diff --git a/eesanje/url_46_100_1.txt b/eesanje/url_46_100_1.txt new file mode 100644 index 0000000000000000000000000000000000000000..5c83c0d44e0bbe940a95553396f3d827abe24cbd --- /dev/null +++ b/eesanje/url_46_100_1.txt @@ -0,0 +1,5 @@ +ವಿವಾಹಿತೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಚಾಕು ಇರಿತ +ದಾವಣಗೆರೆ, ಜೂ.23-ವ್ಯಕ್ತಿಯೊಬ್ಬ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ ಚಾಕು ಇರಿದಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮನಟ್ಟಿ ಗ್ರಾಮದ ಗೊಲ್ಲರಟ್ಟಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. +ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಗ್ರಾಮಸ್ಥರೇ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. +ಆರೋಪಿ ಕಾಟಪ್ಪ ನಿನ್ನೆ ರಾತ್ರಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಮಹಿಳೆ ಪ್ರತಿರೋಧವೊಡ್ಡಿ ಜೋರಾಗಿ ಕೂಗಿಕೊಂಡಿದ್ದಾರೆ. ಗ್ರಾಮಸ್ಥರಿಗೆ ವಿಚಾರ ಗೊತ್ತಾಗುತ್ತದೆ ಎಂದು ತಿಳಿದ ಆರೋಪಿ ಮಹಿಳೆಯ ಕುತ್ತಿಗೆ ಸೇರಿದಂತೆ ಮೂರು ಕಡೆ ಚಾಕುವಿನಿಂದ ಇರಿದಿದ್ದಾನೆ. +ಮಹಿಳೆಯ ಚೀರಾಟ ಕೇಳಿ ಧಾವಿಸಿದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ. \ No newline at end of file diff --git a/eesanje/url_46_100_10.txt b/eesanje/url_46_100_10.txt new file mode 100644 index 0000000000000000000000000000000000000000..7da60ff3c4caafcbb5efeaef8f15d2991e0bf0b1 --- /dev/null +++ b/eesanje/url_46_100_10.txt @@ -0,0 +1,7 @@ +“ದಮ್ಮು ಮತ್ತು ತಾಕತ್ತು ಇದ್ದರೆ ಜಿ.ಪಂ, ತಾ.ಪಂ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕ ಘೋಷಿಸಿ” +ಬೆಂಗಳೂರು,ಜೂ.22-ಕಾಂಗ್ರೆಸ್‌‍ ಪಕ್ಷದವರಿಗೆ ದಮ್ಮು ಮತ್ತು ತಾಕತ್ತಿದ್ದರೆ ಜಿಲ್ಲಾ, ತಾಲ್ಲೂಕು ಪಂಚಾಯತ್‌ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬಹಿರಂಗ ಸವಾಲು ಹಾಕಿದ್ದಾರೆ. +ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ಸಂತೃಪ್ತಿಯಾಗಿದ್ದಾರೆಂದು ಕಾಂಗ್ರೆಸ್‌‍ ನಾಯಕರು ಬೊಗಳೆ ಬಿಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಿಮ ಹಣೆಬರಹ ಏನೆಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದರು. +ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ವೇದಿಕೆ ಮೂಲಕ ಬಹಿರಂಗ ಸವಾಲು ಹಾಕುತ್ತೇನೆ. ನಿಮಗೆ ದಮು ಮತ್ತು ತಾಕಿತ್ತಿದ್ದರೆ ಮುಂದೂಡಲ್ಪಟ್ಟಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು. ಅವಾಗ ನಿಮ ಬಂಡವಾಳ ಗೊತ್ತಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. +ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ನಮ ಮೈತ್ರಿ ಮುಂದುವರೆಯಲಿದೆ. ಇಲ್ಲೂ ಕೂಡ ನಾವು ಗೆದ್ದು ತೋರಿಸಬೇಕು. ಈಗ ಗ್ಯಾರಂಟಿಗಳು ಇಲ್ಲ. ಅದು ಬೋಗಸ್‌‍ ಗ್ಯಾರಂಟಿ. ಬೆಲೆ ಏರಿಕೆಯಿಂದಲೇ ಕಾಂಗ್ರೆಸ್‌‍ನವರನ್ನು ನಾವು ಮನೆಗೆ ಕಳುಹಿಸಿಕೊಡಬೇಕೆಂದು ಕರೆ ಕೊಟ್ಟರು. +ಬಿಜೆಪಿ-ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ಗೆ ನಡುಕ ಹುಟ್ಟಿಸಿದೆ. ಅದು ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ಕಸದ ಬುಟ್ಟಿ ಸೇರಿದೆ. ಲೋಕಸಭೆಯಲ್ಲಿ ಜನ ಕಾಂಗ್ರೆಸ್‌‍ ಅನ್ನು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಹೇಳಿದರು.ಕಾಂಗ್ರೆಸ್‌‍ ಇನ್ನು ಮುಂದೆ ಬೆಲೆ ಏರಿಕೆ ಯುಗವನ್ನೇ ಪ್ರಾರಂಭ ಮಾಡಿದ್ದಾರೆ. ಕರ್ನಾಟಕದ ಕಾಂಗ್ರೆಸ್‌‍ ನಾಯಕರ ಮುಖ ನೋಡಿ ಕೇಂದ್ರದಲ್ಲಿ ದುಡ್ಡು ಕೊಡುವ ಪರಿಸ್ಥಿತಿ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮುಖ ನೋಡಿದರೆ ಯಾರೂ ದುಡ್ಡು ಕೊಡುವುದಿಲ್ಲ ಎಂದರು. +ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಬಿಜೆಪಿ ಜೆಡಿಎಸ್‌‍ ಸಂಸದರಿಗೆ ಅಭಿನಂದನಾ ಕಾರ್ಯಕ್ರಮ ದ ಮೂಲಕ ಕೇಂದ್ರದ ಗಮನಕ್ಕೆ ತಂದು ರಾಜ್ಯದ ಹಿತ ಕಾಪಾಡಬೇಕಿದೆ. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಇದೆ ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕಿದೆ ಎಂದು ಹೇಳಿದರು. \ No newline at end of file diff --git a/eesanje/url_46_100_11.txt b/eesanje/url_46_100_11.txt new file mode 100644 index 0000000000000000000000000000000000000000..d597e69cf8d4afdf7ff1445ba8082c6848082ea2 --- /dev/null +++ b/eesanje/url_46_100_11.txt @@ -0,0 +1,6 @@ +ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧಿಸಿದರೆ ನನ್ನದೇನೂ ಅಭ್ಯಂತರವಿಲ್ಲ : +ಬೆಂಗಳೂರು,ಜೂ.22-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಾದರೂ ಸ್ಪರ್ಧಿಸಲಿ, ಅವರೊಂದಿಗೆ ಇನ್ನೂ ನಾಲ್ಕು ಜನ ಕರೆದುಕೊಂಡು ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್‌ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ದೊಡ್ಡ ಮಹತ್ವ ಕೊಡುವುದು ಬೇಡ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು ಎಂದರು. +ಉಪಚುನಾವಣೆಯಲ್ಲಿ ಯಾರನ್ನಾದರೂ ನಾವು ನಿಲ್ಲಬೇಡಿ ಎಂದು ಹೇಳಲು ಆಗುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಅಭ್ಯರ್ಥಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಯಾರಾಗಲಿದ್ದಾರೆ ಎಂಬುದನ್ನು ಕಾಲವೇ ನಿರ್ಧಾರ ಮಾಡುತ್ತದೆ ಎಂದು ಮಾರ್ಮಿಕವಾಗಿ ನುಡಿದರು.ಉಪಚುನಾವಣೆ ವಿಚಾರಕ್ಕೆ ಈಗ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸೋಣ ಎಂದು ಹೇಳಿದರು. +ನಿರಾಕರಣೆ:ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಲು ಕುಮಾರಸ್ವಾಮಿ ನಿರಾಕರಿಸಿದರು. ಇಂಥ ವಿಚಾರಗಳನ್ನು ನನ್ನ ಬಳಿ ಚರ್ಚೆ ಮಾಡಲು ಬರಬೇಡಿ. ರಾಜ್ಯದ ಸಮಸ್ಯೆಗಳಿಗೆಸಂಬಂಧಪಟ್ಟ ವಿಚಾರಣಗಳನ್ನು ಮಾತ್ರ ಚರ್ಚೆಮಾಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ಈಗ ಆ ಪ್ರಕರಣದ ಅವಶ್ಯಕತೆ ಏನಿದೆ? ರಾಜ್ಯದಲ್ಲಿ ಕಾನೂನು ಇದೆ. ಕಾನೂನಡಿ ಎಲ್ಲವೂ ನಡೆಯಲಿದೆ. ಯಾಕೆ ಈ ರೀತಿ ಆರೋಪ ಪ್ರಕರಣ ಬರುತ್ತಿದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಇಂಥ ಪ್ರಶ್ನೆಗಳನ್ನು ಕೇಳಬೇಡಿ ಎಂದು ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಗರಮಾದರು. \ No newline at end of file diff --git a/eesanje/url_46_100_12.txt b/eesanje/url_46_100_12.txt new file mode 100644 index 0000000000000000000000000000000000000000..bc3f0f22103a2b664005f96601734ff1aab9dbad --- /dev/null +++ b/eesanje/url_46_100_12.txt @@ -0,0 +1,12 @@ +ರೇಣುಕಾಸ್ವಾಮಿ ಪ್ರಕರಣದ ಆರೋಪಿಯೊಬ್ಬನ ಕರುಣಾಜನಕ ಕಥೆ +ಬೆಂಗಳೂರು,ಜೂ.22-ಹುಚ್ಚು ಅಭಿಮಾನ ಒಂದೊಂದು ಬಾರಿ ಎಂತಹ ಪ್ರಾಣ ಸಂಕಟ ತಂದೊಡ್ಡುತ್ತದೆ ಎಂಬುದಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯೊಬ್ಬನ ಕರುಣಾಜನಕ ಕಥೆ ಇದೆ.ಕನ್ನಡ ಚಿತ್ರರಂಗವನ್ನೇ ದಿಗ್ಬ್ರಮೆಗೊಳಿಸಿದ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್‌ಗೆ ಸಹಕಾರ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಆರೋಪಿಗಳನ್ನು ನೋಡುವವರೂ ಇಲ್ಲ ಕೇಳುವವರು ಇಲ್ಲ. +ಈ ಪ್ರಕರಣದಲ್ಲಿ ಬಂಧಿತರಾಗಿರುವ ಕೆಲವರು ಆರ್ಥಿಕವಾಗಿ ಸದೃಢರಾಗಿದ್ದು, ನ್ಯಾಯಾಲಯದಲ್ಲಿ ವಾದ ಮಂಡಿಸಲು ತನಗೆ ಬೇಕಾದ ವಕೀಲರನ್ನು ನೇಮಿಸಿಕೊಂಡಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪವಿತ್ರಗೌಡ, 2ನೇ ಆರೋಪಿ ದರ್ಶನ್‌ ಸೇರಿದಂತೆ ಕೆಲವರ ಪರವಾಗಿ ಖ್ಯಾತ ವಕೀಲರು ವಾದ ಮಾಡಲು ಮುಂದೆ ಬಂದಿದ್ದಾರೆ. +ಆದರೆ ಈ ಪ್ರಕರಣದಲ್ಲಿ ಗೊತ್ತಿದ್ದೋ, ಗೊತ್ತಿಲ್ಲದೆಯೋ ಶಾಮೀಲಾಗಿರುವ ಆರೋಪದ ಮೇಲೆ ಬಂಧಿತರಾಗಿರುವ ಇನ್ನು ಕೆಲವು ಆರೋಪಿಗಳಿಗೆ ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ಮುಗ್ಗಟ್ಟು ಎದುರಾಗಿದೆ. +ಒಂದು ಕಡೆ ವಯಸ್ಸಾದ ತಂದೆತಾಯಿಗಳು, ಕುಟುಂಬ ನಿರ್ವಹಣೆ, ಮನೆಯ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಾದ ಮಗ, ಎಲ್ಲಿ ಜೈಲು ಪಾಲಾಗುತ್ತಾನೇನೋ ಎಂಬ ಆತಂಕದಲ್ಲಿ ಅನೇಕ ಪೋಷಕರು ಕಣ್ಣೀರು ಸುರಿಸುತ್ತಿದ್ದಾರೆ. +ಆರ್ಥಿಕವಾಗಿ ಸದೃಢವಾಗಿರುವವರು ಇಲ್ಲವೇ ಅವರಿಗೆ ಬೇಕಾದವರು ಹೆಚ್ಚಿನ ಹಣ ನೀಡಿ ವಾದ ಮಾಡಲು ಹೆಸರಾಂತ ವಕೀಲರನ್ನು ನೇಮಿಸಿಕೊಳ್ಳುತ್ತಾರೆ. ದೈನಂದಿನ ಜೀವನ ನಿರ್ವಹಣೆ ಮಾಡಲೂ ಏಗುತ್ತಿರುವ ನಮಗೆ ಲಕ್ಷ ಗಟ್ಟಲೇ ಹಣ ಹೊಂದಿಸಿ ವಕೀಲರನ್ನು ಎಲ್ಲಿಂದ ನೇಮಿಸಿಕೊಳ್ಳುವುದು? ಎಂಬ ಮೂಲಭೂತ ಪ್ರಶ್ನೆಯನ್ನು ಅಸಹಾಯಕ ತಂದೆತಾಯಿಗಳು ಮುಂದಿಟ್ಟಿದ್ದಾರೆ. +ದರ್ಶನ್‌ ಮೇಲಿನ ಅಭಿಮಾನವೋ ತಾವು ಅಂಥವರ ಪರ ಜೈಕಾರ ಹಾಕಿದರೆ ಸಣ್ಣಪುಟ್ಟ ಅನುಕೂಲವಾಗಬಹುದೆಂಬ ಕಾರಣಕ್ಕಾಗಿ ತಿಳಿದೋ ತಿಳಿಯದೆಯೋ ಮಾಡಿರುವ ತಪ್ಪಿಗಾಗಿ ಪೋಷಕರು ಆಕ್ರಂದನ ದೇವರಿಗೆ ಪ್ರೀತಿ ಎಂಬಂತಾಗಿದೆ. +ಅದರಲ್ಲಿ ಪ್ರಮುಖ್ಯವಾಗಿ 5ನೇ ಆರೋಪಿಯಾಗಿರುವ ನಂದೀಶ್‌ ಮಂಡ್ಯ ತಾಲೂಕಿನ ಚಾಮಲಪುರ ಗ್ರಾಮದವನು. ಜೈಲಲ್ಲಿರುವ ಮಗನನ್ನು ನೋಡಲು ಬೆಂಗಳೂರಿಗೆ ಬರಲಾಗದೆ ಈತನ ಹೆತ್ತವರು ಒದ್ದಾಡುತ್ತಿದ್ದಾರೆ.ಸ್ನೇಹಿತರೊಬ್ಬರು ವಾಹನ ವ್ಯವಸ್ಥೆ ಮಾಡಿಕೊಟ್ಟರು. ಆದರೆ ಡಿಸೇಲ್‌‍ಗೆ ಹಣ ಹೊಂದಿಸಲಾಗಿಲ್ಲ. +ನಂದೀಶ್‌ ತಾಯಿ ಭಾಗ್ಯಮ ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದಾರೆ. ಮಾಧ್ಯಮದವರನ್ನು ಹೊರತುಪಡಿಸಿ ಮನೆ ಬಳಿಗೆ ಸೌಜನ್ಯಕ್ಕೂ ದರ್ಶನ್‌ ಅಭಿಮಾನಿಗಳು, ಆಪ್ತರು ಭೇಟಿ ನೀಡಿಲ್ಲ. ನಂದೀಶ್‌ ಬಿಡುಗಡೆಗೆ ಪ್ರಯತ್ನಿಸೋಣ ಎಂದರೆ ಅದು ಕನಸಿನ ಮಾತು ಎಂಬಂತಾಗಿದೆ. +ಬೆಂಗಳೂರಿಗೆ ಬರಲು ಹಣವಿಲ್ಲ. ಹೀಗಿರುವಾಗ ವಕೀಲರನ್ನು ನೇಮಿಸಿಕೊಳ್ಳೋದು ಹೇಗೆ? ಅವರಿಗೆ ಹಣ ನೀಡೋದು ಹೇಗೆ? ದರ್ಶನ್‌ ಅಭಿಮಾನಿ ಎನಿಸಿಕೊಂಡ ಯಾರೊಬ್ಬರೂ ನಮ ಕಷ್ಟ ಕೇಳಲಿಲ್ಲ ಎಂದು ಮಾಧ್ಯಮಗಳ ಮುಂದೆ ನಂದೀಶ್‌ನ ಅಕ್ಕ ನಂದಿನಿ ಕಣ್ಣೀರು ಹಾಕಿದ್ದಾರೆ. +ದರ್ಶನ್‌ ಜೊತೆ ಬಂಧನಕ್ಕೆ ಒಳಗಾದ ಎಲ್ಲಾ ಅಭಿಮಾನಿಗಳದ್ದು ಒಂದೊಂದು ರೀತಿಯ ಕಥೆ ಇದೆ. ಬಹುತೇಕರ ಕುಟುಂಬ ಕಷ್ಟದಲ್ಲಿಯೇ ಇದೆ. ದರ್ಶನ್‌ ಸೇರಿ ಕೆಲವೇ ಕೆಲವು ಮಂದಿ ವಕೀಲರ ನೇಮಿಸಿಕೊಂಡಿದ್ದಾರೆ. ಆದರೆ ನಂದೀಶ್‌ ಹಾಗೂ ಕೆಲವರ ಪರ ವಕಾಲತ್ತು ವಹಿಸಲು ವಕೀಲರೇ ಇಲ್ಲವಾಗಿದ್ದಾರೆ. +ಇದೀಗ ನಂದೀಶ್‌‍ಗೆ ಜಾಮೀನು ನೀಡಲು ಲಕ್ಷಾಂತರ ರೂ. ಬೇಕು, ನಮ ಬಳಿ ಹಣವಿಲ್ಲ. ಜೊತೆಗೆ ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗಿ ಮಗನ ಮುಖ ನೋಡಲು ನಮ ಬಳಿ ಹಣವಿಲ್ಲ ಎಂದು ಕುಟುಂಬಸ್ಥರು ಚಿಂತಾಕ್ರಾಂತರಾಗಿದ್ದಾರೆ. \ No newline at end of file diff --git a/eesanje/url_46_100_2.txt b/eesanje/url_46_100_2.txt new file mode 100644 index 0000000000000000000000000000000000000000..ab2bc9f64672c02df2a117d1d40fc64deeaa74aa --- /dev/null +++ b/eesanje/url_46_100_2.txt @@ -0,0 +1,6 @@ +ಮೈತ್ರಿಗೆ ಜನಾರ್ಶೀವಾದ ಮಾಡಿದ್ದಾರೆ : ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ +ಬೆಂಗಳೂರು, ಜೂ.22– ಬಿಜೆಪಿ-ಜೆಡಿಎಸ್‌‍ ಮೈತ್ರಿ ಯನ್ನು ರಾಜ್ಯದ ಜನತೆ ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾ ರೆಂದು ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ 2006ರಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಅಂದಿನ ಮೈತ್ರಿ ಮುರಿದು ಬೀಳದೆ ಮುಂದುವರೆದಿದ್ದರೆ ಇಂದು ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರದಲ್ಲಿ ಇರುತ್ತಿರಲಿಲ್ಲ ಎಂದರು. +ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ರಾಜ್ಯದ ಜನರಿಗೆ ನಾನು ಹೆಚ್ಚು ಪರಿಚಯವಾಗಲು ಸಾಧ್ಯವಾಯಿತು. 2006ರ ನಮ ಮೈತ್ರಿ ಸರ್ಕಾರವು ಚೆನ್ನಾಗಿ ಅಧಿಕಾರ ನಡೆಸುತ್ತಿತ್ತು. ಆದರೆ ಕೆಲವರ ಕುತಂತ್ರದಿಂದ ಅಂದು ನನ್ನನ್ನು ಗೊಂದಲಕ್ಕೀಡು ಮಾಡಿದ್ದರು. ಇದರಿಂದಾಗಿ ಮೈತ್ರಿ ಮುರಿದು ಬಿದ್ದಿತ್ತು ಎಂದರು. +ಲೋಕಸಭಾ ಚುನಾವಣೆ ಪೂರ್ವ ಮೈತ್ರಿಯಿಂದಾಗಿ ಬಿಜೆಪಿ ಮತ್ತು ಜೆಡಿಎಸ್‌‍ನವರು ಅತ್ಯಂತ ವಿಶವಾಸದಿಂದ ಇದ್ದೇವೆ. ಎರಡು ಪಕ್ಷಗಳ ನಡುವಿನ ಹೊಂದಾಣಿಕೆ ಸ್ವಾಭಾವಿಕವಾಗಿ ಆಗಿದೆ ಎಂದು ಹೇಳಿದರು.ಪ್ರಧಾನಿ ನರೇಂದ್ರಮೋದಿ ಅವರು 3ನೇ ಬಾರಿಗೆ ರಾಷ್ಟ್ರದ ನಾಯಕತ್ವವನ್ನು ವಹಿಸಿರುವುದು ವಿಶ್ವದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಈ ವಯಸ್ಸಿನಲ್ಲೂ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿ ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಕುಮಾರಸ್ವಾಮಿ ತಿಳಿಸಿದರು. +ಕಳೆದ 2018ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಬಿಜೆಪಿ ಜೊತೆ ಸೇರಿ ಸರ್ಕಾ ರಚನೆ ಮಾಡಬೇಕೆಂದು ಮನಸ್ಸಿತ್ತು. ಆದರೆ ಕಾಂಗ್ರೆಸ್‌‍ ಜೊತೆ ಸರ್ಕಾರ ಮಾಡಬೇಕಾಯಿತು ಎಂದರು. +ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 26ರಿಂದ 27 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದವು.ಎರಡು ಪಕ್ಷಗಳ ನಿಷ್ಟಾವಂತ ಕಾರ್ಯಕರ್ತರ ಪರಿಶ್ರಮದಿಂದಾಗಿ 19 ಕ್ಷೇತ್ರಗಳಲ್ಲಿ ಜಯಗಳಿಸಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_100_3.txt b/eesanje/url_46_100_3.txt new file mode 100644 index 0000000000000000000000000000000000000000..06123ab0e94c8e68806b54bffbe2cfafc8b94a47 --- /dev/null +++ b/eesanje/url_46_100_3.txt @@ -0,0 +1,5 @@ +ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು : ಬಿಎಸ್ವೈ +ಬೆಂಗಳೂರು,ಜೂ.22-ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು. +ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು. +ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು. ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಯಿತು. ಟಿಕೆಟ್‌ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ ಇನ್ನೂ 3-4 ಸೀಟು ನಾವು ಕಳೆದುಕೊಂಡೆವು ಎಂದು ಪುನರುಚ್ಚರಿಸಿದರು. +ಕಾಂಗ್ರೆಸ್‌‍ ವಿರುದ್ಧದ ಆಕ್ರೋಶವನ್ನು ಜನ ಚುನಾವಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಆಮಿಷ, ಹಣಬಲದ ಹೊರತಾಗಿಯೂ ಎನ್‌ಡಿಎಯ 19 ಸೀಟು ಜನ ಗೆಲ್ಲಿಸಿದ್ದಾರೆ. ಸಂಸದರು ಅವರವರ ಕ್ಷೇತ್ರಗಳಲ್ಲಿ ಮೋದಿಯ ಜನ ಸೇವಕರಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಕಾಂಗ್ರೆಸ್‌‍ ಅಂದರೆ ಅಭಿವೃದ್ಧಿ ಶೂನ್ಯ ಎಂಬುದನ್ನು ಮನವರಿಕೆ ಮಾಡಬೇಕಾಗಿದೆ. ಜಿಪಂ, ತಾಪಂ, ಗ್ರಾಪಂ ಚುನಾವಣೆಗಳನ್ನು ಬಿಜೆಪಿ-ಜೆಡಿಎಸ್‌‍ ಒಟ್ಟಾಗಿ ಹೋಗಬೇಕಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_100_4.txt b/eesanje/url_46_100_4.txt new file mode 100644 index 0000000000000000000000000000000000000000..bcb1770275512c81965bbe372a528345ec552cde --- /dev/null +++ b/eesanje/url_46_100_4.txt @@ -0,0 +1,5 @@ +ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ಹೈಕೋರ್ಟ್ ಬ್ರೇಕ್ +ಬೆಂಗಳೂರು, ಜೂ.22-ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಗಳ ಆಯೋಜನೆಗೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. +ರೇಸ್ ಕೋರ್ಸ್ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾ। ಎನ್.ವಿ. ಅಂಜಾರಿಯಾ ಮತ್ತು ನ್ಯಾ। ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ ಏಕ ಸದಸ್ಯ ಪೀಠ ಮಧ್ಯಂತರ ಆದೇಶಕ್ಕೆ ತಡೆ ನೀಡಿದೆ. +ಸರ್ಕಾರ ಮೇಲನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಕುದರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಅಮಾನತ್ತಿನಿಟ್ಟಿರುವುದಾಗಿ ಪೀಠ ತಿಳಿಸಿದೆ. +ಅಲ್ಲದೆ, ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್ಗಳ ಆಯೋಜನೆಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಅರ್ಜಿಯ ಮುಂದಿನ ವಿಚಾರಣೆಯನ್ನು ಆ. 13ಕ್ಕೆ ಮುಂದೂಡಿದೆ. \ No newline at end of file diff --git a/eesanje/url_46_100_5.txt b/eesanje/url_46_100_5.txt new file mode 100644 index 0000000000000000000000000000000000000000..729c6803cf05a8b87187f5afcdd19632ee6e6cc8 --- /dev/null +++ b/eesanje/url_46_100_5.txt @@ -0,0 +1,8 @@ +ಬ್ರೇಕಿಂಗ್ : ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳಿಗೆ ಜು.4ರವರೆಗೆ ನ್ಯಾಯಾಂಗ ಬಂಧನ + +ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. +ಆರೋಪಿಗಳಾದ ನಟ ದರ್ಶನ್‌, ವಿನಯ್‌, ಧನರಾಜ್‌, ಪ್ರದೂಷ್‌ ಅವರ ಪೊಲೀಸ್‌‍ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಸರ್ಕಾರಿ ವಿಶೇಷ ಅಭಿಯೋಜಕರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ರಿಮ್ಯಾಂಡ್‌ ಅರ್ಜಿ ಸಲ್ಲಿಸಿದರು. +ಇಂದು ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಚಾಟ್ಲಾ ಅವರು ಆರೋಪಿಗಳಾದ ನಟ ದರ್ಶನ್‌, ವಿನಯ್‌, ಧನರಾಜ್‌, ಪ್ರದೂಷ್‌ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಈ ಮೂಲಕ ದರ್ಶನ್‌ ಗ್ಯಾಂಗ್‌ ಪರಪ್ಪನ ಅಗ್ರಹಾರ ಜೈಲುಪಾಲಾಗಬೇಕಾಯಿತು. +ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್‌ ಮತ್ತು ಅವರ ಬೆಂಬಲಿಗರನ್ನು ಬಂಧಿಸಿದ್ದ ವಿಜಯನಗರ ಉಪವಿಭಾಗದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಶಕ್ಕೆ ಪಡೆದಿದ್ದರು. +ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿತರನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಪವಿತ್ರಾಗೌಡ ಸೇರಿ 9 ಆರೋಪಿಗಳಿಗೆ ಜೂ.20 ರಂದು ನ್ಯಾಯಾಂಗ ಬಂಧನ ವಿಧಿಸಿ, ನಟ ದರ್ಶನ್‌, ಧನರಾಜ್‌, ವಿನಯ್‌, ಪ್ರದೂಷ್‌ ಅವರನ್ನು 2 ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ವಹಿಸಲಾಗಿತ್ತು. +ಪೊಲೀಸ್‌‍ ಕಸ್ಟಡಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.ನಟ ದರ್ಶನ್‌, ಇತರೆ ಆರೋಪಿಗಳು ಜೈಲು ಸೇರುತ್ತಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಬಂಧಿಖಾನೆ ಬಳಿ ಭಾರಿ ಬಂದೋಬಸ್ತ್‌ ಮಾಡಲಾಗಿತ್ತು. \ No newline at end of file diff --git a/eesanje/url_46_100_6.txt b/eesanje/url_46_100_6.txt new file mode 100644 index 0000000000000000000000000000000000000000..ad26d7634eca35d005d26ec1e812a30502074f6c --- /dev/null +++ b/eesanje/url_46_100_6.txt @@ -0,0 +1,7 @@ +ಪಕ್ಷದಲ್ಲಿ ಕೆಲಸ ಮಾಡದವರನ್ನು ಕಿತ್ತುಹಾಕಿ : ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೋಮಣ್ಣ ಸಲಹೆ +ಬೆಂಗಳೂರು,ಜೂ.22-ಇನ್ನು ಮುಂದಾದರೂ ಪಕ್ಷದಲ್ಲಿ ಕೆಲಸ ಮಾಡುವವರನ್ನು ಗುರುತಿಸಿ, ಸಂಘಟನೆ ಮಾಡದೆ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಬೇಕೆಂದು ಕೇಂದ್ರ ಸಚಿವ ವಿ.ಸೋಮಣ್ಣ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವೇದಿಕೆಯಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದ ಪ್ರಸಂಗ ಜರುಗಿತು. +ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲಸ ಮಾಡುವವರನ್ನು ಪಕ್ಷ ಗುರುತಿಸಬೇಕು. ಕೆಲಸವನ್ನೇ ಮಾಡದೆ ನಾಯಕರ ಹಿಂದೆ ಸುತ್ತಾಡುವವರು ಇದ್ದರೂ ಒಂದೇ ಬಿಟ್ಟರೂ ಒಂದೇ ಎಂದು ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದರು. +ಕಳೆದ ಮೂರು ದಶಕಗಳಿಂದ ದಾವಣಗೆರೆ ಬಿಜೆಪಿಯ ಭದ್ರಕೋಟೆಯಾಗಿತ್ತು. ಇಲ್ಲಿ ನಾವು ಕೆಲವೇ ಸಾವಿರ ಮತಗಳ ಅಂತರದಿಂದ ಸೋತಿದ್ದೇವೆ. ಇದಕ್ಕೆ ಯಾರು ಕಾರಣ ಎಂಬುದು ಮುಖ್ಯವಲ್ಲ. ನಮ ಸೋಲಿಗೆ ಆತಾವಲೋಕನ ಮಾಡಿಕೊಳ್ಳಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು. +ಯಾರು, ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ರಾಜ್ಯಾಧ್ಯಕ್ಷರು ಅವಲೋಕಿಸಬೇಕು. ಯಾರೋ ಮಾಡಿದ ಪಾಪಕ್ಕೆ ಯಾರನ್ನೋ ಗುಡಿ ಮಾಡಬೇಡಿ ಎಂದು ವಿಜಯೇಂದ್ರಗೆ ಮನವಿ ಮಾಡಿದರು. ತುಮಕೂರಿನಲ್ಲಿ ಸೋಮಣ್ಣ ಸೋಲುತ್ತಾರೆಂದು ಎಲ್ಲರೂ ಅಪಪ್ರಚಾರ ಮಾಡಿದರು. ನಾನು ಯಾವುದಕ್ಕೂ ದೃತಿಗೆಡದೆ ಎರಡೂ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಚಾರ ನಡೆಸಿದೆ ಎಂದು ಹೇಳಿದರು. +ಜೆಡಿಎಸ್‌‍ಗೆ ಬಹುಪರಾಕ್‌: ಇನ್ನು ಸೋಮಣ್ಣ ತಮ ಭಾಷಣದಲ್ಲಿ ಜೆಡಿಎಸ್‌‍ಗೆ ಬಹುಪಾಲು ಎಂದು ಹೇಳಿದ ಪ್ರಸಂಗವೂ ಜರುಗಿತು. ತಮ ಭಾಷಣದಲ್ಲಿ ಬಹುತೇಕ ಜೆಡಿಎಸ್‌‍ ವರಿಷ್ಠ ಎಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌‍ ಕಾರ್ಯಕರ್ತರು ಮತ್ತು ಮುಖಂಡರನ್ನು ಹಾಡಿ ಹೊಗಳಿದರು. ಜನ ಗೆಲ್ಲಲು ಬಿಜೆಪಿ ಕೊಟ್ಟಷ್ಟೇ ಕೊಡುಗೆಯನ್ನು ಜೆಡಿಎಸ್‌‍ ಕೂಡಾ ಕೊಟ್ಟಿದೆ. ಎರಡೂ ಕಡೆಗಳಲ್ಲಿ ಸೋತವನನ್ನು ರಾಷ್ಟ್ರೀಯ ನಾಯಕರು ಗುರುತಿಸಿ ಶಕ್ತಿ ಕೊಟ್ಟರು. ನನ್ನ ಗೆಲುವಿನಲ್ಲಿ ಜೆಡಿಎಸ್‌‍ ಪಾತ್ರ ತುಂಬಾ ಇದೆ ಎಂದರು. +ನಮಪ್ಪನಾಣೆಗೂ ಈ ಸರ್ಕಾರ ಇರುವವರೆಗೂ ಬಿಬಿಎಂಪಿ ಚುನಾವಣೆ ನಡೆಯುವುದಿಲ್ಲ. ಜಿ.ಪಂ ಚುನಾವಣೆಗೆ ಎರಡೂ ಪಕ್ಷದಿಂದ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಯಾರು ಅಭ್ಯರ್ಥಿಗಳು ಎಂದು ನಾಯಕರು ಕುಳಿತು ತೀರ್ಮಾನ ಮಾಡಿ ಚುನಾವಣೆ ಎದುರಿಸಬೇಕು ಎಂದು ಇದೇ ವೇಳೆ ಸೋಮಣ್ಣ ಹೇಳಿದರು. \ No newline at end of file diff --git a/eesanje/url_46_100_7.txt b/eesanje/url_46_100_7.txt new file mode 100644 index 0000000000000000000000000000000000000000..e24378ed22668130e7f28a573407d7364e523897 --- /dev/null +++ b/eesanje/url_46_100_7.txt @@ -0,0 +1,11 @@ +ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು – ಪ್ರತಿ ದೂರು +ಬೆಂಗಳೂರು,ಜೂ.22-ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರೊಬ್ಬರು ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸೂರಜ್ ಅವರ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರುನೀಡಿದ್ದು, ತಮನ್ನು ಹಾಗೂ ಎಂಎಲ್ಸಿಯವರನ್ನು ಬ್ಲಾಕ್ಮೇಲ್ ಮಾಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. +ಹಾಸನ ಜಿಲ್ಲೆಯ ಅರಕಲಗೂಡು ಮೂಲದ ಜೆಡಿಎಸ್‌‍ ಕಾರ್ಯಕರ್ತರೊಬ್ಬರು ರಾಜ್ಯದ ಡಿಜಿಪಿ, ಮುಖ್ಯಮಂತ್ರಿ, ಗೃಹಸಚಿವರು ಮತ್ತು ಹಾಸನ ಜಿಲ್ಲೆಯ ಎಸ್ಪಿಯವರಿಗೆ 14 ಪುಟಗಳ ದೂರು ಬರೆದಿದ್ದು, ಕೃತ್ಯದ ಬಗ್ಗೆ ಸುದೀರ್ಘ ವಿವರಣೆ ನೀಡಿದ್ದಾರೆ. +ಫೈನಾನ್‌್ಸ ಕಂಪನಿಯಲ್ಲಿ ತಾನು ಕೆಲಸ ಮಾಡುವಾಗ ಶಿವಕುಮಾರ್‌ ಎಂಬುವವರ ಪರಿಚಯವಾಗಿತ್ತು. ಅನಂತರದ ದಿನಗಳಲ್ಲಿ ಶಿವಕುಮಾರ್‌ ಅವರು ಸೂರಜ್‌ ರೇವಣ್ಣ ಬ್ರಿಗೇಡ್‌ನ ಖಜಾಂಚಿಯಾಗಿ ಕೆಲಸ ಮಾಡುತ್ತಿದ್ದಾರೆ. ಸೂರಜ್‌ ರೇವಣ್ಣ ಅವರನ್ನು ಭೇಟಿ ಮಾಡಿಸಿ ಕೆಲಸ ಕೊಡಿಸಿ ಸಹಾಯ ಮಾಡುವಂತೆ ತಾವು ಶಿವಕುಮಾರ್‌ರಲ್ಲಿ ಕೇಳಿಕೊಂಡಿದ್ದಾಗಿ ತಿಳಿಸಿದ್ದಾರೆ. +ಶಿವಕುಮಾರ್‌ ಅವರ ಸಲಹೆ ಮೇರೆಗೆ ಇದೇ 16ರಂದು ಸಂಜೆ 6.45 ಕ್ಕೆ ಘನ್ನಿಕಡ ಗ್ರಾಮದ ತೋಟದ ಮನೆಗೆ ಹೋಗಿದ್ದು, ಅಲ್ಲಿ ಸೂರಜ್‌ ರೇವಣ್ಣ ತಮ ಮೇಲೆ ಅಮಾನುಷವಾಗಿ ಅಸಹಜವಾದ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ದೂರಿದ್ದಾರೆ.ತಮಗಾದ ಅನ್ಯಾಯಕ್ಕೆ ನ್ಯಾಯ ಕೊಡಿಸಿ ಎಂದು ದೂರು ಬರೆದಿರುವ ಸಂತ್ರಸ್ತ ಯುವಕ ಸೂರಜ್‌ ರೇವಣ್ಣ ಮತ್ತು ಅವರ ಬೆಂಬಲಿಗರಿಂದ ಪ್ರಾಣ ಬೆದರಿಕೆ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ. +ಪ್ರತಿ ದೂರು: ಇದಕ್ಕೆ ಪ್ರತಿಯಾಗಿ ಜೂ.21 ರಂದು ಸಂಜೆ 5.20ಕ್ಕೆ ಶಿವಕುಮಾರ್ ಎಂಬುವರು ಹೊಳೆನರಸೀಪುರ ಪೊಲೀಸ್‌‍ ಠಾಣೆಯಲ್ಲಿ ದೂರು ನೀಡಿದ್ದು, ಅರಕಲಗೂಡು ತಾಲ್ಲೂಕಿನ ಜೆಡಿಎಸ್‌‍ ಕಾರ್ಯಕರ್ತನೊಬ್ಬ ಎಂಎಲ್‌ಸಿಯವರನ್ನು ಪರಿಚಯ ಮಾಡಿಕೊಡು ಹಾಗೂ ಯಾವುದಾದರೂ ಕೆಲಸ ಕೊಡಿಸಿ ಸಹಾಯ ಮಾಡು ಎಂದು ಕೇಳಿಕೊಂಡಿದ್ದ. +ನಾವಿಬ್ಬರೂ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಪರಿಚಯವಿದ್ದುದರಿಂದ ಚುನಾವಣಾ ಸಮಯದಲ್ಲಿ ಎಂಎಲ್‌ಸಿ ಸೂರಜ್‌ ರೇವಣ್ಣ ಅವರನ್ನು ಕಾರ್ಯಕರ್ತರಿಗೆ ಪರಿಚಯ ಮಾಡಿಕೊಟ್ಟಿದ್ದೆ. ಅವರನ್ನು ಭೇಟಿ ಮಾಡಬೇಕು ಎಂದು ಈತ ಕೇಳಿದಾಗ ವಾರದ ದಿನಗಳಲ್ಲಿ ಎಂಎಲ್‌ಸಿಯವರು ಬ್ಯುಸಿ ಇರುತ್ತಾರೆ. ಶನಿವಾರ ಅಥವಾ ಭಾನುವಾರ ಘನ್ನಿಕಡಕ್ಕೆ ಹೋಗಿ ಭೇಟಿ ಮಾಡುವಂತೆ ಹೇಳಿದ್ದೆ. +ಜೂ.17 ರಂದು ನನಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದು, ಮಾರನೆಯ ದಿನ ನಾನು ಆತನಿಗೆ ಕರೆ ಮಾಡಿ ಸಂದೇಶದ ಬಗ್ಗೆ ವಿಚಾರಿಸಿದೆ. ಜೂ.16 ರಂದು ಎಂಎಲ್‌ಸಿಯವರನ್ನು ಭೇಟಿ ಮಾಡಿದ್ದೇನೆ. ಈಗ ಸಹಾಯ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ನನ್ನ ಜೀವನ ಕಷ್ಟದಲ್ಲಿದೆ. +ಹೇಗಾದರೂ ಮಾಡಿ ಸಹಾಯ ಮಾಡು. ಇಲ್ಲವಾದರೆ ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಬಹಿರಂಗವಾಗಿ ಹೇಳಿ ಮರ್ಯಾದೆ ಹಾಳು ಮಾಡುತ್ತೇನೆ ಎಂದು ಜೆಡಿಎಸ್‌‍ ಕಾರ್ಯಕರ್ತ ಬೆದರಿಕೆ ಹಾಕಿದ್ದ ಎಂದು ಶಿವಕುಮಾರ್‌ ದೂರಿನಲ್ಲಿ ವಿವರಿಸಿದ್ದಾರೆ. +ಸುಳ್ಳು ಹೇಳಬೇಡ ಎಂದು ನಾನು ಸಲಹೆ ನೀಡಿದ್ದೆ. ಇದು ನಿಯತ್ತಿಗೆ ಕಾಲವಲ್ಲ. ಸುಳ್ಳು ಹೇಳಿಯೇ ಬದುಕಬೇಕು. ನನಗೆ 5 ಕೋಟಿ ಕೊಡಿಸು. ಸುಮನಾಗುತ್ತೇನೆ ಎಂದು ಒತ್ತಡ ಹಾಕಿದ್ದ. ಕೊನೆಗೆ ಅದು 3 ಕೋಟಿ, 2.50 ಕೋಟಿ, 2 ಕೋಟಿವರೆಗೂ ಚೌಕಾಸಿ ನಡೆಯಿತು. ನೀವು ಹಣ ಕೊಡದೇ ಇದ್ದರೆ, ನಾನು ಸೂರಜ್‌ರವರ ವಿರುದ್ಧ ಆರೋಪ ಮಾಡಿ, ದೂರು ಕೊಟ್ಟರೆ, ಬೇರೆಯವರು 1 ಕೋಟಿ ಹಣ ನೀಡಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದ್ದ. +ಜೂ.19 ರಂದು ಜೆಡಿಎಸ್‌‍ ಕಾರ್ಯಕರ್ತನ ಭಾವ ಎಂದು ಹೇಳಿಕೊಂಡ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದರು. ಈ ಇಬ್ಬರೂ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ ಎಂದು ಶಿವಕುಮಾರ್‌ ದೂರು ನೀಡಿದ್ದಾರೆ.ಈ ಕುರಿತು ಐಪಿಸಿ 384, 506 ಅಡಿ ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_46_100_8.txt b/eesanje/url_46_100_8.txt new file mode 100644 index 0000000000000000000000000000000000000000..24e816b93fba25a27b5c6eb61d473707733db91c --- /dev/null +++ b/eesanje/url_46_100_8.txt @@ -0,0 +1,5 @@ +ಭಟ್ಕಳದಲ್ಲಿ ಉಗ್ರನಿಗಾಗಿ ಮುಂಬೈ ಎಟಿಎಸ್‌‍ ಹುಡುಕಾಟ +ಬೆಂಗಳೂರು, ಜೂ.22-2008ರ ಪುಣೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿ ಉಗ್ರ ಅಬ್ದುಲ್‌ ಕಬೀರ್‌ ಖಾದೀರ್‌ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್‌ದಲ್ಲಿ ಜಾಲಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್‌ ಕಚೇರಿ, ಪುರಸಭೆಗೆ ನೋಟಿಸ್‌‍ ಅಂಟಿಸಿದೆ. +ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಭಟ್ಕಳ ನಿವಾಸಿ ಮನೆಗೆ ಮುಂಬೈ ಎಟಿಎಸ್‌‍ ತಂಡವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌‍ ಅಂಟಿಸಿ ಹೋಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. +2008ರಲ್ಲಿ ಪುಣೆಯಲ್ಲಿ ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿರುವ ಅಬ್ದುಲ್‌ ಕಬೀರ್‌ ಖಾದೀರ್‌ ಸುಲ್ತಾನ್‌ ಅಲಿಯಾಸ್‌‍ ಮೌಲಾನಾ ಸುಲ್ತಾನ್‌ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತ ಆಗಾಗ ಭಟ್ಕಳಕ್ಕೆ ಬಂದು ಹೋಗುತ್ತಿದ್ದ ವಿಚಾರ ಎಟಿಎಸ್‌‍ಗೆ ತಿಳಿದೆ. +ಹೀಗಾಗಿ ಮುಂಬೈ ಎಟಿಎಸ್‌‍ ತಂಡ ಈತನಿಗಾಗಿ ಜೂ.10ರಂದು ಭಟ್ಕಳಕ್ಕೆ ಆಗಮಿಸಿ ಮನೆ, ತಹಸೀಲ್ದಾರ್‌ ಕಚೇರಿ ಹಾಗೂ ಪುರಸಭೆಯ ನೋಟಿಸ್‌‍ ಬೋರ್ಡ್‌ಗೆ ಜೂ.21ರಂದು ಪುಣೆ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವ ನೋಟಿಸ್ ಅಂಟಿಸಿ ತೆರಳಿದೆ. \ No newline at end of file diff --git a/eesanje/url_46_100_9.txt b/eesanje/url_46_100_9.txt new file mode 100644 index 0000000000000000000000000000000000000000..f65be7dbdaa7520c1bbfa0882459d03896a8501e --- /dev/null +++ b/eesanje/url_46_100_9.txt @@ -0,0 +1,8 @@ +ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್‌ ಜೋಶಿ +ಬೆಂಗಳೂರು,ಜೂ.22-ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. +ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬನೇ ಜಗತ್ತಿನಲ್ಲಿ ಮಹಾ ಸಾಚಾ ಎಂದು ಸಿದ್ದರಾಮಯ್ಯನವರು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. +ಹಣಕಾಸು ಇಲಾಖೆ ಯಾರ ಕೈಯಲ್ಲಿದೆ. ನಿಮ ಅನುಮತಿ ಇಲ್ಲದೆ ನಿಗಮದ ಹಣವು ಸಚಿವರೊಬ್ಬರ ಖಾತೆಗೆ ವರ್ಗಾವಣೆಯಾಗಲು ಹೇಗೆ ಸಾಧ್ಯ. ಈ ನಿಗಮದಲ್ಲಿ ನಡೆದಿರುವ ಎಲ್ಲಾ ಅಕ್ರಮಗಳಿಗೂ ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಆರೋಪಿಸಿದರು. +ಬಿಜೆಪಿ ನೇತೃತ್ವದ ಎನ್‌ಡಿಗೆ ಜನರು 54% ಮತ ಕೊಟ್ಟು ಕಾಂಗ್ರೆಸ್‌‍ನ್ನು ತಿರಸ್ಕರಿಸಿದ್ದಾರೆ. ಅದರ ದ್ವೇಷಕ್ಕಾಗಿಯೇ ಕಾಂಗ್ರೆಸ್‌‍ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದೆ. ಬೇರೆ ರಾಜ್ಯಗಳ ಹೋಲಿಕೆ ಮಾಡಿ ಅದರ ಸಮರ್ಥನೆ ಮಾಡಿಕೊಳ್ಳುತ್ತಿದೆ ಎಂದರು. +ಅರೆ ಬೆಂದ ಗ್ಯಾರಂಟಿಗಳನ್ನು ಕೊಟ್ಟು, ಅದಕ್ಕಾಗಿ ತೈಲ ಬೆಲೆ ಏರಿಸಿ ಮತ್ತಷ್ಟು ಬೆಲೆಗಳು ಏರಿಕೆ ಮಾಡುವಂತೆ ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಬೆಲೆ ಏರಿಕೆ ಮಾಡಿ ಜನರಿಗೆ ಬರೆ ಹಾಕಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು. +ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈ ಚುನಾವಣೆಯಲ್ಲಿ ಸೋಶಿಯಲ್‌ ಮೀಡಿಯಾಗಳು ನಮ ವಿರುದ್ದ ಇದ್ದವು. ಆದಾಗ್ಯೂ ಮತದಾರರು ಕಾಂಗ್ರೆಸ್‌‍ನ್ನು ಸಿಂಗಲ್‌ ಡಿಜಿಟ್‌ಗೆ ತಂದು ನಿಲ್ಲಿಸಿದ್ದಾರೆ. ತಾಲ್ಲೂಕು ಪಂಚಾಯತ್‌ ಚುನಾವಣೆ ಆಗಲಿ, ಜಿಪಂ ಚುನಾವಣೆ ಆಗಲಿ ಕಾಂಗ್ರೆಸ್‌‍ನ್ನು ಮನೆಗೆ ಕಳಿಸಬೇಕು ಎಂದು ಕರೆ ನೀಡಿದರು. +ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ. ಸಿಎಂ, ಡಿಸಿಎಂ ರಾಜೀನಾಮೆ ಕೊಡೋವರೆಗೂ ಹೋರಾಟ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_101_1.txt b/eesanje/url_46_101_1.txt new file mode 100644 index 0000000000000000000000000000000000000000..91016ba4527fcad48b29de6187fa48254a354dd6 --- /dev/null +++ b/eesanje/url_46_101_1.txt @@ -0,0 +1,5 @@ +ಶ್ರೀಮಂತರು, ಪ್ರಭಾವಿಗಳ ಪ್ರಕರಣದಲ್ಲಿ ನ್ಯಾಯ ಮೇಲುಗೈ ಸಾಧಿಸದಿದ್ದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ : ರಮ್ಯಾ +ಬೆಂಗಳೂರು,ಜೂ.22-ಪ್ರಜ್ವಲ್‌ ರೇವಣ್ಣ, ಸೂರಜ್‌ ರೇವಣ್ಣ. ದರ್ಶನ್‌, ಯಡಿಯೂರಪ್ಪ ಅವರ ಪ್ರಕರಣಗಳಲ್ಲಿ ನ್ಯಾಯ ಮೇಲುಗೈ ಸಾಧಿಸದೇ ಇದ್ದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ. +ಇಂದು ಬೆಳಿಗ್ಗೆ ಟ್ವೀಟ್‌ ಮಾಡಿ ಇತ್ತೀಚೆಗೆ ಸಾರ್ವಜನಿಕರ ಗಮನ ಸೆಳೆದ ಅಪರಾಧ ಪ್ರಕರಣಗಳನ್ನು ಹೊರಗೆಳೆದಿರುವ ಪೊಲೀಸರು ಹಾಗೂ ಮಾಧ್ಯಮಗಳಿಗೆ ಧನ್ಯವಾದ ಹೇಳಿದ್ದು, ನ್ಯಾಯ ಮೇಲುಗೈ ಸಾಧಿಸಬೇಕು ಎಂದು ಆಶಿಸಿದ್ದಾರೆ. +ಯಾರು ಕಾನೂನನ್ನು ಮುರಿಯುತ್ತಾರೊ ಅವರು ಸುದ್ದಿಯಲ್ಲಿರುತ್ತಾರೆ. ಶ್ರೀಮಂತರು ಮತ್ತು ಪ್ರಭಾವಿಗಳು ಯಾರೇ ಆದರೂ ಬಡವರು, ಮಹಿಳೆಯರು, ಮಕ್ಕಳ ಮೇಲೆ ಹಿಂಸಾತಕ ಕ್ರಮಗಳನ್ನು ಅನುಸರಿಸುವವರು ತಾರ್ಕಿಕ ಅಂತ್ಯ ಕಾಣಲೇಬೇಕು ಎಂದು ಹೇಳಿದ್ದಾರೆ. +ಕರ್ನಾಟಕದ ಸಾಮಾನ್ಯ ಜನ, ಪೊಲೀಸರು ಮತ್ತು ಮಾಧ್ಯಮಗಳಿಗೆ ಧನ್ಯವಾದಗಳು. ಇಂತಹ ಅಪರಾಧಗಳನ್ನು ಬೆಳಕಿಗೆ ತರಲಾಗಿದೆ. ವಿಚಾರಣೆ ವೇಳೆ ಸಂತ್ರಸ್ತರಿಗೆ ನ್ಯಾಯ ಸಿಗಬೇಕು. ಪ್ರಕರಣಗಳು ತಾರ್ಕಿಕ ಅಂತ್ಯ ಕಾಣಬೇಕು. ಆಗ ಮಾತ್ರ ನ್ಯಾಯ ಮೇಲುಗೈ ಸಾಧಿಸುತ್ತದೆ. ಇಲ್ಲವಾದರೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_46_101_10.txt b/eesanje/url_46_101_10.txt new file mode 100644 index 0000000000000000000000000000000000000000..9db6b247b28efc77c1e765f0d5457e7d3c61a6fc --- /dev/null +++ b/eesanje/url_46_101_10.txt @@ -0,0 +1,7 @@ +ರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ +ಬೆಂಗಳೂರು, ಜೂ.21-ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಿದೆ. ವಾರಾಂತ್ಯಕ್ಕೆ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಈಗಾಗಲೇ ಹಳದಿ ಮುನ್ನೆಚ್ಚರಿಕೆ ನೀಡಿದ್ದು, ನಾಳೆಯಿಂದ ಮೂರು ದಿನ ಕೆಂಪು ಎಚ್ಚರಿಕೆ ನೀಡಲಾಗಿದೆ. +ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ನಾಳೆಯಿಂದ ಹಳದಿ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 30ರಿಂದ 40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಮತ್ತು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. +ಈಗಾಗಲೇ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ಹಾಗೂ ರಾತ್ರಿ ವೇಳೆ ಮಳೆಯಾಗಲಿದೆ. +ಜೂನ್‌ ಒಂದರಿಂದ ಇದುವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.9 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ, ಹೆಚ್ಚು ಮಳೆಯಾಗುವ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಕ್ರಮವಾಗಿ ಶೇ.78 ಹಾಗೂ ಶೇ.84ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. +ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ನೆಚ್ಚರಿಕೆ ಇರುವ ಹಿನ್ನೆಲೆಯಲ್ಲಿ ನದಿಗಳ ನೀರಿನ ಮಟ್ಟ ಹೆಚ್ಚಾಗಲಿದ್ದು, ನದಿಪಾತ್ರಗಳ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. \ No newline at end of file diff --git a/eesanje/url_46_101_11.txt b/eesanje/url_46_101_11.txt new file mode 100644 index 0000000000000000000000000000000000000000..df41c8e120aa442b5812d4d7b850004b94b12857 --- /dev/null +++ b/eesanje/url_46_101_11.txt @@ -0,0 +1,15 @@ +ರೈತರಿಗೆ ಸಕಾಲದಲ್ಲಿ ಸವಲತ್ತು ಸಿಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ +ವಿಜಯನಗರ, ಜೂ. 21– ರೈತರಿಗೆ ದೊರೆ ಯಬೇಕಾದ ಸೌಲಭ್ಯ ಮತ್ತು ಸವಲತ್ತು ಗಳನ್ನು ಸಕಾಲಕ್ಕೆ ತಲುಪಿಸದೇ ಚೆಲ್ಲಾಟ ವಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರಿ ಯವರು ಪ್ರಗತಿ ಪರಿಶೀಲನೆ ನಡೆಸಿದರು. ಸಮಾಧಾನಕರವಾಗಿ ಮಳೆ ಆಗಿದ್ದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. +ರೈತರಿಗೆ ಅಗತ್ಯವಾದ ಬೀಜ, ರಸಗೊಬ್ಬರ ಇತ್ಯಾದಿ ಅಗತ್ಯಗಳ ಸಂಗ್ರಹದ ಪ್ರಮಾಣ ಎಷ್ಟಿದೆ ಎನ್ನುವ ಕುರಿತಂತೆ ಒಂದೊಂದಾಗಿ ಮಾಹಿತಿ ಪಡೆದುಕೊಂಡರು. ಕೆಲವೊಮೆ ಕೊಟ್ಟ ಬೀಜ ಮೊಳಕೆಯೊಡೆಯದಿದ್ದರೆ ಎರಡನೇ ಸುತ್ತು ಕೂಡ ಬೀಜಗಳನ್ನು ಕಡ್ಡಾಯವಾಗಿ ರೈತರಿಗೆ ವಿತರಿಸಬೇಕು. ರೈತರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು. +ಉಪ ರೈತ ಸಂಪರ್ಕಗಳನ್ನು ಹೆಚ್ಚೆಚ್ಚು ತೆರೆದು ರೈತರಿಗೆ ಬೀಜ, ರಸಗೊಬ್ಬರ ವಿತರಣೆ ಮಾಡಬೇಕು ಎಂದಾಗ, ಹಗರಿಬೊಮನಹಳ್ಳಿ ಸೇರಿ ನಾನಾ ತಾಲ್ಲೂಕುಗಳಲ್ಲಿ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು. +ರಾಜ್ಯ ಸರ್ಕಾರದಿಂದ ನೀಡಿದ ಬರ ಪರಿಹಾರದ ಮೊತ್ತ 130 ಕೋಟಿ ರೂಪಾಯಿಗಳನ್ನು ಸಂಪೂರ್ಣವಾಗಿ ಜಿಲ್ಲೆಯ ರೈತರಿಗೆ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಯಾವ ಅರ್ಹ ರೈತರಿಗೂ ಬಾಕಿ ಉಳಿಸಿಕೊಂಡಿಲ್ಲ ಎಂದು ಅಧಿಕಾರಿಗಳು ದಾಖಲೆ ಮುಂದಿಟ್ಟು ವಿವರಿಸಿದರು. +ಬೆಳೆ ಸಮೀಕ್ಷೆಗಳನ್ನು ವೈಜ್ಞಾನಿಕವಾಗಿ ನಡೆಸಿ ಒಬ್ಬರಿಗೂ ಅನ್ಯಾಯ ಆಗದಂತೆ ಪ್ರತಿಯೊಬ್ಬ ರೈತರಿಗೂ ಡಿಬಿಟಿ ಮೂಲಕ ಒಬ್ಬರಿಗೂ ಬಾಕಿ ಉಳಿಯದಂತೆ ಅವರ ಖಾತೆಗಳಿಗೆ ಹಣ ಜಮೆ ಆಗಿರುವುದನ್ನು ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಬೆಳೆ ವಿಮೆ ಸಮರ್ಪಕವಾಗಿ ದೊರಕಿಸಲಾಗಿದೆ. ಅತಿ ಹೆಚ್ಚು ಮಳೆಯಿಂದ ಆದ ಹಾನಿ, ನೋಂದಣಿ ಮಾಡಿಕೊಂಡ ಎಲ್ಲಾ ರೈತರಿಗೂ, ಬೆಳೆ ಕಟಾವು ಹೊತ್ತಲ್ಲೂ ಅಗತ್ಯಕ್ಕೆ ತಕ್ಕಂತೆ ಬೆಳೆ ವಿಮಾ ಪರಿಹಾರ ವಿತರಣೆಯಾಗಿದೆ ಎಂದು ವಿವರಿಸಿದರು. +ರೈತರ ಜಮೀನುಗಳಿಗೆ ಹೋಗಿ ಮಣ್ಣಿನ ಗುಣಮಟ್ಟಕ್ಕೆ ತಕ್ಕಂತೆ ರೈತರಿಗೆ ತಿಳಿವಳಿಕೆ ನೀಡಿದ್ದೀರಾ ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದರು. ಯಾವ ಯಾವ ಅಧಿಕಾರಿಗಳು ಯಾವ ಯಾವ ಹಳ್ಳಿಗೆ ಹೋಗಿದ್ದೀರಿ? ಎಷ್ಟು ರೈತರಿಗೆ ತಿಳಿವಳಿಕೆ ನೀಡಿದ್ದೀರಿ? ನೀವು ಭೇಟಿ ನೀಡಿ ತಿಳಿವಳಿಕೆ ನೀಡಿದ ಡೈರಿ ಎಲ್ಲಿದೆ ಎಂದು ಮಾಹಿತಿ ನೀಡುವಂತೆ ಸೂಚಿಸಿದರು. +ಡೈರಿ ಬರೆದಿದ್ದೀನಿ. ಆದರೆ ಅದನ್ನು ಕಚೇರಿಯಲ್ಲೇ ಬಿಟ್ಟು ಬಂದಿದ್ದೀನಿ ಎಂದು ಮಾಹಿತಿ ನೀಡಿದ ಅಧಿಕಾರಿ ವಿರುದ್ಧ ಮುಖ್ಯಮಂತ್ರಿ ಗರಂ ಆದರು. ಡೈರಿ ಇಲ್ಲದೆ ಬರಿ ಕೈಲಿ ಬಂದಿದ್ದಕ್ಕೆ ತರಾಟೆಗೆ ತೆಗೆದುಕೊಂಡು ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು. +ಆತಹತ್ಯೆ ಮಾಡಿಕೊಂಡವರಿಗೆ ಪರಿಹಾರ ಪಾವತಿಯಲ್ಲಿ ವಿಳಂಬ:2023-24 ರಲ್ಲಿ ಒಟ್ಟು 34 ಮಂದಿ ರೈತರು ಜಿಲ್ಲೆಯಲ್ಲಿ ಆತಹತ್ಯೆ ಮಾಡಿಕೊಂಡಿದ್ದು ಈ ಸಾಲಿನಲ್ಲಿ ಮೂವರು ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಆತಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ದೊರಕಿದೆಯೇ ಎಂದು ಪ್ರಶ್ನಿಸಿದರು. +ಐದು ಮಂದಿ ರೈತರ ಕುಟುಂಬಕ್ಕೆ ಮಾತ್ರ ತಾಂತ್ರಿಕ ತೊಂದರೆ ಆಗಿದೆ. ಉಳಿದೆಲ್ಲರಿಗೂ ಸರಿಯಾದ ಸಮಯಕ್ಕೆ ಪರಿಹಾರದ 5 ಲಕ್ಷ ಮೊತ್ತ ಜಮೆ ಆಗಿದೆ. ಎಫ್‌ಎಸ್‌‍ಎಲ್‌ ವರದಿ 20 ದಿನದೊಳಗೆ ಬರುತ್ತದೆ. ಆ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. +ಪರಿಹಾರ ಪಾವತಿ ಪ್ರಕ್ರಿಯೆ ತಡೆವಾಗಿದ್ದಕ್ಕೆ ಮುಖ್ಯಮಂತ್ರಿಗಳು ಸಿಟ್ಟಾಗಿ ತರಾಟೆಗೆ ತೆಗೆದುಕೊಂಡರು. ರೈತರ ಬದುಕು ಮತ್ತು ಬವಣೆಗಳ ಬಗ್ಗೆ ಚೆಲ್ಲಾಟ ಆಡಿದರೆ ಹುಷಾರ್‌ ಎಂದು ಎಚ್ಚರಿಸಿದರು.ಸರ್ಕಾರ ಹಣ ಕೊಟ್ಟಿದೆ, ರೈತರಿಗೆ ತಲುಪಿಸಲು ಏನು ತೊಂದರೆ. ಇನ್ನೂ ಮುಂದೆ ಇಂತಹ ವಿಳಂಬವನ್ನು ಸಹಿಸುವುದಿಲ್ಲ ಎಂದು ಖಾರವಾಗಿ ಹೇಳಿದರು. +ನೀರು, ಮೇವು, ನರೇಗಾ ಉದ್ಯೋಗಕ್ಕೆ ಯಾವ ಕಾರಣಕ್ಕೂ ತೊಂದರೆ ಆಗಬಾರದು. ಪಿಡಿ ಖಾತೆಯಲ್ಲಿರುವ ಇರುವ ಹಣವನ್ನು ಇದಕ್ಕಾಗಿ ಸರಿಯಾಗಿ ಬಳಸಬೇಕು. ಕೆರೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಸಬೇಕು. ಒತ್ತುವರಿಯಿಂದ ಅಚ್ಚುಕಟ್ಟು ಪ್ರದೇಶಕ್ಕೆ ನೀರಿನ ಕೊರತೆಯಾಗುತ್ತದೆ. +ನರೇಗಾದಲ್ಲಿ ಕೆರೆ ಹೂಳು ತೆಗೆದು ಕೆರೆಗಳಿಗೆ ಮರು ಜೀವ ಒದಗಿಸಬೇಕು. 52 ಶುದ್ಧ ನೀರಿನ ಘಟಕಗಳು ಕೆಲಸ ಸ್ಥಗಿತಗೊಳಿಸಿದ್ದರೂ ಸರಿಯಾದ ಸಮಯಕ್ಕೆ ರಿಪೇರಿ ಮಾಡಿಸಲು ಏನು ಸಮಸ್ಯೆ ಎಂದು ಪ್ರಶ್ನಿಸಿದರು.ಕೆಲವು ಬೋರ್‌ ವೆಲ್‌ಗಳು ಪದೇ ಪದೇ ರಿಪೇರಿಗೆ ಬರುತ್ತಿವೆ ಎನ್ನುವ ಅಧಿಕಾರಿಗಳ ಉತ್ತರಕ್ಕೆ ಗರಂ ಆದ ಸಿಎಂ ರಿಪೇರಿ ಮಾಡಿದ್ದು ಇಲಾಖೆಯವರೇ ತಾನೆ? ಪದೇ ಪದೇ ಕೆಟ್ಟು ಹೋಗುವ ರೀತಿ ರಿಪೇರಿ ಯಾಕೆ ಮಾಡ್ತಾರೆ. ಅದರಲ್ಲಿ ಏನಾದರೂ ರಿಪೇರಿಯಾಗದ ಸಮಸ್ಯೆ ಇದೆಯಾ ಪರಿಶೀಲಿಸಿ ಎಂದರು. +ಜಿಲ್ಲೆಯಲ್ಲಿ ಶೌಚಾಲಯಗಳು ಇಲ್ಲದ ಮನೆಗಳು ಇವೆಯೇ ಎಂದು ಸಿಎಂ ಪ್ರಶ್ನಿಸಿದರು. ಇವೆ ಎಂದು ಅಧಿಕಾರಿಗಳು ಉತ್ತರಿಸಿದರು. ಹೀಗಿದ್ದೂ ಜಿಲ್ಲೆಯನ್ನು ಬಯಲು ಶೌಚ ಮುಕ್ತ ಜಿಲ್ಲೆ ಎಂದು ಘೋಷಿಸಿದ್ದು ಏಕೆ ಎಂದು ತೀವ್ರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ನೀವು ಕೊಡುವ ತಪ್ಪು ಮಾಹಿತಿಯನ್ನು ನಾವು ಅಧಿವೇಶನದಲ್ಲಿ ಹೇಳುವುದಕ್ಕೆ ಆಗುತ್ತದೆಯೇ ಎಂದು ತರಾಟೆಗೆ ತೆಗೆದುಕೊಂಡರು. +ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌, ಶಾಸಕರಾದ ಗವಿಯಪ್ಪ, ಕಂಪ್ಲಿ ಗಣೇಶ್‌, ಲತಾ ಎಂ.ಪಿ.ಪ್ರಕಾಶ್‌, ಶ್ರೀನಿವಾಸ್‌‍ ಸಭೆಯಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_101_12.txt b/eesanje/url_46_101_12.txt new file mode 100644 index 0000000000000000000000000000000000000000..b4c487a95749c072f3d6757921eed3aff9bb5375 --- /dev/null +++ b/eesanje/url_46_101_12.txt @@ -0,0 +1,5 @@ +ಸಂಸದರ ನಿವಾಸಕ್ಕೆ ಪ್ರಜ್ವಲ್‌ ರೇವಣ್ಣನನ್ನು ಕರೆದೊಯ್ದು ಮಹಜರು +ಹಾಸನ,ಜೂ.21-ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣನನ್ನು ಬೆಂಗಳೂರಿನಿಂದ ನಗರದ ಸಂಸದರ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು. +ಇಲ್ಲಿನ ಆರ್‌.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಇಂದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರಜ್ವಲ್‌ನನ್ನು ಕರೆದೊಯ್ದು ಸ್ಥಳ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ ಎಫ್‌ಎಸ್‌‍ಎಲ್‌ನ ನಾಲ್ಕುಸಿಬ್ಬಂದಿಗಳ ತಂಡ ಹಾಗೂ ಎಸ್‌‍ಐಟಿ ತಂಡದ ಅಧಿಕಾರಿಗಳು ಜೊತೆಯಲ್ಲಿದ್ದರು. +ಪ್ರಜ್ವಲ್‌ ಸಂಸದರಾಗಿದ್ದ ಅವಧಿಯಲ್ಲಿ ಸರ್ಕಾರಿ ನಿವಾಸದಲ್ಲಿ ಅತ್ಯಾಚಾರ-ಲೈಂಗಿಕ ದೌರ್ಜನ್ಯ ನಡೆದಿತ್ತು ಎಂಬ ಆರೋಪದ ಹಿನ್ನಲೆಯಲ್ಲಿ ಇಂದು ಮತ್ತೆ ನಗರದಿಂದ ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದ ಸ್ಥಳ ಮಹಜರು ಮಾಡಿ ನಂತರ ನಗರಕ್ಕೆ ಕರೆತಂದಿದ್ದಾರೆ. +ಈಗಾಗಲೇ 2 ಪ್ರಕರಣದಲ್ಲಿ ಎಸ್‌‍ಐಟಿ ಪೊಲೀಸರು ಪ್ರಜ್ವಲ್‌ನನ್ನು ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. \ No newline at end of file diff --git a/eesanje/url_46_101_2.txt b/eesanje/url_46_101_2.txt new file mode 100644 index 0000000000000000000000000000000000000000..a0e40eedf0825a712d9573fc01f634643e4d598d --- /dev/null +++ b/eesanje/url_46_101_2.txt @@ -0,0 +1,10 @@ +ಮೊದಲನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ +ಮೈಸೂರು, ಜೂ. 22– ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿ ಕಾರಿ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದರು. +ಮೈಸೂರು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. +ಈ ವರ್ಷ ಜುಲೈ 12ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 19ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27ರ ಶನಿವಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯ ಕ್ರಮ ಹಾಗೂ ಆಗ್ಟ್ 2ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. +ಜುಲೈ ಮೊದಲ ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿ ಗಳ ಜೊತೆ ಆಷಾಢ ಶುಕ್ರವಾರ ಕುರಿತು ಆಗಿರುವ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು. +ಚಾಮುಂಡೇಶ್ವರಿ ಬೆಟ್ಟದಲ್ಲಿ ದಾಸೋಹ ಭವನದಲ್ಲಿ ನಡೆಯುವ ಪ್ರಸಾದ ವಿತರಣಾ ಕಾರ್ಯಕ್ರಮದ ಜೊತೆಗೆ ಭಕ್ತಾದಿಗಳು ಸಹ ಅಲ್ಲಲ್ಲಿ ಪ್ರಸಾದ ವಿತರಣೆ ಮಾಡುವುದರಿಂದ ಆಹಾರದ ಸುರಕ್ಷತೆಗೆ ಗಮನ ಕೊಡಲಾಗಿದೆ. ಆಹಾರ ಸುರಕ್ಷತಾ ಅಧಿ ಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿ ಕಾರಿಗಳು ತಿಳಿಸಿದರು. +ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳ ಪಾರ್ಕಿಂಗ್ ಅನ್ನು ಕ್ರಮಬದ್ಧವಾಗಿ ಮಾಡಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ. ಬೆಟ್ಟಕ್ಕೆ ಬರುವವರು ಪ್ಲಾಸ್ಟಿಕ್ಗಳನ್ನು ತರುವಂತಿಲ್ಲ ಎಂದು ತಿಳಿಸಿದರು. +ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಬೇಕು. ಚಾಮುಂಡಿ ಬೆಟ್ಟದಲ್ಲಿನ ಅಂಗಡಿಗಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಚಾಮುಂಡಿ ಬೆಟ್ಟದಲ್ಲಿ ಸಿಸಿಟಿವಿ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಬೇಕು. ಚಾಮುಂಡಿ ಬೆಟ್ಟದಲ್ಲಿ ಕುಡಿಯುವ ನೀರಿನ ರ್ಆ ಓ ಪ್ಲಾಂಟ್ ವ್ಯವಸ್ಥೆ ಕಲ್ಪಿಸಬೇಕು. ಇದರಿಂದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ಬಳಕೆ ಕಡಿಮೆ ಮಾಡಬಹುದು ಎಂದು ತಿಳಿಸಿದರು. +ಯಾವುದೇ ಪ್ಲ್ಸೆ್ ಬ್ಯಾನರ್ಗಳನ್ನು ಅಳವಡಿಸುವಂತಿಲ್ಲ. ಪಾಸ್ ವ್ಯವಸ್ಥೆ ಇರುವುದಿಲ್ಲ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದರ್ಶನ ಸುಗಮವಾಗಿ ಆಗಬೇಕು. ಬರುವ ಭಕ್ತಾದಿಗಳಿಗೆ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಬೇಕು ಎಂದು ಜಿಲ್ಲಾಧಿ ಕಾರಿಗಳು ಸೂಚಿಸಿದರು. +ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿ ಕೆ.ಎಂ.ಗಾಯತ್ರಿ, ಉಪ ಪೊಲೀಸ್ ಆಯುಕ್ತರಾದ ಮುತ್ತುರಾಜ್, ಜಾಹ್ನವಿ, ಅಪರ ಜಿಲ್ಲಾಧಿ ಕಾರಿಗಳಾದ ಡಾ.ಪಿ. ಶಿವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿ ಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_101_3.txt b/eesanje/url_46_101_3.txt new file mode 100644 index 0000000000000000000000000000000000000000..215861117ed739100d5dc6e158cf0479080deac7 --- /dev/null +++ b/eesanje/url_46_101_3.txt @@ -0,0 +1,4 @@ +ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲ್ಪಟ್ಟಿದ್ದ ಹೆಣ್ಣು ಮಗು ಸಾವು +ಬೆಂಗಳೂರು,ಜೂ.22-ಬೆಳಗಾವಿಯಲ್ಲಿ ನಡೆದಿದ್ದ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲಾಗಿದ್ದ ಹೆಣ್ಣು ಮಗು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದೆ. +ನರ್ಸ್ ಮಹದೇವಿಗೆ 30 ದಿನದ ಮಗುವನ್ನು ಕೇವಲ 60 ಸಾವಿರಕ್ಕೆ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಾಖಾನ್ ಮಗು ಮಾರಾಟ ಮಾಡಿದ್ದನು.ನಕಲಿ ವೈದ್ಯನಿಂದ ಮಗುವನ್ನು ಪಡೆದಿದ್ದ ನರ್ಸ್ ಮಹದೇವಿ ಬೆಳಗಾವಿಗೆ ಬಂದು ಶ್ರೀಮಂತ ದಂಪತಿಗೆ ಮಗು ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. +30 ದಿನದ ಮಗುವಾದ್ದರಿಂದ ಅದರ ಬೆಳವಣಿಗೆ ಕುಂಠಿತವಾಗಿತ್ತಲ್ಲದೆ ತೂಕ ಹೆಚ್ಚಳವಾಗದೆ ನಿತ್ರಾಣಗೊಂಡು ರಾತ್ರಿ ಮೃತಪಟ್ಟಿದೆ. ಇಂದು ಬೆಳಿಗ್ಗೆ ಪೊಲೀಸರು ಹಾಗೂ ಮಗುವಿನ ತಂದೆ ತಾಯಿ ಸಮುಖದಲ್ಲಿ ಬೆಳಗಾವಿಯ ಸದಾಶಿವ ನಗರದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. \ No newline at end of file diff --git a/eesanje/url_46_101_4.txt b/eesanje/url_46_101_4.txt new file mode 100644 index 0000000000000000000000000000000000000000..b20a90b9c5cacf0d15972932beb5de0359d33099 --- /dev/null +++ b/eesanje/url_46_101_4.txt @@ -0,0 +1,12 @@ +ಕನ್ನಡದ ಖ್ಯಾತ ಸಾಹಿತಿ ನಾಡೋಜ ಡಾ.ಕಮಲ ಹಂಪನಾ ಇನ್ನಿಲ್ಲ +ಬೆಂಗಳೂರು,ಜೂ.22-ಕನ್ನಡದ ಖ್ಯಾತ ಸಾಹಿತಿ , ಮಹಿಳಾ ಪರ ಗಟ್ಟಿ ದನಿಯಾಗಿದ್ದ ನಾಡೋಜ ಡಾ.ಕಮಲಹಂಪನಾ(89) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜರಾಜೇಶ್ವರಿನಗರದಲ್ಲಿರುವ ಅವರ ಹಿರಿಯ ಪುತ್ರಿ ರಾಜಶ್ರೀ ಅವರ ನಿವಾಸದಲ್ಲಿ ಇದ್ದ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು ಅವರನ್ನು ಎಂಎಸ್‌‍ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. +ಮೃತರು ಪತಿ ಸಾಹಿತಿ ಹಂಪ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಕಮಲಾಹಂಪನಾ ಅವರ ಪಾರ್ಥಿವ ಶರೀರವನ್ನು ರಾಜಾಜಿನಗರದ 18ನೇ ಕ್ರಾಸ್‌‍ನಲ್ಲಿರುವ ಅವರ ಸ್ವಂತ ನಿವಾಸ ಸನಿಮಗೆ ತರಲಾಗುವುದು. ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. +ಕಮಲಾ ಹಂಪನಾ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್‌ ಕಾಲೇಜಿಗೆ ದೇಹದಾನ ಮಾಡಲಾಗುವುದು ಅವರ ಕುಟುಂಬದವರು ತಿಳಿಸಿದ್ದಾರೆ.ಕಮಲಾ ಹಂಪನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಸಚಿವರು, ಶಾಸಕರು ಸೇರಿದಂತೆ ಅನೇಕ ಗಣ್ಯರು, ಸಾಹಿತ್ಯಾಭಿಮಾನಿಗಳು ಕಂಬನಿ ಮಿಡಿದಿದ್ದಾರೆ. +ಬೆಂಗಳೂರಿನ ದೇವನಹಳ್ಳಿಯಲ್ಲಿ 1931ರ ಅಕ್ಟೋಬರ್‌ 28ರಂದು ಶ್ರೀರಂಗಧಾಮ ನಾಯಕ್‌ ಮತ್ತು ಲಕ್ಷ್ಮಮ ದಂಪತಿಯ ಪುತ್ರಿಯಾಗಿ ಕಮಲ ಹಂಪನಾ ಜನಿಸಿದರು.ತುಮಕೂರು ಮತ್ತು ಮೈಸೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದರು. +ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾನಿಲಯಗಳಲ್ಲಿ ಸೇವೆ ಸಲ್ಲಿಸಿದ್ದರು. ತಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿದ್ದ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿಯಾಗಿದ್ದಾರೆ. +ಅವರ ಧೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. +ಡಾ.ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್‌ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಶೀಲ ಕೃತಿಗಳೂ ಸೇರಿವೆ. +ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ ಹಾಗೂ ಅತ್ತಿಮಬ್ಬೆ ಅಂಡ್‌ ಚಾಲುಕ್ಯಾಸ್‌‍ ಹಾಗೂ ಜೈನಿಸಮ್‌ ಅಂಡ್‌ ಅದರ್‌ ಎಸ್ಸೇಸ್‌‍ ಎಂಬ ಎರಡು ಇಂಗ್ಲಿಷ್‌ ಪುಸ್ತಕಗಳನ್ನು ರಚಿಸಿದ್ದಾರೆ. +ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವ ಕಮಲಾ ಹಂಪನಾ ಕನ್ನಡದ ಹೆಮೆ. ಕರ್ನಾಟಕ ಸರ್ಕಾರ ಅವರ ಕುರಿತ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ. ಜಗತ್ತಿನ ಆಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್‌ ನಿರ್ದೇಶಿಸಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಇಡೀ ಭಾರತದ ಪರವಾಗಿ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿ ಸೇರಿರುವುದು. ಇವೆಲ್ಲದಕ್ಕೂ ಕಿರೀಟಪ್ರಾಯವಾಗಿದೆ. +ಕಮಲ ಹಂಪನಾ ಪಟ್ಟ ಶ್ರಮ, ನಡೆಸಿದ ನಿರಂತರ ಹೋರಾಟ, ಮಾಡಿದ ಸಾಧನೆಗಳು ಹಲವಾರು. ಅವರ ಪರಿಶ್ರಮದ ಫಲವಾಗಿ ಕರ್ನಾಟಕ ಸರ್ಕಾರ ಪ್ರತಿವರ್ಷ ಲೇಖಕಿಯೊಬ್ಬರಿಗೆ ಮೂರು ಲಕ್ಷ ನಗದನ್ನೂ ಒಳಗೊಂಡ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯನ್ನು ನೀಡುತ್ತಿದೆ. +ಅವರ ಪ್ರಯತ್ನದಿಂದಲೇ ಮಹಿಳಾ ವಿಶ್ವವಿದ್ಯಾಲಯ ಸಾಕಾರಗೊಂಡಿತು. ವೀರಮಹಿಳೆ ರಾಣಿ ಅಬ್ಬಕ್ಕದೇವಿಯ ಪ್ರತಿಮೆ ಪ್ರತಿಷ್ಠಾಪನೆಗೊಂಡಿತು. ಬೇರು ಬೆಂಕಿ ಬಿಳಲು ಬೃಹತ್‌ ಗ್ರಂಥ ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನವಾಗಿದೆ. \ No newline at end of file diff --git a/eesanje/url_46_101_5.txt b/eesanje/url_46_101_5.txt new file mode 100644 index 0000000000000000000000000000000000000000..999d7d2914800a1d74b2ce4787fc36bcae3b8de5 --- /dev/null +++ b/eesanje/url_46_101_5.txt @@ -0,0 +1,7 @@ +ಜೂ.25 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ರೆಡ್‌ ಅಲರ್ಟ್‌ ಘೋಷಣೆ +ಬೆಂಗಳೂರು,ಜೂ.22-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಕಳೆದೆರಡು ದಿನಗಳಿಂದ ನೈರುತ್ಯ ಮುಂಗಾರು ಚೇತರಿಸಿಕೊಂಡಿದೆ.ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಅನಂತರ ಮತ್ತೆ ಮಳೆ ಪ್ರಮಾಣ ಕಡಿಮೆಯಾಗಲಿದೆ. +ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲಾವಾರು ಮುನ್ನೆಚ್ಚರಿಕೆಯನ್ನು ನೀಡಿದೆ. ನಾಳೆಯಿಂದ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಿತ್ತಳೆ ಎಚ್ಚರಿಕೆ (ಆರೆಂಜ್‌ ಅಲರ್ಟ್‌) ಘೋಷಣೆ ಮಾಡಿದೆ.ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿದ್ದು, ಹವಾಮಾನ ಇಲಾಖೆ ಕೆಂಪು ಎಚ್ಚರಿಕೆ (ರೆಡ್‌ ಅಲರ್ಟ್‌) ಘೋಷಿಸಿದೆ. +ಬೆಂಗಳೂರು ಸೇರಿದಂತೆ ನಿನ್ನೆ ಹಲವು ಕಡೆಗಳಲ್ಲಿ ಮಳೆಯಾಗಿದೆ. ಇಂದು ದಕ್ಷಿಣ ಒಳನಾಡಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಮೇಲೈ ಗಾಳಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಗಳಿವೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಬೆಳಗಾವಿ ಹಾಗೂ ಕರಾವಳಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. +ನಾಳೆಯಿಂದ ಜೂ.25 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಕೆಲವೆಡೆ ಅತೀ ಬಾರಿ ಮಳೆಯಾಗುವ ಮುನ್ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. +ಆಯಾ ಜಿಲ್ಲಾಡಳಿತಕ್ಕೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚನೆ ನೀಡಲಾಗಿದೆ. ನಿಗದಿತ ಅವಧಿಗಿಂತ ಮುಂಚೆಯೇ ಮುಂಗಾರು ಆರಂಭವಾಗಿದ್ದು, ಜೂ.12 ರವರೆಗೂ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. +ಅನಂತರ ಮುಂಗಾರು ದುರ್ಬಲಗೊಂಡು ಚದುರಿದಂತೆ ಮಾತ್ರ ಮಳೆಯಾಗಿತ್ತು. ಜೂ.20 ರ ನಂತರ ಮತ್ತೆ ಚುರುಕಾಗಿರುವ ಮುಂಗಾರು ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಹಾಗೂ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_101_6.txt b/eesanje/url_46_101_6.txt new file mode 100644 index 0000000000000000000000000000000000000000..306453c1ed53d579a8459596281b6c3938b0b463 --- /dev/null +++ b/eesanje/url_46_101_6.txt @@ -0,0 +1,7 @@ +ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರಾಗಲಿದೆ ದರ್ಶನ ಅಂಡ್ ಗ್ಯಾಂಗ್ +ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್‌‍ ಕಸ್ಟಡಿ ಇಂದು ಅಂತ್ಯವಾಗಲಿದ್ದು, ವಿಜಯನಗರ ಉಪವಿಭಾಗದ ಪೊಲೀಸರು ಸಂಜೆ ವೇಳೆಗೆ ಈ ನಾಲ್ವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. +ಆರೋಪಿಗಳಾದ ನಟ ದರ್ಶನ್‌ ಹಾಗೂ ಆತನ ಗ್ಯಾಂಗ್‌ನ ವಿನಯ್‌, ಧನರಾಜ್‌ ಮತ್ತು ಪ್ರದೋಷ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ಮತ್ತೆ ತಮ ವಶಕ್ಕೆ ಪಡೆದು ಇನ್ನಷ್ಟು ಹೇಳಿಕೆಗಳನ್ನು ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಇಂದು ಮತ್ತೆ ನ್ಯಾಯಾಲಯದ ಮುಂದೆ ಈ ನಾಲ್ವರನ್ನು ಹಾಜರುಪಡಿಸಲಾಗುತ್ತದೆ. ಒಟ್ಟು 12 ದಿನಗಳ ಕಾಲ ವಿಚಾರಣೆ ನಡೆಸಿರುವ ಪೊಲೀಸರು ಬಹುತೇಕ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. +ಒಟ್ಟಾರೆ ಈ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ಕಾನೂನಿನ ಕುಣಿಕೆ ಮತ್ತಷ್ಟು ಬಿಗಿಯಾಗುವಂತೆ ಕಾಣುತ್ತಿದೆ.ಈಗಾಗಲೇ ಈ ಪ್ರಕರಣದಲ್ಲಿ ಪವಿತ್ರಾಗೌಡ ಸೇರಿದಂತೆ 9 ಮಂದಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ನಟ ದರ್ಶನ್‌ ಹಾಗೂ ಉಳಿದ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಸೇರುವುದು ಖಚಿತ ಎನ್ನಲಾಗುತ್ತಿದೆ. +ಸ್ಥಳಮಹಜರು ವೇಳೆ ದರ್ಶನ್‌ ಮನೆಯಲ್ಲಿ ಪತ್ತೆಯಾದ 37 ಲಕ್ಷ ಹಣದ ಮೂಲದ ಬಗ್ಗೆ ಮಾಹಿತಿ ಪಡೆಯಲು ದರ್ಶನ್‌ನನ್ನು ಮಾತ್ರ ಮತ್ತೇನಾದರೂ ಪೊಲೀಸರು ತಮ ಕಸ್ಟಡಿಗೆ ಪಡೆಯಬಹುದೆಂಬುದನ್ನು ಅಲ್ಲಗಳೆಯುವಂತಿಲ್ಲ. +ಬಿಗಿ ಭದ್ರತೆ :ಇಂದು ನ್ಯಾಯಾಲಯಕ್ಕೆ ದರ್ಶನ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಕರೆದೊಯ್ಯಲಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಬಿಗಿ ಪೊಲೀಸ್‌‍ ಬಂದೊಬಸ್ತ್‌ ಮಾಡಲಾಗಿದೆ.ಅಭಿಮಾನಿಗಳು ನ್ಯಾಯಾಲಯದ ಬಳಿ ಹೆಚ್ಚಾಗಿ ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಎಸ್‌‍ಆರ್‌ಪಿ ಪೊಲೀಸ್‌‍ ಸಹಿತ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಜಯನಗರ ಉಪವಿಭಾಗದ ಪೊಲೀಸರು 130ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಮುಂದಿನ ದಿನಗಳಲ್ಲಿ ಈ ಆರೋಪಿಗಳಿಗೆ ನ್ಯಾಯಾಲಯ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_101_7.txt b/eesanje/url_46_101_7.txt new file mode 100644 index 0000000000000000000000000000000000000000..d701e61f22287abd928262dd77fba86627786b4c --- /dev/null +++ b/eesanje/url_46_101_7.txt @@ -0,0 +1,6 @@ +ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ +ಚಿಕ್ಕಮಗಳೂರು,ಜೂ.22-ಕಾಫಿ ನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ವಿಧಿಸಿದೆ.ಜಿಲ್ಲೆಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದು, ಭಾರಿ ಗಾಳಿ, ಮಳೆ, ಮಂಜಿನೊಂದಿಗೆ ಪ್ರವಾಸಿತಾಣದ ಸೊಬಗನ್ನು ನೋಡುವುದೇ ಒಂದು ವಿಸಯ. +ಆದರೆ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಎತ್ತಿನಭುಜದ ಕಿರಿದಾದ ಪ್ರದೇಶದಲ್ಲಿ ಪ್ರವಾಸಿಗರು ಚಾರಣಕ್ಕೆ ಹೋಗುತ್ತಿದ್ದಾರೆ. ಈ ರಸ್ತೆಯಲ್ಲಿ ಪಾಚಿ ಕಟ್ಟಿದ್ದು, ಅನಾಹುತಗಳು ಸಂಭವಿಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಾರಣಕ್ಕೆ ಹೋಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತಾ ಕಾಮಗಾರಿಗೆ ಇಲಾಖೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. +ಜಿಲ್ಲೆಯ ಬಾಬಾಬುಡನ್‌ಗಿರಿ, ಮುಳ್ಳಯ್ಯನಗಿರಿ, ಕಲ್ಲತ್ತಗಿರಿ, ಕುದುರೆಮುಖ, ಕೆಮಣ್ಣುಗುಂಡಿ ಸೇರಿದಂತೆ ಈಗ ಪ್ರವಾಸಿತಾಣಗಳಲ್ಲಿ ಪ್ರಕೃತಿ ಸೌಂದರ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.ವೀಕೆಂಡ್‌ ಬಂದಿತೆಂದರೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಪ್ರವಾಸಿಗರ ದಂಡೇ ಜಿಲ್ಲೆಗೆ ಆಗಮಿಸುತ್ತಿದೆ. +ಅದರಲ್ಲೂ ಎತ್ತಿನಭುಜ ಪ್ರವಾಸಿಗರ ನೆಚ್ಚಿನ ಪ್ರದೇಶವಾಗಿದೆ. ಕಳೆದ ಶನಿವಾರದಿಂದ ಸೋಮವಾರದವರೆಗೆ ಮೂರು ದಿನಗಳ ಅವಧಿಯಲ್ಲಿ 20 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. +ಅದೇನೇ ಇದ್ದರೂ ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುತ್ತಾ ರಜಾದಿನಗಳಲ್ಲಿ ಪ್ರಕೃತಿಯ ಸೌಂದರ್ಯವನ್ನು ಸವಿಯುವಂತಾಗಲಿ. \ No newline at end of file diff --git a/eesanje/url_46_101_8.txt b/eesanje/url_46_101_8.txt new file mode 100644 index 0000000000000000000000000000000000000000..e3b7706e9056650021da49811f3ac674eb445463 --- /dev/null +++ b/eesanje/url_46_101_8.txt @@ -0,0 +1,2 @@ +ರಾಜ್ಯದಲ್ಲಿ ಹೇಗಿತ್ತು ಯೋಗ ದಿನಾಚರಣೆ..? ಚಿತ್ರಗಳಲ್ಲಿ ನೋಡಿ +ರಾಜ್ಯದಲ್ಲಿ ಹೇಗಿತ್ತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ..? ಚಿತ್ರಗಳಲ್ಲಿ ನೋಡಿ \ No newline at end of file diff --git a/eesanje/url_46_101_9.txt b/eesanje/url_46_101_9.txt new file mode 100644 index 0000000000000000000000000000000000000000..c41d42b8c829baf3f096850c0191ff95972ec630 --- /dev/null +++ b/eesanje/url_46_101_9.txt @@ -0,0 +1,9 @@ +ಶಾಲಾ ಕಾಲೇಜುಗಳಲ್ಲಿ ಯೋಗಾಭ್ಯಾಸಕ್ಕೆ ಹೊಸ ರೂಪ : ರಾಜ್ಯಪಾಲರು +ಬೆಂಗಳೂರು, ಜೂ.21– ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿ ಆಯೋಜಿಸಲಾಗಿದ್ದ ಯೋಗಾಭ್ಯಾಸದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಭಾಗವಹಿಸಿದ್ದರು. +ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ನಟ ಶರಣ್‌, ನಟಿ ಅನುಪ್ರಭಾಕರ್‌, ಕ್ರಿಕೆಟರ್‌ ಮನೀಷ್‌ ಪಾಂಡೆ ಸೇರಿದಂತೆ ಅನೇಕರು ಭಾಗವಹಿಸಿದ್ದರು. +ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಐದು ಸಾವಿರ ವರ್ಷಗಳ ಇತಿಹಾಸ ಇರುವ ಯೋಗವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ನಮ ಧರ್ಮ, ಸಂಸ್ಕೃತಿ, ಪದ್ಧತಿಗೆ ಜಾಗತಿಕ ಮಾನ್ಯತೆ ದೊರೆತಿದೆ. ಹಿರಿಯರು ಮಹಾ ಋಷಿಗಳು ಯೋಗಕ್ಕೆ ಬುನಾದಿ ಹಾಕಿಕೊಟ್ಟಿದ್ದಾರೆ. ಜಾತಿ ಧರ್ಮ, ಪ್ರದೇಶ ಮೀರಿ ಇಂದು ಯೋಗ ಬೆಳೆಯುತ್ತಿದೆ ಎಂದರು. +ನನಗೆ ಯೋಗ ಮಾಡಿ ಅಭ್ಯಾಸ ಇಲ್ಲ. ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದೆ. ಈಗ ನಮ ಮನೆಯಲ್ಲಿ ಶ್ರೀಮತಿಯವರು ಯೋಗ ಅಭ್ಯಾಸ ಮಾಡುತ್ತಾರೆ. ಇನ್ನು ಮುಂದೆ ನಾನು ಯೋಗಾಭ್ಯಾಸ ಮಾಡುತ್ತೇನೆ. ಸಚಿವ ದಿನೇಶ್‌ ಒಬ್ಬ ಯೋಗ ಗುರುವನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ ಎಂದರು. +ಇದು ನಮ ಆಸ್ತಿ, ಇದಕ್ಕೆ ಪ್ರೋತ್ಸಾಹ ನೀಡಬೇಕಿದೆ. 10 ದಿನಗಳ ಕಾಲ ಕ್ರೀಡಾಪಟುಗಳು ಹಾಗೂ ಸಿನಿಮಾ ನಟರನ್ನು ಕರೆಸಿ ಯೋಗಾಭ್ಯಾಸದ ಮೂಲಕ ಪ್ರೋತ್ಸಾಹ ನೀಡುತ್ತಿರುವ ಆರೋಗ್ಯ ಇಲಾಖೆಯ ಕಾರ್ಯ ಶ್ಲಾಘನಾರ್ಹ. ಎಲ್ಲರೂ ಹೆಚ್ಚು ಆರೋಗ್ಯವಂತರಾಗಿ, ಹೆಚ್ಚು ದಿನ ಬಾಳಿ ಎಂದು ಹಾರೈಸಿದರು. +ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ ಇದೆ. ಯೋಗ ಕುರಿತು ಹೆಚ್ಚು ಪ್ರಚಾರ ಮಾಡಬೇಕಿದೆ. ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಅಥವಾ ವಾರಕ್ಕೆ ಕೆಲ ತರಗತಿಗಳನ್ನು ಯೋಗ ಅಭ್ಯಾಸ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ. +ಆಯುಷ್‌ ಇಲಾಖೆಯಿಂದ ಇದಕ್ಕೆ ಹೊಸ ರೂಪ ಒದಗಿಸಿಕೊಡಲಾಗುತ್ತದೆ. ಹಿರಿಯರಾಗಿರಲಿ, ಕಿರಿಯರಾಗಿರಲಿ ಪ್ರತಿಯೊಬ್ಬರು ಯೋಗಾಭ್ಯಾಸ ಮಾಡಿ ಆರೋಗ್ಯದಿಂದ ಇರಲಿ ಎಂದರು.ಶರಣ್‌ ಮಾತನಾಡಿ, ಯೋಗ ದೈಹಿಕ ಆರೋಗ್ಯಕ್ಕಷ್ಟೆ ಅಲ್ಲ, ಮಾನಸಿಕವಾಗಿಯು ನಮನ್ನು ಸದೃಢವಾಗಿಸಿ, ಆರೋಗ್ಯಕರ ಜೀವನ ಸಾಗಿಸಲು ಸಹಾಯ ಮಾಡುತ್ತದೆ. ದಿನ ನಿತ್ಯದ ಜೀವನದಲ್ಲಿ ಪ್ರತಿಯೊಬ್ಬರು ಕನಿಷ್ಠ ಅರ್ಧ ಅಥವಾ ಒಂದು ಗಂಟೆ ಯೋಗಾಭ್ಯಾಸ ಮಾಡಬೇಕು ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು. +ಅನುಪ್ರಭಾಕರ್‌ ಮಾತನಾಡಿ, ಸಮಾಜದಲ್ಲಿ ಹೆಚ್ಚಿ ನ ಹಿಂಸೆ, ನೋವು, ಅಸೂಯೆ ಸೇರಿ ನಕಾರಾತಕ ಅಂಶಗಳನ್ನೇ ನೋಡುತ್ತಿದ್ದೇವೆ. ಯೋಗಾಭ್ಯಾಸದಿಂದ ದೇಹ ಸದೃಢವಾಗಿದ್ದರೆ ಮನಸ್ಸು ಸಕಾರಾತಕ ವಾಗಿರುತ್ತದೆ. ಪ್ರತಿಯೊಬ್ಬರು ಯೋಗಾಭ್ಯಾಸ ಮಾಡಬೇಕು.ನಾನು 25 ವರ್ಷಗಳಿಂದ ಯೋಗ ಮಾಡುತ್ತಿ ದ್ದೇನೆ. ಯೋಗಾಭ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.ನಟ ದರ್ಶನ್‌ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಶರಣ್‌ ಹಾಗೂ ಅನುಪ್ರಭಾಕರ್‌ ಉತ್ತರಿಸದೇ ತೆರಳಿದರು. \ No newline at end of file diff --git a/eesanje/url_46_102_1.txt b/eesanje/url_46_102_1.txt new file mode 100644 index 0000000000000000000000000000000000000000..5bba09fd837111260d7b9be8667a54abfe37a980 --- /dev/null +++ b/eesanje/url_46_102_1.txt @@ -0,0 +1,11 @@ +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ +ಬೆಂಗಳೂರು,ಜೂ.21-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇದುವರೆಗೂ 17 ಆರೋಪಿಗಳನ್ನು ಬಂಧಿಸಿರುವ ಪೊಲೀಸರು 28 ಸ್ಥಳಗಳಲ್ಲಿ ಮಹಜರು ನಡೆಸಿ ಬರೋಬ್ಬರಿ 130ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿರುವುದು ತಿಳಿದುಬಂದಿದೆ. +ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದ ಸ್ಥಳದಿಂದ ಕೊಲೆಯಾದ ಪಟ್ಟಣಗೆರೆಯ ಶೆಡ್‌ ಹಾಗು ಮೃತದೇಹ ಪತ್ತೆಯಾದ ಸುಮನಹಳ್ಳಿಯ ರಾಜಕಾಲುವೆ, ಪಾರ್ಟಿ ಮಾಡಿದ ಹೋಟೆಲ್‌, ಮೈಸೂರಿನಲ್ಲಿ ದರ್ಶನ್‌ ತಂಗಿದ್ದ ಹೋಟೆಲ್‌, ಫಾರ್ಮ್‌ ಹೌಸ್‌‍ ಹಾಗೂ ಕೊಲೆಯಾದ ದಿನ ಆರೋಪಿಗಳು ಧರಿಸಿದ್ದಂತಹ ಬಟ್ಟೆ, ಶೂ, ಚಪ್ಪಲಿ ಹಲ್ಲೆಗೆ ಬಳಸಿದ್ದಂತಹ ವಸ್ತುಗಳು, ಆರೋಪಿಗಳ ಮೊಬೈಲ್‌ಗಳು ಸೇರಿದಂತೆ 130ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ವಿಜಯನಗರ ಉಪವಿಭಾಗದ ಪೊಲೀಸರು ಸಂಗ್ರಹಿಸಿದ್ದಾರೆ. +ದರ್ಶನ್‌ ಸೇರಿದಂತೆ 17 ಆರೋಪಿಗಳ ನಿವಾಸಗಳಲ್ಲೂ ಹಾಗೂ ಪ್ರಕರಣ ಸಂಬಂಧ 11 ಪ್ರಮುಖ ಸ್ಥಳಗಳಲ್ಲಿಯೂ ಸ್ಥಳ ಮಹಜರು ಮಾಡಿ ಹಲವು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಒಟ್ಟಾರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಮುಂದುವರೆದಿದೆ. +ಕೇಂದ್ರಬಿಂದುವೇ ಪವಿತ್ರಾಗೌಡ:ಈ ಪ್ರಕರಣದ ಕೇಂದ್ರಬಿಂದು ಪವಿತ್ರಗೌಡ ಎಂಬುದು ಪೊಲೀಸರ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ರೇಣುಕಾಸ್ವಾಮಿ ಮೊಬೈಲ್‌ಗೆ ಪವಿತ್ರಾ ಗೌಡ ತನ್ನ ಮೊಬೈಲ್‌ನಿಂದ ಮೆಸೇಜ್ ಕಳುಹಿಸಿರುವುದನ್ನು ಪೊಲೀಸರು ಪತ್ತೆಹಚ್ಚಿದ್ದು, ಆಕೆಯ ಮೊಬೈಲ್‌ನಲ್ಲಿರುವ ಸಂದೇಶಗಳೇ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿವೆ. +ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ನಗರಕ್ಕೆ ಕರೆತಂದು ಆತನಿಗೆ ಬುದ್ದಿ ಕಲಿಸಬೇಕೆಂದು ಪವಿತ್ರಗೌಡ ಪ್ರಚೋದನೆ ನೀಡಿ ಒತ್ತಡ ಹಾಕಿದ್ದರಿಂದಲೇ ಇಷ್ಟೆಲ್ಲ ರಾದ್ದಾಂತಕ್ಕೆ ಕಾರಣವಾಗಿದೆ ಎಂಬುದು ಗೊತ್ತಾಗಿದೆ. ಹಾಗಾಗಿ ಈ ಪ್ರಕರಣದ ಪ್ರಮುಖ ಕೇಂದ್ರಬಿಂದು ಪವಿತ್ರ ಗೌಡ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ರೇಣುಕಾಸ್ವಾಮಿ ಮೊಬೈಲ್‌ ಇದುವರೆಗೂ ಪತ್ತೆಯಾಗಿಲ್ಲ. ಅವರ ಮೊಬೈಲ್‌ ಸಿಕ್ಕಿದರೆ ಇನ್ನಷ್ಟು ಮಾಹಿತಿಗಳು ಬಯಲಾಗಲಿದ್ದು, ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ. +ವಿನಯ್‌ ಮೊಬೈಲ್‌ ಸಾಕ್ಷ:ದರ್ಶನ್‌ ಆಪ್ತ ವಿನಯ್‌ ಮೊಬೈಲ್‌ನಲ್ಲಿ ಪ್ರಮುಖ ಸಾಕ್ಷ್ಯವಿದ್ದು ಇದು ದರ್ಶನ್‌ ಗ್ಯಾಂಗ್‌ಗೆ ಕಂಟಕವಾಗಲಿದೆ. ವಿನಯ್‌ ಮೊಬೈಲ್‌ಗೆ ಯಾರು ಅದನ್ನು ಕಳುಹಿಸಿದರೆಂಬ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ಕಲೆ ಹಾಕುತ್ತಿದ್ದಾರೆ. +ಡೇಟಾ ರಿಟ್ರೀವ್:ಎಲ್ಲಾ ಆರೋಪಿಗಳ ಮೊಬೈಲ್‌ಗಳ ಡೇಟಾ ರಿಟ್ರೀವ್‌ ಸಂಗ್ರಹಿಸಲು ತನಿಖಾ ತಂಡ ಮುಂದಾಗಿದ್ದು, ಇದರಿಂದ ಮಹತ್ವದ ಸಾಕ್ಷ್ಯ ದೊರೆಯುವ ಸಾಧ್ಯತೆ ಇದೆ. ರಿಟ್ರೀವ್‌ನಿಂದ ಸಂಗ್ರಹಿಸುವ ಸಾಕಷ್ಟ್ಯಗಳು ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಮುಳುವಾಗಲಿದೆ. ಸೈಬರ್‌ ತಜ್ಞರ ನೆರವಿನಿಂದ ಡೇಟ ರಿಟ್ರೀವ್‌ ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳು ವಿಚಾರಣೆ ವೇಳೆ ಸುಳ್ಳು ಹೇಳಿದ್ರೂ ಎಲ್ಲಾ ಆರೋಪಿಗಳಲ್ಲಿರುವ ಸಾಕ್ಷ್ಯಗಳನ್ನು ಸುಳ್ಳು ಎಂದು ಹೇಳಕ್ಕಾಗುವುದಿಲ್ಲ. +ಮೂವರು ವಶಕ್ಕೆ :ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿದ್ದ ಮೂವರು ಪ್ರಕರಣ ಹೊರಬರುತ್ತಿದ್ದಂತೆ ನಾಪತ್ತೆಯಾಗಿದ್ದಾರೆ. ನಿನ್ನೆ ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆ ವಿಡಿಯೋ ಡಿಲಿಟ್‌ ಮಾಡಿರುವುದು ತಿಳಿದುಬಂದಿದೆ. +ಹಲ್ಲೆ ದೃಶ್ಯದ ವಿಡಿಯೋವನ್ನು ಬೇರೆ ಯಾರಿಗಾದರೂ ಫಾವರ್ಡ್‌ ಮಾಡಲಾಗಿದೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗಿದೆ. ಸದ್ಯ ಪೊಲೀಸರು ಈ ಮೂವರ ಮೊಬೈಲ್‌ಗಳ ಡೇಟಾ ರಿಟ್ರೀವ್‌ ಪ್ರಕ್ರಿಯೆ ನಡೆಸುತ್ತಿದ್ದಾರೆ. +ಕಾಣದ ಕೈಗಳು ಶಾಮೀಲು:ಈ ಪ್ರಕರಣದ ಸಾಕ್ಷ್ಯ ನಾಶಕ್ಕೆ ಕಾಣದ ಕೈಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಸಾಕ್ಷ್ಯ ನಾಶಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿರಿರೋರು ಯಾರು? ಬಂಧಿತರಾಗಿರುವ 17 ಆರೋಪಿಗಳನ್ನು ಹೊರತುಪಡಿಸಿ ತೆರೆಮರೆಯಲ್ಲಿ ಸಹಕರಿಸಿದವರ ಬಗ್ಗೆ ಪೊಲೀಸ್‌‍ ಕಸ್ಟಡಿಯಲ್ಲಿರುವ ನಾಲ್ವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. \ No newline at end of file diff --git a/eesanje/url_46_102_10.txt b/eesanje/url_46_102_10.txt new file mode 100644 index 0000000000000000000000000000000000000000..bcc9ec320d390ac2f0763be6b80bf09f8b86bece --- /dev/null +++ b/eesanje/url_46_102_10.txt @@ -0,0 +1,6 @@ +ಆರೋಗ್ಯಕರ ಜೀವನಕ್ಕೆ ನಿತ್ಯ ಯೋಗ ಮಾಡಿ : ಜಗದೀಶ್‌ ಶೆಟ್ಟರ್‌ +ಬೆಳಗಾವಿ,ಜೂ.21-ಆರೋಗ್ಯಕರ ಬದುಕಿಗೆ ಯೋಗ ಅತ್ಯಗತ್ಯ. ಪ್ರತಿದಿನವು ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ತಿಳಿಸಿದರು. +ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌‍, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್‌ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕೆಪಿಟಿಸಿಎಲ್‌ ಭವನದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. +ಯೋಗದಿಂದ ಬೌದ್ಧಿಕ ಬೆಳವಣಿಗೆ ಜತೆಗೆ ಸಾಮಾಜಿಕ ಬದುಕಿನಲ್ಲಿ ಉತ್ತಮ ಜೀವನ ನಡೆಸಲು ಸಹಕಾರಿಯಾಗಲಿದೆ. ಇಂದಿನ ಯುವ ಪೀಳಿಗೆ ತಮ ದಿನಚರಿಯಲ್ಲಿ ಯೋಗ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು. +ಮನುಷ್ಯ ಆಧುನಿಕ ಒತ್ತಡದಿಂದ ಕಲಬೆರಿಕೆ ಆಹಾರದಿಂದ ಶ್ರಮರಹಿತ ಜೀವನದಿಂದ ವೈಜ್ಞಾನಿಕ ಸಾಧನಗಳ ದುರ್ಬಳಕೆ ಹಾಗೂ ದುಶ್ಚಟಗಳಿಂದ ಅನೇಕ ರೋಗಗಳಿಗೆ ಬಲಿಯಾಗಿದ್ದಾನೆ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಎಂದರೆ ಪ್ರಕೃತಿಯನ್ನು ಅರ್ಥ ಮಾಡಿಕೊಂಡು ಸಹಜ, ಸರಳ, ಬದುಕಿನ ಜೊತೆಗೆ ತನ್ನಂತೆ ಇತರೆ ಜೀವಿಗಳಿಗೆ ಬದುಕುವ ಅವಕಾಶ ಕಲ್ಪಿಸಿಕೊಡಬೇಕು ಎಂದರು. +ವಿಧಾನಪರಿಷತ್‌ ಸದಸ್ಯ ಹನುಮಂತ ನಿರಾಣಿ, ಜಿಲ್ಲಾ ಆಯುಷ್‌ ಅಧಿಕಾರಿ ಶ್ರೀಕಾಂತ ಸುಣಧೋಳಿ, ಜರ್ಮನಿ ಹಾಗೂ ಇಂಗ್ಲೆಂಡ್‌ ದೇಶದ ಯೋಗ ಪಟುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೊಲೀಸ್‌‍ ಇಲಾಖೆ ಸಿಬ್ಬಂದಿಗಳು, ಎನ್‌‍ಜಿಓ ಸಂಸ್ಥೆಗಳ ಪ್ರತಿನಿಧಿಗಳು, ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_102_11.txt b/eesanje/url_46_102_11.txt new file mode 100644 index 0000000000000000000000000000000000000000..703c7cad8d4d35de3d4dc9e738506e6d4accf4e3 --- /dev/null +++ b/eesanje/url_46_102_11.txt @@ -0,0 +1,14 @@ +ಬಿಜೆಪಿ-ಜೆಡಿಎಸ್‌‍ ದೋಸ್ತಿಗೆ ಪರೀಕ್ಷೆ, ಚನ್ನಪಟ್ಟಣದಲ್ಲಿ ತ್ಯಾಗ ಮಾಡೋರು ಯಾರು..? +ಬೆಂಗಳೂರು,ಜೂ.21-ಪ್ರತಿಷ್ಠೆಯ ಕಣವಾಗಿ ಪರಿಣಮಿಸಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡುವುದೇ ಬಿಜೆಪಿ ಹಾಗೂ ಜೆಡಿಎಸ್‌‍ಗೆ ಸವಾಲಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಎರಡೂ ಪಕ್ಷಗಳಿಂದ ಒಮತದ ಅಭ್ಯರ್ಥಿ ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಎಲ್ಲಾ ನಾಯಕರಲ್ಲೂ ಇದೆ. ಆದರೆ ಕ್ಷೇತ್ರವನ್ನು ಯಾರು ತ್ಯಾಗ ಮಾಡುತ್ತಾರೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. +ರಾಮನಗರ ಹೇಳಿಕೇಳಿ ಒಂದು ಕಾಲದಲ್ಲಿ ಜೆಡಿಎಸ್‌‍ನ ಭದ್ರಕೋಟೆಯಾಗಿತ್ತು. 2018ರಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಗೆದ್ದಿದ್ದರೆ 2023ರಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಿಂದ ಕೇವಲ ಚನ್ನಪಟ್ಟಣದಲ್ಲಿ ಮಾತ್ರ ಜೆಡಿಎಸ್‌‍ ಗೆದ್ದಿತ್ತು. +ಇದೀಗ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರವನ್ನು ಗೆದ್ದು ಬೀಗಿರುವ ಜೆಡಿಎಸ್‌‍ ಸದ್ಯ ಫೀನಿಕ್‌್ಸನಂತೆ ಮೇಲೆದ್ದಿದೆ. ಅಸ್ತಿತ್ವ ಕಳೆದುಕೊಂಡಿರುವ ಜಿಲ್ಲೆಯಲ್ಲೇ ತನ್ನ ಪ್ರಾಬಲ್ಯ ಮೆರೆಯಬೇಕೆಂಬುದು ದಳಪತಿಗಳ ಲೆಕ್ಕಾಚಾರ. ಕಳೆದೆರಡು ಚುನಾವಣೆಯಲ್ಲಿ ಸೋತು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಮಾಜಿ ಸಚಿವ, ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಕೂಡ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವುದು ಗುಟ್ಟಾಗಿ ಉಳಿದಿಲ್ಲ. +ಚುನಾವಣೆಯಲ್ಲಿ ಸೋತಿದ್ದರೂ ಚನ್ನಪಟ್ಟಣದಲ್ಲಿ ಸೈನಿಕ ತನ್ನದೇ ಆದ ಹಿಡಿತ ಮತ್ತು ಬೆಂಬಲಿಗರನ್ನು ಹೊಂದಿದ್ದಾರೆ. ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. +ಆದರೆ ತಾನು ಗೆದ್ದಿರುವ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಜೆಡಿಎಸ್‌‍ ಒಪ್ಪುತ್ತದೆಯೇ ಎಂದು ಊಹೆಗೂ ನಿಲುಕದ ಪ್ರಶ್ನೆ. ಮಂಡ್ಯ ಲೋಕಸಭೆ ಹಾಗೂ ರಾಮನಗರ ವಿಧಾನಸಭೆಯಲ್ಲಿ ಸೋತು ಸುಣ್ಣವಾಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ತಮ ಪುತ್ರ ನಿಖಿಲ್‌ಕುಮಾರಸ್ವಾಮಿಗೆ ಇದೇ ಕ್ಷೇತ್ರದಿಂದಲೇ ರಾಜಕೀಯ ಪುರ್ನಜನ ನೀಡಬೇಕೆಂಬ ಮಹಾದಾಸೆಯನ್ನು ಹೊಂದಿದ್ದಾರೆ. +ಉಭಯ ಪಕ್ಷಗಳ ನಾಯಕರು ಒಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮೈತ್ರಿಗೆ ಲಾಭವಾಗುತ್ತದೆ ಎಂಬುದು ಲೋಕಸಭೆ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ.ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗುವಂತೆ ಬಿಜೆಪಿ-ಜೆಡಿಎಸ್‌‍ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌‍ಗೆ ಲಾಭವಾಗಲಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ಇಲ್ಲಿ ಕ್ಷೇತ್ರವನ್ನು ಯಾರಿಗೆ ಬಿಟ್ಟು ಕೊಟ್ಟು ತ್ಯಾಗ ಮಾಡುವವರು ಯಾರು ಎಂಬುದು ಎದುರಾಗಿರುವ ಪ್ರಶ್ನೆ. +ಬದಲಾದ ಪರಿಸ್ಥಿತಿ:ಈವರೆಗೂ ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಥಳೀಯ ಕಾರ್ಯಕರ್ತರೊಬ್ಬರು ಕಣಕ್ಕಿಳಿಯಬಹುದೆಂಬ ಲೆಕ್ಕಾಚಾರವಿತ್ತು.ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ಎಲ್ಲರ ಲೆಕ್ಕಾಚಾರವನ್ನು ಬುಡಮೇಲು ಮಾಡಿದೆ. ಏಕೆಂದರೆ ಖುದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಖಾಡಕ್ಕಿಳಿದಿರುವುದು ಚುನಾವಣಾ ಕಾವು ರಂಗೇರುವಂತೆ ಮಾಡಿದೆ. +ಕ್ಷೇತ್ರದ ಮತದಾರರು ಬಯಸಿದರೆ ನಾನು ಸ್ಪರ್ಧಿಸಲು ಸಿದ್ಧ ಎಂದು ಹೇಳಿರುವುದು ಬಿಜೆಪಿ, ಜೆಡಿಎಸ್‌‍ ರಣತಂತ್ರವನ್ನು ಬದಲಾಯಿಸಿದೆ.ಮುಖ್ಯವಾಗಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಸಂಸದರಾಗಿದ್ದ ಡಿ.ಕೆ.ಸುರೇಶ್‌ ಸೋಲು ಅನುಭವಿಸಿದ್ದಾರೆ. ಇದರ ಸೇಡು ತೀರಿಸಿಕೊಳ್ಳಬೇಕೆಂದು ಹಿರಿಯ ಸಹೋದರ, ಡಿಸಿಎಂ ಡಿ.ಕೆ.ಶಿವಕುಮಾರ್‌ ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಹೆಚ್‌ಡಿಕೆ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಅವರು ಶಸಾ್ತ್ರಭ್ಯಾಸಕ್ಕೆ ಇಳಿದಿದ್ದಾರೆ. +ಚನ್ನಪಟ್ಟಣ ಕ್ಷೇತ್ರದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಡಿಕೆಶಿ ಜನರ ನಾಡಿಮಿಡಿತ ಅರಿಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಾರನ್ನು ಸ್ಪರ್ಧೆಗಿಳಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಜನಾಭಿಪ್ರಾಯ ಕಲೆ ಹಾಕುತ್ತಿದ್ದಾರೆ. ಜೆಡಿಎಸ್‌‍ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್‌‍ನಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಪೈಪೋಟಿ ಏರ್ಪಟ್ಟಿದೆ. +ಆದರೆ ಉಪಚುನಾವಣೆಗೆ ಯಾರಿಗೆ ಟಿಕೆಟ್‌ ಎಂಬ ಸುಳಿವನ್ನು ಯಾವ ಪಕ್ಷಗಳೂ ಬಿಟ್ಟುಕೊಟ್ಟಿಲ್ಲ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬೀಗಿರುವ ಕುಮಾರಸ್ವಾಮಿ, ಕೇಂದ್ರದಲ್ಲಿ ಮಂತ್ರಿ ಸ್ಥಾನವನ್ನೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಈ ಕ್ಷೇತ್ರದ ವ್ಯಾಪ್ತಿಗೆ ಬರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌‍ ನಿರೀಕ್ಷೆಗೂ ಮೀರಿದ ಮತಗಳನ್ನು ಪಡೆದಿದೆ. ಇದು ಹೆಚ್‌ಡಿಕೆ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ಅವರಿಗೆ ಹೊಸ ಸವಾಲು ತಂದೊಡ್ಡಿದೆ. +ಅಲ್ಲದೇ, ಮುಂಬರುವ ಉಪಚುನಾವಣೆಯಲ್ಲಿ ಸೋಲೊಪ್ಪಿಕೊಳ್ಳಲು ಹೆಚ್‌ಡಿಕೆ ಅವರಿಗೆ ಸಾಧ್ಯವಿಲ್ಲ. ಇದರ ನಡುವೆ ಡಿಕೆಶಿ ಚನ್ನಪಟ್ಟಣದತ್ತ ತಮ ದೃಷ್ಟಿ ನೆಟ್ಟಿದ್ದಾರೆ. ಚನ್ನಪಟ್ಟಣ ಈ ಹಿಂದೆ ಅವರ ಹಿಡಿತದಲ್ಲಿಯೇ ಇದ್ದ ಕ್ಷೇತ್ರ. ಹೀಗಾಗಿ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.ಬಿಜೆಪಿ- ಜೆಡಿಎಸ್‌‍ನ ಸ್ಥಳೀಯ ಮುಖಂಡರ ದೊಡ್ಡ ಪಟ್ಟಿ ಸಿದ್ಧಪಡಿಸಿ, ಹಂತಹಂತವಾಗಿ ಅವರನ್ನು ತಮತ್ತ ಸೆಳೆಯಲು ಮುಂದಾಗಿದ್ದಾರೆ ಎಂದೇ ಹೇಳಲಾಗುತ್ತಿದೆ. +ಡಿಕೆಶಿ ಕಾರ್ಯತಂತ್ರ ಯಶಸ್ವಿಯಾದರೆ ಖಂಡಿತವಾಗಿಯೂ ಮೈತ್ರಿ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಆದರೆ, ಇದಕ್ಕೆ ಅವಕಾಶ ನೀಡದಂತೆ ಮೈತ್ರಿ ಪಕ್ಷಗಳ ನಾಯಕರಾದ ಹೆಚ್‌ ಡಿಕೆ ಮತ್ತು ಯೋಗೇಶ್ವರ್‌ ರಚಿಸುವ ಚಕ್ರವ್ಯೂಹವನ್ನು ಡಿಕೆಶಿ ಭೇದಿಸಲೇಬೇಕಾಗುತ್ತದೆ. +ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ಗೆ ಚನ್ನಪಟ್ಟಣ ಕ್ಷೇತ್ರ ಕಬ್ಬಿಣದ ಕಡಲೆಯಾಗಿದೆ. ಹಿಂದಿನ ವಿಧಾನಸಭೆ ಉಪಚುನಾವಣೆಗಳು ಆಡಳಿತ ಪಕ್ಷಕ್ಕೆ ಒಲಿದಿರುವ ಸಾಕಷ್ಟು ಉದಾಹರಣೆಗಳಿವೆ. ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದರೂ ಚನ್ನಪಟ್ಟಣವನ್ನು ಅಷ್ಟು ಸುಲಭದಲ್ಲಿ ಕೈವಶ ಮಾಡಿಕೊಳ್ಳಲಾಗದು. ಇದರ ಅಂದಾಜು ಡಿಕೆಶಿಗೆ ಇರುವುದರಿಂದಲೇ ಚುನಾವಣೆ ಘೋಷಣೆಗೂ ಮುನ್ನವೇ ಮತಗಳ ಕ್ರೋಢೀಕರಣಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ. \ No newline at end of file diff --git a/eesanje/url_46_102_12.txt b/eesanje/url_46_102_12.txt new file mode 100644 index 0000000000000000000000000000000000000000..e4bafe455db4aebe30673dedf771b4b73ed04e1c --- /dev/null +++ b/eesanje/url_46_102_12.txt @@ -0,0 +1,12 @@ +ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ +ಬೆಂಗಳೂರು,ಜೂ.21– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕರ್ನಾಟಕ ಇಂದು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ರೈತರು, ಕೂಲಿಕಾರ್ಮಿಕರು, ದೀನದಲಿತರು, ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಬರೀ ಗ್ಯಾರಂಟಿಗಳ ಡಂಗೂರ ಸಾರಲಾಗುತ್ತಿದೆ. ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಿಗೆ ನಯಾಪೈಸಾ ಹಣ ಬಿಡುಗಡೆಯಾಗುತ್ತಿಲ್ಲ. ಆರ್ಥಿಕ ಪರಿಸ್ಥಿತಿ ದಿವಾಳಿ ಹಂತಕ್ಕೆ ತಲುಪಿದೆ ಎಂದು ಆರೋಪಿಸಿದರು. +ರಾಜ್ಯದ ಹಣಕಾಸು ವ್ಯವಸ್ಥೆ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆಂನ್ಸಿ ಸಲಹೆ ಪಡೆಯಲು ಮುಂದಾಗಿರುವುದು ನಮೆಲ್ಲರಿಗೂ ಆಶ್ಚರ್ಯ ಉಂಟು ಮಾಡಿದೆ. 14 ಬಜೆಟ್‌ ಮಂಡಿಸಿರುವ ಮುಖ್ಯಮಂತ್ರಿಗೆ ಹಣಕಾಸು ಇಲಾಖೆ ನಿರ್ವಹಣೆ ಮಾಡಲು ಸಾಧ್ಯವಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. +ಮುಖ್ಯಮಂತ್ರಿಗಳ ಸುತ್ತಮುತ್ತ ಅನೇಕ ಅಧಿಕಾರಿಗಳು ಇದ್ದಾರೆ. ಅಷ್ಟೇಲ್ಲ ಇರುವಾಗ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿಕೊಳ್ಳಲು ಮುಂದಾಗಿರುವುದು ಯಾವ ಪುರುಷಾರ್ಥಕ್ಕೆ? ಎಲ್ಲ ರಂಗಗಳಲ್ಲೂ ವಿಫಲವಾಗಿರುವ ಸರ್ಕಾರ ಜನರ ಪಾಲಿಗೆ ಇದ್ದು ಸತ್ತಂತಾಗಿದೆ ಎಂದು ವಾಗ್ದಾಳಿ ನಡೆಸಿದರು. +ರಾಜ್ಯದಲ್ಲೇ ಅನೇಕ ಐಎಎಸ್‌‍ ಅಧಿಕಾರಿಗಳು ಇದ್ದಾರೆ. ಆರ್ಥಿಕ ತಜ್ಞರಿಗೂ ಕೊರತೆ ಇಲ್ಲ. ಒಬ್ಬ ಸೂಕ್ತ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದರೆ ಹೇಗೆ? ಯಡಿಯೂರಪ್ಪ, ಎಸ್‌‍.ಎಂ.ಕೃಷ್ಣ ಸೇರಿದಂತೆ ಅನೇಕರು ಅಧಿಕಾರದಲ್ಲಿದ್ದಾಗ ಕರ್ನಾಟಕ ಎಲ್ಲಾ ರಂಗಗಳಲ್ಲೂ ಮುಂದಿತ್ತು. ಈಗ ಹಿನ್ನಡೆ ಅನುಭವಿಸುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಅಭಿವೃದ್ದಿಶೀಲ ರಾಜ್ಯ ಮಾಡಬೇಕೆಂಬ ಇಚ್ಛೆ ಇದೆಯೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಬೇಕು. ಇವರ ಕಿತ್ತಾಟದಿಂದ ಬಂಡವಾಳ ಹೂಡುವವರು ಕರ್ನಾಟಕಕ್ಕೆ ಬರುತ್ತಿಲ್ಲ. ನಿಮ ಆಂತರಿಕ ಕಚ್ಚಾಟದಿಂದ ಕರ್ನಾಟಕವನ್ನು ಹಿಂದುಳಿದ ರಾಜ್ಯ ಮಾಡಬೇಡಿ ಎಂದು ಮನವಿ ಮಾಡಿದರು. +ಕರ್ನಾಟಕಕ್ಕೆ ಕಳೆದ ಒಂದು ವರ್ಷದಿಂದ ವಿದೇಶಿ ಬಂಡವಾಳವೇ ಹರಿದುಬರುತ್ತಿಲ್ಲ. ಇಲ್ಲಿ ಬಂಡವಾಳ ಹೂಡಲು ಮೂಲಭೂತ ಸೌಕರ್ಯಗಳ ಕೊರತೆ ಇದೆ. ಒಂದು ವರ್ಷದಲ್ಲಿ ಒಂದೇ ಒಂದು ಕಿ.ಮೀ ರಸ್ತೆ ಕೂಡ ಅಭಿವೃದ್ಧಿಯಾಗಿಲ್ಲ ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಡಂಗೂರ ಸಾರುತ್ತಿದ್ದಾರೆ. ಇವರ ಗ್ಯಾರಂಟಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾರ ತಕ್ಕ ಉತ್ತರ ಕೊಟ್ಟಿದ್ದಾರೆಂದು ಟೀಕಾ ಪ್ರಹಾರ ನಡೆಸಿದರು. +ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧೆ ವಿಚಾರಡಿಕೆಶಿ ಅವರು ಈಗಾಗಲೇ ಶಾಸಕರು ಇದ್ದಾರೆ. ಆದರೂ ಚನ್ನಪಟ್ಟಣದಲ್ಲಿ ಸ್ಪರ್ಧೆಯ ಅಭಿಲಾಷೆ ವ್ಯಕ್ತಪಡಿಸಿದರು.ಇದು ಅವರ ಪಕ್ಷದ ತೀರ್ಮಾನ. ಆದರೂ ಜನರ ಮನದಾಳದಲ್ಲಿ ಏನಿದೆ ಅನ್ನೋದು ಇನ್ನೂ ನಿಗೂಢವಾಗಿದ. ಬೆಂಗಳೂರು ಗ್ರಾಮೀಣ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸುವವರೇ ಇಲ್ಲ ಅಂದುಕೊಂಡಿದ್ದರು. ಆದರೆ ಜನರ ತೀರ್ಪು ಏನಿತ್ತು ಎಂಬುದು ಎಲ್ಲರೂ ನೋಡಿದ್ದೀರ ಎಂದರು. +ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ ಅಭ್ಯರ್ಥಿ ಯಾರಾಗಬೇಕು ಎಂಬು ನಾವು ಮತ್ತು ಜೆಡಿಎಸ್‌‍ ನಾಯಕರು ಅತೀ ಶೀಘ್ರದಲ್ಲೇ ತೀರ್ಮಾನ ಮಾಡುತ್ತೇವೆ ಅಂತ ಹೇಳಿದರು. +ಹರೀಶ್‌ಗೂ ಎಚ್ಚರಿಕೆ:ದಾವಣಗೆರೆ ಸೋಲಿಗೆ ಯಡಿಯೂರಪ್ಪ, ವಿಜಯೇಂದ್ರ ಕಾರಣ ಎಂಬ ಶಾಸಕ ಬಿ.ಪಿ.ಹರೀಶ್‌ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ ಶಾಸಕ ಮಿತ್ರ ಹರೀಶ್‌ ಆಗಲೀ ಅಥವಾ ಬೇರೆ ಯಾರೇ ಆಗಲೀ ಅವರಿಗೆ ಒಂದು ಮಾತು ಹೇಳುತ್ತೇನೆ. ಬಹಿರಂಗವಾಗಿ ಹೇಳಿಕೆ ಕೊಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದರೆ ಹೇಳಲಿ, ನನ್ನದೇನೂ ತಕರಾರಿಲ್ಲ. ಆದರೆ ನಾನು ರಾಜ್ಯಾಧ್ಯಕ್ಷ ಆಗಿ ಮನವಿ ಮಾಡುವುದೇನೆಂದರೆ, ಏನೇ ಸಮಸ್ಯೆ ಇದ್ದರೂ ಪಕ್ಷದ ಕಚೇರಿಗೆ ಬಂದು ಚರ್ಚೆ ಮಾಡಿ ಈ ರೀತಿ ಹೇಳಿಕೆ ಕೊಡುವುದರಿಂದ ಪಕ್ಷಕ್ಕೂ ಲಾಭ ಆಗಲ್ಲ. ಸಂಘಟನೆಗೂ ಲಾಭ ಅಲ್ಲ. ಬಿಜೆಪಿಯಲ್ಲಿ ಗುಂಪುಗಾರಿಕೆ ಜಾಸ್ತಿ ಆಗುತ್ತಿಲ್ಲ, ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ಹೇಳಿದರು. +ಸಂಸದರಿಗೆ ಸನಾನ:ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಬಿಜೆಪಿ ಹಾಗೂ ಜೆಡಿಎಸ್‌‍ನ ಕೇಂದ್ರ ಸಚಿವರು ಹಾಗೂ ಸಂಸದರಿಗೆ ನಾಳೆ ದಿನ ನಗರದ ಅರಮನೆ ಮೈದಾನದಲ್ಲಿ ಸನಾನ ಕಾರ್ಯಕ್ರಮ ಹಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ- ಜೆಡಿಎಸ್‌‍ನಿಂದ ಆಯ್ಕೆಯಾಗಿರುವ 19 ಸಂಸದರಿಗೆ ಸನಾನ ಮಾಡಲಾಗುವುದು ಎಂದುಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈವಿಜಯೇಂದ್ರ ಇದೇ ವೇಳೆ ತಿಳಿಸಿದರು. \ No newline at end of file diff --git a/eesanje/url_46_102_2.txt b/eesanje/url_46_102_2.txt new file mode 100644 index 0000000000000000000000000000000000000000..773341893960e2b85d3f46c049221ac308fb2a00 --- /dev/null +++ b/eesanje/url_46_102_2.txt @@ -0,0 +1,6 @@ +ಪರಪ್ಪನ ಅಗ್ರಹಾರ ಜೈಲಲ್ಲಿ ರಾತ್ರಿ ನಿದ್ದೆಯಿಲ್ಲದೆ ಒದ್ದಾಡಿದ ಪವಿತ್ರಾಗೌಡ +ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿದ್ದೆಯಿಲ್ಲದೆ ಚಡಪಡಿಸಿದ್ದಾರೆ. ನಿನ್ನೆ ಪವಿತ್ರಗೌಡ ಸೇರಿದಂತೆ 9 ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. +ಆರೋಪಿ ಪವಿತ್ರ ಗೌಡಗೆ ನಿನ್ನೆ ರಾತ್ರಿ ನಿದ್ದೆಯೇ ಬರಲಿಲ್ಲವಂತೆ. 11 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದ ಅವರು, ಸರಿಯಾಗಿ ನಿದ್ದೆ ಬಾರದೆ ಪದೇ ಪದೇ ಎದ್ದು ಕುಳಿತಿದ್ದಾರೆ. ಐಷರಾಮಿ ಜೀವನ ನಡೆಸುತ್ತಿದ್ದ ಪವಿತ್ರ ಗೌಡ ಜೈಲಿನಲ್ಲಿ ರಾತ್ರಿ ಕಳೆಯಲು ಚಡಪಡಿಸಿದ್ದಾರೆ. +ಬೆಳಗ್ಗೆ 5 ಗಂಟೆಗೆ ಎದ್ದು ಜೈಲಿನ ಬ್ಯಾರೆಕ್ನಲ್ಲಿ ವಾಕಿಂಗ್ ಮಾಡಿ ಬಳಿಕ ಜೈಲಿನ ಸಿಬ್ಬಂದಿ ನೀಡಿದ ಕಾಫಿ ಕುಡಿದು ಪೇಪರ್ ಓದಿ, ಜೈಲಿನ ತಿಂಡಿ ತಿಂದಿದ್ದಾರೆ ಎಂದು ತಿಳಿದುಬಂದಿದೆ. +ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯೇ ಈ ಪವಿತ್ರಗೌಡ. ಕೃತ್ಯಕ್ಕೆ ಪ್ರಮುಖ ಕಾರಣಕರ್ತೆಯಾಗಿದ್ದು, ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಸಂಚು ರೂಪಿಸಿರುವುದು ಮತ್ತುಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸರ ತನಿಖೆಯಲ್ಲಿ ದೃಢಪಟ್ಟಿದೆ. +2ನೇ ಆರೋಪಿಯು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೋಗಪಡಿಸಿಕೊಂಡಿರುವುದು ಸಾಕ್ಷಾಧಾರಗಳಿಂದ ಕಂಡುಬಂದಿರುತ್ತದೆ. \ No newline at end of file diff --git a/eesanje/url_46_102_3.txt b/eesanje/url_46_102_3.txt new file mode 100644 index 0000000000000000000000000000000000000000..5838d7f5966d884a662f859fc9eece4be220d67b --- /dev/null +++ b/eesanje/url_46_102_3.txt @@ -0,0 +1,8 @@ +ಭಾರತ ಯೋಗದ ಮೂಲಕ ಇಡೀ ಜಗತ್ತನ್ನು ಬೆಸೆದಿದೆ : ಹೆಚ್ಡಿಕೆ +ನವದೆಹಲಿ, ಜೂ.21-ಪ್ರತಿಯೊಬ್ಬರೂ ಯೋಗವನ್ನು ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್‌.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.ನವದೆಹಲಿಯ ನೋಯ್ಡಾದ ಭಾರತ್‌ ಹೆವಿ ಎಲೆಕ್ಟ್ರಿಕಲ್‌ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. +ಜಗತ್ತಿಗೆ ಭಾರತ ಕೊಟ್ಟ ಅಮೂಲ್ಯ ಕೊಡುಗೆ ಯೋಗ. ಯೋಗದ ಮೂಲಕ ಇಡೀ ಜಗತ್ತನ್ನು ಭಾರತದ ಬೆಸೆದಿದೆ. ಯೋಗವೆಂದರೆ ಜೋಡಿಸು, ಸೇರಿಸು, ಕೂಡಿಸು ಎಂಬ ಅರ್ಥ ಬರುತ್ತದೆ. ಅದಕ್ಕೆ ಸಾರ್ಥಕತೆ ತರುವ ನಿಟ್ಟಿನಲ್ಲಿ ಯೋಗ ಇಡೀ ಜಗತ್ತನ್ನು ಬೆಸೆದುಕೊಂಡು ಬೆಳಗುತ್ತಿದೆ ಎಂದು ಅವರು ಹೇಳಿದರು. +ಋಷಿ ಮುನಿಗಳು ನಮಗೆ ಯೋಗವನ್ನು ಕೊಟ್ಟು ಹೋದರು. ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಿ ಭಾರತದ ನೆಲದಲ್ಲಿ ನಿಂತು ಜಗತ್ತನ್ನು ನೋಡುವ ಹಿರಿಮೆಯನ್ನು ತಂದುಕೊಟ್ಟರು. ಇದಕ್ಕಾಗಿ ನಾನು ಪ್ರಧಾನಿಗಳನ್ನು ಮನಸಾರೆ ಅಭಿನಂದಿಸುತ್ತೇನೆ ಎಂದರು. +ಯೋಗ ವಿಕಾಸಕ್ಕೆ ಪೂರಕ :ಯೋಗದ ಮೂಲಕ ಮಾಡುವ ಸಾಧನೆ ಭವ್ಯ ಭಾರತಕ್ಕೆ ಪೂರಕ. ವಿಕಾಸಕ್ಕೆ ಪೂರಕ. ಮನುಕುಲಕ್ಕೆ ಪೂರಕ. ಸಾಧನೆಯ ಮೆಟ್ಟಿಲೇರಲು ಕೂಡ ಪೂರಕ. ಒಟ್ಟಾರೆಯಾಗಿ ಯೋಗವು ನಮನ್ನು ಸಾಧಕರನ್ನಾಗಿ ಮಾಡಿ ದೇಶವನ್ನು ರಚನಾತಕವಾಗಿ ಕಟ್ಟುತ್ತದೆ ಎಂದು ಸಚಿವ ಕುಮಾರಸ್ವಾಮಿ ಅವರು ಒತ್ತಿಹೇಳಿದರು. +ಯೋಗವು ನಮ ಆತವಿಶ್ವಾಸವನ್ನು ಹೆಚ್ಚಿಸುತ್ತದೆ ಮತ್ತು ಮನಸ್ಸನ್ನು ನಿಯಂತ್ರಿಸುತ್ತದೆ. ಯೋಗವು ನಮ ಮನಸ್ಸು ಮತ್ತು ದೇಹವನ್ನು ಪುನರುಜ್ಜೀವನಗೊಳಿಸುತ್ತದೆ. ಪ್ರತಿದಿನ ಯೋಗ ಮಾಡುವ ಮೂಲಕ ನಾವೆಲ್ಲರೂ ನಮ ದೇಹ, ಮನಸ್ಸು ಚೈತನ್ಯಶೀಲವಾಗಿರುತ್ತದೆ ಎಂದು ಅವರು ನುಡಿದರು. +ಮನಸ್ಸು, ದೇಹ ಎರಡೂ ಸನಾರ್ಗದಲ್ಲಿ ನಡೆಯುವಂತೆ ಮಾಡುವ ಯೋಗಕ್ಕೆ 5,000 ವರ್ಷಗಳ ಇತಿಹಾಸವಿದೆ. ಋಗ್ವೇದದಲ್ಲಿ ಯೋಗದ ಬಗ್ಗೆ ಉಲ್ಲೇಖವಿದೆ ಎಂದು ನಾನು ಕೇಳಿದ್ದೇನೆ. ಅಂತ ಯೋಗ ನಮ ದೇಶಕ್ಕೆ ಆರೋಗ್ಯವಂತ ಮಾನವ ಸಂಪನೂಲವನ್ನು ಸೃಷ್ಟಿ ಮಾಡುತ್ತಿದೆ. ದೃಢತೆಯ ನಾಯಕತ್ವಕ್ಕೆ ಯೋಗ ದೊಡ್ಡ ಕಾಣಿಕೆ ನೀಡುತ್ತಿದೆ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು. +ಪ್ರಧಾನಿಗಳು ಯುವಕರಿಗೆ ಪ್ರೇರಣೆ :ನಾನು ಕಂಡ ಹಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಯೋಗವನ್ನೇ ಬದುಕು ಮಾಡಿಕೊಂಡಿರುವ ನಿಜಯೋಗಿ. ಬಹುಶಃ ಅವರ ಜೀವನ ಶೈಲಿ, ಯೋಗದ ಕಡೆಗಿನ ಒಲವು ಈ ತಲೆಮಾರಿನ ಯುವಕರಿಗೆ ಪ್ರೀರಣೆ ಎಂದು ಬಲವಾಗಿ ನಂಬಿದೇನೆ. ಐದು ಸಾವಿರ ವರ್ಷಗಳಿಂದ ಭಾರತ ನೆಲದಲ್ಲಿ ನಮ ಜೀವನ ಶೈಲಿಯೇ ಆಗಿರುವ ಯೋಗವನ್ನು ವಿಶ್ವಸಂಸ್ಥೆಗೆ ತೆಗೆದುಕೊಂಡು ಹೋದ ಪ್ರಧಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು. \ No newline at end of file diff --git a/eesanje/url_46_102_4.txt b/eesanje/url_46_102_4.txt new file mode 100644 index 0000000000000000000000000000000000000000..f0da589d7513369f28aa3e0fd95789c7c2b90878 --- /dev/null +++ b/eesanje/url_46_102_4.txt @@ -0,0 +1,9 @@ +ಕುತೂಹಲ ಕೆರಳಿಸಿದೆ ಚನ್ನಪಟ್ಟಣ ಉಪಚುನಾವಣೆ ಕುರಿತ ಡಿಕೆಶಿ ಹೇಳಿಕೆ +ಬೆಂಗಳೂರು, ಜೂ.21-ಜನ ಬಯಸಿದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ವಿಧಿ ಇಲ್ಲದೆ ತಾವೇ ಅಭ್ಯರ್ಥಿಯಾಗುವುದಾಗಿ ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್‌ ಇಂದು ಬೇರೆ ರೀತಿಯ ಮಾತುಗಳ ಮೂಲಕ ಕುತೂಹಲ ಕೆರಳಿಸಿದ್ದಾರೆ. +ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕನಕಪುರದಲ್ಲಿ ಶಾಸಕನಾಗಿದ್ದೇನೆ. ಪಕ್ಷದ ಅಧ್ಯಕ್ಷ, ಜವಾಬ್ದಾರಿ ಇದೆ. ಎಲ್ಲಾ ಕ್ಷೇತ್ರಗಳು ನನ್ನವು. ನನ್ನದೇ ಮುಖಂಡತ್ವ. ನನ್ನದೇ ನಾಯಕತ್ವ. ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೊತೆಯಾಗಿ ಉಪ ಚುನಾವಣೆ ನಡೆಸುತ್ತೇವೆ ಎಂದರು. +ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಗೆದ್ದರೆ ಕನಕಪುರ ಕ್ಷೇತ್ರ ಖಾಲಿಯಾಗಬಹುದು. ಆಗ ಮತ್ತೊಂದು ಉಪಚುನಾವಣೆ ನಡೆದರೆ ದೇಶದ ಸಂಪತ್ತು ಅನಗತ್ಯ ವೆಚ್ಚವಾಗುತ್ತದೆ ಎಂದು ಮಾಜಿ ಸಚಿವ ಬಿಜೆಪಿಯ ಎಸ್‌‍.ಸುರೇಶ್‌ ಕುಮಾರ್‌ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಯವರು, ಕನಕಪುರಕ್ಕೆ ಉಪಚುನಾವಣೆ ಏಕೆ ಬರುತ್ತದೆ ಎಂದು ಮರು ಪ್ರಶ್ನಿಸಿದರು. ನನ್ನ ಜಿಲ್ಲೆ, ನನ್ನದೇ ನಾಯಕತ್ವ ಎಂದು ಹೇಳುವ ಮೂಲಕ ಬದಲಿ ಅಭ್ಯರ್ಥಿಯ ಸುಳಿವು ನೀಡಿದ್ದಾರೆ. +ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಿಂದ ಹಿಂದೆ ಸರಿದು ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆಯೇ ? ಉಪಚುನಾವಣೆಯಲ್ಲಿ ತಾವೇ ಅಭ್ಯರ್ಥಿ ಎಂದು ಪ್ರಚಾರ ಮಾಡಿ, ಗೆಲ್ಲುವ ತಂತ್ರ ಅನುಸರಿಸಿದ್ದಾರೆಯೇ ಎಂಬ ಪ್ರಶ್ನೆಗಳು ಕಾಡಲಾರಂಭಿಸಿವೆ. +ಕಳೆದ ಎರಡು ದಿನಗಳ ಹಿಂದೆ ಡಿ.ಕೆ.ಶಿವಕುಮಾರ್‌ ನೀಡಿದ್ದ ಹೇಳಿಕೆಯಲ್ಲಿ ಚನ್ನಪಟ್ಟಣದಲ್ಲಿ ತಾವೇ ಅಭ್ಯರ್ಥಿಯಾಗುವ ಅರ್ಥದಲ್ಲಿ ಮಾತನಾಡಿದರು. ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿ ಗೆದ್ದರೆ, ಕನಕಪುರ ಕ್ಷೇತ್ರ ತೆರವಾಗಲಿದೆ. ಅಲ್ಲಿ ಮಾಜಿ ಸಂಸದ ಹಾಗೂ ಸಹೋದರ ಡಿ.ಕೆ.ಸುರೇಶ್‌ರನ್ನು ಅಭ್ಯರ್ಥಿ ಮಾಡಲಿದ್ದಾರೆ ಎಂಬ ಚರ್ಚೆಗಳಿದ್ದವು. ಈಗ ಡಿ.ಕೆ.ಶಿವಕುಮಾರ್‌ ನನ್ನದೆ ನಾಯಕತ್ವ ಎಂದು ಹೇಳುವ ಮೂಲಕ ಚರ್ಚೆಯ ಆಯಾಮವನ್ನು ಬದಲು ಮಾಡಿದ್ದಾರೆ. +ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದರೆ ಅವರ ರಾಜಕೀಯ ಜೀವನ ಅಂತ್ಯವಾಗಲಿದೆ ಎಂದು ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ ರಾಜಕೀಯ ಭವಿಷ್ಯ ತೀರ್ಮಾನಿಸುವುದು ಜನ. ಯೋಗೇಶ್ವರ್‌ ದೊಡ್ಡವರು, ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಅದಕ್ಕೆ ನನಗೆ ಸಮಯವೂ ಇಲ್ಲ ಎಂದರು. +ನಾನು ಆ ಜಿಲ್ಲೆಯವನು, ನನಗೆ ಶಕ್ತಿ ಕೊಡಿ, ನಿಮ ಋಣತೀರಿಸುತ್ತೇನೆ ಎಂದು ಮತದಾರರಲ್ಲಿ ಕೇಳಿಕೊಂಡಿದ್ದೇನೆ. ವಿಶ್ವಾಸ ಇದ್ದರೆ ಬೆಂಬಲಿಸುತ್ತಾರೆ. ನನ್ನ ಹಿಂದೆ ಒಂದು ಶಕ್ತಿ ಇದೆ. ಅದು ಮತ್ತು ಜನ ನನ್ನ ರಾಜಕೀಯ ಅಂತ್ಯ ಬರೆಯುತ್ತಾರೆಯೇ ಹೊರತು ಬೇರೆಯವರಲ್ಲ ಎಂದು ತಿರುಗೇಟು ನೀಡಿದರು. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‌ ಹೊರತು ಪಡಿಸಿ ಬೇರೆಯವರು ಗೆಲ್ಲಲು ಸಾಧ್ಯವಿಲ್ಲ ಎಂದು ಕೊಂಡಿದ್ದರು. ಈಗ ಏನಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಲೇವಡಿ, ಅವರು ದೊಡ್ಡವರು ನಾನು ಪ್ರತಿಕ್ರಿಯಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಜಾರಿಕೊಂಡರು. \ No newline at end of file diff --git a/eesanje/url_46_102_5.txt b/eesanje/url_46_102_5.txt new file mode 100644 index 0000000000000000000000000000000000000000..b5ef83a4c1649b606e1e76616a200794fa0247a6 --- /dev/null +++ b/eesanje/url_46_102_5.txt @@ -0,0 +1,12 @@ +ದರ್ಶನ್‌ ಪ್ರಕರಣದಲ್ಲಿ ಯಾವ ಪಕ್ಷದವರಾದರೂ ತಪ್ಪಿತಸ್ಥರಿಗೆ ಶಿಕ್ಷೆ : ಪರಮೇಶ್ವರ್ +ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಬಿಜೆಪಿ ಅಥವಾ ಕಾಂಗ್ರೆಸ್‌‍ ಎಂದು ಪಕ್ಷದ ಆಧಾರದ ಮೇಲೆ ನೋಡುವುದಿಲ್ಲ. ಯಾವ ತಪ್ಪು ನಡೆದಿದೆ ಎಂಬ ಪುರಾವೆ ಮೂಲಕವೇ ಕ್ರಮ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ನಟ ದರ್ಶನ್, ಇತರ ನಾಲ್ಕು ಜನರನ್ನು ಒಂದು ವಾರ ಪೊಲೀಸ್‌‍ ಕಸ್ಟಡಿಗೆ ಕೇಳಲಾಗಿತ್ತು, ನ್ಯಾಯಾಲಯ ಎರಡು ದಿನ ಕಸ್ಟಡಿಗೆ ನೀಡಿದೆ. ಅಷ್ಟರಲ್ಲಿ ತನಿಖೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದರು. +ಬಿಜೆಪಿ ಶಾಸಕರೊಬ್ಬರೊಬ್ಬರ ಸಂಬಂಧಿ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್‌‍ ಶಾಸಕ ಪೊನ್ನಣ್ಣ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಕ್ಷದ ಆಧಾರದ ಮೇಲೆ ಈ ಪ್ರಕರಣವನ್ನು ನೋಡುವುದಿಲ್ಲ. ತಪ್ಪಿತಸ್ಥರು ಯಾರೇ ಇರಲಿ, ಯಾವ ಪಕ್ಷದಲ್ಲೇ ಇರಲಿ ಅದು ಮುಖ್ಯವಲ್ಲ. ಒಂದು ವೇಳೆ ನಮದೇ ಪಕ್ಷದಲ್ಲಿ ಇದ್ದರೂ ಮಾಡಿರುವ ತಪ್ಪನ್ನಷ್ಟೆ ನೋಡುತ್ತೇವೆ. ಇಲ್ಲಿ ಪಕ್ಷದ ವಿಷಯ ತರಲು ಬಯಸುವುದಿಲ್ಲ ಎಂದರು. +ಪ್ರಕರಣದಲ್ಲಿ ಪ್ರಭಾವ ಬೀರಲು ಈವರೆಗೂ ಯಾರು ಮಧ್ಯ ಪ್ರವೇಶಿಸಿಲ್ಲ. ಅದರ ಅವಶ್ಯಕತೆಯೂ ಇಲ್ಲ. ನನ್ನ ಬಳಿಯಾಗಲಿ, ಮುಖ್ಯಮಂತ್ರಿಯಾಗಲಿ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.ನಟ ದರ್ಶನ್‌ ನ್ಯಾಯಾಂಗ ಬಂಧನಕ್ಕೆ ಹೋದಾಗ ಜೈಲಿನಲ್ಲಿ ಎಲ್ಲಾ ರೀತಿಯ ಸವಲತ್ತುಗಳು ಇರುತ್ತವೆ ಎಂಬ ಚರ್ಚೆಗಳು ನಡೆಯುತ್ತಿರಬಹುದು. ಆದರೆ ಆ ರೀತಿ ವಿಶೇಷ ಸೌಲಭ್ಯ ಸಿಗದಂತೆ ಎಚ್ಚರಿಕೆ ವಹಿಸಲಾಗುವುದು. +ಜೈಲಿನಲ್ಲಿ ಎಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬ ಆರೋಪವನ್ನು ನಾನು ಅಲ್ಲಗಳೆಯುವುದಿಲ್ಲ. ಹಿಂದೆಲ್ಲಾ ಮೊಬೈಲ್‌ ಸೇರಿದಂತೆ ಅನೇಕ ವಸ್ತುಗಳು ಸಿಗುತ್ತವೆ ಎಂದು ತಿಳಿದು ಬಂದಿದೆ.. ಜೈಲಿನ ಅಧಿಕಾರಿಗಳಿಗೆ ಆ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸುತ್ತೇವೆ. ಕಾಲಕಾಲಕ್ಕೆ ಅಧಿಕಾರಿಗಳು ಕ್ರಮ ಬದ್ಧ ಗೊಳಿಸುತ್ತಾರೆ. ಆದರೂ ಕಣ್ಣು ತಪ್ಪಿಸಿ ತೆಗೆದುಕೊಂಡು ಹೋಗುವುದು ನಡೆದಿದೆ ಎಂದರು. +ಅಯೋಧ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ್ದಾರೆ ಎಂಬ ಕಾರಣಕ್ಕೆ ದಾಖಲಾದ ಪ್ರಕರಣದಲ್ಲಿ ಯು ಟೂಬರ್‌ ಅಜಿತ್‌ ಭಾರತಿಯನ್ನು ಬಂಧಿಸಲು ತೆರಳಿದ ಕರ್ನಾಟಕದ ಪೊಲೀಸರು ತಪ್ಪೇನು ಮಾಡಿಲ್ಲ ಎಂದು ಸಚಿವರು ಇದೇ ವೇಳೆ ಸಮರ್ಥಿಸಿಕೊಂಡರು. +ರಾಜ್ಯದಿಂದ ತೆರಳಿದ್ದ ಪೊಲೀಸರನ್ನು ತಡೆದಿರುವ ಉತ್ತರ ಪ್ರದೇಶದ ಪೊಲೀಸರು ಮೊದಲು ನೋಟಿಸ್‌‍ ಕೊಡಿ, ವಾರೆಂಟ್‌ ಇಲ್ಲದೆ ಬಂಧಿಸಬೇಡಿ ಎಂದಿದ್ದಾರೆ. ನಮ ಪೊಲೀಸರು ಮಫ್ತಿಯಲ್ಲಿ ಹೋಗಿದ್ದರು, ಸ್ಥಳೀಯ ಪೊಲೀಸ್‌‍ ಠಾಣೆಗೆ ಮೊದಲೇ ಮಾಹಿತಿ ನೀಡಬೇಕಿತ್ತು, ನೀಡಿಲ್ಲ. ಅಲ್ಲಿಗೆ ಹೋದ ಮೇಲೆ ವಿಷಯ ತಿಳಿಸಿ, ಸಹಾಯ ಪಡೆದಿದ್ದಾರೆ. ಆಗ ಉತ್ತರ ಪ್ರದೇಶದ ಪೊಲೀಸರು ನೋಟಿಸ್‌‍ ಕೊಡಿ ಎಂದಿದ್ದಾರೆ. ಅದರಂತೆ ನಮ ಪೊಲೀಸರು ನೋಟಿಸ್‌‍ ಕೊಟ್ಟು ಬಂದಿದ್ದಾರೆ. ಅಜಿತ್‌ ಭಾರತಿ ವಿಚಾರಣೆಗೆ ಹಾಜರಾಗಬೇಕು, ಇಲ್ಲವಾದರೆ ವಾರೆಂಟ್‌ ಪಡೆದು ಬಂಧಿಸಿ ಕರೆತರಲಾಗುವುದು. ಕೆಲವು ಸಂದರ್ಭದಲ್ಲಿ ಇಂತಹ ಗೊಂದಲಗಳಾಗುತ್ತವೆ ಎಂದು ಹೇಳಿದರು. +ವಾಲಿಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬ್ಯಾಂಕ್‌ನಲ್ಲಾಗಿರುವ ಲೋಪ ದೋಷಗಳ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಇಲಾಖಾ ಮಟ್ಟದಲ್ಲಾಗಿರುವ ತಪ್ಪು ಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ರಚನೆ ಮಾಡಿದೆ. ಸಿಬಿಐ ಈವರೆಗೂ ರಾಜ್ಯ ಸರ್ಕಾರಕ್ಕೆ ಇಲಾಖೆಗಳ ತನಿಖೆಗೆ ಅನುಮತಿ ನೀಡಿ ಎಂದು ಪತ್ರ ಬರೆದಿಲ್ಲ ಎಂದರು. +ಕ್ರಮ ಅನಿವಾರ್ಯ:ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ 15 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆ ಇತ್ತು. ಅಧ್ಯಕ್ಷರು ಆ ನಿಟ್ಟಿನಲ್ಲಿ ಹೈಕಮಾಂಡ್‌ಗೆ ಭರವಸೆ ನೀಡಿದ್ದರು. ಆದರೆ ನಿರೀಕ್ಷಿತ ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿ ಇದ್ದರೂ ಕಡಿಮೆ ಕ್ಷೇತ್ರಗಳಲ್ಲಿ ಗೆದ್ದಿರುವುದಕ್ಕೆ ಆತಾವಲೋಕನ ನಡೆಯಲಿದೆ, ಹೈಕಮಾಂಡ್‌ ಸತ್ಯಶೋಧನಾ ಸಮಿತಿಯನ್ನು ರಚನೆ ಮಾಡಿದೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್‌ ಮಿಸ್ತ್ರಿ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಮಿತಿ ಯಾವ ವರದಿ ನೀಡಲಿದೆ, ಅದನ್ನು ಪರಿಗಣಿಸಿ ಪಕ್ಷದ ವರಿಷ್ಠರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡುತ್ತೇವೆ. ಸರ್ಕಾರ ಇರುವ ಕಡೆ ಮತ್ತು ಸರ್ಕಾರ ಇಲ್ಲದ ಕಡೆ ಬೇರೆ ಬೇರೆ ರೀತಿಯ ಕ್ರಮಗಳಾಗುತ್ತವೆ ಎಂದು ಹೇಳಿದರು. +ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅಥವಾ ತಾವೇ ಕಣಕ್ಕಿಳಿಯುವ ಇರಾದೆಯನ್ನು ಪಕ್ಷದ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವ್ಯಕ್ತ ಪಡಿಸಿದ್ದಾರೆ. ಅವರ ಸಹೋದರ ಡಿ.ಕೆ.ಸುರೇಶ್‌ ಲೋಕಸಭೆಯಲ್ಲಿ ಗೆಲ್ಲಬೇಕಿತ್ತು. ಸೋಲಾಗಿದೆ. ಹೀಗಾಗಿ ಮುಂದೆ ಜಿಲ್ಲೆಯನ್ನು ಭದ್ರ ಪಡಿಸಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದರು. +ಚನ್ನಪಟ್ಟಣದಲ್ಲಿ ಕಾಂಗ್ರೆಸ್‌‍ಗೆ ನೆಲೆ ಇದೆ. ಹಿಂದೆ ಹಲವು ಬಾರಿಗೆ ನಮ ಅಭ್ಯರ್ಥಿಗಳು ಗೆದ್ದಿದ್ದಾರೆ. ಸಾಂದರ್ಭಿಕವಾಗಿ ಮತದಾರರು ಬೇರೆಯವರನ್ನು ಆಯ್ಕೆ ಮಾಡಿರಬಹುದು. ನನ್ನ ಕ್ಷೇತ್ರದಲ್ಲೂ ಒಮೆ ಸೋಲು ಕಂಡಿದ್ದೇನೆ. ಮತ್ತೊಮೆ ಗೆದ್ದಿದ್ದೇನೆ. ಸೋಲು ಕಂಡಾಕ್ಷಣ ಮತದಾರರೇ ಇಲ್ಲ ಎಂದು ಭಾವಿಸಬೇಕಿಲ್ಲ. ನನ್ನ ಕ್ಷೇತ್ರದಲ್ಲಿ ನಾನು ಸೋತಿದ್ದು ಎನ್ನುವ ಮೂಲಕ ಸೋಲಿಸಿದ್ದು ಎಂಬ ವ್ಯಾಖ್ಯಾನಕ್ಕೆ ನಕಾರ ವ್ಯಕ್ತ ಪಡಿಸಿದರು. \ No newline at end of file diff --git a/eesanje/url_46_102_6.txt b/eesanje/url_46_102_6.txt new file mode 100644 index 0000000000000000000000000000000000000000..ea455e869934b90a88ec93b822095ec778837b71 --- /dev/null +++ b/eesanje/url_46_102_6.txt @@ -0,0 +1,5 @@ +ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ‌ ನೇಮಕ‌ ಕುರಿತು ‘ಮಹಾ’ ಸರ್ಕಾರಕ್ಕೆ ಪತ್ರ +ಬೆಂಗಳೂರು: ಜೂ.21 :ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಹೀಗಾಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. +ಈ ಹಿಂದೆಯೂ ಕೇರಳ‌ ಸರ್ಕಾರ ಇದೇ ರೀತಿ ಕಾಸರಗೋಡಿನಲ್ಲಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳಂ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ನಮ್ಮ ಮಧ್ಯ ಪ್ರವೇಶದ ಬಳಿಕ ಕೇರಳ ಸರ್ಕಾರ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದರು. +ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡ್ಡಾಯವಾಗಿ ಕನ್ನಡ ಭಾಷಾ ಮಾಧ್ಯಮದಲ್ಲಿ‌ ಪಾಠ ಮಾಡುವ ಶಿಕ್ಷಕರನ್ನೇ ಕನ್ನಡ ಮಾಧ್ಯಮ ಶಾಲೆಗಳಿಗೆ ಮಹಾರಾಷ್ಟ್ರ ಸರಕಾರ ನೇಮಿಸಬೇಕು. ಹೀಗಾಗಲೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿದ್ದೇನೆ. ಗಡಿಭಾಗದಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆ ಉಳಿವಿಗೆ ನಮ್ಮ ಸರ್ಕಾರ ವಿಶೇಷ ಕಾಳಜಿ ಹೊಂದಿದೆ ಎಂದರು. +ವಿಶ್ವ‌ ಸಮ್ಮೇಳನ‌ದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಿಶ್ವ ಸಮ್ಮೇಳನ ನಡೆಸುವ ಬಗ್ಗೆ ನಮಗೂ ಇರಾದೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು \ No newline at end of file diff --git a/eesanje/url_46_102_7.txt b/eesanje/url_46_102_7.txt new file mode 100644 index 0000000000000000000000000000000000000000..c02943575414b7208a831a5735fbc6e54c26d164 --- /dev/null +++ b/eesanje/url_46_102_7.txt @@ -0,0 +1,6 @@ +ನಟ ದರ್ಶನ್‌ ಸೇರಿ ನಾಲ್ವರ ವಿಚಾರಣೆ ತೀವ್ರ +ಬೆಂಗಳೂರು,ಜೂ.21-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ನಟ ದರ್ಶನ್, ಧನ್ರಾಜ್, ವಿನಯ್, ಪ್ರದೂಶ್ ಈ ನಾಲ್ವರನ್ನು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ನಿನ್ನೆ ನ್ಯಾಯಾಲಯದ ಮೂಲಕ ಕಸ್ಟಡಿಗೆ ಪಡೆಯಲಾಗಿದ್ದು, ಇಂದು ಆರೋಪಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. +ನಾಲ್ವರು ಆರೋಪಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ದರ್ಶನ್ ಅವರನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಅವರ ಮನೆಯಿಂದ ವಶಪಡಿಸಿಕೊಂಡ 37 ಲಕ್ಷ ರೂ.ನಗದು ಹಾಗೂ ಆರೋಪಿಯ ತನ್ನ ಪತ್ನಿಗೆ ನೀಡಿದ್ದ 3 ಲಕ್ಷ ರೂ.ಗಳ ಹಣದ ಮೂಲದ ಬಗ್ಗೆ ಪ್ರಶ್ನಿಸಿದ್ದಾರೆ. +ಈ ಹಣ ತಮಗೆ ಎಲ್ಲಿಂದ ಬಂತು? ಯಾರು ಕೊಟ್ಟಿದ್ದರು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆ ಹಾಕಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ನಂತರ ಎಲ್ಲಿಗೆ ಹೋಗಿದ್ದೀರಿ? ಯಾರ್ಯಾರಿಗೆ ಫೋನ್ ಮಾಡಿದ್ದೀರಿ? ಪ್ರಕರಣ ಮುಚ್ಚಿ ಹಾಕಲು ಮಾಡಿದ ಪ್ರಯತ್ನವೇನು? ಯಾರ ಮೇಲೆ ಒತ್ತಡ ಹೇರಿದ್ದೀರೀ ಎಂದು ಸರಣಿ ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. +ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲು ಬಳಸಲಾದ ಮೆಗ್ಗರ್ ಸಾಧನ ಎಲ್ಲಿಂದ ಖರೀದಿ ಮಾಡಲಾಗಿತ್ತು ಎಂದು ಆರೋಪಿ ಧನರಾಜ್ ಅವರಿಂದ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. +ಹತ್ಯೆಗೀಡಾದ ರೇಣುಕಾಸ್ವಾಮಿ ಮೊಬೈಲ್ ಹಾಗೂ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದ ಆರೋಪಿ ರಾಘವೇಂದ್ರ ಮೊಬೈಲ್ನ್ನು ರಾಜಕಾಲುವೆಗೆ ಎಸೆಯಲಾಗಿದ್ದು, ಅವುಗಳಿಗಾಗಿ ಶೋಧ ನಡೆಸಿದರೂ ಸಿಕ್ಕಿಲ್ಲ. ಅವುಗಳನ್ನು ಎಲ್ಲಿ ಎಸೆಯಲಾಗಿದೆ ಎಂಬ ಬಗ್ಗೆ ಆರೋಪಿ ಪ್ರದೂಷ್ನಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. \ No newline at end of file diff --git a/eesanje/url_46_102_8.txt b/eesanje/url_46_102_8.txt new file mode 100644 index 0000000000000000000000000000000000000000..71f21a969ef96468179e6ebc7563da3544bf1cec --- /dev/null +++ b/eesanje/url_46_102_8.txt @@ -0,0 +1,6 @@ +ಭೋವಿ ಜನೋತ್ಸವ ಅದ್ಧೂರಿ ಆಚರಣೆಗೆ ಪೂರ್ವ ಭಾವಿ ಸಭೆ +ಬೆಂಗಳೂರು,ಜೂ.21-ಜುಲೈ 18ರಂದು ಚಿತ್ರದುರ್ಗದಲ್ಲಿ ಭೋವಿ ಗುರುಪೀಠವು ಪ್ರತಿ ವರ್ಷದಂತೆ ನಡೆಸುವ ರಾಜ್ಯಮಟ್ಟದ ಬೃಹತ್‌ ಭೋವಿ ಜನೋತ್ಸವ, ಗುರುಗಳ ಹುಟ್ಟುಹಬ್ಬ , ಪ್ರತಿಭಾ ಪುರಸ್ಕಾರ ಮತ್ತು ನೂತನ ಸಂಸದರು, ನಿಗಮ ಮಂಡಳಿಗಳ ಅಧ್ಯಕ್ಷರ ಗೌರವ ಸಮರ್ಪಣೆ, ಯುಪಿಎಸ್‌‍ ಪರೀಕ್ಷೆಯಲ್ಲಿ ಪಾಸಾದ ಸಮಾಜದ ಅಭ್ಯರ್ಥಿಗಳಿಗೆ ಸನಾನ ಕಾರ್ಯಕ್ರಮ ನಡೆಸಲು ಸಮಾಜದ ಮುಖಂಡರ ಪೂರ್ವಭಾವಿ ಸಭೆ ನಿರ್ಧರಿಸಿದೆ. +ಚಿತ್ರದುರ್ಗ- ಬಾಗಲಕೋಟೆ ಭೋವಿ ಮಹಾ ಸಂಸ್ಥಾನದ ಜಗದ್ಗುರು ಇಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ಸಾನಿಧ್ಯದಲ್ಲಿ ಹಾಗೂ ಸಚಿವ ಶಿವರಾಜ್‌ ಎಸ್‌‍.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಜಸಾ ಭವನದಲ್ಲಿ ಸಭೆ ನಡೆಸಲಾಗಿದೆ. +ಈ ವೇಳೆ ಮಾತನಾಡಿದ ಸಚಿವ ಶಿವರಾಜ್‌ ಎಸ್‌‍.ತಂಗಡಗಿ, ಭೋವಿ ನಿಗಮ ಸ್ಥಾವನೆಯಾಗಿದೆ. ಶಾಸಕರ ಸಂಖ್ಯೆ ಹೆಚ್ಚಾಗುತ್ತಿದೆ. ನಿಗಮ ಮಂಡಳಿಗಳ ಆಯಾಕಟ್ಟಿನ ಜಾಗದಲ್ಲಿ ಅಧ್ಯಕ್ಷರು ನಿರ್ದೇಶಕರು ನೇಮಕಗೊಳ್ಳುತ್ತಿದ್ದಾರೆ. ನಮ ಮುಖ್ಯಮಂತ್ರಿಗಳ ಆಪ್ತವಲಯದ ಶ್ರೀಗಳಾಗಿ ಗುರುತಿಸಿಕೊಂಡಿದ್ದಾರೆ.ಪರಿಣಾಮ ಕೆಪಿಎಸ್ಸಿ ಸದಸ್ಯರ ನೇಮಕವಾಗುತ್ತಿದೆ. ಇಮ್ನಡಿ ಶ್ರೀಗಳ ಸಮಾಜ ಬದ್ಧತೆಯಿಂದಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ರಾಜಕೀಯವಾಗಿ ಧಾರ್ಮಿಕವಾಗಿ ಬಲಗೊಳ್ಳುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. +ಭಾಗಲಕೋಟೆ ಭೋವಿ ಗುರುಪೀಠ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಚಿತ್ರದುರ್ಗ ಭೋವಿ ಸಮಾಜದ ಭೂತ, ವರ್ತಮಾನ, ಭವಿಷ್ಯ ದಿಕ್ಸೂಚಿ ಮಹಾಸಂಗಮವೇ ಭೋವಿ ಜನೋತ್ಸವ ಎಂದರು. ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್‌‍. ರವಿಕುಮಾರ್‌ ಮಾತನಾಡಿ, ಇವತ್ತು ಇಲ್ಲಿಸಭೆ ಕರೆದಿರುವುದರ ಉದ್ದೇಶ ಇಷ್ಟೆ. ಸಮಾಜದ ಎಳಿಗೆಗೆ ಶ್ರಮಿಸುವುದು ನಮ್ಮ ಕರ್ತವ್‌ಯವಾಗಿದೆ. +ಸಮಾಜದ ಸಂಘಟನೆ ಇಂದು ತುರ್ತಾಗಿದೆ. ಹಾಗಾಗಿ ಸಮಾಜದ ಸಂಘಟನೆ ತುಂಬಾ ಅಗತ್ಯವಿದೆ. ಅದಕ್ಕೆ ಪೂರಕವಾಗಿ ಭೋವಿ ಜನೋತ್ಸವ ದೊಡ್ಡ ಮಟ್ಟದಲ್ಲಿ ನಡೆಯಬೇಕಿದೆ ಎಂದರು. ರಾಜ್ಯ ಭೋವಿ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಣರಾದ ಸೀತರಾಮ್‌‍, ಗುಲ್ವರ್ಗಾದ ಸಮಾಜದ ಮುಖಂಡರಾದ ತಿಪ್ಪಣ್ಣ ಹಾಗೂ ಹಾವೇರಿ ಜಿಲ್ಲಾಧ್ಯಕ ರವಿಪೂಜಾರ್‌, ಮಾಜದ ಮುಖಂಡರಾದ ಎಂ ರಾಮಪ್ಲ, ಪರುಸಪ್ಪ ಅಮರಾವತಿ, ಕೃಷ್ಣಪ್ಪ, ಬಸವರಾಜ್‌‍, ಸೂಚಪ್ಪದೇವರಮನೆ,ಲಕ್ಷ್ಮಣ್‌ ಭೋವಿ, ರವಿಗುಂಚ್ಕರ್‌, ಮಂಜಪ್ಪ ಹೆಚ್‌.ನರೇಶ್‌ ಮಲೆನಾಡು, ವೆಂಕಟರಾಮ್‌‍, ದಯಾನಂದ್‌ ಭೀಮಣ್‌ ಕಳಸದ್‌‍, ಹನುಮಂತಪ್ಪ , ಸುಭಾಷ್‌ , ವೈ. ತಿಮ್ಮರಾಜು, ವಿರೇಶ್‌ ಕ್ಯಾತಿನಕೊಪ್ಪ, ದೇಶಾದ್ರಿ ಹೊಸಮನೆ ಮುಂತಾದವರು ಇದ್ದರು. \ No newline at end of file diff --git a/eesanje/url_46_102_9.txt b/eesanje/url_46_102_9.txt new file mode 100644 index 0000000000000000000000000000000000000000..296f9d5e3d17fe69dc983b6a913bb117e5b708a3 --- /dev/null +++ b/eesanje/url_46_102_9.txt @@ -0,0 +1,6 @@ +ಗುಂಡುಪ್ರಿಯರಿಗೆ ಗ್ಯಾರಂಟಿ ಸರ್ಕಾರದಿಂದ ಕಿಕ್ಕೇರಿಸೋ ಸುದ್ದಿ +ಬೆಂಗಳೂರು,ಜೂನ್‌.21-ಮದ್ಯದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ.ರಾಜ್ಯದಲ್ಲಿ ಮದ್ಯ ವ್ಯಾಪಾರ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಮದ್ಯ ಪ್ರಿಯರನ್ನು ಆಕರ್ಷಿಸಲು ಅಬಕಾರಿ ಇಲಾಖೆ ಹೊಸ ಮಾರ್ಗ ಹುಡುಕುತ್ತಿದೆ.ಈ ನಡುವೆ ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ. ಈ ಸಂಬಂಧ ಹೆಚ್ಚುವರಿ ಅಬಕಾರಿ ತೆರಿಗೆ ಇಳಿಕೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ. +ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ರಾಜ್ಯದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. +ಆದರೆ ಕಳೆದ 2023ರ ಜುಲೈನಲ್ಲಿ ಭಾರತೀಯ ಉತ್ಪಾದಿತ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲಾಗಿತ್ತು. 2024ರ ಜನವರಿಯಲ್ಲಿ ಬಿಯರ್‌ ಮೇಲಿನ ತೆರಿಗೆ ಏರಿಕೆ ಮಾಡಲಾಗಿತ್ತು. ಆದರೆ, ಇದೇ ಮೊದಲ ಬಾರಿಗೆ 1ವರ್ಷದ ನಂತರ ಸರ್ಕಾರ ತೆರಿಗೆ ಕಡಿಮೆ ಮಾಡುವ ನಿರ್ಧಾರ ತೆಗೆದುಕೊಂಡಿದೆ. +ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ.ನೆರೆಯ ರಾಜ್ಯಗಳಿಂದ ಇಲ್ಲಿಗೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಪೂರೈಕೆಯಾಗುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ಪಕ್ಕದ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. +ಇದರಿಂದ ರಾಜ್ಯ ಸರ್ಕಾರಕ್ಕೆ ನಷ್ಟವಾಗುತ್ತಿತ್ತು. ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ದರ ಪರಿಷ್ಕರಣೆಯ ನಿರ್ಧಾರ ಮಾಡಿದೆ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_103_1.txt b/eesanje/url_46_103_1.txt new file mode 100644 index 0000000000000000000000000000000000000000..1961c23c21ed2afe172f17ec6f96d9deb9927668 --- /dev/null +++ b/eesanje/url_46_103_1.txt @@ -0,0 +1,9 @@ +ಯುಪಿಗೆ ತೆರಳಿ ಪತ್ರಕರ್ತ ಅಜಿತ್ ಭಾರ್ತಿ ಬಂಧನಕ್ಕೆ ಯತ್ನಿಸಿದ ಕರ್ನಾಟಕ ಪೊಲೀಸರು, ಕಿಡಿಕಾರಿದ ಬಿಜೆಪಿ +ಬೆಂಗಳೂರು,ಜೂ.21-ನೊಯ್ಡಾದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್‌ ಅಜೀತ್‌ ಭಾರ್ತಿ ಅವರನ್ನು ಬಂಧಿಸಲು ಬೆಂಗಳೂರು ಪೊಲೀಸರು ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಸುಳ್ಳು ಸುದ್ದಿ ಹಂಚುತ್ತಿದ್ದ ಆರೋಪ ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ರಾಜ್ಯ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಅಜೀತ್‌ ಭಾರ್ತಿ ವಿರುದ್ಧ ಪ್ರಕರಣ ದಾಖಲಿಸಿದ್ದು, ತನ್ನ ನಿವಾಸಕ್ಕೆ ಬಂದ ಕರ್ನಾಟಕ ಪೊಲೀಸರನ್ನು ನೋಯ್ಡಾ ಪೊಲೀಸರು ತಮ್ಮ ಜತೆ ಕರೆದೊಯ್ದಿದ್ದಾರೆ ಎನ್ನಲಾಗಿದೆ. +ಯೂಟ್ಯೂಬರ್ನ ಮನೆಯ ಹೊರಗೆ ಕರ್ನಾಟಕ ಪೊಲೀಸರು ಮತ್ತು ನೋಯ್ಡಾ ಪೊಲೀಸರ ನಡುವೆ ಮುಖಾಮುಖಿಯಾಗಿದೆ. ಕರ್ನಾಟಕ ಪೊಲೀಸರನ್ನು ತನ್ನ ಮನೆಗೆ ಪ್ರವೇಶಿಸಲು ಅವರು ಅನುಮತಿಸಲಿಲ್ಲ ಎಂದು ಭಾರ್ತಿ ಹೇಳಿದ್ದು, ನೋಯ್ಡಾ ಪೊಲೀಸರು ಸಮಯಕ್ಕೆ ಮಧ್ಯಪ್ರವೇಶಿಸಿ ಕ್ರಮ ಕೈಗೊಂಡರು ಎಂದು ಹೇಳಲಾಗುತ್ತಿದೆ. ಅದೇ ವೇಳೆ ಪತ್ರಕರ್ತ, ಫ್ಯಾಕ್ಟ್‌ ಚೆಕರ್‌ ಮೊಹಮ್ಮದ್‌ ಜುಬೇರ್‌ ವಿರುದ್ಧ ಪ್ರಕರಣ ದಾಖಲಿಸುವುದಾಗಿಯೂ ಯೂಟ್ಯೂಬರ್‌ ತನ್ನ ಕಾಮೆಂಟ್‌‍ನಲ್ಲಿ ಹೇಳಿದ್ದಾರೆ. +ಈ ಬೆಳವಣಿಗೆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ವಿಲಕ್ಷಣ ಕಾರಣಗಳಿಗಾಗಿ ಅಜೀತ್‌ ಭಾರ್ತಿ ಅವರನ್ನು ಬಂಧಿಸುವ ಪ್ರಯತ್ನವು ಸಂಪೂರ್ಣವಾಗಿ ಸರ್ವಾಧಿಕಾರಿಯಾದದ್ದು. ಬಿಜೆಪಿ ಅಜೀತ್‌ ಭಾರ್ತಿ ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಈ ಪ್ರಕರಣದ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ. +ಈ ಘಟನೆಯು ಪ್ರಸ್ತುತ ಆಡಳಿತದ ಆಡಳಿತ ವೈಫಲ್ಯಕ್ಕೆ ಉದಾಹರಣೆಯಾಗಿದೆ, ರಾಜ್ಯದಲ್ಲಿ ಕಾನೂನು ಸುವ್‌ಯವಸ್ಥೆ ಕುಸಿದಿದೆ. ರಾಜ್ಯದಲ್ಲಿ ಹೈ-ಪ್ರೊಫೈಲ್‌ ಕೊಲೆಗಳು, ಮಹಿಳೆಯರಿಗೆ ಕಿರುಕುಳ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಗಣನೀಯ ಏರಿಕೆ ಕಂಡಿದೆ. ಆದರೆ, ಇದನ್ನು ಸರ್ಕಾರ ನಿರ್ಲಕ್ಷಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಪೊಲೀಸ್‌‍ ಪಡೆಯ ಅಮೂಲ್ಯ ಸಮಯ ಮತ್ತು ಸಂಪನೂಲಗಳನ್ನು ಸಾರ್ವಜನಿಕರ ಸುರಕ್ಷತೆಯ ಬದಲಿಗೆ ರಾಜಕೀಯ ಸೇಡಿಗೆ ಬಳಸಿಕೊಳ್ಳಲಾಗುತ್ತಿದೆ. +# . '' ' . @. …../rWj9oc2pCg +ಸಿದ್ದರಾಮಯ್ಯ ಸರ್ಕಾರ ತನ್ನ ನಾಗರಿಕರ ಕಲ್ಯಾಣ ಮತ್ತು ಭದ್ರತೆಯನ್ನು ಖಾತ್ರಿಪಡಿಸುವುದಕ್ಕಿಂತ ತನ್ನ ಟೀಕಾಕಾರರನ್ನು ಹತ್ತಿಕ್ಕುವತ್ತ ಹೆಚ್ಚು ಗಮನಹರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯು ಭಾರ್ತಿ ಅವರನ್ನು ರಕ್ಷಿಸಲು ಪಣ ತೊಟ್ಟಿದೆ. ರಾಜ್ಯದ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ ಎಂದು ಹೇಳಿದ್ದಾರೆ. +# . '' ' . @. …../zS7jeXzcuH +ಈ ನಡುವೆ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಹೈಗ್ರೌಂಡ್ಸ್ ಪೊಲೀಸರು, ಅಜೀತ್‌ ಭಾರ್ತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದೇವೆಯೇ ಹೊರತು ಬಂಧಿಸಿಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_103_10.txt b/eesanje/url_46_103_10.txt new file mode 100644 index 0000000000000000000000000000000000000000..91d135963fbeaf48e3f98e93c7a347aa2689a60b --- /dev/null +++ b/eesanje/url_46_103_10.txt @@ -0,0 +1,6 @@ +ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ‘ತುಘಲಕ್‌ ದರ್ಬಾರ್‌’ ನೆನಪಿಸುತ್ತೆ : ಸುರೇಶ್‌ ಕುಮಾರ್‌ +ಬೆಂಗಳೂರು, ಜೂ.20– ಕನಕಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್‌ ರಾಜ್ಯದ ಉಪ ಮುಖ್ಯಮಂತ್ರಿಯೂ ಆಗಿದ್ದು, ಇದೀಗ ಚನ್ನಪಟ್ಟಣದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವುದಕ್ಕೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಲೇವಡಿ ಮಾಡಿದ್ದಾರೆ.ರಾಜ್ಯದ ಇನ್ನುಳಿದ 220 ಕ್ಷೇತ್ರಗಳ ಶಾಸಕರಂತೆ 2028ರವರೆಗೂ ಡಿ.ಕೆ. ಶಿವಕುಮಾರ್‌ ಅವರಿಗೂ ಅವಧಿ ಇದೆ. ಇದೀಗ ಡಿ.ಕೆ. ಶಿವಕುಮಾರ್‌ ರಾಜಕಾರಣದಲ್ಲಿ ಹೊಸ ನಾಂದಿ ಹಾಡುವ ಸಡಗರದಲ್ಲಿದ್ದಾರೆ. +ಕಳೆದ ವರ್ಷ, 2023ರ ಮೇ ತಿಂಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದ ಎಚ್‌.ಡಿ. ಕುಮಾರಸ್ವಾಮಿಯವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿ ಕೇಂದ್ರದ ಸಚಿವರೂ ಆಗಿದ್ದಾರೆ.ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ತನ್ನ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ಕೊಟ್ಟಿದ್ದಾರೆ. +ಈಗ ಶಾಸಕ ಸ್ಥಾನ ಖಾಲಿಯಾಗಿರುವ ಚನ್ನಪಟ್ಟಣ ಕ್ಷೇತ್ರದಿಂದ ಉಪಚುನಾವಣೆ ಅಗತ್ಯವಾಗಿದೆ. ಹಾಗಾಗಿ ಆ ಕ್ಷೇತ್ರದಿಂದ ಸ್ಪರ್ಧಿಸಲು ಡಿ.ಕೆ. ಶಿವಕುಮಾರ್‌ ಅವರು ಮುಂದಾಗಿರುವುದು ಹಾಸ್ಯಸ್ಪದ.ಇತಿಹಾಸದಲ್ಲಿ ಓರ್ವ ವ್ಯಕ್ತಿ ತನ್ನ ರಾಜಧಾನಿಯನ್ನು ದೆಹಲಿಯಿಂದ ಸಾವಿರಾರು ಮೈಲಿ ದೂರದ ಮಹಾರಾಷ್ಟ್ರದಲ್ಲಿನ ದೌಲತಾಬಾದಿಗೆ ಬದಲಾಯಿಸಿದ್ದ. ನಂತರ ಮತ್ತೆ ದೌಲತಾಬಾದಿಂದ ದೆಹಲಿಗೆ ವಾಪಸ್ಸು ರಾಜಧಾನಿಯನ್ನು ತಂದ. ಇತಿಹಾಸದಲ್ಲಿ ಈ ವಿಲಕ್ಷಣ ವ್ಯಕ್ತಿ ಹೆಸರು ಯಾವಾಗಲೂ ನೆನಪಿರುತ್ತದೆ. ಇದನ್ನೇ ತುಘಲಕ್‌ ದರ್ಬಾರ್‌ ಅನ್ನುವುದು. +ಇದೀಗ ಕನಕಪುರದಿಂದ ಆಯ್ಕೆಯಾಗಿ 2028ರವರೆಗೆ ಶಾಸಕನಾಗಿ ಮುಂದುವರಿಯುವ ಅವಕಾಶ ಮತ್ತು ಕರ್ತವ್ಯ ಹೊಂದಿರುವ ಡಿ.ಕೆ. ಶಿವಕುಮಾರ್‌ ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟಿರುವುದು ಒಂದು ಅನಗತ್ಯ ಪ್ರಹಸನವೇ ಹೌದು.ಮಾಧ್ಯಮಗಳಲ್ಲಿ ಕೇಳಿ ಬಂದಂತೆ ಚನ್ನಪಟ್ಟಣದಿಂದ ಸ್ಪರ್ಧಿಸಿ ತಾನು ಗೆದ್ದು, ಈಗಾಗಲೇ ಆಯ್ಕೆ ಯಾಗಿರುವ ಕನಕಪುರ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಲ್ಲಿಂದ ಲೋಕಸಭಾ ಚುನಾವಣೆಯಲ್ಲಿ ಪರಾಜಿತರಾದ ತನ್ನ ಸಹೋದರ ಡಿ.ಕೆ. ಸುರೇಶ್‌ಗೆ ಸ್ಪರ್ಧಿಸುವಂತೆ ಮಾಡಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡುವ ಮಹದೋದ್ದೇಶ ಡಿಕೆ ಶಿವಕುಮಾರ್‌ ಅವರದಂತೆ. ಇದಕ್ಕೆ ಏನು ಹೇಳಬೇಕು ಎಂದು ಸುರೇಶ್‌ ಕುಮಾರ್‌ ಪ್ರಶ್ನಿಸಿದ್ದಾರೆ. +ಸಾರ್ವಜನಿಕರ ಹಣ, ರಾಷ್ಟ್ರದ ಸಂಪತ್ತು ಹೇಗೆ ವೈಯಕ್ತಿಕ ಪ್ರತಿಷ್ಠೆಗಾಗಿ ವೆಚ್ಚವಾಗುತ್ತದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ. ಡಿ.ಕೆ.ಶಿವಕುಮಾರ್‌ ರವರ ಈ ನಡೆ ವಿವೇಚನೆ ಮತ್ತು ವಿವೇಕದಿಂದ ಕೂಡಿದ ಅತಿರೇಕದ ನಡೆ ಎಂದೆನಿಸದು!, ಇದಕ್ಕೆ ರಾಹುಲ್‌ ಗಾಂಧಿಯವರು ಒಪ್ಪುತ್ತಾರೆಯೇ ಎಂದು ಸುರೇಶ್‌ಕುಮಾರ್‌ ಅವರು ತಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_103_11.txt b/eesanje/url_46_103_11.txt new file mode 100644 index 0000000000000000000000000000000000000000..d5dc23834791a1a979bd5589c7db362679592ac9 --- /dev/null +++ b/eesanje/url_46_103_11.txt @@ -0,0 +1,6 @@ +ಇಂದು ಪೊಲೀಸ್‌‍ ಕಸ್ಟಡಿ ಅಂತ್ಯ, ನ್ಯಾಯಾಲಯದ ಮುಂದೆ ‘ಡಿ’ ಗ್ಯಾಂಗ್‌ +ಬೆಂಗಳೂರು, ಜೂ.20-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಇತರ ಆರೋಪಿಗಳ ಪೊಲೀಸ್‌‍ ಕಸ್ಟಡಿಯು ಇಂದು ಅಂತ್ಯವಾಗಲಿದ್ದು, ಸಂಜೆಯೊಳಗೆ ಎಲ್ಲಾ ಆರೋಪಿಗಳನ್ನು ವಿಜಯನಗರ ಉಪವಿಭಾಗದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. +ಜೂ.9ರಂದು ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ಬಳಿಕ ಮೂವರು ಆರೋಪಿಗಳು ತಾವೇ ಖುದ್ದಾಗಿ ಕಾಮಾಕ್ಷಿಪಾಳ್ಯ ಪೊಲೀಸ್‌‍ ಠಾಣೆಗೆ ತೆರಳಿ ಶರಣಾಗಿದ್ದರು.ನಂತರ ಈ ಮೂವರಿಂದ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ರೇಣುಕಾಸ್ವಾಮಿ ಕೊಲೆ ಹಿಂದೆ ದರ್ಶನ್‌, ಪವಿತ್ರಾಗೌಡ ಹೆಸರು ಕೇಳಿ ಬಂದಿತ್ತು. +ಈ ಬಗ್ಗೆ ಕೂಲಂಕುಶವಾಗಿ ತನಿಖೆ ನಡೆಸಿ ಹಲವು ಮಾಹಿತಿಗಳನ್ನು ಕಲೆಹಾಕಿ ದರ್ಶನ್‌ ಸೇರಿದಂತೆ ಆತನ ಗ್ಯಾಂಗ್‌ನ ಹಲವರನ್ನು ಬಂಧಿಸಿ ಹಲವು ಮಾಹಿತಿಗಳನ್ನು ಹಾಗೂ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.ಈಗಾಗಲೇ ಪೊಲೀಸರು ಎರಡು ಬಾರಿ ಆರೋಪಿಗಳನ್ನು ತಮ ಕಸ್ಟಡಿಗೆ ಪಡೆದು ಅವರ ಹೇಳಿಕೆಗಳನ್ನು ದಾಖಲಿಸಿ ಸ್ಥಳ ಮಹಜರು ಮಾಡಿ ಕೆಲವು ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. +ಬಹುತೇಕ ಆರೋಪಿಗಳ ವಿಚಾರಣೆ ಮುಗಿದಿರುವುದು ಕಂಡು ಬಂದಿದೆ. ಆರೋಪಿಗಳ ಸ್ವ-ಇಚ್ಛಾ ಹೇಳಿಕೆಗಳಿಂದ ಏನಾದರೂ ಹೊಸ ಮಾಹಿತಿ ಲಭ್ಯವಾಗಿದ್ದರೆ ಆ ಬಗ್ಗೆ ತನಿಖೆ ನಡೆಸಲು ಕೆಲವು ಆರೋಪಿಗಳನ್ನು ಮತ್ತೆ ಮೂರ್ನಾಲ್ಕು ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ಕೊಡುವಂತೆ ಪೊಲೀಸರು ನ್ಯಾಯಾಲಯದ ಮುಂದೆ ಮನವಿ ಸಲ್ಲಿಸುವ ಸಾಧ್ಯತೆ ಇದೆ. +ಒಂದು ವೇಳೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರೆ ನಟ ದರ್ಶನ್‌ ಮತ್ತು ಆತನ ಗ್ಯಾಂಗ್‌ ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ.ಒಟ್ಟಾರೆ ಇಂದು ಎಲ್ಲಾ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದು, ಮುಂದೇನಾಗುತ್ತದೆ ಎಂಬುವುದನ್ನು ಕಾದುನೋಡಬೇಕಿದೆ. \ No newline at end of file diff --git a/eesanje/url_46_103_12.txt b/eesanje/url_46_103_12.txt new file mode 100644 index 0000000000000000000000000000000000000000..fb252720c6dd0bafb405b68633377e8452fae347 --- /dev/null +++ b/eesanje/url_46_103_12.txt @@ -0,0 +1,4 @@ +ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆ ಭಂಡತನದ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು : ಬಿವೈವಿ +ಬೆಂಗಳೂರು,ಜೂ.20-ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟೋಲ್‌‍-ಡೀಸೆಲ್‌ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು. +ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್‌ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಅವರು, ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿಯವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು. +ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದೂ ಅವರು ತಿಳಿಸಿದರು. \ No newline at end of file diff --git a/eesanje/url_46_103_2.txt b/eesanje/url_46_103_2.txt new file mode 100644 index 0000000000000000000000000000000000000000..5a5cbaa190e204e4c631260bcb62e68bad4dfb1a --- /dev/null +++ b/eesanje/url_46_103_2.txt @@ -0,0 +1,5 @@ +ಮಾಜಿ ಪ್ರಧಾನಿ ದೇವೇಗೌಡರ ‘ಯೋಗ’ ಸಂದೇಶ +ಬೆಂಗಳೂರು,ಜೂ.21– ಪುರಾತನವಾದ ಭಾರತೀಯ ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. +ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. + # . 91 .../ +ಇದರಿಂದ ನಾನು 91 ವರ್ಷಗಳ ಕಾಲ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_103_3.txt b/eesanje/url_46_103_3.txt new file mode 100644 index 0000000000000000000000000000000000000000..d05afb5bf77a9b2e8eee18520b1c2d82b0fd9d5d --- /dev/null +++ b/eesanje/url_46_103_3.txt @@ -0,0 +1,5 @@ + : ಪವಿತ್ರಗೌಡ ಜೈಲುಪಾಲು, ದರ್ಶನ್ ಪೊಲೀಸ್ ಕಸ್ಟಡಿಗೆ +ಬೆಂಗಳೂರು,ಜೂ.20 -ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಗಳಾದ ಎ.1 ಪವಿತ್ರಗೌಡ,ಎ.3 ಪವನ್‌,ಎ.4 ರಾಘವೇಂದ್ರ ಎ.5 ನಂದೀಶ್‌,ಎ.6.ಜಗದೀಶ್‌,ಎ.7 ಅನುಕುಮಾರ್‌ ಹಾಗು ಎ.8 ರವಿ ಶಂಕರ್‌, ನಾಗರಾಜ್‌ ಹಾಗು ಲಕ್ಷ್ಮಣ್‌ ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ಆದೇಶಿಸಿದರು. +10 ದಿನದ ಪೊಲೀಸ್‌‍ ಕಸ್ಟಡಿ ಅವದಿ ಮುಗಿದ ಹಿನ್ನಲೆಯಲಿ ಪ್ರಕರಣದ ವಿಚಾರಣೆಗಾಗಿ ಇಂದು ಸಂಜೆ 24 ನೇ ಎಸಿಎಂಎಂ ನ್ಯಾಯಾಲಯಕ್ಕೆ ಕರೆ ತಂದ ವಿಜಯನಗರ ಉಪವಿಭಾಗದ ಪೊಲೀಸರು ದರ್ಶನ್‌ ಸೇರಿದಂತೆ 13 ಆರೋಪಿಗಳನ್ನು ನ್ಯಾಯಾದೀಶರ ಮುಂದೆ ಹಾಜರುಪಡಿಸಿದರು. +ಪೊಲೀಸರ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕರು ಇನ್ನು ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿದೆ.ಹೆಚ್ಚಿನ ವಿಚಾರಣೆ ಅಗತ್ಯವಿದೆ ಅದಕ್ಕಾಗಿ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ವಹಿಸಬೇಕೆಂದು ವಾದ ಮಂಡಿಸಿದರು.ಇದಕ್ಕೆ ದರ್ಶನ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. +ವಾದ ಆಲಿಸಿದ ನ್ಯಾಯಾದೀಶರು ಪವಿತ್ರಗೌಡ ಸೇರಿ 7ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು ಮೂಲಕ ಇವರೆಲ್ಲ ಪರಪ್ಪನ ಅಗ್ರಹಾರ ಜೈಲು ಸೇರಿದಂತಾಗಿದೆ. ಆರೋಪಿಗಳಾದ ನಟ ದರ್ಶನ್‌,ವಿನಯ್‌ ,ಧನರಾಜ್‌,ಪ್ರದೋಶ್‌,ಅವರನ್ನು ಮತ್ತೆ ಎರಡು ದಿನ ಪೊಲೀಸ್‌‍ ಕಸ್ಟಡಿ ನೀಡಲಾಗಿದೆ. diff --git a/eesanje/url_46_103_4.txt b/eesanje/url_46_103_4.txt new file mode 100644 index 0000000000000000000000000000000000000000..9ee77873377fd76695b90134623c20ac725e3eb8 --- /dev/null +++ b/eesanje/url_46_103_4.txt @@ -0,0 +1,5 @@ +ಕೇಂದ್ರ ಸಚಿವ ಕುಮಾರಸ್ವಾಮಿಯವರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಮಹಿಳೆ ವಿರುದ್ಧ ದೂರು +ಬೆಂಗಳೂರು,ಜೂ.20-ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿರುವ ಮಹಿಳೆಯೊಬ್ಬರ ವಿರುದ್ಧ ಜೆಡಿಎಸ್‌‍ ನಗರ ಪೊಲೀಸ್‌‍ ಆಯುಕ್ತರಿಗೆ ದೂರು ನೀಡಿದೆ. +ಮಂಗಳ ಎಂಬ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿಯವರನ್ನು ಕುರಿತು ಅತ್ಯಂತ ಕೀಳು ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮಹಿಳೆ ದುರುದ್ದೇಶಪೂರ್ವಕವಾಗಿ ನಿಂದಿಸಿದ್ದಾರೆ ಎಂದು ಜೆಡಿಎಸ್‌‍ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಎಸ್‌‍.ಪಿ. ಅವರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. +ನಟ ದರ್ಶನ್‌ ಅವರ ಮೇಲಿನ ಆರೋಪ ಪ್ರಕರಣಕ್ಕೂ, ಕುಮಾರಸ್ವಾಮಿಯವರಿಗೂ ಯಾವುದೇ ಸಂಬಂಧವಿಲ್ಲದಿದ್ದರೂ ಕುಮಾರಸ್ವಾಮಿಯವರ ಹೆಸರನ್ನು ಬಳಸಿ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿರುವುದು ಜೆಡಿಎಸ್‌‍ ಪಕ್ಷದ ನಾಯಕರಿಗೆ, ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ತುಂಬಾ ನೋವಾಗಿದೆ. +ಈ ಸಂಬಂಧ ಮಂಗಳ ಮತ್ತು ಅವರ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಅವರು ಕೋರಿದ್ದಾರೆ. \ No newline at end of file diff --git a/eesanje/url_46_103_5.txt b/eesanje/url_46_103_5.txt new file mode 100644 index 0000000000000000000000000000000000000000..8f8d8ba55935fddd873329f843b4a788c7c17076 --- /dev/null +++ b/eesanje/url_46_103_5.txt @@ -0,0 +1,8 @@ +ಶೀಘ್ರದಲ್ಲೇ ಜೆಡಿಎಸ್‌ ಬಿಜೆಪಿಯೊಂದಿಗೆ ವಿಲೀನವಾಗಲಿದೆ : ಚೆಲುವರಾಯಸ್ವಾಮಿ ಭವಿಷ್ಯ +ಬೆಂಗಳೂರು,ಜೂ.20– ಬಿಜೆಪಿಯೊಂದಿಗೆ ಜೆಡಿಎಸ್‌‍ ಆದಷ್ಟು ಬೇಗ ವಿಲೀನವಾಗಲಿದೆ ಎಂದು ಕೆಲವರು ಹೇಳಿರುವುದಾಗಿ ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಿದ್ದವು. ಈಗ ಬಿಜೆಪಿಯೊಂದಿಗೆ ಜೆಡಿಎಸ್‌‍ ವಿಲೀನವಾಗಲಿದೆ ಎಂದು ಕೆಲವರು ನನಗೆ ಹೇಳಿದ್ದಾರೆ ಎಂದರು. +ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಉಪಚುನಾವಣೆಗೆ ತಯಾರಿ ನಡೆಸಲು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದೆ ಎಂದು ಹೇಳಿದರು. ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ಒಳ್ಳೆಯ ಕೆಲಸವನ್ನು ಕ್ಷೇತ್ರದಲ್ಲಿ ಮಾಡಿದ್ದಾರೆ. +ಅವರಿಗೂ ಒಳ್ಳೆಯ ಅವಕಾಶ ಸಿಗಲಿದೆ. ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅವರೇ ಸೂಕ್ತ ತೀರ್ಮಾನ ಮಾಡುತ್ತಾರೆ. ನನಗೆ ಸಣ್ಣ ಜವಾಬ್ದಾರಿಯನ್ನು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ತೀರ್ಮಾನ ಮಾಡಿಲ್ಲ. ಜನರ ಪಕ್ಷದ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. +ಹೈ ವೋಲ್ಟೇಜ್‌ ಕ್ಷೇತ್ರವಾಗಿರುವುದರಿಂದ ಮೊದಲೇ ಅಭ್ಯರ್ಥಿ ಹೆಸರು ಹೇಳಿದರೆ ಅಚ್ಚರಿಯ ಘೋಷಣೆಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗೆ 85 ಸಾವಿರ ಮತಗಳನ್ನು ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ರವರ ನಾಯಕತ್ವ ಇರುವುದಕ್ಕೆ ಈ ಪ್ರಮಾಣದ ಮತಗಳು ಲಭಿಸಿವೆ ಎಂದರು. +ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಹಳ ದಿನದಿಂದ ಕನಸು ಕಟ್ಟಿಕೊಂಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಮಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬಹುದು ಎಂಬ ಆಸೆ ಹೊಂದಿದ್ದಾರೆ. ಕುಮಾರಸ್ವಾಮಿಯವರು ಅವರ ಪುತ್ರನಿಗೆ ಟಿಕೆಟ್‌ ನೀಡಬೇಕೆಂದುಕೊಂಡಿದ್ದಾರೆ. ಕಾದು ನೋಡೋಣ. ಏನು ಮಾಡುತ್ತಾರೋ! ಅವರ ಪಕ್ಷಗಳ ತೀರ್ಮಾನ ಅವರಿಗೆ ಬಿಟ್ಟದ್ದು. ನಾವು ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು. +ಬಿಜೆಪಿಗೆ ನೈತಿಕತೆ ಇಲ್ಲ :ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ. ಅವರಿಗೆ ನಾಚಿಕೆಯಾಗಬೇಕು ಎಂದು ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದರು.ಪೆಟ್ರೋಲ್‌ ಬೆಲೆ 70 ರೂ. ಇದ್ದದ್ದನ್ನು ಹೆಚ್ಚಳ ಮಾಡಿದರು. ಅಡುಗೆ ಅನಿಲ ಬೆಲೆ 1,200 ರೂ. ಗೆ ಹೆಚ್ಚಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಿದೆ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು. +ಆಡಳಿತ ನಡೆಸುವವರು ತೆರಿಗೆ ಸಂಗ್ರಹ ಮಾಡಬೇಕಲ್ಲವೇ? ಬೆಲೆ ಇಳಿಸಲು ಬಿಜೆಪಿಯ 17 ಸಂಸದರು ಕೇಂದ್ರದ ಮುಂದೆ ಪ್ರತಿಭಟನೆ ಮಾಡಲಿ ಎಂದು ಹೇಳಿದರು.ತೆರಿಗೆ ಸಂಗ್ರಹ ಮಾಡುವುದು ಸಹಜ. ಆದರೆ ಅದು ಸಾರ್ವಜನಿಕರಿಗೆ ಹೊರೆಯಾಗಬಾರದು. ನಮ ರಾಜ್ಯದ ತೈಲ ಬೆಲೆ ಬೇರೆ ರಾಜ್ಯಗಳಿಗಿಂತ ಕಡಿಮೆ ಇದೆ ಎಂದರು. \ No newline at end of file diff --git a/eesanje/url_46_103_6.txt b/eesanje/url_46_103_6.txt new file mode 100644 index 0000000000000000000000000000000000000000..887a5faa148fc2f0d97b2beb9441d4edd7561c5b --- /dev/null +++ b/eesanje/url_46_103_6.txt @@ -0,0 +1,5 @@ +ಜಾಮೀನು ಅರ್ಜಿ ಸಲ್ಲಿಕೆಗೆ ಇನ್ನೂ ಒಂದು ವಾರ ಬೇಕಾಗಬಹುದು : ದರ್ಶನ್ ಪರ ವಕೀಲರು +ಬೆಂಗಳೂರು,ಜೂ.20-ನಟ ದರ್ಶನ್ ಅವರ ಜಾಮೀನು ಅರ್ಜಿ ಸಲ್ಲಿಸಲು ಸಮಯಾವಕಾಶ ಬೇಕಾಗಬಹುದು ಎಂದು ದರ್ಶನ್ ಪರ ವಕೀಲರು ಹೇಳಿದರು.ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿಗಳ ಜೊತೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದರ್ಶನ್ ಪರ ವಕೀಲರಾದ ಅನಿಲ್ಬಾಬು ಅವರು ಇಂದು ಸಂಜೆಯೊಳಗೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು. +ಬಹುತೇಕ ತನಿಖೆ ಮುಗಿದಿರಬಹುದು. ಜಾಮೀನು ಸಂಬಂಧ ದರ್ಶನ್ ಜೊತೆ ಮಾತನಾಡಿದ್ದೇವೆ. ಜಾಮೀನಿಗೆ ಅರ್ಜಿ ಸಲ್ಲಿಸಲು ಒಂದು ವಾರ ಬೇಕಾಗಬಹುದು. ಚರ್ಚೆ ಮಾಡಿ ನಂತರ ಅರ್ಜಿ ಸಲ್ಲಿಸುತ್ತೇವೆ. ಅವರ ಆರೋಗ್ಯ ಚೆನ್ನಾಗಿದೆ ಎಂದರು. +ಅವರ ವಕೀಲರಾದ ರಂಗನಾಥ ರೆಡ್ಡಿ ಮಾತನಾಡಿ, ಆರೋಪಿಗಳನ್ನು ಕಸ್ಟಡಿಗೆ ಕೇಳುವುದು ತನಿಖಾಧಿಕಾರಿಗಳ ನಿರ್ಧಾರವಾಗಿದೆ. ಬಹುತೇಕ ವಿಚಾರಣೆ ಮುಗಿದಿರಬಹುದು ಎಂದು ಹೇಳಿದರು. +ಡಿಎನ್ಎ ಪರೀಕ್ಷೆ ಸ್ಯಾಂಪಲ್ ಪಡೆಯಲು ನ್ಯಾಯಾಲಯದ ಅನುಮತಿ ಬೇಕಾಗುತ್ತದೆ. ಅದನ್ನು ಪೊಲೀಸರು ತೆಗೆದುಕೊಂಡಿದ್ದಾರೋ?, ಇಲ್ಲವೋ?, ಡಿಎನ್ಎ ಪರೀಕ್ಷೆ ನಡೆಸಲಾಗಿದೆಯೋ?, ಇಲ್ಲವೋ? ಸದ್ಯಕ್ಕೆ ನಮಗೆ ಗೊತ್ತಿಲ್ಲ. ಚಾರ್ಜ್ಶೀಟ್ ಸಲ್ಲಿಕೆಯಾದ ನಂತರ ನಮಗೆ ಗೊತ್ತಾಗುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_103_7.txt b/eesanje/url_46_103_7.txt new file mode 100644 index 0000000000000000000000000000000000000000..e8949303911d3588cd3f6a03675a123cf3ba7f56 --- /dev/null +++ b/eesanje/url_46_103_7.txt @@ -0,0 +1,14 @@ +ಹಾಸನ : ಸ್ನೇಹಿತನನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ +ಹಾಸನ:ನಗರದ ಹೊಯ್ಸಳ ಬಡಾವಣೆಯಲ್ಲಿ ಇಬ್ಬರು ಗನ್ ಶೂಟ್ ಗೆ ಬಲಿಯಾಗಿದ್ದಾರೆ. ಬೆಂಗಳೂರು ಮೂಲದ ಆಸಿಫ್ (46) ಮತ್ತು ಹಾಸನದ ಆಡುವಳ್ಳಿಯ ಶರಾಫತ್ ಅಲಿ( 52) ಮೃತರು ಎಂದು ಗುರುತಿಸಲಾಗಿದೆ. ಇವರಿಬ್ಬರು ಸ್ನೇಹಿತರಾಗಿದ್ದು ಶುಂಠಿ ಮತ್ತು ರಿಯಲ್ ಎಸ್ಟೇಟ್ ವ್ಯವಹಾರವನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ . +ಇಂದು ಮಧ್ಯಾಹ್ನ 12.30 ರ ಸಮಯದಲ್ಲಿ ಕೆಎ 09 ಎಂಬಿ 3868 ನಿಸ್ಸಾನ್ ಕಾರಿನಲ್ಲಿ ಆಸಿಫ್ ಮತ್ತು ಶರಾಫತ್ ಆಲಿ ಹೊಯ್ಸಳ ನಗರಕ್ಕೆ ಬಂದಿದ್ದಾರೆ ಹಾಗೂ ಪಕ್ಕದಲ್ಲಿಯೇ ನಿವೇಶನವನ್ನು ನೋಡಿದ್ದು ನಂತರ ಕಾರಿನ ಒಳಗೆ ಕುಳಿತು ಮಾತನಾಡುತ್ತಿರುವಾಗ ಆಸಿಫ್ , ಶರಫ್ ಆಲಿ ಅವರಿಗೆ ಗುಂಡನ್ನು ಹಾರಿಸಿದ್ದಾರೆ. ನಂತರ ಆಸಿಫ್ ಅವರು ತಲೆಗೆ ಗುಂಡುಹಾರಿಸಿಕೊಂಡು ಕಾರಿನಲ್ಲಿಯೇ ಮೃತಪಟ್ಟಿದ್ದು ಈ ಕೃತ್ಯಕ್ಕೆ ಬಳಸಿದ ಗನ್ ಕಾರಿನೊಳಗೆ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. +ಪಟಾಕಿ ಸದ್ದು ಎಂದು ತಿಳಿದ ನಿವಾಸಿಗಳು:ಗನ್ ಶೂಟ್ ನಡೆದ ನಂತರ ಸುತ್ತಮುತ್ತಲಿನ ಜನರು ಪಟಾಕಿ ಸದ್ದು ಎಂದು ತಿಳಿದಿದ್ದರು ನಂತರ ಕಾರಿನಿಂದ ಆಚೆ ಬಿದ್ದಿದ್ದ ಶರಫತ್ ಅಲಿ ಅವರನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. +ನಂತರ ಸ್ಥಳಕ್ಕೆ ಕೆ ಆರ್ ಪುರಂ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ . ಘಟನೆ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜಿತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ಬೆರಳಚ್ಚು ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ಶರಫತ್ ಅವರು ಹತ್ತು ವರ್ಷಗಳಿಂದ ಹಾಸನದಲ್ಲಿಯೇ ವಾಸವಾಗಿದ್ದಾರೆ ಎಂದು ಹೇಳಲಾಗುತ್ತಿದೆ. +ಸಂಪೂರ್ಣ ತನಿಖೆ ನಂತರ ಸ್ಪಷ್ಟ ಮಾಹಿತಿ:ಘಟನಾ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಪಿ ಮೊಹಮ್ಮದ್ ಸುಜಿತಾ ಅವರು ನಿವೇಶನ ನೋಡಲು ಆಗಮಿಸಿದ ಇಬ್ಬರು ಕಾರಿನೊಳಗೆ ಕೂತಿರುವ ವೇಳೆ ಗನ್ ಶೂಟ್ ನಡೆದಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ತನಿಖೆ ನಡೆಯುತ್ತಿದೆ . +ಕೃತ್ಯದ ವೇಳೆ ಬಳಸಿರುವ ಕಾರು ಮೈಸೂರಿನ ಜಿಲ್ಲೆಯ ರಿಜಿಸ್ಟರ್ ನಂಬರ್ ಆಗಿದ್ದು ಇಲ್ಲಿಗೆ ಏಕೆ ತರಲಾಗಿದೆ ಹಾಗೂ ಯಾವ ಕಾರಣಕ್ಕೆ ಕೃತಿ ನಡೆದಿದೆ ಎಂಬ ಬಗ್ಗೆ ಎಲ್ಲಾ ಆಯಮದಲ್ಲಿಯೂ ತನಿಖೆ ಮುಂದುವರೆದಿದೆ. +ಪ್ರಕರಣ ನಡೆಯುವ ಸಂದರ್ಭದಲ್ಲಿ ಹಾಗೂ ಕಾರು ಇಲ್ಲಿಗೆ ಬಂದಂತಹ ವೇಳೆ ಮತ್ತೆ ಯಾರಾದರೂ ಬಂದಿದ್ದಾರೆಯೇ ಬೇರೆ ವಾಹನ ಸಾಗಿದೆಯೇ ಎಂಬುದರ ಕುರಿತು ಸುತ್ತಮುತ್ತಲಿನ ಮನೆಯ ಸಿಸಿಟಿವಿ ಕ್ಯಾಮೆರಾ ಗಳನ್ನು ಪರಿಶೀಲನೆ ನಡೆಸಲಾಗುವುದು, ಕೃತ್ಯಕ್ಕೆ ಬಳಸಿದ ಗನ್ ಕಾರಿನೊಳಗೆ ದೊರೆತಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಳಿಕ ಗನ್ನಿನ ಮಾದರಿ ಹಾಗೂ ಇತರೆ ಮಾಹಿತಿ ದೊರೆಯಲಿದೆ . +ಓರ್ವ ವ್ಯಕ್ತಿಗೆ ತಲೆಗೆ ಗುಂಡು ತಗುಲಿದ್ದು, ಮತ್ತೊಬ್ಬರಿಗೆ ಗುಂಡು ಎಲ್ಲೆಲ್ಲಿ ತಗುಲಿ ಸಾವಾಗಿದೆ ಎಂಬುದು ವಿಧಿವಿಜ್ಙಾನ ಪರೀಕ್ಷೆಯ ನಂತರವಷ್ಠೆ ತಿಳಿಯಲಿದೆ ಎಂದು ವಿವರಿಸಿದರು. ರಿಯಲ್ ಎಸ್ಟೇಟ್ ಹಾಗೂ ಹಣಕಾಸಿನ ವ್ಯವಹಾರ ಸಂಬಂಧ ಇಬ್ಬರಲ್ಲೂ ಮನಸ್ತಾಪ ಉಂಟಾಗಿ ಪ್ರಕರಣ ನಡೆದಿದೆ ಎಂದು ಪ್ರಾಥಮಿಕ ಹಂತದ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಎಸ್ಪಿ ಮೊಹಮ್ಮದ್ ಸುಜಿತಾ ತಿಳಿಸಿದ್ದಾರೆ. +ಕಾರಿನಲ್ಲಿ ಗನ್:ಪ್ರಕರಣ ದಲ್ಲಿ ಕಾರಿನೊಳಗೆ ಗನ್ ದೊರೆತಿದ್ದು ಇದಕ್ಕೆ ಪರವಾನಗಿ ಪಡೆಯಲಾಗಿದೆಯೇ ಅಥವಾ ಅನಧಿಕೃತವಾಗಿ ಖರೀದಿಸಿ ತರಲಾಗಿತ್ತೆ ಎಂಬುದರ ಬಗ್ಗೆಯೂ ಪೊಲೀಸರು ತೀವ್ರತನಿಗೆ ಮುಂದುವರಿಸಿದ್ದಾರೆ. +ದಶಕ ಬಳಿಕ ಶೂಟೌಟ್:ನಗರದ ಹೃದಯ ಭಾಗದಲ್ಲಿ ಅಪೂರ್ವ ಹೋಟೆಲ್ ಬಳಿ ದಶಕಗಳ ಹಿಂದೆ ಅಪ್ಸರ್ ಎಂಬ ವ್ಯಕ್ತಿಯ ಮೇಲೆ ಶೂಟ್ ಔಟ್ ನಡೆದಿತ್ತು, ತದನಂತರ ಇಂದು ಗನ್ ಶೂಟ್ ಪ್ರಕರಣ ನಡೆದಿದ್ದು ನಗರದ ನಾಗರಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ. +ಹರಿದಾಡಿದ ಅಂತೆ-ಕಂತೆಗಳು :ಶೂಟ್ ಔಟ್ ಪ್ರಕರಣ ಸುದ್ದಿ ಹರಡಿದ ನಂತರ ಜನರ ಬಾಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಬಗೆಯ ಅಂತೆ-ಕಂತೆ ಎಂಬ ಮಾಹಿತಿ ಹರಿದಾಡಿತು. +ಕೆಲ ಹಂತಕರು ಬಂದು ಇಬ್ಬರು ಯುವಕರನ್ನು ಶೂಟ್ ಮಾಡಿದ್ದಾರೆ ಎಂಬ ಬಗ್ಗೆಯೂ ವರದಿಯಾಗಿತ್ತು, ಆದರೆ ಎಸ್ಪಿ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದ ನಂತರ ಪ್ರಕರಣ ಸಂಬಂಧ ಪ್ರಾಥಮಿಕ ಮಾಹಿತಿಯನ್ನು ತಿಳಿಸಿದ್ದು ಹಣಕಾಸಿನ ವ್ಯವಹಾರದಲ್ಲಿ ಮನಸ್ತಾಪದಿಂದ ಈ ರೀತಿ ಗನ್ ಶೂಟ್ ನಡೆದಿದೆ ಎಂದು ಎಸ್ ಪಿ ಸ್ಪಷ್ಟಪಡಿಸಿದರು ಆದರೆ ಇನ್ನೂ ಸಹ ಈ ಪ್ರಕರಣದ ನಿಖರ ಕಾರಣ ತನಿಖೆಯಿಂದ ಅಷ್ಟೆ ಹೊರಬರಬೇಕಿದೆ‌ +ಪೊಲೀಸರು ಘಟನೆ ಹೇಗಾಯಿತು ಎಂಬುದರ ಬಗ್ಗೆ ಕೂಲಂಕುಷ ತನಿಖೆ ಕೈಗೊಂಡಿದ್ದಾರೆ. ತನಿಖೆಯ ನಂತರ ಕೊಲೆ ಮಾಡಿ, ಆತಹತ್ಯೆ ಮಾಡಿಕೊಂಡಿರಬಹುದೋ ಅಥವಾ ಬೇರೆ ಯಾರಾದರೋ ಇವರಿಬ್ಬರನ್ನೂ ಗುಂಡು ಹಾರಿಸಿ ಕೊಲೆ ಮಾಡಿದ್ದಾರೋ ಎಂಬುದು ತಿಳಿದುಬರಲಿದೆ. \ No newline at end of file diff --git a/eesanje/url_46_103_8.txt b/eesanje/url_46_103_8.txt new file mode 100644 index 0000000000000000000000000000000000000000..4dab52f01b4396cf5021b7d739bf44b22a93516e --- /dev/null +++ b/eesanje/url_46_103_8.txt @@ -0,0 +1,9 @@ +ಚಳಿಗಾಲದ ಅಧಿವೇಶನ ದಿನಾಂಕ ನಿಗದಿ ಸಿಎಂ ವಿವೇಚನೆ ಬಿಟ್ಟಿದ್ದು : ಎಚ್‌.ಕೆ.ಪಾಟೀಲ್‌ +ಬೆಂಗಳೂರು,ಜೂ.20-ವಿಧಾನಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ದಿನಾಂಕವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದರು. +ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜಿಎಫ್‌ ಗಣಿ ಗುತ್ತಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, 1300 ಎಕರೆ ಪ್ರದೇಶದಲ್ಲಿ ಗುತ್ತಿಗೆಗೆ ಅವಕಾಶ ಸಿಗಲಿದೆ. ಕೇಂದ್ರ ಸರ್ಕಾರ ಈ ಸಂಬಂಧ ಸಲ್ಲಿಸಿದ ಪ್ರಸ್ತಾವನೆಗೆ ಸಮತಿ ಸೂಚಿಸಲಾಗಿದೆ. ಮರು ಗುತ್ತಿಗೆಯಿಂದ ಉದ್ಯೋಗ ಸೃಷ್ಟಿಯಾಗುವುದಲ್ಲದೆ, ಕೈಗಾರಿಕಾ ವಸಾಹತು ಸ್ಥಾಪನೆಗೂ ಅನುಕೂಲವಾಗಲಿದೆ. ಹೀಗಾಗಿ ಸಂಪುಟ ಸಭೆ ವಿಶೇಷ ಅನುಮತಿಯನ್ನು ನೀಡಿದೆ ಎಂದರು. +ಪ್ರಧಾನಿ ಉಚ್ಚತರ್‌ ಅಭಿಯಾನ ಯೋಜನೆಯಡಿ ರಾಜ್ಯದ 6 ವಿವಿಗಳನ್ನು ಮೇಲ್ದರ್ಜೆಗೇರಿಸಲು 279.77 ಕೋಟಿ ರೂ.ಗಳ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರಗಳ ಅನುದಾನದಡಿ ಮೂಲ ಸೌಕರ್ಯ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. +ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಯೋಜನೆಯನ್ನು 29.19 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತಕ ಅನುಮೋದನೆ ನೀಡಿದೆ.ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಹಾಗೂ ಬಾಕಿ ವಸೂಲಾತಿ ಮಾಡಲು ಸ್ಥಳೀಯ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಒಪ್ಪಿಗೆ ನೀಡಲಾಯಿತು ಎಂದರು. +ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಕ್ಕೆ ಬರಲಿದೆ. ಶೇ.30 ರಿಂದ 40 ರಷ್ಟು ಬಾಕಿ ವಸೂಲಿಯಾಗಿಲ್ಲ. ಹೀಗಾಗಿ ಸ್ವಸಹಾಯ ಸಂಘಗಳಿಗೆ ವಸೂಲಿ ಮಾಡಲು ಅವಕಾಶ ಕಲ್ಪಿಸಿದ್ದು, ಶೇ.5 ರಷ್ಟು ಪ್ರೋತ್ಸಾಹ ಧನ ಸಂಘಗಳಿಗೆ ಸಿಗಲಿದೆ ಎಂದರು.ಬಾಹ್ಯ ನೆರವಿನೊಂದಿಗೆ ಪ್ರಗತಿ ಪಥ ಯೋಜನೆಯಡಿ 7,110 ಕಿ.ಮೀ.ಗಳ ಗ್ರಾಮೀಣ ರಸ್ತೆಗಳನ್ನು 5,190 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ನೀಡಲಾಗಿದೆ. ವಿಶ್ವಬ್ಯಾಂಕ್‌ನಿಂದ ಸಾಲ ಪಡೆದು 2 ವರ್ಷಗಳೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು. +ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಗ್ರ ವ್ಯಕ್ತಿತ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೋಟರಿ ಇಂಟರ್‌ನ್ಯಾಷನಲ್‌ರವರ ಸಹಭಾಗಿತ್ವದೊಂದಿಗೆ 2.37 ಕೋಟಿ ರೂ.ಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತಕ ಅನುಮೋದನೆ ದೊರೆತಿದೆ. +ನ.26 ರ ಸಂವಿಧಾನ ದಿನಾಚರಣೆ ಮತ್ತು ಆ.15 ರ ಸ್ವಾತಂತ್ರ್ಯ ದಿನಾಚರಣೆಯಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ನಡೆಯುವ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಭಾರತರತ್ನ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. +ಮೈಸೂರಿನ ಕೆ.ಆರ್‌.ಆಸ್ಪತ್ರೆಯ ಆವರಣದಲ್ಲಿ ನೂತನ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿಗೆ 75 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಆಡಳಿತಾತಕ ಅನುಮೋದನೆ ನೀಡಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ 33 ಘಟಕಗಳನ್ನು ವಿಶೇಷ ಪೊಲೀಸ್‌‍ ಠಾಣೆಗಳೆಂದು ಘೋಷಿಸಿ ಈ ಠಾಣೆಗಳ ನಿರ್ವಹಣೆಗಾಗಿ ಅಗತ್ಯವಿರುವ 450 ವಿವಿಧ ಹುದ್ದೆಗಳ ಮಂಜೂರಾತಿ ನೀಡಲು ಸಮತಿಸಲಾಗಿದೆ. \ No newline at end of file diff --git a/eesanje/url_46_103_9.txt b/eesanje/url_46_103_9.txt new file mode 100644 index 0000000000000000000000000000000000000000..3f7dce2d24f363d43037d5d54fa2fec0a8181024 --- /dev/null +++ b/eesanje/url_46_103_9.txt @@ -0,0 +1,9 @@ +ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ದೇವಿ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ +ಬೆಂಗಳೂರು,ಜೂ.20-ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುತ್ತಿರುವ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ನ.24 ರಂದು ಕಂಚಿನ ಪ್ರತಿಮೆಯನ್ನು ಅನಾವರಣ ಮಾಡಲಾಗುವುದು. ಪ್ರತಿಮೆ ನಿರ್ಮಾಣಕ್ಕೆ ಯಾವುದೇ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. +ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿ ಪ್ರತಿಮೆ ನಿರ್ಮಾಣ ಆಗುತ್ತಿರುವುದು ಒಳ್ಳೆಯದು. 25 ಅಡಿ ಎತ್ತರದ ಕಂಚಿನ ಪ್ರತಿಮೆ ಇದಾಗಿದ್ದು, ಈ ಪ್ರತಿಮೆ ಶಾಶ್ವತವಾಗಿ ಇರಬೇಕು. ಸುಂದರವಾಗಿ ಮೂಡಿಬರಬೇಕು. ಇದರ ಆಕರ್ಷಣೆ ಇಮಡಿಗೊಳ್ಳಬೇಕು ಎಂದು ಹೇಳಿದರು. +ಕರ್ನಾಟಕವೆಂದು ನಾಮಕರಣಗೊಂಡು 50 ವರ್ಷ ತುಂಬಿದ ಸಂದರ್ಭದಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಮಾಡಿದ್ದೇವೆ. ಹೆಸರಾಯಿತು ಕನ್ನಡ, ಉಸಿರಾಗಲಿ ಕನ್ನಡ ಮಾಡಿದ್ದೇವೆ. ಇಡೀ ವರ್ಷ ಕನ್ನಡ ಕಾರ್ಯಕ್ರಮವನ್ನು ಮಾಡಿದ್ದೇವೆ. ಕಳೆದ ವರ್ಷ ನವೆಂಬರ್‌ನಲ್ಲಿ ಹಂಪಿಯಿಂದ ಈ ಕಾರ್ಯಕ್ರಮ ಪ್ರಾರಂಭವಾಗಿತ್ತು ಎಂದರು. +ದೇವರಾಜು ಅರಸುರವರು ಮುಖ್ಯಮಂತ್ರಿಯಾಗಿದ್ದಾಗ 1973 ರಲ್ಲಿ ಕರ್ನಾಟಕವೆಂದು ನಾಮಕರಣ ಮಾಡಲಾಯಿತು. ಕರ್ನಾಟಕ ಏಕೀಕರಣಕ್ಕೂ ಮುನ್ನ ತಾಯಿ ಭುವನೇಶ್ವರಿ ಪೂಜೆಯನ್ನು ಮಾಡಲಾಗುತ್ತಿತ್ತು. ರಾಜಮಹಾರಾಜರೂ ಕೂಡ ಮಾಡುತ್ತಿದ್ದರು ಎಂದು ಅವರು ಹೇಳಿದರು. +ಕನ್ನಡ ನೆಲ, ಜಲ, ಭಾಷೆ ಉಳಿಸಿಕೊಂಡು ಬರುತ್ತಿದ್ದೇವೆ. ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಾಣ ಮಾಡಲು ಪ್ರತಿಯೊಬ್ಬರೂ ಕನ್ನಡದಲ್ಲೇ ಮಾತನಾಡಬೇಕು. ಬೇರೆ ಭಾಷೆಯವರು ಇಲ್ಲಿ ನೆಲೆಸಿದ್ದಾರೆ. ಅವರೂ ಕೂಡ ಕನ್ನಡವನ್ನು ಕಲಿತು ಮಾತನಾಡಬೇಕು. ಎಲ್ಲರಿಗೂ ಕನ್ನಡವನ್ನು ಕಲಿಸಬೇಕು. ಬೇರೆ ರಾಜ್ಯಗಳಲ್ಲಿ ಇಲ್ಲಿನ ರೀತಿ ಇಲ್ಲ. ಅಲ್ಲಿ ಆಯಾ ರಾಜ್ಯದ ಭಾಷೆಯನ್ನು ಕಲಿಯಬೇಕಾಗಿದೆ. ನಾವು ದುರಭಿಮಾನಿಗಳಲ್ಲ. ಆದರೆ ಕನ್ನಡದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು. ಕನ್ನಡ ನಾಡು-ನುಡಿ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಿದಾಗ ಮಾತ್ರ ಕನ್ನಡ ಉಳಿಯಲಿದೆ ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಆಡಳಿತದಲ್ಲಿ ಕನ್ನಡ ಕಡ್ಡಾಯ ಕಾನೂನು ತಂದವರು ನಾವು. ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಿದ್ದೇವೆ. ಕನ್ನಡದ ಉಸಿರು ಉಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಹೇಳಿದರು. +ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ನಾಡದೇವಿ ಭುವನೇಶ್ವರಿ ಪ್ರತಿಮೆ ನಿರ್ಮಾಣವಾಗಬೇಕೆಂಬುದು ಎಲ್ಲರ ಆಶಯವಾಗಿತ್ತು. ಮುಂದಿನ ನ.1 ಕ್ಕೆ ಪ್ರತಿಮೆ ಪೂರ್ಣಗೊಳಿಸುತ್ತೇವೆ. ಕರ್ನಾಟಕ ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಡು-ನುಡಿ ಕುರಿತಂತೆ ರಾಜ್ಯದಲ್ಲಿ ಹಲವು ಕಾರ್ಯಕ್ರಮ ಹಮಿಕೊಂಡಿದ್ದೇವೆ. ಸರ್ಕಾರ ಕನ್ನಡ ನೆಲ-ಜಲ-ಭಾಷೆ ಬಗ್ಗೆ ಒತ್ತು ನೀಡಿದೆ ಎಂದರು. +ಈ ಸಂದರ್ಭದಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಎಚ್‌.ಕೆ.ಪಾಟೀಲ್‌, ಡಾ.ಎಂ.ಸಿ.ಸುಧಾಕರ್‌, ಕೆ.ಎನ್‌.ರಾಜಣ್ಣ, ಸತೀಶ್‌ ಜಾರಕಿಹೊಳಿ ಸೆೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_104_1.txt b/eesanje/url_46_104_1.txt new file mode 100644 index 0000000000000000000000000000000000000000..83e51e180ce34b32fef93efe31c280e545f05752 --- /dev/null +++ b/eesanje/url_46_104_1.txt @@ -0,0 +1,5 @@ +ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ – ಸಲೀಂ ಅಹಮದ್ +ಹುಬ್ಬಳ್ಳಿ,ಜೂ.20-ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ಬಿಜೆಪಿಯ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಸಲೀಂ ಅಹದ್‌ ಆರೋಪಿಸಿದರು. +ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟೋಲ್‌ ಬೆಲೆಯನ್ನು ಲೀಟರ್‌ಗೆ 65 ರಿಂದ 110 ರೂ. ಗೆ ಹೆಚ್ಚಿಸಿದ್ದು ಹಾಗೂ ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು 400 ರಿಂದ 1200 ರೂ. ಗೆ ಏರಿಕೆ ಮಾಡಿದ್ದು ಬಿಜೆಪಿ ಸರ್ಕಾರ. ಆಗ ಬಿಜೆಪಿಯವರು ಪ್ರತಿಭಟನೆ ಮಾಡಿರಲಿಲ್ಲ. ಈಗ ಬಿಜೆಪಿಯವರ ಪ್ರತಿಭಟನೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಉದ್ದೇಶ ಹೊಂದಿದೆ ಎಂದರು. +ಕಾಂಗ್ರೆಸ್‌‍ ಪಕ್ಷ ಚುನಾವಣೆ ಉದ್ದೇಶಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ನೀಡಿರಲಿಲ್ಲ. ಒಂದು ವರ್ಷದ ಅವಧಿಯಲ್ಲಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಅಥವಾ ಈಗಿರುವ ಲಾನುಭವಿಗಳ ಸಂಖ್ಯೆ ಯನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂದು ಕಾಂಗ್ರೆಸ್‌‍ ಶಾಸಕರ ಹೇಳಿಕೆ ವೈಯಕ್ತಿಕವಾದುದು. ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದರು.’ +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಆರೋಪಿಗಳನ್ನು ರಕ್ಷಿಸಬೇಕೆಂದು ಯಾವ ಸಚಿವರೂ ಒತ್ತಡ ತಂದಿಲ್ಲವೆಂದು ಹಾಗೂ ತಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲವೆಂದು ಈಗಾಗಲೇ ಮುಖ್ಯಮಂತ್ರಿಯವರು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್‌‍ ಇಲಾಖೆಯ ಕೆಲಸದಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ ಎಂದರು.ಸದಾನಂದ ಡಂಗನವರ, ಚಂದ್ರಶೇಖರ್‌ ಜುಟ್ಟಲ್‌ ಮುಂತಾದವರು ಇದ್ದರು. \ No newline at end of file diff --git a/eesanje/url_46_104_10.txt b/eesanje/url_46_104_10.txt new file mode 100644 index 0000000000000000000000000000000000000000..a1aa65286cc85771d6b8936390c337a159a31758 --- /dev/null +++ b/eesanje/url_46_104_10.txt @@ -0,0 +1,6 @@ +ರೇಣುಕಾಸ್ವಾಮಿ ಪ್ರಕರಣದಲ್ಲಿ ಸದ್ಯಕ್ಕೆ ಎಸ್‌‍ಪಿಪಿ ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ : ಪರಮೇಶ್ವರ್‌ +ಬೆಂಗಳೂರು,ಜೂ.19-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಎಸ್‌‍ಪಿಪಿಯನ್ನು ಬದಲಾವಣೆ ಮಾಡುವ ಪ್ರಸ್ತಾಪವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಎಸ್‌‍ಪಿಪಿಯನ್ನು ಬದಲಾವಣೆ ಮಾಡಬೇಕಾದರೆ ಕಾನೂನು ಪ್ರಕಾರವೇ ಮಾಡಲಾಗುತ್ತದೆ. ಅದರಲ್ಲಿ ತಪ್ಪೇನಿಲ್ಲ. ಯಾರೇ ಎಸ್‌‍ಎಸ್‌‍ಪಿಯಾದರೂ ಕಾನೂನು ಪ್ರಕಾರವಾಗಿ ನಡೆದುಕೊಳ್ಳಬೇಕು ಎಂದರು. +ಬದಲಾವಣೆ ಮಾಡಬೇಕಾದರೆ ಅದಕ್ಕೇನಾದರೂ ಕಾರಣ ಇರುತ್ತದೆ. ನಮಗೂ ಜವಾಬ್ದಾರಿ ಇದೆ. ಕಾನೂನು ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು, ಈ ಕೊಲೆ ಕೇಸ್‌‍ ಸಡಿಲ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಯಾರ ಪ್ರಭಾವಕ್ಕೊಳಗಾಗದೆ ತನಿಖೆ ನಡೆಯುತ್ತಿದೆ ಎಂದು ಹೇಳಿದರು. +ನಟ ದರ್ಶನ್‌ ಅವರ ಫಾರ್ಮ್‌ ಹೌಸ್‌‍ ಮ್ಯಾನೇಜರ್‌ ನಾಪತ್ತೆಯಾಗಿರುವ ವಿಚಾರ ಗೊತ್ತಿಲ್ಲ. ಹೊಸದಾಗಿ ಈ ವಿಚಾರ ಪ್ರಸ್ತಾಪವಾಗಿದೆ ಇದರ ಬಗ್ಗೆಯೂ ತನಿಖೆ ಮಾಡಲು ಅಧಿಕಾರಿಗಳು ಅನುಮತಿ ಕೋರಿದರೆ ಸಮತಿಸಲಿದೆ.ಮತ್ತೊಬ್ಬ ಮ್ಯಾನೇಜರ್‌ ಆತಹತ್ಯೆ ಮಾಡಿಕೊಂಡಿರುವ ವಿಚಾರಕ್ಕೂ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ಸಂಬಂಧ ಇದೆಯೇ ಎಂಬುದರ ಬಗ್ಗೆ ವಿಚಾರಣೆ ಮಾಡುತ್ತಾರೆ. +ರೇಣುಕಾಸ್ವಾಮಿ ಕುಟುಂಬದ ರೀತಿ ಮ್ಯಾನೇಜರ್‌ ಕುಟುಂಬದವರಿಗೂ ಅನುಮಾನ ಬಂದಿರಬಹುದು. ಅದರಲ್ಲಿ ಯಾರ ಪಾತ್ರವಿದ್ದರೂ ತನಿಖಯಾಗಲಿದೆ. ಅನುಮತಿ ಕೇಳಿದರೆ ಸರ್ಕಾರ ಅನುಮತಿ ಕೊಡಲಿದೆ ಎಂದರು.ದರ್ಶನ್‌ ಸ್ವಇಚ್ಚೆ ಹೇಳಿಕೆ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಎಲ್ಲವೂ ಮಾಧ್ಯಮಗಳಿಗೆ ಗೊತ್ತಾಗಿದೆ. ವಿಚಾರಣೆ ಸಂದರ್ಭದಲ್ಲಿ ಏನೂ ಹೇಳಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ ಎಂದು ತಿಳಿಸಿದರು. +ಸಾಬೀತುಪಡಿಸಲಿ:ವಾಲೀಕಿ ಅಭಿವೃದ್ದಿ ನಿಗಮದಲ್ಲಿ ಕೇಳಿಬಂದಿರುವ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡಿರುವುದನ್ನು ಬಿಜೆಪಿಯವರು ಸಾಬೀತುಪಡಿಸಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದ್ದರು. ಬ್ಯಾಂಕ್‌ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಸಿಬಿಐ ಕೂಡ ಪ್ರವೇಶ ಮಾಡಿದ್ದು, ತನಿಖೆ ನಡೆಸುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_104_11.txt b/eesanje/url_46_104_11.txt new file mode 100644 index 0000000000000000000000000000000000000000..c8023c65ee70148eb5d860b9ecc570a8481f5114 --- /dev/null +++ b/eesanje/url_46_104_11.txt @@ -0,0 +1,5 @@ +ಬಿಜೆಪಿಯವರು ಪ್ರತಿಭಟನೆ ಮಾಡಲಿ, ನಾವು ಪೆಟ್ರೋಲ್‌, ಡೀಸೆಲ್‌ ದರ ಕಡಿಮೆ ಮಾಡಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜೂ.19-ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರವನ್ನು ಕಡಿಮೆ ಮಾಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ ದರ ಹೆಚ್ಚಳ ಮಾಡಿದ್ದು, ವಾಹನ ಸವಾರರು ಪೆಟ್ರೋಲ್‌ , ಡೀಸೆಲ್‌ನ್ನು ಖರೀದಿ ಮಾಡುತ್ತಿದ್ದಾರೆ. +ನಮ್ಮ ರಾಜ್ಯದಲ್ಲಿ ಕಡಿಮೆ ಇರುವುದರಿಂದ ನೆರೆ ರಾಜ್ಯದವರು ಬಂದು ಪೆಟ್ರೋಲ್‌, ಡೀಸೆಲ್‌ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿಯವರು ಪೊಲೀಸರ ಅನುಮತಿ ಪಡೆದು ರಸ್ತೆತಡೆ ನಡೆಸಬಹುದಾಗಿದೆ. +ಸುಪ್ರೀಂಕೋರ್ಟ್‌ ತೀರ್ಪಿನ ಪ್ರಕಾರ ರಸ್ತೆತಡೆ ಮಾಡುವಂತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವಂತಿಲ್ಲ, ಅನುಮತಿ ಪಡೆಯದೆ ಇಲ್ಲವೇ ಅನುಮತಿಯ ಅವಧಿ ಮೀರಿ ರಸ್ತೆ ತಡೆ ನಡೆಸಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ. ರಸ್ತೆ ತಡೆ ಮಾಡುವವರನ್ನು ಯಾವ ರೀತಿ ತೆರವುಗೊಳಿಸಬೇಕೋ ಆ ರೀತಿ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯಬಿದ್ದರೆ ಲಾಠಿಚಾರ್ಜ್‌ ಮಾಡಲಾಗುವುದು ಎಂದರು. +ಪ್ರತಿಭಟನೆ ಮಾಡಲು ಹಕ್ಕಿದೆ. ಈಗಾಗಲೇ ಹಲವು ಸಂಘಸಂಸ್ಥೆ, ಸಾರ್ವಜನಿಕರು ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ಅಡ್ಡಿ ಪಡಿಸಿಲ್ಲ ಎಂದರು.ನೀರಿನ ದರ ಹಾಗೂ ಬಸ್‌‍ ಟಿಕೆಟ್‌ ದರ ಹೆಚ್ಚಳ ಪ್ರಸ್ತಾಪ ಆಯಾಯ ಇಲಾಖೆಗೆ ಸಂಬಂಧಿಸಿದ್ದು, ನಮಗೇನಾದರೂ ಅವುಗಳ ಬಗ್ಗೆ ದೂರು ಬಂದಾಗ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_104_12.txt b/eesanje/url_46_104_12.txt new file mode 100644 index 0000000000000000000000000000000000000000..579c2f779dce56158e8d5bd170691b4fd9885699 --- /dev/null +++ b/eesanje/url_46_104_12.txt @@ -0,0 +1,9 @@ +ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಚದುರಂಗದಾಟ ಶುರು +ಬೆಂಗಳೂರು,ಜೂ.19-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ಷೇತ್ರದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಜನರ ನಾಡಿಮಿಡಿತ ಅರಿಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಾರನ್ನು ಸ್ಪರ್ಧೆಗಿಳಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಜನರ ಅಭಿಪ್ರಾಯವನ್ನು ಕಲೆ ಹಾಕುತ್ತಿದ್ದಾರೆ. +ಜೆಡಿಎಸ್‌‍ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. ಹೀಗಾಗಿ ಬಿಜೆಪಿ, ಜೆಡಿಎಸ್‌‍ನಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಪೈಪೋಟಿ ಏರ್ಪಟ್ಟಿದೆ. ಉಪಚುನಾವಣೆಯಲ್ಲಿ ಯಾರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ಸುಳಿವನ್ನು ಇನ್ನೂ 2 ಮೈತ್ರಿ ಪಕ್ಷಗಳು ಬಿಟ್ಟುಕೊಟ್ಟಿಲ್ಲ. +ಆದರೆ ಜೆಡಿಎಸ್‌‍ ಯುವಘಟಕದ ಅಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಅಲ್ಲದೆ, ಚನ್ನಪಟ್ಟಣ ತಾಲ್ಲೂಕು ಜೆಡಿಎಸ್‌‍ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ಜಯಮುತ್ತು ಅವರಿಗೆ ಟಿಕೆಟ್‌ ನೀಡಬೇಕೆಂಬ ಒತ್ತಡವನ್ನು ಅವರ ಅಭಿಮಾನಿಗಳು ಕುಮಾರಸ್ವಾಮಿಯವರಿಗೆ ತರುತ್ತಿದ್ದಾರೆ.ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಜಯಮುತ್ತು ಅವರ ಅಭಿಮಾನಿಗಳು ಪೋಸ್ಟ್‌ ಹಾಕಿ ಉಪಚುನಾವಣೆಗೆ ತಮ ನಾಯಕನಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ. +ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಪ್ರಸ್ತುತ ವಿಧಾನಪರಿಷತ್‌ ಸದಸ್ಯರಾಗಿದ್ದು, ಉಪಚುನಾವಣೆಯಲ್ಲಿ ಸ್ಪರ್ಧೆಗಿಳಿಯುವ ಆಸಕ್ತಿ ಹೊಂದಿದ್ದಾರೆ. ಈಗಾಗಲೇ ಜೆಡಿಎಸ್‌‍ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆಯನ್ನು ನಡೆಸಿದ್ದಾರೆ. +ಚುನಾವಣೆ ಘೋಷಣೆಯಾದ ನಂತರ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದು, ಸದ್ಯಕ್ಕೆ ಉಪಚುನಾವಣೆಯ ಮೈತ್ರಿ ಅಭ್ಯರ್ಥಿ ಯಾರೆಂಬ ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ನಡುವೆ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ಪ್ರತಿನಿಧಿಸಬೇಕು ಎಂಬ ವಾದವು ಬಲವಾಗಿದ್ದು, ಯೋಗೀಶ್ವರ್‌ ಸ್ಪರ್ಧೆ ಮಾಡುವುದಾದರೆ ಬಿಜೆಪಿ ಬದಲಾಗಿ ಜೆಡಿಎಸ್‌‍ ಚಿಹ್ನೆಯಡಿ ಸ್ಪರ್ಧಿಸಲಿ ಎಂಬ ಸಲಹೆಯನ್ನು ನೀಡಲಾಗಿದೆ. +ಇದರ ಬಗ್ಗೆ ಯೋಗೇಶ್ವರ್‌ ಜೊತೆ ಸಮಾಲೋಚನೆ ನಡೆಸಿ ಅಂತಿಮ ರೂಪ ನೀಡಲು ಮಾಜಿ ಶಾಸಕ ಎ.ಮಂಜು ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ.ಎನ್‌ಡಿಎ ಮೈತ್ರಿಕೂಟದಲ್ಲಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಕುರಿತ ಯಾವುದೇ ಸಭೆಗಳೂ ಅಧಿಕೃತವಾಗಿ ನಡೆದಿಲ್ಲ. ಆದರೆ ಮಾಜಿ ಸಂಸದ ಡಿ.ಕೆ.ಸುರೇಶ್‌ ತಾವು ಉಪಚುನಾವಣೆಯಲ್ಲಿ ಸ್ಪಧಿಸುವುದಿಲ್ಲ ಎಂಬ ಸ್ಪಷ್ಟನೆ ನೀಡಿದ್ದಾರೆ. ಆದರೂ ಡಿ.ಕೆ.ಶಿವಕುಮಾರ್‌ರವರು ಕ್ಷೇತ್ರದ್ಯಂತ ಪ್ರವಾಸ ಕೈಗೊಂಡು, ಜನರ ನಾಡಿಮಿಡಿತ ಅರಿಯುವ ಕಾರ್ಯ ಮಾಡುತ್ತಿರುವುದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. +ಕಾಂಗ್ರೆಸ್‌‍ಗೆ ಅನುಕೂಲಕರವಾದ ವಾತಾವರಣ ಕಂಡುಬಂದು ವಿಶ್ವಾಸ ದೊರೆಯುವುದು ಖಾತ್ರಿಯಾದರೆ ಸುರೇಶ್‌ ಅವರನ್ನೇ ಉಪಚುನಾವಣೆ ಅಭ್ಯರ್ಥಿ ಮಾಡಲಾಗುತ್ತದೆ ಎಂಬ ವಿಚಾರವು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. \ No newline at end of file diff --git a/eesanje/url_46_104_2.txt b/eesanje/url_46_104_2.txt new file mode 100644 index 0000000000000000000000000000000000000000..fa5e9fbb8436ff5039d29c2f1592ac486fcdc135 --- /dev/null +++ b/eesanje/url_46_104_2.txt @@ -0,0 +1,10 @@ +ಉಪ ಚುನಾವಣೆಯಲ್ಲೂ ಬಿಜೆಪಿ – ಜೆಡಿಎಸ್‌‍ ಮೈತ್ರಿ ಮುಂದುವರಿಕೆ +ಬೆಂಗಳೂರು, ಜೂ.20– ಲೋಕಸಭಾ ಚುನಾವಣೆಯಂತೆ ಮುಂಬರುವ ವಿಧಾನಸಭಾ ಉಪ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಮೈತ್ರಿ ಮುಂದುವರೆಸಲಿವೆ. ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ(ಚನ್ನಪಟ್ಟಣ), ಬಸವರಾಜ ಬೊಮಾಯಿ(ಶಿಗ್ಗಾವಿ) ಹಾಗೂ ತುಕಾರಾಂ(ಸಂಡೂರು) ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. +ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್‌‍ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌‍ ವಿರುದ್ಧ ಜಂಟಿ ಹೋರಾಟ ನಡೆಸಲಿವೆ. +ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ಗೆ ಬಿಟ್ಟುಕೊಡಲಿದ್ದು, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ. ಮೂರು ಕ್ಷೇತ್ರಗಳಲ್ಲಿ ಆಂತರಿಕ ಸಮೀಕ್ಷೆ ನಡೆಸಿ ವರದಿ ಪಡೆಯಲು ಬಿಜೆಪಿ ಹೈಕಮಾಂಡ್‌ ತೀರ್ಮಾನಿಸಿದೆ. +ಸಮೀಕ್ಷಾ ವರದಿ ಆಧರಿಸಿ ಅಭ್ಯರ್ಥಿಗಳ ಆಯ್ಕೆ ಮಾಡಬೇಕು. ಲೋಕಸಭಾ ಚುನಾವಣೆಯಂತೆ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಬೇಕು. ಅದಕ್ಕೆ ಪೂರಕ ವಾತಾವರಣ ಸೃಷ್ಟಿ ಮಾಡಲು ಉಭಯ ನಾಯಕರು ನಿರ್ಧರಿಸಿದ್ದಾರೆ. +ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ನಿನ್ನೆ ಭೇಟಿ ಮಾಡಿ ಉಪ ಚುನಾವಣೆ ಸಂಬಂಧ ಮಾತುಕತೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಚನ್ನಪಟ್ಟಣ ನಮ ಪಕ್ಷಕ್ಕೆೆ ಬಿಟ್ಟುಕೊಡುವುದಾಗಿ ಹಾಗೂ ಉಳಿದ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುವುದಾಗಿ ಶಾ ಹೇಳಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಆದರೆ, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸ್ಪರ್ಧಿಸುವ ಅಪೇಕ್ಷೆ ಹೊಂದಿದ್ದಾರೆ. ಅವರು ಬಿಜೆಪಿ ಬಿಟ್ಟು ಜೆಡಿಎಸ್‌‍ ಚಿಹ್ನೆಯ ಮೇಲೆ ಸ್ಪರ್ಧೆ ಮಾಡಿದರೆ ಯಾವುದೇ ಬಿಕ್ಕಟ್ಟು ಮೈತ್ರಿಯಲ್ಲಿ ಉಂಟಾಗುವುದಿಲ್ಲ. +ಯೋಗೇಶ್ವರ್‌ ಬಿಜೆಪಿಯಿಂದ ಸ್ಪರ್ಧಿಸಲು ಜೆಡಿಎಸ್‌‍ ಒಪ್ಪದಿದ್ದರೆ ಮೈತ್ರಿಯಲ್ಲಿ ಬಿಕ್ಕಟ್ಟು ಉಂಟಾಗಲಿದೆ. ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್‌‍ ಮೂಲಗಳು ಹೇಳಿವೆ. +ಮೈತ್ರಿ ಅಭ್ಯರ್ಥಿಯಾಗಿ ಸ್ಥಳೀಯರನ್ನೇ ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ನಡುವೆ ನಿನ್ನೆ ಕ್ಷೇತ್ರ ಪ್ರವಾಸ ಕೈಗೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಜನರು ಅಪೇಕ್ಷೆ ಪಟ್ಟರೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ. +ಹೀಗಾಗಿ ಪ್ರಬಲ ಹಾಗೂ ಸಮರ್ಥ ಅಭ್ಯರ್ಥಿಯನ್ನೇ ಎನ್‌ಡಿಎ ಮೈತ್ರಿಕೂಟ ಕಣಕ್ಕಿಳಿಸಬೇಕಿದೆ. ಮೂರು ಕ್ಷೇತ್ರಗಳಲ್ಲಿ ಮೂರು ರಾಜಕೀಯ ಪಕ್ಷಗಳ ತಲಾ ಒಬ್ಬರು ರಾಜೀನಾಮೆ ನೀಡಿದ್ದಾರೆ. ಮತ್ತೆ ಆಯಾ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಸಮರ್ಥ ಅಭ್ಯರ್ಥಿಯ ಹುಡುಕಾಟವನ್ನು ಆರಂಭಿಸಿವೆ. ಇದರಿಂದ ಉಪ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌‍ ಮತ್ತು ಮಿತ್ರ ಪಕ್ಷಗಳ ನಡುವೆ ಪ್ರತಿಷ್ಠೆಯ ಹೋರಾಟ ನಡೆಯಲಿದೆ. \ No newline at end of file diff --git a/eesanje/url_46_104_3.txt b/eesanje/url_46_104_3.txt new file mode 100644 index 0000000000000000000000000000000000000000..169f90b8e2a414cda6202c1d9477dc620e41e280 --- /dev/null +++ b/eesanje/url_46_104_3.txt @@ -0,0 +1,5 @@ +ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆ ದೋಚಿದ ಕಳ್ಳರು +ಚೇಳೂರು,ಜೂ.20– ತಡರಾತ್ರಿ ಕೈಚಳಕ ತೋರಿಸಿರುವ ಕಳ್ಳರು ಮೂರು ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆ ಹಾಗೂ ಮನೆಯೊಂದರಲ್ಲಿ ಕಳವು ಮಾಡಿರುವ ಘಟನೆ ಚೇಳೂರು ಪೊಲೀಸ್‌‍ ಠಾಣೆಯಲ್ಲಿ ನಡೆದಿದೆ. +ಬಿದಿರೆ, ಎಂ.ಎನ್‌.ಕೋಟೆ, ದೊಡ್ಡಗುಣಿ ಹಾಗೂ ಕಾರೇಹಳ್ಳಿ ಗ್ರಾಮದ ಎಂಎಸ್‌‍ಐಎಲ್‌ ಮದ್ಯ ಮಾರಾಟ ಮಳಿಗೆಯ ರೋಲಿಂಗ್‌ ಶೆಟರ್‌ ಮೀಟಿ ಒಳನುಗ್ಗಿರುವ ಚೋರರು ಮನಸಿಗೆ ಬಂದಷ್ಟು ಮದ್ಯ ಹಾಗೂ ಕ್ಯಾಶ್‌ ಡ್ರಾದಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. +ಅದೇ ರೀತಿ ಕೊಂಡ್ಲಿ ಗ್ರಾಮದಲ್ಲಿ ಮನೆಯೊಂದರ ಬೀಗ ಮುರಿದು ಅಲ್ಲೂ ಕೂಡ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ತಡರಾತ್ರಿ ಈ ಸರಣಿಗಳ್ಳತನ ನಡೆದಿದ್ದು, ಎಷ್ಟು ಹಣ, ಆಭರಣ ಹಾಗೂ ಮದ್ಯ ಕಳ್ಳತನವಾಗಿದೆ ಎಂಬುದು ತಿಳಿದುಬಂದಿಲ್ಲ. +ಇಂದು ಬೆಳಿಗ್ಗೆ ಅಂಗಡಿಗಳ ಬಾಗಿಲು ತೆರೆದಿರುವುದನ್ನು ಕಂಡ ಸ್ಥಳೀಯರು ಮಾಲೀಕರಿಗೆ ಸುದ್ದಿ ತಿಳಿಸಿದ್ದಾರೆ.ಕೂಡಲೇ ಚೇಳೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸುತ್ತಮುತ್ತಲಿನ ಸಿಸಿ ಟಿವಿಗಳನ್ನು ಪರಿಶೀಲಿಸಿದ್ದು, ಒಂದೇ ಗ್ಯಾಂಗ್‌ ಸರಣಿ ಕಳ್ಳತನ ಮಾಡಿದೆಯೋ ಅಥವಾ ಬೇರೆ ಬೇರೆ ಕಳ್ಳರ ತಂಡ ಈ ಕೃತ್ಯ ಎಸಗಿದ್ದಾರಾ? ಎಂಬುದು ತನಿಖೆಯ ನಂತರ ತಿಳಿದುಬರಬೇಕಿದೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_104_4.txt b/eesanje/url_46_104_4.txt new file mode 100644 index 0000000000000000000000000000000000000000..9f46d8c9ddb16755eda21cba5ac8734ef67bff8e --- /dev/null +++ b/eesanje/url_46_104_4.txt @@ -0,0 +1,5 @@ +ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರ ಸಾವು +ಚಿಕ್ಕಮಗಳೂರು,ಜೂ.20-ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ.ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅ್ದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ. +ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ ನಿಯಂತ್ರಣ ತಪ್ಪಿ ತೆಪ್ಪ ಪಲ್ಟಿಯಾಗಿ ಮೂವರು ನೀರಿನಲ್ಲಿ ಮುಳುಗಿದ್ದಾರೆ. +ಪ್ರಾಥಮಿಕ ಮಾಹಿತಿ ಪ್ರಕಾರ, ತೆಪ್ಪದ ಮಾಲೀಕ ಕೂಡ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಮೃತದೇಹಗಳ ಪತ್ತೆಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. +ಶವ ದೊರೆತ ಬಳಿಕ ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದರು.ರಾತ್ರಿ 8ರ ತನಕ ಶೋಧ ಕಾರ್ಯ ನಡೆಸಲಾಯಿತು. ಆದರೂ ಮೃತದೇಹಗಳು ಸಿಗದೆ, ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. \ No newline at end of file diff --git a/eesanje/url_46_104_5.txt b/eesanje/url_46_104_5.txt new file mode 100644 index 0000000000000000000000000000000000000000..36caf07a7467bb987368ea0525040acecf42b589 --- /dev/null +++ b/eesanje/url_46_104_5.txt @@ -0,0 +1,11 @@ +ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜೂ.19-ರಾಜ್ಯದಲ್ಲಿ ಕಡ್ಡಾಯವಾಗಿ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ ನಮ್ಮ ಸರ್ಕಾರದ ಸಂಕಲ್ಪ. ಇದನ್ನು ಚಾಚೂ ತಪ್ಪದೇ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ನಗರದ ಅಂಬೇಡ್ಕರ್‌ ಭವನದಲ್ಲಿ ಸಮಾಜಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಡನಾಡಿದ ಅವರು, 1994-95 ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ವಸತಿ ಶಾಲೆಗಳನ್ನು ಆರಂಭಿಸಲಾಯಿತು ಎಂದರು. ಪ್ರಸ್ತುತ ಸಮಾಜ ಕಲ್ಯಾಣ ಇಲಾಖೆಯಿಂದ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 113 ಸೇರಿ 946 ವಸತಿ ಶಾಲೆಗಳಿವೆ. ಶೇ.86 ರಷ್ಟು ಹೋಬಳಿಗಳಲ್ಲಿ ವಸತಿ ಶಾಲೆಗಳಿದ್ದು, ಕೆಲವು ಕಡೆ ಒಂದು ಹೋಬಳಿಗೆ ಎರಡು ಶಾಲೆಗಳಿವೆ. ಬಾಕಿ ಇರುವ ಶೇ.14 ರಷ್ಟು ಹೋಬಳಿಗಳಲ್ಲಿ ವಸತಿ ಶಾಲೆಯನ್ನು ಆರಂಭಿಸಬೇಕು. +ಈ ವರ್ಷ 20 ಶಾಲೆಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶಾಲೆಗಳನ್ನು ಆರಂಭಿಸಲಾಗುವುದು ಎಂದರು.ಸಮಾಜದಲ್ಲಿ ಶ್ರೇಣೀಕೃತ ವ್ಯವಸ್ಥೆಯಿಂದಾಗಿ ಜಾತಿ ಹಾಗೂ ಅಸಮಾನತೆ ಇದೆ. ಬುದ್ದ, ಬಸವಣ್ಣ ಅವರು ಹೇಳಿದ ಬಳಿಕವೂ ಜಾತಿ ನಿರ್ಮೂಲನೆಯಾಗಿಲ್ಲ. ವೈಚಾರಿಕತೆ ಬೆಳೆದಿಲ್ಲ. ಕರ್ಮ ಸಿದ್ಧಾಂತವನ್ನು ನಂಬುವುದನ್ನು ಬಿಟ್ಟಿಲ್ಲ. +ಶಿಕ್ಷಣ ಎಂದರೆ ಅಂಕ ಗಳಿಸುವುದು, ನೌಕರಿ ಗಿಟ್ಟಿಸುವುದು ಮಾತ್ರವಲ್ಲ. ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವ ಬೆಳೆಯಬೇಕಿದೆ ಎಂದು ಹೇಳಿದರು. ವಸತಿ ಶಾಲೆಯ ಶಿಕ್ಷಕರು ಮೊದಲು ಜಾತಿ ವ್ಯವಸ್ಥೆಯನ್ನು ಬೆಂಬಲಿಸುವುದನ್ನು ಬಿಡಬೇಕು. ನಂತರ ಮಕ್ಕಳಿಗೆ ವೈಚಾರಿಕ ಶಿಕ್ಷಣವನ್ನು ಕಲಿಸಬೇಕು ಎಂದು ಸೂಚನೆ ನೀಡಿದರು. +ತಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿಯವರು ನನಗೆ ಶಿಕ್ಷಣ ದೊರೆಯದೇ ಇದ್ದರೆ ಕಾನೂನು ಪದವೀಧರನಾಗುತ್ತಿರಲಿಲ್ಲ, ರಾಜ್ಯದ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹುಟ್ಟಿನಿಂದ ಯಾರೂ ದಡ್ಡರಲ್ಲ. ಅವಕಾಶಗಳ ಕೊರತೆಯಿಂದಾಗಿ ಪ್ರತಿಭೆ ಬೆಳಕಿಗೆ ಬರುವುದಿಲ್ಲ. +ಹಳ್ಳಿಗಾಡಿನಲ್ಲಿ ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಮಕ್ಕಳಿಗೆ ಅವಕಾಶಗಳ ಕೊರತೆ ಇರುತ್ತದೆ ಎಂದು ಹೇಳಿದರು. ವಸತಿ ಶಾಲೆಯ ಮಕ್ಕಳು ಉತ್ತಮ ಫಲಿತಾಂಶ ಗಳಿಸಿದ್ದಾರೆ. ಅದರಲ್ಲೂ ಅಂಕಿತ 100 ಕ್ಕೆ 100 ಅಂಕ ಪಡೆದಿದ್ದು ನನಗೆ ಅತೀವ ಸಂತಸ ಉಂಟುಮಾಡಿತು. ಇಂದು ಆ ಮಕ್ಕಳನ್ನು ಸನಾನಿಸಲಾಗಿದೆ ಎಂದರು. +ಸಚಿವ ಎಚ್‌.ಸಿ.ಮಹದೇವಪ್ಪ ಮಾತನಾಡಿ, ರಾಜ್ಯದಲ್ಲಿ 175 ಹಿಂದುಳಿದ ವರ್ಗಗಳ, 154 ಪರಿಶಿಷ್ಟ ವರ್ಗದ ಹಾಗೂ 500 ಕ್ಕೂ ಹೆಚ್ಚು ಪರಿಶಿಷ್ಟ ಜಾತಿಯ ವಸತಿ ಶಾಲೆಗಳಿವೆ. ಇಲ್ಲಿ ಪ್ರವೇಶ ನೀಡುವಾಗ ಪರಿಶಿಷ್ಟ ಜಾತಿ ಪಂಗಡದ ಮಕ್ಕಳಿಗೆ ಶೇ.75 ರಷ್ಟು ಹಾಗೂ ಸಾಮಾನ್ಯ ವರ್ಗಕ್ಕೆ ಶೇ.25 ರಷ್ಟು ಮೀಸಲಾತಿ ನೀಡಲಾಗುತ್ತಿದೆ ಎಂದು ವಿವರಿಸಿದರು. +ದೇಶದಲ್ಲಿ ವಾಕ್‌ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯಕ್ಕೆ ತಡೆಯಾಗುವ ವಾತಾವರಣ ನಿರ್ಮಾಣವಾಗಿತ್ತು. ಭಾಷೆ, ಉಡುಪು ಮತ್ತು ಆಹಾರ ಪದ್ಧತಿಯಲ್ಲಿ ಏಕರೂಪತೆಗಾಗಿ ಬಲವಂತಗೊಳಿಸುವ ಪರಿಸ್ಥಿತಿ ಎದುರಾದಾಗ ನಮ ಸರ್ಕಾರ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸಿತ್ತು ಎಂದು ವಿವರಿಸಿದರು. +ಸಭಾಪತಿ ಬಸವರಾಜಹೊರಟ್ಟಿ, ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುವ ಮಕ್ಕಳು ಉನ್ನತಾಧಿಕಾರಿಗಳಾಗಬೇಕು, ಸಮಾಜಸೇವೆ ಮಾಡಬೇಕು ಎಂದು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಸವಣ್ಣನವರ ತತ್ವ ಅನುಸರಿಸುತ್ತಿದ್ದಾರೆ. ಹಿಡಿದ ಕೆಲಸವನ್ನು ಮಾಡುವ ಪಟ್ಟು ಹಿಡಿದರೆ ಹರಿ, ಬ್ರಹ ಬಂದರೂ ಅದನ್ನು ನಿಲ್ಲಿಸುವುದಿಲ್ಲ ಎಂದು ಹಾಡಿ ಹೊಗಳಿದರು. +ರಿಜ್ವಾನ್‌ ಹರ್ಷದ್‌, ವಿಧಾನಪರಿಷತ್ ಸದಸ್ಯ ಸುಧಾಂದಾಸ್‌‍ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಎಸ್‌‍ಎಸ್‌‍ಎಲ್‌ಸಿ, ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಹಾಗೂ ಶೇ. 100ರಷ್ಟು ಫಲಿತಾಂಶದ ಪಡೆದ ಶಾಲೆಗಳ ಪ್ರಾಂಶುಪಾಲರನ್ನು ಕಾರ್ಯಕ್ರಮದಲ್ಲಿ ಸನಾನಿಸಲಾಯಿತು.625 ಕ್ಕೆ 625 ಅಂಕ ಪಡೆದ ಬಾಗಲಕೋಟೆಯ ಅಂಕಿತ ಬಸಪ್ಪ ಅವರಿಗೆ 5 ಲಕ್ಷ ರೂ.ವಿನ ನಗದು ಬಹುಮಾನದೊಂದಿಗೆ ಸನಾನಿಸಲಾಯಿತು. \ No newline at end of file diff --git a/eesanje/url_46_104_6.txt b/eesanje/url_46_104_6.txt new file mode 100644 index 0000000000000000000000000000000000000000..c8b6b839953ecad669c2795f7afd3e886e462a61 --- /dev/null +++ b/eesanje/url_46_104_6.txt @@ -0,0 +1,4 @@ +ಕೇಂದ್ರ ರೈಲ್ವೆ ಸಚಿವರೊಂದಿಗೆ ಎಚ್‌ಡಿಕೆ ಮಹತ್ವದ ಚರ್ಚೆ +ನವದೆಹಲಿ,ಜೂ.19-ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಸಿದರು. +ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣ ಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಕುರಿತಂತೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. +ರೈಲ್ವೆ ಸಚಿವರು ರಾಜ್ಯದ ಯೋಜನೆಗಳ ಬಗ್ಗೆ ಅತ್ಯಂತ ಸಕಾರಾತಕವಾಗಿ ಸ್ಪಂದಿಸಿದ್ದು, ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಮಾಜಿ ಪ್ರಧಾನಿಗಳಾದ ಹೆಚ್‌‍.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತಂತೆ ಚರ್ಚೆ ನಡೆಸಲಾಗಿದೆ. \ No newline at end of file diff --git a/eesanje/url_46_104_7.txt b/eesanje/url_46_104_7.txt new file mode 100644 index 0000000000000000000000000000000000000000..44c4481585a7a18d292af1bb2f3a7e2f809f97e1 --- /dev/null +++ b/eesanje/url_46_104_7.txt @@ -0,0 +1,7 @@ +ರೇಣುಕಾಸ್ವಾಮಿಯ ಮರಣೋತ್ತರ ವರದಿ ತಿರುಚಲು ಹಣದ ಆಮಿಷವೊಡ್ಡಿದ್ದು ನನಗೆ ಗೊತ್ತಿಲ್ಲ : ಗುಂಡೂರಾವ್ +ಮೈಸೂರು, ಜೂ.19-ರೇಣುಕಾಸ್ವಾಮಿಯ ಮರಣೋತ್ತರ ವರದಿ ತಿರುಚಲು ಹಣದ ಆಮಿಷವೊಡ್ಡಿದ್ದರು ಎನ್ನಲಾದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಅಂತಹದ್ದೇನಾದರೂ ಇದ್ದರೆ ಆ ಬಗ್ಗೆ ಪರಿಶೀಲನೆ ನಡೆಸುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿಯನ್ನು ಹೀನಾಯವಾಗಿ ಕೊಲೆ ಮಾಡಲಾಗಿದೆ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿದ್ದಾರೆ. +ತಪಿತಸ್ಥರಿಗೆ ಶಿಕ್ಷೆಯಾಗಬೇಕು, ಯಾವುದೇ ಆಗಲಿ ಅತಿರೇಕಕ್ಕೆ ಹೋದಾಗ ಅಸಹಿಷ್ಣತೆ ಉಂಟಾಗುತ್ತದೆ. ನಾನು ಎಂಬ ಅಹಂ ಬಿಡಬೇಕು. ನಮ್ಮಿಂದಲೇ ಎಲ್ಲಾ ಎಂಬ ಮನೋಭಾವನೆ ಬದಲಾಗಬೇಕು ಎಂದರು.ಈ ಪ್ರಕರಣದಲ್ಲಿ ನಾವ್ಯಾರು ಮಧ್ಯಪ್ರವೇಶ ಮಾಡುವುದಿಲ್ಲ. ಪೊಲೀಸರು ಕೂಲಂಕುಶವಾಗಿ ಸಾಕ್ಷಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದ್ದಾರೆ ಎಂದರು. +ರೇಣುಕಾಸ್ವಾಮಿ ಅವರು ಚಿತ್ರಹಿಂಸೆ, ರಕ್ತಸ್ರಾವದಿಂದ ಆಘಾತಗೊಳಗಾಗಿ ಮೃತಪಟ್ಟಿದ್ದಾರೆಂದು ವೈದ್ಯಕೀಯ ವರದಿಯಲ್ಲಿ ತಿಳಿಸಲಾಗಿದೆ. ರೇಣುಕಾಸ್ವಾಮಿಯವರ ದೇಹದ ಮೇಲೆ 15ಕ್ಕೂ ಹೆಚ್ಚು ಗಾಯದ ಗುರುತುಗಳಿವೆ. ಅವರ ತಲೆ, ಹೊಟ್ಟೆ, ಎದೆ ಇತರ ಭಾಗಗಳಲ್ಲಿ ದೊಣ್ಣೆ, ಚರ್ಮದ ಬೆಲ್್ಟ ಹಾಗೂ ಹಗ್ಗದಿಂದ ಹೊಡೆದಿರುವ ಗುರುತುಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.ಹಾಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾಗಿ ಪೊಲೀಸರು ಹಗಲಿರುಳು ತನಿಖೆ ನಡೆಸುತ್ತಿದ್ದಾರೆಂದು ಪ್ರತಿಕ್ರಿಯಿಸಿದರು. +ಬೆಲೆ ಏರಿಕೆ ಅನಿವಾರ್ಯ:ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಕಡಿಮೆ ಇದೆ. ಕೇಂದ್ರ ಸರ್ಕಾರ ತನಗೆ ಬರುವ ತೆರಿಗೆ ಸುಂಕವನ್ನ ಇಳಿಸದೆ ಕೇವಲ ನಮ್ಮನ್ನ ಮಾತ್ರ ತೆರಿಗೆ ಇಳಿಸಿ ಎಂದರೆ ಹೇಗೆ. +ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣ ಅನಿವಾರ್ಯವಾಗಿದೆ. ಅದಕ್ಕಾಗಿ ಸಂಪನ್ಮೂಲ ಕ್ರೂಢೀಕರಣ ಮಾಡುತ್ತಿದ್ದೇವೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.ಗ್ಯಾರಂಟಿಗಳಿಗಾಗಿ ಬೆಲೆ ಏರಿಸಿದ್ದೇವೆ ಎಂಬುವುದು ಸುಳ್ಳು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ, ಪರಿಷ್ಕರಣೆ ಮಾಡುವುದಾಗಲೀ ಇಲ್ಲ. ಅಧ್ಯಯನ ನಡೆಸಿ ಕೆಲ ಬದಲಾವಣೆ ಮಾಡಬಹುದು ಎಂದರು. +ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಽಸಿದಂತೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಇದಕ್ಕೆ ಸಾಕಷ್ಟು ಕಡಿವಾಣ ಹಾಕಲಾಗಿದೆ. ಹೆಣ್ಣು ಭ್ರೂಣ ಹತ್ಯೆ ಸಂಪೂರ್ಣ ನಿಂತಿದೆ ಎಂದು ಹೇಳುವುದಿಲ್ಲ. ನಮ್ಮ ಅಽಕಾರಿಗಳು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.ಬೆಳಗಾವಿ, ಮಂಡ್ಯ ಸೇರಿದಂತೆ ಹಲವಡೆ ದಾಳಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸುತ್ತೇನೆ. ಮೈಸೂರಿನ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು. diff --git a/eesanje/url_46_104_8.txt b/eesanje/url_46_104_8.txt new file mode 100644 index 0000000000000000000000000000000000000000..34f31b59e9bb7e7d0e4fc9f65d2a5400f0e38512 --- /dev/null +++ b/eesanje/url_46_104_8.txt @@ -0,0 +1,9 @@ +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 118 ಸಾಕ್ಷ್ಯಗಳ ಸಂಗ್ರಹ! +ಬೆಂಗಳೂರು, ಜೂ.19-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರು ಕುಗೊಳಿಸಿ ಇಂಚಿಂಚೂ ಬಿಡದೆ ಸಾಕ್ಷಿಗಳನ್ನು ಸಂಗ್ರಹಿಸುತ್ತಿರುವ ವಿಜಯನಗರ ಉಪವಿಭಾಗದ ಪೊಲೀಸರು ಇದು ವರೆಗೂ ಬರೋಬ್ಬರಿ 118 ವಸ್ತುಗಳನ್ನು ವಿವಿಧ ಸ್ಥಳಗಳಿಂದ ಜಪ್ತಿ ಮಾಡಿದ್ದಾರೆ. +ಜೂ. 8ರಂದು ರೇಣುಕಾಸ್ವಾಮಿಯನ್ನು ಚಿತ್ರ ದುರ್ಗದಿಂದ ಕರೆತಂದ ವಾಹನ ಸೇರಿದಂತೆ ಅವರು ಕೊಲೆಯಾದ ಪಟ್ಟಣಗೆರೆ ಶೆಡ್ನಲ್ಲಿ ದೊರೆತ ಪ್ರತಿಯೊಂದು ವಸ್ತುವನ್ನು ಸಹ ಸೀಜ್ ಮಾಡಲಾಗಿದೆ. ಬೆಂಗಳೂರು, ಮೈಸೂರು, ಚಿತ್ರದುರ್ಗದಲ್ಲಿ ಸ್ಥಳ ಮಹಜರು ಮಾಡಿ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದು, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. +ಅಲ್ಲದೆ, ಕೃತ್ಯಕ್ಕೆ ಬಳಸಿದಂತಹ ವಸ್ತುಗಳು, ಆರೋಪಿಗಳ ಬಟ್ಟೆಗಳು, ಶೂ, ಚಪ್ಪಲಿ ಹಾಗೂ ಓಡಾಡಲು ಬಳಸಿದಂತಹ ವಾಹನಗಳು ಸೇರಿದಂತೆ ಹೀಗೆ ಹಲವು ಸಾಕ್ಷ್ಯಗಳನ್ನು ಕಲೆಹಾಕಿ ವಶಪಡಿಸಿಕೊಳ್ಳಲಾಗಿದೆ. +ಈಗಾಗಲೇ ನಟ ದರ್ಶನ್ ಮನೆ, ಪವಿತ್ರಗೌಡ ಮನೆ ಹಾಗೂ ದರ್ಶನ್ಗೆ ಸೇರಿದ ಫಾರ್ಮ್ಹೌಸ್ ಹಾಗೂ ಕೃತ್ಯಕ್ಕೂ ಮುನ್ನ ಪಾರ್ಟಿ ಮಾಡಿದಂತಹ ಹೊಟೇಲ್ ಮತ್ತು ದರ್ಶನ್ ಬಂಧನದ ವೇಳೆ ತಂಗಿದ್ದ ಹೊಟೇಲ್ಗಳಲ್ಲೂ ಸಹ ಸ್ಥಳ ಮಹಜರು ನಡೆಸಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಈ ಪ್ರಕರಣದ ಆರೋಪಿಗಳನ್ನು ಅಷ್ಟೇ ಅಲ್ಲದೆ ಅವರಿಗೆ ಸಂಬಂಧಿಸಿದವರನ್ನು ಸಹ ಪೊಲೀಸರು ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. +ಈ ಪ್ರಕರಣದಲ್ಲಿ ಪ್ರಮುಖ ಹಾಗೂ ಮಹತ್ತರವಾದ ಸಾಕ್ಷ್ಯವಾದ ರೇಣುಕಾಸ್ವಾಮಿ ಅವರ ಮೊಬೈಲ್ ಹಾಗೂ ಸಿಮ್ ಇದುವರೆಗೂ ಪತ್ತೆಯಾಗಿಲ್ಲ. ಈ ಮೊಬೈಲ್ ಕೊಲೆ ಪ್ರಕರಣಕ್ಕೆ ಅತ್ಯಂತ ಮಹತ್ವದ್ದಾಗಿದೆ. ಸಾಕ್ಷಿ ನಾಶ ಪಡಿಸಲೆಂದೇ ರೇಣುಕಾಸ್ವಾಮಿ ಮೃತದೇಹ ಎಸೆದ ರಾಜಕಾಲುವೆಗೆ ಆತನ ಮೊಬೈಲ್ನ್ನು ಸಹ ಆರೋಪಿ ರಘು ಎಸೆದಿರುವುದಾಗಿ ವಿಚಾರಣೆ ವೇಳೆ ಗೊತ್ತಾಗಿದ್ದು, ರಾಜಕಾಲುವೆಯಲ್ಲಿ ಹುಡುಕಾಟ ನಡೆಸಿದರಾದರೂ ಇದುವರೆಗೂ ಪತ್ತೆಯಾಗಿಲ್ಲ. +ರೇಣುಕಾಸ್ವಾಮಿ ಮೊಬೈಲ್ ಅಲ್ಲದೆ ಆರೋಪಿ ರಘು ಮೊಬೈಲ್ನ್ನು ಸಹ ಆರೋಪಿ ಪ್ರದೋಶ್ ಅದೇ ರಾಜಕಾಲುವೆಗೆ ಎಸೆದಿದ್ದು, ಈ ಎರಡೂ ಮೊಬೈಲ್ ಫೋನ್ಗಳು ಪತ್ತೆಯಾದರೆ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ. +ಅಗ್ನಿಶಾಮಕದ ನೆರವು:ಮೊಬೈಲ್ ಪತ್ತೆಗಾಗಿ ಇದೀಗ ಅಗ್ನಿಶಾಮಕ ಇಲಾಖೆಯ ನೆರವನ್ನು ಪಡೆದು ಮೊಬೈಲ್ಗಾಗಿ ಪೊಲೀಸರು ಹುಡುಕಾಟ ನಡೆಸಲಿದ್ದಾರೆ.ರೇಣುಕಾಸ್ವಾಮಿ ಮೊಬೈಲ್ನಲ್ಲಿ ಪವಿತ್ರಾಗೌಡಗೆ ಕಳುಹಿಸಿದ ಚಿತ್ರಗಳು, ಸಂದೇಶ ಹಾಗೂ ಅಪಹರಣದ ದಿನ ಆತನಿಗೆ ಬಂದ ಮೊಬೈಲ್ ಕರೆಗಳು ಸಂಗ್ರಹವಾಗಿವೆ. ಅಲ್ಲದೆ, ರೇಣುಕಾಸ್ವಾಮಿ ಮೇಲೆ ಅಂದು ನಡೆದ ಹಲ್ಲೆಯನ್ನು ರಘು ಮೊಬೈಲ್ನಲ್ಲಿ ವಿಡಿಯೋ ವಿಡಿಯೋ ಮಾಡಿಕೊಂಡಿದ್ದ. +ಹಾಗಾಗಿ ಆತನ ಮೊಬೈಲ್ನ್ನು ಪ್ರದೋಶ್ ರಾಜಕಾಲುವೆಗೆ ಎಸೆದಿದ್ದ. ಈತನ ಮೊಬೈಲ್ ದೊರೆತರೆ ಈ ಪ್ರಕರಣ ದೊಡ್ಡ ತಿರುವನ್ನೇ ಪಡೆದುಕೊಳ್ಳಲಿದ್ದು, ಆರೋಪಿಗಳಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.ಒಟ್ಟಾರೆ ರೇಣುಕಾಸ್ವಾಮಿ ಕೊಲೆಗೆ ಸಂಗ್ರಹಿಸಿದ ಪ್ರತಿ ವಸ್ತುವನ್ನು ಸಹ ಸಾಕ್ಷ್ಯವನ್ನಾಗಿ ಪರಿಗಣಿಸಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. \ No newline at end of file diff --git a/eesanje/url_46_104_9.txt b/eesanje/url_46_104_9.txt new file mode 100644 index 0000000000000000000000000000000000000000..76199104c84f54baed1f7f8f743f18e79219a189 --- /dev/null +++ b/eesanje/url_46_104_9.txt @@ -0,0 +1,6 @@ +ಬೆಂಗಳೂರಿಗರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ “ಗ್ಯಾರಂಟಿ” +ಬೆಂಗಳೂರು,ಜೂ.19– ಪೆಟ್ರೋಲ್ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿರುವ ರಾಜ್ಯಸರ್ಕಾರ ಈಗ ನೀರಿನ ದರವನ್ನು ಹೆಚ್ಚಿಸುವ ಮೂಲಕ ಬೆಂಗಳೂರಿನ ನಾಗರಿಕರಿಗೆ ಮತ್ತಷ್ಟು ಸಂಕಷ್ಟ ತಂದಿಡಲು ಮುಂದಾಗಿದೆ. +ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ನೀರು ಪೂರೈಸುವ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಸ್ಥಿರತೆಗಾಗಿ ದರ ಪರಿಷ್ಕರಣೆ ಅನಿವಾರ್ಯ ಎಂದು ಸ್ಪಷ್ಟಪಡಿಸಿದ್ದಾರೆ. +ಕಳೆದ 10 ವರ್ಷಗಳಿಂದಲೂ ನೀರಿನ ದರ ಹೆಚ್ಚಳವಾಗಿಲ್ಲ. ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಿಲ್ಲ. ವರ್ಷದಿಂದ ವರ್ಷಕ್ಕೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಯಾವುದೇ ಬ್ಯಾಂಕುಗಳು ಆರ್ಥಿಕ ನೆರವಿಗೆ ಮುಂದೆ ಬರುತ್ತಿಲ್ಲ ಎಂದರು.ಸಂಗ್ರಹಿಸಲಾಗುತ್ತಿರುವ ನೀರಿನ ಕರದಲ್ಲಿ ಶೇ.70 ರಷ್ಟು ವಿದ್ಯುತ್ ಬಿಲ್ ಮತ್ತು ಕಾರ್ಮಿಕರ ವೇತನಕ್ಕೆ ಸಂದಾಯವಾಗುತ್ತಿದೆ. +ರಾಜಕೀಯ ಕಾರಣಕ್ಕಾಗಿ ನೀರಿನ ದರ ಪರಿಷ್ಕರಣೆ ಮಾಡದೇ ಸಂಸ್ಥೆಯನ್ನು ನಷ್ಟಕ್ಕೊಳಪಡಿಸಲಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಸೇರಿದಂತೆ ಹಲವಾರು ಸಂಸ್ಥೆಗಳು ರಾಜಕೀಯವನ್ನು ಬದಿಗಿಟ್ಟು ನಿರ್ಧಾರ ತೆಗೆದುಕೊಳ್ಳುವಂತೆ ಸಲಹೆ ನೀಡುತ್ತಿವೆ ಎಂದು ಹೇಳಿದರು. +ನೀರಿನ ದರ ಪರಿಷ್ಕರಣೆ ಸೇರಿದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆರ್ಥಿಕ ಸುಸ್ಥಿರತೆಗೆ ಸಾಧುವಾಗಿರುವ ಎಲ್ಲಾ ಸಾಧ್ಯತೆಗಳನ್ನು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯಕ್ಕೆ ಕಾಲಮಿತಿ ನಿಗದಿ ಮಾಡಲಾಗಿಲ್ಲ. ಆದರೆ ನಿಷ್ಠೂರವಾದ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_105_1.txt b/eesanje/url_46_105_1.txt new file mode 100644 index 0000000000000000000000000000000000000000..d46357df3634d58be06dcb7e5b20b629e4b20512 --- /dev/null +++ b/eesanje/url_46_105_1.txt @@ -0,0 +1,8 @@ +ಜೂ.24 ರಂದು ವಿಧಾನಪರಿಷತ್‌ ನೂತನ ಸದಸ್ಯರ ಪ್ರಮಾಣವಚನ +ಬೆಂಗಳೂರು,ಜೂ.19-ವಿಧಾನಪರಿಷತ್‌ಗೆ ಚುನಾಯಿತರಾಗಿರುವ 17 ನೂತನ ಸದಸ್ಯರು ಜೂ.24 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಹಾಗೂ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಂದ ಮೇಲನೆಯ 6 ಸದಸ್ಯ ಸ್ಥಾನಗಳಿಗೆ ಚುನಾಯಿತರಾಗಿದ್ದಾರೆ. +ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.ವಿಧಾನಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಹೊಸದಾಗಿ ಆಯ್ಕೆಯಾಗಿರುವ 11 ಸದಸ್ಯರು ಅಧಿಕಾರ ಹಾಗೂ ಗೌಪ್ಯತೆಯ ತಮ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. +ಈ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್‌‍, ಕಾಂಗ್ರೆಸ್‌‍ನ ನಾಯಕರು ಹಾಗೂ ನೂತನ ಸದಸ್ಯರ ಕುಟುಂಬ ಸದಸ್ಯರು, ಅಭಿಮಾನಿಗಳು ಹಾಜರಿರಲಿದ್ದಾರೆ.ವಿಧಾನಸಭೆಯಿಂದ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌‍ನ ಐವಾನ್‌ ಡಿಸೋಜ, ಕೆ.ಗೋವಿಂದರಾಜು, ಜಗದೇವ ಗುತ್ತೇದಾರ್‌, ಬಲ್ಕಿಸ್‌‍ ಬಾನು, ಡಾ.ಯತೀಂದ್ರ ಎಸ್‌‍., ಸಚಿವ ಎನ್‌.ಎಸ್‌‍.ಬೋಸರಾಜ್‌, ಎಸ್‌‍.ವಸಂತಕುಮಾರ್‌, ಬಿಜೆಪಿಯ ಸಿ.ಟಿ.ರವಿ, ಎನ್‌.ರವಿಕುಮಾರ್‌, ಮೂಳೆ ಮಾರುತಿರಾವ್‌ ಹಾಗೂ ಜೆಡಿಎಸ್‌‍ನಿಂದ ಟಿ.ಎನ್‌.ಜವರಾಯಿಗೌಡ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. +ಕಾಂಗ್ರೆಸ್‌‍ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ರಾಮೋಜಿಗೌಡ (ಬೆಂಗಳೂರು ಪದವೀಧರ ಕ್ಷೇತ್ರ), ಬಿ.ಟಿ.ಶ್ರೀನಿವಾಸ್‌‍ (ಆಗ್ನೇಯ ಶಿಕ್ಷಕರ ಕ್ಷೇತ್ರ), ಡಾ.ಚಂದ್ರಶೇಖರ ಪಾಟೀಲ (ಈಶಾನ್ಯ ಪದವೀಧರ ಕ್ಷೇತ್ರ), ಜೆಡಿಎಸ್‌‍ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಎಸ್‌‍.ಎಲ್‌.ಬೋಜೇಗೌಡ (ನೈರುತ್ಯ ಶಿಕ್ಷಕರ ಕ್ಷೇತ್ರ), ವಿವೇಕಾನಂದ (ದಕ್ಷಿಣ ಶಿಕ್ಷಕರ ಕ್ಷೇತ್ರ) ಹಾಗೂ ಡಾ.ಧನಂಜಯ ಸರ್ಜಿ (ನೈರುತ್ಯ ಪದವೀಧರ ಕ್ಷೇತ್ರ) ಚುನಾಯಿತರಾಗಿದ್ದಾರೆ. ಈ 6 ಸದಸ್ಯರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ವಿಧಾನಪರಿಷತ್‌ನ ಸದಸ್ಯರಾಗಿದ್ದ ರಘುನಾಥ್‌ರಾವ್‌ ಮಲ್ಕಾಪುರೆ, ಡಾ.ಕೆ.ಗೋವಿಂದರಾಜ್‌, ಅರವಿಂದ್‌ ಕುಮಾರ್‌ ಅರಳಿ, ಪಿ.ಎಂ.ಫಾರುಖ್‌, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ ಕುಮಾರ್‌, ಎನ್‌.ಎಸ್‌‍.ಬೋಸರಾಜು ಹಾಗೂ ಮುನಿರಾಜುಗೌಡ ಜೂ.17 ರಂದು ನಿವೃತ್ತಿಯಾಗಿದ್ದಾರೆ. +ಡಾ.ತೇಜಸ್ವಿನಿಗೌಡ ಹಾಗೂ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ರಾಜೀನಾಮೆ ನೀಡಿದ್ದು, ನಿವೃತ್ತಿ ಹಾಗೂ ರಾಜೀನಾಮೆಯಿಂದ 17 ಸದಸ್ಯ ಸ್ಥಾನ ತೆರವಾಗಿದ್ದು, ಆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 11 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ, ಡಾ.ಚಂದ್ರಶೇಖರ ಪಾಟೀಲ್‌, ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಜೂ.21 ರಂದು ನಿವೃತ್ತಿ ಹೊಂದಲಿದ್ದಾರೆ. +ಮರಿತಿಬ್ಬೇಗೌಡ ತಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಒಂದು ಸ್ಥಾನ ಖಾಲಿಯಿತ್ತು. ಈ ಆರೂ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಇದಿದ್ದು, ನೂತನ ಸದಸ್ಯರು ಆಯ್ಕೆಯಾಗಿದ್ದಾರೆ.ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಹಾಲಿ ಸದಸ್ಯರ ಅವಧಿ ಜೂ.21 ರವರೆಗೆ ಇದೆ. ಜೂ.22, 23 ರಂದು ರಜೆ ಇರುವುದರಿಂದ ಜೂ.24 ರಂದು ಎಲ್ಲಾ 11 ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಗುತ್ತಿದೆ. \ No newline at end of file diff --git a/eesanje/url_46_105_10.txt b/eesanje/url_46_105_10.txt new file mode 100644 index 0000000000000000000000000000000000000000..01f3e5f39dff39e1d1d2deeb69d17c9ef3d35b9d --- /dev/null +++ b/eesanje/url_46_105_10.txt @@ -0,0 +1,7 @@ +ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದರ್ಶನ್, ಪವಿತ್ರಗೌಡ ಬಂಧನ +ಬೆಂಗಳೂರು,ಜೂ.18-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಬಲ ಸಾಕ್ಷಿಯಾದ ಸಿಸಿ ಟಿವಿ ಪುಟೇಜ್ಗಳನ್ನು ಆಧರಿಸಿ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ. +ರಘು ಮತ್ತು ಆತನ ತಂಡ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿದ ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್ಗೆ ಕರೆದೊಯ್ದ ನಂತರ ಶೆಡ್ನಲ್ಲಿ ದರ್ಶನ್ ಮತ್ತು ಆತನ ತಂಡ ಹಲ್ಲೆ ನಡೆಸಿರುವ ದೃಶ್ಯ ಶೆಡ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. +ದರ್ಶನ್ ಮತ್ತು ಪವಿತ್ರಾ ಗೌಡ ಅವರು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಪ್ರಬಲ ಸಾಕ್ಷ್ಯಾಧಾರಗಳು ಸಿಕ್ಕಿವೆ. ರೇಣುಕಾಸ್ವಾಮಿ ಮೃತದೇಹ ಪತ್ತೆಯಾಗುತ್ತಿದ್ದಂತೆ ಮೊದಲು ನಾಲ್ವರು ಆರೋಪಿಗಳು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಹೋಗಿ ಶರಣಾದರು. ಈ ನಾಲ್ವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಯಾರ್ಯಾರು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ +ಕಲೆ ಹಾಕಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಹೆಸರು ಕೇಳಿಬಂದಿದೆ. ಇತರೆ ಆರೋಪಿಗಳ ಮಾಹಿತಿ ಹಾಗೂ ಸಿಸಿಟಿವಿ ಪುಟೇಜ್ಗಳು, ಮತ್ತಿತರ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದಾಗ ದರ್ಶನ್ ಮತ್ತು ಪವಿತ್ರ ಇಬ್ಬರೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿರುವುದು ಗೊತ್ತಾಗಿದೆ. +ಇಬ್ಬರು ಒಟ್ಟಿಗೆ ಶೆಡ್ಗೆ ಹೋಗಿರುವುದು ಹಾಗೂ ಒಟ್ಟಿಗೆ ಹೊರಬಂದಿರುವುದು ತನಿಖೆಯಿಂದ ಗೊತ್ತಾಗಿದೆ. ಪಟ್ಟಣಗೆರೆ ಶೆಡ್ನಲ್ಲಿ ಅಳವಡಿಸಿರುವ ಸಿಸಿಟಿವಿಯು ಈ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ. +ರೇಣುಕಾಸ್ವಾಮಿಗೆ ಬಹಳ ಹಿಂಸೆ ನೀಡಿ ಎಲೆಕ್ಟ್ರಿಕ್ ಶಾಕ್ ಕೊಟ್ಟು ಭೀಕರವಾಗಿ ಹತ್ಯೆ ಮಾಡಿರುವುದು ಕಂಡುಬಂದಿದೆ. ಇದೆಲ್ಲದರ ವಿಡಿಯೋ ಹಾಗೂ ತಾಂತ್ರಿಕ, ಪೂರಕ ಸಾಕ್ಷಿಗಳು ದೊರೆತಿರುವ ಹಿನ್ನಲೆಯಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡನನ್ನು ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_46_105_11.txt b/eesanje/url_46_105_11.txt new file mode 100644 index 0000000000000000000000000000000000000000..392f0a901737e2cd0bb19fb4c0244d89b6fd1ac9 --- /dev/null +++ b/eesanje/url_46_105_11.txt @@ -0,0 +1,5 @@ +ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ಜೆಡಿಎಸ್‌‍ ಪ್ರತಿಭಟನೆ +ಬೆಂಗಳೂರು,ಜೂ.18-ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್‌‍ ನಗರದಲ್ಲಿಂದು ಪ್ರತಿಭಟನೆ ನಡೆಸಿತು.ಬೆಂಗಳೂರು ಮಹಾನಗರ ಜೆಡಿಎಸ್‌‍ ವತಿಯಿಂದ ರಾಜ್ಯಸರ್ಕಾರದ ವಿರುದ್ಧ ಇಂದು ಸ್ವಾತಂತ್ರ್ಯ ಉದ್ಯಾನವನದಲ್ಲಿನ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಹೆಚ್ಚಳ ಮಾಡಿರುವ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಸುವಂತೆ ಆಗ್ರಹಿಸಲಾಯಿತು. +ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ, ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎನ್‌.ಜವರಾಯಿಗೌಡ, ಜೆಡಿಎಸ್‌‍ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ, ರೇವಣ್ಣ ಸೇರಿದಂತೆ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. +ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯಸರ್ಕಾರ ತೈಲಬೆಲೆ ಹೆಚ್ಚಳ ಮಾಡಿ ಗ್ರಾಹಕರಿಗೆ ಹೊರೆಯಾಗಿಸಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗಲಿದ್ದು, ಶ್ರೀಸಾಮಾನ್ಯರಿಗೆ ತೊಂದರೆಯಾಗಲಿದೆ. +ರಾಜ್ಯಸರ್ಕಾರ ಕೂಡಲೇ ಬೆಲೆ ಇಳಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಜೆಡಿಎಸ್‌‍ನ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡು ರಾಜ್ಯಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_105_12.txt b/eesanje/url_46_105_12.txt new file mode 100644 index 0000000000000000000000000000000000000000..11e6236395c31fc3a9fb2676eb45b3722ddda537 --- /dev/null +++ b/eesanje/url_46_105_12.txt @@ -0,0 +1,7 @@ +ಬಿಬಿಎಂಪಿಯಲ್ಲಿ 1 ಕೆಲಸಕ್ಕೆ 2 ಬಿಲ್‌ ಮಾಡಿ ಲೂಟಿ ಮಾಡಲಾಗುತ್ತಿದೆ : ಕೇಂದ್ರ ಸಚಿವ ಹೆಚ್ಡಿಕೆ ಆರೋಪ +ಬೆಂಗಳೂರು,ಜೂ.18-ಬಿಬಿಎಂಪಿಯಲ್ಲಿ ಒಂದು ಕೆಲಸಕ್ಕೆ ಎರಡು ಬಿಲ್‌ ಮಾಡಿಕೊಂಡು ಕೋಟ್ಯಂತರ ರೂ. ಲೂಟಿ ಮಾಡಲಾಗುತ್ತಿದೆ ಎಂದು ಕೇಂದ್ರದ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿಗಳಲ್ಲಿನ ಹಣ ಎಲ್ಲಿ ಹೋಗಿದೆಯೋ, ಏನೋ? ಅದನ್ನು ಕೇಳೋರು ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +25 ಸಾವಿರ ಎಕರೆ ಮೇಲೆ ರಾಜ್ಯಸರ್ಕಾರ ಕಣ್ಣು ಹಾಕಿದೆ. ಗ್ಯಾರಂಟಿಯಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವಾಗ ವಿವೇಕ ಇರಲಿಲ್ಲವೇ?, ಯಾವ ರೀತಿ ಅನುಷ್ಠಾನ ಮಾಡಬೇಕು ಎಂಬುದರ ಬಗ್ಗೆ ಚಿಂತೆ ಮಾಡಬೇಕಿತ್ತಲ್ಲವೇ?, ಹಣಕಾಸು ಸಚಿವರಾಗಿ 14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಭವ ಇರಲಿಲ್ಲವೇ?, ಮುಂದೇನಾಗಬಹುದು ಎಂಬ ಆಲೋಚನೆಯನ್ನೂ ಮಾಡಲಿಲ್ಲವೇ?, ಹಲವಾರು ಇಲಾಖೆಯಲ್ಲಿ ಹಣ ಸೋರಿಕೆಯಾಗುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದರು. +ಜನರ ಹೆಸರಿನಲ್ಲಿ ಕಾಂಗ್ರೆಸ್‌‍ ಸರ್ಕಾರ ಲೂಟಿ ಮಾಡಿಕೊಂಡು ಕೂತಿದೆ ಎಂದು ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಉಪಕರವನ್ನು ಹೆಚ್ಚಳ ಮಾಡುವ ಅವಶ್ಯಕತೆ ಏನಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಪ್ರಶ್ನಿಸಿದ್ದಾರೆ. +ಪೆಟ್ರೋಲ್‌, ಡೀಸೆಲ್‌ ದರವನ್ನು ಕೇಂದ್ರಸರ್ಕಾರ ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿಯವರು ಒತ್ತಾಯಿಸಿದ್ದಾರೆ. ಕೇಂದ್ರಸರ್ಕಾರ ದರ ಇಳಿಸುವುದು ಅಥವಾ ಬಿಡುವುದರ ಬಗ್ಗೆ ಆಮೇಲೆ ಚರ್ಚಿಸೋಣ. ಈಗ ತರಾತುರಿಯಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡುವುದರ ಅಗತ್ಯವೇನಿತ್ತು? ಯಾವ ಕಾರಣಕ್ಕಾಗಿ ಹೆಚ್ಚಳ ಮಾಡಿದ್ದೀರಿ ಎಂದು ಪ್ರಶ್ನೆಗಳ ಸುರಿಮಳೆಗೈದರು. +ಕೇಂದ್ರ ಸರ್ಕಾರವನ್ನು ಬೆಲೆ ಇಳಿಸುವಂತೆ ಇಷ್ಟು ದಿನ ಏಕೆ ಕೇಳಲಿಲ್ಲ? ಸರ್ಕಾರದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಸೆಸ್‌‍ ಮೂಲಕ 3 ಸಾವಿರ ಕೋಟಿ ರೂ. ಸಂಗ್ರಹಿಸಲು ತೈಲಬೆಲೆ ಹೆಚ್ಚಳ ಮಾಡಿದ್ದೀರ. ಜನರ ಜೇಬಿನಿಂದ ಕಿತ್ತುಕೊಳ್ಳಲು ಹೊರಟಿದ್ದೀರ. ಗ್ಯಾರಂಟಿ ಅನುಷ್ಠಾನಗೊಳಿಸುವುದಾಗಿ ಹೇಳಿ ಜನರಿಂದ ತೆಗೆದುಕೊಂಡು, ಜನರಿಗೇ ಕೊಡುವುದಕ್ಕೆ ನೀವೇ ಬೇಕಾ? ಯಾರು ಬೇಕಾದರೂ ಇಂತಹ ಆಡಳಿತ ನಡೆಸುತ್ತಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. +ನಟ ದರ್ಶನ್‌ ಮೇಲಿನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗಮನ ಸೆಳೆದಾಗ ಕುಮಾರಸ್ವಾಮಿಯವರು, ಈ ವಿಚಾರದಲ್ಲಿ ನನ್ನನ್ನು ಏಕೆ ಎಳೆದು ತರುತ್ತೀರಿ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು. \ No newline at end of file diff --git a/eesanje/url_46_105_2.txt b/eesanje/url_46_105_2.txt new file mode 100644 index 0000000000000000000000000000000000000000..970cebdf51568c7fe7921692c165cddb16d93fd1 --- /dev/null +++ b/eesanje/url_46_105_2.txt @@ -0,0 +1,6 @@ +ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನೇ ದೋಚಿದ ಮನೆ ಮಾಲೀಕ..! +ಮೈಸೂರು,ಜೂ. 19-ನಕಲಿ ಕೀ ಬಳಸಿ ಬಾಡಿಗೆ ನೀಡಿದ್ದ ಮನೆಯನ್ನ ಮಾಲೀಕನೇ ದೋಚಿದ ಘಟನೆ ಮೈಸೂರಿನ ಲೋಕನಾಯಕ ನಗರದಲ್ಲಿ ನಡೆದಿದೆ.ಸರ್ವಸ್ವವನ್ನೂ ಕಳೆದುಕೊಂಡ ಬಾಡಿಗೆದಾರ ಇದೀಗ ಅತಂತ್ರವಾಗಿದ್ದಾರೆ.ಡ್‌ ಪ್ರಾಡಕ್ಟ್‌್ಸ ಡಿಸ್ಟ್ರಿಬ್ಯೂಟರ್‌ ಆಗಿರುವ ಮೇಘರಾಜ್‌ ರವರ ಕುಟುಂಬ ಇದೀಗ ಅತಂತ್ರಕ್ಕೆ ಸಿಲುಕಿದೆ. +ಮಾಲೀಕ ಮಂಜುನಾಥ್‌ ಹಾಗೂ ಈತನ ಸಹೋದರನ ಮೇಲೆ ಮೇಘರಾಜ್‌ ರವರು ಮೇಟಗಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮಂಜುನಾಥ್‌ರವರಿಗೆ ಸೇರಿದ ಮನೆಗೆ ಮೇಘರಾಜ್‌ ಸುಮಾರು 6 ತಿಂಗಳ ಹಿಂದೆ ಬಾಡಿಗೆ ಪಡೆದು ವಾಸಕ್ಕೆ ಬಂದಿದ್ದಾರೆ. ಬಾಡಿಗೆ ವಿಚಾರದಲ್ಲಿ ಮೇಘರಾಜ್‌ ಹಾಗೂ ಮಂಜುನಾಥ್‌ ನಡುವೆ ವಿವಾದ ಶುರುವಾಗಿದೆ. ತಾವು ನೀಡಿದ್ದ ಮುಂಗಡ ಹಣ ವಾಪಸ್‌‍ ಪಡೆದು ಮನೆ ಖಾಲಿ ಮಾಡಲು ಮೇಘರಾಜ್‌ ನಿರ್ಧರಿಸಿದ್ದಾರೆ. ಇದಕ್ಕೆ ಒಪ್ಪದ ಮಂಜುನಾಥ್‌ ಮನೆಗೆ ಬೀಗ ಜಡಿದಿದ್ದಾರೆ. +ಈ ಕುರಿತಂತೆ ಮೇಘರಾಜ್‌ ಮೇಟಗಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಾರೆ. ಮಂಜುನಾಥ್‌ ರವರನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿ ಬೀಗ ತೆಗೆಸಿದ್ದಾರೆ. ಹೀಗಿದ್ದರೂ ಆಗಾಗ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಕಿರುಕುಳ ನೀಡಿದ್ದಾರೆ. +ಕೆಲ ದಿನಗಳ ಹಿಂದೆ ಮೇಘರಾಜ್‌ ರವರು ಕುಟುಂಬ ಸಮೇತ ತಮ ಸ್ವಂತ ಊರಾದ ಕಬ್ಬಳಿಗೆರೆಗೆ ತೆರಳಿದ್ದಾರೆ. ಹಿಂದಿರುಗಿ ಬರುವಷ್ಟರಲ್ಲಿ ಮಂಜುನಾಥ್‌ ಮತ್ತೆ ಮನೆಗೆ ಬೀಗ ಹಾಕಿದ್ದಾರೆ. ಕಿಟಕಿ ಮೂಲಕ ಮನೆ ಒಳಗೆ ಪರಿಶೀಲಸಿದಾಗ ಪೀಠೋಪಕರಣಗಳ ಸಮೇತ ನಗದು ಚಿನ್ನಾಭರಣ ನಾಪತ್ತೆಯಾಗಿದೆ. +ಸುಮಾರು 85 ಗ್ರಾಂ ಚಿನ್ನಾಭರಣ,1.20 ಲಕ್ಷ ನಗದು, ಫ್ರಿಡ್ಜ್ , ವಾಶಿಂಗ್‌ ಮೆಷಿನ್‌, ಹರ್ಬಲ್‌ ಪ್ರಾಡಕ್ಟ್‌್ಸ ಗಳು ನಾಪತ್ತೆಯಾಗಿವೆ.ನಕಲಿ ಕೀ ಬಳಸಿ ಮಾಲೀಕ ಮಂಜುನಾಥ್‌ ತಮ ಪದಾರ್ಥಗಳನ್ನು ದೋಚಿದ್ದಾರೆಂದು ಮೇಘರಾಜ್‌ ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. \ No newline at end of file diff --git a/eesanje/url_46_105_3.txt b/eesanje/url_46_105_3.txt new file mode 100644 index 0000000000000000000000000000000000000000..9defdaf9c54c66622ac77df0ee1d3c9c2989aa00 --- /dev/null +++ b/eesanje/url_46_105_3.txt @@ -0,0 +1,5 @@ +ಅಣ್ಣಾವ್ರ ಕುಟುಂಬದ ಮೇಲಿನ ಅಭಿಮಾನ ತುಂಬಿದ ಮದುವೆಯ ಕರೆಯೋಲೆ +ಮೈಸೂರು,ಜೂ19-ನಟಸಾರ್ವಭೌಮ ಡಾ.ರಾಜ್‌ಕುಮಾರ್‌ ಅಗಲಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ ಅಭಿಮಾನಿಗಳ ಮನದಲ್ಲಿ ಡಾ.ರಾಜ್‌ ಅಚ್ಚಳಿಯದೆ ಉಳಿದಿದ್ದಾರೆ ಎನ್ನುವುದಕ್ಕೆ ಕಟ್ಟಾ ಅಭಿಮಾನಿಯೊಬ್ಬರು ತಮ್ಮ ಮಗಳ ಮದುವೆಯ ಕರಯೋಲೆ ಸಾಕ್ಷಿಯಾಗಿದೆ.ನಗರದ ನಂಜುಮಳಿಗೆ ನಿವಾಸಿಯಾಗಿರುವ ಮಹದೇವಸ್ವಾಮಿ ರವರು ರಸಿಕರರಾಜ ಡಾ.ರಾಜ್‌ಕುಮಾರ್‌ರವರ ಕಟ್ಟಾ ಅಭಿಮಾನಿ. +ಡಾ.ರಾಜ್‌ರವರ ಹುಟ್ಟುಹಬ್ಬವಿರಲಿ, ಪುಣ್ಯತಿಥಿಯಾಗಲಿ ಯಾವುದೇ ಕಾರ್ಯಕ್ರಮವಿದ್ದರೂ ಮುಂದೆ ನಿಲ್ಲುವ ಫ್ಯಾನ್ .ಜೂ. 23ರಂದು ಮಹದೇವಸ್ವಾಮಿರವರ ಮಗಳು ಕಾವ್ಯರವರ ವಿವಾಹ ಮಹೋತ್ಸವ ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಕನಕ ಸಮುದಾಯ ಭವನದಲ್ಲಿ ನೆರವೇರಲಿದೆ.ನಂಜನಗೂಡಿನ ಸುಪ್ರೀತ್‌ ಹೆಚ್‌.ಸುರೇಶ್‌ರವರನ್ನು ಕಾವ್ಯ ವರಿಸಲಿದ್ದಾರೆ. +ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಮಹದೇವಸ್ವಾಮಿ ರವರು ನೆಚ್ಚಿನ ನಟನ ಭಾವಚಿತ್ರದೊಂದಿಗೆ ಹಾಗೂ ಇಡೀ ಕುಟುಂಬದ ಆಶೀರ್ವಾದ ಕೋರಿ ಮುದ್ರಿಸಿದ್ದಾರೆ.ಡಾ.ರಾಜ್‌ ದಂಪತಿ, ಪುತ್ರರಾದ ಡಾ. ಶಿವರಾಜ್‌ಕುಮಾರ್‌ ದಂಪತಿ, ರಾಘವೇಂದ್ರ ರಾಜ್‌ಕುಮಾರ್‌ ದಂಪತಿ ಹಾಗೂ ಪುನೀತ್‌ ರಾಜ್‌ಕುಮಾರ್‌ ದಂಪತಿಯ ಭಾವಚಿತ್ರಗಳನ್ನು ಮದುವೆ ಕರೆಯೋಲೆಯಲ್ಲಿ ಮುದ್ರಿಸಿ ತಮ ಅಭಿಮಾನವನ್ನು ಮೆರೆದಿದ್ದಾರೆ. +ಜೊತೆಗೆ ಡಾ.ರಾಜ್‌ಕುಮಾರ್‌ ಸಂಘದ ರಾಜ್ಯಾಧ್ಯಕ್ಷರಾದ ಸಾ.ರಾ.ಗೋವಿಂದ್‌ರವರ ಭಾವಚಿತ್ರವನ್ನೂ ಸಹ ಮುದ್ರಿಸಿದ್ದಾರೆ.ಮಹದೇವ್‌ ರವರ ಕಟ್ಟಾ ಅಭಿಮಾನಕ್ಕೆ ಸಾರ್ವಜನಿಕರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_105_4.txt b/eesanje/url_46_105_4.txt new file mode 100644 index 0000000000000000000000000000000000000000..3c0cefd41deeda33158dbd9fd6d51d5ee12c88db --- /dev/null +++ b/eesanje/url_46_105_4.txt @@ -0,0 +1,5 @@ +ಹುಬ್ಬಳ್ಳಿಯಲ್ಲಿ ಸಿಟಿ ರವಿ ವಿರುದ್ಧ ದೂರು ದಾಖಲು +ಹುಬ್ಬಳ್ಳಿ,ಜೂ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್‌‍ ಠಾಣೆಗೆ ದೂರು ಸಲ್ಲಿಕೆ ಆಗಿದೆ. ತೈಲದರ ಏರಿಕೆ ಖಂಡಿಸಿ ನಿನ್ನೆ ಬಿಜೆಪಿ ನಾಯಕರು ಧರಣಿ ನಡೆಸಿದ್ದರು. +ಈ ವೇಳೆ ಪ್ರತಿಭಟನೆಯಲ್ಲಿ ಸಿ.ಟಿ ರವಿ ಅವರು ಸಿದ್ದರಾಮಯ್ಯರವರನ್ನು ಟೀಕಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಅಗೌರವ ತೋರಿದ್ದಾರೆ ಎಂದು ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅವರು ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ. +ರಾಜ್ಯದಲ್ಲಿ ಪೆಟೋಲ್‌ ಹಾಗೂ ಡೀಸೆಲ್‌ ದರ ಏರಿಕೆಗೆ ಬಿಜೆಪಿ ಆಕೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಹೋರಾಟ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡೋದು. +ಭಂಡತನದ ಸಮರ್ಥನೆ ಬಿಟ್ಟು ಯಾಕೆ ಸೆಸ್‌‍ ಹಾಕೀರೋದು ಎಂದು ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದರು. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಸಿ.ಟಿ ರವಿ, ಅಶ್ವತ್ಥನಾರಾಯಣ್‌ ಸೇರಿದಂತೆ ಶಾಸಕರು, ಪರಿಷತ್‌ ಸದಸ್ಯರು ಭಾಗಿಯಾಗಿದ್ದರು. \ No newline at end of file diff --git a/eesanje/url_46_105_5.txt b/eesanje/url_46_105_5.txt new file mode 100644 index 0000000000000000000000000000000000000000..e1ee47928d1a6f8856a6062928f5d1a509ed9568 --- /dev/null +++ b/eesanje/url_46_105_5.txt @@ -0,0 +1,5 @@ +ಪ್ರಜ್ವಲ್‌ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ +ಬೆಂಗಳೂರು,ಜೂ.18-ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಜ್ವಲ್‌ ರೇವಣ್ಣ ಅವರ ಎಸ್‌‍ಐಟಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ನಿರಾಕರಿಸಿದ ನ್ಯಾಯಾಲಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತು. +ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್‌‍ಐಟಿ ರಚನೆ ಮಾಡಿತ್ತು. ಅವರು ವಿದೇಶದಿಂದ ಬರುತ್ತಿದ್ದಂತೆ ಅವರನ್ನು ವಶಕ್ಕೆ ಪಡೆದ ಎಸ್‌‍ಐಟಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿತ್ತು. +ಎರಡು ಪ್ರಕರಣದಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿರುವ ಪೊಲೀಸರು ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೊಳೆನರಸೀಪುರದಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಎರಡು ಪ್ರಕರಣಗಳಲ್ಲಿ ವಿಚಾರಣೆಯನ್ನು ಅಂತ್ಯಗೊಳಿಸಿರುವ ಎಸ್ಐಟಿ ಮತ್ತೊಂದು ಪ್ರಕರಣದಲ್ಲಿ ವಿಚಾರಣೆ ನಡೆಸಲು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದರು. +ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಜ್ವಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು. ಮೂರನೇ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಬಾಡಿ ವಾರಂಟ್‌ ಪಡೆಯಲು ಅರ್ಜಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ. \ No newline at end of file diff --git a/eesanje/url_46_105_6.txt b/eesanje/url_46_105_6.txt new file mode 100644 index 0000000000000000000000000000000000000000..f2a7a890b59a7f9e2cc0b99b4136b653fff9a833 --- /dev/null +++ b/eesanje/url_46_105_6.txt @@ -0,0 +1,6 @@ +ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು +ಬೆಂಗಳೂರು,ಜೂ.18– ಕೆ.ಆರ್‌ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣರಿ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.ನ್ಯಾಯಮೂರ್ತಿ ಕೃಷ್ಣ.ಎಸ್‌‍ ದೀಕ್ಷಿತ್‌ ಅವರಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ ಈ ತೀರ್ಪನ್ನು ನೀಡಿ, ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಕರೆದಾಗ ಮೈಸೂರು ಮತ್ತು ಹಾಸನಕ್ಕೂ ಬರಬೇಕು. +ಎಂದು ಸೂಚನೆ ನೀಡಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.ಭವಾನಿ ರೇವಣ್ಣ ಅವರು ಎಸ್‌‍ಐಟಿಯ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ ಎಂದು ಪ್ರಾಸಿಕ್ಯೂಷನ್‌ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದರು. +ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರು ತನಿಖೆಗೆ ಅಸಹಕಾರ ತೋರುತ್ತಿದ್ದಾರೆ. ನ್ಯಾಯಾಲಯ ನೀಡಿದ ನಿರ್ದೇಶನದಂತೆ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಇದರಿಂದ ತನಿಖೆ ಮುಂದುವರೆಸಲಾಗುತ್ತಿಲ್ಲ. ಅವರು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡುತ್ತಿಲ್ಲ. +ಹೀಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೆ ಒಳಪಡಿಸಬೇಕಾಗಿದೆ. ಹಾಗಾಗಿ ಅವರಿಗೆ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಸರ್ಕಾರಿ ಪರ ವಕೀಲರು ಮನವಿ ಮಾಡಿದ್ದರು. ಮಹಿಳೆಯ ಅಪಹರಣದ ಹಿಂದಿನ ಸೂತ್ರಧಾರಿ ಅವರೇ ಆಗಿದ್ದಾರೆ. ಎಲ್ಲ ಆರೋಪಿಗಳೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ. ಅದಕ್ಕೆ ಸಾಕ್ಷಿಗಳಿವೆ. ಅವರು ಸರಿಯಾದ ಉತ್ತರ ನೀಡುತ್ತಿಲ್ಲ ಎಂದು ಹೇಳಿದ್ದರು. +ಆಗ ನ್ಯಾಯಮೂರ್ತಿಗಳು ಪ್ರಾಸಿಕ್ಯೂಷನ್‌ ಕೇಳಿದ ಪ್ರಶ್ನೆಗೆ ಉತ್ತರ ಹೇಳುವುದು, ಬಿಡುವುದು ಆರೋಪಿಗೆ ಬಿಟ್ಟ ವಿಚಾರ. ಜೊತೆಗೆ ನೀವು ಹೀಗೆ ಉತ್ತರ ನೀಡಬೇಕೆಂದು ಬಯಸುವುದು ಸರಿಯಲ್ಲ. ಅನಗತ್ಯ ಪ್ರಶ್ನೆಗಳನ್ನು ಕೇಳಿದಾಗ ಅವರು ಉತ್ತರ ನೀಡದೇ ಇರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿ ತನಿಖೆಯ ವೇಳೆ ಕೇಳಲಾದ ಪ್ರಶ್ನೆಗಳು ಮತ್ತು ಉತ್ತರಗಳ ಪ್ರತಿಯನ್ನು ನೀಡುವಂತೆ ಸೂಚಿಸಿ, ವಾದ-ಪ್ರತಿವಾದ ಆಲಿಸಿ ಇಂದಿಗೆ ಕಾಯ್ದಿರಿಸಿದ ತೀರ್ಪನ್ನು ಪ್ರಕಟಿಸಿದ ನ್ಯಾಯಮೂರ್ತಿ ದೀಕ್ಷಿತ್‌ ಅವರು , ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. \ No newline at end of file diff --git a/eesanje/url_46_105_7.txt b/eesanje/url_46_105_7.txt new file mode 100644 index 0000000000000000000000000000000000000000..797b1ebe9933f89a07ec5cf3d13fa253c99fa3ed --- /dev/null +++ b/eesanje/url_46_105_7.txt @@ -0,0 +1,5 @@ +ಹೊಸಕೋಟೆ : ನಡು ರಸ್ತೆಯಲ್ಲೇ ಚಿಕ್ಕಮ್ಮನ ಕೊಲೆ +ಹೊಸಕೋಟೆ, ಜೂ.18-ಕೌಟುಂಬಿಕ ಕಲಹದಿಂದ ನಡುರಸ್ತೆಯಲ್ಲಿ ಚಿಕ್ಕಮ್ಮನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ರುವ ಘಟನೆ ಹೊಸಕೋಟೆ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದೊಮಸಂದ್ರದ ನಿವಾಸಿ ಚಂದ್ರಮ್ಮ(40) ಕೊಲೆಯಾದ ದುರ್ದೈವಿ. +ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್‌ ಹಾಗೂ ಈತನ ಚಿಕ್ಕಮ ಚಂದ್ರಮನ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ರಾತ್ರಿಯೂ ಸಹ ಇದೇ ವಿಚಾರವಾಗಿ ಜಗಳ ನಡೆದಿದ್ದು, ಚಿಕ್ಕಮನ ವಿರುದ್ಧ ವೆಂಕಟೇಶ್‌ ಕೋಪಗೊಂಡಿದ್ದನು. +ಚಂದ್ರಮ ದಾರಿಯಲ್ಲಿ ನಡೆದು ಹೋಗುತ್ತಿದ್ದಾಗ ನಡುರಸ್ತೆಯಲ್ಲೇ ಅಡ್ಡಗಟ್ಟಿದ ವೆಂಕಟೇಶ್‌ ದೊಣ್ಣೆಯಿಂದ ಚಂದ್ರಮ ಅವರ ತಲೆಗೆ ಹೊಡೆದು ಪರಾರಿಯಾಗಿದ್ದಾನೆ.ಸ್ಥಳದಲ್ಲೇ ಕುಸಿದು ಬಿದ್ದ ಚಂದ್ರಮ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. +ಸುದ್ದಿ ತಿಳಿದು ಹೊಸಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_105_8.txt b/eesanje/url_46_105_8.txt new file mode 100644 index 0000000000000000000000000000000000000000..4a6b7d45ed82c0a69a640a4d56407cfe9f111175 --- /dev/null +++ b/eesanje/url_46_105_8.txt @@ -0,0 +1,7 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಂದ ಮೈಸೂರಿನಲ್ಲಿ ಸ್ಥಳ ಮಹಜರು +ಮೈಸೂರು, ಜೂ. 18-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಪೈಕಿ ಇಬ್ಬರನ್ನು ಇಂದು ಮೈಸೂರಿಗೆ ಕರೆತಂದು ಸ್ಥಳ ಮಹಜರು ನಡೆಸಲಾಯಿತು.ಆರೋಪಿಗಳಾದ ದರ್ಶನ್ ಆಪ್ತ ವ್ಯವಸ್ಥಾಪಕ ನಾಗರಾಜು, ಕಾರಿನ ಚಾಲಕ ಲಕ್ಷ್ಮಣ್ ಇಬ್ಬರನ್ನು ಮೈಸೂರಿಗೆ ಕರೆತಂದು ಇಂದು ಸ್ಥಳ ಮಹಜರು ನಡೆಸಲಾಯಿತು. +ಮೈಸೂರಿನ ರ್ಯಾಡಿಸನ್ ಬ್ಲೂ ಹೊಟೇಲ್ಗೆ ಆರೋಪಿಗಳನ್ನು ಕರೆತಂದ ಬೆಂಗಳೂರಿನ ವಿಜಯನಗರ ಉಪವಿಭಾಗದ ಪೊಲೀಸರು ಸ್ಥಳ ಮಹಜರು ನಡೆಸಿದರು.ನಟ ದರ್ಶನ್ನನ್ನು ರ್ಯಾಡಿಸನ್ಬ್ಲೂ ಹೊಟೇಲ್ನಲ್ಲಿ ವಶಕ್ಕೆ ಪಡೆಯಲಾಯಿತು. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರಿಗಾಗಿ ಆರೋಪಿಗಳಿಬ್ಬರನ್ನು ಪೊಲೀಸರು ಕರೆತಂದು ಮಹಜರು ನಡೆಸಿದ್ದಾರೆ. +ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಮೈಸೂರಿಗೆ ಆಗಮಿಸಿ ರ್ಯಾಡಿಷನ್ ಬ್ಲೂ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಹಾಗೆಯೇ ಲಲಿತ ಮಹಲ್ನಲ್ಲಿ ನಡೆದ ಡೆವಿಲ್ ಚಿತ್ರದ ಚಿತ್ರೀಕರಣದಲ್ಲಿಯೂ ಸಹ ದರ್ಶನ್ ಭಾಗವಹಿಸಿದ್ದರು.ದರ್ಶನ್ರನ್ನು ಬಂಧಿಸುವ ದಿನ ದರ್ಶನ್ ಈ ಹೊಟೇಲ್ನಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಗೋಲ್ಡ್ ಜಿಮ್ಗೆ ತೆರಳಿ ಅಲ್ಲಿ ವರ್ಕೌಟ್ ಮಾಡಿ ನಂತರ ಆಗಮಿಸಿದಾಗ ಅವರನ್ನು ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡರು. +ರ್ಯಾಡಿಸನ್ ಬ್ಲೂ ಹೊಟೇಲ್ ಸ್ಥಳಮಹಜರು ನಂತರ ದರ್ಶನ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಹೊಟೇಲ್ ಲಲಿತ ಮಹಲ್ ಆ ನಂತರ ದರ್ಶನ್ ಫಾರ್ಮ್ಹೌಸ್ನಲ್ಲೂ ಸ್ಥಳ ಮಹಜರು ನಡೆಸಿದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಇಂದು ಬೆಳಗ್ಗೆ ದರ್ಶನ್ ಫಾರ್ಮ್ಹೌಸ್ಗೆ ಆರೋಪಿಗಳಾದ ನಾಗರಾಜ್ ಮತ್ತು ಲಕ್ಷ್ಮಣ್ನನ್ನು ಕರೆದೊಯ್ದು ಪರಿಶೀಲಿಸಿದರು. +ದರ್ಶನ್ನನ್ನು ಮಹಜರಿಗೆ ಫಾರ್ಮ್ಹೌಸ್ಗೆ ಕರೆದೊಯ್ದರೆ ಅಭಿಮಾನಿಗಳು ಸೇರುವ ಸಾಧ್ಯತೆ ಇದೆ. ಅಭಿಮಾನಿಗಳನ್ನು ನಿರ್ವಹಿಸುವುದು ಬಹಳ ಕಷ್ಟವೆಂದು ಅರಿತು ಪೊಲೀಸರು ದರ್ಶನ್ನನ್ನು ಕರೆದೊಯ್ಯದೆ ಇನ್ನಿಬ್ಬರು ಆರೋಪಿಗಳನ್ನು ಕರೆದೊಯ್ದು ಫಾರ್ಮ್ಹೌಸ್ನಲ್ಲಿ ಸ್ಥಳ ಮಹಜರು ಮಾಡಿದರು. +ರೇಣುಕಾಸ್ವಾಮಿ ಕೊಲೆ ಬಳಿಕ ದರ್ಶನ್ ಮೈಸೂರಿಗೆ ತೆರಳಿದ್ದ ಮಾಹಿತಿ ಹಿನ್ನೆಲೆಯಲ್ಲಿ ಅವರ ಫಾರ್ಮ್ಹೌಸ್ನಲ್ಲಿ ಸ್ಥಳ ಮಹಜರು ಮಾಡಿ ಕೆಲವೊಂದು ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ನಂತರ ಆರೋಪಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. \ No newline at end of file diff --git a/eesanje/url_46_105_9.txt b/eesanje/url_46_105_9.txt new file mode 100644 index 0000000000000000000000000000000000000000..7092c7b8e297fda931499fbf9bc6949789174203 --- /dev/null +++ b/eesanje/url_46_105_9.txt @@ -0,0 +1,8 @@ +ಪೊಲೀಸರ ಸಮಯ ಪ್ರಜ್ಞೆಯಿಂದ ರೇಣುಕಾಸ್ವಾಮಿ ಪ್ರಕರಣ ಬಯಲು : ಬಿ.ದಯಾನಂದ +ಬೆಂಗಳೂರು, ಜೂ.18-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸರ ಸಮಯ ಪ್ರಜ್ಞೆ ಹಾಗೂ ಕರ್ತವ್ಯ ಪ್ರಜ್ಞೆ ಯಿಂದ ಪ್ರಕರಣ ಹೊರ ಬಂದಿದ್ದು, ಸೆಲಬ್ರಿಟಿಗಳನ್ನು ಸಹ ಬಂಧಿಸಲಾಗಿದೆ ಎಂದು ವಿವರಿಸಿದರು. +ಈ ಪ್ರಕರಣವನ್ನು ಬೇರೆ ಬೇರೆ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ. ಸಮರ್ಪಕ ರೀತಿಯಲ್ಲಿ ತನಿಖೆ ನಡೆಯುತ್ತಿದ್ದು, ತನಿಖೆ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ ಎಂದರು. +ಸ್ವಲ್ಪ ನಿರ್ಲಕ್ಷ್ಯ ವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು. ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರ ಬಂದಿದೆ. ವ್ಯಕ್ತಿಯ ಕೊಲೆ ಮಾಡಿರುವುದು ಹೀನ, ಅತ್ಯಂತ ಹೇಯ ಕೃತ್ಯ. ರೇಣುಕಾಸ್ವಾಮಿ ಕುಟುಂಬಕ್ಕೆ ನಾವು ನ್ಯಾಯ ಒದಗಿಸಿಕೊಡಬೇಕು. ಆದ್ದರಿಂದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸ ಆಗುತ್ತಿದೆ ಎಂದು ಅವರು ಹೇಳಿದರು. +ಇದು ಗಂಭೀರ ಪ್ರಕರಣವಾಗಿರುವುದರಿಂದ ಎಲ್ಲಾ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಪಟ್ಟಿ ಸಲ್ಲಿಸುತ್ತೇವೆ. ಈ ಪ್ರಕರಣದ ಗಂಭೀರತೆ ಅರಿತು ವಿಜಯನಗರ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ.ಆ ವಿಭಾಗದ ಎಲ್ಲಾ ಇನ್‌್ಸಪೆಕ್ಟರ್ಗಳು ಹಾಗೂ ಸಿಬ್ಬಂದಿ ತನಿಖಾ ತಂಡದಲ್ಲಿದ್ದಾರೆ. +ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆ ತರಲಾಗಿದೆ. ಕೆಲವು ಆರೋಪಿಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದ್ದರಿಂದ ಚಿತ್ರದುರ್ಗ, ಮೈಸೂರು, ಬೆಂಗಳೂರು ನಗರ ಹಾಗೂ ಇನ್ನಿತರ ಕಡೆ ತನಿಖೆ ಮತ್ತು ಸ್ಥಳ ಮಹಜರು ಮಾಡಬೇಕಾಗಿದೆ. ಆದ್ದರಿಂದ ಹಲವು ಆಯಾಮಗಳಲ್ಲಿ ಒಬ್ಬೊಬ್ಬ ಇನ್ಸ್ ಪೆಕ್ಟರ್ ಒಂದೊಂದು ಕಡೆ ಹೋಗಿ ತನಿಖೆ ನಡೆಸಿ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ ಎಂದು ಆಯುಕ್ತರು ಹೇಳಿದರು. +ಈ ಪ್ರಕರಣದಲ್ಲಿ ಸೆಲೆಬ್ರೆಟಿಗಳು ಇರುವುದರಿಂದ ಬಹಳ ಜಾಗರೂಕತೆಯಿಂದ ಹಲವು ಸಾಕ್ಷ್ಯಾಧಾರಗಳನ್ನು ಕಲೆಹಾಕಲಾಗುತ್ತಿದೆ. ಊಹಾ-ಪೋಹಾಗಳಿಗೆ ಕಿವಿಗೆಡಬೇಡಿ. ತನಿಖೆಯ ಭಾಗವಲ್ಲದ ಕೆಲವು ಉತೆ್ಪ್ರೕಕ್ಷಗಳು, ಅನೇಕ ಅಂಶಗಳು ಕೇಳಿ ಬರುತ್ತಿದೆ. ಇದು ಸಲ್ಲದು. ನಾವು ಈ ಪ್ರಕರಣವನ್ನು ಕಾನೂನಿನ ಮುಂದೆ ತೆಗೆದುಕೊಂಡು ಹೋಗಬೇಕಾಗಿದೆ. ದಯವಿಟ್ಟು ತಾಳೆ- ಸಹನೆಯಿಂದ ನಮೊಂದಿಗೆ ಸಹಕರಿಸಿದರೆ ಸಮಗ್ರವಾಗಿ ತಾತ್ವಿಕ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗಲು ಸಹಕರಿಯಾಗುತ್ತದೆ. ನಾವೆಲ್ಲರೂ ಸೇರಿ ಜವಾಬ್ದಾರಿಯಿಂದ ಈ ಪ್ರಕರಣವನ್ನು ಬಗೆಹರಿಸಬೇಕಿದೆ ಎಂದರು. +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ ಸೆಲೆಬ್ರಿಟಿ ಸೇರಿದಂತೆ ಒಟ್ಟು 17ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕೂಲಂಕುಷವಾಗಿ ತನಿಖೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_106_1.txt b/eesanje/url_46_106_1.txt new file mode 100644 index 0000000000000000000000000000000000000000..e7a5e129eec6b2213045c3cdd12661acdaa2cee6 --- /dev/null +++ b/eesanje/url_46_106_1.txt @@ -0,0 +1,10 @@ +ದರ್ಶನ್‌ ಜೊತೆ ಸಂಪರ್ಕದಲ್ಲಿದ್ದವರೆಲ್ಲಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಸಾಧ್ಯವಿಲ್ಲ : ಪರಮೇಶ್ವರ್‌ + +ಬೆಂಗಳೂರು,ಜೂ.18– ನಟ ದರ್ಶನ್‌ ಜೊತೆ ಸಂಪರ್ಕದಲ್ಲಿದ್ದವರೆಲ್ಲಾ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ತನಿಖೆ ಮುಂದುವರೆಯಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನಟರಾಗಿರುವುದರಿಂದಾಗಿ ಬಹಳಷ್ಟು ಮಂದಿ ಒಂದಲ್ಲಾ ಒಂದು ರೀತಿ ಸಂಪರ್ಕದಲ್ಲಿರುತ್ತಾರೆ. ಅಂದ ಮಾತ್ರಕ್ಕೆ ಕೊಲೆಗೆ ಸಂಪರ್ಕವಿದೆ, ಭಾಗಿಯಾಗಿದ್ದಾರೆ ಎಂದು ಹೇಳಲು ಬರುವುದಿಲ್ಲ. ತನಿಖೆಯ ಹಂತದಲ್ಲಿ ದೊರೆಯುವ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮುಂದುವರೆಸುತ್ತಾರೆ. ಅಗತ್ಯವಾದರೆ ಸಂಪರ್ಕದಲ್ಲಿದ್ದವರನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಹೇಳಿದರು. +ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಸಂಬಂಧಪಟ್ಟಂತೆ ಪ್ರತಿಭಟನೆ ನಡೆಸುವುದು ಪ್ರತಿಪಕ್ಷ ಬಿಜೆಪಿಯವರ ಹಕ್ಕು. ಆಡಳಿತ ನಡೆಸುವುದು ನಮ ಹಕ್ಕು. ನಮಗೂ ಅವರಿಗೂ ಇಷ್ಟೇ ವ್ಯತ್ಯಾಸ ಎಂದರು. +ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರು ಇತ್ತೀಚೆಗೆ ಪ್ರತಿಯೊಂದರಲ್ಲೂ ರಾಜಕಾರಣ ಮಾಡುತ್ತಾರೆ. ದೇಶದಲ್ಲಿ 14 ಬಾರಿ ಪೆಟ್ರೋಲ್‌, ಡೀಸೆಲ್‌ ದರವನ್ನು ಹೆಚ್ಚಿಸಿದರೂ ಅದನ್ನು ಮರೆತು ಹೋದಂತಿದೆ. ಕಚ್ಚಾತೈಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಡಿಮೆಯಿದ್ದಾಗಲೂ ಬೆಲೆ ಹೆಚ್ಚಿಸಿ ಸಂಗ್ರಹಿಸಿದ ಹಣ ಎಲ್ಲಿ ಹೋಯಿತು ಎಂದು ಹೇಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪಿಎಸ್‌‍ಐ ನೇಮಕಾತಿ ವಿಷಯವಾಗಿ ಇನ್ನೆರೆಡು ವಾರಗಳಲ್ಲಿ ಅಂತಿಮ ಘಟ್ಟ ತಲುಪಲಾಗುವುದು, ಈಗಾಗಲೇ ಎರಡು-ಮೂರು ಸಭೆಗಳನ್ನು ನಡೆಸಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗಿದ್ದು, ಅದನ್ನು ಬಗೆಹರಿಸಲಾಗುವುದು ಎಂದು ಹೇಳಿದರು. +ನಟ ದರ್ಶನ್‌ ಮತ್ತು ಅವರ ಗ್ಯಾಂಗ್‌ನಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳುತ್ತೇನೆ ಹಾಗೂ ಕಲುಷಿತ ನೀರಿನ ಪ್ರಕರಣದಿಂದ ಸಂಕಷ್ಟಕ್ಕೊಳಗಾದ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮಕ್ಕೂ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. +ರಾಹುಲ್‌ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟು ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಭಾರತ್‌ ಜೋಡೊದಂತಹ ಪಾದಯಾತ್ರೆ ನಡೆಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಪಕ್ಷವನ್ನು ಕಟ್ಟಿ ಹೊಸತನವನ್ನು ತಂದುಕೊಟ್ಟಿದ್ದಾರೆ. +ಈಗ ಅವರು ಲೋಕಸಭೆಯ ವಿರೋಧಪಕ್ಷದ ನಾಯಕರಾಗಬೇಕು ಎಂಬುದು ನಮೆಲ್ಲರ ನಿರೀಕ್ಷೆ. ಇದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ಹೇಳಿದರು.ರಾಹುಲ್‌ಗಾಂಧಿಯವರು ವಿರೋಧಪಕ್ಷದ ನಾಯಕರಾಗಿ ಅವರ ವ್ಯಕ್ತಿತ್ವಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದರು. \ No newline at end of file diff --git a/eesanje/url_46_106_10.txt b/eesanje/url_46_106_10.txt new file mode 100644 index 0000000000000000000000000000000000000000..e0fb7a18e073e2efd531a895a14e43ebe353c68f --- /dev/null +++ b/eesanje/url_46_106_10.txt @@ -0,0 +1,13 @@ +ತಕ್ಷಣವೇ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ವಿಜಯೇಂದ್ರ ವಾರ್ನಿಂಗ್ +ಬೆಂಗಳೂರು,ಜೂ.17-ಏರಿಕೆ ಮಾಡಿರುವ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಸರ್ಕಾರ ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು. ವರ್ತಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಅಹಂಕಾರ ಮತ್ತು ದರ್ಪವನ್ನು ಇಳಿಸುವುದು ಜನರಿಗೆ ಗೊತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. +ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್‌‍ ಅಹಂಕಾರ ಮತ್ತು ದರ್ಪದಿಂದ ವರ್ತಿಸುತ್ತಿದೆ. ಮುಂದಿನ ವಾರ ನಾವು ಮತ್ತು ಜೆಡಿಎಸ್‌‍ನವರು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಸ್ತೆ ತಡೆ ನಡೆಸಲಿದ್ದೇವೆ. ಬೆಲೆ ಹಿಂತೆಗೆದುಕೊಳ್ಳುವವರೆಗೂ ನಮ ಹೋರಾಟ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ. ನಮ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಎಚ್ಚರಿಕೆ ಕೊಟ್ಟರು. +ರೈತರು, ಬಡವರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಗ್ಯಾರಂಟಿ ಮೂಲಕ ಜನರಿಗೆ ಬೆಲೆ ಏರಿಕೆಯ ಗ್ಯಾರಂಟಿ ಕೊಡಲು ಹೊರಟಿದೆ. ಒಬ್ಬ ಅನುಭವಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎಂಬ ಕಾರಣಕ್ಕೆ ಜನರಿಗೆ ಬೆಲೆ ಏರಿಕೆ ಮಾಡಿದ್ದಾರೆ. ಇದು ಜನ ವಿರೋಧಿ ಸರ್ಕಾರವಲ್ಲವೇ ಎಂದು ಪ್ರಶ್ನಿಸಿದರು. +ಸರ್ಕಾರ ತೆಗೆದುಕೊಂಡಿರುವುದು, ಅವಿವೇಕದ ನಿರ್ಧಾರ. ಲೋಕಸಭಾ ಚುನಾವಣೆ ಮುಂಚೆ ಕಾಂಗ್ರೆಸ್‌‍ ನಾಯಕರೇ ಹೇಳುತ್ತಿದ್ದರು. ರಾಜ್ಯದಲ್ಲಿ 18-19 ಸಂಸದರು ಗೆಲ್ಲದಿದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಅವರೇ ಹೇಳುತ್ತಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಮುಖಭಂಗ ಆಯ್ತು. ಅದಕ್ಕಾಗಿ ಗ್ಯಾರಂಟಿ ನಿಲ್ಲಿಸಿದರೆ ಜನ ದಂಗೆ ಏಳುತ್ತಾರೆ ಎಂದು ಸಿಎಂ ಅವರು ಪಿತೂರಿ ಮಾಡಿ ಗ್ಯಾರಂಟಿ ನಿಲ್ಲಿಸುವ ಬದಲು ಪೆಟ್ರೋಲ್‌,ಡೀಸೆಲ್‌ ಬೆಲೆ ಹೆಚ್ಚಳ ಮಾಡುವ ಅನ್ನೋ ತೀರ್ಮಾನ ತಗೊಂಡಿದ್ದಾರೆ. +ವಿಪಕ್ಷ ನಾಯಕರಾಗಿದ್ದಾಗ ಇದ್ದ ಜನಪರ ಕಾಳಜಿಮುಖ್ಯಮಂತ್ರಿ ಆದೇಲೆ ಎಲ್ಲಿ ಕಳೆದೋಯಿತು? ನಿಮ ಪಕ್ಷದ ಶಾಸಕರಾದ ನಾಡಗೌಡರೇ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಜನರ ಮುಂದೆ ತಲೆ ಎತ್ತಿಕೊಂಡು ಓಡಾಡೋಕೆ ಆಗುತ್ತಿಲ್ಲ ಎಂದಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡೋಕೆ ಆಗುತ್ತಿಲ್ಲ. ಬೊಮ್ಮಾಯಿ ಸಿಎಂ ಸ್ಥಾನದಿಂದ ಇಳಿದಾಗ ರೆವಿನ್ಯೂ ಸರ್‌ ಫ್ಲೆಸ್‌‍ ಇತ್ತು. ಒಂದೇ ವರ್ಷದಲ್ಲಿ ರಾಜ್ಯ ದಿವಾಳಿಯ ಅಂಚಿನಲ್ಲಿ ಹೋಗುತ್ತಿದೆ. ಯಾವ ಪುರುಷಾರ್ಥಕ್ಕೆ ಅಧಿಕಾರ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು. +ಮಾಜಿ ಸಚಿವ ಅಶ್ವಥ್‌ ನಾರಾಯಣ ಮಾತನಾಡಿ, ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ದಿನದಿಂದಲೂ ಬರೀ ಅನ್ಯಾಯ ಮಾಡುತ್ತಿದ್ದಾರೆ. ಎಲ್ಲಾ ದರ ಏರಿಕೆ ಮಾಡುತ್ತಿದ್ದಾರೆ. ಆರ್ಥಿಕ ತಜ್ಞರ ನಾಯಕತ್ವದಲ್ಲಿ ಹಣದುಬ್ಬರದ ಆಗಿದೆ. ನಾವು ಎಷ್ಟು ಪ್ರತಿಭಟನೆ ಮಾಡಿದ್ರು ದಪ್ಪ ಚರ್ಮದವರು ಕ್ಯಾರೆ ಎನ್ನಿತ್ತಿಲ್ಲಅವರು ಅಕ್ಕಪಕ್ಕದ ರಾಜ್ಯಗಳಿಗೆ ಬೆಲೆ ಹೋಲಿಕೆ ಮಾಡ್ತಿದ್ದಾರೆನಾವು ಕೋವಿಡ್‌ ಟೈಮ್‌ ನಲ್ಲಿ 1 ರೂ. ಏರಿಕೆ ಮಾಡಿದಾಗ ಸಿದ್ದರಾಮಯ್ಯನವರು ಎಷ್ಟೆಲ್ಲಾ ಮಾತಾಡಿದ್ದರು. ತಿಳುವಳಿಕೆ ಕೊಟ್ಟ ಮಹಾಪುರುಷರ ಕ್ರಮ ಯಾವ ನ್ಯಾಯ ಎಂದು ಆಕ್ರೋಶ ಹೊರಹಾಕಿದರು. +ನಮ್ಮ ರಾಜ್ಯದಲ್ಲಿ ಹಣದ ಕೊರತೆ ಇಲ್ಲ ಎಂದವರು, ಏಕೆ ಬೆಲೆ ಏರಿಕೆ ಮಾಡಿದ್ದಾರೆ.ಜನಪರ ಕೆಲಸ ಮಾಡದೆ, ಬರೀ ಲೂಟಿ ಹೊಡಿತಿದ್ದಾರೆಜೈಲಲ್ಲಿ ಇರಬೇಕಾದ ಸರ್ಕಾರ ಇದುಸ್ವಾತಂತ್ರ್ಯ ಬಂದ ಕಾಲದಿಂದಲೂ ನಾವು ಇಷ್ಟು ವೀಕ್‌‍, ಚೀಪ್‌ ಮುಖ್ಯಮಂತ್ರಿ ನಾವು ಕಂಡಿಲ್ಲಮಂತ್ರಿಮಂಡಲದ ಒಬ್ಬ ಸಚಿವರು ಸಿಎಂ ಮಾತು ಕೇಳುತ್ತಿಲ್ಲವಲ್ಲಾ, ಸಚಿವರು ಸಿಎಂ ಆಗೋಕೆ ಹೊತಟಿದ್ದಾರೆ, ಸಿಎಂ ಸಚಿವರ ಎದುರು ಧಮಯ್ಯ ಅಂತಿದ್ದಾರೆ. ಬೆಂಬಲ ಕೊಡಿ ಎಂದು ಭಿಕ್ಷೆ ಬೇಡುತ್ತಿದ್ದಾರೆ. ಇಂತಹ ಅಸಹಾಯಕ ಸಿಎಂ ಸಿದ್ದರಾಮಯ್ಯ ಬೆಲೆ ಏರಿಕೆ ಹಿಂಪಡೆಯುವವರೆಗೆ ನಾವು ಪ್ರತಿಭಟನೆ ನಿಲ್ಲಿಸಲ್ಲ. ಎಲ್ಲಾ ಸಂಘಟನೆಗಳ ಬೆಂಬಲ ಪಡೆದು ಸರ್ಕಾರಕ್ಕೆ ಬುದ್ದಿ ಕಲಿಸುತ್ತೇವೆ ಎಂದು ಗುಡುಗಿದರು. +ದರ ಹಿಂಪಡೆಯುವವರೆಗೂ ಹೋರಾಟ :ಪೆಟ್ರೋಲ್‌- ಡೀಸೆಲ್‌ಗಳ ಮೇಲೆ ಹೆಚ್ಚಿಸಿರುವ ದರವನ್ನು ವಾಪಾಸ್‌‍ ಪಡೆಯದಿದ್ದರೆ ದರ ಹಿಂಪಡೆಯುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಕ್ಕೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ. +ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಈ ಸರ್ಕಾರ ಜನಕಲ್ಯಾಣವನ್ನು ಮರೆತು ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಪೆಟ್ರೋಲ್‌‍-ಡೀಸೆಲ್‌ ದರ ಆರಂಭವಷ್ಟೇ ಇನ್ನು ಈ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆಗಳೂ ಗಗನಕ್ಕೇರಲಿವೆ, ಜನಸಾಮಾನ್ಯರು, ಕಾರ್ಮಿಕರು, ಬಡವರು ಹಾಗೂ ಮಧ್ಯಮ ವರ್ಗದವರು ಬೆಲೆ ಏರಿಕೆಯ ಚಕ್ರವ್ಯೂಹದಲ್ಲಿ ಸಿಲುಕಿ ನಲುಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದಿದ್ದಾರೆ. +ಈ ಬೆಲೆ ಏರಿಕೆಯ ಬಿಸಿ ಪಂಪ್‌ಸೆಟ್‌, ಟ್ರಾಕ್ಟರ್‌ ಸೇರಿದಂತೆ ಇತರ ಕೃಷಿ ಉಪಕರಣಗಳನ್ನು ಬಳಸುವ ರೈತರ ಕೈ ಸುಡಲಿದೆ. ಅದರ ಜೊತೆಗೆ ವಾಹನವನ್ನು ಆಶ್ರಯಿಸಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೂ ಕೂಡ ಇದರ ಬಿಸಿ ತಟ್ಟಲಿದೆ. ಒಟ್ಟಾರೆಯಾಗಿ ಎಲ್ಲ ಕ್ಷೇತ್ರಗಳಿಗೂ ಬೆಲೆ ಏರಿಕೆಯ ಬಿಸಿತಟ್ಟಿಸುವ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕೆಂದು ಎಂದು ಒತ್ತಾಯಿಸಿದ್ದಾರೆ. +ರಾಜ್ಯದ ಸಂಪನೂಲವನ್ನು ಬಳಸಿಕೊಳ್ಳುವ ಯಾವ ಕಾಳಜಿಯೂ ಸರ್ಕಾರಕ್ಕಿಲ್ಲ, ಬದಲಾಗಿ ರಾಜ್ಯದ ಸಂಪನೂಲವನ್ನು ಕೊಳ್ಳೆ ಹೊಡೆಯುವವರಿಗೆ ಆಥಿತ್ಯ ನೀಡುವ ತಾಣವನ್ನಾಗಿಸುತ್ತಿದೆ, ಕಾಂಗ್ರೆಸ್‌‍ ಕರ್ನಾಟಕದಲ್ಲಿ ಅರಾಜಕತೆ ಸೃಷ್ಟಿ ಮಾಡಿಯೇ ಅಧಿಕಾರದಿಂದ ಕೆಳಗಿಳಿಯುವ ಶಪಥ ಮಾಡಿದಂತೆ ಕಾಣುತ್ತಿದೆ ಎಂದು ಗುಡುಗಿದ್ದಾರೆ. \ No newline at end of file diff --git a/eesanje/url_46_106_11.txt b/eesanje/url_46_106_11.txt new file mode 100644 index 0000000000000000000000000000000000000000..bc59b7f889a045a58366c670905e1da1659a4c44 --- /dev/null +++ b/eesanje/url_46_106_11.txt @@ -0,0 +1,11 @@ +ವಿಧಾನಸೌಧವನ್ನೇ ಅಡ ಇಡಲು ಸಿಎಂ “ಸಿದ್ದ” : ಆರ್‌.ಅಶೋಕ್‌ ಆಕ್ರೋಶ +ಬೆಂಗಳೂರು, ಜೂ.17-ಆದಷ್ಟು ಬೇಗ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಿಂದ ತೊಲಗದಿದ್ದರೆ ಮುಂದಿನ ಬಜೆಟ್‌ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸೌಧವನ್ನೇ ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸ್ಪೋಟಕ ಹೇಳಿಕೆ ನೀಡಿದ್ದಾರೆ. +ಪಕ್ಷದ ವತಿಯಿಂದ ನಗರದ ಫ್ರೀಡಂಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾರ್ಪೋರೇಷನ್‌ ಕಟ್ಟಡಗಳು , ವಾರ್ಡ್‌ ಕಚೇರಿ ಅಡ ಇಟ್ಟು ಬ್ಯಾಂಕ್‌ನಿಂದ ಸಾಲ ಪಡೆಯಲು ಇಟ್ಟಿದ್ದಾರೆ. ಇದೇ ಪ್ರವೃತ್ತಿ ಮುಂದುವರೆದರೆ ಸಿಎಂ ಸಿದ್ದರಾಮಯ್ಯನವರು ವಿಧಾನಸೌಧವನ್ನು ಅಡ ಇಡಲು ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. +ತಮ ಭಾಷಣದ ವೇಳೆ ಅಶೋಕ್‌ ಅವರು ಈ ಹಿಂದೆ ಸಿದ್ದರಾಮಯ್ಯನವರು ವಿಪಕ್ಷ ನಾಯಕನಾಗಿದ್ದ ವೇಳೆ ಬೆಲೆ ಏರಿಕೆ ಬಗ್ಗೆ ಮಾತನಾಡಿದ ಭಾಷಣದ ವಿಡಿಯೋವನ್ನು ಪ್ರದರ್ಶಿಸಿದರು. +ನಾವು ಅಂದು ಆಡಳಿತದಲ್ಲಿದ್ದಾಗ ಒಂದು ರೂ. ಬೆಲೆ ಹೆಚ್ಚಳ ಮಾಡಿದ್ದಕ್ಕೆ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿದ್ದರು. ಈಗ ಪೆಟ್ರೋಲ್‌ ದರವನ್ನು 3 ರೂ. 50 ಪೈಸೆ ಹಾಗೂ ಡೀಸೆಲ್‌ ದರವನ್ನು 3 ರೂ.ಗೆ ಏರಿಕೆ ಮಾಡಿದ್ದಾರೆ. ಹಾಗಾದರೆ ನಿಮ ಸರ್ಕಾರಕ್ಕೆ ಮಾನಮರ್ಯಾದೆ ಇದೆಯೇ ಎಂದು ತರಾಟೆಗೆ ತೆಗೆದುಕೊಂಡರು. +ವಾಲೀಕಿ ಅಭಿವೃದ್ಧಿ ನಿಗಮದ ಹಣ ನುಂಗಿದ ಆರೋಪದಲ್ಲಿ ಸಚಿವ ನಾಗೇಂದ್ರ ಅವರ ಮೊದಲ ವಿಕೆಟ್‌ ಬಿದ್ದಿದೆ. ಈಗ 2ನೇ ವಿಕೆಟ್‌ ಬೀಳುವುದೇ ಸಿದ್ದರಾಮಯ್ಯನವರದು. ನಾಗೇಂದ್ರ 20% ಹೊಡೆದರೆ ಸಿದ್ದರಾಮಯ್ಯ 80% ಪಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದರು. 187 ಕೋಟಿ ಹಣವನ್ನು ಹಗಲು ದರೋಡೆ ಮಾಡಿದ್ದಾರೆ. ದಲಿತರ ಹಣ ಬಾರ್‌ಗಳಿಗೆ ಹೋಗಿದೆ. ಎಲ್ಲೆಂದರಲ್ಲಿ ಹಾಡುಹಗಲೇ ಹಿಂದೂಗಳ ಕಗ್ಗೊಲೆಯಾಗುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. +ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಇಂತಹ ನುಡಿಮುತ್ತನ್ನು ಹಿಂದೆ ಸಿದ್ದರಾಮಯ್ಯನವರೇ ಹೇಳಿದ್ದರು. ಈಗ ಏಕಾಏಕಿ ಟಾಕಾಟಕ್‌ ಎಂದು ಬೆಲೆ ಹೆಚ್ಚಳ ಮಾಡಿದ್ದಾರೆಂದು ಕಿಡಿಕಾರಿದರು. +ಮದ್ಯದ ಬೆಲೆ 3 ಸಾವಿರ, ಪೆಟ್ರೋಲ್‌ ಬೆಲೆ 1800, ಅಗತ್ಯ ವಸ್ತುಗಳ ಬೆಲೆ, ವಿದ್ಯುತ್‌ ದರವು ಹೆಚ್ಚಳವಾಗಿದೆ, ಸದ್ಯದಲ್ಲೇ ಬಸ್‌‍ ದರವೂ ಏರಿಕೆಯಾಗಲಿದೆ. ಕಾಫೀ, ಟೀ ದರವೂ ಹೆಚ್ಚಳವಾಗಿದೆ. ಕಾಂಗ್ರೆಸ್‌‍ನವರು ಸತ್ತರೆ ತಿಥಿ ವಡೆಯು ಹೇರಿಕೆಯಾಗಲಿದೆ ಎಂದು ವ್ಯಂಗ್ಯವಾಡಿದರು. +ಮಹಾನಗರ ಪಾಲಿಕೆಗಳಲ್ಲಿ ಕಸ ಗುಡಿಸಲು ಪೌರಕಾರ್ಮಿಕರಿಗೆ ಸಂಬಳ ಕೊಟ್ಟಿಲ್ಲ. ಒಂದೇ ಒಂದು ಗುಂಡಿಯನ್ನೂ ಸಹ ಮುಚ್ಚಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬ್ರಾಂಡ್‌ ಬೆಂಗಳೂರು ಮಾಡಲು ಹೊರಟಿದ್ದಾರೆ. ಇದೇನಪ್ಪಾ ಶಿವಕುಮಾರ್‌ ಬ್ರಾಂಡ್‌ ಬೆಂಗಳೂರು ಎಂದು ಅಶೋಕ್‌ ಪ್ರಶ್ನಿಸಿದರು. +ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿ ಬಕ್ರೀದ್‌ ಹಿಂದಿನ ದಿನ ಜನರನ್ನು ಬಕ್ರಾ ಮಾಡಲು ಬೆಲೆ ಏರಿಕೆ ಮಾಡಲಾಗಿದೆ. ಊಸರವಳ್ಳಿಗೂ ನಿಮಗೂ ಸರ್ಧೆ ಮಾಡಿದರೆ ಗೆಲ್ಲೋದು ನೀವೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್‌ ಗಾಂಧಿಗೆ ಹೋಗುತ್ತಿದೆಕಾಂಗ್ರೆಸ್‌‍ ಸರ್ಕಾರವಿರುವ 3 ಕಡೆಯೂ ಜನರಿಗೆ ನಾಮ ಹಾಕ್ತಾರೆ. ಬಕ್ರೀದ್‌ ದಿನ ಸಿಎಂ ಮಾತ್ರ ಟೋಪಿ ಹಾಕಿಕೊಳ್ಳುತ್ತಾರೆ ಎಂದುಕೊಂಡಿದ್ದೆವು. ಆದರೆ ಇವರು ಎಲ್ಲರಿಗೂ ಟೋಪಿ ಹಾಕಿದ್ದಾರೆ. ಚೊಂಬು ಆದರೂ ಯಾವುದಕ್ಕಾದರೂ ಉಪಯೋಗಕ್ಕೆ ಬರುತ್ತದೆ. ಆದರೆ ಕಾಂಗ್ರೆಸ್‌‍ ನಾಯಕರು ಕೊಡುವುದು ಹಳೆಯ ಚಿಪ್ಪು. ಚಿಪ್ಪು ಕೂಡ ಮೂರು ತೂತು, ಇವರ ಸರ್ಕಾರವೂ ತೂತು. ಸಂಗ್ರಹ ಮಾಡಿದ ಹಣವೆಲ್ಲಾ ರಾಹುಲ್‌ ಗಾಂಧಿಗೆ ಹೋಗುತ್ತಿದೆ. ಬೆಲೆ ಇಳಿಸಬೇಕು ಇಲ್ಲಾ ಅವರೇ ಇಳಿಯಬೇಕು. ಇಳಿಯದಿದ್ದರೆ ಹೇಗೆ ಇಳಿಸಬೇಕೆಂದು ನಮಗೆ ಗೊತ್ತಿದೆ. ನುಂಗಣ್ಣ, ನುಂಗಣ್ಣ ಎಂದು ನುಂಗುವ ಕೆಲಸ ಒಂದೇ ಮಾಡುತ್ತಿದ್ದಾರೆ ಎಂದು ಸಿ.ಟಿ.ರವಿ ಕಿಡಿಕಾರಿದರು. \ No newline at end of file diff --git a/eesanje/url_46_106_12.txt b/eesanje/url_46_106_12.txt new file mode 100644 index 0000000000000000000000000000000000000000..d9dbecc2b2d4203dce7f3f55def1eb6c812ba436 --- /dev/null +++ b/eesanje/url_46_106_12.txt @@ -0,0 +1,4 @@ +ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಹೃದಯಾಘಾತದಿಂದ ನಿಧನ +ಬೆಂಗಳೂರು, ಜೂ.17-ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ ಅಣುಕು ಶವ ನಡೆಸುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ. +ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರು ಕುಸಿದುಬಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.ಆರ್‌ಎಸ್‌‍ಎಸ್‌‍ ಹಿನ್ನಲೆಯಲ್ಲಿ ಭಾನುಪ್ರಕಾಶ್‌ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಾಕಷ್ಟು ಶ್ರಮ ಹಾಕಿದ್ದರು. ಒಂದು ಬಾರಿ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. +ಸಂತಾಪ: ಭಾನುಪ್ರಕಾಶ್‌ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಅನೇಕರು ತೀವ್ರ ಕಂಬನಿ ಮಿಡಿದಿದ್ದಾರೆ. \ No newline at end of file diff --git a/eesanje/url_46_106_2.txt b/eesanje/url_46_106_2.txt new file mode 100644 index 0000000000000000000000000000000000000000..959bbd10ed893119308eecd2e3bb6e99c1d98fad --- /dev/null +++ b/eesanje/url_46_106_2.txt @@ -0,0 +1,6 @@ +ರಸ್ತೆ ಅಪಘಾತದಲ್ಲಿ ಗಾಯಗೊಂಡ ದಂಪತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಸಂಸದ ಡಾ.ಸಿ.ಎನ್‌.ಮಂಜುನಾಥ್‌ +ಕನಕಪುರ,ಜೂ.18-ರಸ್ತೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ದಂಪತಿಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ಪ್ರಥಮ ಚಿಕಿತ್ಸೆ ಮಾಡಿ ಆಸ್ಪತ್ರೆಗೆ ದಾಖಲಿಸಿ ಅಲ್ಲೂ ಕೂಡ ಮಾನವೀಯತೆ ಮೆರೆದಿದ್ದಾರೆ. +ಮೈಸೂರು ರಸ್ತೆಯಲ್ಲಿ ಬರುತ್ತಿರುವ ಮಾರ್ಗಮಧ್ಯೆ ಅಪಘಾತವಾಗಿ ನರಳುತಿದ್ದ ದಂಪತಿಗಳನ್ನು ಗಮನಿಸಿ ತಮ ವಾಹನ ನಿಲ್ಲಿಸಿ ಸ್ಥಳಕ್ಕೆ ತೆರಳಿ ಗಾಯಾಳು ದಂಪತಿಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. +ಆನೆಕಲ್‌ ತಾಲೂಕು ದಂಪತಿ ಮುನಿವೀರಪ್ಪ ಮತ್ತು ಮುನಿರತ್ನಮ ಸಾತನೂರು ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೆದ್ದಾರಿ ಬಳಿಯ ಬಟ್ಟಲುಗುಂಡಪ್ಪ ಬೆಟ್ಟದ ಸಮೀಪ ಟಿಟಿ ವಾಹನ ಅಪಘಾತ ಮಾಡಿ ಹೋಗಿತ್ತು. +ಅದೇ ವೇಳೆಗೆ ಪ್ರಸಿದ್ಧ ಗ್ರಾಮದೇವತೆ ಕಬ್ಬಾಳಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಸಂಜೆ ವಾಪಸ್‌‍ ತೆರಳುವಾಗ ಅಪಘಾತದಲ್ಲಿ ಬಿದ್ದು ನರಳುತಿದ್ದವರನ್ನು ನೋಡಿದ ಸಂಸದ ಸಿ ಎನ್‌ ಮಂಜುನಾಥ್‌ ಕೂಡಲೇ ಅವರನ್ನು ಪರೀಕ್ಷಿಸಿ ಆಟೋ ಮೂಲಕ ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. +ತಕ್ಷಣ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ .ನರಸಿಂಹಮೂರ್ತಿಯವರನ್ನುೆ ದೂರವಾಣಿ ಮೂಲಕ ಸಂರ್ಪಕಿಸಿ ಆಟೋರಿಕ್ಷಾದಲ್ಲಿ ಕಳುಹಿಸುತ್ತಿರುವುದಾಗಿ ಹೇಳಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.ಸಂಸದರ ಈ ಸಹಾದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ವ್ಯಾಪಕ ಶ್ಲಾಘನೆಗಳು ಕೇಳಿಬರುತ್ತಿವೆ. \ No newline at end of file diff --git a/eesanje/url_46_106_3.txt b/eesanje/url_46_106_3.txt new file mode 100644 index 0000000000000000000000000000000000000000..aa623981dc35a1b9e0cc29e168fa8da9502b4f14 --- /dev/null +++ b/eesanje/url_46_106_3.txt @@ -0,0 +1,14 @@ +ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರೆಯುತ್ತಾ ಬಿಜೆಪಿ-ಜೆಡಿಎಸ್‌‍ ದೋಸ್ತಿ..? +ಬೆಂಗಳೂರು, ಜೂ.17– ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ನ ಎಲ್ಲಾ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಹೆಚ್ಚಿನ ಸ್ಥಾನ ಗಳಿಸಿರುವ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದುವರೆಸಲು ಉತ್ಸುಕತೆ ತೋರಿದೆ. +ಕಾಂಗ್ರೆಸ್‌‍ನ ನಾಗಲೋಟಕ್ಕೆ ಕಡಿವಾಣ ಹಾಕಬೇಕಾದರೆ ಎನ್‌ಡಿಎ ಮೈತ್ರಿಕೂಟದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗೊಂಡಿರುವ ಉಭಯ ಪಕ್ಷಗಳ ಮುಖಂಡರು, ಜಿಲ್ಲಾ , ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿಗೆ ಒಲವು ತೋರಿದ್ದಾರೆ. +ಸದ್ಯದಲ್ಲೇ ಜರುಗಬಹುದಾದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಜೆಡಿಎಸ್‌‍-ಬಿಜೆಪಿ ಎನ್‌ಡಿಎ ಮೈತ್ರಿಕೂಟ ಒಮತದ ಕಣಕ್ಕಿಳಿಸುವ ಸಾಧ್ಯತೆ ಇದೆ. +ಜೆಡಿಎಸ್‌‍-ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧಿಸಿದರೆ ಮತ ವಿಭಜನೆಯಾಗಿ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎಂಬಂತೆ ಕಾಂಗ್ರೆಸ್‌‍ ಪರಿಸ್ಥಿತಿಯ ಲಾಭ ಪಡೆಯಬಹುದೆಂಬುದು ಅರಿವಾಗಿರುವುದರಿಂದ ಮೈತ್ರಿಯನ್ನು ಇನ್ನಷ್ಟು ಗಟ್ಟಿಗೊಳಿಸಲು ಕಾರ್ಯತಂತ್ರ ರೂಪಿಸಲಾಗಿದೆ. +ಸ್ಥಳೀಯ ಮಟ್ಟದಲ್ಲಿ ಏನೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಮೊದಲ ಹಂತದ ನಾಯಕರು ಸರಿಪಡಿಸಿಕೊಂಡು ಭವಿಷ್ಯದಲ್ಲಿ ಕಾಂಗ್ರೆಸ್‌‍ ಎಲ್ಲಿಯೂ ಅಧಿಕಾರಕ್ಕೆ ಬಾರದಂತೆ ತಡೆಯಲು ಮೈತ್ರಿ ಅನಿವಾರ್ಯ ಎಂಬ ಸಂದೇಶ ಕೇಂದ್ರ ನಾಯಕರಿಂದಲೇ ಬಂದಿದೆ. +ಅದರಲ್ಲೂ ವಿಶೇಷವಾಗಿ ಹಳೇ ಮೈಸೂರು ಭಾಗದ ಬಿಜೆಪಿ ಸಂಸದರು ಮುಂಬರುವ ಬಿಬಿಎಂಪಿ ಮತ್ತು ಜಿಲ್ಲಾ ಪಂಚಾಯಿತಿ/ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ಉತ್ಸುಕರಾಗಿದ್ದಾರೆ. +ಅರೆ-ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೆಡಿಎಸ್‌‍ ಮತಗಳನ್ನು ತಮ್ಮ ಪರವಾಗಿ ಪರಿವರ್ತಿಸುವುದರೊಂದಿಗೆ ಮೈತ್ರಿಯು ಲೋಕಸಭಾ ಚುನಾವಣಾ ಫಲಿತಾಂಶಗಳಲ್ಲಿ ಸ್ಪಷ್ಟವಾಗಿ ಕಂಡುಬಂದಿದ್ದು, ಬಿಜೆಪಿ ಸಂಸದರು ಪ್ರಭಾವಿತರಾಗಿದ್ದಾರೆ. ಬಿಬಿಎಂಪಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಉಭಯ ಪಕ್ಷಗಳಿಗೆ ಅನುಕೂಲವಾಗುತ್ತದೆ ಎಂಬುದು ಬಹುತೇಕ ಅಭಿಪ್ರಾಯವಾಗಿದೆ. +ಉದಾಹರಣೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌‍ ಪಕ್ಷದ ಕಾರ್ಯಕರ್ತರು ಬೆಂಬಲ ಸೂಚಿಸಿದ್ದರಿಂದ ಅವರು ಗೆಲುವು ಸಾಧಿಸಿದ್ದು, ಉಭಯ ಪಕ್ಷಗಳ ನಾಯಕರು ಅವರಿಗೆ ಅಭಿನಂದನೆ ಸಲ್ಲಿಸಿದರು. ಭವಿಷ್ಯದಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಬಹುದು ಎಂದು ಹೆಸರು ಹೇಳಲು ಇಚ್ಛಿಸದ ಪ್ರಮುಖರೊಬ್ಬರು ತಿಳಿಸಿದ್ದಾರೆ. +ವೀರಶೈವ ಲಿಂಗಾಯತ ಸಮುದಾಯದವರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಜಲಶಕ್ತಿ ಸಚಿವ ವಿ ಸೋಮಣ್ಣ ಅವರು ಜೆಡಿಎಸ್‌‍ ವರಿಷ್ಠ ಎಚ್‌ಡಿ ದೇವೇಗೌಡ ಮತ್ತು ಕೇಂದ್ರದ ಭಾರೋ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಮುಂಬರುವ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ಉತ್ಸುಕರಾಗಿದ್ದಾರೆ. +ಹಳೇ ಮೈಸೂರು ಭಾಗದ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ವಿ.ಸೋಮಣ್ಣ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ವಿಚಾರದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಮಾತು ಮುಖ್ಯವಾಗಿತ್ತು. ಹೀಗಾಗಿ, ಬಿಬಿಎಂಪಿ ಮತ್ತು ಜಿಲ್ಲಾ/ತಾಲ್ಲೂಕು ಪಂಚಾಯಿತಿ ಚುನಾವಣೆ ಸೇರಿದಂತೆ ಮುಂದಿನ ಚುನಾವಣೆಗಳಲ್ಲಿ ಈ ಪ್ರದೇಶದಲ್ಲಿ ಜೆಡಿಎಸ್‌‍ ಜೊತೆಗೆ ಮೈತ್ರಿ ಮುಂದುವರಿಯಲಿದೆ ಎಂದು ತಿಳಿದುಬಂದಿದೆ. +ಮೈತ್ರಿ ಮುಂದುವರಿಸಲು ಸಂಸದರು ಒಪ್ಪಿಗೆ ಸೂಚಿಸಿದ್ದರೂ, ಜೆಡಿಎಸ್‌‍ ಜೊತೆಗೆ ಮೈತ್ರಿ ಮುಂದುವರಿಸಿದ್ದೇ ಆದರೆ ಭವಿಷ್ಯದಲ್ಲಿ ಪಕ್ಷದ ಮುಂದಿನ ಯೋಜನೆಗಳಲ್ಲಿ ತಮ ಪ್ರಭಾವ ಕುಗ್ಗುತ್ತದೆ ಎಂದು ಕೆಲವು ನಾಯಕರು ಅಭಿಪ್ರಾಯಪಟ್ಟಿದ್ದಾರೆ. +ಮೈತ್ರಿಯ ಬಲದಿಂದ ರಾಜ್ಯದಲ್ಲಿ ಯಶಸ್ವಿಯಾದ ನಂತರ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಸಂಸದರು ಜೆಡಿಎಸ್‌‍ನ ರಾಜ್ಯ ನಾಯಕತ್ವದ ಜೊತೆಗೆ ಉತ್ತಮವಾದ ಸಂಬಂಧ ಹೊಂದುತ್ತಲೇ ಇರುವುದರಿಂದ ಬಿಜೆಪಿಯೊಳಗಿನ ಇತರ ನಾಯಕರಿಗೆ ಅವಕಾಶಗಳು ಕಡಿಮೆಯಾಗುತ್ತವೆ. +ಇದರಿಂದ ಬಿಜೆಪಿಯೊಳಗಿನ ಒಕ್ಕಲಿಗ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್‌‍ ಯಡಿಯೂರಪ್ಪ ಸೇರಿದ್ದಾರೆ. ಒಕ್ಕಲಿಗ ಸಮುದಾಯ ಮತ್ತು ಜೆಡಿಎಸ್‌‍ (ಜನತಾ ದಳ (ಜಾತ್ಯತೀತ) ಎರಡಕ್ಕೂ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ಇದು ವಿಶೇಷವಾಗಿ ನಿಜವಾಗಿದೆ. ಈ ಪ್ರದೇಶದಲ್ಲಿ, ಮೈತ್ರಿಯು ಬಿಜೆಪಿ ನಾಯಕರ ಪ್ರಭಾವ ಮತ್ತು ಅವಕಾಶಗಳನ್ನು ಸೀಮಿತಗೊಳಿಸಬಹುದು ಎಂಬ ಆತಂಕವೂ ಇದೆ. \ No newline at end of file diff --git a/eesanje/url_46_106_4.txt b/eesanje/url_46_106_4.txt new file mode 100644 index 0000000000000000000000000000000000000000..23e14b9e87768b1a710910268613775c51923f04 --- /dev/null +++ b/eesanje/url_46_106_4.txt @@ -0,0 +1,8 @@ +ಸಿಎಂ ಸಿದ್ದರಾಮಯ್ಯನವರಿಗೆ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲ್ +ಬೆಂಗಳೂರು, ಜೂ.17-ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆ ಪ್ರಮಾಣವನ್ನು ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಸಮರ್ಥಿಸಿಕೊಳ್ಳುವ ಬದಲು ನಮ ರಾಜ್ಯದಿಂದಲೇ ಮೊದಲು ಕಡಿಮೆ ಮಾಡಿ ನಂತರ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲು ಹಾಕಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಿಸಿ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು. +ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರದ ಮೇಲೆ ಯಾವಾಗಲೂ ಗೂಬೆ ಕೂರಿಸಿ ತಮ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಾರೆ. ಬೇರೆ ರಾಜ್ಯಗಳ ಉದಾಹರಣೆ ಕೊಡುವುದು ನಮಗೆ ಬೇಡ. ಮೊದಲು ಕರ್ನಾಟಕದಿಂದಲೇ ಕಡಿಮೆ ಮಾಡಿ ಬಳಿಕ ಇನ್ನೊಂದು ರಾಜ್ಯದ ಉದಾಹರಣೆ ಕೊಡಿ ಎಂದು ಆಗ್ರಹಿಸಿದರು. +ರಾಜ್ಯ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡದೆ ಬೆಲೆ ಏರಿಕೆ ಹೆಚ್ಚಳ ಜನರಿಗೆ ಬರದ ಗ್ಯಾರಂಟಿ ಕೊಡುತ್ತಿದೆ. ಇದೊಂದು ಜನ ವಿರೋಧಿ ಸರ್ಕಾರ. ಬಡವರ ಮೇಲಿನ ತೆರಿಗೆ ಬರೆ ಎಂದು ಕಿಡಿಕಾರಿದರು. +ಕಾಂಗ್ರೆಸ್‌‍ ಪಕ್ಷದ ನಾಡಗೌಡರೇ ಸರ್ಕಾರದ ಬಳಿ ಹಣವಿಲ್ಲವೆಂದು ಹೇಳಿದ್ದಾರೆ. ನನ್ನ ಕ್ಷೇತ್ರಕ್ಕೆ ಅನುದಾನ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಬೆದರಿಕೆ ಹಾಕಿದ್ದಾರೆ.ಒಂದು ಕಡೆ ಭ್ರಷ್ಟಾಚಾರ ಮತ್ತೊಂದು ಸಿಎಂ ಸಿದ್ದರಾಮಯ್ಯನವರು ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರದ ವಿರೋಧಿ ಧೋರಣೆಯನ್ನು ವಿರೋಧಿಸಿ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು. +ಬಿಜೆಪಿ ಅಧಿಕಾರದಲ್ಲಿದ್ದಿದ್ದರೆ ನಾವು 10 ರೂ. ದರವನ್ನು ಕಡಿಮೆ ಮಾಡುತ್ತಿದ್ದೆವು. ಸಿದ್ದರಾಮಯ್ಯನವರು ಹಿಂದೆ ತಾವೇ ಹೇಳಿದ ಮಾತನ್ನು ಮರೆತು ಬಿಟ್ಟಿದ್ದಾರ.ಪೆಟ್ರೋಲ್‌ ಡೀಸೆಲ್‌ ದರ ಹೆಚ್ಚಳದಿಂದಾಗಿ ಆಟೋ, ಟ್ಯಾಕ್ಸಿ ದರವು ಹೆಚ್ಚಳವಾಗುತ್ತದೆ. ನಮ ಹೋರಾಟಕ್ಕೆ ಜೆಡಿಎಸ್‌‍ ಕೂಡ ಬೆಂಬಲ ಕೊಡಲಿದೆ ಎಂದು ಹೇಳಿದರು. +ಯಡಿಯೂರಪ್ಪ ವಿರುದ್ಧ ಕೇಳಿಬಂದಿರುವ ಆರೋಪ ಕುರಿತಂತೆ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಯಾವುದೇ ಕಾರಣಕ್ಕೂ ಹೆದರಿಕೊಂಡು ಹೋಗುವ ಪ್ರಶ್ನೆಯೇ ಇಲ್ಲ. ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ನ್ಯಾಯಾಧೀಶರೇ ಯಡಿಯೂರಪ್ಪ ಕಾನೂನಿಗೆ ಬೆನ್ನು ತೋರಿಸುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ ಎಂದು ಹೇಳಿದರು. \ No newline at end of file diff --git a/eesanje/url_46_106_5.txt b/eesanje/url_46_106_5.txt new file mode 100644 index 0000000000000000000000000000000000000000..b4988451fb297e131bba7a432849920190cfa629 --- /dev/null +++ b/eesanje/url_46_106_5.txt @@ -0,0 +1,7 @@ +ಇಂಧನ ಬೆಲೆ ಏರಿಕೆ ಸಮರ್ಥಿಸಿಕೊಳ್ಳುವ ನಾಚಿಕೆಗೇಡಿನ ಸರ್ಕಾರ : ಬೊಮ್ಮಾಯಿ +ಬೆಂಗಳೂರು, ಜೂ.17-ಇಂಧನ ಬೆಲೆ ಏರಿಕೆ ವಿಷಯದಲ್ಲಿ ಸುಳ್ಳಿನ ಸರಮಾಲೆ/ತಪ್ಪು ಮಾಹಿತಿಯನ್ನು ಬಿತ್ತರಿಸುವುದು ಕಾಂಗ್ರೆಸ್‌‍ ಪಕ್ಷದ ಕಪಟ ನಾಟಕವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಜನರಿಗೆ ಗ್ಯಾರಂಟಿ ನೀಡಲು ಈ ರೀತಿಯಾದ ದರ ಏರಿಕೆ ಅನಿವಾರ್ಯ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ. +ಮುಂದುವರೆದು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್‌‍/ಡೀಸೆಲ್‌ ದರ ಕಡಿಮೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಅಂಡಮಾನ್‌ ದ್ವೀಪದಲ್ಲಿ ಪೆಟ್ರೋಲ್‌ ದರ ಅತ್ಯಂತ ಕಡಿಮೆ ಇದೆ ಹಾಗೂ ಆಂಧ್ರ ಮತ್ತು ತೆಲಂಗಾಣದಲ್ಲಿ ಅತ್ಯಂತ ಹೆಚ್ಚಾಗಿದೆ. +ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲೆ ಕೇಂದ್ರ ಸರ್ಕಾರ ವಿಧಿಸುವ ಅಬಕಾರಿ ಸುಂಕ ರೂ.19.90 (ಪ್ರತಿ ಲೀಟರ್‌ ಮೇಲೆ) ಆಗಿದೆ, ಅದೇ ಕಾಂಗ್ರೆಸ್‌‍ ಸರ್ಕಾರದ 24.17 (ಪ್ರತಿ ಲೀಟರ್‌) ಆಗಿದೆ. ಪೆಟ್ರೋಲ್‌ ಮೇಲೆ ರಾಜ್ಯ ಸರ್ಕಾರ ಹಾಕುವ ಕೇಂದ್ರ ಸರ್ಕಾರದ ಎಕ್ಸೈಸ್‌‍ ಡ್ಯೂಟಿಗಿಂತ ಹೆಚ್ಚಾಗಿದೆ. +ಇಂದು ತಮ್ಮ ಬಿಟ್ಟಿ ಭಾಗ್ಯಗಳಿಗೆ ಹಣವನ್ನು ಹೊಂದಿಸಲು ಪೆಟ್ರೋಲ್‌ ಮೇಲಿನ ಹೆಚ್ಚಳ ಮಾಡಿರುವ ಕಾಂಗ್ರೆಸ್‌‍ ಸರ್ಕಾರ 2022ರಲ್ಲಿ ಹಾಗೂ 2000 ಇಸವಿಯಲ್ಲಿ ಏರುತ್ತಿರುವ ಇಂಧನ ದರಗಳ ಮೇಲೆ ಸ್ಪೀಕ್‌ ಅಪ್‌ ಇಂಡಿಯಾ ಎಂಬ ಬೃಹತ್‌ ಚಳುವಳಿಯನ್ನು ಕೇಂದ್ರ ಸರ್ಕಾರದ ವಿರುದ್ಧ ಹಮಿಕೊಂಡಿತ್ತು. +ಅಸಲೀಗೆ 2000 ಹಾಗೂ 2022ರಲ್ಲಿ ಕೋವಿಡ್‌ ಸೇರಿದಂತೆ, ರಶಿಯಾ-ಯುಕ್ರೇನ್‌ ಬಿಕ್ಕಟಿನಿಂದ ಇಂಧನ ಮೇಲಿನ ಆಮದು ಬೆಲೆ ಹೆಚ್ಚಾಗಿದ್ದರಿಂದ ಕೇಂದ್ರ ಸರ್ಕಾರ ಅನಿವಾರ್ಯವಾಗಿ ಇಂಧನ ಬೆಲೆ ಹೆಚ್ಚಿಸಬೇಕಾಗಿತ್ತು ಹೊರತು ಬಡವರಿಗೆ, ಮಾಧ್ಯಮ ವರ್ಗದವರಿಗೆ ಅನಾವಶ್ಯಕವಾಗಿ ಹೊರೆ ಹಾಕಲು ಅಲ್ಲ. ಹೊಣೆಗೇಡಿತನಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್‌‍ ಎಂದು ಅವರು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_106_6.txt b/eesanje/url_46_106_6.txt new file mode 100644 index 0000000000000000000000000000000000000000..8da8f7f88062b9174ba57a3958845512a9592a8b --- /dev/null +++ b/eesanje/url_46_106_6.txt @@ -0,0 +1,7 @@ +ಮರ್ಮಾಂಗಕ್ಕೆ ಎಲೆಕ್ಟ್ರಿಕ್ ಶಾಕ್‌ : ‘ಅಂತ’ ಸಿನಿಮಾ ಸ್ಟೈಲಲ್ಲೇ ರೇಣುಕಾಸ್ವಾಮಿಗೆ ‘ಡಿ’ಗ್ಯಾಂಗ್ ಟಾರ್ಚರ್.? +ಬೆಂಗಳೂರು,ಜೂ.17-ರೇಬಲ್‌ ಸ್ಟಾರ್‌ ಅಂಬರೀಷ್‌ ಅಭಿನಯದ ಅತ್ಯಮೋಘ ಚಿತ್ರ ಅಂತ ಚಿತ್ರದಲ್ಲಿ ಹೀರೋ ಸುಶೀಲ್‌ಕುಮಾರ್‌ ಅವರನ್ನು ಚೇರ್‌ಗೆ ಕಟ್ಟಿ ಹಾಕಿ ನೀಡುವ ಚಿತ್ರಹಿಂಸೆ ನೀಡಿದ ಮಾದರಿಯಲ್ಲೇ ದರ್ಶನ್‌ ಅಂಡ್‌ ಗ್ಯಾಂಗ್‌ನಿಂದ ಕೊಲೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿಗೂ ಚಿತ್ರಹಿಂಸೆ ನೀಡಲಾಗಿತ್ತೇ ಎಂಬ ಅನುಮಾನ ಇದೀಗ ಪೊಲೀಸರನ್ನು ಕಾಡತೊಡಗಿದೆ. +ಕಾರಣ ಇಷ್ಟೇ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆದ ಪಟ್ಟಣಗೆರೆಯಲ್ಲಿರುವ ಶೆಡ್‌ ಹಿಂದಿನಿಂದಲೂ ಚಿತ್ರಹಿಂಸೆ ನೀಡುವುದಕ್ಕೆ ಕುಖ್ಯಾತಿ ಹೊಂದಿದೆ. ಇಲ್ಲಿ ಪೈನಾನ್ಷಿಯರ್‌ಗಳಿಂದ ಹಣ ಪಡೆದು ಸಾಲ ಮರು ಪಾವತಿಸದೆ ತಲೆಮರೆಸಿಕೊಳ್ಳುವವರನ್ನು ಕರೆತಂದು ಅಂತ ಚಿತ್ರದ ಮಾದರಿಯಲ್ಲೇ ಚಿತ್ರಹಿಂಸೆ ನೀಡಿದ ಉದಾಹರಣೆಗಳಿವೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ. +ಅಂತ ಚಿತ್ರದಲ್ಲಿ ಹೀರೋ ಸುಶೀಲ್‌ ಕುಮಾರ್‌ ಅವರನ್ನು ಚೇರ್‌ಗೆ ಕಟ್ಟಿ ಹಾಕಿ ಮರ್ಮಾಂಗಕ್ಕೆ ಎಲೆಕ್ಟ್ರಿಕ್ ಶಾಕ್‌ ನೀಡಿ ಬೆರಳುಗಳಿಂದ ಉಗುರುಗಳನ್ನು ಕಿತ್ತು ಚಿತ್ರಹಿಂಸೆ ನೀಡಲಾಗುತ್ತದೆ. ಈ ಚಿತ್ರಹಿಂಸೆಯ ನಂತರ ಹೀರೋ ಸುಶೀಲ್‌ಕುಮಾರ್‌ ಪುರುಷತ್ವ ಕಳೆದುಕೊಳ್ಳಬೇಕಾಗುತ್ತದೆ. +ಅಂತ ಚಿತ್ರದ ಮಾದರಿಯಲ್ಲೇ ಸಾಲ ಕಟ್ಟಲು ಸತಾಯಿಸುವವರನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದು ಚಿತ್ರಹಿಂಸೆ ನೀಡಿರುವ ಕುರುಹುಗಳು ಅಲ್ಲಿ ಪತ್ತೆಯಾಗಿದೆ ಎನ್ನುತ್ತಿವೆ ಪೊಲೀಸ್‌‍ ಮೂಲಗಳು. +ಪವಿತ್ರಾಗೌಡ ಅವರಿಗೆ ಆಶ್ಲೀಲ ಫೋಟೋ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಅಂತ ಚಿತ್ರದ ರೀತಿಯಲ್ಲಿ ಚಿತ್ರಹಿಂಸೆ ನೀಡುವ ಉದ್ದೇಶದಿಂದಲೇ ಆತನನ್ನು ಇಲ್ಲಿಗೆ ಕರೆತಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರ ಈ ಅನುಮಾನಕ್ಕೆ ಇಂಬು ನೀಡುವಂತೆ ಮನುಷ್ಯರಿಗೆ ಶಾಕ್‌ ನೀಡಲು ಬಳಸುವ ಮೆಗ್ನರ್‌ ಯಂತ್ರ ಪೊಲೀಸರಿಗೆ ಸಿಕ್ಕಿದೆ. +ಹೀಗಾಗಿ ರೇಣುಕಾಸ್ವಾಮಿಗೆ ಅಂತ ಚಿತ್ರದ ಮಾದರಿಯಲ್ಲೇ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಯಿತೇ ಎಂಬ ದಿಕ್ಕಿನಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ವಿವರಿಸಿವೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡದೆ ಕೇವಲ ಶಾಕ್‌ ನೀಡುವ ಮೂಲಕ ಮತ್ತೆ ಯಾವುದೇ ಹೆಣ್ಣು ಮಕ್ಕಳ ತಂಟೆಗೆ ಹೋಗದಂತೆ ಮಾಡಬೇಕು ಎಂಬ ಉದ್ದೇಶ ಡಿ ಗ್ಯಾಂಗ್‌ ಗೆ ಇತ್ತು ಎನ್ನಲಾಗಿದೆ. ಆದರೆ, ಬಿದ್ದ ಏಟಿನಿಂದ ರೇಣುಕಾಸ್ವಾಮಿ ಇಹಲೋಕ ತ್ಯಜಸಿದ್ದರಿಂದ ಇದೀಗ ಪಟ್ಟಣಗೆರೆ ಶೆಡ್‌ನಲ್ಲಿ ನಡೆದಿರಬಹುದು ಎನ್ನಲಾದ ಚಿತ್ರಹಿಂಸೆ ಪ್ರಕರಣಗಳು ಒಂದೊಂದಾಗಿ ಹೊರ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ. \ No newline at end of file diff --git a/eesanje/url_46_106_7.txt b/eesanje/url_46_106_7.txt new file mode 100644 index 0000000000000000000000000000000000000000..a6a51d47804560d8f59941a290eda74b0071e0ac --- /dev/null +++ b/eesanje/url_46_106_7.txt @@ -0,0 +1,19 @@ +ಬಸ್‌‍ ಟಿಕೆಟ್‌ ದರ ಸದ್ಯಕ್ಕೆ ಏರಿಸಲ್ಲ ಎನ್ನುತ್ತಲೇ ಏರಿಕೆಯ ಸುಳಿವು ನೀಡಿದ ಸಿಎಂ +ಬೆಂಗಳೂರು,ಜೂ.17-ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬೆನ್ನಲ್ಲೇ ಬಸ್‌‍ ಟಿಕೆಟ್‌ ದರದ ಏರಿಕೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪರೋಕ್ಷ ಸುಳಿವು ನೀಡಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸಂಪನೂಲ ಕ್ರೂಢೀಕರಣಕ್ಕೆ ನಾವು ಪ್ರಯತ್ನ ಮಾಡಿದ್ದೇವೆ. ಜನರಿಗೆ ಹೊರೆಯಾಗುವಂತಹ ತೆರಿಗೆಗಳನ್ನು ವಿಧಿಸುವುದಿಲ್ಲ ಎಂದು ತಿಳಿಸಿದರು. +ಬಸ್‌‍ ಪ್ರಯಾಣ ದರ ಏರಿಕೆಯಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಬಸ್‌‍ ದರ ಏರಿಕೆಯಾಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಹೆಚ್ಚಳ ಮಾಡುವ ಸಾಧ್ಯತೆ ಇಲ್ಲ. ಆದರೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳುವ ಮೂಲಕ ಪ್ರಯಾಣದರದ ಏರಿಕೆಯ ಸುಳಿವು ನೀಡಿದರು. +ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ನ್ಯಾಯೋಚಿತವಾಗಿ ನೀಡಿದರೆ ನಮಗೆ ಪೆಟ್ರೋಲ್‌, ಡೀಸೆಲ್‌ ಮೇಲೆ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ :ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಮಾಡುತ್ತಿದ್ದರೂ ಬಾಯಿ ಬಿಡದ ಬಿಜೆಪಿಯವರು, ಈಗ ರಾಜ್ಯ ಸರ್ಕಾರ ಸಂಪನೂಲ ಕ್ರೋಢಿಕರಣಕ್ಕಾಗಿ ಮಾರಾಟ ತೆರಿಗೆಯನ್ನು ಹೆಚ್ಚಿಸಿದಾಕ್ಷಣ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಬಡವರ ಯೋಜನೆಗಳಿಗೆ ವಿರುದ್ಧವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. +ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಎಸ್‌‍ಟಿ ನಂತರ ರಾಜ್ಯಕ್ಕೆ ತೆರಿಗೆ ಹೆಚ್ಚು ಮಾಡುವ ಸ್ವಾತಂತ್ರ್ಯ ಕಡಿಮೆಯಾಗಿದೆ. ಅಬಕಾರಿ, ಮೋಟಾರು ಟ್ಯಾಕ್‌್ಸ, ಸ್ಟಾಂಟ್‌ ಡ್ಯೂಟಿ, ಪೆಟ್ರೋಲ್‌, ಡಿಸೇಲ್‌ ಮೇಲೆ ಮಾತ್ರ ತೆರಿಗೆ ಪರಿಷ್ಕರಣೆಗೆ ಅವಕಾಶ ಉಳಿದಿದೆ. ಉಳಿದ ಎಲ್ಲಾ ಜಿಎಸ್‌‍ಟಿಯನ್ನು ಕೇಂದ್ರ ಸರ್ಕಾರವೇ ಸಂಗ್ರಹಿಸುತ್ತಿದೆ. ಅದರಲ್ಲಿ ರಾಜ್ಯಕ್ಕೆ ಕಡಿಮೆ ಪಾಲು ಕೊಡುತ್ತಿದೆ. +14 ಮತ್ತು 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ತೆರಿಗೆ ಪಾಲು ಹಾಗೂ ಕೇಂದ್ರದಿಂದ ಬರುವ ಅನುದಾನವೂ ಕಡಿಮೆಯಾಗಿದೆ. ಜಿಎಸ್‌‍ಟಿ ತೆರಿಗೆಯಲ್ಲಿ 5495 ಕೋಟಿ ಪಾಲು ಕಡಿಮೆಯಾಗಿದೆ, ಅದನ್ನು ಸರಿತೂಗಿಸಲು ವಿಶೇಷ ಅನುದಾನ ಕೊಡುತ್ತೇವೆ ಎಂದು 15ನೇ ಹಣಕಾಸು ಆಯೋಗ ಹೇಳಿತ್ತು, ಅದರ ಬಗ್ಗೆ ಮಾತನಾಡಲಿಲ್ಲ. ಬೆಂಗಳೂರಿನ ಕೆರೆಗಳು, ಫೆರಿಫರಲ್‌ ರಿಂಗ್‌ ರಸ್ತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಲಾಗಿದ್ದ ಹಣ ಬಿಡುಗಡೆಯಾಗದಿದ್ದಾಗ ಬಿಜೆಪಿಯವರು ಮಾತನಾಡಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. +ಕರ್ನಾಟಕ ಸರ್ಕಾರ ಪಾಪರ್‌ ಆಗಿದೆ ಎನ್ನುತ್ತಿದ್ದಾರೆ. ಪಾಪರ್‌ ಎಂದರೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ಗೆ ಅರ್ಥ ಗೊತ್ತಾ? ಯಾವುದಾದರೂ ವೇತನ ಅಥವಾ ಬಜೆಟ್‌ನಲ್ಲಿ ಹೇಳಿದ ಯೋಜನೆಗಳಿಗೆ ಹಣ ನಿಲ್ಲಿಸಿದ್ದೇವಾ? ಎಂದು ಮರು ಪ್ರಶ್ನಿಸಿದರು. +ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗ 2014 ಜೂನ್‌ನಲ್ಲಿ ಪೆಟ್ರೋಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ 9.48 ರೂಪಾಯಿ ಇತ್ತು. ಅದು 2020 ಮೇ ವೇಳೆಗೆ 32.98 ರೂಪಾಯಿ ಆಗಿದೆ. 23.50 ರೂಪಾಯಿ ಹೆಚ್ಚಾಗಿದೆ. ಡೀಸೆಲ್‌ ಮೇಲೆ 3.56 ರೂ. ಕೇಂದ್ರ ಅಬಕಾರಿ ತೆರಿಗೆ 31.81 ರೂಪಾಯಿ ಆಗಿದೆ. 28.27 ರೂಪಾಯಿ ಹೆಚ್ಚಾಗಿದೆ. ಆಗ ಬಿಜೆಪಿಯವರು ಪ್ರತಿಭಟನೆ ಮಾಡಲಿಲ್ಲ. ಕೇಂದ್ರ ತೆರಿಗೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಲಿಲ್ಲವೇ?, ಬಡವರು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿರುವ ಬಿಜೆಪಿಯವರು ಹಾಗೂ ಇತರರು ಕೇಂದ್ರ ತೆರಿಗೆಯನ್ನು ಏಕೆ ವಿರೋಧಿಸಲಿಲ್ಲ? ಎಂದು ಪ್ರಶ್ನಿಸಿದರು. +2014ರಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 113 ಡಾಲರ್‌ ಇತ್ತು. 2015ರಲ್ಲಿ 50 ಡಾಲರ್‌ಗೆ ಇಳಿಯಿತು. 2016ರಲ್ಲಿ ಅದಕ್ಕಿಂತ ಕಡಿಮೆಯಾಯಿತು. ಈಗ 82.35 ಡಾಲರ್‌ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಯಿತು. ಆದರೆ ದೇಶಿಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದೆ. 410 ರೂ ಇದ್ದ ಅಡುಗೆ ಸಿಲಿಂಡರ್‌ ಬೆಲೆ 200 ರೂ ದರ ಇಳಿಸಿದ ಬಳಿಕವೂ 805.50 ಆಗಿದೆ ಎಂದರು. +ಬಡವರು ಮತ್ತು ಶ್ರೀಸಾಮಾನ್ಯರ ಬಗ್ಗೆ ಕಾಳಜಿ ಇದ್ದರೆ ಬಿಜೆಪಿಯವರು ಯಾರ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಪ್ರಶ್ನಿಸಿದ ಅವರು, ಬಿಜೆಪಿಯವರು ನಮಗೆ ಪಾಠ ಹೇಳುತ್ತಾರಾ ? ಬರ ಪರಿಹಾರ ತೆಗೆದುಕೊಳ್ಳಲು ಕೋರ್ಟ್‌ಗೆ ಹೋದ ಮೇಲೆ ನ್ಯಾಯಾಲಯದ ನಿರ್ದೇಶನದ ಮೇರೆಗೆ 3453 ರೂಪಾಯಿ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. +ಬಿಜೆಪಿ ಬಡವರ, ಸಾಮಾನ್ಯರ ಕಾರ್ಯಕ್ರಮಗಳಿಗೆ ವಿರುದ್ಧವಾಗಿದ್ದಾರೆ. ನಾವು ಗ್ಯಾರಂಟಿ ಕೊಟ್ಟಿರುವುದು ಜನ ಸಾಮಾನ್ಯರಿಗಾಗಿ. ಇವುಗಳಿಂದ ಬಡವರ ಕೊಳ್ಳುವ ಆರ್ಥಿಕ ಶಕ್ತಿ ಹೆಚ್ಚಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಮಾರಾಟ ತೆರಿಗೆ ಪರಿಷ್ಕರಣೆಯ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರ್‌ಗೆ 102.85 ರೂಪಾಯಿಗೆ ಮಾರಾಟವಾಗುತ್ತಿದೆ. ಮೊದಲು 99.85 ರೂಗಳಿತ್ತು. ನೆರೆಯ ತಮಿಳುನಾಡಿನ ಹೊಸೂರಿನಲ್ಲಿ 102.84, ಕೇರಳದ ಕಾಸರಗೂಡಿನಲ್ಲಿ 106.64 ರೂ, ಆಂಧ್ರ ಪ್ರದೇಶದಲ್ಲಿ 109.44, ತೆಲಂಗಾಣದಲ್ಲಿ 107.40, ಬಿಜೆಪಿ ಆಡಳಿತದಲ್ಲಿರುವ ಮಹಾರಾಷ್ಟ್ರದಲ್ಲಿ 104.46 ರೂಪಾಯಿ ದರವಿದೆ. +ಡೀಸೆಲ್‌ 85.94 ಇದ್ದದ್ದು ಮೂರು ರೂ. ಮಾರಾಟ ತೆರಿಗೆ ಹೆಚ್ಚಳದ ಬಳಿಕ 88.94 ಆಗಿದೆ. ಹೋಸೂರಿನಲ್ಲಿ 94.81 ರೂ, ಕಾಸರಗೋಡಿನಲ್ಲಿ 95.60, ಆಂಧ್ರ ಪ್ರದೇಶದಲ್ಲಿ 97, ತೆಲಂಗಾಣದಲ್ಲಿ 95, ಮಹಾರಾಷ್ಟ್ರದಲ್ಲಿ 91.01 ರೂಪಾಯಿ ಇದೆ. ಇನ್ನೂ ಬಿಜೆಪಿ ಆಡಳಿತದ ರಾಜಸ್ಥಾನದಲ್ಲಿ ಪೆಟ್ರೋಲ್‌ 104.86 , ಮಧ್ಯಪ್ರದೇಶದಲ್ಲಿ107.47 ರೂ. ರಾಜಸ್ಥಾನದಲ್ಲಿ ಡೀಸೆಲ್‌ 90.36, ಗುಜರಾತ್‌ನಲ್ಲಿ 90.21, ಮಧ್ಯ ಪ್ರದೇಶದಲ್ಲಿ 91.84 ರೂ ಇದೆ. ಬಿಜೆಪಿಯವರು ಅಲ್ಲೆಲ್ಲಾ ಏಕೆ ಗಲಾಟೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. +ರಾಜ್ಯಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಒಂದು ದಿನ ಬಾಯಿ ಬಿಡಲಿಲ್ಲ. ಇವರಿಗೆ ನಮ ಸರ್ಕಾರವನ್ನು ಟೀಕಿಸಲು ಯಾವ ನೈತಿಕತೆ ಇದೆ ಎಂದ ಅವರು, ಬಡವರ ಕೆಲಸಗಳಿಗೆ ಕಲ್ಲು, ಹಾಕಿ ಬಡವರ ಹೊಟ್ಟೆಯ ಮೇಲೆ ಹೊಡೆಯುವುದೇ ಬಿಜೆಪಿಯವರ ಕೆಲಸ ಎಂದು ಟೀಕಿಸಿದರು. +ಸಂಪನೂಲ ಸಂಗ್ರಹಿಸಿ, ರಾಜ್ಯವನ್ನು ಅಭಿವೃದ್ಧಿ ಮಾಡುವುದೇ ನಮ ಉದ್ದೇಶ. ಕೇಂದ್ರ ಸರ್ಕಾರ ದೊಡ್ಡ ಅನ್ಯಾಯ ಮಾಡುತ್ತಿದೆ. ಬಿಜೆಪಿಯವರು ಒಂದು ದಿನವೂ ಚಕಾರ ಎತ್ತಲಿಲ್ಲ. ಆರು ತಿಂಗಳು ಬರಗಾಲಕ್ಕೆ ಹಣ ನೀಡದಿದ್ದರೂ ಮಾತನಾಡಲಿಲ್ಲ. ಈಗ ಬಿಜೆಪಿಗೆ ಬೇರೆ ವಿಚಾರಗಳಿಲ್ಲ. ಅದಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಆಶೋಕ್‌ಗೆ ದೇಶದ ಆರ್ಥಿಕತೆ ಗೊತ್ತಿಲ್ಲ. ಹೆಚ್‌.ಡಿ.ಕುಮಾರಸ್ವಾಮಿ ಜನರಿಗೆ ದಂಗೆ ಏಳಿ ಎಂದು ಕರೆ ನೀಡಿದ್ದಾರೆ. ರಾಜ್ಯಕ್ಕೆ ಅನ್ಯಾಯವಾದಾಗ ಒಂದು ದಿನವೂ ಮಾತನಾಡಲಿಲ್ಲ. ಬಿಜೆಪಿ ಜೊತೆ ಮೈತ್ರಿ ಬಳಿಕವೂ ಮೌನಕ್ಕೆ ಶರಣಾಗಿದ್ದರು ಎಂದು ಸಿಡಿಮಿಡಿ ವ್ಯಕ್ತಪಡಿಸಿದರು. +ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬುದು ಸುಳ್ಳು. ಹಾಗೆಂದ ಮಾತ್ರಕ್ಕೆ ಹಣಕಾಸು ತುಂಬಿ ತುಳುಕುತ್ತಿಲ್ಲ, ಪೆಟ್ರೋಲ್‌ ಡೀಸೆಲ್‌ನಿಂದ 3 ಸಾವಿರ ಕೋಟಿ ಬರಬಹುದು. ಗ್ಯಾರಂಟಿಗಳಿಗೆ 60 ಸಾವಿರ ಕೋಟಿ ಖರ್ಚಾಗುತ್ತಿದೆ. ನಾವು ಆ ಹಣವನ್ನು ಶ್ರೀಮಂತರಿಗೆ ಕೊಡುತ್ತಿಲ್ಲ. ನರೇಂದ್ರ ಮೋದಿ ರೀತಿ ಅಂಬಾನಿ ಅದಾನಿಯಂತಹ ಶ್ರೀಮಂತರಿಗೆ ಸಾಲ ಮನ್ನಾ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದರು. +ನರೇಂದ್ರ ಮೋದಿ ಕೂಡ ನಮ ಹಾಗೇಯೇ ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿಯೇ ಅಧಿಕಾರಕ್ಕೆ ಬಂದವರು. ಅಚ್ಚೆ ದಿನ್‌ ಆಯೇಗಾ ಎಂದು ಹೇಳಿದರು. ನಾವು ಆ ರೀತಿ ಹೇಳಲಿಲ್ಲ. ಚುನಾವಣೆ ಪ್ರಚಾರದಲ್ಲಿ ತೆರಿಗೆ ಹಾಕಲ್ಲ ಎಂದು ನಾವು ಹೇಳಿಲ್ಲ, ಹೇಳಿದ್ದರೆ ತೋರಿಸಿ ಎಂದು ಸವಾಲು ಹಾಕಿದರು. +ಐದು ವರ್ಷ ನರೇಂದ್ರ ಮೋದಿ ಯದ್ವಾತದ್ವ ಬೆಲೆ ಏರಿಕೆ ಮಾಡಿದರೂ ಕಡಿಮೆ ಮಾಡಿ ಎಂದು ಬಿಜೆಪಿಯವರು ಕೇಳಲಿಲ್ಲ. ಸಂಸತ್‌ ಚುನಾವಣೆಯಲ್ಲಿ ಸೋಲಿಗಾಗಿ ದರ ಹೆಚ್ಚಿಸಲಾಗಿದೆ ಎಂಬುದು ಸುಳ್ಳು. ಕಾಂಗ್ರೆಸ್‌‍ಗೆ ಶೇ.31.ರಿಂದ 45 ಮತ ಗಳಿಕೆ ಅಂದರೆ ಶೇ.13ರಷ್ಟು ಹೆಚ್ಚಾಗಿದೆ. 2019ರಲ್ಲಿ ಕಾಂಗ್ರೆಸ್‌‍ ಒಂದು ಸ್ಥಾನ ಮಾತ್ರ ಗೆದ್ದಿತ್ತು, ಈಗ 9ರಲ್ಲಿ ಗೆದಿದ್ದೇವೆ. 25 ಸ್ಥಾನ ಗೆದಿದ್ದ ಬಿಜೆಪಿಯವರು 17ಕ್ಕೆ ಇಳಿದಿದ್ದಾರೆ. ಜೆಡಿಎಸ್‌‍ನೊಂದಿಗೆ ಮೈತ್ರಿಯಿಂದಾಗಿ ಬಿಜೆಪಿ ಕಾಂಗ್ರೆಸ್‌‍ಗಿಂತ ಸ್ವಲ್ಪ ಪ್ರಮಾಣದಷ್ಟು ಮಾತ್ರ ಮತ ಹೆಚ್ಚು ಗಳಿಸಿದೆ. ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಕಡಿಮೆ ಸ್ಥಾನ ಗಳಿಸಿದೆ, ಸೋತಿದೆ. ನಾವು ಗೆದ್ದಿದ್ದೇವೆ ಎಂದು ವಿವರಿಸಿದರು. +ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅವನ್ನು ಮತಕ್ಕಾಗಿ ಮಾಡಿದ್ದಲ್ಲ. ಯಾವುದನ್ನೂ ನಿಲ್ಲಿಸುವುದಿಲ್ಲ, ಎಲ್ಲ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದರು. ಸಚಿವರಾದ ಬೈರತಿ ಬಸವರಾಜು, ಚಲುವರಾಯಸ್ವಾಮಿ, ಶಾಸಕ ನರೇಂದ್ರ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_106_8.txt b/eesanje/url_46_106_8.txt new file mode 100644 index 0000000000000000000000000000000000000000..223fa246ce1402d0764104b354c19174939595ea --- /dev/null +++ b/eesanje/url_46_106_8.txt @@ -0,0 +1,5 @@ +ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ಬಿಜೆಪಿಗರ ವಿರುದ್ಧ ಜಮೀರ್‌ ಆಕ್ರೋಶ +ಬೆಂಗಳೂರು, ಜೂ.17-ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬೊಬ್ಬೆ ಹಾಕುತ್ತಿರುವ ಬಿಜೆಪಿ ನಾಯಕರು ಅವರ ಆಡಳಿತದಲ್ಲಿ ಶತಕದ ಗಡಿ ದಾಟಿದಾಗ ಯಾಕೆ ಧ್ವನಿ ಎತ್ತಲಿಲ್ಲ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, 2013 ರಲ್ಲಿ ಯುಪಿಎ ಸರ್ಕಾರ ಇದ್ದಾಗ ಪೆಟ್ರೋಲ್‌ -ಡೀಸೆಲ್‌‍, ಅಡುಗೆ ಅನಿಲ ಬೆಲೆ ಎಷ್ಟು ಇತ್ತು? ಬಿಜೆಪಿ ಸರ್ಕಾರ ಹತ್ತು ವರ್ಷಗಳಲ್ಲಿ ಎಷ್ಟು ಹೆಚ್ಚು ಮಾಡಿ ಜನರ ಮೇಲೆ ಭಾರ ಹಾಕಿತು ಎಂಬುದು ಗೊತ್ತಿದೆ. ಈಗಲೂ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಕೇಂದ್ರ ಅಬಕಾರಿ ಸುಂಕ ಕರ್ನಾಟಕದಲ್ಲಿ ಹೆಚ್ಚು ಸಂಗ್ರಹ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. +ಕರ್ನಾಟಕ ದಲ್ಲಿ ತೆರಿಗೆ ಹೆಚ್ಚಳ ನಂತರ ಪೆಟ್ರೋಲ್‌ 102.85 ರೂ., ಡಿಸೇಲ್‌ 88.91 ರೂ. ಇದೆ. ಆದರೆ ದಕ್ಷಿಣ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಈಗಲೂ ನಮದೇ ಕಡಿಮೆ ಎಂದು ಅವರು ಹೇಳಿದ್ದಾರೆ. +ಕಚ್ಚಾ ತೈಲ ಬೆಲೆ ಹೆಚ್ಚಿದ್ದಾಗ ಯುಪಿಎ ಸರ್ಕಾರ ಪೆಟ್ರೋಲ್‌‍, ಡೀಸೆಲ್‌ ಬೆಲೆ ಹೆಚ್ಚಳ ಮಾಡಿರಲಿಲ್ಲ, ಆದರೆ ಕೇಂದ್ರ ಬಿಜೆಪಿ ಸರ್ಕಾರ ಕಚ್ಚಾ ತೈಲ ಬೆಲೆ ಇಳಿಕೆ ಆಗಿದ್ದಾರೂ ಬೆಲೆ ಹೆಚ್ಚಿಸಿ ಜನರಿಗೆ ವಂಚನೆ ಮಾಡಿತು. ಹೀಗಾಗಿ ಬಿಜೆಪಿ ಅವರಿಗೆ ಹೋರಾಟ ಮಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ್ದಾರೆ. \ No newline at end of file diff --git a/eesanje/url_46_106_9.txt b/eesanje/url_46_106_9.txt new file mode 100644 index 0000000000000000000000000000000000000000..c9ba74507377a884fe7bd5f740d9d8656e5ebb98 --- /dev/null +++ b/eesanje/url_46_106_9.txt @@ -0,0 +1,5 @@ +ಬಿಎಸ್‌‍ವೈ ಪ್ರಕರಣದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ : ಸಚಿವ ತಿಮ್ಮಾಪೂರ +ಮುಧೋಳ ,ಜೂ.17- ಜೂ.17-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡೆಯೂರಪ್ಪನವರ ವಿರುದ್ಧದ ಫೋಕ್ಸೊ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿ ಹಸ್ತಕ್ಷೇಪ ಮಾಡುವುಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಐಡಿ ಸಂಸ್ಥೆ ತನಿಖೆ ನಡೆಸುತ್ತಿದ್ದು, ನ್ಯಾಯಾಲಯದ ನಿರ್ದೇಶನದಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗಾಗಿ ಹಾಜರಾಗುವಂತೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. +ಇಳಿವಯಸಿನಲ್ಲಿ ಅವರಿಗೆ ಇಂತಹ ಪ್ರಕರಣ ಎದುರಾಗಬಾರದಿತ್ತು. ಆದರೆ ಸಂತ್ರಸ್ತೆ ದೂರು ದಾಖಲಿಸಿರುವುದರಿಂದ ಪ್ರಕರಣಕ್ಕೆ ಅವರು ತನಿಖೆಗೆ ಸಹಕರಿಸಲೇಬೇಕಾಗುತ್ತದೆ. ಇದರಿಂದ ಕೆಲವರು ಮುಂಡಿಟ್ಟುಕೊಂಡು ಜಾತಿ ಲೇಪನ ಮಾಡಲು ಮುಂದಾಗುತ್ತಿದ್ದಾರೆ. +ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಪಾತ್ರವಿರುವುದಿಲ್ಲ. ಮುಖ್ಯಮಂತ್ರಿಗಳಾಗಲೀ, ಉಪಮುಖ್ಯಮಂತಿಗಳಾಗಲೀ ಈ ಪ್ರಕರಣದಲ್ಲಿ ಯಾವುದೇ ರೀತಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_107_1.txt b/eesanje/url_46_107_1.txt new file mode 100644 index 0000000000000000000000000000000000000000..3b1b29f37f98939603b68140d3770c1753b403ce --- /dev/null +++ b/eesanje/url_46_107_1.txt @@ -0,0 +1,5 @@ +ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಖಂಡಿಸಿ ನಾಳೆ ಜೆಡಿಎಸ್ ಪ್ರತಿಭಟನೆ +ಬೆಂಗಳೂರು,ಜೂ.17– ಏರಿಕೆ ಮಾಡಿರುವ ಪೆಟ್ರೋಲ್‌, ಡೀಸೆಲ್‌ ದರವನ್ನು ಇಳಿಕೆ ಮಾಡುವಂತೆ ಒತ್ತಾಯಿಸಿ ಜೆಡಿಎಸ್‌‍ ನಾಳೆ ಪ್ರತಿಭಟನೆ ನಡೆಸಲಿದೆ.ಬೆಂಗಳೂರು ಮಹಾನಗರ ಜೆಡಿಎಸ್‌‍ ವತಿಯಿಂದ ರಾಜ್ಯಸರ್ಕಾರದ ವಿರುದ್ಧ ನಾಳೆ ಬೆಳಿಗ್ಗೆ 10.30 ಕ್ಕೆ ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. +ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎನ್‌.ರಮೇಶ್‌ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ವಿಭಾಗಗಳ ಪದಾಧಿಕಾರಿಗಳು, ಬಿಬಿಎಂಪಿ ಮಾಜಿ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. +ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌‍ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವುದಾಗಿ ತಿಳಿಸಿದ್ದಾರೆ. \ No newline at end of file diff --git a/eesanje/url_46_107_10.txt b/eesanje/url_46_107_10.txt new file mode 100644 index 0000000000000000000000000000000000000000..4e8b73ad1f4dbceb88d396c1b3c74b1672f7fbc9 --- /dev/null +++ b/eesanje/url_46_107_10.txt @@ -0,0 +1,14 @@ +ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌‍ಗೆ ಮತ ಹಾಕಬೇಡಿ : ಜನತೆಗೆ ಆರ್‌.ಅಶೋಕ್‌ ಕರೆ +ಬೆಂಗಳೂರು, ಜೂ.16-ಡೀಸೆಲ್‌, ಪೆಟ್ರೋಲ್‌ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆ ಮಾಡಿರುವ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷಕ್ಕೆ ಮುಂಬರುವ ಜಿಲ್ಲಾ, ತಾಲ್ಲೂಕು ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ಯಾರೊಬ್ಬರೂ ಮತ ಹಾಕಬಾರದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ. +ಕಾಂಗ್ರೆಸ್‌‍ ಪಕ್ಷದಿಂದ ಸಚಿವರು ಇಲ್ಲವೇ ಶಾಸಕರ ಅಣ್ಣ-ತಮಂದಿರು, ಅಕ್ಕ-ತಂಗಿಯರು ಇಲ್ಲವೇ ಸಂಬಂಧಿಕರೇ ಸ್ಪರ್ಧೆ ಮಾಡಿದರೂ ಅವರಿಗೆ ಒಂದೇ ಒಂದು ಮತ ಹಾಕಬೇಡಿ. ನೀವು ಕಾಂಗ್ರೆಸ್‌‍ಗೆ ಮತ ಹಾಕುವುದರಿಂದ ಮತ್ತಷ್ಟು ದರದ ಬಿಸಿಯನ್ನು ಅನುಭವಿಸುತ್ತೀರಿ ಎಂದು ಎಚ್ಚರಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ಗ್ಯಾರಂಟಿಗಳನ್ನು ಜಾರಿ ಮಾಡಿ ಕರ್ನಾಟಕದ ಜನರು ಸಂತೃಪ್ತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೊಗಳೆ ಬಿಡುತ್ತಿದ್ದಾರೆ. ದೇಶದಲ್ಲಿ ಕರ್ನಾಟಕ ಮಾದರಿ ಚರ್ಚೆಯಾಗುತ್ತಿದೆ ಎಂದು ಮತ್ತೊಂದು ಹಸಿಸುಳ್ಳು ಹೇಳಿದ್ದಾರೆ. ನಿಜವಾಗಿಯೂ ಚರ್ಚೆಯಾಗುತ್ತಿರುವುದು ಏಕಾಏಕಿ ಇಷ್ಟು ದೊಡ್ಡಮಟ್ಟದಲ್ಲಿ ಡೀಸೆಲ್‌, ಪೆಟ್ರೋಲ್‌ ದರವನ್ನು ಏರಿಸಿದ್ದು ಏಕೆ ಎಂಬುದಾಗಿ ಅಶೋಕ್‌ ನುಡಿದರು. +ಮುಂಬರುವ ಸ್ಥಳೀಯ ಸಂಸ್ಥೆಗಳು ಮತ್ತು ಬಿಬಿಎಂಪಿ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌‍ ಪಕ್ಷಕ್ಕೆ ಚೊಂಬು ಕೊಡುವುದು ಗ್ಯಾರಂಟಿ. ಜನವಿರೋಧಿ ಸರ್ಕಾರ ಇದು ಇದ್ದರೆಷ್ಟು, ಬಿಟ್ಟರೆಷ್ಟು ಎಂದು ಎಲ್ಲರೂ ಹಿಡಿಶಾಪ ಹಾಕುತ್ತಿದ್ದಾರೆ. ಅವರ ಕಣ್ಣೀರಿನ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರುವುದಿಲ್ಲ ಎಂದು ಟೀಕಾಪ್ರಹಾರ ನಡೆಸಿದರು. +ಮಾತೆತ್ತಿದರೆ ನಾನು 14 ಬಜೆಟ್‌ ಮಂಡಿಸಿದ್ದೇನೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆಯಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಇರಲಿಲ್ಲವೇ? ರಾಜ್ಯದ ಜನತೆ ಈ ದರಿದ್ರ ಸರ್ಕಾರ ಅಧಿಕಾರದಿಂದ ಹೋದರೆ ಸಾಕು ಎಂದು ಎದುರು ನೋಡುತ್ತಿದ್ದಾರೆ. ಯಾವ ನೈತಿಕತೆ ಇಟ್ಟುಕೊಂಡು ಅಧಿಕಾರದಲ್ಲಿ ಸಿದ್ದರಾಮಯ್ಯ ಮುಂದುವರೆಯುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು. +ಲೋಕಸಭಾ ಚುನಾವಣೆಯಲ್ಲಿ ನಮಗೆ ಮತ ಹಾಕಿಲ್ಲ ಎಂಬ ಒಂದೇ ಕಾರಣಕ್ಕಾಗಿ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ ಮಾಡಲಾಗಿದೆ. ನಿಮಗೆ ಸೇಡಿದ್ದರೆ ಬಿಜೆಪಿ ಮೇಲೆ ತೀರಿಸಿಕೊಳ್ಳಿ. ಅದನ್ನು ಬಿಟ್ಟು ಶ್ರೀಸಾಮಾನ್ಯರ ಹೊಟ್ಟೆಪಾಡಿಗೆ ಕಲ್ಲು ಹಾಕುವ ಕೆಲಸ ಮಾಡಬೇಡಿ. ಬಡವರು ರೊಚ್ಚಿಗೆದ್ದರೆ ಕಾಂಗ್ರೆಸ್‌‍ ರಾಜ್ಯದಲ್ಲಿ ಸರ್ವನಾಶವಾಗುತ್ತದೆ ಎಂದು ಅಶೋಕ್‌ ಎಚ್ಚರಿಕೆ ಕೊಟ್ಟರು. +ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತತ್‌ಕ್ಷಣವೇ ಶ್ವೇತಪತ್ರ ಹೊರಡಿಸಲಿ. ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂಬುದು ನನಗೂ ಗೊತ್ತಿದೆ. ಹಣಕಾಸು ಇಲಾಖೆಯಲ್ಲಿ ನನಗೂ ಬೇಕಾದ ಅಧಿಕಾರಿಗಳಿದ್ದಾರೆ ಎಂದರು.ಸರ್ಕಾರಿ ಅಧಿಕಾರಿಗಳಿಗೆ ಪ್ರತಿಯೊಬ್ಬರೂ ಕಿರುಕುಳ ನೀಡುತ್ತಿದ್ದಾರೆ. ಇಲಾಖೆಗೆ ಬರಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. +ಇಲಾಖೆಯಲ್ಲಿ ನಯಾಪೈಸೆ ಹಣ ಇಲ್ಲದಿದ್ದರೂ ಕೆಲವರು ಬಿಲ್‌ಗಳನ್ನು ಬಿಡುಗಡೆ ಮಾಡಲು ಒತ್ತಡ ಹೇರುತ್ತಿದ್ದಾರೆ. ವೇತನ ಆಯೋಗದ ವರದಿಯನ್ನು ಕಸದ ಡಬ್ಬಿಗೆ ಎಸೆಯಲಾಗಿದೆ. ಸರ್ಕಾರಿ ನೌಕರರು ನಮಗೆ ಮತ ಹಾಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳುತ್ತಾರೆ. ಇದೊಂದು ಆಡಳಿತ ನಡೆಸುವ ವ್ಯವಸ್ಥೆಯೇ ಎಂದು ತರಾಟೆಗೆ ತೆಗೆದುಕೊಂಡರು. +ಕಾಂಗ್ರೆಸ್‌‍ ಪಕ್ಷದ ಶಾಸಕರೇ ಸಿಎಂ ಮತ್ತು ಡಿಸಿಎಂ ಮೇಲೆ ತಿರುಗಿಬಿದ್ದಿದ್ದಾರೆ. ಯಾರೂ ಅನುಮಾನ ಕೇಳದೇ ಬಾಯಿ ಮುಚ್ಚಿಕೊಂಡು ಇರಿ ಎಂದು ಡಿ.ಕೆ.ಶಿವಕುಮಾರ್‌ ಶಾಸಕರಿಗೆ ಬೆದರಿಕೆ ಹಾಕುತ್ತಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಹೋದರ ಡಿ.ಕೆ.ಸುರೇಶ್‌ ಹಾಗೂ ಶಿವಕುಮಾರ್‌ಗೆ ಹೊಟ್ಟೆಗೆ ಹಸಿಮೆಣಸಿನಕಾಯಿ ಇಟ್ಟುಕೊಂಡಂತಾಗಿದೆ ಎಂದು ವ್ಯಂಗ್ಯವಾಡಿದರು. +ಶಾಸಕರು ತಮ ಮನೆಬಾಗಿಲಿಗೆ ಬರಬೇಡಿ ಎಂದು ಶಿವಕುಮಾರ್‌ ಹೇಳುತ್ತಾರೆ. ಸಹೋದರನ ಸೋಲಿನಿಂದ ಅವರು ಪೂರಾ ಹತಾಶರಾಗಿದ್ದಾರೆ. ಯಾರು ಮತ ಹಾಕಿಲ್ಲವೋ ಅವರ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್‌‍ಗೆ ಸೋಲು ಎಷ್ಟು ಹತಾಶೆ ಉಂಟುಮಾಡಿದೆ ಎಂದರೆ ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟದ ಮೇಲಿನ ತೆರಿಗೆ ಹೆಚ್ಚಳವೇ ಸಾಕ್ಷಿ ಎಂದು ಹೇಳಿದರು. +ಸಿಎಂ ಸಿದ್ದರಾಮಯ್ಯನವರು ಔಟ್‌ ಗೋಯಿಂಗ್‌ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಜೆಟ್‌ ಒಂದು ಬೋಗಸ್‌‍ ಎಂದು ನಾನು ಸದನದಲ್ಲಿ ಹೇಳಿದ್ದೆ. ಆದರೆ ನನ್ನ ಮಾತು ಒಪ್ಪಿರಲಿಲ್ಲ. ಗ್ಯಾರಂಟಿಯಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದು ಆರ್ಥಿಕ ತಜ್ಞರು ಹೇಳಿದ್ದರು. ಈಗ ಅವರ ಹಣೆಬರಹ ಏನೆಂಬುದು ಎಲ್ಲರಿಗೂ ಗೊತ್ತಾಗಿದೆ. ಬಜೆಟ್‌ನಲ್ಲಿ ದರ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರೆ ಜನ ತಿರುಗಿಬೀಳಬಹುದು ಎಂಬ ಕಾರಣಕ್ಕಾಗಿ ಕದ್ದುಮುಚ್ಚಿ ರಾತ್ರೋರಾತ್ರಿ ಏರಿಕೆ ಮಾಡುತ್ತಾರೆ. ಇದರಿಂದ ಪ್ರತಿ ಮನೆಗೆ 1800 ರೂ. ಹೊರೆಯಾಗುತ್ತದೆ. ಇದು ಮನೆಮುರಿಯುವ ಕೆಲಸವಲ್ಲವೇ? ಎಂದು ಅಶೋಕ್‌ ಸಿಡಿಮಿಡಿಗೊಂಡರು. +ಕಳೆದ ಮೂರು ತಿಂಗಳಿನಿಂದ ಅಕ್ಕಿ ಹಣ ಕೊಟ್ಟಿಲ್ಲ. ಬಿಡಿಎ ನಿವೇಶನಗಳು, ಕಾಂಪ್ಲೆಕ್‌್ಸಗಳನ್ನು ಮಾರಾಟ ಮಾಡಲು ಇಟ್ಟಿದ್ದಾರೆ. ಕಾರ್ಪೊರೇಷನ್‌ ಕಟ್ಟಡ, ಯುಟಿಲಿಟಿ ಬಿಲ್ಡಿಂಗ್‌, ವಾರ್ಡ್‌ ಕಚೇರಿಗಳನ್ನು ಅಡವು ಇಡಲು ನೀಲಿನಕ್ಷೆ ಸಿದ್ಧ ಮಾಡಿದ್ದಾರೆ. ಇವುಗಳನ್ನು ಅಡವಿಟ್ಟು 4 ಸಾವಿರ ಕೋಟಿ ರೂ. ಲೂಟಿ ಹೊಡೆಯಲು ಸರ್ಕಾರ ಮುಂದಾಗಿದೆ. +ಇದೇ ರೀತಿ ಜಲಮಂಡಳಿಯಲ್ಲಿಯೂ ಸಾವಿರ ಕೋಟಿ ಲೂಟಿ ಹೊಡೆಯುವ ಯೋಜನೆ ಸಿದ್ಧವಾಗಿದೆ. ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇವೆಲ್ಲವನ್ನೂ ಅಡವಿಟ್ಟು ಸಾಲ ಎತ್ತುವಳಿಗೆ ಡಿಸಿಎಂ ಶಿವಕುಮಾರ್‌ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಆರ್ಥಿಕ ಶಿಸ್ತು ಸಂಪೂರ್ಣವಾಗಿ ಹಾಳಾಗಿದೆ. ಕರ್ನಾಟಕವನ್ನು ಸರ್ವನಾಶದತ್ತ ಕೊಂಡೊಯ್ಯುತ್ತಿದ್ದಾರೆ. ಇದೇ ರೀತಿ ಇನ್ನೊಂದು ವರ್ಷ ಬಿಟ್ಟರೆ ವಿಧಾನಸೌಧವನ್ನೂ ಅಡ ಇಡಲಿದ್ದಾರೆ ಎಂದು ಅಶೋಕ್‌ ಆತಂಕ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_107_11.txt b/eesanje/url_46_107_11.txt new file mode 100644 index 0000000000000000000000000000000000000000..4609b30cece6e0aa8410ad58c634d6e295c9ce26 --- /dev/null +++ b/eesanje/url_46_107_11.txt @@ -0,0 +1,6 @@ +ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ಕೊಟ್ಟ ಸಾಧನಕ್ಕಾಗಿ ಪೊಲೀಸರ ಶೋಧ +ಬೆಂಗಳೂರು, ಜೂ.16-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕರಾಳತೆ ಬಗೆದಷ್ಟೂ ಬಯಲಾಗುತ್ತಿದೆ. ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಿರುವುದಲ್ಲದೆ, ಕರೆಂಟ್‌ ಶಾಕ್‌ ಕೊಟ್ಟು ಚಿತ್ರವಿಚಿತ್ರವಾಗಿ ಹಿಂಸೆ ಕೊಟ್ಟಿರುವ ಎಲೆಕ್ಟ್ರಾನಿಕ್‌ ಉಪಕರಣಕ್ಕಾಗಿ ವಿಜಯನಗರ ಉಪವಿಭಾಗದ ಪೊಲೀಸರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಶೋಧ ನಡೆಸುತ್ತಿದ್ದಾರೆ. +ಹತ್ಯೆ ಮಾಡಿದ ನಂತರ ರೇಣುಕಾಸ್ವಾಮಿಯ ಶವ ಸಾಗಿಸುವ ಮುನ್ನ ನಟ ದರ್ಶನ್‌ ಭೇಟಿಗೆ ಹೋಗಿದ್ದ ಆರೋಪಿಗಳು ಈ ಸಂದರ್ಭದಲ್ಲಿ ಕರೆಂಟ್‌ ಶಾಕ್‌ ಕೊಡಲು ಬಳಸಿದ್ದ ಎಲೆಕ್ಟ್ರಾನಿಕ್‌ ಮೆಗ್ಗರ್‌ ಅನ್ನು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಬಿಸಾಡಿದರೆಂದು ತನಿಖೆಯಿಂದ ತಿಳಿದುಬಂದಿದೆ. +ಈ ಹಿನ್ನೆಲೆಯಲ್ಲಿ ಆ ಹೆದ್ದಾರಿಯಲ್ಲಿ ಪೊಲೀಸರು ಎಲೆಕ್ಟ್ರಾನಿಕ್‌ ಉಪಕರಣಕ್ಕಾಗಿ ಶೋಧ ನಡೆಸುತ್ತಿದ್ದಾರೆ.ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆತಂದು ಮನಬಂದಂತೆ ಥಳಿಸಿ, ಮರ್ಮಾಂಗಕ್ಕೂ ಕಾಲಿನಿಂದ ಒದ್ದಿರುವುದಲ್ಲದೆ, ಕರೆಂಟ್‌ ಶಾಕ್‌ ಕೊಡಲಾಗಿದೆ. ಅಲ್ಲದೆ, ದೇಹದ ಐದಾರು ಭಾಗಗಳಿಗೂ ಸಹ ಕರೆಂಟ್‌ ಶಾಕ್‌ ಕೊಟ್ಟು ಹಿಂಸೆ ನೀಡಲಾಗಿದೆ. +ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನಾಭರಣ ಕಾಣೆಯಾಗಿದ್ದು, ಆರೋಪಿಗಳು ಅದನ್ನು ದೋಚಿರುವ ಶಂಕೆ ಇದೆ.ಶವದ ಮೇಲಿದ್ದ ಬಟ್ಟೆ ತೆಗೆದು, ಬೇರೆ ಬಟ್ಟೆ ಹಾಕಿ ಶವವನ್ನು ಬಿಸಾಡಿ ಕೆಲವು ಆರೋಪಿಗಳು ಚಿತ್ರದುರ್ಗಕ್ಕೆ, ಮತ್ತೆ ಕೆಲವು ಆರೋಪಿಗಳು ಮೈಸೂರಿಗೆ ತೆರಳಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. +ಈ ಪ್ರಕರಣ ಸಂಬಂಧ ಈಗಾಗಲೇ ನಟ ದರ್ಶನ್‌ ಸೇರಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. \ No newline at end of file diff --git a/eesanje/url_46_107_12.txt b/eesanje/url_46_107_12.txt new file mode 100644 index 0000000000000000000000000000000000000000..110e8dbaca23f146d51494e733ed6d9e76e3c23e --- /dev/null +++ b/eesanje/url_46_107_12.txt @@ -0,0 +1,11 @@ +ಪೆಟ್ರೋಲ್‌-ಡೀಸೆಲ್‌ ತೆರಿಗೆ ಹೆಚ್ಚಿಸಿ ಸುಲಿಗೆಗಿಳಿದ ಗ್ಯಾರಂಟಿ ಸರ್ಕಾರದ ವಿರುದ್ಧ ಜನಾಕ್ರೋಶ +ಬೆಂಗಳೂರು, ಜೂ.16-ಪೆಟ್ರೋಲ್‌, ಡೀಸೆಲ್‌ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಮೂಲಕ ರಾಜ್ಯಸರ್ಕಾರ ಜನಾಕ್ರೋಶಕ್ಕೆ ಕಾರಣವಾಗಿದೆ.ನಿನ್ನೆ ಏಕಾಏಕಿ ಸರ್ಕಾರಿ ಆದೇಶ ಜಾರಿ ಮಾಡಿ ತಕ್ಷಣದಿಂದಲೇ ಜಾರಿಯಾಗುವಂತೆ ಪೆಟ್ರೋಲ್‌ ಮೇಲೆ 3 ರೂ. ಡೀಸೆಲ್‌ ಮೇಲೆ 3.50 ಪೈಸೆ ದರ ಹೆಚ್ಚಳ ಮಾಡಲಾಗಿದೆ. +ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ನಾಗರಿಕರಿಗೆ ಸರ್ಕಾರದ ಈ ಆದೇಶ ಗಾಯದ ಮೇಲೆ ಬರೆ ಎಳೆದಂತಾಗಿದೆ. ತೈಲ ಬೆಲೆ ಏರಿಕೆ ಸಹಜವಾಗಿಯೇ ಸರಕು ಸಾಗಾಣಿಕೆ ಸೇವೆಗಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ದುಬಾರಿಯಾಗಲಿದೆ. +ದೈನಂದಿನ ಜೀವನದಲ್ಲಿ ಸಾರಿಗೆ ವೆಚ್ಚ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ತರಕಾರಿ, ದಿನಸಿ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಯನ್ನೂ ಹೆಚ್ಚಿಸಲಿದೆ.ವಿಧಾನಸಭಾ ಚುನಾವಣೆಗೂ ಮೊದಲು ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್‌‍ ಪಕ್ಷ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಟೀಕಿಸಿತ್ತು. ಹಾದಿಬೀದಿಯಲ್ಲಿ ಪ್ರತಿಭಟನೆ ನಡೆಸಿ ಜನಾಕ್ರೋಶವನ್ನು ಹೆಚ್ಚುವಂತೆ ಮಾಡಿತ್ತು. +ಅಧಿಕಾರಕ್ಕೆ ಬಂದ ಬಳಿಕವೂ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನೇ ಮುಂದಿಟ್ಟುಕೊಂಡು ಕೇಂದ್ರದ ಮೇಲೆ ವಾಗ್ದಾಳಿ ನಡಸಲಾಗುತ್ತಿತ್ತು. ಈಗ ತಾನಾಗಿಯೇ ಮಾರಾಟ ತೆರಿಗೆಯನ್ನು ಪರಿಷ್ಕರಣೆ ಮಾಡುವ ಮೂಲಕ ಸಿಕ್ಕಿ ಹಾಕಿಕೊಂಡಂತಾಗಿದೆ. +ಜಿಎಸ್‌‍ಟಿ ವ್ಯಾಪ್ತಿಯಿಂದ ಹೊರಗಿರುವ ತೈಲ ಮಾರಾಟದಿಂದ ರಾಜ್ಯಸರ್ಕಾರಕ್ಕೆ ಕೇಂದ್ರಕ್ಕೆ ಸಮನಾಂತರವಾಗಿಯೇ ಆದಾಯ ಬರುತ್ತಿದೆ. ಪೆಟ್ರೋಲ್‌ ಮೇಲೆ ಈ ಮೊದಲಿದ್ದ ಸರಿಸುಮಾರು 26 ರಷ್ಟು ತೆರಿಗೆ ಈಗ 29.84 ಕ್ಕೆ ಹೆಚ್ಚಾಗಿದೆ. ಡೀಸೆಲ್‌ ಮೇಲಿನ ತೆರಿಗೆ ಶೇ.14.34 ರಿಂದ ಶೇ.18.44 ರಷ್ಟು ಏರಿಕೆಯಾಗಿದೆ. ಇದರಿಂದ ಸರಿಸುಮಾರು 2 ರಿಂದ 3 ಸಾವಿರ ಕೋಟಿ ರೂ.ಗಳಷ್ಟು ಆದಾಯವನ್ನು ರಾಜ್ಯಸರ್ಕಾರ ಪಡೆಯುತ್ತಿದೆ. +ಕೇಂದ್ರ ಸರ್ಕಾರ ಲೋಕಸಭಾ ಚುನಾವಣೆಗೂ ಮೊದಲು ಜನಾಕ್ರೋಶವನ್ನು ಮನಗಂಡು ಪೆಟ್ರೋಲ್‌, ಡೀಸೆಲ್‌ ದರವನ್ನು ಕಡಿಮೆ ಮಾಡಿತ್ತು. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ದರ ಪರಿಷ್ಕರಣೆ ಮಾಡಲಿದೆ ಎಂಬ ಅಂದಾಜುಗಳಿದ್ದವು. ಆದರೆ ಅದಕ್ಕೂ ಮೊದಲೇ ರಾಜ್ಯಸರ್ಕಾರ ಮಾರಾಟ ತೆರಿಗೆಯನ್ನು ಹೆಚ್ಚಿಸುವ ಮೂಲಕ ಮರ್ಮಾಘಾತ ನೀಡಿದೆ. +ಈ ಬೆಳವಣಿಗೆ ಜನರ ಸಿಟ್ಟಿಗೆ ಕಾರಣವಾಗಿದ್ದು, ರಾಜಕೀಯ ಕಾರಣಕ್ಕಾಗಿ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತಂದು ಅದರ ಹೊರೆಯನ್ನು ಜನರ ಮೇಲೆ ಹಾಕಲಾಗುತ್ತಿದೆ ಎಂಬ ಆಕ್ರೋಶ ತೀವ್ರಗೊಂಡಿದೆ. +ಆಂತರಿಕವಾಗಿ ರಾಜ್ಯಸರ್ಕಾರ ಇದೇ ರೀತಿಯ ಜನಾಭಿಪ್ರಾಯ ರೂಢಿಯಾಗಬೇಕು ಎಂಬ ಮುಂದಾಲೋಚನೆ ಇಟ್ಟುಕೊಂಡು ತೈಲಬೆಲೆ ಪರಿಷ್ಕರಣೆ ಮಾಡಿದಂತಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದು, ಅದನ್ನು ಸ್ಥಗಿತಗೊಳಿಸಬೇಕು ಎಂಬ ಒತ್ತಡಗಳು ಹೆಚ್ಚಾದರೆ ರಾಜ್ಯಸರ್ಕಾರ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿಯಂತಹ ಯೋಜನೆಗಳಿಗೆ ಕಡಿವಾಣ ಹಾಕಿ ವೆಚ್ಚವನ್ನು ತಗ್ಗಿಸಲು ಮಾರ್ಗಸೂಚಿ ರೂಪಿಸಬಹುದು ಎಂಬ ಲೆಕ್ಕಾಚಾರ ಇದ್ದಂತಿದೆ. +ಪಂಚಖಾತ್ರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈಗಾಗಲೇ ಹಣಕಾಸು ಹೊಂದಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಬೇರೆ ಅಭಿವೃದ್ಧಿ ಯೋಜನೆಗಳಿಗೆ ಸಂಪನೂಲದ ಕೊರತೆಯಿದೆ. ಅದನ್ನು ಸರಿದೂಗಿಸಲು ಪೆಟ್ರೋಲ್‌, ಡೀಸೆಲ್‌ ಮೇಲೆ ತೆರಿಗೆ ಹೆಚ್ಚಿಸುವುದಾಗಿ ತಿಳಿದುಬಂದಿದೆ. +ಸರ್ಕಾರ ರಚನೆಯಾಗುತ್ತಿದ್ದಂತೆ ಸ್ಟಾಂಪ್‌ ಡ್ಯೂಟಿ, ಅಬಕಾರಿ ಶುಲ್ಕ ಹೆಚ್ಚಿಸಲಾಗಿತ್ತು. ಹಿಂದಿನ ಸರ್ಕಾರ ಹೆಚ್ಚಿಸಿದ್ದ ವಿದ್ಯುತ್‌ ದರದ ಲಾಭವೂ ಕಾಂಗ್ರೆಸ್‌‍ ಸರ್ಕಾರಕ್ಕೆ ದೊರೆತ್ತಿತ್ತು. ಈಗ ನೇರವಾಗಿ ಪೆಟ್ರೋಲ್‌, ಡೀಸೆಲ್‌ ಮೇಲೆಯೇ ಶುಲ್ಕ ಹೆಚ್ಚಿಸಿರುವುದರಿಂದ ಮತ್ತಷ್ಟು ಆದಾಯ ನಿರೀಕ್ಷಿಸಲಾಗುತ್ತಿದೆ. \ No newline at end of file diff --git a/eesanje/url_46_107_2.txt b/eesanje/url_46_107_2.txt new file mode 100644 index 0000000000000000000000000000000000000000..ae493552baf0738d871a9ef517a6c6f2f286aa4c --- /dev/null +++ b/eesanje/url_46_107_2.txt @@ -0,0 +1,9 @@ +ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಬೃಹತ್‌ ಪ್ರೊಟೆಸ್ಟ್ +ಬೆಂಗಳೂರು, ಜೂ.17-ಡೀಸೆಲ್‌ ಮತ್ತು ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆ ನಡೆಸಿತು. +ರಾಜಧಾನಿ ಬೆಂಗಳೂರು, ಮಂಡ್ಯ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಮೋರ್ಚಾಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಲಾಯಿತು. +ಕೆಲವು ಕಡೆ ಕಾರಿಗೆ ಹಗ್ಗ ಕಟ್ಟಿ ಎಳೆದರೆ ಇನ್ನು ಕೆಲವು ಕಡೆ ಎತ್ತಿನ ಗಾಡಿ ಮೆರವಣಿಗೆ, ಶವಯಾತ್ರೆ, ತೆಂಗಿನಕಾಯಿ ಚಿಪ್ಪು, ಕರಪತ್ರ ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರ ಜನವಿರೋಧಿ, ರೈತ ವಿರೋಧಿ ಎಂದು ಪ್ರತಿಭಟನೆ ನಿರತರು ಕಿರಿಕಾರಿದರು. +ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಮುಖಂಡರಾದ ಸಿ.ಟಿ.ರವಿ, ಭೈರತಿ ಬಸವರಾಜ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು. +ಪ್ರತಿಭಟನೆಗೂ ಮುನ್ನ ಅಶೋಕ್‌ ನೇತೃತ್ವದಲ್ಲಿ ಫ್ರೀಡಂಪಾರ್ಕ್‌ಗೆ ಎತ್ತಿನಗಾಡಿಯಲ್ಲಿ ಆಗಮಿಸಿದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನೆ ನಿರತರು ಈ ಸರ್ಕಾರ ಆದಷ್ಟು ಬೇಗ ತೊಲಗಲಿ ಎಂದು ಕಿಡಿಕಾರಿದರು.ಮಂಡ್ಯದ ಸಂಜಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ಮೊದಲು ಬಾಯಿ ಬಾಯಿ ಬಡಿದುಕೊಂಡು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ಬೊಕ್ಕಸವನ್ನು ದಿವಾಳಿ ಮಾಡಿರುವ ಕಾಂಗ್ರೆಸ್‌‍ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿ ಎಂದು ವಾಗ್ದಾಳಿ ನಡೆಸಿದರು. +ಇದೇ ರೀತಿ ದಕ್ಷಿಣಕನ್ನಡದಲ್ಲಿ ಅಣುಕು ಶವಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಾಧ್ಯವಾಗದ ಸರ್ಕಾರ ಜನರ ಜೇಬಿಗೆ ದರದ ಬರೆಯನ್ನು ಎಳೆದಿದೆ. ಬೇರೆ ರಾಜ್ಯಗಳಲ್ಲಿ ಅಷ್ಟಿತ್ತು, ಇಷ್ಟಿತ್ತು ಎನ್ನುವ ಬದಲು ಮೊದಲು ನೀವು ಕಡಿಮೆ ಮಾಡಿ ಎಂದು ಸವಾಲು ಹಾಕಿದರು. +ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿದ ಬಿಜೆಪಿಯವರು ದ್ವಿಚಕ್ರ ವಾಹನಗಳನ್ನು ತಳ್ಳಿಕೊಂಡೇ ಬಂದಿದ್ದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕ ಅನಿಲ್‌ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. +ತುಮಕೂರಿನಲ್ಲಿ ಭದ್ರಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಶಾಸಕ ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಭದ್ರಮ ವೃತ್ತದಿಂದ ಕನಕ ವೃತ್ತದವರೆಗೆ ಪ್ರತಿಭಟನಾ ಮೆರಣಿವಣಿಗೆ ನಡೆಸಲಾಯಿತು. ಶಾಸಕ ಜ್ಯೋತಿ ಗಣೇಶ್‌ ಪ್ರತಿಭಟನೆಗೆ ಸೈಕಲ್‌ ಏರಿ ಬಂದಿದ್ದು, ವಿಶೇಷವಾಗಿತ್ತು. ಹೀಗೆ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಿಡಿದೆದ್ದಿರುವ ಬಿಜೆಪಿ ಮೊದಲ ಬಾರಿಗೆ ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. \ No newline at end of file diff --git a/eesanje/url_46_107_3.txt b/eesanje/url_46_107_3.txt new file mode 100644 index 0000000000000000000000000000000000000000..cfeb46b68f3167d08bb459a135584acc2a451c1d --- /dev/null +++ b/eesanje/url_46_107_3.txt @@ -0,0 +1,10 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ ಕುರಿತು ಜನತೆಗೆ ರಿಯಲ್‌ ಸ್ಟಾರ್‌ ಉಪೇಂದ್ರ ಮನವಿ +ಬೆಂಗಳೂರು,ಜೂ.17-ಕನ್ನಡಕ ಚಿತ್ರರಂಗವನ್ನೇ ದಂಗುಬಡಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ರಿಯಲ್‌ ಸ್ಟಾರ್‌ ಉಪೇಂದ್ರ ಮಧ್ಯಪ್ರವೇಶ ಮಾಡಿದ್ದು, ವಿಚಾರಣೆಗೆ ವಿಡಿಯೋ ಹಾಗೂ ಸಾಕ್ಷಿಗಳನ್ನು ಹಂಚಿಕೊಳ್ಳಬೇಕೆಂದು ಜನತೆಗೆ ಮನವಿ ಮಾಡಿದ್ದಾರೆ. +ಭಾನುವಾರವಷ್ಟೇ ಮತ್ತೋರ್ವ ನಟ ಕಿಚ್ಚ ಸುದೀಪ ಅವರು ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆಂದು ಹೇಳಿದ ಬೆನ್ನಲ್ಲೇ ಇದೀಗ ಉಪೇಂದ್ರ ಕೂಡ ಇದಕ್ಕೆ ದನಿಗೂಡಿಸಿದ್ದಾರೆ.ತಮ್ಮ ಸಾಮಾಜಿಕ ಜಾಲತಾಣ ಇನ್‌ಸ್ಟ್ರಾಗ್ರಾಂನಲ್ಲಿ ಸುದೀರ್ಘವಾದ ಪೋಸ್ಟ್‌ ಮಾಡಿರುವ ಉಪೇಂದ್ರ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರದರ್ಶಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. +ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್‌ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈಪ್ರೊಫೈಲ್‌ ಕೇಸ್‌‍ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ. + (@) +ರೇಣುಕಾಸ್ವಾಮಿ ಕುಟುಂಬದಲ್ಲಿ ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್‌ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. +ಏಕೆಂದರೆ ಯಾವುದೇ ಕೇಸ್‌‍ ಆದರೂ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಮಾಡಬಹುದು ) ಎಂದು ಹೇಳಿದ್ದಾರೆ. +ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್‌‍ ಆಗಿದ್ದರೆ ಆ ಕೇಸ್‌‍ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ. +ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್‌ ಅಭಿಮಾನಿಗಳಿಗೆ ಮನಸಿನಲ್ಲಿ ಪೋಲೀಸ್‌‍ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ. +ಸುದೀಪ್‌ ಮಾತನಾಡಿದ್ದೇನು?:ನಟ ಕಿಚ್ಚ ಸುದೀಪ್‌ ಅವರು ರೇಣುಕಾಸ್ವಾಮಿ ಕೊಲೆ ಬಗ್ಗೆ ಮಾತನಾಡಿದ್ದು, ರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗಬೇಕು. ಹುಟ್ಟುವ ಮಗುವಿಗೆ ಜೀವನ ಸಿಗಬೇಕು. ಚಿತ್ರರಂಗಕ್ಕೆ ಕಪ್ಪುಚುಕ್ಕೆ ಬರುವುದು ಬೇಡ. ನಾನು ಯಾರ ಪರ ವಿರೋಧವೂ ಮಾತನಾಡೋದುವುದಿಲ್ಲ. ಒಬ್ಬರಿಂದ ಚಿತ್ರರಂಗ ಇಲ್ಲ, ಎಲ್ಲರಿಂದ ಚಿತ್ರರಂಗ ಎಂದು ಹೇಳಿಕೆ ನೀಡಿದ್ದಾರೆ. ಇನ್ನೂ ಕೆಲ ಕಲಾವಿದರು ತನಿಖೆ ನಡೆಯಲಿ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_107_4.txt b/eesanje/url_46_107_4.txt new file mode 100644 index 0000000000000000000000000000000000000000..ef594b54e278ed134fd5f987ca69b29a128db7f8 --- /dev/null +++ b/eesanje/url_46_107_4.txt @@ -0,0 +1,7 @@ +10 ದಿನ ಕಳೆದರೂ ಪತ್ತೆಯಾಗಿಲ್ಲ ರೇಣುಕಾಸ್ವಾಮಿ ಮೊಬೈಲ್‌, ರಾಜಕಾಲುವೆಯಲ್ಲಿ ಹುಡುಕಾಟ +ಬೆಂಗಳೂರು, ಜೂ.17-ಚಿತ್ರ ನಟ ದರ್ಶನ್‌ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಯ ಮೊಬೈಲ್‌ 10 ದಿನಗಳು ಕಳೆದರೂ ಪತ್ತೆಯಾಗಿಲ್ಲ. ಸುಮನಹಳ್ಳಿಯ ಮೋರಿಗೆ ಮೊಬೈಲ್‌ ಬಿಸಾಡಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಪೊಲೀಸರು ರಾಜಕಾಲುವೆಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. +ರೇಣುಕಾಸ್ವಾಮಿ ಅವರನ್ನು ಜೂ.8ರಂದು ಚಿತ್ರದುರ್ಗದಿಂದ ನಗರಕ್ಕೆ ಅಪಹರಿಸಿಕೊಂಡು ಕರೆ ತಂದಿದ್ದರು. ಅಂದು ಬೆಳಗ್ಗೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು. ಮಧ್ಯಾಹ್ನದ ವೇಳೆಗೆ ಆರ್‌ಆರ್‌ ನಗರದಲ್ಲಿ ಮತ್ತೆ ಮೊಬೈಲ್‌ ಸ್ವಿಚ್‌ ಆನ್‌ ಮಾಡಲಾಗಿದೆ. ಸಂಜೆ ವೇಳೆಗೆ ಮತ್ತೆ ಮೊಬೈಲ್‌ ಸ್ವಿಚ್‌ ಆಗಿದೆ. +ಅದೇ ದಿನ ಶೆಡ್‌ಗೆ ಬಂದ ತಕ್ಷಣ ಆತನ ಮೊಬೈಲ್‌ ಕಿತ್ತುಕೊಂಡು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿ ಹಾಕಿ ಮನಸೋ ಇಚ್ಚೆ ದರ್ಶನ್‌ ಮತ್ತು ಆತನ ಗ್ಯಾಂಗ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ನಂತರ ಶವವನ್ನು ಸುಮನಹಳ್ಳಿಯ ರಾಜಕಾಲುವೆಗೆ ಎಸೆದಿದ್ದು, ಮೃತದೇಹ ಪತ್ತೆಯಾದ ಮಾರನೇ ದಿನದಿಂದಲೂ ರೇಣುಕಾಸ್ವಾಮಿ ಮೊಬೈಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. +ರೇಣುಕಾಸ್ವಾಮಿ ತನ್ನ ಮೊಬೈಲ್‌ನಿಂದ ಪವಿತ್ರಾ ಗೌಡಗೆ ಮೆಸೆಜ್‌ ಮಾಡಿರುವುದು ಹಾಗೂ ವಿಡಿಯೋ ಕಳಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಅಲ್ಲದೆ, ಪವಿತ್ರಾಗೌಡ ಸಹ ಆತನಿಗೆ ರಿಪ್ಲೈ ಮಾಡಿರುವ ಬಗ್ಗೆ ಮಾಹಿತಿ ಕಲೆಹಾಕಬಹುದಾಗಿದೆ. ಹಾಗಾಗಿ ಮೊಬೈಲ್‌ ದೊರೆತರೆ ಅದರಲ್ಲಿರುವ ಸಾಕ್ಷ್ಯಗಳನ್ನು ಸಂಗ್ರಹಿಸಲು ಪೊಲೀಸರಿಗೆ ನೆರವಾಗಲಿದೆ. +ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ನಂತರ ಆರೋಪಿಗಳು ಆತನ ಮೊಬೈಲ್‌ನಿಂದ ಸಿಮ್‌ ಬೇರ್ಪಡಿಸಿ ಮುರಿದು ಮೊಬೈಲ್‌ ಹಾಗೂ ಸಿಮ್‌ನ್ನು ಬೇರೆ ಬೇರೆ ಕಡೆ ಬಿಸಾಡಿದ್ದಾರೆ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. +ಘಟನೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳದಲ್ಲಿ ಹಾಗೂ ಮೃತದೇಹ ದೊರೆತ ಸ್ಥಳ ಮಹಜರು ಮಾಡಿರುವ ಪೊಲೀಸರು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಅಲ್ಲದೆ, ನಟ ದರ್ಶನ್‌ ಹಾಗೂ ಪವಿತ್ರಾಗೌಡ ಶೆಡ್‌ಗೆ ಬಂದಿದ್ದಾಗ ಧರಿಸಿದಂತಹ ಬಟ್ಟೆಗಳು ಹಾಗೂ ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ.ಒಟ್ಟಾರೆ ರೇಣುಕಾಸ್ವಾಮಿ ಮೊಬೈಲ್‌ ಪತ್ತೆಯಾದರೆ ಇನ್ನಷ್ಟು ಸಾಕ್ಷ್ಯಗಳು ಲಭ್ಯವಾಗಲಿದ್ದು, ತನಿಖೆಗೆ ನೆರವಾಗಲಿದೆ. \ No newline at end of file diff --git a/eesanje/url_46_107_5.txt b/eesanje/url_46_107_5.txt new file mode 100644 index 0000000000000000000000000000000000000000..c31cdec535e81c7fcd5501e3a087917d20c3b225 --- /dev/null +++ b/eesanje/url_46_107_5.txt @@ -0,0 +1,7 @@ +ಪೋಕ್ಸೊ ಪ್ರಕರಣ : ಸಿಐಡಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ಮಾಜಿ ಸಿಎಂ ಬಿಎಸ್ವೈ +ಬೆಂಗಳೂರು,ಜೂ.17-ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಸಿಐಡಿ ತನಿಖಾಧಿಕಾರಿಗಳ ಎದುರು ಇಂದು ವಿಚಾರಣೆಗೆ ಹಾಜರಾದರು.ಇಂದು ವಿಚಾರಣೆಗೆ ಹಾಜರಾದ ಯಡಿಯೂರಪ್ಪ ಅವರಿಗೆ ತನಿಖಾಧಿಕಾರಿಗಳು ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡಿದ್ದಾರೆ. +ದೂರುದಾರರಾಗಿದ್ದ ತಾಯಿ ಮತ್ತು ಅವರ ಮಗಳು ನಿಮ ಬಳಿ ಯಾವಾಗ ಬಂದಿದ್ದರು?, ಏನು ಸಹಾಯ ಕೇಳಿಕೊಂಡು ಬಂದಿದ್ದರು?, ಅಂದು ಏನು ಘಟನೆ ನಡೆಯಿತು? ಎಂಬಿತ್ಯಾದಿ ಪ್ರಶ್ನೆಗಳನ್ನು ಅಧಿಕಾರಿಗಳು ಕೇಳಿ ಮಾಹಿತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. +ಫೆಬ್ರವರಿ 2 ರಂದು ನಡೆದಿದೆ ಎನ್ನಲಾದ ಘಟನೆ ಬಗ್ಗೆ ಅಪ್ರಾಪ್ತ ಬಾಲಕಿಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ಯಡಿಯೂರಪ್ಪನವರ ವಿರುದ್ಧ ದೂರು ಸಲ್ಲಿಸಿದ್ದರು.ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಪ್ರಕರಣವನ್ನು ಸರ್ಕಾರ ಸಿಐಡಿಗೆ ಹಸ್ತಾಂತರಿಸಿತ್ತು. +ದೂರು ನೀಡಿದ್ದ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಿದ್ದ ಸಿಐಡಿ ಧ್ವನಿ ಮಾದರಿಯನ್ನುಸಂಗ್ರಹಿಸಿ ಜೂನ್‌ 12 ರಂದು ವಿಚಾರಣೆಗೆ ಹಾಜರಾಗುವಂತೆ ಎರಡನೇ ಬಾರಿ ನೋಟಿಸ್‌‍ ನೀಡಿದ್ದರು, ಯಡಿಯೂರಪ್ಪರವರು ವಿಚಾರಣೆಗೆ ಗೈರು ಆಗಿದ್ದರು. ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ಸಿಐಡಿಗೆ ಪತ್ರ ಬರೆದು ಮನವಿ ಮಾಡಿದ್ದರು. +ಜೂನ್‌ 13 ರಂದು ಯಡಿಯೂರಪ್ಪ ವಿರುದ್ಧ ಸೆಷನ್‌ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್‌ ಜಾರಿ ಮಾಡಿತ್ತು. ಅವರ ಬಂಧನಕ್ಕೆ ಸಿಐಡಿ ಶೋಧ ಆರಂಭಿಸಿತ್ತು. ಪ್ರಕರಣವನ್ನು ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಬಿಎಸ್‌‍ವೈರವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. +ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಮುಂದಿನ ವಿಚಾರಣೆವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಹಾಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸಿಐಡಿಗೆ ಸೂಚನೆ ನೀಡಿತ್ತು ಹಾಗೂ ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪರವರು ಸಿಐಡಿ ಎದುರು ವಿಚಾರಣೆಗೆ ಹಾಜರಾದರು. \ No newline at end of file diff --git a/eesanje/url_46_107_6.txt b/eesanje/url_46_107_6.txt new file mode 100644 index 0000000000000000000000000000000000000000..c9d1f6c1b55c34bd42b395f7c9c0a0796a94be60 --- /dev/null +++ b/eesanje/url_46_107_6.txt @@ -0,0 +1,6 @@ +ಬಕ್ರೀದ್‌ ಹಬ್ಬ : ಮುಸ್ಲಿಂ ಬಾಂಧವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ +ಬೆಂಗಳೂರು,ಜೂ.17-ಬಕ್ರೀದ್‌ ಹಬ್ಬದ ಅಂಗವಾಗಿ ನಗರದ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. +ಸಚಿವ ಜಮೀರ್‌ ಅಹಮದ್‌ ಖಾನ್‌ ಹಾಗೂ ಧಾರ್ಮಿಕ ಮುಖಂಡರು ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿ ಅಮಾಮ್‌ ಹಾಗೂ ಶಾಲು ಹಾಕಿ ಸನಾನಿಸಿದರು. ಈ ವೇಳೆ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದ ಮಕ್ಕಳೊಂದಿಗೆ ಮುಖ್ಯಮಂತ್ರಿ ಫೋಟೊಗೆ ಫೋಸ್‌‍ ನೀಡಿದರು. +ಪ್ರಾರ್ಥನೆ ಬಳಿಕ ಮಾತನಾಡಿದ ಸಿದ್ದರಾಮಯ್ಯನವರು ಮುಸ್ಲಿಂ ಹಾಗೂ ಎಲ್ಲರಿಗೂ ಬಕ್ರೀದ್‌ ಶುಭಾಶಯಗಳನ್ನು ಕೋರಿದರು. ಎಲ್ಲರೂ ಅಣ್ಣ-ತಮಂದಿರಂತೆ ಬದುಕಿ ಬಾಳಬೇಕು. ಪ್ರೀತಿ ವಿಶ್ವಾಸದಿಂದ ಬದುಕುವ ಅಗತ್ಯವಿದೆ. ದೇಶದಲ್ಲಿ ಬಹುತ್ವದ ಸಂಸ್ಕೃತಿ ಇದೆ. ಇಲ್ಲಿ ವಿವಿಧ ಧರ್ಮ, ಜಾತಿ, ಭಾಷೆ, ಪ್ರಾಂತ್ಯದ ಜನ ವಾಸಿಸುತ್ತಿದ್ದಾರೆ. ಮನುಷ್ಯತ್ವ ಎಲ್ಲದಕ್ಕಿಂತಲೂ ದೊಡ್ಡದು. +ಪರಸ್ಪರ ಪ್ರೀತಿ ಸಹಿಷ್ಣತೆಯಿಂದ ಬದುಕಬೇಕು. ಮತ್ತೊಂದು ಜಾತಿ ಹಾಗೂ ಧರ್ಮವನ್ನು ಪ್ರೀತಿಸುವ, ಸಹಿಸಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.ನಮ ಸರ್ಕಾರ ಸರ್ವಧರ್ಮದಲ್ಲಿ ನಂಬಿಕೆ ಇಟ್ಟಿದ್ದು, ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತದೆ. ಪ್ರತಿಯೊಬ್ಬರ ನಂಬಿಕೆ ಹಾಗೂ ಧರ್ಮಗಳನ್ನು ತಾರತಮ್ಯ ಇಲ್ಲದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿರುವ ಎಲ್ಲಾ ಧರ್ಮಗಳ 7 ಕೋಟಿ ಜನರಿಗೂ ರಕ್ಷಣೆ ನೀಡುವುದು ನಮ ಜವಾಬ್ದಾರಿ ಮತ್ತು ಬದ್ಧತೆ ಎಂದರು. +ಅಲ್ಪಸಂಖ್ಯಾತರು ಆತಂಕ ಮತ್ತು ಭಯ ಬೀಳುವ ಅಗತ್ಯವಿಲ್ಲ. ಅಲ್ಪಸಂಖ್ಯಾತರು ಹಾಗೂ ಬಹುಸಂಖ್ಯಾತರಿಗೆ ಒಂದೇ ರೀತಿಯ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಮಳೆ, ಬೆಳೆ ಹೆಚ್ಚಾಗಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ ಎಂದು ಅವರು ಹಾರೈಸಿದರು. \ No newline at end of file diff --git a/eesanje/url_46_107_7.txt b/eesanje/url_46_107_7.txt new file mode 100644 index 0000000000000000000000000000000000000000..9effd0254855b80ca796f0ace94a38fef6e15cca --- /dev/null +++ b/eesanje/url_46_107_7.txt @@ -0,0 +1,11 @@ +ಅಭಿವೃದ್ಧಿ ಕಾರ್ಯಗಳಿಗಾಗಿ ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಮಾಡಲಾಗಿದೆ : ಪರಮೇಶ್ವರ್‌ ಸಮರ್ಥನೆ +ಬೆಂಗಳೂರು,ಜೂ.17-ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅಭಿವೃದ್ಧಿ ಕಾರ್ಯಗಳಿಗೆ ಸಂಪನೂಲ ಕ್ರೂಢೀಕರಣ ಅನಿವಾರ್ಯ. ಹಾಗಾಗಿ ತೈಲಬೆಲೆ ಹೆಚ್ಚಿಸಿದ್ದೇವೆ. ಇದರಿಂದ ಸಹಜವಾಗಿ ಅಡ್ಡಪರಿಣಾಮ ಆಗೇ ಆಗುತ್ತದೆ ಎಂದು ವಾದಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ದೇಶದಲ್ಲಿ 14 ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆಯನ್ನು ಹೆಚ್ಚಿಸಿದೆ. ಆಗ ಪ್ರತೀ ಬ್ಯಾರೆಲ್‌ ಬೆಲೆ ಕಡಿಮೆ ಇತ್ತು. ನಾವು ದರ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದೆವು. ಬಿಜೆಪಿಯವರು ಬೆಲೆ ಇಳಿಸಿರಲಿಲ್ಲ ಎಂದರು. +ನೆರೆರಾಜ್ಯಗಳಾದ ತಮಿಳುನಾಡು, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ನಮಲ್ಲಿನ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಮಾರಾಟ ತೆರಿಗೆ ಹೆಚ್ಚಿಸಬೇಕೆಂಬ ಪ್ರಸ್ತಾಪ ಬಹಳ ವರ್ಷಗಳಿಂದಲೂ ಇತ್ತು. ಆದರೆ ಕ್ರಮ ಕೈಗೊಂಡಿರಲಿಲ್ಲ. ಈಗ ಇಷ್ಟು ಪ್ರಮಾಣದ ಹೆಚ್ಚಳದ ನಂತರವೂ ನಮಲ್ಲಿ ನೆರೆರಾಜ್ಯಕ್ಕಿಂತಲೂ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿಮೆ ಇದೆ. ಹೀಗಾಗಿ ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. +ರಾಜ್ಯದಲ್ಲಿ ಯೋಜನೆಗಳು ಜಾರಿಯಾಗಬೇಕು. ವಿವಿಧ ಅಭಿವೃದ್ಧಿ ಕೆಲಸಗಳಾಗಬೇಕು. ಇದಕ್ಕೆಲ್ಲಾ ಸಂಪನೂಲ ಕ್ರೂಢೀಕರಣಗೊಳ್ಳಬೇಕಿದೆ. ಗ್ಯಾರಂಟಿ ಯೋಜನೆಗಳಿಗಾಗಿ ದರ ಹೆಚ್ಚಿಸಲಾಗಿದೆ ಎಂಬ ವ್ಯಾಖ್ಯಾನ ಸರಿಯಲ್ಲ ಎಂದರು. +ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದರೆ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಕಡಿಮೆ ಮಾಡಲಾಗುವುದು ಎಂದು ಹೇಳಿದ್ದರು. ಈಗ ವ್ಯತಿರಿಕ್ತವಾಗಿ ದರ ಹೆಚ್ಚಿಸಲಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ನಾವು ಯಾವುದೋ ಮಾತುಗಳನ್ನು ಹೇಳಿದ್ದರೆ ಅದೇ ಶಾಶ್ವತವಾಗಿ ನಿಲ್ಲುವುದಿಲ್ಲ. +ಸಂದರ್ಭಾನುಸಾರ ಪರಿಸ್ಥಿತಿಗನುಗುಣವಾಗಿ ಆಡಳಿತ ನಡೆಸಬೇಕಿದೆ ಎಂದು ಸ್ಪಷ್ಟನೆ ನೀಡಿದರು.ದರ ಏರಿಕೆಯನ್ನು ಮನಸ್ಸಿಗೆ ಬಂದ ಹಾಗೆ ಸುಮನೆ ಹೆಚ್ಚಿಸಿಲ್ಲ. ಯಾವ ಕಾರಣಕ್ಕೆ ಹೆಚ್ಚಳ ಆಗಿದೆ ಎಂಬುದನ್ನು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು. ಈ ಸಂದರ್ಭಕ್ಕೆ ಸಂಪನೂಲ ಕ್ರೂಢೀಕರಣ ಅಗತ್ಯವಿದೆ. ನಾವು ಈಗಲೂ ನೆರೆರಾಜ್ಯಗಳಿಗೆ ಸರಿಸಮನಾದ ದರ ಪರಿಷ್ಕರಣೆ ಮಾಡಲಾಗಿಲ್ಲ. ಬಿಜೆಪಿಯವರು ಹಳೆಯದನ್ನು ನೆನಪಿಸಿಕೊಳ್ಳಬೇಕು ಎಂದರು. +ತೈಲಬೆಲೆ ಏರಿಕೆಯಿಂದಾಗಿ ಸಹಜವಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಇದನ್ನು ಸ್ಪಿನ್‌ ಆಫ್‌ ಎಫೆಕ್ಟ್‌ ಎಂದು ಕರೆಯಲಾಗುತ್ತದೆ. ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಾದಾಗ ಸಾರಿಗೆ, ಆಟೋ, ಬಸ್‌‍ ಪ್ರಯಾಣ ದರ ಎಲ್ಲವೂ ಹೆಚ್ಚಾಗುತ್ತದೆ. ಹೆಚ್ಚಾಗಲೇಬೇಕು. ಈ ಹಿಂದೆಯೂ ಇದೇ ಆಗಿತ್ತು ಎಂದಿದ್ದಾರೆ. +ನಟ ದರ್ಶನ್‌ ಪ್ರಕರಣದಲ್ಲಿ ಯಾವುದೇ ಮೃದುಧೋರಣೆ ತೋರದೆ ಮುಲಾಜಿಲ್ಲದೆ ತನಿಖೆ ನಡೆಸಲಾಗುತ್ತಿದೆ. ಮೃತಪಟ್ಟ ವ್ಯಕ್ತಿಗೆ ಕರೆಂಟ್‌ ಶಾಕ್‌ ನೀಡಲಾಗಿದೆ ಎಂಬುದು ಸೇರಿದಂತೆ ನಾನಾ ರೀತಿಯ ವದಂತಿಗಳಿವೆ. ತನಿಖೆ ಪೂರ್ಣಗೊಳ್ಳುವವರೆಗೂ ಸಾರ್ವಜನಿಕವಾಗಿ ಯಾವುದೇ ವಿಚಾರಗಳು ಬಹಿರಂಗಗೊಳ್ಳುವುದಿಲ್ಲ. ತನಿಖೆ ಪೂರ್ಣಗೊಂಡ ಬಳಿಕ ವರದಿ ಬರುತ್ತದೆ. ನ್ಯಾಯಾಲಯ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು. +ಜಿಲ್ಲಾಪಂಚಾಯತ್‌, ತಾಲ್ಲೂಕು ಪಂಚಾಯತ್‌, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ನಡೆಸಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಹಜವಾಗಿಯೇ ಮೀಸಲಾತಿ ನಿಗದಿ ಸೇರಿದಂತೆ ವಿವಿಧ ಸಿದ್ಧತೆಗಳನ್ನು ನಡೆಸಲಾಗುತ್ತದೆ. ಮೀಸಲಾತಿಯಿಂದ ಅನ್ಯಾಯವಾಗಿದೆ ಎಂದು ಯಾರೂ ಕೋರ್ಟ್‌ಗೆ ಹೋಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು. +ಮಧುಗಿರಿಯ ಚಿನ್ನೇನಹಳ್ಳಿ ಕಲುಷಿತ ನೀರಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ತಪ್ಪಿತಸ್ಥರು ಎಂದು ಕಂಡುಬಂದವರ ವಿರುದ್ಧ ಕ್ರಮ ಜರುಗಿಸಲಾಗಿದೆ, ತನಿಖೆ ಮುಂದುವರೆದಿದೆ. ಹಿರಿಯ ಅಧಿಕಾರಿಗಳ ಲೋಪ ಕಂಡುಬಂದರೆ ಜಿಲ್ಲಾಧಿಕಾರಿ, ಸಿಇಒ ಸೇರಿದಂತೆ ಮತ್ತಿತರರನ್ನು ಹೊಣೆ ಮಾಡಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_107_8.txt b/eesanje/url_46_107_8.txt new file mode 100644 index 0000000000000000000000000000000000000000..92b362759e36122bbda07c34877411cea5780f21 --- /dev/null +++ b/eesanje/url_46_107_8.txt @@ -0,0 +1,5 @@ +ಮುಂಗಾರು ದುರ್ಬಲಗೊಳ್ಳುತ್ತಿದ್ದಂತೆ ಮತ್ತೆ ಏರಿಕೆಯಾಗುತ್ತಿದೆ ತಾಪಮಾನ +ಬೆಂಗಳೂರು,ಜೂ.17-ನೈರುತ್ಯ ಮುಂಗಾರು ದುರ್ಬಲಗೊಂಡ ಪರಿಣಾಮ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ಗರಿಷ್ಠ ತಾಪಮಾನದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ.ಕಳೆದ ವಾರಕ್ಕೆ ಹೋಲಿಸಿದರೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಒಂದು ಡಿಗ್ರಿ ಸೆಂಟಿಗ್ರೇಡ್‌ನಷ್ಟು ಹೆಚ್ಚಾಗಿದೆ ಎಂದು ಹವಾಮಾನ ತಜ್ಞ ಸಿ.ಎಸ್‌‍.ಪಾಟೀಲ್‌ ತಿಳಿಸಿದ್ದಾರೆ. +ಬೆಂಗಳೂರಿನಲ್ಲಿ ಕನಿಷ್ಟ ತಾಪಮಾನ 21 ಡಿ.ಸೆಂ. ನಷ್ಟಿದ್ದು, ಗರಿಷ್ಠ ತಾಪಮಾನ 31 ಡಿ.ಸೆಂ.ವರೆಗೆ ಇರಲಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿಗಿಂತ ಕಡಿಮೆ ಇರುತ್ತಿತ್ತು. ಅಂದರೆ 27 ರಿಂದ 29 ಡಿ.ಸೆಂ. ವರೆಗೂ ದಾಖಲಾಗುತ್ತಿತ್ತು ಎಂದಿದ್ದಾರೆ. +ಮುಂಗಾರು ದುರ್ಬಲಗೊಂಡಿರುವುದರಿಂದ ವಾತಾವರಣದಲ್ಲಿ ಮಳೆ ತರುವಂತಹ ಯಾವುದೇ ಸನ್ನಿವೇಶಗಳು ಸೃಷ್ಟಿಯಾಗಿಲ್ಲ. ಆದರೆ ನೈರುತ್ಯ ಮತ್ತು ಪಶ್ಚಿಮದ ಕಡೆಯಿಂದ ಬೀಸುವ ತಂಪಾದ ಗಾಳಿಯ ಪರಿಣಾಮದಿಂದ ರಾಜ್ಯದ ಕೆಲವೆಡೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳಿಲ್ಲ. +ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರ ಮಳೆಯನ್ನು ನಿರೀಕ್ಷಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_107_9.txt b/eesanje/url_46_107_9.txt new file mode 100644 index 0000000000000000000000000000000000000000..1d6e61b088c0cbf5679addd68872c2ce69f51646 --- /dev/null +++ b/eesanje/url_46_107_9.txt @@ -0,0 +1,7 @@ +ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ನಿರ್ದೇಶನ +ಬೆಂಗಳೂರು,ಜೂ.17-ವಿಶ್ವವಿದ್ಯಾಲಯಗಳು ಸ್ವಾಯತ್ತ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ನಿರ್ದೇಶನ ನೀಡಿದೆ. +ಗ್ರೂಪ್‌ ಡಿ ಮತ್ತು ಸಮಾನಾಂತರ ಹುದ್ದೆ ಹಾಗೂ ಗ್ರೂಪ್‌ ಸಿ ವೃಂದಗಳಲ್ಲಿನ ಬ್ಯಾಕ್‌ಲಾಗ್‌ ಖಾಲಿ ಹುದ್ದೆ ಸೇರಿದಂತೆ ಯಾವುದೇ ಖಾಲಿ ಹುದ್ದೆಯನ್ನು ಆಯಾ ವರ್ಗಗಳಿಗೆ ಮೀಸಲಾದ ಅಭ್ಯರ್ಥಿಗಳಿಂದಲೇ ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. +ಆದರೆ ಬೆರಳಚ್ಚುಗಾರರು, ದತ್ತಾಂಶ ನಮೂದು ಸಹಾಯಕರು, ವಾಹನ ಚಾಲಕರು, ಶೀಘ್ರ ಲಿಪಿಗಾರರು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. +ಯಾವುದೇ ಹುದ್ದೆಗಳನ್ನು ಸೃಜನೆ ಮಾಡುವ ಅಥವಾ ಹೆಚ್ಚಿಸುವ ಸಂದರ್ಭದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿದೆ. ಆರ್ಥಿಕ ಇಲಾಖೆ ಯಾವುದೇ ಹುದ್ದೆಯನ್ನು ಮಂಜೂರು ಮಾಡದಿದ್ದರೆ ವಿಶ್ವವಿದ್ಯಾಲಯಗಳು ಮತ್ತು ಇತರ ಸ್ವಾಯತ್ತ ಸಂಸ್ಥೆಗಳ ಮಟ್ಟದಲ್ಲಿ ಸೃಜಿಸಲಾದ ಹುದ್ದೆಗಳಿಗೆ ಯಾವುದೇ ಮಾನ್ಯತೆ ಇರುವುದಿಲ್ಲ. ಆರ್ಥಿಕ ಇಲಾಖೆಯು ಇಂತಹ ಹುದ್ದೆಗಳ ಭರ್ತಿಗೆ ಸಹಮತಿ ನೀಡುವುದಿಲ್ಲ. ಅನುದಾನ ಒದಗಿಸಲು ಕ್ರಮ ವಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. +ಆರ್ಥಿಕ ಇಲಾಖೆ ಅನುಮೋದನೆ ಇಲ್ಲದ ಹುದ್ದೆಗಳ ಎದುರಾಗಿ ಉದ್ಭವಿಸುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದಿಲ್ಲ. ಆದರೂ ವಿಶ್ವವಿದ್ಯಾಲಯಗಳು ಮತ್ತು ಇತರ ಸ್ವಾಯತ್ತ ಸಂಸ್ಥೆಗಳು ಇಂತಹ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸುತ್ತಿರುವುದನ್ನು ಗಮನಿಸಲಾಗಿದೆ. ಇಂತಹ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಸಹಮತಿ ಪಡೆಯದೆ ಬ್ಯಾಕ್‌ಲಾಗ್‌ ಹುದ್ದೆಗಳೆಂದು ಗುರುತಿಸಿರುತ್ತವೆ. +ಕರ್ನಾಟಕ ಸರ್ಕಾರದ 1977 ರ ನಿಯಮಗಳ ಅನ್ವಯ ಆರ್ಥಿಕ ಇಲಾಖೆಯಿಂದ ಪೂರ್ವಾನುಮತಿ ಪಡೆಯದ ಹುದ್ದೆಗಳ ಎದುರಾಗಿ ಬ್ಯಾಕ್‌ಲಾಗ್‌ ಹುದ್ದೆ ಸೇರಿದಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶವಿಲ್ಲ. ಯಾವುದೇ ಹುದ್ದೆ ಸೃಜನೆಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯಬೇಕಾಗಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. \ No newline at end of file diff --git a/eesanje/url_46_108_1.txt b/eesanje/url_46_108_1.txt new file mode 100644 index 0000000000000000000000000000000000000000..ab602b149c7d590ba08ed1edd54a74ae349e2178 --- /dev/null +++ b/eesanje/url_46_108_1.txt @@ -0,0 +1,6 @@ +ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ : ಪ್ರಲ್ಹಾದ್‌ ಜೋಶಿ +ಹುಬ್ಬಳ್ಳಿ, ಜೂ.16-ಪೆಟೋಲ್‌ ಹಾಗೂ ಡಿಸೇಲ್‌ ಬೆಲೆ ಏರಿಕೆ ಮಾಡಿ ರಾಜ್ಯಸರ್ಕಾರ ಜನಸಾಮಾನ್ಯರ ಮೇಲೆ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಘೋಷಣೆ ಮಾಡಿ ಈಗ ಆರ್ಥಿಕ ಹೊರೆ ತಡೆಯಲು ಪೆಟೋಲ್‌, ಡಿಸೇಲ್‌ ಬೆಲೆ ಏರಿಕೆ ಮಾಡಿದೆ. +ದಿನನಿತ್ಯಡ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ, ಗ್ಯಾರೆಂಟಿಯಿಂದ ಉಚಿತ ಕೊಡುತ್ತೇವೆ ಎಂದು ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಹೊರೆಯಾಗಿದೆ ಎಂದು ಹೇಳಿದರು.ಜಾಗತಿಕ ಯುದ್ಧ, ತೀವ್ರ ಬರಗಾಲದಿಂದ ಜನ ಸಂಕಷ್ಟ ಎದರುಸುತಿದ್ದಾರೆ. ಅನೇಕ ಕಡೆ ಬೆಳೆಗಳು ಸರಿಯಾಗಿ ಬಂದಿಲ್ಲ. +ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬೆಲೆ ನಿಯಂತ್ರಣಕ್ಕೆ ಮುಂದಾಯಿತು. ಸರಿಯಾದ ರೀತಿಯಲ್ಲಿ ಪೂರೈಕೆ ಇರದ ಕಾರಣ ಆಹಾರ ಧಾನ್ಯ ಸಿಗಲಿಲ್ಲ , ಈಗಲೂ ಸಿಗುತ್ತಿಲ್ಲ. ಅದು ನೈಸರ್ಗಿಕವಾಗಿ ಆಗಿದ್ದು. ಆದರೆ ಪೆಟೋಲ್‌, ಡೀಸೆಲ್‌ ಬೆಲೆ ಜಾಸ್ತಿ ಮಾಡುತ್ತಿರುವುದು ಮಾನವ ನಿರ್ಮಿತ ಎಂದರು. +ತೈಲ ಬೆಲೆ ಏರಿಕೆಯಿಂದ ಬಸ್‌‍ ದರ, ಹಾಲಿನ ದರ, ಅಕ್ಕಿ ಎಲ್ಲಾ ದರಗಳೂ ಹೆಚ್ಚಾಗುತ್ತವೆ. ಸರ್ಕಾರದ ಬಡ ವಿರೋಧ ನೀತಿ ಅನುಸರಿಸುತ್ತಿದೆ. ಗ್ಯಾರಂಟಿ, ಗ್ಯಾರಂಟಿ ಎಂದರೂ ಜನ ತಿರಸ್ಕಾರ ಮಾಡಿದ್ದಾರೆ, ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ. ಈಗ ದ್ವೇಷ ಸಾಧಿಸಲು ಮುಂದಾಗಿರುವ ಸರ್ಕಾರ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಹಗೆ ತೀರಿಸಿಕೊಳ್ಳುತ್ತಿದೆ ಎಂದು ಆಕ್ಷೇಪಿಸಿದರು. +ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಹಿಂದೆ ಬೆಲೆ ಏರಿಕೆ ವಿರುದ್ಧ ಶವ ಯಾತ್ರೆ ಮಾಡಿದ್ದರು. ನಾವು ಕಾಂಗ್ರೆಸ್‌‍ ಸರಕಾರದ ವಿರುದ್ಧ ಉಗ್ರ ಸ್ವರೂಪದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. \ No newline at end of file diff --git a/eesanje/url_46_108_10.txt b/eesanje/url_46_108_10.txt new file mode 100644 index 0000000000000000000000000000000000000000..3cb183c6ff14812d9c9b73542bda7603203afcb4 --- /dev/null +++ b/eesanje/url_46_108_10.txt @@ -0,0 +1,4 @@ +ತಡರಾತ್ರಿ ದರ್ಶನ್‌ನನ್ನು ಮನೆಗೆ ಕರೆದೊಯ್ದು ಪರಿಶೀಲನೆ ನಡೆಸಿದ ಪೊಲೀಸರು +ಬೆಂಗಳೂರು,ಜೂ.15-ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್‌ನನ್ನು ತಡರಾತ್ರಿ ಆರ್‌ಆರ್‌ನಗರದಲ್ಲಿರುವ ಆತನ ಮನೆಗೆ ಕರೆದೊಯ್ದ ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್‌‍ ಜೀಪಿನ್‌ ಹಿಂಬದಿ ಸೀಟಿನಲ್ಲಿ ದರ್ಶನ್‌ನನ್ನು ಕೂರಿಸಿಕೊಂಡು ಪೊಲೀಸರು ಆತನ ಮನೆಗೆ ಕರೆದೊಯ್ದಿದ್ದಾನೆ. +ಕಳೆದ ಶನಿವಾರ ರಾತ್ರಿ ಪಟ್ಟಣಗೆರೆ ಶೆಡ್‌ನಿಂದ ಮನೆಗೆ ಬಂದು ಬಿಚ್ಚಿದ ಬಟ್ಟೆ, ಬಳಸಿದ ವಸ್ತುಗಳು, ಸ್ನಾನಕ್ಕೆ ಬಳಸಿದ್ದ ಟವಲ್‌, ಸೋಪು, ಬಕೆಟ್‌ನ್ನು ವಶಕ್ಕೆ ಪಡೆದಿದ್ದಾರೆ.ಈ ಪ್ರಕರಣದಲ್ಲಿ ಒಂದು ಸಣ್ಣ ಸಾಕ್ಷಿಯೂ ಪೊಲೀಸರಿಗೆ ಪ್ರಬಲ ಅಸ್ತ್ರ. ಒಂದು ವೇಳೆ ಆರೋಪಿಗಳು ವಿಚಾರಣೆ ವೇಳೆ ಹೇಳಿದ ಹೇಳಿಕೆಗಳು ಎಲ್ಲಾದರೂ ಉಲ್ಲಾ ಆಗಬಹುದೆಂಬ ಹಿನ್ನಲೆಯಲ್ಲಿ ಸಣ್ಣ ಸಣ್ಣ ಸಾಕ್ಷ್ಯಗಳನ್ನು ಸಹ ಪೊಲೀಸರು ಸಂಗ್ರಹಿಸುತ್ತಿದ್ದಾರೆ. +ಹೊಸ ವಿಚಾರಗಳು ಬೆಳಕಿಗೆ :ಈ ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರತಿಯೊಬ್ಬರ ಹೇಳಿಕೆಯಲ್ಲಿಯೂ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಮುಂದಿನ ದಿನಗಳಲ್ಲಿ ಆರೋಪಿಗಳು ಉಲ್ಟಾ ಹೊಡೆಯಬಾರದೆಂಬ ಹಿನ್ನೆಲಯಲ್ಲಿ ಪ್ರತಿ ಹೇಳಿಕೆಗಳನ್ನು ಸಹ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಹೇಳಿರುವ ಮಾಹಿತಿಗಳು ನಟ ದರ್ಶನ್‌ಗೆ ಭವಿಷ್ಯದಲ್ಲಿ ಕಂಟಕವಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_108_11.txt b/eesanje/url_46_108_11.txt new file mode 100644 index 0000000000000000000000000000000000000000..2b79933093df0bd310fbf5c65b5efe3794053550 --- /dev/null +++ b/eesanje/url_46_108_11.txt @@ -0,0 +1,9 @@ +ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್‌ +ಬೆಂಗಳೂರು, ಜೂ.15-ದೇಶದ ಎಲ್ಲಾ ರಾಜ್ಯಗಳಲ್ಲೂ ಕೈಗಾರಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆಡಿರುವ ಮಾತುಗಳನ್ನು ಬೆಂಬಲಿಸಿರುವ ಸಚಿವರು ತಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. +ಮೈಕ್ರಾನ್‌ ಕಂಪನಿ 2.70 ಬಿಲಿಯನ್‌ ಡಾಲರ್‌ ವೆಚ್ಚದಲ್ಲಿ ಗುಜರಾತಿನಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, 5,000 ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಶೇಕಡಾ 50 ಮತ್ತು ಗುಜರಾತ್‌ ಸರಕಾರದಿಂದ ಶೇಕಡ 20ರಷ್ಟು ಪ್ರೋತ್ಸಾಹ ಧನವನ್ನು ಅದು ಪಡೆಯುತ್ತಿದೆ. ಅಂದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಬೊಕ್ಕಸದಿಂದ ಕಂಪನಿಗೆ 2 ಬಿಲಿಯನ್‌ ಡಾಲರ್‌ ಸಂದಾಯ ಆಗುತ್ತಿದೆ. ಇದರ ಹಿಂದಿರುವ ತರ್ಕ ಸಮರ್ಥನೀಯವಲ್ಲ ಎಂದು ಕುಮಾರಸ್ವಾಮಿ ನಿನ್ನೆ ಹೇಳಿದ್ದರು. + , . 70% , . ’ , , , “ / …://./5lS4oakDD8 +ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ, ಇಷ್ಟೊಂದು ಭಾರೀ ಪ್ರಮಾಣದ ಪ್ರೋತ್ಸಾಹಕ ಧನವನ್ನು ಸರಕಾರದ ಬೊಕ್ಕಸದಿಂದಲೇ ನೀಡುತ್ತಿದ್ದರೆ ಇದನ್ನು ಸಾರ್ವಜನಿಕ ವಲಯದ ಉದ್ಯಮವೆಂದೇ ಪರಿಗಣಿಸಬಹುದು ಎಂದೂ ಹೇಳಿದ್ದಾರೆ. +ಗುಜರಾತಿನ ಸಾನಂದ್‌ ನಲ್ಲಿ ಸೆಮಿಕಂಡಕ್ಟರ್‌ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿರುವ ಅಮೆರಿಕ ಮೂಲದ ಮೈಕ್ರಾನ್‌ ಟೆಕ್ನಾಲಜಿ ಕಂಪನಿ ಸೃಷ್ಟಿಸಲಿರುವ ಪ್ರತೀ ಉದ್ಯೋಗಕ್ಕೆ ದೇಶದ ಬೊಕ್ಕಸದಿಂದ 3.20 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ಕೊಡುತ್ತಿರುವುದು ಸರಿಯಲ್ಲ. +ಈ ಬಗ್ಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನಿಸಿರುವುದು ಸರಿಯಾಗಿದೆ. ಇದೇ ನೀತಿ ಮುಂದುವರಿಯುವುದಾದರೆ, ದೇಶದ ಎಲ್ಲ ರಾಜ್ಯಗಳಿಗೂ ಇದೇ ರೀತಿಯ ಸಮಾನ ಸೂತ್ರ ಮತ್ತು ಅವಕಾಶ ಸಿಗಲಿ ಎಂದಿದ್ದಾರೆ. +ಕೈಗಾರಿಕಾ ಬೆಳವಣಿಗೆಗೆ ಸೂಕ್ತವಾದ ಕಾರ್ಯ ಪರಿಸರ ಸೃಷ್ಟಿಸಲು ಈ ರೀತಿಯ ಪ್ರೋತ್ಸಾಹ ಧನ ನೀಡುತ್ತಿದ್ದರೆ ಅದು ಸ್ವಾಗತಾರ್ಹ. ಇದು ವಾಸ್ತವವಾಗಿದ್ದರೆ, ಎಲ್ಲ ರಾಜ್ಯಗಳಿಗೂ ಇಂತಹ ಸಮಾನ ಅವಕಾಶ ಸಿಗಬೇಕು. ಆಗ ಮಾತ್ರ ದೇಶದೆಲ್ಲೆಡೆ ಕೈಗಾರಿಕಾ ಬೆಳವಣಿಗೆ ಕಾಣಬಹುದು ಎಂದಿದ್ದಾರೆ. +ಕೇಂದ್ರದ ಈಗಿನ ನೀತಿಯು ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತಿನ ಬಗ್ಗೆ ಮಾತ್ರ ವಿಶೇಷ ಒಲವನ್ನು ತೋರಿಸುವಂತಿದೆ. ಇದು ತಾರತಮ್ಯ ಮತ್ತು ಅಸಮಾನತೆಗೆ ದಾರಿ ಮಾಡಿಕೊಡಲಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_108_12.txt b/eesanje/url_46_108_12.txt new file mode 100644 index 0000000000000000000000000000000000000000..d01bdee38255e34fab16a7dbeacf9ffde328c328 --- /dev/null +++ b/eesanje/url_46_108_12.txt @@ -0,0 +1,8 @@ +ರಾಜಕೀಯ ಸಂಚಲನ ಸೃಷ್ಟಿಸಿದೆ ದರ್ಶನ್‌ ಕುರಿತ ಸಿ.ಪಿ.ಯೋಗೇಶ್ವರ್‌ ಹೇಳಿಕೆ +ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ನಟ ದರ್ಶನ್‌ ಅವರನ್ನು ಕಣಕ್ಕಿಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮುಂದಾಗಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ನೀಡಿರುವ ಹೇಳಿಕೆ ರಾಜಕೀಯವಾಗಿ ಸಂಚಲನ ಸೃಷ್ಟಿಸಿದೆ. +ಈ ಹೇಳಿಕೆಯನ್ನು ಅಲ್ಲಗಳೆಯುವ ಬದಲಾಗಿ ಕಾಂಗ್ರೆಸಿಗರೇ ಅನುಮಾನಗಳಿಗೆ ಪುಷ್ಟಿ ನೀಡುವಂತೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ಆದರೆ, ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಸಲಾಗುವುದು ಮತ್ತು ಅವರನ್ನು ಗೆಲ್ಲಿಸಲು ಶ್ರಮಿಸುವುದಾಗಿ ಹೇಳಿದ್ದರು. +ಇದಕ್ಕೆ ಪ್ರತಿಯಾಗಿ ಮಾತನಾಡಿರುವ ಸಿ.ಪಿ.ಯೋಗೇಶ್ವರ್‌, ಡಿ.ಕೆ.ಸಹೋದರರು ಕಣಕ್ಕಿಳಿಸಲು ಬಯಸಿದ್ದ ಅಚ್ಚರಿ ಅಭ್ಯರ್ಥಿ ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ ಎಂದಿದ್ದಾರೆ.ಸಿ.ಪಿ.ಯೋಗೇಶ್ವರ್‌ ಅವರು ದರ್ಶನ್‌ ಅವರ ಹೆಸರು ಹೇಳದಿದ್ದರೂ ಸಹಜವಾಗಿ ಜನರ ಗಮನ ಪ್ರಸಕ್ತ ವಿದ್ಯಮಾನಗಳತ್ತ ಹೊರಳಿದೆ. +ದರ್ಶನ್‌ ಅವರು, ಕಾಂಗ್ರೆಸ್‌‍ ಅಭ್ಯರ್ಥಿಯಾಗಲು ಬಯಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್‌ ತಮಗೆ ಆ ಬಗ್ಗೆ ಮಾಹಿತಿ ಇಲ್ಲ. ಆದರೆ, ಕೊಲೆ ಪ್ರಕರಣ ಬಯಲಿಗೆ ಬರುವ ಮುನ್ನ ಆ ರೀತಿಯ ಚರ್ಚೆಗಳು ನಡೆದಿದ್ದರೆ ತಪ್ಪೇನೂ ಇಲ್ಲ. ಕಾಂಗ್ರೆಸ್‌‍ನವರು ಇದೇ ರೀತಿಯ ಪ್ರಶ್ನೆಗಳನ್ನು ಕೇಳಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದೇಕೆ? ಎಂದರೆ ಜೆಡಿಎಸ್‌‍ ಮತ್ತು ಬಿಜೆಪಿಯ ಬಳಿ ಉತ್ತರವಿದೆಯೇ? ಎಂದು ಪ್ರಶ್ನಿಸಿದ್ದಾರೆ. +ದರ್ಶನ್‌ ಅವರನ್ನು ರಕ್ಷಿಸಲು ಕಾಂಗ್ರೆಸ್‌‍ನಲ್ಲಿ ಯಾರೂ ಪ್ರಯತ್ನಿಸುತ್ತಿಲ್ಲ. ಇದು ಕೊಲೆ ಪ್ರಕರಣ. ಕೊಲೆಯಾಗಿರುವ ಕುಟುಂಬದವರು ಆರೋಪಿಗಳು ಸುಲಭವಾಗಿ ಪಾರಾಗಲು ಬಿಡುವುದಿಲ್ಲ. ವಕೀಲರಿದ್ದಾರೆ, ಕಾನೂನು ಇದೆ ಎಂದು ಹೇಳಿದ್ದಾರೆ. +ಕಾಂಗ್ರೆಸ್‌‍ ಶಾಸಕ ಪ್ರಸಾದ್‌ ಅಬ್ಬಯ್ಯ ಮಾತನಾಡಿ, ದರ್ಶನ್‌ ಅವರನ್ನು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲು ಪ್ರಯತ್ನ ನಡೆದಿತ್ತು ಎಂಬ ರಾಜಕೀಯ ವ್ಯಾಖ್ಯಾನಗಳು ನಡೆಯುತ್ತಿವೆ. ಆದರೆ, ಆ ರೀತಿಯ ನಿರ್ಧಾರವನ್ನು ಸಮಯ ಬಂದಾಗಷ್ಟೇ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. +ಕಾಂಗ್ರೆಸ್‌‍ನಲ್ಲೇ ಪ್ರಭಾವಿಗಳು ದರ್ಶನ್‌ ಅವರನ್ನು ರಕ್ಷಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಎಂಬ ಆರೋಪಗಳು ಹಾಗೂ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ತಳುಕು ಹಾಕಿರುವುದು ಕಾವೇರಿದ ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_108_2.txt b/eesanje/url_46_108_2.txt new file mode 100644 index 0000000000000000000000000000000000000000..ae168598f04347e83ef65f2d66157e9335ea5bee --- /dev/null +++ b/eesanje/url_46_108_2.txt @@ -0,0 +1,6 @@ +ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ +ಬೆಂಗಳೂರು, ಜೂ, 16:ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿರುವುದನ್ನು ಇಂಡಿಯನ್‌ ವೆಹಿಕಲ್‌ ಡ್ರೈವರ್‌ ಅಸೋಸಿಯೇಷನ್‌ ಖಂಡಿಸಿದ್ದು, ಕೂಡಲೇ ದರ ಏರಿಕೆ ಕೈಬಿಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. +ಈ ಕುರಿತು ಹಣಕಾಸು ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದ್ದು, ತಕ್ಷಣವೇ ದರ ಇಳಿಕೆ ಮಾಡಬೇಕು ಎಂದು ಅಸೋಸಿಯೇಷನ್‌ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ. +ಕ್ಯಾಬ್‌‍, ಟ್ಯಾಕ್ಸಿ ಕಾರುಗಳು, ಸರಕು ಸಾಗಾಣೆ ಹಾಗೂ ಖಾಸಗಿ ಬಸ್‌‍, ಹಾಲಿನ ವಾಹನಗಳು, ಜೆಸಿಬಿ, ಟ್ಯಾಂಕರ್‌ ಗಳು ಒಳಗೊಂಡಂತೆ 83ಲಕ್ಷಕ್ಕೂ ಅಧಿಕ ಹಳದಿ ಬೋರ್ಡ್‌ ವಾಹನಗಳು ರಾಜ್ಯದಲ್ಲಿ ಸಂಚರಿಸುತ್ತವೆ. ದರ ಏರಿಕೆಯಿಂದ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳಕ್ಕೆ ದಾರಿಯಾಗುತ್ತದೆ. ವಾಣಿಜ್ಯ ವಾಹನಗಳ ಮಾಲೀಕರು ಮತ್ತು ಚಾಲಕರಿಗೆ ದರ ಏರಿಕೆ ಬರೆ ಎಳೆದಂತಾಗಿದೆ ಎಂದು ಅವರು ತಿಳಿಸಿದ್ದಾರೆ. +ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಗಾಣೆ ವಲಯದ ಮೇಲೆ ಹೊರೆ ಹೇರಿರುವುದು ಅತ್ಯಂತ ಅಮಾನವೀಯ. ಬೆಲೆ ಏರಿಕೆಯಿಂದ ಬಸವಳಿದಿರುವ ಜನ ಸಾಮಾನ್ಯರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಯಾವುದೇ ಸುಳಿವು ನೀಡದೇ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಹೆಚ್ಚಿಸಿರುವುದು ಅತ್ಯಂತ ಖಂಡನೀಯ ಎಂದು ಗಂಡಸಿ ಸದಾನಂದ ಸ್ವಾಮಿ ತಿಳಿಸಿದ್ದಾರೆ. +ಈ ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_108_3.txt b/eesanje/url_46_108_3.txt new file mode 100644 index 0000000000000000000000000000000000000000..67c15b400e883042d5d865e1f99e33882e65ffd4 --- /dev/null +++ b/eesanje/url_46_108_3.txt @@ -0,0 +1,4 @@ +ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ +ಬೆಂಗಳೂರು, ಜೂ.16-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿ ಸಂಸತ್‌ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮಾಯಿ ಹಾಗೂ ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅಂಗೀಕರಿಸಿದ್ದಾರೆ. +ಶಾಸಕ ಸ್ಥಾನದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಮೂರು ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ತೆರವಾಗಿರುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. +ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ , ಬಸವರಾಜ ಬೊಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ನಿನ್ನೆ ಹಾಗೂ ಇ ತುಕಾರಾಂ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ಜೂ.14ರಂದು ರಾಜೀನಾಮೆ ನೀಡಿದ್ದರು. ಸಭಾಧ್ಯಕ್ಷರು ಈ ಮೂರು ರಾಜೀನಾಮೆಗಳನ್ನು ನಿನ್ನೆ ಅಂಗೀಕರಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_108_4.txt b/eesanje/url_46_108_4.txt new file mode 100644 index 0000000000000000000000000000000000000000..b2fc1bef1fb57d5e99ede12923aec51fb340031b --- /dev/null +++ b/eesanje/url_46_108_4.txt @@ -0,0 +1,11 @@ +ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಏರಿಕೆಯಾಗಿಲ್ಲ ಜಲಾಶಯಗಳ ನೀರಿನ ಮಟ್ಟ +ಬೆಂಗಳೂರು, ಜೂ.16-ರಾಜ್ಯದಲ್ಲಿ ನೈರುತ್ಯ ಮುಂಗಾರು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಸಂಗ್ರಹ ಮಾತ್ರ ಶೇ.21ರಷ್ಟಿದೆ. ನಾರಾಯಣಪುರ ಹಾಗೂ ವಾಣಿವಿಲಾಸ ಸಾಗರ ಜಲಾಶಯ ಹೊರತುಪಡಿಸಿದರೆ, ಉಳಿದ ಯಾವ ಜಲಾಶಯದಲ್ಲೂ ಶೇ.50ಕ್ಕಿಂತ ಹೆಚ್ಚು ನೀರಿಲ್ಲ. +ಮೇ ತಿಂಗಳಲ್ಲಿ ಪೂರ್ವ ಮುಂಗಾರು ಮಳೆ ಹಾಗೂ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಪರಿಹಾರ ದೊರೆತಂತಾಗಿದೆ. +ಆದರೆ, ಜಲ ವಿದ್ಯುತ್‌ ಉತ್ಪಾದಿಸುವ ಹಾಗೂ ಕೃಷಿಗೆ ನೀರು ಪೂರೈಸುವ ಜಲಾಶಯಗಳಿಗೆ ಮಾತ್ರ ಗಣನೀಯವಾಗಿ ಒಳ ಹರಿವು ಹೆಚ್ಚಾಗಿಲ್ಲ. ಮುಂಗಾರು ಮಳೆ ಆರಂಭ ಉತ್ತಮವಾಗಿದ್ದು, ಜಲಾಶಯಗಳ ಒಳಹರಿವು ಆರಂಭಗೊಂಡಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಒಳ ಹರಿವು ಬರುತ್ತಿಲ್ಲ. ಕಳೆದ ವರ್ಷ ಮುಂಗಾರು ದುರ್ಬಲವಾಗಿತ್ತು, ಅಲ್ಲದೆ, ರಾಜ್ಯದಲ್ಲಿ ಬರದ ಕರಾಳ ಛಾಯೆ ಆವರಿಸಿ ಜನ-ಜಾನುವಾರುಗಳನ್ನು ಸಂಕಷ್ಟಕ್ಕೆ ದೂಡಿತ್ತು. +ಈ ಬಾರಿ ಮುಂಗಾರು ಉತ್ತಮವಾಗಿದ್ದರೂ ಈತನಕ ಜಲಾಶಯಗಳು ಭರ್ತಿಯಾಗುವ ಪ್ರಮಾಣಕ್ಕೆ ಅನುಗುಣವಾಗಿ ಒಳಹರಿವು ಇಲ್ಲದಿರುವುದು ಮತ್ತೊಂದು ಆತಂಕಕ್ಕೆ ಕಾರಣವಾಗಿದೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆಯವರೆಗೆ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 187.46 ಟಿಎಂಸಿ ಅಡಿಯಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 185.85 ಟಿಎಂಸಿ ಅಡಿಯಷ್ಟು ನೀರಿತ್ತು. ಕಳೆದ ವರ್ಷಕ್ಕಿಂತ ಎರಡು ಟಿಎಂಸಿಯಷ್ಟು ಮಾತ್ರ ನೀರು ಹೆಚ್ಚಿದೆಯಷ್ಟೇ. +ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ ಜಲಾಶಯದಲ್ಲಿ ಶೇ.10ರಷ್ಟು, ಸೂಪಾ ಜಲಾಶಯದಲ್ಲಿ ಶೇ.22ರಷ್ಟು ಹಾಗೂ ವರಾಹಿ ಜಲಾಶಯದಲ್ಲಿ ಶೇ.11ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಈ ಮೂರು ಜಲಾಶಯಗಳಿಗೆ ಒಟ್ಟಾರೆ 1300 ಕ್ಯುಸೆಕ್‌್ಸನಷ್ಟು ಮಾತ್ರ ಒಳಹರಿವಿದೆ. +ಕಾವೇರಿ ನದಿ ಪಾತ್ರದ ಕಬಿನಿಯಲ್ಲಿ ಶೇ.45, ಹಾರಂಗಿಯಲ್ಲಿ ಶೇ.38, ಹೇಮಾವತಿಯಲ್ಲಿ ಮತ್ತು ಕೆಆರ್‌ಎಸ್‌‍ನಲ್ಲಿ ಶೇ.28ರಷ್ಟು ನೀರು ಸಂಗ್ರಹವಿದೆ. ಈ ನಾಲ್ಕು ಜಲಾಶಯಗಳಿಗೆ ಒಟ್ಟಾರೆ 4000 ಕ್ಯುಸೆಕ್‌್ಸಗೂ ಹೆಚ್ಚು ಒಳಹರಿವಿದೆ. +ಕೃಷ್ಣಾ ಕೊಳದ ಭದ್ರಾದಲ್ಲಿ ಶೇ.21, ತುಂಗಭದ್ರಾದಲ್ಲಿ ಕೇವಲ ಶೇ.6ರಷ್ಟು ಮಾತ್ರ ನೀರಿದೆ. ಘಟಪ್ರಭಾದಲ್ಲಿ ಶೇ.16, ಮಲಪ್ರಭಾದಲ್ಲಿ ಶೇ.17, ಆಲಮಟ್ಟಿಯಲ್ಲಿ ಶೇ.21, ನಾರಾಯಣಪುರದಲ್ಲಿ ಶೇ.63 ಹಾಗೂ ವಾಣಿ ವಿಲಾಸ ಸಾಗರದಲ್ಲಿ ಶೇ. 60ರಷ್ಟು ನೀರು ಸಂಗ್ರಹವಾಗಿದೆ. +ಕೃಷ್ಣಾ ಕೊಳ್ಳದ ಆರು ಜಲಾಶಯಗಳಲ್ಲಿ 17 ಸಾವಿರ ಕ್ಯುಸೆಕ್‌್ಸಗೂ ಹೆಚ್ಚಿನ ಒಳಹರಿವಿದೆ. ಇತ್ತೀಚೆಗೆ ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಾದ್ದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. +ಸದ್ಯಕ್ಕೆ ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಮತ್ತೆ ವಾರಾಂತ್ಯಕ್ಕೆ ಚೇತರಿಸಿಕೊಳ್ಳುವ ಲಕ್ಷಣಗಳಿವೆ. ವಾಡಿಕೆಗಿಂತ ಹೆಚ್ಚು ಮಳೆ ಎರಡು ವಾರಗಳಲ್ಲಿ ಆಗಿದ್ದರೂ ಭಾರೀ ಮಳೆಯಾಗಿಲ್ಲ. ಹೀಗಾಗಿ ಬರದ ತೀವ್ರತೆ ತಗ್ಗಿದೆಯೇ ಹೊರತು ಜಲಾಶಯಗಳ ಒಳ ಹರಿವು ಗಣನೀಯವಾಗಿ ಹೆಚ್ಚಳವಾಗಿಲ್ಲ. ಹೀಗಾಗಿ ಮಳೆ ಬಂದರೂ ನೀರಿಗೆ ಬರ ಎನ್ನುವಂತಾಗಿದೆ. ಪ್ರಸಕ್ತ ಜಲ ವರ್ಷದ ಆರಂಭವಾಗಿದ್ದು, ನೆರೆಯ ರಾಜ್ಯಗಳ ಪಾಲಿನ ನೀರನ್ನು ಬಿಡಬೇಕಾದ ಸಂಕಷ್ಟ ಮುಂದಿನ ತಿಂಗಳಿನಿಂದ ಪ್ರಾರಂಭವಾಗಲಿದೆ. \ No newline at end of file diff --git a/eesanje/url_46_108_5.txt b/eesanje/url_46_108_5.txt new file mode 100644 index 0000000000000000000000000000000000000000..ab14d94c076d2f8b3bede53f030c4687f79a3e83 --- /dev/null +++ b/eesanje/url_46_108_5.txt @@ -0,0 +1,14 @@ +ಪೆಟ್ರೋಲ್‌- ಡೀಸೆಲ್‌ ತೆರಿಗೆ ಏರಿಕೆ ಬೆನ್ನಲ್ಲೇ ಬಸ್‌‍ ದರ ಹೆಚ್ಚಳ ‘ಗ್ಯಾರಂಟಿ’ +ಬೆಂಗಳೂರು, ಜೂ.16-ಡೀಸೆಲ್‌ ಹಾಗೂ ಪೆಟ್ರೋಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆೆಎಸ್‌‍ಆರ್‌ಟಿಸಿ ಹಾಗೂ ಬಿಎಂಟಿಸಿ) ಬಸ್‌‍ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. +ಈಗಾಗಲೇ ಶೇ.25 ರಿಂದ 35 ರಷ್ಟು ಟಿಕೆಟ್‌ ದರ ಹೆಚ್ಚಳದ ಪ್ರಸ್ತಾವನೆಯನ್ನು ಸಾರಿಗೆ ಇಲಾಖೆ ಸಲ್ಲಿಸಿದ್ದು, ಅಂತಿಮವಾಗಿ ದರ ಪರಿಷ್ಕರಣೆಯ ತೀರ್ಮಾನವನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಡಲಾಗಿದೆ. ಮೂಲಗಳ ಪ್ರಕಾರ, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಸ್‌‍ದರ ಪರಿಷ್ಕರಣೆ ಕುರಿತಂತೆ ಸರ್ಕಾರ ಯಾವುದಾದರೂ ಒಂದು ನಿರ್ಧಾರ ತೆಗೆದುಕೊಳ್ಳುವ ಸಂಭವವಿದೆ. +ಮೂಲಗಳ ಪ್ರಕಾರ, ಸರ್ಕಾರ ಈ ಬಾರಿ ಬಸ್‌‍ ಪ್ರಯಾಣದ ದರವನ್ನು ಶೇ.15 ರಿಂದ 25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಹಿಂದೆ ಲೋಕಸಭಾ ಚುನಾವಣೆಗೂ ಮುನ್ನವೇ ಟಿಕೆಟ್‌ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಜೊತೆಗೆ ಚುನಾವಣಾ ಸಂದರ್ಭದಲ್ಲೇ ದರ ಹೆಚ್ಚಳ ಮಾಡಿದರೆ ಮತದಾರರ ಆಕ್ರೋಶಕ್ಕೆ ಗುರಿಯಾಗಬಹುದೆಂಬ ಕಾರಣದಿಂದ ಸರ್ಕಾರವು ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. +ಇದೀಗ ಲೋಕಸಭಾ ಚುನಾವಣೆ ಮುಗಿದಿದ್ದು, ಪ್ರತೀ ಲೀಟರ್‌ ಡೀಸೆಲ್‌ಗೆ 3 ರೂ. ಹಾಗೂ ಪೆಟ್ರೋಲ್‌ಗೆ 3.50 ರೂ. ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಲಾಗಿದ್ದು, ಶನಿವಾರದಿಂದಲೇ ಪರಿಷ್ಕೃತ ದರ ರಾಜ್ಯಾದ್ಯಂತ ಜಾರಿಯಾಗಿದೆ. ಈಗ ಸಾರಿಗೆ ಸಂಸ್ಥೆಯಲ್ಲಿ ಉಂಟಾಗುತ್ತಿರುವ ನಷ್ಟವನ್ನು ಸರಿದೂಗಿಸಲು ಸರ್ಕಾರ ಬಸ್‌‍ ದರವನ್ನು ಹೆಚ್ಚಳ ಮಾಡುವ ಅನಿವಾರ್ಯತೆಗೆ ಸಿಲುಕಿದೆ. +ಡೀಸೆಲ್‌ ಹಾಗೂ ಪೆಟ್ರೋಲ್‌ ದರ ಹೆಚ್ಚಳ ಮಾಡುವುದರಿಂದ ಕೆಎಸ್‌‍ಆರ್‌ಟಿಸಿಗೆ ವಾರ್ಷಿಕ 65 ಕೋಟಿ ರೂ. ಹಾಗೂ ಬಿಎಂಟಿಸಿಗೆ 32 ಕೋಟಿ ರೂ. ಹೊರೆಯಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಕೆಎಸ್‌‍ಆರ್‌ಟಿಸಿ ಪ್ರತಿದಿನ ಬಸ್‌‍ಗಳ ಕಾರ್ಯಾಚರಣೆಗೆ 6.2 ಲಕ್ಷ ಲೀಟರ್‌ ಡೀಸೆಲ್‌ ಖರೀದಿಸುತ್ತಿದೆ. ಇದರಿಂದ ತಿಂಗಳಿಗೆ 5.4 ಕೋಟಿ ಹಾಗೂ ವಾರ್ಷಿಕ 65 ಕೋಟಿಗೆ ಹೆಚ್ಚಳವಾಗಲಿದೆ. +ಹೀಗಾಗಿ ಬಸ್‌‍ ದರ ಏರಿಸುವುದು ಅನಿವಾರ್ಯ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಇದೇ ರೀತಿ ಬಿಎಂಟಿಸಿಗೂ ದಿನಕ್ಕೆ 8.7 ಲಕ್ಷ ರೂ. ಮೌಲ್ಯದ ಬೆಲೆಯ ಡೀಸೆಲ್‌ ಖರೀದಿಸಬೇಕಾಗುತ್ತದೆ. ವಾರ್ಷಿಕವಾಗಿ ನಮಗೆ 32 ಕೋಟಿ ರೂ. ಬೇಕು. ಪ್ರತಿ ಕಿ.ಮೀ.ಗೆ ನಿರ್ವಹಣಾ ವೆಚ್ಚ 66 ರಿಂದ 78 ರೂ. ಆಗುತ್ತದೆ. ಇದರಿಂದ ಸಂಸ್ಥೆ ನಿರ್ವಹಣೆ ಕಷ್ಟವಾಗುತ್ತದೆ ಎಂದು ಅಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ. +ಆರ್ಥಿಕ ಸಂಕಷ್ಟ :ರಾಜ್ಯಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಸಾರಿಗೆ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆ ಜಾರಿಗೆ ಬಂದ ಮೇಲೆ ಮಹಿಳೆಯರೇನೋ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಬಸ್ಸುಗಳಿಗೆ ಆದಾಯವಿಲ್ಲದೆ, ಈಶಾನ್ಯ ಸಾರಿಗೆ ಸಂಸ್ಥೆ, ವಾಯವ್ಯ, ನೈರುತ್ಯ ಹಾಗೂ ಬಿಎಂಟಿಸಿ ಸಂಸ್ಥೆಗಳು ಕನಿಷ್ಟ ಪಕ್ಷ ಸಿಬ್ಬಂದಿಗಳಿಗೆ ವೇತನ ನೀಡಲೂ ಸಾಧ್ಯವಾಗದ ಸ್ಥಿತಿ ಬಂದಿದೆ. +ಸಂಸ್ಥೆ ನಷ್ಟದಲ್ಲಿಲ್ಲ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆಯಾದರೂ ವಾಸ್ತವ ಚಿತ್ರಣ ಬೇರೆಯದೇ ಇದೆ. 2020 ರಲ್ಲಿ ಕೊನೆಯ ಬಾರಿಗೆ ಟಿಕೆಟ್‌ ದರವನ್ನು ಪರಿಷ್ಕರಣೆ ಮಾಡಲಾಗಿತ್ತು. ಅಂದು ಡೀಸೆಲ್‌ ದರ 61 ರೂ. ಇದ್ದರೆ, ಪೆಟ್ರೋಲ್‌ ದರ 90 ಇತ್ತು. ಪ್ರಸ್ತುತ ರಾಜ್ಯದಲ್ಲಿ ಡೀಸೆಲ್‌ ದರ ಶನಿವಾರದಿಂದ ಬೆಂಗಳೂರಿನಲ್ಲಿ 88.93 ಪೈಸೆ ಇದ್ದರೆ, ಪೆಟ್ರೋಲ್‌ ದರ 102.83 ಪೈಸೆ ಇದೆ. ಕೇವಲ ನಾಲ್ಕು ವರ್ಷಗಳಲ್ಲಿ ಅಜಗಜಾಂತರ ವ್ಯತ್ಯಾಸವಿರುವುದರಿಂದ ದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದು ಅಧಿಕಾರಿಗಳೇ ಹೇಳುತ್ತಾರೆ. +ಡೀಸೆಲ್‌ ಬೆಲೆ ಏರಿಕೆ, ಸಿಬ್ಬಂದಿಯ ತುಟ್ಟಿ ಭತ್ಯೆ ಹೆಚ್ಚಳದಿಂದಾಗಿ ಸಂಸ್ಥೆಗೆ ಆರ್ಥಿಕ ಹೊರೆ ಬೀಳುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊರೆಯಾಗದಂತೆ ಟಿಕೆಟ್‌ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಅಂತಿಮವಾಗಿ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ ಎಂಬುದು ಅಧಿಕಾರಿಗಳ ವಿವರಣೆಯಾಗಿದೆ. +ನಮ ಗಳಿಕೆಯ ಶೇ.45 ಕ್ಕಿಂತ ಹೆಚ್ಚು ಡೀಸೆಲ್‌ಗೆ ಹೋಗುತ್ತದೆ. ಅದರ ಬೆಲೆ ಕಳೆದ ನಾಲ್ಕು ವರ್ಷಗಳಲ್ಲಿ ಹೆಚ್ಚಾಗಿದೆ. ಮೊದಲು ದಿನಕ್ಕೆ 3 ಕೋಟಿ ರೂ. ಖರ್ಚು ಮಾಡಿತ್ತ್ದೆಿವು. ಆದರೆ ಈಗ 5 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಬೇಕಾಗಿದೆ. ಹೀಗಾದರೆ, ನಮ ಆರ್ಥಿಕ ಸಂಪನೂಲಗಳನ್ನು ನಾವು ಹೇಗೆ ನಿರ್ವಹಿಸುವುದು ಎಂದು ಪ್ರಶ್ನಿಸಿದ್ದಾರೆ. +ಸಗಟು ಬೆಲೆ ಸೂಚ್ಯಂಕಕ್ಕೆ (ಡಬ್ಲ್ಯುಪಿಐ) ಅನುಗುಣವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕವಾಗಿ ಹೆದ್ದಾರಿ ಟೋಲ್‌ಗಳನ್ನು ಹೇಗೆ ಹೆಚ್ಚಿಸುತ್ತದೆಯೋ ಹಾಗೆಯೇ ಬಸ್‌‍ ನಿಗಮಗಳು ಸಹ ಒಂದು ಸೂತ್ರವನ್ನು ಹೊಂದಿವೆ. +ಶೇ.20ರಷ್ಟು ಏರಿಕೆಯಾಗಿರುವ ವೇತನ, ಶೇ.46ರಷ್ಟು ಏರಿಕೆಯಾಗಿರುವ ಡೀಸೆಲ್‌ ಬೆಲೆ ಮತ್ತು ಬಿಡಿಭಾಗಗಳು ಮತ್ತು ಇತರ ಬೆಲೆಗಳನ್ನು ಪರಿಗಣಿಸಿದರೆ, ಟಿಕೆಟ್‌ ದರವನ್ನು ಸುಮಾರು ಶೇ.40ರಷ್ಟು ಹೆಚ್ಚಿಸಬೇಕಾಗುತ್ತದೆ. ಆದರೆ ಇದು ಸಾರ್ವಜನಿಕ ಬಸ್‌‍ ನಿಗಮವಾಗಿದ್ದು, ನಮ ಆದ್ಯತೆ ಲಾಭ ಗಳಿಸುವುದಲ್ಲ, ಅದು ಜನರ ಸೇವೆ. ಟಿಕೆಟ್‌ ದರವನ್ನು ತೀವ್ರವಾಗಿ ಹೆಚ್ಚಿಸಲು ನಾವು ಬಯಸುವುದಿಲ್ಲ, ಅದು ಜನರನ್ನು ಕಷ್ಟಕ್ಕೆ ನೂಕುತ್ತದೆ ಎಂದು ಹೇಳಿದ್ದಾರೆ. +ಈ ವರ್ಷ ಸರ್ಕಾರವು ಟಿಕೆಟ್‌ ದರ ಹೆಚ್ಚಳದ ಪ್ರಸ್ತಾವನೆಯನ್ನು ಅನುಮೋದಿಸುತ್ತದೆ. ಪ್ರತಿ ವರ್ಷ ಬಜೆಟ್‌ನಲ್ಲಿ ಹೊಸ ಬಸ್‌‍ಗಳನ್ನು ಖರೀದಿಸಲು, ನೌಕರರಿಗೆ ವೇತನ ನೀಡಿಕೆ ತೆರವುಗೊಳಿಸಲು, ಕಟ್ಟಡಗಳಿಗೆ ಮತ್ತು ಇತರರಿಗೆ ವಿಶೇಷ ಅನುದಾನವನ್ನು ನಾವು ಪಡೆಯುತ್ತೇವೆ. ಆದರೆ ಶಕ್ತಿ ಯೋಜನೆಯ ನಂತರ, ಸರ್ಕಾರವು ಯಾವುದೇ ಅನುದಾನವನ್ನು ನೀಡುತ್ತಿಲ್ಲ. ನಮ ಆದಾಯದಿಂದ ನಮ ನಿಗಮಗಳನ್ನು ನಡೆಸಬೇಕಾಗಿದೆ. ಹೆಚ್ಚಳದ ಪ್ರಸ್ತಾವನೆಯು ಶೇ. 25-30 ಆಗಿದ್ದರೆ, ಸರ್ಕಾರವು 15-20 ಪ್ರತಿಶತ ಹೆಚ್ಚಳವನ್ನು ಒಪ್ಪಿಕೊಳ್ಳಬಹುದು ಎಂದು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_108_6.txt b/eesanje/url_46_108_6.txt new file mode 100644 index 0000000000000000000000000000000000000000..e4b3790136d4e122394c2bb168e8dd891d45f932 --- /dev/null +++ b/eesanje/url_46_108_6.txt @@ -0,0 +1,8 @@ +ಮತ್ತೆ ಸೆಂಚುರಿಯತ್ತ ಟಮೊಟೋ ಬೆಲೆ +ಬೆಂಗಳೂರು, ಜೂ.16-ಲಾಟರಿ ಬೆಳೆ ಎಂದು ಹೇಳಲಾಗುವ ಕೆಂಪು ಸುಂದರಿ ಟಮೊಟೋ ಬೆಲೆ ಮತ್ತೆ ಏರುತ್ತಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ.ಕಳೆದ ಕೆಲ ತಿಂಗಳ ಹಿಂದೆ ಡಬ್ಬಲ್‌ ಸೆಂಚುರಿ ಭಾರಿಸಿ ಭಾರಿ ಸುದ್ದಿಯಾಗಿದ್ದ ಟಮೋಟೋ ಮತ್ತೆ ಸೆಂಚುರಿಯತ್ತ ಮುನ್ನುಗ್ಗುತ್ತಿದೆ, ಅಡುಗೆ ಮಾಡಲು ಯಾವ ತರಕಾರಿ ಇಲ್ಲದ್ದರೂ ಪರವಾಗಿಲ್ಲ ಒಂದೆ ಒಂದು ಟಮೋಟೋ ಇದ್ದರೆ ಸಾಕು ಅಂದಿನ ದಿನ ಕಳೆಯಬಹುದು ಅಷ್ಟರ ಮಟ್ಟಿಗೆ ಅಡುಗೆ ಮನೆಯಲ್ಲಿ ಪ್ರಾಮುಖ್ಯತೆಯನ್ನು ಪಡೆದು ಕೊಂಡಿದೆ. +ಐಮೋಟೋ ಬೆಳೆದು ಶ್ರೀಮಂತರಾದವರು ಇದ್ದರೆ ಸಾಲದ ಸುಳಿಗೆ ಸಿಲುಕಿರುವವರ ಹಲವಾರು ನಿದರ್ಶನಗಳನ್ನು ಕಾಣಬಹುದಾಗಿದೆ. ಅದಕ್ಕೆ ಗ್ರಾಮಾಂತರ ಭಾಗದಲ್ಲಿ ಇದು ಲಾಟರಿ ಬೆಳೆ ಎಂದು ಹೇಳುತ್ತಾರೆ. ಬೆಳೆ ಕೈ ಹಿಡಿದರೆ ಅದೃಷ್ಟ ಒಲಿಯುತ್ತದೆ, ಇಲ್ಲದಿದ್ದರೆ ಕೆ.ಜಿ.ಗೆ 2 ರಿಂದ 5 ರೂ. ದರವಾಗಿ ರೋಡಿಗೆ ಸುರಿಯ ಬೇಕಾಗುತ್ತದೆ, ಬೆಲೆ ಯಾವಾಗ ಬರುತ್ತದೆ, ಯಾವಾಗ ಕಡಿಮೆಯಾಗುತ್ತದೆ ಎಂದು ಯಾರಿಂದಲೂ ಊಹಿಸಲಾಗದು. +ಕಳೆದ ಕೆಲ ದಿನಗಳ ಹಿಂದೆ ಬರೋಬ್ಬರಿ ಸುಮಾರು ಎರಡು ತಿಂಗಳುಗಳ ಕಾಲ ಮೇಲೇರಿದ ಬೆಲೆ ಕೆಳಗೆ ಇಳಿದೇ ಇರಲಿಲ್ಲ. ಈ ಸಂದರ್ಭದಲ್ಲಿ ಬೆಳೆ ಬೆಳೆದಿದ್ದ ರೈತರು ಲಕ್ಷಾಧೀಶ್ವರರು ಹಾಗೂ ಕೋಟ್ಯಾಧಿಪತಿಗಳಾದ ಉದಾಹರಣೆಗಳನ್ನು ಕಾಣಬಹುದಾಗಿದೆ.ಕಳೆದ ಎರಡು ಮೂರು ತಿಂಗಳು ಬಿಸಿಲು ಜಾಸ್ತಿ ಇತ್ತು. ನೀರಿಲ್ಲದೆ ಇಳುವರಿ ಇರಲಿಲ್ಲ. ಈಗ ಕೆಲವು ಕಡೆ ಮಳೆಯಾಗುತ್ತಿದೆ ಇದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬಂದಿಲ್ಲ ಹಾಗಾಗಿ ಬೆಲೆ ಏರಿಕೆಯಾಗುತ್ತಿದೆ. +ಏಷ್ಯಾದಲ್ಲೆ ದೊಡ್ಡ ಮಾರುಕಟ್ಟೆಯಾದ ಕೋಲಾರ ಮಾರುಕಟ್ಟೆಯಲ್ಲೆ ಬೆಲೆ ದುಬಾರಿಯಾಗಿದೆ. 15 ಕೆ.ಜಿ. ತೂಕದ ಒಂದು ಕ್ರೇಟ್‌ 800 ರಿಂದ ಸಾವಿರ ರೂ.ಗೆ ಮಾರಾಟವಾಗುತ್ತಿದೆ. ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಿಗೆ ಪಾರ್ಸೆಲ್‌ ಹೊಗುತ್ತಿದ್ದು, ಕೋಲಾರ ಚಿಕ್ಕಬಳ್ಳಾಪುರ, ಮಾಲೂರು, ಹೊಸಕೋಟೆ, ಚಿಂತಾಮಣಿ, ಗೌರಿಬಿದರನೂರು ತಾಲ್ಲೂಕುಗಳಲ್ಲಿ ಹೆಚ್ಚಾಗಿ ಬೆಳೆ ಬೆಳೆಯುವ ಪ್ರದೇಶವಾಗಿದ್ದು, ಕೆಲ ದಿನಗಳಿಂದ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಾಲು ಬಾರದಿರುವುದರಿಂದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಬಹುದು. +ತುಮಕೂರು, ರಾಮನಗರ, ಮಾಗಡಿ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಗ್ರಾಮಾಂತರ ಪ್ರದೇಶದಿಂದಲೂ ಟಮೋಟೋ ಮಾರುಕಟ್ಟಗೆ ಹೆಚ್ಚಾಗಿ ಬಾರದಿರುವುದರಿಂದ ಬೆಲೆ ಹೆಚ್ಚಳವಾಗಿದೆ. +ಚಿಲ್ಲರೆಯಾಗಿ ಬೆಂಗಳೂರಿನಲ್ಲಿ ಕೆ.ಜಿ.ಗೆ 70 ರಿಂದ 80 ರೂ.ಗೆ ಮರಾಟವಾಗುತ್ತಿದೆ. ಮಳೆ ಬಂದ ಹಿನ್ನಲೆಯಲ್ಲಿ ರೈತರು ಈಗ ಗಿಡಗಳನ್ನು ನಾಟಿ ಮಾಡಿದ್ದು, ಬೆಳೆ ಬರಲು ಇನ್ನೂ ಒಂದೂವರೆ ಎರಡು ತಿಂಗಳು ಕಾಲಾವಕಾಶ ಬೇಕು. ಅಲ್ಲದೆ ಇರುವ ಬೆಳೆ ಮಳೆಗೆ ನಾಶವಾಗಿದ್ದು ಹೊಸ ಮಾಲು ಮಾರುಕಟ್ಟೆಗೆ ಬರುವ ವರೆಗೂ ಬೆಲೆ ಇಳಿಯುವ ಲಕ್ಷಣಗಳಿಲ್ಲ ಎಂದು ವ್ಯಾಪಾರಿ ಗೊವಿಂದರಾಜು ಎನ್ನುವವರು ತಿಳಿಸಿದ್ದಾರೆ. +ಬೆಲೆ ಹೆಚ್ಚಾದರೆ ರೈತರಿಗೇನೂ ಅಷ್ಟೇನೂ ಸಿಗುವುದಿಲ್ಲ. ಇಲ್ಲಿ ವ್ಯಾಪಾರಿಗಳಿಗೆ ಹಾಗೂ ದಲ್ಲಾಳಿಗಳಿಗೆ ಲಾಭವಾಗುತ್ತದೆ. ರೈತರ ಬಳಿ ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತದೆ. ಕೂಲಿ, ಗೊಬ್ಬರ, ಬಿತ್ತನೆ ಬೀಜ, ಔಷಧಿ ಎಲ್ಲವನ್ನೂ ಲೆಕ್ಕ ಹಾಕಿದರೆ ರೈತರಿಗೇನೂ ಉಳಿಯವುದಿಲ್ಲ. \ No newline at end of file diff --git a/eesanje/url_46_108_7.txt b/eesanje/url_46_108_7.txt new file mode 100644 index 0000000000000000000000000000000000000000..574fa51c8cd0400dac5f4c252cba974241d973c0 --- /dev/null +++ b/eesanje/url_46_108_7.txt @@ -0,0 +1,7 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಲ್ಲಾ ಆರೋಪಿಗಳು ಮತ್ತೆ 5 ದಿನ ಪೊಲೀಸರ ವಶಕ್ಕೆ + + +ಬೆಂಗಳೂರು.ಜೂ.15 : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರ ಗೌಡ ಪವನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು 42ನೇ ಎಸಿಎಂ ಎಂ ನ್ಯಾಯಾಲಯ ಮತ್ತೆ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ. +ಆರೋಪಿಗಳ ವಿಚಾರಣೆಗಾಗಿ ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದ ಪೊಲೀಸರು ಇಂದು ನ್ಯಾಯಾಲಯ ಮುಂದೆ ಆರೋಪಿಗಳನ್ನ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡಬೇಕೆಂದು ಮಾಡಿದ ಮನವಿಯನ್ನು ಪುರಸ್ಕರಿಸಿದ 42ನೇ ಎಸಿ ಎಮ್ ಎಮ್ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ್ ಗೌಡ ರವರು ಜೂನ್ 20ರವರೆಗೆ ಎಲ್ಲ ಹದಿಮೂರು ಆರೋಪಿಗಳನ್ನ ಪೊಲೀಸ್ ವಶಕ್ಕೆ ನೀಡಿದರು. +ಆರೋಪಿಗಳ ಹೆಚ್ಚಿನ ವಿಚಾರಣೆಯ ಅಗತ್ಯವಿದೆ ಮೈಸೂರಿನಲ್ಲಿ ಸ್ಥಳಮಹಜರು ಮಾಡಬೇಕಾಗಿದೆ ಮೃತ ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ ಈ ಸಂಬಂಧ ಡಿವೈಸ್ ವಶಪಡಿಸಿಕೊಳ್ಳಬೇಕಾಗಿದೆ ಆರೋಪಿಗಳನ್ನು ಕನಿಷ್ಠ 9 ದಿನಗಳ ಕಾಲ ಪೊಲೀಸ್ ಕಷ್ಟಡಿಗೆ ನೀಡಬೇಕೆಂದು ಸರ್ಕಾರಿ ಪರ ಪ್ರಬಲವಾದ ಮಂಡಿಸಿದರು. +ಎಲ್ಲದಕ್ಕೂ ದರ್ಶನ್ ಕಾರಣ ಎನ್ನಲಾಗುತ್ತಿದೆ ಆರೋಪಿಗಳ ಹೇಳಿಕೆಗಳು ಸೋರಿಕೆಯಾಗುತ್ತಿವೆ. ಈಗಾಗಲೇ ಆರು ದಿನ ಪೊಲೀಸರ ವಿಚಾರಣೆ ನಡೆಸಲಾಗಿದೆ ವಾದ ಮಂಡಿಸಿದರುವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಐದು ದಿನಗಳ ಕಾಲ 13 ಆರೋಪಿಗಳನ್ನು ಪೊಲೀಸ್ ಕಷ್ಟಡಿಗೆ ನೀಡಿ ಆದೇಶಿಸಿದರು. \ No newline at end of file diff --git a/eesanje/url_46_108_8.txt b/eesanje/url_46_108_8.txt new file mode 100644 index 0000000000000000000000000000000000000000..59295faa726f0c5e4713eafc9419d557f8875467 --- /dev/null +++ b/eesanje/url_46_108_8.txt @@ -0,0 +1,8 @@ +ಚನ್ನಪಟ್ಟಣ ಉಪ ಚುನಾವಣೆ ಘೋಷಣೆ ಬಳಿಕ ಅಭ್ಯರ್ಥಿ ಆಯ್ಕೆ : ಹೆಚ್‌ಡಿಕೆ +ಬೆಂಗಳೂರು, ಜೂ.15-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬಳಿಕ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡುವುದಾಗಿ ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. +ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಘೋಷಣೆಯಾಗಲಿ. ಆ ನಂತರ ಅಭ್ಯರ್ಥಿ ಆಯ್ಕೆ ಕುರಿತು ಮಾತನಾಡೋಣ ಎಂದರು. +ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ದೊಡ್ಡವರು, ಅವರು ಏನು ಬೇಕಾದರೂ ಮಾತನಾಡಲಿ ಎಂದು ತಿರುಗೇಟು ನೀಡಿದರು. ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದಿಲ್ಲ ಎಂಬ ಸುರೇಶ್‌ ಅವರ ಹೇಳಿಕೆಗೆ ಮೇಲಿನಂತೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. +ಕುಮಾರಸ್ವಾಮಿ ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃದು ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳ ನಡೆಯನ್ನು ಸ್ವಾಗತ ಮಾಡೋಣ ಬಿಡಿ ಎಂದು ಹೇಳಿದರು. +ಲೋಕಸಭೆಗೆ ಆಯ್ಕೆಯಾದ ಮೇಲೆ ಸಂಸತ್‌ ಸದಸ್ಯ ಸ್ಥಾನ ಇಲ್ಲವೆ ಶಾಸಕ ಸ್ಥಾನ ಎರಡರಲ್ಲಿ ಒಂದು ಮಾತ್ರ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇಂದು ಸಲ್ಲಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು.ದಕ್ಷಿಣ ಕನ್ನಡ ಜಿಲ್ಲೆ ಕೈಗಾರಿಕೆಗೆ ಪ್ರೋತ್ಸಾಹ: ದಕ್ಷಿಣ ಕನ್ನಡ ಜಿಲ್ಲೆಯ ಕೈಗಾರಿಕಾ ಯೋಜನೆಗಳಿಗೆ ಪ್ರೋತ್ಸಾಹ ನೀಡುವಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸಲಹೆ ಮಾಡಿದರು. +ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ತಮ ಕಚೇರಿಯಲ್ಲಿ ರಾಜೀನಾಮೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಸಭಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದಾರು ಕೈಗಾರಿಕಾ ಯೋಜನೆಗಳಿವೆ. ಅವುಗಳಿಗೆ ನಿಮ ಬೆಂಬಲ ಬೇಕು. ನಿಮಿಂದ ರಾಜ್ಯ ಯೋಜನೆಗಳ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ ಎಂದರು. +ಆಗ ಮಾತನಾಡಿದ ಕುಮಾರಸ್ವಾಮಿ ಅವರು, ಕೈಗಾರಿಕೆಗಳಿಗೆ ಸಂಬಂಧಿಸಿದ ಯೋಜನೆಗಳ ಮಾಹಿತಿಯನ್ನು ಗಮನಕ್ಕೆ ತಂದರೆ, ಕೈಲಾದ ಬೆಂಬಲ ನೀಡುವೆ ಎಂದು ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_108_9.txt b/eesanje/url_46_108_9.txt new file mode 100644 index 0000000000000000000000000000000000000000..eeca2917882a53a82d705e75f5510627e3c3008e --- /dev/null +++ b/eesanje/url_46_108_9.txt @@ -0,0 +1,6 @@ +ಕೃಷ್ಣಾ, ಕಾವೇರಿ ಜಲ ವಿವಾದಗಳಿಗೆ ಸಂಸತ್ತಿನಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇನೆ : ಬೊಮ್ಮಾಯಿ +ಬೆಂಗಳೂರು,ಜೂ.15-ಸಂಸತ್ತಿನಲ್ಲಿ ಕರ್ನಾಟಕದ ನೀರಾವರಿ ಯೋಜನೆಗಳಾದ ಕೃಷ್ಣಾ, ಕಾವೇರಿ ಅಂತರಾಜ್ಯ ಜಲ ವಿವಾದಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ. ಸಂಸತ್ತಿನಲ್ಲಿ ಪ್ರಮಾಣಿಕವಾಗಿ ಕನ್ನಡಿಗರ ಪರವಾಗಿ ಧ್ವನಿ ಎತ್ತುವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. +ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಮೇಲೆ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಂಸದನಾಗಿ ಆಯ್ಕೆಯಾಗಿ ದೆಹಲಿಗೆ ಹೋದರೂ, ಕರ್ನಾಟಕದ ರಾಜಕಾರಣದಲ್ಲಿ ನಾನು ಸಕ್ರಿಯನಾಗಿರುತ್ತೇನೆ. ನಮ ವರಿಷ್ಠರು ಅದೇ ಕಾರಣಕ್ಕೆ ಕೆಲವು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. +ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ನಿಯಮಾನುಸಾರ ಮನವಿ ಸಲ್ಲಿಸಬೇಕು. ಹಿಂದೆ ನಾವು ಎಐಬಿಪಿಯಲ್ಲಿ ಸುಮಾರು ಆರು ತಿಂಗಳು ದೆಹಲಿಯಲ್ಲಿ ನಮ ಅಧಿಕಾರಿಗಳನ್ನು ಇಟ್ಟು ಸುಮಾರು 3800 ಕೊಟಿ ರೂ. ತಂದಿದ್ದೆ. ಕೇಂದ್ರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿಟ್ಟಿರುವ 5000 ಕೋಟಿ ರೂ ತರಲು ರಾಜ್ಯದ ಸಚಿವರು ಹಾಗೂ ಕೇಂದ್ರ ಸರ್ಕಾರದ ಸಚಿವರ ಜೊತೆ ಮಾತನಾಡಿ ಹಣ ತರಲು ಪ್ರಯತ್ನಿಸುತ್ತೇನೆ ಎಂದರು. +ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ನಾವು ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವು. ಇದುವರೆಗೂ ಕೇಂದ್ರ ಸರ್ಕಾರ ಯಾವುದೇ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿಲ್ಲ. ಆದರೆ, ನಮ್ಮ ಒತ್ತಾಸೆಯ ಕಾರಣಕ್ಕೆ ಈ ಯೋಜನೆಗೆ ವಿಶೇಷವಾಗಿ 5000 ಕೋಟಿ ರೂ. ನೀಡುವ ಭರವಸೆ ನೀಡಿದ್ದರು ಎಂದು ತಿಳಿಸಿದರು. +ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಆಯ್ಕೆಯಾದ ಹಿನ್ನೆಲೆ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಶಿಗ್ಗಾವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುತ್ತೇನೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದೇನೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಹಾಜರಿದ್ದರು. \ No newline at end of file diff --git a/eesanje/url_46_109_1.txt b/eesanje/url_46_109_1.txt new file mode 100644 index 0000000000000000000000000000000000000000..02140fcc72f008d53e2b0fdff3dc5bf8635a2322 --- /dev/null +++ b/eesanje/url_46_109_1.txt @@ -0,0 +1,5 @@ +ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ +ಬೆಂಗಳೂರು, ಜೂ.15-ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. +ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿನ್ನೆ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು, ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸನಾನ ಸ್ವೀಕರಿಸಿ ಮಾತನಾಡುವ ವೇಳೆ ಸೆಮಿಕಂಡಕ್ಟರ್‌ ತಯಾರಿಸಲು ಬಂಡವಾಳ ಹೂಡಿಕೆಗೆ ಆಗಮಿಸಿರುವ ಅಮೇರಿಕಾದ ಕಂಪನಿಯೊಂದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೀಡಲಾಗುವ ಬೃಹತ್‌ ಪ್ರಮಾಣದ ಸಬ್ಸಿಡಿಯ ಬಗ್ಗೆ ಪ್ರಸ್ತಾಪಿಸಿದ್ದರು. ಇದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು. +ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ತಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವರು, ಸೆಮಿಕಂಡಕ್ಟರ್‌ ಕೈಗಾರಿಕೆಯು ಕಾರ್ಯತಂತ್ರದ ವಲಯವಾಗಿದೆ. ಎಲೆಕ್ಟ್ರಾನಿಕ್‌್ಸ ಮತ್ತು ಆಟೋಮೊಬೈಲ್‌ ಉತ್ಪಾದನೆಗೆ ಮೂಲಭೂತಸೌಲಭ್ಯಗಳು ಅಗತ್ಯ. ಇವೆರಡೂ ಕ್ಷೇತ್ರಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿವೆ ಎಂದಿದ್ದಾರೆ. +ಸೆಮಿಕಂಡಕ್ಟರ್‌ ಕ್ಷೇತ್ರದ ಅಭಿವೃದ್ಧಿಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕ್ರಮಗಳನ್ನು ನಾನು ಪ್ರಶಂಸಿಸುತ್ತೇನೆ. ಭವಿಷ್ಯದಲ್ಲಿ ಈ ವಲಯದ ಅಭಿವೃದ್ಧಿಗೆ ತಮ ಇಲಾಖೆಯಿಂದ ಸಹಭಾಗಿಯಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_109_10.txt b/eesanje/url_46_109_10.txt new file mode 100644 index 0000000000000000000000000000000000000000..611d40f23a80ffe4bb4665c6d7ae8700ce8cfde5 --- /dev/null +++ b/eesanje/url_46_109_10.txt @@ -0,0 +1,15 @@ +ಅಮೆರಿಕದ ವರ್ಜೀನಿಯಾದಲ್ಲಿ ಆ.30, ಸೆ.1ರವರೆಗೆ 12ನೇ ಅಕ್ಕ ವಿಶ್ವ ಸಮ್ಮೇಳನ +ಬೆಂಗಳೂರು, ಜೂನ್‌ 14:ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ ಪಸರಿಸುವ, ಬೆಳೆಸುವ 12ನೇ ಅಕ್ಕ ವಿಶ್ವ ಸಮ್ಮೇಳನ – 2024 ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್‌ ನಗರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷರಾದ ರವಿ ಬೋರೆಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದರಲ್ಲಿ ಒಟ್ಟು 42 ಅಮೆರಿಕ ಕನ್ನಡ ಸಂಘಗಳು ಸೇರಿ ಈ ವಿಶಿಷ್ಠ ಕಾರ್ಯಕ್ರಮವನ್ನು ಆಯೋಜಿಸುತ್ತಿವೆ ಎಂದು ಅವರು ತಿಳಿಸಿದರು. +ಸಮ್ಮೇಳನದ ವೈಶಿಷ್ಟ್ಯಗಳು:ಸಾಂಸ್ಕೃತಿಕ ಕಾರ್ಯಕ್ರಮಗಳು: ಕರ್ನಾಟಕದ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಮೆರಿಕದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.ಸ್ಪರ್ಧೆಗಳು: ಎಲ್ಲಾ ವಯೋಮಾನದವರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ವಿಜೇತರಿಗೆ ಕರ್ನಾಟಕದಿಂದ ಆಗಮಿಸುವ ಗಣ್ಯರಿಂದ ಬಹುಮಾನ ವಿತರಿಸಲಾಗುತ್ತದೆ. +ಫ್ಯಾಶನ್‌ ಶೋ:ಕನ್ನಡ ನಾಡಿನ ಕಲೆ, ಸಂಸ್ಕೃತಿಯ ವಿವಿಧ ಮಾದರಿಯ ವಸ್ತ್ರ ಮಾದರಿಗಳ ಪ್ರದರ್ಶನ ಆಯೋಜಿಸಲಾಗಿದೆ.ಸಾಹಿತ್ಯ ಗೋಷ್ಠಿಗಳು: ಅಮೆರಿಕ ಮತ್ತು ಕರ್ನಾಟಕದ ಸಾಹಿತಿಗಳ ನಡುವೆ ಸಮ್ಮಿಲನ ಮತ್ತು ಸಾಹಿತ್ಯ ವಿಚಾರಗೋಷ್ಠಿಗಳು ಜರುಗಲಿವೆ. +ವಿಶೇಷ ಬಿಸಿನೆಸ್‌‍ ಫೋರಂ:ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗ ವಾಣಿಜ್ಯೋದ್ಯಮಿಗಳಿಗೆ ಹಾಗೂ ಅಲ್ಲಿ ಉದ್ಯಮ ಆರಂಭಿಸಲು ಮತ್ತು ಕೆಲಸ ನಿರ್ವಹಿಸಲು ಇರುವ ಅವಕಾಶಗಳ ಕುರಿತು ಆಸಕ್ತ ಕನ್ನಡಿಗರಿಗಾಗಿ ವಿಶೇಷ ಬಿಸಿನೆಸ್‌‍ ಫೋರಂ ಮೂಲಕ ಚರ್ಚಿ ನಡೆಸಲಾಗುತ್ತದೆ. +ವಿಶೇಷ ಖಾದ್ಯ:ಮೂರು ದಿನಗಳ ಸಮ್ಮೇಳನದಲ್ಲಿ ಕನ್ನಡ ನಾಡಿನ ವಿಶಿಷ್ಠ ಭಕ್ಷ್ಯ ಬೋಜನ ಸವಿಯುವ ಅವಕಾಶ ಲಭಿಸಲಿದೆ. ಕರ್ನಾಟಕದ ಬಹುತೇಕ ಮಾದರಿಯ ಊಟವನ್ನು ಪ್ರಸಿದ್ಧ ಅಡುಗೆ ತಯಾರಕರು ತಯಾರಿಸಿ ಬಡಿಸಲಿದ್ದಾರೆ. +ಪ್ರದರ್ಶನ ಮಳಿಗೆಗಳು:ಅಮೆರಿಕ, ಭಾರತ ಮತ್ತು ಕರ್ನಾಟಕದ ವಿವಿಧ ಇಲಾಖೆ ಮತ್ತು ಮಳಿಗೆಗಳ ಪ್ರದರ್ಶನಗೊಳ್ಳಲಿವೆ. +ಸಂಗೀತ ಕಾರ್ಯಕ್ರಮಗಳು:ಪ್ರತಿದಿನ ಕರ್ನಾಟಕದ ಜಾನಪದ, ಸಾಹಿತ್ಯ, ಸಿನಿಮಾ ಕುರಿತಾದ ಸಂಗೀತ ಕಾರ್ಯಕ್ರಮಗಳು, ಖ್ಯಾತ ಗಾಯಕರಾದ ವಿಜಯ್‌ ಪ್ರಕಾಶ್‌‍, ರಾಜೇಶ್‌ ಕೃಷ್ಣ, ನವೀನ್‌ ಸಜ್ಜು, ಅನುರಾಧ ಭಟ್‌ ಮತ್ತು ಅವರ ತಂಡದಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ. +ಪುನೀತ್‌ ನಮನ:ಅಕಾಲಿಕವಾಗಿ ನಮ್ಮನ್ನು ಅಗಲಿದ ಕರ್ನಾಟಕ ರತ್ನ ಪುನೀತ್‌ ರಾಜ್‌ಕುರ್ಮಾ ಅವರಿಗೆ ಸಮರ್ಪಿತ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. +ಪಾರಂಪರಿಕ ನೃತ್ಯಗಳು:ಕರ್ನಾಟಕದ ಪಾರಂಪರಿಕ ನೃತ್ಯ ರೂಪಗಳು, ಯಕ್ಷಗಾನ, ಡೊಳ್ಳು ಕುಣಿತ ಮತ್ತು ವೀರಗಾಸೆ ಪ್ರದರ್ಶನ ಇರಲಿದೆ. +ನಾಟಕ ಮತ್ತು ರಂಗಭೂಮಿ:ಕರ್ನಾಟಕದ ಪ್ರಸಿದ್ಧ ರಂಗಭೂಮಿ ತಂಡಗಳಿಂದ ಕನ್ನಡ ನಾಟಕಗಳು ಪ್ರದರ್ಶನಗೊಳ್ಳಲಿವೆ. +ವಿಶೇಷ ಅತಿಥಿಗಳು:ರಾಜಕೀಯ ಗಣ್ಯರು: ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು.ಆಧ್ಯಾತ್ಮಿಕ ನಾಯಕರು: ಕರ್ನಾಟಕದ ಗೌರವಾನ್ವಿತ ಆಧ್ಯಾತ್ಮಿಕ ನಾಯಕರು.ಚಲನಚಿತ್ರ ತಾರೆಗಳು: ಕನ್ನಡ ಚಲನಚಿತ್ರ ರಂಗದ ಪ್ರಮುಖ ತಾರೆಯರು, ಗಣ್ಯರು, ಪ್ರಮುಖರು ಭಾಗವಹಿಸುತ್ತಾರೆ.ಸಾಹಿತ್ಯ ಕ್ಷೇತ್ರದ ಗಣ್ಯರು: ಪ್ರಸಿದ್ಧ ಸಾಹಿತಿಗಳು ಮತ್ತು ಕವಿಗಳು.ಉದ್ಯಮಿಗಳು: ನಾಡಿನ ಯಶಸ್ವಿ ಉದ್ಯಮಿಗಳು ಸಮ್ಮೇಳನದಲ್ಲಿ ಭಾಗವಹಿಸುತ್ತಾರೆ. +ವಿಶೇಷ ಆಕರ್ಷಣೆಗಳು:ಕ್ರೀಡಾ ಚಟುವಟಿಕೆಗಳು: ಯುವಕ, ಯುವತಿಯರಿಗಾಗಿ ವಿಶೇಷ ಕ್ರೀಡಾ ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ತಂತ್ರಜ್ಞಾನ ವೇದಿಕೆ: ತಂತ್ರಜ್ಞಾನದಲ್ಲಿ ನಾವಿನ್ಯತೆಗಳು, ನವೀನ ತಂತ್ರಜ್ಞಾನ ಉತ್ಪನ್ನಗಳು ಮತ್ತು ಕನ್ನಡಿಗರ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಚರ್ಚೆಗಳು ನಡೆಯಲಿವೆ.ವರ್ಕ್‌ಶಾಪ್‌ಗಳು ಮತ್ತು ಪರಿಷತ್ತುಗಳು: ಆರೋಗ್ಯ ಮತ್ತು ಆಯುಷ್‌‍, ಶಿಕ್ಷಣ ಮತ್ತು ಕನ್ನಡಿಗರಿಗೆ ಸಂಬಂಧಿಸಿದ ಸಾಮಾಜಿಕ ಸಮಸ್ಯೆಗಳ ಕುರಿತ ಸಂವಾದಗಳು.ಕಲಾ ಪ್ರದರ್ಶನ: ಕನ್ನಡ ಕಲಾವಿದರ ಚಿತ್ರಗಳು, ಶಿಲ್ಪಿಗಳು ಮತ್ತು ಕರಕುಶಲ ವಸ್ತುಗಳ ಪ್ರದರ್ಶನ.ನೆಟ್‌ವರ್ಕಿಂಗ್‌‍ ಕಾರ್ಯಕ್ರಮಗಳು: ವಿಶ್ವದಾದ್ಯಂತ ಇರುವ ಕನ್ನಡಿಗರನ್ನು ಸಂಪರ್ಕಿಸಲು ನೆಟ್‌ ವರ್ಕಿಂಗ್‌ ಕಾರ್ಯಕ್ರಮಗಳ ಆಯೋಜನೆ. +ವಿಶೇಷ ಕಾರ್ಯಕ್ರಮ: ಕನ್ನಡ ಕಲಿಯೋಣ ಬನ್ನಿಕನ್ನಡ ಕಲಿಯೋಣ ಬನ್ನಿ (ಬನ್ನಿ, ಕನ್ನಡ ಕಲಿಯೋಣ) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ಯೋಜನೆಯು ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಮತ್ತು ಕನ್ನಡ ಭಾಷೆಯ ಕಲಿಕೆಯಲ್ಲಿ ಆಸಕ್ತಿ ತೋರಿಸುವ ಎಲ್ಲರಿಗೂ ಕಲಿಸುವ ಉದ್ದೇಶವನ್ನು ಹೊಂದಿದೆ.ಈ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲಾ ಸಂಘಟನೆಗಳು ಸೇರಿ ಅಮೆರಿಕದ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ಒಂದು ವಿಷಯವಾಗಿ ಪರಿಗಣಿಸುವಂತೆ ಕೋರಲು ಪ್ರಯತ್ನ ನಡೆಸುವುದಾಗಿ ತಿಳಿಸಿವೆ. ಈ ಕಾರ್ಯಕ್ರಮವು ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರಿಗೆ ಅನುಕೂಲವಾಗಲಿದೆ.ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದವರು: ಅಕ್ಕ ಅಧ್ಯಕ್ಷರಾದ ರವಿ ಬೋರೇಗೌಡ, ಕಾರ್ಯದರ್ಶಿ ಮಾದೇಶ ಬಸವರಾಜು, ಸಂಚಾಲಕರಾದ ಡಾ. ನವೀನ್‌ ಕೃಷ್ಣ, ಅಕ್ಕ ಭಾರತದ ಸಂಚಾಲಕರಾದ ತಿಮ್ಮಪ್ಪಗೌಡ ಮತ್ತು ಇತರ ಪದಾಧಿಕಾರಿಗಳು. +ಹೆಚ್ಚಿನ ಮಾಹಿತಿಗಾಗಿ:ಸಿ.ಆರ್‌. ಮಂಜುನಾಥ್‌ಮಾಧ್ಯಮ ಸಂಚಾಲಕರು, ಅಕ್ಕಸಂಪರ್ಕ ಸಂಖ್ಯೆ: 9980765001 \ No newline at end of file diff --git a/eesanje/url_46_109_11.txt b/eesanje/url_46_109_11.txt new file mode 100644 index 0000000000000000000000000000000000000000..02d4fc366fbbf71f1a9d3fdd29845fe1ef56368f --- /dev/null +++ b/eesanje/url_46_109_11.txt @@ -0,0 +1,7 @@ +ದರ್ಶನ್‌ ಹಾಗೂ ಅವರ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು : ಎಟಿಆರ್‌ ಆಗ್ರಹ +ಹಾಸನ,ಜೂನ್‌.14-ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಯಾಗಿರುವ ನಟ ದರ್ಶನ್‌ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು ಎಂದು ಮಾಜಿ ಶಾಸಕ ಎ ಟಿ ರಾಮಸ್ವಾಮಿ ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉರಿದವರು ಬೂದಿ ಆಗಲೇಬೇಕು ಉರಿದವರು ಒಂದಲ್ಲ ಒಂದು ದಿನ ನಾಶ ಆಗುತ್ತಾರೆ ಎನ್ನುವುದಕ್ಕೆ ನಟ ದರ್ಶನ್‌ ಸ್ಪಷ್ಟ ಉದಾಹರಣೆಯಾಗಿದ್ದಾರೆ.ಇವರನ್ನು ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಹೊರದಬ್ಬ ಬೇಕು ಹಾಗೂ ಇವರ ಸಿನಿಮಾಗಳನ್ನು ಬ್ಯಾನ್‌ ಮಾಡಬೇಕು ಎಂದು ಆಗ್ರಹಿಸಿದರು . +ನಟ ದರ್ಶನ್‌ ಮಾಡಿರುವ ಘನ ಘೋರ ಅಪರಾಧಗಳನ್ನು ನಾವೆಲ್ಲರೂ ಖಂಡಿಸಲೇಬೇಕು, ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಸಿನಿಮಾ ಶೈಲಿಯಲ್ಲಿ ಅಪಹರಣ ಮಾಡಿ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಿದ್ದಾರೆ. ಓರ್ವ ನಟನಾದವನು ನಾಡಿನ ಕಲೆ ಸಂಸ್ಕೃತಿ ಸಂಪ್ರದಾಯವನ್ನು ಎತ್ತಿ ಹಿಡಿಯಬೇಕಿತ್ತು, ಆದರೆ ಮೇರು ನಟ ಎಂದು ಹೆಸರು ಪಡೆದಿದ್ದ ದರ್ಶನ್‌ ಹಾಗೂ ಅವರ ಪಟಾಲಂಗಳು ಹತ್ಯೆ ಮಾಡಿರುವುದು ನೋಡಿ ಧಿಗ್ಭ್ರಮೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು . +ಇಂತಹ ವ್ಯಯಕ್ತಿಗಳಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಹಣ ಹೆಸರು ಬೆಳೆಸಿ ಇಂತಹ ಹೇಯ ಕೃತ್ಯವನ್ನು ಮಾಡಿರುವುದು ನಾಡಿಗೆ ಅಗೌರವ ತಂದಂತಾಗಿದೆ. ಹಿಂದೆ ಆರೋಪಿಗಳು ಹಣದಿಂದ ಇಂತಹ ಪ್ರಕರಣಗಳಲ್ಲಿ ಕುಲಾಸಿಯಾಗಿದ್ದಾರೆ. ಇದು ಕಾನೂನಿನ ದೌರ್ಬಲ್ಯವೋ? ಎನ್ನುವುದು ತಿಳಿಯುತ್ತಿಲ್ಲ .ಆದರೆ ಈಗ ರಣರೋಚಕ ದುರ್ಘಟನೆ ನಡೆದಿದ್ದು, ಪೊಲೀಸ್‌‍ ಇಲಾಖೆ ದರ್ಶನ್‌ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಿಂದೆ ಹಲವು ದೇಶದ್ರೋಹಿ ಕೋಟಾ ನೋಟು ಮುದ್ರಣ ದಂತಹ ಪ್ರಕರಣಗಳಲ್ಲೂ ಖುಲಾಸೆಯಾಗಿರುವ ಸನ್ನಿವೇಶನಗಳನ್ನು ಕಂಡಿದ್ದೇವೆ ಸರ್ಕಾರ ಮತ್ತು ಇಲಾಖೆಗಳು ಕಾನೂನು ಕ್ರಮದ ಜೊತೆಗೆ ಎಷ್ಟು ಜನಕ್ಕೆ ಶಿಕ್ಷೆಯಾಯಿತು ಎನ್ನುವುದನ್ನು ಗಮನಿಸಬೇಕು. ಈ ರೀತಿಯ ಪ್ರಕರಣಗಳಲ್ಲಿ ಶೀಘ್ರ ಶಿಕ್ಷೆಯಾದರೆ ಮಾತ್ರ ಸಮಾಜಕ್ಕೆ ಉತ್ತಮ ಸಂದೇಶ ರವಾನಿಯಾಗುತ್ತದೆ ಎಂದರು.ರೇಣುಕಸ್ವಾಮಿ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅನ್ನು ತೆರೆಯುವ ಮೂಲಕ ಕನಿಷ್ಠ ಮೂರು ತಿಂಗಳಲ್ಲಿ ದರ್ಶನ್‌ ಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. +ಇನ್ನು ವಾಲ್ಮೀಕಿ ನಿಗಮದ ಹಣ ಲೂಟಿಕೋರರ ಪಾಲಾಗಿದ್ದು ಇದರ ಹಿಂದೆ ದೊಡ್ಡ ಶಕ್ತಿಯೇ ಅಡಗಿದ್ದು ಈ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ರಾಮಸ್ವಾಮಿ ಒತ್ತಾಯಿಸಿದರು .ಈ ಹಿಂದೆಯೂ ಹಲವಾರು ನಿಗಮ ಮಂಡಳಿಗಳಲ್ಲಿ ಅವ್‌ಯವಹಾರ ನಡೆದಿದೆ. ಆಡಳಿತ ನಡೆಸುವವರು ಬಾಯಲ್ಲಿ ಮಾತ್ರ ಪಾರದರ್ಶಕತೆ ಆಡಳಿತ ನೀಡುವುದಾಗಿ ಹೇಳುತ್ತಾರೆ. ಆದರೆ ಅಂತಹ ಆಡಳಿತ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಒಳ್ಳೆಯ ಬೆಳೆ ಬರಲು ಕಳೆ ಕೀಳಬೇಕು ಅಂತಯೇ ಉತ್ತಮ ಆಡಳಿತಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಆಗಲೇಬೇಕು ಇದು ದೊಡ್ಡ ಹಗರಣವಾಗಿದ್ದು ಸಣ್ಣವರಿಂದ ಅಪರಾಧ ನಡೆದಿಲ್ಲ, ದೊಡ್ಡವರೆ ಇಂತಹ ಕೃತ್ಯ ಮಾಡಿದ್ದಾರೆ ಎಂದರು. ಸರ್ಕಾರಕ್ಕೆ ಬದ್ಧತೆ ಇದ್ದರೆ ಇಂತಹ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಈ ಮೂಲಕ ಜನರಿಗೆ ದೊಡ್ಡ ಸಂದೇಶವನ್ನು ಸಾರಬೇಕಿದೆ. ಇಂತಹ ಭ್ರಷ್ಟಾಚಾರ ಬೆಳೆಯಲು ಬಿಡದೆ ನಿಯಂತ್ರಣ ಮಾಡಬೇಕಿದ್ದು ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. +ಸಾರ್ವಜನಿಕರ ಆಸ್ತಿ ಹಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್‌ಯವಾಗಿದೆ. ಆದರೆ ಈ ನಿಟ್ಟಿನಲ್ಲಿ ಕಠಿಣ ಕ್ರಮಗಳು ಜರುಗುತ್ತಿರುವುದು ಕಡಿಮೆಯಾಗಿದೆ, ಎಂಜಲು ತಿಂದವರು ಆರೋಗ್ಯವಾಗಿರಲು ಸಾಧ್ಯವಿಲ್ಲ ಇಂತಹ ಪ್ರಕರಣದಲ್ಲಿ ಸಿಲುಕಿರುವವರು ಹೆಚ್ಚು ದಿನ ಕಾನೂನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.ಪತ್ರಿಕಾಗೋಷ್ಠಿಯಲ್ಲಿ ಜನಾರ್ಧನ್‌‍, ಮಾದೇಶ್‌‍, ಲೋಕೇಶ್‌ ಇದ್ದರು. \ No newline at end of file diff --git a/eesanje/url_46_109_12.txt b/eesanje/url_46_109_12.txt new file mode 100644 index 0000000000000000000000000000000000000000..7a0635848d4d9dbb1d2811aa692855cd6a3f29b4 --- /dev/null +++ b/eesanje/url_46_109_12.txt @@ -0,0 +1,7 @@ +ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಬೇಟಿ + +ತುಮಕೂರು,ಜೂನ್‌.14-ಕೇಂದ್ರ ಸಚಿವರಾದ ನಂತರ ಸೋಮಣ್ಣನವರು ಮೊಟ್ಟಮೊದಲ ಇಂದು ಬೆಳಿಗ್ಗೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ತಮ್ಮ ಆರಾಧ್ಯ ದೈವ ಡಾ.ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ, ಮಠಾಧೀಶ ಶ್ರೀ ಸಿದ್ದಲಿಂಗ ಸ್ವಾಮಿಯವರ ಆಶೀರ್ವಾದ ಪಡೆದರು. +ನಂತರ ಎಲೆರಾಂಪುರ ಮಠ, ಸಿದ್ದರಬೆಟ್ಟದ ಮಠ, ಬೆಳ್ಳಾವಿ ಕಾರದೇಶ್ವರ ಮಠ, ಗೋಡೆಕೆರೆ ಮಠ, ತಿಪಟೂರು ಮಠ, ರಂಗಾಪುರ ಮಠ, ನೊಣವಿನಕೆರೆ ಮಠಗಳಿಗೆ ಭೇಟಿ ನೀಡಿ ಅಲ್ಲಿನ ಶ್ರೀಗಳ ಆಶೀರ್ವಾದ ಪಡೆಯುವರು . +ಮಾಜಿ ಸಂಸದ ಜಿ ಎಸ್‌‍ ಬಸವರಾಜು, ಶಾಸಕ ಜ್ಯೋತಿಗಣೇಶ್‌ ,ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್‌ ಹೆಬ್ಬಾಕ . ಜಿಲ್ಲಾ ಜೆಡಿಎಸ್‌‍ ಅಧ್ಯಕ್ಷ ಆರ್‌.ಸಿ.ಆಂಜನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂದೀಪ್‌ಗೌಡ, ಉಪಾಧ್ಯಕ್ಷರಾದ ನಾಗರತ್ನಮ್ಮ, ಅನಿತಾ, ಕಾರ್ಯದರ್ಶಿಗಳಾದ ಕೆಂಪೇಗೌಡ, ಜ್ಯೋತಿ ತಿಪ್ಪೇಸ್ವಾಮಿ, ಜೆಡಿಎಸ್‌‍ ನಗರಾಧ್ಯಕ್ಷ ವಿಜಯ್‌ಗೌಡ, ವಕ್ತಾರ ಮಧು, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್‌ ಜೆ.ಜಗದೀಶ್‌ ಹಾಜರಿದ್ದರು. +ಭಾನುವಾರ ಜೂನ್‌.16)ರಂದು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ಸಚಿವ ಸೋಮಣ್ಣ ಅವರು ಲೋಕಸಭಾಚುನಾವಣೆಯಲ್ಲಿ ತಮ್ಮ ಗೆಲುವಿಗೆ ಸಹಕರಿಸಿದ ಮತದಾರರಿಗೆ ಹಾಗೂ ಬೆಜೆಪಿ ಹಾಗು ಜೆಡಿಎಸ್‌‍ ಪಕ್ಷಗಳ ಮುಖಂಡರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಮೈತ್ರಿ ಪಕ್ಷಗಳ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಹಿದೆ. +ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್‌‍ನಿಂದ ವಿ.ಸೋಮಣ್ಣ ಅವರನ್ನು ಅಭಿನಂದಿಸಲಾಗುವುದು ಕಾರ್ಯಕ್ರಮಕ್ಕೆ ಮುನ್ನಾ ನಗರದ ಎಸ್‌‍ಐಟಿ ಬ್ಯಾಕ್‌ ಗೇಟ್‌ ಬಳಿಯಿಂದ ಸೋಮಣ್ಣ ಅವರನ್ನು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ಯಲಾಗುವುದು, ಎರಡೂ ಪಕ್ಷಗಳ ಕಾರ್ಯಕರ್ತರ ಬೃಹತ್‌ ಬೈಕ್‌ ಕ್ಯಾಲಿ, ಜನಪದ ಕಲಾತಂಡಗಳ ಆಕರ್ಷಕ ಪ್ರದರ್ಶನದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲು ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_109_2.txt b/eesanje/url_46_109_2.txt new file mode 100644 index 0000000000000000000000000000000000000000..19d0a5ed51a901d68ca454f33e0b48e65f959a46 --- /dev/null +++ b/eesanje/url_46_109_2.txt @@ -0,0 +1,9 @@ +ನೀಟ್‌ ಮರು ಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ +ಬೆಂಗಳೂರು, ಜೂ.15-ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಸಂಬಂಧಪಟ್ಟಂತೆ ನೀಟ್‌ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರಿಗೆ ಫಸ್ಟ್‌ ರ್ಯಾಂಕ್‌ ನೀಡಲಾಗಿದೆ. ಕಷ್ಟಪಟ್ಟು ಓದಿ ಬರೆದಂತಹ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ ನಡೆಸಬೇಕು ಎಂದರು. +ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನೀಟ್‌ ಪರೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ. ಗ್ರೇಸ್‌‍ ಅಂಕ ಕೊಟ್ಟು ಪಾಸ್‌‍ ಮಾಡುವುದು ಕೆಟ್ಟ ಅಭ್ಯಾಸ. ಯಾರಿಗೂ ಗ್ರೇಸ್‌‍ ಅಂಕ ಕೊಡಬಾರದು ಎಂದು ಹೇಳಿದರು.ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗಾಗಿ ಬಿಡುಗಡೆ ಮಾಡಲಾದ ಹಣವನ್ನು ರಾಜ್ಯ ಸರ್ಕಾರ ರೈತರ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದೆ. ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ದಕ್ಷಿಣ ಭಾರತಕ್ಕೆ 8 ಸಚಿವ ಸ್ಥಾನಗಳನ್ನು ನೀಡುವ ಮೂಲಕ ಬಿಜೆಪಿ ತನ್ನ ಪಕ್ಷ ಸಂಘಟನೆಯನ್ನು ವಿಸ್ತರಣೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಏನೇ ಮಾಡಿದರೂ ದಕ್ಷಿಣ ಭಾರತದಲ್ಲಿ ಜನರು ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ಏಕೆಂದರೆ, ಅದು ಆರ್‌ಎಸ್‌‍ಎಸ್‌‍ ಮೂಲದ ಪಕ್ಷ ಎಂದು ವ್ಯಾಖ್ಯಾನಿಸಿದರು. +ಉತ್ತರ ಭಾರತದಲ್ಲೂ ಈ ಬಾರಿ ಜನರು ಬಿಜೆಪಿಯನ್ನು ಬೆಂಬಲಿಸಿಲ್ಲ. ಆರ್‌ಎಸ್‌‍ಎಸ್‌‍ನವರೇ ಚುನಾವಣಾ ಫಲಿತಾಂಶದ ಬಗ್ಗೆ ಹೇಳಿಕೆ ನೀಡಿದ್ದು, ಅಹಂಕಾರವಿದ್ದರೆ ಜನ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಆದರೂ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟಿಲ್ಲ. ಮೊದಲಿನಿಂದಲೂ ಅದೇ ಪರಿಪಾಠ ಅನುಸರಿಸುತ್ತಾ ಬಂದಿದ್ದಾರೆ. ಈಗಲೂ ಅದನ್ನೇ ಮುಂದುವರೆಸಿದ್ದಾರೆ. +ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿಲ್ಲ ಎಂದರು.ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಟೀಕೆಗಳಿಗೆ ಉತ್ತರಿಸಿದ ಅವರು, ನನ್ನ ಮೇಲೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರ ಮೇಲೆ ಕೇಸು ದಾಖಲಿಸಿರುವುದನ್ನು ಏನೆಂದು ಕರೆಯಬೇಕು ಎಂದು ಮರು ಪ್ರಶ್ನೆ ಹಾಕಿದರು. +ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ಸದಸ್ಯತ್ವವೇ ರದ್ದುಗೊಳ್ಳುವಂತೆ ಮಾಡಿರಲಿಲ್ಲವೇ? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜೈಲಿಗೆ ಕಳುಹಿಸಿದ್ದಾರೆ. ಅದನ್ನು ದ್ವೇಷದ ರಾಜಕಾರಣ ಎನ್ನಬೇಕೇ ಅಥವಾ ಪ್ರೀತಿಯ ರಾಜಕಾರಣ ಎನ್ನಬೇಕೇ? ಸೇಡಿನ ರಾಜಕಾರಣ ಮಾಡುವವರು ಅವರು. ನಾವಲ್ಲ. ನಾನು ಎಂದೂ ಸೇಡಿನ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. +ಪರಿಶಿಷ್ಟ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ನಿಗದಿಯಾಗಿದ್ದ ಶೇಕಡಾವಾರು ಅಂಕಗಳ ಪ್ರಮಾಣವನ್ನು ಶೇ. 60ರಿಂದ 75ಕ್ಕೆ ಹಾಗೂ ಆದಾಯ ಮಿತಿಯನ್ನು ಆರು ಲಕ್ಷ ರೂ.ಗಳಿಗೆ ಹೆಚ್ಚಿಸಿರುವ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು. +ಎಂಜಿನಿಯರಿಂಗ್‌ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಕಾಲೇಜು ಆಡಳಿತಮಂಡಳಿಗಳ ಒತ್ತಾಯದ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಹೇಳಿದರು.ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಲು ನಮ ಸರ್ಕಾರ ಬದ್ಧವಾಗಿದೆ ಎಂದರು. \ No newline at end of file diff --git a/eesanje/url_46_109_3.txt b/eesanje/url_46_109_3.txt new file mode 100644 index 0000000000000000000000000000000000000000..a2b002c71d4fb6889f3a5e57a0953d31dd7fad45 --- /dev/null +++ b/eesanje/url_46_109_3.txt @@ -0,0 +1,6 @@ +ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ +ಬೆಂಗಳೂರು, ಜೂ.15-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. +ನಿನ್ನೆ ರಾತ್ರಿ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಿದ್ದ ಅವರು ಬೆಳಗಿನಜಾವ ಸುಪ್ರಭಾತ ಪೂಜೆಯ ಸಮಯದಲ್ಲಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ಮರಳಿದ ಬಳಿಕ ಅವರು ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷರಿಗೆ ತಮ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. +ನಂತರ ತಮ ತವರು ಕ್ಷೇತ್ರ ಚನ್ನಪಟ್ಟಣಕ್ಕೆ ತೆರಳಿದರು. ಶಾಸಕರಾಗಿ ಇಂದು ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ತಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಪೂರ್ವ ನಿಯೋಜಿತವಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಚನ್ನಪಟ್ಟಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ ಕೋರಿ ಅಭಿನಂದಿಸಲಾಯಿತು. +ಇಂದು ಸಂಜೆ ತಮ ಲೋಕಸಭಾ ಕ್ಷೇತ್ರವಾದ ಮಂಡ್ಯಕ್ಕೆ ತೆರಳಲಿದ್ದಾರೆ. ಮಂಡ್ಯದಲ್ಲಿ ಸಂಸದರ ಕಚೇರಿ ಪೂಜೆ ನೆರವೇರಿಸಲಿದ್ದು, ಬಳಿಕ ಬೆಂಗಳೂರಿಗೆ ಮರಳುವ ಕಾರ್ಯಕ್ರಮವಿದೆ. ನಿನ್ನೆ ಬೆಂಗಳೂರಿನಲ್ಲಿ ಜೆಡಿಎಸ್‌‍ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದಂತೆ ಮಂಡ್ಯದಲ್ಲೂ ಅಭಿನಂದನೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. +ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾದ ನಂತರ ಹಾಗೂ ಕೇಂದ್ರ ಸಚಿವರಾದ ಮೇಲೆ ಹೆಚ್‌ಡಿಕೆ ಮೊದಲ ಬಾರಿಗೆ ಮಂಡ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಜೆಡಿಎಸ್‌‍ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಕುಮಾರಸ್ವಾಮಿ ಅವರನ್ನು ಬರಮಾಡಿಕೊಳ್ಳಲು ಹಾಗೂ ಅಭಿನಂದಿಸಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಸಂಸದರ ಕಚೇರಿ ಪೂಜೆ ನೆರವೇರಿಸುವ ಕುಮಾರಸ್ವಾಮಿ ಅವರು, ತಮನ್ನು ಚುನಾಯಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಲಿದ್ದಾರೆ. \ No newline at end of file diff --git a/eesanje/url_46_109_4.txt b/eesanje/url_46_109_4.txt new file mode 100644 index 0000000000000000000000000000000000000000..f15dd3639cfd6c3c69746b796ce7333c118273e4 --- /dev/null +++ b/eesanje/url_46_109_4.txt @@ -0,0 +1,14 @@ +ಮೋದಿಗೆ ಮತ್ತಷ್ಟು ಹತ್ತಿರವಾದ ಕುಮಾರಸ್ವಾಮಿ, ಬಿಜೆಪಿಯಲ್ಲಿ ಕೆಲವರಿಗೆ ಉರಿ ಉರಿ +ಬೆಂಗಳೂರು,ಜೂ.15-ಲೋಕಸಭೆ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಕೇಂದ್ರದ ನರೇಂದ್ರಮೋದಿ ಸಂಪುಟದಲ್ಲಿ ಸಚಿವರಾಗಿರುವ ಹೆಚ್‌‍.ಡಿ.ಕುಮಾರಸ್ವಾಮಿಗೆ ಹೆಚ್ಚಿನ ಮನ್ನಣೆ ಸಿಗುತ್ತಿರುವುದು ಒಂದು ಬಣದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. +ಕೇಂದ್ರದಲ್ಲಿ ಕೃಷಿ ಖಾತೆಯನ್ನು ನಿರೀಕ್ಷೆ ಮಾಡಿದ್ದ ಕುಮಾರಸ್ವಾಮಿಗೆ ಸ್ವತಃ ಅವರೇ ಶಾಕ್‌ ಆಗುವಂತೆ ಭಾರೀ ಕೈಗಾರಿಕೆ ಖಾತೆಯನ್ನು ನೀಡಲಾಗಿತ್ತು. ಪ್ರಮಾಣ ವಚನ ಸ್ವೀಕರಿಸುವ ವೇಳೆ ಎನ್‌ಡಿಎ ಮೈತ್ರಿ ಪಕ್ಷಗಳ ಪೈಕಿ ಹೆಚ್‌ಡಿಕೆ ಮೊದಲನೇಯವರಾಗಿ ಸ್ವೀಕಾರ ಮಾಡಿದ್ದರು. +ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್‌‍ ಜತೆಗಿನ ಮೈತ್ರಿಯಿದ ಬಿಜೆಪಿಗೆ ಹೆಚ್ಚಿನ ಲಾಭವೇನೂ ಆಗಿಲ್ಲ. ಆದರೆ ಈ ಮೈತ್ರಿಯಿಂದ ಲಾಭ ಪಡೆದಿರುವ ಮಾಜಿ ಮುಖ್ಯಮಂತ್ರಿ ಎಚ್‌‍.ಡಿ.ಕುಮಾರಸ್ವಾಮಿ ಗೆದ್ದ ನಂತರ ಉರುಳಿಸುತ್ತಿರುವ ಒಂದೊಂದೇ ದಾಳ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅದಕ್ಕಿಂತ ಹೆಚ್ಚಾಗಿ ಸಂಘ ಪರಿವಾರದ ಹಿನ್ನಲೆಯಿಂದ ಬಂದಿರುವ ಮೂಲ ಬಿಜೆಪಿ ಮುಖಂಡರಿಗೆ ಹೆಚ್ಚು ಕಿರಿಕಿರಿ ಉಂಟು ಮಾಡಿದೆ. +ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಮಾಜಿ ಸಚಿವರಾದ ವಿ.ಸೋಮಣ್ಣ, ಡಾ.ಸುಧಾಕರ್‌ ಹಾಗೂ ತೇಜಸ್ವೀ ಸೂರ್ಯ ಸೇರಿದಂತೆ ಕೆಲವರು ನೇರವಾಗಿ ಜೆಡಿಎಸ್‌‍ನ ಪ್ರಶ್ನಾತೀತ ನಾಯಕ, ಮಾಜಿ ಪ್ರಧಾನಿ ಎಚ್‌‍.ಡಿ.ದೇವೇಗೌಡರು ಹಾಗೂ ಕುಮಾರ ಸ್ವಾಮಿಯವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದರು. +ಅದರಲ್ಲೂ ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಂದ ಗೆದ್ದಿರುವ ವಿ.ಸೊಮಣ್ಣ ಮತ್ತು ಡಾ.ಸುಧಾಕರ್‌ ತಮ ಗೆಲುವಿಗೆ ಜೆಡಿಎಸ್‌‍ ನಾಯಕತ್ವದ ಬೆಂಬಲವೇ ಪ್ರಮುಖ ಕಾರಣ ಎಂದು ಬಹಿರಂಗವಾಗೇ ಘೋಷಿಸಿರುವುದು ಮತ್ತು ಫಲಿತಾಂಶ ಘೋಷಣೆಯಾದ ಮರುಕ್ಷಣವೇ ಜೆಡಿಎಸ್‌‍ ನಾಯಕರನ್ನು ಭೇಟಿ ಮಾಡಿರುವುದು ಬಿಜೆಪಿಯ ವರಿಷ್ಠರಿಗೆ ಅಸಮಾಧಾನ ತಂದಿದೆ. +ವಿಶೇಷ ಎಂದರೆ ಈ ಇಬ್ಬರೂ ಮುಖಂಡರೂ ಬೇರೆ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದವರು ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರ ಅನುಭವಿಸಿದವರು ಎಂಬುದು ಇಲ್ಲಿ ಗಮನಿಸಬೇಕಾದ ಅಂಶ. ಹಾಗೆಯೇ ಇತ್ತೀಚಿನ ದಿನಗಳಲ್ಲಿ ಸೋಮಣ್ಣ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಹಾಗೂ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರವಾಗೇ ಸಮರ ಸಾರಿದ್ದರು. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಹಾಗೂ ಚಾಮರಾಜ ನಗರ ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಸೋಮಣ್ಣ ತಮ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಅವರ ಬೆಂಬಲಿಗರೇ ಕಾರಣ ಎಂದು ವರಿಷ್ಠರಿಗೆ ದೂರಿದ್ದು ಈಗ ಗುಟ್ಟೇನಲ್ಲ ಎಂಬುದು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿರುವ ಮಾತು. +ಈಗ ಚುನಾವಣೆಯಲ್ಲಿ ಗೆದ್ದ ನಂತರ ಸೋಮಣ್ಣ ತಮ ಗೆಲುವಿಗೆ ಜೆಡಿಎಸ್‌‍ ನಾಯಕರು, ಕಾರ್ಯಕರ್ತರು ಹಾಗೂ ಬಿಜೆಪಿ ವರಿಷ್ಠರೇ ಕಾರಣ ಎಂದೂ ಹೇಳುತ್ತಿರುವುದನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಗುರಿಯಾಗಿಸಿಕೊಂಡಿರುವುದು ಕಾಣುತ್ತದೆ. +ಇದೇ ಮಾದರಿಯಲ್ಲಿ ಡಾ. ಸುಧಾಕರ್‌ ಕೂಡ ಪ್ರತಿಕ್ರಿಯಿಸಿದ್ದಾರೆ. ಅಲ್ಲಿಗೆ ಬಿಜೆಪಿಯ ದೆಹಲಿ ವರಿಷ್ಠರ ಪಗಡೆಯಾಟಕ್ಕೆ ರಾಜ್ಯದಲ್ಲಿ ಇಬ್ಬರು ಪ್ರಮುಖ ಮುಖಂಡರು ಸಿಕ್ಕಂತಾಗಿದೆ. ಈ ಅವಕಾಶವನ್ನು ಬಳಸಿಕೊಂಡು ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗೊತ್ತುವ ಪ್ರಯತ್ನ ಶುರುವಾಗಿದೆ ಎಂಬುದನ್ನು ಹೆಸರು ಬಹಿರಂಗಪಡಿಸಲು ಇಚ್ಛಿಸದ ಬಿಜೆಪಿ ಮುಖಂಡರು ಒಪ್ಪಿಕೊಳ್ಳುತ್ತಾರೆ. +ಬಿಜೆಪಿಯಲ್ಲಿನ ಈ ವಿದ್ಯಮಾನಗಳನ್ನು ಅರಿತಿರುವ ಕುಮಾರಸ್ವಾಮಿ ಯಡಿಯೂರಪ್ಪ ವಿರುದ್ಧ ಒಳಗೊಳಗೇ ಕುದಿಯುತ್ತಿರುವ ಪ್ರಮುಖ ಮುಖಂಡರುಗಳನ್ನು ತಾವಾಗೇ ಸಂಪರ್ಕಿಸಿ ವಿಶ್ವಾಸಕ್ಕೆ ತಗೆದುಕೊಳ್ಳುವ ಪ್ರಯತ್ನ ಮಾಡುತ್ತಿರುವುದು ಈಗಿನ ಬೆಳವಣಿಗೆ.ಒಂದಂತೂ ಸ್ಪಷ್ಟ. +ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್‌‍ ಅಸ್ತಿತ್ವ ಮುಗಿದೇ ಹೋಯಿತು ಎಂದು ಟೀಕಿಸುತ್ತಿದ್ದವರಿಗೆ ಮಂಡ್ಯದಲ್ಲಿ ಕುಮಾರಸ್ವಾಮಿ ಹಾಗೂ ಕೋಲಾರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಮಲ್ಲೇಶ ಬಾಬು ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ದೇವೇಗೌಡರ ಅಳಿಯ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರ ಗೆಲವು ಮತ್ತೆ ಉತ್ಸಾಹ ಪುಟಿಯುವಂತೆ ಮಾಡಿದೆ. +ಅದರಲ್ಲೂ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸೋದರ ಡಿ.ಕೆ.ಸುರೇಶ್‌ ಅವರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದು ಕುಮಾರಸ್ವಾಮಿಯವರ ಗೆಲುವಿನ ಓಟದ ಹುಮಸ್ಸನ್ನು ಅಧಿಕಗೊಳಿಸಿದೆ. +ಕೇಂದ್ರ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗಿದ್ದು, ಈ ಅವಕಾಶವನ್ನು ಬಳಸಿಕೊಂಡು ರಾಜ್ಯದಲ್ಲಿ ಮತ್ತೆ ತಮ ಪಕ್ಷಕ್ಕೆ ಜೀವ ತುಂಬಲು ಕುಮಾರಸ್ವಾಮಿ ಸಿದ್ಧವಾಗುತ್ತಿದ್ದಾರೆ. ಬಿಜೆಪಿ ನಾಯಕತ್ವಕ್ಕೂ ಇದೇ ಬೇಕಾಗಿದೆ. ಕಾಂಗ್ರೆಸ್‌‍ನಲ್ಲಿ ಪ್ರಬಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಪ್ರಾಬಲ್ಯ ಮಣಿಸಲು ಕುಮಾರಸ್ವಾಮಿ ಪ್ರಮುಖ ಅಸ್ತ್ರವಾಗುತ್ತಾರೆ ಎಂಬ ಅಚಲ ನಂಬಿಕೆ ಅವರಿಗಿದೆ. ಈ ಅವಶ್ಯಕತೆ ಪೂರೈಸುವವರೆಗೆ ಕುಮಾರಸ್ವಾಮಿ ಬಿಜೆಪಿ ದೆಹಲಿ ನಾಯಕರ ಪಾಲಿಗೆ ಆಪದ್ಭಾಂದವನಾಗಿರುತ್ತಾರೆ. \ No newline at end of file diff --git a/eesanje/url_46_109_5.txt b/eesanje/url_46_109_5.txt new file mode 100644 index 0000000000000000000000000000000000000000..bd6ea5cb5c93f6c3499e2eadefb1e6558a9b842d --- /dev/null +++ b/eesanje/url_46_109_5.txt @@ -0,0 +1,12 @@ +ಕುತೂಹಲ ಮೂಡಿಸಿದೆ ಬಂಧನ ಬಲೆಯಿಂದ ತಪ್ಪಿಸಿಕೊಂಡ ಬಿಎಸ್ವೈ ಮುಂದಿನ ನಡೆ +ಬೆಂಗಳೂರು,ಜೂ.15– ಸದ್ಯ ಬೀಸುವ ದೊಣ್ಣೆಯಿಂದ ಪಾರಾದಂತೆ ಕಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ಮುಂದಿನ ರಾಜಕೀಯ ನಡೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಬಿಎಸ್‌‍ವೈ ಅವರನ್ನು ಹೈಕೋರ್ಟ್‌ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ. +ನ್ಯಾಯಾಲಯದ ಆದೇಶದಿಂದ ನಿಟ್ಟುಸಿರು ಬಿಟ್ಟಿರುವ ಯಡಿಯೂರಪ್ಪ, ತಮ ವಿರುದ್ಧದ ರಾಜಕೀಯ ಪಿತೂರಿಯ ವಿರುದ್ಧ ಸಿಡಿದೇಳುತ್ತಾರಾ ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ. +ನಾಲ್ಕು ದಶಕಗಳ ಅವರ ರಾಜಕೀಯ ನಡೆಯನ್ನು ಗಮನಿಸುತ್ತಾ ಬಂದಿರುವವರಿಗೆ ಯಡಿಯೂರಪ್ಪ ಸುಮನೆ ಕೂರುವ ವ್ಯಕ್ತಿಯಲ್ಲ ಎಂಬುದು ತಿಳಿದೇ ಇದೆ. ವಿಶೇಷ ಎಂದರೆ ಈ ಪ್ರಕರಣದಲ್ಲಿ ವಿರುದ್ಧ ಆರೋಪಗಳು ಕೇಳಿ ಬಂದಾಗ ಬಿಜೆಪಿಯ ರಾಜ್ಯ ನಾಯಕರು ಅವರ ಬೆಂಬಲಕ್ಕೆ ನಿಂತರೆ, ಲೋಕಸಭೆ ಚುನಾವಣೆಯಲ್ಲಿ ತಮ ಪುತ್ರನಿಗೆ ಬಿಜೆಪಿ ಟಿಕೆಟ್‌ ತಪ್ಪಿದ ಸಿಟ್ಟಿಗೆ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗೇ ಸಿಡಿದು ನಿಂತ ಮಾಜಿ ಸಚಿವ ಕೆ.ಎಸ್‌‍. ಈಶ್ವರಪ್ಪ ಕೂಡ ಬಿಎಸ್‌‍ವೈ ಪರವೇ ನಿಂತು ಸಮರ್ಥಿಸಿಕೊಂಡಿದ್ದರು. ರಾಜಕೀಯಕ್ಕೆ ಈ ಪ್ರಕರಣವನ್ನು ಬಳಸಿಕೊಳ್ಳುವ ಸಣ್ಣತನ ತೋರಿಸಲಿಲ್ಲ ಎಂಬುದು ಪ್ರಮುಖ ಅಂಶ. +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪನವರ ನಡುವೆ ಸರ್ಕಾರದ ಆಡಳಿತ, ನೀತಿ ನಿರೂಪಣೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್‌‍ ಪಕ್ಷದ ನಿಲುವುಗಳಿಗೆ ಸಂಬಂಧಿಸಿದಂತೆ ಅನೇಕ ಸಂದರ್ಭದಲ್ಲಿ ತೀವ್ರ ಸ್ವರೂಪದ ವಾಕ್ಸಮರ ನಡೆದಿದೆ. ಆದರೆ ವೈಯಕ್ತಿಕ ಮಟ್ಟದಲ್ಲಿ ಅವರಿಬ್ಬರ ನಡುವೆ ಪಕ್ಷ ರಾಜಕಾರಣ ಮೀರಿದ ಸ್ನೇಹ, ಸಂಬಂಧ ಇದೆ. +ರಾಜಕಾರಣದ ವಿವಿಧ ಸಂದರ್ಭಗಳಲ್ಲಿ ಪರಸ್ಪರ ಒಬ್ಬರಿಗೊಬ್ಬರು ನೆರವಾಗಿದ್ದೂ ಈಗ ಗುಟ್ಟೇನಲ್ಲ. ಇದು ಕಾಂಗ್ರೆಸ್‌‍ ನಲ್ಲಿರುವ ಸಿದ್ದರಾಮಯ್ಯ ವಿರೋಧಿ ಗುಂಪಿಗೆ ಅಸಹನೆ ತಂದಿದೆ. ಇದು ಈ ಪ್ರಕರಣದಲ್ಲಿ ರಾಜಕೀಯ ಕೈವಾಡ ಇದೆಯೆ? ಎಂಬ ಸಂಶಯಗಳನ್ನು ಹುಟ್ಟುಹಾಕಿದೆ. +ಇಡೀ ಪ್ರಕರಣದ ಹಿಂದೆ ಬಿಜೆಪಿ ನಾಯಕರು ದೂಷಿಸುತ್ತಿರುವಂತೆ ರಾಜಕೀಯ ಪಿತೂರಿ ಇದೆಯಾ? ಇದ್ದರೆ ಅದು ಯಾರಿಗೆ? ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.ಒಂದು ವೇಳೆ ಈ ಪ್ರಕರಣದಲ್ಲಿ ಯಡಿಯೂರಪ್ಪನವರು ಬಂಧನಕ್ಕೀಡಾಗಿದ್ದರೆ ಬಿಜೆಪಿ ರಾಜ್ಯ ಮಟ್ಟದಲ್ಲಿ ಮುಜುಗರದ ಪರಿಸ್ಥಿತಿ ಎದುರಿಸಬೇಕಾಗಿತ್ತು. ಆದರೆ ಸದ್ಯಕ್ಕೆ ಅಂಥದೊಂದು ಬಿಕ್ಕಟ್ಟಿನ ಸನ್ನಿವೇಶದಿಂದ ಪಕ್ಷವೂ ಪಾರಾಗಿದೆ. +ಇಡೀ ಪ್ರಕರಣ ಹೈಕೊರ್ಟ್‌ ಮುಂದಿರುವುದರಿಂದ ವಿಚಾರಣೆ ಆರಂಭವಾದ ನಂತರ ಅನೇಕ ಸತ್ಯ ಸಂಗತಿಗಳು ಹೊರ ಬರಬಹುದು. ಆದರೆ ಈ ಪ್ರಕರಣದಲ್ಲಿ ಲೋಕಸಭೆ ಚುನಾವಣೆಗೆ ಮೊದಲೇ ದೂರು ದಾಖಲಾದಾಗ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಕಾದು ನೋಡುವ ನಿರ್ಧಾರಕ್ಕೆ ಬಂದಿತ್ತು. ಸ್ವಯಂ ಗೃಹಸಚಿವ ಡಾ. ಪರಮೇಶ್ವರ್‌ ಅವರ ಹೇಳಿಕೆಯೇ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದನ್ನು ಬಯಲುಗೊಳಿಸಿತ್ತು. +ಚುನಾವಣೆ ಸಂದರ್ಭದಲ್ಲಿ ದೂರು ಬಂದಾಗಲೇ ಸರ್ಕಾರ ಪ್ರಕರಣದ ತನಿಖೆಗೆ ಹಿಂಜರಿಯಲು ಯಡಿಯೂರಪ್ಪ ಪ್ರಭಾವಿ ರಾಜಕೀಯ ನಾಯಕ ಎಂಬುದು ಒಂದು ಕಾರಣವಾದರೆ ಮತ್ತೊಂದು ಬಿಜೆಪಿ ಈ ಪ್ರಕರಣವನ್ನು ಚುನಾವಣಾ ರಾಜಕೀಯಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳನ್ನೂ ಸರ್ಕಾರ ಗುರುತಿಸಿತ್ತು. ಈ ಕಾರಣಕ್ಕಾಗೇ ಕ್ರಮಕ್ಕೆ ಹಿಂದೇಟು ಹಾಕಿತ್ತು. ಆದರೆ ಚುನಾವಣೆ ಮುಗಿದು ಫಲಿತಾಂಶ ಬಂದ ನಂತರ ಇದ್ದಕ್ಕಿದ್ದಂತೆ ಸರ್ಕಾರ ಚುರುಕಾಗಿದ್ದರ ಹಿಂದೆ ರಾಜಕೀಯ ಪ್ರಭಾವ ಇತ್ತು ಎಂಬ ಸಂಶಯಗಳು ಈಗ ತಲೆ ಎತ್ತಿದೆ. +ಹಾಗಿದ್ದಲ್ಲಿ ಅಂತಹ ರಾಜಕೀಯ ಲಾಭ ಪಡೆಯಲು ಯತ್ನಿಸಿದ್ದ ಪ್ರಭಾವೀ ನಾಯಕರು ಯಾರು? ಯಡಿಯೂರಪ್ಪ ಪ್ರಕರಣವನ್ನು ತಮ ಅನುಕೂಲಕ್ಕೆ ಬಳಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವ ಹುನ್ನಾರಗಳೂ ಇತ್ತು ಎಂಬ ಮಾತುಗಳು ರಾಜಕೀಯ ವಲಯಗಳಲ್ಲಿ ಕೇಳಿ ಬರುತ್ತಿವೆ. +ಸದ್ಯಕ್ಕಂತೂ ಯಡಿಯೂರಪ್ಪ ಬಂಧನದ ಭಿತಿಯಿಂದ ಪಾರಾಗಿದ್ದಾರೆ. ಇವತ್ತಿನ ರಾಜಕೀಯ ಸನ್ನಿವೇಶದಲ್ಲಿ ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ. ಇದಕ್ಕೆ ಕಾರಣವೂ ಇದೆ. ಬಿಜೆಪಿಯಲ್ಲಿ ಅವರು ಪ್ರಭಾವೀ ನಾಯಕರಾಗಿದ್ದರೂ ಈ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಅವರ ಮಾತನ್ನು ಬಿಜೆಪಿ ವರಿಷ್ಠರು ಪೂರ್ಣವಾಗಿ ಪರಿಗಣಿಸಲಿಲ್ಲ. +ತುಮಕೂರು ಮತ್ತು ಚಿಕ್ಕ ಬಳ್ಳಾಪುರ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ ಅವರ ಮಾತಿಗೆ ವರಿಷ್ಠರು ಮನ್ನಣೆ ನೀಡಲಿಲ್ಲ. ಫಲಿತಾಂಶದ ನಂತರವೂ ಪಕ್ಷದ ವೈಫಲ್ಯಗಳನ್ನು ಅವರ ತಲೆಗೇ ಕಟ್ಟುವ ಪ್ರಯತ್ನಗಳು ದೆಹಲಿ ಮಟ್ಟದಲ್ಲಿ ರಾಜ್ಯದ ಕೆಲವು ನಾಯಕರುಗಳಿಂದ ನಡೆದವು ಸಚಿವ ಸಂಪುಟ ರಚನೆ ವಿಚಾರದಲ್ಲೂ ಅವರ ವಿರೋಧಿ ವಿ. ಸೋಮಣ್ಣ ಅವರಿಗೆ ಮಣೆ ಹಾಕಲಾಯಿತು. ಅಸಮಾಧಾನ, ಅಪಮಾನಗಳಿಂದ ಯಡಿಯೂರಪ್ಪ ಕುದಿಯುತ್ತಿದ್ದಾರೆ. \ No newline at end of file diff --git a/eesanje/url_46_109_6.txt b/eesanje/url_46_109_6.txt new file mode 100644 index 0000000000000000000000000000000000000000..98aa85674e03df57aa9bb49c726c3fdb69c67f12 --- /dev/null +++ b/eesanje/url_46_109_6.txt @@ -0,0 +1,7 @@ +ಶಾಸಕ ಸ್ಥಾನಕ್ಕೆ ಹೆಚ್‌‍.ಡಿ.ಕುಮಾರಸ್ವಾಮಿ ಮತ್ತು ಇ.ತುಕಾರಾಂ ರಾಜೀನಾಮೆ +ಬೆಂಗಳೂರು,ಜೂ.15– ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ವಿಜೇತರಾಗಿ ಸಂಸತ್‌ ಗೆ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವ ಹೆಚ್‌‍.ಡಿ.ಕುಮಾರಸ್ವಾಮಿ ಹಾಗೂ ಬಳ್ಳಾರಿ ಸಂಸದ. ಇ.ತುಕಾರಾಂ ಅವರುಗಳು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. +ಬಳ್ಳಾರಿಯಿಂದ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್‌‍ ಸಂಸದ ಇ.ತುಕಾರಾಂ ಅವರು, ಸಂಸತ್‌ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ನಿನ್ನೆಯೇ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. +ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್‌‍ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ ಭಾರಿಸಿದ್ದರು. ಕಾಂಗ್ರೆಸ್ನ ಇ. ತುಕಾರಾಮ್‌ ಅವರು 7,30,845 ಮತಗಳು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿದ್ದವು. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಪ್ರಸ್ತುತ ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿ ಭಾರೀ ಕೈಗಾರಿಕಾ ಸಚಿವರಾಗಿದ್ದಾರೆ.ಇಂದು ವಿಧಾನಸಭೆಯಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಭೇಟಿ ಮಾಡಿ ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. +ಇದೇ ರೀತಿ ಹಾವೇರಿ ಲೋಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮಯಿ ಕೂಡಾ ಯಾವುದೇ ಕ್ಷಣದಲ್ಲಿ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಅವರು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. +ನಿಯಮಗಳ ಪ್ರಕಾರ ಯಾವುದೇ ಒಬ್ಬ ಅಭ್ಯರ್ಥಿ ಏಕಕಾಲಕ್ಕೆ ಎರದು ಸದನಗಳ ಸದಸ್ಯರಾಗುವಂತಿಲ್ಲ. ಆರು ತಿಂಗಳೊಳಗೆ ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿ, ಒಂದು ಸದನದ ಸದಸ್ಯರಾಗಬೇಕೆಂಬ ನಿಯಮವಿದೆ. ತೆರವಾಗಲಿರುವ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. \ No newline at end of file diff --git a/eesanje/url_46_109_7.txt b/eesanje/url_46_109_7.txt new file mode 100644 index 0000000000000000000000000000000000000000..6f3f8fc4ab0e54446bcd52650ee1dea0debd8956 --- /dev/null +++ b/eesanje/url_46_109_7.txt @@ -0,0 +1,6 @@ +ಪೋಕ್ಸೋ ಪ್ರಕರಣ : ಯಡಿಯೂರಪ್ಪನವರನ್ನು ಬಂಧಿಸದಂತೆ ಹೈಕೋರ್ಟ ಆದೇಶ +ಬೆಂಗಳೂರು.ಜೂ14 : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಾಧೀಶರಾದ ಕೃಷ್ಣ ದೀಕ್ಷಿತ್ ಅವರು ಬಿಎಸ್ ವೈ ಅವರನ್ನು ಬಂಧಿಸದಂತೆ ಆದೇಶಿಸಿ ಜೂನ್ 17ರಂದು ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರು. +ಬಿಎಸ್ ವೈ ಯವರು ಓಡಿ ಹೋಗುವ ವ್ಯಕ್ತಿಯಲ್ಲ ಅವರ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುದಂತೆ ಕೋರ್ಟ್ ಸೂಚನೆ ನೀಡಿತು ನ್ಯಾಯಾಲಯದಲ್ಲಿ ಅರ್ಜಿ ಇತ್ಯರ್ಥವಾಗುವವರೆಗೂ ಬಿ ಎಸ್ ವೈ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. +ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಂಧಿಸುವ ಅಗತ್ಯವಿದೆಯೆಂದು ಸಿಐಡಿ ಎಸಿಎಂಎಂ ನ್ಯಾಯಾಲಯದ ಮುಂದೆ ಮನವಿ ಸಲ್ಲಿಸಿ ವಾರೆಂಟ್ ಆದೇಶ ಪಡೆದಿತ್ತು ಬಂಧನದ ಭೀತಿಯಿಂದ ಬಿ ಎಸ್ ವೈ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. +ಯಡಿಯೂರಪ್ಪ ಅವರ ಪರ ಹಿರಿಯವಕೀಲರಾದ ಸಿವಿ ನಾಗೇಶ್ ಅವರು ವಾದ ಮಂಡಿಸಿ ಬಿಎಸ್ ವೈ ಅವರ ವಿರುದ್ಧನೀಡಿರುವ ಮಹಿಳೆಗೆ ದೂರು ಕೊಡುವುದೇ ಹವ್ಯಾಸ, ದೂರು ದಾ ರೇ ತನ್ನ ಗಂಡ ಹಾಗೂ ಮನೆಯವರ ವಿರುದ್ಧ ವೇ ದೂರು ನೀಡಿದ್ದರು. ಲೈಂಗಿಕ ದೌರ್ಜನರ ಪ್ರಕರಣ ಜಾಮೀನು ಸಹಿತ ಪ್ರಕರಣವಾಗಿದೆ ಸಿಐಡಿಬಂದನದ ಆತುರ ತೋರುತ್ತಿದ್ದಾರೆ. +ಪ್ರಕರಣದಲ್ಲಿ ನಮ್ಮ ಕಕ್ಷಿದಾರರು ವಿಚಾರಣೆಗೆ ಹಾಜರಾಗಿದ್ದಾರೆ .ನಿಯಮ ಬಹಿರವಾಗಿ ವಿಷಯಗಳನ್ನು ಮುಚ್ಚಿಟ್ಟು ಅರೆಸ್ಟ್ ವಾರಂಟ್ ಪಡೆಯಲಾಗಿದೆ. ತನಿಖಾಧಿಕಾರಿಗಳು ರಾಜಕೀಯ ಮಾಸ್ಟರಗಳ ಆಜ್ಞೆ ಪಾಲಿಸುತ್ತಿದ್ದಾರೆ ಎಂದು ಪ್ರಬಲವಾದ ಮಂಡಿಸಿದರು ಯಡಿಯೂರಪ್ಪ ಅವರ ವಿರುದ್ಧ ಬಂಧನದ ವಾರೆಂಟ್ ಜಾರಿಯಾಗಿದೆ ನೋಟಿಸ್ ನೀಡಿದರೂ ಅವರ ವಿಚಾರಣೆಗೆ ಹಾಜರಾಗಿಲ್ಲ ಬೆಂಗಳೂರು ಬಿಟ್ಟು ಹೋಗುವುದು ಅವರ ಉದ್ದೇಶವಾಗಿತ್ತು ಸಂತ್ರಸ್ತೆಯ ಮೇಲೆ ಒತ್ತಡ ತಂದು ಸಾಕ್ಷ ನಾಶ ಮಾಡಿದ್ದಾರೆ ಸಾಕ್ಷ ನಾಶ ತಡೆಯಲು ಅವರ ಬಂಧಿಸುವ ಅಗತ್ಯವಿದೆ ಬೇರೆ ರಾಜ್ಯದಲ್ಲಿ ಇರುವುದರಿಂದ ಅವರ ವಿರುದ್ಧ ವಾರಂಟ್ ಪಡೆಯಲಾಗಿದೆ ಹೀಗಾಗಿ ಜಾಮೀನು ನೀಡಬಾರದು ಎಂದು ಸರ್ಕಾರಿ ಪರ ವಕಿಲರು ಮನವಿ ಮಾಡಿದರು .ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿದರು \ No newline at end of file diff --git a/eesanje/url_46_109_8.txt b/eesanje/url_46_109_8.txt new file mode 100644 index 0000000000000000000000000000000000000000..f930320f640cc10468a38591093622bb0cdd9bea --- /dev/null +++ b/eesanje/url_46_109_8.txt @@ -0,0 +1,8 @@ +ಕೇಂದ್ರ ಸಚಿವರಾಗಿ ರಾಜ್ಯಕ್ಕಾಗಮಿಸಿದ ನಂತರ ಹೆಚ್ಡಿಕೆ ಹೇಳಿದ್ದೇನು..? +ಬೆಂಗಳೂರು,ಜೂ.14-ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಸಿಗಬೇಕೆ ಹೊರತು ರಾಜಕೀಯವಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಸಾದರಹಳ್ಳಿ ಗೇಟ್‌ ಬಳಿ ಜೆಡಿಎಸ್‌‍ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು. +ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿದೆ. ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಸಮಯ ವ್ಯರ್ಥ ಮಾಡುವುದಿಲ್ಲ. ಎಲ್ಲ ಇಲಾಖೆಯಲ್ಲಿ ನಮ ರಾಜ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುವುದಾಗಿ ಹೇಳಿದರು. +ಜೆಡಿಎಸ್‌‍ನ್ನು ಮುಗಿಸಿದ್ದೇವೆ ಎಂದು ದುರಹಂಕಾರದಲ್ಲಿ ಮಾತನಾಡಿರುವವರಿಗೆ ಉತ್ತರ ಕೊಡುವುದಿಲ್ಲ. ನನಗೆ ಬೇಕಾಗಿರುವುದು ರಾಜಕೀಯವಲ್ಲ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಎಂದು ಹೇಳಿದರು. +ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ ಎಂದರು. +ನಾಲ್ಕು ದಿನ ದೆಹಲಿಯಲ್ಲಿ ಕೆಲಸ ಮಾಡುವೆ. ಎರಡು ದಿನ ಕರ್ನಾಟಕದಲ್ಲಿರುತ್ತೇನೆ. ಅದರಲ್ಲೂ ಮಂಡ್ಯದಲ್ಲಿ ಇರುತ್ತೇನೆ ಎಂದು ಅವರು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ನಮ ಸ್ವಯಂಕೃತ ಅಪರಾಧಗಳಿಂದ ಸೋತಿದ್ದೇವೆ ಎಂದ ಅವರು, ಪ್ರಧಾನಿ ನರೇಂದ್ರಮೋದಿಯವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. +ಕೇಂದ್ರ ಸಚಿವರಾದ ಬಳಿಕ ನನ್ನ ಕರ್ಮಭೂಮಿಗೆ ಬಂದಿದ್ದೇನೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌‍ ಕಾರ್ಯಕರ್ತರನ್ನು ಅದರಲ್ಲೂ ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. +ಈ ಸಂದಭದಲ್ಲಿ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ರಮೇಶ್‌ ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್‌‍ ಅಧ್ಯಕ್ಷ ಬಿ.ಮುನೇಗೌಡ ಮತ್ತಿತರರು ಇದ್ದರು \ No newline at end of file diff --git a/eesanje/url_46_109_9.txt b/eesanje/url_46_109_9.txt new file mode 100644 index 0000000000000000000000000000000000000000..d13153be10c5bd76b13f21d653fa8619ea2ce2ea --- /dev/null +++ b/eesanje/url_46_109_9.txt @@ -0,0 +1,9 @@ +ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಅನುಮಾನ ಮೂಡಿಸಿದೆ ಪೊಲೀಸರು ನಡೆ : ಸಿ.ಟಿ.ರವಿ +ಬೆಂಗಳೂರು,ಜೂ.14-ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನಡೆದುಕೊಳ್ಳುತ್ತಿರುವ ರೀತಿ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅಸಮಾಧಾನ ಹೊರಹಾಕಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಲೆ ಆರೋಪ ಹೊತ್ತ ಚಿತ್ರನಟ ದರ್ಶನ್‌ ಅವರನ್ನು ರಕ್ಷಣೆ ಮಾಡಲು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಪ್ರಯತ್ನಿಸಿದಂತೆ ಕಾಣಿಸುತ್ತಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಠಾಣೆಗೆ ಶಾಮಿಯಾನ ಹಾಕಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದರು. +ರೇಣುಕಾಸ್ವಾಮಿ ಹತ್ಯೆ ಮನುಕುಲ ಕ್ಷಮಿಸುವಂತದ್ದಲ್ಲ. ಯಾವುದೇ ನಾಗರಿಕ ಸಮಾಜವು ಒಪ್ಪುವುದಿಲ್ಲ. ಆದರೆ ಪೊಲೀಸರ ವರ್ತನೆ ನೋಡಿದರೆ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಸಂಚು ರೂಪಿಸಿದಂತೆ ಕಾಣುತ್ತಿದೆ. ಸಾರ್ವಜನಿಕ ಹಿತದೃಷ್ಟಿಯಿಂದಲಾದರೂ ಪೊಲೀಸರು ಸರಿಯಾಗಿ ನಡೆದುಕೊಳ್ಳಿ, ಜನರನಂಬಿಕೆ ಉಳಿಸಿಕೊಳ್ಳುವ ಕೆಲಸ ನೀವು ಮಾಡದಿದ್ದರೆ ಮನುಕುಲ ಕ್ಷಮಿಸುವುದಿಲ್ಲ ಎಂದು ಶಾಪ ಹಾಕಿದರು. +ಪೊಲೀಸ್‌‍ ಠಾಣೆಗೆ ಶಾಮಿಯಾನ ಹಾಕಿರುವುದು ಮಾಧ್ಯಮಗಳಿಗೆ ನಿರ್ಬಂಧ, ಠಾಣೆಯ ಸುತ್ತಮುತ್ತ 200 ಮೀಟರ್‌ ಸೆಕ್ಷನ್‌ ಜಾರಿ ಮಾಡಿರುವುದನ್ನು ಅವಲೋಕಿಸಿದರೆ ಪೊಲೀಸ್‌‍ ಠಾಣೆಯೊಳಗೆ ಏನೋ ನಡೆಯುತ್ತಿದೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.ಪ್ರಕರಣದಲ್ಲಿ ಪಾರದರ್ಶಕತೆಯಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಅನುಮಾನ ನನಗೆ ಮಾತ್ರವಲ್ಲ. ಸಾರ್ವಜನಿಕ ವಲಯದಲ್ಲೂ ಕೇಳಿಬರುತ್ತಿದೆ. ಅವರ ಸಂಶಯಗಳನ್ನು ಮುಖ್ಯಮಂತ್ರಿ, ಡಿಸಿಎಂ, ಗೃಹಸಚಿವರು ನಿವಾರಿಸಬೇಕು ಎಂದು ಆಗ್ರಹಿಸಿದರು. +ಪ್ರಕರಣವನ್ನು ಮುಚ್ಚಿ ಹಾಕಲು ಆರೋಪಿಗಳು ಪೊಲೀಸರಿಗೆ ದೊಡ್ಡ ಮಟ್ಟದ ಆಫರ್‌ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ರಜಾದಲ್ಲಿದ್ದ ಸಬ್‌ ಇನ್‌ಸ್ಪೆಕ್ಟರ್‌ ಅವರೊಬ್ಬರನ್ನು ಏಕಾಏಕಿ ಕರ್ತವ್ಯಕ್ಕೆ ಕರೆಸಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿದರು.ಮೃತ ರೇಣುಕಾಸ್ವಾಮಿಗೆ 15 ಕಡೆ ಗಾಯಗಳಾಗಿವೆ. ಆತ ಸಾಯುವವರೆಗೂ ಬಿಡದೆ ಹೊಡೆದು ಸಾಯಿಸಿದ್ದಾರೆ. ಮರ್ಮಾಂಗಕ್ಕೆ ರಾಡಿನಿಂದ ಒಡೆದು ಕೊಲೆ ಮಾಡಲಾಗಿದೆ. +ವೃತ್ತಿಪರ ರೌಡಿಗಳು ಕೂಡ ಈ ರೀತಿ ಹತ್ಯೆ ಮಾಡುವುದಿಲ್ಲ. ಸಾವಿನ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರು.ರೇಣುಕಾಸ್ವಾಮಿ ಪತ್ನಿ ಈಗ 5 ತಿಂಗಳ ಗರ್ಭಿಣಿ. ಬೇಕರಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈಗ ಅವರಿಗೆ ಯಾರು ಆಸರೆ, ಸರ್ಕಾರ ಅವರಿಗೆ ಆರ್ಥಿಕ ನೆರವು ನೀಡಲಿ. ಜೊತೆಗೆ ಪಿಯುಸಿ ಓದಿರುವ ಸಹನಾ ಅವರಿಗೆ ಮಾನವೀಯತೆ ದೃಷ್ಟಿಯಿಂದ ಸರ್ಕಾರಿ ಹುದ್ದೆ ನೀಡಬೇಕೆಂದು ಆಗ್ರಹಿಸಿದರು. +ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿ, ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದ್ದೆ. ಅತ್ಯಂತ ಬಡ ಕುಟುಂಬ ಅನಾಥವಾಗಿದೆ. ಆ ಕುಟುಂಬ 15 ಕಡೆ ರೇಣುಕಾಸ್ವಾಮಿ ಮೈಮೇಲೆ ಗಾಯಗಳಾಗಿವೆ ಭೀಕರವಾಗಿ ಹಿಂಸೆ ನೀಡಿ ಕೊಂದಿದ್ದಾರೆ.ಮರ್ಮಾಂಗದಲ್ಲಿ ರಕ್ತ ಬಂದಿದೆ. ರೌಡಿಗಳೂ ಕೊಲೆ ಮಾಡುವ ರೀತಿ ಮಾಡಿದ್ದಾರೆ ತಪ್ಪಿತಸ್ತರ ಜನ್ಮ ಜಾಲಾಡಬೇಕು ಎಂದರು. +ರಾಜ್ಯದಲ್ಲಿ ನೇಹಾ, ಅರ್ಜುನ್‌ ಮಡಿವಾಳ್‌ ಹೀಗೆ ನಿರಂತರ ಹತ್ಯೆ ಆಗ್ತಿದೆ. ಸರ್ಕಾರ ಯಾವ ಕ್ರಮವೂ ವಹಿಸುತ್ತಿಲ್ಲ. ಕಾನೂನು ಸುವ್‌ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರದ ಯಾವ ಪ್ರತಿನಿಧಿಯು ರೇಣುಕಾಸ್ವಾಮಿ ಮನೆಗೆ ಹೋಗಿಲ್ಲ. ಪ್ರಕರಣ ನಡೆದು ಇಷ್ಟು ದಿನಗಳಾದರೂ ರೇಣುಕಾಸ್ವಾಮಿ ಮನೆಗೆ ಸಿಎಂ, ಸಚಿವರು, ಸ್ಥಳೀಯ ಶಾಸಕರು ಹೋಗಿಲ್ಲ. ದರ್ಶನ್‌ ಆಗಿರಲಿ, ಬೇರೆಯವರೇ ಆಗಿರಲಿ, ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದರು. \ No newline at end of file diff --git a/eesanje/url_46_10_1.txt b/eesanje/url_46_10_1.txt new file mode 100644 index 0000000000000000000000000000000000000000..3d6a8ff4ce26154eb0e7fa45aaa73b9be70f81ee --- /dev/null +++ b/eesanje/url_46_10_1.txt @@ -0,0 +1,7 @@ +ಹಣದಾಸೆಗೆ ಅಧಿಕಾರಿಗಳಿಂದಲೇ ನಟ ದರ್ಶನ್‌ ಹಾಗೂ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ; ತನಿಖಾ ವರದಿ + +ಬೆಂಗಳೂರು, ಸೆ.25-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ಜೈಲಿನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ರಾಜಾತಿಥ್ಯ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ. +ಆಗ್ನೇಯ ವಿಭಾಗದ ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡು ಹಲವು ಮಾಹಿತಿಗಳನ್ನು ಕಲೆಹಾಕಿ, ಹೇಳಿಕೆಗಳನ್ನು ಪಡೆದುಕೊಂಡು ವರದಿ ಸಿದ್ಧಪಡಿಸಿದ್ದಾರೆ. ಶೀಘ್ರದಲ್ಲೇ ಆಗ್ನೇಯ ಭಾಗದ ಡಿಸಿಪಿ ಸಾ.ರಾ. ಪಾತೀಮಾ ಅವರು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರಿಗೆ ಈ ವರದಿಯನ್ನು ನೀಡಲಿದ್ದಾರೆ. +ಜೈಲಿನ ಕೆಲ ಅಧಿಕಾರಿ ಹಾಗೂ ಸಿಬ್ಬಂದಿ ಹಣದ ಆಮಿಷಕ್ಕೆ ಒಳಗಾಗಿ ರಾಜಾತಿಥ್ಯ ನೀಡಿದ್ದಾರೆಂಬುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. +ಜೈಲಿನಲ್ಲಿ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರು ಬ್ಯಾರಕ್‌ ಎದುರಿನ ಆವರಣದಲ್ಲಿ ಚೇರ್‌ನಲ್ಲಿ ಕುಳಿತು ಕಾಫಿ ಕುಡಿಯುತ್ತಿರುವುದು ಹಾಗೂ ಕೈಯಲ್ಲಿ ಸಿಗರೇಟ್‌ ಹಿಡಿದುಕೊಂಡಿದ್ದ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. +ಒಂದು ಪ್ರಕರಣವನ್ನು ಎಸಿಪಿ ಹಾಗೂ ಇನ್ನೆರಡು ಪ್ರಕರಣಗಳು ಇನ್‌್ಸಪೆಕ್ಟರ್‌ಗಳು ತನಿಖೆ ಮಾಡುತ್ತಿದ್ದು, ತನಿಖೆಯ ಭಾಗವಾಗಿ ಜೈಲಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು, ಖೈದಿಗಳು ಹಾಗೂ ವಿಚಾರಣಾಧಿನ ಖೈದಿಗಳಿಂದ ಹೇಳಿಕೆ ಪಡೆದುಕೊಂಡಿರುವುದಲ್ಲದೆ, ಸಿಸಿ ಟಿವಿಗಳಲ್ಲಿರುವ ದೃಶ್ಯಾವಳಿಗಳನ್ನು ಆಧರಿಸಿ ಮಾಹಿತಿಗಳನ್ನು ಸಂಗ್ರಹಿಸಿ ವರದಿ ಸಿದ್ಧಪಡಿಸಿದ್ದಾರೆ. \ No newline at end of file diff --git a/eesanje/url_46_10_10.txt b/eesanje/url_46_10_10.txt new file mode 100644 index 0000000000000000000000000000000000000000..70b738d9c40983993841b50865a9456c2360be06 --- /dev/null +++ b/eesanje/url_46_10_10.txt @@ -0,0 +1,5 @@ +ಸಿಇಟಿ/ನೀಟ್‌ : 2ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆಗೆ ದಿನಾಂಕ ವಿಸ್ತರಣೆ +/ : 2nd +ಬೆಂಗಳೂರು,ಸೆ.25-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಯುಜಿ ಸಿಇಟಿ ಮತ್ತು ಯುಜಿ ನೀಟ್‌ ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರಿಗೆ ಪ್ರವೇಶ ಪ್ರಕ್ರಿಯೆ ಮುಗಿಸಿಕೊಳ್ಳಲು ದಿನಾಂಕಗಳನ್ನು ವಿಸ್ತರಿಸಲಾಗಿದೆ. +ಸಿಇಟಿ ಸೀಟು ಪಡೆದವರು ಛಾಯ್ಸ್‌‍ ದಾಖಲಿಸಲು ನಾಳೆಯವರೆಗೆ ಹಾಗೂ ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಸಲು ಸೆ.27ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೆ.28ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ ಗಳಿಗೆ ಛಾಯ್ಸ್‌‍ ದಾಖಲಿಸಲು ಅವಕಾಶ ಇಲ್ಲ. ಆದರೆ, ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಲು ಇದೇ ದಿನಾಂಕಗಳು ಅನ್ವಯವಾಗಲಿವೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_46_10_11.txt b/eesanje/url_46_10_11.txt new file mode 100644 index 0000000000000000000000000000000000000000..a6f145ab438c1ba982ec97ecbdc33f8efb55eeea --- /dev/null +++ b/eesanje/url_46_10_11.txt @@ -0,0 +1,8 @@ +ನಂದಿನಿ ಹೊರತುಪಡಿಸಿ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಸರ್ಕಾರ ಆದೇಶ + +ಬೆಂಗಳೂರು,ಸೆ.25-ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಕೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆಗೆ ಆದೇಶ ನೀಡಿದೆ. +ರಾಜ್ಯದಲ್ಲಿ ಕೆಎಂಎಫ್‌ ನಂದಿನಿ ತುಪ್ಪ ಹೊರತುಪಡಿಸಿ ಉಳಿದ ಬ್ರ್ಯಾಂಡ್‌ಗಳ ತುಪ್ಪ ಪರಿಶೀಲನೆ ನಡೆಸುವಂತೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸೂಚನೆ ನೀಡಿದ್ದಾರೆ. +ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಹೊರತುಪಡಿಸಿ ಉಳಿದ ಎಲ್ಲಾ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ. +ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಕರ್ನಾಟಕಕ್ಕೆ ತುಪ್ಪ ಪೂರೈಕೆ ಆಗುತ್ತಿದೆ. ಈ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ ಪರಿಶೀಲಿಸಲು ಸೂಚಿಸಲಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಜನರಲ್ಲಿ ಬಹಳ ಗೊಂದಲ ಆರಂಭವಾಗಿರುವುದು ಆಘಾತಕಾರಿ. ಹೀಗಾಗಿ, ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. +ಆರಂಭಿಕ ಪರೀಕ್ಷೆಗಳನ್ನು ನಡೆಸಲಾಗುವುದು. ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ, ತಯಾರಕರಿಂದ ಹೆಚ್ಚುವರಿ ಮಾದರಿಗಳನ್ನು ಪಡೆಯಲಾಗುವುದು. ಪರೀಕ್ಷಾ ಫಲಿತಾಂಶಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006 ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ತುಪ್ಪ ಉತ್ಪಾದನೆಯ ಮೇಲೆ ನಿಷೇಧವನ್ನೂ ಹೇರಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. +ಆಹಾರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಪ್ರಸಾದ ತಯಾರಿಸಲು ಎಲ್ಲಾ ಸರ್ಕಾರಿ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕೆಂದು ಆದೇಶಿಸಿತ್ತು. \ No newline at end of file diff --git a/eesanje/url_46_10_12.txt b/eesanje/url_46_10_12.txt new file mode 100644 index 0000000000000000000000000000000000000000..319355b170e73cf89a2376e33ae0d5c132f85439 --- /dev/null +++ b/eesanje/url_46_10_12.txt @@ -0,0 +1,13 @@ +ಹೈಕೋರ್ಟ್‌ ತೀರ್ಪಿನ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ + ' +ಬೆಂಗಳೂರು,ಸೆ.24-ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ತಮ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದಿದ್ದಾರೆ. +ಹೈಕೋರ್ಟ್‌ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್‌ ಬಿಎನ್‌ಎಸ್‌‍ಎಸ್‌‍ 218ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್‌ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ ಎಂದು ವಿವರಿಸಿದ್ದಾರೆ. +ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್‌ 218 ಬಿಎನ್‌ಎಸ್‌‍ಎಸ್‌‍, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು. ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್‌ಎಸ್‌‍ಎಸ್‌‍ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದಿದ್ದಾರೆ. +ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್‌‍ನ ಈ ಸೇಡಿನ ರಾಜಕೀಯದ ವಿರುದ್ದ ನಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್‌‍ ಹೈಕಮಾಂಡ್‌ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ ಎಂದು ತಿಳಿಸಿದ್ದಾರೆ. +ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್‌‍ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದಿದ್ದಾರೆ. +ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. +ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್‌‍ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್‌ ಯೋಜನೆಗಳನ್ನು ವಿರೋಧಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್‌ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್‌ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. +ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್‌‍ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. +ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್‌‍ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_10_2.txt b/eesanje/url_46_10_2.txt new file mode 100644 index 0000000000000000000000000000000000000000..86e9dd29ac1e8264ccb9024965ad3a0ccce9f6e5 --- /dev/null +++ b/eesanje/url_46_10_2.txt @@ -0,0 +1,6 @@ +ಕಾನೂನು ಹೋರಾಟದ ಬಗ್ಗೆ ಸಿಎಂ ಸರಣಿ ಸಭೆ +' +ಬೆಂಗಳೂರು,ಸೆ.25-ಹೈಕೋರ್ಟ್‌ ತೀರ್ಪಿನ ಬಳಿಕ ಮುಡಾ ಪ್ರಕರಣದಲ್ಲಿ ಅನುಸರಿಸಬೇಕಾದ ಕಾನೂನು ಹಾಗೂ ರಾಜಕೀಯ ಹೋರಾಟಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸರಣಿ ಸಭೆಗಳನ್ನು ನಡೆಸಿದ್ದಾರೆ. +ಇಂದು ಬೆಳಿಗ್ಗೆ ಕಾನೂನು ಸಲಹೆಗಾರ ಎ.ಎಸ್‌‍.ಪೊನ್ನಣ್ಣ ಅವರು ಮುಖ್ಯಮಂತ್ರಿ ಗೃಹಕಚೇರಿ ಕಾವೇರಿಗೆ ಆಗಮಿಸಿ ಸಮಾಲೋಚನೆ ನಡೆಸಿದರು.ಸಚಿವರಾದ ಲಕ್ಷ್ಮೀಹೆಬ್ಬಾಳ್ಕರ್‌ ಹಾಗೂ ಇತರರು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ಹಲವು ಶಾಸಕರು, ಸಚಿವರು ಆಗಮಿಸಿ ಮುಖ್ಯಮಂತ್ರಿಯವರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದರು. +ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಬೇಕಿತ್ತು. +ಆದರೆ ಅದನ್ನು ಬದಿಗಿಟ್ಟು ಮುಖ್ಯಮಂತ್ರಿಯವರು ಕಾನೂನು ಹಾಗೂ ರಾಜಕೀಯ ಸಂಘರ್ಷದ ಬಗ್ಗೆ ಹಲವರ ಜೊತೆ ಭೌತಿಕವಾಗಿ ಹಾಗೂ ದೂರವಾಣಿಯ ಮೂಲಕ ಸಮಾಲೋಚನೆ ನಡೆಸಿದರು.ಮಧ್ಯಾಹ್ನ ಕೇರಳಕ್ಕೆ ಭೇಟಿ ನೀಡುವ ಮುನ್ನ ಸಿದ್ದರಾಮಯ್ಯ ಸಾಕಷ್ಟು ತಯಾರಿಗಳನ್ನು ನಡೆಸಿದರು. \ No newline at end of file diff --git a/eesanje/url_46_10_3.txt b/eesanje/url_46_10_3.txt new file mode 100644 index 0000000000000000000000000000000000000000..b2045e2e527c1377f063e4c9382a3d0a8658689f --- /dev/null +++ b/eesanje/url_46_10_3.txt @@ -0,0 +1,13 @@ +ಸಿಎಂ ಸ್ಥಾನ ಪಲ್ಲಟ ಗ್ಯಾರಂಟಿ : ವಿಜಯೇಂದ್ರ ಭವಿಷ್ಯ + +ಬೆಂಗಳೂರು,ಸೆ.25-ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತನಿಖೆಗೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಎಷ್ಟೇ ಬಂಡತನ ತೋರಿದರೂ ಮುಖ್ಯಮಂತ್ರಿ ಸ್ಥಾನ ಪಲ್ಲಟವಾಗುವುದು ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. +ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನಾನೇಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ನವರು ಪ್ರಶ್ನಿಸಿದ್ದಾರೆ. ನೀವು ಎಷ್ಟೇ ಬಂಡತನ ತೋರಿದರೂ ಮುಖ್ಯಮಂತ್ರಿ ಸ್ಥಾನ ಪಲ್ಲಟವಾಗುವುದು ದಿಟ. ಹೈಕೋರ್ಟ್‌ ತೀರ್ಪು ಬಂದ ನಂತರ ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಹೇಳಿದರು. +ಮುಡಾ ಹಗರಣದಲ್ಲಿ ಮೇಲ್ನೋಟಕ್ಕೆ ಸಿದ್ದರಾಮಯ್ಯನವರ ಕುಟುಂಬದವರು ಫಲಾನುಭವಿಗಳಾಗಿದ್ದಾರೆ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ತೀರ್ಪು ನೀಡಿದೆ. ಯಾವ ನೈತಿಕತೆ ಮೇಲೆ ಅವರು ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು.ನಿನ್ನೆ ಹೈಕೋರ್ಟ್‌ ತಿರ್ಪು ನೀಡಿದೆ. ಸಿಎಂ ಗಮನಕ್ಕೆ ಬರದೆ ಇಷ್ಟು ದೊಡ್ಡ ಹಗರಣ ಆಗಲಿಕ್ಕೆ ಸಾಧ್ಯವಿಲ್ಲ. ಹೀಗಾಗಿ ಸಮಗ್ರ ತನಿಖೆ ಅಗತ್ಯವಿದೆ ಎಂದಿದೆ. +ತಪ್ಪು ಮಾಡಿಲ್ಲ ರಾಜೀನಾಮೆ ನೀಡಲ್ಲ ಎಂದಿದ್ದಾರೆ. ನ್ಯಾಯಾಲಯ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಆದರೂ ಸಿಎಂ ರಾಜಕೀಯ ಪ್ರೇರಿತ ಎನ್ನುತ್ತಾರೆ. ನ್ಯಾಯಾಲಯದ ತೀರ್ಪಿಗೆ ತಲೆದೂಗಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. +ಬಿಜೆಪಿ ನಾಯಕರು ಈಶ್ವರಪ್ಪ ಭೇಟಿ ಕುರಿತು ಮಾತನಾಡಿದ ಅವರು, ಯತ್ನಾಳ್‌ ಮತ್ತೆ ಯಾರು ಯಾರು ಹೋಗಿದ್ದರು ಗೊತ್ತಿಲ್ಲ.. ಅವರನ್ನೇ ಕೇಳಿ.. ನಾನು ಈಶ್ವರಪ್ಪ ಹೇಳಿಕೆ ಬಗ್ಗೆ ಮಾತನಾಡಬಾರದು ಅಂದುಕೊಂಡಿದ್ದೆ. ಬಹಳ ಕಾಳಜಿ ಇಟ್ಟುಕೊಂಡು ಬಿಜೆಪಿ ಪರವಾಗಿ ಮಾತನಾಡಿದ್ದಾರೆ ಈಶ್ವರಪ್ಪ ಎಂದರು. +ನಾವು ವಿಜಯೇಂದ್ರ ನಾಯಕತ್ವ ಒಪ್ಪಲ್ಲ ಎನ್ನುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಅವರ ಉಚ್ಚಾಟನೆ ಆಗಿದೆ. ಸ್ವಾತಂತ್ರವಾಗಿ ಸ್ಪರ್ಧೆ ಮಾಡಿದ್ದರು. ಪಕ್ಷಕ್ಕಾಗಿ ಸ್ಪರ್ಧೆ ಮಾಡಲಿಲ್ಲ, ಮಗನಿಗಾಗಿ ಆ ರೀತಿ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.ಈಶ್ವರಪ್ಪ ಕರೆತರುವ ಯಾವುದೇ ಪ್ರಯತ್ನ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿಲ್ಲ. ಒಂದು ವೇಳೆ ರಾಷ್ಟ್ರ ನಾಯಕರು ಕೇಳಿದರೆ ಮಾಹಿತಿ ನೀಡುತ್ತೇವೆ ಎಂದರು. +ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಯಾವ ಒಗ್ಗಟ್ಟು ಇಲ್ಲ ಹೇಳಿ. ಒಗ್ಗಟ್ಟಿನಿಂದಲೇ ಪಾದಯಾತ್ರೆ ಮಾಡಿದ್ದು. ಪಾದಯಾತ್ರೆ ಯಶಸ್ವಿಯಾಗಿದೆ ಕೋರ್ಟ್‌ ತನಿಖೆಗೆ ಅನುಮತಿ ಕೊಟ್ಟಿದೆ ಎಂದು ಹೇಳಿದರು. +ಮಾಜಿ ಸಚಿವ ಮುರುಗೇಶ್‌ ನಿರಾಣಿ ಮಾತನಾಡಿ, ಸಿದ್ದರಾಮಯ್ಯ ಐದು ದಶಕ ರಾಜಕೀಯ ಮಾಡಿದ್ದಾರೆ. ಹಿಂದೆ ಇಂತಹ ಕೋರ್ಟ್‌ ತೀರ್ಪು ಕೊಟ್ಟಾಗ ಹೋರಾಟ ಮೂಲಕ ಹಲವರು ರಾಜೀನಾಮೆ ಪಡೆದಿದ್ದಾರೆ. ಈಶ್ವರಪ್ಪ ಅವರ ರಾಜೀನಾಮೆ ಪಡೆದಿದ್ದರು. ಅದು ಮೂಲಕ ಹೋರಾಟ ಸಿದ್ದರಾಮಯ್ಯ ಅವರದಾಗಿತ್ತು. ಕೋರ್ಟ್‌ ತನಿಖೆ ಆದೇಶ ನೀಡಿರುವುದರಿಂದ ಅವರು ರಾಜೀನಾಮೆ ನೀಡಬೇಕು. ತನಿಖೆ ಎದುರಿಸಬೇಕು ಎಂದರು. +ಮಂಡ್ಯದ ನಾಗಮಂಗಲದಲ್ಲಿ ನಮ ಕಾರ್ಯಕರ್ತೆ ಛಾಯ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಭಾಗಿ ಆಗಿದ್ದರು. ಅವರನ್ನು ರಾತ್ರಿ 12 ಗಂಟೆ ತನಕ ಪೊಲೀಸ್‌‍ ಠಾಣೆಯಲ್ಲಿ ಕೂರಿಸಿದ್ದರು. ಒಟಿಪಿ ಡೌನ್ಲೋಡ್‌ ಮಾಡ್ತಾ ಇದ್ದೀರಿ ಎಂದು ಕಾರಣ ನೀಡಿ ಕೂರಿಸಿದ್ದರು. ಇದನ್ನು ನಾವು ಸಹಿಸುವುದಿಲ್ಲ. ಪದೇ ಪದೇ ನಮ ಕಾರ್ಯಕರ್ತರಿಗೆ ತೊಂದರೆ ನೀಡುತ್ತಾ ಇದ್ದಾರೆ. ಇದು ಸಣ್ಣ ವಿಷಯ ಅಲ್ಲ. ಗೃಹ ಸಚಿವರು ಗಮನ ಹರಿಸಬೇಕು. ಇಲ್ಲವಾದರೆ ಪೊಲೀಸ್‌‍ ಠಾಣೆಗೆ ನಾವು ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು. +ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ನಾಡಿನ ಜನರಿಗೆ ಪ್ರಾಮಾಣಿಕ ಉತ್ತರಬೇಕು. ಬುದ್ದಿವಂತಿಕೆ ಉತ್ತರದಿಂದ ಕೆಲವರನ್ನು ನಂಬಿಸಬಹುದು. ಪರಿಸ್ಥಿತಿ ನೋಡಿದರೆ ಅವರ ಪಕ್ಷದವರಿಂದಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಸನ್ನಿವೇಶ ಬರುತ್ತದೆ. ಇದೊಂದು ರೀತಿ ಐಸಿಯುನಲ್ಲಿರುವ ಸರ್ಕಾರ ಆಕ್ಸಿಜನ್‌ ಇರುವವರೆಗೆ ಉಸಿರಾಡುತ್ತೇ ಆಮೇಲೆ ಇದ್ದೇ ಇದೆಯಲ್ಲ ಎಂದು ವ್ಯಂಗ್ಯವಾಡಿದರು. +ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದೇವೆ. ಬಿಜೆಪಿಯಿಂದ ದೊಡ್ಡ ಹೋರಾಟಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಶಾಸಕರು, ಸಂಸದರು ಹಾಗೂ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_10_4.txt b/eesanje/url_46_10_4.txt new file mode 100644 index 0000000000000000000000000000000000000000..727392751ed2733bc0ad356c2783202cd7373eec --- /dev/null +++ b/eesanje/url_46_10_4.txt @@ -0,0 +1,12 @@ +ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ : ಗೃಹಸಚಿವ ಪರಮೇಶ್ವರ್‌ + +ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದು, ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾನೂನಿನ ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿತ್ತು. +ಆದರೆ ವ್ಯತಿರಿಕ್ತವಾದ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇನೆ. ಆದರೆ ಎಲ್ಲೋ ಒಂದು ಕಡೆ ನ್ಯಾಯ ಸಿಕ್ಕಿಲ್ಲ ಎಂದು ಮನಸ್ಸಿಗೆ ನೋವಾಗಿದೆ. ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ನ್ಯಾಯಾಂಗ ಹೋರಾಟವನ್ನು ಮುಂದುವರೆಸಲಾಗುವುದು ಎಂದರು. +ಈ ನಡುವೆ ವಿರೋಧಪಕ್ಷಗಳು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಈಗಾಗಲೇ ಸಿದ್ದರಾಮಯ್ಯರಾದಿಯಾಗಿ ಎಲ್ಲರೂ ಸ್ಪಷ್ಟಪಡಿಸಿದ್ದಾರೆ. ನಾನು ಅದನ್ನು ದೃಢಪಡಿಸುತ್ತೇನೆ. ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ಸಲ್ಲಿಸಲಾಗುವುದು. ನ್ಯಾಯಾಂಗ ಹೋರಾಟ ಮುಂದುವರೆಸುವುದರಿಂದ ರಾಜೀನಾಮೆ ನೀಡುವ ಮಾತು ಬರುವುದಿಲ್ಲ ಎಂದು ತಿಳಿಸಿದರು. +ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಆಪಾದನೆಗಳು ಅವರ ವಿರುದ್ಧ ಬಂದಿರಲಿಲ್ಲ. ಈಗ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಿದ್ದಾರೆ ಎಂಬ ಭಾವನೆ ಜನಸಾಮಾನ್ಯರಿಗೆ ಬರುತ್ತಿದೆ. ಅದನ್ನು ನಾವು ರಾಜಕೀಯವಾಗಿಯೇ ಹೋರಾಟ ಮಾಡಿ ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಹೇಳಿದರು. +ಹೈಕೋರ್ಟ್‌ ತೀರ್ಪನ್ನು ದ್ವಿಸದಸ್ಯ ಪೀಠದ ಮುಂದೆ ಪ್ರಶ್ನಿಸುತ್ತೇವೆ. ಆದರೆ ಈ ಹಿಂದೆ ವಾದ-ಪ್ರತಿವಾದದ ವೇಳೆ ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ಏನು ಎಂದು ಹೇಳುವಂತೆ ನ್ಯಾಯಾಧೀಶರೇ ಪ್ರಶ್ನಿಸಿದರು. +ವಾದ-ಪ್ರತಿವಾದದ ಸಂದರ್ಭದಲ್ಲಿ ನ್ಯಾಯಾಧೀಶರ ಉಲ್ಲೇಖಗಳೇ ಬೇರೆ, ತೀರ್ಪೇ ಬೇರೆ ಎಂಬಂತಾಗಿದೆ. ಈ ಹಿನ್ನೆಲೆಯಲ್ಲಿ ದ್ವಿಸದಸ್ಯ ಪೀಠದ ಮುಂದೆ ಹೋರಾಟ ಮಾಡಬೇಕೆ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಬೇಕೇ ಎಂಬುದರ ಕುರಿತು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು. +ಹೈಕೋರ್ಟ್‌ ತೀರ್ಪಿನಲ್ಲಿ ರಾಜ್ಯಪಾಲರು ತಮ ಆದೇಶ ಹೊರಡಿಸುವಾಗ ವಿವೇಚನಾಧಿಕಾರ ಬಳಸಿದ್ದಾರೆ ಎಂಬುದಕ್ಕೆ ಸಮರ್ಥನೆ ನೀಡಿಲ್ಲ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ. ಇದರ ಬಗ್ಗೆ ಚರ್ಚೆಯಾಗಬೇಕಿತ್ತು. ತೀರ್ಪಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ ಎಂಬುದಂತೂ ಸತ್ಯ. ನ್ಯಾಯಾಧೀಶರ ಉಲ್ಲೇಖ ಮತ್ತು ತೀರ್ಪಿನಲ್ಲಿ ವೈರುಧ್ಯಗಳು ಕಂಡುಬರುತ್ತಿವೆ ಎಂದರು.ದ್ವಿಸದಸ್ಯ ಪೀಠದ ಮುಂದೆ ನ್ಯಾಯ ಸಿಗಬಹುದು ಎಂಬ ನಿರೀಕ್ಷೆ ಇದೆ. ಅಲ್ಲಿ ಯಾವ ರೀತಿಯ ತೀರ್ಪು ಬರುತ್ತದೋ ಗೊತ್ತಿಲ್ಲ. ಒಂದು ವೇಳೆ ಇದೇ ರೀತಿ ತೀರ್ಪು ಹೊರಬಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. +ಸಿದ್ದರಾಮಯ್ಯನವರ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪಿನಿಂದಾಗಿ ಇತರ ಸಚಿವರುಗಳ ಮೇಲಿನ ದೂರುಗಳಿಗೂ ಬಲ ಬಂದಂತಾಗಿದೆ ಎಂಬ ವಿಶ್ಲೇಷಣೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ರವರು, ರಾಜ್ಯಪಾಲರು ಎಲ್ಲಾ ದೂರುಗಳನ್ನೂ ಏಕರೂಪತೆಯಿಂದ ನೋಡಬೇಕಿತ್ತು. ಎಚ್‌.ಡಿ.ಕುಮಾರಸ್ವಾಮಿ, ಮುರುಗೇಶ್‌ ನಿರಾಣಿ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ ಎಲ್ಲರಿಗೂ ಇದೇ ರೀತಿಯ ಮಾನದಂಡಗಳನ್ನು ಅನುಸರಿಸಬೇಕಿತ್ತು. ಕೆಲವರಿಗೆ ಮಾತ್ರ ತುರ್ತು ಅನುಮತಿ ನೀಡಿ ಉಳಿದ ಕಡತಗಳನ್ನು ಮರೆಯುವುದು ಮೇಲ್ನೋಟಕ್ಕೆ ತಾರತಮ್ಯ ಎಂದು ಕಂಡುಬರುತ್ತಿದೆ. +ಲೋಕಾಯುಕ್ತಕ್ಕೆ ಕಡತ ವಾಪಸ್‌‍ ಬಂದಿದ್ದರೆ ಅಗತ್ಯ ವಿವರಣೆಗಳನ್ನು ನೀಡಿ ಮರುಸಲ್ಲಿಕೆ ಮಾಡಲಾಗುವುದು. ಆಗ ರಾಜ್ಯಪಾಲರು ಅಷ್ಟೇ ವೇಗವಾಗಿ ನಿರ್ಣಯ ಕೈಗೊಳ್ಳಬೇಕಲ್ಲವೇ? ಎಂದು ಹೇಳಿದರು.ಕುಮಾರಸ್ವಾಮಿಯವರ ಕಡತ ಇನ್ನೂ ರಾಜ್ಯಪಾಲರ ಬಳಿಯೇ ಇದೆ ಎಂದರು. +ರಾಜ್ಯಪಾಲರ ವಿರುದ್ಧ ಹೋರಾಟದ ಬಗ್ಗೆ ಪಕ್ಷ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು. ರಾಜ್ಯಪಾಲರು ಸಚಿವ ಸಂಪುಟ ಸಭೆಯ ಸಲಹೆ ಮೇರೆಗೆ ಕೆಲಸ ಮಾಡಬೇಕಿತ್ತು. ಆದರೆ ಅದನ್ನು ಬಿಟ್ಟು ವಿವೇಚನಾಧಿಕಾರವನ್ನು ಬಳಸಬಹುದು. ಆದರೆ ಇಲ್ಲಿ ಅದು ಕಂಡುಬರುತ್ತಿಲ್ಲ. ಹೈಕೋರ್ಟ್‌ ತೀರ್ಪಿನಿಂದ ನಮಗೆ ಸಮಾಧಾನವಾಗಿಲ್ಲ. ಆದರೆ ಈ ಪ್ರಕರಣದಿಂದ ಸಿದ್ದರಾಮಯ್ಯ ಅವರು ಕುಗ್ಗಿಲ್ಲ. ಕಲ್ಲುಬಂಡೆಯಂತೆ ಗಟ್ಟಿಯಾಗಿದ್ದಾರೆ. ಹೈಕಮಾಂಡ್‌ ಕೂಡ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ. ವರಿಷ್ಠ ನಾಯಕರು ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_10_5.txt b/eesanje/url_46_10_5.txt new file mode 100644 index 0000000000000000000000000000000000000000..494ab100339d514d5f1a847e179b01719ba5d0dd --- /dev/null +++ b/eesanje/url_46_10_5.txt @@ -0,0 +1,7 @@ +ಮುಡಾ ಪ್ರಕರಣ : ಲೋಕಾಯುಕ್ತ ಪೊಲೀಸರಿಗೆ ದೂರು + : +ಮೈಸೂರು,ಸೆ.25– ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ನೇರ ವಿಚಾರಣೆ ಆರಂಭಿಸುವಂತೆ ಜೆಡಿಎಸ್‌‍ನ ಪ್ರದೀಪ್‌ಕುಮಾರ್ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. +ಇಂದು ಬೆಳಿಗ್ಗೆ ಪಕ್ಷದ ಕೆಲ ಮುಖಂಡರ ಜೊತೆ ಲೋಕಾಯುಕ್ತ ಕಚೇರಿಗೆ ತೆರಳಿ ಎರಡನೇ ಬಾರಿಗೆ ದೂರು ಸಲ್ಲಿಸಿದ್ದಾರೆ.ಕಳೆದ ಜುಲೈನಲ್ಲೇ ನಾನು ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯಪಾಲರು ಅಭಿಯೋಜನೆಗೆ ನೀಡಿದ್ದ ಪೂರ್ವಾನುಮತಿಯನ್ನು ನಿನ್ನೆ ಹೈಕೋರ್ಟ್‌ ತೀರ್ಪು ಎತ್ತಿಹಿಡಿದಿದೆ. ಜೊತೆಗೆ ಪ್ರಕರಣ ದಾಖಲಿಸಲು ಯಾರ ಪೂರ್ವಾನುಮತಿಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ತಮ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಬೇಕು ಎಂದು ಒತ್ತಾಯಿಸಿದರು. +ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದ್ದು, ತನಿಖೆಗೂ ಮುನ್ನ ಪ್ರಕರಣ ದಾಖಲಿಸಲು ಸೂಚನೆ ನೀಡುವಂತೆ ಕೆಲವರು ಮನವಿ ಮಾಡಿದ್ದಾರೆ. ಆದರೆ ಹೈಕೋರ್ಟ್‌ ಯಾವುದೇ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ಹೇಳಿರುವುದರಿಂದ ಲೋಕಾಯುಕ್ತ ಸಂಸ್ಥೆ ನ್ಯಾಯೋಚಿತವಾಗಿ ಕ್ರಮ ಕೈಗೊಳ್ಳಬೇಕು. ಕಳೆದ ಮೂರು ತಿಂಗಳಿನಿಂದಲೂ ಉದ್ದೇಶಪೂರಕವಾಗಿ ಕಾಲಾಹರಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ತಮ ದೂರಿನ ಅಡಿ ಪ್ರಕರಣ ದಾಖಲಿಸದೇ ಇದ್ದರೆ ಲೋಕಾಯುಕ್ತ ಕಚೇರಿ ಎದುರು ಧರಣಿ ನಡೆಸುವುದಾಗಿಯೂ ಅವರು ಎಚ್ಚರಿಸಿದರು.ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಯತೀಂದ್ರ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎರಡನೇ ದೂರು ನೀಡಿದ್ದಾರೆ. +ಲೋಕಾಯುಕ್ತ ಅಧಿಕಾರಿಗಳು 197 ಪುಟಗಳ ದೂರಿದ್ದು, ಇದನ್ನು ಪರಿಶೀಲಿಸಲು ಕಾಲಾವಕಾಶ ನೀಡುವಂತೆ ಸೂಚಿಸಿದ್ದಾರೆ. ಅರ್ಧಗಂಟೆ ನಾನು ಈ ಬಗ್ಗೆ ಕಾಯುತ್ತೇನೆ. ನಂತರ ಧರಣಿ ನಡೆಸುತ್ತೇನೆ ಎಂದು ಸುದ್ದಿಗಾರರೊಂದಿಗೆ ತಿಳಿಸಿದರು.ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಡಕ್ಕೆ ಮಣಿದಂತೆ ಕಂಡುಬರುತ್ತಿದೆ. ಹೀಗಾಗಿ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_46_10_6.txt b/eesanje/url_46_10_6.txt new file mode 100644 index 0000000000000000000000000000000000000000..e927609def08376561716ca4969d75f4594c3021 --- /dev/null +++ b/eesanje/url_46_10_6.txt @@ -0,0 +1,17 @@ +ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ + +ಬೆಂಗಳೂರು,ಸೆ.25– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸುವ ಮೂಲಕ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದು, ಇಂದು ತೀರ್ಪು ಪ್ರಕಟವಾಗಿದ್ದು, ಸಿಆರ್‌ಪಿಸಿ ಅಡಿಯೇ ಕಾನೂನ ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಸೂಚಿಸಲಾಗಿದೆ. +ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಹಾಗೂ ಕಾನೂನಿನ ಕುಣಿಕೆ ಎದುರಾಗಿದೆ.ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರವಾಗಿ ವಕೀಲರಾದ ಲಕ್ಷ್ಮೀ ಅಯ್ಯಂಗಾರ್‌ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್‌ ನೀಡಿರುವ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಗಮನಕ್ಕೆ ತಂದರು. +ಜೊತೆಗೆ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಸ್ವಾದೀನಪಡಿಸಿಕೊಂಡು ಮೂಲ ಮಾಲೀಕರಿಗೆ ಪರಿಹಾರವನ್ನು ಪಾವತಿಸಲು ಹಣ ಠೇವಣಿ ಇಡಲಾಗಿತ್ತು. ನಿವೇಶನಗಳನ್ನು ಅಭಿವೃದ್ಧಿಪಡಿಸಿ ರಸ್ತೆ, ಪಾರ್ಕ್‌ಗಳನ್ನು ನಿರ್ಮಿಸಲಾಗಿತ್ತು ಎಂದು ವಿವರಿಸಿದರು. +ಮುಡಾ ಸ್ವಾದೀನಪಡಿಸಿಕೊಂಡಿದ್ದ ಭೂಮಿಯನ್ನು ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದಾರೆ. ನಂತರ ತಮ ಸಹೋದರಿ ಹಾಗೂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರಿಗೆ ದಾನಪತ್ರ ಮಾಡಿಕೊಟ್ಟಿದ್ದಾರೆ. ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಭೂಮಿ ಖರೀದಿಸಿದ್ದಾರೆ. ಆದರೆ ಇಲ್ಲಿ ದೇವರಾಜು ಭೂಮಿಯ ಮಾಲೀಕರೇ ಅಲ್ಲ ಎಂದು ವಾದಿಸಿದರು. +ಭೂಸ್ವಾದೀನ ಪ್ರಕ್ರಿಯೆಗಳು ಪೂರ್ಣಗೊಂಡಿದ್ದ ಜಮೀನನ್ನು ಜಿಲ್ಲಾಡಳಿತ ರಾಜಕೀಯ ಪ್ರಭಾವಕ್ಕೆ ಮಣಿದು ಮತ್ತೊಮೆ ನಿಯಮಬಾಹಿರವಾಗಿ ಭೂಪರಿವರ್ತನೆ ಮಾಡಿದೆ ಎಂದು ವಕೀಲರು ದೂರಿದರು. +ಈ ನಡುವೆ ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿಯಾಗಿದ್ದಾಗ ಜಮೀನಿನ ಖರೀದಿ ಹಾಗೂ ಡಿ ನೋಟಿಫಿಕೇಷನ್‌ ಪ್ರಕ್ರಿಯೆಗಳಾಗಿವೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಸಲಾಗಿದೆ ಮತ್ತು ಮುಡಾದಲ್ಲಿ 60:40 ರ ಬದಲಾಗಿ 50:50ರ ಅನುಪಾತದಡಿ ನಿವೇಶನ ಹಂಚಿಕೆಯಾಗಬೇಕು ಎಂಬ ನಿರ್ಣಯವಾಗಿದೆ. ಆ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಭಾಗವಹಿಸಿದ್ದರು. +ಸಿದ್ದರಾಮಯ್ಯ ವಿರೋಧಪಕ್ಷದ ನಾಯಕರಾಗಿದ್ದಾಗ 14 ನಿವೇಶನಗಳ ಮಂಜೂರಾತಿಯಾಗಿದೆ ಎಂದು ವಿವರಿಸಿದರು.ಪಾರ್ವತಿ ಅವರು ಜಮೀನಿನ ಮಾಲೀಕರಾಗಿದ್ದರೂ ಕೂಡ 4,800 ಚದರ ಅಡಿ ಅಂದರೆ 4 ನಿವೇಶನಗಳನ್ನು ಪಡೆಯಲು ಅರ್ಹರಾಗಿದ್ದರೂ, ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಒಟ್ಟು 11 ಅಂಶಗಳ ಆಧಾರದ ಮೇಲೆ ವಾದ ಮಂಡಿಸಿದ್ದರು. +ಈ ಪ್ರಕರಣದಲ್ಲಿ ಸ್ಪಷ್ಟವಾಗಿ ನಿಯಮದ ಉಲ್ಲಂಘನೆಯಾಗಿದೆ. ಅನಪೇಕ್ಷಿತ ರಾಜಕೀಯ ಪ್ರಭಾವ ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಮನವಿ ಮಾಡಿದರು. +ಈ ವೇಳೆ ನ್ಯಾಯಾಧೀಶರು ಕಾನೂನು ಪ್ರಕ್ರಿಯೆಯನ್ನು ಹೊಸದಾಗಿ ಜಾರಿಯಾಗಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍) ಅಡಿ ಅಥವಾ ಈ ಮೊದಲು ಜಾರಿಯಲ್ಲಿದ್ದ ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಸರ್‌(ಸಿಆರ್‌ಪಿಸಿ) ಅಡಿ ಮುಂದುವರೆಸಬೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು. +ಅರ್ಜಿದಾರರ ಪರ ವಕೀಲರು, ಹೊಸದಾಗಿ ಜಾರಿಯಾಗಿರುವ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.ಒಂದು ವೇಳೆ ವಿಚಾರಣೆ ಸಂದರ್ಭದಲ್ಲಿ ಕಾನೂನಿನ ಸಂಘರ್ಷ ಎದುರಾದರೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಗುಜರಾತ್‌ ಹಾಗೂ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ತೀರ್ಪನ್ನು ಉಲ್ಲೇಖಿಸಿದರು. ಸದ್ಯಕ್ಕೆ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ನ್ಯಾಯಾಧೀಶರು ಕಲಾಪವನ್ನು ಕೆಲಕಾಲ ಮುಂದೂಡಿದರು. +ಮತ್ತೆ ನ್ಯಾಯಾಲಯದ ಕಲಾಪ ಆರಂಭವಾದಾಗ ನ್ಯಾಯಾಧೀಶರು ತಮ ತೀರ್ಪನ್ನು ಪ್ರಕಟಿಸಿದ್ದು, ಡಿ.24 ರೊಳಗೆ ಅಂದರೆ ಮೂರು ತಿಂಗಳ ಕಾಲಾವಧಿಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದಾರೆ. +ಕಾನೂನು ಪ್ರಕ್ರಿಯೆ ಜಿಜ್ಞಾಸೆ :ಮುಡಾ ನಿವೇಶನ ಹಂಚಿಕೆ ಪ್ರಕರಣ 2004 ರಿಂದಲೂ ಆರಂಭಗೊಂಡಿದೆ. ಬಿಎನ್‌ಎಸ್‌‍ಎಸ್‌‍ 2024 ರ ಜುಲೈ 1 ರಿಂದ ಅನುಷ್ಠಾನಕ್ಕೆ ಬಂದಿದ್ದು, ಅನಂತರ ಘಟಿಸಿದ ಅಪರಾಧಗಳನ್ನು ಹೊಸ ಪದ್ಧತಿಯಡಿ ವಿಚಾರಣೆ ನಡೆಸಬೇಕಾಗುತ್ತದೆ. ಹಳೆಯ ಪ್ರಕರಣ ಆಗಿರುವುದರಿಂದ ಸಿಆರ್‌ಪಿಸಿಯನ್ನೇ ಪಾಲನೆ ಮಾಡಬೇಕು ಎಂಬ ವಾದಗಳು ಇವೆ. +ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 17 ಎ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍) ಕಾಯಿದೆ ಸೆಕ್ಷನ್‌ 218 ರ ಅಡಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದರು. +ರಾಜ್ಯಪಾಲರು ಪೂರ್ವಾನುಮತಿಯನ್ನು ನೀಡಿದರು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಭ್ರಷ್ಟಾಚಾರ ನಿಗ್ರಹ ಕಾಯಿದೆ 17 ಎ ಅಡಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಎತ್ತಿಹಿಡಿದಿತ್ತು. ಬಿಎನ್‌ಎಸ್‌‍ 218ರ ಅಡಿ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದರು.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್‌ ತೀರ್ಪಿನ ದೃಢೀಕೃತ ಪ್ರತಿಯನ್ನು ಸಲ್ಲಿಸಲಾಯಿತು. ವಿಚಾರಣೆ ಹಂತದಲ್ಲಿ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಜಿಜ್ಞಾಸೆ ವ್ಯಕ್ತವಾಗಿತ್ತು. ಅದಕ್ಕೆ ಸ್ಪಷ್ಟನೆ ಸಿಕ್ಕ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸಿದೆ. +ಇದರಿಂದಾಗಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರಿಗೆ ಸಂಕಷ್ಟಗಳು ಎದುರಾಗಿವೆ. ಹೈಕೋರ್ಟ್‌ ನಿನ್ನೆ ನೀಡಿದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಲು ಮುಖ್ಯಮಂತ್ರಿಯವರ ಕಾನೂನು ತಂಡ ತಯಾರಿ ನಡೆಸಿತು.ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದರ ನಡುವೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಮತ್ತೊಂದು ಸಂಕಷ್ಟವನ್ನು ತಂದೊಡ್ಡಿದೆ. \ No newline at end of file diff --git a/eesanje/url_46_10_7.txt b/eesanje/url_46_10_7.txt new file mode 100644 index 0000000000000000000000000000000000000000..6f32129ed2abe6d91efabb52be833c26672c0c6f --- /dev/null +++ b/eesanje/url_46_10_7.txt @@ -0,0 +1,12 @@ +ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ +- ' +ಬೆಂಗಳೂರು,ಸೆ.25– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶದ ನೀಡಿದ ಬೆನ್ನಲ್ಲೇ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿವೆ.ರಾಜಧಾನಿ ಬೆಂಗಳೂರು, ಮೈಸೂರು, ಯಾದಗಿರಿ, ಶಿವಮೊಗ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯನವರ ರಾಜೀನಾಮೆಗೆ ತೀವ್ರ ಒತ್ತಡ ತಂದಿದ್ದಾರೆ. +ಅಲ್ಲದೆ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲು ಉಭಯ ಪಕ್ಷಗಳು ನಿರ್ಧರಿಸಿದ್ದು, ಜಂಟಿಯಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸುವುದಾಗಿ ಘೋಷಿಸಿವೆ. ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ, ಫಲಕಗಳನ್ನು ಪ್ರದರ್ಶಿಸಿ, ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿವೆ. +ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಮೋರ್ಚಾದ ನೂರಾರು ಕಾರ್ಯಕರ್ತರು, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.ಶಿವಾನಂದ ವೃತ್ತದಿಂದ ಮುಖ್ಯಮಂತ್ರಿ ವಿರುದ್ಧದ ಫಲಕಗಳನ್ನು ಹಿಡಿದು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಕುಮಾರಕೃಪ ಅತಿಥಿ ಗೃಹದ ಬಳಿ ಬರುತ್ತಿದ್ದಂತೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. +ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಧೀರಜ್ ಮುನಿರಾಜ್, ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಆರೋಪಿ ಸ್ಥಾನದಲ್ಲಿರುವುದರಿಂದ ನೈತಿಕ ಹೊಣೆ ಹೊತ್ತು ಅವರು ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆಯಿದ್ದರೆ ಅವರು ನ್ಯಾಯಾಲಯದ ತೀರ್ಪು ಹೊರಬರುತ್ತಿದ್ದಂತೆ ರಾಜೀನಾಮೆ ನೀಡಬೇಕಿತ್ತು ಎಂದು ಹೇಳಿದರು. +ನ್ಯಾಯಾಲಯದ ಆದೇಶ ಸ್ಪಷ್ಟವಾಗಿದ್ದು, ಅವರು ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಉಳಿಸಿಕೊಂಡಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಮೊದಲು ನೈತಿಕತೆ ಪ್ರದರ್ಶಿಸಿ ಇನ್ನೊಬ್ಬರಿಗೆ ಮಾದರಿಯಾಗಲಿ. ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. +ಅವರು ರಾಜೀನಾಮೆ ನೀಡುವವರೆಗೂ ನಮ ಹೋರಾಟ ಮುಂದುವರೆಯುತ್ತದೆ. ಬೆಂಗಳೂರಿನಿಂದ ಮೈಸೂರುವರೆಗೆ ನಾವು ಹೋರಾಟ ನಡೆಸಿದ ಪರಿಣಾಮದಿಂದ ಪ್ರಕರಣ ಹೊರಬಂದಿದೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ತಮ ಬುಡಕ್ಕೆ ಬೆಂಕಿ ಬಿದ್ದಾಗ ಕಾನೂನು ಬಗ್ಗೆ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ನಾವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಎಚ್ಚರಿಸಿದರು. +ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ ಮೊದಲಾದವರ ನೇತೃತ್ವದಲ್ಲಿ ಫ್ರೀಡಂಪಾರ್ಕ್ ಮುಂಭಾಗದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಲಾಯಿತು.ಮುಖ್ಯಮಂತ್ರಿ ವಿರದ್ಧದ ಫಲಕಗಳನ್ನು ಪ್ರದರ್ಶಿಸಿ, ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಾಗ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದರು. +ಇದಕ್ಕೂ ಮುನ್ನ ಮಾತನಾಡಿದ ಎಚ್.ಎಂ.ರಮೇಶ್ಗೌಡ, ಬಿಜೆಪಿ-ಜೆಡಿಎಸ್ ತಮ ವಿರುದ್ಧ ಷಡ್ಯಂತ್ರ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಆರೋಪಿಸಿ ರಾಜೀನಾಮೆ ಕೇಳುವ ನೈತಿಕ ಹಕ್ಕು ವಿಪಕ್ಷಗಳಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು. ರಾಜ್ಯಪಾಲರು ನೀಡಿದ ಅನುಮತಿಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಹೀಗಾಗಿ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಿ ಎಂದು ಆಗ್ರಹಿಸಿದರು. +ತಿಪ್ಪೇಸ್ವಾಮಿ ಮಾತನಾಡಿ, ಹೈಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಈ ಹಿಂದೆ ಆರೋಪ ಕೇಳಿಬಂದಾಗ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮಾಯಿ ರಾಜೀನಾಮೆ ನೀಡಿದ್ದರು. ಅಲ್ಲದೆ, ಬಿ.ಎಸ್.ಯಡಿಯೂರಪ್ಪ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಅಂಟಿಕೊಂಡು ಕೂರಬಾರದು. ತಕ್ಷಣವೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವವರೆಗೂ ನಿರಂತರವಾಗಿ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದರು. +ಟಿ.ಎ.ಶರವಣ ಮಾತನಾಡಿ, ಹೈಕೋರ್ಟ್ ತನಿಖೆಗೆ ಆದೇಶ ನೀಡಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದರು. ಕಾನೂನು ಹೋರಾಟ ನಡೆಸಲು ನಮದೇನು ತಕರಾರು ಇಲ್ಲ. ಆದರೆ ನೈತಿಕ ಹೊಣೆ ಹೊತ್ತು ತಕ್ಷಣ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_10_8.txt b/eesanje/url_46_10_8.txt new file mode 100644 index 0000000000000000000000000000000000000000..ddb26e552d65634aae3a5d7dcd8ee16ddbffe12d --- /dev/null +++ b/eesanje/url_46_10_8.txt @@ -0,0 +1,11 @@ +ಸಿಎಂಗೆ ಸಂಕಷ್ಟ : ಮುಡಾ ಪ್ರಕರಣದ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ + ' +ಬೆಂಗಳೂರು,ಸೆ.25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತನಿಖೆಗೆ ಸೂಚನೆ ನೀಡಿದೆ.ನಮ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಸ್ನೇಹಮಯಿ ಕೃಷ್ಣ ಹಾಗೂ ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಯಿತು. +ದೂರುದಾರರ ಪರವಾಗಿ ವಕೀಲ ಲಕ್ಷ್ಮೀ ಅಯ್ಯಂಗಾರ್‌ ವಾದ ಮಂಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್‌ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್‌ ನೀಡಿರುವ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಗಮನಕ್ಕೆ ತಂದರು. +ಈ ವೇಳೆ ನ್ಯಾಯಾಧೀಶರು ಕಾನೂನು ಪ್ರಕ್ರಿಯೆಯನ್ನು ಹೊಸದಾಗಿ ಜಾರಿಯಾಗಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍) ಅಡಿ ಅಥವಾ ಈ ಮೊದಲು ಜಾರಿಯಲ್ಲಿದ್ದ ಕೋಡ್‌ ಆಫ್‌ ಕ್ರಿಮಿನಲ್‌ ಪ್ರೊಸಿಸರ್‌(ಸಿಆರ್‌ಪಿಸಿ) ಅಡಿ ಮುಂದುವರೆಸಬೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು. +ಅರ್ಜಿದಾರರ ಪರ ವಕೀಲರು, ಹೊಸದಾಗಿ ಜಾರಿಯಾಗಿರುವ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಆದೇಶ ನೀಡಬೇಕೆಂದು ಮನವಿ ಮಾಡಿದರು.ಒಂದು ವೇಳೆ ವಿಚಾರಣೆ ವೇಳೆ ಕಾನೂನಿನ ಸಂಘರ್ಷ ಎದುರಾದರೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ. +ಸದ್ಯಕ್ಕೆ ಬಿಎನ್‌ಎಸ್‌‍ಎಸ್‌‍ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು. ಈ ವೇಳೆ ನ್ಯಾಯಾಧೀಶರು ಕಲಾಪವನ್ನು ಕೆಲಕಾಲ ಮುಂದೂಡಿದರು. ನಂತರ ನ್ಯಾಯಾಲಯದ ಕಲಾಪ ಮರು ಸಮಾವೇಶಗೊಂಡಾಗ ನ್ಯಾಯಾಧೀಶರು ತಮ ತೀರ್ಪನ್ನು ಪ್ರಕಟಿಸಿದರು. +ಕಾನೂನು ಪ್ರಕ್ರಿಯೆ ಜಿಜ್ಞಾಸೆ :ಮುಡಾ ನಿವೇಶನ ಹಂಚಿಕೆ ಪ್ರಕರಣ 2004 ರಿಂದಲೂ ಆರಂಭಗೊಳ್ಳಲಿದೆ. ಬಿಎನ್‌ಎಸ್‌‍ಎಸ್‌‍ 2024 ರ ಜುಲೈ 1 ರಿಂದ ಅನುಷ್ಠಾನಕ್ಕೆ ಬಂದಿದ್ದು, ಅನಂತರ ಘಟಿಸಿದ ಅಪರಾಧಗಳನ್ನು ಹೊಸ ಪದ್ಧತಿಯಡಿ ವಿಚಾರಣೆ ನಡೆಸಬೇಕಾಗುತ್ತದೆ. ಹಳೆಯ ಪ್ರಕರಣ ಆಗಿರುವುದರಿಂದ ಸಿಆರ್‌ಪಿಸಿಯನ್ನೇ ಪಾಲನೆ ಮಾಡಬೇಕು ಎಂಬ ವಾದಗಳು ಇವೆ. +ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‌ ಕುಮಾರ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌ 17 ಎ ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍) ಕಾಯಿದೆ ಸೆಕ್ಷನ್‌ 218 ರ ಅಡಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದರು. +ರಾಜ್ಯಪಾಲರು ಪೂರ್ವಾನುಮತಿಯನ್ನು ನೀಡಿದರು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಭ್ರಷ್ಟಾಚಾರ ನಿಗ್ರಹ ಕಾಯಿದೆ 17 ಎ ಅಡಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಎತ್ತಿಹಿಡಿದಿತ್ತು. ಬಿಎನ್‌ಎಸ್‌‍ 218ರ ಅಡಿ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದರು.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೈಕೋರ್ಟ್‌ ತೀರ್ಪಿನ ದೃಢೀಕೃತ ಪ್ರತಿಯನ್ನು ಸಲ್ಲಿಸಲಾಯಿತು. ವಿಚಾರಣೆ ಹಂತದಲ್ಲಿ ಅನುಸರಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಜಿಜ್ಞಾಸೆ ವ್ಯಕ್ತವಾಗಿತ್ತು. ಅದಕ್ಕೆ ಸ್ಪಷ್ಟನೆ ಸಿಕ್ಕ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪನ್ನು ಪ್ರಕಟಿಸಿದೆ. +ಇದರಿಂದಾಗಿ ಸಿದ್ದರಾಮಯ್ಯನವರಿಗೆ ಮತ್ತಷ್ಟು ಸಂಕಷ್ಟಗಳು ಎದುರಾಗಿವೆ. ಹೈಕೋರ್ಟ್‌ ನಿನ್ನೆ ನೀಡಿದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಲು ಮುಖ್ಯಮಂತ್ರಿಯವರ ಕಾನೂನು ತಂಡ ತಯಾರಿ ನಡೆಸಿತು.ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನಲ್ಲಿ ಕಾನೂನು ಹೋರಾಟವನ್ನು ಮುಂದುವರೆಸಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆದಿದ್ದವು. ಇದರ ನಡುವೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಮತ್ತೊಂದು ಸಂಕಷ್ಟವನ್ನು ತಂದೊಡ್ಡಿದೆ. \ No newline at end of file diff --git a/eesanje/url_46_10_9.txt b/eesanje/url_46_10_9.txt new file mode 100644 index 0000000000000000000000000000000000000000..364e303aade72b4387638975eb67ecbc3f84d470 --- /dev/null +++ b/eesanje/url_46_10_9.txt @@ -0,0 +1,8 @@ +ಸಿದ್ದರಾಮಯ್ಯ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ಸಿಎಂಗೆ ‘ನೈತಿಕತೆ’ ಪ್ರಶ್ನೆ +' , '' +ಬೆಂಗಳೂರು,ಸೆ.25-ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ಲಾಗಿದೆ. +ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ ರದ್ದುಪಡಿಸುವುದಿಲ್ಲ ಎಂದು ಆದೇಶ ನೀಡಿತ್ತು. ಅಂದು ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದರಿಂದ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. +ಮುಕ್ತ ಮತ್ತು ನಿಕ್ಷಪಾತ ತನಿಖೆ ನಡೆಯಬೇಕಾದರೆ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಅಲ್ಲದೆ ಯಾವ ನೈತಿಕತೆ ಮೇಲೆ ಯಡಿಯೂರಪ್ಪ ಅಧಿಕಾರದಲ್ಲಿ ಮುಂದುವರೆಯುತ್ತಾರೆ. ಅವರು ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಲಿ. +ಮುಖ್ಯಮಂತ್ರಿಯಾಗಿ ಅವರನ್ನು ತನಿಖಾಧಿಕಾರಿಗಳು ಹೇಗೆ ವಿಚಾರಣೆಗೊಳಪಡಿಸುತ್ತಾರೆ. ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು. ಈಗ ಸಿದ್ದರಾಮಯ್ಯನವರು ಆಡಿದ್ದ ಮಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗುತ್ತಿದ್ದು, ಸಿದ್ದರಾಮಯ್ಯನವರೇ ನೀವು ರಾಜೀನಾಮೆ ಕೊಡುವುದು ಯಾವಾಗ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. +ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ನೀವು ಮೊದಲು ನಿಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮಾತನಾಡಿ. ಹೈಕೋರ್ಟ್‌ ನಿಮ ಅರ್ಜಿಯನ್ನು ವಜಾಗೊಳಿಸಿ ತನಿಖೆ ನಡೆಯಬೇಕೆಂದು ಹೇಳಿದೆ. ನೀವು ಅಧಿಕಾರದಲ್ಲಿದ್ದರೆ ಮುಕ್ತ ಮತ್ತು ನ್ಯಾಯಸಮತ ತನಿಖೆ ಸಾಧ್ಯವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದರೂ ಅಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸರ್ಕಾರದ ಅಣತಿ ಮೇರೆಗೆ ಕೆಲಸ ಮಾಡುತ್ತಾರೆ. ನೀವು ತನಿಖಾಧಿಕಾರಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಎಂಬುದಕ್ಕೆ ಗ್ಯಾರಂಟಿಯಾದರೂ ಏನು? ಅಂದು ಯಡಿಯೂರಪ್ಪ ಅವರ ನೈತಿಕತೆ ಪ್ರಶ್ನಿಸಿದ ನಿಮಗೆ ಅದೇ ನೈತಿಕತೆ ಅನ್ವಯವಾಗುವುದಿಲ್ಲವೇ? ಎಂಬುದು ಅನೇಕರ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_110_1.txt b/eesanje/url_46_110_1.txt new file mode 100644 index 0000000000000000000000000000000000000000..ff5f68481185d4560376846ceae0d8d5f36b603a --- /dev/null +++ b/eesanje/url_46_110_1.txt @@ -0,0 +1,6 @@ +ರಕ್ತದಾನ ಕುರಿತು ಜಾಗೃತಿ ಜಾಥಾಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಚಾಲನೆ +ಬೆಂಗಳೂರು, ಜೂ.14-ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ನಗರದಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಚಾಲನೆ ನೀಡಿದರು.ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವು ಒಬ್ಬರ ಜೀವ ಉಳಿಸಬಹುದು. ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು. +ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್‌ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ ಅವರು ಹಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು. +ಮಾನವನ ರಕ್ತದ ಪ್ರತಿಯೊಂದು ಹನಿಯೂ ಅಮೃತಕ್ಕೆ ಸಮಾನ. ರಕ್ತದಾನ ಮಾಡುವ ನಮ್ಮ ಒಂದು ಜವಾಬ್ದಾರಿಯುತ ನಡೆ ಮತ್ತೊಬ್ಬರ ಬಾಳಿನಲ್ಲಿ ಅತೀದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಇಂದು ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ರಕ್ತದಾನ ಕುರಿತು ಜಾಗೃತಿ ಮೂಡಿಸಲು ಹೈಕೋರ್ಟ್‌ ನ ಮುಂಭಾಗದಿಂದ ಕಂಠೀರಬವ ಕ್ರೀಡಾಂಗಣದವರೆಗೆ ವಾಕಾಥಾನ್…../jMdgiD1Mwg +ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್‌ 14ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗಿತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾದ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. +ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು. ಈ ನಿಟ್ಟಿನಲ್ಲಿ ಯಾವುದೇ ಪ್ರತಿಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಹಾಗೂ ಕೆಎಸ್‌‍ಎಪಿಎಸ್‌‍ ಸಂಸ್ಥೆಯಿಂದ ಜಾಥಾ ಹಮಿಕೊಳ್ಳಲಾಗಿತ್ತು.ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು. \ No newline at end of file diff --git a/eesanje/url_46_110_10.txt b/eesanje/url_46_110_10.txt new file mode 100644 index 0000000000000000000000000000000000000000..910757f007c68ef185aed6096438ba88e74700a0 --- /dev/null +++ b/eesanje/url_46_110_10.txt @@ -0,0 +1,5 @@ +ಚುನಾವಣೆ ಸೋಲು ಅರಗಿಸಿಕೊಳ್ಳಲಾಗದೆ ಯಡಿಯೂರಪ್ಪನವರ ವೈಷಮ್ಯ ಸಾಧಿಸಲಾಗುತ್ತಿದೆ : ಜೋಶಿ +ಹುಬ್ಬಳ್ಳಿ, ಜೂ.14-ರಾಜ್ಯದಲ್ಲಿ ಕಾಂಗ್ರೆಸ್‌‍ಗೆ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ. +ರಾಜ್ಯ ಕಾಂಗ್ರೆಸ್‌‍ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್‌‍.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ ಎಂದು ಸಚಿವ ಜೋಶಿ ಹರಿ ಹಾಯ್ದಿದ್ದಾರೆ.ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್‌‍ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. +ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್‌‍.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್‌‍ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಜೋಶಿ ಖಂಡಿಸಿದ್ದಾರೆ. +ಆ ಮಹಿಳೆ ಈಗಾಗಲೇ ಐಎಎಸ್‌‍, ಐಪಿಎಸ್‌‍ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌‍ವೈ ಅವರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಸಚಿವರು ಟ್ವೀಟ್‌ ಮೂಲಕ ತೀವ್ರ ಆಕೋಶ ಹೊರ ಹಾಕಿದ್ದಾರೆ.ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_110_11.txt b/eesanje/url_46_110_11.txt new file mode 100644 index 0000000000000000000000000000000000000000..e8b33216930ded1d0818011e11df2fca3d4b185f --- /dev/null +++ b/eesanje/url_46_110_11.txt @@ -0,0 +1,6 @@ +ಚುನಾವಣಾ ಸೋಲಿನ ಹತಾಶೆಯಿಂದ ಬಿಎಸ್‌‍ವೈ ವಿರುದ್ಧ ಷಡ್ಯಂತ್ರ : ಬಿಜೆಪಿ +ಬೆಂಗಳೂರು, ಜೂ.14-ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌‍ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. +ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್‌ ಗಾಂಧಿ ಅವರನ್ನು ಕೋರ್ಟ್‌ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ. +ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ. +ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಪರಮೇಶ್ವರ್‌ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ. +ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್‌ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್‌‍ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಕಿಡಿ ಕಾರಿದೆ. \ No newline at end of file diff --git a/eesanje/url_46_110_12.txt b/eesanje/url_46_110_12.txt new file mode 100644 index 0000000000000000000000000000000000000000..7e057fef4964b61e56bfb5fad3ecff6d6d4b7a55 --- /dev/null +++ b/eesanje/url_46_110_12.txt @@ -0,0 +1,4 @@ +ಹುಬ್ಬಳ್ಳಿ-ರಾಮೇಶ್ವರಂ ರೈಲು ಸಂಚಾರ ಸೌಲಭ್ಯ ವಿಸ್ತರಣೆ +ಹುಬ್ಬಳಿ,ಜೂ.14-ನೈರುತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಸೌಲಭ್ಯ ವಿಸ್ತರಣೆ ಮಾಡಲು ನಿರ್ಧರಿಸಿದ್ದು, ಹುಬ್ಬಳ್ಳಿ-ರಾಮೇಶ್ವರಂ (07355) ವಿಶೇಷ ರೈಲು ಸಂಚಾರವನ್ನು ಜು.6 ರಿಂದ ಡಿ.28 ರವರೆಗೆ, ರಾಮೇಶ್ವರಂ-ಹುಬ್ಬಳ್ಳಿ (07356) ರೈಲು ಸಂಚಾರವನ್ನು ಜು.1ರಿಂದ ಡಿ.31ರವರೆಗೆ ವಿಸ್ತರಿಸಿದೆ. +ಹುಬ್ಬಳ್ಳಿ-ಕೆಸಿಆರ್‌ ಬೆಂಗಳೂರು (07339) ರೈಲು ಸಂಚಾರವನ್ನು ಜು. 1ರಿಂದ ಡಿ.31ರವರೆಗೆ, ಕೆಸಿಆರ್‌ ಬೆಂಗಳೂರು-ಹುಬ್ಬಳ್ಳಿ (07340) ರೈಲು ಸಂಚಾರವನ್ನು ಜು. 2ರಿಂದ 2025ರ ಜ.1ರವರೆಗೆ ವಿಸ್ತರಿಸಲಾಗಿದೆ. ಹುಬ್ಬಳ್ಳಿ-ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌‍-ಹುಬ್ಬಳ್ಳಿ (22697/22698) ಸಾಪ್ತಾಹಿಕ ರೈಲು ಯಶವಂತಪುರ ನಿಲ್ದಾಣದ ಬದಲು, ಯಶವಂತಪುರ ಬೈಪಾಸ್‌‍ ಮೂಲಕ ಸಂಚರಿಸಲಿದೆ. +ಸೆ. 7ರಿಂದ ಹುಬ್ಬಳ್ಳಿ- ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌ (22697) ರೈಲು, ಸೆ.8ರಿಂದ ಡಾ.ಎಂ.ಜಿ.ಆರ್‌. ಚೆನ್ನೈ ಸೆಂಟ್ರಲ್‌‍-ಹುಬ್ಬಳ್ಳಿ (22698) ರೈಲು ಬದಲಿ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_110_2.txt b/eesanje/url_46_110_2.txt new file mode 100644 index 0000000000000000000000000000000000000000..3c699c91f7fb48f901469675e666b3badb12cc75 --- /dev/null +++ b/eesanje/url_46_110_2.txt @@ -0,0 +1,8 @@ +ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿ ದ್ವೇಷ ರಾಜಕಾರಣ ಮಾಡಿದ್ದರು : ಡಿಕೆಶಿ +ಬೆಂಗಳೂರು, ಜೂ.14-ಕಾಂಗ್ರೆಸ್‌‍ ಯಾರ ವಿರುದ್ಧವೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ನಮ್ಮ ಮೇಲೆ ಕೇಸು ಹಾಕಿಸಿ ಕೋರ್ಟಿಗೆ ಹೋಗುವಂತೆ ಮಾಡಿದ್ದು ದ್ವೇಷ ರಾಜಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. +ಬಿಬಿಎಂಪಿ ವತಿಯಿಂದ ಕಬ್ಬನ್‌ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಲು ಆರಂಭಿಸಿದರೆ ಅದು ಎಲ್ಲೆಲ್ಲಿಗೋ ಹೋಗುತ್ತದೆ. ನನಗೆ ಅದರ ನೋವು ಗೊತ್ತು. ನಾನು ಅನುಭವಿಸಿದ್ದೇನೆ ಎಂದು ಹೇಳಿದರು. +ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಹೀರಾತು ನೀಡಿದ್ದು, ನಮ ಮೇಲೆ ಕೇಸು ದಾಖಲಿಸಲಿ, ಅದನ್ನು ಎದುರಿಸುತ್ತೇವೆ. ಆದರೆ ರಾಹುಲ್‌ಗಾಂಧಿಯವರನ್ನು ಮಧ್ಯಕ್ಕೆ ತರಲು ಅವರೇನು ಕೆಪಿಸಿಸಿ ಅಥವಾ ಎಐಸಿಸಿ ಅಧ್ಯಕ್ಷರಾಗಿದ್ದರೇ? ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಕಾಮನ್‌ಸೆನ್‌್ಸ ಇರಲಿಲ್ಲವೇ? ಅವರ ಪಕ್ಷದ ಎಂಎಲ್‌ಸಿ ಮೂಲಕ ಕೇಸು ಹಾಕಿಸಿದ್ದೇಕೆ? ಎಂದು ಪ್ರಶ್ನಿಸಿದರು. +ಕಾಂಗ್ರೆಸ್‌‍ನವರು ದ್ವೇಷ ರಾಜಕಾರಣ ಮಾಡುವುದಿಲ್ಲ. ರಾಹುಲ್‌ಗಾಂಧಿಯವರಿಗೆ ಅವರದ್ದೇ ಆದ ತೊಂದರೆಗಳಿವೆ. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಮೂಗು ತೂರಿಸುವ ಅಗತ್ಯ ಅವರಿಗಿಲ್ಲ . ಕಾಂಗ್ರೆಸ್‌‍ನವರು ದ್ವೇಷ ಸಾಧಿಸಲು ನೀಚ ರಾಜಕಾರಣ ಮಾಡುವುದಿಲ್ಲ ಎಂದರು.2028ಕ್ಕೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಮರಳಿ ಅಧಿಕಾರಕ್ಕೆ ತಂದೇ ತರುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಎಲ್ಲಾ ಸದಸ್ಯರು ಇದಕ್ಕಾಗಿ ಹಗಲು-ರಾತ್ರಿ ಕೆಲಸ ಮಾಡುತ್ತೇವೆ ಎಂದರು. +ನಾವು ವಿಶ್ವಮಾನವರಾಗಲು ಸಮಾಜದ ಅಭಿಪ್ರಾಯ ಮುಖ್ಯ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಹಿನ್ನಡೆಯಾಗಿರುವುದು ಹಾಗೂ ಮತದಾನ ಏಕೆ ಈ ರೀತಿ ಆಗಿದೆ ಎಂಬುದರ ಕುರಿತು ನಿನ್ನೆ ರಾತ್ರಿ ಒಕ್ಕಲಿಗ ಮುಖಂಡರ ಸಭೆಯಲ್ಲಿ ದೊಡ್ಡ ಚರ್ಚೆಯಾಗಿದೆ ಎಂದು ಹೇಳಿದರು. +ಕಾಂಗ್ರೆಸ್‌‍ ಪಕ್ಷ ಸೋತಿದೆ. ಸೋಲನ್ನು ಒಪ್ಪಿಕೊಳ್ಳುತ್ತೇವೆ. ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ. ಚೆಲುವರಾಯಸ್ವಾಮಿ, ಬಾಲಕೃಷ್ಣ, ಬಂಡಿ ಸಿದ್ದನಗೌಡ ಸೇರಿದಂತೆ ಹಲವರು 50 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಅದರ ನಂತರದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲಾ ಸಾಮಾನ್ಯ. ಆರು ತಿಂಗಳಲ್ಲಿ ಪರಿಸ್ಥಿತಿ ಬದಲಾಗುತ್ತಿದೆ. ಜನರ ಭಾವನೆಗಳು, ಕೆಲಸ ಕಾರ್ಯಗಳು ಬದಲಾಗುತ್ತವೆ. ಯಾವುದೂ ಶಾಶ್ವತವಲ್ಲ ಎಂದರು. +ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಈಗ 9 ಸ್ಥಾನಗಳನ್ನು ಗೆದ್ದಿದ್ದೇವೆ. ಇನ್ನೂ ನಾಲ್ಕೈದು ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆಯಾಗಿದೆ. ಕಾರ್ಯಕರ್ತರು ಚಿಂತೆ ಮಾಡುವ ಅಗತ್ಯವಿಲ್ಲ. ಮುಂದೆ ನಮ ಸರ್ಕಾರದ ಅಧಿಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_110_3.txt b/eesanje/url_46_110_3.txt new file mode 100644 index 0000000000000000000000000000000000000000..7e78ad6da64d28a872b2adcb6fae1195dd6fa8c6 --- /dev/null +++ b/eesanje/url_46_110_3.txt @@ -0,0 +1,7 @@ +ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಬಳಕೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜೂ.14-ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆಗಳನ್ನು ಜಾರಿ ಮಾಡಲು ಅನುವಾಗುವಂತೆ ಜು.15 ರೊಳಗೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಪ್ರಗತಿ ಪರಿಶೀಲನೆ ನಡೆಸಿದರು. +ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಆಯವ್ಯಯದಲ್ಲಿ ವರ್ಷಕ್ಕೆ 5 ಸಾವಿರ ಕೋಟಿ ರೂ. ಒದಗಿಸುವ ಭರವಸೆ ನೀಡಲಾಗಿದೆ. ಈ ಮೊತ್ತವನ್ನು ವೆಚ್ಚ ಮಾಡಲು ಅನುವಾಗುವಂತೆ ಜು. 15 ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಈಗ ಅನುಮೋದನೆಯಾದ ಟೆಂಡರ್‌ ಕರೆಯದೆ ಇರುವ ಕಾಮಗಾರಿಗಳಿಗೆ ಕೂಡಲೇ ಟೆಂಡರ್‌ ಕರೆಯಬೇಕು, ಕಾಮಗಾರಿಗಳ ಮೌಲ್ಯಮಾಪನ ಮಾಡಬೇಕು ಎಂದು ಆದೇಶಿಸಿದರು. +ಒಟ್ಟು 14,228 ಕೋಟಿ ಅನುದಾನದಲ್ಲಿ 10,342.90 ಕೋಟಿ ವೆಚ್ಚವಾಗಿದೆ. 2885.90 ಕೋಟಿ ಉಳಿದಿದೆ. ಬಾಕಿ ಉಳಿದ ಕಾಮಗಾರಿಗಳ ಕುರಿತು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಅನುಷ್ಠಾನಕ್ಕೆ ಇರುವ ತೊಡಕುಗಳನ್ನು ನಿವಾರಿಸಬೇಕು, ಬಾಕಿ ಉಳಿದಿರುವ 3528 ಕಾಮಗಾರಿಗಳನ್ನು ಜುಲೈ ಅಂತ್ಯದೊಳಗೆ ಪ್ರಾರಂಭಿಸಬೇಕು ಎಂದು ಸೂಚಿಸಿದರು. +ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಜನೆಗೆ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಲಾಯಿತು.ಎರಡು ವರ್ಷಗಳನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಿ, ಶೇ.25 ರಷ್ಟು ಅನುದಾನ ವೆಚ್ಚ ಮಾಡಬೇಕು. ಆರೋಗ್ಯ ಕ್ಷೇತ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬೇಡಿಕೆ ಇದ್ದು, ಇದಕ್ಕೆ ಒತ್ತು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ನಿಗದಿತ ಮಾನದಂಡಗಳಂತೆಯೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. +ಉನ್ನತ ಶಿಕ್ಷಣ ಕ್ಷೇತ್ರದಲ್ಲಿ 41 ಮಹಿಳಾ ಪದವಿ ಕಾಲೇಜು ಪ್ರಾರಂಭಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ. ಇದನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಅರಣ್ಯೀಕರಕ್ಕೆ ಮತ್ತು ಶುದ್ಧ ಕುಡಿಯುವ ನೀರು, ಚೆಕ್‌ ಜಲಾಶಯಗಳಿಗೆ ಆದ್ಯತೆ ನೀಡುವ ಮೂಲಕ ಅಂತರ್ಜಲ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಂಡು, ಕಾರ್ಯಕ್ರಮಗಳನ್ನು ರೂಪಿಸುವಂತೆ ಸೂಚನೆ ನೀಡಿದರು. +ಸಭೆಯಲ್ಲಿ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ, ರಹೀಂ ಖಾನ್‌, ಈಶ್ವರ್‌ ಖಂಡ್ರೆ, ಜಮೀರ್‌ ಅಹಮದ್‌ ಖಾನ್‌, ಶರಣಬಸಪ್ಪ ದರ್ಶನಾಪೂರ, ಎನ್‌.ಎಸ್‌‍. ಭೋಸರಾಜು, ಶಿವರಾಜ್‌ ತಂಗಡಗಿ, ಡಿ.ಸುಧಾಕರ್‌, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು. \ No newline at end of file diff --git a/eesanje/url_46_110_4.txt b/eesanje/url_46_110_4.txt new file mode 100644 index 0000000000000000000000000000000000000000..a130594d701cf25d5d9e9312f26ddeb803bade5e --- /dev/null +++ b/eesanje/url_46_110_4.txt @@ -0,0 +1,9 @@ +ಸುಧಾಕರ್‌ ನನ್ನ ಸವಾಲನ್ನು ಸ್ವೀಕರಿಸಿರಲಿಲ್ಲ, ನಾನು ರಾಜೀನಾಮೆ ಕೊಡಲ್ಲ : ಪ್ರದೀಪ್‌ ಈಶ್ವರ್‌ +ಬೆಂಗಳೂರು, ಜೂ.14-ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್‌ ಗೆದ್ದರೆ ರಾಜೀನಾಮೆ ನೀಡುವುದಾಗಿ ನಾನು ಹಾಕಿದ್ದ ಸವಾಲನ್ನು ಪ್ರತಿಸ್ಪರ್ಧಿಗಳು ಸ್ವೀಕರಿಸಿರಲಿಲ್ಲ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡುವ ಅಗತ್ಯವಿಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ಸಮರ್ಥಿಸಿಕೊಂಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸವಾಲನ್ನು ಅವರು ಸ್ವೀಕರಿಸಿದರೆ ಈಗಲೂ ನಾನು ರಾಜೀನಾಮೆ ನೀಡಲು ಸಿದ್ಧ. ಪ್ರಶ್ನೆಪತ್ರಿಕೆಯನ್ನೇ ಕೊಡದೆ ಉತ್ತರ ತಪ್ಪಾಗಿದೆ ಎಂದು ಆರೋಪ ಹಾಕುವುದು ಸರಿಯಲ್ಲ. ರಾಜಕೀಯದಲ್ಲಿ ಎಲ್ಲಾ ನಡೆಯುತ್ತಿರುತ್ತದೆ. ತಲೆ ಕೆಡಿಸಿಕೊಳ್ಳುವುದು ಬೇಡ ಎಂದು ಬಿಟ್ಟಾಕಿ ಎಂದು ಹೇಳಿದರು. +ಲೋಕಸಭಾ ಚುನಾವಣೆ ಅಖಾಡದಲ್ಲಿ ನಾನು ಇದ್ದಿದ್ದರೆ ಕಥೆಯೇ ಬೇರೆ ಇರುತ್ತಿತ್ತು. ಎಲ್ಲರೂ ಪ್ರದೀಪ್‌ ಈಶ್ವರ್‌ ಆಗಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಕಾರ್ಯಕರ್ತರೊಂದಿಗೆ ಮನೆಮನೆ ಸುತ್ತುತ್ತೇನೆ. ಪಕ್ಷ ಸಂಘಟನೆ ಮಾಡುತ್ತೇನೆ. ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ದೊಡ್ಡದು ಎಂದರು. +ಕಾಂಗ್ರೆಸ್‌‍ ಪಕ್ಷ ನನ್ನಂತಹ ಅಹಿಂದ ಹುಡುಗನಿಗೆ ಬೆನ್ನುಲುಬಾಗಿರುತ್ತದೆ. ಹೀಗಾಗಿ ಈ ಸಿದ್ಧಾಂತ ನನಗೆ ಇಷ್ಟ ಎಂದ ಅವರು, ಕಾಂಗ್ರೆಸ್‌‍ ಪಕ್ಷ ಚುನಾವಣೆ ಕಾರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ತಂದಿರಲಿಲ್ಲ. ನಮ ಸರ್ಕಾರ ಅವುಗಳನ್ನು ನಿಲ್ಲಿಸುವುದಿಲ್ಲ ಎಂಬ ವಿಶ್ವಾಸವಿದೆ ಎಂದರು. +ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಮಗೆ ಸೋಲಾಗಿಲ್ಲ. ಬದಲಾಗಿ ಗೆಲುವು 5 ವರ್ಷ ಮುಂದೂಡಿಕೆಯಾಗಿದೆ. ಮುಂದಿನ ಅವಧಿಯಲ್ಲಿ ಮತ್ತೆ ನಾವು ಗೆಲ್ಲುತ್ತೇವೆ. ಫಲಿತಾಂಶ ಪ್ರಕಟಗೊಂಡ ಬಳಿಕ ನಮ ಮನೆಯ ಮೇಲೆ ಕಲ್ಲು ತೂರಿದ ಆರೋಪಿಗಳನ್ನು ಗುರುತಿಸಿ ನೋಟಿಸ್‌‍ ನೀಡಲಾಗಿದೆ. ಮೈಸೂರಿನ ಮೂವರು ಹುಡುಗರು ನಕಲಿ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವುದು ಪತ್ತೆಯಾಗಿದೆ. ಅವರ ಬಂಧನಕ್ಕೂ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದರು. +ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಡಾ.ಕೆ.ಸುಧಾಕರ್‌ ದೆಹಲಿಯಲ್ಲಿ ಸಂಸದರಾಗಿ ನಾನು ಶಾಸಕನಾಗಿ ಬೆಂಗಳೂರಿನಲ್ಲಿ ಆರಾಮಾಗಿರುತ್ತೇವೆ. ನಮಗೆ ನಮ ಹೆಂಡತಿ, ಮಕ್ಕಳೇ ಮುಖ್ಯ. ಕಾರ್ಯಕರ್ತರು ತಮ ವಿಚಾರದಲ್ಲಿ ತಲೆಕೆಡಿಸಿಕೊಂಡು ಹೊಡೆದಾಡಬಾರದು. ಎಲ್ಲಾದರೂ ಸಿಕ್ಕರೆ ಜೊತೆಯಲ್ಲಿ ತಿಂಡಿ ತಿನ್ನೋಣ. ಅನಗತ್ಯವಾಗಿ ದ್ವೇಷ ಬೆಳೆಸಿಕೊಳ್ಳಬೇಡಿ ಎಂದು ಸಲಹೆ ನೀಡಿದರು. +ಕಳೆದ ಒಂದೂವರೆ ವರ್ಷದಿಂದಲೂ ನಾನು ಅತ್ಯಂತ ಸಹನೆಯಿಂದ ಇದ್ದೇನೆ. ನನ್ನ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ, ನಾಲ್ಕೈದು ಕಡೆ ದಾಳಿಯಾಗಿದೆ. ಅದಕ್ಕೆಲ್ಲಾ ತಕ್ಷಣ ಪ್ರತಿಕ್ರಿಯಿಸಿದರೆ ನಮ ಕಾರ್ಯಕರ್ತರು ರೊಚ್ಚಿಗೇಳುತ್ತಾರೆ, ಕಾನೂನು ಸುವ್ಯವಸ್ಥೆಗೆ ತೊಡಗಕಾಗುತ್ತದೆ ಎಂಬ ವಿಷಯಕ್ಕೆ ಸುಮನಿದ್ದೇನೆ. ಕಾರ್ಯಕರ್ತರನ್ನು ಗುಂಪುಕಟ್ಟಿಕೊಂಡು ಸುದ್ದಿಗೋಷ್ಠಿ ಮಾಡಿ ನಾನು ಯಾರನ್ನೂ ಟೀಕಿಸುವಂತೆ ಮಾಡುವುದಿಲ್ಲ. ಏನೇ ಇದ್ದರೂ ನಾನು ಒಬ್ಬನೇ ಅಖಾಡಕ್ಕೆ ಇಳಿಯುತ್ತೇನೆ. ಎದುರಿಸುತ್ತೇನೆ ಎಂದು ಹೇಳಿದರು. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತಾವು ಖಂಡಿಸುತ್ತಿದ್ದು, ಯಾರೇ ತಪ್ಪು ಮಾಡಿದ್ದರೂ ತಕ್ಷ ಶಿಕ್ಷೆಯಾಗಬೇಕು. ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_110_5.txt b/eesanje/url_46_110_5.txt new file mode 100644 index 0000000000000000000000000000000000000000..c3fefab76613bc9f1a1f4675ec3baf9a26f4b92d --- /dev/null +++ b/eesanje/url_46_110_5.txt @@ -0,0 +1,10 @@ +ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ಡಿಕೆಗೆ ಅದ್ಧೂರಿ ಸ್ವಾಗತ +ಬೆಂಗಳೂರು, ಜೂ.14-ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತಕೋರಿ ಅಭಿನಂದಿಸಿದರು. +ಇಂದು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ನ ಮುಖಂಡರು ಸ್ವಾಗತಿಸಿದರು. ಬಳಿಕ ಸಾದರಹಳ್ಳಿ ಬಳಿ ಜೆಡಿಎಸ್‌‍ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು. +ನಂತರ ಜೆಡಿಎಸ್‌‍ ಕಚೇರಿ ಜೆಪಿಭವನಕ್ಕೆ ಕುಮಾರಸ್ವಾಮಿ ಆಗಮಿಸಿದರು. ಕಚೇರಿಯಲ್ಲಿ ಹಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕುಮಾರಸ್ವಾಮಿ ಅವರನ್ನು ಅಭಿನಂದಿಸಿದರು. +ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ ಅವರು, ತಮಗೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ತಯಾರಿ ನಡೆಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು. ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪದನಾಭನಗರದ ನಿವಾಸಕ್ಕೆ ತೆರಳಿ, ತಂದೆತಾಯಿ ಆಶೀರ್ವಾದ ಪಡೆದುಕೊಂಡರು. ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಲಿದ್ದಾರೆ. +ರಾತ್ರಿ ತಿರುಪತಿಗೆ:ಇಂದು ರಾತ್ರಿ ತಿರುಪತಿಗೆ ತೆರಳಲಿರುವ ಕುಮರಸ್ವಾಮಿ ಅವರು ನಾಳೆ ಪ್ರಾತಃ ಕಾಲ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ಅನಿತಾಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರು ದೇವರ ದರ್ಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸತ್‌ ಪ್ರವೇಶಿಸುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಆನಂತರ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ ಅವರು ಬಿಜೆಪಿ ಜೆಡಿಎಸ್‌‍ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. +2ನೇ ಬಾರಿ ರಾಮನಗರದಿಂದ ಚುನಾಯಿತರಾದ ಬಳಿಕ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿ ಲೋಕಸಭೆ ಪ್ರವೇಶಿಸಿದರು.ಆನಂತರ ಮತ್ತೆ ರಾಮನಗರ ಕ್ಷೇತ್ರದಿಂದ 3ನೇ ಬಾರಿ ಆಯ್ಕೆಯಾದರು. 2018ರಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. + +ಜೆಡಿಎಸ್‌‍-ಕಾಂಗ್ರೆಸ್‌‍ ಮೈತ್ರಿ ಸರ್ಕಾರದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾದರು. 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ 2ನೇ ಬಾರಿಗೆ ಚುನಾಯಿತರಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಲೋಕಸಭೆ ಪ್ರವೇಶ ಮಾಡಿರುವ ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿ ಸಂಪುಟದಲ್ಲಿ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. \ No newline at end of file diff --git a/eesanje/url_46_110_6.txt b/eesanje/url_46_110_6.txt new file mode 100644 index 0000000000000000000000000000000000000000..160fcf778c324873a120cae8bce995cfff25b30a --- /dev/null +++ b/eesanje/url_46_110_6.txt @@ -0,0 +1,10 @@ +ಯಡಿಯೂರಪ್ಪನವರು ವಿಚಾರಣೆಗೆ ಹಾಜರಾದರೆ ಒಳ್ಳೆಯದು, ಇಲ್ಲವಾದರೆ ಪೊಲೀಸರೇ ಕರೆತರುತ್ತಾರೆ : ಪರಮೇಶ್ವರ್‌ +ಬೆಂಗಳೂರು, ಜೂ.14-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಜಾರಿಯಾಗಿದೆ. ಆದಷ್ಟು ಬೇಗ ಬಂದು ಅವರಾಗಿಯೇ ವಿಚಾರಣೆಗೆ ಹಾಜರಾದರೆ ಒಳ್ಳೆಯದು, ಇಲ್ಲವಾದರೆ ಪೊಲೀಸರೇ ಕರೆತರುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೊಟ್ಟಿರುವ ನೋಟೀಸ್‌‍ಗೆ ಉತ್ತರ ಕೊಟ್ಟಿರುವ ಯಡಿಯೂರಪ್ಪ, ತಾವು ದೆಹಲಿಗೆ ಭೇಟಿ ನೀಡುತ್ತಿದ್ದು, 17 ರಂದು ವಾಪಸ್‌‍ ಬರುವುದಾಗಿ ತಿಳಿಸಿದ್ದಾರೆ. ಅವರನ್ನು ಕರೆತಂದು, ಕಾನೂನು ಪ್ರಕಾರ ಮಾಹಿತಿ ಪಡೆದು ಪೊಲೀಸರು ಮುಂದಿನ ಕ್ರಮಗಳನ್ನು ಜರುಗಿಸುತ್ತಾರೆ ಎಂದರು. +ಮೂರು ತಿಂಗಳ ಕಾಲ ಸುಮನಿದ್ದು ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಬಿಜೆಪಿಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ವಿರೋಧಪಕ್ಷಗಳು ಅದೇ ರೀತಿಯ ಟೀಕೆ ಮಾಡಬೇಕು, ಅದನ್ನು ಬಿಟ್ಟು ಬೇರೆ ರೀತಿ ಹೇಳಲು ಸಾಧ್ಯವಿಲ್ಲ. ಯಡಿಯೂರಪ್ಪ ದೊಡ್ಡವರಿದ್ದಾರೆ. +ವಿವಿಐಪಿ ಆಗಿರುವುದರಿಂದ ಯಾವುದೇ ತಪ್ಪಾದರೂ ಪೊಲೀಸರೇ ಹೊಣೆಯಾಗಬೇಕಾಗುತ್ತದೆ. ಆ ಕಾರಣಕ್ಕಾಗಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌‍ಎಲ್‌ಗೆ ಕಳುಹಿಸಿ ವರದಿಗಳನ್ನು ಕಾಯಲಾಗುತ್ತಿತ್ತು. ಈಗ ಆ ಪ್ರಕ್ರಿಯೆಗಳು ಮುಗಿದಿವೆ. ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. +ರಾಹುಲ್‌ಗಾಂಧಿಯವರು ಬೆಂಗಳೂರಿಗೆ ಬಂದಾಗ ವಿಮಾನನಿಲ್ದಾಣದಲ್ಲಿ ಸೂಚನೆ ನೀಡಿದ್ದಾರೆ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಸುಮನೆ ಕಥೆ ಕಟ್ಟಿದರೆ ಪ್ರಯೋಜನವಿಲ್ಲ. ಇದು ಇಲ್ಲಿಯ ಸಮಸ್ಯೆ. ಅವರೆಲ್ಲಾ ಹಸ್ತಕ್ಷೇಪ ಮಾಡುವುದಿಲ್ಲ . ಯಾರ ಒತ್ತಡವೂ ಇದರಲ್ಲಿ ಇಲ್ಲ ಎಂದರು. +ನಟ ದರ್ಶನ್‌ ಅವರ ವಿಚಾರಣೆ ವಿಷಯವಾಗಿ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ರಸ್ತೆಗೆ ಬ್ಯಾರಿಕೇಡ್‌ ಹಾಕಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು. +ದರ್ಶನ್‌ ಪ್ರಕರಣದಲ್ಲಿ ವಿಶೇಷ ರಾಜಾತೀಥ್ಯ ನೀಡುವುದಿಲ್ಲ. ಎಲ್ಲಾ ಸಾಮಾನ್ಯ ಖೈದಿಗಳಂತೆ ಕಾನೂನು ಪ್ರಕಾರವೇ ನಡೆಸಿಕೊಳ್ಳಲಾಗುವುದು. ಬಿರಿಯಾನಿ ಕೊಟ್ಟು ಸತ್ಕರಿಸುತ್ತಿಲ್ಲ. ತಾವು ಪೊಲೀಸ್‌‍ ಆಯುಕ್ತರ ಬಳಿ ಈ ಕುರಿತು ವಿಚಾರಿಸಿದ್ದು, ರಾಜಾತೀಥ್ಯ ನೀಡುತ್ತಿಲ್ಲ, ನೀಡುವುದೂ ಇಲ್ಲ ಎಂದಿದ್ದಾರೆ. ಅದಕ್ಕೆ ಅವಕಾಶವೂ ಇಲ್ಲ. ಸದ್ಯಕ್ಕೆ ಮುಕ್ತವಾಗಿ ತನಿಖೆ ಮಾಡಲು ಪೊಲೀಸರಿಗೆ ಸಮಯಾವಕಾಶ ನೀಡಬೇಕಿದೆ ಎಂದರು. +ಠಾಣೆಗೆ ಭೇಟಿ ನೀಡುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಪೊಲೀಸ್‌‍ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದರು.ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚೆನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರಿನ ಪ್ರಕರಣದಲ್ಲಿ ಸರ್ಕಾರ ತುರ್ತು ಸ್ಪಂದನೆ ಮಾಡಿದೆ. ಇಬ್ಬರು ಮೃತಪಟ್ಟಿದ್ದಾರೆ. ಹಲವರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲ ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ ಎಂದರು. +ಜಾತ್ರೆ ಇದ್ದಿದ್ದರಿಂದ ಬೆಟ್ಟದ ಮೇಲಿಂದ ನೀರು ತಂದು ತಂಬಿಟ್ಟು ಮಾಡಲಾಗಿತ್ತು. ಅದನ್ನು ಸೇವಿಸಿದ ಬಳಿಕ ಅನಾರೋಗ್ಯ ಕಾಣಿಸಿಕೊಂಡಿದ್ದಾಗಿ ಗ್ರಾಮಸ್ಥರು ಹೇಳುತ್ತಿದ್ದಾರೆ. ಅದೇನಿದ್ದರೂ ಪರಿಶೀಲನೆ ನಡೆಸುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_110_7.txt b/eesanje/url_46_110_7.txt new file mode 100644 index 0000000000000000000000000000000000000000..e92f8aee2db3c561751c6abe272b896b83e1cf3e --- /dev/null +++ b/eesanje/url_46_110_7.txt @@ -0,0 +1,5 @@ +ಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌ +ಬೆಂಗಳೂರು, ಜೂ.14– ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ವಾರಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಶೋಧ ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಇಂದು ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಯಡಿಯೂರಪ್ಪ ಅವರಿಗಾಗಿ ತಲಾಷ್‌ ನಡೆಸಿದ್ದಾರೆ. +ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಬಿಎಸ್‌‍ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಕರ್ನಾಟಕ ಭವನ ಸೇರಿದಂತೆ ಹಲವೆಡೆ ನಿನ್ನೆ ಹುಡುಕಾಟ ನಡೆಸಿದ್ದರೂ ಯಡಿಯೂರಪ್ಪ ಸಿಕ್ಕಿರಲಿಲ್ಲ.ಅವರಿಗಾಗಿ ಹುಡುಕಾಟ ಮುಂದುವರೆಸಿದ ಸಿಐಡಿ ತಂಡ ಶಿವಮೊಗ್ಗದ ಸಂಸದರ ನಿವಾಸ, ಯಡಿಯೂರಪ್ಪ ನಿವಾಸ, ಕಚೇರಿ ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿಲ್ಲ. +ಬೆಂಗಳೂರಿನ ಸದಾಶಿವನಗರದ ಮನೆ, ಕಚೇರಿಯಲ್ಲಿ ಕೂಡ ಬಂಧನಕ್ಕಾಗಿ ಬಲೆ ಬೀಸಿ ಶೋಧ ನಡೆಸಿದ್ದಾರೆ. ಆದರೆ ಈವರೆಗೆ ಯಡಿಯೂರಪ್ಪ ಅವರು ಸಿಕ್ಕಿಲ್ಲ.ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವುದಲ್ಲದೆ, ನಿರೀಕ್ಷಣಾ ಜಾಮೀನು ನೀಡುವಂತೆ ಮನವಿಯನ್ನು ಸಲ್ಲಿಸಿದ್ದಾರೆ. +ಈ ಎರಡು ಅರ್ಜಿಗಳ ವಿಚಾರಣೆ ಇಂದೇ ನಡೆಯುವ ಸಾಧ್ಯತೆ ಇದೆ. ಒಂದು ವೇಳೆ ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ದೊರೆತರೆ ಬಂಧನದಿಂದ ಬಚಾವ್‌ ಆಗಲಿದ್ದಾರೆ. \ No newline at end of file diff --git a/eesanje/url_46_110_8.txt b/eesanje/url_46_110_8.txt new file mode 100644 index 0000000000000000000000000000000000000000..023a44f0e00f06a590854ff50f3cd980e03ee689 --- /dev/null +++ b/eesanje/url_46_110_8.txt @@ -0,0 +1,6 @@ +ಯಡಿಯೂರಪ್ಪ ಬಂಧನ ವಾರಂಟ್‌ ವಿಚಾರದಲ್ಲಿ ರಾಜಕೀಯ ಮಾಡಿಲ್ಲ : ಎಂ.ಬಿ.ಪಾಟೀಲ್‌ +ಹುಬ್ಬಳ್ಳಿ, ಜೂ.14-ಪೋಕ್ಸೋ ಪ್ರಕ್ರರಣ ಅತ್ಯಂತ ಸೂಕ್ಷ ಹಾಗೂ ಗಂಭೀರವಾಗಿದ್ದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾನೂನು ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. +ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಏನಾದರೂ ಅಹಿತಕರ ಘಟನೆಗಳು ನಡೆದರೆ ಇದು ಪೋಕ್ಸೋ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ಯಾವುದೇ ಸರ್ಕಾರ ಹಾಗೂ ಪಕ್ಷ ಹಸ್ತಕ್ಷೇಪ ಮಾಡಲು ಬರುವುದಿಲ್ಲ. ಪೊಲೀಸರು ತನ್ನದೇ ಆದ ತನಿಖೆಯನ್ನು ಮಾಡತ್ತಾರೆ ಎಂದರು. +ಚಿತ್ರದುರ್ಗ ಮುರುಘಾಶರಣರ ಮೇಲೆ ಪೋಕ್ಸೋ ಕಾಯ್ದೆ ಮೇಲೆ ಬಂಧನ ಮಾಡಿದ್ದು ಏನಾಯಿತು ಗೊತ್ತು. ಹೀಗಾಗಿ ಪೋಕ್ಸೋ ಕಾಯ್ದೆ ಹಿನ್ನೆಲೆಯಲ್ಲಿ ನ್ಯಾಯಾಲಯ ಬಂಧನದ ವಾರಂಟ್‌ ಜಾರಿ ಮಾಡಿದೆ. ಕೋರ್ಟ್‌ ನಿರ್ದೇಶನ ಮೇರೆಗೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.ಇನ್ನು ನಟ ದರ್ಶನ ಬಂಧನ ಕುರಿತು ಮಾತನಾಡಿದ ಅವರು, ದರ್ಶನ ಆರೋಪಿ ಆಗಿದ್ದು ಆರೋಪಿನೇ ಎಂದರು. +ಸಚಿವ ಕೆ.ಎನ್‌.ರಾಜಣ್ಣ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಮಾಡಬೇಕು ಎನ್ನುವ ಕುರಿತು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಪಕ್ಷದ ಆಂತರಿಕ ವಿಚಾರವಾಗಿದ್ದು ಪಕ್ಷದ ವೇದಿಕೆಯಲ್ಲಿ ಮಾತನಾಡುವೆ ಎಂದರು.ಇನ್ನು ಲೋಕಸಭಾ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಸೋಲಾಗಿದ್ದು, ಕೆಲವರು ತೆಲೆದಂಡ ಆಗುತ್ತದೆ ಎಂಬ ವಿಚಾರ ಕೇವಲ ಊಹಾಪೋಹವಷ್ಟೇ ಎಂದು ತಿಳಿಸಿದರು. +ರಾಜ್ಯ ಸರ್ಕಾರ ಉರುಳುತ್ತದೇ ಎಂಬ ವಿಚಾರ ಕುರಿತು ಸಹ ಮಾತನಾಡಿದ ಅವರು, ಮೊದಲು ಅವರು ಮಹಾರಾಷ್ಟ್ರ ಸರ್ಕಾರ ಉಳಿಸಿಕೊಳ್ಳಲಿ ಎಂದರು. ನಮವರೇ ಕೇಂದ್ರದಲ್ಲಿ ಬೃಹತ್‌ ಕೈಗಾರಿಕಾ ಸಚಿವರಾಗಿದ್ದು ಕೆಲವು ಬೇಡಿಕೆಗಳನ್ನು ಶೀಘ್ರವಾಗಿ ಸಲ್ಲಿಸಲಾಗುತ್ತದೆ ಎಂದು ಎಂ.ಬಿ.ಪಾಟೀಲ್‌ ತಿಳಿಸಿದರು. \ No newline at end of file diff --git a/eesanje/url_46_110_9.txt b/eesanje/url_46_110_9.txt new file mode 100644 index 0000000000000000000000000000000000000000..bd74e6e7823d724fa66ab142b7556c47220590cb --- /dev/null +++ b/eesanje/url_46_110_9.txt @@ -0,0 +1,4 @@ +ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶೆಟ್ಟರ್‌ ಸಮಾಲೋಚನೆ +ಬೆಳಗಾವಿ,ಜೂ.14-ನೂತನ ಬೆಳಗಾವಿ ಸಂಸದರಾದ ಜಗದೀಶ್‌ ಶೆಟ್ಟರ್‌ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು. +ಬೆಳಗಾವಿ ವಿಮಾನಯಾನ ಪ್ರಾಧಿಕಾರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. +322 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್‌ ಟರ್ಮಿನಲ್‌ – 2 ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಏರ್‌ಪೋರ್ಟ್‌ ಡೈರೆಕ್ಟರ್‌ ಎಸ್‌‍. ತ್ಯಾಗರಾಜನ್‌, ಡಿಜಿಎಂ ಪಿ.ಎಸ್‌‍ ದೇಸಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_111_1.txt b/eesanje/url_46_111_1.txt new file mode 100644 index 0000000000000000000000000000000000000000..2ab25cab5b6b3cc76c3425cce9080d0aadebeab9 --- /dev/null +++ b/eesanje/url_46_111_1.txt @@ -0,0 +1,6 @@ +ಹೋಟಲ್‌, ಮದುವೆ, ಸಮಾರಂಭಗಳಲ್ಲಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಕ್ರಮ : ಸಚಿವ ಮುನಿಯಪ್ಪ +ಬೆಂಗಳೂರು,ಜೂ.13-ಐಶಾರಾಮಿ ಹೋಟಲ್‌ಗಳಲ್ಲಿ ಮದುವೆ ಮಂಟಪಗಳು, ಸಾರ್ವಜನಿಕ ಸಮಾರಂಭದಲ್ಲಿ ಜನರು ಆಹಾರವನ್ನು ಶೇಕಡಾ 10 ರಷ್ಟು ಪದಾರ್ಥಗಳನ್ನು ತಟ್ಟೆಯಲ್ಲೇ ಬಿಟ್ಟು ವ್ಯರ್ಥ ಮಾಡುತ್ತಿದ್ದಾರೆ. ಅದನ್ನು ತಡೆಯಲು ನಾವು ಕ್ರಮವನ್ನು ತೆಗೆದುಕೊಳ್ಳಲು ಮುಂದಾಗಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಕರೆ ನೀಡಿದ್ದಾರೆ. +ನಗರದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿರುವ ಇನ್‌ಕ್ರೆಡಿಬಲ್‌ ಚೆ್‌‍ ಚಾಲೆಂಜ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಪದ್ದತಿ ವಿಭಿನ್ನವಾಗಿದ್ದು, ಆರೋಗ್ಯ ಹದಗೆಡುತ್ತಿದೆ. ಪಾಲೀಶ್‌ ಮಾಡಲಾದ ಅಕ್ಕಿ ಬಳಕೆಯಿಂದ ಸಾರ್ವಜನಿಕರಲ್ಲಿ ಮಧುಮೇಹದಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ. ಇವನ್ನು ತಡೆಯಲು ರಾಗಿಯನ್ನು ಹೆಚ್ಚಾಗಿ ಬಳಸಬೇಕು ಎಂದು ಹೇಳಿದರು. +ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನದ ಪ್ರಯೋಜನವನ್ನು ಸಾರ್ವಜನಿಕರು ಹಾಗೂ ಹೋಟೆಲ್‌ ಮಾಲಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಈಗಿನ ಜನರು ಫಾಸ್ಟ್‌ ಫುಡ್‌ ಕಡೆ ಹೆಚ್ಚಿನ ಒತ್ತು ನೀಡುವುದರಿಂದ ಬೇರೆಬೇರೆ ಸ್ವರೂಪದ ಖಾದ್ಯ ಪದಾರ್ಥಗಳು ದೊರೆಯುತ್ತಿವೆ. ಇವುಗಳಿಂದ ಜನರ ಆರೋಗ್ಯ ಹಾಳಾಗುತ್ತಿದೆ. ಈ ಮೊದಲು ಜನರು ರಾಗಿ, ನವಣೆ, ಸಜ್ಜೆ, ಆಕಾರ್‌ ಮೊದಲಾದ ಧಾನ್ಯಗಳನ್ನು ಬಳಕೆ ಮಾಡುತ್ತಿದ್ದರು. ಇದರಿಂದ ಆರೋಗ್ಯ ಉತ್ತಮವಾಗಿರುತ್ತಿತ್ತು. +ಆತಿಥ್ಯ, ಸಾರಿಗೆ ಹಾಗು ಪ್ರವಾಸೋದ್ಯಮ ಕ್ಷೇತ್ರಕ್ಕೆ ಇನ್ನೊಂದು ಹೆಸರೇ ನಮ ಕರ್ನಾಟಕ. ನಮ ರಾಜ್ಯದ ಮುಕುಟ ಮಣಿಯಂತಿರುವ ಬೆಂಗಳೂರಿನಲ್ಲಿ ಐತಿಹಾಸಿಕ ಸಮೇಳನಕ್ಕೆ ಸಾಕ್ಷಿಯಾಗುತ್ತಿದೆ. +ದಕ್ಷಿಣ ಭಾರತ ಬಾಣಸಿಗರ ಸಂಘದ ಸಹಯೋಗದಲ್ಲಿ ನಡೆಯುತ್ತಿರುವ ಇನ್‌ಕ್ರೆಡಿಬಲ್‌ ಚೆ್‌‍ ಚಾಲೆಂಜ್‌ ಸ್ಪರ್ಧೆ ಯುವ ಪಾಕಶಾಲೆಯ ಪ್ರತಿಭೆಗಳಿಗೆ ವೇದಿಕೆಯಾಗಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ರಮೇಶ್‌ ಚಂದ್ರ ಲಹೋಟೆ ಅಧ್ಯಕ್ಷರು ಎ್‌‍ ಕೆಸಿಸಿ, ಧಾಮೋದರ್‌, ಪಂಕಜ್‌ ಕೊರಾಠಿ, ಪಿಸಿ ರಾವ್‌ ಅಧ್ಯಕ್ಷರು ಬಿ.ಬಿ.ಎಚ್‌.ಎ ಮುಂತಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_111_10.txt b/eesanje/url_46_111_10.txt new file mode 100644 index 0000000000000000000000000000000000000000..81ea99d75edd86a892bc3dfdbe7af38bb3b2448d --- /dev/null +++ b/eesanje/url_46_111_10.txt @@ -0,0 +1,6 @@ +ಮೃತಪಟ್ಟ ಕೆಎಸ್‌‍ಆರ್‌ಟಿಸಿ ನೌಕರರು, ಪ್ರಯಾಣಿಕರ ಕುಟುಬದವರಿಗೆ ಪರಿಹಾರ ವಿತರಣೆ +ಬೆಂಗಳೂರು,ಜೂ.13-ಅನಾರೋಗ್ಯ ಹಾಗೂ ಅಪಘಾತದಲ್ಲಿ ಮೃತಪಟ್ಟ ಕೆಎಸ್‌‍ಆರ್‌ಟಿಸಿ ನೌಕರರ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ಹಾಗೂ ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಅವಲಂಬಿತರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್‌ ಅನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿತರಿಸಿದರು. +ಶಾಂತಿನಗರದ ಕೆಎಸ್‌‍ಆರ್‌ಟಿಸಿ ಕಚೇರಿಯಲ್ಲಿ ಹಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ತವ್ಯದಲ್ಲಿರುವಾಗಲೇ ಮೃತಪಟ್ಟ ನಾಲ್ಕು ಮಂದಿ ಸಂಸ್ಥೆಯ ನೌಕರರ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ, ಕುಟುಂಬ ಕಲ್ಯಾಣ ಯೋಜನೆಯಡಿ 23 ನೌಕರರ ಅವಲಂಬಿತರಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಲ್ಲಿ ಸಾವನ್ನಪ್ಪಿದ ನಾಲ್ವರು ಪ್ರಯಾಣಿಕರ ಅವಲಂಬಿತರಿಗೆ 10 ಲಕ್ಷ ರೂ.ಗಳ ಪರಿಹಾರದ ಚೆಕ್‌ ಅನ್ನು ವಿತರಿಸಲಾಯಿತು. +ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೇವೆಯಲ್ಲಿದ್ದ ನೌಕರರ 4 ಅವಲಂಭಿತರಿಗೆ ಅಪಘಾತ ಪರಿಹಾರ ( / ) ವಿಮೆ ತಲಾ ₹1 ಕೋಟಿಯನ್ನು ಇಂದು ವಿತರಿಸಿದೆ.ಒಟ್ಟು ಇಲ್ಲಿಯವರೆಗೆ ಇದೂ ಸೇರಿ 17 ಸಿಬ್ಬಂದಿಗಳ ಕುಟುಂಬಕ್ಕೆ ವಿಮಾ‌ ನೀಡಿಕೆಹಾಗೂ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತ ಪಟ್ಟ 23 ನೌಕರರ…../t5liZSNXO3 +ಈ ವೇಳೆ ಮಾತನಾಡಿದ ಸಚಿವರು, ಕೆಎಸ್‌‍ಆರ್‌ಟಿಸಿ ಸಂಸ್ಥೆಯ ಪ್ರಯಾಣಿಕರು ಹಾಗೂ ನೌಕರರ ಹಿತರಕ್ಷಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಜೀವ ಅಮೂಲ್ಯವಾದುದು. ಅದಕ್ಕೆ ಬೆಲೆ ಕಟ್ಟಲಾಗದು. ಆದರೆ, ಮೃತ ನೌಕರರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಯೋಜನೆಗಳು ದೂರದರ್ಶಿತ್ವ ಹೊಂದಿದೆ. ಪರಿಹಾರದ ಮೊತ್ತವನ್ನು ಮಕ್ಕಳ ವಿದ್ಯಾಭ್ಯಾಸ, ಮನೆ ನಿರ್ಮಾಣ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಇತರೆ ಉದ್ದೇಶಗಳಿಗೆ ಹಣವನ್ನು ವೃಥಾ ಖರ್ಚು ಮಾಡಬೇಡಿ ಎಂದು ಸಲಹೆ ನೀಡಿದರು. +ಕೆಎಸ್‌‍ಆರ್‌ಟಿಸಿ ಅಧ್ಯಕ್ಷ ಶ್ರೀನಿವಾಸ್‌‍ ಮಾತನಾಡಿ, ನಿಗಮದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಶ್ರಮ ಜೀವಿಗಳಾಗಿದ್ದು, ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನೂ ಕಲ್ಪಿಸಿಕೊಡುವುದು ನಮ ಆದ್ಯ ಕರ್ತವ್ಯವಾಗಿದೆ ಎಂದರು.ಈ ಸಂದರ್ಭದಲ್ಲಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌, ಕಾರ್ಮಿಕ ಸಂಘಟನೆಗಳ ಮುಖಂಡ ಅನಂತ ಸುಬ್ಬರಾವ್‌, ವಿಜಯ ಭಾಸ್ಕರ್‌, ರೇವಪ್ಪ, ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_111_11.txt b/eesanje/url_46_111_11.txt new file mode 100644 index 0000000000000000000000000000000000000000..f1b84cbb758cee4788e330de7a83bf8ea724e2d1 --- /dev/null +++ b/eesanje/url_46_111_11.txt @@ -0,0 +1,5 @@ +ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ರೇಣುಕಾಸ್ವಾಮಿ ಕುಟುಂಬ ಪಟ್ಟು +ಬೆಂಗಳೂರು,ಜೂ.13-ನಟ ದರ್ಶನ್‌ ಪ್ರಕರಣದಲ್ಲಿ ರಾಜ್ಯದ ಪೊಲೀಸರಿಂದ ನ್ಯಾಯ ಸಿಗುವ ಅನುಮಾನಗಳಿರುವುದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ಪಟ್ಟು ಹಿಡಿದಿದೆ. +ತನಿಖೆ ನಡೆಸುತ್ತಿರುವ ಪೊಲೀಸರು ಠಾಣೆಯ ಸುತ್ತ ಟೆಂಟ್‌ ಹಾಕಿಕೊಂಡು ದರ್ಶನ್‌ ಅವರನ್ನು ಮರೆಮಾಚುವ ಪ್ರಯತ್ನ ಮಾಡುತ್ತಿದ್ದಾರೆ. ವಿಚಾರಣಾಧೀನ ಆರೋಪಿಗಳಿಗೆ ಬಿರಿಯಾನಿ ಸೇರಿದಂತೆ ಭಕ್ಷ್ಯ ಭೋಜನದ ಆತಿಥ್ಯ ನೀಡಲಾಗುತ್ತಿದೆ. ಹೀಗಿರುವಾಗ ತನಿಖೆಯಲ್ಲಿ ನ್ಯಾಯ ಸಿಗುವ ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. +ನಿನ್ನೆ ವೀರಶೈವ ಮಹಾಸಭಾದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಪ್ರಕರಣದಲ್ಲಿ ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ದೊರಕಿಸುವುಂತೆ ಆಗ್ರಹಿಸಲಾಗಿದೆ. +ಅದರ ಹೊರತಾಗಿಯೂ ದರ್ಶನ್‌ ಅವರ ವಿಚಾರದಲ್ಲಿ ಮೃದು ಧೋರಣೆ ಅನುಸರಿಸಲಾಗುತ್ತಿದೆ ಎಂಬ ಅನುಮಾನಗಳು ಜನಸಾಮಾನ್ಯರನ್ನು ಕಾಡುತ್ತಿದೆ. ಹೀಗಾಗಿ ಒಟ್ಟಾರೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. \ No newline at end of file diff --git a/eesanje/url_46_111_12.txt b/eesanje/url_46_111_12.txt new file mode 100644 index 0000000000000000000000000000000000000000..0bc649e24867cbc2101c8395c097f86a1a5517b5 --- /dev/null +++ b/eesanje/url_46_111_12.txt @@ -0,0 +1,6 @@ +ದರ್ಶನ್‌ ಪ್ರಕರಣ ಕುರಿತು ಹೇಳಿಕೆ ನೀಡದಂತೆ ಕಾಂಗ್ರೆಸ್‌‍ ಮುಖಂಡರಿಗೆ ಸಿಎಂ ತಾಕೀತು +ಬೆಂಗಳೂರು,ಜೂ.13– ನಟ ದರ್ಶನ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಯಿ ತಪ್ಪಿದ ಹೇಳಿಕೆಗಳನ್ನು ನೀಡಬಾರದು ಹಾಗೂ ತನಿಖಾ ಸಂಸ್ಥೆಯ ಮೇಲೆ ಅನಗತ್ಯ ಒತ್ತಡ ಹೇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ ಸಂಪುಟದ ಸದಸ್ಯರು ಹಾಗೂ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ. +ನಟ ದರ್ಶನ್‌ ಪ್ರಕರಣದಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು, ನಾಯಕರು, ವಿರೋಧಪಕ್ಷಗಳ ಕೆಲವು ಶಾಸಕರು ಪ್ರಭಾವ ಬೀರಲು ಯತ್ನಿಸಿದರು ಎಂದು ಹೇಳಲಾಗಿದೆ. ಆದರೆ ಅದಕ್ಕೆ ಸೊಪ್ಪು ಹಾಕದ ಸಿದ್ದರಾಮಯ್ಯ, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸತ್ಯಾಸತ್ಯತೆ ಬೆಳಕಿಗೆ ಬರಲಿ. ಈ ವಿಷಯದಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. +ದರ್ಶನ್‌ ಪ್ರಕರಣ ಬಿಟ್ಟರೆ ಸಚಿವರಿಗೆ, ಶಾಸಕರಿಗೆ ಮಾಡಲು ಬೇರೆ ಕೆಲಸಗಳಿವೆ. ಕಳೆದ ಮೂರು ತಿಂಗಳಿನಿಂದಲೂ ಚುನಾವಣಾ ನೀತಿ ಸಂಹಿತೆಯಿಂದಾಗಿ ಆಡಳಿತ ವ್ಯವಸ್ಥೆ ಸ್ಥಗಿತಗೊಂಡಿತ್ತು. ಈಗ ನೀತಿ ಸಂಹಿತೆ ತೆರವಾಗಿದೆ. ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಕ್ಕೆ ತರಬೇಕು. ಈ ನಿಟ್ಟಿನಲ್ಲಿ ಆಯಾ ಇಲಾಖೆಯ ಸಚಿವರು ಹೆಚ್ಚಿನ ಗಮನ ಹರಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. +ದರ್ಶನ್‌ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳು ಹಾಗೂ ಸತ್ಯಾಂಶ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ತಪ್ಪು ಮಾಡದವರು ಗಾಬರಿಗೊಳ್ಳುವ ಅಗತ್ಯವಿಲ್ಲ. ಈ ವಿಷಯದಲ್ಲಿ ಪೊಲೀಸರಿಗೆ ಒತ್ತಡ ಹೇರುವುದಾಗಲೀ, ಪ್ರಭಾವ ಬೀರುವುದಾಗಲೀ ಸರಿಯಲ್ಲ. ಅಂತಹ ವಿಚಾರಗಳು ತಮ ಗಮನಕ್ಕೆ ಬಂದರೆ ಸಹಿಸುವುದಿಲ್ಲ ಎಂದು ಖಡಕ್‌ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. +ನಟ ದರ್ಶನ್‌ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದರು. ಅದರ ಹಿಂದಿನ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍, ಬಿಜೆಪಿ ಎಂಬ ಭೇದ ಮಾಡದೇ ತಮ ಆಪ್ತ ಬಳಗದಲ್ಲಿರುವ ಅಭ್ಯರ್ಥಿಗಳ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. \ No newline at end of file diff --git a/eesanje/url_46_111_2.txt b/eesanje/url_46_111_2.txt new file mode 100644 index 0000000000000000000000000000000000000000..8e3090753e47a84dffdbfa30c51cd5da0bbcc430 --- /dev/null +++ b/eesanje/url_46_111_2.txt @@ -0,0 +1,4 @@ +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿದೆ : ಸಚಿವ ಚೆಲುವರಾಯಸ್ವಾಮಿ +ಬೆಂಗಳೂರು,ಜೂ.13-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100 ಕ್ಕೆ 100 ರಷ್ಟು ನಿಷ್ಪಕ್ಷಪಾತ ತನಿಖೆ ನಡೆಯಲಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. +ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಲ್ಲಿ ಯಾವ ಪ್ರಭಾವಕ್ಕೂ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆದಿದೆ. ಅದೇ ರೀತಿ ದರ್ಶನ್‌ ಪ್ರಕರಣದಲ್ಲೂ ನ್ಯಾಯೋಚಿತವಾದ ತನಿಖೆ ನಡೆಯಲಿದೆ ಎಂದು ಹೇಳಿದರು. +ಪೊಲೀಸರ ತನಿಖೆ ಒಂದು ಹಂತ. ಅನಂತರ ಅದು ನ್ಯಾಯಾಲಯಕ್ಕೆ ತಲುಪಲಿದೆ. ಶಿಕ್ಷೆ ಕೊಡುವುದು, ಜಾಮೀನು ನೀಡುವುದು, ಮಾನ್ಯತೆ ಕೊಡುವುದು ಅಂತಿಮವಾಗಿ ನ್ಯಾಯಾಲಯ ಎಂದರು.ದರ್ಶನ್‌ ಪ್ರಕರಣದಲ್ಲಿ ಯಾವ ಪ್ರಭಾವಿಗಳ ಹಸ್ತಕ್ಷೇಪವೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_111_3.txt b/eesanje/url_46_111_3.txt new file mode 100644 index 0000000000000000000000000000000000000000..1eb910da7ef52e43be331bdd4fa1f74fec95f74b --- /dev/null +++ b/eesanje/url_46_111_3.txt @@ -0,0 +1,6 @@ +ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನದ ಭೀತಿ +ಬೆಂಗಳೂರು,ಜೂ.13– ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದೆ. ಯಡಿಯೂರಪ್ಪ ಅವರನ್ನು ಬಂಧಿಸಲು ಸಿಐಡಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರೆಂಟ್‌ ಹೊರಡಿಸಬೇಕೆಂದು ಪೊಲೀಸರು ನಿನ್ನೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ವಾರೆಂಟ್‌ ಜಾರಿ ಮಾಡಿದರೆ ಪೊಲೀಸರು ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆ ಇದೆ. +ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟೀಸ್‌‍ಗೆ ಯಡಿಯೂರಪ್ಪ ಈಗಾಗಲೇ ಉತ್ತರಿಸಿದ್ದಾರೆ. ಕಳೆದ ಮಾ.28 ರಂದು ನೀಡಿದ್ದ ನೋಟೀಸ್‌‍ನಂತೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಜೂ.12 ರಂದು ತಾವು ನೀಡಿರುವ ನೋಟೀಸ್‌‍ ನನಗೆ ನಿನ್ನೆಯಷ್ಟೇ ತಲುಪಿದೆ. +ನಾನು ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಜೂ. 17 ರಂದು ನಾನು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ನಾನು ತನಿಖೆಗೆ ಸಹಕರಿಸಿದ್ದೇನೆ. ಹೀಗಾಗಿ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದರು. +ತಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌‍ವೈ ಅವರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಳೆದ ಮಾರ್ಚ್‌ನಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟರು. ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿ.ಎಸ್‌‍.ಯಡಿಯೂರಪ್ಪ ಅವರಿಗೆ ನೋಟೀಸ್‌‍ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. +ಮತ್ತೊಂದೆಡೆ ಯಡಿಯೂರಪ್ಪ ಅವರು ಈ ಪ್ರಕರಣದ ರದ್ದು ಕೋರಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟೀಸ್‌‍ಗೂ ಉತ್ತರ ನೀಡಿ ಜೂನ್‌ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.ಇಂದು ಮಧ್ಯಾಹ್ನ 42ನೇ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಾಧೀಶರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದರ ಮೇಲೆ ಯಡಿಯೂರಪ್ಪನವರ ಬಂಧನ ನಿರ್ಧಾರವಾಗಲಿದೆ. \ No newline at end of file diff --git a/eesanje/url_46_111_4.txt b/eesanje/url_46_111_4.txt new file mode 100644 index 0000000000000000000000000000000000000000..cbcb32b58b95f7bb553be82149bd525ac2f3d086 --- /dev/null +++ b/eesanje/url_46_111_4.txt @@ -0,0 +1,7 @@ +ಕಲುಷಿತ ನೀರು ಪ್ರಕರಣ : ಸತ್ಯ ಮರೆಮಾಚುತ್ತಿದ್ದಾರಾ ಅಧಿಕಾರಿಗಳು..? +ಮಧುಗಿರಿ,ಜೂ.13-ಕಲುಷಿತ ನೀರು ಕುಡಿದು ಸುಮಾರು 54 ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥರಾಗಿರುವ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಮೂರನೇ ದಿನವಾದ ನಿನ್ನೆ ಮತ್ತೆ ಇಬ್ಬರು ಮೃತ ಪಟ್ಟಿದ್ದು, ಅಧಿಕಾರಿಗಳು ಸತ್ಯವನ್ನು ಮರೆಮಾಚುತ್ತಿದ್ದಾರಾ..? ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. +ಚಿಕ್ಕದಾಸಪ್ಪ ಕಲುಷಿತ ನೀರು ಕುಡಿದು ಅಸ್ವಸ್ಥರಾದ ಹಿನ್ನೆಲೆಯಲ್ಲಿ ತುಮಕೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಲಕಾರಿಯಾಗದೇ ಬುಧವಾರ ಮೃತಪಟ್ಟಿದ್ದಾರೆ. +ಚನ್ನೇನಹಳ್ಳಿ ಗ್ರಾಮದ ಚಿಕ್ಕದಾಸಪ್ಪ(74), ಮೀನಾಕ್ಷಿ(3) ಮೃತಪಟ್ಟವರು.ಅದೇ ಗ್ರಾಮದ ಬಾಲಕಿ ಮೀನಾಕ್ಷಿ(3) ಸಹ ವಾಂತಿ ಬೇಧಿಯಿಂದ ನರಳುತ್ತಿದ್ದು, ಚಿಕಿತ್ಸೆಗಾಗಿ ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. +ಅಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸ್ಸಾಗಿ ಮಲಗಿದ್ದಾಗ ಏಕಾಏಕಿ ಕೆಮು ಕಾಣಿಸಿಕೊಂಡಿದ್ದು, ಪೋಷಕರು ಬಾಲಕಿಯನ್ನು ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಅಲ್ಲಿಂದ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸುವಾಗ ಬಾಲಕಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. +ಗ್ರಾಮದ ಹನುಮಕ್ಕ (86) ಒಂದು ವಾರದ ಹಿಂದೆ ಆಕಸಿಕವಾಗಿ ಬಿದ್ದಿದ್ದರು. ನಾಗಪ್ಪ (95) ಹದಿನೈದು ದಿನಗಳಿಂದ ಅನಾರೋಗ್ಯ ಬಳಲುತ್ತಿದ್ದರು. ನಾಗಮ (95) ವಯೋ ಸಹಜ ಖಾಯಿಲೆಯಿಂದ ಬಳಲಿ ಮೃತಪಟ್ಟಿದ್ದಾರೆಯೇ ಹೊರತು ಕಲುಷಿತ ನೀರಿನ ಸೇವನೆಯಿಂದಲ್ಲ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದರು. ನಿನ್ನೆ ಮತ್ತೆ ಇಬ್ಬರು ಮೃತಪಟ್ಟಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. +ಮತ್ತೊಬ್ಬ ವ್ಯಕ್ತಿ ಪೆದ್ದಣ್ಣ(74) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 3 ವರ್ಷದ ಬಾಲಕಿ ಮೀನಾಕ್ಷಿ ಸೇರಿದಂತೆ ನಿನ್ನೆ ಇಬ್ಬರು ಮೃತಪಟ್ಟಿದ್ದು, ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದಿಲ್ಲ. ಆದರೆ ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಬೇಧಿಯಾಗಿ ಅಸ್ವಸ್ಥಗೊಂಡು ಮೃತಪಟ್ಟಿರಬಹುದು ಎಂಬ ಅನುಮಾನಗಳು ವ್ಯಕ್ತವಾಗುತ್ತಿದ್ದು, ಮೃತರ ಶವಪರೀಕ್ಷೆ ನಡೆಸಿದರೆ ಘಟನೆಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಬಹುದು. ಈಗಾಗಲೇ ನೀರಿನ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸತ್ಯಾಂಶ ತಿಳಿಯಲಿದೆ. \ No newline at end of file diff --git a/eesanje/url_46_111_5.txt b/eesanje/url_46_111_5.txt new file mode 100644 index 0000000000000000000000000000000000000000..7c6fda095621219760a7088577aac949558f8003 --- /dev/null +++ b/eesanje/url_46_111_5.txt @@ -0,0 +1,5 @@ +ರಸಗೊಬ್ಬರ, ಬಿತ್ತನೆ ಬೀಜಗಳಿಗೆ ಹಿಂದಿನ ಬೆಲೆ ನಿಗದಿಪಡಿಸಿ ರೈತರ ಅಲೆದಾಟ ತಪ್ಪಿಸಿ : ವಿಜಯೇಂದ್ರ ಮನವಿ +ಬೆಂಗಳೂರು,ಜೂ.13– ಈಗಲಾದರೂ ಬಿತ್ತನೆ ಬೀಜಗಳ ಬೆಲೆ ಈ ಹಿಂದಿನಂತೆ ನಿಗಧಿಪಡಿಸಿ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವುದನ್ನು ತಪ್ಪಿಸಲು ಸರ್ಕಾರ ಜರೂರು ಕ್ರಮ ವಹಿಸಬೇಕು ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾಡಿನ ರೈತರ ಕುರಿತು ಕಿಂಚಿತ್ತೂ ಕಾಳಜಿ ತೋರದ ರಾಜ್ಯದ ಸರ್ಕಾರದಿಂದ ನಿತ್ಯವೂ ಒಂದಿಲ್ಲೊಂದು ಸಮಸ್ಯೆಗಳು ಎದುರಾಗುತ್ತಲೇ ಇದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. +ಬರದಿಂದ ಕಂಗೆಟ್ಟಿದ್ದ ರೈತರಿಗೆ ಬರ ಪರಿಹಾರ ನೀಡದ ಈ ಸರ್ಕಾರ ಇದೀಗ ವರುಣನ ಆಗಮನದಿಂದ ಮುಂಗಾರು ಬಿತ್ತನೆಗೆ ಸಜ್ಜಾಗುತ್ತಿರುವ ಹೊತ್ತಲ್ಲೇ ಬಿತ್ತನೆ ಬೀಜಗಳ ಬೆಲೆ ಏರಿಸಿ ಅನ್ನದಾತರ ಮೇಲೆ ಬರೆ ಎಳೆದಿದ್ದಲ್ಲದೇ ಬಿತ್ತನೆಗೆ ಅಗತ್ಯವಿದ್ದ ರಸ ಗೊಬ್ಬರ ಸಂಗ್ರಹದಲ್ಲಿಯೂ ವಿಫಲವಾಗಿ ರೈತರಿಗೆ ಅಲೆದಾಟದ ಭಾಗ್ಯ ಕರುಣಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಸದ್ಯ ಈಗಲಾದರೂ ಬಿತ್ತನೆ ಬೀಜಗಳ ಬೆಲೆ ಈ ಹಿಂದಿನ ಬೆಲೆಯನ್ನೇ ನಿಗಧಿಪಡಿಸಿ ರಸಗೊಬ್ಬರಕ್ಕಾಗಿ ರೈತರು ಅಲೆದಾಡುವುದನ್ನು ತಪ್ಪಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ಅವರು ಹೇಳಿದ್ದಾರೆ. \ No newline at end of file diff --git a/eesanje/url_46_111_6.txt b/eesanje/url_46_111_6.txt new file mode 100644 index 0000000000000000000000000000000000000000..208e76064a3ce34552564b93395899b97a8d2f52 --- /dev/null +++ b/eesanje/url_46_111_6.txt @@ -0,0 +1,4 @@ +‘ಡಿ’ಗ್ಯಾಂಗ್ ಇರುವ ಅನ್ನಪೂರ್ಣೇಶ್ವರಿನಗರ ಠಾಣೆ ಬಳಿ ನಿಷೇಧಾಜ್ಞೆ ಜಾರಿ +ಬೆಂಗಳೂರು,ಜೂ.13-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ಅನ್ನಪೂರ್ಣೇಶ್ವರಿನಗರ ಪೊಲೀಸ್‌‍ ಠಾಣೆಯಲ್ಲಿ ಇರಿಸಿ ಸಂಪೂರ್ಣ ತನಿಖೆ ನಡೆಸುತ್ತಿದ್ದು, ಠಾಣೆ ಬಳಿ ಗುಂಪು ಸೇರುವುದನ್ನು ನಿಯಂತ್ರಿಸುವ ಸಲುವಾಗಿ ಠಾಣೆ ಸುತ್ತ 200 ಮೀಟರ್‌ ಪ್ರದೇಶದಲ್ಲಿ ಇಂದಿನಿಂದ ಐದು ದಿನಗಳ ಕಾಲ ಪ್ರತಿಬಂಧ ಕಾಯ್ದೆ ವಿಧಿಸಿ ನಗರ ಪೊಲೀಸ್‌‍ ಆಯುಕ್ತರಾದ ಬಿ.ದಯಾನಂದ ಅವರು ಆದೇಶಿಸಿದ್ದಾರೆ. +ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರು, ಮೆರವಣಿಗೆ ಮತ್ತು ಸಭೆಗಳನ್ನು ನಡೆಸಬಾರದು, ದೊಣ್ಣೆ, ಕತ್ತಿ ಸೇರಿದಂತೆ ಯಾವುದೇ ಮಾರಕಾಸ್ತ್ರಗಳು ಅಥವಾ ದೈಹಿಕ ಹಿಂಸೆ ಮಾಡುವ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. +ಯಾವುದೇ ಸ್ಫೋಟಕ ವಸ್ತು ಸಿಡಿಸುವುದು, ಕಲ್ಲು ಕ್ಷಿಪಣಿ ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿ ಅಥವಾ ಶವಗಳ ಪ್ರತಿಕೃತಿ ಪ್ರದರ್ಶನ ಮಾಡುವುದನ್ನು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಿ ಆಯುಕ್ತರು ಆದೇಶಿಸಿದ್ದಾರೆ.ನಟ ದರ್ಶನ್‌ ಸೇರಿದಂತೆ ಕೆಲವು ಆರೋಪಿಗಳನ್ನು ಈ ಠಾಣೆಯಲ್ಲಿ ಇರಿಸಿ ವಿಚಾರಣೆ ನಡೆಸಲಾಗುತ್ತಿದೆ. \ No newline at end of file diff --git a/eesanje/url_46_111_7.txt b/eesanje/url_46_111_7.txt new file mode 100644 index 0000000000000000000000000000000000000000..f745eea681a96ec3215496b8805e99976b2bdfc3 --- /dev/null +++ b/eesanje/url_46_111_7.txt @@ -0,0 +1,11 @@ +ಸಿಎಂ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ : ಆರ್‌.ಅಶೋಕ್‌ +ಬೆಂಗಳೂರು,ಜೂ.13-ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಇಂದು ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರ ಬಂದ ಮೇಲೆ ನಿರಂತರವಾಗಿ ಹಲ್ಲೆ ಪ್ರಕರಣಗಳು ಆಗುತ್ತಿದೆ. ಭಾರತ್‌ ಮಾತಾ ಕೀ ಜೈ, ವಂದೇ ಮಾತರಂ ಅಂದರೆ ಹಲ್ಲೆ ನಡೆಯುತ್ತದೆ. ಮಂಗಳೂರಿನಲ್ಲಿ ಹಲ್ಲೆ ನಡೆದಿದೆ. ಚಾಕು ಇರಿತವಾಗಿದೆ. ಈ ಗಲಾಟೆಗಳು ಕಾಂಗ್ರೆಸ್‌‍ ಸರ್ಕಾರ ಬಂದ ಮೇಲೆಯೇ ಆಗುತ್ತಿವೆ ಎಂದರು. +ಭಾರತ್‌ ಮಾತಾ ಕೀ ಜೈ ಎನ್ನುವುದಕ್ಕೆ ಸಾಕ್ಷಿಗಳಿದೆ. ಡಿಕೆಶಿ ಹೇಳಿದ್ದಾರೆ. ಕರ್ನಾಟಕದಲ್ಲಿರುವ ಮುಸ್ಲಿಂರ ಸರ್ಕಾರ ಅಂದಿದ್ದಾರೆ. ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಬ್ರದರ್ಸ್‌ ಅಂದರು. ನಾಳೆ ಸಭೆ ಮಾಡುತ್ತೇವೆ. ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಭೆ ಸೇರುತ್ತಿದ್ದೇವೆ. ಹೋರಾಟದ ರೂಪುರೇಷೆ ತೀರ್ಮಾನ ಮಾಡುತ್ತೇವೆ. ಇದೊಂದು ತಾಲಿಬಾನ್‌ ಸರ್ಕಾರ ಆಗಿದೆ. ಈ ರೀತಿ ಅಲ್ಪಸಂಖ್ಯಾತರ ಓಲೈಕೆ ಮಾಡಿಕೊಂಡ ಸರ್ಕಾರ ಇದು ಎಂದು ಕಿಡಿಕಾರಿದರು. +ಅಶೋಕ್‌ ಕಿಡಿ: ನಗರದ ಅನ್ನಪೂರ್ಣೇಶ್ವರಿ ಪೊಲೀಸ್‌‍ ಠಾಣೆಗೆ ಶಾಮಿಯಾನ ಹಾಕಲು ಸೂಚನೆ ನೀಡಿರುವ ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ಅವರ ಕ್ರಮಕ್ಕೆ ಅಶೋಕ್‌ ತೀವ್ರವಾಗಿ ಕಿಡಿಕಾರಿದ್ದಾರೆ. ಬಿ.ದಯಾನಂದ್‌ ಯಾರನ್ನು ಮೆಚ್ಚಿಸಲು ಪೊಲೀಸ್‌‍ ಠಾಣೆಗೆ ಶಾಮಿಯಾನ ಹಾಕಿದ್ದಾರೆ. ಠಾಣೆಯ 200 ಸುತ್ತಮುತ್ತ 144 ಸೆಕ್ಷನ್‌ ಹಾಕಲು ಇವರಿಗೆ ಅಧಿಕಾರವಿದೆಯೇ? ಮೊದಲು ದಯಾನಂದ್‌ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. +ನಾನು ಕೂಡ ಗೃಹಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. ಎಂಥದ್ದೇ ಪ್ರಕರಣ ನಡೆದರೂ ಠಾಣೆಗೆ ಶಾಮಿಯಾನ ಹಾಕಲು ಅಧಿಕಾರಿಗಳಿಗೆ ಸೂಚಿಸಿರಲಿಲ್ಲ. ಇದಕ್ಕೆ ಸರ್ಕಾರ ಅನುಮತಿ ನೀಡಿದೆಯೇ ಇಲ್ಲವೇ ಪೊಲೀಸರು ಸ್ವಯಂಪ್ರೇರಿತರಾಗಿ ನಿರ್ಧಾರ ತೆಗೆದುಕೊಂಡಿದ್ದಾರೆಯೇ ಎಂಬುದನ್ನು ದಯಾನಂದ್‌ ಅವರು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. +ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಂವಿಧಾನವೇ ಹೇಳುತ್ತದೆ. ಠಾಣೆಗೆ ಶಾಮಿಯಾನ ಹಾಕಿರುವ ಉದ್ದೇಶವೇ ದರ್ಶನ್‌ ಪ್ರಕರಣವನ್ನು ಮುಚ್ಚಿ ಹಾಕಲು ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ತಮ ಪಕ್ಷದ ಪರವಾಗಿ ಪ್ರಚಾರ ನಡೆಸಿದವರನ್ನು ರಕ್ಷಣೆ ಮಾಡಲು ಹೊರಟಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದರು. +ನಟ ದರ್ಶನ್‌ ಅವನ್ನು ಸಿನಿಮಾದಿಂದ ದೂರ ಇಡಬೇಕು ಎಂಬ ಚರ್ಚೆಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇದು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಫಿಲಂಚೇಂಬರ್‌ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಸತ್ಯಾಸತ್ಯಾತೆ ಹೊರಗೆ ಬರಲಿ. ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು. +ಕೊಲೆಯಾದವನು ರೌಡಿಶೀಟರ್‌ ಅಲ್ಲ. ಯಾವುದೇ ಕ್ರಿಮಿನಲ್‌ ಚಟುವಟಿಕೆಯ ಹಿನ್ನೆಲೆಯವನ್ನಲ್ಲ. ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಲಾಗಿದೆ. ಇದು ಇಡೀ ಚಿತ್ರರಂಗಕ್ಕೆ ಕಳಂಕ ಎಂದು ಬೇಸರ ವ್ಯಕ್ತಪಡಿಸಿದರು. +ಸರ್ಕಾರ ಮಾನವೀಯತೆ ದೃಷ್ಟಿಯಿಂದ ಸಹಾಯ ಮಾಡಬೇಕು. ನಮ ಮಗನಿಗೆ ಯಾರು ಗತಿ? ಎಂದು ಮೃತನ ಪತ್ನಿ ಕೇಳುತ್ತಿದ್ದಾರೆ. ಆಕೆ ಗರ್ಭಿಣಿಯಾಗಿದ್ದು, ಇಂಥ ಸಂದರ್ಭದಲ್ಲಿ ಗಂಡನನ್ನು ಕಳೆದುಕೊಂಡಿರುವುದು ನೋಡಿದರೆ ಕರುಳು ಕಿತ್ತುಬರುತ್ತಿದೆ ಎಂದು ವಿಷಾದಿಸಿದರು. +ಕೆಲ ಜನಪ್ರತಿನಿಧಿಗಳಿಂದ ದರ್ಶನ್‌ ಬಿಡಿ ಎಂಬ ಒತ್ತಡ ಕೇಳಿಬರುತ್ತಿದೆ. ಗೃಹ ಸಚಿವರು ಹಾಗೇನೂ ಇಲ್ಲ ಎಂದಿದ್ದಾರೆ. ಇಂತಹ ಕೃತ್ಯಗಳಲ್ಲಿ ಭಾಗಿಯಾದವರನ್ನು ಬಿಡಿ ಎಂದು ಹೇಳುವುದು ಸರಿಯಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_111_8.txt b/eesanje/url_46_111_8.txt new file mode 100644 index 0000000000000000000000000000000000000000..e3725f5d8578bd7e99ec85bfe1c2fea6015d7297 --- /dev/null +++ b/eesanje/url_46_111_8.txt @@ -0,0 +1,7 @@ +ಪೋಕ್ಸೊ ಪ್ರಕರಣ ; ಬಿಎಸ್‌‍ವೈ ಬಂಧನದ ಕುರಿತು ಗೃಹಸಚಿವ ಪರಮೇಶ್ವರ್‌ ಹೇಳಿದ್ದೇನು..? +ತುಮಕೂರು,ಜೂ.13-ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿಚಾರಣೆ ನಡೆಯಲಿದ್ದು, ಅಗತ್ಯವಿದ್ದರೆ ಬಂಧಿಸುವ ಬಗ್ಗೆ ಸಿಐಡಿ ಅಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಗೆ ಇರುವ ಮಾಹಿತಿ ಪ್ರಕಾರ, ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟೀಸ್‌‍ ನೀಡಿದ್ದಾರೆ. ಅವರು ಬಂದು ತಮ ಹೇಳಿಕೆ ದಾಖಲಿಸಬೇಕಿದೆ ಎಂದರು.ಪ್ರಕರಣದಲ್ಲಿ 15ನೇ ತಾರೀಖಿನೊಳಗೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕು. ಅದಕ್ಕೂ ಮುನ್ನ ಅಗತ್ಯವಿರುವ ಪ್ರಕ್ರಿಯೆಗಳನ್ನು ಪಾಲಿಸಬೇಕಾಗುತ್ತದೆ. ಹೇಳಿಕೆ ಪಡೆಯುವುದು, ಹಾಜರುಪಡಿಸುವುದು ಸೇರಿದಂತೆ ಇತರ ಕ್ರಮಗಳಾಗುತ್ತವೆ ಎಂದು ಹೇಳಿದರು. +ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸಬೇಕೋ? ಬೇಡವೋ? ಎಂಬ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಗತ್ಯವಿದ್ದರೆ ಬಂಧಿಸುತ್ತಾರೆ. ಈ ವಿಚಾರವಾಗಿ ನಾನು ಏನನ್ನೂ ಹೇಳುವುದಿಲ್ಲ ಎಂದು ತಿಳಿಸಿದರು. +ಬೆಂಗಳೂರಿನಲ್ಲಿ ದರ್ಶನ್‌ ಪ್ರಕರಣದ ವರದಿ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಎಸಿಪಿ ಭರತರೆಡ್ಡಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಅವರು, ಒಂದು ವೇಳೆ ಹಲ್ಲೆ ಮಾಡಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. +ಪೊಲೀಸ್‌‍ ಇಲಾಖೆಯಲ್ಲಿ ಯಾರಾದರೂ ಲೋಪವೆಸಗಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ ಪರಮೇಶ್ವರ್‌, ತಪ್ಪುಗಳು ಕಂಡುಬಂದರೆ ಅಮಾನತುಗೊಳಿಸುವುದು, ವಿಚಾರಣೆ ನಡೆಸುವುದು, ಕೇಸು ದಾಖಲಿಸುವ ಕ್ರಮಗಳನ್ನು ನಿಯಮಾನುಸಾರ ಮಾಡಲಾಗುವುದು ಎಂದು ಕುಣಿಗಲ್‌ನಲ್ಲಿ ವರದಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದರು. +ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಆಂಧ್ರ ಪ್ರದೇಶದಲ್ಲಿ ಒಬ್ಬರನ್ನು ಬಂಧಿಸಿದ್ದಾರೆ. ಉಳಿದಂತೆ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು. \ No newline at end of file diff --git a/eesanje/url_46_111_9.txt b/eesanje/url_46_111_9.txt new file mode 100644 index 0000000000000000000000000000000000000000..afcda8fbcf916cf8f2f5a62183c1e0778613fdb9 --- /dev/null +++ b/eesanje/url_46_111_9.txt @@ -0,0 +1,10 @@ +ತುಮಕೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು 4 ಮಂದಿ ಬಲಿ +ಬೆಂಗಳೂರು,ಜೂ.13-ಕಲುಷಿತ ನೀರಿನ ಪ್ರಕರಣದಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಆಯಾ ಜಿಲ್ಲೆಗಳ ಜಿಲ್ಲಾಡಳಿತವನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದ ಬಳಿಕವೂ ತುಮಕೂರು ಜಿಲ್ಲೆಯಲ್ಲಿ ಕುಡಿಯುವ ನೀರು ಮಲಿನಗೊಂಡು 4ಕ್ಕೂ ಹೆಚ್ಚು ಮಂದಿ ಜೀವಹಾನಿಯಾಗಿರುವ ಪ್ರಕರಣ ವರದಿಯಾಗಿದೆ. +ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮಧುಗಿರಿ, ಕೊರಟಗೆರೆ, ತುಮಕೂರು ಹಾಗೂ ಬೆಂಗಳೂರಿನ ವಿವಿಧೆಡೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ನಾಲ್ವರ ಜೀವಹಾನಿಯಾಗಿದೆ ಎಂದು ಹೇಳಲಾಗಿದೆ. +ಗ್ರಾಮಕ್ಕೆ ಜಲಜೀವನ್‌ ಮಿಷನ್‌ ಯೋಜನೆಯಡಿ ಮನೆಮನೆಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾಮಗಾರಿ ನಡೆಯುತ್ತಿದೆ. ಜೆಸಿಬಿಯಲ್ಲಿ ಕೆಲಸ ಮಾಡುವಾಗ ಕುಡಿಯುವ ನೀರಿನ ಹಾಗೂ ತ್ಯಾಜ್ಯನೀರು ಹರಿದುಹೋಗುವ ಪೈಪ್‌ಗಳು ಹಾನಿಗೊಂಡಿವೆ. +ಈ ಸಂದರ್ಭದಲ್ಲಿ ಕಲುಷಿತ ನೀರು ಕುಡಿಯುವ ನೀರಿಗೆ ಮಿಶ್ರಣಗೊಂಡಿದೆ ಎಂದು ಹೇಳಲಾಗಿದೆ. ಚಿನ್ನೇನಹಳ್ಳಿಯಲ್ಲಿ ಜಾತ್ರೆಯ ಸಂಭ್ರಮವಿದ್ದು, ಕಲುಷಿತ ನೀರಿನಿಂದಾಗಿ 100 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ವಾಂತಿ-ಬೇಧಿಯಿಂದ ಬಳಲುತ್ತಿದ್ದವರ ಪೈಕಿ ಬಹಳಷ್ಟು ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. +ಮೂರು ದಿನಗಳ ಹಿಂದಿನ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಬೇರೆ ಬೇರೆ ಕಡೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಮುಂದುವರೆಸಿದೆ.ಇಂದು ಬೆಳಿಗ್ಗೆ ತುಮಕೂರು ಆಸ್ಪತ್ರೆಯಲ್ಲಿ ಚಿಕ್ಕದಾಸಪ್ಪ (76), ಪೆದ್ದಣ್ಣ (75) ಎಂಬುವವರು ಮೃತಪಟ್ಟಿದ್ದಾರೆ. +ಬಾಲಕಿಯೊಬ್ಬಳು ಮಧುಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. +ತುಮಕೂರು ವರದಿ :ಜಿಲ್ಲಾ ಉಸ್ತುವಾರಿ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕಲುಷಿತ ನೀರು ಪ್ರಕರಣದ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿ ಚಿಕ್ಕದಾಸಪ್ಪ ಮತ್ತು ಪೆದ್ದಣ್ಣ ಅವರು ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಾಗಿರುವ ಜೀವಹಾನಿಯ ಬಗ್ಗೆ ಮಾಹಿತಿ ಪಡೆಯಲಾಗುವುದು. ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಹೇಳಿದರು. +ಕುಡಿಯುವ ನೀರಿನ ವ್ಯವಸ್ಥೆಗೆ ಕಲುಷಿತ ನೀರು ಮಿಶ್ರಣಗೊಂಡಿದ್ದರಿಂದಾಗಿ ದುರಂತ ಸಂಭವಿಸಿದೆ. ಕರ್ತವ್ಯ ನಿರ್ಲಕ್ಷ್ಯಕ್ಕೆ ಸಂಬಂಧಪಟ್ಟಂತೆ ಪಿಡಿಒ ಹಾಗೂ ನೀರು ಸರಬರಾಜು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತಾವು ನಾಳೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದು, ಇಡೀ ಜಿಲ್ಲೆಯ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಜಲಜೀವನ್‌ ಮಿಷನ್‌ ಯೋಜನೆಯ ಪ್ರಗತಿ ಪರಿಶೀಲನೆ ನಡೆಸುವುದಾಗಿ ಹೇಳಿದರು. +ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿಯ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಚಿನ್ನೇನಹಳ್ಳಿ ಪ್ರಕರಣದಲ್ಲಿ ಚಿಕ್ಕ ಮಕ್ಕಳು, ಶಾಲೆಗೆ ಹೋಗುವ ಮಕ್ಕಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅವರಿಗೆ ಚಿಕಿತ್ಸೆ ಕೊಡಿಸಲಾಗುತಿದ್ದು ಪೂರ್ತಿ ಗುಣಮುಖರಾದ ಬಳಿಕ ಮನೆಗೆ ಕಳುಹಿಸಲಾಗುವುದು ಎಂದರು. \ No newline at end of file diff --git a/eesanje/url_46_112_1.txt b/eesanje/url_46_112_1.txt new file mode 100644 index 0000000000000000000000000000000000000000..b5834bab00a4a79745558c934701dbd9092b74b9 --- /dev/null +++ b/eesanje/url_46_112_1.txt @@ -0,0 +1,4 @@ +ಭವಾನಿ ರೇವಣ್ಣ ಕಾರು ಚಾಲಕ ಅಜಿತ್‌ ಮನೆ ಮೇಲೆ ಕಲ್ಲು ತೂರಿ, ಮನೆಯವರ ಮೇಲೆ ಹಲ್ಲೆ +ಹಾಸನ,ಜೂ.13-ಕೆ.ಆರ್‌.ನಗರ ಸಂತ್ರಸ್ತೆಯ ಅಪಹರಣ ಆರೋಪ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್‌ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಕಿಡಿಗೇಡಿಗಳು ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆಯಲ್ಲಿರುವ ಅಜಿತ್‌ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. +ರಾತ್ರಿ ಮನೆ ಮೇಲೆ ದಾಳಿ ಮಾಡಿದ ಮೂರ್ನಾಲ್ಕು ಮಂದಿ ಕಿಡಿಗೇಡಿಗಳು ಅಜಿತ್‌ ಅವರ ಅಕ್ಕನ ಮಗ ಮೋಹಿತ್‌ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಮೋಹಿತ್‌ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಈ ಸಂಬಂದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಹಾಗೂ ಮನೆ ಮೇಲೆ ದಾಳಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_112_10.txt b/eesanje/url_46_112_10.txt new file mode 100644 index 0000000000000000000000000000000000000000..946f0c2de60c68ffdad1da222406b55dc26e5566 --- /dev/null +++ b/eesanje/url_46_112_10.txt @@ -0,0 +1,6 @@ +ಠಾಣೆಗೆ ಬಂದು ರೇಣುಕಾಸ್ವಾಮಿ ಪ್ರಕರಣ ಮಾಹಿತಿ ಪಡೆದುಕೊಂಡ ನಗರ ಪೊಲೀಸ್‌‍ ಆಯುಕ್ತರು +ಬೆಂಗಳೂರು,ಜೂ.12-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಗರ ಪೊಲೀಸ್‌‍ ಆಯುಕ್ತರಾದ ಬಿ.ದಯಾನಂದ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್‌‍ ಠಾಣೆಗೆ ಇಂದು ಬೆಳಗ್ಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. +ಈ ಪ್ರಕರಣದ ತನಿಖೆ ಯಾವ ರೀತಿ ನಡೆಯುತ್ತಿದೆ, ಏನೆಲ್ಲಾ ಮಾಹಿತಿಗಳನ್ನು ಆರೋಪಿಗಳಿಂದ ಪಡೆದುಕೊಳ್ಳಲಾಗಿದೆ, ಕೊಲೆಗೆ ಮೂಲ ಕಾರಣವೇನು? ಈ ಪ್ರಕರಣದಲ್ಲಿ ಇನ್ನು ಯಾರ್ಯಾರು ಭಾಗಿಯಾಗಿದ್ದಾರೆ, ಕೊಲೆ ನಂತರ ಮೃತದೇಹವನ್ನು ಸಾಗಿಸಲು ಯಾವ ವಾಹನಗಳನ್ನು ಬಳಸಲಾಗಿತ್ತು, ಆ ವಾಹನಗಳು ಯಾರಿಗೆ ಸೇರಿದ್ದು ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸುವಂತೆ ಸೂಚನೆ ನೀಡಿದ್ದಾರೆ. +ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾದಂತಹ ಸಾಕ್ಷ್ಯಾಧಾರಗಳನ್ನು ಬೇಗ ಸಂಗ್ರಹಿಸಬೇಕು ಎಂದು ಆಯುಕ್ತರು ಇದೇ ಸಂದರ್ಭದಲ್ಲಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.ಇದೊಂದು ಗಂಭೀರ ಪ್ರಕರಣ. ಜಾಗರೂಕತೆಯಿಂದ ಬಹಳ ಎಚ್ಚರಿಕೆಯಲ್ಲಿ ತನಿಖೆ ನಡೆಸಬೇಕೆಂದು ತನಿಖಾಧಿಕಾರಿಗಳಿಗೆ ಸೂಚಿಸಿ ಕೆಲವೊಂದು ಮಾರ್ಗದರ್ಶನ ನೀಡಿದರು. +ಈ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ, ನಟ ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಕೆಲವು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. +ಆಯುಕ್ತರು ಠಾಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಹಾಗೂ ಕಾಮಾಕ್ಷಿಪಾಳ್ಯ ಠಾಣೆ ಇನ್‌ಸ್ಪೆಕ್ಟರ್‌, ಸಬ್‌ಇನ್‌ಸ್ಪೆಕ್ಟರ್‌ಗಳು ಹಾಗೂ ಇನ್ನಿತರ ಸಿಬ್ಬಂದಿಗಳಿದ್ದರು. \ No newline at end of file diff --git a/eesanje/url_46_112_11.txt b/eesanje/url_46_112_11.txt new file mode 100644 index 0000000000000000000000000000000000000000..62eeeaec117c74173a6aebcea4835502ddce768b --- /dev/null +++ b/eesanje/url_46_112_11.txt @@ -0,0 +1,7 @@ +ಪೊಲೀಸರಿಂದ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕರೆತಂದು ಸ್ಥಳ ಮಹಜರು ನಡೆಸಿದ ಪೊಲೀಸರು +ಬೆಂಗಳೂರು,ಜೂ.12-ಚಿತ್ರದುರ್ಗದ ರೇಣುಕಾ ಸ್ವಾಮಿಯ ಹತ್ಯೆಯಲ್ಲಿ ಯಾರ ಪಾತ್ರ ಏನೆಂಬುದರ ಬಗ್ಗೆ ವಿಜಯನಗರ ಉಪವಿಭಾಗದ ಪೊಲೀಸರು ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ವಿಚಾರಣೆ ನಡೆಸುತ್ತಿದ್ದಾರೆ. +ರೇಣುಕಾಸ್ವಾಮಿಗೆ ಯಾವ ವಿಷಯ ಹೇಳಿ ಚಿತ್ರದುರ್ಗದಿಂದ, ಯಾವ ವಾಹನದಲ್ಲಿ ಕರೆತರಲಾಯಿತು, ಯಾರು ಅವರನ್ನು ಕರೆದುಕೊಂಡು ಬರಲು ಹೇಳಿದರು, ಅವರನ್ನು ಯಾರು ಕರೆತಂದರು, ಬೆಂಗಳೂರಿಗೆ ಕರೆದುಕೊಂಡು ಬಂದು ಎಲ್ಲಿ ಇಡಲಾಗಿತ್ತು. ಅವರ ಮೇಲೆ ಯಾವ ಯಾವ ಆಯುಧಗಳಿಂದ ಯಾರ್ಯಾರು ಹೊಡೆದರು ಎಂಬ ಮಾಹಿತಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. +ರೇಣುಕಾಸ್ವಾಮಿ ಮೃತಪಟ್ಟ ನಂತರ ಯಾವ ವಾಹನದಲ್ಲಿ ತೆಗೆದುಕೊಂಡು ಹೋಗಿ ಸುಮನಹಳ್ಳಿಯ ಮೋರಿಗೆ ಹಾಕಿದ್ದೀರಿ? ಆ ವೇಳೆ ಯಾರ್ಯಾರು ಇದ್ದರು ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಆರೋಪಿಗಳಿಂದ ಬಾಯ್ಬಿಡಿಸುತ್ತಿದ್ದಾರೆ. +ಈ ಪ್ರಕರಣದಲ್ಲಿ ಇದುವರೆಗೂ ಪವಿತ್ರ ಗೌಡ, ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ನಿನ್ನೆ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ, ನ್ಯಾಯಾಲಯ 6 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ. +ಸ್ಥಳ ಮಹಜರು:ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಅಪರಿಹರಿಸಿಕೊಂಡು ಬಂದು ಕೊಲೆ ಮಾಡಿದ ನಂತರ ಶವ ಬಿಸಾಡಲಾಗಿದ್ದ ಸ್ಥಳಕ್ಕೆ ಇಂದು ಪೊಲೀಸರು ಕೆಲವು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆ ಸಂದರ್ಭದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿತ್ತು. +ರೇಣುಕಾಸ್ವಾಮಿಯನ್ನು ಕರೆದೊಯ್ದು ಕೂಡಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾದ ಪಟ್ಟಣಗೆರೆಯ ಶೆಡ್‌ನಲ್ಲೂ ಪೊಲೀಸರು ಸ್ಥಳ ಮಹಜರು ನಡೆಸಿದರು. ಆ ಸಂದರ್ಭದಲ್ಲಿ ಎಫ್‌ಎಸ್‌‍ಎಲ್‌ ಅಧಿಕಾರಿಗಳು ಸ್ಥಳದಲ್ಲಿದ್ದರು. \ No newline at end of file diff --git a/eesanje/url_46_112_12.txt b/eesanje/url_46_112_12.txt new file mode 100644 index 0000000000000000000000000000000000000000..1c58bebcadfe00c07458b1ade9bec861b94c099a --- /dev/null +++ b/eesanje/url_46_112_12.txt @@ -0,0 +1,4 @@ +ಇನ್ನು ಮುಂದೆ ಕುಮಾರಪಾರ್ಕ್‌ ಸರ್ಕಾರಿ ನಿವಾಸದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದ್ದಾರೆ ಡಿಸಿಎಂ ಡಿಕೆಶಿ +ಬೆಂಗಳೂರು, ಜೂ. 12-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇನ್ನು ಮುಂದೆ ಕುಮಾರಪಾರ್ಕ್‌ ಪೂರ್ವದಲ್ಲಿರುವ ಸರ್ಕಾರಿ ನಿವಾಸದಲ್ಲಿ ಸಾರ್ವಜನಿಕರಿಗೆ ಲಭ್ಯವಾಗಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. +ಸರ್ಕಾರಿ ನಿವಾಸದ ವಿಳಾಸ ನಂಬರ್‌ 1, ಕುಮಾರಪಾರ್ಕ್‌ ಪೂರ್ವ, ಗಾಂಧಿಭವನ ರಸ್ತೆ, ಶಿವಾನಂದ ಸರ್ಕಲ್‌ ಬಳಿ, ಬೆಂಗಳೂರು ಆಗಿದ್ದು, ಇನ್ನು ಮುಂದೆ ಅವರು ಇಲ್ಲಿಯೇ ಎಲ್ಲರಿಗೂ ಲಭ್ಯವಾಗಲಿದ್ದಾರೆ. +ಸದಾಶಿವನಗರದಲ್ಲಿರುವ ಖಾಸಗಿ ನಿವಾಸದಲ್ಲಿ ಇನ್ನು ಮುಂದೆ ಯಾರನ್ನೂ ಭೇಟಿ ಮಾಡುವುದಿಲ್ಲ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಡಿ.ಕೆ.ಶಿವಕುಮಾರ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_112_2.txt b/eesanje/url_46_112_2.txt new file mode 100644 index 0000000000000000000000000000000000000000..69ebc1a388edb2949d44eae0e32d20930140b053 --- /dev/null +++ b/eesanje/url_46_112_2.txt @@ -0,0 +1,6 @@ +ರೇಣುಕಾಸ್ವಾಮಿ ಶವ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರು ಪೊಲೀಸ್‌‍ ವಶಕ್ಕೆ +ಬೆಂಗಳೂರು,ಜೂ.13-ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಬಳಿಕ ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೊ ಕಾರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. +ಆರ್‌.ಆರ್‌.ನಗರದ ದರ್ಶನ್‌ ಅಭಿಮಾನಿ ಸಂಘದ ಅಧ್ಯಕ್ಷನ ಮನೆ ಬಳಿ ಈ ಕಾರು ಪತ್ತೆಯಾಗಿದ್ದು, ರಾತ್ರಿಯೇ ಕಾರನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ತಂದಿದ್ದು, ಈ ಕಾರು ಪುನೀತ್‌ ಎಂಬಾತನ ಹೆಸರಿನಲ್ಲಿರುವುದು ತಿಳಿದುಬಂದಿದೆ.ಶೆಡ್‌ನಿಂದ ಮೃತದೇಹ ಸಾಗಿಸಲು ನೆರವಾದ ಗ್ಯಾರೆಜ್‌ ಮಂಜನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. +ಜೂ.8 ರಂದು ಡಿ ಬಾಸ್‌‍ ಗ್ಯಾಂಗ್‌ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ ನಗರಕ್ಕೆ ಕರೆತಂದ ಬಳಿಕ ಪಟ್ಟಣಗೆರೆ ಶೆಡ್‌ನಲ್ಲಿ ಅವರಿಗೆ ಚಿತ್ರಹಿಂಸೆ ನೀಡಿದ್ದಲ್ಲದೆ, ಸಿಗರೇಟ್‌ನಿಂದ ಸುಟ್ಟು, ಥಳಿಸಿ, ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ನಂತರ ಮೃತದೇಹ ಸಾಗಿಸಲು ಈ ತಂಡ ಸಂಚು ರೂಪಿಸಿದೆ. +ಆ ಸಂದರ್ಭದಲ್ಲಿ ನಟ ದರ್ಶನ್‌ 30 ಲಕ್ಷ ನೀಡುವುದಾಗಿ ಹೇಳಿ ಮೃತದೇಹವನ್ನು ಎಲ್ಲಾದರೂ ಬಿಸಾಕಿ ಎಂದು ತನ್ನ ಆಪ್ತ ಪ್ರದೋಷ್‌ಗೆ ಹೇಳಿದ್ದರು. ಹೀಗಾಗಿ ಪ್ರದೋಷ್‌ ಮತ್ತಿತರರೊಂದಿಗೆ ಸೇರಿಕೊಂಡು ಮೃತದೇಹವನ್ನು ಬಿಳಿ ಬಣ್ಣದ ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ ತೆಗೆದುಕೊಂಡು ಹೋಗಿ ಸುಮನಹಳ್ಳಿಯಲ್ಲಿರುವ ಸತ್ಯ ಅಪಾರ್ಟ್‌ಮೆಂಟ್‌ ಮುಂಭಾಗದ ಮೋರಿಗೆ ಎಸೆದು ಹಿಂದಿರುಗಿದ್ದರು. +ಮೃತದೇಹ ಮಾರನೇ ದಿನ ಪತ್ತೆಯಾದಾಗ ಮೊದಲೇ ಅಂದುಕೊಂಡಂತೆ ಒಬ್ಬೊಬ್ಬರಾಗಿ ಶರಣಾಗಿದ್ದಾರೆ. ಆ ಬಳಿಕ ದರ್ಶನ್‌ ಹಾಗೂ ಪವಿತ್ರಾಗೌಡ ಸಹ ಖಾಕಿ ಖೆಡ್ಡಾಕ್ಕೆ ಬಿದ್ದಿದ್ದಾರೆ. \ No newline at end of file diff --git a/eesanje/url_46_112_3.txt b/eesanje/url_46_112_3.txt new file mode 100644 index 0000000000000000000000000000000000000000..dfba636cb0fc501380ae73b5a8749e72db3a9d0c --- /dev/null +++ b/eesanje/url_46_112_3.txt @@ -0,0 +1,5 @@ +ಕೇಂದ್ರ ಸಚಿವರಾದ ಬಳಿಕ ನಾಳೆ ಮೊದಲ ಬಾರಿಗೆ ಹೆಚ್ಡಿಕೆ ರಾಜ್ಯಕ್ಕೆ ಆಗಮನ, ಅದ್ದೂರಿ ಸ್ವಾಗತಕ್ಕೆ ಸಿದ್ಧತೆ +ಬೆಂಗಳೂರು, ಜೂ.13– ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ನಂತರ ಮೊದಲ ಬಾರಿಗೆ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಬೆಂಗಳೂರಿಗೆ ಆಗಮಿಸುವ ಕುಮಾರಸ್ವಾಮಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜೆಡಿಎಸ್‌‍ನಲ್ಲಿ ಸಿದ್ಧತೆ ನಡೆದಿದೆ. +ದೆಹಲಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ನಾಳೆ ಬೆಳಿಗ್ಗೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ವಿಮಾನ ನಿಲ್ದಾಣದಿಂದ ಜೆಡಿಎಸ್‌‍ ಕಚೇರಿಯವರೆಗೂ ಅವರನ್ನು ಮೆರವಣಿಗೆಯಲ್ಲಿ ಕರೆತರಲು ನಿರ್ಧರಿಸಲಾಗಿದೆ.ಲೋಕಸಭೆ ಕಚೇರಿ ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಅಭಿನಂದನಾ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರಿ ಮತಗಳ ಅಂತರದಿಂದ ಜಯ ಗಳಿಸಿರುವುದು ಹಾಗೂ ಮೊದಲ ಬಾರಿ ಕೇಂದ್ರಸಚಿವರಾಗಿರುವುದಕ್ಕೆ ಎಚ್‌.ಡಿ.ಕುಮಾರಸ್ವಾಮಿಯವರನ್ನು ಪಕ್ಷದ ವತಿಯಿಂದ ಅಭಿನಂದಿಸಲಾಗುತ್ತದೆ. ಮಾಜಿ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಕುಮಾರಸ್ವಾಮಿಯವರನ್ನು ಅಭಿನಂದಿಸಲಿದ್ದಾರೆ. +ನಂತರ ಪದನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆಶೀರ್ವಾದವನ್ನು ಕುಮಾರಸ್ವಾಮಿ ಪಡೆಯಲಿದ್ದಾರೆ. ಅನಂತರ ತಮನ್ನು ಲೋಕಸಭೆಗೆ ಚುನಾಯಿಸಿದ ಮಂಡ್ಯ ಜಿಲ್ಲೆಯ ಜನರಿಗೆ ಧನ್ಯವಾದವನ್ನು ಅರ್ಪಿಸಲು ಮಂಡ್ಯಕ್ಕೆ ತೆರಳುವ ಕಾರ್ಯಕ್ರಮವಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_112_4.txt b/eesanje/url_46_112_4.txt new file mode 100644 index 0000000000000000000000000000000000000000..e72403f1545df406f9c87d2994eb954baee40666 --- /dev/null +++ b/eesanje/url_46_112_4.txt @@ -0,0 +1,11 @@ +ಬಿಬಿಎಂಪಿ ವಿಭಜನೆ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ, ಉಗ್ರ ಹೋರಾಟದ ಎಚ್ಚರಿಕೆ +ಬೆಂಗಳೂರು,ಜೂ.12– ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರನ್ನು ಐದು ಭಾಗಗಳನ್ನಾಗಿ ವಿಭಜನೆ ಮಾಡಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಕನ್ನಡ ಪರ ಹೋರಾಟಗಾರರು ಹಾಗೂ ಬಿಬಿಎಂಪಿ ಮಾಜಿ ಸದಸ್ಯರುಗಳು ಸರ್ಕಾರದ ಈ ನಿರ್ಧಾರವನ್ನು ಕೂಡಲೇ ವಾಪಸ್‌‍ ಪಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. +ಕರವೇ ಅಧ್ಯಕ್ಷ ನಾರಾಯಣಗೌಡ, ವಾಟಾಳ್‌ ನಾಗರಾಜ್‌ ಬಿಬಿಎಂಪಿ ಮಾಜಿ ಸದಸ್ಯರಾದ ಎನ್‌.ಆರ್‌.ರಮೇಶ್‌, ಪದನಾಭನಗರ ನಾಡಪ್ರಭು ಕೆಂಪೇಗೌಡ ನಾಗರೀಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಎ.ಎಚ್‌.ಬಸವರಾಜ್‌ ಮತ್ತಿತರರು ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ. +ನಾಡಪ್ರಭು ಕೆಂಪೇಗೌಡ ಅವರು ಕಟ್ಟಿರುವ ವ್ಯವಸ್ಥಿತ ನಗರ ಬೆಂಗಳೂರನ್ನು ವಿಭಜನೆ ಮಾಡಲು ಮುಂದಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗೌಡ ಹಾಗೂ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ.ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳಿಗೆ ಪತ್ರ ಬರೆದಿರುವ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಅವರು ಬೆಂಗಳೂರಿನ ಇತಿಹಾಸದ ಪಾಠ ಹೇಳುವ ಮೂಲಕ ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ. +ವಿಜಯನಗರ ಸಾವ್ರಾಜ್ಯದ ಅರಸರಾದ ಅಚ್ಯುತರಾಯರಿಂದ ಹನ್ನೆರಡು ಹೋಬಳಿ (ಉತ್ತರಹಳ್ಳಿ, ವರ್ತೂರು, ಯಲಹಂಕ, ಬೇಗೂರು, ಹಲಸೂರು, ಕೆಂಗೇರಿ, ತಲಘಟ್ಟಪುರ, ಜಿಗಣಿ, ಕುಂಬಳಗೋಡು, ಕಾಗಳ್ಳಿ, ಬಾಣಾವಾರ ಮತ್ತು ಹೆಸರುಘಟ್ಟ) ಗಳನ್ನು ಜಹಗೀರಾಗಿ ಪಡೆದ ಕೆಂಪೇಗೌಡರು 1537ರಲ್ಲಿ ಬೆಂಗಳೂರು ನಿರ್ಮಿಸಿದ್ದಾರೆ. ಅಂತಹ ಮಹಾನುಭಾವರು ಕಟ್ಟಿರುವ ಬೆಂಗಳೂರನ್ನು ವಿಭಜಿಸುವುದು ಸೂಕ್ತವಲ್ಲ ಎಂದು ಅವರು ಸಲಹೆ ನೀಡಿದ್ದಾರೆ. +ಬೆಂಗಳೂರು ಮಹಾನಗರವನ್ನು ವಿಭಜನೆ ಮಾಡುವುದಿಲ್ಲ ಆದರೆ, ಬಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆಯನ್ನು ಐದು ಭಾಗಗಳಾಗಿ ವಿಭಜನೆ ಮಾಡುತ್ತೇವೆ ಎಂದು ಅತ್ಯಂತ ಜಾಣ ತನದಿಂದ ಹೇಳಿಕೆ ನೀಡಿದಾಕ್ಷಣ, ತಮ ನಿಜ ಬಣ್ಣ ಬಯಲಾಗುವುದಿಲ್ಲ ಎಂದು ತಾವು ಭಾವಿಸಿದರೆ ಅದು ತಪ್ಪಾಗುತ್ತದೆ. ಒಂದು ವೇಳೆ ವಿಭಜನೆ ಮಾಡಿದರೆ ಅದು ಪ್ರಾದೇಶಿಸಕ ಅಸಮತೋಲನಕ್ಕೂ ಕಾರಣವಾಗುತ್ತದೆ. ಹೀಗಾಗಿ ಈ ಕೂಡಲೇ ನಿಮ ನಿರ್ಧಾರದಿಂದ ಹಿಂದೆ ಸರಿಯಿರಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. +ಇನ್ನೂ ಬಿಬಿಎಂಪಿ ವಿಭಜನೆ ಕುರಿತಂತೆ ಪ್ರತಿಕ್ರಿಯಿಸಿರುವ ಪದನಾಭನಗರ ನಾಡಪ್ರಭು ಕೆಂಪೇಗೌಡ ನಾಗರೀಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಎ.ಎಚ್‌.ಬಸವರಾಜ್‌ ಅವರು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಒಡೆಯಲು ಮುಂದಾದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. +ಬಿಬಿಎಂಪಿಗೆ ಚುನಾವಣೆ ನಡೆದು ನಾಲ್ಕು ವರ್ಷಗಳಾಗಿವೆ ಇಂತಹ ಸಂದರ್ಭದಲ್ಲಿ ಪಾಲಿಕೆಗೆ ಚುನಾವಣೆ ನಡೆಸುವುದನ್ನು ಬಿಟ್ಟು ವಿಭಜನೆ ಮಾಡುತ್ತೇವೆ ಎಂಬ ಹೇಳಿಕೆ ನೀಡುತ್ತಿರುವುದು ಬಿಬಿಎಂಪಿ ಚುನಾವಣೆಯನ್ನು ಮತ್ತೆ ನಾಲ್ಕು ವರ್ಷಗಳವರೆಗೆ ಮುಂದೂಡುವ ಪ್ರಯತ್ನ ಎನ್ನುವುದು ಸಾಮಾನ್ಯ ನಾಗರೀಕರಿಗೂ ಆರ್ಥವಾಗುತ್ತದೆ. ಇಂತಹ ವಿಫಲ ಯತ್ನ ಮಾಡುವುದನ್ನು ಬಿಟ್ಟು ಈ ಕೂಡಲೇ ಚುನಾವಣೆ ನಡೆಸಿ ಎಂದು ಅವರು ಆಗ್ರಹಿಸಿದ್ದಾರೆ. +ಐದು ಪಾಲಿಕೆ ನಿರ್ಮಾಣ ಮಾಡಿದರೆ ಇಲ್ಲಿನ ಮೂಲ ನಿವಾಸಿಗಳಾದ ಕನ್ನಡಿಗರಿಗೆ ಅನ್ಯಾಯವಾಗುತ್ತದೆ ಇದರ ಜೊತೆಗೆ ಅನ್ಯಭಾಷಿಕರಿಗೆ ಮಣೆ ಹಾಕಿದಂತಾಗುತ್ತದೆ ಹೀಗಾಗಿ ಅಂತಹ ಪ್ರಯತ್ನ ಮಾಡುವುದನ್ನು ನಮ ವೇದಿಕೆ ವಿರೋಧಿಸುತ್ತದೆ ಎಂದು ತಿಳಿಸಿದ್ದಾರೆ.ಇದರ ಜತೆಗೆ ಕಾಂಗ್ರೆಸ್‌‍ ಪಕ್ಷದ ಕೆಲ ಮಾಜಿ ಬಿಬಿಎಂಪಿ ಸದಸ್ಯರುಗಳು ಕೂಡ ಸರ್ಕಾರದ ಈ ನಿರ್ಧಾರಕ್ಕೆ ಅಪಸ್ವರ ಎತ್ತಿದ್ದಾರೆ. +ಹೇಗೆ ವಿಭಜನೆ:ಈಗಿರುವ 225 ವಾರ್ಡ್‌ಗಳನ್ನು 400 ವಾರ್ಡ್‌ಗಳನ್ನಾಗಿ ವಿಭಜಿಸಿ 80 ವಾರ್ಡ್‌ಗಳನ್ನು ಒಳಗೊಂಡ ಒಂದು ಪಾಲಿಕೆ ರಚನೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ರೀತಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಭಾಗಗಳನ್ನಾಗಿ ಮಾಡುವ ಮೂಲಕ ಪಾರದರ್ಶಕ ಆಡಳಿತ ನೀಡಲಾಗುವುದು ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ.ಬಿಬಿಎಂಪಿಯನ್ನು ಐದು ಭಾಗಗಳನ್ನಾಗಿ ವಿಭಜಿಸುವ ಕುರಿತಂತೆ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಎಸ್‌‍.ಪಾಟೀಲ್‌ ಹಾಗೂ ಬಿಬಿಎಂಪಿ ಮಾಜಿ ಕಮಿಷನರ್‌ ಸಿದ್ದಯ್ಯ ಅವರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. +ಅವರು ನೀಡಿರುವ ಸಮಿತಿ ವರದಿಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡ ನಂತರ ಬಿಬಿಎಂಪಿಯನ್ನು ಐದು ಭಾಗಗಳನ್ನಾಗಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. \ No newline at end of file diff --git a/eesanje/url_46_112_5.txt b/eesanje/url_46_112_5.txt new file mode 100644 index 0000000000000000000000000000000000000000..78b1b6f4c4fe77f8afa4b8ea38f2144a98c678e1 --- /dev/null +++ b/eesanje/url_46_112_5.txt @@ -0,0 +1,10 @@ +ಅಧಿಕೃತ ನಿವಾಸಕ್ಕಾಗಿ ಪ್ರಯಾಸ ಪಡುತ್ತಿರುವ ವಿಪಕ್ಷ ನಾಯಕ ಆರ್‌.ಅಶೋಕ್‌ +ಬೆಂಗಳೂರು,ಜೂ.12-ಅಧಿಕೃತ ವಿರೋಧ ಪಕ್ಷದ ನಾಯಕರಾಗಿರುವ ಆರ್‌.ಅಶೋಕ್‌ ಸಾಂವಿಧಾನಿಕ ಹುದ್ದೆ ಹೊಂದಿದ್ದರೂ ಅಧಿಕೃತ ನಿವಾಸಕ್ಕಾಗಿ ಪ್ರಯಾಸಪಡಬೇಕಾಗಿದೆ.ಆರು ತಿಂಗಳಿನಿಂದ ನಿವಾಸ ಹಂಚಿಕೆಗೆ ಪತ್ರ ವ್ಯವಹಾರ ನಡೆಸುತ್ತಿರುವ ಅಶೋಕ್‌ ಅವರಿಗೆ ಇದುವರೆಗೂ ಸರ್ಕಾರಿ ನಿವಾಸ ಸಿಕ್ಕಿಲ್ಲ. ಹಾಗಾಗಿ ಅಧಿಕೃತ ನಿವಾಸವಿಲ್ಲದೇ ಕಾರ್ಯ ನಿರ್ವಹಣೆ ಮಾಡಬೇಕಾಗಿದೆ. +ಮುಖ್ಯಮಂತ್ರಿಗೆ ಸರಿಸಮಾನವಾದ ಸಾಂವಿಧಾನಿಕ ಹುದ್ದೆ ವಿರೋಧ ಪಕ್ಷದ ನಾಯಕನ ಸ್ಥಾನವಾಗಿದೆ. ಯಾವುದೇ ಸರ್ಕಾರ ಬಂದರೂ ವಿರೋಧ ಪಕ್ಷದ ನಾಯಕರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಲಾಗುತ್ತದೆ. +ಇತ್ತೀಚಿನ ವರ್ಷಗಳಲ್ಲಿ ಕುಮಾರಕೃಪಾ ಈಸ್ಟ್‌ ಬಂಗಲೆಯನ್ನು ಸಾಮಾನ್ಯವಾಗಿ ಪ್ರತಿಪಕ್ಷ ನಾಯಕರಿಗೆ ಹಂಚಿಕೆ ಮಾಡಿಕೊಂಡು ಬರಲಾಗುತ್ತಿದೆ. ಇದನ್ನು ಬಿಟ್ಟರೆ ರೇಸ್‌‍ ಕೋರ್ಸ್‌ ರಸ್ತೆಯ ರೇಸ್‌‍ ವ್ಯೂ ಕಾಟೇಜ್‌ ಹಂಚಿಕೆ ಮಾಡುವುದು ವಾಡಿಕೆ. ಆದರೆ ಈಗ ವಿರೋಧ ಪಕ್ಷದ ನಾಯಕರಾಗಿರುವ ಅಶೋಕ್‌ಗೆ ಈವರೆಗೂ ಸರ್ಕಾರಿ ನಿವಾಸವನ್ನು ಹಂಚಿಕೆ ಮಾಡಿಲ್ಲ, ಹಾಗಾಗಿ ಖಾಸಗಿ ನಿವಾಸದಿಂದಲೇ ಅಶೋಕ್‌ ಸಾಂವಿಧಾನಿಕ ಹುದ್ದೆಯ ಜವಾಬ್ದಾರಿ ನಿರ್ವಹಣೆ ಮಾಡಬೇಕಾಗಿದೆ. +ನಿವಾಸಕ್ಕಾಗಿ ಪತ್ರ: ವಿರೋಧ ಪಕ್ಷದ ನಾಯಕರಾಗುತ್ತಿದ್ದಂತೆ ಸರ್ಕಾರಿ ನಿವಾಸಕ್ಕಾಗಿ 2023ರ ನವೆಂಬರ್‌ನಲ್ಲೇ ಸರ್ಕಾರಕ್ಕೆ ಅಶೋಕ್‌ ಪತ್ರ ಬರೆದಿದ್ದರು. ಆದರೆ ನಿವಾಸ ಹಂಚಿಕೆ ಮಾಡುವ ಕೆಲಸ ಆಗಲೇ ಇಲ್ಲ, 2024ರ ಫೆಬ್ರವರಿಯಲ್ಲಿ ಮತ್ತೊಮೆ ಸರ್ಕಾರಕ್ಕೆ ಪತ್ರ ಬರೆದ ಅಶೋಕ್‌ ಸರ್ಕಾರಿ ನಿವಾಸ ಹಂಚಿಕೆಗೆ ಮನವಿ ಮಾಡಿದ್ದರು. +ಚುನಾವಣೆ ಮುಗಿದು ತಿಂಗಳಾದರೂ ಸರ್ಕಾರಿ ನಿವಾಸ ಹಂಚಿಕೆಗೆ ಸರ್ಕಾರ ಮುಂದಾಗಿಲ್ಲ. ಹಾಗಾಗಿ ಮೂರನೇ ಬಾರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪತ್ರ ಬರೆದು ರೇಸ್‌‍ಕೋರ್ಸ್‌ ರಸ್ತೆಯಲ್ಲಿರುವ ನಿವಾಸ ಅಥವಾ ಕುಮಾರಕೃಪಾ ನಿವಾಸಕ್ಕೆ ಅವರು ಮನವಿ ಮಾಡಿದ್ದಾರೆ. +ವಿಪಕ್ಷ ನಾಯಕನ ಮನವಿ: ನಂ.1 ಕುಮಾರಕೃಪಾ ಪೂರ್ವ ನಿವಾಸ, ನಂ.1 ರೇಸ್‌‍ ವ್‌ಯೂವ್‌ ಕಾಟೇಜ್‌‍, ನಂ.2 ರೇಸ್‌‍ ವ್‌ಯೂವ್‌ ಕಾಟೇಜ್‌ ಈ ಮೂರರಲ್ಲಿ ಒಂದು ನಿವಾಸಕ್ಕೆ ಅಶೋಕ್‌ ಮನವಿ ಸಲ್ಲಿಸಿದ್ದಾರೆ. ಆದರೆ ಕುಮಾರಕೃಪ ನಂಬರ್‌ 1 ನಿವಾಸ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕೊಡಲಾಗಿದೆ. +ರೇಸ್‌‍ ವ್‌ಯೂವ್‌ ಕಾಟೇಜ್‌‍-1 ಸಚಿವ ಎಂ.ಬಿ. ಪಾಟೀಲ್‌ ಅವರಿಗೆ ನೀಡಲಾಗಿದೆ, ರೇಸ್‌‍ ವ್‌ಯೂವ್‌ ಕಾಟೇಜ್‌‍-2 ಸಚಿವ ಕೆ.ಜೆ. ಜಾರ್ಜ್‌ ಅವರಿಗೆ ನೀಡಲಾಗಿದೆ, ಈಗ ವಿಪಕ್ಷ ನಾಯಕ ಅಶೋಕ್‌ ಅವರು ಕೇಳಿರುವ ಈ ನಿವಾಸ ಖಾಲಿ ಇಲ್ಲ ಹೀಗಾಗಿ ಮುಖ್ಯ ಕಾರ್ಯದರ್ಶಿಗಳಿಗೂ ತಲೆ ನೋವಾಗಿದೆ.ಸಚಿವರನ್ನ ಖಾಲಿ ಮಾಡಿಸಿ ಅಶೋಕ್‌ಗೆ ನಿವಾಸ ಕೊಡಲು ಸಾಧ್ಯವಾಗುತ್ತಿಲ್ಲ, ಅಶೋಕ್‌ ಅವರಿಗೆ ಬೇರೆ ಯಾವುದೇ ನಿವಾಸದ ಮೇಲೆ ಆಸಕ್ತಿ ಇಲ್ಲ. ಜಯಮಹಲ್‌ ನಿವಾಸ ದೂರ ಎಂದು ನಿರಾಕರಿಸಿದ್ದಾರೆ. +ಆದರೆ, ಸಿಎಂ ಸಮಾನ ಹುದ್ದೆಯಲ್ಲಿರುವ ಅಶೋಕ್‌ಗೆ ಸರ್ಕಾರಿ ನಿವಾಸ ಕೊಡಲೇಬೇಕು. ಕೇಳಿದ ನಿವಾಸ ನೀಡುವುದು ಸರ್ಕಾರದ ಕರ್ತವ್‌ಯವಾಗಿದೆ. ನವೆಂಬರ್‌ ನಿಂದ ಮನವಿ ಮಾಡುತ್ತಲೇ ಇದ್ದಾರೆ. ಆದರೂ ಅಶೋಕ್‌ ಮನವಿಯತ್ತ ಸರ್ಕಾರ ಮಾತ್ರ ಗಮನ ಹರಿಸುತ್ತಿಲ್ಲ. ಸಾಂವಿಧಾನಿಕ ಹದ್ದೆಯಾಗಿರುವ ವಿರೋಧ ಪಕ್ಷದ ನಾಯಕ ಸ್ಥಾನ ನಿರ್ವಹಣೆಗೆ ಪ್ರತ್ಯೇಕ ನಿವಾಸದ ಅಗತ್ಯವಿದೆ. +ಶಾಸಕಾಂಗ ಪಕ್ಷದ ನಾಯಕ ಮತ್ತು ವಿರೋಧ ಪಕ್ಷದ ನಾಯಕರಾಗಿರುವವರಿಗೆ ಸಾಕಷ್ಟು ಜವಾಬ್ದಾರಿ ನಿರ್ವಹಣೆ ಮಾಡಬೇಕಿದ್ದು, ಅದಕ್ಕಾಗಿ ಸಿಬ್ಬಂದಿ ಬಳಸಿಕೊಳ್ಳಬೇಕಾಗಲಿದೆ. ಆದರೆ ಖಾಸಗಿ ನಿವಾಸದಲ್ಲಿ ಇದನ್ನೆಲ್ಲ ನಿರ್ವಹಿಸುವುದು ಕಷ್ಟ. ಇದಕ್ಕಾಗಿಯೇ ಸರ್ಕಾರಿ ನಿವಾಸ ಹಂಚಿಕೆ ಮಾಡಲಾಗುತ್ತದೆ. ಆದರೆ, ಸರ್ಕಾರಿ ನಿವಾಸ ಸಿಗದ ಕಾರಣದಿಂದ ಖಾಸಗಿ ನಿವಾಸದಿಂದಲೇ ಅಶೋಕ್‌ ವಿರೋಧ ಪಕ್ಷದ ನಾಯಕರ ಕೆಲಸ ಕಾರ್ಯಗಳನ್ನು ನಿರ್ವಹಣೆ ಮಾಡಬೇಕಾಗಿದೆ. \ No newline at end of file diff --git a/eesanje/url_46_112_6.txt b/eesanje/url_46_112_6.txt new file mode 100644 index 0000000000000000000000000000000000000000..9ef2bae6f7397cf13e9765e053bcf7d179aeb41d --- /dev/null +++ b/eesanje/url_46_112_6.txt @@ -0,0 +1,7 @@ +ವಿಕೃತವಾಗಿ ಪತಿಯನ್ನು ಕೊಂದವರ ಬಗ್ಗೆ ರೇಣುಕಾಸ್ವಾಮಿ ಅವರ ಪತ್ನಿ ಹೇಳಿದ್ದೇನು..? +ಬೆಂಗಳೂರು,ಜೂ.12-ನನ್ನ ಪತಿಯನ್ನು ಮೋಸದಿಂದ ಅಪಹರಿಸಿ ಚಿತ್ರಹಿಂಸೆ ನೀಡಿ ವಿಕೃತವಾಗಿ ಕೊಲೆ ಮಾಡಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ಅವರ ಪತ್ನಿ ಸಹನಾ ನೊಂದು ನುಡಿದಿದ್ದಾರೆ.ನಾನು ಐದು ತಿಂಗಳ ಗರ್ಭಿಣಿ, ಮಗು ಹುಟ್ಟಿದ ಮೇಲೆ ತಂದೆ ಯಾರೆಂದು ಹೇಳಬೇಕು ಎಂದು ಅಳಲು ತೋಡಿಕೊಂಡಿದ್ದಾರೆ. +ಶನಿವಾರ ಫೋನ್‌ ಮಾಡಿ ಊಟಕ್ಕೆ ಬರುವುದಾಗಿ ಹೇಳಿದ್ದರು. ಆದರೆ ಸಂಜೆಯಾದರೂ ಬಾರದಿದ್ದಾಗ ಫೋನ್‌ ಮಾಡಿದೆ. ಆದರೆ 7.30ರಲ್ಲಿ ಸ್ವಿಚ್‌ ಆಫ್‌ ಆಗಿತ್ತು. ನನ್ನ ಪತಿಯನ್ನು ಅಪಹರಿಸಿ ಬೆಂಗಳೂರಿಗೆ ಕರೆದೊಯ್ದು ವಿಕೃತವಾಗಿ ಕೊಲೆ ಮಾಡಿದ್ದಾರೆ. ನನ್ನ ಪತ್ನಿ ಗರ್ಭಿಣಿ ಎಂದು ಹೇಳಿದರೂ ಅವರಿಗೆ ಕನಿಕರ ಬಂದಿಲ್ಲ. ಹೀನಾಯವಾಗಿ ಹೊಡೆದು ಸಾಯಿಸಿದ್ದಾರೆ. ನನ್ನ ಮುಂದಿನ ಬದುಕು ಹೇಗೆ ಎಂಬುದೇ ಚಿಂತೆಯಾಗಿದೆ ಎಂದು ಸಹನಾ ಕಣ್ಣೀರು ಹಾಕಿದ್ದಾರೆ. +ನನ್ನ ಗಂಡ ತಪ್ಪು ಮಾಡಿದ್ದರೆ ಬುದ್ದಿ ಹೇಳಿ ಬಿಟ್ಟುಬಿಡಬಹುದಿತ್ತು. ಕೊಲೆ ಮಾಡುವ ಮಟ್ಟಕ್ಕೆ ಹೋಗಬಾರದಿತ್ತು. ನನ್ನ ಪತಿಯನ್ನು ಕೊಲೆ ಮಾಡಿರುವ ಆರೋಪಿಗಳು ಯಾವುದೇ ಕಾರಣಕ್ಕೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಾರದು. ಎಲ್ಲರಿಗೂ ಕಠಿಣ ಶಿಕ್ಷೆ ನೀಡಬೇಕೆಂದು ಹೇಳಿದ್ದಾರೆ. +ಪತಿಯ ಕೊಲೆಯಿಂದಾಗಿ ನಮ ಜೀವನ ಹಾಳಾಗಿದೆ. ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡಬಾರದು. ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಪತಿಯ ಮೃತದೇಹದ ಮುಂದೆ ನೋವು ಹೇಳಿಕೊಂಡಿದ್ದಾರೆ. +ಸೊಸೆಗೆ ಉದ್ಯೋಗ ಕೊಡಿ:ನನ್ನ ಮಗನನ್ನು ಬೆಂಗಳೂರಿಗೆ ಕರೆದೊಯ್ದು ಕೊಲೆ ಮಾಡಿರುವ ಎಲ್ಲರಿಗೂ ತಕ್ಷ ಶಿಕ್ಷೆಯಾಗಬೇಕು ಎಂದು ರೇಣುಕಾಸ್ವಾಮಿ ಅವರ ತಾಯಿ ರತ್ನಪ್ರಭಾ ಕಣ್ಣೀರು ಹಾಕುತ್ತಾ, ನನ್ನ ಸೊಸೆಗೆ ಪರಿಹಾರ ನೀಡಬೇಕು. ಸರ್ಕಾರಿ ಉದ್ಯೋಗ ಕೊಡಿ ಎಂದು ಅಲವತ್ತುಕೊಂಡಿದ್ದಾರೆ. +ವಯಸ್ಸಾದ ನಮ ಕುಟುಂಬಕ್ಕೆ ಮಗನೇ ಆಧಾರವಾಗಿದ್ದ. ಈಗ ನಾವು, ನಮ ಸೊಸೆ ಕಷ್ಟಪಡುವಂತಾಗಿದೆ. ನನ್ನ ಸೊಸೆಗೆ ಅನ್ಯಾಯವಾಗಿದೆ. ಆಕೆಗೆ ನ್ಯಾಯ ಒದಗಿಸಬೇಕು, ಕೊಲೆಗಾರರಿಗೆ ಕಠಿಣ ಶಿಕ್ಷೆಯಾಗಬೇಕೆಂದರು. \ No newline at end of file diff --git a/eesanje/url_46_112_7.txt b/eesanje/url_46_112_7.txt new file mode 100644 index 0000000000000000000000000000000000000000..b60954d3876e55fb8f93baa6eb35f7509b60b313 --- /dev/null +++ b/eesanje/url_46_112_7.txt @@ -0,0 +1,8 @@ +ಮೋದಿ ಸರ್ಕಾರದಲ್ಲಿ ಕರ್ನಾಟಕದ ಐವರು ಮಂತ್ರಿಗಳು, ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ಸಿಗುತ್ತಾ ವೇಗ..? +ಬೆಂಗಳೂರು,ಜೂ.12-ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿ ಕರ್ನಾಟಕದ ಐವರು ಮಂತ್ರಿಮಂಡಲಕ್ಕೆ ಸೇರ್ಪಡೆಯಾಗಿ ಪ್ರಮುಖ ಖಾತೆಗಳು ಲಭಿಸಿರುವುದರಿಂದ ನೆನೆಗುದಿಗೆ ಬಿದ್ದಿರುವ ರಾಜ್ಯದ ಯೋಜನೆಗಳಿಗೆ ವೇಗ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ. ಅದರಲ್ಲೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಭಾರೀ ಕೈಗಾರಿಕೆ ಮತ್ತು ವಿ.ಸೋಮಣ್ಣಗೆ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳು ಸಿಕ್ಕಿರುವುದು ಅನೇಕ ಯೋಜನೆಗಳಿಗೆ ಚಾಲನೆ ಸಿಗಬಹುದೆಂದು ಹೇಳಲಾಗುತ್ತಿದೆ. +ಈ ಇಬ್ಬರ ಜೊತೆಗೆ ಕೇಂದ್ರದ ಗ್ರಾಹಕರ ಕಲ್ಯಾಣ ಸಚಿವ ಪ್ರಹ್ಲಾದ್‌ ಜೋಶಿ ಹಾಗೂ ರಾಜ್ಯ ಖಾತೆ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರೂ ಪ್ರಮುಖ ಇಲಾಖೆಯ ಸಚಿವರಾಗಿರುವುದರಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಚಾಲನೆ ಸಿಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. +ವಿಶೇಷವಾಗಿ ನಿರೀಕ್ಷೆಗೂ ಮೀರಿ ಪ್ರಭಾವಿ ಖಾತೆಯನ್ನೇ ದಕ್ಕಿಸಿಕೊಂಡಿರುವ ಕುಮಾರಸ್ವಾಮಿ ಅವರಿಂದ ರಾಜ್ಯದಲ್ಲಿ ಹಲವಾರು ಕಾರಣಗಳಿಂದ ಮುಚ್ಚಿ ಹೋಗಿರುವ ಹಾಗೂ ಮುಚ್ಚುವ ಹಂತಕ್ಕೆ ಬಂದಿರುವ ಕೆಲವು ರೋಗಗ್ರಸ್ಥ ಕಾರ್ಖಾನೆಗಳಿಗೆ ಮರುಜನ ಸಿಗಬಹುದೆಂದು ಹೇಳಲಾಗುತ್ತಿದೆ. +ಮೇಕೆದಾಟು ಸೇರಿದಂತೆ ಅಂತಾರಾಜ್ಯ ಜಲ ವ್ಯಾಜ್ಯಗಳ ಪರಿಹಾರ, ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮತಿ ಮತ್ತು ಅನುದಾನ ಕೊಡಿಸುವುದು, ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗ ನೀಡುವುದು ಸೇರಿದಂತೆ ಎರಡೂ ಇಲಾಖೆಯಡಿ ಬಾಕಿ ಇರುವ ಕಾಮಗಾರಿಗಳ ಪೂರ್ಣಗೊಳಿಸಲು ಸೋಮಣ್ಣ ಶ್ರಮಿಸಲಿದ್ದಾರೆ ಎಂದು ಜನತೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. +ರಾಜ್ಯ ಸರ್ಕಾರದಲ್ಲಿ ವಿವಿಧ ಖಾತೆಗಳ ನಿರ್ವಹಿಸಿ ಅಪಾರ ಅನುಭವ ಹೊಂದಿರುವ ಸೋಮಣ್ಣ ಪಾದರಸದಂತೆ ಸದಾ ಚಟುವಟಿಕೆಯಿಂದ ಇರುವ ರಾಜಕಾರಣಿ. ತಮಗೆ ಸಿಕ್ಕ ಅವಕಾಶದಲ್ಲಿ ಸಾಕಷ್ಟು ಕೆಲಸ ಮಾಡಬೇಕೆನ್ನುವ ಮಹತ್ವಾಕಾಂಕ್ಷೆ ಹೊಂದಿರುವ ನಾಯಕ. ಈಗ ಕೇಂದ್ರ ಸಂಪುಟದಲ್ಲಿ ಎರಡು ಮಹತ್ವದ ಖಾತೆಗಳ ಜವಾಬ್ದಾರಿ ಸಿಕ್ಕಿದೆ. ಸಂಪುಟ ದರ್ಜೆಯಲ್ಲದೇ ಇದ್ದರೂ ರಾಜ್ಯ ಖಾತೆಯಲ್ಲಿಯೂ ಇರುವ ಮಿತಿಯಲ್ಲಿ ರಾಜ್ಯಕ್ಕೆ ಹೆಚ್ಚಿನ ನೆರವು ಕಲ್ಪಿಸಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದಾರೆ. +ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವ ಇರುವ ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆಯ ಮಹತ್ವದ ಸ್ಥಾನ ದೊರಕಿದೆ. ಈ ಖಾತೆ ಸಿಕ್ಕಿರುವುದರಿಂದ ಸಹಜವಾಗಿಯೇ ಕರ್ನಾಟಕ ಉದ್ಯಮ ಕ್ಷೇತ್ರದ ಕನಸುಗಳು ಚಿಗುರಿವೆ. +ರಾಜ್ಯಕ್ಕೆ ಬೃಹತ್‌ ಉದ್ಯಮವನ್ನು ಹಾಗೂ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಲ್ಲಿ ಕೇಂದ್ರ ಸಚಿವ ಹೆಚ್‌‍.ಡಿ. ಕುಮಾರಸ್ವಾಮಿ ಪ್ರಮುಖ ಪಾತ್ರ ವಹಿಸಬಹುದು. ಇದೇ ರೀತಿ ನೆರೆ ರಾಜ್ಯಗಳಿಗೆ ಕೈಗಾರಿಕೋದ್ಯಮಿಗಳ ವಲಸೆ ತಡೆಯುವ ನಿಟ್ಟಿನಲ್ಲೂ ಅನುಕೂಲವಾಗಬಹುದೆಂಬ ನಿರೀಕ್ಷೆ ಇದೆ. ಇದರ ಜೊತೆಗೆ ಉಕ್ಕು ಖಾತೆಯನ್ನೂ ಹೊಂದಿರುವುದರಿಂದ ರಾಜ್ಯದ ಭದ್ರಾವತಿಯ ವಿಐಎಸ್‌‍ಎಲ್‌ ಕಾರ್ಖಾನೆ ಪುನಃಶ್ಚೇತನದ ಆಸೆಗೆ ಮತ್ತೆ ಚಿಗುರೊಡೆದಿದೆ. ಎಂಪಿಎಂ ಕಾರ್ಖಾನೆ ಮತ್ತು ಎನ್‌ಜಿಇಎಫ್‌‍ ಕಾರ್ಖಾನೆಗಳೂ ಸಹ ಮರುಜೀವ ಪಡೆದುಕೊಳ್ಳುವ ಆಶಾಭಾವನೆ ಇದೆ. \ No newline at end of file diff --git a/eesanje/url_46_112_8.txt b/eesanje/url_46_112_8.txt new file mode 100644 index 0000000000000000000000000000000000000000..89efb2c94d09d90b966daf9b6bf6038fc642da25 --- /dev/null +++ b/eesanje/url_46_112_8.txt @@ -0,0 +1,7 @@ +ವಾಲೀಕಿ ನಿಗಮದ ಹಗರಣ : 18 ನಕಲಿ ಖಾತೆ ತೆರೆದಿದ್ದ ಆರೋಪಿ ಅಂದರ್‌ +ಬೆಂಗಳೂರು,ಜೂ.12– ವಾಲಿಕಿ ನಿಗಮದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌‍ಐಟಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಬಂಧಿಸಿ 8 ಕೋಟಿಗೂ ಹೆಚ್ಚು ನಗದನ್ನು ವಶಪಡಿಸಿಕೊಂಡಿದ್ದಾರೆ. +ಹೈದರಾಬಾದ್‌ನಲ್ಲಿ ಆರೋಪಿ ಸತ್ಯನಾರಾಯಣ ವರ್ಮ ಎಂಬಾತನನ್ನು ಎಸ್‌‍ಐಟಿ ಬಂಧಿಸಿ ವಿಚಾರಣೆಗೊಳಪಡಿಸಿ ಅಕೌಂಟ್‌ ನಂಬರ್‌ಗಳ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿದೆ. +ವಾಲೀಕಿ ನಿಗಮದಲ್ಲಿನ ಹಣವನ್ನು ವರ್ಗಾವಣೆ ಮಾಡಲು ಆರೋಪಿಯು 18 ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆದಿದ್ದಾನೆ. ಈ ಖಾತೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವ ಬಗ್ಗೆ ಎಸ್‌‍ಐಟಿ ತನಿಖಾಧಿಕಾರಿಗಳು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. +ಆರೋಪಿ ಸತ್ಯನಾರಾಯಣ ವಿವಿಧ ಕಂಪನಿಗಳ ಹೆಸರಿನಲ್ಲಿ 18 ಬ್ಯಾಂಕ್‌ ಖಾತೆಗಳನ್ನು ತೆರೆದಿದ್ದನು. ಆ ಖಾತೆಗಳಿಗೆ ವಾಲೀಕಿ ನಿಗಮದಿಂದ ಹಣ ವರ್ಗಾವಣೆಯಾಗಿತ್ತು. ಅಕೌಂಟ್‌ ನಂಬರ್‌ಗಳನ್ನು ಪರಿಶೀಲಿಸಿದಾಗ ಅವು ನಕಲಿ ಖಾತೆ ಎಂಬುದು ಖಚಿತವಾದ ಬೆನ್ನಲ್ಲೇ ಆರೋಪಿಯ ಬಗ್ಗೆ ಹಲವು ಮಾಹಿತಿಗಳನ್ನು ಸಂಗ್ರಹಿಸಿ ಆತನನ್ನು ಬಲೆಗೆ ಬೀಳಿಸಿಕೊಂಡಿದೆ. +ಆರೋಪಿ ಸತ್ಯನಾರಾಯಣ ವರ್ಮನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ 8 ಕೋಟಿಗೂ ಹೆಚ್ಚು ಹಣ ವಶಪಡಿಸಿಕೊಳ್ಳಲಾಗಿದೆ. ವಾಲೀಕಿ ಅಭಿವೃದ್ದಿ ನಿಗಮದ ಬ್ಯಾಂಕ್‌ ಖಾತೆಯಿಂದ 18 ಖಾತೆಗಳಿಗೆ ಎಂಜಿರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ 94.73 ಕೋಟಿ ಹಣ ವರ್ಗಾವಣೆಯಾಗಿತ್ತು. +ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸೂಕ್ತ ತನಿಖೆಗಾಗಿ ಎಸ್‌‍ಐಟಿ ರಚಿಸಿತ್ತು. ತನಿಖೆ ಕೈಗೊಂಡ ಎಸ್‌‍ಐಟಿ ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ, ಲೆಕ್ಕಾಧಿಕಾರಿ ಪರಶುರಾಮ್‌, ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಎನ್ನಲಾದ ನಾಗರಾಜ್‌ ನೆಕ್ಕುಂಟಿ, ನಾಗೇಶ್ವರ್‌ ರಾವ್‌ ಎಂಬುವರನ್ನು ಈಗಾಗಲೇ ಎಸ್‌‍ಐಟಿ ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿ ತನಿಖೆ ಮುಂದುವರೆಸಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಈವರೆಗೂ ಏಳು ಮಂದಿಯನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_46_112_9.txt b/eesanje/url_46_112_9.txt new file mode 100644 index 0000000000000000000000000000000000000000..53b6cb17415e73207e70d9b3a3b1471bb0c7ad5e --- /dev/null +++ b/eesanje/url_46_112_9.txt @@ -0,0 +1,7 @@ +ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ : ಮಾಜಿ ಸಿಎಂ ಯಡಿಯೂರಪ್ಪಗೆ ಸಿಐಡಿ ನೋಟಿಸ್‌‍ +ಬೆಂಗಳೂರು,ಜೂ.12-ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ಜಾರಿ ಮಾಡಿದೆ. ಇದರ ಬೆನ್ನಲ್ಲೇ ತಮ ಮೇಲೆ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. +ಸಿಐಡಿ ತನಿಖಾ ತಂಡ ಬಿಎಸ್‌‍ವೈ ಅವರಿಗೆ ಪ್ರಕರಣ ಕುರಿತಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌‍ ನೀಡಿದೆ.ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿರಬೇಕಿರುವುದರಿಂದ ನಾನು ದೆಹಲಿಗೆ ತೆರಳುತ್ತಿದ್ದೇನೆ. ಜೂ.15ರಂದು ವಿಚಾರಣೆಗೆ ಹಾಜರಾಗುತ್ತೇನೆ. ಹಾಗಾಗಿ ವಿನಾಯಿತಿ ನೀಡಬೇಕೆಂದು ಯಡಿಯೂರಪ್ಪ ನೋಟಿಸ್‌‍ಗೆ ಉತ್ತರಿಸಿದ್ದಾರೆ. +ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನಲಾದ ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರದಲ್ಲಿ ಕಳೆದ ಮಾರ್ಚ್‌ 14ರಂದು ದೂರು ನೀಡಲಾಗಿತ್ತು. ಅದಾ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ನೋಟಿಸ್‌‍ ಜಾರಿ ಮಾಡಿದ್ದಾರೆ. ಪ್ರಕರಣ ದಾಖಲಾದ ಬಳಿಕ ಏಪ್ರಿಲ್‌ 12ರಂದು ಪೊಲೀಸರ ವಿಚಾರಣೆಗೆ ಬಿಎಸ್‌‍ ಯಡಿಯೂರಪ್ಪ ಅವರು ಹಾಜರಾಗಿದ್ದರು. +ಅಂದು ವಿಚಾರಣೆ ವೇಳೆ, ದೂರು ನೀಡಿದ್ದ ಮಹಿಳೆಗೆ ಇತರರ ವಿರುದ್ಧ ದೂರು ನೀಡುವುದು ಒಂದು ಹವ್ಯಾಸವಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು. ನಂತರ ಪೊಕ್ಸೋ ಪ್ರಕರಣದ ತನಿಖೆ ಜವಾಬ್ದಾರಿ ವಹಿಸಿಕೊಂಡ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದೆ. +ಬೆಂಗಳೂರಿನ ಸದಾಶಿವ ನಗರದ ಪೊಲೀಸ್‌‍ ಠಾಣೆಗೆ ಮಾಚ್‌ 14ರಂದು ರಾತ್ರಿ ಹೆಣ್ಣು ಮಗಳೊಬ್ಬರು ತೆರಳಿ ತನ್ನ ಅಪ್ತಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದರು. +ಈ ಮಹಿಳೆಯು ಈ ಹಿಂದೆಯು ಕೆಲವು ಪ್ರಮುಖರ ವಿರುದ್ಧ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಮೇ ತಿಂಗಳಲ್ಲಿ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಅಸುನೀಗಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧ ಪೊಕ್ಸೋ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಡಾ.ಜಿ.ಪರಮೇಶ್ವರ್‌, ತನಿಖೆ ನಡೆಯುತ್ತಿದೆ. ಸಿಐಡಿಯಿಂದ ತನಿಖೆಯು ಪ್ರಗತಿಯಲ್ಲಿದೆ. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_113_1.txt b/eesanje/url_46_113_1.txt new file mode 100644 index 0000000000000000000000000000000000000000..16e2c82bfba3ca577ab5df7a306c408bc3c39650 --- /dev/null +++ b/eesanje/url_46_113_1.txt @@ -0,0 +1,6 @@ +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ಹಿಂದೆ ವ್ಯವಸ್ಥಿತ ಖಾಸಗಿ ಜಾಲ +ಬೆಂಗಳೂರು, ಜೂ. 12-ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯ ಹಿಂದೆ ವ್ಯವಸ್ಥಿತವಾದ ಖಾಸಗಿ ಜಾಲವೊಂದು ಸಕ್ರಿಯವಾಗಿರುವ ಕುರಿತು ಮಾಹಿತಿ ಬೆಳಕಿಗೆ ಬಂದಿದೆ.ನಿಗಮದಲ್ಲಿದ್ದ ಹಣವನ್ನು ಒಂದು ತಿಂಗಳ ಮಟ್ಟಿಗೆ ಪಡೆದುಕೊಂಡು ಅದನ್ನು ಬೇರೆ ಕಡೆ ಹೂಡಿಕೆ ಮಾಡಿ ಲಾಭ ಗಳಿಸಿ ತಿಂಗಳ ಬಳಿಕ ಕಮಿಷನ್‌ ಜೊತೆ ಅಸಲನ್ನು ವಾಪಸ್‌‍ ಸಂದಾಯ ಮಾಡಲಾಗುತ್ತಿತ್ತು ಎನ್ನಲಾಗಿದೆ. +ಈ ರೀತಿ ಹಲವು ಬಾರಿ ಹಣದ ವಹಿವಾಟು ನಡೆದಿದೆ ಎಂಬ ಮಾಹಿತಿಗಳಿವೆ. ಇದರ ಹಿಂದೆ ಸತ್ಯನಾರಾಯಣವರ್ಮ ಮತ್ತು ಆರ್‌ಬಿಎಲ್‌ ಬ್ಯಾಂಕಿನ ನಿವೃತ್ತ ಅಧಿಕಾರಿ ಚಂದ್ರಮೋಹನ್‌ರ ಕೈವಾಡ ಕಂಡುಬಂದಿದೆ. +ಈ ರೀತಿ ಪದೇಪದೇ ಹಣದ ವಹಿವಾಟು ನಡೆಸುವ ಮೂಲಕ ತಮ ಸಿವಿಲ್‌ ಸ್ಕೋರ್‌ ಅನ್ನು ಹೆಚ್ಚಿಸಿಕೊಂಡು ಅದರ ಮೂಲಕ ಬ್ಯಾಂಕ್‌ನಿಂದ ದೊಡ್ಡ ಪ್ರಮಾಣದಲ್ಲಿ ಸಾಲ ಪಡೆದುಕೊಂಡು ಬೇರೆ ಬೇರೆ ವ್ಯವಹಾರ ನಡೆಸುತ್ತಿದ್ದರು ಎಂದು ಹೇಳಲಾಗಿದೆ.ಸತ್ಯನಾರಾಯಣ ವರ್ಮ ಅವರನ್ನು ತನಿಖಾಧಿಕಾರಿಗಳು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. +ನಿಗಮದ 97 ಕೋಟಿ ರೂ. ಗಳನ್ನು ನಕಲಿ ಬ್ಯಾಂಕುಗಳಿಗೆ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಈತ ಕಿಂಗ್‌ಪಿನ್‌ ಎಂದು ಹೇಳಲಾಗಿದೆ. 97 ಕೋಟಿ ರೂ.ಗಳ ಹಣ ವರ್ಗಾವಣೆಗೆ 5 ಕೋಟಿ ರೂ.ಗಳ ಕಮಿಷನ್‌ ನೀಡುವ ಭರವಸೆ ನೀಡಿ 4 ಕೋಟಿ ರೂ.ಗಳನ್ನು ಪಾವತಿಸಲಾಗಿತ್ತು ಎಂಬ ಮಾಹಿತಿ ತಿಳಿದುಬಂದಿದೆ. +ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರು ಆತಹತ್ಯೆ ಮಾಡಿಕೊಂಡ ಬಳಿಕ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜ್ಯಸರ್ಕಾರ ತನಿಖೆಯನ್ನು ಎಸ್‌‍ಐಟಿಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಸಿಬಿಐ ಕೂಡ ಎಫ್‌ಐಆರ್‌ ದಾಖಲಿಸಿದೆ.ಹಗರಣಕ್ಕೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಯುವಜನ ಸೇವೆ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ಕೂಡ ನೀಡಿದ್ದಾರೆ. \ No newline at end of file diff --git a/eesanje/url_46_113_10.txt b/eesanje/url_46_113_10.txt new file mode 100644 index 0000000000000000000000000000000000000000..8e9f2d50bcc4029fd4034811e307bee2e7d898ca --- /dev/null +++ b/eesanje/url_46_113_10.txt @@ -0,0 +1,5 @@ +ಪ್ರಮಾಣವಚನ ಸ್ವೀಕರಿಸಿದ ಸುರಪುರ ನೂತನ ಶಾಸಕ ರಾಜಾ ವೇಣುಗೋಪಾಲ ನಾಯಕ +ಬೆಂಗಳೂರು,ಜೂ.11– ಸುರಪುರ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾಗಿದ್ದ ರಾಜಾ ವೇಣುಗೋಪಾಲ ನಾಯಕ ಅವರು ಇಂದು ವಿಧಾನಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. +ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌ ಫರೀದ್‌ ಅವರು ಪ್ರಮಾಣವಚನ ಬೋಧಿಸಿದರು. ವಿಧಾನಸಭಾ ಸದಸ್ಯರಾಗಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣವಚನವನ್ನು ವೇಣುಗೋಪಾಲ ನಾಯಕ ಸ್ವೀಕರಿಸಿದರು. +ಈ ಸಂದರ್ಭದಲ್ಲಿ ಸಭಾಧ್ಯಕ್ಷ ಖಾದರ್‌, ಸಚಿವ ಶರಣಬಸಪ್ಪ ದರ್ಶನಪುರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅಭಿನಂದಿಸಿದರು. ಈ ವೇಳೆ ಶಾಸಕರಾದ ಬಿ.ಚಿಮನಕಟ್ಟಿ, ಅಲ್ಲಮಪ್ರಭು ಪಾಟೀಲ್‌, ಜಗದೇವ ಗುತ್ತೇದಾರ್‌, ಸಂಸದ ಕುಮಾರ್‌ ನಾಯಕ್‌, ವಿಧಾನಸಭೆ ಕಾರ್ಯದರ್ಶಿ ಎನ್‌.ಕೆ.ವಿಶಾಲಾಕ್ಷಿ ಮತ್ತಿತರರು ಇದ್ದರು. +ಕಾಂಗ್ರೆಸ್‌‍ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಕಳೆದ ಫೆಬ್ರವರಿ 25ರಂದು ನಿಧನರಾಗಿದ್ದರು. ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಲೋಕಸಭೆ ಎರಡನೇ ಹಂತದ ಚುನಾವಣೆ ಸಂದರ್ಭದಲ್ಲೇ ಉಪಚುನಾವಣೆ ನಡೆದಿತ್ತು.ಉಪಚುನಾವಣೆಯಲ್ಲಿ ವೇಣುಗೋಪಾಲ್‌ ನಾಯಕ್‌ ಅವರು ಚುನಾಯಿತರಾಗಿದ್ದರು. \ No newline at end of file diff --git a/eesanje/url_46_113_11.txt b/eesanje/url_46_113_11.txt new file mode 100644 index 0000000000000000000000000000000000000000..dcc331c0f90664d2deef76915fbe9b3a82e497b9 --- /dev/null +++ b/eesanje/url_46_113_11.txt @@ -0,0 +1,8 @@ +ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಮೊದಲ ಮೀಟಿಂಗ್ ಮಾಡಿದ ಹೆಚ್ಡಿಕೆ +ನವದೆಹಲಿ,ಜೂ.11-ಭದ್ರಾವತಿ ಕಬ್ಬಿಣ ಉಕ್ಕಿನ ಕಾರ್ಖಾನೆ ಸೇರಿದಂತೆ ರಾಷ್ಟ್ರದ ಉಕ್ಕಿನ ಕಾರ್ಖಾನೆಗಳ ಪುನಶ್ಚೇತನದ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಉಕ್ಕು ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. +ಅಧಿಕಾರ ಸ್ವೀಕಾರ ಮಾಡುವ ಮುನ್ನ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಭದ್ರಾವತಿ ಕಬ್ಬಿಣ್ಣ ಮತ್ತು ಉಕ್ಕಿನ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಚರ್ಚೆ ನಡೆಸಿದರು. ಕಾರ್ಖಾನೆಗಳ ಪುನಶ್ಚೇತನದ ಸಾಧ್ಯಸಾಧ್ಯತೆಗಳು, ಪುನಶ್ಚೇತನಕ್ಕಿರುವ ಅವಕಾಶಗಳ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು. +ಕರ್ನಾಟಕದ ಕುದುರೆಮುಖದಲ್ಲಿ ಸಿಗುತ್ತಿದ್ದ ಕಬ್ಬಿಣದ ಅದಿರು ಜಗತ್ತಿನಲ್ಲೇ ಶ್ರೇಷ್ಠ ಗುಣಮಟ್ಟದ ಅದಿರಾಗಿತ್ತು ಎಂದು ಹೇಳುವ ಮೂಲಕ ಬೆಂಗಳೂರಿನಲ್ಲಿ ಉಕ್ಕು ಸಂಶೋಧನಾ ಕೇಂದ್ರ ಸ್ಥಾಪನೆಯ ಬಗ್ಗೆ ಅಧಿಕಾರಿಗಳು ಸಚಿವರ ಗಮನ ಸೆಳೆದರು. ಉಕ್ಕಿನ ಸಂಶೋಧನೆಗೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟರೆ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ ಎಂಬ ನಿಟ್ಟಿನಲ್ಲಿ ಚರ್ಚೆ ನಡೆಸಲಾಯಿತು. +ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತಾವು ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ ಮಾಡಿದ್ದ ಕೆಲಸಗಳ ಮಾಹಿತಿಯನ್ನು ನೀಡಿ ಕಾಂಪಿಟ್‌ ವಿತ್‌ ಚೀನಾ ಪರಿಕಲ್ಪನೆಯ ಬಗ್ಗೆ ವಿವರಿಸಿದರು. +ಇದು ಅಧಿಕಾರಿಗಳ ಮೆಚ್ಚುಗೆಗೂ ಪಾತ್ರವಾಯಿತು. ದೇಶದ ಎಲ್ಲಾ ರಾಜ್ಯಗಳ ಕೈಗಾರಿಕಾಭಿವೃದ್ದಿ ತಮ ಗುರಿಯಾಗಿದ್ದು, ಪ್ರಧಾನಿ ನರೇಂದ್ರಮೋದಿಯವರ ಮೇಕಿನ್‌ ಇಂಡಿಯಾ ಪರಿಕಲ್ಪನೆಯಡಿ ಉತ್ಪಾದನೆ ಹೆಚ್ಚಳ, ಉದ್ಯೋಗ ಸೃಷ್ಟಿ, ಭಾರತವನ್ನು ವಿಶ್ವದ ಮೂರನೇ ಆರ್ಥಿಕ ಶಕ್ತಿ ಮಾಡುವ ಗುರಿಗೆ ತಲುಪಲು ಎಲ್ಲರೂ ಸಾಥ್‌ ನೀಡೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು. +ಪುನಶ್ಚೇತನಗೊಳಿಸಲು ಅವಕಾಶ ಇರುವ ಕೈಗಾರಿಕೆಗಳನ್ನು ಮಾತ್ರ ಅಭಿವೃದ್ಧಿಪಡಿಸೋಣ. ವಿನಾಕಾರಣ ಜನರ ತೆರಿಗೆ ಹಣ ಪೋಲು ಮಾಡುವುದು ಬೇಡ. ಪ್ರಧಾನಿಯವರು ಬಹಳ ವಿಶ್ವಾಸವಿಟ್ಟು ಮಹತ್ವದ ಈ ಖಾತೆಯನ್ನು ನೀಡಿದ್ದಾರೆ. ಅವರ ನಿರೀಕ್ಷೆ ಹುಸಿಯಾಗಬಾರದೆಂದು ಕಿವಿಮಾತು ಹೇಳಿದರು. +ಇದೇ ಸಂದರ್ಭದಲ್ಲಿ ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರಿಂದು ಪ್ರಕಾಶ್‌ ಅವರು ಬಿಲಾಯ್‌ ಸೇರಿ ಇತರೆ ಉಕ್ಕು ತಯಾರಿಕಾ ಘಟಕಗಳಿಗೆ ಭೇಟಿ ನೀಡುವಂತೆ ಕೋರಿದರು. ಸಭೆಯಲ್ಲಿ ಉಕ್ಕು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸುಕೃತಿ ಲಿಖಿ, ಜಂಟಿ ಕಾರ್ಯದರ್ಶಿ ವಿನೋದ್‌ಕುಮಾರ್‌ ತ್ರಿಪಾಠಿ, ಆರ್ಥಿಕ ಸಲಹೆಗಾರ ಅಶ್ವಿನ್‌ಕುಮಾರ್‌, ಉಪಕಾರ್ಯದರ್ಶಿ ಸುಭಾಷ್‌ಕುಮಾರ್‌ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_113_12.txt b/eesanje/url_46_113_12.txt new file mode 100644 index 0000000000000000000000000000000000000000..fa28e2b2f2d0074e00f12991494f7aa39192ee15 --- /dev/null +++ b/eesanje/url_46_113_12.txt @@ -0,0 +1,7 @@ +ಕೊಲೆಯಾದ ರೇಣುಕಾಸ್ವಾಮಿ ಯಾರು..? ಹಿನ್ನೆಲೆ ಏನು..? +ಬೆಂಗಳೂರು :ನಟ ದರ್ಶನ್ ಹಾಗೂ ಅವರ ಹಿಂಬಾಲಕರಿಂದ ಕೊಲೆಯಾಗಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮಿ ವೆಂಕಟೇಶ್ವರ ಬಡಾವಣೆಯ ನಿವಾಸಿ, ಬೆಸ್ಕಾಂ ನಿವೃತ್ತ ಉದ್ಯೋಗಿ ಶಿವನಗೌಡ-ರತ್ನಪ್ರಭಾ ದಂಪತಿ ಪುತ್ರ ರೇಣುಕಾಸ್ವಾಮಿ. ಎರಡು ವರ್ಷದ ಹಿಂದೆಯಷ್ಟೇ ರೇಣುಕಾಸ್ವಾಮಿ ವಿವಾಹವಾಗಿದ್ದು, ಪತ್ನಿ ಸಹನಾ ಈಗ 3 ತಿಂಗಳ ಗರ್ಭಿಣಿ. +ರೇಣುಕಾಸ್ವಾಮಿ ಮೆಡಿಕಲ್‌ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದರು. ದರ್ಶನ್‌ ಬಾಳಿನಲ್ಲಿ ಪವಿತ್ರ ಇರುವುದು ಇಷ್ಟವಿರಲಿಲ್ಲ. ಹಾಗಾಗಿ ದರ್ಶನ್‌ ಅಭಿಮಾನಿಯಾಗಿದ್ದ ರೇಣುಕಾಸ್ವಾಮಿ, ನಟಿ ಪವಿತ್ರಾ ಗೌಡಗೆ ದರ್ಶನ್‌ ಸಂಸಾರ ಹಾಳು ಮಾಡದೆ ಅವರಿಂದ ದೂರ ಇರುವಂತೆ ಆಗಾಗ್ಗೆ ಮೆಸೇಜ್‌ ಹಾಕುತ್ತಿದ್ದನು ಎಂದು ಹೇಳಲಾಗಿದೆ. +ಕಳೆದ ಶನಿವಾರ ಏಕಾಏಕಿ ರೇಣುಕಾಸ್ವಾಮಿ ನಾಪತ್ತೆಯಾಗಿದ್ದರು. ಇವರ ಮನೆಯವರು ಎಲ್ಲ ಕಡೆ ವಿಚಾರಿಸಿದರೂ ಸುಳಿವು ಸಿಕ್ಕಿರಲಿಲ್ಲ. +ಬೈಕ್‌ ಪತ್ತೆ:ಚಳ್ಳಕೆರೆ ಗೇಟ್‌ ಬಳಿಯ ಬಾಲಾಜಿ ವೈನ್ಸ್ ಸಮೀಪ ರೇಣುಕಾ ಅವರ ಬೈಕ್‌ ಪತ್ತೆಯಾಗಿತ್ತು. +ನಿನ್ನೆ ಕುಟುಂಬದವರಿಗೆ ಮಾಹಿತಿ:ನಗರದ ಕಾಮಾಕ್ಷಿಪಾಳ್ಯ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ದೊರೆತ ಶವದ ಗುರುತು ಪತ್ತೆಹಚ್ಚಿದಾಗ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುದು ಖಚಿತಪಡಿಸಿಕೊಂಡು ಅವರ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕುಟುಂಬಸ್ಥರು ತಕ್ಷಣ ನಗರಕ್ಕೆ ಬಂದು ಮೃತದೇಹವನ್ನು ನೋಡಿ ನಮ ಮಗ ರೇಣುಕಸ್ವಾಮಿಯದೇ ಎಂದು ಗುರುತಿಸಿದ್ದಾರೆ. +ಬುದ್ದಿ ಹೇಳಲು ಕರೆತಂದಿದ್ದ ಬಾಡಿಗಾರ್ಡ್‌ಗಳು:ರೇಣುಕಾಸ್ವಾಮಿಗೆ ಬುದ್ದಿ ಹೇಳಲು ಆತನನ್ನು ನಗರಕ್ಕೆ ಕರೆಸಿಕೊಂಡಿದ್ದ ದರ್ಶನ್‌ ಬಾಡಿಗಾರ್ಡ್‌ಗಳು ಹಾಗೂ ಇನ್ನಿತರರು ಸೇರಿಕೊಂಡು ಹಲ್ಲೆ ಮಾಡಿದ್ದರಿಂದ ಪ್ರಾಣ ಬಿಟ್ಟಿದ್ದಾರೆ. \ No newline at end of file diff --git a/eesanje/url_46_113_2.txt b/eesanje/url_46_113_2.txt new file mode 100644 index 0000000000000000000000000000000000000000..0b530626f5d7af7c62eef82cb1b2e2861b6a0816 --- /dev/null +++ b/eesanje/url_46_113_2.txt @@ -0,0 +1,12 @@ +ನಟ ದರ್ಶನ್‌ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳಿರುವುದು ಕಂಡುಬಂದಿಲ್ಲ : ಪರಮೇಶ್ವರ್‌ ಸ್ಪಷ್ಟನೆ +ಬೆಂಗಳೂರು, ಜೂ. 12-ನಟ ದರ್ಶನ್‌ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎಂದು ನಮಗೆ ಕಂಡುಬರುತ್ತಿಲ್ಲ. ನಮ ಬಳಿ ಯಾರೂ ಪ್ರಕರಣದಲ್ಲಿ ಪ್ರಭಾವ ಬೀರಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸಾಧ್ಯವಿರುವ ಎಲ್ಲಾ ಕ್ರಮಗಳನ್ನೂ ಪೊಲೀಸರು ತೆಗೆದುಕೊಳ್ಳುತ್ತಾರೆ. ಸರ್ಕಾರದ ವತಿಯಿಂದ ಯಾರೂ ಮಧ್ಯಪ್ರವೇಶ ಮಾಡುವುದಿಲ್ಲ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ ಎಂದರು. +ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ದರ್ಶನ್‌ರನ್ನು ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ದರ್ಶನ್‌ಗಾಗಲೀ, ಪರಮೇಶ್ವರ್‌ಗಾಗಲೀ ಎಲ್ಲರಿಗೂ ಕಾನೂನು ಒಂದೇ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು.ಕೊಲೆಯಾದ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ದರ್ಶನ್‌ ಅವರ ಶ್ರೀಮತಿಯವರ ಬಗ್ಗೆ ಪೋಸ್ಟ್‌ ಮಾಡಿದ್ದ ಎಂದು ಹೇಳಲಾಗಿದೆ. ಅದಕ್ಕೆ ದೂರು ನೀಡಬಹುದಿತ್ತು. ಪೊಲೀಸರು ತಕ್ಷಣ ಕ್ರಮ ಕೈಗೊಳ್ಳುತ್ತಿದ್ದರು. +ಅದನ್ನು ಬಿಟ್ಟು ಕರೆತಂದು ಹೊಡೆದು ಸಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆಯನ್ನು ತಡೆಯಬಹುದಿತ್ತು. ನಡೆದುಹೋಗಿದೆ. ಜೀವ ಹೋಗಿದೆ. ಯಾರೂ ಏನೂ ಮಾಡಲು ಸಾಧ್ಯವಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಪೊಲೀಸರು ಮಾಡುತ್ತಾರೆ ಎಂದು ಹೇಳಿದರು. +ಪೊಲೀಸ್‌‍ ಕಸ್ಟಡಿಯಲ್ಲಿರುವ ದರ್ಶನ್‌ಗೆ ಬಿರಿಯಾನಿ ಅಥವಾ ಚಿಕನ್‌ ತಂದುಕೊಟ್ಟಿದ್ದಾರಾ ನನಗೆ ಗೊತ್ತಿಲ್ಲ. ಉಪವಾಸದಿಂದ ಸಾಯಿಸಲಿಕ್ಕಂತೂ ಆಗುವುದಿಲ್ಲ. ಪೊಲೀಸ್‌‍ ಠಾಣೆಯಲ್ಲಿ ಊಟ ತರಿಸಿಕೊಡುವುದು ಸಾಮಾನ್ಯ ಎಂದರು.ರೇಣುಕಾಸ್ವಾಮಿ ಕುಟುಂಬಕ್ಕೆ ನೆರವು ನೀಡುವ ಸಂಬಂಧ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಲಾಗುವುದು. ಕುಟುಂಬದ ಸದಸ್ಯರು ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. +ಎಲ್ಲವನ್ನೂ ಸಿಬಿಐಗೆ ಕೊಡುವ ಅಗತ್ಯವಿಲ್ಲ. ಈಗಾಗಲೇ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 13 ಜನರನ್ನು ಬಂಧಿಸಲಾಗಿದೆ. ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎಂಬುದು ಹೆಚ್ಚೂ ಕಡಿಮೆ ಗೊತ್ತಾಗಿದೆ. ಹೀಗಾಗಿ ಬೇರೆ ಸಂಸ್ಥೆಯ ತನಿಖೆಗೆ ನೀಡುವ ಅಗತ್ಯವಿಲ್ಲ ಎಂದರು. +ವಿಚಾರಣೆ ವೇಳೆ ದರ್ಶನ್‌ ಕೃತ್ಯವನ್ನು ಒಪ್ಪಿಕೊಂಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಪೊಲೀಸರು ಯಾವ ಪ್ರಶ್ನೆ ಕೇಳುತ್ತಾರೆ, ಯಾವ ರೀತಿ ತನಿಖೆ ಮಾಡುತ್ತಾರೆ ಎಂಬೆಲ್ಲಾ ವಿಚಾರಗಳು ನಮಗೆ ಮಾಹಿತಿ ಇರುವುದಿಲ್ಲ. ಅಂತಿಮ ವರದಿಯಲ್ಲಿ ಮಾತ್ರ ವಿಚಾರ ತಿಳಿಯುತ್ತದೆ ಎಂದು ಹೇಳಿದರು. +ದರ್ಶನ್‌ ಈ ಹಿಂದೆ ಹಲವು ಕೃತ್ಯಗಳಲ್ಲಿ ಇದೇ ರೀತಿ ಭಾಗಿಯಾಗಿದ್ದರು ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಅವರ ವಿರುದ್ಧ ರೌಡಿಶೀಟ್‌ ತೆರೆಯಬೇಕೇ, ಬೇಡವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿ ಯಾವ ರೀತಿ ಶಿಫಾರಸು ಮಾಡುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ಅಂತಹ ಕ್ರಮ ಕೈಗೊಳ್ಳಲು ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯವಿದೆ ಎಂದರು. +ರೇಣುಕಾಸ್ವಾಮಿ ಅವರು ದರ್ಶನ್‌ರ ಅಭಿಮಾನಿಯಾಗಿದ್ದರು ಎಂಬುದನ್ನು ನಾನು ಮಾಧ್ಯಮದವರಿಂದಲೇ ತಿಳಿದುಕೊಂಡಿದ್ದೇನೆ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪ್ರೋಕ್ಸೊ ಪ್ರಕರಣದ ತನಿಖೆ ನಡೆಯುತ್ತಿದೆ. ದಾಖಲಾತಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಯಾವುದೇ ಆದೇಶಗಳಿಲ್ಲ ಎಂದು ಹೇಳಿದರು. +ಮಾದಕವಸ್ತು ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಾಗಿಣಿ ತ್ರಿವೇದಿ ಅವರನ್ನು ಬಾಲಕಾರ್ಮಿಕ ಜಾಗೃತಿ ಅಭಿಯಾನದ ರಾಯಭಾರಿಯಾಗಿ ಪರಿಗಣಿಸಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಅದು ಕಾರ್ಮಿಕ ಇಲಾಖೆಗೆ ಸೇರಿದ ವಿಚಾರ. ಅವರು ನಮನ್ನಂತೂ ಕೇಳುವುದಿಲ್ಲ ಎಂದರು. +ಪಿಎಸ್‌‍ಐ ನೇಮಕಾತಿ ಕುರಿತಂತೆ ಇಂದು ಪ್ರಗತಿ ಪರಿಶೀಲನೆ ನಡೆಸಲಾಗುವುದು. 545 ಹುದ್ದೆಗಳಿಗೆ ಆಯ್ಕೆಯಾಗಿರುವವರಿಗೆ ಶೀಘ್ರವೇ ನೇಮಕಾತಿ ಆದೇಶ ನೀಡಬೇಕು ಎಂದು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಕೆಲವರು ನ್ಯಾಯಾಲಯಕ್ಕೆ ಹೋಗಿ ಅಲ್ಲಿಂದ ಆದೇಶಗಳನ್ನು ತಂದಾಗ ನಮ ಕೈಕಟ್ಟಿಹಾಕಿದಂತಾಗುತ್ತದೆ ಎಂದು ಹೇಳಿದರು. +545 ಹುದ್ದೆಗಳಿಗೆ ಪರೀಕ್ಷೆ, ಮರುಪರೀಕ್ಷೆ ಸೇರಿ ಹಲವು ಪ್ರಯತ್ನಗಳಾಗಿವೆ. ಇದಾದ ಬಳಿಕ 403 ಹುದ್ದೆಗಳ ನೇಮಕಾತಿ, ಅನಂತರ ಖಾಲಿ ಇರುವ 600 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. 545 ಹುದ್ದೆಗಳ ವಿವಾದ ಇತ್ಯರ್ಥವಾಗದ ಹೊರತು ಉಳಿದವುಗಳ ನೇಮಕಾತಿ ಆಗುವುದಿಲ್ಲ ಎಂದರು. \ No newline at end of file diff --git a/eesanje/url_46_113_3.txt b/eesanje/url_46_113_3.txt new file mode 100644 index 0000000000000000000000000000000000000000..21cfeca0dd87e12b1ffc7190cf2a435f3f1c65cc --- /dev/null +++ b/eesanje/url_46_113_3.txt @@ -0,0 +1,6 @@ +ನಟ ದರ್ಶನ್‌ ಮಾಡಿರುವುದು ಹೇಯ ಕೃತ್ಯ : ಜಗದೀಶ್‌ ಶೆಟ್ಟರ್‌ +ಹುಬ್ಬಳ್ಳಿ, ಜೂ.12-ನಟ ದರ್ಶನ್‌ ಮಾಡಿರುವುದು ಹೇಯ ಕೃತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್‌ ಶೆಟ್ಟರ್‌ ಅಸಮಾಧಾನ ವ್ಯಕ್ತಪಡಿಸಿದರು. +ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತಮ ತಮ ಅಭಿಪ್ರಾಯ ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಅದರೆ ಅದನ್ನು ಇಷ್ಟೊಂದು ಗಂಭೀರವಾಗಿ ಪರಿಗಣಿಸುವುದು ಸರಿಯಲ್ಲ. ದರ್ಶನ್‌ ಹಾಗೂ ಅವರ ಟೀಂ ಮಾಡಿದ್ದು ರಾಕ್ಷಸ ಪ್ರವೃತ್ತಿ ಎಂದರು. +ರೇಣುಕಾಸ್ವಾಮಿ ಮಾಡಿದ್ದು ತಪ್ಪು ಆಗಿದ್ದರೆ ಕಾನೂನು ಮೂಲಕ ಬಗೆಹರಿಸಿಕೊಳ್ಳಬಹುದಿತ್ತು. ಆದರೆ ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ ಎಂದರು.ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಸ್ವತಃ ಕಾಂಗ್ರೆಸ್‌‍ ಶಾಸಕರೇ ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ಕೊಟ್ಟ ಅವರು, ನಾನು ಮೊದಲೇ ಹೇಳಿದ್ದೆ, ಐದು ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿ ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ ಹೆದಗೆಟ್ಟಿದೆ ಎಂದು ಅವರ ಪಕ್ಷದ ಶಾಸಕರೇ ಹೇಳಿದ್ದರಲ್ಲಿ ತಪ್ಪು ಇಲ್ಲ ಎಂದರು. +ಇನ್ನೂ ತಾವು ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೀರಿ ಎಂಬ ಕುರಿತು ಮಾತನಾಡಿದ ಅವರು ನಾನು ಎಲ್ಲಿಯೂ ಹೇಳಿಲ್ಲ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಆಗಿದ್ದು ಪಕ್ಷ ಯಾವ ಜವಾಬ್ದಾರಿ ಕೊಡುತ್ತದೆ ಅದನ್ನ ನಿಭಾಯಿಸಿಕೊಂಡು ಹೋಗಲು ಸಿದ್ಧ ಎಂದರು. +ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮೇಲೆ ಚಾಕು ಇರಿತ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು ಈ ರೀತಿಯಾಗಿ ನಡೆಯಬಾರದು. ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದರು \ No newline at end of file diff --git a/eesanje/url_46_113_4.txt b/eesanje/url_46_113_4.txt new file mode 100644 index 0000000000000000000000000000000000000000..6f8f9110dfa29ac9d99f6cb5b1ac3659e51901d8 --- /dev/null +++ b/eesanje/url_46_113_4.txt @@ -0,0 +1,8 @@ +ಜನರ ಆರೋಗ್ಯ ಹಾಳುಮಾಡುತ್ತಿವೆ ಸ್ವಚ್ಛತೆ ಕಾಪಾಡಿಕೊಳ್ಳದ ಹೋಟೆಲ್‌ಗಳು +ಬೆಂಗಳೂರು,ಜೂ.12-ಸಿಲಿಕಾನ್‌ ಸಿಟಿಯಲ್ಲಿ ಹೈಜೆನಿಕ್‌ ಎನ್ನುವುದೇ ಮಾಯವಾಗಿದೆ. ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಅಲ್ಲಿ ಎಗ್ಗಿಲ್ಲದೆ ತಿಂಡಿ ತಿನಿಸುಗಳನ್ನು ಮಾರಾಟ ಮಾಡುವುದು ಸಾಮಾನ್ಯವಾಗಿದ್ದು, ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.ಇಷ್ಟೆಲ್ಲಾ ಆದರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾತ್ರ ಜನರ ಆರೋಗ್ಯಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ಕೈ ಕಟ್ಟಿ ಕುಳಿತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. +ನಗರದ ಬಹುತೇಕ ಪ್ರದೇಶಗಳ ರಸ್ತೆ ಬದಿಗಳಲ್ಲಿ ಮತ್ತು ರಾಜಕಾಲುವೆಗಳ ಪಕ್ಕದಲ್ಲೇ ಹೋಟೆಲ್‌ಗಳನ್ನು ತೆರೆದು ವ್ಯಾಪಾರ ಮಾಡುವುದು ಕಂಡುಬರುತ್ತದೆ ಕೆಲವು ಪ್ರದೇಶಗಳಲ್ಲಿ ಹೈಜೆನಿಕ್‌ ಕಾಪಾಡಿಕೊಳ್ಳದಿರುವುದು ಕಂಡು ಬಂದರೂ ಆರೋಗ್ಯಾಧಿಕಾರಿಗಳು ಕಣುಚ್ಚಿ ಕುಳಿತಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. +ಅದರಲ್ಲೂ ನಗರದ ಹೃದಯ ಭಾಗದಲ್ಲಿರುವ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದ ರಸ್ತೆ ತುಂಬಾ ಹೋಟೆಲ್‌ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ. ಕೆಲವರು ಬಿಬಿಎಂಪಿಯಿಂದ ವ್ಯಾಪಾರ ಪರವಾನಿಗಿ ಪಡೆದುಕೊಂಡಿದ್ದರೆ ಉಳಿದವರು ಯಾವುದೇ ಅನುಮತಿ ಇಲ್ಲದೆ ರಸ್ತೆ ಬದಿಯಲ್ಲೇ ಹೋಟೆಲ್‌ ತೆರೆದು ವ್ಯಾಪಾರ ಮಾಡುತ್ತಿದ್ದಾರೆ. +ಹೀಗಾಗಿ ಇಡೀ ರಸ್ತೆ ಗಬ್ಬೇದ್ದು ಹೋಗಿದ್ದು ಅಲ್ಲಿ ಹೈಜೆನಿಕ್‌ ಎನ್ನವುದೇ ಮಾಯವಾಗಿದೆ. ಈ ರಸ್ತೆಯಲ್ಲಿರುವ ಹೋಟೆಲ್‌ಗಳಲ್ಲಿ ಊಟ ಮಾಡಿರುವ ಕೆಲವರಿಗೆ ವಾಂತಿ ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. +ಅದೇ ರಸ್ತೆಯಲ್ಲಿ ಊಟ ಮಾಡಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಇತ್ತಿಚೆಗಷ್ಟೇ ಚೇತರಿಸಿಕೊಂಡಿರುವ ವ್ಯಕ್ತಿಯೊಬ್ಬರು ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದ ರಸ್ತೆಯಲ್ಲಿರುವ ಪ್ರದೇಶಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸುವಂತೆ ನೀಡಿದ್ದ ಸಲಹೆ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿನ ಕರ್ಮಕಾಂಡ ಬಯಲಾಗಿದೆ. +ಈ ರಸ್ತೆಯಲ್ಲಿರುವುದು ಬಹುತೇಕ ಹೋಟೆಲ್‌ಗಳೇ ಬಹುತೇಕ ಹೋಟೆಲ್‌ಗಳಲ್ಲಿ ಹೈಜೆನಿಕ್‌ ಎನ್ನುವುದೇ ಇಲ್ಲ. ಅಂತಹ ಸ್ಥಳಗಳಲ್ಲಿ ಊಟ ಮಾಡಿದರೆ ಅಂತವರನ್ನು ಆ ದೇವರೇ ಕಾಪಾಡಬೇಕು ಎನ್ನುವಂತಹ ಪರಿಸ್ಥಿತಿಯಿರುವುದು ಕಂಡು ಬಂದಿದೆ. +ಈಗಲಾದರೂ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕಾನೂನುಬಾಹಿರವಾಗಿ ನಡೆಸುತ್ತಿರುವ ಹೋಟೆಲ್‌ಗಳು ಹಾಗೂ ಹೈಜೆನಿಕ್‌ ಕಾಪಾಡಿಕೊಳ್ಳದೆ ಇರುವಂತವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಸಹಕರಿಸಬೇಕು ಎನ್ನುವುದೇ ಈ ಲೇಖನದ ಉದ್ದೇಶವಾಗಿದೆ. diff --git a/eesanje/url_46_113_5.txt b/eesanje/url_46_113_5.txt new file mode 100644 index 0000000000000000000000000000000000000000..c2af22a71a4699d15d2f31ddcf615d2203a2105f --- /dev/null +++ b/eesanje/url_46_113_5.txt @@ -0,0 +1,6 @@ +ಖಾಸಗಿ ವಿಡಿಯೋ ವೈರಲ್‌ ಬೆದರಿಕೆ : ಅಣ್ಣನ ಜೊತೆ ಪ್ರಿಯಕರನನ್ನು ಕೊಂದ ಪ್ರೇಮಿ +ಮೈಸೂರು, ಜೂ.12-ಖಾಸಗಿ ಫೋಟೋ ಹಾಗೂ ವಿಡಿಯೋ ವೈರಲ್‌ ಮಾಡುತ್ತೇನೆಂದು ಬೆದರಿಕೆ ಹಾಕಿದ್ದ ಪ್ರಿಯತಮನನ್ನು ಪ್ರಿಯತಮೆ ಹಾಗೂ ಸಹೋದರ ಸೇರಿಕೊಂಡು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.ಎಚ್‌ಡಿ ಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದ ನಿವಾಸಿ ರಾಜೇಶ್‌ ಕೊಲೆಯಾದ ಪ್ರಿಯತಮ. +ಪ್ರಿಯತಮನ ಮೇಲೆ ಕಲ್ಲುಚಪ್ಪಡಿ ಹಾಕಿ ಕೊಲೆಗೈದ ಪ್ರಿಯತಮೆ ಹಾಗೂ ಈಕೆಯ ಸಹೋದರ ಪೊಲೀಸರ ಅತಿಥಿಯಾಗಿದ್ದಾನೆ. ಮೈಸೂರಿನ ಕ್ಯಾತಮಾರನಹಳ್ಳಿಯ ಪ್ರೇಮ ಎಂಬ ಮಹಿಳೆ ಕಳೆದ 15 ವರ್ಷಗಳ ಹಿಂದೆ ನಂಜನಗೂಡಿನ ಶ್ರೀರಾಂಪುರದ ನಿವಾಸಿಯನ್ನು ವಿವಾಹವಾಗಿದ್ದರು. +ಒಂದು ತಿಂಗಳ ಹಿಂದೆ ಮಹಿಳೆ ಪತಿ ತೀರಿಕೊಂಡಿದ್ದರು. ಪ್ರೇಮಾ ಪತಿ ಜತೆ ರಾಜೇಶ್‌ ಆತೀಯನಾಗಿದ್ದ. ಆಗಾಗ್ಗೆ ಪ್ರೇಮಾಳ ಮನೆಗೆ ಬಂದು ಹೋಗುತ್ತಿದ್ದ. ಕೆಲ ದಿನಗಳ ನಂತರ ಸಲುಗೆ ಅಕ್ರಮ ಸಂಬಂಧಕ್ಕೆ ತಿರುಗಿತ್ತು ಎನ್ನಲಾಗಿದೆ. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು, ಈ ಸೇಡಿಗಾಗಿ ಖಾಸಗಿ ವಿಡಿಯೋ ಹಾಗೂ ಆಡಿಯೋಗಳನ್ನು ವೈರಲ್‌ ಮಾಡುವುದಾಗಿ ಪ್ರೇಮಾಗೆ ರಾಜೇಶ್‌ ಬೆದರಿಕೆ ಹಾಕಿದ್ದ. +ಇದೇ ವಿಚಾರವಾಗಿ ಮಾತನಾಡಬೇಕೆಂದು ಪ್ರೇಮಾ ರಾಜೇಶ್‌ನನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಈ ವೇಳೆ ಪ್ರೇಮಾ ಸಹೋದರನ ಜತೆ ಸೇರಿ ರಾಜೇಶ್‌ ಜತೆ ಜಗಳವಾಡಿ ವಾರ್ನಿಂಗ್‌ ಮಾಡಿದ್ದಾರೆ. ಇದರಿಂದ ತಪ್ಪಿಸಿಕೊಂಡು ಹೋಗುತ್ತಿರುವಾಗ ಆರ್‌ಪಿ ರಸ್ತೆಯ 8ನೆ ಕ್ರಾಸ್‌‍ ಬಳಿ ಅಡ್ಡ ಹಾಕಿ ಜಗಳ ತೆಗೆದು ಕಲ್ಲುಚಪ್ಪಡಿಯನ್ನು ತಲೆ ಮೇಲೆ ಹಾಕಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. +ಈ ಸುದ್ದಿ ಗ್ರಾಮದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದ್ದು, ಸುದ್ದಿ ತಿಳಿದ ಕೂಡಲೇ ನಂಜನಗೂಡು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿ ಪ್ರೇಮಾ ಹಾಗೂ ಸಹೋದರನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_113_6.txt b/eesanje/url_46_113_6.txt new file mode 100644 index 0000000000000000000000000000000000000000..c977b9a92101a9e64c5e41a4eb3927684317cfe4 --- /dev/null +++ b/eesanje/url_46_113_6.txt @@ -0,0 +1,6 @@ +ವಿಶ್ವದ ಶ್ರೇಷ್ಠ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ನಿಧನ +ಮೈಸೂರು, ಜೂ.12-ವಿಶ್ವ ಸಂಗೀತ ಲೋಕದ ಧ್ರುವತಾರೆ, ಖ್ಯಾತ ಸರೋದ್‌ ವಾದಕ ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಸಂಗೀತ ಕ್ಷೇತ್ರದ ದಿಗ್ಗಜರು, ಸಚಿವರು, ಶಾಸಕರು, ಕಲಾವಿದರು, ನ್ಯಾಯಾಧೀಶರು ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. +ಪಂ.ರಾಜೀವ್‌ ತಾರಾನಾಥ್‌ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಾಜೀವ್‌ ತಾರಾನಾಥ್‌ ಅವರು ಕರ್ನಾಟಕದ ಹೆಮೆಯ ದಿಗ್ಗಜ ಕಲಾವಿದರಲ್ಲಿ ಒಬ್ಬರು, ಕನ್ನಡ ಸಾಂಸ್ಕೃತಿಕ ಲೋಕದಲ್ಲಿ ಅವರ ಹೆಸರು ಅಜರಾಮರವಾಗಿ ಉಳಿಯುವಂತಹದ್ದು ಎಂದು ಅವರು ಶೋಕ ಸಂದೇಶದಲ್ಲಿ ಬಣ್ಣಿಸಿದ್ದಾರೆ. +ಅಂತಹ ಅದ್ಭುತ ಕಲಾವಿದ ವಿಧಿವಶರಾಗಿದ್ದು ನಮ ದುರ್ದೈವ, ಅವರ ನಿಧನದಿಂದ ಕರ್ನಾಟಕದ ಸಾಂಸ್ಕೃತಿಕ ಲೋಕ ಬಹಳ ದೊಡ್ಡ ನಷ್ಟ ಅನುಭವಿಸಿದೆ ಎಂದು ಸಚಿವ ಶಿವರಾಜ ತಂಗಡಗಿ ತಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.ದೇಶ ವಿದೇಶಗಳಲ್ಲಿ ಅವರು ತಮ ಸಂಗೀತದ ಮೂಲಕ ಕರ್ನಾಟಕದ ಕೀರ್ತಿಯನ್ನ ಪಸರಿಸಿದ್ದಾರೆ, ಕ್ಯಾಲಿೇರ್ನಿಯಾ ವಿಶ್ವವಿದ್ಯಾಲಯದ ಕಲಾ ವಿಭಾಗದಲ್ಲಿ ಸಹ ಕಾರ್ಯ ನಿರ್ವಹಿಸಿದ್ದರು. +ಸಂಗೀತ ನಾಟಕ ಅಕಾಡೆಮಿ ಹಾಗೂ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದ ರಾಜೀವ್‌ ತಾರಾನಾಥ್‌ ಈ ದೇಶ ಕಂಡ ಅತ್ಯಂತ ಅಪರೂಪದ ಕಲಾವಿದರು. +ರಾಜೀವ್‌ ತಾರಾನಾಥ್‌ ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳು ಹಾಗೂ ಶಿಷ್ಯ ವೃಂದದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ, ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದು ಸಚಿವ ಶಿವರಾಜ ತಂಗಡಗಿ ತಮ ಸಂದೇಶದಲ್ಲಿ ತಿಳಿಸಿದ್ದಾರೆ.ತಾರಾನಾಥ್‌ ಅವರ ನಿಧನದಿಂದ ಸಂಗೀತ ಕ್ಷೇತ್ರ ಸೊರಗಿದಂತಾಗಿದೆ ಎಂದು ಸಂಗೀತ ಕ್ಷೇತ್ರದ ಅನೇಕ ದಿಗ್ಗಜರು ತಮ ಸಂತಾಪಸೂಚಕದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.ಸಚಿವರು, ಕಲಾವಿದರು ತಾರಾನಾಥ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_113_7.txt b/eesanje/url_46_113_7.txt new file mode 100644 index 0000000000000000000000000000000000000000..df66c7f92a538f18e9ad6c6e4f6880925c1ea2ff --- /dev/null +++ b/eesanje/url_46_113_7.txt @@ -0,0 +1,9 @@ +ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳ ಕಾರ್ಯಕ್ಷಮತೆ ಪರಿಗಣನೆ : ಸಿಎಂ +ಬೆಂಗಳೂರು,ಜೂ.11-ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನೂಲ ಕ್ರೂಢೀಕರಣದಲ್ಲಿ ಗುರಿ ಸಾಧಿಸದೇ ಇದ್ದರೆ ಶಿಸ್ತುಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. +ಲೋಕಸಭೆ ಹಾಗೂ ವಿಧಾನಸಭೆಯ ಚುನಾವಣೆ ಮುಗಿದು, ನೀತಿಸಂಹಿತೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಪನೂಲ ಕ್ರೂಢೀಕರಣ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದು, ಕಳೆದ ಎರಡು ಮೂರು ತಿಂಗಳಿನಿಂದಲೂ ಕೆಲಸ ಮರೆತಿದ್ದ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ. +ಸಂಪನೂಲ ಸಂಗ್ರಹದಲ್ಲಿ ಮುಂಚೂಣಿ ಇಲಾಖೆಯಾಗಿರುವ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಆರಂಭದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಯವರು ವಿಭಾಗವಾರು ತೆರಿಗೆ ಸಂಗ್ರಹದ ಕುರಿತು ವಿವರಣೆ ಪಡೆದುಕೊಂಡಿದ್ದಾರೆ. +ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ. ವರ್ಗಾವಣೆ ವೇಳೆ ನಿಮ ಕಾರ್ಯಕ್ಷಮತೆಯೇ ಮಾನದಂಡ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಂದಾಜು, ಜಾರಿ, ಮೇಲನವಿ ತಂಡಗಳು ನಿರಂತರ ಸಹಕಾರದಿಂದ ಕೆಲಸ ಮಾಡಿ ಎಂದು ಸೂಚನೆ ನೀಡಿದರು. +ಚುನಾವಣೆ ಸಂಹಿತೆ ಕಾರಣಕ್ಕಾಗಿ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಿನಲ್ಲಿ ನಿರೀಕ್ಷಿತ ಪ್ರಮಾಣದ ಸಂಪನೂಲ ಸಂಗ್ರಹವಾಗಿಲ್ಲ ಎಂದು ಹೇಳಲಾಗಿದೆ. ಅದರಲ್ಲೂ ಬಹಳಷ್ಟು ಹಿರಿಯ ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಹೀಗಾಗಿ ಇಲಾಖೆಯ ಕೆಲಸ ಆಮೆಯ ವೇಗದಲ್ಲಿ ನಡೆದಿತ್ತು ಎಂದು ಮೂಲಗಳು ತಿಳಿಸಿವೆ. +ಇಂದಿನ ಸಭೆಯಲ್ಲಿ ಪ್ರತಿ ಹಂತದಲ್ಲೂ ಅಧಿಕಾರಿಗಳ ಆಡಳಿತದ ನಿರ್ಲಕ್ಷ್ಯವನ್ನು ಮುಖ್ಯಮಂತ್ರಿಯವರು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನಿಗದಿತ ಗುರಿ ತಲುಪಬೇಕು, ಯಾವುದೇ ನೆಪ ಹೇಳಬಾರದು ಎಂದು ಸೂಚಿಸಿದ್ದಾರೆ. +ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌, ಕಾರ್ಯದರ್ಶಿಗಳಾದ ಜಾಫರ್‌, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಸಭೆಯಲ್ಲಿ ಉಪಸ್ಥಿತರಿದ್ದರು. +ನಂತರದಲ್ಲಿ ಅಬಕಾರಿ, ಗಣಿ ಮತ್ತು ಭೂ ವಿಜ್ಞಾನ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಇಲಾಖೆಗಳ ಅಧಿಕಾರಿಗಳೊಂದಿಗೂ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದ್ದಾರೆ. \ No newline at end of file diff --git a/eesanje/url_46_113_8.txt b/eesanje/url_46_113_8.txt new file mode 100644 index 0000000000000000000000000000000000000000..eebc104b610649c80d3721f15dc6806860663909 --- /dev/null +++ b/eesanje/url_46_113_8.txt @@ -0,0 +1,4 @@ +ವಿನಯ ಕುಲಕರ್ಣಿ ವಿರುದ್ಧದ ದೋಷಾರೋಪ ರದ್ದತಿಗೆ ಸುಪ್ರೀಂ ನಕಾರ +ಹುಬ್ಬಳ್ಳಿ,ಜೂ.11-ಬಿಜೆಪಿ ಕಾರ್ಯಕರ್ತ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ ರಾಜ್ಯದ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ನಿಗದಿಯಾಗಿರುವ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. +2016ರಲ್ಲಿ ಧಾರವಾಡದಲ್ಲಿ ಯೋಗೇಶ್‌ ಅವರನ್ನು ಹತ್ಯೆ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಸಂಜಯ್‌ಕುಮಾರ್‌ ಮತ್ತು ಆಗಸ್ಟೀನ್‌ ಜಾರ್ಜ್‌ ಮಸೀಹ್‌ ಅವರು ಇದ್ದ ರಜಾಕಾಲದ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್‌ ನೀಡಿದ ಆದೇಶದಲ್ಲಿ ಮಾರ್ಪಾಡು ಮಾಡಲು ನಿರಾಕರಿಸಿತ್ತು. +ಕುಲಕರ್ಣಿ ಅವರ ವಿರುದ್ಧ ವಿಶೇಷ ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿರುವುದರಲ್ಲಿ ಮಧ್ಯಪ್ರವೇಶ ಮಾಡಲು ಹೈಕೋರ್ಟ್‌ ಏಪ್ರಿಲ್‌ 8ರಂದು ನಿರಾಕರಿಸಿತ್ತು. ವಿಚಾರಣೆಯನ್ನು ಪೂರ್ಣಗೊಳಿಸಿ, ಕ್ರಿಮಿನಲ್‌ ಪ್ರಕರಣವನ್ನು ಸಾಧ್ಯವಾದಷ್ಟುಮಟ್ಟಿಗೆ ಮೂರು ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿತ್ತು. \ No newline at end of file diff --git a/eesanje/url_46_113_9.txt b/eesanje/url_46_113_9.txt new file mode 100644 index 0000000000000000000000000000000000000000..bd5f22104a87737c48a8991e0c1ab310a0f4f42f --- /dev/null +++ b/eesanje/url_46_113_9.txt @@ -0,0 +1,5 @@ +ಕರೆ ಮಾಡಿ ದೇವೇಗೌಡರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ +ಬೆಂಗಳೂರು,ಜೂ.11– ಪ್ರಧಾನಿ ನರೇಂದ್ರಮೋದಿ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಆರೋಗ್ಯ ವಿಚಾರಿಸದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ದೇವೇಗೌಡರು ಅನಾರೋಗ್ಯದ ಹಿನ್ನಲೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. +ಅನಾರೋಗ್ಯದಿಂದಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. 3ನೇ ಬಾರಿಗೆ ಪ್ರಧಾನಿಯಾಗಿರುವುದಕ್ಕೆ ಶುಭ ಕೋರಿ ದೇವೇಗೌಡರು ಪತ್ರ ಬರೆದಿದ್ದರು. +ಇದರ ಬೆನ್ನಲ್ಲೇ ಪ್ರಧಾನಿಯವರು ದೇವೇಗೌಡರಿಗೆ ಕರೆ ಮಾಡಿ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ ವಿಚಾರವನ್ನು ಗೌಡರು ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪ್ರಧಾನಿಯವರು ನನ್ನ ಆರೋಗ್ಯದ ಬಗ್ಗೆ ವಹಿಸಿರುವ ಕಾಳಜಿಗೆ ಅಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿದೆ ಎಂದಿದ್ದಾರೆ. +ಕರೆ ಮಾಡಿದ ಸಂದರ್ಭದಲ್ಲಿ ಹೊಸ ಸರ್ಕಾರದ ಆಡಳಿತ ವೈಖರಿ, ಆಲೋಚನೆ, ಚಿಂತನೆಗಳ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಂಡರು ಎಂದು ಹೇಳಿರುವ ಗೌಡರು, ಭಾರತವನ್ನು ಮತ್ತಷ್ಟು ಹೆಚ್ಚಿನ ಕೀರ್ತಿಗೆ ಮೋದಿಯವರು ಕೊಂಡಯ್ಯಲಿ. ಭಗವಂತನ ಆಶೀರ್ವಾದ ಸದಾ ಅವರ ಮೇಲಿರಲಿ ಎಂದು ಹಾರೈಸಿದ್ದಾರೆ. \ No newline at end of file diff --git a/eesanje/url_46_114_1.txt b/eesanje/url_46_114_1.txt new file mode 100644 index 0000000000000000000000000000000000000000..9c86e13b8a31ba58b3a72bed1e053a72c195727b --- /dev/null +++ b/eesanje/url_46_114_1.txt @@ -0,0 +1,5 @@ +ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ವಿಚಾರಣೆ ಮಾಡುತ್ತಿದ್ದೇವೆ : ಬಿ.ದಯಾನಂದ್‌ +ಬೆಂಗಳೂರು,ಜೂ.11-ಕೊಲೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್‌ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕನ್ನಡ ಚಿತ್ರರಂಗದ ನಟ ದರ್ಶನ್‌ ಹಾಗೂ ಆತನ ಸಹಚರರನ್ನು ಬಂಧಿಸಿ ಕೂಲಂಕುಷವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಸದ್ಯಕ್ಕೆ ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದರು. +ಚಿತ್ರನಟನ ಪತ್ನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಕೊಲೆಯಾಗಿದೆ ಎಂದು ಪ್ರಾಥಮಿಕ ಹಂತದ ಮಾಹಿತಿಯಲ್ಲಿ ತಿಳಿದುಬಂದಿದೆ. ಸುಮಾರು 10ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಸದ್ಯದಲ್ಲಿ ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಮುಂದಿನ ಹಂತದಲ್ಲಿ ಉಳಿದ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು ಎಂದು ಹೇಳಿದರು. +ಕಾಮಾಕ್ಷಿಪಾಳ್ಯ ಪೊಲೀಸ್‌‍ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ದರ್ಶನ್‌ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_114_10.txt b/eesanje/url_46_114_10.txt new file mode 100644 index 0000000000000000000000000000000000000000..f4cbb90c072db550ae9f4aa164e62ec6e6cd20b5 --- /dev/null +++ b/eesanje/url_46_114_10.txt @@ -0,0 +1,7 @@ +ಕೇಂದ್ರ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆ ಆಗಿಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜೂ.10-ಕೇಂದ್ರ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಪಾಲಿಸದೇ ಇರುವ ಬಿಜೆಪಿಗೆ ಪರಿಶಿಷ್ಟರು ಹಾಗೂ ಹಿಂದುಳಿದವರ ಸಹಕಾರ ಬೇಕಿಲ್ಲ ಎಂದೆನಿಸುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಶ್ಲೇಷಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳ ಸಂಸದರು ಆಯ್ಕೆಯಾಗಿದ್ದರು. ಅವರನ್ನು ಕೇಂದ್ರ ಸಂಪುಟಕ್ಕೆ ಪರಿಗಣಿಸಬಹುದಿತ್ತು. ಆ ಸಮುದಾಯಗಳನ್ನು ನಿರ್ಲಕ್ಷಿಸುವುದನ್ನು ನೋಡಿದರೆ ಬಿಜೆಪಿಗೆ ಪರಿಶಿಷ್ಟ ಜಾತಿಯ ಹಾಗೂ ಹಿಂದುಳಿದ ವರ್ಗದ ಸಮುದಾಯಗಳು ಬೇಕಿಲ್ಲ ಎಂದು ಭಾವಿಸಬಹುದು ಎಂದು ಹೇಳಿದರು. +ರಾಜ್ಯದಿಂದ ಕೇಂದ್ರಸಂಪುಟದಲ್ಲಿ ಸಚಿವರಾಗಿರುವ ಐದು ಮಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೊಸ ಸಚಿವರ ಮುಂದೆ ಸವಾಲುಗಳು ದೊಡ್ಡದಿವೆ. ಜಿಎಸ್‌‍ಟಿ ಪಾಲಿನ ಹಂಚಿಕೆ, ರಾಜ್ಯದಲ್ಲಿನ ನೀರಾವರಿ ಯೋಜನೆಗೆ ನೆರವು, ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದು, ಕಳಸಾ ಬಂಡೂರಿ ಸಮಸ್ಯೆ ಬಗೆಹರಿಸುವುದು, ಮೇಕೆದಾಟಿಗೆ ಅನುಮತಿ ಸೇರಿದಂತೆ ನಾನಾ ರೀತಿಯ ಕೆಲಸಗಳಾಗಬೇಕು. ಕೇಂದ್ರ ಸಚಿವರು ಸಂಬಂಧಪಟ್ಟ ಸಚಿವಾಲಯಗಳು ಹಾಗೂ ಪ್ರಧಾನಮಂತ್ರಿಯವರ ಜೊತೆ ಚರ್ಚೆ ನಡೆಸಿ ರಾಜ್ಯಕ್ಕೆ ಅಗತ್ಯ ನೆರವು ಕೊಡಿಸಬೇಕು ಎಂದು ಒತ್ತಾಯಿಸಿದರು. +ಹೊಸ ಸರ್ಕಾರದ ಮೇಲೆ ಸಾಕಷ್ಟು ವಿಶ್ವಾಸವಿದೆ. ಅದು ಈಡೇರದೇ ಇದ್ದರೆ ಮತ್ತೆ ಪ್ರತಿಭಟನೆ ಅನಿವಾರ್ಯವಾಗುತ್ತದೆ. ಅದಕ್ಕೆ ಅವಕಾಶವಾಗದಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದರು. +ಎಚ್‌.ಡಿ.ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿಯಾಗಿದ್ದ ಅನುಭವಿ ರಾಜಕಾರಣಿ. ಅವರ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಅವರು ಶ್ರಮಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ಜಮು-ಕಾಶೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹತ್ತಿಕ್ಕಿ ಶಾಂತಿಯ ವಾತಾವರಣ ನಿರ್ಮಿಸಲಾಗಿದೆ ಎಂದು ಕೇಂದ್ರಸರ್ಕಾರ ಹೇಳಿಕೊಳ್ಳುತ್ತದೆ. ಆದರೆ ಭಯೋತ್ಪಾದನಾ ಧಾಳಿಯಿಂದ ತಪ್ಪಿಸಿಕೊಳ್ಳಲು ರಸ್ತೆ ಬದಿ ಚಲಿಸಿದ್ದ ಯೋಧರಿದ್ದ ಬಸ್ಸು ಕಂದಕಕ್ಕೆ ಉರುಳಿ ದುರ್ಘಟನೆ ಸಂಭವಿಸಿದೆ. ಇದರರ್ಥ ಜಮು-ಕಾಶೀರದಲ್ಲಿ ಭಯೋತ್ಪದನಾ ಚಟುವಟಿಕೆ ಪೂರ್ತಿಯಾಗಿ ನಿಂತಿಲ್ಲ ಎಂದರು. \ No newline at end of file diff --git a/eesanje/url_46_114_11.txt b/eesanje/url_46_114_11.txt new file mode 100644 index 0000000000000000000000000000000000000000..a95e114d611fc4c168aa25fe89727856ace26322 --- /dev/null +++ b/eesanje/url_46_114_11.txt @@ -0,0 +1,9 @@ +ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಚಿರತೆ ಸಫಾರಿ ಆರಂಭಿಸಲು ಸೂಚನೆ +ಬೆಂಗಳೂರು,ಜೂ.10-ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್‌ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. +ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿ ಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಗಮನ ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು. +ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು. ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್‌ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. +ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು. +ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು. ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿ ಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು. +ಇತರ ನಿರ್ಣಯಗಳು:ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸುವ ಕ್ರಮ ಕೈಗೊಳ್ಳಲು ಸಮ್ಮತಿ ನೀಡಲಾಗಿದೆ.ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್‌.ಎಸ್‌. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ ಕೊಡಲಾಗಿದೆ. +ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್‌ ಕೇಂದ್ರವಾಗಿ ಕಾರ್ಯ ನಿರ್ವಹಣೆಗೆ ಅನುಮೋದನೆ ನೀಡಲಾಗಿದೆ. +ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕರೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿಸಲಾಗಿದೆ. \ No newline at end of file diff --git a/eesanje/url_46_114_12.txt b/eesanje/url_46_114_12.txt new file mode 100644 index 0000000000000000000000000000000000000000..ae239fe0bb906cf5134e6c1239b7b5b82222ae5a --- /dev/null +++ b/eesanje/url_46_114_12.txt @@ -0,0 +1,11 @@ +ಚುನಾವಣೆ ಫಲಿತಾಂಶದ ಬಳಿಕ ಹೆಚ್ಚುವರಿ ಡಿಸಿಎಂ ಹುದ್ದೆಯ ಚರ್ಚೆಗೆ ಬ್ರೇಕ್ +ಬೆಂಗಳೂರು,ಜೂ.10– ಜಾತಿವಾರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಪದೇಪದೇ ಪ್ರತಿಪಾದಿಸುತ್ತಿದ್ದ ಸಚಿವರು ಹಾಗೂ ಕಾಂಗ್ರೆಸ್‌‍ ನಾಯಕರು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಇದ್ದಕ್ಕಿದ್ದಂತೆ ಉಲ್ಟಾ ಹೊಡೆದಿದ್ದು, ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆ ಇಲ್ಲ ಎಂದು ಜಾರಿಕೊಳ್ಳಲಾರಂಭಿಸಿದ್ದಾರೆ. +ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ, ಲಿಂಗಾಯತ, ಹಿಂದುಳಿದ ವರ್ಗ ಹಾಗೂ ಮಹಿಳೆ ಸೇರಿದಂತೆ ಐದು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬುದು ಕಾಂಗ್ರೆಸ್‌‍ ನಾಯಕರ ಆಗ್ರಹವಾಗಿತ್ತು. +ಆರಂಭದಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರಿಗೆ ಗೃಹ ಸಚಿವ ಪರಮೇಶ್ವರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಹಿರಿಯ ಶಾಸಕ ಬಸವರಾಜರಾಯರೆಡ್ಡಿ ಸೇರಿದಂತೆ ಅನೇಕರು ಧ್ವನಿಗೂಡಿಸಿದ್ದರು. +ಇದು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್‌‍ ಪಕ್ಷದಲ್ಲಿ ಮುಜುಗರದ ವಾತಾವರಣ ಸೃಷ್ಟಿಸಿತ್ತು. ಒಂದು ಹಂತದಲ್ಲಿ ಮಧ್ಯಪ್ರವೇಶಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ ಲೋಕಸಭಾ ಚುನಾವಣೆಯತ್ತ ಗಮನಹರಿಸಿ ಅನಗತ್ಯ ವಿಚಾರಗಳ ಬಗ್ಗೆ ಗೊಂದಲ ಬೇಡ ಎಂದು ಎಚ್ಚರಿಕೆ ನೀಡಿದ್ದರು. ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯ ಸೃಷ್ಟಿಯ ಸಾಧ್ಯತೆಗಳನ್ನು ಅಲ್ಲಗಳೆದಿದ್ದರು. ಅಲ್ಲಿಗೆ ಪದೇಪದೇ ಚರ್ಚೆ ಮಾಡಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದವರ ಬಾಯಿ ಬಂದ್‌ ಆಗಿತ್ತು. +ಲೋಕಸಭಾ ಚುನಾವಣೆ ಬಳಿಕ ಇದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ಸಚಿವರ ತವರು ಕ್ಷೇತ್ರದಲ್ಲೇ ಕಾಂಗ್ರೆಸ್‌‍ಗೆ ಲೀಡ್‌ ಕೊರತೆಯಾಗಿದ್ದು, ಜೆಡಿಎಸ್‌‍ ಮತ್ತು ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಮತ ಗಳಿಸಿದ್ದಾರೆ. +ಕಾಂಗ್ರೆಸ್‌‍ ಅಭ್ಯರ್ಥಿಗಳು ಸೋಲು ಕಂಡಿದ್ದಾದರೆ, ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆಯಾಗಬೇಕಾಗುತ್ತದೆ. ಸಚಿವರ ತಲೆದಂಡವಾಗುವ ಸಾಧ್ಯತೆಯೂ ಇದೆ ಎಂಬ ಚರ್ಚೆಗಳಾಗಿದ್ದವು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ರಾಹುಲ್‌ಗಾಂಧಿ ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ್ದು, ಕಾಂಗ್ರೆಸ್‌‍ ಸೋಲಿಗೆ ಅಸಮಾಧಾನ ಹೊರಹಾಕಿದ್ದರು. ಸಚಿವರ ಕ್ಷೇತ್ರಗಳಲ್ಲಿನ ಹಿನ್ನಡೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು. ಇದು ಬಹಳಷ್ಟು ಮಂದಿ ಸಚಿವರಿಗೆ ಆತಂಕ ಸೃಷ್ಟಿಸಿದ್ದು, ಕುರ್ಚಿಯ ಕುತ್ತಿನ ಕೆಟ್ಟ ಕನಸು ಬೀಳುವಂತಾಗಿದೆ. +ಹೀಗಾಗಿ ಉಪಮುಖ್ಯಮಂತ್ರಿ ಹುದ್ದೆಯ ಸದ್ದು ಅಡಗಿ ಹೋಗಿದೆ. ಎಐಸಿಸಿಯ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆಯನ್ನು ಸೃಷ್ಟಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.ಒಂದು ಕಾಲದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಹುದ್ದೆಯ ತೂಕ ತಗ್ಗಲಿದೆ ಎಂಬ ಕಾರಣಕ್ಕಾಗಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಗೆ ವಿರೋಧ ವ್ಯಕ್ತವಾಗಿತ್ತು. ಈಗ ಖುದ್ದು ಡಿ.ಕೆ.ಶಿವಕುಮಾರ್‌ ಅವರೇ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಪರವಾಗಿ ಮಾತನಾಡುತ್ತಿದ್ದಾರೆ ಎನ್ನಲಾಗಿದೆ. +ಆದರೆ ಜಾತಿವಾರು ಪ್ರಾಧಾನ್ಯತೆ ಸಿಗಬೇಕು ಎಂದು ಹೇಳಿದ್ದ ಸಚಿವ ಸತೀಶ್‌ ಜಾರಕಿಹೊಳಿ, ಸದ್ಯಕ್ಕೆ ಉಪಮುಖ್ಯಮಂತ್ರಿ ಹುದ್ದೆಯ ಪ್ರಸ್ತಾಪ ಇಲ್ಲ ಎಂದು ಅಲ್ಲಗಳೆದಿದ್ದಾರೆ. ಇವರ ಪುತ್ರಿ ಪ್ರಿಯಾಂಕ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿ ಫಾರಂ ನೀಡಿದ್ದು, ಅವರು ಗೆದ್ದು ಸಂಸದರಾಗಿದ್ದಾರೆ. ಹೀಗಾಗಿ ಒಂದೇ ಮನೆಗೆ ಸಂಸದ ಸ್ಥಾನ ಹಾಗೂ ಉಪಮುಖ್ಯಮಂತ್ರಿ ಸ್ಥಾನ ಎರಡೂ ದೊರೆಯುವ ಅವಕಾಶಗಳು ಇಲ್ಲದಿರುವುದರಿಂದ ಅವರು ಚರ್ಚೆಯಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. +ತುಮಕೂರು ಲೋಕಸಭಾ ಕ್ಷೇತ್ರದ ಪೈಕಿ ಕೆ.ಎನ್‌.ರಾಜಣ್ಣ ಅವರು ಪರಮೇಶ್ವರ್‌ ಅವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಅವರಿಗೆ ಹೆಚ್ಚಿನ ಲೀಡ್‌ ಬಂದಿವೆ. ಹೀಗಾಗಿ ಅವರೂ ಕೂಡ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮೌನಕ್ಕೆ ಶರಣಾಗಿದ್ದಾರೆ. +ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್‌, ಉಪಮುಖ್ಯಮಂತ್ರಿ ಹುದ್ದೆ ಪದೇಪದೇ ಚರ್ಚೆಯಾಗುವುದಿಲ್ಲ. ಅಲ್ಲಿಇಲ್ಲಿ ನಾಲ್ಕೈದು ಜನ ಮಾತನಾಡಿದರೆ ಅದು ಈಡೇರುವುದೂ ಇಲ್ಲ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಎಂಬ ಅಭಿಪ್ರಾಯದಲ್ಲಿ ಹೈಕಮಾಂಡ್‌ ಇದ್ದಾಗ ಹೆಚ್ಚುವರಿ ಹುದ್ದೆಗಳ ಸೃಷ್ಟಿ ಮಾಡುವುದು ಕಷ್ಟ ಎಂದು ಹೇಳಿದ್ದಾರೆ.ಒಟ್ಟಾರೆ ಸರ್ಕಾರಕ್ಕೆ ತಲೆನೋವಾಗಬಹುದಾಗಿದ್ದ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆಗಳು ಮೋಡ ಕರಗಿದಂತೆ ತಣ್ಣಗಾಗಿವೆ. \ No newline at end of file diff --git a/eesanje/url_46_114_2.txt b/eesanje/url_46_114_2.txt new file mode 100644 index 0000000000000000000000000000000000000000..b43385d9e30e86d3a511ed9ed94574eed5c7fdae --- /dev/null +++ b/eesanje/url_46_114_2.txt @@ -0,0 +1,11 @@ +ಸಂವಿಧಾನವು ಭಗವದ್ಗೀತೆ, ಕುರಾನ್‌, ಬೈಬಲ್‌ ಇದ್ದಂತೆ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜೂ.11-ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿಯನ್ನು ತೆರೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು.ಕೋರಮಂಗಲದ ಆರ್‌.ಎ.ಮುಂಡ್ಕುರ್‌ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಇಂದು ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. +ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಇಲಾಖೆಯ ಕೆಲಸ ಕಾರ್ಯಗಳಿಗೆ ತಮನ್ನು ತೊಡಗಿಸಿಕೊಳ್ಳುತ್ತಿದ್ದೀರಿ. ಭವಿಷ್ಯ ಉಜ್ವಲವಾಗಿರಲಿ ಎಂದರು. +ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್‌ವರೆಗೆ ನೀರು ತಲುಪಿಸಬಹುದಾದ ಏರಿಯಲ್‌ ಲ್ಯಾಡರ್‌ ಅಳವಡಿಸಿಕೊಳ್ಳಲಾಗಿದೆ. ಬಹುತೇಕ ರಾಜ್ಯಗಳಲ್ಲಿ ಇದು ಇಲ್ಲ. ಅಲ್ಲದೇ, ಮೊದಲ ಬಾರಿಗೆ ಇಲಾಖೆಯ ವಾಹನಗಳಿಗೆ ಪೆಟೋಲ್‌ ಕಾರ್ಡ್‌ ಸವಲತ್ತು ಕಲ್ಪಿಸಲಾಗಿದೆ ಎಂದು ತಿಳಿಸಿದರು. +ರಾಜ್ಯದ ಅಗ್ನಿಶಾಮಕ ದಳ ಎಂದರೆ ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದಕ್ಕೆ ಕಾರಣರಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ. ಹೊಸದಾಗಿ ಇಲಾಖೆಗೆ ನೇಮಕ ಹೊಂದಿರುವ ಸಿಬ್ಬಂದಿಗಳಿಗೆ ತಮಗೆ ತರಬೇತಿ ನೀಡಲಾಗಿದೆ. ಮುಂದಿನ ಮುವತ್ತೈದು ವರ್ಷ ನಿಮ ಜೊತೆಗೆ ಇರುತ್ತದೆ. ಕರ್ತವ್ಯದಲ್ಲಿ ಶಿಸ್ತು ಪಾಲನೆ ಮೂಲಕ ಇಲಾಖೆಯ ಕೀರ್ತಿ ಹೆಚ್ಚಿಸಬೇಕು ಎಂದು ತಿಳಿಸಿದರು. +ಕಾಲೇಜು ದಿನಗಳಲ್ಲಿ ಎನ್‌ಸಿಸಿ ತರಬೇತಿ ಪಡೆದುಕೊಂಡಿದ್ದೇನೆ. ನನ್ನ ಜೀವನದಲ್ಲಿ ಶಿಸ್ತು ಬಂದಿರುವುದಕ್ಕೆ ಇದೇ ಮೂಲ ಕಾರಣ. ನೀವು ಪಡೆದುಕೊಂಡಿರುವ ತರಬೇತಿಯು ಸಹ ಕರ್ತವ್ಯದಲ್ಲಿ ಮಾತ್ರವಲ್ಲದೇ, ದೈನಂದಿನ ಜೀವನವು ಶಿಸ್ತಿನಿಂದ ಇರಲಿದೆ ಎಂದು ಹೇಳಿದರು.ಸಂವಿಧಾನ ನಮ್ಮ ದೇಶದ ಮೂಲ ಗ್ರಂಥ. ವಿಶ್ವದಲ್ಲೇ ಹೆಚ್ಚು ಪ್ರಖ್ಯಾತಿ ಪಡೆದಿದೆ. 148 ಕೋಟಿ ಜನಸಂಖ್ಯೆಗೆ ಆಧಾರವಾಗಿದೆ. ಇದು ಇಲ್ಲವಾಗಿದ್ದರೆ ಯಾವ ಸಮಸ್ಯೆಗೂ ಉತ್ತರ ಸಿಗುವುದಿಲ್ಲ. ಸಂವಿಧಾನವು ಭಗವದ್ಗೀತೆ, ಕುರಾನ್‌, ಬೈಬಲ್‌ ಇದ್ದಂತೆ ಎಂದರು. +ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ಯಾವುದೇ ಧರ್ಮ, ರಾಜಕೀಯ, ವ್ಯಕ್ತಿಗೆ ಕೆಲಸ ಮಾಡುವುದಿಲ್ಲ. ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಿಮಗೆ ಪ್ರಮಾಣ ಬೋಧನೆ ಮಾಡಲಾಗಿದೆ ಅದೇ ನಿಟ್ಟಿನಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು. +ಆಧುನಿಕ ಜಗತ್ತು ತಾಂತ್ರಿಕವಾಗಿ ಸಾಕಷ್ಟು ಬದಲಾವಣೆ ಕಂಡಿದೆ. ಅಗ್ನಿ ಶಾಮಕ ದಳ ಮತ್ತು ತುರ್ತುಸೇವೆಯ ಐವತ್ತು ವರ್ಷಗಳ ಹಿಂದೆ ಸಿಬ್ಬಂದಿಗಳ ಕಾರ್ಯವೈಖರಿ ಬೇರೆ ಇತ್ತು. ಈಗ ಬದಲಾಗಿದೆ. ನಗರಗಳಲ್ಲಿ ದೊಡ್ಡ ಕಟ್ಟಡಗಳು ನಿರ್ಮಣವಾಗಿವೆ. ಅವಘಡಗಳು ಸಂಭವಿಸಿದಾಗ ಹೇಗೆ ನಿಭಾಯಿಸಬೇಕು ಎಂದು ತರಬೇತಿ ನೀಡಲಾಗಿದೆ. ತಾಂತ್ರಿಕ ಉಪಕರಣಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. +ಉತ್ತರ ಕರ್ನಾಟಕ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲಾಖೆಗೆ ನೇಮಕಾತಿ ಹೊಂದುತ್ತಿದ್ದಾರೆ. ಇದು ಸಂತೋಷದಾಯಕ ವಿಚಾರ. ಈ ಭಾಗದವರು ಸಹ ನೇಮಕ ಹೊಂದಲು ಆಸಕ್ತಿ ತೋರಬೇಕು ಎಂದರು. +ಬಿಜಾಪುರದ ಇಂಡಿ ತಾಲ್ಲೂಕಿನ ಲಚ್ಚಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಸಾತ್ವಿಕ್‌ ಎಂಬ ಮಗುವನ್ನು ನಮ ಸಿಬ್ಬಂದಿ ನಿರಂತರ ಕಾರ್ಯಚರಣೆ ಮೂಲಕ ರಕ್ಷಣೆ ಮಾಡಿದ್ದಾರೆ. ರಕ್ಷಣೆ ಮಾಡಿದ್ದಾರೆ ಎಂಬುದನ್ನು ಕೇಳಲು ಸುಲಭ. ಆದರೆ ಜೀವದ ಹಂಗು ತೊರೆದು, ತಮ ಕುಟುಂಬವನ್ನು ಜ್ಞಾಪಿಸಿಕೊಳ್ಳದೆ ಸತತ 19 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿದ್ದಾರೆ. ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು. +ರಾಮೇಶ್ವರ ಕೆಫೆ ಸ್ಫೋಟದ ಸ್ಥಳ ಪರಿಶೀಲನೆಗೆ ಹೋಗಿದ್ದೆ. ಕೋರಮಂಗಲದ ಪಬ್‌ನಲ್ಲಿ 16 ಸಿಲಿಂಡರ್‌ ಬ್ಲಾಸ್ಟ್‌ ಆಗಿತ್ತು. ಭಯದಿಂದ ಕಟ್ಟಡದ ಮೇಲಿಂದ ಹಾರಿದ್ದ ವ್ಯಕ್ತಿಯನ್ನು ರಕ್ಷಿಸಿ ಪ್ರಾಣ ಉಳಿಸಿದರು. ಮಡಿಕೇರಿಯಲ್ಲಿ ಭೂಕುಸಿತ ಸಂಭವಿಸಿ ಹತ್ತಾರು ಜನ ಪ್ರಾಣ ಕಳೆದುಕೊಂಡರು. ಎಸ್‌‍ಡಿಆರ್‌ಎಫ್‌ನವರು ಯಾವುದೇ ಭಯವಿಲ್ಲದೇ ನೂರಾರು ಜನರ ಪ್ರಾಣ ರಕ್ಷಣೆ ಮಾಡಿದ್ದಾರೆ. ಸಿಬ್ಬಂದಿಗಳು ಕಠಿಣ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸಿರುವುದನ್ನು ಗೃಹ ಸಚಿವನಾಗಿ ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿದರು. \ No newline at end of file diff --git a/eesanje/url_46_114_3.txt b/eesanje/url_46_114_3.txt new file mode 100644 index 0000000000000000000000000000000000000000..afb49b91e48597990ab55568c9a31c0e457563cb --- /dev/null +++ b/eesanje/url_46_114_3.txt @@ -0,0 +1,12 @@ +ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭ : ಡಿಸಿಎಂ ಡಿ.ಕೆ.ಶಿವಕುಮಾರ್‌ +ಬೆಂಗಳೂರು,ಜೂ.11-ಬಿಬಿಎಂಪಿಗೆ ಆದಷ್ಟು ಶೀಘ್ರದಲ್ಲಿ ಚುನಾವಣೆ ನಡೆಸಲಾಗುವುದು. ಅದಕ್ಕೆ ಅಗತ್ಯವಿರುವ ವಾರ್ಡ್‌ ಮೀಸಲಾತಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಈಗಾಗಲೇ ಆರಂಭಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಆದಷ್ಟು ಶೀಘ್ರವಾಗಿ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಬೆಂಗಳೂರನ್ನು ಆಡಳಿತಾತಕವಾಗಿ ವಿಭಜಿಸಬೇಕು ಎಂಬ ಪ್ರಸ್ತಾವನೆ ಇದೆ. ಸದ್ಯಕ್ಕೆ ಶೀಘ್ರ ಚುನಾವಣೆ ಮಾಡುವತ್ತ ನಾವು ಗಮನ ಹರಿಸಿದ್ದೇವೆ. ನ್ಯಾಯಾಲಯ ಕೂಡ ಪದೇಪದೇ ಸೂಚನೆ ನೀಡುತ್ತಿದೆ ಎಂದು ಹೇಳಿದರು. +ಏಕಕಂತು ತೀರುವಳಿ ಯೋಜನೆಯಡಿ ಆಸ್ತಿ ತೆರಿಗೆ ಪಾವತಿಗೆ ಜೂ.31 ಅಂತಿಮ ಗಡುವಾಗಿದೆ. ಅದರ ನಂತರ ಆಸ್ತಿ ಮಾಲಿಕರು ಸುಸ್ತಿದಾರರಾಗಿದ್ದಾರೆ. ಗಡುವಿನ ಒಳಗೆ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಸಿದರೆ ಬಡ್ಡಿ ಹಾಗೂ ದಂಡ ವಿನಾಯಿತಿ ಸಿಗಲಿದೆ ಎಂದರು. +ಬೆಂಗಳೂರಿನಲ್ಲಿ 20 ಲಕ್ಷ ಆಸ್ತಿಗಳಿದ್ದು, 5,200 ಕೋಟಿ ರೂ. ಸಂಗ್ರಹವಾಗುವ ನಿರೀಕ್ಷೆಯಿತ್ತು. ಇದುವರೆಗೂ 1,300 ಕೋಟಿ ರೂ. ಬಂದಿದೆ. ಇನ್ನೂ 3,500 ಕೋಟಿ ಬಾಕಿ ಇದೆ. ಆಸ್ತಿ ತೆರಿಗೆ ವ್ಯಾಪ್ತಿಗೊಳಪಡದೇ ಇರುವ 4 ಲಕ್ಷ ಸ್ವತ್ತುಗಳು ಬೆಂಗಳೂರಿನಲ್ಲಿವೆ. ಅವುಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಿದರೆ ಎ ಖಾತೆ ಅಥವಾ ಬಿ ಖಾತೆ ನೀಡಿ ತೆರಿಗೆ ಪಾವತಿಗೆ ಅವಕಾಶ ಮಾಡಿಕೊಡಲಾಗುವುದು. ಇದರಲ್ಲಿ ಈವರೆಗೂ 50 ಸಾವಿರ ಆಸ್ತಿ ಮಾಲಿಕರು ಮಾತ್ರ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿಸಿದರು. +ವಿಶ್ವ ಪರಿಸರ ದಿನಾಚರಣೆಯನ್ನು ಜೂ.14 ರಂದು ಆಚರಿಸಲಾಗುತ್ತಿದೆ. ಈ ವೇಳೆ ಹಸಿರು ಬೆಂಗಳೂರು ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಯಾ ಪ್ರದೇಶದಲ್ಲಿ ಗಿಡನೆಟ್ಟು ಅವುಗಳನ್ನು ದತ್ತು ತೆಗೆದುಕೊಂಡು ಬೆಳೆಸಲು ಅವಕಾಶ ಮಾಡಿಕೊಡಲಾಗಿದೆ. +250 ಶಾಲೆಗಳು ಬಿಬಿಎಂಪಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಈವರೆಗೆ 52 ಸಾವಿರ ಗಿಡಗಳನ್ನು ನೆಡಲಾಗಿದ್ದು, ಅವುಗಳಲ್ಲಿ ಶೇ.80 ರಷ್ಟು ಊರ್ಜಿತವಾಗಿವೆ. ನಷ್ಟವಾಗಿರುವ ಶೇ.20 ಅನ್ನು ಮರು ನಾಟಿ ಮಾಡಲಾಗುವುದು. ಪ್ರಸಕ್ತ ವರ್ಷ 2 ಲಕ್ಷ ಗಿಡ ನೆಡುವ ಗುರಿ ಇದೆ. ಗಿಡ ನೆಡಲು ಲಭ್ಯವಿರುವ ಜಾಗದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ ಎಂದರು. +ಬಿಬಿಎಂಪಿ ವ್ಯಾಪ್ತಿಯಲ್ಲಿನ ಮರಗಳ ಸಮೀಕ್ಷೆ ನಡೆಸಲಾಗುವುದು. ಬೊಮನಹಳ್ಳಿ ವಲಯದ ವಿದ್ಯಾಪೀಠ ವಾರ್ಡ್‌ನಲ್ಲಿ 4,600, ಕತ್ರಿಗುಪ್ಪೆ ವಾರ್ಡ್‌ನಲ್ಲಿ 4,300 ಮರಗಳ ಸಮೀಕ್ಷೆ ಆಗಿದೆ. ಮರಗಳನ್ನು ಗುರುತಿಸಿ ಅವು ಬೀಳದಂತೆ ಅಗತ್ಯ ಸ್ವರೂಪ ನೀಡಲಾಗುವುದು. ಬೇರುಗಳು ಗಟ್ಟಿಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು. +ಬೆಂಗಳೂರಿನ ಅಂತರ್ಜಲ ಅಭಿವೃದ್ಧಿಗೆ ತೆರೆದ ಬಾವಿಗಳ ಮರುಪೂರಣ, ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಬಿಬಿಎಂಪಿ ವ್ಯಾಪ್ತಿಯಲ್ಲಿನ ಪಾರ್ಕ್‌ಗಳನ್ನು ಇನ್ನು ಮುಂದೆ ಬೆಳಿಗ್ಗೆ 5 ರಿಂದ ರಾತ್ರಿ 8 ರವರೆಗೂ ಸಾರ್ವಜನಿಕರ ಪ್ರವೇಶಕ್ಕೆ ತೆರೆದಿಡಲಾಗುವುದು. +ಪ್ರಸ್ತುತ ಬೆಳಿಗ್ಗೆ 5 ರಿಂದ 8 ಗಂಟೆ ಮಧ್ಯಾಹ್ನ 1.30 ರಿಂದ ರಾತ್ರಿ 8 ಗಂಟೆವರೆಗೂ ಮಾತ್ರ ಮುಕ್ತವಾಗಿರಿಸಲಾಗಿತ್ತು. ಸಾರ್ವಜನಿಕರ ಒತ್ತಾಯದ ಮೇರೆಗೆ ಸಮಯ ಬದಲಾವಣೆ ಮಾಡಲಾಗಿದೆ. ಪಾರ್ಕ್‌ನಲ್ಲಿ ಅನಪೇಕ್ಷಣೀಯವಾದ ಘಟನೆಗಳಿಗೆ ಕಡಿವಾಣ ಹಾಕಲು ಪೊಲೀಸರ ಜೊತೆ ಮಾರ್ಷಲ್‌ಗಳು ಗಸ್ತು ತಿರುಗುತ್ತಾರೆ. ಸಿಸಿಟಿವಿ ಈಗಾಗಲೇ ಅಳವಡಿಸಲಾಗಿದೆ. ಅದು ಮೀರಿ ಯಾವುದಾದರೂ ಘಟನೆಗಳು ಕಂಡುಬಂದರೆ ಸಾರ್ವಜನಿಕರು 1533, 22660000, 22221188 ಅಥವಾ ವಾಟ್‌್ಸಆಪ್‌ 94806857 ಗೆ ಮಾಹಿತಿ ನೀಡಬಹುದು ಎಂದರು. +ಬೆಂಗಳೂರಿನಲ್ಲಿ ಫ್ಲೆಕ್‌್ಸಗಳಿಗೆ ನಿಷೇಧ ಹೇರಲಾಗಿದೆ. ಅನಧಿಕೃತವಾಗಿ ಅಳವಡಿಸುವ ಫ್ಲೆಕ್‌್ಸಗಳ ಬಗ್ಗೆ ಸಾರ್ವಜನಿಕರು ಬಿಬಿಎಂಪಿಯ ದೂರವಾಣಿಗಳಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದು. ಇನ್ನು ಮುಂದೆ ಯಾವುದೇ ಪ್ರದೇಶದಲ್ಲಿ ಫ್ಲೆಕ್‌್ಸಗಳು ಕಂಡುಬಂದರೆ ಆಯಾ ಪ್ರದೇಶದ ಕಂದಾಯ ಅಧಿಕಾರಿಯನ್ನು ಹೊಣೆ ಮಾಡಿ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು. +ಅಕ್ರಮ ಸಕ್ರಮ ಮಸೂದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಅಲ್ಲಿನ ಆದೇಶ ಬಂದ ಬಳಿಕ ಅದನ್ನು ಜಾರಿ ಮಾಡಲಾಗುವುದು. ಬೆಂಗಳೂರಿನ ನಾಲ್ಕು ಕಡೆ ತ್ಯಾಜ್ಯವನ್ನು ಬಳಸಿ ವಿದ್ಯುತ್‌ ಉತ್ಪಾದನೆಗೆ ಯೋಜನೆ ಸಿದ್ಧಗೊಂಡಿದೆ. ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದರು. \ No newline at end of file diff --git a/eesanje/url_46_114_4.txt b/eesanje/url_46_114_4.txt new file mode 100644 index 0000000000000000000000000000000000000000..29bfb070cb6639f2dbb8b58bdfda5b65384bbc30 --- /dev/null +++ b/eesanje/url_46_114_4.txt @@ -0,0 +1,4 @@ +ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ +ಬೆಂಗಳೂರು,ಜೂ.11-ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು, ವಿಳಂಬ ಮಾಡಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿಪರಿಶೀಲನಾ ಸಭೆ ನಡೆಸಿದ ಅವರು, ಮೇಲ್ಮನವಿ ಪ್ರಕರಣಗಳನ್ನು 3 ವಿಲೇವಾರಿ ಮಾಡಬೇಕು, ಐಜಿಎಸ್‌‍ಟಿ ನಕಾರಾತಕ ಸೆಟಲ್‌ ಮೆಂಟ್‌ ಆಗುವ ಕಡೆ, ಇತರೆ ಸರಕುಗಳ ಮೇಲಿನ ತೆರಿಗೆ ಸಂಗ್ರಹವನ್ನು ಚುರುಕಗೊಳಿಸಬೇಕು ಎಂದು ಎಚ್ಚರಿಸಿದರು. +ಕೆಲಸ ಮರು ಹಂಚಿಕೆ 2017 ಕ್ಕೂ ಹಿಂದಿನ ಪ್ರಕರಣಗಳ ತೀರ್ಮಾನವಾಗಿರುವುದರಿಂದ ಬೆಂಗಳೂರಿನಲ್ಲಿ ಹೆಚ್ಚು ಮೇಲನವಿಗಳು ದಾಖಲಾಗುತ್ತಿದ್ದು, ಇವುಗಳ ವಿಲೇವಾರಿಗಾಗಿ ಹೆಚ್ಚುವರಿ ಜಂಟಿ ಆಯುಕ್ತರ ಹ್ದುೆ ಮಂಜೂರಾಗಿದ್ದು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿದ್ದಾರೆ. +ವೃತ್ತಿ ತೆರಿಗೆ ಸಂಗ್ರಹವನ್ನೂ ಚುರುಕುಗೊಳಿಸಲು ಗುರಿ ನಿಗಧಿ ಪಡಿಸಲು ಸೂಚನೆ ನೀಡಲಾಗಿದೆ.ಅಂದಾಜು, ಜಾರಿ, ಮೇಲನವಿ ಸಮನ್ವಯ ಸಭೆ ತಿಂಗಳಿಗೆ 2 ಬಾರಿ ಕಡ್ಡಾಯವಾಗಿ ನಡೆಸಬೇಕು. ಕಾರ್ಯಯೋಜನೆ ಸಿದ್ದಪಡಿಸಬೇಕು. ಮೇಲನವಿಗಳನ್ನು ಸಕಾಲದಲ್ಲಿ ಇತ್ಯರ್ಥ ಮಾಡಬೇಕು, ಸೆಪ್ಟೆಂಬರ್‌ ಮೊದಲ ವಾರದಲ್ಲಿ ಮತ್ತೊಮೆ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ತಿಳಿಸಿದ ಅವರು, ಆ ವೇಳೆಗೆ ಗುರಿ ತಲುಪಿರುವಂತೆ ತಾಕೀತು ಮಾಡಿದ್ದಾರೆ. \ No newline at end of file diff --git a/eesanje/url_46_114_5.txt b/eesanje/url_46_114_5.txt new file mode 100644 index 0000000000000000000000000000000000000000..e343a29dde55060ec773b1bf7dc8b186c4c5ab6f --- /dev/null +++ b/eesanje/url_46_114_5.txt @@ -0,0 +1,6 @@ +ಯಾರಾಗ್ತಾರೆ ಜೆಡಿಎಸ್‌‍ ರಾಜ್ಯಾಧ್ಯಕ್ಷ..? +ಬೆಂಗಳೂರು,ಜೂ.11-ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವರಾಗಿರುವುದರಿಂದ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಮುಕ್ತರಾಗಲಿದ್ದಾರೆ.ಲೋಕಸಭೆಗೆ ಕುಮಾರಸ್ವಾಮಿಯವರು ಚುನಾಯಿತರಾಗಿರುವುದರಿಂದ ವಿಧಾನಸಭೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇದರಿಂದ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸ್ಥಾನ ತೆರವಾಗಲಿದೆ. +ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಯಾರಾಗಬಹುದು ಎಂಬ ಚರ್ಚೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಜೆಡಿಎಸ್‌‍ ರಾಜ್ಯಾಧ್ಯಕ್ಷರ ಬದಲಾವಣೆಯ ವಿಚಾರವೂ ಮುನ್ನಲೆಗೆ ಬಂದಿದೆ.ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಹಿರಿಯ ಶಾಸಕರಾದ ಎಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ವೆಂಕಟಶಿವಾರೆಡ್ಡಿ ಅವರ ಹೆಸರುಗಳು ಪ್ರಸ್ತಾಪವಾಗುತ್ತಿವೆ. ಇನ್ನು ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯುವಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್‌ ಕುಮಾರಸ್ವಾಮಿಯವರ ಹೆಸರು ಪ್ರಸ್ತಾಪವಾಗುತ್ತಿದೆ. +ನಿಖಿಲ್‌ ಕುಮಾರಸ್ವಾಮಿಯವರಿಗೆ ಬಡ್ತಿ ನೀಡಿ ರಾಜ್ಯಾಧ್ಯಕ್ಷ ಸ್ಥಾನ ನೀಡುವುದರ ಜೊತೆಗೆ ಪಕ್ಷ ಸಂಘಟನೆಯ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.ಪ್ರಸ್ತುತವಾಗಿ ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ವಿಧಾನಪರಿಷತ್‌ ಚುನಾವಣೆಯಲ್ಲಿ ಮೂರು ಮಂದಿ ಒಕ್ಕಲಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗರಿಗೆ ಬದಲಿಗೆ ಬೇರೆ ಸಮುದಾಯಕ್ಕೆ ನೀಡುವುದು ಸೂಕ್ತ ಎಂದು ಪಕ್ಷದ ವಲಯದಲ್ಲಿ ಚರ್ಚೆಯಾಗುತ್ತಿದೆ. +ಕುರುಬ ಇಲ್ಲವೇ ಲಿಂಗಾಯತ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡುವುದು ಸೂಕ್ತ. ಲೋಕಸಭೆ ಚುನಾವಣೆ ನಂತರ ಪಕ್ಷಕ್ಕೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರಲ್ಲೂ ಉತ್ಸಾಹ ಮೂಡಿದೆ. ಬೇರೆ ಸಮುದಾಯಕ್ಕೂ ಅವಕಾಶ ಮಾಡಿಕೊಟ್ಟರೆ ಮತ್ತಷ್ಟು ಪಕ್ಷಕ್ಕೆ ಶಕ್ತಿ ಬರುತ್ತದೆ. ಎಲ್ಲಾ ಸಮುದಾಯಗಳೂ ಒಗ್ಗೂಡಿ ಪಕ್ಷ ಸಂಘಟನೆ ಮಾಡಲು ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. +ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಜೆಡಿಎಸ್‌‍ ಕೋರ್‌ಕಮಿಟಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಒಂದೇ ಸಮುದಾಯಕ್ಕೆ ಅಧಿಕಾರ ಹಂಚಿಕೆಯಾಗುವುದು ಬೇಡ. ಬೇರೆಬೇರೆ ಸಮುದಾಯಗಳಿಗೂ ಪಕ್ಷದ ಸ್ಥಾನಮಾನಗಳನ್ನು ನೀಡುವುದರಿಂದ ಮುಂದಿನ ನಗರ, ಸ್ಥಳೀಯ ಸಂಸ್ಥೆಗಳ, ಜಿಲ್ಲಾ, ತಾಲ್ಲೂಕು, ಪಂಚಾಯಿತಿ ಚುನಾವಣೆಗಳಿಗೂ ಅನುಕೂಲವಾಗಲಿದೆ. ಇಲ್ಲದಿದ್ದರೆ, ಬೇರೆ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಲಿದ್ದು, ಎದುರಾಳಿಗಳಿಗೆ ಅಸ್ತ್ರವೂ ಆಗಬಹುದು ಎಂಬ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. \ No newline at end of file diff --git a/eesanje/url_46_114_6.txt b/eesanje/url_46_114_6.txt new file mode 100644 index 0000000000000000000000000000000000000000..5defc5c6f69a460559d8f68bff14c9e126e7b936 --- /dev/null +++ b/eesanje/url_46_114_6.txt @@ -0,0 +1,5 @@ +ಲಾರಿ ಖರೀದಿ ವಿಚಾರಕ್ಕೆ ಜಗಳ : ಅಪ್ಪನನ್ನೇ ಕೊಂದ ಮಗ +ಹಾಸನ, ಜೂ.11-ಲಾರಿ ಖರೀದಿ ವಿಚಾರವಾಗಿ ತಂದೆ-ಮಗನ ನಡುವೆ ನಡೆದ ಜಗಳ ಅಪ್ಪನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆಲೂರು ತಾಲ್ಲೂಕಿನ ಕಡಬಗಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. +ಚಂದ್ರಶೇಖರ್‌ (60) ಕೊಲೆಯಾದ ತಂದೆ. ಈತನ ಪುತ್ರ ಸಚಿನ್‌ (30) ಡ್ರೈವರ್‌ ಕೆಲಸ ಮಾಡುತ್ತಿದ್ದು, ಕಂಠಪೂರ್ತಿ ಕುಡಿದು ಬಂದು ಜಮೀನು ಮಾರಾಟ ಮಾಡಿ ಲಾರಿ ಕೊಡಿಸುವಂತೆ ತಂದೆ ಜತೆ ಜಗಳವಾಡುತ್ತಿದ್ದ. +ಕಳೆದ ರಾತ್ರಿಯೂ ಸಹ ಕುಡಿದು ಬಂದು ನನಗೆ ಕೂಡಲೇ ಲಾರಿ ಕೊಡಿಸುವಂತೆ ಜಗಳ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಕುಡಿದ ಮತ್ತಿನಲ್ಲಿದ್ದ ಸಚಿನ್‌ ಎಡೆಮಟ್ಟೆಯಿಂದ ತಂದೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. +ತೀವ್ರ ರಕ್ತಸ್ರಾವದಿಂದ ಚಂದ್ರಶೇಖರ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.ಸುದ್ದಿ ತಿಳಿದ ಕೂಡಲೇ ಆಲೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_114_7.txt b/eesanje/url_46_114_7.txt new file mode 100644 index 0000000000000000000000000000000000000000..207aab762e429848fd954478b9b93bf27742f3ab --- /dev/null +++ b/eesanje/url_46_114_7.txt @@ -0,0 +1,4 @@ +ತುಮಕೂರು : ಕರ್ತವ್ಯಲೋಪವೆಸಗಿದ ಐವರು ಪೊಲೀಸರ ಅಮಾನತು +ತುಮಕೂರು, ಜೂ.11-ಕ್ರಿಮಿನಲ್‌ಗಳಿಗೆ ಪೊಲೀಸ್‌‍ ಇಲಾಖೆಯ ಮಾಹಿತಿ ಸೋರಿಕೆ ಆರೋಪದಡಿ ಒಂದೇ ದಿನ ಐವರು ಪೊಲೀಸ್‌‍ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಅಶೋಕ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. +ಕ್ಯಾತಸಂದ್ರ ಪೊಲೀಸ್‌‍ ಠಾಣೆಯ ಇಬ್ಬರು, ಜಯನಗರ ಠಾಣೆಯ ಓರ್ವ, ಟ್ರಾಫಿಕ್‌ ಠಾಣೆಯ ಕಾನ್‌ಸ್ಟೆಬಲ್‌‍, ಎಸ್‌‍ಪಿ ಕಚೇರಿಯ ಒಬ್ಬ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.ಅಮಾನತಾದ ಸಿಬ್ಬಂದಿ ಮಂಜುನಾಥ್‌ ರೆಡ್ಡಿ, ನವೀನ್‌, ನರಸಿಂಹ ಮೂರ್ತಿಗೆ ಮಾಹಿತಿ ಸೋರಿಕೆ ಮಾಡಿದರು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. +ನವೀನ್‌ ಮಂಜುನಾಥ್‌ ರೆಡ್ಡಿ, ನರಸಿಂಹ ಮೂರ್ತಿ ಈ ಮೂವರು ಆರೋಪಿಗಳ ವಿರುದ್ಧ ದಂಡಿನಶಿವರ ಹಾಗೂ ತಿಲಕ್‌ ಪಾರ್ಕ್‌ ಪೊಲೀಸ್‌‍ ಠಾಣೆಯಲ್ಲಿ ಕೊಲೆ ಸಂಚು, ಹಲ್ಲೆ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.ವಾಟ್ಸಾಪ್‌ ಮೂಲಕ ಆರೋಪಿಗಳಿಗೆ ಮಾಹಿತಿ ರವಾನಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. \ No newline at end of file diff --git a/eesanje/url_46_114_8.txt b/eesanje/url_46_114_8.txt new file mode 100644 index 0000000000000000000000000000000000000000..47c91a2bda9e4b68a4977accb8b3d6b6bbb24055 --- /dev/null +++ b/eesanje/url_46_114_8.txt @@ -0,0 +1,3 @@ +ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ +ಬೆಂಗಳೂರು ಜೂ. 10 :ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 42ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪ್ರಕರಣ ದ ವಿಚಾರಣೆ ನೆಡೆಸಿದ ನ್ಯಾಯಾಧೀಶರು ಜೂನ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. +ಪ್ರಜ್ವಲ್ ರೇವಣ್ಣ ಅವರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಾಗ ಅವರು ವಿದೇಶಕ್ಕೆ ತೆರಳಿದರು ಅವರ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದವು ತನಿಖೆಗಾಗಿ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು ಎಸ್ ಐಟಿ. ನ್ಯಾಯಾಧೀಶರಿಗೆ ಮುಚ್ಚಿದ ಲಕೋಟಿಯಲ್ಲಿ ವರದಿ ಸಲ್ಲಿಸಿದೆ. \ No newline at end of file diff --git a/eesanje/url_46_114_9.txt b/eesanje/url_46_114_9.txt new file mode 100644 index 0000000000000000000000000000000000000000..17eb43ade769aad949c60f8dd2dec5c0dff31ef9 --- /dev/null +++ b/eesanje/url_46_114_9.txt @@ -0,0 +1,8 @@ +ಗ್ಯಾರಂಟಿಗಳನ್ನು ನಿಲ್ಲಿಸುವ ಶಾಸಕರು-ಸಚಿವರ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಮನವಿ +ಬೆಂಗಳೂರು, ಜೂ.10-ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಉಂಟಾದ ಅಲ್ಪ ಹಿನ್ನಡೆಯಿಂದ ಕಾಂಗ್ರೆಸ್‌‍ ಪಕ್ಷದ ಕೆಲವು ಶಾಸಕರು, ಸಚಿವರು, ಮುಖಂಡರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂಬ ಹೇಳಿಕೆಗಳನ್ನು ನೀಡುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದಾರೆ. +ಈ ಕುರಿತು ಪತ್ರ ಬರೆದಿರುವ ಅವರು, ಗ್ಯಾರಂಟಿ ಯೋಜನೆಗಳಿಂದ ಜನಮನ್ನಣೆ ಗಳಿಸಿರುವುದು ಕಳೆದ ವಿಧಾನಸಭೆ ಹಾಗೂ ಈಗಿನ ಲೋಕಸಭಾ ಚುನಾವಣೆಗಳಲ್ಲಿ ಪಡೆದ ಮತಗಳಿಕೆ ಪ್ರಮಾಣವನ್ನು ನೋಡಿದರೂ ಸಾಕು. ಈಚೆಗೆ ಬಂದ ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಪಕ್ಷ 9 ಕ್ಷೇತ್ರಗಳನ್ನು ಗೆದ್ದರೂ ಮತಗಳಿಕೆಯಲ್ಲಿ ಗಣನೀಯವಾಗಿ ಹೆಚ್ಚಳ ಕಾಣಲಾಗಿದೆ. +ಈ ಲೋಕಸಭೆಯಲ್ಲಿ ನಮ್ಮ ಕಾಂಗ್ರೆಸ್‌‍ ಪಕ್ಷವು ಮತಗಳಿಕೆಯಲ್ಲಿ ಶೇಕಡಾ 14ರಷ್ಟು ಹೆಚ್ಚಳ ಕಂಡಿದೆ. ಅಂದರೆ, 2019ರಲ್ಲಿ ಶೇಕಡಾ 31.5ರಷ್ಟಿದ್ದ ಮತ ಪ್ರಮಾಣವು ಈ ಬಾರಿ 45.5ಕ್ಕೆ ಏರಿಕೆಯಾಗಿದೆ. ಅದೇ ಶೇಕಡಾ 51.5ರಷ್ಟಿದ್ದ ಬಿಜೆಪಿ ಮತ ಗಳಿಕೆಯು ಈ ಬಾರಿ ಶೇಕಡಾ 46ಕ್ಕೆ ಕುಸಿತ ಕಂಡಿದೆ. ಇದು ಕಾಂಗ್ರೆಸ್‌‍ ಬಗ್ಗೆ ಜನರು ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ ಎಂದಿದ್ದಾರೆ. +ಕಾಂಗ್ರೆಸ್‌‍ ಪಕ್ಷ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಪ್ರತಿ ಮನೆಮನೆಗೆ ಗ್ಯಾರಂಟಿ ಕಾರ್ಡ್‌ ಗಳನ್ನು ಹಂಚಿ ಆಶ್ವಾಸನೆ ನೀಡಿತ್ತು. ಇದರ ಬಗ್ಗೆ ಐತಿಹಾಸಿಕ ಪ್ರಣಾಳಿಕೆಯನ್ನು ತಯಾರಿಸಿ ಅದನ್ನು ಜನರ ಮುಂದಿಟ್ಟು ವಾಗ್ದನ ಮಾಡಿತ್ತು. ಆ ವಾಗ್ದಾನದ ಮೇಲೆ ವಿಶ್ವಾಸ ಇಟ್ಟು ರಾಜ್ಯದ ಜನ ಕಾಂಗ್ರೆಸ್‌‍ ಪಕ್ಷಕ್ಕೆ ಮತನೀಡಿ 136 ಸ್ಥಾನಗಳಲ್ಲಿ ಅಭೂತಪೂರ್ವ ಜಯಕ್ಕೆ ಕಾರಣಿ ಭೂತರಾದರು. +ಸರ್ಕಾರ ರಚನೆಯಾದ 9 ತಿಂಗಳಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ರಾಜ್ಯವನ್ನು ಮಾದರಿಯನ್ನಾಗಿ ತೆಗೆದುಕೊಂಡು ಎಐಸಿಸಿ ಕೂಡ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರಿಂದ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಾಗಿದೆ ಎಂದು ವಿವರಿಸಿದ್ದಾರೆ. +ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಸರ್ಕಾರದಿಂದ ನೀಡುವ ಎರಡು ಸಾವಿರ ರೂ. ಉಳಿಸಿಕೊಂಡು ಬಂಗಾರ ಖರೀದಿ ಮಾಡಿದ ಮಹಿಳೆಯರಿದ್ದಾರೆ. ಫ್ರಿಜ್‌ ಖರೀದಿಸಿದವರಿದ್ದಾರೆ. ಸ್ಮಾರ್ಟ್‌ ಫೋನ್‌ಗಳನ್ನು ಖರೀದಿ ಮಾಡಿದವರಿದ್ದಾರೆ. ಈ ಹಣ ಮಕ್ಕಳ ಶಿಕ್ಷಣಕ್ಕೆ, ಹಿರಿಯರ ಔಷಧಕ್ಕೆ ಸಹ ನೆರವಾಗುತ್ತಿದೆ ಎಂದು ಅದೆಷ್ಟೋ ಮಂದಿ ಹೇಳಿದ್ದಾರೆ. +ನಮ್ಮ ಸರ್ಕಾರವನ್ನು ಹರಸಿದ್ದಾರೆ. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಗೆ ಕಾರಣವಾಗಿವೆ ಎಂದು ಹೇಳಿದರು.ಅವುಗಳ ಬಗ್ಗೆ ಹಗುರವಾಗಿ ಮಾತನಾಡುವುದು ಮತ್ತು ಟೀಕಿಸುವುದಕ್ಕೆ ಕಡಿವಾಣ ಹಾಕುವಂತೆ ದಿನೇಶ್‌ ಗೂಳಿಗೌಡ ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_115_1.txt b/eesanje/url_46_115_1.txt new file mode 100644 index 0000000000000000000000000000000000000000..49ddcf79bed5a63e22740bb8eb0adc770be10905 --- /dev/null +++ b/eesanje/url_46_115_1.txt @@ -0,0 +1,9 @@ +ವಿಧಾನಪರಿಷತ್‌ ನೂತನ ಸದಸ್ಯರಿಗೆ ಪ್ರಮಾಣವಚನಕ್ಕೆ ಇನ್ನೂ ಒಂದು ವಾರ ಕಾಯಬೇಕು +ಬೆಂಗಳೂರು,ಜೂ.10-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ 11 ಮಂದಿ ನೂತನ ಸದಸ್ಯರಾಗಲು ಜೂನ್‌ 18 ರವರೆಗೆ ಕಾಯಬೇಕಿದೆ. ಅದೇ ರೀತಿ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಆರು ಮಂದಿ ವಿಧಾನಪರಿಷತ್‌ನ ನೂತನ ಸದಸ್ಯರಾಗಲು ಜೂ.22 ರವರೆಗೆ ಕಾಯಬೇಕಿದೆ. +ವಿಧಾನಸಭೆಯಿಂದ ಚುನಾಯಿತರಾಗಿದ್ದ ರಘುನಾಥರಾವ್‌ ಮಲ್ಕಾಪುರೆ, ಡಾ.ಕೆ.ಗೋವಿಂದರಾಜು, ಅರವಿಂದ ಕುಮಾರ್‌ ಅರಳಿ, ಬಿ.ಎಂ.ಫಾರುಖ್‌, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌, ಮುನಿರಾಜುಗೌಡ ಪಿ.ಎಂ., ಎನ್‌.ಎಸ್‌‍.ಬೋಸರಾಜು ಅವರು ಜೂನ್‌ 17 ರಂದು ನಿವೃತ್ತಿಯಾಗಲಿದ್ದಾರೆ. ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ದ್ವೈವಾರ್ಷಿಕ ಚುನಾವಣೆ ನಡೆದಿದೆ. ಆದರೆ ಡಾ.ತೇಜಸ್ವಿನಿ ಗೌಡ ಹಾಗೂ ಕೆ.ಪಿ.ನಂಜುಂಡಿ ವಿಶ್ವಕರ್ಮ ವಿದಾನಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಆ 2 ಸ್ಥಾನಗಳು ತೆರವಾಗಿವೆ. +ಸದಸ್ಯರ ನಿವೃತ್ತಿಯ ನಂತರ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆದಿರುವುದರಿಂದ ನೂತನ ಸದಸ್ಯರು ಪ್ರಮಾಣವಚನ ಸ್ವೀಕರಿಸಲು ಜೂ.18 ರವರೆಗೆ ಕಾಯಬೇಕಿದೆ.ವಿಧಾನಸಭೆಯಿಂದ ಮೇಲನೆಯ 11 ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್‌‍ನ ಐವಾನ್‌ ಡಿಸೋಜ, ಕೆ.ಗೋವಿಂದರಾಜು, ಜಗದೇವ ಗುತ್ತೇದಾರ್‌, ಬಲ್ಕೀಸ್‌‍ ಭಾನು, ಸಚಿವ ಎನ್‌.ಎಸ್‌‍.ಬೋಸರಾಜು ಹಾಗೂ ಡಾ.ಯತೀಂದ್ರ ಎಸ್‌‍. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. +ಅದೇ ರೀತಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮೂಳೆ ಮಾರುತಿ ರಾವ್‌, ಸಿ.ಟಿ.ರವಿ, ಎನ್‌.ರವಿಕುಮಾರ್‌ ಹಾಗೂ ಜೆಡಿಎಸ್‌‍ನಿಂದ ಸ್ಪರ್ಧಿಸಿದ್ದ ಟಿ.ಎನ್‌.ಜವರಾಯಿಗೌಡ ಅವರು ಸಹ ಅವಿರೋಧವಾಗಿ ಈಗಾಗಲೇ ಆಯ್ಕೆಯಾಗಿದ್ದಾರೆ. +3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದು ಆರು ಮಂದಿ ಆಯ್ಕೆಯಾಗಿದ್ದಾರೆ. ಅವರೂ ಕೂಡ ಜೂ.22 ರವರೆಗೆ ಕಾಯಬೇಕಿದೆ. ವಿಧಾನಪರಿಷತ್‌ ಸದಸ್ಯರಾದ ಡಾ.ಚಂದ್ರಶೇಖರ್‌ ಪಿ.ಪಾಟೀಲ್‌, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21 ರಂದು ನಿವೃತ್ತಿಯಾಗಲಿದ್ದಾರೆ. ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ಎರಡೂ ಸದಸ್ಯ ಸ್ಥಾನಗಳು ತೆರವಾಗಿವೆ. +ಕಾಂಗ್ರೆಸ್‌‍ನಿಂದ ಸ್ಪರ್ಧಿಸಿ ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಶ್ರೀನಿವಾಸ, ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಪಾಟೀಲ ಅವರು ಚುನಾಯಿತರಾಗಿದ್ದಾರೆ. +ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಧನಂಜಯ ಸರ್ಜಿ ಅವರು ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಜೆಡಿಎಸ್‌‍ನಿಂದ ಸ್ಪರ್ಧಿಸಿದ್ದ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿವೇಕಾನಂದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌‍.ಎಂ.ಬೋಜೇಗೌಡ ಚುನಾಯಿತರಾಗಿದ್ದಾರೆ. +17 ಮಂದಿ ಮೇಲನೆ ಸದಸ್ಯರ ಪೈಕಿ ಡಾ.ಚಂದ್ರಶೇಖರ್‌ ಬಿ.ಪಾಟೀಲ್‌, ಎಸ್‌‍.ಎಲ್‌.ಬೋಜೇಗೌಡ, ಕೆ.ಗೋವಿಂದರಾಜು, ಎನ್‌.ಎಸ್‌‍.ಬೋಸರಾಜು, ಎನ್‌.ರವಿಕುಮಾರ್‌ ಪುನರ್‌ ಆಯ್ಕೆಯಾಗಿದ್ದು, ಮತ್ತೆ ವಿಧಾನಪರಿಷತ್‌ ಸದಸ್ಯರಾಗಲಿದ್ದಾರೆ. \ No newline at end of file diff --git a/eesanje/url_46_115_10.txt b/eesanje/url_46_115_10.txt new file mode 100644 index 0000000000000000000000000000000000000000..3583f284327725864e2f5d14731e11cc468e9543 --- /dev/null +++ b/eesanje/url_46_115_10.txt @@ -0,0 +1,5 @@ +ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಂಪೂರ್ಣ ತೆರವು +ಬೆಂಗಳೂರು,ಜೂ.10-ಲೋಕಸಭೆ ಹಾಗೂ ವಿಧಾನಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿದ್ದ ನೀತಿ ಸಂಹಿತೆಯನ್ನು ಸಂಪೂರ್ಣ ತೆರವುಗೊಳಿಸಿರುವುದಾಗಿ ಭಾರತದ ಚುನಾವಣಾ ಆಯೋಗ ತಿಳಿಸಿದೆ. +ಮಾ.16 ರಂದು ಲೋಕಸಭಾ ಚುನಾವಣೆ ಘೋಷಣೆಯಾದಂದಿನಿಂದಲೂ ದೇಶಾದ್ಯಂತ ಜಾರಿಯಲ್ಲಿದ್ದಂತೆ ರಾಜ್ಯದಲ್ಲೂ ನೀತಿ ಸಂಹಿತೆ ಇತ್ತು. ಜೂ.4 ಕ್ಕೆ ಮತ ಎಣಿಕೆ ಮುಗಿದು ಫಲಿತಾಂಶ ಪ್ರಕಟವಾಗಿದ್ದರೂ ಜೂ.6ರವರೆಗೂ ಚುನಾವಣಾ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದವು. ಅದು ಮುಗಿದ ಬೆನ್ನಲ್ಲೇ ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳಿಗೆ ನಡೆಯುತ್ತಿದ್ದ ಚುನಾವಣೆಗಳ ನೀತಿ ಸಂಹಿತೆ ಮುಂದುವರೆದಿತ್ತು. +ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯಸರ್ಕಾರದ ಮನವಿಯ ಮೇರೆಗೆ ಭಾಗಶಃ ನೀತಿಸಂಹಿತೆಯನ್ನು ಆಯೋಗ ಸಡಿಲಿಸಿತ್ತಾದರೂ ಯಾವುದೇ ಘೋಷಣೆ ಹಾಗೂ ನಿರ್ಧಾರಗಳನ್ನು ಪ್ರಕಟಿಸಲು ಅವಕಾಶ ಇರಲಿಲ್ಲ. ಸಚಿವ ಸಂಪುಟ ಸಭೆ ನಡೆಸಲು ನಿರ್ಬಂಧಗಳಿದ್ದವು. +ವಿಧಾನಸಭೆಯಿಂದ ವಿಧಾನಪರಿಷತ್‌ಗೆ 11 ಸದಸ್ಯರ ಆಯ್ಕೆ, ಶಿಕ್ಷಕರ, ಪದವೀಧರರ 6 ಕ್ಷೇತ್ರಗಳ ಚುನಾವಣೆ ಸೇರಿದಂತೆ ಎಲ್ಲಾ ಫಲಿತಾಂಶಗಳು ಪ್ರಕಟಗೊಂಡಿದ್ದರಿಂದ ನೀತಿ ಸಂಹಿತೆಯನ್ನು ತೆರವು ಮಾಡಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. \ No newline at end of file diff --git a/eesanje/url_46_115_11.txt b/eesanje/url_46_115_11.txt new file mode 100644 index 0000000000000000000000000000000000000000..2772640de72812efe35251f2eae51483636a492f --- /dev/null +++ b/eesanje/url_46_115_11.txt @@ -0,0 +1,7 @@ +ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ +ಬೆಂಗಳೂರು,ಜೂ.10-ಮೇಲೈ ಸುಳಿಗಾಳಿಯಿಂದಾಗಿ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಆರ್ಭಟಿಸುತ್ತಿದೆ. ಉತ್ತರಕನ್ನಡ, ಬೆಳಗಾವಿ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬಿಜಾಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಭಾರಿ ಮಳೆಯಾಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ-ಕೊಳ್ಳಗಳು, ನದಿಗಳು ಮೈದುಂಬಿ ಹರಿಯುತ್ತಿವೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಐದು ದಿನಗಳ ಕಾಲ ಸರಾಸರಿ ಇದೇ ರೀತಿ ಮಳೆ ಮುಂದುವರೆಯಲಿದೆ. +ಕರಾವಳಿ, ಮಲೆನಾಡು ಹಾಗೂ ಉತ್ತರಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.ನಿನ್ನೆ ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೆರೆಕಟ್ಟೆಗೆ ನೀರು ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಮುನ್ನೆಚ್ಚರಿಕೆಯನ್ನು ನೀಡಿದೆ. +ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಜೂ.15 ರವರೆಗೂ ಮುಂಗಾರು ಪ್ರಬಲವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಇಲ್ಲವೇ ಅರೆವ್ಯಾಪಕ ಮಳೆಯಾಗಲಿದೆ. ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ತುಂಗಭದ್ರಾ, ಕಾವೇರಿ, ಘಟಪ್ರಭಾ ಸೇರಿದಂತೆ ಪ್ರಮುಖ ನದಿಗಳ ಒಳಹರಿವು ಹೆಚ್ಚಾಗುತ್ತಿದೆ. +ಕೇರಳದಲ್ಲೂ ಉತ್ತಮ ಮಳೆಯಾಗಿರುವುದಿರಂದ ಕಾವೇರಿ ನದಿಪಾತ್ರದ ಜಿಲ್ಲೆಗಳಲ್ಲೂ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಗಳಿವೆ. ಒಟ್ಟಾರೆ ಈ ಬಾರಿ ಮುಂಗಾರು ಆರಂಭದಿಂದಲೇ ಆರ್ಭಟಿಸುತ್ತಿದೆ. ಆದರೆ ಕಳೆದ ವರ್ಷ ಆರಂಭದಲ್ಲೇ ಮುಂಗಾರು ಕೈಕೊಟ್ಟು ಬರದ ಕರಾಳ ಛಾಯೆ ಆವರಿಸಿತ್ತು. +ಈ ಬಾರಿ ಅವಧಿಗೂ ಮುನ್ನ ಮುಂಗಾರು ಆರಂಭವಾಗಿದ್ದು, ಆರಂಭದಿಂದಲೇ ಉತ್ತಮ ಮಳೆಯಾಗುತ್ತಿರುವು ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯಕ್ಕೆ ರೈತರು ಸಿದ್ಧತೆ ಮಾಡಿಕೊಳ್ಳಲು ಅನುಕೂಲಕರವಾಗಿದೆ. ಅಲ್ಲದೆ, ಕೆರೆಕಟ್ಟೆ, ನದಿಗಳನ್ನು ನೀರು ಬರುತ್ತಿರುವುದು ಮತ್ತಷ್ಟು ಸಮಾಧಾನ ತಂದಂತಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ, ಈ ಬಾರಿ ವಾಡಿಕೆ ಪ್ರಮಾಣದ ಮಳೆಯಾಗಲಿದೆ. ಅದಕ್ಕೆ ಪೂರಕವಾಗಿ ಕಳೆದ 2 ವಾರಗಳಿಂದಲೂ ರಾಜ್ಯಾದ್ಯಂತೆ ಉತ್ತಮ ಮಳೆಯಾಗುತ್ತಿದೆ. \ No newline at end of file diff --git a/eesanje/url_46_115_12.txt b/eesanje/url_46_115_12.txt new file mode 100644 index 0000000000000000000000000000000000000000..2da6c106022de17bc3cc4d51581d4c9bd4147ef5 --- /dev/null +++ b/eesanje/url_46_115_12.txt @@ -0,0 +1,3 @@ +ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಶಾಸಕ ಗೋಪಾಲಯ್ಯ +ಬೆಂಗಳೂರು, ಜೂ.9- ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೆಎಂ ಡಬ್ಲ್ಯೂಎ ವಿದ್ಯಾನಿಕೇತನ ಮತ್ತು ಪಿಯು ಕಾಲೇಜ್ ಹಾಗೂ ಸಪ್ತಗಿರಿ ಸೂಪರ್ ಸ್ಪೆಷಲಿಟಿ ಹಾಸ್ಪಿಟಲ್, ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಸಾನೆಟೇರಿಯಲ್ ,ಸ್ಪಂದನ ಸ್ಪರ್ಶ ಹಾಸ್ಪಿಟಲ್ ಯಶವಂತಪುರ, ಕೆಎಲ್ಎ ಡೆಂಟಲ್ ಕಾಲೇಜ್ ಇವರ ಸಹಯೋಗದೊಂದಿಗೆ ಇಂದು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಸ್ಥಳೀಯ ಶಾಸಕರಾದ ಕೆ ಗೋಪಾಲಯ್ಯನವರು ಉದ್ಘಾಟನೆ ನಡೆಸಿದರು +ಈ ಸಂದರ್ಭದಲ್ಲಿ ಲಯನ್ಸ್ ಮನೋಜ್ ಕುಮಾರ್, ಖ್ಯಾತ ಚಲನಚಿತ್ರ ನಟ ಗಣೇಶ್, ವೆಂಕಟೇಶ್ ಮೂರ್ತಿ, ಲಯನ್ ಸುರೇಶ್ ಕೆ ಎಸ್ ಆರ್ ಗೋರ್ಪಡೆ, ಶಾಲೆಯ ಮುಖ್ಯೋಪಾಧ್ಯಾಯರು ಮಕ್ಕಳು ಮತ್ತು ಪೋಷಕರು ಸ್ಥಳೀಯ ಜನರು ಭಾಗವಹಿಸಿದ್ದ \ No newline at end of file diff --git a/eesanje/url_46_115_2.txt b/eesanje/url_46_115_2.txt new file mode 100644 index 0000000000000000000000000000000000000000..30e28871a659f185a72b265494b403d2d1414d27 --- /dev/null +++ b/eesanje/url_46_115_2.txt @@ -0,0 +1,7 @@ +ಕಲ್ಪತರು ನಾಡಲ್ಲಿ ಹೊರಗಿನವರು ಗೆಲ್ಲಲ್ಲ ಎಂಬುದನ್ನು ಸುಳ್ಳಾಗಿಸಿದ ವಿ.ಸೋಮಣ್ಣ +ತುಮಕೂರು,ಜೂ.10-ಕಲ್ಪತರು ನಾಡಿಗೆ ಹೊರಗಿನ ಬಂದು ಗೆದ್ದವರಿಲ್ಲ. ಆದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಅವರು ಅದನ್ನು ಸುಳ್ಳು ಮಾಡಿ ತೋರಿಸಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಹಾಗೂ ವರುಣ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರೂ ತಮ ಛಲ ಬಿಡದೆ ಎದೆಗುಂದದೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಶೀಲರಾಗಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. +ತುಮಕೂರಿಗೂ ಹಾಗೂ ಸೋಮಣ್ಣನವರಿಗೂ ಮೊದಲಿನಿಂದಲೂ ಅವಿನಾಭಾವ ಸಂಬಂಧ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ವರಿಷ್ಠರ ತೀರ್ಮಾನದಂತೆ ಕಣಕ್ಕಿಳಿದು ಜಿಲ್ಲೆಯ ಜನರ ಮನಗೆದ್ದಿದ್ದಾರೆ. ಇಲ್ಲಿಯವರೆಗೂ ಕಲ್ಪತರು ನಾಡಿಗೆ ಕೇಂದ್ರ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದರೆ ಸೋಮಣ್ಣನವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದು ಜಿಲ್ಲೆಗೆ ಹೆಮೆಯ ವಿಷಯ. +ಈ ಹಿಂದೆ ಮಲ್ಲಿಕಾರ್ಜುನಯ್ಯ ಅವರು ಡೆಪ್ಯೂಟಿ ಸ್ಪೀಕರ್‌ ಆಗಿದ್ದರು. ಅದಾದ ಬಳಿಕ ಯಾರೊಬ್ಬರಿಗೂ ಕೇಂದ್ರದಲ್ಲಿ ದೊಡ್ಡ ಹುದ್ದೆ ಸಿಕ್ಕಿರಲಿಲ್ಲ. ಆದರೆ ಈಗ ಸೋಮಣ್ಣ ಅವರಿಗೆ ಸಿಕ್ಕಂತಾಗಿದೆ. +ತುಮಕೂರು ಸಾರ್ಟ್‌ ಸಿಟಿ ಯೋಜನೆಯಡಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ಸೋಮಣ್ಣ ಅವರು ಕೇಂದ್ರ ಸಚಿವರಾಗಿರುವುದರಿಂದ ಕೆಲಸದ ವೇಗ ಮತ್ತಷ್ಟು ಹೆಚ್ಚಲಿದೆ ಎಂಬ ದೊಡ್ಡ ಮಟ್ಟದ ನಿರೀಕ್ಷೆಗಳು ಜಿಲ್ಲೆಯ ಜನರಲ್ಲಿದೆ. +ರೈಲ್ವೆ ಯೋಜನೆಗಳು ನೆನೆಗುದಿಗೆ ಬಿದ್ದಿದ್ದು, ಇದೀಗ ಅವುಗಳಿಗೆ ಟೇಕ್‌ಆಫ್‌ ಅಗಲಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕ್ಷೇತ್ರದ ಜನರು ನನ್ನನ್ನು ಆಶೀರ್ವದಿಸಿದರೆ ಜಿಲ್ಲೆಯನ್ನು ಎರಡನೇ ಕಾಶಿ ಮಾಡುತ್ತೇನೆಂದು ಹೇಳಿದ್ದರು. ಇದೀಗ ಕೇಂದ್ರ ಸಚಿವ ಸ್ಥಾನ ಕೂಡ ಸಿಕ್ಕಿದ್ದು ಅವರ ಆಲೋಚನೆಗೆ ದೊಡ್ಡಮಟ್ಟದ ಇಂಬು ಕೊಟ್ಟಂತಾಗಿದೆ.ರಾಜಧಾನಿಗೆ ಉಪನಗರದಂತಿರುವ ತುಮಕೂರು ಚಿತ್ರಣ ಇನ್ನೂ ಮುಂದಿನ ದಿನಗಳಲ್ಲಿ ಬದಲಾಗುವ ಸಾಧ್ಯತೆಯಿದೆ. +ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ :ತುಮಕೂರು ಕ್ಷೇತ್ರದಿಂದ ಸ್ಪರ್ಽಸಿ ಗೆದ್ದು ಕೇಂದ್ರಸಚಿವರಾಗುತ್ತಿರುವ ಕ್ಷಣಗಳನ್ನು ಕಣ್ಣು ತುಂಬಿಕೊಳ್ಳಲು ತುಮಕೂರಿನ ಭದ್ರಮ ಕಲ್ಯಾಣ ಮಂಟಪದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಎಲ್‌ ಇ ಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ಜೆಡಿಎಸ್‌‍ ಮತ್ತು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. \ No newline at end of file diff --git a/eesanje/url_46_115_3.txt b/eesanje/url_46_115_3.txt new file mode 100644 index 0000000000000000000000000000000000000000..5a4596f85ed10a0496dd53fff0771a0fca12e820 --- /dev/null +++ b/eesanje/url_46_115_3.txt @@ -0,0 +1,9 @@ +ಮಕ್ಕಳ ಮಾರಾಟ ಜಾಲ ಬೇಧಿಸಿದ ಪೊಲೀಸರು : ವೈದ್ಯ ಅಬ್ದುಲ್‌ ಸೇರಿ 5 ಮಂದಿ ಖಾಕಿ ಬಲೆಗೆ +ಬೆಳಗಾವಿ, ಜೂ.10-ಮಕ್ಕಳ ಮಾರಾಟ ಜಾಲವನ್ನು ಬಯಲಿಗೆಳೆದಿರುವ ಮಾಳಮಾರುತಿ ಠಾಣೆ ಪೊಲೀಸರು ಈ ಜಾಲದ ಕಿಂಗ್‌ಪಿನ್‌ ವೈದ್ಯ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ.ಕಿತ್ತೂರು ಮೂಲದ ಕಿಂಗ್‌ಪಿನ್‌, ಆರ್‌.ಎಂ.ಪಿ. ವೈದ್ಯ ಡಾ. ಅಬ್ದುಲ್‌ ಗಫಾರ್‌ ಖಾನ್‌, ನೇಗಿನಹಾಳ ಗ್ರಾಮದ ಮಹಾದೇವಿ ಜೈನ್‌, ಚಂದನ್‌ ಸುಭೇದಾರ್‌, ಪವಿತ್ರಾ ಮತ್ತು ಪ್ರವೀಣ ಬಂಧಿತ ಆರೋಪಿಗಳು. +ಮಕ್ಕಳ ಮಾರಾಟ ಜಾಲ ನಗರದಲ್ಲಿ ಸಕ್ರಿಯವಾಗಿರುವ ಮಾಹಿತಿ ಆಧರಿಸಿ ಬೆನ್ನಿತ್ತಿದ್ದ ಪೊಲೀಸರಿಗೆ ಈ ಸಂಘಟಿತ ಜಾಲ ಪತ್ತೆಯಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಜಕುಮಾರ ಸಿಂಗಪ್ಪ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೈದ್ಯ ಅಬ್ದುಲ್‌ ಸೇರಿ ಐದು ಮಂದಿಯ ತಂಡವನ್ನು ಬಂಧಿಸಿದೆ. +ಮೂಲತಃ ಸವದತ್ತಿಯ ವೈದ್ಯ, ಚೆನ್ನಮ ಕಿತ್ತೂರಿನ ಸೋಮವಾರ ಪೇಟೆಯಲ್ಲಿ ನೆಲೆಸಿರುವ ಡಾ.ಅಬ್ದುಲ್‌ ಗಫಾರ್‌ ಖಾನ್‌ನಿಂದ 60 ಸಾವಿರಕ್ಕೆ ಮಗು ಖರೀದಿಸಿ ಬಳಿಕ ಬೆಳಗಾವಿಯಲ್ಲಿ ಸುಮಾರು. 1.40ಲಕ್ಷಕ್ಕೆ ಮಾರುತ್ತಿದ್ದಾಗ ಮಹಿಳೆಯನ್ನು ಬಲೆಗೆ ಬೀಳಿಸಿಕೊಂಡು ನಂತರ ವೈದ್ಯ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. +ಪೊಲೀಸ್‌‍ ಆಯುಕ್ತರಾದ ಡಾ.ಮಾರ್ಟಿನ್‌ ಮಾರ್ಬನ್ಯಾಂಗ್‌, ಡಿಸಿಪಿ ಪಿ. ವಿ. ಸ್ನೇಹಾ ಮಾರ್ಗದರ್ಶನದಲ್ಲಿ ಇನ್‌್ಸಪೆಕ್ಟರ್‌ ಜೆ. ಎಂ. ಕಾಲಿಮಿರ್ಚಿ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿತರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. +ಮಕ್ಕಳ ಮಾರಾಟ ಜಾಲದ ತಂಡ 60 ಸಾವಿರದಿಂದ 1.50 ಲಕ್ಷಕ್ಕೆ ಮಗುವನ್ನು ಮಾರಾಟ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದು ಬಂದಿದೆ.ಪ್ರಕರಣ ಬಯಲಿಗೆ: ಆರೋಪಿ ಮಹದೇವಿ 60 ಸಾವಿರ ಹಣ ಕೊಟ್ಟು ವೈದ್ಯ ಅಬ್ದುಲ್‌ ಗಫಾರ್‌ನಿಂದ 30 ದಿನದ ಹೆಣ್ಣು ಮಗುವನ್ನು ಖರೀದಿಸಿದ್ದು, ಆ ಮಗುವನ್ನು ಬೆಳಗಾವಿಯಲ್ಲಿ 1.40 ಲಕ್ಷಕ್ಕೆ ಮಾರಾಟ ಮಾಡಲು ಉದ್ದೇಶಿಸಿದ್ದ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸರ್ಕಾರಿ ದತ್ತು ಕೇಂದ್ರದ ಸಂಯೋಜಕರಾದ ರಾಜಕುಮಾರ ಸಿಂಗಪ್ಪ ರಾಠೋಡ ಎಂಬುವವರಿಗೆ ಮಾಹಿತಿ ಲಭಿಸಿದೆ. +ಈ ಬಗ್ಗೆ ಅವರು ಮಾಳಮಾರುತಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಜಾಲದ ಬಗ್ಗೆ ರಹಸ್ಯ ಕಾರ್ಯಾಚರಣೆ ನಡೆಸಿ ಮಹದೇವಿಯನ್ನು ಸಂಪರ್ಕಿಸಿ ಮಗುವನ್ನು ಖರೀದಿಸುವುದಾಗಿ ನಂಬಿಸಿದ್ದಾರೆ.ಮಹದೇವಿ ಮಗುವನ್ನು ಮಾರಾಟ ಮಾಡಲು ಬಂದಾಗ ಆಕೆಯನ್ನು ಬಲೆಗೆ ಬೀಳಿಸಿಕೊಂಡು ಹೆಣ್ಣು ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. +ನಂತರ ಮಹದೇವಿಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ವೈದ್ಯನ ಬಗ್ಗೆ ಬಾಯಿಬಿಟ್ಟಿದ್ದಾರೆ.ಇನ್‌್ಸಪೆಕ್ಟರ್‌ ಕಾಲಿಮಿರ್ಚಿ ಅವರ ಮಾರ್ಗದರ್ಶನದಲ್ಲಿ ಸಬ್‌ಇನ್‌್ಸ ಪೆಕ್ಟರ್‌ ರಾಮಗೌಡ ಸಂಕನಾಳ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ವೈದ್ಯ ಡಾ.ಅಬ್ದುಲ್‌ ಗಪಾರ್‌ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. +ಅಮಾಯಕರೇ ಟಾರ್ಗೆಟ್‌: ಮದುವೆಗೂ ಮುನ್ನ ಗರ್ಭಿಣಿಯಾಗುವ ಯುವತಿಯರು ಅಬಾಷನ್‌ಗಾಗಿ ಈ ವೈದ್ಯನ ಬಳಿ ಬಂದಾಗ ಆತ ತಾನೇ ಮಗುವನ್ನು ಸಾಕುವುದಾಗಿ ಹೇಳಿ ಅವರ ಮನವೊಲಿಸಿ ಎಂಟು ತಿಂಗಳು ತುಂಬಿದ ಬಳಿಕ ಬರುವಂತೆ ಹೇಳಿ ಕಳುಹಿಸುತ್ತಿದ್ದನು.ನಂತರ ಆಪರೇಷನ್‌ ಮಾಡಿ ಮಗುವನ್ನು ತೆಗೆದು ಅವರಿಗೆ 20 ಸಾವಿರ ಹಣ ಕೊಟ್ಟು ಮಗುವನ್ನು ತಾನೇ ಪಡೆದು ಮೂರ್ನಾಲ್ಕು ತಿಂಗಳ ಕಾಲ ಮಗುವನ್ನು ಪೋಷಣೆ ಮಾಡಿ ನಂತರ ಮಕ್ಕಳಿಲ್ಲದವರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ. \ No newline at end of file diff --git a/eesanje/url_46_115_4.txt b/eesanje/url_46_115_4.txt new file mode 100644 index 0000000000000000000000000000000000000000..6f99da17d9a1396752109b98c06111770d853036 --- /dev/null +++ b/eesanje/url_46_115_4.txt @@ -0,0 +1,8 @@ +ಜೂ.25ರಿಂದ ಕೆಎಸ್‌‍ಆರ್‌ಟಿಸಿಯಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ ವ್ಯವಸ್ಥೆ ಜಾರಿ +ಬೆಂಗಳೂರು,ಜೂ.10– ಪ್ರಯಾಣಿಕರ ಅನುಭವವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೆಎಸ್‌‍ಆರ್‌ಟಿಸಿಯು ತನ್ನ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ಮಾಡುತ್ತಿದ್ದು, ಈ ಮೂಲಕ ಪಾವತಿ ಮಾಡಿ ಟಿಕೆಟ್‌ ಖರೀದಿಸುವ ಅವಕಾಶ ಒದಗಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಎಸ್‌‍ಆರ್‌ಟಿಸಿ ಜೂನ್‌ 25ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್‌ ಟಿಕೆಟಿಂಗ್‌ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ. +ಎಲ್ಲಾ ಕಂಡಕ್ಟರ್‌ಗಳಿಗೆ ತರಬೇತಿ ನೀಡಿದ ನಂತರ ಕೆಲವೇ ವಾರಗಳಲ್ಲಿ ಎಲ್ಲಾ ಬಸ್‌‍ಗಳಲ್ಲಿ ವ್ಯವಸ್ಥೆ ಜಾರಿಗೆ ಬರಲಿದೆ. ಸಾರಿಗೆ ನಿಗಮವು ಪ್ರತಿ ಸಾಧನಕ್ಕೆ ತಿಂಗಳಿಗೆ 645 ರೂ. ಬಾಡಿಗೆಯಂತೆ 10,245 ಇಟಿಎಂಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. +ಕೆಎಸ್‌‍ಆರ್‌ಟಿಸಿ ಎಂ.ಡಿ.ಅನ್ಬುಕುಮಾರ್‌ ಮಾತನಾಡಿ, ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಈ ತಿಂಗಳ ಅಂತ್ಯದಲ್ಲಿ ಎಲ್ಲಾ ಬಸ್‌‍ಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದೆ. ಇದರಿಂದ ಚಿಲ್ಲರೆ ಸಮಸ್ಯೆ ಎದುರಾಗುವುದಿಲ್ಲ ನಿರ್ವಾಹಕರು ಚಿಲ್ಲರೆ ನೀಡಲಿಲ್ಲ ಎಂಬ ದೂರುಗಳು ಕೂಡ ಕಡಿಮೆಯಾಗಲಿದೆ. ಪ್ರಯಾಣಿಕರು ಮತ್ತು ಅವರ ಕ್ರೆಡಿಟ್‌ ಮತ್ತು ಡೆಬಿಟ್‌ ಕಾರ್ಡ್‌ಗಳನ್ನು ಪಾವತಿಸಿ, ಟಿಕೆಟ್‌ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ. +ಇದಕ್ಕೆ ಐದು ವರ್ಷ ಕಾಲದ ಒಪ್ಪಿಗೆ ನೀಡಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕಂಪನಿಯು ಇಟಿಎಂಗಳಿಗೆ ಬ್ಯಾಕೆಂಡ್‌ ಮತ್ತು ಇಂರ್ಟೇಸ್‌‍ ಸಾಫ್‌ವೇರ್‌ ಅನ್ನು ಒದಗಿಸುತ್ತದೆ. ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಯಂತ್ರಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಕೆಎಸ್‌‍ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಂಡಕ್ಟರ್‌ಗಳು ಆಗಮನ ಮತ್ತು ನಿರ್ಗಮನ ನಿಲ್ದಾಣಗಳನ್ನು ಆಯ್ಕೆ ಮಾಡಬೇಕು, ನಂತರ ಪ್ರಯಾಣಿಕರ ಸಂಖ್ಯೆ, ಪಾವತಿ ವಿಧಾನವನ್ನು ಆರಿಸಬೇಕು. ಬಳಿಕ ದರ ಸ್ವಯಂಚಾಲಿತವಾಗಿ ಲೆಕ್ಕ ಹಾಕಲಾಗುತ್ತದೆ. ಪ್ರಯಾಣಿಕರು ಹಣ ಪಾವತಿಸಿದ ನಂತರ ಟಿಕೆಟ್‌ ಪಡೆಯಬಹುದು. ಯಂತ್ರಗಳನ್ನು ಲಾಕ್‌ ಮಾಡಬಹುದು ಮತ್ತು ಅವುಗಳನ್ನು ಕದ್ದರೆ, ಅವುಗಳನ್ನು ಸಾರ್ಟ್‌ಫೋನ್‌ನಂತೆ ಟ್ರ್ಯಾಕ್‌ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ. +ಹ್ಯಾಂಡ್‌ಹೆಲ್ಡ್‌‍ ಇಟಿಎಂಯಲ್ಲಿ ಸಾಧನವಿರಲಿದ್ದು, ಇ-ಪಾಸ್‌‍ಗಳಂತಹ ಸಾರ್ಟ್‌ಕಾರ್ಡ್‌ಗಳನ್ನು ಸ್ಕ್ಯಾನ್‌ ಮಾಡಲು ಮತ್ತು ಮೌಲ್ಯೀಕರಿಸಲು ಕ್ಯಾಮರಾ ಕೂಡ ಇದರಲ್ಲಿರುತ್ತದೆ. ಒಂದು ವೇಳೆ ಸರ್ಕಾರವು ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಸಾರ್ಟ್‌ ಕಾರ್ಡ್‌ಗಳನ್ನು ನೀಡಿದರೆ, ಅದನ್ನೂ ಅಳವಡಿಸಿಕೊಳ್ಳಲು ಈ ಯಂತ್ರಗಳಲ್ಲಿ ಅವಕಾಶ ಇರುತ್ತದೆ. +ಆನ್‌ಲೈನ್‌ ಟಿಕೆಟ್‌ ಕಾಯ್ದಿರಿಸುವಿಕೆ ವ್ಯವಸ್ಥೆಗಳನ್ನು ಟ್ರ್ಯಾಕಿಂಗ್‌ ಮಾಡುವುದು ಮತ್ತು ಖಾಲಿ ಇರುವ ಆಸನಗಳ ಆಧಾರದ ಮೇಲೆ ಟಿಕೆಟ್‌ಗಳನ್ನು ನೀಡುವುದು, ಸ್ಥಳ ಟ್ರ್ಯಾಕಿಂಗ್‌ ಮತ್ತು ಇತರ ಸುಧಾರಿತ ವೈಶಿಷ್ಟ್ಯಗಳಂತಹ ಹಲವು ವೈಶಿಷ್ಟ್ಯಗಳಿವೆ. ಆದರೆ ಅವುಗಳನ್ನು ತಕ್ಷಣವೇ ಸೇರಿಸಲು ಸಾಧ್ಯವಾಗುವುದಿಲ್ಲ. ಹಂತ ಹಂತದಲ್ಲಿ ಎಲ್ಲವನ್ನೂ ಅಳವಡಿಸಿಕೊಳ್ಳಲಾಗುವುದು ಎಂದು ಕೆಎಸ್‌‍ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_115_5.txt b/eesanje/url_46_115_5.txt new file mode 100644 index 0000000000000000000000000000000000000000..60d57408088f3e90a58364746b0cbeafdad3f69d --- /dev/null +++ b/eesanje/url_46_115_5.txt @@ -0,0 +1,6 @@ +ಆಪ್ತ ಸಹಾಯಕನಿಂದಲೇ ಅನ್ನದಾನೇಶ್ವರ ಮಠದ ಸ್ವಾಮೀಜಿಯ ಬರ್ಬರ ಹತ್ಯೆ +ಮೈಸೂರು, ಜೂ.10-ಆಪ್ತ ಸಹಾಯಕನೇ ಅನ್ನದಾನೇಶ್ವರ ಮಠದ ಸ್ವಾಮೀಜಿಯವರನ್ನು ಬರ್ಭರವಾಗಿ ಹತ್ಯೆ ಮಾಡಿರುವ ಘಟನೆ ನಜರ್‌ಬಾದ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶಿವಾನಂದ ಸ್ವಾಮೀಜಿ(90) ಕೊಲೆಯಾದ ಹಿರಿಯ ಶ್ರೀಗಳು. +ಕಳೆದ ಹಲವಾರು ವರ್ಷಗಳಿಂದ ರವಿ ಎಂಬಾತ ಸ್ವಾಮೀಜಿಯವರ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಶ್ರೀಗಳ ಕೆಲಸ ಕಾರ್ಯಗಳಿಗೆ ನೆರವಾಗಿದ್ದ ಸಿದ್ದಾರ್ಥ ನಗರದಲ್ಲಿರುವ ಮಠದಲ್ಲೇ ನೆಲೆಸಿದ್ದು, ಶ್ರೀಗಳ ಯೋಗಕ್ಷೇಮ, ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದ. +ಆದರೆ ಇದ್ದಕ್ಕಿದ್ದಂತೆ ಶ್ರೀಗಳನ್ನು ಕೊಲೆ ಮಾಡಿರುವುದು ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿಬೀಳಿಸಿದೆ. ಶ್ರೀಗಳು ಮಲಗಿದ್ದಾಗ ಕೋಣೆಗೆ ಬಂದ ರವಿ(60) ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. +ಶ್ರೀಗಳಿಗೆ ಈಗಾಗಲೇ ವಯಸ್ಸಾಗಿದ್ದು, ಇಂತಹ ಸಮಯದಲ್ಲಿ ಯಾಕೆ ಕೊಲೆ ಮಾಡಿದ್ದಾನೆ. ಇದರ ಹಿಂದಿರುವ ಉದ್ದೇಶವೇನು ಎಂಬುವುದು ತನಿಖೆಯಿಂದ ತಿಳಿದುಬರಬೇಕಿದೆ.ಸುದ್ದಿ ತಿಳಿಯುತ್ತಿದ್ದಂತೆ ನಜರ್‌ಬಾದ್‌ ಠಾಣೆ ಪೊಲೀಸರು ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆಗಾಗಿ ಬಲೆಬೀಸಿದ್ದಾರೆ. +ಶ್ರೀಗಳಿಗೆ ನಗರದಲ್ಲಿ ಅಪಾರ ಭಕ್ತ ಸಮೂಹವಿದ್ದು, ಈ ಕೃತ್ಯದಿಂದ ಬೆಚ್ಚಿಬಿದ್ದಿದ್ದಾರೆ. ಆತಂಕದಿಂದ ಮಠಕ್ಕೆ ಭಕ್ತರ ದಂಡೆ ಹರಿದುಬಂದಿತ್ತು. \ No newline at end of file diff --git a/eesanje/url_46_115_6.txt b/eesanje/url_46_115_6.txt new file mode 100644 index 0000000000000000000000000000000000000000..b2f381e7749001d9fdae8a8e3eb5fee91fa82418 --- /dev/null +++ b/eesanje/url_46_115_6.txt @@ -0,0 +1,11 @@ +ಪ್ರಭಾವಿ ರಾಜಕೀಯ ವ್ಯಕ್ತಿಯೊಬ್ಬರ ಕಿರುಕುಳ : ಸಾಮೂಹಿಕ ಆತಹತ್ಯೆಗೆ ಯತ್ನಿಸಿದ ಅಪ್ರಾಪ್ತೆ ಮತ್ತು ಕುಟುಂಬ +ಬೆಂಗಳೂರು,ಜೂ.10-ಹುಬ್ಬಳ್ಳಿ-ಧಾರವಾಡದಲ್ಲಿ ಇಬ್ಬರು ಯುವತಿಯರ ಕೊಲೆ ಪ್ರಕರಣದ ಕಹಿನೆನಪು ಮಾಸುವ ಮುನ್ನವೇ ರಾಜಕೀಯ ಪ್ರಭಾವಿ ವ್ಯಕ್ತಿಯೊಬ್ಬರ ಕಿರುಕುಳಕ್ಕೆ ಬೇಸತ್ತು ಅಪ್ರಾಪ್ತೆ ಮತ್ತು ಆಕೆಯ ಕುಟುಂಬದ ಸದಸ್ಯರು ಸಾಮೂಹಿಕ ಆತಹತ್ಯೆಗೆ ಯತ್ನಿಸಿರುವುದು ಸಾರ್ವಜನಿಕರ ಆಕ್ರೋಶವನ್ನು ಹೆಚ್ಚಿಸಿದೆ. +17 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ 44 ವರ್ಷದ ಲೋಕೇಶ್‌ ಅಲಿಯಾಸ್‌‍ ಯುಗ ಫೋಟೊಗಳನ್ನು ತೆಗೆದುಕೊಂಡಿದ್ದು ಅದನ್ನು ಅಶ್ಲೀಲ ವಿಡಿಯೋ ಮಾಡಿ ವೈರಲ್‌ ಮಾಡುವುದಾಗಿ ಬೆದರಿಸಿದ್ದ ಎಂಬ ಆರೋಪ ಕೇಳಿಬಂದಿದೆ. +ಅಷ್ಟಕ್ಕೇ ಸುಮನಾಗದ ಬಾಲಕಿ ಅಪ್ರಾಪ್ತೆಯ ತಾಯಿಯ ಕುರಿತು ಅವಹೇಳನಕಾರಿಯಾಗಿ ನಡೆದುಕೊಂಡಿದ್ದ ಎನ್ನಲಾಗಿದೆ. ಈತನ ಕಿರುಕುಳದಿಂದ ಬೇಸತ್ತ ಕುಟುಂಬದ ಸದಸ್ಯರು ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ. +ಆರೋಪಿ ಕಿರುಕುಳ ನೀಡಿದ ಸಾಕ್ಷ್ಯಗಳಿದ್ದರೆ ತೋರಿಸಿ ಎಂದು ಪೊಲೀಸರು ಕುಟುಂಬದ ಸದಸ್ಯರನ್ನೇ ನಿಂದಿಸಿದ್ದು, ಅಪಮಾನಕಾರಿಯಾಗಿ ನಡೆದುಕೊಂಡರು ಎಂಬ ಆರೋಪಗಳಿವೆ. ಮೂರು ದಿನ ಠಾಣೆಗೆ ಅಲೆದರೂ ಎಫ್‌ಐಆರ್‌ ದಾಖಲಿಸಲಿಲ್ಲ. ಇತ್ತ ಆರೋಪಿ ಅಪ್ರಾಪ್ತೆಯ ಮನೆಬಾಗಿಲಿಗೆ ಬಂದು ಗಲಾಟೆ ಮಾಡಿದ್ದ. +ಒಂದೆಡೆ ನ್ಯಾಯ ಸಿಗುತ್ತಿಲ್ಲ, ಮತ್ತೊಂದೆಡೆ ಮರ್ಯಾದೆಗೆ ಕುಂದಾಗುತ್ತದೆ ಎಂದು ನೊಂದುಕೊಂಡ ಕುಟುಂಬ ಅಸಹಾಯಕ ಸ್ಥಿತಿಯಲ್ಲಿ ಮಲೆಮಾದೇಶ್ವರ ಬೆಟ್ಟಕ್ಕೆ ತೆರಳಿ ಕಾಡುಪ್ರದೇಶದಲ್ಲಿ ವಿಷ ಸೇವಿಸಿ ಆತಹತ್ಯೆಗೆ ಯತ್ನಿಸಿದೆ. +ಅಜ್ಜ ಮಹದೇವನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಥಳೀಯರು ನೋಡಿ ಮೂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಾಯಿ ಮತ್ತು ಮಗಳು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಅಜ್ಜಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. +ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿಸ ಚಂದಗಾಲ ಗ್ರಾಮಸ್ಥರು ದೂರು ನೀಡಿದ್ದು, ಕ್ರಮ ಕೈಗೊಂಡಿಲ್ಲ, ಮೂರು ಬಾರಿ ಠಾಣೆಗೆ ಹೋದರೂ ಸ್ಪಂದಿಸದೆ ಕಿರುಕುಳವಾಗಿರುವುದಕ್ಕೆ ದಾಖಲೆ ಕೊಡಿ ಎಂದು ಪೊಲೀಸರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ, ಇದರಿಂದ ಮನನೊಂದ ನಾಲ್ಕು ಮಂದಿ ಆತಹತ್ಯೆಗೆ ಯತ್ನಿಸಿದ್ದಾರೆ. +ಮೃತಪಟ್ಟ ಮಹದೇವನಾಯ್ಕ ಅವರ ಪಾರ್ಥೀವ ಶರೀರವನ್ನು ಮುಖ್ಯರಸ್ತೆಯಲ್ಲಿ ಗ್ರಾಮಕ್ಕೆ ತರಬಾರದು, ಪೊಲೀಸ್‌‍ ಠಾಣೆ ಬಳಿಯೂ ಬರಬಾರದು ಎಂದು ತಡೆಯೊಡ್ಡಲಾಗಿದೆ ಎಂದು ಗ್ರಾಮದ ಹಿರಿಯರು ಆರೋಪಿಸಿದ್ದಾರೆ.ತಾವು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ದೂರು ಸ್ವೀಕರಿಸಿ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಕಿಡಿಕಾರಿದರು. +ಅಮಾನತು:ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳು ಕೆ.ಆರ್‌.ನಗರ ಇನ್‌್ಸಪೆಕ್ಟರ್‌ ಪಿ.ಪಿ.ಸಂತೋಷ್‌ ಮತ್ತು ಹೆಡ್‌ ಕಾನ್‌್ಸಟೇಬಲ್‌ರನ್ನು ಅಮಾನತುಗೊಳಿಸಲಾಗಿದೆ. ತಡವಾಗಿ ಎಚ್ಚೆತ್ತುಕೊಂಡ ಪೊಲೀಸರು ಆರೋಪಿ ಲೋಕೇಶ್‌ನನ್ನು ಬಂಧಿಸಿದ್ದಾರೆ. ಈ ಹಿಂದೆ ಹುಬ್ಬಳ್ಳಿ-ಧಾರವಾಡದಲ್ಲಿ ಅಂಜಲಿ ಅಂಬೀಗರ್‌ ಎಂಬ ಯುವತಿಗೆ ಗಿರೀಶ್‌ ಎಂಬಾತ ಕಿರುಕುಳ ನೀಡುತ್ತಿದ್ದ. +ಆಕೆಯ ಕುಟುಂಬ ಠಾಣೆಗೆ ದೂರು ನೀಡಿದರೂ ಕ್ರಮ ಕೈಗೊಂಡಿರಲಿಲ್ಲ. ಕೊನೆಗೆ ಆರೋಪಿ ಯುವತಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆ ಮಾಡಿದ್ದ. ಅದರ ನಂತರವೂ ಎಚ್ಚೆತ್ತುಕೊಳ್ಳದ ಕೆ.ಆರ್‌.ನಗರ ಪೊಲೀಸರ ನಿರ್ಲಕ್ಷ್ಯದಿಂದ ಇಡೀ ಕುಟುಂಬವೊಂದು ಪ್ರಾಣಾಂತಿಕ ಸ್ಥಿತಿಗೆ ತಲುಪಿದೆ. \ No newline at end of file diff --git a/eesanje/url_46_115_7.txt b/eesanje/url_46_115_7.txt new file mode 100644 index 0000000000000000000000000000000000000000..738be2dbd757e01085e53435a80c58580b1fbc0a --- /dev/null +++ b/eesanje/url_46_115_7.txt @@ -0,0 +1,4 @@ +ಮೊದಲ ನಿರ್ಧಾರದಲ್ಲಿ ರೈತರ ಬಗ್ಗೆ ಬದ್ಧತೆ ಪ್ರದರ್ಶಿಸಿದ ಪ್ರಧಾನಿ ಮೋದಿಗೆ ಹೆಚ್‌ಡಿಕೆ ಧನ್ಯವಾದ +ಬೆಂಗಳೂರು,ಜೂ.10-ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಅನ್ನದಾತರ ಪರವಾಗಿ ಮಹತ್ವದ ನಿರ್ಧಾರ ಕೈಗೊಳ್ಳುವುದಕ್ಕೆ ಸಮಸ್ತ ರೈತಬಂಧುಗಳ ಪರವಾಗಿ ಧನ್ಯವಾದಗಳನ್ನು ಕೇಂದ್ರದ ನೂತನ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದಾರೆ. +3ನೇ ಅವಧಿಗೆ ಭಾರತದ ಪ್ರಧಾನಮಂತ್ರಿಗಳಾಗಿ ಪ್ರಮಾಣ ಸ್ವೀಕರಿಸಿದ ಮರುದಿನವೇ ಅನ್ನದಾತರ ಪರವಾಗಿ ಮಹತ್ವದ ನಿರ್ಧಾರ ಕೈಗೊಂಡ ಸನ್ಮಾನ್ಯ ಶ್ರೀ@narendramodiಅವರಿಗೆ ಸಮಸ್ತ ರೈತ ಬಂಧುಗಳ ಪರವಾಗಿ ಅನಂತ ಧನ್ಯವಾದಗಳು. @' 3rd …../ +ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಧಾನಮಂತ್ರಿಗಳ ಕಿಸಾನ್‌ ನಿಧಿಯಿಂದ 9.3 ಕೋಟಿ ರೈತರುಗಳಿಗೆ 20 ಸಾವಿರ ಕೋಟಿ ರೂ.ಗಳ ಬಿಡುಗಡೆಗೆ ತೀರ್ಮಾನ ಕೈಗೊಂಡಿದ್ದಾರೆ. ಇದು ಎನ್‌ಡಿಎ ಸರ್ಕಾರಕ್ಕೆ ನಮ್ಮ ರೈತರ ಬಗ್ಗೆ ಇರುವ ಬದ್ಧತೆಯನ್ನು ತೋರುತ್ತದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_115_8.txt b/eesanje/url_46_115_8.txt new file mode 100644 index 0000000000000000000000000000000000000000..39c181095bf4528174fa7a52b7646696c9bf6f0e --- /dev/null +++ b/eesanje/url_46_115_8.txt @@ -0,0 +1,5 @@ +ಮಂಗಳೂರು : ಮೋದಿ ಪ್ರಮಾಣವಚನ ವಿಜಯೋತ್ಸವ ವೇಳೆ ಇಬ್ಬರಿಗೆ ಚೂರಿ ಇರಿತ +ಮಂಗಳೂರು, ಜೂ.10-ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಜಯೋತ್ಸವ ಆಚರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಸುಮಾರು 20 ರಿಂದ 25 ಮಂದಿಯ ಗುಂಪೊಂದು ಹಲ್ಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಕಳೆದ ರಾತ್ರಿ ನಗರದ ಮುಡಿಪು ಸಮೀಪದ ಬೋಳಿಯಾರ್‌ನಲ್ಲಿ ನಡೆದಿದೆ. +ಘಟನೆಯಲ್ಲಿ ಹರೀಶ್‌ (40) ಹಾಗೂ ನಂದಕುಮಾರ್‌ ಎಂಬುವವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಕೃಷ್ಣಕುಮಾರ್‌ ಎಂಬುವವರಿಗೆ ಹಲ್ಲೆಯಿಂದ ಗಾಯಗಳಾಗಿದ್ದು, ಅವರಿಗೆ ಇಲ್ಲಿನ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. +ಸುಮಾರು ನಾಲ್ಕೈದು ಮಂದಿ ಬಿಜೆಪಿಗೆ ಜೈಕಾರ ಕೂಗಿ ವಿಜಯೋತ್ಸವ ಆಚರಿಸುತ್ತಿದ್ದರು. ಈ ವೇಳೆ ಕೆಲವರು ಅವರ ಬಳಿ ಬಂದು ಜಗಳ ತೆಗೆದಿದ್ದಾರೆ. ನಂತರ ಕೆಲವರನ್ನು ದೂರವಾಣಿ ಮೂಲಕ ಕರೆಸಿದ್ದಾರೆ. ಅಪಾಯ ಅರಿತ ಯುವಕರು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದರೂ ಅವರನ್ನು ಹಿಂಬಾಲಿಸಿ ಚೂರಿಯಿಂದ ಇರಿಯಲಾಗಿದೆ. +ಒಬ್ಬ ಪ್ರಾಣಾಪಾಯದಿಂದ ಪಾರಾಗಿದ್ದು, ಮತ್ತೊಬ್ಬರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೋಣಾಂಜೆ ಪೊಲೀಸ್‌‍ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_115_9.txt b/eesanje/url_46_115_9.txt new file mode 100644 index 0000000000000000000000000000000000000000..0eb646ee9c59629b1d05ddf9db95d2f7ab877ab4 --- /dev/null +++ b/eesanje/url_46_115_9.txt @@ -0,0 +1,7 @@ +ಬಿಬಿಎಂಪಿ ಚುನಾವಣೆ ಮೇಲೆ ಸಿಎಂ-ಡಿಸಿಎಂ ಕಣ್ಣು, ಶಾಸಕರ ಜೊತೆ ಸಮಾಲೋಚನೆ +ಬೆಂಗಳೂರು,ಜೂ.10-ಲೋಕಸಭೆ, ವಿಧಾನಪರಿಷತ್‌ ಸೇರಿದಂತೆ ಎಲ್ಲಾ ಚುನಾವಣೆಗಳನ್ನೂ ಮುಗಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿದ್ದು ಇಂದು ಪಕ್ಷದ ಶಾಸಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. +ಸಂಜೆ ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಬೆಂಗಳೂರಿನ ವ್ಯಾಪ್ತಿಯ 3 ಲೋಕಸಭಾ ಕ್ಷೇತ್ರಗಳಲ್ಲಿನ ಸೋಲಿನ ಬಗ್ಗೆಯೂ ಪರಾಮರ್ಶೆ ನಡೆಯಲಿದೆ. ಈ ಬಾರಿ ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆಲ್ಲುವ ವಿಶ್ವಾಸವಿತ್ತು. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರದ ಮತದಾರರು ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿದರು. ಆದರೆ ಈಗ ಲೋಕಸಭಾ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲೂ ಗೆಲ್ಲಲು ಸಾಧ್ಯವಾಗದೇ ಇರುವುದು ಏಕೆ? ಎಂಬ ಪ್ರಶ್ನೆ ಕಾಂಗ್ರೆಸ್‌‍ ಅನ್ನು ಕಾಡುತ್ತಿದೆ. ಹೀಗಾಗಿ ಸೋಲಿನ ಕಾರಣಗಳ ಬಗ್ಗೆ ಪಕ್ಷದ ಶಾಸಕರ ಜೊತೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. +ಇತ್ತೀಚೆಗೆ ಬೇಸಿಗೆಯ ಕಾರಣಕ್ಕೆ ಕುಡಿಯುವ ನೀರಿನ ಅಭಾವವನ್ನು ನಗರದ ಜನತೆ ಎದುರಿಸಿದರು. ಅದರ ಬೆನ್ನಲ್ಲೇ ಮುಂಗಾರು ಮಳೆ ಚುರುಕುಗೊಂಡಿದ್ದು, ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾದರೂ ನಗರ ಜಲಾವೃತಗೊಳ್ಳುತ್ತಿದ್ದು, ಮನೆಗಳಿಗೆ ನೀರು ನುಗ್ಗುತ್ತಿದೆ, ರಸ್ತೆಗಳಲ್ಲಿ, ಸೇತುವೆಗಳಲ್ಲಿ ನೀರು ನಿಂತು ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ತೆಗೆದುಕೊಳ್ಳಬೇಕಾದ ಶಾಶ್ವತ ಪರಿಹಾರದ ಕಾರ್ಯಗಳ ಬಗ್ಗೆಯೂ ಪಕ್ಷದ ಶಾಸಕರೊಂದಿಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. +ಕಳೆದ 5 ವರ್ಷಗಳಿಂದಲೂ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಲ್ಲದೆ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂದು ಸಾರ್ವಜನಿಕ ವಲಯದಿಂದ ತೀವ್ರ ಒತ್ತಡ ಕೇಳಿಬರುತ್ತಿದೆ.ಮುಖ್ಯಮಂತ್ರಿಯವರು ಚುನಾವಣೆ ನಡೆಸಬೇಕು ಎಂಬ ಉಮೇದಿನಲ್ಲಿದ್ದಾರೆ. ಆದರೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಲು ಸುಪ್ರೀಂಕೋರ್ಟ್‌ ನಿರ್ಬಂಧ ವಿಧಿಸಿರುವುದರಿಂದ ಚುನಾವಣಾ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ. +ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಬದಿಗಿರಿಸಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿಲ್ಲ. ಮೀಸಲಾತಿಯ ಮರು ಅನುಷ್ಠಾನದ ಅಧ್ಯಯನಕ್ಕಾಗಿ ಸಮಿತಿ ರಚಿಸಲಾಗಿದೆ.ಈ ಎಲ್ಲಾ ಅಂಶಗಳನ್ನೂ ಪರಿಗಣಿಸಿ ಬಿಬಿಎಂಪಿಗೆ ಚುನಾವಣೆ ನಡೆಸಬೇಕು ಎಂಬ ಚರ್ಚೆ ನಡೆಯುತ್ತಿದೆ. \ No newline at end of file diff --git a/eesanje/url_46_116_1.txt b/eesanje/url_46_116_1.txt new file mode 100644 index 0000000000000000000000000000000000000000..f0144c3693fa2b21e76737444633c9618b201edd --- /dev/null +++ b/eesanje/url_46_116_1.txt @@ -0,0 +1,4 @@ +ನಿವೃತ್ತ ನ್ಯಾ. ನಾಗಮೋಹನ್‌ದಾಸ್‌ಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ +ಬೆಂಗಳೂರು, ಜೂ.9- ಕನ್ನಡ ಶಕ್ತಿ ಕೇಂದ್ರ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಪದಕ, ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. +ನಾಳೆ ಸಂಜೆ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವರಿಗೆ ನ್ಯಾಯಮೂರ್ತಿ ಡಾ.ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. +ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜಪ್ಪ ದಳವಾಯಿ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ಕಸಾಪ ನಿಕಟ ಪೂರ್ವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ತಿಳಿಸಿದ್ದಾರೆ. \ No newline at end of file diff --git a/eesanje/url_46_116_10.txt b/eesanje/url_46_116_10.txt new file mode 100644 index 0000000000000000000000000000000000000000..aae4d2dbfa2ff27635787f20655e1c9d252559c4 --- /dev/null +++ b/eesanje/url_46_116_10.txt @@ -0,0 +1,10 @@ +ಮೋದಿ ದುರ್ಬಲ ಮೈತ್ರಿ ಸರ್ಕಾರ 5 ವರ್ಷ ಪೂರೈಸುವುದು ಕಷ್ಟ : ಎಂ.ಬಿ.ಪಾಟೀಲ್‌ +ಬೆಂಗಳೂರು, ಜೂ.8-ಪ್ರಧಾನಮಂತ್ರಿ ನರೇಂದ್ರಮೋದಿ ಮೈತ್ರಿ ಸರ್ಕಾರ ದುರ್ಬಲರಾಗಿದ್ದು, ಐದು ವರ್ಷ ಪೂರ್ಣಾವಧಿ ಸರ್ಕಾರ ನಡೆಯುವುದು ಕಷ್ಟಸಾಧ್ಯವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರು, ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್‌ಕುಮಾರ್‌ ಅವರ ಮೇಲೆ ಅವಲಂಬಿತರಾಗಬೇಕಿದೆ. +ನಿತೀಶ್‌ಕುಮಾರ್‌ ಅವರು ಯಾವಾಗ, ಯಾವ ಕ್ಷಣದಲ್ಲಿ ಬೇಕಾದರೂ ತಮ ನಿಲುವನ್ನು ಬದಲಾವಣೆ ಮಾಡುತ್ತಿರುತ್ತಾರೆ. ಹಾಗಾಗಿ ಸರ್ಕಾರದ ಅವಧಿ ಪೂರ್ಣಗೊಳಿಸುವುದು ಸುಲಭದ ವಿಚಾರ ಅಲ್ಲ ಎಂದರು. +ರಾಜಸ್ಥಾನ, ಮಹಾರಾಷ್ಟ್ರ, ಬಿಹಾರ ಸೇರಿದಂತೆ ಹಲವು ಕಡೆ ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌‍ 9 ಸ್ಥಾನ ಪಡೆದುಕೊಂಡಿದ್ದು, ಇನ್ನೂ 5 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಯಿದ್ದರೂ ಸೋಲು ಕಂಡಿದ್ದೇವೆ. ಅದಕ್ಕೆ ಕಾರಣಗಳೇನು ಎಂಬುದು ಎಲ್ಲರಿಗೂ ಗೊತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. +ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಚಿವ ಶರಣ ಪ್ರಕಾಶ ಪಾಟೀಲರ ಹೆಸರು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸದ ಅವರು, ಅವರೊಬ್ಬ ಅಪ್ಪಟ ಪ್ರಾಮಾಣಿಕ ವ್ಯಕ್ತಿ. ಸ್ವಚ್ಛ ವ್ಯಕ್ತಿತ್ವ ಹೊಂದಿದ್ದಾರೆ ಎಂಬುದನ್ನು ನಾವು ಗರ್ವದಿಂದ ಹೇಳುತ್ತೇವೆ. ಕ್ರಿಯಾಶೀಲ ಸಚಿವರಾಗಿರುವ ಶರಣಪ್ರಕಾಶ್‌ ಪಾಟೀಲರು ಸಾಕ್ಷ್ಯ ನಾಶಪಡಿಸುವ ಮತ್ತು ಭ್ರಷ್ಟಾಚಾರ ನಡೆಸುವ ವ್ಯಕ್ತಿ ಅಲ್ಲ ಎಂದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಅಪ್ಪಿತಪ್ಪಿಯೂ ಅವರ ಹೆಸರನ್ನು ಇದರಲ್ಲಿ ಥಳಕು ಹಾಕಬೇಡಿ ಎಂದರು. +ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದನಾಬ್‌ ಅತ್ಯಂತ ಭ್ರಷ್ಟ ವ್ಯಕ್ತಿ. ಆತ ನಾಳೆ ನನ್ನ ಹೆಸರು ಬರೆಯಬಹುದು. ಆಗಲೂ ಪ್ರಶ್ನೆ ಕೇಳಲು ಸಾಧ್ಯವೇ? ಯಾವುದೋ ಚಾನಲ್‌ ಹೆಸರು ಬರೆದಿಟ್ಟರೆ, ಪ್ರಧಾನಿ ನರೇಂದ್ರ ಮೋದಿಯವರು ಮೌಖಿಕ ಸೂಚನೆ ನೀಡಿದ್ದರು ಎಂದರೆ ಅದನ್ನು ನಂಬಲಾಗುತ್ತದೆಯೇ? ಇದು ಒಂದು ಪಕ್ಷಕ್ಕೆ ಸೀಮಿತವಲ್ಲ. ಯಾವುದೇ ಪಕ್ಷಕ್ಕಾದರೂ ಎಚ್ಚರಿಕೆಯಿಂದ ಮಾತನಾಡಬೇಕು. ಸಿಕ್ಕಿಬಿದ್ದ ಭ್ರಷ್ಟರ ಮಾತುಗಳನ್ನು ನಂಬುವಾಗ ಯೋಚಿಸಬೇಕಾಗುತ್ತದೆ ಎಂದು ಹೇಳಿದರು. +ಬಹಳಷ್ಟು ನಿಗಮಗಳಲ್ಲಿ ಈ ರೀತಿ ಹಣ ದುರುಪಯೋಗ ಮಾಡಿಕೊಳ್ಳುವ ವ್ಯಕ್ತಿಗಳಿರುತ್ತಾರೆ. ನಮ ಇಲಾಖೆಯಲ್ಲೂ ಬಹಳಷ್ಟು ಲೋಪಗಳನ್ನು ನಾನೇ ಕಂಡುಹಿಡಿದಿದ್ದೇನೆ. ಅದು ಭ್ರಷ್ಟಾಚಾರ ಅಲ್ಲದೇ ಇರಬಹುದು, ಆದರೆ ಲೋಪಗಳಂತೂ ನಡೆದಿವೆ ಎಂದು ಹೇಳುವ ಮೂಲಕ ಸಚಿವ ಶರಣಪ್ರಕಾಶ್‌ ಪಾಟೀಲ್‌ ಪರವಾಗಿ ಬ್ಯಾಟಿಂಗ್‌ ಮಾಡಿದರು.ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಹಿನ್ನಡೆಯಾಗಿರುವ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ರಾಹುಲ್‌ಗಾಂಧಿ ಚರ್ಚೆ ನಡೆಸಿದ್ದಾರೆ. +ಜಾತಿ ಸಮೀಕರಣವಾಗಿರುವ ಬಗ್ಗೆ ರಣದೀಪ್‌ ಸಿಂಗ್‌ ಸುರ್ಜೇವಾಲ ಪ್ರಾಥಮಿಕ ವಿವರಣೆ ನೀಡಿದರು. ವಿಸ್ತೃತ ವರದಿ ತಯಾರಿಸುವಂತೆ ಹೈಕಮಾಂಡ್‌ ನಾಯಕರು ಸೂಚಿಸಿದ್ದಾರೆ ಎಂದರು. ರಾಜಕೀಯ ಭವಿಷ್ಯ ದೃಷ್ಟಿಯಿಂದಾಗಿ ಸೋಲಿನ ಆತಾವಲೋಕನ ನಡೆಸಲಾಗುವುದು, ಸೋಲುಗಳಿಗೆ ಕಾರಣ, ಲೋಪಗಳ ಬಗ್ಗೆ ಕಾರಣವನ್ನು ಪತ್ತೆ ಹಚ್ಚಿ ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಲು ಪ್ರಯತ್ನ ನಡೆಸಲಾಗುವುದು ಎಂದರು. +ಲೋಕಸಭೆ ಚುನಾವಣಾ ಹಿನ್ನೆಲೆಯಲ್ಲಿ ಸಚಿವರ, ಶಾಸಕರ ಮೌಲ್ಯಮಾಪನ ನಡೆಸುವ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಹೇಳಿದ ಸಚಿವರು, ಕಾಂಗ್ರೆಸ್‌‍ ಪಕ್ಷಕ್ಕೆ ಸೋಲಾಗಿದೆ ಎಂಬ ಕಾರಣಕ್ಕೆ ಯಾವುದೇ ಒಂದು ಸಮುದಾಯಕ್ಕೆ ಅದನ್ನು ಹೊಣೆಯನ್ನಾಗಿಸಲು ಸಾಧ್ಯವಿಲ್ಲ. ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಗೆದ್ದಿದೆ. ಲಿಂಗಾಯತ ಸಮುದಾಯ ಬೆಂಬಲ ನೀಡಿದ್ದಕ್ಕಾಗಿಯೇ ಅಲ್ಲಿ ಗೆಲ್ಲಲು ಸಾಧ್ಯವಾಗಿದೆ. ಉಳಿದ ಕಡೆ ಹೆಚ್ಚು ಕಮಿ ಆಗಿರುವ ಬಗ್ಗೆ ಚರ್ಚೆಯಾಗಲಿದೆ ಎಂದು ಹೇಳಿದರು. +ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರ ಮಹಾರಾಷ್ಟ್ರದ ಮಾದರಿಯಲ್ಲೇ ಪತನಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದ ಅಲ್ಲಿನ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆ ನೀಡಿದ್ದರು. ಆದರೆ ಮಹಾರಾಷ್ಟ್ರದಲ್ಲೇ ಅವರಿಗೆ ಜನಬೆಂಬಲ ಸಿಕ್ಕಿಲ್ಲ. ಸಾಕಷ್ಟು ಕ್ಷೇತ್ರಗಳಲ್ಲಿ ಸೋಲು ಕಂಡಿದ್ದಾರೆ ಎಂದರು. \ No newline at end of file diff --git a/eesanje/url_46_116_11.txt b/eesanje/url_46_116_11.txt new file mode 100644 index 0000000000000000000000000000000000000000..3538087e97993235044ce75449137a12f20b53e4 --- /dev/null +++ b/eesanje/url_46_116_11.txt @@ -0,0 +1,4 @@ +ಸ್ಥಳ ಮಹಜರ್‌ಗಾಗಿ ಪ್ರಜ್ವಲ್‌ ರೇವಣ್ಣನನ್ನು ಹೊಳೆನರಸೀಪುರ ಕರೆತಂದ ಎಸ್‌‍ಐಟಿ ತಂಡ +ಹಾಸನ,ಜೂ.8-ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಸ್ಥಳ ಮಹಜರ್‌ಗಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದ ಚೆನ್ನಾಂಬಿಕಾ ನಿವೇಶನಕ್ಕೆ ಕರೆತಂದಿದ್ದು ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. +ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್‌ರೇವಣ್ಣ ಕರೆತಂದ ಎಸ್‌‍ಐಟಿ, ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ವಾಹನದಲ್ಲಿ ನಿವಾಸಕ್ಕೆ ಕರೆದೊಯ್ಯಿತು.ಪ್ರಜ್ವಲ್‌ ಮೇಲಿನ ಪ್ರಕರಣಗಳ ಘಟನಾ ಸ್ಥಳಗಳ ಮಹಜರ್‌ಗಾಗಿ ಎಸ್‌‍ಐಟಿ ಅವರನ್ನು ಜಿಲ್ಲೆಗೆ ಕರೆತಂದಿದ್ದು, ಮೊದಲು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಪ್ರಕ್ರಿಯೆ ನಡೆಯಲಿದೆ. +ಹೀಗಾಗಿ ಎಎಸ್‌‍ಪಿ ವೆಂಕಟೇಶ್‌ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಏರ್ಪಡಿಸಲಾಗಿದೆ.ಮತದಾನ ಮುಕ್ತಾಯಗೊಂಡ ದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್‌ ರೇವಣ್ಣ ಅವರನ್ನು 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ವಿಶೇಷ ತಂಡ ಕರೆತಂದಿದೆ. \ No newline at end of file diff --git a/eesanje/url_46_116_12.txt b/eesanje/url_46_116_12.txt new file mode 100644 index 0000000000000000000000000000000000000000..51118bdeead6ba027cd53ef2a89a112f7b0f2e4b --- /dev/null +++ b/eesanje/url_46_116_12.txt @@ -0,0 +1,12 @@ +ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಯಾರಿಗೆ, ಎಷ್ಟು ಸಚಿವ ಸ್ಥಾನ..? +ಬೆಂಗಳೂರು,ಜೂ.8– ಪ್ರಧಾನಿ ನರೇಂದ್ರಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದರೂ ಕರ್ನಾಟಕದಿಂದ ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಗುಟ್ಟು ಈಗಲೂ ಗುಟ್ಟಾಗಿಯೇ ಉಳಿದಿದೆ. ಭಾನುವಾರ ರಾತ್ರಿ7.15ಕ್ಕೆ ಮೋದಿಯವರು ಪ್ರಧಾನಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಕರ್ನಾಟಕದಿಂದ ಈ ಬಾರಿ ಕೇಂದ್ರದಲ್ಲಿ ಯಾರಿಗೆ ಸಚಿವ ಸ್ಥಾನ ಎಂಬುದು ಈ ಕ್ಷಣದವರೆಗೂ ಯಾರಿಗೂ ತಿಳಿಯದಿರುವುದು ಗೊಂದಲಕ್ಕೆ ಕಾರಣವಾಗಿದೆ. +28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ 19 ಕ್ಷೇತ್ರಗಳನ್ನು ಗೆದ್ದಿದೆ. ಕೇಂದ್ರದಲ್ಲಿ ರಾಜ್ಯಕ್ಕೆ ಪ್ರತಿ ಬಾರಿ ಸಂಪುಟದಲ್ಲಿ ಎರಡು ಸಂಪುಟ ದರ್ಜೆ ಹಾಗೂ 2-3 ರಾಜ್ಯ ಖಾತೆಗಳು ಲಭಿಸುತ್ತಿದ್ದವು. +ಈ ಬಾರಿ ಮೋದಿ ಸಂಪುಟದಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಊಹೆಗೂ ನಿಲುಕದ ಯಕ್ಷ ಪ್ರಶ್ನೆಯಾಗಿದೆ. ಸದ್ಯ ಎಲ್ಲಾ ನೂತನ ಸಂಸದರು ದೆಹಲಿಗೆ ದೌಡಾಯಿಸಿದ್ದರೂ ಪ್ರಧಾನಿ ಕಾರ್ಯಾಲಯದಿಂದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೂರವಾಣಿ ಕರೆ ಯಾರಿಗೂ ಬಂದಿಲ್ಲ ಎಂದು ಗೊತ್ತಾಗಿದೆ. +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಳೇ ಮೈಸೂರು ಭಾಗದಲ್ಲಿಯಾವ ರೀತಿಯಲ್ಲಿ ಬೆಂಬಲ ಸಿಕ್ಕಿದೆಯೋ, ಅಷ್ಟೇ ಬೆಂಬಲ ಕಿತ್ತೂರ ಕರ್ನಾಟಕದಲ್ಲಿಯೂ ದೊರೆತಿದೆ. ಈ ಭಾಗದ ಏಳು ಲೋಕಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅಲ್ಲದೇ ಆಯ್ಕೆಯಾದವರಲ್ಲಿ ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ವಿಧಾನಸಭೆ ಸ್ಪೀಕರ್‌ಗಳು, 5ರಿಂದ 7 ಬಾರಿ ಸಂಸದರಾದ ಘಟನುಘಟಿಗಳಿದ್ದಾರೆ. +ರಾಜ್ಯದಲ್ಲಿ ಕಾಂಗ್ರೆಸ್‌‍ ಸರಕಾರ ಅಸ್ತಿತ್ವದಲ್ಲಿ ಇರುವುದರಿಂದ ಇನ್ನೂ ನಾಲ್ಕು ವರ್ಷ ಬಿಜೆಪಿ ಶಾಸಕರಿಗೆ ಯಾವುದೇ ಅಧಿಕಾರವಿಲ್ಲ. ಸಂಸದರಾದರೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗಬಹುದೆಂಬ ಮಹತ್ವಕಾಂಕ್ಷೆಯಿಂದಲೇ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ ಬೊಮಾಯಿ ಹಾವೇರಿ ಲೋಕಸಭೆಗೆ ಟಿಕೆಟ್‌ ಪಡೆದು ಪ್ರಥಮ ಬಾರಿಗೆ ಸಂಸತ್‌ಗೆ ಆಯ್ಕೆಯಾಗಿದ್ದಾರೆ. +ಇನ್ನು ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸಹ ಮೊದಲ ಬಾರಿ ಸಂಸತ್‌ ಪ್ರವೇಶಿಸುವ ಮೂಲಕ ರಾಜಕೀಯ ಮರು ಹುಟ್ಟು ಪಡೆದಿದ್ದಾರೆ. ಮೋದಿಯವರ ಎರಡನೇ ಅವಧಿ ಸರಕಾರದಲ್ಲಿ ಐದು ವರ್ಷ ಯಶಸ್ವಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಪ್ರಹ್ಲಾದ್‌ ಜೋಶಿ ಈಗ 5ನೇ ಬಾರಿ ಆಯ್ಕೆಯಾಗಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.ಇನ್ನು ಸ್ಪೀಕರ್‌ ಆಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಥಮ ಬಾರಿಗೆ, ಪಿ.ಸಿ.ಗದ್ದಿಗೌಡರ 5ನೇ ಬಾರಿಗೆ, ರಮೇಶ ಜಿಗಜಿಣಗಿ 7ನೇ ಬಾರಿಗೆ ಆಯ್ಕೆಯಾಗಿದ್ದಾರೆ. +ಕಿತ್ತೂರ ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗಿರುವ ಎಲ್ಲಸಂಸದರೂ ಹಿರಿಯರು, ಅನುಭವಿಗಳು ಹಾಗೂ ಉನ್ನತ ಸ್ಥಾನಗಳನ್ನು (ಗದ್ದಿಗೌಡರ, ಜಿಗಜಿಣಗಿ ಹೊರತುಪಡಿಸಿ) ಅಲಂಕರಿಸಿದ್ದಾರೆ. ಹೀಗಾಗಿ ಇವರೆಲ್ಲರೂ ಸಚಿವ ಸ್ಥಾನಕ್ಕೆ ಅರ್ಹರೇ. ಹೀಗಾಗಿ ಪೈಪೋಟಿ ಏರ್ಪಟ್ಟಿದೆ. +ಆದರೆ ಕೇವಲ ಹಿರಿತನ, ಅನುಭವದ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಆಗುವುದಿಲ್ಲ. ಜಾತಿ, ಪ್ರಾದೇಶಿಕತೆ ಹಾಗೂ ಪಕ್ಷದಲ್ಲಿ ಅವರಿಗೆ ಇರುವ ಸ್ಥಾನಮಾನ ಕೂಡಾ ಪರಿಗಣಿಸಲ್ಪಡುತ್ತದೆ. +ಕರ್ನಾಟಕಕ್ಕೆ 2-3 ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ಅದರಲ್ಲಿ ಒಂದು ಹಳೇ ಮೈಸೂರ ಭಾಗದಲ್ಲಿಒಕ್ಕಲಿಗರಿಗೆ ಅವಕಾಶ ನೀಡಿದರೆ, ಇನ್ನೊಂದು ಸ್ಥಾನವನ್ನು ಉತ್ತರ ಕರ್ನಾಟಕದ ಲಿಂಗಾಯತರಿಗೆ ಅವಕಾಶ ನೀಡಬೇಕಾಗುತ್ತದೆ. ಆಗ ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್‌ ಹಾಗೂ ಬಸವರಾಜ ಬೊಮಾಯಿ ಇವರಿಬ್ಬರಲ್ಲಿ ಒಬ್ಬರಿಗೆ ಅವಕಾಶ ದೊರೆಯುವ ಸಾಧ್ಯತೆ ಹೆಚ್ಚು. ಒಂದು ವೇಳೆ ರಾಜ್ಯ ಖಾತೆ ನೀಡುವುದಾದರೆ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರಿಗೂ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತದೆ. +2014, 2019ರ ಸೂತ್ರ ಪಾಲಿಸುತ್ತಾ ಎನ್‌ಡಿಎ?:ಇನ್ನು ಬ್ರಾಹಣ ಸಮುದಾಯಕ್ಕೆ ಒಂದು ಅವಕಾಶ ನೀಡಿದರೆ, ಪ್ರಲ್ಹಾದ ಜೋಶಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಇದ್ದಾರೆ. ಇವರಲ್ಲಿಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಈಗಾಗಲೇ ಒಂದು ಅವಧಿಗೆ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿದ್ದಲ್ಲದೇ, ರಾಜಸ್ಥಾನ ಚುನಾವಣಾ ಉಸ್ತುವಾರಿ ಹೊತ್ತು ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಪ್ರಹ್ಲಾದ್‌ ಜೋಶಿ ಅವರಿಗೆ ಹೆಚ್ಚಿನ ಅವಕಾಶಗಳಿವೆ. ಒಂದು ವೇಳೆ ದಲಿತ ಸಮುದಾಯಕ್ಕೆ ಅವಕಾಶ ಸಿಕ್ಕರೆ ವಿಜಯಪುರದ ಸಂಸದ ರಮೇಶ್‌ ಜಿಗಜಿಣಗಿ ಹೆಸರು ಮುಂಚೂಣಿಗೆ ಬರುವ ಸಾಧ್ಯತೆಯಿದೆ. +ಸಚಿವ ಸ್ಥಾನಕ್ಕೆ ಲಾಬಿ:ಜೋಶಿಯವರ ಬೆನ್ನಿಗೆ ಪ್ರಧಾನಿ ಮೋದಿ, ಶಾ ಇದ್ದರೆ, ಬೊಮ್ಮಾಯಿ ಅವರಿಗೆ ಅಮಿತ್‌ ಶಾ, ಜೋಶಿ ಬೆನ್ನಿಗಿದ್ದಾರೆ. ಜಗದೀಶ ಶೆಟ್ಟರ್‌ ಪರ ಮಾಜಿ ಸಿಎಂ ಯಡಿಯೂರಪ್ಪ ಬ್ಯಾಟಿಂಗ್‌ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಯಾರಿಗೆ ಅವಕಾಶ ಸಿಗಲಿದೆ, ಯಾರ ಕೈ ಮೇಲಾಗುತ್ತದೆ ಎಂಬುದಕ್ಕೆ ನಾಳೆಯವರೆಗೂ ಕಾಯಬೇಕಿದೆ. \ No newline at end of file diff --git a/eesanje/url_46_116_2.txt b/eesanje/url_46_116_2.txt new file mode 100644 index 0000000000000000000000000000000000000000..d02807dfd67f807d84135e12c75d81f015575966 --- /dev/null +++ b/eesanje/url_46_116_2.txt @@ -0,0 +1,5 @@ +ಜೆಡಿಎಸ್ ಶಾಸಕರು, ಮುಖಂಡರ ದಂಡೇ ದೆಹಲಿಗೆ +ಬೆಂಗಳೂರು,ಜೂ.9- ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಜೆಡಿಎಸ್ ಪಕ್ಷದ ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸೇರಿದಂತೆ ಪಕ್ಷದ ಮುಖಂಡರ ದಂಡೇ ಇಂದು ದೆಹಲಿಗೆ ತೆರಳಿದೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಜಿ.ಡಿ.ಹರೀಶ್‍ಗೌಡ, ಸ್ವರೂಪ್ ಪ್ರಕಾಶ್, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್‍ಗೌಡ, ವಿಧಾನ ಪರಿಷತ್‍ಗೆ ನೂತನವಾಗಿ ಆಯ್ಕೆಯಾಗಿರುವ ವಿವೇಕಾನಂದ, ಟಿ.ಎನ್.ಜವರಾಯಿಗೌಡರು ಮಾಜಿ ಶಾಸಕ ಅಶ್ವಿನ್, ಪಿರಿಯಾಪಟ್ಟಣ ಮಹದೇವ್ ಅವರು ಸೇರಿದಂತೆ ಪಕ್ಷದ ಹಲವು ಮುಖಂಡರು ಈಗಾಗಲೇ ದೆಹಲಿ ತಲುಪಿದ್ದಾರೆ. +ಇಂದು ಬೆಳಿಗ್ಗೆ ವಿವಿಧ ವಿಮಾನಗಳಲ್ಲಿ ಜೆಡಿಎಸ್ ಮುಖಂಡರು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಲೋಕಸಭಾ ಹಾಗೂ ವಿಧಾನ ಪರಿಷತ್ ಗೆಲುವಿನ ಉತ್ಸಾಹದಲ್ಲಿರುವ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಿರುವುದರಿಂದ ಸಂಭ್ರಮ ಇಮ್ಮಡಿಗೊಂಡಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಿರುವ ಹಾಗೂ ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಿರುವುದರ ಸಂಭ್ರಮ ಆಚರಿಸಲು ದೆಹಲಿಗೆ ಹೋಗಿದ್ದಾರೆ. +ದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲೂ ಸಂಭ್ರಮ ಜೋರಾಗಿದೆ. ಅವರ ನಿವಾಸವನ್ನು ಶೃಂಗಾರಗೊಳಿಸಲಾಗಿದ್ದು, ಹಬ್ಬದ ವಾತಾವರಣ ಕಂಡುಬರುತ್ತಿದೆ. ಪ್ರಮಾಣ ವಚನದಲ್ಲಿ ಭಾಗಿಯಾಗಲು ರಾಜ್ಯದಿಂದ ಹೋಗಿರುವ ಪಕ್ಷದ ಮುಖಂಡರು ಸಹ ದೇವೇಗೌಡರ ನಿವಾಸಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಿವಾಸ ಹಾಗೂ ಅಂಗಳವನ್ನು ವಿಶಿಷ್ಟ ರೀತಿಯಲ್ಲಿ ಸಿಂಗರಿಸಲಾಗಿದೆ. +ದೇವೇಗೌಡರು ಪ್ರಧಾನಿಯಾದ ಬಳಿಕ ಗೌಡರ ಕುಟುಂಬ ಹಾಗೂ ಜೆಡಿಎಸ್‍ನಿಂದ ಯಾರು ಕೇಂದ್ರ ಸಚಿವರಾಗಿರಲಿಲ್ಲ. ಮೊದಲ ಬಾರಿ ಮುಖ್ಯಮಂತ್ರಿಯಾದಾಗಲೂ ಕುಮಾರಸ್ವಾಮಿ ಅವರು, ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರದಲ್ಲೇ ಆಗಿದ್ದರು. ಈಗ ಅದೇ ರೀತಿ ಎನ್‍ಡಿಎ ಮೈತ್ರಿ ಕೂಟದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವರಾಗುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಪಾಳೆಯಲ್ಲಿ ಹಬ್ಬದ ವಾತಾವರಣ ಕಂಡು ಬಂದಿದ್ದು, ಉತ್ಸಾಹದ ಅಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೇಲುತ್ತಿದ್ದಾರೆ. \ No newline at end of file diff --git a/eesanje/url_46_116_3.txt b/eesanje/url_46_116_3.txt new file mode 100644 index 0000000000000000000000000000000000000000..aa037a8917a93ce4cb7ae6376888e3dc204d0df9 --- /dev/null +++ b/eesanje/url_46_116_3.txt @@ -0,0 +1,11 @@ +ಮೋದಿ ಸಂಪುಟದಲ್ಲಿ ಹೆಚ್‌ಡಿಕೆ, ಜೋಶಿ, ಶೋಭಾ, ಸೋಮಣ್ಣ! +ಬೆಂಗಳೂರು,ಜೂ.9- ನರೇಂದ್ರ ಮೋದಿಯವರು ಮೂರನೇ ಅವಧಿಗೆ ಪ್ರಧಾನಿ ಆಗಿ ಅಧಿಕಾರ ಸ್ವೀಕರಿಸುವುದ ರೊಂದಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಇಂದಿನಿಂದ ವಿದ್ಯುಕ್ತವಾಗಿ ಅಧಿಕಾರಕ್ಕೆ ಬರಲಿದೆ.ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆಯುವ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. +ಪಂಡಿತ್ ಜವಹರಲಾಲ್ ನೆಹರೂ ನಂತರ ಸತತವಾಗಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿಯವರು ಪಾತ್ರರಾಗಲಿದ್ದಾರೆ. ಪ್ರಧಾನಿಯವರೊಂದಿಗೆ 30ಕ್ಕೂ ಹೆಚ್ಚು ಸಚಿವರು ಅಧಿಕಾರ ಸ್ವೀಕರಿಸಲಿದ್ದು, 2014 ಹಾಗೂ 2019 ರಲ್ಲಿ ಸ್ವಂತಬಲದ ಮೇಲೆ ಅಧಿಕಾರ ಗದ್ದುಗೆ ನಡೆಸಿದ್ದ ಬಿಜೆಪಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮೈತ್ರಿ ಧರ್ಮವನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. +ಎನ್‍ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಜೆಡಿಎಸ್, ಎಚ್‍ಎಎಂ, ಅಪ್ನಾ ದಳ, ಶಿವಸೇನೆ, ಆರ್‍ಎಲ್‍ಡಿ ಸೇರಿದಂತೆ ಮೈತ್ರಿಪಕ್ಷಗಳಿಗೂ ಸಂಪುಟದಲ್ಲಿ ಸಿಂಹಪಾಲು ಸಿಗಲಿದೆ. ಕೇಂದ್ರದ ಪ್ರಮುಖ ಖಾತೆಗಳಾದ ಗೃಹ, ವಿದೇಶಾಂಗ ವ್ಯವಹಾರ, ಹಣಕಾಸು, ರೈಲ್ವೆ, ಸಾರಿಗೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ ಸೇರಿದಂತೆ ಹಲವು ಖಾತೆಗಳನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆ. ಕರ್ನಾಕಟದಿಂದ ಪ್ರಹ್ಲಾದ್ ಜೋಶಿ-ಧಾರವಾಡ, ಎಚ್.ಡಿ.ಕುಮಾರಸ್ವಾಮಿ-ಮಂಡ್ಯ, ಶೋಭಾ ಕರಂದ್ಲಾಜೆ-ಬೆಂಗಳೂರು ಉತ್ತರ ಅವರುಗಳಿಗೆ ಪ್ರಮಾಣ ವಚನ ಸ್ವೀಕರಿಸಲು ಪ್ರಧಾನಿ ಕಾರ್ಯಾಲಯದಿಂದ ಸೂಚನೆ ಬಂದಿದೆ. +ಆದರೆ ವೀರಶೈವ ಲಿಂಗಾಯತ ಸಮುದಾಯದಿಂದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಅವರ ಹೆಸರುಗಳು ಕೇಳಿ ಬಂದಿವೆ.ಎನ್‍ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಶಿವಸೇನೆ, ಆರ್‍ಎಲ್‍ಡಿ, ಅಪ್ನಾದಳ್, ಎಲ್‍ಜೆಪಿ ಪಕ್ಷಗಳಿಗೆ ಸಂಪುಟದಲ್ಲಿ ಒಂದು ಸಂಪುಟ ದರ್ಜೆ ಹಾಗೂ ಒಂದು ರಾಜ್ಯಖಾತೆ ಲಭಿಸಲಿದೆ. +ಮೋದಿಯವರ ಸಂಪುಟಕ್ಕೆ ಕಳೆದ ಬಾರಿ ಸಚಿವರಾಗಿದ್ದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್, ಜಯಶಂಕರ್, ಅರ್ಜುನ್ ಮೇಗರ್‍ವಾಲ್, ಜ್ಯೋತಿರಾಧ್ಯ ಸಿಂಧ್ಯಾ, ಕಿಶನ್ ರೆಡ್ಡಿ, ಸಂಜಯ್ ಬಂಡಿ, ಸುರೇಶ್ ಗೋಪಿ, ಶಿವರಾಜ್ ಸಿಂಗ್ ಚೌವ್ಹಾಣ್, ಸ್ವರ್ಬಾನಂದ್ ಸೋನಾವಾಲ್, ಕೆ.ಅಣ್ಣಮಲೆ, ಮನೋಹರ್‍ಲಾಲ್ ಕಟ್ಟರ್, ಧಮೇಂದ್ರ ಪ್ರಧಾನ್, ಮಾಲ್ಸುಕ್ ಮಾಂಡವಿಯ, ಪುರಂದರೇಶ್ವರಿ, ಕಿರಣ್ ರಿಜ್ಸುಜು, ಅಶ್ವಿನಿ ವೈಷ್ಣವ್, ಕಮಲ್‍ದೀಪ್ ಶರಾವತ್, ರಾವ್ ಇಂದ್ರಜಿತ್ ಸಿಂಗ್, ಜಿತಿನ್, ಹರ್ಜಿತ್ ಸಿಂಗ್, ಗಿರಿದತ್‍ಸಿಂಗ್ ಸೇರಿದಂತೆ ಮತ್ತಿತರರು ಬಿಜೆಪಿಯಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಟಿಡಿಪಿ ವತಿಯಿಂದ ಕೇಂದ್ರದ ಮಾಜಿ ಸಚಿವ ದಿ.ಎರ್ರಂನಾಯ್ಡು ಅವರ ಪುತ್ರ ರಾಮಮೋಹನ್ ನಾಯ್ಡು ಕಿಂಗ್‍ಜರಪು ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ದೇಶದಲ್ಲೇ ಅತ್ಯಂತ ಕಿರಿ ವಯಸ್ಸಿನ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. +ಜೊತೆಗೆ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂದು ಬಿಂಬಿತವಾಗಿದ್ದ ಚಂದ್ರಶೇಖರ್ ಪೆಮ್ಮಸಾನಿ ಅವರಿಗೆ ರಾಜ್ಯಖಾತೆ ಲಭಿಸಲಿದೆ. ಅಲ್ಲದೆ, ರಾಮ್‍ಮೋಹನ್ ನಾಯ್ಡು ಕೂಡ ಸಂಪುಟಕ್ಕೆ ಸೇರಿಕೊಳ್ಳುವ ಸಾಧ್ಯತೆಯಿದೆ.ಬಿಹಾರದಿಂದ ಜೆಡಿಯುನ ಲಾಲನ್‍ಸಿಂಗ್, ಪ್ರತಾಪ್‍ರಾವ್ ಜಾದವ್, ಎಚ್‍ಎಎಂನ ಜಿತಿನ್ ರಾಮ್‍ಮಾಂಜಿ, ಅಪ್ನಾದಳ್‍ನ ಅನುಪ್ರಿಯಾ ಪಟೇಲ್, ಆರ್‍ಎಲ್‍ಡಿಯ ಜಯಂತ್ ಚೌಧರಿ, ಶಿವಸೇನೆಯ ಪ್ರಪುಲ್ ಪಟೇಲ್, ಎಲ್‍ಜೆಪಿಯ ಚಿರಾಗ್ ಪಾಸ್ವಾನ್ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ.ಈ ಬಾರಿ ಮಿತ್ರಪಕ್ಷಗಳಿಗೆ ಸಂಪುಟದಲ್ಲಿ ಸ್ಥಾನಮಾನ ಕಲ್ಪಿಸಬೇಕಾಗಿರುವುರಿಂದ ಬಿಜೆಪಿ ಕೆಲವರಿಗೆ ಸ್ಥಾನ ತ್ಯಾಗ ಮಾಡುವಂತೆ ಸೂಚನೆ ನೀಡಿದೆ. ಮೋದಿಯವರು ಪ್ರದೇಶವಾರು, ಜಾತಿ, ಪಕ್ಷಕ್ಕೆ ಸಲ್ಲಿಸಿರುವ ಸೇವೆ, ಅನುಭವ, ಹಿರಿತನ, ಶೈಕ್ಷಣಿಕ ಹಿನ್ನೆಲೆ ಮತ್ತಿತರ ಅಂಶಗಳ ಮೇಲೆ ಸಂಪುಟಕ್ಕೆ ತೆಗೆದುಕೊಂಡಿದ್ದಾರೆ. +ಯಾರೆಗೆಲ್ಲ ಆಹ್ವಾನ..?:ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪೌರ ಕಾರ್ಮಿಕರು, ಸೆಂಟ್ರಲ್ ವಿಸ್ತಾ ಯೋಜನೆ, ನೂತನ ಸಂಸತ್ ಕಟ್ಟಡ ನಿರ್ಮಾಣ ಕಾರ್ಮಿಕರು, ತೃತೀಯ ಲಿಂಗಿಗಳು, ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳು, ಉತ್ತರಾಖಂಡ್ ಗಣಿ ಕಾರ್ಮಿಕರ ರಕ್ಷಿಸಿದ ತಂಡ, ವಂದೇ ಭಾರತ್, ಮೆಟ್ರೋದಂಥ ರೈಲ್ವೆ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು, ಎಲ್ಲಾ ಧರ್ಮಗಳ 50 ಧರ್ಮ ಗುರುಗಳಿಗೂ ಜೊತೆಗೆ ಪದ್ಮಭೂಷಣ, ಪದ್ಮವಿಭೂಷಣ, ಪದ್ಮಶ್ರೀ ಪುರಸ್ಕøತರಿಗೆ, ವಿಕಸಿತ ಭಾರತ್ ಅಂಬಾಸಿಡರ್‍ಗಳು ಹಾಗೂ ಆದಿವಾಸಿ ಮಹಿಳೆಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. +ವಿದೇಶಿ ಗಣ್ಯರು :ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಸೀಷೆಲ್ಸ ಅಧ್ಯಕ್ಷ ವಾವೆಲ್ ರಾಮ್ಕಾಲಾವನ್, ಭೂತಾನ್ ಪ್ರಧಾನಿ ತ್ಶೆರಿಂಗ್ ತೋಗ್ಬೆ, ಮಾರಿಷಸ್ ಪ್ರಧಾನಿ ಪ್ರವೀಂದ್ ಜುಗ್ನಾಥ್, ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಹಾಗೂ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುಗೆ ಆಹ್ವಾನ ನೀಡಲಾಗಿತ್ತು. +ಬಿಗಿಭದ್ರತೆ:ಮೋದಿ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ದೆಹಲಿ ಪೊಲೀಸರು 5 ಹಂತದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ. ಅರೆಸೈನಿಕ ಸಿಬ್ಬಂದಿ, ಎನ್‍ಎಸ್ಜಿ ಕಮಾಂಡೋಗಳು, ಡ್ರೋನ್‍ಗಳು, ಸ್ನೈಪರ್‍ಗಳು ಸೇರಿ ಬಹು ಹಂತದ ಭದ್ರತೆ ಕೈಗೊಳ್ಳಲಾಗಿತ್ತು. +ರಾಷ್ಟ್ರಪತಿ ಭವನದ ಒಳಗೆ ಹಾಗೂ ಹೊರಗೆ 3 ಹಂತದಲ್ಲಿ ಭದ್ರತೆ ನೀಡಲಾಗಿತ್ತು. 5 ಕಂಪನಿಗಳ ಅರೆಸೇನಾಪಡೆ, ದೆಹಲಿ ಸಶಸ್ತ್ರ ಪೊಲೀಸ್ ಹೀಗೆ ಭದ್ರತೆಗಾಗಿ 2,500 ಪೆÇಲೀಸರ ಸುತ್ತಲೂ ನೇಮಕ ಮಾಡಲಾಗಿದೆ. ಗಣ್ಯರ ಮಾರ್ಗದಲ್ಲಿ ಸ್ನೈಪರ್‍ಗಳು, ಶಸ್ತ್ರಸಜ್ಜಿತ ಪೆÇಲೀಸರನ್ನು ನಿಯೋಜನೆ ಮಾಡಲಾಗಿದೆ. ವಿದೇಶಿ ಗಣ್ಯರು ಉಳಿಯುವ ಲೀಲಾ, ತಾಜ್, ಐಟಿಸಿ ಮರ್ಯ, ಕ್ಲಾರಿಡ್ಜಸ್ ಮತ್ತು ಒಬೆರಾಯ್ ಹೋಟೆಲ್‍ಗಳಲ್ಲೂ ಜಿ-20 ಮಾದರಿಯಲ್ಲೇ ವಿಶೇಷ ಭದ್ರತೆ ನಿಯೋಜನೆ ಮಾಡಲಾಗಿತ್ತು. \ No newline at end of file diff --git a/eesanje/url_46_116_4.txt b/eesanje/url_46_116_4.txt new file mode 100644 index 0000000000000000000000000000000000000000..5171f37163b4e20e9cc0b71645db803e883f8112 --- /dev/null +++ b/eesanje/url_46_116_4.txt @@ -0,0 +1,7 @@ +ಹಣ ಅವ್ಯವಹಾರ ತನಿಖೆ ಕುರಿತು ಸಿಬಿಐ ಪತ್ರ ಬರೆದಿಲ್ಲ: ಪರಮೇಶ್ವರ್ +ಬೆಂಗಳೂರು,ಜೂ.9- ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ರಾಜ್ಯಸರ್ಕಾರಕ್ಕೆ ಅಧಿಕೃತವಾಗಿ ಇನ್ನೂ ಪತ್ರ ಬರೆದಿಲ್ಲ. ಆದರೆ ಸಹಪಾಠಿ ಅಧಿಕಾರಿಗಳ ಬಳಿ ಮಾಹಿತಿ ನೀಡುವಂತೆ ಕೇಳಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೇಳಿದಾಕ್ಷಣ ಸಚಿವರು, ಮುಖ್ಯಮಂತ್ರಿ ರಾಜೀನಾಮೆ ನೀಡಲು ಸಾಧ್ಯವಿಲ್ಲ. ಈಗಾಗಲೇ ತನಿಖೆ ನಡೆಯುತ್ತಿದೆ. ಎಸ್‍ಐಟಿಗಾಗಲೀ, ಸಿಬಿಐಗಾಗಲೀ ಸಮಯಾವಕಾಶ ನೀಡಬೇಕಾಗುತ್ತದೆ. ಕಾಲಮಿತಿ ನಿಗದಿ ಮಾಡುವುದು ಸೂಕ್ತ ಅಲ್ಲ ಎಂದರು. ಸಚಿವ ಶರಣಪ್ರಕಾಶ್ ಪಾಟೀಲರ ಕಚೇರಿಯಲ್ಲಿ ಸಭೆ ನಡೆದಿದೆ ಎನ್ನುವ ಬಗ್ಗೆ ಎಸ್‍ಐಟಿ ಅಧಿಕಾರಿಗಳು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಿದ್ದಾರೆ ಎಂದು ಹೇಳಿದರು. +ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅ„ಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ಸರ್ಕಾರದ ಇಲಾಖೆಗಳ ತನಿಖೆಗೆ ಇನ್ನೂ ಅ„ಕೃತವಾಗಿ ಪತ್ರ ಬರೆದಿಲ್ಲ. ಬ್ಯಾಚ್‍ಮೇಟ್ ಅ„ಕಾರಿಗಳ ಜೊತೆ ಚರ್ಚೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಒಂದು ವೇಳೆ ಸಿಬಿಐ ಅ„ಕೃತವಾಗಿ ಪತ್ರ ಬರೆದರೆ ಸರ್ಕಾರ ಪರಿಶೀಲನೆ ಮಾಡಲಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ನನ್ನನ್ನೂ ಸೇರಿದಂತೆ 17 ಸಚಿವರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತಗಳಿಕೆಯಲ್ಲಿ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಪರಿಶೀಲನೆ ಮತ್ತು ಆತ್ಮಾವಲೋಕನ ನಡೆಯಲಿದೆ. ಹೈಕಮಾಂಡ್ ನೀಡುವ ಯಾವುದೇ ಸಲಹೆಗಳನ್ನು ಒಪ್ಪಲು ನಾವು ತಯಾರಿದ್ದೇವೆ. ಎಐಸಿಸಿ ನಿರ್ದೇಶನವನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. +ಕಾಂಗ್ರೆಸ್‍ನಲ್ಲಿ ಯಾವುದೇ ಒಳಜಗಳು ಇಲ್ಲ. ಅಭಿಪ್ರಾಯ ಬೇಧಗಳು ಸಹಜ. ಸಂದರ್ಭಾನುಸಾರ ನಾವು ನಮ್ಮ ಅಭಿಪ್ರಾಯಗಳನ್ನು ಹೇಳುತ್ತೇವೆ. ಬೇರೆಯವರು ಹೇಳಿದ್ದನ್ನು ಒಪ್ಪಲೇಬೇಕು ಎಂದೇನಿಲ್ಲ. ಅಂದ ಮಾತ್ರಕ್ಕೆ ಅದು ಒಳಜಗಳ ಅಲ್ಲ ಎಂದು ಹೇಳಿದರು. ಸಚಿವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಸಚಿವ ಸಂಪುಟ ಸಭೆ ಇದೆ. ಅಲ್ಲಿ ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತೇವೆ. ಪಕ್ಷದಲ್ಲಿ ಚರ್ಚೆ ನಡೆಸಲು ಉನ್ನತಾಧಿಕಾರ ಸಮಿತಿ, ಸಮನ್ವಯ ಸಮಿತಿ ಅಥವಾ ಪದಾಧಿಕಾರಿಗಳ ನಿಯೋಗ ಸೇರಿ ಯಾವುದಾದರೂ ಒಂದರ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು. +ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ತಿಳಿಸಲು ಬಯಸುತ್ತೇನೆ. ಜನರ ದೃಷ್ಟಿಯಿಂದ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮುಂದಿನ ದಿನಗಳಲ್ಲಿ ಅವರು ಗಂಭೀರ ಚಿಂತನೆ ನಡೆಸಬೇಕಿದೆ. ಕಳೆದ ಹತ್ತು ವರ್ಷಗಳಲ್ಲಿ ಜನಪರವಾಗಿ ಯಾವುದೇ ಕಾನೂನು ಕಾಯ್ದೆಗಳು ರೂಪುಗೊಂಡಿಲ್ಲ. ಇನ್ನು ಮುಂದಾದರೂ ಈ ನಿಟ್ಟಿನಲ್ಲಿ ಆಲೋಚನೆಗಳನ್ನು ಮಾಡಲಿ ಎಂದು ಕರೆ ನೀಡಿದರು. +ರಾಜ್ಯಕ್ಕೆ ಹೆಚ್ಚಿನ ಸಚಿವ ಸ್ಥಾನ ಸಿಗಲಿ. ಈ ಹಿಂದಿನ ಸಚಿವರಿಂದ ರಾಜ್ಯಕ್ಕೆ ಯಾವುದೇ ಉಪಯೋಗವಾಗಿಲ್ಲ. ಮುಂದೆ ಅವಕಾಶ ಪಡೆಯುವವರಾದರೂ ರಾಜ್ಯದ ಪರವಾಗಿ ಕೇಂದ್ರದಲ್ಲಿ ಧ್ವನಿ ಎತ್ತಲಿ ಎಂದು ಪರಮೇಶ್ವರ್ ಆಶಿಸಿದರು. \ No newline at end of file diff --git a/eesanje/url_46_116_5.txt b/eesanje/url_46_116_5.txt new file mode 100644 index 0000000000000000000000000000000000000000..6bb074dca52ea459e61323fd1c2d00c23573db64 --- /dev/null +++ b/eesanje/url_46_116_5.txt @@ -0,0 +1,10 @@ +ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆ ಮರು ಪರಿಶೀಲನೆ.. +ಬೆಂಗಳೂರು,ಜೂ.9- ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆಯೇ ರಾಜ್ಯಸರ್ಕಾರ ಅವುಗಳ ಸಾಧಕ ಬಾಧಕ ಪರಿಶೀಲನೆಗಾಗಿ ಹಿರಿಯರ ಹಾಗೂ ಅನುಭವಿಗಳ ಸಮಿತಿ ರಚನೆ ಮಾಡಿ ಅನರ್ಹ ಫಲಾನುಭವಿಗಳನ್ನು ಪರಿಷ್ಕರಣೆ ಮಾಡುವ ಚಿಂತನೆಯಲ್ಲಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪ್ರಮುಖ ಸಚಿವರ ಸಭೆಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಔಪಚಾರಿಕ ವಿಮರ್ಶೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿಲ್ಲ ಎಂಬ ತೀವ್ರ ಆಕ್ಷೇಪ ವ್ಯಕ್ತವಾಗಿದೆ. +52 ಸಾವಿರ ಕೋಟಿ ರೂ.ಗಳಷ್ಟು ಹಣ ವೆಚ್ಚ ಮಾಡಿ ಜನರ ಆರ್ಥಿಕ ಸಬಲೀಕರಣಕ್ಕಾಗಿ ರೂಪಿಸಲಾದ ಯೋಜನೆಗಳು ರಾಜಕೀಯವಾಗಿ ಕಾಂಗ್ರೆಸ್‍ಗೆ ಲಾಭ ತಂದುಕೊಡಬಹುದು ಎಂಬ ಅಂದಾಜಿತ್ತು. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿಯ ಮೈತ್ರಿಯಿಂದಾಗಿ ಜಾತಿ ಸಮೀಕರಣವೇ ಮೇಲುಗೈ ಸಾಧಿಸಿದೆ. ಯೋಜನೆಯ ಲಾಭ ಪಡೆದ ಫಲಾನುಭವಿಗಳು ಕಾಂಗ್ರೆಸ್ ಜೊತೆ ನಿಲ್ಲಲಿದ್ದಾರೆ ಎಂಬ ಅಂದಾಜು ತಲೆಕೆಳಗಾಗಿದೆ. +ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿಬಂದಿದೆ. ಲೋಕಸಭಾ ಚುನಾವಣೆಗೂ ಮೊದಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾಕಷ್ಟು ವಿಮರ್ಶೆಗಳಾಗಿದ್ದವು. ಮಹಿಳೆಯರಿಗೆ ಸಂಪೂರ್ಣ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಜಾರಿಗೊಳಿಸುವ ಬದಲಾಗಿ ಬಡವರಿಗೆ ಆರ್ಥಿಕವಾಗಿ ಅಗತ್ಯವಿರುವವರಿಗೆ ಸೌಲಭ್ಯ ನೀಡಬೇಕು. +ರಾಜ್ಯವ್ಯಾಪಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬದಲಾಗಿ ಸೀಮಿತ ಅಂತರವನ್ನು ನಿಗದಿ ಮಾಡಬೇಕು. ಸರ್ಕಾರಿ ನೌಕರರು, ತೆರಿಗೆ ಪಾವತಿದಾರರು ಸೇರಿದಂತೆ ಅಗತ್ಯ ಇಲ್ಲದೇ ಇರುವವರೆಗೆ ಶಕ್ತಿ ಯೋಜನೆಯಡಿ ಕಡಿವಾಣ ಹಾಕಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ದೊರಕುವಂತೆ ಮಾಡಬೇಕು ಎಂಬ ಪ್ರಸ್ತಾವನೆ ಚರ್ಚೆಯಲ್ಲಿತ್ತು. ಆದರೆ ಚುನಾವಣೆ ಕಾರಣಕ್ಕಾಗಿ ಅದನ್ನು ತಡೆಹಿಡಿದಿದ್ದರು. +ಫಲಿತಾಂಶ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿ ಬಂದಿದ್ದರೆ ಗ್ಯಾರಂಟಿ ಯೋಜನೆಗಳು ಯಥಾರೀತಿ ಅಬಾಧಿತವಾಗಿ ಮುಂದುವರೆಯುವ ನಿರೀಕ್ಷೆಗಳಿದ್ದವು. ಕಾಂಗ್ರೆಸ್ ನಾಯಕರು 22 ಸ್ಥಾನಗಳನ್ನು ಅಂದಾಜಿಸಿದರೆ ಜನ ಗೆಲ್ಲಿಸಿದ್ದು ಕೇವಲ 9ರಲ್ಲಿ ಮಾತ್ರ. ಅವುಗಳಲ್ಲಿಯೂ ಚಾಮರಾಜನಗರ, ದಾವಣಗೆರೆ, ಚಿಕ್ಕೋಡಿ ಕ್ಷೇತ್ರಗಳಲ್ಲಿ ಆಯಾ ಜಿಲ್ಲೆಗಳ ಪ್ರಭಾವಿಗಳ ವರ್ಚಸ್ಸು ಕೆಲಸ ಮಾಡಿದ್ದರೆ, ಕಲ್ಯಾಣ ಕರ್ನಾಟಕ ಭಾಗದ 5 ಜಿಲ್ಲೆಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಭಾವನಾತ್ಮಕ ಹೇಳಿಕೆಗಳು ಹಾಗೂ 371 ಜೆ ಮತ ತಂದು ಕೊಟ್ಟಿದೆ. +ಹಾಸನದಲ್ಲಿ ಪೆನ್‍ಡ್ರೈವ್ ಪ್ರಕರಣದಿಂದಾಗಿ ಮುಜುಗರಕ್ಕೊಳಗಾದ ಜೆಡಿಎಸ್ ಕಾರ್ಯಕರ್ತರು ಮತದಾನದ ಕೊನೆಯ ದಿನಗಳಲ್ಲಿ ಪ್ರಚಾರಕ್ಕೆ ಹೋಗದ ಕಾರಣ ಕಾಂಗ್ರೆಸ್ ಗೆಲುವು ಕಂಡಿದೆ ಎಂಬ ವಿಶ್ಲೇಷಣೆ ಇದೆ. ಉಳಿದಂತೆ ಗೆಲುವು ಸಾಧ್ಯವಾಗಬಹುದಾಗಿದ್ದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪಂಚಖಾತ್ರಿಗಳು ಕೈ ಹಿಡಿದಿಲ್ಲ. ಹೀಗಾಗಿ ಇವುಗಳನ್ನು ಪರಿಷ್ಕರಣೆ ಮಾಡುವುದು ಸೂಕ್ತ ಎಂಬ ಒತ್ತಡ ಸಚಿವರು ಹಾಗೂ ಶಾಸಕರಲ್ಲಿ ಕೇಳಿಬಂದಿದೆ. +ಏಕಾಏಕಿ ಯೋಜನೆಗಳ ಪರಿಷ್ಕರಣೆಗೆ ಮುಂದಾದರೆ ರಾಜಕೀಯವಾಗಿ ಪ್ರತಿರೋಧ ಅನುಭವಿಸಬೇಕಾಗಬಹುದು ಎಂಬ ಕಾರಣಕ್ಕೆ ಅನುಭವಿಗಳ ಹಾಗೂ ಹಿರಿಯರ ಸಮಿತಿಯನ್ನು ರಚಿಸಿ ಸಮಗ್ರ ಅಧ್ಯಯನದ ಮೂಲಕ ವರದಿ ಪಡೆದುಕೊಂಡು ನಂತರ ಯೋಜನೆಗಳನ್ನು ಅರ್ಹಫಲಾನುಭವಿಗಳಿಗೆ ತಲುಪಿಸುವಂತೆ ಮಾಡುವುದು ಸೂಕ್ತ ಎಂಬ ಚರ್ಚೆ ನಡೆದಿದೆ. +ಪಂಚಖಾತ್ರಿಗಳಿಗೆ ಹೆಚ್ಚು ಹಣ ಬಳಕೆ ಮಾಡುವುದರಿಂದ ಶಾಸಕರಿಗೆ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ಇದು ಸಹಜವಾಗಿ ಪಕ್ಷ ಸಂಘಟನೆಗೂ ತೊಂದರೆಯಾಗುತ್ತಿದೆ. ಹಾಗಾಗಿ ಪಂಚಖಾತ್ರಿಗಳ ಯೋಜನಾ ವೆಚ್ಚವನ್ನು ಕಡಿತ ಮಾಡಬೇಕು ಎಂಬ ಆಗ್ರಹ ಶಾಸಕರಿಂದ ಹೆಚ್ಚಾಗಿ ಕೇಳಿಬರುತ್ತಿದೆ. ಏಕಾಏಕಿ ಯೋಜನೆಗಳ ಪರಿಷ್ಕರಣೆಗೆ ಮುಂದಾದರೆ ಬಿಬಿಎಂಪಿ ಸೇರಿದಂತೆ ನಗರ ಮತ್ತು ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಾಗಬಹುದು. ಇದರಿಂದ ಸ್ಥಳೀಯ ನಾಯಕತ್ವ ಹಾಗೂ ಪಕ್ಷ ಸಂಘಟನೆಯ ಮೇಲೆ ಅಡ್ಡಪರಿಣಾಮವಾಗಬಹುದು ಎಂಬ ಆತಂಕವೂ ಇದೆ. +ಬಹುತೇಕ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದೆಲ್ಲದರ ಹೊರತಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಪಂಚಖಾತ್ರಿಗಳು ನಿಲ್ಲುವುದಿಲ್ಲ ಎಂದು ಪದೇಪದೇ ಹೇಳುತ್ತಿದ್ದಾರೆ. ಮೂಲಗಳ ಪ್ರಕಾರ, ಯೋಜನೆಗಳು ನಿಲ್ಲುವುದಿಲ್ಲ. ಆದರೆ ಅರ್ಹ -Àಲಾನುಭವಿಗಳಿಗೆ ಎಂಬ ಷರತ್ತಿಗೆ ಒಳಪಟ್ಟು ವೆಚ್ಚ ಕಡಿವಾಣಕ್ಕೆ ಮಾರ್ಗಸೂಚಿ ರೂಪಿಸಲು ತಯಾರಿಗಳು ನಡೆದಿವೆ. \ No newline at end of file diff --git a/eesanje/url_46_116_6.txt b/eesanje/url_46_116_6.txt new file mode 100644 index 0000000000000000000000000000000000000000..4bef5195b0f4c9dbdc133fa68b024da2584556fa --- /dev/null +++ b/eesanje/url_46_116_6.txt @@ -0,0 +1,7 @@ + ಫೈನಲ್ಸ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್ +ಲೂಯಿಸ್ವಿಲ್ಲೆ, ಜೂ.9- ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ ()ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ ಮೂಲಕ ಭಾರತದ ಯುವ ಮಹಿಳಾ ಬಾಕ್ಸರ್ ಪೂಜಾ ತೋಮರ್ ಇತಿಹಾಸ ಸೃಷ್ಟಿಸಿದ್ದಾರೆ. ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬ್ರೆಜಿಲ್ ರಾಯನ್ನೆ ಡಾಸ್ ಸ್ಯಾಂಟೋಸ್‍ರ ಪ್ರಬಲ ಪೈಪೋಟಿ ಎದುರಿಸಿದ ಉತ್ತರಪ್ರದೇಶದ ಮುಜಾಫರ್ ನಗರದ ಪೂಜಾ ತೋಮರ್ ಗೆಲುವು ಸಾಧಿಸಿ ಇಡೀ ದೇಶವೇ ತನ್ನತ್ತ ತಿರುಗುವಂತೆ ಮಾಡಿದ್ದಾರೆ. +ಮೊದಲ ಸುತ್ತಿನಿಂದಲೇ ತಮ್ಮಲ್ಲಿರುವ ತಂತ್ರಗಳನ್ನು ಸಮರ್ಥವಾಗಿ ಬಳಸಿಕೊಂಡ ಪೂಜಾ ತೋಮರ್ ಎದುರಾಳಿ ತಂಡದ ಮಹಿಳಾ ಬಾಕ್ಸರ್‍ಗೆ ಬಲವಾದ ಪೆಟ್ಟು ನೀಡುವ ಮೂಲಕ 30-27 ಅಂಕಗಳ ಅಂತರದಿಂದ ಗೆಲುವಿನ ನಗೆ ಚೆಲ್ಲಿದ್ದಾರೆ. ಎರಡನೇ ಸುತ್ತನ್ನು ಗೆಲ್ಲುವ ಮೂಲಕ ಪದಕವನ್ನು ಕೊರಳಿಗೇರಿಸಿಕೊಳ್ಳುವ ಹಂಬಲ ಹೊಂದಿದ್ದ ಪೂಜಾಗೆ ಎರಡನೇ ಸುತ್ತಿನಲ್ಲಿ ರಾಯನ್ನೆ ಡಾಸ್ ಸ್ಯಾಂಟೋಸ್ ತಿರುಗೇಟು ನೀಡಿದರು.ಎರಡನೇ ಸುತ್ತಿನ ಆರಂಭದಲ್ಲಿ ಮೇಲುಗೈ ಸಾ„ಸಿದ್ದ ಪೂಜಾರ ಹೊಡೆತಗಳನ್ನು ನಂತರ ಸಮರ್ಥವಾಗಿ +ಡಿಫೆನ್ಸ್ ಮಾಡಿದ ಬ್ರೆಜಿಲ್ ಬಾಕ್ಸರ್ 27-30 ಅಂತರದ ಮುನ್ನೆಡೆ ಸಾಧಿಸಿದರು. ನಂತರ ಗೆಲುವಿಗಾಗಿ ನಿರ್ಣಾಯಕವಾಗಿದ್ದ ಸುತ್ತು ತೀರಾ ಜಿದಾ-ಜಿದ್ದಿನಿಂದ ಕೂಡಿತ್ತು. ಆದರೆ ತಮ್ಮಲ್ಲಿರುವ ಕೌಶಲ್ಯತೆಯನ್ನು ಸಮಯಕ್ಕೆ ಸರಿಯಾಗಿ ಬಳಸಿಕೊಂಡ ಪೂಜಾ 29-28 ಅಂಕಗಳ ಕೂದಲೆಳೆಯ ಅಂತರದಿಂದ ಜಯಮಾಲೆಯನ್ನು ತಮ್ಮ ಕೊರಳಿಗೇರಿಸಿಕೊಂಡರು. +ಭಾರತದ ಬಾಕ್ಸರ್‍ಗಳಿಗೆ ಗೆಲುವು ಅರ್ಪಣೆ: ಫೈನಲ್ಸ್ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್ನಲ್ಸ್‍ನಲ್ಲಿ ಜಯಭೇರಿ ಬಾರಿಸಿ ಇತಿಹಾಸ ಸೃಷ್ಟಿಸಿದ ನಂತರ ಮಾತನಾಡಿದ ಪೂಜಾ ತೋಮರ್, ನನ್ನ ಈ ಗೆಲುವನ್ನು ಭಾರತದ ಬಾಕ್ಸರ್ಸ್ ಮತ್ತು ಎಂಎಂಎ ಅಭಿಮಾನಿಗಳಿಗೆ ಅರ್ಪಿಸಿದ್ದಾರೆ. ಭಾರತದಫೈಟರ್ಸ್ ಚಾಂಪಿಯನ್‍ಶಿಪ್‍ನಲ್ಲಿ ಗೆಲುವು ಸಾಧಿಸಲು ಅನರ್ಹರಲ್ಲ ಎಂದು ವಿಶ್ವದೆಲ್ಲೆಡೆ ಮಾತುಗಳು ಕೇಳಿಬಂದಿದ್ದವು. ಆದರೆ ಈ ಗೆಲುವು ಟೀಕಾಕಾರರಿಗೆ ತಕ್ಕ ಉತ್ತರ ನೀಡಿದಂತಾಗಿದೆ. +ಭಾರತದ ಹೋರಾಟಗಾರರು ಸೋಲುವವರಲ್ಲ ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ನಾವು ಎಲ್ಲ ರಂಗಗಳಲ್ಲೂ ಉನ್ನತ ಸ್ಥಾನಕ್ಕೇರುತ್ತಿದ್ದೇವೆ. ಮತ್ತೆ ನಾವು ಹಿಂದಿರುಗಿ ನೋಡುವ ಪ್ರಶ್ನೆಯೇ ಇಲ್ಲ. ನಾವು ಬೇಗ ಚಾಂಪಿಯನ್ ಶಿಪ್ ಪಟ್ಟವನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ. ಈಗ ಸಿಕ್ಕಿರುವ ಗೆಲುವು ಖಂಡಿತಾವಾಗಿಯೂ ನನ್ನ ಗೆಲುವಲ್ಲ. ಇದು ಎಲ್ಲಾ ಭಾರತದ ಹೋರಾಟಗಾರರು ಹಾಗೂ ಅಭಿಮಾನಿಗಳಿಗೆ ದೊರೆತ ಗೆಲುವಾಗಿದೆ' ಎಂದು ಪೂಜಾ ತೋಮರ್ ತಮ್ಮ ಸಂತಸ ಹಂಚಿಕೊಂಡಿದ್ದಾರೆ.ಫೈನಲ್ ಪಂದ್ಯಕ್ಕೂ ಮುನ್ನ ಸ್ಟೇಡಿಯಂನಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯೂ ಕಂಠಘೋಷವಾಗಿ ಮೊಳಗಿತ್ತು. ಇದು ನಿಜಕ್ಕೂ ನನಗೆ ಹೆಮ್ಮೆ ಮೂಡಿಸಿತು. ಅಲ್ಲದೆ ರೋಮಾಂಚನವಾಯಿತು. ಪಂದ್ಯದಲ್ಲಿ ನನಗೆ ಯಾವುದೇ ಒತ್ತಡವಿರಲಿಲ್ಲ, ಅಲ್ಲದೆ ಚಾಂಪಿಯನ್ ಪಟ್ಟವನ್ನು ಗೆಲ್ಲುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದೆ. ಪಂದ್ಯದಲ್ಲಿ ನಾನು ಎದುರಾಳಿ ಸ್ಪರ್ಧಿಯಿಂದ ಒಂದೆರಡು ಬಲವಾದ ಪಂಚ್‍ಗಳನ್ನು ಪಡೆದಿದ್ದೆ. ಆದರೂ ಅದರಿಂದ ಚೇತರಿಸಿಕೊಂಡು ನನ್ನ ಆಟವನ್ನು ಉತ್ತಮಪಡಿಸಿಕೊಳ್ಳುತ್ತಾ ಸಾಗಿದ ನಾನು ಕೊನೆಗೂ ಟ್ರೋಫಿ ಗೆದ್ದು ಸಂಭ್ರಮಿಸಿದ್ದೇನೆ’ ಎಂದು ಪೂಜಾ ತೋಮರ್ ತಿಳಿಸಿದರು. +ಈ ಹಿಂದೆ ಚಾಂಪಿಯನ್‍ಶಿಪ್‍ನಲ್ಲಿ ಭಾರತದವರೇ ಆದ ಭಾರತ್ ಖಂಡ್ರೆ ಹಾಗೂ ಅನ್ಷುಲ್ ಜುಬ್ಲಿ ಅವರು ಕಾದಾಟ ನಡೆಸಿದ್ದರಾದರೂ ಚಾಂಪಿಯನ್ ಪಟ್ಟ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಬ್ರೆಜಿಲ್‍ನ ರಾಯನ್ನೆ ಡಾಸ್ ಸ್ಯಾಂಟೋಸ್ ಅವರನ್ನು ಮಣಿಸಿದ ಪೂಜಾ ತಾಮೋರ್ ಇತಿಹಾಸ ಸೃಷ್ಟಿಸಿದ್ದಾರೆ. \ No newline at end of file diff --git a/eesanje/url_46_116_7.txt b/eesanje/url_46_116_7.txt new file mode 100644 index 0000000000000000000000000000000000000000..fc35a40a0a2cf62d3cf95aca625ecebaef6c3afb --- /dev/null +++ b/eesanje/url_46_116_7.txt @@ -0,0 +1,4 @@ +ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ +ಬೆಂಗಳೂರು, ಜೂ.9- ಯಶಸ್ವಿನಿ ಯೋಜನೆಯಡಿ ಬರುವ 200 ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ರಾಜ್ಯಸರ್ಕಾರ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ಆಸ್ಪತ್ರೆಗಳು ಸಹ ಹೆಚ್ಚಾಗಿದ್ದು, ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಇದರಿಂದ ಭರ್ಜರಿ ಲಾಭವಾಗಲಿದೆ. 2003 ರಲ್ಲಿ ಆರಂಭವಾಗಿದ್ದ ಈ ಯೋಜನೆಯು ಕಾರಣಾಂತರಗಳಿಂದ 2018 ರಲ್ಲಿ ಸ್ಥಗಿತವಾಗಿತ್ತು. 2023ರ ಜನವರಿಯಲ್ಲಿ ಸಹಕಾರ ಸಂಘದ ಅಡಿ ಮರು ಜಾರಿಗೊಳಿಸಿತ್ತು. 2023-24 ನೇ ಸಾಲಿಗೆ ಈಗಾಗಲೇ ಸದಸ್ಯರ ನೋಂದಣಿಗೆ ಮಾ.31 ರವರೆಗೆ ವಿಸ್ತರಣೆಯಾಗಿತ್ತು. ಇದರ ಬೆನ್ನಲ್ಲೇ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. +ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳು ಗರಿಷ್ಠ 5 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದು. ಈ ಯೋಜನೆಯಡಿ ವ್ಯಕ್ತಿಯು ನೋಂದಣಿ ಮಾಡಿಕೊಂಡಿರುವ ನೆಟ್‍ವರ್ಕ್ ಆಸ್ಪತ್ರೆಗಳಿಗೆ ನೇರವಾಗಿ ತೆರಳಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. +ಇದರಿಂದ ಯೋಜನೆಯ ಫಲಾನುಭವಿಗಳಿಗೆ ಸುಲಭವಾಗಿ ಚಿಕಿತ್ಸೆ ದೊರೆಯಲಿದೆ. ಯಶಸ್ವಿನಿ ಯೋಜನೆಯಡಿ ಬರುವ 200ಕ್ಕೂ ಹೆಚ್ಚು ಚಿಕಿತ್ಸಾ ದರಗಳ ಪರಿಷ್ಕರಣೆ ಮಾಡಲಾಗಿದೆ. ಈ ಯೋಜನೆಯಡಿ 370ರಷ್ಟಿದ್ದ ಖಾಸಗಿ ಆಸ್ಪತ್ರೆಗಳ ಸಂಖ್ಯೆ ಈಗ 600 ರ ಗಡಿ ದಾಟಿದೆ. \ No newline at end of file diff --git a/eesanje/url_46_116_8.txt b/eesanje/url_46_116_8.txt new file mode 100644 index 0000000000000000000000000000000000000000..30146dde11461164185eff6cfc0315c338f7dcaa --- /dev/null +++ b/eesanje/url_46_116_8.txt @@ -0,0 +1,4 @@ +ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಚ್‍ಡಿಡಿ ಗೈರು +ಬೆಂಗಳೂರು, ಜೂ.9-ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗಿಯಾಗುತ್ತಿಲ್ಲ. ಪ್ರಸಕ್ತ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಜೂನ್ 7ರಂದು ಬೆಳಿಗ್ಗೆ ದೆಹಲಿ ಪ್ರವಾಸ ನಿಗದಿ ಮಾಡಿದ್ದ ಗೌಡರು, ಕಾರಣಾಂತರಗಳಿಂದ ಮುಂದೂಡಿದ್ದರು. +ಎನ್‍ಡಿಎ ಒಕ್ಕೂಟದ ಸಭೆಯಲ್ಲಿ ಜೆಡಿಎಸ್‍ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಎನ್‍ಡಿಎ ಸರ್ಕಾರ ರಚನೆಗೆ ಬೆಂಬಲ ಸೂಚಿಸಿದ್ದರು.ಇಂದು ರಾತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಹಾಗೂ ಅವರ ಸಂಪುಟದ ಸಚಿವರ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕರ ಮಾಡಲಿದ್ದಾರೆ. +ಮೋದಿ ಅವರ ಸಂಪುಟದಲ್ಲಿ ಕುಮಾರಸ್ವಾಮಿ ಅವರು ಸೇರ್ಪಡೆಗೊಳ್ಳುವುದು ಖಚಿತವಾಗಿದೆ. ಆದರೂ ಗೌಡರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ. ಪ್ರಧಾನಿ ಹಾಗೂ ಅವರ ಸಂಪುಟದ ಸಚಿವರಿಗೆ ಶುಭ ಕೋರಿದ್ದಾರೆ. \ No newline at end of file diff --git a/eesanje/url_46_116_9.txt b/eesanje/url_46_116_9.txt new file mode 100644 index 0000000000000000000000000000000000000000..130ed606210ff3a943265327f2f61c4d6e4c4538 --- /dev/null +++ b/eesanje/url_46_116_9.txt @@ -0,0 +1,7 @@ +ಹೆಚ್‌ಡಿಕೆಗೆ ಮೊದಲ ಬಾರಿ ಕೇಂದ್ರ ಸಚಿವ ಸ್ಥಾನ +ಬೆಂಗಳೂರು, ಜೂ.9- ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದ್ದು, ಜೆಡಿಎಸ್‍ನಲ್ಲಿ ಸಂಭ್ರಮಾಚರಣೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂಬ ವಿಶ್ವಾಸದಿಂದ ಜೆಡಿಎಸ್‍ನಲ್ಲಿ ಸಂಭ್ರಮ ಮನೆ ಮಾಡಿದೆ. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭಾರೀ ಅಂತರದಿಂದ ಗೆದ್ದಿರುವ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಲೋಕಸಭೆ ಪ್ರವೇಶ ಮಾಡಿದ್ದಾರೆ. ಮೊದಲ ಬಾರಿಗೆ ಕೇಂದ್ರ ಸಚಿವರಾಗುತ್ತಿದ್ದಾರೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವುದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ.ಸಿ.ಎನ್.ಮಂಜುನಾಥ್ ಖಚಿತ ಪಡಿಸಿದ್ದಾರೆ. +ಕುಮಾರಸ್ವಾಮಿ ಮಂತ್ರಿಯಾಗುತ್ತಿರುವುದು ಅವರ ಕುಟುಂಬಕ್ಕಷ್ಟೇ ಅಲ್ಲ, ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಖುಷಿ ತಂದಿದೆ. ಜತೆಗೆ ಆತ್ಮವಿಶ್ವಾಸ ತುಂಬಿ ಉತ್ಸಾಹದಿಂದ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಹೀಗಾಗಿ ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಮಾರಂಭವನ್ನು ಜೆಡಿಎಸ್ ಕಚೇರಿಯಲ್ಲಿ ದೊಡ್ಡ ಎಲ್‍ಇಡಿ ಪರದೆ ಅಳವಡಿಸಿಕೊಂಡು ವೀಕ್ಷಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರದ ಬಳಿಕ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಿದ್ದಾರೆ. +ಎನ್‍ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಹೆಚ್.?ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಖಾತ್ರಿ ಇರುವುದರಿಂದಲೇ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ , ಸೊಸೆ ರೇವತಿ ಸೇರಿದಂತೆ ಕುಟುಂಬ ಸದಸ್ಯರು ನಿನ್ನೆಯೇ ದೆಹಲಿಗೆ ತೆರಳಿದ್ದಾರೆ. +ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್‍ಗೌಡ ಸೇರಿದಂತೆ ಪಕ್ಷದ ಹಲವು ನಾಯಕರು ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರದ ಮಂತ್ರಿ ಆಗುತ್ತಿರುವುದು ಬಹಳ ಸಂತೋಷವಾಗಿದೆ. ಕರ್ನಾಟಕ ಜನತೆ ತುಂಬಾ ಖುಷಿ ಪಡುತ್ತಾರೆ ಎಂದು ಹೇಳಿದ್ದಾರೆ. +ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಜಯಗಳಿಸಿ ಸಂಸತ್ ಪ್ರವೇಶ ಮಾಡಿದ್ದಾರೆ. diff --git a/eesanje/url_46_117_1.txt b/eesanje/url_46_117_1.txt new file mode 100644 index 0000000000000000000000000000000000000000..8e243ec9fce4af8259a92b019fd6cb8b56121575 --- /dev/null +++ b/eesanje/url_46_117_1.txt @@ -0,0 +1,9 @@ +ಎಸ್‌‍ಐಟಿ ತನಿಖೆಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮಗಳ ಸತ್ಯಾಸತ್ಯತೆ ಹೊರಬರಲಿದೆ : ಪರಮೇಶ್ವರ್‌ +ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳು ಉಲ್ಲೇಖಿಸಿರುವ ಹೆಸರುಗಳನ್ನು ಎಸ್‌‍ಐಟಿ ಅಧಿಕಾರಿಗಳು ಪರಿಶೀಲಿಸಿ ಸತ್ಯಾಸತ್ಯತೆಯ ತನಿಖೆ ನಡೆಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತ ಆರೋಪಿಗಳು ಹೇಳಿಕೆ ನೀಡುವಾಗ ಅನೇಕರ ಹೆಸರುಗಳನ್ನು, ಸನ್ನಿವೇಶಗಳನ್ನು ಉಲ್ಲೇಖಿಸಿದ್ದಾರೆ. ತನಿಖಾಧಿಕಾರಿಗಳು ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದರು.ತನಿಖೆಯ ಹಂತದಲ್ಲಿ ನಾವು ಯಾವುದೇ ರೀತಿಯ ಹೇಳಿಕೆಗಳನ್ನು ನೀಡಿ, ಶಿಫಾರಸ್ಸು ಮಾಡಲು ಅಥವಾ ಮಧ್ಯಪ್ರವೇಶಿಸಲು ಬಯಸುವುದಿಲ್ಲ. ನಾವು ಯಾವುದೇ ರೀತಿಯ ವ್ಯಾಖ್ಯಾನ ಮಾಡುವುದಿಲ್ಲ ಎಂದು ಹೇಳಿದರು. +ಆರೋಪಿಗಳಷ್ಟೇ ಅಲ್ಲ, ಸಾರ್ವಜನಿಕರು ನಾನಾ ರೀತಿಯ ಅಭಿಪ್ರಾಯಗಳನ್ನ ಹೇಳುತ್ತಿರುತ್ತಾರೆ. ಹಗರಣದ ಆರೋಪಿ ಹೇಳಿದಂತೆ ಸಚಿವರ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡು ಪರಿಶೀಲಿಸುವ ನಿಟ್ಟಿನಲ್ಲಿಯೂ ಎಸ್‌‍ಐಟಿ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಎಂದರು. +ಲೋಕಸಭಾ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದರಿಂದಾಗಿ ಪಿಎಸ್‌‍ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಈಗ ನೀತಿಸಂಹಿತೆ ಪೂರ್ಣಗೊಂಡಿದೆ. ಇನ್ನು ಮುಂದೆ ನೇಮಕಾತಿ ಚುರುಕುಗೊಳ್ಳಲಿದೆ ಎಂದು ಹೇಳಿದರು. +ಪ್ರಧಾನಿಗೆ ಅಭಿನಂದನೆ :ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರೇ ಹೇಳಿಕೊಂಡಂತೆ ಜವಹರಲಾಲ್‌ನಂತೆ ನರೇಂದ್ರ ಮೋದಿಯವರು ಮೂರನೇ ಬಾರಿ ನಿರಂತರವಾಗಿ ಪ್ರಧಾನಿಯಾಗಲಿದ್ದಾರೆ. ಅವರಿಗೆ ಶುಭವಾಗಲಿ ಎಂದರು. +ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಚರ್ಚೆಯಾಗಬೇಕು ಮತ್ತು ಸೋಲಿನ ವಿಶ್ಲೇಷಣೆ ನಡೆಯಬೇಕು ಎಂಬುದು ಹೈಕಮಾಂಡ್‌ನ ಆಸಕ್ತಿಯಾಗಿದೆ. ನನ್ನನ್ನೂ ಒಳಗೊಂಡಂತೆ ಹಿನ್ನಡೆಯಾಗಿರುವ ಜಿಲ್ಲೆಗಳ ಸಚಿವರ ಜೊತೆ ಚರ್ಚೆ ನಡೆಯಲಿದೆ. ಸೋಲಿಗೆ ಕಾರಣಗಳನ್ನು ಹುಡುಕುವ ಪ್ರಯತ್ನ ಮಾಡಲಾಗುವುದು. ಹೈಕಮಾಂಡ್‌ ನೀಡುವ ಸಲಹೆ ಸೂಚನೆಗಳನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದರು. +ಲೋಕಸಭೆಯಲ್ಲಿ ರಾಹುಲ್‌ಗಾಂಧಿ ವಿರೋಧಪಕ್ಷದ ನಾಯಕರಾಗಬೇಕು ಎಂಬುದು ನಮೆಲ್ಲರ ಆಸೆ. ಅದನ್ನು ಕಾಂಗ್ರೆಸ್‌‍ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ತೀರ್ಮಾನ ಮಾಡಲಿದೆ. ರಾಹುಲ್‌ಗಾಂಧಿ ದೇಶಾದ್ಯಂತ ಪಾದಯಾತ್ರೆ ಮಾಡಿ ಜನರ ಸಮಸ್ಯೆಗಳನ್ನು ಅರ್ಥೈಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜ್ವಲಂತ ಸಮಸ್ಯೆಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಲು ರಾಹುಲ್‌ಗಾಂಧಿ ಸಮರ್ಥರಿದ್ದಾರೆ. ಅವರ ಆಯ್ಕೆಯಾದರೆ ಕಾಂಗ್ರೆಸ್‌‍ ಪಕ್ಷಕ್ಕೂ ಒಳ್ಳೆಯದಾಗಲಿದೆ ಎಂದರು. +ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಏನಿದೆಯೋ ಗೊತ್ತಿಲ್ಲ, ಈವರೆಗೂ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ರಾಜ್ಯಸರ್ಕಾರದ ಇಲಾಖೆಗಳನ್ನು ಸಿಬಿಐ ತನಿಖೆಗೆ ಒಳಪಡಿಸುವ ವಿಷಯದ ಚರ್ಚೆ ಕುರಿತು ಯಾವುದೇ ಅಜೆಂಡಾ ನಿಗದಿಯಾಗಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_117_10.txt b/eesanje/url_46_117_10.txt new file mode 100644 index 0000000000000000000000000000000000000000..6e7c415a8eaacc1aec333a2d80c06bfeb35ffff8 --- /dev/null +++ b/eesanje/url_46_117_10.txt @@ -0,0 +1,6 @@ +ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು : ಕಾಂಗ್ರೆಸ್‌‍ +ನವದೆಹಲಿ, ಜೂ.8-ಲೋಕಸಭೆ ಚುನಾವಣೆಯ ಜನಾದೇಶವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು ಎಂದು ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದೆ. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದುಕೊಂಡಿದೆ, 543 ಸದಸ್ಯ ಬಲದ ಸದನದಲ್ಲಿ ಅರ್ಧದಷ್ಟು ಕಡಿಮೆಯಾಗಿದೆ. ಆದರೆ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) ಒಟ್ಟಾಗಿ 293 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್‌‍ 99 ಸ್ಥಾನಗಳನ್ನು ಗೆದ್ದಿದೆ. ಮೋದಿಯವರಿಗೆ ನೈತಿಕ, ರಾಜಕೀಯ ಮತ್ತು ವೈಯಕ್ತಿಕ ಸೋಲು ನೀಡಿದ ಜನಾದೇಶದಲ್ಲಿ ಬೆಳ್ಳಿಗೆರೆಗಳನ್ನು ಹುಡುಕುವ ಡೊಳ್ಳು ಕುಣಿತ ಆರಂಭವಾಗಿದೆ ಎಂದು ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ. +ಜವಾಹರಲಾಲ್‌ ನೆಹರು ನಂತರ ಸತತವಾಗಿ ಮೂರು ಬಾರಿ ಜನಾದೇಶ ಪಡೆದವರು ನರೇಂದ್ರ ಮೋದಿಯವರು ಎಂದು ಪ್ರಚಾರ ಮಾಡಲಾಗುತ್ತಿದೆ. ಪಕ್ಷವನ್ನು 240 ಸ್ಥಾನಗಳಿಗೆ ಮುನ್ನಡೆಸುವುದು ಮತ್ತು ಮೂರನೇ ಒಂದು ಭಾಗ ಪ್ರಧಾನ ಮಂತ್ರಿ ಜನಾದೇಶ ಹೇಗೆ ಎಂಬುದನ್ನು ವಿವರಿಸಲಾಗಿಲ್ಲ ಎಂದು ಕಾಂಗ್ರೆಸ್‌‍ ಮುಖಂಡರು ಹೇಳಿದ್ದಾರೆ. +ಇನ್ನೊಂದೆಡೆ ನೆಹರೂ ಅವರು 1952ರಲ್ಲಿ 364 ಸ್ಥಾನಗಳನ್ನು ಪಡೆದಿದ್ದರು, 957ರಲ್ಲಿ 371 ಸ್ಥಾನಗಳನ್ನು ಮತ್ತು 1962ರಲ್ಲಿ 361 ಸ್ಥಾನಗಳನ್ನು ಪಡೆದಿದ್ದರು. ಪ್ರತಿ ಬಾರಿ 2/3ನೇ ಬಹುಮತ. ಆದರೂ ಅವರು ಸಂಪೂರ್ಣ ಪ್ರಜಾಪ್ರಭುತ್ವವಾದಿಯಾಗಿ ಉಳಿದಿದ್ದರು. ತಮ ನಿರಂತರ ಉಪಸ್ಥಿತಿಯಿಂದ ಸಂಸತ್ತನ್ನು ಬಹಳ ಎಚ್ಚರಿಕೆಯಿಂದ ಪೋಷಿಸಿದರು ಎಂದಿದ್ದಾರೆ. +ನೆಹರೂ ನಂತರ ಸತತವಾಗಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಮೋದಿ ಅಲ್ಲ ಎಂದ ಅವರು, ಅಟಲ್‌ ಬಿಹಾರಿ ವಾಜಪೇಯಿ ಅವರು 1996, 1998 ಮತ್ತು 1999ರಲ್ಲಿ ಮೂರು ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಇಂದಿರಾ ಗಾಂಧಿಯವರು 1966, 1967, 1971 ಮತ್ತು 1980 ರಲ್ಲಿ 4 ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು ಎಂದು ಹೇಳಿದ್ದಾರೆ. 2024ರಲ್ಲಿ ನರೇಂದ್ರ ಮೋದಿಯವರ ಕರುಣಾಜನಕ ಚುನಾವಣಾ ಸಾಧನೆಯನ್ನು ಸಮರ್ಥಿಸಲು ಡ್ರಮ್‌ಬೀಟರ್‌ಗಳು ಏನನ್ನೂ ಹುಡುಕುತ್ತಾರೆ ಎಂದು ರಮೇಶ್‌ ಪ್ರಶ್ನಿಸಿದರು. \ No newline at end of file diff --git a/eesanje/url_46_117_11.txt b/eesanje/url_46_117_11.txt new file mode 100644 index 0000000000000000000000000000000000000000..adb01fe1c7a06a9f454383d7d934fbd14598955b --- /dev/null +++ b/eesanje/url_46_117_11.txt @@ -0,0 +1,3 @@ +ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ +ಮೈಸೂರು, ಜೂ.8-ಮೈಸೂರು ಮತ್ತು ಕೊಡಗು ಕ್ಷೇತ್ರದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಮುನ್ನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. +ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಯದುವೀರ್‌ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ ಯದುವೀರ್‌ ಭರವಸೆ ನೀಡಿದರು. \ No newline at end of file diff --git a/eesanje/url_46_117_12.txt b/eesanje/url_46_117_12.txt new file mode 100644 index 0000000000000000000000000000000000000000..4112eb484f3c9277751ccebe5b30bf3b586cd54d --- /dev/null +++ b/eesanje/url_46_117_12.txt @@ -0,0 +1,4 @@ +ನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ +ಮೈಸೂರು,ಜೂ. 8– ಕಪಿಲಾ ನದಿ ದಂಡೆ ಕೂಗಳತೆ ದೂರದಲ್ಲಿದ್ದರೂ ಸಹ ಸ್ಥಳೀಯರಿಗೆ ನೀರಿನ ಸಮಸ್ಯೆ ತಪ್ಪಿಲ್ಲ. ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವಂತಾಗಿದೆ.ಪ್ರತಿದಿನ ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವ ಗೋಳೂರು ಗ್ರಾಮಸ್ಥರ ಪರಿಪಾಟಲಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ. +ಸುಮಾರು ಮೂರು ಸಾವಿರ ಕುಟುಂಬಗಳಿರುವ ಈ ಗ್ರಾಮ ನಿರ್ಲಕ್ಷಕ್ಕೆ ಒಳಗಾಗಿ ನೀರಿನ ಅಭಾವ ಇಲ್ಲಿನ ಜನಗಳಿಗೆ ನಿರಂತರವಾಗಿ ಕಾಡುತ್ತಿದೆ.ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರ ಸಂಯಮ ಮೀರಿದೆ. ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿ ಗಳ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ. +ನೀರಿನ ಸಮಸ್ಯೆ ಬಗೆಹರಿಸುವಂತೆ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಮಹಿಳೆಯರು ಆಕೋಶ ವ್ಯಕ್ತಪಡಿಸಿದ್ದಾರೆ. ಮನೆಗೆ ಅಳವಡಿಸಲಾದ ಕೊಳಾಯಿಗಳು ಬರಿದಾಗಿವೆ. ನೀರಿನ ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_117_2.txt b/eesanje/url_46_117_2.txt new file mode 100644 index 0000000000000000000000000000000000000000..310c915a36884debf15061eac212a197eb615b5a --- /dev/null +++ b/eesanje/url_46_117_2.txt @@ -0,0 +1,10 @@ +ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆ : ತಮ್ಮದೇ ಶಾಸಕರ ಮೇಲೆ ಸತೀಶ್‌ ಜಾರಕಿಹೊಳಿ ಅಸಮಾಧಾನ +ಬೆಂಗಳೂರು, ಜೂ.8-ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಸಾಕಷ್ಟು ವ್ಯತ್ಯಾಸಗಳಿದ್ದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 2 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗಿದೆ ಎಂಬ ಅಸಮಾಧಾನ ಇದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ 70 ಸಾವಿರ ಲೀಡ್‌ ಇತ್ತು. ಈಗ 8 ಸಾವಿರ ಕಡಿಮೆಯಾಗಿದೆ. ಶಶಿಕಲಾ ಜೊಲ್ಲೆ ಕ್ಷೇತ್ರದಲ್ಲಿ 30 ಸಾವಿರ ಲೀಡ್‌ ಸೇರಿದಂತೆ ದುರ್ಬಲ ಕ್ಷೇತ್ರದಲ್ಲೂ ಕಾಂಗ್ರೆಸ್‌‍ ಉತ್ತಮವಾಗಿ ಮತ ಗಳಿಸಿದೆ. ಆದರೆ ಅಥಣಿಯಲ್ಲಿ ಮತ್ತು ಕುಡಚಿಯಲ್ಲಿ ಹಿನ್ನಡೆಯಾಗಿದೆ ಎಂದರು. +ಕುಡಚಿ ಕ್ಷೇತ್ರದ ಶಾಸಕ ಮಹೇಂದ್ರ ಕೆ.ತಮಣ್ಣನವರ್‌ ಮತದಾನಕ್ಕೆ ಎರಡು ದಿನ ಮೊದಲೇ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಎಲ್ಲೋ ಹೋಗಿ ಮಲಗಿದ್ದರು. ನಾನು ಮೂರು ದಿನ ಅದೇ ಕ್ಷೇತ್ರದಲ್ಲಿ ಉಳಿದು ಕೆಲಸ ಮಾಡಬೇಕಾಯಿತು. ಮತದಾನದ ದಿನ ಮತಗಟ್ಟೆಗಳಿಗೆ ಭೇಟಿ ನೀಡುವುದು ಶಾಸಕರ ಕರ್ತವ್ಯ. ಅಂದೂ ಕೂಡ ಮಹೇಂದ್ರ ಅವರು ಪತ್ತೆ ಇರಲಿಲ್ಲ ಎಂದು ಹೇಳಿದರು. +ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗಲು ಶಾಸಕರುಗಳೇ ಕಾರಣ. ಅವರ ಕಾರ್ಯಕರ್ತರು ಹಾಗೂ ಅನ್ಯಾಯಿಗಳು ಯಾರ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಗೊತ್ತಿದೆ. ಇದರ ಹಿಂದೆ ರಾಜ್ಯ ನಾಯಕರಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಹಿನ್ನಡೆಗೆ ಕಾರಣವನ್ನು ಶಾಸಕರು ಹೇಳಿದಾಗ ಮಾತ್ರ ವಿಷಯ ಗೊತ್ತಾಗಲಿದೆ ಎಂದರು. +ಲಕ್ಷ್ಮಣ್‌ ಸವದಿ ಲೋಕಸಭಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ರಾಜಕೀಯವಾಗಿ ನಮ್ಮ ಜೊತೆ ಮತ್ತಷ್ಟು ಗಟ್ಟಿಗೊಳ್ಳುವ ಅವಕಾಶವಿತ್ತು. ಆದರೆ ಈಗ ಯತಾಸ್ಥಿತಿ ಮುಂದುವರೆದಿದೆ ಎಂದು ಅಸಹನೆ ವ್ಯಕ್ತಪಡಿಸಿದರು. +ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸುವ ಕ್ಷೇತ್ರಗಳಲ್ಲಿ ವಿಶ್ಲೇಷಣೆ ನಡೆಯುವುದು ಸಹಜ. ಆದರೆ ಸಚಿವರ ತಲೆದಂಡ ಆಗುವುದಿಲ್ಲ. ಸೋಲು-ಗೆಲುವಿಗೆ ಸಚಿವರನ್ನು ಹೊಣೆ ಮಾಡುವುದಾಗಿಯೂ ಯಾರೂ ಸೂಚನೆ ನೀಡಿರಲಿಲ್ಲ. ಅಂತಹ ಚರ್ಚೆಗಳೂ ನಡೆದಿರಲಿಲ್ಲ. ಮತದಾರರು ರಾಷ್ಟ್ರ ರಾಜಕಾರಣಕ್ಕೆ ಮತ್ತು ರಾಜ್ಯ ರಾಜಕಾರಣಕ್ಕೆ ಬೇರೆಯದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು. +ಸಚಿವರ ಪ್ರಗತಿ ಕುರಿತು ವರದಿ ನೀಡಬೇಕು ಎಂದು ರಾಹುಲ್‌ಗಾಂಧಿ ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್‌ ಜಾರಕಿಹೊಳಿ, ನಾವೇನು ಸರ್ಕಾರಿ ನೌಕರರಲ್ಲ. ಪ್ರಗತಿಪತ್ರ ಅಗತ್ಯವಿಲ್ಲ ಎಂದರು. +ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌‍ ಕೈ ಹಿಡಿದಿರುವುದರಿಂದಾಗಿಯೇ ಬಿಜೆಪಿಯವರ ಗೆಲುವಿನ ಅಂತರ ಕಡಿಮೆಯಾಗಿದೆ. ಈ ಮೊದಲೆಲ್ಲಾ 2-3 ಲಕ್ಷ ದಅಂತರದಲ್ಲಿ ಫಲಿತಾಂಶ ಬರುತ್ತಿತ್ತು. ಅದು ಕುಸಿದಿದೆ. ಏನೇ ಆದರೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಹಾಗಾಗಿ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಜೆಡಿಎಸ್‌‍ -ಬಿಜೆಪಿ ಮೈತ್ರಿ ಕಾಂಗ್ರೆಸ್‌‍ಗೆ ಮುಂದಿನ ದಿನಗಳಲ್ಲಿ ಸವಾಲಾಗಿದ್ದು, ಅದನ್ನು ಎದುರಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುವ ಅಗತ್ಯವಿದೆ ಎಂದು ಹೇಳಿದರು. \ No newline at end of file diff --git a/eesanje/url_46_117_3.txt b/eesanje/url_46_117_3.txt new file mode 100644 index 0000000000000000000000000000000000000000..6b9d4e556568fbc3430c37e2393795aa55a2e42d --- /dev/null +++ b/eesanje/url_46_117_3.txt @@ -0,0 +1,5 @@ +ಎಸ್‌‍ಐಟಿ ಕಚೇರಿಯಲ್ಲಿ ಅಮ್ಮ-ಮಗ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ +ಬೆಂಗಳೂರು, ಜೂ.8-ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ವಿಚಾರಣೆಗಾಗಿ ಎಸ್‌‍ಐಟಿ ಕಚೇರಿಗೆ ಭವಾನಿ ರೇವಣ್ಣ ಅವರು ಆಗಮಿಸಿದಾಗ ಪಕ್ಕದ ಕೊಠಡಿಯಲ್ಲಿ ಮಗ ಪ್ರಜ್ವಲ್‌ ಇದ್ದರೂ ಒಬ್ಬರನ್ನೊಬ್ಬರು ನೋಡಲಾಗದ ಸನ್ನಿವೇಶ ಮನಕಲಕುವಂತಿತ್ತು. +ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಎಸ್‌‍ಐಟಿ ವಶದಲ್ಲಿದ್ದು, ನಿನ್ನೆ ಭವಾನಿ ಅವರು ಎಸ್‌‍ಐಟಿ ವಿಚಾರಣೆಗಾಗಿ ಕಚೇರಿಗೆ ಹಾಜರಾದಾಗ ಅಮ್ಮ-ಮಗ ಅಕ್ಕಪಕ್ಕದ ಕೊಠಡಿಯಲ್ಲಿದ್ದರೂ ಮುಖ ನೋಡಲಾಗಲಿಲ್ಲ. +ಕೆಆರ್‌ ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿನ್ನೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಭವಾನಿ ಅವರನ್ನು ಯಾವುದೇ ಕಾರಣಕ್ಕೂ ಎಸ್‌‍ಐಟಿ ಬಂಧಿಸುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಕಚೇರಿಗೆ ವಕೀಲರೊಂದಿಗೆ ವಿಚಾರಣೆಗಾಗಿ ಭವಾನಿ ರೇವಣ್ಣ ತೆರಳಿದಾಗ ಪಕ್ಕದ ಕೊಠಡಿಯಲ್ಲೇ ಪ್ರಜ್ವಲ್‌ ಇದ್ದರೂ ನೋಡಲಿಕ್ಕೆ ಆಗಲಿಲ್ಲ. +ಸುಮಾರು ಒಂದೂವರೆ ತಿಂಗಳಿನಿಂದ ಮಗನ ಮುಖವನ್ನು ಭವಾನಿ ಅವರು ನೋಡಿಲ್ಲ. ನಿನ್ನೆ ಎಸ್‌‍ಐಟಿ ವಿಚಾರಣೆ ಮುಗಿಸಿ ಸೀದಾ ಹೊರಬಂದಿದ್ದಾರೆ. ಪ್ರಜ್ವಲ್‌ ಹಾಗೂ ಭವಾನಿ ಅವರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್‌‍ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿಕೊಂಡಿದ್ದಾರೆ. \ No newline at end of file diff --git a/eesanje/url_46_117_4.txt b/eesanje/url_46_117_4.txt new file mode 100644 index 0000000000000000000000000000000000000000..940c5d08b6c8505072aeac6914580eedd933740a --- /dev/null +++ b/eesanje/url_46_117_4.txt @@ -0,0 +1,8 @@ +ಲೋಕಸಭೆ-ವಿಧಾನಪರಿಷತ್‌ ಚುನಾವಣೆ ನಂತರ ಇಮ್ಮಡಿಗೊಂಡ ಜೆಡಿಎಸ್‌‍ ಉತ್ಸಾಹ +ಬೆಂಗಳೂರು, ಜೂ.8-ಲೋಕಸಭೆ ಮತ್ತು ವಿಧಾನಪರಿಷತ್‌ ಚುನಾವಣೆ ನಂತರ ಜೆಡಿಎಸ್‌‍ ಮುಖಂಡರು ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾಗಿದ್ದ ಹೀನಾಯ ಸೋಲಿನಿಂದ ಕಂಗೆಟ್ಟಿದ್ದ ಜೆಡಿಎಸ್‌‍ ಪಕ್ಷದ ಮುಖಂಡರು, ಕಾರ್ಯಕರ್ತರು ಮಂಕಾಗಿ ಉತ್ಸಾಹವನ್ನೇ ಕಳೆದುಕೊಂಡಿದ್ದರು. +ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದು, ನಿರೀಕ್ಷೆಗೂ ಮೀರಿದ ಫಲ ನೀಡಿದೆ. ಹೀಗಾಗಿ ಜೆಡಿಎಸ್‌‍ ಪುಟಿದೆದ್ದಿದ್ದು, ಮೈತ್ರಿ ಟಾನಿಕ್‌ ನೀಡಿದಂತಾಗಿದೆ. +ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌‍ ಕಳೆಗುಂದಿದಂತೆ ವಿಧಾನಸಭೆ ಚುನಾವಣೆ ನಂತರ ಕಂಡುಬಂದಿತ್ತು. ಆದರೆ ಲೋಕಸಭಾ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳಿಗೆ ಲಾಭವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌‍ನ ಸಾಂಪ್ರದಾಯಿಕ ಮತಗಳು ಒಗ್ಗೂಡಿದ್ದು ಇದಕ್ಕೆ ಪ್ರಮುಖ ಕಾರಣ. +ವಿಧಾನಪರಿಷತ್‌ನ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌‍ ಜಯಭೇರಿ ಭಾರಿಸಿದೆ. ಆದರೆ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮಿತ್ರ ಪಕ್ಷ ಬಿಜೆಪಿ ಒಂದು ಕ್ಷೇತ್ರದಲ್ಲಷ್ಟೇ ಗೆಲ್ಲಲು ಸಾಧ್ಯವಾಗಿದೆ. ಇದರಿಂದ ಬಿಜೆಪಿಗಿಂತ ಜೆಡಿಎಸ್‌‍ಗೆ ಹೆಚ್ಚಿನ ಅನುಕೂಲವಾಗುತ್ತಿದೆ. +ಕಾಂಗ್ರೆಸ್‌‍ನೊಂದಿಗೆ ಮೈತ್ರಿ ಮಾಡಿಕೊಂಡ ಸಂದರ್ಭದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯದೆ ಅಸಮಾಧಾನ ಉಂಟಾಗುತ್ತಿತ್ತು. ಆದರೆ ಈ ಬಾರಿ ಬಿಜೆಪಿಯೊಂದಿಗಿನ ಮೈತ್ರಿ ಹೆಚ್ಚಿನ ಅನುಕೂಲವಾಗಿದ್ದು, ಮುಂಬರುವ ಬಿಬಿಎಂಪಿ ನಗರ ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಮೈತ್ರಿಯನ್ನು ಮುಂದುವರೆಸಲು ಉತ್ಸುಕವಾಗಿದೆ. +ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಬಹುಮತದಿಂದ ಚುನಾಯಿತರಾಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ ಸೇರುತ್ತಿರುವುದು ಪಕ್ಷದಲ್ಲಿನ ಉತ್ಸಾಹವನ್ನ ಮತ್ತಷ್ಟು ಹೆಚ್ಚಿಸಿದೆ. ಇದು ಪಕ್ಷದ ಮೇಲೆ ಪ್ರಭಾವ ಬೀರುತ್ತಿದ್ದು, ಪಕ್ಷ ಸಂಘಟನೆಯ ಜೊತೆಗೆ ಹೋರಾಟಗಳಲ್ಲೂ ಹೆಚ್ಚಿನ ಉತ್ಸಾಹದಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ತೊಡಗಿಸಿಕೊಳ್ಳಲು ಕಾತರಿಸುತ್ತಿದ್ದಾರೆ. +ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಪಕ್ಷದ ಸಭೆ ನಡೆಸಿ ಮುಂದಿನ ಹೋರಾಟ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಹಳೆ ಮೈಸೂರು ಭಾಗದಲ್ಲಿ ಸಿಂಹಪಾಲು ಪಡೆದಿತ್ತು. ಅದೇ ರೀತಿ ಈಗ ಬಿಜೆಪಿ-ಜೆಡಿಎಸ್‌‍ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಸಿಂಹಪಾಲು ಪಡೆದಿವೆ. ಇದನ್ನು ಇನ್ನಷ್ಟು ಹೆಚ್ಚಿಸಿ ಮುನ್ನಡೆಯುವ ಉದ್ದೇಶವನ್ನು ಮಿತ್ರಪಕ್ಷಗಳು ಹೊಂದಿವೆ. ಅದಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮಿಕೊಳ್ಳಲು ಯೋಚಿಸುತ್ತಿದೆ. \ No newline at end of file diff --git a/eesanje/url_46_117_5.txt b/eesanje/url_46_117_5.txt new file mode 100644 index 0000000000000000000000000000000000000000..ae81dd3834b62d046c9db03c62bf9da5cf39dbdd --- /dev/null +++ b/eesanje/url_46_117_5.txt @@ -0,0 +1,13 @@ +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಇನ್ನೂ ಹಲವು ಸಚಿವರ ತಲೆದಂಡ..? +ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣ ರಾಜ್ಯಸಚಿವ ಸಂಪುಟದ ಹಲವರ ತಲೆದಂಡದ ಮುನ್ಸೂಚನೆ ನೀಡಿದ್ದು, ಸರ್ಕಾರದ ಬುಡವನ್ನೇ ಅಲುಗಾಡಿಸುವಷ್ಟು ಬ್ರಹ್ಮಾಂಡವಾಗಿ ಬೆಳೆಯುತ್ತಿದೆ 187 ಕೋಟಿ ರೂ.ಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಈಗಾಗಲೇ ನಿಗಮ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. +ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಪಡೆದುಕೊಂಡಾಗಿದೆ. ಆದರೆ ಹಣ ವರ್ಗಾವಣೆ ಮತ್ತು ಅದು ತಲುಪಿರುವ ಮೂಲಗಳ ಬಗ್ಗೆ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗುತ್ತಿವೆ. ರಾಜ್ಯಸರ್ಕಾರದ ತನಿಖೆಗೆ ಎಸ್‌‍ಐಟಿ ರಚಿಸಿದೆ. ಅದೇ ಸಮಯಕ್ಕೆ ಯೂನಿಯನ್‌ ಬ್ಯಾಂಕಿನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರ ದೂರಿನ ಆಧಾರದ ಮೇಲೆ ಸಿಬಿಐ ಕೂಡ ಎಫ್‌ಐಆರ್‌ ದಾಖಲಿಸಿದೆ. +ರಾಜ್ಯಸರ್ಕಾರದ ಎಸ್‌‍ಐಟಿ ಅಧಿಕಾರಿಗಳು ತನಿಖೆಯಲ್ಲಿ ಲೋಪ ಮಾಡಿದರೆ ಮುಂದಿನ ದಿನಗಳಲ್ಲಿ ಸಿಬಿಐನ ತನಿಖೆಯ ಕುಣಿಕೆಗೆ ಸಿಲುಕಿಕೊಳ್ಳುವ ಅಪಾಯವಿದೆ.ಹೀಗಾಗಿ ಪ್ರತಿಯೊಂದನ್ನೂ ಕಾನೂನುಬದ್ಧವಾಗಿ, ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ವಿಚಾರಣೆಗೊಳಪಡಿಸಲಾಗುತ್ತಿದೆ. ಪ್ರಕರಣವನ್ನು ಬಯಲಿಗೆ ಬರುವಂತೆ ಮಾಡಿ ಆತಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರು ಮರಣ ಪತ್ರದಲ್ಲಿ ಉಲ್ಲೇಖಿಸಿರುವ ಲೆಕ್ಕಾಧಿಕಾರಿ ಪರಶುರಾಮ್‌ ದುರ್ಗಣ್ಣನವರ್‌ ಅವರನ್ನು ಎಸ್‌‍ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಸ್ಫೋಟಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. +ಆದರೆ, ಮಾಹಿತಿಯನ್ನು ಹೇಳಿಕೆ ರೂಪದಲ್ಲಷ್ಟೇ ಸಂಗ್ರಹಿಸದೆ ಸಂಬಂಧಿಸಿದ ನ್ಯಾಯಾಲಯಕ್ಕೆ ಆರೋಪಿ ಅಧಿಕಾರಿಯಿಂದಲೇ ಪ್ರಮಾಣಪತ್ರ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ. ಹೀಗಾಗಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮತ್ತಷ್ಟು ಜನರಿಗೆ ಸಂಕಷ್ಟವಾಗುವ ಸಾಧ್ಯತೆಯಿದೆ. +ಅಧಿಕಾರಿ ಪರಶುರಾಮ್‌ ಮೇ 24 ರಂದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಚಿವ ಶರಣಪ್ರಕಾಶ್‌ ಪಾಟೀಲ್‌ ಅವರ ಕೊಠಡಿಯಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೂ ಸಭೆ ನಡೆಸಿದ್ದು, ಪ್ರಕರಣದಲ್ಲಿ ಸಾಕ್ಷ್ಯಗಳನ್ನು ಹಾಗೂ ದಾಖಲಾತಿಗಳನ್ನು ನಾಶಪಡಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎನ್ನಲಾಗಿದೆ. +ಸಭೆಯಲ್ಲಿ ಸಚಿವರಾದ ಶರಣಪ್ರಕಾಶ್‌ ಪಾಟೀಲ್‌, ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು ಎಂಬ ಮಾಹಿತಿ ಇದೆ.ಇದನ್ನೇ ಆಧಾರವಾಗಿಟ್ಟುಕೊಂಡಿರುವ ಪ್ರತಿಪಕ್ಷಗಳು ಸಚಿವ ಶರಣಪ್ರಕಾಶ್‌ ಪಾಟೀಲ್‌ ಅವರ ರಾಜೀನಾಮೆಗೆ ಪಟ್ಟು ಹಿಡಿದಿವೆ. ಜೊತೆಗೆ ಬಸವನಗೌಡ ದದ್ದಲ್‌ ಅವರನ್ನೂ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿವೆ. +ನಿಗಮದ ಹಣ ಬ್ಯಾಂಕ್‌ನ ಮೂಲ ಖಾತೆಯಿಂದ ಉಪಖಾತೆಗೆ ವರ್ಗಾವಣೆಗೊಂಡು ಅಲ್ಲಿಂದ ತೆಲಂಗಾಣದ ಹಲವು ಕಂಪನಿಗಳಿಗೆ ಹಂಚಿಕೆಯಾಗಿದೆ. ಈ ಹಣವನ್ನು ಲೋಕಸಭಾ ಚುನಾವಣೆಗಾಗಿಯೇ ಬಳಕೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸುತ್ತಿರುವ ಪ್ರತಿಪಕ್ಷ ತೆಲಂಗಾಣದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಎನ್‌.ಎಸ್‌‍.ಬೋಸರಾಜ್‌ ಅವರ ರಾಜೀನಾಮೆಗೂ ಒತ್ತಾಯಗಳು ಕೇಳಿಬರುತ್ತಿವೆ. +ಮುಂದುವರೆದ ಮಾಹಿತಿಯಲ್ಲಿ ತೆಲಂಗಾಣ ಮೂಲದಿಂದ ಹಣವನ್ನು ಕಲ್ಯಾಣ ಕರ್ನಾಟಕ ಭಾಗದ ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.ಐಟಿಬಿಟಿ ಕಂಪನಿಗಳ ಹೆಸರು ಉಲ್ಲೇಖವಾಗಿರುವುದರಿಂದಾಗಿ ಪ್ರಕರಣ ಎಲ್ಲಿಂದ ಎಲ್ಲಿಗೋ ಸಂಪರ್ಕಗೊಳ್ಳುತ್ತಿದ್ದು, ಹಲವು ಸಚಿವರುಗಳ ಹೆಸರು ಥಳಕು ಹಾಕಿಕೊಳ್ಳುವಂತೆ ಮಾಡಿದೆ.ಶೋಷಿತರ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಕೋಟ್ಯಂತರ ರೂ.ಗಳು ಹಿಡಿಗಂಟಾಗಿ ವರ್ಗಾವಣೆಗೊಂಡಿರುವುದು ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ವ್ಯಕ್ತಿಗಳಿಗೆ ಹಂಚಿಕೆಯಾಗಿರುವುದು ತನಿಖಾಧಿಕಾರಿಗಳ ಹುಬ್ಬೇರುವಂತೆ ಮಾಡಿದೆ. +ಆರಂಭದಲ್ಲಿ ಹಣ ವರ್ಗಾವಣೆಯಾಗಿರುವುದು ತಮ ಗಮನದಲ್ಲಿರಲಿಲ್ಲ ಎಂಬ ಹೇಳಿಕೆ ನೀಡಿದ್ದ ಆಗಿನ ಸಚಿವ ನಾಗೇಂದ್ರ ವರ್ಗಾವಣೆಯಾಗಿರುವ ಹಣ ಎಲ್ಲಿಯೂ ಹೋಗಿಲ್ಲ. ಖಾಸಗಿಯಾಗಿ ಅದನ್ನು ನಗದೀಕರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಹಣ ಮರಳಿ ನಿಗಮದ ಖಾತೆಗೆ ಬರಲಿದೆ ಎಂದು ಹೇಳುತ್ತಿದ್ದರು. ಹಣ ಪೋಲಾಗುವುದಿಲ್ಲ ಎಂಬುದೇ ಆಗಿದ್ದರೆ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಮಾಡಿಕೊಳ್ಳುವ ಗಂಭೀರ ಪರಿಸ್ಥಿತಿ ಏಕಿತ್ತು ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. +ಆದರೆ ತನಿಖೆ ಆಳಕ್ಕಿಳಿದಂತೆಲ್ಲಾ ಕೋಟ್ಯಂತರ ರೂ.ಗಳನ್ನು ನುಂಗಿ ಪಂಗನಾಮ ಹಾಕುವ ಷಡ್ಯಂತರಗಳು ಒಂದೊಂದಾಗಿ ಬಯಲಾಗುತ್ತಿವೆ.ಇದರಲ್ಲಿ ಕೆಲ ಸಚಿವರಷ್ಟೇ ಅಲ್ಲ ಪ್ರಭಾವಿಗಳ ಹಸ್ತಕ್ಷೇಪವೂ ಇರುವ ಸಾಧ್ಯತೆ ಇದೆ ಎಂಬ ವದಂತಿಗಳಿವೆ.ಹೀಗಾಗಿ ವಸತಿ ನಿಗಮದ ಹಗರಣ ನಾಗೇಂದ್ರ ಅವರ ತಲೆದಂಡಕ್ಕಷ್ಟೇ ಸೀಮಿತಗೊಳ್ಳದೆ ಮತ್ತಷ್ಟು ಸಚಿವ ಸ್ಥಾನಗಳನ್ನು ಅಪೋಷಣ ತೆಗೆದುಕೊಳ್ಳುವ ಸಾಧ್ಯತೆಯಿದೆ. +ಹಿಂದೇಟು ಹಾಕುತ್ತಿರುವ ಸರ್ಕಾರ :ಪ್ರಕರಣದ ಆಳದ ಅರಿವಾಗುತ್ತಿದ್ದಂತೆ ಸರ್ಕಾರ ಸಿಬಿಐ ತನಿಖೆಯನ್ನು ಬ್ಯಾಂಕಿನ ವಹಿವಾಟಿಗೆ ಸೀಮಿತಗೊಳಿಸುವ ಪ್ರಯತ್ನ ನಡೆಸುತ್ತಿದೆ. 3 ಕೋಟಿ ರೂ.ಗಳಿಗೆ ಮೇಲ್ಪಟ್ಟ ಬ್ಯಾಂಕ್‌ ಅವ್ಯವಹಾರಗಳು ಸಹಜವಾಗಿಯೇ ಸಿಬಿಐ ತನಿಖೆಗೆ ಒಳಪಡುತ್ತವೆ. ಅದೇ ರೀತಿ ವಾಲೀಕಿ ನಿಗಮದ ಹಗರಣ ಈಗಾಗಲೇ ತನಿಖೆ ಶುರುವಾಗಿದೆ. ಆದರೆ ಇದು ಬ್ಯಾಂಕಿನ ವಹಿವಾಟಿಗಷ್ಟೇ ಸೀಮಿತಗೊಳ್ಳದೆ ಪರಿಶಿಷ್ಟ ವರ್ಗಗಳ ಕಲ್ಯಾಣ, ಸಹಕಾರ, ಹಣಕಾಸು ಸೇರಿದಂತೆ ವಿವಿಧ ಇಲಾಖೆಗಳ ನಿರ್ದೇಶನಾಲಯಗಳನ್ನು ತನಿಖೆಗೊಳಪಡಿಸಬೇಕಾದ ಸಾಧ್ಯತೆಯಿದೆ. +ಇಲಾಖೆಗಳನ್ನು ಸಿಬಿಐ ತನಿಖೆಗೊಳಪಡಿಸಲು ಸರ್ಕಾರದ ಅನುಮತಿ ಅಗತ್ಯವಿದೆ. ರಾಜ್ಯಸರ್ಕಾರ ನೀತಿ ಸಂಹಿತೆಯ ನೆಪದಲ್ಲಿ ಈವರೆಗೂ ತನ್ನ ಇಲಾಖೆಗಳ ವ್ಯಾಪ್ತಿಯ ವಿಚಾರಣೆಗೆ ಅನುಮತಿಸಿಲ್ಲ. ಒಂದು ವೇಳೆ ಪೂರ್ಣ ಪ್ರಮಾಣದ ತನಿಖೆಗೆ ಅವಕಾಶ ನೀಡಿದ್ದೇ ಆದರೆ ಮತ್ತುಷ್ಟು ಬ್ರಹಾಂಡ ಸತ್ಯಗಳು ಬಯಲಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_117_6.txt b/eesanje/url_46_117_6.txt new file mode 100644 index 0000000000000000000000000000000000000000..a84ef3e64d5c99d67a33f8ccfa78672f14bf5ff5 --- /dev/null +++ b/eesanje/url_46_117_6.txt @@ -0,0 +1,9 @@ +ರಾಜ್ಯದಲ್ಲಿ ನಿರಂತರ ಮಳೆ, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಹರ್ಷ +ಬೆಂಗಳೂರು, ಜೂ.8-ಮೇ ತಿಂಗಳ ನಂತರ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಬರದಿಂದ ಕಂಗೆಟ್ಟಿದ್ದ ರೈತ ಸಮುದಾಯಕ್ಕೆ ಖುಷಿ ತಂದಂತಾಗಿದೆ. ಜೊತೆಗೆ ಪ್ರಮುಖ ಜಲಾಶಯಗಳ ಒಳ ಹರಿವು ಪ್ರಾರಂಭವಾಗಿರುವುದು ಮತ್ತಷ್ಟು ಸಂತೋಷವನ್ನು ನೀಡುತ್ತಿದೆ. +ರಾಜ್ಯದ 14 ಪ್ರಮುಖ ಜಲಾಶಯಗಳ ಪೈಕಿ ಮಲಪ್ರಭಾ ಜಲಾಶಯವನ್ನು ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳ ಒಳಹರಿವು ಪ್ರಾರಂಭವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬಾರದಿದ್ದರೂ ಸ್ವಲ್ಪ ಪ್ರಮಾಣದ ಒಳಹರಿವು ಎಲ್ಲಾ ಜಲಾಶಯಗಳಲ್ಲಿ ಕಂಡುಬರುತ್ತಿದೆ. ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆಯ ತೀವ್ರ ಕೊರತೆಯಿಂದ ರಾಜ್ಯ ಬರದ ಕರಾಳ ಛಾಯೆಗೆ ಸಿಲುಕಿತ್ತು. ಕಳೆದ ಬೇಸಿಗೆಯಲ್ಲಿ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿತ್ತು. +ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ನಿರಂತರವಾಗಿ ಬೀಳುತ್ತಿದೆ. ಇದರಿಂದ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿವೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 174.32 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 192.75 ಟಿಎಂಸಿ ಅಡಿಯಷ್ಟು ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 18 ಟಿಎಂಸಿಯಷ್ಟು ನೀರು ಕಡಿಮೆ ಸಂಗ್ರಹವಾಗಿದೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ಪ್ರಕಾರ, 22 ಸಾವಿರ ಕ್ಯೂಸೆಕ್‌್ಸಗೂ ಹೆಚ್ಚಿನ ಒಳಹರಿವಿದೆ. 7 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವು ಇದೆ. ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. +ಕೃಷ್ಣಾಕೊಳ್ಳದ ತುಂಗಭದ್ರಾ ಜಲಾಶಯಕ್ಕೆ 1,400 ಕ್ಕೂ ಹೆಚ್ಚು ಕ್ಯೂಸೆಕ್‌್ಸ, ಆಲಮಟ್ಟಿಗೆ 2,500 ಕ್ಕೂ ಹೆಚ್ಚು ಕ್ಯೂಸೆಕ್ಸ್ , ನಾರಾಯಣಪುರ ಜಲಾಶಯಕ್ಕೆ 12,000 ಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವು ಇದೆ. ಒಟ್ಟಾರೆ ಕಾವೇರಿ ಜಲಾನಯನದ ಜಲಾಶಯಗಳಲ್ಲಿ 15,000 ಕ್ಯೂಸೆಕ್‌್ಸಗಿಂತಲೂ ಹೆಚ್ಚಿನ ಒಳಹರಿವಿದೆ. +ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳಿಗೆ 1,500 ಕ್ಕೂ ಹೆಚ್ಚು ಕ್ಯೂಸೆಕ್‌್ಸ ನೀರು ಹರಿದುಬರುತ್ತಿದೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ ಜಲಾಶಯಕ್ಕೆ ಅಲ್ಪಪ್ರಮಾಣದ ಒಳಹರಿವಿದೆ. ಕೆಆರ್‌ಎಸ್‌‍ ಜಲಾಶಯಕ್ಕೆ 1,400 ಕ್ಯೂಸೆಕ್ಸ್ ಗೂ ಹೆಚ್ಚು ಒಳಹರಿವಿದ್ದರೆ ಕಬಿನಿ ಜಲಾಶಯಕ್ಕೆ 3,000 ಕ್ಕೂ ಹೆಚ್ಚು ಕ್ಯೂಸೆಕ್‌್ಸ ಒಳಹರಿವಿದೆ. +ಈ ನಾಲ್ಕೂ ಜಲಾಶಯಗಳಲ್ಲಿ 34 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ 33.50 ಅಡಿ ಟಿಎಂಸಿಯಷ್ಟು ನೀರಿತ್ತು. ಈ ಬಾರಿಯ ಮುಂಗಾರು ವಾಡಿಕೆ ಪ್ರಮಾಣದಲ್ಲಿ ಆಗಲಿದೆ ಎಂಬ ಮುನ್ಸೂಚನೆಯಿದೆ. ಅಲ್ಲದೆ, ಸದ್ಯಕ್ಕೆ ಇನ್ನೂ ಒಂದು ವಾರ ಮಳೆ ಬೀಳುವ ಮುನ್ಸೂಚನೆಗಳಿವೆ. ಹೀಗಾಗಿ ಒಳಹರಿವು ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. +ಆದರೆ ಕೇರಳದ ವಯನಾಡು ಭಾಗದಲ್ಲಿ ಮುಂಗಾರು ಅವಧಿಗೂ ಮುನ್ನ ಆರಂಭವಾಗಿದ್ದರೂ ಈ ತನಕ ಭಾರಿ ಮಳೆಯಾಗಿಲ್ಲ. ವಯನಾಡು ಮತ್ತು ಕೊಡಗಿನ ಭಾಗದಲ್ಲಿ ಮುಂಗಾರು ಆರಂಭವಾಗಿ ಎಂಟು-ಹತ್ತು ದಿನ ಕಳೆದರೂ ಭಾರಿ ಮಳೆಯಾಗುತ್ತಿಲ್ಲ. ಆದರೆ ನಿರಂತರ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳಹರಿವು ಹೆಚ್ಚಾಗುವ ನಿರೀಕ್ಷೆ ಇದೆ. \ No newline at end of file diff --git a/eesanje/url_46_117_7.txt b/eesanje/url_46_117_7.txt new file mode 100644 index 0000000000000000000000000000000000000000..9606c57447cb071c80b287d46d046d21297ba5b9 --- /dev/null +++ b/eesanje/url_46_117_7.txt @@ -0,0 +1,7 @@ +ವಾಲ್ಮೀಕಿ ಅಭಿವೃದ್ಧಿ ನಿಗಮಗದ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ : ಸಚಿವ ಶರಣಪ್ರಕಾಶ್‌ +ಬೆಂಗಳೂರು, ಜೂ.8-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಆರೋಪಿ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ದಿನ ನಾನು ಕಚೇರಿಗೇ ಹೋಗಿರಲಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್‌‍ಐಟಿ ವಿಚಾರಣೆಯಲ್ಲಿರುವ ಆರೋಪಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬುದು ನನ್ನ ಗಮನಕ್ಕೂ ಬಂದಿದೆ. ನಾನು ಓದಿದ ಪ್ರಕಾರ, ಸಚಿವರ ಕಚೇರಿಯಲ್ಲಿ ನಾನು ಒಬ್ಬರನ್ನು ಭೇಟಿ ಮಾಡಿದ್ದೇನೆ. ಈ ಹಿನ್ನೆಲೆಯಲ್ಲಿ ಅಲ್ಲಿನ ದೃಶ್ಯಾವಳಿಗಳನ್ನು ಸಂರಕ್ಷಿಸಿ ಎಂದು ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವರು ಸಭೆಯಲ್ಲಿದ್ದರು ಎಂದು ಹೇಳಿಲ್ಲ ಎಂದರು. +ಪ್ರಮಾಣಪತ್ರದ ಆಧಾರದ ಮೇಲೆ ನ್ಯಾಯಾಲಯ ನಿರ್ದೇಶನ ಕೊಟ್ಟು ತನಿಖೆ ಮಾಡಿಸಲಿ. ನನ್ನ ಅಭ್ಯಂತರವಿಲ್ಲ. 24 ರಂದು ನಾನು ಸಚಿವರ ಕಚೇರಿಗೆ ಹೋಗಿಲ್ಲ. ಆಗ ನೀತಿ ಸಂಹಿತೆ ಜಾರಿಯಲ್ಲಿತ್ತು. ವಿಕಾಸಸೌಧದಲ್ಲಿರುವ ತಮ್ಮ ಕಚೇರಿ ಸರ್ಕಾರಿ ಸ್ವತ್ತಾಗಿದೆ. ಅಲ್ಲಿಗೆ ಬಹಳಷ್ಟು ಮಂದಿ ಬರುತ್ತಾರೆ, ಕೂರುತ್ತಾರೆ, ಹೋಗುತ್ತಾರೆ. ನಾನು ಇಲ್ಲದೇ ಇದ್ದಾಗಲೂ ಅನೇಕ ಶಾಸಕರು ಬಂದು ಕುಳಿತು ಮಾತನಾಡಿ ಹೋಗಿರುವುದು ಸಾಮಾನ್ಯ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. +ಅದು ನನ್ನ ಖಾಸಗಿ ಕಚೇರಿಯಲ್ಲ. ಸರ್ಕಾರಿ ಕಚೇರಿ. ಹಾಗಾಗಿ ನಾನು ಸಿಸಿಟಿವಿಯನ್ನು ಪರಿಶೀಲಿಸುವ ಅಗತ್ಯವಿಲ್ಲ. ವಿಚಾರಣೆಗೆ ನನಗೆ ನೋಟೀಸ್‌‍ ಕೊಟ್ಟರೆ ನಾನು ಸಹಕರಿಸುತ್ತೇನೆ. ಕಚೇರಿಯಲ್ಲಿ ಅಂತಹ ಚರ್ಚೆಗಳು, ಸಭೆಗಳಾಗಿದ್ದರೆ ತನಿಖೆಯಾಗಲಿ. ಮಾಧ್ಯಮದಲ್ಲಿ ಈ ವಿಚಾರ ಬಂದ ಮೇಲೆ ನನಗೆ ಅರಿವಾಗಿದೆ. ಅದರ ಹೊರತಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು. +ಪ್ರಮಾಣಪತ್ರದ ವಿಷಯ ಹೊರಬರುತ್ತಿದ್ದಂತೆ ನಾನು ವಿಚಾರಣೆ ಮಾಡಿದ್ದೇನೆ. ಆದರೆ ಅಂತಹ ಯಾವುದೇ ಸಭೆಗಳು ನಡೆದಿರಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಅವರನ್ನು ನಾನು ವಿಚಾರಿಸಿದಾಗ ನಿಮನ್ನು ಭೇಟಿ ಮಾಡಲು ನಾನು ಕಚೇರಿಗೆ ಬಂದಿದ್ದೆ. ಅಲ್ಲಿಗೆ ಈಗ ಪ್ರಮಾಣಪತ್ರ ಸಲ್ಲಿಸಿರುವ ಆರೋಪಿತ ಅಧಿಕಾರಿ ಬಂದು ಹಗರಣದ ಬಗ್ಗೆ ಒಂದು ಪತ್ರ ನೀಡಿದ್ದ ಎಂದು ತಿಳಿಸಿದ್ದಾರೆ. +ನನ್ನ ಕಚೇರಿಯಲ್ಲಿ ಏನಾಗಿದೆ ಎಂಬ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಗೆ ಬರಲಿ ನನ್ನ ಗೈರುಹಾಜರಿಯಲ್ಲಿ ನಡೆದಿರುವುದಕ್ಕೆ ನಾನು ಹೊಣೆಯಲ್ಲ ಎಂದರು.ವಿರೋಧಪಕ್ಷಗಳು ನನ್ನ ರಾಜೀನಾಮೆ ಕೇಳುತ್ತಿರುವುದಲ್ಲಿ ತರ್ಕವೇ ಇಲ್ಲ. ಯಾವ ಆಧಾರದ ಮೇಲೆ ಆ ರೀತಿ ಆಗ್ರಹ ಮಾಡುತ್ತಿದ್ದಾರೆ. ನನಗೂ ಇದಕ್ಕೂ ಸಂಬಂಧವೇ ಇಲ್ಲ. ನಾನು ಈ ಹಿಂದೆ 5 ವರ್ಷಗಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಆರೋಪಗಳಿಲ್ಲ. ಭ್ರಷ್ಟಾಚಾರ, ಹಗರಣಗಳಿಗೆ ನಾನು ತದ್ವಿರುದ್ಧನಾಗಿದ್ದೇನೆ. ಪಾರದರ್ಶಕ ವ್ಯವಸ್ಥೆಯ ಮೇಲೆ ನನಗೆ ನಂಬಿಕೆ ಇದೆ ಎಂದು ಹೇಳಿದರು. \ No newline at end of file diff --git a/eesanje/url_46_117_8.txt b/eesanje/url_46_117_8.txt new file mode 100644 index 0000000000000000000000000000000000000000..15a73eaaf952a3bdcf9a53358758904d6de51cd2 --- /dev/null +++ b/eesanje/url_46_117_8.txt @@ -0,0 +1,5 @@ +ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಗೆಳತಿಗೆ ಎಸ್‌‍ಐಟಿ ನೋಟಿಸ್‌‍ +ಬೆಂಗಳೂರು, ಜೂ.8-ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಆರೋಪಿ ಪ್ರಜ್ವಲ್‌ ರೇವಣ್ಣಗೆ ವಿದೇಶದಲ್ಲಿದ್ದಾಗ ಸಹಾಯ ಮಾಡಿದ ಆತನ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಿದೆ. ಪೆನ್‌ಡ್ರೈವ್‌ಗಳ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಜ್ವಲ್‌ ಮತದಾನ ಮುಗಿಸಿಕೊಂಡು ಜರ್ಮನಿಗೆ ಹೋಗಿ ಅಡಗಿಕೊಂಡಿದ್ದರು. +ಸುಮಾರು 34 ದಿನಗಳ ಕಾಲ ಯಾರ ಸಂಪರ್ಕಕ್ಕೂ ಸಿಗದೆ ಜರ್ಮನಿಯಲ್ಲಿದ್ದಾಗ ಪ್ರಜ್ವಲ್‌ಗೆ ಆತನ ಗೆಳತಿ ಸಹಾಯ ಮಾಡಿರುವುದು ಎಸ್‌‍ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಗೆಳತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ ಎಂದು ತಿಳಿದುಬಂದಿದೆ. +ಪ್ರಜ್ವಲ್‌ ವಿದೇಶದಲ್ಲಿದ್ದಾಗ ಆತನ ಗೆಳತಿ ಸಹಾಯ ಮಾಡಿರುವ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಸ್ನೇಹಿತೆಗೆ ನೋಟಿಸ್‌‍ ನೀಡಿದ್ದಾರೆ.ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ತನಿಖೆಗಾಗಿ ಸರ್ಕಾರ ಎಸ್‌‍ಐಟಿ ರಚನೆ ಮಾಡಿದೆ. +ಪ್ರಕರಣ ದಾಖಲಾದ ನಂತರ ಪ್ರಜ್ವಲ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದರೂ ಬಂದಿರಲಿಲ್ಲ. ಎರಡು ಬಾರಿ ವಿಮಾನದ ಟಿಕೆಟ್‌ ಬುಕ್‌ ಮಾಡಿ ಕೊನೆ ಕ್ಷಣದಲ್ಲಿ ಪ್ರಜ್ವಲ್‌ ಅದನ್ನು ರದ್ದುಪಡಿಸಿದ್ದರು. ತದನಂತರ ಮೇ 31ರಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್‌ ಬಂದಾಗ ಎಸ್‌‍ಐಟಿ ಅಧಿಕಾರಿಗಳು ವಿಮಾನನಿಲ್ದಾಣದಲ್ಲೇ ವಶಕ್ಕೆ ಪಡೆದು ನಂತರ ಬಂಧಿಸಿದ್ದಾರೆ. \ No newline at end of file diff --git a/eesanje/url_46_117_9.txt b/eesanje/url_46_117_9.txt new file mode 100644 index 0000000000000000000000000000000000000000..aab3890d98d5d70b1a4b618225fc51c5b1fb55b8 --- /dev/null +++ b/eesanje/url_46_117_9.txt @@ -0,0 +1,6 @@ +ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರದಲ್ಲಿ ಕೆಲವು ಸಚಿವರು-ಶಾಸಕರು ಭಾಗಿ : ಸಿಬಿಐಗೆ ತನಿಖೆಗೆ ಬಿಜೆಪಿ ಒತ್ತಾಯ +ಬೆಂಗಳೂರು,ಜೂ.8– ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದಲ್ಲಿ ಇನ್ನೂ ಕೆಲವು ಸಚಿವರು ಮತ್ತು ಶಾಸಕರು ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರ ಇದನ್ನು ಸಿಬಿಐಗೆ ಒತ್ತಾಯಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಎಸ್‌‍ಐಟಿಯಿಂದ ಈ ಪ್ರಕರಣವನ್ನು ಬೇಧಿಸಲು ಸಾಧ್ಯವಿಲ್ಲ. ಏಕೆಂದರೆ ಇದು ಸರ್ಕಾರದ ಕೆಳಗೆಯೇ ಕಾರ್ಯ ನಿರ್ವಹಿಸುವುದರಿಂದ ಸಚಿವರು ಮತ್ತು ಶಾಸಕರನ್ನು ವಿಚಾರಣೆಗೆ ಕರೆಸಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದೆ. +ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಚಿವರಾದ ಶರಣ ಪ್ರಕಾಶ್‌ ಪಾಟೀಲ್‌ ಅವರ ಕಾರ್ಯಾಲಯದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಯೂನಿಯನ್‌ ಬ್ಯಾಂಕಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ನಾಶ ಮಾಡುವ ಸಂಭವವಿದ್ದು ಅವುಗಳನ್ನು ಕೂಡ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ನ್ಯಾಯಾಲಯದಲ್ಲಿ ಎಸ್‌‍ಐಟಿ ವಶದಲ್ಲಿರುವ 8ನೇ ಆರೋಪಿ ಹೇಳಿರುವುದು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದೆ. +ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ ಸರ್ಕಾರದ ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್ಸಿನ ಬಹುತೇಕ ನಾಯಕರು ಸೇರಿಕೊಂಡು ಮಾಡಿರುವ ಮಹಾನ್‌ ಭ್ರಷ್ಟಾಚಾರ ಎಂದು ವಾಗ್ದಾಳಿ ನಡೆಸಿದೆ. +ತನ್ನ ಮೊಬೈಲ್‌ನಲ್ಲಿ ನಿಗಮದ ಅಧ್ಯಕ್ಷರಾದ ಬಸವರಾಜ್‌ ದದ್ದಲ್‌ ಜೊತೆ ನಡೆಸಿರುವ ಸಂಭಾಷಣೆಯನ್ನು ವಶಪಡಿಸಿಕೊಂಡಿದ್ದು ಅದನ್ನು ನಾಶ ಮಾಡುವ ಸಂಭವವಿರುತ್ತದೆ. ಹಾಗಾಗಿ ಅದರ ಒಂದು ಪ್ರತಿಯನ್ನು ನ್ಯಾಯಾಲಯ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದೆ. +ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಭಾಗಿಯಾಗಿರುವ ಈ ಒಂದು ಹಗರಣವನ್ನು ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸುವುದು ಅಸಾಧ್ಯ, ಆದಕಾರಣ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಸಿಬಿಐಗೆ ವಹಿಸಿ ತಾವು ಕೂಡ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. \ No newline at end of file diff --git a/eesanje/url_46_118_1.txt b/eesanje/url_46_118_1.txt new file mode 100644 index 0000000000000000000000000000000000000000..e9c04d301cdf7a6ef8d70cec0a3784ff5c6bd366 --- /dev/null +++ b/eesanje/url_46_118_1.txt @@ -0,0 +1,5 @@ +ಮೇ ತಿಂಗಳಿನಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯಲ್ಲಿ 2240.32 ಕೋಟಿ ರೂ. ಕುಸಿತ +ಬೆಂಗಳೂರು,ಜೂ.8-ರಾಜ್ಯ ವಾಣಿಜ್ಯ ತೆರಿಗೆ ಸಂಗ್ರಹಣೆಯು ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಆಗಿದೆ. ಕಳೆದ ಏಪ್ರಿಲ್‌ ತಿಂಗಳಿಗೆ ಹೋಲಿಸಿದರೆ ಮೇ ತಿಂಗಳ ತೆರಿಗೆ ಸಂಗ್ರಹ 2240.32 ಕೋಟಿ ರೂ.ನಷ್ಟು ಕಡಿಮೆಯಾಗಿದೆ. +ಆದರೆ ಕಳೆದ ವರ್ಷದ ಮೇ ತಿಂಗಳಿಗೆ ಹೋಲಿಸಿದರೆ ಈ ಬಾರಿ ತೆರಿಗೆ ಸಂಗ್ರಹ ಪ್ರಮಾಣ ಏರಿಕೆಯಾಗಿದೆ. ಸುಮಾರು 3 ಸಾವಿರ ಕೋಟಿಗೂ ಹೆಚ್ಚು ಹೆಚ್ಚಳವಾಗಿದೆ. ಸರಕು ಸೇವಾ ತೆರಿಗೆ ಕರ್ನಾಟಕ ಮಾರಾಟ ತೆರಿಗೆ ಹಾಗೂ ವೃತ್ತಿ ತೆರಿಗೆ ಸೇರಿ ಏಪ್ರಿಲ್‌-ಮೇ ತಿಂಗಳಿನಲ್ಲಿ 17088.94 ಕೋಟಿ ರೂ. ಸಂಗ್ರಹ ಇರುವುದು ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿಯಿಂದ ತಿಳಿದುಬಂದಿದೆ. +ಮೇ ತಿಂಗಳಿನಲ್ಲಿ 5,573.23 ಕೋಟಿ ಸರಕು ಸೇವಾ ತೆರಿಗೆ, 1731.48 ಮಾರಾಟ ತೆರಿಗೆ ಹಾಗೂ 119.60 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ. ಏಪ್ರಿಲ್‌-ಮೇ ತಿಂಗಳಿನಲ್ಲಿ 13,251.10 ಕೋಟಿ ಸರಕು ಸೇವಾ ತೆರಿಗೆ, 3542.80 ಮಾರಾಟ ತೆರಿಗೆ ಹಾಗೂ 295.04 ವೃತ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ. +ಕಳೆದ ವರ್ಷಕ್ಕೆ ಹೋಲಿಸಿದರೆ ಏಪ್ರಿಲ್‌-ಮೇ ತಿಂಗಳಿನಲ್ಲಿ ಈ ವರ್ಷ ತೆರಿಗೆ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. \ No newline at end of file diff --git a/eesanje/url_46_118_10.txt b/eesanje/url_46_118_10.txt new file mode 100644 index 0000000000000000000000000000000000000000..3500bd742aeb46e9299fe0c8252414aea3556739 --- /dev/null +++ b/eesanje/url_46_118_10.txt @@ -0,0 +1,7 @@ +ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಪಲ್ಟಿಯಾಗಿ 3 ಮಂದಿ ಸ್ಥಳದಲ್ಲೇ ಸಾವು +ಗೌರಿಬಿದನೂರು, ಜೂ.7-ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ನಗರಗೆರೆ ಹೋಬಳಿಯ ವಾಟದ ಹೊಸಹಳ್ಳಿ ಗ್ರಾಮದ ಬಳಿಯ ತಿರುವಿನಲ್ಲಿ ತಡರಾತ್ರಿ ನಡೆದಿದೆ. +ತಾಲೂಕಿನ ಬಿ.ತಾಂಡ ವಾಸಿ ಶ್ರೀಧರ್‌ ನಾಯಕ್‌ (28), ಚಿಕ್ಕಬಳ್ಳಾಪುರದ ಪೆರೆಸಂದ್ರದ ವೇಣುಗೋಪಾಲ್‌(38), ಬೆಲ್ಲಾಳಹಳ್ಳಿಯ ಮಂಜುನಾಥ್‌ (37) ಮೃತಪಟ್ಟವರು. ದಾವಣಗೆರೆ ನಿವಾಸಿ ಶಿವಕುಮಾರ್‌ (38) ಗಾಯಗೊಂಡಿದ್ದಾರೆ. ಇವರೆಲ್ಲರೂ ಬೆಸ್ಕಾಂ ನೌಕರರು ಎಂದು ಪೊಲೀಸರು ತಿಳಿಸಿದ್ದಾರೆ. +ಕರ್ತವ್ಯ ನಿಮಿತ್ತ ವೇಣುಗೋಪಾಲ್‌ ಅವರ ಬ್ರಿಜಾ ಕಾರಿನಲ್ಲಿ ನಗರಗೆರೆಗೆ ತೆರಳಿದ್ದು, ಗೌರಿಬಿದನೂರಿಗೆ ವಾಪಸ್‌ ಬರುವಾಗ ಈ ದುರಂತ ಸಂಭವಿಸಿದೆ.ಅಪಘಾತದ ರಭಸಕ್ಕೆ ಕಾರು ಹಳ್ಳಕ್ಕೆ ಉರುಳಿ ಬಿದ್ದು ಮರವೊಂದಕ್ಕೆ ಕಚ್ಚಿಕೊಂಡಿದೆ. ಅದರಲ್ಲಿದ್ದ ಮೂವರು ಚೆಲ್ಲಾಪಿಲ್ಲಿಯಾಗಿ ಹೊರಗೆ ಬಿದ್ದು ರೆಂಬೆಕೊಂಬೆಗಳಿಗೆ ಕಚ್ಚಿಕೊಂಡು ಮೃತಪಟ್ಟಿದ್ದರೆ, ಒಬ್ಬರು ಕಾರಿನಲ್ಲೇ ಸಿಲುಕಿದ್ದರು. +ಮೃತರು ವಾಟದಹೊಸಹಳ್ಳಿ ಬೆಸ್ಕಾಂ ವಿಭಾಗದಲ್ಲಿ ಲೈನ್‌ಮೆನ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಾರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ. +ಈ ಘೋರ ಅಪಘಾತ ರಾತ್ರಿ ನಡೆದಿದ್ದು , ಇಂದು ಬೆಳಗಿನವರೆಗೂ ಯಾರಿಗೂ ಗೊತ್ತಾಗಿಲ್ಲ. ಗ್ರಾಮಸ್ಥರು ಇದನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್‌ ಪ್ರಜ್ಞೆ ತಪ್ಪಿ ರಾತ್ರಿ ಇಡೀ ಅಲ್ಲೇ ಕಳೆದಿದ್ದಾರೆ. +ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಎಸ್‌ಪಿ ಡಿ.ಎಲ್‌.ನಾಗೇಶ್‌, ಅಡಿಷನಲ್‌ ಎಸ್‌ಪಿ ಕಾಸೀಮ್‌, ಡಿವೈಎಸ್‌ಪಿ ಶಿವಕುಮಾರ್‌, ಸಿಪಿಐ ಕೆ.ಪಿ.ಸತ್ಯನಾರಾಯಣ್‌, ಗ್ರಾಮಾಂತರ ಠಾಣೆಯ ಎಸ್‌ಐ ರಮೇಶ್‌ ಗುಗ್ಗರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರೇನ್‌ ಮೂಲಕ ಮೃತ ದೇಹಗಳನ್ನು ಹೊರತೆಗೆಸಿದ್ದಾರೆ.ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. \ No newline at end of file diff --git a/eesanje/url_46_118_11.txt b/eesanje/url_46_118_11.txt new file mode 100644 index 0000000000000000000000000000000000000000..414c2626be10636c5cf4fb26acf7dd8919d5323d --- /dev/null +++ b/eesanje/url_46_118_11.txt @@ -0,0 +1,6 @@ +ಜೆಡಿಎಸ್‌ಗೆ ಮತ್ತೊಂದು ಜಯ; ಮೈಸೂರಿನಲ್ಲಿ ಕಾಂಗ್ರೆಸ್‌ಗೆ ಮುಖಭಂಗ +ಬೆಂಗಳೂರು, ಜೂ.6- ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೆ.ವಿವೇಕಾನಂದ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ವಿವೇಕಾನಂದ ಅವರು ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. +ಲೋಕಸಭೆ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿರುವ ಜೆಡಿಎಸ್‍ಗೆ ವಿವೇಕಾನಂದ ಅವರ ಗೆಲುವು ಮತ್ತಷ್ಟು ಖುಷಿ ತಂದರೆ, ಕಾಂಗ್ರೆಸ್‍ನ ಹೀನಾಯ ಸೋಲು ಪಕ್ಷಕ್ಕೆ ಶಾಕ್ ನೀಡಿದೆ. ಮೈಸೂರು-ಕೊಡಗು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಸೋಲುಂಡ ಬೆನ್ನಲ್ಲೇ ಈಗ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಹೀನಾಯವಾಗಿ ಸೋಲನ್ನು ಅನುಭವಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಮುಖಭಂಗವಾದಂತಾಗಿದೆ. ಮುಖ್ಯಮಂತ್ರಿ ತವರಿನಲ್ಲಿ ಈ ಎರಡೂ ಚುನಾವಣೆಯಲ್ಲೂ ಪರಾಭವವಾಗಿರುವುದು ಗಮನಾರ್ಹ. +ವಾಲ್ಮೀಕಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ ಇಡಿ +ಮತ ಎಣಿಕೆಯ ಆರಂಭದಿಂದಲ್ಲೂ ವಿವೇಕಾನಂದ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದರು. ಗೆಲುವಿನ ಖೋಟಾ ತಲುಪಿದ ಕೂಡಲೇ ಅವರ ಜಯ ಅ„ಕೃತವಾಗಿ ದಾಖಲಾಯಿತು. ಸತತವಾಗಿ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದ ಮರಿತಿಬ್ಬೇಗೌಡ ಅವರಿಗೆ ಈ ಸೋಲಿನಿಂದ ತೀವ್ರ ಮುಖಭಂಗವಾಗಿದೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ವಿವೇಕಾನಂದ ಅವರು ಮೂರುವರೆ ಸಾವಿರಕ್ಕೂ ಹೆಚ್ಚು ಬಹುಮತಗಳಿಂದ ಗೆಲುವು ಸಾಧಿಸಿದ್ದು ವಿಶೇಷವಾಗಿತ್ತು. +ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರೇ ಚಲಾಯಿಸಿದ್ದ ಮತಗಳ ಪೈಕಿ ಏಳು ನೂರಕ್ಕೂ ಹೆಚ್ಚು ಮತಗಳು ಅಸಿಂಧುವಾಗಿರುವುದು ಗಮನಾರ್ಹವಾಗಿದೆ. \ No newline at end of file diff --git a/eesanje/url_46_118_12.txt b/eesanje/url_46_118_12.txt new file mode 100644 index 0000000000000000000000000000000000000000..01185de2bf82c398e9a1977f1b6c279c06048510 --- /dev/null +++ b/eesanje/url_46_118_12.txt @@ -0,0 +1,5 @@ +ಇನ್ನೊಂದು ವಾರ ರಾಜ್ಯದಲ್ಲಿ ಮಳೆ ಮುಂದುವರಿಕೆ +ಬೆಂಗಳೂರು, ಜೂ.6-ನೈರುತ್ಯ ಮುಂಗಾರು ಮಳೆ ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ಮಳೆಯಾಗುತ್ತಿದೆ. ಇದರಿಂದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೆಲವೆಡೆ ಭಾರಿ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಸಾಧಾರಣ ಮಳೆಯಾಗಿದೆ. +ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್‌ 14 ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ಜೂನ್‌ 9 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಜೂನ್‌ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. +ಉತ್ತರ ಕರ್ನಾಟಕ ಭಾಗದಲ್ಲಿ ಜೂ. 11 ರವರೆಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಜೂನ್‌ 8 ರಿಂದ 11 ರವರೆಗೆ ಕೃಷ್ಣಾ ನದಿಯ ಜಲಾನಯನ ಪ್ರದೇಶದ ಮೇಲ್ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. +ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆಗಳಲ್ಲಿ ಮಳೆಯಾಗಲಿದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ,ಬೆಳಗಾವಿ ಸೇರಿದಂತೆ ಕರಾವಳಿ ಹಾಗೂ ಉತ್ತರ ಕರ್ನಾಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ಯಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. \ No newline at end of file diff --git a/eesanje/url_46_118_2.txt b/eesanje/url_46_118_2.txt new file mode 100644 index 0000000000000000000000000000000000000000..8ed9ca70a474a2df91e832eb17d58aacdf300dfb --- /dev/null +++ b/eesanje/url_46_118_2.txt @@ -0,0 +1,10 @@ +ರೌಡಿಶೀಟರ್‌ ಚೈಲ್ಡ್‌‍ ರವಿ ಮರ್ಡರ್‌ ಪ್ರಕರಣದಲ್ಲಿ ನಾಲ್ವರ ಬಂಧನ +ಹಾಸನ, ಜೂ.8-ರೌಡಿಶೀಟರ್‌, ಚೈಲ್ಡ್‌‍ ರವಿ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮಹಮದ್‌ ಸುಜಿತ ತಿಳಿಸಿದರು. +ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಹತ್ಯೆ ಪ್ರಕರಣ ಸಂಬಂಧ ಹಾಸನ ನಗರದ ಪ್ರೀತಮ್‌ (27), ಕೀರ್ತಿ( 26), ರಂಗನಾಥ್‌ (26), ಅಮಿತ್‌ (31) ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. +ರವಿ ಹಾಗೂ ಪ್ರೀತಂ ನಡುವೆ ಕ್ಷುಲ್ಲಕ ಕಾರಣಕ್ಕೆ ಪದೇಪದೇ ಮಾತಿನ ಚಕಮಕಿ ಹಾಗೂ ಗಲಾಟೆಗಳು ನಡೆದಿದ್ದು, ಕೊಲೆ ನಡೆಯುವ ದಿನವೂ ಸಹ ಚೈಲ್ಡ್‌‍ ರವಿಯೊಂದಿಗೆ ಪ್ರೀತಂ ಮೊಬೈಲ್‌ ಸಂಭಾಷಣೆ ವೇಳೆ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದರು. +ಹತ್ಯೆ ಆರೋಪಿ ಪ್ರೀತಂ ವಿರುದ್ಧ ಈಗಾಗಲೇ ನಾಲ್ಕು ಕೊಲೆ ಪ್ರಕರಣ ದಾಖಲಾಗಿದ್ದು , ಹತ್ಯೆಗೀಡಾದ ರವಿ ವಿರುದ್ಧ ಕೊಲೆ ಸೇರಿದಂತೆ 304 , 307, 504ರ ಅಡಿ ಏಳು ಪ್ರಕರಣಗಳು ದಾಖಲಾಗಿದ್ದವು. ರವಿ ಹತ್ಯೆಯಾದ ನಂತರ ರವಿ ಪತ್ನಿ , ಪ್ರೀತಂ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲು ಮಾಡಿದ್ದರು. ಈ ದೂರಿನ ಅನ್ವಯ ತನಿಖೆ ಕೈಗೊಂಡು ಮಾಹಿತಿ ಕಲೆ ಹಾಕುವ ಮೂಲಕ ಹಾಸನ ತಾಲೂಕಿನ ಗ್ಯಾರಹಳ್ಳಿ ಮಧ್ಯದ ಅಂಗಡಿ ಬಳಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಎಸ್ಪಿ ತಿಳಿಸಿದರು. +ರೌಡಿಸಂ ವಿರುದ್ಧ ಕಠಿಣ ಕ್ರಮ :ಜಿಲ್ಲೆಯಲ್ಲಿ ಅಪರಾಧ ಪ್ರಕರಣ ಹಾಗೂ ರೌಡಿಸಂ ತಹಬದಿಗೆ ತರುವಲ್ಲಿ ಇಲಾಖೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಚುನಾವಣೆ ಸಂದರ್ಭದಲ್ಲಿಯೂ 59 ಮಂದಿಯನ್ನು ಗಡಿಪಾರು ಮಾಡಲಾಗಿತ್ತು ಎಂದು ಎಸ್ಪಿ ವಿವರಿಸಿದರು.ಅಪರಾಧ ಪ್ರಕರಣವನ್ನು ತಡೆಯುವ ನಿಟ್ಟಿನಲ್ಲಿ ಗೊಂಡಾ ಕಾಯ್ದೆಯಡಿ 11 ಮಂದಿ ವಿರುದ್ಧ ಈಗಾಗಲೇ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು. +ಟ್ರಾಫಿಕ್‌ ಸಮಸ್ಯೆಗೆ ಶೀಘ್ರದಲ್ಲಿ ಕ್ರಮ:ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್‌ ಸಮಸ್ಯೆಗೆ ಮುಕ್ತಿಯಾಡಲು ಇನ್ನೆರಡು ದಿನದಲ್ಲಿ ಪ್ರಮುಖವಾಗಿ ಬಿಎಮ್‌ ರಸ್ತೆ, ಎನ್‌.ಆರ್‌. ಸರ್ಕಲ್‌‍, ಸಾಲಿಗಾಮೆ ರಸ್ತೆ, ಸೇರಿದಂತೆ ಪ್ರಮುಖ ವೃತ್ತಗಳ ಅಂಗಡಿ ಮಾಲೀಕರ ಸಭೆಯನ್ನು ಕರೆಯಲಾಗುತ್ತಿದೆ ಎಂದರು. +ಈಗಾಗಲೇ ಶಾಲೆಗಳು ಆರಂಭವಾಗಿರುವುದರಿಂದ ಶಂಕರಮಠ ರಸ್ತೆ, ಕೆ.ಆರ್‌.ಪುರಂ ಸಂಪಿಗೆ ರಸ್ತೆ ಹಾಗೂ ಇತರೆ ಬಡಾವಣೆಗಳಲ್ಲಿನ ಆಸ್ಪತ್ರೆ ಮತ್ತು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರನ್ನು ಕರೆದು ಪಾರ್ಕಿಂಗ್‌ ಸಮಸ್ಯೆ ಉಂಟಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಹಾಗೂ ಪಾರ್ಕಿಂಗ್‌ಗೆ ಸೂಕ್ತ ಸ್ಥಳವನ್ನು ಗುರುತಿಸಲಾಗುವುದು ಎಂದರು. +ನಗರದಲ್ಲಿ ಮತ್ತೆ ವೀಲಿಂಗ್‌ ಹಾಗೂ ಕರ್ಕಶ ದ್ವನಿವುಳ್ಳ ಸೈಲೆನ್ಸರ್‌ ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು ಆಟೋ ಚಾಲಕರು ಸಹ ಗ್ರಾಹಕರೊಂದಿಗೆ ಅಂಚಿತವಾಗಿ ವರ್ತಿಸುತ್ತಿರುವುದು ಮತ್ತು ಬೇಕಾಬಿಟ್ಟಿ ಪಾರ್ಕಿಂಗ್‌ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದೆ. +ಆದ್ದರಿಂದ ಆಟೋ ಚಾಲಕರ ಮಾಲೀಕರ ಸಭೆ ಕರೆದು ಕಟ್ಟುನಿಟಿನ ಸೂಚನೆ ನೀಡಲಾಗುವುದು ಮತ್ತು ವೀಲಿಂಗ್‌ ಹಾಗೂ ಕರ್ಕಶ ಸೈಲೆನ್ಸರ್‌ ಬಳಸಿ ದ್ವಿಚಕ್ರ ವಾಹನ ಚಾಲನೆ ಮಾಡುವವರಿಗೆ ಇಲಾಖೆಯಿಂದ ದಂಡ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌‍ಪಿ ಎಚ್ಚರಿಕೆ ನೀಡಿದರು. \ No newline at end of file diff --git a/eesanje/url_46_118_3.txt b/eesanje/url_46_118_3.txt new file mode 100644 index 0000000000000000000000000000000000000000..19fe1e74115572b2cf5995c54ceb223a49c9922a --- /dev/null +++ b/eesanje/url_46_118_3.txt @@ -0,0 +1,3 @@ +30 ಮಂಗಗಳನ್ನು ಕೊಂದ ಮನುಷ್ಯತ್ವ ಮರೆತ ಮಾನವರು +ಚಿಕ್ಕಮಗಳೂರು, ಜೂ.8-ಬಾಳೆಹಣ್ಣಿಗೆ ಮತ್ತು ಬರುವ ಔಷಧವಿಟ್ಟು 30 ಮಂಗಗಳನ್ನು ಕೊಂದ ಅಮಾನುಷ ಘಟನೆ ಎನ್‌.ಆರ್‌.ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.ಒಟ್ಟು 16 ಗಂಡು, 14 ಹೆಣ್ಣು, 4 ಮರಿಗಳನ್ನು ಕೊಂದಿದ್ದು, ರಸ್ತೆ ಬದಿಗೆ ತಂದು ಪಾಪಿಗಳು ಎಸೆದು ಹೋಗಿದ್ದಾರೆ. +ಮಂಗಗಳು ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿದ್ದು, ರಕ್ತ ಸುರಿದು ಮೃತಪಟ್ಟಿವೆ.ಸ್ಥಳಕ್ಕೆ ಡಿ.ಎಫ್‌.ಓ, ಆರ್‌.ಎಫ್‌.ಓ, ಪಿ.ಎಸ್‌‍.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಕಿಡಿ ಕಾರಿದ್ದಾರೆ. \ No newline at end of file diff --git a/eesanje/url_46_118_4.txt b/eesanje/url_46_118_4.txt new file mode 100644 index 0000000000000000000000000000000000000000..a04eabcc5be02ad243107247fc1de664b6620425 --- /dev/null +++ b/eesanje/url_46_118_4.txt @@ -0,0 +1,6 @@ +ಉತ್ತರಾಖಂಡ್‌ದಲ್ಲಿ ಮೃತಪಟ್ಟಿದ್ದ 9 ಮಂದಿಯ ಮೃತ ದೇಹಗಳು ಸಂಬಂಧಿಕರಿಗೆ ಹಸ್ತಾಂತರ +ಬೆಂಗಳೂರು,ಜೂ.6-ಉತ್ತರಾಖಂಡ್‌ ಶಹಸ್ತ್ರತಾಳ್‌ ಪ್ರದೇಶದಲ್ಲಿ ಚಾರಣದ ವೇಳೆ ಹಿಮಪಾತಕ್ಕೆ ಸಿಲುಕಿ ಜೀವನರಣದ ಹೋರಾಟದಲ್ಲಿದ್ದ ರಾಜ್ಯದ 13 ಚಾರಣಿಗರ ತಂಡವನ್ನು ರಕ್ಷಿಸಿ ಬೆಂಗಳೂರಿಗೆ ಕರೆತರಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮೃತಪಟ್ಟಿದ್ದ 9 ಮೃತ ದೇಹಗಳನ್ನು ಬೆಂಗಳೂರಿಗೆ ತಂದು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. +ಮೃತ ದೇಹಗಳು ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರು ತಲುಪಿವೆ. ಬದುಕುಳಿದಿದ್ದ ಚಾರಣಿಗರು ನಿನ್ನೆ ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಸುರಕ್ಷಿತವಾಗಿ ಚಾರಣಿಗರು ಮರಳಿರುವುದನ್ನು ಕಂಡು ಅವರ ಪೋಷಕರು, ಬಂಧು, ಮಿತ್ರರು ನಿಟ್ಟುಸಿರು ಬಿಟ್ಟಿದ್ದಾರೆ. ಮಕ್ಕಳು ಸುರಕ್ಷಿತವಾಗಿ ಮರಳಿರುವುದನ್ನು ಕಂಡು ಪೋಷಕರು ರಾಜ್ಯ ಸರ್ಕಾರ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. +ಉತ್ತರಾಖಂಡ್‌ಗೆ ತೆರಳಿ ರಕ್ಷಣಾ ಕಾರ್ಯದ ಉಸ್ತುವಾರಿ ವಹಿಸಿದ ಕೃಷ್ಣಬೈರೇಗೌಡ ಅವರಿಗೆ ಕರ್ನಾಟಕ ಪರ್ವತಾರೋಹಣ ಸಂಘದ ಸದಸ್ಯರು ಧನ್ಯವಾದ ಅರ್ಪಿಸಿದ್ದಾರೆ.ಉತ್ತರಾಖಂಡ್‌ ಶಹಸ್ತ್ರತಾಳ್‌ ಪ್ರದೇಶದಲ್ಲಿ ಮೃತಪಟ್ಟಿದ್ದ 9 ಚಾರಣಿಗರ ಮೃತ ದೇಹಗಳನ್ನು ದೆಹಲಿಯಿಂದ ವಿವಿಧ ವಿಮಾನಗಳ ಮೂಲಕ ಬೆಂಗಳೂರಿಗೆ ತರಲಾಗಿದ್ದು, ಮೃತದೇಹಗಳನ್ನು ಅವರ ಬಂಧುಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ. +ಪದಿನಿ ಹೆಗ್ಡೆ, ವೆಂಕಟೇಶ ಪ್ರಸಾದ್‌, ಆಶಾ ಸುಧಾಕರ್‌, ಪದನಾಭ ಕುಂದಾಪು ಕೃಷ್ಣಮೂರ್ತಿ, ಸಿಂಧು ವಕೇಕಲಂ, ವಿನಾಯಕ ಮುಂಗೂರ್ವಾಡಿ, ಸುಜಾತ ಮುಂಗೂರ್ವಾಡಿ, ಚೈತ್ರ ಪ್ರಣೀತ್‌, ಅನಿತ ರಂಗಪ್ಪ ಅವರ ಮೃತ ದೇಹಗಳನ್ನು ಬೆಂಗಳೂರಿಗೆ ತರಲಾಗಿದೆ.ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತ ದೇಹಗಳನ್ನು ತರಲಾಗಿದ್ದು, ಆಯಾ ಮೃತ ದೇಹಗಳನ್ನು ಸಂಬಂಧಿಕರಿಗೆ ನೀಡಲಾಗಿದೆ. +ಸತತ ಎರಡು ದಿನಗಳ ಕಾಲ ನಿರಂತರ ಶ್ರಮವಹಿಸಿ ಬದುಕಿದ್ದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಹಾಗೆಯೇ ಮೃತದೇಹಗಳನ್ನು ವಾರಸುದಾರರಿಗೆ ತಲುಪಿಸಿ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದೆ.ಮೃತಪಟ್ಟವರ ಆತಕ್ಕೆ ಸದ್ಗತಿ ದೊರೆಯಲಿ ಹಾಗೂ ಮೃತರ ಬಂಧು ಬಾಂಧವರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಅವರು ಈ ಸಂದರ್ಭದಲ್ಲಿ ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_118_5.txt b/eesanje/url_46_118_5.txt new file mode 100644 index 0000000000000000000000000000000000000000..3509642877fcb5fe8e5db1267806a28c7c3bef9f --- /dev/null +++ b/eesanje/url_46_118_5.txt @@ -0,0 +1,3 @@ +ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹಮದ್ ನೇಮಕ +ಬೆಂಗಳೂರು,ಜೂ.6-ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನಿವೃತ್ತ ಐಜಿಪಿ ಯು.ನಿಸಾರ್‌ ಅಹದ್‌ ಅವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದೆ. +ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿ ನಿಸಾರ್‌ ಅಹದ್‌ ಅವರನ್ನು ನೇಮಕ ಮಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇಂದು ಆದೇಶ ಹೊರಡಿಸಿದೆ. ಇಂದಿನಿಂದ ಮುಂದಿನ ಆದೇಶದವರೆಗೆ ಅವರು ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಬಹುದಾಗಿದೆ.ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆ 1994ರ ಸೆಕ್ಷನ್‌ 3(1) ಮತ್ತು 4 (1)ರಡಿಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. \ No newline at end of file diff --git a/eesanje/url_46_118_6.txt b/eesanje/url_46_118_6.txt new file mode 100644 index 0000000000000000000000000000000000000000..416f3ce79821c7db783482605890ea29a9b135c7 --- /dev/null +++ b/eesanje/url_46_118_6.txt @@ -0,0 +1,6 @@ +ಉತ್ತರಾಖಂಡ ಚಾರಣ ದುರಂತದಲ್ಲಿ ಹುಟ್ಟಿದ ದಿನವೇ ಸಾವನ್ನಪ್ಪಿದ ಹುಬ್ಬಳ್ಳಿಯ ದಂಪತಿ +ಹುಬ್ಬಳ್ಳಿ,:ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ 22 ಜನರಲ್ಲಿ 9 ಮಂದಿ ಮೃತಪಟ್ಟಿದ್ದು, ಇದರಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ದಂಪತಿಯೂ ಸೇರಿದ್ದಾರೆ. ಹುಬ್ಬಳ್ಳಿಯ ವಿನಾಯಕ ಮುಂಗರವಾಡಿ ಹಾಗೂ ಸುಜಾತಾ ಮುಂಗರವಾಡಿ ಮೃತ ದುರ್ದೈವಿಗಳು. ವಿಶೇಷವೆಂದರೆ, ಇವರಿಬ್ಬರ ಹುಟ್ಟಿದ ದಿನಾಂಕವೂ ಒಂದೇ. ಆದರೆ, ಹುಟ್ಟಿದ ವರ್ಷ ಬೇರೆ ಇದೆ. ವಿನಾಯಕ ಜನ್ಮ ದಿನಾಂಕ 03-10-1969 ಆದರೆ, ಸುಜಾತಾ ಮುಂಗರವಾಡಿ ಜನ್ಮ ದಿನಾಂಕ 03-10-1972 ಆಗಿದೆ. ಇಬ್ಬರೂ ಒಂದೇ ದಿನ ಮೃತಪಟ್ಟಿದ್ದು ಕಾಕತಾಳೀಯ. +ಚಾರಣಕ್ಕೆ ಹೋದ 22 ಮಂದಿಯ ಪೈಕಿ ಹುಬ್ಬಳ್ಳಿಯಲ್ಲಿ ವಾಸವಿದ್ದ ದಂಪತಿ ಜೂನ್ ನಾಲ್ಕರಂದು ಮೃತಪಟ್ಟಿದ್ದಾರೆ. ಮೃತ ದಂಪತಿ ಹುಬ್ಬಳ್ಳಿಯ ಬಿವಿಬಿ ಕಾಲೇಜ್‌ನಲ್ಲಿ 1994ರಲ್ಲಿ ಇಂಜಿನೀಯರಿಂಗ್ ಪದವಿ ಪಡೆದಿದ್ದರು‌. ಇಬ್ಬರೂ 1996 ರಲ್ಲಿ ಉದ್ಯೋಗ ಅರಿಸಿಕೊಂಡು ಬೆಂಗಳೂರಿಗೆ ಹೋಗಿದ್ದರು. +ಸಮಾಜ ಸೇವೆಯಲ್ಲೂ ಮುಂದುಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್ ಎಂಬ ಸಂಸ್ಥೆ ಹುಟ್ಟು ಹಾಕಿದ್ದ ವಿನಾಯಕ ಮುಂಗರವಾಡಿ, ಸುಜಾತಾ ಮುಂಗರವಾಡಿ ದಂಪತಿ ಸಮಾಜ ಸೇವೆಯಲ್ಲಿಯೂ ಮುಂದಿದ್ದರು. ಪ್ರತಿ ವರ್ಷ ಚಾರಣಕ್ಕೆ ಹೋಗುತ್ತಿದ್ದರು. +ದೊರೆಯದ ಟಿಕೆಟ್, ಮಕ್ಕಳು ಜೀವ ಉಳಿಯಿತು :ಈ ಬಾರಿ ಮಕ್ಕಳನ್ನು ಕೂಡ ಚಾರಣಕ್ಕೆ ಕರೆದೊಯ್ಯಲು ದಂಪತಿ ಯೋಜನೆ ಹಾಕಿಕೊಂಡಿದ್ದರು. ಆದರೆ, ಅವರಿಗೆ ಕೇವಲ 2 ಟಿಕೆಟ್ ಮಾತ್ರ ದೊರೆತಿತ್ತು. ಹೀಗಾಗಿ ದಂಪತಿ ಮಾತ್ರ ಚಾರಣಕ್ಕೆ ಹೋಗಿದ್ದರು. +ಚಾರಣದ ವೇಳೆ ಸಾವಿಗೀಡಾದವರ ಪಾರ್ಥಿವ ಶರೀರವನ್ನು ತವರಿಗೆ ತರುವ ಪ್ರಕ್ರಿಯೆ ಮುಂದುವರಿದಿದೆ. ಸದ್ಯ, ಪತ್ತೆಯಾಗಿರುವ 9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಈಗಾಗಲೇ ದೆಹಲಿಯಿಂದ ಎರಡು ಪ್ರತ್ಯೇಕ ಇಂಡಿಗೋ ವಿಮಾನಗಳಲ್ಲಿ 4 ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ. ಇನ್ನು ಅಂತ್ಯಕ್ರಿಯೆನ್ನ ಯಾವಾಗ ಮಾಡತಾರ ಎಂಬಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಾಗಿದೆ \ No newline at end of file diff --git a/eesanje/url_46_118_7.txt b/eesanje/url_46_118_7.txt new file mode 100644 index 0000000000000000000000000000000000000000..47a063db3421befaea67f3ebb3a134db592d23e8 --- /dev/null +++ b/eesanje/url_46_118_7.txt @@ -0,0 +1,4 @@ +ನ್ಯಾಯಾಲಯದ ಮುಂದೆ ರಾಹುಲ್‌ ಹಾಜರ್, ಜಾಮೀನು ಮಂಜೂರು, ಜು.30ಕ್ಕೆ ವಿಚಾರಣೆ ಮುಂದೂಡಿಕೆ +ಬೆಂಗಳೂರು,ಜೂ.7-ಬಿಜೆಪಿ ನಾಯಕರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಕಾಂಗ್ರೆಸ್‌‍ನ ವರಿಷ್ಠ ನಾಯಕ ರಾಹುಲ್‌ ಗಾಂಧಿ ಇಂದು ನಗರದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ. ನಿಯಮಗಳು ಎರಡು ಬಾರಿ ರಾಹುಲ್‌ ಗಾಂಧಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಖುದ್ದು ಹಾಜರಾಗುವಂತೆ ನ್ಯಾಯಾಧೀಶರು ಸೂಚಿಸಿದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ದೆಹಲಿಯಿಂದ ಆಗಮಿಸಿದ್ದ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾದರು. +42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರು ಅವರಿಗೆ ಜಾಮೀನು ಮಂಜೂರು ಮಾಡಿ, ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದ್ದಾರೆ.ರಾಹುಲ್‌ ಗಾಂಧಿ ಆಗಮನದ ಹಿನ್ನಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಟಿ ಸಿವಿಲ್‌ ಕೋರ್ಟ್‌ವರೆಗೂ ವ್ಯಾಪಕ ಭದ್ರತೆಯನ್ನು ಒದಗಿಸಲಾಗಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಅನೇಕರು ರಾಹುಲ್‌ ಗಾಂಧಿ ಅವರ ಜೊತೆ ಕೋರ್ಟ್‌ಗೆ ಆಗಮಿಸಿದ್ದರು. ವಿಚಾರಣೆಯಲ್ಲಿ ರಾಹುಲ್‌ ಗಾಂಧಿಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು 70 ಲಕ್ಷ ರೂ. ಮೌಲ್ಯದ ಆಸ್ತಿಯ ವೈಯಕ್ತಿಕ ಬಾಂಡ್‌ನ ಭದ್ರತೆ ಒದಗಿಸಿದ್ದಾರೆ. \ No newline at end of file diff --git a/eesanje/url_46_118_8.txt b/eesanje/url_46_118_8.txt new file mode 100644 index 0000000000000000000000000000000000000000..a652db7273799bdc3aebafbc04acf88cc125d893 --- /dev/null +++ b/eesanje/url_46_118_8.txt @@ -0,0 +1,7 @@ +3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಚುನಾವಣೆ : ಐದು ಕ್ಷೇತ್ರಗಳ ಫಲಿತಾಂಶ ಪ್ರಕಟ +ಬೆಂಗಳೂರು,ಜೂ.6-ರಾಜ್ಯದ ವಿಧಾನಪರಿಷತ್‌ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಐದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್‌‍, ಜೆಡಿಎಸ್‌‍ ತಲಾ ಎರಡು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿವೆ. ಬೆಂಗಳೂರು ಪದವೀಧರ ಕ್ಷೇತ್ರದ ಮತ ಎಣಿಕೆ ತಡರಾತ್ರಿವರೆಗೂ ನಡೆದಿದ್ದು, ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ 36729 ಮತಗಳನ್ನು ಪಡೆದು ಜಯಗಳಿಸಿದ್ದಾರೆ. +ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಅವರು 34888 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 11841 ಮತಗಳ ಅಂತರದಿಂದ ರಾಮೋಜಿಗೌಡ ಚುನಾಯಿತರಾಗಿದ್ದಾರೆ. ಚಲಾವಣೆಯಾಗಿದ್ದ 80080 ಮತಗಳಲ್ಲಿ 8482 ಮತಗಳು ತಿರಸ್ಕೃತಗೊಂಡಿದ್ದವು. 71598 ಮತಗಳು ಸಿಂಧುವಾಗಿದ್ದವು. +ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌‍ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರಾಭವಗೊಂಡಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಕೆ.ವಿವೇಕಾನಂದ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯಗಳಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಮರಿತಿಬ್ಬೇಗೌಡ ಅವರಿಗೆ ಸೋಲುಂಟಾಗಿದೆ. +ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿ ಎರಡನೇ ಬಾರಿಗೆ ಮೇಲನೆ ಪ್ರವೇಶಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ವಿಜೇತರಾಗಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಆಯನೂರು ಮಂಜುನಾಥ್‌ ಪರಾಭವಗೊಂಡಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿಭಟ್‌ಗೆ ಮೂರನೇ ಸ್ಥಾನ ದೊರೆತಿದೆ. +ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಡಾ.ಚಂದ್ರಶೇಖರ್‌ ಬಸವರಾಜ್‌ ಪಾಟೀಲ್‌ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಮರ್‌ನಾಥ್‌ ಪಾಟೀಲ್‌ ಹಿನ್ನಡೆಯಲ್ಲಿದ್ದಾರೆ. ಗೆಲುವಿನ ಕೋಟಾ ಮೊದಲ ಪ್ರಾಶಸ್ತ್ಯದ ಮತ ಲಭಿಸದ ಹಿನ್ನೆಲೆಯಲ್ಲಿ ಎರಡನೆ ಪ್ರಾಶಸ್ತ್ಯದ ಮತ ಎಣಿಕೆ ನಡೆಯುತ್ತಿದ್ದು, ಅಧಿಕೃತ ಫಲಿತಾಂಶ ಪ್ರಕಟವಾಗಬೇಕಿದೆ. +ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಜೆಡಿಎಸ್‌‍ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಎರಡು ಕ್ಷೇತ್ರ ಸೋತಿದ್ದು, ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್‌‍ ಆರು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಮೂರು ಕ್ಷೇತ್ರಗಳಲ್ಲಿ ಸೋತು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ. \ No newline at end of file diff --git a/eesanje/url_46_118_9.txt b/eesanje/url_46_118_9.txt new file mode 100644 index 0000000000000000000000000000000000000000..4234fe2fed515f1a6f196e9f1954d81c35aa5e9f --- /dev/null +++ b/eesanje/url_46_118_9.txt @@ -0,0 +1,9 @@ +ಲೋಕಸಭೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‌‍ನಲ್ಲಿ ಮೂಲ-ವಲಸಿಗರ ನಡುವೆ ಕಿತ್ತಾಟ ಜೋರು +ಬೆಂಗಳೂರು,ಜೂ.7-ಲೋಕಸಭೆಯ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‌‍ನಲ್ಲಿ ಮೂಲ ಹಾಗೂ ವಲಸಿಗ ಕಾಂಗ್ರೆಸಿಗರ ನಡುವೆ ಒಳಬೇಗುದಿ ಹೆಚ್ಚಾಗಿದ್ದು, ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್‌ ಸವದಿ ವಿರುದ್ದ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. +ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಗೆದ್ದಿದೆ. ಅಥಣಿಯಲ್ಲೂ ಕಾಂಗ್ರೆಸ್‌‍ ಗೆದ್ದಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಂದ ನಾವು 30ರಿಂದ 40 ಸಾವಿರ ಲೀಡ್‌ಗಳನ್ನು ನಿರೀಕ್ಷಿಸಿದ್ದೆವು. ಆದರೆ ಚುನಾವಣಾ ಪ್ರಚಾರದಲ್ಲಿ ಶಾಸಕರು ತೊಡಗಿಸಿಕೊಳ್ಳದೆ ನಂಬಿಕೆಗೆ ಮಹಾಮೋಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಮಹೇಶ್‌ ಕುಮ್ಟಳ್ಳಿ ಬಳಿಕ ಕಾಂಗ್ರೆಸ್‌‍ ಗೆದ್ದಿರಲಿಲ್ಲ. ಲಕ್ಷ್ಮಣ್‌ ಸವದಿ ಕಾಂಗ್ರೆಸ್‌‍ಗೆ ಬಂದಾಗ ಆಶಾಕಿರಣ ಬಂದಂತಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಅವರು ಪಕ್ಷದ ತರಬೇತಿ ಕಾರ್ಯಕ್ರಮಗಳಲ್ಲೂ ಭಾಗವಹಿಸಿರಲಿಲ್ಲ. ಚುನಾವಣಾ ಕಾಲದಲ್ಲಿ ಅವರಿಗೆ ಕ್ಷೇತ್ರದ ಪೂರ್ಥಿ ಜವಾಬ್ದಾರಿ ನೀಡಲಾಗಿತ್ತು. ಅವರು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದೆ ನಿಧಾನಗತಿ ಅನುಸರಿಸಿದರು. ತಾವು ಅನುಮಾನಗೊಂಡು ಸ್ಥಳೀಯ ಮೂಲಕ ಕಾರ್ಯಕರ್ತರಿಗೆ ಎಚ್ಚರದಿಂದ ಕೆಲಸ ಮಾಡುವಂತೆ ಸಲಹೆ ನೀಡಿದ್ದಾಗಿ ತಿಳಿಸಿದರು. +ಅವರ ಉದ್ದೇಶ ಏನಿತ್ತೋ ಗೊತ್ತಿಲ್ಲ. ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕು ಎಂದುಕೊಂಡಿದ್ದರೋ ಮಾಹಿತಿ ಇಲ್ಲ. ಆದರೆ ಕಾಂಗ್ರೆಸ್‌‍ ಪಕ್ಷಕ್ಕೆ ಅವರಿಂದ ಮೋಸ ಆಗಿದ್ದಂತೂ ನಿಜ ಎನ್ನುವ ಮೂಲಕ ಹೆಸರು ಹೇಳದೆ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ. +ನಾಯಕರು ಬರುತ್ತಾರೆ ಹೋಗುತ್ತಾರೆ ಆದರೆ ಕಾರ್ಯಕರ್ತರು ಸ್ಥಿರವಾಗಿದ್ದಾರೆ. ಹಲವಾರು ನಾಯಕರು ಬದಲಾವಣೆಯಾದರೂ ಮೂಲ ಕಾಂಗ್ರೆಸಿಗರು ಪಕ್ಷ ನಿಷ್ಠೆ ತೊರೆದಿಲ್ಲ. ಇದೇ ನಮ ಶಕ್ತಿ. ಇನ್ನು ಮುಂದೆ ನಮೊಂದಿಗೆ ನೇರವಾಗಿ ಸಂಪರ್ಕದಲ್ಲಿರಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಹೇಳುವ ಮೂಲಕ ಸತೀಶ್‌ಜಾರಕಿಹೊಳಿ ರಾಜ್ಯ ರಾಜಕೀಯದಲ್ಲಿ ಹೊಸ ಗೊಂದಲಕ್ಕೆ ಕಾರಣರಾಗಿದ್ದಾರೆ. +ನಿನ್ನೆ ಸತೀಶ್‌ ಜಾರಕಿಹೊಳಿಯವರ ಸಹೋದರ ಹಾಗೂ ಪಕ್ಷೇತರ ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕಿಡಿಕಾರಿದ್ದರು. ಈಗ ಸತೀಶ್‌ ಜಾರಕಿಹೊಳಿ ವಲಸಿಗ ನಾಯಕ ಲಕ್ಷ್ಮಣ್‌ ಸವದಿ ವಿರುದ್ಧವೇ ಕೆಂಡಕಾರಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯಿತ ಸಮುದಾಯದ ಜಗದೀಶ್‌ಶೆಟ್ಟರ್‌, ಲಕ್ಷ್ಮಣ್‌ ಸವದಿ ಬಿಜೆಪಿ ಟಿಕೆಟ್‌ ವಂಚಿತರಾಗಿದ್ದರು. ಅವರನ್ನು ಸೆಳೆದುಕೊಂಡ ಕಾಂಗ್ರೆಸ್‌‍ ಬಿ ಫಾರಂ ಕೊಟ್ಟು ಅಖಾಡಕ್ಕಿಳಿಸಿತ್ತು. ಜಗದೀಶ್‌ ಶೆಟ್ಟರ್‌ ಸೋಲು ಕಂಡರೆ ಲಕ್ಷ್ಮಣ್‌ ಸವದಿ ಗೆಲುವು ಕಂಡಿದ್ದರು. +ಬೆಳಗಾವಿ ಜಿಲ್ಲೆಯ ರಾಜಕಾರಣ ರಾಜ್ಯದ ಮಟ್ಟಿಗೆ ಸಿಡಿಮದ್ದಿನಂತಿತ್ತು. ಈ ಹಿಂದೆ ಕಾಂಗ್ರೆಸ್‌‍-ಜೆಡಿಎಸ್‌‍ ಸಮಿಶ್ರ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಕಳೆದ ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರದ ಅವಧಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದ ಜಿಲ್ಲೆಯ ಒಳಬೇಗುದಿಗಳು ಲೋಕೋಪಯೋಗಿ ಚುನಾವಣೆ ಬಳಿಕ ಹಂತ ಹಂತವಾಗಿ ಬಯಲಿಗೆ ಬರಲಾರಂಭಿಸಿವೆ. \ No newline at end of file diff --git a/eesanje/url_46_119_1.txt b/eesanje/url_46_119_1.txt new file mode 100644 index 0000000000000000000000000000000000000000..5986f19a7f841811f3e6b769e9489db12d08382a --- /dev/null +++ b/eesanje/url_46_119_1.txt @@ -0,0 +1,8 @@ +ವಾಲ್ಮೀಕಿ ಹಗರಣವನ್ನು ಗಂಭೀರವಾಗಿ ಪರಿಗಣಿಸಿದ ಇಡಿ +ಬೆಂಗಳೂರು,ಜೂ.6-ಮಹರ್ಷಿ ವಾಲೀಕಿ ಪರಿಶಿಷ್ಟ ವರ್ಗ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಅವ್ಯವಹಾರ ಕುರಿತಂತೆ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಅವರು ನೀಡಿರುವ ದೂರನ್ನು ಜಾರಿ ನಿರ್ದೇಶನಾಲಯ ( ಇಡಿ) ಗಂಭೀರವಾಗಿ ಪರಿಗಣಿಸಿದೆ. +ಈ ಅವ್ಯವಹಾರದ ಪ್ರಮುಖ ದಾಖಲೆಗಳನ್ನು ಎನ್‌.ಆರ್‌.ರಮೇಶ್‌ ಅವರು ಇಡಿ ಅಧಿಕಾರಿಗಳಿಗೆ ಸಲ್ಲಿಸಿದ್ದರು. ಅವರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. +ರಾಜ್ಯ ಆರ್ಥಿಕ ಅಪರಾಧ ಪ್ರಕರಣವಾಗಿರುವ ಈ ಬಹತ್‌ ಹಗರಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ. ನಾಗೇಂದ್ರ, ಅವರ ಆಪ್ತ ನಾಗರಾಜ್‌ ಸೇರಿದಂತೆ ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಜೆ. ಜಿ. ಪದನಾಭ್‌,ಲೆಕ್ಕಾಧಿಕಾರಿ ಪರಶುರಾಮ್‌ ಜಿ ದುರಗಣ್ಣನವರ್‌ ಮತು ಯೂನಿಯನ್‌ ಬ್ಯಾಂಕ್‌ ಮುಖ್ಯ ವ್ಯವಸ್ಥಾಪಕಿ ಶುಚಿಸಿತಾ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. +ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆದೇಶವಿಲ್ಲದೇ ಕರ್ನಾಟಕ ರಾಜ್ಯ ಸರ್ಕಾರದ ಸಂಸ್ಥೆಯಿಂದ ಪಕ್ಕದ ತೆಲಂಗಾಣ ರಾಜ್ಯದ ಖಾಸಗಿ ಬ್ಯಾಂಕಿನ ಖಾಸಗಿ ಸಂಸ್ಥೆಗಳ ಖಾತೆಗಳಿಗೆ 89.62 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವರ್ಗಾವಣೆಯಾಗಲೂ ಸಾಧ್ಯವೇ ಇರುವುದಿಲ್ಲ. +ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ಹಣಕಾಸು ಖಾತೆಯನ್ನೂ ಸಹ ಹೊಂದಿರುವುದರಿಂದ, ಅವರ ಆದೇಶವಿಲ್ಲದೆ ಅಥವಾ ಅವರ ಗಮನಕ್ಕೆ ಬಾರದೆ ಈ ಅಕ್ರಮ್‌ ಹಣ ವರ್ಗಾವಣೆ ಕಾರ್ಯ ನಡೆದಿರುವುದು ಸಾಧ್ಯವಿಲ್ಲ. +ಹೀಗಾಗಿ ಸಿದ್ಧರಾಮಯ್ಯ, ಸಚಿವ ಬಿ. ನಾಗೇಂದ್ರ,ನಾಗರಾಜ್‌‍, ಪದನಾಭ್‌‍, . ಪರಶುರಾಮ್‌ ಜಿ ದುರಗಣ್ಣನವರ್‌ , ಶುಚಿಸಿತಾ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಪ್ರಮುಖರ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ, ನಕಲಿ ದಾಖಲೆ ತಯಾರಿಕೆ, ಅಕ್ರಮ ಹಣ ವರ್ಗಾವಣೆ ಹಾಗೂ ಸರ್ಕಾರಿ ಹಣ ದುರ್ಬಳಕೆ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಾರಿ ನಿರ್ದೇಶನಾಲಯ (ಇಡಿ) ದಲ್ಲಿ ದಾಖಲೆಗಳ ಸಹಿತ ರಮೇಶ್‌ ದೂರು ದಾಖಲಿಸಿದ್ದಾರೆ. +ಹಾಗೆಯೇ, ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವದ್ಧಿ ನಿಗಮ ದಲ್ಲಿ ಹಣಕಾಸು ಅಕ್ರಮಗಳು ನಡೆದಿರುವಂತೆಯೇ ರಾಜ್ಯ ಸರ್ಕಾರದ ಇನ್ನುಳಿದ ನಿಗಮಗಳಲ್ಲಿಯೂ ಸಹ ಅಕ್ರಮ ಹಣ ವರ್ಗಾವಣೆ ನಡೆದಿರುವ ಸಾಧ್ಯತೆಗಳು ಇರುವುದರಿಂದ ಕೂಡಲೇ ಎಲ್ಲಾ ನಿಗಮಗಳ ಖಾತೆಗಳನ್ನು ತಮ ವಶಕ್ಕೆ ಪಡೆದು ತನಿಖೆ ನಡೆಸಬೇಕೆಂದೂ ಸಹ ಜಾರಿ ನಿರ್ದೇಶನಾಲಯಕ್ಕೆ ಅವರು ಮನವಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_46_119_10.txt b/eesanje/url_46_119_10.txt new file mode 100644 index 0000000000000000000000000000000000000000..471e235f56aaaee29d6fa09915f0620a440169b1 --- /dev/null +++ b/eesanje/url_46_119_10.txt @@ -0,0 +1,6 @@ +ಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..? +ಬೆಂಗಳೂರು, ಜೂ.6-ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದೆ. +ಲೋಕಸಭಾ ಚುನಾವಣಾ ಪೂರ್ವದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‌ಡಿಎ ಮೈತ್ರಿ ಕೂಟ ಸೇರಿರುವ ಜೆಡಿಎಸ್‌‍ಗೆ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದು, ಅವರ ನೂತನ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನಿಶ್ಚಿತ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದ ಕುಮಾರಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. +ಕೆಂದ್ರ ಸರ್ಕಾರ ರಚನೆ ಕುರಿತಂತೆ ನಿನ್ನೆ ನಡೆದ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು ನಗರಕ್ಕೆ ಮರಳಿದ್ದಾರೆ. ನಾಳೆ ಮತ್ತೆ ದೆಹಲಿಗೆ ತೆರಳಲಿದ್ದು, ಜೂ.8ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ ಎಷ್ಟು ಮಂದಿ ಸಚಿವರು ಪ್ರಮಾಣ ವಚನ ಸೀಕರಿಸಬೇಕು. ಯಾರ್ಯಾರು ಸಂಪುಟ ಸೇರಬೇಕು. ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬ ವಿಚಾರದ ಬಗ್ಗೆ ನಾಳೆ ಎನ್‌ಡಿಎ ನಾಯಕರು ಚರ್ಚೆ ನಡೆಸಿ ನಿರ್ಧಾರ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ. +ಶನಿವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲೇ ಕುಮಾರಸ್ವಾಮಿ ಅವರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. diff --git a/eesanje/url_46_119_11.txt b/eesanje/url_46_119_11.txt new file mode 100644 index 0000000000000000000000000000000000000000..0d075c488c69b0de8169ee1f6d30c361d3ec5dd4 --- /dev/null +++ b/eesanje/url_46_119_11.txt @@ -0,0 +1,8 @@ +ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಬಿಎಸ್ವೈ ಅವರ ಆಪ್ತ ಸಹಾಯಕ ಕಾ.ಪು.ಸಿದ್ದಲಿಂಗಾಸ್ವಾಮಿ ನಿಧನ +ಬೆಂಗಳೂರು, ಜೂ.6-ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ಸಹಾಯಕ ಹಾಗೂ ಬಿಜೆಪಿ ಮುಖಂಡ ಕಾ.ಪು.ಸಿದ್ದಲಿಂಗಾಸ್ವಾಮಿ ಅವರು ಇಂದು ಮುಂಜಾನೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. +ಕಳೆದ ಆರೇಳು ತಿಂಗಳಿನಿಂದ ಕಾ.ಪು. ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. +ಸಂಜೆ 4 ಗಂಟೆಗೆ ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿ -ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಪ್ರಮುಖರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. +ಕಾ.ಪು.ಸಿದ್ದಲಿಂಗಸ್ವಾಮಿ ಹಲವು ವರ್ಷಗಳ ಕಾಲ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಆಪ್ತರಾಗಿ ಕೆಲಸ ನಿರ್ವಹಣೆ ಮಾಡಿದ್ದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಜೊತೆಗಿದ್ದರು. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮುಖ್ಯಮಂತ್ರಿ ಯಡಿಯೂರಪ್ಪ ಕಾ.ಪು.ಸಿದ್ದಲಿಂಗಸ್ವಾಮಿ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿಯೂ ನೇಮಕ ಮಾಡಲಾಗಿತ್ತು. +ಯಡಿಯೂರಪ್ಪ ಆಪ್ತರಾಗಿದ್ದ ಕಾ.ಪು. ಸಿದ್ದಲಿಂಗಸ್ವಾಮಿ ಯಡಿಯೂರಪ್ಪ ಕೆಜೆಪಿ ಪಕ್ಷವನ್ನು ಕಟ್ಟಿದಾಗ ಅವರ ಜೊತೆಗೆ ಇದ್ದರು. ಆ ಕಾರಣಕ್ಕಾಗಿಯೇ ವರುಣ ಕ್ಷೇತ್ರದಲ್ಲಿ ಅವರನ್ನು ಕೆಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಲಾಗಿತ್ತು. +ಕೆಜೆಪಿ ಅಭ್ಯರ್ಥಿಯಾಗಿದ್ದ ಅವರು 54,744 ಮತಗಳನ್ನು ಪಡೆದು, ಕಾಂಗ್ರೆಸ್‌ನ ಸಿದ್ದರಾಮಯ್ಯ ವಿರುದ್ಧ (84,385 ಮತ) ಸೋಲು ಕಂಡಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ವರುಣದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಯಾದರು. ಆದರೆ ಕಾ.ಪು. ಸಿದ್ದಲಿಂಗಸ್ವಾಮಿಗೆ ಕಣಕ್ಕಿಳಿಯಲಿಲ್ಲ. +2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾ.ಪು.ಸಿದ್ದಲಿಂಗಸ್ವಾಮಿ ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಆಗ ಪ್ರತಿಕ್ರಿಯೆ ನೀಡಿದ್ದ ಅವರು, ಯಾವುದೇ ಕಾರಣಕ್ಕೂ ನಾನು ಬಿಜೆಪಿ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದರು. ನಾನು ಕಾಂಗ್ರೆಸ್‌ ಸೇರುತ್ತಿದ್ದೇನೆ ಎಂಬ ಸಂಗತಿ ಉಹಾಪೋಹವಾಗಿದ್ದು, ನನ್ನ ಕತ್ತು ಸೀಳಿದರೂ ಸಹ ಅದು ಸಾಧ್ಯವಾಗುವುದಿಲ್ಲ. ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾದ ನಾನು ವರುಣದಲ್ಲಿ ವಿ. ಸೋಮಣ್ಣ ಗೆಲುವಿಗಾಗಿ ಪಣ ತೊಟ್ಟಿದ್ದೇನೆ. ನನ್ನ ಮೊದಲ ಮತ್ತು ಕೊನೆಯ ಮತ ಬಿಜೆಪಿಗೆ ಎಂದು ತಿಳಿಸಿದ್ದರು. \ No newline at end of file diff --git a/eesanje/url_46_119_12.txt b/eesanje/url_46_119_12.txt new file mode 100644 index 0000000000000000000000000000000000000000..ec5902eb16f495d875d25ac7cb7ea1d5ce5450fd --- /dev/null +++ b/eesanje/url_46_119_12.txt @@ -0,0 +1,7 @@ +ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ : ಗೂಳಿಹಟ್ಟಿ ಶೇಖರ್‌ ಗಂಭೀರ ಆರೋಪ +ಬೆಂಗಳೂರು, ಜೂ.6– ಬೋವಿ ನಿಗಮದಲ್ಲಿ 100 ಕೋಟಿ ಅವ್ಯವಹಾರ ಆಗಿದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರು ನೂತನ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. +ಈ ಕುರಿತು ವಾಯ್ಸ್ ಮೆಸೇಜ್‌ ಮೂಲಕ ಗೂಳಿಹಟ್ಟಿ ಶೇಖರ್‌ ಅವರು,ಉಡುಪಿ-ಚಿಕ್ಕಮಗಳೂರು ನೂತನ ಸಂಸದರಾದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಸಚಿವರಾಗಿದ್ದಾಗ ಹಗರಣ ನಡೆದಿದೆ. ಬೋವಿ ನಿಗಮದ ಹಗರಣವನ್ನು ಸಿಐಡಿ ತನಿಖೆಗೆ ನೀಲಾಗಿದೆ. ಪ್ರಕರಣ ಸಂಬಂಧ ಇಬ್ಬರ ಕೊಲೆ ಆಗಿದೆ ಆರೋಪ ಮಾಡಿದ್ದಾರೆ. +ಸಿಬಿಐ ತನಿಖೆ ಬೇಡ, ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ಕೋಟ ಶ್ರೀನಿವಾಸ್‌ ಪೂಜಾರಿಯಂಥ ಪ್ರಾಮಾಣಿಕರು ದೇಶದಲ್ಲಿಲ್ಲ. ಈಗ 50-60 ಕೋಟಿ ಆಸ್ತಿ ಮಾಡಿದ್ದು ಎಲ್ಲಿಂದ ಬಂತು? ಎಸ್ಟಿ ನಿಗಮ, ಬೋವಿ ನಿಗಮ ಎಲ್ಲ ಹಗರಣಗಳ ಬಗ್ಗೆ ತನಿಖೆ ಮಾಡಿ. ಸಿದ್ದರಾಮಯ್ಯ ಸಿಎಂ ಆದ ಬಳಿಕ ತನಿಖೆ ಸ್ಥಗಿತ ಆಗಿದೆ. +ಬಿಎಸ್‌ ಯಡಿಯೂರಪ್ಪ ಕೇಸ್‌ ತನಿಖೆ ಮಾಡದೆ ಯಾಕೆ ಮುಚ್ಚಿ ಹಾಕಿದ್ರಿ? ದೂರುದಾರ ಮಹಿಳೆ ಸಾವಿಗೀಡಾದ ಸುದ್ದಿ ಎಲ್ಲೆಡೆ ಬಂದಿದೆ. ಪ್ರಜ್ವಲ್‌ ಕೇಸ್‌ ಮಾತ್ರ ತನಿಖೆ ಮಾಡ್ತೀರಾ ಎಂದು ಶೇಖರ್‌ ಕಿಡಿ ಕಾರಿದ್ದಾರೆ. +ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ: ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ಕೊಲೆ ಮಾಡಿ ಶವ ಹೂತಿಟ್ಟಿದ್ದಾನೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶ್ರೕನಿವಾಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, 55 ವರ್ಷದ ಸುನಂದಮ್ಮ ಕೊಲೆಯಾದ ದುರ್ದೈವಿ. ಆರೋಪಿ ರವಿಕುಮಾರ್‌ ಒಂದು ವರ್ಷದ ಹಿಂದೆ ಸುನಂದಮ್ಮ ಬಳಿ 20 ಸಾವಿರ ರೂಪಾಯಿ ಸಾಲ ಪಡೆದಿದ್ದಾನೆ. +ವಾಪಸ್‌ ಕೊಟ್ಟಿರಲಿಲ್ಲ. ಆದ್ರೆ, ನಿನ್ನೆ ಸಾಲದ ಹಣ ಕೊಡೋದಾಗಿ ಸುನಂದಮ್ಮನನ್ನು ಆರೋಪಿ ಕರೆದಿದ್ದಾನೆ. ಆರೋಪಿ ರವಿ ಮಾತಿನಂತೆ ಮೃತ ಸುನಂದಮ್ಮ ಟಿ.ಗೊಲ್ಲಹಳ್ಳಿಗೆ ತೆರಳಿದ್ದಾರು ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_119_2.txt b/eesanje/url_46_119_2.txt new file mode 100644 index 0000000000000000000000000000000000000000..d308e7ad1a8d11829af9dc7f82f1f9479a1db0c5 --- /dev/null +++ b/eesanje/url_46_119_2.txt @@ -0,0 +1,3 @@ +ಪ್ರಜ್ವಲ್ ರೇವಣ್ಣ ಮತ್ತೆ ಕಸ್ಟಡಿಗೆ +ಬೆಂಗಳೂರು, ಜೂ.6- ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‍ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್ 10ರವರೆಗೆ ವಿಸ್ತರಿಸಲಾಗಿದೆ. ಆರು ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್‍ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಧಿಶರು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜೂ.10ರವರೆಗೆ ಎಸ್‍ಐಟಿ ವಶಕ್ಕೆ ನೀಡಿದರು. +ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ಮಾಹಿತಿ ಕಲೆ ಹಾಕಿ ಸಾಕ್ಷಾಧಾರ ಸಂಗ್ರಹಿಸಲು ಪ್ರಯತ್ನಿಸುತ್ತಿವೆ. ಆದರೆ, ಪ್ರಜ್ವಲ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಮತ್ತೆ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ 4 ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದೆ. \ No newline at end of file diff --git a/eesanje/url_46_119_3.txt b/eesanje/url_46_119_3.txt new file mode 100644 index 0000000000000000000000000000000000000000..f877c990dcd89837fd05e129602b912797092986 --- /dev/null +++ b/eesanje/url_46_119_3.txt @@ -0,0 +1,11 @@ +ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ..? +ಬೆಂಗಳೂರು,ಜೂ.6-ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯದಿಂದ ನಾಲ್ವರು ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ.ಜೆಡಿಎಸ್‌‍, ಎನ್‌ಡಿಎ ಮೈತ್ರಿ ಭಾಗವಾಗಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ ಹಾಗೂ ರಮೇಶ್‌ ಜಿಗಜಿಣಗಿ ಇಲ್ಲವೇ ಗೋವಿಂದ ಕಾರಜೋಳ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ. +ಸದ್ಯಕ್ಕೆ ಈ ನಾಲ್ವರಿಗೆ ಸೇರ್ಪಡೆ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲವಾದರೂ ಎಲ್ಲಾ ಸಂಸದರು ದೆಹಲಿಗೆ ಬರುವಂತೆ ಬುಲಾವು ನೀಡಲಾಗಿದ್ದು, ರಾಜ್ಯಕ್ಕೆ ಈ ಬಾರಿ 3 ರಿಂದ 4 ಸ್ಥಾನಗಳು ಕೇಂದ್ರದಲ್ಲಿ ಸಿಗುವುದು ಖಚಿತ ಎಂದು ಹೇಳಲಾಗುತ್ತಿದೆ. ಬಿಜೆಪಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಬಹುಮತ ಗಳಿಸಲು ಸಾಧ್ಯವಾಗದ ಕಾರಣ ಮಿತ್ರಪಕ್ಷಗಳಿಗೆ ಸಂಪುಟದಲ್ಲೂ ಅವಕಾಶ ಕಲ್ಪಿಸಬೇಕಾಗಿದೆ. ಹೀಗಾಗಿ ಮೊದಲ ಕಂತಿನಲ್ಲೇ ಎಚ್‌.ಡಿ.ಕುಮಾರಸ್ವಾಮಿ ಸಚಿವ ಸ್ಥಾನ ಬಹುತೇಕ ಗ್ಯಾರಂಟಿ. +ಉಳಿದಂತೆ ಬಿಜೆಪಿಯು ರಾಜ್ಯದಲ್ಲಿ ಈ ಬಾರಿ 17 ಸ್ಥಾನಗಳನ್ನು ಗೆದ್ದಿರುವುದರಿಂದ ಹಿರಿತನ ಪ್ರದೇಶವಾರು ಜಾತಿ, ಪಕ್ಷಕ್ಕೆ ಸೇರಿಸುವ ಸೇವೆ, ಸಂಘಟನೆ ಹೀಗೆ ಹತ್ತು ಹಲವು ಮಾನದಂಡಗಳ ಮೇಲೆ ಸಂಪುಟಕ್ಕೆ ತೆಗೆದುಕೊಳ್ಳಬೇಕಾಗುತ್ತದೆ.ಜಗದೀಶ್‌ ಶೆಟ್ಟರ್‌ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಹಿರಿತನದ ಮೇಲೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ. +ಕಳೆದ ವಿಧಾನಸಭಾ ಚುನಾವಣೆ ವೇಳೆ ಪಕ್ಷ ತೊರೆದಿದ್ದ ಅವರು, ನಂತರ ನಡೆದ ಬೆಳವಣಿಗೆಯಲ್ಲಿ ಪುನಃ ಮಾತೃಪಕ್ಷಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ನಿಮಗೆ ಮಂತ್ರಿ ಸ್ಥಾನ ನೀಡಲಾಗುತ್ತದೆ ಎಂದು ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಗೃಹಸಚಿವ ಅಮಿತ್‌ ಶಾ ಆಶ್ವಾಸನೆ ನೀಡಿದ್ದರು.ಗೆದ್ದಿರುವ ಬಿಜೆಪಿ ಸಂಸದರಲ್ಲಿ ಶೆಟ್ಟರ್‌ ಹಿರಿಯರಾಗಿದ್ದು, ಸಂಪುಟಕ್ಕೆ ಸೇರ್ಪಡೆಯಾಗುವುದು ಖಚಿತವಾಗಿದೆ. ಲಿಂಗಾಯತ ಕೋಟದಲ್ಲಿ ಅವರಿಗೆ ಸ್ಥಾನ ಕಲ್ಪಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. +ಬಸವರಾಜ ಬೊಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸದ್ಯಕ್ಕೆ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಅವಕಾಶ ಕ್ಷೀಣಿಸಿವೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದ ಪ್ರಹ್ಲಾದ್‌ ಜೋಶಿ ಪುನಃ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. +ಕೆಲವು ಸಂದರ್ಭಗಳಲ್ಲಿ ಮಸೂದೆ ಅಂಗೀಕಾರ ಸೇರಿದಂತೆ ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಜೋಶಿ ನಿರ್ವಹಿಸಿದ ಪಾತ್ರಕ್ಕೆ ಖುದ್ದು ಮೋದಿಯವರೇ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೀಗಾಗಿ ಮೊದಲ ಸಂಪುಟದಲ್ಲೇ ಜೋಶಿಗೆ ಈ ಬಾರಿಯೂ ಅದೃಷ್ಟ ಖುಲಾಯಿಸಬಹುದು. +ಈ ಬಾರಿಯೂ ಬಿಜೆಪಿಗೆ ಒಕ್ಕಲಿಗ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಲಭಿಸಿರುವ ಕಾರಣ ಮಹಿಳಾ ಕೋಟದಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಶೋಭಾಕರಂದ್ಲಾಜೆ ಎರಡನೇ ಬಾರಿ ಸಂಪುಟಕ್ಕೆ ಸೇರುವ ಸಂಭವನೀಯ ಪಟ್ಟಿಯಲ್ಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಗೆದ್ದಿರುವ ಡಾ.ಸಿ.ಎನ್‌.ಮಂಜುನಾಥ್‌ ಅವರನ್ನು ಸಹ ಸಂಪುಟಕ್ಕೆ ತೆಗೆದುಕೊಳ್ಳುವ ಬಗ್ಗೆ ಬಿಜೆಪಿ ಸಕಾರಾತಕವಾದ ನಿಲುವು ಇಟ್ಟುಕೊಂಡಿದೆ.ಒಂದು ಕಡೆ ಕುಮಾರಸ್ವಾಮಿ, ಮತ್ತೊಂದು ಕಡೆ ಡಾ.ಸಿ.ಎನ್‌.ಮಂಜುನಾಥ್‌ ಸೇರ್ಪಡೆಯಾದರೆ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ಆನೆಬಲ ಬರಲಿದೆ ಎಂಬ ಲೆಕ್ಕಾಚಾರವು ಇದೆ.ಇನ್ನೊಂದು ಮೂಲದ ಪ್ರಕಾರ, ಡಾ.ಸಿ.ಎನ್‌.ಮಂಜುನಾಥ್‌ಗೆ ಎರಡನೇ ಅವಧಿಯಲ್ಲಿ ಸಚಿವ ಸಂಪುಟ ಪುನರ್‌ ರಚನೆಯಾಗುವ ವೇಳೆ ಅವಕಾಶ ಸಿಗಬಹುದು ಎಂಬ ಮಾತುಗಳು ಕೇಳಿಬಂದಿವೆ. +ಪರಿಶಿಷ್ಟ ಜಾತಿ ಕೋಟದಲ್ಲಿ 7 ಬಾರಿ ಗೆದ್ದಿರುವ ವಿಜಯಾಪುರದ ಸಂಸದ ರಮೇಶ್‌ ಜಿಗಜಿಣಗಿ ಸಚಿವರಾಗಬಹುದು. ಈ ಹಿಂದೆ ಒಂದು ಬಾರಿ ರಾಜ್ಯಖಾತೆ ಸಚಿವರಾಗಿದ್ದ ಅವರಿಗೆ ಈ ಬಾರಿ ಸಂಪುಟ ದರ್ಜೆಯ ಖಾತೆ ಸಿಗಲಿದೆ ಎಂದು ಹೇಳಲಾಗುತ್ತಿದೆ.ಅಚ್ಚರಿಯ ಬೆಳವಣಿಗೆಯಲ್ಲಿ ಚಿತ್ರದುರ್ಗದಲ್ಲಿ ಗೆದ್ದಿರುವ ಗೋವಿಂದ ಕಾರಜೋಳ ಕೂಡ ಎಸ್‌‍ಸಿ ಕೋಟದಲ್ಲಿ ಸಚಿವ ಸ್ಥಾನ ಮೇಲೆ ಕಣ್ಣಿಟ್ಟಿದ್ದಾರೆ. +ಆದರೆ ಜಿಗಜಿಣಗಿ ಹಿರಿಯರಾಗಿರುವುದರಿಂದ ಹೆಚ್ಚಿನ ಅವಕಾಶಗಳು ಅವರಿಗೆ ಸಿಗಬಹುದು. ಹಿಂದುಳಿದ ವರ್ಗದ ಕೋಟದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷದ ನಾಯಕರಾಗಿ, ಸಚಿವರಾಗಿ ಸುಮಾರು ಮೂರು ದಶಕಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಅವರಿಗೆ ಮೋದಿ ಸಂಪುಟದಲ್ಲಿ ಸಚಿವರಾಗುವ ಅದೃಷ್ಟ ಖುಲಾಯಿಸಿದರೂ ಅಚ್ಚರಿಯಿಲ್ಲ ಎಂದು ಹೇಳಲಾಗುತ್ತಿದೆ.ಸಂಪುಟಕ್ಕೆ ಸೇರ್ಪಡೆಯಾಗುವವರೆಗೂ ಗುಟ್ಟು ಬಿಟ್ಟುಕೊಡದೆ ಎಲ್ಲವನ್ನೂ ರಹಸ್ಯವಾಗಿಯೇ ಉಳಿಸಿಕೊಳ್ಳುವ ಮೋದಿ, ಅಮಿತ್‌ ಶಾ ಜೋಡಿ ಕೃಪೆ ಯಾರ ಮೇಲೆ ಎಂಬುದು ಶನಿವಾರದವರೆಗೂ ಕಾದು ನೋಡಲೇಬೇಕು. \ No newline at end of file diff --git a/eesanje/url_46_119_4.txt b/eesanje/url_46_119_4.txt new file mode 100644 index 0000000000000000000000000000000000000000..4e1866efba50154bca2aa8507ec23b70419be9ad --- /dev/null +++ b/eesanje/url_46_119_4.txt @@ -0,0 +1,6 @@ +ಯಾರಾಗಲಿದ್ದಾರೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು..? +ಬೆಂಗಳೂರು, ಜೂ.6-ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರು ಯಾರಾಗಲಿದ್ದಾರೆ ಎಂಬ ಚರ್ಚೆ ಪ್ರಾರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಆ ಸ್ಥಾನ ತೆರವಾಗಲಿದೆ. +ಜೆಡಿಎಸ್‌‍ನಲ್ಲಿ ಮಾಜಿ ಸಚಿವರಾದ ಹೆಚ್‌.ಡಿ.ರೇವಣ್ಣ, ಜಿ.ಟಿ.ದೇವೇಗೌಡ ಹಾಗೂ ಶ್ರೀನಿವಾಸಪುರ ಕ್ಷೇತ್ರದ ವೆಂಕಟಶಿವಾರೆಡ್ಡಿ ಅವರು ಹಿರಿಯ ಶಾಸಕರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸಂಸದರಾಗಿದ್ದ ಸಂದರ್ಭದಲ್ಲೂ ರೇವಣ್ಣ ಅವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. +ಜಿ.ಟಿ.ದೇವೇಗೌಡ ಅವರು ಪ್ರಸ್ತುತ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿದ್ದಾರೆ. ಕಟಶಿವಾರೆಡ್ಡಿ ಅವರಿಗೆ ಇಂತಹ ಯಾವ ಜವಾಬ್ದಾರಿಯನ್ನು ಈತನಕ ನೀಡಿಲ್ಲ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಜಿ.ಟಿ.ದೇವೇಗೌಡರ ಹೆಸರು ಮುಂಚೂಣಿಯಲ್ಲಿದೆ. ಆದರೆ, ಪ್ರಸಕ್ತ ವಿಧಾನಸಭೆಯಲ್ಲಿ ರೇವಣ್ಣ ಅವರು ಎಲ್ಲರಿಗಿಂತ ಹಿರಿಯ ಶಾಸಕರಾಗಿದ್ದಾರೆ. +ಅಧಿವೇಶನದಲ್ಲಿ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಉತ್ತಮ ಸಂಸದೀಯಪಟುವಾಗಿರುವವರು ಶಾಸಕಾಂಗ ಪಕ್ಷದ ನಾಯಕರಾಗಬೇಕು ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿದೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಚುನಾಯಿತರಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನವು ರದ್ದಾಗಲಿದೆ. +ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ಎದುರಾಗಲಿದೆ. ಕೇಂದ್ರ ಸರ್ಕಾರ ರಚನೆ ಪ್ರಕ್ರಿಯೆ ಮುಗಿದ ಬಳಿಕ ಪಕ್ಷದ ನಾಯಕರು ಸಭೆ ಸೇರಿ ನೂತನ ಶಾಸಕಾಂಗ ಪಕ್ಷದ ನಾಯಕ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಜೆಡಿಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_119_5.txt b/eesanje/url_46_119_5.txt new file mode 100644 index 0000000000000000000000000000000000000000..2745c6e03f243fa21eb0ab7a37ff909e5eabf84c --- /dev/null +++ b/eesanje/url_46_119_5.txt @@ -0,0 +1,8 @@ +ಉತ್ತರಕಾಂಡ್‌ನ ಚಾರಣ ದುರಂತ : 13 ಕನ್ನಡಿಗರ ರಕ್ಷಣೆ, ವಿಶೇಷ ವಿಮಾನದಲ್ಲಿ 9 ಜನರ ಶವ ಬೆಂಗಳೂರಿಗೆ +ಬೆಂಗಳೂರು, ಜೂ.6– ಉತ್ತರಕಾಂಡ್‌ನ ಚಾರಣಕ್ಕೆ ತೆರಳಿದ್ದ 22 ಕನ್ನಡಿಗರ ಪೈಕಿ 13 ಜನರನ್ನು ರಕ್ಷಿಸಲಾಗಿದ್ದು, ಮೃತಪಟ್ಟ 9 ಜನರ ಶವಗಳನ್ನು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತರಲಾಗಿದೆ. +ಸಂತ್ರಸ್ತರ ರಕ್ಷಣೆಗಾಗಿ ಉತ್ತರಾಕಾಂಡ್‌ಗೆ ತೆರಳಿರುವ ಕಂದಾಯ ಸಚಿವ ಕೃಷ್ಣಾಭೈರೇಗೌಡ ಅವರ ಮಾಹಿತಿ ಪ್ರಕಾರ, ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಸೌಮ್ಯಾ ಕೆನಾಲೆ , ಸತಿ ಡೋಲಾಸ್‌‍, ಶೀನಾ ಲಕ್ಷಿ, ಎಸ್‌‍. ಶಿವ ಜ್ಯೋತಿ, ಅನಿಲ್‌ ಜಮತಿಗೆ ಅರುಣಾಚಲ ಭಟ್‌, ಭರತ್‌ ಬೊಮನ ಗೌಡರ್‌, ಮಧು ಕಿರಣ್‌ ರೆಡ್ಡಿ, ಜೈಪ್ರಕಾಶ್‌ ಬಿ.ಎಸ್‌‍. ಅವರನ್ನು ರಕ್ಷಿಸಲಾಗಿತ್ತು. +ಇಂದು ಬೆಳಿಗ್ಗೆ ಎಸ್‌‍ ಸುಧಾಕರ್‌,ವಿನಯ್‌ ಎಂ.ಕೆ, ವಿವೇಕ್‌ ಶ್ರೀಧರ್‌, ನವೀನ್‌.ಎ, ರಿತಿಕಾ ಜಿಂದಾಲ್‌ ಸೇರಿ 5 ಮಂದಿಯನ್ನು ರಕ್ಷಿಸಿ ಉತ್ತರಕಾಶಿಯಿಂದ ಡೆಹ್ರಾಡೂನ್‌ಗೆ ವಿಮಾನದ ಮೂಲಕ ಕಳುಹಿಸಲಾಗಿದೆ. ವಿಪತ್ತಿನಿಂದ ಪಾರಾದವರಿಗೆ ಡೆಹ್ರಾಡೂನ್‌ನಲ್ಲಿ ಅಗತ್ಯ ಊಟೋಪಚಾರ ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕರ್ನಾಟಕ ಹಾಗೂ ಉತ್ತರಕಾಂಡ್‌ನ ಸರ್ಕಾರಗಳ ತ್ವರಿತ ಪ್ರತಿಕ್ರಿಯೆಗೆ ಪ್ರಾಣಾಪಾಯದಿಂದ ಪಾರಾಗಿ ಬಂದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. +ಚಾರಣದ ನಡುವೆ ಹವಾಮಾನ ವೈಪರೀತ್ಯ, ವಿಪರೀತ ಮಳೆ, ಹಿಮಪಾತದಿಂದಾಗಿ ದಿಕ್ಕುತಪ್ಪಿ ಮೃತಪಟ್ಟಿರುವ 9 ಜನರ ಪೈಕಿ ಸಿಂಧು ವಕೆಲಂ,ಆಶಾ ಸುಧಾಕರ್‌, ಸುಜಾತಾ ಮುಂಗುರವಾಡಿ, ವಿನಾಯಕ್‌ ಮುಂಗುರವಾಡಿ, ಚಿತ್ರಾ ಪ್ರಣೀತ್‌ ಅವರ ಶವಗಳನ್ನು ನಿನ್ನೆ ಪತ್ತೆ ಹಚ್ಚಿ ಕಣಿವೆಯಿಂದ ಮೇಲಕ್ಕೆ ತಂದು ಉತ್ತರಕಾಶಿಗೆ ರವಾನಿಸಲಾಗಿತ್ತು. +ಮುಂದುವರೆದ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಪದನಾಭ ಕೆ.ಪಿ., ವೆಂಕಟೇಶ್‌ ಪ್ರಸಾದ್‌.ಕೆ, ಅನಿತಾ ರಂಗಪ್ಪ, ಪದಿನಿ ಹೆಗ್ಡೆ ಅವರ ಶವಗಳನ್ನು ಬೇಸ್‌‍ಕ್ಯಾಂಪ್‌ಗೆ ತಂದು ಅಲ್ಲಿಂದ ವಿಮಾನದ ಮೂಲಕ ಉತ್ತರಕಾಶಿಗೆ ತರಲಾಗುತ್ತಿದೆ.ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್‌ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. +ಸಚಿವರ ಚುರುಕು ಕಾರ್ಯಾಚರಣೆ:ಇಂದು ಬೆಳಿಗ್ಗೆ ಸಚಿವ ಕೃಷ್ಣಭೈರೇಗೌಡ ಅವರು ಉತ್ತರಕಾಂಡ್‌ನ ಮುಖ್ಯ ಕಾರ್ಯದರ್ಶಿ ರಾಧಾರತೌರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ಡಾ.ರಂಜಿತ್‌ ಸಿನ್ಹಾ, ಬಿಎಸ್‌‍ಎಫ್‌ನ ಡಿಐಜಿ ರಾಜಕುಮಾರ್‌ ನೇಗಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಪಾರ್ಥೀವ ಶರೀರಗಳನ್ನು ಸ್ಥಳಾಂತರಿಸಲು ಸಹಕರಿಸುವಂತೆ ಮನವಿ ಮಾಡಿದರು. ಅದಕ್ಕೆ ಸ್ಥಳೀಯಾಧಿಕಾರಿಗಳು ಸಹಮತಿ ಸೂಚಿಸಿದ್ದು, ವಿಶೇಷ ವಿಮಾನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.ಡೆಹ್ರಾಡೂನ್‌ನಿಂದ ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಪಾರ್ಥೀವ ಶರೀರಗಳನ್ನು ಸಾಗಿಸಲಾಯಿತು. +ಮನಕಲಕಿದ ವೈರಲ್‌ ವಿಡಿಯೋ :ಈ ನಡುವೆ ವಿಪತ್ತಿಗೆ ಸಿಲುಕುವ ಮುನ್ನ ಚಾರಣಿಗರು ತಮ ಕ್ಯಾಂಪ್‌ನಲ್ಲಿ ಸಂತಸದಿಂದಿರುವುದು, ಗ್ರೂಪ್‌ ಫೋಟೊಗೆ ಫೋಸ್‌‍ ಕೊಟ್ಟಿರುವುದು ಮತ್ತು ಸೇನೆಯ ಯೋಧರೊಂದಿಗೆ ಸಮಯ ಕಳೆದಿರುವುದು, ಯೋಧರು ಚಾರಣಿಗರಿಗೆ ಬಿಸ್ಕೆಟ್‌ ನೀಡಿ ಉಪಚರಿಸಿರುವುದೂ ಸೇರಿದಂತೆ ಹಲವು ದೃಶ್ಯಗಳ ವಿಡಿಯೋ ವೈರಲ್‌ ಆಗಿದ್ದು, ಕರಳು ಕಿವುಚುವಂತಿದೆ.ನಗರದ ಎಚ್‌ಎಸ್‌‍ಆರ್‌ ಲೇ ಔಟ್‌, ಗಿರಿನಗರ, ಪ್ರಿಸ್ಟೇಜ್‌ ಸಿಟಿ, ಎಸ್‌‍ಆರ್‌ಕೆ ನಗರ ಮುಂತಾದ ಪ್ರದೇಶಗಳಿಂದ 22 ಮಂದಿ ಉತ್ತರಕಾಂಡ್‌ನ ಚಾರಣಕ್ಕೆ ತೆರಳಿದ್ದರು. \ No newline at end of file diff --git a/eesanje/url_46_119_6.txt b/eesanje/url_46_119_6.txt new file mode 100644 index 0000000000000000000000000000000000000000..f86814f7bb025b641dcb79326cd62df7ac4ac2af --- /dev/null +++ b/eesanje/url_46_119_6.txt @@ -0,0 +1,12 @@ +ರಾಜಕಾರಣದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದೆ ಜಾರಕಿಹೊಳಿ ಕುಟುಂಬ +ಬೆಂಗಳೂರು, ಜೂ.6-ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದ್ದು, ಜಾರಕಿಹೊಳಿ ಕುಟುಂಬ ಮತ್ತೆ ಚರ್ಚೆಯಲ್ಲಿದೆ. ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಅಭ್ಯರ್ಥಿಯಾಗಿದ್ದ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಗೆಲುವು ಕಂಡಿದ್ದಾರೆ. +ಬೆಳಗಾವಿಯಿಂದ ಅಭ್ಯರ್ಥಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಸೋಲು ಕಂಡಿದ್ದಾರೆ. ಈ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಮತ್ತೆ ಜಾರಕಿಹೊಳಿ ಕುಟುಂಬದ ಅಧಿಪತ್ಯ ಹೆಚ್ಚಾಗಿದೆ ಎಂಬ ಅಭಿಪ್ರಾಯಗಳಿವೆ. +ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಸಚಿವ ಸತೀಶ್‌ ಜಾರಕಿಹೊಳಿ, ರಾಜ್ಯಾದ್ಯಂತ ಫಲಿತಾಂಶ ಹಿನ್ನಡೆಗೆ ಚುನಾವಣೆ ನಾಯಕತ್ವ ವಹಿಸಿದ್ದ ನಿರ್ದೇಶಕರು, ನಿರ್ಮಾಪಕರು ಹೊಣೆಯಾಗುತ್ತಾರೆ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಪರೋಕ್ಷ ಅಸಹನೆ ಹೊರಹಾಕಿದರು. +ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌‍ನ ಕಾರ್ಯಕರ್ತರಿಗೆ ಟಿಕೆಟ್‌ ಕೊಡಬೇಕು ಎಂದು ಸತೀಶ್‌ ಜಾರಕಿಹೊಳಿ ಹಲವು ಬಾರಿ ಪ್ರತಿಪಾದಿಸಿದ್ದರು. ಆದರೆ ಲಕ್ಷ್ಮೀ ಹೆಬ್ಬಾಳ್ಕರ್‌ ರಾಜ್ಯಮಟ್ಟದಲ್ಲಿ ತಮ ಪ್ರಭಾವ ಬೆಳೆಸಿಕೊಂಡು ಪುತ್ರ ಮೃಣಾಲ್‌ನನ್ನು ಕಣಕ್ಕಿಳಿಸಲು ಲಾಬಿ ಮಾಡಿದ್ದರು. +ಒಂದು ವೇಳೆ ಮೃಣಾಲ್‌ಗೆ ಟಿಕೆಟ್‌ ಕೊಟ್ಟು ಜಾರಕಿಹೊಳಿ ಕುಟುಂಬಕ್ಕೆ ಅವಕಾಶ ಸಿಗದೇ ಇದ್ದರೆ ಫಲಿತಾಂಶದಲ್ಲಿ ಏರುಪೇರಾಗಲಿದೆ ಎಂಬ ಆತಂಕದಲ್ಲಿ ಕಾಂಗ್ರೆಸ್‌‍ನ ವರಿಷ್ಠರು ಸತೀಶ್‌ ಜಾರಕಿಹೊಳಿ ಪುತ್ರಿಗೂ ಬಿ ಫಾರಂ ಕೊಟ್ಟು ಕೈ ತೊಳೆದುಕೊಂಡರು. +ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಜಿಲ್ಲೆಯ ರಾಜಕಾರಣದಲ್ಲಿನ ಆಂತರಿಕ ಬೇಗುದಿ ಹೊರಬರದಂತೆ ಎಚ್ಚರಿಕೆ ವಹಿಸಲಾಗಿತ್ತು. ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ವಿರುದ್ಧ ಪರೋಕ್ಷವಾಗಿ ಕೆಂಡ ಕಾರುತ್ತಿದ್ದರು. ಆದರೆ ನೇರವಾಗಿ ಹೆಸರು ಹೇಳದೆ ಕುತೂಹಲ ಹುಟ್ಟುಹಾಕಿದ್ದರು. ಜೂನ್‌ 4 ರ ನಂತರ ಮಾತನಾಡುತ್ತೇನೆ ಎಂದು ಸೂಚ್ಯವಾಗಿ ಹೇಳಿದರು. +ಈಗ ರಮೇಶ್‌ ಜಾರಕಿಹೊಳಿ ಅವರ ಬದಲಿಗೆ ಅವರದೇ ಕುಟುಂಬ ಸಹೋದರ ಹಾಗೂ ಪಕ್ಷೇತರ ವಿಧಾನಪರಿಷತ್‌ ಸದಸ್ಯ ಲಕನ್‌ ಜಾರಕಿಹೊಳಿ ಮಾತನಾಡಿದ್ದಾರೆ. ತಾವು ಪಕ್ಷೇತರರಾಗಿದ್ದು, ಚಿಕ್ಕೋಡಿಯಲ್ಲಿ ಕಾಂಗ್ರೆಸ್‌‍ನ ಪ್ರಿಯಾಂಕ ಜಾರಕಿಹೊಳಿ ಅವರನ್ನು ಬೆಳಗಾವಿಯಲ್ಲಿ ಬಿಜೆಪಿಯ ಜಗದೀಶ್‌ ಶೆಟ್ಟರ್‌ ಅವರನ್ನು ಬೆಂಬಲಿಸಿದ್ದಾಗಿ ಹೇಳಿದ್ದಾರೆ. +ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಜಾರಕಿಹೊಳಿ ಕುಟುಂಬ ಮತ್ತೆ ಪ್ರಬಲವಾಗಿದೆಯೇ ಎಂಬ ಪ್ರಶ್ನೆಗೆ, ಜನರ ಆಶೀರ್ವಾದ ಇರುವವರೆಗೂ ನಮನ್ನು ಯಾರೂ ಏನೂ ಮಾಡಲಾಗುವುದಿಲ್ಲ ಎಂದು ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ.ಸತೀಶ್‌ ಜಾರಕಿಹೊಳಿ ಉಪಮುಖ್ಯಮಂತ್ರಿಯಾಗಬೇಕು ಎಂಬ ಬೇಡಿಕೆಗೆ ಲಕನ್‌ ಜಾರಕಿಹೊಳಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್‌‍ನಲ್ಲಿ ಹಿರಿಯ ನಾಯಕರಿದ್ದಾರೆ. ಅದನ್ನು ಪರಿಗಣಿಸಿ ಪಕ್ಷದ ವರಿಷ್ಠರು ಸತೀಶ್‌ ಅವರಿಗೆ ಅವಕಾಶ ನೀಡಬಹುದು. +ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಪತನವಾಗುವುದಿಲ್ಲ, ಇನ್ನಷ್ಟು ಮಳೆ ಬೀಳಬಹುದೇ ಹೊರತು ಸರ್ಕಾರ ಬೀಳುವುದಿಲ್ಲ. ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಆತೀಯವಾಗಿ ಇದ್ದಾರೆ. ಹೀಗಾಗಿ ಬೆಳಗಾವಿ ರಾಜಕಾರಣ ಸರ್ಕಾರದ ಭವಿಷ್ಯಕ್ಕೆ ಧಕ್ಕೆ ಆಗುವುದಿಲ್ಲ. ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. +ಬೆಳಗಾವಿಯ ಬಿಜೆಪಿ ಅಭ್ಯರ್ಥಿಯಾಗಿದ್ದ ಜಗದೀಶ್‌ ಶೆಟ್ಟರ್‌ ಸೌಮ್ಯ ಸ್ವಭಾವದವರಾಗಿದ್ದರು. ಅವರ ಒಳ್ಳೆತನ ನೋಡಿ ಜನ ಮತ ಹಾಕಿದ್ದಾರೆ. ಮೃಣಾಲ್‌ ಹೆಬ್ಬಾಳ್ಕರ್‌ ಅವರು ಶೆಟ್ಟರ್‌ ಬಗ್ಗೆ ಅಗೌರವವಾಗಿ ಮಾತನಾಡಿದ್ದಕ್ಕೆ ಸೋಲು ಕಂಡಿದ್ದಾರೆ ಎಂದರು.ಬೆಳಗಾವಿ ರಾಜಕಾರಣದಲ್ಲಿ ಸೇಡಿನ ಪ್ರಶ್ನೆಯಿಲ್ಲ. ಇಲ್ಲಿ ಯಾರಿಗೂ ಅಧಿಕಾರ ಶಾಶ್ವತವಲ್ಲ. ಮುಂದಿನ ನಾಲ್ಕು ವರ್ಷ ಎಲ್ಲರೂ ಒಟ್ಟಾಗಿಯೇ ಕೆಲಸ ಮಾಡಬೇಕು. ಒಳ್ಳೆಯ ಕೆಲಸ ಮಾಡಿದರೆ ಜನ ಪುನರ್‌ ಆಯ್ಕೆ ಮಾಡುತ್ತಾರೆ. ಇಲ್ಲವಾದರೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ ಎಂದು ಹೇಳಿದರು. +ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ ಮತ್ತು ಲಕನ್‌ ಜಾರಕಿಹೊಳಿ ಸಹೋದರರ ಹೇಳಿಕೆಗಳು ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಜೆಡಿಎಸ್‌‍-ಕಾಂಗ್ರೆಸ್‌‍ ಸಮಿಶ್ರ ಸರ್ಕಾರಕ್ಕೆ ರಮೇಶ್‌ ಜಾರಕಿಹೊಳಿ ಹಳ್ಳ ತೋಡಿದ್ದರು. ಹೀಗಾಗಿ ಬೆಳಗಾವಿ ಜಿಲ್ಲಾ ರಾಜಕಾರಣ ರಾಜ್ಯಸರ್ಕಾರ ಹಾಗೂ ರಾಜ್ಯ ರಾಜಕಾರಣದ ಮೇಲೆ ಹೆಚ್ಚು ಪ್ರಭಾವಿಯಾಗಿಯೇ ಕಾಣಿಸಿಕೊಳ್ಳುತ್ತದೆ. \ No newline at end of file diff --git a/eesanje/url_46_119_7.txt b/eesanje/url_46_119_7.txt new file mode 100644 index 0000000000000000000000000000000000000000..ca3ca483e13676e47571c0bf414e81bb916ae49c --- /dev/null +++ b/eesanje/url_46_119_7.txt @@ -0,0 +1,6 @@ +ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಪ್ರಮುಖ ಆರೋಪಿ ಪ್ರಭಾವಿ ರಾಜಕಾರಣಿ ಜೊತೆ ಲಿಂಕ್ +ಬೆಂಗಳೂರು, ಜೂ.6-ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ನೆಕ್ಕುಂಟೆ ನಾಗರಾಜ್‌ ಅವರು ಸಚಿವ ನಾಗೇಂದ್ರ ಅವರಿಗೆ ಆಪ್ತರಲ್ಲದೆ ರಾಜ್ಯದ ಪ್ರಭಾವಿ ರಾಜಕಾರಣಿ ಒಬ್ಬರಿಗೂ ಪರಮಾಪ್ತ ಎನ್ನಲಾಗಿದೆ. +ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಸ್‌‍ಐಟಿ ಈಗಾಗಲೇ ನಿಗಮದ ಹಿಂದಿನ ಎಂ.ಡಿ. ಪದನಾಭ, ಮುಖ್ಯ ಲೆಕ್ಕಾಧಿಕಾರಿ ಪರಶುರಾಮು, ನೆಕ್ಕುಂಟೆ ನಾಗರಾಜ್‌, ನಾಗೇಶ್ವರ ರಾವ್‌, ಸತ್ಯನಾರಾಯಣ್‌ರನ್ನ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದೆ. +ಕೊಪ್ಪಳ ಜಿಲ್ಲೆ ಕರಟಗಿ ತಾಲೂಕಿನ ಉಳಕ್ಯಾಳ ಕ್ಯಾಂಪಸ್‌‍ನ ನಿವಾಸಿ ನೆಕ್ಕುಂಟೆ ನಾಗರಾಜ್‌ ಪ್ರಕರಣದ ಪ್ರಮುಖ ಆರೋಪಿ ಇವರು ಸಚಿವ ನಾಗೇಂದ್ರ ಅವರ ಪರಮಾಪ್ತ. ಅಷ್ಟೇ ಅಲ್ಲದೆ, ರಾಜ್ಯದ ಪ್ರಭಾವಿ ಸಚಿವರೊಬ್ಬರಿಗೂ ಕೂಡ ಆಪ್ತ ಎಂದು ತಿಳಿದುಬಂದಿದೆ. +ರಾಜಕಾರಣಿಗಳ ಜೊತೆ ವ್ಯವಹಾರ ಮಾಡುತ್ತಿದ್ದ ಆರೋಪಿ ನಾಗರಾಜ್‌ ಅಧಿಕಾರದಲ್ಲಿರುವ ಪಕ್ಷದ ನಾಯಕರ ಜೊತೆ ಸದಾ ಇರುತ್ತಿದ್ದ. ಶ್ರೀರಾಮಲು ಸ್ಥಾಪಿಸಿದ್ದ ಬಿಎಸ್‌‍ಆರ್‌ ಪಕ್ಷದಿಂದ 2013 ರಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀರಾಮಲು ಜೊತೆ ಹೆಚ್ಚಾಗಿ ಇರುತ್ತಿದ್ದ ನಾಗರಾಜ್‌ ನಂತರ ನಾಗೇಂದ್ರ ಜೊತೆ ಗುರುತಿಸಿಕೊಂಡಿದ್ದ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದಿದ್ದ ನಾಗರಾಜ್‌ ನಂತರ ಕೊಪ್ಪಳದಲ್ಲಿ ಕಾಂಗ್ರೆಸ್‌‍ ಸೇರಲು ಮುಂದಾಗಿದ್ದ. ಆದರೆ ನಾಗರಾಜ್‌ ಕಾಂಗ್ರೆಸ್‌‍ ಸೇರ್ಪಡೆಗೆ ಶಿವರಾಜ್‌ ತಂಗಡಗಿ ಒಲವು ತೋರಿರಲಿಲ್ಲ. ಹೀಗಾಗಿ ನಾಗೇಂದ್ರ ಅವರ ಜೊತೆ ಗುರುತಿಸಿಕೊಂಡಿದ್ದಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಹಗರಣ ಸಂಬಂಧ ಹೈದ್ರಾಬಾದ್‌ನ ಫಸ್ಟ್‌ ಫೈನಾನ್‌್ಸ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ರೂ. ಹಣವನ್ನು ಜಪ್ತಿ ಮಾಡಿದೆ. \ No newline at end of file diff --git a/eesanje/url_46_119_8.txt b/eesanje/url_46_119_8.txt new file mode 100644 index 0000000000000000000000000000000000000000..9138f8439a47b79278603e726f279c5fd38fdc42 --- /dev/null +++ b/eesanje/url_46_119_8.txt @@ -0,0 +1,5 @@ +ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಹುಲ್‌ +ಬೆಂಗಳೂರು, ಜೂ.6-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಂಸದ ರಾಹುಲ್‌ ಗಾಂಧಿಯವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. +ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಶೇ. 40 ಕಮಿಷನ್‌, ಸಿಎಂ ಹುದ್ದೆಗೆ 2,500 ಕೋಟಿ ರೂ. ಸೇರಿ ವಿವಿಧ ಆರೋಪಗಳ ಬಗ್ಗೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಸಂಬಂಧ ಬಿಜೆಪಿಯ ಕೇಶವಪ್ರಸಾದ್‌ ಎಂಬುವರು ಸಿಎಂ, ಡಿಸಿಎಂ, ರಾಹುಲ್‌ಗಾಂಧಿ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು. +ಪ್ರತಿವಾದಿಯಾಗಿದ್ದ ರಾಹುಲ್‌ಗಾಂಧಿಯವರು ವಿಚಾರಣೆಗೆ ಹಾಜರಾಗದೇ ಇದ್ದುದಕ್ಕೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿ ಜೂ. 7 ರಂದು ಖುದ್ದು ಹಾಜರಾತಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ನಾಳೆ ರಾಹುಲ್‌ಗಾಂಧಿಯವರು ಜನಪ್ರತಿನಿಧಿಗಳ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. +ದೆಹಲಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇಂಡಿ ಮೈತ್ರಿಕೂಟದ ನೇತೃತ್ವ ವಹಿಸಿರುವ ರಾಹುಲ್‌ಗಾಂಧಿಯವರು ಬಿಡುವಿಲ್ಲದ ಕಾರ್ಯದೊತ್ತಡದಲ್ಲಿದ್ದಾರೆ. ಈ ನಡುವೆ ರಾಹುಲ್‌ಗಾಂಧಿಯವರು ನಾಳೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕಿದೆ. \ No newline at end of file diff --git a/eesanje/url_46_119_9.txt b/eesanje/url_46_119_9.txt new file mode 100644 index 0000000000000000000000000000000000000000..d5d011238ea711ffe4a5e93e2c168eeb6167a546 --- /dev/null +++ b/eesanje/url_46_119_9.txt @@ -0,0 +1,6 @@ +ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಸ್ವಯಂ ಪ್ರೇರಿತ ರಾಜೀನಾಮೆ +ಬೆಂಗಳೂರು,ಜೂ.6-ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಯುವಜನ ಸೇವೆ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಸಚಿವ ಬಿ.ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. +ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ನಾನು ಮತ್ತು ಗೃಹ ಸಚಿವರು ಸಚಿವ ನಾಗೇಂದ್ರ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದರು. +ಮುಂದುವರೆದು ಮಾತನಾಡಿದ ಡಿ.ಕೆ.ಶಿವಕುಮಾರ್‌ ಅವರು, ಆದರೆ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂಬ ಕಾರಣಕ್ಕೆ ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಿದರು.ಸರ್ಕಾರ ರಾಜೀನಾಮೆ ಸ್ವೀಕರಿಸಲಿದೆಯೇ ಎಂದು ಕೇಳಿದಾಗ, ಮುಖ್ಯಮಂತ್ರಿಗಳು ಪಕ್ಷದ ಹೈಕಮಾಂಡ್‌ ಜತೆ ಚರ್ಚೆ ಮಾಡಿ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. +ಲೋಕಸಭೆ ಚುನಾವಣೆ ಲಿತಾಂಶದ ಬಗ್ಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಉತ್ತಮ ಪ್ರದರ್ಶನ ನೀಡಿರುವುದಕ್ಕೆ ಸಂತೋಷವಾಗಿದೆ. ನಮ ಮೈತ್ರಿಕೂಟ ಅಧಿಕಾರದ ಸನಿಹಕ್ಕೆ ಬಂದರೂ ಸರ್ಕಾರ ರಚನೆ ಪ್ರಯತ್ನದಿಂದ ದೂರವಿರಲು ನಿರ್ಧರಿಸಿದೆ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು ಎಂದು ದೇಶ ಅಭಿಪ್ರಾಯ ಪಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ರಕ್ಷಣೆಗೆ ಹೊಸ ಭರವಸೆ ಸಿಕ್ಕಿದೆ. ಭವಿಷ್ಯದ ಬಗ್ಗೆ ಎಐಸಿಸಿ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದರು. +ಗ್ಯಾರಂಟಿ ಜಾರಿ ವಿಚಾರವಾಗಿ ಕೇಳಿದಾಗ, ನಮ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದು. ಕಾಂಗ್ರೆಸ್‌‍ ಪಕ್ಷ ಎಂದಿಗೂ ಇಟ್ಟ ಹೆಜ್ಜೆಯನ್ನು ಹಿಂದಕ್ಕೆ ಪಡೆಯುವುದಿಲ್ಲ. ಕಾಂಗ್ರೆಸ್‌‍ ಸರ್ಕಾರ ಬಂದಾಗ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಪುನರುಚ್ಚರಿಸಿದರು. \ No newline at end of file diff --git a/eesanje/url_46_11_1.txt b/eesanje/url_46_11_1.txt new file mode 100644 index 0000000000000000000000000000000000000000..7d640aba0b90b755901b4ac708a5253303653549 --- /dev/null +++ b/eesanje/url_46_11_1.txt @@ -0,0 +1,7 @@ +ಶಿವಮೊಗ್ಗದಿಂದ ಚೆನ್ನೈ-ಹೈದರಾಬಾದ್‌ಗೆ ನೇರ ವಿಮಾನ + - +ಬೆಂಗಳೂರು, ಸೆ.24– ಶಿವಮೊಗ್ಗದಿಂದ ಚೆನ್ನೈ ಮತ್ತು ಹೈದರಾಬಾದ್‌ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆಯನ್ನು ಸ್ಪೈಸ್‌‍ ಜೆಟ್‌ ಪರಿಚಯಿಸಲಿದ್ದು, ಅ.10 ರಿಂದ ಆರಂಭವಾಗಲಿವೆ. ವಿಮಾನ ಯಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಆರಂಭಿಸಲಾಗಿದೆ. +ಈ ಬಗ್ಗೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಕೂಡ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದು, ಚವಿಮಾನ ಆಗಮನ, ನಿರ್ಗಮನ ಸಮಯ ಮತ್ತಿತರ ವಿವರಗಳನ್ನು ನೀಡಿದ್ದಾರೆ. ಶಿವಮೊಗ್ಗಕ್ಕೆ ಮತ್ತೊಂದು ಮಹತ್ವದ ಸುದ್ದಿ! ಸ್ಪೈಸ್‌‍ ಜೆಟ್‌ ವಿಮಾನಯಾನ ಸಂಸ್ಥೆಯು ಶಿವಮೊಗ್ಗದಿಂದ ಎರಡು ಹೊಸ ವಿಮಾನ ಮಾರ್ಗಗಳನ್ನು ಸೇವೆಗೆ ಸೇರಿಸಲಿದೆ. +ಅ.10ರಿಂದ ಪ್ರಾರಂಭವಾಗುವಂತೆ ಚೆನ್ನೈ ಮತ್ತು ಹೈದರಾಬಾದ್‌ಗೆ ನೇರ ವಿಮಾನಯಾನ ಸೇವೆ ದೊರೆಯಲಿದೆ ಎಂದು ರಾಘವೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಸ್ಪೈಸ್‌‍ ಜೆಟ್‌ ವಿಮಾನ ಚೆನ್ನೈನಿಂದ ಪ್ರತಿದಿನ ಬೆಳಿಗ್ಗೆ 10.40 ಕ್ಕೆ ಹೊರಟು ಮಧ್ಯಾಹ್ನ 12.10 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಶಿವಮೊಗ್ಗದಿಂದ ಹೈದರಾಬಾದ್‌ಗೆ ತೆರಳುವ ವಿಮಾನಗಳು ಮಧ್ಯಾಹ್ನ 12.35 ಕ್ಕೆ ಹೊರಡಲಿದ್ದು, 2.05 ಕ್ಕೆ ಹೈದರಾಬಾದ್‌ ತಲುಪಲಿವೆ. +ಹೈದರಾಬಾದ್‌ನಿಂದ ಹಿಂತಿರುಗುವ ವಿಮಾನ ಮಧ್ಯಾಹ್ನ 2.40 ಕ್ಕೆ ಹೊರಡಲಿದ್ದು, ಸಂಜೆ 4.10 ಕ್ಕೆ ಶಿವಮೊಗ್ಗ ತಲುಪಲಿದೆ. ಚೆನ್ನೈಗೆ ತೆರಳುವ ವಿಮಾನ ಶಿವಮೊಗ್ಗದಿಂದ ಸಂಜೆ 4.25ಕ್ಕೆ ಹೊರಟು 5.55ಕ್ಕೆ ಚೆನ್ನೈ ತಲುಪಲಿದೆ. +ಈ ಹೊಸ ವಿಮಾನ ಸೇವೆ ಶಿವಮೊಗ್ಗದ ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಉತ್ತೇಜನವನ್ನು ನೀಡುತ್ತದೆ ಮತ್ತು ಸಂಪರ್ಕವನ್ನು ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಸೇವೆಗಳನ್ನು ವಿಸ್ತರಿಸಿದ್ದಕ್ಕಾಗಿ ಅವರು ಸ್ಪೈಸ್‌‍ ಜೆಟ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_11_10.txt b/eesanje/url_46_11_10.txt new file mode 100644 index 0000000000000000000000000000000000000000..8965891783ca7d750d695383f6678e3134fd21b0 --- /dev/null +++ b/eesanje/url_46_11_10.txt @@ -0,0 +1,11 @@ + : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ..! + ' +ಬೆಂಗಳೂರು,ಸೆ.24-ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿಲುವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ. +ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ಹೈಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾ. ನಾಗಪ್ರಸನ್ನ ಅವರು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218 ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿ ಹಿಡಿದಿದ್ದಾರೆ. +ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಅಡಿ ಪೊಲೀಸ್‌‍ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ಪೀಠ ಹೇಳಿದೆ. +ಸಂವಿಧಾನದ 163 ನೇ ವಿಧಿಯಡಿ ರಾಜ್ಯಪಾಲರು ಸಂಪುಟದ ಸಲಹೆ ಆಧಾರಿತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಲಾಗಿದೆ. ಆದರೆ ಕೆಲ ಸಂದರ್ಭಗಳಲ್ಲಿ ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರವನ್ನು ಬಳಸಿಯೂ ನಿರ್ಧಾರ ತೆಗೆದುಕೊಳ್ಳಬಹುದು. +ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿಗಳ ಕುಟುಂಬ ಫಲಾನುಭವಿಯಾಗಿರುವುದರಿಂದ ರಾಜ್ಯಪಾಲರು ಪೂರ್ವಾನುಮತಿ ನೀಡಲು ತೆಗೆದುಕೊಂಡಿರುವ ಕ್ರಮ ಸಮರ್ಥನೀಯವಾಗಿದೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. +ಈ ಎಲ್ಲಾ ಕಾರಣಗಳಿಂದಾಗಿ ರಾಜ್ಯಪಾಲರು ಸ್ವಂತ ವಿವೇಚನೆ ಬಳಸಿಲ್ಲ ಎಂಬ ವಾದವನ್ನು ತಳ್ಳಿಹಾಕಿದೆ. ಸಿದ್ದರಾಮಯ್ಯ ಅವರ ಪರ ವಕೀಲರು ತಮ ವಾದ ಮಂಡನೆಯ ಸಂದರ್ಭದಲ್ಲಿ ಎತ್ತಿದ್ದ ಎಲ್ಲಾ ಪ್ರಶ್ನೆಗಳಿಗೂ ಹೈಕೋರ್ಟ್‌ ಉತ್ತರ ನೀಡಿದೆ.ಯಾವ ರೀತಿಯ ವಿಚಾರಣೆ ಎಂಬುದನ್ನು ಕೆಳಹಂತದ ನ್ಯಾಯಾಲಯ ನಿರ್ಧರಿಸಬಹುದಾಗಿದೆ. ಈವರೆಗೂ ರಾಜ್ಯಪಾಲರ ಅಭಿಯೋಜನೆ ಆಧರಿಸಿದ ಪ್ರಕ್ರಿಯೆಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವು ಮಾಡಿದೆ. +ಹೈಕೋರ್ಟ್‌ನ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ ವೇಳೆ ಸಿದ್ದರಾಮಯ್ಯ ಅವರ ಪರ ವಕೀಲರಾದ ಅಭಿಷೇಕ್‌ ಮನುಸಿಂಘ್ವಿ ಎರಡು ವಾರಗಳ ತಡೆ ನೀಡುವಂತೆ ಮನವಿ ಮಾಡಿದರು. ನಾನೇ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಇಂದು ಮಧ್ಯಾಹ್ನದ ವೇಳೆಗೆ ತೀರ್ಪಿನ ಪ್ರತಿ ಕೈ ಸೇರಲಿದೆ. ಮುಂದಿನ ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಬಹುದು ಎಂದು ನ್ಯಾಯಮೂರ್ತಿಗಳು ಹೇಳಿದರು. +ರಾಜ್ಯಪಾಲರ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿಹಿಡಿದ ಬೆನ್ನಲ್ಲೇ ರಾಜಕೀಯವಾಗಿ ಬಿರುಗಾಳಿಯೇ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ವಾದಗಳು ಕೇಳಿಬಂದ ವೇಳೆ ಹೈಕೋರ್ಟ್‌ನಿಂದ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ಸಿಗಬಹುದು ಎಂಬ ಅಂದಾಜುಗಳಿದ್ದವು. ಆದರೆ ಎಲ್ಲವೂ ಹುಸಿಯಾಗಿವೆ. +ಇಂದು ಬೆಳಿಗ್ಗೆಯಿಂದಲೂ ತೀರ್ಪಿಗಾಗಿ ಮುಖ್ಯಮಂತ್ರಿ ಮತ್ತು ಅವರ ತಂಡ ತೀವ್ರ ಕುತೂಹಲದಿಂದ ನಿರೀಕ್ಷಿಸಿತ್ತು. ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಕೆಳಹಂತದ ನ್ಯಾಯಾಲಯಕ್ಕೆ ತನ್ನ ವಿಚಾರಣೆಯನ್ನು ಮುಂದುವರೆಸಲು ಅವಕಾಶ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಲು ಅವಕಾಶ ಸಿಕ್ಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. \ No newline at end of file diff --git a/eesanje/url_46_11_11.txt b/eesanje/url_46_11_11.txt new file mode 100644 index 0000000000000000000000000000000000000000..72e7a72cf2f5467b7f234d7f8f3d97086f59eb79 --- /dev/null +++ b/eesanje/url_46_11_11.txt @@ -0,0 +1,9 @@ +ಇಂದು ಸಿಎಂ ವಿರುದ್ಧದ ಅಭಿಯೋಜನೆ ತೀರ್ಪು : ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಒಂದೆಡೆ ಸೇರಿದ ಸಚಿವರು + ’ +ಬೆಂಗಳೂರು,ಸೆ.24-ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್‌ ಅರ್ಜಿಯ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಹೈ ಅಲರ್ಟ್‌ ಮಾದರಿಯಲ್ಲಿ ಪೂರ್ವ ತಯಾರಿ ನಡೆಸಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಡದ ನಡುವೆಯೂ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಉಳಿದಂತೆ ಸಚಿವರಾದ ಕೃಷ್ಣಾಭೈರೇಗೌಡ, ಎಚ್‌.ಕೆ.ಪಾಟೀಲ್‌, ಡಾ.ಜಿ.ಪರಮೇಶ್ವರ್‌, ದಿನೇಶ್‌ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ ಸೇರಿದಂತೆ ಸಂಪುಟದ ಕೋರ್‌ಟೀಂನಲ್ಲಿರುವ ಸದಸ್ಯರು ತಮೆಲ್ಲಾ ಪ್ರವಾಸ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಕೇಂದ್ರಸ್ಥಾನದಲ್ಲಿ ಬೀಡುಬಿಟ್ಟಿದೆ. +ತೀರ್ಪಿನ ಬಳಿಕ ಯಾವುದೇ ರೀತಿಯ ಪರಿಸ್ಥಿತಿಗಳು ಎದುರಾದರೂ ಅದನ್ನು ನಿಭಾಯಿಸಲು ಸರ್ಕಾರ ತಯಾರಿ ನಡೆಸಿದೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದೇ ರಾಜಕೀಯಪ್ರೇರಿತ ಎಂಬ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಕಾನೂನು ಸಂಘರ್ಷಕ್ಕಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ತಂಡ ಮುಂದಾಗಿತ್ತು. +ರಾಜ್ಯದ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜಭವನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಆರಂಭದಿಂದಲೂ ಮಾಡಲಾಗುತ್ತಿದೆ. ರಾಜ್ಯಪಾಲರು ಉದ್ದೇಶಪೂರ್ವಕವಾಗಿಯೇ ಕ್ಷುಲ್ಲಕ ವಿಚಾರಗಳಿಗೆಲ್ಲಾ ಹಸ್ತಕ್ಷೇಪ ನಡೆಸುವ ಮೂಲಕ ಪದೇಪದೇ ಮುಜುಗರ ಉಂಟುಮಾಡುತ್ತಿದ್ದಾರೆ. ಸಾಂವಿಧಾನಿಕ ಬಾಧ್ಯತೆಗಳು ಹಾಗೂ ವಿಧಿಗಳನ್ನು ಮೀರಿ ರಾಜಕೀಯ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂಬೆಲ್ಲಾ ಟೀಕೆಗಳನ್ನು ಕಾಂಗ್ರೆಸ್‌‍ನ ನಾಯಕರು, ಸಚಿವರು ಹಾಗೂ ಶಾಸಕರು ಬಹಿರಂಗವಾಗಿಯೇ ಮಾಡಿದರು. +ಅಭಿಯೋಜನೆಗೆ ಅನುಮತಿ ನೀಡಿದ ಬಳಿಕವಂತೂ ಕಾಂಗ್ರೆಸ್‌‍ ನೇರವಾಗಿ ಬೀದಿಗಿಳಿದಿತ್ತು. ರಾಜ್ಯಪಾಲರ ನಡವಳಿಕೆಯನ್ನು ಕಾನೂನಾತಕವಾಗಿ ಎದುರಿಸುವುದಾಗಿ ಘೋಷಿಸಿದ್ದಲ್ಲದೆ, ಹಲವು ಸುತ್ತಿನ ಸಂಘರ್ಷದ ನಡವಳಿಕೆಗಳನ್ನು ಅನುಸರಿಸಿತ್ತು.ಈಗಾಗಲೇ ಹೈಕೋರ್ಟ್‌ನಲ್ಲಿ ಕಾನೂನು ಸಮರ ನಡೆಸಲಾಗಿದೆ. ಯಾವುದೇ ಸಂದರ್ಭ ಬಂದರೂ ಕುಗ್ಗದೆ ಮುಖ್ಯಮಂತ್ರಿಯವರು ಎಂದಿನಂತೆಯೇ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಒಂದಷ್ಟು ಜನ ಪ್ರತಿಪಾದಿಸುತ್ತಿದ್ದಾರೆ. +ಮೇಲ್ನೋಟಕ್ಕೆ ಸಂಪುಟದ ಸಚಿವರಲ್ಲಿ ಹಾಗೂ ಹೈಕಮಾಂಡ್‌ ನಾಯಕರಿಂದಲೂ ಇದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ ಒಳಗೊಳಗೇ ಸಿದ್ದರಾಮಯ್ಯ ವಿರುದ್ಧ ಮಸಲತ್ತುಗಳು ನಡೆಯುತ್ತಲೇ ಇವೆ. +ಒಂದು ವೇಳೆ ಎಫ್‌ಐಆರ್‌ ದಾಖಲಾಗಿದ್ದೇ ಆದರೆ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಳ್ಳುತ್ತಾರೆ ಎಂಬ ವಿರೋಧಪಕ್ಷಗಳ ಅಭಿಪ್ರಾಯಗಳಿಗೆ ಆಡಳಿತ ಪಕ್ಷದಲ್ಲೂ ಮೌನಸಮತಿ ದೊರೆಯುತ್ತಿದೆ. ಹೀಗಾಗಿ ಹೈಕೋರ್ಟ್‌ನ ತೀರ್ಪು ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯವನ್ನು ನಿರ್ಣಯಿಸುವುದಷ್ಟೇ ಅಲ್ಲ, ರಾಜ್ಯ ರಾಜಕೀಯಕ್ಕೂ ಹೊಸ ದಿಕ್ಕು ನೀಡಲಿದೆ. \ No newline at end of file diff --git a/eesanje/url_46_11_12.txt b/eesanje/url_46_11_12.txt new file mode 100644 index 0000000000000000000000000000000000000000..ee005977ac3383f8c6f6413683c91e61010e5b49 --- /dev/null +++ b/eesanje/url_46_11_12.txt @@ -0,0 +1,9 @@ +ಕೆಂಪಣ್ಣ ಆಯೋಗ ವರದಿಯನ್ನು ಸದನದಲ್ಲಿ ಮಂಡಿಸಲು ಸಿ.ಟಿ.ರವಿ ಆಗ್ರಹ + +ಬೆಂಗಳೂರು,ಸೆ.23– ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣವೇ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. +ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರೀಡೂ ಹೆಸರಿನಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 450ಕ್ಕೂ ಹೆಚ್ಚು ಎಕರೆ ಡಿನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಿಲುಕಿದ್ದಾರೆ. +ಇದರ ಬಗ್ಗೆ ಅಂದಿನ ಸರ್ಕಾರವೇ ತನಿಖಾ ಆಯೋಗವನ್ನು ರಚಿಸಿತ್ತು. ಹಲವು ವರ್ಷಗಳು ಕಳೆದರೂ ಆಯೋಗದ ವರದಿ ಬಹಿರಂಗಗೊಂಡಿಲ್ಲ. ಸರ್ಕಾರ ವಿಳಂಬ ಮಾಡದೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ಕೆಂಪಣ್ಣ ಆಯೋಗದ ವರದಿಯನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡನೆ ಮಾಡಬೇಕೆಂದು ನಾನೇ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದೆ. ಇದಕ್ಕೆ ಈಗಲೂ ಉತ್ತರ ಕೊಟ್ಟಿಲ್ಲ. ಇದು ಜಾಣ ವೌನವೇ ಎಂದು ಪ್ರಶ್ನಿಸಿದರು. +ಕೆಂಪಣ್ಣ ಆಯೋಗದ ವರದಿಯನ್ನು ಮಂಡಿಸಬೇಕು. ವರದಿ ಆಧಾರದ ಮೇಲೆ ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ಸಿದ್ದರಾಮಯ್ಯ ಪರಮ ಭ್ರಷ್ಟರು ಎನ್ನುವುದರಲ್ಲಿ ಇನ್ನೊಂದು ಮಾತಿಲ್ಲ ಎಂದರು.ನಿನ್ನೆ ಸಿಎಂ ಸಿದ್ಧರಾಮಯ್ಯ ಪತ್ರಕರ್ತರ ಪ್ರಶ್ನೆ ಅರ್ಧ ಹೇಳಿಕೆ ಕೊಟ್ಟಿದ್ದಾರೆ. ರಿಡೂ ಮಾಡಿದ್ದು ನಾನಲ್ಲ. ಅದು ಸುಪ್ರೀಂಕೋರ್ಟ್ ತೀರ್ಪು ಎಂದಿದ್ದಾರೆ. ಸಮಿತಿ ಕೊಟ್ಟ ವರದಿ ಬೇರೆ ಇತ್ತು. ಒಟ್ಟು 880 ಎಕರೆ ರಿಡೂ ಮಾಡಿದ್ದಾರೆ. +ಬಿಡಿಎ ಅಭಿವೃದ್ಧಿ ಪಡಿಸಿದ ಲೇಔಟ್ ಇದ್ದರೇ, ಡಿನೋಟಿಫಿಕೇಶನ್ ಮಾಡಲು ತಿಳಿಸಿತ್ತು. ಆದರೆ 16 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸ್ಥಳಕ್ಕೆ ಡಿನೋಟಿಫಿಕೇಶನ್ ಮಾಡಿಕೊಟ್ಟಿದ್ದಾರೆ. ಆರ್ಕಾವತಿ ಬಡಾವಣೆಗೆ ನಿವೇಶನ ಸಿಕ್ಕಿತ್ತು. ಕೆಂಪೇಗೌಡ ಬಡಾವಣೆಗೆ ಅವಕಾಶ ಕೊಟ್ಟಿದ್ದೀರಿ. ಬಂಡೂರು ರಾಮಸ್ವಾಮಿ ಆಯೋಗ ಕೊಟ್ಟಿದ್ದ ವರದಿಯಲ್ಲಿನ ನಿಯಮ ಗಾಳಿಗೆ ತೂರಿದ್ದೀರಿ. ವರದಿಯನ್ನು ಹೊರಗೆ ತರಬೇಕಿತ್ತು. +ಆರ್ಕಾವತಿ ಬಡಾವಣೆಯಲ್ಲಿ ನಿಮ್ಮ ಸರ್ಕಾರ ಅಕ್ರಮ ಮಾಡಿದೆ. ಅದನ್ನು ಟೇಬಲ್ ಮಾಡಬೇಕಿತ್ತು. ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಅದರಲ್ಲಿ ನಿಮ್ಮ ಪಾಲು ಇದೆ. ನೀವು ಭ್ರಷ್ಟಾಚಾರಿಗಳನ್ನು ಪೋಷಿಸಿದ್ದೀರಿ ಎಂದು ಸಿದ್ಧರಾಮಯ್ಯರ ವಿರುದ್ಧ ವಾಗ್ದಾಳಿ ನಡೆಸಿದರು. +ಶಾಸಕ ಮುನಿರತ್ನರ ವಿಚಾರದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಮುನಿರತ್ನರನ್ನು ರಾಜಕೀಯದಿಂದ ದೂರ ಸರಿಸಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಇದರ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಮಾತುಕತೆ ನಡೆಸಿದ್ದೇವೆ ಎಂದು ಇದೇ ವೇಳೆ ಅವರು ತಿಳಿಸಿದರು. \ No newline at end of file diff --git a/eesanje/url_46_11_2.txt b/eesanje/url_46_11_2.txt new file mode 100644 index 0000000000000000000000000000000000000000..c3caa2178366c35efd8a2dedb96304af0a3c09c0 --- /dev/null +++ b/eesanje/url_46_11_2.txt @@ -0,0 +1,11 @@ +ಮೈಸೂರಿನಲ್ಲಿ ದಸರಾ ದೀಪಾಲಂಕಾರ, ಆಗಸದಲ್ಲಿ ಡ್ರೋನ್‌ಗಳ ಚಿತ್ತಾರ + +ಮೈಸೂರು,ಸೆ.24– ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರಕ್ಕೆ ಈ ಬಾರಿ ಡೋನ್‌ ಪ್ರದರ್ಶನ ಹೊಸ ಮೆರಗು ನೀಡಲಿದ್ದು, 1500 ಡೋನ್‌ ಗಳು ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿವೆ. +ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ದಸರಾ ದೀಪಾಲಂಕಾರದ ಪೋಸ್ಟರ್‌ ಗಳನ್ನು ಚೆಸ್ಕ್‌ ಕಚೇರಿಯಲ್ಲಿ ಬಿಡುಗಡೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದರು.ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. +ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್‌ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ. ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆದೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ. ದಸರಾ ದೀಪಾಲಂಕಾರಕ್ಕಾಗಿ 6.50 ಕೋಟಿ ರೂ. ವೆಚ್ಚವಾಗುತ್ತಿದ್ದು, 2881 ಕಿ.ವ್ಯಾ. ಅಂದಾಜು ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಭಾರ ಹಾಗೂ 242012 ಯೂನಿಟ್‌ಗಳ ವಿದ್ಯುತ್‌ ಬಳಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು. +ಡೋನ್‌ ಶೋ ಆಕರ್ಷಣೆ:ದಸರಾ ದೀಪಾಲಂಕಾರದೊಂದಿಗೆ ಇದೇ ಮೊದಲ ಬಾರಿಗೆ ಡೋನ್‌ ಪ್ರದರ್ಶನ ಏರ್ಪಡಿಸಲಾಗಿದೆ. ಎಲ್‌‍.ಇ.ಡಿ. ಬಲ್‌್ಬ ಗಳನ್ನು ಅಳವಡಿಸಿರುವ ಸುಮಾರು 1500 ಡ್ರೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು. ಅ. 6,7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡೋನ್‌ ಪ್ರದರ್ಶನ ನಡೆಯಲಿದ್ದು, ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡೋನ್‌ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ ಎಂದರು. +ವಿದ್ಯುತ್‌ ರಥ ಸಂಚಾರ: ದಸರಾ 2024ರ ಸಂದರ್ಭದಲ್ಲಿ ಪವರ್‌ ಮ್ಯಾನ್‌ಗಳ ಕರ್ತವ್ಯಗಳು, ಗೃಹಜ್ಯೋತಿ, ಕೃಷಿ ಬಳಕೆಗೆ ಸೌರ ವಿದ್ಯುತ್‌ ಪಂಪ್‌ ಸೆಟ್‌ಗಳು, ವಿದ್ಯುತ್‌ ಸುರಕ್ಷತೆ ಹಾಗೂ ನುಡಿದಂತೆ ನಡೆದ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡ ವಿದ್ಯುತ್‌ ರಥವನ್ನು ರೂಪಿಸಲಾಗುವುದು. +ಈ ರಥ ಅ.3ರಂದು ಉದ್ಘಾಟನೆಗೊಳ್ಳಲಿದ್ದು, ದಸರಾ ನವರಾತ್ರಿಯ 10 ದಿನಗಳ ಕಾಲ ಮೈಸೂರಿನ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಸಚಿವರು ವಿವರಿಸಿದರು. +ನಿಗಮದ ಅಧ್ಯಕ್ಷರಾದ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, ದಸರಾ ದೀಪಾಲಂಕಾರದ ಜತೆಗೆ ಈ ಬಾರಿ ಡೋನ್‌ ಪ್ರದರ್ಶನ ನಡೆಸಲಾಗುತ್ತಿದೆ. ವಾರಣಾಸಿ, ಹರಿದ್ವಾರಗಳಲ್ಲಿ ಡೋನ್‌ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ್ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು. +ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. +ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷೀಕಾಂತ ರೆಡ್ಡಿ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, ಸೆಸ್ಕ್‌ ಹಣಕಾಸು ನಿರ್ದೇಶಕ ಶೇಖ್‌ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್‌ ಸುನೀಲ್‌ ಕುಮಾರ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಹಾಜರಿದ್ದರು. \ No newline at end of file diff --git a/eesanje/url_46_11_3.txt b/eesanje/url_46_11_3.txt new file mode 100644 index 0000000000000000000000000000000000000000..ca87b3c80395cc1fcb6dddbb7efbcc20449996b3 --- /dev/null +++ b/eesanje/url_46_11_3.txt @@ -0,0 +1,12 @@ +ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ತಯಾರಿ + +ಬೆಂಗಳೂರು,ಸೆ.24-ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲನವಿ ಸಲ್ಲಿಸುವ ತಯಾರಿ ನಡೆಸಿದ್ದಾರೆ. +ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಹಾಗೂ ಇತರರು ಸುಪ್ರೀಂಕೋರ್ಟ್‌ನಲ್ಲಿ ಈಗಾಗಲೇ ಕೇವಿಯಟ್‌ ಸಲ್ಲಿಸಿರುವುದರಿಂದ ಪ್ರಕರಣವನ್ನು ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಕಾನೂನು ಹೋರಾಟಕ್ಕೆ ತಕ್ಷಣಕ್ಕೆ ತ್ವರಿತ ಕ್ರಮಗಳನ್ನು ಅನುಸರಿಸುತ್ತಿದ್ದಾರೆ. +ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾ.ನಾಗಪ್ರಸನ್ನ ಅವರ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ವಿಭಾಗೀಯ ಪೀಠದ ಮುಂದೆ ಮೇಲನವಿ ಸಲ್ಲಿಸಲು ವಕಾಲತ್ತಿನ ಕರಡನ್ನು ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾನೂನು ತಜ್ಞರ ಜೊತೆ ಹಾಗೂ ಸಂಪುಟದ ಹಿರಿಯ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಯಲ್ಲೇ ಸುಪ್ರೀಂಕೋರ್ಟ್‌ನಲ್ಲೂ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. +ಇದೇ ಸಮಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲೂ ಸಿದ್ದರಾಮಯ್ಯನವರು ಕಾನೂನು ಹೋರಾಟ ಮುಂದುವರೆಸಬೇಕಿದೆ. ಒಂದೆಡೆ ಹೈಕೋರ್ಟ್‌ನಲ್ಲಿ ರಾಜ್ಯಪಾಲರ ಅಭಿಯೋಜನೆಯನ್ನು ಪ್ರಶ್ನಿಸಿ ವಿಭಾಗೀಯ ಪೀಠದ ಮುಂದೆ ವಾದ ಮಂಡಿಸಿದರೆ ಮತ್ತೊಂದೆಡೆ ತನಿಖೆ ಹಾಗೂ ಮುಂದಿನ ಕ್ರಮಗಳಿಗೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ವಾದ-ಪ್ರತಿವಾದಗಳನ್ನು ನಡೆಸಬೇಕಿದೆ. +ಸಿದ್ದರಾಮಯ್ಯನವರು ನಿಯಮ 482 ರ ಅಡಿ ರಿಟ್‌ ಅರ್ಜಿ ಸಲ್ಲಿಸಿರುವುದರಿಂದ ಇದು ಹೆಚ್ಚುವರಿ ಬಾಬ್ತುಗಳ ವ್ಯಾಪ್ತಿಗೆ ಒಳಪಡಲಿದ್ದು, ನೇರವಾಗಿ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುವುದಕ್ಕಿಂತ ಹೈಕೋರ್ಟ್‌ನಲ್ಲೇ ವಾದ ಮಾಡಬೇಕಾದಂತಹ ಅನಿವಾರ್ಯತೆ ಎದುರಾಗಿದೆ. +ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಹಾಗೂ ಇತರರು ನಾಳೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಹೈಕೋರ್ಟ್‌ ತೀರ್ಪನ್ನು ಪ್ರಸ್ತಾಪಿಸಿ ವಿಚಾರಣೆಗೆ ಅನುಮತಿ ಕೇಳುವ ಸಾಧ್ಯತೆಯಿದೆ. ಒಂದು ವೇಳೆ ಕೆಳಹಂತದ ನ್ಯಾಯಾಲಯ ತನಿಖೆಗೆ ಆದೇಶಿಸುವ ಅಥವಾ ಮತ್ತೊಂದು ದಿನಾಂಕವನ್ನು ನಿಗದಿಪಡಿಸುವ ಸಾಧ್ಯಾಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. +ರಾಜ್ಯಪಾಲರು ಮುಡಾ ಪ್ರಕರಣದ ಅಭಿಯೋಜನೆ ಮತ್ತು ತನಿಖೆಗೆ ಪೂರ್ವಾನುಮತಿ ನೀಡಿರುವುದನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮುಂದಿನ ಹಂತದ ವಿಚಾರಣೆ ನಡೆಯುವ ಸಾಧ್ಯತೆಯಿದೆ. ಈವರೆಗೂ ಹೈಕೋರ್ಟ್‌ನ ತಡೆಯಾಜ್ಞೆಯಿಂದಾಗಿ ಕೆಳಹಂತದ ನ್ಯಾಯಾಲಯದಲ್ಲಿನ ಪ್ರಕ್ರಿಯೆಗಳಿಗೆ ನಿರ್ಬಂಧವಿತ್ತು. +ನ್ಯಾ.ನಾಗಪ್ರಸನ್ನ ಅವರ ಪೀಠದ ತೀರ್ಪು ಎಲ್ಲಾ ನಿರ್ಬಂಧಗಳನ್ನೂ ತೆರವು ಮಾಡಿರುವುದರಿಂದ ಯಾವ ಕ್ಷಣದಲ್ಲಾದರೂ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣ ದಾಖಲಿಸಲು ಸೂಚಿಸಬಹುದಾಗಿದೆ ಅಥವಾ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿಯೂ ಪ್ರಕರಣ ದಾಖಲಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. +ಸಿದ್ದರಾಮಯ್ಯನವರಿಗೆ ಸಂಕಷ್ಟ :ಪ್ರಕರಣ ದಾಖಲಾದರೆ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಪ್ಪಿದ್ದಲ್ಲ ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ಕಾಂಗ್ರೆಸ್‌‍ ಹೈಕಮಾಂಡ್‌ ಆದಿಯಾಗಿ ಸಚಿವರು, ಶಾಸಕರೆಲ್ಲರೂ ಸಿದ್ದರಾಮಯ್ಯನವರ ಬೆನ್ನಿಗೆ ನಿಲ್ಲುವುದಾಗಿ ಹೇಳುತ್ತಿದ್ದಾರೆ.ಪ್ರಕರಣ ದಾಖಲಾದರೂ, ನ್ಯಾಯಾಲಯದ ಹೋರಾಟದಲ್ಲಿ ಹಿನ್ನಡೆಯಾದರೂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂಬ ಸಮರ್ಥನೆಗಳು ಕೇಳಿಬರುತ್ತಿವೆ. +ಆದರೆ ಬಿಜೆಪಿ ತೀರ್ಪು ಪ್ರಕಟಗೊಂಡ ತಕ್ಷಣವೇ ಪತ್ರಿಕಾಗೋಷ್ಠಿ ನಡೆಸಿ ಸಿದ್ದರಾಮಯ್ಯನವರಿಗೆ ನೈತಿಕತೆಯ ಪ್ರಶ್ನೆಯನ್ನು ಮುಂದಿಟ್ಟಿದೆ. ಇದು ಕೇವಲ ರಾಜ್ಯಕ್ಕೆ ಸೀಮಿತವಾಗಿರುವ ವಿಚಾರವಾಗಿರದೇ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್‌‍ನ ನೈತಿಕತೆಯನ್ನು ಅಣಕಿಸುವಂತೆ ಮಾಡಲಿದೆ. ಹೀಗಾಗಿ ಸಿದ್ದರಾಮಯ್ಯನವರು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕುವ ಸಾಧ್ಯತೆಯಿದೆ. \ No newline at end of file diff --git a/eesanje/url_46_11_4.txt b/eesanje/url_46_11_4.txt new file mode 100644 index 0000000000000000000000000000000000000000..885933b7948260637841434224fc0bd296d409a5 --- /dev/null +++ b/eesanje/url_46_11_4.txt @@ -0,0 +1,8 @@ +ನ್ಯಾಯಾಲಯ ತೀರ್ಪು ಗೌರವಿಸಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ : ವಿಜಯೇಂದ್ರ + : +ಬೆಂಗಳೂರು,ಸೆ.24– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. +ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್‌ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್‌ ತಿಳಿಸಿದೆ ಎಂದು ವಿಶ್ಲೇಷಿಸಿದರು. +ಹೈಕೋರ್ಟ್‌ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್‌ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು. +ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್‌‍ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡ್ದೆಿವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮಿಕೊಂಡ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್‌‍ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿವರಿಸಿದರು. ರಾಜ್ಯದ ಮೂಲೆಮೂಲೆಯಿಂದ ಲಕ್ಷ ಲಕ್ಷ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದರು. +ಗೌರವಾನ್ವಿತ ರಾಜ್ಯಪಾಲರಿಗೆ ಅನೇಕ ಆರ್ಟಿಐ ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ. ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. +ಮುಡಾ ವಿಚಾರದಲ್ಲಿ ತಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್‌ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಉತ್ತರ ನೀಡಿದರು.ಬಿಜೆಪಿ ರಾಜ್ಯ ಸಹ ಉಸ್ತುವಾರಿ ಸುಧಾಕರ್‌ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ಅವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_11_5.txt b/eesanje/url_46_11_5.txt new file mode 100644 index 0000000000000000000000000000000000000000..ca50d63b986eaed00597e3f699689bcdc68363a2 --- /dev/null +++ b/eesanje/url_46_11_5.txt @@ -0,0 +1,8 @@ +ಸಾಲುಮರದ ತಿಮಕ್ಕ ಪ್ರಶಸ್ತಿಗೆ ಭಾಜನರಾದ ಸುರೇಶ್ + +ಬೆಂಗಳೂರು, ಸೆ.24-ಸಮಾಜ ಸೇವೆಯಲ್ಲಿ ಸದಾ ತೊಡಗಿಸಿಕೊಂಡು ಬಡವರ ಪರ ಹೋರಾಟಗಳನ್ನು ಮಾಡುತ್ತಾ ಯುವಕರಿಗೆ ಪ್ರೋತ್ಸಾಹ ನೀಡುತ್ತಿರುವ ಕುರುಡುಸೋಣ್ಣೇನಹಳ್ಳಿ ಗ್ರಾಮದ ಸುರೇಶ್‌(ಸೂರಿ) ಅವರು ಸಾಲುಮರದ ತಿಮಕ್ಕ ನ್ಯಾಷನಲ್‌ ಗ್ರೆನರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. +ಸುರೇಶ್‌ ರವರು ಮೂಲತಃ ಮಹದೇವಪುರ ವಿಧಾನಸಭಾ ಕ್ಷೇತ್ರದ ಕುರುಡು ಸೊಣ್ಣೇನಹಳ್ಳಿ ಗ್ರಾಮದದವರಾಗಿದ್ದು, ಬಡಕುಟುಂಬದಿಂದ ಬೆಳೆದು ಬಂದವರು, ಬಡವರ ಕಷ್ಟಗಳ ಮಧ್ಯೆ ಬೆಳೆದಿರುವ ಇವರು ನಾವು ಪಟ್ಟಿರುವ ಕಷ್ಟಗಳು ಸುತ್ತಮುತ್ತಲಿನ ಬಡ ಜನರು ಪಡಬಾರದೆಂದು ತಮ ಕೈಲಾದ ಸಹಾಯ ಮಾಡುತ್ತಾ ಬಂದಿದ್ದಾರೆ. +ಸುಮಾರು 15 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬಂದಿರುವ ಸುರೇಶ್‌ರವರು ಸರ್ಕಾರಿ ಶಾಲೆಗಳಿಗೆ 20 ಸಾವಿರ ತಟ್ಟೆ, 20 ಸಾವಿರ ಗ್ಲಾಸ್‌‍ಗಳು, ನೋಟ್‌ಪುಸ್ತಕಗಳು ನೀಡಿದ್ದಾರೆ. ಅಲ್ಲದೆ ಬಡ ಮಕ್ಕಳ ಶಾಲಾ ಶುಲ್ಕವನ್ನೂ ಸಹ ಇವರೆ ಕಟ್ಟಿದ್ದಾರೆ. ವಿಕಲಚೇತನರಿಗೆ ಸ್ಟಿಕ್‌, ಬಡವರಿಗೆ ಬೆಡ್‌ಶೀಟ್‌ಗಳು ನೀಡಿ ಇತರರಿಗೆ ಮಾದರಿಯಾಗಿದ್ದಾರೆ. +ಐಎಎಸ್‌‍, ಐಪಿಎಸ್‌‍ ಓದುವ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ, ಸಾವಿರಾರು ಸಸಿಗಳನ್ನು ನೆಟ್ಟು, ಪೋಷಿಸಲು ಯುವಕರಿಗೆ ಕರೆ ನೀಡಿದ್ದಾರೆ, ದೇವಾಲಯಗಳ ಅಭಿವೃದ್ಧಿಗೆ ಸಹಾಯದನ ಮಾಡಿದ್ದಾರೆ, ಬಡವರಿಗೆ ಉಚಿತ ಆರೋಗ್ಯ ಶಿಬಿರ, ರಕ್ತದಾನ ಶಿಬಿರಗಳನ್ನು ಹಮಿಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. +ಪ್ರಶಸ್ತಿ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್‌, ಮಾಡಿರುವ ಸೇವೆ ಹೇಳಿಕೊಳ್ಳಬಾರದು ಅದನ್ನು ಗುರುತಿಸಿ ನಮಗೆ ಈ ಪ್ರಶಸ್ತಿ ನೀಡುತ್ತಿದ್ದಾರೆ ಇನ್ನಷ್ಟು ಹೆಚ್ಚು ಸಮಾಜ ಸೇವೆ ಮಾಡಲು ಉತ್ತೇಜನ ನೀಡಿದಂತಾಗಿದೆ ಎಂದು ಹೇಳಿದರು. +ತಮನ್ನು ಆಯ್ಕೆ ಮಾಡಿದ ಸಾಲುಮರದ ತಿಮಕ್ಕ ಇಂಟರ್‌ನ್ಯಾಷನಲ್‌ ೌಂಡೇಶನ್‌, ಸಾಲುಮರದ ತಿಮಕ್ಕ ಅಭಿನಂದನಾ ಸಮಿತಿಗೆ ಧನ್ಯವಾದ ತಿಳಿಸಿದ್ದಾರೆ.ಇದೇ ಸೆ.26 ರಂದು ನಗರದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. \ No newline at end of file diff --git a/eesanje/url_46_11_6.txt b/eesanje/url_46_11_6.txt new file mode 100644 index 0000000000000000000000000000000000000000..3662584670884f7ef6ba0b899edefdef221269ca --- /dev/null +++ b/eesanje/url_46_11_6.txt @@ -0,0 +1,9 @@ +ಮಹಾಲಕ್ಷ್ಮಿ ಹಂತಕನ ಚಾಣಾಕ್ಷತನ ಕಂಡು ಬೆಸ್ತು ಬಿದ್ದ ಪೊಲೀಸರು +' ' +ಬೆಂಗಳೂರು, ಸೆ.24– ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿರುವ ವಯ್ಯಾಲಿ ಕಾವಲ್ನ ಮಹಾಲಕ್ಷ್ಮಿ ಕೊಲೆಯ ಹಂತಕ ಚಾಣಾಕ್ಷತನದಿಂದ ಕೃತ್ಯವೆಸಗಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. +ಒಂಟಿ ಮಹಿಳೆ ಮಹಾಲಕ್ಷ್ಮಿಯನ್ನು ಮಚ್ಚಿನಿಂದ ಭೀಕರವಾಗಿ ಕೊಂದು ನಂತರ ತುಂಡು-ತುಂಡುಗಳನ್ನಾಗಿ ಕತ್ತರಿಸಿ, ಆಕ್ಸಲ್ ಬ್ಲೇಡ್ನಿಂದ ಕೊಯ್ದು ವಾಸನೆ ಬರದಂತೆ ಅವುಗಳಿಗೆ ರಾಸಾಯನಿಕ ಸಿಂಪಡಿಸಿ ಫ್ರಿಡ್ಜ್ ನಲ್ಲಿ ತರಕಾರಿ ಜೋಡಿಸುವಂತೆ ಜೋಡಿಸಿದ್ದಾನೆ. +ಮನೆಯೊಳಗೆ ಮಹಾಲಕ್ಷ್ಮಿ ಕೊಲೆ ಮಾಡಿದ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಕಾಣದಂತೆ ಆರೋಪಿಯು ಯಾವುದೋ ರಾಸಾಯನಿಕ ಸಿಂಪಡಿಸಿ, ಸ್ವಚ್ಚಪಡಿಸಿ ಮನೆಗೆ ಬೀಗ ಹಾಕಿಕೊಂಡು ಚಾಣಾಕ್ಷತನದಿಂದ ಜಾಗ ಖಾಲಿಮಾಡಿದ್ದಾನೆ. +ಒಂದು ವೇಳೆ ಈ ಮನೆಯೊಳಗೆ ಯಾರಾದರೂ ಬಂದರೆ ಕೊಲೆಯಾಗಿರುವುದು ಗೊತ್ತಾಗಬಾರದೆಂದು ಬಹಳ ಎಚ್ಚರಿಕೆಯಿಂದ ಆರೋಪಿಯು ಮೊದಲೇ ಮಾಡಿಕೊಂಡಿದ್ದ ಸಂಚಿನಂತೆ ತನ್ನ ಕೃತ್ಯವನ್ನು ಮಾಡಿಮುಗಿಸಿದ್ದಾನೆ. ಈ ಕೊಲೆ ಬೆಳಕಿಗೆ ಬಂದರೆ ಪೊಲೀಸರು ತನ್ನ ಜನ ಜಾಲಾಡುತ್ತಾರೆ ಎಂಬುದನ್ನು ಅರಿತು ಆರೋಪಿ ತನ್ನ ಊರಿಗೆಹೋಗದೆ ಈಶಾನ್ಯ ರಾಜ್ಯಗಳಲ್ಲಿ ತಲೆಮರೆಸಿಕೊಂಡು ಓಡಾಡುತ್ತಿದ್ದಾನೆ. ಅಲ್ಲದೆ ತನ್ನ ಮೊಬೈಲ್ ಸಹ ಸ್ವಿಚ್ಆಫ್ ಮಾಡಿಕೊಂಡಿದ್ದಾನೆ. +ಪೊಲೀಸರು ಮಹಾಲಕ್ಷ್ಮಿಯ ಮೊಬೈಲ್ನ್ನು ವಶಕ್ಕೆ ಪಡೆದು ಅದರಲ್ಲಿರುವಕರೆಗಳನ್ನು ಆಧರಿಸಿ, ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿ ಹಂತಕನ ಪತ್ತೆಗೆಬಲೆಬೀಸಿದ್ದಾರೆ. +ಹಂತಕ ಮಹಾಲಕ್ಷ್ಮಿಯನ್ನು ಕೊಲೆ ಮಾಡಿದ ಬಳಿಕ ಎರಡು-ಮೂರು ದಿನಗಳ ಕಾಲ ಆಕೆಯ ಮನೆಯಲ್ಲೇ ಉಳಿದುಕೊಂಡು ಎಲ್ಲಾ ಸಾಕ್ಷಗಳನ್ನು ಬಹಳ ಚಾಣಾಕ್ಷತನದಿಂದ ನಾಶಪಡಿಸಿ, ಇನ್ನೇನ್ನಾದರೂ ಕುರುಹುಗಳು ಪೊಲೀಸರಿಗೆ ಸಿಗುತ್ತದೆಯೇ ಎಂಬುದನ್ನು ಮನೆಯನೆಲ್ಲಾ ಪರಿಶೀಲಿಸಿದ ನಂತರ ಸ್ಥಳದಿಂದ ಜಾಗ ಖಾಲಿಮಾಡಿದ್ದಾನೆ. +ಒಟ್ಟಾರೆ ಒಂಟಿ ಮಹಿಳೆ ಮಹಾಲಕ್ಷ್ಮಿ ಕೊಲೆ ಪ್ರಕರಣ ನಗರ ಪೊಲೀಸರಿಗೆ ಒಂದು ಸವಾಲಾಗಿದ್ದು, ಹಂತಕ ಎಷ್ಟೇ ಚಾಣಾಕ್ಷತನದ ಬುದ್ಧಿ ತೋರಿಸಿದರೂ ಪೊಲೀಸರು ಅತೀ ಶೀಘ್ರದಲ್ಲೇ ಒಂದಲ್ಲಾ ಒಂದುದಿನ ಆತನ ಎಡೆಮುರಿ ಕಟ್ಟುವುದಂತೂ ಸತ್ಯ. \ No newline at end of file diff --git a/eesanje/url_46_11_7.txt b/eesanje/url_46_11_7.txt new file mode 100644 index 0000000000000000000000000000000000000000..21c2c63f4c00bf6c1b2cfc0d00088494fe667167 --- /dev/null +++ b/eesanje/url_46_11_7.txt @@ -0,0 +1,5 @@ +ಹೈಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ : ಸ್ನೇಹಮಯಿ ಕೃಷ್ಣ + : +ಬೆಂಗಳೂರು,ಸೆ.24-ಹೈಕೋರ್ಟ್ನ ತೀರ್ಪು ಸತ್ಯಕ್ಕೆ ಸಂದ ಜಯ ಎಂದು ಸಾಮಾಜಿಕ ಹೋರಾಟಗಾರ ಹಾಗೂ ಮುಡಾ ಪ್ರಕರಣದ ಅರ್ಜಿದಾರ ಸ್ನೇಹಮಯಿ ಕೃಷ್ಣ ಹೇಳಿದ್ದಾರೆ.ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಮ ಹೋರಾಟಕ್ಕೆ ಸಿಕ್ಕ ಜಯ. +ರಾಜಕಾರಣಿಗಳು ತಮ ಅಧಿಕಾರವನ್ನ ದುರುಪಯೋಗಪಡಿಸಿಕೊಂಡು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆಗೆ ತಕ್ಕ ಪಾಠವಾಗಿದೆ ಎಂದರು.ರಾಜ್ಯಪಾಲರ ಹುದ್ದೆ ಹಾಗೂ ಅವರ ವಿವೇಚನಾಧಿಕಾರಿಗಳ ಬಗ್ಗೆಯೂ ಚರ್ಚೆಯಾಗಿತ್ತು. +ಹೈಕೋರ್ಟ್ನ ತೀರ್ಪು ಎಲ್ಲದಕ್ಕೂ ತೆರೆ ಎಳೆದಿದೆ. ಮುಂದಿನ ದಿನಗಳಲ್ಲೂ ನಾವು ಕಾನೂನಾತಕ ಹೋರಾಟಗಳನ್ನು ಮುಂದುವರೆಸುತ್ತೇವೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_11_8.txt b/eesanje/url_46_11_8.txt new file mode 100644 index 0000000000000000000000000000000000000000..4212f55dadaaa3bf55274f6b7235485ea01b9811 --- /dev/null +++ b/eesanje/url_46_11_8.txt @@ -0,0 +1,11 @@ +ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪಿನ ಕುರಿತು ಅರ್ಜಿದಾರ ಟಿ.ಜೆ.ಅಬ್ರಹಾಂ ಮೊದಲ ಪ್ರತಿಕ್ರಿಯೆ + . ' +ಬೆಂಗಳೂರು,ಸೆ.24-ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸಿರುವ ಅರ್ಜಿದಾರರಾದ ಟಿ.ಜೆ.ಅಬ್ರಹಾಂ ಸುಪ್ರೀಂಕೋರ್ಟ್‌ನಲ್ಲೂ ಕೇವಿಯಟ್‌ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.ತೀರ್ಪು ಪ್ರಕಟಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ನಮ ವಾದಕ್ಕೆ ಮತ್ತು ಆಕ್ಷೇಪಣೆಗಳಿಗೆ ಮನ್ನಣೆ ನೀಡಿದೆ. ರಾಜ್ಯಪಾಲರ ಪೂರ್ವಾನುಮತಿ ಸರಿಯಿಲ್ಲ ಎಂದು ವಾದ ಮಾಡುವುದು ಅವರ ಹಕ್ಕಾಗಿತ್ತು. ಆದರೆ ಹೈಕೋರ್ಟ್‌ ಅದನ್ನು ಮಾನ್ಯ ಮಾಡಿಲ್ಲ ಎಂದರು. +ತೀರ್ಪು ಸ್ವಾಗತಾರ್ಹ. ಇದನ್ನು ಪ್ರಶ್ನಿಸಿ ಮೇಲನವಿ ಸಲ್ಲಿಸುವ ಎಲ್ಲಾ ಹಕ್ಕುಗಳೂ ಅರ್ಜಿದಾರರಿಗಿವೆ. ಈಗಾಗಲೇ ನಾವು ಸುಪ್ರೀಂಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಿದ್ದೇವೆ. ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆಯೂ ಕೇವಿಯಟ್‌ ಸಲ್ಲಿಸುತ್ತೇವೆ ಎಂದು ಹೇಳಿದರು. +ಮುಡಾ ಪ್ರಕರಣದ ವಿಚಾರಣೆಗೆ ಯಾವುದೇ ಅಡೆತಡೆ ಇರಲಿಲ್ಲ. ಹೈಕೋರ್ಟ್‌ ವಿಚಾರಣೆಯಿಂದಾಗಿ ಒಂದಿಷ್ಟು ಕಾಲ ಮುಂದೂಡಿಕೆಯಾಗಿತ್ತು. ಈಗ ತೀರ್ಪಿನಿಂದಾಗಿ ಎಲ್ಲವೂ ಇತ್ಯರ್ಥವಾಗಿದೆ ಎಂದರು.ತೀರ್ಪಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಟಿ.ಜೆ.ಅಬ್ರಹಾಂ, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನಾನು ಸಲ್ಲಿಸಿದ್ದ ದೂರಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ನೀಡಿರುವ ಅನುಮೋದನೆ ಕಾನೂನಾತಕವಾಗಿ ಸರಿಯಿದೆ ಎಂದು ಪ್ರತಿಪಾದಿಸಿದ್ದರು. +ಅಭಿಯೋಜನೆಗೆ ಅನುಮತಿ ನೀಡಿರುವುದು ತಪ್ಪು ಎಂದು ಮುಖ್ಯಮಂತ್ರಿಯವರ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಯಾರ ಅರ್ಜಿಗೆ ಅನುಮತಿ ನೀಡಿರುವುದು ತಪ್ಪು ಎಂಬ ಪ್ರಶ್ನೆ ಕಾಡುತ್ತಿದೆ. ನಾನು ನಿಯಮ 154 ರ ಅಡಿ ಅನುಮತಿಗಾಗಿ ನೀಡಿದ್ದ ಅರ್ಜಿಯ ಜೊತೆ ಸಲ್ಲಿಸಬೇಕಾದ ದಾಖಲೆಗಳನ್ನು ಲಗತ್ತಿಸಿದ್ದೇನೆ. 154 (3) ಅಡಿ ಅಗತ್ಯ ದಾಖಲೆಗಳನ್ನು ಒದಗಿಸಲಾಗಿದೆ. ಇದನ್ನು ಆಧರಿಸಿ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿದ್ದರು. +ಮುಖ್ಯಮಂತ್ರಿಯವರಿಂದ ಉತ್ತರ ಪಡೆದು ಅದನ್ನು ಪರಿಶೀಲಿಸಿ ನಂತರ ಆದೇಶ ನೀಡಿದ್ದಾರೆ. ಹೀಗಾಗಿ ನನಗೆ ನೀಡಿರುವ ಅನುಮತಿ ತಪ್ಪು ಎಂದು ಹೇಳಲಾಗುವುದಿಲ್ಲ ಎಂದು ಹೇಳಿದರು.2004 ರಲ್ಲಿ ಸಿದ್ದರಾಮಯ್ಯ ಅವರ ಬಾಮೈದ ಜಮೀನು ಖರೀದಿ ಮಾಡಿದ್ದಾರೆ. 2010 ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ದಾನಪತ್ರ ಮಾಡಲಾಗಿದೆ. 2014 ರಲ್ಲಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. +2001 ರಲ್ಲೇ ಸದರಿ ಜಮೀನಿನಲ್ಲಿ ಲೇಔಟ್‌ ಸಿದ್ಧಪಡಿಸಿ, ಪಾರ್ಕ್‌ ಮಾಡಿ, ನಿವೇಶನಗಳನ್ನು ಹಂಚಿದ್ದಾರೆ ಎಂದು ಪಾರ್ವತಿಯವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಹಾಗಿದ್ದ ಮೇಲೆ 2004 ರಲ್ಲಿ ಖರೀದಿಸಿದಾಗ ಅಲ್ಲಿ ಕೃಷಿಭೂಮಿ ಇರಲು ಹೇಗೆ ಸಾಧ್ಯ?, 2001 ರಲ್ಲಿ ನಿವೇಶನ ಹಂಚಿಕೆ ಮಾಡಿದ್ದ ಭೂಮಿಗೆ 2014 ರಲ್ಲಿ ಪರಿಹಾರ ಕೇಳಲು ಅವಕಾಶ ಇದೆಯೇ? ಎಂದು ಪ್ರಶ್ನಿಸಿದರು. +ವಾದಗಳು ಏನೇ ಇರಲಿ, ಅವರು ಹೇಳುವ ಮಾತುಗಳು, ಆರೋಪಗಳನ್ನು ಬದಿಗಿಟ್ಟರೂ ಪಾರ್ವತಿಯವರ ಪತ್ರದಲ್ಲೇ ಸತ್ಯಾಂಶ ಇದೆ. ಸಿದ್ದರಾಮಯ್ಯ ಅವರ ಪ್ರಭಾವ ಬಳಸಿ ಭೂಪರಿವರ್ತನೆ ಮಾಡಿಸಲಾಗಿದೆ ಎಂದು ಹೇಳಲಾಗಿದೆ. 2001 ರಲ್ಲಿ ನಿವೇಶನ ಹಂಚಿಕೆ ಮಾಡಿದ್ದರೆ 2005 ರಲ್ಲಿ ಭೂಪರಿವರ್ತನೆಗೆ ಹೇಗೆ ಅನುಮತಿ ಕೊಡಲು ಸಾಧ್ಯವಿದೆಯೇ ಎಂದು ವಿವರಿಸಿದರು. +ಅಭಿವೃದ್ಧಿಯಾಗಿರುವ ಜಮೀನು ಖಾಲಿ ಇತ್ತು ಎಂದು ಖರೀದಿ ಮಾಡಲು ಸಾಧ್ಯವೇ?, ಭೂಪರಿಹಾರಕ್ಕಾಗಿ 2021 ರಲ್ಲಿ ಪತ್ರ ಬರೆಯಲಾಗಿದೆ. 1998-99 ರಲ್ಲಿ ಮುಡಾ ಭೂಸ್ವಾಧೀನ ಮಾಡಿಕೊಂಡು ಭೂಮಿಯನ್ನು ತಮದು ಎಂದು ಪ್ರತಿಪಾದಿಸುತ್ತಿರುವ ಸಿದ್ದರಾಮಯ್ಯ ಅವರ ಕುಟುಂಬ 2014 ರಲ್ಲಿ ನೀಡಿರುವ ಅರ್ಜಿಯಲ್ಲಿ ಮುಡಾ ಅಕ್ರಮವಾಗಿ ನಿವೇಶನ ಮಾಡಿ ಮಾರಾಟ ಮಾಡಿದೆ ಎಂದು ಹೇಳುತ್ತಾರೆ. +ಒಂದು ವೇಳೆ ಅದು ನಿಜವೇ ಆಗಿದ್ದರೆ ಅಷ್ಟು ಸುದೀರ್ಘ ಅವಧಿಯಲ್ಲಿ ಯಾರು, ಯಾವುದೇ ತಕರಾರನ್ನು ಏಕೆ ಎತ್ತಿಲ್ಲ?, 2020 ರವರೆಗೂ ಭೂಮಿ ತಮದು ಎಂದು ಯಾರೂ ಹಕ್ಕು ಪ್ರತಿಪಾದಿಸಿಲ್ಲ. ಹೀಗಿದ್ದ ಮೇಲೆ ಜಮೀನು ಯಾರಿಗೆ ಸೇರಿದ್ದು? ಎಂದು ಪ್ರಶ್ನಿಸಿದರು.ದೇವನೂರು ಬಡಾವಣೆಯಲ್ಲಿ ನಿವೇಶನ ಅಭಿವೃದ್ಧಿಯಾಗಿದೆ, ಹಂಚಿಕೆಯೂ ಆಗಿದೆ. ಎಲ್ಲವನ್ನೂ ಮೌನವಾಗಿ ನೋಡಿಕೊಂಡಿದ್ದಾರೆ. ಅನಂತರ 20 ವರ್ಷಗಳ ಬಳಿಕ ತಕರಾರು ತೆಗೆದಿದ್ದಾರೆ. 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ 55 ಕೋಟಿ ರೂ.ಗಳ ನಷ್ಟವಾಗಿದೆ. ನಿವೇಶನ ವಾಪಸ್‌‍ ಕೊಡುವವರೆಗೂ ತಾವು ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_11_9.txt b/eesanje/url_46_11_9.txt new file mode 100644 index 0000000000000000000000000000000000000000..97374b86f3c7fa8a233d1b2620fc3dad5da3998b --- /dev/null +++ b/eesanje/url_46_11_9.txt @@ -0,0 +1,6 @@ +ಸಿಎಂ ವಿರುದ್ದದ ಪ್ರಾಸಿಕ್ಯೂಷನ್‌ ತೀರ್ಪು : ರಾಜ್ಯಾದ್ಯಂತ ಪೊಲೀಸರು ಅಲರ್ಟ್‌ + : +ಬೆಂಗಳೂರು, ಸೆ.24-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರವಾಗಿ ಇಂದು ಹೈಕೋಟ್‌ನಲ್ಲಿ ತೀರ್ಪು ಬರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಪೊಲೀಸರು ಅಲರ್ಟ್‌ ಆಗಿರುವಂತೆ ರಾಜ್ಯದ ಪೊಲೀಸ್‌‍ ಮಹಾನಿರ್ದೇಶಕರಾದ ಅಲೋಕ್‌ ಮೋಹನ್‌ ಅವರು ಸೂಚಿಸಿದ್ದಾರೆ. +ಮುಖ್ಯವಾಗಿ ಸಿಎಂ ನಿವಾಸ, ಕಛೇರಿ ಹಾಗೂ ಕಾವೇರಿ ಬಳಿ ಎರಡು ಕೆಎಸ್‌‍ಆರ್‌ಪಿ ತುಕಡಿ ಹಾಗೂ ಬಿಎಂಟಿಸಿ ಬಸ್‌‍ ನಿಯೋಜಿಸಲಾಗಿದ್ದು, ಪೊಲೀಸ್‌‍ ಸರ್ಪಗಾವಲು ಹಾಕಲಾಗಿದೆ.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು, ಮೈಸೂರುನಗರ ಸೇರಿದಂತೆ ಎಲ್ಲಾ ನಗರಗಳ ಆಯುಕ್ತರುಗಳು, ಜಿಲ್ಲೆಗಳ ಎಸ್‌‍ಪಿ ಹಾಗೂ ಹಿರಿಯ ಅಧಿಕಾರಿಗಳು ಬಂದೋಬಸ್ತ್‌ನಲ್ಲಿರುವಂತೆ ಅವರು ಸೂಚಿಸಿದ್ದಾರೆ. +ಒಂದು ವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ, ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆಯ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಬಂದೋಬಸ್ತ್‌ನಲ್ಲಿರುವಂತೆ ಡಿಜಿಪಿ ಅವರು ತಿಳಿಸಿದ್ದಾರೆ. +ಬೆಂಗಳೂರಿನ ಪೂರ್ವ, ಪಶ್ಚಿಮ, ಉತ್ತರ, ಆಗ್ನೇಯ, ಈಶಾನ್ಯ ಸೇರಿದಂತೆ ವೈಟ್‌ಫೀಲ್ಡ್ ವಿಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಎಲ್ಲೆಡೆ ಹೊಯ್ಸಳ ವಾಹನ ಗಸ್ತು ಹೆಚ್ಚಿಸುವಂತೆ ಹಾಗೂ ಎಎಸ್‌‍ಐ ಸೇರಿದಂತೆ ಎಲ್ಲಾ ಪೊಲೀಸ್‌‍ ಸಿಬ್ಬಂದಿ ರೌಂಡ್‌್ಸನಲ್ಲಿರುವಂತೆ ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಆದೇಶಿಸಿದ್ದಾರೆ. \ No newline at end of file diff --git a/eesanje/url_46_120_1.txt b/eesanje/url_46_120_1.txt new file mode 100644 index 0000000000000000000000000000000000000000..eadca3dd6d286407700e5a7ebebe43e4cd06bae4 --- /dev/null +++ b/eesanje/url_46_120_1.txt @@ -0,0 +1,6 @@ +ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..? +ಬೆಂಗಳೂರು, ಜೂ.6-ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸೋಲು ಹಿನ್ನೆಲೆಯಲ್ಲಿ ಎನ್‌.ಚಲುವರಾಯಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. +ಈ ಬಗ್ಗೆ ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ತಮ್ಮ ರಾಜೀನಾಮೆ ಕುರಿತು ಸಚಿವ ಎನ್‌.ಚಲುವರಾಯಸ್ವಾಮಿ ಪ್ರಸ್ತಾಪಿಸಿರುವ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. +ಸ್ಟಾರ್‌ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸು ಬರಲ್ಲ. ಟೇಬಲ್‌ ಕುಟ್ಟಲು ಆಗಲ್ಲ, ಸಂಪುಟದಲ್ಲಿ ತಲೆ ಎತ್ತಿ ಮಾತಾಡಲು ಆಗಲ್ಲ. ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಶಾಸಕನಾಗಿ ಕೆಲಸ ಮಾಡಬೇಕು. ಈ ಚುಣಾವಣೆಯಲ್ಲಿ ಸೋತರೆ ಅಳಲ್ಲ, ಯಾರ ಕೈಗೂ ಸಿಗುವುದಿಲ್ಲ. ಎರಡು ತಿಂಗಳು ಎಲ್ಲಾದರೂ ಹೊರಗಡೆ ಪ್ರವಾಸಕ್ಕೆ ಹೋಗುತ್ತೇನೆ. +ಮೊಬೈಲ್‌ನ ಹಳೇ ಸಿಮ್‌ ಕಿತ್ತೆಸೆದು ಹೊಸ ಸಿಮ್‌ ಹಾಕಿಕೊಳ್ತೇನೆ. ರಾಜಕೀಯ ನಿವೃತ್ತಿ ಘೋಷಣೆ ಮಾಡಿ, ನೆಮ್ಮದಿಯಾಗಿ ಇರ್ತೀನಿ ಎಂದು ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಚಲುವರಾಯಸ್ವಾಮಿ ಭಾಷಣ ಮಾಡಿದ್ದರು. +ಸದ್ಯ ಈಗ ಮಂಡ್ಯದಲ್ಲಿ ಹೆಚ್ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಜೆಡಿಎಸ್‌ ಕಾರ್ಯಕರ್ತರು ಸಚಿವ ಚೆಲುವರಾಯಸ್ವಾಮಿ ಅವರ ಭಾಷಣದ ವಿಡಿಯೋ ವೈರಲ್‌ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ಬಗ್ಗೆ ಚರ್ಚೆ ಜೋರಾಗಿದೆ. \ No newline at end of file diff --git a/eesanje/url_46_120_10.txt b/eesanje/url_46_120_10.txt new file mode 100644 index 0000000000000000000000000000000000000000..48c5efdadc7aa6bf1e8e5b1fc932fb9fad5e9563 --- /dev/null +++ b/eesanje/url_46_120_10.txt @@ -0,0 +1,12 @@ +ಉತ್ತರಾಖಂಡ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕನ್ನಡಿಗರೂ ಸೇರಿದಂತೆ 22 ಮಂದಿಯಲ್ಲಿ 5 ಮಂದಿ ಸಾವು +ಬೆಂಗಳೂರು,ಜೂ.5-ಹಿಮಾಲಯ ತಪ್ಪಲಿನ ಉತ್ತರಕಾಶಿ ಹಾಗೂ ತೆಹರಿ ಜಿಲ್ಲೆಯ ಗಡಿಭಾಗದಲ್ಲಿ ಟ್ರೆಕ್ಕಿಂಗ್‌ನಲ್ಲಿ ಭಾಗಿಯಾಗಿದ್ದ ಕರ್ನಾಟಕದ 18 ಮಂದಿ ಸೇರಿ, 22 ಜನ ಮಳೆ, ಮಂಜು ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರಲ್ಲಿ 5 ಮಂದಿ ಮೃತಪಟ್ಟಿದ್ದಾರೆ. +ಈ ಘಟನೆ ನಿನ್ನೆ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ರಾಜ್ಯಸರ್ಕಾರ ಧಾವಿಸಿದೆ. ಸಚಿವ ಕೃಷ್ಣಭೈರೇಗೌಡ ಉತ್ತರಾಖಂಡ್‌ಗೆ ತೆರಳಿ ಪರಿಹಾರ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. +ನಿನ್ನೆ ರಾತ್ರಿಯಿಂದ ನಡೆದ ಪ್ರಯತ್ನಗಳ ಪರಿಣಾಮ ಇಂದು ಬೆಳಿಗ್ಗೆ ವಾಯುಸೇನೆಯ ಎರಡು ಹೆಲಿಕಾಪ್ಟರ್‌ಗಳು ಹುಡುಕಾಟ ನಡೆಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರಿಂದಾಗಿ ಕರ್ನಾಟಕದ ಹಲವಾರು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಕರೆತರಲಾಗಿದೆ.ಯಶಸ್ವಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸೌಮ್ಯ ವಿವೇಕ್‌ (37), ವಿನಯ್‌ ಕೃಷ್ಣಮೂರ್ತಿ (47), ಶಿವಜ್ಯೋತಿ, ಸುಧಾಕರ್‌, ಬಿ.ಎನ್‌.ನಾಯ್ಡು (64), ಸತಿ ಗುರುರಾಜ್‌ (40), ಸೀನಾ (48) ಸೇರಿದಂತೆ ಹಲವರನ್ನು ರಕ್ಷಿಸಲಾಗಿದೆ. +ಕರ್ನಾಟಕದ ಸುಜಾತ (52), ಪದಿನಿ ಹೆಗಡೆ (35), ಚೈತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (55), ಅನಿತಾ (61), ಆಶಾ ಸುಧಾಕರ್‌ (72), ಪದನಾಭ್‌ ಕೆಪಿಎಸ್‌‍ (50), ವಿನಾಯಕ್‌ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. +ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶಿ ಮಹೇಶ್‌ ಈ ಸಂಜೆಯೊಂದಿಗೆ ಮಾತನಾಡಿ, ಬೆಂಗಳೂರಿನ 22 ಮಂದಿ ಚಾರಣಕ್ಕೆ ತೆರಳಿದ್ದು, ನಿನ್ನೆ ಮಧ್ಯಾಹ್ನ ಹವಾಮಾನ ವೈಪರೀತ್ಯದಿಂದ ತೊಂದರೆಗೆ ಸಿಲುಕಿದ್ದಾರೆ. ನಿನ್ನೆ ಸಂಜೆಯಿಂದ ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ರಕ್ಷಣಾ ಕಾರ್ಯಕ್ಕೆ ಪ್ರಯತ್ನ ಮಾಡಿದ್ದಾರೆ. +ಸಂಜೆ ಹಾಗೂ ರಾತ್ರಿ ವೇಳೆ ತೀವ್ರ ಹಿಮಪಾತ ಹಾಗೂ ಪ್ರತಿಕೂಲ ಹವಾಮಾನದಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿತ್ತು. ಇಂದು ಬೆಳಿಗ್ಗೆ ವಾಯುಸೇನೆಯ ಹೆಲಿಕಾಪ್ಟರ್‌ ಬಳಕೆ ಮಾಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಐದು ಮಂದಿ ಮೃತಪಟ್ಟಿರುವ ಮಾಹಿತಿ ಬಂದಿದೆ. ಉಳಿದವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿಸಿದರು. +ಅಪಾಯಕಾರಿ ಚಾರಣ :ಮನೇರಿಯಾದ ಹಿಮಾಲಯ ವೀವ್‌ ಟ್ರೆಕ್ಕಿಂಗ್‌ ಸಂಸ್ಥೆ ಆಯೋಜಿಸಿದ್ದ ಟ್ರೆಕ್ಕಿಂಗ್‌ನಲ್ಲಿ ಒಟ್ಟು 22 ಮಂದಿ ಭಾಗವಹಿಸಿದ್ದರು. ಅವರಲ್ಲಿ ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಹಾಗೂ ಮೂರು ಜನ ಸ್ಥಳೀಯರು ಭಾಗವಹಿಸಿದ್ದರು ಎಂದು ಉತ್ತರಕಾಶಿಯ ಜಿಲ್ಲಾಧಿಕಾರಿ ಮೆಹರ್ಬಾನ್‌ ಸಿಂಗ್‌ ಬಿಶತ್‌ ತಿಳಿಸಿದ್ದಾರೆ. +ಮೇ 29 ರಿಂದ ಉತ್ತರಕಾಶಿಯಿಂದ ಆರಂಭಗೊಂಡಿದ್ದ ಟ್ರೆಕ್ಕಿಂಗ್‌ 35 ಕಿ.ಮೀ. ದೀರ್ಘ ಪ್ರಯಾಣವಾಗಿದ್ದು, ಮಲ್ಲಾ-ಸಿಲ್ಲಾ-ಖುಷ್ಕಲ್ಯಾಣ್‌ ಸಹಸ್ತ್ರತಲ್‌ ಮಾರ್ಗವಾಗಿ ಮುಂದುವರೆದು ಜೂನ್‌ 7 ರಂದು ಅವರು ಮರಳಿ ಬರಬೇಕಿತ್ತು. ಆದರೆ ಹವಾಮಾನ ವೈಪರೀತ್ಯ, ಭಾರಿ ಮಳೆ, ಮಂಜು ಕವಿದ ವಾತಾವರಣದಿಂದಾಗಿ ಚಾರಣಿಗರು ಸಹಸ್ತ್ರತಲ್‌ನ ಆಲ್ಫೆನ್‌ಲೇಕ್‌ನ ಹಾದಿಯಲ್ಲಿ ದಿಕ್ಕು ತಪ್ಪಿದ್ದಾರೆ. +ವಿಷಯ ತಿಳಿದ ಜಿಲ್ಲಾಡಳಿತ ಕೂಡಲೇ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದು, ವಾಯುಸೇನೆಯ 2 ಚೇತಕ್‌ ಹೆಲಿಕಾಪ್ಟರ್‌ಗಳನ್ನು ಬಳಕೆ ಮಾಡಿಕೊಂಡು ಹುಡುಕಾಟ ಆರಂಭಿಸಲಾಯಿತು ಎಂದು ಉತ್ತರಖಂಡ್‌ನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ರಂಜಿತ್‌ ಸಿನ್ಹಾ ತಿಳಿಸಿದ್ದಾರೆ. +ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಎಸ್‌‍ಡಿಆರ್‌ಎಫ್‌ ದಳ, ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ.ಎಸ್ಪಿ ಅರ್ಪಣ್‌ ಯದುವಂಶಿ ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ಡೆಹ್ರಾಡೂನ್‌ನಲ್ಲಿ ವಿಚಕ್ಷಣಾ ದಳಗಳನ್ನು ಸಜ್ಜುಗೊಳಿಸಲಾಗಿದೆ. ಉತ್ತರಕಾಶಿಯ ಜಿಲ್ಲಾಸ್ಪತ್ರೆ ಹಾಗೂ ಬಟವಾಡಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಪರಿಸ್ಥಿತಿ ನಿಭಾಯಿಸಲು ಸಿದ್ಧಗೊಳಿಸಲಾಗಿದ್ದು, 14 ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. +ಸಹಸ್ತ್ರತಲ್‌ 7 ಸರೋವರಗಳ ಸಮೂಹವಾಗಿದ್ದು, ಆಳವಾದ ಕಂದಕಗಳನ್ನು ಹೊಂದಿದೆ. ಪಾಂಡವರು ಈ ಸ್ಥಳದಿಂದ ಸ್ವರ್ಗಕ್ಕೆ ಹೋದರು ಎಂಬ ಪೌರಾಣಿಕ ಐತಿಹ್ಯವಿದೆ. ಸುಮಾರು 14,500 ಅಡಿಗೂ ಹೆಚ್ಚಿನ ಏರಿಳಿತಗಳ ಈ ಚಾರಣಕ್ಕೆ ಇದು ಸೂಕ್ತ ಸಮಯ ಅಲ್ಲ ಎಂದು ಹೇಳಲಾಗುತ್ತಿದೆ.ಅದರ ಹೊರತಾಗಿಯೂ ಖಾಸಗಿ ಸಂಸ್ಥೆ ಚಾರಣ ಆಯೋಜಿಸಿದ್ದು ಪ್ರಶ್ನಾರ್ಹವಾಗಿದೆ. \ No newline at end of file diff --git a/eesanje/url_46_120_11.txt b/eesanje/url_46_120_11.txt new file mode 100644 index 0000000000000000000000000000000000000000..7d52caa799a2684756589262a061227a8fd823ac --- /dev/null +++ b/eesanje/url_46_120_11.txt @@ -0,0 +1,5 @@ +ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಎಚ್‌.ಡಿ.ಕುಮಾರಸ್ವಾಮಿ +ಬೆಂಗಳೂರು,ಜೂ.5-ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿದರು.ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿತ್ತು. +ಇಂದು ಸಂಜೆ ನವದೆಹಲಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣಾ ಫಲಿತಾಂಶ, ಕೇಂದ್ರ ಸರ್ಕಾರ ರಚನೆಯ ರೂಪುರೇಷೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್‌‍, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ. ರಾಜ್ಯದಲ್ಲಿ ಜೆಡಿಎಸ್‌‍ 2 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. +ಇಂದು ಮಧ್ಯಾಹ್ನ ದೆಹಲಿ ತಲುಪಲಿರುವ ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್‌ ಶಾರನ್ನು ಭೇಟಿ ಮಾಡಿ ಲೋಕಸಭಾ ಚುನಾವಣಾ ಫಲಿತಾಂಶ, ಪ್ರಚಲಿತ ರಾಜಕೀಯ ವಿದ್ಯಮಾನ, ಎನ್‌ಡಿಎ ಸರ್ಕಾರ ರಚನೆ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಎಚ್‌.ಡಿ.ಕೆ. ಗೆ ಸಚಿವ ಸ್ಥಾನ ? :ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಬಹುಮತದಿಂದ ಗೆದ್ದಿರುವ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ಅಚಲ ವಿಶ್ವಾಸವನ್ನು ಜೆಡಿಎಸ್‌‍ ಮುಖಂಡರು, ನಾಯಕರು ಹೊಂದಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸುತ್ತಿದ್ದಂತೆ ಜೆಡಿಎಸ್‌‍ ಪಾಳಯದಲ್ಲಿ ಸಚಿವ ಸ್ಥಾನದ ಆಶೆ ಚಿಗುರೊಡೆದಿದೆ.ಕುಮಾರಸ್ವಾಮಿ ಸಚಿವರಾಗುವುದು ಬಹುತೇಕ ಖಚಿತ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_120_12.txt b/eesanje/url_46_120_12.txt new file mode 100644 index 0000000000000000000000000000000000000000..94298fda2e24daabffed602d6d50569decfcb7a0 --- /dev/null +++ b/eesanje/url_46_120_12.txt @@ -0,0 +1,5 @@ +ಸೆಲ್ಫೀ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್‌ ಆತ್ಮಹತ್ಯೆ +ಮೈಸೂರು, ಜೂ. 5-ಮಾಡದ ತಪ್ಪಿಗೆ ನನ್ನನ್ನು ಹೊಣೆ ಮಾಡಿದ್ದಾರೆಂದು ಮನನೊಂದು ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಂಜನಗೂಡು ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಂಜೇಶ್‌ ಆತ್ಮಹತ್ಯೆ ಮಾಡಿಕೊಂಡ ಸೆಕ್ಯೂರಿಟಿ ಗಾರ್ಡ್‌. +ನಂಜನಗೂಡಿನ ಕಲ್ಮಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚೆಗೆ ಫ್ಯಾಕ್ಟರಿಯಲ್ಲಿ ಕಳ್ಳತನವಾಗಿದ್ದು, ಈ ಆರೋಪವನ್ನು ನಂಜೇಶ್‌ ಮೇಲೆ ಹೊರಿಸಲಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ಫ್ಯಾಕ್ಟರಿ ಆವರಣದಲ್ಲೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. +ಆತ್ಮಹತ್ಯೆಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕ್ಷಮಿಸುವಂತೆ ಮನವಿ ಮಾಡಿದ್ದಾರೆ. ತಾನು ಮಾಡದ ತಪ್ಪಿಗೆ ಕೆಲವರು ನನ್ನನ್ನ ಹೊಣೆ ಮಾಡಿದ್ದಾರೆ. ಆದರೆ ನಂಜೇಶ್‌ ಸಹೋದರ ನೀಡಿರುವ ದೂರು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸರಿಯಾದ ಕೆಲಸ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನೀಡಿರುವ ಹೇಳಿಕೆ ಅನುಮಾನಕ್ಕೆ ಕಾರಣವಾಗುತ್ತಿದೆ. +ನಂಜೇಶ್‌ ಮೇಲೆ ಹೇರಿದ ಒತ್ತಡವಾದರೂ ಏನು ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ.ದೂರು ದಾಖಲಿಸಿಕೊಂಡಿರುವ ನಂಜನಗೂಡು ಟೌನ್‌ ಪೊಲೀಸರು ತನಿಖೆ ನಡೆಸಬೇಕಿದೆ. \ No newline at end of file diff --git a/eesanje/url_46_120_2.txt b/eesanje/url_46_120_2.txt new file mode 100644 index 0000000000000000000000000000000000000000..2cb6df521c0758fa4f35a4b17efc0dc50f7837fc --- /dev/null +++ b/eesanje/url_46_120_2.txt @@ -0,0 +1,6 @@ +ಕುಮಾರಸ್ವಾಮಿ ಅವರಿಂದ ತೆರವಾಗುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕಾಗಿ ದೋಸ್ತಿಗಳ ನಡುವೆ ಪೈಪೋಟಿ ಶುರು..? +ಬೆಂಗಳೂರು, ಜೂ.6-ಚನ್ನಪಟ್ಟಣದ ಹಾಲಿ ಶಾಸಕರಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್‌ ಈ ಕ್ಷೇತ್ರಕ್ಕಾಗಿ ತೀವ್ರ ಪೈಪೋಟಿ ನಡೆಸುವ ಸಾಧ್ಯತೆ ಇದೆ. +ಕುಮಾರಸ್ವಾಮಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರ ರಾಜೀನಾಮೆಯಿಂದ ತೆರವಾಗಲಿರುವ ಸ್ಥಾನಕ್ಕೆ ಆರು ತಿಂಗಳ ಒಳಗೆ ವಿಧಾನಸಭೆ ಉಪಚುನಾವಣೆ ನಡೆಯಲಿದೆ. ಒಕ್ಕಲಿಗ ಭದ್ರಕೋಟೆಯಲ್ಲಿ ಮೇಲುಗೈ ಸಾಧಿಸಲು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ದೇವೇಗೌಡರ ಕುಟುಂಬ ಮತ್ತೊಮ್ಮೆ ಸಿದ್ಧತೆ ನಡೆಸಿದೆ. +ಶಿವಕುಮಾರ್‌ ಅವರ ಕಿರಿಯ ಸಹೋದರ ಡಿಕೆ ಸುರೇಶ್‌ ಬೆಂಗಳೂರು ಗ್ರಾಮಾಂತರ ಲೋಕಸಬಾ ಕ್ಷೇತ್ರದಲ್ಲಿ ಸೋತ ನಂತರ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ರಾಮನಗರ ಜಿಲ್ಲೆಯ ರಾಜಕೀಯ ವಲಯಗಳಲ್ಲಿ ಈಗಾಗಲೇ ಚರ್ಚೆಗಳು ಪ್ರಾರಂಭವಾಗಿವೆ. ಮಂಡ್ಯದಿಂದ ಗೆದ್ದಿರುವ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಚನ್ನಪಟ್ಟಣದಿಂದ ಹಾಲಿ ಶಾಸಕರಾಗಿದ್ದಾರೆ. ಇನ್ನು ಆರು ತಿಂಗಳೊಳಗೆ ಚನ್ನಪಟ್ಟಣಕ್ಕೆ ಉಪಚುನಾವಣೆ ನಡೆಯಲಿದೆ. +ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸುತ್ತಾರೋ ಅಥವಾ ಮೈತ್ರಿಕೂಟದ ಪಾಲುದಾರ ಬಿಜೆಪಿಗೆ ಕ್ಷೇತ್ರವನ್ನು ತ್ಯಾಗ ಮಾಡುತ್ತಾರೋ ಕಾದು ನೋಡಬೇಕಿದೆ. 2023ರ ಚುನಾವಣೆಯಲ್ಲಿ ರಾಮನಗರದಲ್ಲಿ ನಿಖಿಲ್‌ ಸೋತಿದ್ದರು.ಬಿಜೆಪಿಯಿಂದ ಮಾಜಿ ಶಾಸಕ ಹಾಗೂ ಎಂಎಲ್ಸಿ ಸಿ.ಪಿ.ಯೋಗೇಶ್ವರ್‌ ಆಕಾಂಕ್ಷಿಯಾಗಿದ್ದಾರೆ. +ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 80 ಸಾವಿರ ಮತಗಳನ್ನು ಗಳಿಸಿದ ಕಾಂಗ್ರೆಸ್‌ ಮತ್ತಷ್ಟು ಬಲಗೊಳ್ಳುವ ಸಾಧ್ಯತೆಯಿದೆ. ಕ್ಷೇತ್ರದಲ್ಲಿ ಅಸಾಧಾರಣ ನಾಯಕರಿಲ್ಲದಿದ್ದರೂ, ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಾಧನೆ ಅದ್ಭುತವಾಗಿದೆ. ಉಪಚುನಾವಣೆಯಲ್ಲಿ ನಾವು 20,000ಕ್ಕೂ ಹೆಚ್ಚು ಮತಗಳನ್ನು ಗಳಿಸಬಹುದು ಮತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರವನ್ನು ಖಂಡಿತವಾಗಿಯೂ ವಶಪಡಿಸಿಕೊಳ್ಳಲಿದೆ ಎಂಬ ವಿಶ್ವಾಸ ಕಮಲ ಪಕ್ಷದ ನಾಯಕರಲ್ಲಿದೆ. \ No newline at end of file diff --git a/eesanje/url_46_120_3.txt b/eesanje/url_46_120_3.txt new file mode 100644 index 0000000000000000000000000000000000000000..0e8e0c5f1f7ae434461b7fb951c920038a0276b8 --- /dev/null +++ b/eesanje/url_46_120_3.txt @@ -0,0 +1,7 @@ +3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳ ಮತ ಎಣಿಕೆ ಆರಂಭ, ಸಂಜೆ ವೇಳೆಗೆ ಫಲಿತಾಂಶ +ಬೆಂಗಳೂರು,ಜೂ.6-ರಾಜ್ಯದ ವಿಧಾನಪರಿಷತ್‌ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭಗೊಂಡಿದ್ದು, ಸಂಜೆ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳಿವೆ.ಜೂನ್‌ 3 ರಂದು ಈ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮತಪತ್ರ ಬಳಕೆ ಮಾಡಿದ್ದು, ಪ್ರಾಶಸ್ತ್ಯದ ಮತಗಳನ್ನು ಎಣಿಕೆ ಮಾಡಬೇಕಾಗಿರುವುದರಿಂದ ಫಲಿತಾಂಶ ವಿಳಂಬವಾಗಲಿದೆ. +ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ನ ಆರು, ಬಿಜೆಪಿಯ ನಾಲ್ಕು, ಜೆಡಿಎಸ್‌‍ನ ಇಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.ಇಂದು ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಮಹಾರಾಣಿ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರಗಳ ಬೆಂಗಳೂರು ಸರ್ಕಾರಿ ಕಲಾ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಬೆಂಗಳೂರು ಪದವೀಧರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಹಾಗೂ ಗುಲ್ಬರ್ಗ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಆರಂಭಗೊಂಡಿದೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ, ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ, ಪಕ್ಷೇತರ ಅಭ್ಯರ್ಥಿಗಳಾದ ಎಂ.ಪುಟ್ಟಸ್ವಾಮಿ, ನೀಲಕಂಠ ಆರ್‌.ಗೌಡ ಸೇರಿದಂತೆ 15 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಅಭ್ಯರ್ಥಿ ಬಿ.ಟಿ.ಶ್ರೀನಿವಾಸ ಸೇರಿದಂತೆ 15 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. +ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಬೋಜೇಗೌಡ, ಕಾಂಗ್ರೆಸ್‌‍ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್‌ ಕುಮಾರ್‌ ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಮರಿತಿಬ್ಬೇಗೌಡ, ಜೆಡಿಎಸ್‌‍ ಅಭ್ಯರ್ಥಿ ಕೆ.ವಿವೇಕಾನಂದ, ಕನ್ನಡ ಚಳವಳಿ ಪಕ್ಷದ ವಾಟಾಳ್‌ ನಾಗರಾಜ್‌ ಸೇರಿದಂತೆ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. +ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಆಯನೂರು ಮಂಜುನಾಥ್‌, ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ, ಪಕ್ಷೇತರ ಅಭ್ಯರ್ಥಿ ರಘುಪತಿಭಟ್‌ ಸೇರಿದಂತೆ 10 ಮಂದಿ ಸ್ಪರ್ಧಿಸಿದ್ದರು.ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಡಾ.ಚಂದ್ರಶೇಖರ್‌ ಬಸವರಾಜ್‌ ಪಾಟೀಲ್‌, ಬಿಜೆಪಿ ಅಭ್ಯರ್ಥಿ ಅಮರ್‌ನಾಥ್‌ ಪಾಟೀಲ್‌ ಸೇರಿದಂತೆ 19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. +ಪ್ರತಿ ಕ್ಷೇತ್ರಕ್ಕೂ 14 ಟೇಬಲ್‌ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್‌ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರು ನಿಯೋಜನೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ. \ No newline at end of file diff --git a/eesanje/url_46_120_4.txt b/eesanje/url_46_120_4.txt new file mode 100644 index 0000000000000000000000000000000000000000..1446069842bc03b0b3a547ab35fed3f3813718b1 --- /dev/null +++ b/eesanje/url_46_120_4.txt @@ -0,0 +1,14 @@ +ಕರ್ನಾಟಕದಲ್ಲಿ ಬಿಜೆಪಿ 25 ರಿಂದ 17 ಸ್ಥಾನಗಳಿಗೆ ಕುಸಿದಿದ್ದೇಕೆ..? ಕಾರಣಗಳೇನು..? +ಬೆಂಗಳೂರು, ಜೂ.6– ಕಳೆದ ಬಾರಿ ರಾಜ್ಯದಲ್ಲಿ 25 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಈ ಬಾರಿ ಕೇವಲ 17 ಸ್ಥಾನಗಳನ್ನಷ್ಟೇ ಗೆಲ್ಲಲು ಸಾಧ್ಯವಾಗಿದೆ. ಚಿಕ್ಕೋಡಿ, ಕಲಬುರಗಿ, ಬಳ್ಳಾರಿ, ರಾಯಚೂರು, ಬೀದರ್‌, ಕೊಪ್ಪಳ, ದಾವಣಗೆರೆ, ಚಾಮರಾಜನಗರ, ಕೊಪ್ಪಳ, ಬಳ್ಳಾರಿ ಕ್ಷೇತ್ರಗಳನ್ನು ಪಕ್ಷ ಕಳೆದುಕೊಂಡಿದೆ. +ಟಿಕೆಟ್‌ ನೀಡುವಾಗಲೇ ತಲೆದೋರಿದ್ದ ಅಸಮಾಧಾನ, ಗೊಂದಲ ಸರಿಪಡಿಸಿಕೊಳ್ಳುವಲ್ಲಿ ಎಡವಿದ ಪರಿಣಾಮ ಗೆಲ್ಲುವ ಅವಕಾಶ ಕಳೆದುಕೊಂಡಿದೆ ಎಂಬ ವಿಶ್ಲೇಷಣೆ ನಡೆಯುತ್ತಿದೆ.ಮಧ್ಯ ಕರ್ನಾಟಕದ ಬಿಜೆಪಿ ಭದ್ರಕೋಟೆಯಾಗಿದ್ದ ದಾವಣಗೆರೆ ಕ್ಷೇತ್ರವನ್ನು ಕಳೆದುಕೊಳ್ಳಲು ಅಭ್ಯರ್ಥಿಗೆ ಎದುರಾದ ವಿರೋಧವೇ ಕಾರಣವಾಗಿದೆ. ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ್‌ ಮತ್ತು ಅವರ ಕುಟುಂಬಕ್ಕೆ ಟಿಕೆಟ್‌ ನೀಡದಂತೆ ಹಾಲಿ ಮಾಜಿ ಶಾಸಕರು, ಜಿಲ್ಲೆಯ ಹಿರಿಯ ನಾಯಕ ಎಸ್‌.ಎ.ರವೀಂದ್ರನಾಥ್‌, ಎಂ.ಪಿ.ರೇಣುಕಾಚಾರ್ಯ, ಬಿ.ಪಿ.ಹರೀಶ್‌, ಮಾಡಾಳ್‌ ವಿರೂಪಾಕ್ಷಪ್ಪ ಕುಟುಂಬ ಸೇರಿ ಅನೇಕರು ರಾಜ್ಯ ಬಿಜೆಪಿಗೆ ಮನವಿ ಮಾಡಿದ್ದರು. +ಈ ನಿಟ್ಟಿನಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನೂ ಭೇಟಿ ಮಾಡಿ ಒತ್ತಡ ಹೇರಿದ್ದರು. ಆದರೂ, ಸಿದ್ದೇಶ್ವರ್‌ ಅವರ ಪತ್ನಿಗೆ ಟಿಕೆಟ್‌ ನೀಡಲಾಯಿತು. ಇದನ್ನು ಬಹಿರಂಗವಾಗಿಯೇ ರೇಣುಕಾಚಾರ್ಯ ಅಂಡ್‌ ಟೀಂ ವಿರೋಧಿಸಿತು. ಪ್ರಚಾರ ಮಾಡದಿರುವ ನಿರ್ಧಾರ ಪ್ರಕಟಿಸಿತು. ೞಸಿದ್ದೇಶ್ವರ್‌ ಹಠಾವೋ, ದಾವಣಗೆರೆ ಬಚಾವೋ ಅಭಿಯಾನ ಸಹ ನಡೆಸಲಾಯಿತು. ಬಳಿಕ ಖುದ್ದು ಯಡಿಯೂರಪ್ಪ ಹೋಗಿ ಸಂಧಾನ ಮಾಡಿದರಾದರೂ, ಅಭ್ಯರ್ಥಿಗೆ ಜಿಲ್ಲಾ ನಾಯಕರಿಂದ ಸರಿಯಾದ ಸಾಥ್‌ ಸಿಗದೆ ಹಿನ್ನಡೆ ಅನುಭವಿಸಿದಂತಾಗಿದೆ. +ಬೀದರ್‌ ಕ್ಷೇತ್ರದ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧವೂ ಪಕ್ಷದಲ್ಲಿ ಸಾಕಷ್ಟು ವಿರೋಧ ಎದುರಾಗಿತ್ತು. ಟಿಕೆಟ್‌ ನೀಡದಂತೆ ಪಕ್ಷದ ನಾಯಕರು ಆಗ್ರಹಿಸಿದ್ದರು. ಅವರು ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದರು. +ಪಕ್ಷದ ವೇದಿಕೆಯಲ್ಲಿಯೇ ಖೂಬಾ ವಿರುದ್ಧ ನೇರ ಮಾಜಿ ಸಚಿವ, ಔರಾದ್‌ ಶಾಸಕ ಪ್ರಭು ಚವ್ಹಾಣ್‌ ವಾಗ್ದಾಳಿ ನಡೆಸಿದ್ದರು. ಬಸವಕಲ್ಯಾಣ ಶಾಸಕ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ, ಖೂಬಾ ಅವರಿಗೆ ಟಿಕೆಟ್‌ ನೀಡುವುದನ್ನು ವಿರೋಧಿಸಿದ್ದರು. ಇತರ ಮಾಜಿ ಶಾಸಕರು, ಜಿಲ್ಲಾ ನಾಯಕರು ಇದನ್ನೇ ಹೇಳಿದ್ದರು. ಆದರೂ ಅಸಮಾಧಾನಿತರನ್ನು ವಿಶ್ವಾಸಕ್ಕೆ ಪಡೆಯದೆ ಖೂಬಾ ಅವರಿಗೆ ಟಿಕೆಟ್‌ ನೀಡಲಾಯಿತು. ಚವ್ಹಾಣ್‌, ಸಲಗಾರ ಸೇರಿ ಅಸಮಾಧಾನಿತರು ದೂರ ಉಳಿದ ಪರಿಣಾಮ ಖೂಬಾ ಅವರಿಗೆ ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ. +ಕೊಪ್ಪಳ ಕ್ಷೇತ್ರದಲ್ಲಿಯೂ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ನೀಡದಂತೆ ವಿರೋಧ ವ್ಯಕ್ತವಾಗಿತ್ತು. ಸ್ಥಳೀಯ ನಾಯಕರ ಬೇಡಿಕೆ ಪರಿಗಣಿಸದ ರಾಜ್ಯ ನಾಯಕರು ಹೊಸ ಮುಖಕ್ಕೆ ಮಣೆ ಹಾಕಿ ಡಾ.ಬಸವರಾಜ್‌ ಕ್ಯಾವಟೂರ್‌ ಅವರಿಗೆ ಟಿಕೆಟ್‌ ನೀಡಿದರು. ಇದರಿಂದ ಕರಡಿ ಸಂಗಣ್ಣ ಅಸಮಾಧಾನಗೊಂಡರು. ಇವರನ್ನು ಮನವೊಲಿಕೆ ಮಾಡಿ ಪಕ್ಷದಲ್ಲಿ ಉಳಿಸಿಕೊಳ್ಳುವಲ್ಲಿ ಬಿಜೆಪಿ ನಾಯಕರು ವಿಫಲರಾದರು. ಕೇವಲ ಎನ್‌.ರವಿಕುಮಾರ್‌ ಮಾತ್ರ ಮನವೊಲಿಕೆ ಕಸರತ್ತು ನಡೆಸಿದರು. ಕೊನೆಗೆ ಕರಡಿ ಸಂಗಣ್ಣ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದರು. ಇದರ ಪರಿಣಾಮ ಫಲಿತಾಂಶದ ಮೇಲೆ ಬೀರಿರುವುದು ಸತ್ಯ. +ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಉಮೇಶ್‌ ಜಾಧವ್‌ ಬಗ್ಗೆ ಯಾವುದೇ ವಿರೋಧ ಇರದೇ ಇರಲಿಲ್ಲ. ಆದರೆ, ಪಕ್ಷದ ಪ್ರಮುಖ ನಾಯಕರು ಕಾಂಗ್ರೆಸ್‌ ಸೇರಿದ್ದರಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ಈ ಹಿಂದಿನ ಚುನಾವಣೆ ಸಮಯದಲ್ಲಿ ಪ್ರಭಾವಿ ನಾಯಕರಾದ ಬಾಬುರಾವ್‌ ಚಿಂಚನಸೂರ್‌, ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿ ಸೇರಿದ್ದರು. ಆದರೆ, ಈ ಚುನಾವಣೆಯ ಸಮಯದಲ್ಲಿ ಇಬ್ಬರೂ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆ ಆಗಿದ್ದರು. 2019ರಲ್ಲಿ ಬಿಜೆಪಿ ನಡೆಸಿದ್ದ ತಂತ್ರವನ್ನೇ ಕಾಂಗ್ರೆಸ್‌ ಅನುಸರಿಸಿ ಪ್ರಭಾವಿಗಳನ್ನು ಸೆಳೆಯಿತು. ಪಕ್ಷ ತೊರೆಯುವ ನಾಯಕರನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ನಾಯಕರು ವಿಫಲರಾಗಿದ್ದರು. ಇದು ಸಹಜವಾಗಿಯೇ ಪೆಟ್ಟು ಕೊಟ್ಟಿದೆ. +ಚಿಕ್ಕೋಡಿ ಕ್ಷೇತ್ರದಲ್ಲೂ ಹಾಲಿ ಸಂಸದ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದ್ದು, ರಮೇಶ್‌ ಕತ್ತಿ ಅಸಮಾಧಾನಕ್ಕೆ ಕಾರಣವಾಗಿತ್ತು. ಟಿಕೆಟ್‌ ಆಕಾಂಕ್ಷಿಯಾಗಿದ್ದ ಅವರ ಜೊತೆ ಸರಿಯಾಗಿ ಮಾತುಕತೆ ನಡೆಸಿ ವಿಶ್ವಾಸಕ್ಕೆ ಪಡೆಯಲು ಪಕ್ಷದ ನಾಯಕರು ಮುಂದಾಗಲಿಲ್ಲ. ಹೀಗಾಗಿ ರಮೇಶ್‌ ಕತ್ತಿ ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಲಿಲ್ಲ. ಇದು ಪಕ್ಷದ ಹಿನ್ನಡೆಗೆ ಕಾರಣವಾಗಿದೆ ಎನ್ನಲಾಗಿದೆ. +ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗೆ ಮಾಜಿ ಸಂಸದ ಬಿ.ವಿ.ನಾಯಕ್‌ ಪಟ್ಟು ಹಿಡಿದಿದ್ದರು. ಅವರ ಅಭಿಮಾನಿಗಳು ಡೀಸೆಲ್‌ ಸುರಿದುಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದರು. ಇದಾದ ಬಳಿಕವೂ ಹಾಲಿ ಸಂಸದರಾಗಿದ್ದ ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಟಿಕೆಟ್‌ ನೀಡಲಾಯಿತು. +ಒಂದೆಡೆ ಬಂಡಾಯದ ಬಿಸಿ ತಣಿಸಲು ಬಿಜೆಪಿ ನಾಯಕರು ಸೋತರೆ, ಅಭ್ಯರ್ಥಿ ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವ ಆರೋಪ ಕೇಳಿಬಂದಿತು. ರಾಯಚೂರು ನಗರದಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಹಾಲಿ ಸಂಸದರ ವಿರುದ್ಧ ಪ್ರತಿಭಟನೆ ನಡೆಸಿ, ೞಗೋಬ್ಯಾಕ್‌ ಅಮರೇಶ್ವರ ನಾಯಕ್‌ ಎನ್ನುವ ಘೋಷಣೆ ಕೂಗಿದರು. +ಈ ಟಿಕೆಟ್‌ ಫೈಟ್‌ ಅನ್ನು ನಿರ್ವಹಿಸಲು ನಾಯಕರು ಸರಿಯಾಗಿ ನಿರ್ವಹಿಸಿದ ಕಾರಣ ಬಿಜೆಪಿ ಬೆಲೆ ತೆರುವಂತೆ ಮಾಡಿದೆ.ಬಳ್ಳಾರಿ ಕ್ಷೇತ್ರದಲ್ಲಿ ಟಿಕೆಟ್‌ ಸಂಬಂಧ ಮೊಳಕಾಲ್ಮೂರು ಮಾಜಿ ಶಾಸಕ ಎಸ್‌.ತಿಪ್ಪೇಸ್ವಾಮಿ ಅತೃಪ್ತಿ ಹೊಂದಿದ್ದರು. ಅಧಿ ಕೃತ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ತೊಡೆ ತಟ್ಟಿದ್ದರು. +ಅವರ ಮನವೊಲಿಕೆ ಮಾಡುವಲ್ಲೂ ಬಿಜೆಪಿ ನಾಯಕರು ವಿಫಲರಾದರು. ಅಲ್ಲದೇ, ಶ್ರೀರಾಮುಲು ಅತಿಯಾದ ಆತ್ಮವಿಶ್ವಾಸದಲ್ಲಿ ಬಂಡಾಯ ಕಡೆಗಣಿಸಿದರು. ಜೊತೆಗೆ ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ದರಿಂದಾಗಿ ಅನುಕೂಲವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದರೆ, ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೂ ಕ್ಷೇತ್ರ ಗೆಲ್ಲಲಾಗಿಲ್ಲ. ರೆಡ್ಡಿ ಫ್ಯಾಕ್ಟರ್‌ ಬಳ್ಳಾರಿ ಹಾಗೂ ಕೊಪ್ಪಳ ಎರಡೂ ಕಡೆಯೂ ಕೆಲಸ ಮಾಡಿಲ್ಲ. +ಚಾಮರಾಜನಗರ ಕ್ಷೇತ್ರದಲ್ಲಿ ಹಾಲಿ ಸಂಸದ ಶ್ರೀನಿವಾಸಪ್ರಸಾದ್‌ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿನ್ನೆಲೆಯಲ್ಲಿ ಹೊಸಬರಿಗೆ ಬಿಜೆಪಿ ನಾಯಕರು ಹುಡುಕಾಟ ನಡೆಸಿದ್ದರು. ಶ್ರೀನಿವಾಸಪ್ರಸಾದ್‌ ಅಳಿಯ ಆಕಾಂಕ್ಷಿಯಾಗಿದ್ದರೂ ಅವರಿಗೆ ಟಿಕೆಟ್‌ ನೀಡಲಿಲ್ಲ. ಕಾಂಗ್ರೆಸ್‌?ನಲ್ಲಿ ವಿಧಾನಸಭೆ ಟಿಕೆಟ್‌ ಸಿಗದೆ ಬಿಜೆಪಿ ಸೇರಿದ್ದ ಬಾಲರಾಜ್‌ ಅವರಿಗೆ ಮಣೆ ಹಾಕಲಾಯಿತು. ಇದರಿಂದ ಸ್ವಪಕ್ಷೀಯರಲ್ಲಿ ಉಂಟಾದ ಅಸಮಾಧಾನ ಕಡೆಗಣಿಸಿದ್ದಕ್ಕೆ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. \ No newline at end of file diff --git a/eesanje/url_46_120_5.txt b/eesanje/url_46_120_5.txt new file mode 100644 index 0000000000000000000000000000000000000000..2e87eaacc97e3c0a659d27d3246fb62c0cad692d --- /dev/null +++ b/eesanje/url_46_120_5.txt @@ -0,0 +1,7 @@ +ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶದ ಹಿಂದಿರುವ ಜಾತಿ ಮತ ಲೆಕ್ಕಾಚಾರ +ಬೆಂಗಳೂರು, ಜೂ.6-ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ 19 ಸ್ಥಾನ ಗೆದ್ದರೆ, ಕಾಂಗ್ರೆಸ್‌ 9 ಸ್ಥಾನದಲ್ಲಿ ಗೆದ್ದಿದೆ. ಮೈತ್ರಿ ಪಕ್ಷಗಳ ಹಾಗೂ ಕಾಂಗ್ರೆಸ್‌ ಗೆಲುವು ಸೋಲಿನ ಹಿಂದೆ ಜಾತಿ ಮತ ಸಮೀಕರಣದ ಲೆಕ್ಕಾಚಾರ ಇದೆ. +ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ ಕ್ಷೇತ್ರಗಳು ಬಹುವಾಗಿ ಜೆಡಿಎಸ್‌ ಹಾಗೂ ಬಿಜೆಪಿ ತೆಕ್ಕೆಗೆ ಬಿದ್ದಿವೆ. ಈ ಮೈತ್ರಿ ಒಕ್ಕಲಿಗರ ಮತ ಸಮೀಕರಣಕ್ಕೆ ಪ್ರಮುಖ ಕಾರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಳೆ ಮೈಸೂರಲ್ಲಿ ಮೇಲುಗೈ ಸಾಧಿಸಿತ್ತು. ಅಂದು ಕಾಂಗ್ರೆಸ್‌ ಒಕ್ಕಲಿಗ ಸಮುದಾಯದ ಮತಗಳನ್ನು ತಮ್ಮತ್ತ ಸೆಳೆದಿತ್ತು. ಆದರೆ, ವಿಧಾನಸಭೆ ಚುನಾವಣೆ ವರ್ಷದ ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಜೆಡಿಎಸ್‌ ಹಾಗೂ ಬಿಜೆಪಿ ಕಡೆ ವಾಲಿವೆ. +ಒಕ್ಕಲಿಗರ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಹಳೆ ಮೈಸೂರು, ದಕ್ಷಿಣ ಕರ್ನಾಟಕದಲ್ಲಿ ಒಕ್ಕಲಿಗರ ಮತಗಳು ಬಿಜೆಪಿ ಹಾಗೂ ಜೆಡಿಎಸ್‌ಗೆ ಕ್ರೋಢೀಕರಣವಾಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಚಿಕ್ಕಬಳ್ಳಾಪುರದಲ್ಲಿ ಶೇ.53.74, ಮಂಡ್ಯದಲ್ಲಿ ಶೇ.58.34, ಮೈಸೂರಿನಲ್ಲಿ ಶೇ.53.59, ಕೋಲಾರದಲ್ಲಿ ಶೇ.51.02, ಬೆಂಗಳೂರು ಗ್ರಾಮಾಂತರದಲ್ಲಿ ಶೇ.56.21, ತುಮಕೂರಿನಲ್ಲಿ ಶೇ.55.31ರಷ್ಟು ಮತ ಪಾಲು ದೋಸ್ತಿ ಅಭ್ಯರ್ಥಿಗಳು ಗಿಟ್ಟಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಕ್ಕಲಿಗರು ಭದ್ರಕೋಟೆಯನ್ನು ಜೆಡಿಎಸ್‌ ಮರಳಿ ಪಡೆದಿದೆ. +ಲಿಂಗಾಯತ, ಮರಾಠ ಮತಗಳು:ಅಲ್ಲದೇ, ಲಿಂಗಾಯತ ಮತಗಳೂ ಬಹುವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ವಾಲಿವೆ. ಮಧ್ಯ ಕರ್ನಾಟಕದಲ್ಲಿ ಬಹುತೇಕ ಲಿಂಗಾಯತ ಸಮುದಾಯ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳಿಗೆ ಕ್ರೋಢೀಕರಣವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ಮತಗಳು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ವಾಲಿತ್ತು. ಆದರೆ, ಲೋಕಸಮರದಲ್ಲಿ ಲಿಂಗಾಯತ ಸಮುದಾಯ ಬಿಜೆಪಿ ಮತ್ತು ಅದರ ದೋಸ್ತಿ ಪಕ್ಷದ ಅಭ್ಯರ್ಥಿಗೆ ಕ್ರೋಢೀಕರಣವಾಗಿರುವುದು ಕಂಡು ಬರುತ್ತದೆ. ಹೀಗಾಗಿ ಮಧ್ಯ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ದೋಸ್ತಿ ಅಭ್ಯರ್ಥಿಗಳು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. +ಉತ್ತರ ಕರ್ನಾಟಕದ ಬಹುತೇಕ ಕ್ಷೇತ್ರಗಳಲ್ಲಿ ಲಿಂಗಾಯತ ಹಾಗೂ ಮರಾಠ ಸಮುದಾಯದ ಮತಗಳು ಮರಳಿ ಬಿಜೆಪಿ ಕಡೆಗೆ ದೊಡ್ಡ ಪ್ರಮಾಣದಲ್ಲಿ ವಾಲಿವೆ. ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ, ಚಿತ್ರದುರ್ಗದಲ್ಲಿ ಲಿಂಗಾಯತ ಸಮುದಾಯದ ಮತಗಳು ಬಿಜೆಪಿ ಕೈ ಹಿಡಿದಿರುವುದು ಕಾಣುತ್ತದೆ. ಬಹುತೇಕ ಕಡೆ ಲಕ್ಷಕ್ಕೂ ಅಧಿ ಕ ಮತಗಳ ಅಂತರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. +ಕಾಂಗ್ರೆಸ್‌ನತ್ತ ಅಹಿಂದ ಮತಗಳು:ರಾಜ್ಯದಲ್ಲಿ ಅಲ್ಪಸಂಖ್ಯಾತರ ಮತಗಳು ಈ ಲೋಕ ಸಮರದಲ್ಲಿ ಕಾಂಗ್ರೆಸ್‌ನತ್ತ ಸಂಪೂರ್ಣವಾಗಿ ಕ್ರೋಢೀಕರಣವಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ, ದಲಿತ) ಮತಗಳು ಕಾಂಗ್ರೆಸ್‌ಗೆ ವಾಲಿವೆ. ಕಲ್ಯಾಣ ಕರ್ನಾಟಕದಲ್ಲಿನ ಕುರುಬ ಮತಗಳು, ದಲಿತ ಸಮುದಾಯದ ಮತಗಳು ಗಣನೀಯ ಪ್ರಮಾಣದಲ್ಲಿ ಕಾಂಗ್ರೆಸ್‌ ಬುಟ್ಟಿಗೆ ಸೇರಿವೆ. ಹೀಗಾಗಿ ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಬಹುತೇಕ ಅಹಿಂದ ಮತಗಳಿಂದ. \ No newline at end of file diff --git a/eesanje/url_46_120_6.txt b/eesanje/url_46_120_6.txt new file mode 100644 index 0000000000000000000000000000000000000000..dc6288ad7f53fb8be977318c908ff5eefeb480b2 --- /dev/null +++ b/eesanje/url_46_120_6.txt @@ -0,0 +1,6 @@ +ಸಾಲ ಕೊಟ್ಟ ಮಹಿಳೆಯನ್ನು ಕೊಂದು ತೋಟದಲ್ಲಿ ಹೂತುಹಾಕಿ ಪರಾರಿ +ಕನಕಪುರ, ಜೂ.6-ಸಾಲ ವಾಪಸ್‌‍ ಕೊಡುವುದಾಗಿ ಕರೆಸಿಕೊಂಡು ಮಹಿಳೆಯೊಬ್ಬರನ್ನು ಕೊಲೆ ಮಾಡಿ ರೇಷ್ಮೆ ತೋಟದಲ್ಲಿ ಹೂತುಹಾಕಿ ಆರೋಪಿಗಳು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯ ಚೌಕಸಂದ್ರ ಗ್ರಾಮದಲ್ಲಿ ಜರುಗಿದೆ. ಟಿ.ಗೊಲ್ಲಹಳ್ಳಿ ಗ್ರಾಮದ ವಾಸಿ ಸುನಂದಮ್ಮ(65) ಕೊಲೆಯಾದ ನತದೃಷ್ಟೆಯಾಗಿದ್ದಾರೆ. +ಇವರ ಸಮೀಪದ ಸಂಬಂಧಿಗಳು ಎನ್ನಲಾದ ತಾಲೂಕಿನ ಶ್ರೀನಿವಾಸನಹಳ್ಳಿ ಗ್ರಾಮದ ರವಿಕುಮಾರ್‌ ಆತನ ಪತ್ನಿ ಆಶಾ ಎಂಬುವವರಿಂದ ಈ ಹತ್ಯೆಯಾಗಿದೆ ಎಂದು ಗ್ರಾಮಾಂತರ ಪೊಲೀಸ್‌‍ ಠಾಣೆಗೆ ದೂರು ನೀಡಲಾಗಿದೆ. ಮೂಲತಃ ಶ್ರೀನಿವಾಸನಹಳ್ಳಿ ಗ್ರಾಮದ ದಂಪತಿಗಳು ಚೌಕಸಂದ್ರ ತಾಂಡ್ಯ ಸಮೀಪದ ವೆಂಕಟೇಶ್‌ನಾಯ್ಕ ಎಂಬುವವರ ರೇಷೆ ತೋಟವನ್ನು ಗುತ್ತಿಗೆ ಪಡೆದಿದ್ದರು. ಕಳೆದ ಐದು ತಿಂಗಳಿನಿಂದ ಇದೇ ತೋಟದ ಮನೆಯಲ್ಲಿ ರವಿಕುಮಾರ್‌ ಮತ್ತವರ ಪತ್ನಿ ವಾಸವಾಗಿದ್ದರು. +ಸುನಂದಮ ಅವರಿಂದ 20 ಸಾವಿರ ಸಾಲ ಪಡೆದಿದ್ದರು. ಪಡೆದ ಸಾಲವನ್ನು ವರ್ಷಗಳಿಂದ ವಾಪಸ್ಸು ನೀಡಿರಲಿಲ್ಲ. ಈ ಸಂಬಂಧ ಸಾಲ ಮರುಪಾವತಿಸುವಂತೆ ಕೇಳಲಾಗಿತ್ತು. ಆರೋಪಿ ರವಿಕುಮಾರ್‌ ಸುನಂದಮನಿಗೆ ಫೋನ್ ಮಾಡಿ ನಿಮ ಸಾಲದ ಹಣವನ್ನು ವಾಪಸ್‌‍ ನೀಡುವುದಾಗಿ ಹೇಳಿ ಕೋಡಿಹಳ್ಳಿಗೆ ಕರೆಸಿಕೊಂಡು ನಂತರ ತೋಟದ ಮನೆಯಲ್ಲಿ ನೀಡುವುದಾಗಿ ಕರೆದುಕೊಂಡು ಹೋಗಿ ಸಂಜೆ ಕೊಲೆ ಮಾಡಿ ರೇಷ್ಮೆ ತೋಟದಲ್ಲಿ ಗುಂಡಿ ತೆಗೆದು ಮುಚ್ಚಿದ್ದಾರೆ. +ಸುನಂದಮ್ಮ ಮನೆಗೆ ಹಿಂದಿರುಗದ ಕಾರಣ ಕುಟುಂಬದ ಸದಸ್ಯರು ಸಂಬಂಧಿಕರ ಮನೆಗಳಲ್ಲಿ ಹುಡುಕಿ ಮಾಹಿತಿ ಸಿಗದ ಕಾರಣ ದೂರವಾಣಿ ಕರೆ ಮಾಡಿ ಹಣ ನೀಡುವುದಾಗಿ ಕರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದು ನೋಡಿದಾಗ ಅಲ್ಲಿಯೂ ಕಾಣದ್ದರಿಂದ ಆತಂಕಗೊಂಡ ಕುಟುಂಬದವರಿಗೆ ಗ್ರಾಮದಿಂದ ಆರೆ-ಸನಿಕೆಗಳನ್ನು ತೆಗೆದುಕೊಂಡು ತೋಟಕ್ಕೆ ಹೋಗಿದ್ದಾರೆಂಬ ಸುದ್ದಿಯ ಹಿನ್ನೆಲೆಯಲ್ಲಿ ಇಡೀ ತೋಟವನ್ನೇ ಶೋಧಿಸಿದಾಗ ಗುಂಡಿ ತೆಗೆದು ಮುಚ್ಚುವ ವೇಳೆ ಮಹಿಳೆಯ ಕೂದಲು ಹೊರ ಕಾಣುತ್ತಿದ್ದರಿಂದ ಕೂಡಲೇ ಗ್ರಾಮಾಂತರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. +ಸುದ್ದಿ ತಿಳಿದ ಸಹಾಯಕ ಪೊಲೀಸ್‌‍ ವರಿಷ್ಠಾಧಿಕಾರಿ ಸುರೇಶ್‌, ಡಿವೈಎಸ್‌‍ಪಿ ಗಿರೀಶ್‌, ಸರ್ಕಲ್‌ ಇನ್‌್ಸಪೆಕ್ಟರ್‌ ಕೆ.ಎಲ್‌.ಕೃಷ್ಣ, ಎಸ್‌‍.ಐ.ಹೇಮಂತ್‌, ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ತಹಶೀಲ್ದಾರ್‌ ಮಹಜರು ನಂತರ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. \ No newline at end of file diff --git a/eesanje/url_46_120_7.txt b/eesanje/url_46_120_7.txt new file mode 100644 index 0000000000000000000000000000000000000000..a2e027387fa23341076a7d4b274a48ae7f97073e --- /dev/null +++ b/eesanje/url_46_120_7.txt @@ -0,0 +1,6 @@ + ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ : ಸುದೀಕ್ಷಾ ರಾಜ್ಯಕ್ಕೆ 2ನೇ ಟಾಪರ್‌ +ಬೆಂಗಳೂರು,ಜೂ.5-ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2024ನೇ ಸಾಲಿನ ಎಸ್‌‍ಎಸ್‌‍ಎಲ್‌ಸಿ ಮರು ಮೌಲ್ಯಮಾಪನ ಫಲಿತಾಂಶ ಪ್ರಕಟಿಸಿದ್ದು, ಮೈಸೂರಿನ ದಿನೇಶ್‌ ಎಂಬುವರ ಅವರ ಪುತ್ರಿ ಸುದೀಕ್ಷಾ.ಎಂ.ಡಿ ಅವರು ರಾಜ್ಯಕ್ಕೆ ಎರಡನೇ ಟಾಪರ್‌ ಆಗಿದ್ದಾರೆ. +ಮರು ಮೌಲ್ಯಮಾಪನದಲ್ಲಿ 625ಕ್ಕೆ 624 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದಾರೆ.ಎಸ್‌‍ಎಸ್‌‍ಎಲ್‌ಸಿ ಫಲಿತಾಂಶ ಪ್ರಕಟದಾಗ ವಿದ್ಯಾರ್ಥಿನಿ ಸುದೀಕ್ಷಾ ಎಂ.ಡಿ ಅವರಿಗೆ 625ಕ್ಕೆ 620 ಅಂಕಗಳು ಬಂದಿದ್ದವು. ಐದು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದಿದ್ದ ಸುದೀಕ್ಷ ಎಂ.ಡಿ ಅವರಿಗೆ ಗಣಿತ ವಿಷಯದಲ್ಲಿ 95 ಅಂಕಳು ಬಂದಿದ್ದವು. +ಸಂಸ್ಕೃತ 125 ಇಂಗ್ಲಿಷ್‌ 100 ಕನ್ನಡ 100 ವಿಜ್ಞಾನ 100 ಸಮಾಜ 100 ಗಣಿತದಲ್ಲಿ 95 ಅಂಕ ಬಂದಿತ್ತು. ನಂತರ ಸುದೀಕ್ಷಾ ಗಣೀತ ವಿಷಯವನ್ನು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಮರು ಮೌಲ್ಯಮಾಪನದ ಫಲಿತಾಂಶ ಪ್ರಕಟವಾಗಿದ್ದು, ಸುಧೀಕ್ಷಾ ಗಣಿತದಲ್ಲಿ 99 ಅಂಕ ಪಡೆದಿದ್ದಾರೆ. +ಇದೀಗ 625ಕ್ಕೆ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಎರಡನೇ ಟಾಪರ್‌ ಆಗಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. +ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆಯುವ ಮೂಲಕ ದ್ವಿತೀಯ ಸ್ಥಾನದ ಪಟ್ಟಿಯಲ್ಲಿ ಸುದೀಕ್ಷಾ 8ನೇಯವರಾಗಿದ್ದಾರೆ. \ No newline at end of file diff --git a/eesanje/url_46_120_8.txt b/eesanje/url_46_120_8.txt new file mode 100644 index 0000000000000000000000000000000000000000..9908dc29973b1b6d65d5225864c9e315a2ed5dea --- /dev/null +++ b/eesanje/url_46_120_8.txt @@ -0,0 +1,6 @@ +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳಿಗೆ ಠೇವಣಿ ನಷ್ಟ +ಬೆಂಗಳೂರು,ಜೂ.5-ಇಡೀ ರಾಷ್ಟ್ರದ ಗಮನಸೆಳೆದು ಹೈವೋಲ್ಟೇಜ್‌ ಕ್ಷೇತ್ರವೆಂದೇ ಪರಿಗಣಿತವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 13 ಅಭ್ಯರ್ಥಿಗಳು ನೋಟಾಗಿಂತಲೂ ಕಡಿಮೆ ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.ಮಂಜುನಾಥ್‌ ಮತ್ತು ಸುರೇಶ್‌ ಎಂಬ ಹೆಸರಿನ ಇತರೆ ಅಭ್ಯರ್ಥಿಗಳಿಗೂ ನೋಟಾಗಿಂತಲೂ ಕಡಿಮೆ ಮತಗಳು ದೊರೆತಿರುವುದು ವಿಶೇವಾಗಿದೆ. +ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೃದಯ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ 1079002 ಮತಗಳನ್ನು ಪಡೆದು ಒಟ್ಟಾರೆ ಶೇ.56.21ರಷ್ಟು ಮತ ಪಡೆದಿದ್ದಾರೆ. ಅಲ್ಲದೆ 2,69,647 ಮತಗಳ ಅಂತರದಿಂದ ಸಂಸದ ಡಿ.ಕೆ.ಸುರೇಶ್‌ ಅವರನ್ನು ಪರಾಭವಗೊಳಿಸಿದ್ದಾರೆ. +ಕಾಂಗ್ರೆಸ್‌‍ ಅಭ್ಯರ್ಥಿಯಾಗಿದ್ದ ಸುರೇಶ್‌ ಅವರು 8,09,355 ಮತಗಳನ್ನು ಪಡೆದಿದ್ದು ಶೇ.42.16ರಷ್ಟು ಮತ ಪಡೆದಿದ್ದಾರೆ. ಆದರೆ ಉಳಿದ ಯಾವೊಬ್ಬ ಅಭ್ಯರ್ಥಿಯೂ ಠೇವಣಿ ಉಳಿಸಿಕೊಂಡಿಲ್ಲ. +ನೋಟಾಗೆ 10,649 ಮತಗಳು ಚಲಾವಣೆಯಾಗಿವೆ. ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಭಿಷೇಕ್‌.ಕೆ 6202, ಪಕ್ಷೇತರ ಅಭ್ಯರ್ಥಿಗಳಾದ ಸುರೇಶ್‌.ಎಂ.ಎನ್‌ಗೆ 3236, ಹೇಮಾವತಿ.ಕೆ ಅವರಿಗೆ 1774, ಜಿ.ಟಿ.ಪ್ರಕಾಶ್‌ ಅವರಿಗೆ 1472, ಎನ್‌.ಕೃಷ್ಣಪ್ಪ 1402 ಮತಗಳು ದೊರೆತಿವೆ. +ಬಹುಜನ್‌ ಭಾರತ್‌ ಪಾರ್ಟಿಯ ಸಿ.ಎನ್‌.ಮಂಜುನಾಥ 1400, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷದ ಅಭ್ಯರ್ಥಿ ಕುಮಾರ್‌.ಎಲ್‌ ಅವರಿಗೆ 1066, ಕರ್ನಾಟಕ ರಾಷ್ಟ್ರ ಸಮಿತಿಯ ಮೊಹಮದ್‌ ಮಜಾದಿ ಪಾಷ 821, ನರಸಿಂಹಮೂರ್ತಿ.ಜೆ.ಪಿ ಅವರಿಗೆ 813, ಕರುನಾಡ ಪಾರ್ಟಿಯ ಸುರೇಶ್‌.ಎಸ್‌‍ 798, ಸಿಸಿಪಿಯ ವಸಿಷ್ಠ.ಜೆ 584, ವೈಎಸ್‌‍ಇಪಿಯ ಮೊಹಮದ್‌ ದಸ್ತಗೀರ್‌ ಅವರಿಗೆ 486, ವಿಸಿಕೆಯ ಎಚ್‌.ವಿ.ಚಂದ್ರಶೇಖರ ಅವರಿಗೆ 480 ಮತಗಳು ಲಭಿಸಿವೆ. 5,516 ಅಂಚೆ ಮತಗಳು ಸೇರಿದಂತೆ 19,19,540 ಮತಗಳು ಈ ಕ್ಷೇತ್ರದಲ್ಲಿ ಚಲಾವಣೆಯಾಗಿದ್ದವು. \ No newline at end of file diff --git a/eesanje/url_46_120_9.txt b/eesanje/url_46_120_9.txt new file mode 100644 index 0000000000000000000000000000000000000000..fdb0ad1ff7ffe4badd737b3a1dfb2f04a1856b4c --- /dev/null +++ b/eesanje/url_46_120_9.txt @@ -0,0 +1,4 @@ +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮತ್ತಿಬ್ಬರು ಎಸ್‌‍ಐಟಿ ವಶಕ್ಕೆ +ಬೆಂಗಳೂರು ಜೂ. 5– ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಳಿಸಿರುವ ಎಸ್‌‍ಐಟಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.ಈ ಪ್ರಕರಣದಲ್ಲಿ ನಾಗರಾಜ ಹಾಗೂ ನಾಗೇಶ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಮಾಹಿತಿ ಸಂಗ್ರಹಿಸುತ್ತಿದೆ. +ಹೈದ್ರಾಬಾದ್‌ನ ಕ್ರೆಡಿಟ್‌ ಕೋ-ಆಪರೇಟಿವ್‌ ಅಧ್ಯಕ್ಷ ಸತ್ಯನಾರಾಯಣ ಹಾಗೂ ಈಗಾಗಲೇ ಅಮಾನತುಗೊಂಡಿರುವ ನಿಗಮದ ಹಿಂದಿನ ಎಂ.ಡಿ. ಪದನಾಭ ಹಾಗೂ ಅಕೌಂಟೆಂಟ್‌ ಪರಶುರಾಮರನ್ನು ಬಂಧಿಸಲಾಗಿದೆ.ಈ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಎಸ್‌‍ಐಟಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. +ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ. \ No newline at end of file diff --git a/eesanje/url_46_121_1.txt b/eesanje/url_46_121_1.txt new file mode 100644 index 0000000000000000000000000000000000000000..8ed96391cf6a5d2621e22f65091326ddcd2e9e38 --- /dev/null +++ b/eesanje/url_46_121_1.txt @@ -0,0 +1,5 @@ +ಚುನಾವಣೆಯಲ್ಲಿ ಸೋತ ಡಿ.ಕೆ.ಸುರೇಶ್‌ ಅವರನ್ನು ಭೇಟಿ ಮಾಡಿದ ಸಚಿವ ಜಮೀರ್‌ ಅಹಮದ್‌ +ಬೆಂಗಳೂರು,ಜೂ.5-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸೋಲು ಕಂಡ ಸಂಸದ ಡಿ.ಕೆ.ಸುರೇಶ್‌ ಅವರನ್ನು ವಸತಿ ಹಾಗೂ ವಕ್ಫ್ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವಾರು ಮಂದಿ ಭೇಟಿ ಮಾಡಿ ಬೆಂಬಲ ಸೂಚಿಸಿದ್ದಾರೆ. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲೇ ಅತ್ಯುತ್ತಮವಾಗಿ ಕೆಲಸ ಮಾಡಿದ ಸಂಸದರ ಪೈಕಿ ಡಿ.ಕೆ.ಸುರೇಶ್‌ ಮುಂಚೂಣಿಯಲ್ಲಿದ್ದರು. ಬೇರೆಯವರು ಭಾನುವಾರ ರಜೆ ತೆಗೆದುಕೊಳ್ಳುತ್ತಿದ್ದರು. ಆದರೆ ಡಿ.ಕೆ.ಸುರೇಶ್‌ ಆ ದಿನವೂ ಕೂಡ ವಿಶ್ರಾಂತಿ ಪಡೆಯದೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಂಥವರು ಸೋತಿದ್ದು ನೋವು ತಂದಿದೆ ಎಂದರು. +ಜೆಡಿಎಸ್‌‍-ಬಿಜೆಪಿ ಮೈತ್ರಿಯಿಂದಾಗಿ ಡಿ.ಕೆ.ಸುರೇಶ್‌ ಸೋಲು ಕಂಡಿಲ್ಲ. ಜನ ಸೋಲಿಸಿದ್ದಾರೆ. ಉತ್ತಮವಾಗಿ ಕೆಲಸ ಮಾಡುವವರನ್ನು ಸೋಲಿಸಿದ್ದು ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಕಳೆದ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದ್ದೆವು. ಈ ಬಾರಿ 9 ರಲ್ಲಿ ಗೆಲುವು ಕಂಡಿದ್ದೇವೆ. ಇದು ಸಮಾಧಾನ ತರುವ ವಿಚಾರ ಎಂದು ಹೇಳಿದರು. +ಬಿಜೆಪಿಯ ಶಾಸಕರಾದ ಎಸ್‌‍.ಡಿ.ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಅವರು ಡಿ.ಕೆ.ಸುರೇಶ್‌ ಅವರ ಮನೆಗೆ ಆಗಮಿಸಿ ಸುದೀರ್ಘ ಚರ್ಚೆ ನಡೆಸಿದರು.ಕಾಂಗ್ರೆಸ್‌‍ ಪಕ್ಷದ ಹಲವು ಶಾಸಕರು ಡಿ.ಕೆ.ಸುರೇಶ್‌ ಅವರಿಗೆ ಸಮಾಧಾನ ಹೇಳಿದ್ದು ಕಂಡುಬಂದಿತು. \ No newline at end of file diff --git a/eesanje/url_46_121_10.txt b/eesanje/url_46_121_10.txt new file mode 100644 index 0000000000000000000000000000000000000000..33f9ed332e9ac693e1459937d89ab42912e91d63 --- /dev/null +++ b/eesanje/url_46_121_10.txt @@ -0,0 +1,30 @@ +ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ +ಬೆಂಗಳೂರು,ಜೂ.4-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಅಭ್ಯರ್ಥಿಯಾಗಿದ್ದಾರೆ. ವಿಜೇತ ಕಾಗೇರಿ ಅವರು 3,33,590 ಮತಗಳ ಅಂತರದಿಂದ ಗೆದ್ದಿದ್ದಾರೆ. ಒಟ್ಟು 7,77,887 ಮತಗಳು ಪಡೆದರೆ, ಕಾಂಗ್ರೆಸ್‌‍ ಅಂಜಲಿ ನಿಂಬಾಳ್ಕರ್‌ ಅವರು 4,43,296 ಮತಗಳನ್ನು ಪಡೆದಿದ್ದಾರೆ. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಅವರು 2,84,620 ಮತಗಳ ಅಂತರದಿಂದ ಗೆದ್ದಿದ್ದಾರೆ.ರಾಜ್ಯದಲ್ಲಿ ಎರಡನೇ ಅತಿಹೆಚ್ಚು ಮತಗಳಿಂದ ಗೆದ್ದ ಅಭ್ಯರ್ಥಿ ಎಂಬ ಹೆಗ್ಗಳಿಕೆ ಕುಮಾರಸ್ವಾಮಿಗೆ ಸಲ್ಲುತ್ತದೆ. ಒಟ್ಟು 8,51,881 ಮತಗಳನ್ನು ಎಚ್‌ಡಿಕೆ ಪಡೆದರೆ, ಜೆಡಿಎಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ ಅವರು 5,67,261 ಮತಗಳನ್ನು ಪಡೆದಿದ್ದಾರೆ. +ಬಾರೀ ಜಿದ್ದಾಜಿದ್ದಿನ ಕಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅವರು 2,68,094 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. +ಒಟ್ಟು 10,75, 533 ಮತಗಳನ್ನು ಪಡೆದ ಡಾ.ಮಂಜುನಾಥ್‌ ಅವರು ತಮ ಪ್ರತಿಸ್ಪರ್ಧಿ ಕಾಂಗ್ರೆಸ್‌‍ನ ಡಿ.ಕೆ.ಸುರೇಶ್‌ ಅವರನ್ನು ಪರಾಭವಗೊಳಿಸಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ 8,74,059 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. +ಬಾಗಲಕೋಟೆ -ಬಿಜೆಪಿ- ಗದ್ದಿಗೌಡರ್‌ – 6,67,441ಕಾಂಗ್ರೆಸ್‌‍ ಸಂಯುಕ್ತ ಪಾಟಿಲ್‌ -6,00,741ಗೆಲುವಿನ ಅಂತರ- 66,700 +ಬೆಂಗಳೂರು ಕೇಂದ್ರ -ಬಿಜೆಪಿ – ಪಿ.ಸಿ.ಮೋಹನ್‌- 6,14,800ಕಾಂಗ್ರೆಸ್‌‍ -ಮನ್ಸೂರ್‌ ಅಲಿಖಾನ್‌ -608366ಗೆಲುವಿನ ಅಂತರ- 35,000 +ಬೆಂಗಳೂರು ಉತ್ತರ -ಬಿಜೆಪಿ- ಶೋಭಾ ಕರಂದ್ಲಾಜೆ – 9,15,553ಕಾಂಗ್ರೆಸ್‌‍ -ಪ್ರೊ.ರಾಜುಗೌಡ-2,61,465ಗೆಲುವಿನ ಅಂತರ -2,59,341ಬೆಂಗಳೂರು ಗ್ರಾಮಾಂತರ -ಬಿಜೆಪಿ- ಡಾ.ಸಿ.ಎನ್‌.ಮಂಜುನಾಥ್‌ – 10,75,553ಕಾಂಗ್ರೆಸ್‌‍- ಡಿ.ಕೆ.ಸುರೇಶ್‌ -807459ಗೆಲುವಿನ ಅಂತರ -2,68,049ಬೆಂಗಳೂರು ದಕ್ಷಿಣ -ಬಿಜೆಪಿ- ತೇಜಸ್ವಿ ಸೂರ್ಯ- 7,23,310ಕಾಂಗ್ರೆಸ್‌‍- ಸೌಮ್ಯ ರೆಡ್ಡಿ-4,56,661ಗೆಲುವಿನ ಅಂತರ – 2,65,649ಬೆಳಗಾವಿ -ಬಿಜೆಪಿ-ಜಗದೀಶ್‌ ಶೆಟ್ಟರ್‌-63,53,72ಕಾಂಗ್ರೆಸ್‌‍- ಮೃಣಾಳ್‌ ಹೆಬ್ಬಾಳ್ಕರ್‌-491657ಗೆಲುವಿನ ಅಂತರ – 1,43,715 +ಬಳ್ಳಾರಿ -ಬಿಜೆಪಿ- ಬಿ.ಶ್ರೀರಾಮುಲು- 6,20,127ಕಾಂಗ್ರೆಸ್‌‍- ಬಿ.ತುಕಾರಾಂ-7,18,727ಗೆಲುವಿನ ಅಂತರ – 98600 +ಬೀದರ್‌ -ಬಿಜೆಪಿ- ಭಗವಂತ ಖೂಬಾ- 5,65,766ಕಾಂಗ್ರೆಸ್‌‍- ಸಾಗರ್‌ ಈಶ್ವರ್‌ ಖಂಡ್ರೆ -6,65,162ಗೆಲುವಿನ ಅಂತರ – 1,29,369 +ಬಿಜಾಪುರ -ಬಿಜೆಪಿ- ರಮೇಶ್‌ ಜಿಣಜಿಣಗಿ- 651634ಕಾಂಗ್ರೆಸ್‌‍- ರಾಜು ಅಲಗೂರು- 5,78,555ಗೆಲುವಿನ ಅಂತರ – 73,129 +ಚಾಮರಾಜನಗರ -ಕಾಂಗ್ರೆಸ್‌‍- ಸುನೀಲ್‌ ಬೋಸ್‌‍- 5,75,234ಬಿಜೆಪಿ -ಬಾಲರಾಜ್‌.ಎಸ್‌‍- 444465ಗೆಲುವಿನ ಅಂತರ – 130770 +ಚಿಕ್ಕಬಳ್ಳಾಪುರ-ಬಿಜೆಪಿ-ಡಾ.ಕೆ.ಸುಧಾಕರ್‌- 819588ಕಾಂಗ್ರೆಸ್‌‍- ಎಂ.ಎಸ್‌‍.ರಕ್ಷಾ ರಾಮಾನ್ಯ-657489ಗೆಲುವಿನ ಅಂತರ – 162099 +ಚಿಕ್ಕೋಡಿ -ಕಾಂಗ್ರೆಸ್‌‍- ಪ್ರಿಯಾಂಕ ಸತೀಶ್‌ ಜಾರಕಿಹೊಳಿ -627877ಬಿಜೆಪಿ- ಅಣ್ಣಾ ಸಾಹೇಬ್‌ ಜೊಲ್ಲೆ-531823ಗೆಲುವಿನ ಅಂತರ – 96,054 +ಚಿತ್ರದುರ್ಗ- ಬಿಜೆಪಿ- ಗೋವಿಂದ ಕಾರಜೋಳ-684890ಕಾಂಗ್ರೆಸ್‌‍- ಬಿ.ಎನ್‌.ಚಂದ್ರಪ್ಪ – 636769ಗೆಲುವಿನ ಅಂತರ – 48121 +ದಕ್ಷಿಣಕನ್ನಡ-ಬಿಜೆಪಿ- ಕ್ಯಾಪ್ಟನ್‌ ಬ್ರಿಜೇಶ್‌ ಚೌಟ- 764132ಕಾಂಗ್ರೆಸ್‌‍- ಪದರಾಜ್‌ ಪೂಜಾರಿ-614924ಗೆಲುವಿನ ಅಂತರ – 149202 +ದಾವಣಗೆರೆ -ಕಾಂಗ್ರೆಸ್‌‍- ಪ್ರಭಾ ಮಲ್ಲಿಕಾರ್ಜುನ್‌- 573788ಬಿಜೆಪಿ- ಗಾಯತ್ರಿ ಸಿದ್ದೇಶ್ವರ್‌-552702ಗೆಲುವಿನ ಅಂತರ – 21086 +ಧಾರವಾಡ -ಬಿಜೆಪಿ- ಪ್ರಹ್ಲಾದ್‌ ಜೋಷಿ- 713649ಕಾಂಗ್ರೆಸ್‌‍- ವಿನೋದ್‌ ಅಸುಟಿ-617616ಗೆಲುವಿನ ಅಂತರ – 96033 +ಕಲಬುರಗಿ -ಕಾಂಗ್ರೆಸ್‌‍- ರಾಮಕೃಷ್ಣ ದೊಡ್ಡಮನಿ – 652321ಬಿಜೆಪಿ- ಡಾ.ಉಮೇಶ್‌.ಜೆ. ಜಾಧವ್‌ -625116ಗೆಲುವಿನ ಅಂತರ – 27205 +ಹಾಸನ -ಕಾಂಗ್ರೆಸ್‌‍- ಶ್ರೇಯಸ್‌‍ ಎನ್‌.ಪಟೇಲ್‌- 6,70,274ಜೆಡಿಸ್‌‍-ಪ್ರಜ್ವಲ್‌ ರೇವಣ್ಣ -626536ಗೆಲುವಿನ ಅಂತರ – 43738 +ಹಾವೇರಿ -ಬಿಜೆಪಿ-ಬಸವರಾಜ ಬೊಮಾಯಿ- 705538ಕಾಂಗ್ರೆಸ್‌‍- ಆನಂದ್‌ ಸ್ವಾಮಿಗದ್ದಿದೇವರ ಮಠ್‌-662025ಗೆಲುವಿನ ಅಂತರ – 43,513 +ಕೋಲಾರ-ಜೆಡಿಎಸ್‌‍- ಕೆ.ಮಲ್ಲೇಶ್‌ ಬಾಬು- 691481ಕಾಂಗ್ರೆಸ್‌‍- ಕೆ.ವಿ.ಗೌತಮ್‌-620093ಗೆಲುವಿನ ಅಂತರ – 71388 +ಕೊಪ್ಪಳ -ಕಾಂಗ್ರೆಸ್‌‍- ಕೆ.ರಾಜಶೇಖರ್‌ ಬಸವರಾಜ್‌ ಯತ್ನಾಳ್‌- 6,33,480ಬಿಜೆಪಿ-ಡಾ.ಬಸವರಾಜ್‌ -590030ಗೆಲುವಿನ ಅಂತರ – 43450 +ಮಂಡ್ಯ -ಜೆಡಿಎಸ್‌‍- ಎಚ್‌.ಡಿ.ಕುಮಾರಸ್ವಾಮಿ- 851881ಕಾಂಗ್ರೆಸ್‌‍- ವೆಂಕಟರಮಣಗೌಡ-567261ಗೆಲುವಿನ ಅಂತರ -284620 +ಮೈಸೂರು-ಕೊಡುಗು -ಬಿಜೆಪಿ- ಯದುವೀರ್‌ ಒಡೆಯರ್‌ -795503ಕಾಂಗ್ರೆಸ್‌‍- ಎಂ.ಲಕ್ಷ್ಮಣ- 656241ಗೆಲುವಿನ ಅಂತರ – 139262 +ರಾಯಚೂರು -ಕಾಂಗ್ರೆಸ್‌‍- ಜಿ.ಕುಮಾರ್‌ ನಾಯಕ್‌-642212ಬಿಜೆಪಿ- ರಾಜ ಅಮರೇಶ್‌ ನಾಯಕ್‌- 563065ಗೆಲುವಿನ ಅಂತರ – 79147 +ಶಿವಮೊಗ್ಗ -ಬಿಜೆಪಿ-ಬಿ.ವೈ.ರಾಘವೇಂದ್ರ-778721ಕಾಂಗ್ರೆಸ್‌‍-ಗೀತಾ ಶಿವರಾಜ್‌ಕುಮಾರ್‌-535006ಗೆಲುವಿನ ಅಂತರ -243715 +ತುಮಕೂರು -ಬಿಜೆಪಿ-ವಿ.ಸೋಮಣ್ಣ-720946ಕಾಂಗ್ರೆಸ್‌‍-ಎಸ್‌‍.ಪಿ.ಮುದ್ದಹನುಮೇಗೌಡ-545352ಗೆಲುವಿನ ಅಂತರ – 175594 +ಉಡುಪಿಚಿಕ್ಕಮಗಳೂರು-ಬಿಜೆಪಿ-ಕೋಟಾ ಶ್ರೀನಿವಾಸ್‌‍ಪೂಜಾರಿ- 716569ಕಾಂಗ್ರೆಸ್‌‍-ಜಯಪ್ರಕಾಶ್‌ ಹೆಗಡೆ -463498ಗೆಲುವಿನ ಅಂತರ – 253079 +ಉತ್ತರಕನ್ನಡ-ಬಿಜೆಪಿ-ವಿಶ್ವೇಶ್ವರ ಹೆಗಡೆ ಕಾಗೇರಿ-777887ಕಾಂಗ್ರೆಸ್‌‍- ಡಾ.ಅಂಜಲಿ ನಿಂಬಾಳ್ಕರ್‌-443296ಗೆಲುವಿನ ಅಂತರ -334591 \ No newline at end of file diff --git a/eesanje/url_46_121_11.txt b/eesanje/url_46_121_11.txt new file mode 100644 index 0000000000000000000000000000000000000000..0e71b2ff73d51436cc1d90ae05c404769443f740 --- /dev/null +++ b/eesanje/url_46_121_11.txt @@ -0,0 +1,4 @@ +ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದರೂ, ಮತಗಳಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ +ಬೆಂಗಳೂರು, ಜೂ.4-ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದ್ದರೂ ಆಡಳಿತಾರೂಢ ಕಾಂಗ್ರೆಸ್‌‍ ಮತಗಳಿಕೆಯಲ್ಲಿ ಮುಂದಿದೆ. ಬಿಜೆಪಿಗಿಂತಲೂ ಸರಿಸುಮಾರು ಶೇ.0.50 ರಷ್ಟು ಕಾಂಗ್ರೆಸ್‌‍ ಹೆಚ್ಚು ಮತ ಗಳಿಸಿದೆ. ಆದರೆ ಮತ ಕ್ರೋಡೀಕರಣದಲ್ಲಿ ವಿಫಲವಾಗಿದ್ದು, ಗೆಲುವಿನಲ್ಲಿ ಮುಗ್ಗರಿಸಿದೆ. +ಪ್ರಕಟಿತ ಫಲಿತಾಂಶಗಳ ಪ್ರಕಾರ, ಬಿಜೆಪಿ ಶೇ.45.01 ರಷ್ಟು ಮತ ಗಳಿಸಿತ್ತು. ಕಾಂಗ್ರೆಸ್‌‍ ಶೇ.45.45 ರಷ್ಟು ಮತ ಗಳಿಸಿದೆ. ಜೆಡಿಎಸ್‌‍ ಶೇ.6.67 ರಷ್ಟು ಮತ ಪಡೆದಿದೆ.ರಾಷ್ಟ್ರಮಟ್ಟದಲ್ಲಿ ಬಿಜೆಪಿ ಶೇ.38.40 ರಷ್ಟು ಮತ ಪಡೆದು ಎಲ್ಲಾ ಪಕ್ಷಗಳಿಗಿಂತಲೂ ಸಿಂಹಪಾಲು ಹೊಂದಿದೆ. ಕಾಂಗ್ರೆಸ್‌‍ ಶೇ.24.11 ರಷ್ಟು ಮತ ಪಡೆದು ಎರಡನೇ ಸ್ಥಾನದಲ್ಲಿದೆ. +ಅತೀ ಹೆಚ್ಚು ಮತ ಪಡೆದ ಮೂರನೇ ಪಕ್ಷದ ಸ್ಥಾನದಲ್ಲಿ ಸಮಾಜವಾದಿ ಪಕ್ಷವಿದ್ದು, ಶೇ.4.05 ರಷ್ಟು ಮತ ಗಳಿಸಿದೆ.ಟಿಡಿಪಿ, ವೈಎಸ್‌‍ಆರ್‌, ಇಐಟಿಸಿ, ಸಿಪಿಐಎಂ, ಡಿಎಂಕೆ ಪಕ್ಷಗಳೂ ಗಮನಾರ್ಹ ಮತಗಳಿಕೆ ಮಾಡಿವೆ. \ No newline at end of file diff --git a/eesanje/url_46_121_12.txt b/eesanje/url_46_121_12.txt new file mode 100644 index 0000000000000000000000000000000000000000..dbf6f8d0391af4b6b3feb222990795515acc9e27 --- /dev/null +++ b/eesanje/url_46_121_12.txt @@ -0,0 +1,5 @@ +ವಿಧಾನಪರಿಷತ್‌ ಚುನಾವಣೆ : 11 ಅಭ್ಯರ್ಥಿಗಳ ನಾಮಪತ್ರ , ಅವಿರೋಧ ಆಯ್ಕೆ ಖಚಿತ +ಬೆಂಗಳೂರು, ಜೂ.4– ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಕಾಂಗ್ರೆಸ್‌‍, ಜೆಡಿಎಸ್‌‍ ಹಾಗೂ ಬಿಜೆಪಿ ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯಗೊಂಡಿದ್ದು ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. +ಕಾಂಗ್ರೆಸ್‌‍ ಅಭ್ಯರ್ಥಿಗಳಾದ ಐವಾನ್‌ ಡಿಸೋಜಾ, ಕೆ.ಗೋವಿಂದರಾಜ್‌, ಜಗದೇವ ಗುತ್ತೇದಾರ್‌, ಬಲ್ಕೀಸ್‌‍ ಬಾನು, ಎನ್‌.ಎಸ್‌‍.ಬೋಸರಾಜು, ಡಾ.ಯತೀಂದ್ರ.ಎಸ್‌‍. ಹಾಗೂ ಎ.ವಸಂತಕುಮಾರ್‌ ಅವರ ನಾಮಪತ್ರಗಳು ಮಾನ್ಯವಾಗಿದ್ದು , ಅವಿರೋಧ ಆಯ್ಕೆಯಾಗಲಿದ್ದಾರೆ. +ಜೆಡಿಎಸ್‌‍ನ ಅಭ್ಯರ್ಥಿ ಟಿ.ಎನ್‌.ಜವರಾಯಿಗೌಡ ಅವರ ನಾಮಪತ್ರವೂ ಮಾನ್ಯವಾಗಿದ್ದು ಅವಿರೋಧ ಆಯ್ಕೆಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಮೂಳೆ ಮಾರುತಿರಾವ್‌ ಹಾಗೂ ರವಿಕುಮಾರ್‌.ಎನ್‌ ಅವರ ನಾಮಪತ್ರಗಳು ಪುರಸ್ಕೃತವಾಗಿದ್ದು, ಅವಿರೋಧ ಆಯ್ಕೆಯಾಗಲಿದ್ದಾರೆ. +ಚುನಾವಣಾ ಕಣದಲ್ಲಿ 11 ಅಭ್ಯರ್ಥಿಗಳು ಮಾತ್ರ ಉಳಿದಿದ್ದು,ನಾಮಪತ್ರ ವಾಪಸ್‌‍ ಪಡೆಯಲು ಜೂನ್‌ 6 ಕೊನೆಯ ದಿನವಾಗಿದ್ದು, ಅಂದು ಸಂಜೆ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. \ No newline at end of file diff --git a/eesanje/url_46_121_2.txt b/eesanje/url_46_121_2.txt new file mode 100644 index 0000000000000000000000000000000000000000..09b15620eb7ef05a1e69cc6a18cd29dd18ee809f --- /dev/null +++ b/eesanje/url_46_121_2.txt @@ -0,0 +1,8 @@ +ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌‍ ಸೋಲಿಗೆ ಒಳಜಗಳವೇ ಕಾರಣ :ಕೆ.ಎಚ್‌.ಮುನಿಯಪ್ಪ +ಬೆಂಗಳೂರು,ಜೂ.5-ಕೋಲಾರ-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಸೋಲಿಗೆ ಒಳಜಗಳವೇ ಕಾರಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ವಿಶ್ಲೇಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ಕ್ಷೇತ್ರಗಳಲ್ಲಿ ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಕಾಂಗ್ರೆಸ್‌‍ ಗೆದ್ದಿದೆ. ಈ ಬಾರಿ ಬಿಜೆಪಿ-ಜೆಡಿಎಸ್‌‍ ಮೈತ್ರಿಯಿಂದಾಗಿ ನಮಗೆ ಸೋಲಾಯಿತು ಎಂದರು. +ಕಾಂಗ್ರೆಸ್‌‍ನಲ್ಲಿ ಜನರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ವೈಫಲ್ಯಗಳಾದವು. ತಾವು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಚರ್ಚಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಆದರೆ ಕೆಲವರು ಕಾಂಗ್ರೆಸ್‌‍ ಪಕ್ಷ ಮುಗಿದು ಹೋದರೂ ಸರಿ, ರಾಜಿಯಾಗುವುದು ಬೇಡ ಎಂದು ನಿರ್ಧಾರ ಮಾಡಿಕೊಂಡಂತಿದೆ. ಹಾಗಾಗಿ ಇಂತಹ ಫಲಿತಾಂಶ ಬಂದಿದೆ ಎಂದು ಹೇಳಿದರು. +30 ವರ್ಷ ಕಾಂಗ್ರೆಸ್‌‍ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಫಲಿತಾಂಶ ನೋವು ತಂದಿದೆ. ಮುಂದೆ ಇದನ್ನು ಸರಿಪಡಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲಲೇಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗುಂಪುಗಾರಿಕೆಯನ್ನು ಸರಿಪಡಿಸಲು ರಾಜ್ಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. +ನಮ್ಮ ಕುಟುಂಬಕ್ಕೆ ಟಿಕೆಟ್‌ ನೀಡಬಾರದು ಎಂದು ಪಟ್ಟು ಹಿಡಿದವರು, ಚುನಾವಣೆಯ ನಾಯಕತ್ವ ವಹಿಸಿದವರು ಕೆ.ಎಚ್‌.ಮುನಿಯಪ್ಪ ಕೋಲಾರ ಚುನಾವಣೆಗೆ ಬರಬಾರದು ಎಂದು ಹಠ ಹಿಡಿದವರು ಚುನಾವಣೆ ಸೋಲಿನ ಹೊಣೆಗಾರಿಕೆಯನ್ನು ಹೊರಬೇಕಿದೆ ಎಂದು ಹೇಳಿದರು.ಹೈಕಮಾಂಡ್‌ ಸೂಚನೆ ನೀಡಿದ ಕಡೆಗಳಲೆಲ್ಲಾ ಪ್ರಚಾರ ಮಾಡಿದ್ದೇನೆ, ಜವಾಬ್ದಾರಿಯನ್ನು ನಿಭಾಯಿಸಿದ್ದೇನೆ. ಆದರೆ ಜನರಿಗೆ ಕಾಂಗ್ರೆಸ್‌‍ನ ಎರಡೂ ಬಣಗಳು ಒಟ್ಟಾಗಿವೆ ಎಂದು ಸಂದೇಶ ನೀಡುವಲ್ಲಿ ವಿಫಲವಾದೆವು ಎಂದು ಹೇಳಿದರು. +ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್‌‍ಗೆ ವಿರುದ್ಧವಾಗಿ ಹೋರಾಟ ಮಾಡುತ್ತಿದ್ದುದು ಜೆಡಿಎಸ್‌‍. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಒಂದಾಗಿದ್ದರಿಂದಾಗಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗಿದೆ. ರಾಜ್ಯಸರ್ಕಾರದ ಗ್ಯಾರಂಟಿಗಳು ಕೈ ಹಿಡಿದಿದ್ದರಿಂದಾಗಿ ಮತ ಗಳಿಕೆಯ ಪ್ರಮಾಣ ಹೆಚ್ಚಾಗಿದೆ ಎಂದು ವ್ಯಾಖ್ಯಾನಿಸಿದರು. +ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಎಲ್ಲಿಯೂ ಚರ್ಚೆಯಾಗಿಲ್ಲ. ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಫಲಿತಾಂಶದಲ್ಲಿ ಗೆಲುವಿನ ಸಂಖ್ಯೆಯಲ್ಲಿ ಹಿನ್ನಡೆಯಾಗಿದ್ದರೂ ಮತಗಳಿಕೆ ಹೆಚ್ಚಾಗಿದೆ. ಹೀಗಾಗಿ ಸಚಿವರ ತಲೆದಂಡದ ಪ್ರಶ್ನೆ ಇಲ್ಲ ಎಂದು ಹೇಳಿದರು. +ಜೆಡಿಎಸ್‌‍-ಬಿಜೆಪಿಯ ಮೈತ್ರಿ ಹಿನ್ನೆಲೆಯಲ್ಲಿ ನಾವು ಹೊಸ ಚಿಂತನೆ ಮಾಡಬೇಕು, ಕಾಂಗ್ರೆಸ್‌‍ನಲ್ಲಿದ್ದು ಕಾಂಗ್ರೆಸ್‌‍ ಪಕ್ಷವನ್ನೇ ಸೋಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರಿಗೆ ಬುದ್ಧಿ ಹೇಳಬೇಕಿದೆ ಎಂದು ಮುನಿಯಪ್ಪ ಕರೆ ನೀಡಿದರು. \ No newline at end of file diff --git a/eesanje/url_46_121_3.txt b/eesanje/url_46_121_3.txt new file mode 100644 index 0000000000000000000000000000000000000000..752535259521b32a7bae91690ed6e699aeefb6f0 --- /dev/null +++ b/eesanje/url_46_121_3.txt @@ -0,0 +1,11 @@ +ಚುನಾವಣಾ ಫಲಿತಾಂಶದಿಂದ ಸಮಾಧಾನವಾಗಿದೆ, ಸಂತೋಷ ಇಲ್ಲ : ಸಚಿವ ಪರಮೇಶ್ವರ್‌ +ಬೆಂಗಳೂರು,ಜೂ.5-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ನಿರೀಕ್ಷಿತ ಫಲಿತಾಂಶ ಬಂದಿಲ್ಲ. 20 ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಈಡೇರಿಲ್ಲ. ಆದರೆ ಒಂದು ಸ್ಥಾನದಲ್ಲಿದ್ದ ಕಾಂಗ್ರೆಸ್‌‍ 09 ಕ್ಕೆ ಏರಿಕೆಯಾಗಿದೆ. ಮತ ಗಳಿಕೆಯಲ್ಲೂ ಗಣನೀಯ ಏರಿಕೆಯಾಗಿದೆ. ಫಲಿತಾಂಶ ಸಮಾಧಾನ ತಂದಿದೆ. ಆದರೆ ಸಂತೋಷ ತಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಶ್ಲೇಷಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತಾರೂಢ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕಿತ್ತು. ಆದರೆ ಜನ ನಮಗೂ ಎಚ್ಚರಿಕೆ ನೀಡಿದ್ದಾರೆ. ಒಂದು ವರ್ಷದ ಆಡಳಿತ ಜನಸಾಮಾನ್ಯರಿಗೆ ಸಮಾಧಾನ ತಂದಿಲ್ಲ ಎಂಬುದನ್ನು ತೋರಿಸುತ್ತದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಒಳ್ಳೆಯ ಆಡಳಿತ ನೀಡುವತ್ತ ಮುಖ್ಯಮಂತ್ರಿ, ಅಧ್ಯಕ್ಷರು ಸೇರಿ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇವೆ. +ಸರ್ಕಾರ ಗ್ಯಾರಂಟಿ ನೀಡಿದ ಹೊರತಾಗಿಯೂ ಜನರ ತೀರ್ಪು ಬೇರೆಯದೇ ಆಗಿದೆ ಎಂದು ಹೇಳಿದರು. 2019 ರ ಚುನಾವಣೆಯಲ್ಲಿ ಕಾಂಗ್ರೆಸ್‌‍-ಜೆಡಿಎಸ್‌‍ ಮೈತ್ರಿ ಫಲ ನೀಡಲಿಲ್ಲ. ಈ ಬಾರಿಯ ಜೆಡಿಎಸ್‌‍-ಬಿಜೆಪಿ ಮೈತ್ರಿ ಪರಿಣಾಮ ಬೀರಿದೆ. ಬಹುಶಃ ಅದು ಪರಿಣಾಮ ಬೀರುವುದಿಲ್ಲ ಎಂಬ ಅಂದಾಜಿನಲ್ಲಿ ಕಾಂಗ್ರೆಸಿಗರಿದ್ದೆವು. ಆದರೆ ಅದು ಹುಸಿಯಾಗಿದೆ ಎಂದರು. +ಚುನಾವಣಾ ಫಲಿತಾಂಶದ ಬಗ್ಗೆ ಮಾಧ್ಯಮಗಳ ಸಮೀಕ್ಷೆಯಷ್ಟೇ ಸುಳ್ಳಾಗಿಲ್ಲ. ಕಾಂಗ್ರೆಸ್ಸಿಗರ ಲೆಕ್ಕಾಚಾರವೂ ಹುಸಿಯಾಗಿದೆ. ಹೀಗಾಗಿ ಮಾಧ್ಯಮ ಹಾಗೂ ಕಾಂಗ್ರೆಸ್‌‍ ಎರಡೂ ಒಂದೇ ವೇದಿಕೆಯಲ್ಲಿದ್ದೇವೆ. ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಶ್ರಮ ಹಾಕಿದ್ದರೆ ಮತ್ತೆ ನಾಲ್ಕೈದು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿತ್ತು. 50 ಸಾವಿರ ಮತಗಳೊಳಗೆ ಸೋಲು ಕಂಡಿರುವ ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು ಎಂದರು. +ತುಮಕೂರಿನಲ್ಲಿ ನಮ ಕಾಂಗ್ರೆಸ್‌‍ ಅಭ್ಯರ್ಥಿ ಎಸ್‌‍.ಪಿ.ಮುದ್ದಹನುಮೇಗೌಡ 100 ಕ್ಕೆ 100 ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಫಲಿತಾಂಶ ಏರುಪೇರಾಗಿದೆ. ಹೀಗಾಗಿ ತಾವು ಮತ್ತು ಸಚಿವ ಕೆ.ಎನ್‌.ರಾಜಣ್ಣ ಪಕ್ಷದ ವರಿಷ್ಠರಿಗೆ ವಿವರಣೆ ಕೊಡುತ್ತೇವೆ ಎಂದು ಹೇಳಿದರು. +ಐತಿಹಾಸಿಕ ಲೋಕಸಭಾ ಚುನಾವಣೆಯನ್ನು ಇಡೀ ವಿಶ್ವವೇ ಗಮನಿಸುತ್ತಿತ್ತು. ಆಧುನಿಕ ಯುಗದಲ್ಲಿ ಪ್ರಜಾಪ್ರಭುತ್ವ ಸಿದ್ಧಾಂತದಡಿ ಜನ ಹೇಗೆ ಮತ ಚಲಾಯಿಸಿದ್ದಾರೆ ಎಂಬ ಕುತೂಹಲವಿತ್ತು. ರಾಜ್ಯ ಸೇರಿದಂತೆ ದೇಶದ ಜನ ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ಏಕಪಾಳಯದ ಒಲವು ವ್ಯಕ್ತವಾಗಲಿದೆ ಎಂದು ಬಿಂಬಿಸಲಾಗಿತ್ತು. ಇಂಡಿಯಾ ಮೈತ್ರಿಕೂಟ ಧೂಳೀಪಟವಾಗಲಿದೆ. ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವರದಿಗಳಿದ್ದವು. ಇದನ್ನು ಜನರ ತೀರ್ಪು ತಿರುವು ಮುರುವು ಮಾಡಿರುವುದು ಫಲಿತಾಂಶದಲ್ಲಿ ಕಂಡುಬಂದಿದೆ. +ಕಾಂಗ್ರೆಸ್‌‍ 99 ಸ್ಥಾನಗಳನ್ನು ಗೆದ್ದಿರುವುದಲ್ಲದೆ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷ ಗಟ್ಟಿಯಾಗಿ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ 10 ವರ್ಷ ಆಡಳಿತಕ್ಕೆ ಎಚ್ಚರಿಕೆಯ ಗಂಟೆ ನೀಡಿದ್ದು, ಸಂಪೂರ್ಣ ಬಹುಮತ ನೀಡಿಲ್ಲ. ಅವರೂ ಕೂಡ ಮೈತ್ರಿಕೂಟದ ಮೇಲೆಯೇ ಅವಲಂಬಿತವಾಗಿರುವ ಪರಿಸ್ಥಿತಿ ಬಂದಿದೆ. +ಮೈತ್ರಿಕೂಟ ಸರ್ಕಾರದ ರಚನೆಗೆ ನಾನಾ ರೀತಿಯ ಕಸರತ್ತುಗಳು ನಡೆಯುತ್ತಿವೆ. ಮೋದಿ ನೇತೃತ್ವದ ಸರ್ಕಾರ ಅಥವಾ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಯಾವುದು ರಚನೆಯಾಗಲಿದೆ ಎಂಬುದು ಕುತೂಹಲ ಇದೆ. ಈಗಲೂ ಇಂಡಿಯಾ ಕೂಟ ಸರ್ಕಾರ ರಚಿಸುವ ಸಾಧ್ಯತೆಯಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್‌ ಕುಮಾರ್‌ ನಮಗೆ ಬೆಂಬಲ ನೀಡಿದರೆ ಸರ್ಕಾರ ರಚಿಸಬಹುದು ಎಂದರು. +ಈ ಹಿಂದೆ ಬಿಜೆಪಿ ಅವರನ್ನು ಯಾವ ರೀತಿ ನಡೆಸಿಕೊಂಡಿತ್ತು ಎಂಬುದನ್ನು ಸರಿಸಿಕೊಂಡು ಅವರಿಬ್ಬರೂ ಮನಸ್ಸು ಬದಲಾಯಿಸಿದರೆ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ರಚನೆಯಾಗಲಿದೆ. ಪ್ರಧಾನಿ ಯಾರಾಗಲಿದ್ದಾರೆ ಎಂಬುದನ್ನು ಸದ್ಯಕ್ಕೆ ನಾವು ಹೇಳಲಾಗುವುದಿಲ್ಲ ಎಂದು ಹೇಳಿದರು. +ಕಾಂಗ್ರೆಸ್‌‍ನ ರಾಷ್ಟ್ರೀಯ ನಾಯಕರು ದೇಶದಾದ್ಯಂತ ಪಾದಯಾತ್ರೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು. ಮಲ್ಲಿಕಾರ್ಜುನ ಖರ್ಗೆಯವರು ಇಳಿವಯಸ್ಸಿನಲ್ಲೂ ದೇಶದೆಲ್ಲೆಡೆ ಪ್ರಚಾರ ನಡೆಸಿದರು. ಪ್ರಿಯಾಂಕ ಗಾಂಧಿ ಕೂಡ ಪ್ರಚಾರದಲ್ಲಿ ತೊಡಗಿಸಿಕೊಂಡರು.ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಎಲ್ಲೆಡೆ ಪ್ರವಾಸ ನಡೆಸಿದ್ದಲ್ಲದೆ, ಕಾರ್ಯಕರ್ತರೂ ಚುನಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು. \ No newline at end of file diff --git a/eesanje/url_46_121_4.txt b/eesanje/url_46_121_4.txt new file mode 100644 index 0000000000000000000000000000000000000000..cd89acde5962eb8da6854176c1fd533a6efaa148 --- /dev/null +++ b/eesanje/url_46_121_4.txt @@ -0,0 +1,5 @@ +ಪೊಲೀಸ್‌‍ ಕಸ್ಟಡಿ ಅವಧಿ ಮುಕ್ತಾಯ, ನಾಳೆ ಕೋರ್ಟ್ ಮುಂದೆ ಪ್ರಜ್ವಲ್‌ ರೇವಣ್ಣ ಹಾಜರು +ಬೆಂಗಳೂರು, ಜೂ. 4 –ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌‍ಐಟಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಬಂಧನಕ್ಕೊಳಗಾಗಿರುವ ಪ್ರಜ್ವಲ್‌ ಅವರ ಪೊಲೀಸ್‌‍ ಕಸ್ಟಡಿ ಅವಧಿ ನಾಳೆಗೆ ಮುಗಿಯಲಿರುವುದರಿಂದ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. +ಜರ್ಮನಿಯಿಂದ ಮೇ 31ರಂದು ಮಧ್ಯರಾತ್ರಿ ಬೆಂಗಳೂರಿಗೆ ಬಂದ ಪ್ರಜ್ವಲ್‌ ಅವರನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌‍ಐಟಿ ವಶಕ್ಕೆ ಪಡೆದು ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವರನ್ನು ನ್ಯಾಯಾಲಯ 6 ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದೆ. +ಪ್ರಜ್ವಲ್‌ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಕೆಲವೊಂದು ಪ್ರಶ್ನೆಗಳಿಗೆ ನಿರ್ಧಿಷ್ಟವಾದ ಉತ್ತರ ನೀಡಿಲ್ಲ ಎಂಬುದು ಗೊತ್ತಾಗಿದೆ.ಹೊಳೆನರಸಿಪುರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಕೇಳಲಾದ ಪ್ರಶ್ನೆಗಳಿಗೆ ಪ್ರಜ್ವಲ್‌ ಸೂಕ್ತ ಉತ್ತರ ನೀಡಿಲ್ಲ. ತಮ ಮನೆಕೆಲಸದಾಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಯಾರೆಂಬುದು ಗೊತ್ತಿಲ್ಲ, ನಮಗೆ ಅವರ ಪರಿಚಯವೇ ಇಲ್ಲ ಎಂದು ಉತ್ತರಿಸಿದ್ದಾರೆ. +ನಿಮ ತಾಯಿ ಇಲ್ಲದಿದ್ದಾಗ ನೀವು ಹೊಳೆನರಸೀಪುರದ ಮನೆಗೆ ಏಕೆ ಹೋಗುತ್ತಿದ್ದೀರಿ ಎಂದು ಎಸ್‌‍ಐಟಿ ಪ್ರಶ್ನಿಸಿದಾಗ ಮೌನವಾಗಿದ್ದಾರೆ. ಅಲ್ಲದೇ ಮೊಬೈಲ್‌ನಲ್ಲಿರುವ ಪೋಟೋಗಳನ್ನು ತೋರಿಸಿ ಇವರು ಯಾರೆಂದು ಕೇಳಿದರೆ ಅದಕ್ಕೂ ಸಹ ಉತ್ತರ ನೀಡಿಲ್ಲ ಎಂಬುದು ಗೊತ್ತಾಗಿದೆ. \ No newline at end of file diff --git a/eesanje/url_46_121_5.txt b/eesanje/url_46_121_5.txt new file mode 100644 index 0000000000000000000000000000000000000000..2f032e1da1c814706ba5e8d1e37cc5959543a5d1 --- /dev/null +++ b/eesanje/url_46_121_5.txt @@ -0,0 +1,6 @@ +ಬೆಳ್ಳಂಬೆಳಿಗ್ಗೆ ಕುಖ್ಯಾತ ರೌಡಿಶೀಟರ್‌ ಚೈಲ್ಡ್ ರವಿಯ ಬರ್ಬರ ಹತ್ಯೆ +ಹಾಸನ, ಜೂ. 5-ಬೆಳ್ಳಂಬೆಳಿಗ್ಗೆ ಕುಖ್ಯಾತ ರೌಡಿಶೀಟರ್‌ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ. +ಕುಡಿಯಲು ನೀರು ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ನಾಲ್ವರು ದುಷ್ಕರ್ಮಿಗಳು ಸಾರ್ವಜನಿಕರು ಓಡಾಡುತ್ತಿದ್ದ ಸಮಯದಲ್ಲೇ ಬೈಕಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿ ಮಚ್ಚಿನಿಂದ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ. +ವಾಯುವಿಹಾರ ಮಾಡುತ್ತಿದ್ದ ಜನರು ಶಾಲೆಗೆ ಹೋಗಲು ಬಸ್‌‍ಗಾಗಿ ಕಾಯುತ್ತಿದ್ದ ಮಕ್ಕಳು ಹಾಗೂ ಅಂಗಡಿಗಳಲ್ಲಿ ದಿನನಿತ್ಯ ವಸ್ತುಗಳನ್ನು ಖರೀದಿ ಮಾಡಲು ಜನರು ಬರುತ್ತಿದ್ದಾಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಈ ವೇಳೆ ಅದೇ ಸಮಯದಲ್ಲಿ ಶಾಲಾ ಬಸ್ಸೊಂದು ತೆರಳಿದ್ದು, ಅದರೊಳಗಿದ್ದ ಮಕ್ಕಳು ರಕ್ತವನ್ನು ಕಂಡು ಆಘಾತಕ್ಕೊಳಗಾಗಿದ್ದು, ಕೆಲ ಮಕ್ಕಳು ಜೋರಾಗಿ ಬಸ್‌‍ನಲ್ಲೇ ಚೀರಿದ್ದಾರೆ. +ಈ ಹಿಂದೆ ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಯಾರು ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿಲ್ಲ. +ಸುದ್ದಿ ತಿಳಿಯುತ್ತಿದ್ದಂತೆ ಪೆನ್ಷನ್‌ ಮೊಹಲ್ಲ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.ಶಾಸಕರ ನಿವಾಸದ ಕೂಗಳತೆ ದೂರದಲ್ಲೇ ಬೆಳ್ಳಂಬೆಳಿಗ್ಗೆ ಹತ್ಯೆ ನಡೆದಿರುವುದು ಇಡೀ ಬಡಾವಣೆಯ ಜನರನ್ನು ಬೆಚ್ಚಿಬೀಳಿಸಿದೆ. \ No newline at end of file diff --git a/eesanje/url_46_121_6.txt b/eesanje/url_46_121_6.txt new file mode 100644 index 0000000000000000000000000000000000000000..9e40045f1f5c539763967453851f56eed2417a9a --- /dev/null +++ b/eesanje/url_46_121_6.txt @@ -0,0 +1,5 @@ +ಉತ್ತರಖಾಂಡದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ 19 ಚಾರಣಿಗರ ರಕ್ಷಣೆಗೆ ಸರ್ಕಾರ ಯತ್ನ +ಬೆಂಗಳೂರು,ಜೂ.5-ಉತ್ತರಖಾಂಡದ ಶಾಸ್ತ್ರತಾಳ ಮಯಳಿಗೆಯಲ್ಲಿ ಪ್ರತಿಕೂಲ ವಾತಾವರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಚಾರಣಿಗರನ್ನು ಕರ್ನಾಟಕ ಸರ್ಕಾರ ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. +ಕರ್ನಾಟಕದ 19 ಚಾರಣಿಗರು ಹಾಗೂ ನಾಲ್ವರು ಮಾರ್ಗದರ್ಶಕರು ಉತ್ತರಖಾಂಡದ ಎತ್ತರದ ಶಾಸ್ತ್ರತಾಳ ಮಯಳಿಗೆ ಎಂಬ ಪ್ರದೇಶಕ್ಕೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಪ್ರತಿಕೂಲ ವಾತಾವರಣದಿಂದಾಗಿ ಈ ತಂಡ ಅಪಾಯದಲ್ಲಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ಬಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಚಾರಣಿಗರ ತಂಡದ ಕೆಲವರು ಕೊಖ್ಲಿ ಶಿಬಿರದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸಲು ನಾವು ಈಗಾಗಲೇ ಉತ್ತರಖಾಂಡ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯೊಂದಿಗೆ ಸಂಪರ್ಕದಲ್ಲಿರುವುದಾಗಿ ಅವರು ಹೇಳಿದ್ದಾರೆ. +ಭಾರತೀಯ ವಾಯುಪಡೆಯ ಹೆಲಿಕಾಫ್ಟರ್‌ ಚಾರಣಿಗರ ರಕ್ಷಣೆಗಾಗಿ ಇಂದು ಬೆಳಿಗ್ಗೆ ಉತ್ತರ ಕಾಶಿ ತಲುಪಿದೆ. ಅಲ್ಲದೆ, 20 ನಿರ್ವಹಣಾ ಪಡೆ ಭೂಮಾರ್ಗವಾಗಿ ಶಿಬಿರದ ಬಳಿಗೆ ತೆರಳುತ್ತಿದೆ. ಸಂಕಷ್ಟದಲ್ಲಿರುವ ಚಾರಣಿಗರನ್ನು ರಕ್ಷಿಸುವ ಎಲ್ಲಾ ಪ್ರಯತ್ನವನ್ನೂ ಪ್ರಾರಂಭಿಸಿರುವುದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_121_7.txt b/eesanje/url_46_121_7.txt new file mode 100644 index 0000000000000000000000000000000000000000..c7d32f6f00abac2a852b0740b19d2170dbd81c92 --- /dev/null +++ b/eesanje/url_46_121_7.txt @@ -0,0 +1,4 @@ +ಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು +ಚಿಕ್ಕಬಳ್ಳಾಪುರ, ಜೂ.5-ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ಅವರ ಚಿಕ್ಕಬಳ್ಳಾಪುರದ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ತಡರಾತ್ರಿ ನಡೆದಿದೆ. ನಗರದ ಬಿಬಿ ರಸ್ತೆಗೆ ಹೊಂದಿಕೊಂಡಂತಿರುವ ಕಂದವಾರ ರಸ್ತೆಯಲ್ಲಿನ ಶಾಸಕರ ಮನೆ ಮೇಲೆ ರಾತ್ರಿ ಸುಮಾರು 11.30ರ ಸಮಯದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದಾಗ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. +ಕಳೆದ ಒಂದು ವರ್ಷದಿಂದ ಶಾಂತವಾಗಿದ್ದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ನಿನ್ನೆ ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಶಾಸಕರು ಹಾಗೂ ನೂತನ ಸಂಸದರ ಬೆಂಬಲಿಗರ ಮಧ್ಯೆ ರಾಜಕೀಯ ದ್ವೇಷ ಆರಂಭಗೊಂಡಿದ್ದು, ಇದಕ್ಕೆ ಪ್ರಥಮವಾಗಿ ಶಾಸಕರ ನಿವಾಸದ ಮೇಲೆ ಕಲ್ಲು ತೂರಾಟವಾಗಿದೆ. +ಸುದ್ದಿ ತಿಳಿಯುತ್ತಿದ್ದಂತೆ ಇಂದು ಬೆಳಿಗ್ಗೆ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮನೆಯ ಸುತ್ತ ಪರಿಶೀಲನೆ ನಡೆಸಿ ನಂತರ ಮನೆಯಲ್ಲಿ ಸಿಸಿಟಿವಿಯಲ್ಲಿ ದಾಖಲಾಗಿರುವ ಪುಟೇಜ್‌ಗಳನ್ನು ಪರಿಶೀಲಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. \ No newline at end of file diff --git a/eesanje/url_46_121_8.txt b/eesanje/url_46_121_8.txt new file mode 100644 index 0000000000000000000000000000000000000000..ec03e8bee2b20deb1bc90b0499b94abb1f39ebbd --- /dev/null +++ b/eesanje/url_46_121_8.txt @@ -0,0 +1,5 @@ +ಲೋಕಸಭಾ ಚುನಾವಣೆ ಫಲಿತಾಂಶದಿಂದ ಜೆಡಿಎಸ್‌‍ ಪ್ರಾಬಲ್ಯ ಸಾಬೀತಾಗಿದೆ : ಶರವಣ +ಬೆಂಗಳೂರು,ಜೂ.5-ಪ್ರಸಕ್ತ ಲೋಕಸಭಾ ಚುನಾವಣೆ ಫಲಿತಾಂಶ ಜೆಡಿಎಸ್‌‍ ಮತ್ತೊಮೆ ಬಲಿಷ್ಠ ಪಕ್ಷ ಎನ್ನುವುದನ್ನು ಸಾಬೀತು ಮಾಡಿದೆ ಎಂದು ಜೆಡಿಎಸ್‌‍ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. +ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಮಾಜಿ ಪ್ರಧಾನಿ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ದೇಶದ ಜನತೆ ಮನ್ನಣೆ ನೀಡಿದ್ದಾರೆ. ಸತತ ಮೂರನೇ ಬಾರಿಗೆ ಎನ್‌ಡಿಎ ಗೆಲುವಿನ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ ಎಂದು ಹೇಳಿದ್ದಾರೆ. +ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಗೆ ರಾಜ್ಯದ ಜನತೆ ಈ ಚುನಾವಣೆ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೈತ್ರಿ ಒಂದು ಪ್ರಭಲ ರಾಜಕೀಯ ಶಕ್ತಿ ಎನ್ನುವುದು ಸಾಬೀತಾಗಿದೆ, ವಿಶೇಷವಾಗಿ ಇಡೀ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌‍ ಮತ್ತೆ ಪ್ರಾಬಲ್ಯ ಸಾಧಿಸಿ ಬಲಿಷ್ಠ ಪಕ್ಷವಾಗಿ ಹೊರಬಂದಿದೆ. +ಜೆಡಿಎಸ್‌‍ ಪಕ್ಷವನ್ನು ಮುಗಿಸುವ ಸಂಚು ವಿಲವಾಗಿದ್ದು, ಎರಡು ಸ್ಥಾನಗಳಲ್ಲಿ ಗೆದ್ದಿರುವ ಜೆಡಿಎಸ್‌‍ 9 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವಿಗೆ ಸಹಕಾರ ನೀಡಿದೆ.ರಾಷ್ಟ್ರ ರಾಜಕಾರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಾತೀತ ನಾಯಕರಾಗಿ ಹೊರ ಹೊಮಿದ್ದಾರೆ. ಮತ್ತೊಮೆ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌‍ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡರೂ ಹೆಚ್ಚಿನ ಸ್ಥಾನ ಗೆಲ್ಲಲು ಆಗಿಲ್ಲ, ಗ್ಯಾರಂಟಿ ಯೋಜನೆಗಳು ಫಲ ನೀಡಿಲ್ಲ ಎಂದು ಅವರು ಟೀಕಿಸಿದ್ದಾರೆ. \ No newline at end of file diff --git a/eesanje/url_46_121_9.txt b/eesanje/url_46_121_9.txt new file mode 100644 index 0000000000000000000000000000000000000000..1d09bcfbd0de8da4a5ffbb9f59c39b8090168aee --- /dev/null +++ b/eesanje/url_46_121_9.txt @@ -0,0 +1,4 @@ +ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ ನಿವೃತ್ತ ಐಎಎಸ್‌‍ ಅಧಿಕಾರಿ ಜಿ.ಕುಮಾರ್‌ ನಾಯಕ್‌ +ರಾಯಚೂರು,ಜೂ.4-ನಿವೃತ್ತ ಐಎಎಸ್‌‍ ಅಧಿಕಾರಿ ಜಿ.ಕುಮಾರ್‌ ನಾಯಕ್‌ ತಮ್ಮ ಮೊದಲ ಪ್ರಯತ್ನದಲ್ಲೇ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದಾರೆ. ಐಎಎಸ್‌‍ ಅಧಿಕಾರಿಯಾಗಿ ಹಲವಾರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಕುಮಾರ್‌ ನಾಯಕ್‌ ಸಾಕಷ್ಟು ಹೆಸರು ಮಾಡಿದ್ದರು. +ನಿವೃತ್ತಿಯ ಬೆನ್ನಲ್ಲೇ ಅಚ್ಚರಿ ಎಂಬಂತೆ ಕಾಂಗ್ರೆಸ್‌‍ನಿಂದ ಬಿ ಫಾರಂ ಪಡೆದುಕೊಂಡಿದ್ದರು.ರಾಯಚೂರು ಲೋಕಸಭೆ ಚುನಾವಣೆ ತೀವ್ರ ಕುತೂಹಲ ಕೆರಳಿಸಿತ್ತು. ಬಿಜೆಪಿ ಅಭ್ಯರ್ಥಿ ರಾಜ ಅಮರೇಶ್‌ ನಾಯ್ಕ ಅವರ ವಿರುದ್ಧ ಕುಮಾರ್‌ ನಾಯಕ್‌ಶೇ.52ರಷ್ಟು ಮತ ಪಡೆದುಕೊಂಡು ಆಯ್ಕೆಯಾಗಿದ್ದಾರೆ. +ರಾಯಚೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್‌‍ ಪಾಲಿಗೆ ಕಬ್ಬಿಣದ ಕಡಲೆಯಾಗಿತ್ತು. ಹಿರಿಯ ರಾಜಕಾರಣಿ ರಾಜ ಅಮರೇಶ್‌ ನಾಯಕ ಅವರನ್ನು ಸೋಲಿಸುವ ಸವಾಲನ್ನು ತೆಗೆದುಕೊಂಡು ಅಖಾಡಕ್ಕಿಳಿದ ಕುಮಾರ್‌ ನಾಯಕ್‌ ಕಾಂಗ್ರೆಸಿಗರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದರು. ಯಾವುದೇ ವಿವಾದಗಳಿಲ್ಲದೆ ಸರ್ಕಾರಿ ಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಕುಮಾರ್‌ ನಾಯಕ್‌ ಈಗ ರಾಜ್ಯ ರಾಜಕಾರಣದಲ್ಲಿ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. \ No newline at end of file diff --git a/eesanje/url_46_122_1.txt b/eesanje/url_46_122_1.txt new file mode 100644 index 0000000000000000000000000000000000000000..11b2c244bad4a9f858efffb076d3859d94af1bc6 --- /dev/null +++ b/eesanje/url_46_122_1.txt @@ -0,0 +1,9 @@ +ವಿ.ಸೋಮಣ್ಣ ಅವರ ಕೈ ಹಿಡಿದ ಕಲ್ಪತರು ನಾಡಿನ ಜನತೆ +ತುಮಕೂರು, ಜೂ. 4-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಸಚಿವ ವಿ. ಸೋಮಣ್ಣ ಅವರನ್ನು ಕಲ್ಪತರು ನಾಡಿನ ಮತದಾರರು ಆಶೀರ್ವದಿಸಿದ್ದಾರೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮನ ಗೆದ್ದಿದ್ದ ವಿ. ಸೋಮಣ್ಣನವರು ಪಕ್ಷದ ವರಿಷ್ಠರ ಮಾತಿಗೆ ಬೆಲೆಕೊಟ್ಟು ವರುಣಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹಾಗೂ ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್‌‍ನ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿದರು. ಆದರೆ ಅಲ್ಲಿ ಭಾರಿ ಹಿನ್ನಡೆಯಾಗಿ ಸೋಲು ಕಂಡಿದ್ದರು. +ಈ ಸಂದರ್ಭದಲ್ಲಿ ಪಕ್ಷದ ಹೈಕಮಾಂಡ್‌ ಆತಸ್ಥೈರ್ಯ ತುಂಬಿ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿ ಕಣ್ಣಕ್ಕಿಳಿಸಿತ್ತು.ತುಮಕೂರಿಗೂ ಹಾಗೂ ಸೋಮಣ್ಣ ಅವರಿಗೂ ಅವಿನಾಭ ಸಂಬಂಧವಿದ್ದು, ಕಾಂಗ್ರೆಸ್‌‍ನ ಅಭ್ಯರ್ಥಿ ಮುದ್ದಹನುಮೇಗೌಡರ ಪರವಾಗಿ ಸ್ಪರ್ಧಿಸಿ ಜಿಲ್ಲೆಯಾದ್ಯಂತ ಪ್ರತಿ ತಾಲೂಕು, ಹೋಬಳಿ, ಗ್ರಾಮಗಳಿಗೆ ಭೇಟಿ ನೀಡಿ ನಿಮ ಸೇವೆಗೆ ಒಂದು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು. +ಈ ವೇಳೆ ಹೊರಗಿನಿಂದ ಬಂದ ಸೋಮಣ್ಣ ನಮ ಕೈಗೆ ಸಿಕ್ತಾರ, ಅಭಿವೃದ್ಧಿ ಕೆಲಸ ಮಾಡುತ್ತಾರಾ ಎಂದು ವಿರೋಧಪಕ್ಷ ಕಾಂಗ್ರೆಸ್‌‍ ಅಪಪ್ರಚಾರ ಮಾಡಿತ್ತು. ಆದರೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಮಲಕ್ಕೆ ಮತ ನೀಡಿ ಆಯ್ಕೆ ಮಾಡಿದ್ದಾರೆ. +ಪ್ರಾರಂಭದಿಂದಲೂ 19 ರೌಂಡ್‌ಗಳಲ್ಲೂ ಮುದ್ದಹನುಮೇಗೌಡ ಅವರಿಗಿಂತ ಮುನ್ನಡೆ ಕಾಯ್ದುಕೊಂಡು ಬಂದಿದ್ದು, ವಿಜಯಲಕ್ಷ್ಮೀ ಸೋಮಣ್ಣ ಅವರಿಗೆ ಒಲಿದಿದ್ದಾಳೆ. ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕೇಂದ್ರದ ಮುಂಭಾಗ ಅಳವಡಿಸಲಾಗಿದ್ದ ಬೃಹತ್‌ ಎಲ್‌ಇಡಿ ಪರದೆಯ ಮೂಲಕ ಶಾಂತಚಿತ್ತವಾಗಿ ಪ್ರತಿ ರೌಂಡ್‌ನ ಫಲಿತಾಂಶವನ್ನು ಕುತೂಹಲದಿಂದ ಸೋಮಣ್ಣ ಅವರು ವೀಕ್ಷಿಸಿ ಗೆಲುವು ಸಾಧಿಸುತ್ತಿದ್ದಂತೆ ಅವರ ಮುಖವೂ ಕೂಡ ಕಮಲದಂತೆ ಅರಳಿತು. +ಸಚಿವರಿಗೆ ಮುಖಭಂಗ:ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದು, ಅವರಿಗೆ ಭಾರಿ ಮುಖಭಂಗವಾಗಿದೆ. ಶತಾಯಗತಾಯ ಕಾಂಗ್ರೆಸ್‌‍ ಅಭ್ಯರ್ಥಿ ಮುದ್ದಹನುಮೇಗೌಡ ಅವರನ್ನು ಗೆಲ್ಲಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಆಗಿರುವ ಜಿ. ಪರಮೇಶ್ವರ್‌ ಹಾಗೂ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಭಾರಿ ಕಸರತ್ತು ನಡೆಸಿದ್ದರು. +ಆದರೆ ಅವರ ಪ್ರಯತ್ನಗಳು ಫಲಕೊಡಲಿಲ್ಲ. ಮತದಾರರು ಜಿಲ್ಲೆಯಲ್ಲಿ ಮತ್ತೆ ಬಿಜೆಪಿಯ ಕೈಹಿಡಿದಿದ್ದಾರೆ. ಇಲ್ಲಿಯವರೆಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನಿಂದ ಬಂದು ಸ್ಪರ್ಧಿಸಿ ಗೆದ್ದವರಿಲ್ಲ. ಆದರೆ ಸೋಮಣ್ಣ ಅವರು ರಾಜಧಾನಿಯಿಂದ ಬಂದು ಜಯ ಸಾಧಿಸಿರುವುದು ಇತಿಹಾಸವಾಗಿದೆ. +ಸಂಭ್ರಮಾಚರಣೆ:ವಿ. ಸೋಮಣ್ಣ ಅವರು ಮುನ್ನಡೆ ಸಾಧಿಸುತ್ತಿದ್ದಂತೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಅದೇ ರೀತಿ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದಲ್ಲೂ ಸಹ ಕಾರ್ಯಕರ್ತರು ಪರಸ್ಪರ ಸಿಹಿ ತಿನಿಸಿ ಸಂಭ್ರಮಾಚರಣೆ ಮಾಡಿದರು. +ಕೃತಜ್ಞತೆ:ಹೊರಗಿನಿಂದ ಬಂದ ನನ್ನನ್ನು ಕ್ಷೇತ್ರದ ಮತದಾರರು ಗೆಲ್ಲಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. \ No newline at end of file diff --git a/eesanje/url_46_122_10.txt b/eesanje/url_46_122_10.txt new file mode 100644 index 0000000000000000000000000000000000000000..e69680e2adb2d0ba025d21a8a95cf0faf2ec8685 --- /dev/null +++ b/eesanje/url_46_122_10.txt @@ -0,0 +1,4 @@ +ಪರಿಷತ್‌ ಟಿಕೆಟ್ ಸಿಕ್ಕ ಖುಷಿಯಲ್ಲಿ ಕಣ್ಣೀರಿಟ್ಟ ಜವರಾಯಿಗೌಡ +ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್‌ ಚುನಾವಣೆಗೆ ತಮನ್ನು ಅಭ್ಯರ್ಥಿ ಮಾಡಿದ ದೇವೇಗೌಡರ ಕುಟುಂಬಕ್ಕೆ ಋಣಿಯಾಗಿರುವುದಾಗಿ ಜೆಡಿಎಸ್‌‍ ಮುಖಂಡ ಜವರಾಯಿಗೌಡ ಕಣ್ಣೀರು ಹಾಕಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009 ರಿಂದಲೂ ಯಶವಂತಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. 2013, 2014, 2023 ರ ಚುನಾವಣೆಗಳಲ್ಲಿ ಸೋಲು ಕಂಡಿದ್ದೇನೆ. ವಿಧಾನಪರಿಷತ್‌ಗೆ ಆಯ್ಕೆ ಮಾಡುವುದಾಗಿ ಕುಮಾರಸ್ವಾಮಿಯವರು ತಮಗೆ ಭರವಸೆ ನೀಡಿದ್ದರು. ಈಗ ಅದನ್ನು ಉಳಿಸಿಕೊಂಡಿದ್ದಾರೆ ಎಂದರು. +ಕಾರ್ಯಕರ್ತರ ಭಾವನೆಗಳಿಗೆ ಕುಮಾರಸ್ವಾಮಿ ಸ್ಪಂದಿಸಿದ್ದಾರೆ. ಪಕ್ಷಸಂಘಟನೆಯಲ್ಲಿ ನಾನು ಅವರ ಜೊತೆಗೆ ನಿಂತು ಕೆಲಸ ಮಾಡುತ್ತೇನೆ, ಶಕ್ತಿ ನೀಡುತ್ತೇನೆ. ಅವಕಾಶ ನೀಡಿದ ದೇವೇಗೌಡರು, ಕುಮಾರಸ್ವಾಮಿ, ಜಿ.ಟಿ.ದೇವೇಗೌಡರು ಪಕ್ಷದ ಎಲ್ಲಾ ಶಾಸಕರಿಗೂ ಧನ್ಯವಾದಗಳು ಎಂದು ಭಾವುಕರಾದರು. \ No newline at end of file diff --git a/eesanje/url_46_122_11.txt b/eesanje/url_46_122_11.txt new file mode 100644 index 0000000000000000000000000000000000000000..3df2456522930084222b839514b4d69e74b3ffdb --- /dev/null +++ b/eesanje/url_46_122_11.txt @@ -0,0 +1,5 @@ +“ಸಂಪುಟದಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಬ್ಲಾಕ್‌ಮೇಲ್‌ ಮಾಡಿದ್ದಾರೆ” +ಬೆಂಗಳೂರು, ಜೂ.3– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಹಿನ್ನೆಲೆಯಲ್ಲಿ ತಮನ್ನು ಸಚಿವ ಸಂಪುಟದಿಂದ ಸಭೆಯಿಂದ ವಜಾಗೊಳಿಸಿದರೆ ಉಳಿದವರ ಬಂಡವಾಳ ಬಯಲು ಮಾಡುವುದಾಗಿ ಬಿ.ನಾಗೇಂದ್ರ ಮುಖ್ಯಮಂತ್ರಿಯವರನ್ನು ಬ್ಲಾಕ್‌ಮೇಲ್‌ ಮಾಡಿದ್ದಾರೆ ಎಂದು ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮ ಆರೋಪವನ್ನು ಪುನರ್‌ ಉಚ್ಚರಿಸಿದ್ದಾರೆ. +ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದಲ್ಲಿ 187 ಕೋಟಿ ರೂ.ಗಳ ದೊಡ್ಡ ಮೊತ್ತದ ಹಗರಣ ನಡೆದಿದೆ. ಅಕ್ರಮವಾಗಿ ವರ್ಗಾವಣೆಯಾಗಿರುವ ಹಣ ತೆಲಂಗಾಣಕ್ಕೆ ಹೋಗಿದೆ. ಈ ಸಂಬಂಧಪಟ್ಟಂತೆ ನಾಗೇಂದ್ರ ಅವರ ರಾಜೀನಾಮೆ ಪಡೆಯುವ ತಾಕತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ ಎಂದೆನಿಸುತ್ತಿದೆ ಎಂದರು. +ನಾಗೇಂದ್ರ ಅವರ ಬ್ಲಾಕ್‌ಮೇಲ್‌ಗೆ ಹೆದರಿ ಸಿದ್ದರಾಮಯ್ಯ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಅವರು ಹೇಳಿದರು.ಮುಂದಿನ ದಿನಗಳಲ್ಲಿ ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕನನ್ನಾಗಿ ಯಾರನ್ನು ಆಯ್ಕೆ ಮಾಡುತ್ತಾರೋ ಗೊತ್ತಿಲ್ಲ. ಸಿ.ಟಿ.ರವಿ ಸೇರಿದಂತೆ ಅನೇಕರು ಸಮರ್ಥರಿದ್ದಾರೆ. ಆದರೆ ಅಂತಿಮ ತೀರ್ಮಾನವನ್ನು ಪಕ್ಷ ತೆಗೆದುಕೊಳ್ಳಲಿದೆ ಎಂದರು. +ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ತಿಳಿಸಿದೆ. ನರೇಂದ್ರಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ. ಸಮೀಕ್ಷೆಗಳು ಸರಿಯಾಗಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. \ No newline at end of file diff --git a/eesanje/url_46_122_12.txt b/eesanje/url_46_122_12.txt new file mode 100644 index 0000000000000000000000000000000000000000..d5d3906e9b46a36666fb5a1778ebfbf9269ae680 --- /dev/null +++ b/eesanje/url_46_122_12.txt @@ -0,0 +1,9 @@ +ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ +ಬೆಂಗಳೂರು, ಜೂ.3-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. +ಸಚಿವ ನಾಗೇಂದ್ರ ಅವರು ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಪಡೆಯುತ್ತಿಲ್ಲ ಎಂದು ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ್‌‍ ಅವರ ಹೇಳಿಕೆಗೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಯಾವ ಬೆದರಿಕೆಗಳೂ ಇಲ್ಲ. ನಾವು ರಾಜೀನಾಮೆ ಕೇಳಿಯೇ ಇಲ್ಲ ಎಂದರು. +ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್‌‍ಐಟಿ ರಚನೆ ಮಾಡಲಾಗಿದೆ. ಇನ್ನೂ ಯಾವುದೇ ವರದಿ ಬಂದಿಲ್ಲ. ಪ್ರಾಥಮಿಕ ವರದಿ ಬರಲಿ. ಅದರಲ್ಲಿ ಏನಿರುತ್ತದೆ ಎಂದು ನೋಡಿದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾಗೇಂದ್ರ ಅವರಿಂದ ತಾವು ಯಾವುದೇ ವಿವರಣೆ ಕೇಳಿಲ್ಲ, ವರದಿ ಬರುವವರೆಗೂ ಕಾಯುತ್ತೇವೆ ಎಂದರು. +ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ.6ರವರೆಗೆ ಗಡುವು ನೀಡುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಅವರ್ಯಾರು ನಮಗೆ ಗಡುವು ನೀಡಲು? ಎಂದು ಪ್ರಶ್ನಿಸಿದರು.ವಿರೋಧಪಕ್ಷಗಳಿರುವುದೇ ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು. ಆದರೆ ಸುಳ್ಳು ಹೇಳಿಕೊಂಡು ಹೋರಾಟ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು. +ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಬಗ್ಗೆ ರಾಹುಲ್‌ಗಾಂಧಿಯವರು ಈಗಾಗಲೇ ಪ್ರತಿಕ್ರಿಯಿಸಿದ್ದಾರೆ. ಅದು ನರೇಂದ್ರ ಮೋದಿಯವರ ಮಾಧ್ಯಮ ಸಮೀಕ್ಷೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್‌‍ ಕನಿಷ್ಠ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ. ಸಮೀಕ್ಷೆಯನ್ನು ನಾವು ತಳ್ಳಿಹಾಕುತ್ತೇವೆ ಎಂದು ಹೇಳಿದರು. +ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ 11 ಸದಸ್ಯರ ಪೈಕಿ ಕಾಂಗ್ರೆಸ್‌‍ನ 7 ಅಭ್ಯರ್ಥಿಗಳಿಂದ ನಾಮಪತ್ರ ಹಾಕಿಸಿದ್ದೇವೆ. ಪ್ರತಿ ಅಭ್ಯರ್ಥಿಗೂ 19 ರಿಂದ 20 ಮತಗಳು ಬೇಕಾಗುತ್ತದೆ. ನಮ ಸಂಖ್ಯಾಬಲದ ಆಧಾರದ ಮೇಲೆ ನಾವು ಏಳನ್ನೂ ಸುಲಭವಾಗಿ ಗೆಲ್ಲುತ್ತೇವೆ. +ಬಿಜೆಪಿ 3, ಜೆಡಿಎಸ್‌‍ನ ಒಬ್ಬರು ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. 11 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದೇ ಇದ್ದರೆ ಚುನಾವಣೆ ನಡೆಯುವುದಿಲ್ಲ. ಅವಿರೋಧ ಆಯ್ಕೆಯಾಗುತ್ತದೆ. ಚುನಾವಣೆ ನಡೆದರೂ ನಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +8ನೇ ಅಭ್ಯರ್ಥಿಗಯನ್ನು ಕಣಕ್ಕಿಳಿಸುವ ಸಾಧ್ಯತೆಗಳಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಮುಂಗಾರು ಮಳೆ ಪ್ರಾರಂಭವಾಗಿದೆ. ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆದರೂ ಮರ ಬೀಳುವುದು, ರಸ್ತೆಯಲ್ಲಿ ನೀರು ನಿಲ್ಲುವುದು ಸಾಮಾನ್ಯವಾಗಿದೆ. ರಸ್ತೆಗುಂಡಿಗಳನ್ನು ಮುಚ್ಚಲು ಈ ತಿಂಗಳ ಅಂತ್ಯದವರೆಗೂ ಗಡುವು ನೀಡಲಾಗಿದೆ ಎಂದರು. \ No newline at end of file diff --git a/eesanje/url_46_122_2.txt b/eesanje/url_46_122_2.txt new file mode 100644 index 0000000000000000000000000000000000000000..e2522997c75f71b5d0df848094772089cef50580 --- /dev/null +++ b/eesanje/url_46_122_2.txt @@ -0,0 +1,7 @@ +ಡಿಕೆ ಬ್ರದರ್ಸ್‌ಗೆ ಶಾಕ್, ಬೆಂಗಳೂರು ಗ್ರಾಮಾಂತರದಲ್ಲಿ ‘ಹೃದಯ’ವಂತ ಮಂಜುನಾಥ್ ಭರ್ಜರಿ ಗೆಲುವು +ಬೆಂಗಳೂರು,ಜೂ.4-ಜಿದ್ದಾಜಿದ್ದಿನ ರಣಕಣ ಎಂದೇ ಪರಿಗಣಿಸಲಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸಹೋದರರ ಸವಾಲು ಮೆಟ್ಟಿ ನಿಂತು ಗೆಲುವ ಸಾಧಿಸುವಲ್ಲಿ ಹೃದಯವಂತ ಡಾ.ಮಂಜುನಾಥ್‌ ಯಶಸ್ವಿಯಾಗಿದ್ದಾರೆ.ಒಟ್ಟು ಚಲಾವಣೆಯಾಗಿದ್ದ 1914030 ಮತಗಳಲ್ಲಿ ಡಾ.ಮಂಜುನಾಥ್‌ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. +ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿದ್ದಾರೆ. ವೈದ್ಯಕೀಯ ವೃತ್ತಿಯಿಂದ ನಿವೃತ್ತಿ ಪಡೆದ ನಂತರ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಅಳಿಯ ಡಾ.ಮಂಜುನಾಥ್‌ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. +ದೇವೇಗೌಡರ ಕುಟುಂಬ ಹಾಗೂ ಡಿಕೆ ಸಹೋದರರ ನಡುವಿನ ಕಾಳಗ ಎಂದೇ ಬಿಂಬಿತವಾಗಿದ್ದ ಗ್ರಾಮಾಂತರ ಕ್ಷೇತ್ರದಲ್ಲಿ ಎರಡು ಕಡೆಯವರು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದ ಕಾರಣ ಈ ಕ್ಷೇತ್ರ ರಣಕಣವಾಗಿ ಮಾರ್ಪಾಡಾಗಿತ್ತು. +ಮಂಡ್ಯ ಮತ್ತು ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡರೆ ತನ್ನ ವರ್ಚಸ್ಸು ವೃದ್ದಿಸುವುದರ ಜೊತೆಗೆ ಮುಖ್ಯಮಂತ್ರಿ ಪಟ್ಟಕ್ಕೆರಲು ಅನುಕೂಲವಾಗಲಿದೆ ಎಂಬ ದೃಷ್ಟಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ ಸಹೋದರನ ಗೆಲುವಿಗೆ ಪಣ ತೊಟ್ಟಿದ್ದರು. +ಆದರೆ ಕ್ಷೇತ್ರದಲ್ಲಿ ಸಹೋದರರ ಸವಾಲನ್ನು ಮೆಟ್ಟಿ ನಿಲ್ಲಬೇಕು ಎಂದು ಹಠ ಹಿಡಿದಿದ್ದ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ವೈದ್ಯರಾಗಿ ನಾಡಿನಲ್ಲಿ ಮನೆ ಮಾತಾಗಿದ್ದ ಮಂಜುನಾಥ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. +ಹೀಗಾಗಿ ಬೆಂಗಳೂರು ಗ್ರಾಮಾಂತರ ಕ್ಷೇತದ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿತ್ತು. ಸೋಲು ಗೆಲುವಿಗಾಗಿ ಕೋಟ್ಯಾಂತರ ರೂ.ಬೆಟ್ಟಿಂಗ್‌ ಕಟ್ಟಿಕೊಳ್ಳಲಾಗಿತ್ತು. ಇಲ್ಲಿ ಯಾರೇ ಗೆದ್ದರೂ ಬೆರಳೇಣಿಕೆ ಮತಗಳ ಅಂತರ ಎಂದೇ ಎಲ್ಲರೂ ಭಾವಿಸಿದ್ದರೂ ಆದರೆ, ಈ ಎಲ್ಲ ಅಂತೆ-ಕಂತೆಗಳಿಗೆ ಮುಕ್ತಿ ಹಾಡಿರುವ ಇಲ್ಲಿನ ಮತದಾರರು ಮಂಜುನಾಥ್‌ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. \ No newline at end of file diff --git a/eesanje/url_46_122_3.txt b/eesanje/url_46_122_3.txt new file mode 100644 index 0000000000000000000000000000000000000000..73c60f6b9baddacdb1792cf6841b98e14e061ffc --- /dev/null +++ b/eesanje/url_46_122_3.txt @@ -0,0 +1,8 @@ +ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಶಸ್ವಿ +ಬೆಂಗಳೂರು,ಜೂ.4-ಕಾಂಗ್ರೆಸ್‌‍ನ ಗ್ಯಾರಂಟಿಗಳ ನಡುವೆಯೂ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಡುವಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಶಸ್ವಿಯಾಗಿದ್ದು, ಕುರ್ಚಿಯನ್ನು ಗಟ್ಟಿಗೊಳಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಭಾರೀ ಮುಖಭಂಗ ಅನುಭವಿಸಿದ್ದ ಬಿಜೆಪಿ ಆರು ತಿಂಗಳ ನಂತರ ರಾಜ್ಯಾಧ್ಯಕ್ಷರ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರಗೆ ನೀಡಿದ್ದರು. +ಸೋತು ಸುಣ್ಣವಾಗಿದ್ದ ಪಕ್ಷವನ್ನು ಮುನ್ನಡೆಸುವ ಸವಾಲಿದ್ದ ವಿಜಯೇಂದ್ರ ಪ್ರಾರಂಭದಲ್ಲಿ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆಗೆ ಮುನ್ನಡೆಸುವ ಜವಾಬ್ದಾರಿಯನ್ನು ತೆಗೆದುಕೊಂಡರು. ಒಂದು ಕಡೆ ಕಾಂಗ್ರೆಸ್‌‍ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ಜನರ ಒಲವು ಗಳಿಸುವತ್ತ ಮುನ್ನಡೆಯುತ್ತಿರುವಾಗ ವಿಜಯೇಂದ್ರಗೆ ಪಕ್ಷದೊಳಗೆ ಸಾಕಷ್ಟು ಸವಾಲುಗಳು ಎದುರಾಗಿದ್ದವು. +ಇಂಥ ಸಂದರ್ಭದಲ್ಲೇ ಬೆಟ್ಟದಷ್ಟು ಸವಾಲಿನಂತಿದ್ದ ಲೋಕಸಭೆ ಚುನಾವಣೆಯಲ್ಲಿ 16 ಸ್ಥಾನಗಳನ್ನು ಗೆದ್ದಿರುವುದು ಸುಲಭದ ಮಾತಲ್ಲ. ಕಳೆದ ಬಾರಿ ಪ್ರಧಾನಿ ನರೇಂದ್ರಮೋದಿ ಅಲೆಯಲ್ಲಿ 25 ಸ್ಥಾನಗಳನ್ನು ಗೆದ್ದಿತ್ತಾದರೂ ಈ ಬಾರಿ ಕನಿಷ್ಟಪಕ್ಷ 18 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕೇಂದ್ರ ವರಿಷ್ಠರು ನೀಡಿದ್ದರು. +ಬಿಜೆಪಿಗೆ ಬೆನ್ನೆಲುಬಾಗಿ ನಿಂತಿದ್ದ ವೀರಶೈವ ಲಿಂಗಾಯಿತ ಸಮುದಾಯವನ್ನು ತನ್ನತ್ತ ಸೆಳೆಯುವಲ್ಲಿ ಅವರ ತಂದೆ ಯಡಿಯೂರಪ್ಪನವರ ಮಾರ್ಗದರ್ಶನದಂತೆ ಪಕ್ಷವನ್ನು ಮುನ್ನಡೆಸಿಕೊಂಡರು. +ಪಕ್ಷದಿಂದ ದೂರವಾಗಿದ್ದ ಜಗದೀಶ್‌ ಶೆಟ್ಟರ್‌ ಹಾಗೂ ಕೆಳಹಂತದ ನಾಯಕನನ್ನು ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾದರು. ವೀರಶೈವ ಲಿಂಗಾಯಿತ ಸಮುದಾಯಕ್ಕೆ ಒಬ್ಬ ಪ್ರಬಲ ನಾಯಕನ ಅಗತ್ಯ ಇರುವಾಗಲೇ ವಿಜಯೇಂದ್ರ ಅವರಲ್ಲಿ ಅದನ್ನು ಸಮುದಾಯ ಕಂಡುಕೊಂಡಿರುವುದು ಫಲಿತಾಂಶದಿಂದಲೇ ಸ್ಪಷ್ಟವಾಗಿದೆ. +ಕಾಂಗ್ರೆಸ್‌‍ನ ಪ್ರಬಲ ನಾಯಕತ್ವದ ನಡುವೆಯೂ ಬಿಜೆಪಿಗೆ 16 ಸ್ಥಾನ ಬಂದಿದೆ ಎಂದರೆ ಸಾಮಾನ್ಯ ಮಾತಲ್ಲ. ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದು ಕಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಂತಹ ಪ್ರಬಲ ನಾಯಕತ್ವದ ನಡುವೆಯೂ ಬಿಜೆಪಿ ಜಯಗಳಿಸಿರುವುದು ವಿಜಯೇಂದ್ರ ಅವರ ನಾಯಕತ್ವಕ್ಕೆ ಸಿಕ್ಕ ಮನ್ನಣೆ ಎಂದು ಹೇಳಲಾಗುತ್ತಿದೆ. +20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿತ್ತಾದರೂ ಸದ್ಯ ಬಿಜೆಪಿ ಇಷ್ಟು ಸ್ಥಾನವನ್ನು ಗೆದ್ದಿರುವುದರ ಹಿಂದೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಪರಿಶ್ರಮ ಇದೆ ಎಂಬುದನ್ನು ಪಕ್ಷದವರು ಒಪ್ಪಿಕೊಳ್ಳುತ್ತಾರೆ. \ No newline at end of file diff --git a/eesanje/url_46_122_4.txt b/eesanje/url_46_122_4.txt new file mode 100644 index 0000000000000000000000000000000000000000..51df68d007b4b41885fadc470508284cb97ba07c --- /dev/null +++ b/eesanje/url_46_122_4.txt @@ -0,0 +1,6 @@ +ಲೋಕಸಭೆ ಚುನಾವಣೆ : ಗೆಲುವು ಸಾಧಿಸಿದ ಮೂವರು ಮುಖ್ಯಮಂತ್ರಿಗಳು +ಬೆಂಗಳೂರು,ಜೂ.4-ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ(ಮಂಡ್ಯ), ಜಗದೀಶ್‌ ಶೆಟ್ಟರ್‌(ಬೆಳಗಾವಿ), ಬಸವರಾಜ ಬೊಮಾಯಿ(ಹಾವೇರಿ) ಅವರು ಜಯಗಳಿಸಿದ್ದಾರೆ. ಅದರಲ್ಲೂ ಸಕ್ಕರೆ ಜಿಲ್ಲೆ ಮಂಡ್ಯದಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ದಾಖಲೆಯ ಮತಗಳ ಅಂತರದಿಂದ ಗೆದ್ದಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಜೆಡಿಎಸ್‌‍ ಈ ಬಾರಿ ಜಿಲ್ಲೆಯಲ್ಲಿ ಏಳು ಶಾಸಕರಿದ್ದರೂ ಎಲ್ಲವನ್ನೂ ಮೆಟ್ಟಿ ಜೆಡಿಎಸ್‌‍ ಅಧಿಪತ್ಯ ಸಾಧಿಸಿರುವುದು ದಳಪತಿಗಳಿಗೆ ಹೊಸ ಟಾಕಿನ್‌ ನೀಡದಂತಾಗಿದೆ.2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಸ್ಪರ್ಧಿಸಿದ್ದರು. ಈ ಬಾರಿ ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕಿಳಿದಿದ್ದರು. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಂಟಾದ ಸೋಲಿನ ಅನುಕಂಪ ಈ ಬಾರಿ ಜೆಡಿಎಸ್‌‍ನ ಕೈ ಹಿಡಿದಿರುವುದು ಸ್ಪಷ್ಟವಾಗಿದೆ. ಜೆಡಿಎಸ್‌‍ ಅಭ್ಯರ್ಥಿ ಕುಮಾರಸ್ವಾಮಿ ಕಾಂಗ್ರೆಸ್‌‍ಗಿಂತ ಹೆಚ್ಚಿನ ಮತಗಳನ್ನು ಗಳಿಸಿದ್ದಾರೆ.ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಸಿಗದೆ ಕಾಂಗ್ರೆಸ್‌‍ನಿಂದ ಸ್ಪರ್ಧಿಸಿ ಸೋತ್ತಿದ್ದ ಜಗದೀಶ್‌ ಶೆಟ್ಟರ್‌ ಕೊನೆ ಕ್ಷಣದಲ್ಲಿ ಬಿಜೆಪಿ ಸೇರಿದ್ದು ಫಲ ಕೊಟ್ಟಿದೆ. +ತವರು ಕ್ಷೇತ್ರ ಧಾರವಾಡ ಬಿಟ್ಟು ಬೆಳಗಾವಿಗೆ ವಲಸೆ ಹೋಗಿದ್ದ ಶೆಟ್ಟರ್‌ಗೆ ಪ್ರಾರಂಭದಲ್ಲಿ ಹಿನ್ನಡೆಯಾದರೂ ಎಲ್ಲವನ್ನು ಮೀರಿ ಗೆಲ್ಲುವ ಮೂಲಕ ಬಿಜೆಪಿ ಭದ್ರಕೋಟೆಯನ್ನು ಉಳಿಸಿದ್ದಾರೆ. +ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ಪ್ರಭಾವಿ ಸಚಿವೆಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ತಮ ಪುತ್ರ ಮೃಣಾಳ್‌ ಹೆಬ್ಬಾಳ್ಕರ್‌ ಅವರನ್ನು ಕಣಕ್ಕಿಳಿಸಿದ್ದರು. ಜಿಲ್ಲೆಯಲ್ಲಿ ಹಿಂದುತ್ವ ಮತ್ತು ಮರಾಠಿ ಮತಗಳು ಮತ್ತು ನರೇಂದ್ರಮೋದಿ ಅಲೆ ಜಗದೀಶ್‌ ಶೆಟ್ಟರ್‌ ಅವರನ್ನು ದಡ ಸೇರಿಸಿದೆ. ವಲ್ಲದ ಮನಸ್ಸಿನಿಂದಲೇ ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಕೂಡ ಗೆಲುವು ಸಾಧಿಸಿದ್ದಾರೆ. \ No newline at end of file diff --git a/eesanje/url_46_122_5.txt b/eesanje/url_46_122_5.txt new file mode 100644 index 0000000000000000000000000000000000000000..596efe357daa406df89d56ea96b3b0beebf7957d --- /dev/null +++ b/eesanje/url_46_122_5.txt @@ -0,0 +1,6 @@ +ಮಂಡ್ಯದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಹೆಚ್ಡಿಕೆ ಗೆಲುವು +ಬೆಂಗಳೂರು,ಜೂ.4-ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎರಡೂವರೆ ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಮಂಡ್ಯ ಜೆಡಿಎಸ್‌‍ನ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ್ದಾರೆ. +ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರನ್ನು ಪರಾಭವಗೊಳಿಸಿದ್ದಾರೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ ಒಂದು ಕ್ಷೇತ್ರದಲ್ಲಷ್ಟೇ ಜೆಡಿಎಸ್‌‍ ಜಯ ಗಳಿಸಿತ್ತು. ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಜಯ ಗಳಿಸುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪ್ರಾಬಲ್ಯ ಮೆರೆದಿತ್ತು. +ಕೇವಲ ಒಂದೇ ವರ್ಷದಲ್ಲಿ ಜನಾದೇಶ ಬದಲಾಗಿದ್ದು, ಕಾಂಗ್ರೆಸ್‌‍ ಬದಲಾಗಿ ಜೆಡಿಎಸ್‌‍ಗೆ ಒಲವು ತೋರಿದ್ದಾರೆ. ತೀವ್ರ ಹಣಾಹಣಿ ಏರ್ಪಟ್ಟಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌‍ನ್ನು ಜನರು ಕೈ ಹಿಡಿದಿಲ್ಲ. ಮತ್ತೆ ಜೆಡಿಎಸ್‌‍ಗೆ ಮನ್ನಣೆ ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ಮೈತ್ರಿಯಾಗಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದವು. ಈ ಕ್ಷೇತ್ರದಲ್ಲಿ ಪಕ್ಷೇತರ ಅ ಭ್ಯರ್ಥಿ ಸುಮಲತಾ ಜಯಗಳಿಸಿದ್ದರು. + +ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದು ಫಲ ನೀಡಿದೆ. ನಿರೀಕ್ಷೆಗೂ ಮೀರಿದ ಬೆಂಬಲ ಎನ್‌ಡಿಎ ಮೈತ್ರಿಕೂಟಕ್ಕೆ ದೊರೆತಿರುವುದು ಇದರಿಂದ ಸಾಬೀತಾದಂತಾಗಿದೆ. ಜೆಡಿಎಸ್‌‍ನ ಮಾಜಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ನಡೆಸಿದ ಸಂಘಟಿತ ಹೋರಾಟ ಫಲ ನೀಡಿದ್ದು, ಜೆಡಿಎಸ್‌‍ ಮಂಡ್ಯ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದೆ. \ No newline at end of file diff --git a/eesanje/url_46_122_6.txt b/eesanje/url_46_122_6.txt new file mode 100644 index 0000000000000000000000000000000000000000..f8f042e0c12add83b9a7390408fe5a00785e9b4b --- /dev/null +++ b/eesanje/url_46_122_6.txt @@ -0,0 +1,3 @@ +ಸುರಪುರ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್‌‍ ಅಭ್ಯರ್ಥಿ ವೇಣುಗೋಪಾಲ ನಾಯಕ್‌ ಮುನ್ನಡೆ +ಸುರಪುರ ಜೂ. 4-ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಲಿತಾಂಶದ ಮತ ಎಣಿಕೆ ಆರಂಭಗೊಂಡಿದ್ದು, ಕಾಂಗ್ರೆಸ್‌‍ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್‌ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರು ಐದೂ ಸುತ್ತಿನಲ್ಲೂ ಹಿನ್ನಡೆ ಅನುಭವಿಸಿದ್ದಾರೆ. +ಕಾಂಗ್ರೆಸ್‌‍ ಮತ್ತು ಬಿಜೆಪಿಯ ಅಭ್ಯರ್ಥಿ ನಡುವೆ ನೇರ ಹಣಾಹಣಿ ನಡೆದಿದ್ದು, 5ನೇ ಸುತ್ತಿನ ಮತ ಏಣಿಕೆಯ ವೇಳೆಗೆ ಕಾಂಗ್ರೆಸ್‌‍ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ್‌ ಅವರು 6000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. \ No newline at end of file diff --git a/eesanje/url_46_122_7.txt b/eesanje/url_46_122_7.txt new file mode 100644 index 0000000000000000000000000000000000000000..cc8ab71a7f73e85c04b3e51f1ead335e1490f151 --- /dev/null +++ b/eesanje/url_46_122_7.txt @@ -0,0 +1,9 @@ +ವಿಧಾನಪರಿಷತ್‌ ಚುನಾವಣೆ : ಮೂರೂ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ +ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್‌‍, ಬಿಜೆಪಿ ಹಾಗೂ ಜೆಡಿಎಸ್‌‍ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಹಣಾಹಣಿಗೆ ವೇದಿಕೆ ಸಿದ್ಧಗೊಂಡಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದರಿಂದ ಕಾಂಗ್ರೆಸ್‌‍, ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳು ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. +ಕಾಂಗ್ರೆಸ್‌‍ ಅಭ್ಯರ್ಥಿಗಳು ಪ್ರತ್ಯೇಕವಾಗಿ ಉಮೇದುವಾರಿಕೆ ಮಾಡಿದರೆ ಬಿಜೆಪಿ-ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಜೊತೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ಒಂದು ವೇಳೆ ಯಾವುದೇ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡದಿದ್ದರೆ ಕಣದಲ್ಲಿರುವ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. +ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಗತ್ಯಬಿದ್ದರೆ ಜೂ.13ರಂದು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 4 ಗಂಟೆವರೆಗೂ ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.ಪಕ್ಷೇತರ ಅಭ್ಯರ್ಥಿಗಳ ನಾಮಪತ್ರಕ್ಕೆ ಸೂಚಕರಾಗಿ 10 ಶಾಸಕರು ಸಹಿ ಹಾಕಬೇಕು. ಒಂದು ವೇಳೆ ಯಾರ ಸಹಿಯೂ ಇಲ್ಲದಿದ್ದರೆ ನಾಮಪತ್ರ ತಿರಸ್ಕೃತವಾಗಲಿದೆ. +ನಾಮಪತ್ರ ಸಲ್ಲಿಕೆ:ಇದಕ್ಕೂ ಮುನ್ನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನದವರೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ವಿಧಾನಸೌಧಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಮೊದಲು ಕಾಂಗ್ರೆಸ್‌‍ನ 7 ಅಭ್ಯರ್ಥಿಗಳಾದ ಎನ್‌‍.ಎಸ್‌‍. ಬೋಸರಾಜು, ವಸಂತ್‌ಕುಮಾರ್‌, ಡಾ.ಯತೀಂದ್ರ, ಕೆ.ಗೋವಿಂದರಾಜ್‌, ಐವನ್‌ ಡಿಸೋಜಾ, ಬಿಲ್ಕಿಸ್‌‍ ಬಾನೋ, ಜಗದೇವ್‌ ಗುತ್ತೇದಾರ್‌ ಅವರುಗಳು ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಉಮೇದುವಾರಿಕೆ ಮಾಡಿದರು. +ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರು ಹಾಜರಿದ್ದರು. ಇನ್ನು ಬಿಜೆಪಿಯಿಂದ ಸಿ.ಟಿ.ರವಿ, ಎನ್‌.ರವಿಕುಮಾರ್‌ ಹಾಗೂ ಎಂ.ಜಿ.ಮುಳೆ ಅವರು ನಾಮಪತ್ರ ಸಲ್ಲಿಸಿದ್ದಾರೆ. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಬಸವರಾಜ ಬೊಮಾಯಿ, ಡಿ.ವಿ.ಸದಾನಂದಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಶಾಸಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್‌ ನೀಡಿದರು. ಜೆಡಿಎಸ್‌‍ನಿಂದ ಹಿರಿಯ ಮುಖಂಡ ಜವರಾಯಗೌಡ ಅವರು ಉಮೇದುವಾರಿಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು. +ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್‌‍ 1 ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 19 ಮತಗಳನ್ನು ಪಡೆಯಬೇಕು. +ವಿಧಾನಪರಿಷತ್‌ ಸದಸ್ಯರಾದ ಅರವಿಂದ್‌ಕುಮಾರ್‌ ಅರಳಿ, ಎನ್‌‍.ಎಸ್‌‍.ಬೋಸರಾಜು, ಕೆ.ಗೋವಿಂದರಾಜ್‌, ಡಾ. ತೇಜಸ್ವಿನಿ ಗೌಡ, ಮುನಿರಾಜು ಗೌಡಪಿ.ಎಂ, ಕೆ.ಪಿ.ನಂಜುಂಡಿ ವಿಶ್ವಕರ್ಮ ಬಿ.ಎಂ.ಫಾರೂಕ್‌, ರಘುನಾಥ ರಾವ್‌ ಮಲ್ಕಾಪುರೆ, ಎನ್‌. ರವಿ ಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರ ಅಧಿಕಾರಾವಧಿ ಮುಕ್ತಾಯವಾಗಲಿದ್ದು, ತೆರವಾಗಲಿರುವ ಈ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದರಲ್ಲಿ ಎನ್‌.ಎಸ್‌‍.ಬೋಸರಾಜ್‌, ಗೋವಿಂದರಾಜ್‌, ಎನ್‌.ರವಿಕುಮಾರ್‌ ಪುನಃ ಸ್ಪರ್ಧಿಸಿದ್ದಾರೆ. \ No newline at end of file diff --git a/eesanje/url_46_122_8.txt b/eesanje/url_46_122_8.txt new file mode 100644 index 0000000000000000000000000000000000000000..f60b7021bad8add5717e4dddb0109c08d5577c06 --- /dev/null +++ b/eesanje/url_46_122_8.txt @@ -0,0 +1,4 @@ +ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಹೈಕೋರ್ಟ್‌ ಮೊರೆ +ಬೆಂಗಳೂರು, ಜೂ.3-ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣರ ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಸೆಷನ್‌ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. +ಎಸ್‌‍ಐಟಿ ಜಾರಿ ಮಾಡಿರುವ ನೋಟಿಸ್‌‍ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಬಗ್ಗೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ ಬಂಧನದ ಭೀತಿ ಇದೆ ಎಂದು ಅರ್ಜಿಯಲ್ಲಿ ಭವಾನಿ ರೇವಣ್ಣ ಅವರು ಆತಂಕ ವ್ಯಕ್ತಪಡಿಸಿದ್ದಾರೆ. +ಕೆ.ಆರ್‌.ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿಯವರಿಗೆ ಎಸ್‌‍ಐಟಿ ನೋಟಿಸ್‌‍ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ವಿಚಾರಣೆಗೊಳಗಾದರೆ ಬಂಧಿಸುವ ಸಾಧ್ಯತೆ ಇದೆ. ಆದ್ದರಿಂದ ನಿರೀಕ್ಷಣಾ ಜಾಮೀನು ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಪ್ರಕರಣದಲ್ಲಿ ಸೆಷನ್‌ ಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. \ No newline at end of file diff --git a/eesanje/url_46_122_9.txt b/eesanje/url_46_122_9.txt new file mode 100644 index 0000000000000000000000000000000000000000..c764ead0f6c5ff559790aab52c75bf346b3a594f --- /dev/null +++ b/eesanje/url_46_122_9.txt @@ -0,0 +1,15 @@ +ವಾಲೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಹೊಣೆ ಸಿಎಂ ಸಿದ್ದರಾಮಯ್ಯನವರೇ ಹೊರಬೇಕು : +ಬೆಂಗಳೂರು, ಜೂ.3-ವಾಲೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಆರೋಪವನ್ನು ಸಚಿವ ನಾಗೇಂದ್ರ ಅವರ ಮೇಲೆ ಹೊರಿಸುವುದಕ್ಕಿಂತ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದರು. +ವಿಧಾನಪರಿಷತ್‌ ಚುನಾವಣೆಗೆ ಜೆಡಿಎಸ್‌‍ ಅಭ್ಯರ್ಥಿ ಟಿ.ಎನ್‌.ಜವರಾಯಿಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಆರೋಪದ ಹೊಣೆಯನ್ನು ಮುಖ್ಯಮಂತ್ರಿ ಹೊರಬೇಕು. ಈ ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ತರಾತುರಿಯಲ್ಲಿ ಎಸ್‌‍ಐಟಿ ರಚನೆ ಮಾಡಲಾಗಿದೆ ಎಂದು ಆರೋಪಿಸಿದರು. +ವಾಲೀಕಿ ಅಭಿವೃದ್ಧಿ ನಿಗಮದಂತೆ ಹಲವು ನಿಗಮಮಂಡಳಿಗಳಲ್ಲೂ ಅವ್ಯವಹಾರ ಆಗಿರುವ ಶಂಕೆ ಇದೆ. ಕೇವಲ ಸಚಿವ ನಾಗೇಂದ್ರ ಅವರ ಮಟ್ಟದಲ್ಲಿ ಇದು ನಡೆದಿಲ್ಲ. ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿದೆ. 14 ಖಾತೆಗಳನ್ನು ತೆರೆದಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ವಿಚಾರದಲ್ಲಿ ಆಮೆ ವೇಗದಲ್ಲಿ ತನಿಖಾ ಕ್ರಮವಾಗುತ್ತಿದೆ. ಹಣ ವರ್ಗಾವಣೆ ಮಾಡುವಂತೆ ನಿಗಮದಲ್ಲಿ ಆಡಳಿತ ಮಂಡಳಿ ಸಭೆ ನಡೆಸಿ ತೀರ್ಮಾನ ಮಾಡಿಲ್ಲ, ಸ್ವೇಚ್ಛಾಚಾರವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ತೆಲಂಗಾಣ ಚುನಾವಣೆಗೆ ಹಣಬಳಕೆ ಮಾಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದು ಒಂದು ವಾರ ಕಳೆದಿದೆ. ಯಾವ ತನಿಖೆ ನಡೆಸುತ್ತಿದ್ದಾರೆ. ಇವರಿಗೆ ನಾಚಿಕೆಯಾಗಬೇಕು. ಈ ಪ್ರಕರಣವನ್ನು ಇನ್ನೊಬ್ಬರ ತಲೆಗೆ ಕಟ್ಟಲು ಹೋಗುತ್ತಿದ್ದಾರೆ. ರಾಜ್ಯದ ಜನತೆ ಬಗ್ಗೆ ಗೌರವವಿದ್ದರೆ ಮುಖ್ಯಮಂತ್ರಿ ಇದರ ಹೊಣೆಯನ್ನು ಹೊರಬೇಕು. ಇದು ಸರ್ಕಾರದ ಜವಾಬ್ದಾರಿ ಎಂದು ಆಗ್ರಹಿಸಿದರು. +ತೆಲಂಗಾಣದ ಚುನಾವಣೆ ಉಸ್ತುವಾರಿ ಜವಾಬ್ದಾರಿಯನ್ನು ಯಾರ್ಯಾರು ವಹಿಸಿಕೊಂಡಿದ್ದರು. ಕಾಂಗ್ರೆಸ್‌‍ ಪಕ್ಷದ ಹೈಕಮಾಂಡ್‌ನ ಮೂಗಿನ ನೇರಕ್ಕೆ ಈ ವ್ಯವಹಾರ ನಡೆದಿದೆ. ಸಚಿವರ ಮೌಖಿಕ ಆದೇಶದ ಮೇರೆಗೆ ಹಣ ವರ್ಗಾವಣೆ ಎಂಬುದು ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ಈ ಪ್ರಕರಣದಲ್ಲಿ ಯೂನಿಯನ್‌ ಬ್ಯಾಂಕ್‌ ಭಾಗಿಯಾಗಿರುವುದರಿಂದ ಸಿಬಿಐ ತನಿಖೆ ಆಗಲಿದೆ ಎಂದರು. +ಸಚಿವ ಪ್ರಿಯಾಂಕ್‌ ಖರ್ಗೆಯವರು ಪ್ರತಿಯೊಂದಕ್ಕೂ ಪ್ರತಿಕ್ರಿಯೆ ನೀಡುತ್ತಾರೆ. ಅವರ ಇಲಾಖೆಗೆ ಸಂಬಂಧಿಸಿದ ಎಆರ್‌ಡಿಎಲ್‌ ಗುತ್ತಿಗೆದಾರರೊಬ್ಬರು ಆತಹತ್ಯೆ ಮಾಡಿಕೊಂಡಿಲ್ಲವೇ? ಎಂದು ಪ್ರಶ್ನಿಸಿದರು. +ನಗರ ಪ್ರದಕ್ಷಿಣೆ ಪ್ರಯೋಜನವೇನು ? :ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಮಳೆ ಅನಾಹುತ ತಡೆಯುವ ಬಗ್ಗೆ ನಗರ ಪ್ರದಕ್ಷಿಣೆ ಮಾಡಿದ್ದಾರೆ. ಏನು ಪ್ರಯೋಜನವಾಗಿದೆ? ಏನು ಕ್ರಮ ಕೈಗೊಂಡಿದ್ದಾರೆ? ಕಳೆದ ವರ್ಷವೂ ನಗರ ಪ್ರದಕ್ಷಿಣೆ ಮಾಡಿದ್ದರು, ಕಳೆದ ವಾರ ಕೂಡ ಮಾಡಿದ್ದರು, ಆದರೂ ಮಳೆ ಬಂದಾಗ ಅನಾಹುತ ಸಾಮಾನ್ಯವಾಗಿದೆ. ಜನರು ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿದೆ. +ಯಾವುದಾದರೂ ಒಂದು ಭಾಗದಲ್ಲಿ ಸರಿಪಡಿಸಿದ್ದರೆ ಹೇಳಲಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಗುಟ್ಟೇನಹಳ್ಳಿ ಕೆರೆ ಸಮಸ್ಯೆ ಉಂಟಾಗಿತ್ತು. ಅದಕ್ಕೆ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗಿದೆ ಎಂದು ಸಮರ್ಥಿಸಿಕೊಂಡರು. +ದೇವರ ಬಗ್ಗೆ ಚೆಲ್ಲಾಟವಾಡಬಾರದು :ಶರಣರಷ್ಟೇ ಅಲ್ಲ ದೇವರೊಂದಿಗೆ ಚೆಲ್ಲಾಟವಾಡಬಾರದು, ದೇವರೇ ಅಂತಿಮ ತೀರ್ಮಾನ ಕೈಗೊಂಡು ಶಿಕ್ಷೆ ಕೊಡುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನೀಡಿದ್ದ ಶತ್ರು ಸಂಹಾರ ಭೈರವಿ ಯಾಗ ಕುರಿತ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. +ಶರಣರ ವಚನ, ದಾಸರ ವಾಣಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಕೇರಳ ಸರ್ಕಾರ ಅವರ ಹೇಳಿಕೆಯನ್ನು ಅಲ್ಲಗಳೆದಿದೆ. ಕೇರಳದಲ್ಲಿ ಶತ್ರು ಸಂಹಾರಕ್ಕಾಗಿ ಕೋಣ, ಮೇಕೆ, ಹಂದಿ ಮೊದಲಾದ ಪ್ರಾಣಿಗಳನ್ನು ಬಲಿ ಕೊಡುತ್ತಿದ್ದಾರೆಂದು ಆರೋಪಿಸಿದ್ದರು. ರಾಜರಾಜೇಶ್ವರಿ ದೇವಾಲಯಕ್ಕೆ ನಾನೂ ಹೋಗಿದ್ದೇನೆ. +ಅಲ್ಲಿನ ಪೂಜಾ ವಿಧಿವಿಧಾನಗಳು ಗೊತ್ತಿಲ್ಲವೇ? ಕಳೆದ ಒಂದೂವರೆ ತಿಂಗಳಿನಿಂದ ನಡೆಸುತ್ತಿರುವ ಪೆನ್‌ಡ್ರೈವ್‌ನ ಮುಂದುವರೆದ ಭಾಗ ಅಷ್ಟೇ. ಪದೇಪದೇ ನಮ ಕುಟುಂಬವನ್ನು ಅವರು ನೆನಪಿಸಿಕೊಳ್ಳುವುದರಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕಾಯಿತು. ನಮ ಕುಟುಂಬದಲ್ಲಿ ಎಂದೂ ಕೂಡ ಪ್ರಾಣಿಬಲಿ ಅರ್ಪಣೆ ಮಾಡಿಲ್ಲ. ನಾವು ದೈವಭಕ್ತರು. ನಮ ದೋಷ ಪರಿಹಾರಕ್ಕೆ ದೇವರ ಪೂಜೆ ಮಾಡುತ್ತೇವೆ. ಬಲಿ ವಿಚಾರಕ್ಕೂ ಸರ್ಕಾರ ಎಸ್‌‍ಐಟಿ ರಚನೆ ಮಾಡಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು. +ನಮ ಕುಟುಂಬವನ್ನು ಸಂಪೂರ್ಣವಾಗಿ ನೆಲ ಕಚ್ಚಿಸಬೇಕೆಂಬ ಉದ್ದೇಶದಿಂದ ಇಂತಹ ಆರೋಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್‌‍ ಹೊಂದಾಣಿಕೆಯಿಂದ ಅವರ ರಾಜಕೀಯ ಭವಿಷ್ಯ ಮಾರಕವಾಗುತ್ತಿದೆ. ಆ ಕಾರಣಕ್ಕಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದರು. +ಮೂರೂ ಕ್ಷೇತ್ರಗಳಲ್ಲಿ ಗೆಲುವು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ 25 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ಆ ನಿಟ್ಟಿನಲ್ಲಿ ಮತದಾನೋತ್ತರ ಸಮೀಕ್ಷಾ ವರದಿಗಳು ಬಂದಿದೆ. ಮೂರನೇ ಬಾರಿಗೆ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು. +ಸುದ್ದಿಗೋಷ್ಠಿಯಲ್ಲಿ ಜೆಡಿಎಸ್‌‍ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕರಾದ ಹರೀಶ್‌, ಎಂ.ಟಿ.ಕೃಷ್ಣಪ್ಪ, ವಿಧಾನಪರಿಷತ್‌ ಸದಸ್ಯರಾದ ಶರವಣ, ತಿಪ್ಪೇಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_123_1.txt b/eesanje/url_46_123_1.txt new file mode 100644 index 0000000000000000000000000000000000000000..6343993ede6ef45e8fffbc6a715a7f363af48607 --- /dev/null +++ b/eesanje/url_46_123_1.txt @@ -0,0 +1,4 @@ +ಬಿಜೆಪಿ ಅವಧಿಯಲ್ಲಿ ಹಲವು ಹಗರಣಗಳು ನಡೆದಿವೆ, ತಪ್ಪು ಯಾರೇ ಮಾಡಿದರೂ ತಪ್ಪೇ : ರಾಮಲಿಂಗಾರೆಡ್ಡಿ +ಬೆಂಗಳೂರು, ಜೂ.3– ಬಿಜೆಪಿಯ ಅಧಿಕಾರವಧಿಯಲ್ಲಿ ಹಲವು ರೀತಿಯ ಹಗರಣಗಳಾಗಿದ್ದವು. ತಪ್ಪು ಯಾರೇ ಮಾಡಿದ್ದರೂ ಅದು ತಪ್ಪು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರದ 4 ವರ್ಷದ ಆಡಳಿತದಲ್ಲಿ ಜವಳಿ ನಿಗಮದಲ್ಲಿ ಮೈಸೂರು ಸ್ಯಾಂಡಲ್‌ ಸೋಪು ನಿಗಮದಲ್ಲಿ ಸೇರಿದಂತೆ ಪ್ರತಿ ಮಂಡಳಿಯಲ್ಲೂ ಹಗರಣಗಳಾಗಿದ್ದವು. ಹಿಂದೆ ಲೋಪಗಳಾಗಿದ್ದವು ಎಂಬ ಕಾರಣಕ್ಕೆ ಅದು ಮುಂದುವರೆಯಬೇಕು ಎಂದು ನಾವು ಬಯಸುವುದಿಲ್ಲ ಎಂದರು. +ತಪ್ಪನ್ನು ಯಾರೇ ಮಾಡಿದರೂ ಅದು ತಪ್ಪು. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಲೋಪಗಳಾಗಿದ್ದರೆ ಅದನ್ನು ಪರಿಶೀಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸೇರಿದಂತೆ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದು ತಿರುಗೇಟು ನೀಡಿದರು. +ನಿನ್ನೆ ತಮಗೆ ಬೇರೆ ಕೆಲಸವಿದ್ದಿದ್ದರಿಂದಾಗಿ ಕಾಂಗ್ರೆಸ್‌‍ ಶಾಸಕಾಂಗ ಸಭೆಗೆ ಹೋಗಲಾಗಲಿಲ್ಲ. ಅಲ್ಲಿ ಬಹಳಷ್ಟು ವಿಚಾರಗಳು ಚರ್ಚೆಯಾಗಿವೆ ಎಂದು ತಿಳಿಸಿದರು.ಲೋಕಸಭಾ ಚುನಾವಣೋತ್ತರ ಸಮೀಕ್ಷೆ ಕೇಂದ್ರ ಸರ್ಕಾರದ ಪ್ರಾಯೋಜಕ ವರದಿಯಾಗಿದೆ. ಅದನ್ನು ಮೀರಿ ಅಚ್ಚರಿಯ ಫಲಿತಾಂಶವನ್ನು ನಾವು ನಿರೀಕ್ಷಿಸುತ್ತೇವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌‍ 85 ರಿಂದ 104 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಸಮೀಕ್ಷಾ ವರದಿಗಳು ಹೇಳಿದ್ದವು. ಆದರೆ ಎಲ್ಲವನ್ನೂ ಮೀರಿ 136 ಸ್ಥಾನಗಳಲ್ಲಿ ನಾವು ಗೆದ್ದಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_123_10.txt b/eesanje/url_46_123_10.txt new file mode 100644 index 0000000000000000000000000000000000000000..bd7ab80d770212be4d2a75e945ad7ff59e488e4e --- /dev/null +++ b/eesanje/url_46_123_10.txt @@ -0,0 +1,11 @@ +ಮತ ಎಣಿಕೆಯ ಪ್ರತಿಯೊಂದು ಟೇಬಲ್‌ಗೂ ಸಿಸಿ ಕ್ಯಾಮೆರಾ +ಬೆಂಗಳೂರು,ಜೂ.2-ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಪ್ರತಿ ಟೇಬಲ್‌ಗೂ ತಲಾ ಒಂದೊಂದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್‌ ಇಂದಿಲ್ಲಿ ತಿಳಿಸಿದರು. +ಇವಿಎಂಗಳನ್ನಿಟ್ಟಿರುವ ಸ್ಟ್ರಾಂಗ್‌ ರೂಂಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿ ಫಲಿತಾಂಶ ಪ್ರಕಟಣೆಗೆ ಇನ್ನಿಲ್ಲದಂತಹ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. +ನಗರದ ಮೂರು ಲೋಕಸಭಾ ಕ್ಷೇತ್ರಗಳ ಮತ ಎಣಿಕೆಗೆ ಅಗತ್ಯ ವ್ಯವಸ್ಥೆ ಮಾಡಲಾಗಿದೆ.ಒಂದೊಂದು ರೂಮಿನಲ್ಲಿ 14 ಟೆಬಲ್‌ಗಳನ್ನು ಹಾಕಲಾಗುವುದು ಈ ಬಾರಿ ಹೆಚ್ಚಿನ ಪ್ರಮಾಣದ ಪೋಸ್ಟಲ್‌ ಬ್ಯಾಲೆಟ್‌ ಬಂದಿರುವುದರಿಂದ ಪೋಸ್ಟಲ್‌ ಬ್ಯಾಲೆಟ್‌ ವ್ಯವಸ್ಥೆಗೆ ಪ್ರತ್ಯೇಕ ರೂಮ್‌ ಮಾಡಲಾಗಿದ್ದು, ಏಕಕಾಲಕ್ಕೆ ಪೋಸ್ಟಲ್‌ ಬ್ಯಾಲೆಟ್‌ಗಳ ಮತ ಎಣಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರು. +ಮತ ಎಣಿಕೆ ಕಾರ್ಯಕ್ಕೆ 1200 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಆನ್‌ ಕೋರ್‌ ಅಂತ ಎಲೆಕ್ಷನ್‌ ಕಮಿಷನ್‌ ಸಾಫ್ಟವೇರ್‌ ಇದೆ ಅದರಲ್ಲಿ ಮಾಹಿತಿ ಎಂಟ್ರಿ ಮಾಡಲಾಗುವುದು ಎಂದು ಅವರು ಹೇಳಿದರು.ಮತ ಎಣಿಕೆ ಮಾಡುವ ಪ್ರತಿ ಟೆಬಲ್‌ಗೂ ಒಂದೊಂದು ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕಾರಿಡಾರ್‌ಗಳಲ್ಲಿ ಆಗು ಚಟುವಟಿಕೆಗಳ ಮೇಲೂ ತೀವ್ರ ನಿಗಾ ವಹಿಸಲಾಗುವುದು ಎಂದು ಅವರು ವಿವರಿಸಿದರು. +ಮಾಧ್ಯಮದವರಿಗೆ ಪ್ರತ್ಯೇಕ ರೂಮ್‌ ವ್ಯವಸ್ಥೆ ಮಾಡಲಾಗಿದೆ ಅವರಿಗೆ ಇನ್‌ಸೈಡ್‌ ಮೊಬೈಲ್‌ ತರುವುದನ್ನು ನಿಷೇಧಿಸಲಾಗಿದೆ ಎಂದು ತುಷಾರ್‌ಗಿರಿನಾಥ್‌ ತಿಳಿಸಿದರು.ಸಾಕಷ್ಟು ಸಂಖ್ಯೆಯಲ್ಲಿ ಮೈಕ್ರೋ ಅಬ್ಸರ್ವರ್‌ ಇರ್ತಾರೆ, ನಾಳೆ ಬೆಳಿಗ್ಗೆ ಯಾವ ಟೇಬಲ್‌ಗೆ ಯಾವ ಸಿಬ್ಬಂದಿ ಹೋಗಬೇಕು ಅಂತ ಅಬ್ಸರ್ವರ್‌ ಎದುರು ತೀರ್ಮಾನ ಮಾಡಲಾಗುತ್ತದೆ ಎಂದರು. +ಬೆಂಗಳೂರು ನಗರ ಜಿಲ್ಲೆಯ 3 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮತ್ತು ಸ್ಟ್ರಾಂಗ್‌ ರೂಂ ಕೇಂದ್ರಗಳ ವಿವರ: +ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2125ಮತ ಎಣಿಕೆ ಕೊಠಡಿಗಳ ಸಂಖ್ಯೆ: 10ಒಟ್ಟು ಟೇಬಲ್‌ ಗಳ ಸಂಖ್ಯೆ: 135ಒಟ್ಟು ಸಿಬ್ಬಂದಿಯ ಸಂಖ್ಯೆ: 416 +ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2911ಮತ ಎಣಿಕೆ ಕೊಠಡಿಗಳ ಸಂಖ್ಯೆ: 19ಒಟ್ಟು ಟೇಬಲ್‌ ಗಳ ಸಂಖ್ಯೆ: 130ಒಟ್ಟು ಸಿಬ್ಬಂದಿಯ ಸಂಖ್ಯೆ: 390 +ವಿಧಾನಸಭಾ ಕ್ಷೇತ್ರಗಳ ಸಂಖ್ಯೆ: 8ಮತಗಟ್ಟೆಗಳ ಸಂಖ್ಯೆ: 2120ಮತ ಎಣಿಕೆ ಕೊಠಡಿಗಳ ಸಂಖ್ಯೆ: 9ಒಟ್ಟು ಟೇಬಲ್‌ ಗಳ ಸಂಖ್ಯೆ: 118ಒಟ್ಟು ಸಿಬ್ಬಂದಿಯ ಸಂಖ್ಯೆ: 354 +ಈ ವೇಳೆ ಚುನಾವಣಾಧಿಕಾರಿಗಳಾದ ಡಾ. ಕೆ. ಹರೀಶ್‌ ಕುಮಾರ್‌ , ದಯಾನಂದ್‌‍, ವಿನೋತ್‌ ಪ್ರಿಯಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_123_11.txt b/eesanje/url_46_123_11.txt new file mode 100644 index 0000000000000000000000000000000000000000..de656dec65e18cb85fec904f30bfa9f4b3dc50f7 --- /dev/null +++ b/eesanje/url_46_123_11.txt @@ -0,0 +1,5 @@ +ಶ್ವೇತಪತ್ರ ಹೊರಡಿಸುವಂತೆ ಸಿಎಂಗೆ ಆರ್‌.ಅಶೋಕ್‌ +ಬೆಂಗಳೂರು,ಜೂ.2– ಕರ್ನಾಟಕದ ಜನತೆಯಲ್ಲಿ ಮೂಡಿರುವ ಅನುಮಾನ ನಿವಾರಿಸಲು ರಾಜ್ಯದ ಎಲ್ಲಾ ನಿಗಮ ಮಂಡಳಿಗಳ ಹಣಕಾಸಿನ ಸ್ಥಿತಿಗತಿ ಬಗ್ಗೆ ಒಂದು ಸಂಪೂರ್ಣ ಆಡಿಟ್‌ ನಡೆಸಿ, ನಿಗಮ ಮಂಡಳಿಗಳ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. +ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕವನ್ನು ಲೂಟಿ ಮಾಡಿ ಕಾಂಗ್ರೆಸ್‌‍ ಹೈಕಮಾಂಡ್‌ ಗೆ ಟಕಾಟಕ್‌ ಅಂತ ಹಣ ವರ್ಗಾವಣೆ ಮಾಡುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ರಾಜ್ಯದ ನಿಗಮ ಮಂಡಳಿಗಳೇ ಎಟಿಎಂಗಳಾಗಿವೆ ಎಂದು ವಾಗ್ದಾಳಿ ನಡೆಸಿದ್ದಾರೆ. +ದಲಿತರು, ಹಿಂದುಳಿದವರು, ಬಡವರು, ರೈತರು, ಗ್ರಾಮೀಣ ಪ್ರದೇಶಗಳ ಜನರ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ನಿಗಮ ಮಂಡಳಿಗಳ ಹಣ ಭ್ರಷ್ಟರ ಪಾಲಾಗುತ್ತಿರುವ ವಾಸನೆ ಬರುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. +ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬ್ರಹಾಂಡ ಭ್ರಷ್ಟಾಚಾರ ಗಮನಿಸಿದರೆ ರಾಜ್ಯದಲ್ಲಿರುವ ಎಲ್ಲಾ ನಿಗಮ ಮಂಡಳಿಗಳನ್ನು ಭ್ರಷ್ಟಾಚಾರಕ್ಕೆ ಬಳಸಿಕೊಂಡಿರುವ ದಟ್ಟವಾದ ಶಂಕೆ ಮೂಡುತ್ತಿದೆ ಎಂದು ಅನುಮಾನ ಹೊರಹಾಕಿದ್ದಾರೆ. \ No newline at end of file diff --git a/eesanje/url_46_123_12.txt b/eesanje/url_46_123_12.txt new file mode 100644 index 0000000000000000000000000000000000000000..412aa0ab1248ee3e1571d5033c056c6c3c50e783 --- /dev/null +++ b/eesanje/url_46_123_12.txt @@ -0,0 +1,9 @@ +ಪಾರದರ್ಶಕವಾಗಿ ಮತಎಣಿಕೆಗೆ ಕ್ರಮ ಕೈಗೊಳ್ಳುವಂತೆ ಎಚ್‌.ಡಿ.ರೇವಣ್ಣ ಮನವಿ +ಹಾಸನ, ಜೂ.2-ಲೋಕಸಭಾ ಚುನಾವಣೆ ಮತ ಎಣಿಕೆಯು ಪಾರದರ್ಶಕವಾಗಿ ನಡೆಯಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. +ಹರದನಹಳ್ಳಿಯ ನಿವಾಸದಲ್ಲಿ ಜೆಡಿಎಸ್‌‍ ಶಾಸಕರು ಹಾಗೂ ಮುಖಂಡರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕವಾಗಿ ಮತ ಎಣಿಕೆ ನಡೆಸಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಆಯೋಗ ನಿರ್ದೇಶನ ನೀಡಬೇಕು ಎಂದರು. +ಮತ ಎಣಿಕೆ ಕೇಂದ್ರಗಳಿಗೆ ಮಾಧ್ಯಮದವರಿಗೆ ಅವಕಾಶ ಕಲ್ಪಿಸಬೇಕೆಂದ ಅವರು, ಹಾಸನ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಜೂನ್‌ 4 ರಂದು ಬೆಳಿಗ್ಗೆ 6 ಗಂಟೆಗೆ ನಮ ಪಕ್ಷದ ಚುನಾವಣಾ ಏಜೆಂಟ್‌, ಮುಖಂಡರು ಹೋಗುತ್ತಾರೆ. ಪಕ್ಷದ ಎಲ್ಲಾ ಮುಖಂಡರು ಮತ ಎಣಿಕೆ ಸಂದರ್ಭದಲ್ಲಿ ಇರುತ್ತಾರೆ ಎಂದರು. +ಇಂದು ಶಾಸಕರಾದ ಡಾ.ಸಿ.ಎನ್‌.ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌ ಅವರನ್ನೊಳಗೊಂಡಂತೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು. +ಸಮೀಕ್ಷೆ : ಪ್ರತಿಕ್ರಿಯೆಗೆ ರೇವಣ್ಣ ನಕಾರಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಚಿವ ಎಚ್‌.ಡಿ.ರೇವಣ್ಣ ನಿರಾಕರಿಸಿದರು.ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇವಾಲಯ ಹಾಗೂ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು. +ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮೆ ದೇಶದ ಪ್ರಧಾನಿಯಾಗುವುದು ನಿಶ್ಚಿತ, ಈ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನಮಂತ್ರಿಯಾಗಲೇಬೇಕು, ಲಕ್ಷ್ಮೀನರಸಿಂಹ ಸ್ವಾಮಿ ಕೃಪೆ ಇರುವವರೆಗೂ ನಮಗೇನೂ ತೊಂದರೆಯಿಲ್ಲ ಎಂದು ಹೇಳಿದರು. +ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದೆ. ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಟ್ಟ ಮುಖ್ಯಮಂತ್ರಿ ಎಂದರೆ ಎಚ್‌.ಡಿ.ಕುಮಾರಸ್ವಾಮಿಯವರು. 1,600 ಪ್ರೌಢಶಾಲೆ, 600 ಪದವಿ ಪೂರ್ವ ಕಾಲೇಜು, 250 ಪದವಿ ಕಾಲೇಜುಗಳನ್ನು ಅವರ ಅವಧಿಯಲ್ಲಿ ತೆರೆಯಲಾಯಿತು. ಏಳೆಂಟು ಸಾವಿರ ಕೋಟಿ ರೂ. ಶಾಲಾ-ಕಾಲೇಜುಗಳ ಕಟ್ಟಡಗಳಿಗೆ ನೀಡಿದ್ದರು. ಅಲ್ಲದೆ, 4,800 ಶಿಕ್ಷಕರು, 1,600 ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಬಿ.ಎಸ್‌‍.ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದೆ. +ಬಿಜೆಪಿ-ಜೆಡಿಎಸ್‌‍ ಮೈತ್ರಿಯಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಒಟ್ಟಾಗಿ ಎಲ್ಲರೂ ಕೆಲಸ ಮಾಡಿದ್ದೇವೆ. ನಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಅವರು ಗೆಲ್ಲುವ ವಿಶ್ವಾಸವಿದೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದೇವೆ ಎಂದರು. \ No newline at end of file diff --git a/eesanje/url_46_123_2.txt b/eesanje/url_46_123_2.txt new file mode 100644 index 0000000000000000000000000000000000000000..d8f34bd851118e8a6d89fed0d93d2420873cc7ca --- /dev/null +++ b/eesanje/url_46_123_2.txt @@ -0,0 +1,6 @@ +ಹಾವು-ಮುಂಗಸಿಗಳಂತೆ ಪರಸ್ಪರ ಕಚ್ಚಾಡುವ ನಾಯಕರು ಮುಖಾಮುಖಿಯಾದಾಗ.. +ಬೆಂಗಳೂರು, ಜೂ.3-ಲೋಕಸಭಾ ಚುನಾವಣೆಯಿಂದಲೂ ಹಾವು ಮುಂಗಸಿಗಳಂತೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ಮೂಲಕ ಕೆಂಡಕಾರುತ್ತಿರುವ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ನ ವರಿಷ್ಠ ನಾಯಕರು ಪರಸ್ಪರ ಎದುರಾದಾಗ ನಾನಾ ರೀತಿಯ ಸ್ವಾರಸ್ಯಕರ ಪ್ರಸಂಗಗಳು ನಡೆದವು. +ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾವಣೆ ನಡೆಯುವ 11 ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಯಲ್ಲಿ ನಾಮಪತ್ರ ಸಲ್ಲಿಕೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರಸ್ಪರ ಎದುರಾಗಿದ್ದಾರೆ. ವಿಧಾನಸಭೆಯ ಕಾರ್ಯದರ್ಶಿಯವರ ಕಚೇರಿಗೆ ಮೊದಲು ಭೇಟಿ ನೀಡಿದ್ದ ಕುಮಾರಸ್ವಾಮಿ ತಮ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಬಳಿಕ ಹೊರಬಂದರು. +ಆ ವೇಳೆಗೆ ಸರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್‌.ಕೆ.ಪಾಟೀಲ್‌, ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌ ಅವರೊಂದಿಗೆ ತಮ ಸರದಿಗಾಗಿ ಕಾಯುತ್ತಾ ನಿಂತಿದ್ದರು. ಕುಮಾರಸ್ವಾಮಿ ಹೊರಬರುವುದನ್ನು ಕಂಡ ಸಿದ್ದರಾಮಯ್ಯನವರು ಕೈ ಎತ್ತಿ ಹಾರೈಸಿದರು. ಅದಕ್ಕೆ ಕುಮಾರಸ್ವಾಮಿ ಪ್ರತಿಯಾಗಿ ವಂದಿಸಿ ಮುಂದೆ ಹೆಜ್ಜೆ ಹಾಕಿದರು. +ಅವರ ಹಿಂದೆ ಬಂದ ಜೆಡಿಎಸ್‌‍ನ ವಿಧಾನಪರಿಷತ್‌ ಸದಸ್ಯ ಶರವಣ ಅವರು ಮುಖ್ಯಮಂತ್ರಿ ಹಾಗೂ ಎಚ್‌.ಕೆ.ಪಾಟೀಲರಿಗೆ ನಮಸ್ಕಾರ ಹೇಳಿದರು. ಜಿ.ಟಿ.ದೇವೇಗೌಡ ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿಯವರ ಬಳಿ ಬಂದು ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿಕೊಂಡು ಹೋದರು. +ಮುಂದೆ ಹೆಜ್ಜೆ ಹಾಕಿದ ಕುಮಾರಸ್ವಾಮಿಯವರು ಸಚಿವ ಎಚ್‌.ಸಿ.ಮಹದೇವಪ್ಪ ಅವರಿಗೆ ಹಸ್ತಲಾಘವ ನೀಡಿ ತೆರಳಿದರು. ಕುಮಾರಸ್ವಾಮಿ ಮುಂದೆ ಸಾಗುತ್ತಿದ್ದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿಧಾನಕ್ಕೆ ಬಂದರು. ಇಬ್ಬರೂ ಪರಸ್ಪರ ಮುಖವನ್ನೂ ನೋಡದೇ ಹಾದಿ ಸವೆಸಿದ್ದು ಗಮನಾರ್ಹವಾಗಿತ್ತು.ಅನಂತರ ಕಾಂಗ್ರೆಸ್‌‍ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಭಾಗಿಯಾಗಿದ್ದರು. \ No newline at end of file diff --git a/eesanje/url_46_123_3.txt b/eesanje/url_46_123_3.txt new file mode 100644 index 0000000000000000000000000000000000000000..a645200ba8d9645435f8adbb3e59d22d7da3ed06 --- /dev/null +++ b/eesanje/url_46_123_3.txt @@ -0,0 +1,15 @@ +ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ +ಬೆಂಗಳೂರು,ಜೂ.3-ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ನಡೆದು, ಮತದಾರ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೋ ಅಚ್ಚು ಒತ್ತಿದ್ದಾನೋ ಎಂಬುದು ಬಹಿರಂಗವಾಗಲಿದೆ. +ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆದ ಬಳಿಕ ಇವಿಎಂಗಳ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 2 ಗಂಟೆ ನಂತರ ಫಲಿತಾಂಶದ ಚಿತ್ರಣ ಹೊರಬೀಳಲಿದ್ದು, ಬಹುತೇಕ ಸಂಜೆಯೊಳಗೆ ಜನಾದೇಶ ಯಾರಿಗೆ ಎಂಬುದು ಸ್ಪಷ್ಟವಾಗಲಿದೆ. +ಬಹುತೇಕ ಮತಗಟ್ಟೆ ಸಮೀಕ್ಷೆಗಳು ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಗಳಿಸಿದ ಸ್ಥಾನಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಿಜೆಪಿ 3ನೇ ಬಾರಿಗೆ ಹ್ಯಾಟ್ರಿಕ್‌ ಜಯ ಗಳಿಸಲಿದೆ ಎಂದು ಅಂದಾಜಿಸಲಾಗಿದೆ. +ಆದರೆ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟ ಮತಗಟ್ಟೆ ಸಮೀಕ್ಷೆಗಳನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಕಳೆದ 2023ರ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಕಾಂಗ್ರೆಸ್‌‍ ಲೋಕಸಭೆ ಚುನಾವಣೆಯಲ್ಲಿ ಎರಡಂಕಿ ದಾಟಲಿದೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡಿದೆ. +1999ರಿಂದ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಈವರೆಗೂ ಎರಡಂಕಿಯನ್ನು ದಾಟಿಲ್ಲ. ಈ ಬಾರಿ 20 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆಯುತ್ತೇವೆ ಎಂಬ ನಿರೀಕ್ಷೆಯನ್ನು ಕೈ ನಾಯಕರು ಹೊಂದಿದ್ದಾರೆ. +ಗ್ಯಾರಂಟಿಗಳ ಅನುಷ್ಟಾನದಿಂದ ಜನರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ. ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಶಕ್ತಿ ಯೋಜನೆ, ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆ, ಪದವಿ ಮತ್ತು ಡಿಪ್ಲೊಮೊ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ, ಅನ್ನಭಾಗ್ಯ, ಉಚಿತವಾಗಿ ವಿದ್ಯುತ್‌ ಪೂರೈಸುವ ಗೃಹಜ್ಯೋತಿ ಯೋಜನೆಗಳಿಂದ ಫಲಾನುಭವಿಗಳು ಸಂತುಷ್ಟರಾಗಿದ್ದಾರೆ. ಹೀಗಾಗಿ ನಮಗೆ ಹೆಚ್ಚಿನ ಸ್ಥಾನ ಬಂದೇ ಬರಲಿದೆ ಎಂಬ ಆತವಿಶ್ವಾಸದಲ್ಲಿದ್ದಾರೆ. +ಆದರೆ ಬಹುತೇಕ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್‌‍ ರಾಜ್ಯದಲ್ಲಿ ಈ ಬಾರಿಯೂ ಎರಡಂಕಿಯನ್ನು ದಾಟುವುದಿಲ್ಲ ಎಂದು ಹೇಳಿದೆ. ಬಹುತೇಕ ಸಮೀಕ್ಷೆಗಳು 2-3, 3-5, 5-7, 5-8 ಸ್ಥಾನಗಳನ್ನು ನೀಡಿವೆ. +ಮೋದಿ ಗ್ಯಾರಂಟಿಯಲ್ಲಿ ಬಿಜೆಪಿ:ಇನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕಿಳಿದಿದ್ದ ಬಿಜೆಪಿ ಈ ಬಾರಿ ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದೆ. ಕಾಂಗ್ರೆಸ್‌‍ ಗ್ಯಾರಂಟಿಗಿಂತ ರಾಜ್ಯದ ಜನತೆ ಮೋದಿ ಗ್ಯಾರಂಟಿ ಬಗ್ಗೆಯೇ ಹೆಚ್ಚು ಒಲವು ಹೊಂದಿದ್ದಾರೆ. +ಏನೇ ಆದರೂ ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ದೃಢ ವಿಶ್ವಾಸ ಬಿಜೆಪಿ ನಾಯಕರಲ್ಲಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮತಗಟ್ಟೆ ಸಮೀಕ್ಷೆಗಳು ಕೂಡ ರಾಜ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಕಡಿಮೆ ಎಂದರೂ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಿದೆ. +ಇನ್ನು ಕೆಲವು ಸಮೀಕ್ಷೆಗಳು ರಾಜ್ಯದಲ್ಲಿ ಎನ್‌ಡಿಎ 24-26 ಕ್ಷೇತ್ರಗಳನ್ನು ಗೆದ್ದು ದಾಖಲೆ ಬರೆಯಬಹುದೆಂಬ ಭವಿಷ್ಯ ನುಡಿದಿರುವುದು ಕಾಂಗ್ರೆಸ್‌‍ ನಾಯಕರನ್ನು ತಲೆ ತಿರುಗುವಂತೆ ಮಾಡಿದೆ. +ಹೀಗಾಗಿಯೇ ಮತಗಟ್ಟೆ ಸಮೀಕ್ಷೆಗಳು ಸುಳ್ಳು ಎಂದು ಕಾಂಗ್ರೆಸ್‌‍ ಪ್ರತಿಪಾದಿಸಿದರೆ, ಬಿಜೆಪಿ ಇದು ವಾಸ್ತವಕ್ಕೆ ಹತ್ತಿರವಿದ್ದು ಜನರ ನಾಡಿಮಿಡಿತದ ಮೇಲೆಯೇ ಮತಗಟ್ಟೆ ಸಮೀಕ್ಷೆಗಳು ಹೊರಬಂದಿವೆ. ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿಗೆ ಉಡುಗೊರೆ ಕೊಡುತ್ತೇವೆ ಎಂಬ ವಿಶ್ವಾಸದಲ್ಲಿದೆ. +ನಿಷೇಧಾಜ್ಞೆ:ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಜೂನ್‌ 3 ಸೋಮವಾರ ಸಂಜೆ 6 ಗಂಟೆಯಿಂದ ಜೂನ್‌ 5ರ ಮಧ್ಯರಾತ್ರಿ 12 ಗಂಟೆಯವರೆಗೆ ದೇಶಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. +ನಿಷೇಧಾಜ್ಞೆ ವೇಳೆ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ, ಸಾರ್ವಜನಿಕ ಸ್ಥಳ, ಸಾರ್ವಜನಿಕ ಕಟ್ಟಡ ಮುಂತಾದವುಗಳಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಪಿಸ್ತೂಲು, ಬಂದೂಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗುತ್ತದೆ. +ಫಲಿತಾಂಶ ಪ್ರಕಟವಾದ ದಿನ ಗೆಲುವು ಸಾಧಿಸುವ ಅಭ್ಯರ್ಥಿಗಳ ಮೆರವಣಿಗೆ ಹಾಗೂ ಪಟಾಕಿ, ಬಾಣ, ಬಿರುಸು ಹಚ್ಚುವುದು ಹಾಗೂ ಸಾರ್ವಜನಿಕ ಸಭೆ ಸಮಾರಂಭ ನಡೆಸುವುದು, ಗೆಲುವಿನ ಸಂಭ್ರಮಾಚರಣೆ ನಡೆಸುವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಯಾವುದೇ ಘೋಷಣೆ ಹಾಕುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಅಥವಾ ಪ್ರಸಾರ ಮಾಡುವುದನ್ನೂ ನಿಷೇಧಿಸಲಾಗಿರುತ್ತದೆ. \ No newline at end of file diff --git a/eesanje/url_46_123_4.txt b/eesanje/url_46_123_4.txt new file mode 100644 index 0000000000000000000000000000000000000000..381443b7bfbd7fd341e973a5692c5aa446877ca2 --- /dev/null +++ b/eesanje/url_46_123_4.txt @@ -0,0 +1,5 @@ +ಬೆಂಗಳೂರಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ : ಡಿಸಿಎಂ ಡಿಕೆಶಿ +ಬೆಂಗಳೂರು, ಜೂ.3-ನಗರದಲ್ಲಿ ಮಳೆ ಅನಾಹುತಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಇನ್ನೂ ಹೆಚ್ಚು ಬರಲಿ ಎಂದು ನಾನು ಪ್ರಾರ್ಥಿಸುತ್ತೇನೆ, ಅದರಿಂದಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸುವಂತೆ ಆದೇಶಿಸಲಾಗಿದೆ ಎಂದರು. +ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸಿ ಮರಳಿ ಬರುತ್ತೇನೆ. ಅನಂತರ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಹೇಳಿದರು. +ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಬಹಳಷ್ಟು ಅನಾಹುತಗಳಾಗಿದ್ದು, ಹಲವೆಡೆ ಮರಗಳು ಬಿದ್ದಿದ್ದು ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮಳೆಬಾಧಿತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_123_5.txt b/eesanje/url_46_123_5.txt new file mode 100644 index 0000000000000000000000000000000000000000..cb63608ea4d01878b07df8339f032e5e57499354 --- /dev/null +++ b/eesanje/url_46_123_5.txt @@ -0,0 +1,4 @@ +ವಿಧಾನಪರಿಷತ್‌ ಚುನಾವಣೆ : ಜೆಡಿಎಸ್‌‍ ಅಭ್ಯರ್ಥಿಯಾಗಿ ಜವರಾಯಿಗೌಡ ಕಣಕ್ಕೆ +ಬೆಂಗಳೂರು, ಜೂ.3-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಟಿ.ಎನ್‌.ಜವರಾಯಿಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಸೇರಿದಂತೆ ನಾಲ್ಕು ಬಾರಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜವರಾಯಿಗೌಡ ಅವರಿಗೆ ಈವರೆಗೂ ಶಾಸನ ಸಭೆ ಪ್ರವೇಶಿಸಲು ಸಾಧ್ಯವಾಗಿರಲಿಲ್ಲ. +ವಿಧಾನಪರಿಷತ್‌ ಚುನಾವಣೆ ಅವರ ಅದೃಷ್ಟವನ್ನು ಖುಲಾಯಿಸುವಂತೆ ಮಾಡಿದೆ. ಜೆಡಿಎಸ್‌‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಇವರ ಪತ್ನಿ ಗಾಯತ್ರಿ ಜವರಾಯಿಗೌಡ ದೊಡ್ಡಬಿದ್ರಿಕಲ್ಲಿನಿಂದ ಬಿಬಿಎಂಪಿಯ ಸದಸ್ಯೆಯಾಗಿಯೂ ಕೆಲಸ ಮಾಡಿದ್ದರು. +ಇಂದು ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಖುದ್ದು ಹಾಜರಿದ್ದರು.ಜೆಡಿಎಸ್‌‍ನ ಶಾಸಕಾಂಗ ಕಚೇರಿಗೆ ಆಗಮಿಸಿದ ಎಂ.ಟಿ.ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು ಜವರಾಯಿಗೌಡರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದರು. \ No newline at end of file diff --git a/eesanje/url_46_123_6.txt b/eesanje/url_46_123_6.txt new file mode 100644 index 0000000000000000000000000000000000000000..2060e44f70c3f82c2491fb791b67bce7bf527030 --- /dev/null +++ b/eesanje/url_46_123_6.txt @@ -0,0 +1,12 @@ +ವಿಧಾನಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದು ಮೇಲುಗೈ +ಬೆಂಗಳೂರು, ಜೂ.3-ವಿಧಾನಪರಿಷತ್‌ನ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಹೈಕಮಾಂಡ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು, ರಾಜ್ಯದಲ್ಲಿನ ನಾಯಕತ್ವ ಮತ್ತಷ್ಟು ಗಟ್ಟಿಗೊಂಡಂತಾಗಿದೆ. +ನಿನ್ನೆ ಸಂಜೆ ಪ್ರಕಟಿಸಲಾದ ಕಾಂಗ್ರೆಸ್‌‍ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರ ಶಿಫಾರಸ್ಸು ಮಾಡಿದ 3 ಮಂದಿಗೆ ಅವಕಾಶ ದೊರೆತಿದೆ. ಉಳಿದ ನಾಲ್ಕು ಸ್ಥಾನಗಳ ಪೈಕಿ ಹೈಕಮಾಂಡ್‌ ಮೂರೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡಿದ್ದು, ಡಿ.ಕೆ.ಶಿವಕುಮಾರ್‌ರವರು ಸೂಚಿಸಿದ್ದ ಒಬ್ಬರಿಗೆ ಮಣೆ ಹಾಕಲಾಗಿದೆ. +ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಸುಪುತ್ರ ಯತೀಂದ್ರ ಹಾಗೂ ಶಿವಮೊಗ್ಗದ ಬಲ್ಕೀಸ್‌‍ ಬಾನು ಅವರಿಗೆ ಅವಕಾಶ ದೊರೆತಿದೆ. ಡಿ.ಕೆ.ಶಿವಕುಮಾರ್‌ರವರು ಸೂಚಿಸಿದ್ದ ಐವಾನ್‌ ಡಿಸೋಜಾ ಅವರಿಗೆ ವಿಧಾನಪರಿಷತ್‌ ಸದಸ್ಯರಾಗುವ ಯೋಗ ಬಂದಿದೆ. +ಬಹುತೇಕ ಎನ್‌.ಎಸ್‌‍.ಬೋಸರಾಜು ಅವರನ್ನು ಕೈಬಿಡುವ ಸಾಧ್ಯತೆಯಿತ್ತಾದರೂ ಕೊನೆಕ್ಷಣದಲ್ಲಿ ಮರು ಅವಕಾಶ ನೀಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಕೃಪಾಶೀರ್ವಾದ ಮಾಡಿದ್ದಾರೆ. ಬೋಸರಾಜ್‌ ಮತ್ತು ವಸಂತಕುಮಾರ್‌ ಇಬ್ಬರೂ ರಾಯಚೂರು ಜಿಲ್ಲೆಗೆ ಸೇರಿದವರಾಗಿದ್ದು, ಈ ಬಾರಿ ಪ್ರಾದೇಶಿಕ ಆದ್ಯತೆ ಮೂಲೆಗುಂಪಾಗಿದೆ. +ಕಲಬುರಗಿಯ ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷ ಜಗದೇವ್‌ ಗುತ್ತೇದಾರ್‌ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡುವ ಮೂಲಕ ಹೈಕಮಾಂಡ್‌ ತಮ ಅಭಿಲಾಷೆಯನ್ನು ಈಡೇರಿಸಿಕೊಂಡಿದೆ. +ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕಾದ ವಿಚಾರ ಬಂದಾಗ ಯುವಕಾಂಗ್ರೆಸ್‌‍ನ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಅವರಿಗೆ ಮಣೆ ಹಾಕಲಾಗಿದೆ.ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಒಂದು ಸ್ಥಾನಕ್ಕೆ ಮುಂದಿನ ತಿಂಗಳು ಚುನಾವಣೆ ನಡೆಯಲಿದ್ದು, ಅದಕ್ಕೆ ಬಸನಗೌಡ ಬಾದರ್ಲಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. +ವಿಧಾನಪರಿಷತ್‌ಗೆ ಅಭ್ಯರ್ಥಿಗಳಾಗಿ ಆಯ್ಕೆಯಾಗಿರುವ ಪೈಕಿ ಗೋವಿಂದರಾಜು, ಎನ್‌.ಎಸ್‌‍.ಬೋಸರಾಜ್‌ ಮರಳಿ ಅವಕಾಶ ಪಡೆದಿದ್ದಾರೆ. ಬೋಸ್‌‍ರಾಜ್‌ 2ನೇ ಬಾರಿ ವಿಧಾನಪರಿಷತ್‌ ಸದಸ್ಯರಾಗುತ್ತಿದ್ದರೆ, ಗೋವಿಂದ ರಾಜು 3ನೇ ಬಾರಿಗೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. +ಐವಾನ್‌ ಡಿಸೋಜಾ ಅವರಿಗೂ 2ನೇ ಬಾರಿ ಅದೃಷ್ಟ ಖುಲಾಯಿಸಿದೆ. ಯತೀಂದ್ರ ಈಗಾಗಲೇ ಶಾಸಕರಾಗಿ ಒಂದು ಅವಧಿಗೆ ಕೆಲಸ ಮಾಡಿದ್ದರು. ತಂದೆಗೆ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟ ಪರಿಣಾಮ ಮೇಲನೆ ಅವಕಾಶ ದೊರೆತಿದೆ. +ವಸಂತಕುಮಾರ್‌ ರಾಯಚೂರು ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷರಾಗಿದ್ದರು. ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಮೂಲಕ ಈಗ ವಿಧಾನಪರಿಷತ್‌ಗೂ ಅಭ್ಯರ್ಥಿ ಮಾಡಿರುವುದು ಗಮನ ಸೆಳೆದಿದೆ. ಯತೀಂದ್ರ ಹಾಗೂ ಬವನಗೌಡ ಬಾದರ್ಲಿ ಅವರನ್ನು ಹೊರತುಪಡಿಸಿ ಈ ಬಾರಿ ಕುಟುಂಬ ರಾಜಕಾರಣಕ್ಕೆ ಹೆಚ್ಚು ಮನ್ನಣೆ ಸಿಕ್ಕಿಲ್ಲ. +ಆದರೆ ಅವಕಾಶ ಪಡೆದವರಿಗೆ ಮರು ಆಯ್ಕೆ ಮಾಡುವುದಿಲ್ಲ ಎಂಬ ಹೈಕಮಾಂಡ್‌ನ ನಿಯಮಾವಳಿಗಳು ಕೆಲವರ ಪ್ರಕರಣದಲ್ಲಿ ಸಡಿಲಿಕೆ ಆಗಿರುವುದು ಅಚ್ಚರಿ ಮೂಡಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹೈಕಮಾಂಡ್‌ ನಾಯಕರು ತಮಗೆ ಬೇಕಾದವರಿಗೆ ಸದಸ್ಯರನ್ನಾಗಿ ಮಾಡಿಕೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿಂಬಾಲಕರಿಗೆ ನಿರಾಸೆಯಾದಂತಾಗಿದೆ. +ಈ ಬಾರಿ ವಿಧಾನಪರಿಷತ್‌ನಲ್ಲಿ ಅವಕಾಶ ಗಿಟ್ಟಿಸಲು ಸುಮಾರು 80ಕ್ಕೂ ಹೆಚ್ಚು ಮಂದಿ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ ತನ್ನದೇ ಆದ ಲೆಕ್ಕಾಚಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. \ No newline at end of file diff --git a/eesanje/url_46_123_7.txt b/eesanje/url_46_123_7.txt new file mode 100644 index 0000000000000000000000000000000000000000..eb65f735fddf97c183c28f737768119c83d8734a --- /dev/null +++ b/eesanje/url_46_123_7.txt @@ -0,0 +1,5 @@ +ಸಚಿವ ಬಿ.ನಾಗೇಂದ್ರ ಕುರಿತು ಸಿಎಂ, ಡಿಸಿಎಂ ನಿರ್ಧಾರಕ್ಕೆ ನಾನು ಬದ್ಧ : ಎಚ್‌.ಕೆ.ಪಾಟೀಲ್‌ +ಬೆಂಗಳೂರು, ಜೂ.3-ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಅವರ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಕಾಂಗ್ರೆಸ್‌‍ ಶಾಸಕಾಂಗ ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾಗಿವೆ. ಅದರಲ್ಲಿ ಬಿ.ನಾಗೇಂದ್ರ ಅವರ ಪ್ರಕರಣ ಕುರಿತು ವಿಚಾರ ವಿನಿಮಯವಾಗಿದೆ. ಅವರ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿದ್ದೇವೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಿ ಎಂದರು. +ಚುನಾವಣೋತ್ತರ ಸಮೀಕ್ಷಾ ವರದಿಗಳು ಹುಸಿಯಾಗಲಿವೆ. ಕರ್ನಾಟಕದಲ್ಲಿ ಕಾಂಗ್ರೆಸ್‌‍ ಪಕ್ಷ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಈಗಾಗಲೇ ಕಾಂಗ್ರೆಸ್‌‍ ಪಕ್ಷ ಮಾತ್ರವಲ್ಲದೆ, ಹಲವಾರು ತಜ್ಞರು ಕಾಂಗ್ರೆಸ್‌‍ ಪರವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಚುನಾವಣೋತ್ತರ ಸಮೀಕ್ಷಾ ವರದಿಗಳು ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪ್ರಕಟವಾಗಿವೆ ಎಂದರು. +ನಾವು ಇದನ್ನು ನಂಬುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಗೆಲುವಾಗುವ ವಿಶ್ವಾಸವಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಸಾಕಷ್ಟು ಸತ್ಯಾಂಶಗಳನ್ನು ಹುಡುಕಲಾಗಿದೆ. ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ಹಲವು ಕಡೆ ಕಾಂಗ್ರೆಸ್‌‍ಗೆ ನಕಾರಾತಕವಾಗಿ ಬಿಂಬಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_123_8.txt b/eesanje/url_46_123_8.txt new file mode 100644 index 0000000000000000000000000000000000000000..eb0d62d01b0e844f0ee66440ac61332e5fa26bdb --- /dev/null +++ b/eesanje/url_46_123_8.txt @@ -0,0 +1,9 @@ +ಇಂದು ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳ ಚುನಾವಣೆ : ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ +ಬೆಂಗಳೂರು, ಜೂ.3-ಲೋಕಸಭಾ ಚುನಾವಣೆ ಬೆನ್ನಲ್ಲೇ ನಡೆಯುತ್ತಿರುವ ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳ ಚುನಾವಣೆ ಮತದಾನ ಇಂದು ಬಿರುಸಿನಿಂದ ಸಾಗಿತು.ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು, ಶಿಕ್ಷಕರು, ಪದವೀಧರ ಮತದಾರರು ಇಂದು ಬೆಳಿಗ್ಗೆಯಿಂದಲೇ ಆಗಮಿಸಿ ತಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿತ್ತಿದ್ದುದು ಕಂಡುಬಂದಿತು. +ಬೆಳಿಗ್ಗೆ ಆರಂಭವಾದ ಮತದಾನ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತದಾರರ ಸಂಖ್ಯೆ ಮತಗಟ್ಟೆಗೆ ಆಗಮಿಸುತ್ತಿದ್ದುದು ಹೆಚ್ಚಾಗಿದ್ದು ಕಂಡುಬಂದಿತು.ಮತಗಟ್ಟೆಯ ಹೊರಭಾಗದಲ್ಲಿ ತಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದೂ ಕೂಡ ಕಂಡುಬಂದಿತು. +ಆಗ್ನೇಯ ಶಿಕ್ಷಕರ ವಿಧಾನಪರಿಷತ್‌ ಚುನಾವಣಾ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಇಲ್ಲಿನ ಚಿಕ್ಕಬಳ್ಳಾಪುರ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿಯಲ್ಲಿ ನಡೆದ ಮತದಾನದಲ್ಲಿ ಮತದಾರರು ಉತ್ಸುಕತೆಯಿಂದ ಆಗಮಿಸಿ ಮತ ಚಲಾಯಿಸಿದರು. +ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಪಕ್ಷದ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್‌‍ ಅವರ ಪರವಾಗಿ ಬೆಂಬಲಿಗರು, ಕಾರ್ಯಕರ್ತರು ಮತದಾರರ ಮನವೊಲಿಸುತ್ತಿದ್ದುದು ಕಂಡುಬಂದಿತು.ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮತದಾನ ಮಾಡಿದರು. +ಶಿಕ್ಷಕರ ಕ್ಷೇತ್ರದ ಬಿಜೆಪಿ ಬೆಂಬಲಿತ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌.ಬೋಜೇಗೌಡ ಮತದಾನ ನಡೆಯುತ್ತಿರುವ ಬೇಲೂರು ರಸ್ತೆಯಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. +ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೇರಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರು ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ. +6 ಕ್ಷೇತ್ರಗಳ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌‍ ಮತ್ತು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಬಿಜೆಪಿ ಮಧ್ಯೆ ನೇರ ಹಣಾಹಣಿ ಇದ್ದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಜೆಡಿಎಸ್‌‍ ನಡುವೆ ಹಣಾಹಣಿ ಏರ್ಪಟ್ಟಿದೆ. +ವಿಧಾನಪರಿಷತ್‌ನಲ್ಲಿ ಬಹುಮತ ಸಾಧಿಸಲು ಹವಣಿಸುತ್ತಿರುವ ಕಾಂಗ್ರೆಸ್‌‍ಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ ಮೇಲನೆಯಲ್ಲಿ ಸಭಾಪತಿ ಮತ್ತು ಉಪಸಭಾಪತಿ ಸ್ಥಾನವನ್ನು ತಮ ಬಳಿಯೇ ಉಳಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಿದೆ.ಶಿಕ್ಷಕ, ಪದವೀಧರ ಮತದಾರರು ಯಾರ ಕಡೆ ವಾಲಲಿದ್ದಾರೆ? ಪಕ್ಷೇತರ ಅಭ್ಯರ್ಥಿಗಳು ಯಾರಿಗೆ ಕಂಠಕವಾಗಲಿದ್ದಾರೆ? ಎಂಬುದು ಜೂನ್‌ 6 ರಂದು ನಡೆಯುವ ಮತ ಎಣಿಕೆ ಸಂದರ್ಭದಲ್ಲಿ ಗೊತ್ತಾಗಲಿದೆ. \ No newline at end of file diff --git a/eesanje/url_46_123_9.txt b/eesanje/url_46_123_9.txt new file mode 100644 index 0000000000000000000000000000000000000000..73213bb9bf079514de6b86ca6162511a4b5abf07 --- /dev/null +++ b/eesanje/url_46_123_9.txt @@ -0,0 +1,8 @@ +ಸಿ.ಟಿ.ರವಿ, ಎನ್‌.ರವಿಕುಮಾರ್‌, ಎಂ.ಜಿ. ಮೂಳೆಗೆ ಪರಿಷತ್‌ ಬಿಜೆಪಿ ಟಿಕೆಟ್‌ +ಬೆಂಗಳೂರು,ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ , ಅಚ್ಚರಿ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಬಿಜೆಪಿ ಮಣೆ ಹಾಕಿದೆ. +ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ, ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರನ್ನು ಕಣಕ್ಕಿಳಿಸಿದೆ. +ಸಿ.ಟಿ.ರವಿ(ಒಕ್ಕಲಿಗ), ಎನ್‌.ರವಿಕುಮಾರ್‌(ಕೋಲಿ ಸಮಾಜ), ಎಂ.ಜಿ.ಮುಳೆ ಮರಾಠ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಟಿ.ರವಿ ಅವರನ್ನು ಅಚ್ಚರಿ ಎಂಬಂತೆ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ. +ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಪರಿಷತ್‌ಗೆ ಆಯ್ಕೆ ಮಾಡುವ ಸುಳಿವು ಕೊಟ್ಟಿದ್ದರು. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಹೋರಾಟ ನಡೆಸಬೇಕಾಗಿದ್ದ ಅವರು ಕೆಲವು ಕಾರಣಗಳಿಂದ ಪರಾಭವಗೊಂಡಿದ್ದಾರೆ. ಪಕ್ಷವು ಸದ್ಯದಲ್ಲೇ ಸೂಕ್ತವಾದ ಸ್ಥಾನಮಾನವನ್ನು ನೀಡಲಿದೆ ಎಂದು ಹೇಳಿದ್ದರು. +ಇದೀಗ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಎನ್‌.ರವಿಕುಮಾರ್‌ ಅವರಿಗೆ ಮತ್ತೊಮೆ ಅವಕಾಶ ನೀಡಲಾಗಿದೆ. ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದ್ದಂತಿ ಕೇಳಿಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌‍ಗೆ ತ್ಯಾಗ ಮಾಡಿದ್ದ ಅವರಿಗೆ ಮೇಲನೆಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಅನ್ಯಾಯ ಸರಿಪಡಿಸಲಾಗುತ್ತದೆ ಎಂಬ ಮಾತು ಪಕ್ಷದ ಕಚೇರಿಯಲ್ಲಿ ಹಬ್ಬಿತ್ತು. +ಆದರೆ ಇದೀಗ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಒಕ್ಕಲಿಗ ಸಮುದಾಯದ ಸಿ.ಟಿ.ರವಿ, ಹಿಂದುಳಿದ ವರ್ಗಗಳಿಂದ ಎನ್‌.ರವಿಕುಮಾರ್‌ ಮತ್ತು ಸಂಘ ಪರಿವಾರದ ಮುಳೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. +ವಿಧಾನಸಭೆಯಲ್ಲಿ 65 ಸದಸ್ಯರನ್ನು ಹೊಂದಿರುವ ಬಿಜೆಪಿ ವಿಧಾನಪರಿಷತ್‌ಗೆ ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಒಬ್ಬ ಸದಸ್ಯ ಗೆಲ್ಲಲು 19 ಮತಗಳ ಅಗತ್ಯ ಇರುವುದರಿಂದ ಬಿಜೆಪಿಗೆ ಮೂರು ಸ್ಥಾನಗಳು ದಕ್ಕಲಿವೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಇಂದು ನಿಗದಿತ ಸಮಯದೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. \ No newline at end of file diff --git a/eesanje/url_46_124_1.txt b/eesanje/url_46_124_1.txt new file mode 100644 index 0000000000000000000000000000000000000000..a66db41c8f3557cd76f091d74296bd62866e3db3 --- /dev/null +++ b/eesanje/url_46_124_1.txt @@ -0,0 +1,7 @@ +ವಿಧಾನಪರಿಷತ್‌ ಚುನಾವಣೆ : ಇಂದು ಕಾಂಗ್ರೆಸ್‌‍ ಅಭ್ಯರ್ಥಿಗಳ ಪಟ್ಟಿ ಪ್ರಕಟ ? +ಬೆಂಗಳೂರು, ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ 7 ಸ್ಥಾನಗಳಿಗೆ ಇಂದು ಸಂಜೆ ವೇಳೆಗೆ ಕಾಂಗ್ರೆಸ್‌‍ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹಾಗೂ ಎನ್‌.ಎಸ್‌‍.ಬೋಸರಾಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಅವರಿಗೆ ಅವಕಾಶಗಳು ಸಿಗುವ ಸಾಧ್ಯತೆಗಳು ದಟ್ಟವಾಗಿವೆ. +ಪ್ರಸ್ತುತ ಚುನಾವಣೆ ನಡೆಯುತ್ತಿರುವ 7 ಸ್ಥಾನಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಮತ್ತೊಂದು ಸ್ಥಾನಕ್ಕೂ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಆ ಕ್ಷೇತ್ರವನ್ನೂ ಒಳಗೊಂಡಂತೆ ಒಟ್ಟು 8 ಮಂದಿಯ ಪಟ್ಟಿಯನ್ನು ಪ್ರಕಟಿಸಬಹುದು ಎಂದು ನಿರೀಕ್ಷಿಸಲಾಗಿದೆ. +7 ಸ್ಥಾನಗಳಿಗೆ ಸುಮಾರು 300 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕಾಂಗ್ರೆಸ್‌‍ ಅಳೆದೂ ತೂಗಿ 80 ಮಂದಿಯ ಸಂಭವನೀಯ ಪಟ್ಟಿಯನ್ನು ತಯಾರಿಸಿತ್ತು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಮೂರು ದಿನಗಳ ಕಾಲ ಬೀಡುಬಿಟ್ಟು ಹೈಕಮಾಂಡ್‌ ಜೊತೆ ಚರ್ಚಿಸಿದ ಬಳಿಕ 1:2 ಅನುಪಾತದ ಆಧಾರದ ಮೇಲೆ 14 ಜನರ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಅದರಲ್ಲಿ ಮೂಲಗಳ ಪ್ರಕಾರ, ಯತೀಂದ್ರ, ಬೋಸ್‌‍ರಾಜ್‌, ಗೋವಿಂದರಾಜು ಅವರ ಜೊತೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಜಿ ಸಂಸದ ವಿ.ಎಸ್‌‍.ಉಗ್ರಪ್ಪ, ಚಿಕ್ಕಮಗಳೂರಿನವರಾದ ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್‌ ಕುಮಾರ್‌, ಬಾಗಲಕೋಟೆಯ ಇಸಾಯಿಲ್‌ ಟಮಟ್ಕರ್‌ ಸೇರಿದಂತೆ ಹಲವರ ಹೆಸರುಗಳಿವೆ. +ಈ ಬಾರಿ ಮಹಿಳೆಯರಿಗೆ ಅವಕಾಶ ನಿರಾಕರಿಸುವ ಸಾಧ್ಯತೆಗಳಿವೆ. ವಿಧಾನಸಭೆ ಹಾಗೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ ಸಿಗಬೇಕು ಎಂಬ ಒತ್ತಾಸೆಗಳಿವೆ. ಕೆಪಿಸಿಸಿಯ ಆಡಳಿತಾತಕ ಪ್ರಧಾನ ಕಾರ್ಯದರ್ಶಿ ವಿಜಯ್‌ ಕೆ. ಮುಳಗುಂದ್‌, ಖಚಾಂಜಿ ವಿನಯ್‌ ಕಾರ್ತಿಕ್‌ ಅವರ ಹೆಸರುಗಳು ತೀವ್ರವಾಗಿ ಕೇಳಿಬಂದಿದೆ.11 ಸ್ಥಾನಗಳಲ್ಲಿ ಕಾಂಗ್ರೆಸ್‌‍ನ ಅರವಿಂದ್‌ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜು, ಕೆ.ಹರೀಶ್‌ಕುಮಾರ್‌ ನಿವೃತ್ತರಾಗುತ್ತಿದ್ದಾರೆ. +ಅರವಿಂದ್‌ ಕುಮಾರ್‌ ಅರಳಿ, ಕೆ.ಹರೀಶ್‌ಕುಮಾರ್‌ ಅವರು ಅವಕಾಶ ಗಿಟ್ಟಿಸುವ ಸಾಧ್ಯತೆಗಳು ಕ್ಷೀಣವಾಗಿವೆ. ಬಿಜೆಪಿಯ ಸದಸ್ಯರಾಗಿದ್ದ ಡಾ.ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ಗೆ ಸೇರ್ಪಡೆಯಾಗಿದ್ದು, ಅವರೂ ಕೂಡ ವಿಧಾನಪರಿಷತ್‌ ಸದಸ್ಯತ್ವಕ್ಕೆ ಲಾಬಿ ನಡೆಸಿದ್ದರು. +ಇಂದು ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌‍ ನಾಯಕ ರಾಹುಲ್‌ಗಾಂಧಿ ಅವರು ಆನ್‌ಲೈನ್‌ ಮೂಲಕ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ಹಂತದ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಸಂಜೆ ಕಾಂಗ್ರೆಸ್‌‍ ಪಕ್ಷದ ಶಾಸಕಾಂಗ ಸಭೆ ನಡೆಯಲಿದ್ದು, ಅಲ್ಲಿ ಪಕ್ಷದ ಶಾಸಕರಿಂದ ಪರಿಷತ್‌ ಅಭ್ಯರ್ಥಿಗಳ ನಾಮಪತ್ರಗಳಿಗೆ ಸೂಚಕರ ಸಹಿ ಹಾಕಿಸಲಾಗುವುದು. ಅದಕ್ಕೂ ಮೊದಲೇ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_124_10.txt b/eesanje/url_46_124_10.txt new file mode 100644 index 0000000000000000000000000000000000000000..5a4b726aa36c8aed006cbb9c505d56e21bde438d --- /dev/null +++ b/eesanje/url_46_124_10.txt @@ -0,0 +1,5 @@ +ರಜೆಗೆ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯರಿಬ್ಬರು ನೀರಿನಲ್ಲಿ ಮುಳುಗಿ ಸಾವು +ಚಿಕ್ಕಬಳ್ಳಾಪುರ, ಜೂ.2-ಈಜಲು ತೆರಳಿದ್ದ ಮುಂಬೈ ಮೂಲದ ಬಾಲಕಿಯರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಂಡಿಗನಹಳ್ಳಿ ಕೆರೆಯಲ್ಲಿ ನಡೆದಿದೆ.ಮುಂಬೈ ಮೂಲದ ಅಲಿಯಾ ಪಾಟೀಲ್‌ (14), ಜೋಯಾ ಪಾಟೀಲ್‌ (14) ಮೃತಪಟ್ಟ ದುರ್ದೈವಿಗಳು. +ರಜೆಯ ಹಿನ್ನೆಲೆಯಲ್ಲಿ ಗೌರಿಬಿದನೂರಿನ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯರು ಕುಟುಂಬ ಸಮೇತ ನಿನ್ನೆ ದಂಡಿಗನಹಳ್ಳಿ ಕೆರೆ ವೀಕ್ಷಣೆಗೆ ಆಗಮಿಸಿದ್ದು, ಬಾಲಕಿಯರು ಈಜಲು ಕೆರೆಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. +ಕೆರೆ ಏರಿ ಮೇಲಿದ್ದ ಸಂಬಂಧಿಕರು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಇನ್ನೆರೆಡು ದಿನ ಬಿಟ್ಟು ಮುಂಬೈಗೆ ವಾಪಸ್ಸಾಗಬೇಕಾಗಿದ್ದ ಬಾಲಕಿಯರು ಅಷ್ಟರೊಳಗೆ ಈ ದುರಂತ ಸಾವನ್ನು ಕಂಡಿದ್ದಾರೆ. +ಸುದ್ದಿ ತಿಳಿದ ಕೂಡಲೇ ಮಂಚೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹಗಳನ್ನು ಸ್ಥಳೀಯರ ನೆರವಿನೊಂದಿಗೆ ಹೊರತೆಗೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_124_11.txt b/eesanje/url_46_124_11.txt new file mode 100644 index 0000000000000000000000000000000000000000..f479aeb5e58844ee1c71dbf3d822b7a98f8ff89e --- /dev/null +++ b/eesanje/url_46_124_11.txt @@ -0,0 +1,6 @@ +ಕೊಲೆಯಾದ ನೇಹಾ ಮೇಲೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪ..? +ಹುಬ್ಬಳ್ಳಿ , ಜೂ.2-ನೇಹಾ ಹಿರೇಮಠ ಕೊಲೆ ಪ್ರಕರಣ ದೇಶದ್ಯಂತ ಸಾಕಷ್ಟು ಸದ್ದು ಮಾಡಿತ್ತು. ಈ ಕೊಲೆ ಪ್ರಕರಣ ತನಿಖೆಯನ್ನು ಸಿಐಡಿ ನಡೆಸುತ್ತಿರುವಾಗಲೇ ಮತ್ತೊಂದು ಆರೋಪವನ್ನು ದಲಿತ ಸಂಘಟನೆಗಳು ಹೊರ ಹಾಕಿವೆ. ನಿರಂಜನ ಹಿರೇಮಠ ಅವರ ಮಗಳು ನೇಹಾ ಹೆಸರಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ದಾಖಲೆ ಸೃಷ್ಟಿ ಮಾಡಿದ್ದಾರೆ ಎಂದು ವಿವಿಧ ದಲಿತ ಸಂಘಟನೆಗಳು ಹಾಗೂ ಸಮತಾ ಸೇನೆ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಆರೋಪಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ತಾಲ್ಲೂಕಾಡಳಿತಕ್ಕೂ ಸತ್ಯಾಸತ್ಯದ ಪರಿಶೀಲನೆಗೆ ಮನವಿ ಮಾಡಿದ್ದಾರೆ. +ದೂರಿನಲ್ಲಿ ಏನಿದೆ? :ನೇಹಾ ಹಿರೇಮಠ ಹತ್ಯೆಯ ತನಿಖೆ ನಡೆದಿರುವಾಗಲೇ ಮತ್ತಷ್ಟು ಹೊಸ ವಿಷಯಗಳು ಹೊರಗೆ ಬರುತ್ತಿವೆ. ಪ್ರಬಲ ಲಿಂಗಾಯತ ಸಮಾಜದ ನಿರಂಜನ ಹಿರೇಮಠ ಮಗಳು ಬೇಡ ಜಂಗಮ ದಳ ಪರಿಶಿಷ್ಟ ಜಾತಿ (ಎಸ್ಸಿ) ಪ್ರಮಾಣ ಪತ್ರ ಪಡೆದಿದ್ದು, ಇದನ್ನು ರದ್ದು ಮಾಡಿ ಕ್ರಿಮಿನಲ್‌ ಕೇಸ್‌‍ ದಾಖಲಿಸಬೇಕೆಂದು ಸಮತಾ ಸೇನಾ ವಿವಿಧ ದಲಿತ ಸಂಘ ಸಂಸ್ಥೆಗಳ ಮಹಾಮಂಡಳದಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ದೂರು ನೀಡಿದ್ದಾರೆ. +ನೇಹಾ ಹುಬ್ಬಳ್ಳಿಯ ರಹವಾಸಿ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಬೆಂಗಳೂರು ವಿಳಾಸ ತೋರಿಸಿ ಜಾತಿ ಸರ್ಟಿಫಿಕೇಟ್‌ ಪಡೆದುಕೊಂಡಿದ್ದಾರೆ. ಬೇಗೂರ ರೋಡ್‌ ಹೊಂಗಸಂದ್ರ ವಾರ್ಡ್‌ ನಂಬರ್‌ 135 ರಲ್ಲಿ ಬೇಡ ಜಂಗಮ ಸರ್ಟಿಫಿಕೇಟ್‌ ಪಡೆದುಕೊಂಡಿದ್ದು, ನೇಹಾ ಜಾತಿ ಸರ್ಟಿಫಿಕೇಟ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಸರ್ಟಿಫಿಕೆಟ್‌ ನಕಲಿಯಾಗಿದೆ. ಇದರ ಸಮಗ್ರ ತನಿಖೆಯಾಗಬೇಕು. ನಿರಂಜನ ಹಿರೇಮಠ ರಾಜಕೀಯ ಲಾಭಕ್ಕಾಗಿ ಈ ಕೃತ್ಯ ಎಸಗಿರಬೇಕು ಎಂಬ ಅನುಮಾನವಿದ್ದು ಸಮಗ್ರ ತನಿಖೆಗೆ ಸಂಘಟನೆಗಳು ಒತ್ತಾಯಿಸಿವೆ. +ಆದರೆ ಈ ಆರೋಪವನ್ನು ನೇಹಾ ತಂದೆ ನಿರಂಜನ ಹಿರೇಮಠ ಅಲ್ಲಗಳೆದಿದ್ದಾರೆ. ನಾವು ಬೇಡ ಜಂಗಮ ಸರ್ಟಿಫಿಕೆಟ್‌ ಖೊಟ್ಟಿಯಾಗಿ ತಗೆದುಕೊಂಡಿಲ್ಲ. ಕಾನೂನುಬದ್ಧವಾಗಿ ತಗೆದುಕೊಳ್ಳಲಾಗಿದೆ. ಈ ಬಗ್ಗೆ ಅನುಮಾನ ಇದ್ದವರು ತನಿಖೆ ನಡೆಸಲಿ ನಾನು ಎಲ್ಲಾ ತನಿಖೆಗೂ ಸಿದ್ಧ. +ಆದ್ರೆ ನನ್ನ ಮಗಳ ಸಾವಿನ ನಂತರ ಕೆಲವರು ಷಡ್ಯಂತ್ರ ಮಾಡಿ ಇಂತಹ ಆರೋಪ ಮಾಡುತ್ತಿದ್ದಾರೆ. ನಾನು ಸಿಐಡಿ ಅಧಿಕಾರಿಗಳಿಗೆ ಮಾತ್ರ ನಾನು ಬೇಡ ಜಂಗಮ ಎಸ್ಸಿ ಸರ್ಟೀಫಿಕೆಟ್‌ ಕೊಟ್ಟ್ದೆಿ. ಅದು ಆರೋಪ ಮಾಡಿದವರ ಕೈಗೆ ಹೇಗೆ ಸಿಕ್ಕಿತು ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_124_12.txt b/eesanje/url_46_124_12.txt new file mode 100644 index 0000000000000000000000000000000000000000..504bc0210d37956094b801bf51a9dd139f14c28a --- /dev/null +++ b/eesanje/url_46_124_12.txt @@ -0,0 +1,6 @@ +ಪ್ರಜ್ವಲ್‌ ರೇವಣ್ಣ ಕ್ಷಮೆಗೆ ಅರ್ಹರಲ್ಲ ; ಕಾನೂನು ರೀತಿ ಅತ್ಯುಗ್ರ ಶಿಕ್ಷೆಯಾಗಲಿ : ಜೋಶಿ +ಹುಬ್ಬಳ್ಳಿ,ಜೂ.1-ಪ್ರಜ್ವಲ್‌ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. +ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಜ್ವಲ್‌ ರೇವಣ್ಣ ಯಾವ ಕಾರಣಕ್ಕಾಗಿ ರಾಜ್ಯದ ಜನರ ಕ್ಷಮೆ ಕೇಳಿದ್ದಾರೋ ಗೊತ್ತಿಲ್ಲ. ಆದರೆ, ಅವರು ಕ್ಷಮೆಗೆ ಅರ್ಹರಲ್ಲ ಎಂದು ಸ್ಪಷ್ಟಪಡಿಸಿದರು. +ಹೇಸಿಗೆ ತರುತ್ತದೆ :ಮಹಿಳೆಯರನ್ನು ಉನ್ನತ ಸ್ಥಾನದಲ್ಲಿರಿಸಿ, ಅತ್ಯಂತ ಗೌರವದಿಂದ ನೋಡುವ ಭಾರತ ದೇಶದಲ್ಲಿ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹೇಸಿಗೆ ತರಿಸುವ ಕೆಲಸ ಎಂದು ಜೋಶಿ ತೀವ್ರವಾಗಿ ಖಂಡಿಸಿದರು. +ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಇದುವರೆಗೆ ನಡೆದುಕೊಂಡ ರೀತಿ ಅಕ್ಷಮ್ಯ. ಸಂತ್ರಸ್ತರ ಕ್ಷಮೆ ಕೇಳುತ್ತಾರೋ, ಬಿಡುತ್ತಾರೋ ಆದರೆ, ಇದೊಂದು ಘನಘೋರ ಕೃತ್ಯವಾಗಿದ್ದರಿಂದ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲೇಬೇಕು. ಇದು ಬಿಜೆಪಿಯ ಸ್ಪಷ್ಟ ನಿಲುವಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು. +ಭಾರತೀಯ ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದೆ. ತ್ವರಿತವಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಆರೋಪಿಗೆ ಶೀಘ್ರವೇ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು ಸಚಿವ ಜೋಶಿ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_124_2.txt b/eesanje/url_46_124_2.txt new file mode 100644 index 0000000000000000000000000000000000000000..9df72464e5837424f99bc8521013b778f2455813 --- /dev/null +++ b/eesanje/url_46_124_2.txt @@ -0,0 +1,7 @@ +ತಲೆಮರೆಸಿಕೊಂಡ ಭವಾನಿ ರೇವಣ್ಣ ಅವರಿಗಾಗಿ ಹುಡುಕಾಟ ನಡೆದಿದೆ : ಪರಮೇಶ್ವರ್‌ +ಬೆಂಗಳೂರು, ಜೂ.2-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಹುಡುಕಾಟ ನಡೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವನಾ ರೇವಣ್ಣ ಅವರನ್ನು ಬಂಧಿಸುವುದಕ್ಕಾಗಿಯೇ ಹುಡುಕಾಡಲಾಗುತ್ತಿದೆ. ಅವರು ಸಿಕ್ಕ ತಕ್ಷಣ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದು. ಈವರೆಗೂ ಅವರು ಎಲ್ಲಿದ್ದಾರೆ ಎಂದು ಗೊತ್ತಿಲ್ಲ. ತಪ್ಪಿಸಿಕೊಂಡಿದ್ದಾರೆ. ಅರವಾಗಿಯೇ ಬಂದರೆ ಅಥವಾ ಹುಡುಕಿದಾಗ ಸಿಕ್ಕರೆ ಬಂಧಿಸುವುದು ಖಚಿತ ಎಂದರು. +ಚುನಾವಣೋತ್ತರ ಸಮೀಕ್ಷೆ ವಿಶ್ವಾಸಾರ್ಹವಲ್ಲ :ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ವಾಸ್ತವಕ್ಕೆ ಹತ್ತಿರವಾಗಿಲ್ಲ. ನಮ ಪಕ್ಷದ ವತಿಯಿಂದ ನಡೆಸಿರುವ ಆಂತರಿಕ ಸಮೀಕ್ಷೆ ಹಾಗೂ ಕಾರ್ಯಕರ್ತರ ವರದಿ ಆಧರಿಸಿದರೆ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಕೂಟ 295 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮಲ್ಲಿಕಾರ್ಜುನ ಖರ್ಗೆಯವರು ವ್ಯಕ್ತಪಡಿಸಿರುವುದು ಸರಿಯಿದೆ. ರಾಜ್ಯದಲ್ಲಿ ನಾವು ತಳಮಟ್ಟದಲ್ಲಿ ಕೆಲಸ ಮಾಡಿದ್ದೇವೆ. ಕನಿಷ್ಟ 17 ರಿಂದ 18 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದೇವೆ ಎಂದರು. +ಜನರ ನಡುವೆ ಹೋರಾಡಿರುವ ನಮಗೆ ವಾಸ್ತವ ಗೊತ್ತಿದೆ. ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳು ಕೈಹಿಡಿಯುತ್ತವೆ ಎಂದು ನಂಬಿದ್ದೇವೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ 3 ರಿಂದ 4 ಸ್ಥಾನ ಮಾತ್ರ ಗೆಲ್ಲಲಿದೆ ಎಂದು ಹೇಳಲಾಗಿದೆ. ಇದರ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದರು. +ಹಲವು ಸಂದರ್ಭಗಳಲ್ಲಿ ಸಮೀಕ್ಷೆಗಳು ಸರಿಯಾಗಿವೆ. ಆದರೆ ಈಗ ನಡೆದಿರುವ ಸಮೀಕ್ಷೆಗಳು ಅನುಮಾನಾಸ್ಪದ. ಆಯ್ದ ಮಾಧ್ಯಮಗಳು ಮಾತ್ರ ಸಮೀಕ್ಷೆಯನ್ನು ಮಾಡಿವೆ. ಇದು ಯಾವ ಕಾರಣಕ್ಕೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಹೇಳಿದರು. +ವಿಧಾನಪರಿಷತ್‌ನ ಚುನಾವಣೆ ಹಿನ್ನೆಲೆಯಲ್ಲಿ ಸಂಜೆ ಕಾಂಗ್ರೆಸ್‌‍ ಶಾಸಕಾಂಗ ಸಭೆಯನ್ನು ಕರೆಯಲಾಗಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಇಂದು ಸಂಜೆ ಅಥವಾ ನಾಳೆ ಪ್ರಕಟಗೊಳ್ಳಲಿದೆ. ಅಭ್ಯರ್ಥಿಗಳ ನಾಮಪತ್ರಕ್ಕೆ 10 ಮಂದಿ ಶಾಸಕರು ಸಹಿ ಹಾಕಬೇಕು. ಅದಕ್ಕಾಗಿ ಶಾಸಕಾಂಗ ಸಭೆ ಆಯೋಜಿಸಲಾಗಿದೆ ಎಂದರು. \ No newline at end of file diff --git a/eesanje/url_46_124_3.txt b/eesanje/url_46_124_3.txt new file mode 100644 index 0000000000000000000000000000000000000000..d7260f8cc73abeef2fc56c637ccdfb7752b01efa --- /dev/null +++ b/eesanje/url_46_124_3.txt @@ -0,0 +1,7 @@ +ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ +ಬೆಂಗಳೂರು, ಜೂ.2-ಪ್ರಸಕ್ತ ಲೋಕಸಭಾ ಚುನಾವಣೆ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಸಂಜೆಯಿಂದ ಜೂ. 5ರ ಮಧ್ಯರಾತ್ರಿಯವರೆಗೆ ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಬದಲಿ ರಸ್ತೆಗಳಿಗೆ ವರ್ಗಾಯಿಸಲಾಗಿದೆ. +ಭಾರಿ ಬಿಗಿ ಬಂದೋಬಸ್ತ್‌ನಲ್ಲಿ ಮತ ಎಣಿಕೆ ನಡೆಯಲಿದ್ದು, ಈಗಾಗಲೇ ಮತ ಎಣಿಕೆ ಮಾಡುವ ಸಿಬ್ಬಂದಿಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗಿದೆ.ವಿದ್ಯುನಾನ ಮತಯಂತ್ರವನ್ನು ಬಳಕೆ ಮಾಡಿರುವುದರಿಂದ ಸಂಜೆ ವೇಳೆಗೆ ಎಲ್ಲಾ 28 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ. +ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಗರದ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ನಡೆದರೆ ಬೆಂಗಳೂರು ದಕ್ಷಿಣ ಕ್ಷೇತ್ರದ ಮತ ಎಣಿಕೆಯು ಜಯನಗರದ ಎಸ್‌‍.ಎಸ್‌‍.ಎಂ.ಆರ್‌.ವಿ ಕಾಲೇಜಿನಲ್ಲಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಮತ ಎಣಿಕೆಯು ಮೌಂಟ್‌ ಕಾರ್ಮಲ್‌ ಕಾಲೇಜಿನಲ್ಲಿ ನಡೆಸಲಾಗುತ್ತದೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ರಾಮನಗರದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ತುಮಕೂರು ಕ್ಷೇತ್ರದ ಮತ ಎಣಿಕೆಯು ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆಯಲಿದೆ. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ದೇವನಹಳ್ಳಿ ತಾಲೂಕಿನ ನಾಗಾರ್ಜುನ ಕಾಲೇಜಿನಲ್ಲಿ ನಡೆಯಲಿದೆ. ಹಾಗೆಯೇ ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಜೂ.4 ರ ಬೆಳಿಗ್ಗೆ 8 ರಿಂದ ಆರಂಭಗೊಳ್ಳಲಿದೆ. +ಏ.26 ರಂದು ಹಾಗೂ ಮೇ 7 ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಮತದಾನ ನಡೆದಿತ್ತು. ಮತದಾನ ನಡೆದ ಬಳಿಕ ಮತಯಂತ್ರಗಳನ್ನು ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿದ ಸ್ಟ್ರಾಂಗ್‌ ರೂಂಗಳಲ್ಲಿ ಮತ ಯಂತ್ರಗಳನ್ನು ಸೂಕ್ತ ಬಿಗಿ ಭದ್ರತೆಯೊಂದಿಗೆ ದಾಸ್ತಾನು ಮಾಡಲಾಗಿದೆ. \ No newline at end of file diff --git a/eesanje/url_46_124_4.txt b/eesanje/url_46_124_4.txt new file mode 100644 index 0000000000000000000000000000000000000000..bf883f82a6a2b5a32e45d9d34dd5836a9bcb81ff --- /dev/null +++ b/eesanje/url_46_124_4.txt @@ -0,0 +1,7 @@ +ನಾಳೆ ಜೆಡಿಎಸ್‌‍ ಕೋರ್‌ಕಮಿಟಿ ಸಭೆ +ಬೆಂಗಳೂರು, ಜೂ.2-ಪ್ರಚಲಿತ ರಾಜಕೀಯ ವಿದ್ಯಮಾನಗಳು, ವಿಧಾನಪರಿಷತ್‌ ಚುನಾವಣೆಗಳ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಜೆಡಿಎಸ್‌‍ ಕೋರ್‌ಕಮಿಟಿ ಸಭೆ ನಡೆಯಲಿದೆ. ಕೋರ್‌ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ಜೆಡಿಎಸ್‌‍ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದೆ. +ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಕೋರ್‌ಕಮಿಟಿ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ವಿಧಾನಪರಿಷತ್‌ನ ಶಿಕ್ಷಕರ, ಪದವೀಧರ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ. ಅಲ್ಲದೆ, ಮಂಗಳವಾರ ಹೊರಬೀಳಲಿರುವ ಲೋಕಸಭಾ ಚುನಾವಣಾ ಫಲಿತಾಂಶ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. +ಲೋಕಸಭಾ ಚುನಾವಣೆಯ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸುವುದಲ್ಲದೆ, ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಾಗುವ ಬದಲಾವಣೆ ಬಗ್ಗೆ ಕೂಡ ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಪಕ್ಷ ಸಂಘಟನೆ, ಹೊಸ ಸದಸ್ಯರ ನೋಂದಣಿ, ಪಕ್ಷ ಕೈಗೊಳ್ಳಲಿರುವ ಹೋರಾಟದ ರೂಪುರೇಷೆಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಅವಲೋಕನ ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ. +ಶಾಸಕಾಂಗ ಸಭೆ :ಇದಕ್ಕೂ ಮುನ್ನ ನಾಳೆ ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಪಕ್ಷದ ಕಚೇರಿಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ನಾಳೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ. ಹೀಗಾಗಿ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪಕ್ಷದ ಶಾಸಕರು, ನಾಯಕರು ಹಾಜರಿರಲಿದ್ದಾರೆ. +ಪಕ್ಷದ ಅಭ್ಯರ್ಥಿಗೆ ಸೂಚಕರಾಗಿ ಶಾಸಕರು ಸಹಿ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_124_5.txt b/eesanje/url_46_124_5.txt new file mode 100644 index 0000000000000000000000000000000000000000..26b61d4528cd50975e2431bea99231016eaa01d0 --- /dev/null +++ b/eesanje/url_46_124_5.txt @@ -0,0 +1,8 @@ +ಲವ್‌ ಜಿಹಾದ್‌ ವಿರುದ್ಧ ಶ್ರೀರಾಮ ಸೇನೆ ಸಹಾಯವಾಣಿಗೆ 400ಕ್ಕೂ ಹೆಚ್ಚು ಕರೆ +ಹುಬ್ಬಳಿ, ಜೂ.2-ಅಂಜಲಿ ಅಂಬೀಗೇರ ಹಾಗೂ ನೇಹಾ ಹಿರೇಮಠ ಕೊಲೆ ನಂತರ ಸಾಕಷ್ಟು ಆತಂಕದಲ್ಲಿ ಇದ್ದ ಹಿಂದು ಹೆಣ್ಣು ಮಕ್ಕಳ, ಯುವತಿಯರ ಸಹಾಯಕ್ಕಾಗಿ ಶ್ರೀ ರಾಮ ಸೇನೆ ಸ್ಥಾಪಿಸಿದ್ದ ಸಹಾಯವಾಣಿಗೆ ಕೇವಲ ಮೂರು ದಿನಗಳಲ್ಲಿ 400 ಕ್ಕೂ ಹೆಚ್ಚು ಕರೆಗಳು ಬಂದಿವೆ. +ವಿಶೇಷವಾಗಿ ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿರುವ ಶ್ರೀ ರಾಮ ಸೇನೆ ಯಾವುದೇ ಕ್ರೌರಕ್ಕೆ ಹೆಣ್ಣು ಮಕ್ಕಳು, ಯುವತಿಯರು ಅಮಾಯಕರು ಬಲಿ ಆಗಬಾರದು ಮತ್ತು ಪೊಲೀಸ್‌‍ ನೈತಿಕಗಿರಿ ವಿರುದ್ಧ ಸೆಡ್ಡು ಹೊಡೆದಿರುವ ಶ್ರೀ ರಾಮ ಸೇನೆ ಕಾರ್ಯಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಂತಾಗಿದೆ. +ಹುಬ್ಬಳ್ಳಿಯಲ್ಲಿ ಶ್ರೀ ರಾಮ ಸೇನೆ ಆರಂಭಿಸಿದ್ದ ಸಹಾಯವಾಣಿಯಲ್ಲಿ ನುರಿತ ಕಾನೂನು ತಜ್ಞರು, ವಿವಿಧ ಕ್ಷೇತ್ರಗಳಲ್ಲಿನ ಪರಿಣಿತರು ಹಾಗೂ ಶ್ರೀ ರಾಮಸೇನೆ ಪ್ರಮುಖರು ಕಾರ್ಯಕರ್ತರು ಪ್ರತಿದಿನ ಸಹಾಯವಾಣಿಗೆ ಬಂದ ಕರೆಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಸಾಧ್ಯವಾದ ಮಟ್ಟಿಗೆ ಪರಿಹರಿಸಲು ಮುಂದಾಗಿದ್ದಾರೆ. ಈಗ ಬಂದ ಕರೆಗಳಲ್ಲಿ ಲವ್‌ ಜಿಹಾದ್‌ ವಿರುದ್ಧ ನಲುಗಿದ ಮಹಿಳೆಯರ ಯುವತಿಯರ ಕರೆ ಆಗಿವೆ. ಮಹಿಳೆಯರ ರಕ್ಷಣೆಗಾಗಿ ಸ್ಥಾಪಿಸಿದ ಸಹಾಯವಾಣಿಗೆ ಬಂದ ಕರೆಗಳು ಸಹ ದಾಖಲಾಗಿತ್ತಿವೆ. +400 ಕ್ಕೂ ಹೆಚ್ಚು ಕರೆಗಳು ಸಹಾಯವಾಣಿಗೆ ಬಂದ ಕರೆಗಳಲ್ಲಿ ಹುಬ್ಬಳ್ಳಿ ಧಾರವಾಡ, ನವಲಗುಂದ ನರಗುಂದ, ಕೊಪ್ಪಳ ಹಾಗೂ ಗದಗ ಜಿಲ್ಲೆಯಿಂದಲೂ ಬಂದಿವೆ.ಲವ್‌ ಜಿಹಾದ್‌ ಹೆಸರಲ್ಲಿ ಯಾರು ಆತಹತ್ಯೆ ಮಾಡಿಕೊಳ್ಳಬೇಡಿ ಎಂಬ ಸಂದೇಶ ರವಾನೆ ಮಾಡಿದ್ದು ನೈತಿಕ ಬೆಂಬಲ ನೀಡಲಾಗುತ್ತಿದ್ದು, ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದೂ ಹೆಣ್ಣು ಮಕ್ಕಳ ಮತಾಂತರ ಆಗುವ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಾ ಇದೆ. ದಿನದ 24 ಗಂಟೆಯಲ್ಲಿ ಯಾವದೇ ಸಮಯದಲ್ಲಿ ನೀವು ಕರೆ ಮಾಡಲು ಅವಕಾಶ ನೀಡಲಾಗಿದೆ. +ಇನ್ನು ಇದೇ ಸಮಯದಲ್ಲಿ ಶ್ರೀ ರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾತನಾಡಿ, ಇಷ್ಟೊಂದು ಬೇಗನೆ ಈ ರೀತಿಯಲ್ಲಿ ಕರೆಗಳು ಬರುತ್ತೇವೆ ಎಂದು ಊಹೆ ಮಾಡರಲಿಲ್ಲ. ಮೇ 29 ರಂದು ಆರಂಭ ಮಾಡಿದ್ದ ಸಹಾಯವಾಣಿಗೆ ಇದುವರೆಗೆ 400 ಕ್ಕೂ ಹೆಚ್ಚು ಕರೆಗಳು ಬಂದಿವೆ. ನಮ ಸಹಾಯವಾಣಿ ಕರೆಗೆ ಪ್ರಶಂಸೆ ಸಹ ಮಾಡಿದ್ದಾರೆ. +ಉದ್ಯೋಗದಲ್ಲಿ ಇದ್ದ ಮಹಿಳೆಯರು ಯುವತಿಯರು ಕುಟುಂಬ ಕಲಹ, ಪ್ರೀತಿ ಪ್ರೇಮ ವೈಫಲ್ಯ, ನಿರಾಕರಣೆ, ಹಿಂಸೆ ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನ ಹೊತ್ತುಕೊಂಡು ಕರೆ ಮಾಡಲಾಗಿದೆ. ಇದರಲ್ಲಿ ಸಾಕಷ್ಟು ಈಗಾಗಲೇ ಬಗೆಹರಿಸಲಾಗಿದೆ ಎಂದರು. +ಇನ್ನು ಕೆಲವರು ನಮ ಸಹಾಯವಾಣಿ ಕೆಲಸಕ್ಕೆ ಸಹಿಸದ ಕೆಲವರು ಅಪಪ್ರಚಾರ ಮಾಡುತಿದ್ದು, ನಮ ನಂಬರ್‌ ಬ್ಲಾಕ್‌ ಸಹ ಮಾಡಲಾಗುತ್ತದೆ. ಆದರೆ ಇದಕ್ಕೆ ಯಾವುದಕ್ಕೂ ಹೆದರುವುದಿಲ್ಲ ಎಂದರು. \ No newline at end of file diff --git a/eesanje/url_46_124_6.txt b/eesanje/url_46_124_6.txt new file mode 100644 index 0000000000000000000000000000000000000000..e759d016f8f922c28828864f35106af6bfddcea6 --- /dev/null +++ b/eesanje/url_46_124_6.txt @@ -0,0 +1,7 @@ +ಸಿ.ಟಿ.ರವಿಗೆ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಸ್ಥಾನ ಬಹುತೇಕ ಖಚಿತ +ಬೆಂಗಳೂರು,ಜೂ.2-ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾಜಿ ಸಚಿವ ಸಿ.ಟಿ.ರವಿ ಅವರು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಚಿಕ್ಕಮಗಳೂರು, ಉಡುಪಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಅವರು ವಿಜೇತರಾದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. +ತೆರವಾಗಲಿರುವ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಬಿಜೆಪಿಯಲ್ಲಿ ಹಲವರು ಆಕಾಂಕ್ಷಿಗಳಾಗಿದ್ದಾರೆ. ಆದರೆ ಪ್ರತಿಪಕ್ಷದಂತಹ ಮಹತ್ವದ ಹುದ್ದೆಯನ್ನು ನಿಭಾಯಿಸಬೇಕಾದರೆ ವಿಷಯ ಪಾಂಡಿತ್ಯ, ಆಳವಾದ ಅಧ್ಯಯನ, ಜ್ಞಾನ, ವಿಷಯಗಳ ಮೇಲೆ ಹಿಡಿತ, ಸಂದರ್ಭೋಚಿತ ವಿಷಯ ಪ್ರಸ್ತಾವನೆ, ಸರ್ಕಾರದ ಮೇಲೆ ಟೀಕೆ-ಟಿಪ್ಪಣಿ ಹೀಗೆ ಹಲವು ವಿಷಯಗಳ ಮೇಲೆ ಪಾಂಡಿತ್ಯ ಹೊಂದಿರಬೇಕು. +ಪರಿಷತ್‌ನಲ್ಲಿ ಉಪನಾಯಕರಾಗಿರುವ ಸುನಿಲ್‌ ವಲ್ಯಾಪುರೆ ಹಾಗೂ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಕೂಡ ಕಣ್ಣಿಟ್ಟಿದ್ದಾರೆ. ವಿಧಾನಸಭೆಯಲ್ಲಿ ಆರ್‌.ಅಶೋಕ್‌ ಪ್ರತಿಪಕ್ಷದ ನಾಯಕರಾಗಿರುವುದರಿಂದ ಪರಿಷತ್‌ನಲ್ಲೂ ಅದೇ ಸಮುದಾಯಕ್ಕೆ ಮಣೆ ಹಾಕುತ್ತಾರೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. +ಸದನದಲ್ಲಿ ಸರ್ಕಾರದ ವಿರುದ್ಧ ರಣತಂತ್ರ ರೂಪಿಸುವುದು, ಎಲ್ಲರನ್ನು ಒಗ್ಗೂಡಿಸುವುದು ಹಾಗೂ ಸದಸ್ಯರ ಮೇಲೆ ಹಿಡಿತ, ಭಾಷೆ ಪಾಂಡಿತ್ಯ ಇರಬೇಕಾಗಿರುವುದರಿಂದ ಸಿ.ಟಿ.ರವಿ ಅವರಿಗೆ ಮಣೆ ಹಾಕಿದರೆ ಅಚ್ಚರಿ ಇಲ್ಲ. +ಮೂಲತಃ ಸಂಘ ಪರಿವಾರದ ಹಿನ್ನಲೆಯ ಸಿ.ಟಿ.ರವಿ ಅವರು ಉಗ್ರ ಹಿಂದೂತ್ವವಾದಿಯೂ ಹೌದು. ಸಂವಿಧಾನ, ಪ್ರಜಾಪ್ರಭುತ್ವ, ಪ್ರಚಲಿತ ವಿದ್ಯಮಾನಗಳು, ಇತಿಹಾಸ, ರಾಜಕೀಯ, ಸಾಹಿತ್ಯ ಹೀಗೆ ಹಲವಾರು ವಿಷಯಗಳ ಮೇಲೆ ತಮದೇ ಆದ ವಿದ್ವತ್‌ ಹೊಂದಿದ್ದಾರೆ. +ಯಾವುದೇ ವಿಷಯದ ಬಗ್ಗೆಯೂ ಸದನದಲ್ಲಿ ನಿರ್ಗಳವಾಗಿ ಮಾತನಾಡುವ ಚಾಕಚಕ್ಯತೆಯೂ ಇದೆ. ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಸಿ.ಟಿ.ರವಿ ಅವರಿಗೆ ಪ್ರತಿಪಕ್ಷದ ನಾಯಕನ ಸ್ಥಾನ ನೀಡಬಹುದೆಂಬ ಮಾತು ಬಿಜೆಪಿಯಲ್ಲಿ ಕೇಳಿಬರುತ್ತಿದೆ.ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಈ ಎಲ್ಲಾ ಅಂತೆಕಂತೆಗಳಿಗೆ ಪೂರ್ಣ ವಿರಾಮ ಬೀಳಲಿದೆ. \ No newline at end of file diff --git a/eesanje/url_46_124_7.txt b/eesanje/url_46_124_7.txt new file mode 100644 index 0000000000000000000000000000000000000000..f8b76f9456cf2a2700d9142d455a2d6036ca653e --- /dev/null +++ b/eesanje/url_46_124_7.txt @@ -0,0 +1,7 @@ +ವಿಧಾನಪರಿಷತ್‌ ಚುನಾವಣೆ : ಅಚ್ಚರಿ ಬೆಳವಣಿಯಲ್ಲಿ ಸಿ.ಟಿ.ರವಿಗೆ ಬಿಜೆಪಿ ಮಣೆ +ಬೆಂಗಳೂರು,ಜೂ.2-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ , ಅಚ್ಚರಿ ಬೆಳವಣಿಗೆ ಎಂಬಂತೆ ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ, ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ. ಮುಳೆ ಅವರನ್ನು ಕಣಕ್ಕಿಳಿಸಿದೆ. +ಸಿ.ಟಿ.ರವಿ(ಒಕ್ಕಲಿಗ), ಎನ್‌.ರವಿಕುಮಾರ್‌(ಕೋಲಿ ಸಮಾಜ), ಎಂ.ಜಿ.ಮುಳೆ ಮರಾಠ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಸಿ.ಟಿ.ರವಿ ಅವರನ್ನು ಅಚ್ಚರಿ ಎಂಬಂತೆ ಪರಿಷತ್‌ ಚುನಾವಣೆಯಲ್ಲಿ ಅಭ್ಯರ್ಥಿ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ. +ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಪರಿಷತ್‌ಗೆ ಆಯ್ಕೆ ಮಾಡುವ ಸುಳಿವು ಕೊಟ್ಟಿದ್ದರು. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಹೋರಾಟ ನಡೆಸಬೇಕಾಗಿದ್ದ ಅವರು ಕೆಲವು ಕಾರಣಗಳಿಂದ ಪರಾಭವಗೊಂಡಿದ್ದಾರೆ. ಪಕ್ಷವು ಸದ್ಯದಲ್ಲೇ ಸೂಕ್ತವಾದ ಸ್ಥಾನಮಾನವನ್ನು ನೀಡಲಿದೆ ಎಂದು ಹೇಳಿದ್ದರು. +ಇದೀಗ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಎನ್‌.ರವಿಕುಮಾರ್‌ ಅವರಿಗೆ ಮತ್ತೊಮೆ ಅವಕಾಶ ನೀಡಲಾಗಿದೆ. ಪರಿಷತ್‌ ಚುನಾವಣೆಯಲ್ಲಿ ಈ ಬಾರಿ ಸುಮಲತಾ ಅಂಬರೀಶ್‌ ಅವರಿಗೆ ಟಿಕೆಟ್‌ ನೀಡಲಾಗುತ್ತದೆ ಎಂಬ ವದ್ದಂತಿ ಕೇಳಿಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌‍ಗೆ ತ್ಯಾಗ ಮಾಡಿದ್ದ ಅವರಿಗೆ ಮೇಲನೆಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಅನ್ಯಾಯ ಸರಿಪಡಿಸಲಾಗುತ್ತದೆ ಎಂಬ ಮಾತು ಪಕ್ಷದ ಕಚೇರಿಯಲ್ಲಿ ಹಬ್ಬಿತ್ತು. +ಆದರೆ ಇದೀಗ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಒಕ್ಕಲಿಗ ಸಮುದಾಯದ ಸಿ.ಟಿ.ರವಿ, ಹಿಂದುಳಿದ ವರ್ಗಗಳಿಂದ ಎನ್‌.ರವಿಕುಮಾರ್‌ ಮತ್ತು ಸಂಘ ಪರಿವಾರದ ಮುಳೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ವಿಧಾನಸಭೆಯಲ್ಲಿ 65 ಸದಸ್ಯರನ್ನು ಹೊಂದಿರುವ ಬಿಜೆಪಿ ವಿಧಾನಪರಿಷತ್‌ಗೆ ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. +ಒಬ್ಬ ಸದಸ್ಯ ಗೆಲ್ಲಲು 19 ಮತಗಳ ಅಗತ್ಯ ಇರುವುದರಿಂದ ಬಿಜೆಪಿಗೆ ಮೂರು ಸ್ಥಾನಗಳು ದಕ್ಕಲಿವೆ. ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಇಂದು ನಿಗದಿತ ಸಮಯದೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. \ No newline at end of file diff --git a/eesanje/url_46_124_8.txt b/eesanje/url_46_124_8.txt new file mode 100644 index 0000000000000000000000000000000000000000..483a326d86b143d0404f9d7d37fc8e2fa1e71e71 --- /dev/null +++ b/eesanje/url_46_124_8.txt @@ -0,0 +1,7 @@ +ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆ ಸಾಧ್ಯತೆ +ಬೆಂಗಳೂರು, ಜೂ.2-ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿ ಮೂರು ದಿನ ಕಳೆದಿದ್ದು, ಮತ್ತೆ ಅಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಕರ್ನಾಟಕಕ್ಕೆ ಇಂದು ಮುಂಗಾರು ಆಗಮನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿತ್ತು. ಆದರೆ ಈತನಕ ಮುಂಗಾರು ಪ್ರವೇಶ ಮಾಡಿರುವುದನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. +ಇಂದು ಸಂಜೆ ವೇಳೆಗೆ ಅಥವಾ ನಾಳೆ ಮುಂಗಾರು ಪ್ರವೇಶದ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎಂದು ಹವಾಮಾನ ತಜ್ಞ ಸಿ.ಎಸ್‌‍.ಪಾಟೀಲ್‌ ತಿಳಿಸಿದರು. ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಅದರ ಪ್ರಭಾವದಿಂದ ಕೇರಳ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದೆ. +ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಲಿದೆ. ನಿನ್ನೆಯಿಂದಲೇ ಮುಂಗಾರು ರಾಜ್ಯಕ್ಕೆ ಆಗಮಿಸಲು ಪೂರಕವಾದ ವಾತಾವರಣ ಸೃಷ್ಟಿಯಾಗಿದೆ ಎಂದರು. +ಉತ್ತರ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸೂಚನೆಗಳಿವೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಆಗೊಮೆ ಈಗೊಮೆ 40 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದರು.ನಿನ್ನೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿತ್ತು. ಉತ್ತರ ಕರ್ನಾಟಕ ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ ಎಂದು ತಿಳಿಸಿದರು. +ಹವಾಮಾನ ಮುನ್ಸೂಚನೆ ಪ್ರಕಾರ, ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಕೆಲೆವೆಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದರು. +ಬೆಂಗಳೂರು, ದೇವನಹಳ್ಳಿ ತಲಾ 5 ಸೆಂ.ಮೀ., ಗಂಗಾವತಿ 6 ಸೆಂ.ಮೀ., ಚಾಮರಾಜನಗರ 4 ಸೆಂ.ಮೀ., ಎಚ್‌.ಡಿ.ಕೋಟೆ, ಚಿಕ್ಕಬಳ್ಳಾಪುರ, ಹೊಸಕೋಟೆ, ಗುಬ್ಬಿ, ಮಂಡ್ಯ, ಮದ್ದೂರು, ಉಡುಪಿ, ಚಿಂತಾಮಣಿಯಲ್ಲಿ ತಲಾ 3 ಸೆಂ.ಮೀ., ಹೆಸರುಘಟ್ಟ, ತುಮಕೂರು, ಮೈಸೂರು, ನಾಗಮಂಗಲ, ಪರಶುರಾಮಪುರ, ಶಿರಾ, ಹುಣಸೂರು ತಲಾ 2 ಸೆಂ.ಮೀ., ಕೋಣನೂರು, ಕೆ.ಆರ್‌.ಪೇಟೆ, ಶ್ರವಣಬೆಳಗೊಳ, ಕೊಳ್ಳೆಗಾಲ, ರಾಮನಗರ, ರಾಯಲ್ಪಡು, ದೇವರಹಿಪ್ಪರಗಿ, ಕುಮಟಾದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. \ No newline at end of file diff --git a/eesanje/url_46_124_9.txt b/eesanje/url_46_124_9.txt new file mode 100644 index 0000000000000000000000000000000000000000..a97e6f1570a3014e746d43a97945e35eb646f792 --- /dev/null +++ b/eesanje/url_46_124_9.txt @@ -0,0 +1,7 @@ +ನೇಹಾ, ಅಂಜಲಿ ಹಾಗೆಯೇ ನಿನ್ನನ್ನೂ ಹತ್ಯೆ ಮಾಡ್ತೀವಿ ; ಮುಖ್ಯ ಶಿಕ್ಷಕಿಗೆ ಬೆದರಿಕೆ ಪತ್ರ +ಹುಬ್ಬಳ್ಳಿ, ಜೂ.2-ನೇಹಾ ಹಾಗೂ ಅಂಜಲಿ ಅಂಬೀಗೇರ ಹಾಗೆಯೇ ನಿನ್ನ ಹತ್ಯೆಯೂ ಆಗುತ್ತದೆ ಎಂದು ನಗರದ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ. +ಮುಖ್ಯ ಶಿಕ್ಷಕಿ ದೀಪಾ ಅಡವಿಮಠ ಎನ್ನುವವರಿಗೆ ಐದು ದಿನಗಳ ಹಿಂದೆ ಪೋಸ್ಟ್‌ (ಅಂಚೆ) ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಹಿನ್ನಲೆಯಲ್ಲಿ ಹತ್ಯೆ ಬೆದರಿಕೆ ಪತ್ರದ ಕುರಿತು ಕೇಶ್ವಾಪೂರ ಪೊಲೀಸರ ಗಮನಕ್ಕೆ ತಂದಿದ್ದು, ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಅವರ ಮನೆಗೆ ಪೊಲೀಸರು ಭೇಟಿ ನೀಡಿದ್ದಾರೆ. +ಎಸಿಪಿ ಭೇಟಿ :ಶಿಕ್ಷಕಿ ದೀಪಾ ಮನೆಗೆ ಎಸಿಪಿ ಶಿವಪ್ರಕಾಶ್‌ ನಾಯಕ್‌ ಭೇಟಿ ನೀಡಿದ್ದು, ಮಾಹಿತಿ ಪಡೆದಿದ್ದಾರೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಮುಖ್ಯ ಶಿಕ್ಷಕಿ ಮನೆ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನೇಹಾ, ಅಂಜಲಿ ಹತ್ಯೆ ಘಟನೆ ಮಾಸುವ ಮುನ್ನವೇ ಕೊಲೆ ಬೆದರಿಕೆ ಪತ್ರ ಮತ್ತಷ್ಟು ಆತಂಕ ಸೃಷ್ಟಿಸಿದೆ. +ಈ ಕುರಿತು ಮಾತನಾಡಿದ ಮುಖ್ಯ ಶಿಕ್ಷಕಿ ದೀಪಾ ಅಡವಿಮಠ, ಮೇ. 28 ರಂದು ನನಗೆ ಅನಾಮಧೇಯ ಪತ್ರ ಬಂದಿದೆ. ಅದರಲ್ಲಿ ದೀಪಾ ನಿನ್ನ ಹತ್ಯೆ ನೇಹಾ ಹಾಗೂ ಅಂಜಲಿ ಹಾಗೆ ಕೆಲವೇ ದಿನಗಳಲ್ಲಿ ಎಂದು ಬರೆದಿದೆ. ಯಾವ ಮಕ್ಕಳ ಮೇಲೂ ನನಗೆ ದ್ವೇಷ ಇಲ್ಲ, ಮಕ್ಕಳಿಗೂ ನನ್ನ ಮೇಲೆ ದ್ವೇಷವಿಲ್ಲ. ನಾನು ಕಣ್ಣಲ್ಲಿ ಬುದ್ಧಿ ಹೇಳಿದ್ದೇನೆ. ಇದೀಗ ಬೆಂಗೇರಿಯ ರೋಟರಿ ಶಾಲೆಗೆ ಪತ್ರ ಬಂದಿದೆ ಎಂದರು. +ಇನ್ನು ನಾನು ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ನನಗೆ ಪತ್ರ ಬಂದ ದಿನವೇ ನಾನು ಪೊಲೀಸರ ಗಮನಕ್ಕೆ ತಂದಿದ್ದೇನೆ. ಈ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮಾಡ್ತೀವಿ ಎಂದಿದ್ದು, ಪತ್ರ ಬರೆದ ಅನಾಮಧೇಯ ವ್ಯಕ್ತಿಯನ್ನು ಪತ್ತೆ ಮಾಡೋದಾಗಿ ಹೇಳಿದ್ದಾರೆ. ಈ ರೀತಿ ಯಾರೇ ಪತ್ರ ಬರೆದರೂ ಅವರಿಗೆ ಶಿಕ್ಷೆ ಆಗಬೇಕು. +ನಾನು ಅಮಾಯಕ ಶಿಕ್ಷಕಿ, ವಿದ್ಯಾರ್ಥಿಗಳ ಮೇಲೆ ನನಗೆ ಅನುಮಾನ ಇಲ್ಲ. ಎಲ್ಲ ವಿದ್ಯಾರ್ಥಿಗಳು ಪ್ರೀತಿ ಇಂದ ಇದ್ದಾರೆ. ವಿದ್ಯಾರ್ಥಿಗಳು ನನ್ನ ಮೊಬೈಲ್‌ ನಂಬರ್‌ ಗಾಡ್‌ ಎಂದು ಸೇವ್‌ ಮಾಡಿದ್ದಾರೆ. ಪತ್ರ ಬಂದ ದಿನದಿಂದ ನನಗೆ ಫ್ರೀಯಾಗಿ ಇರೋಕೆ ಆಗುತ್ತಿಲ್ಲ. ಭಯ ಆಗುತ್ತಿದೆ ಎಂದು ದೀಪಾ ಅಡವಿಮಠ ಹೇಳಿದ್ದಾರೆ. \ No newline at end of file diff --git a/eesanje/url_46_125_1.txt b/eesanje/url_46_125_1.txt new file mode 100644 index 0000000000000000000000000000000000000000..a45261ae2fc65147a903610543f3063668027f7b --- /dev/null +++ b/eesanje/url_46_125_1.txt @@ -0,0 +1,11 @@ +ವಾಲ್ಮೀಕಿ ಅಭಿವೃದ್ದಿ ನಿಗಮದ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಆರ್‌.ಆಶೋಕ್‌ +ಬೆಂಗಳೂರು,ಜೂ.1-ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ಅವ್ಯವಹಾರ ಪ್ರಕರಣವನ್ನು ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೆ, ದೆಹಲಿಗೂ ಕೊಂಡಯ್ಯುವುದಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಆಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಿಕ್‌ ಬ್ಯಾಕ್‌ ಹಣ ದೆಹಲಿವರೆಗೂ ಮುಟ್ಟಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ. ಇದರಲ್ಲಿ ಮುಂದೆ ಕಾಂಗ್ರೆಸ್‌‍ ನ ದೆಹಲಿ ನಾಯಕರ ತಲೆದಂಡವೂ ಆಗಲಿದೆ. ಹೀಗಾಗಿ ಇದನ್ನು ಸರ್ಕಾರ ಅವರನ್ನು ರಕ್ಷಿಸಲು ಎಸ್‌‍ಐಟಿ ಮೂಲಕ ತನಿಖೆಗೆ ಆದೇಶ ನೀಡಿದೆ. ಸಿಬಿಐಗೆ ಕೊಡದಿದ್ದರೆ ದೆಹಲಿವರೆಗೂ ಪ್ರಕರಣ ಕೊಂಡೊಯ್ತುತ್ತೇವೆ ಎಂದು ಹೇಳಿದರು. +ಕಾಂಗ್ರೆಸ್‌‍ ಪಕ್ಷದ ಅಽನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಯವರೆಗೂ ಈ ಹಣ ಹೋಗಿದೆ. ಜೊತೆಗೆ 9 ಐಟಿ ಕಂಪೆನಿಗಳಿಗೆ ದಲಿತರ ಹಣ ವರ್ಗಾವಣೆ ಮಾಡಲಾಗಿದೆ.ದಲಿತರ ಹಣವನ್ನೇ ಲೂಟಿ ಹೊಡೆಯುವಷ್ಟು ಚಂಡಾಳರು ಇವರು. ಈ ಹಣವನ್ನು ಒಬ್ಬರೇ ತಿಂದಿಲ್ಲ, ಎಲ್ಲರಿಗೂ ಪಾಲು ಹೋಗಿದೆ ಎಂದು ದೂರಿದರು. +ವಾಲೀಕಿ ಹಗರಣದ ಸಂಪೂರ್ಣ ದಾಖಲೆಗಳನ್ನು ಕೇಂದ್ರದ ನಮ ನಾಯಕರಿಗೆ ಕಳಿಸಿಕೊಟ್ಟಿದ್ದೇವೆ. ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಎಸ್‌‍ಐಟಿಗೆ ತನಿಖೆ ವಹಿಸಿದ್ದಾರೆ.ಸಿಬಿಐ ತನಿಖೆ ತಪ್ಪಿಸಿಕೊಳ್ಳೋದು ಹೇಗೆ ಎಂದು ಸಿಎಂ, ಡಿಸಿಎಂ, ಸಚಿವರು ಸಭೆಗಳ ಸಭೆ ನಡೆಸುತ್ತಾಲೇ ಇದ್ದಾರೆ. ಸರ್ಕಾರಕ್ಕೆ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳಲು ಪ್ರಕರಣವನ್ನು ಏನಾದರೂ ಮಾಡಿ ಮುಚ್ಚಿ ಹಾಕಿ ಎಂದು ಸಿಎಂ ಅವರು ಎಸ್‌‍ಐಟಿ ಗೆ ಹೇಳಿದ್ದಾರೆಂದು ನಮಗೆ ಮಾಹಿತಿ ಬಂದಿದೆ ಎಂದು ಅನುಮಾನ ವ್ಯಕ್ತಪಡಿಸಿದರು. +187 ಕೋಟಿ ಮೊತ್ತದ ಬ್ರಹಾಂಡ ಅವ್ಯವಹಾರ ಇದು. ಯಾರು ಎಲ್ಲಿಗೆ ಬೇಕಾದರೂ ಸರ್ಕಾರದ ಹಣ ವರ್ಗಾವಣೆ ಮಾಡುವ ಆದೇಶ ಕೊಟ್ಟಿದ್ದಾರಾ ಸಿಎಂ? ಎಂದು ಪ್ರಶ್ನೆಸಿದ ಅಶೋಕ್‌ ಅವರು, ಆರ್ಥಿಕ ಸಚಿವರಾಗಿ ಸಿಎಂ ಅಡಿಯೇ ಈ ಅಕ್ರಮ ನಡೆದಿದೆ. ರಾಜ್ಯದಲ್ಲಿ ಇಬ್ಬರು ಸಿಎಂ ಇದ್ದಾರೆ. ಒಬ್ಬರು ಸಿಎಂ, ಇನ್ನೊಬ್ಬರು ಸೂಪರ್‌ ಸಿಎಂ. ನಿಷ್ಟಾವಂತ ಅಧಿಕಾರಿಗಳಿಗೆ ಈ ಸರ್ಕಾರ ಸಾವಿನ ಭಾಗ್ಯ ಕಲ್ಪಿಸಿದೆ ಎಂದು ಟೀಕಾ ಪ್ರಹಾರ ನಡೆಸಿದರು. +ಆರ್ಥಿಕ ಇಲಾಖೆ ಅಡಿಯಲ್ಲೇ ಅಕ್ರಮ ನಡೆದಿದ್ದರೂ ಸಿದ್ದರಾಮಯ್ಯ ಕಣುಚ್ಚಿ ಕೂತಿದ್ದಾರೆ. ಈ ಹಣ ದಲಿತರಿಗೆ ತಲುಪಬೇಕು. ಸಿಎಂ ರಾಜೀನಾಮೆ ಕೊಡಬೇಕು. ಬಿಜೆಪಿ ಇದನ್ನು ಇಲ್ಲಿಗೇ ಬಿಡುವುದಿಲ್ಲ. ಹಣ ವರ್ಗಾವಣೆಯಾಗಿರುವ ಈ ಕಂಪೆನಿಗಳು ಕಾಂಗ್ರೆಸ್‌‍ನ ಹಿಂಬಾಲಕರದ್ದು. +ಕಾಂಗ್ರೆಸ್‌‍ ಮಾಯಾಜಾಲದ ಸ್ವರೂಪ ಬಯಲಾಗಿದೆ. ಅಕ್ರಮ ಆಗಿರುವುದು ನಿಗಮದ ಅಧ್ಯಕ್ಷರಿಗೇ ಗೊತ್ತಿಲ್ಲ. ಇಲಾಖೆ ಸಚಿವರಿಗೆ ಗೊತ್ತಿಲ್ಲ ಎಂದಿದ್ದಾರೆ. ಇಬ್ಬರೂ ಅಧಿಕಾರ ಸ್ವೀಕಾರ ನಂತರ ಅಧಿಕಾರಿಗಳ ಸಭೆ ನಡೆಸಿದರಲ್ಲ, ಆಗ ಯಾಕೆ ಕೇಳಲಿಲ್ಲ? ಸಿಎಂಗೂ ಕೇಳಿದರೆ ಗೊತ್ತಿಲ್ಲ ಅಂತಿದ್ದಾರೆ. ಆದರೆ, ಎಲ್ಲರೂ ಭ್ರಷ್ಟಾಚಾರ ನಡೆದಿದೆ ಎನ್ನುತ್ತಾರೆ. ಅಸಲಿಗೆ ಯಾರ ಮಾತನ್ನು ನಂಬಬೇಕು ಎಂದು ಆಶೋಕ್‌ ಆಶ್ಚರ್ಯ ವ್ಯಕ್ತಪಡಿಸಿದರು. +ಹಿಂದುಳಿದ ವರ್ಗಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಅವರು ರಿಸರ್ವ್‌ ಬ್ಯಾಂಕ್‌ ಅ್‌‍ ಇಂಡಿಯಾಗೆ ಪತ್ರ ಬರೆದು ಬ್ಯಾಂಕ್‌ನ ಹಣ ಫ್ರೀಜ್‌ ಮಾಡಿ ಎಂದು ಪತ್ರ ಬರೆದಿದ್ದಾರೆ. ಆದರೆ, ಲಿತಾಂಶ ಶೂನ್ಯ, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ.ದಲಿತರ ಹಣ ನುಂಗಿ ಹಾಕುವ ಕಪ್ಪು ಚುಕ್ಕೆ ಸರ್ಕಾರಕ್ಕೆ ಅಂಟಿದೆ. ಸರ್ಕಾರದ ಮೇಲಿನ ಈ ಕಳಂಕ ನಿರ್ಮಾ ಹಾಕಿದರೂ ಹೋಗುವುದಿಲ್ಲ, ರ್ಸ್‌ ಎಕ್ಸೆಲ್‌ ಹಾಕಿದರೂ ಹೋಗುವುದಿಲ್ಲ ಎಂದು ಕುಹಕವಾಡಿದರು. +ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಮಹಿಳೆಯರ ಖಾತೆಗೆ ಟಕಾ ಟಕ್‌ ಹಣ ಹಾಕುತ್ತೇವೆ ಎಂದು ಹೇಳಿದ್ದಾರೆ. ಅದೇ ರೀತಿ ದಲಿತರ ಹಣವನ್ನು ಖಾಸಗಿ ಕಂಪೆನಿಗಳಿಗೆ ಟಕಾ ಟಕ್‌ ಎಂದು ವರ್ಗಾವಣೆ ಮಾಡಿದ್ದಾರೆ. ಹಣ ಅಕ್ರಮವಾಗಿ ವರ್ಗಾವಣೆ ಆಗಿರುವುದಕ್ಕೆ ಸ್ಪಷ್ಟ ದಾಖಲೆಗಳು ಇವೆ. +ಅಂಗೈ ಹುಣ್ಣಿಗೆ ಕನ್ನಡಿ ಬೇಕಾ? ಸಚಿವರ ವಿರುದ್ಧ ಕ್ರಮಕ್ಕೆ ಇನ್ನು ಏನು ಬೇಕು? ಏತಕ್ಕಾಗಿ ಸರ್ಕಾರ ಕಾಯುತ್ತಿದೆ? ಎಂದು ಪ್ರಶ್ನೆ ಮಾಡಿದರು. ನಾನು ಶುಕ್ರವಾರ ಆತಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಮನೆಗೆ ಭೇಟಿ ಕೊಟ್ಟ್ದೆಿ. ಅವರ ಪತ್ನಿ ಬೇಡಿಕೆ ಒಂದೇ, ಮಾಡದಿರುವ ತಪ್ಪಿಗೆ ಜೀವ ಕಳೆದುಕೊಂಡಿದ್ದಾರೆ. ಮಾಡದಿರುವ ತಪ್ಪಿಗೆ ರಾಜ್ಯ ಸರ್ಕಾರ ನಮನ್ನು ದೂಡಿದೆ. ಕೋವಿಡ್‌ ನಲ್ಲಿ ಮಾಡಿದ ಸಾಲವನ್ನು ಇದುವರೆಗೆ ನಾವು ತೀರಿಸಿಲ್ಲ ಎಂದು ನೋವನ್ನು ಹೊರಹಾಕಿದ್ದಾರೆ. ಇದಕ್ಕೆಲ್ಲಾ ಸರ್ಕಾರವೇ ಹೊಣೆ ಎಂದು ಆಶೋಕ್‌ ವಾಗ್ದಳಿ ನಡೆಸಿದರು. \ No newline at end of file diff --git a/eesanje/url_46_125_10.txt b/eesanje/url_46_125_10.txt new file mode 100644 index 0000000000000000000000000000000000000000..89c5f64f8d999b05664ba7b6a23d58b73ae5a20c --- /dev/null +++ b/eesanje/url_46_125_10.txt @@ -0,0 +1,3 @@ +ಮೈಸೂರು : ಗುರಾಯಿಸಿ ನೋಡಿದ ಯುವಕನ ಕೊಚ್ಚಿ ಕೊಲೆ +ಮೈಸೂರು, ಜೂ.1-ಗುರಾಯಿಸಿ ನೋಡಿದ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉದಯಗಿರಿ ಪೊಲೀಸ್‌‍ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದೆ. ಅರ್ಬಾಜ್‌ಖಾನ್‌(18) ಕೊಲೆಯಾದ ಯುವಕ. +ಶಾಂತಿನಗರದ ಲಾಲ್‌ ಮಸೀದಿ ಬಳಿ ಶಾದಿಲ್‌, ಶಹಬಾಜ್‌, ಶೋಯಬ್‌ ಹಾಗೂ ಸಾಹಿಲ್‌ ಎಂಬುವವರನ್ನು ಮೃತ ಅರ್ಬಾಜ್‌ಖಾನ್‌ ಗುರಾಯಿಸಿ ನೋಡಿದನೆಂದು ವಿನಾಕಾರಣ ಜಗಳ ತೆಗೆದಿದ್ದಾರೆ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಹೊಡೆದಾಟ ಅರ್ಬಾಜ್‌ಖಾನ್‌ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಈ ಸಂಬಂಧ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_125_11.txt b/eesanje/url_46_125_11.txt new file mode 100644 index 0000000000000000000000000000000000000000..cc386589afe2f075ded8ab78367c5e32609a3ed9 --- /dev/null +++ b/eesanje/url_46_125_11.txt @@ -0,0 +1,7 @@ +ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ? +ಬೆಂಗಳೂರು, ಜೂ.1-ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ, ಸದ್ಯ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸದ್ಯದಲ್ಲಿಯೇ ಪುರುಷತ್ವ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ. ಅತ್ಯಾಚಾರ ಪ್ರಕರಣದ ಆರೋಪಿಯು ಸಂತ್ರಸ್ಥ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಸಾಮರ್ಥ್ಯ ಹೊಂದಿದ್ದಾನೆಯೇ ಎಂದು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಮಾಡಲಾಗುತ್ತದೆ. +ಆರೋಪಿ ತನಿಖೆಗೆ ಸಹಕರಿಸಲು ದೈಹಿಕ-ಮಾನಸಿಕವಾಗಿ ಸಿದ್ಧನಾಗಿದ್ದಾನೆಯೇ ಎಂಬುದನ್ನು ಈ ಪರೀಕ್ಷೆಗಳ ಮೂಲಕ ತಿಳಿದುಕೊಳ್ಳಲಾಗುತ್ತದೆ. ಪ್ರಜ್ವಲ್‌ ರೇವಣ್ಣ ಮೂರು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಎದುರಿಸುತ್ತಿದ್ದು, ಅವರ ತಾಯಿ ಭವಾನಿ ರೇವಣ್ಣ ಅವರು ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದಾರೆ. +ಈ ಪ್ರಕರಣದಲ್ಲಿ ಭವಾನಿ ಆರೋಪಿಯಲ್ಲದಿದ್ದರೂ, ಆಕೆಯ ಪಾತ್ರದ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ಬಯಸಿದೆ ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಎಸ್‌‍ಐಟಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ, ವಿಡಿಯೋದಲ್ಲಿ ಇರುವಂಥ ಅಶ್ಲೀಲ ವಿಡಿಯೋವನ್ನು ತಾನು ಮಾಡಿಲ್ಲ ಎಂದು ಪ್ರಜ್ವಲ್‌ ಅಫಿಡವಿಟ್‌ ಸಲ್ಲಿಸಿದರೆ, ಪ್ರಜ್ವಲ್‌ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸುವ ಸಾಧ್ಯತೆ ಇದೆ. +ತಾನು ಅತ್ಯಾಚಾರ ಮಾಡಿಲ್ಲ ಎಂದು ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸುವ ಸಾಧ್ಯತೆಯೂ ಇರುವುದರಿಂದ, ಮುಂದಿನ ಹಂತದಲ್ಲಿ ಪ್ರಜ್ವಲ್‌ ರೇವಣ್ಣರ ಪುರುಷತ್ವ ಪರೀಕ್ಷೆಯನ್ನು ಎಸ್‌‍ಐಟಿ ಮಾಡಿಸಲಿದೆ. +ನಂತರ ಹಾಸನ ಸಂಸದರ ನಿವಾಸದಲ್ಲಿ ಸಂಗ್ರಹಿಸಲಾದ ಹಾಸಿಗೆ- ಹೊದಿಕೆ ಇತ್ಯಾದಿಗಳಲ್ಲಿ ಕಂಡುಬಂದಿರುವ ಡಿಎನ್‌ಎಗೂ, ಪ್ರಜ್ವಲ್‌ ಡಿಎನ್‌ಎಗೂ ತಾಳೆ ಮಾಡಲಾಗುತ್ತದೆ. ಒಟ್ಟು ಮೂರು ಹಂತದಲ್ಲಿ ಪ್ರಜ್ವಲ್‌ ರೇವಣ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಈ ಹಿಂದೆಯೂ ಅನೇಕರಿಗೆ ಅತ್ಯಾಚಾರ ಪ್ರಕರಣದಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಸ್ವಾಮಿ ನಿತ್ಯಾನಂದ, ಮುರುಘಾ ಶ್ರೀ, ಅಸಾರಾಂ ಬಾಪು ಸೇರಿದಂತೆ ಹಲವರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. +ಪುರುಷತ್ವ ಪರೀಕ್ಷೆ? :ಇದು ಲೈಂಗಿಕ ಸಾಮಥ್ರ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡೋಲಜಿಸ್ಟ್‌ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.2) ನಂತರ ವೀರ್ಯ ವಿಶ್ಲೇಷಣೆ ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.3) ಡಾಪ್ಲರ್‌ ಅಲ್ಟ್ರಾಸೌಂಡ್‌ ಪರೀಕ್ಷೆ ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ರಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಪರೀಕ್ಷೆ ಇದಾಗಿದೆ. ವಯಾಗ್ರಾದಂಥ ಮೆಡಿಸಿನ್‌ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.4) ಎನ್‌ಪಿಟಿ ಟೆಸ್ಟ್‌ : ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತದೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್‌ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಇದರಲ್ಲಿ ಬರುವ ವೈದ್ಯಕೀಯ ವರದಿ ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋಗಳು ಸೋರಿಕೆಯಾದ ನಂತರ ಪ್ರಜ್ವಲ್‌ ರೇವಣ್ಣ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. \ No newline at end of file diff --git a/eesanje/url_46_125_12.txt b/eesanje/url_46_125_12.txt new file mode 100644 index 0000000000000000000000000000000000000000..d75c1e05c32f7d077d7facfe4621fac73be3039c --- /dev/null +++ b/eesanje/url_46_125_12.txt @@ -0,0 +1,7 @@ +ಡಿಕೆಶಿ ಶತ್ರು ಭೈರವಿ ಯಾಗ ಆರೋಪ ತಳ್ಳಿಹಾಕಿದ ದೇವಸ್ಥಾನದ ಆಡಳಿತ ಮಂಡಳಿ +ಕೋಝಿಕ್ಕೋಡು,ಜೂ.1– ಕೇರಳದ ದೇವಸ್ಥಾನದಲ್ಲಿ ಪ್ರಾಣಿ ಬಲಿ ಒಳಗೊಂಡ ಶತ್ರು ಭೈರವಿ ಯಾಗ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿದ್ದ ಹೇಳಿಕೆಯನ್ನು ಕಣ್ಣೂರಿನ ತಳಿಪರಂಬದಲ್ಲಿರುವ ಶಿವ ದೇವಾಲಯವಾದ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ತಳ್ಳಿಹಾಕಿದೆ. +ಕೇರಳದ ದೇವಸ್ಥಾನವೊಂದರಲ್ಲಿ ಪ್ರಾಣಿ ಬಲಿಯನ್ನು ಒಳಗೊಂಡಿರುವ ಶತ್ರು ಭೈರವಿ ಯಾಗವನ್ನು ಗುರುವಾರ ನಡೆಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದರಲ್ಲದೆ, ತಮ್ಮ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕರ್ನಾಟಕದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಮಾಟಮಂತ್ರ ಮಾಡಲಾಗಿದೆ ಎಂದು ಆರೋಪಿಸಿದ್ದರು. +ಕೇರಳದ ಬಹುತೇಕ ದೇವಾಲಯಗಳಲ್ಲಿ ಶತ್ರು ಸಂಹಾರ ಪೂಜೆಯನ್ನು ನಡೆಸಲಾಗುತ್ತಿದ್ದು, ಯಾವುದೇ ಜೀವಿಯ ಬಲಿದಾನವಿಲ್ಲದ ಸರಳ ಪೂಜೆಯಾಗಿರುತ್ತದೆ. ಮಲರ್ಬಾ ದೇವಸ್ಥಾನ ಮಂಡಳಿ ಸಹಾಯಕ ಕಮಿಷನರ್‌ ಗಿರೀಶ್‌ ಕುಮಾರ್‌ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಇಂತಹ ಆರೋಪಗಳು ಆಧಾರರಹಿತವಾಗಿವೆ. ಈ ಪ್ರದೇಶದಲ್ಲಿ ಯಾವುದೇ ದೇವಾಲಯಗಳು ಅಕ್ರಮ ಆಚರಣೆಗಳಲ್ಲಿ ತೊಡಗುವುದಿಲ್ಲ ಎಂದು ಹೇಳಿದ್ದಾರೆ. +ಇದಕ್ಕೆ ಪುಷ್ಠಿ ನೀಡುವಂತೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಹಾಗೂ ಸಮೀಪದ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಸಮಗ್ರ ವರದಿಯನ್ನು ಸಲ್ಲಿಸಲಾಗಿದೆ. ಈ ವರದಿಯು ಡಿ. ಕೆ.ಶಿವಕುಮಾರ್‌ ಅವರು ಮಾಡಿದ ಆರೋಪಗಳನ್ನು ನಿರಾಕರಿಸುವುದಕ್ಕೆ ಸಾಕ್ಷಿಯಾಗಿದೆ, ಈ ದೇವಾಲಯಗಳು ಕಾನೂನುಬದ್ಧ ಮತ್ತು ಸಾಂಪ್ರದಾಯಿಕ ಆಚರಣೆಗಳಿಗೆ ಬದ್ಧವಾಗಿರುವುದನ್ನು ತೋರಿಸುತ್ತವೆ. +ಕೇರಳದ ಬಹುತೇಕ ದೇವಾಲಯಗಳಲ್ಲಿ ಶತ್ರು ಸಂಹಾರ ಪೂಜೆಯನ್ನು ನಡೆಸಲಾಗುತ್ತಿದ್ದು, ಯಾವುದೇ ಬಲಿದಾನದ ಅಗತ್ಯವಿಲ್ಲದ ಸರಳ ಪೂಜೆಯಾಗಿದೆ, ಇಲ್ಲಿ ಸರಳವಾದ ಮಂತ್ರಗಳ ಪಠಿಸಲಾಗುತ್ತದೆ. ಕಣ್ಣೂರಿನ ತಿರುವರ್ಕಾಡು ಭಗವತಿ ದೇವಸ್ಥಾನ ಅಂದರೆ ಮಡಾಯಿ ಕಾವುನಲ್ಲಿ ಮಾತ್ರ ಜೀವಿಯ ಬಲಿ ನೀಡಲಾಗುತ್ತದೆ. +ಇಲ್ಲಿ ಕೋಜಿ ಕಲಶವನ್ನು ನಡೆಸಲಾಗುತ್ತಿದ್ದು, ಇದು ದೇವಿಗೆ ನೀಡುವ ಕೋಳಿ ಬಲಿಯಾಗಿದೆ, ಆದರೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ .ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯಂತೆ ಇಲ್ಲಿ ಯಾವುದೇ ಆಚರಣೆಗಳು ನಡೆಯುವುದಿಲ್ಲ ಎಂದರು.ಈ ಮಧ್ಯೆ, ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಆಚರಣೆಗಳ ತನಿಖೆಗಾಗಿ ಕರ್ನಾಟಕ ಪೊಲೀಸರ ವಿಶೇಷ ದಳ ನಿನ್ನೆ ಕಣ್ಣೂರಿಗೆ ಹೋಗಿತ್ತು. \ No newline at end of file diff --git a/eesanje/url_46_125_2.txt b/eesanje/url_46_125_2.txt new file mode 100644 index 0000000000000000000000000000000000000000..28ad957c16b8f2c9570bb1c53bc91b30c8d55e11 --- /dev/null +++ b/eesanje/url_46_125_2.txt @@ -0,0 +1,10 @@ +ಗುತ್ತಿಗೆದಾರರ ಆತಹತ್ಯೆಗೆ ಹಣ ಬಿಡುಗಡೆ ವಿಳಂಬ ಕಾರಣವಲ್ಲ : ಖರ್ಗೆ +ಕಲಬುರಗಿ,ಜೂ.1-ಕೆಆರ್‌ಐಡಿಎಲ್‌ ನಿಗಮದಿಂದ ಗುತ್ತಿಗೆ ಕಾಮಗಾರಿಗೆ ಹಣ ಬಂದಿಲ್ಲ ಎಂದು ಗುತ್ತಿಗೆದಾರರು ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೃತಪಟ್ಟ ವ್ಯಕ್ತಿಯ ಮರಣಪತ್ರದಲ್ಲಿ ಕೌಟುಂಬಿಕ ಸಮಸ್ಯೆಯಿದೆ. ಹಲವು ಕಡೆ ಸಾಲ ಮಾಡಿಕೊಂಡಿದ್ದೇನೆ ಎಂದು ನಾನಾ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 5 ನೇ ಅಂಶದಲ್ಲಿ ಕೆಆರ್‌ಐಡಿಎಲ್‌ನಿಂದ ಕಾಮಗಾರಿ ಗುತ್ತಿಗೆ ಪಡೆದು ಕೆಲಸ ಮಾಡಿದ್ದು, ಬಿಲ್‌ ಪಾವತಿಯಾಗದೆ ಸತಾಯಿಸುತ್ತಿದ್ದಾರೆ. ನನ್ನ ಸಾವಿನ ಬಳಿಕ ಕೆಆರ್‌ಐಡಿಎಲ್‌ನಿಂದ ದೊಡ್ಡ ಮೊತ್ತದ ಪರಿಹಾರ ಪಡೆದುಕೊಳ್ಳಿ ಎಂದು ಬರೆದಿದ್ದಾರೆ ಎಂದರು. +ಕೆಆರ್‌ಐಡಿಎಲ್‌ ಎಂಜಿನಿಯರಿಂಗ್‌ ಸಂಸ್ಥೆಯಾಗಿದ್ದು, ಕಾಮಗಾರಿಗಳನ್ನು ಖುದ್ದು ನಿರ್ವಹಣೆ ಮಾಡಲಿದೆ. ಉಪಗುತ್ತಿಗೆ ನೀಡಲು ಅವಕಾಶವಿಲ್ಲ. ಚನ್ನಗಿರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿಯನ್ನು ನೋಡಿದರೆ ಅಲ್ಲಿ ಆಗಿನ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಆದೇಶದ ಮೇಲೆ ನಡೆದಿರುವ ಕೆಲಸ ಎಂದು ರಸ್ತೆಗಿಂತಲೂ ದೊಡ್ಡದಾಗಿ ಫಲಕ ಹಾಕಲಾಗಿದೆ. ಯಾವುದೇ ಅನುಮೋದನೆ ಇಲ್ಲದೆ ಕಾಮಗಾರಿ ನಡೆದಿರುವ ಸಾಧ್ಯತೆಯಿದೆ. ಅಧಿಕಾರಿಗಳ ತನಿಖಾ ವರದಿ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದರು. +ಕಲ್ಯಾಣ ಕರ್ನಾಟಕ ಭಾಗಕ್ಕೆ 371 ಜೆ ವಿಶೇಷ ಮಾನ್ಯತೆ ಬಗ್ಗೆ ರಾಜ್ಯದ ಇತರ ಭಾಗಗಳ ಜನ ಅಸಹನೆ ತೋರಿಸಬಾರದು. ನಿಜಾಮರ ಆಡಳಿತದಲ್ಲಿದ್ದ ಪ್ರದೇಶಗಳ ಪೈಕಿ ತೆಲಂಗಾಣ, ಮರಾಠವಾಡ ಸೇರಿದಂತೆ ಹಲವು ಭಾಗಗಳಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಐತಿಹಾಸಿಕ ಕಾರಣಕ್ಕೆ ವಿಶೇಷ ಸ್ಥಾನಮಾನ ದೊರೆತಿದೆ. ಎ ಯಿಂದ ಜೆ ವರೆಗೂ ಹಲವು ಭಾಗಗಳು ಸೌಲಭ್ಯ ಪಡೆದಿವೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ತಡವಾಗಿ ಅವಕಾಶ ಸಿಕ್ಕಿದೆ ಎಂದು ಹೇಳಿದರು. +ಈ ಹಿಂದೆ ಸಚಿವರಾಗಿದ್ದ ಶ್ರೀರಾಮಲು ಉಪಸಮಿತಿ ಅಧ್ಯಕ್ಷರಾಗಿ ಹೊರಡಿಸಿದ್ದ ಹಲವು ಆದೇಶಗಳು ದೋಷಪೂರಿತವಾಗಿದ್ದವು, ಅವುಗಳನ್ನು ನಾವು ಸರಿಪಡಿಸಿದ್ದೇವೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಪಕ್ಷದ ಜಾಹೀರಾತಿನ ಕಾರಣಕ್ಕೆ ಬಿಜೆಪಿಯವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾವು ಅದನ್ನು ಕಾನೂನಾತಕವಾಗಿಯೇ ಎದುರಿಸಿದ್ದೇವೆ. ರಾಹುಲ್‌ಗಾಂಧಿ ಇಂದು ದೆಹಲಿಯಲ್ಲಿ ನಡೆಯುವ ಇಂಡಿಯಾ ರಾಜಕೀಯ ಕೂಟದ ಸಭೆಯಲ್ಲಿ ಭಾಗವಹಿಸಿರುವ ಕಾರಣಕ್ಕೆ ಖುದ್ದು ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯಾಲಯಕ್ಕೆ ಬರುತ್ತಾರೆ ಎಂದು ತಿಳಿಸಿದರು. +ಬಿಜೆಪಿಯವರು ಮಾಡುವ ಯಾವ ಆರೋಪಗಳಿಗೂ ಸಾಕ್ಷ್ಯ ಪುರಾವೆಗಳನ್ನು ನೀಡುವುದಿಲ್ಲ. ಈ ಹಿಂದೆ ನಾವು ಮಾಡಿದ್ದ ಪ್ರತೀ ಟೀಕೆಗೂ ಸಾಕ್ಷ್ಯ ನೀಡಿದ್ದೇವೆ. ಸರ್ಕಾರ ರಚನೆಯಾದ ಬಳಿಕ ತನಿಖೆ ನಡೆಯುತ್ತಿದೆ. ವಾಲೀಕಿ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವಶ್ಯಕತೆ ಬಿದ್ದರೆ ಸಿಬಿಐ, ಎನ್‌ಐ ಸೇರಿದಂತೆ ಯಾವುದೇ ತನಿಖೆಗಾದರೂ ಸರ್ಕಾರ ಸಿದ್ಧವಿದೆ. ಸದ್ಯಕ್ಕೆ ವಿಶೇಷ ತನಿಖಾ ದಳ ರಚನೆ ಮಾಡಿದ್ದು, ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದರು. +ಬಿಜೆಪಿಯವರು ಪ್ರತೀ ವಿಚಾರಕ್ಕೂ ಸಚಿವರ ರಾಜೀನಾಮೆ ಕೇಳುತ್ತಾರೆ. ಹಾಗೆ ನೋಡಿದರೆ ಈ ಹಿಂದೆ ಬಿಜೆಪಿಯಲ್ಲಾದ ಅವ್ಯವಹಾರಗಳಿಗೆ ಯಾರಾದರೂ ರಾಜೀನಾಮೆ ಕೊಟ್ಟಿದ್ದರೇ? ದೊಡ್ಡದಾಗಿ ಮಾತನಾಡುವ ಬಸನಗೌಡ ಪಾಟೀಲ್‌ ಯತ್ನಾಳ್‌ ಕೂಡ ನೈತಿಕ ಹೊಣೆ ಹೊತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ತಿರುಗೇಟು ನೀಡಿದರು.ಈ ಹಿಂದೆ ಬಿಜೆಪಿ ಸರ್ಕಾರ ದೆಹಲಿಯ ವರಿಷ್ಠರಿಗೆ ಎಟಿಎಂನಂತೆ ಬಳಕೆಯಾಗಿತ್ತು. ಅದೇ ಅನುಭವದ ಆಧಾರದ ಮೇಲೆ ಕಾಂಗ್ರೆಸ್‌‍ ಸರ್ಕಾರವೂ ಏರಿಕೆ ಮಾಡಿರಬಹುದು ಎಂದು ಹೇಳಿದ್ದಾರೆ. ಆದರೆ ನಮಲ್ಲಿ ಆ ಪದ್ಧತಿ ಇಲ್ಲ ಎಂದು ಹೇಳಿದರು. +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿಯನ್ನು ನೋಡಲು ಹೋದರೂ ಕ್ಯಾಮೆರಾಮನ್‌ಗಳನ್ನು ಕರೆದುಕೊಂಡು ಹೋಗುತ್ತಾರೆ, ಧ್ಯಾನಕ್ಕೆ ಕುಳಿತರೆ ನಾಲ್ಕು ಬಾರಿ ಬಟ್ಟೆ ಬದಲಾಯಿಸುತ್ತಾರೆ, ಐದು ಪೀಠಗಳು ಬದಲಾಗುತ್ತವೆ, ಕನಿಷ್ಠ 10-12 ಕ್ಯಾಮರಾಗಳು ಫೋಟೋಶೂಟ್‌ ಮಾಡಿವೆ, ಭಕ್ತಿ ಎಂಬುದು ಖಾಸಗಿ ವಿಚಾರ. ಆದರೆ ನರೇಂದ್ರ ಮೋದಿ ಪ್ರಧಾನಮಂತ್ರಿ ಅಲ್ಲ, ಪ್ರಚಾರ ಮಂತ್ರಿ. ಹಾಗಾಗಿ ಪ್ರತಿಯೊಂದಕ್ಕೂ ಫೋಟೊಶೂಟ್‌ಗಳಾಗುತ್ತವೆ ಎಂದು ಲೇವಡಿ ಮಾಡಿದರು. +ರಾಹುಲ್‌ಗಾಂಧಿಯವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹೇಳಿರುವ ಹೇಳಿಕೆ ಸಮರ್ಥನೀಯ. ದೇಶದ ಯಾವ ವ್ಯಕ್ತಿಯೂ ಕನ್ಯಾಕುಮಾರಿಯಿಂದ ಕಾಶೀರ, ಈಶಾನ್ಯ ರಾಜ್ಯದಿಂದ ಗುಜರಾತ್‌ವರೆಗೂ ಪ್ರವಾಸ ಮಾಡಿಲ್ಲ. ರಾಹುಲ್‌ಗಾಂಧಿ ಭಾರತ್‌ ಜೋಡೊ ಯಾತ್ರೆ ಮೂಲಕ ಈ ಪ್ರವಾಸ ಮಾಡಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_125_3.txt b/eesanje/url_46_125_3.txt new file mode 100644 index 0000000000000000000000000000000000000000..f97eea86ecf5666b9dd30c33dd037f28ccd60722 --- /dev/null +++ b/eesanje/url_46_125_3.txt @@ -0,0 +1,8 @@ +ಕರ್ನಾಟಕ ಬಿಜೆಪಿ ದೇಶದಲ್ಲೇ ಕಡುಭ್ರಷ್ಟರು : ಡಿಕೆಶಿ +ಬೆಂಗಳೂರು,ಜೂ.1-ಕರ್ನಾಟಕ ಬಿಜೆಪಿ ದೇಶದಲ್ಲೇ ಅತ್ಯಂತ ಭ್ರಷ್ಟವಾಗಿದ್ದು, ನಾವು ಹೋಗಲಿ ಎಂದು ಸುಮನಿದ್ದರೂ ಅವರು ನಮನ್ನು ಬಯಲು ಮಾಡಿ ಎಂದು ಪದೇಪದೇ ಕೆಣಕುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.ಮಾನನಷ್ಟ ಮೊಕದ್ದಮೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಸಿಟಿ ಸಿವಿಲ್‌ ಕೋರ್ಟ್‌ಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಕೆಂಡ ಕಾರಿದರು. +ಈ ಹಿಂದೆ ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ.ಗಳ ಲಂಚ ಕೇಳಿದ್ದರು ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪ ಮಾಡಿದ್ದರು. ಅಧಿಕಾರಿಗಳ ವರ್ಗಾವಣೆಗೆ ನಿಗದಿಯಾಗಿದ್ದ ದರದ ಪಟ್ಟಿ ಸಿಐಡಿ ವರದಿ ಆಧರಿಸಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.ಕಾಂಗ್ರೆಸ್‌‍ ಪಕ್ಷ ಅದನ್ನೇ ಆಧಾರವಾಗಿಟ್ಟುಕೊಂಡು ಜಾಹೀರಾತು ನೀಡಿದೆ. ಯಾವ ಯಾವ ಪತ್ರಿಕೆಗಳಲ್ಲಿ ದರಪಟ್ಟಿ ಪ್ರಕಟವಾಗಿದೆ ಎಂಬುದನ್ನೂ ನಾವು ತಿಳಿಸಿದ್ದೇವೆ ಎಂದರು. +ಬಿಜೆಪಿಯವರು ಸಿದ್ದರಾಮಯ್ಯ ಹಾಗೂ ನನ್ನ ಮೇಲೆ ಕೇಸು ದಾಖಲಿಸಿದರೆ ನಮ ಅಭ್ಯಂತರವಿಲ್ಲ. ಆದರೆ ತಾವು ದೊಡ್ಡವರು ಎನ್ನಿಸಿಕೊಳ್ಳಬೇಕು ಎಂಬ ಕಾರಣಕ್ಕೆ ರಾಹುಲ್‌ಗಾಂಧಿಯವರ ಮೇಲೂ ಪ್ರಕರಣ ದಾಖಲಿಸಿದ್ದಾರೆ. ರಾಹುಲ್‌ಗಾಂಧಿ ಕಾನೂನಿಗೆ ಗೌರವ ನೀಡಲಿದ್ದು, ನ್ಯಾಯಾಲಯಕ್ಕೆ ಹಾಜರಾಗುತ್ತಾರೆ. ಬಿಜೆಪಿಯವರು ಸವಾಲು ಹಾಕಿದಂತೆ ನಾವು ಮಾಡಿದ ಆರೋಪಗಳನ್ನು ಸಾಬೀತುಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. +ವಾಲೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಇಲ್ಲ. ಈಗಾಗಲೇ ಎಸ್‌‍ಐಟಿ ರಚನೆಯಾಗಿದೆ. ಹಣ ಎಲ್ಲೆಲ್ಲಿ ಹೋಗಿದೆ ಎಂದು ಪತ್ತೆಹಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ. ಎಲ್ಲವೂ ತಿಳಿಯಲು 2-3 ದಿನಗಳ ಸಮಯಾವಕಾಶ ಬೇಕಿದೆ. ಅನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. +ಬಿಜೆಪಿಯವರು ಏನಾದರೂ ಹೇಳಿಕೊಳ್ಳಲಿ, ಅವರ ಸರ್ಕಾರ ಇದ್ದಾಗಲೂ ಇಂತಹ ಹಲವು ಪ್ರಕರಣಗಳು ನಡೆದಿವೆ. ಬಸವರಾಜ ಬೊಮಾಯಿ ಅವರಿಗೆ ಇದು ಗೊತ್ತಿದೆ. ಬಿಜೆಪಿಯವರು ಪದೇಪದೇ ನಮನ್ನು ಕೆಣಕಿ ತನಿಖೆ ಆಗುವಂತೆ ಮಾಡುತ್ತಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. +ಹಗರಣದಲ್ಲಿ ಡಿ.ಕೆ.ಶಿವಕುಮಾರ್‌ ಕೂಡ ಪಾಲುದಾರರು ಎಂದು ಅವನ್ಯಾರೋ ರವಿ ಹೇಳಿದ್ದಾನೆ. ಹೌದು, ನನ್ನದೂ ಪಾಲುದಾರಿಕೆ ಇದೆ. ನಾನು ಮತ್ತು ರವಿ ಇಬ್ಬರೂ ಪಾಲುದಾರರು. ಇಬ್ಬರೂ ಸೇರಿ ಹಂಚಿಕೊಂಡಿದ್ದೇವೆ ಎಂದು ವ್ಯಂಗ್ಯವಾಡಿದರು.100 ಕೋಟಿ ರೂ.ಗಳ ಮೇಲ್ಪಟ್ಟ ಹಣಕಾಸಿನ ವಹಿವಾಟು ನಡೆದಿದ್ದರೆ ಅದು ಸಹಜವಾಗಿಯೇ ಸಿಬಿಐ ತನಿಖೆಗೆ ಒಳಪಡುತ್ತದೆ. ಇಲ್ಲಿ ಸರ್ಕಾರ ತನಿಖೆಗೆ ಹಸ್ತಾಂತರಿಸಬೇಕು ಎಂಬ ಪ್ರಮೇಯ ಉದ್ಭವಿಸುವುದಿಲ್ಲ. ನಮ ಸರ್ಕಾರ ಸಿಬಿಐ ತನಿಖೆಗೆ ಅಗತ್ಯ ಸಹಕಾರ ನೀಡಲು ಸಿದ್ಧವಿದೆ. +ಆದರೆ ಅವರು ರಾಜಕೀಯ ಮಾಡದೇ ನಿಷ್ಪಕ್ಷಪಾತ ತನಿಖೆ ಮಾಡಲಿ ಎಂದು ಹೇಳಿದರು. ಈಶ್ವರಪ್ಪ ಅವರ ಪ್ರಕರಣದಲ್ಲಿ ನೇರವಾಗಿ ಹೆಸರು ಉಲ್ಲೇಖಿಸಲಾಗಿತ್ತು. ಈ ಪ್ರಕರಣದಲ್ಲಿ ಚಂದ್ರಶೇಖರನ್‌ ಅವರ ಮರಣಪತ್ರದಲ್ಲಿ ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂದು ಅಧಿಕಾರಿ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ. ಸಾಕ್ಷ್ಯ ದೊರೆತರೆ ನಾವು ಯಾರನ್ನೂ ರಕ್ಷಿಸುವುದಿಲ್ಲ. ನಮ ಸರ್ಕಾರ ಪಾರದರ್ಶಕವಾಗಿರಲಿದೆ. ನಮ ಮೊದಲ ಆದ್ಯತೆ ಹಣ ರಕ್ಷಣೆ ಮಾಡುವುದಾಗಿದೆ. ಸಚಿವರು ಈ ಬಗ್ಗೆ ತಮ ಬಳಿ ಬಂದು ಚರ್ಚೆ ನಡೆಸಿದ್ದಾರೆ ಎಂದರು. \ No newline at end of file diff --git a/eesanje/url_46_125_4.txt b/eesanje/url_46_125_4.txt new file mode 100644 index 0000000000000000000000000000000000000000..3461492311efbe028e01192571e86a65131de14e --- /dev/null +++ b/eesanje/url_46_125_4.txt @@ -0,0 +1,4 @@ +ಸಚಿವ ನಾಗೇಂದ್ರ ರಕ್ಷಣೆಗೆ ಸರ್ಕಾರ ಯತ್ನಿಸುತ್ತಿದೆ : ಬಿಜೆಪಿ ಆರೋಪ +ಬೆಂಗಳೂರು,ಜೂ.1-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರಕಾರ ಬಹುಕೋಟಿ ಹಗರಣದ ಆರೋಪಿ ಸಚಿವ ಬಿ.ನಾಗೇಂದ್ರ ಅವರನ್ನು ರಕ್ಷಿಸುವ ಸಲುವಾಗಿ ಅಕ್ರಮ ಹಣ ವರ್ಗಾವಣೆಯ ಆರೋಪವನ್ನು ಯೂನಿಯನ್‌ ಬ್ಯಾಂಕ್‌ ಆ್‌‍ ಇಂಡಿಯಾದ ಮೇಲೆ ಹೊರಿಸುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ. +ಅತ್ಯಂತ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಪ್ರಾಥಮಿಕ ಸಿಐಡಿ ತನಿಖೆಯ ಮೂಲಕ ಸಚಿವರಿಗೆ ಕ್ಲೀನ್‌ ಚಿಟ್‌ ಪಡೆಯಲು ಪ್ರಯತ್ನಿಸುತ್ತಿದೆ.ಸರ್ಕಾರ, ಭ್ರಷ್ಟ ಸಚಿವರ ರಾಜೀನಾಮೆ ಪಡೆಯುವುದು ಬಿಟ್ಟು ಎಸ್‌‍ಐಟಿ ಮೂಲಕ ಪ್ರಾಥಮಿಕ ತನಿಖೆ ಮಾಡಿಸಿ ಕ್ಲೀನ್‌ ಚಿಟ್‌ ಕೊಡಲು ಯತ್ನಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. +ಇದಕ್ಕೆ ಪ್ರತಿಯಾಗಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಿಬಿಐಗೆ ದೂರು ನೀಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಿದ್ಧ ಎಂದು ತಿಳಿಸಿದೆ. ಸರ್ಕಾರ ಈ ಕೂಡಲೇ ಭ್ರಷ್ಟ ಸಚಿವನ ರಾಜೀನಾಮೆ ಪಡೆದು, ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದೆ. \ No newline at end of file diff --git a/eesanje/url_46_125_5.txt b/eesanje/url_46_125_5.txt new file mode 100644 index 0000000000000000000000000000000000000000..ea6faa3e8131e45f455a186d792a6fe39e6d00cc --- /dev/null +++ b/eesanje/url_46_125_5.txt @@ -0,0 +1,7 @@ +ಎಸ್‌‍ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಕಕ್ಕಾಬಿಕ್ಕಿ +ಬೆಂಗಳೂರು,ಜೂ.1-ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಬಸವಳಿದು ಹೋಗಿದ್ದಾರೆ.ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಅವರು ಸುಸ್ತಾಗಿದ್ದಾರೆ. +ನಿಮ ತಾಯಿ ಇಲ್ಲದ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿರುವ ಮನೆಗೆ ಏಕೆ ಹೋಗುತ್ತಿದ್ದಿರಿ? ನಿಮ ಮನೆಯಲ್ಲಿ ಕೆಲಸಗಾರರು ಎಷ್ಟು ಮಂದಿ ಇದ್ದಾರೆ? ಅವರನ್ನು ಯಾವ ರೀತಿ ನೋಡುತ್ತಿದ್ದಿರಿ? ಎಂದು ಹಲವು ಪ್ರಶ್ನೆಗಳನ್ನು ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದ್ದಾರೆ. +ಅಲ್ಲದೆ, ಕೆಲವು ಫೋಟೊಗಳನ್ನು ತೋರಿಸಿ ಇವರು ನಿಮಗೆ ಗೊತ್ತಾ? ಎಂದು ಕೇಳಿದ್ದಾರೆ. ಅದಕ್ಕೆ ಪ್ರಜ್ವಲ್‌ ರೇವಣ್ಣ ಅವರು ಗೊತ್ತಿಲ್ಲ ಹಾಗೂ ನೆನಪಿಲ್ಲ ಎಂದು ಹೇಳಿದ್ದಾರೆ.ಹೊಳೆನರಸೀಪುರ, ಹಾಸನ ತೋಟದ ಮನೆಗಳಲ್ಲಿ ತುಂಬಾ ಜನ ಕೆಲಸದವರಿದ್ದಾರೆ. ಯಾರೆಂಬುದು ಗೊತ್ತಿಲ್ಲ. ಯಾರು ಎಂಬುದು ನೆನಪಿಲ್ಲ ಎಂದು ಉತ್ತರ ನೀಡಿದ್ದಾರೆಂದು ತಿಳಿದುಬಂದಿದೆ. +ನಾನು ಯಾರ ಮೇಲೂ ಲೈಂಗಿದ ದೌರ್ಜನ್ಯವೆಸಗಿಲ್ಲ. ಪೆನ್‌ಡ್ರೈವ್‌ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ, ವಿನಾಕಾರಣ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದಿದ್ದಾರೆ.ಅಲ್ಲದೆ, ಇನ್ನೂ ಹಲವು ಪ್ರಶ್ನೆಗಳಿಗೆ ವಕೀಲರನ್ನು ಕೇಳಿ ಉತ್ತರಿಸುವುದಾಗಿ ತಿಳಿಸಿದ್ದಾರೆ. ಏನೇನು ಪ್ರಶ್ನೆಗಳನ್ನು ಕೇಳುತ್ತೀರಿ ಅದಕ್ಕೆಲ್ಲಾ ಉತ್ತರಿಸಲು ಆಗುವುದಿಲ್ಲ ಎಂದು ಕೂಡ ಹೇಳಿದ್ದಾರೆಂದು ತಿಳಿದುಬಂದಿದೆ. +ರಾತ್ರಿ ಪ್ರಜ್ವಲ್‌ ಅವರನ್ನು ವಿಚಾರಣೆ ನಡೆಸಲಾಗಿದೆ. 11.30 ರ ತನಕ ಎಚ್ಚರವಾಗಿದ್ದ ಅವರು ನಂತರ ನಿದ್ರೆಗೆ ಜಾರಿದರು. ಬೆಳಿಗ್ಗೆ ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ನಾಳೆ ಅಥವಾ ನಾಡಿದ್ದು ಹೊಳೆನರಸೀಪುರಕ್ಕೆ ಸ್ಥಳ ಮಹಜರಿಗಾಗಿ ಕರೆದೊಯ್ಯುವ ಸಾಧ್ಯತೆ ಇದೆ. +ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಆಗಮಿಸುತ್ತಿದ್ದಂತೆ ಬಂಧಿಸಿದ್ದ ಎಸ್‌‍ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದ್ದರು.ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಸಿಐಡಿ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_125_6.txt b/eesanje/url_46_125_6.txt new file mode 100644 index 0000000000000000000000000000000000000000..5a41bc09cd4497e411259475aa33da56933b0d8e --- /dev/null +++ b/eesanje/url_46_125_6.txt @@ -0,0 +1,10 @@ +ಬಿಜೆಪಿ ವಿರುದ್ಧ ಅಪಪ್ರಚಾರ ಜಾಹೀರಾತು ಆರೋಪ ಪ್ರಕರಣ : ಸಿಎಂ, ಡಿಸಿಎಂಗೆ ಜಾಮೀನು +ಬೆಂಗಳೂರು,ಜೂ.1– ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ನೀಡಿ ಅಪಪ್ರಚಾರ ಮಾಡಿದೆ ಎಂಬ ಆರೋಪ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿ ಜಾಮೀನು ಕೋರಿ ಸಲ್ಲಿಸಿದ ಮನವಿ ಪುರಸ್ಕರಿಸಿದ ನ್ಯಾಯಾಧೀಶರಾದ ಕೆ.ಶಿವಕುಮಾರ್‌ರವರು ಜಾಮೀನು ಮಂಜೂರು ಮಾಡಿದರು. +ರಾಹುಲ್‌ ಗೈರು :ಪ್ರಕರಣದಲ್ಲಿ ಮತ್ತೊಬ್ಬ ಪ್ರತಿವಾದಿಯಾದ ರಾಹುಲ್‌ಗಾಂಧಿಯವರ ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ಅವರ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಪರ ವಕೀಲರಾದ ವಿನೋದ್‌ಕುಮಾರ್‌ರವರು ಚುನಾವಣಾ ನೆಪ ಹೇಳಿ ಗೈರುಹಾಜರಾಗುವಂತಿಲ್ಲ, ಇಂದು ಹಾಜರಾಗುವುದಾಗಿ ಹೇಳಿದ್ದರು, ಹಾಜರಾಗುವುದು ಅವರ ಕರ್ತವ್ಯ, ಮೊದಲ ಬಾರಿ ಗೈರಾದಾಗ ವಿನಾಯಿತಿ ನೀಡಿದಿರಿ, ಈಗ ಮೂರನೇ ಬಾರಿ ಗೈರಾಗಿದ್ದಾರೆ, ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು, ವಿಚಾರಣೆಗೆ ಹಾಜರಾಗುವಂತೆ ವಾರಂಟ್‌ ಹೊರಡಿಸಬೇಕೆಂದು ಮನವಿ ಮಾಡಿದರು. +ಇದು ದುರುದ್ದೇಶಪೂರ್ವಕ ಗೈರುಹಾಜರಿಯಲ್ಲ. ಚುನಾವಣೆ ನಡೆಯುತ್ತಿದೆ. ಇಂಡಿಯಾ ಒಕ್ಕೂಟದ ಸಭೆ ಇದೆ. ಹಾಗಾಗಿ ಹಾಜರಾಗಲು ಸಾಧ್ಯವಾಗಿಲ್ಲ. ಹಾಜರಾತಿಗೆ ವಿನಾಯಿತಿ ನೀಡಬೇಕೆಂದು ರಾಹುಲ್‌ ಪರ ವಕೀಲರಾದ ಎಸ್‌‍.ಎ.ಅಹಮದ್‌ ಮನವಿ ಮಾಡಿದರು.ಜೂ.7 ರಂದು ರಾಹುಲ್‌ಗಾಂಧಿಯವರು ವಿಚಾರಣೆಗೆ ಹಾಜರಾಗಲಿದ್ದಾರೆ. ಅವಕಾಶ ನೀಡಬೇಕೆಂದು ಮನವಿ ಮಾಡಿದರು. ರಾಹುಲ್‌ಗಾಂಧಿಯವರ ಹಾಜರಾತಿಗೆ ವಿನಾಯಿತಿ ನೀಡಬೇಕೋ ಅಥವಾ ವಾರಂಟ್‌ ಹೊರಡಿಸಬೇಕೋ ಎಂಬ ಆದೇಶವನ್ನು ನ್ಯಾಯಾಧೀಶರು ಮಧ್ಯಾಹ್ನಕ್ಕೆ ಕಾಯ್ದಿರಿಸಿದರು. +ಪ್ರಕರಣದ ಹಿನ್ನೆಲೆ :ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧದ ಭ್ರಷ್ಟಾಚಾರವನ್ನು ಪ್ರಧಾನ ಅಸ್ತ್ರವನ್ನಾಗಿಸಿದ್ದ ಕಾಂಗ್ರೆಸ್‌‍ 2023 ರ ಮೇ 5 ರಂದು ಭ್ರಷ್ಟಾಚಾರ ದರ ಪಟ್ಟಿ ಎಂಬ ಹೆಸರಿನಡಿ ವಿವಿಧ ಹುದ್ದೆಗಳಿಗೆ ಬಿಜೆಪಿ ಲಂಚ ನಿಗದಿಪಡಿಸಿದೆ ಎಂದು ಆರೋಪಿಸಿ ಎಲ್ಲಾ ಪ್ರಮುಖ ಪತ್ರಿಕೆಗಳ ಮುಖಪುಟಗಳಲ್ಲಿ ಜಾಹೀರಾತು ಪ್ರಕಟಿಸಿತ್ತು. +ಅಲ್ಲದೆ, ಕೋವಿಡ್‌ ಸಾಮಗ್ರಿಗಳ ಪೂರೈಕೆ, ಲೋಕೋಪಯೋಗಿ ಗುತ್ತಿಗೆಗಳು, ಮಠಗಳ ಅನುದಾನ, ಶಾಲೆಗಳಿಗೆ ಮೊಟ್ಟೆ ಪೂರೈಕೆ, ರಸ್ತೆ ಕಾಮಗಾರಿಗಳಲ್ಲಿ ಶೇ. 75-80 ಕಮಿಷನ್‌ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್‌‍ ಆರೋಪಿಸಿತ್ತು. ಪತ್ರಿಕೆಗಳಿಗೆ ನೀಡಿದ ಜಾಹೀರಾತಿನ ಕೊನೆಯಲ್ಲಿ ಶೇ. 40 ಪರ್ಸೆಂಟ್‌ ಕಮಿಷನ್‌ನ (ಬಿಜೆಪಿ ಸರ್ಕಾರವು 1.5 ಲಕ್ಷ ಕೋಟಿ ರೂ.ಗಳನ್ನು ಕಳೆದ ನಾಲ್ಕು ವರ್ಷಗಳಲ್ಲಿ ಲೂಟಿ ಮಾಡಿದೆ) ಎಂದು ಕಾಂಗ್ರೆಸ್‌‍ ಆರೋಪ ಮಾಡಿತ್ತು. +ಡಬ್ಬಲ್‌ ಎಂಜಿನ್‌ ಸರ್ಕಾರಕ್ಕೆ ಬದಲಾಗಿ ಟ್ರಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುವ ಮೂಲಕ ಬಿಜೆಪಿಯ ವರ್ಚಸ್ಸಿಗೆ ಹಾನಿ ಮಾಡಿ ಕಳೆದ ಚುನಾವಣೆಯಲ್ಲಿ ಗೆಲುವಿಗೆ ಅಡ್ಡಿಪಡಿಸಲಾಗಿದೆ. ಕೊನೆಯಲ್ಲಿ ಕಾಂಗ್ರೆಸ್‌‍ಗೆ ಮತ ನೀಡಿ ಎಂದು ಕೇಳಿದ್ದಾರೆ. ಸುಳ್ಳು ಜಾಹೀರಾತು ನೀಡಲು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ರಾಹುಲ್‌ಗಾಂಧಿಯವರು ನೇರ ಕಾರಣರಾಗಿದ್ದಾರೆ ಎಂದು ಬಿಜೆಪಿ ದೂರು ನೀಡಿತ್ತು. +ರಾಹುಲ್‌ಗಾಂಧಿಯವರು ತಮ ಟ್ವಿಟರ್‌ ಖಾತೆಯಲ್ಲಿ ಈ ಜಾಹೀರಾತನ್ನು ಹಂಚಿಕೊಂಡು ಬಿಜೆಪಿಗೆ ಮಾನಹರಣ ಮಾಡುವ ಪ್ರಯತ್ನ ಮಾಡಿದ್ದಾರೆ, ಹೀಗಾಗಿ ಕಾಂಗ್ರೆಸ್‌‍ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಮತ್ತು ರಾಹುಲ್‌ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿಯು ಖಾಸಗಿ ದೂರು ದಾಖಲಿಸಿತ್ತು. +ಇದನ್ನು ಪರಿಗಣಿಸಿದ ವಿಶೇಷ ನ್ಯಾಯಾಲಯ ಫೆ.23 ರಂದು ಮಾನಹಾನಿ ದಾವೆ ದಾಖಲಿಸಲು ಆದೇಶಿಸಿ ಆರೋಪಿಗಳಿಗೆ ಸಮನ್‌್ಸ ಜಾರಿ ಮಾಡಿತ್ತು. ಸಮನ್‌್ಸ ಅನ್ನು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರಿಗೆ ತಲುಪಿಸದ ಹಿನ್ನೆಲೆಯಲ್ಲಿ ಮರು ಜಾರಿ ಮಾಡಲಾಗಿತ್ತು. \ No newline at end of file diff --git a/eesanje/url_46_125_7.txt b/eesanje/url_46_125_7.txt new file mode 100644 index 0000000000000000000000000000000000000000..a0244f57ca116c8bf8ac28b111c8db7d1e602f01 --- /dev/null +++ b/eesanje/url_46_125_7.txt @@ -0,0 +1,7 @@ +ಸೋಮವಾರ ಜೆಡಿಎಸ್‌‍ ಶಾಸಕಾಂಗ ಸಭೆ +ಬೆಂಗಳೂರು, ಜೂ.1-ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸೋಮವಾರ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿರುವ ಪಕ್ಷದ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ 10.30ಕ್ಕೆ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಈ ಸಭೆ ಜರುಗಲಿದೆ. +ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ನ 11 ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನ. ಈ ಚುನಾವಣೆಯಲ್ಲಿ ಜೆಡಿಎಸ್‌‍ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಹಾಗೂ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. +ಜೆಡಿಎಸ್‌‍ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದ ಪಕ್ಷದ ಮುಖಂಡ ಟಿ.ಎನ್‌.ಜವರಾಯಿಗೌಡ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ನಾಯಕರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ. ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಶಾಸಕರು ಸಹಿ ಹಾಕಬೇಕಾಗಿರುವುದರಿಂದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. +ಈ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗದೇ ಮತದಾನ ನಡೆಯುವುದು ಖಾತರಿಯಾದರೆ, ಕೈಗೊಳ್ಳಬೇಕಾದ ಚುನಾವಣಾ ತಂತ್ರಗಾರಿಕೆ, ಮೇಲನೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಒಂದು ವೇಳೆ ಮತದಾನ ನಡೆಯುವುದು ಅನಿವಾರ್ಯವಾದರೆ, ಮಿತ್ರ ಪಕ್ಷ ಬಿಜೆಪಿ ಜತೆಗೂಡಿ ಚುನಾವಣೆ ಎದುರಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗುತ್ತದೆ. ಮೊದಲ ಪ್ರಾಶಸ್ತ್ಯದ ಮತವನ್ನು ಪಕ್ಷದ ಅಭ್ಯರ್ಥಿಗೆ ಚಲಾಯಿಸುವುದು ಎರಡನೇ ಪ್ರಾಶಸ್ತ್ಯದ ಮತವನ್ನು ಬಿಜೆಪಿ ಅಭ್ಯರ್ಥಿಗಳಿಗೆ ನೀಡುವುದು, ಹಾಗೆಯೇ ಬಿಜೆಪಿಯ ಹೆಚ್ಚುವರಿ ಮತ ಹಾಗೂ ಎರಡನೇ ಪ್ರಾಶಸ್ತ್ಯದ ಮತವನ್ನು ಅವರಿಂದ ಪಡೆಯುವ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ. +ಅಲ್ಲದೆ, ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ, ಪಕ್ಷದ ವತಿಯಿಂದ ಕೈಗೊಳ್ಳುವ ಹೋರಾಟ ಮೊದಲಾದ ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_125_8.txt b/eesanje/url_46_125_8.txt new file mode 100644 index 0000000000000000000000000000000000000000..eba95916c8cb5cb5949fefa4a27f9b6e6f7140a4 --- /dev/null +++ b/eesanje/url_46_125_8.txt @@ -0,0 +1,7 @@ +ಪದವೀಧರ, ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆಗೆ ಸೋಮವಾರ ಮತದಾನ +ಬೆಂಗಳೂರು, ಜೂ.1-ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವ ವಿಧಾನ ಪರಿಷತ್ತಿನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ. +ಕರ್ನಾಟಕ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ನೈರುತ್ಯ ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಸೋಮವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. +ಈ ಆರು ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಲೋಕಸಭಾ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿಯನ್ನು ವಿಧಾನ ಪರಿಷತ್‌ ಚುನಾವಣೆಯಲ್ಲೂ ಮಾಡಿಕೊಂಡಿವೆ. ಕಾಂಗ್ರೆಸ್‌‍ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌‍ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 121860, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 156623, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 85090 ಪದವೀಧರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 25309, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 23402, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 21549 ಶಿಕ್ಷಕರು ಮತದಾರರಾಗಿದ್ದಾರೆ. +ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 47, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 44 ಸೇರಿದಂತೆ ಒಟ್ಟು 170 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 159, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 194, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 108 ಸೇರಿದಂತೆ 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. +ನೋಂದಾಯಿತ ಪದವೀಧರ ಹಾಗೂ ಶಿಕ್ಷಕ ಮತದಾರರು ಮತದಾರರ ಗುರುತಿನ ಚೀಟಿ,ಆಧಾರ್‌ ಕಾರ್ಡ್‌, ಪಾನ್‌ ಕಾರ್ಡ್‌ ಸೇರಿದಂತೆ ನಿಗದಿಪಡಿಸಿರುವ ಗುರುತಿನ ಚೀಟಿಗಳನ್ನು ಹಾಜರು ಪಡಿಸಿ ಮತದಾನ ಮಾಡಬಹುದಾಗಿದೆ. ಜೂನ್‌ 6ರಂದು ಮತ ಎಣಿಕೆ ಆಯಾ ಕ್ಷೇತ್ರಗಳಲ್ಲಿ ನಡೆಯಲಿದ್ದು, ಜೂನ್‌ 12ರ ವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. \ No newline at end of file diff --git a/eesanje/url_46_125_9.txt b/eesanje/url_46_125_9.txt new file mode 100644 index 0000000000000000000000000000000000000000..e116867a4c43c5e663b4dd04c739b9bb26d92e38 --- /dev/null +++ b/eesanje/url_46_125_9.txt @@ -0,0 +1,5 @@ +ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ಖಾಲಿಯಾಗಿದೆ : ಗೋವಿಂದ ಕಾರಜೋಳ +ಚಿತ್ರದುರ್ಗ,ಜೂ.1-ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ನಿರಂತರವಾಗಿ ಲೂಟಿಯಾಗುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. +ಜೂ.3ರಂದು ನಡೆಯಲಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ಚಿತ್ರದುರ್ಗ ನಗರದ ಸಂತ ಜೋಸೆಫ್‌ ಕಾನ್ವೆಂಟ್‌ನಲ್ಲಿ ಮತಯಾಚನೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರದ ಖಜಾನೆ ನಿರಂತರವಾಗಿ ಲೂಟಿಯಾಗುತ್ತಿದೆ. ವಾಲೀಕಿ ನಿಗಮ ಹಗರಣ ಸರ್ಕಾರದ ಖಜಾನೆಯ ಹಗಲು ದರೋಡೆಯಾಗಿದೆ ಎಂದು ದೂರಿದರು. +ಇದು ಭ್ರಷ್ಠಾಚಾರ ಅಲ್ಲ ಹಗಲು ದರೋಡೆಯಾಗಿದೆ. ಮಾರ್ಚಿನಲ್ಲಿ 180 ಕೋಟಿ ಹಣವನ್ನು ಬೇರೆಬೇರೆ ಆಕೌಂಟ್‌‍ ಓಪನ್‌ ಮಾಡಿ ವರ್ಗಾವಣೆ ಮಾಡಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿ ನೆರೆರಾಜ್ಯವಾದ ಹೈದರಾಬಾದ್‌ ಮತ್ತು ತೆಲಂಗಾಣಕ್ಕೆ ಹಣ ಹೋಗಿದೆ.ಮುಖ್ಯಮಂತ್ರಿಗಳು ಇದುವರೆವಿಗೂ ಯಾವುದೇ ಹೇಳಿಕೆಯನ್ನು ನೀಡಿಲ್ಲ, ಹಣಕಾಸು ಇಲಾಖೆಯನ್ನು ನೋಡುತ್ತಿರುವವರ ಮುಖ್ಯಮಂತ್ರಿಗಳಾಗಿದ್ದಾರೆ. +ಈ ವೇಳೆಗೆ ಸಚಿವ ನಾಗೇಂದ್ರರವರ ರಾಜೀನಾಮೆಯನ್ನು ಪಡೆಯಬೇಕಿತ್ತು. ಈ ಪ್ರಕರಣವನ್ನು ನಿಸ್ಪಕ್ಷಪತವಾದ ತನಿಖೆಗೆ ಆದೇಶವನ್ನು ಮಾಡಬೇಕಿತ್ತು, ಅದನ್ನು ಮಾಡಿಲ್ಲ ಬಂಡತನದಿಂದ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನುಮುಖ್ಯಮಂತ್ರಿಗಳು ಮತ್ತು ಸಚಿವ ಸಂಪುಟದ ಸದಸ್ಯರು ಮಾಡುತ್ತಿದ್ದಾರೆ. ಇದು ಖಂಡನೀಯವಾದದು ಎಂದಿದ್ದಾರೆ. \ No newline at end of file diff --git a/eesanje/url_46_126_1.txt b/eesanje/url_46_126_1.txt new file mode 100644 index 0000000000000000000000000000000000000000..f80cbcb8043c9a2ca957131fb410be607011f604 --- /dev/null +++ b/eesanje/url_46_126_1.txt @@ -0,0 +1,4 @@ +ಕ್ಯಾಂಟರ್‌ ಹರಿದು ಟೋಲ್‌ ಸಿಬ್ಬಂದಿ ಸಾವು +ನೆಲಮಂಗಲ,ಜೂ.1-ಹಿಟ್‌ ಅಂಡ್‌ ರನ್‌ಗೆ ಟೋಲ್‌ ಕಾರ್ಮಿಕ ಬಲಿಯಾಗಿರುವ ಘಟನೆ ಅರಿಶಿನಕುಂಟೆ ಟೋಲ್‌ ಪ್ಲಾಸಾ ಬಳಿ ಇಂದು ಬೆಳಿಗ್ಗೆ ನಡೆದಿದೆ. ನಾಗರಾಜು (25) ಮೃತಪಟ್ಟ ಸಿಬ್ಬಂದಿ. +ಈತ ನವಯುಗ ಟೋಲ್‌ನಲ್ಲಿ ಆಪರೇಟರ್‌ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ ವಾಹನ ಟೋಲ್‌ನಲ್ಲಿ ಮುಂದೆ ಚಲಿಸುತ್ತಿದ್ದ ಎರಡು ವಾಹನಗಳ ಹಿಂದೆಯೇ ತೆರಳುತ್ತಿದ್ದು, ಈ ವೇಳೆ ಕರ್ತವ್ಯದಲ್ಲಿದ್ದ ನಾಗರಾಜು, ಹಿಂದೆ ಯಾವುದೇ ವಾಹನಗಳು ಇಲ್ಲವೆಂದು ರಸ್ತೆಗೆ ಇಳಿದಾಗ ಕ್ಯಾಂಟರ್‌ ವಾಹನ ಕಾಲಿನ ಮೇಲೆ ಹರಿದಿದೆ ಎನ್ನಲಾಗಿದೆ. +ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಸುದ್ದಿ ತಿಳಿಯುತ್ತಿದ್ದ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಚಾಲಕನ ಪತ್ತೆಗಾಗಿ ಬಲೆಬೀಸಿದ್ದಾರೆ. \ No newline at end of file diff --git a/eesanje/url_46_126_10.txt b/eesanje/url_46_126_10.txt new file mode 100644 index 0000000000000000000000000000000000000000..c54d9b96a8267b1a36080e353d812e17ec5b0915 --- /dev/null +++ b/eesanje/url_46_126_10.txt @@ -0,0 +1,6 @@ +ಜೂ.2ರಿಂದ ರಾಜ್ಯದಲ್ಲಿ ವ್ಯಾಪಕ ಮುಂಗಾರು ಮಳೆ ಸಾಧ್ಯತೆ +ಬೆಂಗಳೂರು, ಮೇ 31-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಜೂನ್‌ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ.ಮುಂಗಾರು ನಿನ್ನೆ ಕೇರಳ ಪ್ರವೇಶ ಮಾಡಿರುವುದನ್ನು ಭಾರತೀಯ ಹವಾಮಾನ ಇಲಾಖೆ ದೃಢಪಡಿಸಿದೆ. ಎರಡು ದಿನ ಮುಂಚೆಯೇ ಕೇರಳ ಪ್ರವೇಶಿಸಿರುವುದಲ್ಲದೆ, ಈಶಾನ್ಯ ರಾಜ್ಯಗಳಲ್ಲೂ ಏಕಕಾಲಕ್ಕೆ ಮುಂಗಾರು ಆರಂಭಗೊಂಡಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ರಾಜ್ಯ ಪ್ರವೇಶ ಮಾಡಲಿದೆ. +ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೊಂದು ಸುತ್ತು ಮಳೆ ಆರಂಭಗೊಳ್ಳಲಿದೆ. ಮುಂಗಾರು ದುರ್ಬಲವಾಗಿರುವುದರಿಂದ ಭಾರೀ ಮಳೆ ಸಾಧ್ಯತೆ ಕಡಿಮೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ನಾಳೆಯಿಂದ ದಕ್ಷಿಣ ಕರ್ನಾಟಕದ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. +ಭಾನುವಾರದಿಂದ ಮುಂಗಾರು ಆರಂಭಗೊಳ್ಳುವುದರಿಂದ ಉತ್ತರ ಕರ್ನಾಟಕಕ್ಕೂ ಮಳೆ ವ್ಯಾಪಿಸಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಮಿಂಚು, ಗುಡುಗು ಹಾಗೂ ಬಲವಾದ ಗಾಳಿ ಸಹಿತ ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಜ್ಞರು ಹೇಳಿದ್ದಾರೆ. +ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಪೂರ್ವ ಮುಂಗಾರಿನ ಮಾರ್ಚ್‌ ಮತ್ತು ಏಪ್ರಿಲ್‌ ಮಳೆ ಕೊರತೆಯನ್ನು ನೀಗಿಸಿದಂತಾಗಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಮೇ ಒಂದರಿಂದ 30ರ ವರೆಗೆ ವಾಡಿಕೆ ಮಳೆ ಪ್ರಮಾಣ 70 ಮಿ.ಮೀ. ಆಗಿದೆ. ಈ ಅವಧಿಯಲ್ಲಿ 129 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.83ರಷ್ಟು ಅಧಿಕವಾಗಿದೆ. ಮಾರ್ಚ್‌ನಿಂದ ಮೇ ವರೆಗೆ 112 ಮಿ.ಮೀ. ವಾಡಿಕೆ ಮಳೆ ಪ್ರಮಾಣವಾಗಿದ್ದು, 151 ಮಿ.ಮೀ.ನಷ್ಟು ಮಳೆಯಾಗಿದೆ. +ಈಗಾಗಲೇ ಮುಂಗಾರು ಆರಂಭವಾಗಿರುವುದರಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಮಳೆ ವ್ಯಾಪಕ ಪ್ರಮಾಣದಲ್ಲಿ ಆಗಲಿದೆ. ಆ ನಂತರ ಬಿಡುವು ಕೊಡಲಿದೆ. ಈ ಬಾರಿಯ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗುವ ಮುನ್ಸೂಚನೆಗಳಿದ್ದು, ಉತ್ತಮ ಮಳೆಯಾಗುವ ಆಶಾಭಾವನೆ ಇದೆ. ಹೀಗಾಗಿ ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗಾಗಿ ಭೂಮಿ ಹದ ಮಾಡುವ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. \ No newline at end of file diff --git a/eesanje/url_46_126_11.txt b/eesanje/url_46_126_11.txt new file mode 100644 index 0000000000000000000000000000000000000000..3496b90bec50f079dae88616d98b79f6b437a3d0 --- /dev/null +++ b/eesanje/url_46_126_11.txt @@ -0,0 +1,9 @@ +ಜೂನ್‌ 2, 4 ಮತ್ತು 6 ರಂದು ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧ +ಬೆಂಗಳೂರು, ಮೇ 31-ಎಂಎಲ್ಸಿ ಚುನಾವಣೆ ಮತ್ತು ಲೋಕಸಭೆ ಮತ್ತು ವಿಧಾನ ಪರಿಷತ್‌ ಚುನಾವಣೆಗಳ ಮತ ಎಣಿಕೆಯ ದೃಷ್ಟಿಯಿಂದ ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್‌ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್‌ 1 ಮತ್ತು ಜೂನ್‌ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ. +ರಾಜ್ಯದಲ್ಲಿ ಲೋಕಸಭೆ ಚುನಾವಣೆ ಅಂಗವಾಗಿ ಏಪ್ರಿಲ್‌ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧದಿಂದ ಈಗಾಗಲೇ ತೀವ್ರ ಹೊಡೆತಕ್ಕೆ ತುತ್ತಾಗಿರುವ ಆಹಾರ ಮತ್ತು ಪಾನೀಯ (ಎ್‌‍ ಬಿ) ಉದ್ಯಮದಲ್ಲಿರುವವರಿಗೆ ಇದು ಮತ್ತೊಂದು ದೊಡ್ಡ ಹೊಡೆತ ಎಂದಿದ್ದಾರೆ. +ಒಟ್ಟು 5 ದಿನಗಳ ಕಾಲ ಮದ್ಯ ನಿಷೇಧ ಮಾಡಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಜೂನ್‌ 3 ರಂದು ವಿಧಾನ ಪರಿಷತ್‌ ಚುನಾವಣೆ ನಡೆಯಲಿದೆ. ಜೂನ್‌ 4 ರಂದು ಲೋಕಸಭಾ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಇನ್ನು ಜೂನ್‌ 6 ರಂದು ವಿಧಾನ ಪರಿಷತ್‌ ಚುನಾವಣೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೂನ್‌ 1 ರಿಂದ ಜೂನ್‌ 6ರ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜೂನ್‌ 1 ರಿಂದ ಜೂನ್‌ 6ರ ವರೆಗೆ ಬಾರ್‌, ವೈನ್‌ ಶಾಪ್‌, ರೆಸ್ಟೋರೆಂಟ್‌, ಕ್ಲಬ್‌‍, ಹೊಟೆಲ್‌‍, ಅಂಗಡಿಗಳಲ್ಲಿ ಮದ್ಯ ಮಾರಾಟ, ಶೇಖರಣೆ ನಿಷೇಧಿಸಲಾಗಿದೆ. +ಜೂನ್‌ 03 ರಂದು ಪರಿಷತ್‌ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮತದಾನಕ್ಕೂ ಮುನ್ನ 48 ಗಂಟೆಗಳ ಕಾಲ ಅಂದರೆ ಜೂನ್‌ 1 ಮತ್ತು 2 ರಂದು ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜೂನ್‌ 4 ಬಳಿಕ ಅಂದರೆ ಜೂನ್‌ 06 ರಂದು ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂನ್‌ 6ರ ಸಂಜೆ 6 ಗಂಟೆವರೆಗೂ ಮದ್ಯ ಮಾರಾಟ ಬ್ಯಾನ್‌ ಆಗಲಿದೆ. +ಈ ಹಿನ್ನಲೆಯಲ್ಲಿ ನಿಗದಿತ ದಿನಗಳಲ್ಲಿ ಉತ್ಪಾದನೆ, ಮದ್ಯದ ಮಾರಾಟ, ವಿತರಣೆ, ಸಾಗಣೆ ಮತ್ತು ಸಂಗ್ರಹಣೆಗೆ ನಿಷೇಧ ಅನ್ವಯವಾಗಲಿದೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಜೂನ್‌ 1 ರಿಂದ 3 ಮತ್ತು ಜೂನ್‌ 6 ರವರೆಗೂ ನಿಷೇಧ ಅನ್ವಯ ಆಗಲಿದೆ. ನಿಷೇಧವು ಮದ್ಯದ ಅಂಗಡಿಗಳು, ವೈನ್‌ ಸ್ಟೋರ್‌ಗಳು, ಬಾರ್‌ಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಗ್ರಾಹಕರಿಗೆ ಮದ್ಯವನ್ನು ಪೂರೈಸುವ ಇತರ ಸ್ಥಳಗಳಿಗೆ ಇದು ಅನ್ವಯಿಸುತ್ತದೆ. +ಇನ್ನು, ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಬಹುತೇಕ ಜೂನ್‌ ಮೊದಲ ವಾರ ಮದ್ಯ ಮಾರಾಟ ನಿಷೇಧ ಇರಲಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಾರ್‌ ಹಾಗೂ ರೆಸ್ಟೋರೆಂಟ್‌ ಉದ್ಯಮಗಳ ಮಾಲೀಕರು, ಕಾನೂನು ಸಡಿಲಿಸುವಂತೆ ಆಗ್ರಹಿಸಿದ್ದಾರೆ. +ಮದ್ಯ ಮಾರಾಟ ನಿಷೇಧ ಮಾಡಿರುವುದರಿಂದ ಈ ಅವಧಿಯಲ್ಲಿ ಬಾರ್‌ ಹಾಗೂ ರೆಸ್ಟೋರೆಂಟ್‌ ಉದ್ಯಮಗಳಿಗೆ ಹೊಡೆತ ಬೀಳಲಿದೆ. ಒಂದು ವಾರಕ್ಕೆ ಅಬಕಾರಿ ಸುಂಕವಾಗಿ ಸರ್ಕಾರಕ್ಕೆ 100 ಕೋಟಿ ರೂಪಾಯಿ ಅಧಿಕ ಮೊತ್ತ ನಷ್ಟವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ನಿರ್ದಿಷ್ಟ ವ್ಯಾಪ್ತಿಗೆ ಮಾತ್ರ ನಿಷೇಧ ಜಾರಿ ಮಾಡಲಿ, ಸಾರ್ವತ್ರಿಕವಾಗಿ ಆಲ್ಕೋಹಾಲ್‌ ನಿಷೇಧಿಸಿದರೆ ಉದ್ಯಮದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರಲಿದೆ. ಹೀಗಾಗಿ ಒಂದು ವಾರದ ಡ್ರೈ ಡೇ ಆದೇಶ ವಾಪಾಸ್‌‍ ಪಡೆಯಲು ಹೋಟೆಲ್‌ ಸಂಘ ಮನವಿ ಮಾಡಿದೆ. +ಜೂನ್‌ 5 ರಂದು ಮದ್ಯ ಮಾರಾಟಕ್ಕೆ ಅವಕಾಶವಿದೆ. ಜೂನ್‌ 5 ರಂದು ಬೆಳಗ್ಗೆಯಿಂದ ನಿಗಽತ ಅವಧಿ ರಾತ್ರಿವರೆಗೆ ಮದ್ಯ ಮಾರಾಟ ನಡೆಯಲಿದೆ. ಜೂನ್‌ 6ರಂದು ವಿಧಾನ ಪರಿಷತ್‌ ಚುನಾವಣೆ ಮತ ಎಣಿಕೆ ನಡೆಯಲಿದೆ. ಹೀಗಾಗಿ ಜೂನ್‌ ರಂದು ಮತ್ತೆ ಮದ್ಯ ಮಾರಾಟಕ್ಕೆ ಬ್ರೀಕ್‌ ಬೀಳಲಿದೆ. ಜೂನ್‌ 6ರ ಮದ್ಯ ರಾತ್ರಿ 12 ಗಂಟೆ ತನಗ ನಿಷೇಧ ಮುಂದುವರಿಯಲಿದೆ.ಇತ್ತ ಎಣ್ಣೆಪ್ರಿಯರು ಈಗಾಗಲೇ ಮದ್ಯದ ಅಂಗಡಿಗಳಲ್ಲಿ ಮುಗಿ ಬೀಳುತ್ತಿದ್ದಾರೆ. ಮತ್ತೆ 5 ದಿನ ಮದ್ಯ ಮಾರಾಟಕ್ಕೆ ಬ್ರೇಕ್‌ ಬೀಳಲಿರುವ ಹಿನ್ನಲೆಯಲ್ಲಿ ಇದೀಗ ಎಣ್ಣೆ ಪ್ರಿಯರು ಮದ್ಯದ ಅಂಗಡಿಗಳಿಗೆ ಧಾವಿಸುತ್ತಿದ್ದಾರೆ. \ No newline at end of file diff --git a/eesanje/url_46_126_12.txt b/eesanje/url_46_126_12.txt new file mode 100644 index 0000000000000000000000000000000000000000..8d0223f2122ff6a837f515c1f1f743f301a5e3a4 --- /dev/null +++ b/eesanje/url_46_126_12.txt @@ -0,0 +1,4 @@ +ಎಚ್‌.ಡಿ.ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆ ಮುಂದೂಡಿಕೆ +ಬೆಂಗಳೂರು, ಮೇ 31-ಮೈಸೂರು ಜಿಲ್ಲೆ ಕೆ.ಆರ್‌.ನಗರ ಮಹಿಳೆ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌‍ಐಟಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಮುಂದೂಡಿದೆ. +ರೇವಣ್ಣ ಅವರಿಗೆ ಜಾಮೀನು ನೀಡಿರುವುದು ಸರಿಯಾದ ಕ್ರಮವಲ್ಲ. ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಎಸ್‌‍ಐಟಿ ಪರ ಸರ್ಕಾರಿ ಅಭಿಯೋಜಕರಾದ ರವಿವರ್ಮ ಕುಮಾರ್‌ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು. +ಸೆಕ್ಷನ್‌ 364 ಎ ಅನ್ವಯವಾಗಲು ಅಗತ್ಯ ಅಂಶಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ಈ ಸೆಕ್ಷನ್‌ ಅನ್ವಯವಾಗುತ್ತದೆ ಎಂದು ಅವರು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಎಚ್‌.ಡಿ.ರೇವಣ್ಣ ಅವರಿಗೆ ನೋಟೀಸ್‌‍ ಜಾರಿಗೊಳಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ. \ No newline at end of file diff --git a/eesanje/url_46_126_2.txt b/eesanje/url_46_126_2.txt new file mode 100644 index 0000000000000000000000000000000000000000..ad0b717487582da2ff7a4b470270578097219aa8 --- /dev/null +++ b/eesanje/url_46_126_2.txt @@ -0,0 +1,6 @@ + : ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ +ಬೆಂಗಳೂರು, ಮೇ 31 – ಮೈಸೂರು ಜಿಲ್ಲೆ, ಕೆ.ಆರ್.ನಗರ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರು ಸೆಷನ್ ನ್ಯಾಯಾಲಯ ವಜಾ ಮಾಡಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ವಾದ-ಪ್ರತಿವಾದಗಳನ್ನು ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾ ಮಾಡಿದರು. +ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿಯೇ ಇರಲಿಲ್ಲ. ಆದರು ಅವರು ಡಿ.ಐ.ಜಿ ಗೆ ಪತ್ರ ಬರೆದು ವಿಚಾರಣೆಗೆ ಸಹಕರಿಸುವುದಾಗಿ ತಿಳಿಸದರು. ಅಲ್ಲದೆ ಪ್ರಕರಣದ ಆರೋಪಿಗಳೊಂದಿಗೆ ಸಂಭಾಷಣೆ ನಡೆಸಿರುವ ಬಗ್ಗೆ ದಾಖಲೆಗಳಿವೆ ಎಂದು ಎಸ್.ಐ.ಟಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದರು. +ಸಂತ್ರಸ್ಥ ಮಹಿಳೆಯನ್ನ ಹೆದರಿಸುವ ಸಂಬಂಧ ಆರೋಪಿಗಳೊಂದಿಗೆ ಚರ್ಚೆ ನಡೆಸಿರುವ ದಾಖಲೆಗಳಿವೆ. ಇವರು ಪ್ರಭಾವಿಯಾಗಿದ್ದು ಇವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು, ಇವರನ್ನು ಎಸ್.ಐ.ಟಿ ವಶದಲ್ಲಿಟ್ಟು ವಿಚಾರಣೆ ನಡೆಸಲು ಅವಕಾಶ ನೀಡಬೇಕೆಂದು ಸರ್ಕಾರಿ ಪರ ವಕೀಲರಾದ ಜಗದೀಶ್ ಅವರು ಪ್ರಭಲ ವಾದ ಮಂಡಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು ಭವಾನಿ ರೇವಣ್ಣ ಅವರ ಪರ ವಕೀಲರು ಇಷ್ಟು ದಿನಗಳಾದರೂ ಎಸ್.ಐ.ಟಿ ಅವರು ವಿಚಾರಣೆಗೆ ಯಾವುದೇ ನೋಟೀಸ್ ನೀಡಿಲ್ಲ. +ಜಾಮೀನಿಗೆ ಅರ್ಜಿ ಸಲ್ಲಿದ್ದ ಮೇಲೆ ಆಕ್ಷೇಪಗಳನ್ನು ಮಾಡುತ್ತಿದ್ದಾರೆ. ಆರೋಪಿಗಳೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳಿಗೆ ಯಾವುದೇ ದಾಖಲೆಯಿಲ್ಲ. ನಮ್ಮ ಕಕ್ಷಿದಾರರು ವಿಚಾರಣೆಗೆ ಸಹಕರಿಸುತ್ತಾರೆ, ಅವರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದರು. +ವಾದ-ಪ್ರತಿವಾದಿಗಳನ್ನು ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಮೇ 31ಕ್ಕೆ ಕಾಯ್ದಿರಿಸಿದ್ದ ತೀರ್ಪು ನೀಡಿ, ನಿರೀಕ್ಷಣಾ ಜಾಮೀನು ಮನವಿ ತಳ್ಳಿ ಹಾಕಿದರು ಇದರಿಂದ ಭವಾನಿ ರೇವಣ್ಣ ಅವರಿಗೆ ಬಂಧನದ ಬೀತಿ ಎದುರಾಗಿ \ No newline at end of file diff --git a/eesanje/url_46_126_3.txt b/eesanje/url_46_126_3.txt new file mode 100644 index 0000000000000000000000000000000000000000..e239369b0deb0e1c88f4e436028c616624cea847 --- /dev/null +++ b/eesanje/url_46_126_3.txt @@ -0,0 +1,7 @@ +ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರನ್ನೂ ರಕ್ಷಿಸಲ್ಲ : ಡಿಕೆಶಿ +ಕನಕಪುರ, ಮೇ 31-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ವಾಸ್ತವಾಂಶಗಳ ಪರಿಶೀಲನೆ ನಡೆಯುತ್ತಿದೆ. ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಸ್ವಕ್ಷೇತ್ರದಲ್ಲಿ ವಿಧಾನಪರಿಷತ್‌ ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಪರ ಮುಖಂಡರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಾವು ನಿನ್ನೆ ಸಭೆ ನಡೆಸಿದ್ದೇವೆ. ವಾಸ್ತವಾಂಶ ಏನು ಎಂದು ವಿಚಾರಣೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಪರಿಶೀಲಿಸುತ್ತೇವೆ ಎಂದು ಹೇಳಿದರು. +ಬಿಜೆಪಿಯ ನಾಯಕರು ಸಚಿವರ ರಾಜೀನಾಮೆಗೆ ಆಗ್ರಹಿಸಿ ಜೂನ್‌ 6 ರ ಬಳಿಕ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಗಡುವು ನೀಡಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌ ಈಗಿನಿಂದಲೇ ಪ್ರತಿಭಟನೆ ಮಾಡಲಿ. 6 ರವರೆಗೂ ಕಾಯುವುದೇಕೆ? ಯಾವುದಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಮಾತನಾಡುತ್ತಿಲ್ಲ ಎಂದು ಆಕ್ಷೇಪಿಸಿದರು. +ಹಿಂದಿನ ಸರ್ಕಾರದಲ್ಲಿ ಎಸ್‌‍ಪಿ, ಇನ್‌್ಸಪೆಕ್ಟರ್‌ ಸೇರಿದಂತೆ ಪೊಲೀಸರಿಗೆ ಹಬ್ಬದ ದಿನ. ಬಿಜಾಪುರ ಮತ್ತು ಉಡುಪಿಯಲ್ಲಿ ಬಿಜೆಪಿಯ ಬಟ್ಟೆ ಹಾಕಿಸಿದ್ದನ್ನು ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮರೆತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ತಿರುಗೇಟು ನೀಡಿದರು. +ತಮ ವಿರುದ್ಧ ಕೇರಳದಲ್ಲಿ ಯಾಗ ನಡೆಸಿರುವ ಬಗ್ಗೆ ಸದ್ಯಕ್ಕೆ ಉತ್ತರಿಸುವುದಿಲ್ಲ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ. ಸರ್ಕಾರಕ್ಕೆ ಆಶೀರ್ವದಿಸಲು, ರಕ್ಷಣೆ ನೀಡಲು ಜನ ಇದ್ದಾರೆ. ನಾನು ನಂಬಿರುವ ಶಕ್ತಿ ಮತ್ತು ದೇವರು ನಮನ್ನು ಕಾಪಾಡುತ್ತದೆ ಎಂದರು.ಅಜ್ಜಯ್ಯ ಅವರ ಸನ್ನಿಧಾನಕ್ಕೆ ಭೇಟಿ ನೀಡಿ, ದರ್ಶನ ಪಡೆಯುತ್ತೀರಾ ಎಂಬ ಪ್ರಶ್ನೆಗೆ ತಮ ಮೊಬೈಲ್‌ನ ಹಿಂಬದಿಯಲ್ಲಿ ಅಜ್ಜಯ್ಯ ಅವರ ಭಾವಚಿತ್ರವನ್ನು ಲಗತ್ತಿಸಿರುವುದನ್ನು ಡಿ.ಕೆ.ಶಿವಕುಮಾರ್‌ ಪ್ರದರ್ಶಿಸಿದರು. +ಪ್ರಜ್ವಲ್‌ ರೇವಣ್ಣ ಅವರ ಬಂಧನದ ಬಗ್ಗೆ ಎಸ್‌‍ಐಟಿಯವರು ಗಮನಿಸುತ್ತಾರೆ. ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯನ್ನು ತಳ್ಳಿಹಾಕಿದರು.ವಿಧಾನಪರಿಷತ್‌ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್‌ಗೆ ಪಟ್ಟಿ ನೀಡಿ ಬಂದಿದ್ದೇವೆ. ಉಳಿದ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. ಯಾರ ಹೆಸರನ್ನು ಕೊಟ್ಟಿದ್ದೇವೆ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದು ತಿಳಿಸಿದರು. +ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌‍ನ ಅಭ್ಯರ್ಥಿ ರಾಮೋಜಿ ಗೌಡರ ಪರವಾಗಿ ತಮ ಕ್ಷೇತ್ರದಲ್ಲಿ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ನನ್ನ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_126_4.txt b/eesanje/url_46_126_4.txt new file mode 100644 index 0000000000000000000000000000000000000000..b392935e2c8893324901411f9def1c0dc2793460 --- /dev/null +++ b/eesanje/url_46_126_4.txt @@ -0,0 +1,7 @@ + : ಪ್ರಜ್ವಲ್‌ ರೇವಣ್ಣ ಅವರನ್ನು 6 ದಿನ ಎಸ್‌‍ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ +ಬೆಂಗಳೂರು, ಮೇ 31-ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ಎಸ್‌‍ಐಟಿ ಕಸ್ಟಡಿಗೆ ನೀಡಿದೆ. ಇಂದು ಮುಂಜಾನೆ ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದ ಎಸ್‌‍ಐಟಿ ಪೊಲೀಸ್‌‍ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ವಿಚಾರಣೆಗೆ ನೀಡಬೇಕೆಂದು ಮನವಿ ಮಾಡಿದರು. +ವಾದ-ಪ್ರತಿವಾದಗಳನ್ನು ಆಲಿಸಿದ 42ನೆ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಶಿವಕುಮಾರ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು 6 ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದರು.ಎಸ್‌‍ಐಟಿ ಪರ ವಕೀಲರಾದ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ವಾದ ಮಂಡಿಸಿ ಆರೋಪಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನೂರಕ್ಕೂ ಅಧಿಕ ಸಂತ್ರಸ್ತೆಯರಿದ್ದಾರೆ ಎಂದು ಹೊಳೆನರಸೀಪುರ ಪ್ರಕರಣವನ್ನು ಉಲ್ಲೇಖಿಸಿದರು. +ವಿಡಿಯೋ ವೈರಲ್‌ ಆದ ಬಳಿಕ ಹಲವು ಮಹಿಳೆಯರು ಸಂತ್ರಸ್ತೆಯರಾಗಿದ್ದಾರೆ. ಅವರಿಂದ ಮೊಬೈಲ್‌ ವಶಕ್ಕೆ ಪಡೆಯಬೇಕು. ಅವರ ಮೊಬೈಲ್‌ನಲ್ಲಿ ಫೇಸ್‌‍ಲಾಕ್‌ ಇದೆ. ಅದನ್ನು ಓಪನ್‌ ಮಾಡಲು ಇವರಿಗೆ ಮತ್ತು ಮಧು ಎಂಬುವವರಿಗೆ ಮಾತ್ರ ಅವಕಾಶವಿದೆ. ಹಾಗಾಗಿ ಹೆಚ್ಚಿನ ತನಿಖೆ ನಡೆಸಲು ಎಸ್‌‍ಐಟಿ ವಶಕ್ಕೆ ನೀಡಬೇಕೆಂದು ಎಂದು ಮನವಿ ಮಾಡಿದರು. +ಪ್ರಜ್ವಲ್‌ ರೇವಣ್ಣ ಪರ ವಕೀಲರಾದ ಅರುಣ್‌ ಅವರು ಪ್ರತಿವಾದ ಮಂಡಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ಮೊದಲು ಸಂತ್ರಸ್ತೆ ದೂರು ನೀಡಿಲ್ಲ. ಯಾವುದೇ ದೃಶ್ಯ ರೆಕಾರ್ಡ್‌ ಆಗಿಲ್ಲ. ಏ.28 ರಿಂದ ಮೇ 2ರ ವರೆಗೆ ಅತ್ಯಾಚಾರದ ಉಲ್ಲೇಖವಿಲ್ಲ. ನ್ಯಾಯಯುತವಾಗಿ ಜಾಮೀನು ನೀಡಬಹುದಾದ ಪ್ರಕರಣ ಇದಾಗಿದೆ. +ಆದರೆ, ಸರ್ಕಾರಿ ಪರ ವಕೀಲರು ತಮಗಿಷ್ಟ ಬಂದ ಪದಗಳನ್ನು ಬಳಸಿ ವಾದ ಮಂಡಿಸಿದ್ದಾರೆ. ದೂರುದಾರರಿಂದ ರೆಡಿಮೇಡ್‌ ದೂರು ಸ್ವೀಕರಿಸಲಾಗಿದೆ. ವಿಡಿಯೋ ರೆಕಾರ್ಡ್‌ ಮಾಡಬೇಕೆಂಬ ನಿಯಮವಿದೆ. ಆದರೆ, ದೂರುದಾರರಿಂದ ವಿಡಿಯೋ ಹೇಳಿಕೆ ಪಡೆದಿಲ್ಲ. ತನಿಖೆಗೆ ಸಹಕರಿಸಲು ಪ್ರಜ್ವಲ್‌ ರೇವಣ್ಣ ಸಿದ್ಧರಿದ್ದಾರೆ. ಆದರೂ 15 ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ಕೇಳುತ್ತಿರುವ ಉದ್ದೇಶವೇನು ಪ್ರಜ್ವಲ್‌ ರೇವಣ್ಣ ಪರ ವಕೀಲರು ಪ್ರಶ್ನಿಸಿದರು. +ಲೈಂಗಿಕ ದೌರ್ಜನ್ಯ ಕೇಸ್‌‍ ಅತ್ಯಾಚಾರ ಕೇಸ್‌‍ ಆಗಿ ಪರಿವರ್ತನೆಯಾಗಿದೆ. ಡಿಯೋದಲ್ಲಿರುವವರ ಮುಖ ಆಧರಿಸಿ ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, 15 ದಿನಗಳ ಕಾಲ ಕಸ್ಟಡಿ ಅಗತ್ಯವಿಲ್ಲ. ಕೇವಲ 1ದಿನ ಸಾಕು ಎಂದು ಹೇಳಿದರು.ವಾದ,ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಜ್ವಲ್‌ ಅವರನ್ನು 6 ದಿನಕಾಲ ಎಸ್‌‍ಐಟಿ ವಶಕ್ಕೆ ನೀಡಿದರು.ವಿಚಾರಣೆ ಸಂದರ್ಭದಲ್ಲಿ ಕೋಟ್‌ ಹಾಲ್‌ ಕಿಕ್ಕಿರಿದು ತಂಬಿತ್ತು . \ No newline at end of file diff --git a/eesanje/url_46_126_5.txt b/eesanje/url_46_126_5.txt new file mode 100644 index 0000000000000000000000000000000000000000..97aaaa0474a2a6b0685dd5b2dee87404d8df2750 --- /dev/null +++ b/eesanje/url_46_126_5.txt @@ -0,0 +1,8 @@ +ಪರಿಷತ್‌ ಚುನಾವಣೆ : ಶಾಸಕಾಂಗ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ +ಬೆಂಗಳೂರು, ಮೇ 31-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದಾರೆ. +ಜೂ 2 ರಂದು ಸಂಜೆ 6 ಗಂಟೆಗೆ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಅದರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ, ವಿಧಾನಪರಿಷತ್‌ನ ಸಭಾ ನಾಯಕ ಎನ್‌.ಎಸ್‌‍.ಬೋಸರಾಜ್‌ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌‍ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ ತಿಳಿಸಿದ್ದಾರೆ. +ವಿಧಾನಪರಿಷತ್‌ ಚುನಾವಣೆಯಲ್ಲಿ ರಹಸ್ಯ ಮತದಾನ ನಡೆಯಲಿದೆ. ಈ ಮೊದಲು ಕೆಲ ಸಂದರ್ಭಗಳಲ್ಲಿ ಅಡ್ಡಮತದಾನ ನಡೆದು ಕಾಂಗ್ರೆಸ್‌‍ನ ಅಧಿಕೃತ ಅಭ್ಯರ್ಥಿಗೆ ಸೋಲು ಕಂಡಿರುವ ಉದಾಹರಣೆಗಳು ಇವೆ. ಈ ಬಾರಿ ಆ ರೀತಿಯಾಗದಂತೆ ಎಚ್ಚರಿಕೆ ವಹಿಸಲು ಕಾಂಗ್ರೆಸ್‌‍ ನಿರ್ಧರಿಸಿದೆ. +ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಕ್ಕೆ 2, ಲಿಂಗಾಯತ, ಒಕ್ಕಲಿಗ, ಮುಸ್ಲಿಂ, ಕ್ರಿಶ್ಚಿಯನ್‌, ಪರಿಶಿಷ್ಟ ಜಾತಿ ಸೇರಿದಂತೆ ಆಯ್ಕೆಯ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. +ಹಾಲಿ ವಿಧಾನಪರಿಷತ್‌ ಸದಸ್ಯ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಚಿವ ಎನ್‌.ಎಸ್‌‍.ಬೋಸರಾಜು ಅವರ ಕುರಿತು ಗೊಂದಲಗಳಿವೆ. ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆಯಲ್ಲೂ ಬಲಾಬಲ ಪ್ರದರ್ಶನ ಪರೋಕ್ಷವಾಗಿ ತಲೆದೋರಿದೆ. +ದೆಹಲಿಯಲ್ಲಿ ನಡೆದ ಸಭೆಯಲ್ಲಿ ಯತೀಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಜಿ ಸಂಸದ ವಿ.ಎಸ್‌‍.ಉಗ್ರಪ್ಪ, ವಿನಯ್‌ಕಾರ್ತಿಕ್‌, ಇಸಾಯಿಲ್‌ ಟಮಟ್ಕರ್‌, ರಮೇಶ್‌ ಬಾಬು, ಡಾ.ಆನಂದಕುಮಾರ್‌, ಬಿ.ಆರ್‌.ನಾಯ್ಡು, ವಿಜಯ್‌ ಮುಳಗುಂದ್‌ ಸೇರಿದಂತೆ ಹಲವರ ಹೆಸರುಗಳು ಅಂತಿಮ ಪಟ್ಟಿಯಲ್ಲಿವೆ. +ಒಟ್ಟು 14 ಜನರ ಅಂತಿಮ ಪಟ್ಟಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಾಗಲಿದೆಯೇ? ಅಥವಾ ಹೈಕಮಾಂಡ್‌ ಹೊಸ ಹೆಸರುಗಳನ್ನು ಸೇರ್ಪಡೆ ಮಾಡಲಿದೆಯೇ? ಎಂಬ ಕುತೂಹಲ ಕೆರಳಿದೆ. ಇಂದು ಸಂಜೆ ಅಥವಾ ನಾಳೆಯವರೆಗೂ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆಗಳಿವೆ.ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದಾರೆ. \ No newline at end of file diff --git a/eesanje/url_46_126_6.txt b/eesanje/url_46_126_6.txt new file mode 100644 index 0000000000000000000000000000000000000000..758104de6c4ab119025a063fe76a370954eb12c2 --- /dev/null +++ b/eesanje/url_46_126_6.txt @@ -0,0 +1,7 @@ +ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸೂಕ್ತ ತನಿಖೆಯಾಗಿ ಸಂತ್ರಸ್ತೆಯರಿಗೆ ನ್ಯಾಯ ಸಿಗಬೇಕು : ಬೊಮ್ಮಾಯಿ +ಹುಬ್ಬಳಿ, ಮೇ 31-ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಸ್‌‍ಐಟಿ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಬೇಕು ಹಾಗೂ ಸಂತ್ರಸ್ತೆಯರಿಗೆ ನ್ಯಾಯ ದೊರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. +ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆನ್‌ ಡ್ರೈವ್‌ ವಿಚಾರದಲ್ಲಿ ಪ್ರಜ್ವಲ್‌ ರೇವಣ್ಣ ಕಾನೂನಾತಕವಾಗಿ ಶರಣಾಗಿದ್ದಾನೆ. ಎಸ್‌‍ಐಟಿಯವರು ತನಿಖೆಯನ್ನು ಕಟುಬದ್ದವಾಗಿ ಮಾಡಬೇಕು ಅನ್ನುವುದು ಇಡೀ ಕರ್ನಾಟಕ ಜನರ ಒತ್ತಾಯ. ಅಲ್ಲದೇ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಹೇಳಿದರು. +ಇದು ಯಾವ ರೀತಿ ಪ್ರಚಲಿತಕ್ಕೆ ಬಂತು ಯಾರು ಪ್ರಚಾರ ಮಾಡಿದರು. ಪೆನ್‌ ಡ್ರೈವ್‌ ಯಾರ ಹತ್ತಿರ ಇತ್ತು ಅವರು ಯಾಕೇ ಅರೆಸ್ಟ್‌‍ ಆದರು ಅನ್ನುವುದರ ಕುರಿತು ಹಲವು ಆಯಾಮಗಳನ್ನು ಪಡೆದಿತ್ತು. ಖಂಡಿತವಾಗಿಯೂ ಇದರಲ್ಲಿ ರಾಜಕಾರಣವು ಬೆರತ್ತಿತ್ತು. ಕಾನೂನು ಪ್ರಕಾರ ಇಂತಹದ್ದನ್ನು ಪ್ರಚಾರ ಮಾಡುವುದು ಕಾನೂನು ವಿರುದ್ದವಾದದ್ದು. ಆ ನಿಟ್ಟಿನಲ್ಲಿ ಎಸ್‌‍ಐಟಿ ಮುಂದುವರೆದು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು. +ಇನ್ನು ವಾಲೀಕಿ ನಿಗಮದ ಸೂಪರಿಂಟೆಂಡೆಂಟ್‌ ಚಂದ್ರಶೇಖರ ಆತಹತ್ಯೆ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಂದ್ರಶೇಖರನ್‌ ಪ್ರಕರಣವು ಸಿಬಿಐಗೆ ಹೋಗುವುದು ಯೋಗ್ಯವಾಗಿದೆ ಇದರಲ್ಲಿ ಬ್ಯಾಂಕ್‌ ಕೂಡ ಪಾತ್ರವಹಿಸಿದೆ. ಬ್ಯಾಂಕ್‌ನ ನಿಯಮ ಪ್ರಕಾರ 10 ಕೋಟಿಗಿಂತ ಜಾಸ್ತಿ ವಹಿವಾಟುಗಳ ಕುರಿತಾಗಿ ಸಿಬಿಐ ತನಿಖೆ ನಡೆಯಬೇಕು ಅನ್ನುವುದು ಇದೆ. ಸಚಿವ ಬಿ.ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಇಡೀ ಸರ್ಕಾರದ ನೈತಿಕತೆ ಪ್ರಶ್ನೆ ಇದೆ. +ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಯಾವ ನೈತಿಕತೆ ಬಗ್ಗೆ ಮಾತನಾಡಿದ್ರು ಅದೇ ನಾಯಕರು ಇವತ್ತು ಸಿಎಂ, ಡಿಸಿಎಂ ಆಗಿದ್ದಾರೆ. ಹಾಗಾಗಿ ಅವರ ನೈತಿಕತೆ ಸರ್ಕಾರದ ನೈತಿಕತೆಯ ಪ್ರಶ್ನೆಯಿದೆಪ್ರಮಾಣಿಕತೆ ಉಳಿಸಿಕೊಳ್ಳುತ್ತಾರೋ ಇಲ್ಲಾ ಮಂತ್ರಿಯನ್ನು ಉಳಿಸಿಕೊಳ್ಳುತ್ತಾರೋ ಅನ್ನುವ ಪ್ರಶ್ನೆ ಅವರ ಮೇಲೆ ಇದೆ ಎಂದು ಹೇಳಿದರು. +ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಶತ್ರು ಭೈರವಿ ಯಾಗ ಮಾಡುತ್ತಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ಯಾಗ ಯಜ್ಞ ಅವರಿಗೇ ಗೊತ್ತು ಎಂದು ಹೇಳಿದರು. \ No newline at end of file diff --git a/eesanje/url_46_126_7.txt b/eesanje/url_46_126_7.txt new file mode 100644 index 0000000000000000000000000000000000000000..cc009870891fdb92c5ef87514d43e07ec8803d72 --- /dev/null +++ b/eesanje/url_46_126_7.txt @@ -0,0 +1,8 @@ +ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಕ್ಷಿಯಲ್ಲ : ಡಿ.ಕೆ.ಸುರೇಶ್‌ +ಬೆಂಗಳೂರು, ಮೇ 31– ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ, ಕೆಲವರು ನನ್ನನ್ನು ನಾಯಕನನ್ನಾಗಿ ಮಾಡಲು ಹೆಸರು ಪ್ರಸ್ತಾಪಿಸುತ್ತಿದ್ದಾರೆ, ಅದಕ್ಕೆ ಬೇಡ ಎಂದು ಹೇಳಲಾಗುವುದಿಲ್ಲ, ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ಇದ್ದಾರೆ. ಹೀಗಾಗಿ ಹೊಸ ಅಧ್ಯಕ್ಷರ ಚರ್ಚೆ ಅಪ್ರಸ್ತುತ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಪ್ರಾಮಾಣಿಕ ಸಣ್ಣ ಕಾರ್ಯಕರ್ತ. ಕೆಲವರು ತಮ್ಮ ತೀಟೆ ತೀರಿಸಿಕೊಳ್ಳಲು ಬೇರೆ ಬೇರೆ ಹೆಸರುಗಳನ್ನು ಹೇಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಪೆನ್‌ಡ್ರೈವ್‌ ಪ್ರಕರಣದಲ್ಲಿ ವಾಸ್ತವ ಏನು ಎಂದು ಜಗತ್ತು ನೋಡಿದೆ. ಆರೋಪಿ ಪ್ರಜ್ವಲ್‌ ರೇವಣ್ಣನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ನಾನು ವಿಮಾನನಿಲ್ದಾಣದಲ್ಲಿ ಬರುತ್ತಿದ್ದ ವೇಳೆಯಲ್ಲೇ ಪ್ರಜ್ವಲ್‌ ಕೂಡ ಬಂದಿದ್ದಾರೆ. ಹಾಗೆಂದು ನಾನು ಅವರನ್ನು ನೋಡಲು ವಿದೇಶಕ್ಕೆ ಹೋಗಿದ್ದೆ ಎಂಬ ವ್ಯಾಖ್ಯಾನ ಹಾಸ್ಯಾಸ್ಪದ ಎಂದರು. +ಪ್ರತಿ ಚುನಾವಣೆಯನ್ನು ನಾನು ಹೋರಾಟ ಎಂದೇ ಭಾವಿಸುತ್ತೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರು, ಮುಖಂಡರು ಎಂದಿನ ಮನೋಭಾವದಲ್ಲೇ ಕೆಲಸ ಮಾಡಿದ್ದಾರೆ. ಗೆಲ್ಲುವ ವಿಶ್ವಾಸವಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯಗಳನ್ನು ಹೇಳುತ್ತಿದ್ದಾರೆ. ಎಲ್ಲದಕ್ಕೂ ಉತ್ತರ ಹೇಳಲು ಸಾಧ್ಯವಿಲ್ಲ ಎಂದರು. +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಜೆಪಿಗರು ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರಕರಣದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ತನಿಖೆಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಳ್ಳಲಿ. ಬಳಿಕ ಲೋಪ ಕಂಡುಬಂದರೆ ಸಚಿವ ನಾಗೇಂದ್ರ ತಲೆಬಾಗುತ್ತಾರೆ ಎಂದು ಹೇಳಿದರು. +ಬಿಜೆಪಿಗರು ಎಲ್ಲಾ ಪ್ರಕರಣಗಳನ್ನು ಸಿಬಿಐ ತನಿಖೆಯನ್ನೂ ಕೇಳುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಇದರಿಂದ ರಾಜಕೀಯವಾಗಿ ತಮಗೆ ಲಾಭವಾಗಬಹುದು ಎಂಬ ಲೆಕ್ಕಾಚಾರ ಅವರದು. ಸಿಬಿಐ ಎಂದರೆ ಅವರೇನು ಬೇರೆ ಕಡೆಯಿಂದ ಬಂದವರಲ್ಲ. ಆ ಸಂಸ್ಥೆ ಮುಖ್ಯಸ್ಥರು ನಮ ರಾಜ್ಯದವರೇ ಆಗಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ರಾಜ್ಯದ ಪೊಲೀಸರು ಪತ್ತೆ ಹಚ್ಚಿದ ಅಂಶಗಳನ್ನೇ ಸಿಬಿಐ ಕೂಡ ಅಂಗೀಕರಿಸಿದೆ. ನಮ ರಾಜ್ಯದ ಪೊಲೀಸರು ಸಮರ್ಥರಿದ್ದಾರೆ ಎಂದರಲ್ಲದೆ, ರಾಜೀನಾಮೆ ಕೇಳುವುದು ಬಿಜೆಪಿಯವರ ಚಾಳಿಯಾಗಿದೆ. +ವಿರೋಧಪಕ್ಷ ಸದೃಢವಾಗಿದ್ದರೆ, ಆಡಳಿತ ಪಕ್ಷಕ್ಕೆ ಎಚ್ಚರಿಕೆ ಇರುತ್ತದೆ ಎಂದರು.ಬಲಿ ಕೊಡುವುದರಲ್ಲಿ ಒಂದು ಪಕ್ಷ ಹೆಸರುವಾಸಿಯಾಗಿದೆ. ಈ ದೇಶದ ಆಸ್ತಿ ಎಂದು ಹೇಳಿಕೊಳ್ಳುವ ಶಕ್ತಿ ಮಂತ್ರ, ತಂತ್ರ, ಕುತಂತ್ರ ಮಾಡಿಕೊಂಡೇ ಬಂದಿದೆ. ಅದನ್ನು ಈಗಲೂ ಮುಂದುವರೆಸುತ್ತಿರಬಹುದು. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ದಿಕ್ಕು ತಪ್ಪಿಸಲು ಉಪಮುಖ್ಯಮಂತ್ರಿ ಹೆಸರು ಬಳಕೆ ಮಾಡಿಕೊಳ್ಳುವುದು ಬಿಟ್ಟರೆ ಅವರಿಗೆ ಬೇರೆ ಗತಿ ಇಲ್ಲ. +ಹಾಗಾಗಿ ಡಿ.ಕೆ.ಶಿವಕುಮಾರ್‌ರವರ ಹೆಸರನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟನೆ ಮಾಡಿಕೊಳ್ಳುತ್ತಾರೆ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡುವುದಿಲ್ಲ. ದೇಶ ಗಮನಿಸುತ್ತಿದೆ. ಕರ್ನಾಟಕದ ಕರ್ಮಕಾಂಡ ಪ್ರಕರಣ ವಿಶ್ವಮಟ್ಟದಲ್ಲೂ ಕುಖ್ಯಾತಿಗೆ ಕಾರಣವಾಗಿದೆ. ಅದನ್ನು ಸಮರ್ಥಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದರೆ ಆ ಪಕ್ಷದ ಸ್ಥಿತಿ ಅರ್ಥವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_126_8.txt b/eesanje/url_46_126_8.txt new file mode 100644 index 0000000000000000000000000000000000000000..06e4ff958262a93708330ccf36b0bb0f9db5ced9 --- /dev/null +++ b/eesanje/url_46_126_8.txt @@ -0,0 +1,11 @@ +ಬಿಜೆಪಿ ಹಗರಣಗಳನ್ನು ಕೆದಕಲಾರಂಭಿಸಿದ ಕಾಂಗ್ರೆಸ್‌ +ಬೆಂಗಳೂರು, ಮೇ 31– ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್‌ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡವನ್ನು ತಪ್ಪಿಸಲು ನಾನಾ ರೀತಿಯ ಸರ್ಕಸ್‌ಗಳು ನಡೆಯುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ 162 ಕೋಟಿ ರೂ.ಗಳ ಹಗರಣವನ್ನು ಕೆಣಕಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. +ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂ.ಗಳು ನಿಗಮದ ಉಪಖಾತೆಗಳಿಗೆ ವರ್ಗಾವಣೆಯಾಗಿರುವಂತೆ ಅಲ್ಲಿಂದ ಬೇರೆ ಬೇರೆ ಖಾತೆಗಳಿಗೂ ಸಂದಾಯವಾಗಿದೆ ಎಂಬ ಆರೋಪಗಳಿದ್ದು, ಸಂಪುಟದಲ್ಲಿ ಬಹಳಷ್ಟು ಮಂದಿ ಈ ಹಗರಣದ ಬಗ್ಗೆ ಸಿಡಿಮಿಡಿಗೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂಬ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ. +ಬಿಜೆಪಿ ಸಚಿವ ನಾಗೇಂದ್ರ ಅವರ ತಲೆದಂಡಕ್ಕೆ ಪಟ್ಟು ಹಿಡಿದು ಜೂನ್‌ 6 ರವರೆಗೂ ಗಡುವು ನೀಡಿದೆ. ಕಾಂಗ್ರೆಸ್‌ನ ಒಂದು ಪಾಳಯ ಸಚಿವ ನಾಗೇಂದ್ರ ಅವರ ತಲೆದಂಡವಾಗಲಿ ಎಂದು ಹೇಳುತ್ತಿದೆ. ಹೈಕಮಾಂಡ್‌ ಮಟ್ಟದಲ್ಲೂ ಇದಕ್ಕೆ ಸಕಾರಾತ್ಮಕ ಸೂಚನೆಗಳು ಬಂದಿವೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಪ್ರತ್ಯೇಕ ಸಭೆ ನಡೆಸಿ ತನಿಖೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ ಏಕಾಏಕಿ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡರೆ ಸರ್ಕಾರ ಮತ್ತಷ್ಟು ಮುಜುಗರಕ್ಕೊಳಗಾಗಬೇಕಾಗುತ್ತದೆ, ಹಗರಣವನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಗೊಂದಲಗಳು ಕಾಂಗ್ರೆಸ್ಸಿಗರನ್ನು ಕಾಡುತ್ತಿವೆ. +ವಿರೋಧ ಪಕ್ಷ ಬಿಜೆಪಿ ಕೂಡ ಈ ಹಗರಣದಲ್ಲಿ ನಿರೀಕ್ಷಿತ ಮಟ್ಟ ಧ್ವನಿಯೇರಿಸದೆ ಮೃದು ಧೋರಣೆಯಿಂದ ಪ್ರತಿಕ್ರಿಯಿಸುತ್ತಿರುವುದು ಅಚ್ಚರಿ ಮೂಡಿಸಿದೆ. ಇದಕ್ಕೆ ಮೂಲ ಕಾರಣ ಬಿಜೆಪಿ ಸರ್ಕಾರದ ಅವಽಯಲ್ಲಿ ಪರಿಶಿಷ್ಟ ಜಾತಿಯ ನಿಗಮವೊಂದರಲ್ಲಿ ನಡೆದಿರುವ 162 ಕೋಟಿ ರೂ.ಗಳ ಹಗರಣ ಎಂದು ಹೇಳಲಾಗುತ್ತಿದೆ. +ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಜೆಪಿಯ ಹಿಂದಿನ ಸರ್ಕಾರದ ಹಲವು ಹಗರಣಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿತ್ತು. ಸರ್ಕಾರ ರಚನೆಯಾದ ಮೇಲೆ ಇದ್ದಕ್ಕಿದ್ದಂತೆ ಕಾಂಗ್ರೆಸ್‌ ಸರ್ಕಾರವು ನಿಧಾನಗತಿಯನ್ನು ಅನುಸರಿಸುತ್ತಿದೆ. ಕೆಲವು ಗಂಭೀರ ಸ್ವರೂಪದ ಹಗರಣಗಳ ತನಿಖೆಗೆ ಎಸ್‌ಐಟಿ ಹಾಗೂ ನ್ಯಾಯಾಂಗ ತನಿಖಾ ಸಮಿತಿಗಳನ್ನು ರಚಿಸಿದ್ದು ಬಿಟ್ಟರೆ ಉಳಿದಂತೆ ಯಥಾರೀತಿಯಲ್ಲಿ ನಡೆದುಕೊಂಡು ಹೋಗಲಿ ಎಂಬ ಧೋರಣೆಯಲ್ಲಿದ್ದಂತಿದೆ. +ಈಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಽೕಕ್ಷಕ ಚಂದ್ರಶೇಖರನ್‌ ಅವರ ಆತ್ಮಹತ್ಯೆಯಿಂದಾಗಿ 187 ಕೋಟಿ ರೂ.ಗಳ ಹಗರಣ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ರೀತಿಯ ಹಗರಣಗಳು ಹೊಸದಲ್ಲ. ಈ ಹಿಂದೆ ಕೂಡ ತುಂಬಾ ನಡೆದಿವೆ ಎಂಬ ಚರ್ಚೆಗಳು ನಡೆಯುತ್ತಿವೆ. +ಸಮುದಾಯವಾರು ಅಭಿವೃದ್ಧಿ ನಿಗಮಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಾಮಾನ್ಯ ಎಂಬ ಧೋರಣೆ ಮನೆ ಮಾಡಿದೆ. ಈ ಹಿಂದೆ ಬಿಜೆಪಿ ಅವಽಯಲ್ಲಿ ನಿಗಮವೊಂದರಿಂದ 162 ಕೋಟಿ ರೂ.ಗಳನ್ನು ವಿವಿಧ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅವುಗಳಲ್ಲಿ ಬಹುತೇಕ ಸಂಸ್ಥೆಗಳು ನಕಲಿ ಎಂದು ತಿಳಿದುಬಂದಿದೆ. +ವರ್ಗಾವಣೆಯಾದ ಹಣವನ್ನು ಹತ್ತು ನಿಮಿಷದಲ್ಲೇ ಬಿಜೆಪಿ ಶಾಸಕರೊಬ್ಬರ ಪುತ್ರನ ಹೆಸರಿನಲ್ಲಿದ್ದ ಟ್ರಸ್‌್ಟಗೆ ಸಂದಾಯ ಮಾಡಲಾಗಿತ್ತು. ಆರು ತಿಂಗಳ ಬಳಿಕ ಆ ಟ್ರಸ್‌್ಟ ಕೂಡ ಪರಿಸಮಾಪ್ತಿಯಾಗಿದೆ, ಹಣ ಎಲ್ಲಿಹೋಗಿದೆ? ಎಂಬ ಮಾಹಿತಿಯೇ ಇಲ್ಲ ಎಂದು ತಿಳಿದುಬಂದಿದೆ.ಈ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಹಲವು ವರ್ಷ ಕಳೆದರೂ ತಾರ್ಕಿಕ ಅಂತ್ಯ ಕಂಡಿಲ್ಲ ಎಂದು ಹೇಳಲಾಗಿದೆ. +ಹಿಂದಿನ ಹಗರಣದ ದಾಖಲಾತಿಗಳನ್ನು ಸಜ್ಜು ಮಾಡಿಟ್ಟುಕೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿಯ ಪ್ರತಿ ಟೀಕೆಗಳಿಗಾಗಿ ಕಾದು ಕುಳಿತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಬಿಜೆಪಿ ರೊಚ್ಚಿಗೆದ್ದು ಸಂಘರ್ಷದ ವಾತಾವರಣಕ್ಕಿಳಿದರೆ ಆಗ ಬಿಜೆಪಿ ಅವಽಯಲ್ಲಾದ ಹಗರಣಗಳನ್ನು ಒಂದೊಂದಾಗಿ ಬಯಲಿಗೆ ತಂದು ಎದುರೇಟು ನೀಡಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_126_9.txt b/eesanje/url_46_126_9.txt new file mode 100644 index 0000000000000000000000000000000000000000..fcb0d25dc6d4504e68fd896975c3dce3b208e45a --- /dev/null +++ b/eesanje/url_46_126_9.txt @@ -0,0 +1,5 @@ +ಮುಂದಿನ ವಾರ ಕೆ-ಸಿಇಟಿ ಫಲಿತಾಂಶ +ಬೆಂಗಳೂರು, ಮೇ 31-ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ತೀವ್ರ ಕುತೂಹಲದಿಂದ ವಿದ್ಯಾರ್ಥಿಗಳು ಕಾಯುತ್ತಿರುವ ಕೆ-ಸಿಇಟಿ ಪರೀಕ್ಷಾ ಫಲಿತಾಂಶ ಶೀಘ್ರದಲ್ಲೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆ-ಸಿಇಟಿ) ಫಲಿತಾಂಶ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆಗಳಿವೆ. +ಉನ್ನತ ಮೂಲಗಳ ಮಾಹಿತಿ ಪ್ರಕಾರ ಜೂನ್‌ ಮೊದಲ ವಾರದಲ್ಲಿ ಕೆ-ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಕ್ಕೆ ಪೂರಕವಾದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಯಾವಾಗ ಬೇಕಾದರೂ ಕೆ-ಸಿಇಟಿ ಫಲಿತಾಂಶ ಪ್ರಕಟಗೊಳ್ಳಬಹುದಾಗಿದೆ. +ಏಪ್ರಿಲ್‌ 18 ಮತ್ತು 19 ರಂದು ರಾಜ್ಯದಲ್ಲಿ ಕೆ-ಸಿಇಟಿ ಪರೀಕ್ಷೆ ನಡೆದಿತ್ತು. ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳು ಸಿಇಟಿ ಪರೀಕ್ಷೆಯಲ್ಲಿ ನೀಡಲಾಗಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅಂತಹ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರವನ್ನು ಮೌಲ್ಯಮಾಪನ ಮಾಡುವುದಾಗಿ ಪ್ರಾಧಿಕಾರ ಘೋಷಿಸಿದಲ್ಲದೆ, ಸರಿಯಾದ ಕೀ ಉತ್ತರಗಳನ್ನು ಪ್ರಕಟಿಸಿತ್ತು. +ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ, ಸಿಬಿಎಸ್‌‍ಇ, ಐಸಿಎಸ್‌‍ಇ ಮೊದಲಾದ ಮಂಡಳಿ ಪರೀಕ್ಷೆ ಅಂಕಗಳನ್ನು ದಾಖಲಿಸಲು ಅವಕಾಶ ನೀಡಿತ್ತು. ಈಗ ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತ ತಲುಪಿದ್ದು, ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_127_1.txt b/eesanje/url_46_127_1.txt new file mode 100644 index 0000000000000000000000000000000000000000..8050dad50f9736e94a5af996ace8c2a7ff029940 --- /dev/null +++ b/eesanje/url_46_127_1.txt @@ -0,0 +1,10 @@ +ಸಚಿವ ನಾಗೇಂದ್ರ ತಲೆದಂಡ ತಪ್ಪಿಸಲು ಕಾಂಗ್ರೆಸ್ ನಾನಾ ಸರ್ಕಸ್‌‍ +ಬೆಂಗಳೂರು, ಮೇ 31-ವಾಲ್ಮೀಕಿ ಅಭಿವೃದ್ಧಿ ನಿಗಮದ ಬೃಹತ್‌ ಹಗರಣದಲ್ಲಿ ಸಚಿವ ನಾಗೇಂದ್ರ ಅವರ ತಲೆದಂಡವನ್ನು ತಪ್ಪಿಸಲು ನಾನಾ ರೀತಿಯ ಸರ್ಕಸ್‌‍ಗಳು ನಡೆಯುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ 162 ಕೋಟಿ ರೂ.ಗಳ ಹಗರಣವನ್ನು ಕೆಣಕಲು ಕಾಂಗ್ರೆಸ್‌‍ ಸಿದ್ಧತೆ ನಡೆಸಿದೆ. +ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂ.ಗಳು ನಿಗಮದ ಉಪಖಾತೆಗಳಿಗೆ ವರ್ಗಾವಣೆಯಾಗಿರುವಂತೆ ಅಲ್ಲಿಂದ ಬೇರೆ ಬೇರೆ ಖಾತೆಗಳಿಗೂ ಸಂದಾಯವಾಗಿದೆ ಎಂಬ ಆರೋಪಗಳಿದ್ದು, ಸಂಪುಟದಲ್ಲಿ ಬಹಳಷ್ಟು ಮಂದಿ ಈ ಹಗರಣದ ಬಗ್ಗೆ ಸಿಡಿಮಿಡಿಗೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂಬ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ. +ಬಿಜೆಪಿ ಸಚಿವ ನಾಗೇಂದ್ರ ಅವರ ತಲೆದಂಡಕ್ಕೆ ಪಟ್ಟು ಹಿಡಿದು ಜೂನ್‌ 6 ರವರೆಗೂ ಗಡುವು ನೀಡಿದೆ. ಕಾಂಗ್ರೆಸ್‌‍ನ ಒಂದು ಪಾಳಯ ಸಚಿವ ನಾಗೇಂದ್ರ ಅವರ ತಲೆದಂಡವಾಗಲಿ ಎಂದು ಹೇಳುತ್ತಿದೆ. ಹೈಕಮಾಂಡ್‌ ಮಟ್ಟದಲ್ಲೂ ಇದಕ್ಕೆ ಸಕಾರಾತಕ ಸೂಚನೆಗಳು ಬಂದಿವೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಪ್ರತ್ಯೇಕ ಸಭೆ ನಡೆಸಿ ತನಿಖೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಆದರೆ ಏಕಾಏಕಿ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಂಡರೆ ಸರ್ಕಾರ ಮತ್ತಷ್ಟು ಮುಜುಗರಕ್ಕೊಳಗಾಗಬೇಕಾಗುತ್ತದೆ, ಹಗರಣವನ್ನು ಒಪ್ಪಿಕೊಂಡಂತಾಗುತ್ತದೆ ಎಂಬ ಗೊಂದಲಗಳು ಕಾಂಗ್ರೆಸ್ಸಿಗರನ್ನು ಕಾಡುತ್ತಿವೆ. +ವಿರೋಧ ಪಕ್ಷ ಬಿಜೆಪಿ ಕೂಡ ಈ ಹಗರಣದಲ್ಲಿ ನಿರೀಕ್ಷಿತ ಮಟ್ಟ ಧ್ವನಿಯೇರಿಸದೆ ಮೃದು ಧೋರಣೆಯಿಂದ ಪ್ರತಿಕ್ರಿಯಿಸುತ್ತಿರುವುದು ಅಚ್ಚರಿ ಮೂಡಿಸಿದೆ. ಇದಕ್ಕೆ ಮೂಲ ಕಾರಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ನಿಗಮವೊಂದರಲ್ಲಿ ನಡೆದಿರುವ 162 ಕೋಟಿ ರೂ.ಗಳ ಹಗರಣ ಎಂದು ಹೇಳಲಾಗುತ್ತಿದೆ. +ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌‍ ಬಿಜೆಪಿಯ ಹಿಂದಿನ ಸರ್ಕಾರದ ಹಲವು ಹಗರಣಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿತ್ತು. ಸರ್ಕಾರ ರಚನೆಯಾದ ಮೇಲೆ ಇದ್ದಕ್ಕಿದ್ದಂತೆ ಕಾಂಗ್ರೆಸ್‌‍ ಸರ್ಕಾರವು ನಿಧಾನಗತಿಯನ್ನು ಅನುಸರಿಸುತ್ತಿದೆ. ಕೆಲವು ಗಂಭೀರ ಸ್ವರೂಪದ ಹಗರಣಗಳ ತನಿಖೆಗೆ ಎಸ್‌‍ಐಟಿ ಹಾಗೂ ನ್ಯಾಯಾಂಗ ತನಿಖಾ ಸಮಿತಿಗಳನ್ನು ರಚಿಸಿದ್ದು ಬಿಟ್ಟರೆ ಉಳಿದಂತೆ ಯಥಾರೀತಿಯಲ್ಲಿ ನಡೆದುಕೊಂಡು ಹೋಗಲಿ ಎಂಬ ಧೋರಣೆಯಲ್ಲಿದ್ದಂತಿದೆ. +ಈಗ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಧೀಕ್ಷಕ ಚಂದ್ರಶೇಖರನ್‌ ಅವರ ಆತಹತ್ಯೆಯಿಂದಾಗಿ 187 ಕೋಟಿ ರೂ.ಗಳ ಹಗರಣ ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ರೀತಿಯ ಹಗರಣಗಳು ಹೊಸದಲ್ಲ. ಈ ಹಿಂದೆ ಕೂಡ ತುಂಬಾ ನಡೆದಿವೆ ಎಂಬ ಚರ್ಚೆಗಳು ನಡೆಯುತ್ತಿವೆ.ಸಮುದಾಯವಾರು ಅಭಿವೃದ್ಧಿ ನಿಗಮಗಳಲ್ಲಿ ಅಕ್ರಮ ಹಣ ವರ್ಗಾವಣೆ ಸಾಮಾನ್ಯ ಎಂಬ ಧೋರಣೆ ಮನೆ ಮಾಡಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ನಿಗಮವೊಂದರಿಂದ 162 ಕೋಟಿ ರೂ.ಗಳನ್ನು ವಿವಿಧ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿದೆ. ಅವುಗಳಲ್ಲಿ ಬಹುತೇಕ ಸಂಸ್ಥೆಗಳು ನಕಲಿ ಎಂದು ತಿಳಿದುಬಂದಿದೆ. +ವರ್ಗಾವಣೆಯಾದ ಹಣವನ್ನು ಹತ್ತು ನಿಮಿಷದಲ್ಲೇ ಬಿಜೆಪಿ ಶಾಸಕರೊಬ್ಬರ ಪುತ್ರನ ಹೆಸರಿನಲ್ಲಿದ್ದ ಟ್ರಸ್ಟ್‌ಗೆ ಸಂದಾಯ ಮಾಡಲಾಗಿತ್ತು. ಆರು ತಿಂಗಳ ಬಳಿಕ ಆ ಟ್ರಸ್ಟ್‌ ಕೂಡ ಪರಿಸಮಾಪ್ತಿಯಾಗಿದೆ, ಹಣ ಎಲ್ಲಿಹೋಗಿದೆ? ಎಂಬ ಮಾಹಿತಿಯೇ ಇಲ್ಲ ಎಂದು ತಿಳಿದುಬಂದಿದೆ.ಈ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಹಲವು ವರ್ಷ ಕಳೆದರೂ ತಾರ್ಕಿಕ ಅಂತ್ಯ ಕಂಡಿಲ್ಲ ಎಂದು ಹೇಳಲಾಗಿದೆ. +ಹಿಂದಿನ ಹಗರಣದ ದಾಖಲಾತಿಗಳನ್ನು ಸಜ್ಜು ಮಾಡಿಟ್ಟುಕೊಂಡಿರುವ ಕಾಂಗ್ರೆಸ್ಸಿಗರು ಬಿಜೆಪಿಯ ಪ್ರತಿ ಟೀಕೆಗಳಿಗಾಗಿ ಕಾದು ಕುಳಿತಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಬಿಜೆಪಿ ರೊಚ್ಚಿಗೆದ್ದು ಸಂಘರ್ಷದ ವಾತಾವರಣಕ್ಕಿಳಿದರೆ ಆಗ ಬಿಜೆಪಿ ಅವಧಿಯಲ್ಲಾದ ಹಗರಣಗಳನ್ನು ಒಂದೊಂದಾಗಿ ಬಯಲಿಗೆ ತಂದು ಎದುರೇಟು ನೀಡಲು ತಯಾರಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_127_10.txt b/eesanje/url_46_127_10.txt new file mode 100644 index 0000000000000000000000000000000000000000..fb8041a4a67854e71751f9725615740351d96808 --- /dev/null +++ b/eesanje/url_46_127_10.txt @@ -0,0 +1,4 @@ +ವಿಧಾನ ಪರಿಷತ್‌ ಚುನಾವಣೆ: ಮತದಾನಕ್ಕೆ ಸಾಂದರ್ಭಿಕ ರಜೆ ನೀಡಲು ಆದೇಶ +ಬೆಂಗಳೂರು, ಮೇ 30-ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂ.3ರಂದು ಮತದಾನ ನಡೆಯಲಿದ್ದು, ಅಂದು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಶಿಕ್ಷಕರು ಹಾಗೂ ಪದವೀಧರರಿಗೆ ಸೀಮಿತವಾಗಿ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರ ಆದೇಶಿಸಿದೆ. +ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈಶಾನ್ಯ ಪದವೀಧರ, ನೈರುತ್ಯ ಪದವೀಧರ, ಬೆಂಗಳೂರು ಪದವೀಧರರ ಕ್ಷೇತ್ರಗಳು ಮತ್ತು ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ರಜೆ ಮಂಜೂರು ಮಾಡಬೇಕಿದೆ. +ವಿಧಾನ ಪರಿಷತ್‌ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ, ಕೇಂಧ್ರ ಸರ್ಕಾರದ ಕಾರ್ಖಾನೆಗಳು,ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಘ-ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಮತ್ತು ದಿನಗೂಲಿ ಮೇಲೆ ಕೆಲಸ ನಿರ್ದೇಶಿಸುವ ಪದವೀಧರರು ಹಾಗೂ ಶಿಕ್ಷಕ ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_127_11.txt b/eesanje/url_46_127_11.txt new file mode 100644 index 0000000000000000000000000000000000000000..8b7667d6718717986b7c6694ce48e4725401abd3 --- /dev/null +++ b/eesanje/url_46_127_11.txt @@ -0,0 +1,15 @@ +ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಡೆಡ್‌ಲೈನ್ ನೀಡಿದ ಬಿಜೆಪಿ +ಬೆಂಗಳೂರು, ಮೇ 30-ವಾಲ್ಮೀಕಿ ಅಭಿವೃದ್ಧಿ ನಿಗಮದ ನಿದೇರ್ಶಕ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ನಾಗೇಂದ್ರ ಅವರ ನೇರ ಪಾತ್ರ ಇರುವ ಹಿನ್ನಲೆಯಲ್ಲಿ ಜೂನ್‌ ತಿಂಗಳ 6 ರೊಳಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಸರ್ಕಾರಕ್ಕೆ ಗಡವು ನೀಡಿದೆ. +ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಆಶೋಕ್‌, ಮಾಜಿ ಸಚಿವರಾದ ಸಿಟಿ ರವಿ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ಲೆಹರ್‌ ಸಿಂಗ್‌, ಶಾಸಕರಾದ ಸಿಕೆ ರಾಮಮೂರ್ತಿ ಅವರುಗಳು ಸಚಿವ ನಾಗೇಂದ್ರ ಜೂನ್‌ 6 ರೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೆ, ರಾಜ್ಯದ್ಯಾಂತ ಬೀದಿಗಿಳಿದು ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಲಾಗಿದೆ. +ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಮಾತನಾಡಿ, ಪ್ರರಕಣದಲ್ಲಿ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೈತಿಕ ಹೊಣೆಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಮೇಲೆ ಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು. ಜೂನ್‌ 6 ರೊಳಗೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಇಡೀ ರಾಜ್ಯಾದ್ಯಂತ ದಲಿತರ ಹಣವನ್ನು ನುಂಗಿದ ಕಾಂಗ್ರೆಸ್‌‍ ಎಂದು ಹೋರಾಟ ಮಾಡುತ್ತೇವೆ. ಈ ವಿಷಯ ವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯವ ತನಕ ಬಿಡುವುದಿಲ್ಲ.ಎಂದು ಎಚ್ಚರಿಕೆ ಕೊಟ್ಟರು. +ಅಧಿಕಾರಿಯ ಸಾವಿಗೆ ಬೆಲೆ ಇಲ್ಲವಾ…? ಈ ಪ್ರಕರಣದ ಹಿಂದೆ ದೊಡ್ಡ ಜಾಲವೇ ಇದೆ, ಇದು ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಹೋಗಿದೆ.ಅದಕ್ಕಾಗಿ ಇದನ್ನು ಸಿಬಿಐ ಗೆ ವಹಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ವಿಷಯ ವನ್ನು ಸುಮ್ಮನೆ ಬಿಡಬಾರದು ಎಂದು ಪಕ್ಷದಲ್ಲಿ ತೀರ್ಮಾನ ಆಗಿದೆ.ದಲಿತರ ಹಣವನ್ನು ಲೂಟಿ ಆಗಿರುವುದನ್ನು ಸುಮನೆ ಬಿಡುವುದಿಲ್ಲ ಎಂದು ಗುಡುಗಿದರು. +ಡೆತ್‌ ನೋಟ್‌ ನಲ್ಲಿ ಸಚಿವರ ಮೌಖಿಕ ಆದೇಶದಿಂದ ಹಣ ವರ್ಗಾವಣೆ ಬಗ್ಗೆ ಅವರು ಬರೆದಿದ್ದಾರೆ. ಇಷ್ಟು ಸ್ಪಷ್ಟವಾಗಿ ಆಗಿ ಡೆತ್‌ ನೋಟ್‌ ಬರೆದಿರುವ ಅಧಿಕಾರಿಯನ್ನು ನಾನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಅವರು ಸಂಪೂರ್ಣವಾಗಿ ವಿವರವುಳ್ಳ ಮಾಹಿತಿಯನ್ನು ಡೀಟೈಲ್‌್ಸ ಬರೆದಿದ್ದಾರೆ.ಲೂಟಿ ಮಾಡಿರುವುದು ಕಂಡು ಬಂದಿದೆ, ಇದರಲ್ಲಿ ನನ್ನ ತಪ್ಪೇನು ಇಲ್ಲ, ಮತ್ತೊಮ್ಮೆ ನನ್ನ ಪರಿಸ್ಥಿತಿ ಕಾರಣ ಎಂದರೆ, ಮತ್ತೊಮ್ಮೆ ಎಲ್ಲರೂ ಕಾರಣ. ಈ ನಿಗಮಕ್ಕೆ ನಾನು ಏನು ವಂಚನೆ ಮಾಡಿರುವುದಿಲ್ಲ ಎಂದು ಬರೆದಿದ್ದಾರೆ. ಇದಕ್ಕೀಂತ ಬೇರೆ ದಾಖಲೆ ಇನ್ನೇನು ಬೇಕು ಎಂದು ಪ್ರಶ್ನೆಸಿದರು. +ಎಫ್‌ಐಆರ್‌ ನಲ್ಲಿ ಸಚಿವರ ಹೆಸರು ಯಾಕಿಲ್ಲ..? ಹಣ ಗುಳುಮ್‌ ಮಾಡಿದ್ದ ಅಧಿಕಾರಿಗಳನ್ನು ಇದುವರೆಗೂ ಏಕೆ ಬಂಧಿಸಿಲ್ಲ.? ಅವರನ್ನು ಬಂಧಿಸಿದರೆ, ನಿಮ್ಮ ಬಂಡವಾಳ ಬಯಲಿಗೆ ಬರುತ್ತದೆಯೇ ಎಂಬ ಭಯ ಕಾಡುತ್ತಿದಿಯೇ? ಪ್ರಕರಣವನ್ನು ಸಿಐಡಿಗೆ ಯಾಕೆ ಕೊಟ್ಟಿದ್ದಾರೆ ಎಂದರೆ, ಇದು ಕಾಂಗ್ರೆಸ್‌‍ ಇನ್ವಿಸ್ಡೇಷನ್‌ ಟೀಮ್‌ ಎಂದು ಟೀಕಾ ಪ್ರಹಾರ ನಡೆಸಿದರು. +ನಾನು ವರ್ಗಾವಣೆ ಯಲ್ಲಿ ಹಣ ಹೊಡೆದರೆ, ರಾಜೀನಾಮೆ ಕೊಡುತ್ತೇನೆ ಎಂದು ಸಿದ್ದರಾಮಯ್ಯನವರೇ ಅನೇಕ ಬಾರಿ ಹೇಳಿದ್ದಾರೆ. ನುಡಿದಂತೆ ನಡೆದುಕೊಳ್ಳುವುದಾದರೆ, ಇವಾಗ ತಾವು ಯಾವಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೀರಾ.?ಮೃತನ ಮನೆಯಲ್ಲಿದ್ದ ಪೆನ್‌ ಡ್ರೈವ್‌ ಅನ್ನು ಏಕೆ ತೆಗೆದುಕೊಂಡು ಹೋದರು. ಅದನ್ನು ಸಾರ್ವಜನಿಕರ ಮುಂದೆ ಬಹಿರಂಗ ಪಡಿಸಿ ಎಂದು ಒತ್ತಾಯಿಸಿದರು. +ಅಂದು ನಮ್ಮ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್‌‍. ಈಶ್ವರಪ್ಪ ಪ್ರಕರಣದಲ್ಲಿ ಕಾಂಗ್ರೆಸ್‌‍ ಉಸ್ತುವಾಗಿ ರಣಜಿತ್‌ ಸಿಂಗ್‌ ಸುರ್ಜೇವಾಲ ಅವರು , ಕರ್ನಾಟಕಕ್ಕೆ ಕೆಟ್ಟ ದಿನ ಅಂದಿದ್ದರು.ಅಂದು ಕಾಂಗ್ರೆಸ್‌‍ ಲೂಟಿ ಯನ್ನು ಸಹಿಸೋದಿಲ್ಲ, ಈಶ್ವರಪ್ಪ ರನ್ನು ಬಂಧಿಸಿ ಎಂದು ಒತ್ತಾಯ ಮಾಡಿದ್ದರು. ನಮ್ಮ ದಲಿತ ಉದ್ಧಾರ ನಾಯಕ ಸಿದ್ದರಾಮಯ್ಯ ನವರನ್ನು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಅಗ್ರಹಿಸಿದರು. +ಪ್ರಧಾನಿ ನರೇಂದ್ರ ಮೋದಿಗೆ ನಾಚಿಕೆ ಆಗಬೇಕು ಅಂದಿದ್ದರು. ಇವಾಗ ನಾಚಿಗೆ ನಿಮಗೆ ಆಗಬೇಕಾ..? ಅವರಿಗೆ ಆಗಬೇಕಾ..? ನಿಮಗೆ ಏನಾದರೂ ಮಾನ ಮರ್ಯಾದೆ ಇದೆಯಾ..? ಪರಿಶಿಷ್ಟ ವರ್ಗಗಕ್ಕೆ ಸೇರಿದ 187 ಕೋಟಿ ಹಣ ಗುಳುಂ ಸರ್ಕಾರದ ಸಾಧನೆ ಎಂದು ಕುಹಕವಾಡಿದ ಆಶೋಕ್‌ ಅಧಿಕಾರ ಸಿಕ್ಕಿದ ಮೇಲೆ ದಲಿತರ ಉದ್ದಾರ ಅಗಿಲ್ಲ. ಕಾಂಗ್ರೆಸ್‌‍ಗೆ ರಾಮ ಕಂಡರೆ ಆಗಲ್ಲ ಗೊತ್ತಿದೆ. ಆದರೆ ವಾಲೀಕಿ ಮಹರ್ಷಿಗಳ ಕಂಡರೆ ಆಗಲ್ಲ ಎಂಬುದು ಇವಾಗ ಗೊತ್ತಾಯಿತು.ಈ ಸರ್ಕಾರ ಕೊಲೆಗಡುಕರ ಸರ್ಕಾರ ಎಂದು ಸಾಬೀತಾಗಿದೆ ಎಂದು ಹೇಳಿದರು. +ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಇರಲಿಲ್ಲ ಇವಾಗ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ. ಮಹಿಳಾ ಬ್ಯಾಂಕ್‌ ಅಕೌಂಟ್‌ ಗೆ ನಮ್ಮ ಸರ್ಕಾರ ಬಂದರೆ ಟಕಾ ಟಕಾ ಅಂತಾ ಹಣ ಹಾಕ್ತೀವಿ ಅಂತ ರಾಹುಲ್‌ ಗಾಂಧಿ ಹೇಳಿದ್ದಾರೆ. ಅದೇ ರೀತಿ ಸರ್ಕಾರದಿಂದ ಈ ಹಣವನ್ನು ಕಾಂಗ್ರೆಸ್‌‍ ನ ಲೂಟಿ ಅಕೌಂಟ್‌ ವೆ ಟಕಾ ಟಕಾ ಎಂದು ವರ್ಗಾವಣೆ ಮಾಡಿದ್ದಾರೆ.180 ಕೋಟಿ ನುಂಗಬೇಕು ಅಂದರೆ ಒಬ್ಬ ಮಂತ್ರಿ ಭಾಗಿಯಾಗಿರುವುದಿಲ್ಲ. ಇಡೀ ಸಚಿವ ಸಂಪುಟದ ಸಚಿವರು ಸೇರಿ ಸರ್ಕಾರವೇ ಭಾಗಿಯಾಗಿದೆ ಎಂದು ಆರೋಪಿಸಿದರು. +ಮಾಜಿ ಸಚಿವ ಸಿ ಟಿ ರವಿ ಮಾತನಾಡಿ, ಡೆಡ್‌ ನೋಟ್‌ ನಲ್ಲಿ ನಾಗರಾಜ್‌ ಎಂಬವವರು ಹೆಸರು ಇದೆ.ನಾಗರಾಜ್‌ ಅವರು ನಾಗೇಂದ್ರ ಅವರ ಬಿಜೆನೆಸ್‌‍ ಪಾರ್ಟರ್‌. ಸಿಎಂ, ಡಿಸಿಎಂ ,ನಾಗೇಂದ್ರ ಜೊತೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ಹೋಗಿದ್ದಾರೆ. ಇಂತಹವರು ಹೋಗಲು ಸಾಧ್ಯವೇ..?ಬೇರೆಯವರ ಜೊತೆ ಸ್ಪೆಷಲ್‌ ಫ್ಲೈಟ್‌ ನಲ್ಲಿ ಹೋಗಲು ಸಾಧ್ಯವೇ ಎಂದು ಪ್ರಶ್ನೆ ಮಾಡಿದರು.ಇದು ದೊಡ್ಡ ಹಗರಣವಾಗಿದ್ದು, ನಾಗೇಂದ್ರ ಸಚಿವರ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು.ಸರ್ಕಾರ ವಜಾ ಆಗೋವರೆಗೂ ನಮ್ಮ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. +ಮುಖ್ಯಮಂತ್ರಿಗಳ ಮನೆಗೆ ಬಿಜೆಪಿ ಎಸ್‌ಟಿ ಮೋರ್ಚಾ ಮುತ್ತಿಗೆವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಎಸ್‌ಟಿ ಮೋರ್ಚಾ ವತಿಯಿಂದ ಇಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. +ಧಿಕ್ಕಾರ ಧಿಕ್ಕಾರ, ಸಚಿವರಿಗೆ ಧಿ ಕ್ಕಾರ, ಸರಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಲಾಯಿತು. ಪೊಲೀಸರು ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಿದರು. ಅಕ್ರಮವಾಗಿ ಅಮಾಯಕರಾದ ತಮ್ಮನ್ನು ಬಂಧಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. +ದಲಿತ ವಿರೋಧಿ ಕಾಂಗ್ರೆಸ್‌ ಸರಕಾರಕ್ಕೆ ಧಿ ಕ್ಕಾರೞ ಕೂಗಿದ ಕಾರ್ಯಕರ್ತರು, ಅಯ್ಯಯ್ಯೋ ಅನ್ಯಾಯ, ಅನ್ಯಾಯೞ ಎಂದು ಘೋಷಣೆ ಕೂಗಿದರು. ಸುಮಾರು 187 ಕೋಟಿ ರೂ. ಅವ್ಯವಹಾರದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿ ಕಾರಿ ಚಂದ್ರಶೇಖರ್‌ ಅವರು ಡೆತ್‌ ನೋಟ್‌ನಲ್ಲಿ ಸಚಿವರ ಹೆಸರನ್ನು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_127_12.txt b/eesanje/url_46_127_12.txt new file mode 100644 index 0000000000000000000000000000000000000000..260c0624540aae5a035e6d6cf57477f73dafbfe5 --- /dev/null +++ b/eesanje/url_46_127_12.txt @@ -0,0 +1,11 @@ +ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್ ಆಕಾಂಕ್ಷಿಗಳ ಎದೆಬಡಿತ ಹೆಚ್ಚಿಸಿದ ದೆಹಲಿ ಮೀಟಿಂಗ್ +ಬೆಂಗಳೂರು, ಮೇ 30-ವಿಧಾನಸಭೆಯಿಂದ ವಿಧಾನಪರಿಷತ್‌ನ ಸದಸ್ಯರ ಆಯ್ಕೆಗೆ ಸಂಬಂಧಪಟ್ಟಂತೆ ವಾತಾವರಣ ಸಂಪೂರ್ಣ ಬದಲಾಗಿದ್ದು, ದೆಹಲಿಯಲ್ಲಿ ನಿನ್ನೆ ಸಂಜೆ ನಡೆದ ಮಹತ್ವದ ಸಭೆ ಆಕಾಂಕ್ಷಿಗಳ ಎದೆಬಡಿತವನ್ನು ಹೆಚ್ಚಿಸಿದೆ. ಸಚಿವ ಬೋಸ್‌‍ರಾಜ್‌ ಅವರಿಗೆ ಎಂಎಲ್‌ಸಿ ಸ್ಥಾನ ಸಿಗುವುದು ಬಹುತೇಕ ಖಚಿತ ಎಂದು ಹೇಳಲಾಗಿತ್ತು. ಆದರೆ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ನಡೆದ ಕಸರತ್ತುಗಳು ವಾತಾವರಣವನ್ನು ಬದಲಾವಣೆ ಮಾಡಿದೆ. +ವಿಧಾನಪರಿಷತ್‌ನಲ್ಲಿ ಆಡಳಿತ ಪಕ್ಷದ ನಾಯಕ ಸ್ಥಾನಕ್ಕೆ ಪ್ರಬಲ ವ್ಯಕ್ತಿಯ ಅಗತ್ಯವಿದೆ ಎಂಬ ಚರ್ಚೆಯ ಹಿನ್ನೆಲೆಯಲ್ಲಿ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ಮರು ಆಯ್ಕೆ ಮಾಡುವ ಬಗ್ಗೆ ಅರ್ಧಚಂದ್ರ ಸ್ಥಿತಿ ನಿರ್ಮಾಣವಾಗಿದೆ. +ಕಾಂಗ್ರೆಸ್‌‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಅವರನ್ನು ಆಡಳಿತ ಪಕ್ಷದ ನಾಯಕರನ್ನಾಗಿ ಮಾಡಬೇಕು ಮತ್ತು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ಒತ್ತಡ ಹೈಕಮಾಂಡ್‌ನಿಂದ ಬಂದಿದೆ. ಹೀಗಾಗಿ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ಆಯ್ಕೆ ಮಾಡದೆ ಕೈಬಿಡುವ ಅಥವಾ ಮುಂದಿನ ತಿಂಗಳಲ್ಲಿ ನಡೆಯುವ ನಾಮನಿರ್ದೇಶನದಲ್ಲಿ ಪರಿಗಣಿಸುವ ಚರ್ಚೆಗಳು ನಡೆದಿವೆ. +11 ಸ್ಥಾನಗಳ ಪೈಕಿ ಕಾಂಗ್ರೆಸ್‌‍ಗೆ 7 ಸ್ಥಾನಗಳು ಲಭ್ಯವಾಗಲಿದ್ದು, 8ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಿಪಕ್ಷಗಳಿಗೆ ಎದುರೇಟು ನೀಡುವ ರಣತಂತ್ರವು ನಡೆಯುತ್ತಿದೆ. ನಿನ್ನೆ ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುರ್ಜೆವಾಲ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡೆಸಿದ ಚರ್ಚೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಮಾತ್ರ ಅಖೈರುಗೊಂಡಿದೆ. +ಉಳಿದಂತೆ ಬಹುತೇಕ ಖಚಿತ ಎಂದು ಭಾವಿಸಲಾಗಿದ್ದ ಎನ್‌.ಎಸ್‌‍.ಬೋಸರಾಜ್‌ ಹಾಗೂ ಡಾ.ಕೆ.ಗೋವಿಂದರಾಜು ಅವರ ಹೆಸರುಗಳು ತ್ರಿಶಂಕು ಸ್ಥಿತಿಯಲ್ಲಿವೆ.ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಲಾ 2 ಸ್ಥಾನಗಳನ್ನು ಹಂಚಿಕೊಂಡಿದ್ದು, ಉಳಿದ 3 ಸ್ಥಾನಗಳಿಗೆ ಆಯ್ಕೆ ಮಾಡಲು ಹೈಕಮಾಂಡ್‌ ನಿರ್ದೇಶನ ಪಾಲಿಸುವ ಒಪ್ಪಂದವಾಗಿದೆ ಎಂದು ತಿಳಿದುಬಂದಿದೆ. +ಲಾಬಿ ತೀವ್ರಗೊಂಡ ಹಿನ್ನೆಲೆಯಲ್ಲಿ ಮಹಿಳಾ ಕೋಟಾ ಕೈಬಿಡುವ ಕುರಿತು ವದಂತಿಗಳಿವೆ. ಕೆಪಿಸಿಸಿಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಹಾಗೂ ಕಮಲಾಕ್ಷಿ ರಾಜಣ್ಣ ಅವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಜೊತೆಗೆ ರಾಣಿ ಸತೀಶ್‌, ಭವ್ಯಾ ನರಸಿಂಹಮೂರ್ತಿ, ಕುಸುಮಾ, ಪದಾವತಿ ಅವರು ಲಾಬಿ ನಡೆಸಿದ್ದರು. +ಈಗಾಗಲೇ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದವರು, ಸೋಲು ಕಂಡವರು, 2 ಕ್ಕಿಂತ ಹೆಚ್ಚು ಬಾರಿ ಅಧಿಕಾರ ಅನುಭವಿಸಿದವರಿಗೆ ಈ ಹಂತದಲ್ಲಿ ಅವಕಾಶ ನೀಡದಿರುವ ನಿರ್ಣಯಗಳಾಗಿವೆ ಎಂದು ತಿಳಿದುಬಂದಿದೆ.ಪ್ರಾಥಮಿಕ ಚರ್ಚೆಯು ಬಹುತೇಕ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮರಳಿ ಬರುತ್ತಿದ್ದಾರೆ. +ರಾಹುಲ್‌ಗಾಂಧಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ ಬಳಿಕ ಪಟ್ಟಿಯನ್ನು ಅಖೈರುಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.ಮೇಲ್ನೋಟಕ್ಕೆ ಈ ಬಾರಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ. ಕುಟುಂಬ ಹಾಗೂ ಪ್ರಭಾವಿಗಳ ಲಾಬಿಯ ಹೊರತಾಗಿಯೂ ಕಾರ್ಯಕರ್ತರನ್ನು ಕಡೆಗಣಿಸಲಾಗುವುದಿಲ್ಲ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್‌ ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ. +ಕೆಪಿಸಿಸಿಯ ಕಾರ್ಯಾಧ್ಯಕ್ಷ ವಸಂತಕುಮಾರ್‌, ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ಬಾಬು, ಪ್ರಧಾನ ಕಾರ್ಯದರ್ಶಿ ನಟರಾಜೇಗೌಡ, ವಾರ್‌ ರೂಂನ ಉಸ್ತುವಾರಿ ಬಿ.ಆರ್‌.ನಾಯ್ಡು, ಬಾಗಲಕೋಟೆಯ ಸೌದಾಗರ್‌ ಸೇರಿದಂತೆ ಹಲವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ. +ಬಿಜೆಪಿಯಿಂದ ಕಾಂಗ್ರೆಸ್‌‍ಗೆ ವಲಸೆ ಬಂದು ವಿಧಾನಪರಿಷತ್‌ ಸದಸ್ಯರಾಗಿ, ಅದಕ್ಕೆ ರಾಜೀನಾಮೆ ನೀಡಿ ಮತ್ತೆ ಬಿಜೆಪಿಗೆ ಮರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾಗಿರುವ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೂ ಈ ಕಂತಿನಲ್ಲೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಚರ್ಚೆಗಳಾಗಿವೆ. \ No newline at end of file diff --git a/eesanje/url_46_127_2.txt b/eesanje/url_46_127_2.txt new file mode 100644 index 0000000000000000000000000000000000000000..36eeafcc97b9291baef505707f0eb3ff0dd27293 --- /dev/null +++ b/eesanje/url_46_127_2.txt @@ -0,0 +1,5 @@ +ಒಂದು ಸಮುದಾಯದ ಓಲೈಕೆಗಾಗಿ ಜಿಹಾದಿ ಸರ್ಕಾರ ‘ತಾಲೀಬಾನ್‌ ಗಿರಿ’ ನಡೆಸುತ್ತಿದೆ : ಸುನಿಲ್‌ ಕುಮಾರ್‌ +ಬೆಂಗಳೂರು, ಮೇ 31-ಒಂದು ಸಮುದಾಯದ ಓಲೈಕೆಗಾಗಿ ಇಡಿ ರಾಜ್ಯದ ಹಿತ ಕಡೆಗಣಿಸಲಾಗುತ್ತಿದೆ ಎಂದರೆ ಅದು ಜಿಹಾದಿ ಸರ್ಕಾರದಿಂದ ಮಾತ್ರ ಸಾಧ್ಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ರಾಜ್ಯದಲ್ಲಿ ಈಗ ನಡೆಸುತ್ತಿರುವುದು ಸರ್ಕಾರವಲ್ಲ, ತಾಲೀಬಾನ್‌ ಗಿರಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್‌ ಕುಮಾರ್‌ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ ! ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ವ್ಯಂಗ್ಯವಾಡಿದ್ದಾರೆ.ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿ ಇದೆ ಎಂಬುದು ಮತ್ತೊಮೆ ಸಾಬೀತಾಗಿದೆ. +ಚನ್ನಗಿರಿಯಲ್ಲಿ ಪೊಲೀಸ್‌‍ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್‌ ಚಿಟ್‌ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್‌ ವೆಲ್‌ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್‌ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ ಒತ್ತಾಯಪೂರ್ವಕವಾಗಿ ಬಿ ರಿಪೋರ್ಟ್‌ ಸಲ್ಲಿಸಿದೆ ಎಂದು ಆಪಾದಿಸಿದ್ದಾರೆ. +ಪಂಪ್‌ ವೆಲ್‌ ಪ್ರಕರಣದಲ್ಲೂ ಹಾಗೇ ಆಗಿದೆ. ರಸ್ತೆಯಲ್ಲಿ ನಮಾಜ್‌ ಮಾಡಿ ಸಮಾಜದ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಅನಾನುಕೂಲತೆ ಸೃಷ್ಟಿಸಿದವರನ್ನು ಬಂಽಸುವುದು ಬಿಟ್ಟು, ಪ್ರಕರಣವನ್ನು ಬೆಳಕಿಗೆ ತಂದ ಶರಣ್‌ ಪಂಪ್‌ ವೆಲ್‌ ವಿರುದ್ಧ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಮಾತ್ರವಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸ್‌‍ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದೆ ಎಂದು ಆರೋಪ ಮಾಡಿದ್ದಾರೆ. \ No newline at end of file diff --git a/eesanje/url_46_127_3.txt b/eesanje/url_46_127_3.txt new file mode 100644 index 0000000000000000000000000000000000000000..ce06722145d959eb5d1237ce4f596031860bfaf2 --- /dev/null +++ b/eesanje/url_46_127_3.txt @@ -0,0 +1,12 @@ +ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ ಹೇಳಿಕೆ ಪಡೆಯುತ್ತಿದ್ದಾರೆ : ಗೃಹ ಸಚಿವ ಪರಮೇಶ್ವರ್‌ +ಬೆಂಗಳೂರು, ಮೇ 31– ವಿದೇಶದಿಂದ ಸ್ವದೇಶಕ್ಕೆ ಮರಳಿದ ಪ್ರಜ್ವಲ್‌ ರೇವಣ್ಣ ಅವರನ್ನು ಎಸ್‌‍ಐಟಿ ಅಧಿಕಾರಿಗಳು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ನಿನ್ನೆ ತಡರಾತ್ರಿ 12.40 ಕ್ಕೆ ಬೆಂಗಳೂರಿನ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಬಂಧಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲಾಗಿದ್ದು, ಎಸ್‌‍ಐಟಿ ಅಧಿಕಾರಿಗಳು ಹೇಳಿಕೆ ಪಡೆಯುವುದು ಸೇರಿದಂತೆ ವಿವಿಧ ಕ್ರಮಗಳನ್ನು ಮುಂದುವರೆಸಿದ್ದಾರೆ ಎಂದರು. +ಆತಹತ್ಯೆ ಮಾಡಿಕೊಂಡ ವಾಲೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವಾನ ಹೇಳಲು ನಿನ್ನೆ ತಾವು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ತಡವಾಗಿ ಬಂದಿದ್ದೇನೆ, ಅಧಿಕಾರಿಗಳ ಜೊತೆ ಇನ್ನೂ ಚರ್ಚೆ ನಡೆದಿಲ್ಲ. ಸದ್ಯದ ಮಾಹಿತಿ ಪ್ರಕಾರ ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ ಎಂದು ಹೇಳಿದರು. +ಮೊಬೈಲ್‌ ನಾಶವಾಗಿರುವ ಬಗ್ಗೆ ಬೇರೆ ಮೂಲಗಳಿಂದ ಬರುವ ಮಾಹಿತಿಯನ್ನು ನಂಬಲಾಗುವುದಿಲ್ಲ. ಎಸ್‌‍ಐಟಿ ಅಧಿಕಾರಿಗಳು ಹೇಳಿದರೆ ಅದು ಅಧಿಕೃತ. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಪ್ರಕರಣದ ಬಗ್ಗೆ ಸಂತ್ರಸ್ತರು ದೂರು ನೀಡುವಂತೆ ಈಗಾಗಲೇ ಕರೆ ನೀಡಲಾಗಿತ್ತು. ಯಾರೇ ದೂರು ನೀಡಿದರೂ ಅವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ರೀತಿ ಬೆಳವಣಿಗೆಯಾಗುತ್ತದೆ ಎಂದು ಕಾದುನೋಡಬೇಕಿದೆ ಎಂದರು. +ಪ್ರಜ್ವಲ್‌ ರೇವಣ್ಣ ಅವರಿಗೆ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌‍ ನೀಡಲಾಗಿತ್ತು. ಸಿಬಿಐ ಮೂಲಕ ಇಂಟರ್‌ಪೂಲ್‌ ಅನ್ನು ಸಂಪರ್ಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಲೋಕಸಭಾ ಚುನಾವಣಾ ಫಲಿತಾಂಶ ಜೂನ್‌ 4 ರಂದು ಪ್ರಕಟವಾಗಲಿದ್ದು, ಹೆಚ್ಚೂ ಕಡಿಮೆಯಾದರೆ ಪ್ರಜ್ವಲ್‌ ರೇವಣ್ಣ ಅವರಿಗಿದ್ದ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳ್ಳುತ್ತಿತ್ತು. +ಇವೆಲ್ಲವನ್ನೂ ಅರಿತುಕೊಂಡು ಪ್ರಜ್ವಲ್‌ ರೇವಣ್ಣ ಭಾರತಕ್ಕೆ ವಾಪಸ್‌‍ ಬಂದಿದ್ದಾರೆ. ಅವರು ದೇಶದಲ್ಲೇ ಇದ್ದರೆ, ನಾಲ್ಕು ಜನ ಇನ್‌್ಸಪೆಕ್ಟರ್‌ಗಳನ್ನು ಅಥವಾ ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಬಂಧಿಸಿ ಕರೆತರಬಹುದಿತ್ತು. ವಿದೇಶದಲ್ಲಿದ್ದಾಗ ಅಂತಾರಾಷ್ಟ್ರೀಯ ನಿಯಮಗಳಿರುತ್ತವೆ, ಅವುಗಳನ್ನು ಪಾಲನೆ ಮಾಡುವುದು ಅನಿವಾರ್ಯ ಎಂದು ಹೇಳಿದರು.ಕೆ.ಆರ್‌.ಪೇಟೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌‍ನ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರ ಹೆಸರು ಕೇಳಿಬಂದಿರುವ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ವಿವರ ತಿಳಿದುಕೊಂಡ ನಂತರ ಪ್ರತಿಕ್ರಿಯಿಸುತ್ತೇನೆ. +ಸ್ವಯಂ ಪ್ರೇರಿತ ಸಿಬಿಐ ತನಿಖೆ ಇಲ್ಲ:ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆ ನಡೆಯುತ್ತಿದೆ. ನೂರು ಕೋಟಿ ರೂ.ಗಳಿಗೂ ಮೇಲ್ಪಟ್ಟ ವಹಿವಾಟುಗಳಿದ್ದರೆ ಅದು ಸಹಜವಾಗಿಯೇ ಸಿಬಿಐ ತನಿಖೆಗೊಳಪಡುತ್ತದೆ ಎಂಬ ಚರ್ಚೆಗಳಿವೆ. ಇನ್ನು ಮುಂದೆ ಯಾವ ರೀತಿ ತಿರುವು ಪಡೆಯುತ್ತದೆ ಎಂದು ನೋಡಬೇಕಿದೆ ಎಂದರು. +ಆತಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಮರಣಪತ್ರದಲ್ಲಿರುವ ಮಾಹಿತಿಗಳು ಹಾಗೂ ಹಣ ವರ್ಗಾವಣೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಸಿಬಿಐ ಮಧ್ಯಪ್ರವೇಶ ಮಾಡಿದರೆ ಸಿಐಡಿಯಿಂದ ಪ್ರಕರಣ ವರ್ಗಾವಣೆಗೊಳ್ಳುತ್ತದೆ. ನಾವಾಗಿಯೇ ಸಿಬಿಐ ತನಿಖೆ ಕೇಳುವುದಿಲ್ಲ. ಎರಡೆರಡೂ ತನಿಖೆಯೂ ನಡೆಯುವುದಿಲ್ಲ ಎಂದರು. +ಸಚಿವರ ರಾಜೀನಾಮೆಗೆ ಬಿಜೆಪಿ ಗಡುವು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ವಿರೋಧಪಕ್ಷವಾಗಿ ಅವರು ಗಡುವು ನೀಡುವುದು, ರಾಜೀನಾಮೆಗೆ ಒತ್ತಾಯಿಸುವುದು, ಪ್ರತಿಭಟಿಸುವುದು ಸಾಮಾನ್ಯ. ಆದರೆ ಸರ್ಕಾರಕ್ಕೂ ಜವಾಬ್ದಾರಿಯಿದೆ. ಅದರಂತೆ ನಾವು ನಡೆದುಕೊಳ್ಳುತ್ತೇವೆ ಎಂದರು. +187 ಕೋಟಿ ಸಾರ್ವಜನಿಕರ ಹಣ ಆಗಿರುವುದರಿಂದ ಮುಖ್ಯಮಂತ್ರಿಯವರು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ನಿನ್ನೆ ನಾನು ಶಿವಮೊಗ್ಗದಲ್ಲಿದ್ದಾಗ ಕರೆ ಮಾಡಿ ಸಭೆ ನಡೆಸೋಣ ಎಂದು ಹೇಳಿದ್ದರು. ನಾನು ದೂರ ಇದ್ದಿದ್ದರಿಂದಾಗಿ ಅವರೇ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ ಎಂದು ಹೇಳಿದರು. +ಯಾಗದಿಂದ ಸರ್ಕಾರ ಬೀಳಿಸಲಾಗುವುದಿಲ್ಲ:ರಾಜ್ಯಸರ್ಕಾರವನ್ನು ಪತನಗೊಳಿಸಲು ಕೇರಳದಲ್ಲಿ ಯಾಗ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಅವರಿಗೆ ಮಾಹಿತಿ ಇದೆ. ನನಗೆ ವಿವರಗಳು ಗೊತ್ತಿಲ್ಲ. ಅವರ ಹೇಳಿಕೆಯನ್ನು ಗೌರವಿಸುತ್ತೇನೆ. ಆದರೆ ಯಾಗ ಮಾಡುವುದರಿಂದ ಸರ್ಕಾರ ಬೀಳಿಸಬಹುದು ಅಥವಾ ರಚಿಸಬಹುದು ಎಂದಾಗಿದ್ದರೆ ಎಲ್ಲರೂ ಯಾಗ ಮಾಡುತ್ತಲೇ ಇರುತ್ತಿದ್ದರು ಎಂದರು. \ No newline at end of file diff --git a/eesanje/url_46_127_4.txt b/eesanje/url_46_127_4.txt new file mode 100644 index 0000000000000000000000000000000000000000..2efbcc9c18a1c959406b659e6f028175c5bb357f --- /dev/null +++ b/eesanje/url_46_127_4.txt @@ -0,0 +1,5 @@ +ಅಸಹಾಯಕ ಅಧಿಕಾರಿಗಳು-ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ : ವಿಜಯೇಂದ್ರ ವಾಗ್ದಾಳಿ +ಬೆಂಗಳೂರು, ಮೇ 31– ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ. ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ ಎಂದು ರಾಜ್ಯ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದ್ದಾರೆ. +ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ವಿಜಯೇಂದ್ರ ಅವರು, ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲೇ ………….. ನಿಂದ ಬಿಲ್‌ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್‌‍.ಗೌಡರ್‌ ಆತಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಕಿಡಿಕಾರಿದ್ದಾರೆ. +ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್‌‍ ಸರ್ಕಾರದಲ್ಲಿ ಆಡಳಿತದಲ್ಲಿ ಅಮಾಯಕ ಹೆಣ್ಣು ಮಕ್ಕಳಿಗೆ- ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ- ವರ್ಗಾವಣೆ ಭಾಗ್ಯ, ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದಷ್ಟೂ ಕಾಲ ರಾಜ್ಯದ ಜನತೆ ನಿತ್ಯ ದುರಂತ ಸುದ್ದಿಯನ್ನಷ್ಟೇ ತಿಳಿಯಬೇಕಿದೆ. +ಇದು ಕರ್ನಾಟಕದ ಪರಮ ದೌರ್ಭಾಗ್ಯವಲ್ಲದೇ ಇನ್ನೇನೂ ಅಲ್ಲ. ಎರಡು ಅಮೂಲ್ಯ ಜೀವಗಳ ಆತಹತ್ಯೆಯ ಹಿನ್ನಲೆಯಲ್ಲಿ ಸತ್ಯ ಏನೆಂಬುದು ಬಹಿರಂಗವಾಗಲೇ ಬೇಕಿದೆ, ಇದಕ್ಕೆ ಸಿಬಿಐ ತನಿಖೆಯೊಂದೇ ಉಳಿದಿರುವ ಮಾರ್ಗವಾಗಿದೆ ಎಂದು ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_127_5.txt b/eesanje/url_46_127_5.txt new file mode 100644 index 0000000000000000000000000000000000000000..d69858f0d0fe23ed3aaac406e71089791ad55e51 --- /dev/null +++ b/eesanje/url_46_127_5.txt @@ -0,0 +1,4 @@ +ಬಂಧನಕ್ಕೊಳಗಾದ ಪ್ರಜ್ವಲ್‌ಗೆ ಎಸ್‌‍ಐಟಿಯಿಂದ ಪ್ರಶ್ನೆಗಳ ಸುರಿಮಳೆ +ಬೆಂಗಳೂರು, ಮೇ 31-ಲೈಂಗಿಕ ದೌರ್ಜನ್ಯದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಇಂದು ಮುಂಜಾನೆ ಬಂಧಿಸಿರುವ ಎಸ್‌‍ಐಟಿ ತೀವ್ರ ವಿಚಾರಣೆಗೊಳಪಡಿಸಿದೆ.ಕಳೆದ 34 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್‌ರವರು ನಿನ್ನೆ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎಸ್‌‍ಐಟಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. +ಇಂದು ಬೆಳಿಗ್ಗೆ ಪ್ರಜ್ವಲ್‌ ತಿಂಡಿ ಸೇವಿಸಿದ ನಂತರ ತೀವ್ರ ವಿಚಾರಣೆಗೊಳಪಡಿಸಿದ ಎಸ್‌‍ಐಟಿ ಅಧಿಕಾರಿಗಳು ಪ್ರಜ್ವಲ್‌ಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. +* ಪೆನ್‌ಡ್ರೈವ್‌ನಲ್ಲಿರುವ ಫೋಟೊ, ವಿಡಿಯೋ ನಿಮದೇ?* ಹಾಗಾದರೆ ಮೊಬೈಲ್‌ನಲ್ಲಿ ಸೆರೆಹಿಡಿದು ಅವುಗಳನ್ನು ಏಕೆ ಮೊಬೈಲ್‌ನಲ್ಲಿ ಏಕೆ ಇಟ್ಟುಕೊಂಡಿದ್ದೀರಿ?* ಎಷ್ಟು ಮಹಿಳೆಯರ ವಿಡಿಯೋಗಳಿವೆ?* ಅವರೆಲ್ಲಾ ನಿಮಗೆ ಹೇಗೆ ಗೊತ್ತು?* ನಿಮ್ಮ ಮೊಬೈಲ್‌ನಲ್ಲಿ ಇರುವ ಅಶ್ಲೀಲ ಚಿತ್ರಗಳು ಹೇಗೆ ಹೊರಗೆ ಬಂದವು?* ನಿಮ್ಮ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ನೀವೇನಾದರೂ ಅವುಗಳನ್ನು ಕೊಟ್ಟಿದ್ದೀರ?* ಪೆನ್‌ಡ್ರೈವ್‌ಗಳು ಹೊರಗೆ ಬಂತು ಎಂದು ನಿಮಗೆ ಗೊತ್ತಾಗಿದ್ದು ಯಾವಾಗ?* ಮುಂದೆ ನೀವೇನು ಮಾಡಿದಿರಿ?* ಹೊಳೆನರಸೀಪುರ, ಹಾಸನದಲ್ಲಿ ನಿಮಗೆ ಮನೆಗಳಿದ್ದರೂ ಹಾಸನ ಸಂಸದರ ನಿವಾಸದಲ್ಲಿ ನೀವು ಮಲಗುತ್ತಿದ್ದುದು ಏಕೆ?* ವಿದೇಶಕ್ಕೆ ಹೋಗಿದ್ದು ಏಕೆ?* ನಾವು ನೋಟೀಸ್‌‍ ಕೊಟ್ಟರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?* ಜರ್ಮನಿಯಿಂದ ಟಿಕೆಟ್‌ ಬುಕ್‌ ಮಾಡಿ ಪದೇಪದೇ ಕ್ಯಾನ್ಸಲ್‌ ಮಾಡಿದ್ದು ಏಕೆ?* ವಿದೇಶಕ್ಕೆ ಯಾರೊಂದಿಗೆ ಹೋಗಿದ್ದಿರಿ?* ಅಲ್ಲಿ ಎಲ್ಲಿದ್ದಿರಿ?* ನಿಮೊಂದಿಗೆ ಯಾರ್ಯಾರಿದ್ದರು? ಎಂದು ಸರಣಿ ಪ್ರಶ್ನೆಗಳನ್ನು ಎಸ್‌‍ಐಟಿ ಅಧಿಕಾರಿಗಳು ಕೇಳಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.* ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿರುವ ಎಸ್‌‍ಐಟಿ ಇಂದು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.* ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_127_6.txt b/eesanje/url_46_127_6.txt new file mode 100644 index 0000000000000000000000000000000000000000..69b17b11945ed234cf805537ceeb3090cb45cc9c --- /dev/null +++ b/eesanje/url_46_127_6.txt @@ -0,0 +1,6 @@ +ಪ್ರಜ್ವಲ್‌ ಆಗಮನದ ನಿರೀಕ್ಷೆ : ವಿಮಾನ ನಿಲ್ದಾಣದಲ್ಲಿ ಭಾರಿ ಭದ್ರತೆ +ಬೆಂಗಳೂರು, ಮೇ 30– ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆನ್ನಲಾದ ಅತ್ಯಾಚಾರ ಆರೋಪ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಇಂದು ಮಧ್ಯರಾತ್ರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ನಿಲ್ದಾಣದ ಸುತ್ತಮುತ್ತ ಭಾರಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. +ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ಅವರನ್ನು ಕರೆತರುವ ಏರ್‌ಪೋರ್ಟ್‌ ರಸ್ತೆ ಉದ್ದಕ್ಕೂ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ.ಎಸ್‌‍ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್‌ ಅವರು ಇಂದು ಬೆಳಗ್ಗೆ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರನ್ನು ಭೇಟಿ ಮಾಡಿ ಬಂದೋಬಸ್ತ್‌ ಬಗ್ಗೆ ಚರ್ಚೆ ನಡೆಸಿದ್ದಾರೆ. +ಪ್ರಜ್ವಲ್‌ ಅವರನ್ನು ಬಂಧಿಸಲು ಎಸ್‌‍ಐಟಿ ತಂಡ ಸಜ್ಜಾಗಿದೆ. ಹಿರಿಯ ಅಧಿಕಾರಿ ನೇತೃತ್ವದ ಎಸ್‌‍ಐಟಿಯ ಒಂದು ತಂಡ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದೆ. ಬಂಧನದ ನಂತರ ಯಾವ ರೀತಿ ವಿಚಾರಣೆ ನಡೆಸಬೇಕೆಂಬ ತನಿಖಾಧಿಕಾರಿ ತಯಾರಿ ನಡೆಸಿದ್ದಾರೆ. +ಈಗಾಗಲೇ ಹಲವು ಬಾರಿ ಟಿಕೇಟ್‌ ಬುಕ್‌ ಮಾಡಿ ಪ್ರಜ್ವಲ್‌ ಅವರು ಕೊನೆ ಕ್ಷಣದಲ್ಲಿ ಕ್ಯಾನ್ಸಲ್‌ ಮಾಡಿದ್ದರು. ಪ್ರಜ್ವಲ್‌ ಅವರು ಈಗ ಬರುತ್ತಾರೆ, ಆಗ ಬರುತ್ತಾರೆ ಎಂದು ಎಸ್‌‍ಐಟಿ ಅಧಿಕಾರಿ ವಿಮಾನ ನಿಲ್ದಾಣದಲ್ಲಿ ಕಾಯ್ದು ಕಾಯ್ದು ಸುಸ್ತಾಗಿದ್ದರು. +ಕಳೆದ ಮೂರು ದಿನಗಳ ಹಿಂದೆ ವಿಡಿಯೋ ಹರಿ ಬಿಟ್ಟ ಪ್ರಜ್ವಲ್‌ ಅವರು ಮೇ 31ರಂದು ಎಸ್‌‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಜರ್ಮನಿಯ ಮೂನಿಚ್‌ ಯಿಂದ ಬೆಂಗಳೂರಿಗೆ ಪ್ರಜ್ವಲ್‌ ಹೆಸರಿನಲ್ಲಿ ಟಿಕೇಟ್‌ ಬುಕ್‌ ಆಗಿದೆ. ಇಂದು ಮಧ್ಯರಾತ್ರಿ ಅವರು ಆಗಮಿಸುವ ನಿರೀಕ್ಷೆ ಇದೆ. \ No newline at end of file diff --git a/eesanje/url_46_127_7.txt b/eesanje/url_46_127_7.txt new file mode 100644 index 0000000000000000000000000000000000000000..b01190aa5d2205280c7112de52662b46605d1f6c --- /dev/null +++ b/eesanje/url_46_127_7.txt @@ -0,0 +1,9 @@ +ಶಾಲೆಗಳು ಶುರುವಾಗುತ್ತಿದ್ದಂತೆ ಮಹಿಳೆಯರಿಗೆ ಫುಲ್ ಟೆನ್ಶನ್ +ಬೆಂಗಳೂರು, ಮೇ 30-ತರಕಾರಿಗಳ ಬೆಲೆ ಇಳಿತಾ ಇಲ್ಲ… ಶಾಲೆಗಳು ಪ್ರಾರಂಭವಾಗಿವೆ. ಮಕ್ಕಳಿಗೆ ದಿನನಿತ್ಯ ಏನ್‌ ತಿಂಡಿ ಮಾಡಿ ಕಳ್ಸೋದು ಎಂದು ಮಹಿಳೆಯರಲ್ಲಿ ಚಿಂತೆ ಶುರುವಾಗಿದೆ. ಕಳೆದ ಎರಡು ತಿಂಗಳಿನಿಂದ ಶಾಲಾ-ಕಾಲೇಜುಗಳಿಗೆ ರಜೆ ಇದ್ದು, ಮಕ್ಕಳು ಮನೆಯಲ್ಲೆ ಇದ್ದರು, ಕೆಲ ಮಕ್ಕಳ ಊರು ಸೇರಿದ್ದರು. ಈ ವೇಳೆ ತಿಂಡಿಯ ಚಿಂತೆ ಇರಲಿಲ್ಲ. ಮನೆಯಲ್ಲೆ ಇರೋ ತರಕಾರಿ ಹಾಕಿ ಅಡುಗೆ ಮಾಡಿ ದಿನ ಕಳೆಯುತ್ತಿದ್ದೆವು. ಆದರೆ ಇನ್ನು ಮುಂದೆ ಹಾಗಾಗುವುದಿಲ್ಲ. ದಿನನಿತ್ಯ ತಿಂಡಿ ಮಾಡಲೇಬೇಕು. ತರಕಾರಿ ಇಲ್ಲದೆ ಯಾವ ತಿಂಡಿ ಮಾಡೋದು, ಬ್ಯಾಗು ಇಡಿದು ತರಕಾರಿ ಅಂಗಡಿಗಳಿಗೆ ಹೋದರೆ ಬೆಲೆ ನೋಡಿ ತಲೆ ತಿರುಗುತ್ತೆ ಎಂದು ಸಾಮಾನ್ಯವರ್ಗದ ಮಹಿಳೆಯರ ಸಾಮಾನ್ಯ ಮಾತುಗಳಿವು. +ಕಳೆದ ಸುಮಾರು ಒಂದು ತಿಂಗಳಿನಿಂದಲೂ ತರಕಾರಿಗಳ ಬೇಲೆ ಷೇರು ಮಾರುಕಟ್ಟೆಯಂತೆ ಏರುತ್ತಲೆ ಇದೆ. ಸದ್ಯಕ್ಕೆ ಕಡಿಮೆಯಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಅಪರೂಪಕ್ಕೆ ಬಳಸುತ್ತಿದ್ದ ತರಕಾರಿಗಳ ಬೆಲೆಯೂ ಸಹ ಏರಿಕೆಯಾಗಿದ್ದು, ಮಾಹಿಳೆಯರ ಸಾಸಿವೆ ಡಬ್ಬಿ ಹಣ ಖಾಲಿಯಾಗುವಂತೆ ಮಾಡುತ್ತಿದೆ. +ಮಕ್ಕಳಿಗೆ ಶುಚಿ-ರುಚಿಯಾದ ತಾಜಾ ತಿಂಡಿ-ಊಟ ಕೊಡಬೇಕು ಎಂದು ಕೆಲ ಖಾಸಗಿ ಶಾಲೆಗಳ ನಿಯಮ ಇದೆ. ಅದರಲ್ಲಿ ಚಿಕ್ಕಮಕ್ಕಳಿಗೆ ಮೆನೂ ಕೂಡ ಇದೆ. ಒಂದು ಕಡೆ ಶಾಲೆ ಫೀಸ್‌ ಕಟ್ಟಿ ಕೈ ಖಾಲಿ… ದಿನನಿತ್ಯ ತರಕಾರಿ ತರಬೇಕು ಅಂದ್ರೆ ಕನಿಷ್ಟ 150 ರೂ.ಬೇಕು ಎಂಬುದು ಪೊಷಕರ ನೋವಿನ ಮಾತಾಗಿದೆ. +ಬೀನ್‌್ಸ ಬರೋಬ್ಬರಿ ದ್ವಿಶತಕ ಬಾರಿಸಿ ಮುನ್ನುಗ್ಗುತ್ತಿದೆ. ಕ್ಯಾರೆಟ್‌ ಕೆಜಿಗೆ 100, ನವಿಲುಕೋಸು, 60, ಆಲೂಗೆಡ್ಡೆ 50, ಹಸಿ ಬಟಾಣಿ 200. ಕ್ಯಾಪ್ಸಿಕಂ 80, ಬದನೆಕಾಯಿ 60, ಮೂಲಂಗಿ 60, ಹಾಗಲಕಾಯಿ 60, ಈರೇಕಾಯಿ, 80. ಗೋರಿಕಾಯಿ 60, ಪಡವಲಕಾಯಿ 50, ಹಸಿಮೆಣಸಿನಕಾಯಿ 120ರೂ.ಗೆ ಮರಾಟವಾಗುತ್ತಿದೆ. +ಇನ್ನು ಇದೇ ಮೊದಲ ಬಾರಿಗೆ ಸೌತೆಕಾಯಿ ಬೆಲೆ ಕೆಜಿಗೆ 80 ರೂ.ಗೆ ಮಾರಾಟ ವಾಗುತ್ತಿರುವುದನ್ನು ಗಮನಿಸಬಹುದಾಗಿದೆ. ಇತ್ತೀಚೆಗೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಇರುವ ಟೊಮ್ಯಾಟೋ ಬೆಳೆಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ನಿಧಾನವಾಗಿ ಬೆಲೆ ಏರಿಕೆಯಾಗುತ್ತಿದ್ದು, ಕೆಜಿಗೆ 60 ರೂ. ತಲುಪಿದೆ. ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. +ಹಿಂದೆಂದೂ ಕಂಡುಕೇಳರಿಯದ ರಣ ಬೇಸಿಗೆಯಿಂದ ರೈತರು ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿ ತರಕಾರಿ ಬೆಳೆ ಬೆಳೆಯಲು ಮುಂದಾಗದ ಕಾರಣ ಉತ್ಪಾದನೆ ಕುಂಠಿತವಾಗಿ ಬೆಲೆ ಏರಿಕೆಯಾಗಿದೆ. ಇನ್ನೇನು ಮಳೆ ಬಂದಿದೆ ತರಕಾರಿ ಬೆಲೆ ಕಡಿಮೆಯಾಗಲಿದೆ ಎಂಬ ನಿರೀಕ್ಷೆ ನಗರದ ಬಹಳ ಜನರಲ್ಲಿತ್ತು. ಆದರೆ ಅದು ಹಾಗಗಲ್ಲ, ಸೊಪ್ಪನ್ನು ಹೊರತುಪಡಿಸಿ ಯಾವುದೆ ತರಕಾರಿ ನಾಟಿ ಅಥವಾ ಬಿತ್ತನೆ ಮಾಡಿ ಎರಡರಿಂದ ಮೂರು ತಿಂಗಳಿಗೆ ಫಸಲಿಗೆ ಬರುತ್ತವೆ. ಒಂದು ವೇಳೆ ನೀರಿನ ಲಭ್ಯತೆ ಇರುವ ರೈತರು ಬೆಳೆದ ಬೆಳೆ ಮಾರುಕಟ್ಟೆಗೆ ಬಂದರೆ ಬೆಲೆ ಕಡಿಮೆಯಾಗಬಹುದು ಅಷ್ಟೆ. +ಈರುಳ್ಳಿ ಬೆಲೆಯಲ್ಲಿ ತುಸು ಏರಿಕೆ: ಕಳೆದ ಕೆಲ ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಈರುಳ್ಳಿ ನಿಧಾನವಾಗಿ ಏರಿಕೆಯಾಗುತ್ತಿದೆ. ಈರುಳ್ಳಿ ಹೆಚ್ಚಾಗಿ ಬೆಳೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ. ಜತೆಗೆ ಕೆಲವು ಕಡೆ ಬೆಳೆ ನಾಶವಾಗಿರುವುದರಿಂದ ಉತ್ಪಾದನೆಯಲ್ಲಿ ಇಳಿಮುಖವಾಗಿ ಬೆಲೆ ಹೆಚ್ಚಾಗಲಿದೆ ಎಂದು ವರ್ತಕರು ತಿಳಿಸಿದ್ದಾರೆ. +ಏನೇ ಆಗಲಿ ಬೆಂಗಳೂರಿನಂತಹ ನಗರಗಳಲ್ಲಿ ಅಡುಗೆ ಮನೆಯಲ್ಲಿ ಒಂದೇ ಒಂದು ವಸ್ತು ಇಲ್ಲದಿದ್ದರೂ ತೊಂದರೆಯೇ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಹಾಗಾಗುವುದಿಲ್ಲ. ಪಕ್ಕದ ಮನೆಯವರ ಬಳಿ ಎರಡು ಟೊಮ್ಯಾಟೋಪಡೆದು ಅಡುಗೆ ಮಾಡಿ ಅಂದಿನ ದಿನ ತಳ್ಳಬಹುದು ಅಲ್ಲವೆ..? \ No newline at end of file diff --git a/eesanje/url_46_127_8.txt b/eesanje/url_46_127_8.txt new file mode 100644 index 0000000000000000000000000000000000000000..94444cb7f2165fb91d442a2f2b040f6eee0bced1 --- /dev/null +++ b/eesanje/url_46_127_8.txt @@ -0,0 +1,5 @@ +ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಬೃಹತ್‌ ಪ್ರತಿಭಟನೆ +ಹಾಸನ, ಮೇ 30-ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿಂದು ಕರ್ನಾಟಕ ಜನಪರ ಚಳವಳಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. +ಹಣಬಲ ಮತ್ತು ಅಧಿಕಾರದಿಂದ ಮಹಿಳೆಯರನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಗುರಿಪಡಿಸಿ ಅದನ್ನು ಚಿತ್ರೀಕರಣ ಮಾಡಿಕೊಂಡಿರುವುದು ಖಂಡನೀಯ. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ಮಹಿಳಾ ಹೋರಾಟಗಾರ್ತಿ ಸುಭಾಷಿಣಿ ಅಲಿ ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ಎನ್‌ಆರ್‌ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಚತುಷ್ಪಥ ರಸ್ತೆವರೆಗೂ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. +ವಿವಿಧ ಮಹಿಳಾ, ಕಾರ್ಮಿಕ, ರೈತ, ಯುವಜನ, ದಲಿತ ವಿದ್ಯಾರ್ಥಿಗಳ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಪ್ರಜ್ವಲ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದವು. +ಪ್ರಜ್ವಲ್‌ ವಿರುದ್ಧ ಈಗ ನಡೆದಿರುವ ತನಿಖೆಗಳು ಏನೂ ಇಲ್ಲ. ಇನ್ನೂ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ದೂರುದಾರ ಮಹಿಳೆಯರ ಗೌಪ್ಯತೆ ಕಾಪಾಡಿ ಅವರಿಗೆ ಆಪ್ತ ಸಮಾಲೋಚನೆ, ಕಾನೂನು ಸಲಹೆ, ರಕ್ಷಣೆ, ಪುನರ್ವಸತಿ ಮತ್ತು ಪರಿಹಾರ ಒದಗಿಸಬೇಕು. ನೊಂದ ಮಹಿಳೆಯರಿಗೆ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_127_9.txt b/eesanje/url_46_127_9.txt new file mode 100644 index 0000000000000000000000000000000000000000..e78481f84179857f37c98b7ee9c80279fb51b25a --- /dev/null +++ b/eesanje/url_46_127_9.txt @@ -0,0 +1,9 @@ +ಚಂದ್ರಶೇಖರನ್‌ ಮನೆಗೆ ವಿಜಯೇಂದ್ರ ಭೇಟಿ, ನಾಗೇಂದ್ರ ರಾಜೀನಾಮೆಗೆ ಆಗ್ರಹ +ಶಿವಮೊಗ್ಗ, ಮೇ 30-ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. +ಚಂದ್ರಶೇಖರನ್‌ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ ಎರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒಂದು ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. +ಸಚಿವ ನಾಗೇಂದ್ರ ಗಮನಕ್ಕೆ ಬಾರದೇ ಈ ಅಕ್ರಮ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. +ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್‌ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು. +ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮಾತ್ರ ಅವ್ಯವಹಾರ ನಡೆದಿಲ್ಲ. ಬೇರೆ ಇಲಾಖೆಗಳಲ್ಲೂ ಇದೇ ರೀತಿ ಅಕ್ರಮ ನಡೆದಿರುವ ಶಂಕೆ ಇದೆ. ಈ ರೀತಿ ಅವ್ಯವಹಾರ ನಡೆಸಿದ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ಅಂತಾರಾಜ್ಯ ಮಟ್ಟದಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆರೋಪ ಮಾಡಿದರು.ಮೃತ ಚಂದ್ರಶೇಖರನ್‌ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಜತೆಗೆ, ಎಲ್ಲಿಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂಬ ಬಗ್ಗೆ ತನಿಖೆ ಆಗಬೇಕು. ಪ್ರಕರಣವನ್ನು ಸಿಬಿಐಗೆ ನೀಡಿದಾಗ ಮಾತ್ರ ಸತ್ಯ ಹೊರಬರಲಿದೆ ಎಂದರು. +ಇದಕ್ಕೂ ಮುನ್ನ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿ ಕಾರಿ ಚಂದ್ರಶೇಖರ್‌ ಅವರ ಮನೆಗೆ ಇಂದು ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಕುಟುಂಬದವರಿಗೆ ಧೈರ್ಯ ತುಂಬಿದರು. +ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟು ಧೈರ್ಯ ವಹಿಸುವಂತೆ ತಿಳಿಸಿದರು. ಲ್ಯಾಪ್‌ಟಾಪ್‌ ಮತ್ತಿತರ ವಸ್ತುಗಳನ್ನು ಒಯ್ದ ಕುರಿತು ಕುಟುಂಬದವರು ಮಾಹಿತಿ ನೀಡಿದರು. ಮನೆಯಲ್ಲಿರುವ ಸಾಕ್ಷವಸ್ತುಗಳನ್ನು ತೆಗೆದುಕೊಂಡು ಹೋಗಲು ಅಧಿ ಕಾರಿಗಳು ತರಾತುರಿಯಲ್ಲಿ ಬಂದಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. +ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಡೆತ್‌ನೋಟ್‌ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ (52) ಆತ್ಮಹತ್ಯೆಗೆ ಶರಣಾಗಿದ್ದರು. \ No newline at end of file diff --git a/eesanje/url_46_128_1.txt b/eesanje/url_46_128_1.txt new file mode 100644 index 0000000000000000000000000000000000000000..a9867b6a625869d36e590aeecb155e3a2d38f7b1 --- /dev/null +++ b/eesanje/url_46_128_1.txt @@ -0,0 +1,4 @@ +ಪಾಲಿಕೆ ಸದಸ್ಯನ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿ 8 ವರ್ಷದ ನಂತರ ಸೆರೆ +ಹುಬ್ಬಳ್ಳಿ,ಮೇ.30-ಪಾಲಿಕೆ ಸದಸ್ಯನ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿ 8 ವರ್ಷಗಳ ನಂತರ ಶಹರ ಠಾಣೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಹಿಂದೆ ಹುಬ್ಬಳ್ಳಿ-ಧಾರವಾಡದ ಪಾಲಿಕೆ ಸದಸ್ಯರಾಗಿದ್ದ ಆರಿಫ್‌ ಭದ್ರಾಪೂರ್‌ ಅವರ ಮೇಲೆ ಹಲ್ಲೆಗೈದು ಕೊಲೆಗೆ ಯ್ನಿಸಿ ಪರಾರಿಯಾದ ಸೈಫ್‌ ಅಲಿ ಬಾಂಬೆ ಬಂಧಿತ ಆರೋಪಿ. +ಕಳೆದ 2016ರಲ್ಲಿ ಗಣೇಶ್‌ ಪೇಟ್‌ ನಿವಾಸಿ ಆರಿಫ್‌ ಬದ್ರಾಪುರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಸೈಫ್‌ ಅಲಿ ಪರಾರಿಯಾಗಿದ್ದ ಅದಷ್ಟವಶಾತ್‌‍, ಆರಿಫ್‌ ಪ್ರಾಣಾಪಾಯದಿಂದ ಪಾರಾಗಿದ್ದರು. +ಈ ಘಟನೆ ಕುರಿತು ಶಹರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸೈಫ್‌‍ನನ್ನು ಎಂಟು ವರ್ಷಗಳ ಬಳಿಕ ಹುಬ್ಬಳ್ಳಿಯ ನವನಗರದಲ್ಲಿ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಶಹರ ಠಾಣೆ ಇನ್ಸ್‌‍ಪೆಕ್ಟರ್‌ ರಫಿಕ್‌ ತಶೀಲ್ದಾರ್‌ ನೇತತ್ವದ ತಂಡ ಬಂಧಿಸಿದ್ದಾರೆ. \ No newline at end of file diff --git a/eesanje/url_46_128_10.txt b/eesanje/url_46_128_10.txt new file mode 100644 index 0000000000000000000000000000000000000000..61fba93e0cb2013d364b3d93fb020ab091cb28e5 --- /dev/null +++ b/eesanje/url_46_128_10.txt @@ -0,0 +1,10 @@ +ಚಂದ್ರಶೇಖರನ್‌ ಆತಹತ್ಯೆ ಕುರಿತು ಸಮಗ್ರ ತನಿಖೆಯಾಗಬೇಕು : ಅಶ್ವತ್ಥ ನಾರಾಯಣ +ಬೆಂಗಳೂರು ಮೇ 29-ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ಚಂದ್ರಶೇಖರನ್‌ ಪಿ. ಆತಹತ್ಯೆ ಪ್ರಕರಣದಲ್ಲಿ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಅಧಿಕಾರಿಗಳ ದೂರವಾಣಿ ಕರೆಗಳ ವಿವರವನ್ನು ತನಿಖೆಗೆ ಒಳಪಡಿಸಬೇಕೆಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಂದ್ರಶೇಖರನ್‌ ಬರೆದಿರುವ ಡೆತ್‌ನೋಟ್‌ನಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಿದ್ದಿವೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೂ ಬಾರದೆ 87 ಕೋಟಿ ಹಣವನ್ನು ವರ್ಗಾವಣೆ ಮಾಡಲಾಗಿತ್ತೆಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಪಾತ್ರದ ಬಗ್ಗೆ ಅವರ ದೂರವಾಣಿ ಕರೆಗಳ ವಿವರಗಳನ್ನು ತನಿಖೆ ನಡೆಸಿದಾಗ ಮಾತ್ರ ಸತ್ಯಾಂಶ ಹೊರಬರುತ್ತದೆ ಎಂದು ಒತ್ತಾಯಿಸಿದರು. +ಪ್ರಕರಣದ ಕುರಿತಂತೆ ಸರ್ಕಾರ ಈವರೆಗೂ ಯಾರ ವಿರುದ್ಧವೂ ಎಫ್‌ಐಆರ್‌ ಅನ್ನೇ ದಾಖಲಿಸಿಲ್ಲ. ಅದಕ್ಕೂ ಮೊದಲೇ ಸಿಐಡಿ ತನಿಖೆಗೆ ಆದೇಶಿಸಿದೆ. ಇದು ಸರ್ಕಾರದ ಮೂಗಿನಡಿಯೇ ನಡೆಯುವುದರಿಂದ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದರು. +ಯಾವುದೇ ಒಂದು ಖಾತೆಯನ್ನು ತೆರೆಯಬೇಕಾದರೆ ಹಣಕಾಸು ಇಲಾಖೆಯ ಅನುಮತಿ ಇರಬೇಕು. ಇಲ್ಲಿ ಅವಕಾಶವನ್ನೇ ಕೊಡದಿದ್ದಾಗ ಹೇಗೆ ಖಾತೆಯನ್ನು ತೆರೆಯಲಾಯಿತು? ಅಷ್ಟು ದೊಡ್ಡ ಮೊತ್ತದ ಹಣ ಎಂಡಿಯವರಿಗೆ ಗೊತ್ತಿಲ್ಲದಂತೆ ವರ್ಗಾವಣೆಯಾಗಿದೆ ಎಂದರೆ ಸಚಿವ ನಾಗೇಂದ್ರ ಅವರ ಗಮನಕ್ಕೆ ಹೋಗಿಲ್ಲವೇ? ಇಲಾಖೆಯಲ್ಲಿ ನಡೆಯುವ ವ್ಯವಹಾರಗಳು ಅವರಿಗೆ ಗೊತ್ತಿಲ್ಲವೆಂದರೆ ಇನ್ನು ಹೇಗೆ ನಿರ್ವಹಣೆ ಮಾಡುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು. +ಖಾತೆಯನ್ನು ಹೇಗೆ ತೆರೆದರು ಎಂಬುದನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಬೇಕು. ಇಲ್ಲಿ ನೇರವಾಗಿ ಅವರ ಮೇಲೆಯೇ ಆರೋಪ ಇರುವುದರಿಂದ ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. +ಮೃತ ಚಂದ್ರಶೇಖರನ್‌ ಅವರ ನಿವಾಸಕ್ಕೆ ನಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ನಾಳೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿಸಿದರು.ಬಿಜೆಪಿ ಸರ್ಕಾರವನ್ನು ಶೇ.40 ಕಮಿಷನ್‌ ಸರ್ಕಾರ ಎನ್ನುತ್ತಿದ್ದ ರಾಜ್ಯ ಕಾಂಗ್ರೆಸ್‌‍ ಉಸ್ತುವಾರಿ ರಣಜಿತ್‌ ಸಿಂಗ್‌ ಸುರ್ಜೇವಾಲ ಈಗ ಎಲ್ಲಿಗೆ ಹೋಗಿದ್ದಾರೆ? ಅವರ ಸರ್ಕಾರದಲ್ಲಿ ನಡೆಯುತ್ತಿರುವ ಅವಾಂತರಗಳು ಅವರ ಗಮನಕ್ಕೆ ಬಂದಿಲ್ಲವೇ? ಅವರದೇನಿದ್ದರೂ ತಿಂಗಳಿಗೊಮೆ ವಸೂಲಿ ಮಾಡುವುದಷ್ಟೇ ಕೆಲಸ ಎಂದು ವ್ಯಂಗ್ಯವಾಡಿದರು. +ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪ್ರತೀ ಇಲಾಖೆಯಲ್ಲೂ ಕಮಿಷನ್‌ ಕೊಡದೇ ಯಾವ ಕೆಲಸಗಳೂ ನಡೆಯುತ್ತಿಲ್ಲ. ಎಲ್ಲರೂ ವಸೂಲಿಗೆ ಇಳಿದಿದ್ದಾರೆ. ಈ ಎಲ್ಲಾ ವಿಚಾರ ಗೊತ್ತಿದ್ದರೂ ಮುಖ್ಯಮಂತ್ರಿ ಅಸಹಾಯಕ ಸ್ಥಿತಿಗೆ ಬಂದಿದ್ದಾರೆಂದು ಅಶ್ವತ್ಥ ನಾರಾಯಣ ಕುಹಕವಾಡಿದರು.ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಾಳು ಮಾಡಿದ ಕೀರ್ತಿ ಕಾಂಗ್ರೆಸ್‌‍ ಸರ್ಕಾರಕ್ಕೆ ಸಲ್ಲುತ್ತದೆ. ನಾನಾ ಆಯೋಗವನ್ನು ಸಹ ರದ್ದು ಮಾಡಿತು. ಈಗಾಗಲೇ ಎರಡು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿವೆ. ಕಾಂಗ್ರೆಸ್‌‍ ಶಿಕ್ಷಣ ವಿರೋಧಿ ಎಂದು ಕಿಡಿಕಾರಿದರು. +ವಾಗ್ದಾಳಿ:ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರ ಸೂಚನೆಯಂತೆ ಪ್ರಜ್ವಲ್‌ ರೇವಣ್ಣ ಸ್ವದೇಶಕ್ಕೆ ವಾಪಸ್‌‍ ಆಗುತ್ತಿದ್ದಾರೆ ಎಂಬ ಸಚಿವ ಪ್ರಿಯಾಂಕ ಖರ್ಗೆ ಅವರ ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪ್ರಿಯಾಂಕ ಖರ್ಗೆ ಅವರೊಬ್ಬ ವಿಶೇಷ ವ್ಯಕ್ತಿ, ಇಡೀ ಸಂಪುಟದಲ್ಲಿ ನಾನೊಬ್ಬನೇ ಮಹಾನ್‌ ವಿಚಾರವಂತ ಎಂದು ಭಾವಿಸಿಕೊಂಡು ಎಲ್ಲದಕ್ಕೂ ಮಾತನಾಡುತ್ತಿದ್ದಾರೆ. ಅಂಥವರ ಬಗ್ಗೆ ಮಾತನಾಡದೇ ಇರುವುದೇ ಲೇಸು ಎಂದು ಕಿಡಿಕಾರಿದರು. +ನಾಲಗೆ ಇದೆ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದಕ್ಕೆ ತಕ್ಕ ಪ್ರತಿಫಲವನ್ನು ಅವರು ಈಗಾಗಲೇ ಅನುಭವಿಸಿದ್ದಾರೆ. ಜೂನ್‌ 4 ರಂದು ಇದಕ್ಕೆ ತಕ್ಕ ಉತ್ತರ ಸಿಗಲಿದೆ ಎಂದು ಎಚ್ಚರಿಸಿದರು. \ No newline at end of file diff --git a/eesanje/url_46_128_11.txt b/eesanje/url_46_128_11.txt new file mode 100644 index 0000000000000000000000000000000000000000..9d105d626927623671a6daba9f441a8a05e639c6 --- /dev/null +++ b/eesanje/url_46_128_11.txt @@ -0,0 +1,5 @@ +ಕೆ-ಸೆಟ್‌ ಪರೀಕ್ಷೆಯ ಫಲಿತಾಂಶ ಪ್ರಕಟ +ಬೆಂಗಳೂರು, ಮೇ 29-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ 2023ರ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಶೇ.7.01ರಷ್ಟು ಕೆ-ಸೆಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ. +50262 ಪುರುಷ, 66656 ಮಹಿಳಾ, 385 ತೃತೀಯ ಲಿಂಗದವರು ಸೇರಿದಂತೆ 1,17,303 ಅಭ್ಯರ್ಥಿಗಳು ಕೆಸೆಟ್‌ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಇವರಲ್ಲಿ ಒಟ್ಟು 95,201 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6675 ಮಂದಿ ಅರ್ಹತೆ ಪಡೆದಿದ್ದಾರೆ. +ಈ ಪೈಕಿ ಶೇ.8.27 ರಷ್ಟು ಪುರುಷ, ಶೇ.5.90ರಷ್ಟು ಮಹಿಳೆ, ಶೇ.43.89ರಷ್ಟು ತೃತೀಯ ಲಿಂಗದವರು ಅರ್ಹತೆ ಪಡೆದಿದ್ದು, ಒಟ್ಟಾರೆ ಶೇ.7.01ರಷ್ಟು ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪಡೆದಿದ್ದಾರೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ. +ಮೀಸಲಾತಿ ಬಯಸದವರು 797 ಮಂದಿ ಅರ್ಹತೆ ಪಡೆದಿದ್ದು, ಶೇ.6.82ರಷ್ಟು ಮಂದಿ ಪರೀಕ್ಷೆಯಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಶೇ.6.06, ಎಸ್ಸಿ, ಶೇ.7.41, ಪ್ರವರ್ಗ -1 ಶೇ.7.42, ಪ್ರವರ್ಗ -2ಎ ಶೇ.9.06, ಪ್ರವರ್ಗ 2ಬಿ ಶೇ.8.59, ಪ್ರವರ್ಗ 3ಎ ಶೇ.6.59, ಪ್ರವರ್ಗ 3ಬಿ ಶೇ. 5.75ರಷ್ಟು ಅರ್ಹತೆ ಹೊಂದಿದ್ದಾರೆ. ವಿಕಲಚೇತನರು 350 ಮಂದಿ ಅರ್ಹತೆ ಪಡೆದಿದ್ದು, ಶೇ.21.94ರಷ್ಟು ಅರ್ಹತೆ ಪಡೆದಿದ್ದಾರೆ. \ No newline at end of file diff --git a/eesanje/url_46_128_12.txt b/eesanje/url_46_128_12.txt new file mode 100644 index 0000000000000000000000000000000000000000..c34601e56f34ef558abad485cdebd279c9d458c3 --- /dev/null +++ b/eesanje/url_46_128_12.txt @@ -0,0 +1,6 @@ +ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತಗೊಂಡರೆ ಅಧಿಕಾರಿಗಳೇ ಹೊಣೆ : ಪ್ರಿಯಾಂಕ್‌ ಖರ್ಗೆ +ಬೆಂಗಳೂರು, ಮೇ 29-ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ. +ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿಯ ಆದ್ಯ ಜವಾಬ್ದಾರಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ. +ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹಾ ಕೆಲವು ಗ್ರಾಮ/ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ. +ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಛಗೊಳಿಸುವುದು ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗ್ರತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ ಪತ್ರದಲ್ಲಿ ತಿಳಿಸಿದ್ದಾರೆ. +ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಸೂಚಚನೆ ನೀಡಿರುವ ಸಚಿವ ಪ್ರಿಯಾಂಕ ಖರ್ಗೆ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_128_2.txt b/eesanje/url_46_128_2.txt new file mode 100644 index 0000000000000000000000000000000000000000..3051e869b2a3152711c551b19bead1258c28bcb2 --- /dev/null +++ b/eesanje/url_46_128_2.txt @@ -0,0 +1,9 @@ +ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ +ಬೆಂಗಳೂರು, ಮೇ 30-ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. +ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು 42.65 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಪಾದರಕ್ಷೆಗಳನ್ನು ಖರೀದಿಸುವ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ. +ಶೂ ಖರೀದಿಗೆ ಸಂಬಂಧಿಸಿದಂತೆ ಕೆಲವೊಂದು ಷರತ್ತುಗಳನ್ನು ಸುತ್ತೋಲೆಯಲ್ಲಿ ವಿಧಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪಾದರಕ್ಷೆಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಪಾದರಕ್ಷೆಯನ್ನು ಸ್ಥಳೀಯವಾಗಿ ಖರೀದಿಸಿ ವಿತರಣೆ ಮಾಡುವ ಜವಾಬ್ದಾರಿಯನ್ನು ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲು ಸೂಚಿಸಿದೆ. +ಒಂದು ಜೊತೆ ಕಪ್ಪು ಬಣ್ಣದ ಶೂ, ಎರಡು ಜೊತೆ ಬಿಳಿ ಬಣ್ಣದ ಸಾಕ್ಸ್ ಗಳನ್ನು ಖರೀದಿಸಿ, ವಿತರಿಸುವುದು, ಸ್ಥಳೀಯ ವಾತಾವರಣಕ್ಕನುಗುಣವಾಗಿ ಪಾದರಕ್ಷೆಗಳನ್ನು ಖರೀದಿಸಿ ವಿತರಿಸುವಂತೆ ನಿರ್ದೇಶನ ನೀಡಲಾಗಿದೆ. +ಶೂ ಮತ್ತು ಸಾಕ್ಸ್ ಖರೀದಿಗೆ ಎಸ್‌‍ಡಿಎಂಸಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸುವುದು, ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರು ಸದಸ್ಯ ಕಾರ್ಯದರ್ಶಿಯಾಗಿದ್ದು, ಎಸ್‌‍ಡಿಎಂಸಿ ನಾಮನಿರ್ದೇಶಿತ 3 ಸದಸ್ಯರು ಸಮಿತಿಯ ಸದಸ್ಯರಾಗಿರಬೇಕೆಂದು ನಿರ್ದೇಶಿಸಲಾಗಿದೆ. +ಪಾರದರ್ಶಕ ಅಧಿನಿಯಮದ ಪ್ರಕಾರ, ಖರೀದಿ ಪ್ರಕ್ರಿಯೆ ಕೈಗೊಳ್ಳಬೇಕು. ಪ್ರತಿಯೊಂದು ತಾಲೂಕಿನಲ್ಲಿ ಶೇ.5 ರಷ್ಟು ಶಾಲೆಗಳಲ್ಲಿನ ಶೂ ಮತ್ತು ಸಾಕ್ಸ್ ಗಳ ಗುಣಮಟ್ಟ ಪರಿಶೀಲನೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಒಂದು ಸಮಿತಿ ರಚಿಸಲು ಕ್ರಮ ಕೈಗೊಳ್ಳಬೇಕು. ಪ್ರತಿಷ್ಠಿತ ಬ್ರಾಂಡ್‌ಗಳ ಅಧಿಕೃತ ಮಾರಾಟಗಾರರಿಂದ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಬೇಕೆಂಬ ಷರತ್ತು ವಿಧಿಸಲಾಗಿದೆ. +ಯಾವುದೇ ಕಾರಣಕ್ಕೂ ಶೂ ಮತ್ತು ಸಾಕ್ಸ್ ಗಳನ್ನು ವಲಯ, ಕ್ಲಸ್ಟರ್‌ ಅಥವಾ ಜಿಲ್ಲಾ ಮಟ್ಟದಲ್ಲಿ ಕೇಂದ್ರೀಕೃತ ವ್ಯವಸ್ಥೆಯಡಿ ಖರೀದಿಸುವುದನ್ನು ನಿಷೇಧಿಸಲಾಗಿದೆ.ಒಂದರಿಂದ ಐದನೇ ತರಗತಿಗಳ ವಿದ್ಯಾರ್ಥಿಗಳಿಗೆ ತಲಾ 265 ರೂ., ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ತಲಾ 295 ರೂ. ಹಾಗೂ ಒಂಭತ್ತರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ನಂತೆ ಖರೀದಿಸಲು ದರ ನಿಗದಿಪಡಿಸಲಾಗಿದೆ. +ಅಲ್ಲದೆ, ದಾನಿಗಳು, ಖಾಸಗಿ ಸಂಸ್ಥೆಗಳು ಈ ಉದ್ದೇಶಕ್ಕೆ ಹೆಚ್ಚುವರಿ ಹಣ ನೀಡಲು ಮುಂದೆ ಬಂದರೆ ಅದನ್ನೂ ಬಳಸಿಕೊಂಡು ಉತ್ತಮ ಗುಣಮಟ್ಟದ ಶೂ, ಸಾಕ್ಸ್ , ಪಾದರಕ್ಷೆಗಳನ್ನು ಖರೀದಿಸಿ ವಿತರಿಸಬಹುದಾಗಿದೆ.ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಈ ಕಾರ್ಯಕ್ರಮದ ಅನುಷ್ಠಾನದ ಮೇಲುಸ್ತುವಾರಿ ನೋಡಿಕೊಳ್ಳುವಂತೆ ಸೂಚಿಸಲಾಗಿದೆ. \ No newline at end of file diff --git a/eesanje/url_46_128_3.txt b/eesanje/url_46_128_3.txt new file mode 100644 index 0000000000000000000000000000000000000000..599d3b157e6038fb584442351a100cbd243adaa4 --- /dev/null +++ b/eesanje/url_46_128_3.txt @@ -0,0 +1,7 @@ +ಜೂನ್‌ 2ರ ವೇಳೆ ರಾಜ್ಯಕ್ಕೆ ಮುಂಗಾರು ಆಗಮನ ಸಾಧ್ಯತೆ +ಬೆಂಗಳೂರು, ಮೇ 30-ಕೇರಳ ಕರಾವಳಿಯಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದರೂ ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಸದ್ಯಕ್ಕೆ ಪ್ರಬಲವಾಗಿಲ್ಲ. ಮುಂಗಾರು ದುರ್ಬಲವಾಗಿರುವುದರಿಂದ ಕೇರಳ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ನಾಳೆ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ. ನಿರೀಕ್ಷೆಯಂತೆ ಮುಂಗಾರು ಆಗಮನವಾದರೆ ಒಂದೆರಡು ದಿನಗಳಲ್ಲಿ ರಾಜ್ಯ ಪ್ರವೇಶಿಸಲಿದೆ. ಅಂದರೆ ಜೂನ್‌ 2ರ ವೇಳೆಗೆ ರಾಜ್ಯದ ಕೆಲವು ಭಾಗದಲ್ಲಿ ಮುಂಗಾರು ಆಗಮನವಾಗುವ ನಿರೀಕ್ಷೆ ಇದೆ. ಕೇರಳ ಕರಾವಳಿಗೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಮುಂಗಾರು ಆರಂಭಕ್ಕೆ ಪೂರಕವಾದ ಸನ್ನಿವೇಶಗಳು ಸೃಷ್ಟಿಯಾಗಿವೆ. ಆದರೂ ಮುಂಗಾರು ಶಕ್ತಿಯುತವಾಗಿ ಒಳನಾಡಿನತ್ತ ಮುನ್ನುಗ್ಗುವ ಲಕ್ಷಣಗಳು ಸದ್ಯಕ್ಕಿಲ್ಲ ಎಂದು ತಜ್ಞರು ಹೇಳಿದ್ದಾರೆ. +ಮುಂಗಾರು ಆಗಮನ ಯಾವ ರೀತಿ ಆಗಲಿದೆ ಎಂಬುದನ್ನು ನಾಳೆಯವರೆಗೆ ಕಾದು ನೋಡಬೇಕಿದೆ. ಆ ನಂತರ ಸ್ಪಷ್ಟ ಚಿತ್ರಣ ಗೋಚರಿಸಲಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆದಿದೆ.ಆದರೆ, ವ್ಯಾಪಕ ಪ್ರಮಾಣದ ಮಳೆಯಾಗುತ್ತಿಲ್ಲ. +ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಮಳೆಯಾದರೆ ಮುಂಗಾರು ಪ್ರವೇಶವಾಗಿರುವುದು ಖಾತರಿಯಾಗಲಿದೆ. ರಾಜ್ಯದ ಕರಾವಳಿಯಲ್ಲಿ ಮಳೆಯಾಗುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಭಾರಿ ಮಳೆಯಾಗುತ್ತಿಲ್ಲ. ಇದರಿಂದ ಮುಂಗಾರಿನ ಆರಂಭ ದುರ್ಬಲವಾಗಿದೆ. ಅದು ಪ್ರಬಲಗೊಂಡಿಲ್ಲ. ನಾಳೆಯ ವೇಳೆಗೆ ಮುಂಗಾರಿನ ಸ್ಪಷ್ಟ ಚಿತ್ರಣ ಕಂಡುಬರಲಿದೆ ಎಂದು ತಜ್ಞರು ಹೇಳಿದರು. +ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸುಮಾರು ಒಂದು ವಾರ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. +ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆಯಾಗುವ ಮುನ್ಸೂಚನೆಗಳಿವೆ. \ No newline at end of file diff --git a/eesanje/url_46_128_4.txt b/eesanje/url_46_128_4.txt new file mode 100644 index 0000000000000000000000000000000000000000..f906bc4872459bcabf2e0203e59a64cca21bbc26 --- /dev/null +++ b/eesanje/url_46_128_4.txt @@ -0,0 +1,5 @@ +ಮೈಸೂರು : ಲಂಚ ಪಡೆದ ವೈದ್ಯನಿಗೆ 4 ವರ್ಷ ಜೈಲು +ಮೈಸೂರು, ಮೇ 30– ರೋಗಿಯ ಸಹೋದರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಕೃಷ್ಣರಾಜೇಂದ್ರ ಸರ್ಕಾರಿ ಆಸ್ಪತ್ರೆ ವೈದ್ಯರಾದ ಡಾ.ಪುಟ್ಟಸ್ವಾಮಿಗೆ ಮೈಸೂರಿನ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. +ಶಿವಕುಮಾರ್‌ ಎಂಬುವವರು 2017 ರಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕೆ.ಆರ್‌.ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಅವರ ಶಸ್ತ್ರಚಿಕಿತ್ಸೆಗೆ ಮೂಳೆ ಶಸ್ತ್ರತಜ್ಞರಾದ ಡಾ.ಪುಟ್ಟಸ್ವಾಮಿ 40 ಸಾವಿರ ರೂ. ಲಂಚ ನೀಡುವಂತೆ ರೋಗಿಯ ಸಹೋದರ ಸಂಬಂಧಿ ದೇವರಾಜ್‌ ಬಳಿ ಕೇಳಿದ್ದರು. ಹಣ ನೀಡುವ ವಿಚಾರದಲ್ಲಿ ವೈದ್ಯರ ಬಳಿ ಮಾತನಾಡಿರುವುದನ್ನು ಮೊಬೈಲ್‌ನಲ್ಲಿ ಚಿತ್ರಿಸಿಕೊಳ್ಳಲಾಗಿತ್ತು. +ದೇವರಾಜ್‌ ಆರಂಭದಲ್ಲಿ 2 ಸಾವಿರ ಹಣ ನೀಡಿದ್ದರು. ಬಳಿಕ ಬಾಕಿ ಹಣ ನೀಡುವ ಮುನ್ನ ಎಸಿಪಿ ಪೊಲೀಸರಿಗೆ ದೂರು ನೀಡಿದ್ದರು. ಮತ್ತೆ 26 ಸಾವಿರ ರೂ.ಗಳನ್ನು ಡಾ.ಪುಟ್ಟಸ್ವಾಮಿಗೆ ನೀಡುತ್ತಿರುವಾಗ ಎಸಿಪಿ ಪೊಲೀಸರು ಕಾರ್ಯಾಚರಣೆ ನಡೆಸಿ ವೈದ್ಯರನ್ನು ಬಂಧಿಸಿದ್ದರು.ಎಸಿಪಿ ಇನ್‌್ಸಪೆಕ್ಟರ್‌ ಶೇಖರ್‌ ಅವರು ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ್ಣ ಪಟ್ಟಿ ಸಲ್ಲಿಸಿದ್ದರು. +ಈ ಪ್ರಕರಣದ ವಿಚಾರಣೆ ನಡೆಸಿದ 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಭಾಗ್ಯ ಅವರು ವೈದ್ಯರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದ್ದಾರೆ. \ No newline at end of file diff --git a/eesanje/url_46_128_5.txt b/eesanje/url_46_128_5.txt new file mode 100644 index 0000000000000000000000000000000000000000..84a2cfd3d65ee83fbf5f45aef30fbc34ae1cd5f9 --- /dev/null +++ b/eesanje/url_46_128_5.txt @@ -0,0 +1,3 @@ +ಎಚ್.ಅನ್ನಪೂರ್ಣಗೆ ಪಿಎಚ್‍ಡಿ +ಬೆಂಗಳೂರು, ಮೇ 29- ಮೈಸೂರಿನ ಯುವರಾಜ ಕಾಲೇಜಿನ ಸಹ ಪ್ರಾಧ್ಯಾಪಕರು ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರೂ ಆದ ಎಚ್. ಅನ್ನಪೂರ್ಣ ಅವರು ಗಣಕ ವಿಜ್ಞಾನ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಲಭಿಸಿದೆ. +“ರೈಟರ್ ಡಿಪೆಂಡೆಂಟ್ ಕ್ಯಾರೆಕ್ಟರಿಸ್ಟಿಕ್ಸ್ ಫಾರ್ ವೆರಿಫಿಕೇಷನ್ ಆ್ಯಂಡ್ ಅಪ್‍ಡೇಷನ್ ಆಫ ರೆಫರೆನ್ಸ್ ಆಫಲೈನ್ ಸಿಗ್ನೇಚರ್ಸ್ (ಗಣಕ ವಿಜ್ಞಾನ ವಿಷಯ)” ಕುರಿತು ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದು, ಪಿಎಚ್‍ಡಿ ಪದವಿ ಮುಂದಿನ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು. \ No newline at end of file diff --git a/eesanje/url_46_128_6.txt b/eesanje/url_46_128_6.txt new file mode 100644 index 0000000000000000000000000000000000000000..a7beed02cb030388d022fa5f1ac511d4133a40db --- /dev/null +++ b/eesanje/url_46_128_6.txt @@ -0,0 +1,10 @@ +ಸರ್ಕಾರಿ ಕೋಟಾದ ಎಂಬಿಬಿಎಸ್‌‍ ವಿದ್ಯಾರ್ಥಿಗಳಿಗೆ ಗ್ರಾಮೀಣ ವೈದ್ಯಕೀಯ ಸೇವೆ ಕಡ್ಡಾಯ +ಬೆಂಗಳೂರು, ಮೇ 29-ಸರ್ಕಾರಿ ಕೋಟಾದ ಅಡಿ 2022ರ ಜುಲೈ 22ರ ನಂತರ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ ಸೇರ್ಪಡೆಯಾಗಿರುವ ಎಂಬಿಬಿಎಸ್‌‍ ವಿದ್ಯಾರ್ಥಿಗಳು ಪದವಿಯ ನಂತರ ಕಡ್ಡಾಯ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದನ್ನು ಅಥವಾ ನಿಯಮಾವಳಿಗಳ ಅನ್ವಯ ತಾವು ನೀಡಿರುವ ಬಾಂಡ್‌ಗಳ ಜಾರಿಯನ್ನು ತಪ್ಪಿಸಿಕೊಳ್ಳಲಾಗದು ಎಂದು ಹೈಕೋರ್ಟ್‌ ಮಹತ್ವದ ಆದೇಶ ಮಾಡಿದೆ. +ಬೆಂಗಳೂರಿನ ಡಾ.ಶರಣ್ಯಾ ಮೋಹನ್‌ ಸೇರಿದಂತೆ ರಾಜಸ್ಥಾನ, ಹರಿಯಾಣ, ಕೇರಳ, ಗುಜರಾತ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ. +2012ರ ಜುಲೈ 17ರ ಅಧಿಸೂಚನೆಯಲ್ಲಿ ತಿದ್ದುಪಡಿ ನಿಯಮಗಳು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದಾಗಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ನಿಯಮಗಳು ರೂಪಿಸಿದ ಹತ್ತು ವರ್ಷಗಳ ಬಳಿಕ ಅಂದರೆ 2022ರ ಜುಲೈ 22ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದನ್ನು ನೋಡಿದರೆ ರಾಜ್ಯ ಸರ್ಕಾರವು ಹತ್ತು ವರ್ಷಗಳಿಂದ ಗಾಢನಿದ್ರೆಯಲ್ಲಿತ್ತು ಎಂದೆನಿಸುತ್ತದೆ ಎಂದು ನ್ಯಾಯಾಲಯ ಕುಟುಕಿದೆ. +ಈ ಸಂಬಂಧದ ತಿದ್ದುಪಡಿಯಾದ ನಿಯಮಗಳನ್ನು 2022ರ ಜುಲೈ 27ಕ್ಕೆ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪೀಠ ಹೇಳಿದ್ದು, ಇದಕ್ಕೂ ಮುಂಚಿನ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗದು ಎಂದು ಸ್ಪಷ್ಟಪಡಿಸಿದೆ. ಆ ಮೂಲಕ ಕೋರ್ಟ್‌ ಕಟಕಟೆ ಏರಿದ್ದ ಗೆಜೆಟ್‌ ಪ್ರಕಟಣೆಯ ಪೂರ್ವದ 447 ವಿದ್ಯಾರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯ ನಿಯಮಾವಳಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದು ಅವರಿಗೆ ಪರಿಹಾರ ಕಲ್ಪಿಸಿದೆ. +ಬುಶ್ರಾ ಅಬ್ದುಲ್‌ ಅಲೀಮ್‌ ಪ್ರಕರಣವನ್ನು ಉಲ್ಲೇಖಿಸಿರುವ ಪೀಠವು ರಾಜ್ಯ ಸರ್ಕಾರಕ್ಕೆ ಶಾಸನಬದ್ಧ ಸಾಮರ್ಥ್ಯವಿಲ್ಲ. ಹೀಗಾಗಿ ನಿಯಮಗಳನ್ನು ಬದಿಗೆ ಸರಿಸಬೇಕು ಎಂಬ ಅರ್ಜಿದಾರರ ವಾದವನ್ನು ತಿರಸ್ಕರಿಸಿದೆ. 2019ರ ಕಾಯಿದೆಯಲ್ಲಿ ಸಂವಿಧಾನದ ಏಳನೇ ಷೆಡ್ಯೂಲ್‌ನ ಲಿಸ್ಟ್‌ ಐಐಐಯ ಎಂಟ್ರಿ 25ರ ಅಡಿ ಶಿಕ್ಷಣವನ್ನು ನಿಯಂತ್ರಿಸಲು ಅಡ್ಡಿ ಮಾಡುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. +ಜಗತ್ತಿನ ಯಾವುದೇ ಭಾಗದಲ್ಲಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುವುದು ವೈದ್ಯಕೀಯ ವೃತ್ತಿಯಲ್ಲಿ ಹೊಸದೇನಲ್ಲ; ಹೆಸರು ಬದಲಾಗಬಹುದು ವಿಚಾರ ಒಂದೇ. ವೈದ್ಯರು ಸಮುದಾಯ/ಗ್ರಾಮೀಣ ಸೇವೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿರುವ ದೇಶಗಳಿಗೆ ಹಲವು ಶಿಾರಸುಗಳನ್ನು ಮಾಡಿದೆ ಎಂದು ನ್ಯಾಯಾಲಯ ಹೇಳಿದೆ. +ವೈದ್ಯರನ್ನು ತಲುಪಲು ಸಾಧ್ಯವಾಗದ ಸ್ಥಳಗಳಲ್ಲಿ ವಾಸಿಸುವ ಆದಿವಾಸಿಗಳು, ಬಡವರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ಸಾರ್ವಜನಿಕ ಆರೋಗ್ಯ ಯೋಜನೆಯ ಭಾಗವಾಗಬೇಕು. ವೈದ್ಯಕೀಯ ಪದವೀಧರರು ಸ್ವಯಂಪ್ರೇರಿತವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಲು ತಮನ್ನು ತೊಡಗಿಸಿಕೊಳ್ಳುತ್ತಾರೆ ಎಂಬ ಕನಸು ಒಂದು ದಿನ ಸಾಕಾರವಾಗಬಹುದು. ಈ ಕನಸು ಆದಷ್ಟು ಬೇಗ ಸಾಕಾರಗೊಳ್ಳುವ ಮೂಲಕ ಸಮಸಮಾಜ ನಿರ್ಮಾಣವಾಗಬೇಕು ಎಂದು ನ್ಯಾಯಾಲಯ ಹೇಳಿದೆ. +2015ರಲ್ಲಿ ಅರ್ಜಿದಾರರು ಸರ್ಕಾರಿ ಕೋಟಾದಡಿ ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್‌‍ ಕೋರ್ಸ್‌ಗೆ ಪ್ರವೇಶ ಪಡೆದಿದ್ದರು. ಈ ಮಧ್ಯೆ, ಭಾರತೀಯ ವೈದ್ಯಕೀಯ ಕೌನ್ಸಿಲ್‌ ಕಾಯಿದೆ 1956 ಅನ್ನು ಹಿಂಪಡೆಯಲಾಗಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯಿದೆ 2019 ಅನ್ನು ಜಾರಿಗೆ ತರಲಾಗಿತ್ತು. ಹೀಗಾಗಿ, ಅರ್ಜಿದಾರರು ರಾಜ್ಯ ಸರ್ಕಾರಕ್ಕೆ ನಿಯಮ 11 ಅನ್ನು ಅಧಿಸೂಚನೆ ಮಾಡುವ ಶಾಸನಬದ್ಧ ಸಾಮರ್ಥ್ಯ ಇಲ್ಲ. ಇದು ಕೇಂದ್ರದ ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯಿದೆಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದರು. ಅಲ್ಲದೇ, ಪದವಿ ಮುಗಿದ ತಕ್ಷಣ ಸ್ನಾತಕೋತ್ತರ ನೀಟ್‌ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರದ ನಿರ್ಧಾರವು ಕರ್ನಾಟಕದ ವಿದ್ಯಾರ್ಥಿಗಳಿಗೆ ಅವಕಾಶ ಸೀಮಿತಗೊಳಿಸಲಿದೆ ಎಂದು ಆಕ್ಷೇಪಿಸಿದ್ದರು. +ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಷನ್‌ ಶುಲ್ಕ ನಿಷೇಧ) ಕಾಯಿದೆಯ ಸೆಕ್ಷನ್‌ 14ರ ಅಡಿ ರಾಜ್ಯ ಸರ್ಕಾರಕ್ಕೆ ನಿಯಮ ರೂಪಿಸುವ ಅಧಿಕಾರವಿದೆ. ಹೀಗಾಗಿ, ಕರ್ನಾಟಕ ವೃತ್ತಿಪರ ಶೈಕ್ಷಣಿಕ ಸಂಸ್ಥೆಗಳಿಗೆ ಸರ್ಕಾರಿ ಸೀಟುಗಳ ಅಡಿ ಅಭ್ಯರ್ಥಿಗಳ ಪ್ರವೇಶಕ್ಕೆ ಆಯ್ಕೆ ನಿಯಮ 2006ರ ನಿಯಮ 11ಕ್ಕೆ 2012ರ ಜುಲೈ 17ರಂದು ತಿದ್ದುಪಡಿ ಮಾಡಲಾಗಿದೆ. ಬಾಂಡ್‌ ಪ್ರಕಾರ ಕೋರ್ಸ್‌ ಪೂರ್ಣಗೊಂಡ ಬಳಿಕ ಒಂದು ವರ್ಷದ ಅವಧಿಗೆ ರಾಜ್ಯದ ಯಾವುದಾದರೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಘಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು. ಇದನ್ನು ಮಾಡಲು ವಿಲವಾದಲ್ಲಿ ಅಂಥ ವಿದ್ಯಾರ್ಥಿಗಳು 15-30 ಲಕ್ಷ ರೂಪಾಯಿ ದಂಡವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಹೇಳಲಾಗಿದೆ. \ No newline at end of file diff --git a/eesanje/url_46_128_7.txt b/eesanje/url_46_128_7.txt new file mode 100644 index 0000000000000000000000000000000000000000..ff5db4e9edd9589e67f35c94d046a0c5eb984df0 --- /dev/null +++ b/eesanje/url_46_128_7.txt @@ -0,0 +1,5 @@ +ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ +ಬೆಂಗಳೂರು ಮೇ.29.ಅತ್ಯಾಚಾರ ಅರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಸಂಸದ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. +ಕಳೆದ 31 ದಿನಗಳಿಂದ ನಾಪತ್ತೆಯಾಗಿದ್ದ ಸಂಸದ ಪ್ರಜ್ವಲ್ ಅವರು ಮೊನ್ನೆ ಅಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು ಈ ಬೆನ್ನಲ್ಲೇ ಇಂದು ಪ್ರಜ್ವಲ್ ಪರವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿರುವುದು ತೀವ್ರ ಕುತೂಹಲ ಮೂಡಿಸಿದೆ. +ಅರ್ಜಿಯನ್ನು ಇಂದೆ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ವಕೀಲರು ಮಾಡಿದ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಲಿಲ್ಲ ಮೇ 31ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ನ್ಯಾಯಾಧೀಶರು ಹೇಳಿದರು ಹೀಗಾಗಿ ಪ್ರಜ್ವಲ್ ಅವರ ಜಾಮೀನು ಅರ್ಜಿ ವಿಚಾರಣೆ ಮೇ 31ಕ್ಕೆ ನಿಗದಿಯಾಗಿದೆ ಪ್ರಜ್ವಲ್ ಅವರು ವಿದೇಶದಿಂದ ಹಿಂದಿರುಗಲು ವಿಮಾನದ ಟಿಕೆಟ್ ಬುಕ್ ಆಗಿದೆ ಅವರನ್ನು ಬಂಧಿಸಲು ಎಸ್ಐಟಿ ಎಲ್ಲಾ ತಯಾರಿ ನಡೆಸಿದೆ. +ತಮ್ಮ ಮೇಲಿನ ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ \ No newline at end of file diff --git a/eesanje/url_46_128_8.txt b/eesanje/url_46_128_8.txt new file mode 100644 index 0000000000000000000000000000000000000000..4afaa1090c2a543d302206599c85774872047e2a --- /dev/null +++ b/eesanje/url_46_128_8.txt @@ -0,0 +1,5 @@ +ಮೇ.31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು +ಬೆಂಗಳೂರು. ಮೇ.29.ಮೈಸೂರು ಜಿಲ್ಲೆ ಕೆ ಆರ್ ನಗರ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದೆಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ಟ ಅವರು ವಾದವನ್ನು ಆಲಿಸಿ ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದರು. +ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಇವರಿಗೆ ನೋಟಿಸ್ ನೀಡಿಯೇ ಇಲ್ಲ ಆದರೂ ಅವರು ಡಿಐಜಿಗೆ ಪತ್ರ ಬರೆದು ವಿಚಾರಣೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ ಅಲ್ಲದೆ ಪ್ರಕರಣದ ಆರೋಪಿಗಳೊಂದಿಗೆ ಸಂಭಾಷಣೆ ನಡೆಸಿರುವ ಬಗ್ಗೆ ಆಡಿಯೋ ದಾಖಲೆಗಳಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. +ಸಂತ್ರಸ್ತ ಮಹಿಳೆಯನ್ನು ಹೆದರಿಸುವ ಸಂಬಂಧ ಆರೋಪಿಗಳೊಂದಿಗೆ ಚರ್ಚೆ ನಡೆಸಿರುವ ಬಗ್ಗೆ ದಾಖಲೆಗಳಿವೆ ಇವರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡಬಾರದು ಎಸ್ಐಟಿ ವಶದಲ್ಲಿ ಇಟ್ಟು ವಿಚಾರಣೆ ನಡೆಸಲು ಅವಕಾಶ ನೀಡಬೇಕೆಂದು ಸರ್ಕಾರಿ ಪರವಕೀಲರಾದ ಜಗದೀಶ್ ಅವರು ಮನವಿ ಮಾಡಿದರು. +ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಭವಾನಿ ರೇವಣ್ಣ ಅವರ ಪರ ವಕೀಲರು ಇಷ್ಟು ದಿನಗಳಾದರೂ ಎಸ್ಐಟಿಯವರು ಯಾವುದೇ ನೋಟಿಸ್ ನೀಡಿಲ್ಲ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ ಮೇಲೆ ಈ ರೀತಿ ಆಕ್ಷೇಪಗಳನ್ನ ಮಾಡುತ್ತಿದ್ದಾರೆ ಆರೋಪಿಗಳೊಂದಿಗೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಗಳು ಸತ್ಯಕ್ಕೆ ದೂರವಾದ ವಿಷಯ ನಮ್ಮ ಕಕ್ಷಿದಾರರಿಗೆ ಜಾಮೀನು ನೀಡಬೇಕೆಂದು ಮನವಿ ಮಾಡಿದರು ಎರಡು ಕಡೆಯ ವಾದಗಳನ್ನ ಆಲಿಸಿದ ನ್ಯಾಯಾಧೀಶರು ತೀರ್ಪನ್ನ ಮೇ 31ಕ್ಕೆ ಕಾಯ್ದಿರಿಸಿದರು. \ No newline at end of file diff --git a/eesanje/url_46_128_9.txt b/eesanje/url_46_128_9.txt new file mode 100644 index 0000000000000000000000000000000000000000..3a463319082fdb3371a10ab3ba816659e163f4db --- /dev/null +++ b/eesanje/url_46_128_9.txt @@ -0,0 +1,8 @@ +ಜೂನ್‌ನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ +ಬೆಂಗಳೂರು, ಮೇ 29-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ನಿರೀಕ್ಷೆಯಂತೆ ಸಕಾಲಕ್ಕೆ ಅರಂಭವಾಗಲಿದ್ದು, ಜೂನ್‌ತಿಂಗಳಿನಲ್ಲಿ ವಾಡಿಕೆಗಿಂತಲೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. +ಕಳೆದ ಮೂರು, ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಕರಾವಳಿ ಹೊರತುಪಡಿಸಿ ಉಳಿದೆಡೆ ಮಳೆಯಾಗುತ್ತಿಲ್ಲ. ನಿರೀಕ್ಷೆಯಂತೆ ಮಳೆ ಬಿಡುವುಕೊಟ್ಟಿದ್ದು, ಜೂನ್‌ ಮೊದಲ ವಾರದಲ್ಲಿ ಮತ್ತೆ ಮಳೆ ಆರಂಭಗೊಳ್ಳಲಿದೆ. +ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನೀಡಿರುವ ಮುನ್ಸೂಚನೆಯಂತೆ ಮೇ 31ರವೇಳೆಗೆ ಮುಂಗಾರು ಮಳೆ ಕೇರಳಕ್ಕೆ ಪ್ರವೇಶಿಸಲಿದೆ. ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ರೆಮೆಲ್‌ ಚಂಡಮಾರುತದಿಂದ ಮುಂಗಾರಿನ ಮೇಲೆ ಪ್ರತಿಕೂಲ ಪರಿಣಾಮವಾಗಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕೇರಳದ ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಶುಕ್ರವಾರ ಮುಂಗಾರಿನ ಆಗಮನವಾಗಲಿದೆ. ಅದಕ್ಕೆ ಅಡ್ಡಿಯಾಗುವಂತಹ ಸನ್ನಿವೇಶಗಳು ಈತನಕ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. +ನೈರುತ್ಯ ಮುಂಗಾರು ಕೇರಳ ಪ್ರವೇಶಿಸಿದ ಬಳಿಕ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ವ್ಯಾಪಿಸಲಿದೆ. ಚಾಮರಾಜನಗರದ ಮೂಲಕ ರಾಜ್ಯಕ್ಕೆ ಮುಂಗಾರು ಆಗಮನವಾಗಲಿದೆ. ಜೂನ್‌ ಐದರವೇಳೆಗೆ ದಕ್ಷಿಣ ಕರ್ನಾಟಕವನ್ನು ಮುಂಗಾರು ಆವರಿಸಲಿದ್ದು, ಜೂನ್‌ 10ರ ವೇಳೆಗೆ ರಾಜ್ಯಾದ್ಯಂತ ವ್ಯಾಪಿಸಲಿದ್ದು, ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಿಳಿಸಿದ್ದಾರೆ. +ಮುಂಗಾರು, ಹಿಂಗಾರು, ಬೇಸಿಗೆ ಮಳೆ ಕೊರತೆಯಿಂದ ತೀವ್ರ ಬರಗಾಲ ಆವರಿಸಿದ್ದ ರಾಜ್ಯದಲ್ಲಿ ಮೇನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು ಮಳೆಯಾದ್ದರಿಂದ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರೆ, ಜಾನುವಾರುಗಳಿಗೆ ಸಾಕಷ್ಟು ಮೇವು ದೊರೆತು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. +ಈ ಬಾರಿಯ ಮುಂಗಾರು ಕಳೆದ ಬಾರಿಯಂತೆ ಕೈಕೊಡದೆ, ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ನಾಳೆಯ ನಂತರ ಮತ್ತೆ ಮಳೆ ಆರಂಭಗೊಳ್ಳುವ ಸಾಧ್ಯತೆಗಳಿವೆ. ವಾರಾಂತ್ಯಕ್ಕೆ ಮತ್ತೊಂದು ಸುತ್ತಿನ ಮಳೆ ಪ್ರಾರಂಭವಾಗಲಿದೆ. \ No newline at end of file diff --git a/eesanje/url_46_129_1.txt b/eesanje/url_46_129_1.txt new file mode 100644 index 0000000000000000000000000000000000000000..310d6d35684e74c5c4541d0c6e971906df7db94b --- /dev/null +++ b/eesanje/url_46_129_1.txt @@ -0,0 +1,9 @@ +ಮಹಿಳೆಯರು ಉಚಿತ ಬಸ್‌‍ ಪ್ರಯಾಣದ ಶಕ್ತಿ ಯೋಜನೆಯಿಂದ ಜಿಎಸ್‌‍ಟಿ ಹೆಚ್ಚಳ +ಬೆಂಗಳೂರು, ಮೇ 29-ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯಾದ್ಯಂತ ಸರ್ಕಾರಿ ಬಸ್‌‍ಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುವ ಶಕ್ತಿ ಯೋಜನೆ ಸರಕು ಸೇವಾ ತೆರಿಗೆ (ಜಿಎಸ್‌‍ಟಿ)ಯನ್ನು ಹೆಚ್ಚಿಸಿದೆ. +2023 ರ ಮೇ ತಿಂಗಳಿನಲ್ಲಿ ಜಾರಿಗೆ ಬಂದಿದ್ದ ಶಕ್ತಿ ಯೋಜನೆಗೆ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳುತ್ತಿರುವ ಕಾರಣ ಜಿಎಸ್‌‍ಟಿಯು ಏರಿಕೆಯಾಗಿರುವುದು ಸರ್ಕಾರದ ಹಣಕಾಸು ನೀತಿ ಸಂಸ್ಥೆ ನಡೆಸಿರುವ ಅಧ್ಯಯನದಿಂದ ಬಹಿರಂಗವಾಗಿದೆ. ವಿಶೇಷವಾಗಿ ಮಹಿಳಾ ಕಾರ್ಮಿಕರು ಈ ಯೋಜನೆಯ ಹೆಚ್ಚಿನ ಫಲಾನುಭವಿಗಳಾಗಿರುವುದರಿಂದ ಅವರ ಭಾಗವಹಿಸುವಿಕೆ ಜಿಎಸ್‌‍ಟಿ ಸಂಗ್ರಹವನ್ನು ಹೆಚ್ಚಿಸಿದೆ ಎಂದು ಎಪ್‌ಪಿಐ ನಡೆಸಿರುವ ಅಧ್ಯಯನದಲ್ಲಿ ಬಹಿರಂಗವಾಗಿದೆ. +ರಾಜ್ಯ ಹಣಕಾಸು ನೀತಿ ಸಂಸ್ಥೆ (ಎಫ್‌ಪಿಐ) ನಡೆಸಿದ ಅಧ್ಯಯನದ ಪ್ರಕಾರ, ಕಳೆದ ವರ್ಷ, ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗ, ಈ ವರ್ಷದ ಮಾರ್ಚ್‌ವರೆಗೆ, ಜಿಎಸ್‌‍ಟಿ ಸಂಗ್ರಹವು 309.64 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ.ಏಕೆಂದರೆ ಮಹಿಳೆಯರಿಗೆ ಬಸ್‌‍ ಪ್ರಯಾಣ ಉಚಿತವಾಗಿರುವದರಿಂದ ಉಳಿತಾಯ ಯೋಜನೆ ಯಥೇಚ್ಛವಾಗಿ ಹೆಚ್ಚಾಗುತ್ತಿದ್ದು, ಇದು ಸರ್ಕಾರದ ಬೊಕ್ಕಸಕ್ಕೂ ಪರೋಕ್ಷವಾಗಿ ಆದಾಯವನ್ನು ಹೆಚ್ಚಿಸಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರದ ಪ್ರಮುಖ ಖಾತರಿ ಯೋಜನೆಯಾದ ಶಕ್ತಿಯ ಆರ್ಥಿಕ ಪರಿಣಾಮವನ್ನು ಅಳೆಯುವ ಮೊದಲ ಅಧ್ಯಯನ ಇದಾಗಿದೆ.ಪ್ರಯಾಣದಲ್ಲಿ ಉಳಿಸಿದ ಮೊತ್ತವು ಪ್ರಯಾಣಿಕರಿಗೆ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಅವರು ಇತರ ಅಗತ್ಯ ವಸ್ತುಗಳ ಬಳಕೆಗೆ ಸಂಪೂರ್ಣ ಮೊತ್ತವನ್ನು ಖರ್ಚು ಮಾಡುತ್ತಾರೆ ಎಂದು ಎಫ್‌ಪಿಐ ಸಂಶೋಧನಾ ಅಧ್ಯಯನದಲ್ಲಿ ತಿಳಿದುಬಂದಿದೆ. +ಇಂತಹ ಹೆಚ್ಚುವರಿ ಖರ್ಚು ಸರ್ಕಾರದಿಂದ ತೆರಿಗೆ ಸಂಗ್ರಹವನ್ನು ಹೆಚ್ಚಿಸುತ್ತದೆ. ವಿವಿಧ ಸರಕುಗಳ ಮೇಲಿನ ಮಾಸಿಕ ತಲಾ ವೆಚ್ಚದ ಅಂಕಿ-ಅಂಶಗಳು, ದರಗಳು ಮತ್ತು ಯೋಜನೆಯ ಒಟ್ಟು ಟಿಕೆಟ್‌ ಮೌಲ್ಯವನ್ನು ಬಳಸಿಕೊಂಡು ಶಕ್ತಿ ಯೋಜನೆಯಿಂದ 2024-25ರಲ್ಲಿ ಶಕ್ತಿಯು 371.57 ಕೋಟಿ ರೂಪಾಯಿಗಳ ಜಿಎಸ್ಟಿ ಆದಾಯವನ್ನು ಗಳಿಸಬಹುದು ಎಂದು ಅಧ್ಯಯನವು ಯೋಜಿಸಿದೆ ಎಂದು ಲೆಕ್ಕ ಹಾಕಿದೆ. +ಜಸ್ಟ್‌ಜಾಯ್‌್ಸ ನೆಟ್ವರ್ಕ್‌ ಫಿಸ್ಕಲ್‌ ಪಾಲಿಸಿ ಇನ್ಸ್ಟಿಟ್ಯೂಟ್‌ ಸಹಯೋಗದೊಂದಿಗೆ ನಡೆಸಿದ ಮತ್ತೊಂದು ಅಧ್ಯಯನದಲ್ಲಿ, ಶಕ್ತಿ ಯೋಜನೆಯಡಿಯಲ್ಲಿ ಪ್ರಯಾಣ ದರ ರಹಿತ ಪ್ರಯಾಣದ ಸರಾಸರಿ ಉಳಿತಾಯವನ್ನು ಬೆಂಗಳೂರಿನಲ್ಲಿ ರೂ.1,326, ಹಾವೇರಿಯಲ್ಲಿ ರೂ.1,015, ಚಾಮರಾಜನಗರದಲ್ಲಿ ರೂ.779, ರೂ.784 ಎಂದು ತೋರಿಸಲಾಗಿದೆ. +ಯಾದಗಿರಿ ಹಾಗೂ ಉಡುಪಿಯಲ್ಲಿ 681 ರೂ.ಎಫ್‌ಪಿಐ ಅಧ್ಯಯನದ ಪ್ರಕಾರ, ಶಕ್ತಿ ಯೋಜನೆಯು ಹೆಚ್ಚಿನ ಮಹಿಳೆಯರು ಉದ್ಯೋಗ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಕೊಡುಗೆ ಯನ್ನು ನೀಡುತ್ತದೆ.ಶಕ್ತಿ ಯೋಜನೆಯ ಅನುಷ್ಠಾನದ ಮೊದಲು ಮತ್ತು ನಂತರ ಮಹಿಳಾ ಕಾರ್ಮಿಕ ಭಾಗವಹಿಸುವಿಕೆ ದರ ಮತ್ತು ಕಾರ್ಮಿಕರ ಜನಸಂಖ್ಯೆಯ ದರ ತ್ರೈಮಾಸಿಕ ಹೋಲಿಕೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. +ಅಕ್ಟೋಬರ್‌-ಡಿಸೆಂಬರ್‌ 2022 ರಲ್ಲಿ, ಶೇ. 25.1 ಆಗಿತ್ತು, ಇದು 2023 ರ ಅದೇ ಅವಧಿಯಲ್ಲಿ ಶೇ. 30.2 ಕ್ಕೆ ಏರಿಕೆ ಆಗಿತ್ತು. ಅಕ್ಟೋಬರ್‌-ಡಿಸೆಂಬರ್‌ 2022 ರಲ್ಲಿ ಶೇ. 23.7 ಆಗಿತ್ತು, ಇದು 2023 ರಲ್ಲಿ ಶೇ. 28.8 ಕ್ಕೆ ಏರಿದೆ ಎಂದು ಅಧ್ಯಯನವು ಹೇಳಿದೆ.ಸುರಕ್ಷಿತ ಮತ್ತು ಕೈಗೆಟುಕುವ ಸಾರಿಗೆ ವಿಧಾನಗಳು ಕಾರ್ಮಿಕ ಬಲದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುವುದಲ್ಲದೆ, ರಾಷ್ಟ್ರದ ಆರ್ಥಿಕತೆಗೆ ಸಕ್ರಿಯವಾಗಿ ಕೊಡುಗೆ ನೀಡುವ ಅವಕಾಶವನ್ನು ಒದಗಿಸುತ್ತವೆ ಎಂದು ಅಧ್ಯಯನವು ಹೇಳುತ್ತದೆ. \ No newline at end of file diff --git a/eesanje/url_46_129_10.txt b/eesanje/url_46_129_10.txt new file mode 100644 index 0000000000000000000000000000000000000000..be404b37a40143ba631f05198b45815d3d74978c --- /dev/null +++ b/eesanje/url_46_129_10.txt @@ -0,0 +1,4 @@ +ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣ : ಹಾಸನ- ಹೊಳೆನರಸೀಪುರಕ್ಕೆ ಎಸ್‌‍ಐಟಿ ತಂಡ +ಹಾಸನ, ಮೇ 29-ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಎಸ್‌‍ಐಟಿ ತಂಡ ಮತ್ತೊಮೆ ಹಾಸನ ಹಾಗೂ ಹೊಳೆನರಸೀಪುರಕ್ಕೆ ಭೇಟಿ ನೀಡಿ ಮುಂಜಾನೆಯವರೆಗೂ ಪರಿಶೀಲನೆ ನಡೆಸಿದೆ.ಹಾಸನ ನಗರದ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ಎಚ್‌.ಡಿ.ರೇವಣ್ಣ ಅವರ ನಿವಾಸಕ್ಕೆ ಎಸ್‌‍ಐಟಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. +ಈ ಹಿಂದೆ ಕೂಡ ಸ್ಥಳ ಮಹಜರು ನಡೆಸಿದ ಎಸ್‌‍ಐಟಿ ಅಧಿಕಾರಿಗಳು ಎಸಿಪಿ ಸತ್ಯನಾರಾಯಣ ನೇತೃತ್ವದಲ್ಲಿ ಎರಡೂ ನಿವಾಸಗಳಲ್ಲೂ ಮತ್ತೆ ಪರಿಶೀಲನೆ ನಡೆಸಿದ್ದಾರೆ.ಕೆಲದಿನಗಳ ಹಿಂದೆ ಹೊಳೆನರಸೀಪುರದ ರೇವಣ್ಣ ಅವರ ನಿವಾಸ ಮತ್ತು ಹಾಸನದ ಸಂಸದರ ನಿವಾಸದಲ್ಲಿ ರಾತ್ರಿಯೆಲ್ಲಾ ಎಸ್‌‍ಐಟಿ ತಂಡ ಪರಿಶೀಲನೆ ನಡೆಸಿತ್ತು. ಈ ವೇಳೆ ಮನೆಯಲ್ಲಿದ್ದ ಹಾಸಿಗೆ, ದಿಂಬು ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. +ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ವಾಪಸ್‌‍ ಬರುತ್ತೇನೆಂದು ವಿಡಿಯೋ ಹರಿಬಿಟ್ಟ ಹಿನ್ನೆಲೆಯಲ್ಲಿ ಮತ್ತೆ ಎಸ್‌‍ಐಟಿ ತಂಡ ಹಾಸನದಲ್ಲಿ ಸಾಕ್ಷ್ಯ ಸಂಗ್ರಹಗಳನ್ನು ತೀವ್ರಗೊಳಿಸಿದೆ.ನಿನ್ನೆ ಮಧ್ಯಾಹ್ನ ಹಾಸನಕ್ಕೆ ಭೇಟಿ ನೀಡಿದ ಎಸ್‌‍ಐಟಿ ಹಾಗೂ ಎಫ್‌ಎಸ್‌‍ಎಲ್‌ ತಂಡ ಪರಿಶೀಲನೆ ನಡೆಸಿ, ಸಾಕ್ಷಿ ಸಂಗ್ರಹಿಸಿ ಇಂದು ಬೆಳಗಿನ ಜಾವ 4 ಗಂಟೆವರೆಗೆ ತಪಾಸಣೆ ನಡೆಸಿದೆ. ಸತತ 10 ಗಂಟೆಗಳ ತನಕ ತಪಾಸಣೆ ನಡೆಸಿದೆ. \ No newline at end of file diff --git a/eesanje/url_46_129_11.txt b/eesanje/url_46_129_11.txt new file mode 100644 index 0000000000000000000000000000000000000000..08a3b7f6e563f8cc94e635846f2be0888dc839bc --- /dev/null +++ b/eesanje/url_46_129_11.txt @@ -0,0 +1,6 @@ +ಕಳೆಯಿತು ಬೇಸಿಗೆ, ಹೋಗೋಣ ಸ್ಕೂಲಿಗೆ : ಒಲ್ಲದ ಮನಸ್ಸಿನಿಂಲೇ ಶಾಲೆಯತ್ತ ಹೆಜ್ಜೆಹಾಕಿದ ಮಕ್ಕಳು +ಬೆಂಗಳೂರು, ಮೇ 29-ಕಳೆಯಿತು ಬೇಸಿಗೆ ರಜೆ, ನಡೆಯಿರಿ ಶಾಲೆಯೆಡೆಗೆ ಎಂದು ಮಕ್ಕಳು ಇಂದು ಒಲ್ಲದ ಮನಸ್ಸಿನಿಂದ ಶಾಲೆಗೆ ತೆರಳಿದರು. ಕಳೆದ ಎರಡು ತಿಂಗಳಿಂದ ಶಾಲೆಗಳಿಗೆ ರಜೆ ಇದ್ದು, ಮಕ್ಕಳು ಖುಷಿಖುಷಿಯಿಂದ ಆಟ, ಊರುಗಳಲ್ಲಿ ಕಾಲ ಕಳೆದಿದ್ದು, ಇಂದಿನಿಂದ ಅದೇ ಪಾಠ, ಓದು, ಬ್ಯಾಗ್‌ಗಳನ್ನು ಹೊತ್ತು ಶಾಲೆಗೆ ಹೋಗಬೇಕಲ್ಲ ಎಂದು ಕೆಲ ಮಕ್ಕಳು ಅತ್ತು ಸುರಿಯುತ್ತ ಶಾಲೆಗೆ ಹೋದ ದೃಶ್ಯಗಳು ಕಂಡುಬಂದವು. +ಮೊದಲ ದಿನವಾದ ಇಂದು ಪೋಷಕರು ತಮ್ಮತಮ್ಮ ಮಕ್ಕಳನ್ನು ಶಾಲೆಗಳಿಗೆ ಕರೆತಂದು ಬಿಟ್ಟರು. ಶಾಲೆಗಳನ್ನು ಸಹ ಅದ್ಧೂರಿಯಾಗಿ ಸಿಂಗರಿಸಿ ಶಿಕ್ಷಕರು ಮಕ್ಕಳಿಗೆ ಗುಲಾಬಿ ಹೂ, ಸಿಹಿ ಹಂಚಿ ಬರಮಾಡಿಕೊಂಡರು. +ಹೊಸದಾಗಿ ಶಾಲೆಗಳಿಗೆ ದಾಖಲಾಗಿರುವ ನರ್ಸರಿ, ಎಲ್‌ಕೆಜಿ, ಯುಕೆಜಿ ಪುಟಾಣಿಗಳು ಶಾಲೆಯ ಸಮವಸ್ತ್ರ ಧರಿಸಿ, ಲಂಚ್‌ ಬ್ಯಾಗ್‌ಗಳನ್ನು ಕೈಯಲ್ಲಿಡಿದು ಪುಟ್ಟಪುಟ್ಟ ಹೆಜ್ಜೆಗಳನ್ನು ಹಾಕುತ್ತಾ ಕೆಲ ಮಕ್ಕಳು ಖುಷಿಯಿಂದ ಶಾಲೆಗೆ ತೆರಳುತ್ತಿದ್ದರೆ, ಮತ್ತೆ ಕೆಲ ಮಕ್ಕಳು ಅಳುತ್ತಾ ಹೋಗುತ್ತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. +ರಸ್ತೆಗಿಳಿದ ಶಾಲಾ ಬಸ್‌‍ಗಳು :ಕಳೆದ ಎರಡು ತಿಂಗಳಿನಿಂದ ನಿಂತಲ್ಲೇ ನಿಂತಿದ್ದ ಶಾಲಾ ಬಸ್‌‍ಗಳು ಇಂದು ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಕಾರ್ಯಾಚರಣೆಗಿಳಿದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಬಸ್‌‍ಗಳ ಸಂಚಾರ ಹೆಚ್ಚಿನದಾಗಿ ಕಂಡುಬಂದಿತು. +ಇನ್ನು ಗ್ರಾಮೀಣ ಪ್ರದೇಶಗಳಲ್ಲೂ ಸಹ ಮಕ್ಕಳು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಮಕ್ಕಳು ಶಾಲೆಗೆ ತೆರಳುತ್ತಿದ್ದ ದೃಶ್ಯ ಸರ್ವೆಸಾಮಾನ್ಯವಾಗಿತ್ತು. \ No newline at end of file diff --git a/eesanje/url_46_129_12.txt b/eesanje/url_46_129_12.txt new file mode 100644 index 0000000000000000000000000000000000000000..5a0da22dd8411c33a6030d864413ab44f468f7ef --- /dev/null +++ b/eesanje/url_46_129_12.txt @@ -0,0 +1,6 @@ +ಎಲ್ಲ ವರ್ಗಗಳಿಗೂ ಅವಕಾಶ ನೀಡಲು ಸಾಧ್ಯವಿಲ್ಲ : ಡಿಕೆಶಿ +ಬೆಂಗಳೂರು, ಮೇ 28-ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕೆ 310 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಎಲ್ಲಾ ವರ್ಗಗಳಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗಗಳಿಂದಲೂ ಆಕಾಂಕ್ಷಿಗಳಿದ್ದಾರೆ. +ಅವರಲ್ಲಿ ಪಕ್ಷಕ್ಕಾಗಿ ದುಡಿದವರು, ದುಡಿಯದೇ ಇರುವವರು, ಹಾಲಿ ಸದಸ್ಯರು ಇದ್ದಾರೆ.. ಕೆಲವರಿಗೆ ಬ್ಲಾಕ್‌ ಮಟ್ಟದಲ್ಲಿ, ಇನ್ನೂ ಕೆಲವರಿಗೆ ಜಿಲ್ಲಾಮಟ್ಟದಲ್ಲಿ, ಮತ್ತೆ ಕೆಲವರಿಗೆ ರಾಜ್ಯಮಟ್ಟದಲ್ಲಿ ಅವಕಾಶ ಸಿಕ್ಕಿದೆ ಎಂದರು. +ಮಲೆನಾಡು, ಕರಾವಳಿ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರು, ಹಳೆ ಮೈಸೂರು ಭಾಗ ಸೇರಿದಂತೆ ಪ್ರಾದೇಶಿಕವಾಗಿ ಎಲ್ಲಾ ಭಾಗದಿಂದಲೂ ಅವಕಾಶ ಕೇಳುತ್ತಿದ್ದಾರೆ. ಸಮಾನವಾದ ಹಂಚಿಕೆ ಕಷ್ಟವಾದ ಕೆಲಸ ಎಂದು ಹೇಳಿದರು. +ನಮಂತಹ ಹಿರಿಯರ ಸಲಹೆಗಳನ್ನು ಕೇಳಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ಹೊರಹಾಕಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, ಖಂಡಿತ ಅವರ ಸಲಹೆ ಕೇಳುತ್ತೇನೆ ಎಂದರಲ್ಲದೆ, ಮಾನದಂಡಗಳನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ ಎಂದು ತಿಳಿಸಿದರು. +ವಾಲೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕೆಗಳಲ್ಲಿ ಓದಿದ್ದೇನೆ. ವಾಸ್ತವಾಂಶ ಏನು ಎಂಬ ಬಗ್ಗೆ ಮತ್ತಷ್ಟು ಮಾಹಿತಿ ಪಡೆದು ಅನಂತರ ಪ್ರತಿಕ್ರಿಯಿಸುತ್ತೇನೆ ಎಂದರು.ದೆಹಲಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಚರ್ಚೆಯಾಗುವ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_129_2.txt b/eesanje/url_46_129_2.txt new file mode 100644 index 0000000000000000000000000000000000000000..03e7a9e33c9005119a5739e132d5cde61d6bf4be --- /dev/null +++ b/eesanje/url_46_129_2.txt @@ -0,0 +1,6 @@ +ವಿಧಾನಪರಿಷತ್‌ ಚುನಾವಣೆ : ಇಂದು ಫೈನಲ್ ಆಗಲಿದೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ..? +ಬೆಂಗಳೂರು, ಮೇ 29-ವಿಧಾನಪರಿಷತ್‌ನಿಂದ ವಿಧಾನಸಭೆಗೆ ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ನಡೆಯುತ್ತಿರುವ ಕಸರತ್ತು ಇಂದು ಸಂಜೆ ಅಂತಿಮ ಘಟ್ಟ ತಲುಪುವ ಸಾಧ್ಯತೆಯಿದೆ. +ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಿನ್ನೆಯಿಂದಲೂ ಎಐಸಿಸಿ ಮುಖಂಡರಾದ ರಣಜಿತ್‌ ಸಿಂಗ್‌ ಸುರ್ಜೆವಾಲ, ಕೆ.ಸಿ.ವೇಣುಗೋಪಾಲ್‌ ಅವರೊಂದಿಗೆ ಸರಣಿ ಸಭೆಯನ್ನು ನಡೆಸಿದ್ದಾರೆ. ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಭೆ ನಡೆಯಲಿದೆ. ಅದರ ಬಳಿಕ ಅಭ್ಯರ್ಥಿಗಳ ಆಯ್ಕೆ ಅಖೈರುಗೊಳ್ಳಲಿದೆ ಎಂದು ತಿಳಿದುಬಂದಿದೆ. +ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಬ್ಬರೂ 70 ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ. ಅದರಲ್ಲಿ ಸಚಿವ ಎನ್‌.ಎಸ್‌‍.ಬೋಸರಾಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೆಸರು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗಿದೆ. +ವಿಧಾನಪರಿಷತ್‌ನ ಸದಸ್ಯ ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರ ಆಯ್ಕೆ ವಿಚಾರವಾಗಿ ಖಚಿತತೆ ಇದ್ದರೂ ಕೊನೆ ಕ್ಷಣದಲ್ಲಿ ಗೊಂದಲಗಳು ಏರ್ಪಟ್ಟಿವೆ. ಈಗಾಗಲೇ ಎರಡು ಬಾರಿ ಅವಕಾಶ ಪಡೆದಿರುವ ಗೋವಿಂದ ರಾಜು ಅವರು ಪ್ರಸ್ತುತ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದಾರೆ. ಅದಕ್ಕೆ ಶಾಸನಸಭೆಯ ಸದಸ್ಯತ್ವ ಕಡ್ಡಾಯವಲ್ಲದೇ ಇರುವುದರಿಂದ ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರ ಅನುಸರಿಸುವ ಬಗ್ಗೆಯೂ ಚರ್ಚೆಗಳಾಗುತ್ತಿವೆ ಎಂದು ತಿಳಿದುಬಂದಿದೆ. +ಉಳಿದಂತೆ ಹತ್ತಾರು ಮಂದಿ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಮುಖಂಡರ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ.ರಾಜ್ಯ ನಾಯಕರು ಸಂಭವನೀಯರ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ. ಇದರ ಪರಿಶೀಲನೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_129_3.txt b/eesanje/url_46_129_3.txt new file mode 100644 index 0000000000000000000000000000000000000000..a7226246e6257ceaf8e02b601ced6e9a5cc6b65d --- /dev/null +++ b/eesanje/url_46_129_3.txt @@ -0,0 +1,9 @@ +ವಿಜಯೇಂದ್ರ ವಿರುದ್ಧ ಶಾಸಕ ಪ್ರದೀಪ್‌ ಈಶ್ವರ್‌ ಹಿಗ್ಗಾಮುಗ್ಗಾ ವಾಗ್ದಾಳಿ +ಬೆಂಗಳೂರು, ಮೇ 29-ವಿಷಯಾಧಾರಿತವಾಗಿ ಚರ್ಚೆ ನಡೆಸುವ ಬದಲಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರ ವೈಯಕ್ತಿಕ ತೇಜೋವಧೆಗೆ ಇಳಿದಿರುವುದು ಖಂಡನೀಯ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. +ಕಾಂಗ್ರೆಸ್‌‍ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಬಂಗಾರಪ್ಪ ಹಿಂದುಳಿದ ವರ್ಗಗಳ ನಾಯಕ. ವಿಜಯೇಂದ್ರ ಅವರಿಗೆ ಹಿಂದುಳಿದ ವರ್ಗದವರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿಯೇ ಅವರದೇ ಪಕ್ಷದ ಕೆ.ಎಸ್‌‍.ಈಶ್ವರಪ್ಪ ಅವರನ್ನು ಮೂಲೆಗುಂಪು ಮಾಡಿ, ಹೀನಾಯವಾಗಿ ಟೀಕೆ ಮಾಡಿ ಅಪಮಾನ ಮಾಡಿದ್ದಾರೆ ಎಂದರು. +ಬಿಜೆಪಿ ಕಟ್ಟುವುದರಲ್ಲಿ ಯಡಿಯೂರಪ್ಪ ಅವರಿಗೆ ಸರಿಸಮಾನವಾಗಿ ಈಶ್ವರಪ್ಪ ಕೆಲಸ ಮಾಡಿದರು. ಅವರನ್ನು ಕರ್ನಾಟಕದ ಅಡ್ವಾಣಿ ಎಂದು ಕರೆಯಲಾಗುತ್ತಿತ್ತು. ಅವರು ಸಂಘಟಿಸಿದ ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಮಾಡಿದ್ದೇನು ಎಂದು ಜನ ನೋಡಿದ್ದಾರೆ ಎಂದರು. +ಮಧುಬಂಗಾರಪ್ಪ ಶಿಕ್ಷಣ ಕ್ಷೇತ್ರದ ಪಾವಿತ್ರ್ಯತೆ ಉಳಿಸುವಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಅವರು ಶ್ಲಾಘನಾರ್ಹರು.ಈ ಹಿಂದೆ ಬಹಳಷ್ಟು ಜನ ಸಾಮೂಹಿಕ ನಕಲು ಮಾಡುತ್ತಿದ್ದುದು ಬಹಿರಂಗ ಸತ್ಯ. ಮಧುಬಂಗಾರಪ್ಪ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಸಿಸಿ ಟಿವಿ ಹಾಕಿ ಮಾಸ್‌‍ ಕಾಪಿ ತಪ್ಪಿಸಿದ್ದಾರೆ. +ಇದರಿಂದಾಗಿ ಎಸ್‌‍ಎಸ್‌‍ಎಲ್‌ಸಿ ಫಲಿತಾಂಶ ಕಡಿಮೆಯಾಗಿದೆ. ಆದರೆ ಮುಂದಿನ ಹತ್ತು ವರ್ಷಗಳಲ್ಲಿ ಇದರ ಸಕಾರಾತಕ ಪರಿಣಾಮ ಗೋಚರಿಸಲಿದೆ. ಮೂರು ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳು ಪಾಸಾಗಲು ಅನುಕೂಲ ಮಾಡಿಕೊಡಲಾಗಿದೆ ಎಂದು ಹೇಳಿದರು. +ವಿಜಯೇಂದ್ರ ಮತ್ತು ಅವರ ಸಲಹೆಗಾರರಿಗೆ ಅಧ್ಯಯನದ ಕೊರತೆ ಇದ್ದಂತೆ ಕಾಣುತ್ತದೆ. ಅದಕ್ಕಾಗಿ ಮಧುಬಂಗಾರಪ್ಪ ಅವರ ಕೇಶಶೈಲಿಯ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಒಂದು ಪಕ್ಷದ ರಾಜ್ಯಾಧ್ಯಕ್ಷರು ಈ ಮಟ್ಟಕ್ಕೆ ಇಳಿಯುವುದು ಶೋಭೆ ತರುವುದಿಲ್ಲ. +ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರ ಕೇಶಶೈಲಿಯ ಬಗ್ಗೆ ಯಾರೂ ಆಕ್ಷೇಪವೆತ್ತಲಿಲ್ಲ. ಮಧು ಬಂಗಾರಪ್ಪ ಅವರಿಗೆ ಅವರದೇ ಆದ ಸ್ವರೂಪವಿದೆ. ಅದನ್ನು ಲೇವಡಿ ಮಾಡುವ ಮೂಲಕ ವಿಜಯೇಂದ್ರ ವೈಯಕ್ತಿಕ ನಿಂದನೆ ಮಾಡುತ್ತಿದ್ದಾರೆ. ವಿಷಯಾಧಾರಿತ ಹಾಗೂ ಸೈದ್ಧಾಂತಿಕವಾಗಿ ಚರ್ಚೆ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು. +ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಗೆಲ್ಲುವುದು ಖಚಿತ. ನಾನು ಪ್ರತಿನಿಧಿಸುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗಿಂತ ಬಿಜೆಪಿ ಒಂದು ಮತ ಹೆಚ್ಚು ಪಡೆದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಸವಾಲಿಗೆ ಈಗಲೂ ಬದ್ಧನಾಗಿದ್ದೇನೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_129_4.txt b/eesanje/url_46_129_4.txt new file mode 100644 index 0000000000000000000000000000000000000000..185dcfde2c1457ec84699062d07f012cba09a846 --- /dev/null +++ b/eesanje/url_46_129_4.txt @@ -0,0 +1,11 @@ +ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ಕುರಿತು ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ +ಬೆಂಗಳೂರು, ಮೇ 29-ಯಾವುದೇ ಘಟನೆ ನಡೆದರೂ ಬಿಜೆಪಿಯವರು ಸಚಿವರ ರಾಜೀನಾಮೆ ಕೇಳುವುದು ಸಾಮಾನ್ಯ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯಾಂಶ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಂದು ಘಟನೆಯಾದಾಗಲೂ ಬಿಜೆಪಿಯವರು ಆಯಾ ಸಚಿವರ ರಾಜೀನಾಮೆ ಕೇಳುತ್ತಾರೆ. ಅವರು ರಾಜೀನಾಮೆ ಕೇಳುವುದು ಸರಿ. ಆದರೆ ಸತ್ಯಾಂಶ ತಿಳಿಯಬೇಕಲ್ಲ ಎಂದರು. +ಹಣ ವರ್ಗಾವಣೆ ಮಾಡುವಂತೆ ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂದು ಮೃತಪಟ್ಟ ಅಧಿಕಾರಿ ಚಂದ್ರಶೇಖರ್‌ ಮರಣಪತ್ರದಲ್ಲಿ ಬರೆದಿದ್ದಾರೆ. ಅದು ಸತ್ಯ ಅಥವಾ ಸುಳ್ಳು ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಸಚಿವರಿಗೆ ಗೊತ್ತಿದ್ದೇ ಹಣ ಹೋಗಿದೆಯೇ? ಎಂಬುದನ್ನು ತನಿಖೆ ನಡೆಸಲಾಗುತ್ತಿದೆ. +ಈ ಹಿಂದೆ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆಗಿನ ಸಚಿವ ಈಶ್ವರಪ್ಪ ಅವರ ಹೆಸರನ್ನು ನೇರವಾಗಿ ಹೇಳಿದ್ದರು. ಇಲ್ಲಿ ಆ ರೀತಿ ಹೆಸರು ಹೇಳಿಲ್ಲ. ಹಾಗಾಗಿ ತನಿಖೆ ವರದಿ ಕಾಯಬೇಕಿದೆ. ವರ್ಗಾವಣೆಯಾಗಿರುವ ಮೊತ್ತದ ಬಗ್ಗೆ ದಿನಕ್ಕೊಂದು ಮಾಹಿತಿ ಕೇಳಿಬರುತ್ತಿದೆ. ಎಂಟ್ಹೆತ್ತು ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿಯೂ ಇದೆ. ಸಿಐಡಿ ಅಧಿಕಾರಿಗಳು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದರು. +ವಿಮಾನನಿಲ್ದಾಣದಲ್ಲೇ ಪ್ರಜ್ವಲ್‌ ರೇವಣ್ಣ ಬಂಧನ :ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ವಿಮಾನನಿಲ್ದಾಣದಲ್ಲೇ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ನ್ಯಾಯಾಲಯದಿಂದ ಬಂಧನದ ವಾರೆಂಟ್‌ ಇದೆ. ಜೊತೆಗೆ ಬ್ಲೂ ಕಾರ್ನರ್‌ ನೋಟೀಸ್‌‍, ಲುಕ್‌ಔಟ್‌ ನೋಟೀಸ್‌‍ ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಚಾಲ್ತಿಯಲ್ಲಿಡಲಾಗಿದೆ. ಪ್ರಜ್ವಲ್‌ ರೇವಣ್ಣ ಬರುವುದನ್ನೇ ಅಧಿಕಾರಿಗಳು ಕಾಯುತ್ತಿದ್ದಾರೆ. ಬಂದ ಬಳಿಕ ಬಂಧಿಸಿ ಹೇಳಿಕೆ ಪಡೆಯುವುದೂ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. +ಪೆನ್‌ಡ್ರೈವ್‌ ಬಹಿರಂಗಗೊಂಡಿರುವುದಕ್ಕೆ ಸಂಬಂಧಪಟ್ಟಂತೆ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುವುದು. ಇದರಲ್ಲಿ ಕಾಂಗ್ರೆಸ್‌‍, ಬಿಜೆಪಿ ಎಂಬ ಬೇಧಭಾವವಿಲ್ಲ ಎಂದು ಹೇಳಿದರು. +ಹೈ ಪವರ್‌ ಕಮಿಟಿ ರಚನೆ :ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಸದಸ್ಯರ ಆಯ್ಕೆ ವಿಚಾರದಲ್ಲಿ ಹಿರಿಯರನ್ನು ಪಕ್ಷಕ್ಕಾಗಿ ಕೆಲಸ ಮಾಡಿದ ಅನುಭವಿಗಳನ್ನು ಸಂಪರ್ಕಿಸುವಂತೆ ನಾನು ನೀಡಿದ್ದ ಸಲಹೆಯನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಪಕ್ಷದೊಂದಿಗೆ ನಿಂತ ಸಮುದಾಯ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂಬ ಕಾರಣಕ್ಕೆ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅದನ್ನು ಪಾಲಿಸಲೇಬೇಕೆಂದೇನೂ ಇಲ್ಲ ಎಂದರು. +ಇಂತಹ ಸಂದರ್ಭದಲ್ಲಿ ಹಿರಿಯರನ್ನೊಳಗೊಂಡ ಉನ್ನತಾಧಿಕಾರಿಗಳ ಸಮಿತಿ ರಚಿಸಿ ಸಲಹೆ ಪಡೆದು ಕ್ರಮ ಕೈಗೊಳ್ಳಬೇಕು ಎಂಬುದು ನನ್ನ ನಿಲುವು. ಆದರೆ ವಿಧಾನಪರಿಷತ್‌ನಿಂದ ಆಯ್ಕೆ ಮಾಡಲು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ದೆಹಲಿಗೆ ತೆರಳಿದ್ದಾರೆ, ಕಾಲ ಮಿಂಚಿ ಹೋಗಿದೆ. ಮುಂದಿನ ದಿನಗಳಲ್ಲಾದರೂ ಇದನ್ನು ಪರಿಗಣಿಸಬಹುದು ಎಂದರು. +ನಾನು ಯಾರ ಹೆಸರನ್ನೂ ಶಿಫಾರಸ್ಸು ಮಾಡಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾರೂ ತಮನ್ನು ಸಲಹೆ ಕೇಳಿಲ್ಲ. ಇಲಾಖೆಯಲ್ಲಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಮುಖ್ಯಮಂತ್ರಿಯವರ ಜೊತೆ ಚರ್ಚಿಸಬೇಕು. ಆ ಕಾರಣಕ್ಕೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೆ. ಆ ವೇಳೆ ವಿಧಾನಪರಿಷತ್‌ ಸದಸ್ಯರ ಆಯ್ಕೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು. +ಏಳು ಸ್ಥಾನಗಳಿಗೆ 300 ಅರ್ಜಿ ಬಂದಿವೆ. ಅವುಗಳನ್ನು ಪರಿಶೀಲನೆ ನಡೆಸುವುದು ಕಷ್ಟದ ಕೆಲಸ. ಅದಕ್ಕಾಗಿಯೇ ಹೈ ಪವರ್‌ ಕಮಿಟಿ ರಚಿಸುವಂತೆ ಸಲಹೆ ನೀಡುತ್ತೇನೆ ಎಂದರು. \ No newline at end of file diff --git a/eesanje/url_46_129_5.txt b/eesanje/url_46_129_5.txt new file mode 100644 index 0000000000000000000000000000000000000000..bdab7ffea0105febb4aa15bc297e40193f555b0c --- /dev/null +++ b/eesanje/url_46_129_5.txt @@ -0,0 +1,16 @@ +ವಾಲೀಕಿ ಅಭಿವೃದ್ಧಿ ನಿಗಮದ 87 ಕೋಟಿ ಲಪಟಾಯಿಸಲು ನಡೆದಿತ್ತೇ ಸಂಚು..? +ಬೆಂಗಳೂರು, ಮೇ 29-ವಾಲ್ಮೀಕಿ ಅಭಿವೃದ್ದಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ 87 ಕೋಟಿ ರೂ.ಗಳನ್ನು ಲಪಟಾಯಿಸುವ ಸಂಚು ನಡೆದಿತ್ತೇ ಎಂಬ ಶಂಕೆಯ ಕುರಿತು ಚರ್ಚೆಗಳು ಆರಂಭಗೊಂಡಿವೆ. +ಆತಹತ್ಯೆಗೆ ಶರಣಾದ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಪಿ. ಅವರ ಮರಣ ಹೇಳಿಕೆಯ ಪತ್ರ ಹಾಗೂ ಸಚಿವರು ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಪ್ರಯಾಸದಿಂದ ಪ್ರಸ್ತಾಪಿಸಿದ ಕೆಲ ವಿಚಾರಗಳು ಹಣಕಾಸಿನ ಅವ್ಯವಹಾರದ ಕುರಿತು ಗುಮಾನಿ ಹೆಚ್ಚಿಸಿವೆ. ಚಂದ್ರಶೇಖರನ್‌ ಅವರ ಆತಹತ್ಯೆಯಾಗದೇ ಇದ್ದರೆ ನಿಗಮದ ಕೋಟ್ಯಂತರ ರೂಪಾಯಿಗಳು ನಿರಾಯಾಸವಾಗಿ ಅನ್ಯರ ಪಾಲಾಗಬಹುದಿತ್ತೇನೋ? ಎಂಬ ಶಂಕೆಗಳು ಕೇಳಿಬರಲಾರಂಭಿಸಿವೆ. +ಈ ಮೊದಲು ಅಂತಾರಾಷ್ಟ್ರೀಯ ಹ್ಯಾಕರ್‌ ಶ್ರೀಕಿ ರಾಜ್ಯಸರ್ಕಾರದ ಇ-ಪ್ರೊಕ್ಯೂರೆಂಟ್‌ ಖಾತೆಗೆ ಕನ್ನ ಹಾಕಿ ಕೋಟ್ಯಂತರ ರೂ.ಗಳನ್ನು ಲಪಟಾಯಿಸಿದ್ದ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದರೂ ಪೊಲೀಸರಿಗೆ ಹ್ಯಾಕಿಂಗ್‌ನ ಮೂಲ ಪತ್ತೆ ಮಾಡಲಾಗಿಲ್ಲ. ವಾಲೀಕಿ ಅಭಿವೃದ್ಧಿ ನಿಗಮದ ಹಣವನ್ನು ಅದೇ ರೀತಿ ಲಪಟಾಯಿಸಲು ಷಡ್ಯಂತ್ರವಾಗಿರುವ ಚರ್ಚೆಗಳಿವೆ. +ಅನ್ಯರ ಪಾಲಾದ ಚೆಕ್‌ಪುಸ್ತಕ :ಇಡೀ ಹಗರಣ ಬೆಳಕಿಗೆ ಬರಲು ಚೆಕ್‌ಪುಸ್ತಕ ಅನ್ಯರ ಪಾಲಾಗಿದ್ದು ಮೂಲ ಕಾರಣ ಎಂದು ತಿಳಿದುಬಂದಿದೆ. ಒಂದು ವೇಳೆ ಎಲ್ಲವೂ ವ್ಯವಸ್ಥಿತವಾಗಿ ನಡೆದಿದ್ದರೆ ಹಗರಣವೇ ಬೆಳಕಿಗೆ ಬರದಂತೆ ಮುಚ್ಚಿ ಹೋಗುವ ಸಾಧ್ಯತೆಯಿತ್ತು. ಜೊತೆಗೆ ಹಂತಹಂತವಾಗಿ ಹಣ ಕಳ್ಳತನವಾಗಬಹುದಿತ್ತು ಅಥವಾ ಬ್ಯಾಂಕ್‌ ಖಾತೆಯಲ್ಲಿ ಕೊಳೆಯುತ್ತಾ ಅನುಪಯುಕ್ತವಾಗಿ ಉಳಿದುಹೋಗಬಹುದಿತ್ತು ಎನ್ನಲಾಗಿದೆ. +ಈಗಾಗಲೇ ಏಳೆಂಟು ಐಟಿ ಸೇರಿದಂತೆ ವಿವಿಧ ಕಂಪೆನಿಗಳ ಖಾತೆಗೆ ಹಣ ವರ್ಗಾವಣೆಯಾಗಿರುವುದು ಈ ಅನುಮಾನವನ್ನು ದೃಢಪಡಿಸಿದೆ.ಮೃತ ಚಂದ್ರಶೇಖರನ್‌ ಅವರ ಮರಣಪತ್ರದ ಅನುಸಾರ ಸಚಿವರ ಮೌಖಿಕ ಆದೇಶದ ಮೇರೆಗೆ ಎಂ.ಜಿ.ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ನಿಗಮದ ಹೆಸರಿಗೆ ಮತ್ತೊಂದು ಉಪಖಾತೆ ತೆರೆಯಲಾಗಿದೆ. +ವಸಂತನಗರದ ಯೂನಿಯನ್‌ ಬ್ಯಾಂಕ್‌ ಶಾಖೆಯಲ್ಲಿನ ನಿಗಮದ ಸ್ವೆಪ್ಪಿಂಗ್‌-ಸೆಪ್‌ಔಟ್‌ ಉಳಿತಾಯ ಖಾತೆಯನ್ನು ಎಂ.ಜಿ.ರಸ್ತೆಯ ಶಾಖೆಗೆ ವರ್ಗಾಯಿಸಲು ಬ್ಯಾಂಕ್‌ ಮ್ಯಾನೇಜರ್‌ ಒಪ್ಪಿಕೊಂಡಿಲ್ಲ. ಹೀಗಾಗಿ ಎಂ.ಜಿ.ರಸ್ತೆ ಬ್ಯಾಂಕ್‌ನಲ್ಲಿ ಉಪಖಾತೆ ತೆರೆಯಲಾಗಿದೆ. ಮಾರ್ಚ್‌ 4 ರಂದು 25 ಕೋಟಿ, ಮಾರ್ಚ್‌ 6 ರಂದು 25, ಮಾ.21 ರಂದು 44 ಹಾಗೂ ರಾಜ್ಯ ಹುಜೂರ್‌ ಖಜಾನೆಯಿಂದ 43.33, ಮೇ 21 ರಂದು 50 ಕೋಟಿ ರೂ. ಸೇರಿ 137 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಲಾಗಿದೆ. +ಉಪಖಾತೆಗೆ ಸಂಬಂಧಪಟ್ಟಂತೆ ಎಂ.ಜಿ.ರಸ್ತೆಯ ಬ್ಯಾಂಕ್‌ನಿಂದ ನಿಗಮದ ಅಧೀಕ್ಷಕರಿಗೆ ಚೆಕ್‌ಪುಸ್ತಕ ಹಾಗೂ ಪಾಸ್‌‍ಪುಸ್ತಕಗಳನ್ನು ಕೊಟ್ಟಿಲ್ಲ. ಚಂದ್ರಶೇಖರನ್‌ ಅವರು ಕೆಲಸದ ಒತ್ತಡದಿಂದಾಗಿ ಇದನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಬರೆದುಕೊಂಡಿದ್ದಾರೆ.ಇತ್ತೀಚೆಗೆ ಎಲ್ಲಾ ವ್ಯವಹಾರಗಳು ಆನ್‌ಲೈನ್‌ ಬ್ಯಾಂಕಿಂಗ್‌ನಲ್ಲೇ ನಡೆಯುವುದರಿಂದಾಗಿ ಚೆಕ್‌ ಪುಸ್ತಕದ ಅವಶ್ಯಕತೆಯೂ ಇರಲಿಲ್ಲ ಎಂದು ಹೇಳಿದ್ದಾರೆ. +ಹಣ ವರ್ಗಾವಣೆಯನ್ನು ಒತ್ತಾಯಪೂರ್ವಕವಾಗಿ ಮಾಡಿಸಲಾಗಿತ್ತು. ಇದರ ಒಳಸಂಚು ತಮಗೆ ಅರಿವಾಗಲೇ ಇಲ್ಲ. ಎಂ.ಜಿ.ರಸ್ತೆಯ ಖಾತೆಯಲ್ಲಿನ ಹಣದ ಲೆಕ್ಕಾಚಾರಗಳನ್ನು ಕೇಳಿದಾಗ ಅದನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ಕೊಡಲು ಮಾತ್ರ ಅವಕಾಶವಿದೆ ಎಂದು ಬ್ಯಾಂಕ್‌ ಮ್ಯಾನೇಜರ್‌ ತಿಳಿಸಿದ್ದರು. +ವ್ಯವಸ್ಥಾಪಕ ನಿರ್ದೇಶಕರ ಪತ್ರದೊಂದಿಗೆ ಬರುತ್ತೇನೆ ಎಂದು ತಾವು ಹೇಳಿದಾಗ, ನಾನೇ ನಿಮ ನಿಗಮದ ಕಚೇರಿಗೆ ಬರುತ್ತೇನೆ ಎಂದು ಬ್ಯಾಂಕ್‌ ಮ್ಯಾನೇಜರ್‌ ಹೇಳಿದ್ದರು ಎಂದು ವಿವರಿಸಿದ್ದಾರೆ. +ನಿಗಮದ ಕಚೇರಿಗೆ ಬಂದ ಬ್ಯಾಂಕ್‌ ಮ್ಯಾನೇಜರ್‌, ಖಾತೆಯ ಚೆಕ್‌ಪುಸ್ತಕ ಹಾಗೂ ಪಾಸ್‌‍ಪುಸ್ತಕಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ. ಇದು ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧೀಕ್ಷಕರು ಮತ್ತು ಲೆಕ್ಕಾಧಿಕಾರಿಗಳನ್ನು ದಂಗುಬಡಿಸಿದೆ.ನಾವ್ಯಾರೂ ಪಾಸ್‌‍ಪುಸ್ತಕವನ್ನಾಗಲೀ, ಚೆಕ್‌ಪುಸ್ತಕವನ್ನಾಗಲಿ ತೆಗೆದುಕೊಂಡಿಲ್ಲ ಎಂದು ನಿಗಮದ ಸಿಬ್ಬಂದಿಗಳು ಹಲವು ಸುತ್ತಿನ ಪರಿಶೀಲನೆ ಬಳಿಕ ಖಚಿತಪಡಿಸಿದ್ದಾರೆ. ಯಾವುದೋ ಗೋಲ್‌ಮಾಲ್‌ ನಡೆಯುತ್ತಿದೆ ಎಂದು ಅನುಮಾನಗೊಂಡು ನಿಗಮದ ಮೂವರು ಅಧಿಕಾರಿಗಳು ಮೇ 23 ರಂದು ಯೂನಿಯನ್‌ ಬ್ಯಾಂಕ್‌ನ ಪ್ರಾದೇಶಿಕ ಮುಖ್ಯಸ್ಥರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. +ಆಗ ವ್ಯವಸ್ಥಾಪಕ ನಿರ್ದೇಶಕರಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರ ಸಿಬ್ಬಂದಿ ನಾಗರಾಜ್‌ ಕರೆ ಮಾಡಿ, ಎಲ್ಲಾ ಮೊತ್ತ ವಾಪಸ್‌‍ ಬಂದೇ ಬರುತ್ತದೆ. ಆವರೆಗೂ ವಿಷಯವನ್ನು ಗೌಪ್ಯವಾಗಿಡಿ ಎಂದು ಸೂಚನೆ ನೀಡಿದ್ದರಂತೆ. ಅದರಂತೆ ಅಂದು ಸಂಜೆ 5 ಕೋಟಿ ರೂ.ಗಳು ನಿಗಮದ ಬ್ಯಾಂಕ್‌ ಖಾತೆಗೆ ಮರಳಿ ಬಂದಿವೆ. +ಇಲ್ಲಿ ಮೂಲಪ್ರಶ್ನೆ ಇರುವುದು ನಿಗಮದ ಬ್ಯಾಂಕ್‌ ಉಪಖಾತೆಯ ಪಾಸ್‌‍ಬುಕ್‌ ಮತ್ತು ಚೆಕ್‌ಪುಸ್ತಕಗಳನ್ನು ಅನಾಮಧೇಯ ವ್ಯಕ್ತಿಗಳು ಪಡೆದುಕೊಂಡಿದ್ದು ಹೇಗೆ? ಎಂಬುದು.ಚಂದ್ರಶೇಖರನ್‌ ಅವರು ತಮ ಮರಣಪತ್ರದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ, ನಿಗಮಕ್ಕೆ ಮೋಸ, ವಂಚನೆ ಮಾಡಿಲ್ಲ. ಈ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಕೆಲಸದ ಒತ್ತಡದಿಂದಾಗಿ ಚೆಕ್‌ಪುಸ್ತಕ ಮತ್ತು ಪಾಸ್‌‍ಪುಸ್ತಕಗಳನ್ನು ತೆಗೆದುಕೊಳ್ಳದೇ ಇರುವುದೇ ನನ್ನ ದೊಡ್ಡ ಲೋಪವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. +ನಾನು ಹೇಡಿ ಅಲ್ಲ, ಆದರೆ ಅವಮಾನ ಸಹಿಸಲಾರೆ, ನನಗೆ ಬೇರೆ ದಾರಿ ತೋಚುತ್ತಿಲ್ಲ ಎಂದು ಉಲ್ಲೇಖಿಸಿದ್ದಾರೆ.ಮೂಲಗಳ ಪ್ರಕಾರ, ಹಣ ವರ್ಗಾವಣೆಯಾಗಿದ್ದರ ಹಿಂದೆ ದೊಡ್ಡ ಸಂಚಿತ್ತು. ಮುಂದಿನ ದಿನಗಳಲ್ಲಿ ಅದನ್ನು ಆನ್‌ಲೈನ್‌ ವಂಚನೆಯ ಹೆಸರಿನಲ್ಲಿ ಕಬಳಿಸುವ ಹುನ್ನಾರ ಅಡಗಿತ್ತು ಎನ್ನಲಾಗಿದೆ. +ಸದ್ಯದ ಪರಿಸ್ಥಿತಿಯಲ್ಲಿ ಪ್ರಭಾವಿಗಳ ಆಪ್ತರಿಗೆ ಬ್ಯಾಂಕ್‌ನಿಂದ ಸಹಾಯ ಮತ್ತು ಲಾಭವಾಗಲಿದೆ ಎಂಬ ಕಾರಣಕ್ಕೆ ಹಣ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.ವಾಲೀಕಿ ಅಭಿವೃದ್ಧಿ ನಿಗಮದಲ್ಲಷ್ಟೇ ಅಲ್ಲ ಹಲವಾರು ನಿಗಮಗಳಲ್ಲಿ ಇದೇ ರೀತಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ನಿಶ್ಚಿತ ಠೇವಣಿ ಇರಿಸಿ ಬ್ಯಾಂಕ್‌ಗಳಿಂದ ವೈಯಕ್ತಿಕ ಲಾಭ ಪಡೆದುಕೊಳ್ಳುವುದು ಹಲವಾರು ವರ್ಷಗಳಿಂದ ನಡೆದುಬಂದಿದೆ. +ಈ ಹಿಂದೆ ಎಚ್‌.ಕೆ.ಪಾಟೀಲ್‌ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದಾಗ ಈ ರೀತಿಯ ಹಗರಣವನ್ನು ಪತ್ತೆ ಹಚ್ಚಿ ಕೆಲವರ ವಿರುದ್ಧ ಕ್ರಮ ಜರುಗಿಸಿದ ಉದಾಹರಣೆಗಳಿವೆ.ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿ ಪ್ರಭಾವಿಗಳು ನುಣುಚಿಕೊಳ್ಳುವ ಯತ್ನ ನಡೆಯುತ್ತಿದೆ ಎಂಬ ಟೀಕೆಗಳು ಜೋರಾಗಿವೆ. \ No newline at end of file diff --git a/eesanje/url_46_129_6.txt b/eesanje/url_46_129_6.txt new file mode 100644 index 0000000000000000000000000000000000000000..4a88ea8abbab6a4e6d11f589af131b4ad0ce347f --- /dev/null +++ b/eesanje/url_46_129_6.txt @@ -0,0 +1,10 @@ +ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟ +ಬೆಂಗಳೂರು, ಮೇ 29-ಕರ್ನಾಟಕ ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅಧೀಕ್ಷಕ ಚಂದ್ರಶೇಖರನ್‌ ಅನುಮಾನಸ್ಪದ ಆತಹತ್ಯೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡಕ್ಕೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಸಜ್ಜಾಗುತ್ತಿದೆ. +ಆತಹತ್ಯೆ ಮಾಡಿಕೊಳ್ಳುವ ಮುನ್ನ ಚಂದ್ರಶೇಖರನ್‌ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ನನಗೆ ಸಾಕಷ್ಟು ಒತ್ತಡ ಮತ್ತು ಬೆದರಿಕೆ ಇತ್ತು ಎಂದು ಉಲ್ಲೇಖ ಮಾಡಿರುವುದನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ, ಹಿಂದುಳಿದ ವರ್ಗಗಳ ಇಲಾಖೆಯ ಸಚಿವರೂ ಆಗಿರುವ ನಾಗೇಂದ್ರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಹೋರಾಟಕ್ಕೆ ಅಣಿಯಾಗುತ್ತಿದೆ. +ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ್ದೇವೆ ಎಂದು ಸಚಿವರು ಹೇಳಿಕೊಳ್ಳುತ್ತಿದ್ದಾರೆ. ಈ ತನಿಖಾ ಸಂಸ್ಥೆಯು ಸರ್ಕಾರದ ಅಡಿಯಲ್ಲೇ ಇರುವ ಕಾರಣ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಒಂದು ವೇಳೆ ಸಚಿವರ ಪಾತ್ರ ಇರುವುದು ಗೊತ್ತಾದರೆ ಮುಜುಗರದಿಂದ ತಪ್ಪಿಸಿಕೊಳ್ಳಲು ಸರ್ಕಾರ ಸಚಿವರ ರಕ್ಷಣೆಗೆ ನಿಲ್ಲಬಹುದು. ಹೀಗಾಗಿ ನಾಗೇಂದ್ರ ಮೊದಲು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬುದು ಬಿಜೆಪಿಯ ಒತ್ತಾಸೆಯಾಗಿದೆ. +ಎರಡು ದಿನಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿರುವ ಬಿಜೆಪಿ ನಂತರ ಹಂತಹಂತವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸಿದೆ.ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾಗಿದ್ದ ಕೆ.ಎಸ್‌‍.ಈಶ್ವರಪ್ಪ ಅವರ ಪ್ರಕರಣದಲ್ಲಿ ಅಂದು ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌‍ ರಾಜೀನಾಮೆ ನೀಡುವವರೆಗೂ ಬಿಟ್ಟಿರಲಿಲ್ಲ. +ಇದೀಗ ಈ ಅಸ್ತ್ರವನ್ನೇ ಶಸಾ್ತ್ರಸ್ತ್ರವನ್ನಾಗಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ನಾಗೇಂದ್ರ ರಾಜೀನಾಮೆ ನೀಡಲೇಬೇಕೆಂದು ಹೋರಾಟಕ್ಕೆ ಆಗ್ರಹಿಸಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದವರೆಗೂ ಹೋರಾಟವನ್ನು ಹಂತಹಂತವಾಗಿ ನಡೆಸಬೇಕೆಂದು ಘಟಕಗಳಿಗೆ ಸೂಚನೆ ನೀಡಲಾಗಿದೆ. +ಚಂದ್ರಶೇಖರನ್‌ ಆತಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಪ್ರಕರಣದ ತನಿಖೆ ಸಿಐಡಿಗೆ ನೀಡಿದರೂ, ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರ ಆಗ್ರಹವಾಗಿದೆ. +ವಾಲೀಕಿ ನಿಗಮದ ಅಧಿಕಾರಿ ಆತಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಆಕೋಶ ವ್ಯಕ್ತಪಡಿಸಿದ್ದರು. ಚಂದ್ರಶೇಖರನ್‌ ಆತಹತ್ಯೆ ಪ್ರಕರಣ ಒಂದು ಸ್ಯಾಂಪಲ್‌ ಅಷ್ಟೇ. ಇಂತಹ ನೂರಾರು ಅಧಿಕಾರಿಗಳು ಒತ್ತಡದಲ್ಲಿದ್ದಾರೆ. ಪಾರದರ್ಶಕ ಆಡಳಿತ ಅಂದಿದ್ದು ಸಿದ್ದರಾಮಯ್ಯ, ಇದೇನಾ? ಅಧಿಕಾರಿಯಿಂದಲೇ ಚೆಕ್‌ ಬರೆಸಿ ಬಲಿ ಕೊಟ್ಟಿದ್ದಾರೆ ಎಂದರು. +ಅಧಿಕಾರಿಗಳು ಇಂಥ ಕೆಲಸ ಮಾಡ್ಕೋಬೇಡಿ, ಆತಹತ್ಯೆ ಕೆಲಸಕ್ಕೆ ಮುಂದಾಗಬೇಡಿ. ಅಧಿಕಾರಿಗಳ ಪರ ಬಿಜೆಪಿ ಇದೆ. ಗೂಂಡಾಗಳು ಬೀದಿಗೆ ಬಂದಿದ್ದಾರೆ. ಅಧಿಕಾರಿ ಆತಹತ್ಯೆಗೆ ಸಿಎಂ ಅವರೇ ನೇರ ಜವಾಬ್ದಾರರು ಹಾಗೂ ಇಲಾಖೆ ಸಚಿವರು ಜವಾಬ್ದಾರರು. ಪ್ರಕರಣದ ತನಿಖೆ ಸಿಬಿಐಗೆ ವಹಿಸಲಿ, ಆಗ ಸತ್ಯ ಹೊರಗೆ ಬರುತ್ತೆ ಎಂದು ಆಗ್ರಹಿಸಿದ್ದರು. +ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್‌‍.ಈಶ್ವರಪ್ಪ ರಾಜೀನಾಮೆ ಕೊಡಿಸುವಲ್ಲಿ ಕಾಂಗ್ರೆಸ್‌‍ ಯಶಸ್ವಿ ಆಗಿತ್ತು. ವಿಧಾನಸೌಧದಲ್ಲಿ ಕಾಂಗ್ರೆಸ್‌‍ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಹಮಿಕೊಂಡಿತ್ತು. ಕಾಂಗ್ರೆಸ್‌‍ ಪ್ರತಿಭಟನೆಗೆ ಮಣಿದು ಈಶ್ವರಪ್ಪ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾಗಿ ಬಂತು. ಇದೀಗ ಇದೇ ಮಾದರಿಯಲ್ಲಿ ಬಿಜೆಪಿ ಹೋರಾಟ ರೂಪಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ. \ No newline at end of file diff --git a/eesanje/url_46_129_7.txt b/eesanje/url_46_129_7.txt new file mode 100644 index 0000000000000000000000000000000000000000..59e9fd41054eaf0c3495430ffdc695b60f265a23 --- /dev/null +++ b/eesanje/url_46_129_7.txt @@ -0,0 +1,15 @@ +ಮ್ಯೂನಿಚ್‌ನಿಂದ ಬೆಂಗಳೂರಿಗೆ ಟಿಕೆಟ್‌ ಬುಕ್ ಮಾಡಿದ ಪ್ರಜ್ವಲ್‌ ರೇವಣ್ಣ +ಬೆಂಗಳೂರು, ಮೇ 29- ಲೈಂಗಿಕ ಕಿರುಕುಳದ ಆರೋಪಕ್ಕೆ ಸಿಲುಕಿ ಜೆಡಿಎಸ್‌‍ನಿಂದ ಅಮಾನತುಗೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 30 ರಂದು ಮಧ್ಯರಾತ್ರಿ ಮ್ಯೂನಿಚ್‌ನಿಂದ ಬೆಂಗಳೂರಿಗೆ ಹಿಂತಿರುಗಲು ವಿಮಾನ ಟಿಕೆಟ್‌ ಕಾಯ್ದಿರಿಸಿದ್ದಾರೆ. +ನಾಳೆ ಮಧ್ಯರಾತ್ರಿ 12.30 ಕ್ಕೆ ಬೆಂಗಳೂರಿಗೆ ಬರುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲೇ ಬಂಧನಕ್ಕೆ ಒಳಗಾಗುವ ಸಾಧ್ಯತೆಗಳಿವೆ. ಎಸ್‌‍ಐಟಿ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್‌ ಬಂಧನಕ್ಕೆ ಸಜ್ಜಾಗಿದ್ದಾರೆ. ಮಧ್ಯರಾತ್ರಿ ಬಂಧಿಸುವ ಕಾರಣ ಜೂನ್‌ 1ಕ್ಕೆ ವಿಚಾರಣೆ ನಡೆಯಬಹುದು. +ಜೆಡಿಎಸ್‌‍ ವರಿಷ್ಠ ಹೆಚ್‌.ಡಿ.ದೇವೇಗೌಡರ 33 ವರ್ಷದ ಮೊಮಗ ಪ್ರಜ್ವಲ್‌ ರೇವಣ್ಣ ತನ್ನ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ವಿಮಾನ ಟಿಕೆಟ್‌ ಬುಕ್‌ ಮಾಡಿದ್ದಾರೆ. ಲ್ತುಾನ್ಸಾ ಏರ್‌ಲೈನ್‌್ಸನಲ್ಲಿ ಬ್ಯುಸಿನೆಸ್‌‍ ಕ್ಲಾಸ್‌‍ ಟಿಕೆಟ್‌ ಬುಕ್‌ ಮಾಡಿಕೊಂಡಿದ್ದು, ಮೇ 30ರಂದು ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. +ಹಾಸನ ಲೋಕಸಭೆ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿರುವ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಸಾರ್ವಜನಿಕವಾಗಿ ಬಹಿರಂಗಗೊಂಡ ನಂತರ ಬಂಧನದ ಭೀತಿಯಿಂದ ತಕ್ಷಣ ವಿದೇಶಕ್ಕೆ ಪಲಾಯನ ಮಾಡಿದ್ದರು. +ಇದರ ಬಗ್ಗೆ ತನಿಖೆಗೆ ಆದೇಶಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ ಎಂಬ ಸುದ್ದಿ ಹೊರಬಿದ್ದ ತಕ್ಷಣವೇ ಸರ್ಕಾರ ತನಿಖೆಗೆ ಎಸ್‌‍ ಐಟಿ ರಚನೆ ಮಾಡಿತ್ತು. ಇದುವರೆಗೆ ಪ್ರಜ್ವಲ್‌ ವಿರುದ್ಧ ಎರಡು ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. +ಇನ್ನು, ಈ ಹಿಂದೆ ಕೂಡ ಸಂಸದ ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಬೆಂಗಳೂರಿಗೆ ಟಿಕೆಟ್‌ ಬುಕ್‌ ಮಾಡಿದ್ದರು. ಆದರೆ., ಕೊನೆ ಕ್ಷಣದಲ್ಲಿ ಅದು ರದ್ದಾಗಿತ್ತು. ಟಿಕೆಟ್‌ ಕ್ಯಾನ್ಸಲ್‌ ಮಾಡಿಸಿ ನಾಲ್ಕು ದಿನಗಳಾಗಿದ್ದರೂ ಪ್ರಜ್ವಲ್‌ ಬುಕ್ಕಿಂಗ್‌ ಮಾಡಿದ ಹಣ ವಾಪಸ್‌‍ ಪಡೆದಿರಲಿಲ್ಲ. +ಮರುಬುಕಿಂಗ್‌ಗಾಗಿ ಹಣವನ್ನು ಮುಂಗಡವಾಗಿ ಹಾಗೆಯೇ ಬಿಟ್ಟಿದ್ದರು. ಆದರೆ, ಅವರು ವಿಮಾನ ನಿಲ್ದಾಣಕ್ಕೆ ಬರುತ್ತಾರೆ ಎಂಬ ಮಾಹಿತಿ ಮೇರೆಗೆ ಎಸ್‌‍ಐಟಿ (ವಿಶೇಷ ತನಿಖಾ ತಂಡ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಮುನ್ನೆಚ್ಚರಿಕೆ ವಹಿಸಿತ್ತು. +ಈಗಾಗಲೇ ಬೆಂಗಳೂರಿಗೆ ಬರಲು ಎರಡು ಬಾರಿ ವಿಮಾನ ಟಿಕೆಟ್‌ ಬುಕ್‌ ಮಾಡಿ, ಕೊನೆ ಕ್ಷಣದಲ್ಲಿ ಟಿಕೆಟ್‌ ರದ್ದು ಮಾಡಿ, ಎಸ್‌‍ಐಟಿ ಅಧಿಕಾರಿಗಳನ್ನು ಆಟವಾಡಿಸಿದ್ದರು. ಈಗ ತಾವೇ ವಿಶೇಷ ತನಿಖಾ ತಂಡದ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿದ್ದಾರೆ. + + +ಹೀಗಾಗಿ ಪ್ರಜ್ವಲ್‌ ರೇವಣ್ಣ ಹೇಳಿದಂತೆಯೇ ಮೇ 30ರಂದು ಬೆಂಗಳೂರಿಗೆ ಬರುತ್ತಾರಾ..? ಇಲ್ಲ ಕಳೆದೆರಡು ಬಾರಿಯಂತೆ ಮತ್ತೆ ಏನಾದರೂ ಆಟವಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.ಪ್ರಕರಣದ ಬಳಿಕ ಮೊದಲ ಬಾರಿಗೆ ಜನರ ಎದುರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೊದಲು ನನ್ನ ತಂದೆ ತಾಯಿ, ನನ್ನ ತಾತ, ಕುಮಾರಣ್ಣ, ಕರ್ನಾಟಕದ ಜನತೆ ಮತ್ತು ಎಲ್ಲಾ ಪಕ್ಷದ ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದಿದ್ದರು. +ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್‌ ಆಗಿತ್ತು. ಆಗ ನನ್ನ ಮೇಲೆ ಯಾವುದೇ ಆರೋಪ ಇರಲಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್‌ ನ್ಯೂಸ್‌‍ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ಎಸ್‌‍ಐಟಿ ನೋಟಿಸ್‌‍ ನೀಡಿದ ವಿಚಾರ ಗೊತ್ತಾಯಿತು. +ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ. ಒಂದು ದಿನದ ನಂತರ, ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್‌‍ ನಾಯಕರು ನನ್ನ ವಿರುದ್ಧ ಬಹಿರಂಗ ವೇದಿಕೆಗಳಲ್ಲಿ ಪ್ರಚಾರ ಮಾಡಲು ಪ್ರಾರಂಭಿಸಿದರು ಮತ್ತು ನನ್ನ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಸಿದರು. +ನಾನು ಖಿನ್ನತೆಗೆ ಜಾರಿದ್ದೆ .ಈ ಖಿನ್ನತೆಯಿಂದ ಹೊರ ಬರಲು ಸಮಯ ಬೇಕಿತ್ತು. ಮೇ 31ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌‍ಐಟಿ ಮುಂದೆ ಹಾಜರಾಗುತ್ತೇನೆ. ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನನ್ನ ವಿರುದ್ಧದ ಪ್ರಕರಣಗಳು ಸುಳ್ಳಾಗಿದ್ದು, ಅದರಿಂದ ಹೊರಬರುವ ವಿಶ್ವಾಸವಿದೆ ಎಂದು ಹೇಳಿದ್ದರು. \ No newline at end of file diff --git a/eesanje/url_46_129_8.txt b/eesanje/url_46_129_8.txt new file mode 100644 index 0000000000000000000000000000000000000000..180282d12aee976d25a9761f754ba3f5770220c6 --- /dev/null +++ b/eesanje/url_46_129_8.txt @@ -0,0 +1,4 @@ +ಪಕ್ಷವಿರೋಧಿ ಚಟುವಟಿಕೆ : ಜೆಡಿಎಸ್‌‍ನಿಂದ ಯಶೋಧಾ ರಾಜಣ್ಣ ಅಮಾನತ್ತು +ಬೆಂಗಳೂರು, ಮೇ 29-ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ ವಿಧಾನ ಸಭಾ ಕ್ಷೇತ್ರದ ಮುಖಂಡರಾದ ಯಶೋಧಾ ರಾಜಣ್ಣ ಅವರನ್ನು ಜೆಡಿಎಸ್‌‍ ಪ್ರಾಥಮಿಕ ಸದಸ್ಯತ್ವದಿಂದ ಅಮಾನತ್ತು ಮಾಡಲಾಗಿದೆ. +ಜೆಡಿಎಸ್‌‍ ನಗರ ಘಟಕದ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ಅವರು ಅಮಾನತ್ತು ಆದೇಶ ಹೊರಡಿಸಿದ್ದಾರೆ. ಯಶೋಧಾ ರಾಜಣ್ಣ ಅವರು ಕಳೆದ ಹಲವು ದಿನಗಳಿಂದ ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಕೊಂಡು ಬಂದಿದ್ದರು. ಈ ಬಗ್ಗೆ ಹಲವಾರು ಬಾರಿ ಅವರಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು. ಆದರೂ ಅವರು ಪಕ್ಷದ ಆದೇಶವನ್ನು ಧಿಕ್ಕರಿಸಿ ಪಕ್ಷ ವಿರೋಧಿ ಕೃತ್ಯಗಳನ್ನು ಮುಂದುವರಿಸಿದ್ದರು ಎಂದು ರಮೇಶ್‌ಗೌಡ ತಿಳಿಸಿದ್ದಾರೆ. +ಅಲ್ಲದೆ, ಮಹಾಲಕ್ಷ್ಮಿ ಲೇಔಟ್‌ನ ಜೆಡಿಎಸ್‌‍ ಪಕ್ಷದ ಮುಖಂಡರು ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್‌.ಡಿ.ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಶೋಧಾ ರಾಜಣ್ಣ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_129_9.txt b/eesanje/url_46_129_9.txt new file mode 100644 index 0000000000000000000000000000000000000000..6f3e4ccb8d4a6660148f19e658f5ff2d8f25c655 --- /dev/null +++ b/eesanje/url_46_129_9.txt @@ -0,0 +1,7 @@ +ಪರಿಷತ್‌ ಚುನಾವಣೆ : ಭಾನುವಾರ ಜೆಡಿಎಸ್‌‍ ಸಭೆ, ಜವರಾಯಿಗೌಡರಿಗೆ ಟಿಕೆಟ್‌ ಸಾಧ್ಯತೆ +ಬೆಂಗಳೂರು, ಮೇ 29-ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾಣೆಗೆ ಸಂಬಂಧಿಸಿದ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ ಕುರಿತ ಸಭೆ ಮೇ 2ರಂದು ನಡೆಯಲಿದೆ. +ವಿಧಾನ ಪರಿಷತ್‌ ಚುನಾವಣೆಗೆ ಸ್ಪರ್ಧಿಸಲು ನಾಲ್ವರು ಆಕಾಂಕ್ಷಿಗಳು ಜೆಡಿಎಸ್‌‍ನಲ್ಲಿದ್ದಾರೆ. ಭಾನುವಾರ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಬಿ ಫಾರಂ ನೀಡಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. +ನಾಲ್ವರು ಆಕಾಂಕ್ಷಿಗಳಿದ್ದರೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌‍ ಅಭ್ಯರ್ಥಿಯಾಗಿದ್ದ ಟಿ.ಎನ್‌.ಜವರಾಯಿಗೌಡ ಅವರ ಹೆಸರು ಮುಂಚೂಣಿಯಲ್ಲಿದೆ. ಯಶವಂತಪುರ ಕ್ಷೇತ್ರದಲ್ಲಿ ಮೂರು ಸಾರ್ವತ್ರಿಕ ಚುನಾವಣೆ ಹಾಗೂ ಒಂದು ಉಪ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಜೆಡಿಎಸ್‌‍ನ ನಿಷ್ಠಾವಂತ ಕಾರ್ಯಕರ್ತರಾಗಿರುವ ಹಿನ್ನೆಲೆಯಲ್ಲಿ ವರಿಷ್ಠರು ಮೇಲನೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಲೋಕಸಭೆ ಚುನಾವಣೆಯ ನಂತರ ನಡೆಯುತ್ತಿರುವ ಚುನಾವಣೆಗಳಲ್ಲಿ ಜೆಡಿಎಸ್‌‍ ಪಕ್ಷವು ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುತ್ತಿದೆ. ಹೀಗಾಗಿ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿರುವುದರಿಂದ ಮುಂದೆ ಆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ, ಜವರಾಯಿಗೌಡ ಅವರ ಸ್ಪರ್ಧೆಗೆ ಅವಕಾಶವಿಲ್ಲದಂತಾಗುತ್ತದೆ ಎಂಬ ಆಲೋಚನೆ ವರಿಷ್ಠರಲ್ಲಿರಬಹುದು. +ಜೂನ್‌ 17ರಂದು ನಿವೃತ್ತರಾಗುವ ವಿಧಾನ ಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌ ಅವರು ಮರು ಸ್ಪರ್ಧೆ ಮಾಡಲು ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಅವರೂ ವಿಧಾನ ಪರಿಷ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬೆಂಗಳೂರು ಮಹಾನಗರ ಜೆಡಿಎಸ್‌‍ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಅವರು ಕೂಡ ಆಕಾಂಕ್ಷಿಯಾಗಿದ್ದಾರೆ. +ಫಾರೂಕ್‌ ಮತ್ತು ಕುಪೇಂದ್ರರೆಡ್ಡಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಭೆಯಲ್ಲಿ ವರಿಷ್ಠರು ಯಾವ ನಿರ್ಧಾರ ಕೈಗೊಳ್ಳುವರೋ ಕಾದುನೋಡಬೇಕು. ಕೊನೆ ಕ್ಷಣದಲ್ಲಿ ಯಾರಿಗೆ ಟಿಕೆಟ್‌ ಸಿಗಲಿದೆ ಎಂಬ ಕುತೂಹಲವಿದೆ. \ No newline at end of file diff --git a/eesanje/url_46_12_1.txt b/eesanje/url_46_12_1.txt new file mode 100644 index 0000000000000000000000000000000000000000..abac105904ecbfea139222e1b0ea974f7bcd5eac --- /dev/null +++ b/eesanje/url_46_12_1.txt @@ -0,0 +1,8 @@ +ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಗೆ ಚಾಲನೆ + +ಬೆಂಗಳೂರು,ಸೆ.23-ಅಪಘಾತದಂತಹ ತುರ್ತು ಸಂದರ್ಭದಲ್ಲಿ ಜೀವ ರಕ್ಷಣೆ ಮಾಡುವ ಮಹದುದ್ದೇಶದಿಂದ ಮುಖ್ಯಮಂತ್ರಿಗಳ ಆಪತ್ಕಾಲಯಾನ ಆ್ಯಂಬುಲೆನ್ಸ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. +ವಿಧಾನಸೌಧದ ಮೆಟ್ಟಿಲುಗಳ ಮೇಲೆ 65 ನೂತನ ಆ್ಯಂಬುಲೆನ್ಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ವರ್ಷಗಳ ಸರಾಸರಿಯಂತೆ ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು. +ಪ್ರಸ್ತುತ ಚಾಲ್ತಿಯಲ್ಲಿರುವ 108 ಆರೋಗ್ಯ ಕವಚ ಸೇವೆಯಲ್ಲಿ ಇರುವ ಆ್ಯಂಬುಲೆನ್ಸ್ ಗಳು ರೋಗಿಗಳನ್ನು ಅಥವಾ ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಲು ಸೀಮಿತವಾಗಿದೆ. ಅವುಗಳಲ್ಲಿ ಜೀವರಕ್ಷಕ ಸಲಕರಣೆಗಳು ಇವೆ. ಅಲ್ಲಿಂದ ಜಿಲ್ಲಾಸ್ಪತ್ರೆಗೆ ಅಥವಾ ಉನ್ನತ ಚಿಕಿತ್ಸೆಗೆ ಕರೆದೊಯ್ಯಬೇಕಾದರೆ ಸಮಸ್ಯೆಗಳು ಎದುರಾಗುತ್ತವೆ. +ಹೀಗಾಗಿ ಅಪಘಾತದಲ್ಲಿ ತೊಂದರೆಗೊಳಗಾದವರಿಗಾಗಿಯೇ ವಿಶೇಷ ಸೇವೆ ಒದಗಿಸಲು ಆಪತ್ಕಾಲಯಾನ ಆ್ಯಂಬುಲೆನ್ಸ್ ಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. 65 ಆ್ಯಂಬುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್‌ ಸಪೋರ್ಟ್‌ ಸೌಲಭ್ಯ ಹೊಂದಿವೆ. ವೆಂಟಿಲೇಟರ್‌, ಔಷಧಿ ಹಾಗೂ ತಂತ್ರಜ್ಞರನ್ನು ಒಳಗೊಂಡಿವೆ. +39 ಬೇಸಿಕ್‌ ಲೈಫ್‌ ಸಪೋರ್ಟ್‌ ಆ್ಯಂಬುಲೆನ್ಸ್ ಗಳು ತಂತ್ರಜ್ಞರು ಹಾಗೂ ಕನಿಷ್ಟ ಸೌಲಭ್ಯಗಳನ್ನು ಒಳಗೊಂಡಿವೆ. ಅಪಘಾತಗಳ ಪ್ರಕರಣಗಳು ಹೆಚ್ಚಿರುವ ಪ್ರದೇಶಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಬ್ಲಾಕ್‌ಸ್ಪಾಟ್‌ಗಳನ್ನು ಗುರುತಿಸಿದ್ದು, ಆ ಸುತ್ತಮುತ್ತಲಿನ ತಾಲ್ಲೂಕು ಅಥವಾ ಜಿಲ್ಲಾಸ್ಪತ್ರೆಗಳಿಗೆ ಟ್ರಾಮಾಕೇರ್‌ ಸೌಲಭ್ಯಗಳನ್ನು ಪೂರೈಸುವುದು ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲು 25 ಕೋಟಿ ರೂ.ಗಳನ್ನು ಬಳಕೆ ಮಾಡಲಾಗುವುದು. ಉಳಿದ 20 ಕೋಟಿ ರೂ.ಗಳಲ್ಲಿ ಆ್ಯಂಬುಲೆನ್‌್ಸಗಳನ್ನು ಖರೀದಿಸಲಾಗಿದೆ ಎಂದರು. +ಈ ವರ್ಷ ರಸ್ತೆ ಸುರಕ್ಷತಾ ನಿಧಿಯಡಿ 45 ಕೋಟಿ ರೂ.ಗಳನ್ನು ನೀಡಲಾಗಿದೆ. ಮುಂದಿನ ವರ್ಷ ಹೆಚ್ಚಿನ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಆರೋಗ್ಯ ಇಲಾಖೆಗೆ ರಸ್ತೆ ಸುರಕ್ಷತಾ ನಿಧಿಯಡಿ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_12_10.txt b/eesanje/url_46_12_10.txt new file mode 100644 index 0000000000000000000000000000000000000000..a772bea822e3e27e9955cedf002bcbd1c6f9c39f --- /dev/null +++ b/eesanje/url_46_12_10.txt @@ -0,0 +1,6 @@ +ಮುನಿರತ್ನ ಹೆಸರಿದ್ದ ಸ್ಲಾಬ್‌ಗಳಿಗೆ ಸಿಮೆಂಟ್‌ ಬಳಿಯುತ್ತಿರುವ ಕಾಂಗ್ರೆಸ್ಸಿಗರು + ' +ಬೆಂಗಳೂರು,ಸೆ.21-ಕೊಲೆ ಬೆದರಿಕೆ, ಜಾತಿನಿಂದನೆ ಹಾಗೂ ಹನಿಟ್ರಾಪ್ ಮಾಡಿಸಿರುವ ಆರೋಪಕ್ಕೆ ಗುರಿಯಾಗಿರುವ ಶಾಸಕ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರದಲ್ಲಿ ಆಕ್ರೋಶ ಭುಗಿಲೆದ್ದಿದೆ. +ಹೀಗಾಗಿ ಅಲ್ಲಿನ ಜನ ಮುನಿರತ್ನ ಎಂಬ ಹೆಸರು ಕಂಡ ಕಂಡ ಕಡೆಗಳೆಲ್ಲ ಮಸಿ ಬಳಿಯತೊಡಗಿದ್ದಾರೆ. ಮಾತ್ರವಲ್ಲ ಚರಂಡಿ ಸ್ಲಾಬ್ಗಳ ಮೇಲೆ ಹಾಕಿಸಿದ್ದ ಮುನಿರತ್ನ ಎಂಬ ಹೆಸರಿಗೆ ಸಿಮೆಂಟ್ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. +ಲಗ್ಗೆರೆ ಸುತ್ತಮುತ್ತ ಯುವ ಕಾಂಗ್ರೆಸ್ ಕಾರ್ಯಕರ್ತರು ಚರಂಡಿಗಳ ಸ್ಲಾಬ್ಗಳ ಮೇಲೆ ಬರೆಸಲಾಗಿದ್ದ ಮುನಿರತ್ನ ಎಂಬ ಹೆಸರಿಗೆ ಸಿಮೆಂಟ್ ಹಾಕಿ ಮರೆ ಮಾಚುತ್ತಿರುವ ದೃಶ್ಯಗಳು ಕಂಡು ಬಂದಿವೆ. +ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮುನಿರತ್ನ ಅವರು ಚರಂಡಿ ಕಾಮಗಾರಿ ನಡೆಯುತ್ತಿದ್ದ ಎಲ್ಲ ಸ್ಲಾಬ್ಗಳ ಮೇಲೆ ತಮ್ಮ ಹೆಸರನ್ನು ಬರೆಸಿಕೊಂಡಿದ್ದರು.ಆರ್.ಆರ್.ನಗರ ಕ್ಷೇತ್ರದ ಬಹುತೇಕ ಚರಂಡಿ ಸ್ಲಾಬ್ಗಳ ಮೇಲೆ ಮುನಿರತ್ನ ಅವರ ಹೆಸರು ರಾರಾಜಿಸುತ್ತಿದ್ದವು. ಇದೀಗ ಕಾಂಗ್ರೆಸ್ ಕಾರ್ಯಕರ್ತರು ಎಲ್ಲಾ ಸ್ಲಾಬ್ಗಳಿಗೂ ಸಿಮೆಂಟ್ ಬಳಿಯುತ್ತಿದ್ದಾರೆ. \ No newline at end of file diff --git a/eesanje/url_46_12_11.txt b/eesanje/url_46_12_11.txt new file mode 100644 index 0000000000000000000000000000000000000000..f2a4ea88c8053d99d5965908ba97adc0b68afacd --- /dev/null +++ b/eesanje/url_46_12_11.txt @@ -0,0 +1,6 @@ +ದಸರಾ ಆನೆಗಳ ಕಾದಾಟ, ಮಾವುತರಿಗೆ ಪೀಕಲಾಟ + - +ಮೈಸೂರು,ಸೆ.21-ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಗಳು ಕಳೆದ ರಾತ್ರಿ ದಿಢೀರನೇ ಕಾದಾಟಕ್ಕಿಳಿದಿದ್ದು, ಅರಮನೆಯಿಂದ ಹೊರಬಂದ ಪರಿಣಾಮ ಕೆಲಕಾಲ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. +ನಿನ್ನೆ ಸಂಜೆ ತುಂತುರು ಮಳೆಯಿದ್ದ ಕಾರಣ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಗಿತ್ತು. ಈ ವೇಳೆ 7.45 ರ ಸಮಯದಲ್ಲಿ ಧನಂಜಯ ಹಾಗೂ ಕಂಜನ್ ಆನೆಗಳನಡುವೆ ಕಾದಾಟ ನಡೆದಿದೆ.ಮಾವುತರು ಊಟ ಮಾಡುವ ವೇಳೆ ಆನೆಗಳ ನಡುವೆ ಕಾಳಗ ನಡೆದ ಪರಿಣಾಮ ಆನೆಗಳು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಕಂಜನ್ ಹಾಗೂ ಧನಂಜಯ ಆನೆಗಳು ಹೊರಬಂದಿವೆ. +ಮಾವುತನಿಲ್ಲದೆ ಕಂಜನ್ ಆನೆಯನ್ನು ಅರಮನೆಯಿಂದ ಧನಂಜಯ ಆನೆ ಹೊರಗೆ ಓಡಿಸಿಕೊಂಡು ಬಂದಿದ್ದು, ಕೆಲಕಾಲ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. +ಆನೆಗಳು ದೊಡ್ಡಕೆರೆ ಮೈದಾನದ ಬಳಿ ಬ್ಯಾರಿಕೇಡ್ಗಳನ್ನು ತಳ್ಳಿಕೊಂಡು ರಸ್ತೆಗೆ ಪ್ರವೇಶಿಸಿವೆ. ತಕ್ಷಣ ಮಾವುತರು ಹಾಗೂ ಅರಣ್ಯ ಇಲಾಖಾಽಕಾರಿಗಳು ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಅನಾಹುತ ತಪ್ಪಿದಂತಾಗಿದೆ.ಕೂಡಲೇ ಆನೆಗಳನ್ನು ಅರಮನೆಯೊಳಗೆ ಕರೆದ್ಯೊಯುವಲ್ಲಿ ಮಾವುತರು ಯಶಸ್ವಿಯಾಗಿದ್ದು, ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. \ No newline at end of file diff --git a/eesanje/url_46_12_12.txt b/eesanje/url_46_12_12.txt new file mode 100644 index 0000000000000000000000000000000000000000..3868cbd8d5b85f696236aa4ae2f52d8770180463 --- /dev/null +++ b/eesanje/url_46_12_12.txt @@ -0,0 +1,6 @@ +ಹೊಸ ಪಡಿತರ ಚೀಟಿ ಅರ್ಜಿ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ + +ಬೆಂಗಳೂರು, ಸೆ.21-ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅನರ್ಹರನ್ನು ಗುರುತಿಸಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹರನ್ನು ಪರಿಶೀಲಿಸಲಾಗುತ್ತಿದೆ. ಈ ಕಾರ್ಯಕ್ಕೆ ಸುಮಾರು ಒಂದು ತಿಂಗಳ ಕಾಲಾವಕಾಶ ಹಿಡಿಯಲಿದ್ದು, ಬಳಿಕ ಹೊಸ ಪಡಿತರ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ. ಬಳಿಕ ಅಂತಿಮವಾಗಿ ಅರ್ಹರನ್ನು ಉಳಿಸಿಕೊಳ್ಳಲಾಗು ವುದು. ಈ ನಡುವೆ ಹೊಸದಾಗಿ ಮತ್ತಷ್ಟು ಜನ ಬಿಪಿಎಲ್ ಕಾರ್ಡ್ ಕೇಳುತ್ತಿದ್ದಾರೆ. ಇನ್ನೊಂದು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸಿ ನಂತರ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. +ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನೀಡಲಾಗುವ ಪ್ರಸಾದದ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬುದು ಆಘಾತಕಾರಿ. ಇದು ನಡೆಯಬಾರದಿತ್ತು. ಜನರ ಭಾವನಾತ್ಮಕವಾದ ವಿಚಾರದಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು ಹೇಳಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು. +ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಲಡ್ಡು ತಯಾರಿಕೆಗೆ ಅಗತ್ಯದಷ್ಟು ತುಪ್ಪ ಪೂರೈಸಲು ನಮ್ಮಲ್ಲಿ ಸಾಕಷ್ಟು ದಾಸ್ತಾನಿದೆ. ಪರಸ್ಪರ ಒಪ್ಪಂದದೊಂದಿಗೆ ತುಪ್ಪ ಪೂರೈಕೆಯಾಗುತ್ತಿದ್ದು, ವಿವಾದದಿಂದ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.ರಾಜ್ಯಸರ್ಕಾರ ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ವಿರೋಧಪಕ್ಷಗಳ ಟೀಕೆಗಳು ಆಧಾರರಹಿತ ಎಂದರು. \ No newline at end of file diff --git a/eesanje/url_46_12_2.txt b/eesanje/url_46_12_2.txt new file mode 100644 index 0000000000000000000000000000000000000000..11b50df426f6f857bdb9da4f115d4244545db3af --- /dev/null +++ b/eesanje/url_46_12_2.txt @@ -0,0 +1,13 @@ +3 ಕ್ಷೇತ್ರಗಳ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ ರವಾನೆ +- : +ಬೆಂಗಳೂರು,ಸೆ.23– ಮುಂಬರುವ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ,1 ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಬಿಜೆಪಿ ಸಂಭಾವನೀಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿದೆ. +ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ನಿಕಟಪೂರ್ವ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ್‌, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್‌ ಕುಮಾರ್‌ ಸುರಾಣ ಭಾಗವಹಿಸಿದ್ದರು. +ಸಭೆಯಲ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ದರಾಗಬೇಕೆಂಬ ಒಮತದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕ್ಷೇತ್ರವನ್ನು ಎನ್‌ಡಿಎ ಮೈತ್ರಿ ಪಕ್ಷವಾದ ಜೆಡಿಎಸ್‌‍ಗೆ ಬಿಟ್ಟುಕೊಡುವುದು ಇಲ್ಲವೇ ಈ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವರ್‌ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. +ಅದೇ ರೀತಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಹಾವೇರಿ ಜಿಲ್ಲೆ ಶಿಗ್ಗಾವಿಗೆ ಅವರ ಪುತ್ರ ಭರತ್‌ ಬೊಮಾಯಿ ಇಲ್ಲವೇ ಮಾಜಿ ಸಚಿವ ಮುರುಗೇಶ್‌ ನಿರಾಣಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ. +ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು, ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೆಸರು ಮುನ್ನಲೆಗೆ ಬಂದಿದೆ. +ಪ್ರತಿಷ್ಠೆಯ ಕಣವಾಗಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವನ್ನು ಜೆಡಿಎಸ್‌‍ಗೆ ಬಿಟ್ಟುಕೊಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಕಾಂಗ್ರೆಸ್‌‍ ಎದುರು ಜೆಡಿಎಸ್‌‍ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಎನ್‌ಡಿಎ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಟಿಕೆಟ್‌ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. +ಶಿಗ್ಗಾವಿ ಕ್ಷೇತ್ರಕ್ಕೆ ಬೊಮಾಯಿ ಅವರ ಅಭಿಪ್ರಾಯ ಪಡೆದುಕೊಂಡೇ ಅಭ್ಯರ್ಥಿ ಪಟ್ಟಿಯನ್ನು ಅಖೈರು ಮಾಡಬೇಕೆಂಬ ಸಲಹೆ ಕೇಳಿಬಂದಿದೆ. ಈ ಕ್ಷೇತ್ರದ ಮೇಲೆ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಕಣ್ಣಿಟ್ಟಿದ್ದು, ಈಗಾಗಲೇ ಕ್ಷೇತ್ರದಲ್ಲಿ ಒಂದು ಸುತ್ತಿನ ಕೆಲಸವನ್ನು ಆರಂಭಿಸಿದ್ದಾರೆ. +ಕುಟುಂಬ ರಾಜಕಾರಣವನ್ನು ಪ್ರಬಲವಾಗಿ ವಿರೋಧಿಸುವ ಬಿಜೆಪಿ, ಬೊಮಾಯಿ ಪುತ್ರನಿಗೆ ಟಿಕೆಟ್‌ ಬೇಡ ಎಂಬ ನಿಲುವಿಗೆ ಬಂದರೆ ಮಾಜಿ ಸಚಿವ ಮುರುಗೇಶ್‌ ನಿರಾಣಿ ಅಭ್ಯರ್ಥಿಯಾಗುವ ಸಂಭವವನ್ನು ತಳ್ಳಿ ಹಾಕುವಂತಿಲ್ಲ. +ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಹೆಸರು ಕೇಳಿಬಂದಿದೆ ಆದರೂ ಈಗಾಗಲೇ ಒಂದು ಬಾರಿ ವಿಧಾನಸಭೆ ಮತ್ತೊಂದು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಅವರು ಸ್ಪರ್ಧೆಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. +ಶ್ರೀರಾಮುಲು ಕಣಕ್ಕಿಳಿಯಲು ನಿರಾಕರಿಸಿದರೆ ಸ್ಥಳೀಯ ಅಭ್ಯರ್ಥಿಗೆ ಟಿಕೆಟ್‌ ನೀಡುವ ಬಗ್ಗೆಯೂ ಕೋರ್‌ ಕಮಿಟಿಯಲ್ಲಿ ಚರ್ಚೆ ನಡೆಯಲಿದೆ. ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಳೀನ್‌ಕುಮಾರ್‌ ಕಟೀಲ್‌ ಪ್ರಮೋದ್‌ ಮಧ್ವರಾಜ್‌ ಆಕಾಂಕ್ಷಿಗಳಾಗಿದ್ದಾರೆ. +ಇನ್ನು ಕೋರ್‌ ಕಮಿಟಿ ಸಭೆಯಲ್ಲಿ ಸದಸ್ಯತ್ವ ನೋಂದಣಿ, ಪಕ್ಷದ ಸಂಘಟನೆ ಕುರಿತು ಸುಧೀರ್ಘ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಾದ್ಯಂತ ಬರುವ ದಿನಗಳಲ್ಲಿ ಇನ್ನಷ್ಟು ನೋಂದಣಿಯನ್ನು ಪರಿಣಾಮಕಾರಿಯಾಗಿ ಮಾಡಬೇಕು. ಇದರಲ್ಲಿ ಹಾಲಿ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಸೇರಿದಂತೆ ಪದಾಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಂಡು ನಿರೀಕ್ಷಿತ ಗುರಿ ತಲುಪಲು ಎಲ್ಲರೂ ಕೈಜೋಡಿಸುವಂತೆ ಸಭೆ ಸೂಚಿಸಿದೆ. \ No newline at end of file diff --git a/eesanje/url_46_12_3.txt b/eesanje/url_46_12_3.txt new file mode 100644 index 0000000000000000000000000000000000000000..4461133f4898312166a951ac2fdcbada75c2f576 --- /dev/null +++ b/eesanje/url_46_12_3.txt @@ -0,0 +1,13 @@ +ಮಹಾಲಕ್ಷ್ಮಿ ಹಂತಕರು ಒಬ್ಬನೋ ಅಥವಾ ಇಬ್ಬರಿದ್ದಾರೋ ಗೊತ್ತಿಲ್ಲ : ಗೃಹಸಚಿವ + : +ಬೆಂಗಳೂರು,ಸೆ.23-ವಯ್ಯಾಲಿಕಾವಲ್ ಬಸಪ್ಪಗಾರ್ಡನ್ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಲಾಗಿದ್ದು, ಶೀಘ್ರವೇ ಆರೋಪಿ ಗಳನ್ನು ಬಂಧಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಹಂತದಲ್ಲಿ ಯಾವುದೇ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಹೇಳಿದರು. +ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು. +ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಕುಟುಂಬಕ್ಕೆ ವಿಮೆ ಆಧರಿಸಿ 25 ಲಕ್ಷ ರೂ.ಗಳ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರ ಪತ್ನಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ತಮಗೆ ಬೇರೆ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅದರ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು. +ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಪ್ರಕರಣ ಮೇಲ್ನೋಟಕ್ಕೆ ಕಂಡುಬಂದಷ್ಟು ಸರಳವಾಗಿಲ್ಲ. ಒಂದು ದೂರು ಬಂದಾಗ ಅದನ್ನು ದಾಖಲಿಸಿ ಮುನಿರತ್ನ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಆದರೆ ದಿನನಿತ್ಯ ಅವರ ನಡುವೆ ಒಂದೊಂದು ಪ್ರಕರಣ ಬೆಳಕಿಗೆ ಬರುತ್ತಿದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಎಸ್ಐಟಿ ರಚನೆ ಮಾಡಿದ್ದೇವೆ, ಶೀಘ್ರವೇ ಎಸ್ಐಟಿ ವಶಕ್ಕೆ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. +ದಿನಕ್ಕೊಂದು ಆರೋಪಗಳು ಬೆಳಕಿಗೆ ಬರುವ ಹಿನ್ನೆಲೆಯಲ್ಲಿ ಎಸ್ಐಟಿ ರಚನೆ ಮಾಡುವ ಅನಿವಾರ್ಯತೆ ಇದೆ ಎಂದು ನಮಗೆ ಮನವರಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದರು. +ನಾಗಮಂಗಲದಲ್ಲಿ ಗಣೇಶನ ಪ್ರತಿಷ್ಠಾಪನೆ ಮಾಡಿದ ತಂಡದ ಸದಸ್ಯ ಕಿರಣ್ ಅನಾರೋಗ್ಯದಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಪ್ರತಿಕ್ರಿಯಿಸುವುದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಅದರ ವರದಿ ಬಂದ ಬಳಿಕ ಹೇಳಿಕೆ ನೀಡುವುದಾಗಿ ತಿಳಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಎಲ್ಲರಿಗೂ ಒಂದೇ ರೀತಿಯ ಮಾನದಂಡವನ್ನು ಅನುಸರಿಸಬೇಕು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ ಮೇಲೆ ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೂ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ನೋಟಿಸ್ ನೀಡಬೇಕಿತ್ತು. ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪಷ್ಟನೆ ಕೇಳಿ ಕುಮಾರಸ್ವಾಮಿಯವರ ಕಡತವನ್ನು ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದರು ಎಂದು ಹೇಳಿದರು. +ಮುಖ್ಯಮಂತ್ರಿಯವರಿಗೆ ನೋಟಿಸ್ ನೀಡಿದ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದನ್ನು ರಾಜ್ಯಪಾಲರು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ರಹಸ್ಯ ದಾಖಲೆ ಎಂಬುದು ಸಂಪುಟದಿಂದ ಹೊರಗೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ರಾಜ್ಯಪಾಲರು ದಿನನಿತ್ಯ ಸರ್ಕಾರಕ್ಕೆ ಒಂದೊಂದು ವಿಚಾರಕ್ಕೆ ಪತ್ರ ಬರೆಯುತ್ತಿರುವುದು ಸರಿಯಲ್ಲ. ಸಂವಿಧಾನದಲ್ಲಿ ರಾಜ್ಯಪಾಲರ ನಡವಳಿಕೆ ಹಾಗೂ ಪಾತ್ರದ ಬಗ್ಗೆ ಸ್ಪಷ್ಟ ಮಾಹಿತಿ ಇದೆ. ಅದನ್ನು ಮೀರಿ ವರ್ತಿಸುವುದು ಸಂವಿಧಾನ ಬಾಹಿರವಾಗಲಿದೆ. ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯಪಾಲರು ಕೇಳಿರುವ ಮಾಹಿತಿಯನ್ನು ಒದಗಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. +ರಾಜ್ಯಪಾಲರು ನೀಡಿದ ಎಲ್ಲಾ ನೋಟಿಸ್ಗೂ ಉತ್ತರ ನೀಡಬೇಕು ಎಂಬುದೇನಿಲ್ಲ. ಸಂವಿಧಾನದಲ್ಲಿ ರಾಜ್ಯಸರ್ಕಾರಕ್ಕೆ ಕಾರ್ಯ ನಿರ್ವಹಣಾಧಿಕಾರವನ್ನು ನೀಡಲಾಗಿದೆ. ಇದರಲ್ಲಿ ಎರಡು ಮಾತಿಲ್ಲ. ರಾಜ್ಯಪಾಲರು ಈ ರೀತಿ ವರ್ತಿಸುವುದನ್ನು ಎಂದೂ ನೋಡಿರಲಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_12_4.txt b/eesanje/url_46_12_4.txt new file mode 100644 index 0000000000000000000000000000000000000000..6df3a85d3b4129c09427edd987ae8dac7f1b414f --- /dev/null +++ b/eesanje/url_46_12_4.txt @@ -0,0 +1,7 @@ +ಮುಂಗಾರು ಮಳೆ ಮತ್ತೆ ಚೇತರಿಕೆ, ರಾಜ್ಯದಲ್ಲಿ ಹಲವೆಡೆ ಯಲ್ಲೋ ಅಲರ್ಟ್ ಘೋಷಣೆ + +ಬೆಂಗಳೂರು, ಸೆ.23-ನೈರುತ್ಯ ಮುಂಗಾರು ಮತ್ತೆ ಕಳೆದ ಎರಡು ದಿನಗಳಿಂದ ಚೇತರಿಕೆಯಾಗಿದ್ದು, ಕರಾವಳಿಯಲ್ಲಿ ವ್ಯಾಪಕವಾಗಿ ಉಳಿದಂತೆ ರಾಜ್ಯದ ಒಳನಾಡಿದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. +ನಿನ್ನೆ ಕರಾವಳಿಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಉತ್ತಮ ಮಳೆಯಾಗಿದೆ. ಒಂದೆರಡು ಕಡೆ ಭಾರಿ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಹಗುರದಿಂದ ವ್ಯಾಪಕ ಪ್ರಮಾಣದ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. +ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಬಂಗಾಳ ಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಸೃಷ್ಟಿಯಾಗುತ್ತಿದೆ. ಇದರ ಪರಿಣಾಮದಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು, ಬಲವಾದ ಮೇಲೈ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. \ No newline at end of file diff --git a/eesanje/url_46_12_5.txt b/eesanje/url_46_12_5.txt new file mode 100644 index 0000000000000000000000000000000000000000..3c6094ebebf97cb6f079c1afdf3fbfc986bab280 --- /dev/null +++ b/eesanje/url_46_12_5.txt @@ -0,0 +1,11 @@ +ಸಂಚಾರಿ ನಿಯಮ ಉಲ್ಲಂಘಿಸುವವರ ಚಾಲನಾ ಪರವಾನಗಿ ರದ್ದು ಮಾಡುವಂತೆ ಸಿಎಂ ಸೂಚನೆ + +ಬೆಂಗಳೂರು,ಸೆ.23– ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. +ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಅಡಿಯಲ್ಲಿ ನೂತನವಾಗಿ 45 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನಸಾಮಾನ್ಯರು ಹಾಗೂ ವಾಹನ ಸವಾರರು ನಿಯಮಗಳನ್ನು ಪಾಲನೆ ಮಾಡದೇ ಇದ್ದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. +ಅಪಘಾತದಂತಹ ಸಂದರ್ಭದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜೀವಹಾನಿಯಾದರೆ ಮುಂದೆ ಅವರಿಂದ ದೇಶಕ್ಕೆ ದೊರೆಯಬಹುದಾದ ಸೇವೆಗಳು ಇಲ್ಲವಾಗುತ್ತವೆ. ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಗಾಯಾಳುಗಳಾದಾಗ ಜೀವನವೇ ತೊಂದರೆಗೊಳಗಾಗುತ್ತದೆ ಎಂದು ಹೇಳಿದರು. +ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಾಗುತ್ತಿವೆ. ಅದರಲ್ಲಿ 9 ರಿಂದ 10 ಸಾವಿರ ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತಗಳನ್ನು ತಗ್ಗಿಸಲು 2017 ರಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅದರಲ್ಲಿ ಸಂಗ್ರಹಿಸಲಾಗುವ ನಿಧಿಯಲ್ಲಿ 45 ಕೋಟಿ ರೂ.ಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದ್ದು, ಇದರಿಂದ 65 ಹೊಸ ಆ್ಯಂಬುಲೆನ್‌್ಸಗಳನ್ನು ಖರೀದಿಸಲಾಗಿದೆ ಎಂದರು. +ಅಪಘಾತಗಳಾದ ಸಂದರ್ಭದಲ್ಲಿ ಸುವರ್ಣ ಸಮಯ ಎಂದು ಹೇಳಲಾಗುವ ಒಂದು ಗಂಟೆಯಲ್ಲಿ ಚಿಕಿತ್ಸೆ ದೊರೆತರೆ ಜೀವರಕ್ಷಣೆ ಸಾಧ್ಯವಾಗುತ್ತದೆ. ಅದಕ್ಕಾಗಿ ಇಂದು ಲೋಕಾರ್ಪಣೆಗೊಂಡ ಆ್ಯಂಬುಲೆನ್‌್ಸಗಳ ಪೈಕಿ 30 ರಲ್ಲಿ ಜೀವರಕ್ಷಕ ಸಲಕರಣೆಗಳ ಜೊತೆಗೆ ವೆಂಟಿಲೇಟರ್, ಔಷಧಿ ಹಾಗೂ ತಂತ್ರಜ್ಞ ಸಿಬ್ಬಂದಿಗಳು ಇರಲಿದ್ದು, ಜೀವರಕ್ಷಣೆಗೆ ಶ್ರಮಿಸಲಿದ್ದಾರೆ. +ಹತ್ತಿರದ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಅಗತ್ಯವಿದ್ದರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದು ಜೀವರಕ್ಷಣೆ ಮಾಡುವ ಪ್ರಯತ್ನಗಳಾಗುತ್ತವೆ ಎಂದರು.ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಅಪಘಾತಗಳು ಕಡಿಮೆಯಾಗುತ್ತವೆ. ಕುಡಿದು ವಾಹನ ಓಡಿಸಬೇಡಿ ಎಂದರೆ ನಾಮಫಲಕ ನೋಡಿಯೇ ವಾಹನ ಚಲಾಯಿಸುತ್ತಾರೆ. +ಇಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದು ಬೋರ್ಡ್ ಇದ್ದರೆ ನಿಷೇಧಿತ ಕೆಲಸವನ್ನು ಅಲ್ಲಿಯೇ ಮಾಡಿ ಸಬೂಬು ಹೇಳುತ್ತಾರೆ. ಈ ರೀತಿಯ ಧೋರಣೆಗಳನ್ನು ಜನರು ಬಿಟ್ಟು ಬದಲಾಗಬೇಕು. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ. ವಾಹನಗಳನ್ನು ಸುರಕ್ಷತಾ ಸ್ಥಿತಿಯಲ್ಲಿಟ್ಟುಕೊಂಡಿರಬೇಕು. ನನಗೆ ಡ್ರೈವಿಂಗ್ ಬರುವುದಿಲ್ಲ, ತುಂಬಾ ಜನ ಫೋನಿನಲ್ಲಿ ಮಾತನಾಡುತ್ತಲೇ ವಾಹನ ಚಲಾವಣೆ ಮಾಡುವುದನ್ನು ನೋಡಿದ್ದೇನೆ. ವೇಗಮಿತಿ 80 ಕಿ.ಮೀ. ಇದ್ದರೆ 120 ಕಿ.ಮೀ. ವೇಗದಲ್ಲಿ ಗಾಡಿ ಓಡಿಸುತ್ತಾರೆ ಎಂದು ಹೇಳಿದರು. +ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಚಾಲನಾ ಪರವಾನಗಿ ರದ್ದು ಮಾಡುವ ವ್ಯವಸ್ಥೆ ವಿದೇಶದಲ್ಲಿದೆ. ನಮಲ್ಲೂ ಅದೇ ಪದ್ಧತಿಯನ್ನು ಪಾಲನೆ ಮಾಡಿ. ನೋಟಿಸ್ ಕೊಡುವುದು ಬೇಡ. ನೇರವಾಗಿ ಪರವಾನಗಿ ರದ್ದು ಮಾಡಿ, ತಪ್ಪು ಮಾಡಿದವರು ಕೋರ್ಟ್ಗೆ ಹೋಗಲಿ ಎಂದು ಸೂಚನೆ ನೀಡಿದರು. +ಕೊಲೆ ಮಾಡಿದರೆ ಜೀವಾವಧಿ ಶಿಕ್ಷೆಯಾಗುತ್ತದೆ ಎಂದು ಗೊತ್ತಿದ್ದೂ ಹತ್ಯೆ ಮಾಡುತ್ತಾರೆ. ಜೈಲಿಗೆ ಹೋದರೂ ಪರವಾಗಿಲ್ಲ. ನಿನ್ನನ್ನು ಮುಗಿಸುತ್ತೇನೆ ಎಂದು ಧಮ್ಕಿ ಹಾಕವುದು ಕಂಡುಬರುತ್ತಿದೆ. ಇದು ಸರಿಯಲ್ಲ ಎಂದು ಹೇಳಿದರು.ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ಗುಂಡೂರಾವ್, ಶಾಸಕರಾದ ರೂಪಕಲಾ, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_12_6.txt b/eesanje/url_46_12_6.txt new file mode 100644 index 0000000000000000000000000000000000000000..4943fb667a2721fbaf32b15407b96fc311494f98 --- /dev/null +++ b/eesanje/url_46_12_6.txt @@ -0,0 +1,10 @@ +ವಿಚ್ಛೇದನಕ್ಕೆ ಬಂದಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಬಳಿ ಹೋಗುವಂತೆ ಸಲಹೆ ನೀಡಿದ ನ್ಯಾಯಮೂರ್ತಿಗಳು + +ಬೆಂಗಳೂರು,ಸೆ.22-ಪರಸ್ಪರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಗೆ ಗವಿಸಿದ್ದೇಶ್ವರ ಶ್ರೀಗಳ ಭೇಟಿ ಮಾಡಿ ಸಮಾಲೋಚಿಸಿ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.ನಾಲ್ಕು ವರ್ಷದ ಹಿಂದೆ ಗದಗ ಜಿಲ್ಲೆಯ ದಂಪತಿ ವಿಚ್ಛೇದನ ಬೇಕೆಂದು ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. +ಸೆಪ್ಟೆಂಬರ್‌ 17ರಂದು ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರು, ದಂಪತಿಗೆ ಬುದ್ಧಿವಾದ ಹೇಳಿದ್ದಾರೆ. ಗಂಡ-ಹೆಂಡತಿ ಜಗಳ ಸಾಮಾನ್ಯ. ಸಣ್ಣ ವಿಚಾರಕ್ಕೆ ಮುನಿಸಿಕೊಂಡು ದೂರ ಆಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಸ್ಯೆ ಇದ್ದರೆ ಕೂತು ಬಗೆಹರಿಸಿಕೊಳ್ಳಿ. ಏನಾದರೂ ಮಾನಸಿಕವಾಗಿ ಸಮಸ್ಯೆ ಇದ್ದರೆ ಮನೋವೈದ್ಯರ ಬಳಿಗೆ ಹೋಗಿ ಎಂದು ತಿಳಿ ಹೇಳಿದ್ದಾರೆ. +ಈ ವೇಳೆ ದಂಪತಿ ನಾವು ಮನೋವೈದ್ಯರ ಬಳಿ ಹೋಗಿದ್ದೇವೆ. ಆದರೂ ಸಮಸ್ಯೆ ಬಗೆಹರಿದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆಗ ನ್ಯಾಯಮೂರ್ತಿಗಳು ಯಾವುದಾದರೂ ಮಠಾಧೀಶರ ಬಳಿ ಹೋಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ನ್ಯಾಯಾಧೀಶರ ಮಾತಿಗೆ ಒಪ್ಪಿದ ಪತಿ ಗದಗದ ತೋಂಟದಾರ್ಯ ಮಠದ ಸ್ವಾಮೀಜಿ ಬಳಿ ಹೋಗುತ್ತೇವೆ ಎಂದು ಹೇಳಿದ್ದಾರೆ. +ಕೋರ್ಟ್‌ನಲ್ಲಿ ಪತಿಯ ಮಾತಿಗೆ ಒಪ್ಪದ ಹೆಂಡತಿ ತೋಂಟದಾರ್ಯ ಮಠ ಬೇಡ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಬಳಿ ಹೋಗುತ್ತೇವೆ ಎಂದಿದ್ದಾರೆ. ಈ ವೇಳೆ ನ್ಯಾಯಮೂರ್ತಿಗಳು ಒಳ್ಳೆಯದೇ ಆಯ್ತು. ಗವಿಸಿದ್ದೇಶ್ವರ ಸ್ವಾಮೀಜಿ ವಿವೇಕಾನಂದರಂತೆ ಇದ್ದಾರೆ. ಅವರ ಭಾಷಣ ಕೇಳಿದ್ದೇನೆ. ಅವರ ಬಳಿಯೇ ಹೋಗಿ ಎಂದು ಸಲಹೆ ಕೊಟ್ಟಿದ್ದಾರೆ. +ಪರಸ್ಪರ ದೂರವಾಗಿದ್ದ ಪತಿ-ಪತ್ನಿಗೆ ಗವಿ ಮಠಕ್ಕೆ ಹೋಗಿ, ಶ್ರೀಗಳ ಆಶೀರ್ವಾದ ಪಡೆದು ಹೊಸ ಜೀವನ ನಡೆಸಿ ಅಂತ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ. ನ್ಯಾಯಮೂರ್ತಿಗಳ ಸೂಚನೆ ಮೇರೆಗೆ ದಂಪತಿಗಳು ಗವಿಸಿದ್ದೇಶ್ವರ ಮಠಕ್ಕೆ ಹೋಗುವುದಾಗಿ ಒಪ್ಪಿದ್ದಾರೆ. +ಶ್ರೀಗಳನ್ನು ಭೇಟಿ ಸರಿಯಾದ ನಿರ್ಧಾರ:ಕೊಪ್ಪಳದ ಗವಿಸಿದ್ದೇಶ್ವರ ಮಠದ ಭಕ್ತ ಶಿವಾನಂದ ಪಾಟೀಲ ಮಾತನಾಡಿ, ತಮ ಸಮಸ್ಯೆಗಳಿಗೆ ಗವಿಸಿದ್ದೇಶ್ವರ ಶ್ರೀಗಳನ್ನು ಭೇಟಿಯಾಗುತ್ತಿರುವುದು ಸರಿಯಾದ ನಿರ್ಧಾರವಾಗಿದ್ದು, ಮಠದ ಸಂಪ್ರದಾಯದಲ್ಲಿ ನ್ಯಾಯಾಲಯದಿಂದ ಇಂತಹ ಪ್ರಕರಣ ನಡೆಯುತ್ತಿರುವುದು ಇದೇ ಮೊದಲು. ಅನೇಕ ದಂಪತಿಗಳು ಈ ಮಾರ್ಗವನ್ನು ಅನುಸರಿಸಿದರೆ, ನ್ಯಾಯಾಲಯಗಳ ಮೇಲೆ ಕಡಿಮೆ ಒತ್ತಡವಿರುತ್ತದೆ ಮತ್ತು ಜನರು ಸಂತೋಷದ ಜೀವನವನ್ನು ನಡೆಸಬಹುದು. +ಅನೇಕ ಜನರು ತಮ ಸಮಸ್ಯೆಗಳಿಗಾಗಿ ದಾರ್ಶನಿಕರನ್ನು ಭೇಟಿಯಾಗುತ್ತಾರೆ. ಆದರೆ ವೈವಾಹಿಕ ಗೊಂದಲದ ವಿಷಯಕ್ಕೆ ಬಂದಾಗ, ಅವರು ದಾರ್ಶನಿಕರಿಂದ ಸಲಹೆಗಳನ್ನು ಪಡೆಯಲು ಬರುವುದಿಲ್ಲ. ಆದರೆ ಅವರು ನೇರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುತ್ತಾರೆ ಮತ್ತು ಈ ಬೆಳವಣಿಗೆಯು ಭವಿಷ್ಯಕ್ಕಾಗಿ ಒಂದು ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. +800 ವರ್ಷಗಳಷ್ಟು ಹಳೆಯ ಐತಿಹಾಸಿಕ ಮಠ: ಅಂದಹಾಗೆ ಕರ್ನಾಟಕದ ಅಗ್ರಮಾನ್ಯ ಮಠ ಪರಂಪರೆಯ ಸಂಸ್ಥಾನಗಳಲ್ಲಿ ಒಂದಾಗಿರುವ ಗವಿಸಿದ್ದೇಶ್ವರ ಮಠ ಕೊಪ್ಪಳ ಜಿಲ್ಲೆಯಲ್ಲಿದೆ. ಇದನ್ನು ಗವಿಮಠ ಎಂತಲೂ ಕರೆಯುತ್ತಾರೆ. ಇದು ಉತ್ತರ ಕರ್ನಾಟಕದ ಹಳೆಯ ಮಠಗಳಲ್ಲಿ ಒಂದು. 800 ವರ್ಷಗಳಷ್ಟು ಹಳೆಯದಾಗಿರುವ ಲಿಂಗಾಯತ ಮಠಗಳಲ್ಲಿ ಈ ಮಠ ವೂ ಒಂದಾಗಿದೆ. \ No newline at end of file diff --git a/eesanje/url_46_12_7.txt b/eesanje/url_46_12_7.txt new file mode 100644 index 0000000000000000000000000000000000000000..28c2e81a6aa736ba1e449ded59ec44443060a4fa --- /dev/null +++ b/eesanje/url_46_12_7.txt @@ -0,0 +1,10 @@ +ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳ ವರ್ಚಸ್ಸಿಗೆ ‘ಲೈಂಗಿಕ ಹಗರಣಗಳ’ ಹೊಡೆತ +' ' ' +ಬೆಂಗಳೂರು,ಸೆ.22-ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರ ವಿರುದ್ಧದ ಸರಣಿ ಲೈಂಗಿಕ ಹಗರಣಗಳ ಆರೋಪಗಳು ರಾಜ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದ್ದು, ಅಲ್ಲದೆ ಕಾರ್ಯಕರ್ತರಲ್ಲೂ ಅಸಮಾಧಾನ ಮತ್ತು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೆ ಈ ಆರೋಪಗಳಿಂದಾಗಿ ವಿರೋಧ ಪಕ್ಷಗಳ ನೈತಿಕ ಬಲವನ್ನು ಕುಗ್ಗಿದ್ದು, ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ಹಿನ್ನಡೆ ಉಂಟು ಮಾಡಿದೆ. +ರಮೇಶ ಜಾರಕಿಹೊಳಿ, ಪ್ರಜ್ವಲ್‌ ರೇವಣ್ಣ, ಸೂರಜ್‌ ರೇವಣ್ಣ, ರೇವಣ್ಣ, ಮುನಿರತ್ನ ಅವರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ, ಬಂಧನ ಪ್ರಸಂಗ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದ ಕಾಂಗ್ರೆಸ್‌‍ ತಪ್ಪುಗಳನ್ನು ಜನರ ಮುಂದೆ ತಂದು, ಮುಜುಗರಕ್ಕೀಡು ಮಾಡಬೇಕಾದ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಮುಖ ಮುಚ್ಚಿಕೊಂಡು ಓಡಾಡಬೇಕಾದ ಸನ್ನಿವೇಶಕ್ಕೆ ತಂದು ನಿಲ್ಲಿಸಿದೆ. +ಇದರ ಜೊತೆಯಲ್ಲಿ ತಮ ವಿರುದ್ಧದ ಯಾವುದೇ ಅಕ್ಷೇಪಾರ್ಹ ವಿಡಿಯೋಗಳು ಬಿಡುಗಡೆ ಮಾಡಬಾರದು ಎಂದು ಕೋರ್ಟ್‌ ಗೆ ಹೋಗಿ ತಡೆ ತಂದಿರುವ ಅರ್ಧ ಡಜನ್‌ ಗೂ ಹೆಚ್ಚಿನ ನಾಯಕರು ಬಿಜೆಪಿಯಲ್ಲಿದ್ದಾರೆ. ಈ ಪೈಕಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಕೂಡಾ ಒಳಗೊಂಡಿದ್ದಾರೆ. +ಈ ನಡುವೆ ಮಾಜಿ ಸಿಎಂ ಬಿಎಸ್‌‍ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣವೂ ದಾಖಲಾಗಿದೆ. ಮಹಿಳೆಯೊಬ್ಬರು ಈ ರೀತಿಯ ಆರೋಪವನ್ನು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌‍ವೈ ಬಂಧನಕ್ಕೆ ನ್ಯಾಯಾಲಯ ತಡೆ ನೀಡಿದೆ. +ಪ್ರಜ್ವಲ್‌ ರೇವಣ್ಣ, ಎಚ್‌.ಡಿ.ರೇವಣ್ಣ ಮತ್ತು ಸೂರಜ್‌ ರೇವಣ್ಣ ವಿರುದ್ಧ ಗಂಭೀರ ಸ್ವರೂಪದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಎಚ್‌.ಡಿ/ರೇವಣ್ಣ ಮತ್ತು ಸೂರಜ್‌ ರೇವಣ್ಣಗೆ ಜಾಮೀನು ಸಿಕ್ಕರೆ, ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿ ಬಂಧನದಲ್ಲಿದ್ದಾರೆ.ಈ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್‌‍ಗೆ ಮುಜುಗರ ಉಂಟು ಮಾಡಿದೆ. +ಹಾಸನದಲ್ಲಿ ಜೆಡಿಎಸ್‌‍ ಸೋಲಿಗೆ ಇದು ಕಾರಣವಾದರೆ, ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಗೂ ಇದು ಮುಜುಗರ ಉಂಟು ಮಾಡಿತ್ತು. ಇನ್ನು ಈ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೂ ಆರೋಪ ಕೇಳಿ ಬಂದಿತ್ತು. ಇದು ಒಂದು ಕಡೆಯಾದರೆ ಬಿಜೆಪಿಯಲ್ಲಿ ಇಂತಹ ಆರೋಪ ರಾಮದಾಸ್‌‍, ಅರವಿಂದ ಲಿಂಬಾವಳಿ ವಿರುದ್ಧವೂ ಕೇಳಿಬಂದಿತ್ತು. ಇದೆಲ್ಲವೂ ಅವರ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರಿದೆ. +ಕೋಲ್ಕತ್ತಾದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಹೊಣೆಯನ್ನು ಹೊತ್ತು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ತುಂಬ ಗಟ್ಟಿ ಧ್ವನಿಯಲ್ಲಿ ಒತ್ತಾಯಿಸುತ್ತಿದೆ. ಇದು ಸರಿ ಕೂಡ. ಆದರೆ ಬಿಜೆಪಿ ಹಾಗೂ ಮೈತ್ರಿ ಪಕ್ಷದ ನಾಯಕರು, ಮುಖಂಡರು, ಶಾಸಕರು, ಮಾಜಿ ಸಂಸದರು, ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕರ್ನಾಟಕದಲ್ಲಿ ಇಷ್ಟೆಲ್ಲ ಆರೋಪಗಳು ಇವೆಯಲ್ಲಾ ಇದಕ್ಕೆ ಬಿಜೆಪಿ ಹೈ ಕಮಾಂಡ್‌ ಏನು ಮಾಡುತ್ತದೆ? ಎಂಬುದು ಕೂಡ ಪ್ರಶ್ನಾರ್ಹವಾಗಿದೆ. +ಕಾರ್ಯಕರ್ತರಲ್ಲಿ ಗೊಂದಲ:ಪಕ್ಷದಲ್ಲಿ ನಡೆಯುತ್ತಿರುವ ಈ ಎಲ್ಲಾ ಬೆಳವಣಿಗೆಗಳು ಕಾರ್ಯಕರ್ತರಲ್ಲೂ ಗೊಂದಲ ಸೃಷ್ಟಿಸಿದೆ. ಬಿಜೆಪಿ ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತಿದೆ. ಆದರೆ, ಪಕ್ಷದ ನಾಯಕರ ವಿರುದ್ಧದ ಆರೋಪಗಳನ್ನು ವಿರೋಧಿಸಲು ಸಾಧ್ಯವಾಗದೆ ಸಮರ್ಥಿಸಲು ಆಗದಂತಹ ಪರಿಸ್ಥಿತಿ ಪಕ್ಷದ ಕಾರ್ಯಕರ್ತರಲ್ಲಿದೆ. ಇದಕ್ಕೆ ಜೆಡಿಎಸ್‌‍ ಪಕ್ಷದ ಕಾರ್ಯಕರ್ತರು ಹೊರತಾಗಿಲ್ಲ. ಒಟ್ಟಿನಲ್ಲಿ ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪಗಳು ಕೇಳಿ ಬಂದಾಗ ಪಕ್ಷ ಏನು ಕ್ರಮ ಕೈಗೊಳ್ಳುತ್ತದೆ ಎಂಬುವುದು ಬಹಳ ಮುಖ್ಯವಾಗಿದೆ. ಕ್ರಮದ ಬದಲಾಗಿ ಸಮರ್ಥನೆಗಿಳಿದ್ದರೆ ಅದು ಪಕ್ಷದ ವರ್ಚಸ್ಸಿಗೆ ಮತ್ತಷ್ಟು ಕುಂದು ಉಂಟು ಮಾಡಲಿರುವುದು ಸತ್ಯ. \ No newline at end of file diff --git a/eesanje/url_46_12_8.txt b/eesanje/url_46_12_8.txt new file mode 100644 index 0000000000000000000000000000000000000000..dab9a7783976ef62d7003953ecbeaf7c1c74889f --- /dev/null +++ b/eesanje/url_46_12_8.txt @@ -0,0 +1,7 @@ +ಹೇಳಿಕೆ ವೈರಲ್ : ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ + -- , +ಬೆಂಗಳೂರು, ಸೆ.22-ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು, ಇತ್ತೀಚೆಗೆ ನ್ಯಾಯಾಂಗ ಪ್ರಕ್ರಿಯೆಯ ಸಂದರ್ಭದಲ್ಲಿ ತಾವು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ.ವಿಚಾರಣೆಯೊಂದರ ವೇಳೆ ಮುಸ್ಲಿಂ ಬಾಹುಳ್ಯ ಪ್ರದೇಶವಾದ (ಬೆಂಗಳೂರಿನ) ಗೋರಿಪಾಳ್ಯದ ಕ್ರಿಮಿನಲ್ಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಹೆದರುತ್ತಿದ್ದಾರೆ. ಏಕೆಂದರೆ ಅದು ಪಾಕಿಸ್ತಾನದಲ್ಲಿದೆ ಎನ್ನುವ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಅಗಿತ್ತು. +ಅದೇ ರೀತಿ, ಮಹಿಳಾ ವಕೀಲೆಯೊಬ್ಬರ ಜೊತೆ ಕೀಳು ಅಭಿರುಚಿಯಿಂದ ಮಾತನಾಡಿದ್ದ ವಿಡಿಯೋ ಕೂಡ ವ್ಯಾಪಕವಾಗಿ ಪ್ರಸರಣಗೊಂಡಿತ್ತು. ಇವುಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಿಕೊಂಡು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ಗೆ ಸೂಚಿಸಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಿಗೇ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ಮುಕ್ತ ನ್ಯಾಯಾಲಯದಲ್ಲಿ ತಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. +ಕಲಾಪ ಆರಂಭವಾಗುತ್ತಿದ್ದಂತೆ ನ್ಯಾಯಮೂರ್ತಿ ಶ್ರೀಶಾನಂದ ಅವರು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಹಿರಿಯ ವಕೀಲರ ಸಮುಖದಲ್ಲಿ,ನಾನು ವ್ಯಕ್ತಪಡಿಸಿರುವ ಅಭಿಪ್ರಾಯವು ಯಾವುದೇ ವ್ಯಕ್ತಿ ಸಮುದಾಯದ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶ ಹೊಂದಿರಲಿಲ್ಲ. +ನನ್ನ ಹೇಳಿಕೆಯಿಂದ ಯಾವುದೇ ಸಮಾಜ ಅಥವಾ ವ್ಯಕ್ತಿಯ ಮನಸ್ಸಿಗೆ ಧಕ್ಕೆಯಾಗಿದ್ದರೆ ಅಂತರಾಳದಿಂದ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಒಕ್ಕಣೆಯನ್ನು ಓದಿದರು. ನೀವು (ನ್ಯಾ.ಶ್ರೀಶಾನಂದ) ಪ್ರಾಮಾಣಿಕರಾದ ನ್ಯಾಯಮೂರ್ತಿಗಳಾಗಿದ್ದೀರಿ. ಕಿರಿಯ ವಕೀಲರಿಗೆ ತಾವು ಉತ್ತೇಜನ ನೀಡಬೇಕು. +ನಿಮ ಪೀಠದ ಮುಂದೆ ಕಿರಿಯ ವಕೀಲರು ವಾದಿಸಲು ಹೆದರುವಂತಿರಬಾರದು. ಅನಗತ್ಯ ಮಾತುಗಳನ್ನು ಆಡಬಾರದು ಎಂದು ಸಲಹೆ ನೀಡಿದ್ದೇವೆ. ಇದಕ್ಕೆ ನ್ಯಾಯಮೂರ್ತಿಗಳೂ ಸಹಮತಿಸಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ. \ No newline at end of file diff --git a/eesanje/url_46_12_9.txt b/eesanje/url_46_12_9.txt new file mode 100644 index 0000000000000000000000000000000000000000..9b24ef178630ee3f72f3c65adb600afca49ebedb --- /dev/null +++ b/eesanje/url_46_12_9.txt @@ -0,0 +1,10 @@ +ಕಾಂಗ್ರೆಸ್‌‍ನಿಂದ ಬಿಪಿಎಲ್‌ ಕಾರ್ಡ್‌ ರದ್ದುಗೊಳಿಸುವ ಹುನ್ನಾರ ನಡೆದಿದೆ : ಕೋಟಾ ಶ್ರೀನಿವಾಸ ಪೂಜಾರಿ + +ಚಿಕ್ಕಮಗಳೂರು,ಸೆ.22– ಗೃಹಲಕ್ಷಿ ಯೋಜನೆಗೆ ಹಣ ಹೊಂದಿಸಲು ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸುವ ಹುನ್ನಾರ ನಡೆಸಿದ್ದು, ಬಿಜೆಪಿ ಕಾರ್ಯಕರ್ತರು ಇದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದರು. +ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಸಂಬಂಧ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 50,000 ಬಿಪಿಎಲ್‌ ಕಾರ್ಡುಗಳು ರದ್ದಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಸಮೀಕ್ಷೆ ಸಹ ನಡೆಸುತ್ತಿದೆ ಎಂದರು. +ಸಾವಿರಾರು ಬಡ ಜನರಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಪಕ್ಷದ ಮಹಿಳಾ ಮೋರ್ಚ ಅಥವಾ ಬೇರೆ ಯಾವುದಾದರೂ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಬಡವರ ಪಡಿತರ ಚೀಟಿಗಳನ್ನು ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಬೇಕು ಎಂದು ಹೇಳಿದರು. +ಇದರಿಂದ ಕನಿಷ್ಠಪಕ್ಷ ಬಿಪಿಎಲ್‌ ಕಾರ್ಡುಗಳಿಗೆ ಸ್ವಲ್ಪಮಟ್ಟಿನ ರಿಯಾಯಿತಿಯಾದರೂ ಸಿಗಬಹುದು. ಬಡವರಿಗೆ ಅನುಕೂಲವಾಗಬಹುದು ಎಂದರು. ಇಡೀ ದೇಶದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ನಮ ನಮ ಬೂತ್‌ ಗಳಲ್ಲಿ ಅಭಿಯಾನಕ್ಕೆ ವೇಗ ನೀಡಬೇಕು. ಕೆಲವೆಡೆ ತುಂಬಾ ಚೆನ್ನಾಗಿ ನಡೆದಿದೆ. ಪ್ರಮುಖವಾಗಿ ಮಹಾಶಕ್ತಿ ಕೇಂದ್ರಗಳು, ಮಂಡಲಗಳಲ್ಲಿ ಇನ್ನಷ್ಟು ಚುರುಕಾಗಿ ಸದಸ್ಯತ್ವ ಅಭಿಯಾನ ನಡೆಯಬೇಕಿದೆ ಎಂದು ಕರೆ ನೀಡಿದರು. +ಮಂಡಲಗಳು ಮತ್ತು ಶಕ್ತಿ ಕೇಂದ್ರದ ನಿಜವಾದ ಶಕ್ತಿಯ ಅರವಿಗೆ ಬರುವುದೇ ಸದಸ್ಯತ್ವ ನೊಂದಣಿಯ ಆಧಾರದ ಮೇಲೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮೋರ್ಚಾಗಳು ಜವಾಬ್ದಾರಿಯನ್ನು ತೆಗೆದುಕೊಂಡು ಆಯಾ ಬೂತ್‌, ಶಕ್ತಿ ಕೇಂದ್ರ ಹಾಗೂ ಮಂಡಲಗಳ ಪ್ರಮುಖರನ್ನು ಜೋಡಿಸಿಕೊಂಡು ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದೆ. +ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ಸದಸ್ಯತ್ವ ಅಭಿಯಾನ ಕೇವಲ ಸಂಖ್ಯಾತಕವಾಗಿ ಆದರೆ ಸಾಲದು. ಅದು ಗುಣಾತಕವಾಗಿರಬೇಕು. ಪಕ್ಷದ ಕಾರ್ಯವು ವಿಸ್ತಾರವಾಗಬೇಕಾದರೆ ಅದಕ್ಕೆ ಸದಸ್ಯತ್ವವು ಒಂದು ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೊಳಗೇರಿಯಿಂದ ಹಿಡಿದು ಮೇಲಟ್ಟದ ಹೊರಗಿನವರನ್ನು ಸದಸ್ಯರನ್ನಾಗಿ ಮಾಡಿಕೊಳ್ಳಬೇಕು ಎಂದರು. +ಜನರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿದ ಪರಿಣಾಮ ನಗರದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದ ಬಿಜೆಪಿ ಇಂದು ಮೊದಲನೇ ಸ್ಥಾನಕ್ಕೆ ಏರಿದೆ. ಪಕ್ಷದ ಸಕ್ರಿಯ ಸದಸ್ಯರಾಗಲು ಕನಿಷ್ಠ 100 ಜನರನ್ನು ಸದಸ್ಯರನ್ನಾಗಿ ಮಾಡಿಸಬೇಕಾಗುತ್ತದೆ. ಅಂತವರು ಪಕ್ಷದಲ್ಲಿ ಜವಾಬ್ದಾರಿಗಳನ್ನು ಪಡೆದುಕೊಳ್ಳಲು ಅರ್ಹತೆ ಪಡೆಯುತ್ತಾರೆ. ಸದಸ್ಯತ್ವ ಅಭಿಯಾನ ಪ್ರಕ್ರಿಯೆಯ ತಾಂತ್ರಿಕ ವಿಚಾರಗಳು ಇನ್ನೂ ಅರ್ಥವಾಗಿಲ್ಲವಾದರೆ ಪ್ರಮುಖರಾದ ರಾಕೇಶ್‌, ಸಂತೋಷ್‌ ಕೋಟ್ಯಾನ್‌, ಸಮೃದ್ಧ ಪೈ ಅವರನ್ನು ಭೇಟಿ ಮಾಡಿ ಗೊಂದಲಗಳಿದ್ದರೆ ಸರಿಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. +ಬಿಜೆಪಿ ನಗರಾಧ್ಯಕ್ಷ ಕೆಂಪನಹಳ್ಳಿ ಪುಷ್ವರಾಜ್‌ , ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ ಆರ್‌ ದೇವರಾಜ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಡಾ. ನರೇಂದ್ರ, ಬೆಳವಾಡಿ ರವೀಂದ್ರ, ಮುಖಂಡರುಗಳಾದ ಪ್ರೇಮ್‌ ಕುಮಾರ್‌, ಬಿ.ರಾಜಪ್ಪ, ಜಸಂತಾಅನಿಲ್‌ ಕುಮಾರ್‌, ಪವಿತ್ರ, ಸಂತೋಷ್‌ ಕೋಟ್ಯಾನ್‌, ಬಸವರಾಜ್‌, ಜಿ.ಶಂಕರ ಉಪಸ್ಥಿತರಿದ್ದರು. \ No newline at end of file diff --git a/eesanje/url_46_130_1.txt b/eesanje/url_46_130_1.txt new file mode 100644 index 0000000000000000000000000000000000000000..4d58912993807611a01e540a7ea52293b9c7a80b --- /dev/null +++ b/eesanje/url_46_130_1.txt @@ -0,0 +1,3 @@ +ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಇಬ್ಬರನ್ನು ಬಂಧಿಸಿದ ಎಸ್‌‍ಐಟಿ ಅಧಿಕಾರಿಗಳು +ಬೆಂಗಳೂರು, ಮೇ 28-ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎಸ್‌‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. +ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ನವೀನ್‌ ಗೌಡ ಹಾಗೂ ಚೇತನ್‌ ಇಂದು ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌‍ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನವೀನ್‌ನನ್ನು ಬಂಧಿಸದ ಬಗ್ಗೆ ಹಲವಾರು ರಾಜಕೀಯ ಮುಖಂಡರುಗಳಿಂದ ಸಾಕಷ್ಟು ಆಕ್ಷೇಪಗಳು ಬಂದಿತ್ತು. \ No newline at end of file diff --git a/eesanje/url_46_130_10.txt b/eesanje/url_46_130_10.txt new file mode 100644 index 0000000000000000000000000000000000000000..3f25f817008c1b9fba156a4d011298f14206a069 --- /dev/null +++ b/eesanje/url_46_130_10.txt @@ -0,0 +1,5 @@ +ಭಾರೀ ಅನಾಹುತ ತಪ್ಪಿಸಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ +ಉಡುಪಿ, ಮೇ 27-ರೈಲ್ವೆ ಹಳಿ ಜಾರಿರುವುದನ್ನು ಪತ್ತೆಹಚ್ಚಿದ ಕೊಂಕಣ ರೈಲ್ವೆ ಮಾರ್ಗದ ಟ್ರ್ಯಾಕ್‌ ನಿರ್ವಾಹಕ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿಸಿದ್ದಾರೆ.ಉಡುಪಿ ಸಮೀಪದ ಇನ್ನಂಜೆ ಮತ್ತು ಪಡುಬಿದ್ರೆ ಮಾರ್ಗದ ನಡುವೆ ರಾತ್ರಿ 2.25ರ ಸುಮಾರಿಗೆ ರೈಲ್ವೆ ಹಳಿ ಜಾರಿರುವುದನ್ನು ಟ್ರ್ಯಾಕ್‌ ನಿರ್ವಾಹಕ ಪ್ರದೀಪ್‌ ಶೆಟ್ಟಿ ಪತ್ತೆ ಮಾಡಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ರೈಲ್ವೆ ಹಳಿ ದೋಷದ ಬಗ್ಗೆ ಮಾಹಿತಿ ನೀಡಿದ್ದಾನೆ. +ಕೂಡಲೇ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳನ್ನು ತಡೆಹಿಡಿದಿದ್ದಾರೆ. ಕಾರ್ಯಪ್ರವೃತ್ತರಾದ ರೈಲ್ವೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ದೋಷವನ್ನು ತ್ವರಿತವಾಗಿ ಸರಿಪಡಿಸಿದ್ದು, ಮುಂಜಾನೆ 5.50ರ 20 ಕಿಲೋ ಮೀಟರ್‌ ವೇಗದ ನಿರ್ಬಂಧದೊಂದಿಗೆ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. +ರೈಲ್ವೆ ಹಳಿ ನಿರ್ವಾಹಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಕೊಂಕಣ ರೈಲ್ವೆ ಕಾರ್ಪೊರೇಷನ್‌ ಲಿಮಿಟೆಡ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂತೋಷ್‌ಕುಮಾರ್‌ ಜಾ ಪ್ರದೀಪ್‌ ಶೆಟ್ಟಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ 25 ಸಾವಿರ ರೂ. ನಗದು ಬಹುಮಾನ ಘೋಷಿಸಿದ್ದಾರೆ. +ನಂತರ ಮರುಸ್ಥಾಪಿತ ಟ್ರ್ಯಾಕ್‌ಸೈಟ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.ರೈಲ್ವೆ ಹಳಿ ದೋಷವನ್ನು ಸರಿಪಡಿಸುವವರೆಗೂ ಪ್ರಯಾಣಿಕರು ಕೆಲ ಗಂಟೆಗಳ ಕಾಲ ಪರದಾಡುವಂತಾಗಿತ್ತು. ಏನೇ ಆದರೂ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದಂತಾಗಿದ್ದು, ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. \ No newline at end of file diff --git a/eesanje/url_46_130_11.txt b/eesanje/url_46_130_11.txt new file mode 100644 index 0000000000000000000000000000000000000000..b47f38b7ade708db4805ee9177625cd9c54260fb --- /dev/null +++ b/eesanje/url_46_130_11.txt @@ -0,0 +1,5 @@ +ರೇವ್‌ ಪಾರ್ಟಿ ಪ್ರಕರಣ : ಸಿಸಿಬಿ ವಿಚಾರಣೆಗೆ ಸಮಯಾವಕಾಶ ಕೇಳಿದ ನಟಿ +ಬೆಂಗಳೂರು, ಮೇ 27-ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ಹೌಸ್‌‍ನಲ್ಲಿ ಆಯೋಜಿಸಿದ್ದ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಅವರು ಸಿಸಿಬಿ ಪೊಲೀಸರ ಮುಂದೆ ಹಾಜರಾಗಲು ಒಂದು ವಾರ ಕಾಲಾವಕಾಶ ಕೇಳಿದ್ದಾರೆ. +ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದವರ ಪೈಕಿ 86 ಮಂದಿ ಡ್ರಗ್ಸ್ ಸೇವಿಸಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿತ್ತು. ದಾಳಿ ಸಂದರ್ಭದಲ್ಲಿ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. +ನಟಿ ಸೇರಿದಂತೆ ಇಂದು 8 ಮಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿಸಿಬಿ ನೋಟಿಸ್‌‍ ನೀಡಿತ್ತು. ಆದರೆ, ಅನಾರೋಗ್ಯ ಹಾಗೂ ಇತರೆ ಕಾರಣ ನೀಡಿ ಒಂದು ವಾರದ ಕಾಲಾವಕಾಶ ನೀಡಬೇಕೆಂದು ನಟಿ ಹೇಮಾ ಮನವಿ ಮಾಡಿದ್ದಾರೆ. +ಇನ್ನುಳಿದ ಏಳು ಮಂದಿ ಇಂದು ಸಂಜೆ ವೇಳೆಗೆ ಸಿಸಿಬಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಮಾದಕ ಜಾಲದ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಶೆಯಲ್ಲಿ ತೇಲಿದ್ದವರಿಗೆ ನೋಟಿಸ್‌‍ ನೀಡಿ ತನಿಖೆ ಚುರುಕುಗೊಳಿಸುತ್ತಿದ್ದಂತೆ ರೇವ್‌ ಪಾರ್ಟಿಯಲ್ಲಿ ಬೆಟ್ಟಿಂಗ್‌ ದಂಧೆ ಸೇರಿದಂತೆ ಅನೈತಿಕ ಚಟುವಟಿಕೆಗಳು ನಡೆದಿರುವುದು ಗೊತ್ತಾಗಿದ್ದು, ರೇವ್‌ ಪಾರ್ಟಿಯ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. \ No newline at end of file diff --git a/eesanje/url_46_130_12.txt b/eesanje/url_46_130_12.txt new file mode 100644 index 0000000000000000000000000000000000000000..cd833bdb5553d45fd32067cfed46ec65eb62f328 --- /dev/null +++ b/eesanje/url_46_130_12.txt @@ -0,0 +1,5 @@ +ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ಆತಹತ್ಯೆ +ಶಿವಮೊಗ್ಗ, ಮೇ 27– ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಡೆಂಟ್‌ ನೇಣು ಹಾಕಿಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ಇಲ್ಲಿ ನಡೆದಿದೆ. ಬೆಂಗಳೂರಿನಲ್ಲಿರುವ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಲೆಕ್ಕಪತ್ರ ವಿಭಾಗದ ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್‌ (52) ಆತಹತ್ಯೆ ಮಾಡಿಕೊಂಡವರು. +ವಿನೋಬನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ಮನೆಯಲ್ಲಿ ಅವರು ಕಳೆದ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ನಿಗಮದಲ್ಲಿ ಕೇಳಿ ಬಂದಿದ್ದ ಅವ್ಯವಹಾರದಿಂದ ಮನನೊಂದಿದ್ದ ಅವರು ಡೆತ್‌ನೋಟ್‌ ಬರೆದಿಟ್ಟು ಆತಹತ್ಯೆಗೆ ಶರಣಾಗಿದ್ದಾರೆ. +ಕಳೆದ ಶುಕ್ರವಾರ ಅವರು ರಜೆ ಹಾಕಿ ತಮ ಸ್ವಂತ ಊರಾದ ಶಿವಮೊಗ್ಗಕ್ಕೆ ಬಂದಿದ್ದರು. ಎಲ್ಲರೊಂದಿಗೆ ಲವಲವಿಕೆಯಿಂದಿದ್ದ ಅವರು ನಿನ್ನೆ ಸಂಜೆ ಬೆಡ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ರಾತ್ರಿ ಊಟಕ್ಕೆ ಕರೆಯಲು ಪತ್ನಿ ಬಾಗಿಲು ತಟ್ಟಿದಾಗ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ಮನೆಯವರು ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ. +ತಕ್ಷಣ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ಇಲಾಖೆಯ ಕೆಲ ಅಧಿಕಾರಿಗಳ ಹೆಸರು ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_130_2.txt b/eesanje/url_46_130_2.txt new file mode 100644 index 0000000000000000000000000000000000000000..b84cb386805bd00aee2cd14474ddf27dc9c8eff0 --- /dev/null +++ b/eesanje/url_46_130_2.txt @@ -0,0 +1,8 @@ +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ವಿಚಾರದ ಕುರಿತು ಸಚಿವ ಬಿ.ನಾಗೇಂದ್ರ ಸ್ಪಷ್ಟನೆ +ಬೆಂಗಳೂರು, ಮೇ 28-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯಲ್ಲಿ ತಮ್ಮ ಪಾತ್ರ ಇಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ತನಿಖೆ ನಡೆಯುತ್ತಿದ್ದು, ಅವರ ವಿರುದ್ಧ ಶೀಘ್ರವೇ ಕ್ರಮ ಜರುಗಿಸಲಾಗುವುದು. ಹಣ ದುರುಪಯೋಗವಾಗಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸಚಿವ ಬಿ.ನಾಗೇಂದ್ರ ಸ್ಪಷ್ಟಪಡಿಸಿದ್ದಾರೆ. +ವಿಧಾನಸೌಧದ ತುರ್ತು ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಹಣವಿತ್ತು. 87 ಕೋಟಿ ರೂ.ಗಳನ್ನು ಯೂನಿಯನ್‌ ಬ್ಯಾಂಕ್‌ನ ನಿಗಮದ ಖಾತೆಯಿಂದ ಅದೇ ಬ್ಯಾಂಕಿನ ಮತ್ತೊಂದು ಶಾಖೆಯ ನಕಲಿ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಇದರ ಹಿಂದೆ ಬ್ಯಾಂಕ್‌ ಅಧಿಕಾರಿಗಳ ಪಾತ್ರ ಇರುವ ಶಂಕೆ ಇದೆ ಎಂದರು. +ವರ್ಗಾವಣೆಯಾಗಿದ್ದ ಹಣದ ಪೈಕಿ ನಿನ್ನೆಯವರೆಗೆ 28 ಕೋಟಿ ರೂ.ಗಳನ್ನು ಮರು ವಸೂಲಿ ಮಾಡಿ ನಿಗಮದ ಖಾತೆಯಲ್ಲಿಡಲಾಗಿದೆ. ಬಾಕಿ ಇರುವ ಸುಮಾರು 50 ಕೋಟಿ ರೂ.ಗಳನ್ನು ಇಂದು ಸಂಜೆಯೊಳಗಾಗಿ ಮರಳಿಸಬೇಕು, ಇಲ್ಲದೇ ಹೋದರೆ ಯೂನಿಯನ್‌ ಬ್ಯಾಂಕ್‌ನ ಅಧ್ಯಕ್ಷರು, ನಿರ್ದೇಶಕರು ಮತ್ತು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. +ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದನಾಭ್‌ ಅವರು ತಮ ಗಮನಕ್ಕೆ ಬರದೆ, ಸಹಿಯನ್ನು ನಕಲು ಮಾಡಿ ಹಣ ವರ್ಗಾವಣೆ ಮಾಡಲಾಗಿದೆ. ಸದರಿ ಹಣವನ್ನು ಸೋಮವಾರದೊಳಗೆ ವಸೂಲಿ ಮಾಡಿ ನಿಗಮದ ಬ್ಯಾಂಕ್‌ ಖಾತೆಗೆ ವಾಪಸ್‌‍ ತರಿಸಬೇಕು ಎಂದು ತಾವು ಸೂಚನೆ ನೀಡಿದ್ದು, ಅದರ ಬಳಿಕ ಭ್ರಷ್ಟಾಚಾರಿ ಚಂದ್ರಶೇಖರ್‌ ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ನಿಗಮದ ಹಣ ವರ್ಗಾವಣೆ ಆಗಿರುವ ಹಾಗೂ ಸಹಿಯನ್ನು ನಕಲು ಮಾಡಿರುವ ಬಗ್ಗೆ ದೂರು ನೀಡಲಾಗಿದ್ದು, ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಯುತ್ತಿದೆ. +ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ವರದಿಯ ಬಳಿಕ ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ವ್ಯವಸ್ಥಾಪಕ ನಿರ್ದೇಶಕರೂ ಸೇರಿದಂತೆ ಯಾರ ವಿರುದ್ಧವೂ ಮೃದು ಧೋರಣೆ ಅನುಸರಿಸುವುದಿಲ್ಲ ಎಂದು ತಿಳಿಸಿದರು. +ಇಷ್ಟು ಬೃಹತ್‌ ಮೊತ್ತದ ಹಣವನ್ನು ವರ್ಗಾವಣೆ ಮಾಡುವಾಗ ನನ್ನ ಗಮನಕ್ಕೆ ತರದೇ ಇರುವುದು ವ್ಯವಸ್ಥಾಪಕ ನಿರ್ದೇಶಕರ ಲೋಪವಾಗಿದೆ. ಈ ಕಾರಣಕ್ಕೆ ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಪ್ರಕರಣದ ಬಗ್ಗೆ ನನಗೆ ಯಾವ ಮಾಹಿತಿಯೂ ಇರಲಿಲ್ಲ. ನಿಗಮ ಪ್ರತ್ಯೇಕವಾದ ಸಂಸ್ಥೆಯಾಗಿದೆ. ಹೀಗಾಗಿ ವಿರೋಧಪಕ್ಷಗಳು ಒತ್ತಾಯಿಸುವಂತೆ ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಲ್ಲದೆ, ಬಿಜೆಪಿಯ ಮಾಜಿ ಸಚಿವ ಕೆ.ಎಸ್‌‍.ಈಶ್ವರಪ್ಪ ಅವರ ಪ್ರಕರಣವೇ ಬೇರೆ, ನನ್ನ ಪ್ರಕರಣವೇ ಬೇರೆ ಎಂದು ಸಮರ್ಥಿಸಿಕೊಂಡರು. +ನಿಗಮದ ಉಳಿತಾಯ ಖಾತೆ ಲೆಕ್ಕಾಧಿಕಾರಿ ಚಂದ್ರಶೇಖರ್‌ ಅವರ ಹೆಸರಿನಲ್ಲಿರುತ್ತದೆ. ಅವರ ಮೇಲೆ ಯಾರು ಒತ್ತಡ ಹೇರಿ ಹಣ ವರ್ಗಾವಣೆ ಮಾಡಿಸಿದ್ದಾರೆ ಎಂದು ಗೊತ್ತಿಲ್ಲ.ಸಿಐಡಿ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸಲಿದ್ದಾರೆ. ವ್ಯವಸ್ಥಾಪಕ ನಿರ್ದೇಶಕರ ಸಹಿಯ ಸಾಚಾತನದ ಬಗ್ಗೆ ಶೀಘ್ರವೇ ಎಫ್‌ಎಸ್‌‍ಎಲ್‌ ವರದಿ ಪಡೆಯಲಾಗುವುದು. ಆತಹತ್ಯೆ ಮಾಡಿಕೊಂಡ ಚಂದ್ರಶೇಖರ್‌, ನನ್ನ ಹೆಸರನ್ನು ಏಕೆ ಉಲ್ಲೇಖ ಮಾಡಿದ್ದಾರೋ ಗೊತ್ತಿಲ್ಲ. ನಾನು ಯಾವುದೇ ಆದೇಶವನ್ನೂ ಮೌಖಿಕವಾಗಿ ನೀಡಿಲ್ಲ. ಎಲ್ಲವನ್ನೂ ಲಿಖಿತವಾಗಿಯೇ ಸೂಚನೆ ನೀಡುತ್ತೇನೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_130_3.txt b/eesanje/url_46_130_3.txt new file mode 100644 index 0000000000000000000000000000000000000000..fb2c10cdfbe44229a112003ab4c68fdcd97a3435 --- /dev/null +++ b/eesanje/url_46_130_3.txt @@ -0,0 +1,12 @@ +ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ : ಆರ್‌.ಅಶೋಕ್‌ ಗಂಭೀರ ಆರೋಪ +ಬೆಂಗಳೂರು, ಮೇ 28-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಇಡೀ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. +ಅವರ ಆತಹತ್ಯೆಗೆ ಪ್ರತಿಪಕ್ಷದ ನಾಯಕರ ಬಳಿ ಸಾಕ್ಷಿ ಇಲ್ಲವೇ, ದಾಖಲೆ ಇದೆ ಎಂದು ಕಾಂಗ್ರೆಸ್‌‍ ನಾಯಕರು ನಮನ್ನೇ ಕೇಳುತ್ತಿದ್ದರು. ಡೆತ್‌ನೋಟ್‌ನಲ್ಲಿ ಅನೇಕ ಅಂಶಗಳನ್ನು ಬರೆದಿಟ್ಟು ಚಂದ್ರಶೇಖರನ್‌ ಆತಹತ್ಯೆಗೆ ಶರಣಾಗಿದ್ದಾರೆ. ಇದಕ್ಕಿಂತ ಸಾಕ್ಷಿ ಬೇಕೇ? ಎಂದು ಅವರು ಪ್ರಶ್ನಿಸಿದರು. +ರಾಜ್ಯಸರ್ಕಾರದ ವೈಫಲ್ಯಗಳನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅಶೋಕ್‌, ಒಬ್ಬ ಅಧಿಕಾರಿ ಪತ್ರ ಬರೆದು ಆತಹತ್ಯೆ ಮಾಡಿಕೊಂಡಿದ್ದಾನೆ. 187 ಕೋಟಿ ಲೂಟಿ ಮಾಡಿದ್ದಾರೆ ಅದು ಚೆಕ್‌ನಲ್ಲಿಯೇ ಲೂಟಿಯಾಗಿದೆ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ಇದಕ್ಕಿಂತ ಸಾಕ್ಷಿ ಏನು ಬೇಕು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. +ಮಾಜಿ ಸಚಿವ ಕೆ.ಎಸ್‌‍.ಈಶ್ವರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ನೈತಿಕ ಹೊಣೆ ಹೊತ್ತು ತಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಚಿವರೊಬ್ಬರ ಮೇಲೆ ಇದೇ ರೀತಿ ಆರೋಪ ಕೇಳಿಬಂದಿರುವುದರಿಂದ ಸಚಿವ ನಾಗೇಂದ್ರ ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಇಲ್ಲವೇ ಮುಖ್ಯಮಂತ್ರಿಯವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು. +ಸರ್ಕಾರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸಗಳೂ ನಡೆಯುತ್ತಿಲ್ಲ. ಲಂಚ ಕೊಟ್ಟರೆ ಮಾತ್ರ ಎಲ್ಲವೂ ಸರಾಗವಾಗಿ ನಡೆಯುತ್ತವೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತದೆ. ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಕಿಲೋಮೀಟರ್‌ ರಸ್ತೆಗೆ ಡಾಂಬರು ಹಾಕಿಲ್ಲ, ಗುಂಡಿಗಳನ್ನು ಮುಚ್ಚಲು ಇವರ ಹಣೆಬರಹಕ್ಕೆ ಸಾಧ್ಯವಾಗಿಲ್ಲ, ಕರ್ನಾಟಕ ಮಾದರಿ ಇದೇನಾ? ಎಂದು ಪ್ರಶ್ನಿಸಿದರು. +ನಾವು ಏನಾದರೂ ಆರೋಪ ಮಾಡಿದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ನಮ ಬ್ರದರ್‌ರ‍ಸ ಎಂದು ವ್ಯಂಗ್ಯವಾಡುತ್ತಾರೆ. ಈಗ ಬೆಂಗಳೂರನ್ನು ಹಾಳು ಮಾಡುತ್ತಿರುವುದು ಇದೇ ಬ್ರದರ್‌ರ‍ಸ ಅಕ್ಕಪಕ್ಕ ಇರುವವರು. ಬ್ರಾಂಡ್‌ ಬೆಂಗಳೂರು ಈಗ ಗಬ್ಬೆದ್ದು ನಾರುವ ಸ್ಥಿತಿಗೆ ಬಂದಿದೆ ಎಂದು ಹರಿಹಾಯ್ದರು. +ಮಾಜಿ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಬೆಂಗಳೂರು ಇರಲಿ, ಕರ್ನಾಟಕದಲ್ಲೂ ಅಭಿವೃದ್ಧಿ ಕಾರ್ಯ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಹೇಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. +ಐಟಿಬಿಟಿ ಮೂಲಕ ಬೆಂಗಳೂರು ಇಡೀ ವಿಶ್ವಕ್ಕೇ ಮಾದರಿಯಾಗಿತ್ತು. ಇಂದು ಅದೇ ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳಿಗೆ ಬಿದ್ದು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಂದು ಗುಂಡಿಯನ್ನೂ ಮುಚ್ಚಲು ಆಗದ ಸರ್ಕಾರ ಕರ್ನಾಟಕ ಮಾದರಿ ಬಗ್ಗೆ ಮಾತನಾಡುತ್ತಿರುವುದು ಐತಿಹಾಸಿಕ ವ್ಯಂಗ್ಯ ಎಂದು ಕುಹಕವಾಡಿದರು. +ಸರ್ಕಾರದಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಗುತ್ತಿಗೆದಾರರು ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಅವರ ರಕ್ತವನ್ನು ಹೀರುವ ಕೆಲಸ ಸರ್ಕಾರವೇ ಮಾಡುತ್ತಿದೆ. ಕಾಮಗಾರಿಗಳಿಗೆ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಮಲಗಿರುವ ಸರ್ಕಾರವನ್ನು ಎಬ್ಬಿಸುವ ಕೆಲಸ ಬಿಜೆಪಿ ಮಾಡಲಿದೆ ಎಂದರು. +ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡದಿರುವುದೇ ಲೇಸು. ಪ್ರತಿ ಸ್ಟೇಷನ್‌ಗಳಿಗೂ ಇಂತಿಷ್ಟು ಮಾಮೂಲಿ ಕೊಡಬೇಕೆಂದು ನಿಗದಿಪಡಿಸಲಾಗಿದೆ. ಪೊಲೀಸರು ಎಲ್ಲೆಂದರಲ್ಲಿ ವಸೂಲಿ ಮಾಡುವ ಕಾಯಕದಲ್ಲಿ ತೊಡಗಿದ್ದಾರೆ. ಹೆಣ್ಣು ಮಕ್ಕಳು ಮನೆಯಿಂದ ಹೊರಹೋದರೆ ಸುರಕ್ಷಿತವಾಗಿ ವಾಪಸ್‌‍ ಬರುತ್ತೇವೆ ಎಂಬ ಖಾತರಿ ಇಲ್ಲ. ಮುಂದಿನ ದಿನಗಳಲ್ಲಿ ನಾವು ಸರ್ಕಾರದ ವಿರುದ್ಧ ಮತ್ತಷ್ಟು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಸಿದರು.ಮಾಜಿ ಸಚಿವ ಗೋಪಾಲಯ್ಯ ಮಾತನಾಡಿ, ಕಾಂಗ್ರೆಸ್‌‍ ಸರ್ಕಾರ ಇಲ್ಲಿನ ಸಮಸ್ಯೆಗಳನ್ನು ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದೆ. ಸಾಲದ್ದಕ್ಕೆ ಸುಪ್ರೀಂಕೋರ್ಟ್‌ಗೂ ಹೋಗಿದ್ದರು. +ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಎಷ್ಟೆಷ್ಟು ಅನುದಾನ ಕೊಟ್ಟಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ, ಕುಡಿಯುವ ನೀರಿಗೂ ತೊಂದರೆಯಾಗಿದೆ, ರಸ್ತೆಗಳು ಗುಂಡಿಮಯವಾಗಿವೆ, ಕಾಂಗ್ರೆಸ್‌‍ ಶಾಸಕರಿಗೆ ಮಾತ್ರ ಅನುದಾನ ಸಿಗುತ್ತದೆ, ನಮ ಕ್ಷೇತ್ರಕ್ಕೆ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ ಎಂದು ಕಿಡಿಕಾರಿದರು.ಪ್ರತಿಭಟನೆಯಲ್ಲಿ ಶಾಸಕರಾದ ಎಸ್‌‍.ಆರ್‌.ವಿಶ್ವನಾಥ್‌, ಭೈರತಿ ಬಸವರಾಜು, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ ಮತ್ತಿತರರು ಭಾಗವಹಿಸಿದ್ದರು. \ No newline at end of file diff --git a/eesanje/url_46_130_4.txt b/eesanje/url_46_130_4.txt new file mode 100644 index 0000000000000000000000000000000000000000..64d6deca847bee371e1a7f419c591027b260cca7 --- /dev/null +++ b/eesanje/url_46_130_4.txt @@ -0,0 +1,5 @@ +ವಿಧಾನಪರಿಷತ್‌ ಸದಸ್ಯತ್ವಕ್ಕಾಗಿ ರಮೇಶ್‌ಕುಮಾರ್‌ ಲಾಬಿ +ಬೆಂಗಳೂರು, ಮೇ 28-ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕಾಗಿ ಮಾಜಿ ಸಚಿವ ರಮೇಶ್‌ಕುಮಾರ್‌ ಲಾಬಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಕೋಲಾರ ಜಿಲ್ಲೆಯ ಶಾಸಕರಾದ ಪ್ರದೀಪ್‌ ಈಶ್ವರ್‌, ಕೊತ್ತನೂರು ಮಂಜುನಾಥ್‌, ವಿಧಾನಪರಿಷತ್‌ ಸದಸ್ಯರಾದ ನಜೀರ್‌ ಅಹಮದ್‌, ಅನಿಲ್‌ಕುಮಾರ್‌ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಮನೆಗೆ ಭೇಟಿ ನೀಡಿದ ನಿಯೋಗ ರಮೇಶ್‌ಕುಮಾರ್‌ ಅವರನ್ನು ವಿಧಾನಪರಿಷತ್‌ ಸದಸ್ಯರನ್ನಾಗಿ ನೇಮಿಸಬೇಕು ಎಂದು ಒತ್ತಡ ಹೇರಿದೆ. +ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದರೂ ರಮೇಶ್‌ಕುಮಾರ್‌ ಜಿಲ್ಲಾ ರಾಜಕಾರಣದಲ್ಲಿ ಪ್ರಬಲ ಹಿಡಿತ ಹೊಂದಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಗಂಭೀರ ಚರ್ಚೆಗಳು ನಡೆಯುವ ವೇಳೆಯಲ್ಲಿ ಸಚಿವ ಕೆ.ಎಚ್‌.ಮುನಿಯಪ್ಪ ಅವರಿಗೆ ಪ್ರತಿತಂತ್ರ ರೂಪಿಸಿ ರಮೇಶ್‌ಕುಮಾರ್‌ ಯಶಸ್ವಿಯಾಗಿದ್ದರು. +ಮುನಿಯಪ್ಪ ತಮ್ಮ ಅಳಿಯ ದೊಡ್ಡಪೆದ್ದಣ್ಣ ಅವರಿಗೆ ಟಿಕೆಟ್‌ ಕೊಡಿಸಲು ನಡೆಸುತ್ತಿದ್ದ ಲಾಬಿಗೆ ಎದುರೇಟು ನೀಡಿದ್ದ ರಮೇಶ್‌ಕುಮಾರ್‌, ಶಾಸಕರು ಹಾಗೂ ಸಚಿವರಿಂದ ರಾಜೀನಾಮೆ ಕೊಡಿಸಲು ಮುಂದಾಗಿದ್ದರು. +ಕೊನೆಗೆ ಎರಡೂ ಬಣವನ್ನು ಸರಿದೂಗಿಸುವ ಸಲುವಾಗಿ ಹೈಕಮಾಂಡ್‌ ಬೇರೆಯ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕೈ ತೊಳೆದುಕೊಂಡಿದ್ದರು. ಈಗ ರಮೇಶ್‌ಕುಮಾರ್‌ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ತೀವ್ರ ಲಾಬಿ ನಡೆಸಲಾರಂಭಿಸಿದ್ದಾರೆ. ಮುನಿಯಪ್ಪ ಅವರ ಬಣ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದು ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_130_5.txt b/eesanje/url_46_130_5.txt new file mode 100644 index 0000000000000000000000000000000000000000..7571f105b932e115d12705b292ddf40ee8e0b92e --- /dev/null +++ b/eesanje/url_46_130_5.txt @@ -0,0 +1,11 @@ +ಸಿಎಂ, ಡಿಸಿಎಂ ವಿರುದ್ಧ ಗೃಹಸಚಿವ ಪರಮೇಶ್ವರ ಅಸಮಾಧಾನ +ಬೆಂಗಳೂರು, ಮೇ 28-ವಿಧಾನಪರಿಷತ್‌ ಸದಸ್ಯರ ಆಯ್ಕೆ ವಿಚಾರದಲ್ಲಿ ಹಿರಿಯರು ಹಾಗೂ ಅನುಭವಿಗಳ ಜೊತೆ ಸಮಾಲೋಚನೆ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಏಕಾಏಕಿ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ಹೊರಹಾಕಿದ್ದಾರೆ. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ನಮ್ಮನ್ನೂ ಸೇರಿದಂತೆ ಪಕ್ಷದ ಹಿರಿಯರ ಜೊತೆ ಚರ್ಚೆ ಮಾಡಬೇಕು. ಪಕ್ಷ ಹಾಗೂ ಸರ್ಕಾರದಲ್ಲಿ ಕೆಲಸ ಮಾಡಿದವರ ಸಂಪರ್ಕದಲ್ಲಿರುವವರ ಬಗ್ಗೆ ಚರ್ಚೆ ಮಾಡಬೇಕು. ಇದರಿಂದ ಪಕ್ಷಕ್ಕೆ ಅನುಕೂಲವಾಗುತ್ತದೆ. +ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಪಕ್ಷದಲ್ಲಿ ಅನೇಕ ಜವಾಬ್ದಾರಿ ನಿಭಾಯಿಸಿ ಅನುಭವಿಗಳಾಗಿರುವವರ ಸಲಹೆ ಸೂಚನೆಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾವಾರು, ಜಾತಿವಾರು ಹಾಗೂ ಪಕ್ಷ ಸಂಘಟನೆಯಲ್ಲಿ ಸಹಾಯ ಮಾಡಿದವರು ಯಾವ ಜಾತಿ ಕಾಂಗ್ರೆಸ್‌‍ ಜೊತೆ ದೃಢವಾಗಿ ನಿಂತಿದೆ ಎಂಬುದನ್ನು ನಮೊಂದಿಗೆ ಚರ್ಚೆ ಮಾಡಬೇಕಿದೆ. ಏಕಾಏಕಿ ಇಬ್ಬರೇ ಕುಳಿತು ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದರು. +ಬಿಜೆಪಿಯವರು ಯಾವುದೇ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಲಿ, ಅದು ಅವರ ಹಕ್ಕು. ಅವರ ಟೀಕೆಗಳಿಗೆ ನಾವು ಸರಿಯಾದ ಉತ್ತರ ನೀಡುತ್ತೇವೆ ಎಂದು ಹೇಳಿದರು.ಸರ್ಕಾರದ ಸಚಿವರು ಪಕ್ಷದ ಕಚೇರಿಗೆ ಭೇಟಿ ನೀಡಬೇಕು. ಜಿಲ್ಲಾ ಪ್ರವಾಸದಲ್ಲೂ ಜಿಲ್ಲಾ ಕಾಂಗ್ರೆಸ್‌‍ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಮುಖಂಡರ ಜೊತೆ ಚರ್ಚೆ ಮಾಡಬೇಕು ಎಂಬುದು ಹೊಸದಲ್ಲ. ಈ ಹಿಂದೆ ನಾನು ಎಂಟು ವರ್ಷ ಪಕ್ಷದ ಅಧ್ಯಕ್ಷನಾಗಿದ್ದಾಗ ಇದೇ ಕೆಲಸ ಮಾಡಿದ್ದೇನೆ. ಇತ್ತೀಚೆಗೆ ಸಚಿವರು ಪಕ್ಷದ ಕಚೇರಿಯತ್ತ ಬರುತ್ತಿರಲಿಲ್ಲ ಎಂಬುದನ್ನು ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಮನಿಸಿದ್ದಾರೆ. ನಿನ್ನೆ ಒಳ್ಳೆಯ ಸೂಚನೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ಹೈಕಮಾಂಡ್‌ ನಾಯಕರು ತೀರ್ಮಾನ ಮಾಡುತ್ತಾರೆ. ಡಿ.ಕೆ.ಶಿವಕುಮಾರ್‌ ಅವರನ್ನು ಬದಲಾಯಿಸಬೇಕು ಎಂದರೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇಲ್ಲವಾದರೆ ಮುಂದುವರೆಸುತ್ತಾರೆ. ನಾನು ಎಂಟು ವರ್ಷ ಅಧ್ಯಕ್ಷನಾಗಿದ್ದೆ. ಎರಡು ಬಾರಿ ಚರ್ಚೆಗಳು ಬಂದಾಗಲಾದರೂ ಬದಲಾವಣೆ ಮಾಡದೇ ಮುಂದುವರೆಸಲಾಗಿತ್ತು. ಈಗಲೂ ಅದೇ ರೀತಿ ಹೈಕಮಾಂಡ್‌ ನಿರ್ಧರಿಸುತ್ತಿದೆ. +ಈ ವಿಚಾರವನ್ನು ಡಿ.ಕೆ.ಶಿವಕುಮಾರ್‌ ಆಗಲೀ, ಮುಖ್ಯಮಂತ್ರಿ ಸಿದ್ದರಾಮಯ್ಯನವರಾಗಲೀ ತೀರ್ಮಾನ ಮಾಡುವುದಿಲ್ಲ. ಡಿ.ಕೆ.ಶಿವಕುಮಾರ್‌ರವರು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರಾಗಿ ಎರಡೂ ಹುದ್ದೆಗಳನ್ನು ನಿಭಾಯಿಸಲು ಸಮರ್ಥರಿದ್ದಾರೆ. ಅದು ಹೊರೆಯಾಗಿದ್ದರೆ ಅದನ್ನು ಅವರು ಹೇಳುತ್ತಾರೆ. ಜವಾಬ್ದಾರಿ ಹೆಚ್ಚಾಗಿದೆ ಎಂದು ಹೈಕಮಾಂಡ್‌ಗೆ ಅನಿಸಿದರೆ ಆಗ ಬದಲಾವಣೆಯಾಗುವ ಸಂಭವವಿದೆ. ಆದರೆ ಯಾವುದೇ ನಿರ್ಧಾರವಾಗಲು ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. +ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಫೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿದ್ದ ಮಹಿಳೆ ಕ್ಯಾನ್ಸರ್‌ನಿಂದಾಗಿ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ನಿಧನರಾಗಿದ್ದಾರೆ ಎಂಬ ಮಾಹಿತಿ ಇದೆ. ಅನಂತರ ಯಾವೆಲ್ಲಾ ಬೆಳವಣಿಗೆಗಳಾಗಿವೆ ಎಂಬುದನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು. +ತಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರೆ ನಿಭಾಯಿಸಲು ಸಿದ್ಧ ಎಂದು ಸಚಿವ ಕೆ.ಎನ್‌.ರಾಜಣ್ಣ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಪಕ್ಷಕ್ಕಾಗಿ ತ್ಯಾಗ ಮಾಡಲು ಬಹಳಷ್ಟು ಜನ ಇದ್ದಾರೆ. ಈ ಸಂಖ್ಯೆಯೇನು ಕಡಿಮೆಯಿಲ್ಲ. ರಾಜಣ್ಣ ಅವರು ಸಚಿವ ಸ್ಥಾನ ತ್ಯಾಗ ಮಾಡುವುದಾಗಿ ಹೇಳಿರುವುದು ಸಂತೋಷದ ವಿಚಾರ ಎಂದರು. +ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ಪ್ರಕಾರ ಕ್ರಮಗಳು ಚಾಲ್ತಿಯಲ್ಲಿವೆ. ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌‍ ಜಾರಿ ಮಾಡಲಾಗಿದೆ. ಎಸ್‌‍ಐಟಿ ಅಧಿಕಾರಿಗಳು ಸಿಆರ್‌ಪಿಸಿ 41 ಎ ನೋಟೀಸ್‌‍ ಜಾರಿ ಮಾಡಲಾಗಿದೆ. ವಿದೇಶದಲ್ಲಿ ಇರುವ ಅವರನ್ನು ಬಂಧಿಸಿ ಕರೆತರುವ ಎಲ್ಲಾ ಪ್ರಕ್ರಿಯೆಗಳು ಚಾಲನೆಯಲ್ಲಿದ್ದು, ವಿಳಂಬವಾಗಿಲ್ಲ ಎಂದು ಸಮರ್ಥಿಸಿಕೊಂಡರು. +ಸಂಸದರಾಗಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಸೌಲಭ್ಯವಿದೆ. ಒಂದು ವೇಳೆ ಲೋಕಸಭಾ ಚುನಾವಣೆಯಲ್ಲಿ ಅವರು ಸೋಲು ಕಂಡರೆ ಅದು ತನ್ನಷ್ಟಕ್ಕೆ ತಾನೇ ರದ್ದುಗೊಳ್ಳುತ್ತದೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇದನ್ನೆಲ್ಲಾ ತಿಳಿದುಕೊಂಡು ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವುದಾಗಿ ಹೇಳಿರಬಹುದು. ನಾವು 31 ರವರೆಗೂ ಕಾದು ನೋಡುತ್ತೇವೆ. ಒಂದು ವೇಳೆ ಬರದೇ ಇದ್ದರೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪ್ರಜ್ವಲ್‌ ರೇವಣ್ಣ ಅವರಿಗೆ ಶರಣಾಗುವ ಅವಕಾಶ ನೀಡುವುದುಅಥವಾ ಬಂಧಿಸುವ ಬಗ್ಗೆ ಎಸ್‌‍ಐಟಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ ಹೇಳಿದರು. \ No newline at end of file diff --git a/eesanje/url_46_130_6.txt b/eesanje/url_46_130_6.txt new file mode 100644 index 0000000000000000000000000000000000000000..ded14b0d586178e087e082a8938476ea4139ff39 --- /dev/null +++ b/eesanje/url_46_130_6.txt @@ -0,0 +1,7 @@ +ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ +ಬೆಂಗಳೂರು, ಮೇ 28– ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಬಿಡುಗಡೆಯಾಗಿದ್ದರೂ ರೈತರ ಖಾತೆಗೆ ಜಮೆ ಮಾಡಲು ವಿಫಲವಾಗಿರುವ ರಾಜ್ಯಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದೆ. ಈ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರತ್ಯೇಕವಾಗಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಕಷ್ಟಿತ ರೈತರ ಗೋಳನ್ನು ಹೇಳುವವರು, ಕೇಳುವವರು ಯಾರೂ ಇಲ್ಲದ ಪರಿಸ್ಥಿತಿ ಉಂಟಾಗಿದೆ. ಕಳೆದ ಬಾರಿಯ ಮುಂಗಾರು ಹಾಗೂ ಹಿಂಗಾರು ವಿಲತೆಯಿಂದ ನೊಂದಿರುವ ರೈತರು ಸದ್ಯ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೈಯಲ್ಲಿ ಕಾಸಿಲ್ಲದೇ ಬಿತ್ತನೆ ಕಾರ್ಯ ಕೈಗೊಳ್ಳಲು ಆಗದ ಪರಿಸ್ಥಿತಿ ಉದ್ಭವಿಸಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಇಂತಹ ಕಷ್ಟದ ಸಮಯದಲ್ಲಾದರೂ ಸರ್ಕಾರ ನಿಗಽಪಡಿಸಿರುವ ಬರ ಪರಿಹಾರವೂ ರೈತನ ಖಾತೆಗೆ ಜಮೆಯಾಗುತ್ತಿಲ್ಲ, ಬೆಳೆ ವಿಮೆ ನಗದೀಕರಣದ ಪರಿಸ್ಥಿತಿಯೂ ಇದೇ ಆಗಿದೆ ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್‌‍ ಸರ್ಕಾರ ಬಂದು ಒಂದು ವರ್ಷದ ಅವಧಿಯಿಂದಲೂ ರೈತರು ಒಂದಲ್ಲ ಒಂದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ, ಕೇವಲ ಮತ ಬ್ಯಾಂಕ್‌ ರಾಜಕಾರಣವನ್ನು ಹೊರತುಪಡಿಸಿ ಈ ಸರ್ಕಾರ ಯಾವುದೇ ಜನಪರ ಕಾರ್ಯಗಳಿಗೂ ಕಿಂಚಿತ್ತು ಗಮನ ಹರಿಸಲಿಲ್ಲ. ಅನ್ನದಾತ ರೈತನ ನೆರವಿಗೆ ಈಗಲಾದರೂ ಧಾವಿಸಿ ಬಂದು ತಾಂತ್ರಿಕ ತೊಡಕಿನ ಹೆಸರಿನಲ್ಲಿ ಹಣ ಕೈ ಸೇರದೇ ಹತಾಶೆಯ ಸ್ಥಿತಿಯಲ್ಲಿರುವ ರೈತನಿಗೆ ನೆರವಾಗಲಿ ಎಂದು ಮನವಿ ಮಾಡಿದ್ದಾರೆ. +ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನಕ್ಕೂ ಕಿಮತ್ತಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ನೋಡಿದರೆ ಬ್ಯಾಂಕಿಂಗ್‌ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸಲಾಗದ ಅಸಮರ್ಥ ಆಡಳಿತದ ಅವ್ಯವಸ್ಥೆಯನ್ನು ಎತ್ತಿ ತೋರಿಸುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. +ಮತ್ತೊಂದು ಪೋಸ್ಟ್‌ನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ರವರು, ಉತ್ತಮ ಮಳೆಯಾಗುತ್ತಿರುವ ಈ ಸಂದರ್ಭದಲ್ಲಾದರೂ ರೈತರ ನೆರವಿಗೆ ಕಾಂಗ್ರೆಸ್‌‍ ಸರ್ಕಾರ ಬಾರದಿದ್ದಲ್ಲಿ ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಮೂರೂ ಇಲ್ಲವೆಂದು ಜನತೆ ತೀರ್ಮಾನಿಸುತ್ತಾರೆ ಎಂದು ಎಚ್ಚರಿಸಿದ್ದಾರೆ. +ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತೆ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ರೈತರ ಬರ ಪರಿಹಾರಕ್ಕಾಗಿ 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ ಒಂದು ತಿಂಗಳ ಕಳೆದರೂ ಅದನ್ನು ರೈತರ ಬ್ಯಾಂಕ್‌ ಖಾತೆಗೆ ಹಾಕದೆ ಸತಾಯಿಸುತ್ತಿದೆ ಈ ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಒಟ್ಟಿನಲ್ಲಿ ಈ ದರಿದ್ರ ಕಾಂಗ್ರೆಸ್‌‍ ಸರ್ಕಾರ ತೊಲಗುವವರೆಗೂ ನಾಡಿನ ಅನ್ನದಾತರಿಗೆ ನೆಮದಿಯಿಲ್ಲ ಎಂದು ಅಶೋಕ್‌ ಟೀಕಾಪ್ರಹಾರ ನಡೆಸಿದ್ದಾರೆ. \ No newline at end of file diff --git a/eesanje/url_46_130_7.txt b/eesanje/url_46_130_7.txt new file mode 100644 index 0000000000000000000000000000000000000000..e270067344fdf4cc2f7312090e61fd1d3ff6b267 --- /dev/null +++ b/eesanje/url_46_130_7.txt @@ -0,0 +1,6 @@ +ಕಿರಿಕ್ ಕೋತಿ : ಹುಳಿಯಾರಿನಲ್ಲಿ ಒಂಟಿ ವಾನರನ ಉಪಟಳ +ಹುಳಿಯಾರು, ಮೇ 28-ಪಟ್ಟಣದಲ್ಲಿ ಒಂದು ವಾರದಿಂದ ಒಂಟಿ ವಾನರನ ಉಪಟಳ ಹೆಚ್ಚಾಗಿದ್ದು, ಈಗಾಗಲೇ ಐದಾರು ಮಂದಿಯನ್ನು ಕಡಿದಿರುವುದರಿಂದ ಗ್ರಾಮಸ್ಥರು ಭಯಬೀತರಾಗಿದ್ದಾರೆ. +ಅರಣ್ಯ ಇಲಾಖೆಯವರು ಕೋತಿ ಸೆರೆಯಿಡಿದು ನಿರ್ಭಯವಾಗಿ ಜನ ಓಡಾಡುವಂತೆ ಮಾಡಬೇಕಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ.ಒಂದು ವಾರದ ಹಿಂದೆ ಪಟ್ಟಣಕ್ಕೆ ಬಂದಿರುವ ಈ ಕೋತಿಯ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. +ಮೊದಮೊದಲು ಅಂಗಡಿಗಳಿಗೆ ನುಗ್ಗುತ್ತಿದ್ದ ಕೋತಿ ಇಷ್ಟ ಬಂದ ಪದಾರ್ಥಗಳನ್ನು ತಿಂದು ಹೋಗುತ್ತಿತ್ತು. ಆದರೆ ಈಗ ಹೋಟೆಲ್‌, ಅಂಗಡಿಗಳಿಗೆ ನುಗ್ಗಿ ದಾಂದಲೆ ಮಾಡುತ್ತಿದೆ. ಸಿಕ್ಕಿದನ್ನೆಲ್ಲಾ ಕಿತ್ತು ಚೆಲ್ಲಾಡಿ ಅಪಾರ ನಷ್ಟ ಉಂಟುಮಾಡುತ್ತಿದೆ. ಕೋತಿಗಳ ಈ ಕಾಟದಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. +ಬಸ್‌‍ ನಿಲ್ದಾಣದಲ್ಲಂತೂ ಪ್ರಾಯಾಣಿಕರ ನೆಮದಿ ಕಿತ್ತುಕೊಳ್ಳುತ್ತಿದೆ. ಬಸ್‌‍ ಒಳಗೆ ಹತ್ತಿ ಎಲ್ಲರನ್ನೂ ಗಾಭರಿ ಮಾಡುತ್ತಿದೆ. ಪ್ರಾಯಾಣಿಕರ ಕೈ ಚೀಲ ಕಿತ್ತುಕೊಳ್ಳುವುದು, ಮಕ್ಕಳ ಮೇಲೆ ಎಗರುವುದು ಹೀಗೆ ಈ ಕಪಿಯ ಚೇಷ್ಟೆಯಿಂದಾಗಿ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ.ಮನೆಯ ಮುಂದೆ ಒಣಹಾಕಿದ ದವಸ-ಧಾನ್ಯಗಳೆಲ್ಲ ಕೋತಿ ಪಾಲಾಗುತ್ತಿವೆ. +ಬಟ್ಟೆಗಳನ್ನು ಎತ್ತಿಕೊಂಡು ಹೋಗುತ್ತಿವೆ. ಮನೆಯ ಮೇಲೆ ಕೋತಿಗಳು ಮಾಡುತ್ತಿರುವ ದಾಂಧಲೆಯಿಂದಾಗಿ ಜನರು ರೋಸಿ ಹೋಗಿದ್ದಾರೆ. ಕೋತಿಯ ಕಾಟದಿಂದ ಮುಕ್ತಿ ಕೊಡಿಸುವಂತೆ ಅರಣ್ಯ ಇಲಾಖೆಗೆ ಹುಳಿಯಾರು ಜನ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_130_8.txt b/eesanje/url_46_130_8.txt new file mode 100644 index 0000000000000000000000000000000000000000..6d7b2e1be5876fa999a9e8426b9657aa0b3765d0 --- /dev/null +++ b/eesanje/url_46_130_8.txt @@ -0,0 +1,6 @@ +: ಒಂದು ತಿಂಗಳ ನಂತರ ವಿಡಿಯೋ ಮೂಲಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ +ಬೆಂಗಳೂರು, ಮೇ 27-ಕರ್ನಾಟಕ ಮಾತ್ರವಲ್ಲದೆ, ದೇಶಾದ್ಯಂತ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಒಂದು ತಿಂಗಳ ನಂತರ ಪ್ರತ್ಯಕ್ಷವಾಗಿದ್ದು, ಶುಕ್ರವಾರ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದ್ದಾಗೆ ತಿಳಿಸಿದ್ದಾರೆ. +ಈ ಸಂಬಂಧದ ಪ್ರಕರಣ ಹೊರಬಿದ್ದ ನಂತರ ಬಂಧನದ ಬೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇಂದು ಇದ್ದಕ್ಕಿದ್ದಂತೆ ವಿಡಿಯೋ ಒಂದನ್ನು ಹೊರಬಿಟ್ಟಿದ್ದು, ತಾವು ಮೇ 31ರಂದು ಸ್ವದೇಶಕ್ಕೆ ಆಗಮಿಸಿ ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. +ಅಜ್ಞಾತ ಸ್ಥಳದಿಂದ 2 ನಿಮಿಷ 57 ಸೆಕೆಂಡ್‍ಗಳ ವಿಡಿಯೋ ಮಾಡಿದ್ದು, ಎಲ್ಲಿಂದ ಈ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಇನ್ನೂ ತಮ್ಮ ವಿಡಿಯೋದಲ್ಲಿ ತಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತರ ನಡೆಯುತ್ತಿದೆ. ಕಾನೂನು ಮೂಲಕ ಹೋರಾಟ ನಡೆಸುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. +ಮುಂದುವರೆದು ತಂದೆ, ತಾಯಿ, ತಾತ ಮತ್ತು ಕುಮಾರಣ್ಣನ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರ ಹಾಗೂ ನಾಡಿನ ಜನರ ಕ್ಷಮೆ ಯಾಚಿಸಿದ್ದಾರೆ.ವಿದೇಶಕ್ಕೆ ಹೋಗುವುದು ಪೂರ್ವ ನಿರ್ಧಾರವಾಗಿತ್ತು. ನಾನು ಪ್ರಯಾಣ ಕೈಗೊಂಡಾಗ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದಿದ್ದಾರೆ. +ವಿದೇಶದಲ್ಲಿ ಯೂ ಟ್ಯೂಬ್ ನ್ಯೂಸ್ ನೋಡಿದಾಗ ನನ್ನ ಮೇಲೆ ಗಂಭೀರ ಆರೋಪ ಕೇಳಿಬಂದಿರುವುದು ಗೊತ್ತಾಯಿತು. ಎಸ್‍ಐಟಿ ರಚನೆ ಮಾಡಿ ನೋಟಿಸ್ ನೀಡಿರುವುದು ತಿಳಿಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂಬ ವಿಡಿಯೋ ಸಂದೇಶ ರವಾನಿಸಿದ್ದಾರೆ. \ No newline at end of file diff --git a/eesanje/url_46_130_9.txt b/eesanje/url_46_130_9.txt new file mode 100644 index 0000000000000000000000000000000000000000..15e27c5419284076d5260c6f10413e0d88430943 --- /dev/null +++ b/eesanje/url_46_130_9.txt @@ -0,0 +1,12 @@ +ನೆಹರೂ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮೋದಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮೇ 27-ವಿಕಸಿತ ಭಾರತ ಮಾಡುವುದಾಗಿ ಹೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮವನ್ನೂ ಆರಂಭಿಸಿಲ್ಲ. ಇರುವ ಸರ್ಕಾರಿ ಆಸ್ತಿಗಳನ್ನೇ ಮಾರಾಟ ಮಾಡಿಕೊಂಡರು. ಈಗ ತಮ್ಮನ್ನು ತಾವು ದೇವರು ಕಳುಹಿಸಿದ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. +ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರೂ ಅವರ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿಯೇನು ದೇವರ ಅವತಾರವೇ? ಎಂದು ಸಿಡಿಮಿಡಿಯಾದರು. +ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್‌ ನೆಹರೂ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು. +ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್‌ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು. +ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ದೇಶದ ಐದೂವರೆ ಲಕ್ಷ ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲದಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು. ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು ಎಂದು ವಿವರಿಸಿದರು. ಮೋದಿಯವರು ಯೋಜನಾ ಆಯೋಗವನ್ನು ಬದಲಾವಣೆ ಮಾಡಿ ನೀತಿ ಆಯೋಗ ಮಾಡಿದ್ದಾರೆ. ಇದರಲ್ಲಿ ಏನೂ ಇಲ್ಲ. ಹಿಂದೆ ಯೋಜನಾ ಆಯೋಗವಿದ್ದಾಗ ರಾಜ್ಯದ ಬಜೆಟ್‌ನ ಗಾತ್ರ, ಸಂಪನೂಲ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ಅಂಗೀಕಾರ ನೀಡುತ್ತಿತ್ತು, ಬಳಿಕ ಅನುಷ್ಠಾನಗೊಳ್ಳುತ್ತಿತ್ತು ಎಂದು ವಿವರಿಸಿದರು. +ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟು, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಮಗಳು ನಿರ್ಮಾಣಗೊಂಡಿದ್ದು, ನೆಹರೂ ಕಾಲದಲ್ಲಿ. ಕಾಂಗ್ರೆಸ್‌‍ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ? ಎಂದು ಪ್ರಶ್ನಿಸಿದರು. +ಮೋದಿಗೆ ಸೋಲು ಖಚಿತವಾಗಿದೆ :ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್‌ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದು ವ್ಯಂಗ್ಯವಾಡಿದರು. +ನಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ ಎಂದರು. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು. +ತಮನ್ನು ತೀವ್ರವಾಗಿ ಟೀಕಿಸುತ್ತಿದ್ದ ಲೋಹಿಯಾ ಅವರ ಮಾತನ್ನು ಪಾರ್ಲಿಮೆಂಟಿನಲ್ಲಿ ಕುಳಿತು ನೆಹರೂ ಆಲಿಸುತ್ತಿದ್ದರು. ಸ್ಪಂದಿಸುತ್ತಿದ್ದರು. ಇದು ನೆಹರೂ ರೂಢಿಸಿಕೊಂಡಿದ್ದ ರಾಜಕೀಯ ಮೌಲ್ಯ ಎಂದರು. ನಮ ಸರ್ಕಾರದ ಸಾಧನೆಗಳ ಕುರಿತು ಬಿಜೆಪಿ ಸರಣಿ ಸುಳ್ಳುಗಳನ್ನು ಹೇಳುತ್ತಿದೆ. 28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ಈಗ ಸತ್ಯ ಗೊತ್ತಾಗಿದೆ. +ಕಾಂಗ್ರೆಸ್‌‍ ಕಾರ್ಯಕರ್ತರ ಶ್ರಮದಿಂದ ಲೋಕಸಭೆಯಲ್ಲಿ ಕಾಂಗ್ರೆಸ್‌‍ 15-20 ಸ್ಥಾನ ಗೆದ್ದೇ ಗೆಲ್ಲುತ್ತದೆ. 28 ಕ್ಕೆ 28 ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿ ಬಾಯಿ ಬಂದಾಗಿದೆ. ಇಡೀ ದೇಶದಲ್ಲಿ ಬಿಜೆಪಿ ತಿರಸ್ಕೃತಗೊಂಡಿದೆ ಎಂದರು. +ದಿನೇಶ್‌ ಗುಂಡೂರಾವ್‌ ಮಾತನಾಡಿ, ಕಾಂಗ್ರೆಸ್‌‍ ಪಕ್ಷವನ್ನು ಮುಳುಗಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ನೆಹರೂ ಬಗ್ಗೆ ಹಗುರವಾಗಿ ಟೀಕಿಸುತ್ತಾರೆ. ಬ್ರಿಟಿಷರ ಜೊತೆ ಕೈ ಜೋಡಿಸಿದ ಅವರು, ನೆಹರು ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ ಎಂದರು.ಬಿ.ಕೆ.ಹರಿಪ್ರಸಾದ್‌ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್‌, ಮಂಜುನಾಥ್‌ ಭಂಡಾರಿ, ಮಾಜಿ ಸಚಿವೆ ರಾಣಿ ಸತೀಶ್‌, ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_131_1.txt b/eesanje/url_46_131_1.txt new file mode 100644 index 0000000000000000000000000000000000000000..f0f3e9662acef129939556d9a5450782eebeeb7e --- /dev/null +++ b/eesanje/url_46_131_1.txt @@ -0,0 +1,6 @@ +ಪ್ರಧಾನಿಯವರ ಆತಿಥ್ಯದ ಬಾಕಿ ವೆಚ್ಚ ಭರಿಸಲು ಸರ್ಕಾರ ಸಿದ್ಧ : ಖಂಡ್ರೆ +ಬೆಂಗಳೂರು, ಮೇ 27-ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸ್ಪಷ್ಟಪಡಿಸಿದ್ದಾರೆ. +ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. +ಆದರೆ ಕಳೆದ ವರ್ಷ ಏಪ್ರಿಲ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್‌ ಬ್ಲೂ ಹೊಟೆಲ್‌ ಬಿಲ್‌ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು. +2023ರ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್‌.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. +ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್‌ ಬ್ಲೂ ಹೊಟೆಲ್‌ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು. ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_131_10.txt b/eesanje/url_46_131_10.txt new file mode 100644 index 0000000000000000000000000000000000000000..5f4e5f72a1626b68375f1162df67a5020481c8c6 --- /dev/null +++ b/eesanje/url_46_131_10.txt @@ -0,0 +1,7 @@ +ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ದಾಳಿಗೆ ಸಂಬಂಧಿಸಿದಂತೆ 25 ಜನರ ಬಂಧನ +ದಾವಣಗೆರೆ , ಮೇ 27-ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಕನಿಷ್ಠ 25 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹಿಂಸಾತ್ಮಕ ದಾಳಿಯಿಂದ ಪೊಲೀಸ್‌‍ ಠಾಣೆಯನ್ನು ಧ್ವಂಸಗೊಳಿಸಲಾಗಿದೆ,ಹಲವಾರು ವಾಹನಗಳನ್ನು ಹಾನಿಗೊಳಿಸಿದೆ. ಘಟನೆಯಲ್ಲಿ ಕನಿಷ್ಠ 11 ಪೊಲೀಸ್‌‍ ಸಿಬ್ಬಂದಿ ಗಾಯಗೊಂಡಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ ವಹಿಸಲಾಗಿದೆ. +ಘಟನೆಗೆ ಸಂಭಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ ಐಪಿಸಿ ಸೆಕ್ಷನ್‌ 353 (ಸಾರ್ವಜನಿಕ ಸೇವಕನ ಕರ್ತವ್ಯದಿಂದ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್‌ ಬಲ) ಮತ್ತು 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. +ಘಟನೆಯ ತನಿಖೆಗಾಗಿ ಐದು ಪೊಲೀಸ್‌‍ ತಂಡಗಳನ್ನು ರಚಿಸಲಾಗಿದೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಲಭ್ಯವಿರುವ ವೀಡಿಯೊ ತುಣುಕುಗಳನ್ನು ಆಧರಿಸಿ ಬಂಧಿಸಲಾಗಿದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಆದಿಲ್‌ (30) ಅವರನ್ನು ಕಳೆದ ಮೇ 24 ರಂದು ಬಂಧಿಸಲಾಯಿತು, ನಂತರ ತನ ಆರೋಗ್ಯ ಸ್ಥಿತಿ ಹದಗೆಟ್ಟು ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. +ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆತನ ಸಂಬಂಧಿಕರು ದೊಡ್ಡ ಗುಂಪಿನೊಂದಿಗೆ ಮೃಬಂದು ಪೊಲೀಸ್‌‍ ವಾಹನಗಳನ್ನು ಹಾನಿಗೊಳಿಸಿ ನಂತರ ಪೊಲೀಸ್‌‍ ಠಾಣೆಗೆ ಕಲ್ಲು ತೂರಿದರು ಕೆಲವರು ಪೊಲೀಸರಿಗೆ ಕೊಲೆ ಬೆದರಿಕೆ ಹಾಕಿ ಠಾಣೆಯನ್ನು ದೌಂಸಗೊಳಿಸಿದ್ದಾರೆ. +ಕರ್ತವ್ಯ ಲೋಪದ ಕಾರಣ ನೀಡಿ ಎಸಿಪಿ ಹಾಗೂ ಚನ್ನಗಿರಿ ಠಾಣೆ ಇನ್‌್ಸಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ.ಘಟನೆ ನಡೆಯಬಾರದಿತ್ತು.ಮೃತ ಆರೋಪಿ ಮಟ್ಕಾ ,ಜೂಜಿನಲ್ಲಿ ತೊಡಗಿಸಿಕೊಂಡಿದ್ದರಿಂದ, ಪೊಲೀಸರು ಅವನನ್ನು ಹಿಡಿದಿದ್ದರು, ಆ ಸಮಯದಲ್ಲಿ ಹೃದಯಾಘಾತ ಅಥವಾ ಕಡಿಮೆ ಬಿಪಿ (ರಕ್ತದೊತ್ತಡ) ಕೊನೆಯುಸಿರಳೆದಿದ್ದಾನೆ ,ಮರಣೋತ್ತರ ಪರೀಕ್ಷೆಯ ವರದಿಗೆ ಕಾಯಲಾಗುತ್ತಿದೆ ಎಂದು ಎಸ್‌‍ಪಿ ತಿಳಿಸಿದ್ದಾರೆ. \ No newline at end of file diff --git a/eesanje/url_46_131_11.txt b/eesanje/url_46_131_11.txt new file mode 100644 index 0000000000000000000000000000000000000000..94f3baf3d1471a53744b98b138cb7ff363f42b72 --- /dev/null +++ b/eesanje/url_46_131_11.txt @@ -0,0 +1,6 @@ +ವಿಧಾನಪರಿಷತ್‌ ಚುನಾವಣೆ ಕುರಿತು ಜೆ.ಪಿ.ಭವನದಲ್ಲಿ ಬಿಜೆಪಿ-ಜೆಡಿಎಸ್‌‍ ಸಮನ್ವಯ ಸಮಿತಿ ಸಭೆ +ಬೆಂಗಳೂರು, ಮೇ 26-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಸಮನ್ವಯ ಸಮಿತಿ ಸಭೆ ಇಂದು ಜೆ.ಪಿ.ಭವನದಲ್ಲಿ ನಡೆಯಿತು.ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭಾ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಮಾಜಿ ಸಚಿವ ಗೋಪಾಲಯ್ಯ, ಮುನಿರತ್ನ, ಸಿ.ಪಿ.ಯೋಗೇಶ್ವರ್‌, ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಮಂಜುನಾಥ್‌, ಡಾ.ಶ್ರೀನಿವಾಸ ಮೂರ್ತಿ, ಮುಖಂಡರಾದ ರಮೇಶ್‌ಗೌಡ, ಸಿ.ರಾಜಣ್ಣ, ಆರ್‌.ಪ್ರಕಾಶ್‌, ಡಾ.ನಾರಾಯಣಗೌಡ ಮೊದಲಾದ ಉಭಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. +ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ-ಜೆಡಿಎಸ್‌‍ ಅಭ್ಯರ್ಥಿ ಆರ್‌.ದೇವೇಗೌಡ ಅವರೂ ಸಹ ಸಭೆಯಲ್ಲಿ ಹಾಜರಿದ್ದರು. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುವಂತೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಲು ಸಭೆಯಲ್ಲಿ ಸಲಹೆ ಮಾಡಲಾಯಿತು. +ನೊಂದಾಯಿತ ಪದವೀಧರ ಮತದಾರರನ್ನು ಸಂಪರ್ಕಿಸಿ ಮೈತ್ರಿ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಕೋರಲು ನಿರ್ಧರಿಸಲಾಯಿತು. ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿನ ಕಾರ್ಯತಂತ್ರಗಳ ಬಗ್ಗೆ ಮಾರ್ಗದರ್ಶನ ಮಾಡಲಾಯಿತು. +ಸಭೆಯಲ್ಲಿ ಉಭಯ ಪಕ್ಷಗಳ ಮುಖಂಡರು ಮಾತನಾಡಿ, ಕಳೆದ ಬಾರಿಯಂತೆ ಈ ಬಾರಿಯ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯೇ ಗೆಲ್ಲಬೇಕು. ಸಾಕಷ್ಟು ಪೈಪೋಟಿ ಇರುವುದರಿಂದ ಎಲ್ಲೂ ಕೂಡ ಲೋಪವಾಗದಂತೆ ಮುನ್ನೆಚ್ಚರಿಕೆ ವಹಿಸಿ ಮತದಾರರ ಮನವೊಲಿಸಲು ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು. +ಇದೇ ಸಂದರ್ಭದಲ್ಲಿ ಇತರೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮೈತ್ರಿ ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರದ ಬಗ್ಗೆಯೂ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿದ್ದಾರೆ. \ No newline at end of file diff --git a/eesanje/url_46_131_12.txt b/eesanje/url_46_131_12.txt new file mode 100644 index 0000000000000000000000000000000000000000..b45e1c7c8c00c81cf4514e1df7e15a95f2e83291 --- /dev/null +++ b/eesanje/url_46_131_12.txt @@ -0,0 +1,5 @@ +ರಾಜ್ಯಕ್ಕೆ ಜೂನ್‌ ಮೊದಲ ವಾರ ರಾಜ್ಯ ಪ್ರವೇಶಿಸಲಿದೆ ಮುಂಗಾರು +ಬೆಂಗಳೂರು, ಮೇ 26-ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಮೇ 31ಕ್ಕೆ ಕೇರಳ ಪ್ರವೇಶಿಸುವ ಮುನ್ಸೂಚನೆ ಇದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಉಂಟಾಗಿದ್ದರೂ, ಮುಂಗಾರು ಮಳೆ ಆರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಚಂಡಮಾರುತ ಪಶ್ಚಿಮ ಬಂಗಾಲ ಹಾಗೂ ಬಾಂಗ್ಲಾ ಕಡೆಗೆ ಸಾಗುತ್ತಿರುವುದರಿಂದ ಮುಂಗಾರು ಮಳೆಯ ಮೇಲೆ ವ್ಯತಿರಿಕ್ತ ಪರಿಣಾಮಗಳಿಲ್ಲ. ಈಗಾಗಲೇ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಸಮೂಹದಲ್ಲಿ ಮಳೆ ಆರಂಭವಾಗಿದೆ. ಅರಬ್ಬೀ ಸಮುದ್ರದಲ್ಲೂ ನಿರೀಕ್ಷೆಯಂತೆ ಮುಂಗಾರು ಆರಂಭಕ್ಕೆ ಪೂರಕ ವಾತಾವರಣವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕಳೆದ ಎರಡು ವಾರಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಒಳನಾಡಿನಲ್ಲಿ ಸಾಕಷ್ಟು ಮಳೆಯಾಗಿದೆ. ತೀವ್ರ ಬರ ಹಾಗೂ ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮುಂಗಾರು ಪೂರ್ವ ಮಳೆ ತಂಪೆರೆದಿದೆ. ಜತೆಗೆ ವಾಡಿಕೆಗಿಂತ ಹೆಚ್ಚು ಮಳೆ ಬೇಸಿಗೆಯಲ್ಲೂ ಹಲವೆಡೆ ಆಗುತ್ತಿದೆ. +ಮುಂಗಾರು ಆರಂಭವಾಗುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ರಾಜ್ಯ ಒಳನಾಡಿನಲ್ಲಿ ನಾಲ್ಕು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆಯಾಗಲಿದೆ. ಆದರೆ, ಪೂರ್ಣವಾಗಿ ಮಳೆ ನಿಲ್ಲುವುದಿಲ್ಲ. ಮೋಡ ಕವಿದ ವಾತಾವರಣವಿದ್ದು, ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.ಆದರೆ, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಮುಂದುವರೆಯಲಿದೆ. ನಾಲ್ಕೈದು ದಿನಗಳ ನಂತರ ಮುಂಗಾರು ವ್ಯಾಪಕವಾಗಿ ವ್ಯಾಪಿಸುವ ಲಕ್ಷಣಗಳಿವೆ. ಚಾಮರಾಜನಗರ ಮೂಲಕ ರಾಜ್ಯಕ್ಕೆ ಆಗಮಿಸುವ ಮುಂಗಾರು ಮಳೆ ಒಂದು ವಾರದೊಳಗೆ ರಾಜ್ಯಾದ್ಯಂತ ವ್ಯಾಪಿಸಲಿದೆ. +ಮುಂಗಾರು ಮಳೆ ಆರಂಭಗೊಳ್ಳುತ್ತಿದ್ದಂತೆ ವ್ಯಾಪಕ ಪ್ರಮಾಣದಲ್ಲಿ ಎಲ್ಲೆಡೆ ಮಳೆಯಾಗಲಿದೆ. ವಾಡಿಕೆ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಬಾರಿಯ ಮುಂಗಾರು ಆಶಾದಾಯಕವಾಗಿರಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಈ ವರ್ಷಉತ್ತಮವಾದ ಮಳೆಯಾಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಲ್ಲಿ ರೈತರು ನಿರತರಾಗಿದ್ದಾರೆ, \ No newline at end of file diff --git a/eesanje/url_46_131_2.txt b/eesanje/url_46_131_2.txt new file mode 100644 index 0000000000000000000000000000000000000000..5db13746e12a6fa5790d899025f4a87e59d338a2 --- /dev/null +++ b/eesanje/url_46_131_2.txt @@ -0,0 +1,13 @@ +ಕಾಂಗ್ರೆಸ್‌ನ್ನು ಕೇಡರ್‌ಬೇಸ್‌‍ ಆಗಿ ಸಂಘಟಿಸಲು ‘ಕಾಂಗ್ರೆಸ್‌‍ ಕುಟುಂಬ’ ರಚನೆ : ಡಿಕೆಶಿ +ಬೆಂಗಳೂರು, ಮೇ 27-ಕಾಂಗ್ರೆಸ್‌‍ ಅನ್ನು ಕೇಡರ್‌ಬೇಸ್‌‍ ಆಗಿ ಸಂಘಟಿಸಲು ಕಾಂಗ್ರೆಸ್‌‍ ಕುಟುಂಬ ಎಂಬ ಕಾರ್ಯಕ್ರಮವನ್ನು ರೂಪಿಸಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ದಿ.ನೆಹರೂ ಅವರ 68 ನೇ ಪುಣ್ಯಸರಣೆಯಲ್ಲಿ ಮಾತನಾಡಿದ ಅವರು, ಜೂನ್‌ 1 ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸಲು ಬೂತ್‌ ಮಟ್ಟದಿಂದಲೂ ಕೇಡರ್‌ ಆಧಾರಿತವಾಗಿ ರೂಪಿಸಬೇಕಿದೆ. +ಪ್ರತಿ ಬೂತ್‌ ಮಟ್ಟದಲ್ಲೂ 50 ಸದಸ್ಯರನ್ನು ನೊಂದಾಯಿಸಬೇಕು. ಯಾವುದೇ ಕಾರ್ಯಕ್ರಮ ಮಾಡಬೇಕಾದರೂ ಅವರ ಸಹಭಾಗಿತ್ವ ಅಗತ್ಯ. ಪ್ರತಿ ನಿರ್ಧಾರಗಳಿಗೂ ಅವರ ಸಹಮತ ಇರಬೇಕು. ಕಾಂಗ್ರೆಸ್‌‍ ಕುಟುಂಬ ಎಂಬ ಹೆಸರಿನ ಈ ಕಾರ್ಯಕ್ರಮಕ್ಕೆ ಪಕ್ಷದ ಪದಾಧಿಕಾರಿಗಳು, ನಿಗಮಮಂಡಳಿ ಅಧ್ಯಕ್ಷರು, ಸದಸ್ಯರು, ಸಚಿವರು, ಶಾಸಕರು ಎಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು. +ಮುಖ್ಯಮಂತ್ರಿ ಮತ್ತು ಸಚಿವರು ತಿಂಗಳಲ್ಲಿ ಒಂದು ದಿನ ಕಾಂಗ್ರೆಸ್‌‍ ಕಚೇರಿಯಲ್ಲಿ ಕುಳಿತು ಪಕ್ಷದ ಕಾರ್ಯಕರ್ತರ ಅಹವಾಲು ಕೇಳಬೇಕಿದೆ. ಮುಖ್ಯಮಂತ್ರಿಯವರು ಮೂರು ಗಂಟೆ ಪಕ್ಷದ ಕಚೇರಿಯಲ್ಲಿರಲು ಒಪ್ಪಿಕೊಂಡಿದ್ದಾರೆ. ಸಚಿವರು ದಿನಪೂರ್ತಿ ಇದ್ದು, ಅಹವಾಲು ಸ್ವೀಕರಿಸಬೇಕು. +ಕಾಟಾಚಾರಕ್ಕೆ ಬಂದು ಹೋಗಲು ಅವಕಾಶವಿಲ್ಲ. ಸಚಿವರು, ಮುಖ್ಯಮಂತ್ರಿಗಳು ಕಚೇರಿಗೆ ಬರುವುದಕ್ಕೆ ಒಂದು ವಾರ ಮೊದಲೇ ಸಮಯ ತಿಳಿಸಬೇಕು, ಅವರನ್ನು ಭೇಟಿ ಮಾಡಲು ಬರುವವರು ನೊಂದಾಯಿಸಿಕೊಳ್ಳಬೇಕು. ಈ ಕೆಲಸಕ್ಕಾಗಿ ಒಬ್ಬರು ಕಾರ್ಯಾಧ್ಯಕ್ಷರು ಹಾಗೂ ಇಬ್ಬರು ಪದಾಧಿಕಾರಿಗಳನ್ನು ನಿಯೋಜಿಸುತ್ತೇನೆ. ರಾಜ್ಯಾದ್ಯಂತ ಯಾರೇ ಬರುವುದಾದರೂ ಅವರು ನೊಂದಾವಣಿ ಮಾಡುವ ವೇಳೆ ತಮ ಪಕ್ಷದ ಸದಸ್ಯತ್ವದ ಸಂಖ್ಯೆಯನ್ನೂ ನಮೂದಿಸಬೇಕು ಎಂದು ವಿವರಿಸಿದರು. +ಸದಸ್ಯರಲ್ಲದೇ ಇರುವವರನ್ನು ನೆಂಟ, ಸಂಬಂಧಿಕ ಎಂದು ಕರೆತಂದು ಸಚಿವರ ಬಳಿ ಮಾತನಾಡಿಸಲು ಅವಕಾಶ ಇಲ್ಲ. ಪೂರ್ಣವಾಗಿ ಕಾರ್ಯಕರ್ತರಿಗೆ ನೊಂದಣಿಗೆ ಅವಕಾಶವಿದೆ. ಸಚಿವರು, ಮುಖ್ಯಮಂತ್ರಿ ಬಂದಾಗ ಅವರ ಸುತ್ತಮುತ್ತ ಶಾಸಕರು, ಪದಾಧಿಕಾರಿಗಳೇ ಕುಳಿತುಕೊಳ್ಳುವುದು ಬೇಡ. ಕಾರ್ಯಕರ್ತರನ್ನು ಭೇಟಿ ಮಾಡಲು ನನಗೂ ಕೂಡ ಸಮಯ ಸಿಗುವುದಿಲ್ಲ. ಅಷ್ಟರ ಮಟ್ಟಿಗೆ ಅವರ ಸುತ್ತಲೂ ಜನ ಸುತ್ತುವರೆದಿರುತ್ತಾರೆ ಎಂದು ಆಕ್ಷೇಪಿಸಿದರು. +ದೂರದೂರಿಂದ ಬರುವ ಕಾರ್ಯಕರ್ತರನ್ನು ಭೇಟಿ ಮಾಡದೇ ಇರುವುದಕ್ಕೆ ನನಗೆ ಮುಜುಗರವಾಗುತ್ತದೆ. ನಮ ಕಚೇರಿಗಳಲ್ಲಿ ಆಪ್ತಸಹಾಯಕರು, ಗನ್‌ಮ್ಯಾನ್‌ಗಳು ಕೋಟು, ಸೂಟು ಬೂಟು ಹಾಕಿದವರನ್ನು ಕರೆದುಕೊಂಡು ಹೋಗಿ ಆ್ಯಂಟಿ ಛೇಂಬರ್‌ನಲ್ಲಿ ಕೂರಿಸಿರುತ್ತಾರೆ. ಸಾಮಾನ್ಯ ಕಾರ್ಯಕರ್ತರನ್ನು ವಿಚಾರಿಸಿರುವುದಿಲ್ಲ ಎಂದರು.ಈ ವೇಳೆ ಪ್ರಮುಖರೊಬ್ಬರು ಮಧ್ಯಪ್ರವೇಶಿಸಿದಾಗ ಸಿಟ್ಟಾದ ಡಿ.ಕೆ.ಶಿವಕುಮಾರ್‌, ಜಾಸ್ತಿಯಾಯಿತು ನಿನ್ನ ಚೇಷ್ಠೆ, ನನಗೆ ಗೊತ್ತಿರುವುದನ್ನು ನಾನು ಹೇಳುತ್ತಿದ್ದೇನೆ, ನಿನ್ನದೇನು? ಎಂದು ತರಾಟೆಗೆ ತೆಗೆದುಕೊಂಡರು. +ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯುವಕರಿಗೆ, ಪಕ್ಷ ನಿಷ್ಠರಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ಕಾಂಗ್ರೆಸ್‌‍ ಬಿಟ್ಟು ಹೋಗಿದ್ದ ಇಬ್ಬರನ್ನು ಕರೆತಂದು ಟಿಕೆಟ್‌ ಕೊಟ್ಟಿದ್ದನ್ನು ಬಿಟ್ಟರೆ ಉಳಿದ ಎಲ್ಲಾ ಕಡೆ ಪಕ್ಷನಿಷ್ಠರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇದು ಮುಂದಿನ ನಾಲ್ಕು ವರ್ಷಗಳ ಸರ್ಕಾರ ಅಲ್ಲ, ಮುಂದಿನ ಹತ್ತು ವರ್ಷಗಳ ಕಾಲವೂ ಅಧಿಕಾರದಲ್ಲಿ ಮುಂದುವರೆಯಲಿದೆ. ಅದಕ್ಕಾಗಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ ಎಂದರು. +ಇತ್ತೀಚೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಇನ್ನು ಮುಂದೆ ಆರ್‌ಎಸ್‌‍ಎಸ್‌‍ ಇಲ್ಲದೆಯೂ ನಾವು ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಆರ್‌ಎಸ್‌‍ಎಸ್‌‍ನವರನ್ನು ಬಳಸಿಕೊಂಡು ಈಗ ಬಿಜೆಪಿ ಕೈಬಿಡುತ್ತಿದೆ. ಆರ್‌ಎಸ್‌‍ಎಸ್‌‍ ಇಲ್ಲದೇ ಇದ್ದರೆ, ಬಿಜೆಪಿ ಶೂನ್ಯ ಎಂದು ಹೇಳಿದರು. +5-10 ವರ್ಷಗಳಿಂದಲೂ ನಿರಂತರವಾಗಿ ಅಧಿಕಾರದಲ್ಲಿರುವವರ ಬ್ಲಾಕ್‌ ಹಾಗೂ ಜಿಲ್ಲಾ ಸಮಿತಿಗಳನ್ನು ವಿಸರ್ಜನೆಗೊಳಿಸಿ ಹೊಸ ರಕ್ತಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.ಇದೇ ವೇಳೆ ಜವಹರಲಾಲ್‌ ನೆಹರೂ ಅವರ ಜನದಿನಾಚರಣೆ ಎಂದು ಬಾಯ್ತಪ್ಪಿ ಹೇಳುವ ಮೂಲಕ ಡಿ.ಕೆ.ಶಿವಕುಮಾರ್‌ ಮುಜುಗರಕ್ಕೆ ಒಳಗಾದರು. ವೇದಿಕೆಯಲ್ಲಿದ್ದ ಇತರ ನಾಯಕರು ಲೋಪವನ್ನು ತಿದ್ದಿದರು. +ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷರು ಪದಾಧಿಕಾರಿಗಳಿದ್ದಂತೆ ಅವರು ವೇದಿಕೆಯಲ್ಲಿ ಕುಳಿತುಕೊಳ್ಳುವುದಲ್ಲ, ಮಾರ್ಗದರ್ಶಕರಾಗಿ ಕೆಲಸ ಮಾಡಬೇಕು ಎಂದು ಖಾರವಾಗಿ ಹೇಳಿದರು. +ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದ ಕಚೇರಿ ನಿರ್ಮಿಸಲು ಶಾಸಕರು, ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ನಿನ್ನೆ ಸಚಿವ ಮಹದೇವಪ್ಪ ಅವರ ಜೊತೆ ನಾನು ಮತ್ತು ಮುಖ್ಯಮಂತ್ರಿಯವರು ಚರ್ಚೆ ಮಾಡಿದ್ದೇವೆ. ನೀವು ಜವಾಬ್ದಾರಿ ತೆಗೆದುಕೊಳ್ಳದೇ ಇದ್ದರೆ ಬಿಟ್ಟು ಬೇರೆ ಕಡೆ ಹೋಗಬೇಕಾಗುತ್ತದೆ ಎಂದು ಹೇಳಿದ್ದೇವೆ ಎಂದರು. +ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರು ಜಂಟಿಯಾಗಿ ಮೊಬೈಲ್‌ ನೋಡುತ್ತಾ ಚರ್ಚೆ ನಡೆಸಿದ್ದು ಗಮನ ಸೆಳೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಿಂಗಳಲ್ಲಿ ಒಂದು ದಿನ ನಾನು ಕೂಡ ಪಕ್ಷದ ಕಚೇರಿಗೆ ಆಗಮಿಸುತ್ತೇನೆ. ಕಾರ್ಯಕರ್ತರ ಜೊತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_131_3.txt b/eesanje/url_46_131_3.txt new file mode 100644 index 0000000000000000000000000000000000000000..d8a511a43728e2ac800b3839a08711e61d25fddb --- /dev/null +++ b/eesanje/url_46_131_3.txt @@ -0,0 +1,5 @@ +ರಾಜ್ಯದಲ್ಲಿ ತಗ್ಗಿದ ಮಳೆ ಆರ್ಭಟ +ಬೆಂಗಳೂರು, ಮೇ 27-ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೂರ್ವ ಮುಂಗಾರು ಮಳೆ ಆರ್ಭಟಿಸಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕ್ಷೀಣಿಸಿದೆ. ಯಾದಗಿರಿ, ಕೊಪ್ಪಳ, ಇಳಕಲ್‌, ನಾರಾಯಣಪುರ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ, ಮೇ 31ರವರೆಗೆ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. +ಕಳೆದ ಎರಡು ವಾರಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, 5 ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ವಿರಳವಾಗಿ ಮಳೆಯಾಗಬಹುದು. ಬಹುತೇಕ ಒಣಹವೆ ಮುಂದುವರೆಯಲಿದೆ. +ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಹಗುರ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_131_4.txt b/eesanje/url_46_131_4.txt new file mode 100644 index 0000000000000000000000000000000000000000..0de8cfe07ff85297adce63fa3c927cc2774c9a59 --- /dev/null +++ b/eesanje/url_46_131_4.txt @@ -0,0 +1,10 @@ +ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ರಾಜ್ಯ ಬಿಜೆಪಿಯಲ್ಲಿ ಒಂದಿಷ್ಟು ಆತಂಕ +ಬೆಂಗಳೂರು, ಮೇ 27-ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ, ಮೂರು ಪಕ್ಷಗಳಲ್ಲೂ ಸೋಲು ಗೆಲುವಿನ ಲೆಕ್ಕಾಚಾರಗಳು ನಡೆಯುತ್ತಿದೆ. ಇದರ ನಡುವೆ ಬಿಜೆಪಿ ನಾಯಕರ ಕೈಗೆ ಚುನಾವಣೆಯ ಆಂತರಿಕ ಫಲಿತಾಂಶದ ವರದಿ ಸಿಕ್ಕಿದ್ದು, ಕಮಲ ಪಾಳಯದಲ್ಲಿ ಒಂದಿಷ್ಟು ಆತಂಕ ಎದ್ದು ಕಾಣುತ್ತಿದೆ. +28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಕನಸು ಇಟ್ಟುಕೊಂಡಿದ್ದ ಕಮಲ-ದಳ ನಾಯಕರಿಗೆ ಆಂತರಿಕ ವರದಿ ಕೊಂಚ ನೆಮದಿ ಕೆಡುವಂತೆ ಮಾಡಿದೆ. ಅಂದರೆ, ಬಿಜೆಪಿಯೇ ರಾಜ್ಯದ ಬೂತ್‌ ಮಟ್ಟದ ಹಂತದಿಂದ ನಡೆಸಿರುವ ಆಂತರಿಕ ವರದಿಯನ್ನು ನೋಡಿದ ಮೇಲೆ ರಾಜ್ಯದ ಎಲ್ಲ ಕ್ಷೇತ್ರಗಳನ್ನು ಗೆಲ್ಲುವುದು ಅಸಾಧ್ಯ ಎಂಬುದು ಬಿಜೆಪಿ ನಾಯಕರಿಗೆ ಗೊತ್ತಾಗಿದೆ. +ಬಿಜೆಪಿಯ ಬೂತ್‌, ಜಿಲ್ಲಾ, ತಾಲ್ಲೂಕು ಹಾಗೂ ಮುಖಂಡರ, ಕಾರ್ಯಕರ್ತರ ಅಭಿಪ್ರಾಯಗಳನ್ನು ಒಳಗೊಂಡಿರುವ ಆಂತರಿಕ ವರದಿಯೂ ಬಿಜೆಪಿ ನಾಯಕರಿಗೆ ಆಘಾತಕಾರಿ ಸುದ್ದಿ ಕೊಟ್ಟಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನು ಗೆಲ್ಲುವ ಟಾರ್ಗೆಟ್‌ ಹಾಕಿಕೊಂಡಿದ್ದ ಬಿಜೆಪಿಯೂ ಈ ಬಾರಿ ಹಲವು ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಬಿಜೆಪಿಯೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದರೂ ಟಾರ್ಗೆಟ್‌ ಹಾಕಿಕೊಂಡಿತ್ತು. ಆದರೆ, ಆಂತರಿಕ ವರದಿ ಬಿಜೆಪಿ ನಾಯಕರ ಕೈ ಸೇರಿದೆ. +ಲೋಕಸಭಾ ಚುನಾವಣೆಯಲ್ಲಿ ್ಲ ಜೆಡಿಎಸ್‌‍ ಜೊತೆಗಿನ ಮೈತ್ರಿ ಸಕ್ಸಸ್‌‍ ಆಗಿದ್ದರೂ ಕೂಡ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಎಡವುವ ಸಾಧ್ಯತೆ ಇದೆ ಎಂದು ಆಂತರಿಕ ವರದಿ ಹೇಳಿದೆ ಎನ್ನಲಾಗುತ್ತಿದೆ.ಆಂತರಿಕ ವರದಿಯ ಪ್ರಕಾರ, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಕಮಲ ಪಡೆಯ ನಾಯಕರು ಇದ್ದಾರೆ. ಆದರೆ, ಅವರು ಅಂದುಕೊಂಡ ಗುರಿ ಮುಟ್ಟುವುದು ಇರಲಿ, ಕಳೆದ ಬಾರಿ ಪಡೆದ ಸ್ಥಾನಗಳನ್ನು ಪಡೆಯುವುದು ಅನುಮಾನ ಎಂದು ಹೇಳಲಾಗಿದೆ. +ತಮ್ಮ ಆಂತರಿಕ ವರದಿ ಪ್ರಕಾರ 17 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದು, ಐದು ಕ್ಷೇತ್ರಗಳಲ್ಲಿ 50 – 50 ಚಾನ್ಸ್ ಇದ್ದು, ಅಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌‍ ನಡುವೆ ಭಾರೀ ಪೈಪೋಟಿ ಇದೆ ಎನ್ನಲಾಗಿದೆ. 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವುದು ಕಷ್ಟ ಎಂದು ಆಂತರಿಕ ವರದಿ ಹೇಳಿದೆ. +ಬಿಜೆಪಿಯ ಇಂಟರ್ನಲ್‌ ರಿಪೋರ್ಟ್‌ ಪ್ರಕಾರ, ಹಳೇ ಮೈಸೂರು ಪ್ರಾಂತ್ಯದ ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬಹುದು. ಅದೇ ರೀತಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳು ಅಂದರೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಗೆಲುವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. +ಇನ್ನು, ಮಲೆನಾಡು ಹಾಗೂ ಕರಾವಳಿ ಭಾಗದ ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿಯೂ ಕಮಲ ಚಿಹ್ನೆಯ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ವಿಶ್ವಾಸದಲ್ಲಿ ಕೇಸರಿ ನಾಯಕರು ಇದ್ದಾರೆ. ಇತ್ತ, ಮುಂಬೈ ಕರ್ನಾಟಕದ ಕಡೆ ಬಂದರೆ ಹುಬ್ಬಳ್ಳಿ – ಧಾರವಾಡ, ಬಾಗಲಕೋಟೆ, ಹಾವೇರಿ, ವಿಜಯಪುರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ ಎಂದು ಕಮಲ ಪಾಳಯದ ಆಂತರಿಕ ವರದಿ ಹೇಳಿದೆ. ಈ 17 ಕ್ಷೇತ್ರಗಳ ಪೈಕಿ ನಾಲ್ಕು 6 ಕ್ಷೇತ್ರಗಳನ್ನು ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆದಿತ್ತು. +ಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ ಹಾಗೂ ಬಳ್ಳಾರಿಯಲ್ಲಿ ಬಿಜೆಪಿಗೆ 50-50 ಚಾನ್ಸ್ ಇದೆ ಎಂದು ಕಮಲದ ಆಂತರಿಕ ವರದಿ ಹೇಳಿದೆ. ಆದರೆ, ಚಾಮರಾಜನಗರ, ಚಿಕ್ಕೋಡಿ, ಬೀದರ್‌, ರಾಯಚೂರು, ಕೊಪ್ಪಳ, ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲುವ ಆತಂಕ ಇದೆ ಎಂದು ಆಂತರಿಕ ವರದಿ ಹೇಳಿದೆ. ಜೆಡಿಎಸ್‌‍ ಸ್ಪರ್ಧಿಸಿದ ಮೂರು ಕ್ಷೇತ್ರಗಳಲ್ಲಿ ಎರಡನ್ನು ಗೆಲ್ಲಬಹುದು ಎಂದು ಹೇಳಲಾಗಿದ್ದು, ಒಂದು ಕ್ಷೇತ್ರದಲ್ಲಿ 50-50 ಚಾನ್‌್ಸ ಇದೆ ಎಂದು ಆಂತರಿಕ ವರದಿ ಹೇಳಿದೆ. \ No newline at end of file diff --git a/eesanje/url_46_131_5.txt b/eesanje/url_46_131_5.txt new file mode 100644 index 0000000000000000000000000000000000000000..69d870450e2e4a2c8ff325593e82885107ccfc50 --- /dev/null +++ b/eesanje/url_46_131_5.txt @@ -0,0 +1,5 @@ +ಧರ್ಮಸ್ಥಳದ ಮಂಜುನಾಥನ ಮೊರೆಹೋದ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ +ಬೆಂಗಳೂರು, ಮೇ 27-ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರು ಇಂದು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದಿದ್ದಾರೆ. ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವುದನ್ನು ರೇವಣ್ಣ ಮುಂದುವರೆಸಿದ್ದಾರೆ. +ಮಹಿಳೆಯೊಬ್ಬರ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ರೇವಣ್ಣ ಅವರು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ವಿಧಾನ ಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲೂ ಪಾಲ್ಗೊಂಡಿದ್ದರು.ಕುಟುಂಬದ ಸದಸ್ಯರಿಲ್ಲದೆ, ಒಬ್ಬರೇ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿರುವುದು ವಿಶೇಷವಾಗಿದೆ. +ಕಳೆದ ಶುಕ್ರವಾರ ಕಲಬುರಗಿಯ ಗಾಣಗಾಪುರದಲ್ಲಿರುವ ಪ್ರಸಿದ್ಧ ದತ್ತಾತ್ರೇಯ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ಬೆಂಗಳೂರಿನ ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. +ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು, ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದು, 25 ವರ್ಷಗಳಿಂದ ಶಾಸಕನಾಗಿ ಜನರ ಸೇವೆ ಮಾಡುತ್ತಿದ್ದೇನೆ. ಪ್ರಗತಿಪರ ಚಿಂತಕರ ವೇದಿಕೆಯಿಂದ ಹಾಸನ ಚಲೋ ಪ್ರತಿಭಟನೆ ನಡೆಸುತ್ತಿರುವುದು ಗೊತ್ತಿಲ್ಲ. ತಮ ಮೇಲಿನ ಆರೋಪ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮಂಜುನಾಥಸ್ವಾಮಿ ಮೇಲೆ ನಮಗೆ ನಂಬಿಕೆ ಇದೆ. ಹಾಗೆಯೇ ರಾಜ್ಯದ ಜನರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_131_6.txt b/eesanje/url_46_131_6.txt new file mode 100644 index 0000000000000000000000000000000000000000..712fa3fa858eeec1235d7dd4ee2f9435403be893 --- /dev/null +++ b/eesanje/url_46_131_6.txt @@ -0,0 +1,6 @@ +ಡ್ರಗ್ಸ್ ಮಾಫಿಯಾ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ : ವಿಜಯೇಂದ್ರ ಎಚ್ಚರಿಕೆ +ಬೆಂಗಳೂರು, ಮೇ 27-ಕಳಪೆ ಔಷಧ ಪೂರೈಸಿ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿರುವ ಜಾಲದ ವಿರುದ್ಧ ಈ ಕೂಡಲೇ ಸರ್ಕಾರ ಕಾರ್ಯಾಚರಣೆ ಆರಂಭಿಸದಿದ್ದರೆ ನಾಗರಿಕ ಸಮಾಜದ ಸುಭದ್ರತೆಗಾಗಿ ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರೇವ್‌ ಪಾರ್ಟಿಗಳು ಹಾಗೂ ಹಾದಿ-ಬೀದಿಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ ಹರಡುತ್ತಿರುವುದರ ವಿರುದ್ಧ ತತ್‌ಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. +ರಾಜ್ಯದಲ್ಲಿ ಮೇರೆ ಮೀರಿರುವ ಕ್ರಿಮಿನಲ್‌ ಚಟುವಟಿಕೆಗಳ ಬೆನ್ನಲೇ ನಿಷೇಧಿತ ಡ್ರಗ್ಸ್ ಮಾದರಿಯ ಮಾತ್ರೆಗಳ ಮಾರಾಟದ ದಂಧೆ ಅನೇಕ ಔಷಧ ಮಳಿಗೆಗಳಲ್ಲೇ ರಾಜಾರೋಷವಾಗಿ ನಡೆಯುತ್ತಿದ್ದು ಡ್ರಗ್ಸ್ , ಗಾಂಜಾ ಪದಾರ್ಥಗಳ ವಹಿವಾಟೂ ಸಹ ಎಗ್ಗಿಲ್ಲದೆ ನಡೆಯುತ್ತಿದೆ, ಇದರ ಪರಿಣಾಮವಾಗಿ ಇಬ್ಬರು ಅಮಾಯಕರು ಡ್ರಗ್ಸ್ ವ್ಯಸನಿಯೊಬ್ಬನಿಂದ ಕೊಲೆಗೀಡಾಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‌‍ ಸರ್ಕಾರದ ನಿಷ್ಕ್ರಿಯಗೊಂಡಿರುವ ಕಾನೂನು ಸುವ್ಯವಸ್ಥೆಯ ನೆರಳಿನಲ್ಲಿ ಬೆಳಕಿಗೆ ಬಾರದ ಅದೆಷ್ಟು ಜನರು ಡ್ರಗ್ಸ್‌‍ ಜಾಲಕ್ಕೆ ಸಿಲುಕಿ ಕ್ರಿಮಿನಲ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೋ ಎಂಬ ಆತಂಕದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಕಾಂಗ್ರೆಸ್‌‍ ಸರ್ಕಾರದ ಅಸಮರ್ಥತೆಯಿಂದಾಗಿ ಕಾಳಸಂತೆಕೋರರು, ಕೊಲೆಗಡುಕರ ಹಾಗೂ ಡ್ರಗ್ಸ್ ಮಾಫಿಯಾದ ಚಟುವಟಿಕೆಗಳು ಸ್ವೇಚ್ಛೆಯಾಗಿ ನಡೆಯುತ್ತಿದೆ.ಸಮಾಜ ಹಾಗೂ ದೇಶದ ಭವಿಷ್ಯ ಬೆಳಗಬೇಕಾದ ವಿದ್ಯಾರ್ಥಿಗಳು, ಯುವಜನರನ್ನು ದಿಕ್ಕು ತಪ್ಪಿಸುವ ವಿದೋಹಿ ಮಾಫಿಯಾ ಶಕ್ತಿಗಳು ರಾಜ್ಯದಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದ್ದು, ಈ ಸರ್ಕಾರ ಪ್ರಜೆಗಳಿಗೆ ಯಾವ ಭಾಗ್ಯ ಕರುಣಿಸುತ್ತದೋ ಇಲ್ಲವೋ ಗೊತ್ತಿಲ್ಲ ಆದರೆ ಜೀವರಕ್ಷಣೆಯ ಭಾಗ್ಯವನ್ನಾದರೂ ಕಲ್ಪಿಸಿ ನಾಗರಿಕ ಸಮಾಜದಲ್ಲಿ ಸುರಕ್ಷತಾ ಭಾವ ಮೂಡಿಸಲಿ. ಆ ಮೂಲಕ ಜನರ ಶಾಪದಿಂದ ಮುಕ್ತಿ ಕಾಣಲಿ ಎಂದು ವಿಜಯೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_131_7.txt b/eesanje/url_46_131_7.txt new file mode 100644 index 0000000000000000000000000000000000000000..66f96793d23b3e3a2759293259a26b899711dfbe --- /dev/null +++ b/eesanje/url_46_131_7.txt @@ -0,0 +1,6 @@ +ತಿಂಗಳು ಕಳೆದರೂ ಪತ್ತೆಯಾಗದ ಪೆನ್‌ಡ್ರೈವ್‌ ಪ್ರಜ್ವಲ್‌ +ಬೆಂಗಳೂರು, ಮೇ 27-ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬಳಿಕ ಅವರು ನಾಪತ್ತೆಯಾಗಿದ್ದಾರೆ. ರಾಜ್ಯ ಸರ್ಕಾರವು ಈ ಆರೋಪ ಪ್ರಕರಣದ ತನಿಖೆಗೆ ಎಸ್‌‍ಐಟಿ ರಚಿಸಿದ್ದು, ತನಿಖೆ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗಲು ಎಸ್‌‍ಐಟಿ ನೀಡಿದ್ದ ನೋಟಿಸ್‌‍ಗೆ ವಕೀಲರ ಮೂಲಕ ಒಂದು ವಾರ ಸಮಯ ಕೇಳಿದ್ದನ್ನು ಬಿಟ್ಟರೆ, ಈವರೆಗೆ ಪ್ರಜ್ವಲ್‌ ಸುಳಿವಿಲ್ಲ. +ಇಂದು ಬರುತ್ತಾರೆ, ನಾಳೆ ಬರುತ್ತಾರೆ, ಈ ದೇಶದಲ್ಲಿದ್ದಾರೆ. ಆ ದೇಶದಲ್ಲಿದ್ದಾರೆ ಎಂಬಂತಹ ವದಂತಿಗಳು ಹರಿದಾಡಿದವು ಅಷ್ಟೇ. ಅವರು ಎಲ್ಲಿದ್ದಾರೆ, ಯಾವಾಗ ಬರುತ್ತಾರೆ ಎಂಬ ಮಾಹಿತಿಯೂ ಈತನಕ ಲಭ್ಯವಿಲ್ಲ. +ಕುಟುಂಬದವರ ಸಂಪರ್ಕದಲ್ಲೂ ಪ್ರಜ್ವಲ್‌ ಇಲ್ಲವೆಂದು ಜೆಡಿಎಸ್‌‍ ಮುಖಂಡರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್‌ ವಿದೇಶಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು, ಅವರನ್ನು ವಾಪಸ್ಸು ಕರೆತರುವ ಹಲವು ಪ್ರಯತ್ನಗಳು ನಡೆದರೂ ಈತನಕ ಫಲ ನೀಡಿಲ್ಲ. ಪ್ರಜ್ವಲ್‌ ಅವರ ರಾಜ ತಾಂತ್ರಿಕ ಪಾಸ್‌‍ ಪೋರ್ಟ್‌ ರದ್ದುಪಡಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಪಾಸ್‌‍ ಪೋರ್ಟ್‌ ರದ್ದತಿ ಪ್ರಕ್ರಿಯೆ ಆರಂಭಗೊಂಡಿದೆ ಎಂಬ ಮಾಹಿತಿ ಹೊರ ಬಿದ್ದಿದೆ. +ಎಲ್ಲೇ ಇದ್ದರೂ ಕೂಡಲೇ ಎಸ್‌‍ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕು. ಇಲ್ಲದಿದ್ದರೆ ಕುಟುಂಬದಿಂದಲೇ ಹೊರ ಹಾಕುವ ಎಚ್ಚರಿಕೆಯನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನೀಡಿದ್ದಾರೆ. ಈ ಪ್ರಕರಣದಿಂದ ತುಂಬಾ ನೊಂದಿರುವ ಗೌಡರು ತಮ ಹುಟ್ಟುಹಬ್ಬದ ಆಚರಣೆಯನ್ನು ಖುಷಿಯಿಂದ ಆಚರಿಸಿಕೊಳ್ಳಲಿಲ್ಲ. +ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಹ ಎಸ್‌‍ಐಟಿ ಮುಂದೆ ಹಾಜರಾಗುವಂತೆ ಸೂಚಿಸಿದರು. ಇದ್ಯಾವುದಕ್ಕೂ ಪ್ರಜ್ವಲ್‌ ಮನ್ನಣೆಯನ್ನೇ ನೀಡಲಿಲ್ಲ. ಸ್ವದೇಶಕ್ಕೆ ಮರಳಲೂ ಇಲ್ಲ. ಎಸ್‌‍ಐಟಿ ಮುಂದೆ ವಿಚಾರಣೆಗೆ ಇನ್ನೂ ಹಾಜರಾಗಿಲ್ಲ.ಪ್ರಜ್ವಲ್‌ ಪತ್ತೆಗಾಗಿ ಎಸ್‌‍ಐಟಿ ಲುಕ್‌ ಔಟ್‌ ನೋಟಿಸ್‌‍ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌‍ ಹೊರಡಿಸಿದರೂ ಪ್ರಯೋಜನವಾಗಿಲ್ಲ. ಆದರೆ, ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವೆ ಆರೋಪ ಮತ್ತು ಪ್ರತ್ಯಾರೋಪಗಳು ನಿರಂತರವಾಗಿ ಕೇಳಿಬರುತ್ತಿವೆ. \ No newline at end of file diff --git a/eesanje/url_46_131_8.txt b/eesanje/url_46_131_8.txt new file mode 100644 index 0000000000000000000000000000000000000000..22f70515379d5923f47bb5eeaebd017776e6495c --- /dev/null +++ b/eesanje/url_46_131_8.txt @@ -0,0 +1,8 @@ +ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ : ಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್‌ ಜೊತೆ ಚರ್ಚೆ +ಬೆಂಗಳೂರು, ಮೇ 27-ವಿಧಾನಪರಿಷತ್‌ನ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪೈಪೋಟಿ ತೀವ್ರಗೊಂಡಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಲು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳುತ್ತಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. +7 ಸ್ಥಾನಗಳ ಪೈಕಿ ಸಚಿವ ಎನ್‌.ಎಸ್‌‍.ಬೋಸ್‌‍ರಾಜ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಹಾಲಿ ಸದಸ್ಯ ಕೆ.ಗೋವಿಂದರಾಜು ಸೇರಿದಂತೆ ಮೂರು ಮಂದಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗಿದೆ. ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸಿಗರು ತಲೆಕೆಡಿಸಿಕೊಂಡಿದ್ದಾರೆ. +ನಿನ್ನೆ ರಜೆ ದಿನವಾದ್ದರಿಂದ ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಿವಾಸದ ಎದುರು ಜಮಾಯಿಸಿತ್ತು. ಇಂದು ಬೆಳಿಗ್ಗೆ ಕೂಡ ನೂರಾರು ಮಂದಿ ಪ್ರಮುಖ ನಾಯಕರುಗಳ ಮನೆಮುಂದೆ ಭೇಟಿ ಮಾಡಲು ಬೆಂಬಲಿಗರೊಂದಿಗೆ ಆಗಮಿಸಿದ್ದರು. +ಕುಮಾರಕೃಪ ಅತಿಥಿಗೃಹದಲ್ಲಿ ಕಾಂಗ್ರೆಸಿಗರು ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಹರಿದಾಡಿದ್ದು, ಅಲ್ಲಿಗೆ ನೂರಾರು ಮಂದಿ ನಾಯಕರು ಆಗಮಿಸಿದ್ದು ಕಂಡುಬಂದಿತು.ಮುಖ್ಯಮಂತ್ರಿಯವರ ಗೃಹಕಚೇರಿ ಕೃಷ್ಣ, ಅಧಿಕೃತ ನಿವಾಸ ಕಾವೇರಿ ಈ ಎರಡೂ ಕಡೆಗಳಲ್ಲೂ ಜನ ಸಾಲುಗಟ್ಟಿ ನಿಂತಿದ್ದರು. ತೀವ್ರ ಪೈಪೋಟಿಯ ನಡುವೆ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಕೆರಳಿಸಿದೆ. +ಸಂಜೆ ಸಭೆ :ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಇಂದು ಸಂಜೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವರ್ಚ್ಯುಯಲ್‌ ಸಭೆ ನಡೆಸಲಿದ್ದಾರೆ. +ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಸಚಿವರು, ಶಾಸಕರು, ಸಂಸದರು, ಉಸ್ತುವಾರಿ ಪದಾಧಿಕಾರಿಗಳು 2023 ರ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು ಮುಂಚೂಣಿ ಘಟಕದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಚುನಾವಣೆಗೆ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಲಾಗುತ್ತಿದೆ. +ಬೆಂಗಳೂರು ಪದವೀಧರರು, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಪದವೀಧರರ ಕ್ಷೇತ್ರ, ಈಶಾನ್ಯ ಪದವೀಧರರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರಗಳಿಗೆ ಹಂತಹಂತವಾಗಿ ಸಭೆ ನಡೆಯಲಿದೆ. \ No newline at end of file diff --git a/eesanje/url_46_131_9.txt b/eesanje/url_46_131_9.txt new file mode 100644 index 0000000000000000000000000000000000000000..cc42c7997309e2bb0fe9e8d57ac8ac639abe62c1 --- /dev/null +++ b/eesanje/url_46_131_9.txt @@ -0,0 +1,8 @@ +ಐತಿಹಾಸಿಕ ಕ್ಷೇತ್ರ ವಿದುರಾಶ್ವತ್ಥದಲ್ಲಿ ನಾಗರ ಹಾವುಗಳ ದರ್ಶನ, ಭಕ್ತರಲ್ಲಿ ಅಚ್ಚರಿ +ಗೌರಿಬಿದನೂರು, ಮೇ 27-ಐತಿಹಾಸಿಕ ಕ್ಷೇತ್ರ ವಿದುರಾಶ್ವತ್ಥದಲ್ಲಿ ನಾಗರ ಕಲ್ಲುಗಳ ಮುಂದೆ ಎರಡು ನಾಗರ ಹಾವುಗಳು ಹೆಡೆ ಎತ್ತಿ ಕಾಣಿಸಿಕೊಂಡಿದ್ದು, ಭಕ್ತಾಧಿಗಳಲ್ಲಿ ಆಶ್ಚರ್ಯಚಕಿತರನ್ನಾಗಿಸಿದೆ. +ವಿದುರಾಶ್ವತ್ಥ ಕ್ಷೇತ್ರದಲ್ಲಿ ಪ್ರಾತಃಕಾಲದ ಸಮಯ 5-30ರಲ್ಲಿ ನಾಗರ ಕಲ್ಲುಗಳನ್ನು ಪ್ರತಿಷ್ಠಾಪನೆ ಮಾಡಲು ಭೂಮಿ ಪೂಜೆ ಮಾಡಲು ಕ್ಷೇತ್ರದ ಅರ್ಚಕರಾದ ಅಶ್ವತ್ಥನಾರಾಯಣ ಪ್ರಸಾದ್‌, ನಾಗೇಂದ್ರ ಶಾಸಿಗಳು ಭೂಮಿ ಪೂಜೆ ಮಾಡಲು ಮುಂದಾದ ಸಂದರ್ಭದಲ್ಲಿ ನಾಲ್ಕು ನಾಗರ ಹಾವುಗಳ ಮರಿಗಳು ಕಾಣಿಸಿಕೊಂಡಿದ್ದು, ಇದರಲ್ಲಿ ಎರಡು ಮರಿಗಳು ಹರಿದು ಹೋಗಿದ್ದು, ಉಳಿದೆರಡು ಮರಿಗಳು ಹೆಡೆಯನ್ನು ಬಿಚ್ಚಿ ಕೆಲಕಾಲ ಭಕ್ತಾಧಿಗಳಿಗೆ ದರ್ಶನ ಭಾಗ್ಯವನ್ನು ನೀಡಿವೆ. +ಬೆಂಗಳೂರಿನಿಂದ ಆಗಮಿಸಿದ್ದ ಮೇಘನ ದಂಪತಿಗಳು ನಾಗರ ಪ್ರತಿಷ್ಠಾಪನೆಗೆ ಮುಂದಾಗಿದ್ದ ಸಂದರ್ಭದಲ್ಲಿ ಈ ಅಪರೂಪದ ಘಟನೆ ನಡೆದಿದೆ. +ಕ್ಷೇತ್ರದ ಹಿನ್ನೆಲೆ:ವಿದುರಾಶ್ವತ್ಥ ಕ್ಷೇತ್ರವು ಮಹಾಭಾರತದ ಕಾಲದಲ್ಲಿ ವಿದುರನು ಇಲ್ಲಿಗೆ ಬಂದು ತಪ್ಪಸ್ಸು ಮಾಡಿದ್ದು, ಒಂದು ದಿನ ಇಲ್ಲಿನ ಉತ್ತರ ಪಿನಾಕಿನಿ ನದಿಯಲ್ಲಿ ಪ್ರಾತಃಕಾಲದಲ್ಲಿ ಸಂಧ್ಯಾವಂದನೆ ಮಾಡುವ ಸಮಯದಲ್ಲಿ ಕಾಷ್ಟಕ (ಅರಳಿ ವೃಕ್ಷದ ಕಡ್ಡಿ) ಕೈಗೆ ಸಿಕ್ಕಿದ್ದು, ಅದನ್ನು ಮಹಾಪ್ರಸಾದವೆಂದು ವಿದುರನು ವಿದುರಾಶ್ವತ್ಥದಲ್ಲಿ ನೆಟ್ಟಿರುವುದಾಗಿ ಇತಿಹಾಸ ಹೇಳುತ್ತಿದೆ. +ಆ ಅರಳಿ ವೃಕ್ಷವು ಇಂದು ಬೃಹದಾಕಾರವಾಗಿ ಬೆಳೆದು ಇದರಡಿಯಲ್ಲಿ ಶ್ರೀ ಅಶ್ವತ್ಥನಾರಾಯಾಣ ಸ್ವಾಮಿ ಸನ್ನಿದಿಯೂ ಇದೆ, ಈ ಕ್ಷೇತ್ರದಲ್ಲಿ ನಾಗರ ಕಲ್ಲುಗಳನ್ನು ಪ್ರತಿಷ್ಠಾಪಿಸಿ ಮಕ್ಕಳು ಆಗದವರು, ಮದುವೆಯಾಗದವರು ನಾಗರ ಕಲ್ಲುಗಳನ್ನು ಪೂಜಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂಬ ಪ್ರತೀತಿ ಹಾಗೂ ಅಪಾರ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಈ ಕ್ಷೇತ್ರದಲ್ಲಿ ಸಾವಿರಾರು ನಾಗರ ಕಲ್ಲುಗಳು ಹಿಂದಿನಿಂದಲೂ ಪ್ರತಿಷ್ಠವಾಗಿರುವುದು ವಿಶೇಷವಾಗಿದೆ. +ಭಕ್ತಸಾಗರ:ವಿದುರಾಶ್ವತ್ಥ ಕ್ಷೇತ್ರದಲ್ಲಿ ಎರಡು ನಾಗರಹಾವುಗಳ ಮರಿಗಳು ನಾಗರ ಕಲ್ಲುಗಳ ಮುಂದೆ ಹೆಡೆಬಿಚ್ಚಿ ನಿಂತಿರುವುದನ್ನು ನೋಡಲು ಭಕ್ತಾದಿಗಳು ಮುಗಿಬಿದ್ದರು, ಶ್ರದ್ಧಾ-ಭಕ್ತಿಯಿಂದ ನಾಗೇಂದ್ರನೇ ಬಂದಿದ್ದಾನೆ ಎಂದು ಭಕ್ತರು ನಮಸ್ಕರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು. ಕೆಲ ಸಮಯದ ನಂತರ ಎರಡು ನಾಗರಹಾವಿನ ಮರಿಗಳು ಹಿಂದೆ ಸರಿದು ನಾಗರ ಕಲ್ಲುಗಳ ಮದ್ಯ ಹೋದವು ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ. +ವಿದುರಾಶ್ವತ್ಥದಲ್ಲಿ ನಾಗರ ಹಾವುಗಳು ಆಗ್ಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತವೆ, ಎಷ್ಟೋ ಭಾರಿ ಶ್ರೀ ಅಶ್ವತ್ಥನಾರಾಯಣ ಸ್ವಾಮಿ ಗರ್ಭಗುಡಿಯ ಬಾಗಿಲು ತೆರೆದ ಸಂದರ್ಭದಲ್ಲೂ ನಾಗರ ಹಾವುಗಳು ಕಾಣಿಸಿಕೊಂಡಿವೆ. ಆದರೆ ಇದೇ ಮೊದಲ ಬಾರಿಗೆ ನಾಗರ ಹಾವಿನ ಮರಿಗಳು ಹೆಡೆಬಿಚ್ಚಿ ಕಾಣಿಸಿವೆ ಎಂದುವಿದುರಾಶ್ವತ್ಥ ಕ್ಷೇತ್ರದ ಅರ್ಚಕರಾದ ಅಶ್ವತ್ಥನಾರಾಯಣ ಪ್ರಸಾದ್‌ ತಿಳಿಸಿದ್ದಾರೆ. \ No newline at end of file diff --git a/eesanje/url_46_132_1.txt b/eesanje/url_46_132_1.txt new file mode 100644 index 0000000000000000000000000000000000000000..3629603e0f76777dea7735a6f6bbc6a99d3a0511 --- /dev/null +++ b/eesanje/url_46_132_1.txt @@ -0,0 +1,4 @@ +ಕರ್ನಾಟಕ ಕಾನೂನು ವಿವಿಗೆ ದಿನೇಶ್‌ ಗೂಳಿಗೌಡ ನಾಮನಿರ್ದೇಶನ +ಬೆಂಗಳೂರು, ಮೇ 26-ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ನ ಸದಸ್ಯರನ್ನಾಗಿ ವಿಧಾನಪರಿಷತ್‌ ಶಾಸಕ ದಿನೇಶ್‌ ಗೂಳಿಗೂಡ ಅವರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಆದೇಶಿಸಿದ್ದಾರೆ. +ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಧಿನಿಯಮ 2009ರ ಸೆಕ್ಷನ್‌ 33 (1) (ಎಲ್‌‍) ರಂತೆ ಮಾರ್ಚ್‌ 14ರಿಂದ ನಾಮನಿರ್ದೇಶನ ಮಾಡಿರುವುದಾಗಿ ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ. +ದಿನೇಶ್‌ ಗೂಳಿಗೌಡ ಅಭಿನಂದನೆ :ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ಗೆ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಕ್ಕೆ ಶಿಾರಸು ಮಾಡಿದ ವಿಧಾನಪರಿಷತ್‌ನ ಸಭಾಪತಿಗಳಾದ ಬಸವರಾಜ್‌ ಹೊರಟ್ಟಿ ಅವರಿಗೆ ವಿಧಾನಪರಿಷತ್‌ ಶಾಸಕರಾದ ದಿನೇಶ್‌ ಗೂಳಿಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_132_10.txt b/eesanje/url_46_132_10.txt new file mode 100644 index 0000000000000000000000000000000000000000..625ba1167fdf53b044f89b29e2d8e3f43769d5ed --- /dev/null +++ b/eesanje/url_46_132_10.txt @@ -0,0 +1,5 @@ +ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಕಲ್ಲು ತೂರಾಟ : 11 ಸಿಬ್ಬಂದಿಗೆ ಗಾಯ, 10ಕ್ಕೂ ಹೆಚ್ಚು ವಾಹನಗಳು ಜಖಂ +ದಾವಣಗೆರೆ, ಮೇ 25-ಲಾಕಪ್‌ ಡೆತ್‌ ಎಂದು ಆರೋಪಿಸಿ ಮೃತನ ಸಂಬಂಧಿಕರು ರಾತ್ರಿ ಚನ್ನಗಿರಿ ಪೊಲೀಸ್‌‍ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ 11 ಮಂದಿ ಪೊಲೀಸ್‌‍ ಸಿಬ್ಬಂದಿ ಗಾಯಗೊಂಡಿದ್ದು, 10 ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳು ಜಖಂ ಗೊಂಡಿವೆ. ಚನ್ನಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌‍ ಬಂದೋಬಸ್ತು ಮಾಡಲಾಗಿದೆ. +ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಉಮಾಪ್ರಶಾಂತ್‌, ಮಟ್ಕ ಆಡಿಸುತ್ತಿದ್ದ ಆರೋಪದ ಮೇಲೆ ಆದಿಲ್‌(30) ಎಂಬ ಯುವಕನನ್ನು ಠಾಣೆಗೆ ಕರೆತಂದ ಐದಾರು ನಿಮಿಷದಲ್ಲಿಯೇ ಆತನ ಆರೋಗ್ಯದಲ್ಲಿ ಏರಿಪೇರಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. +ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಆದರೂ ಕೂಡ ಈತನ ಸಂಬಂಧಿಕರು ಲಾಕಪ್‌ ಡೆತ್‌ ಎಂದು ಹೇಳುತ್ತಿದ್ದಾರೆ. ನಮಲ್ಲಿ ಸಿಸಿ ಕ್ಯಾಮೆರಾ ಇದ್ದು ಪರಿಶೀಲನೆ ಮಾಡಿ ಪ್ರಮಾಣಿಕ ತನಿಖೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ. +ಈ ಸಂಬಂಧ ಮೃತನ ತಂದೆ ದೂರು ಕೊಟ್ಟಿದ್ದಾರೆ. ಇದು ಗಂಭೀರ ಪ್ರಕರಣವಾದ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ಮಾಡಲಾಗುವುದು. ಈಗಾಗಲೇ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದರು.ನಿನ್ನೆ ಸಂಜೆ ಕಲ್ಲು ತೂರಾಟ ನಡೆಸಿದ್ದರಿಂದ ನಾಲ್ಕು ಪ್ರಕರಣ ದಾಖಲಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_132_11.txt b/eesanje/url_46_132_11.txt new file mode 100644 index 0000000000000000000000000000000000000000..f93bec58873f05d7c6b43b3557a92174281d50c0 --- /dev/null +++ b/eesanje/url_46_132_11.txt @@ -0,0 +1,6 @@ +ಬಸ್‌‍ ಸೋರದಿದ್ದರೂ ಕೊಡೆ ಹಿಡಿದು ವಿಡಿಯೋ ಮಾಡಿದ್ದ ಚಾಲಕ-ನಿರ್ವಾಹಕಿ ಅಮಾನತು +ಹುಬ್ಬಳ್ಳಿ, ಮೇ 25-ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ತಂದೊಡ್ಡಿದೆ. ಬಸ್‌‍ ಮೇಲ್ಛಾವಣಿ ಸೋರದಿದ್ದರೂ ಕೊಡೆ ಹಿಡಿದು ಬಸ್‌‍ ಚಾಲನೆ ಮಾಡಿದ ವಾಯವ್ಯ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ಅದನ್ನು ಚಿತ್ರೀಕರಣ ಮಾಡಿದ ನಿರ್ವಾಹಕಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಗ್‌ ತಿಳಿಸಿದ್ದಾರೆ. +ಈ ಕುರಿತು ಮಾಹಿತಿ ನೀಡಿದ ಅವರು, ಚಾಲಕ ಹನುಮಂತ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್‌.ಅನಿತಾ ಅವರನ್ನು ಅಮಾನತು ಮಾಡಲಾಗಿದೆ. ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌‍ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. +ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌‍ನ ವಾಸ್ತವತೆ ಕುರಿತು ಸ್ಥಳೀಯ ತಾಂತ್ರಿಕ ಅಧಿಕಾರಿ ಹಾಗೂ ಮುಖ್ಯ ತಾಂತ್ರಿಕ ಅಧಿಕಾರಿಗಳ ಜೊತೆಗೆ ವರದಿ ನೀಡಿದ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌‍ ಮೇಲ್ಛಾವಣಿ ಸೋರುತ್ತಿರಲಿಲ್ಲ ಎನ್ನುವ ಪರಿಶೀಲನಾ ವರದಿ ಸಲ್ಲಿಸಿದ್ದರು. +ಬಸ್‌‍ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕರ ಯಾವುದೇ ದೂರು ದಾಖಲು ಮಾಡಿಲ್ಲ. ಇನ್ನೂ ಈ ವಿಡಿಯೋ ಕುರಿತು ಚಾಲನಾ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆದಾಗ ತಾವು ಮನರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ. +ವರದಿ ಆಧಾರದ ಮೇಲೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಿಬ್ಬಂದಿಯ ಕರ್ತವ್ಯ ಲೋಪ ಹಾಗೂ ಸಂಸ್ಥೆ ಘನತೆಗೆ ಧಕ್ಕೆಯಾಗುವಂತಹ ಕೆಲಸವಾಗಿದ್ದರಿಂದ ಚಾಲಕ-ನಿರ್ವಾಹಕಿಯನ್ನು ಅಮಾನತು ಮಾಡಿ ಆದೇಶ ಎಂಡಿ ಹೊರಡಿಸಿದ್ದಾರೆ. \ No newline at end of file diff --git a/eesanje/url_46_132_12.txt b/eesanje/url_46_132_12.txt new file mode 100644 index 0000000000000000000000000000000000000000..9314fa72e91a28506ed2f9368107a512e65524fa --- /dev/null +++ b/eesanje/url_46_132_12.txt @@ -0,0 +1,8 @@ +ರೇವ್‌ ಪಾರ್ಟಿ ಪ್ರಕರಣ : 5 ಮಂದಿಯ ಬ್ಯಾಂಕ್‌ ಖಾತೆ ಸೀಸ್‌‍ +ಬೆಂಗಳೂರು, ಮೇ 25-ಫಾರ್ಮ್‌ಹೌಸ್‌‍ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿರುವ 5 ಮಂದಿಯ ಬ್ಯಾಂಕ್‌ ಅಕೌಂಟ್‌ಗಳಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದೆ.ಈ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಐದು ಮಂದಿಯ ಬ್ಯಾಂಕ್‌ ಖಾತೆಗಳನ್ನು ಸೀಸ್‌‍ ಮಾಡಿಸಲು ಮುಂದಾಗಿದ್ದಾರೆ. +ಈ ರೀತಿಯ ರೇವ್‌ ಪಾರ್ಟಿಗಳನ್ನು ಎಲ್ಲೆಲ್ಲಿ ಮಾಡಿಸಲಾಗಿದೆ, ಯಾರೆಲ್ಲಾ ಭಾಗಿಯಾಗಿದ್ದರು, ಎಷ್ಟೆಷ್ಟು ಹಣ ಸಂಗ್ರಹಿಸಲಾಗಿತ್ತು, ಪಾರ್ಟಿಗೆ ಎಲ್ಲಿಂದ ಮಾದಕ ವಸ್ತು ಸರಬರಾಜು ಆಗುತ್ತಿತ್ತು ಎಂಬೆಲ್ಲಾ ಮಾಹಿತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಈ ಐದು ಮಂದಿಯ ಮೊಬೈಲ್‌ಗಳ ಮಿರರ್‌ ಇಮೇಜ್‌ ಮಾಡಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. +ವಾಸು ಎಂಬಾತನ ಹುಟ್ಟು ಹಬ್ಬದ ಅಂಗವಾಗಿ ಸನ್‌ಸೆಟ್‌ ಟು ಸನ್‌ರೈಸ್‌‍ ವಿಕ್ಟರಿ ಎಂಬ ಶೀರ್ಷಿಕೆಯಲ್ಲಿ ಆಯೋಜಿಸಿದ್ದ ರೇವ್‌ ಪಾರ್ಟಿ ಯಲ್ಲಿ 103 ಮಂದಿ ಪಾಲ್ಗೊಂಡಿದ್ದರು. ಪಾರ್ಟಿಯಲ್ಲಿ ದೊಡ್ಡಮಟ್ಟದಲ್ಲಿ ಮಾದಕ ವಸ್ತು ಬಳಸಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದಲ್ಲದೇ, ದಾಳಿ ಸಂದರ್ಭದಲ್ಲಿ ಎಂಡಿಎಂಎ, ಕೊಕೇನ್‌ ಹಾಗೂ ಹೈಡ್ರೋ ಗಾಂಜಾ ಪತ್ತೆಯಾಗಿತ್ತು. +ಈ ಹಿನ್ನೆಲೆಯಲ್ಲಿ ಪಾರ್ಟಿಯಲ್ಲಿ ಭಾಗಿಯಾಗಿದ್ದವರ ರಕ್ತದ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ 86 ಮಂದಿ ಡ್ರಗ್‌ ಸೇವಿಸಿರುವುದ ದೃಢಪಟ್ಟಿದೆ.ಈ ಪಾರ್ಟಿಯಲ್ಲಿ ಇಬ್ಬರು ತೆಲುಗು ನಟಿಯರು, ಕಿರುತೆರೆ ನಟಿಯರು, ಸಾಫ್‌್ಟ ವೇರ್‌ ಎಂಜಿನಿಯರ್‌ಗಳು ಭಾಗವಹಿಸಿದ್ದರು. +ಆಂಧ್ರ ಸಚಿವರ ಆಪ್ತರು ವಶಕ್ಕೆ :ನಗರದ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಫಾರ್ಮ್‌ ಹೌಸ್‌‍ನಲ್ಲಿ ನಡೆದ ರೇವ್‌ ಪಾರ್ಟಿ ಪ್ರಕರಣದ ತನಿಖೆಯನ್ನು ತೀವ್ರ ಗೊಳಿಸಿರುವ ಸಿಸಿಬಿ ಪೊಲೀಸರು ಆಂಧ್ರ ಪ್ರದೇಶದ ಸಚಿವ ಮತ್ತು ಶಾಸಕರೊಬ್ಬರ ಆಪ್ತರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. +ದಾಳಿ ಸಂದರ್ಭದಲ್ಲಿ ಕಾರೊಂದರಲ್ಲಿ ಎಮ್‌ಎಲ್‌ಎ ಪಾಸ್‌‍ ಪತ್ತೆಯಾಗಿತ್ತು. ಅದರ ಜಾಡುಹಿಡಿದು ಪೊಲೀಸರು ತನಿಖೆ ಕೈಗೊಂಡು ಆಪ್ತನನ್ನು ವಶಕ್ಕೆ ಪಡೆದಿದ್ದಾರೆ.ರೇವ್‌ ಪಾರ್ಟಿ ಆಯೋಜನೆಯಲ್ಲಿ ಆಂಧ್ರದ ಸಚಿವರೊಬ್ಬರ ಆಪ್ತನ ಪ್ರಮುಖ ಪಾತ್ರವಿದೆ ಎಂಬುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲಾಗಿದೆ. +ಮೇ 19 ರಂದು ಸಂಜೆ ಆಯೋಜಿಸಿದ್ದ ಸನ್‌ಸೆಟ್‌ ಟು ಸನ್‌ರೈಸ್‌‍ ಪಾರ್ಟಿಯಲ್ಲಿ ಪಾಲ್ಗೊಂಡಿದ್ದವರ ಪೈಕಿ 86 ಮಂದಿ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಅವರೆಲ್ಲರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದಾರೆ.ಇದೆಲ್ಲದರ ನಡುವೆ ಕರ್ತವ್ಯಲೋಪದಲ್ಲಿ ಹೆಬ್ಬಗೋಡಿ ಪೊಲೀಸ್‌‍ ಠಾಣೆಯ ಮೂವರು ಸಿಬ್ಬಂದಿಗಳ ತಲೆದಂಡ ಸಹ ಆಗಿದೆ. \ No newline at end of file diff --git a/eesanje/url_46_132_2.txt b/eesanje/url_46_132_2.txt new file mode 100644 index 0000000000000000000000000000000000000000..40d08999a7b0c37511cf720fc0ec1e4f1031793e --- /dev/null +++ b/eesanje/url_46_132_2.txt @@ -0,0 +1,6 @@ +ಮೋದಿ ಪ್ರಧಾನಿಯಾಗಿ ಇಂದಿಗೆ 10 ವರ್ಷ ಪೂರ್ಣ, ಶುಭ ಹಾರೈಸಿದ ವಿಜಯೇಂದ್ರ +ಬೆಂಗಳೂರು, ಮೇ 26-ನಿರೀಕ್ಷಿತ ಗುರಿ ತಲುಪಿ ಭಾರತ ಗೆಲ್ಲಲು ಸಾಗಲೇ ಬೇಕಿದೆ ಮತ್ತೊಂದು ಅವಧಿಗೂ ನಿಮ್ಮ ಸಾರಥ್ಯದ ವಿಜಯ ರಥ ಇದು ಶತಕೋಟಿ ಭಾರತೀಯರ ಒಕ್ಕೊರಲ ಪ್ರಾರ್ಥನೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಭ ಹಾರೈಸಿದ್ದಾರೆ. +ನರೇಂದ್ರ ಮೋದಿಯವರು ಪ್ರಧಾನಿಯಾಗಿ ಇಂದಿಗೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಭ ಕೋರಿರುವ ವಿಜಯೇಂದ್ರ ಹತ್ತು ವರುಷದ ನಿಮ್ಮ ದಿಟ್ಟ ನಿಲುವುಗಳು, ಯುಗ ಮರೆಯದ ಹೆಜ್ಜೆ ಗುರುತುಗಳು ಎಂದು ಬಣ್ಣಿಸಿದ್ದಾರೆ. +ಅಂದು ಪ್ರಜಾಪ್ರಭುತ್ವದ ದೇಗುಲ ಸಂಸತ್‌ ಭವನದ ಬಾಗಿಲಿಗೆ ತಲೆ ಇಟ್ಟು ನಮಿಸಿ ಅಡಿಯಿಟ್ಟ ಪ್ರಥಮ ಪ್ರಧಾನಿ ನೀವು, ಸುದೀರ್ಘ ಹತ್ತು ವರುಷದ ಆಡಳಿತದಲ್ಲಿ ಜಗತ್ತಿನೆದುರು ಭಾರತ ತಲೆ ಎತ್ತಿ ಬೀಗುವಂತೆ ಸಾಧನೆ ಮಾಡಿದ ಸಾರ್ಥಕ ನೇತಾರ ನೀವು ಎಂದು ಹಾಡಿ ಹೊಗಳಿದ್ದಾರೆ. +ಜನಭೂಮಿಯಲ್ಲಿ ರಾಮ ಮಂದಿರ, ಭಾರತ ಮಾತೆಗೆ ತೊಡಿಸಿದ ಕಾಶೀರ ಕಿರೀಟ ನೀವು ತೊಟ್ಟ ಸಂಕಲ್ಪದ ಸಾಕಾರಗಳು. ರಾಷ್ಟ್ರ ಭಕ್ತರ ಪಾಲಿಗೆ ನೀವು ಅವತಾರ ಪುರುಷ, ಭಾರತಮಾತೆಗೆ ಹೆಮೆಯ ಸುಪುತ್ರ ನೀವು ಎಂದು ಕೊಂಡಾಡಿದ್ದಾರೆ. +ವಿಶ್ವ ಮೂಂಚೂಣಿಯಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲಲು ಭಾರತ ಬಯಸುತ್ತಿದೆ ನಿಮ ಸಂತ ತೇಜಸ್ಸು, ತಪಸ್ವಿ ವರ್ಚಸ್ಸು ನಿಮ ದಿಟ್ಟ ನಡೆ, ನುಡಿಯ ಪ್ರಖರ ಧೀರತೆಯ ಯಶಸ್ಸು ಎಂದು ಮೋದಿಯವರ ಆಡಳಿತವನ್ನು ವಿಜಯೇಂದ್ರ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪ್ರಶಂಸೆಯ ಸುರಿಮಳೆಗೈದಿದ್ದಾರೆ. \ No newline at end of file diff --git a/eesanje/url_46_132_3.txt b/eesanje/url_46_132_3.txt new file mode 100644 index 0000000000000000000000000000000000000000..003d16397137d7cf91cd5fce42a3a88c21179005 --- /dev/null +++ b/eesanje/url_46_132_3.txt @@ -0,0 +1,6 @@ +ಮಟ್ಕಾ ಆಡಿಸುವವರಿಂದ ಪೊಲೀಸರ ಮಾಸಿಕ ಚಂದಾ ವಸೂಲಿ ದೃಢಪಟ್ಟರೆ ಸೇವೆಯಿಂದ ವಜಾ : ಪರಮೇಶ್ವರ್ +ಬೆಂಗಳೂರು, ಮೇ 26-ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್‌‍ ಠಾಣೆ ದಾಂಧಲೆ ಪ್ರಕರಣವನ್ನು ಸಮಗ್ರ ತನಿಖೆಗೆ ವಹಿಸಲಾಗಿದ್ದು, ಮಟ್ಕಾ ದಂಧೆ ನಡೆಸುವವರಿಂದ ಮಾಸಿಕ ಹಣ ವಸೂಲಿ ಮಾಡುತ್ತಿರುವುದು ದೃಢಪಟ್ಟರೆ ಅಂತಹವರನ್ನು ಸೇವೆಯಿಂದ ವಜಾ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ. +ಮಟ್ಕಾ ಆಡಿಸುವವರಿಂದ ಮಾಸಿಕ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಎಲ್ಲಾ ವಿಚಾರವನ್ನೂ ತನಿಖೆಗೆ ಒಳಪಡಿಸಲಾಗುವುದು ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ವರದಿ ಬಂದ ನಂತರ ಕಾನೂನು ರೀತಿ ಕ್ರಮ ಜರುಗಿಸುತ್ತೇವೆ. ಈಗಾಗಲೇ ಠಾಣೆ ಇನ್ಸ್ ಪೆಕ್ಟರ್‌ ಹಾಗೂ ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ ಎಂದರು. +ಪೊಲೀಸರು ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ. ಮಟ್ಕಾ ಆಡಿಸುವುದರಲ್ಲಿ ಭಾಗಿಯಾಗಿದ್ದ ಎಂಬ ಆರೋಪದ ಮೇಲೆ ಠಾಣೆಗೆ ಕರೆದುಕೊಂಡು ಬಂದಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಯಾವ ಕಾರಣಕ್ಕೆ ಮೃತಪಟ್ಟಿದ್ದಾರೆ ಎಂಬುದು ಮರಣೋತ್ತರ ವರದಿ ನಂತರ ತಿಳಿಯಲಿದೆ. ತನಿಖೆ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು. +ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಲು ಬಿಡುವುದಿಲ್ಲ :ಶಾಸಕರೇ ಪೊಲೀಸ್‌‍ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು ಸರಿಯಲ್ಲ. ಯಾರೇ ಆದರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಶಾಸಕರಿರಲಿ, ಸಂಸದರಿರಲಿ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಗೃಹಸಚಿವರು ಹೇಳಿದರು. +ರಾಜ್ಯದಲ್ಲಿ ಗೂಂಡಾ ವರ್ತನೆ, ದಾದಾಗಿರಿ, ಗೂಂಡಾಗಿರಿ ಮಾಡಲು ಅವಕಾಶವಿಲ್ಲ. ಒಂದು ವೇಳೆ ಅಂತಹ ಘಟನೆ ನಡೆದರೆ ಸಹಿಸುವುದಿಲ್ಲ. ಹತ್ತಿಕ್ಕುತ್ತೇವೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹಾಳಾಗಲು ಬಿಡುವುದಿಲ್ಲ ಎಂದರು.ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಯಾವ ರೀತಿ ಕಾನೂನು ಸುವ್ಯವಸ್ಥೆ ಇದೆ. ಗುಜರಾತಿನಲ್ಲಿ ನಿನ್ನೆ ಸಂಭವಿಸಿರುವ ಅಗ್ನಿ ದುರಂತಕ್ಕೆ ಯಾರು ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದರು. \ No newline at end of file diff --git a/eesanje/url_46_132_4.txt b/eesanje/url_46_132_4.txt new file mode 100644 index 0000000000000000000000000000000000000000..b88ceaeaba4a120240ec78eaeb8b756279442084 --- /dev/null +++ b/eesanje/url_46_132_4.txt @@ -0,0 +1,6 @@ +ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 283 ಕೋಟಿ ರೂ ಬಾಕಿ ಉಳಿಸಿಕೊಂಡ ಗ್ಯಾರಂಟಿ ಸರ್ಕಾರ +ಹುಬ್ಬಳ್ಳಿ, ಮೇ 26-ಸಾರಿಗೆ ಸಂಸ್ಥೆಯ ಬಸ್‌‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಕರ್ನಾಟಕ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಮರು ಪಾವತಿಸಬೇಕಾದ ಮೊತ್ತದಲ್ಲಿ ರಾಜ್ಯ ಸರ್ಕಾರ 283 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. +2023ರ ಜೂನ್‌ 11ರಂದು ಈ ಯೋಜನೆ ಜಾರಿಗೆ ಬಂದಿತ್ತು. ಅಂದಿನಿಂದ ಇಲ್ಲಿಯವರೆಗೆ ಯಾವುದೇ ತಿಂಗಳು ಸಹ ರಾಜ್ಯ ಸರ್ಕಾರ ಪೂರ್ಣ ಮೊತ್ತವನ್ನು ಮರು ಪಾವತಿ ಮಾಡಿಲ್ಲ. ಇದರ ಪರಿಣಾಮವಾಗಿ ಬಾಕಿ 300 ಕೋಟಿ ರೂ. ಸಮೀಪ ಬಂದು ಮುಟ್ಟಿದೆ. ಯೋಜನೆ ಆರಂಭದಿಂದ ಈ ವರ್ಷದ ಏಪ್ರಿಲ್‌ ಅಂತ್ಯದವರೆಗೆ ಮಹಿಳೆಯರಿಗೆ 46,42,11,425 ಶೂನ್ಯ ಟಿಕೆಟ್‌ಗಳನ್ನು ವಿತರಿಸಲಾಗಿದೆ. ಇದರ ಒಟ್ಟು ಪ್ರಯಾಣ ವೆಚ್ಚ 1193,86,33,524 ರೂ. ಗಳಾಗಿವೆ. ಇದರಲ್ಲಿ ರಾಜ್ಯ ಸರ್ಕಾರ, ವಾಕರಸಾ ಸಂಸ್ಥೆಗೆ ಇಲ್ಲಿಯವರೆಗೆ 894,90,52,000 ರೂ. ಪಾವತಿ ಮಾಡಿದೆ. +ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ, ವಾಕರಸಾ ಸಂಸ್ಥೆಗೆ ಮರು ಪಾವತಿಯಲ್ಲಿ ಪ್ರತಿ ತಿಂಗಳು 15ರಿಂದ 40 ಕೋಟಿ ರೂ. ವರೆಗೆ ಬಾಕಿ ಉಳಿಸಿಕೊಳ್ಳುತ್ತ ಬಂದಿದೆ. ಆದರೆ, ಮಾರ್ಚ್‌ ತಿಂಗಳಲ್ಲಿ ಶೂನ್ಯ ಟಿಕೆಟ್‌ ಮೊತ್ತಕ್ಕಿಂತ ಹೆಚ್ಚಿನ ಹಣ ಮರು ಪಾವತಿ ಮಾಡಿರುವುದು ವಿಶೇಷ. ಎರಡು ಕಂತುಗಳಲ್ಲಿ 157.36 ಕೋಟಿ ರೂ. ಪಾವತಿಸಿತ್ತು. ಆರ್ಥಿಕ ವರ್ಷದ ಕೊನೆಯ ತಿಂಗಳು ಎಂಬುದು ಇದಕ್ಕೆ ಕಾರಣ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. +ಇತ್ತೀಚಿನ ತಿಂಗಳಲ್ಲಿ ಶಕ್ತಿಯೋಜನೆಯ ಲಾನುಭವಿಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಏಪ್ರಿಲ್‌ ತಿಂಗಳು ಹೊರತು ಪಡಿಸಿ ಶೂನ್ಯ ಟಿಕೆಟ್‌ ಮೊತ್ತದಲ್ಲೂ ಗಮನಾರ್ಹ ಏರಿಕೆ ಏನೂ ಆಗಿಲ್ಲ. ಸಮಾಧಾನಕರ ಸಂಗತಿಯೆಂದರೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳ ಮರು ಪಾವತಿ ಮೊತ್ತ ಏರಿಕೆಯಾಗಿರುವುದು. ಏಪ್ರಿಲ್‌ ತಿಂಗಳಲ್ಲಿ ಅತ್ಯಧಿಕ 102.68 ಕೋಟಿ ರೂ. ಪಾವತಿಸಿದೆ. ಮೇ ತಿಂಗಳು ಮುಗಿಯುವ ಮೊದಲೇ 102.68 ಕೋಟಿ ರೂ. ಪಾವತಿಸಿರುವುದು ಗಮನಾರ್ಹ ಅಂಶವಾಗಿದೆ. +ವಾಕರಸಾ ಸಂಸ್ಥೆಯು ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.ಶಕ್ತಿ ಯೋಜನೆಯಡಿ ರಾಜ್ಯ ಸರ್ಕಾರ, ಸಂಸ್ಥೆಗೆ ಇಲ್ಲಿಯವರೆಗೆ 895 ಕೋಟಿ ರೂ. ಮರು ಪಾವತಿ ಮಾಡಿದೆ. 298 ಕೋಟಿ ರೂ. ಬಾಕಿ ಬರಬೇಕಿದೆ. ಪ್ರತಿ ತಿಂಗಳು ಸರ್ಕಾರದಿಂದ ಬರಬೇಕಾದ ಮರು ಪಾವತಿ ಮೊತ್ತ ಹಾಗೂ ಬಾಕಿ ಮೊತ್ತದ ಬಗ್ಗೆ ವರದಿ ಸಲ್ಲಿಸಲಾಗುತ್ತದೆ ಎಂಬ ಕುರಿತು ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಂಡಿ ಪ್ರಿಯಾಂಗಾ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_132_5.txt b/eesanje/url_46_132_5.txt new file mode 100644 index 0000000000000000000000000000000000000000..f22922ec30de520061b85d1bb7f7a458bbc9d0ff --- /dev/null +++ b/eesanje/url_46_132_5.txt @@ -0,0 +1,4 @@ +ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ದಂಪತಿ +ಬೆಂಗಳೂರು, ಮೇ 26-ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಮತ್ತು ಅವರ ಪತ್ನಿ ಸುದೇಶ್‌ ಧನಕರ್‌ ನಾಳೆ ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌-ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆ್‌‍ ಟ್ರಡಿಷನಲ್‌ ಮೆಡಿಸಿನ್‌ (ಎನ್‌ಐಟಿಎಂ) ಸಂಸ್ಥಾಪನಾ ದಿನ ಮತ್ತು ಬೆಳಗಾವಿಯ ಕೆಎಲ್‌‍ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. +ನಂತರ, ಧನಕರ್‌ ಅವರು ಸಿಎಸ್‌‍ ಐಆರ್‌ – ಎನ್‌ ಎಎಲ್‌ ಬೆಂಗಳೂರು ಕ್ಯಾಂಪಸ್‌‍ಗೆ ಭೇಟಿ ನೀಡಲಿದ್ದು, ಲಘು ಯುದ್ಧ ವಿಮಾನ (ಎಲ್ಸಿಎ) ಘಟಕಗಳು ಮತ್ತು ಸಾರಸ್ನ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.ರಾಷ್ಟ್ರೀಯ ಏರೋಸ್ಪೇಸ್‌‍ ಲ್ಯಾಬೋರೇಟರೀಸ್‌‍ (ಎನ್‌ಎಎಲ್‌‍) ವಿನ್ಯಾಸಗೊಳಿಸಿದ ಲಘು ಸಾರಿಗೆ ವಿಮಾನ ವಿಭಾಗದಲ್ಲಿ ಸಾರಸ್‌‍ ಮೊದಲ ಭಾರತೀಯ ಬಹುಪಯೋಗಿ ನಾಗರಿಕ ವಿಮಾನವಾಗಿದೆ. +ಇದರೊಂದಿಗೆ ಧನಕರ್‌ ಅವರು ರಾಷ್ಟ್ರೀಯ ಏರೋನಾಟಿಕ್ಸ್‌‍ ಲಿಮಿಟೆಡ್‌ನಲ್ಲಿ (ಎನ್‌ಎಎಲ್‌‍) ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ವೇಳೆ ಬೆಂಗಳೂರಿನ ರಾಜಭವನಕ್ಕೂ ಭೇಟಿ ನೀಡಲಿದ್ದಾರೆ. ಉಪ ರಾಷ್ಟ್ರಪತಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. \ No newline at end of file diff --git a/eesanje/url_46_132_6.txt b/eesanje/url_46_132_6.txt new file mode 100644 index 0000000000000000000000000000000000000000..caed5176332e7c95d5244779026da83059ffb5b5 --- /dev/null +++ b/eesanje/url_46_132_6.txt @@ -0,0 +1,7 @@ +ಮೇಲ್ಮನೆ ಚುನಾವಣೆಗೆ ನಾಳೆ ಅಧಿಸೂಚನೆ, ಅಂತಿಮಗೊಳ್ಳದ ಅಭ್ಯರ್ಥಿಗಳ ಆಯ್ಕೆ +ಬೆಂಗಳೂರು, ಮೇ 26-ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ನ 11 ಸ್ಥಾನಗಳಲ್ಲಿ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. +11 ಸ್ಥಾನಗಳ ಪೈಕಿ ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಆಧಾರದ ಮೇಲೆ ಆಡಳಿತಾರೂಢ ಕಾಂಗ್ರೆಸ್‌‍ 7, ಪ್ರತಿಪಕ್ಷ ಬಿಜೆಪಿ 3 ಹಾಗೂ ಜೆಡಿಎಸ್‌‍ 1 ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ.ಇದುವರೆಗೂ ಮೂರೂ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಂತಿಮಗೊಳಿಸಿಲ್ಲ. ಆಕಾಂಕ್ಷಿಗಳ ಸಂಖ್ಯೆ ಸಾಕಷ್ಟಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರು ಪಕ್ಷಗಳು ವಿಳಂಬ ಮಾಡುತ್ತಿವೆ. +ನಾಮಪತ್ರ ಸಲ್ಲಿಸಲು ಜೂನ್‌ 3 ರವರೆಗೂ ಕಾಲಾವಕಾಶ ಇರುವುದರಿಂದ ಈ ವಾರಾಂತ್ಯದೊಳಗೆ ಅಭ್ಯರ್ಥಿಗಳ ಆಯ್ಕೆ ಮಾಡಿ ಅಂತಿಮಗೊಳಿಸಲಾಗುತ್ತದೆ. ಕಾಂಗ್ರೆಸ್‌‍ನಲ್ಲಿ 70 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರೆ ಬಿಜೆಪಿಯಲ್ಲಿ 10 ಕ್ಕೂ ಹೆಚ್ಚು ಮಂದಿ ಇದ್ದಾರೆ.ಜೆಡಿಎಸ್‌‍ನಲ್ಲೂ ನಾಲ್ಕು ಮಂದಿ ಪ್ರಬಲ ಆಕಾಂಕ್ಷಿಗಳಿರುವುದು ಅಭ್ಯರ್ಥಿ ಆಯ್ಕೆಗೆ ಕಗ್ಗಂಟಾಗಿ ಪರಿಣಮಿಸಿದೆ. +ಜೂನ್‌ 17 ರಂದು ವಿಧಾನಪರಿಷತ್‌ ಸದಸ್ಯರಾದ ಅರವಿಂದ ಕುಮಾರ್‌ ಅರಳಿ, ಸಚಿವ ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜ್‌, ಮುನಿರಾಜೇಗೌಡ, ಬಿ.ಎಂ.ಫಾರೂಕ್‌, ರಘುನಾಥರಾವ್‌ ಮಲ್ಕಾಪುರೆ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ನಿವೃತ್ತಿಯಾಗಲಿದ್ದಾರೆ. +ಡಾ.ತೇಜಸ್ವಿನಿಗೌಡ ಹಾಗೂ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ಈಗಾಗಲೇ ತಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.ರಾಜೀನಾಮೆ ಹಾಗೂ ನಿವೃತ್ತಿಯಿಂದ ತೆರವಾಗುವ 11 ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.ನಾಳೆ ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಜೂನ್‌ 3 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. +ಜೂನ್‌ 4 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜೂನ್‌ 6 ರವರೆಗೂ ನಾಮಪತ್ರ ವಾಪಸ್‌‍ ಪಡೆಯಲು ಕಾಲಾವಕಾಶ ಇದೆ. 11 ಕ್ಕಿಂತ ಹೆಚ್ಚು ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದರೆ ಜೂನ್‌ 13 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಜೂನ್‌ 15 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. \ No newline at end of file diff --git a/eesanje/url_46_132_7.txt b/eesanje/url_46_132_7.txt new file mode 100644 index 0000000000000000000000000000000000000000..747d7f1f73a10a52b1b08c2c556478736ffd612e --- /dev/null +++ b/eesanje/url_46_132_7.txt @@ -0,0 +1,7 @@ +ಕಂಟೈನರ್‌-ಕಾರ್ ನಡುವೆ ಭೀಕರ ಅಪಘಾತ, ಮಗು ಸೇರಿ 6 ಜನ ಸ್ಥಳದಲ್ಲೇ ಸಾವು +ಹಾಸನ,ಮೇ 26-ಕಂಟೈನರ್‌ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-75ರ ಈಚನಹಳ್ಳಿ ಬಳಿ ಇಂದು ಬೆಳಿಗ್ಗೆ ನಡೆದಿದೆ.ನಾರಾಯಣಸ್ವಾಮಿ, ಸುನಂದ, ರವಿಕುಮಾರ್‌, ನೇತ್ರ, ಚೇತನ್‌ (ಬಾಲಕ), ರಾಕೇಶ್‌ (ಚಾಲಕ) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. +ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಹೊಸಕೋಟೆ ತಾಲೂಕಿನ ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರೆಂದು ತಿಳಿದುಬಂದಿದೆ.ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಈಟಿಯೋಸ್‌‍ ಕಾರಿನಲ್ಲಿ ತೆರಳಿದ್ದ ಒಂದೇ ಕುಟುಂಬದ ಸದಸ್ಯರು ಸಂಬಂಧಿಕರ ಆರೋಗ್ಯವನ್ನು ವಿಚಾರಿಸಿಕೊಂಡು ವಾಪಸ್‌‍ ಗ್ರಾಮಕ್ಕೆ ಬರುತ್ತಿದ್ದಾಗ ಬೆಳಗಿನ ಜಾವ 6.30 ರ ಸುಮಾರಿನಲ್ಲಿ ನಿದ್ದೆ ಮಂಪರಿನಲ್ಲಿದ್ದ ಕಾರಿನ ಚಾಲಕ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿ ಕಂಟೈನರ್‌ಗೆ ಅಪ್ಪಳಿಸಿದೆ. +ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಸುದ್ದಿ ತಿಳಿಯುತ್ತಿದ್ದ ಹಾಸನ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರಿನೊಳಗೆ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು. +ನಂತರ ಕ್ರೇನ್‌ ಮೂಲಕ ಕಾರನ್ನು ಮೇಲಕ್ಕೆ ಎತ್ತಿ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಮಹಮದ್‌ ಸುಜೀತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. +ಆಕ್ರಂದನ:ಅಪಘಾತದಲ್ಲಿ ತಮವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮುಟ್ಟಿತ್ತು. +ಸಂತಾಪ :ಭೀಕರ ಅಪಘಾತದಲ್ಲಿ ಮೃತಪಟ್ಟವರ ಆತಕ್ಕೆ ಶಾಂತಿ ದೊರೆಯಲಿ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಸಂತಾಪ ವ್ಯಕ್ತಪಡಿಸಿದ್ದು, ಇವರ ಅಗಲಿಕೆ ದುಃಖ ಭರಿಸುವ ಶಕ್ತಿ ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_132_8.txt b/eesanje/url_46_132_8.txt new file mode 100644 index 0000000000000000000000000000000000000000..c8866188819f7afa6152019da58c7ae054aebf4d --- /dev/null +++ b/eesanje/url_46_132_8.txt @@ -0,0 +1,5 @@ +ಪರಿಷತ್‌ ಚುನಾವಣೆ : ಅಭ್ಯರ್ಥಿಗಳ ಆಯ್ಕೆ ಕುರಿತು ಸಚಿವರ ಜೊತೆ ಡಿಸಿಎಂ ಸಮಾಲೋಚನೆ +ಬೆಂಗಳೂರು, ಮೇ 25-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ನಿವಾಸದಲ್ಲಿಂದು ಪ್ರಮುಖ ಸಚಿವರುಗಳ ಸಭೆ ನಡೆಸಿ ಸಮಾಲೋಚನೆ ಮಾಡಿದ್ದಾರೆ. +ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್‌ರವರು ರಹಸ್ಯ ಸಭೆ ನಡೆಸಿದರು. +ಮೂಲಗಳ ಪ್ರಕಾರ, 7 ಸ್ಥಾನಗಳ ಪೈಕಿ ಎಸ್‌‍ಸಿ/ಎಸ್ಟಿ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಅದರಲ್ಲೂ ಎಸ್‌‍ಸಿಯಲ್ಲಿ ಲಂಬಾಣಿ ಸಮುದಾಯಕ್ಕೆ ಅವಕಾಶ ನೀಡಬೇಕಿದೆ. ಈ ಬಾರಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು. +ಕಳೆದ ಜೂನ್‌ನಲ್ಲಿ ನಡೆದ ನಾಮನಿರ್ದೇಶನದಲ್ಲಿ ಅಲ್ಪಸಂಖ್ಯಾತರನ್ನು ಕಡೆಗಣಿಸಲಾಗಿದೆ ಎಂಬ ಒತ್ತಾಯಗಳಿವೆ. ಹೀಗಾಗಿ ಡಿ.ಕೆ.ಶಿವಕುಮಾರ್‌ರವರು ಸಚಿವರ ಜೊತೆ ಸಮಾಲೋಚನೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ವಿಚಾರ ವಿನಿಮಯ ಮಾಡಿದ್ದಾರೆ. ಶೀಘ್ರವೇ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. \ No newline at end of file diff --git a/eesanje/url_46_132_9.txt b/eesanje/url_46_132_9.txt new file mode 100644 index 0000000000000000000000000000000000000000..13d0cabcf659f52e0d16f9ce8f1211127a5ea129 --- /dev/null +++ b/eesanje/url_46_132_9.txt @@ -0,0 +1,11 @@ +ಸಿದ್ದರಾಮಯ್ಯನವರೇ ನಿಮ್ಮ ಈ ಊಸರವಳ್ಳಿ, ಬಣ್ಣಗೇಡಿ ವರ್ತನೆಯನ್ನು ನಿರೀಕ್ಷಿಸಿರಲಿಲ್ಲ : ಕುಮಾರಸ್ವಾಮಿ ಕೆಂಡ +ಬೆಂಗಳೂರು, ಮೇ 25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ. ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ ಎಂದು ಹೇಳಿದ್ದಾರೆ. +ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ. ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ. +•ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ@siddaramaiahನವರೇ..…../AwI9R1G43p +ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ. ಅಶ್ಲೀಲ ವಿಡಿಯೋಗಳನ್ನು ವೈರಲ್‌ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್‌ ಇದ್ದರೆ ಹೇಳಲಿ ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದಿದ್ದಾರೆ. +ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು. ಪ್ರಖ್ಯಾತ ಮಾಜಿ ವಕೀಲರು. ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್‌ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹೇಳಿದ್ದಾರೆ. +ಇದೇ ಕಾರಣಕ್ಕೆ ನಾನು ನಿಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, ‘ದಯಮಾಡಿ ವಕೀಲಿಕೆ ಮಾಡಬೇಡಿ’ ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ‘ನಾನೂ ವಕೀಲ. ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ ಎಂದಿದ್ದಾರೆ. +ನೊಂದ ಮಹಿಳೆಯರ ವಿಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್‌ ನಲ್ಲಿ ಹೇಳಿದ್ದಾರೆ ಎಂದು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ. ನಿಮ್ಮ ಸರ್ಕಾರದ ಅಧೀನದಲ್ಲಿರುವ, ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ‘ಸಾಕ್ಷಾತ್‌ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ ತಾವು ಸರ್ಕಾರ ನಡೆಸುತ್ತಿರುವಿರೋ ಅಥವಾ ವಿಧಾನಸೌಧವನ್ನು ಟೈಮ್‌ ಪಾಸ್‌‍ ಕ್ಲಬ್‌ ಮಾಡಿಕೊಂಡಿರುವಿರೋ? ಎಂದು ಪ್ರಶ್ನಿಸಿದ್ದಾರೆ, +ನಿಮ್ಮ ಘನತವೆತ್ತ ಅವಗಾಹನೆಗೆ ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ. ನೀವು ಕೇಳಿದ ಎಲ್ಲಾ ಸೆಕ್ಷನ್‌ಗಳು ಅದರಲ್ಲಿಯೇ ಇವೆ. ಒಂದಲ್ಲಾ. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ. ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭವಸ್ಥರು ನೀವು. ಆದರೆ, ಪೆನ್‌ ಡ್ರೈವ್‌ ಪ್ರಕರಣದಲ್ಲಿ ನಿಮ್ಮನಡವಳಿಕೆ ಪ್ರಶ್ನಾರ್ಹ ಎಂದಿದ್ದಾರೆ. +ಅಮಾಯಕ ಹೆಣ್ಣು ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್‌ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮಸಂಪುಟದಲ್ಲಿ ಉಪ ಮುಖ್ಯಮಂತ್ರಿ. ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಪ್ರಶ್ನಿಸಿದ್ದಾರೆ. +ನೀವು, ನಿಮ್ಮ ಇಡೀ ಕಾಂಗ್ರೆಸ್‌‍ ಪಕ್ಷ ಸಿಡಿ ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ ಇಡೀ ಕ್ಯಾಬಿನೆಟ್‌ ಆ ವ್ಯಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮದು ಕ್ಯಾಬಿನೆಟ್‌ ಆಫ್‌ ಕರ್ನಾಟಕ ಅಲ್ಲ, ಅದು ಕ್ಯಾಬಿನೆಟ್‌ ಆಫ್‌ ಕಾನ್‌್ಸಪಿರೆಸಿ ಎಂದು ಬಹಳ ನೊಂದು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_133_1.txt b/eesanje/url_46_133_1.txt new file mode 100644 index 0000000000000000000000000000000000000000..e79f16231310206900d018ff1de9001d29a5dcd2 --- /dev/null +++ b/eesanje/url_46_133_1.txt @@ -0,0 +1,10 @@ +ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ +ಮೈಸೂರು, ಮೇ 25-ವಿಚಾರಣೆಗಾಗಿ ಕರೆತಂದಿದ್ದ ವ್ಯಕ್ತಿ ಪೊಲೀಸರ ವಶದಲ್ಲಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರದೂ ತಪ್ಪಿದ್ದು, ಡಿವೈಎಸ್ಪಿ ಮತ್ತು ಇನ್ಸ್ ಪೆಕ್ಟರ್‌ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಯ ಚನ್ನಗಿರಿ ಪೊಲೀಸ್‌‍ ಠಾಣೆಯ ಪ್ರಕರಣದ ಬಗ್ಗೆ ತಾವು ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದು, ಅದು ಲಾಕಪ್‌ಡೆತ್‌ ಅಲ್ಲ, ಮೃತಪಟ್ಟ ಆದಿಲ್‌ಗೆ ಪಿಡ್ಸ್ ಇತ್ತು. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾನೆ ಎಂದು ಹೇಳಿದರು. +ಎಫ್‌ಐಆರ್‌ ದಾಖಲಾಗದೆ ವ್ಯಕ್ತಿಯನ್ನು ವಿಚಾರಣೆಗೆ ಕರೆತಂದು ಠಾಣೆಯಲ್ಲಿ ಕೂರಿಸಿಕೊಳ್ಳುವುದು ನಿಯಮಬಾಹಿರ. ಈ ಕಾರಣಕ್ಕಾಗಿ ಸಂಬಂಧಪಟ್ಟ ಉಪವಿಭಾಗದ ಡಿವೈಎಸ್ಪಿ ಹಾಗೂ ಚನ್ನಗಿರಿ ಪೊಲೀಸ್‌‍ ಠಾಣೆಯ ಇನ್ಸ್ ಪೆಕ್ಟರ್‌ರನ್ನು ಅಮಾನತುಗೊಳಿಸಲಾಗಿದೆ ಎಂದರು. ಯಾವುದೇ ವ್ಯಕ್ತಿಯ ಮೇಲೆ ದೂರು ದಾಖಲಾಗದೇ ಇದ್ದರೆ, ವಿಚಾರಣೆ ನಡೆಸಿ ವಾಪಸ್‌‍ ಕಳುಹಿಸಬೇಕು. ಅನಧಿಕೃತವಾಗಿ ಠಾಣೆಯಲ್ಲಿರಿಸಿ ಕೊಂಡಿರುವುದು ಅಪರಾಧ ಎಂದು ಹೇಳಿದರು. +ಪ್ರತ್ಯೇಕ ಕ್ರಿಮಿನಲ್‌ ಕಾನೂನುಗಳಿದ್ದರೆ ತಿಳಿಸಲಿ :ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿಡಿಯೋಗಳನ್ನು ವೈರಲ್‌ ಮಾಡಿರುವುದು ಅತ್ಯಾಚಾರಕ್ಕಿಂತಲೂ ಮಹಾಪರಾಧ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳುತ್ತಿದ್ದಾರೆ. ಇದು ಯಾವ ಸೆಕ್ಷನ್‌ನಲ್ಲಿ ಮಹಾಪರಾಧ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು. +ಮುಖ ಕಾಣುವ ಹಾಗೆ ವಿಡಿಯೋಗಳನ್ನು ಬಹಿರಂಗಗೊಳಿಸಿರುವುದು ಸರಿಯಲ್ಲ. ಅದು ಅಪರಾಧ ಎಂಬುದಕ್ಕೆ ನನ್ನ ಸಹಮತ ಇದೆ. ಆದರೆ ಯಾವುದೇ ಅಪರಾಧಕ್ಕೆ ಶಿಕ್ಷೆಯಾಗಬೇಕಾದರೆ ಭಾರತ ದಂಡಸಂಹಿತೆಯ ಸೆಕ್ಷನ್‌ಗಳು ಇರುತ್ತವೆ. +ಕುಮಾರಸ್ವಾಮಿಯವರು ಯಾವ ಸೆಕ್ಷನ್‌ನಡಿ ಅಪರಾಧ ಎಂದು ಹೇಳುತ್ತಿದ್ದಾರೆ? ಐಪಿಸಿ ಹೊರತುಪಡಿಸಿ ಅವರಿಗಾಗಿ ಪ್ರತ್ಯೇಕವಾದ ಕ್ರಿಮಿನಲ್‌ ಕಾನೂನುಗಳೇನಾದರೂ ಇವೆಯೇ? ಎಂದು ಮುಖ್ಯಮಂತ್ರಿ ವ್ಯಂಗ್ಯವಾಡಿದರು. +ಅವರ ಅಣ್ಣನ ಮಗ ಅತ್ಯಾಚಾರ ಮಾಡಿದ್ದಾನೆ. ಅದು ಮಹಾಪರಾಧ ಎಂದ ಮುಖ್ಯಮಂತ್ರಿಯವರು, ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವುದು ಜಠಿಲ ಪ್ರಕ್ರಿಯೆ ಎಂದು ಹೇಳಲು ಕುಮಾರಸ್ವಾಮಿಯವರೇನು ವಿದೇಶಾಂಗ ಸಚಿವರೇ? ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು, ಕೇಂದ್ರ ಸಚಿವರಾಗಿರಲಿಲ್ಲ ಎಂದು ತಿರುಗೇಟು ನೀಡಿದರು. +ತಮ ಪುತ್ರ ರಾಕೇಶ್‌ ಸಿದ್ದರಾಮಯ್ಯ 2016 ರಲ್ಲಿ ಮೃತಪಟ್ಟಿದ್ದಾನೆ. 8 ವರ್ಷಗಳ ಬಳಿಕ ಈಗ ಆ ವಿಚಾರವನ್ನು ಪ್ರಸ್ತಾಪಿಸುತ್ತಿರುವುದು ಕುಮಾರಸ್ವಾಮಿಯ ಮೂರ್ಖತನ. ತಮ ಪುತ್ರನ ಸಾವಿಗೂ, ಇಂದಿನ ಪೆನ್‌ಡ್ರೈವ್‌ ಪ್ರಕರಣಕ್ಕೂ ಏನು ಸಂಬಂಧ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. +ಈಗಲಾದರೂ ರದ್ದುಪಡಿಸಲಿ :ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ನೀಡಿದ್ದು ಕೇಂದ್ರ ವಿದೇಶಾಂಗ ಸಚಿವರು. ಅದನ್ನು ರದ್ದುಪಡಿಸಬೇಕಾಗಿರುವುದೂ ಅವರದೇ ಕೆಲಸ. ಈ ನಿಟ್ಟಿನಲ್ಲಿ ತಾವು ಬರೆದ ಪತ್ರ ತಡವಾಗಿ ತಲುಪಿದೆ ಎಂದು ವಿದೇಶಾಂಗ ಸಚಿವ ಜಯಶಂಕರ್‌ ನೆಪ ಹೇಳುತ್ತಿದ್ದಾರೆ. ನಾನು 15 ದಿನಗಳ ಹಿಂದೆಯೇ ಮೊದಲ ಬಾರಿಗೆ ಪ್ರಧಾನಿಯವರಿಗೆ ಪತ್ರ ಬರೆದಿದ್ದೆ. ಅನಂತರ ಎಸ್‌‍ಐಟಿ ಅಧಿಕಾರಿಗಳೂ ಬರೆದಿದ್ದರು. ನಾನು ಎರಡನೇ ಸುತ್ತಿನಲ್ಲೂ ಪತ್ರ ಬರೆದಿದ್ದೇನೆ ಎಂದು ವಿವರಿಸಿದರು. +ಒಂದು ವೇಳೆ ಪತ್ರ ತಲುಪಿದ್ದು ತಡವಾಗಿದೆ ಎಂದು ವಾದವನ್ನು ಒಪ್ಪಿಕೊಂಡರೂ ಈಗಲಾದರೂ ಪತ್ರ ಸಿಕ್ಕಿದೆಯಲ್ಲಾ? ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ತಕ್ಷಣವೇ ರದ್ದುಗೊಳಿಸಲಿ ಎಂದು ಮುಖ್ಯಮಂತ್ರಿ ಆಗ್ರಹಿಸಿದರು. \ No newline at end of file diff --git a/eesanje/url_46_133_10.txt b/eesanje/url_46_133_10.txt new file mode 100644 index 0000000000000000000000000000000000000000..0a9328c0b61f62136b65226d94d6de4adc1c0814 --- /dev/null +++ b/eesanje/url_46_133_10.txt @@ -0,0 +1,9 @@ +ಠಾಣೆಗೆ ನುಗ್ಗಿ ದಾಂಧಲೆ ಮಾಡಿ, ತಲೆ ಕತ್ತರಿಸುತ್ತೇವೆಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಲ್ಲ : ಪರಮೇಶ್ವರ್‌ +ಬೆಂಗಳೂರು, ಮೇ 25-ಪೊಲೀಸ್‌‍ ಠಾಣೆಗೆ ನುಗ್ಗಿ ದಾಂಧಲೆ ಮಾಡುವುದು, ತಲೆ ಕತ್ತರಿಸುತ್ತೇವೆ ಎಂದು ಪೊಲೀಸರಿಗೆ ಬೆದರಿಕೆ ಹಾಕುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ, ಅಂತವರ ವಿರುದ್ಧ ಕಾನೂನಿನ ಪ್ರಕಾರ ಅಗತ್ಯವಾದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. +ದಾವಣಗೆರೆ ಜಿಲ್ಲೆ ಚನ್ನಗಿರಿಯ ಪೊಲೀಸ್‌‍ ಠಾಣೆಗೆ ನುಗ್ಗಿ ಗಲಭೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ದೂರೊಂದರ ವಿಚಾರಣೆಗಾಗಿ ವ್ಯಕ್ತಿಯೊಬ್ಬನನ್ನು ಪೊಲೀಸ್‌‍ ಠಾಣೆ ಕರೆತರಲಾಗಿತ್ತು. ಆತ ಅಲ್ಲಿ 7 ನಿಮಿಷ ಮಾತ್ರ ಉಳಿದಿದ್ದು, ಸಾವನ್ನಪ್ಪಿದ್ದಾನೆ ಎಂದು ಹೇಳಿದರು. +ಪೊಲೀಸರ ಹಲ್ಲೆಯಿಂದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಭಾವಿಸಿ ಆತನ ಕಡೆಯವರು ಪ್ರತಿಭಟನೆ ಮಾಡಿ ಪೊಲೀಸ್‌‍ ಠಾಣೆಗೆ ನುಗ್ಗಿದ್ದಾರೆ. ಈ ವೇಳೆ ಟಿಯರ್‌ ಗ್ಯಾಸ್‌‍ ಬಳಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಕಲ್ಲು ತೂರಾಟದಿಂದ ಅಲ್ಲಿದ್ದವರಿಗೆ ಗಾಯಗಳಾಗಿವೆ ಎಂದು ವಿವರಿಸಿದರು. +ವ್ಯಕ್ತಿಯ ಸಾವಿಗೆ ನಿಖರ ಕಾರಣಗಳೇನು ಎಂದು ತಿಳಿಯಲು ಶವಪರೀಕ್ಷೆಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಅದರ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಅವರು, ಠಾಣೆಗೆ ಬಂದು ಧಮ್ಕಿ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಕೆಜೆ ಹಳ್ಳಿ, ಡಿಜೆ ಹಳ್ಳಿ ಮಾದರಿಯಲ್ಲಿ ಗಲಭೆ ಮಾಡಲು ಚನ್ನಗಿರಿಯಲ್ಲೂ ಸಂಚು ನಡೆದಿತ್ತು ಎಂಬುದನ್ನು ನಾನು ಕೇಳಿಸಿಕೊಂಡಿದ್ದೇನೆ ಎಂದು ಹೇಳಿದರು. +ಉಡುಪಿಯಲ್ಲಿನ ಗುಂಪು ಗಲಭೆ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಲ್ಲಿ ಗಲ್ಲಿಗಳಲ್ಲಿ ಸಣ್ಣಪುಟ್ಟ ಗಲಭೆಗಳಾದರೆ ಅದನ್ನು ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಪರಿಗಣಿಸಲಾಗುವುದಿಲ್ಲ. ಕ್ರಿಕೆಟ್‌ ಆಟದ ವೇಳೆ ಗಲಭೆಗಳಾಗುತ್ತವೆ ಎಂದು ಮೊದಲೇ ಮಾಹಿತಿ ಇರುವುದಿಲ್ಲ. ಗಲಾಟೆ ನಡೆದಾಗ ಅದನ್ನು ನಿಯಂತ್ರಣಕ್ಕೆ ತರಲಾಗುವುದು. ಗಲಭೆಕೋರರನ್ನು ಮುಕ್ತವಾಗಿ ಓಡಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.ದಕ್ಷಿಣ ಕನ್ನಡದಲ್ಲಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ಪೊಲೀಸ್‌‍ ಠಾಣೆಗೆ ಹೋಗಿ ಗಲಾಟೆ ಮಾಡಿದ್ದರು. ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮುಂದಿನ ವಿಚಾರಣೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಡೆಯಲಿದೆ ಎಂದರು. +ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರೆದಿರುವ ಪತ್ರ ವಿದೇಶಾಂಗ ಸಚಿವಾಲಯಕ್ಕೆ ತಲುಪಿಲ್ಲ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದಾಗಿದೆ. ಕೇಂದ್ರ ವಿದೇಶಾಂಗ ಸಚಿವಾಲಯ ಮೇ 21 ರಂದು ಮುಖ್ಯಮಂತ್ರಿಗಳ ಪತ್ರ ತಲುಪಿದೆ ಎಂದು ಹೇಳಿದೆ. ಇದಕ್ಕೂ ಮೊದಲು ಬರೆದ ಪತ್ರ ಎಲ್ಲಿ ಹೋಗಿದೆ? ಎಂದು ಪರಮೇಶ್ವರ್‌ ಪ್ರಶ್ನಿಸಿದರು. +ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಂಡರೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ಉಳಿಯಲು ಅವಕಾಶವಾಗುವುದಿಲ್ಲ. ಅನಂತರ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು. +ಬೆಂಗಳೂರಿಗೆ ಅಪಕೀರ್ತಿ ಸಲ್ಲ :ಬೆಂಗಳೂರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಹೆಸರು ತರಲು ವಿರೋಧಪಕ್ಷಗಳು ಯತ್ನಿಸುತ್ತಿವೆ ಎಂದು ಗೃಹಸಚಿವರು ಆಕ್ಷೇಪಿಸಿದರು.ಮಳೆ ಬಂದಾಗ ರಸ್ತೆ ಹದಗೆಡುವುದು ಸಾಮಾನ್ಯ. ಅದನ್ನು ಸರಿಪಡಿಸಲಾಗುತ್ತದೆ. ಬೆಂಗಳೂರಿನ ನಿರ್ವಹಣೆ ನಿಟ್ಟಿನಲ್ಲಿ ಲೋಪಗಳಾಗಿದ್ದರೆ ಅದನ್ನು ಸರ್ಕಾರದ ಗಮನಕ್ಕೆ ತರಬಹುದು. ಅಥವಾ ಟೀಕೆ ಮಾಡಬಹುದು. ನಾವು ಸರಿಪಡಿಸಿಕೊಳ್ಳುತ್ತೇವೆ. ಅದನ್ನು ಬಿಟ್ಟು ಉಡ್ತಾ ಬೆಂಗಳೂರು, ಗುಂಡಿಗಳ ನಗರ ಎಂದೆಲ್ಲಾ ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಇದರಿಂದ ಬೆಂಗಳೂರಿನ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಬಂಡವಾಳ ಹೂಡಿಕೆಗೂ ಸಮಸ್ಯೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_133_11.txt b/eesanje/url_46_133_11.txt new file mode 100644 index 0000000000000000000000000000000000000000..ff54ae5dd3b9e8f91a818d3b94248ae9ba54dfdc --- /dev/null +++ b/eesanje/url_46_133_11.txt @@ -0,0 +1,6 @@ +ಖಾಲಿ ಇರುವ 4,002 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ +ಬೆಂಗಳೂರು, ಮೇ 25-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಖಾಲಿ ಇರುವ 4,002 ವಿವಿಧ ಹುದ್ದೆಗಳಿಗೆ ನಡೆಸಲಿರುವ ನೇಮಕಾತಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದೆ. +ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ, ಕುಶಲಕರ್ಮಿ, ತಾಂತ್ರಿಕ ಸಹಾಯಕ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12,13 ಹಾಗೂ 14 ರಂದು ಸ್ಪರ್ಧಾತಕ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. +ಕರ್ನಾಟಕ ನೀರು ನಗರ ಸರಬರಾಜು ಮತ್ತು ಒಳಚರಂಡಿಯ ಸಹಾಯಕ ಇಂಜಿನಿಯರ್‌ (ಸಿವಿಲ್‌) ಪ್ರಥಮ ದರ್ಜೆ ಲೆಕ್ಕ ಸಹಾಯಕರು – ಗ್ರೂಪ್‌ಸಿ ಯ 64 ಹುದ್ದೆಗಳಿಗೆ ಆಗಸ್ಟ್‌ 11 ರಂದು ಪರೀಕ್ಷೆ ನಡೆಸಲಾಗುತ್ತದೆ. +ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕ ದರ್ಜೆ 3 ಮೇಲ್ವಿಚಾರಕೇತರ 2,500 ಹುದ್ದೆಗಳಿಗೆ ಸೆಪ್ಟೆಂಬರ್‌ 1 ರಂದು ಹಾಗೂ ಪೊಲೀಸ್‌‍ ಇಲಾಖೆಯ 402 ಪಿಎಸ್‌‍ಐ ಹುದ್ದೆಗಳಿಗೆ ಸೆಪ್ಟೆಂಬರ್‌ 22 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದೆ. +ಕಂದಾಯ ಇಲಾಖೆಯ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅಕ್ಟೋಬರ್‌ 27 ರಂದು ಪರೀಕ್ಷೆ ನಡೆಸಲಿದ್ದು, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಅನ್ವಯಿಸುವ ಹುದ್ದೆಗಳಿಗೆ ನಡೆಸಲಿರುವ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಹೇಳಿದೆ. \ No newline at end of file diff --git a/eesanje/url_46_133_12.txt b/eesanje/url_46_133_12.txt new file mode 100644 index 0000000000000000000000000000000000000000..3426c343d8ba5b4b7c3748757fb447a76022fcbe --- /dev/null +++ b/eesanje/url_46_133_12.txt @@ -0,0 +1,9 @@ +ಬೆಳಗಾವಿಯಲ್ಲೊಬ್ಬ ಪಾಗಲ್‌ ಪ್ರೇಮಿ, ಎಂದಿನಂತೆ ಪೊಲೀಸರ ನಿರ್ಲಕ್ಷ್ಯ…!? +ಬೆಳಗಾವಿ,ಮೇ 25-ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿರುವ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ನಂತರವೂ ಪಾಗಲ್‌ ಪ್ರೀಮಿಗಳ ಕಾಟ ತಣ್ಣಗಾಗಿಲ್ಲ.ಬೆಳಗಾವಿಯಲ್ಲಿ ಸೈಕೋಪಾತ್‌ ಪಾಗಲ್‌ ಪ್ರೀಮಿಯ ಕಾಟದಿಂದ ಇಡೀ ಕುಟುಂಬವೇ ನರಕಯಾತನೆ ಅನುಭವಿಸುತ್ತಿರುವ ಘಟನೆ ತಾಲೂಕಿನ ಕಿಣೆಯ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. +ಕಿಣೆಯ ಗ್ರಾಮದ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ಮನೆ ಮೇಲೆಯೇ ಕಲ್ಲು ತೂರಿ ಕಿಟಕಿ ಗ್ಲಾಸ್‌‍ ಪುಡಿ ಪುಡಿ ಮಾಡಿ ಗ್ರಾಮದ ಜನರನ್ನೇ ಬೆಚ್ಚಿ ಬೀಳಿಸಿದ್ದಾನೆ. ಈ ಪಾಗಲ್‌ ಪ್ರೀಮಿಯ ಹುಚ್ವಾಟದಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. +ತಾಲೂಕಿನ ಕಿಣೆಯ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬಾತ ಯುವತಿಗೆ ತನ್ನನ್ನು ಪ್ರೀತಿಸುವಂತೆ, ಮದುವೆಯಾಗುವಂತೆ ಹುಚ್ಚಾಟವಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. +ಅದೇ ಗ್ರಾಮದ ಬಿಕಾಂ ಓದುತ್ತಿರುವ ಯುವತಿ ಬೆನ್ನು ಬಿದ್ದು, ಪೀಡಿಸುತ್ತಿರುವ ತಿಪ್ಪಣ್ಣ ನಿತ್ಯ ಕಾಲೇಜಿಗೆ ಹೋಗುವಾಗಲೇ ಹಿಂಬಾಲಿಸಿಕೊಂಡು ಹೋಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿಯ ಕುಟುಂಸ್ಥರು ಅಳಲು ತೋಡಿಕೊಂಡಿದ್ದಾರೆ. +ಆತನ ಹುಚ್ಚಾಟಕ್ಕೆ ಬೇಸತ್ತು ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದಾಳೆವಾಸವಿದ್ದಾಳೆ. ಯುವತಿ ಜೊತೆಗೆ ಮದುವೆ ಮಾಡಿ ಕೊಡುವಂತೆ, ಇಲ್ಲದಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೇದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. +ಕೆಲ ತಿಂಗಳ ಹಿಂದೆಯೇ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನಂತೆ ಈತ. ಇದಾದಬಳಿಕ ಮೂರ ದಿನಗಳ ಹಿಂದೆಯೂ ಮನೆ ಬಳಿ ಹೋಗಿ ಗಲಾಟೆ ಮಾಡಿದ್ದಲ್ಲದೆ, ಮನೆಯಲ್ಲಿ ಯಾರೂ ಇಲ್ಲದಿರುವಾಗ ಕಿಟಕಿ ಗ್ಲಾಸ್‌‍ ಒಡೆದು ಪುಂಡಾಟ ಮೆರೆದಿದ್ದಲ್ಲದೆ, ಮನೆಯ ಪಕ್ಕದಲ್ಲಿಯೇ ಜಮೀನಿಗೆ ಬರುವ ನೆಪವೊಡ್ಡಿ ಕಿರುಕುಳ ನೀಡಿದ್ದಾನೆ. +ಯಾವುದೇ ಕೆಲಸ ಮಾಡದೇ ಊರಲ್ಲಿ ಸುತ್ತಾಡುವ ಈ ಪಾಗಲ್‌ ಪ್ರೇಮಿಯ ಕಿರಿಕಿರಿಗೆ ಬೇಸತ್ತು ಯುವತಿ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.ಕಳೆದ ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಪೊಲೀಸರು ಠಾಣೆಗೆ ಆತನನ್ನು ಕರೆದು ಎಚ್ಚರಿಕೆ ನೀಡಿದ್ದರಿಂದ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್‌ ಆಗಿದ್ದ. +ಈಗ ಆತ ಮತ್ತೆ ಬಾಲ ಬಿಚ್ಚಿರುರುವುದರಿಂದ ಮತ್ತೆ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.ಎರಡು ಬಾರಿಯೂ ನಾಳೆ ಬನ್ನಿ ಎಂದು ಹೇಳಿ ಕಳಿಸಿರುವ ಪೊಲೀಸರ ನಿರ್ಲಕ್ಷ್ಯಕ್ಕೆ ಜೀವ ಭಯದಲ್ಲೇ ಜೀವನ ನಡೆಸುತ್ತಿರುವ ಯುವತಿ ಹಾಗೂ ಆಕೆಯ ತಾಯಿ ಬಗ್ಗೆ ಈಗ ಸರಕಾರ ಗಮನ ಹರಿಸಬೇಕಿದೆ ಎಂಬುದು ಸ್ಥಳೀಯರ ಕಳಕಳಿಯಾಗಿದೆ. \ No newline at end of file diff --git a/eesanje/url_46_133_2.txt b/eesanje/url_46_133_2.txt new file mode 100644 index 0000000000000000000000000000000000000000..49457e36830ed49e1eb3822cbbd6a21b2dd560bd --- /dev/null +++ b/eesanje/url_46_133_2.txt @@ -0,0 +1,5 @@ +“ಮುಂಗಾರು ಮಳೆಯ ಮೇಲೆ ರೆಮೆಲ್‌ ಚಂಡಮಾರುತ ಪರಿಣಾಮ ಬೀರಲ್ಲ” +ಬೆಂಗಳೂರು, ಮೇ 25-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೆಮೆಲ್‌ ಚಂಡ ಮಾರುತದ ಪರಿಣಾಮ ನೈರುತ್ಯ ಮುಂಗಾರಿನ ಮೇಲೆ ಹೆಚ್ಚು ಉಂಟಾಗುವುದಿಲ್ಲ. ಒಡಿಸ್ಸಾ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಲಿಸುತ್ತಿರುವುದರಿಂದ ಅದರ ನೇರ ಪರಿಣಾಮ ಮುಂಗಾರಿನ ಮೇಲೆ ಆಗುವುದಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ತಿಳಿಸಿದರು. +ರಾಜ್ಯದ ಮೇಲೆ ಚಂಡ ಮಾರುತದ ಪರಿಣಾಮವಿಲ್ಲ. ಆದರೆ, ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗಬಹುದು. ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಅವರು ಹೇಳಿದರು. +ಮುಂಗಾರು ಮಳೆ ನಿರೀಕ್ಷೆಗಿಂತ ಮುಂಚೆಯೇ ಆಗಮಿಸುವ ಸಾಧ್ಯತೆಗಳಿವೆ. ಹೀಗಾಗಿ ಐದು ದಿನಗಳ ನಂತರ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆ ನಿರೀಕ್ಷಿಸಬಹುದಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ. ಅಂದರೆ ಕರಾವಳಿ ಭಾಗದಲ್ಲಿ 100ರಿಂದ 150 ಮಿ.ಮೀ., ಮಲೆನಾಡು ಭಾಗದಲ್ಲಿ 100 ಮಿ.ಮೀ.ವರೆಗೆ, ಉತ್ತರ ಒಳನಾಡಿನಲ್ಲಿ 15ರಿಂದ 50 ಮಿ.ಮೀ. ಹಾಗೂ ದಕ್ಷಿಣ ಒಳನಾಡಿನಲ್ಲಿ 15ರಿಂದ 40 ಮಿ.ಮೀ.ನಷ್ಟು ಮಳೆಯಾಗುವ ಲಕ್ಷಣಗಳಿವೆ ಎಂದರು. +ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದರೂ ಅರಬ್ಬೀ ಸಮುದ್ರದಲ್ಲಿ ಮುಂಗಾರು ಮಳೆ ಆರಂಭಕ್ಕೆ ಪೂರಕ ವಾತಾವರಣಗಳು ನಿರ್ಮಾಣಗೊಂಡಿವೆ. ಇದರಿಂದ ಅವಧಿಗೂ ಮುನ್ನ ಹೆಚ್ಚು ಮಳೆ ನಿರೀಕ್ಷಿಸಬಹುದಾಗಿದೆ. ಈಗಾಗಲೇ ಪೂರ್ವ ಮುಂಗಾರು ಮಳೆ ಕಳೆದ ಎರಡು ವಾರಗಳಿಂದ ರಾಜ್ಯದ ಹಲವು ಕಡೆಗಳಲ್ಲಿ ಬಿದ್ದಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_133_3.txt b/eesanje/url_46_133_3.txt new file mode 100644 index 0000000000000000000000000000000000000000..53854c242873e85a5a99049b7ae1371f193f92c6 --- /dev/null +++ b/eesanje/url_46_133_3.txt @@ -0,0 +1,10 @@ +ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ : ಕೆ.ಎನ್‌.ರಾಜಣ್ಣ +ಹಾಸನ ಮೇ 25-ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೆ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಹಾಗೂ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ದೆಹಲಿಯಲ್ಲಿ ನಡೆದ ಚರ್ಚೆಯ ಬಗ್ಗೆ ಹೈಕಮಾಂಡ್‌ 3 ವಿಚಾರಗಳನ್ನು ಹೇಳಿತ್ತು. ಅದರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. +ಡಿ.ಕೆ.ಶಿವಕುಮಾರ್‌ ಏಕೈಕ ಉಪಮುಖ್ಯಮಂತ್ರಿ, ಲೋಕಸಭಾ ಚುನಾವಣೆವರೆಗೂ ಅವರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ಮುಂದುವರೆಸಲಾಗುವುದು ಎಂದು ತಿಳಿಸಿತ್ತು. ಯಾರೇ ಆದರೂ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಹೇಳಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್‌ ನನ್ನನ್ನು ಆಯ್ಕೆ ಮಾಡುವುದಾದರೆ ತನು-ಮನ ಪೂರ್ವಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾನು ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ಯಾವುದೇ ರಾಜಕೀಯ ಅಧಿಕಾರವನ್ನೂ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ವಿಧಾನಪರಿಷತ್‌ ಚುನಾವಣೆಯಲ್ಲಿ ಅವಕಾಶ ವಂಚಿತರಿಗೆ ಮಣೆ ಹಾಕಬೇಕು. ಯಾರಿಗೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಅಥವಾ ಈವರೆಗೂ ವಿಧಾನಪರಿಷತ್‌, ವಿಧಾನಸಭೆಯಲ್ಲಿ ಪ್ರಾತಿನಿಧ್ಯ ದೊರೆಯದೆ ಇರುವ ತಳ ಸಮುದಾಯದವರಿಗೆ ಅವಕಾಶ ನೀಡಬೇಕು. ನನ್ನ ಕಡೆಯಿಂದ ಯಾವ ಅಭ್ಯರ್ಥಿಯೂ ಇಲ್ಲ ಎಂದು ಪ್ರತಿಪಾದಿಸಿದರು. +ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾರೆ ಎಂದು ಕೇಂದ್ರಸರ್ಕಾರ, ರಾಜ್ಯಸರ್ಕಾರ, ಎಸ್‌‍ಐಟಿ ಎಲ್ಲರಿಗೂ ಗೊತ್ತಿದೆ. ಆದರೆ ಕಾನೂನು ಪ್ರಕಾರ, ಸಹಜ ನ್ಯಾಯದಂತೆ ಆರೋಪಿಗೆ ಕಾಲಾವಕಾಶ ನೀಡಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಕಾನೂನಿನ ಲೋಪಗಳಾಗದಂತೆ ಈಗಿನಿಂದಲೇ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು. +ಪೆನ್‌ಡ್ರೈವ್‌ ಅನ್ನು ಬಿಡುಗಡೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ವಾದಗಳು ನಡೆಯುತ್ತಿವೆ. ಈ ಹಿಂದೆ ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಉದ್ಭವಿಸುತ್ತವೆ. ರಾಜ್ಯದಲ್ಲಿ ಪೆನ್‌ಡ್ರೈವ್‌ಗಳ ಜನಕ ಎಂದರೆ ಅದು ಎಚ್‌.ಡಿ.ಕುಮಾರಸ್ವಾಮಿ ಎಂದು ಟೀಕಿಸಿದರು. +ಪ್ರಜ್ವಲ್‌ ರೇವಣ್ಣ ಅವರ ವಿಚಾರಕ್ಕೆ ಸಂಬಂಧಪಟ್ಟಂತೆ ಎಷ್ಟು ವಿಡಿಯೋಗಳಿವೆ, ಎಷ್ಟು ಜನ ಸಂತ್ರಸ್ತೆಯರು ಎಂಬುದನ್ನು ಖುದ್ದು ಅವರೇ ಹೇಳಬೇಕು. ನಾನಂತೂ ಇಂತ ವಿಚಾರಗಳಿಂದ ದೂರ. ಯಾರಾದರೂ ಹೆಣ್ಣು ಮಗಳು ಕರೆ ಮಾಡಿ, ನಾನು ಬೆಳಗಾವಿ, ಬಾಗಲಕೋಟೆ ಎಂದು ಹೇಳಿಕೊಂಡರೆ, ಪಕ್ಷದ ಕಾರ್ಯಕರ್ತೆ ಎಂದು ಪರಿಚಯಿಸಿಕೊಂಡರೆ ತಕ್ಷಣವೇ ನಾನು ಆ ನಂಬರ್‌ಗಳನ್ನು ಬ್ಲಾಕ್‌ ಮಾಡುತ್ತೇನೆ. ನನ್ನ ಮೊಬೈಲ್‌ ಬೇಕಾದರೆ ನಿಮಗೆ ಕೊಡುತ್ತೇನೆ, ಎಷ್ಟು ಬ್ಲಾಕ್‌ ನಂಬರ್‌ಗಳಿವೆ ಎಂದು ಪರಿಶೀಲಿಸಿ ಎಂದು ಪತ್ರಕರ್ತರಿಗೆ ಹೇಳಿದರು. +ಹನಿಟ್ರಾಪ್‌ ಸೇರಿದಂತೆ ಏನೇನೋ ವಿಚಾರಗಳು ಕೇಳಿಬರುತ್ತಿವೆ. ತೇಜೋವಧೆ ಮಾಡುವ ವಿಚಾರಗಳು ರಾಜಕೀಯದಲ್ಲಿ ನಿರಂತರ. ಹಾಗಾಗಿ ನಾವು ಎಚ್ಚರಿಕೆಯಿಂದಿರುವುದು ಅಗತ್ಯ ಎಂದರು. ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಕಳುಹಿಸಿಕೊಟ್ಟಿದ್ದು ದೇವೇಗೌಡರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ದೇವೇಗೌಡರು ಎಚ್ಚರಿಕೆ ಪತ್ರ ಬರೆದಿರಬಹುದು. ರೇವಣ್ಣ ಕುಟುಂಬ ಮತ್ತು ತಮ್ಮ ಕುಟುಂಬ ಬೇರೆ ಎಂದು ಕುಮಾರಸ್ವಾಮಿಯವರು ಹೇಳಿದ್ದರು. ಈಗ ದೇವೇಗೌಡರು ಯಾವ ಕುಟುಂಬವನ್ನು ಪ್ರಸ್ತಾಪಿಸಿ ಪತ್ರ ಬರೆದಿದ್ದಾರೆ ಎಂದು ತಮಗೆ ಮಾಹಿತಿ ಇಲ್ಲ ಎಂದು ರಾಜಣ್ಣ ಹೇಳಿದರು. +ಪೆನ್‌ಡ್ರೈವ್‌ ಪ್ರಕರಣದಿಂದ ರಾಜಕೀಯ ಲಾಭವಾಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಹಾಸನದಲ್ಲಿ ಕಾಂಗ್ರೆಸ್‌‍ಗೆ ಒಳ್ಳೆಯ ಅಭ್ಯರ್ಥಿಯಿದ್ದಾರೆ. 30 ವರ್ಷಗಳಿಂದ ಒಂದೇ ಕುಟುಂಬದಲ್ಲಿರುವ ಹಿಡಿತವನ್ನು ತಪ್ಪಿಸಲು ಜನ ಈ ಬಾರಿ ನಮ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು. +ಲಿಂಕ್‌ಕೆನಲ್‌ ಮೂಲಕ ರಾಮನಗರಕ್ಕೆ ಹೇಮಾವತಿ ನೀರು ತೆಗೆದುಕೊಂಡು ಹೋಗುವುದರಿಂದ ತುಮಕೂರು, ಕೊರಟಗೆರೆ, ಮಧುಗಿರಿ, ಗುಬ್ಬಿ, ತುರುವೇಕೆರೆ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. ಇದಕ್ಕೆ ನಮ ವಿರೋಧವಿದೆ. ಮುಖ್ಯಮಂತ್ರಿಯ ಬಳಿ ಈ ವಿಚಾರವಾಗಿ ಚರ್ಚೆ ಮಾಡುತ್ತೇನೆ ಎಂದರು.ಮಾದಕ ವಸ್ತುಗಳ ಪಿಡುಗನ್ನು ತಪ್ಪಿಸಲು ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಮತ್ತಷ್ಟು ಕ್ರಮಗಳು ಅಗತ್ಯ ಎಂದು ಹೇಳಿದರು. \ No newline at end of file diff --git a/eesanje/url_46_133_4.txt b/eesanje/url_46_133_4.txt new file mode 100644 index 0000000000000000000000000000000000000000..a6b34fe351a317628750d59b85e9799647c98c93 --- /dev/null +++ b/eesanje/url_46_133_4.txt @@ -0,0 +1,6 @@ +ಸಿಎಂ ಪುತ್ರ ಯತೀಂದ್ರಗೆ ವಿಧಾನಪರಿಷತ್‌ ಸ್ಥಾನ ಸಿಕ್ಕೇ ಸಿಗುತ್ತದೆ : ಸತೀಶ್‌ ಜಾರಕಿಹೊಳಿ +ಬೆಂಗಳೂರು, ಮೇ 25-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೆ ವಿಧಾನಪರಿಷತ್‌ನ ಸದಸ್ಯತ್ವ ಸ್ಥಾನ ಸಿಕ್ಕೇ ಸಿಗುತ್ತದೆ. ಅದರಲ್ಲಿ ಎರಡು ಮಾತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಜಾತಿವಾರು ಹಾಗೂ ಪ್ರಾಂತ್ಯವಾರು ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗಿವೆ. ನಾವು ನಮ್ಮ ಸಲಹೆಗಳನ್ನು ನೀಡಿದ್ದೇವೆ ಎಂದರು. +ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಮಂಗಳೂರು ಕರಾವಳಿ ಕರ್ನಾಟಕ ಸೇರಿದಂತೆ ಎಲ್ಲಾ ಪ್ರಾಂತ್ಯವಾರು ಆಯ್ಕೆಗಳಾಗಬೇಕು. ಬೆಂಗಳೂರಿನವರನ್ನು ಮಾತ್ರ ಪರಿಗಣಿಸುವುದು ಸರಿಯಲ್ಲ. ಅದೇ ರೀತಿ ಜಾತಿ ಸಮುದಾಯವಾರು ಹಂಚಿಕೆ ಮಾಡಬೇಕು ಎಂದು ಹೇಳಿದರು. ಕಾಂಗ್ರೆಸ್‌‍ ಪಕ್ಷದಲ್ಲಿ ಲಂಬಾಣಿ ಸಮುದಾಯದ ಅಭ್ಯರ್ಥಿಗಳು ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. +ಆ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಕಾಂಗ್ರೆಸ್‌‍ ಪಕ್ಷಕ್ಕೆ ಮತ ಹಾಕುವ ಜಾತಿ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ ನಾಯಕರಿಗೆ ಸಲಹೆ ನೀಡಿದ್ದೇನೆ ಎಂದರು. +ಕೆಲ ಸದಸ್ಯರ ಪುನರ್‌ ಆಯ್ಕೆ ಅನಿವಾರ್ಯ. ಹಾಗೆಯೇ ಹೊಸಬರನ್ನು ಗುರುತಿಸದೇ ಇದ್ದರೆ ಪಕ್ಷ ಸಂಘಟನೆ ಮಾಡುವುದು ಕಷ್ಟವಾಗುತ್ತದೆ. ಹೀಗಾಗಿ ಕನಿಷ್ಟ ನಾಲ್ಕೈದು ಜನರಿಗಾದರೂ ಹೊಸಬರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿರುವುದಾಗಿ ತಿಳಿಸಿದರು. \ No newline at end of file diff --git a/eesanje/url_46_133_5.txt b/eesanje/url_46_133_5.txt new file mode 100644 index 0000000000000000000000000000000000000000..402fb7f38d0f20a0b2f515f10e12a6c85b6171f2 --- /dev/null +++ b/eesanje/url_46_133_5.txt @@ -0,0 +1,4 @@ +ಇರೋದು 7 ಸ್ಥಾನ ಯಾರಿಗಂತ ಕೊಡೋದು : ಅಸಹಾಯಕತೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ +ಮೈಸೂರು, ಮೇ 25-ಇರುವುದು 7 ಸ್ಥಾನ. ಯಾರಿಗೆಂದು ಹಂಚಿಕೆ ಮಾಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ತಂಗಿರುವ ಅವರನ್ನು ಇಂದು ಬೆಳಿಗ್ಗೆ ಪಕ್ಷದ ಹಲವು ನಾಯಕರು ಭೇಟಿ ಮಾಡಿ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಬೇಡಿಕೆ ಇಟ್ಟರು. ಈ ವೇಳೆ ಎಸ್‌‍ಸಿ/ಎಸ್‌‍ಟಿಗೆ ಕೊಡಬೇಕು. ಯಾರಿಗೆಂದು ಕೊಡೋಣ. ನಮ್ಮ ಕಷ್ಟ ನಿಮಗೆ ಅರ್ಥವಾಗುವುದಿಲ್ಲ ಎಂದು ಸಿಡಿಮಿಡಿಗೊಂಡಿದ್ದಾರೆ. +ಇದೇ ವೇಳೆ ಮತ್ತೊಬ್ಬ ವ್ಯಕ್ತಿ ತಮ್ಮ ಸಮಸ್ಯೆ ಪರಿಹರಿಸಿಕೊಡುವಂತೆ ಅರ್ಜಿ ನೀಡಲು ಬಂದಿದ್ದರು. ಅವರನ್ನು ಗದರಿದ ಸಿದ್ದರಾಮಯ್ಯ, ಎಷ್ಟು ಬಾರಿ ಅರ್ಜಿ ಕೊಡುತ್ತೀಯ. ಈಗಾಗಲೇ ಮೂರು ಬಾರಿ ಕೊಟ್ಟಿರಬಹುದು ಎಂದು ಖಾರವಾಗಿ ಹೇಳಿದರು. +ತುಂಬಾ ಜನ ಮುಖ್ಯಮಂತ್ರಿಯವರ ಬೆನ್ನಿಗೆ ಬಿದ್ದಾಗ ತಿಂಡಿ ತಿಂದು ಬರುತ್ತೇನೆ, ಸ್ವಲ್ಪ ಹೊತ್ತು ಇರಿ ಎಂದು ಹೇಳಿ ಹೊರಟರು. ನಿನ್ನೆ ಕೂಡಾ ಮುಖ್ಯಮಂತ್ರಿಯವರು ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ದೋಸೆ ರುಚಿ ಸವಿದಿದ್ದರು. ಇಂದು ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ಗೆ ಸಚಿವ ವೆಂಕಟೇಶ್‌ರೊಂದಿಗೆ ತೆರಳಿ ಉಪಹಾರ ಸೇವಿಸಿದರು. diff --git a/eesanje/url_46_133_6.txt b/eesanje/url_46_133_6.txt new file mode 100644 index 0000000000000000000000000000000000000000..d1e44c044cb5316ae237efb8640c700b126ad540 --- /dev/null +++ b/eesanje/url_46_133_6.txt @@ -0,0 +1,6 @@ +“ನನ್ನ ಮಗ ಲೋ ಬಿಪಿಯಿಂದಾಗಿ ಮೃತಪಟ್ಟಿದ್ದಾನೆ, ಪೊಲೀಸರ ವಿರುದ್ಧ ಆರೋಪ ಮಾಡಲ್ಲ” : ಆದಿಲ್‌ ತಂದೆ +ದಾವಣಗೆರೆ, ಮೇ 25-ಲೋ ಬಿಪಿಯಿಂದಾಗಿ ತಮ್ಮ ಪುತ್ರ ಸಾವನ್ನಪ್ಪಿದ್ದು, ಅನಗತ್ಯವಾಗಿ ನಾನು ಪೊಲೀಸರ ವಿರುದ್ಧ ಆರೋಪ ಮಾಡಲು ಬಯಸುವುದಿಲ್ಲ ಎಂದು ಚನ್ನಗಿರಿ ನಿವಾಸಿ ಕರೀಂ ಉಲ್ಲಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪುತ್ರ ಆದಿಲ್‌ ಬಡಗಿ ಕೆಲಸ ಮಾಡುತ್ತಿದ್ದ. ದೇವರ ವಿಗ್ರಹಗಳನ್ನು ನಿರ್ಮಿಸುತ್ತಿದ್ದ. ವಿನ್ಯಾಸಕಾರನಾಗಿದ್ದ ಆತನಿಗೆ ದಿನಕ್ಕೆ 2 ಸಾವಿರ ರೂ. ಸಂಬಳ ಸಿಗುತ್ತಿತ್ತು. ನಮ್ಮ ಮನೆಯ ಹತ್ತು ಜನರನ್ನು ಸಾಕುತ್ತಿದ್ದ ಎಂದು ಹೇಳಿದ್ದಾರೆ. +ಆತನ ಸಾವಿಗೆ ಕಾರಣ ಗೊತ್ತಿಲ್ಲ. ನಾನು ಅನಗತ್ಯವಾಗಿ ಪೊಲೀಸರ ಮೇಲೆ ದೂರಲು ಬಯಸುವುದಿಲ್ಲ. ಮೃತ ದೇಹದ ಮೇಲೆ ಹಲ್ಲೆಯ ಗುರುತುಗಳನ್ನು ನಾನು ಗಮನಿಸಲಿಲ್ಲ. ಹೆಚ್ಚಿನ ವಿವರಗಳನ್ನು ಹೇಳಲು ನಾನು ವೈದ್ಯನಲ್ಲ. ಅನಕ್ಷರಸ್ಥ. ಹಮಾಲಿ ಕೆಲಸ ಮಾಡಿ ಮಕ್ಕಳನ್ನು ಸಾಕಿ ಓದಿಸಿದೆ. ಈಗ ಬೆಳೆದ ಮಗನನ್ನು ಕಳೆದುಕೊಂಡಿದ್ದೇನೆ. ಪರಿಹಾರ ಕೊಡಿ ಎಂದು ಕೇಳಿಕೊಳ್ಳುತ್ತೇನೆ ಎಂದರು. +ನಮ್ಮ ಮಗನ ಹೆಣವನ್ನು ಇಟ್ಟುಕೊಂಡು ಪೊಲೀಸ್‌‍ ಠಾಣೆಗೆ ಕಲ್ಲು ಹೊಡೆಯಲು ಸಾಧ್ಯವೇ? ಸಾವಿನ ಮನೆಯಲ್ಲಿದ್ದವರು ಯಾರಾದರೂ ಈ ಕೆಲಸ ಮಾಡಲು ಆಗುತ್ತದೆಯೇ? ನಾವು, ನಮ್ಮ ಸಂಬಂಧಿಕರು, ನಮ್ಮ ಅಣ್ಣ-ತಮಂದಿರು ಎಲ್ಲರೂ ಪೊಲೀಸ್‌‍ ಠಾಣೆ ಒಳಗಡೆ ಇದ್ದೆವು. ಹೊರಗಡೆ ಯಾರು ಕಲ್ಲು ಹೊಡೆದಿದ್ದಾರೋ ಗೊತ್ತಿಲ್ಲ, ಕುಡುಕರು ಮಾಡಿರುವ ಕೆಲಸಕ್ಕೆ ನಮ್ಮ ಹೆಸರು ಹೇಳುವುದು ಸರಿಯಲ್ಲ ಎಂದು ಹೇಳಿದರು. +ನನ್ನ ಮಗ ಓಸಿ ಬರೆಯುವಂತಹ ಕೆಲಸ ಮಾಡುತ್ತಿರಲಿಲ್ಲ. ಆತನನ್ನು ಬೆಳೆಸಿ, ಮದುವೆ ಮಾಡಿದ ನನಗೆ ಅವನ ಇತಿಹಾಸ ಗೊತ್ತು. ಆತನಿಗೆ ಮೂರು ಮಕ್ಕಳಿವೆ. ಯಾವುದೇ ಖಾಯಿಲೆ ಇರಲಿಲ್ಲ. ಮೂರ್ಛೆರೋಗದಿಂದ ಮೃತಪಟ್ಟಿದ್ದಾನೆ ಎಂಬುದು ಸರಿಯಲ್ಲ. ಲೋ ಬಿಪಿಯಿಂದಾಗಿ ಸಾವನ್ನಪ್ಪಿರಬಹುದು ಎಂದು ಹೇಳಿದ್ದಾರೆ. +ಪೊಲೀಸ್‌‍ ಠಾಣೆಗೆ ಕರೆದುಕೊಂಡು ಬಂದ 10 ನಿಮಿಷದೊಳಗಾಗಿಯೇ ಕುಸಿದು ಮೃತಪಟ್ಟಿದ್ದಾನೆ. ಮುಂದೆ ನಾವೂ ಸಾಯುತ್ತೇವೆ, ಇನ್ನೊಬ್ಬರ ಮೇಲೆ ದೂರು ಹೇಳಿ ಪಾಪ ಮಾಡಲು ಬಯಸುವುದಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_133_7.txt b/eesanje/url_46_133_7.txt new file mode 100644 index 0000000000000000000000000000000000000000..ec2c083dfc54216b70b3e3f828267ceb1d500976 --- /dev/null +++ b/eesanje/url_46_133_7.txt @@ -0,0 +1,3 @@ +ಬೆಳಗಾವಿ : ಸಿಲಿಂಡರ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಸಾವು +ಬೆಳಗಾವಿ, ಮೇ 25-ಸಿಲಿಂಡರ್‌ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಾಕತಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ತಾಲೂಕಿನ ಸುಳ್ಯ ಗ್ರಾಮದ ಕಲ್ಲಪ್ಪ ಪಾಟೀಲ (63) ಮತ್ತು ಸುಮನಾ ಪಾಟೀಲ (60) ಮೃತಪಟ್ಟ ದಂಪತಿ.ಮೇ 18 ರಂದು ಇವರ ಮನೆಯಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು.ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ ದಂಪತಿ ಮೃತಪಟ್ಟಿದ್ದಾರೆ. \ No newline at end of file diff --git a/eesanje/url_46_133_8.txt b/eesanje/url_46_133_8.txt new file mode 100644 index 0000000000000000000000000000000000000000..05f54b100832a1023de2f207ab9bc841e6a50637 --- /dev/null +++ b/eesanje/url_46_133_8.txt @@ -0,0 +1,10 @@ +ವಿಧಾನಪರಿಷತ್‌ ಚುನಾವಣೆಯಲ್ಲೂ ಕುಟುಂಬ ರಾಜಕಾರಣ : ಕಾರ್ಯಕರ್ತರ ಅಸಮಾಧಾನ +ಬೆಂಗಳೂರು, ಮೇ 25-ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಹಾಗೂ ಈಗಾಗಲೇ ಸಾಕಷ್ಟು ಅವಕಾಶ ಪಡೆದವರಿಗೆ ಮತ್ತೆ ಮಣೆ ಹಾಕುತ್ತಿರುವುದು ಕಾರ್ಯಕರ್ತರ ಅಸಹನೆಗೆ ಕಾರಣವಾಗಿದೆ. 2023 ರ ಜೂನ್‌ 23 ರಂದು ಸಚಿವ ಎನ್‌.ಎಸ್‌‍.ಬೋಸರಾಜ್‌ ಅವರನ್ನು ವಿಧಾನಪರಿಷತ್‌ಗೆ ನೇಮಕ ಮಾಡಲಾಗಿತ್ತು. ಈಗ ಮರಳಿ ಅವರನ್ನು ಮೇಲ್ಮನೆಗೆ ಕಳುಹಿಸಲು ತಯಾರಿಗಳಾಗುತ್ತಿವೆ. ಕೆ.ಎ.ಗೋವಿಂದರಾಜು ಕೂಡ ಎರಡನೇ ಬಾರಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ. +ಇದರ ಜೊತೆಗೆ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಪಂಚಖಾತ್ರಿಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿದ್ದು, ಕ್ಯಾಬಿನೇಟ್‌ ದರ್ಜೆಯ ಸ್ಥಾನಮಾನ ಹೊಂದಿದ್ದಾರೆ. ಆದರೂ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಆರ್‌.ವಿ.ವೆಂಕಟೇಶ್‌, ವಿ.ಆರ್‌.ಸುದರ್ಶನ್‌, ಬಿ.ಎಲ್‌.ಶಂಕರ್‌, ವಿ.ಎಸ್‌‍.ಉಗ್ರಪ್ಪ, ರಾಣಿಸತೀಶ್‌, ಬಿ.ಆರ್‌.ಪಾಟೀಲ್‌, ಎಂ.ಸಿ.ವೇಣುಗೋಪಾಲ್‌, ಪಿ.ಆರ್‌.ರಮೇಶ್‌, ಐವಾನ್‌ ಡಿಸೋಜಾ, ನಾರಾಯಣ ಸ್ವಾಮಿ, ಧರ್ಮಸೇನ, ಜಲಜಾ ನಾಯಕ್‌, ಮಲ್ಲಾಜಮ, ತೇಜಸ್ವಿನಿ ಗೌಡ, ಆರ್‌.ಶಂಕರ್‌, ಎಸ್‌‍.ಜಿ.ನಂಜಯ್ಯ ಹಿರೇಮಠ್‌, ಕೆ.ಶಿವಮೂರ್ತಿ, ಎಲ್‌.ಹನುಮಂತಯ್ಯ ಸೇರಿದಂತೆ ಅನೇಕರು ಈಗಾಗಲೇ ಅವಕಾಶ ಪಡೆದಿದ್ದು, ಮತೊಮ್ಮೆ ಪ್ರಯತ್ನಿಸುತ್ತಿದ್ದಾರೆ. +ಸಂಭವನೀಯ ಪಟ್ಟಿಯಲ್ಲಿರುವವರ ಪೈಕಿ ಯತೀಂದ್ರ ಸಿದ್ದರಾಮಯ್ಯ ಕುಟುಂಬ ರಾಜಕಾರಣದ ಅಪವಾದಕ್ಕೆ ಗುರಿಯಾಗಿದ್ದಾರೆ. ಇನ್ನು ಬಿಜೆಪಿಯಿಂದ ಕಾಂಗ್ರೆಸ್‌‍ಗೆ ವಲಸೆ ಬಂದಿರುವ ಕಲಬುರಗಿಯ ಬಾಬುರಾಜ್‌ ಚಿಂಚನಸೂರು ಮತ್ತು ಮಾಲೀಕಯ್ಯ ಗುತ್ತೇದಾರ್‌ ಅವರು ಟಿಕೆಟ್‌ಗಾಗಿ ಹಿರಿಯ ನಾಯಕರ ದುಂಬಾಲು ಬಿದ್ದಿದ್ದಾರೆ. +ಒಂದು ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ತವರು ಜಿಲ್ಲೆಯ ನಾಯಕರಿಗೆ ಅವಕಾಶ ನೀಡಲು ಇಚ್ಛಿಸಿದರೆ 7 ಸ್ಥಾನಗಳಲ್ಲಿ ಒಂದು ಕಡಿತಗೊಳ್ಳುತ್ತದೆ. ಹಾಗೂ ಹೀಗೂ ಉಳಿಯುವ ಮೂರ್ನಾಲ್ಕು ಸ್ಥಾನಗಳಿಗೆ ಮತ್ತದೇ ಹಳಬರು ಕುಟುಂಬದ ಹಿನ್ನಲೆಯುಳ್ಳವರೇ ಲಾಬಿ ನಡೆಸುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರು ಪ್ರತಿಬಾರಿಯಂತೆ ಮೂಲೆಗುಂಪಾಗುವ ಚಡಪಡಿಕೆ ಕಂಡುಬರುತ್ತಿದೆ. +ಈ ಹಿಂದೆ ಮೂರು ನಾಮನಿರ್ದೇಶನದ ಸ್ಥಾನಗಳಿಗೆ ಐಆರ್‌ಎಸ್‌‍ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದು ಹೊಸದಾಗಿ ರಾಜಕಾರಣಕ್ಕೆ ಬಂದ ಸುಧಾಂದಾಸ್‌‍ ಅವರಿಗೆ ತೀವ್ರ ವಿರೋಧದ ನಡುವೆಯೂ ಮಣೆ ಹಾಕಲಾಯಿತು. +ಮಾಜಿ ಸಚಿವ ಎಂ.ಆರ್‌.ಸೀತಾರಾಮ್‌ ಕಾಂಗ್ರೆಸ್‌‍ನಿಂದ ಒಂದು ಕಾಲು ಹೊರಗಿಟ್ಟಿದ್ದರು. ಅವರಿಗೆ ಎಂ.ಎಲ್‌.ಸಿ ಸ್ಥಾನ ನೀಡಿದ್ದಲ್ಲದೆ, ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಮಾಜಿ ಸಚಿವೆ ಉಮಾಶ್ರೀ ಕೂಡ ಅವಕಾಶ ಪಡೆದುಕೊಂಡರು. +ಮೂರು ಸ್ಥಾನಗಳಲ್ಲಿ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸಲೇ ಇಲ್ಲ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಗೆಲ್ಲುವ ಅನಿವಾರ್ಯತೆ ಇರುವುದರಿಂದಾಗಿ ಕುಟುಂಬ ರಾಜಕಾರಣ ಹಣದ ಪ್ರಭಾವಕ್ಕೆ ಅವಕಾಶ ನೀಡುವುದನ್ನು ಕಾರ್ಯಕರ್ತರು ಸಹಿಸಿಕೊಳ್ಳುತ್ತಿದ್ದಾರೆ. +ಆದರೆ ಪ್ರಸ್ತುತ ಪ್ರಮುಖ ಚುನಾವಣೆಗಳು ಮುಗಿದಿವೆ. ಈಗಲಾದರೂ ನಿಷ್ಠಾವಂತರನ್ನು ಗುರುತಿಸದೇ ಇದ್ದರೆ ಪಕ್ಷಕ್ಕೆ ಉಳಿಗಾಲ ಇರುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ. ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವವರು ಅಥವಾ ಕನಿಷ್ಠ 5 ವರ್ಷ ಜವಾಬ್ದಾರಿ ನಿಭಾಯಿಸುವವರಿಗೆ ಅವಕಾಶ ನೀಡಬೇಕು. ದಶಕದಿಂದ ಅವಕಾಶ ವಂಚಿತರನ್ನು ಪರಿಗಣಿಸಬೇಕು. +ನಿಷ್ಠಾವಂತ ಹಾಗೂ ಹೊಸ ಮುಖಗಳನ್ನು ಪರಿಗಣಿಸಬೇಕು. 7 ವಿಧಾನಪರಿಷತ್‌ನ ಸ್ಥಾನಗಳ ಪೈಕಿ ಕನಿಷ್ಠ ಮೂರಕ್ಕಾದರೂ ಪ್ರಭಾವರಹಿತ, ಕೌಟುಂಬಿಕ ಹಿನ್ನೆಲೆ ಇಲ್ಲದಿರುವ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ. \ No newline at end of file diff --git a/eesanje/url_46_133_9.txt b/eesanje/url_46_133_9.txt new file mode 100644 index 0000000000000000000000000000000000000000..5881955b3f5ed4dbb039f4dd200d3f9cc8d6d9cb --- /dev/null +++ b/eesanje/url_46_133_9.txt @@ -0,0 +1,4 @@ +ವಿಧಾನಪರಿಷತ್‌ ಚುನಾವಣೆ : ನಾಳೆ ಬಿಜೆಪಿ – ಜೆಡಿಎಸ್‌‍ ಸಮನ್ವಯ ಸಭೆ +ಬೆಂಗಳೂರು, ಮೇ 25-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನಾಳೆ ಬಿಜೆಪಿ ಮತ್ತು ಜೆಡಿಎಸ್‌‍ ಸಮನ್ವಯ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಜೆಡಿಎಸ್‌‍ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದ್ದು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡ ಅವರ ಗೆಲುವಿಗೆ ಸಭೆಯಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಸಭೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಜೆಡಿಎಸ್‌‍ ಯುವಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ಪ್ರಮುಖರು ಭಾಗವಹಿಸಲಿದ್ದಾರೆ. +ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಜಂಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದೇವೇಗೌಡ ಅವರ ಗೆಲುವಿಗೆ ಎಲ್ಲರೂ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂಬ ಸಂದೇಶವನ್ನು ಸಭೆಯಲ್ಲಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_134_1.txt b/eesanje/url_46_134_1.txt new file mode 100644 index 0000000000000000000000000000000000000000..e0effc3db67b62aa531a21949c019a2f05373d9a --- /dev/null +++ b/eesanje/url_46_134_1.txt @@ -0,0 +1,5 @@ +ಅಂತ್ಯ ಸಂಸ್ಕಾರದ ವೇಳೆ ಮರುಜೀವ ಪಡೆದ ಎಳೆಮಗು, ಬಾಗಲಕೋಟೆಯಲೊಂದು ಅಚ್ಚರಿ +ಬಾಗಲಕೋಟೆ, ಮೇ 24-ಎಳೆಯ ಮಗುವೊಂದು ಮೃತಪಟ್ಟಿದೆ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಆ ಮಗು ಕೆಮ್ಮಿದ್ದು ಪೋಷಕರಲ್ಲಿ ಅಚ್ಚರಿ ಮೂಡಿಸಿದ ಘಟನೆ ಜಿಲ್ಲೆಯ ಇಳಕಲ್‌ ನಗರದಲ್ಲಿ ನಡೆದಿದೆ. +ಬಸವರಾಜ ಭಜಂತ್ರಿ ಹಾಗೂ ನೀಲಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಮೃತ ಪಟ್ಟಿದೆ ಎಂದು ಭಾವಿಸಿದ್ದ ಮಗು. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. +ವೈದ್ಯರು ಪರೀಕ್ಷಿಸಿ ಮಗು ಬದುಕುವುದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್‌‍ ಮನೆಗೆ ವಾಹನದಲ್ಲಿ ಹಿಂದಿರುಗುವಾಗ ಮಗು ಪ್ರಜ್ಞೆ ತಪ್ಪಿದೆ. ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದರು. +ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಬಂದು ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು ಪೋಷಕರು ನಿಟ್ಟುಸಿರು ಬಿಟ್ಟರೆ, ಇತ್ತ ಅಂತ್ಯಸಂಸ್ಕಾರಕ್ಕೆಂದು ಬಂದ ಸಂಬಂಧಿಕರಿಗೆ ಅಚ್ಚರಿಯಾಗಿದೆ. ಸದ್ಯ ಮಗುವಿಗೆ ಇಳಕಲ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. \ No newline at end of file diff --git a/eesanje/url_46_134_10.txt b/eesanje/url_46_134_10.txt new file mode 100644 index 0000000000000000000000000000000000000000..e1558114fd1e1469abab37e7ebaf52c7e699c0df --- /dev/null +++ b/eesanje/url_46_134_10.txt @@ -0,0 +1,5 @@ +ಕೆಪಿಟಿಸಿಎಲ್‌ 902 ಹುದ್ದೆಗಳ ನೇಮಕ ಮಾಡಿ ಆದೇಶ ಹೊರಡಿಸಿದ ಸರ್ಕಾರ +ಬೆಂಗಳೂರು, ಮೇ 24-ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (ಕೆಪಿಟಿಸಿಎಲ್‌‍) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಎಂಜಿನಿಯರ್‌(ವಿದ್ಯುತ್‌), 17 ಸಹಾಯಕ ಎಂಜಿನಿಯರ್‌(ಸಿವಿಲ್‌‍), 15-ಕಿರಿಯ ಇಂಜಿನಿಯರ್‌(ಸಿವಿಲ್‌‍) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. +ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್‌) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸೆಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರ ವೃಂದದವರು. +ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ. ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು. +ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಂಡ ನಂತರ, ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ ಹಾಗೂ ಮೀಸಲು ಕೋರಿರುವ ದಾಖಲೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ದೃಢೀಕರಣ ಪಡೆದು ತ್ವರಿತವಾಗಿ ಸ್ಥಳ ನಿಯುಕ್ತಿ ಹಾಗೂ ನೇಮಕ ಆದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಟಿಸಿಎಲ್‌ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_134_11.txt b/eesanje/url_46_134_11.txt new file mode 100644 index 0000000000000000000000000000000000000000..c661e5161ffb850a070a8277f50a540e215e8f80 --- /dev/null +++ b/eesanje/url_46_134_11.txt @@ -0,0 +1,12 @@ +ಪರಿಷತ್ ಚುನಾವಣೆ : ಕಾಂಗ್ರೆಸ್‌ಗೆ 4 ಕ್ಷೇತ್ರಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ +ಬೆಂಗಳೂರು, ಮೇ 24-ಪ್ರಸ್ತುತ ನಡೆಯುತ್ತಿರುವ ಶಿಕ್ಷಕರ ಹಾಗೂ ಪದವೀಧರರ ದ್ವೈವಾರ್ಷಿಕ 6 ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಕನಿಷ್ಟ 4 ನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು, ಪಕ್ಷೇತರರ ಬೆಂಬಲದೊಂದಿಗೆ 137 ರವರೆಗೂ ಸಂಖ್ಯಾಬಲವನ್ನು ಹೊಂದಿರುವ ಕಾಂಗ್ರೆಸ್‌‍ ಪಕ್ಷ ಭರ್ಜರಿ ಬಹುಮತ ಸಾಧಿಸಿದೆ. +ಪಕ್ಷಗಳ ಬಲಾಬಲ :ಆದರೆ ಮೇಲನೆ ವಿಧಾನಪರಿಷತ್‌ನಲ್ಲಿ ಬಿಜೆಪಿ ಮುಂದಿದ್ದು, ಜೆಡಿಎಸ್‌‍, ಬಿಜೆಪಿ ಮೈತ್ರಿಯಿಂದಾಗಿ ಕಾಂಗ್ರೆಸ್‌‍ ಪಕ್ಷ ಅಲ್ಪ ಮತಕ್ಕೆ ಕುಸಿದಿದೆ. 2024ರ ಏಪ್ರಿಲ್‌ 24ರವರೆಗಿನ ಸಂಖ್ಯಾಬಲದ ಪ್ರಕಾರ, ಬಿಜೆಪಿ 32, ಜೆಡಿಎಸ್‌‍ 7, ಸಭಾಪತಿ 1 ಸ್ಥಾನ ಸೇರಿ 40 ಬಲಾಬಲ ಹೊಂದಿದೆ. +ಪಕ್ಷೇತರರಾಗಿ ಆಯ್ಕೆಯಾಗಿರುವ ಲಖನ್‌ ಲಕ್ಷ್ಮಣರಾವ್‌ ಜಾರಕಿಹೊಳಿ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಾರೆ ಎಂಬುದು ಆಯಾ ಸಂದರ್ಭದ ಪರಿಸ್ಥಿತಿಯನ್ನು ಆಧರಿಸಿದೆ. ಕಾಂಗ್ರೆಸ್‌‍ 29 ಸದಸ್ಯರನ್ನು ಹೊಂದಿದ್ದು, ಈ ಮೊದಲು ಎಪಿಎಂಸಿ ಕಾಯ್ದೆಯನ್ನು ಅಂಗೀಕಾರ ಪಡೆದುಕೊಳ್ಳಲು ಸಾಧ್ಯವಾಗದೇ ವೈಫಲ್ಯ ಅನುಭವಿಸಿತ್ತು. +ಸದಸ್ಯರ ರಾಜೀನಾಮೆ :ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಮಾಡಲಾಗಿತ್ತು. ಅವರಿಗೆ 2028 ರ ಜೂನ್‌ 14 ರವರೆಗೂ ಅಧಿಕಾರವಧಿಯಿತ್ತು. ಆದರೆ ಅವರು ಕಾಂಗ್ರೆಸ್‌‍ ಹಾಗೂ ವಿಧಾನಪರಿಷತ್‌ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಮರಳಿದ್ದಾರೆ. +ಬಿಜೆಪಿಯ ಸದಸ್ಯರಾಗಿದ್ದ ತೇಜಸ್ವಿನಿ ರಮೇಶ್‌, ಕೆ.ಪಿ.ನಂಜುಂಡಿ ಅವರ ಅಧಿಕಾರವಧಿ ಈ ವರ್ಷದ ಜೂನ್‌ 17 ಕ್ಕೆ ಮುಕ್ತಾಯಗೊಳ್ಳುತ್ತಿದ್ದರೆ, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಆಯನೂರು ಮಂಜುನಾಥ್‌ ವಿಧಾನಸಭೆಗೆ ಸ್ಪರ್ಧಿಸುವ ಸಲುವಾಗಿ ರಾಜೀನಾಮೆ ನೀಡಿದ್ದರು. ಅದರ ಅಧಿಕಾರವಧಿ ಜೂ. 21 ರವರೆಗೆ ಇತ್ತು. ಜೆಡಿಎಸ್‌‍ ಸದಸ್ಯರಾಗಿದ್ದ ಮರಿತಿಬ್ಬೇಗೌಡ ಅವರು ಜೂನ್‌ 21 ಕ್ಕೆ ನಿವೃತ್ತರಾಗಬೇಕಿತ್ತು. ಆದರೆ ಪಕ್ಷ ಹಾಗೂ ವಿಧಾನಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಸೇರಿ ಹೆಚ್ಚಿನ ಪದವೀಧರ ಕ್ಷೇತ್ರದಿಂದ ಮರು ಆಯ್ಕೆಯಾಗಲು ಸ್ಪರ್ಧಿಸಿದ್ದಾರೆ. ಈ ಐವರು ರಾಜೀನಾಮೆ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ. +ತೆರವಾಗುವ ಸ್ಥಾನಗಳು :32 ಸದಸ್ಯರನ್ನು ಹೊಂದಿರುವ ಬಿಜೆಪಿಯಲ್ಲಿ ವಿಧಾನಸಭೆಯಿಂದ ಆಯ್ಕೆಯಾಗಿರುವ ಹಾಗೂ ಪದವೀಧರ ಶಿಕ್ಷಕರ ಕ್ಷೇತ್ರಗಳ ಸದಸ್ಯರಿಂದ 8 ಸ್ಥಾನಗಳು ತೆರವಾಗುತ್ತಿವೆ. ಕಾಂಗ್ರೆಸ್‌‍ನಲ್ಲಿ 7, ಜೆಡಿಎಸ್‌‍ನಲ್ಲಿ 2 ಸ್ಥಾನಗಳು ತೆರವಾಗುತ್ತಿವೆ. +ವಿಧಾನಸಭೆಯಿಂದ ಆಯ್ಕೆಗೆ ಚುನಾವಣೆ :11 ಸದಸ್ಯರ ಅಧಿಕಾರವಧಿ ಜೂನ್‌ 16 ಕ್ಕೆ ಮುಕ್ತಾಯಗೊಳ್ಳಲಿದೆ. ಅದರಲ್ಲಿ ಬಿಜೆಪಿಯ 6, ಕಾಂಗ್ರೆಸ್‌‍ನ 4, ಜೆಡಿಎಸ್‌‍ನ ಒಬ್ಬರು ಸದಸ್ಯರಿದ್ದರು. ಈ ಸ್ಥಾನಗಳಿಗೆ ಜೂನ್‌ 13 ರಂದು ಚುನಾವಣೆ ನಡೆಯುತ್ತಿದ್ದು, ಅಲ್ಲಿ ಕಾಂಗ್ರೆಸ್‌‍ 7, ಬಿಜೆಪಿ 3, ಜೆಡಿಎಸ್‌‍ 1 ಕ್ಷೇತ್ರಗಳಲ್ಲಿ ಗೆಲ್ಲುವ ಅವಕಾಶ ಹೊಂದಿದೆ. +ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾವಣೆ ನಡೆದ ಬಳಿಕ ಬಿಜೆಪಿಯ ಸಂಖ್ಯಾಬಲ 27, ಕಾಂಗ್ರೆಸ್‌‍ 31, ಜೆಡಿಎಸ್‌‍ 6 ಸದಸ್ಯರನ್ನು ಹೊಂದಲಿದೆ. ಸಭಾಪತಿಯವರನ್ನೂ ಒಳಗೊಂಡ ಬಳಿಕ ಜೆಡಿಎಸ್‌‍, ಬಿಜೆಪಿ ಮೈತ್ರಿಯ ಸಂಖ್ಯಾಬಲ 34 ಆಗಲಿದೆ.ಕಾಂಗ್ರೆಸ್‌‍ ಎರಡೂ ಪಕ್ಷಗಳನ್ನು ಮೀರಿಸಬೇಕಾದರೆ ಶಿಕ್ಷಕರ ಪದವೀಧರರ ದ್ವೈವಾರ್ಷಿಕ ಚುನಾವಣೆಯಲ್ಲಿ 4 ಕ್ಷೇತ್ರಗಳನ್ನು ಗೆಲ್ಲಲೇಬೇಕಿದೆ. ಈ ನಡುವೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವ ಬಿಜೆಪಿಯ ಕೋಟಾ ಶ್ರೀನಿವಾಸ್‌‍ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದಾರೆ. +ಸಂಸತ್‌ಗೆ ಒಂದು ವೇಳೆ ಅವರು ಆಯ್ಕೆಯಾದರೆ ಮೇಲನೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಆಗ ಬಿಜೆಪಿಗೆ ಮತ್ತೊಂದು ಸ್ಥಾನ ಕೊರತೆಯಾಗುವ ಸಾಧ್ಯತೆಗಳಿವೆ. ಆಡಳಿತಾರೂಢ ಕಾಂಗ್ರೆಸ್‌‍ ವಿಧಾನಮಂಡಲದಲ್ಲಿ ಯಾವುದೇ ವಿಧೇಯಕ ಹಾಗೂ ನಿಯಮಗಳಿಗೆ ಸರಾಗವಾಗಿ ಅಂಗೀಕಾರ ಪಡೆದುಕೊಳ್ಳಬೇಕಾದರೆ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಇದೆ. +ಇದೇ ವರ್ಷ ಅಕ್ಟೋಬರ್‌ 29 ಕ್ಕೆ ನಾಮನಿರ್ದೇಶಿತ ಕಾಂಗ್ರೆಸ್‌‍ ಸದಸ್ಯರಾದ ಯು.ಬಿ.ವೆಂಕಟೇಶ್‌, ಪ್ರಕಾಶ್‌ ಕೆ. ರಾಥೋಡ್‌ ನಿವೃತ್ತರಾಗುತ್ತಿದ್ದು, ಆ ಎರಡೂ ಸ್ಥಾನಗಳಿಗೂ ನಾಮನಿರ್ದೇಶನ ಮಾಡಿಕೊಳ್ಳಲು ಸರ್ಕಾರಕ್ಕೆ ಅವಕಾಶ ಇದೆ.ಈ ಲೆಕ್ಕಾಚಾರದ ಆಧಾರದ ಮೇಲೆ ಕನಿಷ್ಟ 2 ಸ್ಥಾನಗಳನ್ನು ಗೆದ್ದರೂ ಕಾಂಗ್ರೆಸ್‌‍ ಮೇಲನೆಯಲ್ಲಿ ಸಂಖ್ಯಾಬಲ ಸಾಧಿಸಿಕೊಳ್ಳುವ ಅವಕಾಶಗಳಿವೆ. +ಸಾಮಾನ್ಯವಾಗಿ ವಿಧಾನಪರಿಷತ್‌ನ ಚುನಾವಣೆಯ ಫಲಿತಾಂಶಗಳು ಆಡಳಿತಾರೂಢ ಪಕ್ಷಕ್ಕೆ ಅನುಕೂಲವಾಗಿರುತ್ತವೆ ಎಂಬ ಪ್ರತೀತಿ ಇದೆ. ಪ್ರಸ್ತುತ ಬಿಜೆಪಿ ಮತ್ತು ಜೆಡಿಎಸ್‌‍ ಚುನಾವಣೋತ್ತರ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್‌‍ಗೆ ಸವಾಲಿನ ಪರಿಸ್ಥಿತಿ ಎದುರಾಗಿದೆ. \ No newline at end of file diff --git a/eesanje/url_46_134_12.txt b/eesanje/url_46_134_12.txt new file mode 100644 index 0000000000000000000000000000000000000000..153ec63796c44d10e4ca1880e62a6315d35a8a43 --- /dev/null +++ b/eesanje/url_46_134_12.txt @@ -0,0 +1,6 @@ +ಹದಗೆಟ್ಟ ಕಾನೂನು ಸುವ್ಯವಸ್ಥೆ, ನೆರೆರಾಜ್ಯಗಳತ್ತ ಹೂಡಿಕೆದಾರರು ಎಂದ ಬಿಜೆಪಿಗೆ ಡಿಕೆಶಿ ಸವಾಲ್ +ಬೆಂಗಳೂರು, ಮೇ 24-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಹೂಡಿಕೆದಾರರು ದೇಶವನ್ನೇ ಬಿಟ್ಟು ಹೋಗಿದ್ದರು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯಮಿಗಳು ಕರ್ನಾಟಕದ ಬದಲಾಗಿ ನೆರೆರಾಜ್ಯಗಳಿಗೆ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂಬ ಬಿಜೆಪಿಯ ಆರೋಪಕ್ಕೆ ಕಿಡಿಕಾರಿರುವ ಅವರು, ಬಿಜೆಪಿಗೆ ನಾಚಿಕೆಯಾಗಬೇಕು. ಮೊದಲು ದಾಖಲಾತಿಗಳನ್ನು ಪರಿಶೀಲನೆ ನಡೆಸಬೇಕು ಎಂದು ಸವಾಲು ಹಾಕಿದ್ದಾರೆ. +ಬಿಜೆಪಿಯ ಆಡಳಿತದ ಅವಧಿಯಲ್ಲಿ ಕಿರುಕುಳಕ್ಕಾಗಿ ಎಷ್ಟು ಉದ್ಯಮಿಗಳು ದೇಶ ಬಿಟ್ಟು ಹೋಗಿದ್ದರು ಎಂಬುದನ್ನು ನೋಡಲಿ, ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಾಕಷ್ಟು ಹೂಡಿಕೆಯಾಗುತ್ತಿದೆ. ನಮ ಸರ್ಕಾರದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಇವರಿಬ್ಬರೂ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ರಾಜ್ಯದಲ್ಲಿ ಎಷ್ಟು ಮಂದಿ ಹೂಡಿಕೆ ಮಾಡಿದ್ದಾರೆ ಎಂಬುದನ್ನು ತೋರಿಸುತ್ತೇವೆ ಎಂದು ಹೇಳಿದರು. +ಕರ್ನಾಟಕ ರಾಜ್ಯ ಅಭಿವೃದ್ಧಿಗೆ, ಶಾಂತಿಗೆ ಜಾಗತಿಕವಾಗಿ ಹೆಸರುವಾಸಿಯಾಗಿದೆ. ಅದರಲ್ಲೂ ಬೆಂಗಳೂರಿಗೆ ತನ್ನದೇ ಆದ ವಿಶೇಷ ಸ್ಥಾನಮಾನವಿದೆ ಎಂದರು.ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರಿಗೆ ಬಹಿರಂಗ ಪತ್ರ ಬರೆದು ಭಾರತಕ್ಕೆ ಮರಳುವಂತೆ ಸೂಚಿಸಿರುವುದು ಕೌಟುಂಬಿಕ ವಿಚಾರ. ಇದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು. +ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿರುವುದು ಶೋಕಿಗಾಗಿ ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಅವರಿಗೆ ಏನು ಬೇಕೋ ಅದನ್ನು ಟೀಕೆ ಮಾಡಿಕೊಳ್ಳಲಿ. ನಾವು ಜನರೊಂದಿಗಿದ್ದೇವೆ, ಜನ ನಮೊಂದಿಗಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_134_2.txt b/eesanje/url_46_134_2.txt new file mode 100644 index 0000000000000000000000000000000000000000..2ae2e8a951e6f45cc21777b6dd3101f0e96cb791 --- /dev/null +++ b/eesanje/url_46_134_2.txt @@ -0,0 +1,5 @@ +ಗುಂಡು ಪ್ರಿಯರಿಗೆ ಒಂದು ವಾರ ಗಂಡಾಂತರ : ಜೂನ್‌ ಮೊದಲ ಸಿಗಲ್ಲ ಎಣ್ಣೆ +ಬೆಂಗಳೂರು,ಮೇ.24-ಎಣ್ಣೆ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌‍! ಜೂ.1 ರಿಂದ 6ರವರೆಗೆ ನಗರದಲ್ಲಿ ಮದ್ಯ ಸಿಗೋದಿಲ್ಲ. ಇದೆನಪ್ಪಾ ಅರು ದಿನ ಮದ್ಯ ಏಕೆ ಸಿಗೊಲ್ಲ ಅಂತಾ ಯೋಚನೆ ಮಾಡ್ತಿದ್ದಿರಾ ಅದಕ್ಕೆ ಲೋಕಸಭಾ ಚುನಾವಣಾ ಫಲಿತಾಂಶ ಹಾಗೂ ಎಂಎಲ್‌ಸಿ ಚುನಾವಣೆ ನಡೆಯುತ್ತಿರುವುದೆ ಕಾರಣವಾಗಿದೆ. +ಎಂಎಲ್‌ ಸಿ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವುದರಿಂದ ಜೂ.5 ಹೊರತುಪಡಿಸಿ ಜೂ.1 ರಿಂದ 6ರವರೆಗೆ ನಗರದಲ್ಲಿರುವ ಮದ್ಯದಂಗಡಿಗಳು ಕ್ಲೋಸ್‌‍ ಆಗಿರುತ್ತವೆ.ಜೂನ್‌ 3 ರಂದು ಪದವೀಧರ ಕ್ಷೇತ್ರದ ಮತದಾನದ ಹಿನ್ನೆಲೆಯಲ್ಲಿ ಜೂನ್‌ 1 ರ ಮಧ್ಯಾಹ್ನ 4 ಗಂಟೆಯಿಂದ ಜೂನ್‌ 3 ರ ವರೆಗೆ ನಗರದಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಕ್ಲೋಸ್‌‍ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. +ಅದೇ ರೀತಿ ಜೂನ್‌ 4 ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಅಂದು ಸಹ ಇಡೀ ರಾಜ್ಯದಲ್ಲಿ ಎಲ್ಲ ಮಾದರಿಯ ಬಾರ್‌ ಅಂಡ್‌ ರೆಸ್ಟೋರೆಂಟ್‌ ವೈನ್‌ಸ್ಟೋರ್‌ಗಳನ್ನು ಬಂದ್‌ ಮಾಡಲಾಗುತ್ತಿದೆ. ಐದರಂದು ಮಾತ್ರ ಎಣ್ಣೆ ಅಂಗಡಿ ಓಪನ್‌ ಆಗಿರುತ್ತದೆ ಮತ್ತೆ ಜೂನ್‌ 6 ರಂದು ಎಂಎಲ್‌ಸಿ ಚುನಾವಣೆಯ ಮತ ಎಣಿಕೆ ಇರೋದಿಂದ ಅಂದು ಸಹ ಮದ್ಯದಂಗಡಿಗಳನ್ನು ಬಂದ್‌ ಮಾಡಲಾಗುತ್ತಿದೆ. +ಜೂನ್‌ ಮೊದಲ ವಾರದ ಮೊದಲ ಆರು ದಿನದಲ್ಲಿ ಜೂ.5ರಂದು ಹೊರತುಪಡಿಸಿದರೆ ಉಳಿದ ದಿನಗಳಲ್ಲಿ ಎಣ್ಣೆ ಸಿಗುವುದಿಲ್ಲ ಹೀಗಾಗಿ ಈಗಲೇ ಸ್ಟಾಕ್‌ ಮಾಡಿಕೊಳ್ಳಿ ಇಲ್ಲದಿದ್ದರೆ ಅಂದು ನಿಮಗ್‌ ಡ್ರೈ ಡೇ ಆಗಿರಲಿದೆ ಇರಲಿ ಎಚ್ಚರ. \ No newline at end of file diff --git a/eesanje/url_46_134_3.txt b/eesanje/url_46_134_3.txt new file mode 100644 index 0000000000000000000000000000000000000000..1b72efb5097009e363ca767e9f33ec8313fe22ab --- /dev/null +++ b/eesanje/url_46_134_3.txt @@ -0,0 +1,8 @@ +ಸೌಂದರ್ಯ ಜಗದೀಶ್‌ ಆತಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲು +ಬೆಂಗಳೂರು, ಮೇ 24-ಚಲನ ಚಿತ್ರ ನಿರ್ಮಾಪಕ ಹಾಗೂ ಉದ್ಯಮಿ ಸೌಂದರ್ಯ ಜಗದೀಶ್‌ ಆತಹತ್ಯೆ ಪ್ರಕರಣ ಸಂಬಂಧ ಮೂವರು ಪಾಲದಾರರ ವಿರುದ್ಧ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. +ಉದ್ಯಮದ ಪಾಲುದಾರರಾದ ಸುರೇಶ್‌, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರು ಮೋಸ ಮಾಡಿದ್ದರಿಂದ ಮಾನಸಿಕವಾಗಿ ನೊಂದು ನನ್ನ ಪತಿ ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಶಶಿರೇಖಾ ಅವರು ದೂರು ನೀಡಿದ್ದಾರೆ. +ಅಲ್ಲದೇ ಇವರುಗಳಿಂದ ನಮ್ಮ ಕುಟುಂಬಕ್ಕೆ ಜೀವಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ. ಈ ದೂರಿನನ್ವಯ ಪೊಲೀಸರು ಈ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.ಸೌಂದರ್ಯ ಜಗದೀಶ್‌ ಅವರು ಆತಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಸಿಕ್ಕಿದೆ ಎಂದು ಶಶಿರೇಖಾ ಅವರು ಪೊಲೀಸರಿಗೆ ತಿಳಿಸಿದ್ದಾರೆ. +ಮೇ 18ರಂದು ಜಗದೀಶ್‌ ಅವರ ರೂಮಿನಲ್ಲಿದ್ದ ಬಟ್ಟೆಯನ್ನು ಪೂಜೆಗಿಡಲು ತೆಗೆದುಕೊಳ್ಳುವಾಗ ಡೆತ್‌ ನೋಟ್‌ ಪತ್ತೆಯಾಗಿದೆ. ಅದರಲ್ಲಿ, ಸೌಂದರ್ಯ ಕನ್‌ಸ್ಟ್ರಕ್ಷನ್‌ನ ಸಹ ಪಾಲುದಾರರಾದ ವಿ.ಎಸ್‌‍.ಸುರೇಶ್‌, ಹೊಂಬಣ್ಣ ಎಸ್‌‍.ಪಿ ಹಾಗೂ ಸುಧೀಂದ್ರ ಎಂಬವರು ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು. +ಕಂಪನಿ ಲಾಭದಲ್ಲಿದ್ದರೂ ಸಹ ಸುಳ್ಳು ನಷ್ಟ ತೋರಿಸಿ ತಮ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ನಲ್ಲಿ ಅಡವಿರಿಸಿ ಸಾಲ ಪಡೆದು ಸುಮಾರು 60 ಕೋಟಿ ರೂ.ನಷ್ಟು ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. +ಈ ಮೂವರು ಸಬೂಬು ಹೇಳಿ ಖಾಲಿ ಚೆಕ್‌ ಹಾಗೂ ಖಾಲಿ ಹಾಳೆಗಳ ಮೇಲೆ ಜಗದೀಶ್‌ ಸಹಿ ಪಡೆದು ಹಣ ದುರುಪಯೋಗಪಡಿಸಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿದ ಜಗದೀಶ್‌ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. +ಈ ವಿಚಾರವಾಗಿ ಸುರೇಶ್‌ ಹಾಗೂ ಹೊಂಬಣ್ಣ ಅವರ ಬಳಿ ಕೇಳಿದಾಗ ಅವರು ಹಣ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಆತಹತ್ಯೆ ಮಾಡಿಕೊಳ್ಳುವ ಒಂದು ವಾರಗಳ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ಅವರು ಜಗದೀಶ್‌ ಅವರಿಗೆ ನಿರಂತರವಾಗಿ ಕರೆ ಮಾಡುತ್ತಿದ್ದರು. ಆ ಕರೆಗಳು ಬಂದಾಗ ಜಗದೀಶ್‌ ಜರ್ಜರಿತರಾಗುತ್ತಿದ್ದರು ಎಂದು ಶಶಿರೇಖಾ ಆರೋಪಿಸಿದ್ದಾರೆ. \ No newline at end of file diff --git a/eesanje/url_46_134_4.txt b/eesanje/url_46_134_4.txt new file mode 100644 index 0000000000000000000000000000000000000000..ae8feae9c31f9dc086b413e17a17b388bfdb4eff --- /dev/null +++ b/eesanje/url_46_134_4.txt @@ -0,0 +1,5 @@ +ಪಿ.ಆರ್‌.ರಮೇಶ್‌, ಬಸವರಾಜ್‌ಗೆ ವಿಧಾನ ಪರಿಷತ್‌ ಟಿಕೆಟ್‌ ನೀಡುವಂತೆ ತಿಗಳ ಮಹಾಸಭಾ ಆಗ್ರಹ +ಬೆಂಗಳೂರು,ಮೇ.24-ಸಮುದಾಯದ ಮುಖಂಡರಾದ ಪಿ.ಆರ್‌.ರಮೇಶ್‌ ಹಾಗೂ ಎ.ಎಚ್‌.ಬಸವರಾಜ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡುವಂತೆ ಕರ್ನಾಟಕ ರಾಜ್ಯ ತಿಗಳರ ಮಹಾ ಸಭಾ ಆಗ್ರಹಿಸಿದೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಎಲ್‌.ಎ. ಮಂಜುನಾಥ್‌ ಅವರು ಸಮುದಾಯದ ಮುಖಂಡರಾಗಿದ್ದು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ ಎ.ಎಚ್‌.ಬಸವರಾಜ್‌ ಅವರಿಗೆ ಮುಂಬರುವ ವಿಧಾನಪರಿಷತ್‌ ಚುನಾವಣೆಯಲ್ಲಿ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದರು. +ನಮ್ಮ ಸಮುದಾಯಕ್ಕೆ ಇದುವರೆಗೂ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿರುವ ಬಸವರಾಜ್‌ ಅವರಿಗೆ ಪರಿಷತ್‌ ಟಿಕೆಟ್‌ ನೀಡಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿಕೊಂಡರು. +ಎ.ಎಚ್‌.ಬಸವರಾಜ್‌ ಮಾತನಾಡಿ, ನಮ ಸಮುದಾಯದ ಹಿರಿಯ ಮುಖಂಡರಾಗಿರುವ ಪಿ.ಆರ್‌.ರಮೇಶ್‌ ಅವರು ಬೆಂಗಳೂರು ಮಹಾನಗರ ಪಾಲಿಕೆ ಮಹಾಪೌರರಾಗಿ ಹಾಗೂ ಎಂಎಲ್‌ಸಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಅವರ ಸೇವೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್‌‍ ಪಕ್ಷದ ವರಿಷ್ಠರು ಮತ್ತೊಂದು ಅವಧಿಗೆ ಅವರಿಗೆ ಪರಿಷತ್‌ ಟಿಕೆಟ್‌ ನೀಡಿ ನಮ್ಮ ಸಮುದಾಯದ ಏಳಿಗೆಗೆ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಸಮುದಾಯದ ಹಲವಾರು ಮುಖಂಡರುಗಳು ಹಾಜರಿದ್ದರು. \ No newline at end of file diff --git a/eesanje/url_46_134_5.txt b/eesanje/url_46_134_5.txt new file mode 100644 index 0000000000000000000000000000000000000000..04534c05e00b5e95ee6773275fe997821416b45e --- /dev/null +++ b/eesanje/url_46_134_5.txt @@ -0,0 +1,9 @@ +ಕರ್ನಾಟಕದಲ್ಲಿರುವ ಅಧಿಕೃತ ಖಾಸಗಿ ಶಾಲೆಗಳ ಪಟ್ಟಿ ಬಿಡುಗಡೆ +ಬೆಂಗಳೂರು,ಮೇ24-ಕರ್ನಾಟಕದಲ್ಲಿರುವ 17,000ಕ್ಕೂ ಹೆಚ್ಚು ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌‍ಇಎಲ್‌‍) ಬಿಡುಗಡೆ ಮಾಡಿದೆ. ಆದರೆ ಅವುಗಳಲ್ಲಿ ಎಷ್ಟೋ ಶಾಲೆಗಳಿಗೆ ಇಲಾಖೆಯ ಒಪ್ಪಿಗೆ ಸಿಕ್ಕಿಲ್ಲ ಎಂಬ ಬಗ್ಗೆ ಯಾವುದೇ ಸೂಚನೆ ನೀಡದ ಕಾರಣ, ಈಗಾಗಲೇ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ ಭವಿಷ್ಯವೇನು ಎಂಬ ಬಗ್ಗೆ ಪೋಷಕರು ಆತಂಕದಲ್ಲಿದ್ದಾರೆ. +ಡಿಎಸ್‌‍ಇಎಲ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌‍ ಮಾಡಲಾದ ಪಟ್ಟಿಯು ಜಿಲ್ಲಾವಾರು ಶಾಲೆಗಳ ಹೆಸರುಗಳನ್ನು ಪ್ರಕಟಿಸುತ್ತದೆ, ಅದರ ಅಡಿಯಲ್ಲಿ ಬ್ಲಾಕ್‌ ಆಯ್ಕೆ ಮಾಡಬೇಕು ಮತ್ತು ಅವರ ಮಗುವಿನ ಶಾಲೆಯು ಅಧಿಕೃತವಾಗಿದೆಯೇ ಎಂದು ನೋಡಲು ಪಟ್ಟಿ ಮಾಡಲಾದ ಹೆಸರುಗಳ ಸರಣಿಯನ್ನು ನೋಡಬೇಕು ಜೊತೆಗೆ ಅನುಮತಿ ನೀಡಿದ ಅವಧಿಯನ್ನು ಪರಿಶೀಲಿಸಬೇಕು. ಪಟ್ಟಿಯಲ್ಲಿ ಶಾಲೆಯು ನೀಡಬಹುದಾದ ಬೋರ್ಡ್‌ಗಳು ಮತ್ತು ತರಗತಿಗಳನ್ನು ಸಹ ಉಲ್ಲೇಖಿಸುತ್ತದೆ. +ಬೆಂಗಳೂರು ಒಂದರಲ್ಲೇ 3,064 ಶಾಲೆಗಳು ಅನುಮೋದನೆಯ ಮುದ್ರೆ ಪಡೆದಿದ್ದು, ಬೆಂಗಳೂರು ದಕ್ಷಿಣ -1,312 ಉತ್ತರ – 1,302 ಮತ್ತು ಗ್ರಾಮಾಂತರದಲ್ಲಿ 449 ಗರಿಷ್ಠ ಶಾಲೆಗಳಿವೆ. ಎಷ್ಟು ಶಾಲೆಗಳನ್ನು ತಿರಸ್ಕರಿಸಲಾಗಿದೆ ಎಂಬುದರ ಕುರಿತು ನಿಖರವಾದ ಸಂಖ್ಯೆಯನ್ನು ಪಡೆಯಲು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಅವುಗಳ ಒಟ್ಟು ನಿಖರ ಸಂಖ್ಯೆ ದೊರೆತಿಲ್ಲ ಎಂದು ತಿಳಿದು ಬಂದಿದೆ. +ನಾವು ಅನಧಿಕೃತ ಪಟ್ಟಿಯನ್ನು ನೀಡುತ್ತಿಲ್ಲ. ಬದಲಾಗಿ ಸಕಾರಾತ್ಮಕ ನಿರ್ಮಾಣಕ್ಕೆ ಹೋಗುತ್ತಿದ್ದೇವೆ ಇದರಿಂದ ಯಾವ ಶಾಲೆಗಳು ಅಧಿಕೃತವಾಗಿವೆ ಎಂಬುದನ್ನು ಪೋಷಕರು ತಿಳಿದುಕೊಳ್ಳಬಹುದು. ಇದು ಈ ಶೈಕ್ಷಣಿಕ ವರ್ಷದಿಂದಲೇ ಅನ್ವಯವಾಗಲಿದೆ. ನಾವು ಪೋಷಕರನ್ನು ಎಚ್ಚರಿಸಲು ಬಯಸುತ್ತೇವೆ ಮತ್ತು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ ಡಿಎಸ್‌‍ಇಎಲ್‌ನ ಪ್ರಧಾನ ಕಾರ್ಯದರ್ಶಿಗಳು ತಿಳಿಸಿದ್ದಾರೆ. +ಅನಧಿಕೃತ ಶಾಲೆಗಳಲ್ಲಿ ಪ್ರವೇಶಗಳು ಕಡಿಮೆಯಾಗುವ ಸಾಧ್ಯತೆಯಿದೆ. ಮಕ್ಕಳ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡು ಪಟ್ಟಿಯಲ್ಲಿಲ್ಲದ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಕರಣದ ಸೂಕ್ತ ಅಧ್ಯಯನ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. +ಶೈಕ್ಷಣಿಕ ವರ್ಷವು ಮೇ 28 ರಂದು ಪ್ರಾರಂಭವಾಗಲಿದ್ದು, ಏತನಧ್ಯೆ, ಅಧಿಕೃತ ಶಾಲೆಗಳ ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡುವ ಇಲಾಖೆಯ ಉದ್ದೇಶದ ಬಗ್ಗೆ ಪ್ರಶ್ನಿಸಲಾಗಿದೆ. ಕೆಲವು ಶಾಲಾ ಮಾಲೀಕರ ಹಿತಾಸಕ್ತಿ ಕಾಪಾಡಲು ಈ ರೀತಿ ಮಾಡಲಾಗುತ್ತಿದೆ, ಇದು ಆಡಳಿತದ ವೈಫಲ್ಯ ಎಂಬ ಆರೋಪವಿದೆ. +ಎನ್‌ಜಿಒ ಚೈಲ್ಡ್ ರೈಟ್ಸ್ ಟ್ರಸ್ಟ್‌ (ಸಿಆರ್‌ಟಿ) ಸರ್ಕಾರವು ಪೋಷಕರಿಗಾಗಿ ಸಹಾಯವಾಣಿಯನ್ನು ಪ್ರಾರಂಭಿಸಬೇಕು ಮತ್ತು ಶಾಲೆಯು ಅಧಿಕೃತವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಸಹಾಯ ಮಾಡಬೇಕು ಎಂದು ಸಲಹೆ ನೀಡಿದೆ. +ಗ್ರಾಮೀಣ ಪ್ರದೇಶದ ಅನೇಕ ಪಾಲಕರು ವೆಬ್‌ಸೈಟ್‌ಗೆ ಪ್ರವೇಶಿಸಲು ಮತ್ತು ತಾಲ್ಲೂಕುವಾರು ಡೇಟಾವನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಜೂನ್‌ ತಿಂಗಳಿಗೆ ಸಹಾಯವಾಣಿಯನ್ನು ಪ್ರಾರಂಭಿಸುವುದು ಪ್ರಯೋಜನಕಾರಿಯಾಗಲಿದೆ. ಶಾಲೆಯು ಇನ್ನೂ ಅನುಮತಿ ಹೊಂದಿದೆ ಎಂದು ಹೇಳಿಕೊಳ್ಳುವುದರಿಂದ ಹಲವಾರು ಪೋಷಕರು ವಿಷಯ ತಿಳಿದುಕೊಳ್ಳಲು ನಮ್ಮ ಬಳಿ ಬಂದಿದ್ದರು ಎಂದು ಇಲಾಖೆಯ ಮುಖ್ಯಸ್ಥರೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_46_134_6.txt b/eesanje/url_46_134_6.txt new file mode 100644 index 0000000000000000000000000000000000000000..d033c17dfb9b3bdcc979342c759d4950b824b667 --- /dev/null +++ b/eesanje/url_46_134_6.txt @@ -0,0 +1,6 @@ +ಕಾಂಗ್ರೆಸ್‌‍ ಸರ್ಕಾರ ಆಡಳಿತದಲ್ಲಿ ಐಟಿಬಿಟಿ ಸಿಟಿ ‘ಉಡ್ತಾ ಬೆಂಗಳೂರು’ ಆಗುತ್ತಿದೆ : ಬಿಜೆಪಿ ಆರೋಪ +ಬೆಂಗಳೂರು,ಮೇ24-ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಐಟಿಬಿಟಿ ಖ್ಯಾತಿಯ ಬೆಂಗಳೂರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಉಡ್ತಾ ಬೆಂಗಳೂರು ಮಾಡಲು ಹೊರಟಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. +ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸಿಲಿಕಾನ್‌ ಸಿಟಿಯು ಇತ್ತೀಚೆಗೆ ಉಡ್ತಾ ಬೆಂಗಳೂರು ಆಗುವತ್ತಾ ಹೊರಟಿದೆ. ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ನಿದರ್ಶನ ಎಂದು ಕೆಂಡಕಾರಿದೆ. +ಬೆಂಗಳೂರು ಮಾದಕಮತ್ತು ರೇವ್‌ ಪಾರ್ಟಿ ಅಡ್ಡವಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬೆಂಗಳೂರಿನಲ್ಲಿ ಅನೈತಿಕ ಸಭೆಗಳು ನಡೆಯುತ್ತಿವೆ ಎಂದು ಬಿಜೆಪಿ ಆರೋಪಿಸಿದೆ. +ಕಾಂಗ್ರೆಸ್‌‍ ಸರಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಅನೈತಿಕ ಕೂಟಗಳು ನಡೆಯುತ್ತಿವೆ. ಸಿಲಿಕಾನ್‌ ಸಿಟಿ ಈಗ ಡ್ರಗ್ಸ್ , ಗಾಂಜಾ, ರೇವ್‌ ಪಾರ್ಟಿಗಳಿಂದ ತುಂಬಿ ತುಳುಕುತ್ತಿದೆ ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದೆ. +ಬ್ಯಾಡ್‌ ಬೆಂಗಳೂರು ಮತ್ತು ಕಾಂಗ್ರೆಸ್‌‍ ಫೇಲ್‌ ಕರ್ನಾಟಕ ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇರುವ ಪೋಸ್ಟರ್‌ ಅನ್ನು ಬಳಸಿದೆ. \ No newline at end of file diff --git a/eesanje/url_46_134_7.txt b/eesanje/url_46_134_7.txt new file mode 100644 index 0000000000000000000000000000000000000000..87e2a218cd76c0bfbc9c996b8aea79e0dca2549b --- /dev/null +++ b/eesanje/url_46_134_7.txt @@ -0,0 +1,7 @@ +ಪೆನ್‌ಡ್ರೈವ್ ಪ್ರಜ್ವಲ್‌ಗೆ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದ +ಬೆಂಗಳೂರು,ಮೇ24-ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಕಾರಣ ಕೇಳಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡಿದೆ. ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಮತ್ತು ವೀಸಾ ಎರಡನ್ನೂ ರದ್ದುಪಡಿಸಬೇಕೆಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌‍ಐಟಿ) ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಇಲಾಖೆ ಶೋಕಾಸ್‌‍ ನೋಟಿಸ್‌‍ ನೀಡಿದೆ. +ಆದಷ್ಟು ಶೀಘ್ರ ನೀವು ಶೋಕಾಸ್‌‍ ನೋಟಿಸ್‌‍ಗೆ ಉತ್ತರ ನೀಡದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಶೋಕಾಸ್‌‍ ನೋಟಿಸ್‌‍ನಲ್ಲಿ ಎಚ್ಚರಿಸಿದೆ.ನೀವು ಶೋಕಾಸ್‌‍ ನೋಟಿಸ್‌‍ಗೆ ಸರಿಯಾದ ಉತ್ತರ ಕೊಡದಿದ್ದರೆ ನಿಮ ಪ್ರಯಾಣದ ಮೇಲೆ ನಿರ್ಬಂಧ ಹಾಕಬೇಕಾಗುತ್ತದೆ. ಮುಂದಿನ ಕಾನೂನಿನ ಬಿಕ್ಕಟ್ಟುಗಳಿಗೆ ನೀವೇ ಹೊಣೆಯಾಗುತ್ತೀರಿ ಎಂದು ಸೂಚನೆ ಕೊಡಲಾಗಿದೆ. +ಒಂದು ವೇಳೆ ಶೋಕಾಸ್‌‍ ನೋಟಿಸ್‌‍ಗೂ ಉತ್ತರ ನೀಡದಿದ್ದರೆ ಅವರಿಗೆ ಇನ್ನಷ್ಟು ಕಾನೂನಿನ ಕುಣಿಕೆ ಬಿಗಿಯಾಗಲಿದೆ. ವಿದೇಶಾಂಗ ವ್ಯವಹಾರಗಳ ಪಾಸ್‌‍ಪೋರ್ಟ್‌ ರದ್ದುಗೊಂಡರೆ ವಿಧಿ ಇಲ್ಲದೆ ಶರಣಾಗಬೇಕು ಇಲ್ಲವೇ ತನಿಖಾ ಸಂಸ್ಥೆಗಳ ಮೂಲಕ ಬಂಧನಕ್ಕೊಳಪಡಬೇಕು. +ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಎರಡು ಪುಟಗಳ ಪತ್ರ ಬರೆದು ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಗಂಭೀರವಾಗಿವೆ. ನೋಟೀಸ್‌‍ ನೀಡಿದರೂ ತನಿಖೆಗೆ ಸಹಕಾರ ಕೊಡುತ್ತಿಲ್ಲ. ವಿದೇಶದಲ್ಲಿರುವ ಅವರನ್ನು ಕರೆತರುವ ಹಿನ್ನೆಲೆಯಲ್ಲಿ ಪಾಸ್‌‍ಪೋರ್ಟ್‌ ಮತ್ತು ರಾಜತಾಂತ್ರಿಕ ವೀಸಾ ರದ್ದುಪಡಿಸಬೇಕೆಂದು ಮನವಿ ಮಾಡಿದ್ದರು. +ಇದರ ಬೆನ್ನಲ್ಲೇ ಎಸ್‌‍ಐಟಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆದು, ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ವೀಸಾವನ್ನು ರದ್ದುಗೊಳಿಸುವಮತೆ ಒತ್ತಾಯಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ಈಗಾಗಲೇ ಅವರಿಗೆ ಮೂರು ಬಾರಿ ನೋಟಿಸ್‌‍ ಜಾರಿ ಮಾಡಿತ್ತು. ಗೈರು ಹಾಜರಾದ ಹಿನ್ನಲೆಯಲ್ಲಿ ಕಾನೂನು ಕ್ರಮದ ಮೂಲಕವೇ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. +ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಹೊರಬಂದ ನಂತರ ರಾಜ್ಯ ಸರ್ಕಾರ ಎಸ್‌‍ಐಟಿ ತನಿಖೆಗೆ ಆದೇಶಿಸಿತ್ತು. ಯಾವಾಗ ಪೊಲೀಸರು ತಮನ್ನು ಬಂಧಿಸುತ್ತಾರೋ ಎಂಬುದು ಖಾತರಿಯಾಯಿತೋ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಪರಾರಿಯಾಗಿದ್ದರು. ಅಂದಿನಿಂದ ಇಂದಿನವರೆಗೂ ಅವರು ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. \ No newline at end of file diff --git a/eesanje/url_46_134_8.txt b/eesanje/url_46_134_8.txt new file mode 100644 index 0000000000000000000000000000000000000000..ff7d4c05f1f1386b5e0afd831430a946c68814d8 --- /dev/null +++ b/eesanje/url_46_134_8.txt @@ -0,0 +1,6 @@ +ಕಾಂಗ್ರೆಸ್ ದುರಾಡಳಿತದಿಂದಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಯಿಂದ ಗೂಗಲ್‌ ಹಿಂದೆ ಸರಿದಿದೆ : ವಿಜಯೇಂದ್ರ +ಬೆಂಗಳೂರು,ಮೇ24-ಕರ್ನಾಟಕದಲ್ಲಿನ ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿ ಸಾರ್ಟ್‌ಫೋನ್‌ ಮತ್ತು ಡ್ರೋಣ್‌ ಉತ್ಪಾದಿಸಲು ಮುಂದಾಗಿದ್ದ ಗೂಗಲ್‌ ಇದೀಗ ಶತಕೋಟಿ ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜೇಂದ್ರ ವಾಗ್ದಾಳಿ ನಡೆಸಿದ್ದಾರೆ. +ಈ ಕುರಿತು ತಮ್ಮ ಅಧಿಕೃತ ಖಾತೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾರ್ಟ್‌ಫೋನ್‌ ಮತ್ತು ಡ್ರೋಣ್‌ ಉತ್ಪಾದನೆ ಮಾಡುವ ಕ್ಷೇತ್ರದಲ್ಲಿ ಗೂಗಲ್‌ ಶತಕೋಟಿ ಬಂಡವಾಳ ಹೂಡಿಕೆಯಿಂದ ಹಿಂದೆಸರಿದು ತಮಿಳುನಾಡಿನಲ್ಲಿ ಹೂಡಿಕೆ ಮಾಡಲು ಮುಂದಾಗಿದೆ. +ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವಿಜಯೇಂದ್ರ, ಕರ್ನಾಟಕವು ತನ್ನ ದುರಾಡಳಿತ ಮತ್ತು ತಪ್ಪಾದ ಆದ್ಯತೆಗಳಿಂದ ರಾಜ್ಯವನ್ನು ವಿಪತ್ತಿನತ್ತ ಕೊಂಡೊಯ್ಯುವ ಮತ್ತು ದಿಕ್ಕಿಲ್ಲದ ರೀತಿಯಲ್ಲಿ ತನ್ನ ದಾರಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಜಡ, ನಿದ್ರಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರದ ನೇರ ಪರಿಣಾಮಗಳನ್ನು ಹೊಂದುತ್ತಿದೆ ಎಂದು ದೂರಿದ್ದಾರೆ. +ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಭಾರತ ಯಶಸ್ವಿಯಾಗಿದ್ದರೆ, ಕರ್ನಾಟಕವನ್ನು ಉನ್ನತ ಹೂಡಿಕೆಯ ತಾಣ ಎಂದು ತೋರಿಸುವಲ್ಲಿ ಮತ್ತು ಹೂಡಿಕೆದಾರರಲ್ಲಿ ವಿಶ್ವಾಸವನ್ನು ತುಂಬುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಮೈತ್ರಿಕೂಟದ ಪಾಲುದಾರ ಡಿಎಂಕೆ ಪರವಾಗಿ ನಮ ಪಾಲಿನ ಕಾವೇರಿ ನೀರನ್ನು ರಕ್ಷಿಸಲು ಸಾಧ್ಯವಾಗದೆ ಕರ್ನಾಟಕದ ರೈತರನ್ನು ಹಾಳು ಮಾಡಿದ್ದು ಇದೇ ಸರ್ಕಾರ. ಬಹು ಶತಕೋಟಿ ಡಾಲರ್‌ ಹೂಡಿಕೆಗಳು ತಮಿಳುನಾಡಿಗೆ ದಾರಿ ಮಾಡಿಕೊಡುವುದರೊಂದಿಗೆ ಅದೇ ಟ್ರೆಂಡ್‌ ಮುಂದುವರೆಯುವುದರಲ್ಲಿ ಆಶ್ಚರ್ಯವಿಲ್ಲ ಎಂದು ಟೀಕೆ ಮಾಡಿದ್ದಾರೆ. \ No newline at end of file diff --git a/eesanje/url_46_134_9.txt b/eesanje/url_46_134_9.txt new file mode 100644 index 0000000000000000000000000000000000000000..e8a5851bd1808841d721fa8af72beb4c14c19671 --- /dev/null +++ b/eesanje/url_46_134_9.txt @@ -0,0 +1,4 @@ +ಕಬಿನಿ, ಕೆಆರ್‌ಎಸ್‌‍ ಜಲಾಶಯಗಳ ಒಳಹರಿವು ಹೆಚ್ಚಳ +ಬೆಂಗಳೂರು,ಮೇ24-ಕೇರಳ ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ಜಲಾನಯನ ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು 6400 ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದುಬರುತ್ತಿದೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಜಲಾಶಯದಲ್ಲಿ ಗರಿಷ್ಠ ಮಟ್ಟ 19.52 ಟಿಎಂಸಿಯಾಗಿದ್ದು ಪ್ರಸ್ತುತ 7.23 ಟಿಎಂಸಿ ಅಡಿ ಮಾತ್ರ ನೀರಿದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ನದಿಯಲ್ಲಿ ಒಳಹರಿವು ಹೆಚ್ಚಾಗಿರುವುದು ಜನರಲ್ಲಿ ಸಂತಸ ಉಂಟು ಮಾಡಿದೆ. +ಕೆಆರ್‌ಎಸ್‌‍ ಜಲಾಶಯಕ್ಕೆ ಎರಡೂವರೆ ಸಾವಿರ ಕ್ಯೂಸೆಕ್‌ಗೂ ಹೆಚ್ಚು ಒಳಹರಿವು ಇದೆ. 49.45 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯ ಈ ಜಲಾಶಯದಲ್ಲಿ ಪ್ರಸ್ತುತ 11.60 ಟಿಎಂಸಿ ನೀರು ಮಾತ್ರ ಇದ್ದು, ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಹಾರಂಗಿ ಜಲಾಶಯಕ್ಕೆ 400 ಕ್ಯೂಸೆಕ್‌ ಹಾಗೂ ಹೇಮಾವತಿ ಜಲಾಶಯಕ್ಕೆ 600 ಕ್ಯೂಸೆಕ್‌ನಷ್ಟು ಒಳಹರಿವು ಇದೆ. ಇದೇ ರೀತಿ ಮಳೆ ಮುಂದುವರೆದರೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_135_1.txt b/eesanje/url_46_135_1.txt new file mode 100644 index 0000000000000000000000000000000000000000..20b5699c9aa3903c78e56f200863fac6e40aa6bc --- /dev/null +++ b/eesanje/url_46_135_1.txt @@ -0,0 +1,8 @@ +ರೀಮಲ್‌ ಚಂಡಮಾರುತ ಎಫೆಕ್ಟ್ : ಕರಾವಳಿ-ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ +ಬೆಂಗಳೂರು, ಮೇ 24-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ರೀಮಲ್‌ ಚಂಡಮಾರುತದ ಪರಿಣಾಮ ರಾಜ್ಯದ ಮೇಲೆ ಅಷ್ಟಾಗಿ ಆಗುವುದಿಲ್ಲ, ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇದರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. +ಪಶ್ಚಿಮಬಂಗಾಳ ಹಾಗೂ ಬಾಂಗ್ಲಾ ದೇಶದ ಕಡೆಗೆ ಚಂಡಮಾರುತ ಸಾಗುತ್ತಿರುವುದರಿಂದ ಕರ್ನಾಟಕದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಇನ್ನೆರೆಡು ದಿನ ಮಳೆಯಾಗಬಹುದು. +ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಇಳಿಮುಖವಾಗಲಿದೆ. ಆದರೂ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆದಿದೆ. ಜನವರಿಯಿಂದ ಮಾರ್ಚ್‌ವರೆಗೆ ಪೂರ್ವ ಮುಂಗಾರು ಮಳೆ ಕೈಕೊಟ್ಟು ಆತಂಕವನ್ನು ಸೃಷ್ಟಿ ಮಾಡಿತ್ತು. ಆದರೆ ಮೇ ತಿಂಗಳಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಆತಂಕವನ್ನು ದೂರ ಮಾಡಿದೆ. +ವಾಡಿಕೆಗಿಂತ ಹೆಚ್ಚು ಮಳೆ ರಾಜ್ಯದಲ್ಲಾಗಿದ್ದು, ಮುಂಗಾರು ಮಳೆಯು ವಾಡಿಕೆ ಪ್ರಮಾಣದಲ್ಲಿ ಆಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ರೈತ ಸಮುದಾಯದಲ್ಲಿ ಆಸೆ ಚಿಗುರೊಡೆದಿದೆ. +ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿರುವುದರಿಂದ ನೈರುತ್ಯ ಮುಂಗಾರಿನ ಮೇಲೆ ಅಷ್ಟಾಗಿ ಪರಿಣಾಮ ಬೀರುವ ಸಾಧ್ಯತೆ ಕಡಿಮೆ. ಆದರೂ ಇದರಿಂದ ಯಾವ ಪರಿಣಾಮ ಉಂಟಾಗಬಹುದು ಎಂಬುದನ್ನು ಕಾದುನೋಡಬೇಕಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕೆಲವೊಮೆ ಚಂಡಮಾರುತದ ಪರಿಣಾಮದಿಂದ ಮಳೆಯ ಪ್ರಮಾಣ ಹೆಚ್ಚಾದರೂ ಆಗಬಹುದು. ಸದ್ಯಕ್ಕಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಮೇ ಅಂತ್ಯದ ವೇಳೆ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆಗಳಿವೆ.ನಿರೀಕ್ಷೆಯಂತೆ ಮುಂಗಾರು ಆರಂಭವಾದರೆ ಭರದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಮಳೆಯ ಆಸರೆ ದೊರೆತಂತಾಗಲಿದೆ. +ಈಗಾಗಲೇ ಮಲೆನಾಡು, ಕರಾವಳಿ ಭಾಗದಲ್ಲಿ ಸಾಕಷ್ಟು ಮಳೆಯಾಗಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಒಟ್ಟಾರೆ ಕಾವೇರಿ ಜಲನಯನ ಭಾಗದಲ್ಲಿನ ಜಲಾಶಯಗಳಿಗೆ ಒಳಹರಿವು ಪ್ರಾರಂಭವಾಗಿರುವುದು ಸದ್ಯದ ಮಟ್ಟಿಗೆ ನಿರಾಳವಾಗುವಂತೆ ಮಾಡಿದೆ. \ No newline at end of file diff --git a/eesanje/url_46_135_10.txt b/eesanje/url_46_135_10.txt new file mode 100644 index 0000000000000000000000000000000000000000..00c8ced6fd4781e09f4c3d1dd4f5177fbf6c312d --- /dev/null +++ b/eesanje/url_46_135_10.txt @@ -0,0 +1,11 @@ +ನೀತಿ ಸಂಹಿತೆ ಸಡಿಲಗೊಂಡ ಬೆನ್ನಲ್ಲೇ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ +ಬೆಂಗಳೂರು, ಮೇ 23-ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಗೊಳಿಸಿದ್ದು, ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸಿ, ವರ್ಷದ ಕೆಲಸವನ್ನು 10 ತಿಂಗಳಿನಲ್ಲಿ ಪೂರ್ಣಗೊಳಿಸಲು ಕಟಿಬದ್ಧರಾಗಿ ಕೆಲಸ ಮಾಡಬೇಕು, ಬಜೆಟ್‌ ಘೋಷಣೆಗಳಿಗೆ ಜೂನ್‌ ಕೊನೆಯ ವೇಳೆಗೆ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. +ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಆರಂಭಿಕವಾಗಿ ಮಾತನಾಡಿ, ಯೋಜನಾ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್‌ ಪ್ರಕ್ರಿಯೆ ಕೂಡ ಶೀಘ್ರವಾಗಿ ನಡೆಸುವಂತೆ ಆದೇಶಿಸಿದ್ದಾರೆ. +ಟೆಂಡರ್‌ ಕರೆಯಲು ಯಾವುದೇ ನೀತಿ ಸಂಹಿತೆ ಅಡ್ಡ ಬರುವುದಿಲ್ಲ. ಟೆಂಡರ್‌ ಕರೆದು, ಅಂತಿಮಗೊಳಿಸಿ, ಕಾರ್ಯಾದೇಶ ನೀಡಲು ಪ್ರಯತ್ನಿಸಬೇಕು. ಇದರಲ್ಲಿ ವಿಳಂಬವಾದರೆ ರಾಜ್ಯದ ಅಭಿವೃದ್ಧಿಯಲ್ಲಿ ವಿಳಂಬವಾಗುತ್ತದೆ ಎಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಬಜೆಟ್‌ನಲ್ಲಿ 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆ. ಈ ಬಗ್ಗೆ ಎಲ್ಲ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಭಿವೃದ್ಧಿ ಕಡೆ ಅಧಿಕ ಆದ್ಯತೆ ನೀಡಬೇಕಿದೆ ಎಂದು ಹೇಳಿದರು. +ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಜೂನ್‌ 6ರವರೆಗೆ ಸುದೀರ್ಘ ಕಾಲದ ನೀತಿ ಸಂಹಿತೆ ಜಾರಿಯಲ್ಲಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ತಕ್ಷಣದಿಂದಲೇ ತುರ್ತು ಕೆಲಸಗಳಿಗೆ ಗಮನ ಕೊಡಿ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದರು. +ಎಲ್ಲ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರುವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ ಎಂದ ಅವರು, ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಗಿದ್ದು ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದರು. +ಪ್ರಸ್ತುತ, ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಬೀತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕೃಷಿ ಯಂತ್ರೋಪಕರಣಗಳ ಹೆಸರಿನಲ್ಲಿ ರೈತರಿಂದ ಅಧಿಕ ಹಣ ವಸೂಲಿ ಮಾಡುವವರ ಮೇಲೆ ನಿಗಾವಹಿಸಬೇಕು. ಬಿತ್ತನೆ ಸಮಯದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಮಾದರಿ, ಮಣ್ಣಿನ ಫಲವತ್ತತೆ, ಮಾರುಕಟ್ಟೆ ನಿರೀಕ್ಷೆ, ರೋಗ ನಿಯಂತ್ರಣ ಕುರಿತು ರೈತರಿಗೆ ಮಾಹಿತಿ ನೀಡಬೇಕು. +ನೀರು, ಮಣ್ಣಿನ ಫಲವತ್ತತೆ ರಕ್ಷಣೆಯ ಜೊತೆಗೆ, ಕಡಿಮೆ ಭೂಮಿಯಲ್ಲಿ ಹೆಚ್ಚು ಇಳುವರಿ ಪಡೆಯುವ ತಳಿಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ, ಸಹಕಾರ, ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಗಳು ಪರಸ್ಪರ ಸಹಕಾರದಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. +ಮೇ ತಿಂಗಳಲ್ಲಿ ಗುರಿ 2.95 ಲಕ್ಷ ಹೆಕ್ಟೇರ್‌ ಪ್ರದೇಶ. ಸಾಧನೆಯಾಗಿರುವುದು 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿದೆ. ಪೂರ್ವ ಮುಂಗಾರಿನಲ್ಲಿ ಗುರಿ ಮೀರಿ ಬಿತ್ತನೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು. ಈ ವರ್ಷದ ಸಾಲ ಯೋಜನೆ ಈಗಾಗಲೇ ಜಿಲ್ಲಾಡಳಿತಗಳಿಗೆ ಕಳುಹಿಸಲಾಗಿದೆ. ಜಿಲ್ಲಾ ಬ್ಯಾಂಕರುಗಳೊಂದಿಗೆ ಸಮನ್ವಯ ವಹಿಸಿ, ಕ್ರಮ ಕೈಗೊಳ್ಳಲು ಸೂಚಿಸಲಾಯಿತು. +ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಬ್ಯಾಂಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.ಬೆಳೆ ವಿಮೆ ಕ್ಲೇಮ್‌ ಮಾಡುವ ಸಂದರ್ಭದಲ್ಲಿ ಕಂಪೆನಿಗಳ ಸ್ಯಾಂಪಲ್‌ ಪರಿಶೀಲನೆಯ ಕುರಿತು ರೈತರು ಹಲವು ಸಂದೇಹಗಳನ್ನು ಹೊಂದಿದ್ದಾರೆ. ಕಂಪನಿಗಳು ಆಡುವ ಆಟದಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಅಪಾಯವಿದೆ ಎನ್ನುವ ಸಲಹೆ ಸಚಿವ ಲಾಡ್‌ ಅವರಿಂದ ಬಂತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಮುಂಚಿತವಾಗಿಯೇ ವಿಮಾ ಕಂಪೆನಿಗಳೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು. +ಸಂವಾದದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ಹೆಚ್‌.ಕೆ. ಪಾಟೀಲ್‌, ಕೆ.ಹೆಚ್‌. ಮುನಿಯಪ್ಪ, ಚೆಲುವರಾಯಸ್ವಾಮಿ, ಭೈರತಿ ಸುರೇಶ್‌, ಶಿವರಾಜ್‌ ತಂಗಡಗಿ, ಪ್ರಿಯಾಂಕ್‌ ಖರ್ಗೆ, ರಹೀಂ ಖಾನ್‌, ಶಿವಾನಂದ ಪಾಟೀಲ, ಎಸ್‌‍. ಎಸ್‌‍. ಮಲ್ಲಿಕಾರ್ಜುನ್‌, ಸಂತೋಷ್‌ ಲಾಡ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_135_11.txt b/eesanje/url_46_135_11.txt new file mode 100644 index 0000000000000000000000000000000000000000..a6388b801f39fa7e93375e8721a18e2000999e1b --- /dev/null +++ b/eesanje/url_46_135_11.txt @@ -0,0 +1,5 @@ +ಅಧಿಕಾರ ದುರುಪಯೋಗ ಬಿಟ್ಟು ನ್ಯಾಯಯುತವಾಗಿ ಆಡಳಿತ ನಡೆಸಿ : ನಿಖಿಲ್‌ ಕುಮಾರಸ್ವಾಮಿ +ಬೆಂಗಳೂರು,ಮೇ23-ಕಾಂಗ್ರೆಸ್‌‍ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುವುದನ್ನು ಬಿಟ್ಟು ನ್ಯಾಯಯುತವಾಗಿ ರಾಜ್ಯದಲ್ಲಿ ಆಡಳಿತ ನಡೆಸಬೇಕು ಎಂದು ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬವನ್ನು ಟಾರ್ಗೆಟ್‌ ಮಾಡಿ ಕಾಂಗ್ರೆಸ್‌‍ ರಾಜಕಾರಣ ಮಾಡುತ್ತಿದೆ ಎಂದು ಹಳ್ಳಿಯ ಜನರೇ ಮಾತನಾಡುತ್ತಿದ್ದಾರೆ ಎಂದರು. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಟಾರ್ಗೆಟ್‌ ಮಾಡಿ ಜೈಲಿಗೆ ಕಳುಹಿಸಿದ್ದರು. ಇದು ಬಹಳ ದಿನ ನಡೆಯುವುದಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದು ಅವರು ಹೇಳಿದರು. +ಆರೋಪ ಕೇಳಿಬಂದಿರುವ ಹಾಸನ ಸಂಸದರು ರಾಜ್ಯಕ್ಕೆ ಆಗಮಿಸಿ ಎಸ್‌‍ಐಟಿ ತನಿಖೆಯನ್ನು ಎದುರಿಸಬೇಕು. ಆರೋಪ ಕೇಳಿಬಂದಾಗ ತನಿಖೆ ಎದುರಿಸುವುದು ಸೂಕ್ತ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಹ ಬಹಿರಂಗ ಆಹ್ವಾನ ನೀಡಿದ್ದಾರೆ ಎಂದರು. +ಫೋನ್‌ ಟ್ಯಾಪಿಂಗ್‌ ಬಗ್ಗೆ ಕುಮಾರಸ್ವಾಮಿ ಅವರಿಗೆ ಮಾಹಿತಿ ಇರಬಹುದು. ಎಸ್‌‍ಐಟಿ ರಚನೆಯಾದ ಮೇಲೆ ಪಾರದರ್ಶಕ ತನಿಖೆ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_46_135_12.txt b/eesanje/url_46_135_12.txt new file mode 100644 index 0000000000000000000000000000000000000000..c88e75e411057109891b49963ca2d2f2314fd0f1 --- /dev/null +++ b/eesanje/url_46_135_12.txt @@ -0,0 +1,6 @@ +ಮಕ್ಕಳ ಶಾಲೆ ಪ್ರವೇಶಾತಿ ವಯೋಮಿತಿಯ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ +ಬೆಂಗಳೂರು, ಮೇ 23-ಒಂದನೇ ತರಗತಿ ಪ್ರವೇಶಾತಿಗೆ 2025-26ನೇ ಸಾಲಿನಿಂದ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್‌ಕೆಜಿಗೆ ದಾಖಲಿಸಲು ಮಕ್ಕಳ ವಯಸ್ಸು ಜೂನ್‌ 1ರೊಳಗೆ 4 ವರ್ಷ ಆಗಿರಬೇಕು (2023-24ರ ಶೈಕ್ಷಣಿಕ ವರ್ಷದಿಂದ) ಎಂಬ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. +ಈ ಕಟ್ಟುನಿಟ್ಟಿನ ವಯೋಮಿತಿಗಳು ಮಕ್ಕಳನ್ನು ಸಕಾಲಿಕ ಶಿಕ್ಷಣದಿಂದ ವಂಚಿತಗೊಳಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಕೇವಲ ಒಂದು ದಿನದ ಅಂತರದಲ್ಲಿ ವಯಸ್ಸು ಪೂರ್ಣಗೊಂಡಿರದಿದ್ದರೆ ಅಂಥ ಮಕ್ಕಳಿಗೆ ಅನ್ಯಾಯವಾಗುತ್ತದೆ. ಮಕ್ಕಳು ಇಡೀ ವರ್ಷ ಶಾಲಾ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪೋಷಕರು ಹೇಳಿದ್ದು, ನಿಯಮದಲ್ಲಿ ಸಡಿಲಿಕೆಗೆ ಒತ್ತಾಯಿಸಿದ್ದಾರೆ. +ಗೊಂದಲಗಳ ಮಧ್ಯೆಯೂ ಇದೀಗ ಖಾಸಗಿ ಶಾಲೆಗಳು ಹೊಸ ನಿಯಮಗಳಿಗೆ ಬದ್ಧವಾಗಿದ್ದು, ವಯಸ್ಸು ಪೂರ್ಣಗೊಂಡಿರದ ಮಕ್ಕಳ ದಾಖಲಾತಿಗೆ ನಿರಾಕರಿಸುತ್ತಿವೆ. ಇದು ಅನೇಕ ಪೋಷಕರನ್ನು ನಿರಾಶೆಗೊಳಿಸಿದೆ. ಕೆಲವು ಪ್ರಕರಣಗಳಲ್ಲಿ ಸುಳ್ಳು ಮಾಹಿತಿ ನೀಡಿ ಇನ್ನೂ 4 ವರ್ಷ ತುಂಬದ ಮಕ್ಕಳನ್ನು ಶಾಲೆಗಳಿಗೆ ಸೇರಿಸಲಾಗುತ್ತಿದೆ ಎಂದು ವರದಿಯಾಗಿದೆ. +ಈ ದಾಖಲಾತಿಗಳಿಗೆ ಅನುಮತಿ ನೀಡುವ ಅಧಿಕೃತ ಆದೇಶವಿದೆ ಎಂದು ಪೋಷಕರನ್ನು ತಪ್ಪುದಾರಿಗೆ ಎಳೆಯಲಾಗುತ್ತಿದೆ. ಆದರೆ, ಶಿಕ್ಷಣ ಇಲಾಖೆಯು ಅಂತಹ ಯಾವುದೇ ಮೌಖಿಕ ಸೂಚನೆ ಅಥವಾ ಆದೇಶಗಳನ್ನು ನೀಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ.ಇಲಾಖೆಯ ವೆಬ್‌ ಪೋರ್ಟಲ್‌ನಲ್ಲಿ ಎಲ್‌ ಕೆಜಿ ಮತ್ತು ಯುಕೆಜಿ ಪ್ರವೇಶದ ಬಗ್ಗೆ ಮಾಹಿತಿ ನಮೂದಿಸುವಂತಿಲ್ಲ, ಆದರೆ ಒಂದನೇ ತರಗತಿಗೆ ದಾಖಲಾದ ಮಕ್ಕಳ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದು ಗೊಂದಲಕ್ಕೆ ಕಾರಣವಾಗಿದೆ. +1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿ:ಶಿಕ್ಷಣ ಇಲಾಖೆ ಆದೇಶ ಈ ಮಧ್ಯೆ, ವಯೋಮಿತಿ ಸಡಿಲಿಕೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತಪ್ಪಾದ ಮಾಹಿತಿಯಿಂದ ದಾರಿತಪ್ಪಿಸಬೇಡಿ ಮತ್ತು ಶಾಲಾ ಪ್ರವೇಶಕ್ಕಾಗಿ ಪ್ರಸ್ತುತ ವಯಸ್ಸಿನ ನಿಯಮಗಳಿಗೆ ಬದ್ಧವಾಗಿರುವಂತೆ ಪೋಷಕರಿಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_135_2.txt b/eesanje/url_46_135_2.txt new file mode 100644 index 0000000000000000000000000000000000000000..de74c8d3921d1c095608b0b3b4c918fa7610e9bf --- /dev/null +++ b/eesanje/url_46_135_2.txt @@ -0,0 +1,4 @@ +ತಿರುಪತಿಗೆ ತೆರಳುತ್ತಿದ್ದ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು +ರಾಣಿಬೆನ್ನೂರು. ಮೇ24-ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಲಗೇರಿ ಬೈಪಾಸ್‌‍ ನಲ್ಲಿ ತಡರಾತ್ರಿ ನಡೆದಿದೆ. +ಹಾವೇರಿ ಪಟ್ಟಣದ ಅಶ್ವಿನಿನಗರದ ನಿವಾಸಿಗಳಾದ ಸುರೇಶ್‌(45) ಐಶ್ವರ್ಯ(22) ಪ್ರಮೀಳಾ (28) ಹಾಗೂ ಚೇತನಾ(7) ಮೃತಪಟ್ಟ ದುರ್ದೈವಿಗಳೆಂದು ಗುರುತಿಸಲಾಗಿದೆ. ಇವರೆಲ್ಲರೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹಾವೇರಿಯಿಂದ ಕಾರಿನಲ್ಲಿ ತೆರಳುತ್ತಿದ್ದಾಗ ರಾತ್ರಿ 12, 45 ರ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ ಎನ್ನನಾಗಿದೆ, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. +ಸುದ್ದಿ ತಿಳಿಯುತ್ತಿದ್ದಂತೆ ರಾಣಿಬೆನ್ನೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಭೀಕರ ಅಫಘಾತದಲ್ಲಿ ತಮವರನ್ನು ಕಳೆದು ಕೊಂಡು ಕುಟುಂಬ ಸದಸ್ಯರ ಆಕಂದ್ರನ ಮುಗಿಲು ಮುಟ್ಟಿತ್ತು. \ No newline at end of file diff --git a/eesanje/url_46_135_3.txt b/eesanje/url_46_135_3.txt new file mode 100644 index 0000000000000000000000000000000000000000..17be16b7f98bb08e56e29de47a486a407ae2d4a8 --- /dev/null +++ b/eesanje/url_46_135_3.txt @@ -0,0 +1,8 @@ +ರಾಜ್ಯಾದ್ಯಂತ ಪೂರ್ವ ಮುಂಗಾರು ಅಬ್ಬರ, ಉತ್ತರ ಕರ್ನಾಟಕದಲ್ಲಿ ಸಿಡಿಲಿಗೆ ಇಬ್ಬರು ಬಲಿ +ಬೆಂಗಳೂರು, ಮೇ 24-ರಾಜ್ಯಾದ್ಯಂತ ಪೂರ್ವ ಮುಂಗಾರಿನ ಮಳೆಯಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಿಡಿಲಿಗೆ ಸಿಲುಕಿ ಇಬ್ಬರು ಬಲಿಯಾಗಿ, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. +ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ ಸಂಜೆಯಿಂದಲೂ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ರಾಯಭಾಗ ಪಟ್ಟಣದ ಜಮೀನೊಂದರಲ್ಲಿ ಕಬ್ಬು ನಾಟಿ ಮಾಡುವಾಗ ಸಿಡಿಲು ಬಡಿದು ಶೋಭಾ ಕೃಷ್ಣ ಕುಲಗೋಡೆ (45) ಎಂಬ ಮಹಿಳೆ ಮೃತಪಟ್ಟರೆ, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ರಾಯಭಾಗ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. +ಸುದ್ದಿ ತಿಳಿದ ಕೂಡಲೇ ರಾಯಭಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮತ್ತೊಂದು ಘಟನೆಯಲ್ಲಿ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಗುರು ಪುಂಡಲೀಕ (35) ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. +ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಭಾರಿ ಮಳೆ ಬಂದಿದ್ದು, ಈ ವೇಳೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಈ ಘಟನೆ ಸಂಭವಿಸಿದೆ.ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸಿಡಿಲಬ್ಬರಕ್ಕೆ 12 ಕುರಿಗಳು ನಿಧನ ಹೊಂದಿವೆ. +ಯಾದಗಿರಿ ಜಿಲ್ಲೆಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದಲ್ಲಿ ನೂರಾರು ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಪಟ್ಟಣದ ಮಾತಾ ಮಾಣಿಕೇಶ್ವರಿ ಬಡಾವಣೆಯಲ್ಲಿ ಮನೆಯ ಮೇಲ್ಛಾವಣಿ ಹಾರಿಹೋಗಿದೆ.ವಿದ್ಯುತ್‌ ಕಂಬಗಳು ಉರುಳಿಬಿದ್ದ ಪರಿಣಾಮ ವಿದ್ಯುತ್‌ ಸಂಪರ್ಕ ಕಡಿತಗೊಂಡು ರಾತ್ರಿಯಿಡೀ ಕತ್ತಲಲ್ಲಿ ಕಾಲ ಕಳೆಯುವಂತಾಗಿತ್ತು. +ಯಾದಗಿರಿ ಪಿಡಬ್ಲ್ಯೂಡಿ ಕಚೇರಿ ಆವರಣಕ್ಕೆ ನೀರು ನುಗ್ಗಿದ್ದು, ಕೆಸರುಗದ್ದೆಯಾಗಿ ನಿರ್ಮಾಣವಾಗಿತ್ತು.ಹುಬ್ಬಳ್ಳಿ, ಧಾರವಾಡ, ಬಿಜಾಪುರ, ರಾಯಚೂರು, ಯಾದಗಿರಿ, ಹಂಪೆ, ಕೊಪ್ಪಳ ಸೇರಿದಂತೆ ಮತ್ತಿತರೆಡೆ ಭಾರಿ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿಹರಿಯುತ್ತಿವೆ. +ಒಂದೆಡೆ ಅನ್ನದಾತರಲ್ಲಿ ಸಂತಸ ಮನೆ ಮಾಡಿದ್ದರೆ, ಮತ್ತೊಂದೆಡೆ ಮಳೆರಾಯ ಭಾರಿ ಅನಾಹುತವನ್ನೇ ಸೃಷ್ಟಿಸಿದ್ದಾನೆ. ಬೆಳೆದು ನಿಂತಿದ್ದ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. \ No newline at end of file diff --git a/eesanje/url_46_135_4.txt b/eesanje/url_46_135_4.txt new file mode 100644 index 0000000000000000000000000000000000000000..960485eaf88b43743944a3050c31a1e016d5a673 --- /dev/null +++ b/eesanje/url_46_135_4.txt @@ -0,0 +1,6 @@ +ವಿವಿಧ ಹುದ್ದೆಗಳಿಗಾಗಿ ಸಿಎಂ ಸಿದ್ದರಾಮಯ್ಯಗೆ ದುಂಬಾಲು ಬಿದ್ದು ಆಕಾಂಕ್ಷಿಗಳು +ಬೆಂಗಳೂರು, ಮೇ 23-ರಾಜ್ಯಸರ್ಕಾರದ ವಿವಿಧ ಹುದ್ದೆಗಳಿಗಾಗಿ ಲಾಬಿ ನಡೆಸುತ್ತಿರುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದುಂಬಾಲು ಬಿದ್ದು ಮನವಿ ನೀಡುತ್ತಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಮುಂದಿನ ತಿಂಗಳು ಒಂದಷ್ಟು ನಾಮನಿರ್ದೇಶನಗಳು ಬಾಕಿ ಇವೆ. ಹೀಗಾಗಿ ಮೇಲನೆಯ ಸದಸ್ಯತ್ವ ಗಿಟ್ಟಿಸಲು ಆಕಾಂಕ್ಷಿಗಳ ದಂಡು ಹೆಚ್ಚಿದೆ. +ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲು ಗೃಹಕಚೇರಿ ಕೃಷ್ಣಾಗೆ ಆಗಮಿಸಿದರು.ಈ ವೇಳೆ ವಿವಿಧ ಹುದ್ದೆಗಳ ಆಕಾಂಕ್ಷಿಗಳು ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದು, ದುಂಬಾಲು ಬೀಳುವುದು ಸಾಮಾನ್ಯವಾಗಿ ಕಂಡುಬಂದಿತು. +ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ತಮ ಬಗ್ಗೆ ಹೇಳಿಕೊಳ್ಳುವವರ ಸಂಖ್ಯೆ ಹೆಚ್ಚಾಗಿತ್ತು. ಹೆಜ್ಜೆಹೆಜ್ಜೆಗೂ ಆಶೀರ್ವಾದ ಪಡೆಯುವವರ ಅಡಚಣೆಯಿಂದಾಗಿ ಸಿಡಿಮಿಡಿಗೊಂಡ ಸಿದ್ದರಾಮಯ್ಯನವರು ದಾರಿ ಬಿಡುವಂತೆ ಗದರಿಸಿದರು. ಇನ್ನೂ ಕೆಲವರು ಅರ್ಜಿಗಳನ್ನು ಹಿಡಿದು ವಿವಿಧ ಕೆಲಸಗಳಿಗಾಗಿ ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತಿದ್ದರು. +ಇತ್ತೀಚೆಗೆ ಲೋಕಸಭಾ ಚುನಾವಣೆ ಕಾರಣಕ್ಕಾಗಿ ಕಾರ್ಯಕರ್ತರ ಭೇಟಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಕಡಿಮೆ ಮಾಡಿದ್ದರು. ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಗೊಂಡಿದ್ದು, ಇಂದಿನಿಂದ ಅಧಿಕೃತ ಕಾರ್ಯಕಲಾಪಗಳು ಚುರುಕು ಪಡೆದುಕೊಂಡಿವೆ. +ಇದೇ ವೇಳೆ ಕಾರ್ಯಕರ್ತರ ಆಗಮನವೂ ಹೆಚ್ಚಾಗಿದೆ. ರಾಜ್ಯದ ನಾನಾ ಭಾಗಗಳಿಂದ ಬಂದ ವಿವಿಧ ಹುದ್ದೆಗಳ ಆಕಾಂಕ್ಷಿಗಳು ಸಚಿವರ ಹಾಗೂ ಪ್ರಮುಖರ ಮನೆ ಬಳಿ ಜಾತ್ರೆಯೋಪಾದಿಯಲ್ಲಿ ಜಮಾಯಿಸುತ್ತಿರುವುದು ಕಂಡುಬರುತ್ತಿದೆ. \ No newline at end of file diff --git a/eesanje/url_46_135_5.txt b/eesanje/url_46_135_5.txt new file mode 100644 index 0000000000000000000000000000000000000000..fdcb9aff2a0e219eda6d6548c150075ecdf8086c --- /dev/null +++ b/eesanje/url_46_135_5.txt @@ -0,0 +1,7 @@ +ಬೆಂಗಳೂರಿನ ಬನಶಂಕರಿ ಬಳಿ ಒತ್ತವರಿಯಾಗಿದ್ದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ : ಖಂಡ್ರೆ +ಬೆಂಗಳೂರು, ಮೇ 23-ಬೆಂಗಳೂರು ಬನಶಂಕರಿ ಬಳಿಯ ಬಿ.ಎಂ.ಕಾವಲ್‌ ಸರ್ವೆ ನಂ. 92ರಲ್ಲಿ ಒತ್ತವರಿ ಮಾಡಲಾಗಿದ್ದ ಸುಮಾರು 60 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯಭೂಮಿಯನ್ನು ತೆರವು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. +ವಿಕಾಸಸೌಧದಲ್ಲಿಂದು ತಮನ್ನು ಭೇಟಿ ಮಾಡಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಅರಣ್ಯ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈಗಾಗಲೇ ಆದೇಶ ಆಗಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸುವಂತೆ ನೀಡಿದ್ದ ಸ್ಪಷ್ಟ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಾರ್ಯಪ್ರವೃತ್ತರಾದ ಬೆಂಗಳೂರು ಅರಣ್ಯಾಧಿಕಾರಿಗಳು 5.2 ಎಕರೆ ಒತ್ತುವರಿ ತೆರವು ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. +ಬಿ.ಎಂ. ಕಾವಲ್‌ ವ್ಯಾಪ್ತಿಯ ಗೊಟ್ಟೆಗೆರೆಪಾಳ್ಯದ ವೆಂಕಟಪ್ಪ ಮತ್ತು ಅವರ ತಾಯಿ ತಿಮಕ್ಕ ಎಂಬುವವರು 5 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಿದ್ದರು. ಎ.ಸಿ.ಎಫ್‌. ನ್ಯಾಯಾಲಯದ ಆದೇಶದ ಮೇರೆಗೆ ಈ ಭೂಮಿ ತೆರವು ಮಾಡಲಾಗಿದೆ. ಈ ಸಂಬಂಧ ಜೆ.ಎಂ.ಎಫ್‌.ಸಿ. ನ್ಯಾಯಾಲಯದಲ್ಲಿ ಪ್ರತಿವಾದಿಗಳು ಹಾಕಿದ್ದ ದಾವೆ ವಜಾ ಆಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದರು. +20 ಸ್ಥಾನಗಳಲ್ಲಿ ಗೆಲುವು :ಈ ಬಾರಿ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಎಲ್ಲಿಯೂ ಮೋದಿ ಅಲೆ ಕಾಣಲೇ ಇಲ್ಲ. ಗ್ಯಾರಂಟಿ ಅಲೆ ಎಲ್ಲೆಡೆ ಪಸರಿಸಿದ್ದು, ಕಾಂಗ್ರೆಸ್‌‍ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ. ಗ್ಯಾರಂಟಿ ಯೋಜನೆಗಳು ಫಲ ನೀಡಿವೆ ಎಂದರು.ನಮ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಪಾರದರ್ಶಕ ಮತ್ತು ಜನಪರವಾದ ಆಡಳಿತವನ್ನು ನೀಡಿದ್ದು, ಜನರ ವಿಶ್ವಾಸ ಇಮಡಿಯಾಗಿದೆ. ಇದು ಚುನಾವಣೆಯ ಲಿತಾಂಶದಲ್ಲೂ ಪ್ರತಿಲಿಸಲಿದೆ ಎಂದು ಹೇಳಿದರು. +ಪ್ರತಿಪಕ್ಷಗಳಿಂದ ದಿಕ್ಕು ತಪ್ಪಿಸುವ ಪ್ರಯತ್ನ:ಪ್ರಜ್ವಲ್‌ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಅತ್ಯಂತ ಹೇಯವಾದುದಾಗಿದ್ದು, ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ಪ್ರಕರಣದ ತನಿಖೆಯನ್ನು ಎಸ್‌‍.ಐ.ಟಿ. ಗೆ ವಹಿಸಲಾಗಿದ್ದು, ಪ್ರಾಮಾಣಿಕವಾಗಿ ಅಧಿಕಾರಿಗಳು ತಮ ಕಾರ್ಯ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅನುಮಾನ ವ್ಯಕ್ತಪಡಿಸುವುದು, ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದರು. +ಕೇಂದ್ರ ಪ್ರಜ್ವಲ್‌ ಬಂಧನಕ್ಕೆ ಸಹಕರಿಸಬೇಕು:ಪ್ರಜ್ವಲ್‌ ರೇವಣ್ಣಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌‍ ಪೋರ್ಟ್‌ ರದ್ದು ಮಾಡುವಂತೆ ಕೋರಿ ರಾಜ್ಯದಿಂದ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಇಂಟರ್‌ ಪೋಲ್‌ ನೆರವಿನಿಂದ ಆರೋಪಿಯ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಈಶ್ವರ ಖಂಡ್ರೆ ಒತ್ತಾಯಿಸಿದರು. \ No newline at end of file diff --git a/eesanje/url_46_135_6.txt b/eesanje/url_46_135_6.txt new file mode 100644 index 0000000000000000000000000000000000000000..46e86499a5a22ded447b71239132c5b0b5467470 --- /dev/null +++ b/eesanje/url_46_135_6.txt @@ -0,0 +1,8 @@ +ಕಲುಷಿತ ನೀರಿನ ಸಮಸ್ಯೆ : ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ +ಬೆಂಗಳೂರು, ಮೇ 23-ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ತೊಂದರೆಗಳು ಕಂಡುಬಂದರೆ ಆಯಾ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. +ಲೋಕಸಭಾ ಚುನಾವಣಾ ನೀತಿ ಸಂಹಿತೆಯನ್ನು ಆಯೋಗ ಸಡಿಲಗೊಳಿಸಿದ ಬೆನ್ನಲ್ಲೇ ಇಂದು ಮುಖ್ಯಮಂತ್ರಿಯವರು ಗೃಹಕಚೇರಿ ಕೃಷ್ಣಾದಿಂದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. +ಮೈಸೂರಿನ 2 ಹಳ್ಳಿಗಳಲ್ಲಿ ಕಾಲರಾ ತಲೆದೋರಿದೆ. ಟಿ.ನರಸೀಪುರ ತಾಲೂಕು ತಗಡೂರು ಹಾಗೂ ಕೆ.ಸಾಲಹುಂಡಿ ಗ್ರಾಮಗಳಲ್ಲಿ ಕಲುಷಿತ ನೀರಿನ ಪ್ರಕರಣಗಳಿಂದ ಕಾಲರಾ ಪ್ರಕರಣಗಳು ಹೆಚ್ಚಾಗಿವೆ. ನೀರು ಕಲುಷಿತಗೊಳ್ಳಲು ಇಂಜಿನಿಯರ್‌ಗಳ ಬೇಜವಾಬ್ದಾರಿತನ ಕಾರಣ ಎಂದು ತರಾಟೆಗೆ ತೆಗೆದುಕೊಂಡರು. +ನೀರಿನ ಗುಣಮಟ್ಟವನ್ನು ದಿನನಿತ್ಯ ಪರೀಕ್ಷೆಗೊಳಪಡಿಸಿ ಅದು ಕುಡಿಯಲು ಯೋಗ್ಯವೇ, ಅಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ. ಅದನ್ನು ಮಾಡದೆ ನಿರ್ಲಕ್ಷ್ಯ ವಹಿಸುವುದು ಅಧಿಕಾರಿಗಳು ಮಾಡುವ ದೊಡ್ಡ ಅಪರಾಧ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ ಎಂದು ಕೆಂಡಕಾರಿದರು. +ಇನ್ನು ಮುಂದೆ ಕುಡಿಯುವ ನೀರಿನ ಪರೀಕ್ಷೆ ನಿತ್ಯವೂ ನಡೆಯಬೇಕು. ಯಾವುದೇ ಭಾಗದಲ್ಲೂ ಕಲುಷಿತ ನೀರಿನ ಪ್ರಕರಣ ವರದಿಯಾದರೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಕಾಲರಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ವಿಷಯದಲ್ಲಿ ಕರ್ತವ್ಯ ಲೋಪವೆಸಗಿದ ಜಿಲ್ಲಾಮಟ್ಟದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. +ಅಧಿಕಾರಿಗಳ ನಿರ್ಲಕ್ಷ್ಯ :ಕೆ.ಸಾಲಹುಂಡಿ ಗ್ರಾಮದಲ್ಲಿ ಕಲುಷಿತ ನೀರಿನಿಂದ 40 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರೆ ಒಬ್ಬ ಯುವಕ ಮೃತಪಟ್ಟ ಪ್ರಕರಣ ಇತ್ತೀಚೆಗೆ ವರದಿಯಾಗಿತ್ತು. ಕಳೆದ ವರ್ಷ ವಿಜಯಪುರ, ಕಲಬುರಗಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪದೇಪದೇ ಕಲುಷಿತ ನೀರಿನ ಪ್ರಕರಣಗಳು ವರದಿಯಾಗಿದ್ದವು. ಮಹಾನಗರಿ ಬೆಂಗಳೂರಿನಲ್ಲೂ ಅಲ್ಲಲ್ಲಿ ಕಲುಷಿತ ನೀರಿನ ಪ್ರಕರಣಗಳು ಕಂಡುಬಂದಿವೆಯಾದರೂ ತತ್‌ಕ್ಷಣದ ಚಿಕಿತ್ಸೆಯಿಂದಾಗಿ ಹೆಚ್ಚಿನ ಅನಾಹುತಗಳಾಗಿಲ್ಲ. +ಅಧಿಕಾರಿಗಳು ಕುಡಿಯುವ ನೀರಿನ ಜೊತೆ ಕಲುಷಿತ ನೀರು ಮಿಶ್ರಣಗೊಳ್ಳುವ ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಜನಸಾಮಾನ್ಯರು ಅದರಲ್ಲೂ ಬಡಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿಯವರು ಈ ವಿಚಾರದ ಬಗ್ಗೆ ಆದ್ಯತೆ ನೀಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_135_7.txt b/eesanje/url_46_135_7.txt new file mode 100644 index 0000000000000000000000000000000000000000..cf5a9ce57808444962f777245f8bae724dff76aa --- /dev/null +++ b/eesanje/url_46_135_7.txt @@ -0,0 +1,6 @@ +ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮತ ಎಣಿಕೆಗೆ ಪೂರ್ವ ಸಿದ್ಧತೆ +ಬೆಂಗಳೂರು, ಮೇ 23-ಪ್ರಸಕ್ತ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರದಲ್ಲಿ ಪೂರ್ವ ಸಿದ್ಧತೆ ಆರಂಭಗೊಂಡಿದೆ. ಅಪರ ಚುನಾವಣಾಧಿಕಾರಿಗಳು, ಚುನಾವಣೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮತ ಎಣಿಕೆ ಕಾರ್ಯಕ್ಕೆ ಸಿದ್ಧತೆ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಸಭೆ ನಡೆಸಿ ಮಾರ್ಗದರ್ಶನಗಳನ್ನು ನೀಡಿದ್ದಾರೆ. +ರಾಜ್ಯದಲ್ಲಿ ಈಗಾಗಲೇ 2 ಹಂತದಲ್ಲಿ ಮತದಾನ ಮುಗಿದಿದ್ದು, ಮತಯಂತ್ರಗಳು ಸ್ಟ್ರಾಂಗ್‌ ರೂಂನಲ್ಲಿ ಇರಿಸಲಾಗಿದೆ. ಜೂನ್‌ 4 ರಂದು ಬೆಳಿಗ್ಗೆ ಮತ ಎಣಿಕೆ ಆರಂಭಗೊಂಡು ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಮತ ಎಣಿಕೆಯ ದಿನದಂದು ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು. ಮತ ಎಣಿಕೆ ಕಾರ್ಯದಲ್ಲಿ ನಿರತರಾಗುವ ಸಿಬ್ಬಂದಿ ಹಾಗೂ ರಾಜಕೀಯ ಪ್ರತಿನಿಧಿಗಳು ಚುನಾವಣಾ ಏಜೆಂಟರುಗಳಿಗೆ ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಿಂದ ಮೊಬೈಲ್‌ ತರುವುದಾಗಲೀ, ಬಳಸುವುದಾಗಲೀ ನಿಷೇಧಿಸುವಂತೆ ಸೂಚಿಸಲಾಗಿದೆ. +ಮತ ಎಣಿಕೆ ದಿನದಂದು ವಿದ್ಯುತ್‌ ವ್ಯತ್ಯಯವಾಗುವಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು, ಏಜೆಂಟರಿಗೆ ಹಾಗೂ ಮತ ಎಣಿಕೆ ಸಿಬ್ಬಂದಿಗೆ ಗುರುತಿನ ಚೀಟಿ ನೀಡುವುದು, ಮತ ಎಣಿಕೆಗೆ ಅಗತ್ಯವಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕ ಮಾಡುವುದು… ಮೊದಲಾದ ವಿಚಾರಗಳ ಬಗ್ಗೆ ಸಭೆ ನಡೆಸಿ ಮಾಹಿತಿ ನೀಡಲಾಗಿದೆ. +ಮತ ಎಣಿಕೆ ಸಿಬ್ಬಂದಿಗೆ ಅಗತ್ಯವಿರುವ ಊಟೋಪಚಾರ, ನೀರಿನ ವ್ಯವಸ್ಥೆ, ಮೂಲಸೌಲಭ್ಯ ಕಲ್ಪಿಸುವುದು ಸೇರಿದಂತೆ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನಗಳನ್ನು ಈಗಾಗಲೇ ನೀಡಿದ್ದಾರೆ.ಯಾವುದೇ ರೀತಿಯ ಲೋಪ ಮತ ಎಣಿಕೆ ದಿನದಂದು ಉಂಟಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. +ಮತ ಎಣಿಕೆಗೆ ಇನ್ನು ಕೇವಲ 12 ದಿನಗಳು ಬಾಕಿ ಉಳಿದಿದ್ದು, ಅದಕ್ಕೆ ಪೂರಕವಾದ ಸಿದ್ಧತೆಯನ್ನು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಮಾಡಿಕೊಳ್ಳುತ್ತಿವೆ. \ No newline at end of file diff --git a/eesanje/url_46_135_8.txt b/eesanje/url_46_135_8.txt new file mode 100644 index 0000000000000000000000000000000000000000..6bbfda72202996d02ef75b1c1fe193235f430af4 --- /dev/null +++ b/eesanje/url_46_135_8.txt @@ -0,0 +1,10 @@ +ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ, ಮುಂದೆ ಶರಣಾಗಲು ಸೂಚನೆ +ಬೆಂಗಳೂರು, ಮೇ 23- ಪ್ರಜ್ವಲ್ ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ರವರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗೌಡರು, ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ ಎಂದು ಕಠೋರವಾಗಿ ಎಚ್ಚರಿಸಿದ್ದಾರೆ. +ಪ್ರಜ್ವಲ್ ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದು ಒತ್ತಾಯಿಸಿದ್ದಾರೆ.ಪ್ರಜ್ವಲ್ ಗೆ ದೇವೇಗೌಡರು ಬರೆದಿರುವ ಎಚ್ಚರಿಕೆ ಸಂದೇಶ ಈ ಕೆಳಕಂದಂತಿದೆ. + @ . .../ +ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್. ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ. +ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ. +ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ. +ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು. +ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ. +ಹೆಚ್. ಡಿ. ದೇವೇಗೌಡ \ No newline at end of file diff --git a/eesanje/url_46_135_9.txt b/eesanje/url_46_135_9.txt new file mode 100644 index 0000000000000000000000000000000000000000..fe65785a69150f9973adacac5acf6124cd3af515 --- /dev/null +++ b/eesanje/url_46_135_9.txt @@ -0,0 +1,5 @@ +ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ : ಜೋಶಿ +ಕಲಬುರಗಿ, ಮೇ 23-ಹಾಸನ ಜೆಡಿಎಸ್‌‍ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮೆ ಪ್ರಧಾನಿ ನರೇಂದ್ರಮೋದಿಗೆ ಪತ್ರ ಬರೆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಿದೆ. ಪಾಸ್‌‍ಪೋರ್ಟ್‌ ರದ್ದತಿಗೆ ಅದರದ್ದೇ ಆದ ಪ್ರಕ್ರಿಯೆಗಳು ಇವೆ. ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದತಿಗೆ ಕೋರ್ಟ್‌ನಲ್ಲಿ ಅರ್ಜಿ ಹಾಕಲಾಗಿದೆ ಎಂದು ಹೇಳಿದರು. +ನನ್ನ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಪರಮೇಶ್ವರ್‌ ಈವರೆಗೂ ಉತ್ತರಿಸಿಲ್ಲ. ಪ್ರಜ್ವಲ್‌ ಪೆನ್‌ಡ್ರೈವ್‌ ಹೊರಬಂದಿದ್ದು ಏ.21ರಂದು. ಆದರೆ ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು. +ವಿದೇಶಕ್ಕೆ ಹೋದವರನ್ನು ಕರೆತರಲು ಪ್ರಕ್ರಿಯೆಗಳಿವೆ. ರಾಜ್ಯ ಸರ್ಕಾರಕ್ಕೆ ಸಹಕಾರ ನೀಡಲು ಕೇಂದ್ರ ತಯಾರಿದೆ. ಪತ್ರ ಬರೆದ ತಕ್ಷಣ ಪಾಸ್‌‍ಪೋರ್ಟ್‌ ರದ್ದಾಗಬೇಕು ಎಂದರೆ ಹೇಗೆ? ಇದೀಗ ಪ್ರಕರಣವನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಕಾಂಗ್ರೆಸ್‌‍ ಮಾಡುತ್ತಿದೆ. ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟು ಚುನಾವಣೆ ಮುಗಿಯುವವರೆಗೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. +ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಗಂಭೀರ ಪ್ರಕರಣ. ಪ್ರಜ್ವಲ್‌ ವಿಚಾರಣೆ ಎದುರಿಸಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ ಎಂದೂ ಜೋಶಿ ಹೇಳಿದರು.ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಸರ್ಕಾರ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. \ No newline at end of file diff --git a/eesanje/url_46_136_1.txt b/eesanje/url_46_136_1.txt new file mode 100644 index 0000000000000000000000000000000000000000..a3d4dfab289a7494eea056b1e940fa4bda75daf5 --- /dev/null +++ b/eesanje/url_46_136_1.txt @@ -0,0 +1,7 @@ +ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ಶಾಸಕ ಹರೀಶ್‌ ಪೂಂಜಾ +ಮಂಗಳೂರು,ಮೇ23-ಬೆಳ್ತಂಗಡಿಯಲ್ಲಿ ದಿನವಿಡೀ ನಡೆದ ಹೈಡ್ರಾಮಾ ಬಳಿಕ ಬಿಜೆಪಿ ಶಾಸಕ ಹರೀಶ್‌ ಪೂಂಜಾ ರಾತ್ರಿಯೇ ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದರು. ಶಾಸಕರ ವಿಚಾರಣೆ ನಡೆಸಿದ ಪೊಲೀಸರು, ಬಳಿಕ ಸ್ಟೇಷನ್‌ ಜಾಮೀನಿನಡಿ ಬಿಡುಗಡೆ ಮಾಡಿದ್ದಾರೆ. ಪೊಲೀಸರಿಗೆ ಧಮ್ಕಿ, ಬೆದರಿಕೆ ಪ್ರಕರಣ ಸಂಬಂಧ ಪೂಂಜಾ ಅವರನ್ನು ಬಂಧಿಸಲು ಬಂದಿದ್ದ ಪೊಲೀಸರು ಕೊನೆಗೆ ನೋಟಿಸ್‌‍ ನೀಡಿ ತೆರಳಿದ್ದರು. +ಶಾಸಕ ಹರೀಶ್‌ ಪೂಂಜಾ ಅವರನ್ನು ಬಂಧಿಸಬೇಕೆಂದು ಬೆಳಗ್ಗೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದರು. ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿ ವಾಪಸಾಗಿದ್ದರು. ಬಳಿಕ ರಾತ್ರಿ 9.30ರ ಸುಮಾರಿಗೆ ಶಾಸಕ ಹರೀಶ್‌ ಪೂಂಜಾ ಪೊಲೀಸ್‌‍ ಠಾಣೆಗೆ ಹಾಜರಾಗಿದ್ದಾರೆ. +ಶಾಸಕ ಹರೀಶ್‌ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಠಾಣೆಗೆ ಕರೆತರಲು ಬೆಳ್ತಂಗಡಿ ಠಾಣೆ ಪೊಲೀಸರು ಅವರ ಮನೆಗೆ ತೆರಳಿದ್ದರು. ಈ ವೇಳೆ ಸ್ಥಳದಲ್ಲಿದ್ದ ದಕ್ಷಿಣ ಕನ್ನಡ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರು, ತಾನೇ ಖುದ್ದಾಗಿ ಹರೀಶ್‌ ಪೂಂಜಾರನ್ನು ವಿಚಾರಣೆಗೆ ಠಾಣೆಗೆ ಕಳುಹಿಸುವುದಾಗಿ ವಿನಂತಿಸಿಕೊಂಡಿದ್ದರು. ಹಾಗೂ ಅದರಂತೆ ಸಂಸದರು ಆರೋಪಿತರಾದ ಹರೀಶ್‌ ಪೂಂಜಾರನ್ನು ಪೊಲೀಸ್‌‍ ಠಾಣೆಗೆ ಕಳುಹಿಸಿದ್ದರು.ಬಳಿಕ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್‌ ಪೂಂಜ ಅವರ ವಿಚಾರಣೆ ನಡೆಸಲಾಗಿದೆ. +ಬೆಳ್ತಂಗಡಿ ಠಾಣೆ 58/2024, ಕಲಂ: 143, 147, 341, 504, 506 ಜೊತೆಗೆ 149 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್‌ ಪೂಂಜಾರನ್ನು ವಿಚಾರಣೆ ನಡೆಸಿ, ಸ್ಟೇಷನ್‌ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಪೂಂಜಾ ಅವರು, ಪೊಲೀಸರ ಮೇಲೆ ಹೆಚ್ಚಿನ ದೌಜನ್ಯ ಮಾಡಿರುವುದು ಕಾಂಗ್ರೆಸ್‌‍. ಬಿಜೆಪಿ ನಾಯಕರಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. +ತುರ್ತು ಪರಿಸ್ಥಿತಿಯಿಂದ ಹಿಡಿದು ಅವತ್ತಿನಿಂದ ಇವತ್ತಿನ ವರೆಗೆ ಪೊಲೀಸರನ್ನು ಹಿಡಿದುಕೊಂಡು ಕಾಂಗ್ರೆಸ್‌‍ ದೌರ್ಜನ್ಯ ಮಾಡುತ್ತಿದೆ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್‌‍ ಪ್ರತಿಭಟನೆ ಮಾಡುತ್ತಿಲ್ಲವಾ? ಆವಾಗ ಯಾವ ನ್ಯಾಯ ಕಾನೂನು ಇತ್ತು. ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯ ಆದಾಗ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು. +ಒಬ್ಬ ಅಮಾಯಕನ ಬಂಧನವಾಗಿದೆ. ಆತ ಬಿಜೆಪಿಯಲ್ಲಿ ಮುಂಚೂಣಿಯಲ್ಲಿದ್ದಾನೆ ಎಂದು ಬಂಧಿಸಿದ್ದಾರೆ. ಅದನ್ನು ನಾನು ಜನಪ್ರತಿನಿಧಿಯಾಗಿ ಖಂಡಿಸಿರುವುದು. ದ್ವೇಷದ ರಾಜಕಾರಣ ಮಾಡಿದರೆ ಒಪುವುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್‌‍ ಹಾಕಿದ್ದಾರೆ. ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪೊಲೀಸ್‌‍ ಅಧಿಕಾರಿ ಶಂಕರ್‌ ಬಿದರಿ ಕಾಲರ್‌ ಪಟ್ಟಿ ಹಿಡಿದಿಲ್ಲವೇ? ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_136_10.txt b/eesanje/url_46_136_10.txt new file mode 100644 index 0000000000000000000000000000000000000000..8e7b095ffd7d03cd84703687606a3108637dcaae --- /dev/null +++ b/eesanje/url_46_136_10.txt @@ -0,0 +1,5 @@ +ಮೇಲ್ಮನೆ ಒಂದು ಸ್ಥಾನಕ್ಕೆ ಜೆಡಿಎಸ್‌‍ನಿಂದ ನಾಲ್ವರು ಆಕಾಂಕ್ಷಿಗಳು +ಬೆಂಗಳೂರು, ಮೇ 23-ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್‌‍ನಿಂದ ಸ್ಪರ್ಧಿಸಲು ನಾಲ್ವರು ಪ್ರಬಲ ಆಕಾಂಕ್ಷಿಗಳಿದ್ದಾರೆ. +ಜೂನ್‌ 17 ರಂದು ನಿವೃತ್ತಿಯಿಂದ ತೆರವಾಗಲಿರುವ 11 ಸದಸ್ಯರಲ್ಲಿ ಜೆಡಿಎಸ್‌‍ನ ಬಿ.ಎಂ.ಫಾರುಕ್‌ ಅವರು ಇದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್‌‍ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಾಗಿದೆ. +ವಿಧಾನಸಭೆಯಲ್ಲಿ 19 ಶಾಸಕರನ್ನು ಹೊಂದಿರುವ ಜೆಡಿಎಸ್‌‍ ಒಂದು ಸ್ಥಾನ ಮಾತ್ರ ಪಡೆಯಲಷ್ಟೇ ಸಾಧ್ಯವಾಗಲಿದೆ. ಹೀಗಾಗಿ ಒಂದು ಸ್ಥಾನಕ್ಕೆ ನಾಲ್ವರು ಆಕಾಂಕ್ಷಿಗಳು ಇದ್ದಾರೆ. ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರುಕ್‌ ಮರು ಆಯ್ಕೆ ಬಯಸುತ್ತಿದ್ದರೆ, ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರರೆಡ್ಡಿ, ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ಗೌಡ ಹಾಗೂ ಪಕ್ಷದ ಮುಖಂಡ ಟಿ.ಎನ್‌.ಜವರಾಯೇಗೌಡ ಅವರು ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. +ಜೂನ್‌ 13 ರಂದು ವಿಧಾನಪರಿಷತ್‌ನ 11 ಸ್ಥಾನಗಳ ಆಯ್ಕೆಗಾಗಿ ನಡೆಯುವ ಚುನಾವಣೆಗೆ ಮೇ 27 ರಂದು ಅಧಿಸೂಚನೆ ಹೊರಬೀಳಲಿದೆ.ಜೂನ್‌ 3 ರವರೆಗೂ ಉಮೇದುವಾರಿಕೆ ಸಲ್ಲಿಸಲು ಕಾಲಾವಕಾಶವಿದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಕುರಿತಂತೆ ಜೆಡಿಎಸ್‌‍ನಲ್ಲಿ ಸದ್ಯಕ್ಕೆ ಯಾವುದೇ ಸಭೆಯೂ ನಡೆದಿಲ್ಲ. ಮುಂದಿನ ವಾರ ಅಭ್ಯರ್ಥಿ ಆಯ್ಕೆ ಕುರಿತ ಸಭೆ ನಡೆಯಲಿದ್ದು, ಈ ನಾಲ್ವರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_136_11.txt b/eesanje/url_46_136_11.txt new file mode 100644 index 0000000000000000000000000000000000000000..98fe4a88ff7969c8ac2f8278dc858e94c40cf64c --- /dev/null +++ b/eesanje/url_46_136_11.txt @@ -0,0 +1,6 @@ +ಕಡಿಮೆಯಾಯ್ತು ಮಳೆ, ಮತ್ತೆ ಹೆಚ್ಚಾಯ್ತು ತಾಪಮಾನ +ಬೆಂಗಳೂರು, ಮೇ 22-ರಾಜ್ಯದಲ್ಲಿ ಮೇ 24ರ ನಂತರ ಮಳೆಯ ಪ್ರಮಾಣ ಇಳಿಕೆಯಾಗಲಿದ್ದು, ಮತ್ತೆ ತಾಪಮಾನದಲ್ಲಿ ಏರಿಕೆ ಕಂಡುಬರುವ ಮುನ್ಸೂಚನೆಗಳಿವೆ. ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೆರೆಡು ದಿನ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೇರಳ ಭಾಗದಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವುದರಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. +ಅಲ್ಲದೆ ಅರಬ್ಬಿಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಬೆಂಗಳೂರು, ಮಂಡ್ಯ, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗಿದ್ದರೆ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಉತ್ತರ ಕನ್ನಡ ಭಾಗದಲ್ಲಿ ಕೆಲವೆಡೆ ಹಗರುದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದಲ್ಲಿ ಹಗುರದಿಂದ ಸಾಧಾರಣ ಮಳೆ ಹಲವೆಡೆ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ.ಮೇ 24 ರ ನಂತರ ಮಳೆ ಕಡಿಮೆಯಾಗಲಿದ್ದು, ಒಣಹವೆ ಕಂಡುಬರುತ್ತದೆ. ಇದರಿಂದ ತಾಪಮಾನದಲ್ಲಿ ಮತ್ತೆ ಹೆಚ್ಚಳ ಕಂಡುಬರಲಿದೆ. ನೈರುತ್ಯ ಮುಂಗಾರು ಮಾಸಾಂತ್ಯಕ್ಕೆ ಆರಂಭವಾಗುವ ಸಾಧ್ಯತೆಗಳಿರುವುದರಿಂದ ಈ ರೀತಿಯ ಬದಲಾವಣೆ ಸಹಜ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_136_12.txt b/eesanje/url_46_136_12.txt new file mode 100644 index 0000000000000000000000000000000000000000..38a056c8b5cf93b45a5b95a3f6ec24436a5a7eff --- /dev/null +++ b/eesanje/url_46_136_12.txt @@ -0,0 +1,12 @@ +ಭಾರೀ ಕುತೂಹಲ ಕೆರಳಿಸಿದೆ ಸಿಎಂ-ಡಿಸಿಎಂ ಆಯೋಜಿಸಿರುವ ಸಚಿವರ ಔತಣಕೂಟ +ಬೆಂಗಳೂರು, ಮೇ 22-ಸಚಿವ ಸಂಪುಟದ ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಔತಣಕೂಟ ಆಯೋಜಿಸಿರುವುದು ಭಾರೀ ಕುತೂಹಲ ಕೆರಳಿಸಿದೆ. +ರಾಜ್ಯಸರ್ಕಾರ ಒಂದು ವರ್ಷ ಪೂರೈಸಿರುವುದು, ಲೋಕಸಭಾ ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಜೊತೆಗೆ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸಂಸದ ಡಿ.ಕೆ.ಸುರೇಶ್‌ ಅವರ ಮನೆಯಲ್ಲಿ ಇಂದು ಸಂಜೆ ಔತಣಕೂಟ ಆಯೋಜಿಸಲಾಗಿದೆ. ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದೆ. +ರಾಜ್ಯಸರ್ಕಾರಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಯಶಸ್ವಿ ಆಡಳಿತ ನಡೆಸಲಾಗಿದೆ. ಪಂಚಖಾತ್ರಿಗಳ ಜಾರಿ ಸೇರಿದಂತೆ ಹಲವು ಮೈಲಿಗಲ್ಲುಗಳನ್ನು ರಾಜ್ಯಸರ್ಕಾರ ದಾಟಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸಚಿವರು ಉಸ್ತುವಾರಿ ವಹಿಸಿಕೊಂಡು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಔತಣಕೂಟವನ್ನು ಏರ್ಪಡಿಸಲಾಗಿದೆ. +ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಬ್ಬರೂ ಸಚಿವರಿಗೆ ಆಹ್ವಾನ ನೀಡಿದ್ದಾರೆ. ಔತಣಕೂಟದಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚೆ ನಡೆಯಲಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಬಿಜೆಪಿ ಹಾಗೂ ಜೆಡಿಎಸ್‌‍ ನಾಯಕರು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. +ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡುವಲ್ಲಿ ಕಾಂಗ್ರೆಸ್‌‍ ವೈಫಲ್ಯಗಳು ಕಂಡುಬಂದಿವೆ. ಹೀಗಾಗಿ ಅಪಪ್ರಚಾರಗಳು ವೈಭವೀಕರಿಸಿದ್ದು, ಅವುಗಳನ್ನು ಸಮರ್ಥವಾಗಿ ನಿಭಾಯಿಸಲು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. +ಲೋಕಸಭಾ ಚುನಾವಣೆ ಫಲಿತಾಂಶದ ಕುರಿತು ಸಭೆಯಲ್ಲಿ ಚರ್ಚೆಗಳು ನಡೆಯಲಿವೆ. ಯಾವ ಯಾವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ ಗೆಲ್ಲುವ ಸಾಧ್ಯತೆಯಿದೆಯೋ, ಹಿನ್ನಡೆಯಾಗುವ ಕ್ಷೇತ್ರಗಳಾವುವು, ಅದಕ್ಕೆ ಕಾರಣಗಳೇನು? ಎಂಬ ಬಗ್ಗೆಯೂ ಸಮಾಲೋಚನೆ ನಡೆಯಲಿದೆ ಎಂದು ತಿಳಿದುಬಂದಿದೆ. +ಮುಂದಿನ ದಿನಗಳಲ್ಲಿ ಇಲಾಖಾವಾರು ಸಾಧನೆಗಳ ಬಗ್ಗೆ ಕೂಡ ಚರ್ಚೆಯಾಗಲಿದೆ. ಕಳೆದ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ. ಆದರೆ ಅವುಗಳಿಗೆ ಈವರೆಗಿನ ಅಧಿಕೃತ ಆದೇಶ ಜಾರಿಯಾಗಿಲ್ಲ. ಅನುದಾನದ ಕೊರತೆ ಪ್ರಮುಖ ಕಾರಣವಾಗಿದ್ದರೆ, ಲೋಕಸಭಾ ಚುನಾವಣೆ ನೀತಿ ಸಂಹಿತೆ ಮತ್ತೊಂದು ಕಾರಣವಾಗಿತ್ತು. +ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಸಚಿವರು ಆಯಾ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಸೂಚನೆಗಳನ್ನು ಹಾಗೂ ಆಡಳಿತಗಳನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಸೂಚಿಸಲಿದ್ದಾರೆ. +ಚುನಾವಣಾ ನೀತಿ ಸಂಹಿತೆ ಇನ್ನೂ 15 ದಿನಗಳ ಕಾಲ ಚಾಲ್ತಿಯಲ್ಲಿರಲಿದೆ. ಆವರೆಗೂ ಆಡಳಿತವನ್ನು ನಿಷ್ಕ್ರಿಯವಾಗಿಡಲು ಸಾಧ್ಯವಿಲ್ಲ. ಹೀಗಾಗಿ ಸಚಿವರು ಕಾಲಕಾಲಕ್ಕೆ ಅಧಿಕಾರಿಗಳಿಂದ ಪ್ರಗತಿ ಪರಿಶೀಲನೆಯ ಮಾಹಿತಿ ಪಡೆದುಕೊಳ್ಳಬೇಕು, ಸೂಚನೆಗಳನ್ನು ನೀಡಿ ಆಡಳಿತವನ್ನು ಜನಪರವಾಗಿ ಚುರುಕುಗೊಳಿಸಬೇಕೆಂದು ಸೂಚಿಸಲು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ. +ಸಂಜೆ ನಡೆಯುವ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಕೂಡ ಚರ್ಚೆಯಾಗಲಿದ್ದು, ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಕಾರ್ಯಕರ್ತರು ಸಜ್ಜುಗೊಳಿಸಲು ಚರ್ಚೆಯಾಗಲಿದೆ.ಇದೇ ವೇಳೆ ಆರ್‌ಸಿಬಿ ಹಾಗೂ ಆರ್‌ಆರ್‌ ತಂಡಗಳ ಐಪಿಎಲ್‌ ಮ್ಯಾಚ್‌ಗಳು ಕೂಡ ಇದ್ದು, ಅದನ್ನು ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. +ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಆದರೆ ಹೈಕಮಾಂಡ್‌ನ ನಿರ್ಧಾರಗಳಲ್ಲಿ ಕುತೂಹಲಗಳಿವೆ. ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಬದಲಾವಣೆಯ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. \ No newline at end of file diff --git a/eesanje/url_46_136_2.txt b/eesanje/url_46_136_2.txt new file mode 100644 index 0000000000000000000000000000000000000000..77d916b919841313d14fd12764e2c2552d4e9160 --- /dev/null +++ b/eesanje/url_46_136_2.txt @@ -0,0 +1,8 @@ +ವಿಧಾನಪರಿಷತ್ ಚುನಾವಣೆ : ಬಿಜೆಪಿ-ಜೆಡಿಎಸ್‌‍ ಮೈತ್ರಿ ಪ್ರಚಾರ ಆರಂಭ +ಬೆಂಗಳೂರು,ಮೇ23-ಜೂನ್‌ 3ರಂದು ನಡೆಯಲಿರುವ ಮೂರು ಶಿಕ್ಷಕ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನೂ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ನಾಯಕರು ನಿರ್ಧರಿಸಿದ್ದು, ಪ್ರಚಾರ ಕಾರ್ಯಾರಂಭಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯ ಹೊರತುಪಡಿಸಿದರೆ ಇತರ ಐದು ಕ್ಷೇತ್ರಗಳಲ್ಲಿ ಮೈತ್ರಿಕೂಟ ನಿರಾತಂಕವಾಗಿ ಚುನಾವಣೆ ಎದುರಿಸುತ್ತಿದೆ. ಕೇಸರಿ ನಾಯಕರು, ದಳಪತಿಗಳು ಒಟ್ಟಾಗಿ ಸ್ಥಳೀಯ ಮಟ್ಟದಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಯಲ್ಲಿ ತೊಡಗಿದ್ದಾರೆ. +ಶಿಕ್ಷಕರ ಮತ್ತು ಪದವೀಧರ ಸೇರಿ ಎಲ್ಲಾ ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಆರು ಕ್ಷೇತ್ರಗಳಲ್ಲಿ ಬಿಜೆಪಿ ನಾಲ್ಕು ಮತ್ತು ಜೆಡಿಎಸ್‌‍ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಕೂಡ ಮಿತ್ರಪಕ್ಷದ ನೆರವಿಗೆ ಪರಸ್ಪರ ನಾಯಕರು ಮುಂದಾಗಿದ್ದಾರೆ. ಅದರ ಭಾಗವಾಗಿ ಬಿಜೆಪಿಯು ಜೆಡಿಎಸ್‌‍ ಅಭ್ಯರ್ಥಿಗಳ ಕ್ಷೇತ್ರಕ್ಕೂ ಉಸ್ತುವಾರಿಗಳನ್ನು ನಿಯೋಜಿಸಿ ಚುನಾವಣೆಗೆ ಅಗತ್ಯ ಸಹಕಾರ ನೀಡಿದೆ. +ಈಶಾನ್ಯ ಪದವೀಧರ ಕ್ಷೇತ್ರ:ವಿಪಕ್ಷ ಮುಖ್ಯ ಸಚೇತಕ ರವಿಕುಮಾರ್, ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌ (ಉಸ್ತುವಾರಿ), ವಿಧಾನಪರಿಷತ್‌ ಸದಸ್ಯ ಡಿ.ಎಸ್‌‍.ಅರುಣ್‌ (ಸಹ ಉಸ್ತುವಾರಿ) ಆಗಿದ್ದು, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನಪರಿಷತ್‌ ಸದಸ್ಯ ಕೆ.ಎಸ್‌‍.ನವೀನ್‌‍, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ಉಸ್ತುವಾರಿಗಳನ್ನಾಗಿ ಬಿಜೆಪಿ ನೇಮಿಸಿದೆ. +ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್‌.ಅಶೋಕ್‌‍, ಹಿರಿಯ ನಾಯಕ ಬಿ.ಎಸ್‌‍.ಯಡಿಯೂರಪ್ಪ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಸೇರಿದಂತೆ ಹಿರಿಯ ನಾಯಕರು ಮತ್ತು ಆಯಾ ಕ್ಷೇತ್ರಗಳ ಪ್ರಮುಖ ನಾಯಕರು ಎನ್‌‍ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. +ಜೆಡಿಎಸ್‌‍ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ, ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಹಿರಿಯ ನಾಯಕರಾದ ಸಾ.ರಾ.ಮಹೇಶ್‌‍, ಸಿಎಸ್‌‍ ಪುಟ್ಟರಾಜು ಸೇರಿದಂತೆ ಹಲವು ನಾಯಕರು ಜೆಡಿಎಸ್‌‍ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದು, ಸ್ಥಳೀಯ ನಾಯಕರು ಬಿಜೆಪಿ ನಾಯಕರ ಜೊತೆ ಕೈಜೋಡಿಸಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವ ಕಡೆ ಪ್ರಚಾರ ಮಾಡುತ್ತಿದ್ದಾರೆ. +ಕುಮಾರಸ್ವಾಮಿ ಕೂಡ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್‌‍ ಪಾಲಿನ ಎರಡು ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. +ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ನಾಯಕರಾದ ಸಾ.ರಾ.ಮಹೇಶ್‌‍, ಸಿ.ಎಸ್‌‍.ಪುಟ್ಟರಾಜುಗೆ ಉಸ್ತುವಾರಿ ವಹಿಸಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಶಾಸಕಿ ಶಾರದಾ ಪೂರ್ಯಾ ನಾಯ್ಕ, ವೈಎಸ್ವಿ ದತ್ತಾ ಸೇರಿ ಇತರರಿಗೆ ಜವಾಬ್ದಾರಿ ವಹಿಸಲಾಗಿದೆ. ಕ್ಷೇತ್ರದಲ್ಲೇ ಬೀಡುಬಿಟ್ಟಿರುವ ನಾಯಕರು ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ. \ No newline at end of file diff --git a/eesanje/url_46_136_3.txt b/eesanje/url_46_136_3.txt new file mode 100644 index 0000000000000000000000000000000000000000..f89a1a0373afed103b7fb5b764782eac3c3f748c --- /dev/null +++ b/eesanje/url_46_136_3.txt @@ -0,0 +1,12 @@ +ಸಭಾಪತಿ ಮತ್ತು ಉಪಸಭಾಪತಿ ಸ್ಥಾನ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಮಾಸ್ಟರ್‌ ಪ್ಲಾನ್‌ +ಬೆಂಗಳೂರು,ಮೇ23-ವಿಧಾನಸಭೆಯಲ್ಲಿ ಪ್ರಚಂಡ ಬಹುಮತದೊಂದಿಗೆ ಕಾಂಗ್ರೆಸ್‌‍ ಅಧಿಕಾರದಲ್ಲಿದ್ದರೂ ವಿಧಾನಪರಿಷತ್‌‍ನಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಕೂಟ ಬಹುಮತದೊಂದಿಗೆ ಸಭಾಪತಿ ಮತ್ತು ಉಪಸಭಾಪತಿ ಸ್ಥಾನವನ್ನು ಪಡೆದುಕೊಂಡಿದೆ. +ಆದರೆ ಶಿಕ್ಷಕರ, ಪದವೀಧರರ ಕ್ಷೇತ್ರದ ಚುನಾವಣೆ ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್‌‍ಗೆ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಮೈತ್ರಿಕೂಟದ ಬಹುಮತಕ್ಕೆ ತಡೆಯೊಡ್ಡಲು ಆಡಳಿತರೂಢ ಕಾಂಗ್ರೆಸ್‌‍ ಮುಂದಾಗಿದೆ. ಅದೇ ರೀತಿ ತಮ್ಮ ಬಹುಮತ ಉಳಿಸಿಕೊಳ್ಳಲು ಮಿತ್ರಪಕ್ಷಗಳ ಕೂಟ ಮಾಸ್ಟರ್‌ ಪ್ಲಾನ್‌ ಮಾಡುತ್ತಿದೆ. +75 ಸದಸ್ಯ ಬಲ ಹೊಂದಿರುವ ವಿಧಾನಪರಿಷತ್‌‍ನಲ್ಲಿ ಬಿಜೆಪಿ 35, ಕಾಂಗ್ರೆಸ್‌‍ 29, ಜೆಡಿಎಸ್‌‍ 8, ಸಭಾಪತಿ 1, ಪಕ್ಷೇತರ 1 ಸ್ಥಾನ ಹೊಂದಿದ್ದು, 1 ಸ್ಥಾನ ಖಾಲಿ ಇದೆ. ಜಗದೀಶ್‌ ಶೆಟ್ಟರ್‌ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಸದ್ಯಕ್ಕೆ ಖಾಲಿ ಇದೆ. ಈಗ ಚುನಾವಣೆ ನಡೆಯುತ್ತಿಲ್ಲ. ಈಗ ನಡೆಯುತ್ತಿರುವ ಚುನಾವಣೆಯ ಸ್ಥಾನಗಳನ್ನು ಕಳೆದು ಚುನಾವಣೆಯಲ್ಲಿ ಗಳಿಸುವ ಸ್ಥಾನಗಳ ಆಧಾರದಲ್ಲಿ ಸಭಾಪತಿ ಸ್ಥಾನದ ಭವಿಷ್ಯವೂ ನಿರ್ಧಾರವಾಗಲಿದೆ. +ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಂದುವರೆಯುತ್ತಾರಾ ಅಥವಾ ಆಡಳಿತ ಪಕ್ಷಕ್ಕೆ ಸಭಾಪತಿ ಸ್ಥಾನ ಸಿಗಲಿದೆಯಾ ಎನ್ನುವುದೂ ಫಲಿತಾಂಶದ ಮೇಲೆ ಅವಲಂಭಿತವಾಗಿದೆ. ಆಯನೂರು ಮಂಜುನಾಥ್‌‍, ತೇಜಸ್ವಿನಿಗೌಡ, ಮರಿತಿಬ್ಬೇಗೌಡರು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಆ ಸ್ಥಾನಗಳಿಗೂ ಈ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳಲ್ಲಿ ಖಾಲಿ ಎಂದು ಈಗ ಪರಿಗಣಿಸುವ ಅಗತ್ಯವಿಲ್ಲ. ಚುನಾವಣೆ ನಡೆಯದೇ ಇರುವುದು ಜಗದೀಶ್‌ ಶೆಟ್ಟರ್‌ ಸ್ಥಾನಕ್ಕೆ ಮಾತ್ರ. ಹಾಗಾಗಿ ಒಂದು ಸ್ಥಾನ ಖಾಲಿ ಇದೆ ಎನ್ನಬಹುದಾಗಿದೆ. +75 ಸದಸ್ಯ ಬಲ ಈಗ 74 ಆಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ವಿಚಾರದಲ್ಲಿ ಬರುವುದಾದರೆ ಈಗಿರುವ 35 ಸ್ಥಾನಗಳಲ್ಲಿ ಶಿಕ್ಷಕರ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಪಾಲಿನ ಮೂರು ಸ್ಥಾನಕ್ಕೆ ಚುನಾವಣೆ ಎದುರಾಗಿದೆ. ಹಾಗಾಗಿ 35 ಸದಸ್ಯ ಬಲ 32 ಆಗಲಿದೆ. ಜೊತೆಗೆ ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ 11 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿಯ 6 ಸದಸ್ಯರಿದ್ದರು. ಅವರ ಸಂಖ್ಯೆ ಕಳೆದರೆ ಸದಸ್ಯ ಬಲ 26 ಆಗಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಮೂರು ಸ್ಥಾನಗಳನ್ನು ಸಂಖ್ಯಾಬಲದ ಆಧಾರದಲ್ಲಿ ದಕ್ಕಿಸಿಕೊಳ್ಳಲಿದೆ. +ಹಾಗಾಗಿ ಬಿಜೆಪಿ ಸಂಖ್ಯೆ 29 ಆಗಲಿದೆ. ಶಿಕ್ಷಕರು ಮತ್ತು ಪದವೀಧರ ಕ್ಷೇತ್ರದಲ್ಲಿ ಎಷ್ಟು ಸ್ಥಾನ ಬರಲಿವೆ ಎನ್ನುವುದನ್ನು ಕಾದು ನೋಡಬೇಕಿದೆ.ಇನ್ನು, ಮಿತ್ರ ಪಕ್ಷ ಜೆಡಿಎಸ್‌‍ ವಿಚಾರಕ್ಕೆ ಬರುವುದಾದಲ್ಲಿ 8 ಜನರ ಸದಸ್ಯ ಬಲವನ್ನು ಹೊಂದಿದೆ. ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌‍ನ ಎರಡು ಸ್ಥಾನ ಇದ್ದು, ಅವುಗಳನ್ನು ಕಳೆದರೆ ಜೆಡಿಎಸ್‌‍ ಬಲ 6 ಆಗಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌‍ಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌‍ನ ಒಂದು ಸ್ಥಾನ ತೆರವಾದರೂ ಒಂದು ಸ್ಥಾನ ಸಂಖ್ಯಾಬಲದ ಆಧಾರದಲ್ಲಿ ಬರಲಿದೆ. ಹಾಗಾಗಿ ಸಂಖ್ಯೆ 6 ಆಗಿಯೇ ಉಳಿಯಲಿದೆ. +ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಷ್ಟು ಸ್ಥಾನ ಬರಲಿವೆ ಎನ್ನುವುದರ ಮೇಲೆ ಅಂತಿಮವಾಗಿ ಜೆಡಿಎಸ್‌‍ ಬಲ ಎಷ್ಟು ಎಂದು ಗೊತ್ತಾಗಲಿದೆ.ಜೂನ್‌ 3ರಂದು ನಡೆಯುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯನ್ನು ಬಿಟ್ಟು ಪಕ್ಷದ ಬಲಾಬಲ ಬಿಜೆಪಿ-ಜೆಡಿಎಸ್‌‍ ಮೈತ್ರಿಗೆ 35 ಸ್ಥಾನ ಆಗಲಿದೆ. ಸಭಾಪತಿ ಸ್ಥಾನ ಸೇರಿದಲ್ಲಿ 36 ಆಗಲಿದೆ. +ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕನಿಷ್ಠ ಎರಡು ಸ್ಥಾನವನ್ನಾದರೂ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಗೆದ್ದರೆ ಸದ್ಯದ ಮಟ್ಟಿಗೆ ಮಿತ್ರಪಕ್ಷದ ಬಳಿಯೇ ಸಭಾಪತಿ ಸ್ಥಾನ ಇರಲಿದೆ. ಒಂದು ವೇಳೆ ಯಾವುದೇ ಸ್ಥಾನ ಗೆಲ್ಲದೇ ಹೋದಲ್ಲಿ, ಈಗಲೇ ಸಭಾಪತಿ ಸ್ಥಾನವನ್ನು ಬಸವರಾಜ ಹೊರಟ್ಟಿ ಕಳೆದಕೊಳ್ಳಬೇಕಾಗಲಿದೆ. +ಶ್ರೀಮಂತ ದೇವಾಲಯಗಳ ದೇಣಿಗೆ ಹಣವನ್ನು ಕಡಿಮೆ ಆದಾಯದ ದೇವಾಲಯಗಳಿಗೆ ಹಂಚಲು ಅವಕಾಶ ಕಲ್ಪಿಸುವ ಹಿಂದೂ ಧಾರ್ಮಿಕ ತಿದ್ದುಪಡಿ ವಿಧೇಯಕ ಒಳಗೊಂಡು ಹಲವು ಪ್ರಮುಖ ಶಾಸನಗಳ ರಚನೆಗೆ ಕಾಂಗ್ರೆಸ್‌‍ ಸರಕಾರಕ್ಕೆ ಮೇಲನೆಯಲ್ಲಿ ಹಿನ್ನಡೆಯಾಗಿತ್ತು. +ಕಳೆದ ಬಜೆಟ್‌ ಅಧಿವೇಶನದಲ್ಲಿ ಪ್ರಮುಖ ವಿಧೇಯಕಗಳಿಗೆ ಪರಿಷತ್‌‍ನಲ್ಲಿ ಸೋಲಾಗಿತ್ತು. ಮತ್ತೆ ಕೆಲವು ಸೆಲೆಕ್ಟ್‌ ಕಮಿಟಿಗೆ ಶಿಫಾರಸ್ಸಾಗಿದ್ದವು. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಿಗೆ ಇರುವ ಅಸ್ತ್ರವೇ ಪರಿಷತ್‌ನಲ್ಲಿನ ಬಹುಮತವಾಗಿದೆ. +ಹಾಗಾಗಿ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಹಾಲಿ ಸ್ಥಾನಗಳನ್ನು ಉಳಿಸಿಕೊಳ್ಳಬೇಕು ಎನ್ನುವ ಟಾರ್ಗೆಟ್‌ ಇದ್ದರೂ ಬಿಜೆಪಿ ಕನಿಷ್ಠ 3 ಸ್ಥಾನ ಮತ್ತು ಒಂದು ಸ್ಥಾನವನ್ನು ಜೆಡಿಎಸ್‌‍ ಗೆಲ್ಲಬೇಕು ಎನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅದಕ್ಕೆ ಬೇಕಾದ ಸಿದ್ಧತೆಗಳ ಕುರಿತು ಬಿಜೆಪಿ ನಾಯಕರು ಸಭೆ ನಡೆಸಿ ಕಾರ್ಯತಂತ್ರಗಳನ್ನು ರೂಪಿಸಿದ್ದಾರೆ \ No newline at end of file diff --git a/eesanje/url_46_136_4.txt b/eesanje/url_46_136_4.txt new file mode 100644 index 0000000000000000000000000000000000000000..c30fd44f6b455d9d0af3a9586a9e66483caecef7 --- /dev/null +++ b/eesanje/url_46_136_4.txt @@ -0,0 +1,5 @@ +ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಹೆಚ್ಚಳ +ಬೆಂಗಳೂರು, ಮೇ 23-ಮಲೆನಾಡು ಹಾಗೂ ಕೇರಳದ ವೈನಾಡು ಭಾಗದಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಏರಿಕೆಯಾಗುತ್ತಿದೆ. ಮುಂಗಾರುಪೂರ್ವ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದರಿಂದ ಬತ್ತಿದ ನದಿ, ಹಳ್ಳಕೊಳ್ಳಗಳಲ್ಲಿ ನೀರು ಹರಿಯಲಾರಂಭಿಸಿದೆ. ನಿಂತು ಹೋಗಿದ್ದ ಒಳಹರಿವಿನ ಪ್ರಮಾಣ ಮತ್ತೆ ಆರಂಭವಾಗಿದ್ದು, ಹೊಸ ಆಶಾಭಾವನೆಯನ್ನು ಜನರಲ್ಲಿ ಮೂಡಿಸುವಂತಾಗಿದೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿನ್ನೆಯ ಮಾಹಿತಿ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 1369 ಕ್ಯೂಸೆಕ್‌್ಸ ನೀರು ಹರಿದುಬರುತ್ತಿದೆ. ಜಲವಿದ್ಯುತ್‌ ಉತ್ಪಾದಿಸುವ ಮೂರು ಜಲಾಶಯಗಳಲ್ಲಿ ಒಟ್ಟು 1694 ಕ್ಯೂಸೆಕ್‌್ಸನಷ್ಟು ಒಳಹರಿವು ಕಂಡುಬಂದಿದೆ. +ಬೆಂಗಳೂರಿಗೆ ನೀರು ಪೂರೈಸುವ ಕಾವೇರಿ ಜಲಾನಯನ ಭಾಗದ ನಾಲ್ಕು ಜಲಾಶಯಗಳಲ್ಲಿ ಒಳಹರಿವು ಆರಂಭಗೊಂಡಿದೆ. ಒಟ್ಟಾರೆ 6 ಸಾವಿರ ಕ್ಯೂಸೆಕ್‌್ಸಗೂ ಹೆಚ್ಚಿನ ನೀರು ಜಲಾಶಯಗಳಿಗೆ ಬರುತ್ತಿದೆ. 6ನೇ ಜಲಾಶಯಕ್ಕೆ 400, ಹೇಮಾವತಿ ಜಲಾಶಯಕ್ಕೆ 2,800, ಕೆಆರ್‌ಎಸ್‌‍ಗೆ 1,400, ಕಬಿನಿ ಜಲಾಶಯಕ್ಕೆ 1,800 ಕ್ಯೂಸೆಕ್‌್ಸನಷ್ಟು ಒಳಹರಿವು ಬರುತ್ತಿದೆ. +ಇದೇ ರೀತಿ ಮಳೆ ಮುಂದುವರೆದರೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜೂ.31 ಕ್ಕೆ ನೈರುತ್ಯ ಮುಂಗಾರು ಕೇರಳ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅದರಂತೆ ಮುಂಗಾರು ಸದ್ಯಕ್ಕೆ ಆರಂಭವಾದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳು ಇವೆ. ಹೀಗಾಗಿ ಜಲಾಶಯಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಒಳಹರಿವು ಬರಲು ಸಾಧ್ಯವಾಗುತ್ತದೆ. ನೀರಿನ ಬವಣೆಯೂ ನೀಗಲು ಸಹಕಾರವಾಗಲಿದೆ. \ No newline at end of file diff --git a/eesanje/url_46_136_5.txt b/eesanje/url_46_136_5.txt new file mode 100644 index 0000000000000000000000000000000000000000..7c40d21200d5c64b66d071433d6344b6d09fb708 --- /dev/null +++ b/eesanje/url_46_136_5.txt @@ -0,0 +1,9 @@ +ಒಂದು ವರ್ಷದಲ್ಲಿ ಕಾಂಗ್ರೆಸ್‌‍ ಸರ್ಕಾರ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? : ಎಚ್‌.ಡಿ ರೇವಣ್ಣ +ಹಾಸನ,ಮೇ.23-ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ. ಅವರ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ ಎಂದು ಶಾಸಕ ಎಚ್‌.ಡಿ ರೇವಣ್ಣ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಏನು ಕೊಡುಗೆ ಕೊಡಿಸಿದ್ದಾರೆ. ನಾವು ಶಾಲಾ-ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟಿ ತೋರಿಸಿದ್ದೇವೆ ಎಂದರು . +ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದೆ ರಾಜ್ಯದಲ್ಲಿ ಯಾವುದಾದರೂ ರಸ್ತೆ ಗುಂಡಿ ಮುಚ್ಚಿದ್ದಾರೆಯೇ? ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರ ಆಡಳಿತದಲ್ಲಿ 1500 ಹೈಸ್ಕೂಲು, 240 ಪ್ರಥಮ ದರ್ಜೆ ಕಾಲೇಜು ತೆರಿಯಲಾಗಿತ್ತು , ಖಾಲಿ ಇದ್ದಂತಹ ನೂರಾರು ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಅವರ ಅವಧಿಯಲ್ಲಿಯೇ ಎಂದರು . +50 ವರ್ಷ ಆಡಳಿತದಲ್ಲಿ ಇದ್ದಂತಹ ಕಾಂಗ್ರೆಸ್‌‍ ಸರ್ಕಾರ ಏನು ಮಾಡಲು ಹಾಗಿರಲಿಲ್ಲ ಕುಮಾರಸ್ವಾಮಿ ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ ಇಡೀ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು , ಕುಮಾರಸ್ವಾಮಿ, ನಮ್ಮ ಜೆಡಿಎಸ್‌‍ ಶಾಸಕರು ಎಂದರು . +ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆಯನ್ನು ತೆರೆದಿಲ್ಲ ಎಂದು ಹೇಳಿದ ಅವರು ಶಿಕ್ಷಕರ ಮಕ್ಕಳ 10% ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದರು.ಎಸ್‌‍ ಎಸ್‌‍ ಎಲ್‌ ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈಗ 15ನೇ ಸ್ಥಾನದಲ್ಲಿದೆ ನಮ್ಮ ಸರ್ಕಾರ ಆಡಳಿತದ ಅವಧಿಯಲ್ಲಿ ಮೊದಲನೇ ಸ್ಥಾನದಲ್ಲಿತ್ತು . ಈ ರೀತಿ ಆಗಲು ಕಾರಣ ಯಾರು? ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು . +ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶವನ್ನು ಜನತೆಯ ಶಕ್ತಿಗೆ ಬಿಟ್ಟಿದ್ದೇನೆ, ಜನತೆಯ ತೀರ್ಪಿಗೆ ತಲೆಬಾಗುತ್ತೇನೆ . ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡಲ್ಲ ಅಧಿಕಾರ ಇದ್ದರೂ ಕೆಲಸ ಮಾಡುತ್ತೇವೆ. ಅಧಿಕಾರ ಇಲ್ಲದಿದ್ದರೂ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಎರಡು ಪ್ರಕರಣ ದಾಖಲು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ರೇವಣ್ಣ ಅವರು ಯಾರು ಆತಂಕ ಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತೆ. ಟೈಮ್‌ ಬೇಕು ಅಷ್ಟೇ ! ನಮ್ಮ ಜಿಲ್ಲೆಯ ಜನರನ್ನು 60 ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನಿದ್ದೇನೆ ಎ. ಮಂಜು, ಸ್ವರೂಪ್ರಕಾಶ್‌ ಇದ್ದಾರೆ ಎಂದರು. ಯಾರು ಭಯಪಡುವ ಆತಂಕ ಪಡುವ ಅಗತ್ಯವಿಲ್ಲ ನನಗೂ ಜಿಲ್ಲೆಯ ಜನ 25 ವರ್ಷ ಆಶೀರ್ವಾದ ಮಾಡಿದ್ದಾರೆ. +48 ಗಂಟೆಗಳಲ್ಲಿ ಪ್ರಜ್ವಲ್‌ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ವಿಚಾರವಾಗಿ, ಕೋರ್ಟ್‌ ನಲ್ಲಿ ಕೇಸ್‌‍ ಇದ್ದಾಗ ನಾನು ಮಾತನಾಡಲ್ಲ ಎಂದರು. ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಎ.ಮಂಜು ಅವರು ಅದರ ಬಗ್ಗೆ ಮಾತನಾಡಲು ಆಗಲ್ಲ ಎಂದರು. +ಶಾಸಕ ಸ್ವರೂಪ್‌ ಪ್ರಕಾಶ್‌ , ಜೆಡಿಎಸ್‌‍ ಜಿಲ್ಲಾ ಘಟಕದ ಅಧ್ಯಕ್ಷ ಕೆ ಎಸ್‌‍ ಲಿಂಗೇಶ್‌ , ದಕ್ಷಿಣ ಶಿಕ್ಷರ ಕ್ಷೇತ್ರದ ಜೆಡಿಎಸ್‌‍ ಬಿಜೆಪಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ನಿರಂಜನ್‌ ಮೂರ್ತಿ , ಜೆಡಿಎಸ್‌‍ ಮುಖಂಡರಾದ ಬಿ ವಿ ಕರೀಗೌಡ , ರಾಜೇಗೌಡ , ಜೆಡಿಎಸ್‌‍ ತಾಲ್ಲೂಕು ಘಟಕದ ಅಧ್ಯಕ್ಷ ಎಸ್‌‍ ದ್ಯಾವೇಗೌಡ , ಎಸ್‌‍ ಮಂಜೇಗೌಡ , ದೊಡ್ಡ ದಿಣ್ಣೆ ಸೋಮಶೇಖರ್‌ ಇದ್ದರು. \ No newline at end of file diff --git a/eesanje/url_46_136_6.txt b/eesanje/url_46_136_6.txt new file mode 100644 index 0000000000000000000000000000000000000000..ee1c3ba4d3b426e587146f46ad1677a7eefcbb49 --- /dev/null +++ b/eesanje/url_46_136_6.txt @@ -0,0 +1,13 @@ +ಮೇಲ್ಮನೆ ಚುನಾವಣೆಗೆ ಆಕಾಂಕ್ಷಿಗಳ ಲಾಬಿ ಜೋರು + +ಬೆಂಗಳೂರು, ಮೇ 23-ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಅವಕಾಶ ಗಿಟ್ಟಿಸಲು 50ಕ್ಕೂ ಹೆಚ್ಚು ಆಕಾಂಕ್ಷಿಗಳು ಬೆಂಗಳೂರಿನಿಂದ ದಿಲ್ಲಿಯವರೆಗೂ ಲಾಬಿ ನಡೆಸಲಾರಂಭಿಸಿದ್ದಾರೆ.ಅರವಿಂದ್‌ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಡಾ.ಕೆ.ಗೋವಿಂದರಾಜು, ಡಾ.ತೇಜಸ್ವಿನಿ ಗೌಡ, ಮುನಿರಾಜುಗೌಡ, ಕೆ.ಪಿ.ನಂಜುಂಡಿ, ಬಿ.ಎಂ.ಫಾರುಖ್‌, ರಘುನಾಥರಾವ್‌ ಮಲ್ಕಾಪುರೆ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರು ಜೂನ್‌ 17ಕ್ಕೆ ನಿವೃತ್ತರಾಗುತ್ತಿದ್ದಾರೆ. +ಮೇ 27 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡು ಜೂನ್‌ 13 ಕ್ಕೆ ಚುನಾವಣೆ ನಡೆಯಲಿದೆ. 11 ಸ್ಥಾನಗಳ ಪೈಕಿ ಕಾಂಗ್ರೆಸ್‌‍ 7, ಬಿಜೆಪಿ 3, ಜೆಡಿಎಸ್‌‍ 1 ಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲು ಶಾಸಕರ ಸಂಖ್ಯಾಬಲ ಹೊಂದಿದೆ.ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ 7 ಸ್ಥಾನಗಳಿಗೆ ಆಕಾಂಕ್ಷಿಗಳ ಸಂಖ್ಯೆ ದಂಡಿಯಾಗಿದೆ. ಹಾಲಿ ಸದಸ್ಯರ ಪೈಕಿ ಸಣ್ಣ ನೀರಾವರಿ ಸಚಿವ ಎನ್‌.ಎಸ್‌‍.ಬೋಸರಾಜ್‌ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು ಮರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. +ಅರವಿಂದ ಕುಮಾರ್‌ ಅರಳಿ, ಹರೀಶ್‌ಕುಮಾರ್‌ ಅವರು ಮತ್ತೊಮೆ ಅವಕಾಶ ಕೇಳುತ್ತಿದ್ದಾರೆ. ಇತ್ತ ಬಿಜೆಪಿಯಲ್ಲಿದ್ದ ತೇಜಸ್ವಿನಿ ರಮೇಶ್‌ ಮತ್ತು ಕೆ.ಪಿ.ನಂಜುಂಡಿ ಅವರು ಲೋಕಸಭಾ ಚುನಾವಣೆಗೂ ಮುನ್ನವೇ ವಿಧಾನಪರಿಷತ್‌ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಸೇರಿದ್ದು, ಮತ್ತೊಮೆ ಮೇಲನೆ ಪ್ರವೇಶಿಸುವ ಉಮೇದಿನಲ್ಲಿದ್ದಾರೆ. +ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ಹೆಸರು ಪ್ರಬಲವಾಗಿ ಕೇಳಿಬಂದಿದೆ. ತಂದೆಗಾಗಿ ವರುಣ ಕ್ಷೇತ್ರವನ್ನು ಬಿಟ್ಟುಕೊಟ್ಟ ಯತೀಂದ್ರ ಅವರಿಗೆ ವಿಧಾನಪರಿಷತ್‌ನಲ್ಲಿ ಅವಕಾಶ ಕಲ್ಪಿಸಬೇಕೆಂಬ ಒತ್ತಾಯಗಳಿವೆ.ಉನ್ನತ ಮೂಲಗಳ ಪ್ರಕಾರ, 7 ಸ್ಥಾನಗಳಲ್ಲಿ ಕಾಂಗ್ರೆಸ್‌‍ ಒಕ್ಕಲಿಗ ಸಮುದಾಯಕ್ಕೆ 2, ಹಿಂದುಳಿದ ವರ್ಗಕ್ಕೆ 2, ಪರಿಶಿಷ್ಟ ಜಾತಿಗೆ 2, ಲಿಂಗಾಯತ ಸಮುದಾಯಕ್ಕೆ 1 ಸ್ಥಾನ ನೀಡುವ ಚಿಂತನೆ ನಡೆಸಿದೆ ಎನ್ನಲಾಗಿದೆ. +ಡಾ.ಕೆ.ಗೋವಿಂದರಾಜು ಅವರು ಪುನರ್‌ ಆಯ್ಕೆಯಾಗುವ ಸಾಧ್ಯತೆ ಇದೆ. ಒಕ್ಕಲಿಗ ಕೋಟಾದ ಒಂದು ಸ್ಥಾನ ಭರ್ತಿಯಾಗಲಿದ್ದು, ಮತ್ತೊಂದು ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆಯಾಗಬೇಕಿದೆ. ಎನ್‌.ಎಸ್‌‍.ಬೋಸರಾಜು ಪುನರ್‌ ಆಯ್ಕೆಯಾಗಿದ್ದೇ ಆದರೆ ಓಬಿಸಿ ವರ್ಗದ ಒಂದು ಸ್ಥಾನ ಮಾತ್ರ ಬಾಕಿ ಉಳಿಯಲಿದೆ. +ಮಹಿಳೆಯರಿಗೂ ಅವಕಾಶ ನೀಡುವ ಚರ್ಚೆಗಳಾಗಿದ್ದು, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಮಹಾನಗರ ಘಟಕದ ಮಾಜಿ ಅಧ್ಯಕ್ಷೆ ಕಮಲ ಸಿ.ರಾಜಣ್ಣ ಅವರ ಹೆಸರುಗಳು ಕೇಳಿಬಂದಿವೆ.ಪರಿಶಿಷ್ಟ ಜಾತಿಯ 2 ಕ್ಷೇತ್ರಗಳ ಪೈಕಿ ಒಂದನ್ನು ಬಲಗೈಗೆ, ಮತ್ತೊಂದನ್ನು ಲಂಬಾಣಿ ಅಥವಾ ಬೋವಿ ಸಮುದಾಯಕ್ಕೆ ನೀಡುವ ಚರ್ಚೆ ನಡೆದಿದೆ. ಇದರ ನಡುವೆ ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಅವಕಾಶ ವಂಚಿತರು, ಬಂಡಾಯಗಾರರನ್ನು ಸಮಾಧಾನಪಡಿಸುವಾಗ ವಿಧಾನಪರಿಷತ್‌ನ ಸದಸ್ಯರನ್ನಾಗಿ ಮಾಡುವ ಆಸೆ ತೋರಿಸಲಾಗಿತ್ತು. ಆ ರೀತಿ ಅವಕಾಶಕ್ಕಾಗಿ ಕಾಯುತ್ತಿರುವವರ ಪೈಕಿ ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು ಬಹಳಷ್ಟು ಮಂದಿ ಇದ್ದಾರೆ. + + +ಪ್ರಮುಖವಾಗಿ ಬಿ.ಎಲ್‌.ಶಂಕರ್‌, ವಿ.ಆರ್‌.ಸುದರ್ಶನ್‌, ಹಿರಿಯರ ಪೈಕಿ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿಯ ಆಡಳಿತಾತಕ ಪ್ರಧಾನ ಕಾರ್ಯದರ್ಶಿ ವಿಜಯ್‌ ಕೆ.ಮುಳಗುಂದ್‌, 15ಕ್ಕೂ ಹೆಚ್ಚು ಅಧ್ಯಕ್ಷರುಗಳ ಜೊತೆ ಕಚೇರಿ ಕಾರ್ಯದರ್ಶಿಯಾಗಿ ಯಶಸ್ವಿ ಕಾರ್ಯ ನಿರ್ವಹಿಸಿರುವ ಎನ್‌.ನಾರಾಯಣ್‌, ಹಿಂದುಳಿದ ವರ್ಗದ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್‌‍.ದ್ವಾರಕಾನಾಥ್‌, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಖ್‌ ಅಹಮದ್‌, ಕೆಪಿಸಿಸಿ ಖಜಾಂಚಿ ವಿನಯ್‌ ಕಾರ್ತಿಕ್‌, ಪದವೀಧರರ ಕ್ಷೇತ್ರದ ಅಧ್ಯಕ್ಷ ನಟರಾಜ್‌ಗೌಡ, ಬಿಬಿಎಂಪಿ ಮಾಜಿ ಮೇಯರ್‌ ರಾಮಚಂದ್ರಪ್ಪ, ಮುಂಡರಗಿ ನಾಗರಾಜ್‌, ಎಂ.ಎಸ್‌‍.ಬಸವರಾಜು, ಎಐಸಿಸಿಯಲ್ಲಿ ಕೆಲಸ ಮಾಡಿದ ಸೂರಜ್‌ ಹೆಗ್ಡೆ, ಸಂದೀಪ್‌ ಅವರು ಆಕಾಂಕ್ಷಿಗಳಾಗಿದ್ದಾರೆ. +ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ಕಳೆದ ಬಾರಿ ವಿಧಾನಸಭೆ ಹಾಗೂ ಲೋಕಸಭೆ ಎರಡಲ್ಲೂ ಟಿಕೆಟ್‌ ವಂಚಿತ ಡಾ.ಬಿ.ಸಿ.ಮುದ್ದುಗಂಗಾಧರ್‌, ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ ಮಾಜಿ ಸಂಸದ ಕರಡಿ ಸಂಗಣ್ಣ ಮತ್ತಿತರರು ಆಕಾಂಕ್ಷಿಗಳಾಗಿದ್ದಾರೆ.ಈ ಬಾರಿ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬುದು ಹಿರಿಯ ನಾಯಕರ ಇರಾದೆಯಾಗಿದೆ. ಪದವೀಧರ ಹಾಗೂ ಶಿಕ್ಷಕರ ಒಟ್ಟು 6 ಕ್ಷೇತ್ರಗಳಲ್ಲಿ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗಳಲ್ಲಿ ವಲಸಿಗರಿಗೆ ಕಾಂಗ್ರೆಸ್‌‍ ಮಣೆ ಹಾಕಿದೆ. +ಈ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಆಯ್ಕೆಯಾಗುವ ಕ್ಷೇತ್ರಗಳಿಗೆ ಪಕ್ಷನಿಷ್ಠರಿಗೆ ಅವಕಾಶ ನೀಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಹೈಕಮಾಂಡ್‌ನ ಸೂಚನೆಗಳು ಮತ್ತು ರಾಜ್ಯ ನಾಯಕರುಗಳ ನಿರ್ಧಾರಗಳು ಯಾವ ರೀತಿ ಇರಲಿವೆ ಎಂಬುದು ಕುತೂಹಲ ಕೆರಳಿಸಿವೆ. \ No newline at end of file diff --git a/eesanje/url_46_136_7.txt b/eesanje/url_46_136_7.txt new file mode 100644 index 0000000000000000000000000000000000000000..733a0bab05911199ff62ab8b7bfc19e5485dd363 --- /dev/null +++ b/eesanje/url_46_136_7.txt @@ -0,0 +1,8 @@ +ಚುನಾವಣಾ ಆಯೋಗ ಕಾಂಗ್ರೆಸ್‌‍ ಪಕ್ಷವನ್ನು ಬೆದರಿಸುವುದನ್ನು ಬಿಟ್ಟು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲಿ : ಹರಿಪ್ರಸಾದ್‌ +ಬೆಂಗಳೂರು, ಮೇ 23-ಚುನಾವಣಾ ಆಯೋಗ ಕಾಂಗ್ರೆಸ್‌‍ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು, ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಿಲಿ ಎಂದು ಕಾಂಗ್ರೆಸ್‌‍ನ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಒತ್ತಾಯಿಸಿದ್ದಾರೆ. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯೂ ಹಿಂದೆಂದೂ ನಡೆಯದ ದ್ವೇಷ, ಅರಾಜಕತೆ, ಪಕ್ಷಪಾತಿತನದಿಂದಲೇ ನಡೆಯುತ್ತಿರುವುದನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಇಂತಹ ಅಪಾಯವನ್ನು ದೇಶದ ಜನರಿಂದ ಮುಚ್ಚಿಡಬೇಕೆಂದು ಚುನಾವಣಾ ಆಯೋಗ ತಾಕೀತು ಮಾಡಿರುವುದು ಆಶ್ಚರ್ಯ ಎಂದು ಹೇಳಿದ್ದಾರೆ. +ಬಿಜೆಪಿ ಸಂಸದರು, ಹಿರಿಯ ನಾಯಕರುಗಳು ಈ ಬಾರಿ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನ ಬದಲಾವಣೆ ಮಾಡಿಯೇ ಸಿದ್ಧ ಎಂದು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ದೇಶದ ಹಿತಕ್ಕಾಗಿ ಸಂವಿಧಾನ ಬದಲಾವಣೆ ಮಾಡುವುದು ಅನಿವಾರ್ಯ ಎಂದು ಬಹಿರಂಗ ಚುನಾವಣಾ ಪ್ರಚಾರದಲ್ಲಿ ರಾಜಸ್ತಾನದ ನಾರ್ಗೌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜ್ಯೋತಿ ಮಿರ್ಧಾ ಹೇಳಿಕೆ ನೀಡಿದ್ದಾರೆ. +ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಹೊಸ ಸಂವಿಧಾನ ನೀಡುತ್ತೇವೆ ಎಂದು ಅಯೋಧ್ಯೆಯ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಲಲ್ಲೂ ಸಿಂಗ್‌ ಕೂಡಿ ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಹಾಲಿ ಸಂಸದ, ಕೇಂದ್ರದ ಮಾಜಿ ಮಂತ್ರಿ ಅನಂತ್‌ ಕುಮಾರ್‌ ಹೆಗಡೆ ಸಂವಿಧಾನ ಬದಲಾವಣೆ ಮಾಡಲು 400 ಸ್ಥಾನಗಳು ಬಿಜೆಪಿಗೆ ಅನಿವಾರ್ಯ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇಂತಹ ಅಪಾಯಕಾರಿ ಹೇಳಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿಯಾಗಲಿ, ಬಿಜೆಪಿ ಪಕ್ಷವಾಗಲಿ ಕನಿಷ್ಟ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಆಕ್ಷೇಪಿಸಿದ್ದಾರೆ. +ಪ್ರಧಾನಿ ಮೋದಿಯ ಸುತ್ತಮುತ್ತ ಸಂವಿಧಾನ ಬದಲಾಯಿಸುವವರನ್ನೇ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಾರೆ. ಪ್ರಧಾನಿಯ ಆರ್ಥಿಕ ಮುಖ್ಯ ಸಲಹೆಗಾರ ಬಿಬೇಕ್‌ ದೇಬ್ರಾಯ ಹೊಸ ಸಂವಿಧಾನದ ಅಗತ್ಯವಿದೆ ಎಂದು ಅಂಕಣವೇ ಬರೆದಿದ್ದು ಜಗಜ್ಜಾಹೀರಾಗಿದೆ. ಸಂವಿಧಾನ ಹಾಗೂ ಮೀಸಲಾತಿ ವಿರೋಧಿ ಮನಸ್ಥಿತಿ ಬಿಜೆಪಿಯ ಹುಟ್ಟಿನಿಂದಲೇ ಇರುವುದು ಗೌಪ್ಯ ವಿಷಯವಲ್ಲ. ಆದರೆ ಸಂವಿಧಾನದಡಿಯಲ್ಲಿ ಕಾರ್ಯ ನಿರ್ವಹಿಸಬೇಕಾದ ಚುನಾವಣಾ ಆಯೋಗದ ಮೌನದ ಹಿಂದಿನ ಉದ್ದೇಶವೇನು? ಈ ಕ್ಷಣದವರೆಗೂ ನೋಟಿಸ್‌‍ ನೀಡಲು ಕೂಡ ಯಾರ ಒಪ್ಪಿಗೆಗೆ ಕಾಯುತ್ತಿದೆ? ದೇಶದ ಅತಿದೊಡ್ಡ ವಿರೋಧ ಪಕ್ಷವನ್ನು ಬೆದರಿಸುತ್ತಿರುವುದು ಯಾರ ಅಣತಿಯಂತೆ? ಎಂದು ಪ್ರಶ್ನಿಸಿದ್ದಾರೆ. +ದೇಶದ ಸಂವಿಧಾನವನ್ನು ರದ್ದುಪಡಿಸಬಹುದು ಎಂಬಂತಹ ತಪ್ಪು ಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್‌‍ ಪಕ್ಷವನ್ನು ತಾಕೀತು ಮಾಡುತ್ತಿರುವುದನ್ನು ನೋಡಿದರೆ ಸಂವಿಧಾನ ಬದಲಾವಣೆ ಮಾಡುವ ಬಿಜೆಪಿಯ ಉದ್ದೇಶಕ್ಕೆ ಚುನಾವಣಾ ಆಯೋಗದ ಸಮಿತಿ ಇದೆಯೇ? ಸಂವಿಧಾನ ಅಪಾಯದಲ್ಲಿರುವುದು ದೇಶದ ಜನರಿಗೆ ತಿಳಿಸುವುದು ತಪ್ಪೇ? ಧರ್ಮದ ಆಧಾರದಲ್ಲಿ ಪ್ರಧಾನಿಯಾದಿಯಾಗಿ ಬಿಜೆಪಿಯ ನಾಯಕರು ಬಹಿರಂಗವಾಗಿ ದ್ವೇಷ ಭಾಷಣವನ್ನು ಮಾಡುತ್ತಿದ್ದರೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. +ಭಾರತದ ಚುನಾವಣಾ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಚುನಾವಣಾ ಆಯೋಗದ ಪಕ್ಷಪಾತಿತನ ಹಾಗೂ ನಿಷ್ಕ್ರಿಯತೆಯನ್ನು ದೇಶ ನೋಡುತ್ತಿದೆ. ದೇಶದ ಮತದಾರರೂ ಚುನಾವಣಾ ಆಯೋಗದ ಮೇಲಿನ ಸಂಪೂರ್ಣ ಭರವಸೆ ಕಳೆದುಕೊಳ್ಳುವ ಮೊದಲು, ತನ್ನ ಘನತೆ, ಪರಂಪರೆಗೆ ಪೂರಕವಾಗಿ ಕಾರ್ಯ ನಿರ್ವಹಿಸಲಿ ಎಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_136_8.txt b/eesanje/url_46_136_8.txt new file mode 100644 index 0000000000000000000000000000000000000000..93471dcee5852e63785439819709d8210c563cd0 --- /dev/null +++ b/eesanje/url_46_136_8.txt @@ -0,0 +1,9 @@ +ಪ್ರಜ್ವಲ್‌ ಪಾಸ್‌‍ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿಎಂ 2ನೇ ಬಾರಿ ಪತ್ರ +ಬೆಂಗಳೂರು, ಮೇ 23-ಪೆನ್‌ಡ್ರೈವ್‌ ಪ್ರಕರಣದ ಕೇಂದ್ರಬಿಂದು ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಎರಡನೇ ಬಾರಿ ಪತ್ರ ಬರೆದಿದ್ದಾರೆ. +ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಂಡರೆ ಅವರು ಭಾರತಕ್ಕೆ ಮರಳಬೇಕಾಗುತ್ತದೆ. ಅವರನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ವಿವರಿಸಿದ್ದಾರೆ. ಗಂಭೀರ ಸ್ವರೂಪದ ಸರಣಿ ಕೃತ್ಯಗಳಲ್ಲಿ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವುದು ಜನರಿಗೆ ಘಾಸಿಯುಂಟು ಮಾಡಿರುವುದಷ್ಟೇ ಅಲ್ಲ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕಳವಳಕ್ಕೆ ಕಾರಣವಾಗಿದೆ. +ಪ್ರಜ್ವಲ್‌ ರೇವಣ್ಣ ಅವರ ಕೃತ್ಯ ನಾಚಿಕೆಗೇಡು. ಮಾಜಿ ಪ್ರಧಾನಿಗಳ ಮೊಮಗ ಮತ್ತೊಮೆ ಮರು ಆಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ. +ಕೃತ್ಯಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್‌ ದಾಖಲಾಗುವ ಕೆಲವೇ ಗಂಟೆಗಳ ಮೊದಲು ಹಾಗೂ ಲೋಕಸಭಾ ಚುನಾವಣೆ ಮುಗಿದ ಬಳಿಕ ಏ.22 ರಂದು ರಾಜತಾಂತ್ರಿಕ ಪಾಸ್‌‍ಪೋರ್ಟ್‌ (ಸಂಖ್ಯೆ ಬಿ 1135500) ಬಳಸಿ ಜರ್ಮನಿಗೆ ಪರಾರಿಯಾಗಿದ್ದಾರೆ. ರಾಜತಾಂತ್ರಿಕ ಶಿಷ್ಟಾಚಾರಗಳನ್ನು ಅವರು ದೇಶ ಬಿಟ್ಟು ಪರಾರಿಯಾಗಲು ಮತ್ತು ಅಪರಾಧ ಪ್ರಕರಣಗಳ ವಿಚಾರಣೆಯಿಂದ ತಪ್ಪಿಸಿಕೊಳ್ಳಲು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. +ಕರ್ನಾಟಕ ಸರ್ಕಾರ ಪ್ರಾಮಾಣಿಕ ಕ್ರಮ ಕೈಗೊಂಡು ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಿದೆ. ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ದೌರ್ಜನ್ಯವನ್ನು ಎಸ್‌‍ಐಟಿ ತನಿಖೆ ನಡೆಸುತ್ತಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಬ್ಲೂ ಕಾರ್ನರ್‌ ನೋಟೀಸ್‌‍ ಕೂಡ ಜಾರಿಯಾಗಿದೆ. +ತನಿಖಾಧಿಕಾರಿಗಳು ಸೆಕ್ಷನ್‌ 41 ಎ ಸಿಆರ್‌ಪಿಸಿ ಅಡಿ ಎರಡು ನೋಟೀಸ್‌‍ಗಳನ್ನು ಜಾರಿಗೊಳಿಸಿದ್ದಾರೆ. ಪ್ರಜ್ವಲ್‌ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ಘನತೆಗೆ ಕುಂದು ತಂದಿರುವುದು, ಅಶ್ಲೀಲ ವಿಡಿಯೋ ಸೇರಿದಂತೆ ಹಲವು ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತರಿಗೆ ಬೆದರಿಕೆ ಹಾಕಿರುವ ಆರೋಪವೂ ಸೇರಿದೆ. +ಆರೋಪಿಯನ್ನು ಬಂಧಿಸಿ ಕರೆತರಲು ಕೇಂದ್ರಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ. ಅನಗತ್ಯವಾದ ಶಿಷ್ಟಾಚಾರಗಳನ್ನು ಪ್ರಸ್ತಾಪಿಸಿ ಉದ್ದೇಶಪೂರಕವಾಗಿಯೇ ವಿಳಂಬ ಮಾಡಲಾಗುತ್ತಿದೆ. ಈ ಹಿಂದೆಯೇ ತಾವು ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿ ತಮಗೆ ಪತ್ರ ಬರೆದಿದ್ದು, ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೆ. ಕೃತ್ಯದ ಗಂಭೀರತೆಯನ್ನು ಅರ್ಥೈಸಿಕೊಂಡು ಆ ಕ್ಷಣಕ್ಕೆ ಕ್ರಮ ತೆಗೆದುಕೊಳ್ಳಬೇಕಿತ್ತು ಎಂದು ಮುಖ್ಯಮಂತ್ರಿ ಅಸಹನೆ ವ್ಯಕ್ತಪಡಿಸಿದ್ದಾರೆ. +ಈಗಲಾದರೂ ಇದನ್ನು ಅತ್ಯಂತ ಗಂಭೀರ ಎಂದು ಭಾವಿಸಿ ಕಾನೂನು ಕ್ರಮಗಳನ್ನು ಕೈಗೊಂಡು ಪಾಸ್‌‍ಪೋರ್ಟ್‌ ಆ್ಯಕ್ಟ್‌ 1967 ಸೆಕ್ಷನ್‌ 10 (3) (ಎಚ್‌) ಅಡಿ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸಿ ಸಾರ್ವಜನಿಕ ಹಿತಾಸಕ್ತಿಯಿಂದ ಆತ ರಾಜ್ಯಕ್ಕೆ ಮರಳುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_136_9.txt b/eesanje/url_46_136_9.txt new file mode 100644 index 0000000000000000000000000000000000000000..b564144aaff09ceabe0423cb501096882d1cda1f --- /dev/null +++ b/eesanje/url_46_136_9.txt @@ -0,0 +1,6 @@ +ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದು? +ನವದೆಹಲಿ, ಮೇ 23 (ಪಿಟಿಐ)ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಚಾಲನೆ ನೀಡಿದೆ. ಪ್ರಜ್ವಲ್‌ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರದಿಂದ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಪತ್ರ ಬಂದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಮಾಜಿ ಪ್ರಧಾನಿ ಹೆಚ್‌‍.ಡಿ.ದೇವೇಗೌಡರ ಮೊಮಗ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದ ಕೇಂದ್ರಬಿಂದುವಾಗಿದ್ದು, ತಮ್ಮ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಮತದಾನ ನಡೆದ ಒಂದು ದಿನದ ನಂತರ ದೇಶ ತೊರೆದಿದ್ದಾರೆ ಅವರು ಇದುವರೆಗೂ ಎಲ್ಲಿದ್ದಾರೆ ಎಂಬ ಸುಳಿವು ಯಾರಿಗೂ ಲಭಿಸಿಲ್ಲ. +ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದಂತೆ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸಲು ಕರ್ನಾಟಕ ಸರ್ಕಾರದಿಂದ ಎಂಇಎ ಪತ್ರವನ್ನು ಸ್ವೀಕರಿಸಿದೆ, ಇದನ್ನು ಪ್ರಕ್ರಿಯೆಗೊಳಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಜೆಡಿಎಸ್‌‍ ಮುಖಂಡ ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿರುವ ಹಿನ್ನೆಲೆಯಲ್ಲಿ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಪಡಿಸುವ ಮನವಿಗೆ ಕೇಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದರು. ಎಸ್‌‍ಐಟಿ ಸಲ್ಲಿಸಿದ ಅರ್ಜಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಜ್ವಲ್‌ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದೆ. +ಈ ತಿಂಗಳ ಆರಂಭದಲ್ಲಿ, ವಿದೇಶಾಂಗ ಇಲಾಖೆ ವಕ್ತಾರ ರಣಧೀರ್‌ ಜೈಸ್ವಾಲ್‌‍ ಅವರು, ರೇವಣ್ಣ ಅವರು ರಾಜತಾಂತ್ರಿಕ ಪಾಸ್‌‍ಪೋರ್ಟ್‌ನಲ್ಲಿ ಜರ್ಮನಿಗೆ ಪ್ರಯಾಣಿಸಿದ್ದಾರೆ ಮತ್ತು ಪ್ರವಾಸಕ್ಕೆ ರಾಜಕೀಯ ಅನುಮತಿಯನ್ನು ಪಡೆದಿಲ್ಲ ಎಂದು ಹೇಳಿದ್ದರು. \ No newline at end of file diff --git a/eesanje/url_46_137_1.txt b/eesanje/url_46_137_1.txt new file mode 100644 index 0000000000000000000000000000000000000000..2354e9c9cb6db9fce1c4166ef876fe4285a49673 --- /dev/null +++ b/eesanje/url_46_137_1.txt @@ -0,0 +1,5 @@ +400 ಮಹಿಳೆಯರ ಅತ್ಯಾಚಾರ ಹೇಳಿಕೆ : ರಾಹುಲ್‌ ಗಾಂಧಿ ವಿರುದ್ಧ ಪೊಲೀಸರಿಗೆ ಜೆಡಿಎಸ್‌‍ ದೂರು +ಬೆಂಗಳೂರು, ಮೇ 22-ಶಿವಮೊಗ್ಗ ಮತ್ತು ರಾಯಚೂರಿನ ಚುನಾವಣಾ ರ್ಯಾಲಿಗಳಲ್ಲಿ ಸಂಸದ ರಾಹುಲ್‌ಗಾಂಧಿಯವರು ಪ್ರಜ್ವಲ್‌ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ ಎಂಬ ಆರೋಪದ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಜೆಡಿಎಸ್‌‍ ನಿಯೋಗ ಮನವಿ ಸಲ್ಲಿಸಿದೆ. +ವಿಧಾನಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಮಂಜೇಗೌಡ, ಜೆಡಿಎಸ್‌‍ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ ಗೌಡ ಹಾಗೂ ವಿಧಾನಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಅವರು, ಈ ಸಂಬಂಧ ಪೊಲೀಸ್‌‍ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ರಾಹುಲ್‌ಗಾಂಧಿಯವರು ಚುನಾವಣಾ ರ್ಯಾಲಿಗಳಲ್ಲಿ ನೀಡಿರುವ ಹೇಳಿಕೆ ಪತ್ರಿಕೆಗಳಲ್ಲಿ ವರದಿಯಾಗಿದ್ದು, ವಿದ್ಯುನಾನ ಮಾಧ್ಯಮದಲ್ಲಿ ಪ್ರಸಾರವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. +ರಾಹುಲ್‌ಗಾಂಧಿಯವರು ಇದೊಂದು ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ ಎಂದು ಆಪಾದಿಸಿದ್ದರು. ಆದರೂ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಇದುವರೆಗೂ ರಾಹುಲ್‌ಗಾಂಧಿಯವರಿಗೆ ನೋಟೀಸ್‌‍ ನೀಡಿಲ್ಲ ಹಾಗೂ ಅವರಿಂದ ಮಾಹಿತಿಯನ್ನು ಪಡೆದಿಲ್ಲ ಎಂದು ಮನವಿ ಪತ್ರದಲ್ಲಿ ಆರೋಪಿಸಿದ್ದಾರೆ. +ರಾಹುಲ್‌ಗಾಂಧಿಯವರು ನಿರ್ದಿಷ್ಟ ಹೇಳಿಕೆ ನೀಡಿರುವುದರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ 400 ಮಹಿಳೆಯರ ಮಾಹಿತಿ ವಿವರಗಳನ್ನು ಅವರು ತಿಳಿದಿದ್ದಾರೆ ಎಂದು ಆಪಾದಿಸಲಾಗಿದೆ.ರಾಹುಲ್‌ಗಾಂಧಿ ಅವರು ಹೇಳಿದಂತೆ ಸಂತ್ರಸ್ತ 400 ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ ಪತ್ರದಲ್ಲಿ ಅವರು ಕೋರಿದ್ದಾರೆ. \ No newline at end of file diff --git a/eesanje/url_46_137_10.txt b/eesanje/url_46_137_10.txt new file mode 100644 index 0000000000000000000000000000000000000000..f7a6820cc6f8fde1535e177a1e2e31bc7bf89d2c --- /dev/null +++ b/eesanje/url_46_137_10.txt @@ -0,0 +1,7 @@ +ಪೌರತ್ವ ತಿದ್ದುಪಡಿ ಕಾಯ್ದೆ : ಕರ್ನಾಟಕದಲ್ಲಿ 145 ಮಂದಿಯಿಂದ ಪೌರತ್ವಕ್ಕಾಗಿ ಅರ್ಜಿ +ಬೆಂಗಳೂರು,ಮೇ22-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಕರ್ನಾಟಕದಲ್ಲಿ 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಅಂಚೆ ಮೂಲಗಳು ತಿಳಿಸಿವೆ. ಅಚ್ಚರಿ ಎಂದರೆ ಇವರೆಲ್ಲಾ ರಾಜ್ಯದ ಎರಡು ಜಿಲ್ಲೆಗಳವರಾಗಿದ್ದಾರೆ. +ರಾಯಚೂರಿನಿಂದ 143 ಮತ್ತು ದಕ್ಷಿಣ ಕನ್ನಡದಿಂದ ಎರಡು ಅರ್ಜಿಗಳು ಬಂದಿವೆ. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದ ಹಿಂದೂಗಳು. ಇದು ನಿರಂತರ ಪ್ರಕ್ರಿಯೆಯಾಗಿರುವುದರಿಂದ ಅರ್ಜಿಗಳನ್ನು ಕಳುಹಿಸಲು ಯಾವುದೇ ಗಡುವು ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.ಈ ವ್ಯಕ್ತಿಗಳು ರಾಯಚೂರಿಗೆ ಯಾವಾಗ ಸ್ಥಳಾಂತರಗೊಂಡರು ಎಂಬುದು ನಮಗೆ ತಿಳಿದಿಲ್ಲ, ಆದರೆ ನಮ್ಮ ವಿಭಾಗೀಯ ಕಚೇರಿಗೆ 143 ಅರ್ಜಿಗಳು ಬಂದಿವೆ. ಬೆಂಗಳೂರಿನಲ್ಲಿ ನಾಲ್ಕು ವಿಭಾಗೀಯ ಕಚೇರಿಗಳಿದ್ದು, ಒಂದು ಅರ್ಜಿಯನ್ನೂ ಸ್ವೀಕರಿಸಿಲ್ಲ ಎಂದು ಮತ್ತೊಂದು ಮೂಲ ತಿಳಿಸಿದೆ. +ಡಿಸೆಂಬರ್‌ 31, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ. ಈ ವರ್ಷದ ಮಾರ್ಚ್‌ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಿದ ನಂತರ ಅಧಿಸೂಚನೆ ಹೊರಡಿಸಲಾಯಿತು. ಅಂಚೆ ಮತ್ತು ರೈಲ್ವೆ ನೌಕರರಿಗೆ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಮತ್ತು ವಿತರಿಸಲು ಅಧಿಕಾರ ನೀಡಲಾಗಿದೆ. +ದೇಶಾದ್ಯಂತ ಸುಮಾರು 12,000 ಮಂದಿ ಅರ್ಜಿ ಸಲ್ಲಿಸಿದ್ದು, ಇತ್ತೀಚೆಗೆ 300 ಮಂದಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ. ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌‍ ಮಾಡಬೇಕಾಗುತ್ತದೆ. ಮೊದಲ ವೈಯಕ್ತಿಕ ಮೇ 25ರಂದು ರಾಯಚೂರಿನಲ್ಲಿ ನಡೆಯುತ್ತದೆ ಮತ್ತು ಅರ್ಜಿದಾರರು ಎಲ್ಲಾ ಮೂಲ ದಾಖಲೆಗಳನ್ನು ಒದಗಿಸುವ ನಿರೀಕ್ಷೆಯಿದೆ. +ಒಂದು ದಿನದಲ್ಲಿ 28 ನೀಡಿರುವುದರಿಂದ ಎಲ್ಲಾ ಅರ್ಜಿಗಳನ್ನು ಮೇ 31ರೊಳಗೆ ಪೂರ್ಣಗೊಳಿಸಲು ಅಂಚೆ ಸಿಬ್ಬಂದಿ ಯೋಜಿಸಿದ್ದಾರೆ. ಜೂನ್‌ 5ರಂದು ಇಬ್ಬರು ಅರ್ಜಿದಾರರಿಗೆ ನೀಡಿದ್ದಾರೆ, ಜೂನ್‌ 5ರೊಳಗೆ ಅಂಚೆ ಇಲಾಖೆಯ ಕೆಲಸ ಮುಗಿಯುತ್ತದೆ. ಪ್ರಕ್ರಿಯೆ ಮುಗಿದ ನಂತರ ಅಂಚೆ ಇಲಾಖೆಯು ಅರ್ಜಿಗಳನ್ನು ರಾಜ್ಯ ಮಟ್ಟದ ಅಧಿಕಾರ ಸಮಿತಿಗೆ ಕಳುಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಅವರು ಅದನ್ನು ಮತ್ತೊಮೆ ಪರಿಶೀಲಿಸುತ್ತಾರೆ ಮತ್ತು ಪರಿಶೀಲನೆಯ ವಿವರಗಳು ಮತ್ತು ದಾಖಲೆಗಳನ್ನು ಸಿಎಎ ಪೋರ್ಟಲ್‌ನಲ್ಲಿ ಅಪ್‌ಲೋಡ್‌‍ ಮಾಡಲಾಗುತ್ತದೆ. ಗೃಹ ಸಚಿವಾಲಯವು ಅರ್ಜಿಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_46_137_11.txt b/eesanje/url_46_137_11.txt new file mode 100644 index 0000000000000000000000000000000000000000..9f2aedc2990be2dbafc72c440749fb6e7d95bc0e --- /dev/null +++ b/eesanje/url_46_137_11.txt @@ -0,0 +1,9 @@ +ಚುನಾವಣೆ ಲಾಭಕ್ಕಾಗಿ ಅಶ್ಲೀಲ ವಿಡಿಯೋಗಳನ್ನ ವಿತರಿಸುದ್ದು ಅಪರಾಧವಲ್ಲವೇ..? : ಹೆಚ್ಡಿಕೆ ಪ್ರಶ್ನೆ +ಮೈಸೂರು,ಮೇ22-ಅಶ್ಲೀಲ ವಿಡಿಯೋವನ್ನು ಚುನಾವಣೆ ಲಾಭಕ್ಕಾಗಿ ವಿತರಣೆ ಮಾಡಿದ್ದು ಅಪರಾಧವಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಮಾಡಿರುವುದು ಒಂದು ಭಾಗವಾದರೆ ಅಂಥ ವಿಡಿಯೋವನ್ನು ಹಂಚಿರುವುದು ಅಪರಾಧವಲ್ಲವೇ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಕಂಡರೆ ನನಗೆ ಅಸೂಯೆ ಎಂದು ಹೇಳಿದ್ದಾರೆ. ಏಕೆ ಅಸೂಯೆ ಪಡೆಯಲಿ, ಅಧಿಕಾರ ಯಾರಪ್ಪನ ಆಸ್ತಿಯೂ ಅಲ್ಲ. ರಾಜಕಾರಣದಲ್ಲಿ ಏಳುಬೀಳು ಸಹಜ. ಭಗವಂತನ ಇಚ್ಛೆಯಂತೆ ಆಗುತ್ತದೆ. ಅದರಲ್ಲಿ ಏಕೆ ಅಸೂಯೆ ಪಡೆಯಲಿ ಎಂದು ಪ್ರಶ್ನಿಸಿದರು. +ಪ್ರಧಾನಿ ಸ್ಥಾನವನ್ನು ಅತ್ಯಂತ ಸುಲಭವಾಗಿ ತೆರವು ಮಾಡಿದ ವಂಶ ನಮದು. ಈಗಾಗಲೇ ಎಲ್ಲಾ ಅಧಿಕಾರವನ್ನು ನಾವು ನೋಡಿಯಾಗಿದೆ. ಅಧಿಕಾರ ಬೇಡವೆಂದರೂ ಬಂದಿದೆ. ನಾವೆಂದೂ ಅಧಿಕಾರವನ್ನು ಹುಡುಕಿಕೊಂಡು ಹೋಗಿರಲಿಲ್ಲ ಎಂದು ತಿರುಗೇಟು ನೀಡಿದರು. +ಮಹಾನುಭಾವರು 1980ರಲ್ಲೇ ಸಿಡಿ ಫ್ಯಾಕ್ಟ್ರಿ ಓಪನ್‌ ಮಾಡಿದ್ದರು. ಈಗಾಗಲೇ ಸಂಚಲನ ಮೂಡಿಸಿರುವ ಪೆನ್‌ಡ್ರೈವ್‌ ಮೂಲವೇ ಕಾರ್ತಿಕ್‌. ಆತ ಹಾಸನದ ಕಾಂಗ್ರೆಸ್‌‍ ಅಭ್ಯರ್ಥಿ ಮೂಲಕ ಸಂಸದ ಡಿ.ಕೆ.ಸುರೇಶ್‌ ಅವರ ಬಳಿಗೆ ಮೊದಲು ಹೋಗಿದ್ದರು. ನಂತರ ಅದನ್ನು ಸಿ.ಡಿ ಶಿವಕುಮಾರ್‌ ಕಾಪಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್‌ ಪರವಾಗಿ ಇಲ್ಲ. ಒಂದು ವೇಳೆ ಆರೋಪ ಸಾಬೀತಾಗಿ ಅಪರಾಧ ಮಾಡಿರುವುದು ದೃಢಪಟ್ಟರೆ ಕಾನೂನು ರೀತಿ ಶಿಕ್ಷೆ ಕೊಡಲಿ ಎಂದರು. +ವಕೀಲ ದೇವರಾಜೇಗೌಡ, ಮಾಜಿ ಸಂಸದ ಶಿವರಾಮೇಗೌಡ, ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ವಿತರಣೆಯ ಹಿಂದಿದ್ದಾರೆ. ಅರ್ಧ ನಿಮಿಷದಲ್ಲೇ ಎಲ್ಲವೂ ತೀರ್ಮಾನವಾಗಿದೆ ಎಂದು ಆರೋಪಿಸಿದರು. +ನನ್ನ ಬಳಿ ಇರುವ ಪೆನ್‌ಡ್ರೈವ್‌ ರಾಜ್ಯ ಸರ್ಕಾರದ ವರ್ಗಾವಣೆಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು, ಅದನ್ನು ಬಹಿರಂಗಪಡಿಸಿದರೆ ನನ್ನದೇ ಸೃಷ್ಟಿ ಎಂದು ಹೇಳುತ್ತೀರ. ಇದುವರೆಗೂ ಎಸ್‌‍ಐಟಿಗೆ ನೀಡಿರುವ ಯಾವ ಪ್ರಕರಣ ತಾರ್ಕಿಕ ಅಂತ್ಯ ಕಂಡಿದೆ ಹೇಳೀ ಎಂದರು. +ನಾನು ಮುಖ್ಯಮಂತ್ರಿಯಾಗಿದ್ದಾಗ ಯಾವ ಪ್ರಕರಣವನ್ನು ಎಸ್‌‍ಐಟಿಗೆ ಕೊಟ್ಟಿರಲಿಲ್ಲ ಎಂದ ಅವರು, ಫೋನ್‌ ಟ್ಯಾಪ್‌ ಮಾಡಲು ಅವರೇನು ಟೆರರಿಸ್ಟಾ ಎಂದು ಕೆಲವರು ಕೇಳಿದ್ದಾರೆ. ಅವರ ಸುತ್ತಮುತ್ತ ಟೆರರಿಸ್ಟ್‌ಗಳೇ ಇದ್ದಾರೆ ಎಂದು ಆಪಾದಿಸಿದರು. +ಪೆನ್‌ಡ್ರೈವ್‌ ಅವರ ಬುಡಕ್ಕೆ ಬರುತ್ತಿರುವುದನ್ನು ಗಮನಿಸಿ ಮುಖ್ಯಮಂತ್ರಿ ಯಾರೂ ಆ ಬಗ್ಗೆ ಮಾತನಾಡಬೇಡಿ ಎಂದು ಸೂಚಿಸಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಗೂ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೂ ಸಂಬಂಧವಿಲ್ಲ. ಈ ಪ್ರಕರಣದಿಂದ ನಮ ಕುಟುಂಬಕ್ಕೆ ಸ್ವಲ್ಪ ಡ್ಯಾಮೇಜ್‌ ಆಗಿರುವುದು ಸತ್ಯ. ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಸಂಪರ್ಕದಲ್ಲೂ ಇಲ್ಲ. ಈ ಸಂದರ್ಭದಲ್ಲಿ ನಾನು ವಿದೇಶಕ್ಕೆ ಹೋದರೆ ಪ್ರಜ್ವಲ್‌ ರಕ್ಷಣೆಗೆ ಹೋಗಿದ್ದಾರೆ ಎಂದು ಸುದ್ದಿ ಹಬ್ಬಿಸಿಬಿಡುತ್ತಾರೆ. ಭಯದಿಂದ ಹೋಗಿರಬಹುದು. ವಕೀಲರ ಸಲಹೆ ಪಡೆಯುವುದು ಬೇಡ, ನೈತಿಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಸ್‌‍ ಬಾ ಎಂದು ಮತ್ತೊಮೆ ಬಹಿರಂಗ ಕರೆಯನ್ನು ಕುಮಾರಸ್ವಾಮಿ ನೀಡಿದರು. \ No newline at end of file diff --git a/eesanje/url_46_137_12.txt b/eesanje/url_46_137_12.txt new file mode 100644 index 0000000000000000000000000000000000000000..e9ffceadac0debe004aeda77bd2f4a95430ebc8f --- /dev/null +++ b/eesanje/url_46_137_12.txt @@ -0,0 +1,6 @@ +8 ತಿಂಗಳಿನಿಂದ ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದ ಕಾಂಗ್ರೆಸ್‌‍ ಸರ್ಕಾರ : ಆರ್‌‍.ಅಶೋಕ್‌‍ ಕಿಡಿ +ಬೆಂಗಳೂರು,ಮೇ22-ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ನೀಡಬೇಕಾದ 703 ಕೋಟಿ ರೂ. ಪ್ರೋತ್ಸಾಹಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‍.ಅಶೋಕ್‌‍ ಕಿಡಿಕಾರಿದ್ದಾರೆ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌‍ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ ನಂದಿನಿ ಬ್ರ್ಯಾಂಡ್‌‍ ಉಳಿಸುವ ಪರಿ? ಪ್ರಶ್ನಿಸಿದ್ದಾರೆ. +ನಂದಿನಿ ಸಂಸ್ಥೆಯ ಕೋಟ್ಯಂತರ ರೂ. ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌‍ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಹಣ ಇದೆ. ಆದರೆ ನಂದಿನಿ ಬ್ರ್ಯಾಂಡ್‌‍ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು ಎಂದು ಅಸಮಾಧಾನ ವ್‌ಯಕ್ತಪಡಿಸಿದ್ದಾರೆ. +ಮತ್ತೊಂದುಟ ಟ್ವೀಟ್‌‍ನಲ್ಲಿ, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮೆ ವಿಫಲವಾಗಿರುವ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ಎಂದು ಬೇಸರ ವ್‌ಯಕ್ತಪಡಿಸಿದ್ದಾರೆ. +ರಾಜ್ಯದ ಪರವಾಗಿ ಸಮರ್ಥವಾದ ವಾದ ಮಂಡಿಸಲು ಸಿದ್ಧರಾಗಿ ಎಂದು ಎಷ್ಟು ಬಾರಿ ಎಚ್ಚರಿಸಿದರೂ ನಿರ್ಲಕ್ಷ್ಯ ಮಾಡುತ್ತಾ ಕಾಲಹರಣ ಮಾಡಿದ ಸಿಎಂ ಹಾಗು ಡಿಸಿಎಂ ಅವರು ಈಗ ಮತ್ತೊಮೆ ಕಾವೇರಿಯ ಮಡಿಲನ್ನು ಬರಿದು ಮಾಡಿ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_137_2.txt b/eesanje/url_46_137_2.txt new file mode 100644 index 0000000000000000000000000000000000000000..986d66f3a7104040b13db6b54d652c50854c6a15 --- /dev/null +++ b/eesanje/url_46_137_2.txt @@ -0,0 +1,11 @@ +ಮಲಗಿದಲ್ಲೇ ಮರಣವನ್ನಪ್ಪಿದ ಒಂದೇ ಕುಟುಂಬದ ನಾಲ್ವರು, ಸಿಲಿಂಡರ್‌ ಸೋರಿಕೆ ಶಂಕೆ +ಮೈಸೂರು, ಮೇ 22-ಮನೆಯೊಂದರಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆಲನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. +ಯರಗನಹಳ್ಳಿಯ ಕಾವೇರಿ ಆಸ್ಪತ್ರೆ ಸಮೀಪದ ನಿವಾಸಿ, ಬಟ್ಟೆ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ(45) ಇವರ ಪತ್ನಿ ಮಂಗಳ(39) ಮತ್ತು ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. +ಈ ಕುಟುಂಬದವರು ಹೇಗೆ ಸಾವನ್ನಪ್ಪಿದ್ದಾರೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. +ಕುಟುಂಬದವರೆಲ್ಲರೂ ಊಟ ಮಾಡಿ ನಿದ್ರೆಗೆ ಜಾರಿದ್ದಾರೆ. ಆ ಸಂದರ್ಭದಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿರುವುದು ಇವರ ಗಮನಕ್ಕೆ ಬಂದಿಲ್ಲ. ಬೆಳಗಾಗುವಷ್ಟರಲ್ಲಿ ನಾಲ್ಕು ಜನ ಮಲಗಿದ್ದ ಜಾಗದಲ್ಲೇ ಶವವಾಗಿದ್ದಾರೆ. +ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಸಖರಾಯಪಟ್ಟಣದವರಾದ ಈ ಕುಟುಂಬ 30 ವರ್ಷಗಳ ಹಿಂದೆ ಮೈಸೂರಿಗೆ ಬಂದು ನೆಲೆಸಿತ್ತು. ಸಿದ್ದಾರ್ಥ ಲೇಔಟ್‌ನ ಜೆಎಸ್‌‍ಎಸ್‌‍ ಪಬ್ಲಿಕ್‌ ಶಾಲೆ ಬಳಿ ಕುಮಾರಸ್ವಾಮಿ ಅವರು ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದು, ಐರನ್‌ಗೆ ಗ್ಯಾಸ್‌‍ ಸಿಲಿಂಡರ್‌ ಬಳಸುತ್ತಿದ್ದರು. ಹಾಗಾಗಿ ಇವರ ಮನೆಯಲ್ಲಿ ಮೂರು ಸಿಲಿಂಡರ್‌ಗಳನ್ನು ಸಂಗ್ರಹಿಸಿಟ್ಟಿದ್ದರು. +ಭಾನುವಾರ ಸಂಬಂಧಿಕರ ಮದುವೆಗೆಂದು ಕಡೂರಿಗೆ ಹೋಗಿದ್ದ ಈ ಕುಟುಂಬ ಸೋಮವಾರ ವಾಪಸ್‌‍ ಬಂದು ರಾತ್ರಿ ಮಲಗಿದ್ದು, ಬೆಳಗಾಗುವಷ್ಟರಲ್ಲಿ ಮಲಗಿದ್ದಲ್ಲಿಯೇ ನಾಲ್ಕೂ ಜನ ಸಾವನ್ನಪಿದ್ದಾರೆ. ಆದರೆ ಇದು ಯಾರ ಗಮನಕ್ಕೂ ಬಂದಿಲ್ಲ. +ಎರಡು ದಿನಗಳಿಂದ ಅರ್ಚಅನಾ ಕಾಲೇಜಿಗೆ ಬಾರದಿದ್ದಾಗ ಆಕೆಯ ಸ್ನೇಹಿತರು ಇಂದು ಬೆಳಗ್ಗೆ ಮನೆ ಬಳಿ ಹೋಗಿದ್ದಾರೆ. ಬಾಗಿಲು ಬಡಿದರೂ ತೆಗೆಯದಿದ್ದಾಗ ಕಿಟಕಿ ತಳ್ಳಿ ನೋಡಿದ್ದು, ಹಾಲ್‌ನಲ್ಲಿ ಮಕ್ಕಳಿಬ್ಬರು ಒಂದೊಂದು ಕಡೆ ಮಲಗಿರುವುದು ಕಂಡು ಕೂಗಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ನೆರೆಹೊರೆಯವರನ್ನು ಕರೆದು ವಿಷಯ ತಿಳಿಸಿ ನಂತರ ಪೊಲೀಸರಿಗೆ ಹೇಳಿದ್ದಾರೆ. +ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ನಾಲ್ವರೂ ಮೃತಪಟ್ಟಿರುವುದು ಕಂಡುಬಂದಿದೆ. ಮನೆಯೊಳಗೆ ಗ್ಯಾಸ್‌‍ ವಾಸನೆ ಬರುತ್ತಿರುವುದು ಗಮನಿಸಿ ತಕ್ಷಣ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮೂರು ಸಿಲಿಂಡರ್‌ಗಳನ್ನು ಹೊರಗೆ ತಂದಿಟ್ಟಿದ್ದಾರೆ. +ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎಫ್‌ಎಸ್‌‍ಎಲ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್‌‍ ಆಯುಕ್ತ ರಮೇಶ್‌ ಬಾನೋತ್‌ ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. +ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಮರಣೋತ್ತರ ಪರೀಕ್ಷೆ ವರದಿ ಬಂದ ನಂತರವಷ್ಟೇ ಈ ನಾಲ್ವರ ಸಾವು ಹೇಗಾಯಿತು ಎಂಬುವುದು ನಿಖರವಾಗಿ ಗೊತ್ತಾಗಲಿದೆ. \ No newline at end of file diff --git a/eesanje/url_46_137_3.txt b/eesanje/url_46_137_3.txt new file mode 100644 index 0000000000000000000000000000000000000000..98f08e420cc950e2f12c8b035ddb44c814281e5a --- /dev/null +++ b/eesanje/url_46_137_3.txt @@ -0,0 +1,5 @@ +“ಯಾವುದೇ ಕಾರಣಕ್ಕೂ ದೇವೇಗೌಡರು ರಾಜೀನಾಮೆ ನೀಡಬಾರದು” +ಬೆಂಗಳೂರು,ಮೇ 22-ಯಾವುದೇ ಕಾರಣಕ್ಕೂ ಎಚ್.ಡಿ.ದೇವೇಗೌಡರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬಾರದು ಎಂದು ಒಕ್ಕಲಿಗರ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಸಿ.ಗಂಗಾಧರ್ ಮನವಿ ಮಾಡಿದ್ದಾರೆ. +ಜೀವನದುದ್ದಕ್ಕೂ ರೈತರ ಪರವಾಗಿ, ಬಡವರ ಪರವಾಗಿ, ದೀನ ದಲಿತರ ಪರವಾಗಿ ದುಡಿದ ದೇಶದ ಮಹಾನ್ ನಾಯಕರಾಗಿರುವ ದೇವೇಗೌಡರು ಕೆಲವರ ಷಡ್ಯಂತ್ರದಿಂದಾಗಿ ಮನನೊಂದು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ನಮಗೆಲ್ಲರಿಗೂ ಆಘಾತ ತಂದಿದೆ ಎಂದು ಹೇಳಿದ್ದಾರೆ. +ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪೆನ್ಡ್ರೈವ್ ಪ್ರಕರಣದಲ್ಲಿ ಕೆಲ ಸಚಿವರು, ಶಾಸಕರ ಕೈವಾಡವಿದ್ದು, ಇದು ಒಕ್ಕಲಿಗ ಸಮುದಾಯವನ್ನು ತುಳಿಯುವಂತಹ ಪ್ರವೃತ್ತಿಯಾಗಿದೆ. ಇದಲ್ಲದೆ, ದೇವೇಗೌಡರ ಕುಟುಂಬಕ್ಕೆ ಮಸಿ ಬಳಿಯುವ ಷಡ್ಯಂತ್ರವಾಗಿದೆ. ಈ ಬಗ್ಗೆ ಒಕ್ಕಲಿಗ ಸಮುದಾಯ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟಕ್ಕೆ ಸಿದ್ಧವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ. +ದೇವೇಗೌಡರ ಮನಸ್ಸಿಗೆ ನೋವುಂಟು ಮಾಡಿದ ಯಾರೇ ಆದರೂ ಅವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_137_4.txt b/eesanje/url_46_137_4.txt new file mode 100644 index 0000000000000000000000000000000000000000..e19263f80a8ab33343c1e0febd9920474268ea94 --- /dev/null +++ b/eesanje/url_46_137_4.txt @@ -0,0 +1,9 @@ +ರದ್ದಾಗುತ್ತಾ ಸಂಸದ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌‍ಪೋರ್ಟ್..? +ಬೆಂಗಳೂರು, ಮೇ 22-ಹಾಸನ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ನೀಡಲಾಗಿರುವ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಪತ್ರ ಬರೆಯಲಾಗಿದೆ. ಆದರೆ ಈವರೆಗೂ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದೆ ಕೇವಲ ಟೀಕೆ, ಟಿಪ್ಪಣಿಗಳನ್ನು ಮಾಡಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆಕ್ಷೇಪ ವ್ಯಕ್ತಪಡಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿಯವರಿಗೆ ಪತ್ರ ಬರೆದಿದ್ದರು. ಸ್ಥಳೀಯ ನ್ಯಾಯಾಲಯ ಜಾಮೀನುರಹಿತ ಬಂಧನ ಆದೇಶ ಹೊರಡಿಸಿದ ಬಳಿಕ ಅದನ್ನು ಆಧಾರವಾಗಿಟ್ಟುಕೊಂಡು ಎಸ್‌‍ಐಟಿ ಮುಖ್ಯಸ್ಥರು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ನ್ಯಾಯಾಲಯದಿಂದ ವಾರಂಟ್‌ ಜಾರಿಯಾದ ಮೇಲೆ ಡಿಪ್ಲೊಮೇಟಿಕ್‌ ಪಾಸ್‌‍ ಅನ್ನು ರದ್ದು ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಅಧಿಕೃತವಾದ ಮಾದರಿಯಲ್ಲೇ ಪತ್ರ ಬರೆಯಲಾಗಿದೆ. ಇದು ಪ್ರಜ್ವಲ್‌ ರೇವಣ್ಣ ಅವರಿಗೆ ಸೀಮಿತವಾಗುವ ವಿಷಯವಲ್ಲ. ಕಾನೂನಿಗೆ ಸಂಬಂಧಪಟ್ಟ ವಿಚಾರ. ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ಸಹಕಾರ ನೀಡಬೇಕು. ಕಾನೂನು ರಕ್ಷಣೆ ಮಾಡುವ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಒತ್ತಾಯಿಸಿದರು. +ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರತಿಯೊಂದು ವಿಚಾರಕ್ಕೂ ಟೀಕೆ, ಟಿಪ್ಪಣಿ ಮಾಡುತ್ತಿದ್ದಾರೆ. ತಾವು ಹೇಳಿದಂತೆಯೇ ಎಲ್ಲವೂ ನಡೆಯಬೇಕು ಎಂಬ ಮನೋಭಾವನೆಯನ್ನು ಕುಮಾರಸ್ವಾಮಿ ಹೊಂದಿರುವಂತೆ ಕಂಡುಬರುತ್ತಿದೆ ಎಂದು ಆಕ್ಷೇಪಿಸಿದರು. +ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಬಿಜೆಪಿಯವರು ತಮ ವಿರುದ್ಧ ಟೀಕೆ ಮಾಡಿ ರಾಜೀನಾಮೆ ಕೇಳುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ಅಪರಾಧ ಪ್ರಕರಣಗಳ ಅಂಕಿ ಅಂಶಗಳನ್ನು ನೀಡಿ ಸ್ಪಷ್ಟನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಪರಮೇಶ್ವರ್‌ ಹೇಳಿದರು. +ಖಾಸಗಿ ವಲಯದಲ್ಲಿ ಮೀಸಲಾತಿ ನೀಡಬೇಕೆಂದು ಹಲವು ವರ್ಷಗಳಿಂದಲೂ ನಮ ಪಕ್ಷ ಒತ್ತಾಯ ಮಾಡುತ್ತಾ ಬಂದಿದೆ. ಈ ಸಂದರ್ಭದಲ್ಲಿ ಮೆರಿಟ್‌ ವಿಷಯದಲ್ಲಿ ರಾಜಿಯಾಗುವ ಅಗತ್ಯವಿಲ್ಲ. ಗುಣಮಟ್ಟ ಪಾಲನೆ ಮುಖ್ಯ ಎಂಬುದು ನಮ್ಮ ನಿಲುವು. ಈಗ ರಾಜ್ಯಸರ್ಕಾರ ಹೊರಗುತ್ತಿಗೆಯಲ್ಲಿ ರೋಸ್ಟರ್‌ ಪದ್ಧತಿಯಂತೆ ಮೀಸಲಾತಿ ಜಾರಿಗೊಳಿಸಲು ನಿರ್ಧಾರ ಕೈಗೊಂಡಿದೆ. +ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿನ ಪ್ರಕರಣ ಯಾವಾಗ ಬೇಕಾದರೂ ಇತ್ಯರ್ಥಗೊಳ್ಳಬಹುದು. ಬಹಳ ದಿನಗಳಿಂದ ನನೆಗುದಿಗೆ ಬಿದ್ದಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಕೂಡ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಮಾಡಬಹುದು. ಹೀಗಾಗಿ ತಯಾರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ ಎಂದರು. +ಸ್ಥಳೀಯ ಸಂಸ್ಥೆಗಳಿಗೆ ಜನಪ್ರತಿನಿಧಿಗಳಿಲ್ಲದೆ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುತ್ತಿಲ್ಲ ಎಂಬ ಆಕ್ಷೇಪಗಳನ್ನು ರಾಜ್ಯಸರ್ಕಾರ ಪರಿಗಣಿಸಲಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಹೈಕಮಾಂಡ್‌ ಬಯಸಿದ್ದಾದರೆ ಆ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಬಹುದು ಎಂದರು. \ No newline at end of file diff --git a/eesanje/url_46_137_5.txt b/eesanje/url_46_137_5.txt new file mode 100644 index 0000000000000000000000000000000000000000..05b6f309085e86d4b73c2c12ff9ef204d407d209 --- /dev/null +++ b/eesanje/url_46_137_5.txt @@ -0,0 +1,7 @@ +ನಾನು ಬದುಕಿರುವವರೆಗೂ ಹಾಸನ ಜಿಲ್ಲೆಯ ಜನರ ಜೊತೆಗಿರುತ್ತೇನೆ : ಎಚ್‌.ಡಿ.ರೇವಣ್ಣ +ಹಾಸನ, ಮೇ 22-ಹಾಸನ ಜಿಲ್ಲೆಯ ಜನರು ನನಗೆ ಸಹಕಾರ ನೀಡಿದ್ದು, ಆ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದರು. +ಹೊಳೆನರಸೀಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕುಟುಂಬದ ಸದಸ್ಯರ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. +ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಹಾಗೆಯೇ ದೇವರ ಮೇಲೆಯೂ ನಂಬಿಕೆಯಿದೆ ಎಂದ ಅವರು, ಜಿಲ್ಲೆಯಲ್ಲಿನ ಯಾರೂ ಧೃತಿಗೆಡಬೇಕಾದ ಪ್ರಮೇಯ ಇಲ್ಲ. ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ ಜನರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ 60 ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ ಎಂದು ಹೇಳಿದರು. +25 ವರ್ಷದಿಂದ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ಹೊಳೆನರಸೀಪುರ ಹಾಗೂ ಜಿಲ್ಲೆಯ ಜನರ ಜೊತೆ ನಾನು ಬದುಕಿರುವವರೆಗೂ ಇರುತ್ತೇನೆ ಹಾಗೆಯೇ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ನಮ್ಮ ಕುಟುಂಬ ಜನರೊಂದಿಗೆ ಇರುತ್ತದೆ. ಕುಮಾರಸ್ವಾಮಿ ಸೇರಿದಂತೆ ನಮ್ಮ ಕುಟುಂಬಕ್ಕೆ ಜನರು ಶಕ್ತಿ ಕೊಟ್ಟಿದ್ದಾರೆ ಎಂದು ಅವರು ತಿಳಿಸಿದರು. +ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸುತ್ತಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. +ನನಗೇನೂ ಗೊತ್ತಿಲ್ಲ :ಸಂಸದ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ವಾಪಸ್‌‍ ಬರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೇವಣ್ಣ, ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ, ಅದರ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು. ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮೇಲೆ ಪರಿಣಾಮ ಬೀರಬಹುದೇ ಎಂಬ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. \ No newline at end of file diff --git a/eesanje/url_46_137_6.txt b/eesanje/url_46_137_6.txt new file mode 100644 index 0000000000000000000000000000000000000000..f862d236e5d080a6e5ecc529d40457211f7309d8 --- /dev/null +++ b/eesanje/url_46_137_6.txt @@ -0,0 +1,5 @@ +ಕಲಬುರಗಿಯ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ ನಿಧನ +ಬೆಂಗಳೂರು, ಮೇ 22-ಕಲಬುರಗಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಇಕ್ಬಾಲ್‌ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ.ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್‌ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. +ಪತ್ನಿ, ಪುತ್ರ ರ್ಇಾನ್‌ ಅಹ್ಮದ್ ಸರಡಗಿ, ಪುತ್ರಿ ಡಾ. ಜಹೇರಾ ಸರಡಗಿ ಅವರನ್ನು ಅಗಲಿದ್ದಾರೆ. ನಗರದ ಐವಾನ್‌- ಇ-ಶಾಹಿ ಪ್ರದೇಶದಲ್ಲಿರುವ ಸರಡಗಿ ನಿವಾಸದಲ್ಲಿ ಇಂದು ಇಡೀ ದಿನ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ. ಸಂಜೆ 6 ಗಂಟೆ ನಂತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸರಡಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಿಎಂ ದಿ. ಧರ್ಮಸಿಂಗ್‌ ಪರಮಾಪ್ತರಲ್ಲಿ ಒಬ್ಬರಾಗಿದ್ದರು. +ಕಲಬುರಗಿ ನಗರದಲ್ಲಿ 1944 ಜೂನ್‌ 5ರಂದು ಜನಿಸಿದ ಸರಡಗಿ, ಉಸಾನಿಯಾ ವಿಶ್ವವಿದ್ಯಾಲಯದಿಂದ ಬಿಎ, ಎಲ್‌‍ಎಲ್‌ಬಿ ಪದವಿ ಪಡೆದು, ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ ಗುಲ್ಬರ್ಗ ಸಾಮಾನ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌‍ ಟಿಕೆಟ್‌ ಪಡೆದು ಸ್ಪರ್ಧಿಸಿ ಎರಡು ಬಾರಿ ಆಯ್ಕೆಯಾಗಿದ್ದರು. ಒಂದು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು. +ಕೇಂದ್ರ ಹಜ್‌ ಸಮಿತಿ, ವಕ್‌್ಫ ಮಂಡಳಿಗಳ ಸದಸ್ಯರೂ ಆಗಿದ್ದರು, ಕಳೆದ ಎರಡು ವರ್ಷದಿಂದ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.ಕಳೆದ ಕೆಲವು ವರ್ಷದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಎರಡು ದಿನಗಳ ಹಿಂದಷ್ಟೆ ಕಲಬುರಗಿಗೆ ಮರಳಿ ಬಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_137_7.txt b/eesanje/url_46_137_7.txt new file mode 100644 index 0000000000000000000000000000000000000000..5a02ef98857e0bc74d8710b8cb24e38f9c50685b --- /dev/null +++ b/eesanje/url_46_137_7.txt @@ -0,0 +1,4 @@ +ದ್ವಿತೀಯ ಪಿಯುಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ +ಬೆಂಗಳೂರು, ಮೇ 22-ಸಿಇಟಿ 2024ಕ್ಕೆ ಸಂಬಂಧಿಸಿದಂತೆ ಸಿಬಿಎಸ್ಸಿ, ಐಸಿಎಸ್ಸಿಇ, ಐಜಿಸಿಎಸ್‌‍ಇ ಯ ಹಾಗೂ 2024 ಕ್ಕಿಂತ ಮೊದಲೇ ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ತಮ್ಮ ಅಂಕಗಳನ್ನು ದಾಖಲಿಸಲು ಮೇ 25 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಮಾಡಿಕೊಟ್ಟಿದೆ. +ಕೆಇಎ ಪೋರ್ಟಲ್‌ ಮೂಲಕ 12ನೇ ತರಗತಿಯ ಅಂಕಗಳನ್ನು ದಾಖಲಿಸಲು ಮೇ 20 ರವರೆಗೆ ಕಾಲಾವಕಾಶ ನೀಡಲಾಗಿತ್ತು.ಆದರೆ ಇದುವರೆಗೆ ಅಂಕಗಳನ್ನು ದಾಖಲಿಸದೇ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮೇ 23 ರ ಸಂಜೆ 4 ರಿಂದ ಮೇ 25 ರ ಸಂಜೆ 5.30 ರವರೆಗೆ ಅಂಕಗಳನ್ನು ದಾಖಲಿಸಲು ಕೆಇಎ ಪೋರ್ಟಲ್‌ ಅನ್ನು ಮತ್ತೊಮೆ ತೆರೆಯುವುದಾಗಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. +ಆರ್ಕಿಟೆಕ್ಚರ್‌ ಪೋಸ್ಟ್‌ನ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ರ ನಾಟಾ ಪರೀಕ್ಷೆಯ ಅಂಕಗಳನ್ನು ಅರ್ಹತೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್‌ಸೈಟ್‌ ಸಂಪರ್ಕಿಸಲು ಕೋರಲಾಗಿದೆ. \ No newline at end of file diff --git a/eesanje/url_46_137_8.txt b/eesanje/url_46_137_8.txt new file mode 100644 index 0000000000000000000000000000000000000000..f100e7e49ea8340a72788e01f38704228804b175 --- /dev/null +++ b/eesanje/url_46_137_8.txt @@ -0,0 +1,5 @@ +ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ +ಮೈಸೂರು,ಮೇ22-ವಿರೋಧಿಗಳಿಗೆ ತೊಂದರೆ ಕೊಡುವುದು, ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ನಮನ್ನು ಟೀಕೆ ಮಾಡುವ ನೈತಿಕತೆ ಮುಖ್ಯಮಂತ್ರಿಯವರಿಗಿಲ್ಲ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಈಗಲಾದರೂ ಮೈಸೂರು ಜಿಲ್ಲೆಯ ಅಭಿವೃದ್ಧಿ ಮಾಡಲಿ. ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯನವರ ಕೊಡುಗೆ ಏನೆಂಬುದನ್ನು ಹೇಳಲಿ ಎಂದು ಆಗ್ರಹಿಸಿದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿದ್ದರಾಮಯ್ಯನವರು ಯಾವ ರೀತಿ ಕೆಲಸ ಮಾಡಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಟೀಕಿಸಿದರು. +ಬಿಜೆಪಿಯನ್ನು ದೂರುವುದಷ್ಟೇ ಕಾಂಗ್ರೆಸ್‌‍ನ ಕೆಲಸವಾಗಿದೆ. ರಾಜ್ಯದ ಹಲವೆಡೆ ಬೆಳೆ ನಾಶವಾಗಿದ್ದರೂ ಸರ್ಕಾರ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ರಾಜ್ಯದಲ್ಲಿ ರೈತರ ಆತಹತ್ಯೆಗಳು ನಿಂತಿಲ್ಲ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆಯೋ ಇಲ್ಲವೋ ಅದು ಗೊತ್ತಿಲ್ಲ. ಮದ್ದೂರು ಮತ್ತು ಗದಗದಲ್ಲಿ ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಗಳಿಗೆ ಹೋಗಿ ಸಾಂತ್ವಾನ ಹೇಳುವ ಕೆಲಸವನ್ನು ಸರ್ಕಾರದಿಂದ ಮಾಡುತ್ತಿಲ್ಲ ಎಂದು ಆರೋಪಿಸಿದರು. +ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜಿಸಲಾಗುತ್ತಿದ್ದು, ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸಿಕೊಡುತ್ತಿದ್ದೆ ಎಂದು ವ್ಯಂಗ್ಯವಾಡಿದ್ದಾರೆ. \ No newline at end of file diff --git a/eesanje/url_46_137_9.txt b/eesanje/url_46_137_9.txt new file mode 100644 index 0000000000000000000000000000000000000000..d0bf9cf0b4667a1c09fee8e2fd94cc041a71cfff --- /dev/null +++ b/eesanje/url_46_137_9.txt @@ -0,0 +1,15 @@ +ವಿಧಾನಪರಿಷತ್‌ ಚುನಾವಣೆಯಲ್ಲಿ ಕುತೂಹಲಕಾರಿ ತ್ರಿಕೋನ ಸ್ಪರ್ಧೆ +ಬೆಂಗಳೂರು,ಮೇ22-ವಿಧಾನಪರಿಷತ್‌ನ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜ್ಯದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಬಂಡಾಯ ತಲೆನೋವಾಗಿ ಪರಿಣಮಿಸಿದ್ದು, ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆ ಕುತೂಹಲಕಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. +ಪದವೀಧರ ಮತ್ತು ಶಿಕ್ಷಕರ ಆರು ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯು ವಿಧಾನಪರಿಷತ್‌‍ನಲ್ಲಿ ಬಹುಮತವನ್ನು ನಿರ್ಧರಿಸುತ್ತದೆ. ಹೀಗಾಗಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷವಾದ ಬಿಜೆಪಿಯು ಈ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿವೆ. ಇದರ ಮಧ್ಯೆ ಬಿಜೆಪಿಯ ಮಿತ್ರಪಕ್ಷವಾದ ಜೆಡಿಎಸ್‌‍ಗೆ ತನ್ನ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ಕಾರಣಕ್ಕೆ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಇವೆಲ್ಲದರಿಂದಾಗಿ ಈ ಬಾರಿಯ ವಿಧಾನ ಪರಿಷತ್‌ ಚುನಾವಣೆ ಬಹಳ ಪೈಪೋಟಿಯಿಂದ ಕೂಡಿದೆ. +ನೈಋತ್ಯ ಪದವೀಧರ ಕ್ಷೇತ್ರ ಅಸ್ತಿತ್ವಕ್ಕೆ ಬಂದಾಗಿನಿಂದ ಬಿಜೆಪಿ ಸೋಲನ್ನೇ ಕಂಡಿಲ್ಲ. ಕಾಂಗ್ರೆಸ್‌‍ ಪಾಲಿಗೆ ಜಯ ಗಗನ ಕುಸುಮವಾಗಿದೆ. ಈ ಬಾರಿ ಮೊದಲ ಜಯದ ಕನಸು ಕಾಣುತ್ತಿದ್ದ ಕಾಂಗ್ರೆಸ್‌‍ಗೆ ಮತ್ತು ಕ್ಷೇತ್ರವನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಳ್ಳಬೇಕೆಂಬ ಬಿಜೆಪಿ ಆಕಾಂಕ್ಷೆಗೆ ಅವರದೇ ಪಕ್ಷದ ಮುಖಂಡರು ಅಡ್ಡಗಾಲು ಹಾಕಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಹಾಲಿ ಸದಸ್ಯ ಎಸ್‌‍ಎಲ್‌ ಭೋಜೇಗೌಡ ಎನ್‌‍ಡಿಎ ಮೈತ್ರಿ ಅಭ್ಯರ್ಥಿಯಾಗಿದ್ದು, ಬಿಜೆಪಿಯಲ್ಲಿ ಬಂಡಾಯವೆದ್ದ ಸತೀಶ್‌ ಆಚಾರ್ಯ ಅವರು ಪೈಪೋಟಿ ನೀಡಲಿದ್ದಾರೆ. +ಕಾಂಗ್ರೆಸ್‌‍ ಟಿಕೆಟ್‌ ವಂಚಿತರಾದ ಎಸ್ಪಿ ದಿನೇಶ್‌ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ಕೆ.ಕೆ.ಮಂಜುನಾಥ್‌ ಕುಮಾರ್‌ ವಿರುದ್ಧ ಇಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿಯಿಂದ ಡಾ.ಧನಂಜಯ ಸರ್ಜಿ ಕಣಕ್ಕಿಳಿದಿರುವ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಮೂರು ಬಾರಿ ಬಿಜೆಪಿ ಶಾಸಕರಾಗಿರುವ ಕೆ.ರಘುಪತಿ ಭಟ್‌ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. +ಕಳೆದ ಬಾರಿ ಬಿಜೆಪಿ ಟಿಕೆಟ್‌‍ನಲ್ಲಿ ಆಯ್ಕೆಯಾಗಿದ್ದ ಹಾಲಿ ಎಂಎಲ್‌‍ಸಿ ಅಯನೂರು ಮಂಜುನಾಥ್‌ ಅವರನ್ನು ಕಾಂಗ್ರೆಸ್‌‍ ಕಣಕ್ಕಿಳಿಸಿದೆ. ಇಬ್ಬರ ಬಂಡಾಯವು ಎರಡೂ ಪಕ್ಷಗಳಿಗೆ ದೊಡ್ಡ ಪೆಟ್ಟು ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಮಲೆನಾಡಿನಲ್ಲಿ ಕಾಂಗ್ರೆಸ್‌‍ಗೆ ಮತ್ತು ಕರಾವಳಿಯಲ್ಲಿ ಬಿಜೆಪಿಗೆ ಬರಬಹುದಾದ ಮತಗಳನ್ನು ಬಂಡಾಯ ಅಭ್ಯರ್ಥಿಗಳು ಸೆಳೆಯಬಹುದು. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಅಭ್ಯರ್ಥಿ ಆಯ್ಕೆಯ ಬಗ್ಗೆ ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವುದರಿಂದ ಬಿಜೆಪಿಗೆ ಬಂಡಾಯ ಬಿಸಿ ತಟ್ಟಿದೆ. +ಹಾಲಿ ಎಂಎಲ್‌‍ಸಿಯನ್ನು ಹೊಂದಿರುವುದರಿಂದ ನೈರುತ್ಯ ಶಿಕ್ಷಕರ ಕ್ಷೇತ್ರದ ಸ್ಥಾನವನ್ನು ಜೆಡಿಎಸ್‌‍ಗೆ ತ್ಯಾಗ ಮಾಡುವುದನ್ನು ಬಿಟ್ಟು ಬಿಜೆಪಿಗೆ ಬೇರೆ ದಾರಿಯಿಲ್ಲದಿದ್ದರೂ, ಕನಿಷ್ಠ ಪಕ್ಷ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್‌, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹೋಗಬೇಕಿತ್ತು ಎಂದು ಕೇಸರಿ ಪಕ್ಷದ ಅನೇಕರು ಭಾವಿಸಿದ್ದಾರೆ. +ಲಿಂಗಾಯತ ಸಮುದಾಯದವರಾಗಿರುವ ಸರ್ಜಿ ಅವರು ಪಕ್ಷಕ್ಕೆ ಹೊಸಬರಾಗಿದ್ದರೂ ಲಿಂಗಾಯತ ಪ್ರಬಲ ನಾಯಕ ಯಡಿಯೂರಪ್ಪನವರ ಆಶೀರ್ವಾದದಿಂದ ಟಿಕೆಟ್‌ ಪಡೆಯಲು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. +ಪಕ್ಷದ ನಿಷ್ಠಾವಂತ ಕಾರ್ಯಕರ್ತರ ನಿರ್ಲಕ್ಷ್ಯವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ದೊಡ್ಡ ವರ್ಗದಲ್ಲಿ ಆತಂಕ ಉಂಟುಮಾಡಿದೆ. ವಿಶೇಷವಾಗಿ ಪಕ್ಷದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ. ನಳೀನ್‌ಕುಮಾರ್‌ ಕಟೀಲ್‌ ಅವರ ಬದಲಿಗೆ ಕ್ಯಾಪ್ಟನ್‌ ಬ್ರಿಜೇಶ್‌ ಚೌಟಾ ಅವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದಾಗ ಪಕ್ಷದಲ್ಲಿ ಅತೃಪ್ತಿ ಶುರುವಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ ಎಂದು ಹೆಸರು ಹೇಳಲು ಬಯಸುವ ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ. +ಕಾಂಗ್ರೆಸ್‌‍ನ ಎಸ್‌‍.ಪಿ.ದಿನೇಶ್‌ ಈ ಹಿಂದೆ ಎರಡು ಬಾರಿ ಪಕ್ಷದ ಅಭ್ಯರ್ಥಿಯಾಗಿ ಸೋಲು ಕಂಡರೂ ಅಧಿಕ ಮತ ಗಳಿಸಿದ್ದರು. ಈ ಬಾರಿಯೂ ತಮಗೆ ಟಿಕೆಟ್‌ ಸಿಕ್ಕುವ ಭರವಸೆಯಲ್ಲಿ ಅವರು ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. ಈಗಾಗಲೆ ಮತದಾರರಿಗೆ ಮೂರ್ನಾಲ್ಕು ಬಾರಿ ಕರಪತ್ರಗಳನ್ನು ರವಾನಿಸಿದ್ದಾರೆ. ಎಲ್ಲ ಪದವೀಧರ ಕ್ಷೇತ್ರದ ಮತದಾರರಿಗೆ ಗುರುತಿನ ಚೀಟಿಯನ್ನು ಕಳುಹಿಸಿದ್ದಾರೆ. +ಹಿಂದಿನ ಚುನಾವಣೆಯಲ್ಲಿ ಮತದಾರರೊಂದಿಗೆ ಇಟ್ಟುಕೊಂಡಿದ್ದ ನಿಕಟ ಸಂಪರ್ಕ ಮತ್ತು ಎರಡು ಬಾರಿ ಅನುಭವಿಸಿದ ಸೋಲಿನ ಕರುಣೆ ಸೃಷ್ಟಿಯಾದಲ್ಲಿ ಕಾಂಗ್ರೆಸ್‌‍ ಮತ ಬ್ಯಾಂಕ್‌‍ಗೆ ಪೆಟ್ಟು ನೀಡಬಹುದು ಎಂದು ಹೇಳಲಾಗುತ್ತಿದೆ. +ಈಶ್ವರಪ್ಪ ಬೆಂಬಲ:ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ವಂಚಿತ ಮಾಜಿ ಶಾಸಕ ರಘುಪತಿಭಟ್‌ ಈ ಬಾರಿ ಪದವೀಧರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಶಿಕ್ಷಕರ ಕ್ಷೇತ್ರವನ್ನು ಮಿತ್ರಪಕ್ಷ ಜೆಡಿಎಸ್‌‍ನ ಹಾಲಿ ಸದಸ್ಯ ಎಸ್‌‍.ಎಲ್‌‍.ಭೋಜೇಗೌಡರಿಗೆ ಬಿಟ್ಟು ಕೊಡುವುದರಿಂದ ಪದವೀಧರ ಕ್ಷೇತ್ರದಲ್ಲಿ ಕರಾವಳಿ ಕೋಟಾದಡಿ ತಮಗೆ ಸಿಗುತ್ತದೆ ಎಂದು ಭಾವಿಸಿದ್ದರು. +ಹೀಗಾಗಿ ಮತದಾರರ ಪಟ್ಟಿಗೆ ಅಧಿಕ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿದ್ದರು. ಲೋಕಸಭೆ ಚುನಾವಣೆ ಪ್ರಚಾರದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆದರೆ, ಬಿಜೆಪಿ ಮುಖಂಡರು ಹೊಸ ಮುಖ ಡಾ. ಧನಂಜಯ ಸರ್ಜಿಗೆ ಅವಕಾಶ ಮಾಡಿಕೊಟ್ಟಿರುವುದು ಅವರಲ್ಲಿತೀವ್ರ ಅಸಮಾಧಾನ ಮೂಡಿಸಿದೆ. +ಎರಡೂ ಕ್ಷೇತ್ರಗಳ ಚುನಾವಣೆಯಲ್ಲಿ ಕರಾವಳಿಯಿಂದ ಬಿಜೆಪಿ ಅಭ್ಯರ್ಥಿ ಇಲ್ಲಎಂಬುದನ್ನೇ ಮುಂದಿಟ್ಟುಕೊಂಡು ಅವರು ಪಕ್ಷದ ಮತಗಳನ್ನು ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರ ಆಸ್ಪತ್ರೆ ರಸ್ತೆಯಲ್ಲೇ ತಮ ಚುನಾವಣೆ ಕಚೇರಿಯನ್ನೂ ತೆರೆದಿದ್ದಾರೆ. ಇದರ ಮಧ್ಯೆ ಮಾಜಿ ಡಿಸಿಎಂ ಕೆ.ಎಸ್‌‍.ಈಶ್ವರಪ್ಪ ಅವರು ರಘುಪತಿ ಭಟ್‌ ಅವರಿಗೆ ಬೆಂಬಲ ಘೋಷಿಸಿದ್ದು, ಕಾರ್ಯಕರ್ತರ ಸಭೆ ಸಹ ನಡೆಸಿದ್ದಾರೆ. +ಶಿಕ್ಷಕರ ಕ್ಷೇತ್ರದಲ್ಲಿ ಒಂದೇ ಹೆಸರಿನ ಇಬ್ಬರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‌‍ ಅಭ್ಯರ್ಥಿ ಕೊಡಗಿನ ಕೆ.ಕೆ.ಮಂಜುನಾಥ ಕುಮಾರ್‌ ಅಲ್ಲದೆ ಚಿಕ್ಕಮಗಳೂರಿನ ಮಂಜುನಾಥ.ಕೆ.ಕೆ ಕಣದಲ್ಲಿದ್ದಾರೆ. ಇದು ಮತದಾರರಲ್ಲಿ ಗೊಂದಲ ಮೂಡಿಸುವ ಸಾಧ್ಯತೆಯೂ ಇದೆ. \ No newline at end of file diff --git a/eesanje/url_46_138_1.txt b/eesanje/url_46_138_1.txt new file mode 100644 index 0000000000000000000000000000000000000000..315954c4f87503274788f42e47a0ad914bba2034 --- /dev/null +++ b/eesanje/url_46_138_1.txt @@ -0,0 +1,5 @@ +ಪ್ರೀತಿಸಿದವಳ ಜೊತೆ ನೇಣಿಗೆ ಶರಣಾದ ಪೊಲೀಸ್‌‍ ಕಾನ್‌ಸ್ಟೇಬಲ್‌ +ಹುಬ್ಬಳ್ಳಿ,ಮೇ.22-ಪ್ರೀತಿಸುತ್ತಿದ್ದ ಮಹಿಳೆಯೊಂದಿಗೆ ಪೊಲೀಸ್‌‍ ಕಾನ್ಸ್ ಟೇಬಲ್‌‍ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಗಾಮನಗಟ್ಟಿಯಲ್ಲಿ ನಡೆದಿದೆ. ಆತಹತ್ಯೆಗೆ ಮಾಡಿಕೊಂಡವರನ್ನು ಮಹೇಶ ಹೆಸರೂರು(32) ಮತ್ತು ವಿಜಯಲಕ್ಷ್ಮೀ (30)ಎಂದು ಗುರುತಿಸಲಾಗಿದೆ. +ಧಾರವಾಡ ಸಂಚಾರಿ ಪೊಲೀಸ್‌‍ ಠಾಣೆಯ ಕಾನ್‌ಸ್ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದ ಮಹೇಶ ಹೆಸರೂರು ಈಗಾಗಲೇ ಮದುವೆಯಾಗಿದ್ದರೂ ವಿಜಯಲಕ್ಷ್ಮೀ ಜೊತೆ ಸಂಬಂಧ ಹೊಂದಿದ್ದರು . +ಕಳೆದ 15 ದಿನದ ಹಿಂದೆ ಗಾಮನಗಟ್ಟಿಯಲ್ಲಿ ಬಾಡಿಗೆ ಮನೆ ಮಾಡಿ ಅಲ್ಲಿ ವಿಜಯಲಕ್ಷ್ಮೀ ಅವರು ವಾಸವಿದ್ದರು ತಿಳಿದುಬಂದಿದೆ. ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಇಬ್ಬರು ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. +ಪ್ರಾಥಮಿಕ ತನಿಖೆ ನಡೆಸಿದಾಗ ಮಹೇಶ ಹೆಸರೂರು ಪೊಲೀಸ್‌‍ಕಾನ್‌್ಸಟೇಬಲ್‌‍ ಎಂದು ಗೊತ್ತಾಗಿದೆ. ಎರಡು ಮೂರು ದಿನಗಳ ಹಿಂದೆ ಮನೆಯೊಂದರಲ್ಲಿ ಆತಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮಹೇಶ ಮನೆಗೆ ಬರದಿದ್ದಾಗ ಅವರು ಎಲ್ಲೂ ಹೋಗಿರಬಹುದು ಎಂದು ತಿಳಿದಿದ್ದರು ಆದರೆ ಈಗ ಈ ಘಟನೆ ಆತಂಕ ಮೂಡಿಸಿದೆ. ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. \ No newline at end of file diff --git a/eesanje/url_46_138_10.txt b/eesanje/url_46_138_10.txt new file mode 100644 index 0000000000000000000000000000000000000000..32de231893d2ec8dcb90ce5d82989da3a31aa8ab --- /dev/null +++ b/eesanje/url_46_138_10.txt @@ -0,0 +1,15 @@ +ಸರಣಿ ಚುನಾವಣೆ: ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ +ಬೆಂಗಳೂರು, ಮಾ 21-ಪ್ರಸಕ್ತ ಲೋಕಸಭಾ ಚುನಾವಣೆ ನಂತರ ಒಂದರ ಹಿಂದೆ ಮತ್ತೊಂದು ಎಂಬಂತೆ ಚುನಾವಣೆ ಸರಣಿ ಆರಂಭವಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ನಿರಂತರವಾಗಿ ಮುಂದುವರೆಯುತ್ತಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗಲಿದೆ. +ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ಜೂ.3ರಂದು ಮತದಾನ ನಡೆಯಲಿದೆ. +ಇದಲ್ಲದೆ, ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಜೂ.13 ರಂದು ಮತ್ತೊಂದು ಚುನಾವಣೆ ಎದುರಾಗಿದೆ. ಈ ಚುನಾವಣೆಗಳು ಮುಗಿಯುತ್ತಿದ್ದಂತೆ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ. +ವಿಧಾನಪರಿಷತ್‌ನ 3 ಪದವೀಧರ, 3 ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಒಬ್ಬ ಮಹಿಳೆ ಸೇರಿದಂತೆ 78 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದ್ದ ನಿನ್ನೆ 12 ಅಭ್ಯರ್ಥಿಗಳು ತಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಅತೀ ಹೆಚ್ಚು 19, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಒಬ್ಬ ಮಹಿಳೆ ಸೇರಿದಂತೆ 15 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. +ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 10 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಜೂ.3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6 ರಂದು ಈ ಆರು ಕ್ಷೇತ್ರಗಳಿಗೆ ಮತ ಎಣಿಕೆ ನಡೆಯಲಿದೆ. +ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 99,121 ಪುರುಷ, 57,483 ಮಹಿಳೆ, ಇತರೆ 19 ಸೇರಿದಂತೆ 1,56,623 ಮತದಾರರು ಇದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 43,720 ಪುರುಷ, 41,369 ಮಹಿಳೆ, ಇತರೆ ಒಬ್ಬರು ಸೇರಿದಂತೆ 85,090 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 58,791 ಪುರಷ, 63,055 ಮಹಿಳೆಯರು ಹಾಗೂ ಇತರೆ 14 ಸೇರಿದಂತೆ ಒಟ್ಟು 1,21,860 ಮತದಾರರು ಇದ್ದಾರೆ.ಈ ಮೂರು ಪದವೀಧರ ಕ್ಷೇತ್ರಗಳಲ್ಲಿ ಒಟ್ಟು 2,01,632 ಪುರುಷ, 1,61,907 ಮಹಿಳಾ, ಇತರೆ 34 ಸೇರಿದಂತೆ 3,63,573 ಮತದಾರರಿದ್ದಾರೆ. +ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15,820 ಪುರುಷ, 9,489 ಮಹಿಳೆ ಸೇರಿದಂತೆ 25,309 ಮತದಾರರಿದ್ದಾರೆ.ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10,487 ಪುರುಷ, 12,915 ಮಹಿಳೆ ಸೇರಿದಂತೆ 23,402 ಮತದಾರರಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11,998 ಪುರುಷ, 9,550 ಮಹಿಳೆ, ಇತರೆ ಒಬ್ಬರು ಸೇರಿದಂತೆ 21,549 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. +ಮೂರೂ ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷ, 31,954 ಮಹಿಳೆ ಹಾಗೂ ಇತರೆ ಒಬ್ಬರು ಸೇರಿದಂತೆ 70,260 ಮತದಾರರು ಮತ ಚಲಾಯಿಸುವ ಹಕ್ಕುಳ್ಳವರಾಗಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 47, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 44 ಸೇರಿದಂತೆ 170 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 159, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 108, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 194 ಸೇರಿದಂತೆ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. +ಮತದಾನಕ್ಕೆ ಒಂದು ದಿನ ಮುಂಚೆ ಕ್ಯೂ ಆರ್‌ ಕೋಡ್‌ ಇರುವ ಮತದಾರರ ಮಾಹಿತಿ ಸ್ಲಿಪ್‌ ಅನ್ನು ನೀಡಲಾಗುತ್ತದೆ. ಮತದಾನ ಮಾಡಲು ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪಾನ್‌ಕಾರ್ಡ್‌, ಪಾಸ್‌‍ಪೋರ್ಟ್‌ ಸೇರಿದಂತೆ ಇತರೆ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. +ಜೂನ್‌ 13 ಕ್ಕೆ ಮತ್ತೊಂದು ಮೇಲನೆ ಚುನಾವಣೆ :ವಿಧಾನಪರಿಷತ್‌ ಸದಸ್ಯರಾದ ಅರವಿಂದ ಕುಮಾರ್‌ ಅರಳಿ, ಎನ್‌.ಎಸ್‌‍.ಬೋಸರಾಜ್‌, ಕೆ.ಗೋವಿಂದರಾಜ್‌, ಮುನಿರಾಜುಗೌಡ, ಬಿ.ಎಂ. ಫಾರುಕ್‌, ರಘುನಾಥರಾವ್‌ ಮಲ್ಕಾಪುರ, ಎನ್‌.ರವಿಕುಮಾರ್‌, ಎಸ್‌‍.ರುದ್ರೇಗೌಡ, ಕೆ.ಹರೀಶ್‌ಕುಮಾರ್‌ ಅವರು ಜೂ.17 ರಂದು ನಿವೃತ್ತಿಯಾಗಲಿದ್ದಾರೆ. +ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಡಾ.ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ.ನಿವೃತ್ತಿ ಹಾಗೂ ರಾಜೀನಾಮೆಯಿಂದ ತೆರವಾಗುವ ವಿಧಾನಪರಿಷತ್‌ನ 11 ಸದಸ್ಯ ಸ್ಥಾನಗಳಿಗೆ ಜೂ.13 ರಂದು ಚುನಾವಣೆ ನಡೆಯಲಿದೆ. +ವಿಧಾನಸಭಾ ಸದಸ್ಯರಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಇದಾಗಿದ್ದು, ಮೇ 27 ರಂದು ಅಧಿಸೂಚನೆ ಹೊರಬೀಳಲಿದೆ.ನಾಮಪತ್ರ ಸಲ್ಲಿಸಲು ಜೂ.3 ಕಡೆಯ ದಿನವಾಗಿದ್ದು, ಜೂ. 3 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌‍ ಪಡೆಯಲು ಜೂ.6 ರವರೆಗೆ ಕಾಲಾವಕಾಶವಿದ್ದು, ಅಗತ್ಯವಿದ್ದರೆ ಜೂ.13 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರಗೆ ಮತದಾನ ನಡೆದು, ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_138_11.txt b/eesanje/url_46_138_11.txt new file mode 100644 index 0000000000000000000000000000000000000000..9504325b17af6fdebd2063178f7d8614567041cd --- /dev/null +++ b/eesanje/url_46_138_11.txt @@ -0,0 +1,4 @@ +ಗ್ಯಾರಂಟಿ ಸರ್ಕಾರ ಅಧಿಕಾರಕ್ಕೆ ವರ್ಷ ಕಳೆದರೂ ಎತ್ತಿನಹೊಳೆ ಯೋಜನೆ ಇನ್ನೂ ಅತಂತ್ರ : ಜೆಡಿಎಸ್‌‍ +ಬೆಂಗಳೂರು, ಮಾ 21-ರಾಜ್ಯ ಕಾಂಗ್ರೆಸ್‌‍ ಸರ್ಕಾರಕ್ಕೆ ಒಂದು ವರ್ಷ ತುಂಬಿದರೂ ಎತ್ತಿನಹೊಳೆ ಯೋಜನೆ ಇನ್ನೂ ತೆವಳುತ್ತಲೇ ಇದೆ ಎಂದು ಜೆಡಿಎಸ್‌‍ ಆರೋಪಿಸಿದೆ. ಕಳೆದ 2014ರ ಮಾರ್ಚ್‌ 3 ರಂದು ಚಿಕ್ಕಬಳ್ಳಾಪುರದಲ್ಲಿ ಅಂದಿನ, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಡಿಗಲ್ಲು ಭಾಗ್ಯ ಕಂಡ ಈ ಯೋಜನೆ ಇವತ್ತು ಅತ್ತಲೂ ಇಲ್ಲ, ಇತ್ತಲೂ ಇಲ್ಲ ಎನ್ನುವಂತಾಗಿದೆ ಎಂದು ಎಕ್ಸ್ ಖಾತೆಯಲ್ಲಿ ಟೀಕಿಸಿದೆ. +ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಜಲ ಸಂಪನೂಲಕ್ಕಿಂತ ಬೆಂಗಳೂರು ನಗರಾಭಿವೃದ್ಧಿ ಮೇಲೆಯೇ ಆಸಕ್ತಿ ಜಾಸ್ತಿ. ಒಮೆಯಷ್ಟೇ ಎತ್ತಿನಹೊಳೆಗೆ ಕಾಟಾಚಾರದ ಭೇಟಿ ನೀಡಿದ್ದ ಅವರು, ಹೂತಿಟ್ಟ ನಿಧಿಯಂತಿರುವ ರಾಜಧಾನಿಯನ್ನು ಬ್ರ್ಯಾಂಡ್‌ ಬೆಂಗಳೂರು ಮಾಡಲು ಅತ್ಯುತ್ಸಾಹ ತೋರುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ. +ಕಳಪೆ ಕಾಮಗಾರಿ, ಅಧಿಕಾರಿ-ಮಂತ್ರಿಗಳ ನಿರ್ಲಕ್ಷ್ಯದಿಂದ ಇಡೀ ಯೋಜನೆ ಹಳ್ಳ ಹಿಡಿಯುವ ಸ್ಥಿತಿಗೆ ಬಂದಿದೆ. ಪೈಪುಗಳು ತುಕ್ಕು ಹಿಡಿಯುತ್ತಿದ್ದರೆ, ತಡೆಗೋಡೆಗಳು ಕುಸಿದು ಬೀಳುತ್ತಿವೆ. 10 ವರ್ಷ ಕಳೆದರೂ ಹನಿ ನೀರೂ ಹರಿಯುವ ನಿರೀಕ್ಷೆ ಇಲ್ಲ. ಗುತ್ತಿಗೆದಾರರ ಜೇಬು ತುಂಬಿದ್ದಷ್ಟೇ ಭಾಗ್ಯ ಎಂದು ಆರೋಪಿಸಿದೆ. \ No newline at end of file diff --git a/eesanje/url_46_138_12.txt b/eesanje/url_46_138_12.txt new file mode 100644 index 0000000000000000000000000000000000000000..2f0f4ad5ee24c6ff729110dc361dcefce32b5d8e --- /dev/null +++ b/eesanje/url_46_138_12.txt @@ -0,0 +1,6 @@ +ಪ್ರಜ್ವಲ್‌ ರೇವಣ್ಣ ಎಲ್ಲಿದ್ರೂ ವಾಪಾಸ್ ಬಾ : ಕುಮಾರಸ್ವಾಮಿ ಬಹಿರಂಗ ಕರೆ +ಬೆಂಗಳೂರು,ಮೇ20-ಸಂಸದ ಪ್ರಜ್ವಲ್‌ ರೇವಣ್ಣ ಅವರು ಸ್ವದೇಶಕ್ಕೆ ವಾಪಸ್‌‍ ಬಂದು ಎಸ್‌‍ಐಟಿ ತನಿಖೆಗೆ ಸಹಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಹಿರಂಗ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪರವಾಗಿ ನಾನೇ ಈ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು. +ಈ ನೆಲದ ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು ಎಂದು ಹೇಳಿದರು. ಅಶ್ಲೀಲ ಪೆನ್‌ಡ್ರಯನ್‌ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ಚಿತಾವಣೆಯ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬುದು ಮಾಜಿ ಸಂಸದ ಶಿವರಾಮೇಗೌಡ ಹಾಗೂ ವಕೀಲ ದೇವರಾಜಗೌಡ ಅವರ ೇನ್‌ ಸಂಭಾಷಣೆಯಿಂದ ಬಹಿರಂಗವಾಗಿದೆ ಎಂದರು. +ನಮ ಸುತ್ತಮುತ್ತ ಇರುವ 45 ಜನರ ಫೋನ್‌ ಟ್ಯಾಪ್‌ ಮಾಡಲಾಗುತ್ತಿದೆ. ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ೇನ್‌ ಟ್ಯಾಪ್‌ ಮಾಡಲಾಗುತ್ತಿದೆ. ಹೊಸ ೇನ್‌ ಬಳಸಿದರೂ ಅದು ಕೂಡ ಟ್ಯಾಪ್‌ ಆಗುತ್ತಿದೆ ಎಂದು ಆರೋಪಿಸಿದರು. +ಪ್ರಜ್ವಲ್‌ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು. +ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು. ಎಸ್‌‍ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಶಿವಕುಮಾರ್‌ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_138_2.txt b/eesanje/url_46_138_2.txt new file mode 100644 index 0000000000000000000000000000000000000000..95ee6afa0f4944f460c91956d5a90c43d6304abf --- /dev/null +++ b/eesanje/url_46_138_2.txt @@ -0,0 +1,7 @@ +ಸಿಎಂ ತವರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಯುವಕ ಸಾವು +ಮೈಸೂರು, ಮೇ 21-ಕಲುಷಿತ ನೀರು ಸೇವಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿ.ಸಾಲುಂಡಿಯಲ್ಲಿ ನಡೆದಿದೆ.ಕನಕರಾಜ್‌ (20) ಮೃತಪಟ್ಟ ಯುವಕ. ಗ್ರಾಮಕ್ಕೆ ಸರಬರಾಜಾಗುತ್ತಿದ್ದ ನೀರನ್ನು ಸೇವಿಸಿದ ಕೆಲ ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. +ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕನಕರಾಜ್‌ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಉಳಿದವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಕ್ಕೆ ಸರಬರಾಜಾಗುತ್ತಿದ್ದ ನೀರಿಗೆ ಕಲುಷಿತ ನೀರು ಹೇಗೆ ಸೇರ್ಪಡೆಯಾಗಿದೆ ಎಂಬುದರ ಬಗ್ಗೆ ಪರಿಶೀಲಿಸಲಾಗುತ್ತಿದೆ. +ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಜಿ.ಟಿ.ದೇವೇಗೌಡ ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.ಘಟನೆ ಕುರಿತು ವೈದ್ಯರಿಂದ ಮಾಹಿತಿ ಪಡೆದು ಕಲುಷಿತ ನೀರಿನ ಬಗ್ಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಿ ಶೀಘ್ರ ಶುದ್ಧ ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಗ್ರಾಮಕ್ಕೆ ವೈದ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಮೈಸೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದು, ಕಲುಷಿತ ನೀರಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನುಮಾನಗಳಿವೆ, ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇಂದು ಮಧ್ಯಾಹ್ನದೊಳಗೆ ವರದಿ ಬರಲಿದೆ ಎಂದು ವಿವರಿಸಿದ್ದಾರೆ. +ಸುಮಾರು 120 ಜನ ಆಸ್ಪತ್ರೆಗೆ ದಾಖಲಾಗಿದ್ದರು, 100 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಕೆಲವರನ್ನು ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಕನಕರಾಜು ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್‌್ಸ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಡಿಎಚ್‌ಒ ವಿವರಣೆ ನೀಡಿದ್ದಾರೆ. +ರಾಜ್ಯಮಟ್ಟದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದೆ, ಆರೋಗ್ಯ ಇಲಾಖಾಧಿಕಾರಿಗಳ ಜೊತೆ ಕೂಡ ಚರ್ಚೆ ನಡೆದಿದೆ ಎಂದು ವಿವರಿಸಿದ್ದಾರೆ.ಈ ವೇಳೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿರುವ ಮುಖ್ಯಮಂತ್ರಿಗಳು, ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು. \ No newline at end of file diff --git a/eesanje/url_46_138_3.txt b/eesanje/url_46_138_3.txt new file mode 100644 index 0000000000000000000000000000000000000000..e658832e49e2ad2547fbb0754029275ff90dbf02 --- /dev/null +++ b/eesanje/url_46_138_3.txt @@ -0,0 +1,8 @@ +ಸರ್ಕಾರ ವರ್ಷ ಪೂರೈಸಿದ ಬೆನ್ನಲ್ಲೇ ಡಿಕೆಶಿ ಕುರಿತು ಸಿಎಂ ಸಿದ್ದರಾಮಯ್ಯ ಸಿಡಿಮಿಡಿ ಮಾತು..! +ಬೆಂಗಳೂರು, ಮಾ 21-ಜೋಡೆತ್ತುಗಳಂತೆ ಬರೋಬ್ಬರಿ ಒಂದು ವರ್ಷ ಯಶಸ್ವಿ ಆಡಳಿತ ಪೂರೈಸಿದ ಮಾರನೆ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುರಿತಂತೆ ಅಸಮಾಧಾನದ ಚಡಪಡಿಕೆ ವ್ಯಕ್ತಪಡಿಸಿದ ಘಟನೆ ನಡೆದಿದೆ. +ಮೇ 21 ದಿ. ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಅವರ ಪುಣ್ಯಸರಣೆ ಅಂಗವಾಗಿ ಆಚರಿಸಲಾಗುವ ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿಧಿ ಬೋಧನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇನ್ನೂ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಡಿ.ಕೆ.ಶಿವಕುಮಾರ್‌ ಅವರ ದಿನಚರಿಯಲ್ಲಿ ವೇಳಾಪಟ್ಟಿಯಲ್ಲಿ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆಯುವ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕ್ರಮವಿತ್ತು. +11 ಗಂಟೆಗೆ ಸರಿಯಾಗಿ ಸಿದ್ದರಾಮಯ್ಯ ಆಗಮಿಸಿದಾಗ ಮುಖ್ಯ ಕಾರ್ಯದರ್ಶಿ ರಜನೀಶ್‌ ಘೋಯಲ್‌ ಅವರು ಉಪಮುಖ್ಯಮಂತ್ರಿಯವರು ಕೆಳಗಡೆ ಇದ್ದಾರೆ. ನಾವು ಸ್ವಾಗತ ಭಾಷಣ ಮುಗಿಸುವ ವೇಳೆಗೆ ಅವರೂ ಬಂದು ಸೇರಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಯವರಿಗೆ ವಿವರಿಸಿದರು. +ಇದಕ್ಕೆ ಸಿಡಿಮಿಡಿಗೊಂಡ ಮುಖ್ಯಮಂತ್ರಿಯವರು ಬಂದ್ರೆ ಬರ್ತಾರೆ, ನೀವು ಶುರು ಮಾಡಿ, ನಾನು ಹೋಗಬೇಕಿದೆ ಎಂದು ತಾಕೀತು ಮಾಡಿದರು.ಸ್ವಲ್ಪ ಹೊತ್ತಿನಲ್ಲೇ ಮುಖ್ಯಮಂತ್ರಿಯವರು ಆಪ್ತ ಕಾರ್ಯದರ್ಶಿ ವೆಂಕಟೇಶ್‌ ಅವರು ಬಂದು ಉಪಮುಖ್ಯಮಂತ್ರಿಯವರು ಕೆಳಗಡೆ ಇದ್ದಾರೆ, ಬರುತ್ತಾರೆ ಎಂದು ಮತ್ತೊಮೆ ವಿವರಿಸಿದರು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯನವರು ಕಾರ್ಯಕ್ರಮ ಮುಂದುವರೆಸುವಂತೆ ಸೂಚಿಸಿದ್ದಲ್ಲದೆ, ಪ್ರತಿಜ್ಞಾವಿಧಿಯನ್ನೂ ಬೋಧಿಸಿದರು. +ಇದೇ ವೇಳೆ ಕಾರ್ಯಕ್ರಮಕ್ಕೆ ಹಿರಿಯ ಅಧಿಕಾರಿಗಳು ಹಾಜರಾಗದಿರುವ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಅಸಹನೆ ಹೊರಹಾಕಿದ್ದು ಕಂಡುಬಂದಿತು. ಕೊನೆಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ. ವಿಧಾನಸೌಧದ ನೆಲಮಹಡಿಯಲ್ಲಿದ್ದ ಡಿ.ಕೆ.ಶಿವಕುಮಾರ್‌, ಕಾರ್ಯಕ್ರಮ ಶುರುವಾದ ಮಾಹಿತಿ ದೊರೆಯುತ್ತಿದ್ದಂತೆ ಅನ್ಯಮನಸ್ಕರಾಗಿ ವಿಧಾನಸೌಧದಿಂದ ನಿರ್ಗಮಿಸಿ ಕೆಪಿಸಿಸಿಯಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ರಾಜೀವ್‌ಗಾಂಧಿ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. +ಇದಕ್ಕೆ ಪೂರಕವಾಗಿ ಕೆಪಿಸಿಸಿ ಕಚೇರಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇನ್ನೆಷ್ಟು ದಿನ ನಾನು ಈ ಹುದ್ದೆಯಲ್ಲಿರುತ್ತೇನೋ ಗೊತ್ತಿಲ್ಲ, ಆದರೆ ಪಕ್ಷದ ಸಂಘಟನೆಗೆ ಸಂಬಂಧಪಟ್ಟಂತೆ ನಾನು ಭದ್ರ ಬುನಾದಿ ತಳಪಾಯ ಹಾಕಿಕೊಡುತ್ತೇನೆ ಎಂದು ಹೇಳಿದ್ದು ವಿಶೇಷವಾಗಿತ್ತು. \ No newline at end of file diff --git a/eesanje/url_46_138_4.txt b/eesanje/url_46_138_4.txt new file mode 100644 index 0000000000000000000000000000000000000000..a8689e2f273249cc04742e69d4e6b9bdb6105d25 --- /dev/null +++ b/eesanje/url_46_138_4.txt @@ -0,0 +1,11 @@ +‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಕಲ್ಪಕ್ಕೆ ಸರ್ಕಾರ ಬದ್ಧ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು, ಮಾ 21-ಮಾದಕವಸ್ತು ಮುಕ್ತ ಕರ್ನಾಟಕದ ಸಂಕಲ್ಪಕ್ಕೆ ರಾಜ್ಯಸರ್ಕಾರ ಬದ್ಧವಾಗಿದೆ. ರೇವು ಪಾರ್ಟಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಬಳಕೆಯ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಡ್ರಗ್‌ ಪೆಡ್ಲರ್‌ಗಳನ್ನು ಮಟ್ಟ ಹಾಕಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರೇವು ಪಾರ್ಟಿಯನ್ನು ಸ್ಥಳೀಯರು ಆಯೋಜಿಸಲಾಗಿದ್ದು, ಹೊರರಾಜ್ಯದವರು ಅದರಲ್ಲಿ ಭಾಗವಹಿಸಿದ್ದು, ಸಿಂಥೆಟಿಕ್‌ ಡ್ರಗ್‌್ಸ ಬಳಸಿರುವ ಬಗ್ಗೆ ಪೊಲೀಸರು ವರದಿ ಮಾಡಿದ್ದಾರೆ. ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದು, ತನಿಖೆ ಮುಂದುವರೆದಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಕರ್ನಾಟಕ ರಾಜ್ಯವನ್ನು ಮಾದಕವಸ್ತು ಮುಕ್ತವನ್ನಾಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಈಗಾಗಲೇ ಹೇಳಿಕೆ ನೀಡಿದ್ದೇವೆ. ಅದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೂ ಎಚ್ಚರಿಕೆ ನೀಡಿ ಸೂಕ್ಷ್ಮವಾಗಿ ಕೆಲಸ ನಿರ್ವಹಿಸಲು ತಾಕೀತು ಮಾಡಲಾಗಿದೆ ಎಂದರು. +ಈಗಾಗಲೇ ಹಲವು ಕಡೆ ದಾಳಿ ಮಾಡಿ ಸಾವಿರಾರು ಕೋಟಿ ರೂ.ಗಳ ಮಾದಕವಸ್ತುಗಳನ್ನು ಹಿಡಿದು ಸುಟ್ಟುಹಾಕಲಾಗಿದೆ. ಆದರೂ ಕೂಡ ಇಂತಹ ಕೃತ್ಯಗಳು ಮರುಕಳಿಸುತ್ತಿವೆ. ಪೊಲೀಸರು ಯಾವುದೇ ಕಾರಣಕ್ಕೂ ಈ ವಿಷಯದಲ್ಲಿ ಸಹನೆಯಿಂದಿರುವುದಿಲ್ಲ ಎಂದು ಹೇಳಿದರು. +ಎಲ್ಲೆಲ್ಲಿ ಮಾದಕವಸ್ತು ದೊರೆತಿವೆಯೋ ಅಲ್ಲೆಲ್ಲಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೊರರಾಜ್ಯದಿಂದ ಕರ್ನಾಟಕ ಪ್ರವೇಶಿಸುವ ಮಾದಕವಸ್ತುಗಳನ್ನೂ ನಿರ್ಬಂಧಿಸಲು ಇಲಾಖೆಯಲ್ಲಿರುವ ಪ್ರತ್ಯೇಕ ಘಟಕ ಕೆಲಸ ನಿರ್ವಹಿಸುತ್ತಿದೆ ಎಂದರು. ಹೈಡ್ರೋಪೋನಿಕ್‌ ಗಾಂಜಾವನ್ನು ಬಾಟಲಿಯ ನೀರಿನಲ್ಲಿಟ್ಟು ಮನೆಯ ಮೇಲ್ಛಾವಣಿ ಮೇಲೆ ಬೆಳೆಸಿಕೊಳ್ಳುತ್ತಿದ್ದಾರೆ. ಅಂತಹುದ್ದನ್ನೆಲ್ಲಾ ಹಿಡಿಯುವುದು ಕಷ್ಟದ ಕೆಲಸ. ಆದರೆ ಈ ರೀತಿ ಎಲ್ಲೆಲ್ಲಿ ಬಳಕೆಯಾಗುತ್ತಿದೆ ಎಂಬ ಮಾಹಿತಿಯನ್ನು ಕಲೆ ಹಾಕಿ ಕ್ರಮ ಕೈಗೊಳ್ಳಲಾಗುತ್ತಿದೆ. ಮಾದಕವಸ್ತು ಕಳ್ಳಸಾಗಾಣಿಕೆ ಮಾಡುವವರ ಮೇಲೆ ನಿಗಾ ವಹಿಸಲಾಗಿದೆ ಎಂದು ಹೇಳಿದರು. +ವಿದೇಶಿಯರು, ವಿದೇಶದ ವಿದ್ಯಾರ್ಥಿಗಳು ಮಾದಕವಸ್ತು ಸಾಗಾಣಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತವರನ್ನು ಬಂಧಿಸಿ ಸಂಬಂಧಪಟ್ಟ ದೇಶದ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿ ಗಡಿಪಾರು ಮಾಡುವ ಪ್ರಕ್ರಿಯೆ ಚಾಲನೆಯಲ್ಲಿರುತ್ತದೆ. ದೇಶ ಬಿಟ್ಟು ತೊಲಗಿಸುವವರೆಗೂ ನಮ ಕಸ್ಟಡಿಯಲ್ಲೇ ಇಟ್ಟುಕೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ. ಇಷ್ಟೆಲ್ಲಾ ಕ್ರಮ ಕೈಗೊಂಡರೂ ಅಲ್ಲಿ, ಇಲ್ಲಿ ಸಣ್ಣ ಪ್ರಮಾಣದ ಮಾದಕವಸ್ತು ಪತ್ತೆಯಾಗುತ್ತಲೇ ಇದೆ. ಇದನ್ನು ಸಮರ್ಥವಾಗಿ ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದರು. +ಹಾಸನದ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಅನ್ನು ರದ್ದು ಮಾಡುವಂತೆ ಎಸ್‌‍ಐಟಿಯ ಮುಖ್ಯಸ್ಥರು ನ್ಯಾಯಾಲಯದ ವಾರೆಂಟ್‌ ಆಧಾರಿತವಾಗಿ ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಮೊದಲು ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಿಗೆ ಈ ವಿಚಾರವಾಗಿ ಪತ್ರ ಬರೆದು ಮನವಿ ಮಾಡಿದ್ದರು. ಆದರೆ ಯಾವುದೇ ಪರಿಣಾಮವಾಗಲಿಲ್ಲ. ನ್ಯಾಯಾಲಯದ ಆರೋಪಿ ವಿರುದ್ಧ ವಾರಂಟ್‌ ಜಾರಿ ಮಾಡಿದ ಆಧಾರದ ಮೇಲೆ ಪೊಲೀಸ್‌‍ ಇಲಾಖಾಧಿಕಾರಿಗಳು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆಯಲು ಸಾಧ್ಯವಾಗಿದೆ. +ಇದರ ಆಧಾರದ ಮೇಲೆ ಕ್ರಮ ಕೈಗೊಂಡು ರಾಜತಾಂತ್ರಿಕತೆಯ ಪಾಸ್‌‍ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿರಲು ಸಾಧ್ಯವಾಗುವುದಿಲ್ಲ, ವಾಪಸ್‌‍ ಮರಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪರಮೇಶ್ವರ್‌ ಆಗ್ರಹಿಸಿದರು. +ಪ್ರಜ್ವಲ್‌ ರೇವಣ್ಣ ವಾಪಸ್‌‍ ಬಂದು ಶರಣಾಗಬೇಕು ಎಂದು ಕುಮಾರಸ್ವಾಮಿಯವರು ಮನವಿ ಮಾಡಿರುವುದು ಅವರ ಕುಟುಂಬಕ್ಕೆ ಸಂಬಂಧಪಟ್ಟ ವಿಚಾರ. ಪೊಲೀಸರು ಕಾನೂನು ರೀತಿಯ ಕ್ರಮ ಮುಂದುವರೆಸುತ್ತಾರೆ ಎಂದು ಹೇಳಿದರು.ಜೆಡಿಎಸ್‌‍ ನಾಯಕರ ಫೋನ್‌ ಟ್ಯಾಪಿಂಗ್‌ ಮಾಡಿಲ್ಲ, ಕುಮಾರಸ್ವಾಮಿಯವರ ಬಳಿ ಇದಕ್ಕೆ ಸಂಬಂಧಪಟ್ಟಂತೆ ಮಾಹಿತಿಗಳಿದ್ದರೆ ಕೊಡಲಿ, ಇನ್ನು ಎಲ್‌.ಆರ್‌.ಶಿವರಾಮೇಗೌಡರ ಆಡಿಯೋ ಪ್ರಕರಣದ ತನಿಖೆ ನಡೆಸುವ ಬಗ್ಗೆ ಎಸ್‌‍ಐಟಿ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಪ್ರತಿ ಹಂತದಲ್ಲೂ ಮಧ್ಯಪ್ರವೇಶಿಸಿ ಸೂಚನೆ ನೀಡುವುದಿಲ್ಲ ಎಂದರು. +ದೇವೇಗೌಡರ ಕುಟುಂಬವನ್ನು ಮುಗಿಸಲು ಕಾಂಗ್ರೆಸ್‌‍ ಸಂಚು ನಡೆಸಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಮ ಸರ್ಕಾರಕ್ಕೆ ಮಾಡಬೇಕಾದ ಕೆಲಸ ಸಾಕಷ್ಟಿದೆ. ಬರ ನಿರ್ವಹಣೆ, ಅಭಿವೃದ್ಧಿಯಂತಹ ಗಂಭೀರ ಕೆಲಸಗಳಿವೆ ಎಂದು ತಿರುಗೇಟು ನೀಡಿದರು.ಕಾಂಗ್ರೆಸ್‌‍ ಕಾರ್ಯಕ್ರಮಗಳ ಬಗ್ಗೆ ಬಿಜೆಪಿಯವರಿಗೆ ಹೊಟ್ಟೆ ಉರಿ ಇದೆ. ಬಡವರ ಅಭಿವೃದ್ಧಿ ಅವರಿಗೆ ಸಹಿಸಲಾಗುತ್ತಿಲ್ಲ. ರಾಜ್ಯಸರ್ಕಾರಕ್ಕೆ ಕೇಂದ್ರದಿಂದ ಪರಿಹಾರ ಕೊಡಿಸಲು ವಿಫಲರಾಗಿರುವ ಬಿಜೆಪಿಗರು ಟೀಕೆ ಮಾಡುವ ನೈತಿಕ ಹಕ್ಕು ಹೊಂದಿಲ್ಲ, ಹೆಚ್ಚು ಸ್ಥಾನ ಗಳಿಸುವುದು ಕಾಂಗ್ರೆಸ್‌‍ನ ಹಗಲುಗನಸು ಎನ್ನುವುದಾಗಿದ್ದರೆ ಬಿಜೆಪಿಯವರೇನು ರಾತ್ರಿ ಕನಸು ಕಾಣುತ್ತಿದ್ದಾರೆಯೇ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_138_5.txt b/eesanje/url_46_138_5.txt new file mode 100644 index 0000000000000000000000000000000000000000..dea3df1bf366d74a08bb093848e204f2b705c447 --- /dev/null +++ b/eesanje/url_46_138_5.txt @@ -0,0 +1,12 @@ +ಅಪಹರಣ-ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ರಿಲೀಫ್ ಸಿಕ್ಕ ಬೆನ್ನಲ್ಲೇ ರೇವಣ್ಣಗೆ ಹೊಸ ಸಂಕಷ್ಟ ಶುರು +ಬೆಂಗಳೂರು,ಮೇ21-ಮಹಿಳೆಯ ಅಪಹರಣ, ಲೈಂಗಿಕ ದೌರ್ಜನ್ಯ ಸೇರಿದಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗಿದೆ. +ಮೈಸೂರು ಜಿಲ್ಲೆ ಕೆ.ಆರ್‌.ನಗರ ಹಾಗೂ ಹಾಸನದ ಹೊಳೆನರಸೀಪುರದ ಪೊಲೀಸ್‌‍ ಠಾಣೆಗಳಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಹಾಗೂ 42ನೇ ಎಸಿಎಂಎಂ ನ್ಯಾಯಾಲಯ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿತ್ತು. +ಈ ಪ್ರಕರಣವನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ದಳ(ಎಸ್‌‍ಐಟಿ) ಎಚ್‌.ಡಿ.ರೇವಣ್ಣಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ವಿಶೇಷ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಪಡೆದು ಬಂಧನದ ಭೀತಿಯಿಂದ ಪಾರಾಗಿದ್ದ ರೇವಣ್ಣಗೆ ಎಸ್‌‍ಐಟಿಯ ಈ ನಿರ್ಧಾರ ಮತ್ತೆ ಕಾನೂನಿನ ಸಂಕೋಲೆಯನ್ನು ಬಿಗಿಗೊಳಿಸಿದೆ. +ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಲ್ಲಿಸಿದ್ದು, ಈ ಬಾರಿ ಖ್ಯಾತ ವಕೀಲ ರವಿವರ್ಮ ಕುಮಾರ್‌ ಅವರು ಎಸ್‌‍ಐಟಿ ಪರ ವಾದ ಮಂಡಿಸಲಿದ್ದಾರೆ. ಹೀಗಾಗಿಯೇ ಸರ್ಕಾರ ಸೋಮವಾರ ರವಿವರ್ಮ ಕುಮಾರ್‌ ಅವರನ್ನು ವಿಶೇಷ ಸಾರ್ವಜನಿಕ ಅಭಿಯೋಜಕ(ಎಸ್‌‍ಪಿಪಿ)ರನ್ನಾಗಿ ನೇಮಿಸಿತ್ತು. ಇನ್ನು ರೇವಣ್ಣ ಪರವಾಗಿ ವಕೀಲ ಸಿ.ವಿ.ನಾಗೇಶ್‌ ವಾದ ಮಂಡಿಸುವ ಸಾಧ್ಯತೆ ಇದೆ. +ತಮ್ಮ ವಿರುದ್ಧ ಎಸ್‌‍ಐಟಿ ದಾಖಲಿಸಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದ್ದಾರೆ. ಇದರ ಜೊತೆಗೆ ಎಸ್‌‍ಐಟಿ ಕೆಳಹಂತದ ನ್ಯಾಯಾಲಯ ನೀಡಿರುವ ಜಾಮೀನು ಪ್ರಶ್ನಿಸಿ ಮೇಲನವಿ ಸಲ್ಲಿಸಿದ್ದಾರೆ. ರೇವಣ್ಣ ಜಾಮೀನು ಆದೇಶ ವಜಾ ಮಾಡುವಂತೆ ಹೈಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಲ್ಲಿಸಿದೆ. +ಪ್ರಕರಣವೇನು?:ನನ್ನ ತಾಯಿ ಮೇಲೆ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಮಾಡಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ. ಎಚ್‌‍.ಡಿ.ರೇವಣ್ಣ ಕೂಡ ಲೈಂಗಿಕ ಕಿರುಕುಳ ನೀಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು, ಸಹಕರಿಸದಿದ್ದರೆ ತನ್ನ ಗಂಡನ ಕೆಲಸವನ್ನು ಕಸಿದುಕೊಳ್ಳುವುದಾಗಿಯೂ ಮತ್ತು ನಿನ್ನ ಮಗಳ ಮೇಲೆ ಅತ್ಯಾಚಾರ ಮಾಡುತ್ತೇನೆ ಎಂದು ತಾಯಿಗೆ ಬೆದರಿಕೆ ಹಾಕುತ್ತಿದ್ದನು. ನಾವು ದೂರು ದಾಖಲಿಸಿದ ನಂತರ ತನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಸಂತ್ರಸ್ತೆ ಮಹಿಳೆ ತಾನು ಅನುಭವಿಸಿರುವ ಕಷ್ಟಗಳನ್ನು ವಿವರಿಸಿದ್ದಾರೆ. +ನಾಲ್ಕೈದು ವರ್ಷಗಳ ಹಿಂದೆ ಬೆಂಗಳೂರಿನ ನಿವಾಸದಲ್ಲಿ ಪ್ರಜ್ವಲ್‌ ರೇವಣ್ಣ ತನ್ನ ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ವಿಶೇಷ ತನಿಖಾ ತಂಡದ (ಎಸ್‌‍ಐಟಿ) ಮೂಲಗಳ ಪ್ರಕಾರ, ಅವರು ಘಟನೆಗಳನ್ನು ವಿವರಿಸುವ ವಿವರವಾದ ಸಾಕ್ಷ್ಯವನ್ನು ನೀಡಿದ್ದಾರೆ ಎನ್ನಲಾಗಿದೆ. +2020 ಮತ್ತು 2021ರ ನಡುವೆ, ಪ್ರಜ್ವಲ್‌ ರೇವಣ್ಣ ಅವರು ವಿಡಿಯೋ ಕರೆಗಳಿಗೆ ಉತ್ತರಿಸುವಂತೆ ಮಾಡಿದ್ದರು. ತನಗೆ ಮತ್ತು ತನ್ನ ತಾಯಿಗೆ ತೊಂದರೆ ಮಾಡುವ ಬೆದರಿಕೆ ಹಾಕಿ ನನ್ನ ಬಟ್ಟೆಗಳನ್ನು ಬಿಚ್ಚುವಂತೆ ಮಾಡಿದ್ದಾರೆ. ಘಟನೆಗಳ ಬಗ್ಗೆ ತಿಳಿದ ನಂತರ ನಮ್ಮ ಕುಟುಂಬವು ನಮಗೆ ಬೆಂಬಲ ನೀಡಿತು. ಹೀಗಾಗಿ ನಾವು ದೂರು ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ. +ನಿರಂತರ ಕಿರುಕುಳವು ತನ್ನ ಕುಟುಂಬಕ್ಕೆ ದೊಡ್ಡ ನಷ್ಟವನ್ನು ಉಂಟುಮಾಡಿದೆ. ನಾವು ನಮ್ಮ ಮೊಬೈಲ್‌ ನಂಬರ್‌ಗಳನ್ನು ಬದಲಿಸಬೇಕಾಯಿತು ಎಂದು ಮಹಿಳೆ ಎಸ್‌‍ಐಟಿಗೆ ತಿಳಿಸಿದ್ದಾರೆ. +ಪ್ರಜ್ವಲ್‌ ರೇವಣ್ಣ ತಮ್ಮ ಮನೆಯಲ್ಲಿ ಮಹಿಳಾ ಕೆಲಸಗಾರರಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ. ರೇವಣ್ಣ ಅವರು ಹಣ್ಣು ಕೊಡುವ ನೆಪದಲ್ಲಿ ಮಹಿಳಾ ಕೆಲಸಗಾರರಿಗೆ ಲೈಂಗಿಕ ಕಿರುಕುಳ ನೀಡುವುದು ನಿಜ. ಪ್ರಜ್ವಲ್‌ ನನ್ನ ತಾಯಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಸದ್ಯಕ್ಕೆ ಈ ಘಟನೆಗಳ ಬಗ್ಗೆ ಕೇವಲ ಮೂರು ಜನರು ಹೊರಬಂದು ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಇನ್ನೂ ಮೂರು ಕೆಲಸಗಾರರರು ಈ ಬಗ್ಗೆ ಮಾತಾಡಿಲ್ಲ. ಅವರು ಕೂಡ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ. +ಘಟನೆ ನಡೆದು ಎರಡು ವರ್ಷಗಳ ನಂತರ ತಮ್ಮ ಜಮೀನನ್ನು ಮಾರಾಟ ಮಾಡುವಂತೆ ಮಾಡಲಾಯಿತು. ನನ್ನ ತಾಯಿ ನಾಲ್ಕೈದು ತಿಂಗಳಿಗೊಮೆ ಮನೆಗೆ ಬರುತ್ತಿದ್ದರು. ಅವರಿಗೆ ತುಂಬಾ ಕಿರುಕುಳ ನೀಡುತ್ತಿದ್ದರು. ಆಕೆ ನಮಗೆ ತಡರಾತ್ರಿ 1 ಅಥವಾ 2 ಗಂಟೆಯ ಸುಮಾರಿಗೆ ಮಾತ್ರ ಕರೆ ಮಾಡುತ್ತಿದ್ದರು. ಆದರೂ ನಮೊಂದಿಗೆ ಅಷ್ಟೇನೂ ಮಾತನಾಡುತ್ತಿರಲಿಲ್ಲ. ಅವರು ನನ್ನ ತಾಯಿಯನ್ನು ಗುಲಾಮಳಂತೆ ನಡೆಸಿಕೊಳ್ಳುತ್ತಿದ್ದರು. ನನ್ನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_138_6.txt b/eesanje/url_46_138_6.txt new file mode 100644 index 0000000000000000000000000000000000000000..8f377750ab7c03095f693cda2bbc1d9439bf29de --- /dev/null +++ b/eesanje/url_46_138_6.txt @@ -0,0 +1,5 @@ +ಪಾಳೇಗಾರಿಕೆಯ ಕಾಂಗ್ರೆಸ್‌‍ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ । ವಿಜಯೇಂದ್ರ +ಬೆಂಗಳೂರು,ಮೇ21-ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್‌‍ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. +ಸಚಿವ ಸತೀಶ್‌ ಜಾರಕಿಹೊಳಿ ಅವರ ಸ್ವಕ್ಷೇತ್ರ ಯಮಕನಮರಡಿ ವ್ಯಾಪ್ತಿಯ ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಮಾಡಿಕೊಂಡಿದ್ದ ಖಾಸಗಿ ಸಾಲವನ್ನು ತೀರಿಸಲಾಗದೇ ಪತ್ನಿ, ಪುತ್ರನನ್ನು ನಿಷೇಧಿತ ಜೀತಪದ್ಧತಿಗಿಟ್ಟು, ಅಕ್ರಮ ಗೃಹ ಬಂಧನದ ಶಿಕ್ಷೆ ಅನುಭವಿಸುವ, ಅಪಮಾನ ಹಾಗೂ ಅಸಹಾಯಕ ಪರಿಸ್ಥಿತಿಯಿಂದ ಆತಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. +ಈ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್‌ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ನೆರಳಿನ ಭಾಗ್ಯ ಕಲ್ಪಿಸಿಕೊಡುತ್ತಿದೆ. ಈ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಇಂಥ ಹೀನ ಘಟನೆಗಳು ರಾಜ್ಯದಲ್ಲಿ ತಲೆ ಎತ್ತದಂತೆ ಎಚ್ಚರಿಕೆ ವಹಿಸಲಿ ಎಂದು ಸಲಹೆ ಮಾಡಿದ್ದಾರೆ. +ರೈತ ಸಮೂಹಕ್ಕೆ ಆತಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_138_7.txt b/eesanje/url_46_138_7.txt new file mode 100644 index 0000000000000000000000000000000000000000..5d71dedab171cee7f099d2786d608ddd13acf035 --- /dev/null +++ b/eesanje/url_46_138_7.txt @@ -0,0 +1,10 @@ +ದೇವರಾಜೇಗೌಡ ಜೊತೆ ಮಾತನಾಡಿರುವುದಾಗಿ ಸ್ವತಃ ಡಿಸಿಎಂ ಒಪ್ಪಿಕೊಂಡ ಮೇಲೆ ಇನ್ನೂ ಸಾಕ್ಷಿ ಬೇಕೇ..? : ಕುಮಾರಸ್ವಾಮಿ +ಬೆಂಗಳೂರು,ಮೇ21-ವಕೀಲ ದೇವರಾಜೇಗೌಡ ಅವರೊಂದಿಗೆ ಅರ್ಧ ನಿಮಿಷ ಮಾತನಾಡಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಒಪ್ಪಿಕೊಂಡ ಮೇಲೆ ಮುಖ್ಯಮಂತ್ರಿಗೆ ಬೇರೆ ಯಾವ ಸಾಕ್ಷಿ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಾಕ್ಷಿ ಕೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ದೇವರಾಜೇಗೌಡ, ಮಾಜಿ ಸಂಸದ ಶಿವರಾಮೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರ ಸಂಭಾಷಣೆ ಸಾಕ್ಷಿಯಾಗುವುದಿಲ್ಲವೇ? ಅರ್ಧ ನಿಮಿಷ ಮಾತನಾಡಿರುವುದು ಪ್ರಮುಖ ಅಂಶವಲ್ಲವೇ? ಆದರೂ ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದಾರೆ ಎಂದರು. +ಎಸ್‌‍ಐಟಿಯವರು ಏಳು ಜನರನ್ನು ಬಂಧಿಸಿ ಕರೆತಂದಿದ್ದಾರೆ. ಯಾವ ಸಾಕ್ಷಿ ಆಧಾರದ ಮೇಲೆ ಬಂಧನ ಮಾಡಿ ಕರೆತಂದಿದ್ದಾರೆ. ಪ್ರತಿನಿತ್ಯ ಹಲವರನ್ನು ಕರೆದು ಕಿರುಕುಳ ನೀಡುತ್ತಿದ್ದಾರೆ. ಸ್ಪಷ್ಟವಾಗಿ ಕಣ್ಣಿಗೆ ಕಟ್ಟಿದ ಹಾಗೆ ಸಂಭಾಷಣೆ ಇದ್ದರೂ ಮಾಹಿತಿ ಕೊಡಿ ಎಂದು ಉಪಮುಖ್ಯಮಂತ್ರಿ ಕೇಳುತ್ತಾರೆ ಎಂದು ಹೇಳಿದರು. +ಬಹಳ ಕಷ್ಟಪಟ್ಟು ದೂರು ಕೊಡಿಸಿರುವುದಾಗಿ ಮಾತನಾಡುವಾಗ ಆ ಮಹಾನುಭಾವ ಹೇಳಿದ್ದಾರೆ. ಇದಕ್ಕಿಂತಲೂ ಇನ್ಯಾವ ಸಾಕ್ಷಿ ಬೇಕು ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. +ಪ್ರಕರಣಕ್ಕೂ ಅವರಿಗೂ ಏನು ಸಂಬಂಧ? ಎಂದ ಅವರು, ಐದಾರು ಪ್ರಶ್ನೆಗಳನ್ನು ಕೇಳಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಂಸದ ಪ್ರಜ್ವಲ್‌ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಪಕ್ಷದಿಂದ ಅಮಾನತು ಮಾಡಿರುವುದು ನೈತಿಕತೆಯ ಆಧಾರದ ಮೇಲೆ. ಆದರೆ ಆರೋಪಿ ಸ್ಥಾನದಲ್ಲಿದ್ದರೂ ಅಪರಾಧಿಯನ್ನಾಗಿ ಮಾಡಿದ್ದಾರೆ. ಎಸ್‌‍ಐಟಿ ಅವರೇ ವಿಡಿಯೋದಲ್ಲಿ ಪುರುಷರ ಮುಖವಾಡವೇ ಇಲ್ಲ ಎಂದು ಹೇಳಿದ ಮೇಲೆ ಅಪರಾಧಿ ಸ್ಥಾನದಲ್ಲಿ ಯಾಕೆ ನಿಲ್ಲಿಸುತ್ತಾರೆ ಎಂದು ಪ್ರಶ್ನಿಸಿದರು. +ಇನ್ನು ಆರೋಪಿ ಸ್ಥಾನದಲ್ಲಿದ್ದು, ಅಪರಾಧಿ ಎಂದು ಸಾಬೀತಾಗಿಲ್ಲ. ನಿಮ್ಮ ರೀತಿ ನಾವು ಬಂಡತನ ತೋರಿಲ್ಲ. ಬಂಡತನದಲ್ಲಿ ನಿಮ್ಮ ಮಗನದ್ದು ನಡೆಯಿತಲಾ? ನಾನು ಈ ಹೆಸರು ಕೊಟ್ಟಿದ್ದೆ. ಆ ಹೆಸರು ಹೇಗೆ ಬಂತು ಎಂದು ಹೇಳಿದ್ದ ವಿಚಾರವನ್ನು ಸಿಎಸ್‌‍ಆರ್‌ ಹಣಕ್ಕಾಗಿ ಫೋನ್‌ ಮಾಡಿದ್ದು ಎಂದು ತಿರುಚಿದಿರಿ. ಮುಖ್ಯಮಂತ್ರಿಯಾಗಿ ಸಾಕ್ಷಿಗಳನ್ನು ಯಾವ ರೀತಿ ನಾಶ ಮಾಡುತ್ತೀರಿ ಎಂದು ಆರೋಪಿಸಿದರು. +ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ ಎಂದು ಆರೋಪಿಸಿದರು. ಮಾಜಿ ಸಚಿವ ರೇವಣ ಕುಟುಂಬದಲ್ಲಿ ಏಳೆಂಟು ವರ್ಷ ಕೆಲಸದಲ್ಲಿದ್ದವರು ಅವರಿಗೆ ತೊಂದರೆಯಾಗಿದ್ದರೆ ಏಕೆ ದೂರು ನೀಡಲಿಲ್ಲ ಎಂದು ಪ್ರಶ್ನಿಸಿದರು. ಅಯ್ಯೋ ಆ ವ್ಯಕ್ತಿಗಳನ್ನು ಇಷ್ಟಾದರೂ ಕರೆದುಕೊಂಡು ಬಂದು ದೂರು ಕೊಡಿಸಿದ್ದೇವೆ ಆ ಮಹಾನುಭಾವ ನಿಮ್ಮ ಡಿಸಿಎಂ ಹೇಳಿದ್ದಾರಲ್ಲಾ? ಇಂಥವರನ್ನು ಇಟ್ಟುಕೊಂಡು ರಾಜ್ಯ ಕಟ್ಟುತ್ತೀರಾ ಎಂದು ವಾಗ್ದಾಳಿ ನಡೆಸಿದರು. +ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ತಪ್ಪಿತಸ್ಥರನ್ನು ರಕ್ಷಣೆ ಮಾಡಲು ಹೋಗುವುದಿಲ್ಲ. ಜೆಡಿಎಸ್‌‍ ಸಂಬಂಧ ಯಾವಾಗ ಮುರಿಯುತ್ತೀರಿ ಎಂದು ಗೃಹಸಚಿವ ಅಮಿತ್‌ ಷಾ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕಾಗಿಯೇ ಈ ಪ್ರಕರಣವನ್ನು ಸೃಷ್ಟಿ ಮಾಡಿದ್ದಾರೆ ಎಂದು ಆರೋಪಿಸಿದರು. +ಬಿಜೆಪಿ-ಜೆಡಿಎಸ್‌‍ ಹೊಂದಾಣಿಕೆಯಿಂದ ಕಾಂಗ್ರೆಸ್‌‍ ಕನಸು ನುಚ್ಚು ನೂರಾಗಿದೆ. ಅದಕ್ಕಾಗಿ ಈ ಪ್ರಕರಣವನ್ನು ಹೊರತಂದು ರಾಜ್ಯವೇ ತಲೆತಗ್ಗಿಸುವಂತಹ ಕೆಲಸ ಮಾಡಲಾಗಿದೆ. ಪೆನ್‌ಡ್ರೈವ್‌ ಕೊಟ್ಟ ವ್ಯಕ್ತಿಯನ್ನು ಬಂಧಿಸಿದ್ದೀರಾ? ಇದರಲ್ಲೇ ಏನೋ ಹುನ್ನಾರ ಅಡಗಿದೆ. ಪ್ರಚಾರಕ್ಕಾಗಿ ಈ ಪ್ರಕರಣ ಬಳಸಿಕೊಳ್ಳಲಾಗುತ್ತಿದೆ ಹೊರತು ತನಿಖೆಯಿಂದ ನ್ಯಾಯ ಕೊಡಿಸುವ ಉದ್ದೇಶವಿಲ್ಲ ಎಂದರು. ಇಷ್ಟೆಲ್ಲಾ ಆದರೂ ಸರ್ಕಾರ ತಪ್ಪಿತಸ್ಥರಿಗೆ ರಕ್ಷಣೆ ಕೊಡುತ್ತಿದೆ. ಶಿವಕುಮಾರ್‌ ಅವರನ್ನು ಮುಂದುವರೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_46_138_8.txt b/eesanje/url_46_138_8.txt new file mode 100644 index 0000000000000000000000000000000000000000..a10ccb6083d0166319b33ff646ca87ce59669010 --- /dev/null +++ b/eesanje/url_46_138_8.txt @@ -0,0 +1,5 @@ +ರೇವ್ ಪಾರ್ಟಿಯಲ್ಲಿ ನಟಿ ಸೇರಿ 101 ಮಂದಿ ಭಾಗಿ । ದಯಾನಂದ್‌ ಸ್ಪಷ್ಟನೆ +ಬೆಂಗಳೂರು,ಮೇ21-ನಗರದ ಹೊರವಲಯದಲ್ಲಿ ನಡೆದ ರೇವೊ ಪಾರ್ಟಿಯಲ್ಲಿ ಖ್ಯಾತ ನಟಿ ಸೇರಿದಂತೆ 101 ಮಂದಿ ಭಾಗಿಯಾಗಿದ್ದರು. ಇದರಲ್ಲಿ ಯಾವುದೇ ಜನಪ್ರತಿನಿಧಿಗಳು ಇರಲಿಲ್ಲ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 19ರಂದು ರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ ಫಾರ್ಮ್‌ ಹೌಸ್‌‍ವೊಂದರಲ್ಲಿ ಸನ್‌ಸೆಟ್‌ ಟೊ ಸನ್‌ರೈಸ್‌‍ ವಿಕ್ಟರಿ ಈವೆಂಟ್‌ನಲ್ಲಿ ಹೊರರಾಜ್ಯದವರು ಸೇರಿದಂತೆ ಕೆಲ ಸ್ಥಳೀಯರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. +ಸುಮಾರು 100ಕ್ಕೂ ಹೆಚ್ಚು ಜನ ಪಾರ್ಟಿಯಲ್ಲಿ ಹಾಜರಿದ್ದರು. ಕೂಲಂಕುಷ ತನಿಖೆ ಕೈಗೊಂಡ ವೇಳೆ ಅಲ್ಲಿ ಮಾದಕವಸ್ತುಗಳಾದ ಎಂಬಿಎಂಎ, ಕೊಕೈನ್‌, ಐಡ್ರೋ ಗಾಂಜಾ ಸೇರಿದಂತೆ ಹಲವು ಮಾದಕವಸ್ತುಗಳು ಪತ್ತೆಯಾಗಿವೆ. 101 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಅದರ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಈ ಕಾರ್ಯಚರಣೆಯಲ್ಲಿ ಶ್ವಾನದಳ ಬಳಕೆ ಮಾಡಿರುವುದರಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ. ಅಲ್ಲಿದ್ದ ಕೆಲವರು ಮಾದಕವಸ್ತುಗಳನ್ನು ಕಾರು ಮತ್ತು ವಿವಿಧೆಡೆ ಬಚ್ಚಿಡಲಾಗಿದ್ದ ಮಾದಕಗಳನ್ನು ಶ್ವಾನದಳ ಪತ್ತೆಹಚ್ಚಿದೆ ಎಂದರು. ಕಳೆದ ವರ್ಷ ಶ್ವಾನದಳಕ್ಕೆ ಮಾದಕವಸ್ತು ಪತ್ತೆಗೆ ವಿಶೇಷ ತರಬೇತಿ ನೀಡಲಾಗಿತ್ತು. ಆ ಶ್ವಾನಗಳನ್ನು ಮೊದಲ ಬಾರಿ ಈ ಕಾರ್ಯಚರಣೆಗೆ ಬಳಸಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. +ಈ ಸಂಬಂಧ ಎಲೆಕ್ಟ್ರಾನಿಕ್‌ಸಿಟಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಐವರನ್ನು ಬಂಧಿಸಲಾಗಿದೆ. ಸರಹದ್ದಿನ ಆಧಾರದ ಮೇಲೆ ಈ ವ್ಯಾಪ್ತಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಬ್ಬಗೋಡಿ ಪೊಲೀಸ್‌‍ ಠಾಣೆ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾಯಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. \ No newline at end of file diff --git a/eesanje/url_46_138_9.txt b/eesanje/url_46_138_9.txt new file mode 100644 index 0000000000000000000000000000000000000000..31a856e58e8c6119a41f44c3a7ae0e2e74f2b510 --- /dev/null +++ b/eesanje/url_46_138_9.txt @@ -0,0 +1,14 @@ +ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಸಂಬಂಧಿಸಿದಂತೆ ದೇಶದ 11 ಕಡೆ ಎನ್‌ಐಎ ದಾಳಿ +ಬೆಂಗಳೂರು,ಮೇ21-ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಹಾಗೂ ಕೋಯಮತ್ತೂರು ಸೇರಿದಂತೆ ದೇಶದ 11 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. +ಇದೇ ವೇಳೆ ಎನ್‌ಐಎ ಅಧಿಕಾರಿಗಳು ಕೊತ್ತಮತ್ತೂರಿನ ನಾರಾಯಣಗುರು ಆಸ್ಪತ್ರೆ ಮೇಲೆ ದಾಳಿ ನಡೆಸಿದ್ದಾರೆ. ಈಗಾಗಲೇ ವಶದಲ್ಲಿರುವ ಶಂಕಿತ ಉಗ್ರರಾದ ಮತೀನ್‌ ಹಾಗೂ ಶಾಹೀಬ್‌ಗೆ ಇಬ್ಬರು ವೈದ್ಯರು ಹಣ ಸಂದಾಯ ಮಾಡಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ವಿಚಾರಣೆ ನಡೆಸಲಾಗಿದೆ. +ತನಿಖಾ ಸಂದರ್ಭದಲ್ಲಿ ಕರ್ನಾಟಕ ಮೂಲದ ಇಬ್ಬರು ವೈದ್ಯರು, ಶಂಕಿತ ಉಗ್ರರಿಗೆ ಹಣವನ್ನು ಖಾತೆಗೆ ಜಮೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಹೀಗಾಗಿ ಯಾವ ಕಾರಣಕ್ಕಾಗಿ ವೈದ್ಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಿಸಿದ್ದ ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಮಹತ್ವದ ದಾಖಲೆಗಳನ್ನು ಎನ್‌ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಬ್ಬರು ಶಂಕಿತರೊಂದಿಗೆ ಸಂಪರ್ಕ ಹೊಂದಿದ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. +ಮೂಲಗಳ ಪ್ರಕಾರ ಎನ್‌‍ಐಎ ಅಧಿಕಾರಿಗಳು ಬೆಂಗಳೂರಿನ ಕುಮಾರಸ್ವಾಮಿಲೇಔಟ್‌ ಮತ್ತು ಬನಶಂಕರಿಯಲ್ಲಿ ದಾಳಿ ಮಾಡಿದ್ದಾರೆ. ಎನ್‌‍ಐಎ ಕೊಯಮತ್ತೂರಿನ ವೈದ್ಯರಾದ ಜಾಫರ್‌ ಇಕ್ಬಾಲ್‌ ಮತ್ತು ನಯನ್‌ ಸಾದಿಕ್‌ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಎನ್‌ಐಎ ಉನ್ನತ ಮೂಲಗಳು ತಿಳಿಸಿವೆ. +ಶಂಕಿತ ಉಗ್ರ ಮತೀನ್‌ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸಸ್ಥಳದ ಮೇಲೆ ದಾಳಿ ಮಾಡಲಾಗಿದೆ. +ಮಾ.1ರಂದು ಬೆಂಗಳೂರಿನ ಐಟಿಪಿಎಲ್‌ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಐಎ, ಏಪ್ರಿಲ್‌ 12ರಂದು ಪಶ್ಚಿಮಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಪ್ರಮುಖ ಆರೋಪಿಗಳಾದ ಅಬ್ದುಲ್‌ ಮತೀನ್‌ ತಾಹಾ ಹಾಗೂ ಮುಸಾವಿರ್‌ ಹುಸೇನ್‌ ಶಾಜೀಬ್‌‍ನನ್ನು ಬಂಧಿಸಿತ್ತು. +ಮುಂದುವರೆದ ತನಿಖೆಯಲ್ಲಿ ಆರೋಪಿಗಳಿಂದ ಮತ್ತಷ್ಟು ಸ್ಫೋಟಕ ಅಂಶಗಳು ಹೊರಬಂದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ. ತನಿಖೆಯ ನೇತೃತ್ವ ವಹಿಸಿರುವ ಎನ್‌ಐಎ ಘಟನೆ ನಡೆದ 43 ದಿನಗಳ ಬಳಿಕ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇವರ ಬಂಧನಕ್ಕೂ ಮುನ್ನ ಪ್ರಮುಖ ಆರೋಪಿಗಳಿಗೆ ಲಾಜಿಸ್ಟಿಕ್‌ ಬೆಂಬಲ ನೀಡಿದ ಆರೋಪದಡಿ ಚಿಕ್ಕಮಗಳೂರಿನ ಕಳಸ ಮೂಲದ ಮುಜಾಮಿಲ್‌ ಶರೀಫ್‌ ಎಂಬಾತನನ್ನು ಮಾರ್ಚ್‌ 26ರಂದು ಬಂಧಿಸಿತ್ತು. +ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಹಚ್ಚುವ ಮತ್ತು ಬಂಧಿಸುವ ಪ್ರಯತ್ನಗಳ ಭಾಗವಾಗಿ ಮಾರ್ಚ್‌ 29ರಂದು ಕರ್ನಾಟಕ, ತಮಿಳುನಾಡು ಮತ್ತು ಉತ್ತರಪ್ರದೇಶದ 18 ಸ್ಥಳಗಳಲ್ಲಿ ಎನ್‌‍ಐಎ ತಂಡಗಳು ಶೋಧ ನಡೆಸಿದ್ದವು. ಇದಲ್ಲದೇ ಆರೋಪಿಗಳ ಬಂಧನಕ್ಕೆ ಸಹಾಯಕಾರಿಯಾಗಬಲ್ಲ ಮಾಹಿತಿ ನೀಡಿದವರಿಗೆ ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. +ಈ ಘಟನೆಯ ಮಾಸ್ಟರ್‌ ಮೈಂಡ್‌ ಅಬ್ದುಲ್‌ ಮತೀನ್‌ ತಾಹ ಹಾಗೂ ಬಾಂಬ್‌ ಇರಿಸಿದ್ದ ಮುಸಾವಿರ್‌ ಹುಸೇನ್‌ ಶಾಜಿಬ್‌ನನ್ನು ಎನ್‌ಐಎ ಬಂಧಿಸಿದೆ. ಬೆಂಗಳೂರಿನ ಕುಂದಲಹಳ್ಳಿ ಬಾಂಬ್‌ ಸ್ಪೋಟಿಸಿ ಕೋಲ್ಕತ್ತಾದಲ್ಲಿ ಇವರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವಾಗಲು ಬೇರೆ ಹೆಸರಿನಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಂಡು ಅಡಗಿಕೊಂಡಿದ್ದರು ಎಂಬ ಮಾಹಿತಿ ಪತ್ತೆಯಾಗಿತ್ತು. +ಅಬ್ದುಲ್‌ ಮತೀನ್‌ ತಾಹ, ಯಶ್‌ ಶಹನವಾಜ್‌ ಪಟೇಲ್‌ ಆಧಾರ್‌ಕಾರ್ಡ್‌ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್‌ ಹುಸೇನ್‌ ಶಾಜಿಬ್‌‍, ಅನೋಲ್‌ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್‌ ಕಾರ್ಡ್‌ ರಚಿಸಿಕೊಂಡಿದ್ದರು. ಇಬ್ಬರೂ ಕೂಡ ಇದೇ ದಾಖಲೆಯಲ್ಲಿಯೇ ಕೋಲ್ಕತ್ತಾದ ಪ್ಯಾರಡೈಸ್‌‍ ಹೋಟೆಲ್‌ಗೆ ದಾಖಲೆ ನೀಡಿ ವಾಸ್ತವ್ಯ ಹೂಡಿದ್ದರು. +ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನು ಎನ್‌‍ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಲ್ಲದೇ, ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. +ಇಬ್ಬರೂ ಉಗ್ರರು ಕೂಡ ತಪ್ಪಿಸಿಕೊಳ್ಳುವುದರಲ್ಲಿ ಮಾಸ್ಟರ್‌ ಮೈಂಡ್‌ ಆಗಿದ್ದರು. ಪಕ್ಕಾ ಚಾಲಾಕಿತನದಿಂದಲೇ ಕೋಲ್ಕತದಲ್ಲಿ ಇವರು ತಪ್ಪಿಸಿಕೊಳ್ಳುತ್ತಿದ್ದರು. 12 ದಿನ ಕೋಲ್ಕತ್ತದಲ್ಲಿದ್ದ ಇವರು, ಮೂರು ನಾಲ್ಕು ದಿನಕ್ಕೆ ಸ್ಥಳ ಬದಲಾಯಿಸುತ್ತಿದ್ದರು. ಆದರೆ ಮುಸಾವಿರ್‌ ಹಾಗೂ ಮತೀನ್‌ ತಾಹ ಹೆಜ್ಜೆ ಗುರುತನ್ನು ಪತ್ತೆ ಹಚ್ಚುವಲ್ಲಿ ಎನ್‌‍ಐಎ ಯಶಸ್ವಿಯಾಗಿತ್ತು. \ No newline at end of file diff --git a/eesanje/url_46_139_1.txt b/eesanje/url_46_139_1.txt new file mode 100644 index 0000000000000000000000000000000000000000..d358b20dbacf422e7d16f510298eb9d1701d1fb2 --- /dev/null +++ b/eesanje/url_46_139_1.txt @@ -0,0 +1,13 @@ +ಕಾಂಗ್ರೆಸ್‌‍ ಸರ್ಕಾರದ 1 ವರ್ಷದ ವೈಫಲ್ಯಗಳ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದ ಬಿಜೆಪಿ +ಬೆಂಗಳೂರು,ಮೇ20-ರಾಜ್ಯದಲ್ಲಿ ಕುಸಿದು ಬರುವ ಕಾನೂನು ಸುವ್ಯವಸ್ಥೆ, ಕೊಲೆ, ಸುಲಿಗೆ, ಅತ್ಯಾಚಾರ, ಕಮೀಷನ್‌ ಆರೋಪ, ಐದು ಗ್ಯಾರಂಟಿ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷದ ಅವಧಿಯಲ್ಲಿನ ವೈಫಲ್ಯಗಳ ವಿರುದ್ಧ ಪ್ರತಿಪಕ್ಷ ಬಿಜೆಪಿ ದೋಷಾರೋಪಪಟ್ಟಿ(ಚಾರ್ಜ್‌ಶೀಟ್‌) ಬಿಡುಗಡೆ ಮಾಡಿದೆ. +ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಪಕ್ಷದ ವಕ್ತಾರ ಅಶ್ವತ್ಥ ನಾರಾಯಣ ಸೇರಿದಂತೆ ಮತ್ತಿತರರು ಕಾಂಗ್ರೆಸ್‌‍ ಸರ್ಕಾರದ ಪಟ್ಟಿಯನ್ನು ಬಿಡುಗಡೆ ಮಾಡಿ ಇದೊಂದು ರೈತ ವಿರೋಧಿ, ಜನವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. +ನಂತರ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಅವೆಲ್ಲ ಹುಸಿಯಾಗಿವೆ. ಇನ್ನು ಮುಂದಾದರೂ ಬೆನ್ನು ತಟ್ಟಿಕೊಳ್ಳುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ, ಜನ ನಿಮಗೆ ಆಶೀರ್ವಾದ ಮಾಡಿದ್ದನ್ನು ಉಳಿಸಿಕೊಳ್ಳಿ, ಭರವಸೆ ಉಳಿಸಿಕೊಳ್ಳಿ ಎಂದರು. +ಕಳೆದ ಏಳೆಂಟು ತಿಂಗಳಿನಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿದೆ, ಹುಬ್ಬಳ್ಳಿಯ ನೇಹಾ, ಅಂಜಲಿ, ಕೊಡಗಿನಲ್ಲಿ ವಿದ್ಯಾರ್ಥಿನಿ ಮೀನಾ ಕೊಲೆ, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ದಬ್ಬಾಳಿಕೆ ಹೆಚ್ಚಾಗಿದೆ, ಮೂರ್ನಾಲ್ಕು ತಿಂಗಳಿನಲ್ಲಿ 400ಕ್ಕೂ ಹೆಚ್ಚಿನ ಕೊಲೆಯಾಗಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ ಹರಾಜಾಗುತ್ತಿದೆ, ಲವ್‌ ಜಿಹಾದ್‌ ನಂತಹ ವೇಳೆ ಸರ್ಕಾರದ ಹೇಳಿಕೆ ಕೊಲೆಗಡುಕರಿಗೆ ಶಕ್ತಿ ನೀಡಿದಂತಾಗಿದೆ ಎಂದು ದೂರಿದರು. +ಸ್ಪಷ್ಟ ಬಹುಮತದ ಕಾಂಗ್ರೆಸ್‌‍ ಸರ್ಕಾರದ ಮೇಲೆ ಜನತೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು ಆದರೆ ನುಡಿದಂತೆ ನಡೆದ ಸರ್ಕಾರ ಎಂದು ಹೊಗಳುಭಟರ ಮೂಲಕ ಬೆನ್ನು ತಟ್ಟಿಸಿಕೊಳ್ಳುತ್ತಿರುವುದೇ ಇವರ ಸಾಧನೆ, ಒಂದು ವರ್ಷದ ಸಾಧನೆ ಶೂನ್ಯ, ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ, ಯಾವುದೇ ಹೊಸ ಯೋಜನೆಗಳಿಗೆ ಚಾಲನೆ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +652 ಕ್ಕೂ ಹೆಚ್ಚಿನ ರೈತರ ಆತಹತ್ಯೆ ಮಾಡಿಕೊಂಡರೂ ಸರ್ಕಾರ ಜವಾಬ್ದಾರಿಯಿಂದ ನಡೆದುಕೊಂಡಿಲ್ಲ, ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿದೆ, ರಾಜ್ಯ ಸರ್ಕಾರದಿಂದ ರೈತರಿಗೆ ಯಾವ ರೀತಿ ಪರಿಹಾರ ಒದಗಿದೆ ಎಂದು ಪ್ರಶ್ನಿಸಿದರು. +ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ಕಾಂಗ್ರೆಸ್‌‍ಗೆ ಖಜಾನೆ ಫುಲ್‌ ಕ್ಲಿಯರ್‌. ಸರ್ಕಾರಕ್ಕೆ ವರ್ಷ, ಸಮಸ್ಯೆಗಳು ನೂರೊಂದು. ವರ್ಷಕ್ಕೆ ಲೂಟಿ ಎಷ್ಟು ಎಂದು ಜನ ಲೆಕ್ಕ ಹಾಕುತ್ತಿದ್ದಾರೆ, ನೇಹಾ,ಮೀನ, ಅಂಜಲಿ ಆಯ್ತು ಮುಂದೆ ಯಾರು ಎನ್ನುವ ಸ್ಥಿತಿ ಇದೆ, ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಹಿರ ಬಂದರೆ ಗ್ಯಾರಂಟಿ ಇಲ್ಲ, ನಿಶರಚಿತಾರ್ತವಾದರೂ ಗ್ಯಾರಂಟಿ ಇಲ್ಲ, ಕೊಲೆ ಭಾಗ್ಯ ನೀಡಿದೆ ಎಂದು ಟೀಕಿಸಿದರು. +ಮಹಿಳೆಯರ ಬದುಕುವ ಅವಕಾಶ ಸರ್ಕಾರ ಕಿತ್ತುಕೊಂಎಯ ಯಾವ ಗ್ಯಾರಂಟಿ ಕೊಟ್ಟು ಏನು ಭಾಗ್ಯ. ಅಂಜಲಿ ಕೊಲೆಗೆ ಪೊಲೀಸ್‌‍ ಲೋಪವಿದೆ ಎಂದು ಪರಮೇಶ್ವರ್‌ ಒಪ್ಪಿಕೊಂಡಿದ್ದಾರೆ, ನಿಮಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇದೆಯಾ? ಗೃಹ ಇಲಾಖೆಯನ್ನು ಮೋದಿ ನಿರ್ವಹಿಸುತ್ತಿದ್ದಾರಾ? ವರ್ಷದಲ್ಲಿ ನೀವು ಮಾಡಿದ್ದೇನು? ಎಂದು ಪ್ರಶ್ನಿಸಿದರು. +ದೇಶದ ಗಡಿಯಲ್ಲಿ ಪಾಕ್‌ ಜಿಂದಾಬಾದ್‌ ಎನ್ನುತ್ತಿದ್ದರು ಆದರೆ ಈಗ ವಿಧಾಮಸೌಧದಲ್ಲಿಯೂ ಘೋಷಣೆ ಹಾಕಲು ಅನುಮತಿಸಿದ್ದಾರೆ. ಅಲ್ಲಾ ಹೋ ಅಕ್ಬರ್‌ ಎನ್ನದಿದ್ದಕ್ಕೆ ಹಲ್ಲೆ, ಹನುಮಾನ್‌ ಚಾಲಿಸ್‌‍ ಹಾಕಿದ್ದಕ್ಕೆ ಹಲ್ಲೆಯಾಗಿದೆ, ಈ ಸರ್ಕಾರ ಬಂದು ವರ್ಷವಾಯಿತು, ಮಗು ಕೂಡ ಹುಟ್ಟಿದ ವರ್ಷದಲ್ಲಿ ಅಂಬೆಗಾಲಿಡಲಿದೆ. ಆದರೆ ಈ ಸರ್ಕಾರ ಅಂಬೆಗಾಲನ್ನೂ ಇಡುತ್ತಿಲ್ಲ ಎಂದು ವ್ಯಂಗ್ಯವಾಡಿದರು. +ರಾಜ್ಯದಲ್ಲಿ ಬರ ಬಂದಿದೆ, ಸಿದ್ದರಾಮಯ್ಯ ಮತ್ತು ಬರಕ್ಕೆ ಏನೋ ಸಂಬಧ ಇದೆ. ಆದರೆ ಈ ಬಾರಿ ಮಕ್ಕಳು ಪಾಸಾಗಲೂ ಬರ, ಮಾರ್ಕ್‌ಸ್‌‍ಗೂ ಬರ ಬಂದಿದೆ, 25 ಪರ್ಸೆಂಟ್‌ ಬಂದರೆ ಪಾಸ್‌‍, ಮುಂದಿನ ವರ್ಷ 100 ಅಂಕ ಕೃಪಾಂಕ ಕೊಡಿ, ಓದನ್ನೂ ಫ್ರೀ ಮಾಡಿ, ಓದದೆ ಪಾಸು ಮಾಡಿ ಎಂದು ಲೇವಡಿ ಮಾಡಿದ್ದಾರೆ. +ಪೊಲೀಸ್‌‍ ಠಾಣೆಗಳಲ್ಲಿ ರಿಯಲ್‌ ಎಸ್ಟೇಟ್‌ ದಂಧೆ ನಡೆಯುತ್ತಿದೆ, ಈ ಸರ್ಕಾರ ಬಂದ ನಂತರ ಮುಕ್ತ ಕೊಲೆ ಗ್ಯಾರಂಟಿ, ಸುಲಿಗೆ ಗ್ಯಾರಂಟಿ, ಹೆಣ್ಣುಮಕ್ಕಳಿಗೆ ಬದುಕುವ ಗ್ಯಾರಂಟಿ ಇಲ್ಲ. ಹಾಗಾಗಿ ಈ ಸರ್ಕಾರವನ್ನು ರಾಜ್ಯಪಾಲರು ಕೂಡಲೇ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. +ಬೆಂಗಳೂರನ್ನು ಕೊಲೆಗಡುಕರ ಸ್ವರ್ಗವನ್ನಾಗಿ ಮಾಡಿದ್ದೀರಿ, ಯಾವ ಮುಖ ಇಟ್ಟುಕೊಂಡು ಸಾಧನೆ ಬಗ್ಗೆ ಮಾತನಾಡುತ್ತೀರ? ನೀವೇ ಸ್ವತಃ ರಾಜೀನಾಮೆ ಕೊಟ್ಟು ಹೋಗಬೇಕಿತ್ತು, ಭಂಡತನದಿಂದ ಉಳಿದುಕೊಂಡಿದ್ದೀರಿ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_139_10.txt b/eesanje/url_46_139_10.txt new file mode 100644 index 0000000000000000000000000000000000000000..f8a291c2af3076d68c3cafa7b5470969b829c344 --- /dev/null +++ b/eesanje/url_46_139_10.txt @@ -0,0 +1,5 @@ +ಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ ಟೀಕೆ +ಬೆಂಗಳೂರು,ಮೇ20-ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ವರ್ಷವಾಯಿತು. ಆದರೆ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ಹರಿಹಾಯ್ದಿದ್ದಾರೆ. +ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು. ಹಿಂದುಳಿದವರ ಅಭಿವೃದ್ಧಿ ಹಿಂದುಳಿಯಿತು. ರೈತರ ಬಾಳು ಗೋಳಾಯಿತು ಎಂದು ಆರೋಪಿಸಿದ್ದಾರೆ. +ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಒಂದು ವರ್ಷದಲ್ಲಿ ವಿಪಕ್ಷಗಳಾದ ಜೆಡಿಎಸ್‌‍ ಮತ್ತು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿವೆ. ಒಂದು ವರ್ಷದಲ್ಲಿ ಸರ್ಕಾರ ಲೋಪ-ದೋಷಗಳು, ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ, ತನ್ನ ಎಲ್ಲ ಘಟಕಗಳಿಗೆ ಸೂಚನೆ ನೀಡಿದೆ. +ಮತ್ತೊಂದೆಡೆ ವಿಪಕ್ಷದ ಹಿರಿಯ ನಾಯಕರು ಸಹ ಸುದ್ದಿಗೋಷ್ಠಿ ನಡೆಸಿ ಸಮಾಜ ಕಲ್ಯಾಣ, ಆಹಾರ, ಕೃಷಿ ಮತ್ತು ಗೃಹ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ವೈಫಲ್ಯಗಳ ಕುರಿತು ಜನರ ಮುಂದಿಡಲು ತೀರ್ಮಾನಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ. \ No newline at end of file diff --git a/eesanje/url_46_139_11.txt b/eesanje/url_46_139_11.txt new file mode 100644 index 0000000000000000000000000000000000000000..1849d9d48827e0bbae1d633f768d778194ed822a --- /dev/null +++ b/eesanje/url_46_139_11.txt @@ -0,0 +1,6 @@ +ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಪೂರೈಸಿದ ಕುರಿತು ಆರ್‌.ಅಶೋಕ್‌ ವ್ಯಂಗ್ಯ +ಬೆಂಗಳೂರು,ಮೇ20-ನಾಲಾಯಕ್‌ ಸಚಿವರು ಹಾಗೂ ಸಾಲು ಸಾಲು ಎಡವಟ್ಟುಗಳು ಮತ್ತು ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಸ್‌‍ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಪೂರ್ಣಗೊಳ್ಳುತ್ತಿರುವುದರ ಬಗ್ಗೆ ವ್ಯಂಗ್ಯವಾಡಿದ್ದಾರೆ. +ಈ ಕುರಿತು ಎಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಾಲಾಯಕ್‌ ಸಚಿವರು ಸಾಲು ಸಾಲು ಎಡವಟ್ಟುಗಳು ಸಿಎಂ ಕುರ್ಚಿಗೇರಲು ಡಿಸಿಎಂ ಕನಸು, ಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಎಂದು ಅಪಹಾಸ್ಯ ಮಾಡಿದ್ದಾರೆ. +ಜಾತಿಗೊಂದು, ಜಿಲ್ಲೆಗೊಂದು ಬಣ ನಾಡಿನ ಅಭಿವೃದ್ದಿ ಮಾತ್ರ ಗೌಣ ಇದು ಕಾಂಗ್ರೆಸ್‌‍ ಸರ್ಕಾರದ ಒಂದು ವರ್ಷದ ಕಥೆ ಏಳೂವರೆ ಕೋಟಿ ಕನ್ನಡಿಗರ ದಿನನಿತ್ಯದ ವ್ಯಥೆ ಎಂದು ಲೇವಡಿ ಮಾಡಿದ್ದಾರೆ. +ಕುಸಿದ ಕಾನೂನು ಸುವ್ಯವಸ್ಥೆಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆಏರುತ್ತಲೇ ಇದೆ ಸಾಲದ ಹೊರೆಅಭಿವೃದ್ದಿ ಮಾತ್ರ ಕಣ್ಮರೆನಾಲಾಯಕ್ ಸಚಿವರುಗಳುಸಾಲು ಸಾಲು ಎಡವಟ್ಟುಗಳುಸಿಎಂ ಕುರ್ಚಿಗೇರಲು ಡಿಸಿಎಂ ಕನಸುಕುರ್ಚಿ ಉಳಿಸಿಕೊಳ್ಳಲು ಸಿಎಂ ಸರ್ಕಸ್ಸುಜಾತಿಗೊಂದು, ಜಿಲ್ಲೆಗೊಂದು ಬಣನಾಡಿನ ಅಭಿವೃದ್ದಿ ಮಾತ್ರ ಗೌಣಇದು ಕಾಂಗ್ರೆಸ್…../Iy7fZ4YG8c +ಕುಸಿದ ಕಾನೂನು ಸುವ್ಯವಸ್ಥೆ ಮಹಿಳೆಯರು ಹೆಣ್ಣುಮಕ್ಕಳಿಗಿಲ್ಲ ಸುರಕ್ಷತೆ ಏರುತ್ತಲೇ ಇದೆ ಸಾಲದ ಹೊರೆ ಅಭಿವೃದ್ಧಿ ಮಾತ್ರ ಕಣರೆ ಎಂದು ವ್ಯಂಗ್ಯವಾಡಿದ್ದಾರೆ. \ No newline at end of file diff --git a/eesanje/url_46_139_12.txt b/eesanje/url_46_139_12.txt new file mode 100644 index 0000000000000000000000000000000000000000..48b9ce2ac41798bc53b0e2c9524144944ca6b782 --- /dev/null +++ b/eesanje/url_46_139_12.txt @@ -0,0 +1,6 @@ +ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ : ನಿಖಿಲ್‌ ಆಕ್ರೋಶ +ಬೆಂಗಳೂರು, ಮೇ 20-ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿರುವ ಪ್ರತಿ ವಿಚಾರದಲ್ಲೂ ರಾಜ್ಯಸರ್ಕಾರದ ಕೈವಾಡವಿದೆ ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆರೋಪಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪ್ರಮುಖ ವ್ಯಕ್ತಿಯೊಬ್ಬರ ಹೆಸರು ಪ್ರಸ್ತಾಪವಾಗಿದೆ. ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕಲ್ಲವೇ ಎಂದು ಹೇಳಿದರು. ಶಿವರಾಮೇಗೌಡರು ಮಾತನಾಡಿರುವ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ರಾಜಕಾರಣವೇ ಬೇರೆ. ಆದರೆ ಒಬ್ಬರ ಸಾವು ಬಯಸುವುದು ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಚುನಾವಣೆಯಲ್ಲಿ ಹೊಂದಾಣಿಕೆ ಕೆಲವು ಸಲ ಕೆಲವರು ಮಾಡಿಕೊಳ್ಳುತ್ತಾರೆ. ಅದು ಬಹಿರಂಗವೂ ಆಗುತ್ತದೆ. ಆದರೆ ನಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಂದೂ ಈ ರೀತಿ ಯೋಚನೆ ಮಾಡಿಲ್ಲ. ಅವರು ಯಾವಾಗಲೂ ರಾಜ್ಯದ ಜನರ ಬಗ್ಗೆಯೇ ಯೋಚಿಸುತ್ತಾರೆ ಎಂದರು. +ಬಹಳಷ್ಟು ಮಂದಿ ಹೊಂದಾಣಿಕೆ ಮಾಡಿಕೊಂಡು ಒಳ್ಳೆಯ ಸ್ಥಾನದಲ್ಲಿದ್ದಾರೆ. ನಮ್ಮ ಬಳಿ ಆ ರೀತಿ ಯಾವ ಅಡ್ಜೆಸ್ಟ್‌ಮೆಂಟ್‌ ಸಂಸ್ಕೃತಿಯೂ ಇಲ್ಲ ಎಂದು ಹೇಳಿದರು. ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂತ್ರಸ್ತ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಸರಿಯಲ್ಲ. +ಪೆನ್‌ಡ್ರೈವ್‌ ಸೋರಿಕೆ ಮಾಡಿದವರ ಬಗ್ಗೆ ಏಕೆ ತನಿಖೆಯಾಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆ ಎಂಬುದನ್ನು ಪತ್ತೆ ಹಚ್ಚಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಎಲ್ಲರೂ ಎಸ್‌‍ಐಟಿ ತನಿಖೆ ಎದುರಿಸಬೇಕು ಎಂದರು. \ No newline at end of file diff --git a/eesanje/url_46_139_2.txt b/eesanje/url_46_139_2.txt new file mode 100644 index 0000000000000000000000000000000000000000..7f0311ba389a8f02ece2af6a4687a266c8c8e4c3 --- /dev/null +++ b/eesanje/url_46_139_2.txt @@ -0,0 +1,5 @@ +ಮಾಜಿ ಸಂಸದ ಶಿವರಾಮೇಗೌಡ ಮನೆ ಬಳಿ ಮೊಟ್ಟೆ ಎಸೆದು ಪರಾರಿಯಾದ ಗುಂಪು +ಬೆಂಗಳೂರು, ಮೇ 20-ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಆಡಿಯೋವೊಂದರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಶಿವರಾಮೇಗೌಡ ಅವರ ಮನೆ ಬಳಿ ಬಂದ ಗುಂಪೊಂದು ಮೊಟ್ಟೆ ಎಸೆದು ಪರಾರಿಯಾಗಿದೆ. +ಸಂಸದ ಪ್ರಜ್ವಲ್‌ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಸಂಸದ ಶಿವರಾಮೇಗೌಡ ಅವರ ನಡುವಿನ ಆಡಿಯೋ ಸಂಭಾಷಣೆಯಲ್ಲಿ ದೇವೇಗೌಡರ ಬಗ್ಗೆ ಶಿವರಾಮೇಗೌಡ ಅವಹೇಳನಕಾರಿ ನಿಂದಿಸಿದ್ದಾರೆ ಎನ್ನಲಾಗಿದೆ. +ಸಿ.ಕೆ. ಅಚ್ಚುಕಟ್ಟು ಪೊಲೀಸ್‌‍ ಠಾಣಾ ವ್ಯಾಪ್ತಿಯ ಬನಗಿರಿಯಲ್ಲಿ ವಾಸವಿರುವ ಶಿವರಾಮೇಗೌಡ ಅವರ ಮನೆ ಬಳಿ ತಡರಾತ್ರಿ 11.30ರ ಸುಮಾರಿನಲ್ಲಿ ಕಾರಿನಲ್ಲಿ ಬಂದ ಗೊಂಪೊಂದು ಮನೆ ಮೇಲೆ ಮೊಟ್ಟೆ ಎಸೆಯಲು ಯತ್ನಿಸಿದೆ. ಆ ವೇಳೆ ಪೊಲೀಸರನ್ನು ಕಂಡು ತಂದಿದ್ದ ಮೊಟ್ಟೆಗಳನ್ನು ಅವರ ಕಣ್ತಪ್ಪಿಸಿ ಮನೆ ಮುಂದೆ ಎಸೆದು ಪರಾರಿಯಾಗಿದೆ. +ಈ ಬಗ್ಗೆ ಸಿ.ಕೆ.ಅಚ್ಚು ಕಟ್ಟು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಮೊಟ್ಟೆ ಎಸೆದು ಹೋದವರಿಗಾಗಿ ಶೋಧ ನಡೆಸುತ್ತಿದ್ದಾರೆ.ಶಿವರಾಮೇಗೌಡ ಮನೆ ರಸ್ತೆಯ ಎರಡು ಕಡೆ ಬ್ಯಾರಿಕೇಡ್‌ ಹಾಕಿ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. \ No newline at end of file diff --git a/eesanje/url_46_139_3.txt b/eesanje/url_46_139_3.txt new file mode 100644 index 0000000000000000000000000000000000000000..ccda550bde281bb85b20b7e7fa5ba6c3ef80fc74 --- /dev/null +++ b/eesanje/url_46_139_3.txt @@ -0,0 +1,15 @@ +“ಕರ್ನಾಟಕದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿಲ್ಲ” : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮೇ 20-ಕೇಂದ್ರದಲ್ಲಿ ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದ ಪ್ರಧಾನಿ ಹುದ್ದೆಗೆ ಯಾರೂ ಆಕಾಂಕ್ಷಿಗಳಿಲ್ಲ ಎಂದು ಸ್ಪಷ್ಟಪಡಿಸಿದರು. +ಪ್ರೆಸ್‌‍ಕ್ಲಬ್‌ನಲ್ಲಿಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಗುಜರಾತಿನ ಮಾದರಿಯನ್ನು ಮುಂದಿಟ್ಟುಕೊಂಡು ನರೇಂದ್ರ ಮೋದಿ ದೇಶದ ಪ್ರಧಾನಿಯಾದಂತೆ ಕರ್ನಾಟಕದ ಮಾದರಿಯನ್ನು ಪ್ರಸ್ತಾಪಿಸಿ ರಾಜ್ಯದಿಂದ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಿಂದ ಯಾರೂ ಪ್ರಧಾನಿ ಹುದ್ದೆಯ ರೇಸ್‌‍ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು. +ತಮ್ಮ 1 ವರ್ಷಗಳ ಸರ್ಕಾರದ ಸಾಧನೆಯೆಂದರೆ ತಕ್ಷಣವೇ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಕ್ಕಾಗಿ 2023-24 ರಲ್ಲಿ 36 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. +ಶಕ್ತಿ ಯೋಜನೆಯಡಿ 201 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 4.10 ಕೋಟಿ ಫಲಾನುಭವಿಗಳಿಗೆ 5,754 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾಗೊಳಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್‌ಗಾಗಿ 7,436 ಕೋಟಿ ರೂ. ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೊಟಿ ಯಜಮಾನಿಯರಿಗೆ 20,293 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದ್ದು, ಯುವನಿಧಿಯಡಿ 1,57,255 ನೋಂದಣಿಯಾಗಿದ್ದಾರೆ ಎಂದು ಹೇಳಿದರು. +ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಜೆಟ್‌ನಲ್ಲಿ 54 ಸಾವಿರ ಕೋಟಿ ರೂ.ಗಳ ಬಂಡವಾಳ ವೆಚ್ಚದ ಬದಲಾಗಿ 56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ನೀರಾವರಿಗೆ 14,369 ಕೋಟಿ ರೂ.ಗಳ ಬದಲಾಗಿ 18,198 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಶೇ.99.20 ಯಷ್ಟು ಅನುದಾನ ಬಳಕೆಯಾಗಿದೆ. +ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಅಪಪ್ರಚಾರದಲ್ಲಿ ಯಾವುದೇ ಹುರುಳಿಲ್ಲ. ಆರ್ಥಿಕವಾಗಿ ಸಬಲವಾಗಿರುವುದಕ್ಕಾಗಿಯೇ ಪಂಚಖಾತ್ರಿಗಳು ಮತ್ತು ಯೋಜನಾ ವೆಚ್ಚಗಳನ್ನು ಹಿಂದಿನ ಸರ್ಕಾರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು. +ಪರಿಶಿಷ್ಟರ ಬಗ್ಗೆ ಕಾಳಜಿ ವಹಿಸುವ ಪ್ರಧಾನಮಂತ್ರಿಯವರು ದೇಶಾದ್ಯಂತ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಎಸ್‌‍ಇಪಿ ಮತ್ತು ಟಿಎಸ್‌‍ಪಿ ಕಾಯ್ದೆಯನ್ನು ಏಕೆ ಜಾರಿಗೊಳಿಸಲಿಲ್ಲ? ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿಯವರು ಅಪ್ಪಟ ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಬೊಮಾಯಿ ಅವರ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್‌ನ ವಿಚಾರಣೆ ವೇಳೆ ಯಥಾಸ್ಥಿತಿಯನ್ನು ಮುಂದುವರೆಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದೆ. ಈವರೆಗೂ ಅದೇ ವ್ಯವಸ್ಥೆ ಮುಂದುವರೆದಿದೆ ಎಂದರು. +ರಾಜಕೀಯ ಮತ್ತು ಮತಗಳಿಕೆಗೆ ಜನರನ್ನು ದಿಕ್ಕು ತಪ್ಪಿಸುವ ಸತ್ಯಕ್ಕೆ ದೂರವಾದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ಭ್ರಷ್ಟಾಚಾರ ನಿರ್ಮೂಲನೆಗೆ ತಮ ಸರ್ಕಾರ ಬದ್ಧವಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌‍ಐ ನೇಮಕಾತಿ ಅಕ್ರಮ ಕೋವಿಡ್‌ ಸಂದರ್ಭದಲ್ಲಿ ನಡೆದ ಖರೀದಿ ಅವ್ಯವಹಾರ ಶೇ.40 ರಷ್ಟು ಕಮಿಷನ್‌ ದೂರ ಸೇರಿದಂತೆ ಹಲವು ದೂರುಗಳ ತನಿಖೆಗೆ ವಿಚಾರಣಾ ಆಯೋಗ ರಚಿಸಲಾಗಿದೆ. ಪಿಎಸ್‌‍ಐ ಹಗರಣದ ವರದಿ ಬಂದಿದ್ದು, ಉಳಿದೆರೆಡು ಹಗರಣಗಳ ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. +ಹುಬ್ಬಳ್ಳಿ ಹಾಗೂ ಕೊಡಗಿನಲ್ಲಿ ನಡೆದ ಕೊಲೆ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಂದೆ ಇಂತಹ ಘಟನೆಗಳು ಮರುಕಳುಸದಂತೆ ಎಚ್ಚರಿಕೆ ವಹಿಸಲಾಗಿದೆ. ಹುಬ್ಬಳ್ಳಿ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ವಿಭಾಗದ ಡಿಸಿಪಿಗಳು, ಡಿವೈಎಸ್ಪಿಗಳು ಹಾಗೂ ಇನ್ಸ್ ಪೆಕ್ಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ವಿವರಿಸಿದರು. +ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗಿದೆ. ಅದರ ಅನುಷ್ಠಾನದ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಒಂದು ವೇಳೆ ತೊಂದರೆಯಾದರೆ ಅದನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. +ದೇಶದಲ್ಲಿ ಇಡಬ್ಲ್ಯೂಎಸ್‌‍ ಜಾರಿ ಬಳಿಕ ಎಲ್ಲಾ ಸಮುದಾಯಗಳಿಗೂ ಮೀಸಲಾತಿ ದೊರೆಯುತ್ತಿದೆ. ಈ ಹಂತದಲ್ಲಿ ಯಾರೂ ಕೂಡಾ ಮೀಸಲಾತಿ ವಿರುದ್ಧವಾಗಿ ಮಾತನಾಡುವುದು ಅರ್ಥಹೀನ ಎಂದು ಹೇಳಿದರು.ಪೆನ್‌ಡ್ರೈವ್‌ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದರಲ್ಲಿ ಯಾವುದೇ ರಾಜಕೀಯ ಷಡ್ಯಂತ್ರವಿಲ್ಲ. ಪೆನ್‌ಡ್ರೈವ್‌ ಇದೆ ಎಂದು ದೇವರಾಜೇಗೌಡ ವರ್ಷದ ಹಿಂದೆಯೇ ಹೇಳಿಕೊಂಡಿದ್ದರು. ವಿಡಿಯೋಗಳು ಬಹಿರಂಗಗೊಳ್ಳುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾದರು. ಇದರಲ್ಲಿ ಷಡ್ಯಂತ್ರ ಇದೆ ಎನ್ನುವುದೇ ಆದರೆ ಜನತಾದಳದವರು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದೇಕೆ? ವಿಷಯ ಗೊತ್ತಿದ್ದೂ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಿದ್ದೇಕೆ? ಅವರ ಪರವಾಗಿ ಪ್ರಚಾರ ಮಾಡಿದ್ದೇಕೆ? ಎಂದು ಹಲವು ಪ್ರಶ್ನೆಗಳನ್ನು ಮುಂದಿಟ್ಟ ಮುಖ್ಯಮಂತ್ರಿಗಳು, ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಮಾಡಲಾಗುತ್ತಿರುವ ಆಡಿಯೋ ಆರೋಪ ಸೇರಿದಂತೆ ಯಾವುದಕ್ಕೂ ಸಾಕ್ಷ್ಯಗಳಿಲ್ಲ ಎಂದು ಸಮರ್ಥಿಸಿಕೊಂಡರು. +ಬರ ಪರಿಹಾರ ಪಾವತಿ ವಿಷಯದಲ್ಲಿ ಬಿಜೆಪಿ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು. ಕಾನೂನು ಸಂಘರ್ಷದ ಮೂಲಕ ಪರಿಹಾರ ಪಡೆದುಕೊಳ್ಳಲಾಗಿದೆ. ರೈತರಿಗೆ ವಿತರಿಸುತ್ತಿದ್ದೇವೆ. ಮುಂದಿನ ಹಂತದಲ್ಲೂ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು. +ಇಂಡಿಯಾ ಮೈತ್ರಿಕೂಟದ ಲೇವಡಿ ಮಾಡುವ ಪ್ರಧಾನಿಯವರು ಎನ್‌ಡಿಎ ಮೈತ್ರಿಕೂಟ ಮಾಡಿಕೊಂಡಿದ್ದೇಕೆ? ಗೆಲ್ಲುವ ವಿಶ್ವಾಸವಿದ್ದಿದ್ದರೆ ಏಕಾಂಗಿಯಾಗಿಯೇ ಸ್ಪರ್ಧಿಸಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು. +ಮುಖ್ಯಮಂತ್ರಿಯವರ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್‌ ಅಹಮದ್‌, ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌, ಪ್ರೆಸ್‌‍ಕ್ಲಬ್‌ ಅಧ್ಯಕ್ಷ ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಬಿ.ಟಿ.ಮಲ್ಲಪ್ಪ, ಉಪಾಧ್ಯಕ್ಷ ಆನಂದ್‌ ಬೈದನನೆ, ಕಾರ್ಯದರ್ಶಿ ದೊಡ್ಡಬೊಮಯ್ಯ, ಖಜಾಂಚಿ ಮೋಹನ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_139_4.txt b/eesanje/url_46_139_4.txt new file mode 100644 index 0000000000000000000000000000000000000000..efb60ae218981a9ae4a2a6dff73b1637f8cce969 --- /dev/null +++ b/eesanje/url_46_139_4.txt @@ -0,0 +1,5 @@ +ದೇವೇಗೌಡರ ವಿರುದ್ಧ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್‌‍ ಪ್ರತಿಭಟನೆ +ಬೆಂಗಳೂರು, ಮೇ 20– ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ಮಾಜಿ ಸಂಸದ ಶಿವರಾಮೇಗೌಡ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜೆಡಿಎಸ್‌‍ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು. ಬೆಂಗಳೂರು ಮಹಾನಗರ ಜೆಡಿಎಸ್‌‍ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಿವರಾಮೇಗೌಡ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. +ದೇವೇಗೌಡರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲು ಶಿವರಾಮೇಗೌಡರಿಗೆ ಡಿ.ಕೆ.ಶಿವಕುಮಾರ್‌ ಕುಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಯಿತು. ಶಿವರಾಮೇಗೌಡ ಹಾಗೂ ಶಿವಕುಮಾರ್‌ ವಿರುದ್ಧ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಲಾಯಿತು. +ಬೆಂಗಳೂರು ಮಹಾನಗರ ಜೆಡಿಎಸ್‌‍ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ, ಪಕ್ಷದ ಮುಖಂಡರಾದ ಟಿ.ಎನ್‌.ಜವರಾಯಿಗೌಡ, ಗೋಪಾಲ್‌, ರೇವಣ್ಣ, ಶೈಲಾ, ಕನ್ಯಾಕುಮಾರಿ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಲ್ಲದೆ ಶಿವರಾಮೇಗೌಡರ ಪ್ರತಿಕೃತಿ ದಹಿಸಲಾಯಿತು. +ವಕೀಲ ದೇವರಾಜೇಗೌಡರೊಂದಿಗೆ ದೂರವಾಣಿಯಲ್ಲಿ ಮಾತನಾಡುವಾಗ ಶಿವರಾಮೇಗೌಡ ಅವರು ದೇವೇಗೌಡರ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಖಂಡಿಸಲಾಯಿತು. \ No newline at end of file diff --git a/eesanje/url_46_139_5.txt b/eesanje/url_46_139_5.txt new file mode 100644 index 0000000000000000000000000000000000000000..9b6d6a5db189f06461d42577c62c7a4e86339a27 --- /dev/null +++ b/eesanje/url_46_139_5.txt @@ -0,0 +1,5 @@ +ಸೋಮಾರಿ ಸಿಎಂ ಸಿದ್ದರಾಮಯ್ಯ : ನಟ ಚೇತನ್‌ ವಂಗ್ಯ +ಬೆಂಗಳೂರು,ಮೇ20-ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್‌ ಅವರ ಅನೀಹಿಲೇಷನ್‌ ಆಫ್‌ಕಾಸ್ಟ್‌ ಕೃತಿಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಗೊರೆಯಾಗಿ ಕೊಟ್ಟಿರುವುದಕ್ಕೆ ನಟ ಚೇತನ್‌ ವಂಗ್ಯವಾಡಿದ್ದಾರೆ. +ಎಸ್‌‍ ಎಸ್‌‍ ಎಲ್‌ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್‌ಗಳಿಗೆ ಬಾಬಾಸಾಹೇಬ್‌ ಅವರ ಅನೀಹಿಲೇಷನ್‌ ಆಫ್‌ ಕಾಸ್ಟ್‌ ಕೃತಿಯ ಪ್ರತಿಯನ್ನು ಸಿಎಂ ಸೋಮಾರಿ ಸಿದ್ದು ನೀಡಿದ್ದಾರೆ. ಎಷ್ಟು ವಿಪರ್ಯಾಸ ಎಂದು ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಟೀಕಿಸಿದ್ದಾರೆ. +ಅಂಬೇಡ್ಕರ್‌ ಅವರ ಕಾಲದಲ್ಲಿ ಅವರ ಅತಿದೊಡ್ಡ ರಾಜಕೀಯ ಶತ್ರು ಕಾಂಗ್ರೆಸ್‌‍ ಪಕ್ಷ (ರಾಜಕೀಯ ಹಿಂದೂ ಧರ್ಮ), ಇಂದಿನ ಕಾಂಗ್ರೆಸ್‌‍ ಪಕ್ಷ (ಅದೇ ಮನುವಾದ) ಅಂಬೇಡ್ಕರ್‌ ಅವರನ್ನು ಚುನಾವಣಾ ಲಾಭಕ್ಕಾಗಿ ಅಪಹರಿಸಲು ಪ್ರಯತ್ನಿತ್ತದೆ. ಗಾಂಧಿಯವರ 36 ಬ್ರಾಹಣ್ಯದ ಪುಸ್ತಕಗಳಲ್ಲಿ ಒಂದನ್ನು ಸಿಎಂ ಈ ಇಬ್ಬರು ವಿದ್ಯಾರ್ಥಿಗಳಿಗೆ ನೀಡಬೇಕಿತ್ತು, ಇದು ಸೈದ್ಧಾಂತಿಕವಾಗಿ ಹೆಚ್ಚು ಪ್ರಾಮಾಣಿಕವಾದ ಉಡುಗೊರೆಯಾಗಿರುತ್ತಿತ್ತು ಎಂದು ಚೇತನ್‌ ಹೇಳಿದ್ದಾರೆ. +ಚೇತನ್‌ ಇಂಥ ಅಪ್ರಾಸಂಗಿಕ, ವಿವಾದಾತಕ ಹೇಳಿಕೆಗಳಿಗೆ ಕುಖ್ಯಾತರಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ವಕೀಲರೊಬ್ಬರು ಶೇಷಾದ್ರಿಪುರ ಠಾಣೆಯಲ್ಲಿ ಇವರ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಚೇತನ್‌ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್‌ಸಿಆರ್‌) ದಾಖಲಿಸಿದ್ದರು. \ No newline at end of file diff --git a/eesanje/url_46_139_6.txt b/eesanje/url_46_139_6.txt new file mode 100644 index 0000000000000000000000000000000000000000..980c28e3e6672f578582b034acebda9b28e21c8c --- /dev/null +++ b/eesanje/url_46_139_6.txt @@ -0,0 +1,5 @@ +ಗ್ಯಾರಂಟಿಗಳನ್ನ ಬಿಟ್ರೆ ಇನ್ನೇನು ಸಾಧನೆ ಮಾಡಿದ್ದೀರಾ..? : ಕಾಂಗ್ರೆಸ್‌‍ ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ +ಬೆಂಗಳೂರು,ಮೇ20– ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷ ಕಾಲ ಐಸಿಯುನಲ್ಲಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ಒಂದು ವರ್ಷ ಪೂರೈಸಿದೆ. 5 ಗ್ಯಾರಂಟಿಗಳನ್ನು ಹೊರತುಪಡಿಸಿದರೆ ಸರ್ಕಾರದ ಸಾಧನೆ ಇನ್ನೇನಿದೆ ಎಂದು ಪ್ರಶ್ನಿಸಿದರು. +ಐದು ಗ್ಯಾರಂಟಿಗಳ ಬಗ್ಗೆ ಮಾಧ್ಯಮದಲ್ಲಿ ಜಾಹಿರಾತು ನೀಡಿ ಪ್ರಚಾರ ಮಾಡಿದ್ದು ಒಂದು ಕಡೆಯಾದರೆ ಇನ್ನೊಂದು ಕಡೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿನಿತ್ಯ ಸಂಘರ್ಷ ಮಾಡಿದ್ದು ಮತ್ತೊಂದು ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು. +ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು ಎಲ್ಲೂ ಕಾಣಲಿಲ್ಲ. ಇಂದೂ ಒಬ್ಬ ರೈತರು ಆತಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ ಎಂದರು. +ಬರ ಪರಿಹಾರಕ್ಕೆ ನೀಡಿದ್ದ ಹಣವನ್ನು ರೈತರು ಪಡೆದಿದ್ದ ಸಾಲಕ್ಕೆ ವಜಾ ಹಾಕುತ್ತಿರುವುದು ಕೇಳಿಬರುತ್ತಿದೆ. ಹಾಲು ಉತ್ಪಾದಕರಿಗೆ ನೀಡಬೇಕಾದ ಪ್ರೋತ್ಸಾಹಧನ 600ರಿಂದ 700 ಕೋಟಿ ರೂ. ಪಾವತಿಯಾಗಿಲ್ಲ. ಹಲವು ಇಲಾಖೆಗಳಲ್ಲಿ ಎರಡುಮೂರು ತಿಂಗಳಿನಿಂದ ಸಂಬಳವನ್ನೇ ಕೊಟ್ಟಿಲ್ಲ. ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಎಷ್ಟು ಸಭೆ ನಡೆಸಿ ಅಧಿಕಾರಿಗಳಿಗೆ ಆಡಳಿತ ಹಾಗೂ ಅಭಿವೃದ್ಧಿಯ ಪ್ರಗತಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_139_7.txt b/eesanje/url_46_139_7.txt new file mode 100644 index 0000000000000000000000000000000000000000..f954fec82e32a4cfbd64071a96c5ffe585c7672f --- /dev/null +++ b/eesanje/url_46_139_7.txt @@ -0,0 +1,6 @@ +ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣಗೆ ಬಿಗ್ ರಿಲೀಫ್ +ಬೆಂಗಳೂರು,ಮೇ20-ಹಾಸನ ಜಿಲ್ಲೆ ಹೊಳೆನರಸೀಪುರದ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ನ್ಯಾಯಾಲಯದ ಷರತ್ತುಬದ್ಧ ಜಾಮೀನು ನೀಡಿದೆ. +ಕಾಯ್ದಿರಿಸಿದ್ದ ತೀರ್ಪನ್ನು ಸೋಮವಾರ ಪ್ರಕಟಿಸಿದ ಬೆಂಗಳೂರು 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಮೂರ್ತಿ ಜೆ.ಪ್ರೀತ್‌ ಅವರು 5 ಲಕ್ಷ ಬಾಂಬ್‌ ಹಾಗೂ ಒಬ್ಬರ ಶ್ಯೂರಿಟಿ ಒದಗಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿತು. +ಈಗಾಗಲೇ ರೇವಣ್ಣ ಅವರಿಗೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನಲ್ಲಿ ಮಹಿಳೆ ಅಪಹರಣ ಮತ್ತು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು. ಇದೀಗ ಎರಡೂ ಪ್ರಕರಣಗಳಲ್ಲಿ ರೇವಣ್ಣಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗಿರುವ ಕಾರಣ ಸದ್ಯ ಅವರು ಪೊಲೀಸ್‌‍ ಬಂಧನದಿಂದ ಮುಕ್ತರಾಗಿದ್ದಾರೆ. +ಕಳೆದ ಶುಕ್ರವಾರ ರೇವಣ್ಣ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ನಾಗೇಶ್‌ ಅವರು, ತಮ್ಮ ಕಕ್ಷಿದಾರರ ಮೇಲೆ ಪೊಲೀಸರು ದಾಖಲಿಸಿರುವ ಪ್ರಕರಣಗಳಲ್ಲಿ ಎಲ್ಲವೂ ಜಾಮೀನು ನೀಡುವಂತಹ ಪ್ರಕರಣಗಳಾಗಿವೆ. ಅವರು ತನಿಖೆಗೆ ಸಹಕಾರ ನೀಡುತ್ತಿದ್ದು, ಎಲ್ಲಿಯೂ ವಿಚಾರಣೆಗೆ ಗೈರು ಹಾಜರಾಗಿಲ್ಲ ಎಂದು ಸಮರ್ಥಿಸಿಕೊಂಡರು. +ಮೇಲ್ನೋಟಕ್ಕೆ ಈ ಪ್ರಕರಣವು ರಾಜಕೀಯ ಪ್ರೇರಿತದಂತೆ ಕಾಣುತ್ತಿದೆ. ಸಂತ್ರಸ್ತೆ ಮಹಿಳೆಯು ಬರೆಯಲು ಬಾರದೆ ಇರುವಾಗ ಅದ್ಹೇಗೆ ಕಂಪ್ಯೂಟರ್‌ನಲ್ಲಿ ಬರೆಯುತ್ತಾರೆ ಎಂದು ಪ್ರಶ್ನೆ ಮಾಡಿದ್ದರು. \ No newline at end of file diff --git a/eesanje/url_46_139_8.txt b/eesanje/url_46_139_8.txt new file mode 100644 index 0000000000000000000000000000000000000000..85d5c066188318440e1cf047116a31b48f0ca283 --- /dev/null +++ b/eesanje/url_46_139_8.txt @@ -0,0 +1,9 @@ +ನುಡಿದಂತೆ ನಡೆದಿದ್ದೇವೆ, ಒಂದು ವರ್ಷ ಪೂರೈಸಿದ್ದೇವೆ : ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮೇ 20-ಕಾಂಗ್ರೆಸ್‌‍ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಸೇರಿ ನಮ್ಮ ಬಲ ಕುಗ್ಗಿಸಲು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. +ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ. +ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.ಭ್ರಷ್ಟಾಚಾರ, ದುರಾಡಳಿತ…../17yGeflgtr +ಕಾಂಗ್ರೆಸ್‌‍ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ. +ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿ ಹೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ ಕೈಗಳ ಬಲ ಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ. +ಇಂತಹ ಸವಾಲುಗಳ ನಡುವೆಯೂ ನಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾರಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು ಎಂದಿದ್ದಾರೆ. +ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸಗಳನ್ನಾಗಿ ಬಳಸಿಕೊಂಡು ನಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗದೆ ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ. +ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದ್ದೆಿವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು ಎಂದು ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_139_9.txt b/eesanje/url_46_139_9.txt new file mode 100644 index 0000000000000000000000000000000000000000..34f93854061490e92c1c3912e5126f17655f8d9f --- /dev/null +++ b/eesanje/url_46_139_9.txt @@ -0,0 +1,7 @@ +“ಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸುವ ದಕ್ಷ ಗೃಹಸಚಿವರು ಬೇಕಾಗಿದ್ದಾರೆ” : ಯತ್ನಾಳ್‌ +ಬೆಂಗಳೂರು,ಮೇ20-ಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸುವ ದಕ್ಷ ಗೃಹಸಚಿವರು ಬೇಕಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯಭರಿತವಾಗಿ ಟ್ವೀಟ್‌ ಮಾಡಿದ್ದಾರೆ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕುರ್ಚಿಗೆ ಭಾವಚಿತ್ರವನ್ನು ಅಂಟಿಸಿ ದಕ್ಷ ಗೃಹಸಚಿವರು ಬೇಕಾಗಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಹಾಲಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಕಾಲೆಳೆದಿದ್ದಾರೆ. ಸಮಾಜದಲ್ಲಿ ಅಶಾಂತಿ, ಗಲಭೆ, ಬೆದರಿಕೆ, ಕೊಲೆ, ಅತ್ಯಾಚಾರ, ಅನೀತಿ, ಅನ್ಯಾಯ, ಕೃತ್ಯಗಳನ್ನು ಹತ್ತಿಕ್ಕಲು ಓರ್ವ ದಕ್ಷ ಸಮರ್ಥ ಗೃಹಮಂತ್ರಿ ಬೇಕಾಗಿದ್ದಾರೆ ಎಂದು ಹಾಲಿ ಸಚಿವರ ಕಾರ್ಯವೈಖರಿಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ. +ಆಸಕ್ತರು ಅರ್ಜಿ ಸಲ್ಲಿಸಿಕರ್ನಾಟಕದ ಕಾನೂನು ಸುವ್ಯವಸ್ಥೆ ಉಳಿಸಿ../ +ಕಠಿಣ ಕ್ರಮ, ಕಾನೂನು ರೀತ್ಯ ಕ್ರಮ ಈ ಪದಪುಂಜಗಳನ್ನು ಬಿಟ್ಟು ಪಾತಕಿಗಳಿಗೆ ಅರ್ಥವಾಗುವ ಭಾಷೆಯಲ್ಲಿ ಕಾರ್ಯ ನಿರ್ವಹಿಸಬೇಕು. ಅವರು ನಮ ಬ್ರದರ್ಸ್‌, ಸಿಸ್ಟರ್ಸ್‌ ಎಂದು ಓಲೈಕೆ ರಾಜಕಾರಣ ಮಾಡಬಾರದು ಉಡಾಫೆ ಮಾತುಗಳನ್ನು ಆಡಮಾರದೆಂದು ಮನವಿ ಮಾಡಿದ್ದಾರೆ. +ಹಾರಿಕೆ ಉತ್ತರಗಳನ್ನು ಬಿಟ್ಟು ಗಂಭೀರವಾಗಿ ಕೆಲಸ ನಿರ್ವಹಿಸಬೇಕು, ದೇಶ ಮೊದಲು ಎಂಬ ಭಾವನೆ ಇರಬೇಕು. ಹಿರಿಯ ಅಧಿಕಾರಿಗಳಿಗೆ/ಜನರಿಗೆ ಏಕವಚನವನ್ನು ಬಳಸದಿರುವುದು ಪೊಲೀಸ್‌‍ ಇಲಾಖೆ/ಗುಪ್ತಚರ ಇಲಾಖೆಯನ್ನು ಕಾರ್ಪರೇಟ್‌ ಮಾದರಿ ನಡೆಸುವ ಚಾಕಚಕ್ಯತೆ, ಕಾನೂನುಬಾಹಿರ ಚಟುವಟಿಕೆಗಳಿಗೆ ಶೂನ್ಯ ಸಹಿಷ್ಣುತೆ ಇರಬೇಕು ಎಂದು ಸಲಹೆ ಮಾಡಿದ್ದಾರೆ. +ಮೇಲ್ಕಂಡ ಕಾರ್ಯವೈಖರಿ, ವ್ಯಕ್ತಿತ್ವವಿರುವ ಶಾಸಕರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ ಸ್ವವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಕಳುಹಿಸಬಹುದು ಎಂದು ಟೀಕೆ ಮಾಡಿದ್ದಾರೆ. \ No newline at end of file diff --git a/eesanje/url_46_13_1.txt b/eesanje/url_46_13_1.txt new file mode 100644 index 0000000000000000000000000000000000000000..f7745eb581bf331f2af3a9432fb6938078ea0063 --- /dev/null +++ b/eesanje/url_46_13_1.txt @@ -0,0 +1,9 @@ +ಅಮೆರಿಕಾದಲ್ಲಿ ಮೀಸಲಾತಿ ಕುರಿತು ಹೇಳಿಕೆ : ರಾಹುಲ್‌ ವಿರುದ್ಧ ಬಿಜೆಪಿ ದೂರು + : +ಬೆಂಗಳೂರು,ಸೆ.21-ಮೀಸಲಾತಿ ಕುರಿತು ಅಮೆರಿಕದ ಸಂವಾದದಲ್ಲಿ ಹೇಳಿಕೆ ನೀಡಿದ್ದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಹೈಗ್ರೌಂಡ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದೆ. +ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ವಿಧಾನಪರಿಷತ್‌ನ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಶಾಸಕ ಬಸವರಾಜ್‌ ಮತ್ತಿಮೋಡ, ಮಾಜಿ ಶಾಸಕ ರಾಜ್‌ಕುಮಾರ್‌ ತೇಲ್ಕೂರ್‌, ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಚ್‌.ವಿ.ಮಂಜುನಾಥ್‌, ಬಿಜೆಪಿ ಕಾನೂನು ಪ್ರಕೋಷ್ಟದ ಸಂಚಾಲಕ ವಸಂತ್‌ಕುಮಾರ್‌, ಶಾಸಕರು, ಮಾಜಿ ಶಾಸಕರ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. +ರಾಹುಲ್‌ ಗಾಂಧಿಯವರು ಮೀಸಲಾತಿ ಕುರಿತಂತೆ ನೀಡಿರುವ ಹೇಳಿಕೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಹಿಂದುಳಿದ ಸಮುದಾಯದಲ್ಲಿ ಆತಂಕ ಉಂಟಾಗಿದೆ. ಮೀಸಲಾತಿ ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ರಾಹುಲ್‌ ಗಾಂಧಿ ಮೀಸಲಾತಿಯನ್ನು ರದ್ದುಪಡಿಸುತ್ತೇವೆ ಎಂದು ಹೇಳಿರುವುದು ಸಂವಿಧಾನ ವಿರೋಧಿ ನಡೆ. ಅವರು ಲೋಕಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದು, ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ರಾಹುಲ್‌ ಗಾಂಧಿಯವರು ವಿದೇಶದಲ್ಲಿ ಕುಳಿತ ಭಾರತಕ್ಕೆ ಅಪಮಾನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ. ನಾವು ಅವರು ಪ್ರಬುದ್ಧರಾಗಿದ್ದಾರೆ ಅಂತ ಅಂದುಕೊಂಡಿದ್ದೆವು. ಆದರೆ ಈ ಮಾತುಗಳನ್ನ ಕೇಳಿದಾಗ ಪ್ರಬುದ್ಧರಾಗಿಲ್ಲ ಎಂಬುದು ಸ್ಪಷ್ಟವಾಗಿದೆ. +ಇಂದಿರಾಗಾಂಧಿಯವರು ಪ್ರಧಾನಿಯಾಗಿ ವಿದೇಶಕ್ಕೆ ಹೋದಾಗ ಅಲ್ಲಿಯ ಸಂದರ್ಶಕರು ಜೈಲಿಗೆ ಹೋದಾಗ ನಿಮ ಅನುಭವ ಹೇಗಿತ್ತೆಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ಅದು ನನ್ನ ದೇಶದ ವಿಚಾರ ಅದನ್ನುನನ್ನ ದೇಶದಲ್ಲಿಯೇ ಮಾತನಾಡುತ್ತೇನೆ ಎಂದಿದ್ದರು. ಆದರೆ ರಾಹುಲ್‌ ಗಾಂಧಿಯವರು ಅವರ ಅಜ್ಜಿಯಿಂದಲೂ ಕಲಿತಿಲ್ಲ. ಹೀಗಾಗಿ ನಾವು ರಾಹುಲ್‌ ಗಾಂಧಿಯವರ ವಿರುದ್ಧ ದೂರು ದಾಖಲು ಮಾಡಿದ್ದೇವೆ ಎಂದು ಹೇಳಿದರು. +ಐಟಿ ಆಕ್ಟ್‌ ಕೆಳಗಡೆ ಅಪರಾಧ ದೇಶದ ಬಗ್ಗೆ ವಿದೇಶದಲ್ಲಿ ಕೂತು ಅಪಮಾನದ ಮಾತುಗಳನ್ನ ಹಾಡಿದ್ದಾರೆ. ಇದು ಜಾಮೀನು ರಹಿತ ಪ್ರಕರಣವಾಗಿದೆ. ಹೀಗಾಗಿ ದೂರು ದಾಖಲಿಸಿದ್ದೇವೆ. ಕೂಡಲೇ ಅವರನ್ನು ಬಂಧಿಸುವಂತೆ ನಿಯೋಗ ಒತ್ತಡ ಹಾಕಿದೆ ಎಂದರು. \ No newline at end of file diff --git a/eesanje/url_46_13_10.txt b/eesanje/url_46_13_10.txt new file mode 100644 index 0000000000000000000000000000000000000000..0b7b06605695273a9f68e327ce3cc7bae623c755 --- /dev/null +++ b/eesanje/url_46_13_10.txt @@ -0,0 +1,6 @@ +ಗುಜರಿಗೆ ಹಾಕುವ ವಾಹನಗಳ ದಂಡದ ವಿನಾಯ್ತಿ 2 ವರ್ಷ ವಿಸ್ತರಣೆ + 2 +ಬೆಂಗಳೂರು, ಸೆ.21-ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಒಂದು ಬಾರಿಗೆ ಮಾತ್ರ ವಿನಾಯಿತಿ ನೀಡುವ ಅವಧಿಯನ್ನು ಎರಡು ವರ್ಷಗಳ ಕಾಲ ವಿಸ್ತರಿಸಲಾಗಿದೆ. +ಸಾರ್ವಜನಿಕರು ಸ್ವಯಂಪ್ರೇರಿತರಾಗಿ ನಾಶಪಡಿಸಲು ಉದ್ದೇಶಿಸುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿನ ದಂಡಗಳನ್ನು ಸಾರಿಗೆ ಇಲಾಖೆಯ ಶಾಸನ ಕ್ರಮದ ಅಡಿಯಲ್ಲಿ ಹಾಗೂ ಪೊಲೀಸ್‌‍ ಇಲಾಖೆಯ ಸಂಚಾರ ನಿಯಮ ಉಲ್ಲಂಘನೆಯಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳಿಗೆ ಮಾತ್ರ ಸೀಮಿತಗೊಳಿಸಿ ದಂಡಗಳ ವಸೂಲಾತಿಯಿಂದ ಒಂದು ವರ್ಷದ ವರೆಗೆ ಮಾತ್ರ ವಿನಾಯಿತಿ ನೀಡಿರುವ ಅವಧಿಯನ್ನು 2026ರ ಮಾರ್ಚ್‌ 31ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. +ಕರ್ನಾಟಕ ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್‌ ಪಾಲಿಸಿ-2022ರ ಯೋಜನೆಯಡಿ ಈ ವಿನಾಯಿತಿಯು 2023ರ ಸೆಪ್ಟೆಂಬರ್‌ 26ರಿಂದ ಜಾರಿಗೆ ಬಂದಿದೆ. 15 ವರ್ಷಗಳನ್ನು ಪೂರೈಸಿರುವ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆ ಮೊದಲಾದವುಗಳಲ್ಲಿ ಇರುವ 5000 ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ ಹಂತವಾಗಿ ನಾಶಪಡಿಸಲು ಅನುಮೋದನೆ ನೀಡಿದ್ದು, ಮೊದಲಿಗೆ ಅತಿ ಹೆಚ್ಚು ವರ್ಷಗಳನ್ನು ಪೂರೈಸಿರುವ ವಾಹನಗಳನ್ನು ನಾಶಪಡಿಸಲು ಆದೇಶಿಸಲಾಗಿದೆ. +ಭಾರತ ಸರ್ಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಂತ್ರಾಲಯವು ವಿವಿಧ ರಾಜ್ಯಗಳು ವಾಹನಗಳ ಮೇಲಿನ ಬಾಕಿ ಇರುವ ದಂಡಗಳ ವಸೂಲಾತಿಯಿಂದ ವಿನಾಯಿತಿ ನೀಡಿರುವ ಅವಧಿಯು ಸೆಪ್ಟೆಂಬರ್‌ನಲ್ಲಿ ಮುಕ್ತಾಯುವಾಗುತ್ತದೆ. ವಾಹನಗಳ ಸ್ಕ್ರ್ಯಾಪಿಂಗ್‌ ಪಾಲಿಸಿಯ ಅನುಷ್ಠಾನವು ಇನ್ನೂ ರೂಪುಗೊಳ್ಳುವಿಕೆಯ ಹಂತದಲ್ಲಿರುವುದರಿಂದ ಈ ಸೌಲಭ್ಯಗಳನ್ನು 2026ರ ಮಾರ್ಚ್‌ವರೆಗೆ ವಿಸ್ತರಿಸುವಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. \ No newline at end of file diff --git a/eesanje/url_46_13_11.txt b/eesanje/url_46_13_11.txt new file mode 100644 index 0000000000000000000000000000000000000000..7a181d78a011c37b4481d0ac8854dddeae8b45e4 --- /dev/null +++ b/eesanje/url_46_13_11.txt @@ -0,0 +1,6 @@ +ರಾಜ್ಯದಲ್ಲಿ 32 ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರ +32 +ಬೆಂಗಳೂರು, ಸೆ.21-ರಾಜ್ಯದ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನಗಳ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ಯೋಜನೆಯ ಕುರಿತು ಟೆಂಡರ್‌ ಆಹ್ವಾನಿಸುವ ಹಾಗೂ ಅಂಗೀಕರಿಸುವ ಪ್ರಾಧಿಕಾರಗಳನ್ನು ಸಾರಿಗೆ ಇಲಾಖೆ ರಚಿಸಿದೆ. +ಅಪರ ಸಾರಿಗೆ ಆಯುಕ್ತರ(ಆಡಳಿತ) ಅಧ್ಯಕ್ಷತೆಯಲ್ಲಿ ಟೆಂಡರ್‌ ಆಹ್ವಾನ ಸಮಿತಿ ರಚಿಸಲಾಗಿದ್ದು, ಅಪರ ಸಾರಿಗೆ ಆಯುಕ್ತರು ಪ್ರವರ್ತನ(ದಕ್ಷಿಣ), ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಆಯುಕ್ತರು, ಬೆಂಗಳೂರು ನಗರ ಜಂಟಿ ಸಾರಿಗೆ ಆಯುಕ್ತರು, ಕೆ.ಆರ್‌.ಪುರಂನ ಪ್ರಾದೇಶಿಕ ಸಾರಿಗೆ ಅಧಿಕಾರಿ ಸದಸ್ಯರಾಗಿರುತ್ತಾರೆ. ಸಾರಿಗೆ ಆಯುಕ್ತರ ಕಚೇರಿಯ ಆರ್ಥಿಕ ಸಲಹೆಗಾರರನ್ನು ಸಮಿತಿಯ ಸದಸ್ಯರು ಹಾಗೂ ಸಂಚಾಲಕರನ್ನಾಗಿ ನೇಮಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. +ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ ಅಧ್ಯಕ್ಷತೆಯಲ್ಲಿ ಟೆಂಡರ್‌ ಅಂಗೀಕಾರ ಸಮಿತಿ ರಚಿಸಿದ್ದು, ಅಪರ ಸಾರಿಗೆ ಆಯುಕ್ತರು ಪ್ರವರ್ತನ(ದಕ್ಷಿಣ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. +ಅರ್ಹತಾ ಪತ್ರ ನವೀಕರಣಕ್ಕೆ ಬರುವ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು ಸಾರಿಗೆ ಇಲಾಖೆಯಲ್ಲಿ 13 ಸ್ಥಳಗಳಲ್ಲಿ ಡಿಸೈನ್‌ ಬಿಲ್ಡ್ ಫೈನಾನ್ಸ್ ಆಪರೇಟ್‌ ಮತ್ತು ಟ್ರಾನ್‌್ಸಫರ್‌ ಮಾದರಿಯಲ್ಲಿ ಮತ್ತು 19 ಸ್ಥಳಗಳಲ್ಲಿ ಬಿಲ್ಡ್ ಓನ್‌ ಆಪರೇಟ್‌ ಮಾದರಿಯಲ್ಲಿ ಸೇರಿದಂತೆ ಒಟ್ಟು 32 ಸ್ಥಳಗಳಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಆಡಳಿತಾತಕ ಅನುಮೋದನೆ ನೀಡಿ ಆದೇಶಿಸಲಾಗಿತ್ತು. \ No newline at end of file diff --git a/eesanje/url_46_13_12.txt b/eesanje/url_46_13_12.txt new file mode 100644 index 0000000000000000000000000000000000000000..8b17166e27ef8441209851a604f881a7e5e40957 --- /dev/null +++ b/eesanje/url_46_13_12.txt @@ -0,0 +1,22 @@ +ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ + +ಬೆಂಗಳೂರು, ಸೆ.21-ಆಂಧ್ರಪ್ರದೇಶದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ರಾಜ್ಯಸ ರ್ಕಾರ ಸೂಚನೆ ನೀಡಿದೆ. +ವಿಶೇಷವೆಂದರೆ ಶುಕ್ರವಾರವಷ್ಟೇ ಮುಜರಾಯಿ ಇಲಾಖೆಯು ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ಸೂಚಿಸಲಾಗಿದೆ. +ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಭಕ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲಾಗುತ್ತದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದ ಮುನ್ನಲೆಗೆ ಬಂದಿರುವ ಹಿನ್ನಲೆಯಲ್ಲಿ ಭಕ್ತರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ಹೀಗಾಗಿ ಈ ಗೊಂದಲವನ್ನು ನಿವಾರಿಸಲು ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸುವುದಾಗಿ ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. +ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಅನುಮಾನ ಎಲ್ಲೆಡೆ ಕೇಳಿಬರುತ್ತಿದೆ. ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಇದು ನಿವಾರಣೆಯಾಗಬೇಕಾದರೆ ಸರ್ಕಾರ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. +ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ. ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್‌ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು. ಕೆಎಂಎಫ್‌ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್‌ ತಿಳಿಸಿದ್ದರು. ಇದೀಗ ಮತ್ತೆ ಟಿಟಿಡಿ ನಂದಿನಿ ತುಪ್ಪ ಮತ್ತಿತರ ಉತ್ಪನ್ನಗಳನ್ನು ಖರೀದಿಸುತ್ತಿದೆ. +ಪ್ರಸಾದ ಖರೀದಿ ಇಳಿಕೆ: +ತಿರುಪತಿ ಲಡ್ಡು ವಿವಾದದ ನಂತರ ರಾಜ್ಯದ ಪ್ರಮುಖ ದೇವಾಲಯಗಳಿಗೆ ಬರುವ ಭಕ್ತರು ಪ್ರಸಾದವನ್ನು ಖರೀದಿಸಲು ಹಿಂದೆಮುಂದೆ ನೋಡುತ್ತಿದ್ದಾರೆ. ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ವಿವಾದ ಕೇಳಿಬರುತ್ತಿದ್ದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ರಸಾದ ಖರೀದಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. +ರಾಜ್ಯದಲ್ಲಿ ಸುಮಾರು 1.85 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಸುಮಾರು 34,563 ದೇವಾಲಯಗಳು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಾಲಯಗಳಾಗಿವೆ. ಆದಾಯದ ಲೆಕ್ಕಾಚಾರದಲ್ಲಿ ಈ ದೇವಾಲಯಗಳನ್ನು ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ.ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಪೈಕಿ ಸುಮಾರು 207 ದೇವಾಲಯಗಳ ವಾರ್ಷಿಕ ಆದಾಯವು 25 ಲಕ್ಷ ರೂ.ಗಿಂತ ಅಧಿಕವಾಗಿದ್ದು ಇದು ಎ ಶ್ರೇಣಿಯ ದೇವಾಲಯಗಳಾಗಿದೆ. +ಹಾಗೆಯೇ 139 ದೇವಾಲಯಗಳ ಆದಾಯವು ಐದು ಲಕ್ಷ ರೂ.ನಿಂದ 25 ಲಕ್ಷ ರೂ. ನಡುವೆ ಬರುವ ಹಿನ್ನೆಲೆ ಇದು ಬಿ ಶ್ರೇಣಿಯ ದೇವಾಲಯ ಎಂದು ವರ್ಗೀಕರಿಸಲಾಗಿದೆ. ಹಾಗೆಯೇ 5 ಲಕ್ಷ ರೂ.ನಿಂದ ಕಡಿಮೆ ಆದಾಯವನ್ನು ಹೊಂದಿರುವ ದೇವಾಲಯಗಳು ಸಿ ಶ್ರೇಣಿಯ ದೇವಾಲಯಗಳೆಂದು ವರ್ಗೀಕರಿಸಲಾಗಿದೆ. ಈ ಪಟ್ಟಿಯಲ್ಲಿ 34,217 ದೇವಾಲಯಗಳಿವೆ. +ಆದರೆ ಆದಾಯದ ಪ್ರಕಾರ ಕರ್ನಾಟಕದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳು:ಟಾಪ್‌ 1: ಕುಕ್ಕೆ ಶ್ರೀ ಸುಬ್ರಹಣ್ಯ ಸ್ವಾಮಿ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹಣ್ಯ ಗ್ರಾಮದಲ್ಲಿರುವ ದೇವಾಲಯವಾಗಿದೆ. ಇದು ಜಿಲ್ಲೆಯ ಹಾಗೂ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದ್ದು, ಇದು ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ +ಟಾಪ್‌ 1 ದೇವಾಲಯವಾಗಿದೆ. 2019ರಲ್ಲಿ ಈ ದೇವಾಲಯವು ಅಂದಾಜು 100 ಕೋಟಿ ಆದಾಯವನ್ನು ಗಳಿಸಿದೆ. ಹುಂಡಿಗೆ ಭಕ್ತರು ಹಾಕುವ ಕಾಣಿಕೆಯನ್ನು ಹೊರತುಪಡಿಸಿ, ದೇವಾಲಯಕ್ಕೆ ಬ್ಯಾಂಕ್‌ ಡೆಪಾಸಿಟ್‌ ಬಡ್ಡಿದರ, ಸೇವೆ, ದೇವಾಲಯದ ಹಾಲ್‌ ಬಾಡಿಗೆಯಿಂದಲೂ ಆದಾಯ ಲಭ್ಯವಾಗುತ್ತದೆ. +ಟಾಪ್‌ 2: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿರುವ ದೇವಾಲಯವಾಗಿದೆ. ಇದು ಹಿಂದೂ ದೇವಾಲಯವಾಗಿದ್ದು, ಮೂಕಾಂಬಿಕಾ ದೇವಿಯ ದೇವಸ್ಥಾನವಾಗಿದೆ. ಕರ್ನಾಟಕ ಮಾತ್ರವಲ್ಲದೆ, ಕೇರಳ, ಬೇರೆ ರಾಜ್ಯಗಳಿಂದ ಈ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. 2019ರ ಲೆಕ್ಕಾಚಾರದ ಪ್ರಕಾರ ಈ ದೇವಾಲಯದ ವಾರ್ಷಿಕ ಆದಾಯವು 90-92 ಕೋಟಿ ರೂಪಾಯಿಯಾಗಿದೆ. +ಟಾಪ್‌ 3: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದಲ್ಲಿ ಅಧಿಕ ಭಕ್ತರು ಆಗಮಿಸುವ ದೇವಾಲಯಗಳಲ್ಲಿ ಒಂದಾಗಿದೆ. ಇದು ಮಂಗಳೂರಿನಿಂದ ಸುಮಾರು 24 ಕಿ.ಮೀ ದೂರದಲ್ಲಿರುವ ದೇವಾಲಯವಾಗಿದೆ. ಕೊರೊನಾ ವೈರಸ್‌‍ ಸಾಂಕ್ರಾಮಿಕ ದೇಶದಲ್ಲಿ ಕಾಣಿಸಿಕೊಳ್ಳುವುದಕ್ಕೂ ಮುನ್ನ ದೇವಾಲಯದ ಆದಾಯವು 40-42 ಕೋಟಿ ರೂ. ಆಗಿತ್ತು. ಈ ದೇವಾಲಯಕ್ಕೆ ಹುಂಡಿ, ಸೇವೆ ಹಾಗೂ ಕಾಣಿಕೆ ಮೂಲಕ ಅಧಿಕ ಆದಾಯ ಲಭ್ಯವಾಗುತ್ತದೆ. +ಟಾಪ್‌ 4: ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಮೊದಲ ಮೂರು ಸ್ಥಾನದಲ್ಲಿ ಕರಾವಳಿಯ ದೇವಾಲಯಗಳಿದ್ದರೆ ನಾಲ್ಕನೇ ಸ್ಥಾನದಲ್ಲಿ ಮೈಸೂರಿನ ಪ್ರಸಿದ್ಧ ದೇವಾಲಯವಿದೆ. ಇದು ವಿಶೇಷ ಪ್ರವೇಶ ಟಿಕೆಟ್‌ನ ಮೂಲಕ, ಪ್ರಸಾದ ರೂಪದಲ್ಲಿ ಲಡ್ಡು ಮಾರಾಟ, ಸೇವೆಗಳು, ಇ-ಸೇವೆ, ಬ್ಯಾಂಕ್‌ಗಳಲ್ಲಿ ಡೆಪಾಸಿಟ್‌ನ ಬಡ್ಡಿದರದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯವು 30-33 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ. +ಟಾಪ್‌ 5: ನಂಜುಂಡೇಶ್ವರಿ ದೇವಾಲಯ ಅತೀ ಹಳೆಯ ದೇವಾಲಯಗಳಲ್ಲಿ ನಂಜುಂಡೇಶ್ವರಿ ದೇವಾಲಯ ಕೂಡಾ ಒಂದಾಗಿದೆ. ಇದನ್ನು ಶ್ರೀಕಂಠೇಶ್ವರ ದೇವಾಲಯ ಎಂದು ಕೂಡಾ ಕರೆಯಲಾಗುತ್ತದೆ. ಇದು ಹುಂಡಿ ಕಾಣಿಕೆ, ಸೇವೆ ಹಾಗೂ ಪ್ರಸಾದದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯದ ವಾರ್ಷಿಕ ಆದಾಯ 15-20 ಕೋಟಿ ರೂ. ಆಗಿದೆ. +ಟಾಪ್‌ 6: ಸವದತ್ತಿ ಯಲ್ಲಮ ದೇವಾಲಯ ಸವದತ್ತಿ ಯಲ್ಲಮ ದೇವಾಲಯವನ್ನು ರೇಣುಕಾ ದೇವಸ್ಥಾನ ಎಂದೂ ಕೂಡ ಕರೆಯಲಾಗುತ್ತದೆ. ಇದು ಬೆಳಗಾವಿಯ ಸವದತ್ತಿ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ಯಾತ್ರಾಸ್ಥಳವಾಗಿದೆ. ಪ್ರತಿ ವರ್ಷ ಅಕ್ಟೋಬರ್‌ನಿಂದ ಏಪ್ರಿಲ್‌ ತಿಂಗಳಿನಲ್ಲಿ ಎರಡು ವರ್ಷಕ್ಕೊಮೆ ಜಾತ್ರೆ ನಡೆಯುತ್ತದೆ. ಇಲ್ಲಿಗೆ ಕರ್ನಾಟಕ, ಆಂಧ್ರಪದೇಶ, ಗೋವಾ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 15-17 ಕೋಟಿ ರೂಪಾಯಿ ಆಗಿದೆ. +ಟಾಪ್‌ 7: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಡುಪಿ ಜಿಲ್ಲೆಯ ಬ್ರಹಾವರ ತಾಲ್ಲೂಕಿನಲ್ಲಿರುವ ಮಂದಾರ್ತಿ ಎಂಬ ಪ್ರದೇಶದಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ. ಈ ದೇವಾಲಯಕ್ಕೆ ಪೂಜೆ, ಯಕ್ಷಗಾನದ ಮೂಲಕ ಆದಾಯ ಲಭಿಸುತ್ತದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದಲ್ಲಿ ಐದು ಮೇಳಗಳಿವೆ. ವರ್ಷದಲ್ಲಿ 1000ಕ್ಕೂ ಅಧಿಕ ಹರಕೆ ಆಟಗಳು ನಡೆಯುತ್ತದೆ. 2027-28ರವರೆಗೆ ಈಗಾಗಲೇ ಹರಕೆ ಆಟವು ಮುಂಗಡವಾಗಿ ಭರ್ತಿಯಾಗಿದೆ. ಈ ದೇವಾಲಯದ ಆದಾಯವು 10-12 ಕೋಟಿ ರೂ. ಆಗಿದೆ. +ಟಾಪ್‌ 8: ಹುಲಿಗೆಮ ದೇವಾಲಯ, ಕೊಪ್ಪಳ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಕೊಪ್ಪಳದ ಹುಲಿಗೆಮ ದೇವಾಲಯ ಕೂಡಾ ಒಂದಾಗಿದೆ. ಹುಲಗಿ ಕ್ಷೇತ್ರ ಎಂಟುನೂರು ವರ್ಷಗಳ ಹಳೆಯ ದೇವಾಲಯವಾಗಿದೆ. ಕೋವಿಡ್‌ ಸಂದರ್ಭದಲ್ಲಿ ನಿರ್ಬಂಧಗಳಿದ್ದರೂ ಕೂಡಾ ಈ ದೇವಾಲಯಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ಬೇರೆ ಬೇರೆ ರಾಜ್ಯದಿಂದ ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ. ಇದರ ಆದಾಯ 8-10 ಕೋಟಿ ರೂ. ಆಗಿದೆ. +ಟಾಪ್‌ 9: ಬನಶಂಕರಿ ದೇವಸ್ಥಾನ, ಬೆಂಗಳೂರು ರಾಜ್ಯದ ರಾಜಧಾನಿ ಬೆಂಗಳೂರಿನ ಬನಶಂಕರಿ ದೇವಸ್ಥಾನವೂ ಕೂಡಾ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಒಂದಾಗಿದ್ದು, ಟಾಪ್‌ 9ನೇ ಸ್ಥಾನದಲ್ಲಿದೆ. ಇದು ಕನಕಪುರ ರಸ್ತೆಯಲ್ಲಿದೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ. +ಟಾಪ್‌10: ಘಾಟಿ ಸುಬ್ರಹಣ್ಯ ದೇವಸ್ಥಾನ, ದೊಡ್ಡಬಳ್ಳಾಪುರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹಣ್ಯ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯವಾಗಿದೆ. 600 ವರ್ಷಗಳ ಇತಿಹಾಸವನ್ನು ಈ ದೇವಾಲಯವು ಹೊಂದಿದೆ. ಡಿಸೆಂಬರ್‌ ತಿಂಗಳಿನಲ್ಲಿ ಈ ದೇವಾಲಯದಲ್ಲಿ ಜಾತ್ರೆ ನಡೆಯಲಿದ್ದು, ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ. \ No newline at end of file diff --git a/eesanje/url_46_13_2.txt b/eesanje/url_46_13_2.txt new file mode 100644 index 0000000000000000000000000000000000000000..2222e20b078cbe381c2e80490029f054b25f35ae --- /dev/null +++ b/eesanje/url_46_13_2.txt @@ -0,0 +1,7 @@ +ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ + +ಬೆಂಗಳೂರು,ಸೆ.21– ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2024-25ನೇ ಸಾಲಿನ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌‍ಎಸ್‌‍ಪಿ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. +ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿರುತ್ತದೆ. ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ವಿವಿಧ ಇಲಾಖೆಗಳಲ್ಲಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌‍ಎಸ್‌‍ಪಿ) ಮೂಲಕ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಧನಸಹಾಯವನ್ನು (ಎಸ್‌‍ಎಸ್‌‍ಪಿ) ತಂತ್ರಾಂಶದ ಮೂಲಕ ಪಡೆಯಲು ಜಾಲತಾಣ ://.../ ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ ತಮ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಆಧಾರ್‌ ಲಿಂಕ್‌ ಮಾಡಬೇಕು. +ಎಸ್‌‍ಎಸ್‌‍ಪಿ ತಂತ್ರಾಂಶದ ಮೂಲಕ ಶೈಕ್ಷಣಿಕ ಧನಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್‌ ಸಂಖ್ಯೆಯನ್ನು ಲಿಂಕ್‌ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕೂಡಲೇ ಆಧಾರ್‌ ಸಂಖ್ಯೆಯನ್ನು ಬ್ಯಾಂಕ್‌ ಖಾತೆಯೊಂದಿಗೆ ನೋಂದಣಿ ಮಾಡಿ ಎನ್‌ಪಿಸಿಐ ಮ್ಯಾಪಿಂಗ್‌ ಮಾಡಿಸಬೇಕಿರುತ್ತದೆ. +ಮಂಡಳಿಯು 2024-25ನೇ ಸಾಲಿನ ಶೈಕ್ಷಣಿಕ ಸಹಾಯ ಧನಕ್ಕೆ ಮೀಸಲಿಟ್ಟಿರುವ ಆಯವ್ಯಯಕ್ಕೆ ಅನುಗುಣವಾಗಿ ಮಂಡಳಿಯ ನಿರ್ಣಯದಂತೆ ಶೈಕ್ಷಣಿಕ ಧನಸಹಾಯ ಕೋರಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಧನಸಹಾಯ ವಿತರಿಸಲಾಗುವುದೆಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಅವಧಿ ವಿಸ್ತರಣೆಬೆಂಗಳೂರು, ಸೆ.21- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2023-24ನೇ ಸಾಲಿನಲ್ಲಿ ಶೈಕ್ಷಣಿಕ ಧನಸಹಾಯ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌‍ಎಸ್‌‍ಪಿ) ಮೂಲಕ ಮಾ.4 ರವರೆಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾಗಿದ್ದ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_13_3.txt b/eesanje/url_46_13_3.txt new file mode 100644 index 0000000000000000000000000000000000000000..0ef611b3e13e6993b7fe4fe8866074a10f12732f --- /dev/null +++ b/eesanje/url_46_13_3.txt @@ -0,0 +1,20 @@ +ತಿರುಪತಿ ಲಡ್ಡು ವಿವಾದ ಭುಗಿದೆದ್ದ ಬೆನ್ನಲ್ಲೇ, ಪ್ರಸಾದ ಖರೀದಿಗೆ ಜನ ಹಿಂದೇಟು + , +ಬೆಂಗಳೂರು, ಸೆ.21-ಆಂಧ್ರಪ್ರದೇಶದ ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿಯ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆ ಮಾಡಿದ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಹಿನ್ನಲೆಯಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳ ಪಡಿಸಲು ರಾಜ್ಯಸ ರ್ಕಾರ ಸೂಚನೆ ನೀಡಿದೆ. +ವಿಶೇಷವೆಂದರೆ ಶುಕ್ರವಾರವಷ್ಟೇ ಮುಜರಾಯಿ ಇಲಾಖೆಯು ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದ ಬೆನ್ನಲ್ಲೇ ಇದೀಗ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲು ಸೂಚಿಸಲಾಗಿದೆ.ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಭಕ್ತರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸಲಾಗುತ್ತದೆ. +ತಿರುಪತಿ ದೇವಸ್ಥಾನದಲ್ಲಿ ಲಡ್ಡು ವಿವಾದ ಮುನ್ನಲೆಗೆ ಬಂದಿರುವ ಹಿನ್ನಲೆಯಲ್ಲಿ ಭಕ್ತರಲ್ಲಿ ಸಾಕಷ್ಟು ಗೊಂದಲ ಉಂಟಾಗಿದೆ. ಹೀಗಾಗಿ ಈ ಗೊಂದಲವನ್ನು ನಿವಾರಿಸಲು ಪ್ರಸಾದವನ್ನು ಪ್ರಯೋಗಾಲಯಕ್ಕೆ ಒಳಪಡಿಸುವುದಾಗಿ ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. +ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಅನುಮಾನ ಎಲ್ಲೆಡೆ ಕೇಳಿಬರುತ್ತಿದೆ. ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇದೆ. ಇದು ನಿವಾರಣೆಯಾಗಬೇಕಾದರೆ ಸರ್ಕಾರ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. +ಪ್ರಸ್ತುತ ತಿರುಪತಿ ದೇವಸ್ಥಾನಕ್ಕೆ ಲಡ್ಡು ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನು ಕರ್ನಾಟಕ ಪೂರೈಸುತ್ತಿದೆ. ಕಳೆದ ವರ್ಷ, ತಿರುಪತಿ ತಿರುಮಲ ದೇವಸ್ಥಾನವು ಕೆಎಂಎಫ್‌ನ ನಂದಿನಿ ತುಪ್ಪ ಮತ್ತು ಇತರ ಉತ್ಪನ್ನಗಳ ಖರೀದಿಯನ್ನು ಬೆಲೆಯ ಕಾರಣವೊಡ್ಡಿ ನಿಲ್ಲಿಸಿತ್ತು. ಕೆಎಂಎಫ್‌ ಉಲ್ಲೇಖಿಸಿದ ಬೆಲೆಗಳನ್ನು ಟಿಟಿಡಿ ಅನುಮೋದಿಸದೆ ಇತರ ಕಂಪನಿಗಳಿಂದ ತುಪ್ಪವನ್ನು ಖರೀದಿಸಲು ಪ್ರಾರಂಭಿಸಿತ್ತು ಎಂದು ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯಕ್‌ ತಿಳಿಸಿದ್ದರು. ಇದೀಗ ಮತ್ತೆ ಟಿಟಿಡಿ ನಂದಿನಿ ತುಪ್ಪ ಮತ್ತಿತರ ಉತ್ಪನ್ನಗಳನ್ನು ಖರೀದಿಸುತ್ತಿದೆ. +ಪ್ರಸಾದ ಖರೀದಿ ಇಳಿಕೆ:ತಿರುಪತಿ ಲಡ್ಡು ವಿವಾದದ ನಂತರ ರಾಜ್ಯದ ಪ್ರಮುಖ ದೇವಾಲಯಗಳಿಗೆ ಬರುವ ಭಕ್ತರು ಪ್ರಸಾದವನ್ನು ಖರೀದಿಸಲು ಹಿಂದೆಮುಂದೆ ನೋಡುತ್ತಿದ್ದಾರೆ. ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ವಿವಾದ ಕೇಳಿಬರುತ್ತಿದ್ದಂತೆ ಮುಜರಾಯಿ ದೇವಾಲಯಗಳಲ್ಲಿ ಪ್ರಸಾದ ಖರೀದಿಸುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. +ರಾಜ್ಯದಲ್ಲಿ ಸುಮಾರು 1.85 ಲಕ್ಷ ದೇವಾಲಯಗಳಿದ್ದು, ಈ ಪೈಕಿ ಸುಮಾರು 34,563 ದೇವಾಲಯಗಳು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಾಲಯಗಳಾಗಿವೆ. ಆದಾಯದ ಲೆಕ್ಕಾಚಾರದಲ್ಲಿ ಈ ದೇವಾಲಯಗಳನ್ನು ಎ, ಬಿ, ಸಿ ಎಂದು ವರ್ಗೀಕರಿಸಲಾಗಿದೆ.ಕರ್ನಾಟಕದಲ್ಲಿ ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಪೈಕಿ ಸುಮಾರು 207 ದೇವಾಲಯಗಳ ವಾರ್ಷಿಕ ಆದಾಯವು 25 ಲಕ್ಷ ರೂ.ಗಿಂತ ಅಧಿಕವಾಗಿದ್ದು ಇದು ಎ ಶ್ರೇಣಿಯ ದೇವಾಲಯಗಳಾಗಿದೆ. +ಹಾಗೆಯೇ 139 ದೇವಾಲಯಗಳ ಆದಾಯವು ಐದು ಲಕ್ಷ ರೂ.ನಿಂದ 25 ಲಕ್ಷ ರೂ. ನಡುವೆ ಬರುವ ಹಿನ್ನೆಲೆ ಇದು ಬಿ ಶ್ರೇಣಿಯ ದೇವಾಲಯ ಎಂದು ವರ್ಗೀಕರಿಸಲಾಗಿದೆ. ಹಾಗೆಯೇ 5 ಲಕ್ಷ ರೂ.ನಿಂದ ಕಡಿಮೆ ಆದಾಯವನ್ನು ಹೊಂದಿರುವ ದೇವಾಲಯಗಳು ಸಿ ಶ್ರೇಣಿಯ ದೇವಾಲಯಗಳೆಂದು ವರ್ಗೀಕರಿಸಲಾಗಿದೆ. ಈ ಪಟ್ಟಿಯಲ್ಲಿ 34,217 ದೇವಾಲಯಗಳಿವೆ. +ಆದರೆ ಆದಾಯದ ಪ್ರಕಾರ ಕರ್ನಾಟಕದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳು:ಟಾಪ್‌ 1: ಕುಕ್ಕೆ ಶ್ರೀ ಸುಬ್ರಹಣ್ಯ ಸ್ವಾಮಿ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹಣ್ಯ ಗ್ರಾಮದಲ್ಲಿರುವ ದೇವಾಲಯವಾಗಿದೆ. ಇದು ಜಿಲ್ಲೆಯ ಹಾಗೂ ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದ್ದು, ಇದು ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 1 ದೇವಾಲಯವಾಗಿದೆ. 2019ರಲ್ಲಿ ಈ ದೇವಾಲಯವು ಅಂದಾಜು 100 ಕೋಟಿ ಆದಾಯವನ್ನು ಗಳಿಸಿದೆ. ಹುಂಡಿಗೆ ಭಕ್ತರು ಹಾಕುವ ಕಾಣಿಕೆಯನ್ನು ಹೊರತುಪಡಿಸಿ, ದೇವಾಲಯಕ್ಕೆ ಬ್ಯಾಂಕ್‌ ಡೆಪಾಸಿಟ್‌ ಬಡ್ಡಿದರ, ಸೇವೆ, ದೇವಾಲಯದ ಹಾಲ್‌ ಬಾಡಿಗೆಯಿಂದಲೂ ಆದಾಯ ಲಭ್ಯವಾಗುತ್ತದೆ. +ಟಾಪ್‌ 2: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿರುವ ದೇವಾಲಯವಾಗಿದೆ. ಇದು ಹಿಂದೂ ದೇವಾಲಯವಾಗಿದ್ದು, ಮೂಕಾಂಬಿಕಾ ದೇವಿಯ ದೇವಸ್ಥಾನವಾಗಿದೆ. ಕರ್ನಾಟಕ ಮಾತ್ರವಲ್ಲದೆ, ಕೇರಳ, ಬೇರೆ ರಾಜ್ಯಗಳಿಂದ ಈ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. 2019ರ ಲೆಕ್ಕಾಚಾರದ ಪ್ರಕಾರ ಈ ದೇವಾಲಯದ ವಾರ್ಷಿಕ ಆದಾಯವು 90-92 ಕೋಟಿ ರೂಪಾಯಿಯಾಗಿದೆ. +ಟಾಪ್‌ 3: ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕರ್ನಾಟಕ ರಾಜ್ಯದಲ್ಲಿ ಅಧಿಕ ಭಕ್ತರು ಆಗಮಿಸುವ ದೇವಾಲಯಗಳಲ್ಲಿ ಒಂದಾಗಿದೆ. ಇದು ಮಂಗಳೂರಿನಿಂದ ಸುಮಾರು 24 ಕಿ.ಮೀ ದೂರದಲ್ಲಿರುವ ದೇವಾಲಯವಾಗಿದೆ. ಕೊರೊನಾ ವೈರಸ್‌‍ ಸಾಂಕ್ರಾಮಿಕ ದೇಶದಲ್ಲಿ ಕಾಣಿಸಿಕೊಳ್ಳುವುದಕ್ಕೂ ಮುನ್ನ ದೇವಾಲಯದ ಆದಾಯವು 40-42 ಕೋಟಿ ರೂ. ಆಗಿತ್ತು. ಈ ದೇವಾಲಯಕ್ಕೆ ಹುಂಡಿ, ಸೇವೆ ಹಾಗೂ ಕಾಣಿಕೆ ಮೂಲಕ ಅಧಿಕ ಆದಾಯ ಲಭ್ಯವಾಗುತ್ತದೆ. +ಟಾಪ್‌ 4: ಮೈಸೂರಿನ ಚಾಮುಂಡೇಶ್ವರಿ ದೇವಾಲಯ ಮೊದಲ ಮೂರು ಸ್ಥಾನದಲ್ಲಿ ಕರಾವಳಿಯ ದೇವಾಲಯಗಳಿದ್ದರೆ ನಾಲ್ಕನೇ ಸ್ಥಾನದಲ್ಲಿ ಮೈಸೂರಿನ ಪ್ರಸಿದ್ಧ ದೇವಾಲಯವಿದೆ. ಇದು ವಿಶೇಷ ಪ್ರವೇಶ ಟಿಕೆಟ್‌ನ ಮೂಲಕ, ಪ್ರಸಾದ ರೂಪದಲ್ಲಿ ಲಡ್ಡು ಮಾರಾಟ, ಸೇವೆಗಳು, ಇ-ಸೇವೆ, ಬ್ಯಾಂಕ್‌ಗಳಲ್ಲಿ ಡೆಪಾಸಿಟ್‌ನ ಬಡ್ಡಿದರದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯವು 30-33 ಕೋಟಿ ರೂಪಾಯಿ ಆದಾಯವನ್ನು ಗಳಿಸಿದೆ. +ಟಾಪ್‌ 5: ನಂಜುಂಡೇಶ್ವರಿ ದೇವಾಲಯ ಅತೀ ಹಳೆಯ ದೇವಾಲಯಗಳಲ್ಲಿ ನಂಜುಂಡೇಶ್ವರಿ ದೇವಾಲಯ ಕೂಡಾ ಒಂದಾಗಿದೆ. ಇದನ್ನು ಶ್ರೀಕಂಠೇಶ್ವರ ದೇವಾಲಯ ಎಂದು ಕೂಡಾ ಕರೆಯಲಾಗುತ್ತದೆ. ಇದು ಹುಂಡಿ ಕಾಣಿಕೆ, ಸೇವೆ ಹಾಗೂ ಪ್ರಸಾದದ ಮೂಲಕ ಆದಾಯವನ್ನು ಗಳಿಸುತ್ತದೆ. 2019ರಲ್ಲಿ ದೇವಾಲಯದ ವಾರ್ಷಿಕ ಆದಾಯ 15-20 ಕೋಟಿ ರೂ. ಆಗಿದೆ. +ಟಾಪ್‌ 6: ಸವದತ್ತಿ ಯಲ್ಲಮ ದೇವಾಲಯ ಸವದತ್ತಿ ಯಲ್ಲಮ ದೇವಾಲಯವನ್ನು ರೇಣುಕಾ ದೇವಸ್ಥಾನ ಎಂದೂ ಕೂಡ ಕರೆಯಲಾಗುತ್ತದೆ. ಇದು ಬೆಳಗಾವಿಯ ಸವದತ್ತಿ ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ಯಾತ್ರಾಸ್ಥಳವಾಗಿದೆ. ಪ್ರತಿ ವರ್ಷ ಅಕ್ಟೋಬರ್‌ನಿಂದ ಏಪ್ರಿಲ್‌ ತಿಂಗಳಿನಲ್ಲಿ ಎರಡು ವರ್ಷಕ್ಕೊಮೆ ಜಾತ್ರೆ ನಡೆಯುತ್ತದೆ. ಇಲ್ಲಿಗೆ ಕರ್ನಾಟಕ, ಆಂಧ್ರಪದೇಶ, ಗೋವಾ, ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 15-17 ಕೋಟಿ ರೂಪಾಯಿ ಆಗಿದೆ. +ಟಾಪ್‌ 7: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಡುಪಿ ಜಿಲ್ಲೆಯ ಬ್ರಹಾವರ ತಾಲ್ಲೂಕಿನಲ್ಲಿರುವ ಮಂದಾರ್ತಿ ಎಂಬ ಪ್ರದೇಶದಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ. ಈ ದೇವಾಲಯಕ್ಕೆ ಪೂಜೆ, ಯಕ್ಷಗಾನದ ಮೂಲಕ ಆದಾಯ ಲಭಿಸುತ್ತದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದಲ್ಲಿ ಐದು ಮೇಳಗಳಿವೆ. ವರ್ಷದಲ್ಲಿ 1000ಕ್ಕೂ ಅಧಿಕ ಹರಕೆ ಆಟಗಳು ನಡೆಯುತ್ತದೆ. 2027-28ರವರೆಗೆ ಈಗಾಗಲೇ ಹರಕೆ ಆಟವು ಮುಂಗಡವಾಗಿ ಭರ್ತಿಯಾಗಿದೆ. ಈ ದೇವಾಲಯದ ಆದಾಯವು 10-12 ಕೋಟಿ ರೂ. ಆಗಿದೆ. +ಟಾಪ್‌ 8: ಹುಲಿಗೆಮ ದೇವಾಲಯ, ಕೊಪ್ಪಳ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಕೊಪ್ಪಳದ ಹುಲಿಗೆಮ ದೇವಾಲಯ ಕೂಡಾ ಒಂದಾಗಿದೆ. ಹುಲಗಿ ಕ್ಷೇತ್ರ ಎಂಟುನೂರು ವರ್ಷಗಳ ಹಳೆಯ ದೇವಾಲಯವಾಗಿದೆ. ಕೋವಿಡ್‌ ಸಂದರ್ಭದಲ್ಲಿ ನಿರ್ಬಂಧಗಳಿದ್ದರೂ ಕೂಡಾ ಈ ದೇವಾಲಯಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿ ಬೇರೆ ಬೇರೆ ರಾಜ್ಯದಿಂದ ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ. ಇದರ ಆದಾಯ 8-10 ಕೋಟಿ ರೂ. ಆಗಿದೆ. +ಟಾಪ್‌ 9: ಬನಶಂಕರಿ ದೇವಸ್ಥಾನ, ಬೆಂಗಳೂರು ರಾಜ್ಯದ ರಾಜಧಾನಿ ಬೆಂಗಳೂರಿನ ಬನಶಂಕರಿ ದೇವಸ್ಥಾನವೂ ಕೂಡಾ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಒಂದಾಗಿದ್ದು, ಟಾಪ್‌ 9ನೇ ಸ್ಥಾನದಲ್ಲಿದೆ. ಇದು ಕನಕಪುರ ರಸ್ತೆಯಲ್ಲಿದೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ. +ಟಾಪ್‌10: ಘಾಟಿ ಸುಬ್ರಹಣ್ಯ ದೇವಸ್ಥಾನ, ದೊಡ್ಡಬಳ್ಳಾಪುರ ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಘಾಟಿ ಸುಬ್ರಹಣ್ಯ ಆದಾಯದ ಲೆಕ್ಕಾಚಾರದಲ್ಲಿ ರಾಜ್ಯದ ಟಾಪ್‌ 10 ಮುಜರಾಯಿ ವ್ಯಾಪ್ತಿಯ ದೇವಾಲಯವಾಗಿದೆ. 600 ವರ್ಷಗಳ ಇತಿಹಾಸವನ್ನು ಈ ದೇವಾಲಯವು ಹೊಂದಿದೆ. ಡಿಸೆಂಬರ್‌ ತಿಂಗಳಿನಲ್ಲಿ ಈ ದೇವಾಲಯದಲ್ಲಿ ಜಾತ್ರೆ ನಡೆಯಲಿದ್ದು, ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. ಈ ದೇವಾಲಯದ ಆದಾಯವು 8-10 ಕೋಟಿ ರೂಪಾಯಿ ಆಗಿದೆ. \ No newline at end of file diff --git a/eesanje/url_46_13_4.txt b/eesanje/url_46_13_4.txt new file mode 100644 index 0000000000000000000000000000000000000000..fa7877e19d48df29645ba9c1f0b29dfad6db594f --- /dev/null +++ b/eesanje/url_46_13_4.txt @@ -0,0 +1,10 @@ +ಈಗಲೇ ರಾಜೀನಾಮೆ ಕೊಡ್ತೀನಿ ತೊಗೊಳ್ಳಿ ಸ್ವಾಮಿ : ನ್ಯಾಯಾಧೀಶರ ಮುಂದೆ ಶಾಸಕ ಮುನಿರತ್ನ ಅಳಲು + ' +ಬೆಂಗಳೂರು,ಸೆ.21– ನಾನು ಬೇಕಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ಇಂತಹ ಮಾನಸಿಕ ಕಿರುಕುಳ ಯಾರಿಗೂ ಬೇಡ. ಬೇಕಾದರೆ ಈಗಲೇ ರಾಜೀನಾಮೆ ಪತ್ರವನ್ನು ತೆಗೆದುಕೊಳ್ಳಿ ಸ್ವಾಮಿ..!!ಅತ್ಯಾಚಾರ ಆರೋಪದ ಮೇಲೆ ಬಂಧನಕ್ಕೊಳಪಟ್ಟಿರುವ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಅಲವತ್ತುಕೊಂಡಿದ್ದು ಹೀಗೆ. +ರಾಮನಗರ ಜಿಲ್ಲೆ ಕಗ್ಗಲಿಪುರ ಪೊಲೀಸರು ವಿಚಾರಣೆ ನಡೆಸಿದ ನಂತರ ಮುನಿರತ್ನ ಅವರನ್ನು ಬೆಳಗ್ಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಮೂರ್ತಿಗಳು ಪ್ರಕರಣ ಕುರಿತು ಆರೋಪಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟರು. ಆಗ ಮುನಿರತ್ನ ಅವರು, ಐದು ವರ್ಷದ ನಂತರ ಈ ಪ್ರಕರಣ ಆಚೆ ಬಂದಿದೆ. +ಒಂದು ವೇಳೆ ಅಂತಹ ನೀಚ ಕೆಲಸವನ್ನು ಮಾಡಿದ್ದರೆ ಸಂತ್ರಸ್ತ ಮಹಿಳೆ ಈವರೆಗೂ ಏಕೆ ಸುಮನಿದ್ದರು. ಅಂದೇ ದೂರು ಕೊಡಬಹುದಿತ್ತಲ್ಲವೇ? ಇದು ವ್ಯವಸ್ಥಿತ ರಾಜಕೀಯ ಷಡ್ಯಂತರ ಎಂದು ನೋವು ಹೊರಹಾಕಿದರು. +ಲೋಕಸಭೆಯ ಚುನಾವಣೆ ಫಲಿತಾಂಶ ಬಂದ ನಂತರ ನನ್ನ ಮೇಲೆ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಕೆಲವರು ನಾನು ಪ್ರತಿನಿಧಿಸುವ ಕ್ಷೇತ್ರದಲ್ಲಿ ತನ್ನ ಸಹೋದರನಿಗೆ ಹಿನ್ನಡೆಯಾಯಿತಲ್ಲ ಎಂದು ಸುಳ್ಳು ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ ಸ್ವಾಮಿ.. ನೀವು ಹೇಳಿದರೆ ನನ್ನ ಶಾಸಕ ಸ್ಥಾನಕ್ಕೆ ಈಗಲೇ ರಾಜೀನಾಮೆ ಕೊಟ್ಟು ಮನೆಯಲ್ಲಿ ನೆಮದಿಯಾಗಿರುತ್ತೇನೆ ಎಂದಿದ್ದಾರೆ. +ಆಗ ಮಧ್ಯಪ್ರವೇಶಿಸಿದ ನ್ಯಾಯಾಧೀಶರು, ಇದು ನ್ಯಾಯಾಲಯ ಎಂಬುದು ನಿಮ ಗಮನದಲ್ಲಿರಲಿ. ನೀವು ರಾಜೀನಾಮೆಯನ್ನು ಯಾರಿಗೆ ಕೊಡಬೇಕೋ ಅವರಿಗೆ ಕೊಡಿ. ನಾನು ಕೇಳುತ್ತಿರುವ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡಿ ಎಂದು ಸೂಚಿಸಿದರು. ಮಾತು ಮುಂದುವರೆಸಿದ ಮುನಿರತ್ನ ಇದು ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದ ವ್ಯವಸ್ಥಿತ ಷಡ್ಯಂತ್ರವಾಗಿದೆ. ನಾನು ಯಾವ ಮಹಿಳೆಯ ಮೇಲೂ ಅತ್ಯಾಚಾರ ನಡೆಸಿಲ್ಲ. ಸಾರ್ವಜನಿಕ ಜೀವನದಲ್ಲಿ ನನ್ನದೇ ಆದ ಘನತೆ ಇಟ್ಟುಕೊಂಡಿದ್ದೇನೆ. +ನಿಜ ಹೇಳಬೇಕೆಂದರೆ ಆ ಮಹಿಳೆಯೇ ನನಗೆ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ ನೋಡುವಂತೆ ಪ್ರಚೋದನೆ ಮಾಡುತ್ತಿದ್ದರು. ನಾನು ಎಂದೂ ಇಂತಹ ನೀಚ ಕೆಲಸ ಮಾಡಲಿಲ್ಲ. ನನ್ನ ಕ್ಷೇತ್ರದಲ್ಲಿರುವ ರಾಜಕೀಯ ಎದುರಾಳಿಗಳು ಕೆಲವು ಪ್ರಭಾವಿಗಳ ಜೊತೆ ಸೇರಿಕೊಂಡು ಇಂತಹ ಷಡ್ಯಂತ್ರ ನಡೆಸಿದ್ದಾರೆ ಎಂದು ನೋವು ತೋಡಿಕೊಂಡರು. +ರಾಜಕೀಯಕ್ಕೆ ಬಂದ ಮೇಲೆ ನನ್ನ ಮೇಲೆ ಇಂಥ ಆರೋಪಗಳು ಕೇಳಿಬರುತ್ತಲೇ ಇದೆ. ನಮಂಥವರು ಸಾರ್ವಜನಿಕ ಕ್ಷೇತ್ರದಲ್ಲಿ ಇರಬಾರದು ಎಂಬುದು ಕೆಲವರ ದುರಾಲೋಚನೆ. ಹೇಗಾದರೂ ಮಾಡಿ ಐದು ವರ್ಷ ಜೈಲಿನಲ್ಲಿ ಕೂರಿಸಲು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ನಾನು ಶಾಸಕನಾಗಿ ಮುಂದುವರೆಯಬಾರದೆಂದ ಇಚ್ಛೆ ಇದ್ದರೆ ರಾಜೀನಾಮೆ ಕೊಟ್ಟುಬಿಡುತ್ತೇನೆ ಎಂದು ಹೇಳಿದರು. +ನೀವು ರಾಜೀನಾಮೆ ನೀಡಬೇಡಿ. ಜನಪ್ರತಿನಿಧಿಯಾಗಿ ಮುಂದುವರೆಯುವ ಆಸಕ್ತಿ ಇಲ್ಲದಿದ್ದರೆ ಸಂಬಂಧಪಟ್ಟವರ ಬಳಿ ರಾಜೀನಾಮೆ ವಿಷಯವನ್ನು ಮಾತನಾಡಿ ಎಂದು ಸೂಚಿಸಿ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು. \ No newline at end of file diff --git a/eesanje/url_46_13_5.txt b/eesanje/url_46_13_5.txt new file mode 100644 index 0000000000000000000000000000000000000000..afe9cf8895ecff4064d93e7e0891709b4e646aa6 --- /dev/null +++ b/eesanje/url_46_13_5.txt @@ -0,0 +1,8 @@ +ಮುನಿರತ್ನ ಮೇಲಿನ ಪ್ರಕರಣಗಳ ತನಿಖೆಗೆ ಎಸ್ಐಟಿ ರಚನೆ..!? + +ಬೆಂಗಳೂರು,ಸೆ.21-ಶಾಸಕ ಮುನಿರತ್ನ ಅವರ ಕರ್ಮಕಾಂಡಗಳ ತನಿಖೆಗೆ ವಿಶೇಷ ತನಿಖಾ ದಳ ರಚಿಸಲು ನಿರ್ಧರಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ. ಮುನಿರತ್ನ ಅವರ ವಿರುದ್ಧ ಹಲವು ರೀತಿಯ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಹೊಸದಾಗಿ ಬೆಳಕಿಗೆ ಬಂದ ಹನಿಟ್ರ್ಯಾಪ್, ಎಚ್ಐವಿ ಸೋಂಕು ಹರಡಿಸುವ ಹುನ್ನಾರ, ಅತ್ಯಾಚಾರ ಸೇರಿದಂತೆ ನಾನಾ ಆರೋಪಗಳಲ್ಲಿ ಪ್ರಕರಣ ದಾಖಲಾಗಿವೆ. +ಈ ಮೊದಲು 2009 ರಿಂದಲೂ ಮುನಿರತ್ನ ವಿರುದ್ಧ ಹಲವು ಸ್ವರೂಪದ ಪ್ರಕರಣಗಳು ವಿವಿಧ ಹಂತದಲ್ಲಿವೆ. ಬಿಬಿಎಂಪಿಯ ಕಡತಗಳನ್ನು ತಮ ಮನೆಯಲ್ಲಿ ಇಟ್ಟುಕೊಂಡಿರುವುದು, ಕಾಮಗಾರಿಗಳಲ್ಲಿ ನೂರಾರು ಕೋಟಿ ರೂ. ಅಕ್ರಮ ಸೇರಿದಂತೆ ಹಲವು ದೂರುಗಳಿವೆ.ಮುನಿರತ್ನ ಅವರು ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಯಾವ ಹಂತಕ್ಕಾದರೂ ತಲುಪುತ್ತಾರೆ ಎಂಬ ಆರೋಪಗಳಿವೆ. +ಈ ಹಿನ್ನೆಲೆಯಲ್ಲಿ ಮುನಿರತ್ನ ಹಲವಾರು ಕುಕೃತ್ಯಗಳನ್ನು ನಡೆಸಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಆರಂಭದಲ್ಲಿ ದೂರು ನೀಡಿದವರು ಹಿಂದೇಟು ಹಾಕಿದವರು ಈಗ ಒಬ್ಬೊಬ್ಬರಾಗಿ ದೂರು ನೀಡಲಾರಂಭಿಸಿದ್ದಾರೆ. +ಗುತ್ತಿಗೆದಾರ ಚೆಲುವರಾಜು ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಬಳಿಕ ಮುನಿರತ್ನ ಅವರ ಗ್ರಹಚಾರ ಕೆಟ್ಟಂತಾಗಿದೆ. ಜಾತಿನಿಂದನೆ ಸೇರಿದಂತೆ ವಿವಿಧ ಆರೋಪಗಳಡಿ ಬಂಧನಕ್ಕೊಳಗಾಗಿ ಜೈಲುಪಾಲಾಗಿದ್ದಾರೆ. ಅದರ ಬೆನ್ನಲ್ಲೇ ಮಹಿಳೆಯೊಬ್ಬರು ಅತ್ಯಾಚಾರದ ಆರೋಪದಡಿ ದೂರು ದಾಖಲಿಸಿದ್ದಾರೆ. ಹೀಗಾಗಿ ಜಾಮೀನು ದೊರೆತರೂ ಮುನಿರತ್ನ ಮತ್ತೆ ಜೈಲಿನಲ್ಲೇ ಉಳಿಯುವಂತಾಗಿದೆ. +ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರು ಸಭೆ ನಡೆಸಿ ಮುನಿರತ್ನ ಅವರ ಹೇಳಿಕೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅವರ ವಿರುದ್ಧದ ಎಲ್ಲಾ ದೂರುಗಳನ್ನು ವಿಶೇಷ ತನಿಖಾ ದಳ ರಚಿಸಿ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. +ಒಕ್ಕಲಿಗ ಸಮುದಾಯುದ ಈ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುತೇಕ ಸಂಬಂಧಿಸಿದ್ದು ಎಸ್ಐಟಿ ರಚನೆಗೆ ಕ್ರಮ ಕೈಗೊಳ್ಳುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೂಚನೆ ನೀಡಿದ್ದು, ಅದರ ಪ್ರಕಾರ, ಎಸ್ಐಟಿ ರಚನೆ ಬಹುತೇಕ ಖಚಿತವಾಗಿದ್ದು, ಯಾವುದೇ ಕ್ಷಣದಲ್ಲಿ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. \ No newline at end of file diff --git a/eesanje/url_46_13_6.txt b/eesanje/url_46_13_6.txt new file mode 100644 index 0000000000000000000000000000000000000000..d83ccc6cc745ca6dab6ee7b2bf42fcfb0aa77d47 --- /dev/null +++ b/eesanje/url_46_13_6.txt @@ -0,0 +1,5 @@ +ಮೈಸೂರು ದಸರಾ 2024 : ‘ಯುವ ಸಂಭ್ರಮ’ದ ಪೋಸ್ಟರ್ ಹಾಗೂ ವೆಬ್ ಸೈಟ್ ಬಿಡುಗಡೆ + +ಮೈಸೂರು, ಸೆ. 21– ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. +ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು. +ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_13_7.txt b/eesanje/url_46_13_7.txt new file mode 100644 index 0000000000000000000000000000000000000000..70e164d408a324229c37d7b3b9f26efc368d85d0 --- /dev/null +++ b/eesanje/url_46_13_7.txt @@ -0,0 +1,6 @@ +ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ಕೂಟ + , , +ಮೈಸೂರು ಸೆ.21-ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು. +ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. +ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು. +ನರಸಿಂಹ ರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_13_8.txt b/eesanje/url_46_13_8.txt new file mode 100644 index 0000000000000000000000000000000000000000..ec962a292247994ffe0014e8aec391f90a25f782 --- /dev/null +++ b/eesanje/url_46_13_8.txt @@ -0,0 +1,11 @@ +ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ + : +ಬೆಂಗಳೂರು,ಸೆ.21-ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಆರ್‌ಆರ್‌ ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್‌‍ ನಾಯಕರು ಸತ್ಯಾಸತ್ಯತೆ ತಿಳಿದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು. +ಮುನಿರತ್ನ ಪ್ರಕರಣದಲ್ಲಿ ಎಸ್‌‍ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, ಕೆಲ ಮುಖಂಡರು ಮನವಿ ಮಾಡಿರುವ ಬಗ್ಗೆ ಹೆಚ್ಚಿನ ಚರ್ಚೆಯಾಗಿಲ್ಲ. ಆದರೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ವಿರುದ್ಧ ನಡೆದಿರುವ ಷಡ್ಯಂತ್ರದ ಬಗ್ಗೆ ಕೇಳಿ ದಿಗ್ಭ್ರಮೆಯಾಯಿತು. ದೇಶದಲ್ಲಷ್ಟೇ ಅಲ್ಲ ವಿಶ್ವದಲ್ಲೇ ಈ ರೀತಿಯ ಸಂಚನ್ನು ನಾನು ನೋಡಿಲ್ಲ ಎಂದು ಹೇಳಿದರು. +ಸಿ.ಟಿ.ರವಿಯಣ್ಣ, ಅಶೋಕಣ್ಣ, ವಿಜಯೇಂದ್ರಣ್ಣ, ಕುಮಾರಣ್ಣ ಅವರು ಸತ್ಯಾಸತ್ಯತೆಯನ್ನು ಪರಿಶೀಲಿಸಿ ಮಾತನಾಡಬೇಕು. ತಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿದರು.ಮುನಿರತ್ನ ಪ್ರಕರಣದಲ್ಲಿ ಜೆಡಿಎಸ್‌‍, ಬಿಜೆಪಿ ಮುಖಂಡರು ಉತ್ತರ ಕೊಡಬೇಕು, ನಾವುಗಳಲ್ಲ ಎಂದರು. +ಈ ಪ್ರಕರಣದಲ್ಲಿ ಸೇಡಿನ ರಾಜಕಾರಣ, ಟೀಕೆಗಳು ಮಾಡುತ್ತಿದ್ದಾರೆ. ಬಿಜೆಪಿ ಅಶ್ವತ್ಥ ನಾರಾಯಣ ಹಾಗೂ ಮತ್ತಿತರರು ನನ್ನನ್ನು ನೆನಪಿಸಿಕೊಳ್ಳಬೇಕು. ಇಲ್ಲದೇ ಇದ್ದರೆ ಅವರಿಗೆ ದಿನ ಬೆಳಗಾಗುವುದೇ ಇಲ್ಲ. ಮುನಿರತ್ನ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಜೆಡಿಎಸ್‌‍, ಬಿಜೆಪಿ ನಾಯಕರನ್ನು ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು. +ಕುಮಾರಸ್ವಾಮಿಯವರ ಡಿ ನೋಟಿಫಿಕೇಶನ್‌ ಪ್ರಕರಣದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಬೆಂಗಳೂರಿನಲ್ಲಿ ಇರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿನ್ನೆಗೆ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಗುಂಡಿಗಳ ಲೆಕ್ಕವೂ ನನ್ನ ಮೊಬೈಲ್‌ನಲ್ಲಿದೆ. +ತಾವು ಸೂಚನೆ ನೀಡಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡುತ್ತಿದ್ದಾರೆ. ತಮ 40 ವರ್ಷಗಳ ಜೀವನದಲ್ಲಿ ಈ ರೀತಿ ಅಭಿಯಾನದ ಮೂಲಕ ಕೆಲಸ ಆಗಿದ್ದನ್ನು ಮೊದಲು ನೋಡುತ್ತಿದ್ದೇನೆ ಎಂದರು. +ರಸ್ತೆಗುಂಡಿ ಮುಚ್ಚಿರುವ ಗುಣಮಟ್ಟ ಪರಿಶೀಲನೆ ಮಾಡುತ್ತೇನೆ. ಜೊತೆಗೆ ರಾತ್ರಿ ವೇಳೆ ನಗರ ಪ್ರದಕ್ಷಿಣೆ ಹಮಿಕೊಳ್ಳುತ್ತೇನೆ. ಎಲ್ಲೆಲ್ಲಿ ಗುಂಡಿ ಮುಚ್ಚಿದ್ದಾರೆ, ಎಲ್ಲೆಲ್ಲಿ ಬಾಕಿ ಇದೆ ಎಂಬುದನ್ನು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು. +ಮಧ್ಯದಲ್ಲಿ ಮಳೆ ಹಾಗೂ ಇತರ ಸಮಸ್ಯೆಗಳಿಂದಾಗಿ ನಿಧಾನವಾಗಿ ಕೆಲಸಗಳಾಗಿವೆ. ಏನೇ ಆದರೂ ನಮ ಬದ್ಧತೆಯಂತೆ ನಾಗರಿಕರಿಗೆ ಉತ್ತಮ ಸೌಲಭ್ಯ ಒದಗಿಸಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಹಾಗೂ ನಗರಗಳಲ್ಲಿನ ಪರಿಸ್ಥಿತಿ ನೋಡಿದರೆ ಅವಮಾನವಾಗುತ್ತದೆ. ಬೇರೆ ರಾಜ್ಯಗಳಿಗಿಂತ ನಮಲ್ಲಿ ಉತ್ತಮ ವ್ಯವಸ್ಥೆ ಇದೆ ಎಂದರು. \ No newline at end of file diff --git a/eesanje/url_46_13_9.txt b/eesanje/url_46_13_9.txt new file mode 100644 index 0000000000000000000000000000000000000000..19a8bf6e9622ecda7d8300b78334fac1aa8d6dcc --- /dev/null +++ b/eesanje/url_46_13_9.txt @@ -0,0 +1,6 @@ +ರೇಪ್ ಕೇಸ್ : ಶಾಸಕ ಮುನಿರತ್ನಗೆ 14 ದಿನದ ನ್ಯಾಯಾಂಗ ಬಂಧನ + : 14- +ಬೆಂಗಳೂರು,ಸೆ.21-ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರಿಗೆ 14 ದಿನದ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ. +ಶುಕ್ರವಾರ ರಾಮನಗರ ಜಿಲ್ಲೆ ಕಗ್ಗಲಿಪುರ ಠಾಣೆ ಪೊಲೀಸರು ಸತತ 10 ಗಂಟೆ ಸುದೀರ್ಘ ವಿಚಾರಣೆಯ ನಂತರ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು.ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಆರೋಪಿ ಮುನಿರತ್ನ ಅವರನ್ನು 14 ದಿನಗಳ ಕಾಲ ಅಂದರೆ ಅ.5ರವರೆಗೆ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿ ಆದೇಶ ನೀಡಿದರು. +ಆರೋಪಿಯನ್ನು ಪೊಲೀಸರು ವಶಕ್ಕೆ ನೀಡಬೇಕೇ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದಾಗ ಈಗಾಗಲೇ ಪ್ರಕರಣ ಸಂಬಂಧ ಸ್ಥಳ ಮಹಜರು ವಿಚಾರಣೆ ನಡೆಸಲಾಗಿದೆ ಎಂದು ವಕೀಲರು ಹೇಳಿದರು.ಈ ಹಿನ್ನಲೆಯಲ್ಲಿ ಮುನಿರತ್ನಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ತಕ್ಷಣವೇ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಲಾಯಿತು. +ಮೂರು ದಿನಗಳ ಹಿಂದೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರನಿಗೆ ಜಾತಿ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮುನಿರತ್ನಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಶುಕ್ರವಾರ ಬೆಳಗ್ಗೆ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗಡೆ ಬರುತ್ತಿದ್ದಂತೆ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. \ No newline at end of file diff --git a/eesanje/url_46_140_1.txt b/eesanje/url_46_140_1.txt new file mode 100644 index 0000000000000000000000000000000000000000..dee68edc4cffad7573c44520be5035f4198f8aea --- /dev/null +++ b/eesanje/url_46_140_1.txt @@ -0,0 +1,7 @@ +ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಇನ್ನೆರೆಡು ದಿನ ಭಾರಿ ಮಳೆ +ಬೆಂಗಳೂರು, ಮೇ 20-ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತ, ಮೇಲೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಉಂಟಾಗಿರುವ ಪ್ರಮುಖ ಬದಲಾವಣೆಗಳಿಂದ ರಾಜ್ಯದ ದಕ್ಷಿಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೆರೆಡು ದಿನ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. +ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಆ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಹೆಚ್ಚೂ ಕಡಿಮೆ ಇದೇ ರೀತಿ ಒಂದು ವಾರ ಕಾಲ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದೆ. ಕೆಲವೆಡೆ ಭಾರೀ ಮಳೆಯಾಗಿದ್ದರೆ, ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ಇನ್ನು ಮುಂದಿನ ದಿನಗಳಲ್ಲೂ ಹೆಚ್ಚಾಗುವ ಮುನ್ಸೂಚನೆಗಳಿವೆ. +ನಿರಂತರ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಜಮೀನು ಸಿದ್ಧತೆ ಮಾಡುವ ಕಾರ್ಯದಲ್ಲಿ ರೈತ ಸಮುದಾಯ ತೊಡಗಿದೆ.ಭಾಗಶಃ ಮೋಡ ಕವಿದಿರುವ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಆದರೂ ಕೆಲವೊಮ್ಮೆ ಆಗೊಮ್ಮೆ, ಈಗೊಮ್ಮೆ ಮಳೆ ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. +ನೈರುತ್ಯ ಮುಂಗಾರು ಮೇ 31ಕ್ಕೆ ಕೇರಳ, ಕರಾವಳಿ ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಕ್ಕೆ ಪೂರಕವಾಗಿ ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾತಾವರಣ ಮಾರ್ಪಾಡಾಗುತ್ತಿದ್ದು, ಈ ಸಮಯದಲ್ಲಿ ಸಾಕಷ್ಟು ಮಳೆಯಾಗಲಿದೆ. +ನಿರೀಕ್ಷೆಯಂತೆ ಮೇ ಅಂತ್ಯಕ್ಕೆ ಮುಂಗಾರು ಕೇರಳ ಪ್ರವೇಶಿಸಿದರೆ ಅನಂತರ ಎರಡು-ಮೂರು ದಿನಗಳಲ್ಲಿ ರಾಜ್ಯವನ್ನು ಮುಂಗಾರು ಪ್ರವೇಶಿಸಲಿದೆ. ಬಳಿಕ ಒಂದು ವಾರದೊಳಗೆ ರಾಜ್ಯಾದ್ಯಂತ ಮುಂಗಾರು ವ್ಯಾಪಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_140_10.txt b/eesanje/url_46_140_10.txt new file mode 100644 index 0000000000000000000000000000000000000000..c8d907b3b5fd263b9f50a3fd6f8631c7795ff34c --- /dev/null +++ b/eesanje/url_46_140_10.txt @@ -0,0 +1,5 @@ +ಇಂಜಿನಲ್ಲಿ ಬೆಂಕಿ : ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ +ಬೆಂಗಳೂರು, ಮೇ 19-ಕೊಚ್ಚಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. +ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ತಕ್ಷಣ ಸ್ಥಳಾಂತರಿಸಲಾಗಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ, ಟೇಕ್‌ ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಚ್ಚತ್ತ ವಿಮಾನದ ಸಿಬ್ಬಂದಿ ಸದಸ್ಯರು ಏರ್‌ ಟ್ರಾಫಿಕ್‌ ಕಂಟ್ರೋಲರ್‌ಗೆ ಎಚ್ಚರಿಕೆ ಸಂದೇಶ ನೀಡಿದ ಮಂತರ ಮತ್ತುಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ ವಕ್ತಾರರು ತಿಳಿಸಿದ್ದಾರೆ. +ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಮತೆ ಕೂಡಲೇ ಬೆಂಕಿಯನ್ನು ನಂದಿಸಲಾಯಿತು ಎಂದು ಹೇಳಿದರು. ನಿನ್ನೆ ರಾತ್ರಿ11.30ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಕೊತ್ತು ಮೇಲೆ ಹಾರಿತ್ತು ಕೆಲವೇ ನಿಮಿಷದಲ್ಲಿ ಒಂದು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಶುರುವಾಗಿದೆ ಕೂಡಲೆ ಹಿಂತಿರುಗಲು ಸೂಚಿಸಿ ಯಾವುದೇ ಅನಾಹುತ ಸಂಭವಿಸದೆ ವಿಮಾನ ಲ್ಯಾಂಡಿಂಗ್‌ ಆಗಿದೆ. +ಯಾವುದೇ ಅತಿಥಿಗಳಿಗೆ ಯಾವುದೇ ಗಾಯಗಳಿಲ್ಲ ,ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಮತ್ತು ನಮ್ಮ ಅತಿಥಿಗಳು ತಮ ಗಮ್ಯಸ್ಥಾನವನ್ನು ಆದಷ್ಟು ಬೇಗ ತಲುಪಲು ಪರ್ಯಾಯ ವ್ಯವಸ್ಥೆಗಳನ್ನು ಒದಗಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಅದು ಹೇಳಿದೆ. ವಿಮಾನವನ್ನು ಸ್ಥಳಾಂತರಿಸಿ ,ಘಟನೆಗೆ ಕಾರಣ ತಿಳಿಯಲು ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. \ No newline at end of file diff --git a/eesanje/url_46_140_11.txt b/eesanje/url_46_140_11.txt new file mode 100644 index 0000000000000000000000000000000000000000..3040a3c174372cc2198662738f39ccbe60d7f0cb --- /dev/null +++ b/eesanje/url_46_140_11.txt @@ -0,0 +1,7 @@ +ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ದೇವೇಗೌಡರು +ಬೆಂಗಳೂರು,ಮೇ 18-ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿದೆ. ಒಂದು ವೇಳೆ ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಶಿಕ್ಷೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಹೇಳಿದರು. ಪ್ರಜ್ವಲ್ ರೇವಣ್ಣ ಮೇಲೆ ಆರೋಪ ಕೇಳಿ ಬಂದ ನಂತರ ಮೊದಲ ಬಾರಿಗೆ ಮೌನ ಮುರಿದು ಮಾಧ್ಯಮದವರೊಂದಿಗೆ ಮಾತನಾಡಿದ ಗೌಡರು, ಈ ವಿಚಾರದಲ್ಲಿ ಆರೋಪ ಕೇಳಿಬಂದಿರುವ ಎಲ್ಲರ ಮೇಲೂ ಕ್ರಮವಾಗಬೇಕು ಎಂದಿದ್ದಾರೆ. +ಮಾಜಿ ಸಚಿವ ಎಚ್.ರೇವಣ್ಣ ಅವರ ಮೇಲೆ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಆ ವಿಚಾರ ನ್ಯಾಯಾಲಯದ ಮುಂದೆ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು. ನಮ್ಮ ಕುಟುಂಬಕ್ಕೆ ಹಿನ್ನಡೆ ಮಾಡಲು ಈ ಪ್ರಕರಣದಲ್ಲಿ ಬಹಳ ಜನರಿರುವುದು ನಿಜ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆರೋಪದ ಬಗ್ಗೆ ಏನು ಮಾಡಬೇಕೆಂಬುದನ್ನು ಈಗಾಗಲೇ ಹೇಳಿದ್ದಾರೆ ಎಂದರು. +ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದ್ದು, ಫಲಿತಾಂಶ ಬಂದ ನಂತರ ಹೆಚ್ಚಿನ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ ಅವರು, ಅಲ್ಲಿಯವರೆಗೆ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಪ್ರಜ್ವಲ್ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದ ಕೂಡಲೇ ಕುಮಾರಸ್ವಾಮಿಯವರು ಯಾವುದೇ ಚ್ಯುತಿಯಿಲ್ಲದ ರೀತಿಯಲ್ಲಿ ಸಂಬಂಧಪಟ್ಟವರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನು ಸೇರಿದಂತೆ ಸಂಬಂಧಪಟ್ಟ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ ಎಂದರು. +ವಕೀಲ ದೇವರಾಜೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಮಾಡಿರುವ ಆರೋಪ ಸೇರಿದಂತೆ ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ವರಾಜೇಗೌಡ ಏನು ಹೇಳಿದ್ದಾರೆ ಎಂಬುದನ್ನು ಮಾಧ್ಯಮಗಳ ಮೂಲಕ ನೋಡಿದ್ದೇವೆ. ಅವರ ಹೇಳಿಕೆಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲದಕ್ಕೂ ಕುಮಾರಸ್ವಾಮಿಯವರೇ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದರು. +ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ನಾನು ಲೋಕಸಭಾ ಚುನಾವಣೆಯಲ್ಲಿ ನಾನು ಎಲ್ಲಾ ಕಡೆ ಪ್ರಚಾರವನ್ನು ಮಾಡಿದ್ದು, ಫಲಿತಾಂಶವನ್ನು ನಿರೀಕ್ಷಿಸುತ್ತಿರುವುದಾಗಿ ತಿಳಿಸಿದರು. \ No newline at end of file diff --git a/eesanje/url_46_140_12.txt b/eesanje/url_46_140_12.txt new file mode 100644 index 0000000000000000000000000000000000000000..3558c197a471341136b811989facb6fd4f3c335e --- /dev/null +++ b/eesanje/url_46_140_12.txt @@ -0,0 +1,4 @@ +ಅಂಜಲಿ ಕೊಲೆ ಆರೋಪಿ ಗಿರೀಶ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು +ಹುಬ್ಬಳ್ಳಿ, ಮೇ 18-ಅಂಜಲಿ ಕೊಲೆ ಆರೋಪಿ ಗಿರೀಶ್‌ ವಿರುದ್ಧ ಬೆಂಡಿಗೇರಿ ಪೊಲೀಸ್‌‍ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮಗಳಿಗೆ ಕಿರುಕುಳ ಕೊಟ್ಟು, ಚಿನ್ನಾಭರಣಗಳನ್ನು ಪಡೆದುಕೊಂಡಿದ್ದಾನೆ ಎಂದು ಅಪ್ರಾಪ್ತ ಬಾಲಕಿಯ ಪೋಷಕರು ಆರೋಪಿ ಗಿರೀಶ್‌ ವಿರುದ್ಧ ದೂರು ನೀಡಿದ್ದಾರೆ. +ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ವಂಚಿಸಿ ಮೋಸ ಮಾಡಿದ್ದ ಹಂತಕ ಗಿರೀಶ ಐದುವರೆ ತೊಲೆ ಬಂಗಾರ ಪಡೆದು ಮೋಸ ಮಾಡಿದ್ದು ಆತನಿಂದ ಒಡವೆಗಳನ್ನು ಕೊಡಿಸಬೇಕು ಹಾಗೂ ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. +ಪ್ರಕರಣ ದಾಖಲಿಸಿಕೊಂಡೊರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇ. 15ರಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಗೆೆ ಆರೋಪಿ ಗಿರೀಶ್‌ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದನು. \ No newline at end of file diff --git a/eesanje/url_46_140_2.txt b/eesanje/url_46_140_2.txt new file mode 100644 index 0000000000000000000000000000000000000000..c6eb08b4ac9e12bc0f78eaf1ec736914d801fcc4 --- /dev/null +++ b/eesanje/url_46_140_2.txt @@ -0,0 +1,11 @@ +ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಾನಾ ಅವಾಂತರ ಸೃಷ್ಟಿಸಿದ ಭಾರಿ ಮಳೆ +ಬೆಂಗಳೂರು, ಮೇ 19-ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರಾತ್ರಿ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿದೆ. ನಗರದ ವಿವಿಧೆಡೆ ಮಳೆಯಾಗಿದ್ದು, ಯಲಹಂಕದ ಸುತ್ತಮುತ್ತ ಭಾರಿ ಮಳೆಯಾದ ಪರಿಣಾಮ ನಾರ್ತ್‌ ವುಡ್‌ ಅಪಾರ್ಟ್‌ಮೆಂಟ್‌ ಸಂಪೂರ್ಣ ಜಲಾವೃತಗೊಂಡು ದ್ವೀಪದಂತಾಗಿದೆ. +ಸ್ಟಾರ್ಮ್‌ ವಾಟರ್‌ ಡ್ರೇನ್‌ ಓಪನ್‌ ಮಾಡಿರುವುದರಿಂದ ರಾಜಕಾಲುವೆಯಿಂದ ನೀರು ವಿಲ್ಲಾ ಮತ್ತು ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ದು, ನಿವಾಸಿಗಳು ಮನೆಯಿಂದ ಹೊರಬರದಂತಾಗಿ ಜಲದಿಗ್ಬಂಧನಕ್ಕೊಳಗಾಗಿದ್ದರು. ಜೊತೆಗೆ ರಾಜಕಾಲುವೆಯಿಂದ ನೀರಿನ ವಾಸನೆಗೆ ಜನರು ಕಂಗಾಲಾಗಿ ಬಿಟ್ಟಿದ್ದಾರೆ. +ಮೋಟಾರು ಅಳವಡಿಸಿ ಸಂಗ್ರಹವಾಗಿದ್ದ ನೀರನ್ನು ಹೊರಹಾಕಲು ಹರಸಾಹಸ ಪಡುತ್ತಿದ್ದಾರೆ. ಒಂದು ವಾರದ ಹಿಂದೆಯೇ ಪಾಲಿಕೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ರಾಜಕಾಲುವೆಯಿಂದ ನೀರು ತುಂಬಿ ನುಗ್ಗಿರುವುದರಿಂದ ಸಂಕಷ್ಟ ಎದುರಾಗಿತ್ತು. +ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ವಾಹನಗಳಿಗೆ ನೀರು ನುಗ್ಗಿ ಹಾಳಾಗಿವೆ. ಒಟ್ಟಿನಲ್ಲಿ ರಾತ್ರಿಯಿಡೀ ಅಪಾರ್ಟ್‌ಮೆಂಟ್‌ನ ನಿವಾಸಿಗಳು ಪರದಾಡುವಂತಾಗಿತ್ತು. ಕೆರೆಯಂತಾಗಿದ್ದ ನೀರು ತೆರವಿಗೆ ಬಂದ ಪಾಲಿಕೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಅಲ್ಲಿನ ನಿವಾಸಿಗಳು ಶಾಶ್ವತವಾಗಿ ಪರಿಹಾರ ಕಲ್ಪಿಸಿ, ಪ್ರತಿಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಮೊದಲು ರಾಜಕಾಲುವೆಗಳನ್ನು ಸ್ವಚ್ಛ ಮಾಡಿ ಎಂದು ಒತ್ತಾಯಿಸಿದರು. +ಇಂದು ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನ ಅಲ್ಲಲ್ಲಿ ಮಳೆಯಾಗಿದೆ.ಉಡುಪಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ತಂತಿ ತುಳಿದು ಇರ್ಷಾದ್‌ (56) ಎಂಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶಿರೂರಿನಲ್ಲಿ ನಡೆದಿದೆ. +ಕಾಫಿನಾಡು ಚಿಕ್ಕಮಗಳೂರಿನಲ್ಲೂ ಸಹ ಭಾರಿ ಮಳೆಯಾಗಿದ್ದು, ಹೌಸಿಂಗ್‌ ಬೋರ್ಡ್‌ ಬಡಾವಣೆಯಲ್ಲಿ ಕಾಂಪೌಂಡ್‌ ಕುಸಿದು ಬಿದ್ದು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ತಾಲ್ಲೂಕಿನ ಕಸ್ಕೆ ಗ್ರಾಮದಲ್ಲಿ ಭಾರೀ ಮರವೊಂದು ಮನೆಯ ಮೇಲೆ ಬಿದ್ದಿದ್ದು ಸಾಕಷ್ಟು ಹಾನಿ ಸಂಭವಿಸಿದೆ. +ಶಿವಮೊಗ್ಗದಲ್ಲೂ ಸಹ ಭಾರೀ ಮಳೆಯಾಗಿದ್ದು, ಮದುವೆ ಛತ್ರಕ್ಕೆ ನೀರು ನುಗ್ಗಿದ್ದು ಬಂದು ಬಳಗ, ನೆಂಟರಿಷ್ಟರಿಗೆ ತೀವ್ರ ತೊಂದರೆಯಾಗಿತ್ತು. ಒಂದೆಡೆ ಛತ್ರದ ಸಿಬ್ಬಂದಿಗಳು ನೀರನ್ನು ಹೊರಹಾಕಿದರು. ಸಕ್ಕರೆನಾಡು ಮಂಡ್ಯದಲ್ಲೂ ಸಹ ಉತ್ತಮ ಮಳೆಯಾಗಿದ್ದು, ಕೆ.ಆರ್‌.ಪೇಟೆ ತಾಲ್ಲೂಕಿನ ಜಕ್ಕನಹಳ್ಳಿಯಲ್ಲಿ ಮನೆಗಳಿಗೆ ನೀರು ನುಗ್ಗಿ ತೊಂದರೆಯುಂಟಾಗಿತ್ತು. ಭಾರೀ ಮಳೆಗೆ ಮರಗಳು ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. +ತುಮಕೂರು ಜಿಲ್ಲೆಯಲ್ಲೂ ಸಹ ಮಳೆಯಾಗಿದ್ದು, ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅಲ್ಲಿನ ಜನರು ಪರದಾಡುವಂತಾಗಿದೆ. ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿ ಗ್ರಾಮದಲ್ಲಿ ಕೊರಟಗೆರೆ-ಗೌರಿಬಿದನೂರು ಹೆದ್ದಾರಿ ಎತ್ತರದ ಕಾಮಗಾರಿಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಮನೆಗಳಿಗೆ ನೀರು ನುಗ್ಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕೋಟೆನಾಡು ಚಿತ್ರದುರ್ಗದಲ್ಲೂ ಮಳೆಯಾಗಿದ್ದು, ಹೊಸದುರ್ಗ ತಾಲೂಕಿನ ಕೆಲ್ಲೋಡು ಸೇತುವೆ ಮುಳುಗಡೆಯಾಗಿದ್ದು, ವಾಣಿವಿಲಾಸ ಸಾಗರಕ್ಕೆ ನೀರು ಹರಿಯುತ್ತಿದೆ. ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಮದ್ದೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿದಂತೆ ಬಯಲುಸೀಮೆ ಪ್ರದೇಶಕ್ಕೆ ವರುಣ ಕೃಪೆ ತೋರಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. +ಇದೇ 23 ರವರೆಗೂ ರಾಜ್ಯದ ವಿವಿಧೆಡೆ ಸಾಧಾರಣ ಹಾಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_140_3.txt b/eesanje/url_46_140_3.txt new file mode 100644 index 0000000000000000000000000000000000000000..17fda3a95e007a5098d9f853c21931fac1b02cbf --- /dev/null +++ b/eesanje/url_46_140_3.txt @@ -0,0 +1,6 @@ +ಶ್ರೀಮಂತರ ಸಾಲ ಮನ್ನಾ ದೇಶಕ್ಕೆ ಲಾಭವಾಗುತ್ತಿದೆಯೇ..? : ಕಾಂಗ್ರೆಸ್‌‍ ಪ್ರಶ್ನೆ +ಬೆಂಗಳೂರು, ಮೇ 19-ಬಡವರ ಅನುಕೂಲಕ್ಕಾಗಿ ಜಾರಿಗೊಳಿಸಿರುವ ಯೋಜನೆಗಳಿಂದ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಪ್ರತಿಪಾದಿಸುವ ಪ್ರಧಾನಿಯವರಿಗೆ ಶ್ರೀಮಂತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಲಾಭವಾಗುತ್ತಿದೆಯೇ ಎಂದು ಕಾಂಗ್ರೆಸ್‌‍ ಪ್ರಶ್ನಿಸಿದೆ. +ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌‍ ಪಕ್ಷ ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ? ಎಂದು ಕಿಡಿಕಾರಿದೆ. +ಶ್ರೀಮಂತ ಉದ್ಯಮಿಗಳ 20 ಲಕ್ಷ ಕೋಟಿ ಸಾಲವನ್ನು ರೈಟಾಫ್ ಮಾಡಿದರೆ ದೇಶದ ಪ್ರಗತಿಗೆ ಮಾರಕ ಆಗಲಿಲ್ಲವೇ?ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ?ಮಾಲ್ಡಿವ್ಸ್, ಅಪಘಾನಿಸ್ತಾನ್, ಭೂತಾನ್ ಸೇರಿದಂತೆ ವಿದೇಶಗಳಿಗೆ ಸಾವಿರಾರು…../ +ಶ್ರೀಮಂತ ಉದ್ಯಮಿಗಳ ಕಾರ್ಪೊರೇಟ್‌ ತೆರಿಗೆ ಕಡಿತಗೊಳಿಸಿ ದೇಶದ ಬೊಕ್ಕಸಕ್ಕೆ ವಾರ್ಷಿಕ 1.5 ಲಕ್ಷ ಕೋಟಿ ನಷ್ಟವಾಗುತ್ತಿರುವುದು ದೇಶದ ಪ್ರಗತಿಗೆ ಮಾರಕವಲ್ಲವೇ? ಮಾಲ್ಡಿವ್ಸ್, ಅಪಘಾನಿಸ್ತಾನ್‌, ಭೂತಾನ್‌ ಸೇರಿದಂತೆ ವಿದೇಶಗಳಿಗೆ ಸಾವಿರಾರು ಕೋಟಿ ಹಣ ನೀಡಿದರೆ ದೇಶದ ಪ್ರಗತಿಗೆ ಮಾರಕವಲ್ಲವೇ? ಪ್ರಧಾನಿ ಓಡಾಟಕ್ಕೆ 8 ಸಾವಿರ ಕೋಟಿ ಕೊಟ್ಟು ವಿಮಾನ ಖರೀದಿಸಿದರೆ ಪ್ರಗತಿಗೆ ಮಾರಕವಲ್ಲವೇ? ಎಂದು ಪ್ರಶ್ನಿಸಿದೆ. +ಅಂದಾಜು 5,000 ಕೋಟಿ ವೆಚ್ಚದ ಉಚಿತ ಪ್ರಯಾಣದ ಯೋಜನೆಯ ಬಗ್ಗೆ ಇಷ್ಟು ಅಸಹನೆ ಹೊಂದಿರುವ ಮೋದಿಯವರ ಜನವಿರೋಧಿ ನಿಲುವು ಜನತೆಗೆ ಅರ್ಥವಾಗಿದೆ ಎಂದು ತಿರುಗೇಟು ನೀಡಿದೆ. \ No newline at end of file diff --git a/eesanje/url_46_140_4.txt b/eesanje/url_46_140_4.txt new file mode 100644 index 0000000000000000000000000000000000000000..64ad2354079b6d67b1df80f45c1c451e73b5efd2 --- /dev/null +++ b/eesanje/url_46_140_4.txt @@ -0,0 +1,11 @@ +ನಾಳೆಗೆ ವರ್ಷ ಪೂರೈಸಲಿದೆ ಗ್ಯಾರಂಟಿ ಸರ್ಕಾರ, ಸಂಭ್ರಮಾಚರಣೆಗೆ ನೀತಿ ಸಂಹಿತೆ ಅಡ್ಡಿ +ಬೆಂಗಳೂರು, ಮೇ 19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಸ್ತಿತ್ವಕ್ಕೆ ಬಂದು ನಾಳೆಗೆ ವರ್ಷವಾಗಲಿದ್ದು, ನೀತಿ ಸಂಹಿತೆ ಹಿನ್ನೆಲೆಯಿಂದಾಗಿ ಮೊದಲ ವಾರ್ಷಿಕೋತ್ಸವದ ಆಚರಣೆಯನ್ನು ತಡೆಹಿಡಿಯಲಾಗಿದೆ. +2023 ರ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13 ರಂದು ಪ್ರಕಟವಾಗಿತ್ತು. ಕಾಂಗ್ರೆಸ್‌‍ನ 135 ಶಾಸಕರು ಆಯ್ಕೆಯಾಗಿದ್ದರು. ಒಬ್ಬರು ಸ್ವತಂತ್ರ, ನಾಲ್ವರು ಪಕ್ಷೇತರರು ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿದ್ದರು. ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಮುಖ್ಯಮಂತ್ರಿ ಆಯ್ಕೆಗೆ ಭಾರೀ ಕಸರತ್ತುಗಳು ನಡೆದಿದ್ದವು. +ದೆಹಲಿಯಲ್ಲಿ ಒಂದು ವಾರ ಕಾಲ ನಡೆದ ಚರ್ಚೆಯಲ್ಲಿ ಅಂತಿಮವಾಗಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಮಣೆ ಹಾಕಿತ್ತು. ಕೆಪಿಸಿಸಿ ಅಧ್ಯಕ್ಷರೂ ಆಗಿದ್ದ ಡಿ.ಕೆ.ಶಿವಕುಮಾರ್‌ ಅವರಿಗೆ ಲೋಕಸಭಾ ಚುನಾವಣೆವರೆಗೂ ಪಕ್ಷದ ಹೊಣೆಗಾರಿಕೆಯ ಜೊತೆ ಉಪಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿತ್ತು. +ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಳೆದ ಕೆಲ ತಿಂಗಳ ಹಿಂದೆ ನಡೆದ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌‍ ಉತ್ತಮ ಪ್ರದರ್ಶನ ತೋರಿಸಿದೆ. ಪ್ರಸ್ತುತ ಲೋಕಸಭಾ ಚುನಾವಣೆ ನಡೆದಿದ್ದು, ಫಲಿತಾಂಶ ವನ್ನು ನಿರೀಕ್ಷಿಸಲಾಗುತ್ತಿದೆ. +ಈ ನಡುವೆ ಕಳೆದ ವರ್ಷ ಪೂರ್ವ ಮುಂಗಾರು ಹಾಗೂ ಮುಂಗಾರಿನ ಮಳೆ ಕೊರತೆಯಿಂದಾಗಿ ತೀವ್ರ ಬರಗಾಲ ಎದುರಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ರಾಜ್ಯಸರ್ಕಾರ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಆರ್ಥಿಕ ನೆರವು ದೊರೆಯದಿದ್ದಾಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿ ಕಾನೂನು ಸಂಘರ್ಷದ ಮೂಲಕ 3,600 ಕೋಟಿ ರೂ. ಪರಿಹಾರ ಪಡೆದುಕೊಂಡು ಬೆಳೆನಷ್ಟ ಅನುಭವಿಸಿದ ರೈತರಿಗೆ ಹಂಚಿಕೆ ಮಾಡುತ್ತಿದೆ. ಅದಕ್ಕೂ ಮುನ್ನ ರಾಜ್ಯಸರ್ಕಾರವೇ ತನ್ನ ಬೊಕ್ಕಸದಿಂದ 34 ಲಕ್ಷ ರೈತರಿಗೆ 600 ಕೋಟಿ ರೂ.ಗಳನ್ನು ಜಮಾ ಮಾಡಿತ್ತು. ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿಗೆ 800 ಕೋಟಿ ರೂ.ಗೂ ಹೆಚ್ಚಿನ ಅನುದಾನವನ್ನು ಬಳಕೆ ಮಾಡಲಾಗಿದೆ. +ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ ಎಂದು ಭಾವಿಸಲಾಗಿರುವ ಪಂಚಖಾತ್ರಿ ಯೋಜನೆಗಳ ಯಶಸ್ವಿ ಅನುಷ್ಠಾನ ಸಿದ್ದರಾಮಯ್ಯನವರ ಸರ್ಕಾರದ ಹೆಗ್ಗಳಿಕೆಯಾಗಿದೆ.ಮೊದಲ ಸಚಿವ ಸಂಪುಟ ಸಭೆಯಲ್ಲೇ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. 6 ತಿಂಗಳೊಳಗಾಗಿ ಎಲ್ಲಾ ಯೋಜನೆಗಳನ್ನೂ ಹಂತಹಂತವಾಗಿ ಅನುಷ್ಠಾನಗೊಳಿಸಲಾಗಿದೆ. +ಸರ್ಕಾರದ ನೀತಿ ಅಂಶಗಳ ಪ್ರಕಾರ, ರಾಜ್ಯದ ಶೇ.80 ರಷ್ಟು ಜನ ಅಂದರೆ, ಸರಿಸುಮಾರು 4.50 ಕೋಟಿ ಮಂದಿಗೆ ಪಂಚಖಾತ್ರಿ ಯೋಜನೆ ತಲುಪಿವೆ. ಬೆಲೆ ಏರಿಕೆಯಿಂದ ತತ್ತರಿಸಿದವರಿಗೆ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳು ವರದಾನ ಎಂದು ಭಾವಿಸಲಾಗಿದೆ.ಇದರ ನಡುವೆ ರಾಜ್ಯಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಿಲ್ಲ ಎಂಬ ಆಕ್ಷೇಪವನ್ನೂ ವಿಪಕ್ಷಗಳು ಮಾಡಿವೆ. ಮದ್ಯದ ಬೆಲೆ, ಸ್ಟ್ಯಾಂಪ್‌ ಡ್ಯೂಟಿ, ಮೋಟಾರು ವಾಹನ ತೆರಿಗೆ ಸೇರಿದಂತೆ ಕೆಲವು ಸೇವಾಶುಲ್ಕಗಳನ್ನು ಹೆಚ್ಚಿಸಲಾಗಿದೆ ಎಂಬ ಟೀಕೆಗಳು ಇವೆ. +ಇತ್ತೀಚೆಗೆ ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ, ಕೊಡಗಿನ ಮೀನಾ ಅವರ ಕೊಲೆ ಪ್ರಕರಣಗಳು ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆಯ ಸವಾಲಿನ ಪ್ರಶ್ನೆಯನ್ನು ಮುಂದಿಟ್ಟಿವೆ. ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಕ್ಕೆ ಕಗ್ಗಂಟಾಗಿದೆ. ಬಿಜೆಪಿ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಂಬ ಕೂಗೆಬ್ಬಿಸಿ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನವನ್ನು ನಡೆಸಿತ್ತು. ಇದೆಲ್ಲಾ ಸಿಹಿ-ಕಹಿಗಳ ನಡುವೆ ಸಿದ್ದರಾಮಯ್ಯ ಅವರ ಸರ್ಕಾರ ಯಾವುದೇ ಆತಂಕವಿಲ್ಲದೆ, ಒಂದು ವರ್ಷ ಸುಭದ್ರ ಆಡಳಿತ ನಡೆಸಿದೆ. +ಕಾಂಗ್ರೆಸ್‌‍ ಹೊರವಲಯದಲ್ಲಿ ಜಾತಿವಾರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಚರ್ಚೆಗಳು ಶುರುವಾಗಿದೆ. ಹೈಕಮಾಂಡ್‌ ಆರಂಭದಲ್ಲೇ ಅದಕ್ಕೆ ಬ್ರೇಕ್‌ ಹಾಕಿತ್ತು. ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ, ನಾಯಕತ್ವ ಬದಲಾವಣೆಗಳ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ. +ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಬರದ ತೀವ್ರತೆ ತಗ್ಗಿದೆ ಎಂದು ಹೇಳಲಾಗುತ್ತಿದೆ. ಆದರೆ ರಾಜಕೀಯ ಅಧಿಕಾರದ ಸಂಘರ್ಷ ಯಾವ ಕ್ಷಣದಲ್ಲಾದರೂ ಸ್ಫೋಟಗೊಳ್ಳುವ ಆತಂಕವಿದೆ. ಅತೃಪ್ತ ಶಾಸಕರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಸಮಾಧಾನಪಡಿಸಲಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ವಾರ್ಷಿಕೋತ್ಸವದ ಆಚರಣೆಗೆ ಸಿದ್ಧತೆಗಳಾಗಿವೆ. \ No newline at end of file diff --git a/eesanje/url_46_140_5.txt b/eesanje/url_46_140_5.txt new file mode 100644 index 0000000000000000000000000000000000000000..0f0e69b85e04726788220669c8af764806c03c02 --- /dev/null +++ b/eesanje/url_46_140_5.txt @@ -0,0 +1,11 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್ಸಿಗರ ಕೈವಾಡವಿಲ್ಲ : ಶಿವರಾಮೇಗೌಡ ಸ್ಪಷ್ಟನೆ +ಬೆಂಗಳೂರು, ಮೇ 19-ಬಿಜೆಪಿ ಮುಖಂಡ ದೇವರಾಜೇಗೌಡ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ಗಳನ್ನು ವ್ಯಾಪಾರಕ್ಕಿಟ್ಟಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನದಾಗಲೀ, ಡಿ.ಕೆ.ಶಿವಕುಮಾರ್‌ ಅವರದಾಗಲೀ ಅಥವಾ ಸಚಿವರ ಕೈವಾಡ ಇಲ್ಲ ಎಂದು ಮಾಜಿ ಸಚಿವ ಎಲ್‌.ಆರ್‌.ಶಿವರಾಮೇಗೌಡ ತಿಳಿಸಿದರು. +ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರಾಜೇಗೌಡರನ್ನು ತಾವು ನೋಡಿರಲೇ ಇಲ್ಲ, ಅವರ ಸಂಪರ್ಕವೂ ಇರಲಿಲ್ಲ, ಪೆನ್‌ಡ್ರೈವ್‌ ಪ್ರಕರಣ ಹೊರಬಂದ ಬಳಿಕ ಅವರನ್ನು ನಾನು ಟಿವಿಯಲ್ಲಿ ನೋಡಿದ್ದು. ಅನಂತರ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿಸುವಂತೆ ನನ್ನನ್ನು ಕೇಳಿದರು. +ಹಾಗಾಗಿ ದೂರವಾಣಿಯಲ್ಲಿ ಮಾತನಾಡಿಸಿದ್ದೆ. ಅದೇ ಮಹಾಪರಾಧವಾಗಿದೆ. ದೇವರಾಜೇಗೌಡ ಮೋಸಗಾರ. ಆತನ ಜೊತೆ ಮಾತನಾಡುವಾಗ ಜನ ಎಚ್ಚರಿಕೆಯಿಂದಿರಬೇಕು. ಆತನ ಇಡೀ ದೇಹದಲ್ಲಿ ಇನ್ನೊಬ್ಬರು ಮಾತನಾಡುವುದನ್ನು ರೆಕಾರ್ಡ್‌ ಮಾಡಿಕೊಳ್ಳುವ ವ್ಯವಸ್ಥೆ ಇಟ್ಟುಕೊಂಡಿರುತ್ತಾನೆ ಎಂದು ಹೇಳಿದರು. +100 ಕೋಟಿ ಆಫರ್‌ ನೀಡಲಾಗಿತ್ತು. ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು ಎಂದೆಲ್ಲಾ ಹೇಳಿಕೆ ನೀಡುತ್ತಿರುವ ದೇವರಾಜೇಗೌಡ, ಆರಂಭದಲ್ಲೇ ಇವುಗಳ ಬಗ್ಗೆ ಏಕೆ ಮಾತನಾಡಲಿಲ್ಲ? ಡಿ.ಕೆ.ಶಿವಕುಮಾರ್‌ರವರ ಜೊತೆಗಿನ ಮಾತುಕತೆಯನ್ನು ಪೂರ್ಣ ಪ್ರಮಾಣದಲ್ಲಿ ಬಹಿರಂಗ ಮಾಡದೇ ತನಗೆ ಬೇಕಾದಷ್ಟನ್ನು ಮಾತ್ರ ಹೊರಗೆ ಬಿಟ್ಟು ರಾಜಕೀಯ ಲಾಭ ಪಡೆಯುವ ಯತ್ನ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಸಂಪುಟದ ಸಚಿವರಾಗಲೀ, ಡಿ.ಕೆ.ಶಿವಕುಮಾರ್‌ರವರ ಪಾತ್ರವಾಗಲೀ ಪೆನ್‌ಡ್ರೈವ್‌ ಪ್ರಕರಣದಲ್ಲಿಲ್ಲ. ನನ್ನ ಹೆಸರನ್ನು ಅನಗತ್ಯವಾಗಿ ಇನ್ನು ಮುಂದೆ ಈ ಪ್ರಕರಣದಲ್ಲಿ ಬಳಸಬೇಡಿ. ಈ ಇಳಿವಯಸ್ಸಿನಲ್ಲಿ ದೇವೇಗೌಡಿರಗೆ ಈ ಪ್ರಕರಣದಿಂದಾದ ನೋವಿನ ಬಗ್ಗೆ ನನಗೆ ವಿಶಾದವಿದೆ. ಆ ಕಾರಣಕ್ಕಾಗಿಯೇ ನಿನ್ನೆ ಅವರ ಹುಟ್ಟುಹಬ್ಬವಿದ್ದಿದ್ದರಿಂದ ನಾನು ಪತ್ರಿಕಾಗೋಷ್ಠಿ ನಡೆಸದೆ ಇಂದು ಮಾತನಾಡುತ್ತಿದ್ದೇನೆ ಎಂದು ಹೇಳಿದರು. +ಪೆನ್‌ಡ್ರೈವ್‌ ಪ್ರಕರಣದ ತನಿಖೆ ದಿಕ್ಕು ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ದೇವರಾಜೇಗೌಡ ತಾವು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಆತಂಕದಲ್ಲಿ ಬೇರೆ ಬೇರೆ ರೀತಿಯ ಆರೋಪ ಮಾಡುತ್ತಿದ್ದಾನೆ. ಅಮಿತ್‌ ಶಾ, ನರೇಂದ್ರ ಮೋದಿ ಗೊತ್ತು ಎಂದು ಸುಳ್ಳು ಹೇಳುತ್ತಿದ್ದಾನೆ ಎಂದರು. +ಬಿಜೆಪಿಗೆ ರಾಜೀನಾಮೆ :ತಾವು ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಲ್‌.ಆರ್‌.ಶಿವರಾಮೇಗೌಡರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಮೂಲತಃ ನಾನು ಕಾಂಗ್ರೆಸಿಗ. ಎರಡು ಬಾರಿ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿದ್ದೆ. ಎರಡು ಬಾರಿ ಬಿಜೆಪಿ ಪಕ್ಷ ಸೇರಿ ಕೆಲಸ ಮಾಡಿದ್ದೇನೆ. ಒಮೆ ಯಡಿಯೂರಪ್ಪ ಅವರು ಪಕ್ಷಕ್ಕೆ ಸೇರಿಸಿಕೊಂಡು ಎಂಪಿ ಟಿಕೆಟ್‌ ನೀಡಿದ್ದರು. +ಇತ್ತೀಚೆಗೆ ಬಸವರಾಜಬೊಮಾಯಿ ಪಕ್ಷಕ್ಕೆ ಸೇರಿಸಿಕೊಂಡರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವುದು ಕಷ್ಟದ ಕೆಲಸ ಎಂದು ನಾನು ಅವರಿಗೆ ಹೇಳಿದ್ದೆ. ಆದರೂ ಅವರು ಕೇಳಲಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರವೂ ಹೋಯಿತು, ಅವರ ನಾಯಕತ್ವದ ಪ್ರಭಾವವೂ ತಗ್ಗಿತ್ತು ಎಂದು ವಿವರಿಸಿದರು. +ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‌‍, ಕಾಂಗ್ರೆಸ್‌‍ ಪಕ್ಷಗಳು ಪ್ರಬಲವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ 10 ರಿಂದ 40 ಸಾವಿರದವರೆಗೂ ಮತ ಪಡೆದು ಇತ್ತೀಚೆಗೆ ಚೇತರಿಕೆ ಕಾಣುತ್ತಿತ್ತು. ಆದರೆ ಜೆಡಿಎಸ್‌‍ ಮೈತ್ರಿಯಿಂದಾಗಿ ಮತ್ತಷ್ಟು ದುರ್ಬಲವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ 2 ಲಕ್ಷ ಅಂತರದಿಂದ ಗೆಲ್ಲುವ ಸಾಧ್ಯತೆಯಿದೆ ಎಂದು ಹೇಳಿದರು. +ತಾವು ಬಿಜೆಪಿಗೆ ರಾಜೀನಾಮೆ ನೀಡಿದ್ದು ವಿಜಯೇಂದ್ರ ಅವರಿಗೆ ಪತ್ರ ಕಳುಹಿಸಿದ್ದೇನೆ. ಅವರಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು. \ No newline at end of file diff --git a/eesanje/url_46_140_6.txt b/eesanje/url_46_140_6.txt new file mode 100644 index 0000000000000000000000000000000000000000..db38debb6a803b7ce05dc0990bb7e06ff5066d4b --- /dev/null +++ b/eesanje/url_46_140_6.txt @@ -0,0 +1,5 @@ +ಬಿಜೆಪಿ ನಾಯಕನ ಬಂಧನ, ಪೊಲೀಸ್‌‍ ಠಾಣೆಯಲ್ಲೇ ಧರಣಿನಡೆಸಲೆತ್ನಿಸಿದ ಶಾಸಕ ಹರೀಶ್‌ ಪೂಂಜಾ +ಮಂಗಳೂರು, ಮೇ 19-ಅಕ್ರಮ ಕಲ್ಲು ಕ್ವಾರಿಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕನನ್ನು ಬಂಧಿಸಿದ ಪೊಲೀಸರ ವಿರುದ್ಧ ಶಾಸಕ ಹರೀಶ್‌ ಪೂಂಜಾ ವಾಗ್ದಾಳಿ ನಡೆಸಿದ್ದು, ನಡುರಾತ್ರಿಯಲ್ಲಿ ಪೊಲೀಸ್‌‍ ಠಾಣೆಯಲ್ಲೇ ಧರಣಿ ನಡೆಸುವ ಪ್ರಯತ್ನ ಮಾಡಿದ್ದಾರೆ. +ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬುವರ ಜಾಗದಲ್ಲಿ ಕಲ್ಲು ಕ್ವಾರಿ ನಡೆಯುತ್ತಿದ್ದು, ಶನಿವಾರ ಸಂಜೆ ತಹಸೀಲ್ದಾರ್‌ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಕ್ವಾರಿಗೆ ಸಂಬಂಧಪಟ್ಟಂತೆ ಸಮರ್ಪಕ ದಾಖಲೆಗಳು ಇರಲಿಲ್ಲ ಎಂದು ಪತ್ತೆಯಾಗಿದೆ. ಜೊತೆಗೆ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಹಿಟಾಜಿ, ಕಂಪ್ರಸರ್‌ ಮಿಷನ್‌ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದರು. +ಬಿಜೆಪಿ ಮುಖಂಡ ಪ್ರಮೋದ್‌ ದಿಡುಪೆ ಹಾಗೂ ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಕ್ವಾರಿ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಶಿರಾಜ ಶೆಟ್ಟಿಯನ್ನು ಬಂಧಿಸಿದ್ದಾರೆ. ತಕ್ಷಣವೇ ಬಿಜೆಪಿ ಕಾರ್ಯಕರ್ತರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಶಾಸಕ ಹರೀಶ್‌ ಪೂಂಜಾ ಸ್ಥಳಕ್ಕೆ ಆಗಮಿಸಿ ಮಧ್ಯರಾತ್ರಿ ನಮ್ಮ ಕಾರ್ಯಕರ್ತರನ್ನು ಬಂಧಿಸುವ ಅಗತ್ಯವೇನಿತ್ತು ಎಂದು ತರಾಟೆಗೆ ತೆಗೆದುಕೊಂಡರು. +ಪೊಲೀಸರು ಕಾಂಗ್ರೆಸ್‌‍ನ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ಅವರೊಂದಿಗೆ ನಾನೂ ಪೊಲೀಸ್‌‍ ಠಾಣೆಯಲ್ಲಿ ಮಲಗುತ್ತೇನೆ ಎಂದು ಪಟ್ಟು ಹಿಡಿದರು. ಪೊಲೀಸರು ಅವರ ಮನವೊಲಿಸಲು ಹರಸಾಹಸ ಪಡಬೇಕಾಯಿತು. ಬಿಜೆಪಿ ನಾಯಕರು ಬೆಳಗಿನ ಜಾವದವರೆಗೂ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. \ No newline at end of file diff --git a/eesanje/url_46_140_7.txt b/eesanje/url_46_140_7.txt new file mode 100644 index 0000000000000000000000000000000000000000..6f3aad8f82bdff0f008b87d44b54cbcf68e98c0b --- /dev/null +++ b/eesanje/url_46_140_7.txt @@ -0,0 +1,6 @@ +ಅರೆಸ್ಟ್ ವಾರಂಟ್‌ ಜಾರಿ : ಪ್ರಜ್ವಲ್‌ ರೇವಣ್ಣಗೆ ಮತ್ತಷ್ಟು ಸಂಕಷ್ಟ +ಬೆಂಗಳೂರು, ಮೇ 19-ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನದ ವಾರಂಟ್‌ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. +ನಿನ್ನೆ ತನಿಖಾಧಿಕಾರಿಗಳು ತಲೆಮರೆಸಿಕೊಂಡಿರುವ ಪ್ರಜ್ವಲ್‌ ವಿರುದ್ಧ ಬಂಧನದ ವಾರಂಟ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯ ಬಂಧನದ ವಾರಂಟ್‌ ಅನ್ನು ಜಾರಿಗೊಳಿಸಿದ್ದು, ಪ್ರಜ್ವಲ್‌ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಲಿದೆ. +ಈಗಾಗಲೇ ಪ್ರಜ್ವಲ್‌ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ಗಳನ್ನು ನೀಡಿತ್ತು. ನಂತರ ಲುಕ್‌ಔಟ್‌ ನೋಟಿಸ್‌‍ ಆಮೇಲೆ ಬ್ಲೂ ಕಾರ್ನರ್‌ ನೋಟಿಸ್‌‍ ಜಾರಿಗೊಳಿಸಲಾಗಿತ್ತು. ಆದರೂ ಪ್ರಜ್ವಲ್‌ ವಿದೇಶದಿಂದ ಹಿಂದಿರುಗಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈಗ ಬರುತ್ತಾರೆ, ಆಗ ಬರುತ್ತಾರೆ ಎಂದು ವಿಮಾನದ ಟಿಕೆಟ್‌ ಬುಕ್‌ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿ ಎಸ್‌‍ಐಟಿ ಅಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು. +ನಿನ್ನೆ ರೈಲಿನ ಮೂಲಕ ಜರ್ಮನಿಯಿಂದ ಲಂಡನ್‌ಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ಎಸ್‌‍ಐಟಿ ಪ್ರಜ್ವಲ್‌ ಬ್ಯಾಂಕ್‌ ಖಾತೆಗಳ ಮೇಲೆ ತೀವ್ರ ನಿಗಾವಹಿಸಿದೆ.ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಅವರು ಸ್ವದೇಶಕ್ಕೆ ಮರಳಿದ ತಕ್ಷಣವೇ ಅವರ ಬಂಧನವಾಗಲಿದೆ. +ನ್ಯಾಯಾಲಯದ ಬಂಧನದ ವಾರಂಟ್‌ ಆಧರಿಸಿ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಎಸ್‌‍ಐಟಿ ಮುಂದಾಗಿದೆ ಎಂದು ತಿಳಿದು ಬಂದಿದೆ.ಈ ಹಿಂದೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಕರೆತರಲು ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದರು. \ No newline at end of file diff --git a/eesanje/url_46_140_8.txt b/eesanje/url_46_140_8.txt new file mode 100644 index 0000000000000000000000000000000000000000..d194a2d3314990700cd9cf64747fd09bdcc17c97 --- /dev/null +++ b/eesanje/url_46_140_8.txt @@ -0,0 +1,5 @@ +ಬೆಂಗಳೂರು-ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಐವರ ಸೆರೆ +ಬೆಂಗಳೂರು,ಮೇ19-ವಿದೇಶಗಳಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಐವರನ್ನು ಬಂಧಿಸಿರುವ ಕಸ್ಟಮ್ಸೌ ಅಧಿಕಾರಿಗಳು, 2.55 ಕೋಟಿ ಮೌಲ್ಯದ 3642.36 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. +ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗ ಆತನ ಬಳಿ 59.3 ಲಕ್ಷ ಮೌಲ್ಯದ 24 ಕ್ಯಾರೆಟ್‌ನ 828 ಗ್ರಾಂ ಚಿನ್ನ ಇರುವುದು ಕಂಡುಬಂದಿದೆ. ಕೂಡಲೇ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. +ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ನಡೆಸಿದ ಕಸ್ಟಮ್‌ ಅಧಿಕಾರಿಗಳು, 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. +ಖಚಿತ ಮಾಹಿತಿ ಮೇರೆಗೆ ದುಬೈನಿಂದ ಬಂದ ಮೂವರು ಪುರುಷರು ಹಾಗೂ ಓರ್ವ ಮಹಿಳೆಯ ತಪಾಸಣೆ ನಡೆಸಿದಾಗ ಜೀನ್ಸ್ ಪ್ಯಾಂಟ್‌ ಹಾಗೂ ಟೀಶರ್ಟ್‌ಗಳಲ್ಲಿ 2814.36 ಗ್ರಾಂನ ಪೇಸ್ಟ್‌ ರೀತಿಯ ಚಿನ್ನವನ್ನು ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ. ಈ ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. \ No newline at end of file diff --git a/eesanje/url_46_140_9.txt b/eesanje/url_46_140_9.txt new file mode 100644 index 0000000000000000000000000000000000000000..f33c818c4841a357f0fdda4ce7b150967547b8a2 --- /dev/null +++ b/eesanje/url_46_140_9.txt @@ -0,0 +1,5 @@ +ರಾಜ್ಯದಲ್ಲಿ ಮೇ.23 ರವರೆಗೂ ಮುಂದುವರೆಯಲಿದೆ ಮಳೆ +ಬೆಂಗಳೂರು, ಮೇ 19-ರಾಜಧಾನಿ ಸೇರಿದಂತೆ ಕಳೆದ ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮೇ.23 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಾಗಡಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಚಿತ್ರದುರ್ಗ, ಮೈಸೂರು ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.ಬೆಂಗಳೂರಿನಲ್ಲಿ ನಿನ್ನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ವಿವಿಧೆಡೆ ಮಳೆಯಾಗಿದೆ. ಇಂದು ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ. +ಬಿಸಿಲ ಬೇಗೆಯಿಂದ ಬಳಲುತ್ತಿದ್ದ ರಾಜ್ಯದ ಜನತೆಗೆ ವರುಣನ ಆಗಮನದಿಂದ ತುಸು ತಂಪೆರೆದಿದ್ದು, ನಿಟ್ಟುಸಿರು ಬಿಡುವಂತಾಗಿದೆ. ತೀವ್ರ ಬರಗಾಲದಿಂದ ಅನ್ನದಾತರು ಕಂಗಾಲಾಗಿದ್ದು, ಬೆಳೆಗಳನ್ನು ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು. ಈ ಮಧ್ಯೆ ಮಳೆಯ ಆಗಮನವಾಗಿದ್ದು, ರೈತರಲ್ಲಿ ಆಶಾಭಾವನೆ ಮೂಡಿಸಿದೆ. +ನೀರಿನ ಅಭಾವ ಹಾಗೂ ಹೆಚ್ಚಿದ ಉಷ್ಣಾಂಶದಿಂದ ತರಕಾರಿಗಳ ಇಳುವರಿ ಕುಂಠಿತವಾಗಿ ಬೆಲೆ ಗಗನಕ್ಕೇರಿದ್ದು, ಇನ್ನೂ ಒಂದು ತಿಂಗಳು ಇದೇ ಬೆಲೆ ಮುಂದುವರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಇದೇ ರೀತಿ ಮಳೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಬೆಳೆ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_141_1.txt b/eesanje/url_46_141_1.txt new file mode 100644 index 0000000000000000000000000000000000000000..3f358ac1e4573488a8df62fd1e28f3ededb28959 --- /dev/null +++ b/eesanje/url_46_141_1.txt @@ -0,0 +1,10 @@ +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್‌‍ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ಮನವಿ +ಬೆಂಗಳೂರು,ಮೇ18-ರಾಜ್ಯದಲ್ಲಿ ಇತ್ತೀಚೆಗೆ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚುತ್ತಿದ್ದು, ತಕ್ಷಣವೇ ಉನ್ನತ ಅಧಿಕಾರಿಗಳ ಸಭೆ ಕರೆದು ಕಾನೂನು ಸುವ್ಯವಸ್ಥೆ ಕಾಪಾಡಬೇಕೆಂದು ಬಿಜೆಪಿ ನಿಯೋಗ ಪೊಲೀಸ್‌‍ ಮಹಾನಿರ್ದೇಶಕರಿಗೆ ಮನವಿ ಮಾಡಿದೆ. +ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ, ಮುಖಂಡರಾದ ಎಸ್‌‍.ಹರೀಶ್‌, ಅಶ್ವತ್ಥನಾರಾಯಣ, ಮಾಳವಿಕ ಅವಿನಾಶ್‌ ಮತ್ತಿತರ ನಿಯೋಗವು ರಾಜ್ಯ ಪೊಲೀಸ್‌‍ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. +ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ, ಮಡಿಕೇರಿಯಲ್ಲಿ ವಿದ್ಯಾರ್ಥಿನಿಯ ಬರ್ಭರ ಕೊಲೆ, ಮೂರು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೆರೆ ಹತ್ಯೆ ಸೇರಿದಂತೆ ಕಳೆದ ಎರಡು ತಿಂಗಳಿನಿಂದ ನಡೆದಿರುವ ಕಾನೂನು ಬಾಹಿರ ಚಟುವಟಿಕೆಗಳನ್ನು ಉಲ್ಲೇಖ ಮಾಡಲಾಗಿದೆ. +ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ. ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ 9ನೇ ಸ್ಥಾನ, ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ.46ರಷ್ಟು ಹೆಚ್ಚಳ, ಹಿರಿಯ ನಾಗರೀಕರ ಮೇಲಿನ ಅಪರಾಧದಲ್ಲಿ ಶೇಕಡಾ 86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ ಎಂದು ನಿಯೋಗ ಕಳವಳ ವ್ಯಕ್ತಪಡಿಸಿದೆ. +ಹಿಂದೆ ರಾಜ್ಯವು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕರ್ನಾಟಕವು ಈ ಮೂಲಕ ಅಪರಾಧಗಳ ರಾಜ್ಯ ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ. +ಕಾಂಗ್ರೆಸ್‌‍ ಪಕ್ಷದ ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಅಪರಾಧ ಪ್ರಮಾಣ ಹೆಚ್ಚಳದ ವಿಚಾರದಲ್ಲೂ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ತಮ ಗಮನಕ್ಕೆ ತರಲು ಬಯಸುತ್ತೇವೆ.ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಕ್ಷದ ಸರ್ಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್‌‍ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ ಜೆಡಿಎಸ್‌‍ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕ್ರಮ ಕೈಗೊಳ್ಳದ ಪರಿಸ್ಥಿತಿ ನಿರ್ಮಾಣವಾಗಿತ್ತು. +ಕಾಂಗ್ರೆಸ್‌‍ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಕುಸಿದು ಅರಾಜಕತೆ ಸೃಷ್ಟಿಯಾಗಿದೆ. ಇದರಿಂದ ರಾಜ್ಯದಲ್ಲಿ ಪೊಲೀಸ್‌‍ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದ್ದು, ಶ್ರೀಸಾಮಾನ್ಯರು ಇದೇ ಪ್ರಶ್ನೆಯನ್ನು ಮುಂದಿಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆಯಲಾಗಿದೆ. +ಗನ್‌ ಹಿಡಿದು ಓಡಾಡುವ ವ್ಯಕ್ತಿ ಮುಖ್ಯಮಂತ್ರಿಗಳಿಗೆ ಹೂಹಾರ ಹಾಕುವ ದುಃಸ್ಥಿತಿ ರಾಜ್ಯದ್ದು. ಜನರು ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ ಎಂದು ವಿಷಾದಿಸಿದೆ. +ಕೋಮುದ್ವೇಷದ ಹಿಂಸಾಚಾರದ ಘಟನೆಗಳು, ರಾಜಕೀಯಪ್ರೇರಿತ ದ್ವೇಷಗಳಿಂದ ನಾಗರಿಕರು ಸುರಕ್ಷತೆ ಮತ್ತು ಭದ್ರತೆ ಇಲ್ಲದೆ ಒದ್ದಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್‌‍ಗೆ ಸರ್ವೇಸಾಮಾನ್ಯವಾಗಿ ಬಿಟ್ಟಿದೆ ಎಂಬುದನ್ನೂ ತಮ ಅವಗಾಹನೆಗೆ ತರಲು ಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_141_10.txt b/eesanje/url_46_141_10.txt new file mode 100644 index 0000000000000000000000000000000000000000..2e104aeb57a1384c5bb98f37802dc9a41c925a9c --- /dev/null +++ b/eesanje/url_46_141_10.txt @@ -0,0 +1,9 @@ +ವಿಧಾನಪರಿಷತ್‌ ಚುನಾವಣೆಗೆ ಬಿಜೆಪಿಯಿಂದ ಪ್ರಚಾರ ಪ್ರಭಾರಿಗಳ ನೇಮಕ +ಬೆಂಗಳೂರು,ಮೇ18-ವಿಧಾನಪರಿಷತ್‌ಗೆ ನಡೆಯುವ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೂ ಸಹ ಬಂಡಾಯದ ಬಿಸಿ ತಟ್ಟಿದೆ. ಆದ್ದರಿಂದ ಬಿಜೆಪಿ ಘಟಕ ಬಂಡಾಯ ಶಮನ, ಚುನಾವಣಾ ಪ್ರಚಾರಕ್ಕಾಗಿ ಪ್ರಭಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. +ಈಶಾನ್ಯ ಪದವೀಧರ ಕ್ಷೇತ್ರದ ಡಾ. ಚಂದ್ರಶೇಖರ ಪಾಟೀಲ, ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದ ಎ. ದೇವೇಗೌಡ ಜೂನ್‌ 21ರಂದು ನಿವೃತ್ತರಾಗಲಿದ್ದಾರೆ. +ಆಗ್ನೇಯ ಶಿಕ್ಷಕರ ಕ್ಷೇತ್ರದ ಡಾ. ವೈ. ಎ. ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದ ಎಸ್‌‍. ಎಲ್‌‍.ಭೋಜೇಗೌಡ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇ ಗೌಡ ಸಹ ನಿವೃತ್ತರಾಗಲಿದ್ದು, ಈ 6 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದೆ. ನಾಮಪತ್ರ ವಾಪಸ್‌‍ ಪಡೆಯಲು ಮೇ 20 ಕೊನೆಯ ದಿನವಾಗಿದೆ. +ಯಾವ ಕ್ಷೇತ್ರಕ್ಕೆ ಯಾರು ಪ್ರಭಾರಿಗಳು:ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನಪರಿಷತ್‌ ಮುಖ್ಯ ಸಚೇತಕರಾದ ಎನ್‌ .ರವಿಕುಮಾರ್‌ ಪ್ರಭಾರಿ. ಕ್ಷೇತ್ರ ವ್ಯಾಪ್ತಿಗೆ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಸೇರುತ್ತವೆ. +ನೈಋತ್ಯ ಪದವೀಧರ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ಕುಮಾರ್‌ ಪ್ರಭಾರಿ, ರಾಜ್ಯ ಕಾರ್ಯದರ್ಶಿ ಡಿ.ಎಸ್‌‍.ಅರುಣ್‌ (ಸಹ ಪ್ರಭಾರಿ). ಕ್ಷೇತ್ರ ವ್ಯಾಪ್ತಿಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆ (ಹೊನ್ನಾಳಿ, ಚನ್ನಗಿರಿ ವಿಧಾನಸಭಾ ಕ್ಷೇತ್ರ) ಸೇರುತ್ತವೆ. +ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಸೇರುತ್ತವೆ. +ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌‍. ನವೀನ್‌ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ದಾವಣಗೆರೆಯ (ಹರಿಹರ, ಜಗಳೂರು, ದಾವಣಗೆರೆ ವಿಧಾನಸಭಾ ಕ್ಷೇತ್ರಗಳು).ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ ಪ್ರಭಾರಿಗಳು. ಕ್ಷೇತ್ರದ ವ್ಯಾಪ್ತಿಗೆ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರುತ್ತವೆ. +ಕರ್ನಾಟಕ ವಿಧಾನ ಪರಿಷತ್‌ನ 3 ಪದವೀಧರ ಮತ್ತು 3 ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದೆ. ಜೂನ್‌ 3ರಂದು ಚುನಾವಣೆ ನಡೆಯಲಿದ್ದು, ಜೂನ್‌ 6ರಂದು ಫಲಿತಾಂಶ ಪ್ರಕಟವಾಗಲಿದೆ. ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡು ಪಕ್ಷ ಚುನಾವಣೆ ಎದುರಿಸುತ್ತಿದೆ. \ No newline at end of file diff --git a/eesanje/url_46_141_11.txt b/eesanje/url_46_141_11.txt new file mode 100644 index 0000000000000000000000000000000000000000..629ebb2548dc68ca28ea46f01342a572d2fa0d69 --- /dev/null +++ b/eesanje/url_46_141_11.txt @@ -0,0 +1,8 @@ +ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನು ಯೋಗ್ಯರಿಗೆ ನೀಡಿ : ಸಿಎಂಗೆ ವಿಜಯೇಂದ್ರ ಮನವಿ +ಬೆಂಗಳೂರು,ಮೇ18-ಗೊಂದಲದ ಗೂಡಾಗಿ ಪರಿಣಮಿಸಿರುವ ಪ್ರಾಥಮಿಕ ಶಿಕ್ಷಣ ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಹಾಗೂ ಇದಕ್ಕೆ ಅರ್ಹತೆ ಇರುವ ಯೋಗ್ಯರನ್ನು ನೇಮಕ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಮಾಡಿದ್ದಾರೆ. +ಈ ಸಂಬಂಧ ತಮ್ಮ ಅಧಿಕೃತ ಜಾಲತಾಣ ಖಾತೆ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಭವಿಷ್ಯತ್ತಿನಲ್ಲಿ ನಾಡು, ದೇಶ ಕಟ್ಟುವ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಲ್ಪಡುತ್ತಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯನ್ನು ಸರಿದಾರಿಗೆ ತರುವ ಕಟ್ಟುನಿಟ್ಟಿನ ಕ್ರಮ ವಹಿಸಲಿ. ಶಿಕ್ಷಣ ಬದ್ಧತೆ ಇದ್ದವರ ಕೈಗೆ ಇಲಾಖೆಯ ಸಾರಥ್ಯ ವಹಿಸಿಕೊಡಲಿ ಎಂದು ಸಲಹೆ ಮಾಡಿದ್ದಾರೆ. +ಪ್ರಾಥಮಿಕ ಶಿಕ್ಷಣವೆಂದರೆ ಕೇವಲ ಅಕ್ಷರ ಕಲಿಕೆಯಲ್ಲ. ನಾಳಿನ ಪ್ರಜೆಗಳ ಭವಿಷ್ಯ ರೂಪಿಸುವ ನೈಜ ಅಡಿಪಾಯ. ಒಂದು ಸರ್ಕಾರ ಶಿಕ್ಷಣವನ್ನು ಆಲಕ್ಷಿಸಿದರೆ ದೇಶದ ಭವಿಷ್ಯವನ್ನು ಗಂಡಾಂತರಕ್ಕೆ ತಳ್ಳುವ ನೀಚ ಪ್ರವೃತ್ತಿಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‌‍ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಇಂತಹ ಪ್ರವೃತ್ತಿ ಮೇಳೈಸುತ್ತಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣ ಅರಾಜಕತೆಯತ್ತ ಸಾಗಿದೆ, ಇದನ್ನು ಮುಖ್ಯಮಂತ್ರಿಗಳು ಇಂದು ಒಪ್ಪಿಕೊಂಡು ಕೃಪಾಂಕ ನೀಡುವಷ್ಟು ತಳಮಟ್ಟಕ್ಕೆ ಕುಸಿದಿರುವ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯ ಬಗ್ಗೆ ಅಸಹಾಯಕತೆಯಿಂದ ಕೋಪೋದ್ರಿಕ್ತರಾಗಿದ್ದಾರೆ. +ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ದಿಕ್ಕಿಲ್ಲದ ಹಡಗಿನಂತೆ ಸಾಗಿದೆ ತಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡಿರುವ ಲಕ್ಷಾಂತರ ಪೋಷಕರ ಆತಂಕದ ಪ್ರಶ್ನೆಗಳಿಗೆ ಉತ್ತರಿಸುವವರಿಲ್ಲದೆ ಅವರ ವೇದನೆ ಅರಣ್ಯರೋದನವಾಗಿದೆ ಎಂದು ಬೇಸರಿಸಿದ್ದಾರೆ. +ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬದಿಗೆ ಸರಿಸುವ ವಿದ್ವತ್ತು ಪ್ರದರ್ಶಿಸಲು ಹೋಗಿ ನೈಜ ಶಿಕ್ಷಣ ವ್ಯವಸ್ಥೆಯನ್ನು ದಮನ ಮಾಡಲು ಹೊರಟ ಸರ್ಕಾರ, ಚಾಲನೆಯ ಅನುಭವವಿಲ್ಲದ ಚಾಲಕನೊಬ್ಬ ವಾಹನ ಅಥವಾ ರೈಲು ಮುನ್ನಡೆಸಿದರೆ ಯಾವ ಸ್ಥಿತಿ ಉಂಟಾಗಬಹುದು ಅಂಥದ್ದೇ ಸ್ಥಿತಿ ಇಂದು ರಾಜ್ಯದ ಪ್ರಾಥಮಿಕ ಹಾಗೂ ಶಿಕ್ಷಣ ಇಲಾಖೆಗೆ ಬಂದೊದಗಿದೆ ಎಂದಿದ್ದಾರೆ. +ಮುಖ್ಯಮಂತ್ರಿಗಳು ವಿದ್ಯಾ ಇಲಾಖೆಯನ್ನು ವಿಧೇಯತೆ ಗೊತ್ತಿಲ್ಲದವರ ಕೈಗೆ ಒಪ್ಪಿಸಿದ್ದ ಕಾರಣಕ್ಕಾಗಿ ಇಂದು ಅವರೇ ಪಶ್ಚಾತ್ತಾಪ ಪಡುವಂತಹ ಪರಿಸ್ಥಿತಿ ಉದ್ಭವಿಸಿದೆ ಎಂದಿರುವ ಅವರು, ಮೇಟಿ ವಿದ್ಯೆಗೆ ರೈತ, ಅಕ್ಷರ ವಿದ್ಯೆಗೆ ವಿನಯವಂತನಿದ್ದರೆ ಕೃಷಿ-ಶಿಕ್ಷಣ ಎರಡೂ ಸಮೃದ್ಧವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_46_141_12.txt b/eesanje/url_46_141_12.txt new file mode 100644 index 0000000000000000000000000000000000000000..079bdacc4204f4a82a0e97bcc4bb3c1ddefe8547 --- /dev/null +++ b/eesanje/url_46_141_12.txt @@ -0,0 +1,12 @@ +ಮದ್ಯಪ್ರಿಯರಿಗೆ ಮತ್ತೆ ಶಾಕ್ ನೀಡಲು ಮುಂದಾದ ಗ್ಯಾರಂಟಿ ಸರ್ಕಾರ..!? +ಬೆಂಗಳೂರು,ಮೇ18-ಕರ್ನಾಟಕದಲ್ಲಿ ಮತ್ತೆ ಮದ್ಯದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಮದ್ಯಪ್ರಿಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಲಕ್ಷಣಗಳು ಗೋಚರಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ರಾಜ್ಯ ಸರ್ಕಾರವು ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಮತ್ತೊಮೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಇದರ ಪರಿಣಾಮವಾಗಿ ಪ್ರತಿ 650 ಮಿಲಿ ಬಾಟಲಿಗೆ 8-10 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. +ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಲವು ಸ್ಪ್ಯಾಬ್‌‍ಗಳ ಅಗ್ಗದ ಮದ್ಯಗಳ ಬೆಲೆ ತುಂಬಾ ಕಡಿಮೆಯಿದೆ. ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಹಾಗೂ ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಿದೆ. ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಿಸಲು ಚಿಂತನೆ ನಡೆಸಿದೆ. +ಕಾಂಗ್ರೆಸ್‌‍ ತನ್ನ ಐದು ಭರವಸೆಗಳನ್ನು ಈಡೇರಿಸಲು ಈ ಬೆಲೆ ಹೆಚ್ಚಳ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ. ಕರಡು ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಾಟಲಿಯ ಬಿಯರ್‌ನ ಮೇಲೆ ಎಇಡಿಯನ್ನು ಶೇಕಡಾ 185ರಿಂದ ಶೇಕಡಾ 195ಕ್ಕೆ ಶೇ.10ರಷ್ಟು ಹೆಚ್ಚಿಸಲಾಗುವುದು. ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿದೆ. +ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾರತೀಯ ತಯಾರಿಕಾ ಮದ್ಯದ ಮೇಲೆ ಶೇ.20ರಷ್ಟು ಮತ್ತು ಬಿಯರ್‌ ಮೇಲೆ ಶೇ.175ರಿಂದ ಶೇ.185ಕ್ಕೆ ಎಇಡಿ ಹೆಚ್ಚಿಸಿದ್ದರು. ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂ.ಆದಾಯ ಗಳಿಸುವ ಗುರಿ ಹೊಂದಿದೆ. ಹೊರ ರಾಜ್ಯಗಳಲ್ಲಿ ದುಬಾರಿ ಬೆಲೆಯ ಮದ್ಯಗಳ ಬೆಲೆ ಕರ್ನಾಟಕಕ್ಕಿಂತಲೂ ಕಡಿಮೆ ಇದೆ. ಈ ಮದ್ಯಗಳ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಇವುಗಳ ಬೆಲೆಯನ್ನು ಇಳಿಕೆ ಮಾಡಲಿದೆ. +ಆರರಿಂದ 12ನೇ ಸ್ಪ್ಯಾಬ್‌ವರೆಗಿನ ಸೆಮಿ ಪ್ರೀಮಿಯಂ ಮದ್ಯಗಳ ಬೆಲೆಯಲ್ಲಿ ಶೇ.10ರಷ್ಟು, 12ರಿಂದ 18ನೇ ಸ್ಪ್ಯಾಬ್‌ವರೆಗಿನ ವಿದೇಶಿ ಅಥವಾ ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯಲ್ಲಿ ಶೇ.12ರಿಂದ 15ರಷ್ಟು ಇಳಿಕೆ ಮಾಡುವ ಸಾಧ್ಯತೆಯಿದೆ. ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿ ಮಾಡಲಾಗುತ್ತದೆ. +2023ರ ವಿಧಾನಸಭಾ ಚುನಾವಣೆ ನಂತರ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್‌‍ ಸರಕಾರ ಮೂರು ಬಾರಿ ಬಿಯರ್‌ ದರ ಹೆಚ್ಚಳ ಮಾಡಿದೆ. ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಬಿಯರ್‌ ಉತ್ಪಾದಕ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂ.ವರೆಗೆ ದರ ಹೆಚ್ಚಿಸಿದ್ದವು. +ಅದರ ಬೆನ್ನಲ್ಲೇ ಸರಕಾರ ಫೆ.1ರಿಂದ ಜಾರಿಗೆ ಬರುವಂತೆ ಬಿಯರ್‌ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಶೇ.185ರಿಂದ 195ಕ್ಕೆ ಹೆಚ್ಚಳ ಮಾಡಿತ್ತು. ಇದರೊಂದಿಗೆ ಎಇಡಿ ಶೇ.10ರಷ್ಟು ಹೆಚ್ಚಳವಾಗಿತ್ತು. +ಎಇಡಿ ಏರಿಕೆಯಿಂದಾಗಿ ಪ್ರತಿ ಬಾಟಲಿ ಬಿಯರ್‌ ದರವು ಬ್ರ್ಯಾಂಡ್‌ಗಳ ಆಧಾರದಲ್ಲಿ ಕನಿಷ್ಠ 8 ರೂ.ಗಳಿಂದ ಗರಿಷ್ಠ 15 ರೂ.ವರೆಗೆ ಹೆಚ್ಚಳವಾಗಿತ್ತು. ಸಾಮಾನ್ಯ ಬ್ರ್ಯಾಂಡ್‌ಗಳಿಂದ ಪ್ರೀಮಿಯಂ ಬ್ರ್ಯಾಂಡ್‌ಗಳವರೆಗೆ ಎಲ್ಲಾ ಬಗೆಯ ಬಿಯರ್‌ ದರ ಏರಿಕೆಯಾಗಿತ್ತು. ಇದರೊಂದಿಗೆ ಕಳೆದ ಏಳೆಂಟು ತಿಂಗಳ ಅವಧಿಯಲ್ಲಿ ಬಿಯರ್‌ ಬೆಲೆ ಪ್ರತಿ ಬಾಟಲ್‌ಗೆ ಸುಮಾರು 40 ರೂ.ವರೆಗೆ ಹೆಚ್ಚಳವಾಗಿದೆ. +ರಾಜ್ಯದಲ್ಲಿ ಮದ್ಯದ ಬ್ರ್ಯಾಂಡ್‌ಗಳನ್ನು ಬೆಲೆಯ ಅನುಸಾರ 18 ಸ್ಪ್ಯಾಬ್‌ಗಳಾಗಿ ವಿಂಗಡಿಸಲಾಗಿದೆ. ಒಂದರಿಂದ ಐದನೇ ಸ್ಪ್ಯಾಬ್‌ವರೆಗಿನ ಮದ್ಯಗಳ ಮಾರಾಟದಿಂದ ಶೇ.75ರಷ್ಟು ಆದಾಯ ಬರುತ್ತದೆ. 6ರಿಂದ 12ನೇ ಸ್ಪ್ಯಾಬ್‌ವರೆಗಿನ ಸೆಮಿ ಪ್ರೀಮಿಯಂ ಮದ್ಯಗಳಿಂದ ಶೇ.20ರಷ್ಟು ಮತ್ತು 1ರಿಂದ 18ರವರೆಗಿನ ಸ್ಪ್ಯಾಬ್‌ಗಳ ಪ್ರೀಮಿಯಂ ವಿದೇಶಿ ಮದ್ಯಗಳಿಂದ ಶೇ.5ರಷ್ಟು ಆದಾಯ ಬರುತ್ತದೆ. ಆದಾಯದ ಲೆಕ್ಕಾಚಾರದಲ್ಲೇ ಸರಕಾರ 2ರಿಂದ 5ನೇ ಸ್ಪ್ಯಾಬ್‌ವರೆಗಿನ ಮದ್ಯಗಳ ಬೆಲೆಯನ್ನು ಶೇ.7ರಿಂದ 8ರಷ್ಟು ಹೆಚ್ಚಳ ಮಾಡಲಿದೆ. +ಚುನಾವಣೆ ಬಳಿಕ ಏರಿಕೆ:ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ಆ ನಂತರ ಬೆಲೆ ಪರಿಷ್ಕರಣೆ ಮಾಡಿಲ್ಲ. ನೆರೆಯ ರಾಜ್ಯಗಳ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ದೇಶೀಯ ಮದ್ಯದ ಬೆಲೆ ಪರಿಷ್ಕರಿಸುವುದಾಗಿ ಸರಕಾರ ಬಜೆಟ್‌ನಲ್ಲೇ ಘೋಷಿಸಿತ್ತು. ಆದರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದರ ಹೆಚ್ಚಳ ಮಾಡಿರಲಿಲ್ಲ. ಚುನಾವಣೆ ಅಂತ್ಯಗೊಂಡ ಬಳಿಕ ದೇಶೀಯ ಮದ್ಯಗಳ ಬೆಲೆ ಏರಿಕೆಯಾಗಲಿದೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ. +ಈಗಿನ ದರ – ಹೆಚ್ಳಳ ಸಾಧ್ಯತೆಮೊದಲನೇ ಸ್ಪ್ಯಾಬ್‌63.14 ರೂ. -ಹೆಚ್ಚಳ ಸಾಧ್ಯತೆಯಿಲ್ಲಎರಡನೇ ಸ್ಪ್ಯಾಬ್‌80ರೂ.ನ ಬ್ರಾಂಡ್‌ -ತಲಾ 5 ರೂ. ಹೆಚ್ಚಳಮೂರನೇ ಸ್ಪ್ಯಾಬ್‌99.50 ರೂ. – 105 ರೂ.ನಾಲ್ಕನೇ ಸ್ಪ್ಯಾಬ್‌122.50 ರೂ – 130 ರೂ. \ No newline at end of file diff --git a/eesanje/url_46_141_2.txt b/eesanje/url_46_141_2.txt new file mode 100644 index 0000000000000000000000000000000000000000..e483c21be52bd3df8bf54e94a7370dae0b8a2cde --- /dev/null +++ b/eesanje/url_46_141_2.txt @@ -0,0 +1,12 @@ +ಪೆನ್‌ಡ್ರೈವ್‌ ಪ್ರಕರಣಕ್ಕೂ ಕಾಂಗ್ರೆಸ್‌‍ ನಾಯಕರಿಗೂ ಯಾವುದೇ ಸಂಬಂಧವಿಲ್ಲ : ಸಚಿವ ಚೆಲುವರಾಯಸ್ವಾಮಿ +ಬೆಂಗಳೂರು,ಮೇ 18-ಪೆನ್‌ಡ್ರೈವ್‌ ಪ್ರಕರಣಕ್ಕೂ ಕಾಂಗ್ರೆಸ್‌‍ನ ಯಾವ ನಾಯಕರಿಗೂ ಸಂಬಂಧವಿಲ್ಲ, ಇದರಿಂದ ನಮ್ಮ ಪಕ್ಷಕ್ಕೆ ರಾಜಕೀಯವಾಗಿ ಲಾಭವಾಗಿಲ್ಲ, ಪ್ರಜ್ವಲ್‌ ರೇವಣ್ಣನನ್ನು ಅವರ ಕುಟುಂಬದ ಸದಸ್ಯರು ಕರೆಸಿ ತನಿಖೆಗೆ ಒಳಪಡಿಸಬೇಕು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸಲಹೆ ನೀಡಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ನಮಗೂ ನೋವಾಗಿದೆ. ಇದು ಆಗಬಾರದಿತ್ತು. ದೇವೇಗೌಡರ ಕುಟುಂಬಕ್ಕೆ ಈ ರೀತಿಯಾಗಿರುವುದರ ಬಗ್ಗೆ ಬೇಸರವಿದೆ. ರಾಜ್ಯದಲ್ಲಿ ಅತ್ಯಂತ ಪ್ರತಿಷ್ಠಿತ ಕುಟುಂಬ ಅದು. ದೇವೇಗೌಡರನ್ನು ಹೊರತುಪಡಿಸಿದರೆ, ಕುಮಾರಸ್ವಾಮಿಯವರು ಆ ಮನೆಯ ಎರಡನೇಯ ಮುಖ್ಯಸ್ಥರಾಗಿದ್ದಾರೆ. ಈಗಲಾದರೂ ಅವರು ಪ್ರಜ್ವಲ್‌ನನ್ನು ವಾಪಸ್‌‍ ಕರೆಸಲಿ ಎಂದು ಮನವಿ ಮಾಡಿದರು. +ಬಿಇಜೆಪಿ ಮುಖಂಡ ದೇವರಾಜೇಗೌಡ ಒಬ್ಬ ಮಹಿಳೆಯ ಜೊತೆ ಮಾತನಾಡಿರುವ ವಿಡಿಯೋ ಮತ್ತು ಆಡಿಯೋವನ್ನು ಎಲ್ಲರೂ ನೋಡಿದ್ದಾರೆ. ಅಂತಹ ವ್ಯಕ್ತಿ ನಮ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಆತನ ಹೇಳಿಕೆಗೆ ನಾವು ಪ್ರತಿಕ್ರಿಯಿಸುವ ಅಗತ್ಯವೂ ಇಲ್ಲ ಎಂದರು. +ದೇವರಾಜೇಗೌಡ ಒಂದು ವರ್ಷದಿಂದಲೇ ರೇವಣ್ಣ ಕುಟುಂಬದ ವಿರುದ್ಧ ಹೋರಾಟ ನಡೆಸುತ್ತಿದ್ದರು. ತಮ್ಮ ಬಳಿ ಪೆನ್‌ಡ್ರೈವ್‌ ಇದೆ ಎಂದು ಹೇಳಿಕೊಂಡಿದ್ದರು. ಅದನ್ನು ತನಿಖಾ ಸಂಸ್ಥೆ ಅಥವಾ ನ್ಯಾಯಾಲಯಕ್ಕೆ ಒಪ್ಪಿಸದೆ ವೈಯಕ್ತಿಕವಾಗಿ ಇಟ್ಟುಕೊಂಡಿದ್ದೇಕೆ? ಇಲ್ಲಿ ಮೂಲ ಪ್ರಶ್ನೆ ಇರುವುದು ಒಂದು ಪ್ರಜ್ವಲ್‌ ರೇವಣ್ಣ ಹೆಣ್ಣು ಮಕ್ಕಳನ್ನು ದುರುಪಯೋಗಪಡಿಸಿಕೊಂಡಿರುವುದು, ಎರಡನೇಯದು ವಿಡಿಯೋವನ್ನು ರೆಕಾರ್ಡ್‌ ಮಾಡಿಕೊಂಡಿರುವುದು, ಮೂರನೆಯದು ಅದು ಎಲ್ಲಿಂದ, ಯಾರ ಮೂಲಕ ಬಹಿರಂಗವಾಯಿತು? ಎಂಬುದು. ಈ ನಿಟ್ಟಿನಲ್ಲಿ ತನಿಖೆ ನಡೆಯಬೇಕೇ ಹೊರತು ಇದರ ನಡುವೆ ನೂರು ಕೋಟಿ ರೂ. ಡೀಲು, ಸರ್ಕಾರ ಪತನ… ಈ ಅನಗತ್ಯ ಚರ್ಚೆಗಳು ಏಕೆ? ಎಂದು ಪ್ರಶ್ನಿಸಿದರು. +ಇದರಲ್ಲಿ ಡಿ.ಕೆ.ಶಿವಕುಮಾರ್‌, ಕೃಷ್ಣಭೈರೇಗೌಡ, ಪ್ರಿಯಾಂಕ್‌ ಖರ್ಗೆ ಅಥವಾ ನನ್ನ ಪಾತ್ರವೇನು? ನಮಗೆ ಇದರಿಂದ ರಾಜಕೀಯ ಲಾಭ ಮಾಡಿಕೊಳ್ಳುವ ಉದ್ದೇಶ ಇದ್ದಿದ್ದರೆ ಚುನಾವಣೆಗೂ ಮೊದಲೇ ಬಹಿರಂಗಪಡಿಸಬಹುದಿತ್ತು. ಆದರೆ ಅದು ನಮಗೆ ಅನಗತ್ಯ. ಇದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವಲ್ಲ. ಕಂಡೂ ಕಾಣದಂತೆ ಇರಬಹುದಾದಂತಹ ಸಂಗತಿ. ನಮಂಥವರೇ ಅಲ್ಲ, ಜನಸಾಮಾನ್ಯರೂ ಕೂಡ ವಿಡಿಯೋ ಬಹಿರಂಗಪಡಿಸುವಂತಹ ಕೆಳಹಂತಕ್ಕೆ ಇಳಿಯುವುದಿಲ್ಲ ಎಂದರು. +ಪೆನ್‌ಡ್ರೈವ್‌ ಯಾರ ಬಳಿ ಇತ್ತು? ಯಾರು ಹೊರತಂದರು? ಎಂಬುದು ತನಿಖೆಯಾಗಿ ಸತ್ಯ ಹೊರಬರಬೇಕು. ದೇವರಾಜೇಗೌಡ, ಕಾರ್ತಿಕ್‌, ಪ್ರಜ್ವಲ್‌ ರೇವಣ್ಣ ಪ್ರಕರಣದ ಕೇಂದ್ರ ಸ್ಥಾನದಲ್ಲಿದ್ದಾರೆ. ಅದನ್ನು ಹೊರತುಪಡಿಸಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ನಮ ವಿಚಾರಗಳು ಏಕೆ ಚರ್ಚೆಯಾಗುತ್ತಿವೆ? ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. +ರೇವಣ್ಣ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಮಹಿಳೆ ಅಪಹರಣ ಪ್ರಕರಣದಲ್ಲಿ ಅವರ ಬಂಧನವಾಗಿದೆ. ಇಲ್ಲದೇ ಇದ್ದಿದ್ದರೆ ರೇವಣ್ಣ ಅವರಿಗೆ ಕಾನೂನಿನ ತೊಡಕಾಗುತ್ತಿರಲಿಲ್ಲ. ಈಗಲೂ ಕುಮಾರಸ್ವಾಮಿಯವರು ಪ್ರಕರಣದ ಬಗ್ಗೆ ಪದೇಪದೇ ಕೆಣಕಿ ಮಾತನಾಡುವುದನ್ನು ನಿಲ್ಲಿಸಿದರೆ ತನಿಖೆಯ ಪಾಡಿಗೆ ತನಿಖೆ ನಡೆಯುತ್ತದೆ. ಡಿ.ಕೆ.ಶಿವಕುಮಾರ್‌ರವರು ಹೇಳಿಕೆ ನೀಡುವಾಗ ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು. +ನಮಗೆ ಪೆನ್‌ಡ್ರೈವ್‌ ವಿಚಾರಕ್ಕಿಂತಲೂ ಮಹತ್ವದ ಬೇರೆ ವಿಚಾರಗಳಿವೆ. ಮಳೆಯಾಗಿದೆ, ಕೃಷಿ ಚಟುವಟಿಕೆ ಬಗ್ಗೆ ಗಮನ ಹರಿಸುತ್ತಿದ್ದೇವೆ. ದೇವರಾಜೇಗೌಡ ಆರೋಪ ಮಾಡಿದಂತೆ ನಾವು ನಾಲ್ಕು ಜನ ಸಚಿವರು ಸಭೆ ನಡೆಸಿ, ಷಡ್ಯಂತ್ರ ಮಾಡಿರುವುದನ್ನು ಸಾಬೀತುಪಡಿಸಿದರೆ ಬಹಿರಂಗ ಕ್ಷಮೆ ಕೇಳಲು ನಾನು ಸಿದ್ಧ ಎಂದು ಸವಾಲು ಹಾಕಿದರು. +ಬಿಜೆಪಿ ಮುಖಂಡ ಎಲ್‌.ಆರ್‌.ಶಿವರಾಮೇಗೌಡರ ಜೊತೆ ನನಗೆ ವೈಯಕ್ತಿಕ ಸ್ನೇಹವಿದೆ. ಆದರೆ ರಾಜಕೀಯವಾಗಿ ಇಬ್ಬರೂ ಬೇರೆ ಪಕ್ಷದಲ್ಲಿದ್ದೇವೆ. ಪೆನ್‌ಡ್ರೈವ್‌ ವಿಚಾರದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಚರ್ಚೆ ಮಾಡಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ನಾನು ಯಾರ ಬಳಿಯೂ ವಿಚಾರ ವಿನಿಮಯ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. +ಜನತಾದಳದವರು ಯಾವ ಕಾರಣಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದೇ ಅರ್ಥವಾಗುವುದಿಲ್ಲ. ಆ ಪಕ್ಷದ ಬಹಳಷ್ಟು ಶಾಸಕರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಆಸಕ್ತಿ ಇಲ್ಲ. ಆದರೂ ನಾಯಕರ ಒತ್ತಡಕ್ಕೆ ಮಣಿದು ಹೋಗುತ್ತಿದ್ದಾರೆ ಎಂದು ಹೇಳಿದರು. ಜೆಡಿಎಸ್‌‍ ಮತ್ತು ಬಿಜೆಪಿಯಿಂದ ಕಾಂಗ್ರೆಸ್‌‍ಗೆ ಸೇರಲು ಹಲವು ಶಾಸಕರು, ಮಾಜಿ ಶಾಸಕರು, ಲೋಕಸಭಾ ಚುನಾವಣೆಗೂ ಮುನ್ನ ಚರ್ಚೆ ನಡೆಸಿದ್ದರು. ಫಲಿತಾಂಶದ ಬಳಿಕ ಯಾವ ರೀತಿ ಬೆಳವಣಿಗೆಗಳಾಗುತ್ತವೆ ಎಂಬುದು ಗೊತ್ತಿಲ್ಲ. ಬಹಳಷ್ಟು ಮಂದಿ ಬರಬಹುದು ಎಂದ ಅವರು, ರಾಜ್ಯದಲ್ಲಿ ಚುನಾಯಿತ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ ಮಾತ್ರವಲ್ಲ. ಅಪರಾಧ ಕೂಡ ಎಂದು ಹೇಳಿದರು. +ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಚೆಲುವರಾಯಸ್ವಾಮಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದಿಗೂ ತಮ ಸ್ನೇಹಿತರು. ಅವರು ನನ್ನನ್ನು ವೈರಿ ಎಂದು ತಿಳಿದುಕೊಳ್ಳಬಹುದು. ನಾನು ಅವರನ್ನು ಹಾಗೆ ಭಾವಿಸುವುದಿಲ್ಲ ಎಂದರು. \ No newline at end of file diff --git a/eesanje/url_46_141_3.txt b/eesanje/url_46_141_3.txt new file mode 100644 index 0000000000000000000000000000000000000000..2d700bddb8f560fc5f591f97712cdcb524cf026b --- /dev/null +++ b/eesanje/url_46_141_3.txt @@ -0,0 +1,6 @@ +ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ಬ್ಯಾಂಕ್‌ ಖಾತೆಗಳ ಮೇಲೆ ಎಸ್‌‍ಐಟಿ ನಿಗಾ +ಬೆಂಗಳೂರು, ಮೇ 18-ಪೆನ್‌ಡ್ರೈವ್‌ ಪ್ರಕರಣ ಸದ್ದು ಮಾಡುತ್ತಿದ್ದಂತೆಯೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಆರ್ಥಿಕವಾಗಿ ಕಟ್ಟಿಹಾಕಲು ಎಸ್‌‍ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. +ಪ್ರಜ್ವಲ್‌ಗೆ ಸೇರಿದ ಎಲ್ಲಾ ಬ್ಯಾಂಕ್‌ ಖಾತೆಗಳ ಮಾಹಿತಿಯನ್ನು ಎಸ್‌‍ಐಟಿ ಪಡೆದುಕೊಂಡಿದ್ದು, ಅವರ ಅಕೌಂಟ್‌ಗಳನ್ನು ಫ್ರೀಜ್‌ ಮಾಡಲು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ. +ಪ್ರಜ್ವಲ್‌ ಖಾತೆಗೆ ಹಣ ಸಂದಾಯವಾಗಿರುವ ಬಗ್ಗೆ ಈಗಾಗಲೇ ಎಸ್‌‍ಐಟಿ ಮಾಹಿತಿಗಳನ್ನು ಕಲೆ ಹಾಕಿದ್ದು, ಒಟ್ಟು 7 ಬ್ಯಾಂಕ್‌ ಖಾತೆಗಳನ್ನು ಪ್ರಜ್ವಲ್‌ ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಎಸ್‌‍ಐಟಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. +ಪೆನ್‌ಡ್ರೈವ್‌ ವಿಚಾರ ಹೊರಬೀಳುತ್ತಿದ್ದಂತೆ ಪ್ರಜ್ವಲ್‌ ತಲೆಮರೆಸಿಕೊಂಡು 21 ದಿನಗಳಾದರೂ ಆತ ವಿಚಾರಣೆಗೆ ಬಾರದ ಹಿನ್ನೆಲೆಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಆತನ ಆರ್ಥಿಕ ವಹಿವಾಟನ್ನು ಬಿಗಿಗೊಳಿಸಲು ಮುಂದಾಗಿದ್ದಾರೆ. +ಪ್ರಜ್ವಲ್‌ ಖಾತೆಗೆ ಹಣ ಹಾಕಿದವರ ಬಗ್ಗೆಯೂ ಎಸ್‌‍ಐಟಿ ಮಾಹಿತಿ ಕಲೆ ಹಾಕಿದ್ದು, ಏಳು ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಈ ಖಾತೆಗಳಿಗೆ ಎಲ್ಲಿಂದ, ಎಷ್ಟೆಷ್ಟು ಹಣ, ಯಾರು ಜಮಾ ಮಾಡಿದ್ದಾರೆ ಎಂಬ ಬಗ್ಗೆ ವಿವರಗಳನ್ನು ಸಂಗ್ರಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_141_4.txt b/eesanje/url_46_141_4.txt new file mode 100644 index 0000000000000000000000000000000000000000..caf90dcb2162579d5095356c9d016d2549c21b93 --- /dev/null +++ b/eesanje/url_46_141_4.txt @@ -0,0 +1,6 @@ +ಕೊಲೆಯಾದ ಅಂಜಲಿ ಮನೆಗೆ ಸಚಿವ ಸಂತೋಷ್‌ ಲಾಡ್‌ ಭೇಟಿ +ಹುಬ್ಬಳ್ಳಿ, ಮೇ 18-ಇತ್ತೀಚೆಗೆ ಕೊಲೆಯಾದ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅಂಜಲಿ ಅವರ ಅಜ್ಜಿ ಗಂಗಮ ಮತ್ತು ಸಹೋದರಿಯರಿಗೆ ಧೈರ್ಯ ಹೇಳಿದ ಲಾಡ್‌, ಸಂತೋಷ್‌ ಲಾಡ್‌ ಫೌಂಡೇಷನ್‌ನಿಂದ 2 ಲಕ್ಷ ರೂ.ಗಳ ಚೆಕ್‌ ನೀಡಿದರು. +ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವಹಿಸಬೇಕು ಹಾಗೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಮನವಿ ಮಾಡಿದರು. ಸಮಾಜದಲ್ಲಿ ಹಾಗೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಇಂತಹ ಪ್ರಕರಣಗಳು ನಡೆಯುತ್ತಿರುವುದು ಒಳ್ಳೆಯದಲ್ಲ. ಅಪರಾಧ ಕೃತ್ಯಗಳಲ್ಲಿ ತೊಡಗುವ ಯುವಕರ ಮನಃಸ್ಥಿತಿ ಎಂತಹದ್ದು ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಗೃಹ ಸಚಿವರು ಸದ್ಯದಲ್ಲೇ ನಗರಕ್ಕೆ ಭೇಟಿ ನೀಡಲಿದ್ದು, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ನಿರ್ಲಕ್ಷ್ಯ ವಹಿಸಿದ ಪೊಲೀಸರನ್ನು ಅಮಾನತು ಸಹ ಮಾಡಲಾಗಿದೆ. ವಿಪಕ್ಷದಲ್ಲಿರುವ ಬಿಜೆಪಿ ನಾಯಕರು ಅವರ ಕೆಲಸ ಮಾಡುತ್ತಿದ್ದಾರೆ. ಸರ್ಕಾರವನ್ನು ವಿರೋಧಿಸುವುದು ಅವರ ಕೆಲಸ ಎಂದರು. +ಡ್ರಗ್‌್ಸ ಮಾರಾಟ ರಾಜ್ಯ ಅಷ್ಟೇ ಅಲ್ಲ, ದೇಶದಾದ್ಯಂತ ನಡೆಯುತ್ತಿದೆ. ಇಂತಹ ಪ್ರಕರಣದಲ್ಲಿ ಭಾಗಿಯಾಗುವವರ ಬಗ್ಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮಕೈಗೊಳ್ಳುತ್ತೇವೆ. ಶ್ರೀ ರಾಮ ಸೇನೆ ಮಹಿಳೆಯರ ಆತ ರಕ್ಷಣೆ ಮಾಡುತ್ತಿರುವುದು ಒಳ್ಳೆಯದು. ಆದರೆ ಇದು ತ್ರಿಶೂಲ ದೀಕ್ಷೆ ನೀಡುವ ಹಾಗೂ ಪಡೆಯುವವರಿಗೆ ಬಿಟ್ಟ ವಿಚಾರ. ಇದಕ್ಕೆ ನಾನು ಉತ್ತರಿಸಲ್ಲ. ಕಾನೂನು ಪ್ರಕಾರ ನೀಡಲಾಗದಿದ್ದರೆ ಖಂಡಿತವಾಗಿ ನಿಲ್ಲಿಸುತ್ತೇವೆ ಎಂದರು. +ಅಂಜಲಿ ಕುಟುಂಬ ಬಡತನದಲ್ಲಿದೆ. ಅವರಿಗೆ ಸರ್ಕಾರದ ಪರಿಹಾರ ನೀಡುತ್ತದೆ. ಏನು ಪರಿಹಾರ ಕೊಡಲಿದೆ ಎಂಬುವುದನ್ನು ನಾನು ಹೇಳುವುದಿಲ್ಲ ಎಂದರು.ಲಾಡ್‌ ಭೇಟಿಗೆ ವಿರೋಧ: ಅಂಜಲಿ ಮನೆಗೆ ಭೇಟಿ ನೀಡಿದ ಸಚಿವ ಸಂತೋಷ್‌ ಲಾಡ್‌, ಶಾಸಕ ಪ್ರಸಾದ ಅಬ್ಬಯ್ಯ ಅವರನ್ನು ಬಿಜೆಪಿ ಮುಖಂಡ ಅನೂಪ್‌ ಬಿಜವಾಡ ಸೇರಿದಂತೆ ಸ್ಥಳೀಯರು ಇಷ್ಟು ದಿನ ಎಲ್ಲಿ ಹೋಗಿದ್ದಿರಿ, ಈಗ ಯಾಕೆ ಬಂದಿರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು. \ No newline at end of file diff --git a/eesanje/url_46_141_5.txt b/eesanje/url_46_141_5.txt new file mode 100644 index 0000000000000000000000000000000000000000..df487cce57a8303b11f1176755b791742bbf1b4c --- /dev/null +++ b/eesanje/url_46_141_5.txt @@ -0,0 +1,8 @@ +ಜರ್ಮನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್..!? +ಬೆಂಗಳೂರು, ಮೇ 18-ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ಲಂಡನ್‌ಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯ ಮೊದಲನೇ ಹಂತದ ಮತದಾನ ಮುಗಿದ ಬಳಿಕ ಪ್ರಜ್ವಲ್‌ ಜರ್ಮನಿಗೆ ಹೋಗಿದ್ದು, ಇಲ್ಲಿಯ ವರೆಗೂ ಅಲ್ಲೇ ಇದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ ಲಂಡನ್‌ಗೆ ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. +ಇಂಗ್ಲೆಂಡ್‌ನಲ್ಲಿರುವ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಪ್ರಜ್ವಲ್‌ ತನ್ನ ಇಬ್ಬರು ಗೆಳೆಯರೊಂದಿಗೆ ರೈಲು ಮೂಲಕ ಜರ್ಮನಿಯ ಮ್ಯೂನಿಚ್‌ನಿಂದ ಲಂಡನ್‌ಗೆ ಹೋಗಿದ್ದಾರೆ ಎಂಬುವುದು ಗೊತ್ತಾಗಿದೆ. +ದುಬೈ ಮೂಲದ ಸ್ನೇಹಿತ ಮತ್ತು ಬೆಂಗಳೂರು ಮೂಲದ ಮತ್ತೊಬ್ಬ ಸ್ನೇಹಿತ ಪ್ರಜ್ವಲ್‌ ಜೊತೆ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಮೂವರು ಒಟ್ಟಾಗಿ ಲಂಡನ್‌ಗೆ ಹೋಗಿರುವ ಸಾಧ್ಯತೆಯಿದೆ. +ಪ್ರಜ್ವಲ್‌ ರೇವಣ್ಣ ಕಳೆದ 20 ದಿನಗಳಿಂದ ಕುಟುಂಬದವರ ಸಂಪರ್ಕದಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ. ಜರ್ಮನಿಗೆ ಹೋದ ನಂತರ ಭಾರತಕ್ಕೆ ವಾಪಸ್‌‍ ಬರಲು 2 ಬಾರಿ ವಿಮಾನದ ಟಿಕೆಟ್‌ ಬುಕ್‌ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದರು. ಮೇ 3 ಮತ್ತು 15ರಂದು ಬುಕ್‌ ಮಾಡಿದ್ದ ಟಿಕ್‌ ರದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್‌ ಬುಕ್ಕಿಂಗ್‌ ಮೇಲೆ ಕಣ್ಣಿಟ್ಟಿದ್ದಾರೆ. +ಈ ನಡುವೆ ಪ್ರಜ್ವಲ್‌ಗೆ ಎಸ್‌‍ಐಟಿ ತನಿಖಾ ತಂಡ ನೋಟಿಸ್‌‍ಗಳನ್ನು ಕೊಟ್ಟಿತ್ತು. ಪ್ರಜ್ವಲ್ ಪರ ವಕೀಲರು ವಿಚಾರಣೆಗಾಗಿ ಕಾಲಾವಕಾಶ ಕೇಳಿದ್ದರು. ಕಾಲಾವಕಾಶ ಅವಧಿ ಮುಗಿದರೂ ಸಹ ಪ್ರಜ್ವಲ್‌ ವಿಚಾರಣೆಗೆ ಹಾಜರಾಗದ ಕಾರಣ ಲುಕ್‌ಔಟ್‌ ನೋಟಿಸ್‌‍ ಸಹ ಜಾರಿ ಮಾಡಲಾಗಿತ್ತು. +ನಂತರ ಬ್ಲೂಕಾರ್ನರ್‌ ನೋಟಿಸ್‌‍ ನೀಡಿದ್ದರೂ ಸಹ ಪ್ರಜ್ವಲ್‌ ವಿಚಾರಣೆಗೆ ಬಂದಿಲ್ಲ. ಹಾಗಾಗಿ ಇದೀಗ ರೆಡ್‌ ಕಾರ್ನರ್‌ ನೋಟಿಸ್‌‍ ನೀಡಲು ಎಸ್‌‍ಐಟಿ ಸಿದ್ಧತೆ ಮಾಡಿಕೊಳ್ಳುತ್ತಿದೆ. +ಮತ್ತೊಂದೆಡೆ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ(ಜೂ.4) ಪ್ರಜ್ವಲ್‌ ಭಾರತಕ್ಕೆ ಬರಬಹುದೆಂಬ ನಿರೀಕ್ಷೆಯಿದೆ. ಮತ್ತೊಂದೆಡೆ ಕುಟುಂಬಸ್ಥರಿಂದಲೂ ವಾಪಸ್‌‍ ಬರುವಂತೆ ಪ್ರಜ್ವಲ್‌ಗೆ ಒತ್ತಡ ಹಾಕಲಾಗಿದೆ ಎಂದು ತಿಳಿದುಬಂದಿದೆ.ಒಟ್ಟಾರೆ ಪೆನ್‌ಡ್ರೈವ್‌ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. \ No newline at end of file diff --git a/eesanje/url_46_141_6.txt b/eesanje/url_46_141_6.txt new file mode 100644 index 0000000000000000000000000000000000000000..24f2098a65896e13ffc9b008010ab26ddf9316aa --- /dev/null +++ b/eesanje/url_46_141_6.txt @@ -0,0 +1,5 @@ +ಬರ ಪರಿಹಾರ ಹಣವನ್ನು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಬ್ಯಾಂಕುಗಳಿಗೆ ಸೂಚನೆ +ಬೆಂಗಳೂರು,ಮೇ 18-ಕಳೆದ 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸರ್ಕಾರದಿಂದ ಬಿಡುಗಡೆಯಾಗಿರುವ ಪರಿಹಾರ ಧನವನ್ನು ಬ್ಯಾಂಕುಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಸೂಚಿಸಲಾಗಿದೆ. ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ಜಿಲ್ಲೆಯ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದ್ದಾರೆ. +ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಣೆ ಮಾಡಿದ್ದು, ಎರಡನೇ ಹಂತದ ಬರಪರಿಹಾರವನ್ನು ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಒಟ್ಟು 40,469 ಫಲಾನುಭವಿಗಳಿಗೆ ಒಟ್ಟು 18,85,68,305 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪರಿಹಾರವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. +ರೈತರಿಗೆ ಬಿಡುಗಡೆಯಾದ ಬರಪರಿಹಾರದ ಮೊತ್ತವನ್ನು ಬೆಳೆಸಾಲ ಅಥವಾ ಇತರ ಯಾವುದೇ ವಿಷಯಗಳಿಗೆ ಬ್ಯಾಂಕುಗಳಲ್ಲಿ ಕಡಿತಗೊಳಿಸುತ್ತಿರುವ ವಿಷಯವು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ಬಂದಿದೆ ಎಂದಿದ್ದಾರೆ. +ಸರ್ಕಾರ ಬಿಡುಗಡೆ ಮಾಡಿದ ಬರ ಪರಿಹಾರವನ್ನು ಬೆಳೆ ಸಾಲ ಅಥವಾ ಯಾವುದೇ ವಿಷಯಗಳಿಗೆ ಕಡಿತಗೊಳಿಸದಂತೆ ಎಲ್ಲಾ ಬ್ಯಾಂಕುಗಳಿಗೆ ಸೂಚನೆ ನೀಡಿದ್ದು, ಭಾರತೀಯ ರಿಸರ್ವ್‌ ಬ್ಯಾಂಕ್‌ ನೀಡಿರುವ ನಿರ್ದೇಶನಗಳನ್ನ ಪಾಲಿಸಲು ಸೂಚಿಸಿದ್ದಾರೆ. \ No newline at end of file diff --git a/eesanje/url_46_141_7.txt b/eesanje/url_46_141_7.txt new file mode 100644 index 0000000000000000000000000000000000000000..f6dc724db3aceb10c099571c8265204207e57925 --- /dev/null +++ b/eesanje/url_46_141_7.txt @@ -0,0 +1,8 @@ +ದೇವರಾಜೇಗೌಡ ಮಾಡಿದ “100 ಕೋಟಿ ಆಫರ್” ಆರೋಪಕ್ಕೆ ಮಧು ಬಂಗಾರಪ್ಪ ಪ್ರತಿಕ್ರಿಯೆ +ಬೆಂಗಳೂರು,ಮೇ 18-ಆರೋಪಿ ಸ್ಥಾನದಲ್ಲಿರುವ ವ್ಯಕ್ತಿ ನೀಡುವ ಹೇಳಿಕೆಯ ಸತ್ಯಾಸತ್ಯತೆಗಳು ಕೂಡಾ ಚರ್ಚೆಗೆ ಅರ್ಹ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ಡ್ರೈವ್ ಪ್ರಕರಣ ಹಾಗೂ ಅತ್ಯಾಚಾರ ಆರೋಪದಡಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಿಜೆಪಿ ಮುಖಂಡ ದೇವರಾಜೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು. +ದೇವರಾಜೇಗೌಡರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂಬುದನ್ನು ಪರಿಗಣಿಸಬೇಕು. ಯಾವುದೇ ಸಂದರ್ಭವಾದರೂ ಕಾನೂನು ಮೇಲುಗೈ ಸಾಧಿಸಬೇಕು. ಇಲ್ಲಿ ಪಕ್ಷ, ವ್ಯಕ್ತಿ ಮುಖ್ಯ ಅಲ್ಲ ಎಂದರು. +ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ದೇವರಾಜೇಗೌಡರಿಗೆ 100 ಕೋಟಿ ರೂ. ಆಫರ್ ನೀಡಿದ್ದರು ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಿಸಲಿ, ನಾವ್ಯಾರೂ ಬೇಡ ಎನ್ನುವುದಿಲ್ಲ ಎಂದ ಸಚಿವರು, ಈ ರೀತಿಯ ಆರೋಪ ಮಾಡುವ ವ್ಯಕ್ತಿ ಯಾರು? ಆತನ ಹಿನ್ನಲೆ ಏನು? ಯಾವ ಸಂದರ್ಭದಲ್ಲಿ ಏಕೆ ಹೇಳಿದ್ದಾರೆ? ಎಂಬುದನ್ನು ಪರಿಗಣಿಸಬೇಕಾಗುತ್ತದೆ ಎಂದರು. +ಹೇಳಿಕೆಯ ಸತ್ಯಾಸತ್ಯತೆ ಕೂಡಾ ಗಮನಾರ್ಹ. ದೇವರಾಜೇಗೌಡ ಸದ್ಯಕ್ಕೆ ಆರೋಪಿ ಸ್ಥಾನದಲ್ಲಿದ್ದಾರೆ. ಆತನ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯ ಇಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. +ಚರ್ಚೆಗೆ ಗ್ರಾಸವಾದ ಹೇಳಿಕೆ :ಅತ್ಯಾಚಾರದ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ದೇವರಾಜೇಗೌಡ ನಿನ್ನೆ ಪೊಲೀಸ್ ವ್ಯಾನಿನಲ್ಲೇ ಕುಳಿತು ಹೇಳಿಕೆ ನೀಡಿದ್ದು, ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮಗೆ 100 ಕೋಟಿ ರೂ. ಆಫರ್ ನೀಡಿದ್ದರು ಎಂದಿದ್ದಾರೆ. +ಹಾಸನದ ಗೋಪಾಲಸ್ವಾಮಿಯವರನ್ನು ಮಧ್ಯವರ್ತಿಯನ್ನಾಗಿ ಕಳುಹಿಸಿದ್ದರು. ಬಿಜೆಪಿಯ ಮುಖಂಡ ಎಲ್.ಆರ್.ಶಿವರಾಮೇಗೌಡ ಮಾತುಕತೆ ನಡೆಸಿದ್ದರು. ಬೋರಿಂಗ್ ಕ್ಲಬ್ನಲ್ಲಿ ಈ ನಿಟ್ಟಿನಲ್ಲಿ ಚರ್ಚೆಯಾಗಿತ್ತು. ತಮ ಬಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಪುರಾವೆಗಳಿವೆ. ಅವುಗಳನ್ನು ನಾನು ಯಾರಿಗೂ ಸಿಗದಂತೆ ಸಂರಕ್ಷಿಸಿಟ್ಟಿದ್ದೇನೆ. ಪೆನ್ಡ್ರೈವ್ ಪ್ರಕರಣವನ್ನು ದಾರಿ ತಪ್ಪಿಸಲು ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣಾಭೈರೇಗೌಡ, ಪ್ರಿಯಾಂಕ ಖರ್ಗೆ ಸೇರಿದಂತೆ ನಾಲ್ಕು ಮಂದಿಯ ತಂಡ ಸಕ್ರಿಯವಾಗಿದೆ ಎಂದು ದೂರಿದರು. +ನಾನು ಜೈಲಿನಿಂದ ಬಿಡುಗಡೆಯಾಗಿ ದಾಖಲೆಗಳನ್ನು ಬಹಿರಂಗಪಡಿಸಿದರೆ ರಾಜ್ಯಸರ್ಕಾರ ಪತನವಾಗಲಿದೆ ಎಂದು ದೇವರಾಜೇಗೌಡ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_141_8.txt b/eesanje/url_46_141_8.txt new file mode 100644 index 0000000000000000000000000000000000000000..2949d74a27554416fb10684fc737a582d6b45d0b --- /dev/null +++ b/eesanje/url_46_141_8.txt @@ -0,0 +1,5 @@ +92ನೇ ಹುಟ್ಟಹಬ್ಬದ ಅಂಗವಾಗಿ ದೇವೇಗೌಡರ ಪೋಸ್ಟರ್‌ಗೆ ಕ್ಷೀರಾಭಿಷೇಕ +ಬೆಂಗಳೂರು,ಮೇ18-ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ 92ನೇ ಹುಟ್ಟಹಬ್ಬದ ಅಂಗವಾಗಿ ಜೆಡಿಎಸ್‌‍ ಕಚೇರಿ ಜೆಪಿ ಭವನದ ಆವರಣದಲ್ಲಿ ಗೌಡರ ಪೋಸ್ಟರ್‌ಗೆ ಕ್ಷೀರಾಭಿಷೇಕ ಮಾಡಲಾಯಿತು. ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ಎಚ್‌.ಎಂ.ರಮೇಶ್‌ ಗೌಡ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಅವರ ನೇತೃತ್ವದಲ್ಲಿ ದೇವೇಗೌಡರ ಕಟೌಟ್‌ಗೆ ಅಭಿಷೇಕ ಮಾಡಿ ಶುಭ ಕೋರಲಾಯಿತು. +ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಕೇಕ್‌ ಕತ್ತರಿಸಿ ಹುಟ್ಟಹಬ್ಬ ಆಚರಿಸಿ ಪರಸ್ಪರ ಸಿಹಿ ಹಂಚಿ ಗೌಡರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶರವಣ, ದೇವೇಗೌಡರ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದೇವೆ. +ದೇವೇಗೌಡರು ಬೇಸರದಲ್ಲಿರುವುದು ನಮಗೂ ಬೇಸರ ತಂದಿದೆ. ಕಳಂಕ ತರುವ ಪ್ರಯತ್ನ ಕೆಲವರಿಂದ ನಡೆಯುತ್ತಿದ್ದು, ಅವರಿಗೇ ತಿರುಗು ಬಾಣವಾಗಲಿದೆ. ಸತ್ಯಕ್ಕೆ ಜಯ ಸಿಗುತ್ತದೆ. ಈ ನೆಲದ ಕಾನೂನು ಮೇಲೆ ವಿಶ್ವಾಸವಿದೆ. ಭಗವಂತನ ಆಶೀರ್ವಾದದಿಂದ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಅವರು ಹೇಳಿದರು. +ರಮೇಶ್‌ಗೌಡ ಮಾತನಾಡಿ, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ತಲಾ ಒಂದೊಂದು ಕೇಕ್‌ಗಳನ್ನು ತಂದು ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಿದ್ದೇವೆ. ಅಲ್ಲದೆ ದೇವೇಗೌಡರ ಜನದಿನದ ಅಂಗವಾಗಿ ಆಸ್ಪತ್ರೆಗಳಲ್ಲಿ ಹಣ್ಣುಗಳನ್ನು ಹಂಚಿದ್ದೇವೆ ಎಂದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರೇವಣ್ಣ, ಗೋಪಾಲ್‌, ಶೈಲಜಾ, ಕನ್ಯಾಕುಮಾರಿ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_141_9.txt b/eesanje/url_46_141_9.txt new file mode 100644 index 0000000000000000000000000000000000000000..0e7fc4628f68970aa9b69b8fa08ee42915798cf2 --- /dev/null +++ b/eesanje/url_46_141_9.txt @@ -0,0 +1,7 @@ +ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ ದೇವರಾಜೇಗೌಡ ‘100 ಕೋಟಿ ಆಫರ್‌’ ಆರೋಪ +ಬೆಂಗಳೂರು,ಮೇ18– ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ 100 ಕೋಟಿ ಆಫರ್‌ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದು, ಕಾಂಗ್ರೆಸ್‌‍ ನಾಯಕರೂ ವಿಚಲಿರಾಗಿದ್ದಾರೆ. ದೇವರಾಜೇಗೌಡ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರವಲ್ಲದೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ ಹೆಸರನ್ನೂ ಉಲ್ಲೇಖ ಮಾಡಿರುವುದು ಗಂಭೀರ ಸ್ವರೂಪ ಪಡೆದುಕೊಂಡಿದೆ. +ಪ್ರಜ್ವಲ್‌ ಅವರ ಕಾರು ಚಾಲಕ ಕಾರ್ತಿಕ್‌ ಗೌಡನ ಹತ್ತಿರ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲಾ ರೆಡಿ ಮಾಡಿದ ಡಿ.ಕೆ ಶಿವಕುಮಾರ್‌ ನಾಲ್ಕು ಸಚಿವರ ಕಮಿಟಿ ಮಾಡಿ ಇದನ್ನೆಲ್ಲಾ ಹ್ಯಾಂಡಲ್‌ ಮಾಡಬೇಕು ಎಂದು ಬಿಟ್ಟಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು. +ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಚನ್ನರಾಯಪಟ್ಟಣದ ಗೋಪಾಲಸ್ವಾಮಿ ಬಳಿ 5 ಕೋಟಿ ಹಣ ಕೊಟ್ಟು ಸಂಧಾನಕ್ಕೆ ಕಳಿಸಿದ್ದರು. ಈ ಸಂದರ್ಭದಲ್ಲಿ ಶಿವಕುಮಾರ್‌ ಅವರು 100 ಕೋಟಿ ಆಫರ್‌ ಮಾಡಿದರು ಎಂದು ದೇವರಾಜೇಗೌಡ ಆರೋಪಿಸಿದ್ದಾರೆ. +ಆರಂಭದಲ್ಲೇ ಡಿ.ಕೆ.ಶಿವಕುಮಾರ್‌, ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ ಅವರು ಈ ಪ್ರಕರಣದಲ್ಲಿ ಪ್ರತಿಕ್ರಿಯೆ ನೀಡುತ್ತಾ ಬಂದಿದ್ದರು. ಇದಕ್ಕೆ ಪ್ರಿಯಾಂಕ್‌ ಖರ್ಗೆ ಕೂಡ ಧ್ವನಿಗೂಡಿಸಿದ್ದರು. ಆದರೆ ಇದೀಗ ದೇವರಾಜೇಗೌಡ ಈ ನಾಲ್ವರನ್ನು ಉಲ್ಲೇಖಿಸಿ ಆರೋಪಿಸಿರುವುದು ಸಹಜವಾಗಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. +ದೇವರಾಜೇಗೌಡ ಈ ಹಿಂದೆಯೂ ಡಿ.ಕೆ. ಶಿವಕುಮಾರ್‌ ಗೆ ಸಂಬಂಧಿಸಿದ ಆಡಿಯೋ ಬಿಡುಗಡೆ ಮಾಡಿದ್ದರು. ಎಲ್‌.ಆರ್‌.ಶಿವರಾಮೇಗೌಡ ಜೊತೆಗೆ ನಡೆಸಿದ ಮಾತುಕತೆ ಹಾಗೂ ಇದೇ ಸಂದರ್ಭದಲ್ಲಿ ಡಿಕೆಶಿ ಜೊತೆಗೂ ನಡೆಸಿದ ಮಾತುಕತೆಯ ಆಡಿಯೋ ಬಿಡುಗಡೆ ಮಾಡಿದ್ದರು. ಆದರೆ ಇದರ ಪೂರ್ತಿ ವಿವರವನ್ನು ಅವರು ಬಹಿರಂಗಪಡಿಸಿರಲಿಲ್ಲ. +ಈ ಆಡಿಯೋ ಬಿಡುಗಡೆಯ ಬೆನ್ನಲ್ಲೇ ದೇವರಾಜೇಗೌಡ ಅವರನ್ನು ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ. ಇದೀಗ ಅವರು ಪೊಲೀಸ್‌‍ ಕಸ್ಟಡಿಯಲ್ಲಿದ್ದಾರೆ. ಈ ನಡುವೆ ಅವರು ರಾಜ್ಯದ ನಾಲ್ವರು ಸಚಿವರ ವಿರುದ್ಧ ಗಂಭೀರ ಸ್ವರೂಪದ ಆರೋಪವನ್ನು ಮಾಡಿದ್ದಾರೆ.ಇನ್ನು ಬಿಜೆಪಿ ಈ ಆರೋಪವನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. \ No newline at end of file diff --git a/eesanje/url_46_142_1.txt b/eesanje/url_46_142_1.txt new file mode 100644 index 0000000000000000000000000000000000000000..c7827665c364551b08d7e6c118395d45c6122e57 --- /dev/null +++ b/eesanje/url_46_142_1.txt @@ -0,0 +1,5 @@ +92ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು +ಬೆಂಗಳೂರು,ಮೇ 18– ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇಂದು 91 ವರ್ಷವನ್ನು ಪೂರೈಸಿದ್ದು, 92 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇಂದು ಬೆಳಿಗ್ಗೆ ದೇವೇಗೌಡರು ತಮ ಹುಟ್ಟುಹಬ್ಬದ ನಿಮಿತ್ತ ಜೆ.ಪಿ.ನಗರದ ತಿರುಮಲಗಿರಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. +ಈ ಸಂದರ್ಭದಲ್ಲಿ ದೇವೇಗೌಡರ ಪುತ್ರ ಬಾಲಕೃಷ್ಣೇಗೌಡ ಗೌಡರ ಜೊತೆಗಿದ್ದರು. ಕಾರಣಾಂತರಗಳಿಂದ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ. ಜೆಡಿಎಸ್‌‍ನ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ತಾವಿದ್ದಲ್ಲಿಯೇ ಹಾರೈಸಬೇಕು ಎಂದು ಗೌಡರು ಕೋರಿದ್ದರು. ಅಲ್ಲದೆ, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌‍, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಬದ್ಧತೆಯಿಂದ ಪಕ್ಷ ಸಂಘಟನೆಯ ಕರ್ತವ್ಯ ನಿರ್ವಹಿಸಬೇಕು ಎಂದು ಕೋರಿದ್ದರು. +ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರ ಹಾಗೂ ರಾಜ್ಯದ ಹಲವು ಗಣ್ಯರು ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ದೇವೇಗೌಡರು ರಾಷ್ಟ್ರಕ್ಕೆ ಸಲ್ಲಿಸಿರುವ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಕುರಿತಂತೆ ಗೌಡರು ಹೊಂದಿರುವ ಒಲವು ಗಮನಾರ್ಹವಾಗಿದೆ. ಅವರಿಗೆ ದೀರ್ಘವಾದ ಆಯಸ್ಸು, ಆರೋಗ್ಯ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. +ಬೆಂಗಳೂರು ಮಹಾನಗರ ಜೆಡಿಎಸ್‌‍ ಪಕ್ಷದ ವತಿಯಿಂದ ಜೆ.ಪಿ.ಭವನದಲ್ಲಿಂದು ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಪಕ್ಷದ ಹಲವು ಮುಖಂಡರು ಪಾಲ್ಗೊಂಡು ಗೌಡರಿಗೆ ಶುಭ ಕೋರಿದರು.ಅದೇ ರೀತಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು. \ No newline at end of file diff --git a/eesanje/url_46_142_10.txt b/eesanje/url_46_142_10.txt new file mode 100644 index 0000000000000000000000000000000000000000..63cd6124698a1cca03ebee86e35f6ee7293bac44 --- /dev/null +++ b/eesanje/url_46_142_10.txt @@ -0,0 +1,11 @@ +ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸರ್ಕಾರ ಆಕ್ಟಿವ್, ಅಧಿಕಾರಿಗಳ ಜೊತೆ ಸಿಎಂ-ಡಿಸಿಎಂ ಮೀಟಿಂಗ್ +ಬೆಂಗಳೂರು,ಮೇ 17-ಕರ್ನಾಟಕದ ಎಲ್ಲಾ ಕ್ಷೇತ್ರಗಳಿಗೂ ಲೋಕಸಭಾ ಚುನಾವಣೆ ಪೂರ್ಣಗೊಂಡಿದ್ದರೂ ನೀತಿ ಸಂಹಿತೆ ವಿನಾಯಿತಿಗೊಳ್ಳದ ಕಾರಣ ಆಡಳಿತ ವ್ಯವಸ್ಥೆ ಮೇಲೆ ಭಾರೀ ಪರಿಣಾಮ ಬೀರಿದ್ದು, ಜಿಡ್ಡುಗಟ್ಟಿದ ವ್ಯವಸ್ಥೆಯನ್ನು ಚುರುಕುಗೊಳಿಸುವ ಸಲುವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಯೋಜನೆಗಳ ಪ್ರಗತಿ ಬಗ್ಗೆ ವಿವರಣೆ ನೀಡಿದರು. +ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೃಷಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. +ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಘೋಯಲ್‌, ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಆಯುಕ್ತರು, ನಿರ್ದೇಶಕರು ಹಾಜರಿದ್ದು, ಬಜೆಟ್‌ ಯೋಜನೆಗಳ ಪ್ರಗತಿಯ ಕುರಿತು ಮಾಹಿತಿ ನೀಡಿದ್ದಾರೆ.ಪಂಚಖಾತ್ರಿ ಯೋಜನೆಗಳು ಚಾಲ್ತಿಯಲ್ಲಿವೆ. ಅದೇ ರೀತಿ ರಾಜ್ಯಸರ್ಕಾರ ಯೋಜನಾ ವೆಚ್ಚಕ್ಕೆ 55 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. +ಚುನಾವಣಾ ನೀತಿ ಸಂಹಿತೆಯ ಕಾರಣಕ್ಕಾಗಿ ಬಹಳಷ್ಟು ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಅಧಿಕಾರಿಗಳು ಪ್ರತಿಯೊಂದಕ್ಕೂ ನೀತಿ ಸಂಹಿತೆಯ ನೆಪ ಹೇಳುತ್ತಿದ್ದು, ಆಡಳಿತ ವ್ಯವಸ್ಥೆ ದಿಕ್ಕು ತಪ್ಪಿದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಇಂದಿನ ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ವಿವರಣೆ ನೀಡುವ ಮೂಲಕ ಯೋಜನೆಗಳ ಪ್ರಗತಿ ಬಗ್ಗೆ ಚರ್ಚೆ ನಡೆಸಿದರು. +ಬರ ನಿರ್ವಹಣೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದು, ಮೇವು ಲಭ್ಯತೆ, ಗೋ ಶಾಲೆಗಳ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಸಮಾಲೋಚನೆ ನಡೆಸಿದರು. +ನೀತಿ ಸಂಹಿತೆಯ ನೆಪದಲ್ಲಿ ಆಡಳಿತ ಯಂತ್ರ ತಟಸ್ಥವಾಗುವುದು ಸಹನೀಯವಲ್ಲ. ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಕಾಲಿಕವಾಗಿ ಸ್ಪಂದಿಸಬೇಕು. ಈಗಾಗಲೇ ಚುನಾವಣೆ ಮುಗಿದಿರುವುದರಿಂದ ಚುನಾವಣಾ ಕರ್ತವ್ಯ ನಿಯೋಜನೆ ಎಂದು ಕಾರಿಗೆ ಬೋರ್ಡ್‌ ಹಾಕಿಕೊಂಡು ತಿರುಗಾಡಿ ಕಾಲಾಹರಣ ಮಾಡುವುದು ಸರಿಯಲ್ಲ. ಸಚಿವರು, ಶಾಸಕರು ಪ್ರಶ್ನಿಸುವುದಿಲ್ಲ ಎಂಬ ಕಾರಣಕ್ಕಾಗಿ ಮನಸೋ ಇಚ್ಛೆ ನಡೆದುಕೊಳ್ಳುವುದನ್ನು ಗಮನಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. +ಕರ್ನಾಟಕದ ಮೇಲೆ ಕೆಂಗಣ್ಣು :ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ.16 ರಿಂದ ಜೂ.4 ರವರೆಗೂ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಸರಿಸುಮಾರು 80 ದಿನಗಳ ಕಾಲದ ಈ ಪ್ರಕ್ರಿಯೆಯಲ್ಲಿ ಅಧಿಕಾರಿಗಳದೇ ದರ್ಬಾರ್‌ ಎಂಬಂತಾಗಿದೆ. ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಆಯಾ ರಾಜ್ಯಗಳಲ್ಲಿರುವ ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿರುವ ಕಡೆ ನೀತಿ ಸಂಹಿತೆಯನ್ನು ಭಾಗಶಃ ಸಡಿಲಗೊಳಿಸಿದೆ. +ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ, ಛತ್ತೀಸ್‌‍ಗಡ, ಗೋವಾ, ಗುಜರಾತ್‌, ಕೇರಳ, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್‌, ರಾಜಸ್ಥಾನ್‌, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದೆ. +ಹೀಗಾಗಿ ಅಲ್ಲಿ ಭಾಗಶಃ ನೀತಿ ಸಂಹಿತೆ ಸಡಿಲಗೊಂಡಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದೆ. ಆಡಳಿತಾತಕ ದೃಷ್ಟಿಯಿಂದ ಹಾಗೂ ಬರ ನಿರ್ವಹಣೆ ಕಾರಣಕ್ಕೆ ನೀತಿ ಸಂಹಿತೆಯನ್ನು ಸಡಿಲಿಕೆ ಮಾಡುವಂತೆ ಹಲವು ಸಚಿವರು ಪತ್ರ ಬರೆದಿದ್ದಾರೆ. ಆದರೆ ಅದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹೀಗಾಗಿ ರಾಜ್ಯದಲ್ಲಿ ಜನಪ್ರತಿನಿಧಿಗಳು ಆಡಳಿತ ವ್ಯವಸ್ಥೆಯಿಂದ ವಿಮುಖರಾಗಿ ನಿಲ್ಲುವಂತಹ ಪರಿಸ್ಥಿತಿ ಬಂದಿದೆ. +ಬಿಸಿತುಪ್ಪವಾದ ಸಿದ್ದರಾಮಯ್ಯ :ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಸಿ ತುಪ್ಪವಾಗಿದ್ದಾರೆ.ಇಲ್ಲಿ ಜಾರಿಗೊಳ್ಳುವ ಜನಪರ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ವ್ಯಾಪಕ ಚರ್ಚೆಗಳಾಗುತ್ತಿವೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳೂ ಕೂಡ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ವಿಚಾರ ಮಂಥನಕ್ಕೆ ಗ್ರಾಸವಾಗಿವೆ.ಈ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಅನಾಪೇಕ್ಷಣೆಯಾದಂತಹ ಒತ್ತಡಗಳು ಹೆಚ್ಚುತ್ತಲೇ ಇದೆ ಎಂಬ ಆಕ್ಷೇಪಗಳಿವೆ. \ No newline at end of file diff --git a/eesanje/url_46_142_11.txt b/eesanje/url_46_142_11.txt new file mode 100644 index 0000000000000000000000000000000000000000..99006f65df030627bbb56372f5fd50e668192f3d --- /dev/null +++ b/eesanje/url_46_142_11.txt @@ -0,0 +1,11 @@ +ಪ್ರಜ್ವಲ್‌ ರೇವಣ್ಣನನ್ನು ಕರೆತಂದು ಬಂಧಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ : ಪರಮೇಶ್ವರ್ +ಬೆಂಗಳೂರು,ಮೇ 17-ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆತಂದು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾದಳ, ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ, ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ ಎಂದು ಹೇಳುವುದಿಲ್ಲ, ನಮಗೆ ಇದರ ಅರಿವಿದೆ. ಆದರೆ ನಮಗೂ ಜವಾಬ್ದಾರಿಯಿದೆ. ನಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು. +ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಕರೆತಂದು ಬಂಧಿಸಿ ಕಾನೂನು ಕ್ರಮ ಜರುಗಿಸುವವರೆಗೂ ಪ್ರಕ್ರಿಯೆಗಳು ಚಾಲನೆಯಲ್ಲಿರುತ್ತವೆ. ಅದು ಯಾವ ಕಾರಣಕ್ಕೂ ನಿಧಾನವಾಗುವುದಿಲ್ಲ. ಇಂತಹ ಪ್ರಕರಣವನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದರು. +ಎಸ್‌‍ಐಟಿಯ ತನಿಖಾ ವರದಿ ಗೃಹಸಚಿವರಿಗಿಂತಲೂ ಮೊದಲೇ ಮಂಡ್ಯದ ಸಂಸದರಿಗೆ ತಲುಪುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಕುಮಾರಸ್ವಾಮಿಯವರಿಗೆ ಆಡಳಿತ ವ್ಯವಸ್ಥೆಯ ಅರಿವಿರುತ್ತದೆ. +ಮಂಡ್ಯ ಶಾಸಕರಿಗೆ ಯಾವ ಅಧಿಕಾರಿ ಬ್ರೀಫಿಂಗ್‌ ಮಾಡುತ್ತಾರೋ? ಗೊತ್ತಿಲ್ಲ. ಸಾಮಾನ್ಯವಾಗಿ ಮುಖ್ಯಮಂತ್ರಿಯವರಿಗೆ ಹಾಗೂ ಗೃಹಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡುತ್ತಿರುತ್ತಾರೆ. ಕುಮಾರಸ್ವಾಮಿ ಹಾಗೂ ಬಿಜೆಪಿಯ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಯಾವುದೇ ಮುಲಾಜಿಗೂ ಒಳಗಾಗದೇ ನಿಸ್ಪಕ್ಷಪಾತ ತನಿಖೆ ನಡೆಸುತ್ತೇವೆ. ತನಿಖೆ ಪ್ರಗತಿಯಲ್ಲಿರುವುದರಿಂದ ಎಲ್ಲಾ ವಿಚಾರವನ್ನು ಬಹಿರಂಗಪಡಿಸುವುದೂ ಕೂಡ ಸೂಕ್ತವಲ್ಲ ಎಂದು ಹೇಳಿದರು. +ಆರೋಪಿ ಬಂಧನ :ಹುಬ್ಬಳ್ಳಿಯ ಅಂಜಲಿ ಪ್ರಕರಣದಲ್ಲಿ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಇಂತಹ ಕೊಲೆ ಪ್ರಕರಣಗಳಲ್ಲಿ ಯಾವುದೇ ಮುಲಾಜು ನೀಡುವುದಿಲ್ಲ. ಆರೋಪಿಗಳಿಗೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು. +ಅಂಜಲಿ ಕುಟುಂಬದ ಸದಸ್ಯರು ಆರೋಪಿಯಿಂದ ಆತಂಕ ಇರುವ ಬಗ್ಗೆ ಪೊಲೀಸ್‌‍ ಅಧಿಕಾರಿಗಳಿಗೆ ಮೌಖಿಕ ಮಾಹಿತಿ ನೀಡಿದ್ದರು. ಲಿಖಿತ ದೂರು ನೀಡಿರಲಿಲ್ಲ ಎಂಬ ವರದಿ ಇದೆ. ಒಂದು ವೇಳೆ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೇ ಇದ್ದರೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಮೇಲ್ನೋಟಕ್ಕೆ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್‌ ಸೇರಿದಂತೆ ಕೆಲವರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಅಗತ್ಯ ಶಿಸ್ತು ಕ್ರಮವನ್ನೂ ಜರುಗಿಸಲಾಗುವುದು ಎಂದು ತಿಳಿಸಿದರು. +ಹುಬ್ಬಳ್ಳಿಯಲ್ಲಿ ಪದೇಪದೇ ಈ ರೀತಿಯ ಪ್ರಕರಣಗಳು ಘಟಿಸುತ್ತಿರುವುದಕ್ಕೆ ಕಾರಣವೇನು ಎಂಬುದನ್ನು ಕಂಡುಹಿಡಿಯಲು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಎಡಿಜಿಪಿ ಅವರನ್ನು ಈಗಾಗಲೇ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಅವರು ನನಗೆ ವರದಿ ನೀಡಿದ್ದಾರೆ. ಕಾರಣವನ್ನು ಕಂಡುಹಿಡಿಯಲು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದ. ಸಾಧ್ಯವಾದರೆ ತಾವೂ ಕೂಡ ಹುಬ್ಬಳ್ಳಿಗೆ ಭೇಟಿ ನೀಡುವುದಾಗಿ ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಮಳೆಯಾಗಿದೆ. ಆದರೆ ಬರದ ಪರಿಣಾಮ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ಚರ್ಚೆಗಳು ನಡೆಯುವ ಸಾಧ್ಯತೆಗಳಿವೆ ಎಂದರು. +ತಮ ಕೊರಟಗೆರೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಾಗಿದ್ದವರು ನನ್ನ ಜೊತೆ ಫೋಟೊ ತೆಗೆಸಿಕೊಂಡು ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಹಲವರಿಂದ ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಯಾವುದೇ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುವಂತೆ ತಾವು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು. \ No newline at end of file diff --git a/eesanje/url_46_142_12.txt b/eesanje/url_46_142_12.txt new file mode 100644 index 0000000000000000000000000000000000000000..5d820e0c91c7b938498dfc9035a485ef54c259fc --- /dev/null +++ b/eesanje/url_46_142_12.txt @@ -0,0 +1,6 @@ +ಅತ್ಯಾಚಾರ ಪ್ರಕರಣ : ಬಿಜೆಪಿ ಮುಖಂಡ ದೇವರಾಜೇಗೌಡಗೆ ನ್ಯಾಯಾಂಗ ಬಂಧನ +ಬೆಂಗಳೂರು,ಮೇ17-ಮಹಿಳೆಯ ಮೇಲೆ ಅತ್ಯಾಚಾರ ಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮೂರು ದಿನಗಳಿಂದ ಪೊಲೀಸ್‌‍ ವಶದಲ್ಲಿದ್ದ ಅವರನ್ನು ಹಾಸನ ಪೊಲೀಸರು ಇಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ದೇವರಾಜೇಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತು. +ಪ್ರಕರಣದ ಹಿನ್ನೆಲೆ:ದೇವರಾಜೇಗೌಡ ವಿರುದ್ಧ ಏಪ್ರಿಲ್‌ 1ರಂದು ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. +ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್‌ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್‌ ಮಾಡಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು. +ಪ್ರಜ್ವಲ್‌ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್‌‍ ಸಂಸದರಿಗೆ ಲೋಕಸಭೆ ಟಿಕೆಟ್‌ ನೀಡದಂತೆ ಆಗ್ರಹಿಸಿದ್ದರು. +2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ, ಹೊಳೆನರಸೀಪುರ ಶಾಸಕ ಹೆಚ್‌.ಡಿ.ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯ ಕಾಂಗ್ರೆಸ್‌‍ ನಾಯಕರನ್ನು ದೂರಿದ್ದರು.ಇತ್ತೀಚೆಗೆ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲೂ ದೇವರಾಜೇಗೌಡ ಭಾರೀ ಸದ್ದು ಮಾಡಿದ್ದರು. \ No newline at end of file diff --git a/eesanje/url_46_142_2.txt b/eesanje/url_46_142_2.txt new file mode 100644 index 0000000000000000000000000000000000000000..0da90df9e73ac0ecc1299ec932e464f91810fa90 --- /dev/null +++ b/eesanje/url_46_142_2.txt @@ -0,0 +1,6 @@ +ಗೃಹಸಚಿವರ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸುತ್ತಿದ್ದ ಝಬೇರ್‌ನನ್ನ ಉಚ್ಚಾಟಿಸಿದ ಕಾಂಗ್ರೆಸ್‌‍ +ಕೊರಟಗೆರೆ, ಮೇ 18-ಗೃಹ ಸಚಿವ ಡಾ.ಜಿ. ಪರಮೇಶ್ವರ ಹೆಸರನ್ನು ದುರ್ಬಳಿಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿರುವ ಮಹಮದ್‌ ಝಬೇರ್‌ ರನ್ನು ಸಚಿವರ ಆದೇಶದಂತೆ ಕಾಂಗ್ರೆಸ್‌‍ ಪಕ್ಷದಿಂದ ಉಚ್ಚಾಟಿಸಿ ಪದವಿಯನ್ನು ವಜಾಗೊಳಿಸಲಾಗಿದೆ ಎಂದು ನಗರ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್‌ ತಿಳಿಸಿದರು. +ಪಟ್ಟಣದ ರಾಜೀವ್‌ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರಟಗೆರೆ ಪಟ್ಟಣದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮದ್‌ ಝಬೇರ್‌ ಬೆಂಗಳೂರು ಸೇರಿದಂತೆ ಹಲವು ಕಡೆ ಗೃಹ ಸಚಿವರ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಅವರ ಜೊತೆಯಲ್ಲಿ ಹಿಂದೆ ಅವರು ಶಾಸಕರಾಗಿದ್ದ ಕಾಲದಲ್ಲಿ ತೆಗೆಸಿಕೊಂಡಿದ್ದ ಪೋಟೋವನ್ನು ತೋರಿಸಿ ವಂಚಿಸಿರುವುದಾಗಿ ತಿಳಿದುಬಂದಿದೆ. +ಇಂತಹ ವಂಚಕರನ್ನು ಗೃಹ ಸಚಿವರು ಎಂದೂ ಕ್ಷಮಿಸುವುದಿಲ್ಲಾ. ಆರೋಪಿ ಝಬೇರ್‌ ರಾಜ್ಯಪಾಲರ ಲೆಟರ್‌, ಅಧಿಕಾರಿಗಳ ಸಹಿ ಮತ್ತು ಹೆಸರುಗಳನ್ನು ಸಹ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ಗೊತ್ತಾಗಿದ್ದು ಆದ್ದರಿಂದ ಈ ಕೂಡಲೆ ಅವನನ್ನು ಪಕ್ಷದಿಂದ ವಜಾಗೊಳಿಸಿ ಉಚ್ಚಾಟಿಸಲಾಗಿದೆ ಎಂದರು. +ತಾಲೂಕು ಅಲ್ಪಸಂಖ್ಯಾತ ಮುಖಂಡ ಮಹಮದ್‌ ಮಕ್ತಿಯಾರ್‌ ಮಾತನಾಡಿ ಝಬೇರ್‌ನ ಮಾಡಿರುವ ವಂಚನೆ ಅಪರಾಧಗಳನ್ನು ನಮ್ಮ ಧರ್ಮದವರು ಸೇರಿದಂತೆ ಪಕ್ಷದವರು ಸಹಿಸುವುದಿಲ್ಲ ಎಂದರು. ಮಹಿಳಾ ಘಟಕದ ಅಧ್ಯಕ್ಷೆ ಜಯಮ ಮತ್ತು ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌‍ ಆಧ್ಯಕ್ಷ ಅರಕೆರೆ ಶಂಕರ್‌ ಮಾತನಾಡಿದರು. +ಗೋಷ್ಠಿಯಲ್ಲಿ ಪ.ಪಂ.ಸದಸ್ಯರಾದ ಎ.ಡಿ. ಬಲರಾಮಯ್ಯ, ಕೆ.ಆರ್‌.ಓಬಳರಾಜು, ನಾಗರಾಜು, ನಂದೀಶ್‌, ಪಕ್ಷದ ಮುಖಂಡರಾದ ಮಹಾಲಿಂಗಪ್ಪ, ಗಣೇಶ್‌, ನಾಜೀರ್‌ ಅಹಮದ್‌, ಕವಿತಾ, ಲಕ್ಷೀದೇವಮ, ಸುಮಾ, ನಾಸೀರ್‌, ಇಸಾಯಿಲ್‌, ಇರ್ಷಾದ್‌, ಜಮೀರ್‌, ಮುರಳಿ, ಯುವಕಾಂಗ್ರೆಸ್‌‍ನ ವಿನಯ್‌ಕುಮಾರ್‌, ಅರವಿಂದ್‌, ದೀಪಕ್‌, ರಘುವೀರ್‌, ಎರ್‌ಟೆಲ್‌ ಗೋಪಿ ಸೇರಿದಂತೆ ಇನ್ನಿತರರು ಹಾಜರಿದ್ದರು. \ No newline at end of file diff --git a/eesanje/url_46_142_3.txt b/eesanje/url_46_142_3.txt new file mode 100644 index 0000000000000000000000000000000000000000..76f4b622a14f06a38014729dcc1e3c3a4041a2c2 --- /dev/null +++ b/eesanje/url_46_142_3.txt @@ -0,0 +1,5 @@ +ಟ್ರ್ಯಾಕ್ಟರ್‌-ಖಾಸಗಿ ಬಸ್‌‍ ನಡುವೆ ಭೀಕರ ಅಪಘಾತ, ನಾಲ್ವರ ಸಾವು +ಕೊಪ್ಪಳ,ಮೇ 18-ಟ್ರ್ಯಾಕ್ಟರ್‌ ಹಾಗೂ ಖಾಸಗಿ ಬಸ್‌‍ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುನಿರಾಬಾದ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ಕೊಪ್ಪಳ ಜಿಲ್ಲೆ ಯಲಬುರ್ಗ ತಾಲೂಕಿನ ಕರಮುಡಿ ಗ್ರಾಮದ ಬಸವರಾಜು (22), ತೇಜಸ್‌‍ (22), ದುರುಗಮ (65) ಹಾಗೂ ಗದಗ ಜಿಲ್ಲೆಯ ತಿಮಾಪುರ ಗ್ರಾಮದ ಕೊಂಡಪ್ಪ (60) ಮೃತಪಟ್ಟ ದುರ್ದೈವಿಗಳು. ಶಿವಪ್ಪ ಎಂಬುವರು ಹರಕೆ ತೀರಿಸುವ ಸಲುವಾಗಿ 30 ಮಂದಿ ಸಂಬಂಧಿಕರನ್ನು ಕರೆದುಕೊಂಡು ಕೊಪ್ಪಳ ತಾಲೂಕಿನ ಹುಲಿಗೆಮದೇವಿ ದೇವಸ್ಥಾನಕ್ಕೆ ಟ್ರ್ಯಾಕ್ಟರ್‌ನಲ್ಲಿ ನಿನ್ನೆ ಬಂದು ಹರಕೆ ತೀರಿಸಿ ರಾತ್ರಿ ವಾಪಸ್ಸಾಗುತ್ತಿದ್ದರು. +ಈ ಸಂದರ್ಭದಲ್ಲಿ ಹೊಸಲಿಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಹಿಂದಿನಿಂದ ಅತೀ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ಸು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. +ಸುದ್ದಿ ತಿಳಿದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮುನಿರಾಬಾದ್‌ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತವೆಸಗಿದ ಬಸ್‌‍ ಚಾಲಕ ಪರಾರಿಯಾಗಿದ್ದು, ಆತನ ಶೋಧ ಕಾರ್ಯ ಮುಂದುವರೆದಿದೆ. \ No newline at end of file diff --git a/eesanje/url_46_142_4.txt b/eesanje/url_46_142_4.txt new file mode 100644 index 0000000000000000000000000000000000000000..4122cc9b0016fd927c34cc08e2fc46f0f1ffb5c4 --- /dev/null +++ b/eesanje/url_46_142_4.txt @@ -0,0 +1,3 @@ +ರಾಜ್ಯದ ಹಾದಿಬೀದಿಯಲ್ಲಿ ಕೊಲೆ, ಗೃಹ ಇಲಾಖೆ ನಿದ್ದೆ ಮಾಡುತ್ತಿದೆಯೇ?: ಜೆಡಿಎಸ್ ವಾಗ್ದಾಳಿ +ಬೆಂಗಳೂರು,ಮೇ 18-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಜೆಡಿಎಸ್‌‍ ಆರೋಪಿಸಿದೆ.ಈ ಸಂಬಂಧ ಎಕ್ಸ್ ನಲ್ಲಿ ಪತ್ರಿಕೆಯೊಂದರಲ್ಲಿ ಕೊಲೆ, ಅತ್ಯಾಚಾರಗಳಿವೆ ಸಂಬಂಧಿಸಿದಂತೆ ವರದಿಯಾಗಿರುವುದನ್ನು ಪೋಸ್ಟ್‌ ಮಾಡಿರುವ ಜೆಡಿಎಸ್‌‍, ರಾಜ್ಯ ಗೃಹ ಇಲಾಖೆ ಎನ್ನುವುದು ಕೆಲಸ ಮಾಡುತ್ತಿದೆಯೇ? ಅಥವಾ ನಿದ್ದೆ ಮಾಡುತ್ತಿದೆಯೇ? ದಯಮಾಡಿ ಹೇಳುವಿರಾ? ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಅವರನ್ನು ಪ್ರಶ್ನಿಸಿದೆ. +ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿ ಇದೆ. ಕೇವಲ ನಾಲ್ಕು ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ. ಜನರಿಗೆ ನೆಮ್ಮದಿಯ ಗ್ಯಾರಂಟಿ ಇಲ್ಲ ಎಂದು ವಾಗ್ದಾಳಿ ನಡೆಸಿದೆ. \ No newline at end of file diff --git a/eesanje/url_46_142_5.txt b/eesanje/url_46_142_5.txt new file mode 100644 index 0000000000000000000000000000000000000000..b495dba785c4f4a379a736dac194543842526265 --- /dev/null +++ b/eesanje/url_46_142_5.txt @@ -0,0 +1,10 @@ +ವಿಧಾನಪರಿಷತ್‌ ಚುನಾವಣೆ : ಮತದಾರರಿಗೆ ಆಮಿಷ.. ?! +ಬೆಂಗಳೂರು,ಮೇ17-ಲೋಕಸಭಾ ಚುನಾವಣೆ-2024ರ ಫಲಿತಾಂಶಕ್ಕೆ ಒಂದು ದಿನದ ಮೊದಲು ಅಂದರೆ ಜೂನ್‌ 3ರಂದೇ ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ತಲಾ ಮೂರು ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಗೆಲುವಿಗೆ ಪರಿಷತ್ತು ಚುನಾವಣೆಯಲ್ಲಿ ಒಂದು ವರ್ಗದ ಅಭ್ಯರ್ಥಿಗಳು ಅನೈತಿಕ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. +ಇತ್ತೀಚೆಗಷ್ಟೇ ಮುಗಿದ ಲೋಕಸಭೆ ಚುನಾವಣೆ ವೇಳೆ ಮತದಾರರನ್ನು ಓಲೈಸಲು ಹಲವು ಕಡೆಗಳಲ್ಲಿ ಉಡುಗೊರೆ ಮತ್ತು ನಗದಿನ ಆಮಿಷಗಳನ್ನು ಮತದಾರರಿಗೆ ಒಡ್ಡಲಾಗಿದೆ ಎಂದು ಹೇಳಲಾಗುತ್ತಿದೆ. +ಈ ಬಾರಿ ವಿಧಾನಪರಿಷತ್‌ ಚುನಾವಣೆಯಲ್ಲಿ ಕೂಡ ಕೆಲವು ಅಭ್ಯರ್ಥಿಗಳ ವಿರುದ್ಧ ಇದೇ ರೀತಿಯ ತಂತ್ರವನ್ನು ಅಳವಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಕೌನ್ಸಿಲ್‌ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವ ಕಡಿಮೆ ಸಂಖ್ಯೆಯಲ್ಲಿರುವ ಮತದಾರರನ್ನು ತಲುಪಲು ಉಡುಗೊರೆ, ನಗದು ಆಮಿಷಗಳು ಸುಲಭ ಮಾರ್ಗಗಳಾಗಿವೆ.ಮತದಾರರನ್ನು ಪಟ್ಟಿಗೆ ಸೇರಿಸಲು ಉಪಕ್ರಮ ಕೈಗೊಂಡಿರುವ ಕೆಲವರು, ಗಾಲಾ ಪಾರ್ಟಿಗಳನ್ನು ಆಯೋಜಿಸಿದ್ದಾರೆ ಎಂದು ಮೂಲಗಳು ಹೇಳಿವೆ. +ಮೊನ್ನೆ ಬಿಜೆಪಿ ಕಾರ್ಯಕರ್ತರಿಗೆ ಆನೇಕಲ್‌ನಲ್ಲಿ ಗೋದಾಮಿನಲ್ಲಿ ಬೆಂಗಳೂರು ಪದವೀಧರರ ಪರಿಷತ್ತಿನ ಅಭ್ಯರ್ಥಿಗೆ ಸೇರಿದ ಉಡುಗೊರೆ ಬಾಕ್‌್ಸಗಳನ್ನು ದಾಸ್ತಾನು ಮಾಡಿರುವುದು ಪತ್ತೆಯಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಗೋದಾಮಿನ ಮೇಲೆ ದಾಳಿ ನಡೆಸಿದಾಗ ಅಭ್ಯರ್ಥಿಗಳು ಮತದಾರರಿಗೆ ನಗದು ಹಂಚಲು ಗೋದಾಮು ನಡೆಸಲಾಗುತ್ತಿದೆ ಎಂದು ನಾಯಕರೊಬ್ಬರು ಆರೋಪಿಸಿದ್ದಾರೆ. +ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿರುವ ರಾಜಕೀಯ ಮುಖಂಡರೂ ಆಗಿರುವ ಶಿಕ್ಷಕರೊಬ್ಬರು, ಕಳೆದ ಬಾರಿ ಅಭ್ಯರ್ಥಿಯೊಬ್ಬರು ಪ್ರತಿ ಮತಕ್ಕೆ 5,000 ರೂ. ಹಂಚಿದ್ದರು. ಈ ಬಾರಿ 10 ಸಾವಿರ ರೂ ನೀಡುತ್ತಿದ್ದಾರೆ. ದಕ್ಷಿಣ ಶಿಕ್ಷಕರಂತಹ ಕೆಲವು ಕೌನ್ಸಿಲ್‌ ಸ್ಥಾನಗಳಲ್ಲಿ, ಪ್ರತಿ ಮತಕ್ಕೆ 25,000 ರೂ. ನೀಡುತ್ತಿದ್ದಾರೆ. +ಒಬ್ಬ ಅಭ್ಯರ್ಥಿಯು ಅರ್ಧದಷ್ಟು ಮತದಾರರನ್ನು ಅಕ್ರಮ ಮಾರ್ಗಗಳ ಮೂಲಕ ತಲುಪಿದರೆ ಮತ್ತು ಅವರ ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆಯುವುದು ಖಚಿತವಾಗಿದ್ದರೆ, ಅವರ ಗೆಲುವು ಬಹುತೇಕ ಖಚಿತವಾಗಿರುತ್ತದೆ. ಸುಮಾರು 20 ವರ್ಷಗಳ ಹಿಂದೆ ಅಭ್ಯರ್ಥಿಗಳು ಅಂಚೆ ಕಾರ್ಡ್‌ಗಳನ್ನು ಕಳುಹಿಸುವ ಮೂಲಕ ಮತ ಕೇಳುತ್ತಿದ್ದರು ಎಂದು ಹೇಳುತ್ತಾರೆ. +ಲೋಕಸಭೆ ಚುನಾವಣೆಗಿಂತ ಭಿನ್ನವಾಗಿ, ಪರಿಷತ್‌ ಚುನಾವಣೆಯಲ್ಲಿ ವೆಚ್ಚದ ಮೇಲೆ ಯಾವುದೇ ಮಿತಿಯಿಲ್ಲ ಮತ್ತು ಅಭ್ಯರ್ಥಿಗಳು ಭಾರತೀಯ ಚುನಾವಣಾ ಆಯೋಗದ ಮುಂದೆ ಅದನ್ನು ಸಲ್ಲಿಸುವ ಸಾಧ್ಯತೆಯಿಲ್ಲ. ಎಲ್ಲಾ ವೆಚ್ಚದಲ್ಲಿಯೂ ಗೆಲುವು ಸಾಧಿಸಲು ದೊಡ್ಡ ಮೊತ್ತವನ್ನು ಖರ್ಚು ಮಾಡುವ ಉದ್ದೇಶ ಹೊಂದಿರುವ ಕೆಲವು ಅಭ್ಯರ್ಥಿಗಳಿಗೆ ಇದು ವರದಾನವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. +ಉಚಿತವಾಗಿ ಹಣ ಹಂಚಿಕೆ ಮಾಡುವುದು ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳು ಭ್ರಷ್ಟ ಪದ್ಧತಿಗಳಡಿ ಬರುತ್ತದೆ. ಗೋದಾಮುಗಳಲ್ಲಿ ಉಚಿತ ಉಡುಗೊರೆಗಳನ್ನು ಹಂಚಲು ವಸ್ತುಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದರೆ ದಾಳಿ ನಡೆಸುತ್ತೇವೆ. ಚುನಾವಣಾ ಪ್ರಚಾರಕ್ಕಾಗಿ ಕಾನೂನು ವೆಚ್ಚಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ಯಾವುದೇ ಮಿತಿಯಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ. +ಕಾಂಗ್ರೆಸ್‌‍ ವಿರುದ್ಧ ಬಿಜೆಪಿ ದೂರು: ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ ಅವರು ಮತದಾರರಿಗೆ ಆಮಿಷವೊಡ್ಡಲು ಉಡುಗೊರೆ ಹಂಚಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ನಾಯಕರು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. \ No newline at end of file diff --git a/eesanje/url_46_142_6.txt b/eesanje/url_46_142_6.txt new file mode 100644 index 0000000000000000000000000000000000000000..0a698490fc5ef6919d8e88c88cc5d8c41718bd53 --- /dev/null +++ b/eesanje/url_46_142_6.txt @@ -0,0 +1,8 @@ +ಹೆಚ್.ಡಿ.ರೇವಣ್ಣ ಮಧ್ಯಂತರ ಜಾಮೀನು ಸೋಮವಾರದವರಿಗೆ ಮುಂದುವರಿಕೆ +ಬೆಂಗಳೂರು,ಮೇ17-ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಸ್ವೀಕಾರದ ಕುರಿತ ಮೇ.20ಕ್ಕೆ ಎಸಿಎಂಎಂ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ. +ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ತೀರ್ಪು ಕಾಯ್ದಿರಿಸಿದ್ದು ಎಚ್ ಡಿ ರೇವಣ್ಣ ಅವರ ಮಧ್ಯಂತರ ಜಾಮೀನನ್ನ ಮೇ.20 ರ ವರೆಗೆ ಮುಂದುವರೆಸಿದೆ. ನಿನ್ನೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ರೇವಣ್ಣ ಅವರಿಗೆ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು ಮಧ್ಯಾಹ್ನ ಮತ್ತೆ ವಿಚಾರಣೆ ಕೈಗೆತ್ತಿಕೊಂಡಾಗ ಎಸ್‍ಐಟಿ ಪರ ವಕೀಲರಾದ ಜಾಯ್ನಾ ಕೊಠಾರಿ ಅವರು ಪ್ರಬಲ ವಾದ ಮಂಡಿಸಿ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. +ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ದಾಖಲಾದ 354 ಸೆಕ್ಷನ್ ಹಾಕಲಾಗಿತ್ತು. ಸಂತ್ರಸ್ತೆ ವಿಚಾರಣೆ ಬಳಿಕ 376 ಸೆಕ್ಷನ್ ಸೇರಿಸಲಾಗಿದೆ ಎಂದು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಆರೋಪಗಳು ಮತ್ತು ನಲ್ಲಿ ದಾಖಲಾದ ಅಂಶಗಳ ವಿವರಗಳನ್ನು ನ್ಯಾಯಾಲಯಕ್ಕೆ ನೀಡಿದರು. +ಇಬ್ಬರ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದ್ದು, ದೂರು ವಿಭಜಿಸಲು ಸಾಧ್ಯವಿಲ್ಲ. ಜಾಮೀನು ಅರ್ಜಿ ಮ್ಯಾಜಿಸ್ಟ್ರೇಟ್ ಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. 376 ಸೆಕ್ಷನ್‍ನಡಿ ದಾಖಲಾಗಿರುವುವದರಿಂದ 436 ಅಡಿ ಜಾಮೀನು ಅರ್ಜಿ ಊರ್ಜಿತವಾಗುವುದಿಲ್ಲ. ಇದು ಜಾಮೀನು ರಹಿತ ಅಪರಾಧ. ಆರೋಪ ಪಟ್ಟಿ ಸಲ್ಲಿಸಿದ ನಂತರವೇ ಯಾರ ಮೇಲೆ ಏನು ಆರೋಪ ಎಂದು ತಿಳಿಯಲಿದೆ. ಇಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಹೀಗಾಗಿ ಜಾಮೀನು ನೀಡಬಾರದೆಂದು ಹೇಳಿದರು. +ಎಸ್‍ಐಟಿ ಪರ ವಕೀಲರಾದ ಅಶೋಕ್ ನಾಯಕ್ ವಾದ ಮಂಡಿಸಿ, ಎಚ್.ಡಿ.ರೇವಣ್ಣ ಅವರು ಪ್ರಭಾವಿ ರಾಜಕಾರಣಿ. ಅವರಿಗೆ ಮಧ್ಯಂತರ ಜಾಮೀನು ನೀಡಬಾರದಿತ್ತು ಎಂದು ಹೇಳಿದಾಗ, ಇದನ್ನು ನೀವು ಮೇಲಿನ ಕೋರ್ಟ್‍ನಲ್ಲಿ ಪ್ರಶ್ನಿಸಬಹುದೆಂದು ನ್ಯಾಯಾ„ೀಶರು ಹೇಳಿದರು. ಇಬ್ಬಿಬ್ಬರು ಸರ್ಕಾರಿ ಪರ ಅಭಿಯೋಜಕರು ವಾದ ಮಂಡಿಸುತ್ತಿರುವುದಕ್ಕೆ ಎಚ್.ಡಿ.ರೇವಣ್ಣ ಪರ ವಕೀಲರಾದ ಸಿ.ವಿ.ನಾಗೇಶ್ ಆಕ್ಷೇಪ ವ್ಯಕ್ತಪಡಿಸಿದರು.ನನ್ನ ಕ್ಷಕ್ಷಿದಾರರಾದ ರೇವಣ್ಣ ವಿರುದ್ಧ ಜಾಮೀನು ನೀಡಬಹುದಾದಂತಹ ಪ್ರಕರಣಗಳು ದಾಖಲಾಗಿದೆ. +ಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲೂ ಜಾಮೀನು ನೀಡಬಹುದಾಗಿದೆ. ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಬೇಕೆಂದು ಎಂದು ಮನವಿ ಮಾಡಿದರು. ರೇವಣ್ಣ ವಿರುದ್ದ ಎ-ïಐಆರ್ ದಾಖಲಿಸಿರುವುದೇ ಕಾನೂನು ಬಾಹಿರ ಸಂತ್ರಸ್ಥ ಮಹಿಳೆ ಹೊಳೆನರಸೀಪುರ ಠಾಣೆಗೆ ಹೋಗಿಯೇ ಇಲ್ಲ,ಬೆಂಗಳೂರಿಗೆ ಬಂದಿದ್ದ ಸಬ್‍ಇನ್‍ಸ್ಪೆಕ್ಟರ್‍ರೊಬ್ಬರು ದೂರು ಪಡೆದುಕೊಂಡಿದ್ದಾರೆ,ತಮಗೆ ತೋಚಿದ ರೀತಿಯಲ್ಲಿ ದೂರು ಬರೆಸಿಕೊಂಡಿದ್ದಾರೆ,ಲೈಂಗಿಕ ದೌರ್ಜನ್ಯ ಬೇರೆ,ಅತ್ಯಾಚಾರ ಬೇರೆ,ಆ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಂದು ಹೇಳುವುದಕ್ಕೇ ಬರುವುದಿಲ್ಲ ,ಇದು ಟೈಪ್ ಮಾಡಿ ಸಿದ್ದಪಡಿಸಿಕೊಂಡಿರುವ ದೂರು ಎಂದು ಪ್ರಭಲ ವಾದ ಮಂಡಿಸಿದರು. +ಸಂತ್ರಸ್ಥೆ ನೀಡಿರುವ ದೂರಿನಲ್ಲಿ ಸಾಕಷ್ಟು ವ್ಯತ್ಯಾಸವಿದೆ,ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಅವರಿಗೆ ಮನೆ ಖಾಲಿ ಮಾಡಿ ನಾಲ್ಕೂವರೆ ವರ್ಷ ಆದ ಮೇಲೆ ಗೊತಾಗಿದೆ ಎಂದು ದೂರಿನಲ್ಲಿರುವ ವ್ಯತ್ಯಾಸದ ಬಗ್ಗೆ ಎಳೆಎಳೆಯಾಗಿ ಬಿಡಿಸಿಟ್ಟರು. ಚುನಾವಣಾ ಸಂದರ್ಭದಲ್ಲಿ ಈ ಆರೋಪ ಕೇಳಿಬಂದಿರುವುದರಿಂದ ಇದು ರಾಜಕೀಯ ಷಡ್ಯಂತ್ರದ ಭಾಗವಾಗಿದೆ ಎಂದರು ಆರಂಭದಲ್ಲಿ 376 ಸೆಕ್ಷನ್ ಹಾಕಿಲ್ಲ ಎಂದು ಉಲೇಕಿಸಿ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್ ಪಡೆಯಲಾಗಿತ್ತು ಆದರೆ ಈಗ 376 ಇದೆ ಎಂದು ಹೇಳಲಾಗುತ್ತಿದೆ ಆಗಾಗಿದ್ದರೆ ನಾವು ನಿರೀಕ್ಷಣಾ ಜಾಮೀನಿನ ಅರ್ಜಿ ವಾಪಸ್ ಪಡೆಯುತ್ತಿರಲಿಲ್ಲ ಎಂದು ಹೇಳಿದರು .ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ಮೇ20ಕ್ಕೆ ತೀರ್ಪು ಕಾಯ್ದಿರಿಸಿತು. \ No newline at end of file diff --git a/eesanje/url_46_142_7.txt b/eesanje/url_46_142_7.txt new file mode 100644 index 0000000000000000000000000000000000000000..7bd125d11acaa7ca0c5ffb864d94fe1aba6d1b20 --- /dev/null +++ b/eesanje/url_46_142_7.txt @@ -0,0 +1,11 @@ +ಜು.1 ರಿಂದ ನೂತನ ಕಾನೂನುಗಳ ಅನುಷ್ಠಾನ : ಬಿ.ದಯಾನಂದ +ಬೆಂಗಳೂರು,ಮೇ 17-ಐಪಿಸಿ, ಸಿಆರ್‌ಪಿಸಿ ಸೇರಿದಂತೆ ದೇಶದ ಕಾನೂನುಗಳು ಬದಲಾವಣೆಯಾಗಿದ್ದು, ಜುಲೈ 1 ರಿಂದ ಜಾರಿಯಾಗಲಿರುವ ನೂತನ ಕಾನೂನುಗಳ ಅನುಷ್ಠಾನಕ್ಕೆ ನಗರದ ಎಲ್ಲಾ ಪೊಲೀಸ್‌‍ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಿದ್ಧರಾಗಬೇಕೆಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. +ನಗರದ ಆಡುಗೋಡಿಯಲ್ಲಿನ ಸಿಎಆರ್‌ ಸೌತ್‌ ಕವಾಯತು ಮೈದಾನದಲ್ಲಿ ಇಂದು ಏರ್ಪಡಿಸಿದ್ದ ಮಾಸಿಕ ಕವಾಯತಿನಲ್ಲಿ ವಂದನೆಯನ್ನು ಸ್ವೀಕರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಪೂರ್ವದಿಂದಲೂ ಜಾರಿಯಲ್ಲಿದ್ದ ಐಪಿಸಿ, ಸಿಆರ್‌ಪಿಸಿ ಮತ್ತು ಸಾಕ್ಷ್ಯ ಕಾಯ್ದೆ ಬದಲಾಗಿ ಕೇಂದ್ರ ಸರ್ಕಾರ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಸಂಹಿತೆಯನ್ನು ರಚಿಸಿದ್ದು, ಅವು ಕಾನೂನಿನ ಸ್ವರೂಪ ಪಡೆದುಕೊಂಡು ಜು.1 ರಿಂದ ಅನುಷ್ಠಾನಗೊಳ್ಳಲಿವೆ ಎಂದರು. +ಈ ನೂತನ ಕಾನೂನುಗಳ ಪರಿಕರಗಳಲ್ಲಿ ಹೊಸ ಸೆಕ್ಷನ್‌ಗಳೇನು? ಹೊಸ ಮತ್ತು ಹಳೆ ಸೆಕ್ಷನ್‌ಗಳಲ್ಲಿನ ಬದಲಾವಣೆ ಹಾಗೂ ವ್ಯತ್ಯಾಸದ ಬಗ್ಗೆ ತಿಳಿದುಕೊಳ್ಳಬೇಕು. ದೇಶದಲ್ಲಿ ಒಂದು ಬಾರಿ ಕಾನೂನು ಅನುಷ್ಠಾನವಾದ ಮೇಲೆ ಅದನ್ನು ಸಂಪೂರ್ಣವಾಗಿ ಪರಿಪಾಲನೆ ಮಾಡಬೇಕಾಗಿರುವುದು ನಮ ಕರ್ತವ್ಯ ಮತ್ತು ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು. +ಜುಲೈ 1 ರ ಪೂರ್ವವಾಗಿಯೇ ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಬೆಂಗಳೂರು ನಗರದ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿ ಕೊಡಲಾಗಿದೆ. ಮುಂದಿನ 15 ದಿನಗಳಲ್ಲಿ ಮತ್ತಷ್ಟು ಜನರಿಗೆ ತರಬೇತಿ ಪ್ರಾರಂಭವಾಗಲಿದೆ ಎಂದು ಹೇಳಿದರು. +ಇದರಲ್ಲಿ ಮುಖ್ಯವಾಗಿ ಎಸಿಪಿ ಮಟ್ಟದ ಅಧಿಕಾರಿಗಳು ತಮ ಉಪವಿಭಾಗದ ಅಧೀನದಲ್ಲಿರುವ ಎಲ್ಲಾ ಪೊಲೀಸ್‌‍ ಠಾಣೆಗಳ ಮತ್ತು ಫೋಕಸ್‌‍ ಗ್ರೂಪ್‌ ಅಧಿಕಾರಿಗಳಿಗೆ, ಸಬ್‌ ಇನ್‌್ಸಪೆಕ್ಟರ್‌ಗಳಿಗೆ ಐಒ ಮತ್ತು ಐಒ ಅಸಿಸ್ಟೆಂಟ್‌ಗಳು ಮತ್ತು ಸ್ಟೇಷನ್‌ ರೈಟರ್‌ಗಳಾದ ನಾಲ್ಕು ಅಥವಾ ಐದು ಸಿಬ್ಬಂದಿಗಳಿಗೆ ಅರಿವು ಮೂಡಿಸಬೇಕಾಗುತ್ತದೆ ಎಂದರು. +ಅಭಿಯೋಜನಾ ಅಧಿಕಾರಿಗಳು, ನ್ಯಾಯಾಲಯದ ಅಧಿಕಾರಿಗಳು ಅಥವಾ ಸ್ಥಳೀಯವಾಗಿರುವ ಕಾನೂನು ಕಾಲೇಜುಗಳ ನೆರವು ಪಡೆದು ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಇದರ ಜೊತೆಗೆ ಸೆಲ್‌್ಫ ಲರ್ನಿಂಗ್‌ ಮೂಲಕ ಈ ಕಾನೂನುಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು. ಇದು ಈಗಾಗಲೇ ಸಾರ್ವಜನಿಕವಾಗಿ ಮಾಹಿತಿ ಇದ್ದು, ಯುಟ್ಯೂಬ್‌ ಮತ್ತು ಇತರೆ ಆ್ಯಪ್‌ಗಳಲ್ಲೂ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು. +ಜೊತೆಗೆ ಕರ್ನಾಟಕ ಪೊಲೀಸ್‌‍ ಅಕಾಡೆಮಿ ಕೂಡ ಇದರ ಬಗ್ಗೆ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಿದ್ದು, ಇದು ಎಲ್ಲಾ ಪೊಲೀಸ್‌‍ ಠಾಣೆಗಳಿಗೆ ನೀಡಲಾಗಿದೆ. ಅವುಗಳನ್ನು ಓದಿ ಅರ್ಥೈಸಿಕೊಳ್ಳಿ. ಏನಾದರೂ ಸಂಶಯಗಳಿದ್ದರೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು. +ಜು.1 ರಿಂದ ಸಾರ್ವಜನಿಕರು ಪೊಲೀಸ್‌‍ ಠಾಣೆಗೆ ಬಂದು ದೂರು ನೀಡಿದರೆ, ನೂತನ ಕಾನೂನು ಮೂಲಕ ಪ್ರಕರಣ ದಾಖಲಿಸಬೇಕಾಗುತ್ತದೆ. ಯಾವ ಕಾಯಿದೆಯಡಿ ಪ್ರಕರಣ ದಾಖಲಿಸಬೇಕು ಎಂಬುದರ ಸಮಗ್ರ ಮಾಹಿತಿ ಜು.1 ರೊಳಗಾಗಿ ಯಾವುದೇ ಸಂಶಯವಿಲ್ಲದೆ ಎಲ್ಲಾ ಪೊಲೀಸ್‌‍ ಅಧಿಕಾರಿಗಳು ತಿಳಿದುಕೊಂಡಿರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. +ಸಾರ್ವಜನಿಕರಿಗೆ ಇದರಿಂದ ಯಾವುದೇ ಅನಾನಕೂಲ ಅಥವಾ ತೊಂದರೆಯಾಗದಂತೆ ಎಫ್‌ಐಆರ್‌ ದಾಖಲಿಸಬೇಕು. ಈ ಸಂಬಂಧ ನ್ಯಾಯಾಲಯಗಳಲ್ಲಿ ಇಲಾಖೆಗೆ ಯಾವುದೇ ಮುಜುಗರ ಉಂಟುಮಾಡದಂತೆ ಎಸಿಪಿ ಮಟ್ಟದ ಅಧಿಕಾರಿಗಳು ಗಮನ ವಹಿಸಬೇಕು ಎಂದು ಹೇಳಿದರು. +ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸುಸೂತ್ರವಾಗಿ ನಡೆದಿದೆ. ಇದಕ್ಕೆ ಸಹಕರಿಸಿದ ನ್ಯೂಡಲ್‌ ಅಧಿಕಾರಿಗಳು, ಡಿಸಿಪಿ, ಎಸಿಪಿ ಅಧಿಕಾರಿಗಳ ಉತ್ತಮ ಸಂಯೋಜನೆ ಕಾರಣವಾಗಿದೆ. ಈ ಎಲ್ಲಾ ಅಧಿಕಾರಿಗಳಿಗೆ ಆಯುಕ್ತರು ಅಭಿನಂದನೆ ಸಲ್ಲಿಸಿದರು. \ No newline at end of file diff --git a/eesanje/url_46_142_8.txt b/eesanje/url_46_142_8.txt new file mode 100644 index 0000000000000000000000000000000000000000..227a2a17321492c9a8e8304340913486979e1ba1 --- /dev/null +++ b/eesanje/url_46_142_8.txt @@ -0,0 +1,7 @@ +ಕಣ್ಣು-ಕಿವಿ, ಹೃದಯ ಇಲ್ಲದ, ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ : ಆರ್‌.ಅಶೋಕ್‌ ವಾಗ್ದಾಳಿ +ಬೆಂಗಳೂರು,ಮೇ17-ಕಣ್ಣು-ಕಿವಿ, ಹೃದಯ ಇಲ್ಲದ, ರೈತ ವಿರೋಧಿ ಕಾಂಗ್ರೆಸ್‌‍ ಸರ್ಕಾರ, ನರೇಗಾ ಹಾಗೂ ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದನ್ನು ತಪ್ಪಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣ ಸಾಲಕ್ಕೆ ಜಮೆ ಮಾಡದಂತೆ ಬ್ಯಾಂಕ್‌ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ. ಬ್ಯಾಂಕ್‌ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದು ಆಗ್ರಹಿಸಿದ್ದಾರೆ. +ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್‌ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದ್ದಾರೆ. +ಸಹಾಯಧನ ಘೋಷಿಸಿಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. +ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆಯನ್ನು ಉಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_142_9.txt b/eesanje/url_46_142_9.txt new file mode 100644 index 0000000000000000000000000000000000000000..e1dfaf8f9b2df1c032f22fa516042bea21bd9a6a --- /dev/null +++ b/eesanje/url_46_142_9.txt @@ -0,0 +1,6 @@ +12ನೇ ತರಗತಿ ಅಂಕಗಳನ್ನು ದಾಖಲಿಸಲು ಕೆಸಿಇಟಿಗೆ ಮೇ.20ರ ಗಡುವು +ಬೆಂಗಳೂರು,ಮೇ17-ಪ್ರಸಕ್ತ ಸಾಲಿನ ಯುಜಿಸಿಇಟಿ ಪರೀಕ್ಷೆ ಬರೆದಿರುವ ಸಿಬಿಎಸ್‌‍ಸಿ, ಸಿಐಎಸ್‌‍ಸಿಇ, ಐಜಿಸಿಎಸ್‌‍ಇ ಮುಂತಾದ ಸಂಸ್ಥೆಗಳಿಂದ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಹಾಗೂ ನಾಟಾ ಅಂಕಗಳನ್ನು ಮೇ 20ರೊಳಗಾಗಿ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ. +ಸಿಬಿಎಸ್‌‍ಸಿ ಸೇರಿದಂತೆ ವಿವಿಧ ಬೋರ್ಡ್‌ಗಳಲ್ಲಿ ಪ್ರಸಕ್ತ ಸಾಲಿನಲ್ಲಿ 12ನೇ ತರಗತಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಕೆಇಎ ಪೋರ್ಟಲ್‌ಗಳ ಮೂಲಕ ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಲು ಮತ್ತು ಮಾರ್ಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಲು ಸೂಚಿಸಿದೆ. +2024ಕ್ಕಿಂತ ಮೊದಲೇ ಅಂದರೆ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಮತ್ತು 12ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಸಹ ಅಂಕಗಳನ್ನು ದಾಖಲಿಸಲು ಸೂಚಿಸಲಾಗಿದೆ. +ಅರ್ಹತಾ ಕಂಡಿಕೆ, ಕ್ಲಾಸ್‌‍-ವೈ ಅನ್ನು ಆಯ್ಕೆ ಮಾಡಿರುವ ಅಭ್ಯರ್ಥಿಗಳು ಸಹ ಅಂಕಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಬೇಕಿದೆ. ಕರ್ನಾಟಕದ ದ್ವಿತೀಯ ಪಿಯುಸಿ 2024ರ ಪರೀಕ್ಷೆಯ ಅಂಕಗಳನ್ನು ಪ್ರಾಧಿಕಾರವು ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳಲಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. +ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ನಾಟಾ ಪರೀಕ್ಷೆಯ ಅಂಕಗಳನ್ನು ಅರ್ಹತೆಯ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಿದೆ. \ No newline at end of file diff --git a/eesanje/url_46_143_1.txt b/eesanje/url_46_143_1.txt new file mode 100644 index 0000000000000000000000000000000000000000..c3cb1e2b9ac6ac60e4cda6f47c8de99baf022805 --- /dev/null +++ b/eesanje/url_46_143_1.txt @@ -0,0 +1,11 @@ +ಪ್ರಜ್ವಲ್‌ ರೇವಣ್ಣ ಪೆನ್‌‍ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಚಿಂತನೆ +ಬೆಂಗಳೂರು,ಮೇ17-ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಎಸ್‌‍ಐಟಿನಿಂದ ಸಿಬಿಐಗೆ ವರ್ಗಾಯಿಸಲು ಚಿಂತನೆ ನಡೆದಿದೆ.ಎಸ್‌‍ಐಟಿ ತನಿಖಾ ವ್ಯಾಪ್ತಿ ಸೀಮಿತವಾಗಿರುವುದರಿಂದ ಪ್ರಕರಣದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರು, ಕೇಳಿಬಂದಿರುವುದರಿಂದ ಸಿಬಿಐಗೆ ವಹಿಸುವಂತೆ ಎಸ್‌‍ಐಟಿಗೆ ನಿರ್ದೇಶನ ನೀಡಬೇಕೆಂದು ಖುದ್ದು ಸಂತ್ರಸ್ತೆಯರೇ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ. +ಅಶ್ಲೀಲ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಸಂತ್ರಸ್ತ ಮಹಿಳೆಯರು ಎಸ್‌‍ಐಟಿನಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ನ್ಯಾಯಾಲಯಕ್ಕೆ ವಕೀಲರ ಮೂಲಕ ವಿಶೇಷ ಮೇಲನವಿ ಅರ್ಜಿಯನ್ನು ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. +ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಸದ್ಯ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಸದಕ್ಕೆ ಅವರು ಸ್ವದೇಶಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ವಿದೇಶದಲ್ಲಿರುವ ಯಾವುದೇ ಒಬ್ಬ ಆರೋಪಿಯನ್ನು ಕರೆತರಬೇಕಾದರೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಸಾಧ್ಯವಿಲ್ಲದ ಕಾರಣ ಪ್ರಜ್ವಲ್‌ ರೇವಣ್ಣನನ್ನು ಕರೆತರುವುದು ಸಿಬಿಐನಿಂದ ಮಾತ್ರ ಸಾಧ್ಯ ಎಂಬುದು ಸಂತ್ರಸ್ತರ ಅಭಿಪ್ರಾಯ. +ಪಶ್ಚಿಮ ಬಂಗಾಳದ ಸಂದೇಶ್‌ ಕಾಳಿ ಪ್ರಕರಣವನ್ನು ಮೊದಲು ಅಲ್ಲಿನ ಟಿಎಂಸಿ ಸರ್ಕಾರ ಸಿಬಿಐಗೆ ವಹಿಸಲು ಹಿಂದೇಟು ಹಾಕಿತ್ತು. ಕೊನೆಗೆ ಸಂತ್ರಸ್ತೆಯರು ಹೈಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿದ್ದರು. ಅಂತಿಮವಾಗಿ ಕೋಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ಆದೇಶಿಸಿತ್ತು. ಬಳಿಕ ಟಿಎಂಸಿ ಸರ್ಕಾರ ಇದನ್ನು ಪ್ರಶ್ನಿಸಿ, ಸುಪ್ರೀಂಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿತ್ತು. ಕೊನೆಗೆ ಕೋಲ್ಕತ್ತಾ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿಯಿತು. +ಇದೀಗ ಅಶ್ಲೀಲ ವಿಡಿಯೋದಲ್ಲಿ ಕೇಳಿಬಂದಿರುವ ಸಂತ್ರಸ್ತೆಯರು ಸಿಬಿಐ ತನಿಖೆಗೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರೂ ಅಂತಿಮವಾಗಿ ಸರ್ಕಾರದ ವ್ಯಾಪ್ತಿಯಲ್ಲೇ ಬರುವುದರಿಂದ ಕೆಲವು ಪ್ರಭಾವಿಗಳನ್ನು ಬಂಧಿಸಲು ಸಾಧ್ಯವಿಲ್ಲ ಎಂಬುದು ಸಂತ್ರಸ್ತರ ಅಳಲು. +ಅಲ್ಲದೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಬಿಡುಗಡೆ ಮಾಡಿರುವ ಆಡಿಯೋದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿತ್ತು. ಸಾಲದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಕರಣದ ತಿಮಿಂಗಲವೇ ಸರ್ಕಾರದಲ್ಲಿದೆ. ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ? ಅವರನ್ನೇ ಬಂಧಿಸಿದರೆ ಎಲ್ಲವೂ ಹೊರಬೀಳಲಿದೆ ಎಂದು ಒತ್ತಾಯಿಸಿದ್ದರು. +ಸಂಶಯದ ನಡೆ:ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‌‍ಡ್ರೈವ್‌ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನಡೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.ಹಾಸನದ ಸೈಬರ್‌ ಕ್ರೈಂ ಠಾಣೆಯಲ್ಲಿ ದಾಖಲಾದ 33/2024 ಪ್ರಕರಣಕ್ಕೆ ಹೊಸ ಹೆಸರು ಸೇರಿಸಿ ಇಬ್ಬರನ್ನು ಬಂಧಿಸಲಾಗಿದೆ. 6 ಮತ್ತು 7ನೇ ಆರೋಪಿಗಳಾಗಿ ಚೇತನ್‌ ಹಾಗೂ ಲಿಖಿತ್‌ ಬಂಧನವಾಗಿದೆ. +6 ಮತ್ತು 7ನೇ ಆರೋಪಿ ಬಂಧನವಾದರೂ ಮೊದಲ ಐದು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ, ಕಾಂಗ್ರೆಸ್‌‍ ಕಾರ್ಯಕರ್ತರಾದ ನವೀನ್‌ ಗೌಡ, ಚೇತನ್‌ ಹಾಗೂ ಪುಟ್ಟಿ ಆಲಿಯಾಸ್‌‍ ಪುಟ್ಟರಾಜ್‌‍ರನ್ನು ಎಸ್‌‍ಐಟಿ ಅಧಿಕಾರಿಗಳು ಈವರೆಗೂ ಬಂಧಿಸಿಲ್ಲ. ಅಲ್ಲದೇ ಪೆನ್‌‍ಡ್ರೈವ್‌ ಹೊಂದಿದ್ದ ಮೂಲ ವ್ಯಕ್ತಿಯಾಗಿರುವ ಸಂಸದನ ಮಾಜಿ ಕಾರು ಚಾಲಕನನ್ನೂ ಕೂಡ ತನಿಖಾ ತಂಡ ವಶಕ್ಕೆ ಪಡೆಯದೇ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. +ಮಾಜಿ ಶಾಸಕ ಪ್ರೀತಂಗೌಡ ಆಪ್ತ ಶರತ್‌ ಕೂಡ ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಹಾಸನದ ಮೂರನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಕಾರ್ತಿಕ್‌‍, ಚೇತನ್‌‍, ನವೀನ್‌ ಗೌಡ ಹಾಗೂ ಪುಟ್ಟರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. +ಜಾಮೀನು ಅರ್ಜಿ ವಜಾಗೊಂಡರೂ ಇವರ ಬಂಧನ ಮಾತ್ರ ಆಗಿಲ್ಲ. ಈಗಾಗಲೇ ಎಸ್‌‍ಐಟಿ ಎಲ್ಲಾ ಆರೋಪಿಗಳ ಮನೆ ಶೋಧ ನಡೆಸಿದೆ. ಇಷ್ಟಾದರೂ ವೀಡಿಯೋ ವೈರಲ್‌ ಮಾಡಿದ ಆರೋಪಿಗಳನ್ನು ಎಸ್‌‍ಐಟಿ ಬಂಧಿಸಿದೇ ಅಚ್ಚರಿ ಮೂಡಿಸಿದೆ.ಎಫ್‌‍ಐಆರ್‌ನಲ್ಲಿ ಹೆಸರಿದ್ದ ಐವರು ಆರೋಪಿಗಳ ಬಂಧನವಾಗದಿರುವ ಬಗ್ಗೆ ಜೆಡಿಎಸ್‌‍ ನಾಯಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆಯೇ ಐವರು ಆರೋಪಿಗಳ ಬಂಧನಕ್ಕೆ ಜೆಡಿಎಸ್‌‍ ಆಗ್ರಹಿಸಿತ್ತು. ಪ್ರಕರಣದ ತನಿಖೆ ಚುರುಕುಗೊಂಡರೂ ಆರೋಪಿಗಳ ಬಂಧನವಾಗದಿರುವ ಬಗ್ಗೆ ಚರ್ಚೆ ಶುರುವಾಗಿದೆ. \ No newline at end of file diff --git a/eesanje/url_46_143_10.txt b/eesanje/url_46_143_10.txt new file mode 100644 index 0000000000000000000000000000000000000000..834fad0cf60313f660900e5880c18f0f3a4fd200 --- /dev/null +++ b/eesanje/url_46_143_10.txt @@ -0,0 +1,4 @@ +ಜನ್ಮ ದಿನ ಆಚರಣೆ ಮಾಡಿಕೊಳ್ಳಲ್ಲ : ಹೆಚ್‌.ಡಿ.ದೇವೇಗೌಡರು +ಬೆಂಗಳೂರು, ಮೇ 16-ಕಾರಣಾಂತರಗಳಿಂದ ತಮ್ಮ ಜನ್ಮ ದಿನವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. +ಮೇ 18ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ನನ್ನ ಅಭಿಮಾನಿಗಳು ಹಾಗೂ ಜೆಡಿಎಸ್‌‍ ಪಕ್ಷದ ಕಾಯಕರ್ತರು ಇದ್ದಲ್ಲಿಯೇ ಶುಭ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಗೌಡರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌‍-ಬಿಜೆಪಿಯ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಅವರು ಸಲಹೆ ಮಾಡಿದ್ದಾರೆ.ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_143_11.txt b/eesanje/url_46_143_11.txt new file mode 100644 index 0000000000000000000000000000000000000000..56bc412af8ca5ca7c5fffc56558487416d195655 --- /dev/null +++ b/eesanje/url_46_143_11.txt @@ -0,0 +1,4 @@ +ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿಗೆ ಬಂಡಾಯದ ಬಿಸಿ +ಬೆಂಗಳೂರು, ಮೇ 16-ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌‍ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದು, ಬಂಡಾಯದ ಬಿಸಿ ಎದುರಿಸುವಂತಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ಸೇರಿದಂತೆ ಜೆಡಿಎಸ್‌‍ ಮತ್ತು ಬಿಜೆಪಿ ನಾಯಕರು ವಿವೇಕಾನಂದ ಅವರು ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದು, ಅಧಿಕೃತ ಮೈತ್ರಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. +ಆದರೆ, ನಿನ್ನೆ ಬಿಜೆಪಿ ಅಭ್ಯರ್ಥಿಯಾಗಿ ಇ.ಸಿ.ನಿಂಗರಾಜು ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿದ್ದರೂ ಬಿಜೆಪಿ ಬಿ ಫಾರಂ ನೀಡಿಲ್ಲ. ಈ ಕ್ಷೇತ್ರ ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸ್ವತಂತ್ರ ಸ್ಪರ್ಧೆ ಮಾಡಲಿದ್ದಾರೆ. ಇವರಿಬ್ಬರೂ ಮೈತ್ರಿ ಪಕ್ಷಗಳಿಗೆ ತಲೆನೋವಾಗಿದ್ದಾರೆ. +ಈ ನಡುವೆ ಮೈಸೂರಿನಲ್ಲಿ ನಿಂಗರಾಜು ಅವರನ್ನು ಆರ್‌.ಅಶೋಕ್ ಅವರು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.ಈ ಒಂದು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ನಿಂದ ತಲಾ ಒಬ್ಬರು ಬಂಡಾಯ ಅಭ್ಯರ್ಥಿಗಳಿರುವುದು ನಾಯಕರನ್ನು ಚಿಂತೆಗೀಡು ಮಾಡಿದೆ. ಮೇ 20ರವರೆಗೂ ನಾಮಪತ್ರ ವಾಪಸ್ಸು ಪಡೆಯಲು ಅವಕಾಶವಿದ್ದು, ಅಷ್ಟರಲ್ಲಿ ನಿಂಗರಾಜು ಹಾಗೂ ಶ್ರೀಕಂಠೇಗೌಡರ ಮನವೊಲಿಸುವರೆ ಎಂಬುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_143_12.txt b/eesanje/url_46_143_12.txt new file mode 100644 index 0000000000000000000000000000000000000000..649271e3a73705d3651e2eff88c4d788d9bd737b --- /dev/null +++ b/eesanje/url_46_143_12.txt @@ -0,0 +1,5 @@ +ಸಂಕಷ್ಟಗಳ ಪರಿಹಾರಕ್ಕಾಗಿ ದೇವರ ಮೊರೆ ಹೋದ ಮಾಜಿ ಸಚಿವ ಎಚ್‌.ಡಿ.ರೇವಣ್ಣ +ಬೆಂಗಳೂರು, ಮೇ 16-ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಸಂಕಷ್ಟ ಪರಿಹಾರಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ತಂದೆ ಮತ್ತು ತಾಯಿ ಅವರ ಆಶೀರ್ವಾದ ಪಡೆದ ಬಳಿಕ ಅವರು, ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ್ದರು. ಇಂದು ಬೆಳ್ಳಿಗ್ಗೆ ಜಯನಗರದಲ್ಲಿರುವ ವಿನಾಯಕ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.. +ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣದಲ್ಲಿ ಅವರನ್ನು ಎಸ್‌‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡಿದ್ದರಿಂದ ನ್ಯಾಯಾಂಗ ಬಂಧನದಲ್ಲಿದ್ದ ರೇವಣ್ಣ ಅವರು ಮಂಗಳವಾರ ಮಧ್ಯಾಹ್ನ ಜೈಲಿನಿಂದ ಬಿಡುಗಡೆಯಾಗಿದ್ದರು. +ಬೆಂಗಳೂರಿನ ತಮ್ಮ ಮನೆಗೆ ಭೇಟಿ ನೀಡಿದ್ದ ಹಲವು ಅಭಿಮಾನಿಗಳೊಂದಿಗೆ ಮಾತಾಡುವಾಗ ಭಾವುಕರಾಗಿದ್ದ ರೇವಣ್ಣ ಅವರು ಇಂದು ಬೆಳಗ್ಗೆ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. +ಮಹಾನ್‌ ದೈವಭಕ್ತರಾದ ರೇವಣ್ಣ ಅವರು ಆರೋಪ ಕೇಳಿಬರುವ ಮೊದಲಿನಿಂದಲೂ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸುವ ಪರಿಪಾಠವನ್ನು ಇಟ್ಟುಕೊಂಡಿದ್ದರು. ಅದೇ ರೀತಿ ಈಗಲೂ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. \ No newline at end of file diff --git a/eesanje/url_46_143_2.txt b/eesanje/url_46_143_2.txt new file mode 100644 index 0000000000000000000000000000000000000000..b655908a33d0f2dfeccc0da7f820d680556df7fa --- /dev/null +++ b/eesanje/url_46_143_2.txt @@ -0,0 +1,7 @@ +ಕಾಗದ-ಪತ್ರಗಳ ಸಮಿತಿ ಸಭೆಯಲ್ಲಿ ಭಾಗಿಯಾದ ಎಚ್‌.ಡಿ.ರೇವಣ್ಣ +ಬೆಂಗಳೂರು,ಮೇ17-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಇಂದು 2023-24ನೇ ಸಾಲಿನ ವಿಧಾನಸಭೆಯ ಮುಂದಿಡಲಾಗುವ ಕಾಗದ ಪತ್ರಗಳ ಸಮಿತಿ ಸಭೆ ವಿಧಾನಸೌಧದಲ್ಲಿ ಇಂದು ಜರುಗಿತು.ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಸಭೆಯನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ನಡೆಸದಂತೆ ವಿಧಾನಸಭಾಧ್ಯಕ್ಷರು ನಿರ್ದೇಶನ ನೀಡಿದ್ದರು. +ರಾಜ್ಯದಲ್ಲಿ ಎರಡು ಹಂತದ ಲೋಕಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ವಿವಿಧ ಸ್ಥಾಯಿಸಮಿತಿಗಳ ಸಭೆ ನಡೆಸಲು ಸಭಾಧ್ಯಕ್ಷರು ಅನುಮತಿ ನೀಡಿದ್ದ ಹಿನ್ನೆಲೆಯಲ್ಲಿ ಇಂದು ರೇವಣ್ಣ ಅವರು ತಮ ಅಧ್ಯಕ್ಷತೆಯಲ್ಲಿರುವ ಕಾಗದಪತ್ರಗಳ ಸಮಿತಿ ಸಭೆಯನ್ನು ನಡೆಸಿದರು. +ನ್ಯಾಯಾಲಯದಿಂದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ನಂತರ ಪ್ರತಿದಿನ ಒಂದಲ್ಲ ಒಂದು ದೇವಾಲಯಕ್ಕೆ ಭೇಟಿ ನೀಡಿ, ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ ಸಲ್ಲಿಸುತ್ತಿರುವ ರೇವಣ್ಣ ಅವರು, ಇಂದು ಮಧ್ಯಾಹ್ನ ಎಂದಿನಂತೆ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದರು. +ಪ್ರತಿಕ್ರಿಯೆ ನೀಡಲು ನಿರಾಕರಣೆ : +ಮಾಜಿ ಸಚಿವ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ವಿಧಾನಸೌಧದಲ್ಲಿ ನಡೆದ 2023-24ನೇ ಸಾಲಿನ ವಿಧಾನಸಭೆಯ ಮುಂದಿಡಲಾಗುವ ಕಾಗದಪತ್ರಗಳ ಸಮಿತಿ ಸಭೆಯ ನಂತರ ಸುದ್ದಿಗಾರರು ರೇವಣ್ಣ ಅವರ ಪ್ರತಿಕ್ರಿಯೆ ಕೇಳಲು ಮುಂದಾದಾಗ ಏನೂ ಮಾತನಾಡುವುದಿಲ್ಲ ಎಂದಷ್ಟೇ ಹೇಳಿದರು. +ವಿಷಯ ನ್ಯಾಯಾಲಯದಲ್ಲಿ ಇರುವಾಗ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಕಾಗದಪತ್ರಗಳ ಸಮಿತಿಯ ಅಧ್ಯಕ್ಷರ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದರು. \ No newline at end of file diff --git a/eesanje/url_46_143_3.txt b/eesanje/url_46_143_3.txt new file mode 100644 index 0000000000000000000000000000000000000000..4560e0e881446ba0aff94547592fd7e2b15b0447 --- /dev/null +++ b/eesanje/url_46_143_3.txt @@ -0,0 +1,5 @@ +ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ : ಬೊಮ್ಮಾಯಿ +ಹುಬ್ಬಳ್ಳಿ, ಮೇ 17-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಿಕ್ಕೆ ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿನ ಕೊಲೆಯಾದ ಅಂಜಲಿ ನಿವಾಸಕ್ಕೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು. +ಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ ಆಗಿದೆ. ಆರೋಪಿಗಳಿಗೆ ಕಾನೂನಿನ ಭವೂ ಇಲ್ಲ, ಪೊಲೀಸರ ಭಯವೂ ಇಲ್ಲದಂತಾಗಿದ್ದು, ಏನು ಮಾಡಿದರೂ ನಡೆಯುತ್ತೆ ಅನ್ನೋ ಭಾವನೆ ಮೂಡಿದೆ. ನೇಹಾ ಪ್ರಕರಣ ನಡೆದ ನಂತರವೂ ಪೊಲೀಸರು ಎಚ್ಚೆತ್ತುಕೊಂಡಿಲ್ಲ. ಸಿಎಂ ಸೇರಿ ಇತರ ನಾಯಕರು ದೊಡ್ಡ ದೊಡ್ಡ ಮಾತುಗಳನ್ನಾಡಿದರು. ಏನೂ ಮಾಡದೆ ಇರೋ ಪರಿಣಾಮ ಈ ಹತ್ಯೆ ನಡೆದಿದ್ದು ಆರೋಪಿ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ ಎಂದರು. +ಪೊಲೀಸರೇ ಪರೋಕ್ಷವಾಗಿ ಇಂತಹ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣ. ಪೊಲೀಸ್‌‍ ಠಾಣೆಗಳು ಇರುವುದಾದರೂ ಯಾಕೆ…? ಪ್ರಶ್ನೆ ಮಾಡಿದ ಅವರು ವಿರೋಧ ಪಕ್ಷದವರು ಹೇಳಿಕೆ ಕೊಟ್ಟರೆ ರಾಜಕೀಯ ಅಂತಾರೆ, ಇಷ್ಟೆಲ್ಲಾ ಕೊಲೆ ನಡೆದರೂ ನಾವು ಬಾಯಿ ಮುಚ್ಕೊಂಡು ಕೂರಬೇಕೇ? ಎಂದು ಪ್ರಶ್ನಿಸಿದ ಅವರು, ನಿಮ ಕೈಯಲ್ಲಿ ಕಾನೂನು ಕಾಪಾಡಲು ಆಗೋಲ್ಲ ಅಂದ್ರೆ ಕೂಡಲೇ ಜಾಗ ಖಾಲಿ ಮಾಡಿ ಎಂದರು. +ಪೊಲೀಸರ ಅಮಾನತಿನಿಂದ ಈ ಪ್ರಕರಣಕ್ಕೆ ನ್ಯಾಯ ಸಿಗುತ್ತೆಯೇ..? ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ರಚನೆ ಮಾಡಬೇಕು. ಆರೋಪಿಗೆ ಗಲ್ಲು ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಅಂಜಲಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ನಮ ಹೋರಾಟವನ್ನು ಇಲ್ಲಿಗೇ ಕೈ ಬಿಡಲ್ಲ. ಇದೇ ರೀತಿ ಕೊಲೆ ಪ್ರಕರಣ ನಡೆದರೆ ಜನವೇ ಸರ್ಕಾರದ ವಿರುದ್ಧ ತಿರುಗಿ ಬೀಳ್ತಾರೆ ಎಂದು ಎಚ್ಚರಿಕೆೆ ನೀಡಿದ್ದಾರೆ. \ No newline at end of file diff --git a/eesanje/url_46_143_4.txt b/eesanje/url_46_143_4.txt new file mode 100644 index 0000000000000000000000000000000000000000..2c28140293c8c5d86e4b883b08a900ac25b6f169 --- /dev/null +++ b/eesanje/url_46_143_4.txt @@ -0,0 +1,5 @@ +ವಿಧಾನಪರಿಷತ್ 6 ಸ್ಥಾನಗಳಿಗೆ ಚುನಾವಣೆ : 103 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ +ಬೆಂಗಳೂರು,ಮೇ 17-ವಿಧಾನಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಗೆ 103 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದು, ಒಟ್ಟು 54 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. +ಮೇ 9 ರಿಂದ ನಿನ್ನೆಯವರೆಗೆ 100 ಪುರುಷರು, 100 ಮಹಿಳೆಯರು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಬಿಜೆಪಿ 5, ಕಾಂಗ್ರೆಸ್‌‍ 6, ಜೆಡಿಎಸ್‌‍ 2, ಆರ್‌ಯುಪಿಪಿ 7, ಪಕ್ಷೇತರರು 83 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. +ಒಟ್ಟು 156 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ಸಂಜೆ ವೇಳೆಗೆ ತಿರಸ್ಕೃತಗೊಂಡ ಹಾಗೂ ಒಪ್ಪಿತವಾದ ನಾಮಪತ್ರಗಳ ವಿವರವನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.ಜೂನ್‌ 3 ರಂದು 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 29, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 24, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 5, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10, ನೈರುತ್ಯ ಪದವೀಧರ ಕ್ಷೇತ್ರದಲ್ಲಿ 12, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_143_5.txt b/eesanje/url_46_143_5.txt new file mode 100644 index 0000000000000000000000000000000000000000..ce3c520c6425da4ca839db90175dc8bd1245a357 --- /dev/null +++ b/eesanje/url_46_143_5.txt @@ -0,0 +1,19 @@ +ಅಂಜಲಿ ಹಂತಕ ವಿಶ್ವ ಅರೆಸ್ಟ್, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ ಯತ್ನಿಸಿದಾಗ ಪ್ರಯಾಣಿಕರಿಂದ ಥಳಿತ +ಹುಬ್ಬಳ್ಳಿ, ಮೇ 17-ಅಂಜಲಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕ ಮತ್ತೊಬ್ಬ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿ ಸಿಕ್ಕಿ ಬಿದ್ದಿದ್ದಾನೆ. ನಿನ್ನೆ ಆರೋಪಿ ವಿಶ್ವ ಅಲಿಯಾಸ್‌‍ ಗಿರೀಶ್‌ ದಾವಣಗೆರೆಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಗಲಾಟೆ ಮಾಡಿ ಅವರಿಗೆ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ. +ತಕ್ಷಣ ಸಹ ಪ್ರಯಾಣಿಕರು ಆತನಿಗೆ ಹಿಗ್ಗಾಮುಗ್ಗ ಥಳಿಸಿದಾಗ ರೈಲಿನಿಂದ ಜಿಗಿದು ತಪ್ಪಿಸಿಕೊಳ್ಳುವ ಭರದಲ್ಲಿ ಹಳಿಬಳಿ ಬಿದ್ದು ಗಾಯಗೊಂಡಿದ್ದಾನೆ.ದಾವಣಗೆರೆ ರೈಲ್ವೆ ಪೊಲೀಸರು ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಆತನ ಪೂರ್ವಾಪರ ವಿಚಾರಿಸುತ್ತಿದ್ದಾಗ ಈತನೇ ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ವಿಶ್ವ ಎಂಬುದು ಗೊತ್ತಾಗಿದೆ. +ತಕ್ಷಣ ಈ ವಿಷಯವನ್ನು ರೈಲ್ವೆ ಪೊಲೀಸರು ಹುಬ್ಬಳ್ಳಿ ಪೊಲೀಸರಿಗೆ ತಿಳಿಸುತ್ತಾರೆ. ರಾತ್ರಿಯೇ ಪೊಲೀಸರು ದಾವಣಗೆರೆಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸೌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಲಿಸಿದ್ದಾರೆ. +ಆಯುಕ್ತರ ಭೇಟಿ:ಇಂದು ಬೆಳಗ್ಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್‌‍ ಆಯುಕ್ತೆ ರೇಣುಕಾ ಸುಕುಮಾರ ಅವರು ಕಿಮ್ಸೌ ಆಸ್ಪತ್ರೆಗೆ ಭೇಟಿ ನೀಡಿ ಆರೋಪಿಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. +ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿ, ಬೆಂಡಿಗೇರಿ ಪೊಲೀಸ್‌‍ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ರಚನೆ ಮಾಡಿದ್ದೆವು. ನಿನ್ನೆ ರೈಲ್ವೆ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದರು. +ಆರೋಪಿ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಆತ ಸದ್ಯ ಕೋಮ ಸ್ಥಿತಿಯಲ್ಲಿದ್ದಾನೆ. ರೈಲಿನಿಂದ ಏಕೆ ಕೆಳಗೆ ಬಿದ್ದ ಎಂಬುದನ್ನು ಆತನ ಹೇಳಿಕೆ ನಂತರವಷ್ಟೇ ತಿಳಿಯಬಹುದಾಗಿದೆ ಎಂದು ಅವರು ತಿಳಿಸಿದರು. +ಮಹಾರಾಷ್ಟ್ರದಿಂದ ತಲೆಮರೆಸಿಕೊಳ್ಳಲು ಯತ್ನ:ಆರೋಪಿಯನ್ನು ಇಂದು ಬೆಳಗಿನ ಜಾವ 4.30ರ ಸುಮಾರಿಗೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಮೈಸೂರಿನಿಂದ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ. ಆತನ ಮೇಲೆ ನಾಲ್ಕು ಬೈಕ್‌ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ. +ಮೊಬೈಲ್‌ ಬಳಸುತ್ತಿರಲಿಲ್ಲ:ಆರೋಪಿ ವಿಶ್ವ ಮೊಬೈಲ್‌ ಬಳಕೆ ಮಾಡುತ್ತಿರಲಿಲ್ಲ. ಹಾಗಾಗಿ ಆತನನ್ನು ಹುಡುಕುವುದು ಪೊಲೀಸರಿಗೆ ಕಷ್ಟವಾಗಿತ್ತು. +ಪ್ರತಿಭಟನೆ ಕಾವು:ಅಂಜಲಿ ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ವಿವಿಧ ಮಠಾಧೀಶರು, ರಾಜಕೀಯ ಮುಂಡರು ಅಂಜಲಿ ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. +ಬಗೆದಷ್ಟು ಆರೋಪಿ ದುಷ್ಕೃತ್ಯ ಬಯಲು:ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಹಲವು ದುಷ್ಕೃತ್ಯಗಳು ಬಯಲಾಗುತ್ತಿವೆ.ಮದ್ಯವೆಸನಕ್ಕೆ ದಾಸನಾಗಿದ್ದ ಈತ ಹಲವು ಬಾರಿ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದನು. +ತಾಯಿ ಕಣ್ಣೀರು:ಮಗನ ಅಪರಾಧಗಳನ್ನು ನೋಡಿ ನೊಂದಿದ್ದ ಆರೋಪಿಯ ತಾಯಿ ಸವಿತಾ ಅವರು, ಪ್ರತಿನಿತ್ಯ ಕಣ್ಣೀರು ಹಾಕುತ್ತಿದ್ದರು. ಹೊಟ್ಟೆಪಾಡಿಗಾಗಿ ಹೊಟೇಲ್‌ನಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. +ಮನೆ ಖಾಲಿ ಮಾಡಲು ಒತ್ತಡ:ಮತ್ತೊಂದು ಕಡೆ ಮನೆ ಮಾಲೀಕರು ಮನೆ ಖಾಲಿ ಮಾಡುವಂತೆ ಆರೋಪಿಯ ತಾಯಿಗೆ ಒತ್ತಡ ಹಾಕಿ ಮನೆಗೆ ಬೀಗ ಹಾಕಿದ್ದಾರೆ.ಆರೋಪಿ ವಿಶ್ವ ಯಾವಾಗಲಾದರೂ ಒಮೆ ಮಾತ್ರ ತಾಯಿಯನ್ನು ನೋಡಲು ಬರುತ್ತಿದ್ದ. ಈತನ ತಾಯಿಯ ಮುಖ ನೋಡಿಕೊಂಡು ಜನರು ಸುಮನಾಗುತ್ತಿದ್ದರು.ಆದರೆ ಅಂಜಲಿ ಹತ್ಯೆ ಬಳಿಕ ಇಲ್ಲಿನ ಜನರು ಆರೋಪಿಯನ್ನು ಎನ್‌ಕೌಂಟರ್‌ ಮಾಡಬೇಕೆಂದು ಆಕ್ರೋಶ ಹೊರಹಾಕಿದ್ದಾರೆ. +ವಿಶ್ವ ಅಲಿಯಾಸ್‌‍ ಗಿರೀಶ್‌ ಬಂಧಿತ ಆರೋಪಿ. ಈತ ಕಳ್ಳತನ ಪ್ರವೃತ್ತಿ ಬೆಳೆಸಿಕೊಂಡಿದ್ದಲ್ಲದೆ, ಅಮಾಯಕ ಯುವತಿಯರನ್ನೇ ಟಾರ್ಗೆಟ್‌ ಮಾಡಿ ಮೋಸ ಮಾಡುತ್ತಿದ್ದುದು ತನಿಖೆಯಿಂದ ಬೆಳಕಿಗೆ ಬಂದಿದೆ. +ಮೇ 15ರಂದು ಮುಂಜಾನೆ 5.30ರ ಸುಮಾರಿನಲ್ಲಿ ಅಂಜಲಿ ಮನೆ ಬಳಿ ಹೋಗಿ ಬಾಗಿಲು ತಟ್ಟಿದ್ದು, ಕದ ತೆಗೆಯುತ್ತಿದ್ದಂತೆಯೇ ಅಂಜಲಿ ಮೇಲೆ ಏಕಾಏಕಿ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದನು. +ಈ ಪ್ರಕರಣ ಹುಬ್ಬಳ್ಳಿ ಜನತೆಯನ್ನು ಬೆಚ್ಚಿ ಬೀಳಿಸಿತ್ತು. ಹಂತಕನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪೊಲೀಸರು ಆತನ ಬಂಧನಕ್ಕೆ ವಿವಿಧ ರಸ್ತೆಗಳಲ್ಲಿನ ಸಿಸಿ ಕ್ಯಾಮರಾ ಪರಿಶೀಲಿಸಿ ಆತನ ಬಂಧನಕ್ಕೆ ಒಂದು ತಂಡ ಮೈಸೂರಿನಲ್ಲಿ ಮತ್ತೊಂದು ತಂಡ ದಾವಣಗೆರೆಯಲ್ಲಿ ಆರೋಪಿಗಾಗಿ ಹುಡುಕಾಟ ನಡೆಸುತ್ತಾ ಹಲವು ಮಾಹಿತಿಗಳನ್ನು ಕಲೆಹಾಕಿದ್ದಾರೆ. +ದಾವಣಗೆರೆಯ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ರಾತ್ರಿ ಹಂತಕನನ್ನು ಬಂಧಿಸಿ ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ. ಆರೋಪಿಯು ಬೈಕ್‌ ಕಳ್ಳತನ ಪ್ರಕರಣದ ಆರೋಪಿಯಾಗಿದ್ದು, ಅಮಾಯಕ ಯುವತಿಯರ ಜೊತೆ ಪ್ರೀತಿಯ ನಾಟಕವಾಡಿ, ಅವರನ್ನು ಓಲೈಸಿಕೊಂಡು ನಂತರ ಅವರಿಂದ ಹಣ, ಬೆಳ್ಳಿ, ಬಂಗಾರ ಪಡೆದು ಮೋಸ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. +ಆರೋಪಿಯು ಅಂಜಲಿಯನ್ನು ಅದೇ ರೀತಿ ಓಲೈಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಆಕೆ ಆತನ ಪ್ರೀತಿಯನ್ನು ಒಪ್ಪದಿದ್ದಾಗ ನೇಹಾ ರೀತಿಯಲ್ಲೇ ಕೊಲೆ ಮಾಡೊದಾಗಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ. +ಈ ವಿಷಯವನ್ನು ಅಂಜಲಿ ತನ್ನ ಅಜ್ಜಿಗೆ ಹೇಳಿದ್ದರು. ಅಜ್ಜಿ ಬೆಂಡಿಗೇರಿ ಪೊಲೀಸ್‌‍ ಠಾಣೆಗೆ ಹೋಗಿ ವಿಶ್ವನ ಬಗ್ಗೆ ಹೇಳಿದರೂ, ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆರೋಪಿ ವಿಶ್ವ ಅಪರಾಧ ಹಿನ್ನೆಲೆವುಳ್ಳವನು ಎಂದು ಗೊತ್ತಿದ್ದರೂ ಪೊಲೀಸರು ಏಕೆ ನಿರ್ಲಕ್ಷ್ಯ ತಾಳಿದರು ಎಂಬುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. \ No newline at end of file diff --git a/eesanje/url_46_143_6.txt b/eesanje/url_46_143_6.txt new file mode 100644 index 0000000000000000000000000000000000000000..0afad57bf445a2b31131cf3d7efbb1a66b6f1ba2 --- /dev/null +++ b/eesanje/url_46_143_6.txt @@ -0,0 +1,10 @@ +ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಭಾರಿ ಮಳೆ ಸಾಧ್ಯತೆ +ಬೆಂಗಳೂರು,ಮೇ 17-ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ಪೂರ್ವ ಮುಂಗಾರು ಚೇತರಿಕೆ ಕಂಡಿದ್ದು, ರಾಜ್ಯಾದ್ಯಂತ ಮಳೆಯಾಗುವ ಮುನ್ಸುಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಇಂದಿನಿಂದ ಮೇ 21 ರವರೆಗೂ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್‌ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. +ಇಂದು ಮುಂಜಾನೆ ರಾಜಧಾನಿ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ವಿಧಾನಸೌಧ, ಕೆ.ಆರ್‌.ಮಾರುಕಟ್ಟೆ, ಮೆಜೆಸ್ಟಿಕ್‌, ಶಿವಾಜಿನಗರ, ಬಸವನಗುಡಿ, ಜಯನಗರ, ಬನಶಂಕರಿ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೆಳಿಗ್ಗೆ ಮಳೆಯಾಗಿದೆ. +ಮೇಲೈ ಸುಳಿಗಾಳಿ, ಟ್ರಫ್‌ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ನೈರುತ್ಯ ಮುಂಗಾರು ಸಕಾಲಕ್ಕೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ ಹಾಗೂ ಅರಬ್ಬೀ ಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣಗಳು ನಿರ್ಮಾಣವಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. + + +ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ, ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. +ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ದಕ್ಷಿಣ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. \ No newline at end of file diff --git a/eesanje/url_46_143_7.txt b/eesanje/url_46_143_7.txt new file mode 100644 index 0000000000000000000000000000000000000000..931a6c60f148e7eae019b0a285c275c8a78aaebe --- /dev/null +++ b/eesanje/url_46_143_7.txt @@ -0,0 +1,3 @@ +ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣಗೆ ಮಧ್ಯಂತರ ಜಾಮೀನು +ಬೆಂಗಳೂರು ಮೇ 16 : ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಮಧ್ಯಂತರ ಜಾಮೀನು ನೀಡಿ ನ್ಯಾಯಾಲಯ ಆದೇಶಿಸಿದೆ ಜಾಮೀನು ನೀಡಬೇಕೆಂದು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆನಡೆಸಿದ 42ನೇ ಎಸಿ ಎಮ್ ಎಂ ನ್ಯಾಯಾಲಯದ ನ್ಯಾಯಾಧೀಶರು ವಾದ ಪ್ರತಿವಾದಗಳನ್ನು ಆಲಿಸಿ, ನಾಳೆ ಮಧ್ಯಾಹ್ನದವರೆಗೆ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದರು5ಲಕ್ಷ ಬಾಂಡ್ ಒದಗಿಸಬೇಕು ಸೇರಿದಂತೆ ಹಲವು ಶರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆರೇವಣ್ಣ ಅವರು ಪ್ರಭಾವಿ ರಾಜಕೀಯ ಮುಖಂಡರಾಗಿದ್ದು ಯಾವುದೇ ಕಾರಣಕ್ಕೂ ಅವರಿಗೆ ಜಾಮೀನು ನೀಡಬಾರದು. ಅವರನ್ನು ಎಸ್ಐಟಿ ವಶಕ್ಕೆ ನೀಡಬೇಕೆಂದು ಸರ್ಕಾರಿ ಪರ ವಕೀಲರಾದ ಜಾಯ್ನ ಕೊಟಾರಿಯವರು ವಾದ ಮಂಡಿಸಿದರುಈ ಪ್ರಕರಣದಲ್ಲಿ ಜಾಮೀನು ಪಡೆಯಬಹುದಾದಂತಹ ಸೆಕ್ಷನ್ಗಳನ್ನ ಹಾಕಲಾಗಿದೆ ಒಂದು ಪ್ರಕರಣದಲ್ಲಿ ಈಗಾಗಲೇ ನಮ್ಮ ಕಕ್ಷಿದಾರರು ಜಾಮೀನು ಪಡೆದಿದ್ದಾರೆ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಅವರಿಗೆ ಜಾಮೀನು ನೀಡಬೇಕೆಂದು ರೇವಣ್ಣ ಪರ ವಕೀಲರು ಪ್ರಬಲವಾದ ಮಂಡಿಸಿದರು +ಜಾಮೀನು ನೀಡಬಹುದಾದಂತಹ ಸೆಕ್ಷನ್ಗಳನ್ನ ಹಾಕಿರುವಾಗ ಜಾಮೀನಿಗೆ ಆಕ್ಷೇಪ ಸಲ್ಲಿಸುವುದು ಸರಿಯಾದ ಕ್ರಮ ಅಲ್ಲ ಎಂದು ರೇವಣ್ಣ ಪರ ವಕೀಲರು ಹೇಳಿದರು ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರು ಮಧ್ಯಂತರ ಜಾಮೀನು, ಮಂಜೂರು ಮಾಡಿದರು \ No newline at end of file diff --git a/eesanje/url_46_143_8.txt b/eesanje/url_46_143_8.txt new file mode 100644 index 0000000000000000000000000000000000000000..49740d56a3475abe899a25b4033924b5f3a0d8e1 --- /dev/null +++ b/eesanje/url_46_143_8.txt @@ -0,0 +1,11 @@ +ಪ್ರಜ್ವಲ್‌ಗಾಗಿ ಕಾದು ಕಾದು ಸುಸ್ತಾದ ಎಸ್ಐಟಿ, ರೆಡ್ ಕಾರ್ನರ್ ನೋಟಿಸ್ ಜಾರಿಯೊಂದೇ ದಾರಿ +ಬೆಂಗಳೂರು, ಮೇ 16– ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಈಗ ಬರುತ್ತಾರೆ…, ಆಗ ಬರುತ್ತಾರೆ ಎಂದು ಎಸ್ಐಟಿ ಕಾದು ಕಾದು ಸುಸ್ತಾಗಿದೆ. +ಕಳೆದ 20 ದಿನಗಳಿಂದ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳೊಂದಿಗೆ ಕಣ್ಣಾಮುಚ್ಚಾಲೆಯ ಆಟ ಆಡುತ್ತಿದ್ದಾರೆ. ಭಾರತಕ್ಕೆ ಹಿಂದಿರುಗಲು ಮೇ 3 ರಿಂದ ನಿನ್ನೆ 15ರ ವರೆಗೆ 5 ಭಾರಿ ವಿಮಾನ ಟಿಕೆಟ್ ಬುಕ್ ಆಗಿ ಕೊನೆಕ್ಷಣಗಳಲ್ಲಿ ರದ್ದಾಗಿವೆ. ಇತ್ತ ಪ್ರಜ್ವಲ್ ರೇವಣ್ಣ ಹಿಂದಿರುಗುತ್ತಾರೆ ಎಂದು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಸ್ಐಟಿ ಅಧಿಕಾರಿಗಳ ನಿರೀಕ್ಷೆ ಹುಸಿಯಾಗಿದೆ. +ಈಗಾಗಲೇ ಪ್ರಜ್ವಲ್ ಅವರು ವಿಚಾರಣೆಗೆ ಹಾಜರಾಗಬೇಕೆಂದು ಮೊದಲು ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ನಂತರ ಲುಕ್ಔಟ್ ನೋಟಿಸ್ ಜಾರಿ ಗೊಳಿಸಲಾಗಿತ್ತು. ಆಮೇಲೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಪ್ರಜ್ವಲ್ ಅವರನ್ನು ಸ್ವದೇಶಕ್ಕೆ ಕರೆತರಲು ಇರುವ ಏಕೈಕ ಮಾರ್ಗವೆಂದರೆ ರೆಡ್ ಕಾರ್ನರ್ ನೋಟಿಸ್ ಜಾರಿ ಗೊಳಿಸುವುದು. +ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವುದು ಅಷ್ಟು ಸುಲಭವಾದ ಪ್ರಕ್ರಿಯೆಯಲ್ಲ. ಪ್ರಜ್ವಲ್ ರೇವಣ್ಣ ಬಂಧನವಾಗದ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಆಗ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ಸಮನ್್ಸ ಜಾರಿ ಮಾಡುತ್ತದೆ. ಈ ವೇಳೆ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಎಸ್ಐಟಿ ಮಾಹಿತಿ ನೀಡುತ್ತದೆ. +ಕೋರ್ಟ್ ಸಮನ್್ಸಗೆ ಗೈರಾದರೆ ಪ್ರಜ್ವಲ್ ಪತ್ತೆಗೆ ಕೋರ್ಟ್ ಅನುಮತಿಯೊಂದಿಗೆ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಸಿಬಿಐಗೆ ಎಸ್ಐಟಿ ಮನವಿ ಮಾಡುತ್ತದೆ. ಬಳಿಕ ಸಿಬಿಐ ಇಂಟರ್ಪೋಲ್ ಮೂಲಕ ರೆಡ್ ಕಾರ್ನರ್ ನೋಟಿಸ್ ಹೊರಡಿಸುತ್ತದೆ. ಈ ನೋಟಿಸ್ ಜಾರಿಯಾದರೆ ಪ್ರಜ್ವಲ್ ಯಾವ ದೇಶದಲ್ಲಿ ಇದ್ದಾರೊ ಆ ದೇಶದ ಸ್ಥಳೀಯ ಪೊಲೀಸರೇ ಅವರನ್ನು ವಶಕ್ಕೆ ಪಡೆಯಲು ಅನುಮತಿ ನೀಡುತ್ತದೆ. +ವಶಕ್ಕೆ ಪಡೆದ ನಂತರ ಆ ದೇಶದ ಪೊಲೀಸರು ಭಾರತಕ್ಕೆ ಒಪ್ಪಿಸುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಬೇಕಾದರೇ ಎಸ್ಐಟಿಗೆ ಕನಿಷ್ಠ 40 ದಿನಗಳು ಬೇಕಾಗಬಹುದು. +ರಾಜತಾಂತ್ರಿಕ ಪಾಸ್ಪೋರ್ಟ್ ಸುಲಭವಾಗಿ ರದ್ದು ಗೊಳಿಸಲು ಸಾಧ್ಯವಿಲ್ಲ:ಸಂಸದರಾಗಿರುವ ಕಾರಣ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಹೋಗಿದ್ದಾರೆ. ಅವರ ರಾಜತಾಂತ್ರಿಕ ಪಾಸ್ಪೋರ್ಟ್ನ್ನು ರದ್ದು ಗೊಳಿಸಿಬೇಕೆಂಬ ಒತ್ತಾಯವೂ ಕೂಡ ಕೇಳಿಬಂದಿದೆ. +ಈ ಪಾಸ್ಪೋರ್ಟ್ ಅನ್ನು ಅಷ್ಟು ಸುಲಭವಾಗಿ ರದ್ದು ಮಾಡಲು ಸಾಧ್ಯವಿಲ್ಲ. ನ್ಯಾಯಾಲಯದಿಂದ ಆದೇಶ ಬಂದ ಬಳಿಕವಷ್ಟೇ ವಿದೇಶಾಂಗ ಸಚಿವಾಲಯ ಪಾಸ್ಪೋರ್ಟ್ಅನ್ನು ರದ್ದು ಮಾಡಬಹುದಾಗಿದೆ.ಎಸ್ಐಟಿ ತಂಡ ಪ್ರಜ್ವಲ್ ಅವರನ್ನು ಭಾರತಕ್ಕೆ ಕರೆ ತರಲು ಎಲ್ಲಾ ಮಾರ್ಗೋಪಾಯಗಳನ್ನು ಬಳಸಲು ಮುಂದಾಗಿದೆ. +ವಿದೇಶದಲ್ಲಿ ಕಳೆದ 20 ದಿನಗಳಿಂದ ತಲೆ ಮರೆಸಿಕೊಂಡಿರುವ ಪ್ರಜ್ವಲ್ ನಿನ್ನೆ ಜರ್ಮನಿಯಿಂದ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುತ್ತಾರೆ ಎಂಬ ನಿರೀಕ್ಷೆ ಹಿನ್ನೆಲೆಯಲ್ಲಿ ಎಸ್ಐಟಿ ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿ, ಪ್ರಜ್ವಲ್ನನ್ನು ವಶಕ್ಕೆ ಪಡೆಯಲು ಎಲ್ಲ ಸಿದ್ಧತೆ ಕೂಡ ನಡೆಸಿದ್ದರು. ಜರ್ಮನಿಯ ಮ್ಯೂನಿಚ್ನಿಂದ ಟಿಕೆಟ್ ಬುಕ್ ಆಗಿತ್ತು. ಲುಫ್ತಾನ್್ಸ ಏರ್ಲೈನ್್ಸನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಪ್ರಜ್ವಲ್ ಬರುವ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಕಾದು ಕುಳಿತಿದ್ದರು. +ನಂತರ ಬ್ರಿಟಿಷ್ ಏರ್ಲೈನ್್ಸನಲ್ಲಿ ಬರುವ ಮಾಹಿತಿ ತಿಳಿದು ಮುಂಜಾನೆ 5 ಗಂಟೆವರೆಗೆ ಪೊಲೀಸರು ಕಾದಿದ್ದರು. ಆದರೆ 2 ವಿಮಾನದಲ್ಲೂ ಪ್ರಜ್ವಲ್ ಬಾರದ ಕಾರಣ ಪೊಲೀಸರು ಬರಿಗೈಯಲ್ಲಿ ಹಿಂದಿರುಗಿದ್ದರು. \ No newline at end of file diff --git a/eesanje/url_46_143_9.txt b/eesanje/url_46_143_9.txt new file mode 100644 index 0000000000000000000000000000000000000000..108672da475ef82a565b1fd42e5a72b66d01aa35 --- /dev/null +++ b/eesanje/url_46_143_9.txt @@ -0,0 +1,4 @@ +ಆಪರೇಷನ್ ಅಗತ್ಯವಿಲ್ಲ, ಕಾಂಗ್ರೆಸ್ ಶಾಸಕರೇ ಸಿದ್ದು ಸರ್ಕಾರವನ್ನು ಉರುಳಿಸುತ್ತಾರೆ : ಶೆಟ್ಟರ್ +ಹುಬ್ಬಳ್ಳಿ, ಮೇ 16-ಸಿದ್ದರಾಮಯ್ಯ ಸರ್ಕಾರ ಉರುಳಲು ಆಪರೇಷನ್ ಕಮಲ ನಡೆಸುವ ಆವಶ್ಯಕತೆಯಿಲ್ಲ, ಅಸಮಾಧಾನದಿಂದ ಕುದಿಯುತ್ತಿರುವ ಕಾಂಗ್ರೆಸ್ ಶಾಸಕರೇ ಪತನಕ್ಕೆ ಕಾರಣರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. +ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದ ಕಾರಣ ಶಾಸಕರೆಲ್ಲಾ ಕೊತಕೊತ ಕುದಿಯುತ್ತಿದ್ದಾರೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಯಾವುದೇ ಕ್ಷಣದಲ್ಲಿ ಅವರ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯೆತೆಯಿದೆ ಎಂದರು. +ಸಿಎಂ ಮತ್ತು ಡಿಸಿಎಂ ನಡುವೆ ಸಿಎಂ ಕುರ್ಚಿ ಗುದ್ದಾಟ ಸರ್ಕಾರ ರಚನೆಯಾಗುವ ಮೊದಲಿಂದ ನಡೆಯುತ್ತಿದೆ. ಸಿದ್ದರಾಮಯ್ಯ 5 ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಸಿಎಂ ಕುರ್ಚಿಗಾಗಿ ಡಿ.ಕೆ. ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಶೆಟ್ಟರು ಹೇಳಿದರು. \ No newline at end of file diff --git a/eesanje/url_46_144_1.txt b/eesanje/url_46_144_1.txt new file mode 100644 index 0000000000000000000000000000000000000000..b90d5223a7c367d5262e42394821dc7369b3ac6d --- /dev/null +++ b/eesanje/url_46_144_1.txt @@ -0,0 +1,5 @@ +ವಿಧಾನಪರಿಷತ್‌ ಚುನಾವಣೆ : ನಾಮಪತ್ರ ಸಲ್ಲಿಸುವ ಅವಧಿ ಮುಕ್ತಾಯ +ಬೆಂಗಳೂರು,ಮೇ 16-ರಾಜ್ಯ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅವಧಿ ಇಂದು ಮುಕ್ತಾಯವಾಗಿದೆ. ಇದುವರೆಗೆ ಬಿಜೆಪಿ 4, ಕಾಂಗ್ರೆಸ್‌‍ 5, ಜೆಡಿಎಸ್‌‍ 1, ಪಕ್ಷೇತರ 40 ಸೇರಿದಂತೆ ಒಟ್ಟು 50 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. +47 ಪುರುಷ ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 68 ನಾಮಪತ್ರಗಳನ್ನು ಸಲ್ಲಿಸಲಾಗಿದೆ. ಕೊನೆಯ ದಿನವಾದ ಇಂದೂ ಕೂಡ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. +ನಿನ್ನೆ 21 ಅಭ್ಯರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉಮೇದುವಾರಿಕೆ ಸಲ್ಲಿಸಿದ್ದರು. 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಳೆ ಸಂಜೆ ಆಯಾ ಕ್ಷೇತ್ರಗಳಲ್ಲಿ ತಿರಸ್ಕೃತಗೊಂಡ ಹಾಗೂ ಕ್ರಮಬದ್ಧವಾದ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ. +ನಾಮಪತ್ರಗಳನ್ನು ವಾಪಸ್‌‍ ಪಡೆಯಲು ಮೇ 20 ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಂತಿಮವಾಗಿ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಲೋಕಸಭೆ ಚುನಾವಣೆಯಂತೆ ಮೇಲನೆ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌‍ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿವೆ. ಆಡಳಿತರೂಢ ಕಾಂಗ್ರೆಸ್‌‍ ಎಲ್ಲಾ 6 ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಹೋರಾಟ ನಡೆಸಲಿದೆ. \ No newline at end of file diff --git a/eesanje/url_46_144_10.txt b/eesanje/url_46_144_10.txt new file mode 100644 index 0000000000000000000000000000000000000000..d798ac85f70927e062e6c80567b57013224094f7 --- /dev/null +++ b/eesanje/url_46_144_10.txt @@ -0,0 +1,8 @@ +ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪಾಗಲ್ ಪ್ರೇಮಿಯಿಂದ ಮತ್ತೊಬ್ಬ ಯುವತಿ ಹತ್ಯೆ +ಹುಬ್ಬಳ್ಳಿ, ಮೇ 15-ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಭೀಕರ ಕೊಲೆ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಇಂದು ನಸುಕಿನ ಜಾವ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ವೀರಾಪುರ ಓಣಿ ಕರಿಯಮನ ಗುಡಿ ನಿವಾಸಿ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾದ ಯುವತಿ. ಯಲ್ಲಾಪುರ ಓಣಿಯ ಗಿರೀಶ ಅಲಿಯಾಸ್ ವಿಶ್ವ ಎಸ್. ಸಾವಂತ ಎಂಬಾತ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ.ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಗಿರೀಶ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಆಕೆಯ ಮನೆ ಬಳಿ ಹೋಗಿ ಬಾಗಿಲು ಬಡಿದಿದ್ದಾನೆ. +ಪರಿಚಯಸ್ಥರು ಬಂದಿರಬಹುದೆಂದು ತಿಳಿದು ಅಂಜಲಿಯೇ ಹೋಗಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಆಕೆಯನ್ನು ಮನೆಯ ಒಳಗೆ ತಳ್ಳಿಕೊಂಡು ಹೋಗಿ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಬಿಡದೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.ಆತನ ತಾಯಿ ಮನೆಗೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. +ಸುದ್ದಿ ತಿಳಿದು ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹಂತಕನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. +ಧಮ್ಕಿ ಹಾಕಿದ್ದ ಆರೋಪಿ:ಮೈಸೂರಿಗೆ ಬರದಿದ್ದರೆ ನಿನ್ನನ್ನು ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಿಗೆ ಆದ ಹಾಗೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಆರೋಪಿ ಗಿರೀಶ್ ಇತ್ತೀಚೆಗೆ ಅಂಜಲಿಗೆ ಧಮ್ಕಿ ಹಾಕಿದ್ದನು ಎಂಬುವುದು ಗೊತ್ತಾಗಿದೆ. +ದೂರು ಸ್ವೀಕರಿಸದ ಪೊಲೀಸರು:ಆರೋಪಿ ಗಿರೀಶ ಧಮ್ಕಿ ಹಾಕಿದ್ದ ವಿಚಾರ ತಿಳಿದು ಅಂಜಲಿ ಅವರ ಅಜ್ಜಿ ಗಂಗಮ ಪೊಲೀಸರ ಗಮನಕ್ಕೆ ತಂದಾಗ, ಇದೆಲ್ಲಾ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರ ಪರಿಣಾಮ ಇಂದು ಹುಬ್ಬಳ್ಳಿಯಲ್ಲಿ ಯುವತಿಯ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. +ಮನೆ ಮುಂದೆ ಜಮಾಯಿಸಿರುವ ಜನರು:ಬೆಳ್ಳಂಬೆಳಗ್ಗೆಯೇ ಮನೆಗೆ ನುಗ್ಗಿ ಯುವತಿಯನ್ನು ಕೊಲೆ ಮಾಡಿರುವ ವಿಷಯ ತಿಳಿದು ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಹಳ್ಳಿಯ ಜನರು ಅಂಜಲಿ ಮನೆ ಬಳಿ ಜಮಾಯಿಸಿದ್ದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಕಾಲೇಜು ಆವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅಂತಹದ್ದೇ ಕೃತ್ಯ ನಡೆದಿರುವುದು ಹುಬ್ಬಳ್ಳಿಯ ಜನತೆಯನ್ನು ಬೆಚ್ಚಿಬೀಳಿಸಿದೆ. \ No newline at end of file diff --git a/eesanje/url_46_144_11.txt b/eesanje/url_46_144_11.txt new file mode 100644 index 0000000000000000000000000000000000000000..dbf772ed71db852619c4f8f714dd3da8370175e0 --- /dev/null +++ b/eesanje/url_46_144_11.txt @@ -0,0 +1,6 @@ +ತಡರಾತ್ರಿ ಬೆಂಗಳೂರಿಗೆ ಬರ್ತಾರಾ ಪ್ರಜ್ವಲ್ ರೇವಣ್ಣ..? +ಬೆಂಗಳೂರು, ಮೇ 15-ಪೆನ್ಡ್ರೈವ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಇಂದು ತಡರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಜರ್ಮನಿಯ ಮ್ಯೂನಿಚ್ ನಗರದಿಂದ ಇಂದು ಅವರು ಪ್ರಯಾಣ ಬೆಳೆಸುವ ಸಾಧ್ಯತೆಯಿದ್ದು, ಮಧ್ಯರಾತ್ರಿ 1 ಗಂಟೆ ವೇಳೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆಯಿದೆ. +ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಪ್ರಜ್ವಲ್ ಅವರ ತಂದೆ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರು ನೇರವಾಗಿ ಬಂದು ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.ಜರ್ಮನಿಯ ಮ್ಯೂನಿಚ್ ನಗರದಿಂದ ಬೆಂಗಳೂರಿಗೆ ಹೊರಡಲಿರುವ ಲುಫ್ತಾನ್ಸಾ ಏರ್ಲೈನ್್ಸಗೆ ಸೇರಿದ ವಿಮಾನದಲ್ಲಿ ಪ್ರಜ್ವಲ್ ಅವರು ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. +ಹರಿಯಾಣ ರಾಜ್ಯದ ಅಕಲ್ ಟ್ರಾವೆಲ್ಸ್ ನಿಂದ ಪ್ರಜ್ವಲ್ಗೆ ಟಿಕೆಟ್ ಬುಕ್ಕಿಂಗ್ ಮಾಡಲಾಗಿದೆ.ಬಿಸಿನೆಸ್ ಕ್ಲಾಸ್ನಲ್ಲಿ ಟಿಕೆಟ್ ಬುಕ್ ಆಗಿದೆ.ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಮಧ್ಯರಾತ್ರಿ 12.30ರ ಸುಮಾರಿಗೆ ಈ ವಿಮಾನ ಆಗಮಿಸಲಿದೆ ಎಂದು ಲುಫ್ತಾನ್ಸಾ ಏರ್ಲೈನ್ಸ್ ವೆಬ್ಸೈಟ್ನಲ್ಲಿ ತಿಳಿಸಲಾಗಿದೆ. +ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಈ ವಿಮಾನ ನಿಲುಗಡೆಯಾಗಲಿದೆ. ಪೆನ್ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಲೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದು ಸಧ್ಯ ಜರ್ಮನಿಯಲ್ಲಿದ್ದಾರೆ ಎಂದು ಹೇಳಲಾಗಿದೆ.ಕಳೆದ 17 ದಿನಗಳಿಂದಲೂ ಅವರು ಭಾರತಕ್ಕೆ ಆಗ ಬರುತ್ತಾರೆ, ಈಗ ಬರುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಬರುವ ಸಾಧ್ಯತೆಗಳಿವೆ. +ಮೇ 1, ಮೇ 3, ಮೇ 5ರಂದು ಪ್ರಜ್ವಲ್ ರೇವಣ್ಣ ಅವರು ಭಾರತಕ್ಕೆ ಹಿಂದಿರುಗಲು ಟಿಕೆಟ್ ಬುಕ್ ಮಾಡಿ ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದರು ಎಂದು ತಿಳಿದು ಬಂದಿದೆ.ಜರ್ಮನಿಯಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಎಸ್ಐಟಿ ಅಲ್ಲಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.ಪ್ರಜ್ವಲ್ ರೇವಣ್ಣ ಅವರು ವಾಸಿಸುತ್ತಿರುವ ಪ್ರದೇಶ ಕುರಿತು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ವಿದೇಶಿ ಅಧಿಕಾರಿಗಳು ಎಸ್ಐಟಿ ಅಧಿಕಾರಿಗಳಿಗೆ ತಮ ವ್ಯಾಪ್ತಿಯಲ್ಲಿ ಕೊಡಬಹುದಾದ ಕೆಲವು ಮಾಹಿತಿಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_144_12.txt b/eesanje/url_46_144_12.txt new file mode 100644 index 0000000000000000000000000000000000000000..2fbef81b1bb551e83620423435c83ec8aa0d6f7d --- /dev/null +++ b/eesanje/url_46_144_12.txt @@ -0,0 +1,6 @@ +ಒಂದೇ ಒಂದು ಗುದ್ದಲಿ ಪೂಜೆ ಮಾಡಿಲ್ಲ, ಸರ್ಕಾರದ ಸಾಧನೆ ಶೂನ್ಯ : ಸುನಿಲ್ ಕುಮಾರ್ +ಬೆಂಗಳೂರು,ಮೇ 15-ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಅಭಿವೃದ್ಧಿ ಕಾರ್ಯ ಶೂನ್ಯ. ನಾವೆಲ್ಲಾ ಶಾಸಕರು ಒಂದು ವರ್ಷದಿಂದ ಒಂದೇ ಒಂದು ಗುದ್ದಲಿ ಪೂಜೆ ಕೂಡ ಮಾಡಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ಕುಮಾರ್ ಇಂದಿಲ್ಲಿ ಗುಡುಗಿದ್ದಾರೆ. +ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಯಾವುದೇ ಅನುದಾನ ಬಂದಿಲ್ಲ. ಯಾವ ಯೋಜನೆಗಳಿಗೆ ಎಷ್ಟು ಅನುದಾನ ನೀಡಲಾಗಿದೆ ಎಂಬುದರ ಬಗ್ಗೆ ಲೆಕ್ಕ ಬಿಡುಗಡೆ ಮಾಡಲಿ. ಈ ಸರ್ಕಾರದಿಂದ ಅನುದಾನ ಬರುವುದಿಲ್ಲ ಎಂಬ ಅಭಿಪ್ರಾಯ ಜನರಲ್ಲಿ ಕೇಂದ್ರೀಕೃತವಾಗಿದೆ. ಇಡೀ ಸಚಿವ ಸಂಪುಟವೇ ಅಸಮರ್ಥ ಸಂಪುಟವಾಗಿದೆ. ಸಚಿವರ ಮೇಲೆ ಹಿಡಿತ ಇಲ್ಲದಂತಾಗಿದೆ. ಕಾನೂನು ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಗೃಹಸಚಿವರು ಇದರಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು. +ಪಿಎಲ್ಡಿ ಬ್ಯಾಂಕುಗಳಲ್ಲಿ ರೈತರಿಗೆ ಮರು ಸಾಲ ಸಿಗುತ್ತಿಲ್ಲ. ಕೃಷಿ, ಸಹಕಾರ, ಇಂಧನ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ನಗರಾಭಿವೃದ್ಧಿ ಸಚಿವರಿಗೆ ಸಂಬಂಧಿಸಿದ ಯಾವುದೇ ಕೆಲಸಗಳಾಗುತ್ತಿಲ್ಲ. ಬ್ರಾಂಡ್ ಬೆಂಗಳೂರು ಈಗ ದಿಕ್ಕೆಟ್ಟ ಬೆಂಗಳೂರು ಆಗಿದೆ. +ಕರ್ನಾಟಕದಲ್ಲಿ ಆಡಳಿತವನ್ನು ಕೆಲವು ಕುಟುಂಬದ ಸದಸ್ಯರು, ಈವೆಂಟ್ ಮ್ಯಾನೇಜ್ಮೆಂಟ್ನ ಸದಸ್ಯರು ನಡೆಸುತ್ತಿದ್ದಾರೆ. ವಿಧಾನಸೌಧದ ಆಡಳಿತ ಯಾರದೋ ಮನೆಯ ಕಿಚನ್ನಲ್ಲಿ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಜನಪ್ರತಿನಿಧಿಗಳಿಗೆ ಅಪಮಾನವಾಗುವಂತಹ ರೀತಿ ಆಡಳಿತ ನಡೆಸುತ್ತಿದೆ. ಇದರ ವಿರುದ್ಧ ಬಿಜೆಪಿ ಜನಾಂಧೋಲನ ಆರಂಭ ಮಾಡಲಿದೆ ಎಂದರು. +ಗ್ಯಾರಂಟಿಗಳ ಗುಂಗಿನಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಅಭಿವೃದ್ಧಿಯತ್ತ ಮಾತ್ರ ಗಮನ ನೀಡುತ್ತಿಲ್ಲ. ಜನರು ನಿರೀಕ್ಷೆಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು. ರಾಜ್ಯಸರ್ಕಾರ ಪತನ ಕುರಿತು ಏಕನಾಥ ಶಿಂಧೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕತ್ವದಲ್ಲಿ ಗೊಂದಲ ಉಂಟಾಗಿದೆ. ಅವರದ್ದೇ ಅಸಮಾಧಾನದಿಂದ ಸರ್ಕಾರ ಪತನವಾಗಬಹುದು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಮತ್ತೆ ಸಿಎಂ ವಾರ್ ಪ್ರಾರಂಭವಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_144_2.txt b/eesanje/url_46_144_2.txt new file mode 100644 index 0000000000000000000000000000000000000000..6163870c68d4dbf2c37017b228ced9327a97e723 --- /dev/null +++ b/eesanje/url_46_144_2.txt @@ -0,0 +1,8 @@ +ಜೆಡಿಎಸ್‌‍-ಬಿಜೆಪಿ ಒಟ್ಟಾಗಿ ಪೆನ್‌ಡ್ರೈವ್‌ ಪ್ರಕರಣ ಮುಚ್ಚಿಹಾಕಲು ಯತ್ನ : ಪ್ರಿಯಾಂಕ್‌ ಖರ್ಗೆ +ಬೆಂಗಳೂರು,ಮೇ 16-ಪೆನ್‌ಡ್ರೈವ್‌ ಪ್ರಕರಣದ ಬಳಿಕವೂ ಜೆಡಿಎಸ್‌‍-ಬಿಜೆಪಿ ಮೈತ್ರಿ ವಿಧಾನಪರಿಷತ್‌ ಚುನಾವಣೆಯಲ್ಲೂ ಮುಂದುವರೆದಿದೆ ಎಂದರೆ ಎರಡೂ ಪಕ್ಷಗಳು ಒಟ್ಟಾಗಿ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಪ್ರಕರಣ ಬಯಲಿಗೆ ಬಂದಿತ್ತು. ಅನಂತರ ಬಹುಷಃ ಬಿಜೆಪಿಯವರು ಜೆಡಿಎಸ್‌‍ನಿಂದ ಅಂತರ ಕಾಯ್ದುಕೊಳ್ಳಬಹುದು ಎಂಬ ಲೆಕ್ಕಾಚಾರಗಳಿದ್ದವು. ಆದರೆ ವಿಧಾನಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರೆದಿದೆ. ಬಿಜೆಪಿ, ಜೆಡಿಎಸ್‌‍ಗೆ ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಇದರರ್ಥ ಬಿಜೆಪಿಗೆ ಅಧಿಕಾರ ಮುಖ್ಯವೇ ಹೊರತು ಯಾರು ಎಷ್ಟೇ ದೊಡ್ಡ ಅಪರಾಧ ಮಾಡಿದರೂ ಅದು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದರು. +ಪ್ರತಿಬಾರಿಯೂ ಸಿಬಿಐ ತನಿಖೆಗೆ ಕೇಳುತ್ತಾರೆ. ಯಾವ ಕಾರಣಕ್ಕಾಗಿ ಸಿಬಿಐ ತನಿಖೆ ಬೇಕು? ಈ ಹಿಂದೆ ಅಕ್ರಮ ಗಣಿಗಾರಿಕೆ, ಪರೇಷ್‌ಮೆಹೇಸ್ತ ಹಾಗೂ ಡಿವೈಎಸ್ಪಿ ಗಣಪತಿ ಪ್ರಕರಣಗಳಲ್ಲಿ ಸಿಬಿಐ ಯಾವ ಸಾಧನೆ ಮಾಡಿದೆ? ನಮ್ಮ ಪೊಲೀಸರ ತನಿಖಾ ವರದಿಯನ್ನು ಅನುಮೋದಿಸಿದ್ದು ಬಿಟ್ಟರೆ ಬೇರೆ ಯಾವ ಪ್ರಗತಿಯೂ ಇಲ್ಲ. ಜೆಡಿಎಸ್‌‍-ಬಿಜೆಪಿಯವರ ಉದ್ದೇಶ ಅಮಿತ್‌ ಷಾ ಅವರ ಕೈಕಾಲಿಗೆ ಬಿದ್ದು ಪ್ರಕರಣವನ್ನು ಮುಚ್ಚಿಹಾಕಿಸುವುದು. ಅದಕ್ಕಾಗಿಯೇ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. +ಪ್ರತಿಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹಸಚಿವ ಪರಮೇಶ್ವರ್‌ ಅವರ ರಾಜೀನಾಮೆ ಕೇಳುತ್ತಿದ್ದಾರೆ. ನಮ ಮನೆಯ ಮಗ ತಪ್ಪು ಮಾಡಿದ್ದಾನೆ ಎಂದು ಜೆಡಿಎಸ್‌‍ ನಾಯಕರೇ ಒಪ್ಪಿಕೊಂಡಿದ್ದಾರೆ. ಹಾಗಿದ್ದ ಮೇಲೆ ಕಾಂಗ್ರೆಸ್‌‍ನವರು ಏಕೆ ರಾಜೀನಾಮೆ ಕೊಡಬೇಕು? ಎಂದು ಪ್ರಶ್ನಿಸಿದರು. +ಪ್ರಕರಣದ ನೈತಿಕತೆ ಹೊತ್ತು ಪ್ರಜ್ವಲ್‌ ರೇವಣ್ಣ ಅವರ ಕುಟುಂಬದ ಸದಸ್ಯರು ತಮ ಹುದ್ದೆಗಳಿಗೆ ರಾಜೀನಾಮೆ ಕೊಡಬೇಕೆಂದು ಪ್ರಿಯಾಂಕ್‌ ಖರ್ಗೆ ಆಗ್ರಹಿಸಿದರು.ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದ ಬಿಜೆಪಿಯವರು ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ತಟಸ್ಥರಾಗಿರುವುದೇಕೆ? ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲಿ ನಾಪತ್ತೆಯಾಗಿದ್ದಾರೆ? ಹಾಸನಕ್ಕೆ ಹೋಗಿ ಏಕೆ ಸಂತ್ರಸ್ತರಿಗೆ ಸಾಂತ್ವಾನ ಹೇಳುತ್ತಿಲ್ಲ. ಅಲ್ಲಿನ ಜನ ಕಲ್ಲಿನಲ್ಲಿ ಹೊಡೆಯುತ್ತಾರೆ ಎಂಬ ಭಯವೇ? ಎಂದು ಪ್ರಶ್ನಿಸಿದರು. +ರಾಜಕೀಯ ಲಾಭವಾಗದೇ ಇದ್ದರೆ ಬಿಜೆಪಿಯವರು ಸಂತ್ರಸ್ತೆಯರ ವಿಚಾರದಲ್ಲಿ ಕಾಳಜಿ ವಹಿಸುವುದಿಲ್ಲ. ಕೊಡಗಿನಲ್ಲಿ ವಿದ್ಯಾರ್ಥಿನಿ ಕೊಲೆ, ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿಯವರು ಉಸಿರು ಬಿಡುತ್ತಿಲ್ಲ. ಅದೇ ಹುಬ್ಬಳ್ಳಿ ಪ್ರಕರಣದಲ್ಲಿ ಅಮಿತ್‌ ಷಾ ಇಂದ ಹಿಡಿದು ಎಲ್ಲಾ ಬಿಜೆಪಿ ನಾಯಕರೂ ಸಂತ್ರಸ್ತೆಯರ ಮನೆಗೆ ಭೇಟಿ ನೀಡಿದ್ದರು. ಕೊಡಗು ಪ್ರಕರಣದಲ್ಲಿ ವೈಯಕ್ತಿಕ ಎಂದವರು, ನೇಹಾ ಪ್ರಕರಣದಲ್ಲಿ ವಿಶೇಷ ಆಸಕ್ತಿ ತೋರಿಸಿದರು. ಇದರರ್ಥ ಅವರ ರಾಜಕೀಯ ಲಾಭವೇ ಹೊರತು ಜನಪರ ಕಾಳಜಿ ಅಲ್ಲ ಎಂದು ವಾಗ್ದಾಳಿ ನಡೆಸಿದರು. +ಕೇಂದ್ರ ಸರ್ಕಾರ ಆರೋಪಿ ಪ್ರಜ್ವಲ್‌ ಬಂಧನಕ್ಕೆ ಯಾವುದೇ ಸಹಕಾರ ನೀಡುತ್ತಿಲ್ಲ. ಬ್ಲೂ ಕಾರ್ನರ್‌ ನೋಟೀಸ್‌‍ ಜಾರಿಯಾಗಿದ್ದು, ಕೇಂದ್ರ ಸರ್ಕಾರ ಇಂಟರ್‌ಪೋಲ್‌ಗೆ ಪತ್ರ ಬರೆದಿಲ್ಲ ಎಂದರು. \ No newline at end of file diff --git a/eesanje/url_46_144_3.txt b/eesanje/url_46_144_3.txt new file mode 100644 index 0000000000000000000000000000000000000000..90394da71b99a85cc1c1dd07f41a93517d3706f8 --- /dev/null +++ b/eesanje/url_46_144_3.txt @@ -0,0 +1,7 @@ +ದೂರು ಕೊಟ್ಟಾಗಲೇ ರಕ್ಷಣೆ ಕೊಟ್ಟಿದ್ದರೆ ನಮ್ಮಕ್ಕ ಕೊಲೆ ಆಗ್ತಿರ್ಲಿಲ್ಲ : ಅಂಜಲಿ ಸಹೋದರಿ ಆಕ್ರೋಶ +ಹುಬ್ಬಳ್ಳಿ,ಮೇ 16-ಪೊಲೀಸ್‌‍ನವರು ಹಣ ಕೊಟ್ಟವರನ್ನು ನೋಡುತ್ತಾರೆ, ಹತ್ತು, ಇಪ್ಪತ್ತು ಸಾವಿರ ಕೊಟ್ಟರೆ ಬಿಟ್ಟು ಬಿಡುತ್ತಾರೆ, ಹೆಣ್ಣಿಗೆ ನ್ಯಾಯ ಎಲ್ಲಿದೆ? ಎಂದು ಹುಬ್ಬಳ್ಳಿಯಲ್ಲಿ ಕೊಲೆಯಾದ ಅಂಜಲಿ ಅವರ ಸಹೋದರಿ ಯಶೋಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಮ್ಮ ಅಕ್ಕನ ಸಾವಿಗೆ ನ್ಯಾಯ ಸಿಗಬೇಕು, ಕೊಲೆ ಆರೋಪಿಯನ್ನು ಬಂಧಿಸಿ ಹುಬ್ಬಳ್ಳಿಯ ಚನ್ನಮ್ಮನ ವೃತ್ತದಲ್ಲಿಯೇ ಹೊಡೆದು ಹಾಕಬೇಕು. ಪೊಲೀಸರಿಗೆ ಸಾಧ್ಯವಾಗದೇ ಇದ್ದರೆ ನಮ ಕೈಗೆ ಕೊಡಿ. ನಾವೇ ಕ್ರಮ ತೆಗೆದುಕೊಳ್ಳುತ್ತೇವೆ. ಅನಂತರ ಕೇಸು ಹಾಕಿ ನಮ್ಮನ್ನೂ ಜೈಲಿಗೆ ಕಳುಹಿಸಿ, ಜೀವನ ಹಾಳಾದರೂ ಚಿಂತೆಯಿಲ್ಲ ಎಂದು ಕಿಡಿಕಾರಿದ್ದಾರೆ. +ನಮ್ಮ ಅಕ್ಕನಿಗೆ ತೊಂದರೆಯಾಗುತ್ತಿದೆ ಎಂದು ದೂರು ಕೊಟ್ಟಾಗ ಅದನ್ನು ಮೂಢನಂಬಿಕೆ ಎಂದು ತಳ್ಳಿ ಹಾಕಿದ್ದರು. ಈಗ ನಮ ಅಕ್ಕನ ಕೊಲೆಯಾಗಿದೆ. ಈಗ ಯಾರ್ಯಾರೋ ಬರುತ್ತಿದ್ದಾರೆ, ಒಂದು ಲಕ್ಷ, ಎರಡು ಲಕ್ಷ ಹಣ ಕೊಡುತ್ತಿದ್ದಾರೆ, ನಮ್ಮಕ್ಕ ಬಂಗಾರ. ಆಕೆಯನ್ನೇ ಕಳೆದುಕೊಂಡಿದ್ದೇವೆ, ಇವರ ಹಣ ತೆಗೆದುಕೊಂಡು ನಾವು ಏನು ಮಾಡೋಣ? ನಾವು ದುಡಿದು ತಿನ್ನುತ್ತೇವೆ. ನಿಮ ಹಣ ಬೇಡ. ನಮ್ಮಕ್ಕನ ಸಾವಿಗೆ ನ್ಯಾಯ ಕೊಡಿ ಎಂದು ಮನವಿ ಮಾಡಿದರು. +ಒಂದು ವೇಳೆ ನಮಕ್ಕನ ಸಾವಿಗೆ ನ್ಯಾಯ ದೊರೆಯದೇ ಇದ್ದರೆ ನಮ್ಮ ಮನೆಯ ನಾಲ್ಕೂ ಮಂದಿ ವಿಷ ಸೇವಿಸಿ ಆತಹತ್ಯೆ ಮಾಡಿಕೊಳ್ಳುತ್ತೇವೆ. ಆಗಲಾದರೂ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರಾ? ನೋಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಈಗ ಮನೆಯಲ್ಲಿ ಕೊಲೆಯಾಗಿದೆ. ನಾಳೆ ರಸ್ತೆಯಲ್ಲಿ, ಹಾದಿಬೀದಿಯಲ್ಲಿ ಕೊಲೆಯಾಗುತ್ತದೆ. ಅಲ್ಲಿಯವರೆಗೂ ಕಾದು ನೋಡುತ್ತಿರುತ್ತಾರೆಯೇ? ಈಗಾಗಲೇ ಅಂಜಲಿ ಮತ್ತು ನೇಹಾ ಎಂಬ ಇಬ್ಬರು ಸಹೋದರಿಯರನ್ನು ಕಳೆದುಕೊಂಡಿದ್ದೇವೆ. ಕೊಲೆ ಮಾಡಿದವರಿಗೆ ಅದೇ ರೀತಿಯ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಿದರು. +ನಮ್ಮಕ್ಕನ ರಕ್ಷಣೆಗಾಗಿ ದೂರು ಕೊಟ್ಟಾಗಲೇ ಕ್ರಮ ಕೈಗೊಂಡಿದ್ದರೆ ಕೊಲೆಯಾಗುತ್ತಿರಲಿಲ್ಲ. ಮೂಢನಂಬಿಕೆಯೆಂದು ದೂರನ್ನು ತಳ್ಳಿ ಹಾಕಿದವರ ಮನೆಯಲ್ಲಿ ಹೆಣ್ಣು ಮಕ್ಕಳಿಲ್ಲವೇ? ಈಗ ನಮ ಅಕ್ಕನನ್ನು ಇವರು ವಾಪಸ್‌‍ ತಂದುಕೊಡುತ್ತಾರೆಯೇ? ಎಂದು ಯಶೋಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಂಜಲಿ ಕೊಲೆಯನ್ನು ಸಹೋದರಿ ಖುದ್ದು ತನ್ನ ಕಣ್ಣಾರೆ ನೋಡಿದ್ದಾಗಿ ಹೇಳುತ್ತಿದ್ದಾರೆ. \ No newline at end of file diff --git a/eesanje/url_46_144_4.txt b/eesanje/url_46_144_4.txt new file mode 100644 index 0000000000000000000000000000000000000000..85c313f19b2d7ebe9c04d6b040681cd2950e1d7b --- /dev/null +++ b/eesanje/url_46_144_4.txt @@ -0,0 +1,12 @@ +ವರ್ಗಾವಣೆ ದಂಧೆ, ಪ್ರತಿ ಹುದ್ದೆಗೂ ರೇಟ್ ಫಿಕ್ಸ್, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ: ಬಿಜೆಪಿ ವಾಗ್ದಾಳಿ +ಬೆಂಗಳೂರು,ಮೇ 16-ಇಲಾಖೆಯಲ್ಲಿನ ವರ್ಗಾವಣೆಗೆ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದ್ದು, ಕರ್ನಾಟಕದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕ ಪಿ.ರಾಜೀವ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. +ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಇಲಾಖೆಯಲ್ಲಿನ ಆಯಕಟ್ಟಿನ ಹುದ್ದೆಗಳಿಗೆ ಇಂತಿಷ್ಟು ಹಣ ನೀಡಿದರೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಪ್ರತಿ ಇಲಾಖೆಯಲ್ಲೂ ಒಂದೊಂದು ಹುದ್ದೆಗೆ ಇಂತಿಷ್ಟು ಎಂದು ದರ ನಿಗದಿಪಡಿಸಲಾಗಿದೆ ಎಂದು ಕಿಡಿಕಾರಿದರು. +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಸಮಾಜಘಾತುಕ ಶಕ್ತಿಗಳು, ಮೂಲಭೂತವಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸಿರುವ ಸರ್ಕಾರ ಜನಸಾಮಾನ್ಯರಿಗೆ ರಕ್ಷಣೆ ಕೊಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಿಡಿಕಾರಿದರು. +ಒಂದು ವರ್ಷದಲ್ಲಿ ಕೊಲೆ, ಸುಲಿಗೆ, ಮತಾಂತರ ತುಷ್ಟೀಕರಣದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶೂನ್ಯ ಅಭಿವೃದ್ಧಿ ಮತ್ತು ಅಸಮರ್ಥ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಕಾಂಗ್ರೆಸ್‌‍ನ ಸಾಧನೆ ಎಂದು ವ್ಯಂಗ್ಯವಾಡಿದರು. +ಆಡಳಿತ ನಡೆಸಲು ಸರ್ಕಾರ ವಿಫಲವಾಗಿದೆ. ಜನರು ಏಕಾದರೂ ಇಂತಹ ಪಕ್ಷವನ್ನು ಅಧಿಕಾರಕ್ಕೆ ತಂದೆವೋ ಎಂದು ಹಿಡಿಶಾಪ ಹಾಕುತ್ತಿದ್ದಾರೆ. ರಾಷ್ಟ್ರೀಯ ಅಪರಾಧ ಅಂಕಿ ಅಂಶಗಳ ಪ್ರಕಾರ, ರಾಜ್ಯದಲ್ಲಿ ಶೇ. 60 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಿಸಿದರು. +ಹುಬ್ಬಳ್ಳಿಯಲ್ಲಿ ಕೇವಲ ಒಂದು ತಿಂಗಳ ಅವಧಿಯಲ್ಲಿ ಎರಡು ಕಗ್ಗೊಲೆಗಳಾಗಿವೆ. ನೇಹಾ ಹತ್ಯೆ ಬಳಿಕ ಇದೀಗ ಅಂಜಲಿ ಕೊಲೆಯಾಗಿದೆ. ಈ ಬಂಡ ಸರ್ಕಾರದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಇಲ್ಲವಾಗಿದೆ. ಕೊಲೆ, ಸುಲಿಗೆ ವಸೂಲಿ ನಿರಂತರವಾಗಿ ನಡೆಯುತ್ತಿವೆ. ಒಂದು ರೀತಿ ಬಂಡ ರೀತಿಯಲ್ಲಿ ಸರ್ಕಾರ ವರ್ತನೆ ಮಾಡುತ್ತಿದೆ ಎಂದು ಟೀಕಾಪ್ರಹಾರ ನಡೆಸಿದರು. +ಯಾವಾಗ ಏನು ಆಗುತ್ತದೆ ಎಂದು ಜನರು ಭಯಭೀತರಾಗಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಗೃಹ ಇಲಾಖೆ ನಿರ್ವಹಣೆ ಮಾಡುವಲ್ಲಿ ಸಚಿವ ಡಾ.ಜಿ.ಪರಮೇಶ್ವರ್‌ ವಿಫಲರಾಗಿದ್ದಾರೆ. ತಕ್ಷಣವೇ ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ತಾಕೀತು ಮಾಡಿದ್ದಾರೆ. +ಪೆನ್‌ಡ್ರೈವ್‌ ಪ್ರಕರಣವನ್ನು ಉದ್ದೇಶಪೂರಕವಾಗಿಯೇ ಮುಚ್ಚಿ ಹಾಕಲು ಸರ್ಕಾರ ಸಂಚು ರೂಪಿಸಿದೆ. ಮೊದಲು ಎಫ್‌ಐಆರ್‌ ಆದಾಗಲೂ ಪ್ರಜ್ವಲ್‌ ರೇವಣ್ಣ ಅವರನ್ನು ಏಕೆ ಬಂಧಿಸಲಿಲ್ಲ. ನಿಮಗೆ ನಿಜವಾಗಿಯೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದಿದ್ದರೆ ನಿಸ್ಪಕ್ಷಪಾತ ತನಿಖೆ ನಡೆಸಬೇಕಿತ್ತು. ಎಸ್‌‍ಐಟಿ ರಚನೆಯಾಗುತ್ತಿದ್ದಂತೆ ಹೊರದೇಶಕ್ಕೆ ಹೋಗಬಹುದೆಂಬ ಸೂಕ್ಷ್ಮತೆ ಗುಪ್ತಚರ ಇಲಾಖೆಗೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು. +ಪ್ರಜ್ವಲ್‌ ರೇವಣ್ಣ ಅವರನ್ನು ಹೊರದೇಶಕ್ಕೆ ಕಳುಹಿಸಿಕೊಡಲು ಸರ್ಕಾರವೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿತ್ತು. ಈಗ ರಾಜಕೀಯವಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಗಿದ ಮೇಲೆ ಈ ಪ್ರಕರಣದ ಬಗ್ಗೆ ಯಾರಿಗೂ ಗಂಭೀರತೆ ಇಲ್ಲ ಎಂದು ಹೇಳಿದರು. +ಪಕ್ಷದ ಪ್ರಧಾನ ಕಾರ್ಯದರ್ಶಿ ಪಿ.ರಾಜು ಮಾತನಾಡಿ, ಸರ್ಕಾರಕ್ಕೆ ಜೀವ ಇದೆಯೇ? ಅಥವಾ ಸತ್ತು ಹೋಗಿದೆಯೇ? ಮಹಿಳೆಯರು, ದಲಿತರು, ಅಮಾಯಕರ ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ರಾಜ್ಯಪಾಲರು ವಜಾ ಮಾಡಬೇಕೆಂದು ಆಗ್ರಹಿಸಿದರು. +ಜನರ ರಕ್ಷಣೆ, ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಕೊಲೆಗಡುಕರ ತಾಣವಾಗಿದೆ. ಪ್ರಮುಖ ಆರೋಪಿಗಳನ್ನು ಬಿಟ್ಟು ಅಮಾಯಕರ ಮೇಲೆ ದೂರು ದಾಖಲಿಸಲಾಗುತ್ತದೆ. ವಿದ್ಯಾರ್ಥಿನಿ ಅಂಜಲಿ ಕೊಲೆಗೂ ಮುನ್ನ ನಿನ್ನನ್ನು ನೇಹಾ ರೀತಿಯಲ್ಲಿ ಕೊಲೆ ಮಾಡುತ್ತೇನೆಂದು ಆರೋಪಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಅವಳಿಗೆ ಸಂಬಂಧಪಟ್ಟವರು ದೂರು ಕೊಟ್ಟಿದ್ದರೂ ಇದನ್ನು ಪೊಲೀಸರು ಮೂಢನಂಬಿಕೆ ಎಂದು ಹೇಳಿದ್ದಾರೆ. ಮೊದಲು ಈ ಅಧಿಕಾರಿಗಳನ್ನು ಸೇವೆಯಿಂದಲೇ ಶಾಶ್ವತವಾಗಿ ವಜಾಗೊಳಿಸಬೇಕೆಂದು ಒತ್ತಾಯ ಮಾಡಿದರು. \ No newline at end of file diff --git a/eesanje/url_46_144_5.txt b/eesanje/url_46_144_5.txt new file mode 100644 index 0000000000000000000000000000000000000000..162025e2a4a9320f0fbc906d2c16c1b081fb6e76 --- /dev/null +++ b/eesanje/url_46_144_5.txt @@ -0,0 +1,6 @@ +ಎಕ್ಸ್ ಖಾತೆಯ ಬ್ಲೂ ಟಿಕ್‌ ಮಾರ್ಕ್‌ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ +ಬೆಂಗಳೂರು,ಮೇ 16-ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಎದುರಿಸುತ್ತಿರುವ ಹಾಸನ ಜೆಡಿಎಸ್‌‍ ಸಂಸದ ಪ್ರಜ್ವಲ್‌ ರೇವಣ್ಣ ಅವರು ತಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿನ ಬ್ಲೂ ಟಿಕ್‌ ಮಾರ್ಕ್‌ ಕಳೆದುಕೊಂಡಿದ್ದಾರೆ. +ವೆರಿಫೈಡ್ ಅಕೌಂಟ್‌ ಎಂದು ಬಳಕೆದಾರರಿಗೆ ಕಂಪೆನಿಯು ಬ್ಲೂ ಟಿಕ್‌ ನೀಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇದ್ದ ಬ್ಲೂ ಟಿಕ್‌ ಮಾರ್ಕ್‌ ಇದೀಗ ಪ್ರಜ್ವಲ್‌ ಖಾತೆಯಲ್ಲಿ ಕಾಣಿಸುತ್ತಿಲ್ಲ.ವೆರಿೈಡ್‌ ಅಕೌಂಟ್‌ ಸ್ಟೇಟಸ್‌‍ನಿಂದ ಪ್ರಜ್ವಲ್‌ ಖಾತೆ ಹೊರಬಿದ್ದಿದ್ದು, ಎಕ್ಸ್ ಕಂಪೆನಿಯು ಅಧಿಕೃತ ಖಾತೆಯನ್ನು ಅಮಾನ್ಯ ಮಾಡಲು ಯಾವುದೇ ಕಾರಣ ನೀಡಿಲ್ಲ. +ಎಕ್ಸ್ ಗಿಂತ ಮುಂಚೆ ಟ್ವಿಟರ್‌ ಖಾತೆ ಬಳಸುವಾಗ ಅಧಿಕೃತ ಹಾಗೂ ಗಣ್ಯ ವ್ಯಕ್ತಿಗಳಿಗೆ ಬ್ಲೂ ಟಿಕ್‌ ಮಾರ್ಕ್‌ ನೀಡಲಾಗುತ್ತಿತ್ತು. ಇದೇ ಮಾದರಿಯಲ್ಲಿ ಪ್ರಜ್ವಲ್‌ ರೇವಣ್ಣಗೂ ನೀಡಿತ್ತು. ಇದೀಗ ಕಾರಣ ನೀಡದೆ ರದ್ದು ಮಾಡಲಾಗಿದೆ. +ಉದ್ಯಮಿ ಎಲಾನ್‌ ಮಸ್ಕ್‌ ಟ್ವಿಟರ್‌ ಕಂಪೆನಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಬಳಿಕ ಹಲವು ಬದಲಾವಣೆ ತಂದಿದ್ದಾರೆ. ಟ್ವಿಟರ್‌ಬದಲಿಗೆ ಎಕ್‌್ಸ ಎಂದು ನಾಮಕರಣ ಮಾಡಿ, ಬಳಕೆದಾರರು ಬ್ಲೂ ಟಿಕ್‌ ಪಡೆಯಬೇಕಾದರೆ ಚಂದಾದಾರರಾಗುವ ಪದ್ಧತಿ ಜಾರಿಗೊಳಿಸಿದ್ದರು. ಗ್ರಾಹಕರು ಹಣ ನೀಡಿ ಬ್ಲೂ ಟಿಕ್‌ ಮಾರ್ಕ್‌ ಪಡೆಯಬಹುದು. ತಿಂಗಳಿಗೆ ನಿಗದಿತ ಪ್ರಮಾಣದಲ್ಲಿ ಹಣ ನೀಡಬೇಕಿದೆ. +ಪ್ರಜ್ವಲ್‌ ಪ್ರಕರಣದಲ್ಲಿ ಬ್ಲೂ ಟಿಕ್‌ ಮಾರ್ಕ್‌ ಪಡೆಯಲು ಹಣ ಪಾವತಿಸಿಲ್ಲವೋ ಅಥವಾ ಅವರ ಮೇಲೆ ಇತ್ತೀಚೆಗೆ ಕೇಳಿಬಂದ ಆರೋಪಗಳ ಬಳಿಕ ಸ್ವಯಂಪ್ರೀರಿತವಾಗಿ ಬ್ಲೂ ಟಿಕ್‌ ಕಳೆದುಕೊಂಡಿದ್ದಾರೋ ಎಂಬುದರ ಬಗ್ಗೆ ತಿಳಿದುಬಂದಿಲ್ಲ. \ No newline at end of file diff --git a/eesanje/url_46_144_6.txt b/eesanje/url_46_144_6.txt new file mode 100644 index 0000000000000000000000000000000000000000..857ae0fed819642d886e47eb492565c866573f65 --- /dev/null +++ b/eesanje/url_46_144_6.txt @@ -0,0 +1,6 @@ +ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮುಂದುವರೆಯಲಿದೆ ಮಳೆ +ಬೆಂಗಳೂರು,ಮೇ 16-ನೈರುತ್ಯ ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯಲಿದೆ. ಮೇಲೈ ಸುಳಿಗಾಳಿ, ಟ್ರಫ್‌ ಹಾಗೂ ಬಂಗಾಳಕೊಲ್ಲಿ, ಹಿಂದೂ ಮಹಾಸಾಗರ, ಅರಬ್ಬೀಸಮುದ್ರದಲ್ಲಿ ಮಳೆಗೆ ಪೂರಕವಾದ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಹಗುರ ಇಲ್ಲವೇ ತುಂತುರು ಮಳೆ ಆಗಾಗ್ಗೆ ಬೀಳುವ ಸಾಧ್ಯತೆಗಳಿವೆ. +ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಭಾರತೀಯ ಹವಾಮಾನ ಇಲಾಖೆ ಈ ಬಾರಿಯ ಮುಂಗಾರು ಸಕಾಲಕ್ಕೆ ಆಗಮಿಸಲಿದೆ ಎಂಬ ಮುನ್ಸೂಚನೆ ನೀಡಿದೆ. ಮೇ ಅಂತ್ಯ ಇಲ್ಲವೇ ಜೂನ್‌ 1 ರಂದು ಮುಂಗಾರು ಮಳೆ ಕೇರಳ, ಕರಾವಳಿ ಪ್ರವೇಶಿಸುವ ಸಾಧ್ಯತೆಯಿದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ. +ಇದುವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಒಟ್ಟಾರೆ ವಾಡಿಕೆ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ವರ್ಷ ವಾಡಿಕೆಗಿಂತ ಶೇ.24 ರಷ್ಟು ಮಳೆ ಕೊರತೆ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿತ್ತು. ಪೂರ್ವ ಮುಂಗಾರು ಕೂಡ ಮಾರ್ಚ್‌, ಏಪ್ರಿಲ್‌ನಲ್ಲಿ ಕೈಕೊಟ್ಟಿದ್ದು, ಜನರು ಕಂಗಾಲಾಗುವಂತೆ ಮಾಡಿತ್ತು. +ಮೇನಲ್ಲಿ ಪೂರ್ವ ಮುಂಗಾರು ಮಳೆ ಅಲ್ಲಲ್ಲಿ ಬೀಳುತ್ತಿದ್ದು, ಆಶಾಭಾವನೆ ಮೂಡಿಸಿದೆ. ಇದರ ಬೆನ್ನಲ್ಲೇ ಸಕಾಲಕ್ಕೆ ಮುಂಗಾರು ಆಗಮನವಾಗಿ ವಾಡಿಕೆ ಪ್ರಮಾಣದ ಮಳೆಯಾಗಲಿದೆ ಎಂಬ ಮುನ್ಸೂಚನೆ ದೊರೆತಿರುವುದು ಜನರಲ್ಲಿನ ಆತಂಕ ದೂರ ಮಾಡಿದಂತಾಗಿದೆ. +ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿದ್ಯುತ್‌ ಕಂಬ, ಬಾಳೆ, ತೆಂಗು, ಮಾವು ಮೊದಲಾದ ಬೆಳೆಗಳಿಗೆ ಹಾನಿಯಾದ ವರದಿಯಾಗಿದೆ.ಹವಾ ಮುನ್ಸೂಚನೆ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. \ No newline at end of file diff --git a/eesanje/url_46_144_7.txt b/eesanje/url_46_144_7.txt new file mode 100644 index 0000000000000000000000000000000000000000..3b603d8ca0f79d61d43e3002c3de7caab5bb8564 --- /dev/null +++ b/eesanje/url_46_144_7.txt @@ -0,0 +1,9 @@ +ಪ್ರೌಢಶಾಲೆ ಶಿಕ್ಷಕರಿಗೆ ಸರ್ಕಾರದಿಂದ ಸಿಹಿಸುದ್ದಿ +ಬೆಂಗಳೂರು,ಮೇ 16-ಕರ್ನಾಟಕದ ಪ್ರೌಢಶಾಲೆಗಳ ಶಿಕ್ಷಕರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಬೇಸಿಗೆ ರಜೆ ಕೆಲವು ದಿನಗಳನ್ನು ತ್ಯಾಗ ಮಾಡಿ ಶಾಲೆಗಳಿಗೆ ಆಗಮಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಪಡೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. +ರಾಜ್ಯದಲ್ಲಿ ಈಗಾಗಲೇ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಘೋಷಿಸಲಾಗಿದೆ. ಜೂನ್‌ನಲ್ಲಿ ನಡೆಯುಲಿರುವ ಈ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ಬೋಧನಾ ಪರಿಹಾರ ತರಗತಿಗಳನ್ನು ನಡೆಸಬೇಕಿದೆ. ಇದಕ್ಕಾಗಿ ಶಿಕ್ಷಕರು ಬೇಸಿಗೆಯನ್ನು ಬಿಟ್ಟು ಬರಬೇಕಿದೆ. +ಸರ್ಕಾರದ ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ, ಮೇ 29ರ ತನಕ ಶಾಲೆಗಳಿಗೆ ಬೇಸಿಗೆ ರಜೆ ಇದೆ. ಆದರೆ ಶಿಕ್ಷಕರು ಶಾಲೆಗಳಿಗೆ ಮೇ 15ರಿಂದಲೇ ಆಗಮಿಸುತ್ತಿದ್ದಾರೆ. ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2ಕ್ಕೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಬೇಸಿಗೆ ರಜೆ ಕಡಿತ ಮಾಡಿರುವುದಕ್ಕೆ ಶಿಕ್ಷಕರು ಆಕೋಶ ವ್ಯಕ್ತಪಡಿಸಿದ್ದರು. +ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2 ಎಂದರೆ 2024ರ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಹಾಜರಾದ ಮತ್ತು ಪೂರ್ಣಗೊಳಿಸಲು ಆಗಿಲ್ಲದ ಹಾಗೂ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಜೂನ್ನಲ್ಲಿ ನಡೆಸುವ ಪರೀಕ್ಷೆ.ಈ ಪರೀಕ್ಷೆಗೆ ಹೆಸರು ನೋಂದಣಿ ಮಾಡಿರುವ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ವಿಶೇಷ ಬೋಧನಾ ಪರಿಹಾರ ತರಗತಿಗಳನ್ನು ನಡೆಸಲಾಗುತ್ತದೆ. ಇದಕ್ಕಾಗಿ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರಿಗೆ ಕಡಿತವಾಗುವ ಬೇಸಿಗೆ ರಜೆ ದಿನಗಳ ಬದಲಿಗೆ ಗಳಿಕೆ ರಜೆಯನ್ನು ನೀಡಲಾಗುತ್ತದೆ. +14 ದಿನಗಳ ಬೇಸಿಗೆ ರಜೆ ಕಡಿತಗೊಳ್ಳುವ ಹಿನ್ನಲೆಯಲ್ಲಿ ಶಿಕ್ಷಕರು ವಿಶೇಷ ಬೋಧನಾ ಪರಿಹಾರ ತರಗತಿಗಳಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಗಳಿಕೆ ರಜೆಯನ್ನು ನೀಡಿ ಸರ್ಕಾರ ಶಿಕ್ಷಕರ ಮನವೊಲಿಕೆ ಮಾಡಿದೆ. ಮೇ 15ರಿಂದಲೇ ಕೆಲವು ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ಆರಂಭಿಸಲಾಗಿದೆ. ಒಂದು ಶಾಲೆಯಲ್ಲಿ ಎಸ್‌‍ಎಸ್‌‍ಎಲ್‌ಸಿ ಅನುತ್ತೀರ್ಣಗೊಂಡ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 10ಕ್ಕಿಂತ ಕಡಿಮೆ ಇದ್ದರೆ ಸಮೀಪದ ಶಾಲೆಯಲ್ಲಿ ತರಗತಿ ನಡೆಸಬಹುದು. +ಆದರೆ 10 ವಿದ್ಯಾರ್ಥಿಗಳಿದ್ದರೆ ಅದೇ ಶಾಲೆಯಲ್ಲಿ ತರಗತಿ ನಡೆಸಬೇಕು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಶಾಲೆಯಲ್ಲಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-1 ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಇದ್ದರೆ ಅವರು ಕಡ್ಡಾಯವಾಗಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2ಕ್ಕೆ ನೋಂದಣಿ ಮಾಡಿಕೊಳ್ಳುವಂತೆ ಮುಖ್ಯ ಶಿಕ್ಷಕರು ನೋಡಿಕೊಳ್ಳಬೇಕು. ಸಿ, ಸಿ+ ಲಿತಾಂಶ ಬಂದಿರುವ ವಿದ್ಯಾರ್ಥಿಗಳು ಲಿತಾಂಶ ಸುಧಾರಣೆಗೆ ಬಯಸಿದರೆ ನೋಂದಣಿಗೆ ಉತ್ತೇಜನ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. +ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-1 ಮುಗಿಸಿ, ಮೌಲ್ಯ ಮಾಪನ ಕಾರ್ಯವನ್ನು ಮುಗಿಸಿದ್ದ ಶಿಕ್ಷಕರಿಗೆ ಲೋಕಸಭಾ ಚುನಾವಣಾ ಕಾರ್ಯ ಬಂದಿತ್ತು. ಚುನಾವಣೆ ಮುಗಿಸಿ ಬೇಸಿಗೆ ರಜೆಯಲ್ಲಿದ್ದ ಶಿಕ್ಷಕರಿಗೆ ವಿಶೇಷ ಬೋಧನಾ ಪರಿಹಾರ ತರಗತಿಗೆ ಆಗಮಿಸುವಂತೆ ಇಲಾಖೆ ಸೂಚನೆ ನೀಡಿದ್ದು ವಿರೋಧಕ್ಕೆ ಕಾರಣವಾಗಿತ್ತು. ಮೊದಲೇ ಶಿಕ್ಷಕರು ಬೇರೆ ಇಲಾಖೆಗಳ ನೌಕರರಿಗೆ ಸಿಗುವಷ್ಟ ರಜೆಗಳು ಸಿಗುತ್ತಿಲ್ಲ ಎಂದು ದೂರಿದ್ದರು. +7ನೇ ರಾಜ್ಯ ವೇತನ ಆಯೋಗಕ್ಕೆ ಶಿಕ್ಷಕರ ಗಳಿಕೆ ರಜೆ ಹೆಚ್ಚಿಸಲು ಶಿಾರಸು ಮಾಡಬೇಕು ಎಂದು ಮನವಿ ಮಾಡಿದ್ದರು. ಈಗ ಬೇಸಿಗೆ ರಜೆ ಕಡಿತವನ್ನು ಗಳಿಕೆ ರಜೆಗೆ ಹೊಂದಿಸಲು ಸರ್ಕಾರ ಅವಕಾಶ ನೀಡಿದೆ. ಶಾಲೆಯ ಮುಖ್ಯ ಶಿಕ್ಷಕರು ಈ ವಿಶೇಷ ಬೋಧನಾ ಪರಿಹಾರ ತರಗತಿಗೆ ವೇಳಾಪಟ್ಟಿಯನ್ನು ತಯಾರು ಮಾಡಬೇಕಿದೆ. ಅಲ್ಲದೇ ಈ ತರತಿಗೆ ಬರುವ ವಿದ್ಯಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಬೇಕಿದೆ. ಆದ್ದರಿಂದ ಪಠ್ಯ ಬೋಧನೆ ಮಾಡುವ ಶಿಕ್ಷಕರು ಮಾತ್ರವಲ್ಲ ಮುಖ್ಯ ಶಿಕ್ಷಕರ ಬೇಸಿಗೆ ರಜೆ ಸಹ ಕಡಿತಗೊಂಡಿದೆ. ಈಗ ಗಳಿಕೆ ರಜೆ ಪಡೆಯಲು ಅವಕಾಶ ನೀಡಿರುವುದು ಶಿಕ್ಷಕರಿಗೆ ಸಹಾಯಕವಾಗಿದೆ. \ No newline at end of file diff --git a/eesanje/url_46_144_8.txt b/eesanje/url_46_144_8.txt new file mode 100644 index 0000000000000000000000000000000000000000..84ee19d0b82b8e9bd65a690f57c893540a8fa789 --- /dev/null +++ b/eesanje/url_46_144_8.txt @@ -0,0 +1,5 @@ +ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳು : ಆಕ್ರೋಶ +ಬೆಂಗಳೂರು,ಮೇ 16-ರೈತರಿಗೆ ನೀಡಿರುವ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ರಾಜ್ಯಸರ್ಕಾರ ತಾಕೀತು ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. +ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯಸರ್ಕಾರ ಕೂಡಲೇ ರೈತರಿಗೆ ಸಾಲ ನೀಡಿರುವ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರ ಸಭೆ ನಡೆಸಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಬೇಕು ಹಾಗೂ ಬರಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಬೇಕು ಎಂದಿದ್ದಾರೆ. +ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್‌ ಖಾತೆಗಳಿಗೆ ಜಮೆಯಾಗಿದ್ದ ಬರಪರಿಹಾರದ ಹಣವನ್ನು ರೈತರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕುಗಳ ವರ್ತನೆ ನಿಜಕ್ಕೂ ಕ್ರೂರಾತಿಕೂರವಾಗಿದ್ದು, ಖಂಡನೀಯವಾಗಿದೆ ಎಂದಿದ್ದಾರೆ. +ಈಗಾಗಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಎಂದರೆ ತಪ್ಪಲ್ಲ ಎಂದು ಹೇಳಿದ್ದಾರೆ.ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆ ಎಂಬುದೇ ಇಲ್ಲದಂತಾಗಿದೆ. ಹೆಸರಿಗೆ ಅನ್ನದಾತ. ಆದರೆ ಅವರ ಕಣ್ಣೀರು ಒರೆಸಿ ಅವರಿಗೆ ದಾತನಾಗಿ ನಿಲ್ಲಬೇಕಾಗಿದ್ದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಟೀಕಿಸಿದ್ದಾರೆ. \ No newline at end of file diff --git a/eesanje/url_46_144_9.txt b/eesanje/url_46_144_9.txt new file mode 100644 index 0000000000000000000000000000000000000000..0d936f5dfcd8d944bad33af92d9920f0304cdb70 --- /dev/null +++ b/eesanje/url_46_144_9.txt @@ -0,0 +1,8 @@ +ಬಿಜೆಪಿಯ ಐಟಿ ಸೆಲ್‌ನಲ್ಲಿ ಆಟ ಆಡುವ ಮಕ್ಕಳನ್ನು ತಂದು ಕೂರಿಸಿದಂತಿದೆ : ಕಾಂಗ್ರೆಸ್ +ಬೆಂಗಳೂರು,ಮೇ 15-ಬಿಜೆಪಿಯ ಐಟಿ ಸೆಲ್‌ನಲ್ಲಿ ಆಟ ಆಡುವ ಮಕ್ಕಳನ್ನು ತಂದು ಕೂರಿಸಿದಂತಿದೆ, ಸರ್ಕಾರ ನಡೆಸುವಾಗ ಆಡಳಿತಾತ್ಮಕ ವಿಷಯಗಳ ಬದಲು ಲೂಟಿಯತ್ತಲೇ ಗಮನ ಹರಿಸಿದ ಬಿಜೆಪಿಗೆ ಆಡಳಿತದ ಸೂಕ್ಷ್ಮ ವಿಷಯಗಳ ಅರಿವು ಬರಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. +ಟಿಎಂಎಲ್ ಸಾರ್ಟ್ ಸಿಟಿ ಮೊಬಿಲಿಟಿ ಸಲ್ಯೂಷನ್ಸ್ ಲಿಮಿಟೆಡ್ ಎಂಬ ಸಂಸ್ಥೆ ವಿದ್ಯುತ್ ಚಾಲಿತ ಬಸ್ಸುಗಳ ಸೇವೆ ಒದಗಿಸುವ ಒಪ್ಪಂದ ಮಾಡಿಕೊಂಡಿದೆ. ಬಸ್ಸುಗಳು, ಅದರ ಚಾಲಕ, ನಿರ್ವಾಹಕರ ನಿಯೋಜನೆ, ವೇತನ ಮುಂತಾದ ಎಲ್ಲಾ ವಿಷಯಗಳ ಹೊಣೆಯೂ ಸದರಿ ಸಂಸ್ಥೆಯದ್ದೇ ಆಗಿರುತ್ತದೆ. +ಆ ಸಂಸ್ಥೆಯು ತನ್ನ ಚಾಲಕರಿಗೆ ನೀಡುವ ವೇತನದಲ್ಲಿ ವ್ಯತ್ಯಯ ಆಗಿರುವ ಕಾರಣ ಚಾಲಕರು ಸಂಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರ ಪರಿಣಾಮ ಎಲೆಕ್ಟ್ರಿಕ್ ಬಸ್ಸುಗಳ ಸೇವೆಯಲ್ಲಿ ವ್ಯತ್ಯಯ ಆಗಿದೆ ಎಂದು ವಿವರಿಸಲಾಗಿದೆ. +ಈ ಸೇವೆಯು ಸಂಪೂರ್ಣ ಸದರಿ ಸಂಸ್ಥೆಯ ಜವಾಬ್ದಾರಿಯಾಗಿದ್ದರೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ವಿಷಯ ತಿಳಿದ ತಕ್ಷಣವೇ ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಅಧಿಕಾರಿಗಳು, ಸಂಸ್ಥೆಯ ಪ್ರತಿನಿಧಿಗಳು ಚಾಲಕರೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಲು ಮುಂದಾಗಿದ್ದಾರೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ. +ಟಿಎಂಎಲ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿ ವ್ಯತ್ಯಯ ಆಗದಂತೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸದ್ಯ ಎಲೆಕ್ಟ್ರಿಕ್ ಬಸ್ಸುಗಳ ಸೇವೆಯು ಸರಾಗವಾಗಿ ನಡೆಯುತ್ತಿದ್ದು, ಯಾವುದೇ ಸಮಸ್ಯೆ ಇಲ್ಲದೆ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುತ್ತಿದೆ ಎಂದು ವಿವರಿಸಲಾಗಿದೆ. +ವಿಷಯದ ಅರಿವಿಲ್ಲದೆ ಆರೋಪಿಸುವ ಬಿಜೆಪಿಯವರಿಗೆ ತಮ ಸರ್ಕಾರದ ಅವಧಿಯಲ್ಲಿ ಸಾರಿಗೆ ನೌಕರರು ಐತಿಹಾಸಿಕ ಪ್ರತಿಭಟನೆ ನಡೆಸಿದ್ದು ಮರೆತು ಹೋಗಿದೆಯೇ? ಎಂದು ಪ್ರಶ್ನಿಸಲಾಗಿದೆ. +ಸಾರಿಗೆ ನೌಕರರ ಮಕ್ಕಳು ಸಂಬಳ ಕೊಡಿ ಅಂಕಲ್ ಎಂದು ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರ ಬಳಿ ಗೋಳಾಡಿದ್ದನ್ನು ಮರೆಯಲು ಸಾಧ್ಯವೇ? ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರನ್ನು ದ್ವೇಷದಿಂದ ನೌಕರಿಯಿಂದ ಕಿತ್ತುಹಾಕಿದ್ದನ್ನು ಮರೆಯಬಹುದೇ? ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. \ No newline at end of file diff --git a/eesanje/url_46_145_1.txt b/eesanje/url_46_145_1.txt new file mode 100644 index 0000000000000000000000000000000000000000..47a6ec9ffae301174adcc95b2b44a59de1ce9db4 --- /dev/null +++ b/eesanje/url_46_145_1.txt @@ -0,0 +1,7 @@ +ಬಿಜೆಪಿಯ ಮುಸ್ಲಿಂ ದ್ವೇಷ ಭವಿಷ್ಯತ್ತಿಗೆ ಮಾರಕವಾಗಲಿದೆ : ಹರಿಪ್ರಸಾದ್‌ +ಬೆಂಗಳೂರು,ಮೇ 15-ಅಣ್ಣ ತಮಂದಿರಂತೆ ಬಾಳಿ ಬದುಕುತ್ತಿದ್ದ ಅನ್ಯ ಸಮುದಾಯಗಳಲ್ಲಿ ಕೇವಲ ಅಧಿಕಾರಕ್ಕಾಗಿ ಹೆಚ್ಚಿರುವ ದ್ವೇಷದ ಜ್ವಾಲೆ ಮನೆ-ಮನಗಳನ್ನು ಸುಡುತ್ತಿದೆ. ಅದರ ಅಪಾಯವೇ ಭವಿಷ್ಯತ್ತಿಗೆ ಮಾರಕವಾಗಲಿದೆ ಎಂದು ಕಾಂಗ್ರೆಸ್‌‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಆತಂಕ ವ್ಯಕ್ತಪಡಿಸಿದ್ದಾರೆ. +ತಾವು ಎಂದೂ ಹಿಂದೂ-ಮುಸ್ಲಿಂ ಎಂದು ವಿಭಜನೆಯ ಮಾತುಗಳನ್ನಾಡುವುದಿಲ್ಲ, ಒಂದು ವೇಳೆ ಆ ರೀತಿ ಮಾತನಾಡಿದರೆ ಸಾರ್ವಜನಿಕ ಜೀವನದಲ್ಲೇ ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿ.ಕೆ.ಹರಿಪ್ರಸಾದ್‌ರವರು, ಸಮುದಾಯದವರ ಮನೆಗಳಲ್ಲಿ ಬಿರಿಯಾನಿ ತಿನ್ನುವುದು ಮೋದಿಗೆ ಬಾಲ್ಯದಿಂದಲೇ ಬೆಳದು ಬಂದಿರುವ ಪಾಠ. +ಅದಕ್ಕಾಗಿಯೇ ಕರೆದರೂ, ಕರೆಯದಿದ್ದರೂ ಬಿರಿಯಾನಿ ತಿನ್ನಬೇಕೆನಿಸಿದರೆ ಪಾಕಿಸ್ತಾನದ ಪ್ರಧಾನಿಯ ಮೊಮಗಳ ಮದುವೆಯ ಬಿರಿಯಾನಿಗೂ ಮೋದಿ ಹಾಜರಾಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ. +ಬಾಲ್ಯದಲ್ಲಿ ಈದ್‌, ಮೊಹರಂ ಹಬ್ಬಗಳಲ್ಲಿ ನರೇಂದ್ರ ಮೋದಿಗೆ ಅಕ್ಕ ಪಕ್ಕದ ಮುಸ್ಲಿಂ ಮನೆಗಳಿಂದಲೇ ಊಟ ಬರುತ್ತಿತ್ತಂತೆ. ಪ್ರಧಾನಿಗಳೇ, ಇದು ಕೇವಲ ನಿಮ ಮನೆಯ ಉದಾಹರಣೆಯಲ್ಲ, ಭಾರತದ ಸಂಸ್ಕೃತಿಯೇ ಇದು. ನೆರೆ ಹೊರೆಯವರು ಜಾತಿ, ಮತ, ಭೇದ ಇಲ್ಲದೇ ಬದುಕು ಕಟ್ಟಿಕೊಂಡಿದ್ದೇ ಈ ಕೊಡು ಕೊಳ್ಳುವ ಪರಂಪರೆಯಿಂದ ಎಂದು ತಿಳಿಸಿದ್ದಾರೆ. +ಉಂಡ ಮನೆಗೆ ದ್ರೋಹ ಬಗೆಯುವುದು, ಕಟ್ಟಿಕೊಂಡ ಪತ್ನಿಯನ್ನು, ನಂಬಿಕೊಂಡ ತಂದೆ ತಾಯಿಯನ್ನು ನಡು ನೀರಿನಲ್ಲಿ ಕೈ ಬಿಡುವುದು ಭಾರತೀಯ ಸಂಸ್ಕೃತಿಯೇ ಅಲ್ಲ. ಭಾರತದ ಮೂಲ ಸಂಸ್ಕೃತಿಯನ್ನು ಉಳಿಸಿದ ಹೆಮೆ ಕಾಂಗ್ರೆಸ್‌‍ ಪಕ್ಷಕ್ಕಿದೆ ಎಂದಿದ್ದಾರೆ. +ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮಗಳ ಭಾವನೆಗಳಿಗೆ ಗೌರವ ನೀಡಿದ ಹೆಮೆಯೂ ಕಾಂಗ್ರೆಸ್‌‍ ಪಕ್ಷಕ್ಕಿದೆ. ಮಾನವೀಯತೆಯೇ ಎಲ್ಲಾ ಧರ್ಮಗಳಲ್ಲಿರುವ ತಿರುಳನ್ನು ನಾವು ಉಳಿಸಿಯೇ ಸಿದ್ಧ. ನಿಮ ಮುಖವಾಡಗಳು ಇನ್ನಷ್ಟು ಬಯಲಾಗುತ್ತಲೇ ಇರುತ್ತದೆ. ಅದಕ್ಕೆ ಕಾಲವೇ ಸಾಕ್ಷಿಯಾಗುತ್ತಿದೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_145_10.txt b/eesanje/url_46_145_10.txt new file mode 100644 index 0000000000000000000000000000000000000000..043f0ecfbdb839073de56350edb29eb8a6faccc5 --- /dev/null +++ b/eesanje/url_46_145_10.txt @@ -0,0 +1,10 @@ +ಪ್ರಜ್ವಲ್‌ ಪ್ರಕರಣ : ಸಿಎಂಗೆ ಪತ್ರ ಬರೆದು 16 ಬೇಡಿಕೆಯಿಟ್ಟ 107 ಸಾಹಿತಿಗಳು +ಬೆಂಗಳೂರು,ಮೇ 15-ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ 107 ಸಾಹಿತಿಗಳು ಹಾಗೂ ಪ್ರಜ್ಞಾವಂತ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು 16 ಬೇಡಿಕೆಗಳನ್ನು ಮಂಡಿಸಿದ್ದಾರೆ. +ಹಿರಿಯ ಲೇಖಕರಾದ ಡಾ.ವಿಜಯಾ, ಸಾಹಿತಿ ಡಾ.ಜಿ ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ.ನೀಲಾ, ಕೆ.ಎಸ್‌‍ ವಿಮಲಾ, ಕುಂ.ವೀರಭದ್ರಪ್ಪ, ಮುಜರ್‌ ಅಸ್ಸಾದಿ, ಅಗ್ರಹಾರ ಕೃಷ್ಣಮೂರ್ತಿ, ಡಾ.ಲೀಲಾ ಸಂಪಿಗೆ, ಭಾನು ಮುಸ್ತಾಕ್‌, ದು.ಸರಸ್ವತಿ, ಜಿ.ಸಿ.ಬಯ್ಯಾರೆಡ್ಡಿ, ಗುರುಪ್ರಸಾದ್‌ ಕೆರೆಗೋಡು, ಮಾವಳ್ಳಿ ಶಂಕರ್‌ಸೇರಿದಂತೆ ಒಟ್ಟು 107 ಮಂದಿ ಪತ್ರ ಬರೆದಿದ್ದಾರೆ. +ಸಮೂಹ ಅತ್ಯಾಚಾರ ಹಗರಣ, ನಾಗರಿಕ ಸಮಾಜ ತಲೆತಗ್ಗಿಸುವ ಹೇಯ ಕೃತ್ಯ ಘಟನೆಗೆ ಸಂಬಂಧಪಟ್ಟಂತೆ ವಿಡಿಯೋಗಳು, ಫೋಟೋಗಳನ್ನು ದಾಖಲಿಸಿಟ್ಟುಕೊಂಡಿರುವುದು, ಸಂತ್ರಸ್ತರು ದೂರು ನೀಡದಂತೆ ಬೆದರಿಸುವುದು, ಅಪಹರಿಸುವುದು ಅಪರಾಧವಾಗಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಎಂದೂ ಕೇಳರಿಯದಂತಹ ಇಂತಹ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿರುವುದು ಆಘಾತಕಾರಿ. ಪ್ರಜ್ವಲ್‌ ರೇವಣ್ಣ ಅವರ ಕುಟುಂಬದ ಸದಸ್ಯರು ಸಾಂವಿಧಾನಿಕವಾಗಿ ಹಲವು ಹುದ್ದೆಗಳನ್ನು ಮತ್ತು ಸೌಲಭ್ಯಗಳನ್ನು ಅನುಭವಿಸುತ್ತಾ ಬಂದಿದ್ದಾರೆ. ಹಗರಣ ಬೆಳಕಿಗೆ ಬಂದ ಕೂಡಲೇ ಹಾಸನದ ಲೋಕಸಭಾ ಚುನಾವಣೆಯನ್ನು ಸ್ಥಗಿತಗೊಳಿಸದೇ ಇರುವುದು ಹಾಗೂ ಆರೋಪಿಯನ್ನು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಆರೋಪಿಯ ಚಲನವಲನಗಳ ಮೇಲೆ ಕಣ್ಗಾವಲು ಹಾಕದೇ ಆತ ದೇಶ ಬಿಟ್ಟು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಹೀಗಾದರೆ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಸರ್ಕಾರದ ಮೇಲೆ ವಿಶ್ವಾಸ ಇಡಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. +ವಿಡಿಯೋ ಬಹಿರಂಗಗೊಂಡಿರುವುದರಿಂದ ಸಂತ್ರಸ್ತರಿಗೆ ಸಾಕಷ್ಟು ಮುಜುಗರವಾಗಿದ್ದು, ಸಾರ್ವಜನಿಕವಾಗಿ ತಿರುಗಾಡಲು ತೊಂದರೆಯಾಗುತ್ತಿದೆ. ಅವರ ಕುಟುಂಬಸ್ಥರು ಮಾನಸಿಕ ಯಾತನೆಗೆ ಗುರಿಯಾಗಿದ್ದಾರೆ. ವಿಡಿಯೋಗಳು, ಯುವಜನರು, ಕಾಮುಕರು, ಮಕ್ಕಳ ಮೇಲೆ ಘೋರ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. +ಪ್ರಜ್ವಲ್‌ ರೇವಣ್ಣ ಅವರನ್ನು ಕೂಡಲೇ ಬಂಧಿಸಬೇಕು, ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು, ಸಂತ್ರಸ್ತ ಮಹಿಳೆಯರನ್ನು ಹೆದರಿಸುವ, ಅವಹೇಳನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆ ನೀಡಬೇಕು. ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳದಂತೆ ಕಡಿವಾಣ ಹಾಕಬೇಕು, ಎಸ್‌‍ಐಟಿ ತನಿಖೆಗೆ 2 ತಿಂಗಳ ಕಾಲಮಿತಿ ನಿಗದಿ ಮಾಡಬೇಕು. ಪ್ರಜ್ವಲ್‌ ಅವರ ಕಾರು ಚಾಲಕ ಕಾರ್ತಿಕ್‌ನನ್ನು ಬಂಧಿಸಬೇಕು, ದೇವರಾಜೇಗೌಡ ಅವರ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. +ವಿಡಿಯೋಗಳನ್ನು ಬಹಿರಂಗಗೊಳಿಸುವ ಮೂಲಕ ಚುನಾವಣೆಯನ್ನು ಅಸ್ತವ್ಯಸ್ತಗೊಳಿಸಲು ಸಂಚು ಮಾಡಿದವರ ವಿರುದ್ಧ ಗಂಭೀರ ಸ್ವರೂಪದ ಪ್ರಕರಣ ದಾಖಲಿಸಬೇಕು. ವಿಡಿಯೋಗಳ ಬಗ್ಗೆ ಮಾಹಿತಿ ಹೊಂದಿದ್ದ ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ಅಧ್ಯಕ್ಷರನ್ನು ಸಂಚಿನ ಭಾಗ ಎಂದು ಪರಿಗಣಿಸಬೇಕು. ಪ್ರಜ್ವಲ್‌ ಅವರ ಕುಟುಂಬದ ಸದಸ್ಯರ ಬಗ್ಗೆಯೂ ಪ್ರಕರಣ ದಾಖಲಿಸಬೇಕು. +ಆರೋಪಿ ದೇಶ ಬಿಟ್ಟು ಪರಾರಿಯಾಗಲು ಅವಕಾಶ ಮಾಡಿಕೊಟ್ಟ ಗುಪ್ತಚರ ಅಧಿಕಾರಿಗಳನ್ನು ವಜಾಗೊಳಿಸಬೇಕು. ಹಾಸನದಲ್ಲಿ ಎಚ್‌.ಡಿ.ರೇವಣ್ಣ ಅವರ ಶಿಫಾರಸಿನ ಮೇಲೆ ನಿಯೋಜನೆಗೊಂಡ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ತನಿಖೆ ಪೂರ್ಣಗೊಳ್ಳುವವರೆಗೂ ರೇವಣ್ಣ ಅವರ ಶಾಸಕತ್ವವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. +ಎಚ್‌.ಡಿ.ಕುಮಾರಸ್ವಾಮಿ ಪ್ರಕರಣದಲ್ಲಿ ತಮ ಹಾಗೂ ದೇವೇಗೌಡರ ಹೆಸರನ್ನು ಬಳಕೆ ಮಾಡಬಾರದು ಎಂದು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮತ್ತೊಂದೆಡೆ ತಾವೇ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡುತ್ತಿದ್ದಾರೆ ಎಂದು ಸಾಹಿತಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_145_11.txt b/eesanje/url_46_145_11.txt new file mode 100644 index 0000000000000000000000000000000000000000..79a7c348c605bb886e77fe91f63fd82e763c1bca --- /dev/null +++ b/eesanje/url_46_145_11.txt @@ -0,0 +1,8 @@ +ಸರ್ಕಾರದಲ್ಲಿರುವ ದೊಡ್ಡ ತಿಮಿಂಗಲ ಯಾವುದು ಎಂದು ಕುಮಾರಸ್ವಾಮಿಯವರು ಹೇಳಬೇಕು : ಪರಮೇಶ್ವರ್‌ +ಬೆಂಗಳೂರು,ಮೇ 15-ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸರ್ಕಾರದಲ್ಲಿರುವ ದೊಡ್ಡ ತಿಮಿಂಗಲ ಯಾವುದು ಎಂದು ಹೆಸರು ಹೇಳಬೇಕು. ಅವರಿಗೆ ತಿಮಿಂಗಲ ಯಾರು ಎಂದು ಗೊತ್ತಿರಬೇಕು. ಹಾಗಾಗಿಯೇ ಹೇಳಿಕೆ ನೀಡಿದ್ದಾರೆ. ಗೊತ್ತಿದ್ದೂ ಹೇಳದೇ ಇರುವುದು ದೊಡ್ಡ ತಪ್ಪು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಪೆನ್‌ಡ್ರೈವ್‌ ಇದೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಹೇಳುತ್ತಲೇ ಇದ್ದಾರೆ. ಇದನ್ನೇ ಬಳಕೆ ಮಾಡಿಕೊಂಡು ದಿನಕ್ಕೊಂದು ಹೇಳಿಕೆ ನೀಡುತ್ತಾರೆ. ಮೊದಲು ಪೆನ್‌ಡ್ರೈವ್‌ ಅನ್ನು ಕೊಡಲಿ. ಅನಂತರ ತನಿಖೆ ಮಾಡಿಸದೇ ಇದ್ದರೆ ಪ್ರಶ್ನೆ ಮಾಡಲಿ ಎಂದರು. +ಪ್ರಜ್ವಲ್‌ ರೇವಣ್ಣ ವಿದೇಶದಿಂದ ಆಗಮಿಸುವ ಬಗ್ಗೆ ಎಸ್‌‍ಐಟಿ ಗಮನಿಸುತ್ತದೆ. ಜರ್ಮನಿಯಿಂದ ಪ್ರಜ್ವಲ್‌ ರೇವಣ್ಣ ವಾಪಸ್‌‍ ಬರುವ ಬಗ್ಗೆ ಟಿಕೆಟ್‌ ಬುಕ್‌ ಮಾಡಿರುವ ಕುರಿತು ಯಾರಿಗೆ ಮಾಹಿತಿ ಇದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು.ಕೆಲವೊಮೆ ಗುಪ್ತಚರ ಇಲಾಖೆಗಿಂತಲೂ ವೇಗವಾಗಿ ಬೇರೆಯವರಿಗೆ ಮಾಹಿತಿ ಸಿಕ್ಕಿರುತ್ತದೆ. ಅಂತಹ ಮಾಹಿತಿಗಳಿದ್ದರೆ ನಮಗೆ ತಲುಪಿಸಿ, ತನಿಖೆಗೆ ಸಹಾಯವಾಗುತ್ತದೆ. ಪ್ರಜ್ವಲ್‌ ರೇವಣ್ಣ ಅವರ ಪ್ರಯಾಣದ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಇರಬಹುದು ಆದರೆ ಎಲ್ಲವನ್ನೂ ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದರು. +ನಿನ್ನೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಸಮಾಲೋಚನೆಗಳಾಗಿವೆ. ಮುಖ್ಯಮಂತ್ರಿಗಳು ನೀಡಿರುವ ಸೂಚನೆಗಳನ್ನು ನಾವು ಬಹಿರಂಗಪಡಿಸಲಾಗುವುದಿಲ್ಲ ಎಂದು ಹೇಳಿದರು.ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಮನೆಗೆ ತಾವು ಭೇಟಿ ನೀಡಿದ್ದು, ಲೋಕಸಭಾ ಚುನಾವಣೆ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದ್ದೇವೆ. ಸತೀಶ್‌ ಜಾರಕಿಹೊಳಿ ಪುತ್ರಿ ಅಭ್ಯರ್ಥಿಯಾಗಿದ್ದಾರೆ. ಅವರು ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ. ನಮ ಬಳಿ ಇರುವ ಮಾಹಿತಿಯನ್ನೂ ಹಂಚಿಕೊಂಡಿದ್ದೇವೆ ಎಂದರು. +ಸಮುದಾಯವಾರು ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದರು.ಸಾಹಿತಿಗಳು ಬರೆದಿರುವ ಪತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತೇವೆ, ಅವರಿಗೆ ಸಾಮಾಜಿಕ ಕಳಕಳಿ ಇರುತ್ತದೆ, ಸಾಮಾಜಿಕ ಆಗುಹೋಗುಗಳನ್ನು ಪ್ರತಿನಿತ್ಯ ಗಮನಿಸುತ್ತಿರುತ್ತಾರೆ, ಹೀಗಾಗಿ ಅವರ ಅಭಿಪ್ರಾಯಗಳನ್ನು ಪರಿಗಣಿಸುತ್ತೇವೆ. + +ಮೇಲಾಗಿ ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನೇ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ . ಸಾಹಿತಿಗಳ ಪತ್ರ ಮತ್ತಷ್ಟು ಎಚ್ಚರಿಕೆ ನೀಡಿದಂತಾಗಿದೆ. ಪತ್ರದಲ್ಲಿರುವ ಅಂಶಗಳನ್ನು ಎಸ್‌‍ಐಟಿ ಅಧಿಕಾರಿಗಳು ಗಮನಿಸುತ್ತಾರೆ. ತನಿಖೆ ನಡೆಯುತ್ತಿರುವುದರಿಂದ ನಾವು ಏನನ್ನೂ ಹೇಳಲು ಅವಕಾಶ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_145_12.txt b/eesanje/url_46_145_12.txt new file mode 100644 index 0000000000000000000000000000000000000000..4c698dca410815721585440ccd876a64b7874650 --- /dev/null +++ b/eesanje/url_46_145_12.txt @@ -0,0 +1,10 @@ +ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಸಾಧ್ಯತೆ..? +ಬೆಂಗಳೂರು,ಮೇ 15-ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಲಿದ್ದು, ನಿಗಮಮಂಡಳಿಗಳ ಅಧ್ಯಕ್ಷರ ಸ್ಥಾನಪಲ್ಲಟ ಹಾಗೂ ಸಚಿವ ಸಂಪುಟ ಪುನರ್‌ ರಚನೆ ಕುರಿತು ಚರ್ಚೆಗಳಾಗುವ ನಿರೀಕ್ಷೆಗಳಿವೆ. +ನಿಗಮ ಮಂಡಳಿಗಳಿಗೆ ಕಳೆದ ಆರು ತಿಂಗಳಿಂದೀಚೆಗೆ ನೇಮಕಾತಿಗಳಾಗಿದ್ದು, ಎರಡೂವರೆ ವರ್ಷಗಳ ಕಾಲಾವಧಿ ಅಧಿಕಾರ ನೀಡಲಾಗಿದೆ. ಹೀಗಾಗಿ ಇನ್ನೂ ಎರಡು ವರ್ಷ ಅಧ್ಯಕ್ಷರ ಅವಧಿ ಅಬಾಧಿತ ಎಂದು ಬಿಂಬಿಸಲಾಗಿದೆ. ಆದರೆ ಬಹಳಷ್ಟು ಮಂದಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಅವರುಗಳನ್ನು ವಜಾಗೊಳಿಸಿ ಪಕ್ಷ ನಿಷ್ಠಾವಂತರಿಗೆ ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹಗಳಿವೆ. +ಲೋಕಸಭಾ ಚುನಾವಣೆಗೂ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ,ಯಾರು ಪ್ರಾಮಾಣಿಕವಾಗಿ ಕೆಲಸ ಮಾಡುವುದಿಲ್ಲವೋ, ಪಕ್ಷಕ್ಕೆ ಬೂತ್‌ ಮಟ್ಟದಿಂದ ಶಕ್ತಿ ತುಂಬುವುದಿಲ್ಲವೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅದರ ಹೊರತಾಗಿಯೂ ಬಹಳಷ್ಟು ಮಂದಿ ಹೈಕಮಾಂಡ್‌ ಆದೇಶವನ್ನು ಲೆಕ್ಕಿಸದೆ ವೈಯಕ್ತಿಕ ಹಾಗೂ ಸ್ವಾರ್ಥಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಹೀಗಾಗಿ ಅವಧಿಗೂ ಮೊದಲೇ ಕೆಲವರ ಬದಲಾವಣೆಯ ಚರ್ಚೆಗಳು ನಡೆಯಲಿವೆ ಎಂದು ಹೇಳಲಾಗಿದೆ. +ಪ್ರಮುಖವಾಗಿ ಸಚಿವ ಸಂಪುಟ ಸಭೆಯಲ್ಲಿ ಸಾಕಷ್ಟು ಬದಲಾವಣೆಗಳಾಗುವ ನಿರೀಕ್ಷೆಗಳಿವೆ. ಕಾಂಗ್ರೆಸ್‌‍ಗೆ ಹಿನ್ನಡೆಯಾಗುವ ಕ್ಷೇತ್ರಗಳಿಗೆ ಉಸ್ತುವಾರಿ ಸಚಿವರುಗಳನ್ನೇ ಹೊಣೆ ಮಾಡಲಾಗುವುದು ಎಂಬ ಸಂದೇಶವನ್ನು ಆರಂಭದಲ್ಲೇ ನೀಡಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಬಹಳಷ್ಟು ಸಚಿವರ ನೆತ್ತಿಯ ಮೇಲೆ ತೂಗುಗತ್ತಿಯಾಗಿದೆ. +ಸಂಪುಟಕ್ಕೆ ಸೇರ್ಪಡೆಯಾಗುವವರ ಸರತಿ ಸಾಲು ದೊಡ್ಡದಿದೆ. ಬಹಳಷ್ಟು ಹಿರಿಯ ಶಾಸಕರು, ಪ್ರಭಾವಿಗಳು ಸಂಪುಟದಲ್ಲಿ ಅವಕಾಶ ಗಿಟ್ಟಿಸಬೇಕು ಎಂದು ಲಾಭಿ ನಡೆಸುತ್ತಲೇ ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ಹಿನ್ನಡೆಯಾಗುವ ಕ್ಷೇತ್ರಗಳಲ್ಲಿ ಸಚಿವರ ಬದಲಾವಣೆಯಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು ಎಂಬ ಕೂಗೇಳುವುದು ಸಹಜವಾಗಿದೆ. +ಲೋಕಸಭಾ ಚುನಾವಣೆ ಕಾಂಗ್ರೆಸ್‌‍ಗೆ ಅಳಿವು-ಉಳಿವಿನ ಪ್ರಶ್ನೆಯಾಗಿತ್ತು. ಹೀಗಾಗಿ ಅಸಮಾಧಾನಿತರು, ಅತೃಪ್ತರು ಯಾವುದೇ ಬಹಿರಂಗ ಹೇಳಿಕೆ ನೀಡದೇ ಪಕ್ಷಕ್ಕಾಗಿ ಸಹಿಸಿಕೊಳ್ಳಬೇಕೆಂಬ ಕಟ್ಟುನಿಟ್ಟಿನ ನಿರ್ದೇಶನಗಳು ಜಾರಿಯಲ್ಲಿದ್ದವು. ಅದರಂತೆ ಬಹಳಷ್ಟು ಹಿರಿಯ ಶಾಸಕರು ನಡೆದುಕೊಂಡಿದ್ದಾರೆ. +ಬಿ.ಆರ್‌.ಪಾಟೀಲ್‌, ಬಸವರಾಜರಾಯರೆಡ್ಡಿಯಂತಹ ಇಬ್ಬರನ್ನು ಹೊರತುಪಡಿಸಿದರೆ ಬಹುತೇಕ ಶಾಸಕರು ಉಸಿರೆತ್ತದೆ ಅವುಡುಗಚ್ಚಿ ಎಲ್ಲವನ್ನೂ ಸಹಿಸಿಕೊಂಡಿದ್ದಾರೆ.ಅಜಯ್‌ಸಿಂಗ್‌ರಂತಹ ಪ್ರಭಾವಿ ಶಾಸಕರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ.ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಂಪುಟದಲ್ಲಿ ಅವಕಾಶಕ್ಕಾಗಿ ಈ ರೀತಿಯ ಹಲವು ಶಾಸಕರು ಧ್ವನಿಯೆತ್ತಲಿದ್ದಾರೆ ಎಂಬ ಚರ್ಚೆಗಳಿವೆ. +ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿವೆ. ಪಕ್ಷದ ಬಲವರ್ಧನೆಗೆ ಸ್ಥಳೀಯ ನಾಯಕತ್ವವನ್ನು ಸದೃಢಗೊಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆವರೆಗೂ ತಾಳೆಯಿರಲಿ ಎಂದು ಹೈಕಮಾಂಡ್‌ ನಾಯಕರು ಸಂಪುಟದ ಆಕಾಂಕ್ಷಿಗಳಿಗೆ ಮತ್ತು ಪ್ರಭಾವಿಗಳ ಮನವೊಲಿಸುವ ಸಾಧ್ಯತೆಗಳಿವೆ. +ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಈ ಮೊದಲು ಭಾರೀ ಚರ್ಚೆಯಾಗಿತ್ತು. ಈಗ ಮತ್ತೊಮೆ ಅದು ಮುನ್ನೆಲೆಗೆ ಬರುವ ಸಾಧ್ಯತೆಗಳಿವೆ.ಏನೇ ಆದರೂ ಲೋಕಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್‌‍ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯನ್ನು ತೀವ್ರಗೊಳಿಸುವುದನ್ನು ತಳ್ಳಿಹಾಕುವಂತಿಲ್ಲ. \ No newline at end of file diff --git a/eesanje/url_46_145_2.txt b/eesanje/url_46_145_2.txt new file mode 100644 index 0000000000000000000000000000000000000000..9314cb6afc50e12e2c5e93800543ea456665272d --- /dev/null +++ b/eesanje/url_46_145_2.txt @@ -0,0 +1,8 @@ +ಆಪ್ತವರ್ಗದವರಿಗೆ 7 ಬಿಡಿಎ ಸಂಕೀರ್ಣ ಗುತ್ತಿಗೆ ನೀಡಲು ಸಿಎಂ ಹುನ್ನಾರ : ಎನ್‌ಆರ್‌ಆರ್‌ ಆರೋಪ +ಬೆಂಗಳೂರು,ಮೇ.15-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹದಿನೈದು ಸಾವಿರ ಕೋಟಿಗೂ ಅಧಿಕ ಮೌಲ್ಯದ 7 ಬಿಡಿಎ ಸಂಕೀರ್ಣಗಳನ್ನು ಕಾನೂನು ನಿಯಮಗಳನ್ನು ಗಾಳಿಗೆ ತೂರಿ ತಮ ಆಪ್ತ ರಾಜಕಾರಣಿಗಳ ಪಾಲುದಾರಿಕೆ ಸಂಸ್ಥೆಗಳಿಗೆ ಗುತ್ತಿಗೆ ಹೆಸರಿನಲ್ಲಿ ಶಾಶ್ವತ ಉಡುಗೊರೆ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. +2017-18 ರ ಸಾಲಿನಲ್ಲಿ ಸಿದ್ಧರಾಮಯ್ಯ ನವರು ಮುಖ್ಯಮಂತ್ರಿಗಳಾಗಿದ್ದ ಅಧಿಕಾರವಧಿಯ ಅಂತಿಮ ಹಂತದಲ್ಲಿ ಬೆಂಗಳೂರು ಮಹಾನಗರದ ಹದಯ ಭಾಗದ ಪ್ರದೇಶಗಳಾದ ಇಂದಿರಾನಗರ, ಕೋರಮಂಗಲ, ಹೆಚ್‌ಎಸ್‌‍ಆರ್‌ ಬಡಾವಣೆ, ಸದಾಶಿವನಗರ, ಆರ್‌.ಟಿ. ನಗರ, ಕಾಕ್ಸ್ ಟೌನ್‌ ಮತ್ತು ಚಂದ್ರಾ ಲೇಔಟ್‌ ಗಳಲ್ಲಿರುವ 7 ಬಿಡಿಎ ವಾಣಿಜ್ಯ ಸಂಕೀರ್ಣಗಳನ್ನು ಅವರ ಅತ್ಯಂತ ಆಪ್ತ ವಲಯದಲ್ಲಿರುವ ಸಚಿವ ಕೆ. ಜೆ. ಜಾರ್ಜ್‌ ರವರ ಪಾಲುದಾರಿಕೆಯ ಎಂಬೆಸಿ ಸಂಸ್ಥೆ ಮತ್ತು ಮೆವರಿಕ್‌ ಹೋಲ್ಡಿಂಗ್‌್ಸ ಸಂಸ್ಥೆಗೆ 65 ವರ್ಷಗಳ ಗುತ್ತಿಗೆಗೆ ನೀಡುವಂತಹ ಜನ ವಿರೋಧಿ ಕಾರ್ಯ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. +ಈ ಕುರಿತಂತೆ 2019 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರಿಗೆ ನಾನು ದಾಖಲೆಗಳ ಸಹಿತ ಪತ್ರ ಮುಖೇನ ಈ ಕಾನೂನು ಬಾಹಿರ ಕಾರ್ಯದ ಬಗ್ಗೆ ತಿಳಿಸಿದ ನಂತರ ಅವರು ಈ ಕಾನೂನು ಬಾಹಿರ ಟೆಂಡರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶಿಸಿದ್ದರು. +ಆದರೆ, ಇದೀಗ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯ ಅವರು ಇದೀಗ ಮತ್ತೆ ಏಳು ಬಿಡಿಎ ಸಂಕೀರ್ಣಗಳ ಮರುನಿರ್ಮಾಣದ ಹೆಸರಿನಲ್ಲಿ ಎಂಬೆಸ್ಸಿ ಹಾಗೂ ಮೆವರಿಕ್‌ ಸಂಸ್ಥೆಗಳಿಗೆ 65 ವರ್ಷಗಳ ಗುತ್ತಿಗೆ ನೀಡಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಇಂದಿರಾನಗರ ವಾಣಿಜ್ಯ ಸಂಕೀರ್ಣವು ಪ್ರಸ್ತುತ ಸುಮಾರು 7,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಇನ್ನುಳಿದ 6 ವಾಣಿಜ್ಯ ಸಂಕೀರ್ಣಗಳು ಸುಮಾರು 8,000 ದಿಂದ 9,000 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯವನ್ನು ಹೊಂದಿರುತ್ತವೆ. +15,000 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ ಈ 7 ಅತ್ಯಮೂಲ್ಯ ಸರ್ಕಾರಿ ಸ್ವತ್ತುಗಳನ್ನು ಸಂರಕ್ಷಿಸಿಕೊಳ್ಳಬೇಕಿರುವ ರಾಜ್ಯ ಸರ್ಕಾರವೇ ಪ್ರಭಾವಿ ವ್ಯಕ್ತಿಗಳ ಪಾಲುದಾರಿಕೆಯ ಸಂಸ್ಥೆಗಳಿಗೆ 35 ವರ್ಷಗಳ ನೇರ ಗುತ್ತಿಗೆ ಮತ್ತು 30 ವರ್ಷಗಳ ವಿಸ್ತರಿಸಬಹುದಾದ ಗುತ್ತಿಗೆ ಅಂದರೆ 65 ವರ್ಷಗಳ ಗುತ್ತಿಗೆಗೆ ನೀಡುವ ಮೂಲಕ ಇಂತಹ ಅಮೂಲ್ಯ ಸರ್ಕಾರಿ ಸ್ವತ್ತುಗಳು ಶಾಶ್ವತವಾಗಿ ನಮಿಂದ ದೂರ ಮಾಡುವ ಹುನ್ನಾರ ನಡೆಸುತ್ತಿದ್ದಾರೆ ಎಂದು ರಮೇಶ್‌ ದೂರಿದ್ದಾರೆ. +ಸಿದ್ಧರಾಮಯ್ಯ ನವರ ಈ ಜನ ವಿರೋಧಿ ಕಾರ್ಯದ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಹಾಗೂ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನೂ ಸಹ ದಾಖಲಿಸಲಾಗುತ್ತಿದೆ ಎಂಬ ವಿಷಯವನ್ನು ಪತ್ರದ ಮೂಲಕ ಸಿದ್ಧರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದು ರಮೇಶ್‌ ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_46_145_3.txt b/eesanje/url_46_145_3.txt new file mode 100644 index 0000000000000000000000000000000000000000..f8e6ec3e757ee9ac06bcfc9673c374d25a763a14 --- /dev/null +++ b/eesanje/url_46_145_3.txt @@ -0,0 +1,4 @@ +ವಿಧಾನ ಮಂಡಲ/ವಿಧಾನಸಭೆಯ ಸ್ಥಾಯಿ ಸಮಿತಿಗಳ ಸಭೆಗೆ ಸ್ಪೀಕರ್ ಅನುಮತಿ +ಬೆಂಗಳೂರು, ಮೇ 15-ಪ್ರಸಕ್ತ ಲೋಕಸಭೆಯ ಎರಡು ಹಂತದ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲದ/ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅನುಮತಿ ನೀಡಿದ್ದಾರೆ. +ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಮಾರ್ಚ್‌ 21ರಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೂ ವಿಧಾನ ಮಂಡಲದ/ ವಿಧಾನಸಭೆಯ ವಿವಿಧ ಸ್ಥಾಯಿ ಸಮಿತಿಗಳ ಸಭೆಗಳನ್ನು ನಡೆಸದಂತೆ ಸಭಾಧ್ಯಕ್ಷರು ಶಾಸಕರಿಗೆ ಪ್ರಕಟಣೆ ಮೂಲಕ ತಿಳಿಸಿದ್ದರು. +ರಾಜ್ಯದಲ್ಲಿ ಎರಡು ಹಂತಗಳ ಚುನಾವಣೆಯ ಮತದಾನ ಮುಕ್ತಾಯವಾಗಿರುವುದರಿಂದ ಸಮಿತಿಗಳ ಸಭೆಗಳನ್ನು ನಡೆಸಲು ಸಭಾಧ್ಯಕ್ಷರು ಶಾಸಕರಿಗೆ ಅನುಮತಿ ನೀಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_145_4.txt b/eesanje/url_46_145_4.txt new file mode 100644 index 0000000000000000000000000000000000000000..23121cf993eaab692b28143e423650d3a68aa5ff --- /dev/null +++ b/eesanje/url_46_145_4.txt @@ -0,0 +1,7 @@ +ಉಷ್ಣಾಂಶ ಹೆಚ್ಚಳ : ರಾಜ್ಯದಲ್ಲಿ ಹಾವು ಕಡಿತದ ಪ್ರಕರಣಗಲ್ಲಿ ದಾಖಲೆ ಏರಿಕೆ +ಬೆಂಗಳೂರು,ಮೇ.15-ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಬೆನ್ನಲ್ಲೇ ಹಾವುಗಳ ಕಡಿತ ಪ್ರಮಾಣ ಹೆಚ್ಚಾಗಿ ಅಪಾರ ಸಾವು-ನೋವು ಸಂಭವಿಸಿದೆ.ಉಷ್ಣಾಂಶ ಏರಿಕೆಯಿಂದ ಬಿಲದಲ್ಲಿ ಇರಲಾರದೆ ಹೊರ ಬಂದಿರುವ ಹಾವುಗಳು ಕಂಡ ಕಂಡವರಿಗೆ ಕಚ್ಚಿರುವ ಪ್ರಕರಣಗಳು ಹೆಚ್ಚಾಗಿವೆ. ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧಿ ಕೊರತೆಯು ಕಂಡು ಬಂದಿದೆ. +ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿರುವುದು ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಗರಿಷ್ಠ ಸಂಖ್ಯೆಯಲ್ಲಿ ಹಾವುಗಳ ಕಡಿತದ ಪ್ರಮಾಣ ಹೆಚ್ಚಾಗಿದೆ.. ಜನವರಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 2316 ಹಾವು ಕಡಿತದ ಪ್ರಕರಣ ಕಂಡು ಬಂದಿದ್ದು 18 ಜನರು ಹಾವು ಕಡಿತದಿಂದ ಸಾವಿಗೆ ಬಲಿಯಾಗಿದ್ದಾರೆ.. +ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 46 ಜನರು ಹಾವು ಕಡಿತದಿಂದ ಸಾವಿಗೀಡಾಗಿದ್ದಾರೆ. ಕೆಲವರು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮತಪಟ್ಟಿದ್ದರೆ ಕೆಲವರು ಔಷಧ ಸಿಗದೆ ಸಾವನ್ನಪ್ಪಿದ್ದರು ಎನ್ನಲಾಗಿದೆ. ಮೂರು ವರ್ಷಗಳಲ್ಲಿ 13 ಸಾವಿರ ಜನರು ಹಾವು ಕಡಿತಕ್ಕೆ ಒಳಗಾಗಿದ್ದು, 46 ಮಂದಿ ಮತಪಟ್ಟಿದ್ದಾರೆ. ಈ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಹೀಗಿದ್ದರೂ, ಹಾವು ಕಡಿತದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹವು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲ ಎಂಬ ಆರೋಪ ಕೇಳಿ ಬರ್ತಿದೆ ಎನ್ನುತ್ತಾರೆ ಪ್ರಾಣಿ ಪರಿಪಾಲಕ ಪಸನ್ನ ಅವರು. +ರಾಜ್ಯದ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಚಿಕಿತ್ಸೆಗೆ ಅಗತ್ಯ ಇರುವ ಔಷಧ ದಾಸ್ತಾನು ಇಟ್ಟುಕೊಳ್ಳಬೇಕು. ಆದರೆ, ರಾಜ್ಯಾದ್ಯಂತ ಹಾವು ಕಡಿತದ ಔಷಧಿ ಆಸ್ಪತ್ರೆಗಳಲ್ಲಿ ಕೊರತೆ ಕಾಡುತ್ತಿದೆ. ಹಾವು ಕಡಿತದ 83,620 ವಯಲ್‌ ಚುಚ್ಚುಮದ್ದಿಗೆ ಇತ್ತೀಚೆಗೆ ಆರೋಗ್ಯ ಇಲಾಖೆ ಟೆಂಡರ್‌ ಆಹ್ವಾನಿಸಿತ್ತು ಆದರೆ ಬೇಡಿಕೆಯಷ್ಟು ಔಷಧಿ ಪೂರೈಕೆಯಾಗಿಲ್ಲ ಎಂದು ತಿಳಿದುಬಂದಿದೆ. +2021ರಲ್ಲಿ 950 ಕಡಿತ ಪ್ರಕರಣಗಳು ದಾಖಲಾಗಿದ್ದು ಯಾರೊಬ್ಬರು ಮೃತಪಟ್ಟಿರಲಿಲ್ಲ. 2022ರಲ್ಲಿ 3439 ಕಡಿತದಿಂದ 17 ಮಂದಿ ಪ್ರಾಣ ಕಳೆದುಕೊಂಡಿದ್ದರು. 2023ರಲ್ಲಿ 6596 ಕಡಿತ ಪ್ರಕರಣಗಳಲ್ಲಿ 19 ಮಂದಿ ಜೀವ ತೆತ್ತಿದ್ದರು ಈ ವರ್ಷ ಆರು ತಿಂಗಳು ಕಳೆಯುವುದರೊಳಗೆ 2316 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು ಈಗಾಗಲೇ 18 ಮಂದಿ ಅಸು ನೀಗಿದ್ದಾರೆ. +ಕಳೆದ ಫೆಬ್ರವರಿ 12ರಂದು ರಾಜ್ಯ ಸರಕಾರ ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದೆ. ರಾಜ್ಯದ ಎಲ್ಲಾ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳು ಹಾವು ಕಡಿತದ ಎಲ್ಲ ಪ್ರಕರಣಗಳನ್ನು ಅಂದರೆ ಒಳ ರೋಗಿಗಳು, ಹೊರ ರೋಗಿಗಳು ಮತ್ತು ಸಾವಿನ ಪ್ರಕರಣಗಳೇ ಆಗಿರಲಿ ಸಮಗ್ರ ಆರೋಗ್ಯ ಮಾಹಿತಿ ನೋಂದಾಯಿಸಬೇಕು ಎಂದು ಆದೇಶಿಸಿದೆ. ಕರ್ನಾಟಕದಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೂ ಸಾವಿನ ಸಂಖ್ಯೆ ಮಾತ್ರ ತಗ್ಗಿಲ್ಲ ಎನ್ನುವಂತಾಗಿದೆ. \ No newline at end of file diff --git a/eesanje/url_46_145_5.txt b/eesanje/url_46_145_5.txt new file mode 100644 index 0000000000000000000000000000000000000000..9a4ee4e4d08dbebbf3eaaeac4d904d3384bcf836 --- /dev/null +++ b/eesanje/url_46_145_5.txt @@ -0,0 +1,5 @@ +ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌‍ ಅಭ್ಯರ್ಥಿಯಾಗಿ ವಿವೇಕಾನಂದ ಆಯ್ಕೆ, ಬಿ ಫಾರಂ ನೀಡಿದ ಗೌಡರು +ಬೆಂಗಳೂರು, ಮೇ 15-ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್‌‍ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದೆ. ವಿವೇಕಾನಂದ ಅವರಿಗೆ ಜೆಡಿಎಸ್‌‍ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಇಂದು ವಿವೇಕಾನಂದ ಅವರಿಗೆ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಬಿ ಫಾರಂ ನೀಡಿದ್ದಾರೆ. +ಪದನಾಭನಗರದ ಗೌಡರ ನಿವಾಸದಲ್ಲಿ ಬಿ ಫಾರಂ ನೀಡುವ ಸಂದರ್ಭದಲ್ಲಿ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ಮುಖಂಡರಾದ ನಿರಂಜನ್‌ ಮೂರ್ತಿ, ನಾಗಣ್ಣಗೌಡರು ಉಪಸ್ಥಿತರಿದ್ದರು. +ಮರಿತಿಬ್ಬೇಗೌಡ ಅವರು, ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಸೇರಿದ ಬಳಿಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದರು. +ಲೋಕಸಭೆ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ಮೇಲನೆ ಚುನಾವಣೆಯಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಈ ನಡುವೆ ಬಿಜೆಪಿ ನೈರುತ್ಯ ಶಿಕ್ಷಕರ ಕ್ಷೇತ್ರ ಹೊರತು ಪಡಿಸಿ ಉಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು.ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ ಇ.ಸಿ.ನಿಂಗರಾಜು ಅವರಿಗೆ ಟಿಕೆಟ್‌ ಘೋಷಣೆಯಾಗಿತ್ತು. ಬಳಿಕ ಜೆಡಿಎಸ್‌‍ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ನಿಂಗರಾಜು ಕೂಡ ಸ್ಪರ್ಧಿಸಲು ಅಣಿಯಾಗಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. \ No newline at end of file diff --git a/eesanje/url_46_145_6.txt b/eesanje/url_46_145_6.txt new file mode 100644 index 0000000000000000000000000000000000000000..ae54b51dca9a8e08db18418a5f4c44aff5915220 --- /dev/null +++ b/eesanje/url_46_145_6.txt @@ -0,0 +1,5 @@ +ಸಂಭ್ರಮಾಚರಣೆ ಮಾಡದಂತೆ ಶಾಸಕ ಹೆಚ್‌.ಡಿ.ರೇವಣ್ಣ ಮನವಿ +ಬೆಂಗಳೂರು, ಮೇ 15-ಸಂಭ್ರಮಾಚರಣೆ ಮಾಡದಂತೆ ಜೆಡಿಎಸ್‌‍ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮಾಜಿ ಸಚಿವ ಹಾಗೂ ಶಾಸಕ ಹೆಚ್‌.ಡಿ.ರೇವಣ್ಣ ಮನವಿ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವುದಕ್ಕೆ ಹಾಸನದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವುದು ಬೇಡ, ಯಾವುದೇ ರ್ಯಾಲಿಯನ್ನು ಮಾಡುವುದು ಬೇಡ. ನಮ ತಂದೆ-ತಾಯಿ ಅವರ ಆಶೀರ್ವಾದ, ಕಾರ್ಯಕರ್ತರ, ಅಭಿಮಾನಿಗಳ ನಿಮ ಪ್ರೀತಿ, ಹಾರೈಕೆಯಿಂದ ಜಾಮೀನು ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ. +ತಮ ಮೇಲಿನ ಆರೋಪ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ತಲೆಬಾಗುತ್ತೇನೆ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇನೆ. ನ್ಯಾಯಾಂಗದ ಬಗ್ಗೆ ಅಪಾರ ಗೌರವವಿದೆ. ಎಲ್ಲವನ್ನೂ ನ್ಯಾಯಾಲಯಕ್ಕೆ ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ. +ನಾನು ಎಲ್ಲೂ ಹೋಗುವುದಿಲ್ಲ. ದೇವರ ಮೇಲೆ ನಂಬಿಕೆ ಇದೆ. ಈ ಆಪತ್ತಿನಿಂದ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_145_7.txt b/eesanje/url_46_145_7.txt new file mode 100644 index 0000000000000000000000000000000000000000..9b27e2edbec0daf6c4ff17f6c7865e19259e14c5 --- /dev/null +++ b/eesanje/url_46_145_7.txt @@ -0,0 +1,7 @@ +ಪರಿಷತ್‌ ಚುನಾವಣೆ : ಮೂರು ಪಕ್ಷಗಳಿಗೂ ಬಂಡಾಯದ ಭೀತಿ +ಬೆಂಗಳೂರು, ಮೇ 15-ಲೋಕಸಭಾ ಚುನಾವಣೆಗಿಂತಲೂ ವಿಧಾನ ಪರಿಷತ್‌ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿದ್ದು, ಮೂರು ಪಕ್ಷಗಳೂ ಬಂಡಾಯದ ಬಿಸಿ ಎದುರಿಸುವಂತಾಗಿದೆ. ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂನ್‌ ಮೂರರಂದು ಮತದಾನ ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸ್ಪರ್ಧೆಗಿಳಿಸುತ್ತಿವೆ. +ನಾಮಪತ್ರ ಸಲ್ಲಿಸಲೂ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರು ಪದವೀಧರರ, ಕರ್ನಾಟಕ ದಕ್ಷಿಣ ಶಿಕ್ಷಕರ, ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲೂ ಬಂಡಾಯವಿರುವುದು ಕಂಡುಬರುತ್ತಿದೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ರಾಮೋಜಿಗೌಡ ಅವರು ನಾಮಪತ್ರ ಸಲ್ಲಿಸಿ ಸ್ಪರ್ಧೆಗಿಳಿದಿದ್ದಾರೆ. ಕಾಂಗ್ರೆಸ್‌‍ ಟಿಕೆಟ್‌ ಸಿಗದಿದ್ದರೂ ನೀಲಕಂಠ ಆರ್‌. ಗೌಡ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಬಂಡಾಯದ ಬಿಸಿ ಎದುರಿಸುವಂತಾಗಿದೆ. +ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಸ್‌‍.ಎಲ್‌ .ಭೋಜೇಗೌಡ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್‌‍ಗೆ ಬಿಟ್ಟುಕೊಟ್ಟಿದೆ. ಆದರೂ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ನ ಮಾಜಿ ಸದಸ್ಯ ಎಸ್‌‍.ಆರ್‌.ಹರೀಶ್‌ ಆಚಾರ್ಯ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಇದು ಮೈತ್ರಿ ಪಕ್ಷಗಳಿಗೆ ತಲೆನೋವಾಗಿದೆ. +ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌‍ ಅಭ್ಯರ್ಥಿಯಾಗಿ ವಿವೇಕಾನಂದ ಸ್ಪರ್ಧಿಸಿದ್ದಾರೆ. ಆದರೆ, ಈ ಕ್ಷೇತ್ರ ಜೆಡಿಎಸ್‌‍ ಟಿಕೆಟ್‌ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರು ಸಂಜೆ ಶಿಕ್ಷಕರ ಸಭೆ ಕರೆದಿದ್ದು, ಬಂಡಾಯ ಸ್ಪರ್ಧೆ ಮಾಡುವ ಸುಳಿವು ನೀಡಿದ್ದಾರೆ ಎನ್ನಲಾಗಿದೆ. +ಅಲ್ಲದೆ, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಇ.ಸಿ.ನಿಂಗರಾಜು ಅವರನ್ನು ಘೋಷಿಸಿದ್ದಾರೆ. ನಿಂಗರಾಜು ಕೂಡ ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವುದು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.ಹೀಗಾಗಿ ಮೂರು ಕ್ಷೇತ್ರಗಳಲ್ಲೂ ಮೂರು ರಾಜಕೀಯ ಪಕ್ಷಗಳಿಗೆ ಟಿಕೆಟ್‌ ಆಕಾಂಕ್ಷಿಗಳು ಬಂಡಾಯ ಸ್ಪರ್ಧೆ ಮಾಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. \ No newline at end of file diff --git a/eesanje/url_46_145_8.txt b/eesanje/url_46_145_8.txt new file mode 100644 index 0000000000000000000000000000000000000000..e15a254d08b76798497392a2234b4cb261dfdf81 --- /dev/null +++ b/eesanje/url_46_145_8.txt @@ -0,0 +1,6 @@ +ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ : ಶಾಸಕ ಜಿ.ಟಿ.ದೇವೇಗೌಡ +ಬೆಂಗಳೂರು,ಮೇ 15-ಸಂಸದ ಪ್ರಜ್ವಲ್‌ ರೇವಣ್ಣ ಯಾರ ಸಂಪರ್ಕದಲ್ಲೂ ಇಲ್ಲ ಎಂದು ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಕೇಳಿ ಬಂದ ಕೂಡಲೇ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಎಲ್ಲಿಗೆ ಹೋದರು? ಏಕೆ ಹೋದರು? ಯಾವಾಗ ಬರುತ್ತಾರೆ? ಎಂಬ ಮಾಹಿತಿ ಯಾರಿಗೂ ಇಲ್ಲ. ಅವರ ಮನೆಯವರಿಗೂ ಸರಿಯಾದ ಮಾಹಿತಿ ಇಲ್ಲವಂತೆ ಎಂದರು. +ಅವರನ್ನು ಪತ್ತೆ ಹಚ್ಚಲು ಸರ್ಕಾರ ಬ್ಲೂ ಕಾರ್ನರ್‌ ನೋಟೀಸ್‌‍ ಕೊಟ್ಟಿದ್ದು, ಅವರನ್ನು ಪತ್ತೆ ಹಚ್ಚುವ ಕೆಲಸ ಸರ್ಕಾರ ಮಾಡುತ್ತಿದೆಯಾದರೂ ಅವರು ಯಾರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದರು.ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ರೇವಣ್ಣ ಅವರು ಬಂಧನವಾಗಿದ್ದಕ್ಕೆ ನೋವನ್ನು ವ್ಯಕ್ತಪಡಿಸಿದ್ದಾರೆ. ತಪ್ಪು ಮಾಡದಿದ್ದರೂ ರೇವಣ್ಣ ಅವರ ಬಂಧನವಾಗಿತ್ತು. ಈ ವಿಚಾರ ದೇವೇಗೌಡರಿಗೆ ಬಹಳ ನೋವುಂಟು ಮಾಡಿದೆ ಎಂದರು. +ಸರ್ಕಾರ ಪ್ರಜ್ವಲ್‌ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌‍ಐಟಿ ರಚನೆ ಮಾಡಿದೆ. ಎಸ್‌‍ಐಟಿ ಆ ಬಗ್ಗೆ ತನಿಖೆ ಕೈಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರೇವಣ್ಣ ಅವರ ಬಗ್ಗೆ ಅನುಕಂಪ ವ್ಯಕ್ತಪಡಿಸಿರುವುದು ಸಹಜ. ರಾಜಕೀಯವಾಗಿ ಒಬ್ಬರಿಗೊಬ್ಬರು ಮಾತನಾಡುವಾಗ ಟೀಕೆ, ಟಿಪ್ಪಣಿಗಳು ಸಾಮಾನ್ಯ. +ರೇವಣ್ಣ ಅವರು ತಪ್ಪು ಮಾಡದೇ ಶಿಕ್ಷೆ ಅನುಭವಿಸುವಂತಾಯಿತಲ್ಲ ಎಂದು ಅವರ ಮನಸ್ಸಿನಲ್ಲೂ ನೋವಿರಬಹುದು. ಈ ವಿಚಾರ ರಾಜ್ಯದ ಜನತೆಗೂ, ರಾಜಕಾರಣಿಗಳಿಗೂ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೂ ಗೊತ್ತಿದೆ. ಎಸ್‌‍ಐಟಿ ಮೂಲಕ ರೇವಣ್ಣ ಅವರನ್ನು ಬಂಧಿಸಿದ್ದು ಸರಿಯಲ್ಲ ಎಂಬ ಅಭಿಪ್ರಾಯ ಸಾರ್ವಜನಿಕವಾಗಿ ವ್ಯಕ್ತವಾಗುತ್ತಿದೆ ಎಂದರು. +ಜೈಲಿನಲ್ಲಿದ್ದಾಗ ರೇವಣ್ಣ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ. ದೇವರು ಯಾವ ದಾರಿ ತೋರುತ್ತಾರೋ ನೋಡೋಣ ಎಂದು ಹೇಳಿದ್ದರು. ಜೈಲಿನಿಂದ ಬಿಡುಗಡೆಯಾದ ನಂತರ ಅವರು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ಎಂದು ಜಿ.ಟಿ.ದೇವೇಗೌಡರು ತಿಳಿಸಿದರು.ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಿದ್ದು, ದೇವೇಗೌಡರಿಂದ ಬಿ ಫಾರಂ ಪಡೆಯಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_145_9.txt b/eesanje/url_46_145_9.txt new file mode 100644 index 0000000000000000000000000000000000000000..888a206f11b48ddbe96baeee14bdc8d7a0b722dd --- /dev/null +++ b/eesanje/url_46_145_9.txt @@ -0,0 +1,5 @@ +ಡಿಸಿಎಂ ಡಿಕೆಶಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಉಪರಾಷ್ಟ್ರಪತಿ ಧನ್ಕರ್‌ +ಬೆಂಗಳೂರು,ಮೇ 15-ಕೆಪಿಸಿಸಿ ಅಧ್ಯಕ್ಷರು ಹಾಗು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಭಾರತದ ಉಪರಾಷ್ಟ್ರಪತಿಗಳಾದ ಜಗದೀಪ್‌ ಧನ್ಕರ್‌ ಅವರು ಜನದಿನದ ಶುಭಾಶಯ ಕೋರಿದ್ದಾರೆ. +ಉಪರಾಷ್ಟ್ರಪತಿಗಳು ಡಿ.ಕೆ.ಶಿವಕುಮಾರ್‌ ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು. ಜತೆಗೆ ಅವರಿಗೆ ಶುಭಾಶಯ ಪತ್ರವನ್ನೂ ಬರೆದಿದ್ದಾರೆ.ಡಿ.ಕೆ. ಶಿವಕುಮಾರ್‌ ಅವರಿಗೆ ಜನದಿನದ ಶುಭಾಶಯಗಳು. ದೇಶದ ಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ತಮಗೆ ದೇವರು ಸಂತೋಷ, ಆರೋಗ್ಯ ಹಾಗೂ ಸುದೀರ್ಘ ಲಪ್ರದಾಯಕ ಜೀವನವನ್ನು ನೀಡಲಿ ಎಂದು ಜಗದೀಪ್‌ ಧನ್ಕರ್‌ ಅವರು ಪತ್ರದ ಮೂಲಕ ಹಾರೈಸಿದ್ದಾರೆ. +ಉಪರಾಷ್ಟ್ರಪತಿಗಳ ಶುಭಕಾಮನೆಗೆ ಧನ್ಯವಾದ ತಿಳಿಸಿ ಶಿವಕುಮಾರ್‌ ಅವರು ಕೂಡ ಪತ್ರ ಬರೆದಿದ್ದು, ನನ್ನ ಜನದಿನದ ಅಂಗವಾಗಿ ನಿಮ ಶುಭಾಶಯ ಪಡೆದು ಸಂತೋಷವಾಗಿದೆ. ನಿಮ ಬಿಡುವಿಲ್ಲದ ವೇಳಾಪಟ್ಟಿ ನಡುವೆ ನೀವು ನನ್ನನ್ನು ನೆನಪಿಸಿಕೊಂಡು ಶುಭಾಶಯ ಕೋರಿದ್ದೀರಿ. +ನಿಮ ನಿರೀಕ್ಷೆಯಂತೆ ನನ್ನ ಜೀವನವನ್ನು ಜನ ಸೇವೆಗೆ ಮುಡುಪಿಡುತ್ತೇನೆ. ಇದಕ್ಕೆ ನಿಮ ಆಶೀರ್ವಾದವನ್ನು ಬಯಸುತ್ತೇನೆ ಎಂದು ಶಿವಕುಮಾರ್‌ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_146_1.txt b/eesanje/url_46_146_1.txt new file mode 100644 index 0000000000000000000000000000000000000000..6998e2a04e2d87613ca0881fd6a3b5f1ae66a319 --- /dev/null +++ b/eesanje/url_46_146_1.txt @@ -0,0 +1,6 @@ +ಕೊಟ್ಟ ಮಾತಿನಂತೆ ಬಾಗಲಕೋಟೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ +ಬೆಂಗಳೂರು,ಮೇ 15-ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಇರುವ ಭಾವಚಿತ್ರ ನೀಡಿದ್ದ ಬಾಗಲಕೋಟೆ ಯುವತಿ ನಾಗರತ್ನಾ ಬಸವರಾಜ ಮೇಟಿಯವರಿಗೆ ಮೋದಿ ಅವರು ಧನ್ಯವಾದ ತಿಳಿಸಿ, ಪತ್ರ ಬರೆದಿದ್ದಾರೆ. +ಪ್ರಧಾನಿ ಮೋದಿ ಅವರು ಬಾಗಲಕೋಟೆಯಲ್ಲಿ ಭಾಷಣ ಮಾಡುವ ವೇಳೆ ನಾಗರತ್ನಾ ಅವರು ಫೋಟೋ ಹಿಡಿದು ನಿಂತಿದ್ದರು. ಇದನ್ನು ಗಮನಿಸಿದ ಮೋದಿಯವರು ತಮ ಅಂಗರಕ್ಷಕ ಅಧಿಕಾರಿಗಳಿಂದ ಫೋಟೋ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ ಬರೆದಿದ್ದಾರೆ. +ಏಪ್ರಿಲ್‌ 29ರಂದು ಬಾಗಲಕೋಟೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಮೋದಿ ಅವರಿಗೆ ನಾಗರತ್ನಾ ಅವರು ಚಿತ್ರವನ್ನು ದೂರದಿಂದ ತೋರಿಸಿದ್ದರು. ಆಗ ಮೋದಿ ಅವರು ವಿಶೇಷ ಭದ್ರತಾ ಸಿಬ್ಬಂದಿಗೆ ಚಿತ್ರವನ್ನು ಸಂಗ್ರಹಿಸಿಕೊಳ್ಳುವಂತೆ ತಿಳಿಸಿದ್ದಲ್ಲದೇ, ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆಂದು ಹೇಳಿದ್ದರು. +ಈ ಕಲಾತಕ ಚಿತ್ರವು ಮಾನವನ ಭಾವನೆಗಳ ಪ್ರಾಮುಖ್ಯ ತೋರಿಸುತ್ತದೆ. ಹೊಸ ಭಾರತ ಮತ್ತು ಯುವಶಕ್ತಿಯ ಭವಿಷ್ಯ ನಿರ್ಮಾಣಕ್ಕೆ ನನ್ನನ್ನು ಪ್ರೇರೇಪಿಸುತ್ತದೆ. ಕೌಶಲ ಹಾಗೂ ರಚನಾತಕ ಚಟುವಟಿಕೆಯನ್ನು ನಿಮ ಕೆಲಸದಲ್ಲಿ ಅಳವಡಿಸಿಕೊಳ್ಳಿ. ಶುಭವಾಗಲಿ ಎಂದು ಮೋದಿ ಹಾರೈಸಿದ್ದಾರೆ. +ಮೋದಿಯವರ ಪತ್ರಕ್ಕೆ ನಾಗರತ್ನಾ ಅವರು ಬಹಳ ಸಂತಸ ವ್ಯಕ್ತಪಡಿಸಿದ್ದು, ಇದು ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_146_10.txt b/eesanje/url_46_146_10.txt new file mode 100644 index 0000000000000000000000000000000000000000..637fb3ab558810baa111cb923b43442ddbd97430 --- /dev/null +++ b/eesanje/url_46_146_10.txt @@ -0,0 +1,6 @@ + : ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜೈಲಿನಿಂದ ರಿಲೀಸ್ +ಬೆಂಗಳೂರು,ಮೇ 14-ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿನ್ನೆ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ನ್ಯಾಯಾಂಗ ಬಂಧನದಿಂದ ಇಂದು ಬಿಡುಗಡೆಯಾದರು.ನಿನ್ನೆ ಸಂಜೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ನ್ಯಾಯಾಲಯದ ಆದೇಶ ಪ್ರತಿಯನ್ನು ನಿನ್ನೆ ಸಂಜೆ 7 ಗಂಟೆಯೊಳಗೆ ಜೈಲಿನ ಅಧಿಕಾರಿಗಳಿಗೆ ತಲುಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರೇವಣ್ಣ ಅವರು ಬಿಡುಗಡೆಯಾಗಲು ಸಾಧ್ಯವಾಗಿರಲಿಲ್ಲ. +ಇಂದು ಬೆಳಿಗ್ಗೆ ರೇವಣ್ಣರ ಪರ ವಕೀಲರು ಆದೇಶದ ಪ್ರತಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ತಲುಪಿಸಿ ಜಾಮೀನು ಷರತ್ತು ಪ್ರಕ್ರಿಯೆಗಳನ್ನು ಪೂರೈಸಿದ ನಂತರ ರೇವಣ್ಣ ಅವರ ಬಿಡುಗಡೆಯಾಯಿತು. +ಈ ಮೂಲಕ ರೇವಣ್ಣ ಅವರ 6 ದಿನಗಳ ಸೆರೆವಾಸ ಅಂತ್ಯವಾಯಿತು. ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ರೇವಣ್ಣ ಅವರು ಈ ಪ್ರಕರಣದಲ್ಲಿ ಅಮಾಯಕರು ಯಾವುದೇ ತಪ್ಪೆಸಗಿಲ್ಲ. ಅವರ ವಿರುದ್ಧದ ಆರೋಪದ ಪುಷ್ಟೀಕರಿಸುವ ಸಂದರ್ಭ ಸಾಕ್ಷಿಗಳಿಲ್ಲ. ಅವರು ಯಾರಿಗೂ ಬೆದರಿಕೆಯೊಡ್ಡಿಲ್ಲ ಎಂದು ರೇವಣ್ಣ ಪರ ವಕೀಲರಾದ ಸಿ.ವಿ.ನಾಗೇಶ್‌ ಪ್ರಬಲ ವಾದ ಮಂಡಿಸಿದ್ದರು. + +ಸರ್ಕಾರಿ ಪರ ವಿಶೇಷ ಅಭಿಯೋಜಕರಾದ ಜಾಯ್ನ ಕೊಥಾರಿ ಹಾಗೂ ಅಶೋಕ್‌ ನಾಯಕ್‌ ಎಸ್‌‍ಐಟಿ ಪರವಾಗಿ ವಾದ ಮಂಡಿಸಿದ್ದರು. ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯ ರೇವಣ್ಣ ಅವರಿಗೆ ಹಲವು ಷರತ್ತುಗಳನ್ನು ವಿಧಿಸಿ ನಿನ್ನೆ ಜಾಮೀನು ಮಂಜೂರು ಮಾಡಿತ್ತು. diff --git a/eesanje/url_46_146_11.txt b/eesanje/url_46_146_11.txt new file mode 100644 index 0000000000000000000000000000000000000000..4923305f8bb0254aa9ec5b908cbe1ad50cd4deb9 --- /dev/null +++ b/eesanje/url_46_146_11.txt @@ -0,0 +1,7 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಚಾರಕ್ಕಾಗಿ ನನ್ನ ಹೆಸರು ಬಳಸಿಕೊಳ್ಳುತ್ತಿದ್ದಾರೆ : ಡಿಕೆಶಿ +ಬೆಂಗಳೂರು,ಮೇ 14-ಹಾಸನದ ಪೆನ್‌ಡ್ರೈವ್‌ ಪ್ರಕರಣ ನಮಗೆ ಗೊತ್ತಿಲ್ಲದೇ ಇರುವ ಸಮಸ್ಯೆ, ಕೆಲವರಿಗೆ ನನ್ನ ಹೆಸರನ್ನು ಬಳಸಿಕೊಂಡರೆ ಪ್ರಚಾರ ಸಿಗುತ್ತದೆ ಎಂದು ಮಾತನಾಡುತ್ತಾರೆ, ಈ ವಿಚಾರದಲ್ಲಿ ನನಗೇನೂ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. +ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ವಿಡಿಯೋ ಹಾಗೂ ಆಡಿಯೋ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. +ಯಾವುದೇ ವಿಚಾರಗಳಿಗೂ ಎಸ್‌‍ಐಟಿಯನ್ನು ಕೇಳಿಕೊಳ್ಳಿ, ನನಗೆ ಗೊತ್ತಿಲ್ಲದೇ ಇರುವ ವಿಚಾರ ಇದು. ನನ್ನ ಹೆಸರು ಉಪಯೋಗಿಸಿಕೊಳ್ಳುವುದರಿಂದ ಪ್ರಚಾರ ಸಿಗುತ್ತದೆ ಎಂಬ ಕಾರಣಕ್ಕೆ ಕೆಲವರು ನನ್ನ ಹೆಸರು ತೆಗೆದುಕೊಳ್ಳುತ್ತಾರೆ. ಆ ವಿಚಾರವಾಗಿ ನನಗೆ ಏನೂ ಗೊತ್ತಿಲ್ಲ ಎಂದರು. +ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಬಿಜೆಪಿ ಹಿರಿಯ ನಾಯಕ ಅಶ್ವತ್ಥನಾರಾಯಣ ಅವರು ಇದೆಲ್ಲಾ ಡಿ.ಕೆ.ಶಿವಕುಮಾರ್‌ ಕುತಂತ್ರ ಎಂದಿರುವುದಕ್ಕೆ ಸೂಕ್ತ ಸಮಯದಲ್ಲಿ ಉತ್ತರ ಕೊಡೋಣ ಎಂದು ತಿರುಗೇಟು ನೀಡಿದರು. +ಇಂದಿನಿಂದ ತಾವು ಎರಡು ದಿನಗಳ ಕಾಲ ಉತ್ತರ ಪ್ರದೇಶದ ರಾಯಭರೇಲಿಯಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದೇನೆ. ನಾಳೆ ನನ್ನ ಹುಟ್ಟುಹಬ್ಬ ಇರುವುದರಿಂದ ಯಾರೂ ಮನೆಯ ಬಳಿ ಬರಬಾರದು. ಹುಟ್ಟುಹಬ್ಬದ ಆಚರಣೆ ಮಾಡಬಾರದು ಎಂದು ಈಗಾಗಲೇ ಮನವಿ ಮಾಡಿಕೊಂಡಿದ್ದೇನೆ ಎಂದರು. +ದೇಶದ ಎಲ್ಲಾ ಕಡೆ ಒಳ್ಳೆಯ ವಾತಾವರಣವಿದೆ. ಇಂಡಿಯಾ ಕೂಟ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸವಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ನೀಡಿರುವ ಹೇಳಿಕೆ ತಿರುಗುಬಾಣವಾಗಲಿದೆ. ಲೋಕಸಭಾ ಚುನಾವಣೆಯ ಬಳಿಕ ಅವರದೇ ಜೊತೆಯಲ್ಲಿರುವ ಶಾಸಕರು ಶಿವಸೇನೆ ಹಾಗೂ ಎನ್‌ಸಿಪಿಗೆ ಮರಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_146_12.txt b/eesanje/url_46_146_12.txt new file mode 100644 index 0000000000000000000000000000000000000000..32aa08db6ea9be667faa707cb141d594f564ec37 --- /dev/null +++ b/eesanje/url_46_146_12.txt @@ -0,0 +1,8 @@ +ಶುಕ್ರವಾರದಿಂದ ಭಾನುವಾರದವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ +ಬೆಂಗಳೂರು,ಮೇ 14-ಕಳೆದ ಎಂಟು ಹತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ 5 ದಿನಗಳ ಕಾಲ ಮುಂದುವರೆಯಲಿದೆ. ಶುಕ್ರವಾರದಿಂದ ಭಾನುವಾರದವರೆಗೆ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆಗಳಿವೆ.ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. +ಅದರ ಪರಿಣಾಮ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಕರಾವಳಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ತಿಳಿಸಿದರು. +ಮುಂಗಾರುಪೂರ್ವ ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಆಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನ ಮುಂದುವರೆಯಲಿದೆ. ಆದರೆ ಶುಕ್ರವಾರದ ನಂತರ ಮಳೆ ಹೆಚ್ಚಾಗಲಿದೆ ಎಂದರು. +ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವು ಕಡೆ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ನಿನ್ನೆ ಕೂಡ ಬೆಂಗಳೂರು, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಿದೆ. +ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಾ.1 ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಶೇ. 40 ರಷ್ಟು ಮಳೆ ಕೊರತೆಯಾಗಿರುವುದು ಕಂಡುಬಂದಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 86.2 ಮಿಲಿ ಮೀಟರ್‌ ಆಗಿದ್ದು, ಕೇವಲ 51.5 ಮಿಲಿ ಮೀಟರ್‌ ಮಾತ್ರ ಮಳೆಯಾಗಿದೆ. +ಮೂರ್ನಾಲ್ಕು ಜಿಲ್ಲೆಗಳನ್ನು ಹೊರತುಪಡಿಸಿದರೆ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮೇ ತಿಂಗಳಿನಲ್ಲಿ ಮಳೆ ಪ್ರಾರಂಭವಾಗಿದ್ದರೂ ವ್ಯಾಪಕವಾಗಿ ಎಲ್ಲಾ ಕಡೆ ಮಳೆಯಾಗಿಲ್ಲ. ಒಂದು ಕಡೆ ಉತ್ತಮ ಮಳೆಯಾಗಿದ್ದರೆ, ಮತ್ತೊಂದು ಕಡೆ ಹಗುರ ಹಾಗೂ ಸಾಧಾರಣ ಮಳೆಯಾಗಿದೆ. ಇನ್ನೂ ಕೆಲವೆಡೆ ಮಳೆಯೇ ಆಗಿಲ್ಲ. ಇಂತಹ ಪರಿಸ್ಥಿತಿ ರಾಜ್ಯದಲ್ಲಿ ಕಂಡುಬರುತ್ತಿದೆ. ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. +ಇದರಿಂದ ಮರ, ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಬಾಳೆ, ಮಾವು ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ. ಒಟ್ಟಾರೆ ಬರದಿಂದ ಕಂಗೆಟ್ಟಿದ್ದ ರಾಜ್ಯಕ್ಕೆ ಬೇಸಿಗೆ ಮಳೆ ತಂಪೆರೆಯುವುದರ ಜೊತೆಗೆ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುವಂತೆ ಮಾಡಿದೆ. \ No newline at end of file diff --git a/eesanje/url_46_146_2.txt b/eesanje/url_46_146_2.txt new file mode 100644 index 0000000000000000000000000000000000000000..4e73433d436d55119f6895ebb25064d4655f3509 --- /dev/null +++ b/eesanje/url_46_146_2.txt @@ -0,0 +1,6 @@ +ವಿಧಾನ ಪರಿಷತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಾಲು ನಾಳೆ ಕಡೇ ದಿನ +ಬೆಂಗಳೂರು, ಮೇ 15– ವಿಧಾನ ಪರಿಷತ್ತಿನ ಆರು ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯದಿನ. ಮೇ 9 ರಿಂದ ನಿನ್ನೆಯವರೆಗೆ ಒಟ್ಟು 29 ಅಭ್ಯರ್ಥಿಗಳು ತಮ ಉಮೇದುವಾರಿಕೆ ಸಲ್ಲಿಸಿದ್ದಾರೆ. +ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, ಬಿಜೆಪಿ 3, ಕಾಂಗ್ರೆಸ್‌‍ 5, ಜೆಡಿಎಸ್‌‍ ಒಂದು ಹಾಗೂ 20 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ. 29 ಅಭ್ಯರ್ಥಿಗಳಲ್ಲಿ 28 ಪುರುಷ ಹಾಗೂ ಒಬ್ಬ ಮಹಿಳೆ ಸೇರಿದ್ದಾರೆ. ಒಟ್ಟು 40 ನಾಮಪತ್ರಗಳು ಸಲ್ಲಿಕೆಯಾಗಿವೆ. ನಿನ್ನೆ ವಿವಿಧ ಕ್ಷೇತ್ರಗಳಲ್ಲಿ 16 ಅಭ್ಯರ್ಥಿಗಳಿಂದ ಒಟ್ಟು 20 ನಾಮ ಪತ್ರ ಸಲ್ಲಿಕೆಯಾಗಿದ್ದವು. +ಇಂದು ಸಹ ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಂ. ಪುಟ್ಟಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. +ಮೆಲನೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಸ್ವತಂತ್ರ ಅಭ್ಯರ್ಥಿಗಳೂ ಸ್ಪರ್ಧೆಗಿಳಿದಿದ್ದಾರೆ. ಇಂದು ಮತ್ತು ನಾಳೆ ಮತ್ತಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ತಿರಸ್ಕೃತ ನಾಮಪತ್ರಗಳು ಹಾಗೂ ಒಪ್ಪಿತವಾದ ನಾಮಪತ್ರಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ. +ನಾಮಪತ್ರ ಹಿಂದಕ್ಕೆ ಪಡೆಯಲು ಮೇ 20ರವರೆಗೂ ಕಾಲಾವಕಾಶವಿದೆ. ಅಂದು ಸಂಜೆ ಅಧಿಕೃತವಾಗಿ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಜೂನ್‌ 6ರಂದು ಮತ ಎಣಿಕೆ ನಡೆಯಲಿದೆ.ಲೋಕಸಭೆ ಚುನಾವಣೆಯಂತೆ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡು ತಮ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್‌‍ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತಿದೆ. \ No newline at end of file diff --git a/eesanje/url_46_146_3.txt b/eesanje/url_46_146_3.txt new file mode 100644 index 0000000000000000000000000000000000000000..cd4c9fc65e1d4841d2fd26abd10990dd2ca6c191 --- /dev/null +++ b/eesanje/url_46_146_3.txt @@ -0,0 +1,4 @@ +ಏಪ್ರಿಲ್‌ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ 9,662.98 ಕೋಟಿ ತೆರಿಗೆ ಸಂಗ್ರಹ +ಬೆಂಗಳೂರು,ಮೇ14-ರಾಜ್ಯದ ವಾಣಿಜ್ಯ ತೆರಿಗೆಗಳ ಇಲಾಖೆಯು ಕಳೆದ ಏಪ್ರಿಲ್‌ ತಿಂಗಳಿನಲ್ಲಿ 9,662.98 ಕೋಟಿ ರೂ. ತೆರಿಗೆಯನ್ನು ಸಂಗ್ರಹಿಸಿದೆ. ಕಳೆದ ವರ್ಷ ಏಪ್ರಿಲ್‌ ತಿಂಗಳಿನಲ್ಲಿ 8,859.65 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿತ್ತು. ಕಳೆದ ವರ್ಷದ ಏಪ್ರಿಲ್‌ಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹವಾಗಿದೆ. +ಕಳೆದ ಏಪ್ರಿಲ್‌ ತಿಂಗಳಿನಲ್ಲಿ 7678.06 ಕೋಟಿ ರೂ. ಸರಕು ಸೇವಾ ತೆರಿಗೆ, 1811.32 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 173.60 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ. +2023-24ನೇ ಆರ್ಥಿಕ ಸಾಲಿನಲ್ಲಿ ಒಟ್ಟು 94,363.27 ಕೋಟಿ ರೂ. ತೆರಿಗೆ ಸಂಗ್ರಹವನ್ನು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಮಾಡಿತ್ತು. \ No newline at end of file diff --git a/eesanje/url_46_146_4.txt b/eesanje/url_46_146_4.txt new file mode 100644 index 0000000000000000000000000000000000000000..a7c73ada9cb43d9b58f40ac98223ea5e40b566b8 --- /dev/null +++ b/eesanje/url_46_146_4.txt @@ -0,0 +1,10 @@ +ರೇವಣ್ಣ ಬಂಧನ ರಾಜಕೀಯ ಪ್ರೇರಿತ, ದೇವೇಗೌಡರ ಕುಟುಂಬಕ್ಕೆ ಕಳಂಕ ತರುವ ಯತ್ನ : +ಬೆಂಗಳೂರು,ಮೇ14-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ರಾಜಕೀಯ ಪ್ರೇರಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದರು. +ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರೇವಣ್ಣ ಅವರಿಗೆ ಜಾಮೀನು ನೀಡಿದ್ದು, ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಪಡುವ ಸಮಯ ಇದಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾದಾಗ ಸಂಭ್ರಮ ಪಡಬೇಕು ಎಂದು ಅವರು ಹೇಳಿದರು. +ಹಾಸನದಲ್ಲಿ ಕೇಳಿಬಂದ ಪೆನ್‌ಡ್ರೈವ್‌ ಪ್ರಕರಣ ರಾಜ್ಯವೇ ತಲೆತಗ್ಗಿಸುವಂತಹ ಹೀನಾಯ ಘಟನೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದವರನ್ನು ಇಲ್ಲಿಯವರೆಗೂ ಕಂಡುಹಿಡಿದಿಲ್ಲ. ಘಟನೆಗೆ ಕಾರಣವಾದ ವ್ಯಕ್ತಿಯನ್ನು ಬಂಧಿಸಲಿಲ್ಲ. ಇದು ಸರ್ಕಾರದ ಬೇಜವಾಬ್ದಾರಿ ಅಲ್ಲವೇ? ಬಿಜೆಪಿಯ ಮಾಜಿ ಶಾಸಕರೊಬ್ಬರ ಎಡಬಲವನ್ನು ಮಾತ್ರ ಹಿಡಿಯಲಾಗಿದೆ. ಇನ್ನೊಂದು ವಾರದಲ್ಲಿ ಮುಖ್ಯವಾದವರನ್ನು ಹಿಡಿಯಲಾಗುತ್ತದೆ ಎನ್ನುತ್ತಾರೆ. ಹಾಗಾದರೆ ಎಸ್‌‍ಐಟಿ ತನಿಖೆ ಹೇಗೆ ಸೋರಿಕೆಯಾಗುತ್ತಿದೆ ಎಂದು ಪ್ರಶ್ನಿಸಿದರು. +ಎಫ್‌ಐಆರ್‌ ದಾಖಲಾಗಿರುವ ವ್ಯಕ್ತಿಯನ್ನು ಸಹ ವಶಕ್ಕೆ ಪಡೆದಿಲ್ಲ ಎಂದು ಆರೋಪಿಸಿದ ಅವರು, ಖಾಸಗಿ ಚಾನೆಲ್‌ನಲ್ಲಿ ಸಂದರ್ಶನ ನೀಡುತ್ತಾರೆ ಎಂದರು. ನವೀನ್‌ ಗೌಡ ಎಂಬಾತ ನಮ ಪಕ್ಷದ ಶಾಸಕರಿಗೆ ಪೆನ್‌ಡ್ರೈವ್‌ ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೂ ಆತನನ್ನು ಪೊಲೀಸರು ಬಂಧಿಸಲಿಲ್ಲ ಎಂದು ಆರೋಪಿಸಿದರು. +ವಿಡಿಯೋದಲ್ಲಿ ಕಾಣಿಸಿಕೊಂಡಂಥ ಮಹಿಳೆಯರ ಕುಟುಂಬದ ಬಗ್ಗೆ ಸರ್ಕಾರಕ್ಕೆ ಅನುಕಂಪ ಇದೆಯೇ? ಮಾಹಿತಿ ತಂತ್ರಜ್ಞಾನದಲ್ಲಿ ಅಪರಾಧಿ ನಿರಪರಾಧಿಯಾಗಬಹುದು. ಸರ್ಕಾರಕ್ಕೆ ಬದ್ದತೆಯಿದ್ದರೆ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಲಿ. ಅಕ್ಕತಂಗಿ, ತಂದೆತಾಯಿಗಳು ನಿಮಗೂ ಇರುವುದಿಲ್ಲವೇ ಎಂದು ಪ್ರಶ್ನಿಸಿದರು. +ಕೆಲವೇ ಕ್ಷಣಗಳಲ್ಲಿ ಪೆನ್‌ಡ್ರೈವ್‌ ಬರಲಿದೆ ಎಂದು ಪೋಸ್ಟ್‌ ಮಾಡಿರುವ ವ್ಯಕ್ತಿಯನ್ನು ಬಂಧಿಸಿದ್ದಿರಾ? ಎಂದು ಪ್ರಶ್ನಿಸಿದ ಅವರು, ತಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ನ್ಯಾಯದ ಹಾಗೂ ಮಹಿಳೆಯ ಪರವಾಗಿ ಇದ್ದೇನೆ ಎಂದು ಹೇಳಿದರು.ವಿಡಿಯೋದಲ್ಲಿ ಆರೋಪಿತ ವ್ಯಕ್ತಿಯ ಯಾವುದೇ ಚಿತ್ರಣವಿಲ್ಲ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ. ಹಾಗಾದರೆ ಈ ಪ್ರಕರಣ ಎಲ್ಲಿಗೆ ಹೋಗುತ್ತದೆ ಎಂದು ಪ್ರಶ್ನಿಸಿದರು. +ದೊಡ್ಡ ತಿಮಿಂಗಲದ ಆಡಿಯೋ ಬಹಿರಂಗಪಡಿಸಿದರು ಎಂದು ವಕೀಲ ದೇವರಾಜೇಗೌಡ ಅವರ ಮೇಲೆ ಕೇಸ್‌‍ ಹಾಕಿ ಬಂಧಿಸಲಾಗಿದೆ. ಒಂದು ತಿಂಗಳಿನಿಂದ ಏನೆಲ್ಲಾ ಬೆಳವಣಿಗೆಯಾಯಿತು ಎಂದರು. +ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ದೂರು ಕೊಟ್ಟಿದ್ದಾರೆ. ಹೆಣ್ಣುಮಕ್ಕಳಿಗೆ ಬೆದರಿಸಿ ದೂರು ಕೊಡಲು ಪ್ರಯತ್ನ ಮಾಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲಾ ವಿಚಾರಗಳು ಹೊರಗೆ ಬರಲಿದೆ ಎಂದು ಹೇಳಿದರು. +ಹೆದರಿಸಿ ಹೆಣ್ಣುಮಕ್ಕಳಿಂದ ದೂರು ಪಡೆಯುವವರ ಬಗ್ಗೆ ಗೃಹಸಚಿವರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಪ್ರಶ್ನಿಸಿದರು. ಪ್ರಜ್ವಲ್‌ ನನ್ನ ಅಣ್ಣನ ಮಗನೇ ಇರಬಹುದು. ಆದರೂ ವಿದೇಶಕ್ಕೆ ಹೋಗಿರುವ ಪ್ರಜ್ವಲ್‌ನನ್ನು ಏಕೆ ಕರೆಸಲಿಲ್ಲ. ಬೆಳೆದ ಮಕ್ಕಳು ನಮನ್ನು ಕೇಳಿ ಹೋಗುತ್ತಾರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_146_5.txt b/eesanje/url_46_146_5.txt new file mode 100644 index 0000000000000000000000000000000000000000..189a661705d68ef65996500fd35ee30ade6e3214 --- /dev/null +++ b/eesanje/url_46_146_5.txt @@ -0,0 +1,4 @@ +ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು ಸತ್ಯ, ನಿಷ್ಠೆಗೆ ಜಯ : ಶರವಣ +ಬೆಂಗಳೂರು,ಮೇ14-ಮಾಜಿ ಸಚಿವ ಎಚ್‌.ಡಿ.ರೇವಣ್ಣರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸತ್ಯ, ನಿಷ್ಠೆಗೆ ಜಯ ಸಿಕ್ಕಂತಾಗಿದೆ. ಕಾಂಗ್ರೆಸ್‌‍ ರೂಪಿಸಿದ್ದ ಸಂಚು ಇದರಿಂದ ವಿಫಲಗೊಂಡಿದೆ ಎಂದು ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಹೇಳಿದರು. +ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ವಿನಾಕಾರಣ ರೇವಣ್ಣ ಅವರ ತೇಜೋವಧೆಗೆ ಸಂಚು ರೂಪಿಸಿದ್ದು, ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. +ನಾಲ್ಕು ದಶಕಗಳ ರಾಜಕಾರಣದಲ್ಲಿ ರಾಜ್ಯಕ್ಕೆ ಅದರಲ್ಲೂ ಹಾಸನ ಜಿಲ್ಲೆಗೆ ರೇವಣ್ಣ ಕೊಡುಗೆ ಅಪಾರ. ಹಾಲು ಉತ್ಪಾದಕ ಕ್ಷೇತ್ರದಲ್ಲಿ ಅವರು ಜಾರಿಗೆ ತಂದಿರುವ ಸುಧಾರಣೆ ಇಡೀ ಭಾರತದಲ್ಲೇ ಮಾದರಿ. ಇಂಥ ನಾಯಕರ ತೇಜೋವಧೆ ಮಾಡುವ ಮಟ್ಟಿಗೆ ಕಾಂಗ್ರೆಸ್‌‍ ನಾಯಕರು ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_146_6.txt b/eesanje/url_46_146_6.txt new file mode 100644 index 0000000000000000000000000000000000000000..804c3919c854aad1b06d37c3cf643605c2a6b38a --- /dev/null +++ b/eesanje/url_46_146_6.txt @@ -0,0 +1,9 @@ +ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಈಶ್ವರಪ್ಪ ದೂರು +ಬೆಂಗಳೂರು,ಮೇ14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಪಕ್ಷೇತರ ಅಭ್ಯರ್ಥಿ ಕೆ.ಎಸ್‌‍.ಈಶ್ವರಪ್ಪ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದ್ದಾರೆ. +ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು, ಚುನಾವಣೆಯ ಹಿಂದಿನ ದಿನ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ನಾನು ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮಾಡಿದ್ದೆ. ನಾನು ಚುನಾವಣಾ ಆಖಾಡದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಲಾಗಿದೆ. ಹೀಗಾಗಿ, ರಾಘವೇಂದ್ರ ವಿರುದ್ಧ ದೂರು ನೀಡಲಾಗಿದೆ ಎಂದು ತಿಳಿಸಿದರು. +ಕಳೆದ ಚುನಾವಣೆಯಲ್ಲಿ ನಾನು ಮಾಡಿದ ಪ್ರಚಾರವನ್ನೇ ಈಗ ಮಾಡಿರುವಂತೆ ಬಿಂಬಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಬಿ.ವೈ.ರಾಘವೇಂದ್ರ ಅವರು ನನ್ನದು ಮತ್ತು ನರೇಂದ್ರಮೋದಿ ಅವರ ಭಾವಚಿತ್ರವಿರುವ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ದ್ರೋಹ ಎಂದು ಹೇಳಿದರು. +ಈಗ ನಡೆದಿರುವ ಚುನಾವಣೆಗೂ, ಬಿಡುಗಡೆ ಮಾಡಿರುವ ವಿಡಿಯೋಗೂ ಸಂಬಂಧವಿಲ್ಲ. ನಾನು ಜೀವನದಲ್ಲಿ ಇಂತಹ ತಪ್ಪು ಮಾಡುವುದಿಲ್ಲ ಎಂದು ನಾನು ಹೇಳಿದ ಹಾಗೇ ಮಾಡಿದ್ದಾರೆ. ನಾನು ಕುಟುಂಬ ರಾಜಕಾರಣದಿಂದ ಹೊರಗೆ ಬರಬೇಕು, ಹಿಂದುತ್ವ ಪ್ರತಿಪಾದಿಸಿ ಸ್ಫರ್ಧಿಸಿದ್ದೇ, ಈಶ್ವರಪ್ಪ ಹಿಂದೆ ಸರಿದಿದ್ದಾರೆ. ನನಗೆ ಬೆಂಬಲಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ.ಇದು ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್‌ ಇದಕ್ಕೆ ಉತ್ತರ ಕೊಡಬೇಕು. ಅವರು ಟೊಳ್ಳು ಇದ್ದಾರೋ, ಗಟ್ಟಿ ಇದ್ದಾರೋ ಅವರೇ ಉತ್ತರ ಕೊಡಬೇಕು. ಮುಖ್ಯಮಂತ್ರಿ ಆಗುವುದು ಒಕ್ಕಲಿಗರು, ಕುರುಬರು ಮಾಡುತ್ತಾರಾ? ಜಾತಿ ರಾಜಕಾರಣ ಮಾಡುತ್ತಿರುರೋ, ಸರ್ಕಾರ ಮುಂದುವರೆಸುತ್ತಾರಾ? ನಾಳೆ ಸರ್ಕಾರ ಏನಾಗುತ್ತೆ ಗೊತ್ತಿಲ್ಲ. ನಾನು ಭವಿಷ್ಯಕಾರ ಅಲ್ಲ. ಅಶೋಕ್‌‍, ಕುಮಾರಸ್ವಾಮಿ ಹೇಳಿಕೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದರು. +ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಮಾತನಾಡಿದ ಅವರು, ಸಿದ್ಧರಾಮಯ್ಯ, ಡಿಕೆಶಿ, ಕುಮಾರಸ್ವಾಮಿ, ರೇವಣ್ಣ ಅವರು ಹೆಣ್ಣನ್ನು ತಾಯಿ ಅಂತಾರೆ. ಹೆಣ್ಣನ್ನು ಮುಂದೆ ಇಟ್ಟುಕೊಂಡು ಇಷ್ಟೆಲ್ಲಾ ಮಾಡಿರುವುದು ಅಸಹ್ಯ. ಈ ಪ್ರಕರಣ ಸಿಬಿಐಗೆ ಕೊಡಬೇಕು ಎಂದರು. +ಜಗದೀಶ್‌ ಶೆಟ್ಟರ್‌ ಅವರನ್ನು 6 ವರ್ಷ ಉಚ್ಚಾಟನೆ ಅಂದರು ಯಡಿಯೂರಪ್ಪ ಅವರ ಮನೆಗೆ ಹೋಗಿ ಕರೆದುಕೊಂಡು ಬಂದು ಸೀಟು ಕೊಟ್ಟರು. ಈ ಉಚ್ಛಾಟನೆ ನಾನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ನಾನು ಮೋದಿ ಪರ ಕೈ ಎತ್ತುತ್ತೇನೆ. ರಾಘವೇಂದ್ರ ಲಿಂಗಾಯತರ ಹೆಸರಲ್ಲಿ ಓಟು ಕೇಳಿದರು ಮಧು ಬಂಗಾರಪ್ಪ ಈಡಿಗರ ಹೆಸರಲ್ಲಿ ಓಟು ಕೇಳಿದರು ನಾಚಿಕೆ ಆಗಬೇಕು ಇವರಿಗೆ.ಜಾತಿ ಹೆಸರಿನಲ್ಲಿ ಮತ ಕೇಳಿದ್ದಕ್ಕೆ ಎಂದು ತರಾಟೆಗೆ ತೆಗೆದುಕೊಂಡರು. +ಈ ಬಾರಿ ಮುಸ್ಲಿಂರು ಒಂದಾಗಿ ಅತಿ ಹೆಚ್ಚು ಮತಗಳನ್ನು ಚಲಾಯಿಸಿದ್ದಾರೆ. ಜಾತಿ ಹೆಸರಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌‍ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಮುಸ್ಲಿಂರು ಒಂದಾಗಿದ್ದಾರೆ. ಹಿಂದು ಸಮಾಜ ಎಚ್ಚೆತ್ತಕೊಳ್ಳಬೇಕು. ಮುಂದಿನ ದಿನಗಳಲ್ಲಿ ನಮ ಹಿಂದು ಸಮಾಜ ಒಂದಾಗುವ ವಿಶ್ವಾಸ ನನಗಿದೆ ಎಂದರು. \ No newline at end of file diff --git a/eesanje/url_46_146_7.txt b/eesanje/url_46_146_7.txt new file mode 100644 index 0000000000000000000000000000000000000000..b36e84021ad92fd4ee89b75ce208a459246d017d --- /dev/null +++ b/eesanje/url_46_146_7.txt @@ -0,0 +1,8 @@ +ಎಸ್‌‍ಎಸ್‌‍ಎಲ್‌ಸಿ ಟಾಪರ್‌ ಅಂಕಿತಾಗೆ 5 ಲಕ್ಷ ರೂ. ಬಹುಮಾನ ನೀಡಿ ಸನ್ಮಾನಿಸಿದ ಡಿಸಿಎಂ +ಬೆಂಗಳೂರು,ಮೇ 14-ಎಸ್‌‍ಎಸ್‌‍ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್‌ ಪಡೆದ ಅಂಕಿತ ಬಸವರಾಜ್‌ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 5 ಲಕ್ಷ ರೂ.ಗಳ ನಗದು ಬಹುಮಾನ ನೀಡಿ ಅಭಿನಂದಿಸಿದ್ದಾರೆ. +ಅಂಕಿತ ಅವರ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ತಮ ಮನೆಗೆ ಕರೆಸಿಕೊಂಡು ಸನ್ಮಾನಿಸಿದ ಡಿ.ಕೆ.ಶಿವಕುಮಾರ್‌, ಸರ್ಕಾರದ ವತಿಯಿಂದ ಪ್ರಶಂಸನಾ ಪತ್ರ ನೀಡಿದರು.ಅದರ ಮೇಲೆ ದಿನಾಂಕವನ್ನು ಖುದ್ದಾಗಿ ತಾವೇ ನಮೂದಿಸಿದರು. ಜೊತೆಗೆ ತಮ್ಮ ಪುತ್ರಿಯಿಂದಲೂ ಸಹಿ ಹಾಕಿಸಿ ಅಂಕಿತಾ ಅವರಿಗೆ ತಲುಪಿಸುವಂತೆ ತಮ ಸಿಬ್ಬಂದಿಗಳಿಗೆ ಸೂಚಿಸಿದರು. ವೈಯಕ್ತಿಕವಾಗಿ 5 ಲಕ್ಷ ರೂ.ಗಳ ಚೆಕ್‌ ಅನ್ನು ವಿತರಿಸಿದರು. ಜೊತೆಗೆ ತೃತೀಯ ರ್ಯಾಂಕ್‌ ಪಡೆದಿರುವ ಮಂಡ್ಯದ ನವನೀತ್‌ಗೂ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು. + ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್…../ +ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಬಾಗಲಕೋಟೆಯ ಅಂಕಿತಾ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ್ಯಾಂಕ್‌ ಪಡೆದಿದ್ದಾರೆ. ನಾನು ಓದುವಾಗಲೂ ಬಹಳಷ್ಟು ಮಂದಿ ರ್ಯಾಂಕ್‌ ಪಡೆಯುತ್ತಿದ್ದರು, ಬೆಂಗಳೂರಿನ ಶಾಲೆಗಳಲ್ಲಿ ರ್ಯಾಂಕ್‌ ಪಡೆಯುವುದು ದೊಡ್ಡ ವಿಷಯವಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ರ್ಯಾಂಕ್‌ ಪಡೆದಿದ್ದು ಶ್ಲಾಘನಾರ್ಹ ಎಂದರು. +ನಾನು ಪ್ರವೃತ್ತಿಯಲ್ಲಿ ರಾಜಕಾರಣಿ. ಆದರೆ ಶೈಕ್ಷಣಿಕ ಸೇವೆ ನನ್ನ ಆಯ್ಕೆ. ರಾಜ್ಯದ ಗ್ರಾಮೀಣ ಭಾಗದಲ್ಲಿನ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಆರಂಭಿಸುವುದು ನನ್ನ ಗುರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಸ್‌‍ಆರ್‌ ಅನುದಾನ ಬಳಸಿ ಶಾಲೆಗಳ ನಿರ್ಮಾಣಕ್ಕೆ ಸಹಮತಿ ಸೂಚಿಸಿದ್ದಾರೆ. ಈಗಾಗಲೇ ಸಂಸದ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ರಾಮನಗರದಲ್ಲಿ ಈ ರೀತಿಯ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು. +ನೀತಿ ಸಂಹಿತೆಯ ಕಾರಣಕ್ಕಾಗಿ ಈವರೆಗೂ ಸಭೆಗಳನ್ನು ಮಾಡಿಲ್ಲ. ಇನ್ನು ಮುಂದೆ ನಿರಂತರವಾಗಿ ಸಭೆಗಳನ್ನು ಮಾಡಿ ಶಾಲೆಗಳ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗುವುದು. ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಅವರ ಫಲಿತಾಂಶ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಮರ್ಥರಿದ್ದಾರೆ, ಶಿಕ್ಷಕರೂ ಸಮರ್ಥರು ಎಂಬುದನ್ನು ಸಾಬೀತುಪಡಿಸಿದೆ ಎಂದು ಡಿ.ಕೆ.ಶಿವಕುಮಾರ್‌ ಅಭಿಪ್ರಾಯಪಟ್ಟರು. +ಇದೇ ವೇಳೆ ಮೊರಾರ್ಜಿ ಶಾಲೆಯ ಪ್ರಾಂಶುಪಾಲರನ್ನು ಡಿ.ಕೆ.ಶಿವಕುಮಾರ್‌ ಅಭಿನಂದಿಸಿದರು.ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಇದು ರಾಜಕಾರಣದ ವಿಚಾರ. ವಿದ್ಯಾರ್ಥಿನಿಯಾಗಿರುವ ನಿನಗೆ ಇದರ ಸಹವಾಸ ಬೇಡ ಎಂದು ಅಂಕಿತಾರನ್ನು ಪಕ್ಕಕ್ಕೆ ಕಳುಹಿಸಿದರು. \ No newline at end of file diff --git a/eesanje/url_46_146_8.txt b/eesanje/url_46_146_8.txt new file mode 100644 index 0000000000000000000000000000000000000000..9b6362adbcba732beedba45adefbc5e0771934be --- /dev/null +++ b/eesanje/url_46_146_8.txt @@ -0,0 +1,9 @@ +ವಿಧಾನಪರಿಷತ್‌ ಚುನಾವಣಾ ಮೇಲೆ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರಲ್ಲ : ಸಿಎಂ +ಮೈಸೂರು,ಮೇ 14-ಶಿಕ್ಷಕರು ಹಾಗೂ ಪದವೀಧರರ ವಲಯದಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ದ್ವೈ ವಾರ್ಷಿಕ ಚುನಾವಣೆಯ ಮೇಲೆ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಮತದಾರರು ಪ್ರಬುದ್ಧರಿದ್ದಾರೆ. ಯಾವುದು ಸರಿ, ಯಾವುದು ತಪ್ಪು ಎಂದು ಯೋಚಿಸುವ ಹಾಗೂ ಕೇಂದ್ರ ಸರ್ಕಾರದ 10 ವರ್ಷಗಳ ಆಡಳಿತ ಹಾಗೂ ನಮ ಸರ್ಕಾರದ ಸಾಧನೆಗಳ ಬಗ್ಗೆ ವಿಮರ್ಶೆ ಮಾಡುವ ವಿವೇಚನೆ ಹೊಂದಿದ್ದಾರೆ. ಹೀಗಾಗಿ ಪೆನ್‌ಡ್ರೈವ್‌ ಪ್ರಕರಣ ಪರಿಣಾಮ ಬೀರುವುದಿಲ್ಲ ಎಂದರು. +ಬೆಂಗಳೂರು ದಕ್ಷಿಣ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌‍ ಪರವಾದ ವಾತಾವರಣವಿದೆ. ನಮ ಪಕ್ಷ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಆರು ತಿಂಗಳಿಗೂ ಮೊದಲೇ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಹೀಗಾಗಿ ಒಂದು ಸುತ್ತಿನ ಮತದಾರರ ಭೇಟಿ ಪೂರ್ಣಗೊಂಡಿದೆ ಎಂದು ಹೇಳಿದರು. +ಜೆಡಿಎಸ್‌‍-ಬಿಜೆಪಿ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ನಮಗೇನೂ ನಷ್ಟವಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿಯೂ ಅವರು ಮೈತ್ರಿ ಮಾಡಿಕೊಂಡಿದ್ದರು. ಆದರೆ ಮತದಾರರು ನಮ ಪರವಾದ ಒಲುವು ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ತಮ ಬಳಿ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಪಟ್ಟಂತಹ ಪೆನ್‌ಡ್ರೈವ್‌ ಇದೆ. ಸರ್ಕಾರ ತನಿಖೆ ಮಾಡುವ ತಾಕತ್ತು ಪ್ರದರ್ಶಿಸಿದರೆ ಅದನ್ನ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರದು ಹಿಟ್‌ ಅಂಡ್‌ ರನ್‌ ಕೇಸು. ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದರು. +ನಮ ಸರ್ಕಾರ ಪತನಗೊಳ್ಳುತ್ತದೆ ಎಂದು ಒಂದು ವರ್ಷದಿಂದಲೂ ಹೇಳುತ್ತಲೇ ಬಂದಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ. ಅಲ್ಲಿನವರು ನಮ ಸರ್ಕಾರದ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ತಿಳಿಸಿದರು. +ಕಾಂಗ್ರೆಸ್‌‍ನಲ್ಲಿ ಒಳ ಜಗಳ ಇಲ್ಲ. ವಿರೋಧಪಕ್ಷಗಳು ರಾಜಕೀಯಕ್ಕಾಗಿ ಏನು ಬೇಕಾದರೂ ಹೇಳಿಕೊಳ್ಳಲಿ. ಒಳಜಗಳ ಇದ್ದಿದ್ದರೆ ಲೋಕಸಭಾ ಚುನಾವಣೆಯನ್ನು ಅಷ್ಟು ಒಗ್ಗಟ್ಟಾಗಿ ಎದುರಿಸಲು ಸಾಧ್ಯವಿತ್ತೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. +ಇದೇ ವೇಳೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರಿತಿಬ್ಬೇಗೌಡ ಅವರು ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು.ಈ ವೇಳೆ ಸಚಿವರಾದ ಎಚ್‌.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಮಧು ಬಂಗಾರಪ್ಪ, ಕೆ.ವೆಂಕಟೇಶ್‌ ಸೇರಿದಂತೆ ಶಾಸಕರು ಹಾಜರಿದ್ದರು. \ No newline at end of file diff --git a/eesanje/url_46_146_9.txt b/eesanje/url_46_146_9.txt new file mode 100644 index 0000000000000000000000000000000000000000..c62b40fd3be4b22a1dea59db80a226b9fa84203f --- /dev/null +++ b/eesanje/url_46_146_9.txt @@ -0,0 +1,9 @@ +ಪ್ರಜ್ವಲ್ ಪೆನ್‌ಡ್ರೈವ್‌ ಹಂಚಿದ್ದು ಬಿಜೆಪಿಯವರೇ : ಶಾಸಕ ಗಣಿಗ ರವಿ +ಮಂಡ್ಯ,ಮೇ 14-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿಯವರೇ ಹಂಚಿಕೆದಾರರಾಗಿದ್ದು, ಮಾಜಿ ಶಾಸಕರು, ರಾಜ್ಯಮಟ್ಟದ ಪ್ರಭಾವಿ ನಾಯಕರ ಪಾತ್ರವು ಶೀಘ್ರವೇ ಹೊರಬರುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌‍ ಶಾಸಕ ಗಣಿಗ ರವಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌‍ ಪಕ್ಷವನ್ನು ಮುಗಿಸಲು ಬಿಜೆಪಿಯವರೇ ಮಾಡಿದ ಹುನ್ನಾರ ಇದು ಎಂದು ಟೀಕಿಸಿದರು. +ಬಿಜೆಪಿಯವರಿಗೆ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಬೆಂಬಲ ಇಲ್ಲ. ಹೀಗಾಗಿ ಜನತಾದಳವನ್ನು ಪಕ್ಕದಲ್ಲೇ ಇಟ್ಟುಕೊಂಡು ಅವರನ್ನು ಮುಗಿಸಿ, ಆ ಪಕ್ಷದ ಕಾರ್ಯಕರ್ತರನ್ನು ಬಿಜೆಪಿಯತ್ತ ಸೆಳೆದುಕೊಳ್ಳುವ ಸಂಚು ನಡೆದಿದೆ. ಅದಕ್ಕಾಗಿ ಕಾಂಗ್ರೆಸ್‌‍ ಮೇಲೆ ಕೋಪ ಬರುವಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. +ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯ ಈ ಮೊದಲು ಜನತಾದಳದ ಜೊತೆಗಿತ್ತು. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಮೇಲೆ ಒಟ್ಟಾರೆ ಲಿಂಗಾಯತ ಸಮುದಾಯವನ್ನು ಬಿಜೆಪಿ ಹೈಜಾಕ್‌ ಮಾಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌‍ ಹೇಳ ಹೆಸರಿಲ್ಲದಂತೆ ಮಾಡಲಾಗಿದೆ. ಈಗ ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವನ್ನು ಸೆಳೆದುಕೊಂಡು ಜೆಡಿಎಸ್‌‍ ಪಕ್ಷವನ್ನು ಮುಗಿಸಲು ಬಿಜೆಪಿ ಸಂಚು ರೂಪಿಸಿದೆೆ ಎಂದರು. +ಜೆಡಿಎಸ್‌‍-ಬಿಜೆಪಿಯ ಮೈತ್ರಿಗೂ ಮೊದಲು ಜೆಡಿಎಸ್‌‍ನವರು ಮಣ್ಣು, ನೇಗಿಲು, ತೆನೆ ಎನ್ನುತ್ತಿದ್ದರು. ಈಗ ಭಾರತ, ಪಾಕಿಸ್ತಾನ, ಆಘ್ಫಾನಿಸ್ತಾನ ಎಂದು ಮಾತನಾಡುತ್ತಿದ್ದಾರೆ. ಹೊಲ ಉಳುವುದು, ನೀರು ಹಾಯಿಸುವ ಬಗ್ಗೆ ಮಾತನಾಡುತ್ತಿದ್ದ ಜನತಾದಳದ ನಾಯಕರು, ಅಮೆರಿಕ ಎಂದು ವಿದೇಶದ ವಿಚಾರಗಳನ್ನು ಬಿಜೆಪಿಯವರ ರೀತಿಯಲ್ಲೇ ಚರ್ಚೆ ಮಾಡಲಾರಂಭಿಸಿದ್ದಾರೆ ಎಂದು ಹೇಳಿದರು. +ಪೆನ್‌ಡ್ರೈವ್‌ ಪ್ರಕರಣಕ್ಕೂ, ಕಾಂಗ್ರೆಸ್‌‍ಗೂ ಯಾವುದೇ ಸಂಬಂಧ ಇಲ್ಲ. ಸಹಜ ಕುತೂಹಲದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೇವರಾಜೇಗೌಡರ ಜೊತೆ ಮಾತನಾಡಿದ್ದಾರೆ. ಆತ ಅದನ್ನು ರೆಕಾರ್ಡ್‌ ಮಾಡಿಕೊಂಡು ತನಗೆ ಬೇಕಾದಷ್ಟು ಮಾತ್ರ ಬಹಿರಂಗಗೊಳಿಸಿದ್ದಾರೆ ಎಂದು ಕಿಡಿಕಾರಿದರು. +ಪೆನ್‌ಡ್ರೈವ್‌ನಲ್ಲಿನ ಅಶ್ಲೀಲ ವಿಡಿಯೋಗಳ ಚಿತ್ರೀಕರಣ ಮಾಡಿದವರು ಸಂಸದ ಪ್ರಜ್ವಲ್‌ ರೇವಣ್ಣ. ಅದರ ಹಂಚಿಕೆದಾರರು, ಪ್ರಿಂಟರ್‌ ಬಿಜೆಪಿಯವರು. ಈಗಾಗಲೇ ಬಿಜೆಪಿಯ ಮಾಜಿ ಶಾಸಕ ರ ಎಡಗೈ, ಬಲಗೈನಂತಿದ್ದ ಆಪ್ತರನ್ನು ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುಖ್ಯ ಪಾತ್ರಧಾರಿಗಳು ಹೊರಬರುತ್ತಾರೆ ಎಂದು ಹೇಳಿದರು. +ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಹೆಣ್ಣು ಮಕ್ಕಳನ್ನು ದುರುಪಯೋಗಪಡಿಸಿಕೊಂಡು ಚಿತ್ರೀಕರಣ ಮಾಡಿಕೊಳ್ಳಲು ನಾವು ಹೇಳಿರಲಿಲ್ಲ. ಎಲ್ಲವೂ ಅವರೇ ಮಾಡಿಕೊಂಡ ತಪ್ಪುಗಳು. ನಾವು ಪ್ರಕರಣದ ತನಿಖೆಗೆ ಎಸ್‌‍ಐಟಿ ರಚನೆ ಮಾಡಿದ್ದೇವೆ. ಹಂಚಿಕೆದಾರರು, ಭಾಗಿದಾರರು ಇಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. +ಸರ್ಕಾರ ಎಸ್‌‍ಐಟಿ ರಚನೆ ಮಾಡಿದೆ, ತನಿಖೆ ನಡಯುತ್ತಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಕುಮಾರಸ್ವಾಮಿ ಹೇಳಿದಂತೆ ತಪ್ಪು ಮಾಡಿದವರ ವಿರುದ್ಧ ಖಂಡಿತ ಕ್ರಮ ತೆಗೆದುಕೊಳ್ಳಲಾಗುತ್ತದೆ. ತಾವು ದಾಖಲೆ ಇಲ್ಲದೆ ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ, ಹಿಟ್‌ ಅಂಡ್‌ ರನ್‌ ಪ್ರವೃತ್ತಿಯೂ ನಮದಲ್ಲ ಎಂದು ಗಣಿಗ ರವಿ ಹೇಳಿದರು. \ No newline at end of file diff --git a/eesanje/url_46_147_1.txt b/eesanje/url_46_147_1.txt new file mode 100644 index 0000000000000000000000000000000000000000..81cf8c4972c507afcd2e9e56621c3923b87ba617 --- /dev/null +++ b/eesanje/url_46_147_1.txt @@ -0,0 +1,9 @@ + : ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು +ಬೆಂಗಳೂರು, ಮೇ 13- ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. +ಸಾಕ್ಷ್ಯ ನಾಶ ಪಡಿಸಬಾರದು, ವಿದೇಶ ಸೇರಿದಂತೆ ನಿಗೂಢ ಸ್ಥಳಕ್ಕೆ ತೆರಳಬಾರದು. 5 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ನ ಭದ್ರತೆ ಒದಗಿಸಬೇಕು ಎಂಬವು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿದ್ದಾರೆ. +ಹಾಸನದ ಪೆನ್ ಡ್ರೈವ್ ಪ್ರಕರಣ ಬಯಲಿಗೆ ಬಂದ ಬಳಿಕ ಮಹಿಳೆಯ ಪುತ್ರ ಮೈಸೂರಿನ ಕೆ.ಅರ್.ನಗರ ಪೊಲೀಸ್ ಠಾಣೆಗೆ ದೂರು ನೀಡಿ, ತಮ್ಮ ತಾಯಿ ಅಪಹರಣವಾಗಿದ್ದಾರೆ ಎಂದು ಆರೋಪಿಸಿದರು. ಈ ಸಂಬಂಧ ತನಿಖೆ ನಡೆಸಿದ ಕೆ.ಅರ್.ನಗರ ಹಾಗೂ ವಿಶೇಷ ತನಿಖಾ ದಳದ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬು ಎಂಬುವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದರು. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ರೇವಣ್ಣ ಜಾಮೀನಿಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. +ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಮುಂದೆ ಹೆಚ್.ಡಿ.ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರ ಪಾತ್ರವಿಲ್ಲ ಎಂದರು. ಐಪಿಸಿ ಸೆಕ್ಷನ್ 364 ಎ ಮತ್ತು 365ರ ಅಡಿ ಅಪಹರಣ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್ ಬಳಕೆ ಸಂಪೂರ್ಣ ಕಾನೂನು ಬಾಹಿರವಾಗಿದೆ. ಅಪಹರಣ ಪ್ರಕರಣದಲ್ಲಿ ಒತ್ತೆಯಾಳನ್ನು ಬಿಡುಗಡೆ ಮಾಡಲು ಬೇಡಿಕೆ ಇಟ್ಟಿರಬೇಕು, ಕೊಲ್ಲುವುದಾಗಿ ಬೆದರಿಕೆ ಹಾಕಿರಬೇಕು. ಹಲ್ಲೆ ಮಾಡಿರಬೇಕು, ಈ ಎಲ್ಲಾ ಆರೋಪಗಳಿಗೆ ಪೂರಕ ಸಾಕ್ಷ್ಯಗಳಿರಬೇಕು. ಅಪಹರಣ ಮಾಡಿದವರನ್ನು ಒತ್ತೆಯಲ್ಲಿಡುವುದು ಅಪರಾಧ ಹೌದಾದರೂ, ಇಲ್ಲಿ ಪ್ರತಿವಾದಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಅಪಹರಣ ಮಾಡಿಲ್ಲ, ಆಕೆಯನ್ನು ಒತ್ತೆಯಾಳಾಗಿಸಿರಿಕೊಂಡಿಲ್ಲ. ಆಕೆಯನ್ನು ಬಿಡುಗಡೆ ಮಾಡಲು ಯಾವುದೇ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ವಾದಿಸಿದ್ದಾರೆ. +ದೂರು ನೀಡಿರುವ ಮಹಿಳೆಯ ಪುತ್ರ, ತನ್ನ ತಾಯಿ ಅಪಹರಣವಾಗಿದ್ಧಾರೆ, ತನ್ನ ತಾಯಿಯನ್ನು ಅಪಹರಣ ಮಾಡಿ ಒತ್ತೆಯಾಳಾಗಿಸಿಕೊಂಡಿದ್ದಾರೆ ಎಂದು ಊಹೆ ಮಾಡಿಕೊಂಡಿದ್ದಾರೆ. ದೂರು ನೀಡಲು ಕೂಡ ಸಾಕಷ್ಟು ವಿಳಂಬವಾಗಿದೆ. ದೂರು ನೀಡುವ ಮೊದಲು ದೂರುದಾರರು ತನ್ನ ತಾಯಿಯನ್ನು ಹುಡುಕುವ ಪ್ರಯತ್ನ ಮಾಡಿಲ್ಲ. ಪೆನ್ಡ್ರೈವ್ ಬಹಿರಂಗಗೊಂಡ ಬಳಿಕ ದೂರು ನೀಡಲಾಗಿದೆ. ಮಹಿಳೆ ರೇವಣ್ಣ ಅವರ ಮನೆಯಲ್ಲಿ 10 ವರ್ಷ ಕೆಲಸ ಮಾಡಿದ್ದರು ಎಂದೆಲ್ಲಾ ವಿವರಿಸಿದರು. +ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್ ಬಾಬು ದ್ವಿಚಕ್ರವಾಹನದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದರು. ಚುನಾವಣೆಯ ದಿನ ಮಹಿಳೆಯನ್ನು ಮತ್ತೆ ಕರೆ ತಂದು ವಾಪಾಸ್ ಬಿಟ್ಟಿದ್ದಾರೆ. ಮಹಿಳೆ ತಮ್ಮ ಮತ ಚಲಾಯಿಸಿದ್ದಾರೆ. ಇದನ್ನು ಹೇಗೆ ಅಪಹರಣ ಪ್ರಕರಣ ಎಂದು ಪರಿಗಣಿಸಲು ಸಾಧ್ಯ ಎಂದು ನಾಗೇಶ್ ವಾದಿಸಿದ್ದರು. +ಜೀವಾವಧಿ ಶಿಕ್ಷೆಗೆ ಅರ್ಹವಾದ ಸಾಧ್ಯತೆಗಳಿದ್ದರೆ ಮಾತ್ರ ಜಾಮೀನು ನಿರಾಕರಿಸಬಹುದು. ಆದರೆ ಈ ಪ್ರಕರಣದಲ್ಲಿ ರೇವಣ್ಣನವರ ವಿರುದ್ಧ ಕೇಸು ದಾಖಲಿಸಲು ಸೂಕ್ತ ಸಾಕ್ಷ್ಯಗಳೇ ಇಲ್ಲ. ಮಹಿಳೆ ಪತ್ತೆಯಾದ ಬಳಿಕ ಆರು ದಿನಗಳಾದರೂ ಹೇಳಿಕೆ ದಾಖಲಿಸಿಲ್ಲ. ಸಾಕ್ಷ್ಯ ಸಂಗ್ರಹಿಸಲು ವಿಳಂಬ ಮಾಡಲಾಗಿದೆ. ಮಹಿಳೆ ಸ್ವಯಿಚ್ಚೆಯಿಂದ ಹೋಗಿದ್ದಾರೆ. ಹಾಗಾಗಿ ಪೊಲೀಸರು ರೇವಣ್ಣನವರ ವಿರುದ್ಧ ಐಪಿಸಿ 364 ಎ ಮತ್ತು 365 ಅಡಿ ಪ್ರಕರಣ ದಾಖಲಿಸಿರುವುದು ಕಾನೂನು ಬಾಹಿರ ಎಂದು ವಾದಿಸಿದರು. +ಸರ್ಕಾರದ ಪರವಾಗಿ ವಾದಿಸಿದ ವಿಶೇಷ ಅಭಿಯೋಜಕ ಜಯ್ನಾ ಕೊಠಾರಿ, ಮಹಿಳೆಯ ಅಪಹರಣದ ಹಿಂದೆ ಸಾಕ್ಷ್ಯ ನಾಶ ಪಡಿಸುವ ಉದ್ದೇಶ ಇದೆ. ಹಾಸನದಲ್ಲಿ ಸಿಕ್ಕ ಪೆನ್ಡ್ರೈವ್ ಪ್ರಕರಣದಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆ ಸಂತ್ರಸ್ಥೆಯಾಗಿದ್ದಾರೆ. ಹಾಗಾಗಿ ಆಕೆಯನ್ನು ಮರೆ ಮಾಚುವ ಮೂಲಕ ಸಾಕ್ಷ್ಯ ನಾಶ ಪಡಿಸುವ ದುರುದ್ದೇಶ ಹೊಂದಿದ್ದರು ಎಂದು ಪ್ರತಿವಾದಿಸಿದರು. ಎಸ್ಐಟಿ ಪರವಾಗಿ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಅಶೋಕ್‌ ನಾಯ್ಕ್‌ ಅವರು “ಎಚ್‌ ಡಿ ರೇವಣ್ಣ ಪ್ರಭಾವಶಾಲಿಯಾಗಿರುವ ಕಾರಣ, ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ. ಮಹಿಳೆಯರು ಹೇಳಿಕೆ ನೀಡುವಿದಿಲ್ಲ, ಹಾಗೂ ಈವರೆಗಿನ ವಿಚಾರಣೆಯಲ್ಲಿ ರೇವಣ್ಣ ಅಗತ್ಯ ಸಹಕಾರ ನೀಡಿಲ್ಲ ಎಂದು ಬಲವಾಗಿ ವಾದಿಸಿದರು. ವಾದಿಸಿದರು. \ No newline at end of file diff --git a/eesanje/url_46_147_10.txt b/eesanje/url_46_147_10.txt new file mode 100644 index 0000000000000000000000000000000000000000..72de6fa096641e1b011c00a105cc21e5546327ea --- /dev/null +++ b/eesanje/url_46_147_10.txt @@ -0,0 +1,7 @@ +ಕರ್ನಾಟಕದ ಗ್ಯಾರಂಟಿ ಸರ್ಕಾರ ಪತನಕ್ಕೆ ಮಹಾರಾಷ್ಟ್ರದಂತೆ`ನಾಥ್‌ ಆಪರೇಷನ್‌’..?! +ಬೆಂಗಳೂರು,ಮೇ 13-ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕದಲ್ಲೂ ನಾಥ್‌ ಆಪರೇಷನ್‌ ಮಾಡಿ ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಚರ್ಚೆಗಳು ನಡೆದಿವೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. +ಮಹಾರಾಷ್ಟ್ರದ ಸತಾರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಹೇಳಿಕೆ ನೀಡಿರುವ ಏಕನಾಥ ಶಿಂಧೆ ಕರ್ನಾಟಕ ಸರ್ಕಾರದ ಭವಿಷ್ಯ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಇತ್ತೀಚೆಗೆ ತಾವು ಕರ್ನಾಟಕದ ಸಭೆಯಲ್ಲಿ ಭಾಗವಹಿಸಲು ತೆರಳಿದ್ದೆ. ಅಲ್ಲಿ ಪಕ್ಷದ ನಾಯಕರು ನಾಥ್‌ ಆಪರೇಷನ್‌ ಮಾಡೋದಿದೆ ಎಂದು ಹೇಳಿದರು. ನಾಥ್‌ ಆಪರೇಷನ್‌ ಎಂದರೆ ಏನು ಎಂದು ನಾನು ಅವರಲ್ಲಿ ಕೇಳಿದೆ. +ಮಹಾರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ ಮಾದರಿಯಲ್ಲೇ ನಾಥ್‌ ಆಪರೇಷನ್‌ ಮಾಡಬೇಕಿದೆ. ನಿಮ ಅನುಭವ ಮತ್ತು ಸಹಕಾರ ನಮಗೆ ಅಗತ್ಯ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. ನಾನು ಅಗತ್ಯ ಸಂದರ್ಭದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿದ್ದೇನೆ ಎಂದು ಶಿಂಧೆ ತಿಳಿಸಿದ್ದಾರೆ.ಇದು ಬಿಜೆಪಿಯವರು ಕರ್ನಾಟಕದಲ್ಲಿ ತೆರೆಮರೆಯಲ್ಲಿ ಆಪರೇಷನ್‌ ಕಮಲಕ್ಕೆ ವೇದಿಕೆ ಸಜ್ಜುಗೊಳಿಸಿರುವುದನ್ನು ಮತ್ತೊಮೆ ಸಾಬೀತುಪಡಿಸಿದೆ. +ಇತ್ತೀಚೆಗೆ ಸರ್ಕಾರದ ಹಲವು ಸಚಿವರು ಬಿಜೆಪಿಯ ಹುನ್ನಾರಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ನಿನ್ನೆಯಷ್ಟೇ ಹೇಳಿಕೆ ನೀಡಿ, ಮಹಾರಾಷ್ಟ್ರದಲ್ಲಿ ಶಿವಸೇನೆಯ ಮೂರನೇ ಎರಡರಷ್ಟು ಶಾಸಕರನ್ನು ಬಿಜೆಪಿಯವರು ಸೆಳೆದುಕೊಂಡಿದ್ದರು. ಹೀಗಾಗಿ ಅಲ್ಲಿ ಅವರು ಯಶಸ್ವಿಯಾಗಿದ್ದಾರೆ. +ಕರ್ನಾಟಕದಲ್ಲಿ ಆ ಪರಿಸ್ಥಿತಿ ಇಲ್ಲ. ಇಲ್ಲಿ ನಮ್ಮ ನಾಲ್ಕು ಮಂದಿ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ ಬಿಜೆಪಿ ಮತ್ತು ಜೆಡಿಎಸ್‌‍ನಿಂದ ಹಲವು ಮಂದಿ ಕಾಂಗ್ರೆಸ್‌‍ನತ್ತ ಬರಲು ತಯಾರಾಗಿದ್ದಾರೆ. ಹೀಗಾಗಿ ಆಪರೇಷನ್‌ ಕಮಲ ಯಶಸ್ವಿಯಾಗುವುದಿಲ್ಲ, ಸರ್ಕಾರ ಪತನಗೊಳ್ಳಲು ಸಾಧ್ಯವಿಲ್ಲ ಎಂದಿದ್ದರು. +ಅದರ ಹೊರತಾಗಿಯೂ ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ಪತನಗೊಳ್ಳುತ್ತದೆ ಎಂದು ಹೇಳುತ್ತಲೇ ಬಂದಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳಿಗೆ ಅಧಿಕೃತ ಮುದ್ರೆ ಎಂಬಂತೆ ಏಕನಾಥ ಶಿಂಧೆ ಹೇಳಿಕೆ ಸ್ಫೋಟಕ ತಿರುವು ನೀಡಿದೆ. \ No newline at end of file diff --git a/eesanje/url_46_147_11.txt b/eesanje/url_46_147_11.txt new file mode 100644 index 0000000000000000000000000000000000000000..55b887a6f547ee36dadcb2fab477f685488a6e5d --- /dev/null +++ b/eesanje/url_46_147_11.txt @@ -0,0 +1,8 @@ +ಅಪಹರಣ ಪ್ರಕರಣ ; ಸಂತ್ರಸ್ತೆ ಹೇಳಿಕೆಗೆ ಪ್ರತಿಕ್ರಿಯಿಸಲು ಗೃಹಸಚಿವ ಪರಮೇಶ್ವರ್‌ ನಕಾರ +ಬೆಂಗಳೂರು,ಮೇ 13-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನಕ್ಕೆ ಕಾರಣವಾಗಿರುವ ಕಿಡ್ನ್ಯಾಪ್‌ ಪ್ರಕರಣದಲ್ಲಿ ಸಂತ್ರಸ್ತೆ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ಗೃಹಸಚಿವ ಡಾ.ಜಿ.ಪರಮೇಶ್ವರ್‌ ನಿರಾಕರಿಸಿದ್ದಾರೆ. +ನಗರದಲ್ಲಿಂದು ಮಾಧ್ಯಮದವರು ಎಂದಿನಂತೆ ಗೃಹಸಚಿವರ ಹೇಳಿಕೆ ಪಡೆಯಲು ಪ್ರಯತ್ನಿಸಿದರು. ಎಸ್‌‍ಐಟಿ ಎನ್ನುತ್ತಿದ್ದಂತೆ ಪರಮೇಶ್ವರ್‌ ಮುಖ ತಿರುಗಿಸಿ ಪ್ರತಿಕ್ರಿಯಿಸಲು ನಿರಾಕರಿಸುವ ಮೂಲಕ ಕಾರು ಹತ್ತಿದರು. ಕಿಡ್ನ್ಯಾಪ್‌ ಪ್ರಕರಣದ ಸಂತ್ರಸ್ತೆ ನೀಡಿರುವ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ ಎಸ್‌‍ಐಟಿಯವರನ್ನು ಕೇಳಬೇಕು ಎಂದಷ್ಟೇ ಹೇಳಿದರು. ಎಸ್‌‍ಐಟಿ ತನಿಖೆ ಬಗ್ಗೆ ಪ್ರತಿದಿನ ವಿವರಣೆ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸ್ಥಳದಿಂದ ತೆರಳಿದರು. +ಉಲ್ಟಾ ಹೊಡೆದ ಹೇಳಿಕೆ :ಹಾಸನದಲ್ಲಿ ಪತ್ತೆಯಾದ ಪೆನ್‌ಡ್ರೈವ್‌ಗಳಲ್ಲಿದ್ದ ಅಶ್ಲೀಲ ವಿಡಿಯೋಗಳು ಬಹಿರಂಗಗೊಂಡ ನಂತರ ಸಾಕಷ್ಟು ಬೆಳವಣಿಗೆಗಳಾಗಿದ್ದು, ವಿಡಿಯೋದಲ್ಲಿ ಇದ್ದಾರೆ ಎಂದು ಹೇಳಲಾದ ಸಂತ್ರಸ್ತೆಯೊಬ್ಬರು ಅಪಹರಣವಾಗಿದ್ದಾರೆ ಎನ್ನಲಾಗಿತ್ತು. ಆಕೆಯ ಪುತ್ರ ಮೈಸೂರಿನ ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ದೂರು ನೀಡಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಸಂತೋಷ್‌ ಬಾಬು ವಿರುದ್ಧ ದೂರಿದ್ದರು. +ಈ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಹಾಗೂ ಆವರ ಆಪ್ತ ಸಂತೋಷ್‌ ಬಾಬು ಅವರನ್ನು ಬಂಧಿಸಲಾಗಿತ್ತು. ಇದೀಗ ಸಂತ್ರಸ್ತ ಮಹಿಳೆ ಅನಾಮಿಕ ಜಾಗದಿಂದ ವಿಡಿಯೋ ಸಂದೇಶದ ಮೂಲಕ ತಮ ಹೇಳಿಕೆ ನೀಡಿದ್ದಾರೆ. ಅದರಲ್ಲಿ ತಮನ್ನು ಯಾರೂ ಕಿಡ್ನ್ಯಾಪ್‌ ಮಾಡಿಲ್ಲ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ. +ನಾನು ಸಂಬಂಧಿಕರ ಮನೆಗೆ ಬಂದಿದ್ದೇನೆ. ಸುರಕ್ಷಿತವಾಗಿ ಹಾಗೂ ಕ್ಷೇಮವಾಗಿದ್ದೇನೆ. ತಮ ಪುತ್ರ ನಾನು ಕಾಣದೇ ಇರುವುದಕ್ಕೆ ಗಾಬರಿಗೊಂಡು ದೂರು ನೀಡಿದ್ದಾನೆ. ನನಗೆ ಯಾರಿಂದಲೂ ತೊಂದರೆಯಾಗಿಲ್ಲ. ಇಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಸಂಬಂಧಿಕರ ಮನೆಯಲ್ಲಿ ಟಿವಿ ನೋಡಿದಾಗ ರೇವಣ್ಣ ಅವರಿಗೆ ತೊಂದರೆಯಾಗಿರುವುದು ತಿಳಿದು ಬಂತು. +ನನಗೆ ರೇವಣ್ಣ, ಭವಾನಿ ಅಕ್ಕ ಅಥವಾ ಸಂತೋಷ್‌ ಬಾಬು ಅವರಿಂದಾಗಲಿ ಯಾವುದೇ ತೊಂದರೆಯಾಗಿಲ್ಲ, ಯಾರೂ ನನ್ನನ್ನು ಅಪಹರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸ್ವಲ್ಪ ದಿನದ ಬಳಿಕ ಬರುತ್ತೇನೆ, ಎಲ್ಲಿ ಬೇಕಾದರೂ ಹೇಳಿಕೆ ನೀಡುತ್ತೇನೆ, ನನಗೂ ಹಾಗೂ ವಿವಾದಿತ ವಿಡಿಯೋಗೂ ಸಂಬಂಧವಿಲ್ಲ. ಈ ರೀತಿ ಏಕೆಲ್ಲಾ ಪ್ರಚಾರ ನಡೆಯುತ್ತಿದೆ ಎಂದು ನನಗೆ ಗೊತ್ತಿಲ್ಲ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ನಾವು ಕೂಲಿ ಮಾಡಿಕೊಂಡು ಬದುಕುವ ಜನ. ಪೊಲೀಸರು ಅನಗತ್ಯವಾಗಿ ನಮ ಮನೆಯ ಬಳಿ ಹೋಗಿ ಕಿರುಕುಳ ನೀಡಬಾರದು. ಮನೆಯಲ್ಲಿ ಚಿಕ್ಕ ಮಕ್ಕಳಿದ್ದಾರೆ, ಗಾಬರಿಗೊಳ್ಳುತ್ತಿದ್ದಾರೆ, ಅಕ್ಕಪಕ್ಕದವರು ಅನುಮಾನದಿಂದ ನೋಡುವಂತಾಗುತ್ತಿದೆ ಎಂದು ಮಹಿಳೆ ಅಸಹನೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_147_12.txt b/eesanje/url_46_147_12.txt new file mode 100644 index 0000000000000000000000000000000000000000..7b81d70bd28b6b5570a5fc029b7cda299969f7b2 --- /dev/null +++ b/eesanje/url_46_147_12.txt @@ -0,0 +1,5 @@ +ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರಆರೋಗ್ಯ ಸ್ಥಿರ +ಬೆಂಗಳೂರು,ಮೇ 13-ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಬಿಜೆಪಿ ಪಕ್ಷದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಡಾ.ಸತ್ಯನಾರಾಯಣ ಅವರ ನೇತೃತ್ವದ ಹಿರಿಯ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. +ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದ ಬಗ್ಗೆ ಹಿರಿಯ ವೈದ್ಯರ ತಂಡ ತೀವ್ರ ನಿಗಾ ವಹಿಸಿದ್ದು, ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ದಿನದಿಂದ ದಿನಕ್ಕೆ ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ ಎಂದು ಮಣಿಪಾಲ್‌ ಆಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಿದೆ. +ಕಳೆದ ವಾರ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಕೊಂಚ ಏರುಪೇರಾದ ಕಾರಣ ಎಸ್‌.ಎಂ.ಕೃಷ್ಣ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. \ No newline at end of file diff --git a/eesanje/url_46_147_2.txt b/eesanje/url_46_147_2.txt new file mode 100644 index 0000000000000000000000000000000000000000..fe0ff70d3666dff859bf093854078500ee681a66 --- /dev/null +++ b/eesanje/url_46_147_2.txt @@ -0,0 +1,7 @@ +ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ, ಬಿಜೆಪಿಯವರು ಭ್ರಮೆಯಲ್ಲಿದ್ದಾರೆ : ಸಿಎಂ +ಬೆಂಗಳೂರು, ಮೇ 13-ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೃಢ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ಭ್ರಮೆಯಲ್ಲಿದ್ದು, ಹಗಲುಗನಸು ಕಾಣುತ್ತಿದ್ದಾರೆ. ಆಪರೇಷನ್‌ ಕಮಲ ಮಾಡಿ ಮಹಾರಾಷ್ಟ್ರದ ಮಾದರಿಯಲ್ಲಿ ಕರ್ನಾಟಕ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ ಎಂದರು. +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೋಲು ಕಾಣುತ್ತಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿನ ಏಕನಾಥ ಶಿಂಧೆ ಅವರ ಸರ್ಕಾರವೇ ಪತನಗೊಳ್ಳಲಿದೆ. ಕೇಂದ್ರದಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ. ಕಾಂಗ್ರೆಸ್‌ನವರು ಪ್ರಧಾನಿಯಾಗಲಿದ್ದಾರೆ. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ ಎಂದು ತಿಳಿಸಿದರು. +ನಮ್ಮ ಶಾಸಕರು ಮಾರಾಟಗೊಳ್ಳಲು ತಯಾರಿಲ್ಲ . ಬಿಜೆಪಿಯವರು ಕಳೆದ ಒಂದು ವರ್ಷದಿಂದಲೂ ಸರ್ಕಾರವನ್ನು ಪತನಗೊಳಿಸಲು ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಯಶಸ್ವಿಯಾಗಿಲ್ಲ. ಪ್ರತಿ ಬಾರಿಯೂ ವಿಫಲವಾಗುತ್ತರೇ ಇದ್ದಾರೆ. ಪ್ರಯತ್ನ ಮಾಡುವುದು, ವಿಫಲವಾಗುವುದು ಅವರ ಚಾಳಿಯಾಗಿದೆ. ಹೀಗಾಗಿ ಅವರು ಮತ್ತೊಮ್ಮೆ ಪ್ರಯತ್ನಿಸುವುದಿಲ್ಲ ಎಂಬ ನಿರೀಕ್ಷೆಯಿದೆ ಎಂದರು. +ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯದಿಂದಾಗಿ ಸರ್ಕಾರ ಪತನಗೊಳ್ಳುವ ಮಾತನಾಡುತ್ತಿದ್ದಾರೆ. ಖುದ್ದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸೋಲಿನ ಭಯ ಎದುರಾಗಿದ್ದು, ಮಾತು ಹಿಡಿತ ತಪ್ಪಿದೆ ಎಂದು ಸಿದ್ದರಾಮಯ್ಯ ಹೇಳಿದರು. +ಡಿ.ಕೆ.ಶಿವಕುಮಾರ್‌ ಮಾತನಾಡಿ, ಏಕನಾಥ್‌ ಶಿಂಧೆ ಅವರ ಸರ್ಕಾರ ಉಳಿಯುವುದೇ ಅನುಮಾನವಾಗಿದೆ. ಶಿವಸೇನೆ ಮತ್ತು ಎನ್‌ಸಿಪಿಯಿಂದ ವಲಸೆ ಹೋದವರು ಈಗ ಮಾತೃಪಕ್ಷದತ್ತ ಮರಳುತ್ತಿದ್ದಾರೆ. ಪ್ರಧಾನಿಯವರು ಸೋಲಿನ ಆತಂಕದಲ್ಲಿ ಉದ್ಧವ್‌ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_147_3.txt b/eesanje/url_46_147_3.txt new file mode 100644 index 0000000000000000000000000000000000000000..9038b33cdd1dae2c5d637fcf8b142615ad5f9103 --- /dev/null +++ b/eesanje/url_46_147_3.txt @@ -0,0 +1,3 @@ +ನಾಗರಹೊಳೆಯಲ್ಲಿ ಅರಣ್ಯ ಸಚಿವ ಖಂಡ್ರೆ ಸಫಾರಿ +ಮೈಸೂರು, ಮೇ 13-ಅರಣ್ಯ ಸಚಿವ ಈಶ್ವರ್‌ಖಂಡ್ರೆ ನಾಗರಹೊಳೆ ಪ್ರದೇಶದಲ್ಲಿ ಸಫಾರಿ ನಡೆಸುತ್ತಿದ್ದಾಗ ಹುಲಿಯ ದರ್ಶನವಾಗಿದೆ.ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಸಚಿವರು ಕರ್ತವ್ಯಕ್ಕೆ ಮರಳಿದ್ದು, ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಮೇವು ಮತ್ತು ನೀರಿನ ಲಭ್ಯತೆಯನ್ನು ಪರಿಶೀಲಿಸಲು ಖುದ್ದು ಸಫಾರಿ ನಡೆಸಿದರು. +ಹಾದಿ ಮಧ್ಯೆ ಸಚಿವರಿಗೆ ಹುಲಿಯ ದರ್ಶನವಾಗಿದೆ. ಹುಲಿ ದಾರಿಯಲ್ಲಿ ಮಲಗಿದ್ದು, ಸಚಿವರ ವಾಹನವನ್ನು ಕಂಡು ಎದ್ದು ಜೀಪಿನತ್ತ ಬರಲಾರಂಭಿಸಿದೆ. ಅನಂತರ ಇದ್ದಕ್ಕಿದ್ದಂತೆ ಹಾದಿ ಬದಲಿಸಿ ಅರಣ್ಯದತ್ತ ತೆರಳಿದೆ. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. \ No newline at end of file diff --git a/eesanje/url_46_147_4.txt b/eesanje/url_46_147_4.txt new file mode 100644 index 0000000000000000000000000000000000000000..2cdb5d28fd852e45329a63580245d718608186ca --- /dev/null +++ b/eesanje/url_46_147_4.txt @@ -0,0 +1,7 @@ +ವಿಧಾನಪರಿಷತ್‌ ಚುನಾವಣೆ : ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ರಾಮೋಜಿಗೌಡ ಬಿ.ಡಿ.ಶ್ರೀನಿವಾಸ್‌ ನಾಮಪತ್ರ ಸಲ್ಲಿಕೆ +ಬೆಂಗಳೂರು, ಮೇ 13-ಶಿಕ್ಷಕರು ಹಾಗೂ ಪದವೀಧರರ 6 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಬೆಂಗಳೂರು ನಗರ ಪದವೀಧರ ಕ್ಷೇತ್ರದ ರಾಮೋಜಿಗೌಡ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿ.ಡಿ.ಶ್ರೀನಿವಾಸ್‌ ಅವರು ಇಂದು ನಾಮಪತ್ರ ಸಲ್ಲಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ, ಮಧು ಬಂಗಾರಪ್ಪ, ಸಂಸದ ಡಿ.ಕೆ.ಸುರೇಶ್‌, ವಿಧಾನಪರಿಷತ್‌ ಸದಸ್ಯರಾದ ಪುಟ್ಟಣ್ಣ, ನಸೀರ್‌ ಅಹಮ್ಮದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. +ಇದಕ್ಕೂ ಮುನ್ನ ರಾಮೋಜಿಗೌಡ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ನಂತರ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿ ಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜೊತೆಯಲ್ಲಿ ನಾಮಪತ್ರ ಸಲ್ಲಿಸಿದರು. +ಬಳಿಕ ಹೊಂಬೇಗೌಡ ನಗರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಯವರು, ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. 6 ತಿಂಗಳ ಮೊದಲೇ ನಾವು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಒಂದು ಸುತ್ತು ಅವರು ಮತದಾರರನ್ನು ಸಂಪರ್ಕಿಸಿದ್ದಾರೆ. ಶಿಕ್ಷಕರು ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಹೇಳಿದರು. +ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ನಮ್ಮ ಪಕ್ಷದ ಇಬ್ಬರು ಅಭ್ಯರ್ಥಿಗಳು ಆಯಾ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಅರಿವು ಹೊಂದಿದ್ದಾರೆ. ಹಿಂದೆ ಶಿಕ್ಷಕರಿಗಾಗಲೀ, ಪದವೀಧರರಿಗಾಗಲೀ ಯಾವುದೇ ಅನುಕೂಲ ಮಾಡಿಕೊಟ್ಟಿರಲಿಲ್ಲ. ನಮ್ಮ ಸರ್ಕಾರ ಪದವೀಧರರಿಗೆ ಸಹಾಯ ಮಾಡಿದೆ. ಎನ್‌ಇಪಿ ಪರಿಷ್ಕರಣೆ, ಎಸ್‌ಇಪಿ ಜಾರಿ ಸೇರಿದಂತೆ ಶಿಕ್ಷಕರಿಗೆ ಹಲವು ವಿಚಾರಗಳನ್ನು ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ತಿಳಿಸಿದೆ ಎಂದು ಹೇಳಿದರು. +ಶಿಕ್ಷಕರಿಗೆ ಮತ್ತು ಪದವೀಧರರಿಗೆ ಅನುಕೂಲ ಮಾಡಿಕೊಡುವುದು ತಮ್ಮ ಜವಾಬ್ದಾರಿ. ನಮ್ಮ ಪಕ್ಷಕ್ಕೆ ಮತ ಹಾಕುವುದು ಅವರ ಕರ್ತವ್ಯ. ಅವರಿಗೆ ಕೆಲಸ ಆಗಬೇಕಿದೆ, ನಮಗೆ ಮತ ಬೇಕಿದೆ ಎಂದು ಹೇಳಿದರು.ಈ ಹಿಂದಿನ ಚುನಾವಣೆಯಲ್ಲಿ ಪ್ರಕಾಶ್‌ ಹುಕ್ಕೇರಿ ಮತ್ತು ಮಧು ಮಾದೇಗೌಡರು ಗೆದ್ದ ಮಾದರಿಯಲ್ಲಿ 6 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು. \ No newline at end of file diff --git a/eesanje/url_46_147_5.txt b/eesanje/url_46_147_5.txt new file mode 100644 index 0000000000000000000000000000000000000000..7398c7c4e37aa34b0467817c15384d614e3ae97c --- /dev/null +++ b/eesanje/url_46_147_5.txt @@ -0,0 +1,6 @@ +ಬಿಜೆಪಿಯದು ಸರ್ಕಾರ ಬೀಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ : ರಾಮಲಿಂಗಾರೆಡ್ಡಿ +ಬೆಂಗಳೂರು, ಮೇ 13-ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿಯವರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಎರಡೂ ಸೇರಿದರೆ 84 ಶಾಸಕರಾಗುತ್ತಾರೆ. ನಾವು 137 ಶಾಸಕರನ್ನು ಹೊಂದಿದ್ದೇವೆ. ನಮ್ಮ ಸರ್ಕಾರ ಪತನವಾಗಬೇಕಾದರೆ 55 ಕ್ಕೂ ಹೆಚ್ಚು ಶಾಸಕರು ರಾಜೀನಾಮೆ ಕೊಡಬೇಕು. ನಮ್ಮ ಸಂಖ್ಯಾಬಲ 83 ರಷ್ಟಾಗಬೇಕು. ಆಗ ಸರ್ಕಾರ ಪತನವಾಗಲು ಸಾಧ್ಯ. ಇಲ್ಲದೇ ಹೋದರೆ ಬಿಜೆಪಿಯವರು ಹೇಗೆ ಹೊಸ ಸರ್ಕಾರ ರಚನೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು. +ಲೋಕಸಭಾ ಚುನಾವಣೆಯಲ್ಲಿ 28 ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಜನರ ನಾಡಿಮಿಡಿತ ನೋಡಿದರೆ ಅವರು ಏಕ ಅಂಕಿಯನ್ನು ದಾಟುವುದೂ ಕಷ್ಟಸಾಧ್ಯವಾಗಿದೆ. ಕಾಂಗ್ರೆಸ್‌ನ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ಹತಾಶರಾಗಿರುವ ಬಿಜೆಪಿಯವರು ಇಂತಹ ಅಸಂಬದ್ಧವಾದ ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದರು. +ಲೋಕಸಭಾ ಚುನಾವಣೆಗೆ 10ಕ್ಕೂ ಹೆಚ್ಚು ಬಿಜೆಪಿ ಸಂಸದರಿಗೆ ಗೋಬ್ಯಾಕ್‌ ಎಂಬ ಘೋಷಣೆ ಬಿಸಿ ತಟ್ಟಿತ್ತು. ಮೊದಲು ಅವರು ತಮ್ಮ ಮನೆಯನ್ನು ಸರಿಯಾಗಿ ನೋಡಿಕೊಳ್ಳಲಿ. ಅನಂತರ ನಮ್ಮ ಪಕ್ಷದ ಬಗ್ಗೆ ಚರ್ಚೆ ಮಾಡಲಿ ಎಂದು ಹೇಳಿದರು. ಬಿಜೆಪಿಯಲ್ಲೀಗ ಮತ ತಂದುಕೊಡುವಂತಹ ನಾಯಕತ್ವ ಯಾರದಿದೆ? ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿಗಾಗಿ ಮತ ನೀಡಿ ಎಂದು ಕೇಳಿಕೊಂಡರು. ಅವರ ಯೋಗ್ಯತೆಗೆ ಬಿಜೆಪಿ ಹೆಸರಿನಲ್ಲಾಗಲೀ ಅಥವಾ ಅಭ್ಯರ್ಥಿಗಳ ಹೆಸರಿನಲ್ಲಾಗಲೀ ಮತ ಕೇಳಲಿಲ್ಲ ಎಂದು ಕಿಡಿಕಾರಿದರು. +ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿಕೆಗೆ ಮಹತ್ವ ನೀಡುವ ಅಗತ್ಯವಿಲ್ಲ. ಒಂದು ವೇಳೆ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿ ಕಾರಕ್ಕೆ ಬಂದರೆ ಏಕನಾಥ ಶಿಂಧೆ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ. ಮೊದಲು ಅವರು ತಮ್ಮ ಸರ್ಕಾರವನ್ನು ಉಳಿಸಿಕೊಳ್ಳಲಿ ಎಂದು ಹೇಳಿದರು. \ No newline at end of file diff --git a/eesanje/url_46_147_6.txt b/eesanje/url_46_147_6.txt new file mode 100644 index 0000000000000000000000000000000000000000..8b7ff93aae5533e1089e1108de4c57e7d2831cfc --- /dev/null +++ b/eesanje/url_46_147_6.txt @@ -0,0 +1,6 @@ +ನವೀನ್‌ ಗೌಡ ನನಗೆ ಯಾವುದೇ ಪೆನ್‌ಡ್ರೈವ್‌ ಕೊಟ್ಟಿಲ್ಲ : ಎ.ಮಂಜು +ಬೆಂಗಳೂರು, ಮೇ 13-ನವೀನ್‌ ಗೌಡ ಎಂಬ ವ್ಯಕ್ತಿಯು ನನಗೆ ಪರಿಚಯವಿಲ್ಲ. ನನಗೆ ಆತ ಪೆನ್‌ ಡ್ರೈವ್‌ ಕೊಟ್ಟಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂಬ ಉದ್ದೇಶದಿಂದ ಎಸ್‌ಐಟಿಗೆ ದೂರು ನೀಡಿರುವುದಾಗಿ ಶಾಸಕ ಎ.ಮಂಜು ಹೇಳಿದ್ದಾರೆ. ಎಸ್‌ಐಟಿಗೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್‌ ಅವ್ರ ಫೇಸ್‌ ಬುಕ್‌ನಲ್ಲಿ ಏ.20 ರಂದು ಪೆನ್‌ಡ್ರೈವ್‌ ಸಿಗುತ್ತದೆ. 21ರಂದು ಕಲ್ಯಾಣ ಮಂಟಪದಲ್ಲಿ ಸಿಗುತ್ತದೆ ಅಂತಾ ಹೇಳಿದ್ದರು. +ಇವ್ರಿಗೆ ರಸ್ತೆಯಲ್ಲೇ ಪೆನ್‌ಡ್ರೈವ್‌ ಸಿಕ್ಕಿರಬಹುದು. ಆದರೆ, ಅದನ್ನು ನನಗೆ ಯಾಕೆ ಕೊಡಬೇಕು? ಆ ಮನಸ್ಸು ಅವರಿಗೆ ಯಾಕೆ ಬಂದಿದೆ ಎಂದು ಪ್ರಶ್ನಿಸಿದರು. ನನಗೆ ಆತನ ಬಗ್ಗೆ ಪರಿಚಯವಿಲ್ಲ. ಆತ ಎಸ್‌ಐಟಿ ತನಿಖೆ ದಿಕ್ಕು ತಪ್ಪಿಸೋಕೆ ಈ ರೀತಿ ಮಾಡಿರಬಹುದು.ಇದರ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಇದರ ಹಿಂದೆ ಯಾರಿದ್ದಾರೆ, ಏನು ಅಂತ ನಾನು ಹೇಳಲ್ಲ ಎಂದರು. +ಆತ ಯಾವುದೇ ರೀತಿಯಿಂದಲೂ ನನಗೆ ಪರಿಚಯ ಇಲ್ಲ.ನನ್ನನ್ನು ಭೇಟಿಯಾಗಿದ್ದು, ಪೆನ್‌ಡ್ರೈವ್‌ ಕೊಟ್ಟಿದ್ದು ಸುಳ್ಳು. ಇದ್ರ ಬಗ್ಗೆ ತನಿಖೆ ಆಗ್ಲಿ ಅಂತಲೇ ನಾನು ದೂರು ಕೊಟ್ಟಿದ್ದೇನೆ. ಮಾಜಿ ಪ್ರಧಾನಿ ದೇವೇಗೌಡರ ಜೆಡಿಎಸ್‌ ಪಕ್ಷದಿಂದ ಗೆದ್ದಿದ್ದೇನೆ. ನನ್ನ ಅವರ ಕುಟುಂಬದಿಂದ ದೂರ ಮಾಡಬೇಕು ಎಂಬ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ. ಏ.21 ರಂದು ನನಗೆ ಪೆನ್‌ಡ್ರೈವ್‌ ಕೊಟ್ಟಿರುವುದಾದರೆ, ಏ.29ರಂದು ಕೊಟ್ಟ ಅಫಿಡವಿಟ್‌ನಲ್ಲಿ ಯಾಕೆ ಆ ರೀತಿ ಆಗಿದೆ ಎಂದು ಪ್ರಶ್ನಿಸಿದರು. +ಫೇಸ್‌ಬುಕ್‌ ಅಕೌಂಟ್‌ ಯಾಕೆ ಇವತ್ತು ಹ್ಯಾಕ್‌ ಆಗಿದೆ:ಇದರ ಸತ್ಯಾಸತ್ಯತೆ ಹೊರಬರಬೇಕು.ನವೀನ್‌ ಅವರನ್ನು ಎಸ್‌ಐಟಿ ಬೇಗ ಬಂಧಿಸಬೇಕು. ಆಗ ಮಾತ್ರ ಇದರ ಸತ್ಯಾಸತ್ಯತೆ ಹೊರ ಬರುತ್ತದೆ ಎಂದು ಅವರು ಹೇಳಿದರು.ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ನನಗೆ ಮಾಹಿತಿ ಇಲ್ಲ. ನಾನು ಘಟನೆ ಆದಮೇಲೆ ದೇವೇಗೌಡರನ್ನು ಭೇಟಿಯಾಗಿ ಧೈರ್ಯ ತುಂಬಿದ್ದೇನೆ. ಶಾಸಕ ರೇವಣ್ಣ ಅವರಿಗೂ ಭೇಟಿಯಾಗಿ ಧೈರ್ಯ ಹೇಳಿದ್ದೇನೆ. ಆ ಮಹಿಳೆ ಕೂಡ ದೂರು ಕೊಟ್ಟಿಲ್ಲ ಅಂತಾ ಹೇಳಿದಾರೆ. ಕಾದು ನೋಡೋಣ ಏನಾಗುತ್ತದೆ ಎಂದರು. +ಈ ರೀತಿಯ ಘಟನೆಗಳು ಪ್ರಪಂಚದಲ್ಲಿ ಎಲ್ಲೂ ಆಗಬಾರದು. ಇದರಲ್ಲಿ ರಾಜಕೀಯ ಇದೆ. ಇದರ ಬಗ್ಗೆ ನನ್ನ ಆಕ್ಷೇಪವಿದೆ. ಯಾರು ಇದನ್ನು ಪ್ರಚಾರ ಮಾಡುತ್ತಿದ್ದಾರೆ ಅವರಿಗೂ ಹೆಂಡತಿ, ಮಕ್ಕಳು, ತಾಯಂದರು ಇರುತ್ತಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು. \ No newline at end of file diff --git a/eesanje/url_46_147_7.txt b/eesanje/url_46_147_7.txt new file mode 100644 index 0000000000000000000000000000000000000000..0a6554e2348ec8c8e0a7b896e89eb0748c09494c --- /dev/null +++ b/eesanje/url_46_147_7.txt @@ -0,0 +1,4 @@ +ಸಂಸದ ಪ್ರಜ್ವಲ್‌ ರೇವಣ್ಣ ನಿವಾಸದಲ್ಲಿ ಎಫ್‌ಎಸ್‌‍ಎಲ್‌ ತಂಡ ಪರಿಶೀಲನೆ +ಹಾಸನ, ಮೇ 13-ಸಂಸದ ಪ್ರಜ್ವಲ್‌ ರೇವಣ್ಣ ಅವರ ಆರ್‌ಸಿ ರಸ್ತೆಯಲ್ಲಿರುವ ನಿವಾಸಕ್ಕೆ ಇಂದು ಬೆಳಗ್ಗೆ ಎಫ್‌ಎಸ್‌‍ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಜ್ವಲ್‌ ವಿರುದ್ಧ ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಕ್ಷ್ಯ ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸಂಸದರ ನಿವಾಸಕ್ಕೆ ಆಗಮಿಸಿದ್ದಾರೆ. +ಸ್ಥಳೀಯ ಪೊಲೀಸರ ಸಮುಖದಲ್ಲಿ ಎಫ್‌ಎಸ್‌‍ಎಲ್‌ ಅಧಿಕಾರಿಗಳು ಸಂಸದರ ನಿವಾಸದ ಬೀಗ ತೆಗೆದು ಒಳಗೆ ಹೋಗಿ ಪ್ರತಿ ಕೊಠಡಿಯನ್ನು ಪರಿಶೀಲಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಸಂಸದರ ನಿವಾಸದ ಬಳಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿತ್ತು. +ಈಗಾಗಲೇ ಎಸ್‌‍ಐಟಿ ಅಧಿಕಾರಿಗಳ ತಂಡ ಸಂತ್ರಸ್ತೆಯನ್ನು ಸಂಸದರ ನಿವಾಸಕ್ಕೆ ಕರೆತಂದು ಮಹಜರು ನಡೆಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ತೆರಳಿದ್ದಾರೆ. ಸಂಸದ ಪ್ರಜ್ವಲ್‌ ಅವರ ಬಳಿ ಹಾಸ್ಟೆಲ್‌ ಪ್ರವೇಶಕ್ಕಾಗಿ ಸಹಾಯ ಕೇಳಿಕೊಂಡು ಹೋದಾಗ ಎಂಪಿ ಕ್ವಾರ್ಟಸ್‌‍ನಲ್ಲಿ ನನ್ನ ಮೇಲೆ ಅತ್ಯಾಚಾರ ವೆಸಗಿದ್ದಾರೆಂದು ಸಿಐಡಿಗೆ 44 ವರ್ಷದ ಮಹಿಳೆ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಇಂದು ಎಫ್‌ಸ್‌‍ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. \ No newline at end of file diff --git a/eesanje/url_46_147_8.txt b/eesanje/url_46_147_8.txt new file mode 100644 index 0000000000000000000000000000000000000000..b5910fe7f05967eeea24f58af2600d8870edb704 --- /dev/null +++ b/eesanje/url_46_147_8.txt @@ -0,0 +1,7 @@ +ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕರಾದ ಸೋಮಶೇಖರ್‌, ಹೆಬ್ಬಾರ್‌ +ಬೆಂಗಳೂರು,ಮೇ 13-ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌‍ನ ಜೊತೆ ಆತೀಯ ಸಖ್ಯ ಹೊಂದಿರುವ ಬಿಜೆಪಿ ಶಾಸಕರು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರನ್ನು ಭೇಟಿ ಮಾಡಿ ಗಮನ ಸೆಳೆದರು. +ಯಶವಂತಪುರದ ಕ್ಷೇತ್ರದ ಶಾಸಕ ಎಸ್‌‍.ಟಿ.ಸೋಮಶೇಖರ್‌, ಯಲ್ಲಾಪುರ ಕ್ಷೇತ್ರದ ಅರೆಬೈಲು ಶಿವರಾಂ ಹೆಬ್ಬಾರ್‌ ಇಬ್ಬರೂ ಇಂದು ಬೆಳಿಗ್ಗೆ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್‌ರವರ ಮನೆಗೆ ಭೇಟಿ ನೀಡಿದರು. ಈ ವೇಳೆ ರಾಜಕೀಯವಾಗಿ ಮಹತ್ವದ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ. +ಆಪರೇಷನ್‌ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರಿದ್ದ 17 ಶಾಸಕರ ಪೈಕಿ ಪುನರ್‌ ಆಯ್ಕೆಯಾಗಿರುವ ಇನ್ನೂ ಕೆಲವರು ಕಾಂಗ್ರೆಸ್‌‍ನತ್ತ ಮರಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. +ಈಗಾಗಲೇ ಎಸ್‌‍.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ ಕಾಂಗ್ರೆಸ್‌‍ನ ಜೊತೆ ಆತೀಯ ಸಂಬಂಧ ರೂಢಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ತಟಸ್ಥವಾಗಿ ಉಳಿದಿದ್ದರು. ಇನ್ನೂ ಕೆಲವು ಭಾಗಗಳಲ್ಲಿ ಕಾಂಗ್ರೆಸ್‌‍ ಪರವಾಗಿ ಪ್ರಚಾರ ಮಾಡಿದರು ಎಂಬ ಮಾಹಿತಿಗಳು ಇವೆ. ಚುನಾವಣೆಯ ಬಳಿಕ ಈ ಇಬ್ಬರೂ ಶಾಸಕರು ಡಿ.ಕೆ.ಶಿವಕುಮಾರ್‌ರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. +ಲಭ್ಯವಿರುವ ಈವರೆಗಿನ ಮಾಹಿತಿ ಪ್ರಕಾರ, ಎಸ್‌‍.ಟಿ.ಸೋಮಶೇಖರ್‌ ಮತ್ತು ಶಿವರಾಂ ಹೆಬ್ಬಾರ್‌ರವರು ಬಿಜೆಪಿಯಲ್ಲೇ ಮುಂದುವರೆಯಲಿದ್ದಾರೆ. ಆದರೆ ಕಾಂಗ್ರೆಸ್‌‍ ಪರವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ಇನ್ನಷ್ಟು ಶಾಸಕರು ಕಾಂಗ್ರೆಸ್‌‍ನತ್ತ ಮುಖ ಮಾಡಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. +ಬಿಜೆಪಿ ನಾಯಕರು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ ಎಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ತದ್ವಿರುದ್ಧವಾಗಿ ರಾಜಕೀಯ ಬೆಳವಣಿಗೆಯಾಗುತ್ತಿದ್ದು, ಜೆಡಿಎಸ್‌‍, ಬಿಜೆಪಿಯಲ್ಲಿರುವ ಬಹಳಷ್ಟು ಶಾಸಕರು ಕಾಂಗ್ರೆಸ್‌‍ನೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ.ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೋಡಿಕೊಂಡು ರಾಜಕೀಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_147_9.txt b/eesanje/url_46_147_9.txt new file mode 100644 index 0000000000000000000000000000000000000000..4a02320540cc82492847bd2f119a22b4de8f4ceb --- /dev/null +++ b/eesanje/url_46_147_9.txt @@ -0,0 +1,6 @@ +ಸರ್ಕಾರವನ್ನು ನಾವು ಅಸ್ಥಿರಗೊಳಿಸೊ ಪ್ರಯತ್ನ ಮಾಡಲ್ಲ, ಅದಾಗೆ ಬಿದ್ದರೆ ನಾವೇನ್ ಮಾಡೋಕಾಗುತ್ತೆ : ವಿಜಯೇಂದ್ರ +ಬೆಂಗಳೂರು, ಮೇ 13-ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದಾಗುವುದಿಲ್ಲ. ಒಂದು ವೇಳೆ ತನ್ನಿಂದ ತಾನೇ ಬಿದ್ದು ಹೋದರೆ ನಾವೇನು ಮಾಡಲು ಸಾಧ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದಾರೆ. +ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಜವಾಬ್ದಾರಿಯುತವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡುತ್ತಿದ್ದೇನೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದ ನಡೆಯುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. +ನಾವು ವಿರೋಧಪಕ್ಷದಲ್ಲಿ ಕುಳಿತುಕೊಂಡು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಮಾತಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ಇದಕ್ಕೆ ಅವರೇ ಉತ್ತರ ಕೊಡಲಿ ಎಂದರು. +ನಮ್ಮ ಮುಂದೆ ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕಾತುರವಿದೆ. ನಾವು ಅದರ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ. ಒಂದು ಬಹುಮತ ಇರುವ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭವಲ್ಲ. ಲೋಕಸಭಾ ಚುನಾವಣೆ ನಂತರ ನಡೆಯುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ಈಗಲೇ ಭವಿಷ್ಯ ಹೇಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು. +ಲೋಕಸಭಾ ಚುನಾವಣೆಯಲ್ಲಿ ತಮಗೆ ಉತ್ತಮವಾದ ಫಲಿತಾಂಶ ಬರಲಿದೆ. ನಮ್ಮ ನಿರೀಕ್ಷೆಗೂ ಮೀರಿ ಮತದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದ್ದಾರೆ. ಎಲ್ಲಾ ರಾಜಕೀಯ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಬಿಜೆಪಿ, ಜೆಡಿಎಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_148_1.txt b/eesanje/url_46_148_1.txt new file mode 100644 index 0000000000000000000000000000000000000000..1ec29f44d2d2d21888472392ebdd3e03c1043494 --- /dev/null +++ b/eesanje/url_46_148_1.txt @@ -0,0 +1,8 @@ +ಎ.ಎಸ್‌.ನಡಹಳ್ಳಿಗೆ ಒಲಿಯಲಿದೆಯೇ ವಿಧಾನಪರಿಷತ್‌ ಸ್ಥಾನ..? +ಬೆಂಗಳೂರು,ಮೇ 13-ಮುಂದಿನ ಜೂನ್‌ ತಿಂಗಳಿನಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್‌.ನಡಹಳ್ಳಿಯವರಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ಕೇಳಿಬಂದಿದೆ. ಕೆಲವು ಕಾರಣಗಳಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುದ್ದೆಬಿಹಾಳ ವಿಧಾನಸಭಾ ಕ್ಷೇತ್ರದಿಂದ ಪರಾಭವಗೊಂಡಿದ್ದ ನಡಹಳ್ಳಿಯವರನ್ನು ಮೇಲ್ಮನೆಗೆ ಆಯ್ಕೆ ಮಾಡಿದರೆ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. +ಜೂನ್‌ ತಿಂಗಳ ಮಧ್ಯಭಾಗದಲ್ಲಿ ವಿಧಾನಸಭೆಯಿಮದ ವಿಧಾನಪರಿಷತ್‌ಗೆ ಚುನಾವಣೆ ನಡೆಯಲಿದೆ. ವಿಧಾನಸಭೆಯ ಬಲಾಬಲದಲ್ಲಿ ಕಾಂಗ್ರೆಸ್‌ 7, ಬಿಜೆಪಿ 3 ಹಾಗೂ ಜೆಡಿಎಸ್‌ಗೆ 1 ಸ್ಥಾನ ದಕ್ಕಲಿದೆ. ಓರ್ವ ಸದಸ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಬೇಕಾದರೆ 19 ಮತಗಳ ಅಗತ್ಯವಿದೆ. 65 ಸದಸ್ಯರನ್ನು ಹೊಂದಿರುವ ಬಿಜೆಪಿಗೆ 3 ಸ್ಥಾನ ಸುಲಭವಾಗಿ ಸಿಗಲಿದೆ. +ಹಾಲಿ ವಿಧಾನಪರಿಷತ್‌ನ ಮುಖ್ಯ ಸಚೇತಕರಾಗಿರುವ ಎನ್‌.ರವಿಕುಮಾರ್‌ ಅವಧಿ ಜೂನ್‌ ತಿಂಗಳಲ್ಲಿ ಮುಕ್ತಾಯವಾಗಲಿದ್ದು, ಪಕ್ಷನಿಷ್ಠೆ ಕಾರಣ ಅವರನ್ನು ಮುಂದುವರೆಸುವ ಸಾಧ್ಯತೆಯಿದೆ. ಉಳಿದ ಎರಡು ಸ್ಥಾನಗಳಿಗೆ ಪಕ್ಷದಲ್ಲಿ ತೀವ್ರ ಪೈಪೋಟಿಯಿದ್ದು, ಕಲ್ಯಾಣ ಕರ್ನಾಟಕ ಭಾಗದವರನ್ನೇ ವಿಧಾನಪರಿಷತ್‌ಗೆ ಆಯ್ಕೆ ಮಾಡಬೇಕೆಂಬ ಒತ್ತಾಯ ಪಕ್ಷದೊಳಗೆ ಕೇಳಿಬರುತ್ತಿದೆ. +ಎ.ಎಸ್‌.ನಡಹಳ್ಳಿಯವರನ್ನು ಪರಿಷತ್‌ಗೆ ಆಯ್ಕೆ ಮಾಡಿದರೆ, ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಹೆಚ್ಚಿನ ಅನುಕೂಲವಾಗಲಿದೆ. ಹೀಗಾಗಿ ಅವರನ್ನೇ ಆಯ್ಕೆ ಮಾಡಬೇಕೆಂಬ ಒಕ್ಕೊರಲ ಅಭಿಪ್ರಾಯ ಪಕ್ಷದೊಳಗೆ ವ್ಯಕ್ತವಾಗಿದೆ. +ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿರುವ ನಡಹಳ್ಳಿಯವರು ಸಂಘ ಪರಿವಾರಕ್ಕೂ ಅಚ್ಚುಮೆಚ್ಚು. ವಿಶೇಷವಾಗಿ ಕೃಷಿ, ರೈತರ ಬಗ್ಗೆ ಸದನದಲ್ಲಿ ಎದೆಗಾರಿಕೆಯಿಂದ ಮಾತನಾಡುವ ಚಾತಿಯುಳ್ಳವರು. ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿರುವ ನಡಹಳ್ಳಿಯವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಅವಿರತ ಪ್ರಯತ್ನ ನಡೆಸಿದ್ದಾರೆ. +ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾದರೂ ಎದೆಗುಂದದೆ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಿರುವ ನಡಹಳ್ಳಿ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿದರೆ, ಪಕ್ಷಕ್ಕೂ ಅನುಕೂಲ ಹಾಗೂ ಸಂಘಟನೆಗೆ ಮತ್ತಷ್ಟು ಆನೆಬಲ ಬರಲಿದೆ ಎಂಬ ವ್ಯಾಖ್ಯಾನ ಕೇಳಿಬರುತ್ತಿದೆ. +ತಮ್ಮನ್ನು ಮೇಲ್ಮನೆಗೆ ಆಯ್ಕೆ ಮಾಡುವಂತೆ ನಡಹಳ್ಳಿಯವರು ಎಲ್ಲಿಯೂ ಒತ್ತಡ ಹೇರಿಲ್ಲ. ಪಕ್ಷ ನೀಡುವ ಯಾವುದೇ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ ಎಂದು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಅವರ ಸಂಘಟನೆಯ ಚಾತುರ್ಯವನ್ನು ಕಂಡು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಪಕ್ಷ ಆಯ್ಕೆ ಮಾಡಿದರೂ ಅಚ್ಚರಿಯಿಲ್ಲ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_148_10.txt b/eesanje/url_46_148_10.txt new file mode 100644 index 0000000000000000000000000000000000000000..cf88fdd32e9ca1620a44a3c69a5fff5018cf3c62 --- /dev/null +++ b/eesanje/url_46_148_10.txt @@ -0,0 +1,5 @@ +ಭೋಜೇಗೌಡ ಮೇಲ್ಮನೆ ಜೆಡಿಎಸ್ ಅಭ್ಯರ್ಥಿ +ಬೆಂಗಳೂರು, ಮೇ 12-ಲೋಕಸಭೆ ಚುನಾವಣೆಯಂತೆ ವಿಧಾನ ಪರಿಷತ್ತಿನ ಚುನಾವಣೆಯಲ್ಲೂ ಮೈತ್ರಿ ಮುಂದುವರೆದಿದ್ದು, ಜೆಡಿಎಸ್ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲಿದೆ. ಈ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾಗಿರುವ ಎಸ್.ಎಲ್.ಭೋಜೇಗೌಡ ಅವರು ಮರು ಸ್ಪರ್ಧೆಗಿಳಿಯಲಿದ್ದಾರೆ. +ಪದವೀಧರರ ಮೂರು ಹಾಗೂ ಶಿಕ್ಷಕರ ಮೂರು ಸೇರಿದಂತೆ ವಿಧಾನ ಪರಿಷತ್‍ನ ಆರು ಸದಸ್ಯ ಸ್ಥಾನಗಳಿಗೆ ಜೂನ್ ಮೂರರಂದು ಚುನಾವಣೆ ನಡೆಯಲಿದೆ. ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಜೆಡಿಎಸ್‍ಗೆ ಒಂದು ಕ್ಷೇತ್ರವನ್ನು ಮಾತ್ರ ಬಿಟ್ಟುಕೊಟ್ಟಿದೆ. +ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್„ಸಿ ಚುನಾಯಿತರಾಗಿದ್ದ ಮರಿತಿಬ್ಬೇಗೌಡ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ಈಗ ಅದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. +ಈಗಾಗಿ ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯುತ್ತಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೆಂಬ ಆಕಾಂಕ್ಷಿಯಾಗಿದ್ದ ಜೆಡಿಎಸ್‍ನವರಿಗೆ ನಿರಾಸೆ ಉಂಟಾಗಿದೆ. ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಎರಡು ಕ್ಷೇತ್ರಗಳನು ಜೆಡಿಎಸ್‍ಗೆ ಬಿಟ್ಟುಕೊಡುವುದಾಗಿ ಹೇಳಿದ್ದರು. ನಿನ್ನೆ ರಾತ್ರಿ ಬಿಜೆಪಿ ಐದು ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. \ No newline at end of file diff --git a/eesanje/url_46_148_11.txt b/eesanje/url_46_148_11.txt new file mode 100644 index 0000000000000000000000000000000000000000..21edd71d88622371fd0896de4b427b10fdfac076 --- /dev/null +++ b/eesanje/url_46_148_11.txt @@ -0,0 +1,5 @@ +ನಾಳೆ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ +ಬೆಂಗಳೂರು, ಮೇ 12-ಮಹಿಳೆಯೊಬ್ಬರ ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ಮುಂದುವರೆದ ವಿಚಾರಣೆ ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ. +ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವಿಧಿಸಿದ್ದ ರೇವಣ್ಣ ಅವರ ಏಳು ದಿನಗಳ ನ್ಯಾಯಾಂಗ ಬಂಧನದ ಅವಧಿ ಮಂಗಳವಾರ ಮುಗಿಯಲಿದೆ. ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧಿಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠವು ವಾದ ಮತ್ತು ಪ್ರತಿವಾದ ಆಲಿಸಿದ ಬಳಿಕ ಸೋಮವಾರಕ್ಕೆ ಮುಂದೂಡಿತ್ತು. +ಹೆಚ್.ಡಿ.ರೇವಣ್ಣ ಅವರ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಪ್ರಬಲ ವಾದ ಮಂಡಿಸಿ ನನ್ನ ಕಕ್ಷಿದಾರರ ವಿರುದ್ಧ ಅನಗತ್ಯ ಆರೋಪ ಮಾಡಲಾಗಿದೆ. ಅವರ ಮೇಲೆ ಯಾವುದೇ ಗಂಭೀರ ಸ್ವರೂಪದ ಆರೋಪಗಳು ಇಲ್ಲ. ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‍ಐಟಿಪರ ವಕೀಲೆ ಜಾಯ್ನ ಕೋಠಾರಿ ಅವರು, ರೇವಣ್ಣ ಅವರು ಪ್ರಭಾವಿ ನಾಯಕರಾಗಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬಾರದು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಾದ ಮಂಡಿಸಲು ಇನ್ನೂ ಕಾಲಾವಕಾಶ ಬೇಕು ಎಂದು ಮನವಿ ಮಾಡಿದ್ದರು. +ಎರಡೂ ಕಡೆಯ ವಾದ ವಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ನಾಳೆ ನಡೆಯಲಿರುವ ವಿಚಾರಣೆಯ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ. ರೇವಣ್ಣ ಅವರಿಗೆ ಜಾಮೀನು ಸಿಗಲಿದೆಯೋ ಅಥವಾ ಇಲ್ಲವೋ ಎಂಬುದನ್ನು ಕಾದುನೋಡಬೇಕಿದೆ. \ No newline at end of file diff --git a/eesanje/url_46_148_12.txt b/eesanje/url_46_148_12.txt new file mode 100644 index 0000000000000000000000000000000000000000..2701db6b55bbc1be875d45c1d2d7def7c3fecb1f --- /dev/null +++ b/eesanje/url_46_148_12.txt @@ -0,0 +1,8 @@ +ಪೆನ್‌ಡ್ರೈವ್‌ ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ಮಾಡಿಸಲು ಸಿ.ಟಿ.ರವಿ ಒತ್ತಾಯ +ಬೆಂಗಳೂರು,ಮೇ11-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ನಡೆವಳಿಕೆಗಳ ಬಗ್ಗೆ ಅನುಮಾನ ಮೂಡುತ್ತಿದ್ದು, ಪ್ರಕರಣವನ್ನು ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ನಡೆಸಿದ ಸಂಭಾಷಣೆಯನ್ನು ಬಿಡುಗಡೆ ಮಾಡಿದ ಮರು ಕ್ಷಣವೇ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರೆ ಇದು ಏನು ಸೂಚಿಸುತ್ತದೆ ಎಂದು ಪ್ರಶ್ನೆ ಮಾಡಿದರು. +ಇನ್ನಷ್ಟು ಆಡಿಯೋ, ವಿಡಿಯೋಗಳನ್ನು ದೇವರಾಜೇಗೌಡ ಬಿಡುಗಡೆ ಮಾಡಬಹುದೆಂಬ ಆತಂಕದಿಂದಲೇ ಯಾರೋ ಒಬ್ಬರ ನಿರ್ದೇಶನದಂತೆ ಪೊಲೀಸರು ದೇವರಾಜೇಗೌಡ ಅವರನ್ನು ಬಂಧಿಸಿದ್ದಾರೆ. ಎಲ್ಲವೂ ಸರ್ಕಾರ ನಡೆಸುವವರ ನಿರ್ದೇಶನದ ಮೇಲೆ ನಡೆಯುತ್ತದೆ ಎಂದರೆ ಎಸ್‌‍ಐಟಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ ಎಂದು ಆಕ್ಷೇಪಿಸಿದರು. +ಸರ್ಕಾರ ಕೂಡಲೇ ಸುಪ್ರೀಂಕೋರ್ಟ್‌ ಇಲ್ಲವೇ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಬೇಕು. ಸಿಬಿಐ ಮೇಲೆ ನಂಬಿಕೆ ಇಲ್ಲದಿದ್ದರೆ ಚಿಂತೆ ಇಲ್ಲ ಕಡೆಪಕ್ಷ ನ್ಯಾಯಾಂಗದ ತನಿಖೆಗೆ ವಹಿಸಲು ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿದರು. +ಇದು ಮೊದಲಿನಿಂದಲೂ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ ಎಂಬ ಅನುಮಾನ ಇತ್ತು. ಡಿ.ಕೆ.ಶಿವಕುಮಾರ್‌ ಜೊತೆ ಎಲ್‌ಆರ್‌ ಶಿವರಾಮೇಗೌಡ ನಡೆಸಿದ ಆಡಿಯೋ ಸಂಭಾಷಣೆ ಬಿಡುಗಡೆಯಾದ ಅರ್ಧಗಂಟೆಯಲ್ಲೇ ದೇವರಾಜೇಗೌಡ ಬಂಧನ ಸಾಕಷ್ಟು ಸಂಶಯಗಳಿಗೆ ಎಡೆ ಮಾಡಿಕೊಟ್ಟಿವೆ ಎಂದು ಹೇಳೀದರು. +ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್‌ ಮಾತನಾಡಿ, ರಾಜ್ಯ ಸರ್ಕಾರದ ಜವಾಬ್ದಾರಿ. ಈ ರೀತಿ ಘಟನೆ ನಡೆಯುವ ಮೊದಲು ಗುಪ್ತಚರ ಇಲಾಖೆ ಸರ್ಕಾರದ ಗಮನಕ್ಕೆ ತರಬೇಕಿತ್ತು. ಇಂಟಲಿಜೆನ್ಸ್ ಫೆಲ್ಯೂರ್‌ ಆಗಿದೆ. ಫಲಿತಾಂಶ ಬಂದ ಹೆಣ್ಣು ಮಗು ತಲೆ ಕಡಿದು ಹತ್ಯೆಯಾಗಿದೆ. ಭ್ರೂಣ ಹತ್ಯೆ ಪ್ರಕರಣ ಮತ್ತೆ ಹೊರ ಬರುತ್ತಿವೆ. ಕರ್ನಾಟಕದಲ್ಲಿ ಕಾನೂನು ಸುವ್‌ಯವಸ್ಥೆ ಹಾಳಗಿದೆ ಎಂದರು. +ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ರಾಷ್ಟ್ರ ಮಟ್ಟದಲ್ಲಿ ನಡೆದಿದೆ. ಮುಂದುವರೆಸಬೇಕೆ, ಬೇಡವೇ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು. \ No newline at end of file diff --git a/eesanje/url_46_148_2.txt b/eesanje/url_46_148_2.txt new file mode 100644 index 0000000000000000000000000000000000000000..319e780b9e0ac391957c94b721e6e32601070e03 --- /dev/null +++ b/eesanje/url_46_148_2.txt @@ -0,0 +1,7 @@ +ಇನ್ನೂ ಮೂರು ದಿನ ವರ್ಷಧಾರೆ, ಹಲವೆಡೆ ಅವಾಂತರ ಸೃಷ್ಟಿಸಿದ ಪೂರ್ವ ಮುಂಗಾರು ಮಳೆ +ಬೆಂಗಳೂರು,ಮೇ 13-ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, ವಿವಿಧೆಡೆ ಉತ್ತಮವಾಗಿ ಮಳೆಯಾಗಿದ್ದು, ಅನ್ನದಾತರಲ್ಲಿ ಸಂತಸ ತಂದಿದ್ದರೆ, ಮತ್ತೊಂದೆಡೆ ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದಾರೆ. +ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲೂಕಿನ ಕಟ್ಟೀಮನಿ ಗ್ರಾಮದ ಬಳಿ ಮರ ಬಿದ್ದು, ಮಹಿಳೆ ಸಾವನ್ನಪ್ಪಿದರೆ, ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಇಟಿಗ ಗ್ರಾಮದಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. +ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೀದರ್‌, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ರಾಯಚೂರು ಪಟ್ಟಣದಲ್ಲಿ ಸುರಿದ ಮಳೆಯಿಂದಾಗಿ ಎಪಿಎಂಸಿ ಆವರಣದಲ್ಲಿ ಭತ್ತದ ರಾಶಿ ನೀರಿನಲ್ಲಿ ನೆಂದು ಹೋಗಿದ್ದು, ಇದರಿಂದ ಅಪಾರ ನಷ್ಟ ಸಂಭವಿಸಿದೆ. +ಚಾಮರಾಜನಗರ ತಾಲೂಕಿನ ದೇವರಾಜಪುರ, ಬ್ಯಾಡಮಡ್ಲು, ಉತ್ತುಮಳ್ಳಿಯಲ್ಲಿ ಮಳೆಯಾಗಿದ್ದು, ಕಟಾವಿಗೆ ಬಂದಿದ್ದ ಬಾಳೆ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ. ಯಾದಗಿರಿಯಲ್ಲಿ ಸಿಡಿಲು ಬಡಿದು ಕುರಿಗಾಹಿ ಸಾವನ್ನಪ್ಪಿರುವ ಘಟನೆ ಶಹಪುರ ತಾಲೂಕಿನ ವೀಬೂತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ರಾಜ್ಯದ ವಿವಿಧೆಡೆ ಮೂವರು ಬಲಿಯಾಗಿದ್ದಾರೆ. +ಬೆಂಗಳೂರಿನಲ್ಲಿಯೂ ಸಹ ಉತ್ತಮವಾಗಿ ಮಳೆಯಾಗಿದ್ದು, ಅಲ್ಲಲ್ಲಿ ಗಾಳಿಗೆ ಮರಗಳು ಉರುಳಿ ಬಿದ್ದಿವೆ. ಹಾಸನ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. +ಮೂರು ದಿನ ಮಳೆ ಸಾಧ್ಯತೆ :ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಗಳಲ್ಲೂ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಬಿರು ಬೇಸಿಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ವರುಣ ತಂಪೆರೆದಿದ್ದು, ತಂಪು ವಾತಾವರಣದಿಂದ ನಿಟ್ಟುಸಿರು ಬಿಡುವಂತಾಗಿದೆ. \ No newline at end of file diff --git a/eesanje/url_46_148_3.txt b/eesanje/url_46_148_3.txt new file mode 100644 index 0000000000000000000000000000000000000000..85f62b7338178fdeae1828ef26891d4b0b58f077 --- /dev/null +++ b/eesanje/url_46_148_3.txt @@ -0,0 +1,5 @@ +ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಕಾರಣ ಇನ್ನೂ ನಿಗೂಢ +ಬೆಂಗಳೂರು, ಮೇ 12-ಕೆಎಎಸ್ ಅಧಿಕಾರಿ ಪತ್ನಿ ಹೈಕೋರ್ಟ್ ವಕೀಲೆ ಚೈತ್ರಾಗೌಡ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪೊಲೀಸರಿಗೆ ಸಿಕ್ಕಿರುವ ಡೆತ್‍ನೋಟ್ ನಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ, ಬದುಕಲು ಸಾಧ್ಯವಾಗುತ್ತಿಲ್ಲ, ನನ್ನ ಪತಿ ಶಿವಕುಮಾರ್ ಒಳ್ಳೆಯವರು, ನನ್ನ ಮಗುವನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಾರ್ಚ್ ತಿಂಗಳಲ್ಲೇ ಚೈತ್ರಾಗೌಡ ಡೆತ್‍ನೋಟ್ ಬರೆದಿಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. +ಯಾವ ಕಾರಣಕ್ಕೆ ಅವರಿಗೆ ಮಾನಸಿಕ ಖಿನ್ನತೆಯಾಗಿತ್ತು. ಖಿನ್ನತೆಗೆ ಕಾರಣ ಗಳೇನು?ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ನಿನ್ನೆ ಸಂಜಯ್ ನಗರದ ಗೆದ್ದಲ ಹಳ್ಳಿಯ ಅಪಾರ್ಟ್‍ಮೆಂಟ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಚೈತ್ರಾಗೌಡ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. +ಪೊಲೀಸರು ಅವರ ಪತಿ, ಕುಟುಂಬದವರು ಮತ್ತು ಸ್ನೇಹಿತರನ್ನು ಭೇಟಿ ಮಾಡಿ ಚೈತ್ರಾ ಅವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡೆತ್‍ನೋಟ್ ಬಗ್ಗೆ ಕೂಡ ಪರಿಶೀಲನೆ ನಡೆಸುತ್ತಿದ್ದಾರೆ. ಚೈತ್ರಾಗೌಡ ಅವರು ತುಂಬಾ ಗಟ್ಟಿಗಿತ್ತಿ, ಆತ್ಮಹತ್ಯೆ ಮಾಡಿಕೊಳ್ಳುವಂತ ಮನಸ್ಥಿತಿ ಅವರಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಬೆಂಗಳೂರು ವಕೀಲರ ಸಂಘ ಪೊಲೀಸರಿಗೆ ದೂರು ನೀಡಿದೆ. +ಈ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಈ ವರೆಗೆ ಆತ್ಮಹತ್ಯೆ ಪ್ರಕರಣ ಇನ್ನೂ ನಿಗೂಢವಾಗಿಯೇ ಇದೆ. \ No newline at end of file diff --git a/eesanje/url_46_148_4.txt b/eesanje/url_46_148_4.txt new file mode 100644 index 0000000000000000000000000000000000000000..b632b0609347030432a7fc91eebc2ab4c72f8312 --- /dev/null +++ b/eesanje/url_46_148_4.txt @@ -0,0 +1,7 @@ +ಪೆನ್‍ಡ್ರೈವ್ ಪ್ರಕರಣ ಸ್ಪೋಟಕ ತಿರುವು : ಬಿಜೆಪಿ ಮಾಜಿ ಶಾಸಕರ ಆಪ್ತರು ಎಸ್‍ಐಟಿ ವಶಕ್ಕೆ +ಹಾಸನ, ಮೇ 12- ಪೆನ್‍ಡ್ರೈವ್ ಪ್ರಕರಣ ದಿನೇ ದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕರ ಆಪ್ತರೊಬ್ಬರು ಸೇರಿದಂತೆ ಇಬ್ಬರನ್ನು ವಿಶೇಷ ತನಿಖಾ ತಂಡ (ಎಸ್‍ಐಟಿ) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. +ಬಿಜೆಪಿ ಮಾಜಿ ಶಾಸಕರ ಅತ್ಯಾಪ್ತನೆನ್ನಲಾದ ಲಿಖಿತ್‍ಗೌಡ ಮತ್ತು ಯಲಗುಂದ ಚೇತನ್ ಎಂಬ ಇಬ್ಬರನ್ನು ಪೆನ್‍ಡ್ರೈವ್ ಹಂಚಿಕೆ ಸಂಬಂಧದ ಆರೋಪದಲ್ಲಿ ಎಸ್‍ಐಟಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೆನ್‍ಡ್ರೈವ್ ವೈರಲ್ ವಿಚಾರದಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರನ್ನು ಎಸ್‍ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. +ಪೂರ್ಣ ಚಂದ್ರ ತೇಜಸ್ವಿ ಎಂಬುವವರು ಏ.23ರಂದು ಹಾಸನ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿ ಲೋಕಸಬೆ ಚುನಾವಣೆಗೆ ಸರ್ಧಿಸಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರ ಭಾವಚಿತ್ರಗಳನ್ನು ನವೀನ್‍ಗೌಡ ಎಂಬುವವರು ಮಾ-ರ್ï ಮಾಡಿ ಅಶ್ಲೀಲ ವಿಡಿಯೋ ತಯಾರಿಸಿಕೊಂಡು ಮನೆ ಮನೆಗೆ ತೆರಳಿ ಮತದಾರರಿಗೆ ಪೆನ್‍ಡ್ರೈವ್, ಸಿಡಿ, ವಾಟ್ಸಾಪ್ ಪೋಟೊಗಳನ್ನು ಮೊಬೈಲ್‍ಗಳಲ್ಲಿ ತೋರಿಸಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು. +ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸರ್ಕಾರ ಎಸ್‍ಐಟಿಗೆ ವಹಿಸಿದೆ. ತನಿಖೆ ಕೈಗೊಂಡ ಎಸ್‍ಐಟಿ ಇಂದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೆನ್‍ಡ್ರೈವ್‍ಗಳನ್ನು ಏಕೆ ಹಂಚಲಾಯಿತು, ಎಲ್ಲೆಲ್ಲಿ ಹಂಚಿದ್ದೀರಿ, ಇದರ ಹಿಂದೆ ಯಾರು ಯಾರು ಇದ್ದಾರೆ ಎಂಬಿತ್ಯಾದಿ ಪ್ರಶ್ನೆಗಳನ್ನು ಅವರಿಗೆ ಕೇಳಿ ಎಸ್‍ಐಟಿ ಮಾಹಿತಿ ಕಲೆ ಹಾಕುತ್ತಿದೆ. +ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಎಸ್‍ಐಟಿ ಶೋಧ ನಡೆಸುತ್ತಿದೆ. ಹಾಸನದಲ್ಲಿ ಹರಿದಾಡಿದೆ ಎನ್ನಲಾದ ಪೆನ್‍ಡ್ರೈವ್ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. +ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಶಾಸಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹಲವು ಸಂತ್ರಸ್ತ ಮಹಿಳೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.ನವೀನ್‍ಗೌಡ, ಕಾರ್ತಿಕ್‍ಗೌಡ ಸೇರಿ ನಾಲ್ವರಿಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದೆ.ಪೆನ್‍ಡ್ರೈವ್‍ಅನ್ನು ಮನೆ ಮನೆಗೆ ಹಂಚಿ ಮಹಿಳೆಯರ ಮಾನಾಪಹರಣ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ನಡುವೆ ರಾಜಕೀಯ ಪಕ್ಷಗಳ ನಡುವೆ ಪರಸ್ಪರ ಕೆಸರೆರಚಾಟ ತೀವ್ರಗೊಂಡಿದೆ. \ No newline at end of file diff --git a/eesanje/url_46_148_5.txt b/eesanje/url_46_148_5.txt new file mode 100644 index 0000000000000000000000000000000000000000..0f92d133d9496265c0a4b0f94485e653580ebfa4 --- /dev/null +++ b/eesanje/url_46_148_5.txt @@ -0,0 +1,7 @@ +ಎಸ್‍ಐಟಿ ತಂಡ ವಿದೇಶಕ್ಕೆ ಹೋಗೋಲ್ಲ: ಪರಮೇಶ್ವರ್ +ಬೆಂಗಳೂರು, ಮೇ 12- ಪೆನ್‍ಡ್ರೈವ್ ಪ್ರಕರಣದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ವಿಶೇಷ ತನಿಖಾ ದಳದ ಅಧಿಕಾರಿಗಳು ವಿದೇಶಕ್ಕೆ ತೆರಳುವ ಅವಕಾಶ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಲು ಅವಕಾಶ ಇಲ್ಲ ಎಂದು ಸ್ಪಷ್ಟ ಪಡಿಸಿದರು. +ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ ಪೋಲ್ ಸಂಸ್ಥೆಯವರು ಪ್ರಜ್ವಲ್‍ನ ಚಲನವಲನಗಳನ್ನು ಗುರುತಿಸಿ, ಎಲ್ಲಿದ್ದಾರೆ ಎಂದು ಪತ್ತೆ ಹಚ್ಚುತ್ತಾರೆ. ಅದನ್ನು ಸಿಬಿಐಗೆ ತಿಳಿಸುತ್ತಾರೆ. ಅಲ್ಲಿಂದ ನಮ್ಮ ತನಿಖಾ ಸಂಸ್ಥೆಗಳಿಗೆ ಮಾಹಿತಿ ಬರುತ್ತದೆ. ಸದ್ಯಕ್ಕೆ ಈವರೆಗೂ ಪ್ರಜ್ವಲ್ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ವಿವರಿಸಿದರು. +ಸದ್ಯಕ್ಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ತನಿಖೆಯ ಮೇಲೆ ಪರಿಣಾಮ ಬೀರುವ ಯಾವುದೇ ವಿಚಾರ ಅಥವಾ ಮಾಹಿತಿಗಳನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡರನ್ನು ಈಗಾಗಲೇ ಬಂಧಿಸಲಾಗಿದೆ. ಮುಂದಿನ ಕ್ರಮಗಳ ಬಗ್ಗೆ ಎಸ್‍ಐಟಿ ಅಧಿಕಾರಿಗಳಿಗೆ ಮಾಹಿತಿ ಇರುತ್ತದೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. +ಹೇಳಿಕೆ ನೀಡುವಾಗ ಎಚ್ಚರ:ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಪ್ರತಿಯೊಬ್ಬರು ನೀಡುವ ಹೇಳಿಕೆಗೂ ಉತ್ತರಿಸಲಾಗುವುದಿಲ್ಲ. ಈ ಪ್ರಕರಣದಲ್ಲಿ ವಿಶೇಷ ಮನವಿ ಏನಂದರೆ ನಾಯಕರು ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಇಲ್ಲವಾದರೆ 41 ಎ ಅಡಿ ನೋಟಿಸ್ ಕೊಟ್ಟು, ವಿಚಾರಣೆಗೆ ಕರೆದು, ಅವರು ನೀಡಿದ ಹೇಳಿಕೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. +ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದು ಭಾವಿಸಿದ್ದೇನೆ. ಮುಂದೆ ಯಾವುದೇ ಹೇಳಿಕೆಗಳನ್ನು ಕೊಡುವಾಗ ಅಥವಾ ಸಾರ್ವಜನಿಕ ವಲಯದಲ್ಲಿ ಮಾಹಿತಿಯನ್ನು ಹಂಚಿಕೊಳ್ಳುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತೇನೆ ಎಂದರು. +ಬೆದರಿದ ಬಿಜೆಪಿ:ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯವರಿಗೆ ಲೋಕಸಭೆ ಚುನಾವಣೆಯ ಬಗ್ಗೆ ಭಯವಾಗಿದೆ. ಬಹುಶಃ ನಿರಾಶರಾಗಿದ್ದಾರೆ. ಆರಂಭದಲ್ಲಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಇದ್ದಕ್ಕಿದ್ದಂತೆ 300ಕ್ಕೆ ಇಳಿದಿದರು. ಈಗ ಮತ್ತೆ 400 ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಜನ ಸಾಮಾನ್ಯರು ಯಾವ ರೀತಿ ಮತ ಹಾಕುತ್ತಾರೆ ಎಂಬ ಸುಳಿವು ಅವರಿಗೆ ಸಿಕ್ಕಿದಂತಿದೆ. ಅದಕ್ಕಾಗಿ ಹತಾಶರಾಗಿ, ಗೊಂದಲಕ್ಕೆ ಒಳಗಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಬಗ್ಗೆ ನಮಗೆ ಯಾವ ಸಂಬಂಧನೂ ಇಲ್ಲ ಎಂದು ಹೇಳಿಕೆಯೊಂದಕ್ಕೆ ಪರಮೇಶ್ವರ್ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_148_6.txt b/eesanje/url_46_148_6.txt new file mode 100644 index 0000000000000000000000000000000000000000..98e1023906f9f6ff435d16b8619b14e7e714a976 --- /dev/null +++ b/eesanje/url_46_148_6.txt @@ -0,0 +1,10 @@ +ರಾಜ್ಯದಲ್ಲಿ ಮತ್ತೊಂದು ಮಿನಿ ಅಗ್ನಿಪರೀಕ್ಷೆಗೆ ರಾಜಕೀಯ ಪಕ್ಷಗಳು ಸಿದ್ಧತೆ +ಬೆಂಗಳೂರು,ಮೇ12- ಲೋಕಸಭೆ ಚುನಾವಣೆಯ ಕಾವು ತಣ್ಣಗಾಗುವ ಮುನ್ನವೇ ರಾಜ್ಯದಲ್ಲಿ ರಾಜಕೀಯ ಪಕ್ಷಗಳಿಗೆ ಮತ್ತೊಂದು ಮಿನಿ ಅಗ್ನಿಪರೀಕ್ಷೆ ಎದುರಾಗಿದೆ. ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್‍ನಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಂಡು ವಿಧೇಯಕಗಳನ್ನು ಪಾಸು ಮಾಡಿಕೊಳ್ಳಲು ಪೂರಕವಾಗಿ ಜೂನ್ 3ರಂದು ನಡೆಯುವ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. +ವಿಧಾನಪರಿಷತ್‍ನ ಶಿಕ್ಷಕರ ಹಾಗೂ ಪದವೀಧರರ ಆರು ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯುತ್ತಿದ್ದು, ಅvಸೂಚನೆ ಜಾರಿಯಲ್ಲಿದೆ. ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‍ನ ಮೈತ್ರಿ ಮುಂದುವರೆದಿದೆ. ಬಿಜೆಪಿ ಐದು ಕ್ಷೇತ್ರಗಳಿಗೆ ನಿನ್ನೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್‍ಗೆ ಬಿಟ್ಟು ಕೊಡಲಾಗಿದ್ದು, ಅದಕ್ಕೆ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆ ಚಾಲನೆಯಲ್ಲಿದೆ. +ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಪಾಟೀಲ(ಕಾಂಗ್ರೆಸ್), ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಅಯನೂರು ಮಂಜುನಾಥ್(ಬಿಜೆಪಿ), ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ.ದೇವೇಗೌಡ(ಬಿಜೆಪಿ), ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ (ಬಿಜೆಪಿ), ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಬೋಜೇಗೌಡ (ಜೆಡಿಎಸ್), ಕರ್ನಾಟಕ ದಕ್ಷಿಣ ಕ್ಷೇತ್ರದಿಂದ ಮರಿತಿಬ್ಬೇಗೌಡ (ಜೆಡಿಎಸ್) 2018ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಇದೇ ಜೂನ್ 21ಕ್ಕೆ ಅವಧಿ ಪೂರ್ಣಗೊಳ್ಳುತ್ತಿದೆ. +ಇವರ ಪೈಕಿ ಮರಿತಿಬ್ಬೇಗೌಡ, ಅಯನೂರು ಮಂಜುನಾಥ್ ತಮ್ಮ ಪಕ್ಷಗಳಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ನಿನ್ನೆ ಐದು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಅ.ದೇವೇಗೌಡ, ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ವಿ.ಸಿ.ನಿಂಗರಾಜು ಅಭ್ಯರ್ಥಿಗಳಾಗಿದ್ದಾರೆ. +ನೈರುತ್ಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಕ್ಷೇತ್ರದ ಮಾಜಿ ಶಾಸಕ ರಘುಪತಿ ಭಟ್ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ತಮಗೆ ವಿಧಾನಪರಿಷತ್‍ನ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ಭರವಸೆ ನೀಡಿತ್ತು. ಆದರೆ ಈಗ ಆ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡಲು ಮುಂದಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. +ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್‍ನ ಶ್ರೀಕಂಠೇಗೌಡ ಆಕಾಂಕ್ಷಿಯಾಗಿದ್ದರು. ಆದರೆ ಆ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಹೀಗಾಗಿ ಮೈತ್ರಿ ಪಕ್ಷದಲ್ಲಿ ಒಂದಿಷ್ಟು ಗೊಂದಲಗಳು ಕಂಡುಬಂದಿವೆ.ಇತ್ತ ಕಾಂಗ್ರೆಸ್ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಪಿ.ಡಿ.ಶ್ರೀನಿವಾಸ್, ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಬಿ.ಪಾಟೀಲ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಯನೂರು ಮಂಜುನಾಥ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಈ ಚುನಾವಣೆಗೆ ವಿದ್ಯಾವಂತರು ಹಾಗೂ ಪ್ರಜ್ಞಾವಂತರು ಮತದಾರರಾಗಿರುವುದರಿಂದ ಎಲ್ಲ ಪಕ್ಷಗಳಿಗೂ ಅಗ್ನಿಪರೀಕ್ಷೆ ಎದುರಾಗಿದೆ. +ಆಡಳಿತಾರೂಢ ಕಾಂಗ್ರೆಸ್‍ಗೆ ವಿಧಾನಪರಿಷತ್‍ನಲ್ಲಿ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ. ದ್ವೈವಾರ್ಷಿಕ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳ ಪೈಕಿ ಈಶಾನ್ಯ ಪದವೀಧರ ಕ್ಷೇತ್ರ ಹೊರತುಪಡಿಸಿ ಉಳಿದ ಮೂರು ಕಡೆ ಬಿಜೆಪಿ, ಎರಡು ಕಡೆ ಜೆಡಿಎಸ್ 2018ರಲ್ಲಿ ಗೆದ್ದಿದ್ದವು.ಪ್ರಸ್ತುತ ವಿಧಾನಪರಿಷತ್‍ನಲ್ಲಿ ಬಿಜೆಪಿ 32, ಜೆಡಿಎಸ್ 7 ಸ್ಥಾನ ಹೊಂದಿದ್ದು, ಎನ್‍ಡಿಎ ಮಿತ್ರಕೂಟ 39 ಸಂಖ್ಯಾಬಲ ಹೊಂದಿದೆ. ಕಾಂಗ್ರೆಸ್ 29 ಸದಸ್ಯರನ್ನು ಹೊಂದಿದ್ದು, ಒಬ್ಬರು ಪಕ್ಷೇತರರು ಮತ್ತು ಒಬ್ಬ ಸಭಾಪತಿ ಇದ್ದಾರೆ. +ತೇಜಸ್ವಿನಿಗೌಡ, ಕೆ.ಪಿ.ನಂಜುಂಡಿ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಿರುವ 9 ಮಂದಿ ಸದಸ್ಯರ ಅವಧಿ ಜೂ.17ಕ್ಕೆ ಮುಕ್ತಾಯಗೊಳ್ಳುತ್ತಿದೆ. ಇಲ್ಲಿ ಕಾಂಗ್ರೆಸ್ 5ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಅವಕಾಶ ಹೊಂದಿದೆ. +ದ್ವೈವಾರ್ಷಿಕ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಜೆಡಿಎಸ್ ಮತ್ತು ಬಿಜೆಪಿಗಿಂತಲೂ ಹೆಚ್ಚು ಸಂಖ್ಯಾಬಲವನ್ನು ಪಡೆದುಕೊಂಡು ಮೇಲ್ಮನೆಯಲ್ಲು ವಿಧೇಯಕಗಳನ್ನು ಅಂಗೀಕರಿಸಿಕೊಳ್ಳಲು ಅವಕಾಶ ಮಾಡಿಕೊಂಡಂತಾಗುತ್ತದೆ. \ No newline at end of file diff --git a/eesanje/url_46_148_7.txt b/eesanje/url_46_148_7.txt new file mode 100644 index 0000000000000000000000000000000000000000..0270d4915e4227023b029285d90da2c1aac55888 --- /dev/null +++ b/eesanje/url_46_148_7.txt @@ -0,0 +1,6 @@ +ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮೂರು ದಿನ ಮುಂದುವರಿಕೆ +ಬೆಂಗಳೂರು, ಮೇ12- ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. +ಮೇ 15ರ ವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದೂವರೆ ಕಿ.ಮೀ.ಎತ್ತರದಲ್ಲಿ ನಿರ್ಮಾಣಗೊಂಡಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. +ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಮಳೆ, ಗಾಳಿ ಹೆಚ್ಚಾಗಿದ್ದು, ಮರ, ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ತೀವ್ರ ಬಿಸಿಲಿನ ಬೇಗೆಯಿದ್ದ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲೂ ಮಳೆ ಆರಂಭಗೊಂಡಿದೆ. ಇದರಿಂದ ತಾಪಮಾನ ತಗ್ಗುತ್ತಿದೆ. ಸರಾಸರಿ ಇನ್ನೂ ಒಂದು ವಾರ ಮಳೆ ಮುಂದುವರೆಯುವ ಲಕ್ಷಣವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಈಗಾಗಲೇ ಬಿದ್ದಿರುವ ಮಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚಳವಾಗಿದ್ದ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ. ನಿರಂತರ ಮಳೆಯಿಂದಾಗಿ ವಾತಾವರಣದಲ್ಲೂ ಆದ್ರ್ರತೆ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. +ಮಾರ್ಚ್ ಮತ್ತು ಏಪ್ರಿಲ್‍ನಲ್ಲಿ ಕೈ ಕೊಟ್ಟಿದ್ದ ಪೂರ್ವ ಮುಂಗಾರು ಮಳೆ ಮೇ ತಿಂಗಳಲ್ಲಿ ಆರಂಭವಾಗಿರುವುದು ರೈತರು ಹಾಗೂ ಜನರಲ್ಲಿ ಆಶಾಭಾವನೆ ಮೂಡಿಸಿದೆ. ಈ ತಿಂಗಳಲ್ಲಿ ವಾಡಿಕೆ ಪ್ರಮಾಣ ಮತ್ತು ಅದಕ್ಕಿಂತ ಹೆಚ್ಚಾದರೆ, ಬೇಸಾಯಕ್ಕೂ ಅನುಕೂಲವಾಗುವುದಲ್ಲದೆ, ಕಾಡು ಪ್ರಾಣಿಗಳ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ನಿವಾರಣೆಗೂ ಅನುಕೂಲವಾಗಲಿದೆ. \ No newline at end of file diff --git a/eesanje/url_46_148_8.txt b/eesanje/url_46_148_8.txt new file mode 100644 index 0000000000000000000000000000000000000000..dfc824cc16fe2e75cc7938f2207d433487ec8178 --- /dev/null +++ b/eesanje/url_46_148_8.txt @@ -0,0 +1,6 @@ +ಭೀಕರ ಅಪಘಾತ: ಸರ್ಕಾರಿ ಪ್ರೌಢಶಾಲೆಯ ಇಬ್ಬರು ಶಿಕ್ಷಕರು ದುರ್ಮರಣ.. +ಪಾವಗಡ,ಮೇ12- ಚಾಲಕನ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಿಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕಣವೆನಹಳ್ಳಿ ಗೇಟ್ ಬಳಿ ತಡರಾತ್ರಿ ನಡೆದಿದೆ. +ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಪ್ರಾಂಶುಪಾಲರಾದ ಓ ಧನಂಜಯ ಹಾಗೂ ಗೌಡಹಟ್ಟಿ ಪ್ರೌಡ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಕೃಷ್ಣ ಮೃತಪಟ್ಟ ದುದೈರ್ವಿಗಳು. ಶಿಕ್ಷಕರಾದ ನರಸಿಂಹಮೂರ್ತಿ ಹಾಗೂ ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. +ನಾಲ್ವರು ಶಿಕ್ಷಕರು ಕಳೆದ ರಾತ್ರಿ ತುಮಕೂರಿನಲ್ಲಿ ನಡೆದ ಶಿಕ್ಷಕರೊಬ್ಬರ ಪುತ್ರಿಯ ವಿವಾಹ ಆರತಕ್ಷತೆ ಮುಗಿಸಿಕೊಂಡು ಒಂದೆ ಕಾರಿನಲ್ಲಿ ಪಾವಗಡಕ್ಕೆ ವಾಪಸ್ ತೆರಳುತ್ತಿದ್ದಾಗ ತಡರಾತ್ರಿ 2.30ರ ಸಮಯದಲ್ಲಿ ಕಣವೆನಹಳ್ಳಿ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದ್ದು ಕಾರಿನ ಕೆಳಗೆ ಸಿಲುಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. +ಸುದ್ದಿ ತಿಳಿಯುತ್ತಿದ್ದಂತೆ ಪಾವಗಡ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. ಚಾಲಕ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರು ಪಲ್ಟಿಹೊಡೆದ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. +ಆಕ್ರಂಧನ: ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂಧನ ಮುಗಿಲು ಮುಟ್ಟಿತ್ತು. ಜೊತೆಗೆ ತಾಲೂಕಿನ ಎಲ್ಲಾ ಶಾಲೆಗಳ ಶಿಕ್ಷಕರು ಸಹದ್ಯೋಗಿಗಳು ಕಂಬನಿ ಮಿಡಿದಿದ್ದು ದುಃಖ ಭರಿಸುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_148_9.txt b/eesanje/url_46_148_9.txt new file mode 100644 index 0000000000000000000000000000000000000000..f4f8c541ace265e34916ccf561ba193b979132ad --- /dev/null +++ b/eesanje/url_46_148_9.txt @@ -0,0 +1,6 @@ +ಒಂದು ಬಿಂದಿಗೆ ನೀರಿಗಾಗಿ ರಾತ್ರಿಯವರೆಗೂ ಕಾದು ಕುಳಿತ ಮಹಿಳೆಯರು +ಬೆಂಗಳೂರು,ಮೇ12- ನಾಡಿನ ಹಲವು ಕಡೆ ಬಿರು ಮಳೆಯಿಂದಾಗಿ ತಂಪಿನ ವಾತಾವರಣ ನಿರ್ಮಾಣವಾಗಿದ್ದರೆ, ಇದೇ ಸಮಯದಲ್ಲಿ ಬಯಲುಸೀಮೆ ಸೇರಿದಂತೆ ಹಲವಾರು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡಲಾರಂಭಿಸಿದೆ. +ಈವರೆಗೂ ಲೋಕಸಭೆಯ ಚುನಾವಣೆಯ ಹಿನ್ನಲೆಯಲ್ಲಿ ರಾಜಕಾರಣಿಗಳು, ಮರಿ ಪುಡಾರಿಗಳು ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಜನರಿಗೆ ಸಮಸ್ಯೆ ಅರಿವಾಗದಂತೆ ಪರಿಸ್ಥಿತಿ ನಿಭಾಯಿಸಿದ್ದರು.ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೂ ಚುನಾವಣೆ ಮುಗಿಯುತ್ತಿದ್ದಂತೆ ನೀರಿನ ಸಮಸ್ಯೆ ತೀವ್ರವಾಗಲಾರಂಭಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಕೆಂಚಾಪುರ ಗ್ರಾಮದಲ್ಲಿ ಒಂದು ಬಿಂದಿಗೆ ನೀರಿಗಾಗಿ ಬೆಳಗ್ಗೆಯಿಂದ ಮಧ್ಯರಾತ್ರಿಯವರೆಗೂ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಇದೆ. +ಕಳೆದ ಎರಡು ದಿನಗಳಿಂದಲೂ ಇದೇ ವಾತಾವರಣವಿದ್ದು, ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ. ರಸ್ತೆಯ ಉದ್ದಗಲಕ್ಕೂ ಖಾಲಿ ಕೊಡಗಳನ್ನು ಸಾಲು ಸಾಲಾಗಿ ಜೋಡಿಸಿದ್ದು, ಟ್ಯಾಂಕರ್ ಬರುವಿಕೆಗಾಗಿ ಚಾತಕಪಕ್ಷಿಯಂತೆ ಕಾದು ಬಳಿಕ ನೀರು ಪಡೆದುಕೊಳ್ಳುವ ಪರಿಸ್ಥಿತಿ ಇದೆ. ನಿನ್ನೆ ಮಧ್ಯರಾತ್ರಿಯ ಬಳಿಕ ಟ್ಯಾಂಕರ್ ಬಂದಿದ್ದು, ಆವರೆಗೂ ಮಹಿಳೆಯರು ಕಾದು ಕುಳಿತಿದ್ದ ದಯಾನೀಯ ಸ್ಥಿತಿ ಕರುಳು ಹಿಂಡುವಂತಿತ್ತು. +ಕೆಲವು ಕಡೆ ಮಳೆ ಸುರಿಯುತ್ತಿದೆಯಾದರೂ ನೀರಿನ ಬವಣೆ ನೀಗಿಲ್ಲ. ಕೆರೆಕಟ್ಟೆಗಳಿಗೆ ನೀರು ತುಂಬಿಕೊಂಡು ಅಂರ್ತಜಲ ಚೇತರಿಕೆಯಾಗಿ ಬತ್ತಿ ಹೋಗಿರುವ ಕೊಳವೆ ಬಾವಿಗಳು ಮರುಜೀವ ಪಡೆಯಲು ಕಾಲಾವಕಾಶದ ಅಗತ್ಯವಿದೆ. ಮಳೆ ಇನ್ನೆರಡು ವಾರ ನಿಂತರವಾಗಿ ಸುರಿದರೆ ನೀರಿನ ಸಮಸ್ಯೆ ತಗ್ಗುವ ನಿರೀಕ್ಷೆ ಇದೆ. ಬಯಲುಸೀಮೆ ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಈಗಲೂ ಕುಡಿಯುವ ನೀರಿಗಾಗಿ ಹಾಹಾಕಾರ ಮುಂದುವರೆದಿದೆ. +ಚುನಾವಣೆ ಮುಗಿಯುತ್ತಿದ್ದಂತೆ ಜನರ ಸಮಸ್ಯೆಗಳತ್ತ ಕಣ್ಣೆತ್ತಿ ನೋಡದ ರಾಜಕೀಯ ನಾಯಕರ ವಿರುದ್ಧ ಜನಸಾಮಾನ್ಯರು ಕೆಂಡ ಕಾರುತ್ತಿದ್ದಾರೆ. \ No newline at end of file diff --git a/eesanje/url_46_149_1.txt b/eesanje/url_46_149_1.txt new file mode 100644 index 0000000000000000000000000000000000000000..d674facfb7181f1968e544327a1b85ac5ed1574a --- /dev/null +++ b/eesanje/url_46_149_1.txt @@ -0,0 +1,7 @@ +ಪರಿಷತ್‌ ಚುನಾವಣೆ : 2 ಕ್ಷೇತ್ರಗಳಲ್ಲಿ ಜೆಡಿಎಸ್‌‍ ಸ್ಪರ್ಧೆ.. ? +ಬೆಂಗಳೂರು, ಮೇ 11-ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ತಿನ ಆರು ಕ್ಷೇತ್ರಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದ್ದು, ಜೆಡಿಎಸ್‌‍ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ. +ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ 25 ಹಾಗೂ ಜೆಡಿಎಸ್‌‍ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು. ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಜೂನ್‌ 3ರಂದು ಮತದಾನ ನಡೆಯಲಿದೆ. +ಇನ್ನೂ ಉಭಯ ಪಕ್ಷಗಳ ನಡುವೆ ಮೇಲನೆಯ ಚುನಾವಣೆಯ ಕ್ಷೇತ್ರಗಳ ಹಂಚಿಕೆ ಪ್ರಕ್ರಿಯೆ ಅಂತಿಮಗೊಂಡಿಲ್ಲ. ಜೆಡಿಎಸ್‌‍ ಎರಡು ಶಿಕ್ಷಕರ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಉಳಿದ ನಾಲ್ಕು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಿದೆ. +ಜೆಡಿಎಸ್‌‍ನಿಂದ ಸ್ಪರ್ಧಿಸಿ ಚುನಾಯಿತರಾಗಿದ್ದ ಮರಿತಿಬ್ಬೇಗೌಡ ಅವರು ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್‌‍ ತೊರೆದು ಕಾಂಗ್ರೆಸ್‌‍ ಸೇರಿದ್ದಾರೆ. ಹೀಗಾಗಿ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌‍ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.ಈ ಕ್ಷೇತ್ರದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ವಿವೇಕಾನಂದ ಎಂಬುವರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಇವರಿಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸುವ ಉದ್ದೇಶವಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ವಿಧಾನ ಪರಿಷತ್‌ ಸದಸ್ಯರಾಗಿರುವ ಎಸ್‌‍.ಎಲ್‌ ಭೋಜೇಗೌಡ ಅವರು, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮರು ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ. ಬಿಜೆಪಿ ನಾಯಕರೊಂದಿಗೆ ಮೈತ್ರಿ ಮಾತುಕತೆ ಅಂತಿಮಗೊಂಡ ಬೆನ್ನಲ್ಲೇ ಜೆಡಿಎಸ್‌‍ ನಾಯಕರು ಸಭೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. +ಬೆಂಗಳೂರು ಪದವೀಧರ ಕ್ಷೇತ್ರದಿಂದಲೂ ಜೆಡಿಎಸ್‌‍ನಿಂದ ಸ್ಪರ್ಧಿಸಲು ಹಲವು ಆಕಾಂಕ್ಷಿಗಳಿದ್ದಾರೆ. ಆದರೆ, ಈ ಕ್ಷೇತ್ರದಲ್ಲಿ ಹಾಲಿ ವಿಧಾನ ಪರಿಷತ್‌ ಸದಸ್ಯರು ಇರುವುದರಿಂದ ಜೆಡಿಎಸ್‌‍ಗೆ ಈ ಕ್ಷೇತ್ರ ಬಿಟ್ಟುಕೊಡುವ ಸಾಧ್ಯತೆ ಇಲ್ಲವೆಂದೇ ಹೇಳಲಾಗುತ್ತಿದೆ. \ No newline at end of file diff --git a/eesanje/url_46_149_10.txt b/eesanje/url_46_149_10.txt new file mode 100644 index 0000000000000000000000000000000000000000..5263eb63820fff4c43623b7a77002fc735a12fd2 --- /dev/null +++ b/eesanje/url_46_149_10.txt @@ -0,0 +1,8 @@ +ಗಗನಕ್ಕೇರಿದ ವೀಳ್ಯದೆಲೆ ಬೆಲೆ +ಬೆಂಗಳೂರು, ಮೇ 11-ಶುಭಕಾರ್ಯಗಳಲ್ಲಿ ವೀಳ್ಯದೆಲೆ ಅಗ್ರಗಣ್ಯ ಸ್ಥಾನ ಪಡೆದಿದ್ದು, ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬೆಳೆಗಾರರಿಗೆ ಲಾಭವಾಗುತ್ತಿದ್ದರೆ ಗ್ರಾಹಕರಿಗೆ ಹೊರೆಯಾಗುತ್ತಿದೆ. +ಮೇ ತಿಂಗಳಲ್ಲಿ ಶುಭಕಾರ್ಯಗಳು ಹೆಚ್ಚಾಗಿ ನಡೆಯಲಿದ್ದು, ಬೇಡಿಕೆ ಹೆಚ್ಚಾದ ಬೆನ್ನಲ್ಲೆ ಬೆಲೆಯೂ ಸಹ ಹೆಚ್ಚಳವಾಗುತ್ತಿದೆ. ಪ್ರತಿ ಮೆನೆಗಳಲ್ಲೂ ಪೂಜಾಕಾರ್ಯ, ಕಳಶಕ್ಕೆ ಎಲೆಗಳನ್ನು ಬಳಸುತ್ತಾರೆ. ಈ ಋತುವಿನಲ್ಲಿ ಮದುವೆ, ಗೃಹಪ್ರವೇಶ, ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಲಿವೆ. ಈ ಸಮಯದಲ್ಲಿ ಎಲ್ಲಾ ಪೂಜಾ ವಸ್ತುಗಳಿಗಿಂತ ವೀಳ್ಯದೆಲೆ ಎದ್ದು ಕಾಣಿಸುತ್ತದೆ. +ಬರ, ಹವಾಮಾನ ವೈಪರೀತ್ಯ, ರೋಗಬಾಧೆ, ಕಾರ್ಮಿಕರ ಸಮಸ್ಯೆಯಿಂದ ಇಳುವರಿ ಕುಂಠಿತವಾಗಿ ಬೇಡಿಕೆ ಹೆಚ್ಚಾದ ಪರಿಣಾಮ ಬೆಲೆ ಏರಿಕೆಯಾಗಿದೆ. ಒಂದು ಪೆಂಡಿಯಲ್ಲಿ 100 ಎಲೆಗಳ 100 ಕಟ್ಟುಗಳನ್ನಾಗಿ ಮಾಡಿ ಮಾರಾಟ ಮಾಡಲಾಗುತ್ತದೆ. ಪ್ರಸ್ತುತದಲ್ಲಿ ಒಂದು ಪೆಂಡಿ 12 ರಿಂದ 16 ಸಾವಿರದವರೆಗೂ ಮಾರುಕಟ್ಟೆಯಲ್ಲಿ ಬೆಲೆ ಇದೆ. ಅಂದರೆ ಬೆಳೆಗಾರರಿಗೆ ಒಂದು ಎಲೆಗೆ ಒಂದೂವರೆ ರೂ. ಸಿಗುತ್ತದೆ. ಚಿಲ್ಲರೆಯಾಗಿ ಒಂದು ಎಲೆ ಮೂರರಿಂದ ನಾಲ್ಕು ರೂ. ಚಿಲ್ಲರೆಯಾಗಿ ಮಾರಾಟವಾಗುತ್ತಿದೆ. ಕಟ್ಟಿನ ಲೆಕ್ಕದಲ್ಲಿ ನೋಡೋದಾದ್ರೆ ಉತ್ತಮ ಗುಣಮಟ್ಟದ ಅಂಬಾಡಿ ಎಲೆ 150 ರೂ. ಇದೆ. +ಇಲ್ಲಿ ಬೆಳೆಗಾರರಿಗೆ ಅಷ್ಟೆನೂ ಲಾಭ ಸಿಗುತ್ತಿಲ್ಲ. ಮಾರಾಟಗಾರರಿಗೆ, ಮಂಡಿಯವರಿಗೆ ಮಾತ್ರ ಲಾಭವಾಗುತ್ತಿದೆ. ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ, ಕೊರಟಗೆರೆ, ಭಾಗದಲ್ಲಿ ಒಂದು ಕಾಲದಲ್ಲಿ ಎಲೆ ತೋಟಗಳು ಹೆಚ್ಚಾಗಿ ಕಾಣ ಸಿಗುತ್ತಿದ್ದವು. ನೀರಿನ ಕೊರತೆ, ರೋಗ, ಕೂಲಿಯಾಳುಗಳ ಸಮಸ್ಯೆಯಿಂದ ಇಂದು ತೋಟಗಳಲ್ಲಿ ಎಲೆ ಅಂಬು ಕಾಣಸಿಗದಾಗಿದೆ. +ವೀಳ್ಯದೆಲೆ ಬಳ್ಳಿಯನ್ನು ಪ್ರತಿ ವರ್ಷ ಭೂಮಿಯೊಳಗೆ ರಿಂಗ್‌ ಮಾದರಿಯಲ್ಲಿ ಅಗಿಯಬೇಕು. ಇದಕ್ಕೆ ನುರಿತ ಕಾರ್ಮಿಕರು ಬೇಕು. ಇಂದಿನ ದಿನಗಳಲ್ಲಿ ಬಳ್ಳಿ ಅದಿಯುವವರು ಸಿಗುತ್ತಿಲ್ಲ. ಜತೆಗೆ ಎಲೆಗಳನ್ನು ಕೊಯ್ಯಲು ಕೆಲ ನಿಯಮಗಳು ಇವೆ. ಆದರೆ ಇಂದಿನ ದಿನಗಳಲ್ಲಿ ಹಲವಾರು ಸಮಸ್ಯೆಗಳಿಂದ ಬೆಳೆ ಬೆಳೆಯಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ಬೆಳೆ ಇಲ್ಲದೆ ಬೆಲೆ ಹೆಚ್ಚಳವಾಗಿದೆ. +ಈ ಬಾರಿ ದಾಖಲೆಯ ಉಷ್ಣಾಂಶದಿಂದ ಬಳ್ಳಿಯಲ್ಲಿ ಎಲೆ ಕಚ್ಚದೆ ಮುದುಡುತ್ತಿವೆ. ನೀರಿನ ಕೊರತೆಯಿಂದ ಇಳುವರಿ ಕುಂಠಿತವಾಗಿ ತಿಂಗಳಿಗೆ 10 ರಿಂದ 15 ಪೆಂಡಿ ಎಲೆ ಮಾರುಕಟ್ಟೆಗೆ ಸರಬರಾಜು ಮಾಡುತ್ತಿದ್ದೆ. ಆದರೆ ಈಗ ಕೇವಲ 5 ರಿಂದ 6 ಪೆಂಡಿ ಮಾತ್ರ ಮಾರಾಟ ಮಾಡುತ್ತಿದ್ದೇನೆ ಎಂದು ತುಮಕೂರು ಜಿಲ್ಲೆ ಕೊರಟಗೆರೆಯ ರೈತ ಬಸವರಾಜು ತಿಳಿಸಿದ್ದಾರೆ. +ಈ ಬಾರಿ ಉತ್ತಮ ಮಳೆಯಾಗಿ ಇಳುವರಿ ಬಂದರೆ ಮಾತ್ರ ಬೆಲೆ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಬೆಲೆ ಕಡಿಮೆಯಾಗದು ಎಂದು ವ್ಯಾಪಾರಿ ಭದ್ರಣ್ಣ ತಿಳಿಸಿದ್ದಾರೆ. \ No newline at end of file diff --git a/eesanje/url_46_149_11.txt b/eesanje/url_46_149_11.txt new file mode 100644 index 0000000000000000000000000000000000000000..df78a01db241875a221fdd6b285d30ea095779fd --- /dev/null +++ b/eesanje/url_46_149_11.txt @@ -0,0 +1,4 @@ +ಪರಿಷತ್‌ ಚುನಾವಣೆಯಲ್ಲಿ ಬಲಗೈ ತೋರು ಬೆರಳಿಗೆ ಶಾಯಿ ಗುರುತು +ಬೆಂಗಳೂರು, ಮೇ11-ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುವುದು. +ಪರಿಷತ್ತಿನ ಮೂರು ಪದವೀಧರರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಜೂನ್‌ 3 ರಂದು ಮತದಾನ ನಡೆಯಲಿದೆ. ಮತದಾನದ ದಿನದಂದು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಮತದಾರರ ಬಲಗೈನ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಗುತ್ತದೆ ಎಂದು ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. +ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಹಾಗೂ ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗಿತ್ತು. \ No newline at end of file diff --git a/eesanje/url_46_149_12.txt b/eesanje/url_46_149_12.txt new file mode 100644 index 0000000000000000000000000000000000000000..10aaee43f9e65e8830af2a7f951046b894576134 --- /dev/null +++ b/eesanje/url_46_149_12.txt @@ -0,0 +1,9 @@ +ಪೆನ್‌ಡ್ರೈವ್‌ ವಿಚಾರದಲ್ಲಿ ಕೀಳು ರಾಜಕಾರಣದ ವಿರುದ್ಧ ಬೇಸತ್ತ ಜನ, ವ್ಯಾಪಕ ಆಕ್ರೋಶ +ಬೆಂಗಳೂರು,ಮೇ11-ದೇಶಾದ್ಯಂತ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿರುವ ಬೆನ್ನಲ್ಲೇ ಹಾಸನ ಸಂಸದ ರೇವಣ್ಣ ಅವರ ಅಶ್ಲೀಲ ಆಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಬದಲು ರಾಜಕೀಯ ಪಕ್ಷಗಳ ಕೆಸರೆರಚಾಟಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದರಲ್ಲೂ ಇದು ಸಾಮಾಜಿಕ ಜಾಲತಾಣಗಳ ಯುಗ. ಆಡಳಿತ ಮತ್ತು ಪ್ರತಿಪಕ್ಷ ಯಾವುದನ್ನೂ ಲೆಕ್ಕಿಸದೆ ಪ್ರತಿಯೊಂದನ್ನು ಸೂಕ್ಷ್ಮವಾಗಿ ಗಮನಿಸಿ ರಾಜಕಾರಣಿಗಳಿಗೆ ಛೀಮಾರಿ ಹಾಕುತ್ತಿದ್ದಾರೆ. +ಪ್ರಜ್ವಲ್‌ ಪ್ರಕರಣ ದಿನ ಕಳೆದಂತೆ ಒಂದೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಅವರ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇನ್ನೊಂದೆಡೆ ಅವರ ತಂದೆ ಎಚ್‌.ಡಿ.ರೇವಣ್ಣ ಈಗಾಗಲೇ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಅವರ ತಾಯಿ ಭವಾನಿ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ಜಾರಿ ಮಾಡಿದೆ. +ಅಸಲಿಗೆ ಪೆನ್‌ಡ್ರೈವ್‌ನಲ್ಲಿ ಎಷ್ಟು ಮಹಿಳೆಯರು ಇದ್ದಾರೆ ಎಂಬ ವಾಸ್ತವ ಯಾರಿಗೂ ಗೊತ್ತಿಲ್ಲ. ಎಲ್ಲವೂ ಅಂತೆಕಂತೆಗಳ ಮೇಲೆಯೇ ಚರ್ಚೆಯಾಗುತ್ತಿದೆ. ಪ್ರಾರಂಭದಲ್ಲಿ 2,960 ನೊಂದ ಸಂತ್ರಸ್ತ ಮಹಿಳೆಯರು ಇದ್ದಾರೆ ಎಂಬ ಗುಸುಗುಸು ಹಬ್ಬಿತ್ತು.ಕೆಲವು ವಿಡಿಯೋಗಳು ಹೊರಬಂದವು. ಆ ವೇಳೆಗೆ ಎಸ್‌‍ಐಟಿ ಇಂತಹ ಅಶ್ಲೀಲ ಆಡಿಯೋಗಳನ್ನು ಯಾರಾದರೂ ಹಂಚಿಕೊಂಡರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟ ನಂತರ ಪೆನ್‌ಡ್ರೈವ್‌ ಚರ್ಚೆ ಒಂದು ಹಂತಕ್ಕೆ ನಿಂತಿತು. +ಆದರೆ ಯಾವಾಗ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಪ್ರಜ್ವಲ್‌ ರೇವಣ್ಣ ಮತದಾನ ಮುಗಿದ ಬಳಿಕ ಬಂಧನದ ಭೀತಿಯಿಂದ ವಿದೇಶಕ್ಕೆ ಪರಾರಿಯಾದರೋ ಅಲ್ಲಿಂದ ಆರಂಭವಾದ ರಾಜಕೀಯ ಕೆಸರೆರಾಚಾಟ ಈ ಕ್ಷಣದವರೆಗೂ ನಿಂತಿಲ್ಲ. ಅವರನ್ನು ಸ್ವದೇಶಕ್ಕೆ ಕರೆತರಲು ಸರ್ಕಾರ ರೆಡ್‌ ಕಾರ್ನರ್‌, ಬ್ಲೂ ಕಾರ್ನರ್‌ ನೋಟಿಸ್‌‍ ಸೇರಿದಂತೆ ಎಲ್ಲಾ ರಾಜತಾಂತ್ರಿಕ ಮಾರ್ಗಗಳ ಮೂಲಕ ಕಾನೂನಿನ ಕುಣಿಕೆಯನ್ನು ಬಿಗಿ ಮಾಡಿದೆ. ಈಗ ಎಲ್ಲೆಡೆ ಕೇಳಿಬರುತ್ತಿರುವ ಒಂದೇ ಮಾತೆಂದರೆ ಪ್ರಜ್ವಲ್‌ ಎಲ್ಲಿದ್ದೀಯಪ್ಪಾ?.. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗುತ್ತಿದೆ. +ಬೆಂಗಳೂರಿನಿಂದ ತೆರಳಿದ ಮೇಲೆ ಫ್ರಾಂಕ್‌ಫರ್ಟ್‌, ದುಬೈ ಹೀಗೆ ಹಲವು ರಾಷ್ಟ್ರಗಳಲ್ಲಿ ವಾಸ್ತವ್ಯಹೂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಅಸಲಿಗೆ ಪ್ರಜ್ವಲ್‌ ಎಲ್ಲಿದ್ದಾನೆ ಎಂಬ ಕಟುಸತ್ಯ ಯಾರಿಗೂ ಗೊತ್ತಿಲ್ಲ.ಇದರ ನಡುವೆ ಕಾಂಗ್ರೆಸ್‌‍, ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಪ್ರಕರಣವನ್ನು ತಮ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ತುತ್ತಾಗಿದೆ. +ಪ್ರಜ್ವಲ್‌ ರೇವಣ್ಣ ಅವರಿಂದ ಅನ್ಯಾಯಕ್ಕೊಳಗಾದ ಮಹಿಳೆಯರಿಗೆ ನ್ಯಾಯ ಒದಗಿಸಿಕೊಡುವ ಉದ್ದೇಶ ಯಾರೊಬ್ಬರಿಗೂ ಇಲ್ಲ. ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ತಮಗೆ ಎಷ್ಟು ಲಾಭವಾಗಬಹುದು ಎಂಬುದನ್ನೇ ಮುಖ್ಯ ಅಂಶ ಮಾಡಿಕೊಂಡಿದ್ದಾರೆ. ಈಗಾದರೆ ನಿಜವಾಗಿಯೂ ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗುವುದಾದರೂ ಹೇಗೆ ಎಂಬ ಮೂಲಭೂತ ಪ್ರಶ್ನೆ ಎದುರಾಗಿದೆ. +ಇಂತಹ ಘಟನೆಗಳು ಸಮಾಜದ ಮೇಲೆ ಖಂಡಿತಾ ಪರಿಣಾಮ ಬೀರುತ್ತದೆ. ಇಲ್ಲಿ ಜನಪ್ರತಿನಿಧಿ ತನ್ನ ಜವಾಬ್ದಾರಿಯನ್ನು ಮರೆತು ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಾನೆ. ಮತ್ತೊಂದು ಕಡೆಯಲ್ಲಿ ಈ ವಿಡಿಯೋ ರಾಜಕೀಯ ದಾಳವಾಗಿ ಬಳಕೆಯಾಗುತ್ತಿದೆ. ಇಲ್ಲಿ ಹೆಣ್ಣನ್ನು ಸರಕಾಗಿ ಹೇಗೆ ಸಮಾಜ ಬಳಕೆ ಮಾಡುತ್ತಿದೆ ಎಂಬುವುದರ ದೋತ್ಯಕವಾಗಿದೆ ಎಂಬ ಮಾತು ಕೇಳಿಬರುತ್ತಿದೆ. +ಸರ್ಕಾರದ ಮುಂದಿನ ಸವಾಲೇನು?:ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಂದೆ ಬಹುದೊಡ್ಡ ಸವಾಲಿದೆ. ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ಸಂತ್ರಸ್ತೆಯ ರಕ್ಷಣೆಗೂ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಪ್ರಕರಣವನ್ನು ರಾಜಕೀಯವಾಗಿ ನೋಡದೆ ಸಾಮಾಜಿಕ ಆಯಾಮದಲ್ಲಿ ನೋಡಬೇಕಾಗಿದೆ. ಸದ್ಯ ಎಸ್‌‍ಐಟಿ ವಿಡಿಯೋ ಹಂಚಿಕೆ ವಿಚಾರವಾಗಿ ಕೆಲವೊಂದು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಇದು ಕೇವಲ ಪತ್ರಿಕಾ ಹೇಳಿಕೆಗಳ ಬಿಡುಗಡೆಗಷ್ಟೇ ಸೀಮಿತವಾಗಬಾರದು. ಬದಲಾಗಿ ಕ್ರಮದ ಮೂಲಕ ಸಾಬೀತುಪಡಿಸಬೇಕಾಗಿದೆ. \ No newline at end of file diff --git a/eesanje/url_46_149_2.txt b/eesanje/url_46_149_2.txt new file mode 100644 index 0000000000000000000000000000000000000000..e0bf4c4b666efc4de6b94e3be549092275d98a1e --- /dev/null +++ b/eesanje/url_46_149_2.txt @@ -0,0 +1,4 @@ + ಅಧಿಕಾರಿ ಪತ್ನಿ, ಹೈಕೋರ್ಟ್ ವಕೀಲೆ ಆತ್ಮಹತ್ಯೆ +ಬೆಂಗಳೂರು, ಮೇ 11- ಕೆ.ಎ.ಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. +ವೃತ್ತಿಯಲ್ಲಿ ವಕೀಲೆಯಾಗಿರುವ ಚೈತ್ರಾ ಗೌಡ ಅವರ ಮೃತದೇಹ ಗೆದ್ದಲಹಳ್ಳಿಯ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಕೆ.ಎ.ಎಸ್ ಅಧಿಕಾರಿ, ಹೈಕೋರ್ಟ್ ವಕೀಲೆಯಾಗಿದ್ದರೂ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳಲು ಕಾರಣವೇನು? ಎಂಬುದೇ ನಿಗೂಢವಾಗಿದೆ. +ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಮಗ ಕೂಡ ಇದ್ದಾನೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಚೈತ್ರಾ ಗೌಡ ಈಗ ಇದ್ದಕ್ಕಿದ್ದಂತೆ ಸಂಜಯ್ ನಗರದ ಮನೆಯಲ್ಲಿ ಬೆಡ್ ರೂಮ್ ನಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ. ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ \ No newline at end of file diff --git a/eesanje/url_46_149_3.txt b/eesanje/url_46_149_3.txt new file mode 100644 index 0000000000000000000000000000000000000000..12ee43158ee0a9fa141d0728d9967cd86ded8fb6 --- /dev/null +++ b/eesanje/url_46_149_3.txt @@ -0,0 +1,6 @@ +ಲೋಕಸಭೆ ಟಿಕೆಟ್ ಅನ್ಯಾಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಪ್ರತಾಪ ಸಿಂಹ +ಮೈಸೂರು,ಮೇ11-ಸ್ವಂತ ಪರಿಶ್ರಮದ ಮೂಲಕ ರಾಜಕೀಯವಾಗಿ ಉನ್ನತಿ ಸಾಧಿಸಿದ ಪೀಳಿಗೆ, ಮುಂದಿನ ದಿನಗಳಲ್ಲಿ ಕಾಣಸಿಗುವುದು ಕಷ್ಟಸಾಧ್ಯ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. +ಮೈಸೂರಿನಲ್ಲಿ ನಡೆದ ರಾಜಕೀಯ ಮುತ್ಸದ್ದಿ ಶ್ರೀನಿವಾಸ್‌‍ ಪ್ರಸಾದ್‌ ಅವರ ಶ್ರದ್ದಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಸಚಿವ ಶ್ರೀನಿವಾಸ್‌‍ ಪ್ರಸಾದ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೆಲದಿಂದ ಎದ್ದು ಬಂದು ಸ್ವಂತ ಶಕ್ತಿ ಹಾಗೂ ಹೋರಾಟದ ಹಿನ್ನಲೆಯಿಂದ ಬೆಳೆದು ರಾಜಕಾರಣದಲ್ಲಿ ಪ್ರಭುತ್ವ ಸಾಧಿಸಿ ರಾಜ್ಯವನ್ನು ಆಳಿದ್ದಾರೆ ಮತ್ತು ಆಳುತ್ತಿದ್ದಾರೆ. ಸ್ವಂತ ಶಕ್ತಿಯಿಂದ ಬೆಳೆದು ಬಂದು ಅಧಿಕಾರ ಹಿಡಿದು ಜನರ ಬಗ್ಗೆ ಯೋಚಿಸಿ ಆಡಳಿತ ನಡೆಸಿದ ಪೀಳಿಗೆ ಬಹುಶಃ ಇದೇ ಕೊನೆ ಇರಬಹುದು ಎಂದರು. +ಪ್ರಸ್ತುತ ರಾಜಕಾರಣದಲ್ಲಿ ಒಂದಿಲ್ಲ ಒಂದು ಶಕ್ತಿಯಿಂದಲೇ ಅವಕಾಶ ಪಡೆದುಕೊಂಡ ಪೀಳಿಗೆಯೇ ಉಳಿದಿದೆ. ಹಿರಿಯ ನಾಯಕರು ನಮಗೆ ಮೇಲ್ಪಂಕ್ತಿ ಎಂದು ಹೇಳುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ತಮಗಾದ ಅನ್ಯಾಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದರು. ಗ್ರಾಮಪಂಚಾಯ್ತಿ ಸದಸ್ಯರಿಂದ ಎಲ್ಲರು ನನ್ನನ್ನು ಟೀಕಿಸಿದ್ದಾರೆ. +ಆದರೆ ಶ್ರೀನಿವಾಸ್‌‍ ಪ್ರಸಾದ್‌ ಅವರು ಸಾರ್ವಜನಿಕವಾಗಿ ನನ್ನ ಬಗ್ಗೆ ಸಣ್ಣ ಟೀಕೆಯನ್ನೂ ಮಾಡಲಿಲ್ಲ. ಹದ್ದುಮೀರಿದ ಹೇಳಿಕೆಗಳನ್ನು ನೀಡಿದಾಗಲೂ ಕರೆದು ನಾಲ್ಕು ಗೋಡೆಗಳ ಮಧ್ಯೆ ನನಗೆ ಬುದ್ದಿ ಹೇಳಿದ್ದಾರೆ. ಅವರನ್ನು ಕಳೆದುಕೊಂಡಾಗ ತಂದೆ ಸಮಾನರಾದವರನ್ನು ಕಳೆದುಕೊಂಡ ನೋವು ಕಾಡಿತ್ತು ಎಂದರು. +ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಾಪ್‌ ಸಿಂಹ ಹಾಡಿ ಹೊಗಳಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಎಚ್‌.ಸಿ.ಮಹದೇವಪ್ಪ , ಮಾಜಿ ಸಚಿವ ಪಿಜಿಆರ್‌ ಸಿಂಧ್ಯಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_149_4.txt b/eesanje/url_46_149_4.txt new file mode 100644 index 0000000000000000000000000000000000000000..1d7ff5aca0ab15186daa6f041556c9b9d0e60ee0 --- /dev/null +++ b/eesanje/url_46_149_4.txt @@ -0,0 +1,9 @@ +ಪೆನ್‌ಡ್ರೈವ್‌ ಪ್ರಕರಣ ಮುಚ್ಚಿ ಹಾಕಲು ಸಿಬಿಐ ತನಿಖೆಗೆ ಒಪ್ಪಿಸಬೇಕೇ..? : ಪಾಟೀಲ್‌ ಪ್ರಶ್ನೆ +ಬೆಂಗಳೂರು,ಮೇ 11-ಪೆನ್‌ಡ್ರೈವ್‌ ಪ್ರಕರಣದಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಷಾ ನಿರ್ದೇಶನ ನೀಡಿದ್ದು ಎಂದು ಬಂಧಿತ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿಕೊಂಡಿರುವ ಆಡಿಯೋ ಸಾಕ್ಷ್ಯ ಲಭ್ಯವಿದೆ. ಹೀಗಿರುವಾಗ ಪ್ರಕರಣವನ್ನು ಮುಚ್ಚಿ ಹಾಕಲು ಸಿಬಿಐ ತನಿಖೆಗೆ ಒತ್ತಾಯಿಸಲಾಗುತ್ತಿದೆಯೇ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. +ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಈಗಾಗಲೇ ಎಸ್‌‍ಐಟಿ ತನಿಖೆಗೆ ವಹಿಸಲಾಗಿದೆ. ನಮ ರಾಜ್ಯದ ಅಧಿಕಾರಿಗಳು ಸಮರ್ಥರಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೂ ಕಾದುನೋಡಬೇಕಿದೆ ಎಂದರು. +ಸಿಬಿಐ ಎಂಬುದು ಬಿಜೆಪಿಯ ವಾಷಿಂಗ್‌ ಮಿಷಿನ್‌ ಇದ್ದಂತೆ. ಅಲ್ಲಿಗೆ ಹಾಕಿ ಆರೋಪಿಗಳನ್ನು ಸಿದ್ಧಗೊಳಿಸಿಕೊಳ್ಳುವುದು ಬಿಜೆಪಿಯ ಹುನ್ನಾರ. ಅದಕ್ಕಾಗಿಯೇ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳುತ್ತಿರಬಹುದು ಎಂದು ಹೇಳಿದರು. ಪ್ರಜ್ವಲ್‌ ರೇವಣ್ಣ ಖುದ್ದು ಶರಣಾಗುವುದು ಸೂಕ್ತ. ಈಗಾಗಲೇ ಲುಕೌಟ್‌ ನೋಟಿಸ್‌‍ ಜಾರಿಯಾಗಿದೆ. ಹೊರ ದೇಶದಲ್ಲಿ ಅಡಗಿರುವ ಅವರನ್ನು ಕರೆತರಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. +ಸರ್ಕಾರ ಪತನ ಅಸಾಧ್ಯ:ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ ನಾಯಕ ಕುಮಾರಸ್ವಾಮಿ ಅವರ ಅಭಿಪ್ರಾಯ ರಾಜಕೀಯ ಪ್ರೇರಿತ ಹೇಳಿಕೆ. ಇದು ಅಸಾಧ್ಯದ ಮಾತು ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ 3ನೇ 2ರಷ್ಟು ಶಾಸಕರನ್ನು ಬಿಜೆಪಿ ಸೆಳೆದುಕೊಂಡು ಮಹಾ ವಿಕಾಸ ಅಘಾಡಿ ಸರ್ಕಾರವನ್ನು ಪತನಗೊಳಿಸಿತ್ತು. +ಆದರೆ ಕರ್ನಾಟಕದಲ್ಲಿ ಆ ರೀತಿಯ ವಾತಾವರಣವಿಲ್ಲ. ಇಲ್ಲಿ ಕಾಂಗ್ರೆಸ್‌‍ ಸರ್ಕಾರವನ್ನು ತೆಗೆಯಬೇಕೆಂದರೆ 65 ಶಾಸಕರನ್ನು ಸೆಳೆಯಬೇಕು. ಬಿಜೆಪಿಯವರು 2ರಿಂದ 4 ಮಂದಿ ಕಾಂಗ್ರೆಸ್‌‍ ಶಾಸಕರನ್ನು ಸೆಳೆಯಲು ಪ್ರಯತ್ನಿಸಿದರೆ ಬಿಜೆಪಿ, ಜೆಡಿಎಸ್‌‍ನಿಂದ ಬಹಳಷ್ಟು ಮಂದಿ ಕಾಂಗ್ರೆಸ್‌‍ನತ್ತ ವಲಸೆ ಬರುವ ಸಾಧ್ಯತೆ ಇದೆ. +ಬಿಜೆಪಿಯ ಹಲವು ಮಂದಿ ನಮ್ಮ ಸಂಪರ್ಕದಲ್ಲಿದ್ದಾರೆ, ಇನ್ನು ಜೆಡಿಎಸ್‌‍ ಮುಳುಗುವ ಹಡಗು. ಈ ಕಡೆಯಿಂದ ಶಾಸಕರು ಆ ಕಡೆಗೆ ವಲಸೆ ಹೋಗುವ ಸಾಧ್ಯತೆ ಕಡಿಮೆ ಇದೆ. ಆದರೆ ಆ ಕಡೆಯಿಂದ ಈ ಕಡೆಗೆ ಬರುವವರ ಸಂಖ್ಯೆ ಹೆಚ್ಚಿದೆ ಎಂದು ವಿವರಿಸಿದರು. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಆ ಪಕ್ಷದ ಬಹಳಷ್ಟು ಮಂದಿ ಅಸಮಾಧಾನಗೊಂಡಿದ್ದಾರೆ. ಜೆಡಿಎಸ್‌‍ನಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಹಲವು ನಾಯಕರು ನಾವು ಕರೆಯದೇ ಇದ್ದರೂ ನಮ್ಮ ಪಕ್ಷಕ್ಕೆ ಬರಲು, ನಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ತುದಿಗಾಲಲ್ಲಿ ನಿಂತಿದ್ದರು ಎಂದು ಪ್ರತಿಪಾದಿಸಿದರು. +ರಾಜ್ಯದ ಬರ ಪರಿಹಾರಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ರಾಜ್ಯ ಸರ್ಕಾರ ಕಾನೂನು ಹೋರಾಟವನ್ನು ಮುಂದುವರೆಸಲಿದೆ. ಎನ್‌ಡಿಎಆರ್‌ಎಫ್‌, ಎಸ್‌‍ಡಿಆರ್‌ಎಫ್‌ ನಿಯಮದಡಿ ಪರಿಹಾರದ ಮೊತ್ತ ಅತ್ಯಲ್ಪ. ಹೀಗಿರುವಾಗ ರಾಜ್ಯ ಸರ್ಕಾರ 18 ಸಾವಿರ ಕೋಟಿ ಕೇಳಿದರೆ, ಕೇಂದ್ರ ಸರ್ಕಾರ ನ್ಯಾಯಾಲಯದ ಮಧ್ಯಪ್ರವೇಶದ ಬಳಿಕ ಮೂರೂವರೆ ಸಾವಿರ ಕೋಟಿ ರೂ. ಮಾತ್ರ ಕೊಟ್ಟಿದೆ. ಅದನ್ನು ರೈತರ ಖಾತೆಗಳಿಗೆ ಜಮೆಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಪೂರ್ಣ ಪ್ರಮಾಣದ ಪರಿಹಾರ ಪಡೆದುಕೊಳ್ಳಲು ನ್ಯಾಯಾಂಗ ಹೋರಾಟ ಮುಂದುವರೆಯಲಿದೆ ಎಂದು ನುಡಿದರು. \ No newline at end of file diff --git a/eesanje/url_46_149_5.txt b/eesanje/url_46_149_5.txt new file mode 100644 index 0000000000000000000000000000000000000000..07af6fc72c5c40be989720f44d3afbb7c4d269ac --- /dev/null +++ b/eesanje/url_46_149_5.txt @@ -0,0 +1,9 @@ +ಪೆನ್‌ಡ್ರೈವ್‌ ಪಾತ್ರಧಾರಿ ಪ್ರಜ್ವಲ್‌ ಪತ್ತೆ ಹಚ್ಚುವಲ್ಲಿ ಎಸ್‌‍ಐಟಿ ವಿಫಲ +ಬೆಂಗಳೂರು, ಮೇ 11-ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ತಲೆಮರೆಸಿಕೊಂಡು ಬರೋಬ್ಬರಿ 15 ದಿನಗಳಾಗಿವೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ ಅವರನ್ನು ಪತ್ತೆ ಹಚ್ಚಿ ಕರೆತರುವಲ್ಲಿ ವಿಶೇಷ ತನಿಖಾ ತಂಡ ಸಂಪೂರ್ಣ ವಿಫಲವಾಗಿದೆ. +ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಏ.27ರಂದು ಪ್ರಜ್ವಲ್‌ ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಪೆನ್‌ಡ್ರೈವ್‌, ಲೈಂಗಿಕ ದೌರ್ಜನ್ಯ ಪ್ರಕರಣದ ಪತ್ತೆಗೆ ಸರ್ಕಾರ ಬಿ.ಕೆ. ಸಿಂಗ್‌ ನೇತೃತ್ವ ದ ಎಸ್‌‍ಐಟಿ ತಂಡ ರಚನೆ ಮಾಡಿತ್ತು. ತನಿಖೆಗೆ ಇಳಿದ ಎಸ್‌‍ಐಟಿ ತಂಡ ಪ್ರಜ್ವಲ್‌ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿತ್ತಲ್ಲದೇ ಪ್ರಜ್ವಲ್‌ ಅವರಿಗೆ ಲುಕ್‌ಔಟ್‌ ನೋಟಿಸ್‌‍ ಜಾರಿ ಮಾಡಿತ್ತು. +ಎಲ್ಲಾ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಕಂಡು ಬಂದರೆ ಬಂಧಿಸುವಂತೆ ಸೂಚನೆ ಕೂಡ ಹೊರಡಿಸಲಾಗಿತ್ತು. ವಿದೇಶದಲ್ಲಿ ಇರುವುದರಿಂದ ತಕ್ಷಣದಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಳು ದಿನಗಳ ಕಾಲ ಕಾಲಾವಕಾಶ ನೀಡಬೇಕು ಎಂದು ತಮ ವಕೀಲರ ಮೂಲಕ ಎಸ್‌‍ಐಟಿ ಮುಂದೆ ಪ್ರಜ್ವಲ್‌ ಮನವಿ ಮಾಡಿದ್ದರು. +ಈ ಮನವಿ ಪುರಸ್ಕರಿಸದ ಎಸ್‌‍ಐಟಿ ತಂಡ ಮತ್ತೆ ನೋಟಿಸ್‌‍ ನೀಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿ ಸೂಚನೆ ನೀಡಿತ್ತು. ಕೇಂದ್ರ ಸರ್ಕಾರದ ನೆರವಿನೊಂದಿಗೆ ಬ್ಲೂಕಾರ್ನರ್‌ ನೋಟಿಸ್‌‍ ಜಾರಿ ಗೊಳಿಸಿ ಪ್ರಜ್ವಲ್‌ ಪತ್ತೆಗೆ ಪ್ರಯತ್ನ ನಡೆಸುತ್ತಿದೆ. ಆದರೂ ಪ್ರಜ್ವಲ್‌ ನಾಪತ್ತೆಯಾಗಿ 15 ದಿನಗಳಾದರೂ ಇನ್ನು ಸುಳಿವು ಸಿಕ್ಕಿಲ್ಲ. +ಪ್ರಜ್ವಲ್‌ ಅವರು ಈಗ ಬರುತ್ತಾರೆ, ಮಧ್ಯಾಹ್ನ ಬರುತ್ತಾರೆ, ನಾಳೆ ಬರುತ್ತಾರೆ, ಮೂರು ದಿನಗಳಲ್ಲಿ ಬರುತ್ತಾರೆ ಎಂದು ಪೊಲೀಸರು ಬೆಂಗಳೂರು, ಮಂಗಳೂರು, ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಲೇ ಇದ್ದಾರೆ.ಪ್ರಜ್ವಲ್‌ ಎಲ್ಲಿದ್ದಾರೆ ? ಯಾವ ದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ ?ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಯಾವ ಮಾಹಿತಿಯೂ ಈ ವರೆಗೆ ಲಭ್ಯವಾಗಿಲ್ಲ. +ಜರ್ಮನಿಗೆ ತೆರಳಿದ್ದಾರೆ, ದುಬೈಗೆ ಆಗಮಿಸಿದ್ದಾರೆ, ದುಬೈನಿಂದ ನೇರವಾಗಿ ಬೆಂಗಳೂರಿಗೆ ಬರುತ್ತಾರೆ ಎಂಬಿತ್ಯಾದಿ ವದಂತಿಗಳು ಮಾತ್ರ ಕೇಳಿ ಬರುತ್ತಿವೆ, ಈ ವರೆಗೆ ಪ್ರಜ್ವಲ್‌ ಪತ್ತೆಯಾಗಿಲ್ಲ. ಪ್ರಜ್ವಲ್‌ ಇರುವಿಕೆಯನ್ನು ಪತ್ತೆ ಮಾಡುವಲ್ಲಿ ಎಸ್‌‍ಐಟಿ ತಂಡ ಸಂಪೂರ್ಣ ವಿಫಲವಾಗಿದೆ. ಇತ್ತ ಪೆನ್‌ಡ್ರೈವ್‌ ಪ್ರಕರಣ ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. +ಮಹಿಳೆ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ತಂದೆ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. +ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಲವು ಸಂತ್ರಸ್ತ ಮಹಿಳೆಯರು ದೂರು ದಾಖಲಿಸಿದ್ದಾರೆ.ಒಟ್ಟಾರೆ ಈ ಪ್ರಕರಣ ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆಯುತ್ತಿದ್ದು ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನ ಪತ್ತೆ ಹಚ್ಚಿ ಯಾವಾಗ ಕರೆ ಎಂಬುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_149_6.txt b/eesanje/url_46_149_6.txt new file mode 100644 index 0000000000000000000000000000000000000000..3d0eb77ca95e9b1c03cdb16c5d49e3c048e9b958 --- /dev/null +++ b/eesanje/url_46_149_6.txt @@ -0,0 +1,7 @@ + ವಿದ್ಯಾರ್ಥಿನಿಯನ್ನು ಕೊಂದು ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಅರೆಸ್ಟ್ +ಕೊಡಗು. ಮೇ 11-ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಸೋಮವಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಮಿಯಾಲ ಗ್ರಾಮದ ಮೊನ್ನಂಡ ಪ್ರಕಾಶ್‌ (32) ಬಂಧಿತ ಆರೋಪಿ. +ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಗ್ರಾಮದ ನಿವಾಸಿ ಸುಬ್ರಹಣಿ ಎಂಬುವವರ ಪುತ್ರಿ ಮೀನಾ (16) ಜೊತೆ ಪ್ರಕಾಶ್‌ಗೆ ಮದುವೆ ನಿಶ್ಚಿಯವಾಗಿ ನಿಶ್ಚಿತಾರ್ಥವಾಗಿತ್ತು. ಅಪ್ರಾಪ್ತ ಬಾಲಕಿಗೆ ಬಾಲ್ಯವಿವಾಹ ಮಾಡಲಾಗುತ್ತಿದೆ ಎಂಬ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋಗಿ ಕುಟುಂಬದವರಿಗೆ ಮನವರಿಕೆ ಮಾಡಿ ಮದುವೆ ನಿಲ್ಲಿಸಿದ್ದರು. +ಇದರಿಂದ ಕೋಪಗೊಂಡ ಪ್ರಕಾಶ್‌ ಮೊನ್ನೆ ಸಂಜೆ ಬಾಲಕಿ ಮನೆಗೆ ಹೋಗಿ ಪೋಷಕರೊಂದಿಗೆ ಜಗಳವಾಡಿ ಆಕೆಯನ್ನು ಮನೆಯಿಂದ ಎಳೆದೊಯ್ದು ಮಚ್ಚಿನಿಂದ ತಲೆ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ರುಂಡದೊಂದಿಗೆ ಪರಾರಿಯಾಗಿದ್ದನು. +ಈ ಬಗ್ಗೆ ಸೋಮವಾರ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳದಲ್ಲಿ ದೊರೆತ ಮಚ್ಚು ಹಾಗೂ ಬಾಲಕಿಯ ಮುಂಡವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಅರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. +ಬಾಲಕಿ ರುಂಡ ಪತ್ತೆ:ಹತ್ಯೆ ನಡೆಸಿದ ಸ್ಥಳದಲ್ಲಿ ಬಾಲಕಿ ಮುಂಡ ಮಾತ್ರ ಪತ್ತೆಯಾಗಿತ್ತು. ರುಂಡಕ್ಕಾಗಿ (ತಲೆ) ಪೊಲೀಸ್‌‍ ತಂಡವೊಂದು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಪೊಲೀಸರು ಆರೋಪಿ ಪ್ರಕಾಶ್‌ನನ್ನು ಸ್ಥಳ ಮಹಜರಿಗೆ ಹಾಗೂ ಬಾಲಕಿಯ ರುಂಡಪತ್ತೆಗಾಗಿ ಕರೆದುಕೊಂಡು ಹೋಗಿದ್ದರು. +ಹತ್ಯೆ ನಡೆಸಿದ ಸ್ಥಳದಿಂದ ರುಂಡವನ್ನು ತೆಗೆದುಕೊಂಡು ಹೋಗಿ 300 ಮೀಟರ್‌ ದೂರದ ಪೊದೆಯಲ್ಲಿಟ್ಟಿರುವುದನ್ನು ಆರೋಪಿ ಪೊಲೀಸರಿಗೆ ತೋರಿಸಿದ್ದು, ಪೊಲೀಸರು ಪೊದೆಯಲ್ಲಿದ್ದ ಬಾಲಕಿ ರುಂಡವನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_149_7.txt b/eesanje/url_46_149_7.txt new file mode 100644 index 0000000000000000000000000000000000000000..5ba029cbe43da0b6a46046f3c67f291c547b4854 --- /dev/null +++ b/eesanje/url_46_149_7.txt @@ -0,0 +1,4 @@ +ಪ್ರಜ್ವಲ್‌ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ಬಹುಮಾನ ಘೋಷಣೆ +ಬೆಂಗಳೂರು, ಮೇ 11-ಲೋಕಸಭಾ ಚುನಾವನೆ ಮುಗಿಯುತ್ತಿದ್ದಂತೆ ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಜನತಾ ಪಕ್ಷ ಪ್ರಕಟಿಸಿದೆ. +ಆರೋಪಿ ಪ್ರಜ್ವಲ್‌ನನ್ನು ಹುಡುಕುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿದೆ. ಪ್ರಕಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿಗೆ ಇದುವರೆಗೆ ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಾಗಿಲ್ಲ. ಹಾಗಾಗಿ ಪ್ರಜ್ವಲ್‌ನನ್ನು ಹುಡುಕಿ ಕೊಟ್ಟವರಗೆ 1 ಲಕ್ಷ ರೂ. ಬಹುಮಾನ ಕೊಡುವುದಾಗಿ ಪೋಸ್ಟರ್‌ನಲ್ಲಿ ಪ್ರಕಟಿಸಿದೆ. +ಪೊಲೀಸ್‌‍ ವಶಕ್ಕೆ :ಈ ನಡುವೆ ನಗರದ ಶಿವಾನಂದ ಸರ್ಕಲ್‌ನಲ್ಲಿ ಈ ಬಗ್ಗೆ ಪೋಸ್ಟರ್‌ ಅಂಟಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ನಾಗೇಶ್‌ ಎಂಬಾತನನ್ನು ಹೈಗ್ರೌಂಡ್‌್ಸ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_149_8.txt b/eesanje/url_46_149_8.txt new file mode 100644 index 0000000000000000000000000000000000000000..10b0d45bd1926d9937e30eb2f1399792b7be5e62 --- /dev/null +++ b/eesanje/url_46_149_8.txt @@ -0,0 +1,7 @@ +ವಿಧಾನಪರಿಷತ್‌ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌ ಮೈತ್ರಿ : ಯಡಿಯೂರಪ್ಪ +ಮೈಸೂರು, ಮೇ 11-ಲೋಕಸಭಾ ಚುನಾವಣೆಯ ಬಳಿಕ ವಿಧಾನಪರಿಷತ್‌ ಚುನಾವಣೆಯಲ್ಲಿಯೂ ಬಿಜೆಪಿ- ಜೆಡಿಎಸ್‌ ಮೈತ್ರಿ ಮುಂದುವರೆಯಲಿದೆ. ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಾಗಿ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹೆಚ್ಚು ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. +ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಗದ್ದುಗೆ ಏರಲಿದ್ದಾರೆ. ಸೂರ್ಯ- ಚಂದ್ರ ಇರೋದು ಎಷ್ಟು ಸತ್ಯನೋ ಮೋದಿಯವರು ಮೂರನೇ ಭಾರಿಗೆ ಪ್ರಧಾನಿಯಾಗುವುದು ಅಷ್ಟೇ ಸತ್ಯ ಎಂದು ತಿಳಿಸಿದರು. ಮುಂದೆ ಪ್ರಧಾನಿಯಾಗಿ ಏನು ಕೆಲಸ ಕಾರ್ಯ ಮಾಡಬೇಕೆಂಬುದನ್ನು ಈಗಲೇ ರೂಪರೇಷೆಗಳನ್ನು ಮೋದಿಯವರು ಸಿದ್ಧಮಾಡಿಕೊಂಡು ದೇಶದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಿದ್ದಾರೆ. +ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠ 24ರಿಂದ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ ಪ್ರಧಾನಿಯಾಗುವ ಅರ್ಹತೆ ಯಾರಿಗಿದೆ ಎಂದು ಪ್ರಶ್ನಿಸಿದರು. +ಸಂಸದ ಪ್ರಜ್ವಲ್‌ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪಾರದರ್ಶಕವಾಗಿ ನಡೆಯಬೇಕೆಂದರೆ ಸಿಬಿಐ ಗೆ ಕೊಡಬೇಕು. ಈಶ್ವರಪ್ಪನವರ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ಶಿವಮೊಗ್ಗದಲ್ಲಿ ರಾಘವೇಂದ್ರ ಅವರ ಎರಡೂವರೆ ಲಕ್ಷ ಲೀಡ್‌ನಿಂದ ಗೆದ್ದೇ ಗೆಲ್ಲುತ್ತಾರೆ. +ವಿಧಾಪರಿಷತ್‌ ಚುನಾವಣೆ ಮೈತ್ರಿ ಕುರಿತಂತೆ ಜೆಡಿಎಸ್‌ಗೆ ಎರಡು ಸ್ಥಾನ ಬಿಟ್ಟುಕೊಟ್ಟು ನಾವು ನಾಲ್ಕು ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು. \ No newline at end of file diff --git a/eesanje/url_46_149_9.txt b/eesanje/url_46_149_9.txt new file mode 100644 index 0000000000000000000000000000000000000000..4e9f8116ea726cf19e59f353eac8f5fd56602cff --- /dev/null +++ b/eesanje/url_46_149_9.txt @@ -0,0 +1,10 @@ +ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ : ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..? +ಬೆಂಗಳೂರು,ಮೇ11-ಮುಂದಿನ ತಿಂಗಳು ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಇಂದು ಸಂಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ನಾಮಪತ್ರ ಸಲ್ಲಿಸಲು ಇದೇ ತಿಂಗಳ 16(ಗುರುವಾರ) ಕೊನೆಯ ದಿನವಾಗಿರುವುದರಿಂದ ಅಭ್ಯರ್ಥಿಗಳು ಅಫಿಡೆವಿಟ್‌ ಸಿದ್ದತೆ ಮಾಡಿಕೊಳ್ಳಲು ಅನುಕೂಲವಾಗುವಂತೆ ಬಿಜೆಪಿ ಇಂದೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಭವವಿದೆ. +ಈಗಾಗಲೇ ಕೇಂದ್ರ ವರಿಷ್ಠರಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಕಳುಸಿಕೊಡಲಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಂಕಿತ ಬಿದ್ದ ನಂತರ ಅಧಿಕೃತವಾಗಿ ಪಟ್ಟಿ ಪ್ರಕಟವಾಗಲಿದೆ. ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರುಗಳನ್ನು ಶಿಫಾರಸ್ಸು ಮಾಡಿದ್ದರೆ ಇನ್ನು ಕೆಲವು ಕ್ಷೇತ್ರಗಳಿಗೆ ಎರಡು ಹೆಸರುಗಳನ್ನು ರಾಜ್ಯ ಬಿಜೆಪಿ ಘಟಕ ಕಳುಹಿಸಿಕೊಟ್ಟಿದೆ. +ಪ್ರತಿಷ್ಠೆಯ ಕಣವಾಗಿರುವ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಯುವ ಮುಖಂಡ ಎ.ಎಚ್‌.ಆನಂದ್‌ಗೆ ಬಹುತೇಕ ಟಿಕೆಟ್‌ ಖಾತರಿಯಾಗಿದೆ. ಹಾಲಿ ಅಭ್ಯರ್ಥಿ ಅ.ದೇವೇಗೌಡ ಅವರಿಗೆ ಟಿಕೆಟ್‌ ನೀಡಲು ಪಕ್ಷ ನಿರಾಕರಿಸಿರುವುದರಿಂದ ಆನಂದ್‌ ಅವರಿಗೆ ನಾಮಪತ್ರ ಸಲ್ಲಿಕೆಗೆ ಬೇಕಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪರೋಕ್ಷವಾಗಿ ಪಕ್ಷ ಸೂಚನೆ ಕೊಟ್ಟಿದೆ. +ಎಬಿವಿಪಿ ಹಿನ್ನಲೆಯಿಂದ ಬಂದ ಆನಂದ್‌ ಪಕ್ಷದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಸಂಘ ಪರಿವಾರ ಹಾಗೂ ಬಹುತೇಕ ಬಿಜೆಪಿಯ ಎಲ್ಲಾ ಮುಖಂಡರು ಸ್ಪರ್ಧೆಗೆ ಒಲವು ತೋರಿರುವುದರಿಂದ ಈ ಬಾರಿ ಟಿಕೆಟ್‌ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. +ಆಗ್ನೇಯ ಪದವೀಧರ ಕ್ಷೇತ್ರದಿಂದ ಹಾಲಿ ಸದಸ್ಯ ವೈ.ಎ.ನಾರಾಯಣಸ್ವಾಮಿ ಪುನಃ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಈ ಕ್ಷೇತ್ರದಿಂದ ಒಂದೇ ಹೆಸರನ್ನು ರಾಜ್ಯ ಘಟಕ ಶಿಫಾರಸು ಮಾಡಿದೆ. +ಈಶಾನ್ಯ ಪದವೀಧರ ಕ್ಷೇತ್ರದಿಂದ ಮಾಜಿ ವಿಧಾನಪರಿಷತ್‌ ಸದಸ್ಯ ಅಮರನಾಥ್‌ ಪಾಟೀಲ್‌ ಸ್ಪರ್ಧಿಸಲು ಒಲವು ತೋರಿದ್ದಾರೆ. ಇದೇ ಕ್ಷೇತ್ರದಿಂದ ಮತ್ತೊಬ್ಬ ಮುಖಂಡ ಸುರೇಶ್‌ ಸಜ್ಜನ್‌ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಕೊನೆ ಕ್ಷಣದಲ್ಲಿ ಯಾರಿಗೇ ಬೇಕಾದರೂ ಅದೃಷ್ಟ ಖುಲಾಯಿಸಬಹುದೆಂದು ಪಕ್ಷದ ಮೂಲಗಳು ತಿಳಿಸಿವೆ. +ನೈರುತ್ಯ ಪದವೀಧರ ಕ್ಷೇತ್ರದಿಂದ ಶಿವಮೊಗ್ಗದ ಖ್ಯಾತ ವೈದ್ಯ ಧನಂಜಯ ಸರ್ಜಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಕಳೆದ ಬಾರಿಯೇ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್‌ ತಪ್ಪಿತ್ತು. +ಮೂಲತಃ ಚನ್ನಗಿರಿಯವರಾದ ಡಾ.ಸರ್ಜಿ ಶಿವಮೊಗ್ಗದಲ್ಲಿ ಹಲವಾರು ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ತಮದೇ ಆದ ಛಾಪು ಮೂಡಿಸಿದ್ದಾರೆ. ಆದರೆ ಇದೇ ಕ್ಷೇತ್ರದಿಂದ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್‌ ಕೂಡ ಕಣಕ್ಕಿಳಿಯುವ ಸುಳಿವು ಕೊಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಆಪ್ತ ವಲಯದಲ್ಲಿ ಸರ್ಜಿ ಗುರುತಿಸಿಕೊಂಡಿರುವುದರಿಂದ ಅವರಿಗೆ ಟಿಕೆಟ್‌ ಸಿಕ್ಕಿದರೂ ಆಶ್ಚರ್ಯವಿಲ್ಲ. +ಉಳಿದಂತೆ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಮೈತ್ರಿ ಪಕ್ಷವಾದ ಜೆಡಿಎಸ್‌‍ಗೆ ಬಿಟ್ಟುಕೊಡಲಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಎಸ್‌‍.ಎಲ್‌.ಬೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜೆಡಿಎಸ್‌‍ನಿಂದ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್‌‍ ಸೋಮವಾರದೊಳಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬಹುದೆಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_14_1.txt b/eesanje/url_46_14_1.txt new file mode 100644 index 0000000000000000000000000000000000000000..6619b480d36a86c957a615ee364db1c0bcebbab2 --- /dev/null +++ b/eesanje/url_46_14_1.txt @@ -0,0 +1,8 @@ +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-09-2024) +' - 21-09-2024 +ನಿತ್ಯ ನೀತಿ :ಮನುಷ್ಯನ ದುಃಖಕ್ಕೆ ಎರಡು ಮುಖ್ಯ ಕಾರಣಗಳಿರುತ್ತವೆ. ಒಂದು; ಅವನು ಶ್ರಮಕ್ಕಿಂತಲೂ ಹೆಚ್ಚಿನದನ್ನು ನಿರೀಕ್ಷಿಸುತ್ತಾನೆ. ಎರಡನೆಯದು; ಸಮಯಕ್ಕಿಂತ ಮುಂಚಿತವಾಗಿ ಬಯಸುತ್ತಾನೆ. +ಪಂಚಾಂಗ : ಶನಿವಾರ, 21-09-2024ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವ್ಯಾಘಾತ / ಕರಣ: ಭವ +ಸೂರ್ಯೋದಯ – ಬೆ.06.09ಸೂರ್ಯಾಸ್ತ – 06.16ರಾಹುಕಾಲ – 9.00-10.30ಯಮಗಂಡ ಕಾಲ – 1.30-3.00ಗುಳಿಕ ಕಾಲ – 6.00-7.30 +ರಾಶಿಭವಿಷ್ಯ :ಮೇಷ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.ಮಿಥುನ: ಜೀವನ ಸಂಗಾತಿಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.ಸಿಂಹ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.ಕನ್ಯಾ:ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.ತುಲಾ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಧಿಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.ವೃಶ್ಚಿಕ: ಬುದ್ಧಿವಂತಿಕೆ ಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾಧಿಸುವಿರಿ. +ಧನುಸ್ಸು: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.ಮಕರ: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ. +ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.ಮೀನ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ. \ No newline at end of file diff --git a/eesanje/url_46_14_10.txt b/eesanje/url_46_14_10.txt new file mode 100644 index 0000000000000000000000000000000000000000..a99217bafb05dc4c51c57bd97474ce795fa8e647 --- /dev/null +++ b/eesanje/url_46_14_10.txt @@ -0,0 +1,11 @@ +ದಾವಣಗೆರೆ ಉದ್ವಿಗ್ನ : 30 ಮಂದಿ ಬಂಧನ, ಹೆಚ್ಚುವರಿ ಪೊಲೀಸರ ನಿಯೋಜನೆ + : 30 , +ಬೆಂಗಳೂರು, ಸೆ.20– ದಾವಣಗೆರೆಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಈ ತನಕ 30 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. +ದಾವಣಗೆರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಈ ಸಂಜೆಯೊಂದಿಗೆ ಮಾತನಾಡಿದ ಅವರು ದಾವಣಗೆರೆಯಲ್ಲಿ ಪರಿಸ್ಥಿತಿ ಸದ್ಯ ಶಾಂತಿಯುತವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಎಸ್ಪಿ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದರು. +ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಕರೆಸಿಕೊಂಡು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತಿನಲ್ಲಿದ್ದಾರೆ ಎಂದು ತಿಳಿಸಿದರು. +ಕಿಡಿಕೇಡಿಗಳಿಂದ ಕಲ್ಲು ತೂರಾಟ:ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆ ಮಾಸುವ ಮುನ್ನವೇ ರಾತ್ರಿ ಇಲ್ಲಿನ ಇಮಾಂನಗರದಲ್ಲಿ ಕಲ್ಲುತೂರಾಟ ನಡೆಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ.ಈ ಘಟನೆಯಿಂದ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂ ನಗರದಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. +ಸ್ಥಳೀಯ ಪೊಲೀಸರ ಜೊತೆಗೆ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್‌ ಪೊಲೀಸ್‌‍ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಾತ್ರಿಯಿಡೀ ನಿದ್ದೆಗೆಟ್ಟು ಗಸ್ತು ನಡೆಸಿವೆ. ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದ್ದು, ಪ್ರಸ್ತುತ ನಗರ ಬೂದಿ ಮುಚ್ಚಿದ ಕೆಂಡದಂತಿದೆ. +ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.ಈ ಘಟನೆಯಿಂದಾಗಿ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಬೆಳ್ಳಂಬೆಳ್ಳಗ್ಗೆ ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ.ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳನ್ನು ಸ್ಥಳದಲ್ಲಿರಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರುತ್ತಿದ್ದು ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. +ಬೇತೂರು ರಸ್ತೆಯಲ್ಲಿ ನಿನ್ನೆ ಸಂಜೆ ಗಣೇಶಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್‌ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್‌ ರಸ್ತೆ, ಹಂಸಬಾವಿ ಸರ್ಕಲ್‌, ಕೆಆರ್‌ ಮಾರ್ಕೆಟ್‌ ಸೇರಿದಂತೆ ಬಂಬೂ ಬಜಾರ್‌ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. +ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡ ಪ್ರದೇಶದ ಮನೆಗಳ ಕಿಟಕಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಬರಿಯಾಗಿ ನಿವಾಸಿಗಳು ಮನೆಗಳಿಂದ ಹೊರಗೆ ಬಂದು ದೊಣ್ಣೆ ಹಿಡಿದು ಓಡಿಸಿದ್ದಾರೆ. +ಸುಮಾರು 60 ರಿಂದ 70 ಯುವಕರ ಗುಂಪುಗಳು ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮನೆ ಮುಂಭಾಗದಲ್ಲಿ ನಿಲ್ಲಿಸಿದಂತಹ ವಾಹನಗಳಿಗೆ ಹಾನಿ ಮಾಡಿದ್ದಾರೆ. ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ನಿವಾಸಿಗಳು ಬೇರೆಡೆ ಹೋಗಿದ್ದಾರೆ. \ No newline at end of file diff --git a/eesanje/url_46_14_11.txt b/eesanje/url_46_14_11.txt new file mode 100644 index 0000000000000000000000000000000000000000..83fd24111f30f5d9c105886596ef8c288067ae7f --- /dev/null +++ b/eesanje/url_46_14_11.txt @@ -0,0 +1,9 @@ +ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡಲು ಮುಂದಾದ ರಾಜ್ಯ ಸರ್ಕಾರ + 6 +ಬೆಂಗಳೂರು,ಸೆ.20-ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ 6 ದಿನಗಳ ವೇತನ ಸಹಿತ ಮುಟ್ಟಿನ ರಜೆ ನೀಡಲು ನೀತಿ ರಚನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಮುಟ್ಟಿನ ರಜೆ ಸಾಧ್ಯಾಸಾಧ್ಯತೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯ ಆಧಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ವರದಿಯಾಗಿದೆ. +ವರದಿ ಸಿದ್ಧಪಡಿಸಲು ಡಾ.ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿತ್ತು. ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಂಬಂಧಪಟ್ಟ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ಶಾಸಕಾಂಗದ ಮುಂದೆ ಪ್ರಸ್ತಾಪಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮದ್‌ ಮೊಹ್ಸಿನ್‌ ತಿಳಿಸಿರುವುದಾಗಿ ವರದಿ ಮಾಡಿದೆ. +ಖಾಸಗಿ ಕಂಪನಿಗಳಲ್ಲೇ ಮೊದಲು ಜಾರಿ :ಆರಂಭದಲ್ಲಿ ಖಾಸಗಿ ವಲಯಕ್ಕೆ ಮುಟ್ಟಿನ ರಜೆ ನೀತಿ ಪರಿಚಯಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪೂರ್ಣ ಪ್ರಮಾಣದಲ್ಲಿ ನೀತಿ ರೂಪಿಸಿದ ನಂತರ ಸರ್ಕಾರಿ ಇಲಾಖೆಗಳಲ್ಲಿ ಕಡ್ಡಾಯಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಮೊಹ್ಸಿನ್‌ ಹೇಳಿದ್ದಾರೆ. ಮುಟ್ಟಿನ ರಜೆ ವಿಚಾರವಾಗಿ ಒಂದು ನೀತಿಯನ್ನು ಹೊಂದುವ ಅಗತ್ಯತೆಯ ಬಗ್ಗೆ ಸುಪ್ರೀಂ ಕೋರ್ಟ್‌ ಆದೇಶದಲ್ಲಿ ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ಅನುಗುಣವಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಅವರು ಹೇಳಿದ್ದಾರೆ. +ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ನೀಡುವುದರ ಸಾಧ್ಯಾಸಾಧ್ಯತೆ ಬಗ್ಗೆ ಗಮನಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌? ಈ ವರ್ಷದ ಜುಲೈನಲ್ಲಿ ನಿರ್ದೇಶನ ನೀಡಿತ್ತು. ಉದ್ಯೋಗದಾತರು ಮುಟ್ಟಿನ ರಜೆ ನೀಡುವುದನ್ನು ಕಡ್ಡಾಯಗೊಳಿಸುವುದರಿಂದ ಮಹಿಳೆಯರಿಗೆ ಅನುಕೂಲವಾಗಬೇಕು. +ಅದರ ಬದಲಿಗೆ ಮುಟ್ಟಿನ ರಜೆ ನೀಡುವುದರಿಂದ ಉದ್ಯೋಗಗಳಲ್ಲಿ ಅವರ ಭಾಗವಹಿಸುವಿಕೆಗೆ ಪ್ರತಿಕೂಲವಾಗದಂತೆ ಗಮನಹರಿಸಬೇಕು ಎಂದು ಕೋರ್ಟ್‌ ಹೇಳಿತ್ತು. ಮುಟ್ಟಿನ ರಜೆಯಿಂದ ಮಹಿಳೆಯರಿಗೆ ಉದ್ಯೋಗಾವಕಾಶ ಕಡಿಮೆ ಆಗಿಬಿಟ್ಟರೆ ಎಂಬ ಆತಂಕವನ್ನೂ ಕೋರ್ಟ್‌ ವ್ಯಕ್ತಪಡಿಸಿತ್ತು. +ಕರ್ನಾಟಕದಲ್ಲಿ ಮುಟ್ಟಿನ ರಜೆ ನೀತಿ ರೂಪಿಸುವ ಬಗ್ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೂಡ ಸುಳಿವು ನೀಡಿದ್ದರು ಎನ್ನ ಲಾಗಿದೆ.ಮುಟ್ಟಿನ ರಜೆ ಪ್ರಸ್ತಾವನೆ ಚರ್ಚೆ ಹಂತದಲ್ಲಿದೆ. ಸಚಿವರು ಆ ಬಗ್ಗೆ ನೀತಿ ರೂಪಿಸಲು ಚಿಂತನೆ ನಡೆಸಿದ್ದರು. ಕಾರ್ಮಿಕ ಇಲಾಖೆಯು ಕೆಲವೇ ದಿನಗಳಲ್ಲಿ ಪ್ರಸ್ತಾವನೆಯನ್ನು ಪರಿಶೀಲಿಸಲಿದೆ. ಆ ನಂತರ ಅದು ಇಲಾಖೆ ಮತ್ತು ಸರ್ಕಾರಿ ಹಂತಗಳಲ್ಲಿ ಮುಂದುವರಿಯಲಿದೆ ಎಂದು ಕಾರ್ಮಿಕ ಆಯುಕ್ತ ಡಾ. ಎಚ್‌ಎನ್‌ ಗೋಪಾಲಕೃಷ್ಣ ತಿಳಿಸಿದ್ದಾರೆ. +ಬಿಹಾರವು 1992ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಘೋಷಿಸಿತ್ತು. ಆ ಮೂಲಕ ಮುಟ್ಟಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಹೊರಹೊಮಿತ್ತು. ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆಯನ್ನು ಒದಗಿಸಲಾಗಿದೆ. ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿನ ರಜೆ ನೀಡಲಾಗುತ್ತಿದೆ.ಜಾಗತಿಕವಾಗಿ ಸ್ವೀಡನ್‌, ಇಟಲಿ, ದಕ್ಷಿಣ ಕೊರಿಯಾ, ತೈವಾನ್‌ ಮತ್ತು ಜಪಾನ್‌ ಮಹಿಳೆಯರಿಗೆ ಮುಟ್ಟಿನ ರಜೆಗಳನ್ನು ನೀಡುತ್ತವೆ. \ No newline at end of file diff --git a/eesanje/url_46_14_12.txt b/eesanje/url_46_14_12.txt new file mode 100644 index 0000000000000000000000000000000000000000..460707f0b5cb5e460b207f982bb3e88c50394376 --- /dev/null +++ b/eesanje/url_46_14_12.txt @@ -0,0 +1,14 @@ +ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಕೇಡಿಗಳಿಂದ ಕಲ್ಲು ತೂರಾಟ, ದಾವಣಗೆರೆ ಉದ್ವಿಘ್ನ + +ದಾವಣಗೆರೆ, ಸೆ.20– ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಲ್ಲುತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆ ಮಾಸುವ ಮುನ್ನವೇ ರಾತ್ರಿ ಇಲ್ಲಿನ ಇಮಾಂನಗರದಲ್ಲಿ ಕಲ್ಲುತೂರಾಟ ನಡೆಸಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. +ಈ ಘಟನೆಯಿಂದ ನಗರಾದಾದ್ಯಂತ ಭಯದ ವಾತಾವರಣ ಮನೆ ಮಾಡಿದ್ದು, ಕಲ್ಲು ತೂರಾಟ ನಡೆದ ಇಮಾಂ ನಗರದಲ್ಲಿ ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. +ಸ್ಥಳೀಯ ಪೊಲೀಸರ ಜೊತೆಗೆ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ರಿಸರ್ವ್‌ ಪೊಲೀಸ್‌‍ ತುಕಡಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಾತ್ರಿಯಿಡೀ ನಿದ್ದೆಗೆಟ್ಟು ಗಸ್ತು ನಡೆಸಿವೆ. ಕೆಲ ಕಾಲ ಈ ಪ್ರದೇಶದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದ್ದು, ಪ್ರಸ್ತುತ ನಗರ ಬೂದಿ ಮುಚ್ಚಿದ ಕೆಂಡದಂತಿದೆ. +ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಎಸ್ಪಿ ಉಮಾ ಅವರು, ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.ಈ ಘಟನೆಯಿಂದಾಗಿ ಜನ ಜಂಗುಳಿಯಿಂದ ತುಂಬಿರುತ್ತಿದ್ದ ಇಮಾಂ ನಗರದ ಜನನಿಬಿಡ ರಸ್ತೆಗಳು ಬೆಳ್ಳಂಬೆಳ್ಳಗ್ಗೆ ಖಾಲಿಖಾಲಿಯಾಗಿದ್ದು ಬಿಕೊ ಎನ್ನುತ್ತಿವೆ. +ಇಲ್ಲಿರುವ ಮಸೀದಿ ಬಳಿ 10ಕ್ಕೂ ಹೆಚ್ಚು ಪೊಲೀಸ್‌‍ ವಾಹನಗಳನ್ನು ಸ್ಥಳದಲ್ಲಿರಿಸಿ ಬಿಗಿ ಭದ್ರತೆ ಒದಗಿಸಲಾಗಿದೆ. ಹಾಗೆಯೇ ಬೆಳಗಿನ ಜಾವ 5 ಗಂಟೆಗೆ ವ್ಯಾಪಾರ ವಹಿವಾಟಿಗೆ ತೆರಳುತಿದ್ದ ಜನರು ತಡವಾಗಿ ಹೊರಬರುತ್ತಿದ್ದು ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. +ಬೇತೂರು ರಸ್ತೆಯಲ್ಲಿ ನಿನ್ನೆ ಸಂಜೆ ಗಣೇಶಮೂರ್ತಿ ವಿಸರ್ಜನೆ ವೇಳೆ ಏಕಾಏಕಿ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ನಗರದ ಅರಳಿಮರ ಸರ್ಕಲ್‌ ಬಳಿ ಮೊದಲು ಕಲ್ಲು ತೂರಾಟ ಶುರುವಾಗಿದ್ದು, ಬಳಿಕ ಕೆ.ಆರ್‌ ರಸ್ತೆ, ಹಂಸಬಾವಿ ಸರ್ಕಲ್‌, ಕೆಆರ್‌ ಮಾರ್ಕೆಟ್‌ ಸೇರಿದಂತೆ ಬಂಬೂ ಬಜಾರ್‌ ರಸ್ತೆ, ಮಟ್ಟಿಕಲ್ಲು ಏರಿಯಾದಲ್ಲಿಯೂ ಕಲ್ಲುತೂರಾಟ ನಡೆದಿದೆ. +ತಕ್ಷಣವೇ ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸರು ಎಷ್ಟೇ ನಿಯಂತ್ರಿಸಿದರೂ ಪೊಲೀಸರ ಎದುರೇ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. +ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸುತ್ತಿದ್ದಂತೆ ಕಿಡಿಗೇಡಿಗಳು ಅಲ್ಲಿಂದ ಪಾರಾಗಿ, ಏರಿಯಾಗಳಿಗೆ ನುಗ್ಗಿ, ಮಟ್ಟಿಕಲ್ಲು, ಅನೆಕೊಂಡ ಪ್ರದೇಶದ ಮನೆಗಳ ಕಿಟಕಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಗಾಬರಿಯಾಗಿ ನಿವಾಸಿಗಳು ಮನೆಗಳಿಂದ ಹೊರಗೆ ಬಂದು ದೊಣ್ಣೆ ಹಿಡಿದು ಓಡಿಸಿದ್ದಾರೆ. +ಸುಮಾರು 60 ರಿಂದ 70 ಯುವಕರ ಗುಂಪುಗಳು ಹಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದಲ್ಲದೆ, ಮನೆ ಮುಂಭಾಗದಲ್ಲಿ ನಿಲ್ಲಿಸಿದಂತಹ ವಾಹನಗಳಿಗೆ ಹಾನಿ ಮಾಡಿದ್ದಾರೆ.ಏಕಾಎಕಿ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಹಿನ್ನಲೆ ಭಯದ ವಾತಾವರಣ ಸೃಷ್ಟಿಯಾಗಿದೆ. ಮನೆಗಳಿಗೂ ಕೂಡ ಬೀಗ ಹಾಕಿಕೊಂಡು ನಿವಾಸಿಗಳು ಬೇರೆಡೆ ಹೋಗಿದ್ದಾರೆ. +ಬಂಧನ:ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ.ಒಟ್ಟಾರೆ ನಗರದ ಇಮಾಂನಗರ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ನಗರಾದಾದ್ಯಂತ ಪೊಲೀಸ್‌‍ ಸರ್ಪಗಾವಲು ಹಾಕಲಾಗಿದೆ. +30 ಮಂದಿ ಬಂಧನ:ದಾವಣಗೆರೆಯಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ಈ ತನಕ 30 ಮಂದಿಯನ್ನು ಬಂಧಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌‍ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. +ಈ ಸಂಜೆಯೊಂದಿಗೆ ಮಾತನಾಡಿದ ಅವರು ಪರಿಸ್ಥಿತಿ ಸದ್ಯ ಶಾಂತಿಯುತವಾಗಿದೆ. ಸ್ಥಳದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದ್ದು, ಎಸ್ಪಿ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂದರು.ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಹಾಗೂ ಕೆಎಸ್‌‍ಆರ್‌ಪಿ ತುಕಡಿಗಳನ್ನು ಕರೆಸಿಕೊಂಡು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗಸ್ತಿನಲ್ಲಿದ್ದಾರೆ ಎಂದರು. \ No newline at end of file diff --git a/eesanje/url_46_14_2.txt b/eesanje/url_46_14_2.txt new file mode 100644 index 0000000000000000000000000000000000000000..0cc8b5e0e232709935a102f879a77577aa642f6b --- /dev/null +++ b/eesanje/url_46_14_2.txt @@ -0,0 +1,13 @@ +ಮುನಿರತ್ನ ಹಿಂದೆ ದೊಡ್ಡ ಜಾಲವೇ ಇದೆ, ಸಮಗ್ರ ತನಿಖೆಯಾಗಬೇಕು : ಡಿ.ಕೆ. ಸುರೇಶ್‌ + : .. +ಬೆಂಗಳೂರು, ಸೆ.20– ರಾಜಕೀಯ ಎದುರಾಳಿಗಳಿಗೆ ಎಚ್‌ಐವಿ ಸೋಂಕಿತರ ರಕ್ತವನ್ನು ಇಂಜೆಕ್ಷನ್‌ ಮೂಲಕ ನೀಡಿ ಜೈವಿಕ ಯುದ್ಧ ಮಾದರಿಯನ್ನು ಅನುಸರಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ಕೃತ್ಯದ ಹಿಂದೆ ದೊಡ್ಡಜಾಲ ಹಾಗೂ ತಂತ್ರಗಾರಿಕೆ ಇದ್ದು, ಇದರ ವಿರುದ್ಧ ಸಮಗ್ರ ತನಿಖೆ ಆಗಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ಒತ್ತಾಯಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುನಿರತ್ನ ವಿರುದ್ಧ ಅತ್ಯಾಚಾರ ಅರೋಪ ಹಾಗೂ ಎಚ್‌ಐವಿ ಬಾಧಿತರನ್ನು ರಾಜಕೀಯ ಎದುರಾಳಿಗಳ ವಿರುದ್ಧ ಹನಿಟ್ರ್ಯಾಪ್‌ ಬಳಸಿಕೊಂಡಿರುವ ದೂರುಗಳಿವೆ ಎಂದರು. +ಮೇಲ್ನೋಟಕ್ಕೆ ಈ ಕೃತ್ಯದಲ್ಲಿ ಯಾರನ್ನು, ಯಾವ ರೀತಿ ಬಳಸಿಕೊಳ್ಳಲಾಗಿದೆ ಎಂಬುದು ಗೊತ್ತಾಗುವುದಿಲ್ಲ. ಯಾರನ್ನು ರೋಗ ಹರಡಲು ಬಳಸಿಕೊಂಡಿದ್ದಾರೆ ಎಂಬುದು ಗೊತ್ತಾಗಬೇಕಿದೆ. ಇದಕ್ಕಾಗಿ ಸುದೀರ್ಘ ತನಿಖೆಯಾಗಬೇಕು ಎಂದು ಒತ್ತಾಯಿದರು.ಈ ಹಿನ್ನಲೆಯಲ್ಲಿ ಒಕ್ಕಲಿಗ ಹಾಗೂ ಪರಿಶಿಷ್ಟ ಜಾತಿಯ ಸಮುದಾಯದ ಮುಖಂಡರು ಚರ್ಚೆ ನಡೆಸಿ, ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದರು. +ಮುನಿರತ್ನ ಅವರು ಬಳಸಿರುವ ಪದಗಳು ಮತ್ತು ಅವರ ತಂತ್ರಗಾರಿಕೆಯನ್ನು ಹಿಂದೆಂದೂ ಕಂಡಿರಲಿಲ್ಲ. ಮುನಿರತ್ನನ ಮನಸ್ಥಿತಿಯೇ ವಿಕ್ಷಿಪ್ತವಾಗಿದೆ. ಮುನಿರತ್ನ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಆರ್‌.ಅಶೋಕ್‌, ಸಿ.ಟಿ.ರವಿ ಅವರೇ ಖುದ್ದು ಬೆನ್ನಿಗೆ ನಿಂತು ಕಾಂಗ್ರೆಸ್ಸಿಗರ ವಿರುದ್ದ ಕೃತ್ಯಗಳನ್ನು ಮಾಡಿಸುತ್ತಿ ದ್ದಾರೆಯೇ ಎಂಬ ಅನುಮಾನ ಬರುತ್ತಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಬೇಕಿದೆ ಎಂದರು. +ಮುನಿರತ್ನ ಅವರ ಅವಹೇಳನಕಾರಿ ಮಾತುಗಳ ವಿರುದ್ಧ ದಲಿತ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಬೇಕಿದೆ. ಇಲ್ಲವಾದರೆ ಇಂತಹದನ್ನು ಹಾದಿಬೀದಿಯಲ್ಲಿ ಹೋಗುವವರೆಲ್ಲ ಬಳಕೆ ಮಾಡಲಾರಂಭಿಸುತ್ತಾರೆ ಎಂದು ಎಚ್ಚರಿಸಿದರು. +ಈ ಪ್ರಕರಣ ಯಾವ ಆಯಾಮದಲ್ಲಿ ಹೋಗುತ್ತಿದೆ ಎಂಬುದು ನನಗೆ ಗೊತ್ತಿಲ್ಲ. ಮುನಿರತ್ನ ಅವರ ಆಡಿಯೋವನ್ನು ಪೂರ್ತಿ ಕೇಳಲು ನನ್ನಿಂದ ಸಾಧ್ಯವಾಗಲಿಲ್ಲ. ಆತನ ಕೃತ್ಯಗಳನ್ನು ಜೀರ್ಣಿಸಿಕೊಳ್ಳಲಾಗುತ್ತಿಲ್ಲ ಎಂದು ಹೇಳಿದರು. +ಕುಮಾರಸ್ವಾಮಿ ವಿರುದ್ಧ ಆಕ್ರೋಶ:ಬೆಂಗಳೂರಿನ ಆರ್‌.ಟಿ.ನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಅತ್ತೆ ಹೆಸರಿನಲ್ಲಿ ತೆಗೆದುಕೊಂಡಿರುವ ಜಮೀನು ಕೂಡ ಸತ್ತವರ ಹೆಸರಿನಲ್ಲೇ ಡಿ-ನೋಟಿಫಿಕೇಷನ್‌ ಮಾಡಿಸಲಾಗಿದೆ. ಬೇರೆಯವರ ವಿಷಯ ಬಂದಾಗ ಸತ್ತವರ ಹೆಸರಿನಲ್ಲಿ ಡಿ-ನೋಟಿಫಿಕೇಷನ್‌ ಮಾಡಿಸಲಾಗಿದೆ ಎಂದು ಹಲವಾರು ಬಾರಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. +ಆರ್‌ಟಿ ನಗರದ ಜಮೀನ ಡಿ- ನೋಟಿಫಿಕೇಷನ್‌ ಕಡತ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಲೇ ಮುಂದುವರೆದಿದೆ.ಡಿ-ನೋಟಿಫಿಕೇಷನ್‌ಗೂ ಮುನ್ನವೇ ಭೂಮಿ ಖರೀದಿ, ನೋಂದಣಿಯಾಗಿದೆ. ಇದು ಆಧಿಕಾರದ ದುರುಪಯೋಗ ಅಲ್ಲವೇ ಎಂದು ಡಿ.ಕೆ.ಸುರೇಶ್‌ ಪ್ರಶ್ನಿಸಿದರು. +ಈ ಪ್ರಕರಣ ಹಳೆಯದು, ಹಳಸಲು ಎಂದು ಕುಮಾರಸ್ವಾಮಿ ಹೇಳಬಹುದು. ಬೇರೆಯವರ ವಿಚಾರಗಳಾದರೆ ಅವು ಫ್ರೆಶ್‌ ಆಗಿರುತ್ತವೆ. ಇವರ ಪ್ರಕರಣಗಳು ಹಲಸಲು ಎಂದು ಜಾರಿಕೊಳ್ಳಲ್ಲಾಗುತ್ತದೆ. ಅತ್ತೆಯ ಜಮೀನು ಖರೀದಿಗೂ ನನಗೆ ಸಂಬಂಧವಿಲ್ಲ. ಅದೇ ಬೇರೆ ವಿಚಾರ, ಅದು ಮುಗಿದು ಹೋಗಿರುವ ಕಥೆ ಎಂಬ ಸಬೂಬುಗಳು ಕೇಳಿಬರುತ್ತವೆ. ಈ ರೀತಿಯ ದ್ವಂದ್ವ, ಜನರನ್ನು ದಾರಿ ತಪ್ಪಿಸುವುದು, ಸುಳ್ಳು ಹೇಳುವುದು ಸರಿಯೇ ಎಂದು ಕಿಡಿಕಾರಿದರು. +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರವಾಗಿದೆ. ನಾಗಮಂಗಲ, ದಾವಣೆಗೆರೆಯಂತಹ ಕೆಲವು ಕಡೆ ಸಂದರ್ಭಗಳನ್ನು ಬಳಸಿಕೊಂಡು ಕೆಲವರು ಶಾಂತಿ ಭಂಗ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ವಿರುದ್ಧ ಸರ್ಕಾರ ಕಠಿಣಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. +ಚನ್ನಪಟ್ಟಣ ನಗರ ಸಭೆಯಲ್ಲಿ ಜೆಡಿಎಸ್‌‍ನ 13 ಮಂದಿ ಕಾಂಗ್ರಸ್‌‍ಗೆ ಸೇರ್ಪಡೆಯಾಗಿದ್ದಾರೆ. ಇದು ಮೂರನೇ ಒಂದು ಭಾಗದಷ್ಟು ಸದಸ್ಯರ ಸಂಖ್ಯೆಯಾಗಿದೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. \ No newline at end of file diff --git a/eesanje/url_46_14_3.txt b/eesanje/url_46_14_3.txt new file mode 100644 index 0000000000000000000000000000000000000000..4549479f2b242d5f5306cc68decc60e12a333142 --- /dev/null +++ b/eesanje/url_46_14_3.txt @@ -0,0 +1,14 @@ +ವಿಜಯೇಂದ್ರ ವಿರುದ್ಧ ಪದೇ ಪದೇ ಅಪಸ್ವರ ಎತ್ತುವ ರಮೇಶ್‌ ಜಾರಕಿಹೊಳಿಗೆ ನಿಗೂಢ ವ್ಯಕ್ತಿಯ ಶ್ರೀರಕ್ಷೆ + +ಬೆಂಗಳೂರು,ಸೆ.20-ಪಕ್ಷದ ರಾಜ್ಯ ಅಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ವಹಿಸಿಕೊಂಡ ಮೇಲೆ ಬಿಜೆಪಿ ಮುರಿದ ಮನೆಯಾಗಿದೆ. ಹಲವು ನಾಯಕರು ಪದೇ ಪದೇ ವಿಜಯೇಂದ್ರ ಬಗ್ಗೆ ಅಪಸ್ವರ ಎತ್ತುತ್ತಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ವಿಜಯೇಂದ್ರ ವಿರುದ್ಧ ಮುಗಿ ಬಿದ್ದಿದ್ದಾರೆ. +ಈ ನಡುವೆ ಜಾರಕಿಹೊಳಿ ಬೆಂಬಲಕ್ಕೆ ಬಿಜೆಪಿಯ ಹಿರಿಯ ಉನ್ನತ ನಾಯಕರೊಬ್ಬರು ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ದಿವಂಗತ ಎಚ್.ಎನ್.ಅನಂತ್ಕುಮಾರ್ ನಾಯಕತ್ವದಲ್ಲಿ ಬಿಜೆಪಿಯ ಸುವರ್ಣ ಯುಗ ಹೊಂದಿತ್ತು ಎಂದು ರಮೇಶ್ ಜಾರಕಿಹೊಳಿ ಹೊಗಳಿರುವುದು ಪಕ್ಷದಲ್ಲಿ ಬೆಂಕಿಯ ಬಿರುಗಾಳಿಯನ್ನು ಎಬ್ಬಿಸಿದೆ. +2019ರವರೆಗೆ ಕಾಂಗ್ರೆಸ್ ಜೊತೆಗಿದ್ದ ಜಾರಕಿ ಹೊಳಿ ಅವರಿಗೆ ಆ ಅವಧಿಯಲ್ಲಿ ಬಿಜೆಪಿಯ ಆಂತರಿಕ ಚಲನವಲನದ ಬಗ್ಗೆ ಹೇಗೆ ತಿಳಿದಿತ್ತು ಎಂದು ಬಿಜೆಪಿಯ ಒಳಗಿನವರು ಪ್ರಶ್ನಿಸಿದ್ದಾರೆ.ಕೆಲವರು ಹೇಳುವಂತೆ ತೆರೆಮರೆಯಲ್ಲಿ ಒಬ್ಬ ಉನ್ನತ ನಾಯಕ ಈ ಭಿನ್ನಮತ ಸೃಷ್ಟಿಗೆ ಕಾರಣರಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಿಜೆಪಿ ಕಚೇರಿಯಲ್ಲಿ ಗುಸು ಗುಸು ಜೋರಾಗಿವೆ. +ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಮತ್ತು ಇತರರು ಏಕಾಂಗಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸಾರ್ವಜನಿಕ ಹೇಳಿಕೆಗಳ ಮೂಲಕ ವಿಜಯೇಂದ್ರ ನಾಯಕತ್ವದ ಬಗ್ಗೆ ಆಗಾಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ದೆಹಲಿಯಲ್ಲಿರುವ ಪಕ್ಷದ ನಿಗೂಢ ಹಿರಿಯ ನಾಯಕ ರೊಬ್ಬರು ಇವರಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ. +ಈ ಮಹಾನಾಯಕ ಅವರಿಗೆ ರಕ್ಷಣೆ ನೀಡುತ್ತಿದ್ದಾರೆ, ತಮ್ಮ ಹೇಳಿಕೆಗಳ ಮೂಲಕ ಭಿನ್ನಮತ ಪ್ರದರ್ಶಿಸುತ್ತಿರುವ ರಾಜ್ಯ ಬಿಜೆಪಿ ನಾಯಕರ ಮೇಲೆ ಕೇಂದ್ರದ ಹಿರಿಯ ನಾಯಕರು ಯಾವುದೇ ರೀತಿಯ ಕ್ರಮ ಕೈಗೊಳ್ಳದಂತೆ ರಕ್ಷಣೆ ನೀಡುತ್ತಿದ್ದಾರೆ. ಹೀಗಾಗಿ ಈ ಭಿನ್ನಮತೀಯ ನಾಯಕರು ಯಾವುದೇ ಭಯವಿಲ್ಲದೆ ತಮ್ಮ ಹುಚ್ಚಾಟ ಮುಂದುವರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡುತ್ತಿರುವ ಕ್ಷಿಪ್ರ ಪ್ರತಿಕ್ರಿಯೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಜಾರಕಿಹೊಳಿ ಅವರಂತಹ ನಾಯಕರು ಪಕ್ಷ ಮತ್ತು ಸಿದ್ಧಾಂತದೊಂದಿಗೆ ತೊಡಗಿಸಿಕೊಂಡಿರುವುದು ಒಳ್ಳೆಯದು ಎಂದು ಅವರು ಎಚ್ಚರಿಕೆಯಿಂದ ಪ್ರತಿಕ್ರಿಯಿಸಿದ್ದಾರೆ. ಆದರೆ ಮುಚ್ಚಿದ ಬಾಗಿಲುಗಳ ಹಿಂದೆ, ಬಿಜೆಪಿಯೊಳಗಿನವರು ಕರಾಳ ಮತ್ತು ಕೆಟ್ಟ ನಿರೂಪಣೆಯನ್ನು ಬಹಿರಂಗಪಡಿಸುತ್ತಾರೆ. +ಬಿಜೆಪಿ ಒಂದು ಶಿಸ್ತಿನ ಪಕ್ಷ, ಮತ್ತು ಯಾರಾದರೂ ಈ ರೀತಿ ಪದೇ ಪದೇ ಪಕ್ಷದ- ನಾಯಕತ್ವದ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ನೋಡಿದರೇ ಹೈಕಮಾಂಡ್ ಮಟ್ಟದಲ್ಲಿ ಇವರುಗಳಿಗೆ ಯಾರು ಶ್ರೀರಕ್ಷೆಯಾಗಿ ನಿಂತಿ ದ್ದಾರೆ ಎಂಬುದು ದೊಡ್ಡ ಪ್ರಶ್ನೆ ಯಾಗಿದೆ.ದೆಹಲಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರೂ, ಸ್ಥಳೀಯ ಚುನಾವಣೆ ಯಲ್ಲಿ ಸ್ವಂತ ಬಲದಿಂದ ಗೆಲ್ಲಲು ಹರಸಾಹಸ ಪಡುತ್ತಿರುವ ಹಿರಿಯ ವ್ಯಕ್ತಿಯೊಬ್ಬರು ಭಿನ್ನಮತೀಯರ ಬೆಂಬಲಕ್ಕೆ ನಿಂತಿದ್ದಾರೆ ಎಂದ ಕೆಲವು ಬಿಜೆಪಿ ನಾಯಕರು ಹೇಳುತ್ತಾರೆ. +ಈ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಈಗ ಕರ್ನಾಟಕದಲ್ಲಿ ಬಿಜೆಪಿಯ ಅನಿರೀಕ್ಷಿತ ಯಶಸ್ಸಿನಿಂದ ಹತಾಶರಾಗಿ ಅಶಾಂತಿ ಹುಟ್ಟುಹಾಕಲುಪ್ರಭಾವ ಬಳಸುತ್ತಿದ್ದಾರೆ ಎನ್ನಲಾಗಿದೆ. +ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಯತ್ನಾಳ್ ತೆರೆಮರೆಯಲ್ಲಿಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕವಾಗಿ ವಿಜಯೇಂದ್ರ ಜೊತೆ ಯತ್ನಾಳ್ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಆದರೆ ಅವರು ಯಡಿಯೂರಪ್ಪನವರ ಮಗ ಎಂಬ ಕಾರಣಕ್ಕೆ ವೈರತ್ವ ಮುಂದುವರಿಸಿದ್ದಾರೆ ಎಂದು ಪಕ್ಷದ ಒಳಗಿನವರು ಹೇಳಿದ್ದಾರೆ. +ದೆಹಲಿಯಲ್ಲಿರುವ ಈ ನಾಯಕ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಮತ್ತು ಬಸನಗೌಡ ಯತ್ನಾಳ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಬಯಸಿದ್ದರು. ಆದರೆ ಅಂದುಕೊಂಡದ್ದು ನಡೆಯದ ಕಾರಣ ಪಕ್ಷದಲ್ಲಿ ಅಶಾಂತಿ ಮೂಡಿಸಲು ಎಲ್ಲಾ ತಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಪ್ರಮುಖರೊಬ್ಬರು ತಿಳಿಸಿದ್ದಾರೆ. +ವಿಜಯೇಂದ್ರ ಬಿಟ್ಟು ಬೇರೆ ಯಾರೇ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರೂ ದೆಹಲಿಯ ಈ ಉನ್ನತ ನಾಯಕನನ್ನು ನಿಯಂತ್ರಿಸಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ. ಈ ಉನ್ನತ ನಾಯಕನಿಗೆ ಎಲ್ಲಾ ಹಂತಗಳಲ್ಲಿ ಅಸಮರ್ಥ ಅಥವಾ ನಿಷ್ಪರಿಣಾಮಕಾರಿ ಜನರು ಇರಬೇಕೆಂಬ ಬಯಕೆಯಿತ್ತು. ಎಲ್ಲಾ ಕೆಲಸಗಳಿಗೂ ತನ್ನನ್ನು ಸಂಪರ್ಕಿಸಿ ಅನುಮತಿ ಪಡೆಯುವ ರಾಜ್ಯಾಧ್ಯಕ್ಷ ಇದ್ದರೆ ಪಕ್ಷದ ಮೇಲಿನ ನಿಯಂತ್ರಣ ಸುಲಭ ಎಂಬುದು ಅವರ ಇಚ್ಛೆಯಾಗಿತ್ತು. ಆದರೆ ನಡೆದದ್ದು ಬೇರೆ. +ಹೀಗಾಗಿ ಅಸಮಾಧಾನಿತ ನಾಯಕರಿಗೆ ಬೆಂಬಲ ನೀಡುವ ಮೂಲಕ ಪಕ್ಷದಲ್ಲಿ ಮತ್ತಷ್ಟು ಭಿನ್ನಮತ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಹಾ ನಾಯಕ ಯಾರು ಎಂಬುದು ಪಕ್ಷದ ಎಲ್ಲರಿಗೂ ತಿಳಿದಿದೆ. ಎಲ್ಲರೂ ಮಾತನಾಡುತ್ತಿದ್ದಾರೆ, ಆದರೆ ಯಾರೂ ಅವರ ಹೆಸರು ಹೇಳಲು ಧೈರ್ಯ ಮಾಡುವುದಿಲ್ಲ. \ No newline at end of file diff --git a/eesanje/url_46_14_4.txt b/eesanje/url_46_14_4.txt new file mode 100644 index 0000000000000000000000000000000000000000..a61c8fc775d626fd6cdc37be8ab06b1ee36518ba --- /dev/null +++ b/eesanje/url_46_14_4.txt @@ -0,0 +1,13 @@ +ಪತ್ರಕರ್ತರ ಸಹಕಾರ ಸಂಘದ ನೆರವಿಗೆ ಸಿಎಂ ಭರವಸೆ +' - +ಬೆಂಗಳೂರು, ಸೆ.20-ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ಗಿರೀಶ್‌ಕೋಟೆ ಅವರ ಸಹಕಾರದೊಂದಿಗೆ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್‌ ಪಾಳ್ಯ ನೇತತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದ್ದಾರೆ. +1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನಾನ ಮಾಧ್ಯಮಗಳ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿದೆ. ಆಡಿಟ್‌ ವರ್ಗೀಕರಣದಲ್ಲಿ ನಮ ಸಂಸ್ಥೆ ಎ ಶ್ರೇಣಿ ಪಡೆದಿರುವ ಸಂಸ್ಥೆ. ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ನಿರಂತರ ಏಳು ದಶಕಗಳಿಂದ ನಮ ಪತ್ರಕರ್ತರ ಸಹಕಾರ ಸಂಘ ಸೇವೆ ಸಲ್ಲಿಸುತ್ತಿದೆ. +ಪತ್ರಕರ್ತರ ಸಂಘದ ಸದಸ್ಯರಿಂದ ಆರೋಗ್ಯದ ನೆರವಿನ ಬೇಡಿಕೆ ದಿನೇದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಪತ್ರಕರ್ತರ ಆರೋಗ್ಯದ ಅನುಕೂಲಕ್ಕಾಗಿ ಆರ್ಥಿಕ ನೆರವು ಬೇಕಿದೆ. ವೈದ್ಯಕೀಯ ನೆರವಿಗೆ ರಾಜ್ಯ ಸರ್ಕಾರದಿಂದ ಸುಮಾರು 5 ಕೋಟಿ ರೂ. ಅನುದಾನ ನೀಡಬೇಕು ಎಂದು ಸಂಘದ ಅಧ್ಯಕ್ಷರಾದ ರಮೇಶ್‌ ಪಾಳ್ಯ ನೇತೃತ್ವದ ನಿಯೋಗವೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿತು. +ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಘದ ಶ್ರೇಯೋಭಿವದ್ಧಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಇದರ ಜೊತೆಗೆ ಕೆಲವು ಹಿರಿಯ ಪತ್ರಕರ್ತರು ಸಂಘದಲ್ಲಿ ಸಾಲ ಪಡೆದಿದ್ದು, ಕೊರೋನಾ ಸಮಯದಲ್ಲಿ ಹಾಗೂ ಆನಂತರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಕೊರೋನಾ ಆರ್ಥಿಕ ಸಂಕಷ್ಟದಿಂದ ನಿಗಧಿತ ಸಮಯಕ್ಕೆ ಸಾಲ ಮರು ಪಾವತಿ ಮಾಡದೆ ಸುಸ್ತಿದಾರರಾಗಿದ್ದಾರೆ. +ಹೀಗಾಗಿ ಸಂಸ್ಥೆಗೆ ಆರ್ಥಿಕ ನೆರವು ತೀರಾ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರ ಸಹಕಾರ ಸಂಘಕ್ಕೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳನ್ನು ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಸಹಕಾರ ಸಂಘಕ್ಕೆ ನೆರವು ನೀಡುವ ಭರವಸೆ ನೀಡಿದರು. +ನಿಗಮಗಳ ನೇಮಕದಲ್ಲಿ ಸಂಸ್ಥೆಯನ್ನೂ ಪರಿಗಣಿಸಿ:ಮಾಧ್ಯಮಕ್ಕೆ ಸಂಬಂಧಿಸಿದ ನಿಗಮ ಮಂಡಳಿ ಅಥವಾ ಅಕಾಡೆಮಿಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘವನ್ನೂ ಪರಿಗಣಿಸಬೇಕು. ಸಹಕಾರ ಸಂಘದ ಪ್ರತಿನಿಧಿಗಳನ್ನು ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಸಿಎಂ ಸಿದ್ದರಾಮಯ್ಯನವರನ್ನು ವಿನಂತಿಸಿಕೊಳ್ಳಲಾಯಿತು. +ನಿಯೋಗದಲ್ಲಿ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ, ಖಜಾಂಚಿ ಮೋಹನ್‌ ಕುಮಾರ್‌ ಬಿ.ಎಸ್‌‍. ನಿರ್ದೇಶಕರಾದ ರಮೇಶ್‌ ಹಿರೇಜಂಬೂರು, ಸೋಮಶೇಖರ್‌ ಕೆ.ಎಸ್‌‍.( ಸೋಮಣ್ಣ ) ಉಪಸ್ಥಿತರಿದ್ದರು. +ಭಾನುವಾರ ಪ್ರೆಸ್‌‍ಕ್ಲಬ್‌ನಲ್ಲಿ ಪತ್ರಕರ್ತರ ಸಹಕಾರ ಸಂಘದ ಮಹಾಸಭೆ :ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಪ್ರೆಸ್‌‍ಕ್ಲಬ್‌ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್‌‍ಎಸ್‌‍ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೊತ್ತರ ಪದವಿಗಳಲ್ಲಿ ಅತ್ಯುತ್ತಮ ಶ್ರೇಣಿಗಳಲ್ಲಿ ಉತ್ತೀರ್ಣರಾಗಿರುವ ಸಂಘದ ಸದಸ್ಯರ ಮಕ್ಕಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರಿಜ್ವಾನ್‌ ಹರ್ಷದ್‌ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಮತ್ತಿತರ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. +ಪ್ರತಿಭಾವಂತ ಮಕ್ಕಳಿಗೆ 2500 ರೂ.ನಗದು, ಪ್ರಮಾಣ ಪತ್ರ, ಬ್ಯಾಗ್‌, ಮೊಮೆಂಟೋ ಮತ್ತಿತರ ವಸ್ತುಗಳನ್ನು ನೀಡಿ ಗೌರವಿಸಲಾಗುವುದು. ಇದೇ ಮೊದಲ ಬಾರಿಗೆ ಯುಪಿಎಸ್‌‍ಸಿ ಪರೀಕ್ಷೆಯಲ್ಲಿ ಸಂಘದ ಸದಸ್ಯರೊಬ್ಬರ ಪುತ್ರರೂ ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಸಿಎ ಪರೀಕ್ಷೆ ಹಾಗೂ ಡೆಂಟಲ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಪ್ರತಿಭಾವಂತರನ್ನು ಸನಾನಿಸಲಾಗುತ್ತಿದೆ. +ಸಂಘದ ಅಧ್ಯಕ್ಷ ರಮೇಶ್‌ಪಾಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಂಘದ ಬೆಳವಣಿಗೆ ಹಾಗೂ ಕೆಲ ನಿಯಮಗಳನ್ನು ಜಾರಿಗೆ ತಂದಿರುವ ಕುರಿತಂತೆ ಮಹಾಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತಿದೆ. +ಸಭೆಯಲ್ಲಿ ಉಪಾಧ್ಯಕ್ಷ ದೊಡ್ಡಬೊಮಯ್ಯ, ಖಜಾಂಚಿ ಮೋಹನ್‌ಕುಮಾರ್‌, ನಿರ್ದೇಶಕರುಗಳಾದ ಆನಂದ್‌ ಬೈದಮನೆ, ಧ್ಯಾನ್‌ಪೂಣಚ್ಚ, ಸೋಮಣ್ಣ, ರಮೇಶ್‌ ಹಿರೆಜಂಬೂರು, ವಿನೋದ್‌ಕುಮಾರ್‌ ನಾಯ್‌್ಕ, ರಾಜೇಂದ್ರ ಕುಮಾರ್‌, ಕೃಷ್ಣಕುಮಾರ್‌, ಕೆ.ವಿ.ಪರಮೇಶ್‌, ನಯನಾ, ವನಿತಾ, ಕಾರ್ಯದರ್ಶಿ ಕೆಂಪಣ್ಣ ಮತ್ತಿತರರು ಪಾಲ್ಗೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_14_5.txt b/eesanje/url_46_14_5.txt new file mode 100644 index 0000000000000000000000000000000000000000..eb618600312ea8d1e4d8675f6fcf368d65e1e911 --- /dev/null +++ b/eesanje/url_46_14_5.txt @@ -0,0 +1,8 @@ +ನಾಗಮಂಗಲ ಗಲಭೆ ಪೂರ್ವ ನಿಯೋಜಿತ ಕೃತ್ಯ : ಬಿಜೆಪಿ ಸತ್ಯ ಶೋಧನಾ ಸಮಿತಿ ವರದಿ + +ಬೆಂಗಳೂರು,ಸೆ.20– ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆಯು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಪೊಲೀಸ್‌‍ ಮತ್ತು ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಹೇಳಿದೆ. +ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್‌ ನಾರಾಯಣ ನೇತೃತ್ವದಲ್ಲಿ ಮಾಜಿ ಸಚಿವರಾದ ಭೈರತಿ ಬಸವರಾಜ್‌, ಕೆ.ಸಿ.ನಾರಾಯಣಗೌಡ, ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್‌ ಗೌಡ, ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌ ಅವರುಗಳು ಸತ್ಯ ಶೋಧನಾ ಸಮಿತಿ ವರದಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹಸ್ತಾಂತರಿಸಿದರು. ಸತ್ಯಶೋಧನಾ ಸಮಿತಿಯು ನಾಗಮಂಗಲ ಗಲಭೆಯನ್ನು ಪೂರ್ವ ನಿಯೋಜಿತ ಕೃತ್ಯ ಎಂಬುದನ್ನು ಉಲ್ಲೇಖಿಸಿದ್ದು, ಬಾಂಗ್ಲಾ ದೇಶದಿಂದ ಬಂದಿರುವ ಕೆಲವು ಕಿಡಿಗೇಡಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದೆ. +ದೇಶದ್ರೋಹಿಗಳು ಗಲಭೆ ಎಬ್ಬಿಸಲು ಮುಂಚಿತವಾಗಿಯೇ ಕತ್ತಿ, ತಲ್ವಾರ್‌, ಪೆಟ್ರೋಲ್‌ ಬಾಂಬ್‌, ಮಾಸ್ಕ್‌ಗಳನ್ನು ಖರೀದಿ ಮಾಡಿದ್ದಾರೆ. ಕಳೆದ ವರ್ಷ ಇಲ್ಲಿ ಗಲಭೆ ನಡೆದಿದ್ದರೂ ಗುಪ್ತಚರ ವಿಭಾಗ ಮತ್ತು ಪೊಲೀ ಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದೆ. +ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯವೂ ಪ್ರಮುಖ ಕಾರಣವಾಗಿದೆ. ನಾಗಮಂಗಲ ಸೂಕ್ಷ್ಮ ಪ್ರದೇಶ ಎಂದು ಗೊತ್ತಿದ್ದರೂ ಸ್ಥಳದಲ್ಲಿ ಹೆಚ್ಚಿನ ಪೊಲೀಸ್‌‍ ಏಕೆ ನಿಯೋಜಿಸಲಿಲ್ಲ. ಗಣಪತಿ ವಿಸರ್ಜನೆ ಇಂತಹ ದಿನವೇ ನಡೆಯುತ್ತವೆ ಎಂದು ಗೊತ್ತಿದ್ದರೂ ಗುಪ್ತಚರ ವಿಭಾಗದ ಎಡಿಜಿಪಿ ಒಂದೇ ಒಂದು ಬಾರಿ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲ. ಇವೆಲ್ಲವೂ ಗೃಹ ಇಲಾಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸತ್ಯಶೋಧನ ಸಮಿತಿ ಹೇಳಿದೆ. +ಗಣಪತಿ ಮೆರವಣಿಗೆ ನಡೆಯುವ ವೇಳೆ ಭದ್ರತೆಗಾಗಿ ಕೇವಲ 25 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಗಲಭೆ ನಡೆಸಲು ಒಂದು ನಿರ್ಧಿಷ್ಟ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಅವರ ಚಲನವಲನಗಳ ಬಗ್ಗೆ ಮಾಹಿತಿ ಕಲೆ ಹಾಕಲು ಏಕೆ ಸಾಧ್ಯವಾಗಲಿಲ್ಲ. +ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದರೆ, ಗಲಭೆಯನ್ನು ನಿಯಂತ್ರಿಸಬಹುದಿತ್ತು. ಸರ್ಕಾರದ ತುಷ್ಟೀಕರಣವು ಕೂಡ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಸಮಿತಿ ಹೇಳಿದೆ. \ No newline at end of file diff --git a/eesanje/url_46_14_6.txt b/eesanje/url_46_14_6.txt new file mode 100644 index 0000000000000000000000000000000000000000..4197bde58eb4f4f6e9b33ec08911cd0cf0d6f21c --- /dev/null +++ b/eesanje/url_46_14_6.txt @@ -0,0 +1,11 @@ +ನಾಡೋಜ ಹಂಪ ನಾಗರಾಜಯ್ಯ ಅವರಿಗೆ ದಸರಾ ಉದ್ಘಾಟನೆ ಭಾಗ್ಯ + 2024: +ಮೈಸೂರು, ಸೆ.20-ಹೆಸರಾಂತ ಸಾಹಿತಿ ಹಂಪನಾಗರಾಜಯ್ಯ ಅವರನ್ನು ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದಸರಾ ಉದ್ಘಾಟನೆಗೆ ಗಣ್ಯರನ್ನು ಆಯ್ಕೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಚಿವ ಸಂಪುಟ ಸಭೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನನಗೆ ಅವಕಾಶ ನೀಡಿತ್ತು. ಅದರ ಅನ್ವಯ ಹಂಪನಾಗರಾಜಯ್ಯ ಅವರನ್ನು ಆಹ್ವಾನಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. +ರಾಜ್ಯಾದ್ಯಂತ 60 ಸಾವಿರಕ್ಕೂ ಹೆಚ್ಚು ಗಣಪತಿ ಉತ್ಸವಗಳು ನಡೆದಿವೆ. ಅದರಲ್ಲಿ ನಾಗಮಂಗಲ ಮತ್ತು ದಾವಣಗೆರೆ ಸೇರಿ ಎರಡು ಕಡೆ ಗಲಭೆಗಳಾಗಿವೆ. ದಾವಣೆಗೆರೆಯಲ್ಲಿ ಕಲ್ಲು ತೂರಾಟವಾಗಿದೆ, ನಾಗಮಂಗಲದಲ್ಲಿ ಅಂಗಡಿಗಳನ್ನು ಸುಟ್ಟು ಹಾಕಲಾಗಿದೆ ಘಟನೆಯಲ್ಲಿ ಪೊಲೀಸರ ವೈಫಲ್ಯ ಕಂಡುಬಂದಿದೆ. ಇನ್‌್ಸಪೆಕ್ಟರ್‌ ಹಾಗೂ ಡಿವೈಎಸ್ಪಿ ಅವರನ್ನು ಅಮಾನತು ಗೊಳಿಸಲಾಗಿದೆ ಎಂದರು. +ರಾಜ್ಯದಲ್ಲಿ ಕೋಮು ಗಲಭೆಗೆ ಬಿಜೆಪಿಯವರೇ ಕಾರಣ. ಅವರ ಪ್ರಚೋದನೆಯಿಂದಲೇ ಗಲಾಟೆಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಗಣೇಶೋತ್ಸವ ಹಾಗೂ ಇತರ ಸಂದರ್ಭಗಳಲ್ಲಿ ಶಾಂತಿ ಪಾಲನೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. +ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರ ವಿರುದ್ಧ ಡಿ-ನೋಟಿಫಿಕೇಷನ್‌ ಆರೋಪ ಕೇಳಿಬಂದಿದೆ. ಸಚಿವರಾದ ಕೃಷ್ಣಬೈರೇಗೌಡ, ದಿನೇಶ್‌ಗುಂಡೂರಾವ್‌, ಸಂತೋಷ್‌ ಲಾಡ್‌ ಅವರು ಆರೋಪ ಮಾಡಿ, ಅಕ್ರಮವಾಗಿ ಡಿ-ನೋಟಿಫಿಕೇಷನ್‌ ಮಾಡಲಾಗಿದೆ ಎಂದು ದೂರಿದ್ದಾರೆ. ಒಂದು ಎಕರೆ 11ಗುಂಟೆ ಜಮೀನು ಡಿ-ನೋಟಿಫಿಕೇಷನ್‌ ಆಗಿದೆ. ಅದರ ಮೌಲ್ಯ ಹೆಚ್ಚು. ಅದರಲ್ಲೂ ಕುಮಾರಸ್ವಾಮಿಯವರ ಅತ್ತೆ, ಜಮೀನಿನ ಜಿಪಿಎ ಭಾಗಿದಾರರು. ಕುಮಾರಸ್ವಾಮಿ ಅವರ ಭಾವಮೈದುನ ಜಮೀನಿನ ಫಲಾನುಭವಿ ಎಂದು ವಿವರಿಸಿದರು. +ಸದರಿ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ, ಸರ್ಕಾರದಿಂದ ಪರಿಹಾರವೂ ಪಾವತಿಯಾಗಿದೆ. ಇಂತಹ ಜಮೀನನ್ನು ಡಿ-ನೋಟಿಫಿಕೇಷನ್‌ ಮಾಡಲು ಸಾಧ್ಯವಿಲ್ಲವೆಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅದನ್ನೂ ಮೀರಿ ಸತ್ತವರ ಹೆಸರಿಗೆ ಡಿನೋಟಿಫಕೇಷನ್‌ ಮಾಡಲಾಗಿದೆ ಎಂದು ದೂರಿದರು. +ಕುಮಾರಸ್ವಾಮಿ ಸದಾ ಹಿಟ್‌ ಅಂಡ್‌ ರನ್‌ ಹೇಳಿಕೆ ನೀಡುತ್ತಿದ್ದಾರೆ. ಜವಾಬ್ದಾರಿಯಿಂದ ಮಾತನಾಡುವುದಿಲ್ಲ. ಯಾವ ಆರೋಪವನ್ನು ತಾರ್ಕಿಕ ಆಂತ್ಯಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಕೇಂದ್ರ ಸಂಪುಟದಲ್ಲಿ ಸಚಿವರಾಗಿರುವವರು ಮಾತನಾಡಿದಾಗ ಘನತೆ ಇರಬೇಕು ಎಂದು ಹೇಳಿದರು. +ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಅವುಗಳನ್ನು ಎಸ್‌‍ಐಟಿ ತನಿಖೆಗೆ ವಹಿಸಬೇಕೆಂದು ಒಕ್ಕಲಿಗ ಸಮುದಾಯದ ಮುಖಂಡರು ಇಂದು ತಮನ್ನು ಭೇಟಿ ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರ ಜೊತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು. +ಪೊಲೀಸ್‌‍ ಕಾನ್‌್ಷಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಒಂದು ಅವಧಿಗೆ ಸೀಮಿತವಾಗಿ ವಯೋಮಿತಿಯನ್ನು ಸಡಿಲಿಕೆ ಮಾಡಲು ಸೂಚಿಸಲಾಗಿದೆ. ಕೆ.ಎ.ಎಸ್‌‍ ಪರೀಕ್ಷೆಯಲ್ಲಿ ಸಾಕಷ್ಟು ತಪ್ಪುಗಳಾಗಿದ್ದವು ಹೀಗಾಗಿ ಮರು ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದು ತೀಳಿಸಿದರು. \ No newline at end of file diff --git a/eesanje/url_46_14_7.txt b/eesanje/url_46_14_7.txt new file mode 100644 index 0000000000000000000000000000000000000000..95d921f77e595e36ca9bd70aecbd3377101aefa0 --- /dev/null +++ b/eesanje/url_46_14_7.txt @@ -0,0 +1,11 @@ +ಮುನಿರತ್ನ ವಿರುದ್ಧದ ಪ್ರಕರಣ ತನಿಖೆಗೆ ಎಸ್‌‍ಐಟಿ ರಚಿಸುವಂತೆ ಆಗ್ರಹ + +ಬೆಂಗಳೂರು, ಸೆ.20– ಬಿಜೆಪಿ ಶಾಸಕ ಮುನಿರತ್ನ ಅವರ ಹೊಸ ಮತ್ತು ಹಳೆಯ ಪ್ರಕರಣಗಳನ್ನು ಸಮಗ್ರವಾಗಿ ತನಿಖೆಗೊಳಪಡಿಸಲು ಎಸ್‌‍ಐಟಿ ರಚಿಸುವಂತೆ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. +ಸಮುದಾಯದ ಹಿರಿಯ ನಾಯಕರು ಹಾಗೂ ಜನ ಪ್ರತಿನಿಧಿಗಳು ನಿನ್ನೆ ಸಭೆ ನಡೆಸಿ ಇತ್ತೀಚಿನ ರಾಜಕೀಯ, ಸಾಮಾಜಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಸಚಿವ ಕೃಷ್ಣಬೈರೇ ಗೌಡ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು.ಸಚಿವರಾದ ಡಾ. ಎಂ.ಸಿ. ಸುಧಾಕರ್‌, ಶಾಸಕರಾದ ಶರತ್‌ ಬಚ್ಚೇಗೌಡ, ಡಾ. ರಂಗನಾಥ್‌, ಮಂಥರ್‌ ಗೌಡ, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಮುಖಂಡರಾದ ಮರಿ ತಿಬ್ಬೇಗೌಡ ಸೇರಿದಂತೆ ಮತ್ತಿತರರು ನಿಯೋಗದಲ್ಲಿದ್ದರು. +ಈ ಕುರಿತು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚೆಲುವರಾಯ ಸ್ವಾಮಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು. ಇಷ್ಟು ದಿನ ನಾವು ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಹಗರಣಗಳ ತನಿಖೆ ನಂತರದ ಆದ್ಯತೆ ಎಂಬ ಧೋರಣೆಯಲ್ಲಿ ಕೆಲಸ ಮಾಡುತ್ತಿದ್ದೆವು. ಇನ್ನೂ ಮುಂದೆ ತನಿಖೆಗೆ ಮೊದಲ ಆದ್ಯತೆ, ನಂತರ ಅಭಿವೃದ್ಧಿ ಎಂಬ ನಿಲುವನ್ನು ಬದಲಾಯಿಸಿಕೊಂಡಿದ್ದೇವೆ ಎಂದರು. +ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿದ್ದ ಕಾರಣ ನಿನ್ನೆ ಸಭೆಗೆ ಬರಲು ಸಾಧ್ಯವಾಗಲಿಲ್ಲ. ಉಳಿದಂತೆ ಸಚಿವರು, ಶಾಸಕರು ಸೇರಿ 40ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದೆವು.ಇವತ್ತಿನ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ನಡೆಸುತ್ತಿರುವ ಅನಗತ್ಯ ವಿಚಾರಗಳ ಬಗ್ಗೆಯೂ ಪ್ರಸ್ತಾಪವಾಗಿದೆ. +ಒಕ್ಕಲಿಗ ಸಮುದಾಯದ ಮುಖಂಡರು ಪಕ್ಷ ಮತ್ತು ಸರ್ಕಾರದ ಜೊತೆಗೆ ದೃಢವಾಗಿ ನಿಲ್ಲಬೇಕು. ಸಮುದಾಯದ ಸಂಘಟನೆ, ಅಭಿವೃದ್ಧಿ, ಮುಂದಿನ ಸ್ಥಳಿಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಮತ್ತಷ್ಟು ಆಕ್ರಮಣಕಾರಿಯಾಗಿ ಹಾಗೂ ಬೆಂಬಲವಾಗಿ ನಿಲ್ಲಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗಿದೆ. +ಆರ್‌ಟಿನಗರದಲ್ಲಿ ಒಂದು ಎಕರೆ ಭೂಮಿಯನ್ನು ಡಿನೋಟಿಫಿಕೇಷನ್‌ ಮಾಡಿರುವ ಪ್ರಕರಣ ಕಣ್ಣ ಮುಂದಿದೆ. ಕುಮಾರಸ್ವಾಮಿ ತಮ ಕಾಲದಲ್ಲಿ ಡಿನೋಟಿಫಿಕೇಷನ್‌ ಮಾಡದೇ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಾಡಿಸಿದ್ದಾರೆ. ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಇಬ್ಬರ ಹೆಸರು ಒಳಗೊಂಡ ಎಫ್‌ಐಆರ್ ಇದೆ. ಈ ಎಲ್ಲ ವಿಚಾರಗಳನ್ನು ಎಸ್‌‍ಐಟಿ ತನಿಖೆಗೆ ಒಳಪಡಿಸಲು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗಿದೆ ಎಂದರು. +ಬಿಜೆಪಿ ಶಾಸಕ ಮುನಿರತ್ನ ಒಕ್ಕಲಿಗ ಸಮುದಾಯ ಹೆಣ್ಣು ಮಕ್ಕಳು ಹಾಗೂ ಪರಿಶಿಷ್ಟ ಜಾತಿಯ ಕುರಿತು ಆಡಿರುವ ಮಾತುಗಳು ತೀವ್ರ ನೋವುಂಟು ಮಾಡಿವೆ. ಕುಮಾರಸ್ವಾಮಿ, ಆರ್‌. ಅಶೋಕ್‌, ಸಿ.ಟಿ. ರವಿ ಅವರು ಮುನಿರತ್ನ ಪರವಾಗಿ ನಿಂತಿದ್ದು, ತಲೆ ಬಗ್ಗಿಸುವಂತಾಗಿದೆ. ಇದು ಖಂಡನೀಯ ಈ ಮೂರು ಮಂದಿ ಸಮಾಜದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. +ಮುನಿರತ್ನ ವಿರುದ್ಧ ನಿನ್ನೆ, ಮೊನ್ನೆ ಬಹಿರಂಗಗೊಂಡ ಪ್ರಕರಣಗಳ ಜೊತೆಗೆ ಮತ್ತಷ್ಟು ಹಳೆಯ ಪ್ರಕರಣಗಳನ್ನೊಳಗೊಂಡು ಸಮಗ್ರ ತನಿಖೆಗೆ, ಎಸ್‌‍ಐಟಿ ರಚಿಸುವಂತೆ ಆಗ್ರಹಿಸಲಾಗಿದೆ ಎಂದು ಹೇಳಿದರು. +ಈ ವಿಚಾರವನ್ನು ಇಟ್ಟುಕೊಂಡು ರಾಜ್ಯಾದಂತ ಹೋರಾಟ ರೂಪಿಸುವ ಕುರಿತು ಚರ್ಚೆ ನಡೆಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರಿಗೆ ಬಂದ ಬಳಿಕ ಶ್ರೀ ಆದಿಚುಂಚನಗಿರಿ ಸ್ವಾಮೀಜಿಯೊಂದಿಗೆ ಚರ್ಚೆ ನಡೆಸಿ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_14_8.txt b/eesanje/url_46_14_8.txt new file mode 100644 index 0000000000000000000000000000000000000000..815c95027103389b9fc695c5d09e58eac6303cf8 --- /dev/null +++ b/eesanje/url_46_14_8.txt @@ -0,0 +1,5 @@ +ಡಿನೋಟಿಫಿಕೇಷನ್ ಗೂ ನನಗೂ ಸಂಬಂಧವಿಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ + +ಮಂಡ್ಯ, ಸೆ.20– ಡಿನೋಟಿಫಿಕೇಷನ್ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಡಿನೋಟಿಫಿಕೇಷನ್ಗೂ ಏನು ಸಂಬಂಧ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಯಾವ ತಪ್ಪು ಮಾಡಿರುವುದಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. +ಕಾಂಗ್ರೆಸ್ನವರಿಗೆ ಕನ್ನಡ ಸರಿಯಾಗಿ ಓದಲು ಬರುವುದಿಲ್ಲವೇ? ದಾಖಲೆಗಳನ್ನು ಸರಿಯಾಗಿ ನೋಡಿದ್ದಾರೆಯೇ? ಯಾರೋ ಬರೆದುಕೊಟ್ಟಿರುವುದನ್ನು ತುತ್ತೂರಿ ಊದಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಮುಡಾ ಹಗರಣಕ್ಕೂ ನನಗೂ ಯಾವ ಸಂಬಂಧ ವಿಲ್ಲ. ಆದರೂ, ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ನವರು ಹುಚ್ಚರಾ? ಏನು ತಪ್ಪು ಮಾಡಿದ್ದೇನೆ? ಏಕೆ ರಾಜೀನಾಮೆ ಕೊಡಲಿ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_14_9.txt b/eesanje/url_46_14_9.txt new file mode 100644 index 0000000000000000000000000000000000000000..a4e0487ebd07933acdae8d4c521a88488ef6ff2d --- /dev/null +++ b/eesanje/url_46_14_9.txt @@ -0,0 +1,8 @@ +ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್ + +ಬೆಂಗಳೂರು, ಸೆ.20-ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. +ಪರಪ್ಪನ ಅಗ್ರಹಾರ ಕಾರಾಗೃಹ ಬಳಿಯಿಂದ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಕರೆದೊಯ್ದು ನಂತರ ಬಂಧಿಸಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿನ್ನೆ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿತ್ತು. +ಅದರಂತೆ ಇಂದು ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದರು.ರಾಮನಗರ ಜಿಲ್ಲೆಯ ಮಾಗಡಿ ಉಪವಿಭಾಗದ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಉಪವಿಭಾಗದ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಮುನಿರತ್ನ ಜೈಲಿನಿಂದ ಹೊರಬರುವುದನ್ನೇ ಕಾದುಕುಳಿತಿತ್ತು. +ಅವರು ಜೈಲಿನಿಂದ ಹೊರಬರುತ್ತಿದ್ದಂತೆ ವಶಕ್ಕೆ ತೆಗೆದುಕೊಂಡ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನದ ಭದ್ರತೆಯೊಂದಿಗೆ ಅವರನ್ನು ವಶಕ್ಕೆ ತೆಗೆದುಕೊಂಡು ಕಗ್ಗಲಿಪುರ ಠಾಣೆಗೆ ಕರೆದೊಯ್ದು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.ಇಂದು ಸಂಜೆ ಮುನಿರತ್ನ ಅವರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸುವ ಸಾಧ್ಯತೆ ಇದೆ. +ಶಾಸಕ ಮುನಿರತ್ನ ವಿರುದ್ಧ ಮೊನ್ನೆ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು, ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಗ್ಗಲೀಪುರದ ಖಾಸಗಿ ರೆಸಾರ್ಟ್ ಹಾಗೂ ನಗರದ ಗೋಡೌನ್ನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ 40 ವರ್ಷದ ಮಹಿಳೆಯೊಬ್ಬರು ಶಾಸಕ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. +ದೂರಿನನ್ವಯ ಪೊಲೀಸರು ಶಾಸಕ ಮುನಿರತ್ನ ನಾಯ್ಡು ಮತ್ತು ವಿಜಯ್ ಕುಮಾರ್, ಸುಧಾಕರ, ಕಿರಣ್ ಕುಮಾರ್ , ಲೋಹಿತ್ ಗೌಡ, ಮಂಜುನಾಥ ಮತ್ತು ಲೋಕಿ ಎಂಬುವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_150_1.txt b/eesanje/url_46_150_1.txt new file mode 100644 index 0000000000000000000000000000000000000000..125587f0a854573cb571fd121135ad9169f439fb --- /dev/null +++ b/eesanje/url_46_150_1.txt @@ -0,0 +1,9 @@ +ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬಿಜೆಪಿ ಪರಾಮರ್ಶೆ ಸಭೆ, ಹೈಕಮಾಂಡ್‌ಗೆ ವರದಿ +ಬೆಂಗಳೂರು,ಮೇ11– ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೆ ನಿರ್ವಹಣೆ ಕುರಿತು ರಾಜ್ಯ ಬಿಜೆಪಿ ನಾಯಕರು ಪರಾಮರ್ಶೆ ನಡೆಸಲಿದ್ದು, ಟಾರ್ಗೆಟ್‌ ರೀಚ್‌ ಕುರಿತ ಅವಲೋಕನ ನಡೆಸಿ ಪಕ್ಷದ ಹೈಕಮಾಂಡ್‌ಗೆ ವರದಿ ಸಲ್ಲಿಸಲಿದ್ದಾರೆ. +ಕಳೆದ ಬಾರಿ ಏಕಾಂಗಿಯಾಗಿ ಸ್ಪರ್ಧೆ ಮಾಡಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಅಷ್ಟು ಸ್ಥಾನ ಉಳಿಸಿಕೊಳ್ಳುವುದು ಅನುಮಾನವಾಗಿದೆ. ಜೆಡಿಎಸ್‌‍ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಕಳೆದ ಬಾರಿಯ ಎಲ್ಲ ಸ್ಥಾನ ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಆದರೂ ಎಷ್ಟು ಸ್ಥಾನ ಗಳಿಸಲಿದೆ ಹಾಗೂ ಎಲ್ಲಿ ಹಿನ್ನಡೆ ಸಾಧ್ಯತೆ ಇದೆ ಎನ್ನುವ ಕುರಿತು ಪರಾಮರ್ಶೆಗೆ ರಾಜ್ಯ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. +ಇಂದು ಸಂಜೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಪದಾಧಿಕಾರಿಗಳು, ಶಾಸಕರು, ಅಭ್ಯರ್ಥಿಗಳು ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರ ಸಭೆ ಕರೆಯಲಾಗಿದೆ. ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. +ಸಭೆಯಲ್ಲಿ ಎಲ್ಲಾ 28 ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ. 25 ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧೆ ಮಾಡಿದ್ದು, 3 ಕ್ಷೇತ್ರದಲ್ಲಿ ಜೆಡಿಎಸ್‌‍ ಸ್ಪರ್ಧೆ ಮಾಡಿವೆ. ಎಲ್ಲ ಕ್ಷೇತ್ರಗಳಲ್ಲಿ ನಡೆದ ಇಡೀ ಚುನಾವಣಾ ಪ್ರಚಾರ ಪ್ರಕ್ರಿಯೆ ಕುರಿತು ಪರಾಮರ್ಶೆ ನಡೆಸಲಾಗುತ್ತದೆ. ಚುನಾವಣಾ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಸಲಾಗಿದೆ. ನಿರೀಕ್ಷೆಯಂತೆ ಪ್ರಚಾರ ಕಾರ್ಯ ನಡೆದಿದೆಯಾ ಅಥವಾ ಹಿನ್ನಡೆಗೆ ಕಾರಣವಾಗುವಂತಹ ಘಟನೆಗಳು ನಡೆದಿವೆಯಾ ಎನ್ನುವ ಕುರಿತು ಚರ್ಚಿಸಲಾಗುತ್ತದೆ. +ಬೂತ್‌ ಮಟ್ಟದಿಂದಲೇ ಚುನಾವಣಾ ನಿರ್ವಹಣೆ ನಡೆದಿದ್ದು, ಅದರ ಸಂಪೂರ್ಣ ವರದಿ ಪಡೆಯಲಾಗುತ್ತದೆ. ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದಲ್ಲಿ ನಡೆದ 14 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ 11 ಜೆಡಿಎಸ್‌‍ 3 ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದು, ಬೆಂಗಳೂರು ಉತ್ತರ, ಚಾಮರಾಜನಗರದಲ್ಲಿ ಪಕ್ಷಕ್ಕೆ ಹಿನ್ನಡೆ ಸಾಧ್ಯತೆ ಕುರಿತು ನಡೆಯುತ್ತಿರುವ ಚರ್ಚೆ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ನಡೆದ ಹಲವು ಘಟನೆಗಳಿಂದ ಪಕ್ಷಕ್ಕೆ ಹಿನ್ನಡೆ ಆಗುತ್ತದೆಯಾ ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ. +ಇನ್ನು ಮಿತ್ರ ಪಕ್ಷಕ್ಕೆ ನೀಡಿರುವ ಮೂರು ಸ್ಥಾನಗಳಲ್ಲಿ ಮಂಡ್ಯದಲ್ಲಿ ಭಾರೀ ಪ್ರಮಾಣದ ಪೈಪೋಟಿ, ಹಾಸನ ಅಭ್ಯರ್ಥಿ ವಿವಾದದಲ್ಲಿ ಸಿಲುಕಿದ್ದರಿಂದ ಹಿನ್ನಡೆ ಆಗಿದೆಯಾ ಎನ್ನುವ ಕುರಿತು ಬಿಜೆಪಿ ನಾಯಕರಿಂದಲೇ ಮಾಹಿತಿ ಪಡೆಯಲಾಗುತ್ತದೆ. ಮೊದಲ ಹಂತದ 14 ಕ್ಷೇತ್ರದಲ್ಲಿ 8 – 10 ಕ್ಷೇತ್ರದಲ್ಲಿ ಗೆಲ್ಲುವ ಲೆಕ್ಕಾಚಾರವಿದ್ದು, ಆ ಬಗ್ಗೆ ಅಂಕಿ ಅಂಶಗಳೊಂದಿಗೆ ಸಮಗ್ರ ಚರ್ಚೆ ನಡೆಸಲಾಗುತ್ತದೆ. +ಇನ್ನು ಎರಡನೇ ಹಂತದಲ್ಲಿ ಉತ್ತರಕರ್ನಾಟಕದ 14 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ 11 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆ ಬಿಜೆಪಿ ನಾಯಕರದ್ದಾಗಿದೆ. ಎಲ್ಲ 14 ಕ್ಷೇತ್ರದಲ್ಲಿಯೂ ಬಿಜೆಪಿಯೇ ಸ್ಪರ್ಧೆ ಮಾಡಿದ್ದು, ಜೆಡಿಎಸ್‌‍ ನಾಯಕರು ಪ್ರಚಾರಕ್ಕೆ ಸಾಥ್‌ ನೀಡಿದ್ದರು. ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ರಾಯಚೂರು ಕಠಿಣವಾಗಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಈ ಕ್ಷೇತ್ರಗಳಲ್ಲಿ ಹಿನ್ನಡೆ ಆಗಿದೆಯಾ? ಆಗಿದ್ದರೆ ಯಾವ ಕಾರಣಕ್ಕೆ ಆಗಿದೆ ಎಂಬುದರ ಕುರಿತು ಚರ್ಚಿಸಲಾಗುತ್ತದೆ. +ಬಿಜೆಪಿ 18ರಿಂದ 20 ಸ್ಥಾನದ ನಿರೀಕ್ಷೆಯಲ್ಲಿದ್ದರೆ, ಬಿಜೆಪಿ ಜೆಡಿಎಸ್‌‍ ಮಿತ್ರಕೂಟಕ್ಕೆ 20ರಿಂದ 22 ಸ್ಥಾನದ ನಿರೀಕ್ಷೆ ಇದೆ. ಈ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದೆಯಾ? ಎಂಬ ಕುರಿತು ಸಮಗ್ರ ಮಾಹಿತಿ ಪಡೆಯಲಾಗುತ್ತದೆ. ಪ್ರತಿಯೊಬ್ಬ ಶಾಸಕರಿಂದಲೇ ಅವರ ಕ್ಷೇತ್ರದ ಮುನ್ನಡೆ, ಹಿನ್ನಡೆ ಸಾಧ್ಯತೆ ಮಾಹಿತಿ ಪಡೆದು ಹೈಕಮಾಂಡ್‌ಗೆ ವರದಿ ರೂಪದಲ್ಲಿ ಈ ಮಾಹಿತಿಯನ್ನು ಕಳುಹಿಸಿಕೊಡಲಾಗುತ್ತದೆ. ಈಗಾಗಲೇ ಪಕ್ಷದ ಆಂತರಿಕ ಸಮೀಕ್ಷಾ ವರದಿ ಇದ್ದರೂ ರಾಜ್ಯ ಘಟಕದಿಂದ ವಸ್ತುಸ್ಥಿತಿಯ ವಿವರವನ್ನು ಹೈಕಮಾಂಡ್‌ ಬಯಸಿದ್ದು, ಅದರಂತೆ ಸಭೆ ನಂತರ ಹೈಕಮಾಂಡ್‌ಗೆ ಮಾಹಿತಿ ಕಳುಹಿಸಿ ಕೊಡಲಾಗುತ್ತದೆ. \ No newline at end of file diff --git a/eesanje/url_46_150_10.txt b/eesanje/url_46_150_10.txt new file mode 100644 index 0000000000000000000000000000000000000000..a378766f2495ec8501ef2dcc8e4faad3032faaa5 --- /dev/null +++ b/eesanje/url_46_150_10.txt @@ -0,0 +1,9 @@ +ಪೆನ್‌ಡ್ರೈವ್‌ ಪ್ರಕರಣದ ತನಿಖೆಯಲ್ಲಿ ನಾನಾಗಲಿ ಅಥವಾ ಡಿ.ಕೆ.ಶಿವಕುಮಾರ್‌ ಆಗಲಿ ಹಸ್ತಕ್ಷೇಪ ಮಾಡಿಲ್ಲ : ಸಿಎಂ +ಮೈಸೂರು, ಮೇ 10-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅಥವಾ ನನ್ನ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟ ಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತನಿಖೆ ನಡೆಸುತ್ತಿರುವ ಎಸ್‌‍ಐಟಿ ಮೇಲೆ ಸಂಪೂರ್ಣ ನಂಬಿಕೆ ಇದೆ. ಸಿಬಿಐಗೆ ವಹಿಸುವ ಅಗತ್ಯವೇ ಇಲ್ಲ ಎಂದು ಪ್ರತಿಪಾದಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದ ತನಿಖೆಗೆ ಈಗಾಗಲೇ ಎಸ್‌‍ಐಟಿ ರಚನೆ ಮಾಡಲಾಗಿದೆ. ನನಗೆ ನಮ ಪೊಲೀಸರ ಮೇಲೆ ನಂಬಿಕೆ ಇದೆ. ಅವರು ಕಾನೂನು ರೀತಿಯಲ್ಲಿ ತನಿಖೆ ಮಾಡಿ ವರದಿ ಕೊಡುತ್ತಾರೆ ಎಂಬ ವಿಶ್ವಾಸ ಇದೆ. ಈ ಹಿಂದೆ ಹಲವು ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು. ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ಒಪ್ಪಿಸಿರಲಿಲ್ಲ. ಸಿಬಿಐ ಎಂದರೆ ಕರೆಷ್ಪನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್‌ ಎಂದು ಬಿಜೆಪಿಯವರು ಹೇಳುತ್ತಿದ್ದರು. ದೇವೇಗೌಡರು ಚೋರ್‌ ಬಜಾವೋ ಸಂಸ್ಥೆ ಎಂದು ಟೀಕಿಸುತ್ತಿದ್ದರು. ಈಗ ಇದ್ದಕ್ಕಿದ್ದಂತೆ ಸಿಬಿಐ ಮೇಲೆ ಪ್ರೀತಿ ಬಂದಿದೆ ಎಂದು ಲೇವಡಿ ಮಾಡಿದರು. +ನಮ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಎಸ್‌‍ಐಟಿ ನಿಷ್ಪಕ್ಷಪಾತವಾಗಿ ಹಾಗೂ ಕಾನೂನಾತಕವಾಗಿ ತನಿಖೆ ನಡೆಸಲಿದೆ ಎಂಬ ವಿಶ್ವಾಸವಿದೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿ ಎಂದು ನಾನು ಪೊಲೀಸರಿಗೆ ಯಾವತ್ತೋ ಹೇಳಿಲ್ಲ. ಹೇಳುವುದು ಇಲ್ಲ. ಎಸ್‌‍ಐಟಿಯಲ್ಲಿರುವುದು ನಮ ಪೊಲೀಸರು. ಅವರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಅವರು ಸತ್ಯಾಸತ್ಯತೆ ಪತ್ತೆ ಹಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದರು. +ಹಿಂದೆ ಡಿ.ಕೆ.ರವಿ, ಲಾಟರಿ, ಕೆ.ಜೆ.ಜಾರ್ಜ್‌, ಪರೇಶ್‌ ಮೆಸ್ತಾ ಸೇರಿದಂತೆ ಹಲವು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇವು. ಒಂದರಲ್ಲಾದರೂ ಶಿಕ್ಷೆ ಆಯಿತೆ. ಹಾಗೇಂದ ಮಾತ್ರಕ್ಕೆ ನನಗೆ ಸಿಬಿಐ ಮೇಲೆ ನಂಬಿಕೆ ಇಲ್ಲ ಎಂದರ್ಥವಲ್ಲ ಎಂದರು.ಪೆನ್‌ಡ್ರೈವ್‌ ಪ್ರಕರಣದಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ವ್ಯಾಪ್ತಿಯಿಲ್ಲ. ಸಿಬಿಐ ತನಿಖೆಗೆ ಕೇಳುವ ಸಲುವಾಗಿ ಆಸ್ಟ್ರೇಲಿಯಾ, ಮಲೇಶಿಯಾದಲ್ಲಿ ನಡೆದಿದೆ ಎಂದು ಹೇಳುತ್ತಿದ್ದಾರೆ. ತನಿಖೆಯಲ್ಲಿ ಯಾರ ಹಸ್ತಕ್ಷೇಪ ಇಲ್ಲ. ನಮಗೆ ನಮ ಪೊಲೀಸರ ಮೇಲೆ ನಂಬಿಕೆ ಇಲ್ಲದೆ ಇದ್ದರೆ ಹೇಗೆ ? ತನಿಖೆಗೆ ಕಾಲಾವಕಾಶ ನೀಡಬೇಕಲ್ಲವೇ ? ಎಂದರು. +ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅಪಹರಣ ಪ್ರಕರಣ ಸತ್ಯಾಂಶ ಇಲ್ಲ ಎಂದಾದ ಮೇಲೆ ನಿರೀಕ್ಷಣಾ ಜಾಮೀನಿಗೆ ಯಾಕೆ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಾಲಯ ಜಾಮೀನು ಅರ್ಜಿಯನ್ನು ಯಾಕೆ ವಜಾಗೊಳಿಸಿತ್ತು. ಸುಳ್ಳು ಎಫ್‌ಐಆರ್‌ ಎಂದ ಮೇಲೆ ಜಾಮೀನು ಕೊಡಬೇಕಿತ್ತಲ್ಲ ಎಂದು ವಾದಿಸಿದರು. +ನೀತಿ ಸಂಹಿತೆ ಇರುವುದರಿಂದ ಇಂದು ತಾವು ಬಸವ ಜಯಂತಿಯ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಬಸವಣ್ಣ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಬಸವಣ್ಣ ಅವರ ಆದರ್ಶಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದರು. +ಎಸ್‌‍ಎಸ್‌‍ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಮೈಸೂರು 5 ಸ್ಥಾನಕ್ಕೆ ಬರಬೇಕು ಎಂದು ಸೂಚಿಸಲಾಗಿತ್ತು. ಈ ಸಾಲಿನಲ್ಲಿ 7ನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಲು ಕ್ರಮ ಕೈಗೊಳ್ಳಲಾಗುವುದು ಎಂದರು.ಬಾಗಲಕೋಟೆಯ ಮುಧೋಳ್‌ನ ಮೋರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವುದು ಶ್ಲಾಘನಾರ್ಹ. ವಸತಿ ಶಾಲೆಗಳ ಹೆಚ್ಚು ವಿದ್ಯಾರ್ಥಿಗಳು ಇದೇ ರೀತಿಯ ಸಾಧನೆ ಮಾಡಲಿ ಎಂದು ಹಾರೈಸಿದರು. +1994ರಲ್ಲಿ ತಾವು ಹಣಕಾಸು ಸಚಿವರಾಗಿದ್ದಾಗ ಗ್ರಾಮೀಣ ಭಾಗದ ಮಕ್ಕಳು, ದಲಿತರು, ಹಿಂದುಳಿದ ವರ್ಗಗಳ, ರೈತರ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸಿಗಬೇಕು ಎಂಬ ಕಾರಣಕ್ಕೆ ಮೋರಾರ್ಜಿ ಶಾಲೆಗಳನ್ನು ಆರಂಭಿಸಲಾಯಿತು. ಆ ಸಂದರ್ಭದಲ್ಲಿ ದಲಿತ ಸಂಘಟನೆಗಳು ನಮಗೆ ಸಾರಾಯಿ, ಹೆಂಡದ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂಬ ಘೋಷಣೆಗಳನ್ನು ಮೊಳಗಿಸುತ್ತಿದ್ದರು. ನನಗೆ ದಲಿತ ಸಂಘರ್ಷ ಸಮಿತಿಯ ಜೊತೆಗೆ ಸಂಪರ್ಕ ಇತ್ತು. ಖುದ್ದು ನಾನು ಗ್ರಾಮೀಣ ಭಾಗದವನಾಗಿದ್ದೆ. ಹಾಗಾಗಿ ವಸತಿ ಶಾಲೆಗಳನ್ನು ಆರಂಭಿಸಿದ್ದೆ. ಇಂದು ಹೋಬಳಿಗೊಂದರಂತೆ 900ಕ್ಕೂ ಹೆಚ್ಚು ವಸತಿ ಶಾಲೆಗಳಿವೆ ಎಂದರು. \ No newline at end of file diff --git a/eesanje/url_46_150_11.txt b/eesanje/url_46_150_11.txt new file mode 100644 index 0000000000000000000000000000000000000000..701dceed1f854eac7f3b47e1d15462f74ca940ec --- /dev/null +++ b/eesanje/url_46_150_11.txt @@ -0,0 +1,12 @@ +ಪಕ್ಷಕ್ಕಾಗಿ ಬಿಡುವಿಲ್ಲದೆ ದುಡಿದ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮೇ 10-ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಡುವಿಲ್ಲದಂತೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಜನವರಿಯಿಂದ 14 ಗ್ಯಾರಂಟಿ ಸಮಾವೇಶಗಳು, 76 ಪ್ರಜಾಧ್ವನಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾಜ್ಯಾದ್ಯಂತ ಸುಮಾರು 22 ರಿಂದ 26 ಸಾವಿರ ಕಿಲೋ ಮೀಟರ್‌ ಪ್ರವಾಸ ಮಾಡಿದ್ದಾರೆ. +ಮುಖ್ಯಮಂತ್ರಿಯವರ ರೋಡ್‌ ಶೋನಲ್ಲಿ ಸರಾಸರಿ 15 ಸಾವಿರ ಮಂದಿ ಭಾಗವಹಿಸಿದ್ದರು. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಆರೋಗ್ಯ ತೀವ್ರ ಸ್ವರೂಪದಲ್ಲಿ ಏರುಪೇರಾದಾಗಲೂ ಲೆಕ್ಕಿಸದೆ ದಿನಕ್ಕೆ ಸರಾಸರಿ 14-18 ಗಂಟೆ ಪ್ರಚಾರದಲ್ಲಿ ಶ್ರಮಿಸಿದ್ದಾರೆ. +ಚುನಾವಣೆ ಘೋಷಣೆಗೂ ಮುನ್ನಾ 14 ಗ್ಯಾರಂಟಿ ಸಮಾವೇಶಗಳಲ್ಲಿ ಭಾಗವಹಿಸಿದ್ದರು. ಎಲ್ಲಾ ಸಮಾವೇಶಗಳಲ್ಲೂ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ತಾತ್ವಿಕತೆ, ಅಗತ್ಯ, ಅನಿವಾರ್ಯತೆ ಮತ್ತು ಪರಿಣಾಮಗಳನ್ನು ತಮದೇ ಶೈಲಿಯಲ್ಲಿ ಜನರಿಗೆ ಮನದಟ್ಟು ಮಾಡಿಸಿದ್ದರು. ಪ್ರಮುಖವಾಗಿ ನೆರೆದಿದ್ದ ಜನರ ಜತೆ ಸಂವಾದ ನಡೆಸುತ್ತಲೇ ಅವರನ್ನು ಒಳಗೊಳ್ಳುತ್ತಾ ಜನಪದ ಕಲಾವಿದರ ಶೈಲಿಯಲ್ಲಿ ಸ್ಪಂದಿಸಿದ್ದು ಪರಿಣಾಮಕಾರಿಯಾಗಿತ್ತು. +ಚುನಾವಣೆ ಘೋಷಣೆಯಾದ ಬಳಿಕ ಮೊದಲ ಮತ್ತು ಎರಡನೇ ಹಂತದ 28 ಲೋಕಸಭಾ ಕ್ಷೇತ್ರಗಳ 76 ಸ್ಥಳಗಳಲ್ಲಿ ಪ್ರಜಾಧ್ವನಿ ಸಮಾವೇಶಗಳಲ್ಲಿ ಹೈವೋಲ್ಟೇಜ್‌ ಭಾಷಣಗಳ ಮೂಲಕ ರಾಜ್ಯದ ಜನರಿಗೆ 2024ರ ಲೋಕಸಭಾ ಚುನಾವಣೆಯ ಮಹತ್ವವನ್ನು ಮನಮುಟ್ಟುವಂತೆ ಅರ್ಥ ಮಾಡಿಸಿದ್ದರು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. +ಬಿಜೆಪಿ ಕೇವಲ ಭಾರತೀಯರ ಭಾವನೆಗಳನ್ನು ಕೆರಳಿಸಿ ಜನರನ್ನು ಬಕ್ರಾ ಮಾಡುತ್ತಿದೆ. ಕಾಂಗ್ರೆಸ್‌‍ ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಭರವಸೆಗಳನ್ನು ನೀಡುತ್ತಿದೆ ಎನ್ನುತ್ತಾ ಜನರ ಮನಸೂರೆಗೊಂಡರು. ಎಲ್ಲಾ ಕಡೆ ಇಲ್ಲಿ ನಾನೇ ಅಭ್ಯರ್ಥಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆದ್ದರೆ ನಾನು ಗೆದ್ದಂತೆ ಎಂದು ಹೇಳುವ ಮೂಲಕ ಜನರ ಉತ್ಸುಕತೆಯನ್ನು ಹೆಚ್ಚಿಸಿದರು. +ಕೇಂದ್ರ ಸರ್ಕಾರ ಹಾಗೂ ಪ್ರಧಾನ ಮಂತ್ರಿಯವರ ಆಡಳಿತದಿಂದಾದ ತೊಂದರೆಗಳನ್ನು ವಿವರಿಸಿದರು. ಕಳೆದ ಹತ್ತು ವರ್ಷಗಳಲ್ಲಿ ಮೋದಿ ನಿಮ ಕೈಗೆ ಏನು ಕೊಟ್ಟರು ಎಂದರು ಜನರೆಡೆಗೆ ಬೆರಳು ಮಾಡಿ ಸಿದ್ದರಾಮಯ್ಯ ಪ್ರಶ್ನಿಸಿದರೆ, ಜನತೆ ಖಾಲಿ ಚೊಂಬು ಎಂದು ಕೂಗುತ್ತಿದ್ದರು. ತಮ ಅಧಿಕಾರವಧಿಯಲ್ಲಿ ಕೊಟ್ಟ ಭಾಗ್ಯಗಳನ್ನು ಒಂದೊಂದಾಗಿ ಹೆಸರಿಸುತ್ತಾ…ಅನ್ನಭಾಗ್ಯ ಕೊಟ್ಟಿದ್ದು ಯಾರು ? ಎಂದು ಕೇಳುತ್ತಿದ್ದರು. +ಜನತೆ ಸಿದ್ದರಾಮಯ್ಯ ಎಂದು ಕೂಗುತ್ತಿದ್ದರು. ಇದೇ ರೀತಿ ಒಟ್ಟು 18-20 ಭಾಗ್ಯಗಳನ್ನು ಹೆಸರಿಸಿದರೆ ಅಷ್ಟೂ ಬಾರಿ ಜನ ಸಿದ್ದರಾಮಯ್ಯ ಎಂದು ಮುಗಿಲು ಮುಟ್ಟುವಂತೆ ಕೂಗುತ್ತಿದ್ದದ್ದರಿಂದ ಇಡೀ ಸಭೆಯಲ್ಲಿ ವಿದ್ಯುತ್‌ ಸಂಚಾರವಾದಂತೆ ಭಾಸವಾಗುತ್ತಿತ್ತು ಎಂದು ಪ್ರತ್ಯೇಕ್ಷ ದರ್ಶಿಗಳು ವಿವರಿಸಿದ್ದಾರೆ. +ಹೈದರಾಬಾದ್‌ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ನೆತ್ತಿ ಸುಡುವ ಬಿಸಿಲಿನಲ್ಲೂ ಮಧ್ಯಾಹ್ನದ ವೇಳೆಯಲ್ಲೂ ಕಪ್ಪು ಮುಖ ಬೆಳ್ಳಿ ಗಡ್ಡದ ಜೊತೆಗೆ ತಲೆಗೆ ಟವೆಲ್‌ ಸುತ್ತಿದ ಗಂಡಸರು, ಸೆರಗು ತಲೆಗೆ ಸುತ್ತಿಕೊಂಡ ಮಹಿಳೆಯರು ಗಂಟೆಗಟ್ಟಲೆ ಕಾದು ಸಿದ್ದರಾಮಯ್ಯ ಅವರ ಭಾಷಣ ಕೇಳುತ್ತಿದ್ದರು. ಈ ಬಾರಿ ಮತದಾನ ಪ್ರಮಾಣ ನಿರೀಕ್ಷೆಗಿಂತ ಹೆಚ್ಚಾಗುವ ಭರವಸೆ ವ್ಯಕ್ತವಾಗಿತ್ತು. ಮುಖ್ಯಮಂತ್ರಿಯವರ ಬಾಷಣಕ್ಕೆ ಜನರಿಂದ ಕೋರಸ್‌‍ ಹೆಚ್ಚಾಗಿ ಕೇಳಿ ಬರುತ್ತಿತ್ತು. +14 ಗ್ಯಾರಂಟಿ ಸಮಾವೇಶಗಳು ಮತ್ತು 76 ಪ್ರಜಾಧ್ವನಿ ಜನ ಸಮಾವೇಶಗಳು ಸೇರಿ ಮುಖ್ಯಮಂತ್ರಿಯವರು ಭಾಗವಹಿಸಿದ್ದ ಸಮಾವೇಶಗಳಲ್ಲಿ ಸರಿ ಸುಮಾರು 7 ಸಾವಿರದಿಂದ 60 ಸಾವಿರದವರೆಗೂ ಜನ ಸೇರಿದ್ದರು. ರೋಡ್‌ ಶೋಗಳಲ್ಲಿ ಸರಾಸರಿ 15 ಸಾವಿರ ಎಂದು ಲೆಕ್ಕ ಹಿಡಿದರೂ ಒಟ್ಟಾರೆ 14 ಲಕ್ಷದಷ್ಟು ಜನರನ್ನು ಮುಖ್ಯಮಂತ್ರಿಗಳು ನೇರಾ ನೇರಾ ತಮ್ಮ ಮಾತುಗಳಲ್ಲಿ ಬೆಸೆದಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. +ಉದ್ಯಮಿಗಳಾದ ಅಂಬಾನಿ, ಅದಾನಿ ಅವರ ಸಂಬಂಧಿಸಿದಂತೆ ಪ್ರಧಾನಿಯವರ ಹೇಳಿಕೆಗೆ ರಾಹುಲ್‌ಗಾಂಧಿ ನೀಡಿರುವ ತೀರುಗೇಟನ್ನು ಸಿದ್ದರಾಮಯ್ಯ ಹೊಸ ಬೆಳವಣಿಗೆಯಲ್ಲಿ ಅನುಮೋದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಯಥಾ ಪ್ರಕಾರ ತಮ ಸುಳ್ಳು ಭಾಷಣದಲ್ಲಿ, ರಾಹುಲ್‌ ಗಾಂಧಿಯವರಿಗೆ ಅಂಬಾನಿ-ಅದಾನಿ ತಮ್ಮ ಬ್ಲಾಕ್‌ ಮನಿಯನ್ನು ಟೆಂಪೋಗಳಲ್ಲಿ ತುಂಬಿ ಕಳುಹಿಸಿದ್ದಾರಾ? ಅದಕ್ಕೇ ಇವರು ಅಂಬಾನಿ-ಅದಾನಿಯನ್ನು ಟೀಕಿಸುವುದನ್ನೇ ನಿಲ್ಲಿಸಿದ್ದಾರಾ? ಎಂದು ಮೋದಿ ಆರೋಪಿಸಿದ್ದಾರೆ. +ಇದು ಅಪ್ಪಟ ಸುಳ್ಳು. ಏಕೆಂದರೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾಗಾಂಧಿ ರಾಜ್ಯದಲ್ಲಿ ನಡೆಸಿದ ಪ್ರತೀ ಚುನಾವಣಾ ಪ್ರಚಾರದಲ್ಲೂ, ಭಾರತೀಯರ ಹಣ ಮತ್ತು ಭಾರತ ದೇಶದ ಸಂಪತ್ತು ಹೇಗೆ ಅಂಬಾನಿ-ಅಂದಾನಿಯ ಖಾಸಗಿ ಸ್ವತ್ತಾಗಿ ಪರಿವರ್ತನೆ ಆಗಿದೆ ಎನ್ನುವುದನ್ನು ತಮದೇ ಮಾತುಗಳಲ್ಲಿ, ತಮ್ಮದೇ ಶೈಲಿಯಲ್ಲಿ ಜನತೆಗೆ ವಿವರಿಸಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಮೋದಿ ಸುಳ್ಳು ಪ್ರಚಾರ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_150_12.txt b/eesanje/url_46_150_12.txt new file mode 100644 index 0000000000000000000000000000000000000000..34cb5ca1f7b78f12195efc124eb79c6cd7d5777b --- /dev/null +++ b/eesanje/url_46_150_12.txt @@ -0,0 +1,8 @@ +ರಾಜ್ಯದಲ್ಲಿ ಮೇ.17ರವರೆಗೂ ಮುಂಗಾರು ಪೂರ್ವ ಮಳೆ ಮುಂದುವರಿಕೆ +ಬೆಂಗಳೂರು,ಮೇ 10-ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭರಣಿ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳು ಆರಂಭಗೊಂಡಿವೆ.ಭರಣಿ ಮಳೆಯಾದರೆ ಧರಣಿಯೆಲ್ಲಾ ಸಂತುಷ್ಠಿ ಎಂಬ ನಾಣ್ನುಡಿಯಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮೇ17ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಇನ್ನೂ ನಾಲ್ಕು ದಿನಗಳ ಕಾಲ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. +ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಿದ್ದರೆ, ಕೆಲವೆಡೆ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಸಂಜೆ ಉತ್ತಮ ಮಳೆಯಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಇನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. +ಮೇ 12ರಿಂದ ಮೇ 17ರವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಅಲ್ಲದೆ, ಈ ಅವಧಿಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಚದುರಿದಂತೆ ಅಲ್ಲಲ್ಲಿ ಬೀಳುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಕುಸಿತ ಗರಿಷ್ಠ ತಾಪಮಾನ : +ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವು ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಸರಾಸರಿಗಿಂತ ಸುಮಾರು ಮೂರು ಡಿ.ಸೆಂ.ನಷ್ಟು ಹೆಚ್ಚಾಗಿದ್ದ ಗರಿಷ್ಠ ತಾಪಮಾನದಲ್ಲಿ ತೀವ್ರವಾಗಿ ಕುಸಿತವಾಗಿದೆ. ಇದರಿಂದ ಬಿರು ಬೇಸಿಗೆಯಲ್ಲೂ ತಂಪಾದ ವಾತಾವರಣ ನಿರ್ಮಾಣವಾಗಿದೆ. ಬೇಸಿಗೆಯ ಬೇಗೆಯಿಂದ ಬಸವಳಿದಿದ್ದ ಜನರಿಗೆ ಖುಷಿ ತಂದಿದೆ. ಜೊತೆಗೆ ವಾತಾವರಣವೂ ಸಹಜ ಸ್ಥಿತಿಯತ್ತ ಮರಳುತ್ತಿದೆ. +ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೂರರಿಂದ ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ಇಳಿಕೆಯಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮಾತ್ರ 40 ಡಿ.ಸೆಂ.ಗಿಂತ ಹೆಚ್ಚು ತಾಪಮಾನವಿದೆ.ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ 38 ಡಿ.ಸೆಂ.ಗಿಂತ ಕಡಿಮೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಗರಿಷ್ಠ ತಾಪಮಾನ 33.6ಡಿ.ಸೆಂ. ಗೆ ಇಳಿಕೆಯಾಗಿದೆ. \ No newline at end of file diff --git a/eesanje/url_46_150_2.txt b/eesanje/url_46_150_2.txt new file mode 100644 index 0000000000000000000000000000000000000000..371f73c8d1532602241c8f4697f5c25334abd82e --- /dev/null +++ b/eesanje/url_46_150_2.txt @@ -0,0 +1,9 @@ +ರಾಜ್ಯದ ದಕ್ಷಿಣ ಒಳನಾಡಿನ ಉತ್ತಮ ಮಳೆ, ಕೃಷಿ ಚಟುವಟಿಕೆ ಚುರುಕು +ಬೆಂಗಳೂರು,ಮೇ 11-ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರದವರೆಗೆ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಕೆಲವು ಕಡೆಗಳಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಮುಂಗಾರು ಹಂಗಾಮಿಗೆ ಭೂಮಿ ಹದ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. +ಮೈಸೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಬೆಳೆಗಳ ಬಿತ್ತನೆ ಕಾರ್ಯವೂ ಆರಂಭಗೊಂಡಿದೆ. ಹಲಸಂದೆ, ಜೋಳ, ಎಳ್ಳು, ತೊಗರಿ ಮೊದಲಾದ ಬೆಳೆಗಳ ಬಿತ್ತನೆ ಮಾಡುತ್ತಿದ್ದಾರೆ. ವ್ಯಾಪಕ ಪ್ರಮಾಣದಲ್ಲಿ ಮಳೆಯಾಗದಿದ್ದರೂ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ರೈತರಲ್ಲಿ ಮಳೆ ಆಶಾಭಾವನೆ ಮೂಡಿಸಿದೆ. +ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. +ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಭಾಗದಲ್ಲಿ 32 ಮಿ.ಮೀ., ಉತ್ತರ ಕರ್ನಾಟಕ ಭಾಗದಲ್ಲಿ 33 ಮಿ.ಮೀ. ಮಳೆಯಾಗಿದೆ. ದಕ್ಷಿಣ ಕರ್ನಾಟಕದಲ್ಲಿ 34 ಮಿ.ಮೀ. ಮಳೆಯಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ದಕ್ಷಿಣ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಿದೆ. ಬಿರುಗಾಳಿ, ಗುಡುಗು ಮತ್ತು ಮಿಂಚಿನಿಂದ ಕೂಡಿದ ಮಳೆಯಾಗಿದ್ದು, ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದ ವರದಿಯಾಗಿದೆ. +ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ 58, ಮಂಡ್ಯ 57.2, ಕೆ.ಆರ್‌. ನಗರ 52.4, ಚಿಕ್ಕಬಳ್ಳಾಪುರ 34.9. ಚಿತ್ರದುರ್ಗ 34.1, ಹಾಸನ 20.4, ಕೊಡಗು 17, ಬೆಳಗಾವಿಯ ಯಡ್ರಾಮಿಯಲ್ಲಿ 17.2, ಕಲಬುರ್ಗಿ 13.2, ಕೆ.ಆರ್‌.ಪೇಟೆ, ಅರಕಲಗೂಡುಗಳಲ್ಲಿ 20.4, ಭಾಗಮಂಡಲ 17, ಮಾಗಡಿ 15.4, ಹೊಸಕೋಟೆ 16.4,ಅಜ್ಜಂಪುರ 14, ಪಾವಗಡ 10 ಮಿ.ಮೀ.ನಷ್ಟು ಮಳೆಯಾಗಿದೆ. +ಉಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆಯಂತೆ ಮೇ 9ರ ನಂತರ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದೆ. ನಾಳೆಯಿಂದ ಪೂರ್ವ ಮುಂಗಾರು ಮಳೆ ಮತ್ತಷ್ಟು ಚುರುಕಾಗುವ ಸಾಧ್ಯತೆಗಳಿದ್ದು, ಇನ್ನೂ ಹೆಚ್ಚಿನ ಮಳೆ ನಿರೀಕಿಸಬಹುದಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಒಂದು ವಾರಕಾಲ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುವ ಲಕ್ಷಣಗಳಿವೆ. ಮಹಾರಾಷ್ಟ್ರದ ವಿದರ್ಭದಿಂದ ತಮಿಳುನಾಡಿನವರೆಗೆ ಟ್ರಫ್‌ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ರಾಜ್ಯದಲ್ಲಿ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ನಿರಂತರವಾಗಿ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ಏರಿಕೆಯಾಗಿದ್ದ ಕನಿಷ್ಠ ಹಾಗೂ ಗರಿಷ್ಠ ತಾಪಮಾನಗಳಲ್ಲಿ ಇಳಿಕೆಯಾಗಿದ್ದು, ವಾಡಿಕೆ ಪ್ರಮಾಣದ ತಾಪಮಾನ ಕಂಡುಬರುತ್ತಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. \ No newline at end of file diff --git a/eesanje/url_46_150_3.txt b/eesanje/url_46_150_3.txt new file mode 100644 index 0000000000000000000000000000000000000000..4a96cd48316f26073ef997c48fc6e7110a39ef7a --- /dev/null +++ b/eesanje/url_46_150_3.txt @@ -0,0 +1,8 @@ +ದೇವರಾಜೇಗೌಡ ಬಂಧನ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಡಿಕೆಶಿ +ಬೆಂಗಳೂರು, ಮೇ 11-ಪೆನ್‌ಡ್ರೈವ್‌ ಪ್ರಕರಣದ ಮತ್ತೊಂದು ಭಾಗವಾಗಿ ಬಿಜೆಪಿ ನಾಯಕ ದೇವರಾಜೇಗೌಡರ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರಾಕರಿಸಿದ್ದಾರೆ. +ಇಂದು ಬೆಳಗ್ಗೆ ಆಂಧ್ರ ಪ್ರದೇಶದಲ್ಲಿನ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಇಂದು ಕಡಪಾಗೆ ಪ್ರಯಾಣಿಸುತ್ತಿದ್ದು, ಅಲ್ಲಿಂದ ಮಡಕಶಿರಾಗೆ ಭೇಟಿ ನೀಡಿ ಅಲ್ಲಿಂದ ವಾಪಸ್‌‍ ಬರಬೇಕಿದೆ. ಮನೆಯಲ್ಲಿ ಪತ್ರಿಕೆಗಳನ್ನು ಓದಲಾಗಿಲ್ಲ, ಇಡೀ ರಾತ್ರಿ ಬ್ಯೂಸಿಯಾಗಿದ್ದೆ. ಆಂಧ್ರ ಪ್ರದೇಶದಿಂದ ವಾಪಸ್‌‍ ಆದ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣಕ್ಕೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಅವರ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದ ಮತ್ತು ಪ್ರಜ್ವಲ್‌ ರೇವಣ್ಣ ಅವರಿಂದ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ತಮ ಬಳಿ ಇಟ್ಟುಕೊಂಡಿದ್ದ ದೇವರಾಜೇಗೌಡರನ್ನು ನಿನ್ನೆ ಬಂಧಿಸಲಾಗಿದೆ. +ಪೆನ್‌ಡ್ರೈವ್‌ನಲ್ಲಿ ವಿವಾದಿತ ವಿಡಿಯೋಗಳು ಬಹಿರಂಗವಾದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ದೇವರಾಜೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದರು. ಪೆನ್‌ಡ್ರೈವ್‌ ಬಿಡುಗಡೆಯ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡ ಇದೆ ಎಂಬ ಆರೋಪ ಮಾಡಿದ್ದರು. +ಅದರ ಬೆನ್ನಲ್ಲೇ ದೇವರಾಜೇಗೌಡರು ವಿವಾಹಿತ ಮಹಿಳೆಯೊಂದಿಗೆ ಅನುಚಿತವಾಗಿ ಮಾತನಾಡಿರುವುದು ಮತ್ತು ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಮತ್ತು ಆಡಿಯೋ ಬಹಿರಂಗಗೊಂಡಿತ್ತು. ಬಳಿಕ ದೇವರಾಜೇಗೌಡರನ್ನು ಹಿರಿಯೂರು ಬಳಿ ಪೊಲೀಸರು ಬಂಧಿಸಿದ್ದರು. +ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೊಳೆನರಸೀಪುರಲ್ಲಿ ದಾಖಲಿಸಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆ ಮುಂದುವರೆದಿದೆ. ಸಂತ್ರಸ್ತ ಮಹಿಳೆಯಿಂದ ಮತ್ತೊಂದು ಹೇಳಿಕೆ ಪಡೆದುಕೊಳ್ಳಲಾಗುತ್ತಿದ್ದು ದೇವರಾಜೇಗೌಡರ ವಿರುದ್ಧ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. +ಈ ನಡುವೆ ಪೆನ್‌ಡ್ರೈವ್‌ ಪ್ರಕರಣದಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿಯೇ ಇಲ್ಲ. ಎಲ್ಲಕ್ಕೂ ಹೈಕಮಾಂಡ್‌ ನಿರ್ದೇಶನ ನೀಡುತ್ತಿದೆ. ಅದರಂತೆ ತಾವು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಇನ್ನೊಂದು ವಾರದಲ್ಲಿ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗುವುದು, ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಲು ತಯಾರಿ ನಡೆದಿದೆ ಎಂದು ದೇವರಾಜೇಗೌಡ ಮಾಧ್ಯಮವೊಂದರ ಮುಖ್ಯಸ್ಥರ ಜೊತೆ ಹೇಳಿರುವ ಆಡಿಯೋ ಕೂಡ ಬಹಿರಂಗಗೊಂಡಿದೆ.ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ಪ್ರತಿಕ್ರಿಯಿಸಲು ಇಂದು ಬೆಳಗ್ಗೆ ಡಿ.ಕೆ.ಶಿವಕುಮಾರ್‌ ನಿರಾಕರಿಸಿದರು. \ No newline at end of file diff --git a/eesanje/url_46_150_4.txt b/eesanje/url_46_150_4.txt new file mode 100644 index 0000000000000000000000000000000000000000..1efb0ccf50da8433a3a75c028257da22a490b509 --- /dev/null +++ b/eesanje/url_46_150_4.txt @@ -0,0 +1,5 @@ +ಸಿಬಿಐ ತನಿಖೆ ಹೆಸರಲ್ಲಿ ನಿವೃತ್ತ ಎಂಜಿನಿಯರ್‌ಗೆ 1.6 ಕೋಟಿ ರೂ.ವಂಚನೆ +ಮಂಗಳೂರು, ಮೇ 10(ಪಿಟಿಐ)-ನಿಮ್ಮ ವಿರುದ್ಧ ಸಿಬಿಐ ತನಿಖೆ ನಡೆಸಬೇಕಿದೆ ಅದರಿಂದ ತಪ್ಪಿಸಿಕೊಳ್ಳಬೇಕು ಎಂದರೆ ಹಣ ನೀಡಬೇಕು ಎಂದು ವಂಚಿಸಿ ನಿವೃತ್ತ ಎಂಜಿನಿಯರ್‌ ಅವರಿಂದ 1.6 ಕೋಟಿ ರೂ.ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಕೇಂದ್ರ ತನಿಖಾ ಸಂಸ್ಥೆಯಿಂದ ಸಂಭವನೀಯ ತನಿಖೆಯನ್ನು ತಪ್ಪಿಸಲು ಎಚ್ಚರಿಕೆ ಹಣ ಕೇಳಿ ನಿವತ್ತ ಇಂಜಿನಿಯರ್‌ಗೆ ವಂಚನೆ ಮಾಡಿ 1.6 ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರೋಪಿಗಳು, ಅಂತಾರಾಷ್ಟ್ರೀಯ ಕೊರಿಯರ್‌ ಸೇವೆಯ ಉದ್ಯೋಗಿಗಳಂತೆ ನಟಿಸುತ್ತಾ, ಸಂತ್ರಸ್ತರು ಕಳುಹಿಸಿದ ಪ್ಯಾಕೇಜ್‌ನಲ್ಲಿ ದೋಷಾರೋಪಣೆಯ ದಾಖಲೆಗಳು ಮತ್ತು ಡ್ರಗ್‌್ಸ ಇವೆ ಅದರ ಬಗ್ಗೆ ತನಿಖಾ ಸಂಸ್ಥೆಗೆ ಮಾಹಿತಿ ಬಂದಿದೆ ಹೀಗಾಗಿ ನಿಮನ್ನು ವಿಚಾರಣೆಗೊಳಪಡಿಸಬೇಕು ಎಂದು ನಂಬಿಸಿದ್ದಾರೆ. +ಹೀಗಾಗಿ ನೀವು 1.6 ಕೋಟಿ ರೂ.ಠೇವಣಿ ಇಡಬೇಕು ತನಿಖೆ ಮುಗಿದ ನಂತರ ಅದನ್ನು ಹಿಂತಿರುಗಿಸುವುದಾಗಿ ಹೇಳಿ ಅವರು ನಂಬಿಸಿ ವಂಚನೆ ಮಾಡಿದ್ದಾರೆ. ಆಪಾದಿತ ವಹಿವಾಟು ಮೇ 2-6 ರ ನಡುವೆ ನಡೆದಿದ್ದು, ಈ ಬಗ್ಗೆ ವ್ಯಕ್ತಿ ತನ್ನ ಮಗಳಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ. +ಘಟನೆಯ ಕುರಿತು ಮಂಗಳೂರು ನಗರದ ಸೈಬರ್‌, ಎಕನಾಮಿಕ್‌ ಮತ್ತು ನಾರ್ಕೋಟಿಕ್‌್ಸ ಕ್ರೈಂ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_46_150_5.txt b/eesanje/url_46_150_5.txt new file mode 100644 index 0000000000000000000000000000000000000000..82dd25d3dd05dc111ce24e8a2c086ed704a98f33 --- /dev/null +++ b/eesanje/url_46_150_5.txt @@ -0,0 +1,5 @@ +ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ ಬೆಳವಣಿಗೆ : ಪ್ರಹ್ಲಾದ ಜೋಶಿ +ಹುಬ್ಬಳ್ಳಿ, ಮೇ 10– ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದರು. +ಸಮಗ್ರ ಅಧ್ಯಯನ ಅಗತ್ಯ:ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ, ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದು ಅಭಿಪ್ರಾಯ ಪಟ್ಟರು. ಪ್ರಜಾಪ್ರಭುತ್ವಕ್ಕೆ ಧಕ್ಕೆ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು. +ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು. +ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ಜೋಶಿ ಎಚ್ಚರಿಸಿದರು.ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು: ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಪ್ರಲ್ಹಾದ ಜೋಶಿ ಅವರು ಬಸವ ಜಯಂತಿಯ ಈ ಸಂದರ್ಭದಲ್ಲಿ ಪ್ರತಿಪಾದಿಸಿದರು. \ No newline at end of file diff --git a/eesanje/url_46_150_6.txt b/eesanje/url_46_150_6.txt new file mode 100644 index 0000000000000000000000000000000000000000..f224fa3de6c0209b43a89e804469d727bb5380ad --- /dev/null +++ b/eesanje/url_46_150_6.txt @@ -0,0 +1,7 @@ +ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ +ಹಾಸನ, ಮೇ 10-ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ನೆಟ್ಟಾರು ಹತ್ಯೆ ಆರೋಪಿಗಳಿಗಾಗಿ ಗಲ್ಲಿ ಗಲ್ಲಿಗಳಲ್ಲಿ ಶೋಧ ನಡೆಸಿದ್ದ ಎನ್‌ಐಎ ತಂಡ ಸುಳ್ಯ ಮೂಲದ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದೆ. +ಸುಳ್ಯ ಮೂಲದ ಮುಸ್ತಾಫ್‌ ಪೈಚಾರ್‌, ಸೋಮವಾರಪೇಟೆಯ ಇಲಿಯಾಸ್‌‍ ಹಾಗೂ ಸಿರಾಜ್‌ ಎಂಬುವರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಈ ಮೂವರು ಆರೋಪಿಗಳು ಸಕಲೇಶಪುರ ತಾಲೂಕಿನ ಆನೆ ಮಹಲ್‌ನಲ್ಲಿ ತಲೆಮರೆಸಿಕೊಂಡಿದ್ದರು ಎನ್ನಲಾಗಿದ್ದು ಅಲ್ಲಿಗೆ ದೌಡಾಯಿಸಿದ ಎನ್‌ಐಎ ತಂಡ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. +ಸಕಲೇಶಪುರದ ಸಿರಾಜ್‌ ಅವರ ಬಳಿ ಮುಸ್ತಾಫ್‌ ಮತ್ತು ಇಲಿಯಾಸ್‌‍ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದೆ. ಈ ಇಬ್ಬರು ಆರೋಪಿಗಳಿಗೆ ಆಶ್ರಯ ಕಲ್ಪಿಸಿದ್ದ ಆರೋಪದ ಮೇಲೆ ಸಿರಾಜ್‌ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫ್‌ ಸಕಲೇಶಪುರದ ಆನ್‌ಮಹಲ್‌ನಲ್ಲಿ ಇದ್ದಾನೆ ಎಂಬ ಮಾಹಿತಿಯನ್ನಾಧರಿಸಿ ಈ ದಾಳಿ ನಡೆಸಲಾಯಿತು. +ಈ ಸಂದರ್ಭದಲ್ಲಿ ಸಿರಾಜ್‌ ಜತೆಗೆ ಮುಸ್ತಾಫ್‌ನ ಸ್ನೇಹಿತನಾದ ಇಲಿಯಾಸ್‌‍ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. +ಏನೀದು ಪ್ರಕರಣ:2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್‌ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣಕ್ಕೆ ಜಿಲ್ಲೆಯಲ್ಲಿ ಮಾತ್ರವಲ್ಲದೆ ಇಡಿ ರಾಜ್ಯದ್ಯಾಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿ ಬೊಮಾಯಿ ಸರ್ಕಾರವೇ ಅಲುಗಾಡುವಂತಾಗಿತ್ತು. +ಹೀಗಾಗಿ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವಾರು ಆರೋಪಿಗಳನ್ನು ಬಂಧಿಸಿರುವ ಎನ್‌ಐಎ ಅಧಿಕಾರಿಗಳು ಇದೀಗ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫನನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್‌ ಆನೆಮಹಲ್‌ ಬಳಿ ಬಂಧಿಸಿ ಬೆಂಗಳೂರಿನ ಎನ್‌ಐಎ ಕಚೇರಿಗೆ ಕರೆದೊಯ್ದಿದ್ದಾರೆ. \ No newline at end of file diff --git a/eesanje/url_46_150_7.txt b/eesanje/url_46_150_7.txt new file mode 100644 index 0000000000000000000000000000000000000000..779d643b9433db9a33ee5c909c62c6f3612666e3 --- /dev/null +++ b/eesanje/url_46_150_7.txt @@ -0,0 +1,9 @@ +ರಾಹುಲ್ ‘ಮಾರ್ಗದರ್ಶಕ’ ಸ್ಯಾಮ್‌ ಪಿತೋಡಾ ಮೇಲೆ ಯಲಹಂಕದ ಬಳಿ ಭೂಮಿ ಕಬಳಿಕೆ ಆರೋಪ +ಬೆಂಗಳೂರು, ಮೇ 10-ಸದಾ ಒಂದಲ್ಲೊಂದು ವಿವಾದಗಳನ್ನು ಸೃಷ್ಟಿಸಿ ಪಕ್ಷಕ್ಕೆ ಮುಜುಗರ ಉಂಟುಮಾಡಿ ಮೂರು ದಿನಗಳ ಹಿಂದೆಯಷ್ಟೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಸ್ಥಾನ ಕಳೆದುಕೊಂಡಿದ್ದ ಸ್ಯಾಮ್‌ ಪಿತೋಡಾ ಅವರ ಮೇಲೆ ಅಕ್ರಮವಾಗಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. +ಯಲಹಂಕದ ಜರಕಬಂಡೆ ಕಾವಲ್‌ನಲ್ಲಿರುವ ಸ್ಥಳೀಯ ಆರೋಗ್ಯ ಸಂಪ್ರದಾಯಗಳ ಪುನರುಜ್ಜೀವನದ ಫೌಂಡೇಷನ್‌ ಅಧ್ಯಕ್ಷರಾಗಿದ್ದ ವೇಳೆ ಅಕ್ರಮವಾಗಿ ಅರಣ್ಯ ಭೂಮಿಯನ್ನು ಕಬಳಿಕೆ ಮಾಡಿಕೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ಥಳೀಯ ಆರೋಗ್ಯ ಸಂಪ್ರದಾಯಗಳ ಪುನರುಜ್ಜೀವನದ ಫೌಂಡೇಷನ್‌ ಅಧ್ಯಕ್ಷರಾಗಿದ್ದ ಈ ಸಂಸ್ಥೆಯೂ 1991ರಲ್ಲಿ ಮುಂಬೈನ ರಿಜಿಸ್ಟ್ರಾರ್‌ ಆಫ್‌ ಸೊಸೈಟೀಸ್‌ನಲ್ಲಿ ನೊಂದಾಯಿಸಲ್ಪಟ್ಟಿದೆ. ( .644/1991/ 23.10.91). +ಕರ್ನಾಟಕ ಅರಣ್ಯ ಇಲಾಖೆಯು ಬೆಂಗಳೂರು ನಗರ ವಿಭಾಗದ ಜರಕಬಂಡೆ ಕಾವಲ್‌ ಬಿ ಬ್ಲಾಕ್‌ನಲ್ಲಿರುವ 5.0 ಹೆಕ್ಟೇರ್‌ ಮೀಸಲು ಅರಣ್ಯ ಭೂಮಿಯನ್ನು 1996 ರಲ್ಲಿ ಎಫ್‌ಆರ್‌ಎಲ್‌‍ಎಚ್‌ಟಿಗೆ 15 ವರ್ಷಗಳ ಅವಧಿ ಗೆ ಗುತ್ತಿಗೆ ನೀಡಿತ್ತು. +ಎಫ್‌ಆರ್‌ಎಲ್‌‍ಎಚ್‌ಟಿಯನ್ನು 2010 ರಲ್ಲಿ ಸಕ್ಷಮ ಪ್ರಾಧಿ ಕಾರದಿಂದ ವಿಸರ್ಜಿಸಲಾಗಿತ್ತು. ಕರ್ನಾಟಕ ಅರಣ್ಯ ಇಲಾಖೆ ಮತ್ತು ಎಫ್‌ಆರ್‌ಎಲ್‌‍ಎಚ್‌ಟಿ ನಡುವಿನ ಗುತ್ತಿಗೆ ಒಪ್ಪಂದವು ಎಫ್‌ಐಆರ್‌ಎಲ್‌‍ಎಚ್‌ಟಿಯ ವಿಸರ್ಜನೆಯೊಂದಿಗೆ ಸಹ-ಟರ್ಮಿನಸ್‌ ಆಗಿದೆ. ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಎಫ್‌ಆರ್‌ಎಲ್‌‍ಎಚ್‌ಟಿ ನೀಡಿದ ಅನುಮೋದನೆಗಳನ್ನು ಸಹ ರದ್ದುಗೊಳಿಸಲಾಗಿತ್ತು. +ಎಫ್‌ಆರ್‌ಎಲ್‌‍ಎಚ್‌ಟಿಯ ವಿಸರ್ಜನೆಯ ಪರಿಣಾಮವಾಗಿ ಗುತ್ತಿಗೆ ಒಪ್ಪಂದದ ಮುಕ್ತಾಯದ ಮೇಲೆ ಎಫ್‌ಆರ್‌ಎಲ್‌‍ಎಚ್‌ಟಿಗಳಿಗೆ ಗುತ್ತಿಗೆ ನೀಡಲಾದ ಅರಣ್ಯ ಭೂಮಿಯನ್ನು ಕರ್ನಾಟಕ ಅರಣ್ಯ ಇಲಾಖೆಗೆ ಮರುಸ್ಥಾಪಿಸಲಾಗಿದೆ. ಕರ್ನಾಟಕ ಅರಣ್ಯ ಇಲಾಖೆಯು ಈ ಅರಣ್ಯ ಭೂಮಿಯನ್ನು 2010ರಲ್ಲಿಯೇ ಸ್ವಾಧೀನಪಡಿಸಿಕೊಳ್ಳಬೇಕು. ಆದಾಗ್ಯೂ, ಸ್ಯಾಮ್‌ ಪಿತೋಡಾ ಅರಣ್ಯ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದು, ರಾಜ್ಯ ಸರ್ಕಾರ ಈ ಪ್ರಕಣವನ್ನು ಗಂಭೀರವಾಗಿ ಪರಿಗಣಿಸದೆ, ನಿರ್ಲಕ್ಷ ಮಾಡಿದೆ ಎಂಬ ಆರೋಪವೂ ಇದೆ. +ಸ್ಯಾಮ್‌ ಪಿತೋಡಾ ಮತ್ತು ಅವರ ಬೆಂಬಲಿಗರು ಮತ್ತೊಂದು ಟ್ರ್ಟ್‌‍ಅನ್ನು ನೋಂದಾಯಿಸಿರುವುದು ಬೆಳಕಿಗೆ ಬಂದಿದೆ. ಎಫ್‌ಆರ್‌ಎಲ್‌‍ಎಚ್‌ಟಿ- ಮುಂಬೈನಲ್ಲಿ ನೋಂದಾಯಿಸಿಕೊಂಡಿದೆ. ಇತ್ತ ಬೆಂಗಳೂರಿನಲ್ಲಿ ನೋಂದಾಯಿಸಲ್ಪಟ್ಟಿರುವುದು ಒಂದೇ ಮತ್ತು ಎರಡನೇ ಘಟಕವನ್ನು ಹೊಂದಿದೆ. ವಾಸ್ತವವೆಂದರೆ ಎರಡೂ ಘಟಕಗಳು ಒಂದೇಯಾಗಿವೆ. ಇದನ್ನು ಪಿತೋಡ ಮರೆಮಾಚಿದ್ದಾರೆ. +ಗುತ್ತಿಗೆ ಪಡೆದ ಅರಣ್ಯ ಭೂಮಿಯ ಮೇಲಿನ ಹಕ್ಕಿನ ನಿಯಮದ ಪ್ರಕಾರ, ಪ್ರತ್ಯೇಕ ಸಂಸ್ಥೆಗಳು ಮತ್ತು ಕಾನೂನಿನ ಪ್ರಕಾರ ಯಾವುದೇ ಎರಡು ಸಂಸ್ಥೆಗಳು ಪಡೆಯುವುದು ನಿಯಮಕ್ಕೆ ವಿರುದ್ಧವಾದುದು. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ ಕರ್ನಾಟಕ ಅರಣ್ಯ ಇಲಾಖೆ ಹಾಗೂ ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆ ಅಧಿ ಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. +ಈ ಪ್ರಕರಣದ ಬಗ್ಗೆ ಕಾಲಮಿತಿಯೊಳಗೆ ಸ್ವತಂತ್ರ ತನಿಖೆ ಸಂಸ್ಥೆಯಿಂದ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಇದ್ದರೂ ಕಾನೂನಿನ ಪ್ರಕಾರವೇ ನಿರ್ದಾಕ್ಷಿಣ್ಯವಾಗಿ ಶಿಕ್ಷೆಯಾಗಬೇಕು ಹಾಗೂ ಗುತ್ತಿಗೆ ಪಡೆದ ಅರಣ್ಯ ಭೂಮಿಯನ್ನು ಮರುಪಡೆಯಲು ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. \ No newline at end of file diff --git a/eesanje/url_46_150_8.txt b/eesanje/url_46_150_8.txt new file mode 100644 index 0000000000000000000000000000000000000000..074a3ccf1d546597a51864da94898151a87fc286 --- /dev/null +++ b/eesanje/url_46_150_8.txt @@ -0,0 +1,7 @@ +ಮೇಲ್ಮನೆ ಚುನಾವಣೆಗೆ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ +ಬೆಂಗಳೂರು,ಮೇ 10-ವಿಧಾನ ಪರಿಷತ್ತಿನ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ರಾಜಕೀಯ ಪಕ್ಷಗಳಿಂದ ಯಾವುದೇ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ. +ಕರ್ನಾಟಕ ಈಶಾನ್ಯ ಪದವೀಧರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ತಲಾ ಒಬ್ಬರು ಪುರುಷ ಸ್ವತಂತ್ರ ಅಭ್ಯರ್ಥಿ ನಿನ್ನೆ ತಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌‍ ಈಗಾಗಲೇ ಮೇಲನೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಲ್ಲ. ಅಲ್ಲದೆ, ಉಭಯ ಪಕ್ಷಗಳ ನಡುವೆ ಚುನಾವಣಾ ಮೈತ್ರಿ ಮುಂದುವರೆಯಲಿದೆಯೋ ಇಲ್ಲವೋ ಎಂಬುದು ಈತನಕ ಸ್ಪಷ್ಟವಾಗಿಲ್ಲ. +ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳ ಆಯ್ಕೆಗಾಗಿ ನಿನ್ನೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ನಿನ್ನೆಯಿಂದಲ್ಲೇ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಶಿಕ್ಷಕರ ಕ್ಷೇತ್ರದಿಂದ ಮೂರು ಹಾಗೂ ಪದವೀಧರ ಕ್ಷೇತ್ರದಿಂದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. +ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. +ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟವಾಗಿದೆ.ಅಭ್ಯರ್ಥಿಗಳು ಮೇ 16ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. +ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_46_150_9.txt b/eesanje/url_46_150_9.txt new file mode 100644 index 0000000000000000000000000000000000000000..f8821705be12127088a416b60fc0c6e578095d93 --- /dev/null +++ b/eesanje/url_46_150_9.txt @@ -0,0 +1,10 @@ +ಬಸವಣ್ಣನವರ ವಚನದ ಮೂಲಕ ಹೆಚ್ಡಿಕೆಗೆ ಡಿಕೆಶಿ ತಿರುಗೇಟು +ಬೆಂಗಳೂರು, ಮೇ 10-ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ್ಮ ನಿಮ್ಮ ತನುವ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ. ಮೊದಲು ನಿಮ್ಮ ಮನೆಯನ್ನು ಸರಿ ಪಡಿಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದ್ದಾರೆ. +ಬಸವ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಪೆನ್‌ಡ್ರೈವ್‌ ಪ್ರಕರಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. +ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌‍ ನಾಯಕರ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿರುವ ಕುರಿತು ಉತ್ತರಿಸಿ, ಇಂದು ಬಸವಣ್ಣನವರ ಕೆಲಸ. ಇಲ್ಲಿ ಬೇರೆ ವಿಚಾರಗಳ ಚರ್ಚೆ ಸೂಕ್ತವಲ್ಲ. ಬಸವಣ್ಣ ಏನು ಹೇಳಿದ್ದಾರೆ. ಲೋಕದ ಡೋಂಕ ನೀವೇಕೆ ತಿದ್ದುವರಿ, ನಿಮ ನಿಮ ತನುವ, ನಿಮ ನಿಮ ಮನವ ಸಂತೈಸಿಕೊಳ್ಳಿ ಎಂದಿದ್ದಾರೆ. ಬೇರೆಯವರ ಮೇಲೆ ಏಕೆ ಜವಾಬ್ದಾರಿ ಹೊರಿಸುತ್ತಿರಿ. +ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ. ಮೊದಲು ನಿಮ ಮನೆ ರಿಪೇರಿ ಮಾಡಿಕೊಳ್ಳಿ ಎಂದರು. ಈ ವೇಳೆ ಬಸವಣ್ಣನವರ ವಚನವನ್ನು ಮಾಜಿ ಸಚಿವ ವಿನಯ್‌ ಕುಲಕರ್ಣಿ ಡಿ.ಕೆ.ಶಿವಕುಮಾರ್‌ ಅವರಿಗೆ ನೆನಪಿಸಿದರು. +ಬೇರೆಯವರ ಬಗ್ಗೆ ಏಕೆ ಮಾತನಾಡುತ್ತಿರಿ. ಲೋಕದ ಡೋಂಕನ್ನು ತಿದ್ದಿಕೊಳ್ಳಿ ಎಂದು ಬಸವಣ್ಣ ಹೇಳಿದ್ದಾರೆ. ನಾವು ಅದನ್ನು ಪಾಲಿಸೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ. ರಾಜ್ಯಪಾಲರಿಗೆ ದೂರು ನೀಡಿರುವ ಕುಮಾರಸ್ವಾಮಿಯವರಿಗೆ ಶುಭವಾಗಲಿ ಎಂದು ಹಾರೈಸುವುದಾಗಿ ಹೇಳಿದರು. +ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಹಳ ದಿನಗಳ ನಂತರ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯೆ ನೀಡಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಆಯೋಗ ರಾಜಕೀಯ ಹೊರತಾಗಿ ಕೆಲಸ ನಿರ್ವಹಿಸಲಿ ಎಂದಷ್ಟೆ ಹೇಳುವುದಾಗಿ ತಿಳಿಸಿದರು. +ಸಮಾನತೆಯ ಸಮಾಜಕ್ಕೆ ಪ್ರೇರಣೆ:ಮೊದಲನೇಯ ಸಂಸತ್‌ ಅನ್ನು ಬಸವಕಲ್ಯಾಣದಲ್ಲಿ ಬಸವಣ್ಣ ಆರಂಭಿಸಿದರು. ಅದರ ಬುನಾದಿಯಲ್ಲೇ ನಾವು ನಡೆದುಕೊಳ್ಳುತ್ತಿದ್ದೇವೆ. ಜಾತಿ ಧರ್ಮ ಇಲ್ಲದೆ ಸಮಾನತೆಯನ್ನು ಬಸವಣ್ಣ ಪ್ರತಿಪಾದಿಸಿದರು. ನಮ ಸರ್ಕಾರದ ಕಾರ್ಯಕ್ರಮಗಳು ಸಮಾನತೆಯ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ. ಅಕ್ಷರ, ಅನ್ನ ದಾಸೋಹ, ಮಹಿಳಾ ಸಬಲೀಕರಣಕ್ಕಾಗಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್‌ ವಿವರಿಸಿದರು. +ಎಲ್ಲಾ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು, ಬಸವ ಜಯಂತಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲಾಗಿದೆ. ಕೇವಲ ಮಾತಿನಲ್ಲಷ್ಟೆ ಅಲ್ಲ. ನಡೆಯಲ್ಲಿಯೂ ಬಸವ ತತ್ವಗಳನ್ನು ಅನುಸರಿಸುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದರು. +ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಈಶ್ವರ್‌ ಖಂಡ್ರೆ, ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_151_1.txt b/eesanje/url_46_151_1.txt new file mode 100644 index 0000000000000000000000000000000000000000..159d5ba97c5277d7fbf08e6e08abfc22cf218f2d --- /dev/null +++ b/eesanje/url_46_151_1.txt @@ -0,0 +1,6 @@ +ಕರ್ನಾಟಕದ 5 ಮಂದಿ ಗಣ್ಯರಿಗೆ ಪದ್ಮಶ್ರೀ ಪ್ರದಾನ +ನವದೆಹಲಿ:2024ನೇ ಸಾಲಿನ ಪದ್ಮಶ್ರೀ ಪ್ರಶಸ್ತಗೆ ಆಯ್ಕೆಯಾದ ಕರ್ನಾಟಕದ 9 ಮಂದಿಯ ಪೈಕಿ 5 ಮಂದಿಗೆ ನಿನ್ನೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಪದ ಪ್ರಶಸ್ತಿಗಳನ್ನು 2024ರ ಜ.26ರ ಗಣರಾಜ್ಯೋತ್ಸವದ ವೇಳೆ ಘೋಷಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ನಿನ್ನೆ ಕೆಲವರಿಗೆ ರಾಷ್ಟ್ರಪತಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. +ಪ್ರಮುಖವಾಗಿ ಕರ್ನಾಟಕದ 5 ಮಂದಿ ಪೈಕಿ ಕಲಾ ಕ್ಷೇತ್ರದಲ್ಲಿ ಬೊಂಬೆಯಾಟದ ಗುರು ಮತ್ತು ಬೆಂಗಳೂರಿನಲ್ಲಿ ಧಾಟು ಬೊಂಬೆ ಥಿಯೇಟರ್‌ನ ಸಂಸ್ಥಾಪಕ ನಿರ್ದೇಶಕಿ ಹಾಗೂ ತೊಗಲು ಗೊಂಬೆಯಾಟದ ಸಂಯೋಜಿತ ಕಲಾ ಪ್ರಕಾರದ ತಮ ವ್ಯಾಪಕ ಸೇವೆಸಲ್ಲಿದ ಅನುಪಮಾ ಹೊಸ್ಕೆರೆ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. +ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ.ಸಾಧಿಸುವ ಮನೋಬಲ, ಆತ್ಮವಿಶ್ವಾಸ, ದೃಢವಾದ ನಂಬಿಕೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ನಮ್ಮ ಕರ್ನಾಟಕದ ಹೆಮ್ಮೆಯ ಶ್ರೀ ಕೆ.ಎಸ್.ರಾಜಣ್ಣ ಅವರೇ ಸಾಕ್ಷಿ.ಬಾಲ್ಯದಲ್ಲಿ ಪೋಲಿಯೋದಿಂದ ಎರಡೂ ಕೈ ಕಾಲುಗಳನ್ನು ಕಳೆದುಕೊಂಡರೂ ಛಲ ಬಿಡದ ರಾಜಣ್ಣನವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು…../IP2gsQC5tZ +ಶಿಕ್ಷಕರು, ಸಂಶೋಧಕರು, ಶಿಕ್ಷಣ ನೀತಿ ತಜ್ಞರು ಮತ್ತು ಭಾರತೀಯ ತತ್ವ ಮತ್ತು ಮೌಲ್ಯಗಳು ಆಳವಾಗಿ ಬೇರೂರಿವುವ ಸಂಸ್ಥೆಗಳ ಸಂಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಪೊ.ಶ್ರೀಧರ್‌ ಮಾಕಂ ಕೃಷ್ಣಮೂರ್ತಿ ಅವರಿಗೆ ತಮ ಸಾಹಿತ್ಯ ಕ್ಷೇತ್ರದ ಸಾಧನೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿತ್ತು. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಇವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. +ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ.ಕೆ.ಎಸ್‌‍. ರಾಜಣ್ಣ, ಸೋಮಣ್ಣ ಹಾಗೂ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಶಶಿ ಸೋನಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ತೆಲುಗು ನಟ ಚಿರಂಜೀವಿ ಹಾಗೂ ನಟಿ ವೈಜಂಯತಿ ಅವರಿಗೆ ಪದ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. \ No newline at end of file diff --git a/eesanje/url_46_151_10.txt b/eesanje/url_46_151_10.txt new file mode 100644 index 0000000000000000000000000000000000000000..54b599f61c7ea07452bf0085fa38930c1b0294df --- /dev/null +++ b/eesanje/url_46_151_10.txt @@ -0,0 +1,8 @@ +ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಜೆಡಿಎಸ್‌ ಮನವಿ +ಬೆಂಗಳೂರು,ಮೇ9-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪಾರದರ್ಶಕ, ನಿಷ್ಪಪಕ್ಷಪಾತ ತನಿಖೆ ಎಸ್‌ಐಟಿಯಿಂದ ನಡೆಯುತ್ತಿಲ್ಲ ಎಂದು ಆರೋಪಿಸಿರುವ ಜೆಡಿಎಸ್‌, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ. +ಪೆನ್‌ಡ್ರೈವ್‌ ಬಹಿರಂಗಗೊಳಿಸಿದವರ ಮೇಲೆ ಕ್ರಮಕೈಗೊಂಡಿಲ್ಲ. ಮಹಿಳೆಯೊಬ್ಬರ ಅಪಹರಣದ ಆರೋಪದ ಪ್ರಕರಣದಲ್ಲೂ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಿ ಎಸ್‌ಐಟಿ ತನಿಖೆ ಬದಲಾಗಿ ಸಿಬಿಐ ತನಿಖೆ ವಹಿಸಲು ರಾಜ್ಯಪಾಲರಿಗೆ ಜೆಡಿಎಸ್‌ ಮನವಿ ಮಾಡಿದೆ. +ಪಕ್ಷದ ಕೋರ್‌ ಕಮಿಟಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು, ರಾಜ್ಯಪಾಲ್ಯರಿಗೆ ಎಸ್‌ಐಟಿ ತನಿಖೆಯ ಹಾದಿ ದಾರಿ ತಪ್ಪಿದೆ. ಈ ಬಗ್ಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ತಪ್ಪು ಯಾರೇ ಮಾಡಿದರೂ ಶಿಕ್ಷೆ ಕೊಡಬೇಕು ಎಂದು ನಾನು ಆರೋಪ ಕೇಳಿ ಬಂದ ಮೊದಲ ದಿನವೇ ಹೇಳಿದ್ದೇನೆ. ಆದರೆ, ಈ ವಾತಾವರಣ ನೋಡಿದರೆ ಕಾಂಗ್ರೆಸ್‌ ನವರಿಗೆ ಶಿಕ್ಷೆ ಬೇಕಿಲ್ಲ ಪ್ರಚಾರ ಬೇಕು ಎಂಬಂತಾಗಿದೆ ಎಂದರು. +ಇಷ್ಟು ದಿನಗಳ ತನಿಖೆ ನೋಡಿದರೆ ಏನು ಇವರ ಸಾಧನೆ? ನಾನೇ ನಿರ್ಮಾಪಕ, ನಾನೇ ನಿರ್ದೇಶಕ, ನಾನೇ ಕಥಾನಾಯಕ ಎಂದು ಆರೋಪಿಸಿದ್ದಾರೆ. ಇಂತಹ ಕಥೆಗಳಿಗೆ ಕಥಾನಾಯಕನು ಬೇಕಲ್ಲ, ನನ್ನನ್ನ ಕಥಾನಾಯಕ ನನ್ನಾಗಿ ಮಾಡಿಕೊಂಡಿದ್ದಾರಲ್ಲ ಡಿಸಿಎಂ ಶಿವಕುಮಾರ್‌ ಅವರು ಸಂತೋಷ. ನನ್ನನ್ನು ಕಥಾನಾಯಕನನ್ನಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. +ಕಿಡ್ನಾಪ್‌ ಆಗಿರುವ ಕುಟುಂಬದವರನ್ನು ಕುಮಾರಕೃಪ ಅತಿಥಿ ಗೃಹದಲ್ಲಿ ಇಟ್ಟಿರುವ ಮಾಹಿತಿ ಇದೆ. ಕಿಡ್ನಾಪ್‌ ಆಗಿರುವ ಮಹಿಳೆಯನ್ನು ಏಕೆ ಇನ್ನು ಕೋರ್ಟ್‌ ಮುಂದೆ ಹಾಜರುಪಡಿಸಿಲ್ಲ. ತೋಟದ ಮನೆಯಿಂದ ಕರೆದುಕೊಂಡು ಬಂದರು ಎಂದುಎಸ್‌ ಐಟಿ ಮೂಲ ಹೇಳಿದೆ. ಆದರೆ ಮಹಜರು ಮಾಡಿದ್ದಾರೆಯೆ? ಎಂದು ಅವರು ಪ್ರಶ್ನಿಸಿದರು. +ಎಲ್ಲಿಂದ ಕರೆದುಕೊಂಡು ಬಂದರೂ ಎಂದು ಎಸ್‌ಐಟಿ ಹೇಳಬೇಕಲ್ಲ. ಐದು ದಿನ ಕಳೆದರೂ ಕೋರ್ಟ್‌ ಮುಂದೆ ಏಕೆ ಮಹಿಳೆ ಕರೆತರುತ್ತಿಲ್ಲ. ಏಕೆ ನ್ಯಾಯಾಧೀಶರ ಮುಂದೆ ಮಹಿಳೆ ಹೇಳಿಕೆ ನೀಡಿಲ್ಲ. ಸೋಮವಾರದವರೆಗೂ ಕಾಲಾವಕಾಶ ಕೇಳಿರುವುದರ ಹಿಂದೆ ಶಾಸಕ ಹೆಚ್‌.ಡಿ.ರೇವಣ್ಣ ಅವರು ಇನ್ನು ಜೈಲಿನಲ್ಲಿ ಇರಬೇಕುು ಎಂಬ ಉದ್ದೇಶವಿದ್ದಂತಿದೆ. ಈ ಹಠ ಸಾಧನೆ ಮಾಡುತ್ತಿದ್ದಾರೆ. ಜೂನ್‌ 4ರ ಬಳಿಕ ಈ ವಿಚಾರ ಸತ್ತು ಹೋಗುತ್ತೋ ಇರುತ್ತೋ ಗೊತ್ತಿಲ್ಲ ಎಂದರು. +ಹಿಂದೆ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವಾಗ ಬಿಜೆಪಿ ಸರ್ಕಾರ ಇದ್ದಾಗ ಬರೀ ಒಕ್ಕಲಿಗರನ್ನೆ ಬಿಟ್ಟು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು ಅದೇ ತಂತ್ರವನ್ನು ಕಾಂಗ್ರೆಸ್‌ನವರು ಬಳಸುತ್ತಿದ್ದಾರೆ ಎಂದು ದೂರಿದರು. \ No newline at end of file diff --git a/eesanje/url_46_151_11.txt b/eesanje/url_46_151_11.txt new file mode 100644 index 0000000000000000000000000000000000000000..652396da2b3ff4c0be49e4a1c91faa9c9748fe0a --- /dev/null +++ b/eesanje/url_46_151_11.txt @@ -0,0 +1,6 @@ +ಪೆನ್‌ ಡ್ರೈವ್‌ ಪ್ರಕರಣದಲ್ಲಿ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲೆತ್ನಿಸಿದರೆ ಕಠಿಣ ಕ್ರಮ : ಪರಮೇಶ್ವರ್‌ +ಬೆಂಗಳೂರು, ಮೇ 9-ಪೆನ್‌ ಡ್ರೈವ್‌ ಪ್ರಕರಣದಲ್ಲಿ ಯಾರಾದರೂ ಮಹಿಳೆಯರನ್ನು ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಎಸ್‌‍ಐಟಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಇವೆ ಎಂದು ಮಹಿಳೆಯರನ್ನು ಯಾರಾದರೂ ಬ್ಲಾಕ್‌ಮೇಲ್‌ ಮಾಡಲು ಯತ್ನಿಸಿದರೆ ಅದನ್ನು ಎಸ್‌‍ಐಟಿ ಗಮನಿಸಿಕೊಳ್ಳುತ್ತದೆ. ಈ ಬಗ್ಗೆ ಸರ್ಕಾರ ಕೂಡ ಸ್ಪಷ್ಟ ಸೂಚನೆ ನೀಡಲಿದೆ ಎಂದರು. ಪ್ರಕರಣದ ಬಗ್ಗೆ ನಿನ್ನೆಯೇ ನಾನು ಸಂಪೂರ್ಣ ವಿವರಣೆ ನೀಡಿದ್ದೇನೆ. +ತನಿಖೆ ಸರಿಯಾಗಿಲ್ಲ ಎಂದು ಜೆಡಿಎಸ್‌‍ ಹೇಳಿದಾಕ್ಷಣ ಅದಕ್ಕೆ ನಾನು ಉತ್ತರ ಕೊಡಬೇಕು ಎಂದಿಲ್ಲ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಎಸ್‌‍ಐಟಿ ತನಿಖೆ ನಡೆಯುತ್ತಿದೆ. ಪ್ರತಿ ದಿನ ಏನಾಗಿದೆ ಎಂದು ಬಹಿರಂಗವಾಗಿ ವಿವರಣೆ ನೀಡಲು ಸಾಧ್ಯವಿಲ್ಲ. ಬಹಳಷ್ಟು ವಿಚಾರಗಳು ನಮಗೇ ಗೊತ್ತಿರುವುದಿಲ್ಲ. ಎಲ್ಲದಕ್ಕೂ ಉತ್ತರ ಕೊಡುತ್ತಾ ಇರಲು ಸಾಧ್ಯವೇ ಎಂದು ಪ್ರಶ್ನಿಸಿದರು. +ಅನೇಕ ವಿಚಾರಗಳು ಪ್ರಕ್ರಿಯೆಯ ಹಂತದಲ್ಲಿರುತ್ತವೆ. ಅದನ್ನು ವಿವರಣೆ ನೀಡುತ್ತಾ ಕೂರಲಾಗುವುದಿಲ್ಲ . ವಿರೋಧ ಪಕ್ಷಗಳು ಟೀಕೆ-ಟಿಪ್ಪಣಿ ಮಾಡುತ್ತಿವೆ. ವಕೀಲ ದೇವರಾಜೇಗೌಡ ಎಸ್‌‍ಐಟಿ ವಿರುದ್ಧ ದೂರು ನೀಡುವುದಾದರೆ ನೀಡಲಿ, ಏನುಬೇಕಾದರೂ ಮಾಡಿಕೊಳ್ಳಲಿ, ಆ ಬಗ್ಗೆ ತಾವು ಏನನ್ನು ಹೇಳುವುದಿಲ್ಲ ಎಂದು ಹೇಳಿದರು. +ಮತ್ತಷ್ಟು ಸಂತ್ರಸ್ಥೆಯರು ಎಸ್‌‍ಐಟಿಗೆ ದೂರು ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಸಂತ್ರಸ್ಥ ಅಧಿಕಾರಿಗಳು ತಮ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಹೇಳಿಕೆ ನೀಡಿದ್ದರೆ, ಎಸ್‌‍ಐಟಿ ಅಧಿಕಾರಿಗಳು ಅದನ್ನು ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪರಮೇಶ್ವರ್‌ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_151_12.txt b/eesanje/url_46_151_12.txt new file mode 100644 index 0000000000000000000000000000000000000000..db5326658e865b2672c8fe2d0fe3f5a9acef1446 --- /dev/null +++ b/eesanje/url_46_151_12.txt @@ -0,0 +1,5 @@ +ಪ್ರಚಾರಕ್ಕಾಗಿ ಕೋವಿಶೀಲ್ಡ್ ಲಸಿಕೆ ನೀಡಿ ಜೀವಗಳ ಜೊತೆ ಚೆಲ್ಲಾಟವಾಡಲಾಗಿದೆ : ಕಾಂಗ್ರೆಸ್ +ಬೆಂಗಳೂರು, ಮೇ 7-ಪ್ರಚಾರದ ಉಮೇದಿಗಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಕೋವಿಶೀಲ್ಡ್ ಲಸಿಕೆಯನ್ನು ಜನರಿಗೆ ನೀಡಿ, ಜೀವದ ಜೊತೆ ಚೆಲ್ಲಾಟವಾಡಲಾಗಿದೆ ಎಂದು ಕಾಂಗ್ರೆಸ್‌‍ ಆಕ್ರೋಶ ವ್ಯಕ್ತ ಪಡಿಸಿದೆ. +ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿರುವ ಕಾಂಗ್ರೆಸ್‌‍, ಕೋವಿಶೀಲ್ಡ್ ಲಸಿಕೆಯ ಗಂಭೀರ ಅಡ್ಡಪರಿಣಾಮದ ಬಗ್ಗೆ ಒಪ್ಪಿಕೊಂಡ ನಂತರ ಜಗತ್ತಿನಾದ್ಯಂತ ಲಸಿಕೆಗಳನ್ನು ಅಸ್ಟ್ರಜೆನಿಕಾ ಕಂಪೆನಿ ಹಿಂಪಡೆದಿದೆ. ಆದರೆ, ಈಗಾಗಲೇ ಜನರ ದೇಹದೊಳಗೆ ಸೇರಿಸಿದ ಲಸಿಕೆಯನ್ನು ಹಿಂಪಡೆಯಲು ಸಾಧ್ಯವೇ ಎಂದು ಕಿಡಿಕಾರಿದೆ. +ಪ್ರಚಾರದ ಉದ್ದೇಶಕ್ಕಾಗಿ ಪೂರ್ಣ ಪ್ರಯೋಗಕ್ಕೆ ಒಳಪಡದ ಲಸಿಕೆಯನ್ನು ಜನತೆಗೆ ಬಲವಂತವಾಗಿ ನೀಡಿ, ಲಸಿಕೆಯಲ್ಲೂ ರಾಜಕಾರಣ ಮಾಡಿದ್ದ, ಸರ್ಟಿಫಿಕೇಟ್‌ ನಲ್ಲಿ ತಮ ಫೋಟೋ ಮುದ್ರಿಸಿದ್ದ ಮೋದಿಯವರು ಈ ದೇಶದ ಜನರ ಜೀವ, ಜೀವನದ ಜೊತೆ ಚೆಲ್ಲಾಟವಾಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದೆ. +ಪೂರ್ಣ ಟ್ರಯಲ್‌ ಆಗದ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಕೆ ಕೊಟ್ಟವರಿಗೆ ದೇಶದ್ರೋಹಿ ಪಟ್ಟ ಕಟ್ಟಿದ್ದ ಬಿಜೆಪಿಗರೇ ಈಗ ನೀವು ನೈಜ ಜನದ್ರೋಹಿಗಳಲ್ಲವೇ?ಲಸಿಕೆಯ ಪರಿಣಾಮಗಳ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದೇಕೆ?ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲದಿರುವುದೇಕೆ ಎಂದು ಪ್ರಶ್ನಿಸಿದೆ. \ No newline at end of file diff --git a/eesanje/url_46_151_2.txt b/eesanje/url_46_151_2.txt new file mode 100644 index 0000000000000000000000000000000000000000..60ff994b8db62bd8462ed5c14ad8fd8bfa698319 --- /dev/null +++ b/eesanje/url_46_151_2.txt @@ -0,0 +1,9 @@ +ಹೆಚ್.ಡಿ‌.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ +ಬೆಂಗಳೂರು, ಮೇ 9- ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ‌.ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. +ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ.ರೇವಣ್ಣ ಅವರ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠದಲ್ಲಿ ಹೆಚ್.ಡಿ.ರೇವಣ್ಣಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ಪ್ರಬಲ ವಾದ‌ ಮಂಡಿಸಿದರು. +ರೇವಣ್ಣ ಅವರು, ಕಸ್ಟಡಿಯಲ್ಲಿ ಇರುವಾಗ ತನಿಖೆಗೆ ಸಹಕರಿಸಿದ್ದಾರೆ. ತನಿಖಾಧಿಕಾರಿಗೆ ತೊಂದರೆ ಕೊಟ್ಟಿಲ್ಲ. ಈ ಪ್ರಕರಣವನ್ನು ಬಹಳ ವಿಜೃಂಭಿಸುವಂತೆ ಮಾಡಲಾಗಿದೆ.ಅಗತ್ಯಕ್ಕಿಂತ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಪ್ರಕರಣದಲ್ಲಿ ಉಲ್ಲೇಖಿಸಿರುವಂತೆ ಸಂತ್ರಸ್ತೆ ಎಲ್ಲಿ ಸಿಕ್ಕಿದ್ದಾರೆ ಎಂಬ ಮಾಹಿತಿ ಇಲ್ಲ. ಆಕೆ ಹೇಗಿದ್ದಾರೆ. ಏನಾಗಿದ್ದಾರೆ ಎಂಬ ಬಗ್ಗೆ ಎಸ್ಐಟಿ ಏನೂ ಹೇಳಿಲ್ಲ. +ವಿಮಾನ ಹೈಜಾಕ್ ಮಾಡಿ ಭಯೋತ್ಪಾದಕರು ಪ್ರಯಾಣಿಕರನ್ನು ಒತ್ತೆಯಾಳಾಗಿರಿಸಿಕೊಂಡ ಪ್ರಕರಣದ ನಂತರ 364ಎ ಸೇರಿಸಲಾಗಿದೆ. ನನ್ನ ಕಕ್ಷಿದಾರರ ಮೇಲೆ ಈ ಪ್ರಕರಣ ದಾಖಲಿಸಿ ಭಯೋತ್ಪಾದಕರಂತೆ ಬಿಂಬಿಸಲಾಗುತ್ತಿದೆ. ತೊಂದರೆ ಕೊಡುವ ಉದ್ದೇಶದಿಂದಲೇ ಈ ರೀತಿ ಮಾಡಲಾಗಿದೆ. +ರೇವಣ್ಣ ಅವರ ವಿರುದ್ಧ ದಾಖಲಿಸಿರುವ ಪ್ರಕರಣಗಳು ಕಾನೂನು ಬಾಹಿರ. ಪ್ರಕರಣಗಳು ರೇವಣ್ಣ ಅವರಿಗೆ ಅನ್ವಯಿಸುವುದಿಲ್ಲ. ಬೇಲೇಬಲ್ ಸೆಕ್ಷನ್ ಬಳಿಕ ತರಾತುರಿಯಲ್ಲಿ ಅವರ ಮೇಲೆ ಕೇಸ್ ಹಾಕಲಾಗಿದೆ. ಈ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಮತ್ತು ಪ್ರಚಾರದ್ದಾಗಿದೆ ಎಂದು ನಾಗೇಶ್ ಸುದೀರ್ಘ ವಾದ ಮಂಡಿಸಿದರು. +ಅವರಿಗೆ ಜಾಮೀನು ನೀಡಿದರೆ ದಾಖಲೆಗಳು ನಾಶವಾಗುವುದಿಲ್ಲ. ದಾಖಲೆ, ಕಂದಾಯ ಜಾಗ ಬದಲಾಗುತ್ತದೆಯೇ? ನನ್ನ ಕಕ್ಷಿದಾರರಿಗೆ ಜಾಮೀನು ಕೊಡಬೇಕು ಎಂದು ಮನವಿ ಮಾಡಿದರು. +ರೇವಣ್ಣ ಪರ ವಕೀಲರು ಒಂದುವರೆ ಗಂಟೆಗೂ ಹೆಚ್ಚು ಕಾಲ ವಾದ ಮಂಡಿಸಿದ್ದಾರೆ. ನಮಗೆ ವಾದ ಮಂಡಿಸಲು ಕಾಲಾವಕಾಶ ಬೇಕು. ಅದಕ್ಕೆ ಸಮಯ ನಿಗದಿ ಮಾಡಬೇಕು ಎಂದು ಎಸ್ಐಟಿಪರ ವಕೀಲೆ ಜಾಯ್ನ ಕೋಠಾರಿ ಮನವಿ ಮಾಡಿದರು.ನೀವು ಮನವಿ ಮಾಡುವುದನ್ನು ಬಿಟ್ಟು ವಾದ ಮಂಡಿಸಿ ಎಂದು ನ್ಯಾಯಾಲಯ ವಕೀಲರಿಗೆ ಸೂಚನೆ ನೀಡಿತು. +ವಾದ ಮಂಡಿಸಿದ ಕೋಠಾರಿ ಅವರು, ಆರೋಪಿಯ ಪುತ್ರ ಸಂತಸ್ತೆಯ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದು ದೊಡ್ಡ ಮತ್ತು ಅತಿ ದೊಡ್ಡ ಅಪರಾಧ. ಸಂತ್ರಸ್ತೆಯನ್ನು ಅಪಹರಿಸಿರುವುದು ನಿಜವಲ್ಲವೇ? ರೇವಣ್ಣ ವಿರುದ್ಧ 364ರಡಿ ಪ್ರಕರಣ ದಾಖಲಾಗಿದೆ. ಇದು ಗಂಭೀರ ಪ್ರಕರಣವಾಗಿದೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನಾಪ್ ಮಾಡಿದರೆ ಗತಿಯೇನು? ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ರೇವಣ್ಣ ಪ್ರಭಾವ ಹೊಂದಿದ್ದಾರೆ. ಹೆಚ್ಚಿನ ವಾದ ಮಂಡಿಸಲು ಸೋಮವಾರ ಅವಕಾಶ ನೀಡಬೇಕು ಎಂದು ಕೋರಿದರು.ವಾದ ವಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು. \ No newline at end of file diff --git a/eesanje/url_46_151_3.txt b/eesanje/url_46_151_3.txt new file mode 100644 index 0000000000000000000000000000000000000000..84630e69ff6f9261fa630e1a0b1ba97825a16e13 --- /dev/null +++ b/eesanje/url_46_151_3.txt @@ -0,0 +1,8 @@ +ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ನಾಲ್ವರನ್ನು ಏಕೆ ಬಂಧಿಸಿಲ್ಲ? +ಹಾಸನ,ಮೇ9-ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದರೂ ನಾಲ್ವರನ್ನು ಇನ್ನು ಏಕೆ ಬಂಧಿಸಿಲ್ಲ ಎಂದು ಜೆಡಿಎಸ್‌‍ ಲೀಗಲ್‌ ಸೆಲ್‌ ಪ್ರಶ್ನಿಸಿದೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಕೀಲರಾದ ಎಸ್‌‍.ದ್ಯಾವೇಗೌಡ ಅವರು, ಏಪ್ರಿಲ್‌ 21ರಂದು ಪ್ರಜ್ವಲ್‌ಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ವನ್ನು ಮನೆ ಮನೆಗಳಿಗೆ ಹಂಚಲಾಗಿದೆ. +ಏಪ್ರಿಲ್‌ 23ರಂದು ಜೆಡಿಎಸ್‌‍ನಿಂದ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಇದುವರೆಗೂ ಅವರನ್ನು ಕರೆದು ಏಕೆ ವಿಚಾರಣೆ ಮಾಡಿಲಿಲ್ಲ, ಕೂಡಲೇ ಅವರುಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಶರತ್‌ ಎಂಬಾತ ಇನ್ನು ಬೇಲ್‌ಗೆ ಅರ್ಜಿನೇ ಹಾಕಿಲ್ಲ. ಇದನ್ನೆಲ್ಲ ಗಮನಿಸಿದರೆ ಸರ್ಕಾರದ ಒತ್ತಡವಿದೆ ಎನಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. +ಬಂಧನ ಸಾಧ್ಯತೆ :ಪೆನ್‌ಡ್ರೈವ್‌ ಬಿಡುಗಡೆ ಆರೋಪದಲ್ಲಿ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಸೇರಿದಂತೆ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದ್ದು, ಬಂಧನ ಭೀತಿ ಎದುರಾಗಿದೆ. ಈ ಪ್ರಕರಣದಲ್ಲಿ ಕಾರ್ತಿಕ್‌ ಗೌಡ, ಪುಟ್ಟರಾಜ್‌, ನವೀನ್‌, ಚೇತನ್‌, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹಾಸನದ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. +ಸಂಸದ ಪ್ರಜ್ವಲ್‌ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಬಿಡುಗಡೆ ಆರೋಪದಡಿ ಜೆಡಿಎಸ್‌ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿತ್ತು. ಈ ಸಂಬಂಧ ಈ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. +ದೂರು ದಾಖಲಾಗುತ್ತಿದ್ದಂತೆ ಈ ನಾಲ್ವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಈ ನಾಲ್ವರಿಗೆ ಬಂಧನ ಭೀತಿ ಎದುರಾಗಿದೆ. +ವಿಡಿಯೋ ದೊರೆತ ಬಳಿಕ ನವೀನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ನೋಡಲು ವಾಟ್ಸಾಪ್‌ ಚಾನಲ್‌ ಫಾಲೋ ಮಾಡಿ ಎಂದು ಮೊದಲ ಪೋಸ್ಟ್ ಮಾಡಿದ್ದ. ನಂತರ ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಬಿಡುಗಡೆಗೆ ಮತ್ತೊಂದು ಪೋಸ್‌್ಟ ಮಾಡಿ ತದನಂತರ ಅದನ್ನು ಡಿಲಿಟ್‌ ಮಾಡಿದ್ದನು.ಇದನ್ನು ಗಂಭೀರವಾಗಿ ಗಮನಿಸಿದ್ದ ಜೆಡಿಎಸ್‌ ಅದನ್ನು ಸ್ಕ್ರೀನ್‌ಶಾಟ್‌ ತೆಗೆದು ಪೊಲೀಸರಿಗೆ ದೂರು ನೀಡಿತ್ತು. \ No newline at end of file diff --git a/eesanje/url_46_151_4.txt b/eesanje/url_46_151_4.txt new file mode 100644 index 0000000000000000000000000000000000000000..58fd20945e88ff0b7cc8297b557fe9e8d541c0dc --- /dev/null +++ b/eesanje/url_46_151_4.txt @@ -0,0 +1,4 @@ +ಮಹಿಳೆ ಅಪಹರಣ ಪ್ರಕರಣ : ಮೂವರನ್ನು ವಶಕ್ಕೆ ಪಡೆದು ಎಸ್‌‍ಐಟಿ ವಿಚಾರಣೆ +ಬೆಂಗಳೂರು,ಮೇ9-ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.ಮೊಬೈಲ್‌ ಕರೆಗಳನ್ನು ಆಧರಿಸಿ ಕೆ.ಆರ್‌.ನಗರ ತಾಲ್ಲೂಕಿನ ಮೂವರು ಯುವಕರನ್ನು ಎಸ್‌‍ಐಟಿ ಕರೆತಂದು ವಿಚಾರಣೆಗೊಳಪಡಿಸಿದೆ. +ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್‌ ಬಾಬು ಅವರನ್ನು ಎಸ್‌‍ಐಟಿ ಬಂಧಿಸಿದೆ.ಕೆ.ಆರ್‌.ನಗರ ತಾಲ್ಲೂಕಿನ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂದು ಕೆ.ಆರ್‌.ನಗರ ಪೊಲೀಸ್‌‍ ಠಾಣೆಗೆ ಅವರ ಮಗ ದೂರು ನೀಡಿದ್ದರು. +ಈ ಸಂಬಂಧ ಎಸ್‌‍ಐಟಿ ತನಿಖೆ ನಡೆಸಿ ಅಪಹರಣಕ್ಕೊಳಗಾಗಿದ್ದಾರೆ ಎಂಬ ಮಹಿಳೆಯನ್ನು ಪತ್ತೆಹಚ್ಚಿ ಕರೆತಂದು ವಿಚಾರಣೆಗೊಳಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. \ No newline at end of file diff --git a/eesanje/url_46_151_5.txt b/eesanje/url_46_151_5.txt new file mode 100644 index 0000000000000000000000000000000000000000..492216a6978200e8d25f2552fe11a8e8380cf19d --- /dev/null +++ b/eesanje/url_46_151_5.txt @@ -0,0 +1,10 @@ +ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ, ಸಿಎಂ ಮಾತ್ರ ರೆಸಾರ್ಟ್‌ನಲ್ಲಿ ಕೂತು ಜೂಸ್‌ ಕುಡಿಯುತ್ತಿದ್ದಾರೆ : ಆರ್‌.ಅಶೋಕ್‌ +ಬೆಂಗಳೂರು,ಮೇ9-ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಜಾನುವಾರುಗಳಿಗೆ ಮೇವಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ರೆಸಾರ್ಟ್‌ನಲ್ಲಿ ಒಳ್ಳೆಯ ಗಾಳಿ, ಏಸಿ, ಜೂಸ್‌ ಕುಡಿಯುತ್ತಾ ಎಲ್ಲವನ್ನು ಅನುಭವಿಸುತ್ತಿದ್ದಾರೆ. ನೀವು ಮಾತ್ರ ಮಜಾ ಅನುಭವಿಸಬೇಕೆ? ಜನರಿಗೆ ಕೊಡುವುದು ಯಾವಾಗ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ .ಅಶೋಕ್‌ ಪ್ರಶ್ನಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಪ್ರಧಾನಿಗೆ ಪ್ರಶ್ನೆಗಳನ್ನು ಮಾಡಿದ್ದಾರೆ. ಅದಕ್ಕೆ ನಮ್ಮದೇನು ತಕರಾರು ಇಲ್ಲ. ಅದಕ್ಕೂ ಮೊದಲು ಜನರಿಗೆ ಬೇಕಾದ ಕನಿಷ್ಟ ಸೌಲಭ್ಯಗಳನ್ನು ಕೊಡಿ. ಎಲ್ಲವನ್ನೂ ನೀವೇ ಮಜಾ ಮಾಡುವುದಾದರೆ ನಿಮಗೆ ಮತ ಹಾಕಿ ಗೆಲ್ಲಿಸಿದ ಜನ ಏನು ಮಾಡಬೇಕೆಂದು ವಾಗ್ದಾಳಿ ನಡೆಸಿದರು. +ನೀವು ಮಿನರಲ್‌ ನೀರನ್ನಾದರೂ ಕುಡಿಯಿರಿ ಅಥವಾ ಇನ್ನೇನಾದರೂ ಕುಡಿದುಕೊಳ್ಳಿ. ಮೊದಲು ಜನರಿಗೆ ಶುದ್ದ ಕುಡಿಯುವ ನೀರನ್ನು ಕೊಡಿ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿ, ಆಂಬ್ಯುಲೆನ್‌್ಸ ಚಾಲಕರಿಗೆ ವೇತನ ನೀಡಿ, ರೆಸಾರ್ಟ್‌ನಲ್ಲಿ ಹಾಯಾಗಿ ಕುಳಿತರೆ ಆಡಳಿತ ಯಂತ್ರ ನಡೆಸುವವರು ಯಾರು ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ್ದಾರೆ. +ಆಂಬ್ಯುಲೆನ್‌್ಸ ಸವಲತ್ತು ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಅವರ ಕನಿಷ್ಟ ಬೇಡಿಕೆಗಳು ಏನೆಂದು ಸಂಬಂಧಪಟ್ಟ ಸಚಿವರೂ ಕೇಳುತ್ತಿಲ್ಲ. ಸಿಎಂ ಸೇರಿದಂತೆ ಎಲ್ಲರೂ ಮೋಜುಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ವಿಧಾನಸೌಧಕ್ಕೆ ಬೀಗ ಹಾಕಿಬಿಡಿ ಎಂದು ಕಿಡಿಕಾರಿದರು. +ತೆಂಗು ಬೆಳೆಗಾರರಿಗೆ ಪರಿಹಾರ ನೀಡಿಲ್ಲ. ಸರಿಯಾದ ಆಹಾರ ನೀಡುತ್ತಿಲ್ಲವೆಂದು ಎರಡು ಲಕ್ಷದಷ್ಟು ಮಕ್ಕಳು ಅಂಗನವಾಡಿಗೆ ಸೇರಲೇ ಇಲ್ಲ, ಸಿಇಟಿ ಪ್ರಶ್ನೆ ಪತ್ರಿಕೆ ಸಮಸ್ಯೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ, ಬೆಂಗಳೂರು ಗುತ್ತಿಗೆದಾರರು ಕೆಲಸ ಕಾರ್ಯ ನಿಲ್ಲಿಸಿದ್ದಾರೆ,ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದೆ ಆದರೆ ನೀವು ರೆಸಾರ್ಟ್‌ ನಲ್ಲಿ ಆರಾಮವಾಗಿ ಇದ್ದೀರ ಎಂದು ಆಕ್ರೋಶ ವ್ಯಕ್ತಪಡಿಸಿದರು. +20 ದಿನದ ಚುನಾವಣಾ ಪ್ರಚಾರಕ್ಕೆ ವಿಶ್ರಾಂತಿ ಮೊರೆ ಹೋಗಿದ್ದೀರಿ ಆದರೆ ಮೋದಿ 10 ವರ್ಷದಲ್ಲಿ ಒಂದೂ ರಜೆ ಹಾಕಿಲ್ಲ, ನೀವು ರೆಸಾರ್ಟ್‌ನಲ್ಲಿ ಕುಳಿತುಕೊಂಡು ಮೋಜು ಮಾಡುತ್ತಿದ್ದೀರಿ. ಅವರ ತಾಯಿ ತಾಯಿ ನಿಧನರಾದರೂ ಪ್ರಧಾನಿ ಮೋದಿ ಕರ್ತವ್ಯ ಬಿಡಲಿಲ್ಲ, ರಜೆ ಪಡೆಯಲಿಲ್ಲ, ಎಲ್ಲಿಯ ಮೋದಿ ಎಲ್ಲಿಯ ಸಿದ್ದರಾಮಯ್ಯ, ಸಿದ್ದರಾಮಯ್ಯ ಕಾಮ್‌ ಚೋರ್‌, ಮೋದಿಗೆ ಹೋಲಿಕೆ ಸಲ್ಲದು, ಮೋದ ಕಾಯಕಯೋಗಿ, ಸಿದ್ದರಾಮಯ್ಯ ಮಜಾವಾದಿ ಎಂದು ವಾಗ್ದಾಳಿ ನಡೆಸಿದರು. +ಇನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹಾಗಾರ ಸ್ಯಾಮ್‌ ಪಿತ್ರೋಡ ವಿರುದ್ಧವೂ ಕೆಂಡಕಾರಿದ ಅಶೋಕ್‌, ವರ್ಣನೀತಿ ಅನುಸರಿಸುತ್ತಿರುವ ಅವರ ವಿರುದ್ಧ ಪಕ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇವರೆಲ್ಲ ಒಂದು ರೀತಿ ದೇಶದೊಳಗಿದ್ದೇ ದೇಶದ್ರೋಹಿ ಕೆಲಸ ಮಾಡುವವರು ಎಂದು ಟೀಕಾ ಪ್ರಹಾರ ನಡೆಸಿದರು. +ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಬಣ್ಣದ ಕಾರಣ ರೈಲಿನಿಂದ ಕೆಳಗಿಳಿಸಿದ ನಿದರ್ಶನ ನಮ್ಮ ಮುಂದಿದೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ಕೂಡ ಜನಾಂಗೀಯ ನಿಂದನೆ ಎದುರಿಸಿದ್ದರು. ಅದರ ಪರಿಪಾಠವನ್ನು ಕಾಂಗ್ರೆಸ್‌ ಸ್ಯಾಮ್‌ ಪಿತ್ರೋಡ ಅವರ ಮೂಲಕ ಮಾಡುತ್ತಿದೆ ಎಂದು ದೂರಿದರು. +ರಾಜ್ಯದಲ್ಲಿರುವ ಒಕ್ಕಲಿಗ, ಲಿಂಗಾಯತ, ದಲಿತರಿಗೆಲ್ಲ ಕಾಂಗ್ರೆಸ್‌ ಯಾವ ಬಣ್ಣ ಹಚ್ಚುತ್ತದೆ ? ಸೋನಿಯಾಗಾಂಧಿ ಇಟಲಿಯಿಂದ ಬಂದವರು, ಭಾರತೀಯರು ಎಂದು ಒಪ್ಪಿಕೊಳ್ಳಿ ಎಂದು ಬಲವಂತ ಮಾಡಿದರು. ಸೋನಿಯಾಗಾಂಧಿ ಯಾರು ? ಭಾರತೀಯರ ಹೌದಾ ಅಲ್ವಾ ಎಂದು ಕಾಂಗ್ರೆಸ್‌ ಹೇಳಬೇಕು, ರಾಬರ್ಟ್‌ ವಾದ್ರಾ ಯಾರು, ಯಾವ ದೇಶದಿಂದ ಬಂದವರು ಹೇಳಿ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_151_6.txt b/eesanje/url_46_151_6.txt new file mode 100644 index 0000000000000000000000000000000000000000..855379fb486bd948ed982e01cdd51a6f17e2e848 --- /dev/null +++ b/eesanje/url_46_151_6.txt @@ -0,0 +1,4 @@ + ಟಾಪರ್ ಅಂಕಿತಾಗೆ ಐಎಎಸ್‌ ಮಾಡುವ ಆಸೆಯಂತೆ +ಬೆಳಗಾವಿ,ಮೇ9-ಎಸ್ಸೆಸ್ಸೆಸ್ಸಿಯಲ್ಲಿ ರಾಜ್ಯಕ್ಕೇ ಮೊದಲ ರ್ಯಾಂಕ್‌ ಪಡೆದಿರುವುದು ಅತೀವ ಸಂತಸ ತಂದಿದೆ. ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯನ್ನು ಪಾಸು ಮಾಡುವ ಆಸೆ ಇದೆ ಎಂದು ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ತನ್ನ ಮನದ ಇಂಗಿತವನ್ನು ವ್ಯಕ್ತಪಡಿಸಿದ್ದಾಳೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿಯಲ್ಲಿ ಸೈನ್‌್ಸ ತೆಗೆದುಕೊಂಡು ಓದಬೇಕೆಂದಿದ್ದೇನೆ. ಮುಂದೆ ಐಎಎಸ್‌ ಅಧಿ ಕಾರಿಯಾಗುವ ಆಸೆ ಇದೆ ಎಂದು ತಿಳಿಸಿದ್ದಾರೆ. +ನಾವು ಪ್ರತಿದಿನ ಅಂದಿನಂದಿನ ಪಾಠವನ್ನು ಅಂದೇ ತಪ್ಪದೇ ಮನನ ಮಾಡಿಕೊಳ್ಳುತ್ತಿದ್ದೆವು. ಗೊತ್ತಾಗದಿದ್ದರೆ ಶಿಕ್ಷಕರನ್ನು ಕೇಳಿ ತಿಳಿದುಕೊಳ್ಳುತ್ತಿದ್ದೆವೆ. ಯೂಟೂಬ್‌ ನೋಡಿ ಗ್ರಹಿಸುತ್ತಿದ್ದೆವು ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_151_7.txt b/eesanje/url_46_151_7.txt new file mode 100644 index 0000000000000000000000000000000000000000..688d6baa290d2fd00f76ba4877650c1bf8b2fe80 --- /dev/null +++ b/eesanje/url_46_151_7.txt @@ -0,0 +1,5 @@ +ಪೆನ್‌ಡ್ರೈವ್‌ ಪ್ರಕರಣ ಹಾಸನ ಜಿಲ್ಲೆಗೆ ಕಳಂಕ : ಶಿವಲಿಂಗೇಗೌಡ +ಹಾಸನ, ಮೇ 9-ನಮ್ಮ ಜಿಲ್ಲೆಯಲ್ಲಿ ಲೈಂಗಿಕ ಹಗರಣ ಆಯಿತ್ತಲ್ಲಾ ಎಂಬುವುದು ಮನಸ್ಸಿಗೆ ಬಹಳ ವೇದನೆಯಾಗಿದೆ ಎಂದು ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಭೌಮತ್ವ ಹೊಂದಿರುವ ಕುಟುಂಬದಿಂದ ಈ ರೀತಿಯ ಕೃತ್ಯ ನಡೆದಿರುವುದು ಬೇಸರ ತಂದಿದೆ. ಈ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. +ಪೆನ್‌ಡ್ರೈವ್‌ ಪ್ರಕರಣ ಪ್ರಪಂಚದಾದ್ಯಂತ ಸುದ್ದಿಯಾಗಿದೆ. ಆರೋಪ ಹೊತ್ತಿರುವವರು ವಿದೇಶಕ್ಕೆ ಹೋಗಿದ್ದಾರೆ. ಇದೇ ಹಾಸನ ಜಿಲ್ಲೆಗೆ ಕಳಂಕ ತಂದಿದೆ ಎಂದರು.ಇಂತಹ ಕೃತ್ಯ ನಡೆಯಬಾರದಿತ್ತು. ಪಕ್ಷ ಭೇದ ಮರೆತು ಎಲ್ಲರೂ ಖಂಡಿಸಬೇಕಿತ್ತು. ಅದರಲ್ಲೂ ಲೈಂಗಿಕ ದೌರ್ಜನ್ಯದ ವಿಡಿಯೋಗಳನ್ನು ಅವರೇ ಚಿತ್ರೀಕರಿಸಿಕೊಂಡು ಪ್ರಪಂಚಕ್ಕೆ ಗೊತ್ತಾಗುವ ತರ ಮಾಡಿದ್ದಾರೆ. +ಅದನ್ನು ಸಹಿಸಲು ಸಾಧ್ಯವಿಲ್ಲ. ನಾಲ್ಕು ಗೋಡೆ ಮಧ್ಯೆ ಕೆಲವು ಘಟನೆಗಳು ನಡೆದುಹೋಗುತ್ತವೆ. ಆ ಘಟನೆ ಹೊರಗೆ ಬರಲು ಕಾರಣ ಏನು? ಅದನ್ನು ಸೆರೆ ಹಿಡಿಯದಿದ್ದರೆ ಹೊರ ಜಗತ್ತಿಗೆ ತಿಳಿಯುತ್ತಿರಲಿಲ್ಲ. +ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಹಾಸನ ಎನ್‌ಆರ್‌ ವೃತ್ತದಲ್ಲಿ ಪರದೆ ಹಾಕಿ ಎಲ್ಲರಿಗೂ ತೋರಿಸ್ತಿನಿ ಎಂದು ಶಾಸಕ ರೇವಣ್ಣ ಅವರಿಗೆ ಏಕವಚನದಲ್ಲೇ ಸವಾಲು ಹಾಕಿದ್ದರು ಎಂದು ಶಿವಲಿಂಗೇಗೌಡರು ತಿಳಿಸಿದ್ದರು. \ No newline at end of file diff --git a/eesanje/url_46_151_8.txt b/eesanje/url_46_151_8.txt new file mode 100644 index 0000000000000000000000000000000000000000..ed040955a97243a5866f42fb5fa6d2205104a37a --- /dev/null +++ b/eesanje/url_46_151_8.txt @@ -0,0 +1,3 @@ +ಎಸ್‍ಎಸ್‍ಎಲ್‍ಸಿ : ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ +ಬೆಂಗಳೂರು, ಮೇ 9- ಇಂದು ಪ್ರಕಟಗೊಂಡ ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ನಗರದ ಸುಂಕದಕಟ್ಟೆಯ ವಿದ್ಯಾನಿಕೇತನ ಪಬ್ಲಿಕ್ ಶಾಲೆಗೆ ಉತ್ತಮ ಫಲಿತಾಂಶ ಲಭಿಸಿದೆ. +ಶಾಲೆಯ ಗುಣಮಟ್ಟದ ಶಿಕ್ಷಣದೊಂದಿಗೆ ಶಿಕ್ಷಕರುಗಳು ಉತ್ತಮ ಬೋಧನೆಯಿಂದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರುಗಳು ಅಭಿನಂದನೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_151_9.txt b/eesanje/url_46_151_9.txt new file mode 100644 index 0000000000000000000000000000000000000000..b37d3c598bd2dcb868eb0ac4fb83442ef56a3ce0 --- /dev/null +++ b/eesanje/url_46_151_9.txt @@ -0,0 +1,5 @@ +ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು ಮಧ್ಯಾಹ್ನಕ್ಕೆ ಮುಂದೂಡಿಕೆ +ಬೆಂಗಳೂರು,ಮೇ9-ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿ ಗಳ ನ್ಯಾಯಾಲಯ ಇಂದು ಮಧ್ಯಾಹ್ನಕ್ಕೆ ಮುಂದೂಡಿದೆ. +ಹೊಸದಾಗಿ ಅಭಿಯೋಜಕರಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂದು ಎಸ್‌ಪಿಪಿಗಳಾದ ಜಾಯ್ನಾ ಕೊತಾರಿ ಅಶೋಕ್‌ ನಾಯಕ್‌ ಅವರು ಮನವಿ ಮಾಡಿದರು. +ಹೊಸದಾಗಿ ಎಸ್‌ಪಿಪಿ ನೇಮಕ ಆದಾಗಲೆಲ್ಲ ವಿಚಾರಣೆ ಮುಂದೂಡಲು ಸಾಧ್ಯವಾಗುವುದಿಲ್ಲ. ಮಧ್ಯಾಹ್ನ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯ ನ್ಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಸೂಚಿಸಿದರು. ಪ್ರತಿದಿನ ಎಸ್‌ಪಿಪಿಗಳು ನೇಮಕವಾಗುತ್ತಾರೆ. ಹಾಗೆಂದು ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಇಂದೇ ಆಕ್ಷೇಪಣೆ ಸಲ್ಲಿಸಿ ಎಂದು ಸೂಚಿಸಿ ವಿಚಾರಣೆಯನ್ನು ಮಧ್ಯಾಹ್ನಕ್ಕೆ ಮುಂದೂಡಿದರು. +ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗ್ಗೆ ನಡೆಯಬೇಕಿತ್ತು. ಆಕ್ಷೇಪ ಸಲ್ಲಿಸಲು ಸಮಯ ಅವಕಾಶ ಬೇಕೆಂದು ಕೇಳಿದ ಹಿನ್ನಲೆಯಲ್ಲಿ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ. ಇಂದು ಜಾಮೀನು ಅರ್ಜಿ ವಿಚಾರಣೆ ನಡೆದು ರೇವಣ್ಣ ಅವರಿಗೆ ಜಾಮೀನು ದೊರೆತರೆ ಇಂದೇ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_152_1.txt b/eesanje/url_46_152_1.txt new file mode 100644 index 0000000000000000000000000000000000000000..d2b17dd395eaadd84df9f352519b7801c2a8ebb0 --- /dev/null +++ b/eesanje/url_46_152_1.txt @@ -0,0 +1,10 @@ +ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..? +ಬೆಂಗಳೂರು,ಮೇ9-ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ. +ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುವ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಸರ್ಕಾರ ಮುಂದಾಗಿದೆ. +ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ ಮೊದಲು 7ನೇ ವೇತನ ಆಯೋಗದ ವರದಿ ಸರ್ಕಾರದ ಕೈ ಸೇರಿದೆ. ಹೀಗಾಗಿ ಮಾದರಿ ನೀತಿ ಸಂಹಿತೆ ಸಡಿಲಗೊಂಡ ಕೂಡಲೇ ವರದಿ ಜಾರಿಗೆ ಸರ್ಕಾರ ಸಿದ್ದತೆ ನಡೆಸಿದೆ. +ಮಾರ್ಚ್‌ 16ರಿಂದ ಜಾರಿಯಲ್ಲಿರುವ ನೀತಿ ಸಂಹಿತೆಯು ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್‌ 3ರವರೆಗೆ ನೀತಿ ಸಂಹಿತೆ ಜಾರಿಯಲ್ಲಿದೆ. ರಾಜ್ಯ ವಿಧಾನಪರಿಷತ್‌ ಚುನಾವಣಾ ಫಲಿತಾಂಶಗಳು ಜೂನ್‌ 6ರಂದು ಹೊರಬೀಳಲಿವೆ. +ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್‌ 15ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಹೇಳಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ ಬಜೆಟ್‌ನಲ್ಲಿ ನೀಡಿದ ಭರವಸೆಗಳನ್ನು ಜಾರಿಗೆ ತರಲು 337 ಸರ್ಕಾರಿ ಆದೇಶಗಳು ಬೇಕಾಗುತ್ತವೆ ಎಂದು ಅಂದಾಜಿಸಲಾಗಿದೆ. ನಮ್ಮ ವಿನಂತಿಯ ಆಧಾರದ ಮೇಲೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯ ಸಡಿಲಿಕೆ ಮಾಡುತ್ತದೆ. ಇದು ಕೇಸ್‌ ಟು ಕೇಸ್‌ ಆಧಾರದ ಮೇಲೆ ಇರುತ್ತದೆ ಎಂದು ಅತೀಕ್‌ ತಿಳಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾರೇ ಸಚಿವರಾದರೂ ಅಧಿ ಕೃತ ಸಭೆಗಳ ಅಧ್ಯಕ್ಷತೆ ವಹಿಸಲು ಚುನಾವಣಾ ಸಮಿತಿಯ ಒಪ್ಪಿಗೆ ಅಗತ್ಯ. ಯಾವುದೇ ಹೊಸ ಘೋಷಣೆ, ಹೊಸ ಆದೇಶಗಳನ್ನು ನೀಡುವುದು, ಹೊಸ ಟೆಂಡರ್‌ಗಳನ್ನು ಕರೆಯುವುದು, ಹೊಸ ಗುತ್ತಿಗೆಗಳನ್ನು ನೀಡುವುದು, ಹೊಸ ಕೆಲಸದ ಆದೇಶಗಳನ್ನು ವಹಿಸಿಕೊಡುವುದು ಮತ್ತು ಹೊಸ ಯೋಜನೆಗಳನ್ನು ಮಂಜೂರು ಮಾಡುವುದು ಮಾದರಿ ನೀತಿಸಂಹಿತೆಯ ಕಾರಣದಿಂದಾಗಿ ತಡೆಯಾಗುತ್ತವೆ ಎಂದು ಹೇಳಿದ್ದಾರೆ. +ಇನ್ನು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿದಿರುವ ಕಾರಣ ಇಷ್ಟು ದಿನ ಚುನಾವಣಾ ಕರ್ತವ್ಯದಲ್ಲಿದ್ದ ಅನೇಕ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಹಿಂದಿರುಗಿದ್ದಾರೆ. ಇದರಿಂದ ಆಡಳಿತ ಯಂತ್ರವನ್ನು ಮತ್ತೆ ಚುರುಗೊಳಿಸಲು ಸಹಾಯವಾಗುತ್ತದೆ. ಇದಾದ ನಂತರ ಸರ್ಕಾರ ಹಲವು ಆದೇಶಗಳನ್ನು ಜಾರಿಗೆ ತರಲಿದೆ. +ಆದರೆ, ರಾಜ್ಯ ಕೇಡರ್‌ನ ಸುಮಾರು 50-60 ಐಎಎಸ್‌ ಅಧಿ ಕಾರಿಗಳನ್ನು ಭಾರತದಾದ್ಯಂತ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸರ್ಕಾರಿ ನೌಕರರು ತಮ್ಮ ತಮ್ಮ ಕೆಲಸಗಳಿಗೆ ಹಿಂತಿರುಗಿದ ನಂತರ ಮತ್ತು ಮಾದರಿ ನೀತಿಸಂಹಿತೆ ಸಡಿಲವಾದ ಬಳಿಕ ಎಲ್ಲಾ ಆದೇಶಗಳು ಜಾರಿಯಾಗುವ ಸಂಭವವಿದೆ. ಸರ್ಕಾರ ಕೂಡ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದೆ. \ No newline at end of file diff --git a/eesanje/url_46_152_10.txt b/eesanje/url_46_152_10.txt new file mode 100644 index 0000000000000000000000000000000000000000..94de976031cc3f6a758a5a4d827752915298c32d --- /dev/null +++ b/eesanje/url_46_152_10.txt @@ -0,0 +1,11 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇವರಾಜೇಗೌಡ ವ್ಯವಹಾರದ ಕುರಿತ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ : ಎಂ.ಲಕ್ಷ್ಮಣ್‌ +ಮೈಸೂರು, ಮೇ 8-ಪೆನ್‌ಡ್ರೈವ್‌ ಬಹಿರಂಗಗೊಂಡ ಪ್ರಕರಣದಲ್ಲಿ ಬಿಜೆಪಿ ನಾಯಕ ದೇವರಾಜೇಗೌಡ ಪಾತ್ರ ಏನು, ಎಷ್ಟು ಹಣ ಪಡೆದರು, ನಗದಾಗಿ ಎಷ್ಟು, ಆನ್‌ಲೈನ್‌ನಲ್ಲಿ ಎಷ್ಟು ತೆಗೆದುಕೊಂಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ತಮ್ಮ ಬಳಿ ಇದೆ. ಒಂದೊಂದಾಗಿ ಬಹಿರಂಗಗೊಳಿಸುತ್ತೇವೆ ಎಂದು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಎಂ.ಲಕ್ಷ್ಮಣ್‌ ಎಚ್ಚರಿಸಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕೃತ್ಯದ ಬಗ್ಗೆ ಚರ್ಚೆ ಮಾಡದೇ ಪೆನ್‌ಡ್ರೈವ್‌ ಬಹಿರಂಗ ಪಡಿಸಿದ್ದವರ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಲಾಗುತ್ತಿದೆ. ಕೊಲೆಯಾದಾಗ ಪ್ರಾಣ ಹಾನಿ ಮುಖ್ಯವಾಗುತ್ತದೋ, ಕೃತ್ಯಕ್ಕೆ ಬಳಸಿದ ಕತ್ತಿ ತಯಾರು ಮಾಡಿದ ವ್ಯಕ್ತಿ ಮುಖ್ಯವೋ ಎಂದು ಪ್ರಶ್ನಿಸಿದರು. +ಹೆಚ್‌.ಡಿ.ಕುಮಾರಸ್ವಾಮಿ ಗಾಜಿನ ಮನೆಯಲ್ಲಿ ಕುಳಿತುಕೊಂಡು ತಮ ವಿರುದ್ಧ ಬೇರೆಯವರು ಕಲ್ಲು ಹೊಡೆಯದಂತೆ ನ್ಯಾಯಾಲಯದ ತಡೆಯಾಜ್ಞೆ ತಂದಿದ್ದಾರೆ. ಅದೇ ಗಾಜಿನ ಮನೆಯಲ್ಲಿ ಕುಳಿತು ಕುಮಾರಸ್ವಾಮಿಯವರು ಬೇರೆ ಯಾರ ಮೇಲಾದರೂ ಕಲ್ಲು ಎಸೆಯಬಹುದು. ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಾಧೀಶರಷ್ಟೆ ಯಾಕೆ, ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಿ ಎಂದು ನಾವು ಕೂಡ ಒತ್ತಾಯಿಸುತ್ತೇವೆ ಎಂದು ಹೇಳಿದರು. +ಈಗ ಡಿ.ಕೆ.ಶಿವಕುಮಾರ್‌ ವಿರುದ್ಧ ಆಡಿಯೋ ಬಿಡುಗಡೆ ಮಾಡಿದ ದೇವರಾಜೇಗೌಡ ಯಾವ ಪಕ್ಷದವರು, ವಿರೋಧ ಪಕ್ಷದ ನಾಯಕನನ್ನು ಭೇಟಿ ಮಾಡಿಲ್ಲವೇ. ದೇವರಾಜೇಗೌಡನನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯ ಗೋತ್ತಾಗಲಿದೆ. 25 ಸಾವಿರ ಪೆನ್‌ಡ್ರೈವ್‌ ಹಂಚಿದ್ದಾರೆ ಎಂದು ಹೇಳಲಾಗಿದೆ. ಅಷ್ಟು ಪೆನ್‌ಡ್ರೈವ್‌ಗಳನ್ನು ಚಿಕ್ಕಪೇಟೆಯಲ್ಲಿ ಯಾರು ಖರೀದಿಸಿದರು. ಯಾರ ಹೆಸರಿನಲ್ಲಿ ಬಿಲ್‌ ಮಾಡಿಸಲಾಯಿತು ಎಂಬ ಬಗ್ಗೆ ನಮ ಬಳಿ ಮಾಹಿತಿ ಇದೆ. ಆರ್‌.ಅಶೋಕ್‌ ಅವರು ತಾಳೆಯಿಂದ ಇರಲಿ, ಎಲ್ಲವೂ ಹೇಳುತ್ತೇವೆ ಎಂದರು. +ಎಸ್‌‍ಐಟಿಯಲ್ಲಿ ಆರು ಮಂದಿ ಐಪಿಎಸ್‌‍ ಅಧಿಕಾರಿಗಳಿದ್ದಾರೆ. ಪ್ರಾಮಾಣಿಕವಾದ ತನಿಖೆ ನಡೆಯುತ್ತಿದೆ. ಆರಂಭದಲ್ಲೇ ತನಿಖೆಗೆ ಅಡ್ಡಿ ಪಡಿಸುವ ಪ್ರಯತ್ನ ಯಾಕೆ. ದೇಶದಲ್ಲಿ ಬಿಜೆಪಿ 68 ಸದಸ್ಯರ ವಿರುದ್ಧ ಲೈಂಗಿಕ ಸಿಡಿ ಪ್ರಕರಣಗಳಿವೆ. ರಾಜ್ಯದ 14 ಮಂದಿ ವಿರುದ್ಧವೂ ಪ್ರಕರಣಗಳಿವೆ ಎಂದು ಕೆಲವರ ಹೆಸರುಗಳನ್ನು ಲಕ್ಷ್ಮಣ್‌ ವಿವರಿಸಿದರು. +ಹಾಸನದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅಮಿತ್‌ ಶಾ ಹಾಗೂ ಬಿ.ವೈ. ವಿಜಯೇಂದ್ರರಿಗೆ ದೇವರಾಜೇಗೌಡ ಪತ್ರ ಬರೆದು ಸಿಡಿ ಸಹಿತ ವಿಡಿಯೋ ತಲುಪಿಸಿದ್ದಾರೆ. ದೇವರಾಜೇಗೌಡರಿಗೆ ಅಮಿತ್‌ ಶಾರನ್ನು ಭೇಟಿ ಮಾಡಿಸಲು ವಿಜಯೇಂದ್ರ ಪ್ರಯತ್ನ ಪಟ್ಟಿದ್ದರು. ಅಮಿತ್‌ ಶಾ-ವಿಜಯೇದ್ರ 20 ನಿಮಿಷ ಇದೇ ವಿಷಯವಾಗಿ ಚರ್ಚೆ ಮಾಡಿದ್ದಾರೆ. ಆ ವೇಳೆ ದೇವರಾಜೇಗೌಡ ಕೊಠಡಿಯ ಹೊರಗೆ ಕುಳಿತಿದ್ದರು. ವಿಷಯ ತಿಳಿದ ಕಾರಣಕ್ಕೆ ಹಾಸನ ಅಭ್ಯರ್ಥಿಯನ್ನು ಕೊನೆ ಕ್ಷಣದವರೆಗೂ ತಡೆ ಹಿಡಿಯಲಾಗಿತ್ತು ಎಂದರು. +ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌‍ಪೋರ್ಟ್‌ಗಾಗಿ 26ರಂದು ಸಂಜೆ 4 ಗಂಟೆಗೆ ಅರ್ಜಿ ಸಲ್ಲಿಸಿದ್ದಾರೆ. 15 ನಿಮಿಷದಲ್ಲಿ ರಾಜತಾಂತ್ರಿಕ ಪಾಸ್‌‍ಪೋರ್ಟ್‌ ಮತ್ತು ವಿಸಾ ಸಿದ್ದಗೊಳ್ಳುತ್ತದೆ. ರಾತ್ರಿ 12.30ಕ್ಕೆ ಪ್ರಜ್ವಲ್‌ ರೇವಣ್ಣ ದೇಶ ಬಿಡುತ್ತಾರೆ. ಇದನ್ನೂ ಕಾಂಗ್ರೆಸ್‌‍ ಮಾಡಿದ್ದಾ ಎಂದು ಪ್ರಶ್ನಿಸಿದರು. +ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ಗೆ ಯಾವ ವಿಷಯವೂ ಗೊತ್ತಿಲ್ಲ. ಕಾಂಗ್ರೆಸ್‌‍ ನಾಯಕರನ್ನು ಟೀಕಿಸುವದಷ್ಟೆ ಗೊತ್ತು. ಕುಮಾರಸ್ವಾಮಿಯವರು ಪ್ರಮಾಣಿಕವಾಗಿದ್ದರೆ ಪ್ರಜ್ವಲ್‌ ರೇವಣ್ಣನನ್ನು ಕರೆಸಿ ತನಿಖಾಧಿಕಾರಿಗಳಿಗೆ ಒಪ್ಪಿಸಿ. ಎಸ್‌‍ಐಟಿಯ ಮೇಲೆ ನಂಬಿಕೆ ಇಲ್ಲದಿದ್ದರೆ ಸಿಬಿಐ, ಎನ್‌ಐಎ ಅಷ್ಟೇ ಅಲ್ಲದೆ ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಒಪ್ಪಿಸಲು ಜೆಡಿಎಸ್‌‍ ನಾಯಕರು ಲಿಖಿತವಾಗಿ ಮನವಿ ನೀಡಲಿ, ಇಲ್ಲವೇ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಿ ಸ್ವಯಂ ಪ್ರೇರಿತ ತನಿಖೆ ಕೈಗೆತ್ತಿಕೊಳ್ಳಲು ಕ್ರಮ ಕೈಗೊಳ್ಳಿ ಎಂದು ಸವಾಲು ಹಾಕಿದರು. +ಜೆಡಿಎಸ್‌‍ನವರು ಇವತ್ತು ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ್ದಾರೆ. ಈ ಪ್ರತಿಭಟನೆ ಯಾಕೆ, ಪ್ರಜ್ವಲ್‌ ರೇವಣ್ಣ ಮಾಡಿದ್ದು ಸರಿ, ಆತನನ್ನು ಬಂಧಿಸಬಾರದು ಎಂಬ ಒತ್ತಾಯಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆಯೇ. ಪ್ರತಿಭಟನಾಕಾರರು ಬೇಡ ಬೇಡ ತನಿಖೆ ಬೇಡ ಎಂದು ಬಿತ್ತಿ ಪತ್ರ ಹಿಡಿದುಕೊಂಡಿದ್ದಾರೆ. ಪ್ರಕರಣದಲ್ಲಿ 2 ಸಾವಿರಕ್ಕೂ ಹೆಚ್ಚು ವಿಡಿಯೋಗಳಲ್ಲಿ 500ಕ್ಕೂ ಹೆಚ್ಚು ಹೆಣ್ಣು ಮಕ್ಕಳ ಮಾನ ಅಪಹರಣ ಮಾಡಿದ್ದು ಸರಿ ಎಂಬ ಕಾರಣಕ್ಕೆ ಪ್ರತಿಭಟನೆ ನಡೆಸಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. +ಬಿಜೆಪಿಯ ಆರ್‌.ಅಶೋಕ್‌, ವಿಜಯೇಂದ್ರ, ಪ್ರೀತಂಗೌಡ, ದೇವರಾಜೇಗೌಡರನ್ನು ಮಂಪರು ಪರೀಕ್ಷೆ ಒಳಪಡಿಸಿದರೆ ಮತ್ತಷ್ಟು ಸತ್ಯಗಳು ಹೊರ ಬರುತ್ತವೆ. ದೇವರಾಜೇಗೌಡರಿಗೆ ಪೈಪೋಟಿ ಮೇಲೆ ಮುಂಗಡ ಕೊಟ್ಟಿದ್ದು ಯಾರು, ಎಷ್ಟು ಹಣ ವರ್ಗಾವಣೆಯಾಗಿದೆ ಎಂಬ ಎಲ್ಲಾ ಮಾಹಿತಿ ತಮ ಬಳಿ ಇವೆ. ಹಂತ ಹಂತವಾಗಿ ಹೊರಗೆ ತರುತ್ತೇವೆ ಎಂದು ಎಚ್ಚರಿಸಿದರು. \ No newline at end of file diff --git a/eesanje/url_46_152_11.txt b/eesanje/url_46_152_11.txt new file mode 100644 index 0000000000000000000000000000000000000000..160b17a9fa2153eced025a293695750b017f8482 --- /dev/null +++ b/eesanje/url_46_152_11.txt @@ -0,0 +1,9 @@ +ಡಿಸಿಎಂ ಡಿಕೆಶಿಯನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಜೆಡಿಎಸ್‌ ಪ್ರತಿಭಟನೆ +ಬೆಂಗಳೂರು,ಮೇ.8-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಹಾಸನದ ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿದೆ. +ಹಾಸನದ ಪೆನ್‌ಡ್ರೈವ್‌ ಹಂಚಿಕೆ ಸಂಚಿನ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಆರೋಪ ಕೇಳಿಬಂದ ಕೂಡಲೇ ಸಿಡಿದೆದ್ದಿರುವ ಜೆಡಿಎಸ್‌ ನಿನ್ನೆಯಿಂದ ಬೀದಿಗಿಳಿದು ಪ್ರತಿಭಟನೆ ನಡೆಸಿ ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇಂದು ಮೈಸೂರು, ರಾಮನಗರ, ನಾಗಮಂಗಲ, ದೇವನಹಳ್ಳಿ, ಚಿತ್ರದುರ್ಗ ಮತ್ತಿತರೆಡೆ ಪ್ರತಿಭಟನೆ ನಡೆಸಲಾಗಿದೆ. ನಿನ್ನೆ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. +ಮೈಸೂರಿನಲ್ಲಿ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಲಾಯಿತು. ಶಿವಕುಮಾರ್‌ ವಿರುದ್ದದ ಘೋಷಣೆಗಳುಳ್ಳ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನಾ ನಿರತರು ಆಕ್ರೋಶ ಹೊರಹಾಕಿದರು. ಅಶ್ಲೀಲ ವಿಡಿಯೋವಿದ್ದ ಪೆನ್‌ಡ್ರೈವ್‌ ಹಂಚಿಕೆ ಹಿಂದೆ ಡಿ.ಕೆ.ಶಿವಕುಮಾರ್‌ ಅವರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿರುವುದರಿಂದ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. +ಮಾಜಿ ಸಚಿವ ಸಾ.ರಾ.ಮಹೇಶ್‌, ಕಾಂಗ್ರೆಸ್‌ ಸಂಚಿನಿಂದ ಪೆನ್‌ಡ್ರೈವ್‌ ಹಂಚಿಕೆಯಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡರು ಹೇಳಿದಂತೆ ಎಸ್‌ಐಟಿ ಅಧಿ ಕಾರಿಗಳು ವರ್ತಿಸುತ್ತಿದ್ದಾರೆ. ನಿಷ್ಪಕ್ಷಪಾತ ತನಿಖೆಯಾಗುತ್ತಿಲ್ಲ. ಪೆನ್‌ಡ್ರೈವ್‌ ಹಂಚಿದವರನ್ನು ಇನ್ನು ಏಕೆ ಬಂಧಿಸಿಲ್ಲ? ಕಿಡ್ನಾಪ್‌ ಆರೋಪದ ದೂರಿನ ಸಂಬಂಧ ಪತ್ತೆಯಾಗಿರುವ ಮಹಿಳೆಯನ್ನು ಇನ್ನು ಏಕೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ ಎಂದು ಪ್ರಶ್ನೆಗಳ ಸುರಿಮಳೆಗೈದರು. +ರಾಮನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಬಳಿಯ ಐಜೂರು ವೃತ್ತದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯ ನಾಯಕರು ಪಾಲ್ಗೊಂಡಿದ್ದರು. ನಾಗಮಂಗಲದಲ್ಲಿ ಸುರೇಶ್‌ ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಶಿವಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. +ಮಾಜಿ ಸಚಿವ ಎಚ್‌ ಡಿ ರೇವಣ್ಣ ಬಂಧನ ಖಂಡಿಸಿ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಅಧಿ ಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ನಿನ್ನೆ ಹಾಸನದಲ್ಲಿ ಜೆಡಿಎಸ್‌ ಪ್ರತಿಭಟನೆ ನಡೆಸಿತ್ತು. +ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಹೊರಟ ಪ್ರತಿಭಟನೆಕಾರರು ಎನ್‌ಆರ್‌ವೃತ್ತದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರತಿಕೃತಿಗೆ ದಹಿಸಿ, ಮಾಜಿ ಸಂಸದ ಎಲ್‌ .ಆರ್‌ ಶಿವರಾಮೇಗೌಡ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. +ಮಾಜಿ ಸಚಿವ ಎ.ಮಂಜು, ಶಾಸಕ ಸಿ.ಎನ್‌ ಬಾಲಕೃಷ್ಣ ,ಜೆಡಿಎಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್‌ ಲಿಂಗೇಶ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ನೇತೃತ್ವದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಯನ್ನು ದಹಿಸಲಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟದಿಂದ ವಜಾಗೊಳಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು. ಬೆಂಗಳೂರು ಮಹಾನಗರ ಜೆಡಿಎಸ್‌ ಅಧ್ಯಕ್ಷ ರಮೇಶ್‌ಗೌಡ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. \ No newline at end of file diff --git a/eesanje/url_46_152_12.txt b/eesanje/url_46_152_12.txt new file mode 100644 index 0000000000000000000000000000000000000000..3679a0468beb3912bbd4bc391ac75b4731eb68e9 --- /dev/null +++ b/eesanje/url_46_152_12.txt @@ -0,0 +1,5 @@ +ನಾಳೆ ಬೆಳಗ್ಗೆ 10.30ಕ್ಕೆ ರಿಸಲ್ಟ್ +ಬೆಂಗಳೂರು,ಮೇ8-ಕಳೆದ ಮಾರ್ಚ್‌-ಏಪ್ರಿಲ್‌ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿತಾಂಶವನ್ನು ಪ್ರಕಟಿಸಲಿದ್ದು, ಗುರುವಾರ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. +ಅಧಿ ಕೃತ ವೆಬ್‌ಸೈಟ್‌ ಹೊರತುಪಡಿಸಿ ಖಾಸಗಿ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಫಲಿತಾಂಶವನ್ನು ವಿದ್ಯಾರ್ಥಿಗಳು ಇಲ್ಲವೇ ಪೋಷಕರು ಖಾತ್ರಿ ಮಾಡಿಕೊಳ್ಳಬಾರದು. ತಪ್ಪು ಮಾಹಿತಿ ನೀಡಿದರೆ ಅಂತಹ ವೆಬ್‌ಸೈಟ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ಕೊಟ್ಟಿದೆ. +ಕಳೆದ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ರಾಜ್ಯದ 2,750 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 4,41,910 ಬಾಲಕರು, 4,28,058 ಬಾಲಕಿಯರು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು, 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8,69,968 ವಿದ್ಯಾರ್ಥಿಗಳು ಹಾಜರಾಗಿದ್ದರು. +ವಿದ್ಯಾರ್ಥಿಗಳು ಅಧಿ ಕೃತ ವೆಬ್‌ಸೈಟ್‌ ಅಧಿ ಕೃತ ವೆಬ್ಸೈಟ್ಗಳಾದ ... ಮತ್ತು .. ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. \ No newline at end of file diff --git a/eesanje/url_46_152_2.txt b/eesanje/url_46_152_2.txt new file mode 100644 index 0000000000000000000000000000000000000000..48acf6de5bd239fa415027bf743afc2ad7c245ea --- /dev/null +++ b/eesanje/url_46_152_2.txt @@ -0,0 +1,6 @@ + ಫಲಿತಾಂಶ : ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ +ಬೆಂಗಳೂರು,ಮೇ9-ಬಾಗಲಕೋಟೆ ಜಿಲ್ಲೆಯ ಮುಧೋಳದ ಮಳ್ಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯಾಗಿದ್ದರೆ, ಈ ಬಾರಿ ಅಗ್ರ ಶ್ರೇಯಾಂಕದಲ್ಲೂ ಹಿನ್ನಡೆ ಕಂಡುಬಂದಿದೆ. 39,034 ವಿದ್ಯಾರ್ಥಿಗಳು ಶೇ.90ರಿಂದ 100ರಷ್ಟು ಅಂಕ ಪಡೆದು ಎ+ ಅಗ್ರ ಶ್ರೇಯಾಂಕದಲ್ಲಿದ್ದು, ಶೇ.5.58ರಷ್ಟು ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಇದು ಶೇ.8.83ರಷ್ಟಿತ್ತು. +ಶೇ.80ರಿಂದ 89ರಷ್ಟು ಅಂಕ ಪಡೆದ ಎ ಶ್ರೇಣಿಯ ವಿದ್ಯಾರ್ಥಿಗಳ ಪ್ರಮಾಣ ಶೇ.12.39ರಷ್ಟಿದೆ. ಕಳೆದ ವರ್ಷ ಶೇ.21.38ರಷ್ಟು ಮಂದಿ ಸಾಧನೆ ಮಾಡಿದ್ದರು. ಶೇ.70ರಿಂದ 79ರಷ್ಟು ಬಿ+ ಅಂಕ ಗಳಿಸಿದ್ದ ಶೇ.16.09ರಷ್ಟು ವಿದ್ಯಾರ್ಥಿಗಳು ಸಾಧನೆ ಮಾಡಿದ್ದರೆ, ಹಿಂದಿನ ವರ್ಷ ಶೇ.25.41ರಷ್ಟು ಯಶಸ್ವಿಯಾಗಿದ್ದರು. +ಶೇ.60ರಿಂದ 69ರಷ್ಟು ಅಂಕ ಪಡೆದ ಬಿ ಶ್ರೇಣಿಯ ವಿದಾರ್ಥಿಗಳ ಸಂಖ್ಯೆ ಶೇ.19.90ರಷ್ಟು. ಕಳೆದ ವರ್ಷ ಶೇ.24.66ರಷ್ಟಿತ್ತು. ಸಿ+ ಮತ್ತು ಸಿ ಶ್ರೇಣಿಯಲ್ಲಿ ಏರಿಕೆ ಕಂಡುಬಂದಿದ್ದು, ಕ್ರಮವಾಗಿ ಶೇ.22.38, ಶೇ.23.66ರಷ್ಟು ಉತ್ತೀರ್ಣರಾಗಿದ್ದಾರೆ.ಈ ಬಾರಿ 785 ಸರ್ಕಾರಿ, 206 ಅನುದಾನಿತ, 1297 ಅನುದಾನ ರಹಿತ ಸೇರಿ 2,288 ಶಾಲೆಗಳು ಶೇ.100ರಷ್ಟು ಫಲಿತಾಂಶ ಪಡೆದಿವೆ. ಕಳೆದ ವರ್ಷ ಈ ಶಾಲೆಗಳ ಸಂಖ್ಯೆ 3,823ರಷ್ಟಿತ್ತು. +ಶೂನ್ಯ ಫಲಿತಾಂಶ ಪಡೆದ ಶಾಲೆಗಳು ಕಳೆದ ವರ್ಷ 34ರಷ್ಟಿದ್ದರೆ ಈ ಬಾರಿ 78ಕ್ಕೆ ಹೆಚ್ಚಾಗಿವೆ. ಇವುಗಳ ಪೈಕಿ ಸರ್ಕಾರಿ 3, ಅನುದಾನಿತ 13, ಅನುದಾನ ರಹಿತ 62 ಶಾಲೆಗಳು ಸೇರಿವೆ. +ರ್ಯಾಂಕ್‌ ವಿದ್ಯಾರ್ಥಿಗಳು:ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಬನಶಂಕರಿ ಮೊದಲ ಹಂತದ ಹೋಲಿ ಚೈಲ್ಡ್ ಇಂಗ್ಲೀಷ್‌ ಶಾಲೆಯ ಮೇದಾ.ಪಿ ಶೆಟ್ಟಿ , ಮಧುಗಿರಿಯ ಶಿರಾ ತಾಲ್ಲೂಕಿನ ಶ್ರೀವಾಸವಿ ಇಂಗ್ಲೀಷ್‌ ಪ್ರೌಢಶಾಲೆಯ ಹರ್ಷಿತಾ.ಡಿ.ಎಂ, ದಕ್ಷಿಣಕನ್ನಡ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಇಂಗ್ಲೀಷ್‌ ಪ್ರೌಢಶಾಲೆಯ ಚಿನ್ಮಯ.ಜಿ.ಕೆ, ಚಿಕ್ಕೋಡಿಯ ಅಥಣಿ ತಾಲ್ಲೂಕಿನ ಶ್ರಮರತ್ನಶ್ರೀ ಶಾಲೆಯ ಸಿದ್ದಾಂತ್‌ ಗಾಡ್ಗೆ, ಸಿರಸಿಯ ಮಾರಿಕಾಂಬ ಸರ್ಕಾರಿ ಪದವಿಪೂರ್ವ ಕಾಲೇಜಿನ ದರ್ಶನ್‌ ಸೂರ್ಯ ಭಟ್‌, ಗೋಳಿಯ ಸಿದ್ದಿ ವಿನಾಯಕ ಶಾಲೆಯ ಚಿನ್ಮಯ್‌ ಶ್ರೀಪಾದ ಹೆಗಡೆ, ಶ್ರೀಶಾರದಾಂಬ ಶಾಲೆಯ ಶ್ರೀರಾಮ್‌.ಕೆ.ಎಂ ಅವರುಗಳು 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ. \ No newline at end of file diff --git a/eesanje/url_46_152_3.txt b/eesanje/url_46_152_3.txt new file mode 100644 index 0000000000000000000000000000000000000000..fa92e5e9314dd7baf73b5093ad5eda4628854133 --- /dev/null +++ b/eesanje/url_46_152_3.txt @@ -0,0 +1,6 @@ +ಜೂ.7ರಿಂದ 2ನೇ ಹಂತದ ಪರೀಕ್ಷೆ, ಮೇ.13ರಿಂದ ಮರುವೌಲ್ಯಮಾಪನಕ್ಕೆ ಅರ್ಜಿ +ಬೆಂಗಳೂರು,ಮೇ9-ಎಸ್ಸೆಸ್ಸೆಲ್ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜೂನ್‌ 7ರಿಂದ 2ನೇ ಹಂತದ ಪರೀಕ್ಷೆ ನಡೆಯಲಿದ್ದು, ಆ ಸಂದರ್ಭದಲ್ಲಿ ಯಶಸ್ಸು ಗಳಿಸಲು ಅವಕಾಶಗಳಿವೆ. +ಇಂದು ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ, ಕಡಿಮೆ ಅಂಕ ಗಳಿಸಿರುವ ಅನುಮಾನಗಳಿರುವ ವಿದ್ಯಾರ್ಥಿಗಳಿಗೆ ಸ್ಕ್ಯಾನ್‌ ಪ್ರತಿ ಪಡೆಯಲು ಮರು ಎಣಿಕೆ ಮತ್ತು ಮರು ವೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. +ಇಂದಿನಿಂದ ಮೇ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಆನ್‌ಲೈನ್‌ ಸವಲತ್ತು ಇಲ್ಲದವರಿಗೆ ಆಫ್‌ಲೈನ್‌ನಲ್ಲಿ ಚಲನ್‌ ಮೂಲಕ ಶುಲ್ಕ ಪಾವತಿಸಲು ಒಂದು ದಿನ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ. +ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರುವೌಲ್ಯಮಾಪನನಕ್ಕೆ ಮೇ 13ರಿಂದ 22ರ ನಡುವೆ ಅರ್ಜಿ ಸಲ್ಲಿಸಬಹುದಾಗಿದೆ. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರಿಗೆ ಒಂದು ದಿನ ಹೆಚ್ಚುವರಿ ಕಾಲಾವಕಾಶವಿದೆ. +ಜೂ.7ರಿಂದ 14ರವರೆಗೆ ಎಸ್ಸೆಸ್ಸೆಲ್ಸಿ 2ನೇ ಹಂತದ ಪರೀಕ್ಷೆ ನಡೆಯಲಿದೆ. ಈ ಬಾರಿ ಯಶಸ್ವಿಯಾಗದಿರುವರನ್ನು ಎನ್‌ಸಿ ಎಂದು ನಮೂದಿಸಲಾಗಿದೆ. 2 ಮತ್ತು 3ನೇ ಹಂತದಲ್ಲೂ ಉತ್ತೀರ್ಣರಾಗುವಲ್ಲಿ ವಿಫಲರಾದ ವಿದ್ಯಾರ್ಥಿಗಳಿಗೆ ಮಾತ್ರ ಅನುತ್ತೀರ್ಣವೆಂದು ಉಲ್ಲೇಖಿಸುವುದಾಗಿ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕ ಎಚ್‌.ಎನ್‌.ಗೋಪಾಲ ಕೃಷ್ಣ ತಿಳಿಸಿದ್ದಾರೆ. \ No newline at end of file diff --git a/eesanje/url_46_152_4.txt b/eesanje/url_46_152_4.txt new file mode 100644 index 0000000000000000000000000000000000000000..9901304f9b837fe63d72d41cda9c5eb50d9a6a0e --- /dev/null +++ b/eesanje/url_46_152_4.txt @@ -0,0 +1,6 @@ +ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ +ಬೆಂಗಳೂರು,ಮೇ 9-ಕಳೆದ ಐದಾರು ದಿನಗಳಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಬಿಸಿ ಗಾಳಿ ಹಾಗೂ ಗರಿಷ್ಠ ತಾಪಮಾನ ಸ್ವಲ್ಪ ಕಡಿಮೆಯಾಗಿತ್ತು, ವಾತಾವರಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. +ಭರಣಿ ಮಳೆಯಾಗುತ್ತಿರುವುದರಿಂದ ತೀವ್ರ ಬರದಿಂದ ಕಂಗೆಟ್ಟಿದ್ದ ರೈತ ಸಮುದಾಯದಲ್ಲಿ ಮಂದಹಾಸ ಮೂಡಿದಂತಾಗಿದೆ. ಲಘು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರು, ರಾಮನಗರ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದ್ದರೆ, ಇನ್ನೂ ಕೆಲವೆಡೆ ಬಿರುಗಾಳಿಗೆ ಮರ ಹಾಗೂ ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. +ಇದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದ್ದು, ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. +ಬಿಸಿಲ ನಾಡೆಂದು ಬಿಂಬಿಸಿರುವ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ 41.2 ಡಿ.ಸೆಂ., ಬಾಗಲಕೋಟೆ, ರಾಯಚೂರುಗಳಲ್ಲಿ 40 ಡಿ.ಸೆಂ., ಬೆಂಗಳೂರು ನಗರದಲ್ಲಿ 34.2ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ನಿನ್ನೆ ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಮೂರ್ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಿತ್ತು. ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು ನಾಲ್ಕು ಡಿ.ಸೆಂ.ನಷ್ಟು ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ. +ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜೆಲ್ಲೆಗಳ ಗರಿಷ್ಠ ತಾಪಮಾನ 35 ಡಿ.ಸೆಂ.ಗಿಂತ ಕಡಿಮೆ ದಾಖಲಾಗುತ್ತಿದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆ ತಂಪೆರೆದಂತಾಗಿದೆ. \ No newline at end of file diff --git a/eesanje/url_46_152_5.txt b/eesanje/url_46_152_5.txt new file mode 100644 index 0000000000000000000000000000000000000000..b0b20bdbba91291a8fb58e9b9eb4cede05f94dfc --- /dev/null +++ b/eesanje/url_46_152_5.txt @@ -0,0 +1,7 @@ +ವಿಧಾನಪರಿಷತ್‌ನ 6 ಸ್ಥಾನಗಳಿಗೆ ಚುನಾವಣಾ ಅಧಿಸೂಚನೆ ಪ್ರಕಟ, ಇಂದಿನಿಂದಲೇ ನಾಮಪತ್ರ ಸಲ್ಲಿಕೆ +ಬೆಂಗಳೂರು,ಮೇ 9-ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳ ಆಯ್ಕೆಗಾಗಿ ಇಂದು ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಶಿಕ್ಷಕರ ಕ್ಷೇತ್ರದಿಂದ ಮೂರು ಹಾಗೂ ಪದವೀಧರ ಕ್ಷೇತ್ರದಿಂದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. +ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸ್ಪರ್ಧಿಸಿದ್ದ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ವಿಧಾನ ಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಅಥವಾ ಸ್ವತಂತ್ರವಾಗಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಹೀಗಾಗಿ ಉಭಯ ಪಕ್ಷಗಳ ಸ್ಪರ್ಧಾಕಾಂಕ್ಷಿಗಳು ಗೊಂದಲಕ್ಕೆ ಒಳಗಾಗಿದ್ದಾರೆ. ಬಿಜೆಪಿಯೊಂದಿಗೆ ದೀರ್ಘ ಕಾಲದವರೆಗೆ ಮೈತ್ರಿ ಮಾಡಿಕೊಂಡಿರುವುದಾಗಿ ಜೆಡಿಎಸ್‌‍ ಪ್ರಕಟಿಸಿದೆ. ಆದರೆ, ಬಿಜೆಪಿಯು ಹಾಸನದ ಪೆನ್‌ಡ್ರೈವ್‌ ಪ್ರಕರಣದ ನಂತರ ಯಾವ ನಿಲುವು ತಳೆಯಲಿದೆ ಎಂಬುದನ್ನು ಕಾದುನೋಡಬೇಕಿದೆ. +ಆಡಳಿತಾರೂಢ ಕಾಂಗ್ರೆಸ್‌‍ ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮುನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸಿತ್ತು. ಮೈತ್ರಿ ವಿಚಾರ ನಿರ್ಧಾರವಾಗದ ಹಿನ್ನೆಯಲ್ಲಿ ಇನ್ನೂ ಬಿಜೆಪಿ ಮತ್ತು ಜೆಡಿಎಸ್‌‍ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ.ವಿಧಾನ ಪರಿಷತ್‌ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿರುವುದರಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌‍.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. +ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಭಾರತದ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. +ಇಂದಿನಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌‍ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. +ವಿಧಾನಪರಿಷತ್‌ನ ಚುನಾವಣಾ ವೇಳಾಪಟ್ಟಿ ಮೇ 2ರಂದು ಪ್ರಕಟವಾಗಿದ್ದು, ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈಶಾನ್ಯ, ನೈರುತ್ಯ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ 3,24,502 ಮತದಾರರು ಇದ್ದು, 1,81,391 ಪುರುಷರು 1,43,075 ಮಹಿಳೆಯರು ಹಾಗೂ 36 ಇತರೆ ಮತದಾರರು ಇದ್ದಾರೆ. ಆಗ್ನೇಯ, ನೈರುತ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ 61,273 ಮತದಾರರು ಇದ್ದು ಈ ಪೈಕಿ 33,977 ಪುರುಷರು 27,294 ಮಹಿಳೆ ಹಾಗೂ ಇತರೆ 2 ಮತದಾರರು ಇದ್ದಾರೆ. \ No newline at end of file diff --git a/eesanje/url_46_152_6.txt b/eesanje/url_46_152_6.txt new file mode 100644 index 0000000000000000000000000000000000000000..be98d51ebcea21420ed695c57a149306a998e3b0 --- /dev/null +++ b/eesanje/url_46_152_6.txt @@ -0,0 +1,15 @@ + ಫಲಿತಾಂಶ ಪ್ರಕಟ : ಉಡುಪಿ ಫಸ್ಟ್, ಯಾದಗಿರಿ ಲಾಸ್ಟ್, ಬಾಲಕಿಯರೇ ಬೆಸ್ಟ್ +ಬೆಂಗಳೂರು,ಮೇ9-2023-24ನೇ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಸುಮಾರು 10ರಷ್ಟು ಕುಸಿತ ಕಂಡಿದೆ.ಈ ವರ್ಷ ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಎಂದಿನಂತೆ ಬಾಲಕೀಯರೇ ಮೇಲಗೈ ಸಾಧಿಸಿದ್ದಾರೆ. ವಿಶೇಷವೆಂದರೆ ನಗರಪ್ರದೇಶದವರನ್ನು ಹಿಂದಿಕ್ಕಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶ ಪಡೆದಿದ್ದಾರೆ. ಕರಾವಳಿ, ಮಲೆನಾಡಿನ ಶೈಕ್ಷಣಿಕ ಜಿಲ್ಲೆಗಳು ಹಿಂದಿನ ಹಿನ್ನಡೆಯನ್ನು ಸರಿಗಟ್ಟಿ ಮುಂಚೂಣಿಗೆ ಬಂದಿವೆ. ವಿದ್ಯಾರ್ಥಿಗಳ ಶ್ರೇಯಾಂಕದಲ್ಲಿ ಸಾಕಷ್ಟು ಏರುಪೇರು ಕಂಡು ಬಂದಿದೆ. +ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಮಂಜುಶ್ರೀ ಇಂದು ಪತ್ರಿಕಾ ಗೋಷ್ಠಿಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಪ್ರಕಟಿಸಿದರು. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.73.40ರಷ್ಟು ಫಲಿತಾಂಶ ಬಂದಿದೆ. +2018ರಿಂದ-20ರ ನಡುವೆ ಕೋವಿಡ್‌ ಅವಧಿಯಲ್ಲಿ ಕಡಿಮೆ ಫಲಿತಾಂಶ ದಾಖಲಾಗಿತ್ತು. ಆ ಬಳಿಕ ಈ ವರ್ಷವೇ ಫಲಿತಾಂಶದಲ್ಲಿ ಕುಸಿತ ಕಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿ ರಿತೇಶ್‌ಕುಮಾರ್‌ ಸಿಂಗ್‌ ಮಾತನಾಡಿ, ಈ ಬಾರಿ ಬಹುತೇಕ ಶಾಲೆಗಳಲ್ಲಿ ವೆಬ್‌ ಕಾಸ್ಟಿಂಗ್‌ ಮೂಲಕ ಪರೀಕ್ಷಾ ಕೇಂದ್ರದಲ್ಲಿನ ಚಟುವಟಿಕೆಗಳನ್ನು ಸಿಸಿಟಿವಿ ಮೂಲಕ ನೇರ ನಿಗಾವಣೆ ವಹಿಸಲಾಗಿತ್ತು. ಫಲಿತಾಂಶ ಕುಸಿಯಲು ಇದು ಕಾರಣವಾಗಿರಬಹುದು ಎಂದು ಹೇಳಿದರು. +ಸದ್ಯಕ್ಕೆ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರೂ ಕೂಡ ಆತಂಕಪಡುವ ಅಗತ್ಯವಿಲ್ಲ. ಪರೀಕ್ಷೆ 2 ಮತ್ತು 3ನೇ ಹಂತದಲ್ಲಿ ಉತ್ತೀರ್ಣರಾಗಲು ಅವಕಾಶವಿದೆ. ವೆಬ್‌ ಕಾಸ್ಟಿಂಗ್‌ ತಾತ್ಕಾಲಿಕವಾಗಿ ಪರೀಕ್ಷೆಯನ್ನು ಅತ್ಯಂತ ಶಿಸ್ತುಬದ್ದವಾಗಿ ನಡೆಸಿದೆ ಎನಿಸಿದರೂ ಕೂಡ ಪರೀಕ್ಷೆಯಲ್ಲಿನ ಭವಿಷ್ಯದ ಪಾವಿತ್ರ್ಯತೆ ಮತ್ತು ಸಮಗ್ರತೆ ಪಾಲನೆಗೆ ಸಹಕಾರಿಯಾಗಲಿದೆ ಎಂದು ವಿವರಿಸಿದರು. +ಕಳೆದ ವರ್ಷ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹೆಚ್ಚುವರಿ ಅಂಕ(ಗ್ರೇಸ್‌ ಮಾರ್ಕ್ಸ್) ನೀಡಲಾಗಿತ್ತು. ಈ ಬಾರಿ 25ರಿಂದ 35ರಷ್ಟು ಕಡಿಮೆ ಅಂಕ ಪಡೆದವರಿಗೆ ಶೇ.20ರಷ್ಟು ಗ್ರೇಸ್‌ ಮಾರ್ಕ್‌್ಸ ನೀಡಲಾಗಿದೆ. ಇಲ್ಲದೆ ಹೋಗಿದ್ದರೆ ಫಲಿತಾಂಶದಲ್ಲಿ ಇನ್ನು ಶೇ.30ರಷ್ಟು ಕುಸಿವಾಗುವ ಸಾಧ್ಯತೆ ಇತ್ತು ಎಂದು ಹೇಳಿದರು. +ಈ ವರ್ಷಕ್ಕೆ ಮಾತ್ರ ಗ್ರೇಸ ಮಾರ್ಕ್ಸ್ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಮುಂದಿನ ವರ್ಷ ಶೇ.10ರಷ್ಟೇ ಪ್ರಮಾಣವನ್ನು ಮುಂದುವರೆಸಲಾಗುವುದು ಎಂದು ರಿತೇಶ್‌ ಸಿಂಗ್‌ ಸ್ಪಷ್ಟಪಡಿಸಿದರು. +ಬಾಲಕಿಯರ ಮೇಲುಗೈ:ಪ್ರಸಕ್ತ ಸಾಲಿನಲ್ಲಿ 4,36,138 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, 2,87,416 ಮಂದಿ ಉತ್ತೀರ್ಣರಾಗುವ ಮೂಲಕ ಶೇ.65.90ರಷ್ಟು ಫಲಿತಾಂಶ ಪಡೆದಿದ್ದಾರೆ. 4,23,829 ಬಾಲಕಿಯರು ಹಾಜರಾಗಿ 3,43,788 ಮಂದಿ ಉತ್ತೀರ್ಣರಾಗಿ ಶೇ.81.11ರಷ್ಟು ತೇರ್ಗಡೆಯಾಗಿದ್ದಾರೆ. +ನಗರದಪ್ರದೇಶದಲ್ಲಿ 4,93,900 ವಿದ್ಯಾರ್ಥಿಗಳು ಹಾಜರಾಗಿ 3,59,703 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.72.83ರಷ್ಟು ಫಲಿತಾಂಶ ಗಳಿಸಿದ್ದರೆ, ಗ್ರಾಮೀಣ ಭಾಗದಲ್ಲಿ 3,66, 067 ವಿದ್ಯಾರ್ಥಿಗಳು ಹಾಜರಾಗಿ 2,71,501 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.74.17ರಷ್ಟು ಫಲಿತಾಂಶ ಪಡೆದಿದ್ದಾರೆ. +ಪ್ರಸಕ್ತ ವರ್ಷದ ಶಾಲಾ ವಿದ್ಯಾರ್ಥಿಗಳ ಪೈಕಿ ಶೇ.76.91ರಷ್ಟು, ಖಾಸಗಿ ಅಭ್ಯರ್ಥಿಗಳ ಪೈಕಿ ಶೇ.10.95, ಪುನರಾವರ್ತಿತ ಶಾಲಾ ವಿದ್ಯಾರ್ಥಿಗಳ ಪೈಕಿ ಶೇ.33.26ರಷ್ಟು ಉತ್ತೀರ್ಣರಾಗಿದ್ದಾರೆ. +ಈ ಬಾರಿಯು ಅನುದಾನರಹಿತ ಶಾಲೆಗಳೇ ಫಲಿತಾಂಶದಲ್ಲಿ ಮುಂದಿವೆ. ಶೇ.86.46ರಷ್ಟು ಫಲಿತಾಂಶ ಗಳಿಸಿವೆ. ಸರ್ಕಾರಿ ಶಾಲೆ ಶೇ.72.46ರಷ್ಟು ಫಲಿತಾಂಶ ಗಳಿಸಿವೆ ಅನುದಾನಿತ ಶಾಲೆಗಳಿಂತಲೂ(ಶೇ.72.22) ಒಂದು ಹೆಜ್ಜೆ ಮುಂದೇ ಇದೆ. +ಅಂಕಿತ ಬಸಪ್ಪ ರಾಜ್ಯಕ್ಕೆ ಪ್ರಥಮ :ಎಸ್‌‍ಎಸ್‌‍ಎಲ್‌ಸಿಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಅಂಕಿತ ಬಸಪ್ಪ ಕೊಣ್ಣೂರ ಅವರಿಗೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಅವರು ಅಭಿನಂದಿಸಿದ್ದಾರೆ. +ಮುಧೋಳ ತಾಲೂಕಿನ ಮೆಳ್ಳಿಗಿರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತ ಅವರು ರೈತ ಕುಟುಂಬದಲ್ಲಿ ಜನಸಿ ಉತ್ತಮವಾಗಿ ಅಭ್ಯಾಸ ಮಾಡುವ ಮೂಲಕ ಸಾಧನೆ ಮಾಡಿರುವುದು ಶ್ಲಾಘನೀಯ . ಶಾಲೆಗೆ, ಪೋಷಕರಿಗೆ, ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ವಿದ್ಯಾರ್ಥಿನಿಯ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದ್ದಾರೆ.ಜಿ.ಪಂ. ಸಿಇಓ ಶಶಿಧರ್‌ ಕುರೇರಾ, ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಅನೇಕ ಗಣ್ಯರು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ. + +ಜಿಲ್ಲಾವಾರು ಫಲಿತಾಂಶಉಡುಪಿ – 94ದಕ್ಷಿಣಕನ್ನಡ, -92.12ಶಿವಮೊಗ್ಗ – 98.67ಕೊಡುಗು- 88.67ಉತ್ತರಕನ್ನಡ- 86.54ಹಾಸನ- 86.28ಮೈಸೂರು- 85.05ಶಿರಸಿ- 84.64ಬೆಂಗಳೂರು ಗ್ರಾಮಾಂತರ – 83.67ಚಿಕ್ಕಮಗಳೂರು – 83.39ವಿಜಯಪುರ- 79.82ಬೆಂಗಳೂರು ದಕ್ಷಿಣ – 79ಬಾಗಲಕೋಟೆ- 77.92ಬೆಂಗಳೂರು ಉತ್ತರ 77.08ಹಾವೇರಿ – 75.85ತುಮಕೂರು- 75.16ಗದಗ-74.76ಚಿಕ್ಕಬಳ್ಳಾಪುರ- 73.51ಮಂಡ್ಯ- 73.59ಕೋಲಾರ- 73.57ಚಿತ್ರದುರ್ಗ -72.85ಧಾರವಾಡ -72.57ದಾವಣಗೆರೆ 77.48ಚಾಮರಾಜನಗರ 71.59ಚಿಕ್ಕೋಡಿ – 69.82ರಾಮನಗರ -69.53ವಿಜಯನಗರ -65.61ಬಳ್ಳಾರಿ- 64.90ಬೆಳಗಾವಿ -64.93ಮೂಡಗೆರೆ- 62.44ರಾಯಚೂರು – 61.2ಕೊಪ್ಪಳ – 61.16ಬೀದರ್‌- 57.52ಕಲಬುರುಗಿ – 53.04ಯಾದಗಿರಿ- 50.59 \ No newline at end of file diff --git a/eesanje/url_46_152_7.txt b/eesanje/url_46_152_7.txt new file mode 100644 index 0000000000000000000000000000000000000000..9b2dc5c476f978a4754451bf752fa43a258b01bf --- /dev/null +++ b/eesanje/url_46_152_7.txt @@ -0,0 +1,6 @@ +ಪರಪ್ಪನ ಅಗ್ರಹಾರ ಜೈಲಲ್ಲಿ ಊಟ-ನಿದ್ದೆಯಿಲ್ಲದೆ ರಾತ್ರಿ ಕಳೆದ ಹೆಚ್‌.ಡಿ.ರೇವಣ್ಣ +ಬೆಂಗಳೂರು,ಮೇ9-ಮಹಿಳಾ ಅಪಹರಣ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಮೊದಲ ದಿನ ಊಟ ಹಾಗೂ ನಿದ್ದೆಯಿಲ್ಲದೆ ಕಳೆದಿದ್ದಾರೆ. ಸೆಂಟ್ರಲ್‌ ಜೈಲಿನ ಕ್ವಾರಂಟೈನ್‌ ಸೆಲ್‌ನಲ್ಲಿ ಒಂದು ರಾತ್ರಿ ಕಾಲ ಕಳೆದಿರುವ ರೇವಣ್ಣ, ಕಳೆದ ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್‌, ಸಾಂಬಾರ್‌ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. +ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಶರಣಾಗಿದ್ದರು. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಏಕಾಂಗಿಯಾಗಿ ತಮಗೆ ಬಂದೊಗಿದ ಪರಿಸ್ಥಿತಿಯ ಬಗ್ಗೆ ಸಂಕಟ ಅನುಭಸುತ್ತಿದ್ದರು. ಸುಮಾರು ಹೊತ್ತಿನ ನಂತರ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದರು ಎಂದು ಜೈಲಿನ ಮೂಲಗಳು ತಿಳಿಸಿವೆ. +ರೇವಣ್ಣ ಆರೋಗ್ಯ ಸರಿ ಇಲ್ಲದ ಕಾರಣ ರಾತ್ರಿ ಜೈಲಾಧಿ ಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ. ನಂತರ ಎದ್ದು ಎಂದಿನಂತೆ ಜೈಲಿನಲ್ಲೇ ವಾಯೂ ವಿಹಾರ ನಡೆಸಿ ಪೇಪರ್‌ ಓದಿ ಪುಳಿಯೊಗರೆ ಸೇವಿಸಿದ್ದಾರೆ. +ಇದಕ್ಕೂ ಮುನ್ನ ನಿನ್ನೆ ಸಂಜೆ 04:30ರ ಸುಮಾರಿಗೆ ಮುಖ್ಯ ದ್ವಾರದ ಮೂಲಕ ರೇವಣ್ಣ ಜೈಲಿನ ಒಳಗೆ ಪ್ರವೇಶಿಸಿದ್ದರು. ಜೈಲಿನ ಒಳಗೆ ಹೋದ ರೇವಣ್ಣಗೆ ಮೊದಲು ಪ್ರಾಥಮಿಕ ಆರೋಗ್ಯ ತಪಾಸಣೆ ಮಾಡಲಾಯಿತು. ವಿಚಾರಣಾಧೀನ ಕೈದಿ ನಂಬರ್‌ 4567 ನಂಬರ್‌ ನೀಡಿ ವಿಐಪಿ ಸೆಲ್‌ನಲ್ಲಿ ಇರಿಸಲಾಯಿತು. +ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯೊಬ್ಬರ ಅಪಹರಣ ಪ್ರಕರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಹೆಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿತ್ತು. ಕಸ್ಟಡಿ ಅವಧಿ ಅಂತ್ಯ ಬಳಿಕ 17ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. \ No newline at end of file diff --git a/eesanje/url_46_152_8.txt b/eesanje/url_46_152_8.txt new file mode 100644 index 0000000000000000000000000000000000000000..f4c63f532db8f07b4bf5004306e0502c281fdddc --- /dev/null +++ b/eesanje/url_46_152_8.txt @@ -0,0 +1,5 @@ +ಹೆಚ್.ಡಿ.ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ +ಬೆಂಗಳೂರು,ಮೇ8-ಮಹಿಳೆಯೊಬ್ಬರ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಗರದ 17ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಸಿದೆ. +17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು, ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ. ರೇವಣ್ಣ ಅವರನ್ನು ಎಸ್‌ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಗಿದಿತ್ತು. ಕಳೆದ ಶನಿವಾರ ಎಸ್‌ಐಟಿಯಿಂದ ಬಂಧಿಸಲಾಗಿರುವ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಭಾನುವಾರ ಹಾಜರು ಪಡಿಸಲಾಗಿತ್ತು. +ಅಂದು ನ್ಯಾಯಾಧೀಶರು ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ನಾಲ್ಕು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಿದ್ದರು. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ರೇವಣ್ಣ ಅವರನ್ನು ಶನಿವಾರ ಸಂಜೆ ವಶಕ್ಕೆ ಪಡೆದು ನಂತರ ಬಂಧಿಸಿ ವಿಚಾರಣೆಗೆ ಒಳಪಡಿಸಿತ್ತು. +ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ:ಮಹಿಳೆಯೊಬ್ಬರ ಅಪಹರಣ ಆರೋಪದ ಪ್ರಕರಣದಲ್ಲಿ ಎಸ್‌ಐಟಿ ಬಂಧನಕ್ಕೆ ಒಳಗಾಗಿರು ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯವು ನಾಳೆಗೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಒಂದು ವಾರ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಲಾಗಿದೆ. \ No newline at end of file diff --git a/eesanje/url_46_152_9.txt b/eesanje/url_46_152_9.txt new file mode 100644 index 0000000000000000000000000000000000000000..02ab96f7b460c6ae5b7aa2aaf3407fba5aeb2864 --- /dev/null +++ b/eesanje/url_46_152_9.txt @@ -0,0 +1,8 @@ +ಪೆನ್‌ಡ್ರೈವ್‌ ಪ್ರಕರಣದ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ +ಬೆಂಗಳೂರು,ಮೇ8-ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಎಸ್‌ಪಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಮಹಿಳಾ ವಿಭಾಗ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದೆ. +ಸಂತ್ರಸ್ತ ಮಹಿಳೆಯರಿಗೆ ಹಾಗೂ ಕುಟುಂಬದವರಿಗೆ ನ್ಯಾಯ ಒದಗಿಸಲು ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ರಾಜಕೀಯ ಮುಖಂಡರು, ಕಾರ್ಯಕರ್ತರು, ಸಮಾಜಘಾತುಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಜೆಡಿಎಸ್‌ ಮಹಿಳಾ ವಿಭಾಗ ಒತ್ತಾಯಿಸಿದೆ. +ಜೆಡಿಎಸ್‌ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷೆ ರಶ್ಮಿ ರಾಮೇಗೌಡ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ವಿಫಲವಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.ಮಹಿಳಾ ಆಯೋಗದ ಪತ್ರವನ್ನು ಆಧರಿಸಿ ಸರ್ಕಾರ ಹಾಸನ ವಿಡಿಯೋ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ರಚಿಸಿರುವುದನ್ನು ಸ್ವಾಗತಿಸುವುದಾಗಿ ತಿಳಿಸಲಾಗಿದೆ. +ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾವಿರಾರು ಪೆನ್‌ಡ್ರೈವ್‌ ಮುಖಾಂತರ ರಾಜ್ಯಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ಉಪಮುಖ್ಯಮಂತ್ರಿಗಳ ಕೈವಾಡವಿದೆ ಎಂದು ವಕೀಲ ದೇವೇರಾಜೇಗೌಡ ಆರೋಪಿಸಿದ್ದಾರೆ. +ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಸೆಕ್ಷನ್‌ 66-ಇ , 67 ಮತ್ತು 67ಎ ಹಾಗೂ ಕಾಯ್ದೆ 228(ಎ) ಐಪಿಎಸ್‌ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್‌ ಸಂದೇಶಗಳನ್ನಾಗಿ ಅಥವಾ ಚಿತ್ರೀಕರಣವನ್ನಾಗಲಿ ಸಂಗ್ರಹಿಸಿಡುವುದು, ಬಿತ್ತರಿಸುವುದು, ಸಂತ್ರಸ್ತೆಯರ ಹಾಗೂ ನ್ಯಾಯಾಲಯದ ಅನುಮತಿ ಇಲ್ಲದೆ ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. +ಹಾಸನದಾದ್ಯಂತ ಸಾಮಾಜಿಕ ಜಾಲತಾಣ ಮತ್ತು ಪೆನ್‌ಡ್ರೈವ್‌ ಮೂಲಕ ವ್ಯಾಪಕವಾಗಿ ಹರಡಿರುವ ಸಂತ್ರಸ್ತೆಯರ ಅಶ್ಲೀಲ ಚಿತ್ರಗಳನ್ನು ತಡೆಹಿಡಿದು, ಹಂಚಿಕೆ ಮಾಡಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಹಾಸನ ಜಿಲ್ಲಾ ಎಸ್‌ಪಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿಲ್ಲ ಎಂದು ಆರೋಪಿಸಿದೆ. +ಸಂಪುಟದ ಪ್ರಭಾವಿ ಸಚಿವರ ವಿರುದ್ದವೇ ವಿಡಿಯೋ ವಿತರಣೆ ಆರೋಪ ಕೇಳಿಬಂದಿರುವುದರಿಂದ ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ವಿಡಿಯೋ ಹರಿದಾಡದ್ದರಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಯಾತನೆಯನ್ನು ಅನುಭವಿಸುತ್ತಿದ್ದಾರೆ. ಮಹಿಳೆಯರ ಗುರುತು ಬಹಿರಂಗವಾಗುವಂತೆ ಮಾಡಿರುವುದು ಅಕ್ಷಮ್ಯವಾಗಿದೆ ಎಂದು ಮನವಿ ಪತ್ರದಲ್ಲಿ ಹೇಳಲಾಗಿದೆ. \ No newline at end of file diff --git a/eesanje/url_46_153_1.txt b/eesanje/url_46_153_1.txt new file mode 100644 index 0000000000000000000000000000000000000000..652efe8d22c7803a29aec84e14e5588e993db1c3 --- /dev/null +++ b/eesanje/url_46_153_1.txt @@ -0,0 +1,4 @@ +ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ +ಬೆಂಗಳೂರು,ಮೇ8-ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚೇತರಿಕೆ ಕಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇನ್ನು ನಾಲ್ಕು ದಿನ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. ಲಘು ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 11ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. +ಮೇ 12ರ ನಂತರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸುತ್ತಮುತ್ತ ಚದುರಿದಂತೆ ಇನ್ನು ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. +ನಿನ್ನೆ ತುಮಕೂರು ಜಿಲ್ಲೆಯ ಚಿಕ್ಕನಹಳ್ಳಿಯಲ್ಲಿ 4 ಸೆ.ಮೀ, ಪರಶುರಾಮಪುರ, ಹಾರಂಗಿಯಲ್ಲಿ 3 ಸೆ.ಮೀ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲೂ ಮಳೆಯಾಗಿದೆ. ಹವಾಮಾನ ಇಲಾಖೆಯ ಮೂನ್ಸೂಚನೆ ಪ್ರಕಾರ ಸಂಜೆ ಹಾಗೂ ರಾತ್ರಿ ವೇಳೆ ಮಿಂಚು ಗುಡುಗಿನ ವಾತಾವರಣ ಉಂಟಾಗಿ ಕೆಲವೆಡೆ ಮಳೆಯಾಗಬಹುದು. ಇನ್ನು ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಹಾಗೂ ಕೆಲವೆಡೆ ಗಾಳಿ, ಮಳೆಯೂ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. \ No newline at end of file diff --git a/eesanje/url_46_153_10.txt b/eesanje/url_46_153_10.txt new file mode 100644 index 0000000000000000000000000000000000000000..2bc6921a4bb27cb7bafb0d500a7a25f320cba428 --- /dev/null +++ b/eesanje/url_46_153_10.txt @@ -0,0 +1,12 @@ +ವಿಧಾನಪರಿಷತ್‌ ಚುನಾವಣಾ ಮೇಲೂ ಪೆಣ್ ಡ್ರೈವ್ ಪ್ರಭಾವ ಬೀರುವ ಸಾಧ್ಯತೆ +ಬೆಂಗಳೂರು,ಮೇ8– ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಭಾಗಿಯಾಗಿರುವ ಲೈಂಗಿಕ ಹಗರಣ ಪ್ರಕರಣವು, ಜೂನ್‌ 3ರಂದು ವಿಧಾನಪರಿಷತ್‌ನ 6 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. +ಪ್ರಸ್ತುತ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಒಟ್ಟಾಗಿ ಎದುರಿಸುತ್ತಿವೆ. ಪರಿಷತ್ತು, ಜಿಪಂ/ ತಾಪಂ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್‌ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ. +ಮೂಲಗಳ ಪ್ರಕಾರ, ಈ ವಿಷಯವು ನಿರಂತರವಾಗಿ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿದೆ ಮತ್ತು ಸಾರ್ವಜನಿಕ ಅಭಿಪ್ರಾಯವೂ ಪ್ರಜ್ವಲ್‌ ವಿರುದ್ಧವಾಗಿದೆ. ಹೀಗಾಗಿ ಕೆಲವು ಬಿಜೆಪಿ ನಾಯಕರು ಮೈತ್ರಿ ಬಗ್ಗೆ ಮರುಚಿಂತನೆ ನಡೆಸಬೇಕೆಂದು ವರಿಷ್ಠರು ಬಯಸುತ್ತಿದ್ದಾರೆ. +ಬಿಜೆಪಿಯ ಉನ್ನತ ನಾಯಕತ್ವವು ಮೈತ್ರಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ, ಅದರ ನಡುವೆಯೇ ಈ ಭಿನ್ನರಾಗಗಳು ಕೇಳಿ ಬರುತ್ತಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಅವರನ್ನು ಗುರಿಯಾಗಿಸಲು ಲೈಂಗಿಕ ಹಗರಣವನ್ನು ಬಳಸುತ್ತಿದ್ದಾರೆ. +ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಜ್ವಲ್‌ ಪರ ಪ್ರಚಾರ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇರವಾಗಿ ವಾಗ್ದಾಳಿ ನಡೆಸಿದ್ದರು. +ರಾಹುಲ್‌ ಅವರು ಪ್ರಜ್ವಲ್‌ ಅವರನ್ನು ಮಾಸ್‌ ರೇಪಿಸ್ಟ್ ಎಂದು ಕರೆದರು ಮತ್ತು ಈ ವಿಷಯದ ಬಗ್ಗೆ ಮೌನವಾಗಿರುವುದಕ್ಕೆ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಜ್ವಲ್‌ ದೇಶದಿಂದ ಪಲಾಯನ ಮಾಡಲು ಕೇಂದ್ರ ಸಹಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. +ಆದಾಗ್ಯೂ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದರು, 2019ರಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಾಗ ಪ್ರಜ್ವಲ್‌ ಲೋಕಸಭೆಗೆ ಚುನಾಯಿತರಾಗಿದ್ದರು ಎಂದು ಸಮರ್ಥಿಸಿಕೊಂಡರು. ಪ್ರಜ್ವಲ್‌ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಒತ್ತಾಯಿಸಿದರು. +ಆದರೆ, ಈ ಹಗರಣ ಜೆಡಿಎಸ್‌-ಬಿಜೆಪಿ ಮೈತ್ರಿಯ ಮೇಲೆ ಪರಿಣಾಮ ಬೀರುವುದು ಬಹುತೇಕ ಖಚಿತವಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕೇಸರಿ ಪಕ್ಷವು ಪರಿಷತ್‌ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿರುವುದರಿಂದ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಪಕ್ಷದವರೇ ಹೇಳುತ್ತಿದ್ದಾರೆ. +ಬಹುತೇಕ ಬಿಜೆಪಿ ರಾಜ್ಯ ನಾಯಕರು ಲೈಂಗಿಕ ಹಗರಣದಿಂದ ಅಸಮಾಧಾನಗೊಂಡಿದ್ದು, ಮೈತ್ರಿ ಮುಂದುವರಿಸಲು ಅಷ್ಟೊಂದು ಉತ್ಸುಕರಾಗಿಲ್ಲ ಎಂದು ಬಲ್ಲಮೂಲಗಳು ಬಹಿರಂಗಪಡಿಸಿವೆ. +ಬಿಜೆಪಿ ನಾಯಕರ ಒಂದು ವಿಭಾಗವು ಹೈಕಮಾಂಡ್‌ ಬಲವಂತದ ನಂತರ ಲೋಕಸಭೆ ಚುನಾವಣೆಗೆ ಮೈತ್ರಿಯನ್ನು ಒಪ್ಪಿಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.ಆಗಿದ್ದು ಆಯಿತು ಎಂದು ಪಕ್ಷದ ವರಿಷ್ಠರು ಹೇಳಿ ಮೈತ್ರಿಯನ್ನು ಕೊನೆಗೊಳಿಸಿದರೆ ಅಥವಾ ಲೈಂಗಿಕ ಹಗರಣದಿಂದ ಪಕ್ಷಕ್ಕೆ ಉಂಟಾದ ಹಾನಿಯನ್ನು ಕಡಿಮೆ ಮಾಡಲು ಪರಿಷತ್ತಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೆ ಆಶ್ಚರ್ಯವಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. +ನಮ್ಮ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಉನ್ನತ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಇನ್ನುಳಿದ ನಾಲ್ಕು ಹಂತದ ಲೋಕಸಭಾ ಚುನಾವಣೆಗಳಲ್ಲಿ ಅಥವಾ ಮುಂದಿನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷವನ್ನು ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಬಣಗಳು ಗುರಿಯಾಗಿಸಿಕೊಳ್ಳದಂತೆ ನಿರ್ಧಾರ ತೆಗೆದುಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದು ಬಿಜೆಪಿಯ ಪ್ರಮುಖ ನಾಯಕರೊಬ್ಬರು ಹೇಳಿದ್ದಾರೆ. \ No newline at end of file diff --git a/eesanje/url_46_153_11.txt b/eesanje/url_46_153_11.txt new file mode 100644 index 0000000000000000000000000000000000000000..a4e16abe7d81856d024e8c2135b300f130edbed4 --- /dev/null +++ b/eesanje/url_46_153_11.txt @@ -0,0 +1,6 @@ +ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ ಎಂದ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರತ್ಯುತ್ತರ +ಬೆಂಗಳೂರು, ಮೇ 8-ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾರ್ತಿಕ್‌ ಗೌಡ ವಿದೇಶಕ್ಕೆ ಹೋಗಿದ್ದಾನೆ ಎಂದು ಮಾಜಿಮುಖ್ಯಮಂತ್ರಿ ಹಾಗೂ ಜೆಡಿಎಸ್‌‍ನಾಯ ಹೆಚ್‌.ಡಿ.ಕುಮಾರಸ್ವಾಮಿ ಬಿಂಬಿಸಿದ್ದರು. ಆದರೆ ಆತ ರಾಜ್ಯದಲ್ಲೇ ಇದ್ದು ಮಾಧ್ಯಮಗಳ ಮುಂದೆ ಹಾಜರಾಗಿದ್ದಾನೆ ಎಂದು ಕಾಂಗ್ರೆಸ್‌‍ ತಿಳಿಸಿದೆ. +ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ರದರ್‌ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಲಾಗಿದೆ. +ಬ್ರದರ್ ಸ್ವಾಮಿಗಳು ಹಗ್ಗವನ್ನು ತೋರಿಸಿ ಹಾವು ಎಂದು ನಂಬಿಸಲು ಸಾಹಸ ಮಾಡುತ್ತಿದ್ದಾರೆ.ಡ್ರೈವರ್ ಕಾರ್ತಿಕ್ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ, ಯಾರೋ ಕಳಿಸಿದ್ದಾರೆ ಎಂದು ಬಾಯಿ ಬಡಿದುಕೊಂಡಿದ್ದರು.ಆದರೆ ಕಾರ್ತಿಕ್ ಗೌಡ ಬಳಿ ಪಾರ್ಸ್ಪೋರ್ಟ್ ಇಲ್ಲವಂತೆ ಹಾಗೂ ಕಾರ್ತಿಕ್ ಗೌಡ ರಾಜ್ಯದಲ್ಲೇ ಇದ್ದು ಚಾನಲ್ ಗಳಲ್ಲಿ ಕಾಣಿಸಿಕೊಂಡಿದ್ದಾರೆ.ಈ… +ಡ್ರೈವರ್‌ ಕಾರ್ತಿಕ್‌ ಗೌಡ ಮಲೇಷ್ಯಾಕ್ಕೆ ಹೋಗಿದ್ದಾನೆ, ಯಾರೋ ಕಳಿಸಿದ್ದಾರೆ ಎಂದು ಕುಮಾರಸ್ವಾಮಿ ಬಾಯಿ ಬಡಿದುಕೊಂಡಿದ್ದರು. ಆದರೆ ಕಾರ್ತಿಕ್‌ ಗೌಡ ಬಳಿ ಪಾಸ್‌‍ರ್ಪೋರ್ಟ್‌ ಇಲ್ಲವಂತೆ ಹಾಗೂ ಕಾರ್ತಿಕ್‌ ಗೌಡ ರಾಜ್ಯದಲ್ಲೇ ಇದ್ದು ಚಾನಲ್‌ ಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್‌‍ ಸ್ಪಷ್ಟ ಪಡಿಸಿದೆ. +ಬ್ರದರ್‌ ಸ್ವಾಮಿಯ ಸುಳ್ಳಿನ ಫ್ಯಾಕ್ಟರಿ ಜೊತೆಗೆ ಬಿಜೆಪಿಯ ಫೇಕ್‌ ಫ್ಯಾಕರಿಯೂ ಸೇರಿ ಸುಳ್ಳಿನ ಸಾಮ್ರಾಜ್ಯ ಕಟ್ಟಲು ಹೊರಟಿದ್ದಾರೆ ಎಂದು ಕಾಂಗ್ರೆಸ್‌‍ ವಾಗ್ದಾಳಿ ನಡೆಸಿದೆ. \ No newline at end of file diff --git a/eesanje/url_46_153_12.txt b/eesanje/url_46_153_12.txt new file mode 100644 index 0000000000000000000000000000000000000000..b4ba1b1f603ad873a9643507aecf0eb15289b558 --- /dev/null +++ b/eesanje/url_46_153_12.txt @@ -0,0 +1,9 @@ +ವಿಧಾನಪರಿಷತ್‌ ಚುನಾವಣೆ : 6 ಸ್ಥಾನಗಳಿಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ +ಬೆಂಗಳೂರು,ಮೇ8-ಪ್ರಸಕ್ತ ಲೋಕಸಭೆ ಚುನಾವಣೆಯ ಎರಡು ಹಂತದ ಮತದಾನ ರಾಜ್ಯದಲ್ಲಿ ಪೂರ್ಣಗೊಂಡ ಬೆನ್ನಲ್ಲೇ ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ಮತ್ತೊಂದು ಚುನಾವಣೆ ಎದುರಾಗಿದೆ. ವಿಧಾನಪರಿಷತ್‌ನ ಆರು ಸದಸ್ಯ ಸ್ಥಾನಗಳಿಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು, ನಾಳೆಯಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. +ಆಯನೂರು ಮಂಜುನಾಥ್‌ ಮತ್ತು ಮರಿತಿಬ್ಬೇಗೌಡ ಅವರ ರಾಜೀನಾಮೆಯಿಂದ ತೆರವಾಗಿರುವ ಎರಡು ಸ್ಥಾನ ಹಾಗೂ ಡಾ.ಚಂದ್ರಶೇಖರ ಬಿ.ಪಾಟೀಲ, ಎ.ದೇವೇಗೌಡ, ಡಾ.ವೈ.ಎ.ನಾರಾಯಣಸ್ವಾಮಿ, ಎಸ್‌.ಎಲ್‌.ಬೋಜೇಗೌಡ ಅವರು ಜೂ.21ರಂದು ನಿವೃತ್ತಿ ಹೊಂದುವುದರಿಂದ ತೆರವಾಗುವ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. +ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಭಾರತದ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. +ನಾಳೆಯಿಂದ ಮೇ 16ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮೇ 20ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ. +ವಿಧಾನಪರಿಷತ್‌ನ ಚುನಾವಣಾ ವೇಳಾಪಟ್ಟಿ ಮೇ 2ರಂದು ಪ್ರಕಟವಾಗಿದ್ದು, ಅಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈಶಾನ್ಯ, ನೈರುತ್ಯ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ 3,24,502 ಮತದಾರರು ಇದ್ದು, 1,81,391 ಪುರುಷರು 1,43,075 ಮಹಿಳೆಯರು ಹಾಗೂ 36 ಇತರೆ ಮತದಾರರು ಇದ್ದಾರೆ. +ಆಗ್ನೇಯ, ನೈರುತ್ಯ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ 61,273 ಮತದಾರರು ಇದ್ದು ಈ ಪೈಕಿ 33,977 ಪುರುಷರು 27,294 ಮಹಿಳೆ ಹಾಗೂ ಇತರೆ 2 ಮತದಾರರು ಇದ್ದಾರೆ.ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಒಟ್ಟು 1,00,100 ಪದವೀಧರ ಮತದಾರರು ಇದ್ದು ಇದರಲ್ಲಿ 48,236 ಪುರುಷರು, 51,852 ಮಹಿಳೆಯರು ಹಾಗೂ ಇತರೆ 12 ಮತದಾರರು ಇದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 74,218 ಮತದಾರರು ಇದ್ದು, ಇದರಲ್ಲಿ 38,051 ಪುರುಷರು, 36,162 ಮಹಿಳೆಯರು ಹಾಗೂ 5 ಇತರೆ ಮತದಾರರು ಇದ್ದಾರೆ. +ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 1,50,184 ಮತದಾರರು ಇದ್ದು, ಇದರಲ್ಲಿ 95,104 ಪುರುಷರು, 55,061 ಮಹಿಳೆಯರು ಹಾಗೂ 19 ಇತರ ಮತದಾರರು ಇದ್ದಾರೆ.ಹಾಗೆಯೇ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 23,514 ಮತದಾರರು ಇದ್ದು, ಇದರಲ್ಲಿ 14,679 ಪುರುಷರು, 8,835 ಮಹಿಳಾ ಮತದಾರರು ಇದ್ದಾರೆ. +ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 19,380 ಮತದಾರರು ಇದ್ದು 8,943 ಪುರುಷರು ಹಾಗೂ 10,437 ಮಹಿಳಾ ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ.ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 18,379 ಮತದಾರರು ಇದ್ದು 10,335 ಪುರುಷರು, 8,022 ಮಹಿಳೆಯರು ಹಾಗೂ ಇತರೆ ಇಬ್ಬರು ಮತದಾರರು ಇದ್ದಾರೆ. \ No newline at end of file diff --git a/eesanje/url_46_153_2.txt b/eesanje/url_46_153_2.txt new file mode 100644 index 0000000000000000000000000000000000000000..3c6a3cf63d5b9dc39476d0ee56ee5cad330546eb --- /dev/null +++ b/eesanje/url_46_153_2.txt @@ -0,0 +1,11 @@ +ರಾಜ್ಯದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸೋಲು-ಗೆಲುವಿನ ಲೆಕ್ಕಾಚಾರ ಶುರು, ಭರ್ಜರಿ ಬೆಟ್ಟಿಂಗ್ +ಬೆಂಗಳೂರು,ಮೇ8-ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಮುಗಿದ ಬೆನ್ನಲ್ಲೇ , ರಾಜ್ಯಾದ್ಯಂತ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಹೋಟೆಲ್‌, ಅಂಗಡಿ ಮುಂಗಟ್ಟುಗಳಲ್ಲಿ, ಜಮೀನಿನಲ್ಲಿ ಕೆಲಸ ಮಾಡುವ ರೈತರು, ಕಾರ್ಮಿಕರು, ಮಹಿಳೆಯರು ಸಹ ಚುನಾವಣೆಯ ಸೋಲು, ಗೆಲುವಿನ ಬಗ್ಗೆಯೇ ಚರ್ಚೆ ಮಾಡುತ್ತಿದ್ದಾರೆ. ಗೆಲುವು, ಸೋಲಿಗೆ ಯಾವ ವಿಷಯಗಳು ಕಾರಣವಾಗುತ್ತವೆ ಎಂಬ ಚರ್ಚೆ ಸರ್ವೇ ಸಾಮಾನ್ಯವಾಗಿವೆ. +ಯಾವುದೇ ಚುನಾವಣೆಗಳಲ್ಲೂ ಪ್ರಮುಖವಾಗಿ ಜಾತಿ ವಿಚಾರ, ಅಭ್ಯರ್ಥಿಗಳ ಜನಪರ ಕೆಲಸಗಳು, ಸಂಘಟನೆ ಹಾಗೂ ವ್ಯಕ್ತಿಗಳ ಆಧಾರ ಮೇಲೆ ಚುನಾವಣೆ ಲೆಕ್ಕಾಚಾರಗಳು ನಡೆಯುತ್ತವೆ. ಪ್ರಮುಖವಾಗಿ ಜಾತಿ ಲೆಕ್ಕಾಚಾರದ ಆಧಾರದ ಮೇಲೆಯೇ ಸೋಲು-ಗೆಲುವಿನ ಲೆಕ್ಕಾಚಾರಗಳು ನಡೆಯಲಾರಂಭಿಸಿವೆ. +ಮತದಾನ ಮುಗಿದ ಕೂಡಲೇ, ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್‌(ಇಂಡಿಯಾ) ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ(ಎನ್‌ ಡಿಎ) ಅಭ್ಯರ್ಥಿಗಳು, ಇತರೆ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಈಗಾಗಲೇ ಮತಗಟ್ಟೆವಾರು ಆಗಿರುವ ಮತದಾನ ವಿವರಗಳನ್ನು ಕೈಯಲ್ಲಿ ಹಿಡಿದು ತಮಗೆ ಬರಬಹುದಾದ ಮತಗಳ ಮತ್ತು ತಮ್ಮಿಂದ ಯಾವ ಆಭ್ಯರ್ಥಿ ಸೋಲಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. +ಬೆಟ್ಟಿಂಗ್‌ ಜೋರು:ಲೋಕಸಭಾ ಚುನಾವಣೆಯ ಸೋಲು, ಗೆಲುವಿನ ಚರ್ಚೆ ಒಂದೆಡೆಯಾದರೆ, ಮತ್ತೊಂದೆಡೆ ಬೆಟ್ಟಿಂಗ್‌ ಸಹ ಜೋರಾಗಿಯೇ ನಡೆಯುತ್ತಿದೆ. ಕೆಲವಡೆ ಎನ್‌ಡಿಎ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ನೀಡಿದರೆ ಕೆಲವೆಡೆ ಇಂಡಿಯಾ ಅಭ್ಯರ್ಥಿ ಪರ ದುಪ್ಪಟ್ಟು ಬಾಜಿ ನೀಡುತ್ತಿದ್ದಾರೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಸಾವಿರ, ಲಕ್ಷ ರೂ.ಗಳವರೆಗೂ ಬೆಟ್ಟಿಂಗ್‌ ಕಟ್ಟುತ್ತಿದ್ದಾರೆ. ಸೈಟ್‌ಗಳು, ಮನೆಗಳನ್ನು ಪಣಕ್ಕಿಟ್ಟಿರುವ ಉದಾಹರಣೆಗಳೂ ಇವೆ. ಗ್ರಾಮಾಂತರ ಪ್ರದೇಶಗಳಲ್ಲಿ ಜಮೀನು, ಟ್ರ್ಯಾಕ್ಟರ್‌, ಕಾರು, ದನ ಕರುಗಳು, ಎಮ್ಮೆ, ಕುರಿ-ಮೇಕೆ, ಕೋಳಿಗಳನ್ನು ಪಣಕ್ಕಿಟ್ಟಿದ್ದಾರೆ. ಹಣ, ಬೈಕ್‌, ಹಸುಗಳನ್ನು ಸಹ ಬೆಟ್ಟಿಂಗ್‌ ಕಟ್ಟಲು ಮುಂದಾಗುತ್ತಿದ್ದಾರೆ. +ಕ್ರಿಕೆಟ್‌ ಐಪಿಎಲ್‌ ಬೆಟ್ಟಿಂಗ್‌ನಂತೆಯೇ ಚುನಾವಣೆಯ ಬೆಟ್ಟಿಂಗ್‌ ಕಾವು ಕೂಡ ಹೆಚ್ಚಿರುವುದಂತೂ ಸುಳ್ಳಲ್ಲ. ಬೆಟ್ಟಿಂಗ್‌ ಹಾವಳಿ ತಡೆಗಟ್ಟಲು ಪೊಲೀಸ್‌ ಇಲಾಖೆಯೂ ಕಣ್ಣಿಟ್ಟಿದೆ. ಆದರೂ ಕದ್ದುಮುಚ್ಚಿ ಬೆಟ್ಟಿಂಗ್‌ ನಡೆಯುತ್ತಿದೆ. ದಲಿತರು, ಲಿಂಗಾಯತರು, ಕುರುಬ, ಮುಸ್ಲಿಂ ಸೇರಿದಂತೆ ಇತರೆ ಹಿಂದುಳಿದ ಸಮುದಾಯಗಳಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಮತವೇ ಕ್ಷೇತ್ರದಲ್ಲಿ ನಿರ್ಣಾಯಕ. ಒಕ್ಕಲಿಗ ಸಮುದಾಯದ ಮತಗಳು ಯಾರ ಕಡೆ ಹೋಗಿರುತ್ತವೆಯೋ ಅಂತಹ ಅಭ್ಯರ್ಥಿಗಳ ಗೆಲುವು ಸನಿಹವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. +ಮತದಾನದ ಪ್ರಮಾಣ, ಮತಗಟ್ಟೆ ಸಮೀಪ ಮತದಾರರು ನೀಡಿದ ಅಭಿಪ್ರಾಯ, ರಾಜಕೀಯ ಪಕ್ಷಗಳ ಕಾರ್ಯಕರ್ತರ ವರದಿ ಆಧರಿಸಿ ವಿಶ್ಲೇಷಣೆಗಳು ನಡೆಯುತ್ತಿವೆ.ಎಲ್ಲಾ ಪಕ್ಷಗಳ ನಾಯಕರಲ್ಲಿ ಮಂದಹಾಸ ಮೂಡಿದ್ದು, ಗೆಲುವು ತಮ್ಮದೇ ಎಂಬ ಬಲವಾದ ನಂಬಿಕೆಯಲ್ಲಿದ್ದಾರೆ. ಮತ ಎಣಿಕೆ ಜೂನ್‌ 4ರಂದು ನಡೆಯಲಿದ್ದು, ತಿಂಗಳಿಗೂ ಹೆಚ್ಚು ಕಾಲ ಕಾಯುವುದು ಮತದಾರರಿಗೂ ಕಷ್ಟವಾಗಿದೆ. +ಕಾಂಗ್ರೆಸ್‌ಗೆ ಗ್ಯಾರಂಟಿ ನಂಬಿಕೆ:ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ ಮತಯಾಚನೆ ಮಾಡಿತ್ತು. ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ, ತಾರಾ ಪ್ರಚಾರಕಿ ಪ್ರಿಯಾಂಕಾ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿಗಳನ್ನು ಬಲವಾಗಿ ಪ್ರತಿಪಾದಿಸಿದ್ದರು. ಈ ಗ್ಯಾರಂಟಿಗಳು ಎಷ್ಟರ ಮಟ್ಟಿಗೆ ಮತಗಳಾಗಿ ಪರಿವರ್ತನೆಯಾಗಿವೆ ಎಂಬ ಲೆಕ್ಕಾಚಾರದಲ್ಲಿ ಕೈ ಪಡೆ ಮುಳುಗಿದೆ. +ಗೃಹಲಕ್ಷ್ಮಿ ಯೋಜನೆಯ 2,000 ನಗದು ಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ವಾರದ ಹಿಂದೆಯಷ್ಟೇ ತಲುಪಿದೆ. ಕಳೆದ ಎರಡು ತಿಂಗಳ ನೆರವು ಒಮ್ಮೆಗೆ ಬ್ಯಾಂಕ್‌ ಖಾತೆಗೆ ಜಮಾ ಆಗಿದ್ದರಿಂದ ಕಾಂಗ್ರೆಸ್‌ ಪಾಳೆಯ ಪುಳಕಗೊಂಡಿತ್ತು. ಮತಗಟ್ಟೆ ಎದುರು ಸಾಲುಗಟ್ಟಿ ನಿಂತಿದ್ದ ಮಹಿಳಾ ಮತದಾರರು ಕೈಬಿಟ್ಟಿಲ್ಲ ಎಂಬುದು ಕಾಂಗ್ರೆಸ್‌ ನಾಯಕರ ನಂಬಿಕೆ. +ಬಿಜೆಪಿಗೆ ಮೋದಿ ನಾಮಬಲ:ಪ್ರಧಾನಿ ನರೇಂದ್ರಮೋದಿ ಅಲೆ ಮತದಾರರನ್ನು ಪ್ರಭಾವಿಸಿದೆ ಎಂಬುದು ಬಿಜೆಪಿಯ ಬಲವಾದ ನಂಬಿಕೆ. ದೇಶಕ್ಕಾಗಿ ಮತದಾರರು ಹಕ್ಕು ಚಲಾಯಿಸಿದ್ದಾರೆ ಎಂದು ಕೇಸರಿ ಪಡೆ ವಿಶ್ಲೇಷಣೆ ಮಾಡುತ್ತಿದೆ. ಕ್ಷೇತ್ರದ ಅಭ್ಯರ್ಥಿ ಕೂಡ ಮೋದಿ ನಾಮ ಜಪ ಮಾಡಿ ಮತಯಾಚಿಸಿದ್ದರು. ಯುವ ಸಮೂಹ, ರೈತರು, ಪುರುಷರು, ಹೊಸ ಮತದಾರರು ಬೆಂಬಲಿಸಿದ್ದಾರೆ ಎಂದೇ ಬಿಜೆಪಿ ಪ್ರತಿಪಾದಿಸುತ್ತಿದೆ. +ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಇತ್ತೀಚಿಗೆ ಪಾವತಿಯಾಗಿದೆ. ಜಿಲ್ಲೆಯ ಸಾವಿರಾರು ರೈತ ಕುಟುಂಬಗಳಿಗೆ ಸಿಕ್ಕಿರುವ ವಿಮೆ ಪರಿಹಾರವು ಮತಗಳಾಗಿ ಪರಿವರ್ತನೆಯಾಗಿವೆ ಎಂಬುದು ಬಿಜೆಪಿ ವಾದ. ಬೆಳೆ ವಿಮೆ ಪಡೆದ ರೈತ ಕುಟುಂಬ, ಕಿಸಾನ್‌ ಸಮ್ಮಾನ್‌ ಯೋಜನೆಯ ಫಲಾನುಭವಿಗಳು ಕಮಲ ಅರಳುವಂತೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈ ಲೆಕ್ಕಾಚಾರಗಳಲ್ಲಿ ಯಾವುದು ಸರಿ ಎಂಬುದು ಮತ ಎಣಿಕೆಯ ಬಳಿಕವಷ್ಟೇ ಖಚಿತವಾಗಲಿದೆ. \ No newline at end of file diff --git a/eesanje/url_46_153_3.txt b/eesanje/url_46_153_3.txt new file mode 100644 index 0000000000000000000000000000000000000000..7289b8a15575d249900c7514b5f0459d2eeb797a --- /dev/null +++ b/eesanje/url_46_153_3.txt @@ -0,0 +1,7 @@ +ಪೆನ್‌ಡ್ರೈವ್‌ ಹಂಚಿದವರನ್ನು ಏಕೆ ತನಿಖೆಗೆ ಒಳಪಡಿಸಿಲ್ಲ..? : ಗೃಹಸಚಿವರಿಗೆ ಪ್ರಶ್ನೆ +ಬೆಂಗಳೂರು,ಮೇ8-ಹಾಸನ ಲೋಕಸಭಾ ಕ್ಷೇತ್ರದಲ್ಲಿ ಅಶ್ಲೀಲ ವಿಡಿಯೋವಿದ್ದ ಪೆನ್‌ಡ್ರೈವ್‌ ಹಂಚಿಕೆ ಮಾಡಿರುವ ಆರೋಪಿಗಳನ್ನು ಏಕೆ ತನಿಖೆಗೆ ಒಳಪಡಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಪ್ರಶ್ನಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ಲೀಲ ವಿಡಿಯೋ ಸೋರಿಕೆ ಮಾಡಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ. ಎಸ್‌ಐಟಿ ತನಿಖೆಯ ಗುರಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಮಾತ್ರ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯ ಮಹಿಳಾ ಆಯೋಗ ಬರೆದಿದ್ದ ಪತ್ರದಲ್ಲಿ ವಿಡಿಯೋ ಬಹಿರಂಗಪಡಿಸಿದವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದಿದ್ದರು. ಇದುವರೆಗೂ ಏನೂ ಮಾಡಿಲ್ಲ ಏಕೆ? ಗೃಹ ಸಚಿವರು ಏನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಪ್ರಜ್ವಲ್‌ನ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಖಾಸಗಿ ಚಾನಲ್‌ನಲ್ಲಿ ಕುಳಿತು ಟ್ರೈನಪ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಂಡೆ ರಕ್ಷಣೆ ಮಾಡಬಹುದೆಂದು ಕಾರ್ತಿಕ್‌ ಅಂದುಕೊಂಡಿರಬಹುದು. ಕಾರ್ತಿಕ್‌ ಗಿರಿನಗರದಲ್ಲೇ ಇದ್ದಾರಂತೆ ಆದರೂ ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂದರು. +ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್‌, ಕಾರ್ತಿಕ್‌, ಶ್ರೇಯಸ್‌ ಅವರಿಗೆ ನೋಟಿಸ್‌ ಕೊಟ್ಟಿಲ್ಲ. ರೇವಣ್ಣ ಅವರಿಗೆ ಮಾತ್ರ ಕೊಟ್ಟಿದ್ದಾರೆ ಎಂದ ಅವರು, ಡಿಸಿಎಂ ಶಿವಕುಮಾರ್‌ ಅವರು ವಕೀಲ ದೇವರಾಜೇಗೌಡ ಅವರ ಬಳಿ ಏಕೆ ಮಾತನಾಡಿದರು, ಅವರಲ್ಲಿ ಏನು ಕೆಲಸವಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿ, ಎಸ್‌ಐಟಿ ಅಧಿ ಕಾರಿಗಳಿಗೆ ವಿಶ್ವಾಸರ್ಹತೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದರು. +ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ನಿವೃತ್ತ ಐಪಿಎಸ್‌ ಅಧಿ ಕಾರಿ ಕೆಂಪಯ್ಯ ಅವರನ್ನು ಮುಂದಿಟ್ಟುಕೊಂಡು ನನ್ನನ್ನು ಬಂಧಿಸಲು ಮುಂದಾಗಿದ್ದರು. ವಕೀಲರು ವಿಚಾರಣೆಗೆ ಹೋಗಬೇಡಿ ಎಂದು ಸಲಹೆ ಮಾಡಿದ್ದರಿಂದ ನಾನು ಹೋಗಿರಲಿಲ್ಲ. ಒಂದು ದಿನವಾದರೂ ನನ್ನನ್ನು ಅರೆಸ್ಟ್ ಮಾಡಬೇಕೆಂದಿದ್ದರು. ಯಾವ ಪ್ರಕರಣವನ್ನು ತಾರ್ಕಿಕ ಅಂತ್ಯ ಮಾಡಿಲ್ಲ ಎಂದರು. +ತೋಟದ ಮನೆಯಲ್ಲಿ ಅಪಹರಣವಾಗಿದ್ದಾರೆ ಎಂಬ ಮಹಿಳೆಯನ್ನು ಕರೆತಂದಿರುವುದಾಗಿ ಹೇಳುತ್ತಿದ್ದಾರೆ. ಇನ್ನು ಮಹಜರು ಮಾಡಿಲ್ಲ. ಆಕೆ ಸಿಕ್ಕಿದ್ದು ಸಂಬಂಧಿ ಕರ ಮನೆಯಲ್ಲಿ, ಹುಣಸೂರಿನ ಪವಿತ್ರ ಎಂಬುವರ ಮನೆಯಿಂದ ಕರೆದುಕೊಂಡು ಬಂದಿದ್ದಾರೆ. ತೋಟದ ಮನೆಯಲ್ಲ ಎಂದು ಸ್ಪಷ್ಟಪಡಿಸಿದರು.ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ರೇವಣ್ಣ ಅವರ ಪರವಾಗಿ ಮಾತ್ರ ಹೋರಾಟ ಮಾಡುತ್ತೇನೆ. ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದ ಬಗ್ಗೆ ಅಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_153_4.txt b/eesanje/url_46_153_4.txt new file mode 100644 index 0000000000000000000000000000000000000000..e59aa5cc15a77bb93f513dd0f4a146a5b7c6af95 --- /dev/null +++ b/eesanje/url_46_153_4.txt @@ -0,0 +1,5 @@ +ಚುನಾವಣೆ ಮುಗಿದ ಬೆನ್ನಲ್ಲೇ ವಿಶ್ರಾಂತಿಗೆ ಜಾರಿದ ಸಿಎಂ, ಡಿಸಿಎಂ ಹಾಗೂ ಸಚಿವರು +ಬೆಂಗಳೂರು, ಮೇ 8-ಲೋಕಸಭೆ ಚುನಾವಣೆ ಮುಗಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದಿಯಾಗಿ ಸಂಪುಟದ ಬಹುತೇಕ ಸಚಿವರು ವಿಶ್ರಾಂತಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ಅವರು ಊಟಿಗೆ ತೆರಳಿದ್ದರು. ಮೂರು ದಿನಗಳಿಂದ ಅಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇತ್ತ ಡಿ.ಕೆ.ಶಿವಕುಮಾರ್‌ ಅವರು ಚಿಕ್ಕಮಗಳೂರಿನಲ್ಲಿ ತಮ್ಮ ಅಳಿಯ ಅವರ ಮನೆಗೆ ಕುಟುಂಬ ಸಮೇತರಾಗಿ ತೆರಳಿ ವಿಶ್ರಾಂತಿ ಪಡೆದರು. +ಪೆನ್‌ಡ್ರೈವ್‌ ಪ್ರಕರಣ ಕಾವೇರಿದ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ವಿಶ್ರಾಂತಿಗೆ ತೆರಳಿರುವುದು ಅಚ್ಚರಿಗೆ ಕಾರಣವಾಗಿದೆ. ಡಿ.ಕೆ.ಶಿವಕುಮಾರ್‌ ಇಂದು ಹೆಲಿಕಾಫ್ಟರ್‌ನಲ್ಲಿ ಪತ್ನಿ, ಮಕ್ಕಳು ಹಾಗೂ ಅಳಿಯನ ಸಮೇತ ಪ್ರವಾಸಕ್ಕೆ ತೆರಳಿದರು. ಜೆಡಿಎಸ್‌‍ ಕಾರ್ಯಕರ್ತರು ಹಲವು ಕಡೆ ಪ್ರತಿಭಟನೆ ನಡೆಸುತ್ತಿರುವುದರಿಂದ ಚಿಕ್ಕಮಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಕುಟುಂಬಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು. +ಸಂಪುಟದ ಹಲವು ಸಚಿವರು ಕುಟುಂಬ ಸಮೇತರಾಗಿ ಪ್ರವಾಸಿ ತಾಣಗಳಿಗೆ ತೆರಳಿ ವಿಶ್ರಾಂತಿ ಪಡೆದುಕೊಂಡರು. ನಿನ್ನೆ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಭಾಗದ 14 ಕ್ಷೇತ್ರಗಳಿಗೆ ನಿನ್ನೆಯಷ್ಟೆ ಮತದಾನ ಮುಗಿದಿದೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ನಿರಂತರವಾಗಿ ಪ್ರಚಾರ ನಡೆಸಿ ಮುಖಂಡರು ಧಣಿದಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಅಭ್ಯರ್ಥಿ ಕಡೆಯಿಂದಲೇ ಪ್ರವಾಸ ಕೊಡುಗೆ ದೊರೆತಿದೆ. ಬಹಳಷ್ಟು ಮಂದಿ ಬಸ್‌‍ ಹಾಗೂ ಖಾಸಗಿ ವಾಹನಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_153_5.txt b/eesanje/url_46_153_5.txt new file mode 100644 index 0000000000000000000000000000000000000000..f7166c3ab97241a4af7fbcf567e74de6be603401 --- /dev/null +++ b/eesanje/url_46_153_5.txt @@ -0,0 +1,5 @@ +ವಿಚಾರಣೆ ಹಾಜರಾಗಲು ಕೋರಿದ್ದ ಕಾಲಾವಕಾಶ ಅಂತ್ಯ, ಪ್ರತ್ಯಕ್ಷ ಆಗ್ತಾರಾ ಪ್ರಜ್ವಲ್‌..? +ಬೆಂಗಳೂರು, ಮೇ 8-ವಿಚಾರಣೆ ಹಾಜರಾಗಲು ಸಂಸದ ಪ್ರಜ್ವಲ್‌ ರೇವಣ್ಣ ಕೇಳಿದ್ದ ಕಾಲಾವಕಾಶ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಆತ ಇಂದು ವಿದೇಶದಿಂದ ವಾಪಸ್‌ ಆಗುವ ನಿರೀಕ್ಷೆಯಿದೆ. ಪೆನ್‌ಡ್ರೈವ್‌ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚನೆಯಾದ ನಂತರ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದರು. +ಆ ಸಂದರ್ಭದಲ್ಲಿ ಪ್ರಜ್ವಲ್‌ ಅವರು ವಕೀಲರ ಮೂಲಕ ಕಾಲಾವಕಾಶ ಕೇಳಿದ್ದು, ಇಂದು ಅವ ಅಂತ್ಯವಾಗಿರುವ ಹಿನ್ನೆಲೆಯಲ್ಲಿ ಇಂದು ಅವರು ವಿದೇಶದಿಂದ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. +ಒಂದು ವೇಳೆ ಪ್ರಜ್ವಲ್‌ ಇಂದು ವಿಚಾರಣೆಗೆ ಹಾಜರಾಗದಿದ್ದರೆ ಅವರು ಯಾವ ದೇಶದಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅಲ್ಲಿಗೆ ಹೋಗಿ ಎಸ್‌ಐಟಿ ಅಧಿಕಾರಿಗಳು ಕರೆತರಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಎಸ್‌ಐಟಿ ನೋಟಿಸ್‌ಗಳನ್ನು ಜಾರಿ ಮಾಡಿದ್ದು, ನಂತರ ಲುಕ್‌ಔಟ್‌ ನೋಟಿಸ್‌ ಹೊರಡಿಸಿತ್ತು. ಇದರ ಬೆನ್ನಲ್ಲೆ ಬ್ಲೂಕಾರ್ನರ್‌ ನೋಟಿಸ್‌ ಜಾರಿ ಮಾಲಾಗಿದೆ. +ಪ್ರಜ್ವಲ್‌ ವಿರುದ್ಧ 2 ಪ್ರಕರಣಗಳು ದಾಖಲಾಗಿದ್ದು, ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ, ಸಿಐಡಿಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.ಹಾಸನ ಜಿಲ್ಲೆಯಲ್ಲಿ ಪೆನ್‌ಡ್ರೈವ್‌ ಹಂಚಿಕೆಯಾದ ನಂತರ, ಲೋಕಸಭಾ ಚುನಾವಣೆ ಮತದಾನ ಮುಗಿದ ಬಳಿಕ ಪ್ರಜ್ವಲ್‌ ಜರ್ಮನಿಗೆ ಹೋಗಿದ್ದಾರೆ. \ No newline at end of file diff --git a/eesanje/url_46_153_6.txt b/eesanje/url_46_153_6.txt new file mode 100644 index 0000000000000000000000000000000000000000..9dbb7b4125f4e79f65166d5fbd89f5fe42d97df5 --- /dev/null +++ b/eesanje/url_46_153_6.txt @@ -0,0 +1,5 @@ +ಹಿಂದೂ ದೇವಾಲಯದ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಸೇರಿಸಿ ವಿವಾದವೆಬ್ಬಿಸಿದ ಕಾಂಗ್ರೆಸ್‌‍ ಸರ್ಕಾರ +ಬೆಂಗಳೂರು, ಮೇ 8-ಲೋಕಸಭೆ ಚುನಾವಣೆಯ ಹೋಸ್ತಿಲಿನಲ್ಲೇ ಕಾಂಗ್ರೆಸ್‌‍ ಸರ್ಕಾರ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದೆ. ದೇವಾಲಯದ ಬ್ರಹರಥೋತ್ಸವ ಸಮಿತಿಗೆ ಹಿಂದುಯೇತರ ವ್ಯಕ್ತಿಯನ್ನು ಸದಸ್ಯರನ್ನಾಗಿ ನೇಮಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದೆ. +ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ತಹಸೀಲ್ದಾರ್‌ ಆದೇಶದ ಪ್ರಕಾರ ಹೊಸಕೋಟೆಯ ಕೋಟೆಯಲ್ಲಿರುವ ಆವಿಮುಕ್ತೇಶ್ವರಸ್ವಾಮಿ ಬ್ರಹರಥೋತ್ಸವ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲು ಶಾಸಕರ ಸಲಹೆ ಮೇರೆಗೆ ಸಮಿತಿಯನ್ನು ರಚಿಸಲಾಗಿದೆ. ಅದರಲ್ಲಿ ನವಾಜ್‌ ಎಂಬ ವ್ಯಕ್ತಿಯ ಹೆಸರಿದ್ದು ಹಿಂದು ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ. +ಮೇ 6ರಂದು ಹೊರಡಿಸಲಾದ ಆದೇಶದಲ್ಲಿ ಕೇಶವಮೂರ್ತಿಯವರನ್ನು ಸಂಚಾಲಕರನ್ನಾಗಿ ನೇಮಿಸಲಾಗಿದೆ. ಕಾರ್ಯದರ್ಶಿಯನ್ನಾಗಿ ಗಾಯತ್ರಿ ವಿಜಯಕುಮಾರ್‌ ನೇಮಿಸಲಾಗಿದೆ. ಉಳಿದ 10 ಮಂದಿ ಸದಸ್ಯರಲ್ಲಿ ಹಿಂದುಯೇತರ ವ್ಯಕ್ತಿ ನವಾಜ್ ಯಾಕೆ ಎಂದು ಪ್ರಶ್ನೆಗಳು ಕೇಳಿ ಬರುತ್ತಿವೆ. +ಸಾಮಾಜಿಕ ಜಾಲತಾಣಗಳಲ್ಲಿ ಆದೇಶದ ಪ್ರತಿಯನ್ನು ಹಂಚಿಕೊಳ್ಳಲಾಗುತ್ತಿದ್ದು, ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲಾಗುತ್ತಿದೆ. ಇತ್ತೀಚೆಗೆ ಕಾನೂನು ತಿದ್ದು ಪಡಿ ತಂದು ಹಿಂದು ಧಾರ್ಮಿಕ ಸಂಸ್ಥೆಗಳ ಸಮಿತಿಗಳಲ್ಲಿ ಅನ್ಯ ಧರ್ಮಿಯರಿಗೆ ಅವಕಾಶ ಕಲ್ಪಿಸಲು ಅವಕಾಶ ಮಾಡಿಕೊಡಲಾಗಿದೆ. ಅದರ ಭಾಗವಾಗಿ ನವಾಜ್‌ ಅವಿಮುಕ್ತೇಶ್ವರ್‌ ಬ್ರಹರಥೋತ್ಸವ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_153_7.txt b/eesanje/url_46_153_7.txt new file mode 100644 index 0000000000000000000000000000000000000000..7e794a056c9a98f12da98caa8686c204dcf47ffa --- /dev/null +++ b/eesanje/url_46_153_7.txt @@ -0,0 +1,8 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ತೀರ್ಪು ನೀಡುವವಂತೆ ಮಾತನಾಡುತ್ತಿರುವ ಕುಮಾರಸ್ವಾಮಿ ನ್ಯಾಯಾಧೀಶರಲ್ಲ : ಡಿಕೆಶಿ +ಬೆಂಗಳೂರು, ಮೇ 8-ಪೆನ್‌ಡ್ರೈವ್‌ ಪ್ರಕರಣದಲ್ಲಿ ತೀರ್ಪು ನೀಡುವ ಮಾದರಿಯಲ್ಲಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನ್ಯಾಯಾಧೀಶರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದರು. +ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್‌ ಕುರಿತು ಕುಮಾರಸ್ವಾಮಿಯವರಿಗೆ ಸಂಪೂರ್ಣವಾಗಿ ಎಲ್ಲವೂ ಗೋತ್ತು. ವಕೀಲ ದೇವರಾಜೇಗೌಡ ಈಗ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಪಾಪ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗರ ನಾಯಕತ್ವಕ್ಕೆ ಪೈಪೋಟಿಯಂತೆ. ರಾಜೀನಾಮೆ ಕೊಡೋಣ, ಒಬ್ಬರನ್ನೇ ಮುಗಿಸುವುದೇ ಅಲ್ಲವೇ ಅವರ ಕೆಲಸ. ಬ್ಲಾಕ್‌ಮೇಲ್‌ ಮಾಡುವುದೇ ಅವರ ವೃತ್ತಿ. ಕಿಂಗ್‌ ಆಫ್‌ ಬ್ಲಾಕ್‌ಮೇಲ್‌ ಎಂದು ಟೀಕಿಸಿದರು. +ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಮಾಡಲಿ, ಮುಂದೆ ಚರ್ಚೆ ಮಾಡಲು ಸಮಯ ಇದೆ. ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಲಿ. ಮೊದಲು ಕುಮಾರಸ್ವಾಮಿ ತಮ ಮಾತಿಗೆ ಬದ್ಧವಾಗಿರಲಿ. ಆರಂಭದಲ್ಲಿ ನನ್ನ ಮತ್ತು ದೇವೇಗೌಡರ ಹೆಸರು ತೆಗೆದುಕೊಳ್ಳಬೇಡಿ, ನಮ ಹಾಗೂ ರೇವಣ್ಣನವರ ಕುಟುಂಬಕ್ಕೆ ಸಂಬಂಧ ಇಲ್ಲ ಎಂದಿದ್ದರು. +ಕುಮಾರಸ್ವಾಮಿಯವರ ಪುತ್ರನೂ ಹೇಳಿದ್ದ. ಮತ್ಯಾಕೆ ಚಿಂತೆ ಮಾಡಿಕೊಳ್ಳುತ್ತಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದವರು, ಈಗ ಯಾಕೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. +ಇವರೇನು ವಕೀಲರೇ ಅಥವಾ ನ್ಯಾಯಾದೀಶರೇ ತೀರ್ಪು ನೀಡಲು. ಪಾಯಿಂಟ್‌ ಪಾಯಿಂಟ್‌ ಮಾತನಾಡುತ್ತಿದ್ದಾರೆ. ಹೋಗಿ ನ್ಯಾಯಾಲಯಕ್ಕೆ ವಾದ ಮಾಡಲಿ. ಎಸ್‌‍ಐಟಿಯನ್ನು ಶಿವಕುಮಾರ್‌ ತನಿಖಾ ದಳ, ಸಿದ್ದರಾಮಯ್ಯ ತನಿಖಾ ದಳ ಎಂದು ಆರೋಪಿಸುತ್ತಿದ್ದಾರೆ. ಪೆನ್‌ಡ್ರೈವ್‌ ಬಹಿರಂಗಗೊಳ್ಳುವ ವಿಚಾರದಲ್ಲಿ ಬಿಜೆಪಿಯವರ ಕಡೆಯಿಂದ ಏನು ಮಾಡಿಸಬೇಕೋ ಅದನ್ನು ಮಾಡಿಸಿದ್ದಾರೆ. ಕುಮಾರಸ್ವಾಮಿ ಏನು ಮಾಡಬೇಕೋ ಮಾಡಿದ್ದಾರೆ, ಮೊದಲು ಪ್ರಕರಣದ ತನಿಖೆಯಾಗಲಿ ಎಂದು ಹೇಳಿದರು. +ಸಂತ್ರಸ್ಥರಲ್ಲಿ ಅವರ ಪಕ್ಷದ ಕಾರ್ಯಕರ್ತರೂ ಇದ್ದಾರೆ. ಮಾನ ಮರ್ಯಾದೆ ಇದ್ದರೆ ಮೊದಲು ಅವರನ್ನು ಭೇಟಿ ಮಾಡಿ, ಮಕ್ಕಳಿಗೆ, ತಂದೆತಾಯಿಗಳಿಗೆ ಧೈರ್ಯ ಹೇಳಲಿ. ಈಗ ಮಾತನಾಡುವವರು ಮೊದಲು ಅಲ್ಲಿಗೆ ಹೋಗಿ ಧೈರ್ಯ ತುಂಬಲಿ ಎಂದು ಒತ್ತಾಯಿಸಿದರು.ಜೆಡಿಎಸ್‌‍ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ನನ್ನ ಹೆಸರು ಹೇಳದಿದ್ದರೆ ಅವರ ಮಾರುಕಟ್ಟೆ ಓಡಲ್ಲ. ನನ್ನ ಹೆಸರು ಇಲ್ಲ ಎಂದರೆ ಅವರಿಗೆ ನಿದ್ದೆ ಇಲ್ಲ. ನನ್ನ ಹೆಸರು ಹೇಳದಿದ್ದರೆ ಮಾಧ್ಯಮಗಳಲ್ಲೂ ಅವರನ್ನು ತೋರಿಸುವುದಿಲ್ಲ. ಪ್ರಬಲವಾದಷ್ಟು ಶತ್ರುಗಳ ಸಂಖ್ಯೆ ಹೆಚ್ಚಾಗುತ್ತದೆ ಎಂದು ಲೇವಡಿ ಮಾಡಿದರು. +ಚುನಾವಣೆ ಮುಗಿದಿದೆ, ವಿಶ್ರಾಂತಿ ಬೇಕಿತ್ತು ಅದಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದೇನೆ. ನಮ ಸಿದ್ಧಾರ್ಥ ಮನೆ ಚಿಕ್ಕನಹಳ್ಳಿಗೆ ಬಹಳ ದಿನದಿಂದ ಬರಬೇಕು ಅಂದು ಕೊಂಡಿದ್ದೆ, ಸ್ವಲ್ಪ ವಿಶ್ರಾಂತಿ ಪಡೆಯಲು ಈಗ ಬಂದಿದ್ದೇನೆ. ಇವತ್ತು ಇಲ್ಲಿದ್ದು ನಂತರ ಬೇರೆ ಕಡೆ ಹೋಗುತ್ತೇನೆ ಎಂದು ತಿಳಿಸಿದರು. \ No newline at end of file diff --git a/eesanje/url_46_153_8.txt b/eesanje/url_46_153_8.txt new file mode 100644 index 0000000000000000000000000000000000000000..fa4a1d74291ceb550d433025118fb90db394bf9f --- /dev/null +++ b/eesanje/url_46_153_8.txt @@ -0,0 +1,6 @@ +ಲೋಕಸಭೆ ಚುನಾವಣೆ : ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾನ +ಬೆಂಗಳೂರು,ಮೇ8-ಪ್ರಸಕ್ತ ಲೋಕಸಭೆ ಚುನಾವಣೆಯ ರಾಜ್ಯದ ಎರಡು ಹಂತದ 28 ಕ್ಷೇತ್ರಗಳಲ್ಲಿ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಬಾರಿ ದಾಖಲೆ ಪ್ರಮಾಣದ ಶೇ.69.96ರಷ್ಟು ಮತದಾನವಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ಪ್ರಕಾರ, ಕಳೆದ ಎರಡು ಲೋಕಸಭೆ ಚುನಾವಣೆಗಳಿಗಿಂತ ಈ ಬಾರಿಯ ಮತದಾನ ಹೆಚ್ಚಾಗಿದೆ. 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಶೇ.67.20ರಷ್ಟು ಮತದಾನವಾಗಿದ್ದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಶೇ.68.81ರಷ್ಟು ಮತದಾನವಾಗಿತ್ತು. +ಕಳೆದ ಎರಡು ಚುನಾವಣೆಗೆ ಹೋಲಿಸಿದರೆ ಈ ಬಾರಿ ನಡೆದ ಎರಡು ಹಂತದ ಚುನಾವಣೆಗಳಲ್ಲೂ ಹೆಚ್ಚಿನ ಪ್ರಮಾಣದ ಮತದಾನವಾಗಿದೆ. ರಾಜ್ಯದ ಮೊದಲ ಹಂತದ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶೇ.69.56ರಷ್ಟು ಮತದಾನವಾಗಿದ್ದರೆ ಉತ್ತರ ಕರ್ನಾಟಕದ ಭಾಗದ 2ನೇ ಹಂತದ 14 ಕ್ಷೇತ್ರಗಳಲ್ಲಿ ಶೇ.70.41ರಷ್ಟು ಮತದಾನವಾಗಿದೆ.2023ರ ವಿಧಾನಸಭೆ ಚುನಾವಣೆಯಲ್ಲಿ ಶೇ.73.84ರಷ್ಟು ಹಾಗೂ 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ.72.44ರಷ್ಟು ಮತದಾನವಾಗಿತ್ತು. +ಮತ ಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ನಿಗದಿಪಡಿಸಿದ ಸ್ಟ್ರಾಂಗ್‌ ರೂಮ್‌ಗಳಲ್ಲಿ ದಾಸ್ತಾನು ಮಾಡಿದ್ದು, ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗುವವರೆಗೂ ಈ ಕೇಂದ್ರಗಳಿಗೆ ಎಲ್ಲಾ ರೀತಿಯ ಭದ್ರತೆಯನ್ನು ಒದಗಿಸಲಾಗುತ್ತದೆ. +ಇದು ಪರಿಷ್ಕರಣೆಯಾಗಲಿದ್ದು, ಸಂಜೆ ವೇಳೆಗೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ. ಈ ಬಾರಿ ಶಾಂತಿಯುತ ಹಾಗೂ ದಾಖಲೆ ಪ್ರಮಾಣದಲ್ಲಿ ಮತದಾನ ಆಗಿರುವುದಕ್ಕೆ ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಶ್ಲಾಘನೆ ವ್ಯಕ್ತಪಡಿಸಿದೆ. ಹಿರಿಯ ನಾಗರಿಕರು, ವಿಶೇಷ ಚೇತನರು, ಯುವ ಮತದಾರರು ಸೇರಿದಂತೆ ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರಿಂದ ಇದು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ. +ಪ್ರಸಕ್ತ ಲೋಕಸಭೆ ಚುನಾವಣೆಯ ಕ್ಷೇತ್ರಗಳ ಶೇಕಡವಾರು ಮತದಾನ ಈ ಕೆಳಕಂಡಂತಿದೆ.ಚಿಕ್ಕೋಡಿ- 76.99ಬೆಳಗಾವಿ – 71ಬಾಗಲಕೋಟೆ 71.01ಬಿಜಾಪುರ 64.71ಗುಲ್ಬರ್ಗಾ 61.73ರಾಯಚೂರು 64.1ಬೀದರ್‌ 63.55ಕೊಪ್ಪಳ 69.87ಬಳ್ಳಾರಿ 72.35ಹಾವೇರಿ 76.78ಧಾರವಾಡ 72.53ಉತ್ತರಕನ್ನಡ 73.52ದಾವಣಗೆರೆ 76.23ಶಿವಮೊಗ್ಗ 76.05ಉಡುಪಿ-ಚಿಕ್ಕಮಗಳೂರು 77.15ಹಾಸನ 77.68ದಕ್ಷಿಣ ಕನ್ನಡ 77.56ಚಿತ್ರದುರ್ಗ 73.30ತುಮಕೂರು 78.05ಮಂಡ್ಯ 81.67ಮೈಸೂರು 70.62ಚಾಮರಾಜನಗರ 76.81ಬೆಂಗಳೂರು ಗ್ರಾಮಾಂತರ 68.30ಬೆಂಗಳೂರು ಉತ್ತರ 54.45ಬೆಂಗಳೂರು ಕೇಂದ್ರ 54.06ಬೆಂಗಳೂರು ದಕ್ಷಿಣ 53.17ಚಿಕ್ಕಬಳ್ಳಾಪು76ಕೋಲಾರ 78.27ಉಪಚುನಾವಣೆ: ಸುರಪುರ ಉಪಚುನಾವಣೆಯಲ್ಲಿ ಶೇ.73ರಷ್ಟು ಮತದಾನವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇ. 75.67ರಷ್ಟು ಮತದಾನವಾಗಿತ್ತು. \ No newline at end of file diff --git a/eesanje/url_46_153_9.txt b/eesanje/url_46_153_9.txt new file mode 100644 index 0000000000000000000000000000000000000000..093bb533c886e5207e8e00b441156c8175faa339 --- /dev/null +++ b/eesanje/url_46_153_9.txt @@ -0,0 +1,9 @@ +ರಾಜ್ಯದಲ್ಲಿ ಮತ್ತಷ್ಟು ಸಿಡಿಗಳು ಸಿಡಿಯುವ ಭೀತಿ, ಪಾತ್ರಧಾರಿಗಳಲ್ಲಿ ಹೆಚ್ಚಿದ ಆತಂಕ +ಬೆಂಗಳೂರು, ಮೇ 8-ಹಾಸನದ ಪೆನ್‌ಡ್ರೈವ್‌ ಪ್ರಕರಣ ಮಾಸುವ ಮುನ್ನವೇ ಮತ್ತಷ್ಟು ಸಿಡಿಗಳು ಬಹಿರಂಗಗೊಳ್ಳುವ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದು, ವಿಡಿಯೋ ಪಾತ್ರದಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ರಾಜ್ಯದಲ್ಲಿ ಹಲವಾರು ರಾಜಕಾರಣಿಗಳ ವಿವಾಹೇತರ ಸಂಬಂಧಗಳ ಕುರಿತು ಸಂದರ್ಭನುಸಾರ ವಿಡಿಯೋಗಳು ಬಹಿರಂಗಗೊಂಡಿವೆ, ಚರ್ಚೆಗೆ ಗ್ರಾಸವಾಗಿವೆ. +ಹಗರಣಕ್ಕೆ ಸಿಲುಕಿದವರ ಪೈಕಿ ಕೆಲವರು ರಾಜಕೀಯವಾಗಿ ನೇಪಥ್ಯಕ್ಕೆ ಸರಿದಿದ್ದಾರೆ. ಬೆಳಗಾವಿಯ ಗೋಕಾಕ್‌ ಕ್ಷೇತ್ರದ ಶಾಸಕ ಹಾಗೂ ಆಗಿನ ಸಚಿವ ರಮೇಶ್‌ ಜಾರಕಿಹೊಳಿ ಅವರ ವಿಡಿಯೋ ಬಹಿರಂಗ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಎಫ್‌ಐಆರ್‌ ದಾಖಲಾಗಿತ್ತು. ಆಗಿನ ವಿಪಕ್ಷ ಕಾಂಗ್ರೆಸ್‌‍ ರಮೇಶ್‌ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಭಾರೀ ಪ್ರತಿಭಟನೆಯನ್ನು ನಡೆಸಿತ್ತು. ಕೊನೆಗೆ ಆ ಪ್ರಕರಣ ಕಾಂಗ್ರೆಸ್‌‍ ನಾಯಕರ ನಿರೀಕ್ಷಿತ ರೀತಿಯಲ್ಲಿ ಇತ್ಯರ್ಥ ಕಾಣದೆ ನೇಪಥ್ಯಕ್ಕೆ ಸರಿದು ಹೋಯಿತು. +ರಮೇಶ್‌ ಜಾರಕಿಹೊಳಿ ವಿಡಿಯೋ ಬಹಿರಂಗವಾದ ಬೆನ್ನಲ್ಲೆ ಆಗಿನ ಸಂಪುಟದ ಸಚಿವರಾಗಿದ್ದ ಶಿವರಾಮ್‌ ಹೆಬ್ಬಾರ್‌, ಬಿ.ಸಿ.ಪಾಟೀಲ್‌, ಎಸ್‌‍.ಟಿ.ಸೋಮಶೇಖರ್‌, ಕೆ.ಸುಧಾಕರ್‌, ಕೆ.ಸಿ.ನಾರಾಯಣಗೌಡ, ಬೈರತಿ ಬಸವರಾಜು ಅವರು ತಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವಿಡಿಯೋ, ಆಡಿಯೋ, ಫೋಟೋಗಳನ್ನು ಬಹಿರಂಗ ಪಡಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. 6ಕ್ಕೂ ಹೆಚ್ಚು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಹಾಗೂ ಸಾಮಾಜಿಕ ಕಾರ್ಯಕರ್ತ ರಾಜಶೇಖರ್‌ ಮುಲಾಲಿ ಅವರನ್ನು ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿತ್ತು. ಸಚಿವರು ತಡೆಯಾಜ್ಞೆ ತಂದಿದ್ದನ್ನು ಅನುಮಾನಿಸಿ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ಪಕ್ಷಗಳು ವಿಧಾನಸಭೆ ಮತ್ತು ವಿಧಾನ ಪರಿಷತ್‌ ಕಲಾಪದಲ್ಲಿ ಮೂರು ದಿನ ಗದ್ದಲ ಎಬ್ಬಿಸಿದ್ದವು. +ನಾವೇನು ತಪ್ಪು ಮಾಡಿಲ್ಲ, ಆಧುನಿಕ ತಂತ್ರಜ್ಞಾನ ಯುಗದಲ್ಲಿ ನಕಲಿ ವಿಡಿಯೋಗಳನ್ನು ತಯಾರಿಸಿ, ಹರಿಯ ಬಿಟ್ಟು ನಾವು ಇಷ್ಟು ದಿನ ಗಳಿಸಿದ ರಾಜಕೀಯ ವರ್ಚಸ್ಸನ್ನು ಹಾಳು ಮಾಡಲಾಗುತ್ತದೆ. ಆ ಕಾರಣಕ್ಕಾಗಿ ನಾವು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇವೆ ಎಂಬ ಸಮರ್ಥನೆಯನ್ನು ಆ ವೇಳೆ ಸಚಿವರು ನೀಡಿದ್ದರು. +ಅದೇ ಚರ್ಚೆಯ ವೇಳೆ ಕಾಂಗ್ರೆಸ್‌‍-ಜೆಡಿಎಸ್‌‍ನಿಂದ ವಲಸೆ ಹೋಗಿದ್ದ 17 ಮಂದಿ ಶಾಸಕರ ಪೈಕಿ ಕೆಲವರನ್ನು ಬಾಂಬೆ ಬಾಯ್‌್ಸ ಎಂದು ಗುರುತಿಸಿ ಲೇವಡಿ ಮಾಡಲಾಗುತ್ತಿದೆ. ತಡೆಯಾಜ್ಞೆ ತಂದಿದ್ದವರ ಪೈಕಿ ಎಸ್‌‍.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಪ್ರಸ್ತುತ ಬಿಜೆಪಿಯಲ್ಲಿ ಅಸಮಧಾನಿತ ಶಾಸಕರಾಗಿ ಗುರುತಿಸಿಕೊಂಡಿದ್ದು, ಕಾಂಗ್ರೆಸ್‌‍ ಜೊತೆ ನಿಕಟ ಸಂಬಂಧ ಹೊಂದಿದ್ದಾರೆ. ಬಿ.ಸಿ.ಪಾಟೀಲ್‌, ಕೆ.ಸಿ.ನಾರಾಯಣಗೌಡ, ಡಾ.ಕೆ.ಸುಧಾಕರ್‌ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅವರ ಪೈಕಿ ಡಾ.ಸುಧಾಕರ್‌ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬೈರತಿ ಬಸವರಾಜ್‌ ಕೆ.ಆರ್‌.ಪುರಂ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ. +ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿಡಿಯೋ ಮತ್ತು ಫೋಟೋಗಳು ಬಹಿರಂಗಗೊಂಡ ಬೆನ್ನಲ್ಲೆ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಕಾಂಗ್ರೆಸ್‌‍ ವಿಡಿಯೋಗಳನ್ನು ಆಧಾರವಾಗಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಲಾಗುತ್ತಿದೆ. ಇದು ಒಂದಿಷ್ಟು ಹಾನಿಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ವಿಡಿಯೋಗಳನ್ನು ಬಹಿರಂಗ ಮಾಡಿ ತಿರುಗೇಟು ನೀಡಲು ತಯಾರಿಗಳಾಗಿವೆ ಎಂಬ ಚರ್ಚೆಗಳಿವೆ. +ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವುದರಿಂದ ನೇರವಾಗಿ ಅಕಾಡಕ್ಕೆ ಬರದೆ, ಡಾರ್ಕ್‌ನೆಟ್‌ ಬಳಸಿಕೊಂಡು ಅಂತರ್ಜಾಲದಲ್ಲಿ ವಿಡಿಯೋಗಳನ್ನು ಹರಿಯ ಬಿಟ್ಟು ಮುಜುಗರ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಹಾಸನದ ಪ್ರಕರಣದಲ್ಲಿ ದಿನಕ್ಕೊಂದು ವಿಡಿಯೋಗಳನ್ನು ಬಹಿರಂಗ ಪಡಿಸಿ ರಾಜಕೀಯವಾಗಿ ಭಾರೀ ಚರ್ಚೆ ಹುಟ್ಟು ಹಾಕಲಾಗಿದೆ. +ಲೋಕಸಭೆ ಚುನಾವಣೆಯಲ್ಲಿ ಇದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದೆ. ರಾಜಕೀಯ ಕಾರಣಕ್ಕೆ ಮತ್ತಷ್ಟು ವಿಡಿಯೋಗಳನ್ನು ಹೊರ ಹಾಕುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇತ್ತ ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಇನ್ನಷ್ಟು ಆಘಾತಕಾರಿ ವಿಡಿಯೋಗಳನ್ನು ಹೊರ ಹಾಕುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_46_154_1.txt b/eesanje/url_46_154_1.txt new file mode 100644 index 0000000000000000000000000000000000000000..eb0c5815172e4ad613c20c2646ff453afc360f63 --- /dev/null +++ b/eesanje/url_46_154_1.txt @@ -0,0 +1,12 @@ +ರಾಜ್ಯದಲ್ಲಿ 2ನೇ ಹಂತದ ಚುನಾವಣೆಯಲ್ಲಿ 70.41 ರಷ್ಟು ಮತದಾನ +ಬೆಂಗಳೂರು, ಮೇ 7-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂತು. +ಸಂಜೆ 5 ಗಂಟೆ ವೇಳೆಗೆ ಸರಾಸರಿಶೇ.66.05ರಷ್ಟುಮತದಾನವಾಗಿ, ಮತದಾನ ಮಕ್ತಾಯದ ವೇಳೆಗೆಶೇ.70.41ಮತದಾನವಾಗಿದ್ದು,ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಈತನಕ ಶಾಂತಿಯುತವಾಗಿ ಮತದಾನ ನಡೆದಿದೆ. +ಗ್ರಾಮೀಣ ಭಾಗದಲ್ಲಿ ಬಿರುಸಿನ ಮತದಾನವಾಗುತ್ತಿರುವುದು ಕಂಡುಬಂದಿತು. ನಗರ ಪ್ರದೇಶಗಳಲ್ಲಿ ಅಷ್ಟು ಉತ್ಸಾಹ ಕಂಡುಬರಲಿಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಬೇಕಾದವರು ಬೆಳಗ್ಗೆಯೇ ಮತ ಚಲಾಯಿಸಿ ತಮ ಕೆಲಸ ಕಾರ್ಯಗಳಿಗೆ ತೆರಳಿದರು. +21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು, ಓರ್ವ ಸಚಿವರ ಸಹೋದರಿ, ಸಚಿವರೊಬ್ಬರ ಪತ್ನಿ, ಹಾಲಿ ಸಂಸದರ ಪತ್ನಿ ಹಾಗೂ ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಅಧ್ಯಕ್ಷರ ಅಳಿಯ ಚುನಾವಣಾ ಕಣದಲ್ಲಿ ಇದ್ದಾರೆ. + +ಬೆಳಗ್ಗೆ ಬಿರುಸಿನಿಂದ ಆರಂಭಗೊಂಡ ಮತದಾನವು ಮಧ್ಯಾಹ್ನ ಸ್ವಲ್ಪ ಕಡಿಮೆಯಾದರೂ 4 ಗಂಟೆ ನಂತರ ಮತ್ತೆ ಮತದಾನ ಬಿರುಸಾಗತೊಡಗಿತು. ಬಿಸಿಲು ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. +ಹಿರಿಯರು,ವಿಶೇಷ ಚೇತನರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು ವಿಶೇಷವಾಗಿತ್ತು ಕೆಲವರನ್ನು ಮತಗಟ್ಟೆಗೆ ಹೊತ್ತು ತಂದು ಮಾತದಾನ ಮಾಡಿಸಿದ್ದು ಭಾರಿ ಪ್ರಶಂಸೆಗೆ ಪಾತ್ರವಾಗಿತ್ತು .ಮೊದಲ ಭಾರಿಗೆ ಮತದಾನ ಮಾಡುವ ಯುವ ಸಮುದಾಯದಲ್ಲಿ ಲವಲವಿಕೆ ಕಂಡುಬಂತು ಮತದಾನ ಮಾಡಿದ ಖುಷಿಯಲ್ಲಿ ಮಾಧ್ಯಮಗಳ ಮುಂದೆ ಸಮತಸ ಹಂಚಿಕೊಂಡರು. +ಒಟ್ಟಾರೆ 3 ತಿಂಗಳಿನಿಂದ ನಡೆದಿದ್ದ ತಂತ್ರ-ಪ್ರತಿ ತಂತ್ರ ,ನಾಯಕರ ನಡುವಿನ ಆರೋಪ -ಪ್ರತ್ಯಾರೋಪ ,ಅಬ್ಬರದ ಪ್ರಚಾರ ಕೊನೆಯಾಗಿದ್ದು ಮತದಾರ ಫ್ರಭು ತನ್ನ ಹಕ್ಕು ಚಲಾಯಿಸಿದ್ದು ಜೂನ್‌ 4ರ ವರೆಗೆ ಜನದೇಶಕ್ಕೆ ಕಾಯಬೇಕಾಗಿದೆ.ರಾಜ್ಯದ 28 ಕ್ಷೇತ್ರದ ಮತದಾನ ಅಧಿಕೃತವಾಗಿ ಮುಕ್ತಾಯವಾಗಿದೆ. +ಇಂದು ನಡೆದ 14 ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಇದರಲ್ಲಿ 1,29,48,978 ಪುರುಷರು, 1,29,66,570 ಮಹಿಳೆಯರು, 1945 ತೃತೀಯ ಲಿಂಗಿಗಳಿದ್ದಾರೆ. 6,90,929 ಯುವ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. +14 ಕ್ಷೇತ್ರಗಳಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು. +1.45 ಲಕ್ಷ ಮತಗಟ್ಟೆ ಅಧಿಕಾರಿಗಳು, 35,000 ಪೊಲೀಸರು, ಅರೆಸೇನಾ ಪಡೆಯ 65 ಕಂಪನಿಗಳನ್ನು ನಿಯೋಜಿಸಲಾಗಿತ್ತು. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಡಗೈ ತೋರುಬೆರಳಿಗೆ ಶಾಯಿಯನ್ನು ಹಾಕಲಾಗುತ್ತಿತ್ತು. ಏ.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಸರಾಸರಿ ಶೇ. 69.56ರಷ್ಟು ಮತದಾನವಾಗಿದೆ. \ No newline at end of file diff --git a/eesanje/url_46_154_10.txt b/eesanje/url_46_154_10.txt new file mode 100644 index 0000000000000000000000000000000000000000..ec4424472d0ddb203fd953cb32df471194d2a89b --- /dev/null +++ b/eesanje/url_46_154_10.txt @@ -0,0 +1,7 @@ +ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ +ಬೆಳಗಾವಿ, ಮೇ 7-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್‌ ನಂಬರ್‌ 61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. +ಸಚಿವರ ಪುತ್ರ ಹಾಗೂ ಕಾಂಗ್ರೆಸ್‌‍ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್‌, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು. +ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು. +ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್‌‍ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್‌‍ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ. ಅರಭಾವಿ, ಗೋಕಾಕ್‌‍, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್‌‍ ಮುನ್ನಡೆ ಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು) ಆಶೀರ್ವಾದವಿದೆ ಎಂದು ಹೇಳಿದರು. +ಕಾಂಗ್ರೆಸ್‌‍ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್‌ ಮಾತನಾಡಿ, ಈ ಬಾರಿ ನೂರಕ್ಕೆ ನೂರರಷ್ಟು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಪಕ್ಷ ಗೆಲುವು ದಾಖಲಿಸಲಿದೆ. ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಗೆಲುವು ಗ್ಯಾರಂಟಿ ಎಂದರು. +ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ. ಚಿಕ್ಕೋಡಿ, ಬೆಳಗಾವಿ ಎರಡು ಕ್ಷೇತ್ರ ಗಳಲ್ಲೂ ಕಾಂಗ್ರೆಸ್‌‍ ಅಭ್ಯರ್ಥಿಗಳು ಜಯ ದಾಖಲಿಸಲಿದ್ದು, ಬೆಳಗಾವಿ ಸ್ವಾಭಿಮಾನಕ್ಕೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_154_11.txt b/eesanje/url_46_154_11.txt new file mode 100644 index 0000000000000000000000000000000000000000..0a5eb780dfd2a532d2629cf8a7077dfa219fcee9 --- /dev/null +++ b/eesanje/url_46_154_11.txt @@ -0,0 +1,4 @@ +ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗಿಲ್ಲ ಮತದಾನದ ಅವಕಾಶ +ಹುಬ್ಬಳ್ಳಿ, ಮೇ 7-ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್‌ ಕುಲಕರ್ಣಿಗೆ ಅವಕಾಶ ಇಲ್ಲ. ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್‌ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾಗೊಳಿಸಿದೆ. ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್‌ ಕುಲಕರ್ಣಿಗೆ ಸುಪ್ರೀಂಕೋರ್ಟ್‌ ನಿರ್ಬಂಧ ಹೇರಿತ್ತು. +ಆ ಪ್ರಕರಣದಿಂದ ಹೊರಗೆ ಬರಲು ವಿನಯ್‌ ಎಷ್ಟೇ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗುತ್ತಲೆ ಇಲ್ಲ.2016 ರ ಜೂ.15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್‌ನಲ್ಲಿ ನಡೆದಿದ್ದ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್‌್ಸ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ್‌ ಕುಲಕರ್ಣಿ ರಿಟ್‌ ಅರ್ಜಿಯನ್ನು ಸಲ್ಲಿಸಿದ್ದರು.ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್‌ ಕುಲಕರ್ಣಿಗೆ ರಿಲೀಫ್‌ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. +ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ಎಸ್‌‍. ದೀಕ್ಷಿತ್‌ ಅವರು ತೀರ್ಪನ್ನು ಕಾಯ್ದಿರಿಸಿದ್ದರು.ಅದರ ತೀರ್ಪನ್ನು ಸೋಮವಾರ ಪ್ರಕಟಿಸಲಾಗಿತ್ತು. ಅದರಲ್ಲಿ ವಿನಯ್‌ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್‌, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು. ಇದರಿಂದಾಗಿ ವಿನಯ ಕುಲಕರ್ಣಿಗೆ ದೊಡ್ಡ ಶಾಕ್‌ ಎದುರಾಗಿತ್ತು. \ No newline at end of file diff --git a/eesanje/url_46_154_12.txt b/eesanje/url_46_154_12.txt new file mode 100644 index 0000000000000000000000000000000000000000..bc2cfe3642eae87c789888ff23894322c48b1d51 --- /dev/null +++ b/eesanje/url_46_154_12.txt @@ -0,0 +1,12 @@ +ಸಾಲಲ್ಲಿ ನಿಂತು ಮತದಾನ ಮಾಡಿದ ಗಣ್ಯಾತಿಗಣ್ಯರು +ಬೆಂಗಳೂರು, ಮೇ 7- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍. ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು, ಮಾಜಿ ಸಚಿವರು ಹಲವು ಗಣ್ಯಾತಿ ಗಣ್ಯರು ಮತದಾನ ಮಾಡಿದರು. ರಾಜ್ಯದಲ್ಲಿ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಇಂದು ನಡೆದ ಮತದಾನದಲ್ಲಿ ಅಭ್ಯರ್ಥಿಗಳು, ಗಣ್ಯರು, ಮುಖಂಡರು ಬೆಳಿಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. +ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಲುಬುರಗಿಯ ಬಸವನಗರದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಕುಟುಂಬದವರೊಂದಿಗೆ ಆಗಮಿಸಿ ಮತಚಲಾಯಿಸಿದರು. ಸಚಿವರಾದ ಪ್ರಿಯಾಂಕ ಖರ್ಗೆ, ಅಭ್ಯರ್ಥಿ ರಾಧಾಕೃಷ್ಣ ಅವರು ಕೂಡ ತಮ ಪರಿವಾರದೊಂದಿಗೆ ಆಗಮಿಸಿ ಮತದಾನ ಮಾಡಿದರು. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ತಮ ಕುಟುಂಬದವರೊಂದಿಗೆ ಆಗಮಿಸಿ ಶಿಕಾರಿಪುರ ಆಡಳಿತ ಭವನದ ಬೂತ್‌ ನಂ.137 ರಲ್ಲಿ ಮತದಾನದ ಹಕ್ಕು ಚಲಾಯಿಸಿದರು. +ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಕಿವುಡ-ಮೂಕರ ಶಾಲೆಯಲ್ಲಿ ಮತದಾನ ಮಾಡಿದರು.ವಿಜಯಪುರದ ಕಾಂಗ್ರೆಸ್‌‍ ಅಭ್ಯರ್ಥಿ ರಾಜುಅಲಗೂರು ಅವರು ಸ್ವಗ್ರಾಮ ತೊರವಿಯ ಸರ್ಕಾರಿ ಶಾಲೆಯಲ್ಲಿ ಮತಚಲಾಯಿಸಿದರು. +ಹಾವೇರಿ ಜಿಲ್ಲೆ ಶಿಗ್ಗಾವಿ ಮತಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಅವರು ಮುಂಜಾನೆಯೇ ತಮ ಪರಿವಾರದೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು.ಬಾಗಲಕೋಟೆಯ ಕಾಂಗ್ರೆಸ್‌‍ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ವಿಜಯಪುರದ ಮರಾಠಿ ಸರ್ಕಾರಿ ಶಾಲೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು. +ಚಿಕ್ಕೋಡಿ ಕಾಂಗ್ರೆಸ್‌‍ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ತಾಲ್ಲೂಕಿನ ಹಳೇವಂಟಮೂರಿ ಗ್ರಾಮದಲ್ಲಿ ತಮ್ಮ ಸೋದರನೊಂಧಿಗೆ ಆಗಮಿಸಿ ಮತದಾನ ಮಾಡಿದರು.ಬೆಳಗಾವಿಯ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ತಮ್ಮ ಬೀಗರಾದ ಮಾಜಿ ಸಂಸದೆ ಮಂಗಳ ಅಂಗಡಿ ಹಾಗೂ ಸೊಸೆ ಶ್ರದ್ಧಾ ಶೆಟ್ಟರ್‌ ಅವರೊಂದಿಗೆ ಆಗಮಿಸಿ ಬೆಳಗಾವಿ ಮತಗಟ್ಟೆ 26ರಲ್ಲಿ ಮತಚಲಾಯಿಸಿದರು. +ಉತ್ತರಕನ್ನಡದ ಕಾಂಗ್ರೆಸ್‌‍ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಖಾನಾಪುರ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದರು. ಸಚಿವರಾದ ಲಕ್ಷ್ಮೀಹೆಬ್ಬಾಳ್ಕರ್‌ ಅವರು ತಮ ಪುತ್ರ ಹಾಗೂ ಕೈ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್‌ ಮತ್ತು ಸೋದರ ಚೆನ್ನರಾಜ್‌ ಹಟ್ಟಿಹೊಳಿ ಅವರೊಂದಿಗೆ ಆಗಮಿಸಿ ಹಿಂಡಲಗಾ ಸಮೀಪದ ವಿಜಯನಗರದ ಕನ್ನಡ-ಮರಾಠಿ ಶಾಲೆಯಲ್ಲಿ ಮತ ಚಲಾಯಿಸಿದರು. +ಮಾಜಿ ಸಚಿವ ಹಾಗೂ ಶತಾಯುಷಿಗಳಾದ ಡಾ. ಭೀಮಣ್ಣ ಖಂಡ್ರೆ, ಇವರ ಪುತ್ರ ಸಚಿವ ಈಶ್ವರ್‌ ಖಂಡ್ರೆ ಹಾಗೂ ಕಾಂಗ್ರೆಸ್‌‍ ಅಭ್ಯರ್ಥಿ ಸಾಗರ್‌ ಖಂಡ್ರೆ ಬೀದರ್‌ ಜಿಲ್ಲೆಯ ಭಾಲ್ಕಿ ಸಹಾಯಕ ಕೃಷಿ ನಿರ್ದೇಶಕ ಕಚೇರಿಯಲ್ಲಿ ಮತಚಲಾಯಿಸಿದರು. +ಸಭಾಪತಿ ಬಸವರಾಜ ಹೊರಟ್ಟಿ ಅವರು ಕುಟುಂಬ ಸಮೇತರಾಗಿ ಆಗಮಿಸಿ ಹುಬ್ಬಳ್ಳಿಯ ಲ್ಯಾಮಿಂಗ್‌ಟನ್‌ ರಸ್ತೆಯಲ್ಲಿನ ಮತಗಟ್ಟೆ ಸಂಖ್ಯೆ 119ರಲ್ಲಿ ಮತಚಲಾಯಿಸಿದರು.ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ನವಲಗುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ4ರಲ್ಲಿ ತಮ್ಮ ಮತ ಚಲಾಯಿಸಿದರು. +ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಅವರು ತಮ್ಮ ಕುಟುಂಬ ಸಮೇತ ಆಗಮಿಸಿ ಪದಲತಾ ಎಚ್‌ಪಿಎಸ್‌‍ ಮತಗಟ್ಟೆ ಸಂಖ್ಯೆ 50ರಲ್ಲಿ ತಮ ಮತಚಲಾಯಿಸಿದರು.ಅಬಕಾರಿ ಸಚಿವ ಆರ್‌.ಬಿ. ತಿಮಾಪುರ್‌ ಮುದೋಳ ನಗರದ ಮತಗಟ್ಟೆ ಸಂಖ್ಯೆ 113ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು. +ಶಿವಮೊಗ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌‍. ಈಶ್ವರಪ್ಪ, ವಿಜಯಪುರದಲ್ಲಿ ಮಾಜಿ ಸಚಿವ ಬಸವನಗೌಡ ಪಾಟೀಲ್‌ ಯತ್ನಾಳ್‌, ಉತ್ತರ ಕನ್ನಡದಲ್ಲಿ ಮಾಜಿ ಸ್ವೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಮತದಾನ ಮಾಡಿದರು. \ No newline at end of file diff --git a/eesanje/url_46_154_2.txt b/eesanje/url_46_154_2.txt new file mode 100644 index 0000000000000000000000000000000000000000..f8cb14c335d40b41e36617ab6538878bbaa12b47 --- /dev/null +++ b/eesanje/url_46_154_2.txt @@ -0,0 +1,4 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿಕೆಶಿ ಕೈವಾಡ ಆರೋಪ, ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ +ಬೆಂಗಳೂರು,ಮೇ7-ಹಾಸನದ ಪೆನ್‌ಡ್ರೈವ್‌ ಸೋರಿಕೆ ಪ್ರಕರಣದ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. +ಜೆಡಿಎಸ್‌ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್‌ ಅಧ್ಯಕ್ಷ ಎಚ್‌.ಎಂ.ರಮೇಶ್‌ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಡಿ.ಕೆ.ಶಿವಕುಮಾರ್‌ ವಿರುದ್ಧ ಘೋಷಣೆ ಕೂಗಿ ಫಲಕಗಳನ್ನು ಪ್ರದರ್ಶಿಸಿ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. +ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದ ಜೆಡಿಎಸ್‌ನ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. diff --git a/eesanje/url_46_154_3.txt b/eesanje/url_46_154_3.txt new file mode 100644 index 0000000000000000000000000000000000000000..29bfe9e82e8eaf6b640e359c48585a0c4814c0b7 --- /dev/null +++ b/eesanje/url_46_154_3.txt @@ -0,0 +1,6 @@ +“ಪ್ರಜ್ವಲ್‌ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದ ರಾಹುಲ್‌ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ..?” +ಬೆಂಗಳೂರು,ಮೇ7-ಸಂಸದ ಪ್ರಜ್ವಲ್‌ ರೇವಣ್ಣ ಅವರು 16 ವರ್ಷದೊಳಗಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದ್ದರು ಎಸ್‌ಐಟಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪವನ್ನು ಸಹ ಮಾಡಿದ್ದಾರೆ. ಈ ಆರೋಪ ಮಾಡಿದ ರಾಹುಲ್‌ ಗಾಂಧಿ ಅವರನ್ನು ಏಕೆ ವಿಚಾರಣೆಗೆ ಕರೆದಿಲ್ಲ. ನೇರ ಆರೋಪ ಮಾಡಿದ ಅವರ ವಿರುದ್ಧ ಏಕೆ ದೂರು ಸ್ವೀಕರಿಸಲಿಲ್ಲ ಎಂದು ಪ್ರಶ್ನಿಸಿದರು. +ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿದ್ದರೆ ಪೋಕ್ಸೋ ಕಾಯ್ದೆ ದಾಖಲಾಗಬೇಕಲ್ಲವೇ? ಇಷ್ಟೆಲ್ಲ ಮಾಹಿತಿ ಅವರಿಗೆ ಹೇಗೆ ಬಂತು? ಇದು ಕಾಂಗ್ರೆಸ್‌ನವರು ಮಾಡಿರುವ ವ್ಯವಸ್ಥಿತ ಸಂಚು. ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಏಕೆ ಎಳೆದು ತರುತ್ತೀರಿ. ಗ್ಯಾರಂಟಿಯಿಂದ ಮತ ಗಳಿಸಲು ಸಾಧ್ಯವಾಗುವುದಿಲ್ಲ ಎಂಬ ಅನುಮಾನವೇ? ಎಂದು ಪ್ರಶ್ನಿಸಿದರು. +ಪ್ರಚಾರಕ್ಕಾಗಿ, ಮತ ಗಳಿಕೆಯ ಲಾಭಕ್ಕಾಗಿ ಹೆಣ್ಣುಮಕ್ಕಳ ಮಾನವನ್ನು ಹರಾಜು ಮಾಡಿದ್ದಾರೆ. ಪ್ರಧಾನಿಯವರು ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಮೃದು ಧೋರಣೆ ಇಲ್ಲ ಎಂದು ಹೇಳಿದ್ದಾರೆ. ಯಾರೇ ತಪ್ಪು ಮಾಡಿದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಎಂಬುದನ್ನು ಮತ್ತೆ ಪುನರುಚ್ಚರಿಸುತ್ತೇನೆ ಎಂದರು. +ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದ ಸಂತ್ರಸ್ತರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಹೇಳಿದ್ದಾರೆ. ಯಾರು ಮೊದಲು ದೂರು ಕೊಡಬೇಕು, ನಂತರ ಯಾರು ಕೊಡಬೇಕು ಎಂದು ಟಿಕ್‌ ಮಾಡಿದ್ದು ನೀವೇ ಅಲ್ಲವೇ ಎಂದು ವಾಗ್ದಾಳಿ ನಡೆಸಿದರು. ಈ ಪ್ರಕರಣವನ್ನು ಮುಚ್ಚಿ ಹಾಕಲು ಬಿಡುವುದಿಲ್ಲ. ಪಾರದರ್ಶಕ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದರು. \ No newline at end of file diff --git a/eesanje/url_46_154_4.txt b/eesanje/url_46_154_4.txt new file mode 100644 index 0000000000000000000000000000000000000000..7e98b2523dcd7c83644966b8c05508701219c9f1 --- /dev/null +++ b/eesanje/url_46_154_4.txt @@ -0,0 +1,13 @@ +ಪೆನ್‌ಡ್ರೈವ್‌ ಪ್ರಕರಣ : ಡಿಕೆಶಿಯನ್ನು ಸಂಪುಟದಿಂದ ಕೈಬಿಡುವಂತೆ ಕುಮಾರಸ್ವಾಮಿ ಆಗ್ರಹ +ಬೆಂಗಳೂರು,ಮೇ7-ಹಾಸನದ ಅಶ್ಲೀಲ ವಿಡಿಯೋವುಳ್ಳ ಪೆನ್‌ಡ್ರೈವ್‌ ಸೋರಿಕೆ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದ್ದಾರೆ ಎಂಬ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಗ್ರಹಿಸಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ವಿಶೇಷ ತನಿಖಾ ದಳ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಇಲ್ಲವೇ ಹೈಕೋರ್ಟ್‌ ಅಥವಾ ಸುಪ್ರೀಂಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಆರೋಪ ಕೇಳಿಬಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಅನ್ಯಾಯವಾಗಿರುವ ಹೆಣ್ಣುಮಕ್ಕಳಿಗೆ ನ್ಯಾಯ ದೊರಕಬೇಕಾದರೆ ಸಿಬಿಐ ತನಿಖೆಗೆ ವಹಿಸಬೇಕು ಎಂದ ಅವರು, ಈ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಪ್ರಚಾರ ಪಡೆಯುವ ಉದ್ದೇಶವೇ ಹೊರತು ಪಾರದರ್ಶಕ ತನಿಖೆ ನಡೆಸುವುದಲ್ಲ ಎಂದು ಹೇಳಿದರು. +ಎಸ್‌ಐಟಿಯು ನಿಷ್ಪಕ್ಷಪಾತವಾಗಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಸಿದ್ದರಾಮಯ್ಯ ಇನ್ವೆಸ್ಟಿಗೇಷನ್‌ ಟೀಂ ಶಿವಕುಮಾರ್‌ ಇನ್ವೆಸ್ಟಿಗೇಷನ್‌ ಟೀಂ ಆಗಿದೆ ಎಂದು ಆರೋಪಿಸಿದರು.ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಚುನಾವಣಾ ಏಜೆಂಟ್‌ ಪೂರ್ಣಚಂದ್ರ ತೇಜಸ್ವಿ ಅವರು ನೀಡಿದ ದೂರಿನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. +ಏ.21ರ ರಾತ್ರಿ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್‌್ಟ ಹಾಕಿದ್ದ ವ್ಯಕ್ತಿಯ ಮೇಲೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೆನ್‌ಡ್ರೈವ್‌ನ್ನು ಹಂಚಿಕೆ ಮಾಡಿದವರು ಯಾರು ಎಂದು ಪತ್ತೆಹಚ್ಚಿಲ್ಲ. ಕೇವಲ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಮತ್ತು ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಮಾತ್ರ ಎಸ್‌ಐಟಿ ತನಿಖೆ ಮಾಡುತ್ತಿದೆ. ಇವರಿಬ್ಬರಿಗೆ ಲುಕೌಟ್‌ ನೋಟಿಸ್‌ ಹೊರಡಿಸಿದ್ದಾರೆ. +ಆದರೆ 25 ಸಾವಿರ ಪೆನ್‌ಡ್ರೈವ್‌ ಹಂಚಿಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಹಂಚಿಕೆ ಮಾಡಿದವರ ಬಗ್ಗೆ ಲುಕೌಟ್‌ ನೋಟಿಸ್‌ ಎಸ್‌ಐಟಿ ಹೊರಡಿಸಿಲ್ಲ. ಪೆನ್‌ಡ್ರೈವ್‌ನಲ್ಲಿ ಹಿಂದೆ ಯಾರ್ಯಾರ ಪಾತ್ರವಿದೆ ಎಂಬ ಸತ್ಯಾಂಶ ಹೊರಬರಬೇಕೆಂದು ಆಗ್ರಹಿಸಿದರು.ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಮುಖ್ಯಮಂತ್ರಿಗೆ ಪತ್ರ ಬರೆದು, ಅಶ್ಲೀಲ ವಿಡಿಯೋ ಚಿತ್ರೀಕರಣದ ಮಾಡಿದ ಹಾಗೂ ಅದನ್ನು ಬಹಿರಂಗಗೊಳಿಸಿದವರನ್ನು ಪತ್ತೆಹಚ್ಚಬೇಕು ಹಾಗೂ ಪ್ರಭಾವಿ ರಾಜಕಾರಣಿಗಳು ಇದ್ದಾರೆ ಎಂದು ಉಲ್ಲೇಖಿಸಿದ್ದಾರೆ. +ಅದರಲ್ಲಿ ರೇವಣ್ಣ ಹೆಸರಾಗಲಿ, ಪ್ರಜ್ವಲ್‌ ರೇವಣ್ಣ ಅವರ ಹೆಸರಾಗಲಿ ಇಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್‌್ಸನಲ್ಲಿ ಪೋಸ್‌್ಟ ಮಾಡಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಪ್ರಕರಣವನ್ನು ಎಸ್‌ಐಟಿಗೆ ವಹಿಸಿರುವುದಾಗಿ ಪೋಸ್‌್ಟ ಮಾಡಿದ್ದಾರೆ. ಇದು ಸಂಚು ನಡೆದಿರುವುದಕ್ಕೆ ನಿದರ್ಶನ ಎಂದು ಆರೋಪಿಸಿದರು. +ಸಂಭಾಷಣೆಯ ರೆಕಾರ್ಡ್‌ ಕೇಳಿಸಿದ ಕುಮಾರಸ್ವಾಮಿ:ಹಾಸನದ ಪೆನ್‌ಡ್ರೈವ್‌ ಕುರಿತಂತೆ ನಡೆದಿದೆ ಎನ್ನಲಾದ ಸಂಭಾಷಣೆಯೊಂದನ್ನು ಪತ್ರಿಕಾಗೋಷ್ಠಿಯಲ್ಲಿ ಕೇಳಿಸಿದರು. ಅದರಲ್ಲಿ 700 ಪೆನ್‌ಡ್ರೈವ್‌ಗಳನ್ನು ಆನಗೋಳದಲ್ಲಿ ಹಂಚಿಕೆ ಮಾಡಿರುವುದಾಗಿ ಸಂಭಾಷಣೆಯಲ್ಲಿ ವ್ಯಕ್ತವಾಗಿದೆ. +ಅಪಹರಣವಾಗಿದ್ದಾರೆ ಎನ್ನಲಾದ ಮಹಿಳೆ ಪತ್ತೆಯಾಗಿ ಎರಡು ದಿನವಾದರೂ ಇನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲ್ಲ. ಆ ಪೆನ್‌ಡ್ರೈವ್‌ ಸೋರಿಕೆ ಮಾಡಿದವರಿಗೆ ಯಾವ ನೋಟಿಸ್‌ ಕೊಟ್ಟಿದ್ದೀರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಪ್ರಶ್ನಿಸಿದರು.ಈ ಘಟನೆಯ ನಂತರ ನಾನು ಲೋಕಸಭೆಗೆ ಹೋಗಬೇಕೋ ಅಥವಾ ಇಲ್ಲಿಯೇ ಉಳಿಯಬೇಕೋ ಎಂಬ ಚಿಂತನೆಯಲ್ಲಿದ್ದೇನೆ ಎಂದರು. +ಅಶ್ಲೀಲ ದೃಶ ನೋಡಿಲ್ಲ. ಅದರ ಬಗ್ಗೆ ಆಸಕ್ತಿ ಇಲ್ಲ ಇದೇ ಸಂದರ್ಭದಲ್ಲಿ ಅವರು ಹೇಳಿದರು.ಚುನಾವಣೆ ಮೇಲೆ ಪ್ರಭಾವವಿಲ್ಲ: ಪೆನ್‌ಡ್ರೈವ್‌ ಪ್ರಕರಣ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ವಿಚಾರ ಬಹಿರಂಗವಾದ ನಂತರ ಶಿವಮೊಗ್ಗ, ರಾಯಚೂರು, ಕೊಪ್ಪಳ, ಕಲಬುರಗಿಯಲ್ಲಿ ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ಭಾಗಿಯಾಗಿದ್ದೆ. ಜನರು ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮಾಧ್ಯಮಗಳಲ್ಲಿ ಮಾತ್ರ ವಿಜೃಂಭಿಸಲಾಗುತ್ತಿದೆ. ಇಂತಹ ಆರೋಪ ಹಲವರ ಮೇಲೂ ಕೇಳಿಬಂದಿತ್ತು. ಅವರೆಲ್ಲ ಚುನಾವಣೆಯಲ್ಲಿ ಗೆದ್ದಿದ್ದಾಎ ಎಂದರು. +ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಮೈತ್ರಿ ಮುಂದುವರಿಕೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ಮುಂದುವರೆಸುತ್ತಾರೋ ಇಲ್ಲವೋ ಎಂಬ ಚಿಂತೆ ನನಗೂ ಇಲ್ಲ. ಪೆನ್‌ಡ್ರೈವ್‌ ಪ್ರಕರಣ ತಾರ್ಕಿಕ ಅಂತ್ಯವಾಗಬೇಕು ಎಂಬುದಷ್ಟೇ ಎಂದು ಹೇಳಿದರು.ವಿಧಾನಪರಿಷತ್‌ನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16ರವರೆಗೆ ಅವಕಾಶವಿದೆ. +ದೀರ್ಘಾವಧಿ ಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಬಿಜೆಪಿಯವರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಗೊತ್ತಿಲ್ಲ. ಗ್ಯಾರಂಟಿಯಿಂದ ಬೀಗುತ್ತಿದ್ದ ಕಾಂಗ್ರೆಸ್‌ಗೆ ಬಿಜೆಪಿ ಜೆಡಿಎಸ್‌ ಮೈತ್ರಿ ನಿದ್ದೆಗೆಡಿಸಿದೆ. ಚುನಾವಣಾ ಫಲಿತಾಂಶವು ಮುಂದಿನ ಅವರ ಭವಿಷ್ಯದ ಫಲಿತಾಂಶದ ತಳಮಳ ಶುರುವಾಗಿದೆ ಎಂದು ವ್ಯಂಗ್ಯವಾಡಿದರು.ಸುದಿಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ, ರಮೇಶ್‌ ಗೌಡ, ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ, ಪಕ್ಷದ ಮುಖಂಡ ಆರ್‌.ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_154_5.txt b/eesanje/url_46_154_5.txt new file mode 100644 index 0000000000000000000000000000000000000000..e17cebf9367cc3b6d4d19b7c3ccdc95e444777b1 --- /dev/null +++ b/eesanje/url_46_154_5.txt @@ -0,0 +1,7 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿರೋಧ ಪಕ್ಷಗಳ ಹತಾಶೆ ಕಾಣುತ್ತಿದೆ : ಸಚಿವ ಮಧು ಬಂಗಾರಪ್ಪ +ಶಿವಮೊಗ್ಗ, ಮೇ 7-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿರೋಧ ಪಕ್ಷಗಳಲ್ಲಿ ಹತಾಶೆ ಕಂಡು ಬರುತ್ತಿದೆ. ಆರೋಪದಿಂದ ತಪ್ಪಿಸಿಕೊಳ್ಳಲು ಅನಗತ್ಯವಾದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ಥರಿಗೆ ನಮ ಸರ್ಕಾರದಲ್ಲಿ ಖಂಡಿತಾ ನ್ಯಾಯ ಸಿಗಲಿದೆ. ಆ ಪ್ರಕರಣದಲ್ಲಿನ ಸತ್ಯಾಂಶಗಳನ್ನು ತಿರುಚುತ್ತಿರುವುದು ಖಂಡನೀಯ. ಯಾವುದೇ ಪ್ರಕರಣವಾದರೂ ಕಾನೂನು ಗೆಲ್ಲಬೇಕು, ನಮ ಸರ್ಕಾದಲ್ಲಿ ಕಾನೂನೇ ಗೆಲ್ಲಲಿದೆ. ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ನನಗೂ ಆತುರ ಇದೆ. ಆದರೆ ಬಹಿರಂಗವಾಗಿ ಹೇಳುವುದಿಲ್ಲ, ನಮ್ಮ ಮುಖಂಡರ ಬಳಿ ಹಂಚಿಕೊಳ್ಳುತ್ತೇನೆ ಎಂದರು. +ದೇಶದಲ್ಲಿ ಸತ್ಯ ಮತ್ತು ಸುಳ್ಳಿನ ಮೇಲೆ ಚುನಾವಣೆ ನಡೆಯುತ್ತಿದೆ. ನಮ ಗ್ಯಾರಂಟಿಗಳು ಗೆಲ್ಲುತ್ತವೆ. ಭಾವನಾತಕ ರಾಜಕಾರಣವನ್ನು ಜನ ತಿರಸ್ಕರಿಸಿದ್ದಾರೆ. ಅಭಿವೃದ್ಧಿಯನ್ನು ಮರೆತು ಸುಳ್ಳು ಹೇಳುವುದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು. +ದೇಶ ಸುರಕ್ಷಿತವಾಗಿರಬೇಕಾದರೆ ಮೋದಿ ಬೇಕು ಎಂಬ ಭಾವನೆ ಬಿತ್ತಲಾಗಿದೆ. 70 ವರ್ಷ ಕಾಂಗ್ರೆಸ್‌‍ ಆಡಳಿತದಲ್ಲಿ ಸುರಕ್ಷೆ ಇರಲಿಲ್ಲವೇ ? ಇವರೇನು ಬದುಕಿರಲಿಲ್ಲವೇ ಎಂದು ಸಾಮಾನ್ಯರೇ ತಿರುಗಿ ಪ್ರಶ್ನಿಸುತ್ತಾರೆ. ಬಿಜೆಪಿಯ ಮತದಾರರು ಕೂಡ ಈ ಬಾರಿ ರಾಜ್ಯ ಸರ್ಕಾರದ ಗ್ಯಾರಂಟಿಗಳಿಗಾಗಿ ಕಾಂಗ್ರೆಸ್‌‍ಗೆ ಮತ ನೀಡುತ್ತಿದ್ದಾರೆ. +ಸಾಮಾನ್ಯ ಜನ ಸಹಕಾರ ಬಯಸುತ್ತಾರೆ. ಸಹಕಾರ ಪಡೆದುಕೊಂಡವರು ಅದಕ್ಕೆ ಪ್ರತಿಯಾಗಿ ಮತ ಹಾಕುತ್ತಾರೆ. ಈ ಹಿಂದೆ ನಂಬಿಕೆ, ವಿಶ್ವಾಸದ ಮೇಲೆಯೇ ವಿಧಾನಸಭೆಯಲ್ಲಿ ಕಾಂಗ್ರೆಸ್‌‍ಗೆ ಅವಕಾಶ ಕೊಟ್ಟಿದ್ದರು. ಗ್ಯಾರಂಟಿ ಜಾರಿಯ ಬಳಿಕ ಅದರ ಪರಿಣಾಮ ಮತ್ತಷ್ಟು ಹೆಚ್ಚಾಗಿದೆ ಎಂದರು. +ಶಿವಮೊಗ್ಗದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಗೀತಾ ಶಿವಕುಮಾರ್‌ ಪರವಾಗಿ ಜಿಲ್ಲೆಯ ಎಲ್ಲಾ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ. ಎಲ್ಲಾ ಚುನಾವಣೆಯಲ್ಲೂ ವೈಯಕ್ತಿಕ ಆರೋಪಗಳು ಸಾಮಾನ್ಯ, ಆದರೆ ಅದಕ್ಕೆ ಇತಿಮಿತಿ ಅಗತ್ಯ ಎಂದು ಕುಮಾರ ಬಂಗಾರಪ್ಪ ಅವರ ಟೀಕೆಗೆ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_154_6.txt b/eesanje/url_46_154_6.txt new file mode 100644 index 0000000000000000000000000000000000000000..92b34eb1e0eaa1f283b92f00d390fba3e8099186 --- /dev/null +++ b/eesanje/url_46_154_6.txt @@ -0,0 +1,4 @@ +ಮೂರು ತಲೆಮಾರಿನ ಮಹಿಳೆಯರ ಮತದಾನ +ಹುಬ್ಬಳ್ಳಿ, ಮೇ 7-ಮೂರು ತಲೆಮಾರಿನ ಮಹಿಳೆಯರು ನಗರದಲ್ಲಿ ಒಂದೇ ಬಾರಿ ಮತದಾನ ಮಾಡಿ ದಾಖಲೆ ಬರೆದರು. ತಾಯಿ, ಮಗಳು, ಅಜ್ಜಿ ಹುಬ್ಬಳ್ಳಿಯ ಲ್ಯಾಮಿಂಗ್ಟನ್‌ ಶಾಲೆಯಲ್ಲಿ ಒಂದೇ ಸಮಯದಲ್ಲಿ ಮತ ಚಲಾಯಿಸಿದ್ದು ವಿಶೇಷವಾಗಿತ್ತು. +ಇನ್ನು ಇವರು ಎಲ್ಲಾ ಚುನಾವಣೆಗಳಲ್ಲಿ ಮೊದಲ ಮತದಾನ ಮಾಡುವ ಕುಟುಂಬವಾಗಿದೆ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಯುವತಿ ತಪಸ್ಯಾ ಪ್ರಭು, ಪ್ರತಿಬಾರಿ ಲ್ಯಾಮಿಂಗ್ಟನ್‌ ಶಾಲೆಯ ಬೂತ್‌ನಲ್ಲಿ ಫರ್ಸ್ಟ್‌ ಓಟ್‌ ಹಾಕುವ ಶಿಕ್ಷಕಿ ಸೌಮ್ಯ ಪ್ರಭು ಹಾಗೂ ಅಜ್ಜಿ ರಜನಿ ಪ್ರಭು ಜೊತೆ ಆಗಮಿಸಿ ಮತ ಚಲಾಯಿಸಿದರು. ಬಳಿಕ ಮತದಾನ ಪ್ರಜಾಪ್ರಭುತ್ವದ ಹಬ್ಬವಾಗಿದ್ದು ಸಂಭ್ರಮದಿಂದ ಆಚರಿಸಬೇಕು ಎಂದು ಕರೆ ಕೊಟ್ಟರು. +ಮತದಾನ ಚುರುಕು: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಲ್ಯಾಮಿಂಗ್ಟನ್‌ ಶಾಲೆಯ ಮತಗಟ್ಟೆಯಲ್ಲಿ ಅತ್ಯಂತ ಉತ್ಸುಕತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ನಡೆಯುತ್ತಿದೆ. ಈ ವೇಳೆ ಹಿರಿಯ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. \ No newline at end of file diff --git a/eesanje/url_46_154_7.txt b/eesanje/url_46_154_7.txt new file mode 100644 index 0000000000000000000000000000000000000000..6afc80e4adefdba65ba8f6fa73523c0c7d84625c --- /dev/null +++ b/eesanje/url_46_154_7.txt @@ -0,0 +1,5 @@ +ಪ್ರಜ್ವಲ್‌ ರೇವಣ್ಣ ಇಂದು ರಾತ್ರಿ ಅಥವಾ ನಾಳೆ ಬೆಂಗಳೂರಿಗೆ ಬರುವ ನಿರೀಕ್ಷೆ +ಬೆಂಗಳೂರು, ಮೇ.7-ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್‌ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ನಗರಕ್ಕೆ ಬರುವ ನಿರೀಕ್ಷೆಯಿದೆ. ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಗೆ ತೆರಳಿದ್ದರು. +ಹೊಳೆನರಸೀಪುರ ನಗರ ಠಾಣೆಯಲ್ಲಿ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌‍ಐಟಿ ವಹಿಸಿದೆ. ಎಸ್‌‍ಐಟಿ ಅಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಂಡ ರಚಿಸಿಕೊಂಡು ತನಿಖೆ ಕೈಗೊಂಡು ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ನೋಟಿಸ್‌‍ ನೀಡಿದ್ದರು. +ಪ್ರಜ್ವಲ್‌ ಪರ ವಕೀಲರು ವಿಚಾರಣೆಗೆ ಕಾಲಾವಕಾಶ ನೀಡುವಂತೆ ಕೋರಿದ್ದರೂ ಎಸ್‌‍ಐಟಿ ಅವಕಾಶ ನೀಡಲಿಲ್ಲ. ನಂತರದಲ್ಲಿ ಲುಕ್‌ಔಟ್‌ ನೋಟಿಸ್‌‍ ನೀಡಿ, ಪ್ರಜ್ವಲ್‌ ಎಲ್ಲಿದ್ದಾರೆಂಬ ಬಗ್ಗೆ ಪತ್ತೆಕಾರ್ಯ ಮುಂದುವರೆಸಿದ್ದರು. +ಈ ನಡುವೆ ಬ್ಲೂ ಕಾರ್ನರ್‌ ನೋಟಿಸ್‌‍ ಸಹ ಪ್ರಜ್ವಲ್‌ ವಿರುದ್ಧ ಜಾರಿ ಮಾಡಿದ್ದರು.ಎಸ್‌‍ಐಟಿ ಪ್ರಜ್ವಲ್‌ ಬಂಧನಕ್ಕೆ ಸಜ್ಜಾಗಿದ್ದು, ಅವರು ನಗರಕ್ಕೆ ಬರುತ್ತಿದ್ದಂತೆ ಬಂಧಿಸಲಿದ್ದಾರೆ.ಪ್ರಜ್ವಲ್‌ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದ್ದು, ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದರೆ, ಸಿಐಡಿಯಲ್ಲಿ ಮಹಿಳೆಯೊಬ್ಬರು ಅತ್ಯಾಚಾರ ದೂರು ನೀಡಿದ್ದಾರೆ. \ No newline at end of file diff --git a/eesanje/url_46_154_8.txt b/eesanje/url_46_154_8.txt new file mode 100644 index 0000000000000000000000000000000000000000..f2bd3fa1fd08c1306b90ee9ac3ac1d82707fd9de --- /dev/null +++ b/eesanje/url_46_154_8.txt @@ -0,0 +1,15 @@ +ಬಿಜೆಪಿಯವರೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿಸಿದ್ದಾರೆ, ಇದರಲ್ಲಿ ಡಿಕೆಶಿ ಕೈವಾಡ ಇಲ್ಲ : ಶಿವರಾಮೇಗೌಡ +ಬೆಂಗಳೂರು, ಮೇ 7-ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಪೆನ್‌ಡ್ರೈವ್‌ ಬಿಡುಗಡೆ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕೈವಾಡ ಇಲ್ಲ. ಬಿಜೆಪಿಯ ನಾಯಕರ ಒತ್ತಡದಿಂದ ವಿಡಿಯೋಗಳನ್ನು ತಾನೇ ಬಹಿರಂಗ ಪಡಿಸಿದ್ದಾಗಿ ವಕೀಲ ದೇವರಾಜೇಗೌಡ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಮಾಜಿ ಸಚಿವ ಎಲ್‌.ಆರ್‌.ಶಿವರಾಮೇಗೌಡ ಸ್ಪಷ್ಟ ಪಡಿಸಿದ್ದಾರೆ. +ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇವರಾಜಗೌಡ ಹಾಗೂ ತಮ ನಡುವಿನ ಭೇಟಿ ಹಾಗೂ ಅನಂತರದ ಬೆಳವಣಿಗೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ಜೊತೆಗೆ ತಮ ಹಾಗೂ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಕೇಳಿ ಬಂದಿರುವ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. +ಪೆನ್‌ಡ್ರೈವ್‌ ಬಹಿರಂಗದ ಹಿಂದೆ ಡಿ.ಕೆ.ಶಿವಕುಮಾರ್‌ ಅವರ ಹಸ್ತಕ್ಷೇಪವಿದೆ. ಎಲ್‌.ಆರ್‌.ಶಿವರಾಮೇಗೌಡ ಅವರ ಮುಖಾಂತರ ತಮನ್ನು ಸಂಪರ್ಕಿಸಿದ್ದ ಡಿ.ಕೆ.ಶಿವಕುಮಾರ್‌ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಆಮಿಶ ತೊರಿಸಿದ್ದರು ಎಂದು ಬಿಜೆಪಿ ನಾಯಕರು ಆಗಿರುವ ದೇವರಾಜೇಗೌಡ ನಿನ್ನೆ ತುರ್ತು ಸುದ್ದಿಗೋಷ್ಟಿಯಲ್ಲಿ ಆರೋಪಿಸಿದ್ದರು. +ಇದಕ್ಕೆ ಸ್ಪಷ್ಟನೆ ನೀಡಿರುವ ಎಲ್‌.ಆರ್‌.ಶಿವರಾಮೇಗೌಡ, ತಾವು ಮತ್ತು ದೇವರಾಜೇಗೌಡ ಬಿಜೆಪಿಯಲ್ಲಿದ್ದೇವು. ಅವರು ಹೊಳೆನರಸೀಪುರದ ಅಭ್ಯರ್ಥಿ ಎಂಬ ಕಾರಣಕ್ಕೆ ಸಿಕ್ಕಾಗ ಹಾಯ್‌ ಬಾಯ್‌ ಹೇಳುತ್ತಿದ್ದೆ. ನಾಲ್ಕು ದಿನಗಳ ಹಿಂದಷ್ಟೆ ಅವರ ಜೊತೆ ಮಾತನಾಡಿದ್ದು ಬಿಟ್ಟರೆ, ಅದಕ್ಕೂ ಮೊದಲು ಹೆಚ್ಚಿನ ಪರಿಚಯ ಇರಲಿಲ್ಲ ಎಂದರು. +ತಮ್ಮ ಮನೆಯಲ್ಲಿ ಎಂದಿನಂತೆ ಜನರನ್ನು ಭೇಟಿ ಮಾಡುವ ವೇಳೆ ಹೊಳೆನರಸೀಪುರದವರು ಬಂದಿದ್ದರು. ಅವರು ನಮ್ಮ ದೇವರಾಜೇಗೌಡರು ನಿಮ್ಮನ್ನು ಕೇಳುತ್ತಿದ್ದರು ಎಂದು ಹೇಳಿದರು. ವಿಡಿಯೋ ಬಹಿರಂಗದ ಬಗ್ಗೆ ನನಗೂ ಕುತೂಹಲ ಇತ್ತು. ಹಾಗಾಗಿ ಕರೆ ಮಾಡಿಕೊಡುವಂತೆ ಹೊಳೆನರಸೀಪುರದವರ ಬಳಿ ಹೇಳಿದ್ದೆ. ಫೋನ್‌ನಲ್ಲಿ ಸಂಪರ್ಕಕ್ಕೆ ಸಿಕ್ಕ ದೇವರಾಜೇಗೌಡರಿಗೆ ನಿಮ್ಮ ಆಸೆ ಈಡೇರಿತ್ತಲ್ಲ, ಎರಡು ವರ್ಷದ ನಿಮ್ಮ ಹೋರಾಟ ಯಶಸ್ವಿಯಾಯಿತಲ್ಲ. ಕೊನೆಗೂ ಹೋರಾಟವನ್ನು ಒಂದು ಹಂತಕ್ಕೆ ತಂದು ಬಿಟ್ಟಿರಿ ಎಂದು ನಾನು ಹೇಳಿದ್ದೆ. +ಆಗ ನಾನು ತುಂಬ ಕಷ್ಟದಲ್ಲಿದ್ದೇನೆ. ನಿಮನ್ನು ಭೇಟಿ ಮಾಡಬೇಕು ಎಂದು ದೇವರಾಜ್‌ಗೌಡ ಕೇಳಿಕೊಂಡರು. ನಾನು ಬ್ಯೂಸಿ ಇದ್ದೇನೆ, ಸದ್ಯಕ್ಕೆ ಭೇಟಿ ಸಾಧ್ಯವಿಲ್ಲ ಎಂದು ಹೇಳಿದ್ದೆ. ನಾನು ಪ್ರಮೀಳಾ ನೇಸರ್ಗಿ ಅವರ ಕಚೇರಿಯಲ್ಲಿ ಕಿರಿಯ ವಕೀಲನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರಾಜೇಗೌಡ ಹೇಳಿದರು. ಪ್ರಮೀಳಾ ಮೇಡಂ ತಮಗೆ ಹಳೇ ವಕೀಲರು, ಇವತ್ತು ಮೂರು ಗಂಟೆಗೆ ಎಂ.ಜಿ.ರಸ್ತೆ ಬರುತ್ತೇನೆ, ಅಲ್ಲಿಗೆ ಬಾ ಸಿಗುತ್ತೇನೆ ಎಂದು ನಾನು ಹೇಳಿದ್ದೆ. ಅದರಂತೆ ನಾವು ಎಂ.ಜಿ.ರಸ್ತೆಯಲ್ಲಿ ಭೇಟಿಯಾದವು ಎಂದು ವಿವರಿಸಿದ್ದಾರೆ. +ಆ ವೇಳೆ ದೇವರಾಜೇಗೌಡ ತಮ್ಮ ಕಷ್ಟಗಳನ್ನು ಹೇಳಿಕೊಂಡರು. ಬಿಜೆಪಿಯ ಎಲ್ಲಾ ಮುಖಂಡರು ವಿಡಿಯೋ ಬಹಿರಂಗ ಪಡಿಸುವಂತೆ ಬಲವಂತ ಮಾಡಿದ್ದರು. ಅದಕ್ಕಾಗಿ ನಾನೇ ಬಿಡುಗಡೆ ಮಾಡಿದ್ದೆ. ಅದಕ್ಕೆ ಕುಮಾರಸ್ವಾಮಿಯವರ ಒಪ್ಪಿಗೆಯೂ ಇತ್ತು ಎಂದು ದೇವರಾಜೇಗೌಡ ನನ್ನ ಬಳಿ ಹೇಳಿಕೊಂಡರು. ನಾನು ವಿಡಿಯೋ ಬಿಡುಗಡೆ ಮಾಡಿದ ಮೇಲೆ ಸಾಕಷ್ಟು ಬೆಳವಣಿಗೆಯಾಗಿದೆ. +ವ್ಯಾಪಕ ಚರ್ಚೆಯಾಗುತ್ತಿದೆ. ಒಮೆ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿಸಿ ಎಂದು ಅವರು ಕೇಳಿಕೊಂಡರು. ದೇವರಾಜಗೌಡ ಕೂಡ ಯುವ ಕಾಂಗ್ರೆಸ್‌‍ನಲ್ಲಿದ್ದರಂತೆ, ಆಗ ಡಿ.ಕೆ.ಶಿವಕುಮಾರ್‌ ಬೆಂಬಲ ನೀಡಲಿಲ್ಲ ಎಂಬ ಆಕ್ಷೇಪವನ್ನು ವ್ಯಕ್ತ ಪಡಿಸಿದ್ದರು. ಆಗಿದ್ದು ಆಗಿ ಹೋಯಿತು ಬಿಡಿ ಎಂದು ನಾನು ಸಮಾಧಾನ ಮಾಡಿದ್ದೆ. ನಮ ಮಾತುಕತೆ ವೇಳೆಗೆ ಡಿ.ಕೆ.ಶಿವಕುಮಾರ್‌ ಬೇರೆ ಊರಿನ ಪ್ರವಾಸದಲ್ಲಿದ್ದರು. ದೇವರಾಜೇಗೌಡ ರಾತ್ರಿ ಏಳು ಗಂಟೆಯವರೆಗೂ ತಮ ಜೊತೆಯಲ್ಲಿ ತಿಂಡಿ ತಿಂದುಕೊಂಡು ತಿರುಗಾಡಿಕೊಂಡಿದ್ದರು. ಆ ಬಳಿಕ ಹೋದರು. ಆ ಕ್ಷಣದಲ್ಲಿ ಅವರ ಚಟುವಟಿಕೆ ನೋಡಿದರೆ ಪ್ರಜ್ವಲ್‌ ರೇವಣ್ಣನಿಗಿಂತ ದೊಡ್ಡ ಮನೋರೋಗಿ ಎನಿಸಿತ್ತು ಎಂದು ದೂರಿದ್ದರು. +ತಮ ಮೊಬೈಲ್‌ ಅನ್ನು ಗುಪ್ತಚರ ಇಲಾಖೆಯವರು ಟಾಪ್‌ ಮಾಡುತ್ತಿದ್ದಾರೆ ಎಂದು ಆತ ವಾಕಿಟಾಕಿ ಬಳಸುತ್ತಿದ್ದಾರೆ. ಹೋರಾಟ ಮಾಡುವ ನೀನು ಹುಷಾರು ಎಂದು ನಾನು ಕಾಳಜಿಯಿಂದ ಹೇಳಿದ್ದೆ. ರಾತ್ರಿ 11ಗಂಟೆಗೆ ಎಂದಿನಂತೆ ನಾನು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಆರಂಭದಲ್ಲಿ ದೇವರಾಜೇಗೌಡ ನಿಮ ಬಳಿ ಮಾತನಾಡಬೇಕಂತೆ ಮಾತನಾಡುತ್ತೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಕೇಳಿದೆ. +ಅವರು ಬೇಡ ಎಂದರು, ನಾನೇಕೆ ಅವರ ಜೊತೆ ಮಾತನಾಡಬೇಕು ಎಂದು ಅವರು ಹೇಳಿದರು. ನಾನೇ ಬಲವಂತ ಮಾಡಿ ಒಪ್ಪಿಸಿದೆ. ಸರಿ ಕರೆ ಮಾಡಿಕೊಡಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಆ ವೇಳೆಗೆ ದೇವರಾಜೇಗೌಡ ದೂರದಲ್ಲಿದ್ದೇನೆ ಬರಲು ತಡವಾಗುತ್ತದೆ ಎಂದು ಹೇಳಿದ್ದರು. ಫೋನ್‌ನಲ್ಲೇ ಮಾತನಾಡಿ ಎಂದು ಡಿ.ಕೆ.ಶಿವಕುಮಾರ್‌ ಕೈಗೆ ಫೋನ್‌ ಕೊಟ್ಟೆ. ಡಿ.ಕೆ.ಶಿವಕುಮಾರ್‌ ಬಳಿಯೂ ದೇವರಾಜ್‌ಗೌಡ ಫೋನ್‌ನಲ್ಲಿ ಎರಡು ಮೂರು ಮಂದಿ ಸಂತ್ರಸ್ಥರ ಬಗ್ಗೆ ವಿವರಣೆ ನೀಡುತ್ತಿದ್ದರು. +ಅದನ್ನೇಲ್ಲಾ ಕೇಳಲು ನಿರಾಕರಿಸಿದ ಡಿ.ಕೆ.ಶಿವಕುಮಾರ್‌ ಎಸ್‌‍ಐಟಿ ರಚನೆ ಮಾಡಿದ್ದೇವೆ. ಏನೇ ಇದ್ದರೂ ತನಿಖಾಧಿಕಾರಿಗಳ ಮುಂದೆ ಹೇಳಿ ಎಂದು ಫೋನ್‌ ಕಟ್‌ ಮಾಡಿದ್ದರು ಎಂದು ಶಿವರಾಮೇಗೌಡ ವಿವರಿಸಿದ್ದಾರೆ. +ಡಿ.ಕೆ.ಶಿವಕುಮಾರ್‌ಗೂ ಇದಕ್ಕೂ ಸಂಬಂಧ ಇಲ್ಲ, ದೇವರಾಜೇಗೌಡನನ್ನೂ ಕರೆದುಕೊಂಡು ಬಾ ಎಂದು ನನ್ನ ಬಳಿ ಅವರು ಹೇಳಿರಲಿಲ್ಲ. ಇಷ್ಟು ಕೆಳಮಟ್ಟದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ಡಿ.ಕೆ.ಶಿವಕುಮಾರ್‌ ಮಾತನಾಡಿರುವ ಆಡಿಯೋ ಇದ್ದರೆ ಪೂರ್ತಿ ಬಹಿರಂಗ ಮಾಡಲಿ. ರಾಜಕೀಯಕ್ಕಾಗಿ ಸ್ಟಂಟ್‌ ಮಾಡುವುದು ಬೇಡ ಎಂದು ಶಿವರಾಮೇಗೌಡ ಸವಾಲು ಹಾಕಿದರು. +ಡಿ.ಕೆ.ಶಿವಕುಮಾರ್‌ ಮಾತನಾಡಿರುವ ಕಾಲ್‌ ಅನ್ನು ದೇವರಾಜೇಗೌಡ ರೆಕಾರ್ಡ್‌ ಮಾಡಿಕೊಳ್ಳುವುದು ನನಗೆ ಗೊತ್ತಿರಲಿಲ್ಲ. ವಕೀಲ ಎಂಬ ಗೌರವದಿಂದ ನಾನು ಮಾತನಾಡಿದ್ದೆ, ಈ ರೀತಿ ಮಾಡುತ್ತಾರೆ ಎಂಬ ಮಾಹಿತಿ ಇದಿದ್ದರೆ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿರಲಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು. +ಹಾಸನದ ಪ್ರಕರಣ ವಿಶ್ವದಲ್ಲೇ ದೊಡ್ಡ ಹಗರಣ, ಅದರ ವಿರುದ್ಧ ದೇವರಾಜೇಗೌಡ ಎರಡು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ, ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಈಗ ಬೇರೆಯವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು. \ No newline at end of file diff --git a/eesanje/url_46_154_9.txt b/eesanje/url_46_154_9.txt new file mode 100644 index 0000000000000000000000000000000000000000..43140c26cef802c13bde1c652fa722d0a09c5c41 --- /dev/null +++ b/eesanje/url_46_154_9.txt @@ -0,0 +1,4 @@ +ಕಲಿತವರು, ತಿಳಿದವರೇ ಮತದಾನಕ್ಕೆ ಹಿಂದೇಟು ಹಾಕುತ್ತಿದ್ದಾರೆ : ಹೊರಟ್ಟಿ +ಹುಬ್ಬಳ್ಳಿ, ಮೇ 7-ಪ್ರಜಾಪ್ರಭುತ್ವದಲ್ಲಿ ಕಲಿತವರು, ತಿಳಿದವರೇ ಕಡ್ಡಾಯ ಮತದಾನ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಈ ಬಗ್ಗೆ ಕೇಂದ್ರ ಚುನಾವಣೆ ಆಯೋಗ ಮುಂದಾಗಬೇಕೆಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. +ನಗರದ ಲ್ಯಾಮಿಂಗ್ಟನ್‌ ರಸ್ತೆಯಲ್ಲಿನ ಮತಗಟ್ಟೆ ಸಂಖ್ಯೆ 119ಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಅವರು ಮತದಾನ ಮಾಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತವನ್ನು ಚಲಾವಣೆ ಮಾಡಿದ್ದೇನೆ. ಆದರೆ ಬಹಳಷ್ಟು ಜನರು ಮತದಾನ ಮಾಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ಈ ಚುನಾವಣೆ ಕೇವಲ ಟೀಕೆ ಟಿಪ್ಪಣಿಗಳಿಗೆ ಸೀಮಿತವಾಗಿದೆ. ಜನರ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಅಸಮಾಧಾನಗೊಂಡರು. \ No newline at end of file diff --git a/eesanje/url_46_155_1.txt b/eesanje/url_46_155_1.txt new file mode 100644 index 0000000000000000000000000000000000000000..6cc9e2d86b7b48008ac2c747c945c475567b555a --- /dev/null +++ b/eesanje/url_46_155_1.txt @@ -0,0 +1,5 @@ +ದೇವರಾಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌‍ ದಾಖಲಿಸುತ್ತೇನೆ : ಶ್ರೇಯಸ್‌‍ ಪಟೇಲ್‌ +ಹಾಸನ, ಮೇ 7-ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಾಗೂ ನಮ್ಮ ನಾಯಕರು ಮೇಲೆ ಸುಳ್ಳಿನ ಮಳೆ ಸುರಿಸುತ್ತಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ದೇವರಾಜೇಗೌಡ ಅವರು ಹೇಳಿರುವುದು ಶುದ್ದಸುಳ್ಳು. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. +ನಾನು ಯಾರನ್ನು ಭೇಟಿ ಮಾಡಿಲ್ಲ. ಒಂದು ವೇಳೆ ನಾನು ಭೇಟಿ ಮಾಡಿದ್ದೇನೆ ಎಂಬ ಸಂಶಯವಿದ್ದರೆ, ಸ್ಕೈಬರ್ಡ್‌ ಹೋಟೆಲ್‌ನಲ್ಲಿ ಸಿಸಿಟಿವಿ ವಿಡಿಯೋ ಇದೆ ಪರಿಶೀಲನೆ ನಡೆಸಲಿ ಎಂದು ಕಿಡಿಕಾರಿದರು.ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಹಾಸನ, ಹೊಳೆನರಸೀಪುರದಲ್ಲಿ ಬಹಿರಂಗವಾಗಿ ಚರ್ಚೆಗೆ ಬರಲಿ. ಅದರಲ್ಲಿ ನನ್ನ ಪಾತ್ರ ಇದೆ ಎಂದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರು. +ದೇವರಾಜೇಗೌಡ ಅವರು ಎಸ್‌‍ಐಟಿ ತನಿಖೆ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಬಿಜೆಪಿ, ಜೆಡಿಎಸ್‌‍, ಕಾಂಗ್ರೆಸ್‌‍ ಯಾವ ಪಕ್ಷದಲ್ಲಿ ಇದ್ದಾರೆ. ಈ ಪ್ರಕರಣ ಸರಿಯಾಗಿ ತನಿಖೆ ನಡೆಯಬೇಕು.ದೇವರಾಜೇ ಗೌಡ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್‌‍ ದಾಖಲಿಸುತ್ತೇನೆ. ಈಗಾಗಲೇ ವಕೀಲರ ಜೊತೆ ಮಾತನಾಡಿದ್ದೇನೆ. ನಾನು ಯಾವುದೇ ಕಳಂಕ ಬರುವ ಕೆಲಸ ಮಾಡಿಲ್ಲ. ದೇವರಾಜೇಗೌಡ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. +ಪೆನ್‌ಡ್ರೈವ್‌ ವಿಚಾರ ಮಾತನಾಡಲು ಅಸಹ್ಯ ಆಗುತ್ತೆ, ನಾನು ಸುಸಂಸ್ಕೃತ ಕುಟುಂಬದಿಂದ ಬಂದವನು. ಅಕ್ಕ-ತಂಗಿಯರ ಜೊತೆ ಬೆಳೆದವನು. ಈ ಕೊಚ್ಚೆ ರಾಜಕಾರಣಕ್ಕೆ ದೇವರಾಜೇಗೌಡ ಕಾರಣ. ಎಸ್‌‍ಐಟಿ ದಿಕ್ಕು ತಪ್ಪಿಸಲು ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_155_10.txt b/eesanje/url_46_155_10.txt new file mode 100644 index 0000000000000000000000000000000000000000..21614a4a688402e7b9dc49e762286a823338978f --- /dev/null +++ b/eesanje/url_46_155_10.txt @@ -0,0 +1,5 @@ +108 ಆ್ಯಂಬುಲೆನ್ಸ್ ಚಾಲಕರಿಗೆ ವೇತನ ನೀಡಿದ ಸರ್ಕಾರಕ್ಕೆ ಕುಟುಕಿದ ಜೆಡಿಎಸ್‌ +ಬೆಂಗಳೂರು,ಮೇ 6-ರಾಜ್ಯದ 108 ಆ್ಯಂಬುಲೆನ್ಸ್ ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರಿಗೆ ವೇತನ ಕೊಡಿಸುವಂತೆ ಜೆಡಿಎಸ್‌ ಆಗ್ರಹಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಾ ರಾಜ್ಯದ ಒಬ್ಬನೇ ಒಬ್ಬ ಸರ್ಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಗುಡುಗಿದ್ದರು ಎಂದಿದೆ. +ಸಿದ್ದರಾಮಯ್ಯ ಅವರೇ ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆ್ಯಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ ಎಂದು ಆಗ್ರಹಿಸಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ ಎಂದು ಟೀಕಿಸಿದೆ. +•ರಾಜ್ಯ@INCKarnatakaಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು…../ +ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆ ಎನ್ನುವ ಇವರಿಗೆ 108 ಆ್ಯಂಬುಲೆನ್‌್ಸ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ. ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. ಮೂರು ತಿಂಗಳಿನಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದೆ. \ No newline at end of file diff --git a/eesanje/url_46_155_11.txt b/eesanje/url_46_155_11.txt new file mode 100644 index 0000000000000000000000000000000000000000..970c4846e2b818735d1e29a0124a47a6da2786c2 --- /dev/null +++ b/eesanje/url_46_155_11.txt @@ -0,0 +1,4 @@ +ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಕಂಟ್ರೋಲ್‌ ರೂಂ ಸ್ಥಾಪನೆ +ಬೆಂಗಳೂರು,ಮೇ 6-ವಿಧಾನಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು, ಸಾರ್ವಜನಿಕರು, ಸಂಘ ಸಂಸ್ಥೆಗಳು ತಮ್ಮ ದೂರು, ಕುಂದು ಕೊರತೆಗಳನ್ನು ಸಲ್ಲಿಸಲು ಅನುಕೂಲವಾಗುವಂತೆ ದೂರು ನಿವಾರಣಾ ಕೇಂದ್ರವನ್ನು ತೆರೆಯಲಾಗಿದೆ. +ಸಹಾಯವಾಣಿ ಸಂಖ್ಯೆ 080 – 22211106 ಅಥವಾ ಇ-ಮೇಲ್‌ .@. ಮೂಲಕ ಸಲ್ಲಿಸಬಹುದಾಗಿದೆ. ಅಲ್ಲದೆ ಸಾಮಾಜಿಕ ಜಾಲಾತಣಾಗಳಾದ , , , ನಲ್ಲೂ ದೂರು ಸಲ್ಲಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿ ಕಾರಿಗಳ ಪ್ರಕಟಣೆ ತಿಳಿಸಿದೆ. +ನಗರ ಜಿಲ್ಲಾ ವ್ಯಾಪ್ತಿಯ ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ, ಆನೆಕಲ್‌ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ದೂರು ಮತ್ತು ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಲು ನಗರದ ಕೆ.ಜಿ.ರಸ್ತೆಯಲ್ಲಿರುವ ಜಿಲ್ಲಾಧಿ ಕಾರಿಗಳ ಕಚೇರಿ ಆವರಣದ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘದ ಕಟ್ಟಡದ 2ನೇ ಮಹಡಿಯಲ್ಲಿ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂ ಅನ್ನು ಸಂಪರ್ಕಿಸಬಹುದಾಗಿದೆ. \ No newline at end of file diff --git a/eesanje/url_46_155_12.txt b/eesanje/url_46_155_12.txt new file mode 100644 index 0000000000000000000000000000000000000000..1dd5912b70ba7fa312e2619d70acfe0b422e2109 --- /dev/null +++ b/eesanje/url_46_155_12.txt @@ -0,0 +1,6 @@ +ರೇವಣ್ಣ ಪ್ರಕರಣ : ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದಿಂದ ಮಾಹಿತಿ ಪಡೆದುಕೊಂಡ ಸಿಎಂ +ಬೆಂಗಳೂರು,ಮೇ 6-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಎಸ್‌ಐಟಿ ತಂಡದ ಪ್ರಮುಖರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. +ಕಳೆದ ಎರಡು ದಿನಗಳ ಹಿಂದೆ ರೇವಣ್ಣ ಅವರನ್ನು ಪೊಲೀಸರು ಅಪಹರಣ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿಸಿದರು. ಪ್ರಸ್ತುತ ರೇವಣ್ಣ ಎಸ್‌ಐಟಿ ಅಧಿಕಾರಿಗಳ ವಶದಲ್ಲಿದ್ದಾರೆ. ಹಾಸನದಲ್ಲಿ ನಡೆದಿದೆ ಎಂದು ಹೇಳಲಾದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಸದ ಪ್ರಜ್ವಲ್‌ ರೇವಣ್ಣ ಈವರೆಗೂ ಪತ್ತೆಯಾಗಿಲ್ಲ. ಅವರು ವಿದೇಶದಲ್ಲಿರಬಹುದು ಎಂಬ ವದಂತಿಗಳಿವೆ. ಈ ಹಿನ್ನೆಲೆಯಲ್ಲಿ ಇಂದು ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಪ್ರಜ್ವಲ್‌ನನ್ನು ವಶಕ್ಕೆ ಪಡೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಕಳೆದ ಶನಿವಾರ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್‌ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದರು. ಅದರ ಬಳಿಕ ರೇವಣ್ಣ ಅವರ ಬಂಧನವಾಗಿತ್ತು. ವಿದೇಶದಲ್ಲಿದ್ದಾರೆ ಎಂದು ಹೇಳಲಾದ ಪ್ರಜ್ವಲ್‌ ರೇವಣ್ಣ ಅವರ ಮಾಹಿತಿ ಪಡೆದುಕೊಳ್ಳುವ ಸಲುವಾಗಿ ಸಿಬಿಐ ಮೂಲಕ ಇಂಟರ್‌ಪೋಲ್‌ನಿಂದ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಲಾಗಿದೆ. +ಮೂಲಗಳ ಪ್ರಕಾರ, ಬ್ಲೂ ಕಾರ್ನರ್‌ ನೋಟಿಸ್‌ ಸಕ್ರಿಯವಾದ ಬಳಿಕ ಪ್ರಜ್ವಲ್‌ ರೇವಣ್ಣ ಅವರ ನಿಖರ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೇರಿದಂತೆ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಪ್ರಕರಣದ ತನಿಖೆಯ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. +ನಿಷ್ಪಕ್ಷಪಾತ ಹಾಗೂ ಕಾನೂನಾತ್ಮಕವಾಗಿ ತನಿಖೆ ನಡೆಯಬೇಕು. ತಪ್ಪಿತಸ್ಥರು ತಪ್ಪಿಸಿಕೊಳ್ಳಲು ಅವಕಾಶವಾಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಪ್ರಭಾವ ಹಾಗೂ ಒತ್ತಡಕ್ಕೆ ಮಣಿಯದೆ ಸಾಕ್ಷ್ಯ ಹಾಗೂ ಪುರಾವೆ ಆಧಾರದ ಮೇಲೆ ತನಿಖೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಯವರ ಸಭೆಯ ಬಳಿಕ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧದ ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ. \ No newline at end of file diff --git a/eesanje/url_46_155_2.txt b/eesanje/url_46_155_2.txt new file mode 100644 index 0000000000000000000000000000000000000000..02db968a5a777307d01a8d59d13bd52abccb0ecd --- /dev/null +++ b/eesanje/url_46_155_2.txt @@ -0,0 +1,7 @@ +ಬೆಂಗಳೂರಿನಲ್ಲಿ ರಾರಾಜಿಸಿದ ಲುಲು ಕುಮಾರ, ಬೋಸು ಡಿಕೆ, ಪಿಂಪ್‌, ರಾಜಕೀಯ ವ್ಯಭಿಚಾರಿ ಪೋಸ್ಟರ್‌ಗಳು +ಬೆಂಗಳೂರು,ಮೇ7-ವಿಧಾನಸಭೆ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪೇ ಸಿಎಂ ಅಭಿಯಾನ ನಡೆಸಿದ್ದ ಕಾಂಗ್ರೆಸ್‌ ಮೇಲೆ ಇದೀಗ ಅದರ ತಂತ್ರವೇ ತಿರುಮಂತ್ರವಾಗಿ ಪರಿಣಮಿಸಿದೆ. ಏಕೆಂದರೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಆಡಿಯೋ ಆಚೆ ಬರಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಕಾರಣ ಎಂದು ವಕೀಲ ದೇವರಾಜೇಗೌಡ ಆರೋಪಿಸಿದ ಬೆನ್ನಲ್ಲೇ ಈಗ ಬೆಂಗಳೂರಿನಲ್ಲಿ ಪೋಸ್ಟರ್‌ಗಳು ಎಲ್ಲೆಡೆ ರಾಜಾಜಿಸುತ್ತಿವೆ. +ನಗರದ ಅನೇಕ ಕಡೆ ರಾತ್ರೋರಾತ್ರಿ ಕೆಲವರು ಪೋಸ್ಟರ್‌ಗಳನ್ನು ಅಂಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಟೀಕೆಗಳ ಸುರಿಮಳೆಗೈಯ್ಯಲಾಗಿದೆ. +ಬಸವೇಶ್ವನಗರ, ರಾಜಾಜಿನಗರ, ಸದಾಶಿವನಗರ ಸೇರಿದಂತೆ ಅನೇಕ ಕಡೆ ಸುಮಾರು 15ಕ್ಕೂ ಹೆಚ್ಚು ಪೋಸ್ಟರ್‌ಗಳನ್ನು ಅಂಟಿಸಿ ಸಿಎಂ ಮತ್ತು ಡಿಸಿಎಂ ವಿರುದ್ದ ಗಂಭೀರ ಆರೋಪಗಳನ್ನು ಮಾಡಲಾಗಿದೆ.ಒಂದು ಪೋಸ್ಟರ್‌ನಲ್ಲಿ ಡಿ.ಕೆ.ಶಿವಕುಮಾರ್‌ ಹೋಲುವ ಭಾವಚಿತ್ರವನ್ನು ಅಂಟಿಸಿ ರಾಜಕೀಯಕ್ಕಾಗಿ ಫೋಟೋವನ್ನೇ ಮಾರಾಟಕ್ಕಿಟ್ಟ ಲುಲು ಕುಮಾರ ಎಂದು ಆರೋಪಿಸಲಾಗಿದೆ. +ಮತ್ತೊಂದು ಪೋಸ್ಟರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೂ ನೀವು ಎಚ್ಚೆತ್ತುಕೊಳ್ಳದಿದ್ದರೆ ಮುಂದೊಂದು ದಿನ ಈ ಮಹಾನುಭಾವ ನಿಮ್ಮ ಸಿ.ಡಿಯನ್ನು ಆಚೆ ತರಲು ಹಿಂದೆಮುಂದೆ ನೋಡುವುದಿಲ್ಲ ಎಂದು ಬರಹದಲ್ಲಿ ಎಚ್ಚರಿಸಲಾಗಿದೆ. +ಹೆಣ್ಣುಮಕ್ಕಳ ಫೋಟೊ ಬಳಸಿ ರಾಜಕೀಯ ಬೋಸು ಡಿಕೆ ನಾನು ಎಂದು ಆರೋಪಿಸಲಾಗಿದೆ. ಹುಡುಗಿಯರನ್ನು ಸಪ್ಲೈ ಮಾಡುವವನು ಪಿಂಪ್‌, ಹುಡುಗಿಯರ ವ್ಯಾಪಾರ ಮಾಡುವವನು ಪಿಂಪ್‌, ಹುಡುಗಿಯರ ಕಳುಹಿಸಿ ಹನಿಟ್ರಾಪ್‌ ಮಾಡುವವನು ಪಿಂಪ್‌. ಇವರೆಲ್ಲ ಪಿಂಪ್‌ ಆದ ಮೇಲೆ ಹುಡುಗಿಯರ ವಿಡಿಯೋವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುವವನು ಏನು? ಅವನು ಪಿಂಪ್‌ ಅಷ್ಟೇ ಎಂದು ದೂರಲಾಗಿದೆ. +ಹೆಣ್ಣು ಮಕ್ಕಳ ಫೋಟೋಗಳನ್ನು ರಾಜಕೀಯಕ್ಕಾಗಿ ಬಳಸಿಕೊಂಡ ರಾಜಕೀಯ ವ್ಯಭಿಚಾರಿ ಡಿ.ಕೆ.ಶಿವಕುಮಾರ್‌ ಎಂದು ಪೋಸ್ಟರ್‌ನಲ್ಲಿ ಹಾಕಲಾಗಿದೆ. ಹೀಗೆ ಅನೇಕ ಪೋಸ್ಟರ್‌ಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರ ಬಗ್ಗೆ ಕೆಲವು ಅನಾಮಧೇಯ ವ್ಯಕ್ತಿಗಳು ಗಂಭೀರವಾದ ಆರೋಪಗಳನ್ನು ಮಾಡಿದ್ದಾರೆ. \ No newline at end of file diff --git a/eesanje/url_46_155_3.txt b/eesanje/url_46_155_3.txt new file mode 100644 index 0000000000000000000000000000000000000000..698363bd064aa415827908853770ece9cd058820 --- /dev/null +++ b/eesanje/url_46_155_3.txt @@ -0,0 +1,7 @@ +ಸಿದ್ದರಾಮಯ್ಯ-ಪರಮೇಶ್ವರ್‌ ಅವರ ಸಿ.ಡಿ ಬಂದರೂ ಅಚ್ಚರಿಯಿಲ್ಲ : ರಮೇಶ್‌ ಜಾರಕಿಹೊಳಿ +ಬೆಳಗಾವಿ,ಮೇ7-ತಕ್ಷಣವೇ ಎಚ್ಚೆತ್ತುಕೊಳ್ಳದಿದ್ದೆ ಮುಂದೊಂದು ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿ ಇಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. +ತಮ್ಮ ತವರು ಕ್ಷೇತ್ರ ಗೋಕಾಕ್‌ನಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಾನು ಸದ್ಯದಲ್ಲೇ ಸಿ.ಡಿ ಬಿಡುಗಡೆಯಾಗುತ್ತದೆ ಎಂದು ಹೇಳಿದ್ದೆ. ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದಾಗ ನನ್ನ ಮಾತು ನಂಬಿರಲಿಲ್ಲ. ಈಗ ಏನಾಗಿದೆ ಎಂದು ಪ್ರಶ್ನಿಸಿದರು. +ರಾಜಕಾರಣದಲ್ಲಿ ಈಗ ಸೈದ್ಧಾಂತಿಕ ಹೋರಾಟ ಮುಗಿದು ಹೋಗಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ತುಳಿಯುವವರೇ ಜಾಸ್ತಿಯಾಗಿದೆ. ಸಿ.ಡಿ, ಪೆನ್‌ಡ್ರೈವ್‌ ಪ್ರಕರಣಗಳು ಯಾವುದು ಒಳ್ಳೆಯದಲ್ಲ. ಇದನ್ನು ಪಕ್ಷಾತೀತವಾಗಿ ಇಲ್ಲಿಗೆ ಮುಗಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್‌ ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿಪಡುವಂಥದ್ದು ಏನೂ ಇಲ್ಲ ಎಂದು ಹೇಳಿದರು. +ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಆಚೆ ಬಂದಿದ್ದರ ಹಿಂದೆ ನಾನು ಮೊದಲ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂದು ಹೇಳಿದ್ದೆ. ನನ್ನ ಮಾತನ್ನು ಯಾರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿರುವ ಆಡಿಯೋ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು. +ಈಗಲೂ ನಾನು ಸ್ಪಷ್ಟವಾಗಿ ಹೇಳುತ್ತೇನೆ. ಇದರ ಸೂತ್ರಧಾರ ಡಿ.ಕೆ.ಶಿವಕುಮಾರ್‌ ಎಂಬುದರಲ್ಲಿ ಎರಡು ಮಾತಿಲ್ಲ. ತನಗೆ ಆಗದವರನ್ನು ಈ ರೀತಿ ಬಳಸಿಕೊಂಡು ಚಾರಿತ್ರ್ಯಹರಣ ಮಾಡುವುದು ಅವರಿಗೆ ಮೊದಲಿನಿಂದಲೂ ಅಭ್ಯಾಸವಿದೆ ಎಂದು ವಾಗ್ದಾಳಿ ನಡೆಸಿದರು.ನನ್ನ ಪ್ರಕರಣದಲ್ಲೂ ಡಿ.ಕೆ.ಶಿವಕುಮಾರ್‌ ನೇರ ಶಾಮೀಲಾಗಿದ್ದವರು. ಅದಕ್ಕೆ ನಮ್ಮವರು ಕೂಡ ಕೈಜೋಡಿಸಿದ್ದಾರೆ. ಜೂ.4ರ ನಂತರ ನಾನು ಕೆಲವು ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಅಲ್ಲಿಯವರೆಗೂ ಕಾದು ನೋಡಿ ರಮೇಶ್‌ ಜಾರಕಿಹೊಳಿ ಕುತೂಹಲ ಹುಟ್ಟಿಸಿದರು. +ನಾನು ಸುಖಾಸುಮ್ಮನೆ ಯಾರ ಬಗ್ಗೆಯೂ ಆಧಾರರಹಿತ ಆರೋಪ ಮಾಡುವುದಿಲ್ಲ. ರಾಜಕಾರಣದಲ್ಲಿ ಜನರ ಬಳಿ ಹೋಗಿ ಹೋರಾಟ ನಡೆಸಿ ಜನನಾಯಕನಾಗಬೇಕು. ಅದನ್ನು ಬಿಟ್ಟು ಪೆನ್‌ ಡ್ರೈವ್‌, ಸಿ.ಡಿ ಇಟ್ಟುಕೊಂಡು ಬ್ಲಾಕ್‌ಮೇಲ್‌ ಮಾಡುವುದರಿಂದ ನಾಯಕನಾಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_155_4.txt b/eesanje/url_46_155_4.txt new file mode 100644 index 0000000000000000000000000000000000000000..673611884aa50c367d5db514bafc8f7cb4bbc3e4 --- /dev/null +++ b/eesanje/url_46_155_4.txt @@ -0,0 +1,6 @@ +ಸದ್ಯದಲ್ಲೇ ಮತ್ತೊಂದು ಸಿ.ಡಿ ಫ್ಯಾಕ್ಟರಿ ಬಹಿರಂಗವಾಗಲಿದೆ : ಯತ್ನಾಳ್‌ ಬಾಂಬ್ +ಬಿಜಾಪುರ,ಮೇ7-ಸದ್ಯದಲ್ಲೇ ಮತ್ತೊಂದು ಸಿ.ಡಿ ಫ್ಯಾಕ್ಟರಿ ರಾಜ್ಯದಲ್ಲಿ ಬಹಿರಂಗವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿ.ಡಿ ಯಾರಿಗೆ ಸಂಬಂಧಿಸಿದ್ದು, ಅದರ ಹಿಂದೆ ಯಾರಿದ್ದಾರೆ ಎಂಬ ವಿವರವನ್ನು ಮಾತ್ರ ಬಹಿರಂಗಪಡಿಸದೆ ಕುತೂಹಲ ಕೆರಳಿಸಿದರು. +ಒಂದು ಕಡೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಯತ್ನಾಳ್‌ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ. +ಲೋಕಸಭೆ ಚುನಾವಣೆಯಲ್ಲಿ ಬಿಜಾಪುರದಲ್ಲಿ ತಮ್ಮ ಹಕ್ಕು ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದನ್ನು ಬಾಯಿ ಚಪಲಕ್ಕೆ ಇಲ್ಲವೇ ಪ್ರಚಾರಕ್ಕೆ ಹೇಳುವುದಿಲ್ಲ. ಹಿಂದೆಯೇ ನಾನು ಸಿ.ಡಿ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದೆ. ಆದರೆ ಯಾರದ್ದು ಎಂದು ಹೇಳಿರಲಿಲ್ಲ. ನನ್ನ ಮಾತು ಈಗ ನಿಜವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡರು. +ಪ್ರಜ್ವಲ್‌ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೈವಾಡವಿದೆ ಎಂದು ಆರೋಪಿಸಿದ ಅವರು, ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್‌ ಅವರ ಕೈವಾಡ ಇರುವುದು ಸ್ಪಷ್ಟ ಎಂದರು. +ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿಯು ಡಿ.ಕೆ.ಶಿವಕುಮಾರ್‌ ವಶದಲ್ಲಿದೆ. ಅದು ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್‌ ದೂರಿದರು.ಪ್ರಜ್ವಲ್‌ ಪ್ರಕರಣ ಉತ್ತರ ಕರ್ನಾಟಕ ಭಾಗದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ 2019ರ ಚುನಾವಣೆಯಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೆವು. ಈ ಭಾಗದಲ್ಲಿ ಜೆಡಿಎಸ್‌ ಅಷ್ಟು ಪ್ರಬಲವಾಗಿಲ್ಲ. ಈ ಎಲ್ಲ ಕಾರಣಗಳಿಂದ ಪ್ರಜ್ವಲ್‌ ಪ್ರಕರಣದಿಂದ ಈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_155_5.txt b/eesanje/url_46_155_5.txt new file mode 100644 index 0000000000000000000000000000000000000000..4bfd68b6256bc27ab2328e515193a4f7a2678035 --- /dev/null +++ b/eesanje/url_46_155_5.txt @@ -0,0 +1,8 @@ +ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಆರಂಭ +ಬೆಂಗಳೂರು,ಮೇ7-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ಬಿರುಸಿನಿಂದ ಆರಂಭಗೊಂಡು ಬಹುತೇಕ ಶಾಂತಿಯುತವಾಗಿ ನಡೆಯಿತು. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿತು. ಹಲವು ಮತಗಟ್ಟೆಗಳಲ್ಲಿ ಸಾಲುಗಟ್ಟಿ ಮತ ಚಲಾಯಿಸುತ್ತಿದ್ದ ದೃಶ್ಯ ಕಂಡುಬಂದಿತು. +ಯುವ ಮತದಾರರು ಉತ್ಸಾಹದಿಂದ ಮತದಾನ ಮಾಡುತ್ತಿರುವುದು ಅಲ್ಲಲ್ಲಿ ಕಂಡುಬಂದಿತು. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಈತನಕ ಶಾಂತಿಯುತವಾಗಿ ಮತದಾನ ನಡೆದಿದೆ. ಗ್ರಾಮೀಣ ಭಾಗದಲ್ಲಿ ಬಿರುಸಿನ ಮತದಾನವಾಗುತ್ತಿರುವುದು ಕಂಡುಬಂದಿತು. ನಗರ ಪ್ರದೇಶಗಳಲ್ಲಿ ಅಷ್ಟು ಉತ್ಸಾಹ ಕಂಡುಬರಲಿಲ್ಲ. +ಗ್ರಾಮೀಣ ಭಾಗದಲ್ಲಿ ಕೃಷಿ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಬೇಕಾದವರು ಬೆಳಗ್ಗೆಯೇ ಮತ ಚಲಾಯಿಸಿ ತಮ್ಮ ಕೆಲಸ ಕಾರ್ಯಗಳಿಗೆ ತೆರಳಿದರು. 21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು, ಓರ್ವ ಸಚಿವರ ಸಹೋದರಿ, ಸಚಿವರೊಬ್ಬರ ಪತ್ನಿ, ಹಾಲಿ ಸಂಸದರ ಪತ್ನಿ ಹಾಗೂ ರಾಷ್ಟ್ರೀಯ ಪಕ್ಷವೊಂದರ ರಾಷ್ಟ್ರೀಯ ಅಧ್ಯಕ್ಷರ ಅಳಿಯ ಚುನಾವಣಾ ಕಣದಲ್ಲಿ ಇದ್ದಾರೆ. +ಬೆಳಗ್ಗೆ 11 ಗಂಟೆ ವೇಳೆಗೆ ರಾಯಚೂರಿನಲ್ಲಿ ಅತಿ ಕಡಿಮೆ ಶೇ.15.27ರಷ್ಟು ಮತದಾನವಾಗಿದ್ದರೆ ಶಿವಮೊಗ್ಗದಲ್ಲಿ ಶೇ.20.39ರಷ್ಟು ಬಿರುಸಿನ ಮತದಾನವಾಗಿತ್ತು.ಚಿಕ್ಕೋಡಿ ಶೇ.20.81, ಬೆಳಗಾವಿ ಶೇ.18.48, ಬಾಗಲಕೋಟೆ ಶೇ.16.59, ಬಿಜಾಪುರ ಶೇ.18.26, ಗುಲ್ಬರ್ಗ ಶೇ.16.71, ರಾಯಚೂರು ಶೇ.16.27, ಬೀದರ್‌ ಶೇ.16.90, ಕೊಪ್ಪಳ ಶೇ.16.79, ಬಳ್ಳಾರಿ ಶೇ. 20.37, ಹಾವೇರಿ ಶೇ.16.62, ಧಾರವಾಡ ಶೇ.18.38, ಉತ್ತರಕನ್ನಡ ಶೇ.22.07, ದಾವಣಗೆರೆ ಶೇ.18.11, ಶಿವಮೊಗ್ಗ ಶೇ.22.39ರಷ್ಟು ಮತದಾನವಾಗಿತ್ತು. +ಬೆಳಗ್ಗೆ ಬಿರುಸಿನಿಂದ ಆರಂಭಗೊಂಡ ಮತದಾನವು ಮಧ್ಯಾಹ್ನವಾಗುತ್ತಿದ್ದಂತೆ ಕಡಿಮೆಯಾಯಿತು. ಬೇಸಿಗೆಯ ಬಿರುಬಿಸಿಲಿನಿಂದಾಗಿ ಮಧ್ಯಾಹ್ನದ ವೇಳೆ ಮತದಾನ ಮಾಡಲು ಅಷ್ಟಾಗಿ ಆಸಕ್ತಿ ತೋರದಿರುವುದು ಕಂಡುಬಂತು. ಸಂಜೆಯಾಗುತ್ತಿದ್ದಂತೆ ಮತ್ತೆ ಮತದಾನ ಬಿರುಸಾಗತೊಡಗಿತು. +ಬಿಸಿಲು ಹೆಚ್ಚಾಗಿರುವುದರಿಂದ ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. 14 ಕ್ಷೇತ್ರಗಳಲ್ಲಿ ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. ಇದರಲ್ಲಿ 1,29,48,978 ಪುರುಷರು, 1,29,66,570 ಮಹಿಳೆಯರು, 1945 ತೃತೀಯ ಲಿಂಗಿಗಳಿದ್ದಾರೆ. 6,90,929 ಯುವ ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದರು. +14 ಕ್ಷೇತ್ರಗಳಲ್ಲಿ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ಅನುಕೂಲವಾಗುವಂತೆ ಸೂಕ್ತ ಪೊಲೀಸ್‌ ಬಂದೋಬಸ್‌್ತ ವ್ಯವಸ್ಥೆ ಮಾಡಲಾಗಿತ್ತು. 1.45 ಲಕ್ಷ ಮತಗಟ್ಟೆ ಅಧಿ ಕಾರಿಗಳು, 35,000 ಪೊಲೀಸರು, ಅರೆಸೇನಾ ಪಡೆಯ 65 ಕಂಪನಿಗಳನ್ನು ನಿಯೋಜಿಸಲಾಗಿತ್ತು. ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಡಗೈ ತೋರುಬೆರಳಿಗೆ ಶಾಯಿಯನ್ನು ಹಾಕಲಾಗುತ್ತಿತ್ತು. \ No newline at end of file diff --git a/eesanje/url_46_155_6.txt b/eesanje/url_46_155_6.txt new file mode 100644 index 0000000000000000000000000000000000000000..cfcbacc341e7262c9189342791126aae7f59bb72 --- /dev/null +++ b/eesanje/url_46_155_6.txt @@ -0,0 +1,4 @@ +ಪರಿವಾರದ ಜೊತೆ ತೆರಳಿ ಸಚಿವ ಪ್ರಲ್ಹಾದ ಜೋಶಿ ಮತದಾನ +ಹುಬ್ಬಳ್ಳಿ, ಮೇ.7:ಹುಬ್ಬಳ್ಳಿಯಲ್ಲಿ ಇಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ಬೆಳಗ್ಗೆಯೇ ಮತದಾನ ಮಾಡಿ, ಮತೋತ್ಸವಕ್ಕೆ ಪ್ರೀರಣೆ ನೀಡಿದರು. ಹುಬ್ಬಳ್ಳಿಯ ಭವಾನಿ ನಗರದಲ್ಲಿ ಇರುವ ಚಿನಯಿ ವಿದ್ಯಾಲಯದ ಮತಗಟ್ಟೆ 111ರಲ್ಲಿ ಸಚಿವರು ಬೆಳಗ್ಗೆ 8.30ಕ್ಕೇ ಕುಟುಂಬ ಸಮೇತ ತೆರಳಿ ಗುಪ್ತ ಮಾತದಾನಗೈದರು. +ಮತದಾನ ಪ್ರಜಾಪ್ರಭುತ್ವದ ಪವಿತ್ರ ಹಬ್ಬವಾಗಿದೆ. ಭವ್ಯ ಭಾರತದ ನಿರ್ಮಾಣ, ರಾಷ್ಟ್ರದ ಅಭಿವೃದ್ಧಿಗಾಗಿ ಸರ್ವರೂ ಮತಗಟ್ಟೆಗಳಿಗೆ ಧಾವಿಸಿ ತಮ ಅಮೂಲ್ಯ ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದರು. +ಪ್ರತಿಯೊಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ನೋಡಿಕೊಳ್ಳಬೇಕು. ಪರಿವಾರ, ಅಕ್ಕಪಕ್ಕದವರು ವೋಟ್‌ ಮಾಡುವಂತೆ ಪ್ರೀರೇಪಿಸಿ ಮತಗಟ್ಟೆಗಳಿಗೆ ಕರೆತರಬೇಕು ಎಂದು ಕೋರಿದರು. \ No newline at end of file diff --git a/eesanje/url_46_155_7.txt b/eesanje/url_46_155_7.txt new file mode 100644 index 0000000000000000000000000000000000000000..ff931ba6bf271fd6a21783c921cc8de3f9c1c801 --- /dev/null +++ b/eesanje/url_46_155_7.txt @@ -0,0 +1,8 @@ +ಭಾರೀ ಮಳೆ ನಿರೀಕ್ಷೆ : ಅನಾಹುತ ತಡೆಯಲು ಮುನ್ನೆಚ್ಚರಿಕೆ ಕ್ರಮಕ್ಕೆ ಕಂದಾಯ ಇಲಾಖೆ ಸುತ್ತೋಲೆ +ಬೆಂಗಳೂರು,ಮೇ 6-ಬಿರುಬೇಸಿಗೆ, ಬಿಸಿಗಾಳಿ, ಉಷ್ಣಾಂಶ ಏರಿಕೆಯಿಂದ ಜನಸಾಮಾನ್ಯರು ಬಳಲುತ್ತಿರುವ ಸಂದರ್ಭದಲ್ಲೇ ಮುಂಗಾರಿನಲ್ಲಿ ಸಾಮಾನ್ಯಕ್ಕಿಂತಲೂ ಹೆಚ್ಚಿನ ಮಳೆ ಸುರಿಯುವ ನಿರೀಕ್ಷೆಯಿದ್ದು, ಇದರಿಂದಾಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. +ಒಟ್ಟು 13 ಅಂಶಗಳ ಸೂಚನೆಗಳನ್ನು ಪ್ರಾದೇಶಿಕ ಆಯೋಜಕರು, ಜಿಲ್ಲಾಧಿ ಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿ ಕಾರಿಗಳಿಗೆ ರವಾನೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಏ.15 ರಂದು ನೀಡಿರುವ ನೈಋತ್ಯಮುಂಗಾರಿನ ಮುನ್ಸೂಚನೆ ಪ್ರಕಾರ, ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಾಗಿ ಮಳೆಯಾಗುವ ನಿರೀಕ್ಷೆಯಿದೆ. ಸರಾಸರಿ ಶೇ.104ಕ್ಕಿಂತ ಹೆಚ್ಚು ಮಳೆಯನ್ನು ಅಂದಾಜಿಸಲಾಗಿದ್ದು, ಕರ್ನಾಟಕ ಸೇರಿದಂತೆ ಭಾರತದ ಪರ್ಯಾಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯ ಸಾಧ್ಯತೆಯಿದೆ. +ವಾಡಿಕೆಗಿಂತ ಹೆಚ್ಚಿನ ಮಳೆಯುಂಟಾದಲ್ಲಿ ಸಂಭವಿಸಬಹುದಾದ ದುಷ್ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಹಾನಿಯನ್ನು ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಲಾಗಿದೆ. +ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌, ಜಲಸಂಪನ್ಮೂಲ ಇಲಾಖೆಗಳ ಸಹಯೋಗದೊಂದಿಗೆ ಕೆಲಸ ಮಾಡಬೇಕು. ವಿಪತ್ತಿಗೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ಅರಿವು ಮೂಡಿಸಬೇಕು. ತುರ್ತು ಸ್ಪಂದನೆಗೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕೇಂದ್ರಗಳನ್ನು ಸ್ಥಾಪಿಸಿ ತಂಡಗಳನ್ನು ರಚಿಸಬೇಕು. +ವಿಪತ್ತು ನಿರ್ವಹಣೆಯಲ್ಲಿ ತೊಡಗುವ ಅಧಿ ಕಾರಿಗಳ ವಾಟ್ಸಾಪ್ ಗ್ರೂಪ್‌ಗಳನ್ನು ರಚಿಸಿ ಕಾಲಕಾಲಕ್ಕೆ ಮಾಹಿತಿ ನಿರ್ಣಯ ಮಾಡಿಕೊಳ್ಳಬೇಕು. ದೂರ ಸಂಪರ್ಕ ಸೇವೆ ಪೂರೈಕೆದಾರರೊಂದಿಗೆ ಸಭೆ ನಡೆಸಿ ಹಾನಿಗೊಳಗಾದ ಸೇವೆಗಳನ್ನು ತಕ್ಷಣ ದುರಸ್ತಿಗೊಳಿಸಲು ಸೂಚಿಸಬೇಕು ಎಂದು ಸಲಹೆ ನೀಡಲಾಗಿದೆ. +ನದಿ ಹಾಗೂ ಜಲಾಶಯ ನೀರಿನ ಹರಿವು ಹಾಗೂ ತಗ್ಗು ಪ್ರದೇಶಗಳಲ್ಲಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಮಾಹಿತಿ ನೀಡಬೇಕು. ತಂತ್ರಜ್ಞಾನದ ಬಳಕೆ ಮಾಡಿಕೊಂಡು ವರುಣ ಮಿತ್ರ ಸಹಾಯವಾಣಿ, ಸಿಡಿಲು ಆ್ಯಪ್‌, ದಾಮಿನಿ ಆ್ಯಪ್‌ ಮುಂತಾದವುಗಳ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಬೇಕು. +ಪರಿಹಾರ, ಪುನರ್‌ ವಸತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಚರಂಡಿಗಳು, ಕಾಲುವೆಗಳ ಹೂಳೆತ್ತಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಭೂಕುಸಿತ ಪ್ರದೇಶಗಳಲ್ಲಿ ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸುವುದು, ವಿದ್ಯುತ್‌ ಸರಬರಾಜು ವ್ಯತ್ಯಯಗೊಳ್ಳದಂತೆ ಆರೋಗ್ಯ ಕಾಳಜಿ, ಪಶುಸಂಗೋಪನೆ ಸೇರಿದಂತೆ ಹಲವು ವಿಚಾರಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಕಂದಾಯ ಇಲಾಖೆ ಸೂಚನೆ ನೀಡಿದೆ. \ No newline at end of file diff --git a/eesanje/url_46_155_8.txt b/eesanje/url_46_155_8.txt new file mode 100644 index 0000000000000000000000000000000000000000..b742d25d921a1c53868a3382ea8ad004a8beff7d --- /dev/null +++ b/eesanje/url_46_155_8.txt @@ -0,0 +1,10 @@ +ಚಿನ್ನದ ಬೆಲೆ ಏರಿಕೆ ನಡುವೆಯೇ ಬಂತು ಅಕ್ಷಯ ತೃತೀಯ +ಎಂ. ಕೃಷ್ಣಪ್ಪ, ಚಿಕ್ಕಬಳ್ಳಾಪುರಇದೇ ಮೆ 10 ರಂದು ಅಕ್ಷಯ ತೃತೀಯ. ಈ ಹಬ್ಬಕ್ಕೆ ಋಹಿಂದೂ ಧರ್ಮದಲ್ಲಿ ವಿಶೇಷ ಮಹತ್ವವಿದೆ. ಈ ದಿನ ಹೊಸ ವಸ್ತುಗಳನ್ನು ಖರೀದಿಸುವ ಮೂಲಕ, ದಾನ ಮಾಡುವ ಮೂಲಕ ಅಕ್ಷಯ ತೃತೀಯವನ್ನು ಆಚರಿಸುತ್ತಾರೆ. ಅಕ್ಷಯ ತೃತೀಯ ಪೌರಾಣಿಕ ಮಹತ್ವವನ್ನು ಹೊಂದಿರುವ ಹಬ್ಬವೂ ಹೌದು ಇತ್ತೀಚಿನ ಕೆಲ ವರ್ಷಗಳಂತೆ ಪ್ರಸಕ್ತ ಸಾಲಿನಲ್ಲೂ ಹೊಸ ವಸ್ತು ಬಂಗಾರ ಕೊಳ್ಳಲು ಜನ ಮುಗಿ ಬೀಳಬಹುದು ಎಂಬ ಹಿನ್ನೆಲೆಯಲ್ಲಿ ವಿವಿಧ ತೆರನಾದ ವಸ್ತುಗಳಿಗೆ ಚಿಕ್ಕಬಳ್ಳಾಪುರ ನಗರದ ಬಜಾರ್‌ ರಸ್ತೆ ಹಾಗೂ ಬಂಗಾರ ಕೊಳ್ಳಲು ಗಂಗಮ್ಮನ ಗುಡಿ ರಸ್ತೆ ಸರ್ವಸನ್ನದ್ಧವಾಗ ತೊಡಗಿದೆ. +ಪ್ರತಿ ವರ್ಷ ವೈಶಾಖ ಮಾಸದಲ್ಲಿ ಮಹಿಳೆಯರಿಗೆ ಅಚ್ಚುಮೆಚ್ಚಿನ ಬಂಗಾರ ತನ್ನದಾಗಿಸುವ ಸಡಗರ ಸಂಭ್ರಮದ ಹಬ್ಬ ಅಕ್ಷಯ ತೃತೀಯ. ಆದರೆ ಈ ವರ್ಷ ಬಂಗಾರದ ಬೆಲೆ ಗಗನಕ್ಕೆ ಏರಿದ್ದು ಈ ಬಾರಿ ಬಂಗಾರ ಕೊಳ್ಳುವವರಲ್ಲಿ ನಿರುತ್ಸಾಹ ಮೂಡಿಸಿದೆ. +ಅಕ್ಷಯ ತೃತೀಯ ದಿನದಂದು ಹೊಸದಾಗಿ ಖರೀದಿಸಿದ ಬಂಗಾರದ ಒಡವೆಗಳನ್ನು ಲಕ್ಷ್ಮೀದೇವಿ ಮುಂದಿಟ್ಟು ಪೂಜೆ ಸಲ್ಲಿಸಿದರೆ ಅಂತಹವರ ಮನೆಗಳಲ್ಲಿ ಬಂಗಾರ ಇನ್ನಷ್ಟು ಮತ್ತಷ್ಟು ವೃದ್ಧಿಯಾಗುತ್ತದೆ ಮತ್ತು ಲಕ್ಷ್ಮೀದೇವಿ ಕೃಪೆಯಿಂದ ಸಿರಿ ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಹೆಚ್ಚು ಪ್ರಚಲಿತಗೊಳ್ಳುತ್ತಿರುವ ಕಾರಣ ಬಂಗಾರದ ಅಂಗಡಿಗಳಿಗೆ ಜನ ಆ ದಿನ ಮುಗಿಬಿದ್ದು ಖರೀದಿಸುವುದು ನಡೆದುಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ. +ಆದರೆ ಈ ವರ್ಷ ಬಂಗಾರದ ಬೆಲೆ ಸಾರ್ವಕಾಲಿಕ ದಾಖಲೆ ಏರಿಕೆಯ ಪರಿಣಾಮ ಒಂದು ಗ್ರಾಂ ಚಿನ್ನಕ್ಕೆ ಏಳು ಸಾವಿರಕ್ಕೂ ಅಧಿಕ ಮೌಲ್ಯ ಆಗಿದ್ದು ಬಂಗಾರ ಕೊಳ್ಳಲು ಸಾಧ್ಯವಾಗದೆ ಮಧ್ಯಮ ವರ್ಗದ ಜನತೆ ಚಡಪಡಿಸುತ್ತಿದ್ದಾರೆ. ಒಮ್ಮೆ ಬಂಗಾರ ಕೊಂಡರೆ ಅದನ್ನು ಅವರ ಜೀವಮಾನ ಪರ್ಯಂತ ಇಟ್ಟುಕೊಳ್ಳೋದು ಹಾಗೂ ಎಂದೂ ಒಳಪನ್ನ ಕಳೆದುಕೊಳ್ಳದ ಹಾಗೂ ಕಷ್ಟಕಾಲದಲ್ಲಿ ಕ್ಷಣಮಾತ್ರದಲ್ಲಿ ಹಣ ಒದಗಿಸಿಕೊಡುವ ಏಕೈಕ ಹಳದಿ ಲೋಹ ಆಗಿರುವುದು ವಿಶೇಷವಾಗಿದೆ. +ಹಳ್ಳಿಗಾಡಿನ ಗಿರವಿ ಅಂಗಡಿಗಳಿಂದ ಹಿಡಿದು ಅಂತಾರಾಷ್ಟ್ರೀಯ ಬ್ಯಾಂಕ್‌ ವಹಿವಾಟಿನ ತನಕ ಷೇರು ಮಾರುಕಟ್ಟೆಯಲ್ಲಿನ ಏರುಪೇರುಗಳಿಗೂ ಸಹ ಬಂಗಾರದ ಬೆಲೆಯೇ ಮಾನದಂಡವಾಗಲಿದೆ. ಇದಿಷ್ಟೇ ಅಲ್ಲದೆ ದೇಶದಲ್ಲಿ ನೋಟುಗಳನ್ನು ಮುದ್ರಿಸಲು ಸಹ ಇಂತಿಷ್ಟು ಬಂಗಾರವನ್ನು ಕೇಂದ್ರ ಸರ್ಕಾರ ಸಂಗ್ರಹಿಸಬೇಕು ಎಂಬ ನಿಯಮವೂ ಇದೆ ಹಾಗಾಗಿ ಬಂಗಾರ ಎಂದರೆ ಎಲ್ಲರಿಗೂ ಅಷ್ಟೊಂದು ಪ್ರೆತಿ. +ಕೂಲಿ ಮಾಡುವವರಿಂದ ಹಿಡಿದು ದೇಶದ ಆಗರ್ಭ ಶ್ರೀಮಂತರ ತನಕ ಬಂಗಾರದ ಪ್ರದರ್ಶನ ಮದುವೆ ಮುಂತಾದ ಶುಭ ಸಮಾರಂಭಗಳಲ್ಲಿ ಅವರವರ ಪ್ರತಿಷ್ಠೆಯನ್ನು ಹೆಚ್ಚಿಸುತ್ತದೆ . ಉದಾಹರಣೆಗೆ ಕಡು ಬಡವರು ಮದುವೆ ಮಾಡಿಕೊಟ್ಟರೆ ಕನಿಷ್ಠ ಚಿನ್ನದ ಬೆಲೆಯನ್ನಾದರೂ ಕೊಡಲೇಬೇಕು ಅದರೊಂದಿಗೆ ಮದುಮಗ ಹಾಗೂ ಮದುಮಗಳಿಗೂ ತಮ್ಮ ಕೈಲಾದಷ್ಟು ಚಿನ್ನವನ್ನು ಒಡವೆ ರೂಪದಲ್ಲಿ ಕೊಡುತ್ತಾರೆ. ಹಾಗಾಗಿ ದೇಶದ ಜನರಲ್ಲಿ ಪ್ರತಿಯೊಬ್ಬರಿಗೂ ಬಂಗಾರ ಕೊಳ್ಳುವಿಕೆ ಅನಿವಾರ್ಯವಾಗಿದೆ. +ವಿವಾಹ ಸಮಾರಂಭ, ಆಸ್ತಿ ಖರೀದಿ, ಅನಾರೋಗ್ಯ ಸಂದರ್ಭ, ಮಕ್ಕಳ ವಿದ್ಯಾಭ್ಯಾಸ , ಮನೆ ಕಟ್ಟುವಿಕೆ ಈ ರೀತಿಯ ನಾನಾ ಕಾರಣಗಳಿಂದ ಬಂಗಾರ ಇದ್ದರೆ ಯಾರನ್ನೂ ಕಾಡಿ ಬೇಡದೆ ತನ್ನ ಒಡವೆ ಅಡಮಾನ ಇಟ್ಟು ತಮಗೆ ಬೇಕಿರುವಷ್ಟು ಹಣ ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಬಂಗಾರ ಕಷ್ಟಕ್ಕೆ ಆಗುವ ನಂಟ ಎಂದು ಶ್ರೀಸಾಮಾನ್ಯರು ತಿಳಿದುಕೊಳ್ಳುವುದರಿಂದಲೇ ಬಂಗಾರಕ್ಕೆ ಇಷ್ಟೊಂದು ಪ್ರಮಾಣದಲ್ಲಿ ಡಿವ್ಯಾಂಡ್‌ ಎಂದರೂ ತಪ್ಪಾಗಲಾರದು. +ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಂಗಾರದ ಅಲ್ಪಸ್ವಲ್ಪ ಏರಿಳಿಕೆ ಹೊರತುಪಡಿಸಿದರೆ ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಕಂಡು ಬಂದಿದೆಯೇ ಹೊರತು ಯಾವುದೇ ಸಂದರ್ಭದಲ್ಲಿ ಇಳಿಮುಖ ಕಂಡಿಲ್ಲ ಹಾಗಾಗಿ, ಮಾರುಕಟ್ಟೆಯಲ್ಲಿಯೂ ಬಂಗಾರ ತನ್ನ ಸ್ಥಿರತೆಯನ್ನು ಕಂಡುಕೊಂಡಿದೆ. +ಸಾಲ ಮಾಡಿ ಆದರೂ ತುಪ್ಪ ತಿನ್ನು ಎಂಬ ಗಾದೆ ಮಾತಿನಂತೆ ಬಂಗಾರಕೊಳ್ಳುವ ಆತುರದಲ್ಲಿ ಮಧ್ಯಮ ವರ್ಗದವರು ಹರ ಸಾಹಸ ಪಟ್ಟು ಸಾಲ-ಸೋಲಮಾಡಿ ಅಕ್ಷಯ ತೃತೀಯ ದಿನಕ್ಕೆ ಒಂದೆರಡು ಗ್ರಾಮ್‌ ಆದರೂ ಸಹ ಬಂಗಾರ ಕೊಳ್ಳಲು ಚಿನ್ನದ ಅಂಗಡಿಗಳಿಗೆ ಲಗ್ಗೆ ಇಡುತ್ತಿದ್ದಾರೆ. ಈ ವರ್ಷ ಮೇ 10ರಂದು ಅಕ್ಷಯ ತೃತೀಯ ಬರುವ ಹಿನ್ನೆಲೆಯಲ್ಲಿ ಬಂಗಾರಕ್ಕೆ ಮತ್ತಷ್ಟು ಬೇಡಿಕೆ ಕಂಡು ಬರುವುದರಲ್ಲೂ ಆಶ್ಚರ್ಯವಿಲ್ಲ. \ No newline at end of file diff --git a/eesanje/url_46_155_9.txt b/eesanje/url_46_155_9.txt new file mode 100644 index 0000000000000000000000000000000000000000..c244b92d8f3df3ae4d13f72d2462f3956ead8572 --- /dev/null +++ b/eesanje/url_46_155_9.txt @@ -0,0 +1,7 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸದಂತೆ ತಡೆಯಾಜ್ಞೆ +ಬೆಂಗಳೂರು, ಮೇ 6-ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಹೆಸರು ಬಳಸದಂತೆ ಸೆಷನ್‌ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. +ಪ್ರಕರಣಗಳ ಸುದ್ದಿ ಪ್ರಸಾರ ಮಾಡುವಾಗ ಅನಗತ್ಯವಾಗಿ ತಮ್ಮ ಹೆಸರು ಬಳಸದಂತೆ ಕೋರಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸೆಷನ್‌ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಾಗೂ ಮಾಜಿ ಸಚಿವ ರೇವಣ್ಣ ವಿರುದ್ಧದ ಮಹಿಳಾ ಅಪಹರಣ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. +ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಕೆಸರೆರಚಾಟಕ್ಕೂ ಕಾರಣವಾಗಿದೆ.ಪ್ರಕರಣದಲ್ಲಿ ಕಾಂಗ್ರೆಸ್‌ ಪಕ್ಷ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಅನಗತ್ಯವಾಗಿ ಈ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರು ನ್ಯಾಯಾಲದ ಮೊರೆ ಹೋಗಿದ್ದರು. +ಪೆನ್‌ಡ್ರೈವ್‌ ಪ್ರಕರಣದಲ್ಲಿ ದೇವೇಗೌಡರ ಹೆಸರು ಬಳಸಿದಿರಿ :ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿನಾ ಕಾರಣ ಮಾಜಿ ಪ್ರಧಾನಿ ದೇವೇಗೌಡರ ಹೆಸರನ್ನು ಬಳಸಬಾರದು ಎಂದು ಒಕ್ಕಲಿಗ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಸಿ. ಗಂಗಾಧರ್‌ ಒತ್ತಾಯಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಾಸನದ ಪೆನ್‌ಡ್ರೈವ್‌ ಜಂಜಾಟದಲ್ಲಿ ಮಾಜಿ ಪ್ರಧಾನಿ ಹೆಸರು ಬಳಸುವುದರಿಂದ ದೇವೇಗೌಡರ ಮನಸ್ಸಿಗೆ ನೋವುಂಟಾಗಲಿದೆ. ಹಾಗಾಗಿ ಯಾರೂ ಸಹ ಅವರ ಹೆಸರನ್ನು ಬಳಸಬಾರದು ಎಂದು ಮನವಿ ಮಾಡಿದರು. +ಪಕ್ಷಾತೀತವಾಗಿ ರಾಜಕೀಯ ನಾಯಕರು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಮಾನಸಿಕವಾಗಿ ಧೈರ್ಯ ತುಂಬಬೇಕು. ಶಾಸಕ ಎಚ್‌.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಎಸ್‌ಐಟಿ ಮೂಲಕ ಪಕ್ಷಾತೀತವಾಗಿ ತನಿಖೆ ನಡೆಸಿ ರಾಜ್ಯಸರ್ಕಾರ ಸತ್ಯಾಂಶವನ್ನು ಜನತೆಯ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ. +ಬಸವನಗುಡಿಯ ರೇವಣ್ಣ ಮನೆಯಲ್ಲಿ ಸ್ಥಳ ಮಹಜರುಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಇಂದು ನಗರದ ಬಸವನಗುಡಿಯ ರೇವಣ್ಣ ಅವರ ನಿವಾಸಕ್ಕೆ ತೆರಳಿ ಸ್ಥಳ ಮಹಜರು ನಡೆಸಿತು. ಮೂವರು ಮಹಿಳಾ ಆಧಿಕಾರಿಗಳು ಸೇರಿದಂತೆ ಆರು ಮಂದಿಯ ತಂಡ ಸಂತ್ರಸ್ತೆಯನ್ನು ಬಸವನಗುಡಿಯ ರೇವಣ್ಣ ಅವರ ನಿವಾಸಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್ ನಲ್ಲಿ ಕರೆದೊಯ್ದು ಪರಿಶೀಲನೆ ನಡೆಸಿತು. ಸಂತ್ರಸ್ತೆಯ ಸಮ್ಮುಖದಲ್ಲಿ ಮಹಜರು ನಡೆಸಿ ಆಕೆಯ ಹೇಳಿಕೆಯನ್ನು ಅಽಕಾರಿಗಳು ದಾಖಲಿಸಿಕೊಂಡರು. ಈ ವೇಳೆ ಮನೆ ಬಳಿ ಯಾರೂ ಬಾರದಂತೆ ಬಿಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿತ್ತು. \ No newline at end of file diff --git a/eesanje/url_46_156_1.txt b/eesanje/url_46_156_1.txt new file mode 100644 index 0000000000000000000000000000000000000000..cd6fcdbb882ab6382ecddb072bf76700b3d27324 --- /dev/null +++ b/eesanje/url_46_156_1.txt @@ -0,0 +1,5 @@ +ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ +ಬೆಂಗಳೂರು,ಮೇ6-ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. +ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ಫ್ಲಟೂನ್‌ ಕೆಎಸ್‌ಆರ್‌ಪಿ, ಡಿಎಆರ್‌ ಪ್ಲಟೂನ್‌ಗಳನ್ನು ನಿಯೋಜಿಸಲಾಗಿದೆ ಎಂದರು. +ಬೆಂಗಳೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹ 2ನೇ ಹಂತದ ಮತದಾನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತದಾನ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿದೆ ಎಂದರು. +ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಇಂದು ಗಸ್ತಿನಲ್ಲಿರುತ್ತಾರೆ ಎಂದು ಹಿತೇಂದ್ರ ಅವರು ತಿಳಿಸಿದರು. \ No newline at end of file diff --git a/eesanje/url_46_156_10.txt b/eesanje/url_46_156_10.txt new file mode 100644 index 0000000000000000000000000000000000000000..1f4b5a36f402a87e0f3864e09bea39348b01dd99 --- /dev/null +++ b/eesanje/url_46_156_10.txt @@ -0,0 +1,16 @@ +ಪ್ರಜ್ವಲ್‌ ರೇವಣ್ಣ ಲೊಕೇಶನ್ ಪತ್ತೆಹಚ್ಚಿದ ಎಸ್‌ಐಟಿ, ವಶಕ್ಕೆ ಪಡೆಯಲು ಸಿದ್ಧತೆ +ಬೆಂಗಳೂರು,ಮೇ 5-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಈಗಾಗಲೇ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಯಾಗಿದ್ದು, ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಎಸ್‌ಐಟಿ ಅಧಿ ಕಾರಿಗಳಿಗೆ ಗೊತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಂತಾರಾಷ್ಟ್ರೀಯ ಪೊಲೀಸ್‌ ಸಂಸ್ಥೆ ಇಂಟರ್‌ಪೋಲ್‌ಗೆ ತಿಳಿಸಿ ಬ್ಲೂ ಕಾರ್ನರ್‌ ನೋಟೀಸ್‌ ಜಾರಿಗೊಳಿಸಲಾಗಿದೆ. +ವಿವಿಧ ದೇಶಗಳ ಪೊಲೀಸರನ್ನು ಸಂಪರ್ಕಿಸಿ ಮೊಬೈಲ್‌ನ ಲೊಕೇಶನ್‌ ಆಧರಿಸಿ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಅದರ ಬಳಿಕ ಎಸ್‌ಐಟಿ ಅಧಿ ಕಾರಿಗಳು ವಿದೇಶದಿಂದ ಕರೆತರುವ ಪ್ರಕ್ರಿಯೆಗಳಿಗೆ ಚಾಲನೆ ನೀಡಲಿದ್ದಾರೆ. ಅದಕ್ಕೆ ಅಗತ್ಯವಾದ ಸಹಕಾರಗಳನ್ನು ಸರ್ಕಾರ ನೀಡಲಿದೆ ಎಂದು ಹೇಳಿದರು. +ಪ್ರಕರಣದಲ್ಲಿ ಎಸ್‌ಐಟಿ ಅಧಿ ಕಾರಿಗಳು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ಎಸ್‌ಐಟಿಯ ಮೇಲೂ ಆಪಾದನೆಗಳು ಬರುವ ಸಾಧ್ಯತೆಯಿದೆ. ಹೀಗಾಗಿ ನಿಯಮ ಅನುಸಾರವೇ ಕಾನೂನಿನ ಚೌಕಟ್ಟಿನಲ್ಲಿ ಎಲ್ಲವೂ ನಡೆಯಬೇಕು. ನಿಯಮ ಬಿಟ್ಟು ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ ಎಂದು ಹೇಳಿದರು. +ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿ ಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಎಸ್‌ಐಟಿ ಅಧಿ ಕಾರಿಗಳಿಗೆ ಮಾಹಿತಿ ಇದೆ. ಭಾರತಕ್ಕೆ ಕರೆದುಕೊಂಡು ಬರುವವರೆಗೂ ಮಾಹಿತಿಯನ್ನು ಬಹಿರಂಗಪಡಿಸುವುದಿಲ್ಲ ಎಂದರು. +ತನಿಖೆಗೆ ಸಂಬಂಧಪಟ್ಟಂತೆ ಯಾವುದೇ ವಿಚಾರಗಳನ್ನು ನಾವು ಬಹಿರಂಗಪಡಿಸುತ್ತಿಲ್ಲ. ಮೇಲ್ನೋಟಕ್ಕೆ ಸಾಧುವಾದಂತಹ ಮಾಹಿತಿಯನ್ನು ನಾನೇ ನೇರವಾಗಿ ಮಾತನಾಡುತ್ತಿದ್ದೇನೆ. ಉಳಿದಂತೆ ತನಿಖೆಯ ಆಂತರಿಕ ಮಾಹಿತಿಗಳು ಎಸ್‌ಐಟಿಯ ಒಳ ವಲಯದಲ್ಲೇ ನಡೆಯುತ್ತಿದೆ. ನಮಗೂ ಕೂಡ ತಿಳಿಯುವುದಿಲ್ಲ. ಒಂದು ವೇಳೆ ಎಸ್‌ಐಟಿಯಿಂದ ವಿಚಾರಗಳು ಬಹಿರಂಗಗೊಳ್ಳುತ್ತವೆ ಎಂದಾದರೆ ಮತ್ತಷ್ಟು ಬಿಗಿಗೊಳಿಸುವುದಾಗಿ ಕುಮಾರಸ್ವಾಮಿಯವರ ಟೀಕೆಗೆ ಪ್ರತಿಕ್ರಿಯಿಸಿದರು. +ಎಸ್‌ಐಟಿ ತನಿಖೆ ಯಾವ ರೀತಿ ನಡೆಯುತ್ತಿದೆ ಎಂದು ವಕ್ತಾರರ ಮಾದರಿಯಲ್ಲಿ ತಾವು ವಿವರ ನೀಡಲು ಸಾಧ್ಯವಿಲ್ಲ. ಎಸ್‌ಐಟಿ ಕಾನೂನು ಪ್ರಕಾರ ದೂರು ಆಧರಿಸಿ ರೇವಣ್ಣ ಅವರನ್ನು ಬಂಧಿಸಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಮುಂದಿನ ಪ್ರಕ್ರಿಯೆಯನ್ನು ಕೈಗೊಳ್ಳುತ್ತಾರೆ ಎಂದು ಹೇಳಿದರು. +ವಿಡಿಯೋ ಬಹಿರಂಗವಾದ ಮೂಲಗಳು ಸೇರಿದಂತೆ ಪ್ರಕರಣವನ್ನು ಎಲ್ಲಾ ಆಯಾಮಗಳಲ್ಲೂ ಎಸ್‌ಐಟಿ ಅಧಿ ಕಾರಿಗಳು ತನಿಖೆ ನಡೆಸುತ್ತಾರೆ. ಕಾರ್ತಿಕ್‌ ಎಂಬಾತ ಎಲ್ಲಿದ್ದಾರೆ? ಎಂಬ ಬಗ್ಗೆಯೂ ಎಸ್‌ಐಟಿ ಅಧಿ ಕಾರಿಗಳಿಗೆ ಮಾಹಿತಿ ಇರಬಹುದು ಎಂದರು. +ಪ್ರಜ್ವಲ್‌ ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ಧತೆ :ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಸಂಜೆ ಅಥವಾ ನಾಳೆ ಭಾರತಕ್ಕೆ ವಾಪಾಸ್‌‍ ಆಗುವ ಸಾಧ್ಯತೆಯಿದ್ದು, ಅವರನ್ನು ವಶಕ್ಕೆ ಪಡೆಯಲು ಎಸ್‌‍ಐಟಿ ಬೆಂಗಳೂರು, ಮಂಗಳೂರು ಮತ್ತು ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣದಲ್ಲಿ ತೀವ್ರ ನಿಗಾ ವಹಿಸಿದೆ. +ಸಂಸದ ಪ್ರಜ್ವಲ್‌ ಪತ್ತೆಗಾಗಿ ಲುಕ್‌ಔಟ್‌ ನೋಟಿಸ್‌‍ ಜಾರಿ ಮಾಡಿರುವುದರಿಂದ ಅವರು ಭಾರತಕ್ಕೆ ಬಂದು ಇಳಿಯುತ್ತಿದ್ದಂತೆ ವಶಕ್ಕೆ ಪಡೆಯಲು ಎಸ್‌‍ಐಟಿ ಸಿದ್ಧತೆ ಮಾಡಿಕೊಂಡಿದೆ. ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧ ಸಾಕಷ್ಟು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌‍ಐಟಿ ನೋಟಿಸ್‌‍ ನೀಡಿತ್ತು. ವಿದೇಶದಲ್ಲಿ ಇರುವುದರಿಂದ ವಿಚಾರಣೆಗೆ ಹಾಜರಾಗಲು 7 ದಿನಗಳು ಕಾಲಾವಕಾಶ ನೀಡಬೇಕೆಂದು ತಮ ವಕೀಲರ ಮೂಲಕ ಪ್ರಜ್ವಲ್‌ ಅವರು ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ್ದ ಎಸ್‌‍ಐಟಿ ಲುಕ್‌ಔಟ್‌ ನೋಟಿಸ್‌‍ ಜಾರಿ ಮಾಡಿತ್ತು. +ನಂತರ ಬ್ಲೂ ಕಾರ್ನರ್‌ ಅಸ್ತ್ರ ಪ್ರಯೋಗಿಸಿ ಬಂಧನಕ್ಕೆ ಸಿದ್ಧತೆ ನಡೆಸಿದೆ. ಈ ನಡುವೆ ಜೆಡಿಎಸ್‌‍ನ ಮಾಜಿ ಸಂಸದರೊಬ್ಬರು ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಹಿಂದಿರುಗುವ ಮಾಹಿತಿ ನೀಡಿದ್ದರು. ಲೈಂಗಿಕ ದೌರ್ಜನ್ಯದ ಪ್ರಕರಣ ಪ್ರಮುಖದ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಇಂದು ಸಂಜೆ ಅಥವಾ ನಾಳೆ ಭಾರತಕ್ಕೆ ಹಿಂದಿರುಗುವ ಸಾಧ್ಯತೆ ದಟ್ಟವಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಎಸ್‌‍ಐಟಿ ಸಿದ್ಧತೆ ಮಾಡಿಕೊಂಡಿದೆ. +ಸಿಐಡಿ ಠಾಣೆಯಲ್ಲಿ ಮಹಿಳೆಯೊಬ್ಬರು ಹಾಗೂ ಹೊಳೆನರಸೀಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಮಹಿಳೆಯೊಬ್ಬರು ಸಂಸದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ದಾಖಲಿಸಿದ್ದಾರೆ.ಮಹಿಳೆಯ ಅಪಹರಣ ಪ್ರಕರಣದಲ್ಲಿ ತನ್ನ ತಂದೆ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಸಿಗದೆ ಹಿನ್ನೆಲೆಯಲ್ಲಿ ಎಸ್‌‍ಐಟಿ ನಿನ್ನೆ ಅವರನ್ನು ಬಂಧಿಸಿದೆ.ಈ ಹಿನ್ನೆಲೆಯಲ್ಲಿ ಪ್ರಜ್ವಲ್‌ ರೇವಣ್ಣ ಶೀಘ್ರದಲ್ಲೇ ವಿದೇಶದಿಂದ ಭಾರತಕ್ಕೆ ವಾಪಾಸ್‌‍ ಆಗುವ ಸಾಧ್ಯತೆ ಇದೆ. +ಕ್ಷಣಕ್ಕೊಂದು ತಿರುವು.. :ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಸನ ಪೆನ್‌ಡ್ರೈವ್‌ ಪ್ರಕರಣ ದಿನಕ್ಕೊಂದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.ಹಾಸನದಲ್ಲಿ ಹರಿದಾಡಿದೆ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಸಂತ್ರಸ್ತೆಯರು ದೂರು ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿದು ಬಂದಿದೆ. +ಈಗಾಗಲೇ ಮಹಿಳೆಯೊಬ್ಬರು ಸಿಐಡಿ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಮತ್ತೆ ಮೂವರು ಮಹಿಳೆಯರು ದೂರು ನೀಡಲು ಮುಂದೆ ಬಂದಿರುವುದರಿಂದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. +ಮೂವರು ಸಂತ್ರಸ್ತೆಯರು ಎಸ್‌‍ಐಟಿ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಎಸ್‌‍ಐಟಿ ಪರಿಶೀಲನೆ ನಡೆಸುತ್ತಿದ್ದು, ಮೂವರಿಂದ ಪ್ರತ್ಯೇಕ ದೂರು ದಾಖಲಾಗುವ ಸಾಧ್ಯತೆಯಿದೆ.ಮಹಿಳೆಯ ಅಪಹರಣ ಪ್ರಕರಣದಲ್ಲಿ ಈಗಾಗಲೇ ಶಾಸಕ ರೇವಣ್ಣ ಅವರನ್ನು ಬಂಧಿಸಲಾಗಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿಲು ಎಸ್‌‍ಐಟಿ ಬ್ಲೂ ಕಾರ್ನರ್‌ ಅಸ್ತ್ರ ಪ್ರಯೋಗಿಸಲು ಸಿದ್ಧತೆ ನಡೆಸಿದೆ. \ No newline at end of file diff --git a/eesanje/url_46_156_11.txt b/eesanje/url_46_156_11.txt new file mode 100644 index 0000000000000000000000000000000000000000..fcf13d5221798dded5710ea015dcdb5419236549 --- /dev/null +++ b/eesanje/url_46_156_11.txt @@ -0,0 +1,7 @@ +ಎಚ್‌.ಡಿ.ರೇವಣ್ಣ ಅವರನ್ನು ಸುದೀರ್ಘ ವಿಚಾರಣೆಗೊಳಪಡಿಸಿದ ಎಸ್‌‍ಐಟಿ +ಬೆಂಗಳೂರು, ಮೇ 5-ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ನಿನ್ನೆ ಸಂಜೆ ಬಂಧನವಾಗಿರುವ ಶಾಸಕ ಎಚ್‌.ಡಿ. ರೇವಣ್ಣ ಅವರನ್ನು ಇಂದು ಎಸ್‌‍ಐಟಿ ತೀವ್ರ ವಿಚಾರಣೆಗೆ ಒಳಪಡಿಸಿದೆ.ಸಿಐಡಿಯ ಎಸ್‌‍ಐಟಿ ಕಚೇರಿಯಲ್ಲಿ ರೇವಣ್ಣ ಅವರನ್ನು ತೀವ್ರ ವಿಚಾರಣೆ ಗೊಳಪಡಿಸಿದ್ದು, ಪ್ರಕರಣದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿ ಕಲೆ ಹಾಕಲಾಗುತ್ತಿದೆ. +ಮೈಸೂರು ಜಿಲ್ಲೆಯ ಕೆ.ಆರ್‌. ನಗರ ಪೊಲೀಸ್‌‍ ಠಾಣೆಯಲ್ಲಿ ದಾಖಲಾದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು, ಮಹಿಳೆಯನ್ನು ಯಾಕೆ ಅಪಹರಿಸಲಾಯಿತು? ಅಪಹರಿಸಿ ಅವರನ್ನು ಎಲ್ಲಿ ಇಡಲಾಗಿತ್ತು? ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ರೇವಣ್ಣ ಅವರಿಗೆ ಕೇಳಿದ್ದಾರೆ. +ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಸತೀಶ್‌ ಬಾಬು ಅವರನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧವೂ ಕೂಡ ವಿಚಾರಣೆ ನಡೆಸಿ ರೇವಣ್ಣ ಅವರಿಂದ ಹಲವು ಮಾಹಿತಿಗಳನ್ನುಪಡೆಯಲಾಗುತ್ತಿದೆ. +ಈ ಮಹಿಳೆ ಎಷ್ಟು ವರ್ಷದಿಂದ ನಿಮಗೆ ಪರಿಚಿತರು? ಭವಾನಿ ರೇವಣ್ಣ ಅವರು ಮನೆಯಲ್ಲಿಲ್ಲದ ಸಮಯದಲ್ಲಿ ಸ್ಟೋರ್‌ ರೂಂ ಹಾಗೂ ಅಡುಗೆ ಮನೆಯಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತೆ…? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿ ಎಸ್‌‍ಐಟಿ ತೀವ್ರ ವಿಚಾರಣೆ ನಡೆಸಿದೆ. +ನಿಮ ಪುತ್ರ, ಸಂಸದ ಪ್ರಜ್ವಲ್‌ ರೇವಣ್ಣ ಎಲ್ಲಿ ವಾಸ ಮಾಡುತ್ತಿದ್ದರು. ಅವರ ಕೃತ್ಯ ನಿಮಗೆ ಗೊತ್ತಿರಲಿಲ್ಲವೇ. ಚುನಾವಣಾ ಸಂದರ್ಭದಲ್ಲಿ ಪೆನ್‌ಡ್ರೈವ್‌ಗಳ ಹಂಚಿಕೆ ನಿಮಗೆ ಗೊತ್ತಾಗಲಿಲ್ಲವೇ ಎಂದು ಎಸ್‌‍ಐಟಿ ಅಧಿಕಾರಿಗಳು ರೇವಣ್ಣ ಅವರಿಗೆ ಪ್ರಶ್ನಿಸಿದ್ದಾರೆ. ಸಂಸದರ ಕಾರು ಚಾಲಕ ಕಾರ್ತಿಕ್‌ ಅವರು ಕೆಲಸ ಬಿಡಲು ಕಾರಣವೇನು, ಅವರು ಹಾಗೂ ಅವರ ಕುಟುಂಬದ ಮೇಲೆ ಹಲ್ಲೆ ನಡೆಸಲಾಗಿತ್ತೇ? ಎಂಬುದರ ಬಗ್ಗೆ ಕೂಡ ಎಸ್‌‍ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. +ರೇವಣ್ಣ ಅವರು ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದರೆ, ಇನ್ನು ಹಲವು ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎನ್ನಲಾಗಿದೆ. ಎಸ್‌‍ಐಟಿ ವಶದಲ್ಲಿರುವ ರೇವಣ್ಣ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. \ No newline at end of file diff --git a/eesanje/url_46_156_12.txt b/eesanje/url_46_156_12.txt new file mode 100644 index 0000000000000000000000000000000000000000..e9599aa4f77f5c46cda2b5b871ca9419095fe2aa --- /dev/null +++ b/eesanje/url_46_156_12.txt @@ -0,0 +1,5 @@ +ಕಾನೂನಿಗಿಂತ ಯಾರೂ ದೊಡ್ಡವರಲ್ಲ : ಮಾಜಿ ಸಿಎಂ ಯಡಿಯೂರಪ್ಪ +ಶಿವಮೊಗ್ಗ,ಮೇ5-ಕಾನೂನಿನ ಪ್ರಕಾರ ಏನಾಗಬೇಕೋ ಅದೇ ಆಗುತ್ತದೆ. ನೆಲದ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. +ಮಹಿಳೆ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನಿನ ಪ್ರಕಾರವೇ ಎಲ್ಲ ಕ್ರಮಗಳು ಜರುಗುತ್ತವೆ ಎಂದು ತಿಳಿಸಿದರು. +ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು. +ಇಂತಹ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ತರಿಸುವ ಘಟನೆ ನಡೆದಿದ್ದು ತುಂಬಾ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ಗೌಡರು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವರು ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಬಿಎಸ್‌ವೈ ಮನವಿ ಮಾಡಿದರು. \ No newline at end of file diff --git a/eesanje/url_46_156_2.txt b/eesanje/url_46_156_2.txt new file mode 100644 index 0000000000000000000000000000000000000000..1781de92a49b315b9718eaa55022ce78a2388268 --- /dev/null +++ b/eesanje/url_46_156_2.txt @@ -0,0 +1,7 @@ +ರೇವಣ್ಣ ವಿರುದ್ಧ ದೂರು ಕೊಡಿಸಿದ್ದು ಕೆ.ಆರ್‌.ನಗರ ಶಾಸಕ : ಲಿಂಗೇಶ್‌ ಗಂಭೀರ ಆರೋಪ +ಹಾಸನ,ಮೇ 6-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಮಹಿಳೆ ಅಪಹರಣದ ದೂರನ್ನು ಕೆ.ಆರ್‌.ನಗರ ಶಾಸಕರು ಕೊಡಿಸಿದ್ದಾರೆ ಎಂದು ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್‌.ಲಿಂಗೇಶ್‌ ಗಂಭೀರ ಆರೋಪ ಮಾಡಿದ್ದಾರೆ. +ಕೆ.ಆರ್‌.ನಗರದ ಮಹಿಳೆ ಅಪಹರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರ ವಿರುದ್ಧ ದೂರು ದಾಖಲಾಗುವುದರ ಹಿಂದೆ ಅಲ್ಲಿನ ಶಾಸಕರ ಪಾತ್ರವಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿನ ಅಶ್ಲೀಲ ಪೆನ್‌ಡ್ರೈವ್‌ ವಿಚಾರದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವುದನ್ನು ನಾವು ಸ್ವಾಗತಿಸುತ್ತೇವೆ. +ಆದರೆ ಎಸ್‌ಐಟಿ ಪೆನ್‌ಡ್ರೈವ್‌ ಹಂಚಿದವರ ಬಗ್ಗೆ ತನಿಖೆ ಮಾಡದೇ ದಿಕ್ಕು ತಪ್ಪಿರುವಂತೆ ಕಾಣುತ್ತಿದೆ ಎಂದು ಆಪಾದಿಸಿದರು. ರೇವಣ್ಣ ಹಣಿಯಲು ಎಸ್‌ಐಟಿ ಅನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ರೇವಣ್ಣ ಅವರ ಮೇಲೆ ಮೊದಲು ಮಹಿಳೆಯೊಬ್ಬರಿಂದ ದೂರು ದಾಖಲಾಯಿತು. ಆ ಮಹಿಳೆಯಿಂದ ದೂರು ಕೊಡಿಸಿದವರು ಯಾರು? ಬಳಿಕ ಅಪಹರಣದ ಪ್ರಕರಣ ದಾಖಲಾಗಿದೆ ಎಂದರು. +ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಲ್ಲಿ ರೇವಣ್ಣ ಅವರು ಅವಿತುಕೊಂಡಿರಲಿಲ್ಲ. ರೇವಣ್ಣ ಅವರಿಗೆ ತಂದೆ ತಾಯಿ ಎಂದರೆ ದೇವರಷ್ಟೇ ಗೌರವ. ಹಾಗಾಗಿ ದೇವೇಗೌಡರ ಆರೋಗ್ಯ ವಿಚಾರಿಸಲು ಹೋಗಿದ್ದರು. ಅವರನ್ನು ಬಂಧಿಸದೇ ವಿಚಾರಣೆ ಮಾಡಬಹುದಿತ್ತು, ತನಿಖೆಗೆ ಅವರು ಸಹಕಾರ ಕೊಡುತ್ತಿದ್ದರು, ರಾಜಕೀಯ ದುರುದ್ದೇಶದಿಂದ, ಹತಾಶ ಮನೋಭಾವದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. +ಗುಂಡಿಗೆ ಬಿದ್ದಾಗ ಆಳಿಗೊಂದು ಕಲ್ಲು ಎನ್ನುವ ರೀತಿಯಲ್ಲಿ ದೇವೇಗೌಡರ ಕುಟುಂಬವನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಆದರೆ ಅದು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ ಎಂದರು. +ತಪ್ಪು ಮಾಡಿದವರು ರಾಜಾರೋಷವಾಗಿ ಓಡಾಡಿಕೊಂಡು ಇದ್ದರೂ ಅವರ ವಿರುದ್ಧ ಧ್ವನಿ ಎತ್ತುವವರೇ ಇಲ್ಲ. ಪೆನ್‌ಡ್ರೈವ್‌ ಪ್ರಕರಣದ ಬಳಿಕ ಜೆಡಿಎಸ್‌ನ ಕಾರ್ಯಕರ್ತರು ಸಾಕಷ್ಟು ನೊಂದಿದ್ದಾರೆ ಎಂದ ಅವರು, ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಯವರಲ್ಲಿ ಮನವಿ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.ಶಾಸಕ ಸಿ.ಎನ್‌.ಬಾಲಕೃಷ್ಣ ಸೇರಿದಂತೆ ಪಕ್ಷದ ಹಲವು ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_156_3.txt b/eesanje/url_46_156_3.txt new file mode 100644 index 0000000000000000000000000000000000000000..6805759a55401109dd16c331ba4c2e044b6b3b67 --- /dev/null +++ b/eesanje/url_46_156_3.txt @@ -0,0 +1,6 @@ +ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 452.72 ಕೋಟಿ ಮೊತ್ತದ ನಗದ, ಮದ್ಯ ಜಪ್ತಿ +ಬೆಂಗಳೂರು,ಮೇ 6-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 452.72 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಲಾಗಿದೆ. +ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಈ ರೀತಿ ಜಪ್ತಿಯಾಗುತ್ತಲೇ ಇದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಹಣ, ಚಿನ್ನ ಹಾಗೂ ಇತರ ವಸ್ತುಗಳು ಜಪ್ತಿಯಾಗಿವೆ. +ಉತ್ತರಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆದಾಯ ತೆರಿಗೆ ಇಲಾಖೆಯವರು 47,47,000 ರೂಪಾಯಿ ವೌಲ್ಯದ 750 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥರ ಕಣ್ಗಾವಲು ತಂಡಗಳು 143.16 ಕೋಟಿ ರೂ. ಮೊತ್ತದ ಮದ್ಯ, ಡ್ರಗ್‌್ಸ, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ. +ಅಬಕಾರಿ ಇಲಾಖೆಯವರು 178.48 ಕೋಟಿ ರೂ. ಮೊತ್ತದ ಮದ್ಯ ಹಾಗೂ ಡ್ರಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿ ಕಾರಿಗಳು 49.97 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. +ವಾಣಿಜ್ಯ ತೆರಿಗೆ ಇಲಾಖೆಯವರು 80.91 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 2,301 ಎಫ್‌ಐಆರ್‌ ಅನ್ನು ದಾಖಲಿಸಲಾಗಿದ್ದು, 2,071 ವಿವಿಧ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_156_4.txt b/eesanje/url_46_156_4.txt new file mode 100644 index 0000000000000000000000000000000000000000..018d15f7a76f04050ab6b3edd9738d1cbb4a2437 --- /dev/null +++ b/eesanje/url_46_156_4.txt @@ -0,0 +1,9 @@ +5 ತಿಂಗಳಿಂದ ವೇತನ ನೀಡದ ಗ್ಯಾರಂಟಿ ಸರ್ಕಾರ : 108 ಆಂಬ್ಯುಲೆನ್ಸ್ ನೌಕರರ ಮುಷ್ಕರ +ಬೆಂಗಳೂರು,ಮೇ6-ಕಳೆದ ಐದು ತಿಂಗಳಿಂದ ವೇತನ ಸಿಗದ ಮತ್ತು ಸಂಬಳ ಕಡಿತದಂತಹ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ 108 ಆಂಬ್ಯುಲೆನ್ಸ್ ನೌಕರರು ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ. ಇದರಿಂದಾಗಿ ರಾಜ್ಯಾದ್ಯಂತ ಆಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. +ಕರ್ನಾಟಕದಾದ್ಯಂತ ಸುಮಾರು 715 ಆಂಬ್ಯುಲೆನ್ಸ್ ಗಳು ಮತ್ತು ಸರಿಸುಮಾರು 3,500 ಉದ್ಯೋಗಿಗಳು 108 ಆಂಬ್ಯುಲೆನ್‌್ಸ ಅಸೋಸಿಯೇಷನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿಯೇ ತುರ್ತು ಆರೋಗ್ಯ ಸೇವೆಗಳ ಮೇಲೆ ಮುಷ್ಕರ ಪರಿಣಾಮ ಬೀರುವ ಸಾಧ್ಯತೆ ಇದೆ. +ಆಂಬ್ಯುಲೆನ್‌್ಸ ಸೇವೆಯನ್ನು ನಿರ್ವಹಿಸುವ ಜಿವಿಕೆ ಸಂಸ್ಥೆ ಮತ್ತು ರಾಜ್ಯ ಸರ್ಕಾರದ ನಡುವಿನ ಅಸಮಾಧಾನದಿಂದ ಈ ಮುಷ್ಕರ ನಡೆಯುತ್ತಿದ್ದು, ಚಾಲಕರು ಮತ್ತು ವೈದ್ಯಕೀಯ ತಂತ್ರಜ್ಞರು ಸೇರಿದಂತೆ ನೌಕರರಿಗೆ ಫೆಬ್ರವರಿ, ಮಾರ್ಚ್‌ ಮತ್ತು ಏಪ್ರಿಲ್‌ ತಿಂಗಳ ಮೂರು ತಿಂಗಳ ಸಂಬಳವನ್ನು ಪಾವತಿಸಿಲ್ಲ ಎಂದು 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. +ಹೆಚ್ಚುವರಿಯಾಗಿ ಜನವರಿಯಲ್ಲಿ ಸಂಬಳ ಕಡಿತವಾಗಿದೆ. 30,000 ರೂ. ಪಡೆಯುವವರು ಕೇವಲ 12,000 ರೂ.ಸಂಬಳ ಪಡೆದಿದ್ದಾರೆ. ಕಳೆದ ಐದು ತಿಂಗಳಿನಿಂದ ಎರಡು ತಿಂಗಳ ವೇತನಕ್ಕೆ ಸಮನಾದ ವೇತನವನ್ನು ಮಾತ್ರ ಪಡೆದಿದ್ದೇವೆ ಎಂದು ಸಂಘದ ನೌಕರರು ಹೇಳಿದ್ದಾರೆ. +ಸಂಘವು ಬೆಂಗಳೂರಿನಲ್ಲಿ ಸುಮಾರು 90 ಆಂಬ್ಯುಲೆನ್ಸ್ ಗಳನ್ನು ನಿರ್ವಹಿಸುತ್ತಿದ್ದು, 400ಕ್ಕೂ ಹೆಚ್ಚು ಕೆಲಸಗಾರರನ್ನು ಹೊಂದಿದೆ. ಕರ್ನಾಟಕ ರಾಜ್ಯ ಆರೋಗ್ಯ ವಿಮಾ 108 ನೌಕರರ ಸಂಘವು ಮುಷ್ಕರವನ್ನು ಆಯೋಜಿಸುತ್ತಿದೆ. ತಮ್ಮ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸದಿದ್ದರೆ ಸೇವೆಯನ್ನು ಸ್ಥಗಿತಗೊಳಿಸಲು ಸಿಬ್ಬಂದಿ ಸಿದ್ಧರಿದ್ದಾರೆ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ. +ಇಷ್ಟು ತಿಂಗಳಿನಿಂದ ಕಡಿತಗೊಳಿಸಿರುವ ವೇತನವನ್ನು ಇಂದು ಸಂಜೆಯೊಳಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಇಲ್ಲದೆ ಇದ್ದರೇ ಇಂದು ರಾತ್ರಿ 8 ಗಂಟೆಯಿಂದ ಮುಷ್ಕರ ನಡೆಸಲಿದ್ದೇವೆ ಎಂದು ನೌಕರರು ಎಚ್ಚರಿಕೆ ನೀಡಿದ್ದಾರೆ. +ವೇತನ ಬಿಡುಗಡೆ ಮಾಡದೇ ಇದ್ದರೇ, ಇಂದು ರಾತ್ರಿಯಿಂದಲೇ ರಾಜ್ಯದಾದ್ಯಂತ ಒಟ್ಟು 711 ವಾಹನಗಳು 108 ಆಂಬ್ಯುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲಿವೆ. ಈ ಕಠಿಣ ನಿರ್ಧಾರ ಅನೇಕರ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ವಿಶೇಷವಾಗಿ ವೈದ್ಯಕೀಯ ಆರೈಕೆಯ ಅಗತ್ಯವಿರುವವರಿಗೆ ತುಂಬಾ ಕಷ್ಟವಾಗಲಿದೆ. ಆಂಬ್ಯುಲೆನ್‌್ಸ ಸೇವೆಯ ಅಲಭ್ಯತೆಯಿಂದ ರೋಗಿಗಳಿಗೆ ಯಾವುದೇ ತೊಂದರೆ ಉಂಟಾದರೆ ಸರ್ಕಾರವೇ ನೇರ ಹೊಣೆ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ. +ನಾವು ಈಗಾಗಲೇ 108 ಸೇವಾ ಪೂರೈಕೆದಾರರಿಗೆ ಅಗತ್ಯ ಸೇವೆಗಳ ನಿರ್ವಹಣೆ ಕಾಯಿದೆ (ಎಸ್ಮಾ) ಸೂಚನೆಯನ್ನು ನೀಡಿದ್ದೇವೆ. ಆದ್ದರಿಂದ ಯಾವುದೇ ಸಮಯದಲ್ಲಿ 108 ತುರ್ತು ಆಂಬ್ಯುಲೆನ್ಸ್ ಸೇವೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿ ಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_156_5.txt b/eesanje/url_46_156_5.txt new file mode 100644 index 0000000000000000000000000000000000000000..cbe5b0068e7c6ad67ae38f75af04f4955c59a40d --- /dev/null +++ b/eesanje/url_46_156_5.txt @@ -0,0 +1,7 @@ +ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮೇಲೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ +ಬೆಂಗಳೂರು,ಮೇ 6-ವಿಶೇಷ ತನಿಖಾ ತಂಡದ ಮುಂದೆ ಶೀಘ್ರದಲ್ಲೇ ಹಾಜರಾಗುವಂತೆ ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಹಾಗೂ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಅವರ ಕುಟುಂಬಸ್ಥರು ಹಾಗೂ ಹಿತೈಷಿಗಳು ಒತ್ತಡ ಹೇರುತ್ತಿದ್ದಾರೆ. +ಆರೋಪ ಕೇಳಿ ಬಂದ ಕೂಡಲೇ ರಾಜ್ಯಸರ್ಕಾರ ತನಿಖೆಗೆ ಎಸ್‌ಐಟಿ ರಚಿಸಿದೆ. ಎಸ್‌ಐಟಿ ಮುಂದೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಅವರ ಕುಟುಂಬಸ್ಥರು, ಆಪ್ತರು ಒತ್ತಾಯಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. +ಎಸ್‌ಐಟಿ ವಿಚಾರಣೆಗೆ ಹಾಜರಾಗದೆ ದೂರ ಉಳಿದರೆ ಅನುಮಾನಗಳು ಹೆಚ್ಚಾಗುತ್ತಾ ಹೋಗುತ್ತವೆ. ಅಲ್ಲದೆ, ಈ ಆರೋಪ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿಚಾರಣೆಗೆ ಹಾಜರಾಗದೆ ರಕ್ಷಣೆ ಪಡೆಯುವುದು ಕಷ್ಟವಾಗಬಹುದು ಎಂಬ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. +ಆರೋಪ ಕೇಳಿಬಂದ ಕೂಡಲೇ ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿಕೊಂಡಿದೆ. ಎಸ್‌ಐಟಿ ಕೂಡ ಪ್ರಜ್ವಲ್‌ ರೇವಣ್ಣ ಅವರ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್‌ ಹೊರಡಿಸಿದೆ. ಅವರನ್ನು ಬಂಧಿಸಲು ಎಲ್ಲಾ ರೀತಿಯ ಸಿದ್ಧತೆಯನ್ನೂ ಕೂಡ ಮಾಡಿಕೊಂಡಿದೆ. +ಈ ಹಂತದಲ್ಲಿ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದು ಒಳ್ಳೆಯದು. ಇಲ್ಲವೆ ಕಾನೂನು ಹೋರಾಟ ನಡೆಸಿದರೆ ಮತ್ತಷ್ಟು ಸಮಸ್ಯೆ ಎದುರಿಸಬೇಕಾಗಬಹುದು. ವಿಚಾರಣೆಗೆ ಹಾಜರಾದರೆ ಸತ್ಯಾಂಶ ಕೂಡ ಹೊರಬರಲಿದೆ. ಈಗಾಗಲೇ ಕುಟುಂಬಕ್ಕೆ ಹಾಗೂ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟಾಗಿದೆ. +ಇಂತಹ ಪರಿಸ್ಥಿತಿಯಲ್ಲಿ ವಿಚಾರಣೆಯಿಂದ ದೂರ ಸರಿಯುವುದು ಸಮಂಜಸವಲ್ಲ. ಈ ವಿಚಾರದ ಬಗ್ಗೆ ಕೂಡಲೇ ವಕೀಲರ ಜೊತೆ ಮಾತುಕತೆ ನಡೆಸಿ ಆದಷ್ಟು ಶೀಘ್ರವಾಗಿ ಎಸ್‌ಐಟಿ ಮುಂದೆ ಹಾಜರಾಗುವಂತೆ ಸಲಹೆ ಮಾಡಿದ್ದಾರೆ ಎಂದು ಗೊತ್ತಾಗಿದೆ. \ No newline at end of file diff --git a/eesanje/url_46_156_6.txt b/eesanje/url_46_156_6.txt new file mode 100644 index 0000000000000000000000000000000000000000..793a1f4af02801bcb116531b56d8ad8562f2a349 --- /dev/null +++ b/eesanje/url_46_156_6.txt @@ -0,0 +1,5 @@ +ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್‌ ನಿಧನ, ಸಿಎಂ ಸಂತಾಪ +ಬೆಂಗಳೂರು, ಮೇ 6-ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ. +ಪಾಟೀಲರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರು. ಅವರ ನಿಧನದಿಂದ ಒಬ್ಬ ಜನಾನುರಾಗಿ ಮುತ್ಸದ್ದಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಬಣ್ಣಿಸಿದ್ದಾರೆ. +ಸೇಡಂನ ಮಾಜಿ ಶಾಸಕ ಡಾ. ನಾಗರೆಡ್ಡಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. 1983ರಲ್ಲಿ ನಾಗರೆಡ್ಡಿಯವರು ಮತ್ತು ನಾನು ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದೆವು. ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ದುಡಿದ ನಾಗರೆಡ್ಡಿಯವರ ನಿಧನದಿಂದ ನಾಡು ಬಡವಾಗಿದೆ.ಮೃತರ ಆತ್ಮಕ್ಕೆ ಶಾಂತಿ…../t7RX8vAaX7 +ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_156_7.txt b/eesanje/url_46_156_7.txt new file mode 100644 index 0000000000000000000000000000000000000000..14259b4e9e4b93fa056903211f2dab67029b5a04 --- /dev/null +++ b/eesanje/url_46_156_7.txt @@ -0,0 +1,4 @@ +ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ +ಬೆಂಗಳೂರು,ಮೇ6-ಹಾಸ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗಾಗಲೇ ಸಹಾಯವಾಣಿ ತೆರೆದಿದೆ. +ವಿಶೇಷ ತನಿಖಾ ತಂಡದ ಅಧಿಕಾರಿಗಳಿಗೆ ತನಿಖಾ ಕಾಲದಲ್ಲಿ ಈ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರು ಇರುವುದು ಗೊತ್ತಾಗಿದೆ. ಯಾರೇ ಸಂತ್ರಸ್ತರಿಗೆ ಕಾನೂನು ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯಬೇಕಾಗಿದ್ದಲ್ಲಿ ಹೆಲ್ಪ್ ಲೈನ್‌ ನಂ.6360938947ಕ್ಕೆ ಕರೆ ಮಾಡಬಹುದಾಗಿದೆ. +ಸಂತ್ರಸ್ಥರ ಅಥವಾ ಬಾತ್ಪೀದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_156_8.txt b/eesanje/url_46_156_8.txt new file mode 100644 index 0000000000000000000000000000000000000000..885440ca7e3ff895761d74a4e78e4c964f461a35 --- /dev/null +++ b/eesanje/url_46_156_8.txt @@ -0,0 +1,11 @@ +ರಾಜ್ಯದಲ್ಲಿ ನಾಳೆ 2ನೇ ಹಂತದ ಮತದಾನ : ಘಟಾನುಘಟಿಗಳು ಸೇರಿ 227 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ +ಬೆಂಗಳೂರು,ಮೇ 6- ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಳೆ ಮತದಾನ ನಡೆಯಲಿದೆ. +ನಾಳೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಚುನಾವಣಾ ಹಾಗೂ ಭದ್ರತಾ ಸಿಬ್ಬಂದಿ ಆಯಾ ಕ್ಷೇತ್ರದ ಮಸ್ಟರಿಂಗ್‌ ಕೇಂದ್ರಗಳಲ್ಲಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ, ಚುನಾವಣಾ ಸಾಮಗ್ರಿ ಹಾಗೂ ಭದ್ರತಾ ಸಿಬ್ಬಂದಿಯೊಂದಿಗೆ ಮಧ್ಯಾಹ್ನದ ನಂತರ ತೆರಳಿದರು. +ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ಕಾಂಗ್ರೆಸ್‌, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿದಂತೆ ಮತ್ತು 327 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ.ಉತ್ತರ ಕರ್ನಾಟಕದ ಒಟ್ಟು 14 ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. +ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತೀ ಹೆಚ್ಚು ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ. 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಒಬ್ಬರು ಹೆಡ್‌ಕಾನ್ಸ್ ಟೇಬಲ್‌ ಹಾಗೂ ಒಬ್ಬರು ಕಾನ್‌್ಸಟೇಬಲ್‌ ಅನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಒಬ್ಬರು ಕಾನ್ಸ್ ಟೇಬಲ್‌ ಅನ್ನು ನಿಯೋಜಿಸಲಾಗಿದ್ದು, ಮತಗಟ್ಟೆಗಳ ಸಮೂಹ ಇರುವ ಕಡೆ ಕೇಂದ್ರದ ಪಡೆಯನ್ನು ನಿಯೋಜಿಸಲಾಗಿದೆ. +ಸುರಪುರ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲೂ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. +ಪರ್ಯಾಯ ಗುರುತಿನ ಚೀಟಿ :ಚುನಾವಣಾ ಆಯೋಗದಿಂದ ಈಗಾಗಲೇ ನೀಡಲಾಗಿರುವ ವೋಟರ್‌ರ‍ಸ ಸ್ಲಿಪ್‌ನ ಜೊತೆಗೆ ಮತದಾರರ ಗುರುತಿನ ಚೀಟಿ, ಆಧಾರ್‌ಕಾರ್ಡ್‌, ನರೇಗ ಜಾಬ್‌ಕಾರ್ಡ್‌, ಬ್ಯಾಂಕ್‌, ಪೋಸ್‌್ಟ ಆಫೀಸ್‌ ಪಾಸ್‌ಬುಕ್‌, ಕಾರ್ಮಿಕ ಸಚಿವರು ನೀಡುವ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಪಿಂಚಣಿಯ ದಾಖಲೆ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಎಂಪಿ, ಎಂಎಲ್‌ಎ, ಎಂಎಲ್‌ಸಿಗಳಿಗೆ ನೀಡಿರುವ ಅಧಿ ಕೃತ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಸಬಲೀಕರಣ ನೀಡಿರುವ ವಿಶಿಷ್ಟ ಅಂಗವಿಕಲ ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಬಹುದಾಗಿದೆ. +ಮತದಾನ ಸಾರ್ವತ್ರಿಕ ರಜೆ :ಮತದಾನ ನಡೆಯುವ ಎಲ್ಲಾ ಕ್ಷೇತ್ರಗಳಲ್ಲಿ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಕೈಗಾರಿಕೋದ್ಯಮಗಳು, ವಿವಿಧ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ದಿನಗೂಲಿ ವೇತನದಲ್ಲಿ ಕೆಲಸ ಮಾಡುವವರಿಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಸರ್ಕಾರ ವೇತನ ಸಹಿತ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. +ನೆರಳಿನ ವ್ಯವಸ್ಥೆ :ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿರುವುದರಿಂದ ಮತಗಟ್ಟೆಗಳಲ್ಲಿ ಕನಿಷ್ಠ ಸೌಲಭ್ಯಗಳಾದ ರ್ಯಾಂಪ್‌, ಕುಡಿಯುವ ನೀರು, ವಿದ್ಯುತ್‌, ಪೀಠೋಪಕರಣ, ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ, ಮತದಾರರಿಗೆ ಸಹಾಯವಾಗುವ ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ. +ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾಗಿ ಮಾರ್ಪಡಿಸಿ ಸಿದ್ಧವಿರಿಸಲಾಗಿದೆ. ತೀವ್ರ ಬಿಸಿಲು ಇರುವ ಹಿನ್ನೆಲೆಯಲ್ಲಿ ಮತಗಟ್ಟೆ ಆವರಣದಲ್ಲಿ ಶಾಮಿಯಾನ, ಫ್ಯಾನ್‌ ಮತ್ತು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಶುಷ್ರೂಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್‌ಎಸ್‌ ಸೇರಿದಂತೆ ಇತರೆ ವೈದ್ಯಕೀಯ ಕಿಟ್‌ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಆಂಬುಲೆನ್‌್ಸ ಒದಗಿಸಲು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಯ್ದಿರಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಸಂಸ್ಕೃತಿಯ ಪ್ರತಿಬಿಂಬ :560 ಮತಗಟ್ಟೆಗಳನ್ನು ಮಹಿಳೆಯರೇ ನಿರ್ವಹಿಸಲಿದ್ದು, 112 ಮತಗಟ್ಟೆಗಳನ್ನು ದಿವ್ಯಾಂಗರು ನಿರ್ವಹಿಸುತ್ತಾರೆ. ಇತರೆ ವಿವಿಧ ವಿಷಯಗಳ 224 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಸ್ಥಳೀಯ ಸಂಸ್ಕೃತಿ ಸಂಪ್ರದಾಯವನ್ನು ಬಿಂಬಿಸುವಂತೆ ಅಲಂಕರಿಸಲಾಗಿದೆ. diff --git a/eesanje/url_46_156_9.txt b/eesanje/url_46_156_9.txt new file mode 100644 index 0000000000000000000000000000000000000000..3c4fdf30096c185d54a2661bc471af1547045158 --- /dev/null +++ b/eesanje/url_46_156_9.txt @@ -0,0 +1,13 @@ +ಬಿಸಿಲಿನ ಝಳ ಮತ್ತು ಉಚಿತ ಗ್ಯಾರಂಟಿ ಎಫೆಕ್ಟ್, ರಾಜ್ಯದಲ್ಲಿ ವಿಪರೀತ ವಿದ್ಯುತ್‌ ಬಳಕೆ +ಬೆಂಗಳೂರು,ಮೇ6-ಉಚಿತ ಗ್ಯಾರಂಟಿ, ತಾಪಮಾನ ಏರಿಕೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್‌ ಬಳಕೆಯ ಪ್ರಮಾಣದ ವಿಪರೀತ ಹೆಚ್ಚಾಗುತ್ತಿದೆ. ಜನರ ಬೇಡಿಕೆ ನೀಗಿಸಲು ಇಂಧನ ಇಲಾಖೆ ಪಡಿಪಾಟಲು ಪಡುವಂತಾಗಿದೆ. ಮಳೆ, ಸಂಪನ್ಮೂಲಗಳ ಕೊರತೆಯಿಂದ ಉತ್ಪಾದನೆಯೂ ಕುಗ್ಗಿದೆ. ಇದರಿಂದ ರಾಜ್ಯ ಸರ್ಕಾರ ಮತ್ತೆ ಭಾರೀ ಪ್ರಮಾಣದಲ್ಲಿ ವಿದ್ಯುತ್‌ ಖರೀದಿಗೆ ಮುಂದಾಗಿದೆ. +ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದೆ. ಮುಂಗಾರು ಪೂರ್ವ ಮಳೆಯೂ ಕೈ ಕೊಟ್ಟಿದೆ. ತಾಪಮಾನ ವಿಪರೀತ ಹೆಚ್ಚುತ್ತಿದೆ. ಮಳೆ ಬೀಳದ ಕಾರಣ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳ ಒಡಲು ಬರಿದಾಗುತ್ತಿದೆ. ಇದರಿಂದ ರಾಜ್ಯದ ಪ್ರಮುಖ ಮೂರು ಜಲ ವಿದ್ಯುತ್‌ ಘಟಕಗಳಲ್ಲೂ ವಿದ್ಯುತ್‌ ಉತ್ಪಾದನೆ ಭಾಗಶಃ ಸ್ಥಗಿತವಾಗಿದೆ. +ಉಷ್ಣ ವಿದ್ಯುತ್‌ ಸ್ಥಾವರಗಳ ಮೂಲಕ ಹೆಚ್ಚಿನ ಉತ್ಪಾದನೆ ಮಾಡುತ್ತಿದೆಯಾದರೂ, ಈಗಿನ ಬೇಡಿಕೆಯನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಎಸ್ಕಾಂಗಳು ವಿದ್ಯುತ್‌ ಬೇಡಿಕೆ ಈಡೇರಿಸಲು ಅಪಾರ ಪ್ರಮಾಣದಲ್ಲಿ ವಿದ್ಯುತ್‌ ಖರೀದಿ ಮಾಡುತ್ತಿವೆ. +ಗರಿಷ್ಠ ಮಟ್ಟ ತಲುಪಿದ ವಿದ್ಯುತ್‌ ಬಳಕೆ:ರಾಜ್ಯದಲ್ಲಿ ಸರಾಸರಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕವಿದೆ. ಇದರ ಪರಿಣಾಮವಾಗಿ ವಿದ್ಯುತ್‌ ಬಳಕೆ ತೀವ್ರವಾಗಿದೆ. ಇಂಧನ ಇಲಾಖೆ ನೀಡಿರುವ ಮಾಹಿತಿಯಂತೆ, ಏಪ್ರಿಲ್‌ ಅಂತ್ಯಕ್ಕೆ ರಾಜ್ಯದ ವಿದ್ಯುತ್‌ ಬಳಕೆ 330.50 ಮೆಗಾ ವ್ಯಾಟ್‌ಗೆ ತಲುಪಿದೆ. +ಕಳೆದ ವರ್ಷ ಏಪ್ರಿಲ್‌ 30ಕ್ಕೆ ರಾಜ್ಯದ ವಿದ್ಯುತ್‌ ಬಳಕೆ 230 ಮೆಗಾ ವ್ಯಾಟ್‌ ಇತ್ತು. ಅಂದರೆ ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಏಪ್ರಿಲ್‌ ಅಂತ್ಯಕ್ಕೆ ರಾಜ್ಯದ ಒಟ್ಟು ವಿದ್ಯುತ್‌ ಬಳಕೆ 100 ಮೆಗಾವ್ಯಾಟ್‌ನಷ್ಟು ಹೆಚ್ಚಳವಾಗಿದ್ದು, ರಾಜ್ಯದ ಗರಿಷ್ಠ ವಿದ್ಯುತ್‌ ಬೇಡಿಕೆ 16,693 ಮೆಗಾ ವ್ಯಾಟ್‌ಗೆ ತಲುಪಿದೆ. +ರಾಜ್ಯದ ಪ್ರಮುಖ ಮೂರು ಜಲ ವಿದ್ಯುತ್‌ ಘಟಕಗಳಿಂದ ಪ್ರಸಕ್ತ ವರ್ಷ 1,638 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಕಳೆದ ವರ್ಷ ಇದು 2,212 ಮೆಗಾವ್ಯಾಟ್‌ ಇತ್ತು. ಅಂದರೆ ಈ ವರ್ಷ ಸುಮಾರು 574 ಮೆಗಾವ್ಯಾಟ್‌ ಕೊರತೆ ಉಂಟಾಗಿದೆ. +ಮೂರು ಜಲ ವಿದ್ಯುತ್‌ ಘಟಕಗಳಿಂದ ಈ ವರ್ಷದ ನಾಲ್ಕು ತಿಂಗಳಲ್ಲಿ (ಏಪ್ರಿಲ್‌ 30ಕ್ಕೆ) 18.97 ಮೆಗಾವ್ಯಾಟ್‌ ವಿದ್ಯುತ್‌ ಮಾತ್ರ ಉತ್ಪಾದನೆಯಾಗಿದೆ ಎಂದು ಇಂಧನ ಇಲಾಖೆ ತಿಳಿಸಿದೆ. +ಇನ್ನು ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳಿಂದ ಹೆಚ್ಚಿನ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರ ಏಪ್ರಿಲ್‌ ತಿಂಗಳಲ್ಲಿ 783 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಿದೆ. ಬಳ್ಳಾರಿ ಉಷ್ಣ ವಿದ್ಯುತ್‌ ಸ್ಥಾವರದಿಂದ 756 ಮೆಗಾವ್ಯಾಟ್‌, ಯರಮರಸ್‌ ಉಷ್ಣ ವಿದ್ಯುತ್‌ ಸ್ಥಾವರದಿಂದ (ವೈಟಿಪಿಎಸ್‌) 659 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗಿದೆ. +ರಾಜ್ಯದ ಉಷ್ಣ ವಿದ್ಯುತ್‌ ಸ್ಥಾವರಗಳು, ಜಲ ವಿದ್ಯುತ್‌ ಘಟಕಗಳು, ಸೋಲಾರ್ನಿಂದ ಏ.30ರಂದು ಒಟ್ಟು 96 ಮಿಲಿಯನ್‌ ಯೂನಿಟ್‌ ವಿದ್ಯುತ್‌ ಉತ್ಪಾದನೆ ಮಾಡಿದೆ ಎಂದು ಕೆಪಿಟಿಸಿಎಲ್‌ ಮಾಹಿತಿ ನೀಡಿದೆ. +ವಿದ್ಯುತ್‌ ಖರೀದಿ ಗಣನೀಯ ಹೆಚ್ಚಳ:ಏರುತ್ತಿರುವ ತಾಪಮಾನ, ಬರಿದಾದ ಜಲಾಶಯ, ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ಪೂರೈಸಲು ಎಸ್ಕಾಂಗಳಿಗೆ ವಿದ್ಯುತ್‌ ಖರೀದಿ ಅನಿವಾರ್ಯವಾಗಿದೆ. 2024 ಜನವರಿಯಿಂದ ಏಪ್ರಿಲ್‌ವರೆಗೆ ಒಟ್ಟು 4,811 ಮಿಲಿಯನ್‌ ಯೂನಿಟ್‌ ವಿದ್ಯುತ್‌ ಖರೀದಿ ಮಾಡಲಾಗಿದೆ. +ದಾಮೋದರ್‌ ವ್ಯಾಲಿ ಕಾರ್ಪೊರೇಷನ್‌ನಿಂದ 4 ತಿಂಗಳಲ್ಲಿ ಸುಮಾರು 1,163 ಮಿಲಿಯನ್‌ ಯುನಿಟ್‌, ಉಡುಪಿ ಪವರ್‌ ಕಾರ್ಪೊರೇಷನ್‌ ಲಿಮಿಟೆಡ್‌ನಿಂದ ಸುಮಾರು 2,196 ಮಿಲಿಯನ್‌ ಯುನಿಟ್‌ ವಿದ್ಯುತ್‌ ಖರೀದಿ ಮಾಡಲಾಗಿದೆ. ಅನ್ಯ ರಾಜ್ಯಗಳಿಂದ ಸುಮಾರು 1,452 ಮಿಲಿಯನ್‌ ಯುನಿಟ್‌ ವಿದ್ಯುತ್‌ ಖರೀದಿ ಮಾಡಲಾಗಿದೆ ಎಂದು ಇಂಧನ ಇಲಾಖೆ ಅಂಕಿಅಂಶ ನೀಡಿದೆ. +ಜನವರಿ ತಿಂಗಳಲ್ಲಿ ಒಟ್ಟು ಖರೀದಿಸಲ್ಪಟ್ಟ ವಿದ್ಯುತ್‌ 1,143 ಮಿಲಿಯನ್‌ ಯೂನಿಟ್‌ ಫೆಬ್ರವರಿಯಲ್ಲಿ 1,198 ಮಿಲಿಯನ್‌ ಯುನಿಟ್‌, ಮಾರ್ಚ್‌ನಲ್ಲಿ 1,244 ಮಿಲಿಯನ್‌ ಯೂನಿಟ್‌, ಏಪ್ರಿಲ್‌ ತಿಂಗಳಲ್ಲಿ 1,226 ಮಿಲಿಯನ್‌ ಯುನಿಟ್‌ ವಿದ್ಯುತ್‌ ಖರೀದಿ ಮಾಡಲಾಗಿದೆ. \ No newline at end of file diff --git a/eesanje/url_46_157_1.txt b/eesanje/url_46_157_1.txt new file mode 100644 index 0000000000000000000000000000000000000000..67d2a1e92ef6b441402a2d69f4546af232d2f00d --- /dev/null +++ b/eesanje/url_46_157_1.txt @@ -0,0 +1,8 @@ +ಮಳೆ ಕೊರತೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ +ಬೆಂಗಳೂರು,ಮೇ5-ಕಳೆದ ವರ್ಷದ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಪೂರ್ವ ಮುಂಗಾರು ಮಳೆಯು ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. +ಒಂದೆಡೆ ತೀವ್ರ ಬಿಸಿಲಿನ ಬೇಗೆ ಹೆಚ್ಚಳವಾದರೆ ಮತ್ತೊಂದೆಡೆ ಮಳೆ ಕೊರತೆ ಉಂಟಾಗಿದೆ. ಹೀಗಾಗಿ ಸಕಾಲಕ್ಕೆ ಸರಿಯಾಗಿ ಮುಂಗಾರು ಪ್ರಾರಂಭವಾಗಿ ಉತ್ತಮ ಮಳೆಯಾಗದಿದ್ದರೆ ಜೂನ್‌ ತಿಂಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಲಿದೆ. +ಈಗಾಗಲೇ ಬಹತೇಕ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದ್ದು, ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಯಾವ ಜಲಾಶಯಗಳಿಗೂ ಒಳಹರಿವಿನ ಪ್ರಮಾಣ ಇಲ್ಲ. ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ.22ರಷ್ಟು ಮಾತ್ರ ಇದೆ. ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವರಾಹಿ ಜಲಾಶಯಗಳ ವ್ಯಾಪ್ತಿಯಲ್ಲಿ ಶೇ.19ರಷ್ಟು ನೀರಿದ್ದರೆ, ಕಾವೇರಿ ನದಿಪಾತ್ರದ ಜಲಾಶಯಗಳಲ್ಲಿ ಶೇ.27ರಷ್ಟು ಹಾಗೂ ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ ಶೇ.21ರಷ್ಟು ಮಾತ್ರ ನೀರಿದೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕಳೆದ ವರ್ಷ ಇದೇ ಅವಧಿಯಲ್ಲಿ 14 ಜಲಾಶಯಗಳಲ್ಲಿ 245.62 ಟಿಎಂಸಿ ಅಡಿಯಷ್ಟು ನೀರಿತ್ತು. ಪ್ರಸ್ತುತ 199.91 ಅಡಿಯಷ್ಟು ಮಾತ್ರ ನೀರಿದೆ.ರಾಜ್ಯದ ಪ್ರಮುಖ ಜಲಾಶಯಗಳಲ್ಲಿ 895.62 ಟಿಎಂಸಿ ನೀರು ಗರಿಷ್ಠ ಸಂಗ್ರಹ ಸಾಮರ್ಥ್ಯವಿದೆ. +ಕಾವೇರಿ ನದಿಪಾತ್ರದ ಹಾರಂಗಿ, ಹೇಮಾವತಿ, ಕೆಆರ್‌ಎಸ್‌, ಕಬಿನಿ ಜಲಾಶಯಗಳಲ್ಲಿ ಒಟ್ಟು 30.46 ಟಿಎಂಸಿಯಷ್ಟು ನೀರಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 38.87 ಟಿಎಂಸಿಯಷ್ಟು ನೀರಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ 8 ಟಿಎಂಸಿಯಷ್ಟು ನೀರಿನ ಕೊರತೆ ಇದೆ. +ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕೆಆರ್‌ಎಸ್‌ ಜಲಾಶಯದಲ್ಲಿ 11.08 ಟಿಎಂಸಿಯಷ್ಟು ನೀರಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 3 ಟಿಎಂಸಿಯಷ್ಟು ನೀರು ಕಡಿಮೆ ಇದೆ. ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ 89.59 ಟಿಎಂಸಿಯಷ್ಟು ಮಾತ್ರ ನೀರಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 94.87 ಟಿಎಂಸಿ ಅಡಿಯಷ್ಟು ನೀರಿತ್ತು. +ಜಲವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವಾರಾಹಿ ಜಲಾಶಯಗಳಲ್ಲಿ 62.87 ಟಿಎಂಸಿಯಷ್ಟು ಮಾತ್ರ ನೀರಿದೆ. ಕಳೆದ ವರ್ಷ 85.23 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿತ್ತು. \ No newline at end of file diff --git a/eesanje/url_46_157_10.txt b/eesanje/url_46_157_10.txt new file mode 100644 index 0000000000000000000000000000000000000000..e14aa0c3c5b0395c122e1b939ff19cb2044b93d7 --- /dev/null +++ b/eesanje/url_46_157_10.txt @@ -0,0 +1,8 @@ +ವಿಚಾರಣೆಗೆ ಹಾಜರಾಗಲು ಎಚ್‌.ಡಿ.ರೇವಣ್ಣ ಅವರಿಗೆ ಸಂಜೆಯವರೆಗೂ ಕಾಲಾವಕಾಶವಿದೆ : ಪರಮೇಶ್ವರ್‌ +ಬೆಂಗಳೂರು,ಮೇ.4-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಇಂದು ಸಂಜೆಯವರೆಗೂ ಕಾಲಾವಕಾಶವಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ.ರೇವಣ್ಣ ಅವರಿಬ್ಬರಿಗೂ ಸೇರಿ ಆರಂಭದಲ್ಲೇ ಲುಕ್‌ ಔಟ್‌ ನೋಟೀಸ್‌ ನೀಡಲಾಗಿದೆ. ರೇವಣ್ಣ ಅವರು ವಿದೇಶಕ್ಕೆ ತೆರಳುವ ಅವಕಾಶವಿರಬಾರದು ಎಂಬ ಕಾರಣಕ್ಕೆ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್‌ ನೋಟೀಸ್‌ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು. +ಈಗಾಗಲೇ 2ನೇ ನೋಟಿಸ್‌ ಅನ್ನು ನೀಡಲಾಗಿದೆ. ಅದರ ಪ್ರಕಾರ ವಿಚಾರಣೆಗೆ ಹಾಜರಾಗಲು ಇಂದು ಸಂಜೆವರೆಗೂ ಕಾಲಾವಕಾಶವಿದ್ದು, ಆ ಬಳಿಕ ಕಾನೂನು ರೀತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಈ ನಡುವೆ ಕೆ.ಆರ್‌.ನಗರ ಠಾಣೆಯಲ್ಲಿ ದಾಖಲಾಗಿರುವ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು. ಇದೇ ಅಪಹರಣ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಸತೀಶ್‌ ಬಾಬು ಅವರ ಬಂಧನವಾಗಿದೆ. ಸಾಮಾನ್ಯವಾಗಿ ಪೊಲೀಸರು ಇಂತಹ ಪ್ರಕ್ರಿಯೆಗಳನ್ನು ನಿರಂತರವಾಗಿ ಚಾಲ್ತಿಯಲ್ಲಿಟ್ಟಿರುತ್ತಾರೆ. ಬಂಧನ, ವಿಚಾರಣೆ ಎಲ್ಲವೂ ಸಾಮಾನ್ಯ. ಪ್ರತಿಯೊಂದನ್ನೂ ಸಾರ್ವಜನಿಕವಾಗಿ ಮಾಹಿತಿ ನೀಡಲು ಸಾಧ್ಯವಾಗುವುದಿಲ್ಲ. ರೇವಣ್ಣ ಅವರಿಗೆ ಸಿಆರ್‌ಪಿಸಿ ಸೆಕ್ಷನ್‌ 47 ಎ ಅಡಿ ನೋಟೀಸ್‌ ನೀಡಲಾಗಿದೆ. ಅವರು ಖುದ್ದು ವಿಚಾರಣೆಗೆ ಹಾಜರಾಗಲೇಬೇಕು ಎಂದರು. +ಪ್ರಜ್ವಲ್‌ ರೇವಣ್ಣ ಸದ್ಯಕ್ಕೆ ಭಾರತಕ್ಕೆ ಮರಳುವ ಸಾಧ್ಯತೆಯಿಲ್ಲ ಎಂಬ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಗೃಹಸಚಿವರು ಇಂದಲ್ಲಾ ನಾಳೆ ಭಾರತಕ್ಕೆ ಮರಳಲೇಬೇಕು ಎಂದು ಹೇಳಿದರು.ಲೋಕಸಭಾ ಚುನಾವಣೆ ಮುಗಿದ ಬಳಿಕ ಪ್ರಕರಣವನ್ನು ಕಡೆಗಣಿಸಲಾಗುತ್ತದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿರುವುದು ಅವರ ಅಭಿಪ್ರಾಯ. ಪ್ರಕರಣದ ನಂತರ ಏನಾಗುತ್ತದೆ ಎಂಬುದನ್ನು ಕಾದು ನೋಡಲಿ. ಪ್ರಸ್ತುತ ನಡೆಯುತ್ತಿರುವ ಚರ್ಚೆಗಳನ್ನು ಮತದಾರರು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು. +ಹುಬ್ಬಳ್ಳಿಯಲ್ಲಿ ಲವ್‌ ಜಿಹಾದ್‌ ನಡೆದಿದೆ ಎಂಬ ಕುರಿತ ಪ್ರಶ್ನೆಗೆ ಸಿಡಿಮಿಡಿಗೊಂಡ ಗೃಹಸಚಿವರು, ಲವ್‌ ಜಿಹಾದ್‌ ನಡೆದಿದೆ ಎಂದು ನಿಮಗೆ ಗೊತ್ತಿದೆಯೇ? ಸಾಕ್ಷಿ ಇದೆಯೇ? ಪ್ರಶ್ನೆಗಳನ್ನು ಕೇಳುವಾಗ ಸೂಕ್ಷ್ಮತೆ ಇರಬೇಕು ಎಂದು ಆಕ್ಷೇಪಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. +ರಾಹುಲ್‌ಗಾಂಧಿ ಗೆ ನೋಟೀಸ್‌ ನೀಡುವಂತೆ ಎಚ್‌.ಡಿ.ಕುಮಾರಸ್ವಾಮಿಯವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಅವರನ್ನೇ ಕೇಳಿಯೇ ಎಲ್ಲಾ ಕೆಲಸ ಮಾಡೋಣ ಎಂದು ಟಾಂಗ್‌ ನೀಡಿದರು. \ No newline at end of file diff --git a/eesanje/url_46_157_11.txt b/eesanje/url_46_157_11.txt new file mode 100644 index 0000000000000000000000000000000000000000..7750bdacbc63670a6f35c97a800dc401bcb09a50 --- /dev/null +++ b/eesanje/url_46_157_11.txt @@ -0,0 +1,6 @@ +ವೇದಿಕೆ ಮೇಲೆ ಅಭಿನಯಿಸುತ್ತಿರುವಾಗಲೇ ಪ್ರಾಣ ಬಿಟ್ಟ ಕಲಾವಿದ +ಯಲಹಂಕ, ಮೇ.4-ವೇದಿಕೆ ಮೇಲೆ ಅಭಿನಯಿಸುವಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ. +ದೇವನಹಳ್ಳಿ ತಾಲ್ಲೂಕು ಹರದೇಶಹಳ್ಳಿಯ ನಿವಾಸಿಯಾದ ಮುನಿಕೆಂಪಣ್ಣ ಮೃತಪಟ್ಟ ಕಲಾವಿದ. ನಿನ್ನೆ ರಾತ್ರಿ ಯಲಹಂಕ ತಾಲ್ಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿ ಕೆಂಪಣ್ಣ ರಾತ್ರಿ 1.30ರ ಸಂದರ್ಭದಲ್ಲಿ ಪಾತ್ರದಲ್ಲಿ ಅಭಿನಯಿಸುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. +ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಾವಿಗೂ ಮುನ್ನ ವೇದಿಕೆಯಲ್ಲಿ ಅದ್ಭುತವಾಗಿ ಅಭಿನಯಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. +ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು. ಸಾಹಿತಿ, ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ದೇವನಹಳ್ಳಿಯಲ್ಲಿ ನಡೆದ 28ನೇ ಕನ್ನಡ ಸಾಹಿತ್ಯ ಸಮೇಳನದ ಅಧ್ಯಕ್ಷರಾಗಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಗೆ ಅವರ ಹುಟ್ಟೂರಾದ ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. +ಇದೇ ರೀತಿ ಕಳೆದ ಬುಧವಾರ ರಾತ್ರಿ ಕೋಟಾ ಗಾಂಧಿ ಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತೆ ಯಕ್ಷಗಾನ ವೇಳೆ ಯಕ್ಷಗಾನ ಮೇಳದ ಕಲಾವಿದ ಸವ್ಯಸಾಚಿ ಗಂಗಾಧರ್‌ ಪುತ್ತೂರು ಅವರು ವೇಶ ಕಳಚುತ್ತಿರುವಾಗಲೇ ಮೃತಪಟ್ಟಿದ್ದರು. \ No newline at end of file diff --git a/eesanje/url_46_157_12.txt b/eesanje/url_46_157_12.txt new file mode 100644 index 0000000000000000000000000000000000000000..2b0372e109060c7db76933926f287cdbf1d8b5bb --- /dev/null +++ b/eesanje/url_46_157_12.txt @@ -0,0 +1,4 @@ +ಮಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ಇಮೇಲ್‌ +ಮಂಗಳೂರು,ಮೇ4-ಇಲ್ಲಿನ ಏರ್‌ಪೋರ್ಟ್‌ಗೆ ಬಾಂಬ್‌ ಇಡಲಾಗಿದ್ದು ಕೆಲವೇ ಗಂಟೆಗಳಲ್ಲಿ ದೊಡ್ಡ ಮಟ್ಟದ ರಕ್ತಪಾತವಾಗಲಿದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್‌ ಬಂದಿದೆ. +ಏರ್‌ಪೋರ್ಟ್‌ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದೆ. ಅಲ್ಲದೆ ಮೂರು ವಿಮಾನಗಳಲ್ಲಿಯೂ ಬಾಂಬ್‌ ಇಡಲಾಗಿದೆ ಎಂಬ ಸಂದೇಶ ಗಮನಿಸಿದ ಏರ್‌ಪೋರ್ಟ್‌ ಸಿಬ್ಬಂದಿ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. +ಈ ಕೃತ್ಯದ ಹಿಂದೆ ಟೆರರೈಸರ್‌ರ‍ಸ 111 ಇದೆ ಎಂದು ಉಗ್ರರ ಹೆಸರಿನಲ್ಲಿ ಇಮೇಲ್‌ ಬಂದಿದ್ದು, ಏರ್‌ಪೋರ್ಟ್‌ ಠಾಣೆ ಪೊಲೀಸರು ಬಾಂಬ್‌ ನಿಷ್ಕ್ರಿಯ ದಳ , ತನಿಖಾ ದಳ, ಶ್ವಾನದಳದೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_157_2.txt b/eesanje/url_46_157_2.txt new file mode 100644 index 0000000000000000000000000000000000000000..3283604a88e68ab9dffeb34f969498649df4b130 --- /dev/null +++ b/eesanje/url_46_157_2.txt @@ -0,0 +1,7 @@ +ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ಗೆದ್ದರೂ ಅಮಾನತು ಹಿಂಪಡೆಯದಂತೆ ಅಶೋಕ್‌ ಮನವಿ +ಬೆಂಗಳೂರು,ಮೇ5-ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್‌ ರೇವಣ್ಣ ವಿಜೇತರಾದರೂ ಅವರನ್ನು ಜೆಡಿಎಸ್‌ನಿಂದ ಕೆಲಕಾಲ ಅಮಾನತು ಮಾಡಿರುವ ನಿರ್ಧಾರವನ್ನು ಹಿಂತೆಗೆದುಕೊಳ್ಳದಂತೆ ಪಕ್ಷದ ನಾಯಕರಿಗೆ ನಾವೇ ಮನವಿ ಮಾಡುತ್ತೇವೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಜೆಡಿಎಸ್‌ ಕೂಡ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಅವರನ್ನು ಪಕ್ಷದಿಂದ ಅಮಾನತುಪಡಿಸಲಾಗಿದೆ ಎಂದರು. +ಹಾಸನದಲ್ಲಿ ಅವರು ವಿಜೇತರಾದರೂ ಅಮಾನತು ಆದೇಶವನ್ನು ಹಿಂಪಡೆಯದಂತೆ ಮನವಿ ಮಾಡುತ್ತೇವೆ. ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್‌ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಮನವಿ ಮಾಡಿದರು. +ಮಾಜಿ ಸಚಿವ ಎಚ್‌.ಡಿ.ರೇವಣ್ಣ ಬಂಧನ ಪ್ರಕ್ರಿಯೆ ಕಾನೂನಿನ ಪ್ರಕಾರವೇ ನಡೆದಿದೆ. ಎಸ್‌ಐಟಿ ಅವರು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಅಂತಿಮವಾಗಿ ನ್ಯಾಯಾಲಯದಲ್ಲಿ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡದ ಕಾರಣ ಎಸ್‌ಐಟಿಗೆ ಶರಣಾಗಿದ್ದಾರೆ. ಎಲ್ಲವೂ ಕೂಡ ಕಾನೂನಿನ ಅನ್ವಯ ನಡೆದಿದೆ. ಪೊಲೀಸರ ಕ್ರಮವನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. +ಈ ಪ್ರಕರಣದಿಂದ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸಿಗರು ಲಾಭ ಮಾಡಿಕೊಳ್ಳಲು ಹೊರಟಿದ್ದರು. ಮತದಾರರಿಗೆ ಇವರ ನಿಜವಾದ ಬಂಡವಾಳ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. +ಕಾಂಗ್ರೆಸ್‌ ಏನೇ ಗ್ಯಾರಂಟಿ , ಮಣ್ಣುಮಸಿ ಎಂದುಕೊಂಡರೂ ಯಾವುದೇ ಕಾರಣಕ್ಕೂ ಅವರು ಎರಡಂಕಿ ದಾಟುವುದಿಲ್ಲ. ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ಹತಾಶೆ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು. \ No newline at end of file diff --git a/eesanje/url_46_157_3.txt b/eesanje/url_46_157_3.txt new file mode 100644 index 0000000000000000000000000000000000000000..622d2daa587246cf2088658e16df89719cccde6d --- /dev/null +++ b/eesanje/url_46_157_3.txt @@ -0,0 +1,5 @@ +ನಾಳೆ ರಾತ್ರಿಯಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ +ಬೆಂಗಳೂರು,ಮೇ.5– ನಾಳೆ ರಾತ್ರಿಯಿಂದ ಆಂಬುಲೆನ್ಸ್ ಸೇವೆಗಳು ಸ್ಥಗಿತಗೊಳ್ಳಲಿವೆ. ಮೂರು ತಿಂಗಳ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ನಾಳೆ ರಾತ್ರಿ ಎಂಟು ಗಂಟೆಯಿಂದ ಆರೋಗ್ಯ ಕವಚ 108 ಆಂಬುಲೆನ್ಸ್ ಸೇವೆಗಳನ್ನು ಸ್ಥಗಿತಗೊಳಿಸಲು ಸಿಬ್ಬಂದಿಗಳು ಸಿದ್ದರಾಗಿದ್ದಾರೆ. +108 ಆಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡಿರುವ ಜಿವಿಕೆ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಿಬ್ಬಂದಿಗಳು ಅಕ್ರೋಶ ವ್ಯಕ್ತಪಡಿಸಿ ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ ಎಂದು 108 ಅಂಬುಲೆನ್ಸ್ ನೌಕರ ಸಂಘದ ಉಪಾಧ್ಯಕ್ಷ ದಯಾನಂದ್‌ ತಿಳಿಸಿದ್ದಾರೆ. +ಒಂದು ಕಡೆ ಮೂರು ತಿಂಗಳಿಂದ ಸಂಬಳವಿಲ್ಲ..ಮತ್ತೊಂದು ಕಡೆ ವೇತನ ಕಡಿತಗೊಳಿಸಿರೋ ಜಿವಿಕೆ ಸಂಸ್ಥೆಯ ನಿರ್ಧಾರ ವಿರೋಧೀಸಿ ನಾವು ಹೋರಾಟಕ್ಕಿಳಿಯಲು ತೀರ್ಮಾನಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಈಗಾಗಲೇ ಡಿಸೆಂಬರ್‌, ಜನವರಿ ತಿಂಗಳ ವೇತನವನ್ನು 30 ಸಾವಿರದಿಂದ ಕಡಿತ ಮಾಡಿ ಕೇವಲ 13 ಸಾವಿರ ವೇತನ ನೀಡಲಾಗಿದೆ. ನಾಳೆ ಸಂಜೆಯೊಳಗೆ ಕಡಿತ ಮಾಡಿದ ವೇತನವನ್ನು ಬಿಡುಗಡೆ ಮಾಡಬೇಕು ಇಲ್ಲಿದಿದ್ದರೆ ನಮ ಸೇವೆ ಸ್ಥಗಿತಗೊಳಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_157_4.txt b/eesanje/url_46_157_4.txt new file mode 100644 index 0000000000000000000000000000000000000000..7be053240879cdd0d9fcf1328bc662c3571ca7bd --- /dev/null +++ b/eesanje/url_46_157_4.txt @@ -0,0 +1,8 @@ +ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..? +ಬೆಂಗಳೂರು,ಮೇ5-ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ್ಟು ಹಾಕಿದೆ. ಅದರಲ್ಲಿ ಒಂದು ಈ ಪ್ರಕರಣಕ್ಕೆ ದುಡ್ಡು ಹಾಕಿದವರು ಯಾರು? ಎಂಬ ಪ್ರಶ್ನೆ. +ಪ್ರಜ್ವಲ್‌ ವಿರುದ್ದ ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮಾತ್ರ ದಾಖಲಾಗಿದ್ದವು. ಈಗ ಅತ್ಯಾಚಾರದ ಕೇಸ್‌ ಕೂಡ ದಾಖಲಾಗುವ ಮೂಲಕ ಕಾನೂನಿನ ಕುಣಿಕೆ ಬಿಗಿಯಾಗುತ್ತಿದೆ. ಪ್ರಜ್ವಲ್‌, ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಅವರನ್ನು ಬಂಧಿಸುವ ಸಾಧ್ಯತೆಯಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿರುವವರಿಗೆ ಜರ್ಮನಿಗೆ ಪ್ರವಾಸ ಮಾಡಲು ವೀಸಾದ ಅವಶ್ಯಕತೆಯಿಲ್ಲ ಎಂದು ವಿದೇಶಾಂಗ ಇಲಾಖೆಯ ಸಚಿವಾಲಯ ಹೇಳಿದೆ. ಆ ಮೂಲಕ, ಪ್ರಜ್ವಲ್‌ ಜರ್ಮನಿಗೆ ತೆರಳಲು ಅನುಕೂಲ ಮಾಡಿಕೊಟ್ಟಿಲ್ಲ ಎಂದು ಇಲಾಖೆ ಸ್ಪಷ್ಟ ಪಡಿಸಿದೆ. +ಇವೆಲ್ಲದರ ನಡುವೆ, ಭಾರೀ ಚರ್ಚೆಯ ವಿಷಯವಾಗಿರುವುದು ಇಷ್ಟೊಂದು ದೊಡ್ಡ ಮಟ್ಟಕ್ಕೆ ಅಶ್ಲೀಲ ಪೆನ್‌ಡ್ರೈವ್‌ ಬಿಡುಗಡೆ ಮಾಡಲು ಬಂಡವಾಳ ಹೂಡಿದ್ದು ಯಾರು ಎನ್ನುವುದು ಮಿಲಿಯನ್‌ ಡಾಲರ್‌ ಪ್ರಶ್ನೆಯಾಗಿದೆ. ಯಾಕೆಂದರೆ, ಇದಕ್ಕೆ ತಗಲುವ ಖರ್ಚು.ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಎರಡು ದಿನ ಇರುವಾಗ ವ್ಯವಸ್ಥಿತವಾಗಿ ಪೆನ್‌ಡ್ರೈವ್‌ ಮೂಲಕ ಪ್ರಚಾರ ನಡೆಸಿದ್ದು, ಕೋಟ್ಯಂತರ ರೂ. ಬಂಡವಾಳ ಹೂಡಿದ ಹಿಂದಿನ ಸೂತ್ರಧಾರ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. +ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಓಡಾಡುತ್ತಿದೆ ಎನ್ನುವುದು ಹಾಸನದಲ್ಲಿ ಸುಮಾರು ಒಂದು ವರ್ಷದಿಂದ ಚರ್ಚೆಯಲ್ಲಿದ್ದ ವಿಷಯ. ಈ ಪೆನ್‌ಡ್ರೈವ್‌ ಎಲ್ಲಾದರೂ ಮಾಧ್ಯಮದವರ ಕೈಗೆ ಸಿಕ್ಕಿದರೆ ಎಂದು ಪ್ರಜ್ವಲ್‌, ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದರು. +ಆದರೆ ಎಲ್ಲಾ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿ ದೇಶದಲ್ಲಿ ದೊಡ್ಡ ಮಟ್ಟದ ಸುದ್ದಿಯಾಗಿ ಹೋಗಿದೆ. ಸುಮಾರು ನಲವತ್ತು ಸಾವಿರದಷ್ಟು ಪೆನ್‌ಡ್ರೈವ್‌ ಹಾಸನ ತಲುಪಲಿದೆ ಎನ್ನುವ ಸುದ್ದಿ ಮೊದಲ ಹಂತದ ಚುನಾವಣೆಗೆ ಒಂದು ವಾರದ ಮುಂಚೆಯಿಂದಲೇ ಓಡಾಡುತ್ತಿತ್ತು. ಏಪ್ರಿಲ್‌ 21ರ ಸುಮಾರಿಗೆ ಒಂದಷ್ಟು ಪೆನ್‌ಡ್ರೈವ್‌ ಹಾಸನಕ್ಕೆ ಬಂದಿದ್ದವು ಕೂಡಾ. +ಇದಾದ ಎರಡು ದಿನಗಳಲ್ಲಿ ಸುಮಾರು ನಲವತ್ತು ಸಾವಿರ ಪೆನ್‌ಡ್ರೈವ್‌ಗಳನ್ನು ಹಾಸನದ ವಿವಿಧ ಭಾಗಗಳಲ್ಲಿ ವ್ಯವಸ್ಥಿತವಾಗಿ ಹಂಚಲಾಗಿತ್ತು. ಬಹಿರಂಗ ಪ್ರಚಾರಕ್ಕೆ ಏಪ್ರಿಲ್‌ 24 ಕೊನೆಯ ದಿನವಾಗಿತ್ತು. ಆದರೆ ಪೆನ್‌ಡ್ರೈವ್‌ ಬಹಿರಂಗವಾಗುವುದು ಖಚಿತವಾಗುತ್ತಿದ್ದಂತೆಯೇ ಏಪ್ರಿಲ್‌ 20ರ ನಂತರ ಪ್ರಜ್ವಲ್‌ ರೇವಣ್ಣ ಬಹಿರಂಗ ಪ್ರಚಾರಕ್ಕೆ ಹೋಗಲೇ ಇಲ್ಲ. +ಏಪ್ರಿಲ್‌ 19ಕ್ಕೆ ಪ್ರತಾಪ್‌ ಸಿಂಹ, ಡಾ.ಅಶ್ವತ್ಥ ನಾರಾಯಣ್‌ ಜೊತೆಗೆ ಸಕಲೇಶಪುರದಲ್ಲಿ ಬಹಿರಂಗ ಪ್ರಚಾರಕ್ಕೆ ಹೋದ ನಂತರ, ಪ್ರಜ್ವಲ್‌ ಎಲ್ಲೂ ಕಾಣಿಸಿಕೊಂಡಿಲ್ಲ. ಈ ನಾಲ್ಕೈದು ದಿನಗಳಲ್ಲಿ ಕಾಂಗ್ರೆಸ್‌ ತನ್ನ ಪ್ರಚಾರದ ವೇಗವನ್ನು ಹೆಚ್ಚಿಸಿಕೊಂಡಿತು. ಏಪ್ರಿಲ್‌ 26ಕ್ಕೆ ಮತದಾನ ನಡೆಸಿದ ನಂತರ ಪ್ರಜ್ವಲ್‌ ವಿದೇಶಕ್ಕೆ ಹಾರಿದ್ದಾರೆ. \ No newline at end of file diff --git a/eesanje/url_46_157_5.txt b/eesanje/url_46_157_5.txt new file mode 100644 index 0000000000000000000000000000000000000000..97a9ed20bd06f6611b5f8a2fc32076c67be8dac9 --- /dev/null +++ b/eesanje/url_46_157_5.txt @@ -0,0 +1,8 @@ +ಹೆಚ್ಚಿದ ಬಿಸಿಲಿನ ಝಳ : ಮತಗಟ್ಟೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ +ಬೆಂಗಳೂರು,ಮೇ5-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಭಾರತದ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. +ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮತದಾರರಿಗೆ ಅನುಕೂಲವಾಗುವಂತೆ ಹಲವು ಸೌಲಭ್ಯಗಳನ್ನು ಮತಗಟ್ಟೆಯಲ್ಲಿ ಕಲ್ಪಿಸಲಾಗುತ್ತದೆ. +ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ಪ್ರಕಾರ, ಮತಗಟ್ಟೆಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ಪೀಠೋಪಕರಣ, ರ್ಯಾಂಪ್‌ ಸೌಲಭ್ಯಗಳಲ್ಲದೆ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯದ ವ್ಯವಸ್ಥೆ ಹಾಗೂ ಮತದಾರರಿಗೆ ಸಹಾಯವಾಗಲು ಸಂಕೇತ ಫಲಕಗಳನ್ನು ಅಳವಡಿಸಲಾಗಿದೆ. +ಮತಗಟ್ಟೆಯ ಅಕ್ಕಪಕ್ಕದ ಕೊಠಡಿಗಳನ್ನು ವಿಶ್ರಾಂತಿ ಕೊಠಡಿಗಳನ್ನಾಗಿ ಮಾರ್ಪಡಿಸಿ ಸಿದ್ದವಿರಿಸಲಾಗಿದೆ. ಮತಗಟ್ಟೆ ಆವರಣದಲ್ಲಿ ಶಾಮಿಯಾನ ಮತ್ತು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. +ಮತಗಟ್ಟೆ ಆವರಣದಲ್ಲಿ ಶುಶ್ರೂಷಕರು, ಆಶಾ ಕಾರ್ಯಕರ್ತೆಯರೊಂದಿಗೆ ಓಆರ್‌ಎಸ್‌, ವೈದ್ಯಕೀಯ ಕಿಟ್‌ಗಳನ್ನು ವ್ಯವಸ್ಥೆ ಮಾಡಲಾಗುತ್ತದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತುರ್ತು ಸಂದರ್ಭಗಳಿಗಾಗಿ ಆಂಬ್ಯುಲೆನ್ಸ್ ಸೇವಾ ಸೌಲಭ್ಯವಿರುತ್ತದೆ ಎಂದು ತಿಳಿಸಿದೆ. +ರಾಜಕೀಯ ಪಕ್ಷಗಳ ತಾತ್ಕಾಲಿಕ ಕಚೇರಿ:ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾನದ ದಿನದಂದು ಮತಗಟ್ಟೆ ಕೇಂದ್ರದಿಂದ 200 ಮೀಟರ್‌ ಹೊರಗಿನ ಜಾಗದಲ್ಲಿ ನೆರಳಿಗಾಗಿ ತಾತ್ಕಾಲಿಕ ಟೆಂಟ್‌ ಹಾಕಿಕೊಂಡು ಪ್ರತಿ ಬೂತ್‌ಗೆ ಕೇವಲ ಒಂದು ಟೇಬಲ್‌ ಎರಡು ಕುರ್ಚಿಗಳನ್ನು ಮಾತ್ರ ಹಾಕಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. +ಯಾವುದೇ ಪಕ್ಷ ಅಥವಾ ಅಭ್ಯರ್ಥಿಯ ಪರವಾಗಿ ಅಥವಾ ವಿರುದ್ಧವಾಗಿ ಮತ ಚಲಾಯಿಸಲು ಯಾವುದೇ ರೀತಿಯ ಪ್ರಭಾವ ಬೀರುವುದನ್ನು ನಿಷೇಧಿಸಲಾಗಿದೆ. ಈ ರೀತಿ ಕೆಲವು ನಿರ್ಬಂಧಗಳನ್ನು ಆಯೋಗ ಅಭ್ಯರ್ಥಿಗಳಿಗೆ ವಿಧಿಸಿದೆ. \ No newline at end of file diff --git a/eesanje/url_46_157_6.txt b/eesanje/url_46_157_6.txt new file mode 100644 index 0000000000000000000000000000000000000000..24b5884294a41509276f7112096ac903aa015507 --- /dev/null +++ b/eesanje/url_46_157_6.txt @@ -0,0 +1,12 @@ +2ನೇ ಹಂತದ ಚುನಾವಣೆಗೆ ಕ್ಷಣಗಣನೆ, ಇಂದು ಸಂಜೆ ಪ್ರಚಾರಕ್ಕೆ ತೆರೆ +ಬೆಂಗಳೂರು,ಮೇ5-ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ 227 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧರಿಸುವ ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ. +ಮತದಾರರು ಅಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಆಯಾ ಕ್ಷೇತ್ರ ಬಿಟ್ಟು ತೆರಳಬೇಕಿದೆ. ಮೇ7ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾಗುವ 48 ಗಂಟೆ ಮುಂಚಿನ ಅವಧಿಯನ್ನು ಶೂನ್ಯ ಅವಧಿ ಎಂದು ಘೋಷಿಸಲಾಗಿದ್ದು, ಆ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಸಾರ್ವಜನಿಕ ಸಭೆಗಳನ್ನು ನಡೆಸಲು ಧ್ವನಿವರ್ಧಕಗಳನ್ನು ಬಳಸಲು ನಿರ್ಬಂಧಿಸಲಾಗಿದೆ. +ಇಂದು ಸಂಜೆ 6 ಗಂಟೆಯ ನಂತರ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿದೆ. ಆದರೆ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸುವಂತಿಲ್ಲ. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ವಸತಿ ಗೃಹಗಳು ಹಾಗೂ ಅತಿಥಿಗೃಹಗಳನ್ನು ಪರಿಶೀಲಿಸಿ ಹೊರಗಿನಿಂದ ಚುನಾವಣಾ ಪ್ರಚಾರಕ್ಕಾಗಿ ಬಂದವರು ಉಳಿದುಕೊಂಡಿದ್ದಾರೆಯೇ ಇಲ್ಲವೇ ಎಂಬುದನ್ನು ಚುನಾವಣಾಧಿ ಕಾರಿಗಳು ಹಾಗೂ ಪೊಲೀಸ್‌ ಅಧಿ ಕಾರಿಗಳು ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. +ಆಯಾ ಕ್ಷೇತ್ರದ ಗಡಿಗಳಲ್ಲಿ ಚೆಕ್‌ಪೋಸ್‌್ಟಗಳನ್ನು ಸ್ಥಾಪಿಸಿ ಕ್ಷೇತ್ರದ ಹೊರಗಿನಿಂದ ಬರುವ ವಾಹನಗಳ ಚಲನವಲನಗಳ ಮೇಲೆ ನಿಗಾವಹಿಸುವಂತೆ ನಿರ್ದೇಶನ ನೀಡಿದೆ. ಆಯಾ ಕ್ಷೇತ್ರದ ಮತದಾರರೇ ಅಲ್ಲವೇ ಎಂಬುದನ್ನು ಪರಿಶೀಲಿಸಲು ಗುರುತಿನ ಚೀಟಿಯನ್ನು ಪರಿಶೀಲಿಸಲು ಸೂಚಿಸಿದೆ. ಸಂಜೆ 6 ಗಂಟೆಯಿಂದ ಮತದಾನ ನಡೆಯುವ ಜಿಲ್ಲೆಗಳಲ್ಲಿ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿ ಕಾರಿ (ಸಿಇಒ) ಕಚೇರಿ ತಿಳಿಸಿದೆ. +ಮದ್ಯ ಮಾರಾಟಕ್ಕೆ ನಿಷೇಧ: +ಮತದಾನದ ಅವಧಿ ಮುಗಿಯುವವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತರುವಂತಿಲ್ಲ. ಕರ್ನಾಟಕ ಗಡಿಯಿಂದ 5 ಕಿ.ಮೀ ವ್ಯಾಪ್ತಿಯಲ್ಲಿರುವ ಇತರ ರಾಜ್ಯಗಳ ಮದ್ಯದಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಬೀದರ್‌, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಉತ್ತರಕನ್ನಡ, ಬೆಳಗಾವಿ ಮತ್ತು ವಿಜಯಪುರ ತೆಲಂಗಾಣ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿವೆ. +ಸಾರ್ವತ್ರಿಕ ರಜೆ:ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲಾ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7ರಂದು ವೇತನ ಸಹಿತ ರಜೆ ನೀಡುವಂತೆ ವಿನಂತಿಸಿದೆ. ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಮತದಾನದ ದಿನ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. +ಅಲ್ಲದೆ, ವ್ಯಾಪಾರ ಉದ್ಯಮಗಳು, ಕೈಗಾರಿಕೆಗಳು ಮತ್ತು ಇತರ ಸಂಸ್ಥೆಗಳು ದಿನಗೂಲಿ ನೌಕರರು ಮತ್ತು ಅವರೊಂದಿಗೆ ಕೆಲಸ ಮಾಡುವ ಕಾಯಂ ಸಿಬ್ಬಂದಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲು ವೇತನ ಸಹಿತ ರಜೆಯನ್ನು ಮಂಜೂರು ಮಾಡುವಂತೆ ಸೂಚಿಸಲಾಗಿದೆ. +ಉತ್ತರ ಕರ್ನಾಟಕದ ಹಲವು ಮಂದಿ ಮಹಾರಾಷ್ಟ್ರ, ಹೈದರಾಬಾದ್‌ ಮತ್ತಿತರ ಕಡೆ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕರೆಸಿ ಆಯಾ ಕ್ಷೇತ್ರಕ್ಕೆ ಬಂದು ಮತದಾನ ಮಾಡುವಂತೆ ಮನವೊಲಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಯಾವುದೇ ಅಭಿಪ್ರಾಯ ಸಂಗ್ರಹಕ್ಕೆ ಅವಕಾಶವಿಲ್ಲ ಎಂದು ಚುನಾವಣಾಧಿ ಕಾರಿಗಳು ತಿಳಿಸಿದ್ದಾರೆ. ಮತಗಟ್ಟೆ ಅಭಿಪ್ರಾಯ ಸಂಗ್ರಹದ ಮೇಲೆ ಈ ನಿರ್ಬಂಧಗಳನ್ನು ಹೇರಲಾಗಿದೆ. ಏಪ್ರಿಲ್‌ 19ರಿಂದ ಜೂನ್‌ 1ರ ಸಂಜೆ 6.30ರವರೆಗೆ ಈ ನಿಷೇಧವಿದೆ. +227 ಅಭ್ಯರ್ಥಿಗಳು:ಕಲಬುರಗಿಯ ಉತ್ತರಕರ್ನಾಟಕ ಭಾಗದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬಾರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ಒಟ್ಟು 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಒಟ್ಟು 2,59,52,958 ಮತದಾರರು ಮತದಾನ ಮಾಡುವ ಹಕ್ಕು ಪಡೆದಿದ್ದಾರೆ. ಒಟ್ಟು 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. +ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಎಲ್ಲಾ 14 ಕ್ಷೇತ್ರಗಳಲ್ಲೂ ಸ್ಫರ್ಧಿಸಿವೆ. ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 73 ಹಾಗೂ 117 ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಪೈಕಿ 206 ಪುರುಷರು, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. \ No newline at end of file diff --git a/eesanje/url_46_157_7.txt b/eesanje/url_46_157_7.txt new file mode 100644 index 0000000000000000000000000000000000000000..a29399e36c4f632b705c35616b6a567f67bb90ff --- /dev/null +++ b/eesanje/url_46_157_7.txt @@ -0,0 +1,8 @@ +ಎಚ್‌.ಡಿ.ರೇವಣ್ಣ ಪ್ರಕರಣದಲ್ಲಿ ರಾಜಕೀಯ ಇಲ್ಲ, ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು : ಖರ್ಗೆ +ಕಲಬುರಗಿ,ಮೇ.5-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನ ಪ್ರಕರಣದಲ್ಲಿ ರಾಜಕೀಯ ಇಲ್ಲ ಎಂದು ಸ್ಪಷ್ಟಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು, ಕಾನೂನು ಮೀರುವವರಿಗೆ ಪಾಠವಾಗಬೇಕು ಎಂದಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಕಾನೂನು ಪ್ರಕಾರ ಎಸ್‌ಐಟಿ ಕ್ರಮ ಕೈಗೊಳ್ಳುತ್ತಾರೆ. ನೆಲದ ಕಾನೂನು ಆಧರಿಸಿ ಕ್ರಮ ಕೈಗೊಳ್ಳುತ್ತಾರೆ. ಬಂಧನ, ಜಾಮೀನು ಇವೆಲ್ಲಾ ನಡೆಯುತ್ತದೆ. ಈಗ ರೇವಣ್ಣ ಅವರ ಬಂಧನವಾಗಿದೆ. ಮುಂದೆ ನೊಂದ ಕುಟುಂಬಗಳಿಗೆ ನ್ಯಾಯ ಸಿಗಬೇಕು. ಇಂತಹ ಹೀನ ಕೆಲಸ ಮಾಡುವವರಿಗೂ ಬುದ್ಧಿ ಬರಬೇಕು ಎಂದರು. +ಕಾನೂನು ಕಠಿಣವಾಗಿದೆ. ಯಾರಿಗೂ ಅದರಿಂದ ಬಿಡುಗಡೆಯಾಗುವುದಿಲ್ಲ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಹೀನ ಕೃತ್ಯ ಎಸಗಲು ನಾವು ಹೇಳಿರಲಿಲ್ಲ. ಹತ್ತಾರು ವರ್ಷಗಳಿಂದ ಇದು ನಡೆಯುತ್ತಾ ಬಂದಿದೆ. ಅವರ ಸರ್ಕಾರವೂ ಅಧಿ ಕಾರದಲ್ಲಿತ್ತು. ಮತ್ತೊಬ್ಬರ ಸರ್ಕಾರವೂ ಇತ್ತು. +ಈಗ ಅದು ಬೇರೆ ವಿಚಾರ. ಪ್ರತಿಯೊಂದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಇದರಲ್ಲಿ ಯಾರೂ ರಾಜಕೀಯ ಬೆರೆಸಬಾರದು ಎಂದು ಹೇಳಿದರು.ಪ್ರಜ್ವಲ್‌ ರೇವಣ್ಣ ಅವರ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅವರು ಕಿರಿಯರಿದ್ದಾರೆ. ನನಗೆ ಅವರಿಗಿಂತಲೂ ಹಿರಿಯರ ಬಗ್ಗೆ ಮಾತನಾಡುವುದು ಸೂಕ್ತ ಎಂದರು. +ಕಾಂಗ್ರೆಸ್‌ನ ವಿರುದ್ಧ ಪೂರ್ವಾಗ್ರಹ ಪೀಡಿತವಾಗಿರುವವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ. ಸಿಗುತ್ತಿದೆ, 200 ಯೂನಿಟ್‌ವರೆಗೆ ಬಳಕೆಗೆ ಉಚಿತ ವಿದ್ಯುತ್‌ ದೊರೆತಿದೆ, ಮಹಿಳೆಯರು ಸ್ತ್ರೀಶಕ್ತಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ, ಯುವನಿಧಿ ಯೋಜನೆಯಡಿ ಪದವೀಧರರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ, ಅನ್ನಭಾಗ್ಯ ಯೋಜನೆಯೂ ಯಶಸ್ವಿಯಾಗಿದೆ. ಆದರೆ ಯಾರ ಉದ್ದೇಶ ಸರಿ ಇರುವುದಿಲ್ಲವೋ ಅವರು ಮಾತ್ರ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ಹೇಳಿದರು. +ನನ್ನ ನೆಲ, ನನ್ನ ನೀರು :ಕಲಬುರಗಿ ನನ್ನ ಊರು, ನನ್ನ ನೀರು, ನನ್ನ ಭೂಮಿ, ನನ್ನ ಜನ್ಮಭೂಮಿಯಲ್ಲಿ ನಾನು ಇರುವುದನ್ನು ಪ್ರಶ್ನೆ ಮಾಡಲಾಗುತ್ತದೆ. 53 ವರ್ಷ ನಾನಿಲ್ಲಿ ರಾಜಕೀಯ ಮಾಡಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈವರೆಗೂ 2 ದಿನ ಸಾರ್ವಜನಿಕ ಸಮಾವೇಶಗಳನ್ನು ನಡೆಸಿದ್ದೇನೆ. +ಇದನ್ನು ಕೇಳುತ್ತಿರುವವರು ಪ್ರಧಾನಿ ನರೇಂದ್ರ ಮೋದಿಯ ಬಗ್ಗೆ ಪ್ರಶ್ನೆ ಮಾಡುವುದಿಲ್ಲ. ಸಂಬಂಧವೇ ಇಲ್ಲದಿರುವ ಮೋದಿ ಈಗಾಗಲೇ ಎರಡು ಬಾರಿ ಕಲಬುರಗಿಗೆ ಬಂದು ಹೋಗಿದ್ದಾರೆ. ಹಲವಾರು ಬಿಜೆಪಿ ನಾಯಕರು ಇಲ್ಲಿ ಪ್ರಚಾರ ಮಾಡಿದ್ದಾರೆ. ಆರ್‌ಎಸ್‌ಎಸ್‌ ನಾಯಕರು ಇಲ್ಲೇ ಟಿಕಾಣಿ ಹೂಡಿದ್ದಾರೆ. ಅವರ ಬಗ್ಗೆ ಯಾರೂ ಪ್ರಶ್ನೆ ಮಾಡುವುದಿಲ್ಲ. ನನ್ನ ಊರಿನಲ್ಲಿ ನಾನಿದ್ದರೆ ಅದಕ್ಕೆ ತಕರಾರುಗಳೇಕೆ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_157_8.txt b/eesanje/url_46_157_8.txt new file mode 100644 index 0000000000000000000000000000000000000000..c9e45e2572a23a4d34e5f9c736393aaebfb6901f --- /dev/null +++ b/eesanje/url_46_157_8.txt @@ -0,0 +1,8 @@ +ತಾಪಮಾನ ದಾಖಲೆಯ ಏರಿಕೆ, ಇಳಿಮುಖ ಪೂರೈಕೆ, ಗಗನಕ್ಕೇರಿದ ತರಕಾರಿ ಬೆಲೆ +ಬೆಂಗಳೂರು,ಮೇ.5-ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣಕ್ಕೆ ಎಲ್ಲ ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ. +ಏರುತ್ತಲೇ ಇರುವ ತರಕಾರಿ ಬೆಲೆ ಜನರ ನಿತ್ಯದ ಜೀವನದಲ್ಲಿ ತಳಮಳಕ್ಕೆ ಕಾರಣವಾಗಿದೆ. ಮಳೆ ಪ್ರಾರಂಭವಾಗುವ ತನಕ ಈ ಬೆಲೆ ಇಳಿಕೆ ಕಾಣುವುದಿಲ್ಲ ಎಂದು ವ್ಯಾಪಾರಸ್ಥರು ಹೇಳುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈಗಾಗಲೇ ಒಂದು ಕೆಜಿ ತರಕಾರಿ ಕೊಳ್ಳುವಲ್ಲಿ ಅರ್ಧ ಕೆಜಿ ಖರೀದಿ ಮಾಡುವ ಸ್ಥಿತಿಗೆ ಗ್ರಾಹಕರು ಬಂದಿದ್ದಾರೆ. +ರಾಜಧಾನಿ ಬೆಂಗಳೂರಿಗೆ ರಾಮನಗರ, ಮಾಗಡಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನಂದಗುಡಿ, ಕನಕಪುರ ಸೇರಿದಂತೆ ವಿವಿಧೆಡೆಯಿಂದ ಪೂರೈಕೆ ಆಗುವ ತರಕಾರಿ ಪ್ರಸ್ತುತ ಗಣನೀಯವಾಗಿ ಇಳಿಮುಖವಾಗಿದೆ. ಬಿರುಬಿಸಿಲು, ಅಂತರ್ಜಲ ಮಟ್ಟ ಕುಸಿತ, ಕೊಳವೆ ಬಾವಿ ಬತ್ತಿರುವುದು ತರಕಾರಿ ಬೆಳೆಗಳ ಇಳುವರಿ ತಗ್ಗಿಸಿದೆ. ಹೀಗಾಗಿ ಪೂರೈಕೆ ಕಡಿಮೆಯಾಗಿದೆ. +ದಾವಣಗೆರೆ, ಪರ ರಾಜ್ಯಗಳಿಂದ ತರಕಾರಿ ಬರುತ್ತಿದ್ದು, ಸಾಗಾಟದ ವೆಚ್ಚದಿಂದ ಗ್ರಾಹಕರಿಗೆ ಬೆಲೆಯನ್ನು ಇನ್ನಷ್ಟು ಹೊರೆಯಾಗಿಸುತ್ತಿವೆ. ಸಗಟು ಮಾರುಕಟ್ಟೆಯೂ ಬೆಲೆ ಏರಿಕೆಗೆ ನಲುಗಿದೆ. +ಬೀನ್‌್ಸ ಬೆಳೆಯಲು ಹೆಚ್ಚಿನ ನೀರು ಬೇಕು. ಸದ್ಯದ ಬರ ಪರಿಸ್ಥಿತಿಯಲ್ಲಿ ಹೆಚ್ಚಿನದಾಗಿ ಬೀನ್‌್ಸ ಬೆಳೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಬೆಲೆ 200 ರೂ.ಗಳವರೆಗೂ ಏರಿಕೆಯಾಗಿದೆ. ಸೊಪ್ಪು, ಮೂಲಂಗಿ, ನವಿಲುಕೋಸು, ಹೀರೆಕಾಯಿ ಬೆಲೆಗಳು ಹೆಚ್ಚುತ್ತಿವೆ. ಸದ್ಯ ಕೆಜಿಗೆ ಇವುಗಳ ಬೆಲೆ ಸುಮಾರು 60 ರೂಪಾಯಿ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. +ಈ ನಡುವೆ ಚಿಲ್ಲರೆ ವ್ಯಾಪಾರಿಗಳು ಸಗಟು ಮಾರುಕಟ್ಟೆಯಿಂದ ತರಕಾರಿ ತಂದು ಮಾರಾಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಬೆಲೆ ಹೆಚ್ಚಳದಿಂದ ಗ್ರಾಹಕರು ಖರೀದಿಗೆ ಮುಂದಾಗುತ್ತಿಲ್ಲ. ತಂದ ತರಕಾರಿಗಳು ಒಣಗಿ ಹೋಗುತ್ತವೆ. ಹಾಗಾಗಿ ಕೆಲ ದಿನ ಮಾರಾಟ ಮಾಡದಿರುವುದೇ ಒಳಿತು ಎಂದು ವ್ಯಾಪಾರಸ್ಥರು ಹೇಳುತ್ತಿದ್ದಾರೆ. ಮಳೆ ಆರಂಭವಾಗಿ ಎರಡು ತಿಂಗಳ ಬಳಿಕವೇ ಬೆಲೆ ಇಳಿಯಬಹುದು. ಬೆಲೆ ಏರಿಕೆ ಗ್ರಾಹಕರನ್ನು ಎಷ್ಟು ಕಂಗೆಡಿಸಿದೆಯೋ ಅಷ್ಟೇ ಚಿಲ್ಲರೆ ವ್ಯಾಪಾರಿಗಳನ್ನೂ ಚಿಂತೆಗೆ ನೂಕಿದೆ. +ತರಕಾರಿ ದರ ಪಟ್ಟಿ (ಪ್ರತಿ ಕೆಜಿಗೆ)ನಾಟಿ ಬೀನ್ಸ್ 180 ರೂ.ರಿಂಗ್‌ ಬೀನ್ಸ್- 140 ರೂ.ಈರುಳ್ಳಿ – 40 ರೂ.ಬೀಟ್ರೂಟ್‌- 80 ರೂ.ಬೆಂಡೆಕಾಯಿ – 80 ರೂ.ನವಿಲುಕೋಸು – 80 ರೂ.ಹೀರೆಕಾಯಿ – 80 ರೂ.ಟೊಮೇಟೋ – 40 ರೂ.ಆಲೂಗೆಡ್ಡೆ- 50 ರೂ.ಮೆಣಸಿನಕಾಯಿ- 90 ರೂ.ಕ್ಯಾಪ್ಸಿಕಂ- 80 ರೂ. \ No newline at end of file diff --git a/eesanje/url_46_157_9.txt b/eesanje/url_46_157_9.txt new file mode 100644 index 0000000000000000000000000000000000000000..ce8b9d0e5b4ee5548b371666253029961aa11eef --- /dev/null +++ b/eesanje/url_46_157_9.txt @@ -0,0 +1,10 @@ + : ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅರೆಸ್ಟ್..! +ಬೆಂಗಳೂರು, ಮೇ 4- ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕರಾದ ಹೆಚ್.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ವಶಕ್ಕೆ ಪಡೆದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ತಿರಸ್ಕೃತವಾದ ಬೆನ್ನಲ್ಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ ಐಟಿ ತಂಡವು ಅಲ್ಲಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. +ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ +ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಮಹಿಳೆ ಅಪಹರಣ ಸಂಬಂಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಂದು ಸುಧೀರ್ಘ ವಿಚಾರಣೆ ನಡೆಯಿತು. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ನಡೆಸಿ, ವಾದ-ಪ್ರತಿವಾಧವನ್ನು ಆಲಿಸಿ, ಈ ತೀರ್ಪು ನೀಡಿದರು. +ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮೂರ್ತಿ.ಡಿ.ನಾಯಕ್ ಅವರು ಎರಡನೇ ಎಫ್.ಐ.ಆರ್ ನಲ್ಲಿ ಎಲ್ಲೂ ರೇವಣ್ಣ ಅವರ ವಿರುದ್ಧ ನೇರ ಆರೋಪವಿಲ್ಲ. ಎರಡನೇ ಆರೋಪಿ ಸತೀಶ್ ಬಾಬಣ್ಣ ಅವರ ಮೇಲೆ ಮಾತ್ರವೇ ಆರೋಪವಿದೆ. ಮಹಿಳೆಯನ್ನ ಸತೀಶ್ ಬಾಬಣ್ಣ ಅವರು ಬಂದು ಕರೆದುಕೊಂಡು ಹೋದರು ಎಂದು ಮಾತ್ರವೇ ಹೇಳದಾಗಿದೆಯೇ ಹೊರತು ರೇವಣ್ಣ ನವರು ಹೇಳಿದಕ್ಕೆ ಕರೆದುಕೊಂಡು ಹೋಗಿದೆಂದು ಎಲ್ಲೂ ತಿಳಿಸಿಲ್ಲ. ಅದೇ ರೀತಿ ಎಫ್.ಐ.ಆರ್ ನಲ್ಲೂ ಮಹಿಳೆಯ ಹೆಸರನ್ನು ಉಲ್ಲೇಖಿಸಿಲ್ಲ. ರೇವಣ್ಣ ವಿರುದ್ಧ ಕೇವಲ ಹೇಳಿದ-ಕೇಳಿದ ಎಂಬತಹ ಆಧಾರದ ರಹಿತ ಅಂಶಗಳಿವೆ ಎಂದರು. +ದೂರುದಾರರ ಹೇಳಿಕೆ ಬಿಟ್ಟರೆ ಎಫ್.ಐ.ಆರ್ ನಲ್ಲಿ ಏನ್ನೂ ಇಲ್ಲ. ಪ್ರಕರಣವನ್ನ ಅನಗತ್ಯವಾಗಿ ವಿಜೃಂಭಿಸುವ ಯತ್ನವನ್ನ ಎಸ್.ಐ.ಟಿ ಮಾಡುತ್ತಿದೆ. ಜಾಮೀನು ಸಿಗಬಾರದೆಂದು ಸೆಕ್ಷನ್ ೩೬೩, ೩೬೪ಎರ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಎ೨ ಆರೋಪಿಗೂ, ರೇವಣ್ಣಗೂ ಯಾವುದೇ ಸಂಬಧವಿಲ್ಲ. ಏಪ್ರಿಲ್ ೨೯ ರಂದು ಘಟನೆ ನಡೆದಿದೆ ಎಂದು ದೂರಿದರೂ, ಮೇ ೨ಕ್ಕೆ ಎಫ್.ಐ.ಆರ್ ದಾಖಲಾಗಿದೆ. +ಪ್ರಾಸಿಕ್ಯೂಷನ್ ಪರ ವಕೀಲರು ನಿನ್ನೆಯಷ್ಟೆ ರೇವಣ್ಣ ವಿರುದ್ಧ ಜಾಮೀನು ರಹಿತ ಆರೋಪಗಳಿಲ್ಲವೆಂದು ಹೇಳಿದ್ದರು. ಆ ಕಾರಣಕ್ಕೆ ನಮ್ಮ ನಿರೀಕ್ಷಣಾ ಜಾಮೀನು ಕೋರಿಕೆ ಅರ್ಜಿಯನ್ನು ವಾಪಸ್ಸ್ ಪಡೆದಿದ್ದೆವು. ಆದರೆ ಅವರು ಪುನ: ಮತ್ತೊಂದು ನೋಟೀಸ್ ನೀಡಿದ್ದಾರೆ. ಈ ನಡೆಯನ್ನು ಗಮನಿಸಿದರೆ ಅರ್ಜಿದಾರರು ನಮ್ಮನ್ನು ಬಂಧಿಸಬಹುದೆAದು ಆತಂಕವಿದೆ. ತುರ್ತಾಗಿ ಜಾಮೀನು ನೀಡಿದರೆ ಸಂಪೂರ್ಣವಾಗಿ ತನಿಖೆಗೆ ಸಹಕರಿಸಲು ಸಿದ್ಧವಿದ್ದೇವೆ. +ಬಂಧನದಿದ ರಕ್ಷಣೆ ಕೊಟ್ಟರೆ ತಕ್ಷಣವೇ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರೆ ಎಂದು ರೇವಣ್ಣ ಪರ ವಕೀಲರು ಪ್ರಬಲ ವಾದ ಮಂಡಿಸಿದರು. ಜಾಮೀನಿಗೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ಪರ ವಕೀಲರಾದ ಎಸ್.ಪಿ.ಜಗದೀಶ್ ಅವರು ವಾದ ಮಂಡಿಸಿ ಇನ್ ಕ್ಯಾಮರಾ ವಿಚಾರಣೆಗೆ ಮನವಿ ಮಾಡಿದರು. ಈ ಪ್ರಕರಣದಲ್ಲಿ ಮಹಿಳೆಯ ಕಿಡ್ನಾಪ್ ಆಗಿದೆ. ಅವರನ್ನ ಕಿಡ್ನಾಪ್ ಮಾಡಿದು ಯಾರು ? ಬಡ ಮಹಿಳೆಯನ್ನ ಹುಡುಕಲು ಎಸ್.ಐ.ಟಿ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂತ್ರಸ್ತ ಮಹಿಳೆ ದೂರು ನೀಡದಂತೆ ತಡೆಯಲಾಗುತ್ತಿದೆ. ನಮ್ಮ ಪೊಲೀಸರು ಹಗಲು-ರಾತ್ರಿ ಮಹಿಳೆಯನ್ನು ಹುಡುಕುತ್ತಿದ್ದಾರೆ. ದೂರು ನೀಡಿದರೆ ಎಚ್ಚರ ಎಂಬ ಸಂದೇಶ ರವಾನಿಸಿದಂತಿದೆ ಎಂದು ಬಿಹಾರ ರಾಜ್ಯದಂತಾಗುತ್ತದೆ ಎಂದು ಹೇಳಿದರು. +ರೇವಣ್ಣ ರಾಜಕೀಯ, ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ. ಹೀಗಾಗಿ ಜಾಮೀನು ನೀಡಬಾರದೆಂದು ವಕೀಲರು ಪ್ರಬಲ ವಾದ ಮಂಡಿಸಿದರು. ವಾದ-ವಿವಾದ ಆಲಿಸಿದ ನ್ಯಾಯಾಲಯ ಕೆಲಕಾಲ ಕಲಾಪವನ್ನು ಮುಂದೂಡಿ ನಂತರ ತೀರ್ಪನ್ನ ಪ್ರಕಟಿಸಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. +ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿ ಪ್ರಕರಣ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_158_1.txt b/eesanje/url_46_158_1.txt new file mode 100644 index 0000000000000000000000000000000000000000..255cde3144ac4479f65f64440eb6b5961c6cf3cc --- /dev/null +++ b/eesanje/url_46_158_1.txt @@ -0,0 +1,7 @@ +ವಿಧಾನಪರಿಷತ್‌ನ 3 ಪದವೀಧರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟ +ಬೆಂಗಳೂರು,ಮೇ.4-ವಿಧಾನಪರಿಷತ್‌ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಮತದಾರರ ಪಟ್ಟಿಗೆ ಹೆಸರುಗಳನ್ನು ನೊಂದಾಯಿಸಲು ಮೇ 6 ಕಡೆಯ ದಿನವಾಗಿದೆ. +ಕರ್ನಾಟಕ ಈಶಾನ್ಯ ಪದವೀಧರ, ಕರ್ನಾಟಕ ನೈರುತ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ಆಗ್ನೇಯ ಶಿಕ್ಷಕರ, ಕರ್ನಾಟಕ ನೈರುತ್ಯ ಶಿಕ್ಷಕರ ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಣ ಕ್ಷೇತ್ರಗಳ ತಲಾ ಒಂದು ಸ್ಥಾನಗಳಿಗೆ ಜೂನ್‌ 3 ರಂದು ಚುನಾವಣೆ ನಡೆಯಲಿದೆ. +ಇದುವರೆಗೂ ಪದವೀಧರರ ಮತದಾರರ ಪಟ್ಟಿಗೆ ಹೆಸರನ್ನು ಸೇರ್ಪಡೆ ಮಾಡದವರು ಮೇ 6 ಸಂಜೆ 5.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ದಾಖಲಾತಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಪದವೀಧರರು ನಮೂನೆ 18 ರಲ್ಲಿ ಹಾಗೂ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. +ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಕಡೆಯ ದಿನಾಂಕಗಳಿಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಆನಂತರ ನೋಂದಾವಣಿಗೆ ಅವಕಾಶ ಇರುವುದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಬೆಂಗಳೂರು ಪದವೀಧರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ನಗರ, ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಅರ್ಹ ಪದವೀಧರರು ನಮೂನೆ 18 ರಲ್ಲಿ ಮೇ 6 ಸಂಜೆ 5.30ರೊಳಗಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದಾಗಿದೆ. +ಹಾಗೆಯೇ ಕರ್ನಾಟಕ ಆಗ್ನೇಯ ಶಿಕ್ಷಕರ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಹರಿಹರ, ಜಗಳೂರು, ದಾವಣಗೆರೆ ತಾಲೂಕುಗಳ ವ್ಯಾಪ್ತಿಯ ಅರ್ಹ ಶಿಕ್ಷಕರು ನಮೂನೆ 19 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 1,00,100 ಮತದಾರರು ಈತನಕ ನೋಂದಾವಣೆಯಾಗಿದ್ದಾರೆ. \ No newline at end of file diff --git a/eesanje/url_46_158_10.txt b/eesanje/url_46_158_10.txt new file mode 100644 index 0000000000000000000000000000000000000000..900a2e673ce13bcf34641de6ab37bb8ce742627a --- /dev/null +++ b/eesanje/url_46_158_10.txt @@ -0,0 +1,6 @@ +ಹುಬ್ಬಳ್ಳಿಯಲ್ಲಿ ಹಿಂದೂ ಅಪ್ರಾಪ್ತೆ ಮೇಲೆ ಅನ್ಯಕೋಮಿನ ಯುವಕ ಅತ್ಯಚಾರ : ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ +ಬೆಂಗಳೂರು,ಮೇ4-ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ರಾಜ್ಯ ಸರ್ಕಾರವನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣುಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ವಾಗ್ದಾಳಿ ನಡೆಸಿದೆ. +ಪ್ರಕರಣ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ರಾಜ್ಯ ಬಿಜೆಪಿ, ತಾಲಿಬಾನಿ ಕಾಂಗ್ರೆಸ್‌ ಸರ್ಕಾರದಲ್ಲಿ ಹಿಂದೂಗಳಿಗೆ ಇಲ್ಲ ಸುರಕ್ಷತೆ. ಕಾಂಗ್ರೆಸ್‌ ಬ್ರದರ್ಸ್‌ಗಳಿಂದ ಹಿಂದೂ ಹೆಣ್ಣು ಮಕ್ಕಳ ಮೇಲೆ ಮತ್ತೊಂದು ಅತ್ಯಾಚಾರ ಎಂದು ಗಂಭೀರ ಆರೋಪ ಮಾಡಿದೆ.ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ. ಈ ಹಿಂದೂ ವಿರೋಧಿ ಸರ್ಕಾರ ತೊಲಗಬೇಕು ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ. +ಹುಬ್ಬಳ್ಳಿ ಫೈಲ್ಸ್!ಮತಾಂಧನಿಂದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ. ಹುಬ್ಬಳ್ಳಿಯಲ್ಲಿ ಹಿಂದೂ ಯುವತಿಯರು, ಬಾಲಕಿಯರಿಗಿಲ್ಲ ರಕ್ಷಣೆ.ಭಯೋತ್ಪಾದಕರು, ಅತ್ಯಾಚಾರಿಗಳು, ಮತಾಂಧ ಜಿಹಾದಿಗಳನ್ನು ಬ್ರದರ್ಸ್ ಎನ್ನುವ@INCKarnatakaಕ್ಕೆ ಅಧಿಕಾರ ಕೊಟ್ಟ ತಪ್ಪಿಗೆ ಇಂದು ಹಿಂದೂ ಯುವತಿಯರು ಕೇರಳ ಫೈಲ್ಸ್ ಮಾದರಿಯಲ್ಲಿ ಬಲಿಯಾಗುತ್ತಿದ್ದಾರೆ.…../QO5E9G0yTA +ಹುಬ್ಬಳ್ಳಿಯಲ್ಲಿ ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. +ವಶಕ್ಕೆ ಪಡೆಯುವ ಸಂದರ್ಭದಲ್ಲಿ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ವೇಳೆ ಕಾಲಿಗೆ ಗುಂಡೇಟು ಹೊಡೆದು ಪೊಲೀಸರು ಬಂಧಿಸಿದ್ದಾರೆ. \ No newline at end of file diff --git a/eesanje/url_46_158_11.txt b/eesanje/url_46_158_11.txt new file mode 100644 index 0000000000000000000000000000000000000000..31b36292e12cb3093a7874f971079b533d23b116 --- /dev/null +++ b/eesanje/url_46_158_11.txt @@ -0,0 +1,14 @@ +2ನೇ ಹಂತದ ಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ..? +ಬೆಂಗಳೂರು,ಮೇ4-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ಹಗರಣದ ಪೆನ್‌ಡ್ರೈವ್‌ ಪ್ರಕರಣ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನದ ಮೇಲೆ ಏನು ಪರಿಣಾಮ ಬೀರಬಹುದೆಂಬ ಲೆಕ್ಕಾಚಾರಗಳು ಆರಂಭವಾಗಿವೆ. +ಮಧ್ಯಕರ್ನಾಟಕದ ಶಿವಮೊಗ್ಗ, ದಾವಣಗೆರೆ ಹಾಗೂ ಕರಾವಳಿ ಭಾಗದ ಉತ್ತರಕನ್ನಡ ಜಿಲ್ಲೆ ಹೊರತುಪಡಿಸಿದರೆ ಉಳಿದ 11 ಕ್ಷೇತ್ರಗಳು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಕ್ಕೆ ಸೇರಿವೆ. ಪ್ರಸ್ತುತ 14 ಲೋಕಸಭಾ ಕ್ಷೇತ್ರಗಳಲ್ಲೂ ಪ್ರಜ್ವಲ್‌ ರೇವಣ್ಣ ಪ್ರಕರಣ ದಿನದಿಂದ ದಿನಕ್ಕೆ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಇದನ್ನೇ ಪ್ರಚಾರದಲ್ಲಿ ಅಸ್ತ್ರ ಮಾಡಿಕೊಂಡಿವೆ. +ಈ ನಿಟ್ಟಿನಲ್ಲಿ ಪ್ರಜ್ವಲ್‌ ಪ್ರಕರಣ ರಾಜಕೀಯವಾಗಿ ಈ ಭಾಗದಲ್ಲಿ ಪ್ರಮುಖ ಚುನಾವಣಾ ಅಸ್ತ್ರವಾಗಿ ಬಳಕೆಯಾಗುತ್ತಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಇದರ ಕುರಿತಾಗಿ ಚರ್ಚೆಗಳು ನಡೆದರೂ ಅದರ ಪರಿಣಾಮ ಏನು ಎಂಬುವುದು ಕೂಡಾ ಪ್ರಮುಖ ಅಂಶವಾಗಿದೆ. ಆದರೆ ನೇಹಾ ಪ್ರಕರಣವನ್ನು ಬಿಜೆಪಿ ಈ ಭಾಗದಲ್ಲಿ ಚುನಾವಣಾ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿರುವುದಕ್ಕೆ ಕೌಂಟರ್‌ ನೀಡಲು ಪ್ರಜ್ವಲ್‌ ಪ್ರಕರಣವನ್ನು ಕಾಂಗ್ರೆಸ್‌ ನಾಯಕರು ಬಳಕೆ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದರ ಜೊತೆ ಜೊತೆಗೆ ವಿವಿಧ ರಾಜ್ಯಗಳ ಚುನಾವಣಾ ಪ್ರಚಾರದಲ್ಲೂ ಈ ಪ್ರಕರಣ ಸದ್ದು ಮಾಡುತ್ತಿದೆ. +ಕಾಂಗ್ರೆಸ್‌ ಹಾಸನ ಪ್ರಕರಣವನ್ನು ಚುನಾವಣಾ ಚರ್ಚೆಗೂ ಬಳಕೆ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಬಿಜೆಪಿ ಲವ್‌ ಜಿಹಾದ್‌ ಎಂದು ಬಿಂಬಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೇಹಾ ಕುಟುಂಬವನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಘಟಾನುಘಟಿ ನಾಯಕರು ಕೂಡಾ ನೇಹಾ ಪ್ರಕರಣದಲ್ಲಿ ಧ್ವನಿ ಎತ್ತಿದ್ದಾರೆ. +ನೇಹಾ ಪ್ರಕರಣಕ್ಕೆ ಕಾಂಗ್ರೆಸ್‌ ಪಕ್ಷದ ನಾಯಕರ ಒಂದು ಸಮುದಾಯದ ತುಷ್ಟೀಕರಣ ನೀತಿಯೇ ಕಾರಣ ಎಂಬ ಅಭಿಪ್ರಾಯಗಳು ಬಿಜೆಪಿ ನಾಯಕರಿಂದ ವ್ಯಕ್ತವಾಗುತ್ತಿವೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಪ್ರತ್ಯುತ್ತರ ನೀಡುತ್ತಿದ್ದಾರೆ. ಆದರೆ ಇದೀಗ ಪ್ರಜ್ವಲ್‌ ರೇವಣ್ಣ ಪ್ರಕರಣ ಕಾಂಗ್ರೆಸ್ಗೆ ಪ್ರಬಲ ಅಸ್ತ್ರವಾಗಿ ಸಿಕ್ಕಿದೆ. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಇದೀಗ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಯ ಮೌನವನ್ನು ಕಾಂಗ್ರೆಸ್‌ ಪ್ರಶ್ನೆ ಮಾಡುತ್ತಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪರವಾಗಿ ಮತಯಾಚನೆ ಮಾಡಿದ್ದನ್ನು ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್‌ ಪದೇ ಪದೇ ಪ್ರಸ್ತಾಪ ಮಾಡುತ್ತಿದೆ. +ಬೆಳಗಾವಿಯಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸರ್ಕಾರದ ಓಲೈಕೆ ರಾಜಕಾರಣ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಗೆ ಕಾರಣವಾಯಿತು ಎಂದು ಆರೋಪಿಸಿದರು. ಈಗ ಪೋಷಕರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ ಎಂದು ಹೇಳಿದ್ದರು. +ಈ ಹಗರಣವು ತಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂಬುದನ್ನು ಕೆಲವು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಆದರೆ ಇದು 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಸಂತ್ರಸ್ತೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಇಲ್ಲಿ ಕೊಲೆ ಪ್ರಕರಣ ಪ್ರಮುಖ ವಿಷಯವಾಗಿದೆ ಎಂದು ಹೇಳುತ್ತಾರೆ. +ಆಡಳಿತಾರೂಢ ಕಾಂಗ್ರೆಸ್‌ ಪ್ರಜ್ವಲ್‌ ಪ್ರಕರಣವನ್ನು ವಿಶೇಷವಾಗಿ ಮಹಿಳೆಯರ ಮತ ಸೆಳೆಯಲು ಬಳಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲೂ ಮಹಿಳಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ಱಹುಬ್ಬಳ್ಳಿ ಕೊಲೆ ಪ್ರಕರಣವನ್ನು ಬಿಜೆಪಿ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿರುವಾಗ ನಾವು ಪ್ರಜ್ವಲ್‌ ಪ್ರಕರಣವನ್ನು ಪ್ರಸ್ತಾಪಿಸಬೇಕಲ್ಲವೇ? ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್‌ ಪ್ರಶ್ನಿಸಿದ್ದಾರೆ. +ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿರುವ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಪ್ರಜ್ವಲ್‌ ಪ್ರಕರಣದಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿ ತಿರುಗೇಟು ನೀಡಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅಮಿತ್‌ ಶಾ, ಅತ್ಯಾಚಾರಿಗಳ ಜೊತೆ ಬಿಜೆಪಿ ನಿಲ್ಲುವುದಿಲ್ಲ. ಆರೋಪಿಗಳು ದೇಶ ಬಿಟ್ಟು ಪರಾರಿಯಾಗದಂತೆ ಕಾಂಗ್ರೆಸ್‌ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕಿತ್ತು ಎಂದಿದ್ದರು. ಅವರು ಹುಬ್ಬಳ್ಳಿಯಲ್ಲಿ ನೇಹಾ ಅವರ ಪೋಷಕರನ್ನು ಭೇಟಿಯಾಗಿದ್ದರು. +ಆದರೆ ರಾಜ್ಯದಲ್ಲಿ ಜೆಡಿಎಸ್‌ ತನ್ನ ಮೈತ್ರಿಕೂಟದ ಪಾಲುದಾರನಾಗಿರುವುದರಿಂದ ಪ್ರಜ್ವಲ್‌ ಪ್ರಕರಣದಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್‌ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ನ ಉನ್ನತ ನಾಯಕರು ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು, ಈ ವಿಷಯದ ಬಗ್ಗೆ ಅವರ ಮೌನವನ್ನು ಪ್ರಶ್ನಿಸಿದ್ದರು. +ಮೇ 7ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ.ಆದರೆ, ಕಾಂಗ್ರೆಸ್‌ ಮತ್ತು ಬಿಜೆಪಿಯ ನಿರೀಕ್ಷೆಗಳ ಮೇಲೆ ಅವು ಎಷ್ಟರ ಮಟ್ಟಿಗೆ ಪ್ರಭಾವ ಬೀರಬಹುದು ಎಂಬುದನ್ನು ಕಾದು ನೋಡಬೇಕು. +ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಇದೊಂದು ಚರ್ಚಾ ವಿಚಾರವಾಗಿದೆ. ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಸುದ್ದಿ ಪ್ರಚಾರ ಆಗಿದೆ. ಈ ನಿಟ್ಟಿನಲ್ಲಿ ಜೆಡಿಎಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಇದರಿಂದ ಮುಜುಗರ ಉಂಟಾಗುತ್ತಿರುವುದಂತೂ ಸತ್ಯ. \ No newline at end of file diff --git a/eesanje/url_46_158_12.txt b/eesanje/url_46_158_12.txt new file mode 100644 index 0000000000000000000000000000000000000000..16748eab6a730a69e302892537c58eee886c3899 --- /dev/null +++ b/eesanje/url_46_158_12.txt @@ -0,0 +1,5 @@ +ಪೆನ್‌ಡ್ರೈವ್‌ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ದೇವರಾಜೇಗೌಡ +ಹಾಸನ, ಮೇ 3-ಅಶ್ಲೀಲ ವಿಡಿಯೋ ಪ್ರಕರಣ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಂದೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ತನ್ನ ಬಳಿ ಇದ್ದ ಪೆನ್‌ಡ್ರೈವ್‌ನ್ನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೆ ಎಂದು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಹೇಳಿದ್ದನು. +ಹೊಳೆನರಸೀಪುರ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದ ಮುಂದಿನ ತನಿಖೆ ಸಂಬಂಧ ವಿಚಾರಣೆಗೆ ಹಾಜರಾಗಿ ತಮ್ಮ ಬಳಿ ಲಭ್ಯವಿರುವ ದಾಖಲೆಗಳ ಜೊತೆ ನೊಟೀಸ್‌ ಸ್ವೀಕರಿಸಿದ ಕೂಡಲೇ ತನಿಖಾಧಿಕಾರಿಗಳ ಮುಂದೆ ವಿಚಾರಣೆ ತನಿಖೆಗೆ ಸಹಕರಿಸುವಂತೆ ಎಸ್‌ಐಟಿ ದೇವರಾಜೇಗೌಡರಿಗೆ ನೋಟೀಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಮುಂದೆ ನಿನ್ನೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. +ಈ ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೆನ್‌ಡ್ರೈವ್‌ಗಳನ್ನು ಹಂಚಿರುವವರ ಬಗ್ಗೆ ಹಲವು ಮಾಹಿತಿಗಳನ್ನು ಎಸ್‌ಐಟಿ ಮುಂದೆ ಹೇಳಿರುವುದಾಗಿ ದೇವರಾಜೇಗೌಡ ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದಾರೆ. +ಈ ಪ್ರಕರಣದ ತನಿಖೆಗೆ ಎಲ್ಲಾ ಸಹಕಾರ ನೀಡುವುದಾಗಿ ಅಕಾರಿಗಳ ಮುಂದೆ ಹೇಳಿದ್ದೇನೆ. ಪೆನ್‌ಡ್ರೈವ್‌ನಲ್ಲಿರುವ ಸಂತ್ರಸ್ತೆಯರ ಜೊತೆ ಚೆಲ್ಲಾಟ ಮಾಡಿರುವ ರಾಜಕಾರಣಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದೇನೆ ಎಂದು ದೇವರಾಜೇಗೌಡ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_46_158_2.txt b/eesanje/url_46_158_2.txt new file mode 100644 index 0000000000000000000000000000000000000000..ed7d2a5541839e20478ab91feb7a2b1b2121c751 --- /dev/null +++ b/eesanje/url_46_158_2.txt @@ -0,0 +1,9 @@ +ಮಹಿಳೆಯರ ಮೇಲಿನ ದೌರ್ಜನ್ಯ ಕಂಡರೂ ಮೋದಿ ಮೌನ : ರಾಹುಲ್‌ ವಾಗ್ದಾಳಿ +ಬೆಂಗಳೂರು,ಮೇ.4-ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಕಂಡೂ ಹಿರಿಯ ಚುನಾಯಿತ ಪ್ರತಿನಿಧಿ ಮೌನಕ್ಕೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್‌ನ ವರಿಷ್ಠ ನಾಯಕ ರಾಹುಲ್‌ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನೂ ನೀಡಬೇಕು. ನ್ಯಾಯಕ್ಕಾಗಿ ಹೋರಾಟ ನಡೆಸುವ ಅವರಿಗೆ ನಮ್ಮ ಸಹಾನುಭೂತಿ ಮತ್ತು ಬೆಂಬಲದ ಅಗತ್ಯವಿದೆ. ಪಕ್ಷಭೇದ ಮರೆತು ಘೋರ ಅಪರಾಧ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ಸಂತ್ರಸ್ತರಿಗೆ ನ್ಯಾಯ ದೊರಕಿಸುವುದು ಎಲ್ಲರ ಸಂಘಟನಾತ್ಮಕ ಜವಾಬ್ದಾರಿ ಎಂದು ಹೇಳಿದ್ದಾರೆ. +ಹಾಸನದ ಲೋಕಸಭಾ ಸದಸ್ಯರಿಂದ ನಡೆದಿದೆ ಎನ್ನಲಾದ ಭೀಕರ ಲೈಂಗಿಕ ದೌರ್ಜನ್ಯ ಪ್ರಕರಣ ನನ್ನನ್ನು ಆಘಾತಕ್ಕೊಳಪಡಿಸಿದೆ. ತಾಯಿ, ಸಹೋದರಿ ಸಮಾನರಾದ ನೂರಾರು ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಮೂಲಕ ಮಹಿಳೆಯರ ಘನತೆಯನ್ನು ಕಸಿದುಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. +ನನಗೆ ಮತ್ತೊಂದು ಆಘಾತವೆಂದರೆ 2023 ರ ಡಿಸೆಂಬರ್‌ನಲ್ಲೇ ಹಾಸನದ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಪ್ರಜ್ವಲ್‌ ರೇವಣ್ಣ ಅವರ ಪೂರ್ವಾಪರ ಲೈಂಗಿಕ ದೌರ್ಜನ್ಯದ ಇತಿಹಾಸ ಮತ್ತು ಆತ ಚಿತ್ರೀಕರಿಸಿರುವ ವಿಡಿಯೋಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅದರ ಹೊರತಾಗಿಯೂ ಬಿಜೆಪಿಯ ಹಿರಿಯ ನಾಯಕರು ಹಾಗೂ ಪ್ರಧಾನಮಂತ್ರಿಯವರು ಸಮೂಹ ಅತ್ಯಾಚಾರಿಯ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ ಎಂದು ರಾಹುಲ್‌ ವಾಗ್ದಾಳಿ ನಡೆಸಿದ್ದಾರೆ. +ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಆರೋಪಿ ದೇಶಬಿಟ್ಟು ಪರಾರಿಯಾಗಲು ಅವಕಾಶ ನೀಡಿದೆ. ಈ ಮೂಲಕ ತನಿಖೆಯನ್ನು ಅರ್ಥಹೀನಗೊಳಿಸುವ ಯತ್ನ ನಡೆದಿದೆ. ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಆಶೀರ್ವಾದ ಇರುವುದು ಖಂಡನೀಯ ಎಂದು ಹೇಳಿದ್ದಾರೆ. +ಕುಸ್ತಿಯಲ್ಲಿ ಒಲಿಂಪಿಕ್‌ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಪದಕ ಗೆದ್ದಂತಹ ಹರಿಯಾಣದ ಸಹೋದರಿಯರ ಮೇಲಾದ ದೌರ್ಜನ್ಯ, ಮಣಿಪುರದ ಸಹೋದರಿಯರ ಮೇಲಿನ ಕಿರುಕುಳ, ಈಗ ಹಾಸನದ ಪ್ರಕರಣ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯವಾದಾಗ ಪ್ರಧಾನಮಂತ್ರಿಯವರು ವೌನಕ್ಕೆ ಶರಣಾಗುವ ಮೂಲಕ ಆರೋಪಿಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ರಾಹುಲ್‌ಗಾಂಧಿ ಕಿಡಿ ಕಾರಿದ್ದಾರೆ. +ಸಂಕಷ್ಟಕ್ಕೊಳಗಾದ ಮಹಿಳೆಯರ ನ್ಯಾಯಕ್ಕಾಗಿ ಹೋರಾಡುವುದು ಕಾಂಗ್ರೆಸ್‌ನ ನೈತಿಕ ಕರ್ತವ್ಯ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿದೆ. ಜೊತೆಗೆ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಿ ಭಾರತಕ್ಕೆ ಶೀಘ್ರವೇ ಹಸ್ತಾಂತರಿಸಲು ಸಹಕರಿಸುವಂತೆ ಮುಖ್ಯಮಂತ್ರಿಯವರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂದು ವಿವರಿಸಿದ್ದಾರೆ. +ರಾಹುಲ್‌ಗಾಂಧಿಯವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರ ಅನ್ಯಾಯಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸಲಾಗುವುದು. ನೊಂದವರ ಕಣ್ಣೀರು ಒರೆಸುವ ಜೊತೆಗೆ ಅವರ ನ್ಯಾಯದ ಹೋರಾಟದಲ್ಲಿ ನಮ್ಮ ಸರ್ಕಾರ ಜೊತೆಗೆ ನಿಲ್ಲಲಿದೆ ಎಂಬ ವಾಗ್ದಾನವನ್ನು ರಾಹುಲ್‌ಗಾಂಧಿಯವರಿಗೆ ನೀಡುವುದಾಗಿ ತಿಳಿಸಿದ್ದಾರೆ. \ No newline at end of file diff --git a/eesanje/url_46_158_3.txt b/eesanje/url_46_158_3.txt new file mode 100644 index 0000000000000000000000000000000000000000..cfbb947ae956c9fe664db202b909a367f42f434c --- /dev/null +++ b/eesanje/url_46_158_3.txt @@ -0,0 +1,7 @@ +ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ಅಧಿಕಾರಿಗಳ ಜತೆ ಸಿಎಂ ಮಹತ್ವದ ಸಭೆ +ಬೆಂಗಳೂರು,ಮೇ.4-ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. +ಪ್ರಕರಣದ ಸಂಬಂಧಪಟ್ಟಂತೆ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದು, ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. +ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿ ಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. +ಸೂಕ್ತ ಕ್ರಮಗಳೊಂದಿಗೆ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಿಬಿಐ ಸಹಕಾರದೊಂದಿಗೆ ಪ್ರಜ್ವಲ್‌ ರೇವಣ್ಣ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸುವ ಸಾಧ್ಯತೆ ಇದೆ. ಇದರಿಂದ ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ಸಭೆಯಲ್ಲಿ ಮುಖ್ಯಮಂತ್ರಿಯವರಿಗೆ ವಿವರಿಸಿದ್ದಾರೆ. +ಮಾಹಿತಿ ಪಡೆಯಲು ಬ್ಲೂ ಕಾರ್ನರ್‌ ನೋಟೀಸ್‌ :196 ಸದಸ್ಯ ರಾಷ್ಟ್ರಗಳೊಂದಿಗೆ ಸಹಯೋಗ ಹೊಂದಿರುವ ಅಂತಾರಾಷ್ಟ್ರೀಯ ಪೊಲೀಸ್‌ ಸಂಸ್ಥೆ (ಇಂಟರ್‌ಪೋಲ್‌) ಹಲವಾರು ಸ್ವರೂಪದ ನೋಟೀಸ್‌ಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಶಿಕ್ಷೆಗೆ ಒಳಗಾಗಿರುವ ತಪ್ಪಿತಸ್ಥ ಆರೋಪಿಗಳ ಸ್ಥಳ ಪತ್ತೆ ಮತ್ತು ಬಂಧನಕ್ಕಾಗಿ ರೆಡ್‌ ಕಾರ್ನರ್‌ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ನಾಪತ್ತೆಯಾಗಿರುವ ಅಪ್ರಾಪ್ತರ ಸ್ಥಳ ಪತ್ತೆ ಮತ್ತು ಸ್ವಯಂ ಗುರುತನ್ನು ಹೇಳಿಕೊಳ್ಳಲು ಸಾಧ್ಯವಾಗದಿರುವವರ ಪತ್ತೆಗಾಗಿ ಎಲ್ಲೋ ಕಾರ್ನರ್‌ ನೋಟೀಸ್‌ ಹೊರಡಿಸಲಾಗುತ್ತದೆ. +ಬ್ಲೂ ಕಾರ್ನರ್‌ ನೋಟೀಸ್‌ ಅನ್ನು ವ್ಯಕ್ತಿಯ ಗುರುತು, ಸ್ಥಳ ಪತ್ತೆ ಮತ್ತು ಅಪರಾಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆತನ ಚಟುವಟಿಕೆಗಳ ಹೆಚ್ಚುವರಿ ಮಾಹಿತಿಯನ್ನು ಕಲೆ ಹಾಕಲು ಹೊರಡಿಸಲಾಗುತ್ತದೆ. ಮೃತಪಟ್ಟವರ ಮಾಹಿತಿ ಸಂಗ್ರಹ ಹಾಗೂ ಗುರುತು ಪತ್ತೆಗೆ ಬ್ಲಾಕ್‌ ನೋಟೀಸ್‌ ಸೇರಿದಂತೆ ಗ್ರೀನ್‌, ಆರೆಂಜ್‌, ಪರ್ಪಲ್‌ ನೋಟೀಸ್‌ಗಳನ್ನು ನಿಗದಿಪಡಿಸಲಾಗಿದೆ. \ No newline at end of file diff --git a/eesanje/url_46_158_4.txt b/eesanje/url_46_158_4.txt new file mode 100644 index 0000000000000000000000000000000000000000..1d6b5651da138855e94cd9ac3c6bcadfaa1493da --- /dev/null +++ b/eesanje/url_46_158_4.txt @@ -0,0 +1,9 @@ +ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ +ಬೆಂಗಳೂರು,ಮೇ.4 –ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ 6 ಗಂಟೆಗೆ ತೆರೆ ಬೀಳಲಿದೆ.ಮೇ 7 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿತವಾಗಿ ಅಂದರೆ ನಾಳೆ ಸಂಜೆ 6 ಗಂಟೆಯ ನಂತರ ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಆಯಾ ಕ್ಷೇತ್ರಬಿಟ್ಟು ತೆರಳಬೇಕಾಗಿದೆ. +ಹೀಗಾಗಿ ಇಂದು ಮತ್ತು ನಾಳೆ ಅಬ್ಬರದ ಬಿರುಸಿನ ಚುನಾವಣಾ ಪ್ರಚಾರ ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಲ್ಲಿ ನಡೆಯಲಿದೆ. +ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಪ್ರಮುಖ ರಾಜಕೀಯ ಪಕ್ಷದ ನಾಯಕರು, ಮುಖಂಡರು, ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದು, ಮತದಾರರನ್ನು ಓಲೈಸಲು ನಾನಾ ರೀತಿಯ ಭರವಸೆಗಳನ್ನು ನೀಡುತ್ತಿದ್ದಾರೆ. ಆರೋಪ-ಪ್ರತ್ಯಾರೋಪದ ಮೂಲಕ ಪ್ರಚಾರದ ಅಬ್ಬರ ತಾರಕಕ್ಕೇರಿದೆ. +ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಲ್ಲಿಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಪ್ರಚಾರಕ್ಕೂ ತೆರೆ ಬಿದ್ದಂತಾಗುತ್ತದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ಇದೇ ನಿಯಮ ಅನ್ವಯವಾಗಲಿದೆ. ಆ ಕ್ಷೇತ್ರಕ್ಕೂ ಮೇ 7 ರಂದೇ ಮತದಾನ ನಡೆಯಲಿದೆ. ಸುರಪುರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್‌ನಿಂದ ತಲಾ ಒಬ್ಬರು ಹಾಗೂ ನಾಲ್ವರು ಪಕ್ಷೇತರರು ಸೇರಿದಂತೆ ಒಟ್ಟು 6 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. +ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 14 ಕ್ಷೇತ್ರಗಳಲ್ಲೂ ಸ್ಪರ್ಧಿಸಿವೆ.ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿಲ್ಲ. ರಾಜಕೀಯ ಪಕ್ಷಗಳು, ಪಕ್ಷೇತರರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಈ ಪೈಕಿ 206 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಚುನಾವಣಾ ಸ್ಪರ್ಧೆಯಲ್ಲಿದ್ದಾರೆ. +ಒಟ್ಟು 2,59,52,958 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇದರಲ್ಲಿ 1,29,48,928 ಪುರುಷ, 1,29,66,570 ಮಹಿಳೆಯರಿದ್ದು, 35,465 ಸೇವಾ ಮತದಾರರಿದ್ದಾರೆ. ಯುವ ಮತದಾರರು 6,90,929 ಇದ್ದು, 85 ವರ್ಷ ಮೇಲ್ಪಟ್ಟ 2,29,563 ಮತದಾರರಿದ್ದರೆ, 3,43,966 ದಿವ್ಯಾಂಗ ಮತದಾರರಿದ್ದಾರೆ. +ಗುಲ್ಬರ್ಗ ಕ್ಷೇತ್ರದಲ್ಲಿ ಅತೀ ಹೆಚ್ಚು 20,98,202 ಮತದಾರರಿದ್ದರೆ, ಉತ್ತರ ಕನ್ನಡ ಕ್ಷೇತ್ರದಲ್ಲಿ 16,41,156 ಮತದಾರರಿದ್ದಾರೆ.14 ಕ್ಷೇತ್ರಗಳಲ್ಲೂ ಒಟ್ಟು 28,269 ಮತಗಟ್ಟೆಗಳನ್ನು ತೆರೆಯಲಾಗುತ್ತದೆ. ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ. ಮತದಾರರಿಗೆ ಈಗಾಗಲೇ ನೀಡಿರುವ ಓಟರ್‌ ಸ್ಲಿಪ್‌ ಹಾಗೂ ಮತದಾರರ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತದಾನ ಮಾಡಬಹುದಾಗಿದೆ. +ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಆಧಾರ್‌ ಕಾರ್ಡ್‌, ಮನ್ರೇಗಾ ಜಾಬ್‌ಕಾರ್ಡ್‌, ಬ್ಯಾಂಕ್‌ ಅಥವಾ ಪೋಸ್ಟ್ ಆಫೀಸ್‌ ಪಾಸ್‌ಬುಕ್‌, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್‌್ಸ, ಪ್ಯಾನ್‌ ಕಾರ್ಡ್‌, ಪಾಸ್‌ಪೋರ್ಟ್‌, ಪಿಂಚಣಿ ದಾಖಲೆ ಸೇರಿದಂತೆ ಭಾವಚಿತ್ರವಿರುವ ಕೇಂದ್ರ, ರಾಜ್ಯಸರ್ಕಾರ, ಸಾರ್ವಜನಿಕ ಸಂಸ್ಥೆಗಳು, ಪಬ್ಲಿಕ್‌ ಲಿಮಿಟೆಡ್‌ ಕಂಪನಿಗಳು ನೀಡಿರುವ ಉದ್ಯೋಗ ಗುರುತಿನ ಚೀಟಿಯನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. \ No newline at end of file diff --git a/eesanje/url_46_158_5.txt b/eesanje/url_46_158_5.txt new file mode 100644 index 0000000000000000000000000000000000000000..dafcb5d8999086f9ade8a862aedef5df78e48a8d --- /dev/null +++ b/eesanje/url_46_158_5.txt @@ -0,0 +1,8 @@ +ರಾಜ್ಯದಲ್ಲಿ 2ನೇ ಹಂತದ ಚುನಾವಣೆ ಟಾರ್ಗೆಟ್ ಮಾಡಿ ‘ಬೆಲೆ ಏರಿಕೆ’ ಬಾಣ ಬಿಟ್ಟ ಕಾಂಗ್ರೆಸ್ +ಬೆಂಗಳೂರು,ಮೇ.4-ರಾಜ್ಯದಲ್ಲಿನ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದ 14 ಕ್ಷೇತ್ರಗಳಲ್ಲಿ ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಕಾಂಗ್ರೆಸ್‌ ಬೆಲೆ ಏರಿಕೆಯನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. +ಮೋದಿಯವರ ಅಚ್ಛೇದಿನ ಅಮೃತ್‌ಕಾಲದಲ್ಲಿ ಗಗನಮುಖಿಯಾಗಿದೆ. ಹೆಚ್ಚಿರುವುದು ಅಭಿವೃದ್ಧಿ ಅಲ್ಲ, ದಿನಬಳಕೆಯ ವಸ್ತುಗಳ ಬೆಲೆ ಎಂದು ದೂಷಿಸಿದರು.ಬೆಲೆ ಏರಿಕೆಯ ಜೊತೆಗೆ ಜಿಎಸ್‌ಟಿಯ ಹೊರೆ ಹೊರಿಸಿ ಜನರ ಬದುಕನ್ನು ಭಾರವಾಗಿಸಿದ್ದೇ ಮೋದಿಯವರ 10 ವರ್ಷಗಳ ಸಾಧನೆ. ಬಂಡವಾಳಶಾಹಿಗಳ ಪರ ನೀತಿ ಹೊಂದಿರುವ ಬಿಜೆಪಿಯನ್ನು ಸೋಲಿಸಿ ಜನಪರವಾಗಿ ಚಿಂತಿಸುವ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿಕೊಳ್ಳಲಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ. ಅಡುಗೆ ಎಣ್ಣೆ, ಗ್ಯಾಸ್‌ ಸಿಲಿಂಡರ್‌, ಬೇಳೆ ಕಾಳಿನ ಬೆಲೆ ಕೇಳಿದರೆ ಹಸಿವೆಯೇ ಮರೆತು ಹೋಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. +ಅಚ್ಛೇದಿನ್‌ ಎಂದರೆ ದುಬಾರಿ. ಮೋದಿ ಎಂದರೆ ಮಕ್ಮಲ್‌ ಟೋಪಿ. ನರೇಂದ್ರ ಮೋದಿಯವರು ಕನ್ನಡಿಗರ ಕೈಗೆ ಕೊಟ್ಟಿರುವ ಚೊಂಬನ್ನು ಈ ಚುನಾವಣೆಯಲ್ಲಿ ಮರೆಯದೇ ಅವರ ಕೈಗೆ ವಾಪಸ್‌ ನೀಡಿ ಎಂದು ಕರೆ ನೀಡಿದ್ದಾರೆ.ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ನಮ್ಮ ಓಟು, ನಮ್ಮ ಅಧಿ ಕಾರ ವಿಭಜನೆಯ ನೀತಿ ಅನುಸರಿಸಿರುವ ಶಕ್ತಿಗಳನ್ನು ಸೋಲಿಸಿ. ಬ್ರಿಟಿಷರು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದ್ದರು. ಕೇಂದ್ರದಲ್ಲಿ ಆಡಳಿತ ನಡೆಸುವವರು ಅದೇ ರೀತಿಯ ನೀತಿಯನ್ನು ಪಾಲನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನಿಯ ವಯಸ್ಸಿಗಿಂತ ಪೆಟ್ರೋಲ್ – ಡೀಸೆಲ್‌ ಬೆಲೆ ಹೆಚ್ಚಾಗಿದೆ. ಚಿನ್ನ ಬಡವರ ಕೈ ಸುಡುತ್ತಿದೆ, ಅಡುಗೆ ಎಣ್ಣೆ, ಗ್ಯಾಸ್ ಸಿಲಿಂಡರ್, ಬೇಳೆಕಾಳಿನ ಬೆಲೆ ಕೇಳಿದರೆ ಹಸಿವೇ ಮರೆತು ಹೋಗುತ್ತದೆ.ಅಚ್ಚೇ ದಿನ್ ಅಂದ್ರೆ ದುಬಾರಿ,ಮೋದಿ ಅಂದ್ರೆ ಮಕ್ಮಲ್ ಟೋಪಿ.ಪ್ರಧಾನಿ@narendramodiಅವರು ಕನ್ನಡಿಗರ…../KWZnm4N6eN +ಕನ್ನಡಿಗರು ಐಕ್ಯತೆ, ಭಾವೈಕ್ಯ, ಸಮಗ್ರತೆ ಮತ್ತು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟಿದ್ದಾರೆ. ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ಭಾಗವಹಿಸಿ ದ್ವೇಷ ಬಿತ್ತುವ ಶಕ್ತಿಗಳಿಗೆ ಹಾಗೂ ದೆಹಲಿಯಲ್ಲಿ ಕುಳಿತು ಸರ್ವಾಧಿ ಕಾರಿ ಪ್ರವೃತ್ತಿ ಅನುಸರಿಸುತ್ತಿರುವವರಿಗೆ ತಕ್ಕ ಪಾಠ ಕಲಿಸಿ ಎಂದು ಮನವಿ ಮಾಡಿದ್ದಾರೆ. +ಮೊದಲ ಹಂತದ ಚುನಾವಣೆ ಸೇರಿದಂತೆ ಬಾಕಿ ಉಳಿದ 14 ಕ್ಷೇತ್ರಗಳ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಜಾಹೀರಾತು ಅಸ್ತ್ರವನ್ನು ಬಳಕೆ ಮಾಡಿದೆ. ಅಡುಗೆ ಎಣ್ಣೆ ಲೀಟರ್‌ಗೆ 180 ರೂ., ಪೆಟ್ರೋಲ್‌ 100 ರೂ., ಡೀಸೆಲ್‌ 85 ರೂ., ತೊಗರಿಬೇಳೆ ಕೆಜಿಗೆ 200 ರೂ. ಇದ್ದರೆ ಡಿಎಪಿ ರಸಗೊಬ್ಬರ 1600 ರೂ., ಅಡುಗೆ ಅನಿಲದ ಪ್ರತಿ ಸಿಲಿಂಡರ್‌ಗೆ 1100 ರೂ. ದರ ಹೆಚ್ಚಾಗಿದೆ. ಅಚ್ಛೇದಿನ್‌ ಎಂದರೆ ದುಬಾರಿ ಎಂಬಂತಾಗಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. \ No newline at end of file diff --git a/eesanje/url_46_158_6.txt b/eesanje/url_46_158_6.txt new file mode 100644 index 0000000000000000000000000000000000000000..9f336baf4f242c169d594ffb81b70309e21b829f --- /dev/null +++ b/eesanje/url_46_158_6.txt @@ -0,0 +1,6 @@ +ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಎಸ್‌‍ಐಟಿ ತಂಡ ಸ್ಥಳ ಮಹಜರು +ಹಾಸನ, ಮೇ.4-ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ಸ್ಥಳ ಮಹಜರಿಗೆ ಎಸ್‌‍ಐಟಿ ತಂಡ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. +ಹೊಳೇನರಸಿಪುರದಲ್ಲಿರುವ ಎಚ್‌.ಡಿ.ರೇವಣ್ಣ ಅವರ ನಿವಾಸಕ್ಕೆ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಸ್‌‍ಐಟಿ ತಂಡ ಆಗಮಿಸಲಿರುವ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್‌ ಸುರೇಶ್‌ಕುಮಾರ್‌ ಹಾಗೂ ಸಬ್‌ಇನ್‌್ಸಪೆಕ್ಟರ್‌ ಅಜಯ್‌ಕುಮಾರ್‌ ಬೆಳಗ್ಗೆಯೇ ಭೇಟಿ ನೀಡಿ ಬಂದೋಬಸ್ತ್‌ ಮಾಡಿದ್ದರು. +ಇನ್‌ಸ್ಪೆಕ್ಟರ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ಜೊತೆ ಇಬ್ಬರು ಮಹಿಳಾ ಕಾನ್ಸಸ್ಟೇಬಲ್‌ಗಳು ಇದ್ದರು.ಸಂತ್ರಸ್ತ ಮಹಿಳೆಯ ಸಮುಖದಲ್ಲಿ ಎಸ್‌‍ಐಟಿ ತಂಡ ಸ್ಥಳ ಮಹಜರು ನಡೆಸಲಿದೆ. ರೇವಣ್ಣ ನಿವಾಸದ ಬಳಿ ಬ್ಯಾರಿಕೇಡ್‌ ಹಾಕಿ ಯಾರೂ ಬಾರದಂತೆ ಪೊಲೀಸರು ಬಂದೋಬಸ್ತ್‌ ಮಾಡಿದ್ದರು. +ಹಾಸನದ ಆರ್‌.ಸಿ. ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲೂ ಸ್ಥಳ ಮಹಜರು ಮಾಡಲಿರುವ ಹಿನ್ನೆಲೆಯಲ್ಲಿ ಅಲ್ಲಿಯೂ ಸಹ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. +ಸಾಕ್ಷಿ ನಾಶದ ಆತಂಕ- ಗೇಟ್‌ಗೆ ಬೀಗ :ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಂಪಿ ನಿವಾಸಕ್ಕೆ ಬೀಗ ಹಾಕಲಾಗಿದೆ. ಸಾಕ್ಷ್ಯನಾಶದ ಆತಂಕದ ಸಂಬಂಧ ಎಂಪಿ ನಿವಾಸದ ಆವರಣಕ್ಕೆ ಪ್ರವೇಶ ನಿರ್ಬಂಧ ವಿಧಿಸಿ ಪೊಲೀಸರು ಬೀಗ ಹಾಕಿದ್ದಾರೆ. \ No newline at end of file diff --git a/eesanje/url_46_158_7.txt b/eesanje/url_46_158_7.txt new file mode 100644 index 0000000000000000000000000000000000000000..93f47bccbd8340ccabd9f0740d8244979e0da5f8 --- /dev/null +++ b/eesanje/url_46_158_7.txt @@ -0,0 +1,10 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ : ವಿಜಯೇಂದ್ರ +ಹುಬ್ಬಳ್ಳಿ,ಮೇ4-ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ನಾವು ಯಾವುದೇ ಕಾರಣಕ್ಕೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಏನು ಶಿಕ್ಷೆಯಾಗಬೇಕೋ ಅದೇ ರೀತಿ ಆಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಸೇರಿದಂತೆ ಪ್ರತಿಯೊಬ್ಬರ ನಿಲುವು ಒಂದೇ ಆಗಿದೆ. ಈ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಬಿಜೆಪಿ ಎಂದಿಗೂ ಸಮರ್ಥನೆ ಮಾಡುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸ್ವತಃ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಹೇಳಿರುವಾಗ ಇಲ್ಲಿ ಬಿಜೆಪಿ ನಿಲುವು ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು. +ನಾನಾಗಲಿ ಅಥವಾ ಪಕ್ಷವಾಗಲಿ ಪ್ರಕರಣವನ್ನು ಎಂಥ ಹಂತದಲ್ಲೂ ಸಮರ್ಥಿಸಿಕೊಂಡಿಲ್ಲ. ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬುದಕ್ಕಿಂತ ಕಾಂಗ್ರೆಸ್‌ನವರಿಗೆ ಲೋಕಸಭಾ ಚುನಾವಣೆಯಲ್ಲಿ ಲಾಭವಾದರೆ ಸಾಕು ಎಂಬ ಮನಃಸ್ಥಿತಿಗೆ ಬಂದಿದೆ. ಇದಕ್ಕೆ ನಮ್ಮ ಆಕ್ಷೇಪವಿದೆ ಎಂದು ಹೇಳಿದರು. +ಎಲ್ಲ 28 ಕ್ಷೇತ್ರಗಳಲ್ಲೂ ಬಿಜೆಪಿ ಪರ ವಾತಾವರಣ ಇದೆ. ದೇಶದ ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ ಮುಂದಾಗಿದೆ. ಹಿಂದೂ ವಿರೋಧಿ ಕಾಂಗ್ರೆಸ್‌ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಎಚ್ಚರಿಸಿದರು. ಎರಡ್ಮೂರು ಆತ್ಮಹತ್ಯೆಗಳು ನಡೆದಿವೆ. ಹತ್ಯೆ ಪ್ರಕರಣಗಳು ದಿನೇದಿನೇ ಜಾಸ್ತಿ ಆಗುತ್ತಿವೆ. +ರಾಜ್ಯದಲ್ಲಿ ಲವ್‌ ಜಿಹಾದ್‌ ಪ್ರಕರಣಗಳು ಜಾಸ್ತಿ ಆಗುತ್ತಿವೆ. ರಾಜ್ಯದ ತಾಯಂದಿರು ಆತಂಕದಲ್ಲಿದ್ದಾರೆ. ಈ ಪ್ರದೇಶದ ಒಬ್ಬ ದಲಿತ ಹೆಣ್ಮಗಳ ಮೇಲೆ ಸದ್ದಾಂ ಹುಸೇನ್‌ ಎಂಬಾತ ನೀಚ ಕೃತ್ಯ ಎಸಗಿದ್ದಾನೆ. ರಾಜ್ಯ ಸರಕಾರ ಕಣ್ಮುಚ್ಚಿ ಕೂತಿದೆ ಎಂದು ಟೀಕಿಸಿದರು. +ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದಾಗಲೇ ಸರಕಾರವು ದೇಶದ್ರೋಹಿಗಳನ್ನು ಒದ್ದು ಒಳಗೆ ಹಾಕಬೇಕಿತ್ತು. ರಾಜ್ಯ ಸರಕಾರವು ಮೀನಮೇಷ ಮಾಡಿತ್ತು. ರಾಜ್ಯ ಸರಕಾರವು ಅಲ್ಪಸಂಖ್ಯಾತ ಕೊಲೆಗಡುಕರನ್ನು ಬಂಧಿಸಲು ನೂರು ಬಾರಿ ಯೋಚಿಸುತ್ತದೆ. ಲವ್‌ ಜಿಹಾದ್‌ ಪ್ರಕರಣದಡಿ ಸಿಲುಕಿದವರನ್ನು ಬಂಧಿಸಲು ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂಬ ಧೋರಣೆ ಹೊಂದಿದಂತಿದೆ ಎಂದರು. +ಸಿದ್ದರಾಮಯ್ಯನವರ ಸರಕಾರವು ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಹೊಂದಿದ್ದು, ರಾಜ್ಯವು ಕೇರಳ ಮಾದರಿಯಲ್ಲಿ ಸಾಗುವಂತಾಗಿದೆ. ಲವ್‌ ಜಿಹಾದ್‌ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ. ಮಹಿಳೆಯರ ವಿರುದ್ಧ ಅಪರಾಧದ ಇಂಥ ದುಷ್ಕೃತ್ಯ ಎಸಗುವ ದೇಶದ್ರೋಹಿಗಳಿಗೆ ನಾವೇನು ಮಾಡಿದರೂ ರಾಜ್ಯ ಸರಕಾರ ಬೆಂಬಲ ಕೊಡುತ್ತದೆ. ನಮ್ಮನ್ಯಾರೂ ಕೂಡ ಏನೂ ಮಾಡಲು ಸಾಧ್ಯವಿಲ್ಲ ಎಂದು ಭಾವಿಸುವಂತಾಗಿದೆ ಎಂದು ಆರೋಪಿಸಿದರು. +ಈಗ ಬರುತ್ತಿರುವ ಮಾಹಿತಿ ಪ್ರಕಾರ ಈ ಪೆನ್‌ ಡ್ರೈವ್‌ ಮುಂಚಿತವಾಗಿಯೇ ಕಾಂಗ್ರೆಸ್‌ ಸರಕಾರಕ್ಕೆ ಸಿಕ್ಕಿತ್ತು. ಮೊದಲ ಹಂತದ ಚುನಾವಣೆ ಮುಗಿಯುವವರೆಗೆ ಕಾದಿದ್ದು, ಕೊನೆಯ ಒಂದು ದಿನ ಇರುವಾಗ ಬಿಡುಗಡೆ ಮಾಡಿಸಿದ್ದಾರೆಂಬ ಚರ್ಚೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಇದಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಸರಕಾರ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು. +ಇಂಥ ಪ್ರಕರಣದಿಂದ ಚುನಾವಣೆ ಮೇಲೆ ಪರಿಣಾಮ ಆಗುವುದಿಲ್ಲ ಎಂದ ಅವರು, ಈ ಕುರಿತಂತೆ ನನಗೆ ಈ ಕ್ಷಣದವರೆಗೆ ಯಾವುದೇ ಪತ್ರ ಸಿಕ್ಕಿಲ್ಲ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಸುದ್ದಿಗೋಷ್ಟಿಯಲ್ಲಿ ಶಾಸಕ ಅರವಿಂದ ಬೆಲ್ಲದ, ಹುಬ್ಬಳ್ಳಿ-ಧಾರವಾಡ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಮುಖರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_158_8.txt b/eesanje/url_46_158_8.txt new file mode 100644 index 0000000000000000000000000000000000000000..d930c925c8872fc4ee3bd7c7b358542ca0217a2a --- /dev/null +++ b/eesanje/url_46_158_8.txt @@ -0,0 +1,14 @@ +2ನೇ ಹಂತದ 14 ಕ್ಷೇತ್ರಗಳ ಪೈಕಿ 12ರಲ್ಲಿ ಕಾಂಗ್ರೆಸ್‌ ಗೆಲುವು ‘ಗ್ಯಾರಂಟಿ’ : ಡಿಕೆಶಿ +ಬೆಂಗಳೂರು,ಮೇ.4-ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ 12 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಇಂದು ದಾವಣಗೆರೆ, ಗದಗ್‌ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. +ಕೊನೆ ಹಂತದ ಪ್ರಚಾರ ನಡೆಯುತ್ತಿದೆ. ದಕ್ಷಿಣ ಕರ್ನಾಟಕ ಭಾಗಕ್ಕಿಂತಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಕ್ಕೆ 5 ಗೆಲ್ಲುವುದರ ಜೊತೆಗೆ 14 ಕ್ಷೇತ್ರಗಳಲ್ಲಿ 12 ಗೆಲ್ಲಲಿದೆ ಎಂದು ಹೇಳಿದರು. +ಜನರಿಗೆ ಕಾಂಗ್ರೆಸ್‌ನ ಗ್ಯಾರಂಟಿಗಳು ಮೆಚ್ಚುಗೆಯಾಗಿವೆ. ಬಿಜೆಪಿ ಮತ್ತು ಜೆಡಿಎಸ್‌ನ ಬಹಳಷ್ಟು ನಾಯಕರು ಗ್ರಾಮೀಣ ಮಟ್ಟದಿಂದಲೂ ಕಾಂಗ್ರೆಸ್‌ ಪಕ್ಷಕ್ಕೆ ಸೇರುತ್ತಿದ್ದಾರೆ. ಬೃಹತ್‌ ಕಾರ್ಯಕ್ರಮಗಳಲ್ಲಿ ಮಾಜಿ ಶಾಸಕ ನೆಹರೂ ಓಲೆಕಾರ್‌ ಸೇರಿದಂತೆ ಪ್ರಮುಖ ನಾಯಕರು ನಮ್ಮ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‌ ಪರವಾದ ಉತ್ತಮ ವಾತಾವರಣವಿದೆ ಎಂದರು. +ಜೆಡಿಎಸ್‌ನ 12 ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎಂಬ ವದಂತಿಗಳು ಸತ್ಯಕ್ಕೆ ದೂರವಾಗಿವೆ. ಈ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮತ್ತು ಸಂಪರ್ಕ ಮಾಡಿಲ್ಲ. ಊಹಾಪೋಹದ ವದಂತಿಗಳನ್ನು ಹರಡಲಾಗುತ್ತಿದೆ. ಜೆಡಿಎಸ್‌ನಲ್ಲಿರುವವರು ಹತಾಶರಾಗಿರುವ ಬಗ್ಗೆ ನಮಗೆ ಮಾಹಿತಿ ಇದೆ. ಜನರು ಕೂಡ ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಹೇಳಿದರು. +ಜೆಡಿಎಸ್‌ ಕುಟುಂಬದೊಳಗಿನ ಸಮಸ್ಯೆ ತೀವ್ರವಾಗಿದೆ. ವಿಧಾನಸಭಾ ಚುನಾವಣೆಯ ಕಾಲದಿಂದಲೂ ಜೆಡಿಎಸ್‌ ನಾಯಕರ ಹೇಳಿಕೆಗಳನ್ನು ಗಮನಿಸಬೇಕು. ಟಿಕೆಟ್‌ ಹಂಚಿಕೆ ಕುರಿತಂತೆ ನಡೆದ ಚರ್ಚೆಗಳು ವಾತಾವರಣವನ್ನು ಸ್ಪಷ್ಟವಾಗಿ ಮನವರಿಕೆ ಮಾಡಿಕೊಡುತ್ತವೆ ಎಂದರು. +ಸದ್ಯಕ್ಕೆ ಜೆಡಿಎಸ್‌ನವರು ಬಿಜೆಪಿಯ ಜೊತೆ ಹೊಂದಾಣಿಕೆಯಲ್ಲಿದ್ದಾರೆ. ಅವರು ಒಗ್ಗಟ್ಟಿನಿಂದ ಅಲ್ಲಿಂದ ಹೊರ ಬರುತ್ತಾರೋ? ಅಥವಾ ಬೇರೆ ರೀತಿಯ ತಂತ್ರಗಾರಿಕೆ ಅನುಸರಿಸುತ್ತಾರೋ ಗೊತ್ತಿಲ್ಲ. ಜೆಡಿಎಸ್‌ನ ಶಾಸಕ ಅಥವಾ ನಾಯಕರು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು. +ಮಳೆ ಬಂದರೆ ಸಾವಿರ ಕೋಟಿ ರೂ. ಉಳಿತಾಯ :ಪರಿಸ್ಥಿತಿ ಏನೇ ಆಗಲಿ, ರಾಜ್ಯದಲ್ಲಿ ಮಳೆ ಬರಲಿ, ಒಂದು ಸುತ್ತು ಮಳೆ ಬಂದರೆ ಸಾವಿರ ಕೋಟಿ ರೂ.ಗಳಷ್ಟು ಉಳಿತಾಯವಾಗುತ್ತದೆ. ಉಚಿತ ವಿದ್ಯುತ್‌ ಉಳಿತಾಯವಾಗುತ್ತದೆ. ಇಲ್ಲವಾದರೆ ಬೋರ್‌ವೆಲ್‌ಗಳಿಂದ ನೀರು ತೆಗೆಯುತ್ತಲೇ ಇರುತ್ತಾರೆ. ಚೆನ್ನಾಗಿ ಮಳೆಯಾಗಲಿ, ಭೂಮಿ ನೆನೆಯಲಿ, ಏನೂ ತೊಂದರೆಯಿಲ್ಲ ಎಂದರು. +ಒಕ್ಕಲಿಗ ನಾಯಕತ್ವ ಬೇಡ :ಒಕ್ಕಲಿಗ ಸಮುದಾಯದ ನಾಯಕತ್ವಕ್ಕಾಗಿ ಹಾಸನದ ಪೆನ್‌ಡ್ರೈವ್‌ ಬಹಿರಂಗಗೊಳಿಸಲಾಯಿತು ಎಂದು ಬಿಜೆಪಿಯವರು ಅಪಪ್ರಚಾರವನ್ನು ಸೃಷ್ಟಿಸಿದ್ದಾರೆ. ನನಗೆ ಯಾವ ನಾಯಕತ್ವವೂ ಬೇಡ. ಕಳೆದ ನಾಲ್ಕು ವರ್ಷಗಳ ಹಿಂದೆ ಕಾಂಗ್ರೆಸ್‌ ಅಧ್ಯಕ್ಷನಾಗಿ ಹೈಕಮಾಂಡ್‌ ಮಾಡಿದೆೆ. ಅದರಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಬಿಜೆಪಿ ಮತ್ತು ಜೆಡಿಎಸ್‌ನವರು ಗಂಟೆಗೊಂದು, ಗಳಿಗೆಗೊಂದು ಮಾತು ಬದಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಕಾಂಗ್ರೆಸ್‌ನಲ್ಲಿ ನಾನು ಒಕ್ಕಲಿಗ ನಾಯಕ ಎಂದು ಹೇಳಿಕೊಳ್ಳಲು ನನಗಿಷ್ಟವಿಲ್ಲ. ಸಮುದಾಯದಲ್ಲಿ ಹುಟ್ಟಿದ್ದೇನೆ, ಸಮಾಜಕ್ಕೆ ಗೌರವ ಕೊಡಬೇಕು, ರಕ್ಷಣೆ ಕೊಡಬೇಕು, ಸಹಾಯ ಮಾಡಬೇಕು, ಜನ ಅಪೇಕ್ಷಿಸುವಂತೆ ನನ್ನ ಕೈಲಾದ ಸೇವೆಯನ್ನು ಜನರ ಸ್ವಾಭಿಮಾನ, ಗೌರವ ಉಳಿವಿಗೆ ಮಾಡುತ್ತೇನೆ ಎಂದು ಹೇಳಿದರು. +ಎನ್‌ಡಿಎ ಕೂಟದಿಂದ ಜೆಡಿಎಸ್‌ ಪಕ್ಷವನ್ನು ಕಿತ್ತು ಹಾಕಬೇಕು ಎಂದು ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಹೇಳಿರುವುದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರು ಜೆಡಿಎಸ್‌ನಿಂದ ಬಿಜೆಪಿಗೆ ಹೋಗಿದ್ದಾರೆ. ಅವರ ಮೈತ್ರಿ ವಿಚಾರವಾಗಿ ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು. +ಪೆನ್‌ಡ್ರೈವ್‌ ಮೂಲ ಗೊತ್ತಿದೆ :ಹಾಸನದಲ್ಲಿ ವರದಿಯಾದ ಲೈಂಗಿಕ ದೌರ್ಜನ್ಯ ಪ್ರಕರಣದ ಮಾದರಿಯಲ್ಲೇ 30 ವರ್ಷಗಳ ಹಿಂದೆ ಇಂಗ್ಲೆಂಡ್‌ನಲ್ಲೂ ಘಟನೆ ನಡೆದಿತ್ತು. ಪ್ರಧಾನಿಯವರ ಮಗನಾಗಿದ್ದ ರೇವಣ್ಣ ಅವರನ್ನು ಹೋಟೆಲ್‌ನಿಂದ ಖಾಲಿ ಮಾಡಿಸಲಾಯಿತು ಎಂಬ ವರದಿ ಇದೆ. ಆದರೆ ಸದ್ಯಕ್ಕೆ ಅದರ ಬಗ್ಗೆ ಪೂರ್ಣ ಮಾಹಿತಿ ತಮ್ಮ ಬಳಿ ಇಲ್ಲ ಎಂದು ಹೇಳಿದರು. +ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂಲ ಯಾವುದು, ಪೆನ್‌ಡ್ರೈವ್‌ಗಳು ಎಲ್ಲಿಂದ ಬಂದವು ಎಂಬ ಮಾಹಿತಿಗಳನ್ನು ನಾವು ಬಿಚ್ಚಬೇಕೇ? ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಹೇಳಿದವರು ನಾವಲ್ಲ, ಅವರ ಕುಟುಂಬವೇ ಬೇರೆ, ನನ್ನ ಕುಟುಂಬವೇ ಬೇರೆ, ಟಿಕೆಟ್‌ ನೀಡುವುದಿಲ್ಲ ಎಂದು ಗಲಾಟೆ ಮಾಡಿದ್ದರು, ತಪ್ಪಾಯಿತು ಎಂದು ಜನರಲ್ಲಿ ಕ್ಷಮೆ ಕೇಳಿದ್ದರು. ಇದೆಲ್ಲವೂ ಜೆಡಿಎಸ್‌ ನಾಯಕರ ಕುಟುಂಬದ ಒಳಬೇಗುದಿಗಳು ಎಂದು ತಿಳಿಸಿದರು. +ಭವಾನಿ ರೇವಣ್ಣ ಅವರ ವಿಚಾರಣೆ ಮತ್ತು ಎಚ್‌.ಡಿ.ರೇವಣ್ಣ ಅವರು ವಿಚಾರಣೆಗೆ ಗೈರುಹಾಜರಾಗಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿ.ಕೆ.ಶಿವಕುಮಾರ್‌, ತಾವೀಗ ಚುನಾವಣೆಯ ಗುಂಗಿನಲ್ಲಿದ್ದು, ಆನಂತರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. \ No newline at end of file diff --git a/eesanje/url_46_158_9.txt b/eesanje/url_46_158_9.txt new file mode 100644 index 0000000000000000000000000000000000000000..ff58b1a82ece674eabcaaf4fff7c36bcdfe63f04 --- /dev/null +++ b/eesanje/url_46_158_9.txt @@ -0,0 +1,6 @@ +ರಾಜ್ಯದ ಹಲವೆಡೆ ತಂಪೆರೆದ ವರುಣ, ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಬೇಗೆ +ಬೆಂಗಳೂರು,ಮೇ.4-ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಮಳೆಯಾಗಿದ್ದರೆ ಕಲ್ಯಾಣ ಕರ್ನಾಟಕ ಕಿತ್ತೂರು ಕರ್ನಾಟಕದ ಭಾಗದಲ್ಲಿ ಬಿಸಿಲ ಬೇಗೆ ತೀವ್ರಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಕಳೆದ 2 ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕೈದು ದಿನ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮೇ 6 ಮತ್ತು 7 ರಂದು ಬೆಂಗಳೂರು ಸುತ್ತಮುತ್ತ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ನಿನ್ನೆ ಮಧ್ಯಾಹ್ನ ಹಾಗೂ ಸಂಜೆ ಹೊಸಕೋಟೆ 6, ಬೆಂಗಳೂರು 2, ಮೈಸೂರು 5, ಮಂಡ್ಯ 3, ಸರಗೂರು 3, ನಂಜನಗೂಡು, ಕುಶಾಲನಗರ, ಕಣ್ಣಾನೂರು ತಲಾ 1 ಮಿಲಿಮೀಟರ್‌ನಷ್ಟು ಅತ್ಯಲ್ಪ ಪ್ರಮಾಣದ ಮಳೆಯಾಗಿದೆ. +ಗುಡುಗು, ಸಿಡಿಲು, ಮಿಂಚಿನ ಆರ್ಭಟದೊಂದಿಗೆ ಕೆಲವೆಡೆ ಮಳೆಯಾಗಿದ್ದು, ಹಲವೆಡೆ ಬಾಳೆ ಬೆಳೆಗೆ ಹಾನಿಯಾಗಿದೆ. ಕೆಲವೆಡೆ ಮರಗಳು ಮುರಿದುಬಿದ್ದ ವರದಿಯಾಗಿದೆ. ಭರಣಿ ಮಳೆ ಬಿದ್ದಿದ್ದರಿಂದ ರೈತರು ಸಂತುಷ್ಟಗೊಂಡಿದ್ದಾರೆ. ಆದರೆ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗದೆ ಒಣಹವೆ ಮುಂದುವರೆದಿದೆ. +44 ಡಿ.ಸೆಂ. ತಲುಪಿದ ಗರಿಷ್ಠ ತಾಪಮಾನ :ರಾಯಚೂರು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44 ಡಿ.ಸೆಂ. ದಾಟಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಕಂಡುಬರುತ್ತಿದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಂ. ಗಿಂತ ಹೆಚ್ಚಾಗಿದೆ. +ಬೀದರ್‌ 41, ವಿಜಯಪುರ 41.5, ಬಾಗಲಕೋಟೆ 41.7, ಧಾರವಾಡ 39.8, ಗದಗ 40.6, ಕೊಪ್ಪಳ 43.5 ಸೆಂ.ನಷ್ಟು ದಾಖಲಾಗಿದೆ.ಬೆಂಗಳೂರು 37, ಚಾಮರಾಜನಗರ 37.7, ಚಿತ್ರದುರ್ಗ ಹಾಗೂ ದಾವಣಗೆರೆ 38.8, ಹಾಸನ 37, ಮಂಡ್ಯ 38.6, ಮೈಸೂರು 38.2, ಶಿವಮೊಗ್ಗ 38.6, ಹಾವೇರಿ 37.6, ಬೆಳಗಾವಿ ನಗರ 37.5 ಡಿ.ಸೆಂ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. \ No newline at end of file diff --git a/eesanje/url_46_159_1.txt b/eesanje/url_46_159_1.txt new file mode 100644 index 0000000000000000000000000000000000000000..fcd131150bde998e9ec893b3bb59d71b2afe4397 --- /dev/null +++ b/eesanje/url_46_159_1.txt @@ -0,0 +1,10 @@ +ಹಾಸನ ಪೆನ್ ಡ್ರೈವ್ ಪ್ರಕರಣದ ಆರೋಪಿಗಳಿಗೆ ಕೇಂದ್ರ ಸರ್ಕಾರ ರಕ್ಷಣೆ : ಸಿಎಂ ಆರೋಪ +ಬಾಗಲ ಕೋಟೆ, ಮೇ.3-ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವುದಷ್ಟೇ ಅಲ್ಲ, ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದು, ಕೇಂದ್ರ ಸರ್ಕಾರ ವಿದೇಶಕ್ಕೆ ಪರಾರಿಯಾಗಿರುವ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರ ವಿಡಿಯೋಗಳು ಸಾರ್ವಜನಿಕವಾಗಿ ಬಹಿರಂಗಗೊಂಡಿವೆ. ಸಂತ್ರಸ್ತೆಯೊಬ್ಬರು ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಮಹಿಳೆ ಸುಳ್ಳು ಹೇಳಿಕೆ ನೀಡುವುದಿಲ್ಲ. ಆ ರೀತಿ ಹೇಳುವುದರಿಂದ ಬದುಕು ಹಾಳಾಗುತ್ತದೆ ಎಂದು ಸಂತ್ರಸ್ತರಿಗೆ ಗೊತ್ತಿರುತ್ತದೆ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ಮಹಿಳೆಯ ಹೇಳಿಕೆ ಮೇಲೆ ನಂಬಿಕೆ ಇಡಲಾಗುತ್ತದೆ ಎಂದು ಹೇಳಿದರು. +ಬಿಜೆಪಿಯವರು ತಪ್ಪು ಮಾಡಿದ್ದಾರೆ. ಅವರಿಗೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಆದರೂ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಪ್ರಜ್ವಲ್‌ಗೆ ಜೆಡಿಎಸ್‌ನವರು ಟಿಕೆಟ್‌ ನೀಡಿದ್ದರು, ಈಗ ಪ್ರಕರಣದ ಬಗ್ಗೆ ತಮ್ಮ ನಿಲುವನ್ನು ಹೇಳಲಿ ಎಂದು ಬಿಜೆಪಿ ನಾಯಕರಿಗೆ ಆಗ್ರಹಿಸಿದರು. +ತಾವು ಪ್ರಧಾನಿಯವರಿಗೆ ಪತ್ರ ಬರೆದಿದ್ದು, ಪ್ರಜ್ವಲ್‌ಗೆ ಇರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದೇನೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಂಡರೆ ಪ್ರಜ್ವಲ್‌ ವಿದೇಶದಲ್ಲಿರಲು ಸಾಧ್ಯವಿಲ್ಲ. ಸ್ವದೇಶಕ್ಕೆ ಮರಳಲೇಬೇಕಾಗುತ್ತದೆ ಎಂದು ಹೇಳಿದರು. +ಪ್ರತಿಯೊಬ್ಬರ ವಿದೇಶಿ ಪ್ರಯಾಣದ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ಇದ್ದೇ ಇರುತ್ತದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪಾಸ್‌ಪೋರ್ಟ್‌ ವೀಸಾ ಪರಿಶೀಲನೆ ನಡೆಯಬೇಕು. ಯಾರ್ಯಾರು, ಯಾವ ದೇಶಕ್ಕೆ ಪ್ರಯಾಣಿಸುತ್ತಾರೆ, ಯಾರೊಂದಿಗೆ ಹೋಗುತ್ತಾರೆ ಎಂಬ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಪ್ರಜ್ವಲ್‌ ಪ್ರಯಾಣದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಇರಲಿಲ್ಲವೇ?, ಹಾಗಿದ್ದರೆ ಯಾರು ಬೇಕಾದರೂ ದೇಶಕ್ಕೆ ಬರಲು, ಹೋಗಲು ಅವಕಾಶವಿದೆಯೇ? ಎಂದು ಪ್ರಶ್ನಿಸಿದರು. +ಕೇಂದ್ರ ಸರ್ಕಾರ ಪ್ರಜ್ವಲ್‌ ರೇವಣ್ಣನನ್ನು ರಕ್ಷಣೆ ಮಾಡುತ್ತಿದೆ. ಆತ ಎಲ್ಲೇ ಅಡಗಿದ್ದರೂ ರಾಜ್ಯಸರ್ಕಾರ ಬಂಧಿಸಿ ಕರೆತರಲಿದೆ. ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌.ಡಿ.ಕುಮಾರಸ್ವಾಮಿ ನುಣುಚಿಕೊಳ್ಳುತ್ತಿದ್ದಾರೆ. ಹಾಸನದ ಚುನಾವಣಾ ಪ್ರಚಾರದಲ್ಲಿ ಪ್ರಜ್ವಲ್‌ನನ್ನು ತಮ್ಮ ಪುತ್ರ ಎಂದು ಹೇಳಿಕೊಂಡಿದ್ದರು. ಪ್ರಕರಣ ಬಯಲಿಗೆ ಬರುತ್ತಿದ್ದಂತೆ ನನ್ನ ಕುಟುಂಬ ಬೇರೆ, ರೇವಣ್ಣ ಕುಟುಂಬ ಬೇರೆ ಎಂದು ಜಾರಿಕೊಂಡರು. ಆದರೆ ನಿನ್ನೆ ಎಚ್‌.ಡಿ.ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ರಾಜಕೀಯ ಅಥವಾ ಕುಕೃತ್ಯ ಏನೇ ಇದ್ದರೂ ಅವರೆಲ್ಲಾ ಒಟ್ಟಿಗೇ ಸೇರಿ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು. +ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ, ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಗಳ ಮೇಲೆ ನಂಬಿಕೆಯಿಲ್ಲ. ಅಮಾಯಕರಿಗೆ ಕಿರುಕುಳ ನೀಡುವುದು ಅವರ ಉದ್ದೇಶ. ರಾಜಕೀಯಕ್ಕಾಗಿ ಅಮಾಯಕರು ಕಣ್ಣೀರು ಹಾಕಬೇಕು ಎಂದು ಬಯಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. +ದೇಶದಲ್ಲಿ ಮಾಡಬಾರದ್ದನ್ನು ಬಿಜೆಪಿಯವರು ಮಾಡುತ್ತಾರೆ. ಸಾಮಾಜಿಕ ನ್ಯಾಯ, ಮೀಸಲಾತಿ, ದೇಶದ ಐಕ್ಯತೆ, ಸಮಾನತೆ ಮೇಲೆ ಬಿಜೆಪಿಯವರಿಗೆ ನಂಬಿಕೆಯಿಲ್ಲ. ಸಂವಿಧಾನಕ್ಕೆ ಸಂಪೂರ್ಣ ವಿರುದ್ಧವಾಗಿ ನಡೆದುಕೊಳ್ಳುತ್ತಾರೆೆ ಎಂದು ವಾಗ್ದಾಳಿ ನಡೆಸಿದರು. +ಸಂತ್ರಸ್ತ ಮಹಿಳೆಯೊಬ್ಬರನ್ನು ಅಪಹರಣ ಮಾಡಲಾಗಿದೆ ಎಂಬ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಪರಿಶೀಲನೆ ನಡೆಸಿ, ನಾಪತ್ತೆಯಾಗಿರುವ ಮಹಿಳೆಯನ್ನು ಕರೆತರುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು. \ No newline at end of file diff --git a/eesanje/url_46_159_10.txt b/eesanje/url_46_159_10.txt new file mode 100644 index 0000000000000000000000000000000000000000..5a8646b36192a05eaf61422913b45b3eeb2668a5 --- /dev/null +++ b/eesanje/url_46_159_10.txt @@ -0,0 +1,7 @@ +ರಾಜ್ಯದ ಹಲವೆಡೆ ಇನ್ನೂ ನಾಲ್ಕೈದು ದಿನ ಮಳೆ ಸಾಧ್ಯತೆ +ಬೆಂಗಳೂರು, ಮೇ 3-ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆಗಳಲ್ಲಿ ಚದುರಿದಂತೆ ನಿನ್ನೆ ಮಳೆಯಾಗಿದ್ದು, ಇನ್ನೂ ನಾಲ್ಕೈದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಿಸಿಲಿನ ಬೇಗೆಯಿಂದ ಬಸವಳಿದ್ದಿದ್ದ ಬೆಂಗಳೂರಿಗೆ ನಿನ್ನೆ ಸಂಜೆ ಬಿದ್ದ ಮಳೆ ಮುದ ನೀಡಿದೆ. ಕೋಲಾರದ ಕೆಜಿಎಫ್‌, ಮುಳಬಾಗಿಲು, ಚನ್ನಪಟ್ಟಣ, ಬೆಂಗಳೂರಿನ ಪೂರ್ವ ಹಾಗೂ ದಕ್ಷಿಣ ಭಾಗದಲ್ಲಿ ಮಳೆಯಾಗಿದೆ. ಬೆಂಗಳೂರಿನ ಉತ್ತರ ಭಾಗದಲ್ಲಿ ಮಳೆಯಾಗಿಲ್ಲ. +ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವುದು ವಾಡಿಕೆಯಾದರೂ ಮುಂಗಾರು ಪೂರ್ವ ಮಳೆಯು ವ್ಯಾಪಕವಾಗಿ ಬೀಳುವುದಿಲ್ಲ. ಚದುರಿದಂತೆ ಅಲ್ಲಲ್ಲಿ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಗಳಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ. ಅದರಲ್ಲೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. +ಮೇ 7ರವರೆಗೂ ಮಳೆ ಮುಂದುವರೆಯು ಲಕ್ಷಣಗಳಿವೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ವಾತಾವರಣ ಉಂಟಾಗಬಹುದು. +ಮಿಂಚು, ಗುಡುಗಿನ ವಾತಾವರಣ ಉಂಟಾದಾಗ ಸಿಡಿಲು ಬಡಿಯುವ ಸಾಧ್ಯತೆ ಇದೆ. ಜನರು ಸುರಕ್ಷಿತವಾಗಿರಬೇಕು. ವಿದ್ಯುತ್‌ ಕಂಬ, ಮರ, ಲೋಹದ ವಸ್ತುಗಳಿಂದ ದೂರವಿರಬೇಕು. ಮೊಬೈಲ್‌ ಬಳಸದಿರುವುದು ಒಳ್ಳೆಯದು. ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿರುಬೇಕು ಎಂಬ ಸಲಹೆ ಮಾಡಲಾಗಿದೆ. +ಬೆಂಗಳೂರು ಸುತ್ತ ಮುತ್ತ ಮೇ 6 ಮತ್ತು 7 ರಂದು ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಮಳೆಯಾದರೂ ತಾಪಮಾನ ಹೆಚ್ಚಾಗಿಯೇ ಇರುತ್ತದೆ. ಹೀಗಾಗಿ ಜನರು ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷಾತ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸಲಹೆ ಮಾಡಿದೆ. \ No newline at end of file diff --git a/eesanje/url_46_159_11.txt b/eesanje/url_46_159_11.txt new file mode 100644 index 0000000000000000000000000000000000000000..e369c5d9c6b994a9b8c56680fcc849b41c4a26d7 --- /dev/null +++ b/eesanje/url_46_159_11.txt @@ -0,0 +1,6 @@ +ಮಹಿಳೆಯ ಹಿಂದೆ ಬಿದ್ದು ಮನೆಗೆ ಬೆಂಕಿ ಹಚ್ಚಿದ್ದ ಆರೋಪಿ ಬಂಧನ +ಬೆಂಗಳೂರು, ಮೇ 2- ಮದುವೆಯಾಗುವಂತೆ ವಿವಾಹಿತೆಯನ್ನು ಪೀಡಿಸಿ ಆಕೆ ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ನಿವಾಸಿ ಅರ್ಬಾಜ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರಿಯಾಗಿದ್ದು, ಮಹಿಳೆಯ ದೂರದ ಸಂಬಂಧಿ. +ಸಾರಾಯಿಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಈ ಮಹಿಳೆ ಪತಿ, ಮಗ ಹಾಗೂ ಮೂವರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದು ಟೈಲರಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಈ ನಡುವೆ ದೂರದ ಸಂಬಂಧಿ ಅರ್ಬಾಜ್ ಎಂಬಾತ ಆಗಾಗ್ಗೆ ಈ ಮಹಿಳೆಗೆ ಫೋನ್ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೇ ವಿಚಾರಕ್ಕೆ ಆಗಾಗ್ಗೆ ಕರೆ ಮಾಡಿ ಗಲಾಟೆ ಮಾಡುತ್ತಿದ್ದನು. +ಏ. 11ರಂದು ರಂಜಾನ್ ನಿಮಿತ್ತ ರಾತ್ರಿ ಮಹಿಳೆ ಶಾಪಿಂಗ್‍ಗಾಗಿ ಟ್ಯಾನರಿ ರಸ್ತೆಯ ಡಿಜೆ ಹಳ್ಳಿಯಲ್ಲಿ ವಾಸವಿರುವ ಸಹೋದರಿ ಸಾನಿಯಾ ಅವರ ಮನೆಗೆ ಹೋಗಿ ಅಲ್ಲಿಂದ ರಾತ್ರಿ 2 ಗಂಟೆ ಸುಮಾರಿಗೆ ಶಿವಾಜಿನಗರಕ್ಕೆ ಹೋಗುತ್ತಿದ್ದಾಗ ಅಲ್ಲೇ ಕೆಲಸ ಮಾಡುತ್ತಿದ್ದ ಪತಿಯನ್ನು ಮಾತನಾಡಿಸಿಕೊಂಡು ಬೆಳಗಿನ ಜಾವ 4 ಗಂಟೆಯಲ್ಲಿ ಈ ಮೂವರು ಮನೆಗೆ ವಾಪಸ್ಸಾಗುತ್ತಿದ್ದರು. +ಆ ಸಂದರ್ಭದಲ್ಲಿ ಆರೋಪಿ ಅರ್ಬಾಜ್ ಮಹಿಳೆಯ ಪತಿಗೆ ಮೊಬೈಲ್ ಕರೆ ಮಾಡಿ ನಿಮ್ಮ ಮನೆಗೆ ಬೆಂಕಿ ಬಿದ್ದಿದೆ ಎಂದು ಹೇಳಿದ್ದಾನೆ. ಇವರೆಲ್ಲರೂ ಮನೆ ಬಳಿ ಹೋಗಿ ನೋಡುವಷ್ಟರಲ್ಲಿ ಅಗ್ನಿಶಾಮಕ ದಳ ಹಾಗೂ ಅಕ್ಕಪಕ್ಕದವರು ಬೆಂಕಿಯನ್ನು ನಂದಿಸಿದ್ದು, ಬೆಂಕಿಯಿಂದ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಎಲ್ಲ ವಸ್ತುಗಳು ಬೆಂಕಿಗಾಹುತಿಯಾಗಿದ್ದವು. +ಈ ಬಗ್ಗೆ ಅರ್ಬಾಜ್ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅರ್ಬಾಜ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈತನೇ ಮನೆಗೆ ಬೆಂಕಿ ಹಚ್ಚಿರುವುದು ಗೊತ್ತಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_159_12.txt b/eesanje/url_46_159_12.txt new file mode 100644 index 0000000000000000000000000000000000000000..35832b788e97689fe8bbea7a545bf833a9cf8ffd --- /dev/null +++ b/eesanje/url_46_159_12.txt @@ -0,0 +1,7 @@ +ಪೆನ್‍ಡ್ರೈವ್ ಪ್ರಕರಣ: ಅಂತರ ಕಾಯ್ದುಕೊಳ್ಳಲು ಬಿಜೆಪಿ ಹೈಕಮಾಂಡ್ ಸೂಚನೆ +ಬೆಂಗಳೂರು,ಮೇ2- ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಪೆನ್‍ಡ್ರೈವ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ ಕಾಯ್ದುಕೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ. ಅಶ್ಲೀಲ ವಿಡಿಯೋ ಪ್ರಕರಣ ಇದೀಗ ದೇಶದಾದ್ಯಂತವಲ್ಲದೆ ವಿದೇಶಗಳಲ್ಲೂ ಸುದ್ದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿವಾದದ ಸುಳಿಯಲ್ಲಿ ತಾವೂ ಸಿಕ್ಕಿಕೊಳ್ಳದೆ ಎಚ್ಚರಿಕೆ ವಹಿಸುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಪೆನ್‍ಡ್ರೈವ್ ವಿವಾದದಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷದ ಜೊತೆಗೆ ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸುತ್ತಿದೆ. +ಈ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವೇನು ಎಂಬ ಪ್ರಶ್ನೆ ಕೇಳಿಬರುತ್ತಿದೆ. ಪ್ರಜ್ವಲ್ ಹಾಗೂ ಬಿಜೆಪಿ ವಿರುದ್ದ ಕಾಂಗ್ರೆಸ್ ದಾಳಿ ನಡೆಸುತ್ತಿದ್ದು, ಪ್ರಜ್ವಲ್ ರೇವಣ್ಣ ಪರ ಪ್ರಧಾನಿ ನರೇಂದ್ರಮೋದಿ ಮತ ಯಾಚಿಸಿದ ಫೋಟೋ ರಿಲೀಸ್ ಮಾಡಿದೆ. +ಎಐಸಿಸಿ ಮಾಧ್ಯಮ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಟೆ ಇದೇ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಮೋದಿ ಅತ್ಯಾಚಾರಿಗಳನ್ನು ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್ ಜೊತೆಗೆ ನಿಂತುಕೊಂಡಂತೆ ಮೋದಿ ಅತ್ಯಾಚಾರಕ್ಕೆ ಒಳಗಾದ ಮಹಿಳೆಯರ ರಕ್ಷಣೆಗೆ ನಿಂತಿಲ್ಲ ಎಂದು ಆರೋಪಿಸಿದ್ದಾರೆ. +ಇಡೀ ಪ್ರಕರಣದಲ್ಲಿ ಕರ್ನಾಟಕದ ರಾಕ್ಷಸನೊಬ್ಬ ದೇಶ ಬಿಟ್ಟು ಹೋಗಲು ಬಿಜೆಪಿಯೇ ಅವಕಾಶ ಮಾಡಿಕೊಟ್ಟಿದೆ. ರಾಷ್ಟ್ರೀಯ ಮಹಿಳಾ ಆಯೋಗ ಇದರಲ್ಲಿ ಏನು ಮಾಡುತ್ತಿದೆ? ಸ್ಮೃತಿ ಇರಾನಿ ಈಗ ಮೌನವಾಗಿದ್ದಾರೆ ಯಾಕೆ? ಮೋದಿ ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. +ಈ ವಿಚಾರವಾಗಿ ರಾಜ್ಯದಲ್ಲಿ ಬಿಜೆಪಿ ನಾಯಕರು ಯಾರೂ ಸಮರ್ಥನೆ ಮಾಡುತ್ತಿಲ್ಲ. ಪ್ರಕರಣದ ಬಗ್ಗೆ ಬಿಜೆಪಿ ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ಅಂತರ ಕಾಯ್ದುಕೊಳ್ಳುತ್ತಿದೆ. ಜೆಡಿಎಸ್ ಎನ್‍ಡಿಎ ಭಾಗ ಅಷ್ಟೇ. ಹಾಗಾಗಿ ಪ್ರಜ್ವಲ್ ಮೈತ್ರಿ ಅಭ್ಯರ್ಥಿ. ಅವರು ಮಾಡಿದ ತಪ್ಪಿಗೆ ನಾವು ಹೊಣೆ ಅಲ್ಲ ಎಂದು ವಾದಿಸುತ್ತಿದೆ. +ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಖಡಕ್ ಸಂದೇಶ ನೀಡಿದ್ದು, ಈ ವಿಚಾರವಾಗಿ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಿದ್ದಾರೆ. ತನಿಖೆ ವಿಚಾರದಲ್ಲಿ ಮಾತಾಡಬಾರದು. ವಿವಾದಾತ್ಮಕ ಹೇಳಿಕೆ ಕೊಡಬಾರದೆಂದು ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_159_2.txt b/eesanje/url_46_159_2.txt new file mode 100644 index 0000000000000000000000000000000000000000..652b8c81fd55ea67ad1cf74861ce0dec30502361 --- /dev/null +++ b/eesanje/url_46_159_2.txt @@ -0,0 +1,7 @@ +ಪೆನ್‌ಡ್ರೈವ್‌ ಪ್ರಕರಣ : ಹೊಳೇನರಸೀಪುರದಲ್ಲಿ ಎಸ್‌ಐಟಿ ತಂಡ ಪರಿಶೀಲನೆ +ಹಾಸನ, ಮೇ 3-ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು ಮುಂಜಾನೆ ಐದು ವಾಹನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. +ಇಂದು ಮುಂಜಾನೆ 3.15ರ ಸುಮಾರಿಗೆ ಹಾಸನ ಜಿಲ್ಲೆಗೆ ಎಸ್‌ಪಿ ಸೀಮಾ ಲಾಟ್ಕರ್‌ ಅವರ ನೇತೃತ್ವ ತಂಡ ಭೇಟಿ ನೀಡಿ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಸೇರಿದ ಫಾರ್ಮ್‌ಹೌಸ್‌ ಹಾಗೂ ತಾಲೂಕಿನ ಘನ್ನಿಕಡ, ಕಾಮೇನಹಳ್ಳಿ ಗ್ರಾಮದ ಬಳಿ ಇರುವ ಎರಡು ಫಾರ್ಮ್‌ಹೌಸ್‌ಗೆಭೇಟಿ ನೀಡಿ ಪರಿಶೀಲನೆ ನಡೆಸಿದೆ. +ಫಾರ್ಮ್‌ಹೌಸ್‌ನ ಇಂಚಿಂಚು ಸಹ ಪರಿಶೀಲನೆ ನಡೆಸಿದ ತಂಡದ ಅಕಾರಿಗಳು ಅಶ್ಲೀಲ ವಿಡಿಯೋ ಚಿತ್ರೀಕರಣದ ಸ್ಥಳದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಪಡುವಲಹಿಪ್ಪೆ ಫಾರ್ಮ್‌ಹೌಸ್‌ನಲ್ಲಿ ಅಸ್ಸಾಂ ಹಾಗೂ ಬಿಹಾರ ಮೂಲದ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಹಲವು ನಿಮಿಷಗಳ ಕಾಲ ಆ ಕಾರ್ಮಿಕರಿಂದ ಎಸ್‌ಐಟಿ ಅಧಿಕಾರಿಗಳು ಮಾಹಿತಿಗಳನ್ನು ಕಳೆದುಕೊಂಡಿದ್ದಾರೆ. +ಸಂಸದ ಪ್ರಜ್ವಲ್‌ ರೇವಣ್ಣ ಎಷ್ಟು ದಿನಕ್ಕೊಮ್ಮೆ ಈ ಫಾರ್ಮ್‌ಹೌಸ್‌ಗೆ ಬರುತ್ತಿದ್ದರು. ಯಾವ ಸಮಯದಲ್ಲಿ ಬರುತ್ತಿದ್ದರು. ಇಲ್ಲಿಗೆ ಬಂದಾಗ ಉಳಿದುಕೊಳ್ಳುತ್ತಿದ್ದರೆ, ಅವರೊಬ್ಬರೇ ಬರುತ್ತಿದ್ದರಾ ಎಂಬಿತ್ಯಾದಿ ಹಲವು ಮಾಹಿತಿಗಳನ್ನು ವಿಶೇಷ ತಂಡ ಕಲೆ ಹಾಕಿದೆ.ವಿಡಿಯೋ ಚಿತ್ರೀಕರಣ ನಡೆದಿದೆ ಎನ್ನುವ ಬಗ್ಗೆ ಎಸ್‌ಐಟಿ ತಂಡ ಮಾಹಿತಿ ಸಂಗ್ರಹಿಸಿರುವ ಜೊತೆಗೆ ಹಲವು ಮಾಹಿತಿಗಳನ್ನು ಸಹ ಕಲೆ ಹಾಕಿ ತಂಡ ತೆರಳಿದೆ. +ಚುನಾವಣಾ ಮುಗಿದ ಕೆಲವೇ ಗಂಟೆಗಳಲ್ಲಿ ಪ್ರಜ್ವಲ್‌ಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಎಲ್ಲಾ ಕಡೆ ಹರಿದಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ರೇವಣ್ಣ ಹಾಗೂ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದರು. +ಈ ಪ್ರಕರಣದ ಗಂಭೀರತೆ ಅರಿತು ತನಿಖೆಗಾಗಿ ಎಸ್‌ಐಟಿಗೆ ವಹಿಸಲಾಗಿದ್ದು, ಇಂದು ವಿಶೇಷ ತನಿಖಾ ತಂಡ ಹಾಸನ ಜಿಲ್ಲೆಗೆ ಭೇಟಿ ನೀಡಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. \ No newline at end of file diff --git a/eesanje/url_46_159_3.txt b/eesanje/url_46_159_3.txt new file mode 100644 index 0000000000000000000000000000000000000000..f295f1d93a207ed347a16169d997ba2c8c68fe7d --- /dev/null +++ b/eesanje/url_46_159_3.txt @@ -0,0 +1,5 @@ +ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್‌ ಪಡೆದ ರೇವಣ್ಣ +ಬೆಂಗಳೂರು,ಮೇ.3-ನಿರೀಕ್ಷಣಾ ಜಾಮೀನು ಕೋರಿ ಶಾಸಕ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರು ಅತ್ಯಾಚಾರದ ಆರೋಪ ಪ್ರಕರಣ ದಾಖಲಿಸಿಲ್ಲದಿರುವುದರಿಂದ ನಿರೀಕ್ಷಣಾ ಜಾಮೀನಿನ ಅಗತ್ಯವಿಲ್ಲ. +ಜಾಮೀನು ನೀಡಬಹುದಾದ ಪ್ರಕರಣಗಳನ್ನು ಮಾತ್ರ ದಾಖಲಿಸಲಾಗಿದೆ. ನಿರೀಕ್ಷಣಾ ಅರ್ಜಿ ಊರ್ಜಿತವಾಗುವುದಿಲ್ಲ ಎಂದು ದೃಢೀಕರಿಸಿದ ಹಿನ್ನೆಲೆಯಲ್ಲಿ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. +ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟೀಸ್‌ ನೀಡಿತ್ತು. ಬಂಧನದ ಭೀತಿಯ ಹಿನ್ನೆಲೆಯಲ್ಲಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. +ಅರ್ಜಿ ವಿಚಾರಣೆ ವೇಳೆ ಜಾಮೀನು ರಹಿತ ಸೆಕ್ಷನ್‌ ಹಾಕುತ್ತಾರೆ ಎಂಬ ಬಗ್ಗೆ ತಿಳಿಸಬೇಕೆಂದು ರೇವಣ್ಣ ಪರ ವಕೀಲರು ವಾದ ಮಂಡಿಸಿದರೂ ಈ ದಿನದವರೆಗೆ ಜಾಮೀನುರಹಿತ ಪ್ರಕರಣ ದಾಖಲಿಸಿಲ್ಲ ಎಂದು ಹೈಕೋರ್ಟ್‌ಗೆ ಎಸ್‌ಪಿಪಿ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಕೋರ್ಟ್‌ ದಾಖಲಿಸಿಕೊಂಡಿತು. ನಂತರ ರೇವಣ್ಣ ಅವರು ತಮ್ಮ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದರು. \ No newline at end of file diff --git a/eesanje/url_46_159_4.txt b/eesanje/url_46_159_4.txt new file mode 100644 index 0000000000000000000000000000000000000000..901978df711bbfdfe2604aed3d14de7ad66a6a7d --- /dev/null +++ b/eesanje/url_46_159_4.txt @@ -0,0 +1,12 @@ +ಪೆನ್‌ಡ್ರೈವ್‌ ಪ್ರಕರಣ : ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ನೋಟೀಸ್‌ +ಬೆಂಗಳೂರು, ಮೇ.3-ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಮತ್ತು ರೇವಣ್ಣ ಅವರಿಗೆ 2ನೇ ಬಾರಿಗೆ ನೋಟೀಸ್‌ ನೀಡ ಲಾಗಿದ್ದು, ಅದಕ್ಕೂ ಪ್ರತಿಕ್ರಿಯಿಸದೇ ಇದ್ದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಮತ್ತು ಪ್ರಜ್ವಲ್‌ ರೇವಣ್ಣ ಅವರಿಗಿ ರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿ ಸಲು ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‌ಪಿಸಿ ಸೆಕ್ಷನ್‌ 41-ಎ ಅಡಿ ಈಗಾಗಲೇ ನೋಟೀಸ್‌ ನೀಡಲಾಗಿತ್ತು. ಇದಕ್ಕೆ ಪ್ರಜ್ವಲ್‌ ಪರವಾದ ವಕೀಲರು ಪತ್ರ ಬರೆದು ಒಂದು ವಾರ ಸಮಯ ಕೇಳಿದ್ದರು. ರೇವಣ್ಣ ಅವರೂ ಕಾಲಾವಕಾಶ ಕೇಳಿದ್ದರು. ಕಾನೂನು ಪರಿಶೀಲನೆ ನಡೆಸಿದ ಎಸ್‌ಐಟಿ ಸಮಯಾವಕಾಶ ನೀಡಲು ನಿರಾಕರಿಸಿದೆ. +ಜೊತೆಯಲ್ಲಿ ಎರಡನೇ ನೋಟೀಸ್‌ ನೀಡಿದೆ. ಅದರನುಸಾರ ಮತ್ತೆ 24 ಗಂಟೆ ಕಾಲಾವಕಾಶ ನೀಡಲಾಗಿದ್ದು, ವಿಚಾರಣೆಗೆ ಇಬ್ಬರೂ ಹಾಜರಾಗಬೇಕು ಎಂದು ಹೇಳಿದರು. ಸಂಸದ ಪ್ರಜ್ವಲ್‌ಗೆ ವಿಶೇಷ ಅವಕಾಶದಲ್ಲಿರುವ ರಾಜತಾಂತ್ರಿಕ ಪಾಸ್‌ಪೋರ್ಟ್‌ ಇದೆ. ಅದನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ. +ಪಾಸ್‌ಪೋರ್ಟ್‌ ರದ್ದು ಮಾಡಲು ನ್ಯಾಯಾಲಯದ ಅನುಮತಿ ಅಗತ್ಯ ಎಂಬ ವಿದೇಶಾಂಗ ಸಚಿವಾಲಯದ ಹೇಳಿಕೆ ಸರಿಯಿದೆ. ನಾವು ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೇಳುತ್ತಿಲ್ಲ. ನಾವು ರಾಜತಾಂತ್ರಿಕ ಅವಕಾಶಗಳನ್ನಷ್ಟೇ ರದ್ದು ಮಾಡಲು ಮನವಿ ಮಾಡಿದ್ದೇವೆ. ಆ ವಿಷಯವಾಗಿ ಪ್ರಧಾನಿಯವರು ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಿವರಿಸಿದರು. +ಪ್ರಜ್ವಲ್‌ ರೇವಣ್ಣ ಅವರ ಫೋಟೊಸಹಿತವಾಗಿ ಲುಕ್‌ಔಟ್‌ ನೋಟೀಸ್‌ ಜಾರಿ ಮಾಡಿದ್ದು, ಎಲ್ಲಾ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ರವಾನೆ ಮಾಡಲಾಗಿದೆ. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಪ್ರಜ್ವಲ್‌ ಜರ್ಮನಿಗೆ ಪ್ರಯಾಣಿಸಿದ್ದಾನೆ. ಅನಂತರ ಅಲ್ಲಿಂದ ಆತ ಎಲ್ಲಿಗೆ ಹೋಗಿದ್ದಾನೆ ಎಂಬ ವಿವರಗಳಿಲ್ಲ ಎಂದರು. +ಸದ್ಯಕ್ಕೆ ಪ್ರಜ್ವಲ್‌ ರೇವಣ್ಣಗೆ 2ನೇ ನೋಟೀಸ್‌ ನೀಡಲಾಗಿದ್ದು, ಆತ ಎಲ್ಲಿದ್ದಾನೆ ಎಂದು ಪರಿಶೀಲನೆ ನಡೆಸಲು ರಾಜ್ಯಸರ್ಕಾರದ ಅಧಿಕಾರಿಗಳಿಗೆ ಅಕಾರವಿಲ್ಲ. ಕೇಂದ್ರ ಸರ್ಕಾರ ಅದನ್ನು ಮಾಡಬೇಕು. ನಮ್ಮ ವ್ಯಾಪ್ತಿಯಲ್ಲಿ ನಾವು ಅಧಿಕಾರಿಗಳನ್ನು ಕಳುಹಿಸಿ ಪ್ರಜ್ವಲ್‌ನನ್ನು ವಿದೇಶದಲ್ಲಿ ಬಂಧಿಸಿ ಕರೆತರುವ ಬಗ್ಗೆ ಪ್ರಯತ್ನ ಮಾಡಬಹುದು. ಆದರೆ ನೋಟೀಸ್‌ನ ಅವಧಿ ಮುಗಿದ ಬಳಿಕ ಈ ಪ್ರಕ್ರಿಯೆ ಬಗ್ಗೆ ಪರಿಶೀಲನೆ ನಡೆಯಲಿದೆ. +ಕಾನೂನಿನ ಪ್ರಕಾರ, ಆರೋಪಿಗಳಿಗೆ ಕಾಲಾವಕಾಶ ನೀಡುವುದು ಅನಿವಾರ್ಯವಿದೆ ಎಂದು ಹೇಳಿದರು.ಈ ನಡುವೆ ಮೈಸೂರಿನ ಪೊಲೀಸ್‌ ಠಾಣೆಯೊಂದರಲ್ಲಿ ಸಂತ್ರಸ್ತೆಯೊಬ್ಬರ ಪುತ್ರನೊಬ್ಬ ತಮ್ಮ ತಾಯಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿರುವ ಬಗ್ಗೆಯೂ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈಗ ಒಂದೊಂದೇ ವಿಚಾರಗಳು ಹೊರಬರುತ್ತಿವೆ. ಇನ್ನೂ ಕೆಲ ಮಹಿಳೆಯರು ಹೇಳಿಕೆ ನೀಡಬೇಕಿದೆ ಎಂದು ತಿಳಿಸಿದರು. +ಈ ಪ್ರಕರಣದಲ್ಲಿ ಪೆನ್‌ಡ್ರೈವ್‌ ಬಹಿರಂಗಗೊಳಿಸಿದವರು ಯಾರು? ಇದರ ಹಿಂದೆ ಯಾರಿದ್ದಾರೆ ಎಂಬ ವಿಚಾರಗಳನ್ನು ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುತ್ತಾರೆ. ಪೆನ್‌ಡ್ರೈವ್‌ ಅನ್ನು ಬಹಿರಂಗಗೊಳಿಸಿದವರು ಎಂದು ಹೇಳಲಾದ ಕಾರ್ತಿಕ್‌ ಎಲ್ಲಿದ್ದಾನೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದರು. +ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿರುವ ಬಗ್ಗೆಯೂ ತಮಗೆ ವಿವರ ಇಲ್ಲ ಎಂದು ಸ್ಪಷ್ಟಪಡಿಸಿದರು.ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾನು ಗೃಹಸಚಿವನಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕಿದೆ. ಹೀಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ರಾಜಕೀಯವಾಗಿ ಪ್ರತಿಕ್ರಿಯಿಸುತ್ತಾರೆ ಎಂದು ತಿಳಿಸಿದರು. +ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳಲ್ಲಿನ ಸಂತ್ರಸ್ತರ ಬಗ್ಗೆ ಸೂಕ್ಷ್ಮವಾಗಿ ನಡೆದುಕೊಳ್ಳಬೇಕಿದೆ. ಹೇಳಿಕೆ ನೀಡಲು ಧೈರ್ಯವಾಗಿ ಮುಂದೆ ಬನ್ನಿ. ಎಲ್ಲಾ ರೀತಿಯ ರಕ್ಷಣೆಯನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಎಸ್‌ಐಟಿ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಇದು ಮಹಿಳೆಯರು ಮತ್ತು ಅವರ ಜೀವನದ ಪ್ರಶ್ನೆಯಾಗಿರುವುದರಿಂದ ಎಚ್ಚರಿಕೆಯಿಂದ ನಡೆದುಕೊಳ್ಳಲಾಗುತ್ತಿದೆ ಎಂದರು. +ಸಾವಿರಾರು ವಿಡಿಯೋಗಳು ಇರುವುದರಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಗಣಿಸಬೇಕಿದೆ. ಹೀಗಾಗಿ ಕಾಲಾವಕಾಶವೂ ಅಗತ್ಯ ಎಂದು ಗೃಹಸಚಿವರು ತಿಳಿಸಿದರು.ಸಂತ್ರಸ್ತೆ ನೀಡಿದ ದೂರು ಆಧರಿಸಿ ಅನ್ವಯವಾಗುವ ಸೆಕ್ಷನ್‌ಗಳನ್ನು ದಾಖಲಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರು ನೀಡಿದ ಹೇಳಿಕೆಗಳು ಬೇರೆಬೇರೆ ಸೆಕ್ಷನ್‌ಗಳನ್ನು ಬಳಕೆ ಮಾಡಲು ಅವಕಾಶ ಕಲ್ಪಿಸುತ್ತದೆ. ಹೀಗಾಗಿ ಎಸ್‌ಐಟಿ ಅಕಾರಿಗಳು ಅದರ ಅನುಸಾರ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_159_5.txt b/eesanje/url_46_159_5.txt new file mode 100644 index 0000000000000000000000000000000000000000..54c676d8d67f9b0594d4da98a14a96dbd0043309 --- /dev/null +++ b/eesanje/url_46_159_5.txt @@ -0,0 +1,16 @@ +ವೀರಶೈವ ಲಿಂಗಾಯತ ಮತಗಳನ್ನು ಕಬಳಿಸಲು ಎಲ್ಲಾ ಪಕ್ಷಗಳಿಂದ ಭಾರಿ ಕಸರತ್ತು +ಬೆಂಗಳೂರು, ಮೇ.3-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಪೈಕಿ ಅಭ್ಯರ್ಥಿಗಳ ಸೋಲು-ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ವೀರಶೈವ ಲಿಂಗಾಯತ ಮತಬುಟ್ಟಿಗೆ ಎಲ್ಲಾ ಪಕ್ಷಗಳೂ ಕೈ ಹಾಕಿವೆ. +ಇದೇ 7 ರಂದು ಶಿವಮೊಗ್ಗ, ದಾವಣಗೆರೆ, ಉತ್ತರ ಕನ್ನಡ, ಚಿಕ್ಕೋಡಿ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಬೀದರ್‌, ವಿಜಾಪುರ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತರೇ ನಿರ್ಣಾಯಕರಾಗಿದ್ದು, ಈ ಸಮುದಾಯವನ್ನು ಸೆಳೆಯಲು ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್‌ ಮತ್ತು ಎನ್‌ಡಿಎ ಮೈತ್ರಿಕೂಟ ಇನ್ನಿಲ್ಲದ ಕಸರತ್ತು ನಡೆಸಿದೆ. +ವೀರಶೈವ ಸಮುದಾಯದ ಒಳಪಂಗಡಗಳಿಗೆ ಅನುಗುಣವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಹೀಗಾಗಿ ಈ ಸಮುದಾಯವನ್ನು ಸೆಳೆಯಲು ಇನ್ನಿಲ್ಲದ ತಂತ್ರಗಾರಿಕೆಯನ್ನು ರೂಪಿಸಲಾಗುತ್ತದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿ ಭರ್ಜರಿ ಫಸಲು ತೆಗೆದಿದ್ದ ಕಾಂಗ್ರೆಸ್‌ ಈಗಲೂ ಈ ಚುನಾವಣೆಯಲ್ಲೂ ಅದೇ ಫಲಿತಾಂಶ ಬರಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದೆ. ಹೀಗಾಗಿಯೇ ವೀರಶೈವ ಸಮುದಾಯದ ಒಳಪಂಗಡಗಳಾದ ಪಂಚಮಶಾಲಿ, ಗಾಣಿಗ ಮತ್ತು ಸಾಧು ಲಿಂಗಾಯತರಿಗೆ ಜನಸಂಖ್ಯೆಗನುಗುಣವಾಗಿ ಟಿಕೆಟ್‌ ಹಂಚಿಕೆ ಮಾಡಿದೆ. +ಈವರೆಗೂ ವೀರಶೈವ ಲಿಂಗಾಯತ ಮತಗಳು ತನಗೆ ಯಾವಾಗಲೂ ಕಟ್ಟಿಟ್ಟ ಬುತ್ತಿ ಎಂಬ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಮರ್ಮಾಘಾತ ನೀಡಿತ್ತು. +ಸಮುದಾಯದ ಪ್ರಭಾವಿ ನಾಯಕ ಬಿ.ಎಸ್‌.ಯಡಿಯೂರಪ್ಪ ರಾಜೀನಾಮೆ ಹಾಗೂ ಆ ಸಮುದಾಯವನ್ನು ಕಡೆಗಣಿಸಿದ್ದರ ಪರಿಣಾಮ ಬಿಜೆಪಿ ಚುನಾವಣೆಯಲ್ಲಿ ಭಾರೀ ಬೆಲೆ ತೆತ್ತಿತ್ತು. ಯಾವಾಗ ತನ್ನ ಸಾಂಪ್ರದಾಯಿಕ ಮತ ಬ್ಯಾಂಕ್‌ ಕೈಬಿಟ್ಟು ಹೋಗಲಿದೆ ಎಂಬುದು ಅರಿವಾಗುತ್ತಿದ್ದಂತೆ ಬಿಜೆಪಿ ತನ್ನ ರಣತಂತ್ರವನ್ನು ಬದಲಾಯಿಸಿದೆ. +ರಾಜ್ಯದಲ್ಲಿ ಶೇಕಡಾ 17 ರಷ್ಟು ಇದೇ ಸಮುದಾಯ ಜನರಿದ್ದಾರೆ. ಇವರನ್ನು ಬಿಟ್ಟರೆ ಒಕ್ಕಲಿಗರು ಹೆಚ್ಚಾಗಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಈ ಸಮುದಾಯದ ಪಾತ್ರ ಶೇಕಡಾ 12 ರಷ್ಟಿದೆ. +ಲಿಂಗಾಯತರು ಇತ್ತೀಚಿನ ಕೆಲವು ದಶಕಗಳಿಗೆ ಬಿಜೆಪಿ ಪಕ್ಷದತ್ತ ಮುಖ ಮಾಡಿದ್ದಾರೆ. ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದರಿಂದ, ಉತ್ತರ ಕರ್ನಾಟಕದಲ್ಲಿ ಮೈತ್ರಿ ಎಷ್ಟರ ಮಟ್ಟಿಗೆ ಕೈ ಹಿಡಿಯಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಂದಹಾಗೆ 2019ರ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿತ್ತು. +ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ 37 ಲಿಂಗಾಯತ ಶಾಸಕರು ಗೆದ್ದು ಬೀಗಿದ್ದಾರೆ. 2018ಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಕೇವಲ 15 ಲಿಂಗಾಯತ ಅಭ್ಯರ್ಥಿಗಳು ಗೆದ್ದಿದ್ದರು. ಇನ್ನು ಒಟ್ಟಾರೆ ಲಿಂಗಾಯತ ಶಾಸಕರ ಸಂಖ್ಯೆಯು ಹೆಚ್ಚಾಗಿದ್ದು, ಇದರ ಲಾಭವನ್ನು ಪಕ್ಷಗಳು ಹೇಗೆ ಪಡೆಯಲಿವೆ ಎಂಬುದು ದೊಡ್ಡ ಪ್ರಶ್ನೆ ಆಗಿದೆ. +ಕರ್ನಾಟಕದ 224 ಕ್ಷೇತ್ರಗಳಲ್ಲಿ 90 ಕ್ಷೇತ್ರಗಳಲ್ಲಿ ಲಿಂಗಾಯತ ಸಮುದಾಯವೇ ಡಾಮಿನೆಟೆಡ್‌ ಇದೆ. ಇನ್ನು ಈ ಸಮುದಾಯ ಬಿಜೆಪಿಯಿಂದ ಕಾಂಗ್ರೆಸ್‌ ಕಡೆ ಮುಖ ಮಾಡಿರಲು ಹಲವು ಕಾರಣಗಳಿವೆ. ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಬಿಎಸ್‌ ಯಡಿಯೂರಪ್ಪ ಅವರನ್ನು ಸೈಡಲೈನ್‌ ಮಾಡಿದ್ದು, ಪಕ್ಷಕ್ಕೆ ಪೆಟ್ಟು ನೀಡಿದೆ. +ಈಗ ಮತ್ತೆ ಬಿಜೆಪಿಯತ್ತ ಲಿಂಗಾಯತ ಸಮುದಾಯ ಮುಖ ಮಾಡಿದೆ. ದೇಶದ ವಿಚಾರಕ್ಕೆ ಬಂದಾಗ ಈ ಸಮುದಾಯ ಒಟ್ಟಾಗಿ ನಿಲ್ಲುವುದು ಕಳೆದ ಹಲವು ಚುನಾವಣೆಗಳಲ್ಲಿ ಎದ್ದು ಕಾಣುತ್ತದೆ. ಈಗ ರಣ ರಂಗದಲ್ಲಿ ಮತ್ತೆ ಬಿಎಸ್‌ವೈ ಕಾಣಿಸಿಕೊಂಡಿದ್ದು, ಇವರ ಮಗನಿಗೂ ದೊಡ್ಡ ಜವಾಬ್ದಾರಿಯನ್ನು ನೀಡಲಾಗಿದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್‌ ನೀಡದೇ ಇರುವ ಕಾರಣಕ್ಕೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ ಸವದಿ, ಜಗದೀಶ್‌ ಶೆಟ್ಟರ್‌ ಪಕ್ಷಕ್ಕೆ ಕೊಂಚ ಪೆಟ್ಟು ಬಿದ್ದಿತ್ತು. ಆದರೆ ಈಗ ರಾಜಕೀಯ ಸಮೀಕರಣ ಬದಲಾಗಿದೆ. ಕಾಂಗ್ರೆಸ್‌ಗೆ ಕೈ ನೀಡಿರುವ ಜಗದೀಶ್‌ ಶೆಟ್ಟರ್‌ ಮತ್ತೆ ಬಿಜೆಪಿ ಬಾವುಟ ಹಿಡಿದಿದ್ದಾರೆ. ಅಲ್ಲದೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಯ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. +ಜಗದೀಶ್‌ ಶೆಟ್ಟರ್‌ ಘರ್‌ ವಾಪಸಿಯಿಂದ ಪಕ್ಷದಲ್ಲಿ ಕಾಣಿಸಿಕೊಂಡಿದ್ದ ಸಣ್ಣ ಬಿರುಕು ಸಹ ಮುಚ್ಚಿದಂತೆ ಕಾಣುತ್ತದೆ. ಈ ಬಾರಿ ಬಿಜೆಪಿ ಕಳೆದ ಬಾರಿಯಂತೆ ಈ ಬಾಗದಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆಯನ್ನು ಮಾಡಲು ಎದುರು ನೋಡುತ್ತಿದೆ. ಈ ಬಾರಿ ಬೆಳಗಾವಿ ಕ್ಷೇತ್ರದ ಮೂಲಕ ಮೊದಲ ಬಾರಿಗೆ ಲೋಕಸಭಾ ಪ್ರವೇಶಿಸಲು ಜಗದೀಶ್‌ ಶೆಟ್ಟರ ಎದುರು ನೋಡುತ್ತಿದ್ದಾರೆ. +ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 9 ಲಿಂಗಾಯತ ಅಭ್ಯರ್ಥಿಗಳಿಗೆ ಅವಕಾಶ ನೀಡಿದರೆ, ಮೂವರು ಒಕ್ಕಲಿಗರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ನೀಡಿದೆ. ಈ ಅಂಕಿ ಅಂಶದಲ್ಲಿ ಕಾಂಗ್ರೆಸ್‌ ಕೊಂಚ ಹಿಂದೆ ಬಿದ್ದಿದೆ. ಕಾಂಗ್ರೆಸ್‌ 5 ಲಿಂಗಾಯತ, 6 ಒಕ್ಕಲಿಗರಿಗೆ ಅವಕಾಶ ನೀಡಿದೆ. ಇನ್ನು ಜೆಡಿಎಸ್‌ ಇಬ್ಬರು ಒಕ್ಕಲಿಗ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. +ಕಾಂಗ್ರೆಸ್‌ ಸಹ ಈ ಹಿಂದೆ ಅಹಿಂದ ಮತಗಳನ್ನು ತನ್ನತ್ತ ಸೆಳೆಯಲು ಬೇಕಾದ ಪ್ರಯತ್ನಗಳು ಮಾಡಿಕೊಂಡಿದೆ. ಅಂದಹಾಗೆ ಕಾಂಗ್ರೆಸ್‌ ಲಿಂಗಾಯತ, ಒಕ್ಕಲಿಗರು ಈ ಎರಡು ಸಮುದಾಯಕ್ಕಿಂತಲೂ ಹೆಚ್ಚಿನ ಒತ್ತನ್ನು ಬೇರೆ ಸಮುದಾಯಕ್ಕೆ ನೀಡಿ ಮತದಾರರ ಮನವೊಲಿಸುವಲ್ಲಿ ಸಫಲವಾಗಿದೆ. ಕಾಂಗ್ರೆಸ್‌ ಕುರುಬ ಸಮುದಾಯದ ಸಿದ್ಧರಾಮಯ್ಯ ಅವರನ್ನು ಸಿಎಂ ಮಾಡಿದ್ದು, ರಾಷ್ಟ್ರೀಯ ಅಧ್ಯಕ್ಷರನ್ನಾಗಿ ದಲಿತ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ನೇಮಕ ಮಾಡಿದ್ದು, ಮಾಸ್ಟರ್‌ ಸ್ಟ್ರೋಕ್‌ ನೀಡಲು ಪ್ಲ್ಯಾನ್‌ ಮಾಡಿದೆ. \ No newline at end of file diff --git a/eesanje/url_46_159_6.txt b/eesanje/url_46_159_6.txt new file mode 100644 index 0000000000000000000000000000000000000000..aab58074250c34df164316f5d53fbdd4d647a0cb --- /dev/null +++ b/eesanje/url_46_159_6.txt @@ -0,0 +1,7 @@ +ಲೋಕಸಭೆ ಚುನಾವಣೆ : ರಾಜ್ಯದಲ್ಲಿ 2262 ಎಫ್‌ಐಆರ್‌ ದಾಖಲು +ಬೆಂಗಳೂರು, ಮೇ 3– ರಾಜ್ಯದ ಪ್ರಸಕ್ತ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 448.98 ಕೋಟಿ ರೂ. ಮೊತ್ತದ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ 2262 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. +ರಾಜ್ಯ ಮುಖ್ಯ ಚುನಾವಣಾಧಿ ಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, 2029 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಘೋರ ಅಪರಾಧದಡಿಯಲ್ಲಿ 3,298 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪರವಾನಗಿ ಉಲ್ಲಂಘನೆಯಡಿ 5,392 ಪ್ರಕರಣಗಳನ್ನು ದಾಖಲಿಸಲಾಗಿದೆ. ಎನ್‌ಡಿಪಿಎಸ್‌ ಅಡಿಯಲ್ಲಿ 186 ಪ್ರಕರಣಗಳನ್ನು ಹಾಗೂ ಅಬಕಾರಿ ಕಾಯ್ದೆಯಡಿ 32,902 ಪ್ರಕರಣಗಳನ್ನು ದಾಖಲಿಸಲಾಗಿದೆ. +ಕಳೆದ ಮಾರ್ಚ್‌ 16 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿಯಮಬಾಹಿರವಾಗಿ ಸಾಗಾಟ ಮಾಡುವ ಹಣ, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ನಿರಂತರವಾಗಿ ಜಪ್ತಿ ಮಾಡಲಾಗುತ್ತಿದೆ. ನಿನ್ನೆಯವರೆಗೆ ಒಟ್ಟಾರೆ 448.98 ಕೋಟಿ ರೂ.ನಷ್ಟು ನಗದು, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆೆ. +ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲು ಇನ್ನೂ ನಾಲ್ಕು ದಿನ ಬಾಕಿ ಇದೆ. ರಾಜ್ಯದಲ್ಲಿ 141.10 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ವಶಪಡಿಸಿಕೊಂಡಿವೆ. +ಅಬಕಾರಿ ಇಲಾಖೆಯವರು 178.58 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್ಸ್ ಅನ್ನು ಹಾಗೂ ಆದಾಯ ತೆರಿಗೆ ಇಲಾಖೆ ಅಧಿ ಕಾರಿಗಳು 49.19 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಅಧಿ ಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ಮಂಗಳೂರು ನಗರ ಸಿಸಿಬಿ ಪೊಲೀಸ್‌ ಠಾಣೆ ತಂಡದವರು, 20,35,000 ರೂ. ವೌಲ್ಯದ 407 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_159_7.txt b/eesanje/url_46_159_7.txt new file mode 100644 index 0000000000000000000000000000000000000000..91fbaa4ef05592bfe64184994c6a1d707c417255 --- /dev/null +++ b/eesanje/url_46_159_7.txt @@ -0,0 +1,11 @@ +ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು +ಬೆಂಗಳೂರು,ಮೇ.3-ಅಶ್ಲೀಲ ಸಿಡಿ ಪ್ರಕರಣದ ಸಂಬಂಧ ಬಂಧನದ ಭೀತಿಯಿಂದ ವಿದೇಶಕ್ಕೆ ಫಲಾಯನ ಮಾಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಹಿಂದೆ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿತ್ತು. ಇದು ಅವರ ಮೇಲೆ ದಾಖಲಾಗಿರುವ 2 ನೇ ಅತ್ಯಾಚಾರ ಪ್ರಕರಣವಾಗಿದೆ. +ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ವಿಶೇಷ ತನಿಖಾ ದಳದ(ಎಸ್‌ಐಟಿ ) ಅಧಿ ಕಾರಿಗಳು ಪ್ರಜ್ವಲ್‌ ವಿರುದ್ಧ ಐಟಿ ಕಾಯಿದೆ ಅಡಿ ಐಪಿಸಿ ಸೆಕ್ಷನ್‌ 376 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸೆಕ್ಷನ್‌ 376(2) () (ಪದೇ ಪದೇ ಅತ್ಯಾಚಾರ ಎಸಗುವುದು), 506 (ಕ್ರಿಮಿನಲ್‌ ಬೆದರಿಕೆ), 354A (1)() (ಲೈಂಗಿಕ ಪರವಾಗಿ ಬೇಡಿಕೆ), 354 () (ಮಹಿಳೆಯ ಮೇಲೆ ಆಕ್ರಮಣ ಅಥವಾ ಕ್ರಿಮಿನಲ್‌ ಬಲಪ್ರಯೋಗದ ಅಡಿಯಲ್ಲಿ ಆರೋಪಗಳನ್ನು ಪಟ್ಟಿ ಮಾಡುತ್ತದೆ. ಅವಳನ್ನು ವಸಾ್ತ್ರಪಹರಣ ಮಾಡುವ ಉದ್ದೇಶದಿಂದ), ಮತ್ತು 354(ಸಿ) (ನಗ್ನ ಅಥವಾ ಅರೆ-ನಗ್ನ ಚಿತ್ರಗಳ ಅಪ್ಲೋಡ್‌) ದೂರು ದಾಖಲಿಸಿದೆ. +ಈ ಹಿಂದೆ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ನಲ್ಲಿ ತನಿಖಾಧಿ ಕಾರಿಗಳು ದುರ್ಬಲ ಸೆಕ್ಷನ್‌ಗಳನ್ನು ದಾಖಲಿಸಿದ್ದಾರೆ ಎಂದು ಕೆಲವರು ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಇದೀಗ ಐಪಿಸಿ ಸೆಕ್ಷನ್‌ 370 ರಡಿ ದೂರು ದಾಖಲಿಸಿದೆ. +ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿ ಕಾರಿಗಳು ವಿಡಿಯೋದಲ್ಲಿ ಬರುವ ಯಾವುದೇ ಮಹಿಳೆಯರೂ ಮುಕ್ತವಾಗಿ ಬಂದು ತಮ್ಮ ಬಳಿ ಹೇಳಿಕೆ ದಾಖಲಿಸಬೇಕೆಂದು ಎಸ್‌ಐಟಿ ಅಧಿ ಕಾರಿಗಳು ಮನವಿ ಮಾಡಿದ್ದರು. ಇದರಂತೆ ಸಂತ್ರಸ್ತ ಮಹಿಳೆಯೊಬ್ಬಳು ನೀಡಿದ ಹೇಳಿಕೆ ಆಧಾರದ ಮೇಲೆ ಸಿಆರ್‌ಪಿ ಸೆಕ್ಷನ್‌ 164 ರಡಿ ಹೇಳಿಕೆಯನ್ನು ದಾಖಲಿಸಲಾಗಿದೆ. ಮಹಿಳೆಯ ವಿವರಗಳನ್ನು ತನಿಖಾಧಿ ಕಾರಿಗಳು ಗೌಪ್ಯವಾಗಿ ಇರಿಸಿದ್ದಾರೆ. +ಮತ್ತೊಂದು ನೋಟೀಸ್‌ :ಈ ಬೆಳವಣಿಗೆಗಳ ನಡುವೆಯೇ ಪ್ರಕರಣದ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ 2ನೇ ಆರೋಪಿ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟೀಸ್‌ ಜಾರಿ ಮಾಡಿದೆ. +ಈ ಹಿಂದೆ ಮೊದಲನೇ ನೋಟೀಸ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಎಸ್‌ಐಟಿ ಸೂಚನೆ ಕೊಟ್ಟಿತ್ತು. ಆದರೆ ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲ ಸಮಯಾವಕಾಶ ನೀಡಬೇಕೆಂದು ಪ್ರಜ್ವಲ್‌ ರೇವಣ್ಣ ತಮ್ಮ ವಕೀಲ ಅರುಣ್‌ ಮೂಲಕ ಮನವಿ ಮಾಡಿಕೊಂಡಿದ್ದರು. +ಇತ್ತ ರೇವಣ್ಣ ಕೂಡ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯಕ್ಕೆ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಎಸ್‌ಐಟಿ ಮತ್ತೊಂದು ನೋಟೀಸ್‌ ಜಾರಿ ಮಾಡಿದ್ದು, 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನಿನ ಪ್ರಕಾರ, ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ತನಿಖಾಧಿ ಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ. +ಎಸ್‌ಐಟಿ ದಾಳಿ:ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಇನ್ನು ಮುಂದೆ ಹಾಸನದ ವಿವಿಧ ಕಡೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ ಮನೆ, ಫಾರಂಹೌಸ್‌ ಸೇರಿದಂತೆ ಮತ್ತಿತರ ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. +ತನಿಖಾ ತಂಡದ ಎಸ್‌ಪಿ ಸೀಮಾ ಲಾಟ್ಕರ್‌ ನೇತೃತ್ವದಲ್ಲಿ 5 ವಾಹನಗಳಲ್ಲಿ ಮುಂಜಾನೆ 3.15ಕ್ಕೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಪಡವಲಹಿಪ್ಪೆ ಗ್ರಾಮದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಒಡೆತನಕ್ಕೆ ಸೇರಿದ ಫಾರಂಹೌಸ್‌ನಲ್ಲಿ ದಾಳಿ ನಡೆಸಿದೆ.ನಂತರ ಘನ್ನಿಕಡ, ಕಾನೇನಹಳ್ಳಿ ಬಳಿ ಮತ್ತೊಂದು ಫಾರಂಹೌಸ್‌ಗೆ ಅಧಿ ಕಾರಿಗಳು ದಾಳಿ ನಡೆಸಿ ಮಾಹಿತಿಯನ್ನು ಪಡೆದಿದೆ. +ಪಡವಲಹಿಪ್ಪೆ ಫಾರಂಹೌಸ್‌ನಲ್ಲಿರುವ ಅಸ್ಸಾಂ ಮತ್ತು ಬಿಹಾರಿ ಮೂಲದ ಕಾರ್ಮಿಕರಿಂದ ತನಿಖಾ ತಂಡ ಮಾಹಿತಿಯನ್ನು ಕಲೆ ಹಾಕಿದೆ.ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ಇಲ್ಲಿಗೆ ಯಾವ ಸಮಯದಲ್ಲಿ ಬರುತ್ತಿದ್ದರು? ವಾರದಲ್ಲಿ ಎಷ್ಟು ಬಾರಿ ಭೇಟಿ ನೀಡುತ್ತಿದ್ದರು? ಇಲ್ಲಿಯೇ ಉಳಿದುಕೊಳ್ಳುತ್ತಿದ್ದರೇ? ಎಂಬೆಲ್ಲಾ ವಿಷಯಗಳನ್ನು ಕಲೆ ಹಾಕಿದೆ.ವಿಡಿಯೋ ಚಿತ್ರೀಕರಣ ಸಂಬಂಧವೂ ತನಿಖಾ ತಂಡ ಮಾಹಿತಿಯನ್ನು ಕಲೆ ಹಾಕಿದೆ. \ No newline at end of file diff --git a/eesanje/url_46_159_8.txt b/eesanje/url_46_159_8.txt new file mode 100644 index 0000000000000000000000000000000000000000..a60022ff1272e4a42c127b25fb7a54d8d28e871c --- /dev/null +++ b/eesanje/url_46_159_8.txt @@ -0,0 +1,8 @@ +ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ.ಎಚ್‌.ಆನಂದ್‌ ಬಿಜೆಪಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತ +ಬೆಂಗಳೂರು,ಮೇ.3-ಈ ಬಾರಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಎ.ಎಚ್‌.ಆನಂದ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.ಈ ಕ್ಷೇತ್ರವನ್ನು ಕಳೆದ ಬಾರಿ ಪ್ರತಿನಿಧಿಸಿದ್ದ ಹಾಲಿ ವಿಧಾನಪರಿಷತ್‌ ಸದಸ್ಯ ಅ.ದೇವೇಗೌಡ ಅವರಿಗೆ ಎರಡನೇ ಬಾರಿಗೆ ಟಿಕೆಟ್‌ ನೀಡಲು ಬಿಜೆಪಿ ಒಲವು ತೋರಿಲ್ಲ. +ಬಿಜೆಪಿಯ ಭದ್ರಕೋಟೆ ಎನಿಸಿರುವ ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯುವ ಮುಖಂಡರೂ ಆಗಿರುವ ಹಾಗೂ ಪಕ್ಷದಲ್ಲಿ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಎ.ಎಚ್‌.ಆನಂದ್‌ ಅವರಿಗೆ ಟಿಕೆಟ್‌ ನೀಡಲು ಪಕ್ಷವು ಒಲವು ತೋರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಪಕ್ಷದ ಎಲ್ಲಾ ನಾಯಕರೂ ಆನಂದ್‌ ಅವರಿಗೆ ಟಿಕೆಟ್‌ ನೀಡಲು ಒಲವು ತೋರಿದ್ದು, ಅವರನ್ನೇ ಅಭ್ಯರ್ಥಿ ಮಾಡಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ. +ಒಂದೆರೆಡು ದಿನದಲ್ಲಿ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡುವ ಸಾಧ್ಯತೆಯಿದ್ದು, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಒಂದೇ ಹೆಸರನ್ನು ಶಿಫಾರಸ್ಸು ಮಾಡುವ ಸಂಭವವಿದೆ. ಕಳೆದ ಬಾರಿಯೇ ಟಿಕೆಟ್‌ ಆಕಾಂಕ್ಷಿಯಾಗಿದ್ದ ಆನಂದ್‌ ಅವರಿಗೆ ಕೆಲವು ಕಾರಣಗಳಿಂದ ಕೊನೆ ಕ್ಷಣದಲ್ಲಿ ಟಿಕೆಟ್‌ ಕೈ ತಪ್ಪಿತ್ತು. ಆದರೂ ಪಕ್ಷವಿರೋಧಿ ಚಟುವಟಿಕೆ ನಡೆಸದೇ ಪಕ್ಷದ ಸೂಚನೆಯಂತೆ ಅಭ್ಯರ್ಥಿಯ ಗೆಲುವಿಗೆ ಸಹಕರಿಸಿದ್ದರು. +ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆನಂದ್‌ ಅವರು ಎಬಿವಿಪಿ ಮೂಲಕ ಬಿಜೆಪಿಗೆ ಸೇರ್ಪಡೆಯಾಗಿದ್ದು. +ಯಡಿಯೂರಪ್ಪನವರು ಈ ಹಿಂದೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದ ಪಾದಯಾತ್ರೆ, ಬೆಂಗಳೂರಿನಲ್ಲಿ ನಡೆದಿದ್ದ ಹಲವು ರಾಷ್ಟ್ರೀಯ ನಾಯಕರ ಸಮಾವೇಶಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿಭಾಯಿಸುವ ಮೂಲಕ ಪಕ್ಷದ ನಾಯಕರ ಮೆಚ್ಚುಗೆಗೆ ಪಾತ್ರರಾಗಿದ್ದು. +ಬಿಜೆಪಿಯ ಮಾಧ್ಯಮ ಮುಖ್ಯಸ್ಥರಾಗಿಯೂ ಅನುಭವ ಹೊಂದಿರುವ ಅವರು ಪಕ್ಷ ನೀಡುವ ಎಲ್ಲಾ ಜವಾಬ್ದಾರಿಗಳನ್ನೂ ಅತ್ಯಂತ ಚಾಣಾಕ್ಷತನದಿಂದ ನಿಭಾಯಿಸುವ ಯುವಕನಾಗಿ ಹೊರಹೊಮ್ಮಿದ್ದರು.ಈ ಎಲ್ಲಾ ಅಂಶಗಳನ್ನೂ ಪರಿಗಣಿಸಿ ಬಿಜೆಪಿ ಈ ಬಾರಿ ಆನಂದ್‌ ಅವರಿಗೆ ಬೆಂಗಳೂರು ಪದವೀಧರ ಕ್ಷೇತ್ರದಿಂದ ಟಿಕೆಟ್‌ ನೀಡುವುದು ಖಚಿತವಾಗಿದೆ. +ವಿಧಾನಪರಿಷತ್‌ನ ಮೂರು ಶಿಕ್ಷಕರು ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಜೂ.3 ರಂದು ಮತದಾನ ನಡೆದು 6 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.ಮೇ 9 ರಂದು ಅಧಿಸೂಚನೆ ಹೊರಡಿಸಲಿದ್ದು, ಮೇ 16 ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿ, ಮೇ 17 ಪರಿಶೀಲನೆ ಹಾಗೂ ಮೇ 20 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.ಬೆಂಗಳೂರು ಪದವೀಧರ ಕ್ಷೇತ್ರವು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಕ್ಷೇತ್ರಗಳನ್ನು ಒಳಗೊಂಡಿದೆ. \ No newline at end of file diff --git a/eesanje/url_46_159_9.txt b/eesanje/url_46_159_9.txt new file mode 100644 index 0000000000000000000000000000000000000000..4d31a22f1021f1639d9fb6a6054e4b92db144cd3 --- /dev/null +++ b/eesanje/url_46_159_9.txt @@ -0,0 +1,10 @@ +ನೋಡ್ತಾ ಇರಿ, ಸಿದ್ರಾಮಣ್ಣನ ವಿರುದ್ದವೂ ಸಿಡಿ ಬಿಡುತ್ತಾರೆ : ರಾಜೂ ಗೌಡ ಸ್ಪೋಟಕ ಹೇಳಿಕೆ +ಯಾದಗಿರಿ,ಮೇ.3-ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ದವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ರಾಜೂ ಗೌಡ ಪೆನ್‌ ಡ್ರೈವ್‌ ವಿದ್ಯಮಾನದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. +ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ಹಮ್ಮಿಕೊಂಡ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿ, ನೋಡುತ್ತಿರಿ.. ಲೋಕಸಭಾ ಚುನಾವಣೆ ಮುಗಿಯಲಿ, ಸಿದ್ರಾಮಣ್ಣನ ವಿರುದ್ಧವೂ ಏನಾದರೂ ಸಿಡಿ ಬಿಡುತ್ತಾರೆ. ಅವರ ಜೊತೆ ಜಾಸ್ತಿ ಓಡಾಡೋಕೆ ಹೋಗಬೇಡಿ ಎಂದು ಸಿಎಂಗೆ ಎಚ್ಚರಿಸಿದ್ದಾರೆ. +ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿ ಮತಯಾಚನೆ ಮಾಡಿದ ಅವರು, ಸಿದ್ದರಾಮಯ್ಯನವರಿಗೂ ಈ ವಿಚಾರಗಳು ಗೊತ್ತು, ಆದರೆ ಮೇಲಿನವರ ಆದೇಶ ಪಾಲಿಸಬೇಕಾಗುತ್ತದೆ. ಡಿಕೆಶಿ ತಮ್ಮ ಎದುರಾಳಿಗಳನ್ನು ಹಣೆಯಲು ಯಾವ ಅಸ್ತ್ರ ಬಳಸಬೇಕು, ಯಾವ ಸಿಡಿ ಬಿಡಬೇಕು ಎನ್ನುವುದು ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಆರೋಪಿಸಿದ್ದಾರೆ. +ಮಾಧ್ಯಮಗಳಲ್ಲಿ ನಾವು ನೋಡುತ್ತಿದ್ದೇವೆಯೇ ಹೊರತು ಈ ಭಾಗದಲ್ಲಿ ಸಿಡಿ ಸದ್ದು ಮಾಡುತ್ತಿಲ್ಲ. ಪ್ರಜ್ವಲ್‌ ರೇವಣ್ಣ ಅಂತ ಅಲ್ಲಾ, ಯಾರೇ ಮಾಡಲಿ ತಪ್ಪುತಪ್ಪೇ.. ಇದು ಸ್ಯಾಡಿಸ್‌್ಟಗಳು ಮಾಡುವ ಕೆಲಸ. ಮೊನ್ನೆ ರಾಹುಲ್‌ ಗಾಂಧಿ , ಡಿಕೆಶಿ ಮುಖ್ಯಮಂತ್ರಿ ಮತ್ತು ಸಿದ್ದರಾಮಯ್ಯ ರಾಜ್ಯಾಧ್ಯಕ್ಷ ಎಂದು ಹೇಳಿದ್ದರು. ಅವರ ಮನಸ್ಸಿನಲ್ಲೂ ಅದೇ ಇದೆ, ಡಿಕೆಶಿ ಅಣ್ಣ 24 ಗಂಟೆ ರಾಜಕೀಯ ಮಾಡುವ ವ್ಯಕ್ತಿ. ಮುಖ್ಯಮಂತ್ರಿ ಆಗುವುದಕ್ಕೆ ಬೇಕಾದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ. +ರಮೇಶ್‌ ಜಾರಕಿಹೊಳಿ ಮತ್ತು ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಯಾವಯಾವ ಅಸ್ತ್ರವನ್ನು ಉಪಯೋಗಿಸಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ನೋಡುತ್ತಿರಿ.. ಸಿದ್ರಾಮಣ್ಣನ ವಿರುದ್ದವೂ ಯಾವುದಾದರೂ ಸಿಡಿ ಬಿಡಬಹುದು ಎಂದು ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗುರಿಯಾಗುವ ಸಾಧ್ಯತೆಯಿದೆ. +ಎಂಪಿ ಚುನಾವಣೆ ಆದ ಮೇಲೆ ಸಿದ್ದಾರಾಮಣ್ಣನ ಮೇಲೆ ಏನಾದರೂ ಮಾಡಿ ಅವರನ್ನು ಬ್ಲಾಕ್‌ ಮಾಡಿಸಿ ಬಿಡುತ್ತಾರೆ. ಕೆಲವರನ್ನು ಬೆದರಿಸುವುದು, ಇನ್ನಷ್ಟು ಜನರನ್ನು ಸಿಡಿ ತೋರಿಸಿ ಭಯ ಪಡಿಸುವುದು ಅವರ ರಾಜಕೀಯ ಶೈಲಿ ಎಂದು ರಾಜೂ ಗೌಡ ಹೇಳಿದ್ದಾರೆ. +ವೋಟಿಂಗ್‌ ಆಗುವ ಎರಡು ದಿನ ಮುನ್ನ ಸಿಡಿ ಹೊರಗೆ ಬಿಟ್ಟರು, ಅವರ ಕೈಯಲ್ಲಿ ಮುಂಚೆನೇ ಪೆನ್‌ ಡ್ರೈವ್‌ ಇತ್ತು ತಾನೆ. ಮುಂಚೆನೇ ಬಿಡಬಹುದಾಗಿತ್ತು, ಮಹಿಳಾ ಸಂತ್ರಸ್ತರ ಕಷ್ಟಕ್ಕೆ ಹೋಗೋಣ ಎನ್ನುವುದು ಅವರಿಗಿಲ್ಲ, ಮೊದಲು ರಾಜಕೀಯ ಲಾಭ ಆಗಬೇಕು. ಸಿದ್ರಾಮಣ್ಣ ನಿಮಗೆ ಬಿಜೆಪಿ ಶತ್ರುವಲ್ಲ, ರಾಜೂ ಗೌಡ ಶತ್ರುವಲ್ಲ, ಪಕ್ಕದಲ್ಲೇ ಇರುವ ಡಿಕೆ ಅಣ್ಣ ಎಂದು ನರಸಿಂಹ ನಾಯಕ್‌ ಗುರುತರ ಆರೋಪವನ್ನು ಮಾಡಿದ್ದಾರೆ. +ಸೆರಗೊಡ್ಡಿ ಮತ ಕೇಳಲು ನನಗೆ ತಾಯಿ ಇಲ್ಲ, ತಂದೆಯೂ ಇಲ್ಲ. ನನ್ನ ಪಾಲಿಗೆ ಕಾರ್ಯಕರ್ತರೇ ತಂದೆ-ತಾಯಂದಿರು, ನೀವೇ ಆಶೀರ್ವಾದ ಮಾಡಬೇಕು. ಎಲ್ಲರೂ ಆಶೀರ್ವಾದ ಮಾಡಬೇಕೆಂದು ವೇದಿಕೆ ಮೇಲೆ ದೀರ್ಘ ದಂಡ ನಮಸ್ಕಾರ ಹಾಕಿದರು. ನನ್ನ ತಾಯಿಯನ್ನು ಕಳೆದುಕೊಂಡಾಗ ನಾನು ಸುಮ್ಮನೆ ಕುಳಿತುಕೊಳ್ಳಲಿಲ್ಲ. ತಾಯಿಯನ್ನು ಕಳೆದುಕೊಂಡಾಗಲೂ ಕೆಲಸ ನಿಲ್ಲಿಸಿಲ್ಲ. ಕೊರೋನಾ ಸಂದರ್ಭದಲ್ಲಿ ನಿಮ್ಮನ್ನು ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ನನ್ನ ಗೆಲ್ಲಿಸಿ ಎಂದು ಮನವಿ ಮಾಡಿಕೊಂಡರು. +ರಾಜಾ ವೆಂಕಟಪ್ಪ ನಿಧನದಿಂದ ತೆರವಾಗಿದ್ದ ಸುರುಪುರ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯ ಜೊತೆಗೆ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಮೇ. 7 ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ರಾಜೂ ಗೌಡ ಸ್ಪರ್ಧಿಸಿದರೆ, ಇತ್ತ ಕಾಂಗ್ರೆಸ್‌ನಿಂದ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕರಿಗೆ ಟಿಕೆಟ್‌ ನೀಡಿದೆ. \ No newline at end of file diff --git a/eesanje/url_46_15_1.txt b/eesanje/url_46_15_1.txt new file mode 100644 index 0000000000000000000000000000000000000000..38271b934493db2fc8bb78daccfc249e058a5e6e --- /dev/null +++ b/eesanje/url_46_15_1.txt @@ -0,0 +1,7 @@ +ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾಂಗ್ರೆಸ್‌‍ ಆಗ್ರಹ + +ಬೆಂಗಳೂರು,ಸೆ.19-ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಮಾನತುಗೊಳಿಸಬೇಕು ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್‌‍ ಕಾರ್ಯಕರ್ತರು ಹಾಗೂ ಮುಖಂಡರು ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. +ಮುನಿರತ್ನ ಕಾಮುಕನಾಗಿದ್ದು, ಅತ್ಯಾಚಾರಿ, ಹನಿಟ್ರ್ಯಾಪ್‌ನ ರೂವಾರಿಯಾಗಿದ್ದಾನೆ. ಗುತ್ತಿಗೆದಾರರನ್ನು ಶೋಷಣೆ ಮಾಡಿದ್ದು, ಹಣ ವಸೂಲಿ ಮಾಡಿದ್ದಾನೆ. ಗುತ್ತಿಗೆದಾರರ ಜೊತೆ ಸಂಭಾಷಣೆಯಲ್ಲಿ ಹೆಣ್ಣುಮಕ್ಕಳ ವಿಷಯವಾಗಿ, ಪರಿಶಿಷ್ಟರ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದಾನೆ ಎಂದು ಆಕ್ರೊಶ ವ್ಯಕ್ತಪಡಿಸಿದರು. +ಜಿ.ಸಿ.ಚಂದ್ರಶೇಖರ್‌ ಮಾತನಾಡಿ, ಮುನಿರತ್ನ ಒಬ್ಬ ಗೂಂಡಾ ಶಾಸಕನಾಗಿದ್ದು, ಆತನ ಬಗ್ಗೆ ದೂರು ನೀಡಲು ಕೂಡ ಭಯ ಪಡುವ ವಾತಾವರಣವಿದೆ. ಹೀಗಾಗಿ ಬಹಳಷ್ಟು ಮಂದಿ ದೂರು ನೀಡಲು ಮುಂದೆ ಬಂದಿಲ್ಲ ಎಂದು ಹೇಳಿದರು. +ಇಂತಹ ನಾಚಿಕೆಗೆಟ್ಟ ಶಾಸಕನನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಬಿಜೆಪಿ ನಾಯಕರ ನೈತಿಕತೆ ಕೂಡ ಪ್ರಶ್ನಾರ್ಹವಾಗಿದೆ. ಆತನನ್ನು ಗೆಲ್ಲಿಸಿದ ರಾಜರಾಜೇಶ್ವರಿ ನಗರ ಕ್ಷೇತ್ರದ ಜನ ತಲೆತಗ್ಗಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಬಿಜೆಪಿಗೆ ನೈತಿಕತೆ ಇದ್ದರೆ ಕೂಡಲೇ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರ ಪಕ್ಷದ ಹಿರಿಯ ನಾಯಕ ಆರ್‌.ಅಶೋಕ್ ವಿರುದ್ಧವೇ ಹನಿಟ್ರ್ಯಾಪ್‌ ಪ್ರಯೋಗ ನಡೆಸಲಾಗಿತ್ತು ಎಂದರೆ ಮುನಿರತ್ನ ಅವರ ಮನಸ್ಥಿತಿ ಅರ್ಥವಾಗುತ್ತದೆ ಎಂದು ಹೇಳಿದರು.ವಿಧಾನಪರಿಷತ್‌ನ ಮುಖ್ಯ ಸಚೇತಕ ಸಲೀಂ ಅಹಮದ್‌, ಬಿಜೆಪಿ ಮುನಿರತ್ನನನ್ನು ವಜಾಗೊಳಿಸಬೇಕು. ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು ನೀಡಬೇಕೆಂದು ಒತ್ತಾಯಿಸಿದರು. \ No newline at end of file diff --git a/eesanje/url_46_15_10.txt b/eesanje/url_46_15_10.txt new file mode 100644 index 0000000000000000000000000000000000000000..1ea18462605d1c622f276dc16fb122737eeb6c64 --- /dev/null +++ b/eesanje/url_46_15_10.txt @@ -0,0 +1,13 @@ +ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ + +ಬೆಂಗಳೂರು,ಸೆ.18-ಬಿಬಿಎಂಪಿ ಗುತ್ತಿಗೆ ದಾರರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. +ಮುನಿರತ್ನ ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಬೆಂಗಳೂರಿನ 82ನೇ ಎಸಿಸಿಎಂ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ. ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ಮುನಿರತ್ನ ಬಿಡುಗಡೆ ಭವಿಷ್ಯ ನಿರ್ಧಾರವಾಗಲಿದೆ. +ಇದಕ್ಕೂ ಮುನ್ನ ಶಾಸಕ ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಹಾಗೂ ಸರ್ಕಾರದ ಪರ ವಿಶೇಷ ಸಾರ್ವಜನಿಕ ಅಭಿಯೋಜಕ(ಎಸ್ಪಿಪಿ) ಪ್ರದೀಪ್ ಪ್ರಬಲ ವಾದ ಮಂಡಿಸಿದರು. +ಮೊದಲು ಮುನಿರತ್ನ ಪರ ವಾದ ಮಂಡಿಸಿದ ಅಶೋಕ್ ಹಾರನಹಳ್ಳಿಯವರು, ಪೊಲೀಸರು ತಮ ಕಕ್ಷಿದಾರರಿಗೆ ಕನಿಷ್ಟ ನೋಟಿಸ್ ಕೊಡದೆ ಬಂಧಿಸಿದ್ದಾರೆ. ಅಷ್ಟಕ್ಕೂ ಅವರೇನು ದೇಶಬಿಟ್ಟು ಹೋಗುತ್ತಿರಲಿಲ್ಲ. ವಿಚಾರಣೆಗೆ ಬರುವಂತೆ ಸೂಚಿಸಿದ್ದರೆ ಹಾಜರಾಗುತ್ತಿದ್ದರು. ಪೊಲೀಸರು ಆತುರದಲ್ಲಿ ಬಂಧಿಸಿದ್ದಾರೆಂದು ವಾದಿಸಿದರು. +ಈ ಪ್ರಕರಣ ನಡೆದಿರುವುದು ಶಾಸಕರ ಕಚೇರಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಒಬ್ಬ ವ್ಯಕ್ತಿಯನ್ನು ನಿಂದಿಸುವುದು, ಉದ್ದೇಶಪೂರ್ವಕವಾಗಿ ಅಪಮಾನ ಮಾಡುವುದು ಕಂಡುಬಂದರೆ ಜಾತಿ ನಿಂದನೆ ಪ್ರಕರಣ ದಾಖಲಿಸಬಹುದು. ಕಚೇರಿಯೊಳಗೆ ನಡೆದಿರುವ ಸಂಭಾಷಣೆ ಆಧಾರದ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳ ಗಮನಕ್ಕೆ ತಂದರು. +ಇಲ್ಲಿ ಗುತ್ತಿಗೆದಾರರಾಗಿರುವ ಚೆಲುವರಾಜು ಅವರು ತಮ ಕಕ್ಷಿದಾರರ ಜೊತೆ ನಡೆಸಿರುವ ಮೊಬೈಲ್ ಸಂಭಾಷಣೆಯನ್ನು ದಾಖಲಿಸಿಕೊಂಡು ಸಾರ್ವಜನಿಕವಾಗಿ ಹಂಚಿದ್ದಾರೆ. ಅಂದರೆ ಅವರ ಉದ್ದೇಶವೇ ಈ ಪ್ರಕರಣದಲ್ಲಿ ಶಾಸಕರನ್ನು ಸಿಲುಕಿಸಬೇಕೆಂಬ ಹುನ್ನಾರವಿದೆ. ನಾವು ವಿಚಾರಣೆಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಹೀಗಾಗಿ ನ್ಯಾಯಾಲಯ ಜಾಮೀನು ಮಂಜೂರು ಮಾಡುವಂತೆ ಕೋರಿದರು. +ಮೂರನೇ ವ್ಯಕ್ತಿಯ ಮುಂದೆ ನಿಂದನೆ ಮಾಡಿದಾಗ ಜಾತಿ ನಿಂದನೆ ಪ್ರಕರಣವನ್ನು ದಾಖಲಿಸಲಿ. ಇಲ್ಲಿ ಇಬ್ಬರ ನಡುವೆ ಮಾತ್ರ ಮಾತುಕತೆ ನಡೆದಿದೆ. ಅದನ್ನೇ ದೊಡ್ಡ ವಿವಾದದಂತೆ ಬಿಂಬಿಸಲಾಗುತ್ತಿದೆ. ಹೀಗಾಗಿ ಅವರು ಜಾಮೀನು ಪಡೆಯಲು ಅರ್ಹರು ಎಂದು ವಾದಿಸಿದರು. +ಇದಕ್ಕೆ ತೀವ್ರ ಆಕ್ಷೇಪಿಸಿದ ಸರ್ಕಾರಿ ಪರ ಅಭಿಯೋಜಕ ಪ್ರದೀಪ್ ಅವರು, ಶಾಸಕರ ಕೊಠಡಿ ಸಾರ್ವಜನಿಕರ ವ್ಯಾಪ್ತಿಗೆ ಒಳಪಡುತ್ತದೆ. ಅವರು ದುರದ್ದೇಶಪೂರ್ವಕವಾಗಿಯೇ ಜಾತಿ ನಿಂದನೆ ಮಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಇನ್ನು ಕೆಲವರು ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಾಗಿಲ್ಲ ಎಂದರು. +ಜಾತಿ ನಿಂದನೆ ಮಾಡಿದಾಗ ಸೆಕ್ಷನ್ 17ರಡಿ ನೋಟಿಸ್ ನೀಡದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಬಹುದು. ಅಗತ್ಯವಿದ್ದರೆ ತನಿಖಾಧಿಕಾರಿಗಳು ಬಂಧಿಸಬಹುದು. ಇಲ್ಲಿ ಪೊಲೀಸರ ಕ್ರಮ ಕಾನೂನಿನ ಪ್ರಕಾರವಾಗಿಯೇ ನಡೆದಿದೆ ಎಂದು ಸಮರ್ಥಿಸಿಕೊಂಡರು. +ಮುನಿರತ್ನ ಜೈಲಿನಿಂದ ಹೊರಗೆ ಬಂದರೆ ದೂರುದಾರರಿಗೆ ಮತ್ತೆ ಪ್ರಾಣಬೆದರಿಕೆ ಹಾಕುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿಯಾದರೂ ಏನು? ಸಾಕ್ಷಿದಾರರ ಮೇಲೆ ಪ್ರಭಾವ ಬೀರುವುದಿಲ್ಲವೇ? ಹೀಗಾಗಿ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ಕೊಡಬಾರದು.ಪ್ರಕರಣವು ತನಿಖಾ ಹಂತದಲ್ಲಿರುವಾಗ ಜಾಮೀನು ನೀಡದರೆ ಅವರು ಯಾರ ಮೇಲೂ ಪ್ರಭಾವ ಬೀರಬಹುದು. +ಮುನಿರತ್ನ ಹಿನ್ನಲೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಅವರ ಮೇಲೆ ಈಗಾಗಲೇ 8 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಜಾಮೀನು ನೀಡದಂತೆ ಪ್ರದೀಪ್ ಅವರು ನ್ಯಾಯಾಧೀಶರಿಗೆ ಮನವಿ ಮಾಡಿದರು. \ No newline at end of file diff --git a/eesanje/url_46_15_11.txt b/eesanje/url_46_15_11.txt new file mode 100644 index 0000000000000000000000000000000000000000..2fe6858e4d4746315239549e542fa77a8c0e3114 --- /dev/null +++ b/eesanje/url_46_15_11.txt @@ -0,0 +1,14 @@ +ಡ್ರಗ್ಸ್ ಹಾವಳಿ ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ : ಸಿಎಂ + : +ಬೆಂಗಳೂರು,ಸೆ.18-ನಗರ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಹತ್ತಿಕ್ಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಇನ್ನು ಮುಂದೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. +ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿ ಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ಸಕ್ರಿಯವಾಗಿವೆ. ಇವುಗಳ ಮೇಲೆ ತೀವ್ರವಾಗಿ ನಿಗಾ ವಹಿಸಲು ಗೃಹಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಟಾಸ್ಕ್ಫೋರ್ಸ್ ಅನ್ನು ರಚಿಸಲಾಗುವುದು. ಅದರಲ್ಲಿ ಆರೋಗ್ಯ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ, ಸಮಾಜ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಸದಸ್ಯರಾಗಿರುತ್ತಾರೆ ಎಂದರು. +ರಾಜ್ಯ ಮತ್ತು ಜಿಲ್ಲಾಮಟ್ಟದ ಸಮಿತಿಗಳು ಪ್ರತಿ ತಿಂಗಳಿಗೊಮೆಯಾದರೂ ಪ್ರಗತಿಪರಿಶೀಲನಾ ಸಭೆ ನಡೆಸಬೇಕು ಎಂದು ಆದೇಶ ಹೊರಡಿಸಲಾಗುವುದು. ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು. ಮಾದಕ ವಸ್ತುಗಳ ಬಳಕೆ, ಮಾರಾಟ, ಸಾಗಾಣಿಕೆ ಸೇರಿದಂತೆ ಎಲ್ಲಾ ರೀತಿಯ ಅಪರಾಧಗಳಿಗೆ ಜಾಮೀನು ರಹಿತ ಪ್ರಕರಣ ದಾಖಲಿಸುವ ಜೊತೆಗೆ ಕನಿಷ್ಠ 10 ರಿಂದ ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿರುವಂತಹ ಕಾಯ್ದೆಗಳಡಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. +ಸ್ಟೂಡೆಂಟ್ ಪೊಲಿಸಿಂಗ್, ಎನ್ಜಿಒಗಳು ಮತ್ತು ಜನವಸತಿ ಪ್ರದೇಶಗಳ ಸಂಘಟನೆಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುವುದು. ಮಾದಕ ವಸ್ತುಗಳ ಚಟಕ್ಕೆ ಬಲಿಯಾದವರ ಪುನರ್ವಸತಿಯ ಕೇಂದ್ರಗಳನ್ನು ಮತ್ತಷ್ಟು ಸಬಲೀಕರಣಗೊಳಿಸಲಾಗುವುದು ಎಂದರು.ಮತ್ತೇರಿಸುವಂತಹ ಮಾತ್ರೆಗಳು, ಕೆಮಿನ ಔಷಧಿಗಳು.. +ಈ ರೀತಿಯ ಔಷಧಿಗಳನ್ನು ಅನಧಿಕೃತವಾಗಿ ಮಾರಾಟ ಮಾಡುವ ಔಷಧಿ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಉನ್ನತ ಮಟ್ಟದ ಕಾರ್ಯಪಡೆಯಲ್ಲಿ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಹೀಗಾಗಿ ವೈದ್ಯರ ಶಿಫಾರಸ್ಸುಗಳಿಲ್ಲದೆ ಅನಧಿಕೃತವಾಗಿ ಹೆಚ್ಚಿನ ಪ್ರಮಾಣದಲ್ಲಿ ಮತ್ತೇರಿಸುವಂತ ಮಾತ್ರೆಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದರು. +ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರಿಗೆ ಮುಕ್ತ ಅವಕಾಶವನ್ನು ನೀಡಲಾಗಿದ್ದು, ಹೊಣೆಗಾರಿಕೆಯನ್ನು ನಿಗದಿ ಮಾಡಲಾಗಿದೆ. ಇದನ್ನು ಮೀರಿದವರ ವಿರುದ್ಧ ಅಮಾನತು, ಸೇವೆಯಿಂದ ವಜಾ ಸೇರಿದಂತೆ ಕಠಿಣ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹೇಳಿದರು. +ಬೆಂಗಳೂರಿನಲ್ಲಿ ಅತೀ ಹೆಚ್ಚು ಮಾದಕವಸ್ತು ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಪೈಕಿ ಶೇ.50 ರಷ್ಟು ಬೆಂಗಳೂರಿನಲ್ಲಿಯೇ ದಾಖಲಾಗಿವೆ. ಶೇ.22 ರಷ್ಟು ಮಂಗಳೂರಿನಲ್ಲಿ, ಶೇ.11 ರಷ್ಟು ರಾಜ್ಯದ ಇತರ ಭಾಗಗಳಲ್ಲಿ ದಾಖಲಾಗಿವೆ. ಬೆಂಗಳೂರಿನ ಪೂರ್ವ ಭಾಗದ ಮೂಲಕ ಮಾದಕವಸ್ತುಗಳು ಹೆಚ್ಚು ಸರಬರಾಜಾಗುತ್ತಿವೆ ಮತ್ತು ಹೆಚ್ಚು ಮಾದಕವ್ಯಸನ ಅಪರಾಧಗಳು ನಡೆಯುತ್ತಿವೆ ಎಂಬ ವರದಿಗಳಿವೆ. +ಪೊಲೀಸ್ ಠಾಣಾಧಿಕಾರಿಗಳಿಗೆ ಮಾದಕವಸ್ತುಗಳ ಮಾರಾಟ, ಸರಬರಾಜು ಸೇರಿದಂತೆ ಎಲ್ಲಾ ಮಾಹಿತಿಗಳು ಇದ್ದೇ ಇರುತ್ತವೆ. ಅವರಿಗೆ ಗೊತ್ತಿಲ್ಲದೇ ಯಾವ ಚಟುವಟಿಕೆಗಳೂ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಇನ್ನು ಮುಂದೆ ಡ್ರಗ್‌್ಸ ಪ್ರಕರಣಗಳು ಕಂಡುಬಂದರೆ ಸಂಬಂಧಪಟ್ಟ ಠಾಣಾಧಿಕಾರಿಗಳು, ಡಿವೈಎಸ್ಪಿ, ಎಸಿಪಿ, ಡಿಸಿಪಿ, ಎಸ್ಪಿಗಳನ್ನು ಹೊಣೆಗಾರರನ್ನಾಗಿ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. +ಒರಿಸ್ಸಾ, ಆಂಧ್ರಪ್ರದೇಶ, ಉತ್ತರಪ್ರದೇಶದಂತಹ ರಾಜ್ಯದಿಂದ ಮಾದಕ ವಸ್ತುಗಳು ಕಳ್ಳಸಾಗಾಣಿಕೆಯಾಗುತ್ತಿವೆ. ಸಮಾಜಕ್ಕೆ ಕಂಠಕವಾಗಿರುವ ಯುವ ಸಮುದಾಯವನ್ನು ಹಾಳು ಮಾಡುತ್ತಿರುವ ಮಾದಕವಸ್ತುಗಳ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದರು. +ಈ ಹಿಂದಿನ ಸರ್ಕಾರ ತೆಗೆದುಕೊಂಡ ಕ್ರಮಗಳು ಸಾಲುವುದಿಲ್ಲ. ದಿನೇದಿನೇ ಈ ಪಿಡುಗು ಹೆಚ್ಚಾಗುತ್ತಿವೆ ಎಂಬುದು ಕಳವಳಕಾರಿ ಎಂದು ಹೇಳಿದರು.2021 ರಲ್ಲಿ 7,511 ಮಂದಿ ಭಾರತೀಯರು, 190 ಮಂದಿ ವಿದೇಶಿಯರು, 2022 ರಲ್ಲಿ 7,737 ಮಂದಿ ಭಾರತೀಯರು, 123 ವಿದೇಶಿಯರು, 2023 ರಲ್ಲಿ 8,016 ಭಾರತೀಯರು, 105 ವಿದೇಶಿಯರು, 2024ರ ಈವರೆಗೂ 1,021 ಭಾರತೀಯರು, 21 ವಿದೇಶಿಯರನ್ನು ಬಂಧಿಸಲಾಗಿದೆ ಎಂದು ಹೇಳಿದರು. +ಆರೋಗ್ಯ ಇಲಾಖೆಯಲ್ಲಿ ಈ ಕುರಿತು ರಚಿಸಲಾಗಿರುವ ತಜ್ಞರ ಜೊತೆಯೂ ಚರ್ಚಿಸಲಾಗಿದ್ದು, ಮಾದಕ ವ್ಯಸನಗಳ ಕುರಿತು ಹೆಚ್ಚು ಜನಜಾಗೃತಿ ಮೂಡಿಸಬೇಕು ಮತ್ತು ನಿರ್ಮೂಲನಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಗರಿಷ್ಠ ಪ್ರಮಾಣದಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. +ಈ ಸಂದರ್ಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಡಿಜಿಪಿ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_15_12.txt b/eesanje/url_46_15_12.txt new file mode 100644 index 0000000000000000000000000000000000000000..734d1bb2714336dbe63e62832ef7d7cc0d8517e9 --- /dev/null +++ b/eesanje/url_46_15_12.txt @@ -0,0 +1,8 @@ +ಗಗನಕ್ಕೇರಿದ ಈರುಳ್ಳಿ-ಬೆಳ್ಳುಳ್ಳಿ ಬೆಲೆ, ದಸರಾ ಹಬ್ಬಕ್ಕೆ ಮತ್ತಷ್ಟು ಏರಿಕೆ +, +ಬೆಂಗಳೂರು,ಸೆ.18-ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದಿನದಿಂದ ದಿನಕ್ಕೆ ಬಡವರು ಹಾಗೂ ಮಧ್ಯಮವರ್ಗದವರ ಜೀವನ ಬಲು ದುಬಾರಿಯಾಗುತ್ತಿದ್ದು, ಈ ನಡುವೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಹೋಗುತ್ತಿದ್ದು, ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ತರಿಸುತ್ತಿದೆ. +ಈರುಳ್ಳಿಯನ್ನು ವ್ಯಾಪಕವಾಗಿ ಬೆಳೆಯುವ ಉತ್ತರಕರ್ನಾಟಕದ ಹಲವು ಭಾಗಗಳಲ್ಲಿ ಅತಿಯಾದ ಮಳೆಯಾದ ಕಾರಣ ಬೆಳೆಯೆಲ್ಲಾ ನಾಶವಾಗಿದ್ದು, ಮತ್ತೊಂದೆಡೆ ತೇವಾಂಶಕ್ಕೆ ಸಂಗ್ರಹಿಸಿಟ್ಟಿದ್ದ ಈರುಳ್ಳಿ ಇಟ್ಟಲ್ಲೇ ಕೊಳೆತುಹೋಗುತ್ತಿದೆ. ಹಾಗಾಗಿ ಉತ್ಪಾದನೆ ಕುಂಠಿತವಾಗಿದ್ದು, ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಬೆಲೆ ಏರುತ್ತಲೇ ಇದೆ. +ಕಳೆದ ಕೆಲವು ತಿಂಗಳ ಹಿಂದೆ 100 ರೂ.ಗೆ ನಾಲ್ಕು ಕೆಜಿ ಗುಣಮಟ್ಟದ ಈರುಳ್ಳಿ ಚಿಲ್ಲರೆಯಾಗಿ ಮಾರಾಟವಾಗುತ್ತಿತ್ತು. ಈಗ ಕೆಜಿಗೆ 60 ರಿಂದ 70 ರೂ.ಗೆ ಮಾರಾಟವಾಗುತ್ತಿದೆ. ಉತ್ತರಕರ್ನಾಟಕದ ಬಳ್ಳಾರಿ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗಗಳಲ್ಲಿ ಹೆಚ್ಚಾಗಿ ಈರುಳ್ಳಿ ಬೆಳೆ ಬೆಳೆಯಲಾಗುತ್ತದೆ. ಆದರೆ ಹೆಚ್ಚಾದ ಮಳೆಯಿಂದ ಬೆಳೆ ನಾಶವಾಗಿ ಉತ್ಪಾದನೆಯಲ್ಲಿ ಭಾರೀ ಕುಸಿತವಾಗಿದೆ. +ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ನಿಗಧಿತ ಪ್ರಮಾಣದಲ್ಲಿ ಮಾಲು ಬರುತ್ತಿಲ್ಲ. ಪೂರೈಕೆ ಕೂಡ ಕಡಿಮೆಯಾಗಿದ್ದು, ನೆರೆಯ ಮಹಾರಾಷ್ಟ್ರ, ಪುಣೆಯಿಂದಲೂ ಸಹ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.ಪಿತೃಪಕ್ಷ ಹಾಗೂ ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ದುಬಾರಿಯಾಗುವ ಸಾಧ್ಯತೆಯಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. +ಬೆಳ್ಳುಳ್ಳಿಯೂ ದುಬಾರಿ :ಈರುಳ್ಳಿ, ಬೆಳ್ಳುಳ್ಳಿ ಒಂದು ರೀತಿಯಲ್ಲಿ ಕಾಂಬಿನೇಷನ್‌ನಂತಿದ್ದು, ಒಗ್ಗರಣೆಗೆ ಎರಡೂ ಕೂಡ ಮುಖ್ಯ. ಇದರಲ್ಲಿ ಯಾವುದೇ ಒಂದು ಇಲ್ಲದಿದ್ದರೂ ಅಡುಗೆ ರುಚಿ ಬರುವುದಿಲ್ಲ. ಈ ನಡುವೆ ಬೆಳ್ಳುಳ್ಳಿ ಕೂಡ ಕೆಜಿಗೆ 400 ರೂ. ತಲುಪಿದೆ. +ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಹೆಚ್ಚಾದ ಕಾರಣ ಬೆಳೆ ಕುಂಠಿತವಾಗಿದ್ದರೆ ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಇಲ್ಲದೆ ನಿಗದಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಮಾಲು ಬಾರದಿರುವುದರಿಂದ ಬೆಲೆ ಹೆಚ್ಚಳವಾಗಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವರ್ತಕರು ಅಭಿಪ್ರಾಯ ಪಟ್ಟಿದ್ದಾರೆ. \ No newline at end of file diff --git a/eesanje/url_46_15_2.txt b/eesanje/url_46_15_2.txt new file mode 100644 index 0000000000000000000000000000000000000000..9db99688a2a7c42f6464cc3402d5ee1cf05c74cd --- /dev/null +++ b/eesanje/url_46_15_2.txt @@ -0,0 +1,12 @@ +ಶಾಸಕ ಮುನಿರತ್ನ ವಿರುದ್ಧ ‘ಹನಿ ಟ್ರಾಪ್’ ಆರೋಪ, FIRನಲ್ಲಿವೆ ಶಾಕಿಂಗ್ ಸಂಗತಿಗಳು..! + , +ಬೆಂಗಳೂರು,ಸೆ.19-ಶಾಸಕ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಕೇಳಿಬಂದಿದ್ದು, ಮಹಿಳೆಯೊಬ್ಬರು ತಮನ್ನು ಹೆದರಿಸಿ, ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಜೊತೆಗೆ ಎಚ್ಐವಿ ಪೀಡಿತ ಮಹಿಳೆಯೊಬ್ಬರನ್ನು ಬಳಸಿ ರಾಜಕೀಯ ಪ್ರತಿಸ್ಪರ್ಧಿಗೆ ಹನಿಟ್ರ್ಯಾಪ್ ಮಾಡಿರುವ ಗಂಭೀರ ಮಾಹಿತಿಯನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. +ಯಶವಂತಪುರದ ಸಮಾಜಸೇವಕಿ ಸುಮಾರು 40 ವರ್ಷದ ಮಹಿಳೆ ಯೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. +ಐಪಿಸಿ ಸೆಕ್ಷನ್ 354 ಎ (ಲೈಂಗಿಕ ದೌರ್ಜನ್ಯ),354 ಸಿ (ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೆಕರಣ) 376 ಎನ್ (2) (ಸರ್ಕಾರಿ ಸೇವಕನಿಂದ ಅತ್ಯಾಚಾರ), 506 ( ಜೀವ ಬೆದರಿಕೆ), 504 ( ಉದ್ದೇಶಪೂರ್ವಕವಾಗಿ ನಿಂದನೆ) 120(ಬಿ) ಅಪರಾಧಿಕ ಒಳಸಂಚು, ( 149 ) ಕಾನೂನು ಬಾಹಿರ ಸಭೆ, 406 ( ನಂಬಿಕೆ ದೋಹ) , 384 ( ಸುಲಿಗೆ) 308 ( ಹತ್ಯೆ ಮಾಡಲು ಪ್ರಯತ್ನ,) ಐಟಿ ಆಕ್ಟ್ 66,66 ಇ ಸೆಕ್ಷನ್ಗಳನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. +ಇದೇ ಪ್ರಕರಣದಲ್ಲಿ ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. +ಬಿಬಿಎಂಪಿ ಮಾಜಿ ಸದಸ್ಯ ವೇಲುನಾಯ್ಕರ್ ಎಂಬುವವರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ನಿನ್ನೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. +ರಾಮನಗರ ಉಪವಿಭಾಗದ ಡಿವೈಎಸ್ಪಿ ದಿನಕರ್ ಶೆಟ್ಟಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ತನಿಖೆ ಮುಗಿದ ನಂತರ ಮುನಿರತ್ನ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ.ದೂರು ನೀಡಿರುವ ಮಹಿಳೆಯನ್ನು ಮುನಿರತ್ನ ಸಂಪರ್ಕಿಸಿ, ಸ್ನೇಹ ಬೆಳೆಸಿ, ಅನುಚಿತವಾಗಿ ನಡೆದುಕೊಳ್ಳುತ್ತಿದ್ದರು ಎಂದು ದೂರಲಾಗಿದೆ. +ಗೋಡನ್ವೊಂದಕ್ಕೆ ಕರೆಸಿಕೊಂಡ ಮುನಿರತ್ನ ಮಹಿಳೆಯನ್ನು ಬೆದರಿಸಿ ಅತ್ಯಾಚಾರ ಮಾಡಿದ್ದಲ್ಲದೆ, ತಾನು ಹೇಳಿದಂತೆ ಕೇಳಬೇಕು ಮತ್ತು ಈ ವಿಚಾರವನ್ನು ಹೊರಗೆ ಎಲ್ಲೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ. ಒಂದು ವೇಳೆ ತನ್ನ ವಿರುದ್ಧ ನಡೆದುಕೊಂಡರೆ ನಮಿಬ್ಬರ ಸರಸ ಸಲ್ಲಾಪದ ದೃಶ್ಯಗಳನ್ನು ಸಿಸಿಟಿವಿಯಲ್ಲಿ ಚಿತ್ರೀಕರಿಸಲಾಗಿದ್ದು, ಅದನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ್ದರು ಎಂದು ಮಹಿಳೆ ದೂರಿದ್ದಾರೆ. +ದೂರಿನಲ್ಲಿ ಏನಿದೆ? :ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸ್ದೆಿ. ಒಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. +ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಆತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. +ಎಫ್ಐಆರ್ನಲ್ಲಿನ ಅಂಶಗಳು :1) ಕೋವಿಡ್ ಸಮಯದಲ್ಲಿ ನನ್ನ ಸೇವೆ ಗುರುತಿಸಿ ಮುನಿರತ್ನ ಕರೆ ಮಾಡಿದ್ದರು2) ನಮಸ್ತೆ ಲೀಡರ್ ನಾನು ನಿಮ ಭಾಗದ ಶಾಸಕ, ಬಂದು ನನ್ನನ್ನು ಭೇಟಿ ಮಾಡಿ ಎಂದಿದ್ದ ಮುನಿರತ್ನ3) ಅದರಂತೆ ಭೇಟಿ ಬಳಿಕ ಇಬ್ಬರ ನಡುವೆ ಆತೀಯತೆ ಬೆಳೆದಿತ್ತು4) ಆಗಾಗ ವೀಡಿಯೊ ಕಾಲ್ ಮೂಲಕ ಮಾತನಾಡುತ್ತಿದ್ದರು5) ಈ ವೇಳೆ ನಗ್ನವಾಗಿ ಕರೆ ಮಾಡುವಂತೆ ಒತ್ತಾಯಿಸಿದಾಗ ನಾನು ನಿರಾಕರಿಸ್ದೆಿ6) ಸ್ಪಾಟ್ ಒಂದಕ್ಕೆ ಬರುವುದಕ್ಕೆ ಹೇಳಿ ನಿನ್ನ ನೋಡಿದರೆ ಮೈ ಜುಮ್ ಎನಿಸುತ್ತೆ ಎಂದೇಳಿ ತಬ್ಬಿಕೊಳ್ಳಲು ಮುಂದಾದರು7) ನಾನು ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇದೆಲ್ಲಾ ಕಾಮನ್ ಎಂದರು8) ನಾನು ಕಿರುಚಿಕೊಳ್ಳುತ್ತೇನೆ ಎಂದಾಗ ನಾನು ಶಾಸಕನಿದ್ದೇನೆ, ಅಪಾರ ಜನಬೆಂಬಲವಿದೆ ಸುಮನಿದ್ದರೆ ಸರಿ, ಇಲ್ಲವಾದರೆ ನಿನ್ನ ವಿರುದ್ಧವೇ ಕಂಪ್ಲೆಂಟ್ ನೀಡುತ್ತೇನೆ ಎಂದು ಹೆದರಿಸಿ ಅತ್ಯಾಚಾರ ಎಸಗಿದರು9) ಅತ್ಯಾಚಾರದ ಬಳಿಕ ಈ ರೂಂನಲ್ಲಿ ಸೀಕ್ರೆಟ್ ಕ್ಯಾಮೆರಾಗಳನ್ನು ಇಟ್ಟಿದ್ದು, ಎಲ್ಲಾ ದೃಶ್ಯಗಳು ಸೆರೆಯಾಗಿವೆ, ಅವುಗಳನ್ನು ಎಡಿಟ್ ಮಾಡಿ ಹಂಚುತ್ತೇನೆ, ಹೇಳಿದಂತೆ ಕೇಳಬೇಕು ಎಂದು ಬಲವಂತಪಡಿಸಿ ಹನಿಟ್ರ್ಯಾಪ್ ಮಾಡಲು ಬಳಸಿಕೊಂಡರು10) ಜತೆಗೆ ಚಿತ್ರೀಕರಿಸಿದ ವಿಡಿಯೊಗಳನ್ನು ಟಿವಿಯಲ್ಲಿ ಹಾಕಿ ನನಗೆ ತೋರಿಸಿದ್ದಾರೆ11) ಇದೇ ವಿಡಿಯೋ ಇಟ್ಟುಕೊಂಡು 2020 ರಿಂದ 2022 ರ ಅವಧಿಯಲ್ಲಿ ನಿರಂತರ ಅತ್ಯಾಚಾರ ನಡೆಸಿದ್ದಾರೆ. ಇದೇ ವೇಳೆ ಹನಿಟ್ರ್ಯಾಪ್ಗೂ ಬಳಕೆ ಮಾಡಿಕೊಂಡಿದ್ದಾರೆ12) ಹೇಳಿದಂತೆ ಕೇಳಲಿಲ್ಲ ಎಂದರೆ ಗಂಡ ಮತ್ತು ಮಕ್ಕಳಿಗೆ ವಿಡಿಯೊ ತೋರಿಸುವುದಾಗಿ ಬೆದರಿಕೆ ಹಾಕಿದ್ದಾರೆ.13) ತನಗೆ ಪರಿಚಯ ಇರುವ ಮತ್ತೊಬ್ಬ ಮಹಿಳೆ ಜತೆ ಸೇರಿ ಆತ ಹೇಳಿದವರನ್ನು ಹನಿಟ್ರ್ಯಾಪ್ ಮಾಡಿಸಿದ್ದಾರೆ14) ಮರ್ಯಾದೆ ಹಾಗು ಪ್ರಾಣಕ್ಕೆ ಅಂಜಿ ಶಾಸಕ ಮುನಿರತ್ನ ಹೇಳಿದಂತೆ ಕೇಳಿದ್ದೇನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.15) ಮಹಿಳಾ ಕಾರ್ಪೊರೇಟರ್ ಅವರ ಪತಿಗೆ ಎಚ್ಐವಿ ಪೀಡಿತ ಮಹಿಳೆಯ ಮೂಲಕ ಹನಿಟ್ರ್ಯಾಪ್ ಮಾಡಿಸಿದ್ದರು. ಅವರ ಮಗನಿಗೂ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಿದ್ದರು.16) ಮುನಿರತ್ನ ಅವರ ವಿರುದ್ಧವಾಗಿ ಧ್ವನಿಯೆತ್ತಿದ ಮಹಿಳೆಯೊಬ್ಬರ ತೇಜೋವಧೆಗಾಗಿ ಷಡ್ಯಂತ್ರ ರೂಪಿಸಿದ್ದರು. ಹಲವರನ್ನು ಗುಂಪುಗೂಡಿಸಿ ಪ್ರವಾಸ ಮಾಡುವಂತೆ ಪುಸಲಾಯಿಸಿದ್ದು, ನಾನಾ ರೀತಿಯ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ.17) ಮಾಜಿ ಶಾಕಸಕರೊಬ್ಬರನ್ನು ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಅತ್ಯಾಚಾರ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಮನಗರ ಉಪವಿಭಾಗದ ಪೊಲೀಸರು ಸಂತ್ರಸ್ತ ಮಹಿಳೆಯನ್ನು ಕೃತ್ಯ ನಡೆದ ನಗರದಲ್ಲಿನ ಗೋಡನ್ಗೆ ಕರೆತಂದು ಸ್ಥಳ ಮಹಜರು ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. \ No newline at end of file diff --git a/eesanje/url_46_15_3.txt b/eesanje/url_46_15_3.txt new file mode 100644 index 0000000000000000000000000000000000000000..20a399a224b8b047c1cdfb300a30a84f07024330 --- /dev/null +++ b/eesanje/url_46_15_3.txt @@ -0,0 +1,6 @@ +ಒಂದು ಆ್ಯಂಬುಲೆನ್ಸ್ ನೀಡಲಾಗದ ಆರೋಗ್ಯ ಇಲಾಖೆ ವಿರುದ್ಧ ಜೆಡಿಎಸ್ ಆಕ್ರೋಶ + +ಬೆಂಗಳೂರು,ಸೆ.19– ಒಂದು ಆ್ಯಂಬುಲೆನ್ಸ್ ನೀಡಲು ಕೈಲಾಗದ ದುಸ್ಥಿತಿ ರಾಜ್ಯ ಆರೋಗ್ಯ ಇಲಾಖೆಗೆ ಬಂದಿದೆಯೇ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ಯಾ ಅಥವಾ ಸತ್ತಿದ್ಯಾ? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪ್ರಶ್ನಿಸಿದೆ. +ತಂದೆಯನ್ನು ಕಳೆದುಕೊಂಡು ನೋವಿನಲ್ಲಿದ್ದ ಆ ಮಕ್ಕಳಿಗೆ ಮೃತದೇಹ ಸಾಗಿಸಲು ಕನಿಷ್ಠ ಆ್ಯಂಬುಲೆನ್‌್ಸಒದಗಿಸದಿರುವುದು ಅಮಾನವೀಯ ಮತ್ತು ರಾಜ್ಯದ ಜನರು ತಲೆ ತಗ್ಗಿಸುವಂತದ್ದು ಎಂದು ಬೇಸರ ವ್ಯಕ್ತಪಡಿಸಿದೆ. +ಆ್ಯಂಬುಲೆನ್‌್ಸಸಿಗದೆ ತಂದೆಯ ಮೃತದೇಹವನ್ನು ಮಕ್ಕಳು ಬೈಕ್ನಲ್ಲಿ ಕೊಂಡೊಯ್ದ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯಲ್ಲಿ ನಡೆದಿದೆ ಎಂದು ಹೇಳಿದೆ. +ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿರುವುದಕ್ಕೆ ಈ ಮನಕಲಕುವ ಘಟನೆಯೇ ಸಾಕ್ಷಿ. ಪಾವಗಡ ಕಾಂಗ್ರೆಸ್ ಶಾಸಕ ಹೆಚ್.ವಿ.ವೆಂಕಟೇಶ್ ಅವರು, ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿ, ದ್ವೇಷ ರಾಜಕಾರಣ ಮಾಡುತ್ತಿರುವುದಕ್ಕೆ ಜನರು ನರಳುವಂತಾಗಿದೆ ಎಂದು ಆರೋಪಿಸಿದೆ. \ No newline at end of file diff --git a/eesanje/url_46_15_4.txt b/eesanje/url_46_15_4.txt new file mode 100644 index 0000000000000000000000000000000000000000..15fb5819b5470baa576c6718723cc0462d4517e4 --- /dev/null +++ b/eesanje/url_46_15_4.txt @@ -0,0 +1,11 @@ +ಮುನಿರತ್ನ ಪ್ರಕರಣದಲ್ಲಿ ದ್ವೇಷ ರಾಜಕಾರಣ ಮಾಡಿಲ್ಲ : ಗೃಹಸಚಿವ ಪರಮೇಶ್ವರ್ + ' : +ಬೆಂಗಳೂರು,ಸೆ.19-ಜನಪ್ರತಿನಿಧಿಯಾಗಿ ಶಾಸಕ ಮುನಿರತ್ನ ಅವರು ಮಾಡಿರುವ ಕೃತ್ಯಗಳ ವಿರುದ್ಧ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನುಸಾರ ಪ್ರಕರಣ ದಾಖಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ನನ್ನ ಬಳಿ ಹೆಚ್ಚಿನ ಮಾಹಿತಿ ಇಲ್ಲ. ಹಾಗಾಗಿ ವ್ಯಾಪಕ ವಿವರಣೆ ನೀಡುವುದಿಲ್ಲ ಎಂದರು. +ದೂರಿನಲ್ಲಿ ನಮೂದಿಸಿರುವಂತಹ ಕೃತ್ಯ ಮಾಡುವುದನ್ನು ಯಾರೂ ಒಪ್ಪಿಕೊಳ್ಳುವುದಿಲ್ಲ. ಅದರಲ್ಲೂ ಜನಪ್ರತಿನಿಧಿಗಳಾಗಿ ಕಾನೂನುಬಾಹಿರವಾಗಿ ಈ ರೀತಿ ಕೆಲಸಗಳನ್ನು ಮಾಡಿದ್ದಾರೆ ಎಂದರೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.ನಾವು ಯಾವುದೇ ದ್ವೇಷದ ರಾಜಕಾರಣ ಮಾಡಿಲ್ಲ. ನಾಗಮಂಗಲದ ಗಲಭೆ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಹಾಗೂ ಮತ್ತಿತರರು ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಕಾನೂನುಬಾಹಿರವಾಗಿ ಯಾವುದನ್ನೂ ಮಾಡುವುದಿಲ್ಲ. ದ್ವೇಷ ರಾಜಕಾರಣ ನಮಗೆ ಅಗತ್ಯವೇ ಇಲ್ಲ ಎಂದರು. +ಒಂದು ದೇಶ, ಒಂದು ಚುನಾವಣೆ ವಿಚಾರವಾಗಿ ಇನ್ನಷ್ಟು ವಿಚಾರಣೆ ನಡೆಯಬೇಕು. ಕನಿಷ್ಠ 2/3 ರಾಜ್ಯಗಳ ಒಪ್ಪಿಗೆ ಬೇಕು. ಮಾಜಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರ ಉನ್ನತಾಧಿಕಾರ ಸಮಿತಿ ವರದಿ ನೀಡಿದೆ. ಮುಂದೆ ಯಾವ ರೀತಿ ಬೆಳವಣಿಗೆಯಾಗಲಿದೆ ಎಂದು ಕಾದುನೋಡಬೇಕಿದೆ. +ರಾಜ್ಯದ ಅಭಿಪ್ರಾಯ ಕೇಳಿದರೆ ಅದನ್ನು ವಿಧಾನಸಭೆಯಲ್ಲಿ ಚರ್ಚಿಸಬೇಕೇ, ಸಂಪುಟದಲ್ಲಿ ವಿಶ್ಲೇಷಣೆ ನಡೆಸಿ ಸರ್ಕಾರದ ಅಭಿಪ್ರಾಯ ಹೇಳಬಹುದೇ? ಎಂದೆಲ್ಲಾ ಕುರಿತು ಚರ್ಚಿಸಲಾಗುವುದು ಎಂದರು. +ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸುವ ವಿಚಾರವಾಗಿ ಹಲವು ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯ ವ್ಯವಸ್ಥೆಗಳಿವೆ. ಗುಜರಾತ್ಸರ್ಕಾರ ರಾಜ್ಯಪಾಲರನ್ನು ಕೇವಲ ಸೆರೋನಿಯಲ್ ಎಂದು ಪರಿಗಣಿಸಿದೆ. ಉಳಿದಂತೆ ಆಡಳಿತಾತಕವಾಗಿ ರಾಜ್ಯಪಾಲರು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಅವಕಾಶ ಇಲ್ಲ. ಈ ಹಿಂದೆ ತಾವು ಉನ್ನತ ಶಿಕ್ಷಣ ಸಚಿವರಾಗಿದ್ದಾಗ ಕುಲಪತಿ ನೇಮಕದ ಅಧಿಕಾರವನ್ನು ಮೊಟಕುಗೊಳಿಸಲಾಗಿತ್ತು. +ಕರ್ನಾಟಕ ಒಂದೇ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ. ಹಾಗಾಗಿ ಇದನ್ನು ರಾಜ್ಯಪಾಲರ ವಿರುದ್ಧದ ಸೇಡು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.ಅಭಿಯೋಜನೆಗೆ ಪೂರ್ವಾನುಮತಿ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಸ್ಪಷ್ಟನೆಗಳನ್ನು ಕೇಳುತ್ತಾರೆ. ಕಾಲಕಾಲಕ್ಕೆ ಆಡಳಿತ ವ್ಯವಸ್ಥೆ ಕೂಡ ಇದಕ್ಕೆ ಮಾಹಿತಿಯನ್ನು ಒದಗಿಸಲಿದೆ. ಇದರಲ್ಲಿ ಯಾವುದೇ ವಿಶೇಷಗಳಿರುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರವರು ದೆಹಲಿಗೆ ಭೇಟಿ ನೀಡಿರುವ ವಿಚಾರ ನನಗೆ ಗೊತ್ತಿಲ್ಲ. ನಾನು ಅವರ ದೈನಂದಿನ ಪ್ರವಾಸ ಕಾರ್ಯಕ್ರಮಗಳನ್ನು ಗಮನಿಸುವುದಿಲ್ಲ. ಪಕ್ಷದ ಅಧ್ಯಕ್ಷರು ಎಂಬ ಕಾರಣಕ್ಕೆ ಹೈಕಮಾಂಡ್ ಹಲವು ಸಲಹೆ, ಸೂಚನೆಗಳನ್ನು ನೀಡುತ್ತಿರುತ್ತದೆ. ಈ ಹಿಂದೆ ತಾವು ಅಧ್ಯಕ್ಷರಾಗಿದ್ದಾಗಲೂ ಹಲವು ಬಾರಿ ದೆಹಲಿಗೆ ಹೋಗಿದ್ದೆವು ಎಂದು ಹೇಳಿದರು. +ಮಾದಕವಸ್ತುಗಳ ಹಾವಳಿಯನ್ನು ಮಟ್ಟ ಹಾಕಲು ಈ ಹಿಂದೆ 2013 ರಿಂದ 2018ರವರೆಗಿನ ಸರ್ಕಾರದಲ್ಲೂ ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕಳೆದ ಒಂದೂವರೆ ವರ್ಷದಿಂದೀಚೆಗೆ ಸಮರೋಪಾದಿಯಲ್ಲಿ ಕ್ರಮಗಳನ್ನು ಜರುಗಿಸಲಾಗಿದೆ. ನೂರಾರು ಕೋಟಿ ರೂ. ಮಾದಕವಸ್ತುಗಳನ್ನು ಜಪ್ತಿ ಮಾಡಿ ನಾಶಪಡಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ. ಸಾವಿರಕ್ಕೂ ಹೆಚ್ಚು ಜನರಿಗೆ ಶಿಕ್ಷೆ ಕೊಡಿಸಲಾಗಿದೆ ಎಂದರು. +ಇತ್ತೀಚೆಗೆ ಹಾಸ್ಟೆಲ್ಗಳಲ್ಲಿ, ಕಾಲೇಜುಗಳಲ್ಲಿ ಈ ಪಿಡುಗು ಹೆಚ್ಚುತ್ತಿದೆ ಎಂಬ ವರದಿ ಇದೆ. ಅದಕ್ಕಾಗಿ ಕಡಿವಾಣ ಹಾಕಲು ತಮ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಹಲವು ಸಚಿವರು ಸದಸ್ಯರಾಗಿದ್ದು, ಮಾದಕವಸ್ತುಗಳ ನಿಯಂತ್ರಣಕ್ಕೆ ತೀವ್ರ ನಿಗಾ ವಹಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_15_5.txt b/eesanje/url_46_15_5.txt new file mode 100644 index 0000000000000000000000000000000000000000..297a269d2a969cf7b3109dd772571b8edc99ff22 --- /dev/null +++ b/eesanje/url_46_15_5.txt @@ -0,0 +1,8 @@ +ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ + +ಬೆಂಗಳೂರು, ಸೆ.19-ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿ ಮನೆಗೆ ಬಂದಿದ್ದ ಅವರು ವಿಶ್ರಾಂತಿ ಪಡೆಯುತ್ತಿದ್ದರು. +ಇಂದು ಬೆಳಿಗ್ಗೆ 10 ಗಂಟೆಯ ಸಂದರ್ಭದಲ್ಲಿ ಕೆಂಪಣ್ಣ ಅವರಿಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ಹೊಸಕೋಟೆ ಸಮೀಪದ ಜ್ಯೋತಿಪುರದಲ್ಲಿರುವ ಅವರ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾದರು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. +ಈ ಹಿಂದೆ ಬಿಜೆಪಿ ಸರ್ಕಾರದ ಸಂದರ್ಭದಲ್ಲಿ ಶೇ.40 ಕಮಿಷನ್‌ ಆರೋಪ ಹೊರಿಸಿ ಅದು ಪ್ರಧಾನಿ ಕಚೇರಿವರೆಗೂ ತಲುಪಿತ್ತು. ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌‍ ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿತ್ತು. ಸರ್ಕಾರ ಬದಲಾದರೂ ಒಂದೂವರೆ ವರ್ಷ ಕಳೆದರೂ ಗುತ್ತಿಗೆದಾರರ ಸಮಸ್ಯೆ ಬಗೆಹರಿದಿಲ್ಲ. ಮತ್ತೆ ಕಮಿಷನ್‌ ಹಾವಳಿ ಇನ್ನೂ ಹೆಚ್ಚಾಗಿದೆಯೆಂದು ಟೀಕಾ ಪ್ರಹಾರ ನಡೆಸಿದ್ದರು. +ಸಿಎಂ ಸಿದ್ದರಾಮಯ್ಯ ಅವರು ಕೂಡ ಅವರನ್ನು ಕರೆಸಿಕೊಂಡು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೂ ಗುತ್ತಿಗೆದಾರರು ಇವರ ಬಳಿ ಬಂದು ನೋವು ತೋಡಿಕೊಳ್ಳುತ್ತಿದ್ದರು.ಕಳೆದ ಒಂದು ತಿಂಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಗುತ್ತಿಗೆದಾರರ ಸಮಸ್ಯೆ ಬಗೆಹರಿಯದಿದ್ದಲ್ಲಿ ಕಾಮಗಾರಿಯನ್ನು ನಿಲ್ಲಿಸುವುದಾಗಿ ಸರ್ಕಾರಕ್ಕೆ ಚಾಟಿ ಬೀಸಿದ್ದರು. +ಕಳೆದ 50 ವರ್ಷಗಳಿಂದ ಅವರು ಗುತ್ತಿಗೆದಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಯಾವುದೇ ಅಂಜಿಕೆ ಅಳುಕಿಲ್ಲದೆ ನೇರವಾಗಿ ಮಾತನಾಡುವ ಗುಣ ಹೊಂದಿದ್ದ ಅವರು ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಮೇಲೆ ಹೊಸ ವರ್ಚಸ್ಸು ನೀಡಿದ್ದರು.ಮೂವರು ಪುತ್ರಿಯರು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಬಿಎಂಪಿ ಗುತ್ತಿಗೆದಾರರ ಸಂಘ, ನೌಕರರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಂತಾಪ ವ್ಯಕ್ತಪಡಿಸಿದೆ. +ಸಿಎಂ ಸಿದ್ದರಾಮಯ್ಯ ಅವರು ಕೂಡ ಕೆಂಪಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿ ಆಸೆ ಆಮಿಷಗಳಿಗೆ ಒಳಗಾಗದೆ ನೇರವಾಗಿದ್ದ ಕೆಂಪಣ್ಣ ಅವರ ಅಗಲಿಕೆ ನನಗೆ ನೋವು ತಂದಿದೆ ಅವರ ಆತಕ್ಕೆ ಶಾಂತಿ ಸಿಗಲಿಯೆಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಇವರ ಅಂತ್ಯಕ್ರಿಯೆ ಮಧ್ಯಾಹ್ನ 3 ಗಂಟೆಗೆ ನಡೆಯಲಿವೆಯೆಂದು ಕುಟುಂಬ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_15_6.txt b/eesanje/url_46_15_6.txt new file mode 100644 index 0000000000000000000000000000000000000000..99d64ebc3c4313cccebecb2e413a0da5ad34f8f9 --- /dev/null +++ b/eesanje/url_46_15_6.txt @@ -0,0 +1,14 @@ +ನಾಗಮಂಗಲದಲ್ಲಿ ‘ಪಾಕಿಸ್ತಾನ್‌ ಜಿಂದಾಬಾದ್‌’ ಘೋಷಣೆ ಕೂಗಿಲ್ಲ : ಗೃಹಸಚಿವ ಪರಮೇಶ್ವರ್‌ +' ' +ಬೆಂಗಳೂರು,ಸೆ.18-ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂಬ ಘೋಷಣೆ ಕೂಗಿಲ್ಲ, ಈ ಬಗ್ಗೆ ನಮ ಗಮನಕ್ಕೆ ಯಾವ ವಿಚಾರಗಳೂ ಬಂದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರಿಗೆ ತಪ್ಪು ಮಾಹಿತಿ ಇದ್ದಂತಿದೆ ಎಂದು ಹೇಳಿದರು. +ನಾಗಮಂಗಲ ಗಲಾಟೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಬಗ್ಗೆ ಕೆಲವರು ತಪ್ಪು ಹೇಳಿಕೆ ನೀಡಿದ್ದಾರೆ ಎಂದು ನಮ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನು ಪುನರ್‌ ಪರಿಶೀಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ. ಆತನ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು. ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್‌‍ಎಲ್‌ ಪರೀಕ್ಷೆಗೆ ಕಳುಹಿಸಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು. +ಶಾಸಕ ಮುನಿರತ್ನ ಅವರನ್ನು ಏಕಾಏಕಿ ಬಂದಿಸಿಲ್ಲ. ದೂರು ದಾಖಲಾಗಿದೆ. ಬಳಿಕ ಬಂಧಿಸಿದ್ದು, ಧ್ವನಿ ಮಾದರಿಯನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ. ಧ್ವನಿ ಮಾದರಿ ಹೊಂದಾಣಿಕೆಯಾದರೆ ಅಗತ್ಯ ಕ್ರಮ ಮುಂದುವರೆಯಲಿದೆ ಎಂದರು. +ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್‌್ಸ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಡ್ರಗ್‌್ಸ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು. +ನೋವು ನಿವಾರಕ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು. +ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್‌ ಎಂದು ಮಾರಾಟ ಮಾಡಲಾಗುತ್ತಿದೆ. ವೈದ್ಯರು ಶಿಫಾರಸ್ಸು ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್‌ ಕಂಟೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು. +ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ. ಎಲ್ಲ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು. +ಅಕ್ಟೋಬರ್‌ 3ಕ್ಕೆ ಪಿಎಸ್‌‍ಐ ಪರೀಕ್ಷೆ :ಪಿಎಸ್‌‍ಐ ಪರೀಕ್ಷೆಯನ್ನು ಸೆ.22ರಿಂದ ಸೆ.28ಕ್ಕೆ ಮುಂದೂಡಲಾಗಿತ್ತು. ಸೆ.28ರಂದು ಸಹ ಯುಪಿಎಸ್ಸಿ ಇಂಗ್ಲೀಷ್‌ ಪರೀಕ್ಷೆ ಇದೆ ಎಂಬ ಮಾಹಿತಿ ಗೊತ್ತಾದ ಕೂಡಲೇ, ಆ ದಿನವನ್ನು ಅ.3ಕ್ಕೆ ಮುಂದೂಡಲಾಗಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅ.3ರಂದು ಪರೀಕ್ಷೆ ನಿಗದಿಪಡಿಸಿ ಅಧಿಕೃತವಾಗಿ ಪ್ರಕಟಣೆ ಮಾಡಿದೆ ಎಂದರು. +ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ. ಹೀಗಾಗಿ ಇದರಲ್ಲಿ ನಮ ತಪ್ಪೇನಿದೆ ಎಂದು ವಾದಿಸಿದ್ದಾರೆ. ಆದಾಗ್ಯೂ ಸಹ ಅವರನ್ನು ಬಂಧಿಸಿದ್ದೇವೆ. ಯಾರು ಈ ಸಂದರ್ಭದಲ್ಲಿ ನಿಮಗೆ ಪ್ರಚೋದನೆ ಮಾಡಿ, ಬಾವುಟ ಹಾರಿಸಲು ಹೇಳಿದರು ಎಂಬ ಕುರಿತು ಬಂಧಿತರ ವಿಚಾರಣೆ ನಡೆಯುತ್ತಿದೆ. 17ರಿಂದ 21 ವರ್ಷ ವಯಸ್ಸಿನ ಹುಡುಗರು ಇದನ್ನು ಮಾಡಿದ್ದಾರೆ ಎಂದು ಹೇಳಿದರು. +ನಾಗಮಂಗಲ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ನಾವು ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. +ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಬಿಜೆಪಿಯವರು ತಮದೇ ಆದ ಒಂದು ಡಿಸೈನ್‌ ಮಾಡಿಕೊಂಡಿದ್ದಾರೆ ಎಂದು ಹೇಳಿದರು. +ಕಳೆದ ವರ್ಷ ಗಣೇಶ ಆಚರಣೆ ವೇಳೆ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಕೋಮು ಸಂಘರ್ಷಗಳಂತಹ ಘಟನೆಗಳು ಸಂಭವಿಸಿಲ್ಲ. ಈ ವರ್ಷವೂ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದೇವೆ. ಅಹಿತಕರ ಘಟನೆ ಆಗಲು ಬಿಡುವುದಿಲ್ಲ ಎಂದು ಈ ಮೊದಲೇ ಹೇಳಿದ್ದೇವೆ. ಬಿಜೆಪಿಯವರು ಎಲ್ಲವನ್ನು ತಿರುಚುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_15_7.txt b/eesanje/url_46_15_7.txt new file mode 100644 index 0000000000000000000000000000000000000000..3f3c4206a18136b8f7d5698f95b7df3acf27b905 --- /dev/null +++ b/eesanje/url_46_15_7.txt @@ -0,0 +1,7 @@ +ನಾಗಮಂಗಲದಲ್ಲಿ ಧರ್ಮಾಂಧರ ಅಟ್ಟಹಾಸಕ್ಕೆ 2.66 ಕೋಟಿ ರೂ. ನಷ್ಟ, ಬೀದಿಗೆ ಬಂದ ವ್ಯಾಪಾರಿಗಳ ಬದುಕು +.2.66 +ಮಂಡ್ಯ,ಸೆ.18-ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ವೇಳೆ ನಡೆದ ಗಲಭೆಯಲ್ಲಿ ಸುಟ್ಟು ಕರಕಲಾದ ಅಂಗಡಿಗಳ ಮಾಲೀಕರು ಹಾಗೂ ಕಾರ್ಮಿಕರ ಬದುಕು ಬೀದಿಗೆ ಬಂದಿದ್ದು, ಒಟ್ಟು 2.66 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.ಮಂಡ್ಯ ಜಿಲ್ಲಾಡಳಿತ ಗಲಭೆಯಿಂದ ನಷ್ಟವಾಗಿರುವ ಆಸ್ತಿ ಮೌಲ್ಯವನ್ನು ಅಂದಾಜಿಸುತ್ತಿದ್ದು, ಸದ್ಯ ಇವರಿಗೆ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ. +ನಾಗಮಂಗಲದ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿಯಿಂದ ಇಡೀ ಪಟ್ಟಣದಲ್ಲಿ ಅಶಾಂತಿ ಉಂಟಾದರೆ, ಇದರಿಂದ ಹಲವು ಜನರ ಬದುಕು ಬೀದಿಗೆ ಬಂದಿದೆ. ತಮ ಬದುಕು ರೂಪಿಸಿಕೊಳ್ಳಲು ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿಕೆ ಮಾಡಿ ಇಲ್ಲಿನ ಜನರು ತಮಗಿಷ್ಟದ ವ್ಯಾಪಾರ ಮಾಡಿ ಬದುಕು ಕಟ್ಟಿಕೊಂಡಿದ್ದರು. ಇದೀಗ ಕೋಮು ದಳ್ಳುರಿಗೆ ಗಲಭೆಕೋರರು ಹಚ್ಚಿದ ಬೆಂಕಿಯಿಂದ ಇಲ್ಲಿನ ಹಲವು ವ್ಯಾಪಾರಿಗಳ ಕನಸು ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. +ಇದರಿಂದ ಈ ವ್ಯಾಪಾರವನ್ನೇ ನಂಬಿಕೊಂಡಿದ್ದ ಜನರ ಬದುಕು ಬೀದಿಗೆ ಬಂದಿದೆ. ಸದ್ಯ ಈ ಜನರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ವೈಯಕ್ತಿಕವಾಗಿ ಒಂದಿಷ್ಟು ಪರಿಹಾರ ನೀಡಿದ್ದಾರೆ. ಈ ಬೆನ್ನಲ್ಲೇ ರಾಜ್ಯಸರ್ಕಾರವೂ ಹಾನಿಗೊಳಗಾದ ಮಾಲೀಕರು ಹಾಗೂ ವ್ಯಾಪಾರಸ್ಥರಿಗೆ ಪರಿಹಾರ ನೀಡಲು ಮುಂದಾಗಿದೆ. ಈ ಸಂಬಂಧ ಮಂಡ್ಯ ಜಿಲ್ಲಾಡಳಿತ ಸಮೀಕ್ಷೆ ಮಾಡಿ ಹಾನಿಯಾದ ಕಟ್ಟಡ ಹಾಗೂ ವಸ್ತುಗಳಿಗೆ ಮೌಲ್ಯವನ್ನು ಅಂದಾಜು ಮಾಡಿ ವರದಿಯೊಂದನ್ನು ಸಿದ್ಧಪಡಿಸಿದೆ. +ಈ ಸಂಬಂಧ ನಾಗಮಂಗಲ ತಹಸೀಲ್ದಾರ್‌ ನೇತೃತ್ವದಲ್ಲಿ ಪಿಡಬ್ಲ್ಯೂಡಿ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಒಂದು ತಂಡ ರಚನೆ ಮಾಡಲಾಗಿತ್ತು. ಈ ತಂಡ ಎಸ್‌‍ಆರ್‌ ರೇಟ್‌ ಪ್ರಕಾರ ಗಲಭೆಯಿಂದ ಹಾನಿಗೆ ಒಳಗಾಗಿರುವ ಕಟ್ಟರ ಪ್ರಮಾಣ ಮೌಲ್ಯ 1.47 ಕೋಟಿ ರೂ. ಹಾಗೂ ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ ಸರಕಿನ ಮೌಲ್ಯ 1.18 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. ಈ ವರದಿಯನ್ನು ಸರ್ಕಾರಕ್ಕೆ ನೀಡಿ ಸೂಕ್ತ ಪರಿಹಾರ ನೀಡುವಂತೆ ಮಂಡ್ಯ ಡಿಸಿ ಡಾ.ಕುಮಾರ್‌ ಮನವಿ ಮಾಡಿದ್ದಾರೆ. +ನಾಗಮಂಗಲ ಗಲಭೆಯಿಂದ ಅಪಾರ ಪ್ರಮಾಣ ಕಟ್ಟಡ ಹಾಗೂ ಸರಕುಗಳು ಹಾನಿಯಾಗಿವೆ. ಸರ್ಕಾರ ಈ ವರದಿಯನ್ನು ಆಧರಿಸಿ ಎಷ್ಟು ಪರಿಹಾರವನ್ನು ಘೋಷಣೆ ಮಾಡಲಿದೆಯೋ ಎನ್ನುವುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_15_8.txt b/eesanje/url_46_15_8.txt new file mode 100644 index 0000000000000000000000000000000000000000..29d2e9b5d785a2816bcaa824249972ba1f49e977 --- /dev/null +++ b/eesanje/url_46_15_8.txt @@ -0,0 +1,9 @@ +ದಸರಾಗೆ ಭರದ ಸಿದ್ಧತೆ, ಫಿರಂಗಿಗಳಿಗೆ ಡ್ರೈ ರನ್‌ ಆರಂಭ + +ಮೈಸೂರು,ಸೆ.18-ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯ ದಿನ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸಿ, ರಾಷ್ಟ್ರಗೀತೆ ಮೊಳಗುವಾಗ ಹಾರಿಸುವ 21 ಕುಶಾಲ ತೋಪುಗಳ ತಾಲೀಮಿಗೆ ಬಳಸುವ ಫಿರಂಗಿಗಳ ಡ್ರೈ ರನ್‌ ಆರಂಭಗೊಂಡಿದೆ.ಅರಮನೆ ಆವರಣದ ಆನೆ ಬಾಗಿಲಿನಲ್ಲಿ ಒಂದು ತಿಂಗಳ ಕಾಲ ಈ ತಾಲೀಮು ನಡೆಯಲಿದೆ. +ದಸರಾ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಂದು ಗಣ್ಯರು ಅಂಬಾರಿಗೆ ಪುಷ್ಪಾರ್ಚನೆ ಮಾಡುವಾಗ ರಾಷ್ಟ್ರಗೀತೆ ಹಾಡಲಾಗುತ್ತದೆ. ಈ ಸಂದರ್ಭದಲ್ಲಿ ಅರಮನೆಯ ಪಕ್ಕದ ಮಾರಮ ದೇವಾಲಯದ ಪಾರ್ಕಿಂಗ್‌ ಪ್ರದೇಶದಲ್ಲಿ ರಾಜಪರಂಪರೆಯಂತೆ ಸಾಂಪ್ರದಾಯಿಕ 21 ಸುತ್ತು ಕುಶಾಲತೋಪು ಹಾರಿಸಲಾಗುತ್ತದೆ. ಇದಕ್ಕಾಗಿ ಪ್ರತಿದಿನ ನುರಿತ ಸಿಬ್ಬಂದಿ ತಾಲೀಮು ನಡೆಸುತ್ತಾರೆ. +ಸಿಎಆರ್‌ ಪೊಲೀಸ್‌‍ ತಂಡದ ಎಸಿಪಿ ನೇತೃತ್ವದಲ್ಲಿ, ಪ್ರತಿದಿನ ಎಎಸ್‌‍ಐ ಸಿದ್ದರಾಜು ಮುಂದಾಳತ್ವದಲ್ಲಿ ಅರಮನೆ ಆನೆ ಬಾಗಿಲಿನಲ್ಲಿರುವ 7 ಫಿರಂಗಿಗಳ ಮೂಲಕ ಕುಶಾಲತೋಪು ಸಿಡಿಸುವ ತಾಲೀಮು ನಡೆಯಲಿದೆ. ಮೂರು ಬಾರಿ ಸಿಡಿಮದ್ದು ಸಿಡಿಸುವ ತಾಲೀಮು ಇದಾಗಿದೆ. ಒಂದೊಂದು ಫಿರಂಗಿಗೂ ಐವರು ಸಿಎಆರ್‌ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. +ಸೆ.25ರ ಬಳಿಕ ಮೂರು ಬಾರಿ ಗಜಪಡೆ, ಅಶ್ವಪಡೆ ಮುಂದೆ ಸಿಡಿಮದ್ದು ಸಿಡಿಸಿ ತಾಲೀಮು ನಡೆಸಲು ನಿರ್ಧರಿಸಲಾಗಿದೆ.ಮೊದಲ ತಾಲೀಮಿನಲ್ಲಿ ಒಂದು ಸುತ್ತಿನ ಸಿಡಿಮದ್ದು ಸಿಡಿತದ ಬಳಿಕ ಕೆಲ ನಿಮಿಷ ವಿಶ್ರಾಂತಿ ನೀಡಿ, ಎರಡನೇ ಸುತ್ತಿನ ಸಿಡಿಮದ್ದು ತಾಲೀಮು ನಡೆಸಲಾಗುತ್ತದೆ. ಆನೆ, ಕುದುರೆಗಳ ವರ್ತನೆಯನ್ನು ಪರಿಶೀಲಿಸಿ ಮೂರನೇ ಸುತ್ತಿನ ತಾಲೀಮು ನಡೆಯಲಿದೆ. +ಎರಡನೇ ತಾಲೀಮಿನಲ್ಲಿ ಪ್ರತಿ ಸುತ್ತು ಕುಶಾಲತೋಪು ಸಿಡಿಸುವ ಸಮಯಾವಕಾಶದಲ್ಲಿ ಕಡಿತ ಮಾಡಲಾಗುತ್ತದೆ. ಮೂರನೇ ತಾಲೀಮಿನಲ್ಲಿ ಒಂದೇ ನಿಮಿಷದೊಳಗೆ ಮೂರು ಸುತ್ತಿನ ಸಿಡಿಮದ್ದು ಸಿಡಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು :ನಾಡಹಬ್ಬ ದಸರಾದಲ್ಲಿ ವಿಶ್ವ ವಿಖ್ಯಾತ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗಿದ್ದು, ಅಂತಹ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಗಳಿಗೂ ಅಷ್ಟೇ ಪ್ರಾಮುಖ್ಯ.18 ಬಾರಿ ಅಂಬಾರಿ ಹೊತ್ತ ಆನೆ ದೋಣ ಹಾಗೂ 3 ಬಾರಿ ಅಂಬಾರಿ ಹೊತ್ತ ರಾಜೇಂದ್ರನನ್ನು ಈ ಸಮಯದಲ್ಲಿ ಸರಿಸಲೇಬೇಕಾಗಿದೆ. +ಅಂಬಾರಿಯನ್ನು ಹೊತ್ತು ಯಶಸ್ವಿ ದಸರಾಗೆ ಕೈಜೋಡಿಸಿದ್ದ ಆನೆ ದ್ರೋಣ ಹಾಗೂ ರಾಜೇಂದ್ರ ಇಂದು ನಮೊಂದಿಗಿಲ್ಲದೇ ಇದ್ದರೂ ಅವುಗಳ ನೆನಪು ಮಾತ್ರ ಅಚ್ಚಳಿಯದೆ ಉಳಿದಿದೆ. ದ್ರೋಣ ಹಾಗೂ ರಾಜೇಂದ್ರನ ಸಮಾಧಿಗಳು ಹೆಚ್‌.ಡಿ ಕೋಟೆ ತಾಲೂಕು ಬಳ್ಳೆಹಾಡಿ ಗ್ರಾಮದಲ್ಲಿದ್ದು, ದಸರಾ ಸಮಯದಲ್ಲಿ ಸಮಾಧಿಗಳಿಗೆ ಪೂಜೆ ಸಲ್ಲಿಸಲಾಗುತ್ತದೆ.ರಾಜೇಂದ್ರ ಆನೆಯನ್ನು ಗಂಧದಗುಡಿ ಸಿನಿಮಾದಲ್ಲಿ ಬಳಸಿಕೊಂಡಿದ್ದನ್ನು ಇಲ್ಲಿ ಸರಿಸಿಕೊಳ್ಳಬಹುದಾಗಿದೆ. \ No newline at end of file diff --git a/eesanje/url_46_15_9.txt b/eesanje/url_46_15_9.txt new file mode 100644 index 0000000000000000000000000000000000000000..faf93480c83b5b49a425a0be317204e508e9d784 --- /dev/null +++ b/eesanje/url_46_15_9.txt @@ -0,0 +1,14 @@ +ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ : ಉಪಕುಲಪತಿಗಳ ನೇಮಕಾತಿ ಸರ್ಕಾರದ ಸುಪರ್ದಿಗೆ + +ಬೆಂಗಳೂರು,ಸೆ.18-ಇನ್ನು ಮುಂದೆ ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳ ನೇಮಕಾತಿಯನ್ನು ರಾಜ್ಯ ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲು ಮುಂದಾಗಿದ್ದು, ಈವರೆಗೆ ರಾಜ್ಯಪಾಲರಿಗಿದ್ದ ಅಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. +ರಾಜ್ಯದ ವಿಶ್ವವಿದ್ಯಾನಿಲಯಗಳ ಉಪಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಉಪಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದ್ದರು. ಅದರೆ ಸರ್ಕಾರ ಶಿಫಾರಸ್ಸು ಮಾಡುವ ಹೆಸರುಗಳಿಗೆ ಅಂಕಿತ ಹಾಕುವುದು ಅವರ ಕರ್ತವ್ಯವಾಗಿತ್ತು. ಇದೀಗ ರಾಜ್ಯ ಸರ್ಕಾರ ಉಪಕುಲಪತಿಗಳ ನೇಮಕಾತಿ ವಿಶ್ವವಿದ್ಯಾಲಯದಲ್ಲಿ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದು ಸಚಿವ ಸಂಪುಟದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿಗಳು ನೇಮಕಾತಿ ಮಾಡುವ ವಿಶೇಷ ಅಧಿಕಾರವನ್ನು ಪಡೆಯಲಿದ್ದಾರೆ. +ಮಂಗಳವಾರ ಕಲಬುರಗಿಯಲ್ಲಿ ನಡೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ 2024ಕ್ಕೆ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರವೇ ಕುಲಪತಿ ನೇಮಕಾತಿ ಮಾಡುವ ಅಧಿಕಾರವನ್ನು ಹೊಂದಿದೆ. +ಮಸೂದೆ ಮಂಡನೆ: ಮೂಲಗಳ ಪ್ರಕಾರ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್ನಲ್ಲಿ ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯುವ ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ. +ಈ ಮಸೂದೆಯನ್ನು ಎರಡು ಸದನಗಳಲ್ಲಿ ಮಂಡಿಸಿ ರಾಜ್ಯ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಇನ್ನು ಮುಂದೆ ಉಪಕುಲಪತಿಗಳನ್ನು ಸರ್ಕಾರವೇ ನೇರವಾಗಿ ನೇಮಕಾತಿ ಮಾಡಲಿದೆ. ಹೆಚ್ಚಿನ ಸಂದರ್ಭಗಳಲ್ಲಿ ರಾಜ್ಯಪಾಲರು ಆ ರಾಜ್ಯದ ವಿವಿಗಳ ಪದನಿಮಿತ್ತ ಕುಲಪತಿಗಳಾಗಿರುತ್ತಾರೆ. ಸಚಿವ ಸಂಪುಟದ ಶಿಫಾರಸ್ಸು, ಮಂತ್ರಿ ಪರಿಷತ್ನ ಸಹಾಯ ಮತ್ತು ಸಲಹೆಯೊಂದಿಗೆ ಕಾರ್ಯ ನಿರ್ವಹಿಸಬೇಕು. +ವಿಶ್ವವಿದ್ಯಾನಿಲಯದ ಆಡಳಿತದಲ್ಲಿ ನೇರವಾಗಿ ರಾಜ್ಯಪಾಲರು ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ. ಉಪಕುಲಪತಿ, ಸಿಂಡಿಕೇಟ್ ಸದಸ್ಯರ ನೇಮಕಾತಿ ಸೇರಿದಂತೆ ಹಲವು ವಿಷಯಗಳಲ್ಲಿ ಸರ್ಕಾರದ ಶಿಫಾರಸ್ಸನ್ನು ಅಂಗೀಕರಿಸುವುದು ಇಲ್ಲವೇ ಕಾರಣ ಕೇಳಿ ವಾಪಸ್ ಕಳುಹಿಸುವ ಅಧಿಕಾರವನ್ನು ಹೊಂದಿದ್ದಾರೆ. ಶಿಕ್ಷಣವು ರಾಜ್ಯ ಪಟ್ಟಿಯಲ್ಲಿ ಬರುವುದರಿಂದ ಕೇಂದ್ರ ಮತ್ತು ರಾಜ್ಯಗಳ ಕೊಂಡಿಯಂತೆ ಇವರು ಕೆಲಸ ಮಾಡಬೇಕು. +ವಿವಾದಗಳ ಆಗರ: ಕೇಂದ್ರದಲ್ಲಿ 2014ರಿಂದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಶ್ವವಿದ್ಯಾನಿಲಯಗಳಲ್ಲಿ ರಾಜ್ಯಪಾಲರು ನೇರವಾಗಿ ಇಲ್ಲವೇ ಪರೋಕ್ಷವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸರ್ಕಾರದ ಶಿಫಾರಸ್ಸುಗಳನ್ನೇ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ತಿರಸ್ಕರಿಸಿದ್ದರು. +ಕೇರಳದಲ್ಲಿ 8 ವಿಶ್ವವಿದ್ಯಾನಿಲಯಗಳಿಗೆ ಉಪಕುಲಪತಿಗಳನ್ನು ಅಲ್ಲಿನ ಸರ್ಕಾರ ನೇಮಕ ಮಾಡಿತ್ತು. ಆದರೆ ರಾಜ್ಯಪಾಲ ಅರೀಫ್ ಮೊಹಮದ್ ಖಾನ್ ಅವರು ಕಾರಣ ಕೇಳಿ ವಾಪಸ್ ಕಳುಹಿಸಿದ್ದರು. ಸಿಂಡಿಕೇಟ್ ಸದಸ್ಯರು ಮತ್ತು ಉಪಕುಲಪತಿಗಳ ಪಟ್ಟಿಯನ್ನು ಸರ್ಕಾರ ಕಳುಹಿಸಿದರೆ ರಾಜಭವನದಲ್ಲಿ ಬೇರೊಂದು ಹೆಸರುಗಳ ಪಟ್ಟಿ ಸಿದ್ದವಾಗುತ್ತಿತ್ತು. ಹೀಗಾಗಿ ರಾಜಭವನ ಮತ್ತು ಸರ್ಕಾರದ ನಡುವೆ ಕೇರಳದಲ್ಲಿ ಈಗಲೂ ತಿಕ್ಕಾಟ ನಡೆಯುತ್ತಲೇ ಇದೆ. +ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರ ಆರ್.ಎನ್.ರವಿ ಮತ್ತು ಮುಖ್ಯಮಂತ್ರಿ ಎನ್.ಕೆ.ಸ್ಟಾಲಿನ್ ನಡುವೆ ಪ್ರತಿದಿನ ಒಂದಿಲ್ಲೊಂದು ಸಂರ್ಘ ನಡೆಯುತ್ತಲೇ ಇದೆ. ಭ್ರಷ್ಟಾಚಾರದ ಆರೋಪದ ಮೇಲೆ ಇಡಿಯು ಸಚಿವ ಸೆಂಥಿ ಬಾಲಾಜಿ ಅವರನ್ನು ಬಂಧಿಸಿತ್ತು. +ಪುನಃ ಅವರನ್ನು ಸಂಪುಟಕ್ಕೆ ತೆಗೆದುಕೊಂಡಾಗ ರಾಜ್ಯಪಾಲ ರವಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ ಸೆಂಥಿ ಬಾಲಾಜಿ ಅವರನ್ನು ಸಂಪುಟದಿಂದಲೇ ವಜಾಗೊಳಿಸಿದ್ದರು. ಬಳಿಕ ನ್ಯಾಯಾಲಯದ ಮಧ್ಯಪ್ರವೇಶದಿಂದಾಗಿ ಈ ಸಮಸ್ಯೆ ಸುಖಾಂತ್ಯ ಕಂಡಿತ್ತು. ಹಠಕ್ಕೆ ಬಿದ್ದ ತಮಿಳುನಾಡು ಸರ್ಕಾರ ವಿವಿ ಉಪಕುಲಪತಿಗಳ ನೇಮಕಾತಿಗೆ ರಾಜ್ಯಪಾಲರಿಗಿದ್ದ ಅಧಿಕಾರವನ್ನೇ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಹಿಂಪಡೆದುಕೊಂಡಿತ್ತು. +ಇತ್ತ ಪಶ್ಚಿಮ ಬಂಗಾಳದಲ್ಲೂ ಸಿಎಂ ಮಮತ ಬ್ಯಾನರ್ಜಿ ಮತ್ತು ರಾಜ್ಯಪಾಲ ಸಿ.ವಿ.ಆನಂದ ಬೋಸ್ ನಡುವೆ ಸಂಘರ್ಷ ಈಗಲೂ ನಿಂತಿಲ್ಲ. ಸರ್ಕಾರದ ಪ್ರತಿಯೊಂದು ವಿಷಯದಲ್ಲೂ ಹಸ್ತಕ್ಷೇಪ ಮಾಡುತ್ತಿದ್ದರಿಂದ ರಾಜ್ಯಪಾಲರಿಗಿದ್ದ ಅಧಿಕಾರವನ್ನು ಹಿಂಪಡೆದಿತ್ತು. +ಕಾಕತಾಳೀಯ ಎಂಬಂತೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ. ಈಗ ರಾಜ್ಯಪಾಲರ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಸಿಡಿದೆದ್ದಿದ್ದು ಹಂತ ಹಂತವಾಗಿ ಅಧಿಕಾರವನ್ನು ಕಿತ್ತು ಹಾಕುವ ಅಜೆಂಡಾಕ್ಕೆ ಚಾಲನೆ ಕೊಟ್ಟಿದೆ. \ No newline at end of file diff --git a/eesanje/url_46_160_1.txt b/eesanje/url_46_160_1.txt new file mode 100644 index 0000000000000000000000000000000000000000..b0f4ecd37756036ffd4d75ec8674feada1a948c7 --- /dev/null +++ b/eesanje/url_46_160_1.txt @@ -0,0 +1,7 @@ +ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ನಾರಾಯಣ ಸ್ವಾಮಿ +ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಇಂದಿಲ್ಲಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದ ಸರ್ಕಾರವೇ ಅಲ್ಲ. ಅದು ಹೇಳಿದ್ದು ಒಂದು, ಮಾಡಿದ್ದು ಮತ್ತೊಂದು. ಗ್ಯಾರಂಟಿ ಕಾರ್ಯಕ್ರಮ ಕೊಟ್ಟರು. ಆದರೆ ಅವುಗಳು ಜನರಿಗೆ ತಲುಪಿಸುವ ಕುರಿತು ಗ್ಯಾರಂಟಿ ನೀಡಲಿಲ್ಲ ಎಂದು ಟೀಕಿಸಿದರು. +ದಲಿತ ಸಮುದಾಯಗಳಿಗೆ ಕಾಂಗ್ರೆಸ್ ಸರ್ಕಾರವು ಯಾವುದೇ ಗ್ಯಾರಂಟಿ ನೀಡಲಿಲ್ಲ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ೨೫,೩೮೬ ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ದ್ರೋಹ ಎಸಗಿದೆ ಎಂದರು. ಈ ಪ್ರಶ್ನೆಗೆ ಮುಖ್ಯಮಂತ್ರಿಯಾಗಲೀ, ಉಳಿದವರಾಗಲೀ ಉತ್ತರ ಕೊಡಲು ಸಿದ್ಧರಿಲ್ಲ. ದಲಿತರನ್ನು ಬಡವರನ್ನಾಗಿಯೇ ಉಳಿಸುವ, ಬರೀ ವೋಟ್ಗೆ ಮಾತ್ರ ಬಳಕೆ ಮಾಡಿ, ಗುಲಾಮರನ್ನಾಗಿಸುವುದು ಕಾಂಗ್ರೆಸ್ನ ಕುತಂತ್ರವಾಗಿದೆ. ಇದು ದಲಿತರಿಗೆ ಮಾಡಿದ ಮೋಸ ಎಂದರು. +ಇದು ಲೋಕಸಭೆ ಚುನಾವಣೆ. ಇಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ವಿಚಾರಗಳು ಚರ್ಚೆಗೆ ಬರಬೇಕು. ಆದರೆ ಸಿದ್ಧರಾಮಯ್ಯ ಈ ಚುನಾವಣೆಯನ್ನೂ ರಾಜ್ಯದ ಚುನಾವಣೆ ಎಂದು ಭಾವಿಸಿದ್ದಾರೆ. ದೇಶದ ಬಗ್ಗೆ ಚಕಾರವೆತ್ತದೇ, ಬರೀ ಗ್ಯಾರಂಟಿ ಬಗ್ಗೆ ಮಾತನಾಡುತ್ತಾರೆ ಅಲ್ಲದೇ ಮುಂಜಾನೆಯಿಂದ ಸಂಜೆವರೆಗೂ ಬರೀ ಸುಳ್ಳು ಹೇಳುತ್ತಾರೆ. ಪ್ರಧಾನಿ ಮೋದಿ ವಿರುದ್ಧ ಬರೀ ಅಪಪ್ರಚಾರ ಮಾಡುತ್ತಾರೆ. ಕಾಂಗ್ರೆಸ್ನವರು ದೇಶಕ್ಕಾಗಿ ಏನು ಮಾಡಿದ್ದಾರೆ ಹೇಳಬೇಕು. ಈ ಬಗ್ಗೆ ಮಾತನಾಡದೇ ಕ್ಷುಲ್ಲಕ ವಿಚಾರಗಳನ್ನು ಪ್ರಸ್ತಾಪಿಸಿ, ಬರೀ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ನಿಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಕಾಂಗ್ರೆಸ್ನವರಿಗೆ ಬಿಜೆಪಿಯನ್ನಾಗಲೀ, ಮೋದಿಯನ್ನಾಗಲೀ ಟೀಕಿಸಲು ನೈತಿಕ ಹಕ್ಕಿಲ್ಲ ಎಂದರು. +ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತಾರೆ ಎಂದು ಆರೋಪಿಸುತ್ತಾರೆ. ಆದರೆ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರೇ ಸ್ಪಷ್ಟನೆ ನೀಡಿದ್ದಾರೆ ಎಂದರು.ಕಾಂಗ್ರೆಸ್ನವರಿಗೆ ಹತಾಶೆ: ಸೋಲಿನ ಹತಾಶೆಯಿಂದ ಕಾಂಗ್ರೆಸ್ ನಾಯಕರು ವಿನಾಕಾರಣ ಏನೇನೋ ಬಡಬಡಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎನ್.ಮಹೇಶ ಆರೋಪಿಸಿದರು. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಏಕವಚನದಲ್ಲಿ ಕರೆದಿರುವುದು, ಇನ್ನೋರ್ವ ಕಾಂಗ್ರೆಸ್ ಧುರೀಣ ರಾಜು ಕಾಗೆ ಮೋದಿ ಅವರ ಬಗ್ಗೆ ಅವಳಹೇಳನಕಾರಿ ಮಾತು ಹೇಳಿರುವುದು ಇದಕ್ಕೆ ಸಾಕ್ಷಿ ಎಂದರು. ಯುವಜನರು ಪ್ರೀತಿಯಿಂದ ಮೋದಿ- ಮೋದಿ ಎನ್ನುತ್ತಾರೆ. ಇದು ಹತ್ತು ವರ್ಷ ಸ್ವಚ್ಛ ಆಡಳಿತ ನೀಡಿ ವಿಶ್ವಾಸ ಗಳಿಸಿದ್ದರ ಫಲ ಎಂದರು. +ಸಂವಿಧಾನ ಬದಲಾಯಿಸಲು ಅದೇನು ಪಠ್ಯಪುಸ್ತಕವೇ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ತುರ್ತು ಪರಿಸ್ಥಿತಿ ಸಮಯದಲ್ಲಿ ಸಂವಿಧಾನವನ್ನೇ ಅಮಾನತು ಮಾಡಿ ಅಪಚಾರವೆಸಗಿದೆ ಎಂದು ಆರೋಪಿಸಿದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಡಿಯೋ ತುಣುಕುಗಳು ಅಂತರ್ಜಾಲದಲ್ಲಿ ಪ್ರಸಾರವಾಗದಂತೆ ನಿರ್ಬಂಧ ವಿಧಿಸಬೇಕೆಂದು ಮಹೇಶ್ ಒತ್ತಾಯಿಸಿದರು. +ಮಹೇಂದ್ರ ಕೌತಾಳ, ಬಸವರಾಜ ಅಮ್ಮಿನಭಾವಿ, ಗುರು ಪಾಟೀಲ, ಪರಶುರಾಮ ಪೂಜಾರ ಮೊದಲಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_160_10.txt b/eesanje/url_46_160_10.txt new file mode 100644 index 0000000000000000000000000000000000000000..66724711f9a0fc1812e5ebc856697a6fc22ffeea --- /dev/null +++ b/eesanje/url_46_160_10.txt @@ -0,0 +1,5 @@ +ಮೇ 5ಕ್ಕೆ ನೀಟ್ ಪರೀಕ್ಷೆ : 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಣಿ +ನವದೆಹಲಿ, ಮೇ 2- ವೈದ್ಯಕೀಯ ಕೋರ್ಸ್‍ಗಳ ಸೀಟಿಗಾಗಿ ನಡೆಯಲಿರುವ ನೀಟ್ ಪರೀಕ್ಷೆಗೆ ಈಗಾಗಲೇ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಪಡೆಯಲು ಇಂದು ಅಂತರ್ಜಾಲದಲ್ಲಿ ಅವಕಾಶ ನೀಡಿದ್ದು, ಮೇ 5ರಂದು ಮಧ್ಯಾಹ್ನ 2 ಗಂಟೆಯಿಂದ 5 ಗಂಟೆವರೆಗೆ ಒಂದೇ ಹಂತದಲ್ಲಿ ದೇಶಾದ್ಯಂತ ಪರೀಕ್ಷೆ ನಡೆಯಲಿದೆ. +ಪ್ರಸ್ತುತ ಅಂದಾಜಿನ ಪ್ರಕಾರ, ಸುಮಾರು 23,81,833 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಭಾರತದಾದ್ಯಂತ 571 ನಗರಗಳಲ್ಲಿ ಮತ್ತು ದೇಶದ ಹೊರಗಿನ 14 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಒಡಿಯಾ, ಕನ್ನಡ, ಪಂಜಾಬಿ, ಉರ್ದು, ಮಲಯಾಳಂ, ತೆಲುಗು, ತಮಿಳು ಭಾಷೆ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರಶ್ನೆಪತ್ರಿಕೆ ಇರಲಿದೆ. +ಈಗಾಗಲೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆಯಲು ಅಂತರ್ಜಾಲದಲ್ಲಿ ಒಮ್ಮೆಲೆ ಮುಗಿಬಿದ್ದಿರುವುದರಿಂದ ಸರ್ವರ್ ಕೂಡ ನಿಧಾನಗೊಂಡಿದೆ. ಆದರೂ ಇಂದು ರಾತ್ರಿವರೆಗೂ ಅವಕಾಶ ಕೊಟ್ಟಿರುವುದರಿಂದ ಬಹುತೇಕ ಎಲ್ಲರೂ ಪ್ರವೇಶಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳುವುದು ಅಗತ್ಯವಾಗಿದೆ.ಅಂತರ್ಜಾಲದ ಮೂಲಕ ಪ್ರಶ್ನೆಪತ್ರಿಕೆ ಡೌನ್‍ಲೋಡ್ ಆಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕ ಹಾಗೂ ಆಧುನಿಕ ತಂತ್ರಜ್ಞಾನ ಬಳಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಅತಿ ದೊಡ್ಡ ಪರೀಕ್ಷೆಯನ್ನು ನಡೆಸುತ್ತಿದೆ. +ವೈದ್ಯರಾಗುವ ಕನಸು ಹೊತ್ತು ಲಕ್ಷಾಂತರ ವಿದ್ಯಾರ್ಥಿಗಳು ಈಗ ನೀಟ್ ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ ಈಗ ದೇಶಾದ್ಯಂತ ಕೇವಲ 2 ರಿಂದ 3 ಲಕ್ಷ ಸೀಟ್‍ಗಳು ಮಾತ್ರ ಲಭ್ಯವಿವೆ. ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಸೀಟುಗಳು ಹೆಚ್ಚಾಗುತ್ತಿವೆ. ಅದರ ಜತೆಗೆ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ಹೆಚ್ಚುತ್ತಿದೆ. \ No newline at end of file diff --git a/eesanje/url_46_160_11.txt b/eesanje/url_46_160_11.txt new file mode 100644 index 0000000000000000000000000000000000000000..2be749c02d13106111d63828ef4abf4370d651fd --- /dev/null +++ b/eesanje/url_46_160_11.txt @@ -0,0 +1,5 @@ +ಮತದಾನ ಮುಗಿದರು ನಿಲ್ಲದ ಜಪ್ತಿ : 1.69 ಕೆಜಿ ಚಿನ್ನ ವಶ +ಬೆಂಗಳೂರು,ಮೇ.2- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಗಿದಿದ್ದರೂ ಚಿನ್ನ ಹಾಗೂ ನಗದನ್ನು ವಶಪಡಿಸಿಕೊಳ್ಳುವುದು ಮಾತ್ರ ನಿಂತಿಲ್ಲ. ಆದಾಯ ತೆರಿಗೆ ಇಲಾಖೆಯವರು 1,09,89,064 ರೂ. ಮೌಲ್ಯದ 1.69 ಕೆಜಿ ಚಿನ್ನವನ್ನು ಚಾಮರಾಜಪೇಟೆಯ ಸಾರಸ್ವತ ಬ್ಯಾಂಕ್ ಲಾಕರ್‍ನಲ್ಲಿ ವಶಪಡಿಸಿಕೊಂಡಿದ್ದಾರೆ. +ಹೆಸರಘಟ್ಟ ಮುಖ್ಯರಸ್ತೆಯ ಎಜಿಬಿ ಲೇಔಟ್‍ನಲ್ಲಿ 46 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ಇಲ್ಲಿಯವರೆಗೆ 448.71 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ಈ ಸಂಬಂಧ 2249 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. 2011 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 140.85 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿವೆ. +ಅಬಕಾರಿ ಇಲಾಖೆಯವರು 178.56 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 48.19 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. \ No newline at end of file diff --git a/eesanje/url_46_160_12.txt b/eesanje/url_46_160_12.txt new file mode 100644 index 0000000000000000000000000000000000000000..dd15c5f2865c272266b499585eae3f74983e4d14 --- /dev/null +++ b/eesanje/url_46_160_12.txt @@ -0,0 +1,7 @@ +ಧರ್ಮಸ್ಥಳ: 123 ಜೋಡಿ ದಾಂಪತ್ಯ ಜೀವನಕ್ಕೆ ಪದಾರ್ಪಣೆ +ಬೆಳ್ತಂಗಡಿ, ಮೇ.2- ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಿನ್ನೆ ಮದುವೆ ಮನೆಯ ಸಂಭ್ರಮ-ಸಡಗರ. ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 39 ಜೊತೆ ಅಂತರ್ಜಾತಿಯ ವಿವಾಹ ಸೇರಿದಂತೆ ಒಟ್ಟು 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು. ನಿನ್ನೆ ಬೆಳಿಗ್ಗೆಯಿಂದಲೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರ ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. +ಸಂಜೆ 6 ಗಂಟೆಯಿಂದ ವಧು-ವರ ಜೋಡಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ಸಭಾಭವನಕ್ಕೆ ಹೋದರು. ಮುಹೂರ್ತಕ್ಕೆ ಅರ್ಧ ಗಂಟೆ ಮುಂಚಿತವಾಗಿ ಹೆಗ್ಗಡೆ ದಂಪತಿ ಮತ್ತು ಚಲನಚಿತ್ರ ನಟ ದೊಡ್ಡಣ್ಣ ದಂಪತಿ ಮಂಗಳಸೂತ್ರ ವಿತರಿಸಿದರು. ಆಯಾ ಜಾತಿ-ಮತ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು. ಸಂಜೆ ಗಂಟೆ 6.45ಕ್ಕೆ ಸರಿಯಾಗಿ ಗೋಧೂಳಿಲಗ್ನ ಸುಮುಹೂರ್ತದಲ್ಲಿ ವೇದಿಕೆಯಿಂದ ವೇದ-ಮಂತ್ರ ಘೋಷ ಪಠಣದೊಂದಿಗೆ ವರನು ವಧುವಿಗೆ ಮಂಗಳಸೂತ್ರ ಧಾರಣೆ ಮಾಡಿದರು. +ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು:ಚಲನಚಿತ್ರನಟ ದೊಡ್ಡಣ್ಣ ಮಾತನಾಡಿ, ತಾಯಿ-ತಂದೆ ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ನೀಡಿ ಸಮಾಜದ ಸಜ್ಜನರಾಗಿ, ಉತ್ತಮ ಚಾರಿತ್ರ್ಯವಂತರಾಗಿ ಮತ್ತು ಸಭ್ಯ-ಸುಸಂಸ್ಕøತ ನಾಗರಿಕರಾಗಿ ರೂಪಿಸಬೇಕು. ತನ್ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಬೇಕು ಎಂದು ಚಲನಚಿತ್ರನಟ ದೊಡ್ಡಣ್ಣ ನೂತನ ದಂಪತಿಗಳಿಗೆ ಕಿವಿಮಾತು ಹೇಳಿದರು. +ತಾಯಿ-ತಂದೆ ಮಾಡಿದ ದಾನ-ಧರ್ಮ, ಸತ್ಕಾರ್ಯದ ಪುಣ್ಯ ಅವರ ಮಕ್ಕಳಿಗೂ ಲಭಿಸುತ್ತದೆ. ಯಾವುದೇ ನೀತಿ, ಧರ್ಮ, ಸಂಸ್ಕಾರ ಕಲಿಯಲು ವಯಸ್ಸಿನ ಇತಿ-ಮಿತಿ ಇಲ್ಲ. ರಾಮಾಯಣ ಮತ್ತು ಮಹಾಭಾರತದಂತಹ ಪೌರಾಣಿಕ ಕೃತಿಗಳ ಅಧ್ಯಯನದೊಂದಿಗೆ ಸ್ವಾಧ್ಯಾಯ ಮಾಡಬೇಕು. ದೇವಸ್ಥಾನಕ್ಕೆ ಹೋಗುವಾಗ ಸಂಚಾರಿ ದೂರವಾಣಿ ಕೊಂಡುಹೋಗಬಾರದು. ದೇವರ ಎದುರು ಕಣ್ಣು ಮುಚ್ಚಬಾರಾದು. ತೆರೆದ ಕಣ್ಣುಗಳಿಂದ ಏಕಾಗ್ರತೆಯೊಂದಿಗೆ ದೇವರ ದರ್ಶನ, ಧ್ಯಾನ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.ಪ್ರೀತಿ-ವಿಶ್ವಾಸ, ಪರೋಪಕಾರ ಸೇವಾಕಳಕಳಿ, ಸಾಮಾಜಿಕ ಬದ್ಧತೆ ಮೊದಲಾದ ಮಾನವೀಯಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. +ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಸಾಮೂಹಿಕ ವಿವಾಹ ಅಂದರೆ ಸರಳ ವಿವಾಹ. ಸಾಮೂಹಿಕ ವಿವಾಹದಿಂದಾಗಿ ವರದಕ್ಷಿಣೆ ಪಿಡುಗು ಮತ್ತು ಮದುವೆಗಾಗುವ ದುಂದುವೆಚ್ಚ ಕಡಿಮೆಯಾಗಿದೆ. ನೂತನ ದಂಪತಿಗಳು ಸತ್ಸಂಗ ಮಾಡಿ ಸಂಸಾರವನ್ನು ಹೊಣೆಗಾರಿಕೆ ಮತ್ತು ಜವಬ್ದಾರಿಯಿಂದ ಅರ್ಥಪೂರ್ಣವಾಗಿ ನಿರ್ವಹಿಸಬೇಕು. ಮದುವೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಸಂಸ್ಕಾರಯುತ ಜೀವನ ನಡೆಸಬೇಕು. ಗ್ರಾಮೀಣ ಪ್ರದೇಶವನ್ನು ತ್ಯಜಿಸಿ ನಗರಕ್ಕೆ ವಲಸೆ ಹೋಗುವುದನ್ನು ತಡೆಯಬೇಕು ಎಂದು ಕಿವಿಮಾತು ಹೇಳಿದರು. +ಸಾಮೂಹಿಕ ವಿವಾಹಕ್ಕೆ ಅನೇಕ ಮಂದಿ ದಾನಿಗಳು ಸೀರೆ, ಮಂಗಳಸೂತ್ರ ಹಾಗೂ ಹೂಮಾಲೆಯನ್ನು ಉದಾರವಾಗಿ ದಾನ ನೀಡಿದ್ದಾರೆ. ನಿರೀಕ್ಷೆಗಿಂತಲೂ ಮಿಗಿಲಾಗಿ ದಾನ ಹರಿದುಬರುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಂತಾ ದೊಡ್ಡಣ್ಣ ಮತ್ತು ಸುಪ್ರಿಯಾ ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು. ಹರ್ಷೇಂದ್ರಕುಮಾರ್ ಸ್ವಾಗತಿಸಿದರು. ರತ್ನವರ್ಮ ಜೈನ್ ಧನ್ಯವಾದವಿತ್ತರು. ಶ್ರೀನಿವಾಸ ರಾವ್ ಧರ್ಮಸ್ಥಳ ಮತ್ತು ಪೂಜಾ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು. ನೂತನ ದಂಪತಿಗಳು ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿದರು. \ No newline at end of file diff --git a/eesanje/url_46_160_2.txt b/eesanje/url_46_160_2.txt new file mode 100644 index 0000000000000000000000000000000000000000..8602369fa2e111db800c591e055a1431a9c3c702 --- /dev/null +++ b/eesanje/url_46_160_2.txt @@ -0,0 +1,9 @@ +ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ +ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ಅವರು, ದಲಿತರು, ಹಿಂದುಳಿದ ವರ್ಗದವರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡುವವರು ನಕ್ಸಲರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಸಂವಿಧಾನದ ಮೇಲೆ ಆಕ್ರಮಣ ಮಾಡಲಾಗಿದೆ ಎಂದು ಹೇಳಿದರು. +ಹಾಸನದ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಇದು ಒಂದು ಲೈಂಗಿಕ ಹಗರಣವಲ್ಲ. ಇದೊಂದು ಸಮೂಹ ಅತ್ಯಾಚಾರ ಪ್ರಕರಣವಾಗಿದೆ. ಅಂತಹ ವ್ಯಕ್ತಿಯ ಪರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದು ಮತಯಾಚನೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರಿಗೆ ನೀಡಿದ ಮತ ನನಗೆ ನೀಡಿದಂತೆ ಎಂದು ಹೇಳಿದ್ದಾರೆ. ಈ ಕಾರಣಕ್ಕಾಗಿ ಪ್ರಧಾನಿ ಮತ್ತು ಬಿಜೆಪಿಯವರು ರಾಜ್ಯ ಮತ್ತು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. +ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು. ಆದರೂ ಆತನೊಂದಿಗೆ ಪ್ರಧಾನಿ ವೇದಿಕೆ ಹಂಚಿಕೊಂಡಿದ್ದಾರೆ. ಮತಯಾಚನೆ ಮಾಡಿದ್ದಾರೆ. ಈ ಮೂಲಕ ದೇಶದ ಪ್ರತಿಯೊಬ್ಬ ಮಹಿಳೆಗೂ ಅಪಮಾನ ಮಾಡಿದ್ದಾರೆ. ಇದಕ್ಕಾಗಿ ನರೇಂದ್ರ ಮೋದಿ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರೂ ದೇಶದ ಮಹಿಳೆಯರಿಗೆ ಕೈ ಮುಗಿದು ತಲೆಬಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. +ಜಗತ್ತಿನಲ್ಲೇ ಇಂತಹ ಘಟನೆಯನ್ನು ನೋಡಿರಲಿಲ್ಲ. ವಿಶ್ವದಲ್ಲೇ ಸಮೂಹ ಅತ್ಯಾಚಾರಿಯ ಪರವಾಗಿ ಪ್ರಧಾನಿ ಮತಯಾಚಿಸಿದ್ದಾರೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಬಿಜೆಪಿಯವರಿಗೆ ಅಧಿಕಾರ ಬೇಕು ಎಂದಾದರೆ ಅವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಇದು ಅವರ ಸಿದ್ಧಾಂತ ಕೂಡ ಎಂದು ಕಿಡಿಕಾರಿದರು. +ಪ್ರಧಾನಿಯವರ ಬಳಿ ಗುಪ್ತಚರ ಸಂಸ್ಥೆ, ವಿದೇಶಾಂಗ ಸಚಿವಾಲಯ ಸೇರಿದಂತೆ ಹಲವಾರು ಸಂಸ್ಥೆಗಳಿದ್ದರೂ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶಕ್ಕೆ ಪರಾರಿಯಾಗಲು ಅವಕಾಶ ಮಾಡಿಕೊಟ್ಟಿದ್ದಾರೆ. ನಮ್ಮ ಸರ್ಕಾರ ಈ ಹಗರಣದಲ್ಲಿ ನಿಷ್ಪಕ್ಷಪಾತವಾದ ಕ್ರಮಗಳನ್ನು ಕೈಗೊಂಡು ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಬದ್ಧವಾಗಿದೆ. ಜನರು ಬದಲಾವಣೆ ಬಯಸುವ ಸಮಯ ಬಂದಿದೆ ಎಂದರು. +ಕಳೆದ 10 ವರ್ಷಗಳಿಂದಲೂ ಕೇವಲ 22 ಜನರಿಗಾಗಿ ಮೋದಿ ಕೆಲಸ ಮಾಡಿದ್ದಾರೆ. ಬಜೆಟ್‍ನ ಹಣವನ್ನು ಅದಾನಿ ಅಂಬಾನಿಯಂತಹ ಜನರ ಜೇಬಿಗೆ ಹಾಕಿದ್ದಾರೆ. ಅವರ 16 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದಾರೆ. ಮೋದಿ ಕೆಲವೇ ವ್ಯಕ್ತಿಗಳನ್ನು ಕೋಟ್ಯಾೀಶರರನ್ನಾಗಿ ಮಾಡುತ್ತಿದ್ದರೆ, ನಮ್ಮ ಉದ್ದೇಶ ದೇಶದ ಪ್ರತಿಯೊಬ್ಬರನ್ನೂ ಲಕ್ಷಾಪತಿಗಳನ್ನಾಗಿ ಮಾಡುವುದು ಎಂದು ಹೇಳಿದರು. +ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಗೃಹಲಕ್ಷ್ಮಿಯ ಮಾದರಿಯಲ್ಲೇ ರಾಷ್ಟ್ರಮಟ್ಟದಲ್ಲಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ನಾವು ಅಕಾರಕ್ಕೆ ಬರುತ್ತಿದ್ದಂತೆ ಇದನ್ನು ಅನುಷ್ಠಾನಕ್ಕೆ ತಂದು ದೇಶದ ಪ್ರತಿ ಬಡ ಕುಟುಂಬಕ್ಕೂ ಆರ್ಥಿಕ ನೆರವು ನೀಡಲು ಈಗಾಗಲೇ ಪಟ್ಟಿ ಸಿದ್ಧಗೊಳಿಸಲಾಗುತ್ತಿದೆ. ಪ್ರತಿ ಕುಟುಂಬದಿಂದಲೂ ಒಬ್ಬ ಮಹಿಳೆಯ ಹೆಸರನ್ನು ಪಡೆದುಕೊಳ್ಳಲಾಗುತ್ತಿದ್ದು, ಆಕೆಯ ಖಾತೆಗೆ ವರ್ಷಕ್ಕೆ 1 ಲಕ್ಷ ರೂ.ಗಳನ್ನು ಪ್ರತಿ ತಿಂಗಳು 8,500 ರೂ.ಗಳನ್ನು ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸಲಾಗುವುದು. ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿಯ ಫಲಾನುಭವಿಗಳಿಗೆ ವಾರ್ಷಿಕ 24 ಸಾವಿರ ರೂ.ಗಳ ಜೊತೆಗೆ ಮಹಾಲಕ್ಷ್ಮಿಯ 1 ಲಕ್ಷ ರೂ. ಸೇರಿ ವರ್ಷಕ್ಕೆ 1.24 ಲಕ್ಷ ರೂ. ಪಾವತಿಯಾಗಲಿದೆ ಎಂದು ಹೇಳಿದರು. +ಯುವನಿಧಿ ಯೋಜನೆಯಡಿ ರಾಜ್ಯದ ಪದವೀಧರ ನೌಕರರಿಗೆ ತಿಂಗಳಿಗೆ 3 ಸಾವಿರ ರೂ. ದೊರೆಯುತ್ತಿದೆ. ರಾಷ್ಟ್ರಮಟ್ಟದಲ್ಲಿ ಯುವನ್ಯಾಯ ಯೋಜನೆಯಡಿ ವರ್ಷಕ್ಕೆ ಒಂದುಲಕ್ಷ ರೂ. ನೀಡಲಾಗುತ್ತಿದ್ದು, ತರಬೇತಿಯೊಂದಿಗೆ ಉದ್ಯೋಗ ಖಾತ್ರಿ ಕೂಡ ಒದಗಿಸಲಾಗುವುದು ಎಂದರು. \ No newline at end of file diff --git a/eesanje/url_46_160_3.txt b/eesanje/url_46_160_3.txt new file mode 100644 index 0000000000000000000000000000000000000000..cc05ba9e445b1142bc0317c6f11dd01f78a687a9 --- /dev/null +++ b/eesanje/url_46_160_3.txt @@ -0,0 +1,10 @@ +ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್ +ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಮಂತ್ರಿ ಗಳನ್ನು ಯಾಕೆ ಎಳೆದು ತರುತ್ತೀರಿ ಎಂಬ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದರು.ಪ್ರಧಾನಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪ್ರಧಾನಿಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. +ಪ್ರಜ್ವಲ್ ಬಂಧಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಲಿ ಎಂದು ಆರ್.ಅಶೋಕ್ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕರು ಬೇರೆ ವಿಚಾರಗಳಲ್ಲಿ ವಾಗ್ದಾಳಿ ಮಾಡುತ್ತಿದ್ದವರು ಈ ಪ್ರಕರಣಗಳಲ್ಲಿ ಏಕೆ ಮಾತನಾಡುತ್ತಿಲ್ಲ ಎಂದು ತಿರುಗೇಟು ನೀಡಿದರು. +ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಆರ್.ಅಶೋಕ್‍ರವರು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಬೇಕು. ಸಂತ್ರಸ್ತರನ್ನು ಏಕೆ ಭೇಟಿ ಮಾಡುತ್ತಿಲ್ಲ? ಎಂದು ಪ್ರಶ್ನಿಸಿದರು. +ಪ್ರಜ್ವಲ್ ಅವರನ್ನು ಏಕೆ ಬಂಧಿಸಿಲ್ಲ ಎಂಬ ಬಗ್ಗೆ ಗೃಹ ಸಚಿವರು ಉತ್ತರ ನೀಡುತ್ತಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಪ್ರಜ್ವಲ್ ಗೆದ್ದಿದ್ದಾರೆ ಎಂದು ಆರ್.ಅಶೋಕ್ ಹೇಳಿದ್ದಾರೆ. ಅದು ನಿಜ. ಅವರು ನಮ್ಮ ಬೆಂಬಲದಿಂದ ಗೆದ್ದಿರುವ ಕಾರಣದಿಂದಾಗಿಯೇ ಪ್ರಶ್ನೆ ಮಾಡುತ್ತಿದ್ದೇವೆ. ಈಗ ನಿಮ್ಮ ಬೆಂಬಲದೊಂದಿಗೆ ಅಭ್ಯರ್ಥಿ ಯಾಗಿದ್ದಾರಲ್ಲ ನೀವು ಏಕೆ ಮೌನ ವಾಗಿದ್ದೀರಿ? ಎಂದು ಪ್ರಶ್ನಿಸಿದರು. +ಹಾಸನದ ಪೆನ್‍ಡ್ರೈವ್‍ಗಳ ವಿಚಾರದಲ್ಲಿ ಕಾರ್ತಿಕ್ ಎಂಬಾತನನ್ನು ಮಲೇಷಿಯಾದಲ್ಲಿ ಅಡಗಿಸಿಡಲಾಗಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. ನಮ್ಮ ಬ್ರದರ್ ಆ ರೀತಿ ಹೇಳಿದ್ದಾರಲ್ಲಾ ಹಾಗಿದ್ದರೆ ಎಲ್ಲಾ ವಿಚಾರಗಳೂ ಗೊತ್ತಿರಬೇಕು. ಕೇಂದ್ರ ಸರ್ಕಾರಕ್ಕೆ ಹೇಳಿ ಕಾರ್ತಿಕ್‍ನನ್ನು ವಿದೇಶಕ್ಕೆ ಕಳುಹಿಸಿದವರ್ಯಾರು ಎಂಬ ಮಾಹಿತಿ ಪಡೆದುಕೊಳ್ಳಲಿ ಮತ್ತು ಆತನನ್ನು ಕರೆತರಲಿ ಎಂದು ಸವಾಲು ಹಾಕಿದರು. +ಕಾರ್ತಿಕ್‍ರನ್ನು ವಿದೇಶಕ್ಕೆ ಕಳುಹಿಸಲು ನನಗೆ ತಲೆ ಕೆಟ್ಟಿದೆಯಾ? ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಯಾರನ್ನೋ ತೋಟದಲ್ಲಿ ಬಚ್ಚಿಟ್ಟು ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಅವರಿಗೆ ಆ ಅವಶ್ಯಕತೆ ಇದೆ. ಬಿಜೆಪಿ ನಾಯಕರಿಗೆ ಪೆನ್ ಡ್ರೈವ್ ನೀಡಿರುವುದಾಗಿ ಕಾರ್ತಿಕ್ ಹೇಳಿದ್ದಾನೆ. ಇನ್ನು ವಕೀಲ ದೇವರಾಜೇಗೌಡರು ನನಗೆ ಕುಮಾರಣ್ಣ ಹಾಗೂ ಗೌಡರ ಮೇಲೆ ಅಭಿಮಾನವಿದೆ. ಹೀಗಾಗಿ ಅವರನ್ನು ಭೇಟಿ ಮಾಡಿ ಎಲ್ಲಾ ವಿಷಯ ತಿಳಿಸಿದ್ದೆ ಎಂದು ಹೇಳಿದ್ದಾರೆ. +ಎರಡನೇ ಹಂತದ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು, ಈ ಐದೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ. ಈ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಕೊಟ್ಟಿರುವ ಕೊಡುಗೆ ಬಗ್ಗೆ ಜನರಿಗೆ ಅರಿವಿದೆ. ಅವರ ಸೋಲಿಗೆ ನಾವೆಲ್ಲೆ ಪಶ್ಚಾತಾಪ ಪಟ್ಟಿದ್ದೇವೆ. ಹೀಗಾಗಿ ಅವರ ಸೇವೆಗೆ ಈ ಭಾಗದ ಜನ ಉಪಕಾರ ಸ್ಮರಣೆ ಮಾಡಲಿದ್ದಾರೆ ಎಂದು ತಿಳಿಸಿದರು. +ಸುರಪುರ ಉಪಚುನಾವಣೆಯಲ್ಲಿ ಕಾಂಗ್ರೆಸ್ 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಾತಾವರಣವಿದೆ. ಕಳೆದ ಚುನಾವಣೆ ಬಳಿಕ ಬಿಜೆಪಿ ಅಭ್ಯರ್ಥಿ ತಮ್ಮ ಕಾರ್ಯಕರ್ತರಿಗೆ 2 ವರ್ಷ ನಾನು ಇರುವುದಿಲ್ಲ, ಯಾರೂ ಮನೆಕಡೆ ಬರಬೇಡಿ ಎಂದು ಹೇಳಿದ್ದರು. ಇನ್ನು ಅವರ ಕಾರ್ಯಕರ್ತರೂ ಕೂಡ ನಮ್ಮ ಪಾಲಿಕೆ ಚುನಾವಣೆ ಸಮಯದಲ್ಲಿ ಅವರೇ ನಮ್ಮ ಜೊತೆ ಇರಲಿಲ್ಲ. ಈಗ ನಾವು ಯಾಕೆ ಅವರ ಪರ ಚುನಾವಣೆ ಮಾಡಬೇಕು ಎಂದು ಸುಮ್ಮನಿದ್ದಾರೆ ಎಂದು ಜನ ತಿರುಗೇಟು ನೀಡುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_160_4.txt b/eesanje/url_46_160_4.txt new file mode 100644 index 0000000000000000000000000000000000000000..e5f425520e75fe84edc28b83f84383d7d8ef1c35 --- /dev/null +++ b/eesanje/url_46_160_4.txt @@ -0,0 +1,6 @@ +ರಾಜಕೀಯ ಲಾಭಕ್ಕೆ ಷಡ್ಯಂತ್ರ : ಸೂರಜ್ ರೇವಣ್ಣ +ಹಾಸನ,ಮೇ.2- ಹಾಸನದ ಪೆನ್‍ಡ್ರೈವ್ ಪ್ರಕರಣದಲ್ಲಿ ರಾಜಕೀಯ ಲಾಭಕ್ಕಾಗಿ ಷಡ್ಯಂತ್ರ ನಡೆಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಆರೋಪಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ದುರ್ಬಲಗೊಳಿಸಬೇಕು. ಸಂಕಷ್ಟಕ್ಕೆ ಸಿಲುಕಿಸಬೇಕೆಂದು ಷಡ್ಯಂತ್ರ ನಡೆಸಲಾಗಿದೆ. ರಾಜಕೀಯಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂದರು. +ರೇವಣ್ಣ ಅವರ ವಿರುದ್ಧ ಸಾವಿರ ಎಫ್‍ಐಆರ್ ಬೇಕಾದರೂ ಹಾಕಲಿ, ಅವರೇನು ಎಂಬುದು ಜನರಿಗೆ ಗೊತ್ತಿದೆ, ರೇವಣ್ಣ ಅವರು ಏನೆಂಬುದು ಹಾಸನ ಜಿಲ್ಲೆ ಹಾಗೂ ಹೊಳೆನರಸೀಪುರ ತಾಲೂಕಿನ ಜನರಿಗೆ ಗೊತ್ತಿದೆ. ರೇವಣ್ಣ ಅವರು ಈ ರೀತಿಯ ರಾಜಕಾರಣ ಮಾಡಿದವರಲ್ಲ. ರಾಜಕೀಯ ದುರುದ್ದೇಶದಿಂದ ಈ ರೀತಿಯ ಮಾಡಲಾಗುತ್ತಿದೆ. ತಮ್ಮ ಕುಟುಂಬದ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. +ಪೆನ್‍ಡ್ರೈವ್ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರವಾಗಿ ಸರ್ಕಾರ ಎಸ್‍ಐಟಿ ತನಿಖೆಗೆ ವಹಿಸಿದೆ. ಅದರ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ . ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಯಾವ ಮಾಹಿತಿಯೂ ಇಲ್ಲ ಎಂದು ಹೇಳಿದರು. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಹಾಸನದಲ್ಲಿ ಯಾವುದೇ ಪ್ರತಿರೋಧವಿಲ್ಲ ಎಂದರು. ಯಾರು ಏನು ಬೇಕಾದರೂ ಹೇಳಲಿ, ತನಿಖೆಯ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದರು. +ಜೆಡಿಎಸ್ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ, ನಿನ್ನೆ ಕೂಡ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿದ್ದೇವೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಬಗ್ಗೆ ಸೂರಜ್, ಯಾರು ಏನು ಬೇಕಾದರೂ ಮಾಡಿಕೊಳ್ಳಲಿ, ಎಸ್‍ಐಟಿ ರಚನೆಯಾಗಿದೆ, ಅದು ಯಾವ ಉದ್ದೇಶಕ್ಕೋಸ್ಕರ ರಚನೆಯಾಗಿದೆ, ಅದರಲ್ಲಿ ಏನು ಸಾಬೀತಾಗುತ್ತದೋ ಕಾದು ನೋಡೋಣ ಎಂದರು. +ಡಿ.ಕೆ.ಶಿವಕುಮಾರ್‍ರವರನ್ನು ಜನವರಿಯಲ್ಲಿ ಅನುದಾನ ಹಾಗೂ ಎಲ್‍ಓಸಿ ವಿಷಯವಾಗಿ ನಮ್ಮ ಜಿಲ್ಲೆಯ ಪ್ರತಿನಿಧಿಯಾಗಿ ಭೇಟಿ ಮಾಡಿದ್ದೆ. ಈಗ ಹೇಗೆ ಭೇಟಿ ಮಾಡಲು ಸಾಧ್ಯ? ಕಳೆದ ಒಂದೂವರೆ ತಿಂಗಳಿನಿಂದ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದೆವು, ಬೆಂಗಳೂರಿನ ಕಡೆ ಹೋಗಿಲ್ಲ, ಡಿ.ಕೆ.ಶಿವಕುಮಾರ್‍ರನ್ನಷ್ಟೇ ಅಲ್ಲ ಬೇರೆ ಯಾವ ರಾಜಕಾರಣಿಯನ್ನೂ ಭೇಟಿಯಾಗುವ ಸಂದರ್ಭ ಬಂದಿಲ್ಲ. ಈ ಹಿಂದೆ ನಮ್ಮ ಜಿಲ್ಲೆ ಅಭಿವೃದ್ಧಿಯ ವಿಚಾರವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ಹೇಳಿದರು. \ No newline at end of file diff --git a/eesanje/url_46_160_5.txt b/eesanje/url_46_160_5.txt new file mode 100644 index 0000000000000000000000000000000000000000..52bc8da01b5296bcff237dafdc9e486d39f1cb46 --- /dev/null +++ b/eesanje/url_46_160_5.txt @@ -0,0 +1,7 @@ +ರಾಜಕೀಯ ಲೆಕ್ಕಾಚಾರ ಚರ್ಚೆ ಜೊತೆಗೆ ಬೆಟ್ಟಿಂಗ್ ಭರಾಟೆ +ಬೆಂಗಳೂರು,ಮೇ.2- ಇದೇ ಮೇ 7 ರಂದು ಚುನಾವಣೆ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದ್ದರೆ, ಈಗಾಗಲೇ ಚುನಾವಣೆ ಮುಗಿದಿರುವ 14 ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರದ ಜೊತೆಗೆ ಬೆಟ್ಟಿಂಗ್ ಭರಾಟೆಯೂ ಜೋರಾಗಿದೆ. ಚುನಾವಣೆ ಮುಗಿದ ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಈಗ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. +ಹಲವು ಹೈ ವೋಲ್ಟೇಜ್ ಕ್ಷೇತ್ರಗಳಲ್ಲಿ ಬೆಟ್ಟಿಂಗ್‍ಗಳ ಚರ್ಚೆಯೂ ಜೋರಾಗಿದೆ. ಜನರು ಇನ್ನೂ ಮತದಾನದ ಗುಂಗಿನಿಂದ ಹೊರಬಂದಂತಿಲ್ಲ. ಪಾರ್ಕ್, ಹೋಟೆಲ್, ಅಂಗಡಿ, ಬಸ್ ನಿಲ್ದಾಣ, ಆಸ್ಪತ್ರೆ, ಜನನಿಬಿಡ ಪ್ರದೇಶಗಳು ಎಲ್ಲಾ ಕಡೆಯೂ ಚುನಾವಣೆಯ ಮಾತುಗಳೇ, ಸೋಲು-ಗೆಲುವಿನ ಲೆಕ್ಕಾಚಾರಗಳೇ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ. ಮೈತ್ರಿ ಅಭ್ಯರ್ಥಿಯ ಗೆಲುವು ಖಚಿತ ಎಂಬ ಚರ್ಚೆಗಳೇ ನಡೆದಿವೆ. +ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ, ಹೆಚ್ಚು ಮತದಾನವಾಗಿರುವ ಕ್ಷೇತ್ರಗಳಲ್ಲಿ ಯಾವ ಪಕ್ಷ ಗೆಲ್ಲಲಿದೆ, ಯಾವ ಅಭ್ಯರ್ಥಿ ಈ ಬಾರಿ ಫೇವರಿಟ್ ಎಂಬ ಚರ್ಚೆಗಳ ಜೊತೆಗೆ ಜೂನ್ 4 ರಂದು ಪ್ರಕಟವಾಗುವ ಫಲಿತಾಂಶಕ್ಕೆ ಬಾಜಿ ಕಟ್ಟುವುದು ಕೂಡ ಕಂಡುಬರುತ್ತಿದೆ. ಯಾವ ಕ್ಷೇತ್ರಗಳಲ್ಲಿ ಜೋರಾಗಿ ಚುನಾವಣೆ ನಡೆದಿದೆ, ಯಾರ್ಯಾರು ಎಷ್ಟೆಷ್ಟು ಹಣ ಹಂಚಿದರು, ಎಲ್ಲೆಲ್ಲಿ ಕಡಿಮೆ ಮತದಾನ ಆಗಿದೆ, ಯಾರು ಗೆಲ್ಲಬಹುದು, ಯಾರು ಸೋಲಬಹುದು… ಇತ್ಯಾದಿ ಚರ್ಚೆಗಳು ಎಲ್ಲಾ ಕಡೆ ಕೇಳಿಬರುತ್ತಲೇ ಇವೆ. +ಬೆಳಿಗ್ಗೆ ವಾಕ್ ಮಾಡುವ ಪ್ರದೇಶಗಳಿಂದ ಹಿಡಿದು ರಾತ್ರಿ ನಿದ್ದೆ ಮಾಡುವವರೆಗೂ ಕೂಡ ರಾಜಕೀಯದ್ದೇ ಚರ್ಚೆ. ಹೈ ಪ್ರೊಫೈಲ್ ಕ್ಷೇತ್ರಗಳಾದ ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ, ತುಮಕೂರು ಕ್ಷೇತ್ರಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿಯೇ ಸಾಗಿದೆ. ಜೊತೆಗೆ ಬಾಜಿ ಕಟ್ಟುವುದೂ ಕೂಡ ಹೆಚ್ಚಾಗಿ ಕಂಡುಬರುತ್ತಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್ ಅವರು ಗೆಲ್ಲುತ್ತಾರೆ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸಿದರು. ಸುರೇಶ್ ಸೋಲಲು ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ಹಲವರದ್ದಾಗಿದೆ. ಈ ನಿಟ್ಟಿನಲ್ಲಿ ಬಹುತೇಕ ಕಡೆ ಚರ್ಚೆಗಳು ಸಾಗಿವೆ. +ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲೂ ಕೂಡ ರಾಜಕೀಯ ಲೆಕ್ಕಾಚಾರಗಳು, ಸೋಲು-ಗೆಲುವಿನ ಮಾತುಕತೆಗಳೇ ನಡೆಯುತ್ತಿವೆ. ಮಳೆ ಬಂದಿಲ್ಲ. ಬೇಸಿಗೆ ವಿಪರೀತವಾಗಿದೆ. ರೈತಾಪಿ ವರ್ಗ ಸೇರಿದಂತೆ ಜನರಿಗೆ ಕೆಲಸವೂ ಕಡಿಮೆ. ಈಗ ರಾಜಕೀಯ ಚರ್ಚೆಗೆ ವೇದಿಕೆಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಎನ್‍ಡಿಎ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆ ಇದ್ದು, ಭಾರೀ ಪ್ರಚಾರ, ಜಿದ್ದಾಜಿದ್ದಿನ ಪೈಪೋಟಿ ನಡೆಯಿತು.ಬೃಹತ್ ಸಮಾವೇಶಗಳು, ರೋಡ್ ಶೋ, ರ್ಯಾಲಿಗಳ ಮೂಲಕ ಶಕ್ತಿ ಪ್ರದರ್ಶನ ಮಾಡಲಾಯಿತು. ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್‍ನ ಭಾರೀ ಸಮಾವೇಶಗಳು ನಡೆದವು. ಹಲವು ಪಕ್ಷೇತರರು ಕಣದಲ್ಲಿ ಉಳಿದರೆ ಇನ್ನೂ ಕೆಲವರು ಚುನಾವಣೆಗೂ ಮುನ್ನವೇ ಕಣದಿಂದ ಹಿಂದೆ ಸರಿದರು. ಹೀಗಾಗಿ ಚುನಾವಣೆಯಲ್ಲಿ ಎನ್‍ಡಿಎ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತು. +ಈ ನೇರ ಸ್ಪರ್ಧೆಯಲ್ಲಿ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ತೀವ್ರಗೊಂಡಿದೆ. ರಾಜಕೀಯ ಲೆಕ್ಕಾಚಾರಗಳು ಬಿರುಸಾಗಿವೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಾರ್, ಕ್ಲಬ್, ಹೋಟೆಲ್‍ಗಳಲ್ಲಿ ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ನಡೆಯುತ್ತಿದೆ. ಫಲಿತಾಂಶ ಪ್ರಕಟವಾಗಲು ಇನ್ನೂ 32 ದಿನ ಬಾಕಿ ಇರುವಂತೆಯೇ ಸೋಲು-ಗೆಲುವಿನ ಲೆಕ್ಕಾಚಾರ ಬಿರುಸುಗೊಂಡಿರುವುದರ ಜೊತೆಗೆ ತಮ್ಮತಮ್ಮ ಅಭ್ಯರ್ಥಿಗಳ ಗೆಲುವಿನ ವಿಶ್ವಾಸದ ಬಗ್ಗೆ ಬೆಂಬಲಿಗರು, ಕಾರ್ಯಕರ್ತರು ಬಾಜಿ ಕಟ್ಟುವುದೂ ಕೂಡ ಹೆಚ್ಚಾಗುತ್ತಿದೆ. \ No newline at end of file diff --git a/eesanje/url_46_160_6.txt b/eesanje/url_46_160_6.txt new file mode 100644 index 0000000000000000000000000000000000000000..6768df5c0c375967227c817da123b8ea2e966406 --- /dev/null +++ b/eesanje/url_46_160_6.txt @@ -0,0 +1,3 @@ +ಬಿಸಿಲ ತಾಪ: 2 ಸಾವಿರ ಕೋಳಿಗಳು ಸಾವು +ಕೋಲಾರ, ಮೇ 2- ಮಿತಿ ಮೀರಿದ ಬಿಸಿಲಿನ ತಾಪಕ್ಕೆ ಜನರು ತತ್ತರಿಸಿದ್ದು, ಸಾಕು ಪ್ರಾಣಿಗಳು ಸಹ ಬಿಸಿಲಿನಿಂದ ಬಸವಳಿದಿವೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಎರಡು ಸಾವಿರಕ್ಕೂ ಹೆಚ್ಚು ಕೋಳಿಗಳು ಬಿಸಿಲಿನ ತಾಪದಿಂದ ಬಳಲಿ ಮೃತಪಟ್ಟಿವೆ. +ಮುರುಘನ್ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಬಿಸಿಲಿನಿಂದ ಕೋಳಿಗಳು ಮೃತಪಟ್ಟಿದ್ದು, ಜೀವನೋಪಯಕ್ಕಾಗಿ ಕೋಳಿ ಸಾಕಾಣಿಕೆ ಮಾಡಿಕೊಂಡಿದ್ದ ಮುರುಘನ್ ಕುಟುಂಬ ಕಂಗಾಲಾಗಿದೆ.ತೀವ್ರ ಶಾಖದ ಅಲೆ ಹಾಗೂ ಒಣಹವೆಯಿಂದಾಗಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಕುರಿ, ಕೋಳಿ, ಪಕ್ಷಿಗಳ ಆರೋಗ್ಯದಲ್ಲೂ ಸಹ ಏರುಪೇರಾಗಿ ಸಾವನ್ನಪ್ಪುತ್ತಿರುವುದು ಕಂಡು ಬರುತ್ತಿವೆ. ರಾಜ್ಯಾದ್ಯಂತ ಬಿಸಿ ಗಾಳಿ ಕಾಣಿಸಿಕೊಂಡಿದ್ದು, ವರದಿ ಪ್ರಕಾರ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. \ No newline at end of file diff --git a/eesanje/url_46_160_7.txt b/eesanje/url_46_160_7.txt new file mode 100644 index 0000000000000000000000000000000000000000..289f3046659ee205ae038a56045f74b495dac7f8 --- /dev/null +++ b/eesanje/url_46_160_7.txt @@ -0,0 +1,10 @@ +ಬಿಸಿಲ ಬೇಗೆಗೆ ಜನತೆ ತತ್ತರ..! ಕಲ್ಲಂಗಡಿ, ತಂಪು ಪಾನೀಯಗಳಿಗೆ ಹೆಚ್ಚಿದ ಬೇಡಿಕೆ +ಬಯಲು ಸೀಮೆ ಚಿಕ್ಕಬಳ್ಳಾಪುರ ಜಿಲ್ಲೆ ಸದ್ಯ ಬಿಸಿಲ ನಾಡಾಗಿ ಪರಿವರ್ತನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಬಿಸಿಲ ತಾಪ ಮಾನ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಮೀರಿಸುತ್ತಿದೆ. ಬಿಸಿಲಿನ ತಾಪಮಾನಕ್ಕೆ ಇದ್ದ ಬದ್ದ ಕೆರೆ-ಕಟ್ಟೆ ಕುಂಟೆಗಳು ಬತ್ತಿ ಹೋಗಿವೆ. ಜನಜಾನುವಾರು ಸೇರಿದಂತೆ ಪ್ರಾಣಿ ಪಕ್ಷಿ ಸಂಕುಲಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಬಿಸಿಲ ತಾಪ ತಾಳಲಾಗದೆ ಜನತೆ ಬಾಯಾರಿಕೆ ನೀಗಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ತಂಪು ಪಾನೀಯಗಳಿಗೆ ಮುಗಿಬಿದ್ದಿದ್ದರೂ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ್ದಾರೆ. +ಈ ಹಿಂದಿನ ವರ್ಷಗಳಲ್ಲಿ ಇಷ್ಟೊತ್ತುಗಾಗ್ಲೇ ಒಂದೆರಡು ಬಾರಿ ಮಳೆ ಬಂದು ಭೂಮಿ ತಂಪಾಗುತ್ತಿತ್ತು. ಆದರೆ ಈ ಬಾರಿ ಮೇ ಮಾಹೆ ಬಂದರೂ ದಿನದಿಂದ ದಿನಕ್ಕೆ ಬಿಸಿಲಿನ ಝಳ ಏರಿಕೆಯಾಗುತ್ತಿದೆ. ಜನತೆ ಮನೆಯಿಂದ ಹೊರಗೆ ಬರಲು ಚಿಂತಿಸುವಂತಾಗಿರುವುದು ಒಂದು ಕಡೆಯಾದರೆ, ಮನೆಯಲ್ಲೇ ತಂಪು ಮಾಡಿಕೊಂಡು ಇದ್ದರೂ ತೀವ್ರತರವಾದ ಸೆಕೆಗೆ ಮನುಷ್ಯನ ದೇಹದಿಂದ ಬೆವರು ಇಳಿಯಲಾರಂಭಿಸಿದೆ. ಈ ಹಿಂದೆ ಜಿಲ್ಲೆಯಲ್ಲಿ 26-28 ಡಿಗ್ರಿ ಇದ್ದ ಉಷ್ಣಾಂಶ, ಕೆಲದಿನಗಳಿಂದ ಏಕಾಏಕಿ 36ರಿಂದ 38 ಡಿಗ್ರಿಗೆ ತಲುಪಿದ್ದು, ಬಿಸಿಲಿನ ಧಗೆಗೆ ಜನಜೀವನ ತತ್ತರಿಸಿದೆ. +ಬಿಸಿಲ ಝಳಕ್ಕೆ ರಸ್ತೆಯಲ್ಲಿ ಜನತೆ ಸಂಚರಿಸಲು ಒದ್ದಾಡುವಂತಾಗಿದ್ದು, ಮಹಿಳೆಯರು, ಯುವತಿಯರಲ್ಲದೆ ಪುರುಷರು ಕೂಡ ಛತ್ರಿ ಬಳಸುವ ಸ್ಥಿತಿ ಎದುರಾಗಿದೆ. ಕಾಂಕ್ರಿಟ್ ರಸ್ತೆ, ಕಟ್ಟಡಗಳು ಹಾಗೂ ಮನೆಯ ಚಾವಣಿ ಕಾದ ಕಾವಲಿಯಾಗಿವೆ. ಡಾಂಬರು ರಸ್ತೆಗಳು ಬಿಸಿಲತಾಪ ಉಗುಳುತ್ತಿವೆ. ಏರಿಕೆ ಯಾಗುತ್ತಿರುವ ಬಿಸಿಲ ತಾಪಕ್ಕೆ ಜನತೆ ಬೆಚ್ಚಿ ಬೀಳುವಂತೆ ಮಾಡಿದ್ದು, ವಿದ್ಯುತ್ ಕಡಿತದಿಂದ ಪ್ಯಾನ್, ಎಸಿಗಳು ಕೆಲಸ ಮಾಡದೆ ಮನೆಯ ಒಳಗೂ ಇರಲಾಗದೇ, ಹೊರಗೂ ಬರಲಾಗದೆ ಜನತೆ ಪರಿತಪಿಸುವಂತಾಗಿದೆ. +ಚಿಕ್ಕಬಳ್ಳಾಪುರ-ಕೋಲಾರ – ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊದಲೇ ಹೇಳಿ ಕೇಳಿ ಯಾವುದೇ ನದಿ ನಾಲೆ ಇಲ್ಲದೆ ಬಯಲುಸೀಮೆ ಬರುಡಾದ ಪ್ರದೇಶ ಇದಾಗಿದ್ದು ಎಲ್ಲೆಲ್ಲೂ ಬಿಸಿಲ ಬೇಗೆ ಮಕ್ಕಳಿಂದ ಹಿಡಿದು ವಯಸ್ಕರ ರವರೆಗೂ ತಟ್ಟಿದೆ. ಹಗಲೆಲ್ಲ ಬಿಸಿಲ ಝಳ ತಪ್ಪಿಸಿಕೊಳ್ಳಲು ಪರದಾಡುವ ಜನತೆ, ರಾತ್ರಿಯಾದರೆ ಸಾಕು ಮನೆಯೊಳಗೆ ಮಲಗಲು ಒದ್ದಾಡುವಂತಾಗಿದೆ. ಇನ್ನು ಮನೆಯ ಮೇಲ್ಭಾಗದಲ್ಲಿ ಗಾಳಿ ಬರುತ್ತೆ ಎಂದು ಅಲ್ಲಿ ಮಲಗಿದರೆ ಬೆಳಗ್ಗೆಯಿಂದ ಸಂಜೆವರೆಗೂ ಕಾದ ಕಬ್ಬಿಣದಂತಾಗಿರುವ ಮೇಲ್ಚಾವಣಿಯ ಭಾಗ ಒಂದು ಕಡೆ ಹಬೆಗೆ ತತ್ತರಿಸಿದಂಥಗಿದ್ದಾರೆ. +ಆರೋಗ್ಯ ಇಲಾಖೆಯ ಸೂಚನೆಗಳು:ಬಿಸಿಲಿನ ತಾಪಕ್ಕೆ ಚರ್ಮ ರೋಗ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಜನರಲ್ಲಿ ಉಂಟಾಗಲಿದೆ. ಸ್ನಾಯು ಸೆಳೆತ, ಸನ್ ಸ್ಟ್ರೋಕ್, ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವುದರಿಂದ ಮೂತ್ರಪಿಂಡ, ಹೃದಯ ಸಂಬಂ„ ಕಾಯಿಲೆ. ಬಿಸಿಲ ಬೇಗೆಗೆ ನೀರಿನ ಕೊರತೆಯಿಂದ ಗ್ರಾಮೀಣ ಭಾಗಗಳಲ್ಲಿ ವಾಂತಿ-ಭೇದಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ಅಶುದ್ಧ ನೀರಿನ ಸೇವನೆಯಿಂದ ಕಾಲರಾದಂಥ ರೋಗಗಳು ಹರಡುವ ಭೀತಿ ಎದುರಾಗಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ವೈದ್ಯರನ್ನ ಸಂಪರ್ಕಿಸಿ ಸಲಹೆಗಳನ್ನು ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ„ಕಾರಿ ಡಾ. ಮಹೇಶ್ ಕುಮಾರ್ ಆಗಿಂದಾಗೆ ಪ್ರಕಟಣೆಯ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. +ತಂಪು ಪಾನೀಯಗೆ ಡಿಮ್ಯಾಂಡ್:ಸೂರ್ಯನ ಕಿರಣ ಹೊರಬೀಳುತ್ತಿದ್ದಂತೆ ಆರಂಭವಾಗುವ ಬಿಸಿಲಿನ ಧಗೆ ತಾಳಲಾರದೆ ಜನರು ದೇಹ ತಂಪಾಗಿಸಿಕೊಂಡು ದಾಹ ತಣಿಸಿಕೊಳ್ಳಲು ಕಲ್ಲಂಗಡಿ ಹಣ್ಣು, ಎಳನೀರು, ಮಜ್ಜಿಗೆ, ತಂಪು ಪಾನಿಯ, ಜ್ಯೂಸ್ ಮೊರೆ ಹೋಗುತ್ತಿದ್ದಾರೆ. ಬಿಸಿಲು ಉಂಟು ಮಾಡುವ ದಾಹ, ಬಾಯಾರಿಕೆ ನೀಗಿಸಿಕೊಳ್ಳಲು ಸಾರ್ವಜನಿಕರು ಕಲ್ಲಂಗಡಿ ಹಣ್ಣು ತಿನ್ನಲು ಮುಗಿಬೀಳುತ್ತಿದ್ದು, ಜ್ಯೂಸ್, ಐಸ್ ಕ್ರೀಂಗೆ -ಡಿಮ್ಯಾಂಡ್ ಬಂದಿದೆ. +ಜನದಟ್ಟಣೆ ಇರುವ ಪ್ರದೇಶ, ಬಸ್ ನಿಲ್ದಾಣ, ರಸ್ತೆಬದಿ, ಕಚೇರಿ, ಬಡಾವಣೆ, ಹೀಗೆ ನಗರದ ಅಲ್ಲಲ್ಲಿ ಕಲ್ಲಂಗಡಿ ಹಣ್ಣು ಮಾರುವ ಗಾಡಿಗಳು, ರಾಶಿ, ರಾಶಿ ಕಲ್ಲಂಗಡಿ ಹಣ್ಣುಗಳು ಜನಸಾಮಾನ್ಯರ ಬಾಯಾರಿಕೆ ನೀಗಿಸುತ್ತಿವೆ. ಆದರೂ ಬಿಸಿಲಿನ ತಾಪಮಾನಕ್ಕೆ ತಟ್ಟುಕೊಳ್ಳಲು ಆಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. +ಬಾಯಾರಿಗೆ ತಣಿಸಿ:ಕೆರೆಕಟ್ಟೆಗಳ ಒಡಲು ಬರಿದಾಗಿದ್ದು, ಪ್ರಾಣಿ-ಪಕ್ಷಿಗಳಿಗೆ ತಿನ್ನಲು ಆಹಾರ, ಕುಡಿಯಲು ನೀರು ಸಿಗದಂತಾಗಿದೆ. ಪ್ರಾಣಿ-ಪಕ್ಷಿಗಳ ಬಾಯಾರಿಕೆ ನೀಗಿಸಲು ಜನಸಾಮಾನ್ಯರು ತಮ್ಮ ಮನೆಯ ಮಹಡಿ ಮೇಲೆ ಪಕ್ಷಿಗಳಿಗೆ ಕುಡಿಯಲು ನೀರಿಟ್ಟು, ಆಹಾರ ಧಾನ್ಯಗಳನ್ನು ನೀಡುವ ಮೂಲಕ ಜೀವಸಂಕುಗಳ ಉಳಿವಿಗೆ ಶ್ರಮಿಸಬೇಕಿರುವುದು ಮನುಷ್ಯರಾದ ತಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪ್ರಾಣಿ ಪಕ್ಷಿ ಹಾಗೂ ಪರಿಸರ ಪ್ರೇಮಿಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. +#ಎಂ. ಕೃಷ್ಣಪ್ಪ, ಚಿಕ್ಕಬಳ್ಳಾಪುರ \ No newline at end of file diff --git a/eesanje/url_46_160_8.txt b/eesanje/url_46_160_8.txt new file mode 100644 index 0000000000000000000000000000000000000000..e1809793fc371df4ee74678d2414de79a05adbb6 --- /dev/null +++ b/eesanje/url_46_160_8.txt @@ -0,0 +1,4 @@ +ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆ +ಕಲಬುರಗಿ, ಮೇ.2- ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಲಾಡಮುಗುಳಿ ಗ್ರಾಮದಲ್ಲಿ ನಡೆದಿದೆ. ನಿಖಿಲ್ ಪೂಜಾರಿ (23) ಲಾಡಮುಗುಳಿ ಗ್ರಾಮದ ಹೊರವಲಯದಲ್ಲಿನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ. +ಕಳೆದ ನಾಲ್ಕು ದಿನಗಳ ಹಿಂದೆ ಈ ಗ್ರಾಮದಲ್ಲಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಸಮುದಾಯಗಳ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಗಲಾಟೆ ಬಳಿಕ ಊರಿನವರ ಸಮ್ಮುಖದಲ್ಲಿ ರಾಜಿಸಂದಾನ ಮಾಡಲಾಗಿತ್ತು. +ರಾಜಿ ಸಂದಾನದ ಬಳಿಕವೂ ನಿಖಿಲ್ ಪೂಜಾರಿ ಸೇರಿ ಹಲವರ ವಿರುದ್ಧ ಇನ್ನೊಂದು ಗುಂಪು ನರೋಣ ಪೊಲೀಸ್ ಠಾಣೆಗೆ ದೂರು ನೀಡಿತ್ತು. ನಿಖಿಲ್ ಹಾಗೂ ಇತರರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾಗಿದ್ದಕ್ಕೆ ಹೆದರಿಕೊಂಡ ಯುವಕ ನಿಖಿಲ್ ಪೂಜಾರಿ ಗ್ರಾಮದ ಹೊರವಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. \ No newline at end of file diff --git a/eesanje/url_46_160_9.txt b/eesanje/url_46_160_9.txt new file mode 100644 index 0000000000000000000000000000000000000000..e5805e894ed173778f818f8996805d9ada4502de --- /dev/null +++ b/eesanje/url_46_160_9.txt @@ -0,0 +1,3 @@ +ಪರಮೇಶ್ವರ್ ಆಪ್ತನ ಮನೆ ಮೇಲೆ ಐಟಿ ದಾಳಿ +ಬೆಂಗಳೂರು,ಮೇ2- ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಆಪ್ತ ಎಂ.ಸಿ.ವೇಣುಗೋಪಾಲ್ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಇಲ್ಲಿನ ಜೆ.ಪಿನಗರದಲ್ಲಿರುವ ವೇಣುಗೋಪಾಲ್ ಅವರ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಆದಾಯ ತೆರಿಗೆ ಪಾವತಿಸದ ಆರೋಪದಡಿ ಈ ದಾಳಿ ನಡೆಸಲಾಗಿದೆ. +3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳ ಕಾರ್ಯಾಚರಣೆಗೆ ಸಹಕರಿಸಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_161_1.txt b/eesanje/url_46_161_1.txt new file mode 100644 index 0000000000000000000000000000000000000000..f593cac29e7ef56831e303a332f562cb21ea6111 --- /dev/null +++ b/eesanje/url_46_161_1.txt @@ -0,0 +1,6 @@ +ಹುಲಿ ಹತ್ಯೆ: ಅರಣ್ಯ ಇಲಾಖೆಯ ವಾಚರ್ ಬಂಧನ +ಚಿಕ್ಕಮಗಳೂರು, ಮೇ.2- ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಿರುವ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ದಿನಗೂಲಿ ವಾಚರ್ ಆಗಿದ್ದ ಕುಂಡ್ರ ಗ್ರಾಮದ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೂಡಿಗೆರೆ ನ್ಯಾಯಾಲಯದ ಸಮೀಪ ಸುರೇಶ್‍ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. +ಮೂಡಿಗೆರೆ ಸಮೀಪದ ಕುಂಡ್ರ ಎಂಬಲ್ಲಿ ಹುಲಿಯೊಂದನ್ನು ಹತ್ಯೆ ಮಾಡಿರುವ ಸಂಬಂಧ ಮೂಡಿಗೆರೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರನ್ನು ಬಂಧಿಸಲಾಗಿತ್ತು. ಈ ಪ್ರಕಣರದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದ ಸುರೇಶ್ ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ. ಆತನ ಬಂಧನಕ್ಕೆ ಅರಣ್ಯ ಇಲಾಖೆ ಹುಡುಕಾಟ ನಡೆಸಿತ್ತು. +ಸುರೇಶ್ ಮೂಡಿಗೆರೆ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಾನೆ ಎಂಬ ಮಾಹಿತಿ ಮೇರೆಗೆ ಮೂಡಿಗೆರೆ ನ್ಯಾಯಾಲಯದ ಸಮೀಪ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಪಹರೆ ಹಾಕಿದ್ದರು.ಸುಮಾರು 5 ಗಂಟೆಯ ಸಮಯದಲ್ಲಿ ಸುರೇಶ್‍ನನ್ನು ನ್ಯಾಯಾಲಯದ ಸಮೀಪ ವಶಕ್ಕೆ ಪಡೆಯಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಮೂಡಿಗೆರೆ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. +ಇದರೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಆರು ಮಂದಿ ಬಂಧನವಾದಂತಾಗಿದೆ. ಈಗಾಗಲೇ ಬಂಧಿಸಲ್ಪಟ್ಟಿದ್ದ ಐವರು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಈ ಪ್ರಕರಣದ ಆರೋಪಿಯೊಬ್ಬ ಹುಲಿ ಹತ್ಯೆಯ ಬಗ್ಗೆ ಎಳೆ ಎಳೆಯಾಗಿ ಮಾತನಾಡಿರುವ ವಿಡಿಯೋ ಒಂದು ರೆಕಾರ್ಡ್ ಆಗಿದ್ದು ಅದರಲ್ಲಿ ಕುಂಡ್ರ ಸುರೇಶ್ ನೇ ಹುಲಿಯನ್ನು ಬಂದೂಕಿನಿಂದ ಹೊಡೆದಿದ್ದಾನೆ ಎಂದು ಹೇಳಿದ್ದಾನೆ ಎನ್ನಲಾಗಿದೆ. +ಪ್ರಕರಣದ ಒಂದನೇ ಆರೋಪಿಯೆಂದು ಬಂಧಿತರಾಗಿರುವ ಸತೀಶ್ ಅವರ ಬೈಕಿಗೆ ಹುಲಿ ಅಂಗಾಂಗಗಳನ್ನು ಇಟ್ಟು ಅವರನ್ನು ಪ್ರಕರಣದಲ್ಲಿ ಸಿಲುಕಿಸಿರುವ ಬಗ್ಗೆಯೂ ಆತ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_46_161_10.txt b/eesanje/url_46_161_10.txt new file mode 100644 index 0000000000000000000000000000000000000000..9ed9855986d71fc382bc5783bb563174b4243da6 --- /dev/null +++ b/eesanje/url_46_161_10.txt @@ -0,0 +1,5 @@ +ಬರ ಪರಿಹಾರವಿಲ್ಲ, ಗೋಶಾಲೆ ತೆರೆದಿಲ್ಲ, ಮೇವಿನ ಕಿಟ್‌ ವಿತರಿಸಿಲ್ಲ ರೈತ ದ್ರೋಹಿ ಕಾಂಗ್ರೆಸ್ ಸರ್ಕಾರ : ವಿಜಯೇಂದ್ರ +ಬೆಂಗಳೂರು,ಮೇ1-ವಿಪರೀತ ಬರ ಆವರಿಸಿದ್ದರೂ, ಬರ ಪರಿಹಾರ ನೀಡಲಿಲ್ಲ, ಒಂದೂ ಗೋಶಾಲೆ ತೆರೆಯಲಿಲ್ಲ, ಮೇವಿನ ಕಿಟ್‌ ವಿತರಿಸಲಿಲ್ಲ, ರೈತ ದ್ರೋಹಿ ಸರ್ಕಾರಕ್ಕೆ ಶೀಘ್ರವೇ ಜನರಿಂದಲೇ ತಕ್ಕ ಶಾಸ್ತಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. +ಈ ಸಂಬಂಧ ತಮ್ಮ ಅಧಿ ಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ ಏಳು ತಿಂಗಳಿಂದಲೂ ಹಾಲಿನ ಪ್ರೋತ್ಸಾಹ ಧನವನ್ನೂ ನೀಡದೇ ರೈತರಿಗೆ ಖಾಲಿ ಬಕೆಟ್‌ ನೀಡಲು ಹೊರಟಿದ್ದು, ಕಾಂಗ್ರೆಸ್‌ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರಲಾರದು ಎಂದು ಗುಡುಗಿದ್ದಾರೆ. +ಕುಡಿಯುವ ನೀರಿನ ಟ್ಯಾಂಕರ್‌ ಮಾಫಿಯಾಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರ, ಇದೀಗ ತೀವ್ರ ಬರದಿಂದ ಕಂಗೆಟ್ಟಿರುವ ನಾಡಿನ ರೈತರ ಸಂಕಷ್ಟಗಳಿಗೆ ಜೊತೆ ನಿಲ್ಲುವಲ್ಲಿಯೂ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಓಲೈಕೆ ರಾಜಕಾರಣಕ್ಕಾಗಿ ದಲಿತರು ಹಾಗೂ ಹಿಂದುಳಿದವರಿಗೆ ಮೀಸಲಿಟ್ಟ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿದ್ದಾಯಿತು, ರೈತರ ಪ್ರೋತ್ಸಾಹ ಧನವು ಮತ್ಯಾವ ಓಲೈಕೆಗೆ ಬಳಕೆಯಾಗಿದೆಯೋ ತಿಳಿಯದು ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_161_11.txt b/eesanje/url_46_161_11.txt new file mode 100644 index 0000000000000000000000000000000000000000..9d3a842812cd31fc0b243d3662d1a2261db7aea3 --- /dev/null +++ b/eesanje/url_46_161_11.txt @@ -0,0 +1,7 @@ +ರಾಮನಗರ ಶಾಸಕ ವಿಡಿಯೋ ವೈರಲ್, ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ : ಡಿ.ಕೆ.ಸುರೇಶ್‌ +ಬೆಂಗಳೂರು,ಮೇ.1-ರಾಮನಗರದ ಶಾಸಕರಿಗೆ ಸೇರಿದ್ದು ಎಂದು ಹೇಳಲಾದ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ 108 ವಿಡಿಯೋಗಳಿರುತ್ತವೆ, ಎಲ್ಲರದೂ ಇರುತ್ತವೆ, ಸಿಡಿ ಬಾಯ್ಸ್ ಗೆ ಸೇರಿದ ವಿಡಿಯೋಗಳಿಲ್ಲವೇ? ಸಿ.ಪಿ.ಯೋಗೀಶ್ವರ್‌ ಅವರು ಮಠಗಳಿಗೆ ಭೇಟಿ ನೀಡಿದ್ದೇಕೆ ಎಂದು ಗೊತ್ತಿಲ್ಲವೇ? ಮಠದವರು ಖಾಸಗಿಯಾಗಿ ಬಹುಶಃ ವಿಷಯಗಳನ್ನು ಚರ್ಚೆ ಮಾಡಿರಬಹುದು, ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದು ಯಾವ ಕಾರಣಕ್ಕೆ? ಎಂದು ಪ್ರಶ್ನಿಸಿದರು. +ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ವಿಶೇಷ ಕಾನೂನಿನ ಅಗತ್ಯವಿದೆ. ಬ್ಲಾಕ್‌ಮೇಲ್‌ ಮಾಡುವುದು, ಖಾಸಗಿ ಬದುಕಿಗೆ ಧಕ್ಕೆ ತರುವುದು, ಅಧಿಕಾರ ದುರುಪಯೋಗ ಸೇರಿದಂತೆ ಹಲವು ವಿಚಾರಗಳನ್ನೊಳಗೊಂಡಂತೆ ಕ್ರಮ ಕೈಗೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದರು. +ಹಾಸನದ ಪೆನ್‌ಡ್ರೈವ್‌ ಬಹಿರಂಗ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ರವರ ಪಾತ್ರ ಇಲ್ಲ. ಎಚ್‌.ಡಿ.ಕುಮಾರಸ್ವಾಮಿಯವರಿಗೆ ಡಿ.ಕೆ.ಶಿವಕುಮಾರ್‌ರವರ ಹೆಸರು ಹೇಳದಿದ್ದರೆ ಊಟ ಸೇರುವುದಿಲ್ಲ, ತಿಂದಿದ್ದು ಜೀರ್ಣವಾಗುವುದಿಲ್ಲ, ನಿದ್ರೆ ಬರುವುದಿಲ್ಲ. ಪೆನ್‌ಡ್ರೈವ್‌ ಡಿ.ಕೆ.ಶಿವಕುಮಾರ್‌ರವರ ಬಳಿ ಇದ್ದರೆ ಚುನಾವಣೆಗೂ ಮೊದಲೇ ಬಿಡುಗಡೆಯಾಗುತ್ತಿತ್ತು. +ಚುನಾವಣಾ ಸಂದರ್ಭದಲ್ಲಿ ಹಾದಿಬೀದಿಯಲ್ಲಿ ಪೆನ್‌ಡ್ರೈವ್‌ ಸಿಗಲು ಹಾಸನ ಜಿಲ್ಲೆಯ ಸ್ಥಳೀಯ ರಾಜಕಾರಣದ ಕೈವಾಡವಿದೆ. ಜೆಡಿಎಸ್‌ನ ಮೈತ್ರಿ ಪಕ್ಷದ ನಾಯಕರು ಮತ್ತು ಎಚ್‌.ಡಿ.ಕುಮಾರಸ್ವಾಮಿಯವರು ಸೇರಿ ಪೆನ್‌ಡ್ರೈವ್‌ ಅನ್ನು ಬಹಿರಂಗ ಮಾಡಿದ್ದಾರೆ ಎಂದು ಡಿ.ಕೆ.ಸುರೇಶ್‌ ತಿರುಗೇಟು ನೀಡಿದರು. +ಕುಮಾರಸ್ವಾಮಿಯವರು ದಿನಕ್ಕೊಂದು ಹೇಳಿಕೆ ನೀಡಿ ಪ್ರಕರಣದ ಹಾದಿ ತಪ್ಪಿಸುತ್ತಿದ್ದಾರೆ. ಇಲ್ಲಿ ಮೂಲ ಪ್ರಶ್ನೆ ಇರುವುದು ಅನ್ಯಾಯಕ್ಕೊಳಗಾದ 500 ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸುವ ಬಗ್ಗೆ. ಆದರೆ ಕುಮಾರಸ್ವಾಮಿ ಅನಗತ್ಯ ವಿಚಾರಗಳನ್ನು ಚರ್ಚೆ ಮಾಡಿ ಜನರ ಗಮನವನ್ನು ಬೇರೆಡೆ ಸೆಳೆಯುವ ಯತ್ನ ನಡೆಸುತ್ತಿದ್ದಾರೆ. ಇಂತಹ ಯಾವುದೇ ಪ್ರಕರಣಗಳಾದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು. +ಅಧಿ ಕಾರ ದುರುಪಯೋಗ ಮಾಡಿಕೊಂಡು ವಿಡಿಯೋ ಮಾಡಿಕೊಂಡವರು ಮತ್ತು ಅದನ್ನು ಪೆನ್‌ಡ್ರೈವ್‌ ಮೂಲಕ ಬಹಿರಂಗಗೊಳಿಸಿದವರು ಶಿಕ್ಷಾರ್ಹರಾಗಿದ್ದಾರೆ. ಇದು ಒಬ್ಬರಿಗೆ ಸಂಬಂಧಪಟ್ಟ ವಿಚಾರವಲ್ಲ. ನೂಲಿನಂತೆ ಸೀರೆ ಎಂಬ ಮಾತಿದೆ. ಮಹಿಳೆಯರಿಗೆ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದ ಡಿ.ಕೆ.ಸುರೇಶ್‌, ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತುಗೊಳಿಸುವುದು ದೊಡ್ಡ ವಿಷಯವಲ್ಲ. ಜನತಾದಳ ಕುಟುಂಬದ ಪಕ್ಷ. ಬೇಡವಾದಾಗ ಅಮಾನತುಗೊಳಿಸುತ್ತಾರೆ, ಬೇಕಾದಾಗ ಸೇರಿಸಿಕೊಳ್ಳುತ್ತಾರೆ ಎಂದು ಲೇವಡಿ ಮಾಡಿದರು. \ No newline at end of file diff --git a/eesanje/url_46_161_12.txt b/eesanje/url_46_161_12.txt new file mode 100644 index 0000000000000000000000000000000000000000..119c2573affea6ac0f430627f7581666baeb4c2e --- /dev/null +++ b/eesanje/url_46_161_12.txt @@ -0,0 +1,10 @@ +ಸಿಕ್ಕಾಪಟ್ಟೆ ಬಿಸಿಲು : ಪ್ರಚಾರಕ್ಕೆ ಜನರಿಲ್ಲದೆ ರಾಜಕೀಯ ಪಕ್ಷಗಳ ಹರಸಾಹಸ +ಬೆಂಗಳೂರು, ಮೇ.1-ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಕಾವೇರುತ್ತಿರುವುದರ ಜೊತೆಗೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಜನ ನಿರೀಕ್ಷೆಯಂತೆ ಪ್ರಚಾರಕ್ಕೆ ಬರುತ್ತಿಲ್ಲ. +ಬೀದರ್‌, ಕಲಬುರಗಿ, ರಾಯಚೂರು, ವಿಜಯಪುರ ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಹಾವೇರಿ, ಬೆಳಗಾವಿ, ದಾವಣಗೆರೆ, ಚಿಕ್ಕೋಡಿ, ಧಾರವಾಡ, ಉತ್ತರಕನ್ನಡ, ಶಿವಮೊಗ್ಗ ಕ್ಷೇತ್ರಗಳಲ್ಲಿ ನಾಯಕರು ಅಬ್ಬರದ ಪ್ರಚಾರಕ್ಕೆ ದಾಂಗುಡಿ ಇಡುತ್ತಿದ್ದರು. ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನ ಪ್ರಚಾರದ ಸಭೆ, ಮೆರವಣಿಗೆ, ರೋಡ್‌ ಶೋಗಳಲ್ಲಿ ನಿರೀಕ್ಷೆಯಂತೆ ಹೆಚ್ಚಾಗಿ ಪಾಲ್ಗೊಳ್ಳುತ್ತಿಲ್ಲ. +ರಾಜಕೀಯ ಪಕ್ಷಗಳ ನಾಯಕರು ಬೃಹತ್‌ ಸಮಾವೇಶ, ರೋಡ್‌ ಶೋ, ರ್ಯಾಲಿಗಳ ಮೂಲಕ ಶಕ್ತಿ ಪ್ರದರ್ಶನ ಮಾಡಿ ಮತದಾರರನ್ನು ಮತದಾನಕ್ಕೆ ಸಜ್ಜು ಗೊಳಿಸಲು ಮುಂದಾಗಿದ್ದಾರೆ. ಆದರೆ ಬಿಸಿಲಿನ ಧಗೆ ಇದಕ್ಕೆ ನಿರಂತರ ಅಡ್ಡಿಯಾಗುತ್ತಿದೆ. ಬೆಳಗ್ಗೆ 10 ಗಂಟೆಯೊಳಗೆ ಸಭೆ-ಸಮಾರಂಭಗಳನ್ನು ಮಾಡಿ ಮುಗಿಸಬೇಕು. ಇಲ್ಲವೇ ಸಂಜೆ 5.30ರ ನಂತರ ಸಮಾವೇಶ, ರೋಡ್‌ಶೋಗಳನ್ನು ಮಾಡಬೇಕು. ಮಧ್ಯಾಹ್ನದ ವೇಳೆ ಮನೆಯಿಂದ ಹೊರ ಬರಲು ಸಾಧ್ಯವಾಗದಷ್ಟು ಬಿಸಿಲಿನ ಝಳ ಇದೆ. +ಮೊದಲನೇ ಹಂತದ 14 ಕ್ಷೇತ್ರಗಳ ಚುನಾವಣೆಯಲ್ಲಿ ಕೂಡ ತಾಪಮಾನ ಮಿತಿಮೀರಿತ್ತು.ಎರಡನೇ ಹಂತದ ಚುನಾವಣೆಯಲ್ಲೂ ಕೂಡ ತಾಪಮಾನ ಏರಿಕೆಯಾಗಿದ್ದು, ಅಬ್ಬರದ ಪ್ರಚಾರ ಮಾಡಲು ಸಾಧ್ಯವಾಗುತ್ತಿಲ್ಲ. ಬಿಸಿಲಿನ ತೀವ್ರತೆಗೆ ಜನ ಹೈರಾಣಾಗುತ್ತಿದ್ದಾರೆ. +ರಾಯಚೂರು, ಕಲಬುರಗಿ, ಬೀದರ್‌, ಕೊಪ್ಪಳ, ವಿಜಯಪುರ, ಹಾವೇರಿ, ಬಳ್ಳಾರಿ ಮುಂತಾದ ಜಿಲ್ಲೆಗಳಲ್ಲಿ ದಾಖಲೆಯ ತಾಪಮಾನ ಏರಿಕೆಯಾಗಿದೆ. ಹೀಗಾಗಿ ಜನ ಪ್ರಚಾರಕ್ಕೆ ಬರುವುದು ಕಡಿಮೆಯಾಗಿದೆ. ಚುನಾವಣಾ ಪ್ರಚಾರಕ್ಕೆ ಬರುವ ಜನರಿಗೆ ತಂಪಾದ ಮಜ್ಜಿಗೆ, ಪಾನಕ ಪಾನೀಯಗಳ ವ್ಯವಸ್ಥೆ ಮಾಡಬೇಕು, ಬಹಿರಂಗ ಸಭೆಗಳಿಗೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ದೊಡ್ಡ ದೊಡ್ಡ ಪೆಂಡಾಲ್‌ಗಳನ್ನು ನಿರ್ಮಿಸಬೇಕು. +ಬರುವ ಸಭೆ-ಸಮಾರಂಭಗಳಿಗೆ ಬರುವ ಜನ ಬಿಸಿಲಿನ ಧಗೆ ಜಾಸ್ತಿ ಇರುವುದರಿಂದ ಹೆಚ್ಚು ಹೊತ್ತು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅರ್ಧ ಮುಕ್ಕಾಲು ಗಂಟೆಯಲ್ಲೆ ಹೊರಡಲು ಆರಂಭಿಸುತ್ತಾರೆ. ವೇದಿಕೆಯ ಮೇಲೆ ಕುಳಿತ ರಾಜಕೀಯ ಪಕ್ಷಗಳ ಮುಖಂಡರು, ಮಂತ್ರಿ ಮಹೋದಯರು ಬಿಸಿಲಿಗೆ ಚಡಪಡಿಸುತ್ತಿರುವುದು ಕಂಡುಬರುತ್ತಿದೆ. +ಹೆಚ್ಚು ಹೊತ್ತು ಸಭೆಗಳನ್ನು ಕೂಡ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇದು ಬಿಸಿಲಿನ ತಾಪಮಾನ ಕಡಿಮೆಯಾದ ಸಂದರ್ಭದಲ್ಲಿ ಅಂದರೆ ಸಂಜೆ ವೇಳೆ ಸಭೆ-ಸಮಾರಂಭ, ರೋಡ್‌ ಶೋಗಳನ್ನು ಆಯೋಜಿಸಲಾಗುತ್ತಿದೆ. ಇನ್ನು ಮನೆ ಮನೆಗೆ ತೆರಳಿ ಮತಯಾಚನೆ ಮಾಡುವವರು ಕೂಡ ಬೆಳಗ್ಗೆ 7 ರಿಂದ 9 ಗಂಟೆ ಯೊಳಗೆ ಹೋಗಿ ಕರಪತ್ರಗಳನ್ನು ವಿತರಿಸುತ್ತಾರೆ. ಆ ನಂತರ ಸಂಜೆ 5 ರಿಂದ 8 ಗಂಟೆಯ ವರೆಗೆ ಮನೆ ಮನೆ ಮತಯಾಚನೆ ನಡೆಯುತ್ತಿದೆ. +ಒಟ್ಟಾರೆ ಈ ಭಾರಿಯ ಲೋಕಸಬಾ ಚುನಾವಣೆಗೆ ಬಿಸಿಲಿನ ಕಾಟ ತೀವ್ರಗೊಂಡಿದೆ. ನಿರೀಕ್ಷೆಯಂತೆ ಮಳೆ ಬಾರದ ಹಿನ್ನೆಲೆಯಲ್ಲಿ ಬೋರ್‌ವೆಲ್‌, ಬಾವಿ, ಕೆರೆಕಟ್ಟೆಗಳು ಬತ್ತಿ ಹೋಗಿ ನೀರಿನ ಅಭಾವ ಸೃಷ್ಟಿಯಾಗಿದೆ. +ಅಂತರ್ಜಲ ಮಟ್ಟ ಕುಸಿದಿದ್ದು, ರೈತರು, ಸಾರ್ವಜನಿಕರು ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ. ಚುನಾವಣೆ ವೇಳೆಗೆ ಅಥವಾ ಚುನಾವಣೆ ಮುಗಿದ ನಂತರವಾದರೂ ಮಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಜನ ಬಿಸಿಲಿನಲ್ಲಿಯೇ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. \ No newline at end of file diff --git a/eesanje/url_46_161_2.txt b/eesanje/url_46_161_2.txt new file mode 100644 index 0000000000000000000000000000000000000000..82babd84c16c6647eec9e7cf799a451cd21d97b8 --- /dev/null +++ b/eesanje/url_46_161_2.txt @@ -0,0 +1,7 @@ +ಮತದಾನದಲ್ಲೂ ಮಹಿಳೆಯರೇ ಮುಂದು +ಬೆಂಗಳೂರು, ಮೇ2- ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟವಾದ ಬಿಜೆಪಿ-ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಲೋಕಸಭಾ ಚುನಾವಣಾ ಮೊದಲ ಹಂತದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿ ಭೇಷ್ ಎನಿಸಿಕೊಂಡಿದ್ದಾರೆ. ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯ, ಸಂಸ್ಕøತಿ, ವಿಜ್ಞಾನ, ಬಾಹ್ಯಾಕಾಶ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮನಾಗಿ ಸ್ಪರ್ಧೆವೊಡ್ಡುತ್ತಿರುವ ಮಹಿಳೆಯರು ಮತದಾನದಲ್ಲೂ ತಮ್ಮ ಹಕ್ಕು ಚಲಾಯಿಸಿ ಮಾದರಿಯಾಗಿದ್ದಾರೆ. +ಕಳೆದ ಏಪ್ರಿಲ್ 26ರಂದು ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ತಿಳಿದುಬಂದಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಪುರುಷರ ಮತದಾನ ಪ್ರಮಾಣ ಶೇಕಡಾ 69.48 ಆಗಿದ್ದರೆ, ಮಹಿಳೆಯರ ಮತದಾನ ಪ್ರಮಾಣ 69.65 ಆಗಿದೆ. ಒಟ್ಟು 1,00,16,921 ಪುರುಷರು ಮತ ಚಲಾಯಿಸಿದ್ದರೆ 1,00,20,796 ಮಹಿಳೆಯರು ಮತ ಚಲಾಯಿಸಿದ್ದಾರೆ. ಅಂದರೆ, ಪುರುಷ ಮತದಾರರಿಗಿಂತ ಮಹಿಳಾ ಮತದಾರರು 3,875 ಹೆಚ್ಚಿರುವುದನ್ನು ಇದು ತೋರಿಸಿದೆ. +ಬೆಂಗಳೂರು ಉತ್ತರ, ಸೆಂಟ್ರಲ್, ದಕ್ಷಿಣ, ಗ್ರಾಮಾಂತರ ಹಾಗೂ ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ ಚಲಾಯಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗಿಂತ ಪುರುಷ ಮತದಾರರ ಸಂಖ್ಯೆ ಹೆಚ್ಚಿತ್ತು. ಆಗ ಪುರುಷರ ಮತದಾನ ಪ್ರಮಾಣ ಶೇ 69.55 ಆಗಿದ್ದರೆ, ಮಹಿಳೆಯರದ್ದು ಶೇ 67.65 ಆಗಿತ್ತು. 2014 ರಲ್ಲಿ ಪುರುಷ ಮತದಾರರು ಶೇ 68.59 ಆಗಿದ್ದರೆ ಮಹಿಳಾ ಮತದಾರರ ಪ್ರಮಾಣ ಶೇ 65.79 ಆಗಿತ್ತು. +ಮಹಿಳಾ ಸಬಲೀಕರಣ, ಸುಧಾರಿತ ಶಿಕ್ಷಣ ಮತ್ತು ಹೆಚ್ಚಿದ ಜಾಗೃತಿಯು ಮಹಿಳಾ ಮತದಾರರ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ ಏಳು ರಾಜ್ಯಗಳಲ್ಲಿ ಮಹಿಳಾ ಮತದಾನದ ಪ್ರಮಾಣ ಹೆಚ್ಚಾಗಿತ್ತು. +ಮಹಿಳಾ ಮತದಾನ ಹೆಚ್ಚಳ:ಚುನಾವಣಾ ಆಯೋಗದ ಅಂಕಿ-ಅಂಶಗಳ ಪ್ರಕಾರ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಮಣಿಪುರ, ಮೇಘಾಲಯ, ಪುದುಚೇರಿ, ನಾಗಾಲ್ಯಾಂಡ್, ತಮಿಳುನಾಡು, ಉತ್ತರಾಖಂಡ, ಪಶ್ಚಿಮ ಬಂಗಾಳ, ಬಿಹಾರ, ಕೇರಳ ಮತ್ತು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಹಂತ-1 ಮತ್ತು ಹಂತ-2ರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮತ ಚಲಾಯಿಸಿದ್ದಾರೆ. ಮತದಾರರಲ್ಲಿ ಜಾಗೃತಿಯನ್ನು ಮೂಡಿಸಲು ಆಯೋಜಿಸಿದ್ದ ಸಂವಾದ ಕಾರ್ಯಕ್ರಮಗಳಲ್ಲಿ ಪುರುಷರಿಗೆ ಹೋಲಿಸಿದರೆ ಮಹಿಳೆಯರು ವಿವರಗಳನ್ನು ತಿಳಿದುಕೊಳ್ಳಲು ಮತ್ತು ಮತ ಚಲಾಯಿಸಲು ಹೆಚ್ಚು ಉತ್ಸುಕರಾಗಿದ್ದು ಕಂಡುಬಂದಿತ್ತು. +ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುವ ಪ್ರದೇಶಗಳಲ್ಲಿಯೂ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು. ಇಲ್ಲಿಯೂ ಪುರುಷರಿಗಿಂತ ಮಹಿಳೆಯರ ಮತದಾನ ಹೆಚ್ಚುತ್ತದೆಯೇ ಎಂದು ಕಾದು ನೋಡಬೇಕಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_161_3.txt b/eesanje/url_46_161_3.txt new file mode 100644 index 0000000000000000000000000000000000000000..b24f4e06ceace202c53fa4747e9e663e6a3e0088 --- /dev/null +++ b/eesanje/url_46_161_3.txt @@ -0,0 +1,8 @@ +ರಾಹುಲ್ ಗಾಂಧಿ ಮನಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ: ಬಿವೈವಿ ಕೆಂಡ +ಬೆಂಗಳೂರು,ಮೇ2- ಕೊಳಕು ಮನಸ್ಸುಗಳು ಮಾತ್ರ ವಿಕೃತಿಯ ಮಾತನಾಡಲು ಸಾಧ್ಯ, ಅಂಥದ್ದೇ ಸಾಲಿಗೆ ಸೇರಿರುವ ಶಾಸಕ (ರಾಜು) ಕಾಗೆ ಬಾಯಿಂದ ಮೋದಿಯವರ ಕುರಿತು ಕಾಂಗ್ರೆಸ್ಸಿಗರು ಅಪಶಕುನವನ್ನು ಉಗುಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. +ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ ಮನಃಸ್ಥಿತಿ ಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನೆಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕøತಿಯ ದ್ಯೋತಕವಾಗಿದೆ ಎಂದು ಟೀಕಿಸಿದ್ದಾರೆ. +“ರಾಹುಲ್ ಗಾಂಧಿ ಮನಸ್ಥಿತಿಕಾಗೆ ಬಾಯಲ್ಲಿ ಅಪಶಕುನ ನುಡಿಸಿದೆ”ಸಾವುಗಳನ್ನು ಆಧರಿಸಿ ಅಧಿಕಾರಗಳನ್ನು ಗಳಿಸಿದ ಹಿನ್ನಲೆಯ ಕಾಂಗ್ರೆಸ್ಸಿಗರು ಅಮೂಲ್ಯ ಜೀವಗಳ ಸಾವುಗಳಿಗಾಗಿ ಚಡಪಡಿಸುವುದು ಅವರ ಹೀನ ಸಂಸ್ಕೃತಿಯ ದ್ಯೋತಕವಾಗಿದೆ.ಮೋದಿಯವರ ಸಾವು ಕಾಂಗ್ರೆಸ್ ಏಕೆ ಬಯಸುತ್ತದೆ?•ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು…../Yp9QMmw7gr +ಮೋದಿಯವರ ಸಾವನ್ನು ಕಾಂಗ್ರೆಸ್ ಏಕೆ ಬಯಸುತ್ತದೆ? ಆರ್ಟಿಕಲ್ 370 ರದ್ದುಗೊಳಿಸಿ, ಭಾರತದ ಕಿರೀಟ ಕಾಶ್ಮೀರವನ್ನು ಉಳಿಸಿದ್ದಕ್ಕಾಗಿಯೇ? ಐದು ಶತಮಾನಗಳ ಭಾರತೀಯರ ಕನಸು ಈಡೇರಿಸಲು ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ ಕಾರಣಕ್ಕಾಗಿಯೇ? ಎಂದು ಪ್ರಶ್ನಿಸಿದ್ದಾರೆ.ದೇಶವನ್ನು ಮುಕ್ಕಿ ತಿನ್ನುತ್ತಿದ್ದ ಭಯೋತ್ಪಾದಕತೆಯನ್ನು ಬೇರು ಸಮೇತ ಕಿತ್ತೊಗೆದು ರಾಷ್ಟ್ರವನ್ನು ರಕ್ಷಿಸಿದ ಕಾರಣಕ್ಕಾಗಿಯೇ? ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ 5ನೇ ಸ್ಥಾನಕ್ಕೇರಿಸಿ ಶಕ್ತಿಶಾಲಿ ರಾಷ್ಟ್ರ ನಿರ್ಮಿಸಿದ ಕಾರಣಕ್ಕಾಗಿಯೇ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಅಭಿವೃದ್ಧಿಯ ಓಟದಲ್ಲಿ ಜಾಗತಿಕ ಪೈಪೋಟಿಯ ನಡುವೆ ಭಾರತವನ್ನು ಮುಂಚೂಣಿ ಸ್ಥಾನದಲ್ಲಿ ತಂದು ನಿಲ್ಲಿಸಿದ ಕಾರಣಕ್ಕಾಗಿಯೇ? ದೇಶದ ಕಟ್ಟಕಡೆಯ ಪ್ರಜೆಯೂ ಸ್ವಾಭಿಮಾನದ ಬದುಕು ರೂಪಿಸಲು ಹತ್ತು ಹಲವು ಯೋಜನೆಗಳನ್ನು ಸಮರ್ಪಿಸಿದ ಕಾರಣಕ್ಕಾಗಿಯೇ? ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡಿ ಕಪ್ಪು ಚುಕ್ಕೆ ಇಲ್ಲದ ಪರಿಶುಭ್ರ ಆಡಳಿತ ನೀಡಿ ಜನರಿಂದ ಸೈ ಅನಿಸಿಕೊಂಡ ಕಾರಣಕ್ಕಾಗಿಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಭಾರತೀಯ ಜನತಾ ಪಾರ್ಟಿ ವ್ಯಕ್ತಿ ಆಧರಿತವಾಗಿ ಬೆಳೆದದ್ದಲ್ಲ, ಸಿದ್ಧಾಂತ, ತತ್ವಗಳನ್ನು ಆಧರಿಸಿ ರಾಷ್ಟ್ರ ಭಕ್ತ ಕಾರ್ಯಕರ್ತರ ಪರಿಶ್ರಮದ ಫಲವಾಗಿ ಬೆಳೆದು ನಿಂತಿರುವ ಬೃಹತ್ ರಾಜಕೀಯ ವೃಕ್ಷ. ದಿವಂಗತ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರಂತಹ ಸಾಲು ಸಾಲು ನಾಯಕರನ್ನು ದೇಶಕ್ಕೆ ಸಮರ್ಪಣೆ ಮಾಡಿದ ಪಕ್ಷ, ಈ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಗಟ್ಟಿಯಾಗಿ ಪಡಿಮೂಡಿದ, ದೇಶ ಮೆಚ್ಚಿದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿ ಜೀ, ಸಮರ್ಥ ಆಡಳಿತಗಾರನಾಗಿ ದೇಶವನ್ನು ಬಲಿಷ್ಠಗೊಳಿಸಿದ ಮಹಾನ್ ನೇತಾರ ಎನ್ನುವ ಕಾರಣಕ್ಕಾಗಿ ಈ ದೇಶದ ಜನ ಮತ್ತೊಮ್ಮೆ ಅವರ ನಾಯಕತ್ವವನ್ನು ಬಯಸಿ ಪ್ರಧಾನಿಯನ್ನಾಗಿಸಲು ಸಂಕಲ್ಪ ತೊಟ್ಟಿದ್ದಾರೆ, ಇದನ್ನು ಸಹಿಸದ ಕಾಂಗ್ರೆಸ್ಸಿಗರ ಬಾಯಲ್ಲಿ ಹತಾಶೆ, ಅಪಶಕುನದ ಮಾತುಗಳಲ್ಲದೇ ಇನ್ನೇನು ಬರಲು ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ. +ದೈವ ಬಲ, ಜನಾಶೀರ್ವಾದದ ಶಕ್ತಿ. ಭಾರತಮಾತೆಯ ಮಹಾನ್ ಸುಪುತ್ರ ಮೋದಿಯವರ ರಕ್ಷಣೆಗೆ ನಿಂತಿದೆ. ಚುನಾವಣೆಯ ಫಲಿತಾಂಶ ಅದನ್ನು ಪ್ರತಿಫಲಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. \ No newline at end of file diff --git a/eesanje/url_46_161_4.txt b/eesanje/url_46_161_4.txt new file mode 100644 index 0000000000000000000000000000000000000000..3efbd62477b168402b7cc6e41ecfb69933f0b8df --- /dev/null +++ b/eesanje/url_46_161_4.txt @@ -0,0 +1,8 @@ +ಬಿಸಿಲ ಬೇಗೆ : ಏಸಿ-ಏರ್‌ಕೂಲರ್‌ಗಳ ಖರೀದಿಗೆ ಮುಗಿಬಿದ್ದಿ ಜನ +ಬೆಂಗಳೂರು, ಮೇ 1-ಮಳೆ ಕೈಕೊಟ್ಟಿದ್ದು, ಕೆರೆ- ಕಟ್ಟೆ- ಹಳ್ಳ- ಕೊಳ್ಳಗಳು ಬತ್ತಿಹೋಗಿವೆ. ಬರಗಾಲದ ಜೊತೆ ಹಿಂದೆಂದೂ ಕಂಡುಕೇಳರಿಯದ ಬಿಸಿಲಿನ ಝಳಕ್ಕೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದು, ಸೆಕೆಯಿಂದ ಮುಕ್ತಿ ಪಡೆದುಕೊಳ್ಳಲು ಏರ್‌ಕೂಲರ್‌, ಏಸಿ ಅಂಗಡಿಗಳತ್ತ ಮುಗಿಬಿದ್ದಿದ್ದಾರೆ. +ಬಿಸಿಲಿನ ತಾಪಕ್ಕೆ ಮನೆಯಿಂದ ಹೊರಬರಲು ಒಂದು ಕ್ಷಣ ಯೋಚಿಸುವಂತಾಗಿದೆ. ಬಿಸಿಲಿನ ಜೊತೆಗೆ ಉಷ್ಣಗಾಳಿಯೂ ಸಹ ಹೆಚ್ಚಾಗಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.ಮನೆಯಲ್ಲೂ ಇರಲಾಗದೆ ಹೊರಗಡೆ ಕೂಡ ಬರಲಾಗದೆ ತ್ರಿಶಂಕು ಸ್ಥಿತಿಯಲ್ಲಿ ಕಾಲ ದೂಡುವಂತಾಗಿದೆ. +ಸೆಕೆಯಿಂದ ರಕ್ಷಿಸಿಕೊಳ್ಳಲು ಸೀಲಿಂಗ್‌ ಫ್ಯಾನ್‌, ಟೇಬಲ್‌ ಫ್ಯಾನ್‌ಗಳು 24 ಗಂಟೆಗಳು ಸಹ ಓಡುವಂತಾಗಿವೆ. ಆದರೂ ಕೂಡ ಶಕೆಗೆ ಮುಕ್ತಿ ಸಿಕ್ಕಿಲ್ಲ. ಫ್ಯಾನ್‌ಗಳು ತಿರುಗಿ ತಿರುಗಿ ಬಿಸಿ ಗಾಳಿಯನ್ನು ಹೊರಸೂಸುತ್ತಿವೆ. ಫ್ಯಾನ್‌ ಗಾಳಿಯಿಂದ ಸೆಕೆಗೆ ಥಣಿಸಿಕೊಳ್ಳಲು ಸಾಧ್ಯವಾಗದೆ ಜನರು ಏಸಿ, ಏರ್‌ಕೂಲರ್‌ಗಳ ಖರೀದಿಯತ್ತ ಮುಖ ಮಾಡಿದ್ದಾರೆ. +ಮಾರುಕಟ್ಟೆಗಳಲ್ಲಿ ನಾನಾ ಕಂಪೆನಿಯ ಹಲವಾರು ಏಸಿ, ಏರ್‌ಕೂಲರ್‌ ದೊರೆಯುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಮಾರಾಟ ಜೋರಾಗಿಯೇ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ 10, 15, 25 ಲೀಟರ್‌ ಸಾಮರ್ಥ್ಯದ ಏರ್‌ಕೂಲರ್‌ಗಳು ಮಾರಾಟವಾಗುತ್ತಿದ್ದು, ಬೆಲೆಯಲ್ಲಿ ತಲಾ ಒಂದರಿಂದ ಎರಡು ಸಾವಿರ ರೂ. ಏರಿಕೆಯಾಗಿದೆ. ಆನ್‌ಲೈನ್‌ ಖರೀದಿಯೂ ಕೂಡ ಜೋರಾಗಿ ನಡೆಯುತ್ತಿದೆ. +ಏರ್‌ಕೂಲರ್‌ಗಳಿಗೆ ತಣ್ಣನೆಯ ನೀರು ಹಾಗೂ ಐಸ್‌ ಕ್ಯೂಬ್‌ಗಳನ್ನು ಹಾಕಿಕೊಂಡರೆ ಸ್ವಲ್ಪ ತಣ್ಣನೆಯ ಗಾಳಿ ಬರುತ್ತದೆ. ನಿದ್ದೆ ಮಾಡಬಹುದು ಎಂದು ಜನರು ಖರೀದಿಗೆ ಮುಂದಾಗಿದ್ದಾರೆ. +ಕೆರೆಕಟ್ಟೆಗಳಲ್ಲಿ ಇರುವ ನೀರು ಕೂಡ ಬಿಸಿಲಿನ ತಾಪಕ್ಕೆ ಹಾವಿಯಾಗುತ್ತಿದ್ದು, ಬೋರ್‌ವೆಲ್‌ಗಳಲ್ಲಿ ಅಂತರ್‌ಜಲ ಮಟ್ಟ ಪಾತಾಳ ತಲುಪಿ ಒಣಗಿ ಹೋಗಿವೆ. ಜನಜಾನುವಾರುಗಳ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ.ರೈತರಿಗೆ ಬೆಳೆಗಳನ್ನು ಉಳಿಸಿಕೊಳ್ಳುವುದೇ ಒಂದು ಸವಾಲಾಗಿದೆ. +ಕೆಲವು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸುವಂತಾಗಿದೆ.ಒಟ್ಟಿನಲ್ಲಿ ಬಿರು ಬೇಸಿಗೆ ಜನಸಾಮಾನ್ಯರ ಹಾಗೂ ಜಾನುವಾರಗಳನ್ನು ಹೈರಾಣ ವಾಗಿಸಿಬಿಟ್ಟಿದೆ. ಯಾವಾಗ ಮಳೆ ಬರುತ್ತಿದೆಯೋ ಎಂದು ದಿನನಿತ್ಯ ಮುಗಿಲು ನೋಡುವಂತಾಗಿದೆ. \ No newline at end of file diff --git a/eesanje/url_46_161_5.txt b/eesanje/url_46_161_5.txt new file mode 100644 index 0000000000000000000000000000000000000000..8038717fc19566e5741147ef41de138010a3f4cf --- /dev/null +++ b/eesanje/url_46_161_5.txt @@ -0,0 +1,5 @@ +ಸರ್ಕಾರದ ಖಜಾನೆ ಖಾಲಿಯಾಗಿದೆ : ಆರ್‌.ಅಶೋಕ್‌ ಆರೋಪ +ಬೆಂಗಳೂರು,ಮೇ1-ರೈತರಿಗೆ ಕೊಡುತ್ತಿದ್ದ ಹಾಲಿನ 5 ರೂ. ಪ್ರೋತ್ಸಾಹ ಧನವನ್ನೂ ಕೂಡ ನಿಲ್ಲಿಸಿದ್ದಾರೆ, ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನುವುದಕ್ಕಿಂತ ಮೋದಿ ಕೊಡುತ್ತಿಲ್ಲ ಎಂದು ಕಾಂಗ್ರೆಸ್‌ ದೂರುತ್ತಿದೆ ಎಂದು ಕಿಡಿಕಾರಿದರು. +ಕಾಂಗ್ರೆಸ್‌ ಸರ್ಕಾರ ಬಂದು ಒಂದು ವರ್ಷವಾಗಿದೆ. ರಾಜ್ಯದ ಜನರ ಮೇಲೆ ತೆರಿಗೆ ಬಾರ ಹೇರಿದ್ದಾರೆ. ಅವರ ಜೇಬಿಗೆ ಕತ್ತರಿ ಹಾಕಿ, ಮಹಿಳೆಯರಿಗೆ ಕೊಡುತ್ತಿದ್ದೇವೇ ಎಂದು ನಾಟಕವಾಡುತ್ತಿದ್ದಾರೆ ಎಂದು ದೂರಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇನು ತಮ್ಮ ಮನೆಯಿಂದ ಕೊಡುತ್ತಿಲ್ಲ. ವಿಶ್ವ ಬ್ಯಾಂಕ್‌ನಿಂದ ಸಾಲ ತಂದು ಕೊಡುತ್ತಿಲ್ಲ. ನಮ್ಮ ದುಡ್ಡನ್ನೇ ಕಿತ್ತು ನಮಗೆ ಕೊಡುತ್ತಿದ್ದಾರೆ, ಇದು ಜನರಿಗೂ ಗೊತ್ತಾಗಿದೆ ಎಂದರು.ಕಾಂಗ್ರೆಸ್‌ಗೆ ಯೋಗ್ಯತೆ ಇದ್ದರೆ, ಕಳೆದ 20 ವರ್ಷದಲ್ಲಿ ನಾವು ಕೊಟ್ಟ ತೆರಿಗೆ ಎಷ್ಟು, ಕೇಂದ್ರದಿಂದ ರಾಜ್ಯಕ್ಕೆ ಬಂದಿದ್ದು ಎಷ್ಟು? ಎಂಬುದನ್ನು ಬಿಡುಗಡೆ ಮಾಡಿ ಎಂದು ಅಶೋಕ್‌ ಸವಾಲು ಹಾಕಿದರು. +ಇದಕ್ಕೂ ಮುನ್ನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಕುರಿತ ಹಾಗೂ ಪ್ರಧಾನಿ ನರೇಂದ್ರಮೋದಿ ಸರ್ಕಾರದ ಪ್ರಧಾನಿ ಮೋದಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಕುರಿತ ಆಡಿಯೋ, ವಿಡಿಯೋಗವನ್ನು ಬಿಡುಗಡೆ ಮಾಡಿದರು. \ No newline at end of file diff --git a/eesanje/url_46_161_6.txt b/eesanje/url_46_161_6.txt new file mode 100644 index 0000000000000000000000000000000000000000..54b78292bdd3bc453ef7a0ada3f782eb987a4beb --- /dev/null +++ b/eesanje/url_46_161_6.txt @@ -0,0 +1,13 @@ +ಹಾಸನ ಪೆನ್‌ಡ್ರೈವ್‌ ಸೂತ್ರಧಾರ ಯಾರು..? +ಬೆಂಗಳೂರು, ಮೇ.1-ನಾನಲ್ಲ… ನಾನಲ್ಲ… ನನಗೂ ವಿಡಿಯೋಗೂ, ಪೆನ್‌ಡ್ರೈವ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಈಗ ಎಲ್ಲರೂ ಹೇಳುತ್ತಿದ್ದಾರೆ. ನಾನು ಪೆನ್‌ಡ್ರೈವ್‌ ಕೊಟ್ಟಿದ್ದು ಬಿಜೆಪಿ ನಾಯಕನಿಗೆ ಅಷ್ಟೇ ಎಂದು ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಹೇಳಿದರೆ, ನನಗೆ ಕೊಟ್ಟಿದ್ದು ನಿಜ. ಆದರೆ ಹಂಚಿದ್ದು ನಾನಲ್ಲ ಎಂದು ದೇವರಾಜೇಗೌಡ ಹೇಳುತ್ತಿದ್ದಾರೆ. +ವಿಡಿಯೋ ಹಿಂದೆ ಮಹಾ ನಾಯಕನ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರೆ, ಅಂತಹ ಚಿಲ್ಲರೆ ಕೆಲಸ ಮಾಡುವ ಅಭ್ಯಾಸ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. +ಅತ್ತ ಹಾಸನದಲ್ಲಿ ಪ್ರೀತಂ ಗೌಡ ನನಗೂ ಪೆನ್‌ಡ್ರೈವ್‌ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಹಾಸನ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಶ್ರೇಯಸ್‌‍ ಪಟೇಲ್‌ ತಾಯಿ ಅನುಪಮಾ ಅವರು ಕೂಡ ಪೆನ್‌ಡ್ರೈವ್‌ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ. +ಹಾಸನ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಪೆನ್‌ಡ್ರೈವ್‌ ಬಗ್ಗೆ ಡಿಸೆಂಬರ್‌ನಲ್ಲೇ ಪ್ರಸ್ತಾಪಿಸಿದ್ದೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಈ ಬಗ್ಗೆ ಪತ್ರಕೂಡ ಬರೆದಿದ್ದೆ ಎಂದು ಹೇಳಿದ್ದಾರೆ. ಆದರೆ ವಿಜಯೇಂದ್ರ ಅವರು ಯಾವುದೇ ಪತ್ರ ನನಗೆ ಬಂದಿಲ್ಲ ಎಂದು ಹೇಳಿದ್ದಾರೆ. +ಹಾಗಾದರೆ ಹಾಸನದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್‌ ಮಾಡಿದ್ಯಾರು… ಹಂಚಿದ್ಯಾರು… ಹಾಸನದ ಮನೆ ಮನೆಗೂ ಪೆನ್‌ಡ್ರೈವ್‌ಗಳನ್ನು ತಲುಪಿಸಿದ್ಯಾರು…. ಎಂಬ ಯಕ್ಷ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. +ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾದ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾದ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಹಲ್‌ ಚಲ್‌ ಸೃಷ್ಟಿಸಿದ ಹಾಸನ ಪೆನ್‌ಡ್ರೈವ್‌ ಸೃಷ್ಟಿಕರ್ತ ಯಾರು…? ಅಶ್ಲೀಲ ವಿಡಿಯೋಗಳು ಫೋನ್‌ಗಳಲ್ಲಿ, ವಾಟ್ಸ್ಯಾಪ್‌ಗಳಲ್ಲಿ ಹರಿದಾಡುತ್ತಿದ್ದಾಗ ಒಬ್ಬರಿಗೊಬ್ಬರು ಫಾರ್ವರ್ಡ್‌ ಮಾಡಿ ಗುಸು ಗುಸು ಪಿಸಿಪಿಸಿಯೊಂದಿಗೆ ಖುಷಿ ಪಟ್ಟವರೇ ಹೆಚ್ಚು. +ಅಬ್ಬಾ… ಇದು ಹೀಗಿದೆಯೇ, ಚುನಾವಣೆ ಮೇಲೆ ಪರಿಣಾಮ ಬೀರಿದೆ. ಏ.. ಇದು ನಿಜವೇ, ಇದು ಸುಳ್ಳು, ಇದು ಫೇಕ್‌ ವಿಡಿಯೋ ಎಂಬಂತಹ ಮಾತುಗಳು ಕೇಳಿಬಂದವು.ನೂರಾರು ವಿಡಿಯೋಗಳು ಮೊಬೈಲ್‌ನಲ್ಲಿ ಯಾವಾಗ ಹರಿದಾಡಿದವೋ ಮಹಿಳಾ ಆಯೋಗ ರಾಜ್ಯಸರ್ಕಾರಕ್ಕೆ ಪತ್ರ ಬರೆದು ಎಸ್‌‍ಐಟಿ ತಂಡ ರಚಿಸುವಂತೆ ಮನವಿ ಮಾಡಿತ್ತು. ಕೂಡಲೇ ಸರ್ಕಾರ ಪ್ರಕರಣವನ್ನು ಎಸ್‌‍ಐಟಿಗೆ ವಹಿಸಿತು. ಆಗ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿತು. +ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಹಾಸನ, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಕಲಬುರಗಿ ಎಲ್ಲೆಡೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಮಹಿಳೆಯರಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದವು.ಈ ನಡುವೆ ಪ್ರಜ್ವಲ್‌ ರೇವಣ್ಣ ಅವರು ಪೂರ್ವನಿಯೋಜಿತವೋ, ಕಾಕತಾಳೀಯವೋ ವಿದೇಶಕ್ಕೆ ಪ್ರವಾಸ ಬೆಳೆಸಿದ್ದರು. +ಇದರಿಂದ ಮತ್ತುಷ್ಟು ಪ್ರತಿಭಟನೆಗಳು ಹೆಚ್ಚಾದವು. ಚುನಾವಣಾ ಸಂದರ್ಭದಲ್ಲಿ ಪ್ರತಿಭಟನೆ ತೀವ್ರಗೊಂಡು ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಪೊಲೀಸ್‌‍ ಮಹಾನಿರ್ದೇಶಕರಿಗೆ ಪತ್ರ ಬರೆದು ಪ್ರಕರಣದ ಬಗ್ಗೆ ತನಿಖೆ ನಡೆಸಿ ಮೂರು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಿತು. +ಈ ನಡುವೆ ಹೊಳೇನರಸೀಪುರ ಟೌನ್‌ ಠಾಣೆಯಲ್ಲಿ ಸಂತ್ರಸ್ತೆ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ವಿರುದ್ಧ ದೂರು ದಾಖಲಾಗಿತ್ತು.ದೂರು ದಾಖಲಾಗುತ್ತಿದ್ದಂತೆ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿತು. ರಾಜಕೀಯ ಪಕ್ಷಗಳ ಕೆಸರೆರಚಾಟವು ಹೆಚ್ಚಾಯಿತು. ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರನ್ನು ಗುರಿಯಾಗಿಸಿ, ಬಿಜೆಪಿಯೊಂದಿಗೆ ಜೆಡಿಎಸ್‌‍ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ಟೀಕೆ ಟಿಪ್ಪಣಿಗಳು ನಡೆದವು. ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್‌‍ ಈ ಪ್ರಕರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡು ಪ್ರತಿಭಟನೆಗಳನ್ನು ನಡೆಸಿತು. +ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌‍ ಎನ್‌ಡಿಎ ಭಾಗ ಅಷ್ಟೇ. ನಾವು ಪ್ರಜ್ವಲ್‌ ಪ್ರಕರಣವನ್ನು ಸಮರ್ಥಿಸುವುದಿಲ್ಲ. ನಮಗೂ ಅದಕ್ಕೂ ಸಂಬಂಧವಿಲ್ಲ. ರಾಜ್ಯ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಮ ಅಭ್ಯಂತರವಿಲ್ಲ. ಜೆಡಿಎಸ್‌‍-ಕಾಂಗ್ರೆಸ್‌‍ ಮೈತ್ರಿಯಲ್ಲಿಯೇ ಪ್ರಜ್ವಲ್‌ ಗೆಲುವು ಸಾಧಿಸಿದ್ದು ಎಂದು ಕಾಂಗ್ರೆಸ್‌‍ ಹೋರಾಟಕ್ಕೆ ತಿರುಗೇಟು ನೀಡಿದ್ದರು. ಪ್ರಜ್ವಲ್‌ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದ್ದರು. +ಈ ನಡುವೆ ಮುಜುಗರಕ್ಕೆ ಈಡಾದ ಜೆಡಿಎಸ್‌‍ ಕಾರ್ಯಕಾರಿಣಿ ಸಭೆ ನಡೆಸಿ ಪ್ರಜ್ವಲ್‌ ಅವರನ್ನು ಅಮಾನತುಗೊಳಿಸಿತ್ತು. ತನಿಖೆಯಲ್ಲಿ ಸಾಬೀತಾದರೇ ಶಾಶ್ವತವಾಗಿ ಉಚ್ಚಾಟನೆ ಮಾಡುವುದಾಗಿ ಜೆಡಿಎಸ್‌‍ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಇಷ್ಟೆಲ್ಲಾ ಘಟನೆಗಳಿಗೆ ಕಾರಣವಾದ ಪೆನ್‌ಡ್ರೈವ್‌ ಮಾಡಿ ಹಂಚಿದವರು ಯಾರು ಎಂಬುದು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. \ No newline at end of file diff --git a/eesanje/url_46_161_7.txt b/eesanje/url_46_161_7.txt new file mode 100644 index 0000000000000000000000000000000000000000..ae46e02e402645f4a175c018f0564209ae17e656 --- /dev/null +++ b/eesanje/url_46_161_7.txt @@ -0,0 +1,5 @@ +ನಾನು ತಪ್ಪು ಮಾಡಿಲ್ಲ, ಯಾವುದೇ ತನಿಖೆಗೆ ಸಿದ್ಧ : ಎಚ್‌.ಡಿ.ರೇವಣ್ಣ +ಹಾಸನ,ಮೇ.1-ನಾನೇನೂ ತಪ್ಪು ಮಾಡಿಲ್ಲ, ಯಾವುದೇ ರೀತಿಯ ತನಿಖೆಯನ್ನಾದರೂ ಎದುರಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ. +ಆರೋಪವನ್ನು ಎದುರಿಸುವ ಶಕ್ತಿ ನಮಗಿದೆ. ತಪ್ಪೇ ಮಾಡಿಲ್ಲ ಎಂದ ಮೇಲೆ ಆರೋಪದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳಬೇಕು? ಸದ್ಯಕ್ಕೆ ಈ ಬಗ್ಗೆ ತಾವು ಹೆಚ್ಚೇನೂ ಹೇಳಲು ಬಯಸುವುದಿಲ್ಲ ಎಂದರು.ಷಡ್ಯಂತ್ರವನ್ನು ಎದುರಿಸುವ ಶಕ್ತಿ ಇದೆ. ಹೀಗಾಗಿ ತನಿಖೆಯನ್ನು ಎದುರಿಸುವ ಸಾಮರ್ಥ್ಯವನ್ನು ದೇವರು ತಮಗೆ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ. +ಎಸ್‌ಐಟಿ ಸೇರಿದಂತೆ ಯಾವುದೇ ರೀತಿ ತನಿಖೆ ಎದುರಿಸಲು ಸಿದ್ಧ. ಎಸ್‌ಐಟಿ ನೋಟಿಸ್‌ ಪ್ರತಿಯನ್ನು ಮನೆಗೆ ಅಂಟಿಸಿ ಹೋಗಿದೆ. ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ತನಿಖೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.ಇದಕ್ಕೂ ಮುನ್ನ ಅವರು ಹರದನಹಳ್ಳಿಯ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. +ಬಳಿಕ ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಕುಟುಂಬದ ಸದಸ್ಯರೊಂದಿಗೆ ಹೋಮ ನಡೆಸಿದರು. ಹೋಮದಲ್ಲಿ ಭಾಗಿಯಾಗಿದ್ದ ರೇವಣ್ಣ ಅವರು ಪೂರ್ಣಾಹುತಿ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. \ No newline at end of file diff --git a/eesanje/url_46_161_8.txt b/eesanje/url_46_161_8.txt new file mode 100644 index 0000000000000000000000000000000000000000..fd5548b0358d71d42c0b9d4b8faddee704c4d95b --- /dev/null +++ b/eesanje/url_46_161_8.txt @@ -0,0 +1,6 @@ +ವಿಚಾರಣೆಗೆ ಹಾಜರಾಗುವಂತೆ ಎಚ್‌.ಡಿ.ರೇವಣ್ಣ ಮತ್ತು ಸುಪುತ್ರ ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌ +ಹಾಸನ,ಮೇ1-ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.ಹೊಳೆನರಸೀಪುರದಲ್ಲಿರುವ ಅವರಿಬ್ಬರ ಮನೆಯ ಬಾಗಿಲಿಗೆ ನೋಟಿಸ್‌ ಪ್ರತಿಯನ್ನು ಅಂಟಿಸಿ ಎಸ್‌ಐಟಿ ತಂಡ ವಾಪಸ್ಸಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೋಟಿಸ್‌ನ್ನು ಅಂಟಿಸಲಾಗಿದೆ. ನೋಟಿಸ್‌ನಲ್ಲಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. +ಸ್ಥಳ ಮಹಜರು ನಡೆಸಲು ಎಸ್‌ಐಟಿ ತಂಡ ದೂರು ನೀಡಿದ ಸಂತ್ರಸ್ತ ಮಹಿಳೆಯೊಂದಿಗೆ ಹೊಳೆನರಸೀಪುರಕ್ಕೆ ತೆರಳಲಿದೆ. ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಯಲ್ಲಿ ಎಸ್‌ಐಟಿ ತಂಡ ಸ್ಥಳ ಮಹಜರನ್ನು ನಡೆಸಬೇಕಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಮಹಿಳೆ ದೂರು ನೀಡಿದ್ದರು. +ದೂರನ್ನು ಆಧರಿಸಿ ಹೊಳೆನರಸೀಪುರ ಟೌನ್‌ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಬಳಿಕ ಸರ್ಕಾರ ಪ್ರಕರಣವನ್ನು ಎಸ್‌ಐಟಿಗೆ ವರ್ಗಾಯಿಸಿತ್ತು.ನಿನ್ನೆ ಮಹಿಳೆಯ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿಕೊಂಡಿದ್ದು, ಇಂದು ಆ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದೆ. +ಪ್ರಜ್ವಲ್‌ ರೇವಣ್ಣ ವಾಪಸ್‌:ವಿದೇಶಕ್ಕೆ ತೆರಳಿರುವ ಪ್ರಜ್ವಲ್‌ ರೇವಣ್ಣ ಮೇ 3ರ ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ಅವರು ಇದ್ದಾರೆ ಎಂದು ತಿಳಿದುಬಂದಿದೆ. +ಲುಪ್ತಾನ್ಸ್ ಏರ್‌ಲೈನ್ಸ್ ನಲ್ಲಿ ಮೇ 3ರಂದು ಪ್ರಯಾಣಿಸಲು ಪ್ರಜ್ವಲ್‌ ಟಿಕೆಟ್‌ ಬುಕ್‌ ಮಾಡಿದ್ದಾರೆ. ಹೀಗಾಗಿ ಮೇ 3ರ ಮಧ್ಯರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮೇ 4ರಂದು ವಿಚಾರಣೆಗೆ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_161_9.txt b/eesanje/url_46_161_9.txt new file mode 100644 index 0000000000000000000000000000000000000000..571ba3e076c6bf6f17c5e37164406410707aa435 --- /dev/null +++ b/eesanje/url_46_161_9.txt @@ -0,0 +1,9 @@ +ಹಾಸನ ಪೆನ್‌ಡ್ರೈವ್‌ ಪ್ರಕರಣ : ಹಲವು ಆಯಾಮಾಗಳಲ್ಲಿ ಎಸ್‌‍ಐಟಿ ತನಿಖೆ +ಬೆಂಗಳೂರು, ಮೇ.1-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್‌‍ಐಟಿ ತನಿಖಾ ತಂಡ ತನಿಖೆಯನ್ನು ಚುರುಕುಗೊಳಿದೆ. ಸಿಐಡಿ ಎಡಿಜಿಪಿ ಬಿ.ಕೆ ಸಿಂಗ್‌ ನೇತೃತ್ವದ ಎಸ್‌‍ಐಟಿ ತಂಡ ಪ್ರಕರಣವನ್ನು ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ನಾನಾ ಆಯಾಮಾಗಳಲ್ಲಿ ತನಿಖೆ ನಡೆಸುತ್ತಿದೆ. +ಈ ಹಗರಣದಲ್ಲಿ ನಡೆದಿದೆ ಎನ್ನಲಾಗ ಲೈಂಗಿಕ ದೌರ್ಜನ್ಯ, ಅಶ್ಲೀಲ ದೃಶ್ಯ ಚಿತ್ರೀಕರಣ, ವಿಡಿಯೋಗಳ ಹಂಚಿಕೆ ಮತ್ತು ಡೀಪ್‌ಫೇಕ್‌ಗಳು ಮಾಡಿರುವ ಸಾಧ್ಯತೆ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಸಂತ್ರಸ್ತೆಯರು ನೀಡಿದ ದೂರಿನ ಸತ್ಯಾಸತ್ಯತೆ ಪರಾಮರ್ಶೆ ವಿಡಿಯೋಗಳನ್ನು ಪೆನ್‌ಡ್ರೈವ್‌ಗೆ ಹಾಕಿದ್ದು ಯಾರೂ, ಪೆನ್‌ಡ್ರೈವ್‌ಗಳನ್ನು ಹಂಚಿದ್ದು ಯಾರು, ಎಂಬ ಮೂಲಗಳನ್ನು ಹುಡುಕಲು ಮುಂದಾಗಿರುವ ಎಸ್‌‍ಐಟಿ ತಂಡವು ಸೂಕ್ಷ್ಮತನಿಖೆಗಾಗಿ ಮೂರು ಉಪತಂಡಗಳನ್ನು ರಚಿಸಿದೆ. +ಹೊಳೆನರಸೀಪುರ ಟೌನ್‌ ಪೊಲೀಸ್‌‍ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ಎಸ್ಪಿ ಸುಮನ್‌ ಡಿ ಪನ್ನೇಕರ್‌ ಅವರ ನೇತೃತ್ವದ ತಂಡ ತನಿಖೆ ನಡೆಸಲಿದೆ. ಈಗಾಗಲೇ ಹಲವಾರು ಸಾಕ್ಷಿಗಳನ್ನು ಸಂಗ್ರಹಿಸಿದ್ದು, ದೂರುದಾರ ಮಹಿಳೆಯಿಂದ ಯಾವಾಗ ಎಲ್ಲಿ ದೌರ್ಜನ್ಯ ಮಾಡಲಾಗಿದೆ, ಯಾವ ರೀತಿ ದೌರ್ಜನ್ಯ ಎಸಗಲಾಗಿದೆ ಎಂಬ ಮಾಹಿತಿ ಸಂಗ್ರಹಿಸಿ ಸ್ಥಳಕ್ಕೆ ಭೇಟಿ ಮಹಜರು ಮಾಡಲಿದೆ. +ಎಸ್‌‍ಪಿ ಸೀಮಾ ಲಾಟ್ಕರ್‌ ಎರಡನೇ ತಂಡವು ವಿಡಿಯೋದಲ್ಲಿರುವ ಸಂತ್ರಸ್ತೆಯರ ವಿಚಾರಣೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ವಿಡಿಯೋಗಳ ಸಂಗ್ರಹ, ಅವುಗಳು ಎಲ್ಲಿಂದ ಅಪ್‌ಲೌಡ್‌ ಆಗಿವೆ ಎಂಬುದರ ಬಗ್ಗೆ ತನಿಖೆ ನಡೆಸಲಿದೆ. ಈಗಾಗಲೇ ಅಧಿಕಾರಿಗಳು ಸಂತ್ರಸ್ತೆಯರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದೆ. +ಈ ತಂಡ ಹಾಸನದಲ್ಲಿಯೇ ಬೀಡುಬಿಟ್ಟು ಸಂತ್ರಸ್ತೆಯರ ಹೇಳಿಕೆ ಪಡೆಯಲು ಸಿದ್ಧತೆ ನಡೆಸಿದೆ. ಎಸ್‌‍ಐಟಿಯ ಮೂರನೇ ತಂಡದಲ್ಲಿ ಸೈಬರ್‌ಕ್ರೈಂ ತಂಡ ಕಾರ್ಯನಿರ್ವಹಿಸಲಿದ್ದು ಎಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದು ಯಾರು, ಪೆನ್‌ಡ್ರೈವ್‌ಗಳನ್ನು ಹಂಚಿದ್ದು ಯಾರು, ಪೆನ್‌ಡ್ರೈವ್‌ನಲ್ಲಿ ವಿಡಿಯೋ ಕಾಪಿಯಾಗಿದ್ದು ಎಲ್ಲಿ, ಯಾವ ಕಂಪ್ಯೂಟರ್‌ನಿಂದ ಮೊದಲು ಕಾಪಿಯಾಗಿದೆ. ಇದರ ಸೂತ್ರದಾರರು ಯಾರು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಯಲಿದೆ. +ಸಂಸದ ಪ್ರಜ್ವಲ್‌ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಹಿಂದೆ ಯಾರಾ ಕೈವಾಡವಿದೆ, ವಿಡಿಯೋದ ಮೂಲವೇನು ಎಂಬುದು ತನಿಖೆಯ ನಂತರವೇ ಬಯಲಾಗಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು. +ಎಚ್‌.ಡಿ.ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೇನರಸೀಪುರ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ತನಿಖೆಗೆ ಈಗಾಗಲೇ ರಾಜ್ಯಸರ್ಕಾರ ಎಸ್‌‍ಐಟಿ ತಂಡ ರಚಿಸಿದೆ. ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್‌ ನೇತೃತ್ವದಲ್ಲಿ 18 ಅಧಿಕಾರಿಗಳ ತಂಡ ತನಿಖೆಗೆ ನೇಮಕವಾಗಿದೆ. +ಮಾಜಿ ಪ್ರಧಾನಿಗಳ ಕುಟುಂಬಕ್ಕೆ ಸಂಬಂಧಿಸಿದ ಹೈಪ್ರೊಫೈಲ್‌ ಪ್ರಕರಣ ವಾಗಿರುವುದರಿಂದ ತನಿಖಾ ತಂಡ ಪ್ರತಿಯೊಂದು ವಿಚಾರವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ. \ No newline at end of file diff --git a/eesanje/url_46_162_1.txt b/eesanje/url_46_162_1.txt new file mode 100644 index 0000000000000000000000000000000000000000..aa6622052030fa532c9da9d8bb33e222206697d7 --- /dev/null +++ b/eesanje/url_46_162_1.txt @@ -0,0 +1,9 @@ +ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಪಾರಾರಿಯಾಗುವವರೆಗೆ ಪೊಲೀಸರು ದನ ಕಾಯುತ್ತಿದ್ದರೇ..? : ಜೋಶಿ +ಹುಬ್ಬಳ್ಳಿ,ಮೇ1-ಅಶ್ಲೀಲ ಸಿ.ಡಿ ಪ್ರಕರಣ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ವಿದೇಶಕ್ಕೆ ಪರಾರಿಯಾಗುವ ಮುನ್ನ ಪೊಲೀಸರು ದನ ಕಾಯುತ್ತಿದ್ದರೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರಶ್ನಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಅಧೀನದಲ್ಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ. ಪ್ರಜ್ವಲ್‌ ರೇವಣ್ಣ ಮೇಲೆ ಆರೋಪಗಳು ಕೇಳಿಬಂದಾಗ ಅವರ ಚಲನವಲನಗಳ ಬಗ್ಗೆ ಗಮನಹರಿಸಲು ಪೊಲೀಸರಿಗೆ ಸರ್ಕಾರ ಏಕೆ ನಿರ್ದೇಶನ ನೀಡಿರಲಿಲ್ಲ ಎಂದು ಪ್ರಶ್ನೆ ಮಾಡಿದರು. +ವಿಮಾನ ನಿಲ್ದಾಣದ ವಲಸಿಗರ ವಿಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರು, ಇಲ್ಲಿಂದ ಹೊರ ಹೋಗುವವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಾರೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ಹೋಗಿದ್ದಾರೋ ಅಥವಾ ಇಂಗ್ಲೆಂಡ್‌ಗೆ ಹೋಗಿದ್ದಾರೋ ದೇವರಿಗೆ ಗೊತ್ತು. ಆದರೆ ಅವರು ವಿದೇಶಕ್ಕೆ ಹೋಗುವವರೆಗೂ ಸರ್ಕಾರವಾಗಲಿ, ಪೊಲೀಸರಾಗಲಿ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಹರಿಹಾಯ್ದರು. +ನನಗಿರುವ ಮಾಹಿತಿ ಪ್ರಕಾರ ಈ ಘಟನೆ 6 ತಿಂಗಳು ಅಥವಾ ಒಂದು ವರ್ಷದ ಹಿಂದೆ ನಡೆದಿಲ್ಲ. ಇದು ತುಂಬಾ ವರ್ಷಗಳಿಂದ ಹಿಂದೆ ನಡೆದಿದೆ. 2019ರಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಜ್ವಲ್‌ ರೇವಣ್ಣ ಪರವಾಗಿ ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್‌ ಪ್ರಚಾರ ಮಾಡಿರಲಿಲ್ಲವೇ? ಈಗ ಯಾರಿಗೆ ನೈತಿಕತೆ ಪಾಠ ಹೇಳಲು ಹೊರಟಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡರು. +ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ನಮ್ಮ ಪಕ್ಷ ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಈಗಾಗಲೇ ನಮ್ಮ ನಿಲುವು ಏನೆಂಬುದನ್ನು ನಮ್ಮ ಕೇಂದ್ರ ಗೃಹಸಚಿವರಾದ ಅಮಿತ್‌ ಷಾ ಅವರೇ ಸ್ಪಷ್ಟಪಡಿಸಿದ್ದಾರೆ. +ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿರುವಾಗ ಇಲ್ಲಿ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರದ ಪಾತ್ರವೇನೆಂಬುದನ್ನು ಡಿ.ಕೆ.ಶಿವಕುಮಾರ್‌ ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮನಸ್ಸಿಗೆ ಬಂದಂತೆ ಮಾತನಾಡಿದರೆ ನಮಗೂ ಮಾತನಾಡಲು ಬರುತ್ತದೆ ಎಂದು ಜೋಶಿ ಎಚ್ಚರಿಸಿದರು. +ಎಸ್‌ಐಟಿ ರಚನೆ ಮಾಡಿರುವ ಉದ್ದೇಶವೇ ಕಾಲಹರಣ ಮಾಡಲು ಎಂಬುದು ಎಲ್ಲರಿಗೂ ಗೊತ್ತು. ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಲಹೆ ಕೊಟ್ಟವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಅದಕ್ಕೂ ಮೊದಲು ಉನ್ನತ ಸ್ಥಾನದಲ್ಲಿರುವವರಿಗೆ ಯಾರು ದೂರವಾಣಿ ಕರೆ ಮಾಡಿದ್ದರು? ಅವರು ನೀಡಿದ ಸಲಹೆಗಳೇನು? ಎಂಬುದು ದೂರವಾಣಿ ಕರೆಯಲ್ಲಿ ದಾಖಲಾಗಿರುತ್ತದೆ. ಇದನ್ನು ಮತ್ತೊಮ್ಮೆ ಉಪಮುಖ್ಯಮಂತ್ರಿಯವರು ಪರಿಶೀಲಿಸಿ ನಂತರ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ ಎಂದು ತಿರುಗೇಟು ಕೊಟ್ಟರು. +ನಾವು ಘಟನೆಯನ್ನು ಅತ್ಯಂತ ಕಠಿಣ ಪದಗಳಲ್ಲಿ ಖಂಡಿಸುತ್ತೇವೆ. ಈ ಪ್ರಕರಣಕ್ಕೂ ನಮ್ಮ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಜೆಡಿಎಸ್‌ ತೆಗೆದುಕೊಂಡಿರುವ ನಿಲುವನ್ನು ನಾವು ಸ್ವಾಗತಿಸುತ್ತೇವೆ. ಅನಗತ್ಯವಾಗಿ ಬಿಜೆಪಿಯನ್ನು ಎಳೆದು ತರುವ ಅಗತ್ಯವಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_162_10.txt b/eesanje/url_46_162_10.txt new file mode 100644 index 0000000000000000000000000000000000000000..72cf19efa65f9ba20c50591abfd29c591be8339a --- /dev/null +++ b/eesanje/url_46_162_10.txt @@ -0,0 +1,5 @@ +ಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ +ಹುಬ್ಬಳ್ಳಿ,ಏ.30-ಪೆನ್‌ಡ್ರೈವ್‌ ವಿಚಾರದಲ್ಲಿ ಕಾಂಗ್ರೆಸ್‌ನ ಮಹಾನ್‌ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಮುಖ ಆರೋಪಿಯ ಬಗ್ಗೆಯೂ ತನಿಖೆಯಾಗಲಿದೆ. +ಪೆನ್‌ಡ್ರೈವ್‌ ಬಹಿರಂಗಪಡಿಸಿದವರ ಬಗ್ಗೆಯೂ ಚರ್ಚೆಯಾಗಲಿದೆ. ಮಹಾನ್‌ ನಾಯಕ ಉಪಮುಖ್ಯಮಂತ್ರಿ ಪ್ರತಿಭಟನೆ ಮಾಡಿಸಿದ್ದಾರೆ. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು. ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಏಕೆ ಎಳೆದು ತರುತ್ತಿದ್ದೀರಿ? ಪ್ರತಿಭಟನೆ ಮಾಡುವುದಾದರೆ ಮಹಾನ್‌ ನಾಯಕರ ಮನೆ ಮುಂದೆ ಮಾಡಿ ಎಂದು ಕಾಂಗ್ರೆಸ್‌ನವರಿಗೆ ತಿರುಗೇಟು ನೀಡಿದರು. +ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ವರ್ಚಸ್ಸು ಹಾಳಾಗಬಾರದೆಂಬ ಕಾಳಜಿ ಇದೆ. ಈ ಹಿನ್ನಲೆಯಲ್ಲಿ ಪಕ್ಷ ಆತಂರಿಕ ವೇದಿಕೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_162_11.txt b/eesanje/url_46_162_11.txt new file mode 100644 index 0000000000000000000000000000000000000000..a5b126cc4be1c4e5be9b41adcf314fd15e2de11f --- /dev/null +++ b/eesanje/url_46_162_11.txt @@ -0,0 +1,6 @@ +ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ +ಬೆಂಗಳೂರು, ಏ.30-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್‌ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ಅವರು ಸ್ಪಷ್ಟ ಪಡಿಸಿದ್ದಾರೆ. +ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದೆ. ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಇವರಿಗೆ ಬಿಟ್ಟರೇ ವಿಡಿಯೋದ ಒಂದು ತುಣುಕನ್ನು ಯಾರಿಗೂ ಕೊಟ್ಟಿಲ್ಲ. ವಿನಾಕಾರಣ ಕಾಂಗ್ರೆಸ್‌ನವರ ಹೆಸರನ್ನು ಬೆರಸಬೇಡಿ ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. +15 ವರ್ಷದಿಂದ ಪ್ರಜ್ವಲ್‌ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ನಾನು ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ಕೊಟ್ಟರು. ಹಾಗಾಗಿ ನಾನು ಒಂದು ವರ್ಷದಿಂದೀಚೆಗೆ ಕೆಲಸ ಬಿಟ್ಟು ಅವರ ಮನೆಯಿಂದ ಹೊರ ಬಂದೆ. ಆ ಸಂದರ್ಭದಲ್ಲಿ ನನಗೆ ಯಾರೂ ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ವಿವರಿಸಿದೆ. +ಅದೇ ಸಂದರ್ಭದಲ್ಲಿ ದೇವರಾಜೇಗೌಡ ಅವರು ಪ್ರಜ್ವಲ್‌ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ನಿನ್ನ ಬಳಿ ಇರುವ ವಿಡಿಯೋ ಮತ್ತು ೇಟೊಗಳನ್ನು ನನಗೆ ಕೊಡು, ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ. +ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಯಾರು ಪೆನ್‌ಡ್ರೈವ್‌ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಎಲ್ಲಾ ವಿಚಾರವನ್ನು ಎಸ್‌ಐಟಿ ಮುಂದೆ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_162_12.txt b/eesanje/url_46_162_12.txt new file mode 100644 index 0000000000000000000000000000000000000000..1d11bcfed63459797ed7e4b5126c18f4b3e8819a --- /dev/null +++ b/eesanje/url_46_162_12.txt @@ -0,0 +1,5 @@ +ಪೆನ್‌ಡ್ರೈವ್‌ ಪ್ರಕರಣಕ್ಕೆ ಮೋದಿ ಸ್ಪಷ್ಟನೆಗೆ ಆಗ್ರಹಸಿ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್‌‍ ಕಾರ್ಯಕರ್ತರ ಮುತ್ತಿಗೆ +ಬೆಂಗಳೂರು, ಏ.30-ಹಾಸನದ ಸಂಸದ ಪ್ರಜ್ಞಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌‍ ಕಾರ್ಯಕರ್ತರು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. +ಯುವ ಕಾಂಗ್ರೆಸ್‌‍ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌‍, ಕಾರ್ಯಾಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲ ಕಾರ್ಯಕರ್ತರು ಪಕ್ಷದ ಕಾರ್ಯಾಲಯದ ಒಳಗೆ ನುಸುಳಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ಹಂತದಲ್ಲಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತಳ್ಳಾಟ-ನೂಕಾಟ ನಡೆಯಿತು. ಯುವ ಕಾಂಗ್ರೆಸ್‌‍ನ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. +ಈ ವೇಳೆ ಮಾತನಾಡಿದ ಬಿ.ವಿ.ಶ್ರೀನಿವಾಸ್‌‍, ಪ್ರಧಾನಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಹೇಳುತ್ತಾರೆ. ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಪ್ರಧಾನಿಯವರು ಮೌನವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. +ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಜೆಡಿಎಸ್‌‍ನ ಸಂಸದರು ಮಾಡಿರುವ ಕೃತ್ಯವನ್ನು ಬಿಜೆಪಿ ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ ಕಾರ್ಯಕರ್ತರು, ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣರನ್ನು ಜರ್ಮಿನಿಗೆ ಓಡಿ ಹೋಗಲು ಸಹಾಯ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರಧಾನಿಗಳೇ ಮಾತನಾಡಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_162_2.txt b/eesanje/url_46_162_2.txt new file mode 100644 index 0000000000000000000000000000000000000000..91463fd1be1181557cec1c5049d6a61066a4a3bf --- /dev/null +++ b/eesanje/url_46_162_2.txt @@ -0,0 +1,7 @@ +ರಾಜ್ಯದಲ್ಲಿ ಈವರೆಗೆ 446.92 ಕೋಟಿ ರೂ.ಗಳಿಗೂ ಹೆಚ್ಚು ಚುನಾವಣಾ ಅಕ್ರಮ ಪತ್ತೆ +ಬೆಂಗಳೂರು,ಮೇ.1-ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯವಾದ ಬಳಿಕ ಜಪ್ತಿಯಾಗುತ್ತಿರುವ ನಗದು, ಚಿನ್ನ, ಬೆಳ್ಳಿ, ಡ್ರಗ್ಸ್ , ಉಚಿತ ಉಡುಗೊರೆಗಳ ಪ್ರಮಾಣ ಇಳಿಕೆಯಾಗಿದೆ. ಆದರೂ ಈವರೆಗೆ 446.92 ಕೋಟಿ ರೂ.ನಷ್ಟು ಜಪ್ತಿ ಮಾಡಲಾಗಿದೆ. +ಮಾ.16 ರಿಂದ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿಯಮಬಾಹಿರವಾಗಿ ಸಾಗಾಟ ಮಾಡುವ ಹಣ, ಮದ್ಯ, ಡ್ರಗ್‌್ಸ, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ನಿರಂತರವಾಗಿ ಜಪ್ತಿ ಮಾಡಲಾಗುತ್ತಿದೆ. ಈತನಕ ಒಟ್ಟಾರೆ 446.92 ಕೋಟಿ ರೂ.ನಷ್ಟು ನಗದು, ಚಿನ್ನ, ಬೆಳ್ಳಿ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ರಾಜ್ಯದ 2ನೇ ಹಂತದ 14 ಕ್ಷೇತ್ರಗಳಿಗೆ ಮತದಾನ ನಡೆಯಲು ಇನ್ನೂ ಒಂದು ವಾರ ಬಾಕಿ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿನಿತ್ಯ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ ಸೇರಿದಂತೆ ಒಂದಲ್ಲಾ ಒಂದು ವಸ್ತುಗಳು ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳಿಗೆ ಸಿಗುತ್ತಲೇ ಇವೆ. ರಾಜ್ಯದಲ್ಲಿ 140.32 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಪೊಲೀಸರು, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ವಶಪಡಿಸಿಕೊಂಡಿವೆ. +ಅಬಕಾರಿ ಇಲಾಖೆಯವರು 178.39 ಕೋಟಿ ರೂ. ವೌಲ್ಯದ ಮದ್ಯ, ಡ್ರಗ್‌್ಸ ಅನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 48.09 ಕೋಟಿ ರೂ. ವೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಾಣಿಜ್ಯ ತೆರಿಗೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +616.48 ಕೆಜಿ ತೂಕದ 11.54 ಕೋಟಿ ರೂ. ವೌಲ್ಯದ ಡ್ರಗ್ಸ್ ಹಾಗೂ 178.84 ಕೋಟಿ ರೂ. ಮೊತ್ತದ ಮದ್ಯ, 137.25 ಕೆಜಿ ಚಿನ್ನ, 302.37 ಕೆಜಿ ಬೆಳ್ಳಿ, 47.23 ಕ್ಯಾರೆಟ್‌ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ.ಚುನಾವಣೆ ಹಿನ್ನೆಲೆಯಲ್ಲಿ ಇದುವರೆಗೆ 2,226 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು, 1,996 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. +ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿ 15 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,115 ಕೇಸ್‌ ಪೆಟ್ಟಿಗೆಗಳ ಬಿಯರ್‌ ಅನ್ನು ವಶಪಡಿಸಿಕೊಂಡಿದ್ದಾರೆ. ಇದರ ವೌಲ್ಯ 29,33,512 ರೂ. ಎಂದು ಅಂದಾಜಿಸಲಾಗಿದೆ. \ No newline at end of file diff --git a/eesanje/url_46_162_3.txt b/eesanje/url_46_162_3.txt new file mode 100644 index 0000000000000000000000000000000000000000..c383d93987aaba54acc638c022d68fb96c9f66ee --- /dev/null +++ b/eesanje/url_46_162_3.txt @@ -0,0 +1,9 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಮೇ.1-ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ ಯಾರನ್ನೇ ಆಗಲಿ ಬಂಧಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ, ಆ ರೀತಿ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸೂಕ್ತ ಅಲ್ಲ. ಸೂಕ್ಷ್ಮ ಪ್ರಕರಣವಾಗಿದ್ದು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಚ್ಚರಿಕೆಯಿಂದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು. +ದೂರುದಾರರಿಂದ ಹೇಳಿಕೆ ಪಡೆಯಲಾಗಿದೆ. ಸಿಆರ್‌ಪಿಸಿ 41/ಎ ಸೆಕ್ಷನ್‌ ಅಡಿ ನೋಟೀಸ್‌ ನೀಡಲಾಗಿದೆ. 24 ಗಂಟೆಯೊಳಗಾಗಿ ವಿಚಾರಣೆಗೆ ಹಾಜರಾಗಬೇಕು, ಇಲ್ಲದೇ ಹೋದರೆ ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ಎಸ್‌ಐಟಿ ಅಧಿ ಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. +ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದು ವಿಮಾನದ ಟಿಕೆಟ್‌ಗಳಿಂದ ಪತ್ತೆಯಾಗಿದೆ. ಅವರನ್ನು ವಾಪಸ್‌ ಕರೆತರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಎಸ್‌ಐಟಿ ಕೈಗೊಳ್ಳಲಿದೆ. ಅಗತ್ಯವಾದರೆ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯಲಿದೆ ಎಂದರು. +ಸದ್ಯಕ್ಕೆ ಎಸ್‌ಐಟಿ ಅಧಿ ಕಾರಿಗಳು ಪ್ರಕರಣ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಬಳಿಕ ವಿಡಿಯೋಗಳ ಮೂಲ ಯಾವುದು? ಎಲ್ಲಿಂದ ಬಿಡುಗಡೆಯಾಗಿದೆ? ಎಂಬ ವಿಚಾರಗಳ ಕುರಿತು ಎಸ್‌ಐಟಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು. +ರೇವಣ್ಣ ಅವರನ್ನು ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ವಿಡಿಯೋ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಟೀಕೆಗಳನ್ನು ಗಮನಿಸಿದ್ದೇನೆ. ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದಾಗಿ ಈ ಹಂತದಲ್ಲಿ ನಾನು ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಬೇರೆಯವರು ಈ ವಿಚಾರವನ್ನು ಚರ್ಚಿಸುವುದು ಸೂಕ್ತವಲ್ಲ. ಆರೋಪಗಳು, ಒತ್ತಡಗಳು, ಟೀಕೆಗಳನ್ನು ಆಧರಿಸಿ ಏಕಾಏಕಿ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. +ಹಾಗೆಯೇ ಯಾರನ್ನೂ ರಕ್ಷಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನೇಹಾ ಪ್ರಕರಣದಲ್ಲಿ ಬೊಬ್ಬೆ ಹೊಡೆದಿದ್ದ ಬಿಜೆಪಿಯವರು ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವೌನವಾಗಿರುವುದು ಮತ್ತು ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ನಮಗೆ ಸಂಬಂಧಟಪ್ಟ ವಿಚಾರಗಳಲ್ಲ. ಆ ಎರಡೂ ಪಕ್ಷಗಳಿಗೆ ಸೇರಿದ ವಿಷಯ ಎಂದು ಹೇಳಿದರು. +ಗ್ಯಾರಂಟಿ ನಿಲ್ಲಲ್ಲ :ಲೋಕಸಭಾ ಚುನಾವಣೆ ಬಳಿಕ ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ, ಕಾಂಗ್ರೆಸ್‌ ಸೋತರೆ ಗೃಹಜ್ಯೋತಿ ಯೋಜನೆ ನಿಲ್ಲಸಲಾಗುತ್ತದೆ ಎಂಬೆಲ್ಲಾ ಅಪಪ್ರಚಾರಗಳನ್ನು ವಿರೋಧಪಕ್ಷಗಳು ಮಾಡುತ್ತಿವೆ. ಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು ಸ್ಪಷ್ಟವಾಗಿ ಹೇಳಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈಗಾಗಲೇ ಪಂಚಖಾತ್ರಿಗಳಿಗೆ ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_162_4.txt b/eesanje/url_46_162_4.txt new file mode 100644 index 0000000000000000000000000000000000000000..695e7f28aa159eb426bcdb0736c6964a09777074 --- /dev/null +++ b/eesanje/url_46_162_4.txt @@ -0,0 +1,6 @@ +ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಬಿಸಿಗಾಳಿ, ಮಳೆಯಾಗುವ ಸಾಧ್ಯತೆಗಳಿಲ್ಲ +ಬೆಂಗಳೂರು,ಮೇ.1-ರಾಜ್ಯದಲ್ಲಿ ಒಣಹವೆ ಮುಂದುವರೆಯುತ್ತಿದ್ದು, ವಾರಾಂತ್ಯದವರೆಗೂ ಬಿಸಿಗಾಳಿಯ ವಾತಾವರಣ ಇರಲಿದೆ. ತಾಪಮಾನದಲ್ಲಿ ನಿರಂತರವಾಗಿ ಏರಿಕೆಯಾಗಿದ್ದು, ಹಗಲಿನ ವೇಳೆ ಸುಡುಬಿಸಿಲಿನ ಜೊತೆಗೆ ಬಿಸಿಗಾಳಿಯ ವಾತಾವರಣ ಇರುವುದರಿಂದ ಜನರು ಸುರಕ್ಷತಾ ಕ್ರಮಗಳನ್ನು ವಹಿಸುವಂತೆ ಹವಾಮಾನ ಇಲಾಖೆ ಸಲಹೆ ಮಾಡಿದೆ. +ಮೇ 4 ರವರೆಗೂ ಒಣಹವೆ ರಾಜ್ಯದಲ್ಲಿ ಕಂಡುಬರಲಿದ್ದು, ಮಳೆಯಾಗುವ ಸಾಧ್ಯತೆಗಳು ತೀರಾ ವಿರಳ. ಈ ಅವಧಿಯಲ್ಲಿ ಬಿಸಿಗಾಳಿ ಹೆಚ್ಚಾಗಲಿದೆ. ಅದರಲ್ಲೂ ಬಿಸಿಲ ನಾಡೇ ಎಂದೇ ಪರಿಗಣಿತವಾಗಿರುವ ಕಲ್ಯಾಣ ಕರ್ನಾಟಕದ ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಈಗಾಗಲೇ 40 ಡಿ.ಸೆಂ. ನಷ್ಟು ದಾಟಿದೆ. +ಮಧ್ಯಾಹ್ನದ ವೇಳೆ ಸಾಧ್ಯವಾದಷ್ಟು ಮನೆ, ಕಚೇರಿಯಿಂದ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ, ಅನಿವಾರ್ಯವಾದರೆ ಕೊಡೆ ಸೇರಿದಂತೆ ನೆರಳಿನ ಆಶ್ರಯ ಪಡೆದು, ಸಾಕಷ್ಟು ದ್ರವ ಪದಾರ್ಥಗಳನ್ನು ಸೇವಿಸಿ ಎಂಬ ಸಲಹೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗರಿಷ್ಠ ತಾಪಮಾನ 37 ಡಿ.ಸೆ. ಗಡಿಯನ್ನು ದಾಟಿದೆ. ಬೆಂಗಳೂರು ಸೇರಿದಂತೆ ಹಲವೆಡೆ ದಾಖಲೆ ಪ್ರಮಾಣದ ಉಷ್ಣಾಂಶ ಕಂಡುಬರುತ್ತಿದೆ. +ಒಂದು ವಾರದ ನಂತರ ರಾಜ್ಯದ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ. ಆದರೆ ಮೇ 4 ರವರೆಗೂ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿಲ್ಲ. ಬೀದರ್‌ 40, ವಿಜಯಪುರ 41.8, ಬಾಗಲಕೋಟೆ 42.4, ಧಾರವಾಡ 40.2, ಗದಗ 41.2, ಕಲಬುರಗಿ 43.6, ಹಾವೇರಿ 37.4, ಕೊಪ್ಪಳ 42.7, ರಾಯಚೂರು 43.4, ಬೆಂಗಳೂರು ನಗರ 38.2, ಚಾಮರಾಜನಗರ 39, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 39, ಚಿತ್ರದುರ್ಗ 39.9, ದಾವಣಗೆರೆ 40, ಚಿಕ್ಕಬಳ್ಳಾಪುರ 31.1, ಮಂಡ್ಯ 39.6, ಶಿವಮೊಗ್ಗ 38.6 ಡಿ.ಸೆಂ. ನಷ್ಟು ಗರಿಷ್ಠ ತಾಪಮಾನ ದಾಖಲಾಗುತ್ತಿದೆ. +ಸರಾಸರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ 35 ಡಿ.ಸೆಂ.ಗಿಂತ ಹೆಚ್ಚು ತಾಪಮಾನ ಕಂಡುಬರುತ್ತಿದೆ. ಕಲಬುರಗಿಯಲ್ಲಿ ಅತೀ ಹೆಚ್ಚು 43.6 ಹಾಗೂ ರಾಯಚೂರಿನಲ್ಲಿ 43.4 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದು, ಸರಾಸರಿ 2 ರಿಂದ 3 ಡಿ.ಸೆ. ನಷ್ಟು ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ.ಹೀಗಾಗಿ ಬಿಸಿಲಿನ ತೀವ್ರತೆಗೆ ಜನ, ಜಾನುವಾರು, ಪ್ರಾಣಿ-ಪಕ್ಷಿಗಳು ತತ್ತರಿಸಿ ಹೋಗುವಂತಾಗಿದೆ. \ No newline at end of file diff --git a/eesanje/url_46_162_5.txt b/eesanje/url_46_162_5.txt new file mode 100644 index 0000000000000000000000000000000000000000..9a0aa08f466ce7bd2e99dfb1ac8f57ee554b155c --- /dev/null +++ b/eesanje/url_46_162_5.txt @@ -0,0 +1,6 @@ +ಪೆನ್‌ಡ್ರೈವ್‌ನ ವಿಡಿಯೋ-ಫೋಟೊ ಹಂಚಿಕೊಂಡವರ ವಿರುದ್ಧ ಕ್ರಮಕ್ಕೆ ಒತ್ತಾಯ +ಬೆಂಗಳೂರು,ಏ.30-ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದಾರೆ. +ಸಾಮಾಜಿಕ ತಾಲತಾಣಗಳಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ ವಿಡಿಯೋಗಳನ್ನು ಹಂಚಲಾಗುತ್ತಿದೆ. ಇದರಿಂದ ಮಹಿಳೆಯರ ಘನತೆಗೆ ಧಕ್ಕೆ ಉಂಟಾಗುತ್ತಿದೆ. ಸಂತ್ರಸ್ತ ಮಹಿಳೆಯ ಕುಟುಂಬದಲ್ಲೂ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಈ ಬಗ್ಗೆ ಸಾಕಷ್ಟು ಮಹಿಳೆಯರಿಂದ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಸಂತ್ರಸ್ತ ಮಹಿಳೆಯರ ವಿಡಿಯೋ ಶೇರ್‌ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ. +ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಇಂತಹ ಕೃತ್ಯ ಎಸಗುತ್ತಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋಗಳನ್ನು ಹರಿಯಬಿಡುವ ಮೂಲಕ ಅನ್ಯಾಯಕ್ಕೊಳಗಾದ ಮಹಿಳೆಯರ ಘನತೆಗೆ ಕುಂದು ತರುತ್ತಿದ್ದಾರೆ. ಇದರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು. +ಈಗಾಗಲೇ ಹಾಸನ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಎಸ್‌ಐಟಿ ರಚನೆ ಮಾಡಿ ಎರಡು ದಿನಗಳಷ್ಟೇ ಆಗಿದೆ. ತನಿಖಾ ತಂಡಕ್ಕೆ ಸಮಯಾವಕಾಶ ಕೊಡಬೇಕಿದೆ. ನಾವು ಸ್ವಲ್ಪ ಕಾಯಬೇಕಾಗಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಆಗಲಿದೆ ಎಂಬ ಭರವಸೆ ಇದೆ ಎಂದು ಇದೇ ಸಂದರ್ಭದಲ್ಲಿ ನಾಗಲಕ್ಷ್ಮಿ ಚೌಧರಿ ವಿಶ್ವಾಸ ವ್ಯಕ್ತಪಡಿಸಿದರು. +ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಆಗಿರುವುದರಿಂದ ನಾವು ಕಾಯಬೇಕು, ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಮುಂದೆ ಬರುವ ಸಂತ್ರಸ್ತ ಮಹಿಳೆಯರ ಗೌಪ್ಯತೆ ಕಾಪಾಡೋದು, ತನಿಖೆಯಲ್ಲಿ ಭಾಗಿಯಾದಾಗ ರಕ್ಷಣೆ ಕೊಡಿಸುವುದು ಮಹಿಳಾ ಆಯೋಗದ ಜವಾಬ್ದಾರಿಯಾಗಿದೆ. ಈ ಭರವಸೆಯನ್ನು ನಾನು ಸಂತ್ರಸ್ತರಿಗೆ ನೀಡುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_162_6.txt b/eesanje/url_46_162_6.txt new file mode 100644 index 0000000000000000000000000000000000000000..129c898ad2bc3e85e5683501219a3c4b251780fd --- /dev/null +++ b/eesanje/url_46_162_6.txt @@ -0,0 +1,12 @@ +ಹಾಸನ ಪೈನ್‌ಡ್ರೈವ್‌ ಬಹಿರಂಗ ವಿಚಾರ : ಕಾರ್ತಿಕ್‌ – ದೇವರಾಜೇಗೌಡ ನಡುವೆ ಜಟಾಪಟಿ +ಬೆಂಗಳೂರು, ಏ.30-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್‌ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ಅವರು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದೆ. +ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಇವರಿಗೆ ಬಿಟ್ಟರೇ ವಿಡಿಯೋದ ಒಂದು ತುಣುಕನ್ನು ಯಾರಿಗೂ ಕೊಟ್ಟಿಲ್ಲ. ವಿನಾಕಾರಣ ಕಾಂಗ್ರೆಸ್‌ನವರ ಹೆಸರನ್ನು ಬೆರಸಬೇಡಿ ಎಂದು ಕಾರ್ತಿಕ್‌ ವಿಡಿಯೋದಲ್ಲಿ ಹೇಳಿದ್ದಾರೆ. +15 ವರ್ಷದಿಂದ ಪ್ರಜ್ವಲ್‌ ಹಾಗೂ ಅವರ ಕುಟುಂಬದ ಕಾರು ಚಾಲಕನಾಗಿ ನಾನು ಕೆಲಸ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ಕೊಟ್ಟರು. ಹಾಗಾಗಿ ನಾನು ಒಂದು ವರ್ಷದಿಂದೀಚೆಗೆ ಕೆಲಸ ಬಿಟ್ಟು ಅವರ ಮನೆಯಿಂದ ಹೊರ ಬಂದೆ. +ಆ ಸಂದರ್ಭದಲ್ಲಿ ನನಗೆ ಯಾರೂ ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ವಿವರಿಸಿದೆ. ಅದೇ ಸಂದರ್ಭದಲ್ಲಿ ದೇವರಾಜೇಗೌಡ ಅವರು ಪ್ರಜ್ವಲ್‌ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. +ನಿನ್ನ ಬಳಿ ಇರುವ ವಿಡಿಯೋ ಮತ್ತು ಪೋಟೊಗಳನ್ನು ನನಗೆ ಕೊಡು, ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ. ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಯಾರು ಪೆನ್‌ಡ್ರೈವ್‌ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಎಲ್ಲಾ ವಿಚಾರವನ್ನು ಎಸ್‌ಐಟಿ ಮುಂದೆ ಹಾಜರಾಗಿ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ತಿಳಿಸಿದ್ದಾರೆ. +`ಕೈ’ ಮುಖಂಡರಿಗೆ ತಲುಪಿವೆಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದು ಪ್ರತಿಪಾದಿಸಿರುವ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ ಅವರು, ಪೆನ್‌ಡ್ರೈವ್‌ ಎಲ್ಲಿಂದ ಎಲ್ಲಿಗೆ ಹೋಗಿವೆ ಎಂಬ ಬಗ್ಗೆಯೂ ವಿಚಾರಣೆ ನಡೆಯಬೇಕಿದೆ ಎಂದು ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು. ನಾನು 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದೆ. ಜಿಲ್ಲೆಯ ಜವಾಬ್ದಾರಿಯುತ ಬಿಜೆಪಿ ಮುಖಂಡ ಆಗಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿನ ಅಕ್ರಮಗಳ ವಿರುದ್ಧ ಪ್ರಜ್ವಲ್‌ ರೇವಣ್ಣ, ಹೆಚ್‌.ಡಿ.ರೇವಣ್ಣ, ಸೂರಜ್‌ ರೇವಣ್ಣ, ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ಮಾಡಿ ಗೆದ್ದಿದ್ದೇನೆ. ಇಷ್ಟು ಮಂದಿ ಅನರ್ಹಗೊಂಡಿ ದ್ದಾರೆ. ಮೇಲ್ಮನವಿಯ ಮೂಲಕ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ ಎಂದು ವಿವರಿಸಿದ್ದರು. +ಈಗ ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳು ಬಹಿರಂಗವಾಗಿರುವುದರ ಹಿಂದೆ ನನ್ನ ಪಾತ್ರ ಇಲ್ಲ. ವಿಡಿಯೋಗಳು ಬಹಿರಂಗಗೊಳಿಸದಂತೆ ಪ್ರಜ್ವಲ್‌ ರೇವಣ್ಣ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆ ಪ್ರಕರಣದಲ್ಲಿ ಕಾರು ಚಾಲಕ ಕಾರ್ತಿಕ್‌ 86ನೇ ಪ್ರತಿವಾದಿಯಾಗಿದ್ದರು. ಆತ ನನ್ನ ಬಳಿ ಬಂದು ವಕಾಲತ್ತು ವಹಿಸುವಂತೆ ಮನವಿ ಮಾಡಿದ್ದ. ಆ ವೇಳೆ ಕಕ್ಷಿದಾರನ ಪರವಾಗಿ ವಾದ ಮಂಡಿಸಬೇಕಾಗಿದ್ದರಿಂದ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ಕೇಳಿದ್ದೆ. +ಈ ವಿಡಿಯೋಗಳು ಬೇರೆ ಯಾರಿಗಾದರೂ ನೀಡಲಾಗಿದೆಯೇ ಎಂದು ನಾನು ಕೇಳಿದಾಗ ಕಾರ್ತಿಕ್‌ ನನಗೆ ಇವನ್ನು ನನ್ನ ಸ್ನೇಹಿತ ನೀಡಿದ್ದಾನೆ. ಇವು ಕಾಂಗ್ರೆಸ್‌ ಅಧ್ಯಕ್ಷರಿಗೆ ಮತ್ತು ಇತರ ಮುಖಂಡರಿಗೆ ತಲುಪಿವೆ ಎಂದು ಕಾರ್ತಿಕ್‌ ತಿಳಿಸಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಜೆಡಿಎಸ್‌-ಬಿಜೆಪಿ ಮೈತ್ರಿಯಾಗುವಾಗ ನಾನು ಹಾಸನದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗುವ ವ್ಯಕ್ತಿ ವಿರುದ್ಧ ಈ ರೀತಿಯ ವಿಡಿಯೋಗಳಿವೆ ಎಂದು ಬಿಜೆಪಿ ಹೈಕಮಾಂಡ್‌ ನಾಯಕರಿಗೆ ಇ-ಮೇಲ್‌ ಕಳುಹಿಸಿದ್ದೆ, ಅವು ತಲುಪಿರಲಿಲ್ಲ. +ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಂಪೂರ್ಣ ಮಾಹಿತಿಯ ಪತ್ರ ಬರೆದು, ಅವರ ಕಚೇರಿಯಲ್ಲಿ ಇಟ್ಟು ಬಂದಿದ್ದೆ. ಅದನ್ನು ಅವರು ಓದಿರಲಿಲ್ಲ. ವಾಟ್‌್ಸಅಪ್‌ನಲ್ಲೂ ಕಳುಹಿಸಿದ್ದೆ, ಬ್ಲೂಟಿಕ್‌ ಆಗಿತ್ತು. ಆದರೆ ಆ ಸಂದೇಶವನ್ನು ವಿಜಯೇಂದ್ರ ಓದಿರಲಿಲ್ಲ ಎಂದು ಗೋತ್ತಾಗಿದೆ ಎಂದಿದ್ದಾರೆ. ಪೆನ್‌ಡ್ರೈವ್‌ ವಿಡಿಯೋದಲ್ಲಿ ಬಹಳಷ್ಟು ಹೆಣ್ಣು ಮಕ್ಕಳ ಜೀವನ ಅಡಗಿದೆ, ಅದನ್ನು ಬಯಲು ಮಾಡಿ ಅವರ ಘನತೆಗೆ ಧಕ್ಕೆ ತರುವ ಹೀನ ರಾಜಕಾರಣ ನಾನು ಮಾಡುವುದಿಲ್ಲ. ಒಂದು ವೇಳೆ ಆ ರೀತಿ ಮಾಡುವುದಿದ್ದರೆ ನಾನು ಪತ್ರ ಬಿಜೆಪಿ ವರಿಷ್ಠರಿಗೆ ಪತ್ರ ಬರೆಯುವ ಅವಶ್ಯಕತೆಯೇ ಬರುತ್ತಿರಲಿಲ್ಲ. ಆಗಲೇ ವಿಡಿಯೋ ಬಹಿರಂಗ ಮಾಡಿದ್ದರೆ ಪ್ರಜ್ವಲ್‌ಗೆ ಟಿಕೆಟ್‌ ಸಿಗುತ್ತಿರಲಿಲ್ಲ ಎಂದು ಹೇಳಿದರು. +ರಾಜಕಾರಣಕ್ಕಾಗಿ ಪ್ರಭಾವಿಗಳು ಕಿಡಿಗೇಡಿಗಳ ಕೈಗೆ ಪೆನ್‌ಡ್ರೈವ್‌ ನೀಡಿ, ಹಾದಿ ಬೀದಿಯಲ್ಲಿ ಸಿಗುವಂತೆ ಮಾಡಿದ್ದಾರೆ. ವಿಡಿಯೋದಲ್ಲಿ ಇರುವುದು ಅತ್ಯಾಚಾರವಲ್ಲ, ಒಪ್ಪಿತ ಕ್ರಿಯೆ. ವಿಡಿಯೋದಲ್ಲಿರುವ ಒಬ್ಬ ಮಹಿಳೆ ತಮ್ಮ ಮೇಲೆ ಒಂಬತ್ತು ವರ್ಷಗಳ ಹಿಂದೆ ಅತ್ಯಾಚಾರ ಆಗಿದೆ ಎಂದು ಹೇಳಿದ್ದಾರೆ. ಇಷ್ಟು ದಿನ ಏಕೆ ಸುಮ್ಮನಿದ್ದರು ದೇವರಾಜೇಗೌಡ ಪ್ರಶ್ನಿಸಿದರು. \ No newline at end of file diff --git a/eesanje/url_46_162_7.txt b/eesanje/url_46_162_7.txt new file mode 100644 index 0000000000000000000000000000000000000000..750ec0b0ed38d02ad0d925e6721ae7d9c2a90a96 --- /dev/null +++ b/eesanje/url_46_162_7.txt @@ -0,0 +1,10 @@ +ಪೊಲೀಸ್‌ ಕರ್ತವ್ಯ ಬಹಳ ಜಟಿಲ, ಆರೋಗ್ಯ ಕಾಪಾಡಿಕೊಳ್ಳಿ : ಡಿಜಿಪಿ ಪ್ರತಾಪ್‌ ರೆಡ್ಡಿ ಕಿವಿ ಮಾತು +ಬೆಂಗಳೂರು, ಏ.30-ಪೊಲೀಸ್‌ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಬಹಳ ಜಟಿಲವಾಗಿದ್ದು, ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತಿ ಅವಶ್ಯಕವೆಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಸಿಬ್ಬಂದಿಗಳಿಗೆ ಕಿವಿ ಮಾತು ಹೇಳಿದರು. +ಸ್ವಯಂ ನಿವೃತ್ತಿ ಪಡೆದಿರುವ ಡಿಜಿಪಿ ಪ್ರತಾಪ್‌ ರೆಡ್ಡಿ ಅವರಿಗೆ ಕೋರಮಂಗಲದ ಕೆಎಸ್‌ಆರ್‌ಪಿ ಪೆರೆಡ್‌ ಮೈದಾನದಲ್ಲಿ ಇಂದು ಬೀಳ್ಕೊಡುಗೆ ಕವಾಯತು ಹಮ್ಮಿಕೊಳ್ಳಲಾಗಿತ್ತು. +ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ, ನಾನು ಇಲಾಖೆಗೆ ಸೇರಿದಾಗ ಇಷ್ಟೊಂದು ಕ್ಲಿಷ್ಟಕರವಾಗಿರಲಿಲ್ಲ. ಆದರೆ ಇತ್ತಿಚೀನ ದಿನಗಳಲ್ಲಿ ಕರ್ತವ್ಯ ಜಟಿಲವಾಗುತ್ತಿದೆ, ಮುಂದೆಯೂ ಕಷ್ಟ ವಾಗಬಹುದು. ಹಾಗಾಗಿ ಸಿಬ್ಬಂದಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದರು. +ಚುನಾವಣಾ ಸಂದರ್ಭದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಬೀಳ್ಕೊಡುಗೆ ಕವಾಯತು ಹಮ್ಮಿಕೊಳ್ಳುವುದು ಬಹಳ ಕಷ್ಟ. ಆದರೂ ಅದನ್ನೆಲ್ಲವನ್ನೂ ನಿಭಾಯಿಸಿ ಇಷ್ಟೊಂದು ಅಚ್ಚುಕಟ್ಟಾಗಿ ಸುಸೂತ್ರವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು. +ಕೆಎಸ್‌ಆರ್‌ಪಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕರ್ನಾಟಕದ ಪೊಲೀಸ್‌ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ ಎಂದರು. +ಕೆಎಸ್‌ಆರ್‌ಪಿ ತುಕಡಿಗಳ ಜೊತೆ ಕೆಲಸ ಮಾಡಿರುವುದು ಬಹಳ ತೃಪ್ತಿ ತಂದಿದೆ. ಕೆಎಸ್‌ಆರ್‌ಪಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿದೆ. ಕೆಎಸ್‌ಆರ್‌ಪಿ ತುಕಡಿ ಪೊಲೀಸ್‌ ಇಲಾಖೆಗೆ ಹೆಮ್ಮೆ ಎಂದು ಕೆಎಸ್‌ಆರ್‌ಪಿ ತುಕಡಿಯ ಕಾರ್ಯವೈಖರಿಯನ್ನು ಶ್ಲಾಸಿದರು.ಸತತ 33 ವರ್ಷ ಪೊಲೀಸ್‌ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ವಿವಿಧ ವಿಭಾಗಗಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ನನ್ನ ಸುಧಿರ್ಘ ಸೇವೆಯಲ್ಲಿ ಅಧಿಕಾರಿಗಳ ಮತ್ತು ಸಿಬ್ಬಂದಿ ಬಹಳ ಪ್ರೀತಿ ತೋರಿಸಿದ್ದಾರೆ. ವೈಯಕ್ತಿಕವಾಗಿ ಗೌರವ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು. +ಪುಟ್ಟ ಹಳ್ಳಿಯಲ್ಲಿ ಹುಟ್ಟಿದ ನನಗೆ ಪೋಷಕರು ಉತ್ತಮ ಶಿಕ್ಷಣ ಕೊಡಿಸಿದರು, ನಾನು ಐಪಿಎಸ್‌ ಪರೀಕ್ಷೆ ತೇರ್ಗಡೆಗೊಂಡು ಪೊಲೀಸ್‌ ಇಲಾಖೆಗೆ ಪಾದಾರ್ಪಣೆ ಮಾಡಿ ಇಂದು ನಿವೃತ್ತಿಯಾಗುತ್ತಿದ್ದು, ತನ್ನ ಸೇವಾ ಅವಽಯಲ್ಲಿ ಹಿರಿಯ ಅಽಕಾರಿಗಳ ಮಾರ್ಗದರ್ಶನದಲ್ಲಿ ಉತ್ತಮವಾಗಿ ಕರ್ತವ್ಯ ನಿಭಾಯಿಸಿರುವ ತೃಪ್ತಿ ನನಗಿದೆ ಎಂದರು. +ಕವಾಯತು ಕಾರ್ಯಕ್ರಮದಲ್ಲಿ ಡಿಜಿ ಅಲೋಕ್‌ ಮೋಹನ್‌, ಎಡಿಜಿಪಿ ಉಮೇಶ್‌ ಕುಮಾರ್‌, ನಗರ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಪ್ರತಾಪ್‌ ರೆಡ್ಡಿ ಅವರ ಬೀಳ್ಕೊಡುಗೆ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ಅವರ ತಂದೆ ಗುಂಟೂರಿನಿಂದ ಆಗಮಿಸಿದ್ದರು. +ಪ್ರತಾಪ್‌ ರೆಡ್ಡಿ ಅವರ ಪತ್ನಿ ಸುಜಾತಾ ರೆಡ್ಡಿ, ಮಗಳು ಹರ್ಷಲಾ ರೆಡ್ಡಿ ಹಾಗೂ ವಿದೇಶದಲ್ಲಿ ನೆಲೆಸಿರುವ ಮಗ ಡಾ. ಗೌತಮ್‌ ರೆಡ್ಡಿ, ಸೊಸೆ ಮತ್ತು ಮೊಮ್ಮಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_162_8.txt b/eesanje/url_46_162_8.txt new file mode 100644 index 0000000000000000000000000000000000000000..55d0457aea015361332f084925efe0a786bafb09 --- /dev/null +++ b/eesanje/url_46_162_8.txt @@ -0,0 +1,7 @@ +ಬೌದ್ಧ ಧರ್ಮದ ವಿಧಿ ವಿಧಾನದೊಂದಿಗೆ ಶ್ರೀನಿವಾಸ್‌ ಪ್ರಸಾದ್‌ ಅಂತ್ಯ ಸಂಸ್ಕಾರ +ಬೆಂಗಳೂರು,ಏ.30-ಕೇಂದ್ರದ ಮಾಜಿ ಸಚಿವ, ಸಂಸದ ಹಾಗೂ ದಲಿತರ ಆಶಾಕಿರಣ ವಿ.ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ಇಂದು ಸರ್ಕಾರಿ ಸಕಲ ಗೌರವಾಧರಗಳೊಂದಿಗೆ ನಡೆಯಿತು. ಮೈಸೂರಿನ ಸಿಲ್ಕ್ ಫ್ಯಾಕ್ಟ್ರಿ ಬಳಿ ಇರುವ ಶ್ರೀನಿವಾಸ್‌ ಪ್ರಸಾದ್‌ ಅವರ ಡಾ.ಬಿ.ಆರ್‌.ಅಂಬೇಡ್ಕರ್‌ ಎಜುಕೇಷನ್‌ ಅಂಡ್‌ ಕಲ್ಚರಲ್‌ ಟ್ರಸ್ಟ್ ಆವರಣದಲ್ಲಿ ಬೌದ್ಧ ಧರ್ಮದ ವಿಧಿವಿಧಾನದೊಂದಿಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಯಿತು. +ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರಂತೆಯೇ ಬೌದ್ಧ ಧರ್ಮದ ಅನುಯಾಯಿಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರ ಕೊನೆಯ ಆಸೆಯಂತೆ ಅಹಿಂಸೆ ಮತ್ತು ಸತ್ಯದ ಸಂದೇಶದ ಮೂಲಕ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. +ಮಧ್ಯಾಹ್ನ 1 ಗಂಟೆಗೆ ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆಯನ್ನು ಬೌದ್ಧ ಧರ್ಮದ ಭಿಕ್ಷುಗಳು ನೆರವೇರಿಸಿಕೊಟ್ಟರು. ಕಳೆದ ಐದು ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ಮುತ್ಸದ್ದಿ ಇನ್ನು ನೆನಪು ಮಾತ್ರ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸ್ಥಳೀಯ ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಶ್ರೀನಿವಾಸ್‌ ಪ್ರಸಾದ್‌ ಅವರ ಸಾವಿರಾರು ಅಭಿಮಾನಿಗಳು ನೆಚ್ಚಿನ ನಾಯಕನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. +ಇದಕ್ಕೂ ಮುನ್ನ ಭೀಮ ಸದನದಿಂದ ವಿ.ಶ್ರೀನಿವಾಸ ಪ್ರಸಾದ್‌ ಅವರ ಪಾರ್ಥಿವ ಶರೀರ ಹೊರಟಾಗ ರಸ್ತೆಯುದ್ದಕ್ಕೂ ಪುಷ್ಪವೃಷ್ಠಿ ಸುರಿಸಿ ಸಾರ್ವ ಜನಿಕರು ನಮನ ಸಲ್ಲಿಸಿದರು.ಮತ್ತೆ ಪ್ರಸಾದ್‌ ಅಣ್ಣ ಬರಲಿ ಎಂಬ ಘೋಷಣೆ ಗಳನ್ನು ಕೂಗಿರು. ಅಭಿಮಾನಿಗಳು ಭಾರವಾದ ಹೆಜ್ಜೆಗಳನ್ನಿಡುತ್ತಾ ಅಂತಿಮ ಯಾತ್ರೆಗೆ ಸಾಕ್ಷಿಯಾದರು. ಅಂತಿಮ ಯಾತ್ರೆ ಸಾಗಿದ ಮಾರ್ಗದುದ್ದಕ್ಕೂ ಮಳಿಗೆದಾರರು ಸ್ವಯಂಪ್ರೀರಿತವಾಗಿ ಅಂಗಡಿ, ಮುಂಗಟ್ಟುಗಳನ್ನು ಬಂದ್‌ ಮಾಡಿ ಗೌರವ ಸಲ್ಲಿಸಿದರು. +ಜೀರೋ ಟ್ರಾಫಿಕ್‌ನಲ್ಲೇ ಭೀಮಸದನದಿಂದ ಅಶೋಕಪುರಂ ವರೆಗೆ ಪಾರ್ಥಿವ ಶರೀರವನ್ನು ತರಲಾಯಿತು. ಪಾರ್ಥಿವ ಶರೀರವಿದ್ದ ವಾಹನವು ಅಶೋಕಪುರಂ ಪ್ರವೇಶಿಸುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಪುಷ್ಪವೃಷ್ಠಿ ಸುರಿಸಿ ಕಂಬನಿ ಮೀಡಿದರು. +ಎಂಟಿಎಂ ಶಾಲೆಯ ಸುತ್ತ ಸಾವಿರಾರು ಮಂದಿ ಜಮಾಯಿಸಿ ದ್ದರಿಂದ ಶಾಲೆಯ ಆವರಣ ಜನರಿಂದಲೇ ಭರ್ತಿಯಾಗಿತ್ತು. ಪಾರ್ಥಿವ ಶರೀರ ಹೊತ್ತು ಸಾಗಿದ ವಾಹನವನ್ನು ವಿಶೇಷ ಹೂ ಹಾಗೂ ತುಳಸಿ ಮಾಲೆಗಳಿಂದ ಅಲಂಕರಿಸಲಾಗಿತ್ತು.ಸಂಸದ ವಿ. ಶ್ರೀನಿವಾಸಪ್ರಸಾದ್‌ ಅವರ ನಿಧನದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲ ಸರಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. \ No newline at end of file diff --git a/eesanje/url_46_162_9.txt b/eesanje/url_46_162_9.txt new file mode 100644 index 0000000000000000000000000000000000000000..d0e54cd803de1beabd77cd17f28463a6df0659d0 --- /dev/null +++ b/eesanje/url_46_162_9.txt @@ -0,0 +1,7 @@ +ನೇಹಾ ಹತ್ಯೆ ಪ್ರಕರಣ ಮುಚ್ಚಿ ಹಾಕಲು ಸಂಚು ನಡೆದಿದೆ : ಆರ್‌. ಅಶೋಕ್‌ ಆರೋಪ +ಬೆಂಗಳೂರು,ಏ.30-ನೇಹಾ ಹತ್ಯೆ ಪ್ರಕರಣವನ್ನು ಜನರು ಮೂರೋ ಆರೋ ತಿಂಗಳ ನಂತರ ಮರೆತ ಬಳಿಕ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ಷೇಪಿಸಿದರು. ಹುಬ್ಬಳ್ಳಿಯಲ್ಲಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಭೇಟಿ ನೀಡಿ, ನಿರಂಜನ ಹಿರೇಮಠ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ್‌, ಸಮರ್ಥ ಸಾಕ್ಷಿ ಬೇಕು. ದಾಖಲೆಗಳನ್ನು ಸರಿಯಾಗಿ ಸಂಗ್ರಹ ಮಾಡಬೇಕಿತ್ತು. ಕಳೆದ ಹತ್ತಾರು ದಿನಗಳಿಂದ ಆತನ ಜೊತೆ ಸಂಪರ್ಕದಲ್ಲಿದ್ದವರ ಫೋನ್‌ ಕರೆಗಳ ವಿವರ ಯಾಕೆ ಸಂಗ್ರಹಿಸಿಲ್ಲ? ಯಾಕೆ ಇದನ್ನು ಮಾಡಿಲ್ಲ? ಅವನು ಮಾದಕ ದ್ರವ್ಯ ಸೇವನೆ ಮಾಡಿದ್ದನೇ? ಬೇರೆ ಏನಾದರೂ ಲಿಂಕ್‌ ಇತ್ತೇ? ಕೆಎಫ್‌ಡಿ, ಪಿಎಫ್‌ಐನಂಥ ಸಮಾಜ ವಿರೋಧಿ ಸಂಘಟನೆ ಜೊತೆ ಸಂಪರ್ಕ ಇತ್ತೇ ಎಂಬ ಮಾಹಿತಿಗಳನ್ನು ಪಡೆಯಬೇಕಿತ್ತು ಎಂದು ಆಗ್ರಹಿಸಿದರು. +ಗೃಹ ಸಚಿವರು, ಪೊಲೀಸ್‌ ಇಲಾಖೆಗೆ ಸಾಮಾನ್ಯ ಜ್ಞಾನ ಇರಬೇಕು. ಇಂಥ ಕೊಲೆ ಆದಾಗ ಡಬಲ್‌ ಅಲರ್ಟ್‌ ಇರಬೇಕು. ತನಿಖೆ ಮಾಡುವವರು ಆರೋಪಿಯನ್ನು ಪೊಲೀಸ್‌ ಕಸ್ಟಡಿಗೆ ಕೇಳಬೇಕಿತ್ತಲ್ಲವೇ? ಸಾಕ್ಷ್ಯಗಳನ್ನು ಸಂಗ್ರಹಿಸಬೇಕಿತ್ತಲ್ಲವೇ? ಕಾನೂನಿನಡಿ ಇರುವ ಕ್ರಮವನ್ನು ಯಾಕೆ ಕೈಗೊಂಡಿಲ್ಲ? ಆರೋಪಿಯನ್ನು ಜೈಲಿಗೆ (ಜುಡಿಷಿಯಲ್‌ ಕಸ್ಟಡಿ) ಕಳಿಸಿದ ಬಳಿಕ ಯಾರ್ಯಾರು ಭೇಟಿ ಮಾಡಿದ್ದರು? ಬಚಾವ್‌ ಮಾಡಲು ಸಲಹೆ ಕೊಟ್ಟಿರುವ ಸಾಧ್ಯತೆ ಇರಬಹುದಲ್ಲವೇ ಎಂದು ಕೇಳಿದರು. +ನೇಹಾ ಹತ್ಯೆ ಖಂಡಿಸಿ, ದೇಶ ಮಾತ್ರವಲ್ಲದೆ ಅಮೇರಿಕ, ಲಂಡನ್‌ನಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹತ್ಯೆ ವಿಷಯದಲ್ಲಿ ಆರೋಪಿ ಬಚಾವ್‌ ಆಗಲು ಪೊಲೀಸ್‌ ಇಲಾಖೆ, ಸರಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ನೇರವಾಗಿ ಆರೋಪಿಸಿದರು.ಈ ಕೊಲೆ ಹಿಂದೆ ಯಾರಿದ್ದಾರೆ? ಕೊಲೆಗೆ ಬಳಸಿದ ಆಯುದ್ಧವನ್ನು ಎಲ್ಲಿಂದ ಖರೀದಿ ಮಾಡಲಾಗಿದೆ ಎಂಬ ಮಾಹಿತಿ ಸಂಗ್ರಹಿಸಬೇಕಿತ್ತು. ಇಡೀ ಕುಟುಂಬದ 20 ವರ್ಷಗಳ ಹಿನ್ನೆಲೆ ಏನು? ಅವರಿಗೆ ಯಾರ್ಯಾರ ಜೊತೆ ಸಂಪರ್ಕ ಇದೆ ಎಂಬ ಮಾಹಿತಿ ತಿಳಿಯಬೇಕಿತ್ತು ಎಂದು ತಿಳಿಸಿದರು. +ಇದೊಂದು ವಿಶೇಷ ಪ್ರಕರಣವಾಗಿದ್ದರೂ ಲವ್‌ ಜಿಹಾದ್‌ ಎಂದರೆ ತಮಗೆ ಕೆಟ್ಟ ಹೆಸರು ಬರಬಹುದೆಂದು, ಅದನ್ನು ತಪ್ಪಿಸಲು ಸರಕಾರವು ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ನೇಮಕ ಮಾಡಿಲ್ಲ. ಹಾಗೂ ಆರೋಪಿಯನ್ನು ಕಸ್ಟಡಿಗೆ ಪಡೆದಿಲ್ಲ ಎಂದು ಆರೋಪಿಸಿದರು. ನೊಂದ ಕುಟುಂಬವು ಸಿಬಿಐಗೆ ಕೊಡಿ ಎಂದರೆ ಸರಕಾರ ಕೊಡಬೇಕು. ಸಿಐಡಿಗೆ ಅಥವಾ ಎಸ್‌ಐಟಿಗೆ ಕೊಡಿ ಎಂದರೂ ಕೊಡಬೇಕಿತ್ತು. ಇದು ಸಾಮಾನ್ಯ ಜ್ಞಾನ ಎಂದು ತಿಳಿಸಿದರು. +ಕಾಲೇಜು ಕ್ಯಾಂಪಸ್‌ಗಳೂ ಸುರಕ್ಷಿತವಲ್ಲ, ಅಲ್ಲಿಯೂ ಕೂಡ ಮಕ್ಕಳ ಹತ್ಯೆ ಆಗಬಹುದು ಎಂಬುದಕ್ಕೆ ಇದೊಂದು ಉದಾಹರಣೆ. ಇದು ಕಾಲೇಜು ಕ್ಯಾಂಪಸ್‌ನಲ್ಲಿ ಆದ ಇಂಥ ಮೊದಲ ದುರ್ಘಟನೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಲವ್‌ ಜಿಹಾದ್‌ಗಾಗಿ ಈ ಘಟನೆ ಆಗಿದ್ದು, ರಾಜ್ಯವೇ ತಲೆತಗ್ಗಿಸುವ ಘಟನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಹಾಜರಿದ್ದರು. \ No newline at end of file diff --git a/eesanje/url_46_163_1.txt b/eesanje/url_46_163_1.txt new file mode 100644 index 0000000000000000000000000000000000000000..67b85902392187ac7d40893aedc4e95016c1f100 --- /dev/null +++ b/eesanje/url_46_163_1.txt @@ -0,0 +1,7 @@ +ಸಿಮಿಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿ ಕೇಂದ್ರ ಅಧಿಸೂಚನೆ : ಆಕ್ಷೇಪಣೆಗಳು ಸಲ್ಲಿಸಲು ಅವಕಾಶ +ಬೆಂಗಳೂರು,ಏ.30-ಸ್ಪೂಡೆಂಟ್ಸ್ ಇಸ್ಲಾಮಿಕ್‌ ಮೂವ್ಮೆಂಟ್‌ ಆಫ್‌ ಇಂಡಿಯಾ(ಸಿಮಿ) ಅನ್ನು ಕಾನೂನು ಬಾಹಿರ ಚಟುವಟಿಕೆಗಳ(ತಡೆ) ಕಾಯ್ದೆ ಅನ್ವಯ ಕಾನೂನು ಬಾಹಿರ ಸಂಘಟನೆಯನ್ನು ಘೋಷಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕುರಿತು ರಾಜ್ಯ ಗುಪ್ತಚರ ಇಲಾಖೆಯ ನಿರ್ದೇಶನಾಲಯವು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. +ಕೇಂದ್ರ ಸರ್ಕಾರವು ಉಪ ಕಲಂ (1)ಕಲಂ- 3 ಕಾನೂನು ಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ)1967(37 ಆಫ್‌ 1967) ರ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿ ಕಾರದ ಅನ್ವಯ ಸ್ಪೂಡೆಂಟ್ಸ್ ಇಸ್ಲಾಮಿಕ್‌ ಮೂಮ್ಮೊಂಟ್‌ ಆಫ್‌ ಇಂಡಿಯಾ (ಸಿಮಿ) ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಕೇಂದ್ರ ಸರಕಾರ 2024 ಜನೆವರಿ 29ರಂದು ಘೋಷಿಸಿದೆ ಎಂದು ದೆಹಲಿ ಉಚ್ಛ ನ್ಯಾಯಾಲಯದ ಕಾನೂನು ಬಾಹಿರ ಚಟುವಟಿಕೆ(ತಡೆ) ನ್ಯಾಯಾಧೀಕರಣ ರಿಜಿಸ್ಟ್ರಾರ್‌ ಜಿತೇಂದ್ರ ಪ್ರಸಾತ್‌ ಸಿಂಗ್‌ ಅವರು ತಿಳಿಸಿದ್ದಾರೆ. +ಈ ಕಾಯ್ದೆಯ ಉಪ ಕಲಂ (1) ಕಲಂ 4ರಲ್ಲಿ ತಿಳಿಸಿರುವಂತೆ ಸ್ಪೂಡೆಂಟ್‌್ಸ ಇಸ್ಲಾಮಿಕ್‌ ಮೂಮ್ಮೆಂಟ್‌ ಆಫ್‌ ಇಂಡಿಯಾ ಅನ್ನು ಕಾನೂನು ಬಾಹಿರ ಸಂಘಟನೆಯೆಂದು ಘೋಷಿಸಲು ಸಾಕಷ್ಟು ಕಾರಣಗಳು ಇವೆಯೇ ಎಂಬ ಬಗ್ಗೆ ನಿರ್ಣಯಿಸಲು ಕಲಂ 5(1) ಕಾಯ್ದೆ ಅಡಿ ದೆಹಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪುರುಷೇಂದ್ರ ಕುಮಾರ್‌ ಕೌರವ್‌ ರವರನ್ನೂಳಗೊಂಡ ನ್ಯಾಯಾಧೀಕರಣವನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. +ಈಗ ಕಾಯ್ದೆಯ ಕಲಂ 4. ಉಪ ಕಲಂ-2ರಡಿ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಈ ನೋಟೀಸ್‌ ಜಾರಿ ಮಾಡಿದ 30 ದಿನದೊಳಗೆ ಸ್ಪೂಡೆಂಟ್‌್ಸ ಇಸ್ಲಾಮಿಕ್‌ ಮೂವ್ಮೆಂಟ್‌ ಆಫ್‌ ಇಂಡಿಯಾ (ಸಿಮಿ) ಅನ್ನು ಸಾಕಷ್ಟು ಕಾರಣಗಳಿಂದ ಕಾನೂನು ಬಾಹಿರವೆಂದು ತೀರ್ಮಾನಿಸಿ ಘೋಷಿಸಿರುವುದನ್ನು ಏಕೆ ಒಪ್ಪಬಾರದು ಹಾಗೂ ಕಲಂ 4(3)ರಡಿ ಈ ನಿರ್ಣಯವನ್ನು ಒಪ್ಪಿಕೊಂಡು ಏಕೆ ಅಂತಹ ಘೋಷಣೆಯನ್ನು ದೃಢೀಕರಿಸಬಾರದೆಂಬುದಕ್ಕೆ ಕಾರಣಗಳನ್ನು ನೀಡಲು ತಿಳಿಸಲಾಗಿದೆ. +ಆಕ್ಷೇಪಣೆಗಳು /ಉತ್ತರ ಏನಾದರೂ ಇದ್ದಲ್ಲಿ ಒಂದು ವಾರದೊಳಗಾಗಿ ಕಚೇರಿ ಕೊಠಡಿ ಸಂಖ್ಯೆ 104, ಮೊದಲನೇ ಮಹಡಿ, ಎ ಬ್ಲಾಕ್‌, ದೆಹಲಿ ಉಚ್ಚ ನ್ಯಾಯಾಲಯ, ಶೇರ್‌ ಷಾ ರಸ್ತೆ, ನವದೆಹಲಿ-110503 ಇಲ್ಲಿಗೆ ಕಳುಹಿಸಬಹುದಾಗಿದೆ. ಆಕ್ಷೇಪಣೆಗಳು/ ಉತ್ತರ/ ದಾಖಲೆಗಳು ಪ್ರಾಂತೀಯ ಭಾಷೆಯಲ್ಲಿ ಇದ್ದಲ್ಲಿ ಅದರ ಯಥಾವತ್ತಾದ ಆಂಗ್ಲ ಭಾಷಾಂತರದ ಪ್ರತಿಯನ್ನು ಲಗತ್ತಿಸಬೇಕಿದೆ. +ನೀವು ಖುದ್ದಾಗಿ ಅಥವಾ ನಿಮ್ಮ ಅಧಿ ಕೃತ ಅನುಮತಿ ಪಡೆದ ವ್ಯಕ್ತಿಯ ಮೂಲಕ ಕೊಠಡಿ ಸಂಖ್ಯೆ 16, ದೆಹಲಿ ಉಚ್ಚ ನ್ಯಾಯಾಲಯ, ಶೇರ್‌ ಷಾ ರಸ್ತೆ, ನವದೆಹಲಿ – 110503 ರ ದೆಹಲಿಯಲ್ಲಿರುವ ಟ್ರಿಬ್ಯೂನಲ್ನ ಮುಂದೆ 2024ರ ಮೇ 04ರ ಸಂಜೆ 4.30 ಗಂಟೆಗೆ ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_163_10.txt b/eesanje/url_46_163_10.txt new file mode 100644 index 0000000000000000000000000000000000000000..359868fc9fb04d1a980a59cd3305609c3369bc8b --- /dev/null +++ b/eesanje/url_46_163_10.txt @@ -0,0 +1,3 @@ +ಇಂಡಿಗನತ್ತ ಮತಗಟ್ಟೆಯಲ್ಲಿ ಶೇ.13.45 ರಷ್ಟು ಮರುಮತದಾನ +ಬೆಂಗಳೂರು, ಏ.30-ಮರು ಮತದಾನ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹನೂರು ತಾಲ್ಲೂಕಿನಲ್ಲಿ ಇಂಡಿಗನತ್ತ ಮತಗಟ್ಟೆಯಲ್ಲಿ ಶಾಂತಿಯುತ ಮತದಾನವಾಗಿದೆ. ಆದರೆ, ಮತದಾನ ಪ್ರಮಾಣ ತೀರಾ ಕಡಿಮೆಯಾಗಿದೆ, ಏಪ್ರಿಲ್‌ 26ರಂದು ಮತದಾನ ಬಹಿಷ್ಕರಿಸಿದಲ್ಲದೆ, ಇಂಡಿಗನತ್ತ ಮತಗಟ್ಟೆಯಲ್ಲಿ ಘರ್ಷಣೆಯಾಗಿ ಮತಯಂತ್ರಕ್ಕೆ ಹಾನಿ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ ನಿನ್ನೆ ಮರು ಮತದಾನ ನಡೆಸಿತ್ತು. +ಇಂಡಿಗನತ್ತ ಮತಗಟ್ಟೆಯಲ್ಲಿ 279 ಪುರುಷ, 249 ಮಹಿಳಾ ಮತದಾರರು ಸೇರಿದಂತೆ 528 ಮತದಾರರು ಇದ್ದು, ಇವರಲ್ಲಿ 32 ಪುರುಷ, 39 ಮಹಿಳಾ ಮತದಾರರು ಮಾತ್ರ ಮತ ಚಲಾಯಿಸಿದ್ದಾರೆ. ಒಟ್ಟಾರೆ 71 ಮತದಾರರು ಮಾತ್ರ ಮತದಾನ ಮಾಡಿದ್ದಾರೆ. ಒಟ್ಟಾರೆ ಶೇ.13.45ರಷ್ಟ ಮಾತ್ರ ಮತದಾನವಾಗಿದೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_163_11.txt b/eesanje/url_46_163_11.txt new file mode 100644 index 0000000000000000000000000000000000000000..37ceebd32c53e840d5696834ee9c2632e6fcee78 --- /dev/null +++ b/eesanje/url_46_163_11.txt @@ -0,0 +1,5 @@ +ನಗದು, ಚಿನ್ನ ಸೇರಿದಂತೆ 446.02 ಕೋಟಿ ಮೌಲ್ಯದ ಚುನಾವಣಾ ಅಕ್ರಮಗಳು ಬಯಲಿಗೆ +ಬೆಂಗಳೂರು,ಏ.29-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 446.02 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ವಜ್ರ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. +ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯರವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 2,207 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 1,961 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. +ಪೊಲೀಸ್‌ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 140 ಕೋಟಿ ರೂ. ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ.ಅಬಕಾರಿ ಇಲಾಖೆಯವರು 177.81 ಕೋಟಿ ರೂ. ಮೊತ್ತದ ಮದ್ಯ, ಡ್ರಗ್ಸ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 48.09 ಕೋಟಿ ರೂ. ಮೊತ್ತದ ವಜ್ರ, ಚಿನ್ನ ಹಾಗೂ ನಗದನ್ನು ಜಪ್ತಿ ಮಾಡಿದ್ದಾರೆ. +ವಾಣಿಜ್ಯ ತೆರಿಗೆ ಅಧಿಕಾರಿಗಳು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಆದಾಯ ತೆರಿಗೆ ಅಧಿಕಾರಿಗಳು ಕಲಬುರಗಿ ರೈಲ್ವೇ ನಿಲ್ದಾಣದ ಬಳಿ 1,99,92,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ಮತದಾರರ ಸಹಾಯವಾಣಿ ಮೂಲಕ 35,715 ಕರೆಗಳನ್ನು ಸ್ವೀಕರಿಸಿ ಅವುಗಳನ್ನು ವಿಲೇವಾರಿ ಮಾಡಲಾಗಿದೆ. ನಾಗರಿಕರಿಂದ ಎನ್‌ಜಿಆರ್‌ ಪೋರ್ಟಲ್‌ ಮೂಲಕ 20,183 ದೂರುಗಳನ್ನು ದಾಖಲಿಸಿ, 18,314 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_163_12.txt b/eesanje/url_46_163_12.txt new file mode 100644 index 0000000000000000000000000000000000000000..9ea023a1af7ca4165b37fc100e2548f85d0f8e3c --- /dev/null +++ b/eesanje/url_46_163_12.txt @@ -0,0 +1,6 @@ +ಹಾಸನ ಪೆನ್ ಡ್ರೈವ್ ಪ್ರಕರಣ, ಎಸ್‌ಐಟಿ ತಂಡ ಸಭೆ +ಬೆಂಗಳೂರು, ಏ.29-ಹಾಸನ ಸಂಸದ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌ ಸಂಬಂಧದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಇಂದು ಸಭೆ ನಡೆಸಿತು. ನಗರದ ಸಿಐಡಿ ಪ್ರಧಾನ ಕಚೇರಿಯಲ್ಲಿ ಎಸ್‌‍ಐಟಿ ಮುಖ್ಯಸ್ಥರಾದ ಬಿ.ಕೆ. ಸಿಂಗ್‌ ಅವರ ನೇತೃತ್ವದಲ್ಲಿ ಈ ಸಭೆ ನಡೆದಿದ್ದು, ಐಪಿಎಸ್‌‍ ಅಧಿಕಾರಿಗಳಾದ ಸುಮನ್‌ ಡಿ. ಪೆನ್ನೇಕರ್‌, ಸೀಮಾ ಲಾಟ್ಕರ್‌ ಭಾಗವಹಿಸಿದ್ದರು. +ಸಭೆಯಲ್ಲಿ ಪ್ರಮುಖವಾಗಿ ವಿಶೇಷ ತನಿಖಾ ತಂಡದಲ್ಲಿ ಎಷ್ಟು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇರಬೇಕು, ಯಾವ ರ್ಯಾಂಕ್‌ನ ಅಧಿಕಾರಿಗಳು ಇರಬೇಕು, ಯಾರ್ಯಾರನ್ನು ಈ ತಂಡಕ್ಕೆ ನೇಮಿಸಿಕೊಳ್ಳಬೇಕು, ಯಾವ ಯಾವ ವಿಭಾಗಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತೆಗೆದುಕೊಳ್ಳಬೇಕು, ಯಾವ ರ್ಯಾಂಕ್‌ನ ಅಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಿಕೊಳ್ಳಬೇಕು, ತನಿಖೆ ಯಾವ ಸ್ವರೂಪದಲ್ಲಿರಬೇಕು ಎಂಬಿತ್ಯಾದಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. +ಈ ಪ್ರಕರಣ ಗಣ್ಯ ವ್ಯಕ್ತಿಗಳಿಗೆ ಸೇರಿದ್ದರಿಂದ ಬಹಳ ಸೂಕ್ಷ್ಮ ತೆಯಿಂದ ತನಿಖೆ ಮಾಡಬೇಕು, ತನಿಖೆ ಆರಂಭಿಸುವ ಮುನ್ನ ಯಾವ ಯಾವ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕು, ಸಂಗ್ರಹಿಸಿದ ಸಾಕ್ಷ್ಯಗಳನ್ನು ಎಫ್‌ಎಸ್‌‍ಎಲ್‌ ಗೆ ಕಳುಹಿಸಬೇಕು. ನಂತರ ವರದಿ ತರಿಸಿಕೊಳ್ಳಬೇಕು ಎಂಬ ವಿಷಯಗಳ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ. +ತದನಂತರದಲ್ಲಿ ಯಾರ್ಯಾರನ್ನು ವಿಚಾರಣೆಗೆ ಒಳಪಡಿಸಬೇಕು, ಯಾರ್ಯಾರಿಗೆ ನೋಟಿಸ್‌‍ ಕೊಡಬೇಕು, ಸಂತ್ರಸ್ತೆಯರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳುವುದು, ಈ ಪ್ರಕರಣ ಸಂಬಂಧ ಎಷ್ಟು ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಆಧರಿಸಿ ಒಟ್ಟಾಗಿ ತನಿಖೆ ಮಾಡಬೇಕಾ ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು. +ನಂತರದ ದಿನಗಳಲ್ಲಿ ಈ ತಂಡ ಹಾಸನಕ್ಕೆ ತೆರಳಿ ತನಿಖೆ ಕೈಗೊಳ್ಳಲಿದೆ.ಏನಿದು ಪ್ರಕರಣ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಾಸನದಲ್ಲಿ ಹರಿದಾಡುತ್ತಿದ್ದು, ರಾಜ್ಯ ಮಹಿಳಾ ಆಯೋಗ ಪ್ರಕರಣವನ್ನು ಎಸ್‌‍ಐಟಿ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದೆ. \ No newline at end of file diff --git a/eesanje/url_46_163_2.txt b/eesanje/url_46_163_2.txt new file mode 100644 index 0000000000000000000000000000000000000000..6388a47fbcd83242498cff41875a90f9cdb59458 --- /dev/null +++ b/eesanje/url_46_163_2.txt @@ -0,0 +1,5 @@ +ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು +ಬೆಂಗಳೂರು,ಏ.30-ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾ ಎಚ್‌.ಡಿ.ದೇವೇಗೌಡರ ಅನುಮೋದನೆಯಂತೆ ಜೆಡಿಎಸ್‌ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್‌.ಶಿವಕುಮಾರ್‌ ಅವರು ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. +ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿರುವ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಅಮಾನತು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ತೀರ್ಮಾನದ ಬೆನ್ನಲ್ಲೇ ಪಕ್ಷದಿಂದ ಅಮಾನತು ಆದೇಶ ಹೊರಬಿದ್ದಿದೆ. +ಜೆಡಿಎಸ್‌ ಪಕ್ಷದ ಸಂವಿಧಾನ ಮತ್ತು ನಿಯಮಗಳಡಿ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್‌ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಘನತೆ, ಗೌರವಗಳಿಗೆ ಮತ್ತು ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ. +ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತುವಿಡಿಯೋಗಳ ಬಗ್ಗೆ ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್‌ ಸರ್ಕಾರ ಒಂದು ವಿಶೇಷ ತನಿಖಾ ದಳವನ್ನು ರಚಿಸಿದೆ. ಆ ತನಿಖಾ ದಳವು ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_163_4.txt b/eesanje/url_46_163_4.txt new file mode 100644 index 0000000000000000000000000000000000000000..34069d80defbe2d13406217593367804d67a3f7a --- /dev/null +++ b/eesanje/url_46_163_4.txt @@ -0,0 +1,7 @@ +ಉತ್ತರಾಖಂಡದಲ್ಲಿ ಪತಂಜಲಿ ಉತ್ಪನ್ನಗಳ ಲೈಸೆನ್ಸ್ ರದ್ದು : ಆರ್‌.ಅಶೋಕ್‌ ಅವರೇ ಈಗೇನ್ ಹೇಳ್ತೀರಾ..? +ಬೆಂಗಳೂರು, ಏ.30-ಪತಂಜಲಿ ಸಂಸ್ಥೆ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆ ನಡೆಸಲು ಮುಂದಾದಾಗ ವಿರೋಧ ವ್ಯಕ್ತ ಪಡಿಸಿದ್ದ ವಿಪಕ್ಷ ನಾಯಕ ಆರ್‌.ಅಶೋಕ್‌ ಈಗ ಉತ್ತರಾಖಂಡ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಏನು ಹೇಳುತ್ತಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, ಉತ್ತರಕಾಂಡದ ಬಿಜೆಪಿ ಸರ್ಕಾರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್‌.ಅಶೋಕ್‌ ಪತಂಜಲಿ ಸಂಸ್ಥೆ ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. +ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರೆಯೇ ಎಂದು ತಿರುಗೇಟು ನೀಡಿದ್ದಾರೆ. ಸುಳ್ಳು ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ ಬಾಬುರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದೆ. +ಸರ್ವೋಚ್ಚ ನ್ಯಾಯಾಲಯವೇ ಪತಂಜಲಿ ಸಂಸ್ಥೆಯ ವಿಶ್ವಾಸರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾಗ ವಿಪಕ್ಷ ನಾಯಕ ಆರ್‌.ಅಶೋಕ್‌ ಪತಂಜಲಿ ಜನ ಮೆಚ್ಚಿದ ಬ್ರ್ಯಾಂಡ್‌ ಎಂದು ಸರ್ಟಿಫಿಕೇಟ್‌ ಕೊಟ್ಟಿದ್ದರು. ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸುವುದೇ ಅಪರಾಧವೆಂಬಂತೆ ವರ್ತಿಸಿದ್ದರು. ಈಗ ಅವರ ಪಕ್ಷದ ನೇತೃತ್ವದ ಉತ್ತರಕಾಂಡ ಸರ್ಕಾರ ಕೈಗೊಂಡ ಕ್ರಮಗಳನ್ನು ಪ್ರಶ್ನಿಸುವ ತಾತ್ತು ಅಶೋಕ್‌ ಅವರಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. +ಮತ್ತೊಂದು ಪೋಸ್ಟ್‌ನಲ್ಲಿ ದಿನೇಶ್‌ ಗುಂಡೂರಾವ್‌, ಕಮಲ ಪಾಳೆಯದವರೇ ಯಾರು ಡೇಂಜರ್‌, ನಿಮ್ಮ ಕಮಲ ದಳದಲ್ಲೇ ಇದೆ ಡೇಂಜರ್‌ ! ಕಣ್ಮುಂದೆ ಕಿರಾತಕ ಕೃತ್ಯಗಳನ್ನ ಕಂಡೂ, ಕಣ್ಣಾ ಮುಚ್ಚಾಲೆ ಆಡಿದ ನೀವು ಡೇಂಜರ್‌ ಎಂದು ಹಾಸನದ ಪೆನ್‌ಡ್ರೈವ್‌ ಪ್ರಕರಣ ಕುರಿತು ಪರೋಕ್ಷವಾಗಿ ಪ್ರತಿಕ್ರಿಯಿಸಿದ್ದಾರೆ. +ಮಹಿಳೆಯರ ಮಾಂಗಲ್ಯದ ಬಗ್ಗೆ ಮಾತಾಡುವ ಮೋದಿಯವರೇ.. ಹುಬ್ಬಳ್ಳಿಯ ಹೆಣ್ಣುಮಗಳ ಹತ್ಯೆಗೆ ಅಬ್ಬರಿಸಿದಷ್ಟು, ಹಾಸನದ ಹೆಣ್ಣುಮಕ್ಕಳಿಗಾದ ಅನ್ಯಾಯಗಳ ಬಗ್ಗೆ ಏಕೆ ಅರ್ಭಟಿಸಲಿಲ್ಲ. ಯಾರಿಗೆ ಆಶೀರ್ವದಿಸಿ ಎಂದು ಕೇಳಿದ್ದಿರೋ, ಅವರ ಅಶ್ಲೀಲದ ಬಗ್ಗೆ ನಿಮಗೆ ಮೊದಲೇ ತಿಳಿಸಿದ್ದರಂತಲ್ಲ.. ಆದರೂ, ನಿಮ್ಮ ಮಡಿಲಲ್ಲಿಟ್ಟುಕೊಂಡು ಮತ ಕೇಳಲು ಅಸಹ್ಯ ಎನಿಸಲಿಲ್ಲವೇ. ದುಷ್ಕೃತ್ಯಗಳನ್ನ ನಡೆಸಿದ ವ್ಯಕ್ತಿಯನ್ನು ನಿಮ್ಮ ಪಕ್ಷ ಜೊತೆಗಿಟ್ಟುಕೊಂಡಿರುವುದು ದುರಂತವೇ ಸರಿ. ಕನ್ಯೆಯರ ಕಣ್ಣೀರಿಗೆ ಬೆಲೆ ಕೊಡದ ಕಮಂಗಿಗಳಿಗೆ ಕಮಲದಳ ರಾಜಕೀಯ ದಾಳವಾಗದಿರಲಿ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_163_5.txt b/eesanje/url_46_163_5.txt new file mode 100644 index 0000000000000000000000000000000000000000..9c8a020aa04962fbb39965edd7f3d5ac40d9b213 --- /dev/null +++ b/eesanje/url_46_163_5.txt @@ -0,0 +1,5 @@ +ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆಯದ ಮೋದಿ : ಕಾಂಗ್ರೆಸ್‌‍ ಪ್ರಶ್ನೆ +ಬೆಂಗಳೂರು, ಏ.30-ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯದಿರುವುದನ್ನು ಕಾಂಗ್ರೆಸ್‌‍ ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಕಾಂಗ್ರೆಸ್‌‍, ಪ್ರಧಾನಿ ಮೋದಿಯವರು ನಿನ್ನೆ ಕರ್ನಾಟಕದಲ್ಲೇ ಇದ್ದರು, ಕರ್ನಾಟಕ ಕಂಡ ಮುತ್ಸದ್ದಿ ರಾಜಕಾರಿಣಿ, ಶೋಷಿತ ಸಮುದಾಯಗಳ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್‌‍ ಪ್ರಸಾದ್‌ ಅವರು ತೀರಿಕೊಂಡಿದ್ದು ಪ್ರಧಾನಿಯಯವರಿಗೂ ತಿಳಿದಿತ್ತು. +ಶ್ರೀನಿವಾಸ್‌‍ ಪ್ರಸಾದ್‌ ಅವರು ಮೋದಿಯವರ ಸಂಸತ್‌ ಸಹೋದ್ಯೋಗಿ ಹಾಗೂ ಅವರದ್ದೇ ಪಕ್ಷದ ಹಾಲಿ ಸಂಸದ ಕೂಡ. ಹೀಗಿದ್ದೂ ಶ್ರೀನಿವಾಸ್‌‍ ಪ್ರಸಾದ್‌ ಅವರ ಪಾರ್ಥಿವ ಶರೀರ ನೋಡಿ ಗೌರವ ಸೂಚಿಸುವ ಕನಿಷ್ಠ ಸೌಜನ್ಯವನ್ನು ಪ್ರಧಾನಿಯವರು ತೋರಿಸಲಿಲ್ಲ ಎಂದು ಆರೋಪಿಸಿದೆ. +ಇದು ಮೋದಿಯವರಿಗೆ ಶೋಷಿತ ಸಮುದಾಯಗಳ ಬಗ್ಗೆ ಇರುವ ತಾತ್ಸಾರವೋ ಅಥವಾ ನಾಯಕರನ್ನು ಬಳಸಿ ಬಿಸಾಡುವ ಕುಯುಕ್ತಿಯ ಬುದ್ಧಿಯೊ? ಶ್ರೀನಿವಾಸ್‌‍ ಪ್ರಸಾದ್‌ ಅವರ ಸೈದ್ದಂತಿಕ ಭಿನ್ನತೆಯ ಕಾರಣಕ್ಕೆ ತೋರಿದ ದ್ವೇಷವೋ ಎಂದು ಕಾಂಗ್ರೆಸ್‌‍ ಪ್ರಶ್ನಿಸಿದೆ. +ಬಿಜೆಪಿ ಶ್ರೀನಿವಾಸ್‌‍ ಪ್ರಸಾದ್‌ರನ್ನು ಪಕ್ಷಕ್ಕೆ ಸೇರಿಸಿಕೊಂಡ ನಂತರ ಮೂಲೆಗುಂಪು ಮಾಡಿತ್ತು, ಈಗ ಮೋದಿಯವರು ನಿರ್ಲಕ್ಷ್ಯ ಮಾಡಿದ್ದಾರೆ. ಒಬ್ಬ ಹಿರಿಯ ಮುತ್ಸದ್ದಿ ನಾಯಕನಿಗೆ ಬಿಜೆಪಿ ಮತ್ತು ಮೋದಿ ಕೊಡುವ ಗೌರವ ಇದೇನಾ ಎಂದು ಖಾರವಾಗಿ ಪ್ರತಿಕ್ರಿಯಿಸಲಾಗಿದೆ. \ No newline at end of file diff --git a/eesanje/url_46_163_6.txt b/eesanje/url_46_163_6.txt new file mode 100644 index 0000000000000000000000000000000000000000..5515a8723902c6af0380a5a843c99f53243e51fc --- /dev/null +++ b/eesanje/url_46_163_6.txt @@ -0,0 +1,7 @@ +ರಾಜ್ಯದಲ್ಲಿ ಮಾವಿನ ಹಣ್ಣಿಗೂ “ಬರಗಾಲ”, ಗಗನಕ್ಕೇರಿದ ಬೆಲೆ +ಬೆಂಗಳೂರು, ಏ.30-ಏಪ್ರಿಲ್‌-ಮೇ ಬಂತೆಂದರೆ ಎಲ್ಲಿ ನೋಡಿದರೂ ಹಣ್ಣುಗಳ ರಾಜ. ಮಾವಿನ ಹಣ್ಣಿನ ಗಮಲು ಪಸರಿಸುತ್ತಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ತೀವ್ರ ಬರಗಾಲ ಆವರಿಸಿದ್ದು, ಮಾವಿನ ಅಬ್ಬರವೇ ಇಲ್ಲದಂತಾಗಿದೆ. ಈ ಸಮಯದಲ್ಲಿ ರಾಜ್ಯದ ವಿವಿಧ ಜಿಲ್ಲೆ ಪಟ್ಟಣ ನಗರದ ರಸ್ತೆ ಬದಿ ರಾಶಿರಾಶಿ ಮಾವಿನ ಹಣ್ಣುಗಳ ವ್ಯಾಪಾರ ಜೋರಾಗಿ ನಡೆಯುತ್ತಿತ್ತು. +ಬರದಿಂದಾಗಿ ಇಳುವರಿ ಕುಂಠಿತವಾಗಿ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕೈಗೆಟುಕದಂತೆ ಹಣ್ಣು ಹುಳಿಯಾಗಿದೆ. ಪ್ರತಿ ವರ್ಷ ಕೆಜಿ ಹಣ್ಣಿಗೆ 70ರಿಂದ 100 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಈ ಬಾರಿ ಕೆಜಿಗೆ 300 ರೂ.ಗೆ ತಲುಪಿದೆ. ರಾಜ್ಯ ಮಾತ್ರ ವಲ್ಲದೆ ಹೊರರಾಜ್ಯದಲ್ಲೂ ಸಹ ನಿರೀಕ್ಷೆಯಂತೆ ಮಾವು ಬೆಳೆಯಿಲ್ಲ. ಪೂರೈಕೆ ಇಲ್ಲದೆ ಬೆಲೆ ಗಗನಕ್ಕೇರಿದೆ. +ಮಾವು ಹೂ ಬಿಡುವ ಸಂದರ್ಭದಲ್ಲಿ ಮಳೆ ಕೈಕೊಟ್ಟಿದ್ದು, ಗಿಡದಲ್ಲೇ ಉಳಿದಿದ್ದ ಪೀಚುಗಳು ಸಹ ಬಿಸಿಲಿನ ಧಗೆಗೆ ಉದುರು ಹೋಗಿದ್ದು, ಬೆಳೆ ರಕ್ಷಿಸಿಕೊಳ್ಳಲು ರೈತರು ಟ್ಯಾಂಕರ್‌ಗಳ ಮೂಲಕ ನೀರು ಹಾಯಿಸಿದ್ದು, ಜೊತೆಗೆ ಸಾಕಷ್ಟು ಔಷಧಿಯನ್ನು ಸಹ ಸಿಂಪಡಿಸಿದರು.ಇದ್ಯಾವುದೇ ಸಹ ಪ್ರಯೋಗವಾಗದೇ ಹವಾಮಾನದ ಮುಂದೆ ನಮ್ಮ ಕಸರತ್ತು ಏನೂ ಕೂಡ ನಡೆಯದಂತಾಗಿ ಇಳುವಳಿ ಭಾರೀ ಕುಂಠಿತವಾಗಿದೆ. ಹಾಗಾಗಿ ಬೆಲೆ ಗಗನಕ್ಕೇರಿದೆ. +ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಾಲೂರು, ಮಾಗಡಿ ಪ್ರದೇಶದಲ್ಲಿ ಹೆಚ್ಚಿನ ಮಾವು ಬೆಳೆಯಲಾಗುತ್ತಿತ್ತು. ಬೆಂಗಳೂರಿಗೆ ಅಧಿಕ ಪ್ರಮಾಣದಲ್ಲಿ ಮಾಲು ಬರುತ್ತಿತ್ತು. ಈ ಬಾರಿ ಇಳುವಳಿ ಇಲ್ಲದೆ ಕೆಲವೇ ಟನ್‌ಗಳಷ್ಟೇ ಹಣ್ಣು ಬಂದಿದ್ದು, ನಗರದ ಆಯ್ದ ಪ್ರದೇಶಗಳಲ್ಲಿ ಮಾತ್ರ ಕಾಣಬಹುದಾಗಿದೆ. +ಬಂದಿರುವ ಹಣ್ಣುಗಳು ಸಹ ಅಷ್ಟೇನೂ ಗಾತ್ರ ಹೊಂದಿಲ್ಲ. ಜೊತೆಗೆ ರುಚಿಯೂ ಕೂಡ ಇಲ್ಲದಂತಾಗಿದೆ. ಅವು ಕೂಡ ನೈಸರ್ಗಿಕವಾಗಿ ಹಣ್ಣಾದಂತಿಲ್ಲ. ಬಿಸಿಲಿಗೆ ಕಲ್ಲರ್‌ ಬಂದಿದ್ದು ಬಲವಂತವಾಗಿ ಹಣ್ಣು ಮಾಡಲಾಗಿದ್ದು, ರುಚಿ ಇಲ್ಲದಂತಾಗಿದೆ. +ಬೆಲೆ ನೋಡುವುದಾದರೆ ಮಲಗೋಬ 200ರಿಂದ 250, ಬಾದಾಮಿ 200, ಸೇಂದೂರ 150, ರಸಪುರಿ 150ಗೆ ಮಾರಾಟ ಮಾಡಲಾಗುತ್ತಿದ್ದು, ಗ್ರಾಹಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.ಈ ಸಮಯದಲ್ಲಿ ಬುಟ್ಟಿಗಟ್ಟಲೆ ಹಣ್ಣು ಕೊಂಡು ತಿನ್ನುತ್ತಿದ್ದ ಜನ ಹಣ್ಣಿನ ಬರಹರಿಸಿಕೊಳ್ಳಲು ಕೆಜಿ ಲೆಕ್ಕದಲ್ಲಿ ಕೊಂಡು ತಿನ್ನುವಂತಾಗಿದೆ. \ No newline at end of file diff --git a/eesanje/url_46_163_7.txt b/eesanje/url_46_163_7.txt new file mode 100644 index 0000000000000000000000000000000000000000..9ef043f5b4a0c1d3d7a3c0e3eb81ee37a98e5faf --- /dev/null +++ b/eesanje/url_46_163_7.txt @@ -0,0 +1,6 @@ +ಮೇ.10ರಂದು ರಿಸಲ್ಟ್ +ಬೆಂಗಳೂರು,ಏ.30-ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 10ರಂದು ಪ್ರಕಟವಾಗುವ ಸಂಭವವಿದೆ. ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ಎಲ್ಲವೂ ನಿರೀಕ್ಷೆಯಂತೆ ನಡೆದು ಮೇ 10ರಂದು ಫಲಿತಾಂಶ ಹೊರಬೀಳಲಿದೆ. +2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದರು. +ಇನ್ನು ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್‌ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. +ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್‌ ನಂಬರ್‌ / ರೋಲ್‌ ನಂಬರ್‌ ಹೊಂದಿರಬೇಕು. ವಿದ್ಯಾರ್ಥಿಗಳು, ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್‌ ನಂಬರ್‌ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು. +...inಗೆ ಭೇಟಿ ನೀಡಬಹುದು. ಈ ಮೂಲಕವಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮೇ 10 ರಂದು ನಿರ್ಧಾರ ಆಗಲಿದೆ. ಹಾಗೇ ಫಲಿತಾಂಶವನ್ನ ವೀಕ್ಷಿಸಲು ಕೆಲವು ಕಡೆ ವಿಶೇಷ ವ್ಯವಸ್ಥೆ ಮಾಡುವ ನಿರೀಕ್ಷೆ ಇದೆ. \ No newline at end of file diff --git a/eesanje/url_46_163_8.txt b/eesanje/url_46_163_8.txt new file mode 100644 index 0000000000000000000000000000000000000000..8bc3bfbeefeb7f977b4fee4a24fd45055834493e --- /dev/null +++ b/eesanje/url_46_163_8.txt @@ -0,0 +1,7 @@ +ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ: ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ +ಹುಬ್ಬಳ್ಳಿ,ಏ.30-ಮಾಜಿ ಸಚಿವ ಎಚ್‌.ಡಿ. ರೇವಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಒಪ್ಪಂದ ಇರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಮೇಲೆ ಸರ್ಕಾರ ತಕ್ಷಣ ಎಫ್‌ಐಆರ್‌ ಹಾಕಿಲ್ಲ. ಅಷ್ಟೇ ಅಲ್ಲದೇ ಪ್ರಜ್ವಲ್‌ ಅವರನ್ನು ಓಡಿ ಹೋಗೋಕ್ಕೆ ಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಸರ್ಕಾರ ಏಕೆ ಇನ್ನು ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಮತ್ತು ರೇವಣ್ಣ ನಡುವೆ ಒಪ್ಪಂದ ಇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕೂಡಲೇ ರಾಜ್ಯ ಪೊಲೀಸರು ಸಂಸದ ಪ್ರಜ್ವಲ್‌ ರೇವಣ್ಣನನ್ನು ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು. +ಇನ್ನು ಪ್ರಜ್ವಲ್‌ ವಿದೇಶಕ್ಕೆ ಹೋಗಲು ಬಿಜೆಪಿಯವರು ಸಹಾಯ ಮಾಡಿದ್ದಾರೆಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ, ಕೇಂದ್ರಕ್ಕೆ ಏನಾದರೂ ಕನಸು ಬೀಳುತ್ತಾ? ಇವರು ಪ್ರಜ್ವಲ್‌ ಮೇಲೆ ಶೀಘ್ರ ಎಫ್‌ಐಆರ್‌ನ್ನು ದಾಖಲಿಸಿಲ್ಲ ಯಾಕೆ? ಎಫ್‌ಐಆರ್‌ ಆಗುವ ಮುಂಚೆ ಯಾಕೆ ಅರೆಸ್ಟ್ ಮಾಡಲಿಲ್ಲ. ಇದು ಆತ್ಯಂತ ಬೇಜಾವ್ದಾರಿ ಹೇಳಿಕೆ ಎಂದರು. +ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆಯಾಗಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಆದರೆ ಈ ಬಗ್ಗೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದು ಹೇಳಿದರು. +ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ನಮಗೇನೂ ಎಫೆಕ್ಟ್‌ ಆಗಲ್ಲ, ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಜೆಡಿಎಸ್‌ ಒಂದು ಇಂಡಿಪೆಂಡೆಂಟ್‌ ಪಕ್ಷ. ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡರ ಮೊಮ್ಮಗ ಆಗಿರುವ ಕಾರಣಕ್ಕೆ ಸೂಕ್ಷ್ಮ ವಿಚಾರವಾಗಿದೆ ಎಂದರು. +ನಾಳೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹುಬ್ಬಳ್ಳಿಗೆ ಬರಲಿದ್ದಾರೆ. ಮೋದಿ ಅವರ ನಂತರ ದೇಶದಲ್ಲಿ ಅತ್ಯಂತ ಹೆಮ್ಮೆಯ ನಾಯಕರು. ಬಿಜೆಪಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಜನರಿಗೆ ಅವರನ್ನು ನೋಡುವ ಕಾತುರ ಇದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_163_9.txt b/eesanje/url_46_163_9.txt new file mode 100644 index 0000000000000000000000000000000000000000..05b9e661850dd179765b75062c03d83ee0698362 --- /dev/null +++ b/eesanje/url_46_163_9.txt @@ -0,0 +1,5 @@ +2ನೇ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ +ಬೆಂಗಳೂರು, ಏ.30-ಮೇ 7ರಂದು ಮತದಾನ ನಡೆಯುವ ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. +ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರತಗಳಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ನಾಳೆಯಿಂದ ಮೇ 3ರವರೆಗೆ ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಅಂಚೆ ಮತದಾನ ಮಾಡಬಹುದಾಗಿದೆ. +ಅಗತ್ಯ ಸೇವೆಗಳ ಇಲಾಖೆಗಳಿಗೆ ಸಂಬಂಧಿಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಳಾಖೆಗಳ ಸಿಬ್ಬಂದಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಭಾರತ ಚುನಾವಣಾ ಆಯೋಗ ಅಂಚೆ ಮತದಾನ ಕೇಂದ್ರಗಳನ್ನು ತೆರೆದಿದ್ದು, ಅರ್ಹ ಮತದಾರರ ಅಂಚೆ ಮತಪತ್ರಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್‌, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಂಚೆ ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. \ No newline at end of file diff --git a/eesanje/url_46_164_10.txt b/eesanje/url_46_164_10.txt new file mode 100644 index 0000000000000000000000000000000000000000..7d7eb0dce6363eb20ce5a516c63a5e3d0a03fc5d --- /dev/null +++ b/eesanje/url_46_164_10.txt @@ -0,0 +1,11 @@ +ಪ್ರಜ್ವಲ್‌ ರೇವಣ್ಣನವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಹಾಸನದ ಪ್ರಮುಖರೊಬ್ಬರು ಬರೆದಿದ್ದ ಪತ್ರ ವೈರಲ್ +ಬೆಂಗಳೂರು,ಏ.29-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ ಪ್ರಮುಖರೊಬ್ಬರು ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ. +2023 ಡಿಸೆಂಬರ್‌ 8ರಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ಹೊಳೆನರಸೀಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದೇವರಾಜ ಗೌಡ ಎಂಬುವರು ಪ್ರಜ್ವಲ್‌ ರೇವಣ್ಣನವರಿಗೆ ಸಂಬಂಧಿಸಿದ ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಗಮನ ಸೆಳೆದಿದ್ದರು. +ವಿಜಯೇಂದ್ರರಿಗೆ ಎರಡು ಪುಟಗಳ ಪತ್ರ ಬರೆದಿದ್ದ ದೇವರಾಜ ಗೌಡ ಹಾಸನದಲ್ಲಿ ಪ್ರಜ್ವಲ್‌ ರೇವಣ್ಣನವರಿಗೆ ಸೇರಿದ ಸುಮಾರು 3 ಸಾವಿರ ಅಶ್ಲೀಲ ವಿಡಿಯೋಗಳು ಜಿಲ್ಲೆಯಾದ್ಯಂತ ಹರಿದಾಡುತ್ತಿವೆ. ಸರ್ಕಾರಿ ಅಧಿಕಾರಿಗಳು, ಯುವತಿಯರು, ಮನೆಗೆಲೆಸದವರು ಸೇರಿದಂತೆ ಅನೇಕರು ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ. +ಪೆನ್‌ಡ್ರೈವ್‌ ಈಚೆ ಬರುತ್ತಿದ್ದಂತೆ ಇದೀಗ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಂತ್ರಸ್ತರು ಪ್ರಜ್ವಲ್‌ ರೇವಣ್ಣಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಗಮನಹರಿಸಬೇಕೆಂದು ದೇವರಾಜ ಗೌಡ ಪತ್ರದಲ್ಲಿ ಮನವಿ ಮಾಡಿದ್ದರು. +ಪ್ರಜ್ವಲ್‌ ರೇವಣ್ಣ ಇದರಲ್ಲಿ ಶಾಮೀಲಾಗಿರುವುದು ಕಂಡುಬಂದಿದೆ. ಮಹಿಳೆಯರನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಬಗ್ಗೆ ಜಿಲ್ಲೆಯಾದ್ಯಂತ ಗುಸುಗುಸು ಹಬ್ಬಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕುಟುಂಬದ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ 2976 ವಿಡಿಯೋಗಳಿವೆ. +ಕೆಲವು ವಿಡಿಯೋಗಳನ್ನು ಮಹಿಳೆಯರಿಗೆ ತೋರಿಸಿ ಬ್ಲಾಕ್‌ಮೇಲ್‌ ಮಾಡಿ ಲೈಂಗಿಕ ಚಟುವಟಿಕೆಗಳಿಗೆ ಪ್ರಜ್ವಲ್‌ ರೇವಣ್ಣ ಬಳಸಿಕೊಂಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ಪೆನ್‌ಡ್ರೈವ್‌ನ್ನು ಹಾಸನ ಜಿಲ್ಲೆಯ ಕೆಲವು ಕಾಂಗ್ರೆಸ್‌ ನಾಯಕರು ಎಐಸಿಸಿ ಅಧ್ಯಕ್ಷರಿಗೆ ತಲುಪಿಸಿದ್ದಾರೆ ಎಂಬ ಮಾಹಿತಿ ಇದೆ. ನಾವು ಇಂಥ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪತ್ರದಲ್ಲಿ ಹೇಳಿದ್ದರು. +ಜೆಡಿಎಸ್‌ ಜೊತೆ ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಬೆಂಬಲಿಸಿದರೆ ಬಿಜೆಪಿಗೆ ಹೊಡೆತ ಬೀಳಲಿದೆ. ಏಕೆಂದರೆ ಕಾಂಗ್ರೆಸ್‌ ನಾಯಕರ ಕೈಗೆ ಈಗಾಗಲೇ ಪೆನ್‌ಡ್ರೈವ್‌ಗಳು ಕೈ ಸೇರಿದ್ದು, ಮತದಾನ ನಡೆಯುವ ಮುನ್ನ ಅಂದರೆ ಒಂದು ವಾರದೊಳಗೆ ಇವುಗಳನ್ನು ಮನೆಗೆ ಮನೆಗೆ ತಲುಪಿಸಲು ವ್ಯವಸ್ಥಿತವಾದ ತಂತ್ರ ಹೆಣಯಲಾಗಿದೆ. +ಮಹಿಳೆಯರನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿದರೆ ಜಿಲ್ಲೆಯಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದರ ಬಗ್ಗೆ ನೀವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ದೇವರಾಜ ಗೌಡ ಅವರು ವಿಜಯೇಂದ್ರಿಗೆ ಪತ್ರದಲ್ಲಿ ಮನವಿ ಮಾಡಿದ್ದರು ಎಂಬುದು ಬಹಿರಂಗಗೊಂಡಿದೆ. +ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಮೇಲ್ನೋಟಕ್ಕೆ ಇದು ವ್ಯವಸ್ಥಿತ, ಪೂರ್ವನಿಯೋಜಿತ ಕೃತ್ಯದಂತೆ ಕಾಣುತ್ತಿದೆ. ಚುನಾವಣೆ ನಡೆಯುವ ವೇಳೆ ಅದರಲ್ಲೂ ಮತದಾನಕ್ಕೆ ನಾಲ್ಕೈದು ದಿನ ಇರುವಾಗ ಪೆನ್‌ಡ್ರೈವ್‌ಗಳು ಹೊರಬಂದಿರುವ ಉದ್ದೇಶವಾದರೂ ಏನು ಪ್ರಶ್ನಿಸಿದ್ದರು. +ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಎಚ್ಚರಿಕೆ ಹೆಜ್ಜೆ ಇಡುತ್ತಿದ್ದು, ಪಕ್ಷದ ಪ್ರಮುಖ ನಾಯಕರನ್ನು ಹೊರತುಪಡಿಸಿ ಬೇರೊಬ್ಬರು ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ನಿರ್ಬಂಧ ವಿಧಿಸಿದೆ. \ No newline at end of file diff --git a/eesanje/url_46_164_11.txt b/eesanje/url_46_164_11.txt new file mode 100644 index 0000000000000000000000000000000000000000..1a4ee825af59b133497d26e976238e663bf14a65 --- /dev/null +++ b/eesanje/url_46_164_11.txt @@ -0,0 +1,8 @@ +ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತಿಗೆ ಜೆಡಿಎಸ್‌ ಶಾಸಕ ಶರಣಗೌಡ ಮನವಿ + +ಬೆಂಗಳೂರು,ಏ.29- ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಗುರುಮಿಟ್ಕಲ್‌ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್‌ ಅವರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಲ್ಲಿ ಮನವಿ ಮಾಡಿದ್ದಾರೆ. +ಈ ಸಂಬಂಧ ದೇವೇಗೌಡರು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ಕೋರ್‌ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. +ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿರುವ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿಯು ಪೆನ್‌ಡ್ರೈವ್‌ ಪ್ರಕರಣದ ಸತ್ಯಾಸತ್ಯತೆಯನ್ನು ನಾಡಿನ ತಾಯಂದಿರಿಗೆ ತಿಳಿಸುವಂತಾಗಲಿ, ಅಲ್ಲಿಯವರೆಗೆ ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ರಾಜ್ಯದ 2ನೇ ಹಂತದ ಲೋಕಸಭಾ ಚುನಾವಣೆ ವೇಳೆ ವ್ಯತಿರಿಕ್ತ ಪ್ರಭಾವ ಬೀರದಿರಲು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಕೋರಿದ್ದಾರೆ. + +ಕೆಲ ದಿನಗಳಿಂದ ರಾಜ್ಯಾದ್ಯಂತ ಹರಿದಾಡುತ್ತಿರುವ ವಿಡಿಯೋ ತುಣುಕುಗಳಿಂದ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ. ಪಕ್ಷದ ನಾಯಕರಾದ ನೀವು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುತ್ತಿದ್ದೀರಿ ಎಂಬುದರಲ್ಲಿ ಎರಡು ಮಾತಿಲ್ಲ. 6 ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ, ರಾಷ್ಟ್ರಕ್ಕೆ ಮಾದರಿಯಾದ ತತ್ವ ಸಿದ್ಧಾಂತಗಳ ಬುನಾದಿ ಮೇಲೆ ಜೆಡಿಎಸ್‌ ಅನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ್ದೀರಿ, ರಾಷ್ಟ್ರದ ಮೊದಲ ಕನ್ನಡಿಗ ಪ್ರಧಾನಿ ಎಂಬ ಹೆಗ್ಗಳಿಕೆಯೂ ನಿಮ್ಮದಾಗಿದೆ. +ಹೆಣ್ಣು ಸಾಕ್ಷಾತ್‌ ಕಪಿಲಸಿದ್ಧ ಮಲ್ಲಿಕಾರ್ಜುನ ಎಂಬ ಶರಣರ ವಾಣಿಯಂತೆ ಹೆಣ್ಣು ಮಕ್ಕಳನ್ನು ಗೌರವಾದರಗಳಿಂದ ನೋಡಿಕೊಂಡು ಬಂದಿದ್ದೀರಿ. ನಮ್ಮ ಪಕ್ಷದ ಚಿಹ್ನೆಯೂ ಕೂಡ ಭತ್ತದ ತೆನೆ ಹೊತ್ತ ಮಹಿಳೆಯಾಗಿದ್ದು, ಮಹಿಳೆಯರ ಬಗ್ಗೆ ಇರುವ ಗೌರವವನ್ನು ಪ್ರತಿನಿಧಿಸುತ್ತದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಲಾಟರಿ ನಿಷೇಧ ಮಾಡಿ, ವಿದ್ಯಾರ್ಥಿನಿಯರಿಗೆ ಸೈಕಲ್‌ ಭಾಗ್ಯವನ್ನು ನೀಡುವ ಮೂಲಕ ಹೆಣ್ಣು ಮಕ್ಕಳ ಕಷ್ಟಕ್ಕೆ ಸ್ಪಂದಿಸಿದ್ದರು ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_164_12.txt b/eesanje/url_46_164_12.txt new file mode 100644 index 0000000000000000000000000000000000000000..6391321a6f5480c757d657e271f83aac9c47f012 --- /dev/null +++ b/eesanje/url_46_164_12.txt @@ -0,0 +1,19 @@ +ದಲಿತರ ಸೂರ್ಯನಂತಿದ್ದ ಸ್ವಾಭಿಮಾನಿ, ಕಳಂಕರಹಿತ ರಾಜಕಾರಣಿ ಶ್ರೀನಿವಾಸ್‌ಪ್ರಸಾದ್‌ +ಬೆಂಗಳೂರು,ಏ.29-ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಹೆಸರು ಕೆಡಿಸಿಕೊಳ್ಳದ ಶ್ರೀನಿವಾಸಪ್ರಸಾದ್‌ ಸ್ವಾಭಿಮಾನಿ ಕಳಂಕರಹಿತ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು. ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿರುವ ಶ್ರೀನಿವಾಸ್‌ಪ್ರಸಾದ್‌, ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. +ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ ಶ್ರೀನಿವಾಸಪ್ರಸಾದ್‌ ಅವರು ಕಳೆದ ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು. ಚುನಾವಣೆಯಲ್ಲಿ ಸೋಲು – ಗೆಲುವು ಕಂಡಿದ್ದರೂ ಎಂದಿಗೂ ಅವರು ಧೃತಿಗೆಡದೇ ಅಂಬೇಡ್ಕರ್‌ ಚಿಂತನೆ, ದಲಿತಪರ ಹೋರಾಟದ ಮುಖ್ಯ ಧ್ವನಿಯಾಗಿದ್ದರು. +ದಲಿತ ನಾಯಕರಾಗಿದ್ದ, ತುಳಿತಕ್ಕೆ ಒಳಗಾದ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ, ನೇರ-ನಿಷ್ಠುರವಾದಿಯಾಗಿದ್ದ ಪ್ರಸಾದ್‌ ಅವರು ಸಾಕಷ್ಟು ಬಾರಿ, ನಾನು ಹಲವಾರು ಪಕ್ಷಗಳನ್ನು ಬದಲಿಸಿರಬಹುದು. ಆದರೆ ತತ್ವ ಬಿಟ್ಟಿಲ್ಲ, ನಾನು ಪಕ್ಷಾಂತರಿ ಆಗಿರಬಹುದು. ಆದರೆ ತತ್ವಾಂತರಿಯಾಗಿಲ್ಲ. ಸ್ವಾಭಿಮಾನ ಬಿಟ್ಟಿಲ್ಲ ಎನ್ನುತ್ತಿದ್ದರು. ಅದರಂತೆಯೇ ನಡೆದುಕೊಂಡಿದ್ದರು. ರಾಜಕೀಯ ಜೀವನದಲ್ಲಿ ಸ್ವಾಭಿಮಾನಕ್ಕೆ ಧಕ್ಕೆ ಉಂಟಾದಾಗ ಬಂಡಾಯವೆದ್ದಿದ್ದರು. ಪಕ್ಷ ಯಾವುದೇ ಇರಲಿ, ನಾಯಕ ಯಾರೇ ಇರಲಿ ಅವರನ್ನು ಬಿಟ್ಟು ಹೊರನಡೆದಿದ್ದ ಸ್ವಾಭಿಮಾನಿ ರಾಜಕಾರಣಿ ಎಂದೇ ಕರೆಯಿಸಿಕೊಂಡಿದ್ದರು. +ರಾಜಕೀಯ ಪ್ರವೇಶಿಸಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಕಳೆದ ಮಾರ್ಚ್‌ 17 ರಂದು ಸುವರ್ಣ ಮಹೋತ್ಸವ ಆಚರಿಸಿ ಚುನಾವಣಾ ರಾಜಕೀಯ ಹಾಗೂ ಸಕ್ರಿಯ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದ್ದರೂ ಸಹ ಪ್ರಸ್ತುತ ನಡೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸ್‌ಪ್ರಸಾದ್‌ ಅವರ ಬೆಂಬಲ ಪಡೆಯಲು ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡೂ ಪಕ್ಷಗಳು ಪ್ರಯತ್ನ ನಡೆಸಿದ್ದವು. +ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್‌ ಪ್ರಸಾದ್‌ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಅವರ ಮೈಸೂರಿನ ನಿವಾಸಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದರು. ಆದರೆ ಯಾರಿಗೆ ಬೆಂಬಲ ಘೋಷಿಸದ ಶ್ರೀನಿವಾಸ ಪ್ರಸಾದ್‌ ತಟಸ್ಥ ನಿಲುವು ತಾಳಿದ್ದರು. +ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ. 2013ರಿಂದ 2016ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೇ ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. +ಒಟ್ಟು 14 ಚುನಾವಣೆಗಳನ್ನು ಎದುರಿಸಿದ್ದು, 8 ಚುನಾವಣೆಗಳಲ್ಲಿ ಗೆದ್ದಿದ್ದಾರೆ. 6 ಬಾರಿ ಸಂಸದರಾಗಿ 2 ಬಾರಿ ಶಾಸಕರಾಗಿದ್ದ ಪ್ರಸಾದ್‌ 7 ಪ್ರಧಾನಿಗಳನ್ನು ಕಂಡಿದ್ದಾರೆ. ಹೌದು, 1974 ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದಲ್ಲಿ ಡಿ.ಸತ್ಯನಾರಾಯಣ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಎಐಡಿಎಂಕೆ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಪ್ರಸಾದ್‌ ಕಣಕ್ಕೆ ಇಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು.ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ವಿ. ಶ್ರೀನಿವಾಸ ಪ್ರಸಾದ್‌ ಅವರಿಗೆ ಸಲ್ಲುತ್ತದೆ. +1974ರ ಮಾ.17ರಂದು ಮೈಸೂರಿನ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿ. ಶ್ರೀನಿವಾಸ ಪ್ರಸಾದ್‌ ಅವರು ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುತಿನಿಂದ ಸ್ಪರ್ಧಿಸಿದ್ದರು. ಅವರ ಸ್ಪರ್ಧೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಗಮನ ಸೆಳೆದಿತ್ತು. +1974ರಲ್ಲಿ ಸಂಸ್ಥಾ ಕಾಂಗ್ರೆಸ್‌ ಸೇರಿ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ ಹುರುಪಿನಿಂದ ಸಂಘಟನೆ ಮಾಡಿ ಗಮನ ಸೆಳೆದಿದ್ದರು. ತುರ್ತು ಪರಿಸ್ಥಿತಿ ಬಳಿಕ ಜಯಪ್ರಕಾಶ್‌ ಕರೆ ನೀಡಿದಂತೆ ವಿಪಕ್ಷಗಳು ಸೇರಿ ಒಂದು ಪಕ್ಷ – ಒಂದು ಧ್ವಜ ರಚಿಸಿಕೊಂಡು ಜನತಾ ಪಕ್ಷ ಅಸ್ತಿತ್ವಕ್ಕೆ ಬಂದಿತ್ತು. +1977ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಲೋಕದಳ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿ.ರಾಚಯ್ಯ ವಿರುದ್ಧ ಪರಾಭವಗೊಂಡಿದ್ದರು. 1978ರಲ್ಲಿ ಟಿ. ನರಸಿಪುರ ಕ್ಷೇತ್ರದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಇಂದಿರಾ ಕಾಂಗ್ರೆಸ್ನ ಅಭ್ಯರ್ಥಿ 28,061 ಮತಗಳನ್ನು ಪಡೆದ ಪಿ. ವೆಂಕಟರಮಣ ಗೆದ್ದರೆ ಶ್ರೀನಿವಾಸಪ್ರಸಾದ್‌ 20,034 ಪಡೆದು ಮೂರನೇ ಚುನಾವಣೆಯಲ್ಲೂ ಪರಾಭವಗೊಂಡಿದ್ದರು. +1980ರ ವೇಳೆಗೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದ ಶ್ರೀನಿವಾಸ ಪ್ರಸಾದ್‌ ಅವರು ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದು ಬಿ.ರಾಚಯ್ಯ ವಿರುದ್ಧ ಗೆದ್ದು ಮೊದಲ ಬಾರಿ ಸಂಸತ್‌ ಸದಸ್ಯರಾಗಿದ್ದರು. ಆ ಚುನಾವಣೆಯಲ್ಲಿ ಪ್ರಸಾದ್‌ 2,28,748 ಮತಗಳನ್ನು ಪಡೆದರೆ, ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಯು.ಬಿ.ರಾಚಯ್ಯ ಅವರಿಗೆ 1,18,287, ಜನತಾ ಪಕ್ಷದ ಸಿದ್ದಯ್ಯಗೆ 36 ಸಾವಿರ ಮತಗಳು ಬಂದಿದ್ದವು. +ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತಾಯಿ ಠೇವಣಿ ಹಣವನ್ನು ಕೊಟ್ಟು ಶುಭ ಹಾರೈಸಿದ್ದರು ಎಂದು ಸ್ವಾಭಿಮಾನಿಯ ನೆನಪುಗಳು ಎಂಬ ತಮ್ಮ ಜೀವನಗಾಥೆಯಲ್ಲಿ ಪ್ರಸಾದ್‌ ದಾಖಲಿಸಿದ್ದಾರೆ.ಮೊದಲ ಬಾರಿ 1980 ರಲ್ಲಿ ಸಂಸದರಾದ ಬಳಿಕ ಪ್ರಸಾದ್‌ 1984, 1989, 1991 ಹೀಗೆ ಸತತ ನಾಲ್ಕು ಚುನಾವಣೆಗಳಲ್ಲಿ ಜಯ ಗಳಿಸಿದ್ದರು. 1984ರಲ್ಲಿ ಜನತಾ ಪಕ್ಷದ ಮಲ್ಲೇಶಯ್ಯ, 1989ರಲ್ಲಿ ಜನತಾ ದಳದ ದೇವನೂರು ಶಿವಮಲ್ಲು 1991ರಲ್ಲಿ ಜನತಾದಳದ ಡಾ.ಎಚ್‌.ಸಿ. ಮಹಾದೇವಪ್ಪ ಅವರನ್ನು ಶ್ರೀನಿವಾಸಪ್ರಸಾದ್‌ ಸೋಲಿಸಿದ್ದರು. +1996ರ ಚುನಾವಣೆಯಲ್ಲಿ ಕಾಂಗ್ರೆಸ್ನ ಟಿಕೆಟ್‌ ಸಿಗದೇ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಭವಗೊಂಡರು. ಸಂಯುಕ್ತರಂಗ ಸರ್ಕಾರ ಉರುಳಿದ್ದರಿಂದ 1998ರಲ್ಲಿ ಮತ್ತೇ ಚುನಾವಣೆ ಎದುರಾಗಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದರು. ಆದರೆ, ಎರಡನೇ ಬಾರಿ ಎ. ಸಿದ್ದರಾಜು ಜನತಾ ದಳದಿಂದ ಆಯ್ಕೆಯಾಗಿದ್ದರು. +ಎಐಡಿಎಂಕೆ ಜಯಲಲಿತಾ ತಮ್ಮ ಬೆಂಬಲ ವಾಪಾಸ್‌ ಪಡೆದಿದ್ದರಿಂದ 1999ರಲ್ಲಿ ಮತ್ತೊಮ್ಮೆ ಲೋಕಸಭಾ ಚುನಾವಣೆ ನಡೆದಿತ್ತು. ಆ ಚುನಾವಣೆಯಲ್ಲಿ ಶ್ರೀನಿವಾಸಪ್ರಸಾದ್‌ ಜೆಡಿಯುನಿಂದ ಸ್ಪರ್ಧೆ ಮಾಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎ. ಸಿದ್ದರಾಜು ಅವರನ್ನು ಸೋಲಿಸಿದರು. +ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ರಾಮಕೃಷ್ಣ ಹೆಗಡೆ, ಜಾರ್ಜ್‌ ಫರ್ನಾಂಡೀಸ್‌ ಅವರಿಂದಾಗಿ ಶ್ರೀನಿವಾಸಪ್ರಸಾದ್‌ ಅವರಿಗೆ ಕೇಂದ್ರ ಮಂತ್ರಿ ಸ್ಥಾನ ಒಲಿಯಿತು. ಬಳಿಕ, ಜಾರ್ಜ್‌ ಫರ್ನಾಂಡೀಸ್‌ ಅವರೊಂದಿಗೆ ಗುರುತಿಸಿಕೊಂಡು ಸಮತಾ ಪಾರ್ಟಿ ಸೇರಿ 2004ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತಮ್ಮ ಬೆಂಬಲಿಗರಾದ ಕಾಗಲವಾಡಿ ಶಿವಣ್ಣಗೆ ಟಿಕೆಟ್‌ ಕೊಡಿಸಿ ಗೆಲ್ಲಿಸಿಕೊಂಡಿದ್ದರು. +ಬಳಿಕ ಮತ್ತೆ ಕಾಂಗ್ರೆಸ್‌ ನತ್ತ ವಾಲಿದ್ದ ಪ್ರಸಾದ್‌ 2008ರಲ್ಲಿ ನಂಜನಗೂಡು ಕ್ಷೇತ್ರದಿಂದ ಗೆದ್ದು ಮೊದಲ ಬಾರಿ ಶಾಸಕರಾಗಿದ್ದರು. ಬಳಿಕ, 2013ರಲ್ಲೂ ನಂಜನಗೂಡು ಕ್ಷೇತ್ರದಿಂದ ಆಯ್ಕೆಯಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು. ಸಚಿವ ಸಂಪುಟ ಪುನಾರಚನೆ ಹೊತ್ತಲ್ಲಿ ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ನಿಂದ ಹೊರ ಬಂದಿದ್ದರು. ಬಳಿಕ, ಬಿಜೆಪಿ ಸೇರಿ ನಂಜನಗೂಡು ಉಪ ಚುನಾವಣೆಯಲ್ಲಿ ಪರಭಾವಗೊಂಡರು. +2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಮುಖಂಡರು, ಅಭಿಮಾನಿಗಳ ಒತ್ತಡಕ್ಕೆ ಮಣಿದು ಸ್ಪರ್ಧಿಸಿ ಮೊದಲ ಬಾರಿಗೆ ಚಾಮರಾಜನಗರದಲ್ಲಿ ಕಮಲ ಅರಳಿಸಿದ್ದರು. +ರಾಜಕೀಯ ಹಿನ್ನಲೆ-ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿದ್ದರು.-ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದರು.-1999ರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.-2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತುಮುಜರಾಯಿ ಸಚಿವರಾಗಿದ್ದರು .-24 ಡಿಸೆಂಬರ್‌ 2016ರಂದು ಅಧಿ ಕೃತವಾಗಿ ಬಿಜೆಪಿ ಸೇರ್ಪಡೆಯಾದರು.-2017ರಲ್ಲಿ ನಂಜನಗೂಡು ಉಪಚುನಾವಣೆಯಲ್ಲಿ ಸೋಲು-2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆಯಾದರು.-2024 ಮಾರ್ಚ್‌ 17ರಂದು ರಾಜಕೀಯ ನಿವೃತ್ತಿ ಪಡೆದರು. \ No newline at end of file diff --git a/eesanje/url_46_164_2.txt b/eesanje/url_46_164_2.txt new file mode 100644 index 0000000000000000000000000000000000000000..6a19220365cb4c4e23eb4b2be3b4bb62e07b7369 --- /dev/null +++ b/eesanje/url_46_164_2.txt @@ -0,0 +1,5 @@ +ಎಸ್‌ಐಟಿ ವರದಿ ಬಂದ ನಂತರ ಮುಲಾಜಿಲ್ಲದೆ ಕ್ರಮ : ಕುಮಾರಸ್ವಾಮಿ +ಶಿವಮೊಗ್ಗ,ಏ.29-ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಆರೋಪ ಕೇಳಿಬಂದಿರುವುದು ಇಡೀ ಸಮಾಜಕ್ಕೆ ಮುಜುಗರ ತರುವಂತದ್ದಾಗಿದ್ದು, ರಾಜ್ಯಸರ್ಕಾರ ರಚಿಸಿರುವ ಎಸ್‌ಐಟಿ ತನಿಖಾ ವರದಿ ಬಂದ ನಂತರ ಮುಲಾಜಿಲ್ಲದೆ ಜೆಡಿಎಸ್‌ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬಕ್ಕಷ್ಟೇ ಮುಜುಗರವಾಗುವುದಿಲ್ಲ, ಇಡೀ ಸಮಾಜಕ್ಕೆ ಮುಜುಗರವಾಗುವಂತಹುದು. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿದೆ ಎಂದರು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕಲ್ಲವೇ ಎಂದು ಹೇಳಿದರು. +ತನಿಖೆಯ ವಿಚಾರದಲ್ಲಿ ನಾನಾಗಲಿ, ಮಾಜಿ ಪ್ರಧಾನಿ ದೇವೇಗೌಡರಾಗಲಿ ಯಾವುದೇ ರೀತಿಯ ಪ್ರಭಾವ ಬೀರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು ಎಂದರು. ದೇವೆಗೌಡರು ಮತ್ತು ನಾನು ಹಲವು ಹೆಣ್ಣುಮಕ್ಕಳ ಕಷ್ಟ, ಸಮಸ್ಯೆಗಳಿಗೆ ಸ್ಪಂದಿಸಿ ಪರಿಹರಿಸಿದ್ದೇವೆ. +ಹೆಣ್ಣು ಮಕ್ಕಳನ್ನು ಅತ್ಯಂತ ಗೌರವದಿಂದ ಕಂಡಿದ್ದೇವೆ. ಹಾಸನದ ಪೆನ್‌ಡ್ರೈವ್‌ ಪ್ರಕರಣದಿಂದ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಎಸ್‌ಐಟಿ ತನಿಖೆಯು ಪಾರದರ್ಶಕವಾಗಿ ನಡೆಯಲಿ, ಪ್ರಕರಣದಲ್ಲಿ ರಾಜಕೀಯ ಸಂಚಿರುವುದು ಕೂಡ ಬಯಲಾಗಲಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_164_3.txt b/eesanje/url_46_164_3.txt new file mode 100644 index 0000000000000000000000000000000000000000..c485a42c38c0d39d4758bb07bba02ef8a9778c71 --- /dev/null +++ b/eesanje/url_46_164_3.txt @@ -0,0 +1,9 @@ +ಪೆನ್‌ಡ್ರೈವ್‌ ಪ್ರಕರಣದ ದೂರಿನಲ್ಲಿ ಉಲ್ಲೇಖಿಸಿರುವವರ ವಿರುದ್ಧ ಕ್ರಮ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಏ.29-ಹಾಸನದ ಪೆನ್‌ಡ್ರೈವ್‌ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ತಮ್ಮ ದೂರಿನಲ್ಲಿ ಯಾರೆಲ್ಲಾ ಹೆಸರನ್ನು ಉಲ್ಲೇಖಿಸಿದ್ದಾರೋ ಅವರುಗಳ ವಿರುದ್ಧ ತನಿಖೆ ಮತ್ತು ಕ್ರಮವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹಿಳಾ ಆಯೋಗಕ್ಕೆ ಬಂದ ದೂರು ಆಧರಿಸಿ ರಾಜ್ಯಸರ್ಕಾರ ಬಿಕೆಸಿ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಇಬ್ಬರು ಮಹಿಳಾ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ದಳ ರಚನೆ ಮಾಡಿದೆ. ಯಾವ ಪದ್ಧತಿಯನ್ನು ಅನುಸರಿಸಿ ಅಧಿಕಾರಿಗಳು ತನಿಖೆ ನಡೆಸುತ್ತಾರೋ ನನಗೆ ಗೊತ್ತಿಲ್ಲ, ಇದರಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದರು. +ಸಾಮಾನ್ಯವಾಗಿ ಇಂತಹ ಪ್ರಕರಣಗಳಲ್ಲಿ 10 ರಿಂದ 15 ದಿನದೊಳಗೆ ತನಿಖೆ ಮುಗಿಸಿ ವರದಿ ನೀಡುವಂತೆ ಸೂಚಿಸಲಾಗುತ್ತದೆ. ಹಾಸನದ ಪ್ರಕರಣದಲ್ಲಿ ಆಂತರಿಕವಾಗಿ ಕಾಲಮಿತಿಯನ್ನು ತನಿಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಮಯದ ಮಿತಿ ಇಲ್ಲದೇ ಇದ್ದರೆ ವರ್ಷಗಟ್ಟಲೆ ತನಿಖೆ ನಡೆಯುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು. +ನಿಯೋಜಿತ ತನಿಖಾ ದಳದ ಅಧಿಕಾರಿಗಳು ಪೆನ್‌ಡ್ರೈವ್‌ಗಳನ್ನು ವಶಪಡಿಸಿಕೊಂಡು ಅವುಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಬೇಕಿದೆ. ಪೆನ್‌ಡ್ರೈವ್‌ ವಿಡಿಯೋಗಳ ಪ್ರಮುಖ ಪಾತ್ರಧಾರಿ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಅವರನ್ನು ಎಸ್‌ಐಟಿ ವಾಪಸ್‌ ಕರೆಸಲಿದೆ ಎಂದರು. +ತನಿಖೆ ನಡೆಸಿ ಎಸ್‌ಐಟಿ ವರದಿ ಸಲ್ಲಿಕೆಯಾದ ಬಳಿಕ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು. ಬಹಳಷ್ಟು ಪೆನ್‌ಡ್ರೈವ್‌ಗಳು ನಾಪತ್ತೆಯಾಗಿವೆ ಅಥವಾ ಅವುಗಳನ್ನು ಹೊರಗೆ ಬರಲು ಬಿಡದಂತೆ ತಡೆಹಿಡಿಯಲಾಗಿದೆ ಎಂಬುದರ ಕುರಿತು ಎಸ್‌ಐಟಿ ಅಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಸತ್ಯಾಸತ್ಯತೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಿದ್ದಾರೆ ಎಂದರು. +ದೂರುದಾರರು ಸಂದರ್ಭಾನುಸಾರ ಮಾಹಿತಿಯೊಂದಿಗೆ ಉಲ್ಲೇಖಿಸಲಾದ ವ್ಯಕ್ತಿಗಳ ವಿರುದ್ಧ ತನಿಖೆ ನಡೆಯಲಿದೆ. ಅದು ಎಚ್‌.ಡಿ.ರೇವಣ್ಣ ಇರಬಹುದು ಅಥವಾ ಬೇರೆ ಯಾರಾದರೂ ಸರಿ ತನಿಖೆಗೊಳಪಡಬೇಕಾಗುತ್ತದೆ ಎಂದು ಹೇಳಿದರು. +ದೂರುದಾರರು ಮತ್ತು ಸಂತ್ರಸ್ತರಿಗೆ ಅಗತ್ಯ ಬಿದ್ದರೆ ಭದ್ರತೆ ಒದಗಿಸಲು ಸರ್ಕಾರ ಸಿದ್ಧವಿದೆ. ಸಂತ್ರಸ್ತರಿಗೆ ಭಯದ ವಾತಾವರಣವಿದೆ ಎಂದು ಕಂಡುಬಂದರೆ ಯಾರಿಗೂ ತೊಂದರೆಯಾಗದಂತೆ ಭದ್ರತೆಯ ವ್ಯವಸ್ಥೆ ಮಾಡಿ ನ್ಯಾಯಯುತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದರು. +ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ರ ನಿಧನ ತುಂಬಲಾರದ ನಷ್ಟವಾಗಿದೆ. ಅವರ ಅಗಲುವಿಕೆಯಿಂದ ಸಮಾಜ ಬಡವಾಗಿದೆ. ಸುದೀರ್ಘ ರಾಜಕೀಯ ಅವಧಿಯಲ್ಲಿ ಶ್ರೀನಿವಾಸ್‌ ಪ್ರಸಾದ್‌ರವರು ಸೌಹಾರ್ದತೆಗೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದು ಹೇಳಿದರು. \ No newline at end of file diff --git a/eesanje/url_46_164_4.txt b/eesanje/url_46_164_4.txt new file mode 100644 index 0000000000000000000000000000000000000000..18c108b2f6a722d44145f87374337cef33cee884 --- /dev/null +++ b/eesanje/url_46_164_4.txt @@ -0,0 +1,10 @@ +“ಕಾಂಗ್ರೆಸ್ ಲೂಟಿಕೋರರ ಕೈಗೆ ದೇಶದ ಚುಕ್ಕಾಣಿ ಕೊಡಬೇಕೇ..?” : ಮುಂದುವರೆದ ಮೋದಿ ಅಟ್ಯಾಕ್ +ಬಾಗಲಕೋಟೆ,ಏ.29-ಕಾಂಗ್ರೆಸ್‌ ವಿರುದ್ದ ಮತ್ತೆ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರಮೋದಿ ಅವರು, ಕರ್ನಾಟಕವನ್ನು ಎಟಿಎಂ ಮಾಡಿಕೊಂಡು ಲೂಟಿ ಹೊಡೆಯುವವರ ಕೈಗೆ ದೇಶದ ಚುಕ್ಕಾಣಿಯನ್ನು ಕೊಡಬೇಕೆ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ. +ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಾಗಲಕೋಟೆ ಮತ್ತು ಬಿಜಾಪುರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಿದ ಮೋದಿ, ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ತುಷ್ಟೀಕರಣ ನೀತಿಯನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ನಿರ್ವಹಿಸುತ್ತಿಲ್ಲ ವಸೂಲಿ ಗ್ಯಾಂಗ್‌ನ್ನು ನಡೆಸುತ್ತಿದೆ. +ಕಾಂಗ್ರೆಸ್‌ ಲೂಟಿಕೋರ ಸರ್ಕಾರ, ಈ ಸರ್ಕಾರದ ಕೈಗೆ ಇಂಥಾ ದೊಡ್ಡ ದೇಶವನ್ನು ಕೊಡಬೇಕೆ? ಎಂಬುದನ್ನು ಮತದಾರರು ತೀರ್ಮಾನಿಸಬೇಕು. ಇದು ದೇಶದ ಭವಿಷ್ಯವನ್ನು ತೀರ್ಮಾನಿಸುವ ಚುನಾವಣೆ ಎಂದು ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷವು ಕರ್ನಾಟಕವನ್ನು ಲೂಟಿ ಮಾಡುವ ಎಟಿಎಂ ಮಾಡಿಕೊಂಡಿದೆ. ಸರ್ಕಾರದ ಖಜಾನೆ ಖಾಲಿ ಮಾಡಿದ್ದಾರೆ. +ಮುಂದೊಂದು ದಿನ ಸರ್ಕಾರಕ್ಕೆ ತನ್ನ ನೌಕರರಿಗೆ ಸಂಬಳ ಕೊಡಲೂ ಹಣವಿರುವುದಿಲ್ಲ, ಜತೆಗೆ ನಿಮ್ಮ ಮಕ್ಕಳನ್ನೂ ಹಸಿವಿನಿಂದ ನರಳುವಂತೆ ಮಾಡುವುದರಲ್ಲಿ ಸಂಶಯವಿಲ್ಲ, ಕಾಂಗ್ರೆಸ್‌ ಮೊದಲೇ ಪ್ಲ್ಯಾನ್‌ ಮಾಡಿ ವಸೂಲಿ ಮಾಡಿ ಸರ್ಕಾರದ ಖಜಾನೆಯಿಂದ ತನ್ನ ತಿಜೋರಿಯನ್ನು ತುಂಬಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದರು. +ಕಾಂಗ್ರೆಸ್‌ ಕರ್ನಾಟಕದಲ್ಲಿ 2ಜಿ ಹಗರಣ ಮಾದರಿಯ ಲಕ್ಷಾಂತರ ಕೋಟಿಯ ಸ್ಕ್ಯಾಮ್‌ ಮಾಡುವ ಕನಸು ಕಾಣುತ್ತಿದೆ. ಕರ್ನಾಟಕದ ಲೂಟಿ ಮಾಡುವವರಿಗೆ 7 ಮೇ ಶಿಕ್ಷೆ ಸಿಗಬೇಕು, ಕಾಂಗ್ರೆಸ್‌ನ ಭ್ರಷ್ಟಾಚಾರವನ್ನು ಅಂತ್ಯಗೊಳಿಸಬೇಕು ಎಂದು ಮೋದಿ ಹೇಳಿದರು. +ಮೋದಿ 10 ವರ್ಷಗಳಲ್ಲಿ ಕತ್ತಲಿನಲ್ಲಿದ್ದ 18 ಸಾವಿರ ಹಳ್ಳಿಗಳನ್ನು ವಿದ್ಯುತ್‌ ದೀಪಗಳಿಂದ ಬೆಳಕಿದ್ದಾರೆ. ಶೇ,16ರಷ್ಟು ಜನರಿಗೆ ಮಾತ್ರ ಈ ಮೊದಲು ಜಲಜೀವನ್‌ ಮಿಷನ್‌ ಅಡಿ ನೀರು ತಲುಪುತ್ತಿತ್ತು ಆದರೆ ಈಗ ಐದು ವರ್ಷಗಳಲ್ಲಿ ಶೇ.75ರಷ್ಟು ಜನರಿಗೆ ನೀರು ತಲುಪುತ್ತಿದೆ. ನಮ್ಮ ಸಂಕಲ್ಪ ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಟಾಪ್‌ 3 ಆರ್ಥಿಕತೆಯನ್ನಾಗಿಸುವುದು, ಭಾರತವನ್ನು ವಿಶ್ವದ ಮೂರನೇ ಆರ್ಥಿಕತೆ ಮಾಡುವ ತಾಕತ್ತು ನಿಮ್ಮ ಮತಕ್ಕಿದೆ ಎಂದರು. +ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಿಸುವುದು ನಮ್ಮ ಸಂಕಲ್ಪವಾಗಿದೆ. ನಾವು ಭಾರತವನ್ನು ಉತ್ಪಾದನಾ ಹಬ್‌, ಕೌಶಲ್ಯ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ. ಇದಕ್ಕೆ ದೂರದೃಷ್ಟಿ ಬೇಕು. ಮೋಜು, ಮಸ್ತಿ ಮಾಡುವವರಿಂದ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. +ಕರ್ನಾಟಕ ಸರ್ಕಾರ ತನ್ನ ನೌಕರರಿಗೆ ಸಂಬಳ ನೀಡದ ದಿನ ದೂರದಲ್ಲಿ ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ವಸೂಲಿ ಗ್ಯಾಂಗ್‌ ನಡೆಸುತ್ತಿದೆ. ಸರ್ಕಾರವಲ್ಲಾ, 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರು, ಒಂದೇ ಬಾರಿಗೆ ಬಡತನವನ್ನು ತೊಡೆದುಹಾಕುತ್ತೇವೆ ಎಂದು ಹೇಳುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮತಗಳನ್ನು ಪಡೆಯಲು ಭಯೋತ್ಪಾದನೆ ಮತ್ತು ಮೂಲಭೂತವಾದಿ ಮನಸ್ಥಿತಿವುಳ್ಳವರನ್ನು ಕಾಂಗ್ರೆಸ್‌ ರಕ್ಷಿಸುತ್ತಿದೆ. +ತನ್ನ ಪ್ರಣಾಳಿಕೆಯಲ್ಲಿ ಧರ್ಮ ಆಧಾರಿತ ಮೀಸಲಾತಿ ನೀಡುವ ಸಂದೇಶ ನೀಡಿದೆ ಎಂದು ಆರೋಪಿಸಿದರು. ಚುನಾವಣೆಯಲ್ಲಿ ಸೋತವರು ತಂತ್ರಜ್ಞಾನ ಬಳಸಿ, ನಕಲಿ ವಿಡಿಯೋ ಸೃಷ್ಟಿಸಿ, ತಪ್ಪು ಮಾಹಿತಿ ಹರಡುತ್ತಿದ್ದಾರೆ. ಇಂತಹ ನಕಲಿ ವಿಡಿಯೋಗಳ ಬಗ್ಗೆ ಪೊಲೀಸರು ಮತ್ತು ಬಿಜೆಪಿ ಪಕ್ಷದವರಿಗೆ ಮಾಹಿತಿ ನೀಡಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. \ No newline at end of file diff --git a/eesanje/url_46_164_5.txt b/eesanje/url_46_164_5.txt new file mode 100644 index 0000000000000000000000000000000000000000..f5d6ef5211986d8fec22c02a25d8ccbd5e268645 --- /dev/null +++ b/eesanje/url_46_164_5.txt @@ -0,0 +1,5 @@ +ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಎಚ್‌.ಡಿ.ರೇವಣ್ಣ +ಬೆಂಗಳೂರು,ಏ.29-ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದ್ದು, ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್‌.ಡಿ.ರೇವಣ್ಣ ತಿರುಗೇಟು ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಕುಟುಂಬದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿ ಹೇಳಿದರು. +ಕಳೆದ 40 ವರ್ಷಗಳಿಂದಲೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸಿಓಡಿ, ಲೋಕಾಯುಕ್ತ ಸೇರಿದಂತೆ ಹಲವು ತನಿಖೆಗಳು ನಡೆದಿವೆ.ತನಿಖೆಗಳನ್ನು ನಾವು ಎದುರಿಸಿದ್ದೇವೆ. ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗುವುದು ಮೊದಲೇ ನಿರ್ಧಾರವಾಗಿತ್ತು. ಅವರಿಗೆ ಎಸ್‌ಐಟಿಗೆ ವಹಿಸುವುದಾಗಲೀ, ಎಫ್‌ಐಆರ್‌ ದಾಖಲಿಸುವುದಾಗಲೀ ಗೊತ್ತಿರಲಿಲ್ಲ ಎಂದರು. +ರಾಜ್ಯಸರ್ಕಾರ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಕಾನೂನು ರೀತಿ ತನಿಖೆ ಮಾಡಲಿ. ಎಸ್‌ಐಟಿಯವರು ಕರೆದರೆ ಪ್ರಜ್ವಲ್‌ ಹಾಜರಾಗುತ್ತಾರೆ ಎಂದು ತಿಳಿಸಿದರು.ನಾಲ್ಕೈದು ವರ್ಷದ ಹಿಂದಿನ ಕಥೆಯನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ. ತನಿಖೆ ನಡೆಯಲಿ ಎಂದರು. +ಪೆನ್‌ಡ್ರೈವ್‌ ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಈ ವಿಚಾರವನ್ನು ದೇವೇಗೌಡರ ಬಳಿ ತಾವು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು. diff --git a/eesanje/url_46_164_6.txt b/eesanje/url_46_164_6.txt new file mode 100644 index 0000000000000000000000000000000000000000..919ee46feb78cc79ba6e785d66f60fa1efa1884b --- /dev/null +++ b/eesanje/url_46_164_6.txt @@ -0,0 +1,15 @@ +ಚುನಾವಣಾ ಪ್ರಚಾರವೇ ಮೋದಿಯವರ ಕೊನೇ ಭಾಷಣವಾಗಲಿದೆ, ಈಗಲಾದರೂ ಸತ್ಯ ಹೇಳಿ : ಸಿದ್ದರಾಮಯ್ಯ ತಿರುಗೇಟು +ಬೆಂಗಳೂರು, ಏ.29-ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರ ಅನ್ಯಾಯವಾಗುತ್ತಿದೆ ಎಂದು ದೂರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಆಯುಷಾನ್‌ ಭಾರತ್‌, ಪ್ರಧಾನಮಂತ್ರಿ ಫಸಲ್‌ಬೀಮಾ, ಕೃಷಿ ಸನಾನ್‌ ಯೋಜನೆಗಳಲ್ಲಿ ಅವ್ಯವಹಾರವಾಗಿದೆ ಎಂದು ಕೇಂದ್ರ ಸಚಿವರ ಹೇಳಿಕೆಗಳನ್ನು ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ. +ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಲೋಕಸಭೆ ಚುನಾವಣಾ ಪ್ರಚಾರ ಕೊನೆಯ ಭಾಷಣವಾಗಿರಬಹುದು. ಇನ್ನಾದರೂ ಸತ್ಯ ಮಾತನಾಡಿ, ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ ದ್ವೇಷ ಹುಟ್ಟಿಸಿ ರಾಜಕೀಯ ಲಾಭ ಪಡೆಯುವ ದುಷ್ಟತನವನ್ನು ಕೈಬಿಟ್ಟು, ಹತ್ತು ವರ್ಷಗಳ ಸಾಧನೆಯ ಬಗ್ಗೆ ಮಾತನಾಡಲಿ. +ಕನ್ನಡಿಗರಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ.ಕರ್ನಾಟಕಕ್ಕೆ ಯುಪಿಎ ಸರ್ಕಾರ ಕೊಟ್ಟಿದ್ದು ಕಡಿಮೆ, ಎನ್‌ಡಿಎ ಸರ್ಕಾರ ಎಷ್ಟೊಂದು ಕೊಟ್ಟಿದೆ ಎಂದು ಲೆಕ್ಕ ಹೇಳುತ್ತಿದ್ದಾರೆ. +2018-19ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ, ಕರ್ನಾಟಕಕ್ಕೆ ನೀಡಿದ್ದ ತೆರಿಗೆ ಪಾಲು ರೂ.35,895 ಕೋಟಿ ಮತ್ತು ಕೇಂದ್ರ ಪುರಸ್ಕೃತ ಯೋಜನೆಯ ಪಾಲು ರೂ. 16,082 ಕೋಟಿ. ಹೀಗೆ ಒಟ್ಟು ರೂ.46,288 ಕೋಟಿ ರಾಜ್ಯಕ್ಕೆ ಬಂದಿತ್ತು. 2023-24ನೇ ಸಾಲಿನ ಕೇಂದ್ರ ಬಜೆಟ್‌ ಗಾತ್ರ ರೂ.45,03,097 ಕೋಟಿ. ಆದರೆ ನಿಮ್ಮ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಹಂಚಿಕೆ, ಕೇಂದ್ರ ಪುರಸ್ಕೃತ ಯೋಜನೆಯ ಪಾಲು ಸೇರಿ ನೀಡಿದ್ದು ಕೇವಲ ರೂ.55,529 ಕೋಟಿ. ಐದು ವರ್ಷಗಳಲ್ಲಿ ಬಜೆಟ್‌ ಗಾತ್ರ ಹೆಚ್ಚು ಕಡಿಮೆ ದುಪ್ಪಟ್ಟಾದರೂ ಕರ್ನಾಟಕಕ್ಕೆ ನೀಡುವ ಹಣವೂ ದುಪ್ಪಟ್ಟಾಗಬೇಕಿತ್ತು ಅಲ್ಲವೇ? ಅಂದರೆ ಕನಿಷ್ಠ ಒಂದು ಲಕ್ಷ ಕೋಟಿಯನ್ನಾದರೂ ನೀವು ನೀಡಬೇಕಾಗಿತ್ತು ಎಂದು ಹೇಳಿದ್ದಾರೆ. +ಯುಪಿಎ ಸರ್ಕಾರ ಹತ್ತು ವರ್ಷಗಳಲ್ಲಿ 95,21,493 ಲಕ್ಷ ಕೋಟಿ ರೂಪಾಯಿಗಳ ಬಜೆಟ್‌ ರೂಪಿಸಿ ಖರ್ಚು ಮಾಡಿತ್ತು. ನಿಮ ನೇತೃತ್ವದ ಎನ್‌ಡಿಎ ಸರ್ಕಾರ ಹತ್ತು ವರ್ಷಗಳ ಅವಧಿಯಲ್ಲಿ ಒಟ್ಟು 282 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ ಮಾಡಿ ಖರ್ಚು ಮಾಡಿತ್ತು. ಅಂದರೆ ಬಜೆಟ್‌ ಗಾತ್ರ ಮೂರು ಪಟ್ಟು ಹೆಚ್ಚಾದರೂ ಅನುದಾನದ ಪ್ರಮಾಣ ಮಾತ್ರ ಏರಿಕೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ. +2014ರ ಯುಪಿಎ ಸರ್ಕಾರದ ಕಾಲದಲ್ಲಿ ದೇಶದ ಸಾಲ 54 ಲಕ್ಷ ಕೋಟಿ ರೂಪಾಯಿಗಳಿತ್ತು, ಈಗ ಒಟ್ಟು ಸಾಲದ ಪ್ರಮಾಣ 172.37 ಲಕ್ಷ ಕೋಟಿ ರೂಪಾಯಿಗಳಾಗಿದೆ. ಇದು ಸಾಧನೆಯೇ ? ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿರುವುದು ನಿಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿರಲ್ಲಾ ಮೋದಿಯವರೇ, ಇದರಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಪಾಲೆಷ್ಟು? ರಸ್ತೆ ನಿರ್ಮಾಣ ಗುತ್ತಿಗೆದಾರರ ಸಾಲ ಎಷ್ಟು ಎಂದು ಲೆಕ್ಕ ಯಾಕೆ ಹೇಳುವುದಿಲ್ಲ. +ಈ ಹೆದ್ದಾರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಪಾಲು ನೀಡಿದ್ದರೂ ಹೆದ್ದಾರಿ ಟೋಲ್‌ಗಳಲ್ಲಿ ಸಂಗ್ರಹಿಸುವ ದುಡ್ಡ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಯಾಕೆ ಹೋಗಬೇಕು? ಕಳೆದ ವರ್ಷ ಟೋಲ್‌ ಗಳಿಂದ ಸಂಗ್ರಹವಾಗಿರುವ ಹಣದ ಮೊತ್ತ 64,810 ಕೋಟಿ ರೂಪಾಯಿ. ಕರ್ನಾಟಕ ರಾಜ್ಯವೊಂದರಿಂದಲೇ ಸಂಗ್ರಹವಾಗಿರುವ ಟೋಲ್‌ ಹಣ 3,600 ಕೋಟಿ ರೂಪಾಯಿ ಎಂದು ವಿವರಿಸಿದ್ದಾರೆ. +ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ, ಕಾವೇರಿ, ಮೇಕೆದಾಟು, ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ. ಭದ್ರ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ಷೇಪಿಸಿದ್ದಾರೆ. +ಪ್ರಧಾನಮಂತ್ರಿ ಸೂರ್ಯ ಘರ್‌ ಮುಫ್ತ ಬಿಜಲಿ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಉಚಿತ ವಿದ್ಯುತ್‌ ಪೂರೈಸುತ್ತೇವೆ ಎನ್ನುವುದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಕಳೆದ ವರ್ಷದ ಬಜೆಟ್‌ ನಲ್ಲಿಯೇ ಘೋಷಿಸಿದ್ದ ಈ ಯೋಜನೆ ಸಂಪೂರ್ಣ ಉಚಿತ ಅಲ್ಲ. 1 ಕಿಲೋ ವ್ಯಾಟ್‌ ಉತ್ಪಾದಿಸುವ ರೂಫ್‌ಟಾಪ್‌ ಸೋಲಾರ್‌ ಪ್ಯಾನೆಲ್‌ಗೆ 50000 ರೂ ವೆಚ್ಚವಾಗುತ್ತದೆ. ಈ ಮೊತ್ತವನ್ನು ಶೇ.40ರಷ್ಟು ಹಣವನ್ನು ಖರೀದಿಸುವ ಕುಟುಂಬವೇ ಭರಿಸಬೇಕಾಗುತ್ತದೆ. ಬ್ಯಾಂಕ್‌ಗಳಿಂದ ಸಾಲ ಕೊಡಿಸಲಾಗುತ್ತಿದೆ. ಅಂದರೆ ಸೋಲಾರ್‌ ಪ್ಯಾನೆಲ್‌ ಅಳವಡಿಸುವ ವೆಚ್ಚದ ಹೊರೆ ಬಡ ಕುಟುಂಬದ ಮೇಲೆ ಹೊರಿಸಲಾಗಿದೆ. ಮತ್ತೆ ಎಲ್ಲಿಯ ಉಚಿತ ಎಂದು ಪ್ರಶ್ನಿಸಿದ್ದಾರೆ. + +70 ವರ್ಷ ಮೇಲ್ಪಟ್ಟವರಿಗೂ ಆಯಷ್ಮಾನ್‌ ಸೇವೆ ವಿಸ್ತರಿಸಲಾಗುವುದು ಎನ್ನುವುದು ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿದೆ. ವಾಸ್ತವ ಸಂಗತಿ ಎಂದರೆ ಆಯುಷ್ಮಾನ್‌ ಯೋಜನೆಯ ಆರೋಗ್ಯ ವಿಮೆಯಲ್ಲಿ ಅಕ್ರಮ ನಡೆದಿರುವುದನ್ನು ಸಿಎಜಿಯೇ ವರದಿ ಬಹಿರಂಗ ಮಾಡಿದೆ. 8.2 ಲಕ್ಷ ರೋಗಿಗಳು ಆಧಾರ್‌ ಬಯೋಮೆಟ್ರಿಕ್‌ ದಾಖಲೆಗಳಿಲ್ಲದೆ ಎರಡಕ್ಕಿಂತ ಹೆಚ್ಚು ಬಾರಿ ಚಿಕಿತ್ಸೆ ಪಡೆದಿರುವುದನ್ನು ಸಿಎಜಿ ಗುರುತಿಸಿತ್ತು. ನಕಲಿ ವಿಮೆಗಳಿಗೆ ರೂ.1697 ಕೋಟಿವರೆಗೆ ಸರ್ಕಾರದಿಂದ ಹಣ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. +ಕಳೆದ ಐದು ವರ್ಷಗಳಲ್ಲಿ ಪಿಎಂ ಕಿಸಾನ್‌ ಸಮಾನ್‌ ನಿಧಿ ಯೋಜನೆಯಡಿ 11 ಕೋಟಿ ರೈತರಿಗೆ ಸಹಾಯ ಧನ ನೀಡಲಾಗಿದೆ. ಕೃಷಿ ಸಚಿವರೇ ರಾಜ್ಯಸಭೆಯಲ್ಲಿ 4 ಲಕ್ಷ ಅನರ್ಹ ರೈತರಿಗೆ ರೂ. 3 ಸಾವಿರ ಕೋಟಿ ಸಹಾಯ ಧನ ವಿತರಣೆಯಾಗಿದ್ದು, ಮರಳಿ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಿದ್ಧಾರೆ. ದೇಶದಲ್ಲಿ ಶೇ.55ರಷ್ಟು ಭೂ ರಹಿತ ರೈತರಿದ್ದು, ಅವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎನ್ನುವುದು ಮತ್ತೊಂದು ದುರಂತ. +ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯನ್ನು ತಂತ್ರಜ್ಞಾನದ ಬಳಕೆಯ ಮೂಲಕ ಮತ್ತಷ್ಟು ಬಲಪಡಿಸಿ ನಿಖರ ಪರಿಶೀಲನೆ ನಡೆಸಿ ಪರಿಹಾರದ ಹಣವನ್ನು ವೇಗವಾಗಿ ಪಾವತಿಸಲಾಗುವುದು ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ವಾಸ್ತವ ಸಂಗತಿ ಎಂದರೆ ಹಿಂದಿನ ಅವಧಿಯಲ್ಲಿ 5 ವರ್ಷಗಳಲ್ಲಿ ಈ ಯೋಜನೆಯಿಂದ ರೈತರಿಗೆ ಆದ ಲಾಭಕ್ಕಿಂತ ವಿಮಾ ಕಂಪನಿಗಳಿಗೆ ಆದ ಲಾಭವೇ ಹೆಚ್ಚು. +ಕೃಷಿ ಸಚಿವ ನರೇಂದ್ರ ತೋಮರ್‌ ರಾಜ್ಯಸಭೆಯಲ್ಲಿ ಉತ್ತರಿಸಿರುವಂತೆ, 2016-17ರಿಂದ 2021-22ರ ಅವಧಿಯಲ್ಲಿ ರೈತರು ರೂ. 1.59 ಲಕ್ಷ ಪ್ರೀಮಿಯಂ ಹಣ ಪಾವತಿಸಿದ್ದರು. ಈ ಪೈಕಿ ವಿಮಾ ಕಂಪನಿಗಳು ರೂ. 1.19 ಲಕ್ಷ ಕೋಟಿ ಹಣವನ್ನು ರೈತರಿಗೆ ಪಾವತಿಸಿದ್ದವು. ಅಂದರೆ ರೂ.40000 ಕೋಟಿಗಳಷ್ಟು ಲಾಭಗಳಿಸಿದ್ದವು ಎಂದು ಅಂಕಿ ಅಂಶ ಹಂಚಿಕೊಂಡಿದ್ದರು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_164_7.txt b/eesanje/url_46_164_7.txt new file mode 100644 index 0000000000000000000000000000000000000000..13dae3d7bd4c3b15e6f45f9ee510c482c15c21d2 --- /dev/null +++ b/eesanje/url_46_164_7.txt @@ -0,0 +1,9 @@ +ಪ್ರಧಾನಿ ಮೋದಿ ವಿರುದ್ಧ ಸಂತೋಷ್‌ ಲಾಡ್‌ ಅಸಮಾಧಾನ +ಹುಬ್ಬಳ್ಳಿ,ಏ.29-ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯ ನಿರ್ಧರಿಸುವಂತದ್ದಾಗಿದ್ದು, ಇಲ್ಲಿ ಕಳೆದ 10 ವರ್ಷಗಳಿಂದ ನಡೆದಿರುವ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆಯಾಗಬೇಕೇ ಹೊರತು ವ್ಯಕ್ತಿಗತ ವಿಚಾರಗಳಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ತಮ್ಮ ಪ್ರಚಾರ ಭಾಷಣದಲ್ಲಿ ಕಾಂಗ್ರೆಸ್‌ನಿಂದ ಲೂಟಿ, ಪಿಕ್‌ಪ್ಯಾಕೆಟ್‌ ಎಂಬ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ. ತಾವು ಮಾಡುತ್ತಿರುವ ಆರೋಪಗಳಿಗೆ ಯಾವುದಕ್ಕೂ ಸರಿಯಾದ ಆಧಾರ ನೀಡುವುದಿಲ್ಲ. ತಮ್ಮ ಹುದ್ದೆಯ ಘನತೆಯನ್ನು ಕುಬ್ಜಗೊಳಿಸಿ ರಾಜಕೀಯ ಲಾಭಕ್ಕಾಗಿ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ಯತ್ನ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಕಳೆದ 10 ವರ್ಷಗಳಿಂದ ದೇಶದಲ್ಲಾಗಿರುವ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆಯಾಗಬೇಕಿತ್ತು. ಆದರೆ ಅದರ ಬಗ್ಗೆ ಎಲ್ಲಿಯೂ ಪ್ರಸ್ತಾಪವಾಗುತ್ತಿಲ್ಲ. ಇವರು ಯಾವ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದರು. ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ ದೇಶದಲ್ಲಿ 13.13 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. +ದೇಶದ ಸಾಲ 183 ಲಕ್ಷ ಕೋಟಿ ರೂ. ಗಳಾಗಿವೆ. ಡಾಲರ್‌ ವೌಲ್ಯ 58 ರೂ.ಗಳಿಂದ 83 ರೂ.ಗಳಿಗೆ ಕುಸಿದಿದೆ. ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂ. ಸಾಲಮನ್ನಾವಾಗಿದೆ. ಇದ್ಯಾವ ವಿಚಾರಗಳು ಚರ್ಚೆಯಾಗಬಾರದೇ ಎಂದು ಪ್ರಶ್ನಿಸಿದರು. +ಅಮೆರಿಕದಲ್ಲಿ ಭಾಷಣ ಮಾಡಿದ ಮೋದಿಯವರು ಪ್ರತಿ ವಾರ ಒಂದು ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಹೇಳಿದ್ದರು. ಎಲ್ಲಿಗೆ ಆ ವಿಶ್ವವಿದ್ಯಾಲಯಗಳು ಎಂಬುದನ್ನು ಯಾರೂ ತೋರಿಸಿದ್ದಿಲ್ಲ, ನೋಟು ಅಮಾನೀಕರಣ ದೊಡ್ಡ ವಂಚನೆಯ ಹಗರಣ. 3 ಲಕ್ಷ ನಕಲಿ ನೋಟುಗಳನ್ನು ಪತ್ತೆ ಹಚ್ಚುವುದಾಗಿ ಹೇಳಿದರು. +ಈವರೆಗೂ ಅದನ್ನು ಲೆಕ್ಕ ಕೊಟ್ಟಿಲ್ಲ. ಪುಲ್ವಾಮ ದಾಳಿಯ ಬಗ್ಗೆ ಆಗಿನ ಲೆಫ್ಟಿನೆಂಟ್‌ ಗವರ್ನರ್‌ ಸತ್ಯಪಾಲ್‌ ಮಲ್ಲಿಕ್‌ ಹೇಳಿಕೆ ಪ್ರಚಾರಕ್ಕೆ ಬರುತ್ತಿಲ್ಲ. ದಾಳಿಯಾದ ಬಳಿಕ ಆಗಿನ ಸರ್ಕಾರದ ಅಧಿ ಕೃತ ಪ್ರತಿನಿಧಿ ಗಳ್ಯಾರು ಪತ್ರಿಕಾಗೋಷ್ಠಿ ನಡೆಸಲಿಲ್ಲ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಪತ್ರಿಕಾಗೋಷ್ಠಿ ಯಲ್ಲಿ ಮೃತಪಟ್ಟವರ ಲೆಕ್ಕ ಹೇಳಿದರು. ಅವರಿಗೆ ಹೇಗೆ ಗೊತ್ತಿತ್ತು ಎಂದು ಪ್ರಶ್ನಿಸಿದರು. +ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ 25 ಮಂದಿಯಲ್ಲಿ 12 ಜನ ಗುಜರಾತ್‌ನವರಿದ್ದಾರೆ. ಅವರನ್ನು ಈವರೆಗೂ ವಾಪಸ್‌ ಕರೆತರಲಾಗಿಲ್ಲ. ಉದ್ಯಮಿ ಗೌತಮ್‌ ಅದಾನಿಯವರ ಸಂಪತ್ತು 11 ಲಕ್ಷ ಕೋಟಿ ರೂ.ಗಳಿಗೆ ಹೆಚ್ಚಾಗಿದ್ದು ಹೇಗೆ ಎಂಬ ವಿಚಾರ ವಿಶ್ಲೇಷಣೆಯಾಗುವುದಿಲ್ಲ. ಸರ್ಕಾರದ ವಿಮಾನನಿಲ್ದಾಣ, ಬಂದರು, ರಸ್ತೆ ಸೇರಿದಂತೆ ಎಲ್ಲವನ್ನೂ ಅವರಿಗೆ ನೀಡಲಾಗಿದೆ ಎಂದು ಆರೋಪಿಸಿದರು. +ಕೇಂದ್ರ ಸರ್ಕಾರ ಸರ್ವಾಧಿ ಕಾರಿ ಧೋರಣೆ ಅನುಸರಿಸುತ್ತಿದೆ. ಈಗಾಗಲೇ ಎಕ್‌್ಸ ಖಾತೆಯ ಮೇಲೆ ನಿಗಾ ವಹಿಸಲಾಗಿದೆ. ಮುಂದುವರೆದು ವಾಟ್‌್ಸ ಆಪ್‌ ಸಂದೇಶಗಳಿಗೂ ಕಳ್ಳಗಣ್ಣಿಡುವ ಪ್ರಯತ್ನಗಳಾಗುತ್ತಿವೆ. ಸಾರ್ವಜನಿಕ ಉದ್ಯಮವಾಗಿರುವ ಬಿಎಸ್‌ಎನ್‌ಎಲ್‌ ಅನ್ನು ಮುಚ್ಚಿಸಿ ಖಾಸಗಿ ಸಂಸ್ಥೆ ಜಿಯೋವನ್ನು ಉದ್ಧಾರ ಮಾಡಲಾಗುತ್ತಿದೆ ಎಂದು ದೂರಿದರು. \ No newline at end of file diff --git a/eesanje/url_46_164_8.txt b/eesanje/url_46_164_8.txt new file mode 100644 index 0000000000000000000000000000000000000000..88f72494b06abe14b16e44661015e775212da75f --- /dev/null +++ b/eesanje/url_46_164_8.txt @@ -0,0 +1,9 @@ +ಪೆನ್ ಡ್ರೈವ್ ಪ್ರಕರಣದ ಬಗ್ಗೆ ಮೌನ ಮುರಿದ ಬಿಜೆಪಿ +ಬೆಂಗಳೂರು,ಏ.29-ಹಾಸನ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕೊನೆಗೂ ಬಿಜೆಪಿ ವೌನ ಮುರಿದಿದೆ. ಪ್ರಕರಣ ಆಚೆ ಬಂದು ಮೂರು ದಿನವಾದರೂ ಬಾಯಿ ಬಿಡದೆ ಅಂತರ ಕಾಪಾಡಿಕೊಂಡಿದ್ದ ಬಿಜೆಪಿ ನಾಯಕರು ಮೊದಲ ಬಾರಿಗೆ ಹೇಳಿಕೆಯನ್ನು ಕೊಟ್ಟಿದ್ದಾರೆ. +ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.ಎಚ್‌.ಡಿ. ಕುಮಾರಸ್ವಾಮಿ ಅವರು ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಎಸ್‌ಐಟಿ ರಚಿಸಿದೆ. +ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅಶೋಕ್‌ ಹೇಳಿದ್ದಾರೆ. ಇನ್ನು, ಪೆನ್‌ ಡ್ರೈವ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ರಕ್ಷಣೆ ಇಲ್ಲ ಎನ್ನುವ ಡಿ.ಕೆ. ಸುರೇಶ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಆರ್‌ ಅಶೋಕ್‌, ಈಗ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆಯಲ್ಲ, ರಕ್ಷಣೆ ಕೊಡಲಿ ಎಂದು ಆಗ್ರಹಿಸಿದ್ದಾರೆ. +ಕಾನೂನಿಗಿಂತ ಯಾರೂ ಕೂಡ ದೊಡ್ಡವರಿಲ್ಲ. ಪ್ರಜ್ವಲ್‌ ರೇವಣ್ಣ ಇರಲಿ, ಇನ್ಯಾರೇ ಇರಲಿ ತಪ್ಪು ಮಾಡಿದಾಗ ಕಾನೂನಿಗೆ ತಲೆ ಬಾಗಲೇಬೇಕು. ಈಗಾಗಲೇ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಹೇಳಿದ್ದಾರೆ. ಯಾರನ್ನು ರಕ್ಷಣೆ ಮಾಡುವ ಉದ್ದೇಶವಿಲ್ಲ ಎಂದರು. +ಪ್ರಜ್ವಲ್‌ ರೇವಣ್ಣ ಅವರಿಗೆ ದೇಶ ಬಿಟ್ಟು ಹೋಗುವಂತೆ ಬಿಜೆಪಿಯಾಗಲಿ, ಜೆಡಿಎಸ್‌ ನಾಯಕರು ಸಲಹೆ ಕೊಟ್ಟಿಲ್ಲ. ಅಷ್ಟಕ್ಕೂ ರಾಜ್ಯ ಗುಪ್ತಚರ ವಿಭಾಗ ಮುಖ್ಯಮಂತ್ರಿ ಅಧೀನದಲ್ಲಿದೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು. ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಾಗಲಕೋಟೆಯಲ್ಲಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದು, ಎಸ್‌ಐಟಿ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿದ್ದಾರೆ. +ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ. ಸರ್ಕಾರ ಈಗಾಗಲೇ ಎಸ್‌ಐಟಿ ರಚಿಸಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ. ಅಲ್ಲಿಯವರೆಗೂ ಕಾದು ನೋಡೋಣ ಎಂದರು. ಇನ್ನೊಂದೆಡೆ ಹುಬ್ಬಳ್ಳಿಯಲ್ಲಿ ಮಾತನಾಡುತ್ತಿದ್ದ ಬಿಜೆಪಿಯ ಮಾಜಿ ಶಾಸಕ ಸಿ.ಟಿ. ರವಿ, ಕಾನೂನು ಎಲ್ಲರಿಗೂ ಒಂದೇ ಇರುತ್ತದೆ ಎಂದಿದ್ದಾರೆ. +ಕಾನೂನು ತಮಗೆ ಅನ್ವಯ ಆಗಬಾರದು ಎಂದು ಕಾಂಗ್ರೆಸ್‌ ಭಾವಿಸುತ್ತದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ತಮ್ಮ ಭಾವನೆ ಎಂದು ಹೇಳಿದ ಸಿ.ಟಿ. ರವಿ, ಈ ಪ್ರಕರಣ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತೆ ಎಂದು ಹೇಳಲು ಆಗಲ್ಲ. ಹಾಗೆಯೇ ಪರಿಣಾಮ ಬೀರುವುದಿಲ್ಲ ಎಂದಲೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +2019ರಲ್ಲಿ ಹಾಸನದಲ್ಲಿ ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿದ್ದರು. ಆವತ್ತು ಅವರ ಜೊತೆ ಕಾಂಗ್ರೆಸ್‌ ಇತ್ತು. ನಾವು ವಿರೋಧವಾಗಿ ಅಭ್ಯರ್ಥಿ ಹಾಕಿದ್ದೆವು. ಇದೀಗ ಪ್ರಜ್ವಲ್‌ ರೇವಣ್ಣಗೆ ಟಿಕೆಟ್‌ ಕೊಟ್ಟಿರುವುದು ನಾವಲ್ಲ, ಜೆಡಿಎಸ್‌ ಎಂದು ಸಿ.ಟಿ.ರವಿ ಹೇಳಿದ್ದಾರೆ. \ No newline at end of file diff --git a/eesanje/url_46_164_9.txt b/eesanje/url_46_164_9.txt new file mode 100644 index 0000000000000000000000000000000000000000..74f3333ad112b9f61259e8b7616b18f0a4067ed6 --- /dev/null +++ b/eesanje/url_46_164_9.txt @@ -0,0 +1,7 @@ +ಕೈಕೊಟ್ಟ ಮುಂಗಾರು ಪೂರ್ವ ಮಳೆ, ರಾಜ್ಯದಲ್ಲಿ ದಾಖಲೆ ತಾಪಮಾನ, ಬೆಂಗಳೂರು ಕೊತಕೊತ +ಬೆಂಗಳೂರು,ಏ.29-ಕಳೆದ ವರ್ಷದ ಮುಂಗಾರು ಹಿಂಗಾರಿನಂತೆ ಈ ಬಾರಿಯ ಮುಂಗಾರು ಪೂರ್ವ ಮಳೆಯು ಕೈಕೊಟ್ಟಿದ್ದು, ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.5 ಡಿಗ್ರಿ ಸೆಂಟಿಗ್ರೇಡ್‌ನಷ್ಟು ದಾಖಲಾಗಿದ್ದು, ರಾಯಚೂರಿನಲ್ಲಿ ಅತ್ಯಧಿಕ 43 ಡಿ.ಸೆ.ನಷ್ಟು ದಾಖಲಾಗಿದೆ. +ಬೆಂಗಳೂರಿನಲ್ಲಿ ನಿನ್ನೆ ಕೂಡ 38.5ರಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಕೂಡ ದಾಖಲಾರ್ಹ ತಾಪಮಾನವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 2016ರ ಏಪ್ರಿಲ್‌ 25ರಂದು ಬೆಂಗಳೂರು ನಗರದಲ್ಲಿ 39.2 ಡಿಗ್ರಿ ಸೆಂಟಿಗ್ರೇಡ್‌ ದಾಖಲಾಗಿತ್ತು. 1999ರ ಏ.3ರಂದು 38.3 ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2016ರ ಏಪ್ರಿಲ್‌ 25ರಂದು 38.3 ಡಿಗ್ರಿ ಸೆಂಟಿಗ್ರೇಡ್‌ನಷ್ಟು ಗರಿಷ್ಠ ತಾಪಮಾನ ದಾಖಲಾಗಿತ್ತು. +ನಿನ್ನೆ 8 ವರ್ಷಗಳಲ್ಲೇ ಅತ್ಯಧಿಕ ಗರಿಷ್ಠ ತಾಪಮಾನ ಬೆಂಗಳೂರಿನಲ್ಲಿ ದಾಖಲಾಗಿದೆ. ಮಾರ್ಚ್‌, ಏಪ್ರಿಲ್‌ ತಿಂಗಳಿನಲ್ಲಿ ಬೇಸಿಗೆ ಅಥವಾ ಮುಂಗಾರು ಪೂರ್ವ ಮಳೆಯಾಗುವುದು ವಾಡಿಕೆ. ಏಪ್ರಿಲ್‌ ಮಧ್ಯ ಭಾಗದಲ್ಲಿ ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಿದ್ದನ್ನು ಬಿಟ್ಟರೆ ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ. ಇದರಿಂದ ಗರಿಷ್ಠ ತಾಪಮಾನ ಹೆಚ್ಚಳವಾಗಿ ಬಿಸಿ ಗಾಳಿಯ ವಾತಾವರಣ ಕಂಡುಬರುತ್ತಿದೆ. ಇದರಿಂದ ಜನರು ತತ್ತರಿಸುವಂತಾಗಿದೆ. +ಜನರಿಗಷ್ಟೇ ಅಲ್ಲ ಜಾನುವಾರು ಹಾಗೂ ಕಾಡು ಪ್ರಾಣಿಗಳು ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ. ಕರ್ನಾಟಕ ಒಂದರ್ಥದಲ್ಲಿ ಬಿಸಿಲ ನಾಡಾಗಿ ಪರಿಣಮಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿಗಿಂತ ಹೆಚ್ಚಾಗಿ ಕಂಡುಬರುತ್ತಿದೆ. +ಬೆಳಗಾವಿ ವಿಮಾನ ನಿಲ್ದಾಣದಲ್ಲಿ 34.4, ಬೀದರ್‌ 39.8 , ವಿಜಯಪುರ 41.2, ಬಾಗಲಕೋಟೆ 42.3, ಧಾರವಾಡ 39.2, ಗದಗ 40.2, ಕಲಬುರಗಿ 42.9, ಹಾವೇರಿ 39.8, ಕೊಪ್ಪಳ 42, ಚಾಮರಾಜನಗರ 40.1, ಚಿತ್ರದುರ್ಗ 39.8, ದಾವಣಗೆರೆ 40, ಮಂಡ್ಯ 39.6, ಶಿವಮೊಗ್ಗ 38.4 ಡಿ.ಸೆ.ನಷ್ಟು ದಾಖಲಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದ್ದು, ಸದ್ಯಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಆದರೆ ಮೇ ಮೊದಲ ವಾರದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. \ No newline at end of file diff --git a/eesanje/url_46_165_1.txt b/eesanje/url_46_165_1.txt new file mode 100644 index 0000000000000000000000000000000000000000..069f7bd1ed47defe3bde44444bec75d0b2036dee --- /dev/null +++ b/eesanje/url_46_165_1.txt @@ -0,0 +1,12 @@ +ಚಾಮರಾಜನಗರದ ಸಂಸದ, ಪ್ರಭಾವಿ ದಲಿತ ನಾಯಕ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ: ನಾಳೆ ಅಂತ್ಯಕ್ರಿಯೆ +ಬೆಂಗಳೂರು,ಏ.29-ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ದಲಿತ ಸಮುದಾಯದ ಪ್ರಭಾವಿ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ನಿಧನರಾಗಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ, ಮೂವರು ಪುತ್ರಿಯರು, ಅಳಿಯಂದಿರಾದ ನಂಜನಗೂಡು ಮಾಜಿ ಶಾಸಕ ಹರ್ಷವರ್ಧನ್‌, ಡಾ.ಮೋಹನ್‌ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಷಾ, ರಾಜ್‌ ನಾಥ್‌ ಸಿಂಗ್‌, ಮುಖ್ಯಮಂತ್ರಿ ಸಿದ್ದರಾಮಯ್ಯ,ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ್‌ ಬೊಮ್ಮಯಿ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. +ಕಳೆದ ಮೂರು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಕಾರಿಯಾಗದೆ, ಮುಂಜಾನೆ 1.27ರ ಸುಮಾರಿಗೆ ನಿಧನರಾಗಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ತವರು ಜಿಲ್ಲೆ ಮೈಸೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. +ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಖ್ಯಾತ ವೈದ್ಯ ಡಾ. ಸುದರ್ಶನ್‌ ಬಲ್ಲಾಳ್‌, ಶ್ರೀನಿವಾಸ್‌ ಪ್ರಸಾದ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದರು. ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಕಳೆದ ವಾರ ಏರುಪೇರಾಗಿತ್ತು. ಶ್ರೀನಿವಾಸ್‌ ಪ್ರಸಾದ್‌ ಪಾರ್ಥಿವ ಶರೀರವನ್ನು ಮಣಿಪಾಲ್‌ ಆಸ್ಪತ್ರೆಯಿಂದ ಮೈಸೂರಿನ ಜಯಲಕ್ಷೀಪುರಂನಲ್ಲಿರುವ ಅವರ ನಿವಾಸಕ್ಕೆ ತರಲಾಯಿತು. +ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಟಿ.ದೇವೇಗೌಡ, ಪುಟ್ಟರಂಗಶೆಟ್ಟಿ ಸೇರಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಇಲ್ಲಿನ ವಸ್ತುಪ್ರದರ್ಶನ ಕೇಂದ್ರದಲ್ಲಿ ಸಾರ್ವಜನಿಕದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. +ನಾಳೆ ಅಂತ್ಯಕ್ರಿಯೆ:ಶ್ರೀನಿವಾಸ್‌ ಪ್ರಸಾದ್‌ ಅವರ ಅಂತ್ಯಕ್ರಿಯೆ ನಾಳೆ ಮೈಸೂರಿನಲ್ಲಿ ನಡೆಯಲಿದೆ ಎಂದು ಅವ ಪುತ್ರಿ ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮನಮನ ಸಲ್ಲಿಸಲಾಗುವುದು. ನಂತರ ಅಶೋಕಪುರಂನ ಎನ್‌ಟಿಎಂ ಶಾಲಾ ಆವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇಡೀ ರಾತ್ರಿ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಶೋಕಪುರಂನಲ್ಲಿ ಮೆರವಣಿಗೆ ಬಳಿಕ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. +ಸಂತಾಪ:ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು- ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್‌ ನಿಧನಕ್ಕೆ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಂತಾಪ ಸೂಚಿಸಿದ್ದಾರೆ.ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸಪ್ರಸಾದ್‌ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. +ತಮ್ಮ ಸಮಾಜ ಸೇವೆಗಳಿಂದಲೇ ಬಹಳ ಜನಪ್ರಿಯರಾಗಿದ್ದರು. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ. +ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಶ್ರೀನಿವಾಸ್‌ ಪ್ರಸಾದ್‌ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್‌ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಮರುಗಿದ್ದಾರೆ. +ದೀರ್ಘಕಾಲ ಕಾಂಗ್ರೆಸ್‌ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್‌ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ ಎಂದು ಬರೆದಿದ್ದಾರೆ.ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರ ಅಭಿಮಾನಿ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_165_10.txt b/eesanje/url_46_165_10.txt new file mode 100644 index 0000000000000000000000000000000000000000..0b19bdf85912b5f5218d7340ad5a5ec0c3f438ff --- /dev/null +++ b/eesanje/url_46_165_10.txt @@ -0,0 +1,9 @@ +ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ನ ನಾಯಕಿಯರ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ +ಬೆಂಗಳೂರು,ಏ.28-ಹಾಸನದ ಸಂಸದರು ಭಾಗಿಯಾಗಿದ್ದಾರೆಂದು ಹೇಳಲಾದ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕಾಂಗ್ರೆಸ್‌ನ ನಾಯಕಿಯರು ಆಗ್ರಹಿಸಿದ್ದಾರೆ. +ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು, ಕವಿತಾ ರೆಡ್ಡಿ, ಭವ್ಯಾ ನರಸಿಂಹಮೂರ್ತಿ ಸೇರಿದಂತೆ ಹಲವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. +ಪ್ರಜ್ವಲ್‌ ರೇವಣ್ಣ ಅತ್ಯಂತ ಪ್ರಭಾವಿ ಕುಟುಂಬದಿಂದ ಬಂದವರು, ಅವರ ತಾತ ಪ್ರಧಾನಿಯಾಗಿದ್ದರು, ಚಿಕ್ಕಪ್ಪ ಮುಖ್ಯಮಂತ್ರಿಯಾಗಿದ್ದರು, ತಂದೆ ಸಚಿವರಾಗಿದ್ದರು, ಪ್ರಜ್ವಲ್‌ ರೇವಣ್ಣ ಖುದ್ದು ಸಂಸದರಾಗಿದ್ದಾರೆ. ಅವರ ವಿರುದ್ಧ ಹೋರಾಟ ನಡೆಸುವುದು ಸಾಮಾನ್ಯ ಮಹಿಳೆಯರಿಗೆ ಸುಲಭದ ವಿಚಾರವಲ್ಲ. ಹೀಗಾಗಿ ಸರ್ಕಾರ ಸಂತ್ರಸ್ತ ಮಹಿಳೆಯರಿಗೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು. +ಹಾಸನ ಜಿಲ್ಲೆಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮಾನಹಾನಿಗೆ ಕಾರಣರಾದವರ ವಿಚಾರವಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆ, ತಂಡ ರಚನೆಗೆ ಸರ್ಕಾರ ನಿರ್ಧರಿಸಿದೆ.####://./ +ಈ ಪ್ರಕರಣದಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ ಎಂದ ಕವಿತಾ ರೆಡ್ಡಿಯವರು ರೇವಣ್ಣ ಜರ್ಮನಿಗೆ ಪರಾರಿಯಾಗಿದ್ದಾರೆ, ಜೆಡಿಎಸ್‌-ಬಿಜೆಪಿ ನಾಯಕರು ಈ ಬಗ್ಗೆ ಏಕೆ ಪ್ರತಿಕ್ರಿಯೆ ನೀಡುತ್ತಿಲ್ಲ? ಎಂದು ಪ್ರಶ್ನಿಸಿದರು. +ಮಂಜುಳಾ ನಾಯ್ಡು ಮಾತನಾಡಿ, ಪ್ರಧಾನಿಯವರು ಮಹಿಳೆಯರ ಮಾಂಗಲ್ಯ ಸರ ಕಿತ್ತುಕೊಳ್ಳುತ್ತಾರೆ ಎಂದು ಮಾತನಾಡುತ್ತಾರೆ, ಇಂತಹ ವಿಚಾರದ ಬಗ್ಗೆ ಏಕೆ ಪ್ರತಿಕ್ರಿಯಿಸುವುದಿಲ್ಲ? ಎಂದು ಪ್ರಶ್ನಿಸಿದರು. +ಭವ್ಯ ನರಸಿಂಹಮೂರ್ತಿಯವರು, ಪ್ರಜ್ವಲ್‌ ರೇವಣ್ಣ ಅವರಿಗೆ ಶಿಕ್ಷೆಯಾಗುವುದನ್ನು ನೋಡಿ ಬೇರೆ ಯಾರೂ ಇಂತಹ ಕೃತ್ಯಗಳಿಗೆ ಯೋಚಿಸಬಾರದು, ಆ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದರು. +ಈ ನಡುವೆ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಕಚೇರಿ ಬಳಿ ಪಕ್ಷದ ಕಾರ್ಯಕರ್ತರು ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸಿ, ಪ್ರತಿಕೃತಿಯನ್ನು ದಹಿಸಿದರು. \ No newline at end of file diff --git a/eesanje/url_46_165_11.txt b/eesanje/url_46_165_11.txt new file mode 100644 index 0000000000000000000000000000000000000000..8347e0d7a649cf8d14eda19f2a16d9d2c9c5038e --- /dev/null +++ b/eesanje/url_46_165_11.txt @@ -0,0 +1,5 @@ +ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ +ಬೆಂಗಳೂರು,ಏ.28-ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು. +ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಡೀ ದೇಶವೇ ನಾಚಿಕೆಪಡುವಂತಹ ವಿಚಾರ. ಸಂಸದರಾಗಿರುವವರು, ಮಾಜಿ ಪ್ರಧಾನಿಯವರ ಮೊಮ್ಮಗ ಈ ರೀತಿ ಕೆಲಸ ಮಾಡಿ ತಲೆ ಮರೆಸಿಕೊಂಡಿರುವುದು ನಾಚಿಕೆಗೇಡು ಎಂದರು. +ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_165_12.txt b/eesanje/url_46_165_12.txt new file mode 100644 index 0000000000000000000000000000000000000000..030c837e97ce2f3d5d6997ba6e0997a2f3fac404 --- /dev/null +++ b/eesanje/url_46_165_12.txt @@ -0,0 +1,7 @@ +ಪ್ರಜ್ವಲ್‌ ರೇವಣ್ಣ ವಿರುದ್ಧದ ಆರೋಪಗಳ ಕುರಿತು ಗೃಹಸಚಿವ ಪರಮೇಶ್ವರ್‌ ಪ್ರತಿಕ್ರಿಯೆ +ಬೆಂಗಳೂರು,ಏ.28-ಸಂತ್ರಸ್ತ ಮಹಿಳೆಯರ ದೂರು ಆಧರಿಸಿ ಹಾಸನದ ಸಂಸದರ ವಿರುದ್ಧ ಕೇಳಿಬಂದಿರುವ ದೂರು ತನಿಖೆಗೆ ವಿಶೇಷ ದಳವನ್ನು ರಚಿಸಲಾಗಿದ್ದು, ಶಂಕಿತ ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದರೆ ಆ ಸಂಬಂಧಪಟ್ಟಂತೆ ಎಸ್‌ಐಟಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ದಳ ರಚಿಸಲಿದೆ ಎಂದರು. +ಇಂದು ಶೀಘ್ರವೇ ಎಸ್‌ಐಟಿ ರಚನೆ ಕುರಿತಂತೆ ಅಧಿ ಕೃತ ಆದೇಶ ಪ್ರಕಟಿಸಲಾಗುವುದು. ಒಮ್ಮೆ ತನಿಖಾ ದಳ ಅಸ್ತಿತ್ವಕ್ಕೆ ಬಂದ ಬಳಿಕ ತನಿಖೆಯ ಅಗತ್ಯ ಕುರಿತು ಅದರ ಮುಖ್ಯಸ್ಥರಾಗಿರುವ ಹಿರಿಯ ಅಧಿ ಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಸರ್ಕಾರ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ತನಿಖೆಯಲ್ಲಿ ಯಾವ ರೀತಿಯ ವರದಿ ಬರುತ್ತದೆ ಎಂಬುದನ್ನು ಪರಿಶೀಲಿಸಿ ಸರ್ಕಾರ ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. ಸಾರ್ವಜನಿಕವಾಗಿ ಬೆಳಕಿಗೆ ಬಂದಿರುವ ವಿಡಿಯೋ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. +ಈ ನಡುವೆ ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಹೋಗಿದ್ದಾರೆ ಎಂಬ ಸುದ್ದಿ ಬಂದಿದೆ. ಕಾನೂನು ಪ್ರಕಾರ ಎಸ್‌ಐಟಿ ಅಗತ್ಯವಾದ ಸೂಕ್ತ ಕ್ರಮ ಕೈಗೊಳ್ಳಲಿದೆ. ವಿದೇಶದಿಂದ ವಾಪಸ್‌ ಕರೆತರುವ ಕೆಲಸವನ್ನೂ ಎಸ್‌ಐಟಿ ಮಾಡಲಿದೆ ಎಂದು ಹೇಳಿದರು. +ತಾವು ಸೇರಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಈವರೆಗೂ ಯಾವ ಸಂತ್ರಸ್ತ ಮಹಿಳೆಯರೂ ತಮ್ಮನ್ನು ಭೇಟಿ ಮಾಡಿಲ್ಲ. ಸರ್ಕಾರ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿಯೇ ಎಸ್‌ಐಟಿ ರಚಿಸಿದ್ದೇವೆ ಎಂದರು. \ No newline at end of file diff --git a/eesanje/url_46_165_2.txt b/eesanje/url_46_165_2.txt new file mode 100644 index 0000000000000000000000000000000000000000..af0e2c446efc603b246481ec8bb330eece4d8342 --- /dev/null +++ b/eesanje/url_46_165_2.txt @@ -0,0 +1,6 @@ +ಹುಬ್ಬಳಿಯಲ್ಲಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಬಂಧಿತ ಸಾಹಿಲ್‌ಖಾನ್‌ +ಮುಂಬೈ,ಏ.29-ಮಹದೇವ್‌ ಬೆಟ್ಟಿಂಗ್‌ಆ್ಯಪ್‌ ಪ್ರಕರಣದಲ್ಲಿ ಬಂಧಿತನಾಗಿರುವ ಸಾಹಿಲ್‌ಖಾನ್‌ ಪೊಲೀಸರಿಗೆ ಸಿಕ್ಕಿಬೀಳುವ ಮುನ್ನ ಕರ್ನಾಟಕದಲ್ಲೂ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಎಂಬ ವಿಷಯ ತಡವಾಗಿ ಬೆಳಕಿಗೆ ಬಂದಿದೆ. +ಸಾಹಿಲ್‌ಖಾನ್‌ಗೆ ನಿರೀಕ್ಷಣಾ ಜಾಮೀನು ದೊರೆಯದೆ ಇದ್ದ ಸಂದರ್ಭದಲ್ಲಿ ಆತ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ವೇಷ ಮರೆಸಿಕೊಂಡು ಐದು ರಾಜ್ಯಗಳಲ್ಲಿ 1800 ಕಿ.ಮೀಗೂ ಹೆಚ್ಚು ದೂರ ಸಂಚರಿಸಿದ್ದ ಎನ್ನಲಾಗಿದೆ. +ಕೊನೆಗೂ ಆತ ಛತ್ತೀಸ್‌ಘಡದ ಜಗದಲ್ಪುರದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ಜಾಮೀನು ಸಿಗುವುದಿಲ್ಲ ಎಂದು ತಿಳಿಯುತ್ತಿದ್ದಂತೆ ಆತ ಸೀದಾ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಅಲ್ಲಿಂದ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಖಾನ್‌ ವೇಷ ಬದಲಿಸಿ ಸ್ಕಾರ್ಫ್‌ ಹಿಂದೆ ತನ್ನ ಮುಖವನ್ನು ಮರೆಮಾಚಿಕೊಂಡು ಓಡಾಡುತ್ತಿದ್ದ ಎಂದು ವರದಿಯಾಗಿದೆ. +ಆದಾಗ್ಯೂ, ಪೊಲೀಸರು ಆತ ಹೈದರಾಬಾದ್‌ನಲ್ಲಿರುವುದುನ್ನು ಪತ್ತೆಹಚ್ಚಿದ್ದರು ಹಾಗೂ ಅಲ್ಲಿಂದ ಛತ್ತೀಸ್‌ಘಢದ ಕಡೆಗೆ ಪಲಾಯನ ಮಾಡಿರುವುದನ್ನು ಕಂಡು ಹಿಡಿದು ಸಿನಿಮಿಯ ಶೈಲಿಯಲ್ಲಿ ಆತನನ್ನು ಬಂಧಿಸಲಾಗಿದೆ. +ಖಾನ್‌ ಅವರು ಲಯನ್‌ ಬುಕ್‌ ಮತ್ತು ಲೋಟಸ್‌ 24/7 ನಂತಹ ಬೆಟ್ಟಿಂಗ್‌ ಪ್ಲಾಟ್‌ಫಾರ್ಮ್‌ಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಆದಾಗ್ಯೂ, ಖಾನ್‌ ಅವರು ಜೂಜಿನ ವೇದಿಕೆಯೊಂದಿಗೆ ನೇರ ಸಂಬಂಧವನ್ನು ಹೊಂದಿಲ್ಲ ಎಂದು ವಾದಿಸುತ್ತಿದ್ದಾರೆ. \ No newline at end of file diff --git a/eesanje/url_46_165_3.txt b/eesanje/url_46_165_3.txt new file mode 100644 index 0000000000000000000000000000000000000000..bcad90cf9f3b0c9cff404dbff50216a10d555ef7 --- /dev/null +++ b/eesanje/url_46_165_3.txt @@ -0,0 +1,6 @@ +ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದಲ್ಲಿ ಮರು ಮತದಾನ +ಬೆಂಗಳೂರು, ಏ. 29 (ಪಿಟಿಐ) :ಕರ್ನಾಟಕದ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹನೂರಿನ ಇಂಡಿಗನತ್ತ ಗ್ರಾಮದ ಒಂದು ಮತಗಟ್ಟೆಯಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆಗಳ ನಡುವೆ ಇಂದು ಮರುಮತದಾನ ನಡೆಯಿತು. +ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಗೊಳ್ಳಲಿದೆ.ಚಾಮರಾಜನಗರ ಜಿಲ್ಲೆಯ ಇಂಡಿಗನಾಥ ಗ್ರಾಮದ ಮತಗಟ್ಟೆಯಲ್ಲಿ ಎ. 26ರಂದು ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿತ್ತು. +ಜಿಲ್ಲಾಡಳಿತದ ಪ್ರಕಾರ, ಸಮರ್ಪಕ ಮೂಲಸೌಕರ್ಯ ಅಭಿವೃದ್ಧಿಯ ಕೊರತೆಯನ್ನು ಮುಂದಿಟ್ಟು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಈ ಹಿಂದೆ ನಿರ್ಧರಿಸಿದ್ದರು. ಆದರೆ, ಸ್ಥಳೀಯ ಅಧಿಕಾರಿಗಳ ಭರವಸೆ ಮತ್ತು ಪ್ರಯತ್ನದ ನಂತರ ಮತದಾನ ನಡೆಯುತ್ತಿದೆ. +ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗುಂಪು ಮತದಾನ ಮಾಡಲು ಬಯಸಿದ್ದರೆ, ಇನ್ನೊಂದು ಗುಂಪು ಬಹಿಷ್ಕಾರಕ್ಕೆ ಉತ್ಸುಕವಾಗಿತ್ತು, ಇದು ಅವರ ನಡುವೆ ಘರ್ಷಣೆಗೆ ಕಾರಣವಾಯಿತು, ಈ ಸಮಯದಲ್ಲಿ ಅವರು ಇವಿಎಂಗಳನ್ನು ಹಾನಿಗೊಳಿಸಿದರು ಮತ್ತು ಕಲ್ಲು ತೂರಾಟದಲ್ಲಿ ತೊಡಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಚಾಮರಾಜನಗರ ಕ್ಷೇತ್ರದ ಚುನಾವಣಾಧಿಕಾರಿ ಮತ್ತು ಸಾಮಾನ್ಯ ವೀಕ್ಷಕರು ಸಲ್ಲಿಸಿದ ವರದಿಗಳ ಆಧಾರದ ಮೇಲೆ ಮತ್ತು ಎಲ್ಲಾ ವಸ್ತುಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು, ಮತಗಟ್ಟೆ ಸಂಖ್ಯೆ 146 ರಲ್ಲಿ ಮರು ಮತದಾನ ನಡೆದಿದೆ. \ No newline at end of file diff --git a/eesanje/url_46_165_4.txt b/eesanje/url_46_165_4.txt new file mode 100644 index 0000000000000000000000000000000000000000..182cad59a58a4190a3e97ccfc4e336e91dd8417b --- /dev/null +++ b/eesanje/url_46_165_4.txt @@ -0,0 +1,11 @@ +ಯುಪಿಎ ಅವಧಿಯಲ್ಲಿ ಎಷ್ಟು ಅನುದಾನ ನೀಡಿತ್ತು ಎಂಬುದನ್ನು ಬಹಿರಂಗಪಡಿಸಿ : ಆರ್.ಅಶೋಕ್ ಸವಾಲ್ +ಬೆಂಗಳೂರು,ಏ.28-ಹಿಂದಿನ ಡಾ.ಮನಮೋಹನಸಿಂಗ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ ಯುಪಿಎ ಎಷ್ಟು ಅನುದಾನವನ್ನು ಕೇಂದ್ರದಿಂದ ಬಿಡುಗಡೆ ಮಾಡಿತ್ತು ಎಂಬುದನ್ನು ಕಾಂಗ್ರೆಸ್‌ ನಾಯಕರು ಶ್ವೇತಪತ್ರ ಹೊರಡಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬಹಿರಂಗ ಸವಾಲು ಹಾಕಿದ್ದಾರೆ. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುಪಿಎ ಕೊಟ್ಟ ಪರಿಹಾರ ನೋಡಿದರೆ ಸ್ಮಶಾನದಲ್ಲಿ ಬಾಯಿ ಬಡಿದುಕೊಳ್ಳಬೇಕು. ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್‌, ಬುರುಡೆ ಕುಮಾರ್‌ ಎಂದು ವಾಗ್ದಾಳಿ ನಡೆಸಿದರು. +ಈ ವೇಳೆ ಯುಪಿಎ ಮತ್ತು ಎನ್‌ಡಿಎ ಅವಧಿಯಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ದಾಖಲೆ ರಿಲೀಸ್‌ ಮಾಡಿ ವಾಗ್ದಾಳಿ ನಡೆಸಿದರು. ಕಳೆದ ಹತ್ತು ವರ್ಷಗಳ ಯುಪಿಎ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ. ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಅಕೋಶ ಹೊರಹಾಕಿದರು. +ಕೇಂದ್ರ ನೀಡಿದ ಬರ ಪರಿಹಾರದಲ್ಲಿ ಲೂಟಿ ಹೊಡೆಯಬಾರದು. ನಾವು ಕೇಂದ್ರದ ಹಣಕ್ಕೆ ಕಾವಲು ಕಾಯುತ್ತೇವೆ. ಕೇಂದ್ರ ಎಷ್ಟು ಹಣವನ್ನು ಬಿಡುಗಡೆ ಮಾಡಿದೆಯೋ, ನೀವೂ ಅಷ್ಟೇ ಬಿಡುಗಡೆ ಮಾಡಿ. ನೀವು ಅಷ್ಟೇ ಹಣ ಬಿಡುಗಡೆ ಮಾಡಲು ಸಾಧ್ಯವಾಗದೇ ಇದ್ದರೆ ನಿಮ್ಮದು ಪಾಪರ್‌ ಸರ್ಕಾರ. ಯೋಗ್ಯತೆ, ಮಾನ ಮರ್ಯಾದೆ ಇದ್ದರೆ ಕೇಂದ್ರದಷ್ಟೇ ನೀವೂ ಈಗ ಬರ ಪರಿಹಾರ ಬಿಡುಗಡೆ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಅಶೋಕ್‌ ಸವಾಲು ಎಸೆದರು. +ಯುಪಿಎ ಅವಧಿಯಲ್ಲಿ ಎಷ್ಟು? :2004-05 ರಲ್ಲಿ ಬರಗಾಲ ಇದ್ದಾಗ ಕರ್ನಾಟಕ 1,147.70 ಕೋಟಿ ರೂ. ಕೇಳಿತ್ತು. ಆದರೆ ಯುಪಿಎ ಸರ್ಕಾರ ನೀಡಿದ್ದು ಕೇವಲ 131 ಕೋಟಿ ರೂ. 2005-06ರಲ್ಲಿ ಅತಿವೃಷ್ಟಿಗೆ 4,297 ಕೋಟಿ ರೂ. ಕೇಳಲಾಗಿತ್ತು. ಯುಪಿಎ ನೀಡಿದ್ದು 358 ಕೋಟಿ ರೂ.. 2006-07ರಲ್ಲಿ ಪ್ರವಾಹ/ಬರಗಾಲಕ್ಕೆ 2.858 ಕೋಟಿ ರೂ. ಕೇಳಲಾಗಿತ್ತು. ನೀಡಿದ್ದು 226 ಕೋಟಿ ರೂ. ಮಾತ್ರ.2007-08ರಲ್ಲಿ ಜುಲೈನಲ್ಲಿ ಪ್ರವಾಹ ವೇಳೆ 406 ಕೋಟಿ ರೂ. ಕೇಳಿದ್ರೆ ಕೊಟ್ಟಿದ್ದು ಶೂನ್ಯ. +ಇದೇ ವರ್ಷದ ಆಗಸ್‌್ಟನಲ್ಲಿ 1,510 ರೂ. ಕೇಳಿದ್ರೆ ಕೊಟ್ಟಿದ್ದು ಚಿಪ್ಪು. ಅದೇ ವರ್ಷದ ಅಕ್ಟೋಬರ್‌ನಲ್ಲಿ 3,941ಕೋಟಿ ರೂ. ಕೇಳಲಾಗಿತ್ತು, ನೀಡಿದ್ದು 178 ಕೋಟಿ ರೂ.2008-09 ರಲ್ಲಿ ಬರಕ್ಕೆ 516 ಕೋಟಿ ರೂ ಕೇಳಿದರೆ, ಕೊಟ್ಟಿದ್ದು ಕೇವಲ 1 ಕೋಟಿ. 2009-10 ರಲ್ಲಿ ಪ್ರವಾಹ, ಬರಕ್ಕೆ 7,759 ಕೋಟಿ ರೂ. ಹಣವನ್ನು ಬಿಜೆಪಿ ಸರ್ಕಾರ ಕೇಳಿತ್ತು. ಆದರೆ ಅವರು ನೀಡಿದ್ದು 957 ಕೋಟಿ ರೂ. ಮಾತ್ರ. 2010-11 ರಲ್ಲಿ ಪ್ರವಾಹಕ್ಕೆ ಸರ್ಕಾರ 1045 ಕೋಟಿ ರೂ. ಕೇಳಿತ್ತು. ಆದರೆ ಒಂದು ರೂ. ನೀಡಿಲ್ಲ. +2011-12 ರಲ್ಲಿ 6,415 ಕೋಟಿ ರೂ. ಕೇಳಿದ್ದಕ್ಕೆ 429 ಕೋಟಿ ರೂ. ನೀಡಿತ್ತು. 2012-13 ರಲ್ಲಿ ಬರಕ್ಕೆ 11,489 ಕೋಟಿ ಕೇಳಿದರೆ, 397 ಕೋಟಿ ರೂ. ಸಿಕ್ಕಿತ್ತು. 2013-14 ರಲ್ಲಿ 2,258 ಕೋಟಿ ಕೇಳಿದ್ದರೆ ಕೊಟ್ಟಿದ್ದು 668 ಕೋಟಿ ಮಾತ್ರ ಎಂದು ಅಶೋಕ್‌ ಹೇಳಿದರು. +ಎನ್‌ಡಿಎ ಅವಧಿಯಲ್ಲಿ ಎಷ್ಟು? :2015-16 ರಲ್ಲಿ 3,831 ಕೋಟಿ ರೂ. ಕೇಳಿದ್ದಕ್ಕೆ 1,853 ಕೋಟಿ ರೂ. ನೀಡಿತ್ತು. 2016-17 ರಲ್ಲಿ ಬರ ಇದ್ದಾಗ 4,703 ಕೋಟಿ ರೂ. ಕೇಳಿದ್ದರೆ ಸರ್ಕಾರ 2,293 ಕೋಟಿ ರೂ. ವಿತರಿಸಿತ್ತು. 2017-18 ರಲ್ಲಿ 3,690 ಕೋಟಿ ರೂ. ಕೇಳಿದ್ದರೆ 1,141 ಕೋಟಿ ರೂ. ನೀಡಿತ್ತು. +2018-19 ರಲ್ಲಿ ರಾಜ್ಯ 2,434 ಕೋಟಿ ರೂ. ಕೇಳಿದ್ದರೆ ಸರ್ಕಾರ 1,248 ಕೋಟಿ ರೂ. ನೀಡಿತ್ತು. 2019-20 ರಲ್ಲಿ 3,837 ಕೋಟಿ ರೂ. ಕೇಳಿದ್ದರೆ 3,412 ಕೋಟಿ ರೂ. ಸಿಕ್ಕಿತ್ತು. 2020-21 ರಲ್ಲಿ ಪ್ರವಾಹ ಬಂದಾಗ 2,242.48 ಕೋಟಿ ರೂ. ಕೇಳಿದ್ದಕ್ಕೆ 1,480 ಕೋಟಿ ರೂ. ನೀಡಿತ್ತು. +2021-22 ರಲ್ಲಿ ಪ್ರವಾಹ, ಭೂಕುಸಿತ ವೇಳೆ 2122 ಕೋಟಿ ರೂ. ಕೇಳಿದ್ದರೆ ಸರ್ಕಾರ 2,255.8 ಕೋಟಿ ರೂ. ನೀಡಿತ್ತು. 2022-23 ರಲ್ಲಿ 1944 ಕೋಟಿ ರೂ. ಕೇಳಿದ್ದರೆ 1,603 ಕೋಟಿ ರೂ. ಸಿಕ್ಕಿತ್ತು. 2023-24 ರಲ್ಲಿ18171 ಕೋಟಿ ರೂ. ಕೇಳಿದ್ದರೆ 4,151.42 ಕೋಟಿ ರೂ.(ಎನ್‌ಡಿಆರ್‌ಎಫ್‌+ಎಸ್‌ಡಿಆರ್‌ಎಫ್‌ ಸೇರಿ) ಸಿಕ್ಕಿದೆ ಎಂದು ಅಶೋಕ್‌ ತಿಳಿಸಿದರು. \ No newline at end of file diff --git a/eesanje/url_46_165_5.txt b/eesanje/url_46_165_5.txt new file mode 100644 index 0000000000000000000000000000000000000000..99ab5ee93560ac4bcb2ba2b0ef17c646980a0f87 --- /dev/null +++ b/eesanje/url_46_165_5.txt @@ -0,0 +1,4 @@ +ರಾಯಚೂರಲ್ಲಿ ಬಿಸಿಲ ತಾಪಕ್ಕೆ ಇಬ್ಬರು ಮಕ್ಕಳ ಸಾವು +ರಾಯಚೂರು, ಏ.28-ಬಿಸಿಲ ತಾಪಕ್ಕೆ ಬಸವಳಿದು ನಿತ್ರಾಣಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ನಡೆದಿದೆ.ರಣಬಿಸಿಲಿನ ತಾಪದಿಂದ ಹೈರಾಣಾಗಿರುವ ಜನರು ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. +ಚಿಕ್ಕಸುಗೂರು ಗ್ರಾಮದಲ್ಲಿ ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾದ ಆರತಿ (9) ಮತ್ತು ಪ್ರಿಯಾಂಕಾ (7) ನಿತ್ರಾಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮತ್ತೊಬ್ಬ ಪುತ್ರ ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. +ಈ ನಡುವೆ ಕೆಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಬಿಸಿಲ ಬೇಗೆ ಹಿನ್ನೆಲೆಯಲ್ಲಿ ಕೃಷ್ಣಾನದಿಯ ನೀರು ಕುಡಿಯುತ್ತಿದ್ದ ಈ ಕುಟುಂಬದವರು ಅನಾರೋಗ್ಯಕ್ಕೀಡಾಗಿದ್ದರು ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಆದರೆ, ಬೇಸಿಗೆಯ ಬೇಗೆಗೆ ಇಬ್ಬರು ಮಕ್ಕಳು ಮೃತಪಟ್ಟಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. diff --git a/eesanje/url_46_165_6.txt b/eesanje/url_46_165_6.txt new file mode 100644 index 0000000000000000000000000000000000000000..7eb24de6884ad14acbaa550cb7b4b570327a6a01 --- /dev/null +++ b/eesanje/url_46_165_6.txt @@ -0,0 +1,16 @@ +ಜನರಿಗೆ ರಕ್ಷಣೆ ಕೊಡಲಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ : ಸಿದ್ದು ಸರ್ಕಾರದ ವಿರುದ್ಧ ಮೋದಿ ಘರ್ಜನೆ +ಬೆಂಗಳೂರು,ಏ.28-ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ರಾಜ್ಯದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಜನರಿಗೆ ರಕ್ಷಣೆ ಕೊಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ಅಧಿಕಾರದಿಂದ ಬಿಟ್ಟು ತೊಲಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತರೂಢ ಕಾಂಗ್ರೆಸ್‌ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. +ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿ, ತಾಯಿ ಭುವನೇಶ್ವರಿ ಮತ್ತು ಸವದತ್ತಿ ಯಲ್ಲಮ್ಮಾಗೆ ಪ್ರಣಾಮ ಸಲ್ಲಿಸುತ್ತೇನೆ. ಕರ್ನಾಟಕದ ಎಲ್ಲ ಮತದಾರರಿಗೆ ಅಭಿನಂದನೆಗಳು. +ನಾನು ಕರ್ನಾಟಕದಲ್ಲಿ ಹೋದಲ್ಲೆಲ್ಲ ಮತ್ತೊಮ್ಮೆ ಮೋದಿ ಸರಕಾರ ಬರಬೇಕೆಂದು ಬಯಸುತ್ತಿದ್ದಾರೆ. ನಾವು ಛತ್ರಪತಿ ಶಿವಾಜಿ, ಭಗವಾನ್‌ ಬಸವೇಶ್ವರ ಅವರ ಅನುಯಾಯಿಗಳು. ಶಿವಾಜಿಯವರು ಪ್ರಜೆಗಳಿಗಾಗಿ ಸಂಘರ್ಷ ಮಾಡಿದವರು, ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಮಹತ್ವ ಸಾರಿದವರು. ಭಾರತ ಪ್ರಜಾಪ್ರಭುತ್ವದ ತಾಯಿಯಾಗಿದೆ ಎಂದು ಹೇಳಿದರು. +ತಮ್ಮ 30 ನಿಮಿಷಗಳ ಭಾಷಣದಲ್ಲಿ ಮೋದಿ ಅವರು, ಇತ್ತೀಚಿಗೆ ಕರ್ನಾಟದಲ್ಲಿ ಸಂಭವಿಸಿದ ಕೆಲವು ಘಟನೆಗಳನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ನಿಂದ ತುಷ್ಠೀಕರಣ ರಾಜಕಾರಣ ನಡೆಯುತ್ತಿದೆ. ಕೋಮುಗಲಭೆ, ಬಾಂಬ್‌ ಸ್ಫೋಟದಂತಹ ಪ್ರಕರಣಗಳು ಹೆಚ್ಚುತ್ತಿವೆ. ಬೆಳಗಾವಿಯಲ್ಲಿ ಮಹಿಳೆಯ ಮೇಲೆ ದಾಳಿ, ಚಿಕ್ಕೋಡಿಯಲ್ಲಿ ಜೈನಮುನಿ ಹತ್ಯೆ,. ಹುಬ್ಬಳ್ಳಿಯಲ್ಲಿ ಕಾಲೇಜಿನ ವಿದ್ಯಾರ್ಥಿನಿ ಹತ್ಯೆಯಿಂದ ದೇಶದಲ್ಲೇ ಆತಂಕ ಮೂಡಿದೆ. +ಕಾಂಗ್ರೆಸ್‌ ಸರಕಾರವು ತುಷ್ಠೀಕರಣದ ಕಡೆ ಗಮನ ಕೊಡುತ್ತಿದೆ. ವಿದ್ಯಾರ್ಥಿನಿ ನೇಹಾರ ಕುರಿತು ಕಾಂಗ್ರೆಸ್ಸಿಗರಿಗೆ ಕಳಕಳಿ ಇಲ್ಲ. ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಸಂಭವಿಸಿದೆ. ಕಾಂಗ್ರೆಸ್‌ ಪಕ್ಷವು ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಹೇಳಿದರು. +ಕಾಂಗ್ರೆಸ್‌ ಹೇಳಿದೆ ಅಧಿ ಕಾರಕ್ಕೆ ಬಂದರೆ, ಎಕ್ಸರೇ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಿಮ್ಮ ಮನೆಯಲ್ಲಿ ಇರುವ ಚಿನ್ನ, ಮಂಗಳ ಸೂತ್ರ, ನಿಮ್ಮ ಸಂಪತ್ತು, ಎಲ್ಲವನ್ನೂ ದೋಚಿ ಅದನ್ನು ಹಂಚಿಕೆ ಮಾಡುತ್ತದೆ. ನಿಮ್ಮ ಸಂಪತ್ತು ಲೂಟಿ ಆಗಬೇಕಾ? ನಿಮ್ಮ ಮಂಗಳ ಸೂತ್ರ ಇನ್ನೊಬ್ಬರ ಕೈಗೆ ಇಡ್ತೀರಾ? ನಿಮ್ಮ ಚಿನ್ನವನ್ನು ಕೊಡ್ತೀರಾ? ನಾನು ನಿಮಗೆ ಭರವಸೆ ನೀಡುತ್ತೇನೆ. ಮೋದಿ ಇರುವ ತನಕ ಅದು ಸಾಧ್ಯವಿಲ್ಲ ಎಂದು ತಮ್ಮ ವಿರೋಧಿ ಗಳಿಗೆ ಎಚ್ಚರಿಕೆ ನೀಡಿದರು. +ಕಾಂಗ್ರೆಸ್‌ ಅಧಿ ಕಾರಕ್ಕೆ ಬಂತೆಂದರೆ ನೀವು ನಿಮ್ಮ ಮಕ್ಕಳಿಗೆ ಕಷ್ಟ ಪಟ್ಟು ಕೂಡಿ ಇಟ್ಟದನ್ನು ಲೂಟಿ ಮಾಡುತ್ತದೆ. ಅದನ್ನು ನಿಮ್ಮ ಮಕ್ಕಳಿಗೆ ನೀಡೋದಿಲ್ಲ. ಶೇ. 55 ಅದಕ್ಕೆ ಟ್ಯಾಕ್‌್ಸ ಮೂಲಕ ಸರ್ಕಾರ ಪಡೆಯುತ್ತದೆ ಎಂದು ಕಾಂಗ್ರೆಸ್‌ ಹೇಳಿದೆ. ನಿಮ್ಮ ವೋಟ್‌ ಬ್ಯಾಂಕ್‌ ಗಾಗಿ ಕಾಂಗ್ರೆಸ್‌ ಏನು ಬೇಕಾದರೂ ಮಾಡುತ್ತದೆ ಕಾಂಗ್ರೆಸ್‌ಗೆ ಪಾಠ ಕಲಿಸಬೇಕೊ? ಬೇಡವೊ? ನಿಮ್ಮ ಕನಸು ನನ್ನ ಸಂಕಲ್ಪ. ನಾನು ಪ್ರತಿ ಕ್ಷಣ ಭಾರತಕ್ಕಾಗಿ ಮಿಡಿಯುವೆ. 24×7 ದುಡಿದು – 2047ರ ತನಕ ವಿಕಸಿತ ಭಾರವನ್ನಾಗಿ ಮಾರ್ಪಡಿಸುವೆ ಎಂದು ಮೋದಿ ಹೇಳಿದರು. +ರಾಜ, ಮಹಾರಾಜರ ಜಮೀನು ಕಸಿದುಕೊಂಡರು. ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ಗಾಗಿ ಏನುಬೇಕಾದರೂ ಮಾಡುತ್ತದೆ. ಇಲ್ಲಿ ಅಭಿವೃದ್ಧಿ ಬಂದ್‌ ಆಗಿದೆ. ರಸ್ತೆ, ನೀರು, ಬರ, ಉದ್ಯೋಗ ಸಮಸ್ಯೆಗಳು ರಾಜ್ಯದಲ್ಲಿ ತಾಂಡವವಾಡುತ್ತಿವೆ. ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಹೊರಗೆ ಬಂದಿದ್ದಾರೆ. ಹಾಗಾಗಿ ಜನರ ವಿಶ್ವಾಸ ವೃದ್ಧಿಯಾಗಿದೆ. ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ಬರಬೇಕು. ಭಾರತ ಇನ್ನಷ್ಟು ಬಲಾಢ್ಯವಾಗಲಿದೆ, ಭಾರತೀಯರು ಖುಷಿಯಾಗುತ್ತಾರೆ ಎಂದು ಮೋದಿ ಹೇಳಿದರು. +ಕಾಂಗ್ರೆಸ್ಸಿಗೆ ಔರಂಗಜೇಬನ ಅತ್ಯಾಚಾರ, ಮಂದಿರಗಳ ಧ್ವಂಸ ಮಾಡಿದ್ದು ನೆನಪಿಗೆ ಬರುವುದಿಲ್ಲ. ದೇಗುಲಗಳನ್ನು ಅವಮಾನ ಮಾಡುವವರ ಜೊತೆ ಕಾಂಗ್ರೆಸ್‌ ಪಕ್ಷ ಹೊಂದಾಣಿಕೆ ಮಾಡಿಕೊಂಡಿದೆ. ಭಾರತದ ವಿಭಜನೆಯಲ್ಲಿ ದೊಡ್ಡ ಪಾತ್ರ ವಹಿಸಿದವರನ್ನು ಕಾಂಗ್ರೆಸ್‌ ಪಕ್ಷ ಬೆಂಬಲಿಸುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ಸಿನ ತುಷ್ಠೀಕರಣ ನೀತಿ ಅವರ ಪ್ರಣಾಳಿಕೆಯಲ್ಲೂ ವಿವರವಾಗಿ ಹೊರಬಂದಿದೆ ಎಂದರು. +ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿ ಹೊಸ ನೀತಿ ತರಲು ಕಾಂಗ್ರೆಸ್‌ ಮುಂದಾಗಿದೆ. ಮಕ್ಕಳಿಗಾಗಿ ಶೇಖರಿಸಿಟ್ಟ ಹಣ, ಆಸ್ತಿಯನ್ನು ನೀವು ಅವರಿಗೆ ಕೊಡಲು ಸಾಧ್ಯವಾಗದು. ಅದನ್ನು ಮಕ್ಕಳಿಗೆ ಕೊಡಲು ಶೇ 55ರಷ್ಟು ತೆರಿಗೆ ಪಾವತಿಸಲು ಕಾಂಗ್ರೆಸ್‌ ಕೇಳಲಿದೆ. ಅದನ್ನು ಮತಬ್ಯಾಂಕಿಗೆ ಹಂಚಲು ನಿಮ್ಮ ಸಂಪತ್ತಿನ ಡಕಾಯಿತಿ ಮಾಡಲು ಮುಂದಾಗಿದ್ದಾರೆ ಎಂದು ಟೀಕಿಸಿದರು. ಇದನ್ನು ಹಿಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ ಎಂದು ತಿಳಿಸಿದರು. +ಇಂಥ ಚಿಂತನೆಗಳನ್ನು ಹೊಂದಿದ ಕಾಂಗ್ರೆಸ್ಸಿಗರಿಗೆ ಪಾಠ ಕಲಿಸಿ ಎಂದು ತಿಳಿಸಿದರು. ಸೇನೆಯಲ್ಲಿ ಯುವತಿಯರಿಗೆ ಅವಕಾಶ ಕೊಡಲಾಗುತ್ತಿದೆ. ಸಿಆರ್‌ಪಿಎಫ್‌ನಲ್ಲೂ ಮಹಿಳೆಯರ ಪ್ರಾತಿನಿಧ್ಯ ಹೆಚ್ಚಾಗಿದೆ. ಜನರ ಕನಸೇ ಬಿಜೆಪಿ ಸಂಕಲ್ಪ ಎಂದು ಅವರು ನುಡಿದರು. ದೇಶಕ್ಕಾಗಿ ಸದಾ 24×7 ಗಂಟೆ ಕಾಲ ದುಡಿದು 2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸುತ್ತೇವೆ ಎಂದರು. +ಕರ್ನಾಟಕದ ಜನರ ಆಶೀರ್ವಾದ ಕೇಳಲು ಬಂದಿದ್ದೇನೆ. ಜಗದೀಶ್‌ ಶೆಟ್ಟರ್‌, ಅಣ್ಣಾಸಾಹೇಬ ಜೊಲ್ಲೆ ಅವರನ್ನು ಗರಿಷ್ಠ ಮತದಿಂದ ಚುನಾಯಿಸಿ. ಕಮಲದ ಚಿಹ್ನೆಗೆ ನೀಡಿದ ಮತವು ಮೋದಿಯವರಿಗೆ ಹೋಗಲಿದೆ. ಮೋದಿಯವರನ್ನು ಸಶಕ್ತಗೊಳಿಸಲು ಬಿಜೆಪಿಗೆ ಮತದಾನ ಮಾಡಿ ಎಂದು ವಿನಂತಿಸಿದರು. ಪ್ರತಿ ಬೂತ್ನಲ್ಲಿ ಬಿಜೆಪಿ ಗೆಲ್ಲುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು. +ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯ ಸರಕಾರವು ಸಂಪೂರ್ಣ ದಿವಾಳಿಯಾಗಿದೆ ಎಂದು ಟೀಕಿಸಿದರು. ಜಗದೀಶ್‌ ಶೆಟ್ಟರ್‌, ಅಣ್ಣಾಸಾಬೇಬ್‌ ಜೊಲ್ಲೆ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಅಂತರದಲ್ಲಿ ಗೆಲ್ಲಿಸುತ್ತೇವೆ. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇವೆ ಎಂದು ವಿಶ್ವಾಸದಿಂದ ನುಡಿದರು. +ಅಭ್ಯರ್ಥಿಗಳಾದ ಜಗದೀಶ್‌ ಶೆಟ್ಟರ್‌ (ಬೆಳಗಾವಿ), ಅಣ್ಣಾಸಾಬೇಬ್‌ ಜೊಲ್ಲೆ (ಚಿಕ್ಕೋಡಿ), ಸಂಸದರಾದ ಮಂಗಳಾ ಅಂಗಡಿ, ಪ್ರಮುಖರಾದ ಡಾ.ಪ್ರಭಾಕರ ಕೋರೆ, ಈರಣ್ಣ ಕಡಾಡಿ, ಮಾಜಿ ಸಚಿವರು, ಶಾಸಕರು, ಪಕ್ಷದ ರಾಜ್ಯ- ಜಿಲ್ಲಾ ಪದಾಧಿ ಕಾರಿಗಳು, ಪಕ್ಷದ ಮುಖಂಡರು ವೇದಿಕೆಯಲ್ಲಿದ್ದರು. +ಇದೇ ವೇಳೆ ಸಮಾವೇಶದಲ್ಲಿ ಮೋದಿ ಅವರಿಗೆ ಅವರ ತಾಯಿಯ ಫೋಟೋ ಇರುವ ಫ್ರೇಮ್‌ ಒಂದನ್ನು ಗಿಫ್‌್ಟ ಆಗಿ ನೀಡಲಾಯ್ತು. ಈ ವೇಳೆ ಮೋದಿ ತಾಯಿ ಫೋಟೋ ನೋಡುತ್ತಿದ್ದಂತೆಯೇ ಕೊಂಚ ಭಾವುಕರಾದರು. \ No newline at end of file diff --git a/eesanje/url_46_165_7.txt b/eesanje/url_46_165_7.txt new file mode 100644 index 0000000000000000000000000000000000000000..8799a27b6b37d995c3490b0224a373ff582981bd --- /dev/null +++ b/eesanje/url_46_165_7.txt @@ -0,0 +1,8 @@ +ಉಪ್ಪು ತಿಂದವರು ನೀರು ಕುಡಿಯಬೇಕು : ಪ್ರಜ್ವಲ್ ವಿರುದ್ಧದ ಆರೋಪಗಳ ಕುರಿತು ಹೆಚ್‌ಡಿಕೆ ಪ್ರತಿಕ್ರಿಯೆ +ಬೆಂಗಳೂರು,ಏ.28-ಹಾಸನ ಕ್ಷೇತ್ರದಲ್ಲಿ ಕೇಳಿಬಂದಿರುವ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಷ್ಟ ಹೇಳಿಕೊಂಡು ಬಂದಂತಹ ಹೆಣ್ಣುಮಕ್ಕಳ ಕಷ್ಟವನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಾಗಲಿ, ನಾನಾಗಲೀ ಪರಿಹರಿಸಿ ಕಳುಹಿಸಿದ್ದೇವೆ. ಹೆಣ್ಣು ಮಕ್ಕಳಿಗೆ ಹೆಚ್ಚಿನ ಗೌರವ ಕೊಟ್ಟಿದ್ದೇವೆ ಎಂದರು. +ಹಾಸನ ಚುನಾವಣಾ ಸಂದರ್ಭದಲ್ಲಿ ಕೇಳಿಬಂದಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ವಹಿಸಲಾಗಿದೆ. ಈ ನೆಲದಲ್ಲಿ ಯಾರೇ ತಪ್ಪು ಮಾಡಿದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪು ಮಾಡಿದವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ನುಡಿದರು. +ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಲ್ಲೇ ಇದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದು ಎಂದರು. +ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ :ರಾಜ್ಯಸರ್ಕಾರ ಬರ ಪರಿಹಾರದ ವಿಚಾರದಲ್ಲಿ ಜನರನ್ನು ದಾರಿ ತಪ್ಪಿಸಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಎನ್‌ಡಿಆರ್‌ಎಫ್‌ನಿಂದ ಯುಪಿಎ ಅವಧಿಯಲ್ಲಿ ಶೇ.8 ರಷ್ಟು ಹಣ ದೊರೆತಿದ್ದರೆ, ಎನ್‌ಡಿಎ ಅವಧಿಯಲ್ಲಿ ಶೇ.38 ರಷ್ಟು ಎನ್‌ಡಿಆರ್‌ಎಫ್‌ ಹಣ ಬಂದಿದೆ. ಆದರೂ ಕಾಂಗ್ರೆಸ್‌ ಸರ್ಕಾರ ಅಪಪ್ರಚಾರ ಮಾಡಿ ಪ್ರತಿಭಟನೆ ಮಾಡುತ್ತಿದೆ ಎಂದು ಟೀಕಿಸಿದರು. +ರಾಜ್ಯಸರ್ಕಾರ ಮೊದಲು ಕೇಳಿದ್ದು 4,800 ಕೋಟಿ ರೂ. ಇನ್ಪುಟ್‌ ಸಬ್ಸಿಡಿ. ಅದನ್ನು ಕೊಟ್ಟರೆ ಸಾಕು ಎಂದು ಹೇಳಿದ್ದರು. ಈಗ 18 ಸಾವಿರ ಕೋಟಿ ರೂ. ಕೊಡಬೇಕಿತ್ತು ಎಂದು ಹೇಳಿ ಕೇಂದ್ರ ಸರ್ಕಾರದ ಮೇಲೆ ಪದೇಪದೇ ಗೂಬೆ ಕೂರಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದರು. +ಚುನಾವಣಾ ಪ್ರಚಾರ :ಎನ್‌ಡಿಎ ಅಭ್ಯರ್ಥಿಗಳ ಪರವಾಗಿ ಹೊಸಪೇಟೆ, ಶಿವಮೊಗ್ಗ, ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು. \ No newline at end of file diff --git a/eesanje/url_46_165_8.txt b/eesanje/url_46_165_8.txt new file mode 100644 index 0000000000000000000000000000000000000000..47cb9038518072482b2361968de0f0e48fc28bd6 --- /dev/null +++ b/eesanje/url_46_165_8.txt @@ -0,0 +1,11 @@ +ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವನ್ನು ನಿರ್ಮಲಾ ಸೀತರಾಮನ್‌ ಅವರೇ ಪ್ರಸ್ತಾಪಿಸಿದ್ದರು : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಏ.28– ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವನ್ನು ಕಾಂಗ್ರೆಸ್‌‍ ನಾಯಕ ಸ್ಯಾಂ ಪಿತ್ರೋಡಾಗಿಂತಲೂ ಮೊದಲೇ 2019ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್‌ ಪ್ರಸ್ತಾಪಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದಾರೆ. ಅವರ ಹೇಳಿಕೆಗಳು ಶಿಕ್ಷಾರ್ಹ ಅಪರಾಧವಾಗಿದ್ದರೂ ಯಾರು ಕ್ರಮ ಕೈಗೊಳ್ಳುವ ಪರಿಸ್ಥಿತಿ ದೇಶದಲ್ಲಿ ಇಲ್ಲ ಎಂದು ವಿಷಾದಿಸಿದ್ದಾರೆ. +ಕಾಂಗ್ರೆಸ್‌‍ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳೇಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ ಎಂಬ ಅಪ್ಪಟ ಸುಳ್ಳನ್ನು ನಿರ್ಲಜ್ಜವಾಗಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದಿರಲ್ಲಾ? ಇದಕ್ಕೆ ನಿಮಲ್ಲಿ ಆಧಾರ ಏನಿದೆ ? ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌‍ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ. ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ ? ದಯವಿಟ್ಟು ತಿಳಿಸಿ ಇಲ್ಲವಾದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ ಎಂದು ಆಗ್ರಹಿಸಿದ್ದಾರೆ. +ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್‌‍ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್‌ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯ. +ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರುಮಾಡಿರುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌. 2019ರ ಬಜೆಟ್‌ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ ? ಈಗ ನಿರ್ಮಲಾ ಸೀತಾರಾಮನ್‌ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ ಎಂದು ಸವಾಲು ಹಾಕಿದ್ದಾರೆ. +ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್‌ ತೆರಿಗೆ ಹೇರಲಾಗಿತ್ತು. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್‌ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್‌್ಟ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್‌.ಡಿ.ದೇವೇಗೌಡರು. ಮೋದಿಯವರೇ ನಿಮ್ಮದೇ ಸರ್ಕಾರ 2015ರಲ್ಲಿ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. +ನರೇಂದ್ರ ಮೋದಿಯವರದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರರಹಿತವಲ್ಲ. 2019ರಲ್ಲಿ ನಿಮ್ಮದೇ ಸರ್ಕಾರ ಶೇ.30ರಷ್ಟಿದ್ದ ಕಾರ್ಪೋರೇಟ್‌ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ಬಳಕೆಯಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್‌ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಪ್ರಧಾನಿ ಮೋದಿಯವರೇ, ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದು ಕಿಡಿಕಾರಿದ್ದಾರೆ. +ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ಪ್ರಧಾನಿಯವರು, ಕೆಲವೇ ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚುವುದಾಗಿ ರಾಹುಲ್‌ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ? ರಾಷ್ಟ್ರೀಕೃತ ಬ್ಯಾಂಕ್‌ ಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ ಎಂದು ಲೇವಡಿ ಮಾಡಿದ್ದಾರೆ. +ದೇಶದ ರೈತರು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಆ ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರೇ ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆಮಾಡಬೇಕೆಂದು ನಿಮಗೆ ಅನಿಸಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ. +ಹಿಂದಿನ ಪ್ರಧಾನಿಗಳಾದ ಜವಾಹರಲಾಲ್‌ ನೆಹರೂ 33, ಲಾಲ್‌ ಬಹದ್ದೂರ್‌ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್‌ ಗಾಂಧಿಯವರು 16, ವಿ.ಪಿ.ಸಿಂಗ್‌ ಅವರು 2, ಐ.ಕೆ.ಗುಜ್ರಾಲ್‌ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್‌ ಸಿಂಗ್‌ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು. ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ಮೋದಿಯವರ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗಿದೆ. +ಹತ್ತು ವರ್ಷಗಳಲ್ಲಿ ಪ್ರಧಾನಿಯವರು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ. ಮಾನ ನಿಲ್ದಾಣಗಳು,ಬಂದರುಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ಹೆದ್ದಾರಿ ಟೋಲುಗಳು, ವಿದ್ಯುತ್‌ ನಿಗಮಗಳು ಒಂದೇ ಎರಡೇ ಎಲ್ಲವನ್ನೂ ಅದಾನಿ-ಅಂಬಾನಿ ಮಡಿಲು ಸೇರಿಸಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. \ No newline at end of file diff --git a/eesanje/url_46_165_9.txt b/eesanje/url_46_165_9.txt new file mode 100644 index 0000000000000000000000000000000000000000..4d5af31dbd1e09ffdecf1034b3bef499f97f6e82 --- /dev/null +++ b/eesanje/url_46_165_9.txt @@ -0,0 +1,5 @@ +ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ತನಿಖೆಗೆ ಜಿಟಿಡಿ ಸ್ವಾಗತ +ಬೆಂಗಳೂರು,ಏ.28-ಸಂಸದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯಸರ್ಕಾರ ವಿಶೇಷ ತನಿಖಾದಳಕ್ಕೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತವೆ. ಅದರ ಭಾಗ ಇದೂ ಆಗಿರಬಹುದು. ಲೈಂಗಿಕ ದೌರ್ಜನ್ಯದ ಆರೋಪದ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. +ರಾಜ್ಯಸರ್ಕಾರ ಎಸ್‌ಐಟಿಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಪೆನ್‌ಡ್ರೈವ್‌ ವಿಚಾರ ಅಥವಾ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ತಾವು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದು, ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. +ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಪ್ರತಿಭಟನೆ ಮಾಡಿರುವುದು ಗಮನಕ್ಕೆ ಬಂದಿದೆ. ಸರ್ಕಾರವೂ ಅವರದ್ದೇ ಆಗಿದೆ, ಎಸ್‌ಐಟಿ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳೂ ಅವರ ಸರ್ಕಾರದ ಅಧೀನದಲ್ಲೇ ಇವೆ. ಯಾವುದೇ ರೀತಿಯ ತನಿಖೆ ನಡೆಸಲು ಕ್ರಮ ಕೈಗೊಂಡರೂ ಸ್ವಾಗತಿಸುವುದಾಗಿ ತಿಳಿಸಿದರು. \ No newline at end of file diff --git a/eesanje/url_46_166_1.txt b/eesanje/url_46_166_1.txt new file mode 100644 index 0000000000000000000000000000000000000000..63a0070d5a52c58a62cd47a315ad9fd5aa229a56 --- /dev/null +++ b/eesanje/url_46_166_1.txt @@ -0,0 +1,12 @@ +ಬರಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪಾಲಿಸಿಲ್ಲ : ಸಿದ್ದು ವಾಗ್ದಾಳಿ +ಬೆಂಗಳೂರು,ಏ.28-ಬರಪರಿಹಾರ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಸುಪ್ರೀಂಕೋರ್ಟ್‌ನ ಮೆಟ್ಟಿಲೇರಿದ ಮೇಲೆ ಅನಿವಾರ್ಯವಾಗಿ ಪರಿಹಾರ ನೀಡುವುದಾಗಿ ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. +ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ, ಬರ ಘೋಷಣೆಗಾಗಿ ಮನವಿ ಸಲ್ಲಿಸಿದ ವಾರದೊಳಗಾಗಿ ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಬೇಕು, ವರದಿ ನೀಡಿದ ಒಂದು ತಿಂಗಳ ಒಳಗೆ ಪರಿಹಾರ ನೀಡಬೇಕು. +ರಾಜ್ಯಸರ್ಕಾರ ಸೆ. 22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆನಂತರ ತಾವು ಖುದ್ದಾಗಿ ಡಿ.19 ರಂದು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಿದರು. +ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಯಿತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದ್ದು, ಇದರ ಅಂದಾಜು ವೌಲ್ಯ 35 ಸಾವಿರ ಕೋಟಿ ರೂ.ಗಳು. ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ, 18,172 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದ್ದೆವು. +ಸುಪ್ರೀಂಕೋರ್ಟ್‌ ಚಾಟಿ ಬೀಸಿದ ಮೇಲೆ 15 ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಹೇಳಿತ್ತು. ಮತ್ತೆ ಹೆಚ್ಚುವರಿಯಾಗಿ ಒಂದು ವಾರ ಸಮಯ ಕೇಳಿ ಈಗ ಪ್ರಸ್ತಾವನೆ ಸಲ್ಲಿಸಿದ್ದರ ಪೈಕಿ ಶೇ.19 ರಷ್ಟು ಪರಿಹಾರ ನೀಡುವುದಾಗಿ ಹೇಳಿದೆ. 3,454 ಕೋಟಿ ರೂ. ಪರಿಹಾರ ನೀಡುವುದಾಗಿ ಹೇಳಿದೆ. 14,718 ಕೋಟಿ ರೂ. ಕೊಡುತ್ತಿಲ್ಲ ಎಂದು ವಿವರಿಸಿದರು. +ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಅಮಿತ್‌ ಶಾ ಅವರುಗಳು ರಾಜ್ಯಕ್ಕೆ ಬಂದು ಸುಳ್ಳು ಹೇಳಿದರು. ಪ್ರಸ್ತಾವನೆ ಸಲ್ಲಿಸುವುದು ತಡವಾಗಿದೆ ಎಂದಾಗಿದ್ದರೆ, ತಾವು ಭೇಟಿ ಮಾಡಿದ್ದಾಗಲೇ ಅಮಿತ್‌ ಶಾ ಹೇಳಬಹುದಿತ್ತು. ದ್ವೇಷದ ರಾಜಕಾರಣಕ್ಕಾಗಿ ಸುಳ್ಳು ಹೇಳುತ್ತಿದ್ದಾರೆ ಎಂದರು. +ನಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಕೇಳುತ್ತಿಲ್ಲ, ಬರಪೀಡಿತ ರೈತರ ಪರಿಹಾರಕ್ಕೆ ಹಣ ಕೇಳುತ್ತಿದ್ದೇವೆ. ನಾವು ಸಂಗ್ರಹಿಸಿಕೊಟ್ಟ ತೆರಿಗೆಯಲ್ಲಿ ನಮಗೆ ಸರಿಯಾದ ಪಾಲು ನೀಡುವುದು ಮತ್ತು ರೈತರಿಗೆ ಪರಿಹಾರ ನೀಡುವುದು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು. +ಗಾಂಧಿ ಪ್ರತಿಮೆಯಿಂದ ದೇವರಾಜ ಅರಸು ಪ್ರತಿಮೆವರೆಗೂ ಪಾದಯಾತ್ರೆ ನಡೆಸಿ ನಮ್ಮ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟ ಮುಂದುವರೆಸುತ್ತೇವೆ ಎಂದರು. +ಸುಪ್ರೀಂಕೋರ್ಟ್‌ ಮೊರೆ ಹೋದ ನಂತರ ಪರಿಹಾರ ಪಾವತಿಸಲು ಕೇಂದ್ರ ಮುಂದಾಗಿದೆಯೇ ಹೊರತು ಸ್ವಯಂಪ್ರೇರಿತವಾಗಿ ಹಣ ಕೊಟ್ಟಿಲ್ಲ. ಬಿಜೆಪಿಯ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್‌.ಅಶೋಕ್‌ ಸೇರಿದಂತೆ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. +ಉದ್ಯೋಗ ಖಾತ್ರಿ ಯೋಜನೆಯ ಮಾನವ ಉದ್ಯೋಗ ದಿನಗಳ ಸಂಖ್ಯೆಯನ್ನು 150 ದಿನಗಳಿಗೆ ಹೆಚ್ಚಿಸಿಲ್ಲ. ಇಂದು ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿಯವರು ಜನರಿಗೆ ಚೊಂಬು ನೀಡಿದ್ದಾರೆ. ಮೇಕೆದಾಟು, ಮಹದಾಯಿ, ಬರಪರಿಹಾರ, ತೆರಿಗೆ ಹಂಚಿಕೆ ಸೇರಿದಂತೆ ಎಲ್ಲದರಲ್ಲೂ ಚೊಂಬು ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. +34 ಲಕ್ಷ ರೈತರಿಗೆ ರಾಜ್ಯಸರ್ಕಾರ ತನ್ನ ಬೊಕ್ಕಸದಿಂದಲೇ ತಲಾ 2 ಸಾವಿರ ರೂ. ಪರಿಹಾರವನ್ನು ಪಾವತಿಸಿದೆ. ಎಲ್ಲರಿಗೂ ಸಮರ್ಪಕವಾಗಿ ಪರಿಹಾರ ದೊರೆಯುತ್ತಿದೆ. ಯಾವ ರೈತರೂ ಪರಿಹಾರ ಸಿಕ್ಕಿಲ್ಲ ಎಂದು ದೂರು ನೀಡಿಲ್ಲ. ಕುಮಾರಸ್ವಾಮಿ ಸುಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ. ನಾವು ರೈತರಿಗೆ ಪರಿಹಾರ ನೀಡುತ್ತಿದ್ದೇವೆಯೇ ಹೊರತು ಕುಮಾರಸ್ವಾಮಿಯವರಿಗಲ್ಲ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_166_10.txt b/eesanje/url_46_166_10.txt new file mode 100644 index 0000000000000000000000000000000000000000..89f26811b3effaabfea3d77ab01fac5e5730ecbe --- /dev/null +++ b/eesanje/url_46_166_10.txt @@ -0,0 +1,7 @@ +ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 443 ಕೋಟಿ ಮೊತ್ತದ ನಗದು, ಚಿನ್ನಾಭರಣ, ವಸ್ತುಗಳು ಜಪ್ತಿ +ಬೆಂಗಳೂರು,ಏ.27-ಪ್ರಸಕ್ತ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾದ ಹಣ, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳ ಪ್ರಮಾಣ ಏರುತ್ತಲೇ ಇದ್ದು ಈತನಕ 443.80 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. +ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಹಣ ಹಾಗೂ ಇತರೆ ವಸ್ತುಗಳು ಪರಿಶೀಲನೆ ವೇಳೆ ಭಾರೀ ಪ್ರಮಾಣ ದಲ್ಲಿ ಪತ್ತೆಯಾಗುತ್ತಲೇ ಇವೆ.ರಾಜ್ಯ ಮುಖ್ಯ ಚುನಾವಣಾಧಿ ಕಾರಿ ಕಚೇರಿ ಪ್ರಕಟಣೆ ಪ್ರಕಾರ, ಪೊಲೀಸ್‌ ಕ್ಷಿಪ್ರ ಪಡೆಗಳು ಹಾಗೂ ಸ್ಥಿರ ಕಣ್ಗಾವಲು ತಂಡಗಳು 139.88 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ , ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ. +ಅಬಕಾರಿ ಇಲಾಖೆಯವರು 277.72 ಕೋಟಿ ರೂ. ಮೊತ್ತದ ನಗದು, ಮದ್ಯ ಹಾಗೂ ಡ್ರಗ್‌್ಸ ಅನ್ನು ವಶಪಡಿಸಿಕೊಂಡಿದ್ದು, ಆದಾಯ ತೆರಿಗೆ ಅಧಿ ಕಾರಿಗಳು 46.09 ಕೋಟಿ ರೂ. ಮೊತ್ತದ ನಗದು, ಚಿನ್ನ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ. +ವಾಣಿಜ್ಯ ತೆರಿಗೆ ಇಲಾಖೆಯವರು 80.11 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ನಿನ್ನೆ ರಾಜ್ಯದಲ್ಲಿ 10.42 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್‌್ಸ, ಚಿನ್ನ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. +ಇದುವರೆಗೂ ರಾಜ್ಯದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ 2172 ಎಫ್‌ಐಆರ್‌ಗಳನ್ನು ದಾಖಲಿಸಿದ್ದು, 1916 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಆದಾಯ ತೆರಿಗೆ ಅಧಿ ಕಾರಿಗಳು ಯಲಹಂಕದಲ್ಲಿ 4.80 ಕೋಟಿ ರೂ. ವಶಪಡಿಸಿಕೊಂಡಿದ್ದಾರೆ. ಕ್ಷಿಪ್ರಪಡೆಗಳು ಕೋರಮಂಗಲದಲ್ಲಿ 18,82,267 ರೂ. ನಗದನ್ನು ಕೆಜಿಎಫ್‌ನ ಬೇತಮಂಗಲದಲ್ಲಿ 47,56,000 ರೂ. ನಗದನ್ನು ಹಾಗೂ ಸ್ಥಿರ ಕಣ್ಗಾವಲು ತಂಡದವರು 20 ಲಕ್ಷ ರೂ. ನಗದನ್ನು ಚಾಮರಾಜಪೇಟೆಯ ರಾಯಲ್‌ ಸರ್ಕಲ್‌ನ ಚೆಕ್‌ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. +ಮೈಸೂರು ಜಿಲ್ಲೆಯ ಕಾಳಸಿದ್ದನಹುಂಡಿ ಚೆಕ್‌ ಪೋಸ್ಟ್ ನಲ್ಲಿ 81,90,900 ರೂ. ನಗದು ಹಾಗೂ ಕುಂದಾಪುರದಲ್ಲಿ 43,34,128 ರೂ. ನಗದನ್ನು ಸ್ಥಿರಕಣ್ಗಾವಲು ತಂಡದವರು ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_166_11.txt b/eesanje/url_46_166_11.txt new file mode 100644 index 0000000000000000000000000000000000000000..516fbaa1b5bc0a41283071fc1a470681e0c8e569 --- /dev/null +++ b/eesanje/url_46_166_11.txt @@ -0,0 +1,9 @@ +ಗ್ಯಾರಂಟಿಗಳ ಪ್ರಭಾವದಿಂದ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ +ಕಲಬುರಗಿ,ಏ.27-ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿವೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್‌ ಹೋಟೆಲ್‌ನಲ್ಲಿ 2024ರ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. +ಮೊದಲ ಹಂತದ ಚುನಾವಣೆ ಮುಗಿದಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ವರದಿ ಬಂದಿದೆ. ಎಲ್ಲಾ ಅಭ್ಯರ್ಥಿಗಳು ಹಾಗೂ ಜಿಲ್ಲಾ ಸಚಿವರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಜನರು ಆಶೀರ್ವಾದ ಮಾಡಿದ್ದಾರೆಂದು ಹೇಳಿದ್ದಾರೆ ಎಂದರು. ನರೇಂದ್ರ ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿ ಸುಳ್ಳಗಳ ಮಾರುಕಟ್ಟೆ ತೆರೆದಿದ್ದಾರೆ. +ಹಿಂದುಳಿದವರಿಗೆ ಮೀಸಲಾತಿ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ ಎಂದರು.ಮಂಡಲ್‌ ಆಯೋಗದ ವರದಿ ಜಾರಿಯಾದಾಗ ಮೀಸಲಾತಿ ವಿರೋಧಿಸಿದ್ದು, ಬಿಜೆಪಿಯವರು. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ, ಅವಕಾಶ ವಂಚಿತರಾದವರಿಗೆ ಮೀಸಲಾತಿ ಕೊಡಬೇಕೆಂದು ಸಂವಿಧಾನ ಹೇಳಿದೆ. +ನರೇಂದ್ರ ಮೋದಿಯವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ ಶೇ. 10 ಮೀಸಲಾತಿ ನೀಡಿದೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ. ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ. +ಮೊದಲಿನಿಂದಲೂ ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅರ್ಜುನ್‌ ಸಿಂಗ್‌ ಅವರು ಆಗ ಮಾನವ ಸಂಪನ್ಮೂಲ ಸಚಿವರಾಗಿದ್ದರು. ದೇಶಾದ್ಯಂತ. ಐಐಟಿ, ಐಐಎಂ ನಂತಹ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿ ಮಾಡಿದರು. ರಾಜೀವ್‌ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ 73, 74 ನೇ ತಿದ್ದುಪಡಿ ಮಾಡಿದರು. +73 ನೇ ತಿದ್ದುಪಡಿ ಮೂಲಕ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರಿಗೆ ಹಿಂದುಳಿದವರಿಗೆ ಮೀಸಲಾತಿ ತಂದರು. ನರಸಿಂಹರಾಯರು ಪ್ರಧಾನಿ ಮಂತ್ರಿಗಳಾಗಿದ್ದಾಗ ಜಾರಿಗೆ ಬಂತು. ಓಬಿಸಿ 2 (ಎ) ಮತ್ತು (ಬಿ )ಎಂದು ಮೀಸಲಾತಿ ತಂದು ಮಹಿಳೆಯರಿಗೆ 33% ಮೀಸಲಾತಿ ತಂದೆವು. ಹಿಂದುಳಿದವರಿಗೆ ಶೇ. 27.4 ಓಬಿಸಿ (ಎ) ಹಾಗೂ ಶೇ. 6.6 ಓಬಿಸಿ (ಬಿ) ಯವರಿಗೆ ಮಾಡಲಾಯಿತು. ಓಬಿಸಿ (ಎ) ನಲ್ಲಿ ಮುಸಲ್ಮಾನರನ್ನು ಸೇರಿಸಲಾಯಿತು ಎಂದರು. +ಹಿಂದುಳಿದವರಿಗೆ ನೀಡಲಾದ ಮೀಸಲಾತಿಯನ್ನು ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸುಳ್ಳು. ರಾಜಕೀಯವಾಗಿ ಬಿಜೆಪಿಯವರು ಈ ರೀತಿ ಮಾಡಲಾಗುತ್ತಿದೆ. ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ. +ಎಲ್ಲ ಭಾರತೀಯರ ರಕ್ಷಣೆ ಮಾಡುವುದು ಪ್ರಧಾನಮಂತ್ರಿಗಳ ಕರ್ತವ್ಯ. ಮುಸಲ್ಮಾನರನ್ನು ಪ್ರತ್ಯೇಕಿಸಿ ಮತಗಳ ಧ್ರುವೀಕರಣ ಮಾಡುತ್ತಿರುವ ಮೋದಿಯವರ ಕಾರ್ಯ ಸಂವಿಧಾನ ಬಾಹಿರವಾದುದು. ಮೀಸಲಾತಿ ನೀಡಿಕೆ ಸಾಂವಿಧಾನಿಕವಾಗಿ ಸರಿಯೆಂದು ಸುಪ್ರೆಂ ಕೋರ್ಟ್‌ ತಿಳಿಸಿದ್ದರೂ, ಮೋದಿಯವರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೀಸಲಾತಿಯನ್ನು ವಿರೋಧಿಸುವ ಬಿಜೆಪಿಯವರ ಧೋರಣೆಯನ್ನು ನಾನು ಖಂಡಿಸುತ್ತೇನೆ. ಜನರಿಗೆ ತಪ್ಪು ಮಾಹಿತಿಗಳನ್ನು ನೀಡುತ್ತಿರುವುದು ಸರಿಯಲ್ಲ ಎಂದರು. \ No newline at end of file diff --git a/eesanje/url_46_166_12.txt b/eesanje/url_46_166_12.txt new file mode 100644 index 0000000000000000000000000000000000000000..47067a9170ff9a6fea1fdfb88e2ea3d95db7bbcf --- /dev/null +++ b/eesanje/url_46_166_12.txt @@ -0,0 +1,8 @@ +ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ +ಬೆಂಗಳೂರು,ಏ.27-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡುವ ಕುರಿತು ಆದೇಶ ಹೊರಡಿಸಿದೆ. ಏಪ್ರಿಲ್‌ 29ರಿಂದ ಪರೀಕ್ಷೆಗಳು ಆರಂಭವಾಗಲಿದೆ. +ಈ ಕುರಿತು ಕೆಎಸ್‌ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಈ ಆದೇಶ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. +ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 29/04/2024 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವರು ಕೋರಿರುತ್ತಾರೆ ಎಂದು ಹೇಳಿದೆ. +ಆದೇಶದ ಅನ್ವಯ ಕ.ರಾ.ರ.ಸಾ. ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ ದಿನಾಂಕ 29/04/2024 ರಿಂದ 16/05/2024 ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. +ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು. +ಚಾಲನಾ ಸಿಬ್ಬಂದಿಗಳು ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್‌ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಸಹ ಪ್ರಕಟವಾಗಿದೆ. ಏಪ್ರಿಲ್‌ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಫಲಿತಾಂಶ ಉನ್ನತೀಕರಣ ಬಯಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. +ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ಫಲಿತಾಂಶ ಉನ್ನತೀಕರಣಕ್ಕಾಗಿ 32,848 ವಿದ್ಯಾರ್ಥಿಗಳು, 27,092 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ರಾಜ್ಯದ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. \ No newline at end of file diff --git a/eesanje/url_46_166_2.txt b/eesanje/url_46_166_2.txt new file mode 100644 index 0000000000000000000000000000000000000000..9e68ed029d2ec91d19a115dc0ef74d0537e12576 --- /dev/null +++ b/eesanje/url_46_166_2.txt @@ -0,0 +1,4 @@ +ಚಾಮರಾಜನಗರ ಜಿಲ್ಲೆಯ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ +ಬೆಂಗಳೂರು,ಏ.28-ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಮತಗಟ್ಟೆಯಲ್ಲಿ ನಾಳೆ ಮರು ಮತದಾನ ನಡೆಯಲಿದೆ. ಕಳೆದ ಶುಕ್ರವಾರ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ, ಮತಗಟ್ಟೆಯ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿ, ಕಲ್ಲು ತೂರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ಮತಯಂತ್ರಗಳೂ ಕೂಡ ಹಾನಿಗೊಳಗಾಗಿದ್ದವು. +ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣಾಧಿ ಕಾರಿ ಸಿ.ಟಿ.ಶಿಲ್ಪಾನಾಗ್‌ ಅವರು ಈ ಸಂಬಂಧ ಭಾರತದ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು.ವರದಿಯನ್ನು ಪರಿಶೀಲಿಸಿದ ಆಯೋಗವು ಮರು ಮತದಾನ ನಡೆಸಲು ತೀರ್ಮಾನಿಸಿದೆ. ಹೀಗಾಗಿ ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಇಂಡಿಗನತ್ತ ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ. +ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದು, ಕಳೆದ ಶುಕ್ರವಾರ 9 ಮಂದಿಯಷ್ಟೇ ಮತ ಚಲಾವಣೆ ಮಾಡಿದ್ದರು. ಉಳಿದವರು ನಮಗೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿಲ್ಲ ಎಂದು ಆರೋಪಿಸಿ ಮತದಾನವನ್ನೇ ಬಹಿಷ್ಕರಿಸಿದ್ದರು. \ No newline at end of file diff --git a/eesanje/url_46_166_3.txt b/eesanje/url_46_166_3.txt new file mode 100644 index 0000000000000000000000000000000000000000..3b8cf98c00c267d6b178a42c69ba0f1db6bd043c --- /dev/null +++ b/eesanje/url_46_166_3.txt @@ -0,0 +1,5 @@ +ಪ್ರಧಾನಿ ಆಗಮನ ಹಿನ್ನೆಲೆ, ಸಾಂಬ್ರಾದಲ್ಲಿ ಸಿಎಂ ವಿಮಾನ ಇಳಿಯಲು ನಿರಾಕರಣೆ, ಕೊಲ್ಲಾಪುರದತ್ತ ಸಿದ್ದರಾಮಯ್ಯ +ಬೆಳಗಾವಿ,ಏ.28-ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ.ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಇಂದು ಚುನಾವಣಾ ಪ್ರಚಾರಾರ್ಥ ಬೆಳಗಾವಿ ಪ್ರವಾಸದಲ್ಲಿದ್ದು, ಇಬ್ಬರ ವಿಮಾನಗಳು ಬೆಳಗಾವಿಯಲ್ಲಿ ಇಳಿಯಬೇಕಿತ್ತು. +ಶನಿವಾರ ತಡರಾತ್ರಿಯೇ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಭಾನುವಾರ ನಗರದ ಮಾಲಿನಿ ಮೈದಾನದಲ್ಲಿ ಸಾರ್ವಜನಿಕ ಸಭೆಯ ಬಳಿಕ ಶಿರಸಿಗೆ ತೆರಳಲಿದ್ದಾರೆ. +11:45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಪ್ರಧಾನಿ ತೆರಳುವ ಹಿನ್ನೆಲೆಯಲ್ಲಿ ಇತರ ವಿಮಾನಗಳ ಪ್ರವೇಶ ಸಾಂಬ್ರಾ ನಿಲ್ದಾಣದಲ್ಲಿ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇದೇ ನಿಲ್ದಾಣಕ್ಕೆ ಬರಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದೆ. +ಜಿಲ್ಲೆಯ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿರುವ ಸಿದ್ದರಾಮಯ್ಯ ಅವರು ಪರ್ಯಾಯವಾಗಿ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಇಳಿದು, ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆ ಪ್ರವೇಶಿಸಲಿದ್ದಾರೆ. \ No newline at end of file diff --git a/eesanje/url_46_166_4.txt b/eesanje/url_46_166_4.txt new file mode 100644 index 0000000000000000000000000000000000000000..97ff26b14515ef4fe73e3608b1dd56d69600996a --- /dev/null +++ b/eesanje/url_46_166_4.txt @@ -0,0 +1,9 @@ +ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ +ಬೆಂಗಳೂರು,ಏ.28-ಕೇಂದ್ರಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಪಕ್ಷವು ಹೆಚ್ಚಿನ ಬರಪರಿಹಾರಕ್ಕೆ ಆಗ್ರಹಿಸಿ ವಿಧಾನಸೌಧ, ವಿಕಾಸಸೌಧದ ನಡುವೆ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ನಡೆಸಿತು. +ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಎಂ.ಸಿ.ಸುಧಾಕರ್‌, ಕೃಷ್ಣಾ ಭೈರೇಗೌಡ, ದಿನೇಶ್‌ ಗುಂಡೂರಾವ್‌, ಚೆಲುವರಾಯಸ್ವಾಮಿ, ಕೆ.ಎಚ್‌.ಮುನಿಯಪ್ಪ, ಡಾ.ಜಿ.ಪರಮೇಶ್ವರ್‌, ಶಾಸಕ ರಿಜ್ವಾನ್‌ ಅರ್ಷದ್‌, ಎಚ್‌.ಸಿ.ಬಾಲಕೃಷ್ಣ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ತಲೆಯ ಮೇಲೆ ಖಾಲಿ ಚೊಂಬು ಹೊತ್ತು ಹಾಗೂ ಬರಪರಿಹಾರ ಕೇಳಿದ್ದು 18,174 ಕೋಟಿ ರೂ. ಕೊಟ್ಟಿದ್ದು, 3,454 ಕೋಟಿ ರೂ. ಬರಪರಿಹಾರ ನೀಡುವಲ್ಲಿಯೂ ಮೋಸವಾಗಿದೆ ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸಲಾಯಿತು.ಚೊಂಬು ಪ್ರದರ್ಶನ ಮಾಡಿ ಪ್ರಧಾನಿ ನರೇಂದ್ರ ಮೋದಿ ಗೋ ಬ್ಯಾಕ್‌ ಎಂಬ ಘೋಷಣೆಯನ್ನು ಕಾಂಗ್ರೆಸ್‌ ನಾಯಕರು ಕೂಗಿದರು. +ರಾಜ್ಯಕ್ಕೆ ನ್ಯಾಯ ಕೊಡಿ ಎಂದು ಘೋಷಣೆ ಕೂಗಲಾಯಿತು. ಮೇಕೆದಾಟು ಯೋಜನೆಗೆ ಅನುಮತಿ ಕೊಡದ ಮಹದಾಯಿ ಯೋಜನೆಗೆ ಬಿಜೆಪಿ ಸರ್ಕಾರ ಕೊಕ್ಕೆ ಹಾಕಿದೆ ಎಂದು ಆರೋಪಿಸಿದ್ದಲ್ಲದೆ, ರೈತರಿಗೆ ನ್ಯಾಯ ಕೊಡಿ, ಪೂರ್ಣ ಪ್ರಮಾಣದ ಬರ ಪರಿಹಾರ ನೀಡಿ ಎಂದು ಆಗ್ರಹಿಸಲಾಯಿತು. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ನಾವು ಬರಪರಿಹಾರ ನೀಡುವಂತೆ ಕಳೆದ ಸೆಪ್ಟೆಂಬರ್‌, ನವೆಂಬರ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಆಗ 35 ಸಾವಿರ ಕೋಟಿ ರೂ.ನಷ್ಟು ನಷ್ಟವಾಗಿದ್ದು, ಆನಂತರ ಈವರೆಗೂ ಒಟ್ಟು ನಷ್ಟದ ಅಂದಾಜು 50 ಸಾವಿರ ಕೋಟಿ ರೂ.ನಷ್ಟಾಗಿದೆ. +ಎನ್‌ಡಿಆರ್‌ಎಫ್‌ ನಿಯಮಾವಳಿಗಳ ಪ್ರಕಾರ, ಕೇಳಿರುವ ಪರಿಹಾರದಲ್ಲಿ ಕೊಟ್ಟಿರುವುದು ಅತ್ಯಂತ ಕಡಿಮೆ. ನಾವು ಅವರಿಂದ ಭಿಕ್ಷೆ ಕೇಳುತ್ತಿಲ್ಲ, ನಮಗಾಗಿ ಹಣ ಕೇಳುತ್ತಿಲ್ಲ, ಬರಪೀಡಿತ ಪ್ರದೇಶಗಳ ರೈತರಿಗೆ ಪರಿಹಾರ ನೀಡಲು ಹಣ ಕೇಳುತ್ತಿದ್ದೇವೆ. ಕೇಂದ್ರ ಯಾವುದೇ ದಯೆ, ಕರುಣೆ ತೋರಿಸಬೇಕಿಲ್ಲ. ನಮ್ಮ ಪಾಲಿನ ಹಕ್ಕನ್ನು ನೀಡಬೇಕು ಎಂದು ಒತ್ತಾಯಿಸಿದರು.ರಾಜ್ಯಕ್ಕೆ ಬಿಜೆಪಿ-ಜೆಡಿಎಸ್‌ ಮುಖಂಡರು ಒಟ್ಟಾಗಿ ಸೇರಿ ದ್ರೋಹ ಬಗೆದಿದ್ದಾರೆ, ಅವರು ರಾಜ್ಯದ ದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು. +ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, 18 ಸಾವಿರ ಕೋಟಿ ರೂ. ಬರಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ಸಚಿವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದೆವು. ಬರ ಅಧ್ಯಯನ ಸಮಿತಿ ರಾಜ್ಯದಲ್ಲಿ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿಯನ್ನೂ ಸಲ್ಲಿಸಿತ್ತು. ಒಂದು ತಿಂಗಳೊಳಗಾಗಿ ಬರಪರಿಹಾರ ನೀಡಬೇಕಿತ್ತು. +ಆದರೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಬೇಕಾಗಿತ್ತು. ಇದು ಇತಿಹಾಸದಲ್ಲೇ ಮೊದಲನೆಯದು. ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಪರಿಹಾರ ನೀಡಿದೆ. ಅದು ಮನವಿ ಮಾಡಿದಷ್ಟು ಕೊಟ್ಟಿಲ್ಲ. ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ಹಾಗೂ ರಾಜ್ಯದ ಜನರ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_166_6.txt b/eesanje/url_46_166_6.txt new file mode 100644 index 0000000000000000000000000000000000000000..41a69d45cde3cf0d198e07de17923427cd326df3 --- /dev/null +++ b/eesanje/url_46_166_6.txt @@ -0,0 +1,7 @@ +ಬರ-ಬಿಸಿಲಿನ ಎಫೆಕ್ಟ್ : ತರಕಾರಿಗಳ ಬೆಲೆ ಗಗನಕ್ಕೆ, ಮಾರಾಟವನ್ನೇ ನಿಲ್ಲಿಸಿದ ಚಿಲ್ಲರೆ ವ್ಯಾಪಾರಿಗಳು +ಬೆಂಗಳೂರು, ಏ.2-ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು ತರಕಾರಿಗಳ ಇಳುವರಿಯಲ್ಲಿ ಕುಂಠಿತವಾಗಿ ಬೆಲೆಗಳು ಗಗನಕ್ಕೆರಿದ್ದು ಚಿಲ್ಲರೆ ತರಕಾರಿ ವ್ಯಾಪಾರಿಗಳು ಮಾರಾಟವನ್ನೇ ತಾತ್ಕಾಲಿಕವಾಗಿ ನಿಲ್ಲಿಸುವಂತಾಗಿದೆ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು ಬಹುತೇಕ ಜಿಲ್ಲೆ ತಾಲೂಕುಗಳಲ್ಲಿ ನೀರಿಗೆ ಸಮಸ್ಯೆ ಎದರುರಾಗಿ ರೈತರು ಬೆಳೆ ಬೆಳೆಯಲು ಮುಂದಾಗದ ಕಾರಣ ಉತ್ಪಾದನೆ ಕುಂಟಿತವಾಗಿ ಬೆಲೆ ಹೆಚ್ಚಳವಾಗಿದೆ. +ಕೊಳವೆ ಬಾವಿ ನೀರನ್ನು ನಂಬಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಸಕಾಲಕ್ಕೆ ಮಳೆಯಾಗದೆ ಅಂತರ್ಜಲ ಮಟ್ಟ ಪಾತಾಳ ತಲುಪಿದೆ. ಜೊತೆಗೆ ವಿದ್ಯುತ್‌ ಕೊರತೆಯಿಂದ ಬೆಳೆ ಬೆಳೆಯಲು ಹಿಂದೆಟು ಹಾಕಿದ್ದಾರೆ. +ಹೆಚ್ಚಿನ ಬಿಸಿಲಿನ ತಾಪ ಹಾಗೂ ತೆವಾಂಶದ ಸಮಸ್ಯೆಯಿಂದ ಇಳುವರಿ ಭಾರಿ ಕುಂಠಿತವಾಗಿದೆ ಸಾಮಾನ್ಯವಾಗಿ ತರಕಾರಿ ಬೆಳೆಗೆ ಹೆಚ್ಚಿನ ತೇವಾಂಶದೊಂದಿಗೆ ಉತ್ತಮ ವಾತಾವರಣ ಅವಶ್ಯಕವಾಗಿರುತ್ತದೆ. ಇವುಗಳಲ್ಲಿ ಯಾವುದೇ ವ್ಯತ್ಯಯವಾದರೂ ಇಳುವರಿಗೆ ಹೊಡೆತ ಬಿಳುತ್ತದೆ. +ಉಷ್ಣಾಂಶ ಹೆಚ್ಚಾದ ಕಾರಣ ಗೀಡಗಳು ಕಚ್ಚುವುದಿಲ್ಲ. ಜೊತೆಗೆ ಹೂ, ಕಾಯಿ ಕೂಡ ಕಟ್ಟುವುದಿಲ್ಲ ಒಂದು ವೇಳೆ ಕಾಯಿ ಕಚ್ಚಿದರೂ ಸರಿಯಾಗಿ ಬಾರದೆ ಉದುರಿ ಹೋಗುತ್ತವೆ.ರಾಮನಗರ, ಮಾಗಡಿ, ತುಮಕೂರು, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನಂದಗುಡಿ, ಕನಕಪುರ ಸೇರಿದಂತೆ ವಿವಿಧೆಡೆಯಿಂದ ಬೆಂಗಳೂರಿಗೆ ಬಾರಿ ತರಕಾರಿ ಬರುತ್ತಿತ್ತು. ಆದರೆ ಈಗ ಗಣೀೕಯವಾಗಿ ಇಳಿಮುಖವಾಗಿದೆ. +ಅಲ್ಲಿನ ಸ್ಥಳಿಯ ಮಾರುಕಟ್ಟೆಗಳಿಗೆ ಮಾಲು ಸಾಕಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತರಕಾರಿ ಸರಬರಾಜಿನಲ್ಲಿ ವ್ಯತ್ಯಯವಾಗಿ ಬೆಲೆ ಹೆಚ್ಚಳವಾಗಿದೆ. ಹುರುಳಿಕಾಯಿ ಕೆಜಿಗೆ 200 ರೂ ತಲುಪಿದೆ, ಕ್ಯಾರೆಟ್‌ 100, ಟಮೋಟೋ 30, ಕ್ಯಾಪ್ಸಿಕಂ 80, ಆಲೂಗೆಡ್ಡೆ 40. ಬದನೆಕಾಯಿ 50, ಗೆಡ್ಡೆಕೋಸ್‌ 50, ಸೌತೆಕಾಯಿ 50 ರೂನಂತೆ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿದೆ. +ಇದರಿಂದ ಚಿಲ್ಲರೆ ವ್ಯಾಪಾರಿಗಳು ತರಕಾರಿ ತಂದು ಮರಾಟ ಮಾಡಲು ಹಿಂದೇಟು ಹಾಕುತ್ತಿದ್ದಾರೆ, ಬೆಲೆ ಹೆಚ್ಚಳದಿಂದ ಗ್ರಾಹಕರು ಖರೀದಿಗೆ ಮುಂದಾಗುತ್ತಿಲ್ಲ. ಇದರಿಂದ ತಂದ ತರಕಾರಿಗಳು ಒಣಗಿ ಹೋಗುತ್ತವೆ. ಇದರಿಂದ ಲಾಸ್‌ ಮಾಡಿಕೊಳ್ಳುವುದಕ್ಕಿಂತ ಕೆಲ ದಿನ ಮಾರಾಟ ನಿಲ್ಲಿಸೋದೆ ಒಳ್ಳೆಯದು ಎಂದು ತೀರ್ಮಾನಿಸಿದ್ದಾರೆ. ಸದ್ಯಕ್ಕೆ ಮಳೆ ಬಂದರೂ ಹೊಸ ತರಕಾರಿ ಬರಲು 2 ತಿಂಗಳಾದರೂ ಕಾಲವಕಾಶಬೇಕು ಸದ್ಯಕ್ಕೆ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ . \ No newline at end of file diff --git a/eesanje/url_46_166_7.txt b/eesanje/url_46_166_7.txt new file mode 100644 index 0000000000000000000000000000000000000000..6f0c5b61741b4636d2b443639a390bc53b1049a4 --- /dev/null +++ b/eesanje/url_46_166_7.txt @@ -0,0 +1,4 @@ +ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ +ಬೆಂಗಳೂರು,ಏ.27-ಕಾರನ್ನು ಸುತ್ತುವರೆದ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿ 2 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿಯ ರೈಲು ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳಿಗೆ ದೊರೆತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ರೈಲಿನಲ್ಲಿ ಬಂದು ಅಲ್ಲಿಯೇ ನಿಂತಿದ್ದ ಕಾರನ್ನು ಹತ್ತಿದ್ದಾರೆ. +ಇನ್ನೇನು ಕಾರು ಹೊರಡಬೇಕೆನ್ನುವಷ್ಟರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾರನ್ನು ಸುತ್ತುವರೆದು ಒಳಗೆ ಪರಿಶೀಲಿಸಿದಾಗ 2 ಕೋಟಿ ರೂ. ಪತ್ತೆಯಾಗಿದ್ದು, ಈ ಹಣಕ್ಕೆ ಸೂಕ್ತ ದಾಖಲೆ ಒದಗಿಸದ ಕಾರಣ ಕಾರಿನ ಸಮೇತ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಹಣ ಮತ್ತು ಕಾರು ಯಾರಿಗೆ ಸೇರಿದ್ದು ಎಂಬ ಬಗ್ಗೆ ಐಟಿ ಅದಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. +ನಿನ್ನೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನವಾಗಿದೆ. ಮೇ 7 ರಂದು ಕಲಬುರಗಿ ಸೇರಿದಂತೆ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ನಡೆದಿರುವ ಐಟಿ ದಾಳಿ ಮಹತ್ವದ್ದಾಗಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೂ ಮುನ್ನ ಐಟಿ ಅಧಿ ಕಾರಿಗಳು ಹಲವೆಡೆ ದಾಳಿ ನಡೆಸಿ ಕೋಟ್ಯಂತರ ರೂ. ಹಣ ವಶ ಪಡಿಸಿಕೊಂಡಿದ್ದು, ದಾಳಿ ಮುಂದುವರೆಸಿದ್ದಾರೆ. \ No newline at end of file diff --git a/eesanje/url_46_166_8.txt b/eesanje/url_46_166_8.txt new file mode 100644 index 0000000000000000000000000000000000000000..ddcbcf3898d46439c94e5f1d0d0f07b4219532e2 --- /dev/null +++ b/eesanje/url_46_166_8.txt @@ -0,0 +1,8 @@ +ರಾಯಚೂರು ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ತಿರಸ್ಕೃತ +ಬೆಂಗಳೂರು, ಏ.27-ರಾಯಚೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ. ಬಿಜೆಪಿ ಪಕ್ಷದಿಂದಲೇ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆ ತಾಂತ್ರಿಕ ಕಾರಣಗಳಿಂದ ನಾಮಪತ್ರ ತಿರಸ್ಕತವಾಗಿದೆ. ನಾಮಪತ್ರ ಪರಿಷ್ಕರಣೆ ವೇಳೆ ಬಿ.ವಿ. ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿದೆ. +ಬಿಜೆಪಿಯಿಂದಲೇ ಬಿವಿ ನಾಯಕ್‌ ನಾಮಪತ್ರ ಸಲ್ಲಿಸಿದ್ದರಿಂದ ಎ.ಬಿ ಫಾರ್ಮ್‌ ಇರಲಿಲ್ಲ.ಒಂದು ವೇಳೆ ಫಾರ್ಮ್‌ ಇಲ್ಲದ ಪಕ್ಷದಲ್ಲಿ 10 ಜನ ಸೂಚಕರು ಇವರ ಪರ ಇರಬೇಕು. ಆದರೆ ಬಿವಿ ನಾಯಕ್‌ ಪರ ಓರ್ವ ಸೂಚಕ ಮಾತ್ರ ಇದ್ದರು. ಇದೇ ಕಾರಣಕ್ಕೆ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಚಂದ್ರಶೇಖರ್‌ ನಾಯಕ್‌ ಹೇಳಿದ್ದಾರೆ. +ಬಂಡಾಯ ಅಭ್ಯರ್ಥಿ ಬಿವಿ ನಾಯಕ್‌ ನಾಮಪತ್ರ ತಿರಸ್ಕೃತಗೊಂಡಿರುವ ಕಾರಣ, ಬಿಜೆಪಿ ಪಾಳಯ ನಿಟ್ಟುಸಿರು ಬಿಟ್ಟಿದೆ. ಬಿವಿ ನಾಯಕರ ಬಂಡಾಯದಿಂದ ಕ್ಷೇತ್ರದಲ್ಲಿ ನೆಗೆಟಿವ್‌ ಅಲೆ ಶುರುವಾಗಿತ್ತು. ಆದರೀಗ ನಾಮಪತ್ರ ತಿರಸ್ಕೃತಗೊಂಡಿರೊ ಹಿನ್ನೆಲೆ ಬಿಜೆಪಿ ಪಾಳಯಕ್ಕೆ ಮತ್ತಷ್ಟು ಶಕ್ತಿಬಂದಂತಾಗಿದೆ. ಈಗಾಗಲೇ ವರಿಷ್ಠರ ಸಂಧಾನಕ್ಕೆ ಒಪ್ಪಿದ್ದ ಬಿವಿ ನಾಯಕ್‌ ಇನ್ಮುಂದೆ ಬಿಜೆಪಿ ಪರ ಪ್ರಚಾರಕ್ಕಿಳಿಯುತ್ತಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ. +ಬಿವಿ ನಾಯಕ್‌ ರನ್ನ ಶತಾಯಗತಾಯ ಫೀಲ್ಡ್ ಗೆ ಕರೆತಂದು ಪ್ರಚಾರ ಮಾಡಬೇಕು ಅಂತ ಜಿಲ್ಲಾ ಘಟಕ ಹರಸಾಹಸ ಪಡ್ತಿದೆ. ಈ ಮಧ್ಯೆ ಬಿವಿ ನಾಯಕ್‌ ನಾಮಪತ್ರದ ಕುರಿತು ಪ್ರತಿಕ್ರಿಯೆ ನೀಡಲು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್‌ ನಾಯಕ್‌ ನಿರಾಕರಿಸಿದ್ದು, ಅದು ಅವರ ವೈಯಕ್ತಿಕ ಅಂತ ಹೇಳ್ತಿದ್ದಾರೆ. ಒಟ್ಟಿನಲ್ಲಿ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು ಬಿವಿ ನಾಯಕ್‌ ಬಿಜೆಪಿ ಪರ ಬ್ಯಾಟ್‌ ಬೀಸ್ತಾರಾ, ಇಲ್ಲಾ ಒಳಹೊಡೆತ ಕೊಡ್ತಾರಾ ಅನ್ನೋದೇ ಕುತೂಹಲ. +ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದ ಹಿನ್ನೆಲೆ ಬಿವಿ ನಾಯಕ್‌ ಕೆರಳಿದ್ದರು. ಬಿಜೆಪಿ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಬಿವಿ ನಾಯಕ್‌ ರಾಜ್ಯ,ಕೇಂದ್ರ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಆದರೆ ಇದರಿಂದ ಟಿಕೆಟ್‌ ಬದಲಾವಣೆ ಆಗಿರಲಿಲ್ಲ. +ಈ ಮಧ್ಯೆ ಬಿವಿ ನಾಯಕ್‌ ಬಂಡಾಯ ತಣಿಸಲು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಅಗರವಾಲ್‌ ಹರಸಾಹಸ ಪಟ್ಟಿದ್ದರು. ಖುದ್ದು ರಾಯಚೂರಿಗೆ ಆಗಮಿಸಿದ್ದ ಅಗರವಾಲ್‌ ಬಿವಿ ನಾಯಕ್‌ ಮನವೊಲಿಸಿ ಅವರ ಮೂಲಕವೇ ರಾಜಾ ಅಮರೇಶ್ವರ ನಾಯಕ್‌ಗೆ ಬಿ ಫಾರ್ಮ್‌ ಕೊಡಿಸಿದ್ದರು. ಇದಾದ ಬಳಿಕ ಎಲ್ಲವೂ ತಣ್ಣಗಾಯ್ತು ಅಂತ ಭಾವಿಸಲಾಗಿತ್ತು. ಆದರೆ ಆಗಿದ್ದೇ ಬೇರೆ. +ಬಿಜೆಪಿ ಸಂಸದ ಹಾಗೂ ಘೋಷಿತ ಅಭ್ಯರ್ಥಿ ರಾಜಾ ಅಮರೇಶ್ವರ್‌ ನಾಯಕ್‌ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಬಿವಿ ನಾಯಕ್‌ ಬಂಡಾಯವೆದ್ದು ಅಜ್ಞಾತ ಸ್ಥಳದಿಂದಲೇ ತಮ್ಮ ಸೂಚಕರ ಮೂಲಕ ನಾಮಪತ್ರ ಸಲ್ಲಿಸಿದ್ದರು. ಅಚ್ಚರಿ ಅಂದ್ರೆ ಬಿವಿ ನಾಯಕ್‌ ಕೂಡ ಬಿಜೆಪಿಯಿಂದಲೇ ನಾಮಪತ್ರ ಸಲ್ಲಿಸಿದ್ದರು. \ No newline at end of file diff --git a/eesanje/url_46_166_9.txt b/eesanje/url_46_166_9.txt new file mode 100644 index 0000000000000000000000000000000000000000..dd83248f233f09808bdb9eed5aaf21dae16b5f0c --- /dev/null +++ b/eesanje/url_46_166_9.txt @@ -0,0 +1,7 @@ +ಬರಪರಿಹಾರಕ್ಕೆ 3454 ಕೋಟಿ ರೂ. ಸಾಕಾಗಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಏ.27-ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್‌ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ರೂ. ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3498 ಕೋಟಿ ರೂ.ಗೆ ಅನುಮೋದನೆ ನೀಡಿ, 3454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. +ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್‌ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆವು. +ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ ಎಂದು ತಿಳಿಸಿದ್ದಾರೆ. +ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್‌ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡಿದರು. +ಈ ಬರ ಪರಿಹಾರದ ಹಿಂದಿನ ಕಾರಣಗಳೇನೇ ಇರಲಿ, ನೀಡಿರುವ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಾಧ್ಯವಾದಷ್ಟು ಶೀಘ್ರ ಬಾಕಿ ಪರಿಹಾರದ ಹಣವನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತಿದ್ದೇನೆ. ಇದೇ ರೀತಿ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯವನ್ನು ಕೂಡಾ ಕೇಂದ್ರ ಸರ್ಕಾರ ಸರಿಪಡಿಸಬೇಕೆಂದು ಆಗ್ರಹಿಸಿದರು. +ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ನಾವು 13-9-2024ರಂದು ಘೋಷಿಸಿದ್ದೆವು. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ 35,162 ಕೋಟಿ ರೂ.ನಷ್ಟು ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ನಾವು ಪರಿಹಾರ ಕೇಳಿರುವುದು ಹೆಚ್ಚು ಕಡಿಮೆ ಅದರ ಅರ್ಧದಷ್ಟು ಅಂದರೆ 18,171 ಕೋಟಿ ರೂ. ಉಳಿದ ಹಣವನ್ನು ರಾಜ್ಯ ಸರ್ಕಾರ ತನ್ನ ಸಂಪನ್ಮೂಲದಿಂದಲೆ ಭರಿಸುತ್ತಿದೆ. ಈಗ ಬಿಡುಗಡೆಯಾಗಿರುವುದು 3498.98 ಕೋಟಿ ರೂ. ಮಾತ್ರ. ಉಳಿದ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_167_1.txt b/eesanje/url_46_167_1.txt new file mode 100644 index 0000000000000000000000000000000000000000..d666c6bca5571ea7f604eac099baabdf618cd36c --- /dev/null +++ b/eesanje/url_46_167_1.txt @@ -0,0 +1,16 @@ +2ನೇ ಹಂತದ ಫೈಟ್ : ಉತ್ತರ ಕರ್ನಾಟಕದತ್ತ ರಾಜಕೀಯ ನಾಯಕರ ದಾಂಗುಡಿ +ಬೆಂಗಳೂರು,ಏ.27-ಮೊದಲ ಹಂತದಲ್ಲಿ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಧ್ಯ ಹಾಗೂ ಉತ್ತರ ಕರ್ನಾಟಕದತ್ತ ಲಗ್ಗೆಯಿಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿ.ಎಂ.ಗಳಾದ ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಘಟಾನುಘಟಿ ನಾಯಕರು ಆಖಾಡಕ್ಕೀಳಿದಿದ್ದಾರೆ. +ನಾಳೆ ಉತ್ತರ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕುಂದಾನಗರಿ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕೋಡಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾನುವಾರವೇ ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರ ನಡೆಸುವುದರಿಂದ ಏಟಿಗೆ ಏಟು ಮಾತಿನ ವಾಗ್ಬಣ ನಡೆಯಲಿದೆ. +ಅದರಲ್ಲೂ ಈ ಕ್ಷೇತ್ರಗಳ ಪೈಕಿ ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಹಾವೇರಿ ತೀವ್ರ ಕುತೂಹಲ ಕೆರಳಿಸಿದ ಕ್ಷೇತ್ರಗಳಾಗಿವೆ. ಬಳ್ಳಾರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಕಣದಲ್ಲಿದ್ದರೆ, ಚಿಕ್ಕೋಡಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಕಣದಲ್ಲಿದ್ದಾರೆ. ಅಲ್ಲದೆ ಬೀದರ್‌ನಲ್ಲಿ ನಲ್ಲಿ ಸಚಿವ ಈಶ್ವರ್‌ ಖಂಡ್ರೆ ಪುತ್ರ ಅಖಾಡಲ್ಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಘಟನಾನುಘಟಿ ನಾಯಕರು ಈ ಕ್ಷೇತ್ರಗಳತ್ತ ದೌಡಾಯಿಸಲಿದ್ದಾರೆ. +ಇನ್ನು ಬಿಜೆಪಿಗೂ ಇದು ಪ್ರತಿಷ್ಠೆಯ ಚುನಾವಣೆಯಾಗಿದೆ. ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಬಂಡಾಯ ಸಾರಿದ್ದಾರೆ. ಬಿವೈ ರಾಘವೇಂದ್ರ ವಿರುದ್ಧ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಹೀಗಾಗಿ ಎಲ್ಲರ ಚಿತ್ತ ಈ ಕ್ಷೇತ್ರದತ್ತ ನೆಟ್ಟಿದೆ. ಇನ್ನು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಮೂರು ಪಕ್ಷಗಳ ನಾಯಕರು ಮತ ಬೇಟೆಗೆ ಸಜ್ಜಾಗುತ್ತಿದ್ದಾರೆ. +ಬಿಜೆಪಿಯ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿನ್ನೆಯಿಂದಲೇ ಎರಡನೇ ಹಂತದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಕೂಡಾ ಈ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. +ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೂ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಇನ್ನುಳಿದಿರುವ ಒಂಬತ್ತು ದಿನಗಳ ಕಾಲ ಅವರು ಕಲ್ಯಾಣ ಕರ್ನಾಟಕ, ಉತ್ತರ ಕನ್ನಡ ಹಾಗೂ ಮಲೆನಾಡಿನ ಈ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. +ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ. +ಇಂದು ಗೋವಾದಿಂದ ಪ್ರಚಾರ ಮುಗಿಸಿಕೊಂಡು ಸಂಜೆ ಬೆಳಗಾವಿಗೆ ಆಗಮಿಸುವ ಮೋದಿ ರಾತ್ರಿ ಇಲ್ಲಿನ ಐಟಿಸಿ ಹೊಟೇಲ್‌ ನಲ್ಲಿ ವಾಸ್ತವ್ಯ ಹೂಡಲಿದ್ದು, ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್‌ ಸಮಾವೇಶ ನಡೆಸುವರು,ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. +ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್‌ ಖುರ್ದ್‌, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ. +ಮಧ್ಯಾಹ್ನ 12.55ಕ್ಕೆ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಆಗಮಿಸುವ ಮೋದಿ, 1 ಗಂಟೆಗೆ ಶಿರಸಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. 2 ಗಂಟೆಗೆ ಶಿರಸಿಯಿಂದ ಹೊರಟು 2.50ಕ್ಕೆ ದಾವಣಗೆರೆಗೆ ತಲುಪಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ, ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ, 6 ಗಂಟೆಗೆ ಹೊಸಪೇಟೆ ಹೋಟೆಲ್ಗೆ ಆಗಮಿಸಿ, ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. +ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಗೆ ಹೊಸಪೇಟೆಯಿಂದ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಪ್ರಯಾಣ ಬೆಳಸಲಿದ್ದಾರೆ. +ಡ್ರೋನ್‌ ಹಾರಾಟಕ್ಕೆ ನಿಷೇಧಬೆಳಗಾವಿಗೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಶನಿವಾರ ಮುಂಜಾನೆ 6 ಗಂಟೆಯಿಂದ ಭಾನುವಾರ ಸಂಜೆ 6 ಗಂಟೆಯವರಗೆ ಡ್ರೋನ್‌ ಹಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ತಾಲೂಕಿನ ವ್ಯಾಪ್ತಿಯನ್ನು ರೆಡ್‌ ಜೋನ್‌ ಎಂದು ಘೋಷಿಸಿದೆ. +ಹಲವು ದಿಗ್ಗಜರು ಕಣದಲ್ಲಿ :ಇನ್ನು ಎರಡನೇ ಹಂತದಲ್ಲಿ ನಡೆಯುವ ಮತದಾನದಲ್ಲಿ ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಹಾಗೂ ಕಾಂಗ್ರೆಸ್‌ ಟಿಕೆಟ್‌ ದೊರೆಯದ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞ ವಿನಯ್‌ಕುಮಾರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಾವಣಗೆರೆಯಲ್ಲಿ ಬಿಟ್ಟರೆ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಇಬ್ಬರೂ ಕುರುಬ ಸಮುದಾಯದವರಾಗಿದ್ದಾರೆ. ತಮ್ಮ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪಧಿಸದ ಹಿನ್ನೆಲೆಯಲ್ಲಿ ಬಿಜೆಪಿಗೆ ಜೆಡಿಎಸ್‌ ಬೆಂಬಲ ನೀಡಲಿದೆ. +ಬಿಜೆಪಿಯಿಂದ ಅಮಾನತುಗೊಂಡಿರುವ ಈಶ್ವರಪ್ಪ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಪುತ್ರ ಹಾಗೂ ಹಾಲಿ ಸಂಸದ ಬಿವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದ ವಿನಯ್‌ಕುಮಾರ್‌ ಅವರು ಶಾಮನೂರು ಶಿವಶಂಕರಪ್ಪ ಸೊಸೆ, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಪತ್ನಿ ಪ್ರಭಾಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್‌, ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ ಮತ್ತು ಬೀದರ್‌ನಲ್ಲಿ ಭಗವಂತ ಖೂಬಾ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. +ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಈ ಚುನಾವಣೆಯಲ್ಲಿ ರಾಜಕೀಯ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಧಾರವಾಡದಲ್ಲಿ ಆನಂದ ಅಸೂಟಿ ಅವರು ಪ್ರಲ್ಹಾದ ಜೋಶಿ ವಿರುದ್ಧ ಕಣಕ್ಕಿಳಿದಿದ್ದಾರೆ.ಮೇ 7ರಂದು ಬಾಗಲಕೋಟೆ, ಬೆಳಗಾವಿ, ಬೀದರ್‌, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡದ 14 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_46_167_10.txt b/eesanje/url_46_167_10.txt new file mode 100644 index 0000000000000000000000000000000000000000..6ba27d996b76c89200debd17cb18639d0de8f986 --- /dev/null +++ b/eesanje/url_46_167_10.txt @@ -0,0 +1,6 @@ +ರಾಜ್ಯದಲ್ಲಿ ದಾಖಲೆ ಪ್ರಮಾಣದ ಚುನಾವಣಾ ಅಕ್ರಮ ಸಂಪತ್ತು ಜಪ್ತಿ +ಬೆಂಗಳೂರು,ಏ.26– ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದಾಖಲೆ ಪ್ರಮಾಣದ ನಗದು, ಮದ್ಯ, ಡ್ರಗ್ಸ್ , ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ನಿನ್ನೆಯವರೆಗೆ ರಾಜ್ಯದಲ್ಲಿ ಒಟ್ಟಾರೆ 433.39 ಕೋಟಿ ರೂ. ಮೊತ್ತದ ನಗದು, ಮದ್ಯ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಪೊಲೀಸ್‌, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 137.31 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ , ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆಯವರು 177.52 ಕೋಟಿ ರೂ. ಮೊತ್ತದ ಮದ್ಯ, ಡ್ರಗ್‌್ಸ ವಶಪಡಿಸಿಕೊಂಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 38.65 ಕೋಟಿ ರೂ.ಮೊತ್ತದ ನಗದು, ಚಿನ್ನ, ವಜ್ರ ವಶಪಡಿಸಿಕೊಂಡಿದ್ದಾರೆ. +ವಾಣಿಜ್ಯ ತೆರಿಗೆ ಅಽಕಾರಿಗಳು 79.90 ಕೋಟಿ ರೂ. ಮೊತ್ತದ ಚಿನ್ನ ಬೆಳ್ಳಿ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿದ ವಸ್ತುಗಳಿಗೆ ಸಂಬಂಧಿಸಿದಂತೆ 2,149 ಎ್‌‍ಐಆರ್‌ಗಳನ್ನು ದಾಖಲಿಸಿಕೊಳ್ಳಲ್ಲಾಗಿದ್ದು, 1884 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. +ಸಂಜಯನಗರ ಪೊಲೀಸ್‌ ತಂಡದವರು ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ 10 ಲಕ್ಷ ನಗದು, ಬಳ್ಳಾರಿನಗರ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ತಂಡದವರು 23ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. +ಸ್ಥಿರ ಕಣ್ಗಾವಲು ತಂಡದವರು ಜೇವರ್ಗಿಯ ನಾಗರಳ್ಳಿ ಚೆಕ್‌ ಪೋಸ್‌್ಟನಲ್ಲಿ 38 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯವರು ಕೋಣನಕುಂಟೆಯ ಸಿಲಿಕಾನ್‌ ಸಿಟಿ ಲೇಔಟ್‌ನಲ್ಲಿ 26 ಲಕ್ಷ ನಗದು, ದೊಡ್ಡ ಕಲ್ಲಸಂದ್ರದ ಡಾಕ್ಟರ್‌ರ‍ಸ ಕಾಲೋನಿಯಲ್ಲಿ 34,97,500 ನಗದು ಹಾಗೂ 55 ಲಕ್ಷ ರೂ. ವೌಲ್ಯದ 1.113 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಿಸಿದೆ. \ No newline at end of file diff --git a/eesanje/url_46_167_11.txt b/eesanje/url_46_167_11.txt new file mode 100644 index 0000000000000000000000000000000000000000..176e564efb411eca0fb5f581b5d856b727c07d5b --- /dev/null +++ b/eesanje/url_46_167_11.txt @@ -0,0 +1,8 @@ +ದೇಶದ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ +ನವದೆಹಲಿ,ಏ.26-ಎರಡನೆ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಅತ್ಯಂತ ಹೆಚ್ಚು ಶ್ರೀಮಂತ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಅಭ್ಯರ್ಥಿ ವೆಂಕಟರಮಣೇಗೌಡ ಹೊರಹೊಮಿದ್ದಾರೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಸ್ಥಾನಗಳಲ್ಲಿ ಇಂದು ಚುನಾವಣಾ ನಡೆಯುತ್ತಿದ್ದು, ಪ್ರಮುಖ ಸ್ಪರ್ಧಿಗಳಲ್ಲಿ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಹೇಮಾ ಮಾಲಿನಿ ಮತ್ತು ಅರುಣ್‌ ಗೋವಿಲ್‌‍, ಕಾಂಗ್ರೆಸ್‌‍ ನಾಯಕರಾದ ರಾಹುಲ್‌ ಗಾಂಧಿ ಮತ್ತು ಶಶಿ ತರೂರ್‌ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್‌‍ನ ಎಚ್‌ಡಿ ಕುಮಾರಸ್ವಾಮಿ ಇದ್ದಾರೆ. +ಅಸೋಸಿಯೇಶನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ಮತ್ತು ನ್ಯಾಷನಲ್‌ನ ಸ್ಪರ್ಧಿಗಳ ಸ್ವಯಂ ಪ್ರಮಾಣ ಪತ್ರಗಳ ವಿಶ್ಲೇಷಣೆಯ ಪ್ರಕಾರ, ಸ್ಟಾರ್‌ ಚಂದ್ರು ಎಂದು ಜನಪ್ರಿಯವಾಗಿರುವ ಕರ್ನಾಟಕ ಕಾಂಗ್ರೆಸ್‌‍ ನಾಯಕ ವೆಂಕಟರಮಣೇಗೌಡ ಅವರು 2 ನೇ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿರುವ ಗೌಡರು 622 ಕೋಟಿ ರೂ.ಗಳ ಆಸ್ತಿ ಘೋಷಿಸಿಕೊಂಡಿದ್ದಾರೆ. +ಡಿಸಿಎಂ ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಹಾಲಿ ಕಾಂಗ್ರೆಸ್‌‍ ಸಂಸದ ಡಿ.ಕೆ.ಸುರೇಶ್‌ ಅವರು 593 ಕೋಟಿ ಮೌಲ್ಯದ ಆಸ್ತಿಯೊಂದಿಗೆ ಎರಡನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಥುರಾ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುತ್ತಿರುವ ಬಿಜೆಪಿ ಸಂಸದೆ ಹೇಮಾ ಮಾಲಿನಿ 278 ಕೋಟಿ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, 232 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್‌‍ ನಾಯಕ ಸಂಜಯ್‌ ಶರ್ಮಾ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ ಅವರ ಒಟ್ಟು ಆಸ್ತಿ ಮೌಲ್ಯ 217.21 ಕೋಟಿ ರೂ.ಗಳಾಗಿದೆ. +ಮೇಲಿನ ಐವರು ಅಭ್ಯರ್ಥಿಗಳು ಅತ್ಯಂತ ಶ್ರೀಮಂತ ಅಭ್ಯರ್ಥಿಗಳಾಗಿದ್ದರೆ ಈ ಕೆಳಗಿನ ಐವರು ಅಭ್ಯರ್ಥಿಗಳು ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಗಳಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮಣ್‌ ನಾಗರಾವ್‌ ಪಾಟೀಲ್‌ ಎರಡನೇ ಹಂತದಲ್ಲಿ ಅತಿ ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಯಾಗಿದ್ದಾರೆ. ಅವರ ಚುನಾವಣಾ ಅಫಿಡವಿಟ್‌ ಪ್ರಕಾರ, ಅವರ ಬಳಿ ಕೇವಲ 500 ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. +ಪಾಟೀಲ್‌ ನಂತರ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ರಾಜೇಶ್ವರಿ ಕೆಆರ್‌ ಅವರು ಕೇರಳದ ಕಾಸರಗೋಡಿನಿಂದ ಸ್ಪರ್ಧಿಸಿದ್ದಾರೆ ಮತ್ತು ಅವರು 1,000 ಮೌಲ್ಯದ ಆಸ್ತಿ ಹೊಂದಿದ್ದರೆ, ಅಮರಾವತಿಯಿಂದ (ಎಸ್‌‍ಸಿ) ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿರುವ ಪಥ್ವಿಸಾವ್ರಾಟ್‌ ಮುಕಿಂದ್ರರಾವ್‌ ದೀಪವಂಶ್‌ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಒಟ್ಟು 1,400 ಆಸ್ತಿ ಹೊಂದಿದ್ದಾರೆ. +ರಾಜಸ್ಥಾನದ ಜೋಧ್‌ಪುರದಿಂದ ಸ್ಪರ್ಧಿಸಿರುವ ದಲಿತ ಕ್ರಾಂತಿ ದಳದ ನಾಯಕ ಶಹನಾಜ್‌ ಬಾನೊ 2,000 ಮೌಲ್ಯದ ಆಸ್ತಿ ಘೋಷಿಸಿದ್ದಾರೆ.ಕೇರಳದ ಕೊಟ್ಟಾಯಂನಿಂದ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್‌ ) ನಿಂದ ಕಣಕ್ಕಿಳಿದಿರುವ ವಿಪಿ ಕೊಚುಮೊನ್‌ 2,230 ಆಸ್ತಿಯೊಂದಿಗೆ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. +ಶೂನ್ಯ ಆಸ್ತಿ ಅಭ್ಯರ್ಥಿಗಳು:ಶೂನ್ಯ ಆಸ್ತಿ ಹೊಂದಿರುವ ಆರು ಅಭ್ಯರ್ಥಿಗಳಲ್ಲಿ ಕರ್ನಾಟಕದ ಪ್ರಕಾಶ್‌ ಆರ್‌ಎ ಜೈನ್‌, ರಾಮಮೂರ್ತಿ ಎಂ, ಮತ್ತು ರಾಜಾ ರೆಡ್ಡಿ ಸೇರಿದ್ದಾರೆ. ಶೂನ್ಯ ಆಸ್ತಿ ಹೊಂದಿರುವ ಇತರ ಮೂವರು ಅಭ್ಯರ್ಥಿಗಳು ಮಹಾರಾಷ್ಟ್ರದ ಕಿಶೋರ ಭೀಮರಾವ್‌ ಲಬಾಡೆ, ನಾಗೇಶ ಸಂಭಾಜಿ ಗಾಯಕವಾಡ ಮತ್ತು ಜ್ಞಾನೇಶ್ವರ ರಾವ್ಸಾಹೇಬ್‌ ಕಪಾಟೆ ಅವರಾಗಿದ್ದಾರೆ. \ No newline at end of file diff --git a/eesanje/url_46_167_12.txt b/eesanje/url_46_167_12.txt new file mode 100644 index 0000000000000000000000000000000000000000..51c5a4b7a638b0dd39ed662c3963974c7633edb2 --- /dev/null +++ b/eesanje/url_46_167_12.txt @@ -0,0 +1,5 @@ +ಮತಗಟ್ಟೆಯಲ್ಲಿ ಮಹಿಳೆಯ ಜೀವ ಉಳಿಸಿದ ವೈದ್ಯ +ಬೆಂಗಳೂರು,ಏ.26-ಮತದಾನ ಮಾಡಲು ಬೆಳಗ್ಗೆಯೇ ಬಂದಿದ್ದ ಮಹಿಳೆಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ನಿತ್ರಾಣಗೊಂಡಿದ್ದಾಗ ವೈದ್ಯ ರೊಬ್ಬರು ಪ್ರಥಮ ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.ಜೆಪಿನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿಯ ಮತಗಟ್ಟೆಗೆ ಬಂದಿದ್ದ 50 ವರ್ಷದ ಮಹಿಳೆ ನೀರು ಕುಡಿಯಲು ಹೋದಾಗ ಏಕಾಏಕಿ ಕುಸಿದು ಬಿದ್ದು ನಿತ್ರಾಣಗೊಂಡರು. +ಅದೇ ಸಮಯದಲ್ಲಿ ಮತದಾನ ಮಾಡಲು ಆಗಮಿಸಿದ್ದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ವೈದ್ಯ ಡಾ.ಗಣೇಶ ಶ್ರೀನಿವಾಸ್‌ ಪ್ರಸಾದ್‌ ಅವರು ಆ ಮಹಿಳೆಯನ್ನು ಗಮನಿಸಿದ್ದಾರೆ. ತಕ್ಷಣ ಆ ಮಹಿಳೆ ಬಳಿ ಹೋಗಿ ನಾಡಿಮಿಡಿತ ಪರಿಶೀಲಿಸಿದಾಗ ಆರೋಗ್ಯದಲ್ಲಿ ಏರುಪೇರಾಗಿರುವುದು ಗಮನಕ್ಕೆ ಬಂದಿದೆ. +ಮಹಿಳೆ ದೇಹ ಸಹ ಯಾವುದೇ ಪ್ರತಿಕ್ರಿಯೆ ವ್ಯಕ್ತಪಡಿಸದಿದ್ದಾಗ ತಕ್ಷಣ ಸಿಪಿಆರ್‌ ಮಾಡಿದಾಗ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿತು. ಆ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿ ಜ್ಯೂಸ್‌ ನೀಡಿದರು. ಬಳಿಕ ಆ್ಯಂಬುಲೆನ್‌್ಸಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಮಹಿಳೆಯನ್ನು ಆಸ್ಪತ್ರೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಮಹಿಳೆಯ ಪ್ರಾಣ ಉಳಿದಿದೆ. +ವೈದ್ಯರ ಪ್ರತಿಕ್ರಿಯೆ:ಮತದಾನ ಮಾಡಲು ನಾನು ಬಂದಿದ್ದಾಗ ಮಹಿಳೆ ಕುಸಿದು ಬೀಳುತ್ತಿದ್ದುದನ್ನು ಗಮನಿಸಿದೆ. ತಕ್ಷಣ ಅವರ ನೆರವಿಗೆ ಧಾವಿಸಿ ಹೃದಯ ಶ್ವಾಸಕೋಶದ ಪುನರುಜ್ಜೀವನ(ಸಿಪಿಆರ್‌) ಮಾಡಿದ್ದರಿಂದ ಸ್ವಲ್ಪ ಸುಧಾರಿಸಿಕೊಂಡರು. ಒಂದು ವೇಳೆ ವಿಳಂಬವಾಗಿದ್ದರೆ ಆ ಮಹಿಳೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿತ್ತು ಎಂದು ವೈದ್ಯರಾದ ಡಾ.ಗಣೇಶ ಶ್ರೀನಿವಾಸ್‌ ಪ್ರಸಾದ್‌ ಅವರು ಪ್ರತಿಕ್ರಿಯಿಸಿದ್ದಾರೆ. \ No newline at end of file diff --git a/eesanje/url_46_167_2.txt b/eesanje/url_46_167_2.txt new file mode 100644 index 0000000000000000000000000000000000000000..ceb5a04a3a00fb545b4f0decc378df9e76b810c1 --- /dev/null +++ b/eesanje/url_46_167_2.txt @@ -0,0 +1,13 @@ +ಕೇಂದ್ರದಿಂದ ಕರ್ನಾಟಕಕ್ಕೆ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ +ನವದೆಹಲಿ,ಏ.27-ಬರಗಾಲದಿಂದ ತತ್ತರಿಸಿದ್ದ ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ ಡಿಆರ್‌ಎಫ್‌) ಯಡಿ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಬರಪೀಡಿತ ಪ್ರದೇಶಗಳಲ್ಲಿ ಉಂಟಾಗಿದ್ದ ಹಾನಿಯ ಅಂದಾಜನ್ನು ನಡೆಸಿದ್ದ ರಾಜ್ಯ ಸರ್ಕಾರ 18,174 ಕೋಟಿ ರೂ. ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿತ್ತು. +ಸದ್ಯ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454.22 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಇದರಿಂದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಗೆಲುವು ಸಿಕ್ಕಂತಾಗಿದೆ. ಕರ್ನಾಟಕದ ಜೊತೆಗೆ ಕೇರಳ ಮತ್ತು ತಮಿಳುನಾಡು ರಾಜ್ಯಗಳು ಕೂಡ ಪರಿಹಾರಕ್ಕಾಗಿ ಸುಪ್ರೀಂಕೋರ್ಟ್‌ ಮೆಟ್ಟಲೇರಿದ್ದವು. ಪ್ರಕೃತಿ ವಿಕೋಪದಲ್ಲಾದ ಪರಿಹಾರವಾಗಿ ತಮಿಳುನಾಡಿಗೆ 276.10 ಕೋಟಿ ರೂ. ಬಿಡುಗಡೆ ಮಾಡಿದೆ. +ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವಾಗಿ ಏ. 29ರೊಳಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಲು ಚುನಾವಣಾ ಆಯೋಗವೂ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು. ಇದರ ಬೆನ್ನಲ್ಲೇ ಕೇಂದ್ರ ಬರ ಪರಿಹಾರ ಬಿಡುಗಡೆ ಮಾಡಿದೆ. +ಸಂಕಷ್ಟಕ್ಕೆ ತುತ್ತಾದ ಜನರಿಗೆ ಬರ ಪರಿಹಾರ ವಿತರಣೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆಗೆ ತ್ವರಿತ ನಿರ್ಧಾರ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೆಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. +ಸಂವಿಧಾನಬದ್ದವಾಗಿ ಕರ್ನಾಟಕಕ್ಕೆ ಬಿಡುಗಡೆ ಮಾಡಬೇಕಿದ್ದ ಬರ ಪರಿಹಾರವನ್ನು ಬಿಡುಗಡೆ ಮಾಡದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ತೀವ್ರ ಬರದಿಂದ ಕಂಗೆಟ್ಟಿರುವ ಕರ್ನಾಟಕದ ರೈತರು ಕಂಗಾಲಾಗಿದ್ದಾರೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್‌ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಆದೇಶಿಸಿತ್ತು. ಕೇಂದ್ರಸರ್ಕಾರವು ಪರಿಹಾರ ಬಿಡುಗಡೆ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು. ಸದ್ಯ ಪ್ರಕರಣದ ವಿಚಾರಣೆ ಏ.29ಕ್ಕೆ ನಡೆಯಲಿದೆ. +ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿ ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೇರಿ ಡಿಸಿಎಂ, ಮಂತ್ರಿಗಳು ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದ್ದರು. ಬರ ಪರಿಹಾರ ಸಿಗದಿದ್ದಾಗ ರಾಜ್ಯ ಸರ್ಕಾರ ದೆಹಲಿಯಲ್ಲಿ ಕೂಡ ಪ್ರತಿಭಟನೆ ಮಾಡಿತ್ತು. +ಕರ್ನಾಟಕದ ವಾದವೇನು?ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು. +ಹೀಗಾಗಿ ಶೀಘ್ರವೇ 18,174 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು. +ಜೊತೆಗೆ ಎನ್‌ಡಿಆರ್‌ಎಫ್‌ನಿಂದ 4663 ಕೋಟಿ ರೂ. ಇನ್ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫೂಟ್ಸ್‌‍ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. +ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು. +ರಾಜ್ಯ ಗಂಭೀರ ಮಾನವೀಯ ಸಂಕಷ್ಟ, ವಿಪತ್ತು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಬರ ಪರಿಹಾರಕ್ಕಾಗಿ 35,162 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಪ್ರಕಾರ, ಬರಗಾಲದ ಹಣಕಾಸಿನ ನೆರವು ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ಕ್ರಮವು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬುದು ಕರ್ನಾಟಕ ವಾದವಾಗಿತ್ತು. +ತನ್ನ ಪಾಲಿನ ಬರ ಪರಿಹಾರ ಕೊಡಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ-ಕೇಂದ್ರ ಸರ್ಕಾರಗಳು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿತ್ತು. \ No newline at end of file diff --git a/eesanje/url_46_167_3.txt b/eesanje/url_46_167_3.txt new file mode 100644 index 0000000000000000000000000000000000000000..d45b3802a6b33aeb72591e3c23051581ad111d9b --- /dev/null +++ b/eesanje/url_46_167_3.txt @@ -0,0 +1,5 @@ +ರಾಜ್ಯದ 14 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್‌ ರೂಂಗಳಲ್ಲಿ ಭದ್ರ +ಬೆಂಗಳೂರು,ಏ.27-ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿನ್ನೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಮತಯಂತ್ರಗಳನ್ನು ಆಯಾ ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗಿದ್ದು, ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ. +ಮತದಾನ ಮುಕ್ತಾಯವಾಗಿದ್ದರೂ ಫಲಿತಾಂಶಕ್ಕಾಗಿ ಜೂನ್‌ 4 ರವರೆಗೂ ಕಾಯಬೇಕಿದೆ. ಜೂ.4 ರಂದು ಮತ ಎಣಿಕೆ ನಡೆಯಲಿದ್ದು, ಅಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ. +ಬಿಜೆಪಿಯ 11, ಜೆಡಿಎಸ್‌ನ 3, ಕಾಂಗ್ರೆಸ್‌ನ 14 ಮಂದಿ ಸೇರಿದಂತೆ ಒಟ್ಟು 247 ಅಭ್ಯರ್ಥಿಗಳು ಮೊದಲ ಹಂತದ 14 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದಿದ್ದರು.ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅರಮನೆ ರಸ್ತೆಯ ವೌಂಟ್‌ಕಾರ್ಮಲ್‌ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದು, ಅದೇ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ. +ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅನ್ನು ವಿಟ್ಠಲ್‌ ಮಲ್ಯ ರಸ್ತೆಯ ಸೇಂಟ್‌ ಜೋಸೆಫ್‌ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್‌ ರೂಂ ಅನ್ನು ಜಯನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದು, ಅದೇ ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_46_167_4.txt b/eesanje/url_46_167_4.txt new file mode 100644 index 0000000000000000000000000000000000000000..7f04a4265b839d06893461681b7683fa18682ec9 --- /dev/null +++ b/eesanje/url_46_167_4.txt @@ -0,0 +1,5 @@ +ಕಳೆದೆರಡು ಚುನಾವಣೆಗಳಿಂಗಿತ 14 ಲೋಕಸಭಾ ಕ್ಷೇತ್ರಗಳಲ್ಲಿ ಈ ಬಾರಿ ಮತದಾನ ಹೆಚ್ಚಳ +ಬೆಂಗಳೂರು, ಏ.27-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ಶೇ.69.23ರಷ್ಟು ಮತದಾನವಾಗಿದ್ದು, ಇದು ಕಳೆದ ಎರಡೂ ಲೋಕಸಭಾ ಚುನಾವಣೆಗಳಿಗಿಂತ ಹೆಚ್ಚಾಗಿದೆ. ಕಳೆದ 2014ರಲ್ಲಿ ಶೇ.67.73ರಷ್ಟು ಹಾಗೂ 2019ರಲ್ಲಿ 68.96ರಷ್ಟು ಮತದಾನವಾಗಿತ್ತು. +ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಲೋಕಸಭೆಗಿಂತ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಹೆಚ್ಚಾಗಿದೆ. ಅಂದರೆ, 2018ರ ವಿಧಾನಸಭಾ ಚುನಾವಣೆಯಲ್ಲಿ ಶೇ. 74.37ರಷ್ಟು ಹಾಗೂ 2023ರಲ್ಲಿ 74.69ರಷ್ಟು ಮತದಾನವಾಗಿತ್ತು. ಆದರೆ, ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಸಾಕಷ್ಟು ಜಾಗೃತಿ ಮೂಡಿಸಿದ್ದರೂ ಮತದಾನದ ಪ್ರಮಾಣ ಹೆಚ್ಚಾಗುವದಲು ಕಡಿಮೆಯಾಗಿದೆ. +ನಿರೀಕ್ಷೆಯಂತೆ ಮಂಡ್ಯ ಕ್ಷೇತ್ರದಲ್ಲಿ ಅತ್ಯಧಿಕ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಮಂಡ್ಯದಲ್ಲಿ ಶೇ.81.48ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದಲ್ಲಿ 52.81ರಷ್ಟು ಮತದಾನವಾಗಿದೆ. ನಗರ ಪ್ರದೇಶಕ್ಕಿಂತ ಗ್ರಾಮಾಂತರ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಹೆಚ್ಚಾಗಿದೆ. ನಿನ್ನೆ ನಡೆದ ಮತದಾನದ ವಿವರ ಈ ಕೆಳಕಂಡಂತಿದೆ. +ಉಡುಪಿ-ಚಿಕ್ಕಮಗಳೂರು-76.06, ಹಾಸನ-77.51, ದಕ್ಷಿಣ ಕನ್ನಡ-77.43, ಚಿತ್ರದುರ್ಗ-73.11, ತುಮಕೂರು-77.70, ಮಂಡ್ಯ-81.48, ಮೈಸೂರು-70.45, ಚಾಮರಾಜನಗರ-76.59, ಬೆಂಗಳೂರು ಗ್ರಾಮಾಂತರ- 67.29, ಬೆಂಗಳೂರು ಉತ್ತರ-54.42, ಬೆಂಗಳೂರು ಕೇಂದ್ರ-52.81, ಬೆಂಗಳೂರು ದಕ್ಷಿಣ- 53.15, ಚಿಕ್ಕಳ್ಳಾಪುರ-76.82 ಹಾಗೂ ಕೋಲಾರ ಕ್ಷೇತ್ರದಲ್ಲಿ 78.07ರಷ್ಟು ಮತದಾನವಾಗಿದೆ. \ No newline at end of file diff --git a/eesanje/url_46_167_5.txt b/eesanje/url_46_167_5.txt new file mode 100644 index 0000000000000000000000000000000000000000..fdcb79b0eea0501d917645664514c9885aa08718 --- /dev/null +++ b/eesanje/url_46_167_5.txt @@ -0,0 +1,9 @@ + : ಲೋಕಸಭೆ ಚುನಾವಣೆ-ರಾಜ್ಯದಲ್ಲಿ ಸರಾಸರಿ ಶೇ.70ರಷ್ಟು ಮತದಾನ +ಬೆಂಗಳೂರು, ಏ.26-ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಸರಾಸರಿ ಶೇ.70ರಷ್ಟು ಮತದಾನವಾಗಿದೆ. +ಮಂಡ್ಯ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಕಂಡುಬಂದಿದ್ದು, ಮತದಾನದ ಪ್ರಮಾಣ ನಿರೀಕ್ಷೆಯಂತೆ ಏರಿಕೆ ಆಗಿಲ್ಲ.ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದುದು ಕಂಡುಬಂತು. +ಹಲವೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ. ಆರಂಭದಲ್ಲಿ ಕೈಕೊಟ್ಟ ಮತಯಂತ್ರ. ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪದಂತಹ ಸಣ್ಣ-ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಯಾವುದೇ ರೀತಿಯ ಅಹಿತಕರ ಘಟನೆಗಳು ಈವರೆಗೆ ನಡೆದಿಲ್ಲ. +ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದುದು ಕಂಡುಬಂತು. ಮಧ್ಯಾಹ್ನ ಬಿರು ಬಿಸಿಲು ಹೆಚ್ಚಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು.ಮತಗಟ್ಟೆಗಳಿಗೆ ಹೆಚ್ಚಾಗಿ ಮಹಿಳೆಯರು ಆಗಮಿಸಿ ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. +ಯುವ ಮತದಾರರು, ನವಮತದಾರರಲ್ಲಿ ಉತ್ಸಾಹ ಹೆಚ್ಚಾಗಿರುವುದು ಹಲವೆಡೆ ಕಂಡುಬಂತು.ರಾಜಕಾರಣಿಗಳು, ಚಲನಚಿತ್ರ ನಟ, ನಟಿಯರು, ಖ್ಯಾತ ಕ್ರಿಕೆಟ್‌ ಪಟುಗಳು, ಕಿರುತೆರೆ ಕಲಾವಿದರು ಸೇರಿದಂತೆ ವಿವಿಧ ಗಣ್ಯರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿ ಗಮನ ಸೆಳೆದರು. +ಹೈವೋಲ್ಟೇಜ್‌ ಕ್ಷೇತ್ರಗಳಾದ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ ಸೇರಿದಂತೆ 14 ಕ್ಷೇತ್ರಗಳಿಗೂ ಸೂಕ್ತ ಭದ್ರತೆ ಒದಗಿಸಲಾಗಿದೆ. 70 ಕಂಪನಿ ಅರೆಸೇನಾ ಪಡೆ, ಡಿಎಆರ್‌ ಪ್ಲಟೂನ್‌, ಸಿಎಆರ್‌ ಮತ್ತು ಕೆಎಸ್‌‍ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ. +ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಳ್ಳಿ ಗ್ರಾಮದ ಜನರು ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮತದಾನ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಕೂಡ ನಡೆದಿದೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆಗೆ ಬೆಳಗ್ಗೆ 10 ಗಂಟೆಯಾದರೂ ಯಾವುದೇ ಮತದಾರರು ಬಂದಿರಲಿಲ್ಲ. +ಗ್ರಾಮದಲ್ಲಿ ಬಿಕೋ ಎನ್ನುವ ವಾತಾವರಣ ಕಂಡುಬಂದಿತ್ತು. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ತಮ ಬೆಂಬಲಿಗರ ಜೊತೆ ಮತಗಟ್ಟೆಗೆ ಆಗಮಿಸಿದ್ದರು ಎಂದು ಆಕ್ಷೇಪ ವ್ಯಕ್ತ ಪಡಿಸಿ ಬಿಜೆಪಿ-ಜೆಡಿಎಸ್‌‍ ಕಾರ್ಯಕರ್ತರು ಕಾಂಗ್ರೆಸ್‌‍ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದರೆ,ಕನಕಪುರದಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತಗಟ್ಟೆ ಬಳಿ ಗಿಫ್‌್ಟ ಕೂಪನ್‌ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್‌‍-ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೇ.7 ಕ್ಕೆ 14 ಕ್ಷೇತ್ರಗಳಿಗೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_167_6.txt b/eesanje/url_46_167_6.txt new file mode 100644 index 0000000000000000000000000000000000000000..88be34e8324047e9638b728befdb8453ba26a2fb --- /dev/null +++ b/eesanje/url_46_167_6.txt @@ -0,0 +1,10 @@ +ರಾಜ್ಯದಲ್ಲಿ ಸಂಜೆ 5 ಗಂಟೆ ವೇಳೆಗೆ ಶೇ.63.90ರಷ್ಟು ಮತದಾನ +ಬೆಂಗಳೂರು, ಏ.26-ದೇಶದ ಭವಿಷ್ಯದ ಮುನ್ನುಡಿ ಬರೆಯುವ ಲೋಕಸಭೆ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಇಂದು ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಮತದಾನ ಬೆಳಗ್ಗೆಯಿಂದಲೇ ಬಿರುಸಿನಿಂದ ಕೂಡಿದ್ದು ಸಂಜೆ 5 ಗಂಟೆ ವೇಳೆಗೆ ಶೇ.63.90%ರಷ್ಟು ಮತದಾನವಾಗಿದೆ +ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ ಮತದಾನವಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರಿನ ಮತದಾರರಲ್ಲಿ ನಿರುತ್ಸಾಹ ಕಂಡುಬಂದಿದ್ದು, ಮತದಾನದ ಪ್ರಮಾಣ ನಿರೀಕ್ಷೆಯಂತೆ ಏರಿಕೆ ಆಗಿಲ್ಲ.ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲೂ ಜನರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದುದು ಕಂಡುಬಂತು. +ಹಲವೆಡೆ ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ. ಆರಂಭದಲ್ಲಿ ಕೈಕೊಟ್ಟ ಮತಯಂತ್ರ. ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಆರೋಪ-ಪ್ರತ್ಯಾರೋಪದಂತಹ ಸಣ್ಣ-ಪುಟ್ಟ ಘಟನೆಗಳನ್ನು ಹೊರತು ಪಡಿಸಿದರೆ ಯಾವುದೇ ರೀತಿಯ ಅಹಿತಕರ ಘಟನೆಗಳು ಈವರೆಗೆ ನಡೆದಿಲ್ಲ. +ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದುದು ಕಂಡುಬಂತು. ಮಧ್ಯಾಹ್ನ ಬಿರು ಬಿಸಿಲು ಹೆಚ್ಚಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಮಹಿಳೆಯರು, ಹಿರಿಯ ನಾಗರಿಕರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದರು.ಮತಗಟ್ಟೆಗಳಿಗೆ ಹೆಚ್ಚಾಗಿ ಮಹಿಳೆಯರು ಆಗಮಿಸಿ ಮತದಾನ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. +ಯುವ ಮತದಾರರು, ನವಮತದಾರರಲ್ಲಿ ಉತ್ಸಾಹ ಹೆಚ್ಚಾಗಿರುವುದು ಹಲವೆಡೆ ಕಂಡುಬಂತು.ರಾಜಕಾರಣಿಗಳು, ಚಲನಚಿತ್ರ ನಟ, ನಟಿಯರು, ಖ್ಯಾತ ಕ್ರಿಕೆಟ್‌ ಪಟುಗಳು, ಕಿರುತೆರೆ ಕಲಾವಿದರು ಸೇರಿದಂತೆ ವಿವಿಧ ಗಣ್ಯರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿ ಗಮನ ಸೆಳೆದರು. +ಮಧ್ಯಾಹ್ನ 1 ಗಂಟೆ ವೇಳೆಗೆ ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳಾದ ಬೆಂಗಳೂರು ಉತ್ತರದಲ್ಲಿ ಶೇ. 32.25, ಬೆಂಗಳೂರು ದಕ್ಷಿಣದಲ್ಲಿ ಶೇ. 31.51, ಬೆಂಗಳೂರು ಕೇಂದ್ರದಲ್ಲಿ ಶೇ.30.10, ಹಾಗೂ ಉಡುಪಿ-ಚಿಕ್ಕಮಗಳೂರು ಶೇ.46.43, ಹಾಸನ ಶೇ. 40.99, ದಕ್ಷಿಣ ಕನ್ನಡ ಶೇ. 48.10, ಚಿತ್ರದುರ್ಗ ಶೇ. 39.05, ತುಮಕೂರು ಶೇ. 41.91, ಮಂಡ್ಯ ಶೇ.40.70, ಮೈಸೂರು ಶೇ. 41.58, ಚಾಮರಾಜನಗರ ಶೇ. 39.57, ಬೆಂಗಳೂರು ಗ್ರಾಮಾಂತರ ಶೇ. 36.09, ಚಿಕ್ಕಬಳ್ಳಾಪುರ ಶೇ.39.85, ಕೋಲಾರ ಶೇ. 38.42 ರಷ್ಟು ಮತದಾನವಾಗಿತ್ತು. +ಹೈವೋಲ್ಟೇಜ್‌ ಕ್ಷೇತ್ರಗಳಾದ ಮಂಡ್ಯ, ಬೆಂಗಳೂರು ಗ್ರಾಮಾಂತರ, ಹಾಸನ ಸೇರಿದಂತೆ 14 ಕ್ಷೇತ್ರಗಳಿಗೂ ಸೂಕ್ತ ಭದ್ರತೆ ಒದಗಿಸಲಾಗಿದೆ. 70 ಕಂಪನಿ ಅರೆಸೇನಾ ಪಡೆ, ಡಿಎಆರ್‌ ಪ್ಲಟೂನ್‌, ಸಿಎಆರ್‌ ಮತ್ತು ಕೆಎಸ್‌‍ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.ಸೂಕ್ಷ್ಮ ಮತಗಟ್ಟೆಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ. +ಕೋಲಾರ ತಾಲ್ಲೂಕಿನ ಕೆ.ಬಿ.ಹೊಸಳ್ಳಿ ಗ್ರಾಮದ ಜನರು ಮೂಲಭೂತ ಸೌಕರ್ಯ ಕೊರತೆ ಆರೋಪಿಸಿ ಮತದಾನ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಘಟನೆ ಕೂಡ ನಡೆದಿದೆ.ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿದ ಮತಗಟ್ಟೆಗೆ ಬೆಳಗ್ಗೆ 10 ಗಂಟೆಯಾದರೂ ಯಾವುದೇ ಮತದಾರರು ಬಂದಿರಲಿಲ್ಲ. +ಗ್ರಾಮದಲ್ಲಿ ಬಿಕೋ ಎನ್ನುವ ವಾತಾವರಣ ಕಂಡುಬಂದಿತ್ತು. ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ತಮ ಬೆಂಬಲಿಗರ ಜೊತೆ ಮತಗಟ್ಟೆಗೆ ಆಗಮಿಸಿದ್ದರು ಎಂದು ಆಕ್ಷೇಪ ವ್ಯಕ್ತ ಪಡಿಸಿ ಬಿಜೆಪಿ-ಜೆಡಿಎಸ್‌‍ ಕಾರ್ಯಕರ್ತರು ಕಾಂಗ್ರೆಸ್‌‍ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದರೆ,ಕನಕಪುರದಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತಗಟ್ಟೆ ಬಳಿ ಗಿಫ್‌್ಟ ಕೂಪನ್‌ ಹಂಚುತ್ತಿದ್ದಾರೆಂದು ಆರೋಪಿಸಿ ಜೆಡಿಎಸ್‌‍-ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಮೇ.7 ಕ್ಕೆ 14 ಕ್ಷೇತ್ರಗಳಿಗೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_167_7.txt b/eesanje/url_46_167_7.txt new file mode 100644 index 0000000000000000000000000000000000000000..010513f3f41c9e4739b8d915af68c8f302197d6f --- /dev/null +++ b/eesanje/url_46_167_7.txt @@ -0,0 +1,6 @@ +20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ : ಸಿಎಂ ಸಿದ್ದರಾಮಯ್ಯ +ಮೈಸೂರು,ಏ.26- ರಾಜ್ಯದಲ್ಲಿ ಕಾಂಗ್ರೆಸ್‌ಗೆ ಉತ್ತಮವಾದ ವಾತಾವರಣ ಇದ್ದು 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ಸಿಎಂ,ಮೊದಲ ಹಂತದ 14ರಲ್ಲಿ ಹೆಚ್ಚು ಸ್ಥಾನವನ್ನು ನಾವೇ ಗೆಲ್ಲುತ್ತೇವೆ ಆದರೆ ಅದರಲ್ಲಿ ಎಷ್ಟು ಅಂಥ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು. +ಮೈಸೂರು, ಚಾಮರಾಜನಗರ, ಮಂಡ್ಯ,ಹಾಸನ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ, ಜನರು ಗ್ಯಾರೆಂಟಿಗೆ ಮತ ಹಾಕುತ್ತಾರೆ ಹಾಗಾಗಿ ನಾವು ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು. ಕಳೆದ ಮೂರು ದಿನಗಳಿಂದ ಮೋದಿ ಮಾಡುತ್ತಿರುವ ಭಾಷಣ ಹತಾಶೆಯಿಂದ ಮಾಡಿದಂತಿದೆ, ಅವರ ಭಾಷಣ ಓಲೈಕೆ ಅಲ್ಲ ಪ್ರಚೋದನೆಯಿಂದ ಕೂಡಿದೆ, ಅವರ ಭಾಷಣ ಆರ್‌ ಎಸ್‌ ಎಸ್‌ ನ ಭಾಷಣ ಎಂದು ಸಿದ್ದು ಟೀಕಿಸಿದರು. +ಅಲ್ಪ ಸಂಖ್ಯಾತರ ಸವಲತ್ತುಗಳನ್ನ ಮುಸ್ಲಿಂರಿಗೆ ಕೊಡುತ್ತಾರೆ ಎಂಬ ವಿಚಾರ ಎಲ್ಲ ಆರ್‌ ಎಸ್‌ ಎಸ್‌ ನ ಹಿಡನ್‌ ಅಜೆಂಡಾ. ಮೋದಿ ಬಂದು ಪ್ರಚಾರ ಮಾಡಲಿ ಎಂದು ಹೇಳಿದರು. ಇದೇ ವೇಳೆ ದೇವೇಗೌರ ಬಗ್ಗೆಯೂ ವಾಗ್ದಾಳಿ ನಡೆಸಿದ ಸಿಎಂ, ದೇವೇಗೌಡರ ಕಣ್ಣಿರು ಕೃತಕವಾದದ್ದು ಎಂದು ಟೀಕಿಸಿದರು. +ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು, ಆದರೆ ದೇವೇಗೌಡರ ಕುಟುಂಬದವರು ಯಾವಗಲೂ ಕಣ್ಣೀರು ಹಾಕುತ್ತಾರೆ, ಇದೆಲ್ಲ ಕೃತಕವಾದದ್ದು ಎಂದು ಟೀಕಿಸಿದರು.ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ, ಆದರೂ ಮೋದಿ ಅದೇ ರೀತಿ ಭಾಷಣ ಮುಂದುವರೆಸುತ್ತಿದ್ದಾರೆ ಎಂದು ಸಿದ್ದು ದೂರಿದರು. +ಮೊದಲ ಹಂತದ ಚುನಾವಣೆಯಲ್ಲಿ 105 ಸ್ಥಾನಗಳ ಸ್ಪರ್ಧೆಯಲ್ಲಿ ಎನ್‌ ಡಿಎ ಮೈತ್ರಿ ಕೂಟ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಎಡವಟ್ಟು ಮಾಡಿದರು,ಐ ಎನ್‌ ಡಿ ಐ ಎ ಎನ್ನುವ ಬದಲು ಎನ್‌ಡಿಎ ಎಂದು ಹೇಳಿದರು. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಕೂಡಾ ಇದೇ ರೀತಿ ಎಡವಟ್ಟು ಮಾಡಿ ಸುದ್ದಿಯಾಗಿದ್ದನ್ನು ಸ್ಮರಿಸಬಹುದು. \ No newline at end of file diff --git a/eesanje/url_46_167_8.txt b/eesanje/url_46_167_8.txt new file mode 100644 index 0000000000000000000000000000000000000000..bb1a3ef163b9685b0911b5b067bc8ccc288b53d0 --- /dev/null +++ b/eesanje/url_46_167_8.txt @@ -0,0 +1,5 @@ +ಮತದಾರರಿಗೆ ಆಮಿಷವೊಡ್ಡಿದ ಆರೋಪದಲ್ಲಿ ಸುಧಾಕರ್‌ ವಿರುದ್ಧ ಎಫ್‌ಐಆರ್‌ +ಬೆಂಗಳೂರು,ಏ.26-ಆಪ್ತನ ಮನೆಯಲ್ಲಿ 4.8 ಕೋಟಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. +ಚಿಕ್ಕಬಳ್ಳಾಪುರದ ಫ್ಲೈಯಿಂಗ್‌ ಸ್ಕ್ವಾಡ್ ತಂಡ (ಎಫ್‌ಎಸ್‌ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4.8 ಕೋಟಿ ರೂ. ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್‌ಎಸ್‌ಟಿ ವಶಪಡಿಸಿಕೊಂಡಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. +ಚಿಕ್ಕಬಳ್ಳಾಪುರ ಕ್ಷೇತ್ರದ ರಾಜ್ಯ ಕಣ್ಗಾವಲು ತಂಡವು ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್‌ ವಿರುದ್ಧ ಏಪ್ರಿಲ್‌ 25ರಂದು ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿದೆ. +ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪದ ಮೇರೆಗೆ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಯೋಗ ಪೋಸ್ಟ್ ಮಾಡಿದೆ. \ No newline at end of file diff --git a/eesanje/url_46_167_9.txt b/eesanje/url_46_167_9.txt new file mode 100644 index 0000000000000000000000000000000000000000..4c152bfd15be90954ae988b25b8f7c5fc1091344 --- /dev/null +++ b/eesanje/url_46_167_9.txt @@ -0,0 +1,5 @@ +ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಭ್ಯಾಸ : ಜೋಶಿ ಲೇವಡಿ +ಹುಬ್ಬಳ್ಳಿ, ಏ.26-ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡೋದನ್ನು ಕಾಂಗ್ರೆಸ್‌ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ ಎಂದು ಟೀಕಿಸಿದರು. +ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗೂ ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಿದ್ದಾರೆ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. +ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್‌:ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ನಡೆಸಿ ದೇಶದ ಪ್ರತಿಯೊಬ್ಬರ ಕೈಗೂ ಚೊಂಬು ಕೊಟ್ಟಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು ಎಂದು ಸಚಿವ ಜೋಶಿ ಹರಿ ಹಾಯ್ದರು. +ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳಿಸಿತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಕುಟುಕಿದರು.ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ, ನೆನಪಿಟ್ಟುಕೊಳ್ಳಿ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. \ No newline at end of file diff --git a/eesanje/url_46_168_1.txt b/eesanje/url_46_168_1.txt new file mode 100644 index 0000000000000000000000000000000000000000..0fecfa4c1b164d075deb8faa5e5faee2b79f606d --- /dev/null +++ b/eesanje/url_46_168_1.txt @@ -0,0 +1,5 @@ +ತಲಾ ಒಂದು ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್‌ ಕರಪತ್ರ ಹಂಚಿಕೆ : ದೂರು ನೀಡಲು ಮುಂದಾದ ದೇವೇಗೌಡರು +ಹಾಸನ,ಏ.26-ಯುವಕರಿಗೆ ಹಾಗೂ ಮಹಿಳೆಯರಿಗೆ ತಲಾ ಒಂದು ಲಕ್ಷ ರೂ. ನೀಡುವುದಾಗಿ ಕಾಂಗ್ರೆಸ್‌ ಕರಪತ್ರ ಪ್ರಕಟಿಸಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು. +ಪಡುವಲಹಿಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವಕರು ಹಾಗೂ ಮಹಿಳೆಯರಿಗೆ ತಲಾ ಒಂದು ಲಕ್ಷ ಕೊಡುವುದಾಗಿ ಪಾಂಪ್ಲೆಟ್‌ ಪ್ರಕಟಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಸ್ಟೇಟಸ್‌ ಏನು ಎಂದು ಪ್ರಶ್ನಿಸಿದರು. +ಇವರೇನು ರಾಜ್ಯದ ಮುಖ್ಯಮಂತ್ರಿಯೋ ಅಥವಾ ಉಪಮುಖ್ಯಮಂತ್ರಿ ಆಗಿದ್ದಾರೆಯೇ? ಒಂದು ವೇಳೆ ಈ ಸ್ಥಾನಗಳಲ್ಲಿ ಅವರಿದ್ದರ ಆ ರೀತಿಯ ಪ್ರಚಾರವನ್ನು ಒಪ್ಪಬಹುದಿತ್ತು ಎಂದರು. +ನೆರೆಯ ಕೇರಳ, ತಮಿಳುನಾಡಿನಲ್ಲಿ ಇಲ್ಲದ ಈ ರೀತಿಯ ಭರವಸೆಯ ಪ್ರಕಟಣೆ ಕರ್ನಾಟಕದಲ್ಲಿ ಮಾತ್ರ ಏಕೆ ಎಂದು ಪ್ರಶ್ನಿಸಿದ ಅವರು, ಈ ಸಂಬಂಧ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_168_10.txt b/eesanje/url_46_168_10.txt new file mode 100644 index 0000000000000000000000000000000000000000..4dcc120fa736e5819186a0ed39190189be95e545 --- /dev/null +++ b/eesanje/url_46_168_10.txt @@ -0,0 +1,21 @@ +ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ( ) +ಬೆಂಗಳೂರು,ಏ.26-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇಂದು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ, ನಿಗದಿತ ಸಮಯದಂತೆ ಬೆಳಿಗ್ಗೆ 7 ಗಂಟೆಯಿಂದಲೇ 14 ಕ್ಷೇತ್ರಗಳ 30,602 ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದೆ. ಶಾಂತಿಯುತ ಮುಕ್ತ ಮತದಾನಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು. ಮತದಾರರು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿರುವುದು ಬಹುತೇಕ ಕಡೆಗಳಲ್ಲಿ ಕಂಡುಬಂದಿದೆ. +ವಿಶೇಷ ಮತಗಟ್ಟೆಗಳಲ್ಲೂ ಕೂಡ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾ ಕಚೇರಿ ಪ್ರಕಟಣೆ ತಿಳಿಸಿದೆ.ಯುವ ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸುತ್ತಿರುವ ಮಾಹಿತಿ ಬಂದಿದೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದ್ದಾರೆ. ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ಅಹಿತಕರ ಘಟನೆ ನಡೆದಿಲ್ಲ. ಮತಗಟ್ಟೆಗಳಲ್ಲಿ ಮತದಾರರಿಗೆ ಅನುಕೂಲವಾಗುವಂತೆ ನೆರಳು, ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್‌ಕಾಸ್ಟಿಂಗ್‌ ಮಾಡಲಾಗುತ್ತಿದೆ. ಒಟ್ಟಾರೆ 19,701 ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್‌ ಹಾಗೂ 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಎಲ್ಲಾ ರೀತಿಯ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೂಕ್ತ ಭದ್ರತೆಯನ್ನು ಮತಗಟ್ಟೆಗಳಲ್ಲಿ ಒದಗಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. +ಪ್ರಧಾನಿ ಕನ್ನಡಲ್ಲೇ ಟ್ವೀಟ್ ಮನವಿ : +ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ… +ಲೋಕಸಭೆ ಚುಣಾವಣೆಗೆ ಇಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ದಾಖಲೆಯ ಸಂಖ್ಯೆಯಲ್ಲಿ ಮತದಾರರು ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ.ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ಎಂದು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. +ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ( ) + + +ಮತದಾನ ಮಾಡಿದ ಶ್ರೀ ರಂಭಾಪುರಿ ಜಗದ್ಗುರು ; +ಶ್ರೀ ರಂಭಾಪುರಿ ಪೀಠ (ಬಾಳೆಹೊನ್ನೂರು) , ಏ.26-ಲೋಕಸಭಾ ಚುನಾವಣೆಯ ಅಂಗವಾಗಿ ಇಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಮತ ಚಲಾಯಿಸಿದರು.ಮತದಾನದ ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಯಶಸ್ವಿಗಾಗಿ ಪ್ರತಿಯೊಬ್ಬರೂ ಕೂಡಾ ಮತ ಚಲಾವಣೆ ಮಾಡುವುದು ಅವಶ್ಯಕ. +ಮತದಾನ ಸಂವಿಧಾನ ನೀಡಿದ ಉನ್ನತ ಹಕ್ಕು ಎಂಬುದನ್ನು ಮರೆಯಬಾರದು. ರಾಜ್ಯದಲ್ಲಿ ಎರಡು ಹಂತದ ಮತದಾನ ನಡೆಯುತ್ತಿದ್ದು ಮೊದಲ ಹಂತದ ಮತದಾನದಲ್ಲಿ ತಾವು ಮತ ಚಲಾಯಿಸಿದ್ದೇವೆ. ಸುಭದ್ರ ಮತ್ತು ಸದೃಢ ಸರ್ಕಾರದ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು. +0 + +ಮತದಾನ ಮಾಡಿ ಮಾದರಿಯಾದ 91 ವರ್ಷದ ಮಂಜುನಾಥ್‌ಅರಸೀಕೆರೆ, ಏ.26- ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ನಗರದ 13ನೇ ವಾರ್ಡಿನಲ್ಲಿ ವಾಸವಿರುವ 91 ವರ್ಷದ ಮಂಜುನಾಥ್‌ ರಾವ್‌ ಮತಗಟ್ಟೆ ಸಂಖ್ಯೆ 132 ರಲ್ಲಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಯುವ ಮತದಾರರಿಗೆ ಮತದಾನದ ಮಹತ್ವ ಸಾರಿದರು. +ಬಾನಂಗಳದಲ್ಲಿ ಸೂರ್ಯ ತನ್ನ ದಿನಚರಿ ಆರಂಭಿಸುತ್ತಿದ್ದಂತೆಯೇ ಇತ್ತ ಚುನಾವಣಾ ಅಧಿ ಕಾರಿಗಳು ಸಹ ತಮ್ಮ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಿದರು ಈ ವೇಳೆ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದ ಮಂಜುನಾಥರಾಯರು ಸರದಿ ಸಾಲಿನಲ್ಲಿ ನಿಂತು ತಮ್ಮ ಮತದಾನ ಮಾಡುವ ಮೂಲಕ ಮತದಾನದ ಅರಿವು ಮೂಡಿಸಿದರು. +ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಂದೊಂದು ಜಾತಿ ಧರ್ಮದವರಿಗೆ ತಮ್ಮದೇ ಆದ ರೀತಿಯಲ್ಲಿ ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವ ಸಂಪ್ರದಾಯವಿರುತ್ತದೆ ಆದರೆ ದೇಶದಲ್ಲಿ ವಾಸ ಮಾಡುತ್ತಿರುವ ಹಿಂದೂ, ಮುಸ್ಲಿಂ, ಕ್ರೈಸ್ತ , ಸಿಖ್‌್ಖ , ಜೈನ ಹೀಗೆ ಯಾವುದೇ ಧರ್ಮವಿರಲಿ, ಜಾತಿ ಇರಲಿ ಅವರೆಲ್ಲರೂ ಒಗ್ಗಟ್ಟಿನಿಂದ ಮಾಡಬಹುದಾದ ಹಬ್ಬವೆಂದರೆ ಅದು ಪ್ರಜಾಪ್ರಭುತ್ವದ ಹಬ್ಬ ಮತದಾನವೆಂಬ ಪೂಜೆ. +ಈ ಹಬ್ಬವನ್ನು ಎಲ್ಲರೂ ತಪ್ಪದೇ ಆಚರಣೆ ಮಾಡುವ ಮೂಲಕ ರಾಜ್ಯ ಹಾಗೂ ದೇಶದ ಅಭಿವೃದ್ಧಿಯ ಚಿಂತನೆಯೊಂದಿಗೆ ತಮ್ಮ ನೆಚ್ಚಿನ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ರಾಜ್ಯ ಹಾಗೂ ದೇಶದ ಪ್ರಗತಿಗೆ ಕಾರಣೀಭೂತರಾಗುವಂತೆ ಮನವಿ ಮಾಡಿದರು. +ಪ್ರತಿಜ್ಞೆ : ಸಂವಿಧಾನ ನನಗೆ ಕೊಟ್ಟಿರುವ ಮತದಾನದ ಹಕ್ಕನ್ನು ದೇಶದ ಅತ್ಯಂತ ಜವಾಬ್ದಾರಿಯುತ ನಾಗರಿಕನಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಿಂದ ಹಿಡಿದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ತಪ್ಪದೇ ಪಾಲ್ಗೊಂಡು ಮತದಾನ ಮಾಡುವ ಪ್ರತಿಜ್ಞೆ ಮಾಡಿರುವುದಲ್ಲದೆ ಪಾಲಿಸುತ್ತಾ ಬಂದಿದ್ದೇನೆ. ಅದೇ ರೀತಿ ಪ್ರತಿಯೊಬ್ಬರೂ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನ ಮಾಡುವ ಪ್ರತಿಜ್ಞೆ ಮಾಡಬೇಕು ಎಂದು ಕರೆ ನೀಡಿದರು. +0 \ No newline at end of file diff --git a/eesanje/url_46_168_11.txt b/eesanje/url_46_168_11.txt new file mode 100644 index 0000000000000000000000000000000000000000..cecbb15e76e3862043523f9b2d32ad845fecbc40 --- /dev/null +++ b/eesanje/url_46_168_11.txt @@ -0,0 +1,6 @@ +ಎಲೆಕ್ಷನ್ ಎಫೆಕ್ಟ್, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬಸ್-ರೈಲುಗಳಲ್ಲಿ ಜನಜಂಗುಳಿ +ಬೆಂಗಳೂರು, ಏ.25-ನಾಳೆ ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಜನರು ಊರುಗಳತ್ತ ತೆರಳುತ್ತಿದ್ದು ಬಸ್ಗಳು, ರೈಲುಗಳು ಫುಲ್ರಷ್ ಆಗಿವೆ. +ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಮೊದಲ ಹಂತದ 14 ಲೋಕಸಭಾ ಕ್ಷೇತ್ರದ ಜನರು ರಾತ್ರಿಯೇ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಆದರೆ ಚುನಾವಣಾ ಕಾರ್ಯಕ್ಕೆ ಸಾರಿಗೆ ಬಸ್ಗಳನ್ನು ಬಳಸಿಕೊಳ್ಳಲಾಗಿದ್ದು, ಕೊರತೆ ಎದುರಾದ ಹಿನ್ನೆಲೆಯಲ್ಲಿ ಇರುವ ಬಸ್ಗಳಲ್ಲಿ ಜನ ಫುಲ್ ರಶ್ ಆಗಿದೆ. ಮೈಸೂರು, ಮಂಡ್ಯ, ಹಾಸನ, ತುಮಕೂರು, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ತಾಲೂಕು ಜಿಲ್ಲೆಗಳಿಗೆ ತೆರಳಲು ರಾತ್ರಿಯೇ ಜನರು ಬಸ್ ನಿಲ್ದಾಣಕ್ಕೆ ಜಮಾಯಿಸಿದ್ದರು. +ಇಂದು ಬೆಳಗ್ಗೆ ಕೂಡ ಮೆಜೆಸ್ಟಿಕ್, ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಕೆಲವರು ಸಾರಿಗೆ ಬಸ್ಗಳ ರಶ್ ನೋಡಿ ಖಾಸಗಿ ಬಸ್ಗಳತ್ತ ಮುಖ ಮಾಡಿದ್ದು, ಇದನ್ನೆ ಬಂಡವಾಳವನ್ನಾಗಿ ಮಾಡಿಕೊಂಡ ಕೆಲ ಖಾಸಗಿ ಬಸ್ನವರು ಟಿಕೆಟ್ ದರ ಹೆಚ್ಚಳ ಮಾಡಿದ್ದರು. ಆದರೂ ಅನಿವಾರ್ಯವಾಗಿ ಜನರು ತೆರಳಿದರು. ಇನ್ನೂ ಕೆಲವರು 15 ದಿನಗಳ ಹಿಂದೆಯೇ ಮುಂಗಡವಾಗಿ ಟಿಕೆಟ್ಗಳನ್ನು ಬುಕ್ಕಿಂಗ್ ಮಾಡಿಕೊಂಡು ತೆರಳಿದರು. ಕೆಲವರು ಇಂದು ಸಂಜೆ ಕೆಲಸ ಮುಗಿಸಿಕೊಂಡು ಖಾಸಗಿ ಕಾರು, ಟ್ರಾವೆಲ್ಸ್ , ಬೈಕ್ಗಳಲ್ಲಿ ತೆರಳಿದ್ದಾರೆ. +ನಾಳೆ ಮತದಾನ ರಜೆ. ಶನಿವಾರ, ಭಾನುವಾರ ಸೇರಿ ಮೂರು ದಿನ ಸಾಲು ಸಾಲು ರಜೆ ಬಂದಿದ್ದು, ಕುಟುಂಬ ಸಮೇತ ಜನರು ಊರುಗಳತ್ತ ತೆರಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಎರಡನೆ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಆ ಭಾಗದ ಜನರು ಮಾತ್ರ ಉಳಿದಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಗಳು ಎಂದಿನಂತೆ ಸಂಚಾರ ನಡೆಸಿವೆ. +ಬಿಎಂಟಿಸಿ ಬಸ್ಗಳು ವಿರಳ:ಬೆಂಗಳೂರು ಲೊಕಸಭಾ ಕ್ಷೇತ್ರಗಳ ಚುನಾವಣಾ ಕಾರ್ಯಕ್ಕೆ ಬಿಎಂಟಿಸಿ ಬಸ್ಗಳನ್ನು ತೆಗೆದುಕೊಳ್ಳಲಾಗಿದ್ದು, ಇಂದು ಬೆಳಗ್ಗೆ ಬಸ್ಗಳ ಸಂಖ್ಯೆ ಕಡಿಮೆ ಇತ್ತು. ಬಸ್ಗಳ ಕೊರತೆಯಿಂದ ಕೆಲಸ-ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದ್ದು, ಇರುವ ಬಸ್ಗಳು ಫುಲ್ ರಷ್ ಆಗಿದ್ದು, ಅನಿವಾರ್ಯವಾಗಿ ಜನರು ಪ್ರಯಾಣಿಸಿದರು. \ No newline at end of file diff --git a/eesanje/url_46_168_12.txt b/eesanje/url_46_168_12.txt new file mode 100644 index 0000000000000000000000000000000000000000..c604f435e1c4ee7fd4d3257008b2f173e97e53a8 --- /dev/null +++ b/eesanje/url_46_168_12.txt @@ -0,0 +1,8 @@ +ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ +ಬೀದರ್,ಏ.25-ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಯಥಾರೀತಿಯಾಗಿ ಮುಂದುವರೆಸುವುದಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವುದನ್ನು ಮರೆತಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. +ಬೀದರ್ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಸ್ಸಿ, ಎಸ್ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಟೀಕಿಸಿದ್ದಾರೆ. ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ ಸಮುದಾಯಕ್ಕೆ ಶೇ.4 ರಷ್ಟು ಮೀಸಲಾತಿ 1994 ರಿಂದ ಜಾರಿಗೆ ಬಂದಿದೆ ಎಂದರು. +ರಾಜ್ಯದಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಈ ಮೀಸಲಾತಿಯನ್ನು ಹಿಂಪಡೆಯಲಾಗಿತ್ತು. ಮುಸ್ಲಿಂ ಸಮುದಾಯ ಸುಪ್ರೀಂಕೋರ್ಟ್ನ ಮೊರೆ ಹೋಗಿದೆ. ವಿಚಾರಣೆಯ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ನ ಮುಂದೆ ಶೇ.4 ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದೆ, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದು ತಿಳಿಸಿದರು. +ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಒತ್ತಾಯ ಮಾಡುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲಿ ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ ಉದಾಹರಣೆ ಇದೆಯೇ? ಎಂದು ಪ್ರಶ್ನಿಸಿದರು. +ನಾನು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಬಿಜೆಪಿಯವರಿಗೆ ಕೇಳಲು ಯಾವ ನೈತಿಕ ಹಕ್ಕಿದೆ. ಇದರಲ್ಲಿ ರಾಜಕೀಯ ಮಾಡಬಾರದು. ನೇಹಾ ಹತ್ಯೆ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಸರ್ಕಾರಿ ಅಭಿಯೋಜಕರೊಂದಿಗೆ ಮಾತನಾಡಿದ್ದು, ಸರ್ಕಾರ ಈಗಾಗಲೇ ಆರೋಪಿಯನ್ನು ಬಂಧಿಸಿದೆ. ಸಿಐಡಿ ತನಿಖೆ ನಡೆದಿದ್ದು ಆರೋಪಪಟ್ಟಿಯನ್ನು ತಯಾರಿಸಲಿದೆ ಎಂದರು. +ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೇಡ :ನೇಹಾ ತಂದೆಯವರು ತಮ್ಮ ಮಗಳ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವೇ ರಾಜಕೀಯ ಮಾಡುತ್ತಿದೆ ಹಾಗೂ ಬಿಜೆಪಿಯವರೂ ಇದೇ ಧೋರಣೆಯನ್ನು ಹೊಂದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನೇಹಾ ಕೊಲೆ ಅನ್ಯಾಯವಾದುದು. ಅದನ್ನು ನಾವು ಖಂಡಿಸಿದ್ದೇವೆ. ಇತರೆ ಪಕ್ಷಗಳು ಅದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು. +ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ :ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನರ ಆಸ್ತಿ ಕಸಿದುಕೊಂಡು ಸಂಪತ್ತು ಹಂಚುವ ಬಗ್ಗೆ ಮೋದಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಈಡೇರಿಸಿದರೇ ಅಗತ್ಯವಸ್ತುಗಳ ಬೆಲೆಯನ್ನು ಮೋದಿಯವರು ಕಡಿಮೆ ಮಾಡಿದ್ದಾರೆಯೇ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. \ No newline at end of file diff --git a/eesanje/url_46_168_2.txt b/eesanje/url_46_168_2.txt new file mode 100644 index 0000000000000000000000000000000000000000..1e9219510763e6f816c5a9ae05e5403c37193292 --- /dev/null +++ b/eesanje/url_46_168_2.txt @@ -0,0 +1,8 @@ +ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ +ಬೆಂಗಳೂರು,ಏ.26-ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ ಅಭ್ಯರ್ಥಿಗಳು ಮತ್ತು ಮತದಾರರು ಮತದಾನದ ನಂತರ ಮೊಬೈಲ್‌ ರೆಕಾರ್ಡ್‌ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ನಡೆದಿವೆ. ಮತದಾನದ ವೇಳೆ ಅದರಲ್ಲೂ ವಿವಿಎಂ ಬಳಿ ಯಾರೊಬ್ಬರೂ ಸೆಲ್ಫಿ ತೆಗೆದುಕೊಳ್ಳುವುದು ಇಲ್ಲವೇ ಮತದಾನದ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬಾರದೆಂದು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. +ಆಯೋಗದ ಈ ಸೂಚನೆಯನ್ನು ಧಿಕ್ಕರಿಸಿ ಕೆಲವು ಕಡೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರೆ ಇನ್ನು ಕೆಲವು ಕಡೆ ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರಿಗೆ ಮತ ಹಾಕಿ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಜೊತೆಗೆ, ಬ್ಯಾಲೆಟ್‌ ಪೇಪರ್‌ ಮುದ್ರಣ ಆಗುವುದನ್ನೂ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಗುರುರಾಜ್‌ ಅಂಜನ್‌ ಎನ್ನುವವರು ಟ್ವಿಟರ್ನಲ್ಲಿ ಹಂಚಿಕೊಂಡು ಒಳ್ಳೆಯ ಕಾರ್ಯವನ್ನು ಶುಭ ಮುಂಜಾನೆಯೇ ಆರಂಭ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾನೆ. +ದಕ್ಷಿಣ ಕನ್ನಡ ಪುತ್ತೂರಿನಲ್ಲಿಯೂ ನಿಯಮ ಉಲ್ಲಂಘನೆ:ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪುತ್ತೂರಿನ ಮತಗಟ್ಟೆಯೊಂದರಲ್ಲಿ ರಂಜಿತ್‌ ಬಂಗೇರ ಎಂಬ ಯುವಕ ಮತದಾನ ಮಾಡುವಾಗ ತಾನು ಕಾಂಗ್ರೆಸ್‌‍ ಅಭ್ಯರ್ಥಿಗೆ ಮತ ಹಾಕಿದ್ದೇನೆ ಎಂದು ಫೋಟೋ ತೆಗೆದುಕೊಂಡು ಶೇರ್‌ ಮಾಡಿಕೊಂಡಿದ್ದಾರೆ. +ತಾನು ಮತದಾನ ಮಾಡಿದ ಯುವಕ ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್‌ ಗೆ ಮತದಾನ ಮಾಡುವ ಫೋಟೊ ಶೇರ್‌ ಮಾಡಿಕೊಂಡಿದ್ದಾನೆ. ಮತಗಟ್ಟೆಯೊಳಗೆ ಮೊಬೈಲ್‌ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆ ಮಾಡಿದ್ದಾನೆ. +ಕೋಲಾರದಲ್ಲೂ ನಿಯಮ ಉಲ್ಲಂಘನೆ:ಪ್ರಜಾಪ್ರಭುತ್ವದ ಪ್ರಮುಖ ಹಕ್ಕಾಗಿರುವ ಮತದಾನವನ್ನು ಚಲಾವಣೆ ಮಾಡಲು 18 ವರ್ಷ ಪೂರೈಸಿದ ಎಲ್ಲ ಭಾರತೀಯ ನಾಗರಿಕರಿಗೂ ಹಕ್ಕಿದೆ. ನಮ್ಮ ದೇಶದಲ್ಲಿ ಗೌಪ್ಯ ಮತದಾನ ವ್ಯವಸ್ಥೆ ಇದೆ. ಆದರೆ, ಈ ನಿಯಮ ಉಲ್ಲಂಘಿಸುವ ಮತದಾರರು ತಾವು ಮತದಾನ ಮಾಡಿದ್ದಾರೆ. +ಕೋಲಾರದಲ್ಲಿ ಮತದಾರನೊಬ್ಬ ತಾನು ಕಾಂಗ್ರೆಸ್‌‍ ಅಭ್ಯರ್ಥಿ ಕೆ.ವಿ. ಗೌತಮ್‌ ಅವರಿಗೆ ಮತದಾನ ಮಾಡುವುದನ್ನು ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. +ಅದೇ ರೀತಿ ಚಿಕ್ಕಬಳ್ಳಾಪುರದಲ್ಲಿಯೂ ನಿಯಮ ಉಲ್ಲಂಘನೆ ಮಾಡಲಾಗಿದೆ. ಚುನಾವಣಾ ಆಯೋಗದಿಂದ ಮತದಾನ ಕೇಂದ್ರದೊಳಗೆ ಮೊಬೈಲ್‌ ತೆಗೆದುಕೊಂಡು ಹೋಗಿ, ಫೋಟೋ ಮತ್ತು ವಿಡಿಯೋ ಮಾಡುವಂತಿಲ್ಲ ಎಂಬ ನಿಯಮವಿದೆ. ಆದರೆ, ಈ ನಿಯಮ ಉಲ್ಲಂಘಿಸಿ ಚಿಕ್ಕಬಳ್ಳಾಪುರ ಲೋಕಸಭಾ ವ್ಯಯಾಪ್ತಿಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಮತ ಹಾಕುವುದನ್ನು ವಿಡಿಯೋ ಮಾಡಿಕೊಂಡಿದ್ದಾನೆ. ಜೊತೆಗೆ, ಮತದಾನ ಮಾಡುವ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡಿದ್ದಾನೆ. \ No newline at end of file diff --git a/eesanje/url_46_168_3.txt b/eesanje/url_46_168_3.txt new file mode 100644 index 0000000000000000000000000000000000000000..cb94fbd1745fe2bc1c7e1fde5df4313c01a45060 --- /dev/null +++ b/eesanje/url_46_168_3.txt @@ -0,0 +1,5 @@ +ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ : ಡಿ.ಕೆ.ಸುರೇಶ್‌ +ಬೆಂಗಳೂರು,ಏ.26-ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಹೇಳಿದರು. +ಸದಾಶಿವನಗರದ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸಿದ್ದಾರೆ ಎಂದರು. +ಪ್ರಜಾಪ್ರಭುತ್ವದಲ್ಲಿ ಮತದಾನ ಹಬ್ಬದಂತೆ. ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ ಪ್ರಜಾಪ್ರಭುತ್ವದಲ್ಲಿ ಪ್ರಮುಖವಾದ ಪಾತ್ರವಹಿಸುತ್ತದೆ. ಈ ಹಕ್ಕನ್ನು ನಾವು ಚಲಾವಣೆ ಮಾಡಬೇಕಿರುವುದು ನಮ್ಮ ಕರ್ತವ್ಯ ಎಂದು ಹೇಳಿದರು. ಸಂಸತ್ತು ಪ್ರಜಾಪ್ರಭುತ್ವದ ದೇಗುಲ. +ಇದರ ಮೂಲಕ ದೇಶ, ರಾಜ್ಯವನ್ನು ಅಭಿವೃದ್ಧಿ ಮಾಡಲು, ಅವಶ್ಯಕತೆಗಳನ್ನು ಪೂರೈಸಲು, ಒಳ್ಳೆಯದನ್ನು ಮಾಡಲು, ಕಾನೂನು, ನಿಯಮಗಳನ್ನು ಮಾಡಲಾಗುತ್ತದೆ. ಆದ ಕಾರಣ ಲೋಕಸಭಾ ಚುನಾವಣೆ ಪ್ರಮುಖವಾದುದು. ಆದ್ದರಿಂದ ಎಲ್ಲ ನಾಗರಿಕರು ಮತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. \ No newline at end of file diff --git a/eesanje/url_46_168_4.txt b/eesanje/url_46_168_4.txt new file mode 100644 index 0000000000000000000000000000000000000000..dac8cba234e63bc7a7f0ea7489cf3ecfcf25803d --- /dev/null +++ b/eesanje/url_46_168_4.txt @@ -0,0 +1,9 @@ +ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತದ್ದಾರೆ : ಡಿಕೆಶಿ +ಬೆಂಗಳೂರು,ಏ.26-ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ, ಲೋಕಸಭಾ ಚುನಾವಣೆ ಬಳಿಕ ತಾವು ಖುದ್ದಾಗಿ ಪೊಲೀಸ್‌ ಮಹಾನಿರ್ದೇಶಕರನ್ನು ಭೇಟಿ ಮಾಡಿ ದೂರು ನೀಡುವುದರ ಜೊತೆಗೆ ಸಂತ್ರಸ್ತರ ಮೂಲಕ ಪ್ರಮಾಣಪತ್ರ ದಾಖಲಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರನ್ನು ಮಾತ್ರ ಗುರಿಯಾಗಿಸಿಕೊಂಡು ದಾಳಿಯ ಮೇಲೆ ದಾಳಿಯನ್ನು ನಡೆಸುತ್ತಿದ್ದಾರೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ರೀತಿಯ ಬೆದರಿಕೆಗಳು ಹೆಚ್ಚಾಗಿವೆ ಎಂದರು. +ದಾಳಿ ನಡೆಸಿದ ವೇಳೆ ಅಧಿಕಾರಿಗಳು ನೀವು ಕಾಂಗ್ರೆಸ್‌ನಲ್ಲಿ ಏಕಿದ್ದೀರ, ಬಿಜೆಪಿಗೆ ಹೋಗಿ ಎಂದು ಒತ್ತಡ ಹೇರುತ್ತಿದ್ದಾರೆ. ಸಂಸದ ಡಿ.ಕೆ.ಸುರೇಶ್‌ ಅವರ ಕಾರು ಚಾಲಕ ಹಾಗೂ ಅವರ ಪತ್ನಿಯನ್ನು ವಿಚಾರಣೆ ನಡೆಸಿ ಕಿರುಕುಳ ನೀಡಲಾಗಿದೆ. ಇದರ ವಿರುದ್ಧ ತಾವು ಪ್ರಮಾಣಪತ್ರ ದಾಖಲಿಸುವುದಾಗಿ ಹೇಳಿದರು. +ಆದಾಯ ತೆರಿಗೆ ಅಧಿಕಾರಿಗಳು ಬಿಜೆಪಿಯ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ. ಪೊಲೀಸ್‌ ಮಹಾನಿರ್ದೇಶಕರಿಗೆ ಈ ಕುರಿತು ಖುದ್ದು ದೂರು ಸಲ್ಲಿಸುವುದಾಗಿ ಹೇಳಿದರು.ಬೆಂಗಳೂರು ಗ್ರಾಮಾಂತರದಲ್ಲಿ ಕೂಪನ್‌ಗಳನ್ನು ಹಂಚಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಅವರೇನು ಸತ್ಯ ಹರಿಶ್ಚಂದ್ರರೇ? ಬಿಜೆಪಿ ಮತ್ತು ಜೆಡಿಎಸ್‌ನಿಂದ ಏನು ಹಂಚಲಾಗುತ್ತಿದೆ ಎಂದು ನಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. +ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ಈಗ ಅವರದೇ ಕುಟುಂಬದ ಅಭ್ಯರ್ಥಿ ಹಾಗೂ ಅವರ ಕುಟುಂಬದ ಸದಸ್ಯ ಹೆಣ್ಣುಮಕ್ಕಳೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಚಾರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಇದರ ಬಗ್ಗೆ ದೇವೇಗೌಡರು ಮತ್ತು ಕುಮಾರಸ್ವಾಮಿಯವರೇ ಉತ್ತರ ನೀಡಬೇಕು ಎಂದರು. +ನಾವು ಯಾವುದೇ ಕೂಪನ್‌ಗಳನ್ನು ಹಂಚುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯ ಮಾಹಿತಿಯನ್ನು ನೀಡುವ ಕೆಲಸ ಮಾಡುತ್ತಿದ್ದೇವೆ. ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? ಅವರೇನು ಹಂಚುತ್ತಿದ್ದಾರೆ ನಮಗೆ ಗೊತ್ತಿಲ್ಲವೇ? ಕನಕಪುರ, ಚನ್ನಪಟ್ಟಣ, ರಾಮನಗರದಲ್ಲಿ ಏನು ಹಂಚುತ್ತಿದ್ದಾರೆ ಎಂಬುದಕ್ಕೆ ತಮ್ಮ ಬಳಿ ಸಾಕ್ಷಿಯಿದೆ. ರಾಜರಾಜೇಶ್ವರಿ ನಗರದಲ್ಲಿ ಚಿನ್ನದ ಕಾಯಿನ್‌ಗಳನ್ನು ಹಂಚುತ್ತಿರುವುದು ತಮಗೆ ಗೊತ್ತಿದೆ ಎಂದು ಹೇಳಿದರು. +ಮೊದಲ ಹಂತದ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 10 ರಲ್ಲಿ ಗೆಲುವು ಸಾಧಿಸಲಿದೆ. ಒಟ್ಟು ರಾಜ್ಯಾದ್ಯಂತ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಜೆಡಿಎಸ್‌ನ ಅಭ್ಯರ್ಥಿಗಳು 3 ಕಡೆ ಸೋಲುವುದರ ಜೊತೆಗೆ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಅಭ್ಯರ್ಥಿಯು ಸೋಲಲಿದ್ದಾರೆ ಎಂದರು. +ಕುಮಾರಸ್ವಾಮಿಯವರು ಧೈರ್ಯವಿಲ್ಲದೆ ರಣಹೇಡಿಯಂತೆ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಅವರೇ ಬೆಂಗಳೂರು ಗ್ರಾಮಾಂತರದಲ್ಲಿ ಸ್ಪರ್ಧಿಸಬೇಕಿತ್ತು ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.ರಾಜ್ಯಸರ್ಕಾರದ ಪಂಚಖಾತ್ರಿ ಯೋಜನೆಗಳು ಜನರಿಗೆ ಅನುಕೂಲವಾಗಿವೆ. ಬಿಜೆಪಿಯವರು ಜನಪರವಾಗಿ ಒಂದು ಯೋಜನೆಗಳನ್ನೂ ಜಾರಿಗೊಳಿಸಿಲ್ಲ. ಈ ಹಿಂದೆ ಯುಪಿಎ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರೂಪಿಸಿದ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_168_5.txt b/eesanje/url_46_168_5.txt new file mode 100644 index 0000000000000000000000000000000000000000..37d0bd7cbb580e789d508d185086d3c9ed3797c8 --- /dev/null +++ b/eesanje/url_46_168_5.txt @@ -0,0 +1,17 @@ +ರಾಜ್ಯದಲ್ಲಿ ಭರ್ಜರಿ ಮತದಾನ, ಸಾಲಲ್ಲಿ ನಿಂತು ಮತದಾನ ಮಾಡಿದ ಸೆಲೆಬ್ರೆಟಿಗಳು +ಬೆಂಗಳೂರು,ಏ.26-ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿಂದಲೇ ಮತಗಟ್ಟೆಯ ಮುಂದೆ ಸಾಲುಗಟ್ಟಿ ನಿಂತಿದ್ದು ಕಂಡುಬಂದಿತು. +ಹಾಸನದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸುವ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳು ಅವರಿಗೆ ಸಹಾಯ ಮಾಡಿದರು. ಇದೇ ವೇಳೆ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಾತನೂರಿನ ದೊಡ್ಡಆಲನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಕೂಡ ತಮ್ಮ ಹಕ್ಕು ಚಲಾಯಿಸಿದರು. +ಕೆಲವೆಡೆ ಉದ್ದನೆಯ ಸರದಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಲಾಯಿತು. ಇನ್‌ಫೋಸಿಸ್‌ನ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಯವರು ಜಯನಗರದಲ್ಲಿ ಮತದಾನ ಮಾಡಿದರು. ಚುನಾವಣಾ ಮುಖ್ಯ ಅಧಿಕಾರಿ ಮನೋಜ್‌ಕುಮಾರ್‌ ಮೀನಾ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಜಕ್ಕೂರು ಪ್ರದೇಶದಲ್ಲಿರುವ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ನಿಂತು ಮತದಾನ ಮಾಡಿದರು. +ಮೈಸೂರಿನಲ್ಲಿ 101 ವರ್ಷದ ಅಜ್ಜಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ರಾಜಮನೆತನದ ಯದುವೀರ್‌ ಕೃಷ್ಣದತ್ತ ಒಡೆಯರ್‌, ಪತ್ನಿ ತ್ರಿಷಿಕಾ, ಅವರ ತಾಯಿ ಪ್ರಮೋದಾ ದೇವಿ ಅವರುಗಳು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು. +ಬೆಂಗಳೂರಿನಲ್ಲಿ ಕ್ರಿಕೆಟಿಗ ರಾಹುಲ್‌ದ್ರಾವಿಡ್‌, ಹಿರಿಯ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್‌, ಪತ್ನಿ ಮಂಗಳ, ನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಸದಾಶಿವನಗರದ ಮತಗಟ್ಟೆಯಲ್ಲಿ, ಹಿರಿಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಮಲ್ಲೇಶ್ವರಂನಲ್ಲಿ, ನಟಿ ಅಮೂಲ್ಯ ಪತಿ ಜಗದೀಶ್‌ ಅವರೊಂದಿಗೆ, ಗೋಲ್ಡನ್‌ ಸ್ಟಾರ್‌ ಗಣೇಶ್‌ ಪತ್ನಿ ಶಿಲ್ಪಾ ಅವರೊಂದಿಗೆ ಬಂದು ಮತ ಚಲಾಯಿಸಿದರು. ಗೃಹಸಚಿವ ಡಾ.ಜಿ.ಪರಮೇಶ್ವರ್‌ ತುಮಕೂರಿನ ಹೆಗ್ಗೆರೆಯಲ್ಲಿ, ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಕೆರೆಸಂದ್ರದಲ್ಲಿ ಮತ ಚಲಾಯಿಸಿದರು. +ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಅವರ ಪುತ್ರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯರೆಡ್ಡಿ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಾಗೂ ಸಂಸದ ಡಿ.ವಿ.ಸದಾನಂದಗೌಡ, ನಟಿ ಸಪ್ತಮಿಗೌಡ, ಹಿರಿಯ ನಟ ಪ್ರಕಾಶ್‌ ರೈ ಅವರುಗಳೂ ಮತ ಚಲಾಯಿಸಿದ್ದಾರೆ. +ಮೈಸೂರಿನಲ್ಲಿ ಮತದಾನ ಬಿರುಸುಮೈಸೂರು ನಗರ ಮತ್ತು ಜಿಲ್ಲೆಯಾದ್ಯಂತ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು.ಯುವ ಜನತೆ ಮತ್ತು ಮೊದಲ ಬಾರಿಗೆ ಮತದಾನ ಮಾಡುವವರು, ಹಿರಿಯ ನಾಗರಿಕರು, ವಿಕಲಚೇತನರು ಕೂಡ ಅತ್ಯುತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.ಒಂದೆರಡು ಮತಗಟ್ಟೆಗಳಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು, ಕೆಲವೆಡೆ ಸಣ್ಣಪುಟ್ಟ ಜಗಳ ನಡೆದರೆ ಜಿಲ್ಲೆಯಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ.ನಗರದಲ್ಲಿ ಗಣ್ಯರು ಬೆಳಗ್ಗೆ ಬೇಗನೆ ಬಂದು ಮತ ಹಾಕಿ ಯುವಜನತೆಗೆ ಮಾದರಿಯಾದರು. +ಮೈಸೂರಿನ ಶ್ರೀಕಾಂತ ಶಾಲೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಅವರು ಪತ್ನಿ ತ್ರಿಷಿಕಾ ಹಾಗೂ ತಾಯಿ ರಾಜಮಾತೆ ಪ್ರಮೋದಾ ದೇವಿ ಒಡೆಯರ್‌ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಎಲ್ಲರೂ ಮರೆಯದೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವಂತೆ ಮನವಿ ಮಾಡಿದರು.ಮತದಾನ ಮಾಡಿ ಮನೆಗೆ ಬಂದ ವೃದ್ಧೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ (90) ಸಾವನ್ನಪ್ಪಿದ್ದು, ಕಲ್ಲಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮಾಡಿ ಆರಾಮವಾಗಿಯೇ ಬಂದಿದ್ದರು. ಅದೇನಾಯಿತೋ ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾರೆ. + +ಎಂಬತ್ತು ವರ್ಷದಿಂದ ಮತದಾನ ಮಾಡುತ್ತಿರುವ ಶತಾಯುಷಿನಾನು ಇದುವರೆಗೂ ಒಂದು ಚುನಾವಣೆಯನ್ನು ಮಿಸ್‌‍ ಮಾಡ್ಕೊಂಡಿಲ್ಲ ತಪ್ಪದೆ ಮತದಾನ ಮಾಡುತ್ತಿದ್ದೇನೆ ಎಂದು ಜಮುವಿನ 102 ವರ್ಷದ ಶತಾಯುಷಿ ಮತದಾರ ಹೇಳಿಕೊಂಡಿದ್ದಾರೆ ಕುಟುಂಬ ಸದಸ್ಯರೊಂದಿಗೆ ಊರುಗೋಲಿನ ಸಮೇತ ಜಮು ಮತಗಟ್ಟೆಗೆ ಬಂದ 102 ವರ್ಷದ ಹಾಜಿ ಕರಮ್‌ದಿನ್‌ ಎಂಬುವರು ತಮ ಮತ ಚಲಾಯಿಸಿದ ಬಳಿಕ ಬೆರಳನ್ನು ತೋರಿಸಿ ಫೋಟೋಗೆ ಪೋಸ್‌‍ ನೀಡಿದ ನಂತರ ಮಾತನಾಡಿದರು.ಈ ವಯಸ್ಸಿನಲ್ಲಿ ಈ ಮತಗಟ್ಟೆಯಲ್ಲಿ ಮತದಾನ ಮಾಡಲು ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರತಿ ಬಾರಿಯೂ ಮತದಾನ ಮಾಡಿದ್ದೇನೆ. 102 ನೇ ವಯಸ್ಸಿನಲ್ಲಿ ಈ ಪ್ರಯಾಣವು ಇಂದಿಗೂ ಮುಂದುವರೆದಿದೆ ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು. +ರಿಯಾಸಿ ಜಿಲ್ಲೆ ಜಮು ಸಂಸದೀಯ ಕ್ಷೇತ್ರದ ಭಾಗವಾಗಿದ್ದು, 22 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು 17.81 ಲಕ್ಷಕ್ಕೂ ಹೆಚ್ಚು ಮತದಾರರು ತಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.ಪ್ರಸ್ತುತ ಬಿಜೆಪಿ ಸಂಸದ ಜುಗಲ್‌ ಕಿಶೋರ್‌ ಶರ್ಮಾ ಅವರು 2014 ಮತ್ತು 2019 ರ ಚುನಾವಣೆಗಳಲ್ಲಿ ಸತತ ಗೆಲುವಿನ ನಂತರ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ ಅವರ ಪ್ರಮುಖ ಸ್ಪರ್ಧಿ ಕಾಂಗ್ರೆಸ್‌‍ ಅಭ್ಯರ್ಥಿ ಮತ್ತು ಮಾಜಿ ಸಚಿವ ರಾಮನ್‌ ಭಲ್ಲಾ ಅವರಾಗಿದ್ದಾರೆ. +ಜಮು-ರಿಯಾಸಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದ್ದು, ಉತ್ಸಾಹದಿಂದ ಮತದಾರರು ಬೂತ್‌ಗಳಿಗೆ ಆಗಮಿಸಿದ್ದರು, ಕೆಲವರು ಸಾಂಪ್ರದಾಯಿಕ ಡೋಗ್ರಾ ಉಡುಗೆಗಳನ್ನು ಧರಿಸಿ ಮತದಾನ ಮಾಡಿದರು.ಕ್ಷೇತ್ರದಾದ್ಯಂತ 2,416 ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು ಬಿರುಸಿನಿಂದ ಮತದಾನವಾಗುತ್ತಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಜಮುವಿನಲ್ಲಿ ಶೇ,74ರಷ್ಟು ಮತದಾನವಾಗಿದೆ.ಐದು ವರ್ಷಗಳ ಹಿಂದೆ ಆರ್ಟಿಕಲ್‌ 370 ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಜಮುವಿನಲ್ಲಿ ಇದು ಮೊದಲ ಪ್ರಮುಖ ಚುನಾವಣೆಯಾಗಿದೆ. +ಕಾಫಿನಾಡಿನಲ್ಲಿ ಯುವಜನತೆಗೆ ಮಾದರಿಯಾದ ಹಿರಿಯ ನಾಗರಿಕರುಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಜಾನೆಯಿಂದ ಬಿರುಸು ಪಡೆದುಕೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಮಾದರಿಯಾಗುವ ಘಟನೆಗಳಿಗೂ ಕೂಡ ಮತದಾನ ಪ್ರಕ್ರಿಯೆ ಕಾರಣವಾಗಿದೆ. ಒಂದೆಡೆ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ರೆ, ಮತ್ತೊಂದೆಡೆ ಹಸೆಮಣೆ ಏರುವ ಮುನ್ನ ಮತಗಟ್ಟೆಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. +ಮತದಾನದ ಪ್ರಕ್ರಿಯೆಯಲ್ಲಿ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ಬೆಳಗ್ಗೆ ಏಳು ಗಂಟೆಗೆ ಮತಗಟ್ಟೆಗಳಿಗೆ ಆಗಮಿಸಿದ ಹಿರಿಯ ನಾಗರಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ನಗರದ ಬಸವನಹಳ್ಳಿಯ ಮತಗಟ್ಟೆಯಲ್ಲಿ ಮತದಾನ ಆರಂಭಕ್ಕೂ ಮುನ್ನವೇ ಆಗಮಿಸಿದ್ದ 80 ವರ್ಷದ ವೃದ್ಧೆ ಕನ್ನಮ್ಮ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. +ಸೊಪ್ಪು, ವ್ಯಾಪಾರಿಯಾಗಿರುವ ಕನ್ನಮ್ಮ ವ್ಯಾಪಾರಕ್ಕೆ ಹೋಗುವ ಹಿನ್ನೆಲೆಯಲ್ಲಿ ಮುಂಜಾನೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಕನ್ನಮ್ಮ ಮುಂದಿನ ಚುನಾವಣೆಗೆ ನಾನು ಇರ್ತೀನೋ ಇಲ್ಲವೋ ಗೊತ್ತಿಲ್ಲ, ಆದರೆ ಮತದಾನ ಒಂದು ಪವಿತ್ರವಾದ ಕಾರ್ಯವಾಗಿದ್ದು ನಮ್ಮ ಕರ್ತವ್ಯವನ್ನು ನಾನು ಮಾಡಿದ್ದೇನೆ. ನಾನು ವ್ಯಾಪಾರಕ್ಕೆ ಹೋಗುವ ಕಾರಣ ಬೆಳಿಗ್ಗೆ ಬೇಗ ಬಂದು ವೋಟ್‌ ಮಾಡಿದ್ದೇನೆ ಎಂದರು. \ No newline at end of file diff --git a/eesanje/url_46_168_6.txt b/eesanje/url_46_168_6.txt new file mode 100644 index 0000000000000000000000000000000000000000..d3f98244b7edae2276b250dc0f2c2ab1d59a580e --- /dev/null +++ b/eesanje/url_46_168_6.txt @@ -0,0 +1,5 @@ +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಸುವಲ್ಲಿ ಆಯೋಗ ವಿಫಲ । ಹೆಚ್‌ಡಿಕೆ ಆಕ್ರೋಶ +ಬೆಂಗಳೂರು,ಏ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡ್‌ ಹಂಚಲಾಗಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಮುಕ್ತ ಪಾರದರ್ಶಕ ಚುನಾವಣೆ ನಡೆಸುವಲ್ಲಿ ಚುನಾವಣಾ ಆಯೋಗ ಸಂಪೂರ್ಣ ವಿಫಲವಾಗಿದೆ ಎಂದು ಆಪಾದಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಈ ರೀತಿ ಚುನಾವಣೆ ನಡೆಸುವ ಬದಲು ಹಣ ಹಂಚಿಕೊಂಡು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಪರವಾಗಿ ಕ್ಯೂ ಆರ್‌ಕೋಡ್‌ ಇರುವ ಕೂಪನ್‌ಗಳನ್ನು ಹಂಚಿಕೆ ಮಾಡಲಾಗಿದೆ. ಅದನ್ನು ತಡೆಯಲು ಹೋದ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದರು. +ಶಾಸಕರಾದ ಡಾ.ರಂಗನಾಥ್‌, ಎಚ್‌.ಸಿ.ಬಾಲಕೃಷ್ಣ, ಇಕ್ಬಾಲ್‌ ಹುಸೇನ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಹಾಗೂ ಕುಸುಮ ಹನುಮಂತಯ್ಯ ಅವರ ಹೆಸರಿನಲ್ಲಿ ಕೂಪನ್‌ ಹಂಚಲಾಗಿದೆ ಎಂದು ಆರೋಪಿಸಿಸಿ ಮೊಬೈಲ್‌ ಕೂಪನ್‌ ನೀಡಲಾಗಿದೆ ಎನ್ನಲಾದ ಚಿತ್ರಗಳನ್ನು ತೋರಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಕಾಂಗ್ರೆಸ್‌ ಕೂಪನ್‌ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತು ಎಂದು ಆಪಾದಿಸಿದರು. \ No newline at end of file diff --git a/eesanje/url_46_168_7.txt b/eesanje/url_46_168_7.txt new file mode 100644 index 0000000000000000000000000000000000000000..fd499b71925c693df9b5652fb0d9d754361b5555 --- /dev/null +++ b/eesanje/url_46_168_7.txt @@ -0,0 +1,4 @@ +ಪ್ಲೀಸ್‌ ಮನೆಯಿಂದ ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ +ಬೆಂಗಳೂರು,ಏ.26-ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ. +ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ ಮಾಡುತ್ತಾರೆ. ಮತಗಟ್ಟೆಯಲ್ಲಿ ಉದ್ದನೆಯ ಸರತಿ ಸಾಲು ಕಾಣುತ್ತಿದೆ. ಚುನಾವಣೆ ಆಯೋಗ ಮನೆಯಲ್ಲೇ ಮತದಾನಕ್ಕೆ ಅವಕಾಶ ಮಾಡಿದರೂ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ ಎಂದು ಅಭಿಪ್ರಾಯಟ್ಟರು. +ಮೊದಲ ಬಾರಿ ವೋಟ್‌ ಮಾಡುವ ಮತದಾರರು ಮತಗಟ್ಟೆಗೆ ಬರುತ್ತಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ವೋಟ್‌ ಮಾಡುವ ಭರವಸೆ ನನಗೆ ಇದೆ ಎಂದರು. ಸರಳವಾಗಿ ಮತಗಟ್ಟೆಗೆ ಆಗಮಿಸಿದ ನಿರ್ಮಲಾ ಸೀತಾರಾಮನ್‌ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. \ No newline at end of file diff --git a/eesanje/url_46_168_8.txt b/eesanje/url_46_168_8.txt new file mode 100644 index 0000000000000000000000000000000000000000..4ebe553978d382bf3a157e0d9cb1a4d562e732c0 --- /dev/null +++ b/eesanje/url_46_168_8.txt @@ -0,0 +1,5 @@ +ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ +ಬೆಂಗಳೂರು,ಏ.26-ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದ್ದಾರೆ. +ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. +ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ. +ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸುವ ಅವಕಾಶವೇ ಮತದಾನ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇದು ಸುಸಂದರ್ಭ. ಇಂದು ಬಹಳ ಸಂತೋಷದ ದಿನ. ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದ ಇರಬೇಕಾದ ದಿನ ಎಂದು ತಿಳಿಸಿದ್ದಾರೆ \ No newline at end of file diff --git a/eesanje/url_46_168_9.txt b/eesanje/url_46_168_9.txt new file mode 100644 index 0000000000000000000000000000000000000000..a9e5088ee8e36b9dcaf59f289c27a39274405d2f --- /dev/null +++ b/eesanje/url_46_168_9.txt @@ -0,0 +1,5 @@ +ಬೆಂಗಳೂರಿನಲ್ಲಿ ದಾಖಲೆಯ ಮತದಾನವಾಗಲಿ : ರಾಹುಲ್‌ ದ್ರಾವಿಡ್‌ +ಬೆಂಗಳೂರು, ಏ. 26-ಇಂದು ನಡೆಯುತ್ತಿರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದೆಲ್ಲೆಡೆ ಮತದಾನ ಪ್ರಕ್ರಿಯೆಯು ನಡೆಯುತ್ತಿದ್ದು ಸ್ಟಾರ್‌ ಕಲಾವಿದರು ಹಾಗೂ ಕ್ರೀಡಾಪಟುಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ತಮ್ಮ ಅಭಿಮಾನಿಗಳಿಗೂ ಸುಭದ್ರ ದೇಶದ ನಿರ್ಮಾಣಕ್ಕಾಗಿ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. +ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಅವರು ಕೂಡ ಯುವ ಮತದಾರರು ಸೇರಿದಂತೆ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕೆಂದು ಕರೆ ನೀಡಿದ್ದಾರೆ. +`ದೇಶದಾದ್ಯಂತ ಚುನಾವಣೆಯು ಯಾವುದೇ ಗದ್ದಲ ಹಾಗೂ ಗೊಂದಲವಿಲ್ಲದೆ ಸರಾಗವಾಗಿ ಸಾಗುತ್ತಿದೆ. ಅಲ್ಲದೆ ಮತದಾನದ ಪ್ರಕ್ರಿಕೆಯು ಹಿಂದೆಂದಿಗಿಂತಲೂ ಸರಳವಾಗಿದೆ. ಸದೃಢ ಪ್ರಜಾಪ್ರಭುತ್ವದ ದೃಷ್ಟಿಯಿಂದ ಪ್ರತಿಯೊಬ್ಬರು ಕಡ್ಡಾಯ ಮತದಾನ ಮಾಡುವುದು ಅಗತ್ಯವಾಗಿದ್ದು , ಎಲ್ಲರೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿ’ ಎಂದು ರಾಹುಲ್‌ ದ್ರಾವಿಡ್‌ ಅವರು ಮನವಿ ಮಾಡಿದ್ದಾರೆ. +`ಈ ಬಾರಿಯ ಲೋಕಸಭೆಯ ಚುನಾವಣೆಯಲ್ಲಿ ಬೆಂಗಳೂರಿನಲ್ಲಿರುವ ಕ್ಷೇತ್ರಗಳಲ್ಲಿ ದಾಖಲೆಯ ಮತದಾನವಾಗಲಿ ಎಂದು ನಾನು ನಿರೀಕ್ಷಿಸುತ್ತಿದ್ದೇನೆ. ಈ ಬಾರಿ ಅತಿ ಹೆಚ್ಚು ಯುವ ಮತದಾರರು ಮತದಾನ ಮಾಡಲು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ ಪ್ರತಿಯೊಬ್ಬರು ಯುವ ಮತದಾರರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಕರೆ ನೀಡಿದರು. ಯುವಕ ಅಥವಾ ಯುವತಿ ಯಾರೇ ಆಗಲಿ ತಮ್ಮ ಹಕ್ಕನ್ನು ಪ್ರದರ್ಶಿಸಬೇಕು’ ಎಂದು ರಾಹುಲ್‌ ದ್ರಾವಿಡ್‌ ಹೇಳಿದ್ದಾರೆ. \ No newline at end of file diff --git a/eesanje/url_46_169_1.txt b/eesanje/url_46_169_1.txt new file mode 100644 index 0000000000000000000000000000000000000000..b1c39db41e8af267f50b3535d2e14198ed8ced0b --- /dev/null +++ b/eesanje/url_46_169_1.txt @@ -0,0 +1,5 @@ +ರಾಜ್ಯದಲ್ಲಿ ಬಿಸಿಲ ಬೇಗೆಗೆ ತತ್ತರಿಸಿದ ಜನ +ಬೆಂಗಳೂರು,ಏ.25-ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಕೊರತೆ ಒಂದಡೆಯಾದರೆ ಮತ್ತೊಂದೆಡೆ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿಸುವಂತಾಗಿದೆ. ಕಳೆದೆರಡು ತಿಂಗಳಿನಿಂದ ನಿರಂತರವಾಗಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಜನರು ಬಸವಳಿದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿ.ಸೆ. ದಾಟಿದೆ. ರಾಯಚೂರಿನಲ್ಲಿ ಅತ್ಯಧಿಕ 41 ಡಿ.ಸೆ. ದಾಖಲಾಗಿದೆ. ಸದ್ಯಕ್ಕೆ ಮಳೆ ಬರುವ ಸಾಧ್ಯತೆಗಳು ತೀರಾ ವಿರಳವಾಗಿದ್ದು, ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕಳೆದ ಎಂಟತ್ತು ದಿನಗಳಿಂದ ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ಚದುರಿದಂತೆ ಕೆಲವೆಡೆ ಹಗುರವಾದ ಮಳೆಯಾಗಿದೆ. ಆದರೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗದ ಕಾರಣ ವಾತಾವರಣದಲ್ಲಿನ ತೇವಾಂಶವು ಕಡಿಮೆಯಾಗಿದೆ. ಹೀಗಾಗಿ ಹಗಲಿನ ವೇಳೆ ಬಿಸಿಲಿನ ಜೊತೆಗೆ ಬಿಸಿ ಗಾಳಿಯೂ ಜನರನ್ನು ಹೈರಾಣುಗೊಳಿಸಿದೆ. +ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ 37 ಡಿ.ಸೆ. ನಷ್ಟು ದಾಖಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35 ಡಿ.ಸೆ. ಗಡಿ ದಾಟಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರಾಸರಿ 40 ಡಿ.ಸೆ ಗಿಂತಲೂ ಹೆಚ್ಚು ತಾಪಮಾನ ದಾಖಲಾಗುತ್ತಿದೆ. +ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಂಡ್ಯ 39, ಚಿಂತಾಮಣಿ 38.1, ದಾವಣಗೆರೆ 38.5, ಚಿತ್ರದುರ್ಗ 38, ಚಾಮರಾಜನಗರ 38, ಬೆಂಗಳೂರು 37, ಕೊಪ್ಪಳ 39.7, ಕಲಬುರಗಿ 40.6, ಗದಗ 38.2, ಬಾಗಲಕೋಟೆ 40, ವಿಜಯಪುರ 39, ಕಾರವಾರ 37.1, ಶಿರಾಳಿ 37.5 ಡಿ.ಸೆಂ. ನಷ್ಟು ದಾಖಲಾಗಿದೆ.ಹೀಗಾಗಿ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸುಡುಬಿಸಿಲಿನ ಬಿಸಿ ತಟ್ಟತೊಡಗಿದೆ. \ No newline at end of file diff --git a/eesanje/url_46_169_10.txt b/eesanje/url_46_169_10.txt new file mode 100644 index 0000000000000000000000000000000000000000..52716da58b1f2f2617544c048bd01409aaf0c19c --- /dev/null +++ b/eesanje/url_46_169_10.txt @@ -0,0 +1,9 @@ +ಕಾಂಗ್ರೆಸ್ ತನ್ನ ಓಲೈಕೆ, ತುಷ್ಟೀಕರಣ ರಾಜಕೀಯ ಮುಂದುವರಿಕೆ : ಅಶ್ವತ್ಥನಾರಾಯಣ್ +ಬೆಂಗಳೂರು, ಏ.24-ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ದಿನದಿಂದ ಓಲೈಕೆ, ತುಷ್ಟೀಕರಣದ ರಾಜಕಾರಣ ಮುಂದುವರೆಸಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದುಹೋಗಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದರು. +ನಗರದ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿಂದು ಕಾಂಗ್ರೆಸ್ ಸರಕಾರದ ವಿರುದ್ಧ ಪೊಸ್ಟರ್ ಬಿಡುಗಡೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಓಲೈಕೆ ಜೊತೆಗೆ ಭಯೋತ್ಪಾದಕರ ವಿಚಾರದಲ್ಲಿ ಮೃದು ಧೋರಣೆ ಈ ಸರ್ಕಾರದ್ದು ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಕಾಂಗ್ರೆಸ್ ಡೇಂಜರ್ ಪೊಸ್ಟರ್ ಇವತ್ತು ಬಿಡುಗಡೆ ಮಾಡಿದ್ದೇವೆ. ಕ್ಯೂಆರ್ ಕೋಡ್ ಕೊಟ್ಟಿದ್ದು, ಘಟನಾವಳಿಗಳನ್ನು ವೀಕ್ಷಿಸಬಹುದು ಎಂದರು.ನೇಹಾ ಹಿರೇಮಠದ ಹತ್ಯೆಯ ಲವ್ ಜಿಹಾದ್ ಸಂಬಂಧಿತ ಹುಬ್ಬಳ್ಳಿಯ ಘಟನೆ, ಸಿಎಂ ಹೇಳಿಕೆ, ಗೃಹ ಇಲಾಖೆ, ಕಮೀಷನರ್ ನಡವಳಿಕೆ ನೇಹಾರ ಪೊಷಕರಿಗೆ, ಕುಟುಂಬಕ್ಕಾದ ನೋವನ್ನು ಗಮನಿಸಬಹುದು. ಕಾಲೇಜಿಗೆ ಹೆಣ್ಮಕ್ಕಳು ಹೋಗಬೇಕೇ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಳವಳ ಸೂಚಿಸಿದರು. +ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣವನ್ನು ವೈಯಕ್ತಿಕ ಎಂದಿದ್ದರು. ಕೊನೆಗೆ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಕುಕ್ಕರ್ ಬಾಂಬ್ ವಿಚಾರದಲ್ಲಿ ಭಯೋತ್ಪಾದಕರನ್ನು ಸೆರೆ ಹಿಡಿದಾಗ ಅವರನ್ನು ಭಯೋತ್ಪಾದಕ ರೆಂದು ಕರೆಯದಂತೆ ಹೇಳಿದ್ದರು ಎಂದು ಗಮನ ಸೆಳೆದರು. +ಜೈಶ್ರೀರಾಂ ಎಂದವರ ಮೇಲೆ ಹಲ್ಲೆ , ಹನುಮಾನ್ ಚಾಲೀಸ ಹಾಕಿದವರ ಮೇಲೆ ಹಲ್ಲೆ , ಮೋದಿಯವರ ಕುರಿತ ಹಾಡು ಬರೆದವರ ಮೇಲೆ ಹಲ್ಲೆ ನಡೆದಿದೆ. ಇದೆಲ್ಲಕ್ಕೂ ಕಾಂಗ್ರೆಸ್ ಸರಕಾರವೇ ಕಾರಣ ಎಂದು ಟೀಕಿಸಿದರು. +ಶಾಸಕ ಸುರೇಶ್ಕುಮಾರ್ ಮಾತನಾಡಿ, ಮತ ಚಲಾಯಿಸುವ ಮೊದಲು ದಯವಿಟ್ಟು ಕಾಂಗ್ರೆಸ್ ಪ್ರಣಾಳಿಕೆಯನ್ನು ಗಮನಿಸಿ. ಇಂಡಿ ಒಕ್ಕೂಟದ ಬೇರೆ ಬೇರೆ ಪಕ್ಷಗಳ ನಿಲುವನ್ನೂ ಗಮನಿಸಿ ಎಂದು ವಿನಂತಿಸಿದರು. ಇಂಡಿ ಒಕ್ಕೂಟ, ಕಾಂಗ್ರೆಸ್ ಮತ್ತು ಈ ಒಕ್ಕೂಟದ ಪಾಲುದಾರರು ಭಾರತಕ್ಕೆ ಯಾವ ಗತಿ ತರಬಹುದು ಎಂಬುದು ಇವರ ಹೇಳಿಕೆಗಳಿಂದ ಗೊತ್ತಾಗುತ್ತದೆ ಎಂದು ವಿಶ್ಲೇ2ಷಿಸಿದರು. +ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ರಾಹುಲ್ ಗಾಂಧಿಯವರು ಆಗ ಜನಗಣತಿ ಮಾಡಿ ದೇಶದ ಜನಸಂಖ್ಯೆ ಆಧಾರದಲ್ಲಿ ಸಂಪತ್ತಿನ ವಿತರಣೆ ಮಾಡುತ್ತೇವೆ ಎಂದಿದ್ದರು. ಅದು ಅಸಮಾನತೆ ಸರಿಪಡಿಸಲು ಪೂರಕ ಎಂದಿದ್ದರು. ಕಷ್ಟಪಟ್ಟು ದುಡಿದವರ ಹಣವನ್ನು ಕೂಡ ಏನೂ ಕಷ್ಟಪಡದೆ ಇರುವವರಿಗೆ ಹಂಚುತ್ತೇವೆ ಎಂಬ ಮನಸ್ಥಿತಿ ಇವತ್ತು ಬಂದಿದೆ ಎಂದು ಆಕ್ಷೇಪಿಸಿದರು. +ಇವರಿಗೆ ಮಾತ್ರ ದೆಹಲಿಯಲ್ಲಿ ತಾಯಿ ಗೊಂದು ಮನೆ, ಒಬ್ಬನೇ ಮಗನಿಗೊಂದು ಮನೆ ಬೇಕು. ಇದು ಸಂಪತ್ತಿನ ವಿತರಣೆಯೇ ಎಂದು ಗೊತ್ತಾಗುತ್ತಿಲ್ಲ ಎಂದು ತಿಳಿಸಿದರು. ಇದು ಕಾಂಗ್ರೆಸ್ಸಿನೊಳಗಡೆ ಉಂಟಾಗಿರುವ ಮಾವೋವಾದಿ ಮಾನಸಿಕತೆ ಎಂದು ದೂರಿದರು.ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಅಶೋಕ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_169_11.txt b/eesanje/url_46_169_11.txt new file mode 100644 index 0000000000000000000000000000000000000000..8a0240fea94d40483fd18bbaa67ae709e211d2e9 --- /dev/null +++ b/eesanje/url_46_169_11.txt @@ -0,0 +1,6 @@ +ಯುವ ಮತದಾರರಿಗೆ ಮತದಾನ ಜಾಗೃತಿ +ತುಮಕೂರು, ಏ.24-ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ತುಮಕೂರು ಹಾಗೂ ತುಮಕೂರು ತಾಲ್ಲೂಕು ಪಂಚಾಯತ್ ವತಿಯಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳವಾದ ಮಂದಾರ ಗಿರಿಯ ಮೇಲೆ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. +ಜೈನ ಬಸದಿ ಮುಂಭಾಗ ವಿ (ವೋಟ್) ಆಕೃತಿಯನ್ನು ರಚಿಸುವುದರ ಮೂಲಕ ಕಾರ್ಯಕ್ರಮವನ್ನು ಸುಂದರಗೊಳಿಸಲಾಯಿತು. ನಂತರ ಬೆಟ್ಟದ ಮೇಲೆ ವೋಟ್ ತುಮಕೂರು 2024 ಎಂಬ ಅಕ್ಷರಗಳಿರುವ ಬಲೂನ್ ಹಾರಿಸಿ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. +ಕಾರ್ಯಕ್ರಮದ ಬಗ್ಗೆ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಪ್ರಭು ಜಿ., ಜಿಲ್ಲೆಯಲ್ಲಿ 45,000 ಯುವಕರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಯುವ ಮತದಾರರನ್ನು ಮತಗಟ್ಟೆಗಳ ಕಡೆ ಸೆಳೆಯುವ ಉದ್ದೇಶದಿಂದ ಹಾಗೂ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರಣದಿಂದ ಮಂದಾರ ಗಿರಿ ಪ್ರವಾಸಿ ತಾಣದಲ್ಲಿ ಕಾರ್ಯಕ್ರಮ ಆಯೋಜಿಲಾಗಿದೆ ಎಂದರು. +ಮೊದಲ ಬಾರಿಗೆ ಮತ ಚಲಾಯಿಸಲು ಸಿದ್ದರಿರುವ ಯುವ ಮತದಾರರಿಗೆ ಗುಲಾಬಿ ಹೂ ನೀಡುವುದರ ಮೂಲಕ ಸ್ವಾಗತವನ್ನು ಕೋರಲಾಗಿದೆ. ಈ ಮೂಲಕ ಜಿಲ್ಲಿಯಲ್ಲಿರುವ ಎಲ್ಲಾ ಯುವ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವುದರ ಮೂಲಕ ಪ್ರಜಾ ಪ್ರಭುತ್ವವನ್ನು ಉಳಿಸಬೇಕು ಎಂಬುದು ನಮ್ಮೆಲ್ಲರ ಆಶಯ ಎಂದರು. +ಕಾರ್ಯಕ್ರದಮಲ್ಲಿ ಜಿಲ್ಲಾ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಕೃಷಿ ಇಲಾಖೆ ಉಪ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶ ಶಾರದಮ್ಮ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹರ್ಷಕುಮಾರ್ ಸೇರಿದಂತೆ ಸುಮಾರು 600 ಮಂದಿ ಭಾಗಿಯಾಗಿದ್ದರು. ವಿವಿಧ ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ ಪಡೆ, ಪ್ರವಾಸಿಗರು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧಿಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_169_12.txt b/eesanje/url_46_169_12.txt new file mode 100644 index 0000000000000000000000000000000000000000..712ab64bf28125ee9ba57af5c9e0213cc63345bc --- /dev/null +++ b/eesanje/url_46_169_12.txt @@ -0,0 +1,7 @@ +ಪ್ರಧಾನಿ ಮೋದಿ ಮಂಗಳಸೂತ್ರದ ಟೀಕೆಗೆ ಕಾಂಗ್ರೆಸ್ ಪ್ರತ್ಯುತ್ತರ +ಬೆಂಗಳೂರು,ಏ.24-ಹತ್ತು ವರ್ಷದ ಸುದೀರ್ಘ ಆಡಳಿತ ಮಾಡಿಯೂ ಒಂದೇ ಒಂದು ತನ್ನ ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಮೋದಿಯವರು, ಅತ್ಯಂತ ನಿರ್ಲಜ್ಜ ಹಾಗೂ ಸಂವೇದನಾಶೂನ್ಯರಾಗಿ ಮಾತಾಡುತ್ತಿದ್ದಾರೆ, ಮಂಗಳಸೂತ್ರ ಎಂಬುದು ಮಹಿಳೆಯರ ಭಾವನಾತ್ಮಕ ವಿಚಾರ. ಯಾವ ವಿಚಾರವನ್ನು ಸಹಿಸಿದರೂ ಮಾಂಗಲ್ಯ ವಿಚಾರವನ್ನು ಮಹಿಳೆಯರು ಸಹಿಸಲಾರರು ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. +ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗೆ ಪ್ರತ್ಯುತ್ತರಿಸಿದೆ. ತಾಳಿ ನಮ್ಮ ದೇಶದ ಜನರ ಸಂಸ್ಕøತಿ, ಸಂಪ್ರದಾಯ, ಭಾವನೆಗಳಲ್ಲಿ ಅಡಕವಾಗಿರುವ ಪವಿತ್ರ ವಸ್ತು. ಇಂತಹ ತಾಳಿಯ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಹತಾಶ ಮೋದಿಯವರು ದೇಶದ ಮಹಿಳೆಯರ ಮಾಂಗಲ್ಯವನ್ನು ಕಿತ್ತು ವಿಧವೆಯರನ್ನಾಗಿ ನೋಡಲು ಬಯಸುತ್ತಿದ್ದಾರೆಯೇ? ಹೀಗೆ ಬಯಸಿದರೂ ಆಶ್ಚರ್ಯವಿಲ್ಲ, ಏಕೆಂದರೆ ಮಾಂಗಲ್ಯ ಕಿತ್ತುಕೊಂಡ ಕರಾಳ ಇತಿಹಾಸವೇ ಇವರಿಗಿದೆ ಎಂದು ಕಿಡಿಕಾರಿದೆ. +ಗೋದ್ರಾ ಗಲಭೆಯಲ್ಲಿ ಸುಮಾರು 2000 ಜನರ ಮಾಂಗಲ್ಯ ಕಿತ್ತುಕೊಂಡವರಲ್ಲವೇ? ರೈತ ಪ್ರತಿಭಟನೆಯಲ್ಲಿ 700 ರೈತ ಮಹಿಳೆಯರ ಮಾಂಗಲ್ಯ ಕಿತ್ತುಕೊಂಡವರಲ್ಲವೇ? ಕೋವಿಡ್ ಸಮಯದಲ್ಲಿ ಆಕ್ಸಿಜನ್, ಚಿಕಿತ್ಸೆ ನೀಡದೆ ಸಾವಿರಾರು ಜನರ ಮಾಂಗಲ್ಯ ಕಿತ್ತುಕೊಂಡವರು ನೀವಲ್ಲವೇ? ಇಂತಹ ಮಾಂಗಲ್ಯ ಕಸಿಯುವ ಬಿಜೆಪಿಯಿಂದ ದೇಶದ ಮಹಿಳೆಯರ ಜೀವನಕ್ಕೆ ಭದ್ರತೆ ದೊರೆಯುವುದು ಅಸಾಧ್ಯ ಎಂದು ವಾಗ್ದಾಳಿ ನಡೆಸಿದೆ. +ಸ್ವತಂತ್ರಾನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ವಹಿಸಿಕೊಂಡಾಗ ದೇಶದ ಸ್ಥಿತಿ ಅಕ್ಷರಶಃ ಸೊನ್ನೆ ಎನ್ನುವಂತಿತ್ತು, ಕಾಂಗ್ರೆಸ್ ಮುಂದೆ ಏಕಕಾಲಕ್ಕೆ ಹಲವು ಸವಾಲುಗಳಿದ್ದವು, ದೇಶದ ರಕ್ಷಣಾ ವ್ಯವಸ್ಥೆ ಬಲಪಡಿಸುವುದರಿಂದ ಹಿಡಿದು, ಮೂಲಸೌಕರ್ಯದ ಅಭಿವೃದ್ಧಿ, ಅರ್ಥ ವ್ಯವಸ್ಥೆಯ ಬಲವರ್ಧನೆ, ಉದ್ಯಮಗಳ ಸ್ಥಾಪನೆ, ನೀರಾವರಿ ವ್ಯವಸ್ಥೆ ಸೇರಿದಂತೆ ದೇಶದ ಸರ್ವತೋಮುಖ ಅಭಿವೃದ್ಧಿ ಮಾಡುವ ಸವಾಲಿತ್ತು. +ಜೊತೆಗೆ ಶೇ. 88 ರಷ್ಟಿದ್ದ ಅನಕ್ಷರತೆಯ ಪ್ರಮಾಣವನ್ನು ಕಡಿಮೆ ಮಾಡಿ ದೇಶದ ಜನರಿಗೆ ಶಿಕ್ಷಣ ನೀಡಬೇಕಾದ ಸವಾಲು, ಸಾಂಕ್ರಾಮಿಕ ರೋಗಗಳನ್ನು ಎದುರಿಸುತ್ತಾ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವ ಸವಾಲು, ವೈಜ್ಞಾನಿಕ ಕೃಷಿಯ ಮೂಲಕ ಆಹಾರ ಭದ್ರತೆಯನ್ನು ಸ್ಥಾಪಿಸುವ ಸವಾಲುಗಳನ್ನು ಏಕಕಾಲಕ್ಕೆ ಎದುರಿಸಿದ ಕಾಂಗ್ರೆಸ್ ದೇಶವನ್ನು ಸಮರ್ಥವಾಗಿ ಕಟ್ಟಿದೆ ಎಂದು ಸಮರ್ಥಿಸಿಕೊಳ್ಳಲಾಗಿದೆ. +ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ಸರ್ಕಾರಿ ಸೇವೆಗಳನ್ನು ನೀಡಿ ಜನರನ್ನು ಸದೃಢರನ್ನಾಗಿಸುವ ನಮ್ಮ ಪ್ರಯತ್ನದ ಫಲವಾಗಿ ಇಂದು ಭಾರತದ ಅಭಿವೃದ್ಧಿಶೀಲ ರಾಷ್ಟ್ರವಾಗಿ ಮುನ್ನುವಂತಾಗಿದೆ. ಕಾಂಗ್ರೆಸ್ ನಾಯಕರ ತ್ಯಾಗ, ಬಲಿದಾನ ಹಾಗೂ ಜನಪರ ಕೆಲಸಗಳ ಬಗ್ಗೆ ದೇಶದ ಜನ ಮೆಚ್ಚುಗೆಯ ಭಾವನೆ ಹೊಂದಿದ್ದಾರೆ ಎಂದು ಹೇಳಿಕೊಂಡಿದೆ. \ No newline at end of file diff --git a/eesanje/url_46_169_2.txt b/eesanje/url_46_169_2.txt new file mode 100644 index 0000000000000000000000000000000000000000..a209b064bcb155dfce8d0c3e5f2b7ebbecd865a3 --- /dev/null +++ b/eesanje/url_46_169_2.txt @@ -0,0 +1,4 @@ +ರಾಜ್ಯದಲ್ಲಿ ನಾಳೆ ಮೊದಲ ಹಂತದ ಚುನಾವಣೆ, ಮತದಾನದ ಹಕ್ಕು ಪಡೆದಿದ್ದಾರೆ 2,88,19,342 ಮತದಾರರು +ಬೆಂಗಳೂರು,ಏ.25-ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರ, 11,160 ಸೇವಾ ಮತದಾರರು ಸೇರಿದ್ದಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಗುತ್ತದೆ. +ಪರ್ಯಾಯ ದಾಖಲೆ :ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಹಾಗೂ ವೋಟರ್ ಸ್ಲಿಪ್ ಅನ್ನು ತೋರಿಸಿ ಮತ ಚಲಾಯಿಸಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಪರ್ಯಾಯವಾಗಿ ಭಾವಚಿತ್ರವುಳ್ಳ ಇತರ ಅಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ. +ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್‌್ಸ, ಪ್ಯಾನ್ ಕಾರ್ಡ್, ಪಾಸ್ಪೋರ್ಟ್, ಪಿಂಚಣಿಯ ದಾಖಲೆ, ಕೇಂದ್ರ, ರಾಜ್ಯ ಸರ್ಕಾರಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿರುವ ಗುರುತಿನ ಚೀಟಿ, ಎಂಪಿ, ಎಂಎಲ್ಎ, ಎಂಎನ್ಸಿಗಳಿಗೆ ನೀಡಿರುವ ಗುರುತಿನ ಚೀಟಿಗಳು, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಕಾರ್ಡ್ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. diff --git a/eesanje/url_46_169_3.txt b/eesanje/url_46_169_3.txt new file mode 100644 index 0000000000000000000000000000000000000000..03dcdb1058a36bb50123df759a3a6e824f54eab8 --- /dev/null +++ b/eesanje/url_46_169_3.txt @@ -0,0 +1,8 @@ +ಕರ್ನಾಟಕ ಸೇರಿ 13 ರಾಜ್ಯಗಳ 89 ಕ್ಷೇತ್ರಗಳಲ್ಲಿ ನಾಳೆ ನಿರ್ಧಾರವಾಗಲಿದೆ ಘಟಾನುಘಟಿ ನಾಯಕರ ಭವಿಷ್ಯ +ಬೆಂಗಳೂರು,ಏ.25-ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬೂಪೇಶ್ ಬಗೇಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಟಿ ಹೇಮಾಮಾಲಿನಿ, ಬಿಜೆಪಿ ರಾಷ್ಟ್ರೀಯ ಯುವ ಘಟಕ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಪ್ರಮುಖ ನಾಯಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ನಾಳೆ ನಡೆಯಲಿದೆ. +ನಾಳೆ 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅದರಲ್ಲಿ ಕೇರಳದ 20 ಕ್ಕೆ 20 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪೂರ್ಣಗೊಳ್ಳಲಿದೆ. ಉಳಿದಂತೆ ಕರ್ನಾಟಕದ 14, ರಾಜಸ್ಥಾನದ 13, ಉತ್ತರಪ್ರದೇಶ, ಮಹಾರಾಷ್ಟ್ರ ತಲಾ 8, ಮಧ್ಯಪ್ರದೇಶದ 7, ಅಸ್ಸಾಂ, ಬಿಹಾರದ ತಲಾ 5, ಛತ್ತೀಸ್‍ಗಡ, ಪಶ್ಚಿಮಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ತಲಾ 1, ಮಣಿಪುರದಲ್ಲಿ ಒಂದು ಅರ್ಧ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. +ಏಪ್ರಿಲ್ 4ಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನದ ವೇಳೆಗೆ 89 ಕ್ಷೇತ್ರಗಳಿಗೆ 1,206 ಅಭ್ಯರ್ಥಿಗಳಿಂದ 2,633 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ಪರಿಶೀಲನೆ ಬಳಿಕ 1,428 ನಾಮಪತ್ರಗಳು ಊರ್ಜಿತಗೊಂಡಿವೆ. +ಕೇರಳದ ವೈನಾಡು ಕ್ಷೇತ್ರದಲ್ಲಿ ರಾಹುಲ್‍ಗಾಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಬಿಜೆಪಿಯ ಕೆ.ಸಿಂಗರಂ ಮತ್ತು ಸಿಪಿಐನ ಅಣೈರಾಜ ಅವರ ನಡುವೆ ತ್ರಿಕೋನ ಸ್ಪರ್ಧೆಯಿದೆ. ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕ ಶಶಿತರೂರ್ ಎದುರು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ಪರ್ಧೆ ಮಾಡಿದ್ದಾರೆ. +ಬಿಜೆಪಿಯ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೋಟಾ ಕ್ಷೇತ್ರದಿಂದ, ಹೇಮಾಮಾಲಿನಿ ಮಥುರಾ ಕ್ಷೇತ್ರದಿಂದ, ಅರುಣ್ ಗೋವಿಂದ್ ಮೀರಥ್‍ನಿಂದ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಕ್ಷೇತ್ರದಿಂದ, ಅಮರಾವತಿಯಲ್ಲಿ ನವನೀತ್ ರಾಣ, ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ, ಕಾಂಗ್ರೆಸ್‍ನ ಮಾಜಿ ಮುಖ್ಯಮಂತ್ರಿ ಬೂಪೇಶ್ ಬಗೇಲ್, ರಾಜಾನಂದಗೌನ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್‍ನಿಂದ ಕಣದಲ್ಲಿದ್ದಾರೆ. ಉಳಿದಂತೆ ಪ್ರಮುಖರಾದ ಕೆ.ಸಿ.ವೇಣುಗೋಪಾಲ್, ಕೆ.ಮುರಳೀಧರನ್, ಸುರೇಶ್ ಗೋಪಿ, ಗೋವಿಂದ್ ಕಾರಜೋಳ, ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಸೇರಿದಂತೆ ಹಲವರು ಕಣದಲ್ಲಿದ್ದಾರೆ. +2019 ರ ಲೋಕಸಭಾ ಚುನಾವಣೆಯಲ್ಲಿ 88 ಕ್ಷೇತ್ರಗಳಲ್ಲಿ ಬಿಜೆಪಿ 52, ಶಿವಸೇನೆ 4, ಜೆಡಿಯು 4, ಪಕ್ಷೇತರ 1 ಸೇರಿದಂತೆ ಎನ್‍ಡಿಎ ಕೂಟ 61 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ನೇತೃತ್ವದ ಯುಪಿಎ ಕೂಟದಲ್ಲಿ ಜೆಡಿಎಸ್ 1, ಕೇರಳ ಕಾಂಗ್ರೆಸ್ ಮಣಿ 1, ಪಕ್ಷೇತರರು 1, ಐಯುಎಂಎಲ್ 2, ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಸೇರಿ 24 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇತರ ಪಕ್ಷಗಳಾದ ಬಿಎಸ್ಪಿ, ಸಿಪಿಎಂ, ಎನ್‍ಪಿಎಫ್ ತಲಾ 1 ರಲ್ಲಿ ಗೆಲುವು ಕಂಡಿತ್ತು. +ಎರಡನೇ ಹಂತದ ಚುನಾವಣೆಗಾಗಿ ಆಯೋಗ ದೇಶಾದ್ಯಂತ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇಂದು ಹಲವು ಕಡೆ ಮಸ್ಟರಿಂಗ್ ಕೇಂದ್ರಗಳ ಮೂಲಕ ಚುನಾವಣಾ ಸಿಬ್ಬಂದಿಗಳು ಮತಯಂತ್ರ ಹಾಗೂ ಅಗತ್ಯ ಪರಿಕರಳೊಂದಿಗೆ ಮತಗಟ್ಟೆಗೆ ತೆರಳಿದ್ದಾರೆ.ಬಿಸಿಲಿನ ತಾಪಮಾನ ವ್ಯಾಪಕವಾದ ಹಿನ್ನೆಲೆಯಲ್ಲಿ ರಾಜಸ್ಥಾನ ಸೇರಿದಂತೆ ಕೆಲವು ಕಡೆ ಮಸ್ಟರಿಂಗ್ ಸೆಂಟರ್‍ಗಳಲ್ಲಿ ಪೆಂಡಾಲ್‍ಗಳನ್ನು ಹಾಕಿ ನೆರಳಿನ ವ್ಯವಸ್ಥೆ ಮಾಡಲಾಗಿತ್ತು. ಛತ್ತೀಸ್‍ಗಡದಲ್ಲಿ ಸೂಕ್ಷ್ಮ ಮತಗಟ್ಟೆಗೆ ತೆರಳುವ ಸಿಬ್ಬಂದಿಗಳಿಗೆ ಹೆಲಿಕಾಫ್ಟರ್, ಪ್ರತ್ಯೇಕ ವಾಹನ ಹಾಗೂ ಭದ್ರತಾ ವ್ಯವಸ್ಥೆ ಮಾಡಿದ್ದು ಗಮನ ಸೆಳೆದಿತ್ತು. \ No newline at end of file diff --git a/eesanje/url_46_169_4.txt b/eesanje/url_46_169_4.txt new file mode 100644 index 0000000000000000000000000000000000000000..1f517d69b6b4ac59a478d2f434886274711243d3 --- /dev/null +++ b/eesanje/url_46_169_4.txt @@ -0,0 +1,6 @@ +“ಮುಸ್ಲಿಮರನ್ನು ಓಲೈಸಲು ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಐತಿಹಾಸಿಕ ಅನ್ಯಾಯ” +ಬೆಂಗಳೂರು, ಏ.25-ಮುಸ್ಲಿಮರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸದ್ದಿಲ್ಲದೇ ಶಿಫಾರಸು ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಕ್ಕೆ ಐತಿಹಾಸಿಕ ಅನ್ಯಾಯ ಎಸಗುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಸುನೀಲ್‍ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಮ್ಮ ವಿದ್ಯಾರ್ಥಿಗಳು ಹಾಗೂ ಯುವಕರ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿಯ ಪಾಲನ್ನು ಮುಸ್ಲಿಮರಿಗೆ ಹಂಚುವ ಜತೆಗೆ ನಗರ- ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳು ಸಂವಿಧಾನದ ಪ್ರಕಾರ ಪಡೆದ ಪಾಲನ್ನೂ ಮುಸ್ಲಿಮರ ಜತೆಗೆ ಹಂಚಿಕೊಳ್ಳಬೇಕಾಗುತ್ತದೆ. ಹೇಳಿ ಸಿದ್ದರಾಮಯ್ಯನವರೇ , ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ಎಂದು ಪ್ರಶ್ನಿಸಿದ್ದಾರೆ. +ಹಿಂದುಳಿದ ವರ್ಗಗಳ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಂಡು ಅದನ್ನು ಮುಸ್ಲಿಮರಿಗೆ ಹಂಚುವ ಕುತ್ಸಿತ ಹಾಗೂ ತುಷ್ಟೀಕರಣ ರಾಜಕಾರಣದ ಸಂಚು ಇದರಲ್ಲಿ ಅಡಗಿದೆ. ಹಿಂದುಳಿದ ವರ್ಗಗಳ ಹಿತಾಸಕ್ತಿ ರಕ್ಷಣೆಯ ಚಾಂಪಿಯನ್ ತಾನೆಂದು ಸ್ವಯಂ ಘೋಷಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಓಬಿಸಿ ಸಮುದಾಯಕ್ಕಿಂತ ಮುಸ್ಲಿಂ ಓಲೈಕೆಯೇ ಮುಖ್ಯ ಎಂಬುದು ಇದರಿಂದ ಸಾಬೀತಾಗಿದೆ ಎಂದಿದ್ದಾರೆ. +ಓಬಿಸಿ ಸಮುದಾಯದ ಪರ ಮಾತೃ ಹೃದಯ ಪ್ರದರ್ಶನ ಮಾಡುವುದನ್ನು ಬಿಟ್ಟು ಮಲತಾಯಿ ಧೋರಣೆಯನ್ನು ತೋರುತ್ತಿದ್ದಾರೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಕಾಲದಲ್ಲಿ ಈ ಬಗ್ಗೆ ಆಕ್ಷೇಪ ಎತ್ತದೇ ಹೋಗಿದ್ದರೆ ಭವಿಷ್ಯದಲ್ಲಿ ಹಿಂದುಳಿದ ವರ್ಗ ತೆರಬೇಕಿದ್ದ ಬೆಲೆಯನ್ನು ಊಹಿಸಿಕೊಂಡರೂ ಒಂದು ಕ್ಷಣ ಮೈ ನಡುಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. +ಹೇಳಿ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗದ ಮೇಲೆ ನಿಮಗ್ಯಾಕೆ ಈ ಆಕ್ರೋಶ ? ಸಮುದಾಯಕ್ಕೆ ಮಾಡುವ ಈ ಚಾರಿತ್ರಿಕ ಅನ್ಯಾಯದಿಂದ ನಿಮಗೆ ಸಿಗುವ ಲಾಭವೇನು ? ಆಯೋಗಕ್ಕೆ ಈ ಶಿಫಾರಸು ಮಾಡುವ ಮುನ್ನ ಯಾರ ಜತೆಗೆ ಚರ್ಚೆ ನಡೆಸಿದ್ದೀರಿ? ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು ? ಎಂದು ಅವರು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_169_5.txt b/eesanje/url_46_169_5.txt new file mode 100644 index 0000000000000000000000000000000000000000..adedda8b34bc7a09c68ee220844fd7c3288c4c0e --- /dev/null +++ b/eesanje/url_46_169_5.txt @@ -0,0 +1,5 @@ +ಏ. 29ರಿಂದ ಮೇ 16ರವರೆಗೆ ಪಿಯುಸಿ-2 ಪರೀಕ್ಷೆ +ಬೆಂಗಳೂರು,ಏ.25-ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29ರಿಂದ ಮೇ 16 ರವರೆಗೆ ನಡೆಯಲಿದ್ದು, ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್‍ಸೈಟ್ ://... ನಲ್ಲಿ ಪಡೆಯಬಹುದಾಗಿದೆ. +ಹನ್ನೊಂದು ಅಂಕಿಗಳನ್ನೊಳಗೊಂಡ ನೋಂದಣಿ ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪತ್ರವನ್ನು ಆನ್‍ಲೈನ್‍ನಲ್ಲಿ ಪಡೆಯಬಹುದಾಗಿದೆ. ಇನ್ನುಳಿದ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. +ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಒಟ್ಟು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 32,848 ವಿದ್ಯಾರ್ಥಿಗಳು ಫಲಿತಾಂಶವನ್ನು ಉನ್ನತೀಕರಿಸಿಕೊಳ್ಳಲು ಪರೀಕ್ಷೆ ತೆಗೆದುಕೊಂಡಿದ್ದು, 27,092 ವಿದ್ಯಾರ್ಥಿಗಳು ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ, ನಾಟ್ ಕ್ಲಿಯರ್ಡ್ ವಿದ್ಯಾರ್ಥಿಗಳ ಸಂಖ್ಯೆ 89,221 ಆಗಿದ್ದು, 139 ವಿದ್ಯಾರ್ಥಿಗಳು ಶೇ.75ರಷ್ಟು ಹಾಜರಾತಿ ಇಲ್ಲದೇ 17 ವರ್ಷ ತುಂಬಿದ ಖಾಸಗಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಮಂಡಳಿ ಮಾಹಿತಿ ನೀಡಿದೆ. +ಒಟ್ಟು 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಸೇರಿ 1,49,300 ಅಭ್ಯರ್ಥಿಗಳು ಪರೀಕ್ಷೆ 2ಕ್ಕೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ. \ No newline at end of file diff --git a/eesanje/url_46_169_6.txt b/eesanje/url_46_169_6.txt new file mode 100644 index 0000000000000000000000000000000000000000..1c10fc5d7b55f5405d759a5555e1a365c5df0bbd --- /dev/null +++ b/eesanje/url_46_169_6.txt @@ -0,0 +1,12 @@ +ಸ್ಯಾಮ್ ಪಿಟ್ರೋಡ ಹೇಳಿಕೆ ವೈಯಕ್ತಿಕವಾದದ್ದು, ಬಿಜೆಪಿಯವರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ : ಡಿಕೆಶಿ +ಬೆಂಗಳೂರು,ಏ.25-ಸಂಪತ್ತಿನ ತೆರಿಗೆ ವಿಚಾರವಾಗಿ ಕಾಂಗ್ರೆಸ್ ನಾಯಕ ಸ್ಯಾಂ ಪಿಟ್ರೋಡ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕವಾಗಿದ್ದು, ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ, ಅದು ಸಾಧ್ಯವೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೋಲಿನ ಭಯದಿಂದ ಹತಾಶವಾಗಿದೆ. ಹೀಗಾಗಿ ಅನಗತ್ಯವಾದ ವಿವಾದಗಳನ್ನು ಕೆಣಕಿ ಜನರ ಮನಸ್ಸನ್ನು ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದೆ ಎಂದು ಕಿಡಿಕಾರಿದರು. +ಈ ಹಿಂದೆ ಬಿಜೆಪಿ ಸರ್ಕಾರದಲ್ಲೇ ಸಂಪತ್ತಿನ ಒಡೆತನದ ಅಮಾನೀಕರಣ ವ್ಯವಸ್ಥೆಯನ್ನು ಜಾರಿಗೆ ತಂದು, ನಂತರ ಅದನ್ನು ಮರು ಹಂಚಿಕೆ ಮಾಡುವ ಚರ್ಚೆ ನಡೆದಿತ್ತು ಎಂದು ಯಾವುದೋ ಮಾಧ್ಯಮದಲ್ಲಿ ನಾನು ಓದಿದ್ದೆ. ನಮ್ಮ ಪಕ್ಷದಲ್ಲಿ ಅಂತಹ ಯಾವುದೇ ಚರ್ಚೆಗಳು, ತೀರ್ಮಾನಗಳು ಆಗಿಲ್ಲ. ಪ್ರಣಾಳಿಕೆಯಲ್ಲಿ ಏನು ಭರವಸೆ ಕೊಟ್ಟಿದ್ದೇವೆ ಅದಕ್ಕೆ ಮಾತ್ರ ನಾವು ಬದ್ಧ. ಅದನ್ನಷ್ಟೇ ಜಾರಿಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. +ಸ್ಯಾಂ ಪಿಟ್ರೋಟ ಹೇಳಿಕೆ ಸಂಪೂರ್ಣ ವೈಯಕ್ತಿಕ. ಈಗಾಗಲೇ ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸ್ಪಷ್ಟನೆ ನೀಡಿದ್ದಾರೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ಅದಕ್ಕೆ ಪಕ್ಷದ ಒಪ್ಪಿಗೆ ಇಲ್ಲ. ಈ ಹಿಂದೆ ಸಾಂಪ್ರದಾಯಿಕವಾಗಿ ಯಾವ ರೀತಿ ನಡೆದುಕೊಂಡು ಬಂದಿದೆಯೋ ಅದೇ ವ್ಯವಸ್ಥೆ ಮುಂದುವರೆಯಲಿದೆ. ರಾಜಕೀಯವಾಗಿ ಪರಂಪರೆಯನ್ನು ಮುಂದುವರೆಸಲಾಗುತ್ತದೆ. ಅಂತಹುದರಲ್ಲಿ ಪಿತ್ರಾರ್ಜಿತ ಆಸ್ತಿ ವರ್ಗಾವಣೆಯಾಗುವಾಗ ತೆರಿಗೆ ವಿಧಿಸಲು ಸಾಧ್ಯವೇ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. +ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ. ಅದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿಯವರು ಮಂಗಳಸೂತ್ರದಂತಹ ಹೇಳಿಕೆಗಳನ್ನು ನೀಡಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳಸೂತ್ರವನ್ನು ಕಿತ್ತು ಕಾಂಗ್ರೆಸ್‍ನವರು ಬೇರೆಯವರಿಗೆ ನೀಡುತ್ತಾರೆ ಎಂದು ಮೋದಿ ಹತಾಶೆ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಚಿನ್ನದ ಬೆಲೆ ಏರಿಕೆ ನೋಡಿದರೆ ಮಂಗಳಸೂತ್ರವನ್ನು ಮಾಡಿಸಿಕೊಳ್ಳಲಾಗದಂತಹ ವಾತಾವರಣವಿದೆ. ಇನ್ನು ಅದನ್ನು ಕಿತ್ತು ಬೇರೆಯವರಿಗೆ ಕಿತ್ತು ಕೊಡುವ ಅವಕಾಶವಾದರೂ ಎಲ್ಲಿದೆ ಎಂದು ಪ್ರಶ್ನಿಸಿದರು. +2014 ರಲ್ಲಿ ಮೋದಿ ಪ್ರಧಾನಿಯಾದಾಗ ಪ್ರತೀ ಗ್ರಾಂ ಚಿನ್ನದ ಬೆಲೆ 2,800 ರೂ. ಗಳಿತ್ತು. ಈಗ 75 ಸಾವಿರ ರೂ. ಆಗಿದೆ. 300 ಪಟ್ಟು ಹೆಚ್ಚಾಗಿದೆ. ಬಡವರು ಇಂತಹ ಪರಿಸ್ಥಿತಿಯಲ್ಲಿ ಮಂಗಳಸೂತ್ರ ಮಾಡಿಸಿಕೊಳ್ಳಲು ಸಾಧ್ಯವೇ ಎಂದು ಹೇಳಿದರು. +ನರೇಂದ್ರ ಮೋದಿಯವರಿಗೆ ದೇಶದ ಜನ 10 ವರ್ಷ ಅವಕಾಶ ನೀಡಿದರು. ಆದರೆ ಅಭಿವೃದ್ಧಿಯಾಗಲಿಲ್ಲ. ಚುನಾವಣೆಯಲ್ಲೂ ಅಭಿವೃದ್ಧಿಯ ವಿಚಾರಗಳು ಚರ್ಚೆಯೇ ಆಗುತ್ತಿಲ್ಲ. ಮಂಗಳಸೂತ್ರ, ಸಂಪತ್ತಿನ ತೆರಿಗೆಯಂತಹ ಸುಳ್ಳುಗಳ ವಿಚಾರಗಳನ್ನೇ ದೊಡ್ಡದಾಗಿ ಬಿಂಬಿಸಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ಬಿಜೆಪಿಯವರು ಜನರ ಅಭಿಪ್ರಾಯವನ್ನು ಗೌರವಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳಬೇಕೆಂದು ಹೇಳಿದರು. +ಮೊದಲ ಹಂತದ ಚುನಾವಣಾ ವೇಳೆ ತಮಿಳುನಾಡಿನಲ್ಲಿ 40 ಸ್ಥಾನಗಳಲ್ಲೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಗೆಲ್ಲುವ ಸಾಧ್ಯತೆಗಳಿವೆ. ಅದಕ್ಕಾಗಿ ಬಿಜೆಪಿಯವರು ಮೈ ಪರಚಿಕೊಳ್ಳುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಮೂರ್ನಾಲ್ಕು ಕಡೆ ಕಾಂಗ್ರೆಸ್‍ನ ಮುಖಂಡರನ್ನೇ ಗುರಿಯಾಗಿಸಿಕೊಂಡು ಆದಾಯ ತೆರಿಗೆ ದಾಳಿ ನಡೆದಿದೆ. ಬಿಜೆಪಿಯವರ್ಯಾರೂ ಹಣ ಹಂಚುತ್ತಿಲ್ಲವೇ? ಅದು ಚುನಾವಣಾ ಆಯೋಗಕ್ಕೆ, ಆದಾಯ ತೆರಿಗೆ ಅಧಿಕಾರಿಗಳಿಗೆ ಗೊತ್ತಿಲ್ಲವೇ? ಈವರೆಗೂ ಬಿಜೆಪಿಯ ಒಬ್ಬರ ಮನೆಯ ಮೇಲೂ ಏಕೆ ದಾಳಿಯಾಗಿಲ್ಲ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. +ಸುಳ್ಳು ವದಂತಿಗಳನ್ನು ಸೃಷ್ಟಿಸಿ, ಅಪಥ್ಯಗಳನ್ನು ವೈಭವೀಕರಿಸುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡುವ ಭರವಸೆಯಂತೆ ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವೃತ್ತಿ ತರಬೇತಿಯೊಂದಿಗೆ 1 ಲಕ್ಷ ಶಿಷ್ಯ ವೇತನ, 25 ಲಕ್ಷ ರೂ.ವರೆಗೆ ಆರೋಗ್ಯ ವಿಮೆ, ನಗರಪ್ರದೇಶದಲ್ಲಿ ಉದ್ಯೋಗ ಖಾತ್ರಿಯಂತಹ ಭರವಸೆಗಳನ್ನು ನೀಡಿದೆ. ಜನರಿಗೆ ಇವು ತಲುಪಿವೆ ಮತ್ತು ಅರ್ಥವಾಗಿವೆ. ಹೀಗಾಗಿ ಲೋಕಸಭಾ ಮತದಾನದಲ್ಲಿ ಬಿಜೆಪಿಗೆ ಚೊಂಬು ನೀಡಲಿದ್ದಾರೆ ಎಂದರು. +ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನುಡಿದಂತೆ ನಡೆದುಕೊಂಡಿದೆ. ಪಂಚಖಾತ್ರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ದೇಶದಲ್ಲೂ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_169_7.txt b/eesanje/url_46_169_7.txt new file mode 100644 index 0000000000000000000000000000000000000000..a1a4b3eb8a38952996ec19b228efa412ec858d18 --- /dev/null +++ b/eesanje/url_46_169_7.txt @@ -0,0 +1,9 @@ +ವೋಟ್ ಮಾಡಿ ಹೋಟೆಲ್‍ನಲ್ಲಿ ಉಚಿತ ಊಟ ಮಾಡಿ +ಬೆಂಗಳೂರು,ಏ.25-ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಮತ ಚಲಾವಣೆ ಮಾಡಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವಂತೆ ಮತದಾನದ ಬಗ್ಗೆ ಹಲವು ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. +ಕೆಲವರು ತಮ್ಮ ಮದುವೆ ಕಾರ್ಯಕ್ರಮಗಳಲ್ಲೂ ಮತದ ಹಕ್ಕಿನ ಬಗ್ಗೆ ಅರಿವು ಮೂಡಿಸಿರುವುದು ಕಂಡುಬರುತ್ತಿದೆ. ಆದರೆ, ಬೆಂಗಳೂರಿನ ಹೋಟೆಲ್‍ವೊಂದು ಮತದಾನ ಮಾಡಿ ಬಂದವರಿಗೆ ಉಚಿತ ಉಪಾಹಾರ ನೀಡಲು ಮುಂದಾಗಿದೆ. ಮತದಾನದ ಜಾಗೃತಿ ಸಲುವಾಗಿ ನಗರದ ನಿಸರ್ಗ ಹೊಟೇಲ್ ಮಾಲೀಕರು ಮತದಾನ ಮಾಡಿ ಬಂದವರಿಗೆ ಉಚಿತ ತಿಂಡಿತಿನಿಸುಗಳನ್ನು ನೀಡಲು ನಿರ್ಧರಿಸಿದ್ದಾರೆ. +ರಾಜ್ಯದಲ್ಲಿ ಮೊದಲ ಹಂತದಲ್ಲಿ ಬೆಂಗಳೂರು ಸೇರಿ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದೆ. ಈ ದಿನ ಮತದಾನ ಮಾಡಿದ ಬಳಿಕ ಹೋಟೆಲ್‍ಗೆ ಬಂದು ಮತದಾನದ ಗುರುತು ತೋರಿಸಿದರೆ ಜನರಿಗೆ ಉಚಿತ ಬೆಣ್ಣೆ ದೋಸೆ, ಸಿಹಿ ತಿನಿಸು, ತಂಪು ಪಾನಕ ನೀಡಲಿದ್ದಾರೆ. +ಚುನಾವಣಾ ಆಯೋಗದ ಅನುಮತಿ ಮೇರೆಗೆ ರಿಯಾಯಿತಿ ದರದಲ್ಲಿ ಊಟ, ತಿಂಡಿ, ಉಚಿತ ಸೇವೆಗೆ ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಹೋಟೆಲ್ ಮತದಾರರಿಗೆ ಈ ಮೂಲಕ ಮತದಾನದ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. +ವೋಟ್ ಮಾಡಿ ಊಟ ಮಾಡಿ:ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿ ಗುರುತು ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ತುಪ್ಪದ ಲಾಡು ಮತ್ತು ತಂಪು ಪಾನಕವನ್ನು ಮತದಾನದ ಉತ್ತೇಜನಕ್ಕಾಗಿ ಉಚಿತವಾಗಿ ನೀಡಲಾಗುವುದು. ವೋಟ್ ಮಾಡಿ, ಊಟ ಮಾಡಿ ಎನ್ನುವ ಸಾಮಾಜಿಕ ಕಳಕಳಿವುಳ್ಳ ರಾಜಕೀಯೇತರ ಕಾರ್ಯಕ್ರಮ ಇದಾಗಿದೆ ಎಂದು ನಿಸರ್ಗ ಹೊಟೇಲ್ ಮಾಲೀಕರಾದ ಕೃಷ್ಣ ರಾಜ್ ಹೇಳಿದ್ದಾರೆ. +ಚಿಕ್ಕಮಗಳೂರು, ಕೊಡಗು ಮುಂತಾದ ಕಡೆಗಳಲ್ಲಿ ಹೋಟೆಲ್ ಹಾಗೂ ಹೋಮ್ ಸ್ಟೇಗಳನ್ನು ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮತದಾನ ಮಾಡಲು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. +ನಾಳೆ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಇದ್ದು, ಶನಿವಾರ ಏಪ್ರಿಲ್ ತಿಂಗಳ ನಾಲ್ಕನೇ ಶನಿವಾರವಾಗಿದೆ. ಶುಕ್ರವಾರ ಮತ್ತು ಶನಿವಾರ ಸಾರ್ವಜನಿಕ ರಜೆ ಇದ್ದು ಭಾನುವಾರ ಸಹ ರಜೆ ಸಿಗುವ ಕಾರಣ ಮೂರು ದಿನ ರಜೆಯಾಗುತ್ತದೆ. ಸಾಲು ಸಾಲು ರಜೆಗಳು ಸಿಗುವ ಕಾರಣ ಕೆಲವೊಬ್ಬರು ಗುರುವಾರವೇ ಬೆಂಗಳೂರು ಪಟ್ಟಣ ಬಿಟ್ಟು ಟ್ರಿಪ್‍ಗೆ ಹೋಗುವ ಯೋಜನೆ ರೂಪಿಸುತ್ತಿದ್ದಾರೆ. +ಆದರೆ, ಇದನ್ನು ತಡೆಯುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ಬೆಂಗಳೂರಿನಲ್ಲಿ ಸಹ ಹೋಟೆಲ್ ಮಾಲೀಕರು ಹೊಸದಾಗಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. \ No newline at end of file diff --git a/eesanje/url_46_169_8.txt b/eesanje/url_46_169_8.txt new file mode 100644 index 0000000000000000000000000000000000000000..9864f6637200e56d9665b52aec33e10405003017 --- /dev/null +++ b/eesanje/url_46_169_8.txt @@ -0,0 +1,5 @@ +ನಾಳೆ ಮತದಾನ : ಮತಗಟ್ಟೆಗಳತ್ತ ತೆರಳುತ್ತಿರುವ ಚುನಾವಣಾ ಸಿಬ್ಬಂದಿ +ಬೆಂಗಳೂರು,ಏ.25-ನಾಳೆ ಮತದಾನ ನಡೆಯಲಿರುವ ದಕ್ಷಿಣ ಕರ್ನಾಟಕದ 14 ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಇಂದು ಮಧ್ಯಾಹ್ನ ತೆರಳಿದರು. +ಇಂದು ಬೆಳಿಗ್ಗೆ ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಸ್ಟರಿಂಗ್ ಕೇಂದ್ರಗಳಲ್ಲಿ ಚುನಾವಣಾ ಸಿಬ್ಬಂದಿ ಸಮಾವೇಶಗೊಂಡು ನಿಗದಿಪಡಿಸಿದ ಮತಗಟ್ಟೆಗಳಿಗೆ ಮತಯಂತ್ರ ಹಾಗೂ ಇತರ ಸಾಮಗ್ರಿಗಳೊಂದಿಗೆ ತೆರಳಿದರು. +ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. +ಮತಗಟ್ಟೆಯ 200 ಮೀಟರ್ ದೂರದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಕಚೇರಿಗಳನ್ನು ಸ್ಥಾಪಿಸಲು ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ. \ No newline at end of file diff --git a/eesanje/url_46_169_9.txt b/eesanje/url_46_169_9.txt new file mode 100644 index 0000000000000000000000000000000000000000..39bdbe3d77752b235e5ff29b0b5fea5a9fd9706a --- /dev/null +++ b/eesanje/url_46_169_9.txt @@ -0,0 +1,5 @@ +ನಾಳೆ ಮೊದಲ ಹಂತದ ಚುನಾವಣೆ : ವೋಟ್ ಐಡಿ ಇಲ್ಲದಿದ್ದರೆ ಪರ್ಯಾಯ ದಾಖಲೆಗಳೇನಿರಬೇಕು..? +ಬೆಂಗಳೂರು,ಏ.25-ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, 2,88,19,342 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. 1,44,17,530 ಪುರುಷ, 1,43,87,585 ಮಹಿಳಾ, 3,057 ಇತರೆ, 11,160 ಸೇವಾ ಮತದಾರರು ಸೇರಿದ್ದಾರೆ. +14 ಲೋಕಸಭಾ ಕ್ಷೇತ್ರಗಳಲ್ಲಿ 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಲೋಕಸಭಾ ಚುನಾವಣೆಯಲ್ಲಿ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ. +ಪರ್ಯಾಯ ದಾಖಲೆ :ಮತದಾನ ಮಾಡಲು ಚುನಾವಣಾ ಆಯೋಗ ನೀಡಿರುವ ಮತದಾರರ ಗುರುತಿನ ಚೀಟಿ ಹಾಗೂ ವೋಟರ್ ಸ್ಲಿಪ್ ಅನ್ನು ತೋರಿಸಿ ಮತ ಚಲಾಯಿಸಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಪರ್ಯಾಯವಾಗಿ ಭಾವಚಿತ್ರವುಳ್ಳ ಇತರೆ ಅಧಿಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ. +ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪ್ಯಾನ್ ಕಾರ್ಡ್, ಪಾಸ್‍ಪೋರ್ಟ್, ಪಿಂಚಣಿಯ ದಾಖಲೆ, ಕೇಂದ್ರ, ರಾಜ್ಯ ಸರ್ಕಾರಗಳು, ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿರುವ ಗುರುತಿನ ಚೀಟಿ, ಎಂಪಿ, ಎಂಎಲ್‍ಎ, ಎಂಎನ್‍ಸಿಗಳಿಗೆ ನೀಡಿರುವ ಗುರುತಿನ ಚೀಟಿಗಳು, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ಕಾರ್ಡ್ ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ. \ No newline at end of file diff --git a/eesanje/url_46_16_1.txt b/eesanje/url_46_16_1.txt new file mode 100644 index 0000000000000000000000000000000000000000..72de19b00f05fcf448afd765a9551a4609b7708d --- /dev/null +++ b/eesanje/url_46_16_1.txt @@ -0,0 +1,4 @@ +ರಾಮನಗರ : ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ವರು ಸಾವು +: +ಬೆಂಗಳೂರು,ಸೆ.17– ರಾಷ್ಟ್ರೀಯ ಹೆದ್ದಾರಿ 75ರ ಕುದೂರು ಸಮೀಪದ ಭದ್ರಾಪುರ ಗೇಟ್ ಬಳಿ ಕಾರು ಮರಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು ಒಬ್ಬರು ಗಾಯಗೊಂಡಿದ್ದಾರೆ. +ಇಂದು ಮಧ್ಯಾಹ್ನ ಸುಮಾರು 4ಗಂಟೆ ಸಮಯದಲ್ಲಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_16_10.txt b/eesanje/url_46_16_10.txt new file mode 100644 index 0000000000000000000000000000000000000000..bda44fd7e6b4c404cf99dcff0d305d4d6c80cd6c --- /dev/null +++ b/eesanje/url_46_16_10.txt @@ -0,0 +1,9 @@ +ನಾಗಮಂಗಲ ಕೋಮುಗಲಭೆ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಒತ್ತಾಯ + +ಬೆಂಗಳೂರು,ಸೆ.17-ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯನ್ನು ರಾಜ್ಯ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ನೋಟಕ್ಕೆ ಇದು ಆಕಸಿಕವಾಗಿ ನಡೆದ ಗಲಾಟೆ ಅಲ್ಲ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಪೆಟ್ರೋಲ್‌ ಬಾಂಬ್‌ಗಳು ಎಲ್ಲಿಂದ ಬಂದವು? ಮಾಸ್ಕ್‌ಗಳನ್ನು ಏಕೆ ಖರೀದಿಸಲಾಯಿತು? ಎಂದು ಪ್ರಶ್ನಿಸಿದರು.ಸತ್ಯಾಸತ್ಯತೆ ಹೊರಬರಬೇಕೆಂದರೆ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ ಇಲ್ಲ. ಹೀಗಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು. +ಕರ್ನಾಟಕದಲ್ಲಿ ಅಪರಾಧಿಗಳು, ದೇಶದ್ರೋಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅನೇಕ ಕಡೆ ಪ್ಯಾಲೇಸ್ತೈನ್‌ ಧ್ವಜ ಹಿಡಿದುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಾರೆ. ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲವೇ ಎಂದು ಕಿಡಿಕಾರಿದರು.ರಾಜ್ಯದ ಕೆಲವು ಕಡೆ ನಡೆದ ಗಲಭೆಯಲ್ಲಿ ಪಿಎಫ್‌ಐ ಮತ್ತು ಎಸ್‌‍ಡಿಪಿಐ ಸದಸ್ಯರು ಶಾಮೀಲಾಗಿದ್ದಾರೆ. ನ್ಯಾಯ ಕೊಡಬೇಕಾದ ಸರ್ಕಾರ ಸಣ್ಣ ಘಟನೆ ಎಂದು ತಿಪ್ಪೇ ಸಾರುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು. +ಶಾಸಕ ಮುನಿರತ್ನ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಬೇಕು. ಕಾನೂನು ಏನು ಕ್ರಮ ಕೈಗೊಳ್ಳೊತ್ತೊ ಅದೇ ಆಗಲಿ. ಎಸ್‌‍ಎಫ್‌ಎಲ್‌ ವರದಿ ಬರಬೇಕು. ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದರು. ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಮಾತನಾಡಿ, ರಾಜ್ಯದಲ್ಲಿ ಸಾಲು ಸಾಲು ಕೋಮುಗಲಭೆಗಳು ಸರಣಿ ರೂಪದಲ್ಲಿ ನಡೆಯುತ್ತಿದ್ದರೂ ಪೊಲೀಸರು ಏನೂ ಮಾಡದ ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದು ವಿಷಾದಿಸಿದ್ದಾರೆ. +ಮಂಗಳೂರು, ನಾಗಮಂಗಲ ಸೇರಿದಂತೆ ಅನೇಕ ಕಡೆ ಗಲಭೆ ಪ್ರಕರಣಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಪೊಲೀಸರು ಸತ್ವ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸರ್ಕಾರ ಹೇಳುವ ಕೆಲಸವನ್ನಷ್ಟೇ ಪೊಲೀಸರು ಮಾಡುತ್ತಿದ್ದಾರೆ. ಅವರ ಕೈಯನ್ನು ಸಂಪೂರ್ಣವಾಗಿ ಕಟ್ಟಿ ಹಾಕಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೋಟ್‌ ಬ್ಯಾಂಕ್‌ ಮನಸ್ಥಿತಿಯಿಂದ ನಾವು ನ್ಯಾಯ ನಿರೀಕ್ಷೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. +ಸಿದ್ದರಾಮಯ್ಯ ಅವರು ಒಂದೇ ಒಂದು ಕಳಂಕ ಇಲ್ಲ ಎನ್ನುತ್ತಾರೆ. ಅರ್ಕಾವತಿ ಡಿ ನೋಟಿಫಿಕೇಷನ್‌ ಹಗರಣ, ಮುಡಾ ಭ್ರಷ್ಟಾಚಾರ ಬಯಲಿಗೆ ಬರುತ್ತಿದೆ, ಮಹರ್ಷಿ ವಾಲೀಕಿ ಹಗರಣ 187 ಕೋಟಿ ಹಗರಣ ಆಗಿದೆ ಅದು ಕಳಂಕ ಅಲ್ಲವೇ ಎಂದು ಪ್ರಶ್ನೆ ಮಾಡಿದರು.ನೀವು ಉತ್ತರ ಕೊಡುವ ವೇದಿಕೆ ವಿಧಾನಸಭೆ, ವಿಧಾನಪರಿಷತ್‌. ಅಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದೀರಿ. +ನ್ಯಾಯಾಲಯದ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರೆ ಅದರ ವಿರುದ್ಧ ಆಂದೋಲನ ಮಾಡಿಸುತ್ತೀರ, ನೀವೇ ಜಡ್‌್ಜ ಆಗುತ್ತೀರ, ನೀವೇ ವಕೀಲರಾಗುತ್ತೀರಿ ಎಂದು ವ್ಯಂಗ್ಯವಾಡಿದ ಅವರು, ವಿಶೇಷ ಅಧಿವೇಶನ ಕರಿಯಿರಿ, ಚರ್ಚೆ ಮಾಡೋಣ ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_16_11.txt b/eesanje/url_46_16_11.txt new file mode 100644 index 0000000000000000000000000000000000000000..73dae0d72bd86482e3f6f1c66fac9485173980c3 --- /dev/null +++ b/eesanje/url_46_16_11.txt @@ -0,0 +1,6 @@ +ಕಲ್ಯಾಣ ಕರ್ನಾಟಕ ವಿಮೋಚನಾ ದಿನ : ಕಲಬುರಗಿಯಲ್ಲಿ ಸಿಎಂ ಧ್ವಜಾರೋಹಣ + +ಬೆಂಗಳೂರು,ಸೆ.17-ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಆ ಭಾಗದ 6 ಜಿಲ್ಲೆಗಳಲ್ಲೂ ವಿಭಿನ್ನ ಹಾಗೂ ವಿಶಿಷ್ಟವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜಾರೋಹಣ ನೆರವೇರಿಸಿದ್ದು, ಬೀದರ್‌, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. +ಬಳ್ಳಾರಿಯಲ್ಲಿ ಪೌರಾಡಳಿತ ಸಚಿವ ರಹೀಂಖಾನ್‌ ಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದರು. ಬೀದರ್‌ನಲ್ಲಿ ಉಸ್ತುವಾರಿ ಸಚಿವ ಈಶ್ವರಖಂಡ್ರೆ, ಕೊಪ್ಪಳದಲ್ಲಿ ಸಚಿವ ಶಿವರಾಜ್‌ ತಂಗಡಗಿ, ರಾಯಚೂರಿನಲ್ಲಿ ಡಾ.ಶರಣಪ್ರಕಾಶ್‌ ಪಾಟೀಲ್‌ ಸೇರಿದಂತೆ ಹಲವು ಕಡೆ ಧ್ವಜಾರೋಹಣ ಹಾಗೂ ಗೌರವರಕ್ಷೆ ಸ್ವೀಕಾರ ಕಾರ್ಯಕ್ರಮಗಳು ನಡೆದವು. +ಕಲಬುರಗಿಯಲ್ಲಿ ಹೈದರಾಬಾದ್‌-ಕರ್ನಾಟಕ ವಿಮೋಚನಾ ದಿನದ ಸುವರ್ಣ ಮಹೋತ್ಸವ ಹಾಗೂ 371 ಜೆ ವಿಧಿಯ ಅನುಷ್ಟಾನ ದಶಮಾನೋತ್ಸವ ಸಂದರ್ಭದ ಜೊತೆಯಲ್ಲೇ ರಾಜ್ಯ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸಂಪುಟದ ಎಲ್ಲಾ ಸಚಿವರು ಕಾರ್ಯಕ್ರಮಗಳಲ್ಲಿ ಹಾಗೂ ಸಚಿವ ಸಂಪುಟ ಸಭೆಗಳಲ್ಲಿ ಭಾಗವಹಿಸಿದ್ದರು. diff --git a/eesanje/url_46_16_12.txt b/eesanje/url_46_16_12.txt new file mode 100644 index 0000000000000000000000000000000000000000..0fb9756a6e669151340f22efaf2bf92101d863eb --- /dev/null +++ b/eesanje/url_46_16_12.txt @@ -0,0 +1,6 @@ +ರಾಹುಲ್ ಗಾಂಧಿಗೆ ನಿಂದಿಸಿದ ಯತ್ನಾಳ್‌ ವಿರುದ್ಧ ಪೊಲೀಸರಿಗೆ ದೂರು + +ಬೆಂಗಳೂರು, ಸೆ.17-ಕೇಂದ್ರದ ಮಾಜಿಸಚಿವ ಹಾಗೂ ಬಿಜೆಪಿಯ ವಿಜಯಪುರ ಜಿಲ್ಲೆಯ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್‌ ಗಾಂಧಿರವರ ವಿರುದ್ಧ ಅತ್ಯಂತ ಕೀಳು ಹಾಗೂ ವಯಕ್ತಿಕ ನಿಂಧನೆ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ತನಿಖೆ ನಡೆಸಿ ಬಂಧಿಸಬೇಕೆಂದು ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಸ್‌‍. ಮನೋಹರ್‌ ನೇತೃತ್ವದ ನಿಯೋಗ ಪೊಲೀಸರಿಗೆ ದೂರು ನೀಡಿದೆ. +ಬಸವನಗೌಡ ಪಾಟೀಲ್‌ ಯತ್ನಾಳ್‌ ಪ್ರತಿ ಬಾರಿಯೂ ಕೇವಲ ತನ್ನ ರಾಜಕೀಯಕ್ಕಾಗಿ ಹಾಗೂ ಪ್ರಚಾರಕ್ಕೋಸ್ಕರ ಕಾಂಗ್ರೆಸ್‌‍ ಪಕ್ಷದ ನಾಯಕರ ವಿರುದ್ಧ ಟೀಕೆ ನಡೆಸುತ್ತಿರುತ್ತಾರೆ. ರಾಹುಲ್‌ ಗಾಂಧಿರವರ ಬಗ್ಗೆ ಈಗಾಗಲೆ ಅನೇಕ ಬಾರಿ ಇಂತಹ ಟೀಕೆಗಳನ್ನು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ತಮಗೆ ದೂರನ್ನು ಸಲ್ಲಿಸಿದ್ದೇವೆ. +ಆದರೂ ಸಹ ಪೊಲೀಸ್‌‍ ಇಲಾಖೆ ಬಸವನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಆದ್ದರಿಂದ ವೈಯಕ್ತಿಕವಾಗಿ ರಾಹುಲ್‌ಗಾಂದಿರವರ ವಿರುದ್ಧ ನಿಂದನೆ ಹಾಗೂ ಟೀಕೆಯನ್ನು ಮಾಡುತ್ತಿದ್ದಾರೆ. +ಇದು ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಆಗಿರುವುದರಿಂದ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತರುವಂತಹ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈ ನಿಯೋಗದ ಮೂಲಕ ಮನವಿಯಲ್ಲಿ ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_46_16_2.txt b/eesanje/url_46_16_2.txt new file mode 100644 index 0000000000000000000000000000000000000000..0a7346a2d1b4baf8a7a2962db164c72c01458102 --- /dev/null +++ b/eesanje/url_46_16_2.txt @@ -0,0 +1,6 @@ +ಮಾಜಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ವಿಧಿವಶ + +ಯಾದಗಿರಿ,ಸೆ.17-ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟ ಗಾರ ದಿ.ವಿಶ್ವನಾಥರೆಡ್ಡಿ ಮುದ್ನಾಳ ಅವರ ಪುತ್ರ, ಮಾಜಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ (70) ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. +ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡರಾಗಿದ್ದ ಅವರು ಕಳೆದ ಹಲವು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದಿದ್ದಾರೆ. +ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ ಮುದ್ನಾಳ ಅವರು ಕಳೆದ ವಿಧಾನಸಭಾ ಚುನಾವಣೆಯ ನಂತರ ಸಾರ್ವಜನಿಕವಾಗಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. 2018ರಲ್ಲಿ ಬಿಜೆಪಿಯಿಂದ ಯಾದಗಿರಿ ಮತಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುದ್ನಾಳ ಅವರು 2023ರಲ್ಲಿ ಪರಾಭವಗೊಂಡಿದ್ದರು. +ಕಲ್ಯಾಣ ಕರ್ನಾಟಕದ ಸ್ವಾಂತ್ರತ್ಯ ಹೋರಾಟಗಾರ ದಿ. ವಿಶ್ವನಾಥರಡ್ಡಿ ಮುದ್ನಾಳ ಅವರ ಪುತ್ರರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ನಿಧನರಾಗಿದ್ದಾರೆ. \ No newline at end of file diff --git a/eesanje/url_46_16_3.txt b/eesanje/url_46_16_3.txt new file mode 100644 index 0000000000000000000000000000000000000000..c9ec7a1333feee5a13a408e9795759207678ae46 --- /dev/null +++ b/eesanje/url_46_16_3.txt @@ -0,0 +1,9 @@ +ಶಿವಸೇನೆ ಶಾಸಕ ಸಂಜಯ್‌ ಗಾಯಕ್‌ವಾಡ್‌ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್‌‍ ಪ್ರತಿಭಟನೆ + +ಬೆಂಗಳೂರು, ಸೆ.17-ರಾಹುಲ್‌ ಗಾಂಧಿಯವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದ ಶಿವಸೇನೆಯ ಶಾಸಕ ಸಂಜಯ್‌ ಗಾಯಕ್‌ವಾಡ್‌ರನ್ನು ಬಂಧಿಸಬೇಕೆಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.ಪಕ್ಷದ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌, ವಿಧಾನ ಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. +ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಬಣದ ಶಾಸಕ ಸಂಜಯ್‌ ಗಾಯಕ್‌ವಾಡ್‌ ವಿವಾದಿತ ಹೇಳಿಕೆ ನೀಡಿ ರಾಹುಲ್‌ ಗಾಂಧಿಯವರ ನಾಲಗೆ ಕತ್ತರಿಸಿ ದವರಿಗೆ 11 ಲಕ್ಷ ರೂ.ಗಳ ಬಹು ಮಾನ ನೀಡುವುದಾಗಿ ಘೋಷಿಸಿ ದ್ದರು. ಇದು ಕಾಂಗ್ರೆಸಿಗರನ್ನು ಕೆರಳಿಸಿದೆ. +ಪ್ರತಿಭಟನೆಯಲ್ಲಿ ಮಾತನಾಡಿದ ಜಿ.ಸಿ. ಚಂದ್ರಶೇಖರ್‌, ಮಹಾ ರಾಷ್ಟ್ರದಲ್ಲಿ ಗೂಂಡಾ ಸರ್ಕಾರ ಅಧಿಕಾರದಲ್ಲಿದೆ. ಸಂಜಯ್‌ ಗಾಯಕ್‌ವಾಡ್‌ ರೌಡಿಶೀಟರ್‌ ಆಗಿದ್ದು, ಶಾಸಕನಾಗಿರುವುದು ದುರಂತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ಪಂಗಡದವರೂ ಸೇರಿದಂತೆ ಶೋಷಿತ ಸಮುದಾಯ ಗಳಿಗೆ ಮೀಸಲಾತಿ ನೀಡಿದ್ದೇ ಕಾಂಗ್ರೆಸ್‌‍ ಪಕ್ಷ. +ರಾಹುಲ್‌ಗಾಂಧಿ ಅಮೆರಿಕದಲ್ಲಿ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಉದ್ದೇಶಪೂರ್ವಕವಾಗಿ ತಿರುಚಿ ಗೊಂದಲ ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಶೋಷಿತ ವರ್ಗಗಳಿಗೆ ಆರ್ಥಿಕ, ಸಾಮಾಜಿಕ ಸುಸ್ಥಿರತೆಯನ್ನು ತಂದ ಬಳಿಕ ಮೀಸಲಾತಿಯನ್ನು ತೆಗೆಯುವುದಾಗಿ ರಾಹುಲ್‌ಗಾಂಧಿ ಹೇಳಿದ್ದಾರೆ. ಆದರೆ ಅದನ್ನು ಪೂರ್ಣವಾಗಿ ಅರ್ಥೈಸಿಕೊಳ್ಳದೆ ಅಪಪ್ರಚಾರ ನಡೆಸಲಾಗುತ್ತಿದೆ. +ಆರಂಭದಿಂದಲೂ ರಾಹುಲ್‌ಗಾಂಧಿಯವರನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಆದರೆ ಅದಕ್ಕೆ ಜನ ಅವಕಾಶ ನೀಡಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿ ಬಿಜೆಪಿಗೆ ಬುದ್ಧಿ ಕಲಿಸಿದ್ದಾರೆ. ಸಂಜಯ್‌ ಗಾಯಕ್‌ವಾಡ್‌ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಲಾಗುವುದು. ನ್ಯಾಯಾ ಲಯದಲ್ಲಿ ಪ್ರಕರಣ ದಾಖಲಿಸ ಲಾಗು ವುದು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ತಮ ಹುದ್ದೆಯ ಘನತೆಯನ್ನು ಮರೆತು ಹೀನ ಹಾಗೂ ಕೀಳುಮಟ್ಟದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದೂರಿದರು. +ಬಿಜೆಪಿಯವರು ಸಂವಿಧಾನವನ್ನು ಪಾಲಿಸುತ್ತಿಲ್ಲ. ಮೋದಿ, ಅಮಿತ್‌ ಶಾ ಕಾನೂನುಗಳನ್ನು ಪಾಲನೆ ಮಾಡುತ್ತಿದ್ದಾರೆ. ಬಿಜೆಪಿಯ ಗೂಂಡಾಗಳು ಜನರ ಶಾಂತಿ ನೆಮದಿಯನ್ನು ಕೆಡಿಸುವುದು, ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಹಿಂಸಾಚಾರಕ್ಕೆ ಕುಮಕ್ಕು ನೀಡು ವುದನ್ನೇ ಪ್ರವೃತ್ತಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಹುಲ್‌ಗಾಂಧಿಯ ನಾಲಗೆ ಕತ್ತರಿಸುವುದಿರಲಿ ಅವರನ್ನು ಮುಟ್ಟಲೂ ಕೂಡ ಬಿಜೆಪಿಯವರಿಗೆ ಸಾಧ್ಯವಿಲ್ಲ. ಕಾಂಗ್ರೆಸ್‌‍ ಪಕ್ಷ ರಾಹುಲ್‌ಗಾಂಧಿಯವರ ಜೊತೆ ಸದೃಢವಾಗಿ ನಿಲ್ಲಲಿದೆ. ಶಿವಸೇನೆ ಸಂಜಯ್‌ ಗಾಯಕ್‌ವಾಡ್‌ನನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಜೊತೆಗೆ ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_16_4.txt b/eesanje/url_46_16_4.txt new file mode 100644 index 0000000000000000000000000000000000000000..db9c2ecbb8232b08b9aa4f83a1cbc7b084519981 --- /dev/null +++ b/eesanje/url_46_16_4.txt @@ -0,0 +1,12 @@ +ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲಾ ಭಯೋತ್ಪಾದನೆ ಹೆಚ್ಚಾಗುತ್ತೆ : ಆರ್‌.ಅಶೋಕ್ + +ಬೆಂಗಳೂರು,ಸೆ.17-ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲ ಮುಸ್ಲಿಂ ಭಯೋತ್ಪಾದನೆ ಹೆಚ್ಚಾಗುತ್ತದೆ. ಇದಕ್ಕೆ ಅತಿಯಾದ ತುಷ್ಟಿಕರಣ ನೀತಿಯೇ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದಲ್ಲಿ ಪೆಟ್ರೋಲ್‌ ಬಾಂಬ್‌ ಹಾಕುತ್ತಾರೆ, ಪ್ಯಾಲೆಸ್ತೈನ್‌ ಧ್ವಜ ಹಿಡ್ಕೊಂಡು ಓಡಾಡುತ್ತಾರೆ, ದೇಶಕ್ಕೆ ದ್ರೋಹ ಬಗೆಯುವವರ ಜೊತೆ ರಾಹುಲ್‌ ಟೀ ಪಾರ್ಟಿ ಮಾಡುತ್ತಾರೆ. ವಿದೇಶದಲ್ಲಿ ಭಾರತವನ್ನು ತೆಗಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಈದ್‌ ಮಿಲಾದ್‌ ಹೆಸರು ಹೇಳಿಕೊಂಡು ಪ್ಯಾಲೆಸ್ಟೈನ್‌ ಧ್ವಜ ಹಾರಿಸುತ್ತಾರೆ. ಎಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೋ ಅಲ್ಲೆಲ್ಲ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂದು ಕಿಡಿಕಾರಿದರು. +ಬಂಟ್ವಾಳದಲ್ಲಿ ಸವಾಲು ಹಾಕಿದವರನ್ನು ಹಿಡಿದು ಜೈಲಿಗೆ ಹಾಕದೆ, ಪೊಲೀಸರು ಕರೆದು ಕಾಫಿ ಕೊಟ್ಟು ಕಳಿಸಿದ್ದಾರೆ. ನಾವು ಕರೆದಾಗ ಬನ್ನಿ ಅಂತಾರೆ, ಖಡಕ್‌ ನಿರ್ಧಾರಗಳಿಲ್ಲ ಈ ಕೋಮು ದಳ್ಳುರಿ ಎಲ್ಲಿಗೆ ಹೋಗಿ ಮುಟ್ಟುತ್ತೊ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು. +ಈ ಘಟನೆಗಳಿಗೆ ಪ್ರಚೋದನೆ ಕೊಡುತ್ತಿರುವುದೇ ಕಾಂಗ್ರೆಸ್‌‍ಪಕ್ಷ. ಒಂದು ಸಮುದಾಯದ ಓಲೈಕೆಗಾಗಿ ಕಾಂಗ್ರೆಸ್‌‍, ಅವರು ಏನೇ ಮಾಡಿದರೂ ಕೇಳುವುದಿಲ್ಲ. ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ನ್ಯಾಯಾಲಯದಲ್ಲಿ ಏನಾಗುತ್ತದೆ ಎಂಬುದೇ ಅವರಿಗೆ ಚಿಂತೆ ಎಂದು ಕಿಡಿಕಾರಿದರು. +ಚಲುವರಾಯಸ್ವಾಮಿ ಆರೋಪ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌‍ನವರು ಸತ್ಯಹರಿಶ್ಚಂದ್ರನ ಮೊಮಕ್ಕಳಾ? ವಿಧಾನಸೌಧದಲ್ಲಿ ಕೂಗಿದಾಗ ಕೂಗೇ ಇಲ್ಲವೆಂದರು. ರಾಮೇಶ್ವರಂ ಕೆಫೆನದ್ದು ದೋಸೆ ಗಲಾಟೆ ಎಂದಿದ್ದರು. ಈಗ ಎನ್‌ಐಎನವರು ಹಿಡಿದಾಕಿದ್ದಾರೆ ಎಂದು ಹೇಳಿದರು. +ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ ಸಂಬಂಧ, ಓ ಮೈ ಬ್ರದರ್ಸ್‌ ಎನ್ನುತ್ತಾರೆ. ಅವರು ತಪ್ಪೇ ಮಾಡಿಲ್ಲ ಎನ್ನುತ್ತಾರೆ. ಅಲ್ಲಿ ನಡೆದದ್ದನ್ನು, ಜನ ಹೇಳಿದ್ದನ್ನು ನಾವು ಹೇಳಿದ್ದೀವಿ ಎಂದರು. +ಸರ್ಕಾರ ತನಿಖೆಗೂ ಮೊದಲು ಕ್ಲೀನ್‌ ಚಿಟ್‌ ಕೊಡುತ್ತಾರೆ. ಗಣೇಶ ಹಬ್ಬದಲ್ಲಿ ಪೆಟ್ರೋಲ್‌ ಬಾಂಬ್‌, ಲಾಂಗು ಮಚ್ಚು ಹೇಗೆ ಬಂತು? ಗಲಾಟೆ ಆಗುತ್ತದೆ ಎಂಬುದು ಗೊತ್ತಿದ್ದರೂ ಮುನ್ನೆಚ್ಚರಿಕೆ ವಹಿಸಿದ್ದರೂ ಕೇರಳದಿಂದ ಇಲ್ಲಿಗೆ ಬಂದು ಕೃತ್ಯಗಳನ್ನು ಮಾಡಿದ್ದಾರೆ. ಹಿಂದುಗಳ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. +ಆರ್‌ಎಸ್‌‍ಎಸ್‌‍ ನಾಯಕರ ಜೊತೆ ನಡೆಸಿದ ಸಂಧಾನ ವಿಫಲವಾಯಿತೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅಶೋಕ್‌, ಸಂಘದಿಂದ ಬಿಜೆಪಿಗೆ ಯಾವುದೇ ಸೂಚನೆ ಬಂದಿಲ್ಲ. ಸಂಘ ಒಂದು ಸಾಂಸ್ಕೃತಿಕ ಸಂಸ್ಥೆಯಾಗಿ. ಸಂಘ ರಾಜಕೀಯ ಮಾಡುವುದಿಲ್ಲ. ಸಂಘದ ಕಾರ್ಯ ಪದ್ಧತಿಯಲ್ಲಿ ರಾಜಕೀಯ ನುಸುಳಿಲ್ಲ ಎಂದು ಸಮರ್ಥಿಸಿಕೊಂಡರು. +ಅಧಿಕಾರಿ/ನೌಕರರ ಪ್ರಾಸಿಕ್ಯೂಷನ್‌ ವಿವರ ಕೇಳಿ ರಾಜ್ಯಪಾಲರು ಥಾವರ್‌ಚಂದ್ರ ಗೆಹ್ಲೋಟ್‌ ಅವರು ವಿವರಣೆ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವುದನ್ನು ಸಮರ್ಥಿಸಿಕೊಂಡ ಅವರು, ರಾಜ್ಯಪಾಲರು ಸರ್ಕಾರದ ಜೊತೆ ಸಂಘರ್ಷಕ್ಕೆ ಇಳಿದಿಲ. ಕಾನೂನು ಪ್ರಕಾರ ಪತ್ರ ಬರೆದಿದ್ದಾರೆ. ಅವರಿಗೆ ಮಾಹಿತಿ ಕೇಳುವ ಅಧಿಕಾರ ಇದೆ. ಮಾಹಿತಿ ಬಂದ ನಂತರ ರಾಜ್ಯಪಾಲರು ಔಚಿತ್ಯವಾದ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು. \ No newline at end of file diff --git a/eesanje/url_46_16_5.txt b/eesanje/url_46_16_5.txt new file mode 100644 index 0000000000000000000000000000000000000000..336cbf02d2c54c570b62048e12d5c3efc931aedd --- /dev/null +++ b/eesanje/url_46_16_5.txt @@ -0,0 +1,6 @@ +ಡಿಕೆಶಿ ವಿರುದ್ಧ ಶಾಸಕ ಯತ್ನಾಳ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ + +ಬೆಂಗಳೂರು,ಸೆ.17– ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. +ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿ ಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಲೋಕಾಯುಕ್ತ, ಸಿಬಿಐ, ರಾಜ್ಯ ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು. +ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಪ್ರಕರಣ ಸಂಬಂಧ ಸಚಿವ ಸಂಪುಟದಲ್ಲಿ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಸಿಬಿಐ ತನಿಖೆಯನ್ನು ಹಿಂಪಡೆಯಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಇದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವಂತೆ ಸೂಚಿಸಿ ಯತ್ನಾಳ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದರಂತೆ ಯತ್ನಾಳ್ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಿದ್ದರು. +ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿ.ಕೆ ಶಿವಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_16_6.txt b/eesanje/url_46_16_6.txt new file mode 100644 index 0000000000000000000000000000000000000000..9f6d4cc68bd5a9538d3b27a18832645a03695989 --- /dev/null +++ b/eesanje/url_46_16_6.txt @@ -0,0 +1,9 @@ +ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ತೆಲಂಗಾಣ ಚುನಾವಣೆಯಲ್ಲಿ ಬಳಕೆ : ಆರ್.ಅಶೋಕ್ + +ಬೆಂಗಳೂರು,ಸೆ.17– ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಹಾಗೇ ಉಳಿದಿದೆಯೋ ಅಥವಾ ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಗುಳೇ ಹೋಯಿತೋ? ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿ ಸಿದರು. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಕೇವಲ ಪೊಳ್ಳು ಭರವಸೆಗಳಾಗಿ ಉಳಿದಿದೆಯೂ ಅಥವಾ ಕಿಂಚಿತ್ತಾದರೂ ಅನುಷ್ಠಾನ ಆಗಿದೆಯೂ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರೇ ತಮ ಚೀಫ್‌ ್ಢಃಟಟಚಿಛ್ಟಿ ಮೂಲಕ ಫ್ಯಾಕ್ಟ್ ಚೆಕ್ ಮಾಡಿಸಿ ಕಲ್ಯಾಣ ಕರ್ನಾಟಕದ ಜನತೆಗೆ ವಾಸ್ತವಾಂಶ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ. +ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿ ಮಾಡಿ ಬಿಟ್ಟಿ ಪ್ರಚಾರ ಗಿಟ್ಟಿಸಿಕೊಳ್ಳಲು ಹೊರಟಿರುವ ಕಾಂಗ್ರೆಸ್, ಸರ್ಕಾರ ಕಲ್ಯಾಣ ಕರ್ನಾಟಕದ ಜನತೆಯ ಕಣ್ಣಿಗೆ ಮಣ್ಣೆರಚಿ ದ್ರೋಹ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ ಮಾಡಿದ ಮಾತ್ರಕ್ಕೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗಿಬಿಡುತ್ತಾ? ನಿಮಗೆ ಕಿಂಚಿತ್ತಾದರೂ ಆತಸಾಕ್ಷಿ ಇದ್ದರೆ ಸಂಪುಟ ಸಭೆ ಮಾಡುವ ಮುನ್ನ ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಒತ್ತಾಯಿಸಿದ್ದಾರೆ. +ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ರೂಪಾಯಿ ನೀಡುವುದಾಗಿ ತಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರಲ್ಲ, ಕಳೆದ ಎರಡು ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಒಟ್ಟು ಎಷ್ಟು ಹಣ ಮೀಸಲಿಟ್ಟಿದ್ದೀರಿ? ಅದರಲ್ಲಿ ಬಿಡುಗಡೆಯಾದ ಅನುದಾನ ಎಷ್ಟು? ಖರ್ಚಾಗಿದ್ದು ಎಷ್ಟು? ಎಂದು ಪ್ರಶ್ನೆ ಮಾಡಿದ್ದಾರೆ. +ಬಳ್ಳಾರಿಯಲ್ಲಿ 5,000 ಕೋಟಿ ರೂಪಾಯಿ ಮೊತ್ತದ ಅಪೇರಲ್ ಪಾರ್ಕ್ ಸ್ಥಾಪಿಸುವ ಭರವಸೆ ಏನಾಯ್ತು?ತಮ್ಮ ಪ್ರಚಾರ ಭಾಷಣದಲ್ಲಿ ಬಳ್ಳಾರಿಯನ್ನ ಜೀನ್ಸ್ ರಾಜಧಾನಿ ಮಾಡುವ ಭರವಸೆ ಏನಾಯ್ತು? ಕಲ್ಯಾಣ ಕರ್ನಾಟಕದಲ್ಲಿ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 100 ಪಿಯುಸಿ ಕಾಲೇಜು, ಒಂದು ಮಹಿಳಾ ಪದವಿ ಕಾಲೇಜು ಸ್ಥಾಪಿಸುವ ಭರವಸೆ ನೀಡಿದ್ದರಲ್ಲಾ? ಅದರಲ್ಲಿ ಒಂದಾದರೂ ಸ್ಥಾಪನೆಯಾಗಿದೆಯಾ? ಕಲ್ಯಾಣ ಕರ್ನಾಟಕದ ಪ್ರತಿ ಹೋಬಳಿಯಲ್ಲಿ ಒಂದು ಬಾಬಾ ಸಾಹೇಬ್ ಅಂಬೇಡ್ಕರ್ ಇಂಗ್ಲಿಷ್ ಮಾಧ್ಯಮ ಶಾಲೆ ಸ್ಥಾಪಿಸುವ ಭರವಸೆ ನೀಡಿದ್ದರಲ್ಲ, ಕನಿಷ್ಠ ಪಕ್ಷ ಒಂದಾದರೂ ಸ್ಥಾಪನೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ. +ಎರಡು ವರ್ಷದೊಳಗೆ ಕಲ್ಯಾಣ ಕರ್ನಾಟಕದ 2,500 ಹೊಸ ಶಾಲಾ ಕೊಠಡಿ ನಿರ್ಮಾಣ ಹಾಗು ಖಾಲಿ ಇರುವ ಎಲ್ಲ ಶಿಕ್ಷಕ ಹುದ್ದೆಗಳ ನೇಮಕಾತಿ ಮಾಡುತ್ತೇವೆ ಎನ್ನುವ ಭರವಸೆ ಈಡೇರುವುದು ಯಾವಾಗ? ಕಳೆದ 15 ತಿಂಗಳಲ್ಲಿ ಎಷ್ಟು ಶಿಕ್ಷಕರ ನೇಮಕಾತಿ ಆಗಿದೆ? ಎಷ್ಟು ಶಾಲಾ ಕೊಠಡಿಗಳ ನಿರ್ಮಾಣ ಆಗಿದೆ ಎಂದು ಪ್ರಶ್ನೆ ಹಾಕಿದ್ದಾರೆ. +ಕಲ್ಯಾಣ ಕರ್ನಾಟಕದ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಭರವಸೆ ಈಡೇರಿದೆಯೇ? ಎಂದು ಎಂದು ಪ್ರಶ್ನೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕವನ್ನ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ನಾಮಕಾವಸ್ತೆ ಸಂಪುಟ ಸಭೆ ಮಾಡುವ ಮೊದಲು ಕಲ್ಯಾಣ ಕರ್ನಾಟಕದ ಜನತೆಯ ಈ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_16_7.txt b/eesanje/url_46_16_7.txt new file mode 100644 index 0000000000000000000000000000000000000000..109e4cbfd21d2101516fdd465e983566bb5d39d4 --- /dev/null +++ b/eesanje/url_46_16_7.txt @@ -0,0 +1,11 @@ +5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಸಂಕಲ್ಪ : ಸಿಎಂ +5000 +ಬೆಂಗಳೂರು,ಸೆ.17- ಕಲ್ಯಾಣ ಕರ್ನಾಟಕ ಭಾಗದ ಪ್ರಗತಿಗಾಗಿ 5 ಸಾವಿರ ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಅಭಿವೃದ್ಧಿಯ ನವಕ್ರಾಂತಿಯನ್ನು ನಿರೀಕ್ಷಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ ವಿಶೇಷ ಸ್ಥಾನಮಾನ ಕಲ್ಪಿಸುವ 371 ಜೆ ವಿಧಿಯ ಜಾರಿಯ ದಶಮಾನೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವರಕ್ಷೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ವರ್ಷ ಉತ್ತಮ ಮಳೆಯಾಗಿದ್ದು, ಪ್ರಕೃತಿಯ ಆಶೀರ್ವಾದದಿಂದ ರೈತರಲ್ಲಿ ಸಂತಸ ಮೂಡಿದೆ ಎಂದರು. 2013 ರಿಂದ ಈವರೆಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 19,778 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು, 13,229 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಈವರೆಗೂ 11,174 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹೇಳಿದರು. +ಬಿಡುಗಡೆಯಾದ ಅನುದಾನಕ್ಕೆ ಶೇ.85 ರಷ್ಟು ಮಂಡಳಿ ಆರ್ಥಿಕ ಪ್ರಗತಿಯನ್ನು ಸಾಧಿಸಿದೆ ಒಟ್ಟಾರೆ 35,885 ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 27,164 ಕಾಮಗಾರಿಗಳು ಪೂರ್ಣಗೊಂಡಿವೆ. 8,621 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ ಎಂದು ವಿವರಿಸಿದರು. +ಭಾರತಕ್ಕೆ ಸ್ವಾತಂತ್ರ್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿತ್ತು. ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ್ಯದ ಬೆಳಕು ಬಂದಿದ್ದು 1948 ರಲ್ಲಿ. ಅಸಂಖ್ಯಾತರ ಹೋರಾಟ, ತ್ಯಾಗ ಬಲಿದಾನದಿಂದ ಸರ್ದಾರ್ ವಲ್ಲಭಾಬಾಯಿ ಪಟೇಲ್, ಜವಹರಲಾಲ್ ನೆಹರೂ ಅವರ ದೂರದೃಷ್ಟಿಯಿಂದಾಗಿ ಕಲ್ಯಾಣ ಕರ್ನಾಟಕ ಭಾಗ ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರ್ಪಡೆಯಾಗುವಂತಾಯಿತು. ಹೈದರಾಬಾದ್-ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಎಲ್ಲರನ್ನೂ ಸರಿಸುವುದಾಗಿ ಹೇಳಿದರು. +ಕಲ್ಯಾಣ ಕರ್ನಾಟಕ ಭಾಗ ಸೂಫಿ ಸಂತರ ಬೀಡಾಗಿದ್ದು, ಕೋಮುಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟ, ಹೈದರಾಬಾದ್-ಕರ್ನಾಟಕ ವಿಮೋಚನಾ ಹೋರಾಟ, ಭಾಷಾವಾರು ಪ್ರಾಂತ್ಯ ರಚನೆ ಹೋರಾಟ, ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ಸೇರಿ ನಾಲ್ಕು ಮಹತ್ವದ ಚಳವಳಿಗಳು ನಡೆದಿವೆ. ಈ ಭಾಗವನ್ನು ಬ್ರಿಟಿಷರು ಮತ್ತು ನಿಜಾಮರು ಕಡೆಗಣಿಸಿದ್ದರು. ಹೀಗಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಾಗಿತ್ತು. ವಿಶೇಷ ಸ್ಥಾನಮಾನದಿಂದಾಗಿ ಅಭಿವೃದ್ಧಿಯ ವೇಗ ಕಾಣುತ್ತಿದೆ ಎಂದು ಹೇಳಿದರು. +ಪಂಚಖಾತ್ರಿ ಯೋಜನೆಗಳ ಸಮಗ್ರ ವಿವರಣೆ ನೀಡಿದ ಮುಖ್ಯಮಂತ್ರಿಯವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಪ್ರಸಕ್ತ ಬಜೆಟ್ನಲ್ಲಿ 5 ಸಾವಿರ ಕೋಟಿ ರೂ. ಘೋಷಿಸಿ, ಅನುದಾನ ಹಂಚಿಕೆ ಮಾಡಲಾಗಿದೆ. ಅಷ್ಟು ಮೊತ್ತದ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯ ಹೊಸ ಕ್ರಾಂತಿಯನ್ನು ನಿರೀಕ್ಷಿಸಲಾಗಿದೆ. +ನಂಜುಂಡಪ್ಪ ವರದಿ 2002ರಲ್ಲಿ ಸಲ್ಲಿಕೆಯಾಗಿತ್ತು. ಅನಂತರ ಸಾಮಾಜಿಕ, ಆರ್ಥಿಕ ಹಾಗೂ ಇನ್ನಿತರ ಆಯಾಮಗಳಲ್ಲಿ ಮಹತ್ವದ ಬೆಳವಣಿಗೆಗಳಾಗಿವೆ. ಇದರ ಪರಿಣಾಮಗಳ ಅಧ್ಯಯನಕ್ಕಾಗಿ ಪ್ರೊ.ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ಆಧಾರದ ಮೇಲೆ ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲೆಗಳ ಆರ್ಥಿಕ ಮತ್ತು ಅಸಮಾನತೆಯನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕವನ್ನು ತಯಾರಿಸಲಾಗುವುದು ಎಂದರು. +ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 38 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಅದರ ಲಾಭವನ್ನು ಈ ಭಾಗದ ಜನ ಪಡೆಯುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷ ಸ್ಥಾನಮಾನಕ್ಕೆ ಹೊರಡಿಸಲಾಗಿರುವ ಆದೇಶದ ಅನುಷ್ಠಾನದ ಮೇಲ್ವಿಚಾರಣೆಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲ್ವಿಚಾರಣೆಯಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. +ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ತರಲು ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ. 1,008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಮಾದರಿ ಶಿಕ್ಷಣ ಆರಂಭಿಸಲಾಗಿದೆ. 36,445 ಮಕ್ಕಳು ಪ್ರವೇಶ ಪಡೆದಿದ್ದು, ಇದಕ್ಕಾಗಿ 1,353 ಅತಿಥಿ ಶಿಕ್ಷಕರು ಹಾಗೂ 892 ಸಹಾಯಕಿಯರನ್ನು ನೇಮಿಸಲಾಗಿದೆ. 872 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಭಾಷಾ ಕಲಿಕೆಯನ್ನು ಪ್ರಾರಂಭಿಸಲಾಗಿದೆ. ಕೌಶಲ್ಯಾಭಿವೃದ್ಧಿ ಕಂಪ್ಯೂಟರ್ ಕಲಿಕಾ ಆಸರೆ ಎಂಬ ವಿಶೇಷ ಅಭ್ಯಾಸವನ್ನು ಒದಗಿಸಲಾಗಿದೆ ಎಂದರು. \ No newline at end of file diff --git a/eesanje/url_46_16_8.txt b/eesanje/url_46_16_8.txt new file mode 100644 index 0000000000000000000000000000000000000000..57f318191e903f4ae3b679bcb89e669feff13e92 --- /dev/null +++ b/eesanje/url_46_16_8.txt @@ -0,0 +1,8 @@ +ನಾಗಮಂಗಲದ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲ್ಲ : ಗೃಹಸಚಿವ ಪರಮೇಶ್ವರ್‌ + +ಕಲಬುರಗಿ,ಸೆ.17-ನಾಗಮಂಗಲದ ಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿಯ ಆಗ್ರಹವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಳ್ಳಿಹಾಕಿದ್ದಾರೆ.ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ. ಕರ್ತವ್ಯಲೋಪಕ್ಕೆ ಹೊಣೆ ಮಾಡಿ ಡಿವೈಎಸ್ಪಿ ಹಾಗೂ ಇನ್ಸ್ ಪೆಕ್ಟರ್‌ರನ್ನು ಅಮಾನತುಪಡಿಸಲಾಗಿದೆ ಎಂದರು. +ಘಟನೆಯಲ್ಲಿ ಭಾಗಿಯಾಗಿದ್ದರೆ ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಹಾಗೆಯೇ ಅನಗತ್ಯವಾಗಿ ಯಾರನ್ನೂ ಹೊಣೆ ಮಾಡುವುದಿಲ್ಲ. ತನಿಖೆಯ ವರದಿ ಬಂದ ಬಳಿಕ ಮತ್ತಷ್ಟು ಕಠಿಣ ಕ್ರಮ ಜರುಗಿಸಲಾಗುವುದು ಎಂದರು.ಘಟನೆ ನಡೆದ ತಕ್ಷಣವೇ ರಾಜ್ಯಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. +ಇದ್ಯಾವುದನ್ನೂ ಲಘುವಾಗಿ ಪರಿಗಣಿಸಿಲ್ಲ. ಹೊರಗಿನಿಂದ ಬಂದವರು ಘಟನೆಯಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ತನಿಖೆ ನಡೆದು, ಸ್ಪಷ್ಟ ಮಾಹಿತಿ ತಿಳಿಯುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಫಲವಾಗಿದೆ. ನಾಗಮಂಗಲದ ಘಟನೆಯನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಹೇಳಿದ್ದಾರೆ. ಅವರು ಹೇಳುವುದಕ್ಕಾಗಿಯೇ ಇದ್ದಾರೆ. ನಾವು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರಿದ್ದ ಜೈಲಿನಲ್ಲಿ ಮೊಬೈಲ್‌ ಪತ್ತೆಯಾದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾಗ ಅನಪೇಕ್ಷಿತ ಆತಿಥ್ಯಕ್ಕೆ ಸಂಬಂಧಪಟ್ಟಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. 11 ಮಂದಿ ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ದರ್ಶನ್‌ ಮತ್ತು ಸಂಗಡಿಗರನ್ನು ಬೇರೆಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದರು. +ಬಳ್ಳಾರಿ ಜೈಲಿನಲ್ಲಿ ಮೊಬೈಲ್‌ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರು ಭಾಗಿಯಾಗಿದ್ದಾರೆ ಎಂದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.ಶಾಸಕ ಮುನಿರತ್ನ ಪ್ರಕರಣದಲ್ಲಿ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದೇ ಕಾಂಗ್ರೆಸ್‌‍ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಅವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸಲಾಗಿದೆ ಎಂಬ ವ್ಯಾಖ್ಯಾನ ಸರಿಯಲ್ಲ. ಮುನಿರತ್ನ ಪ್ರಕರಣದಲ್ಲಿ ದೂರು ದಾಖಲಾಗಿದೆ. ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದರು. \ No newline at end of file diff --git a/eesanje/url_46_16_9.txt b/eesanje/url_46_16_9.txt new file mode 100644 index 0000000000000000000000000000000000000000..df26fa53e0a6095fb19d223afb5fb27697bde1c4 --- /dev/null +++ b/eesanje/url_46_16_9.txt @@ -0,0 +1,6 @@ +ನಾಗಮಂಗಲ ಗಲಭೆಯಲ್ಲಿ ಬಾಂಗ್ಲಾದೇಶಿಗಳ ಕೈವಾಡ : ಸುರೇಶ್‌ಗೌಡ ಹೊಸ ಬಾಂಬ್ + : +ಮಂಡ್ಯ,ಸೆ.17-ನಾಗಮಂಗಲದಲ್ಲಿ ನಡೆದ ಗಲಭೆಯಲ್ಲಿ ಕೇವಲ ಕೇರಳ ಮೂಲದವರ ಕೈವಾಡವಿಲ್ಲ. ಅಕ್ರಮವಾಗಿ ನಾಗಮಂಗಲದಲ್ಲಿ ನೆಲೆಸಿರುವ ಬಾಂಗ್ಲಾದೇಶಿಗಳು ಇರುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ಶಾಸಕ ಸುರೇಶ್‌ಗೌಡ ಹೇಳಿದ್ದಾರೆ. +ಸುದ್ದಿಗಾರೊಂದಿಗೆ ಮಾತನಾಡಿದ ಅವರು ಪೊಲೀಸರು ಈಗ ಕೇರಳ ಮೂಲದ ನಿಷೇದಿತ ಸಂಘಟನೆಯ ಸದಸ್ಯರನ್ನು ಬಂಧಿಸಿದ್ದಾರೆ ಇದನ್ನು ನೋಡಿದರೆ ಗಲಭೆಯಲ್ಲಿ ಕೇವಲ ಕೇರಳ ಮೂಲದ ಪಿಎಫ್‌ಐ ಸಂಘಟನೆಯವರು ಮಾತ್ರವಲ್ಲ. ಬಾಂಗ್ಲಾದೇಶದಿಂದ ಆಕ್ರಮವಾಗಿ ಬಂದು ನಾಗಮಂಗಲ ತಾಲೂಕಿನಲ್ಲಿ ನೆಲಸಿರುವವರು ಸಹ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. +ನಾಗಮಂಗಲ ತಾಲೂಕಿನ ಹಲವೆಡೆ ತೋಟದ ಮನೆಗಳಲ್ಲಿ ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದವರು ನೆಲೆಸಿದ್ದಾರೆ. ನಾನು ಶಾಸಕನಾಗಿದ್ದ ವೇಳೆ ಪೊಲೀಸ್‌‍ ಇಲಾಖೆಗೆ ಹಾಗೂ ಆಗಿನ ಗೃಹ ಸಚಿವರಿಗೂ ಮಾಹಿತಿ ನೀಡಿದ್ದೇನೆ. ಆದರೆ ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ. +ಈ ತನಿಖೆಯನ್ನು ಎನ್‌ಐಎಗೆ ನೀಡಿದರೆ ಎಲ್ಲಾ ಸತ್ಯಗಳು ಹೊರಗೆ ಬರುತ್ತವೆ. ಹೀಗಾಗಿ ನಾಗಮಂಗಲ ಗಲಭೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_170_1.txt b/eesanje/url_46_170_1.txt new file mode 100644 index 0000000000000000000000000000000000000000..151958d901322769decd01b78174e12d7e4d0e83 --- /dev/null +++ b/eesanje/url_46_170_1.txt @@ -0,0 +1,7 @@ +ಮತಗಟ್ಟೆ ಅಧಿಕಾರಿಗಳ ರ್‍ಯಾಂಡಮೈಸೇಷನ್‌ ಮುಕ್ತಾಯ +ಬೆಂಗಳೂರು, ಏ.24-ಮತಗಟ್ಟೆ ಅಧಿಕಾರಿಗಳ ಅಂತಿಮ ಹಂತದ ರ್ಯಾಂಡಮೈಸೇಷನ್ ಇಂದು ನಡೆಸಲಾಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು. +ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. +ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅ„ಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಜೊತೆಗೆ 305 ವಲ್ನರಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳಿಗಾಗಿ 385 ಮೈಕ್ರೋ ಅಬ್ಸರ್ವರ್ಸ್ ಗಳನ್ನು ನಿಯೋಜನೆ ಮಾಡಲಾಗಿದ್ದು, ಅವರನ್ನು ಕೂಡಾ ರ್ಯಾಂಡಮೈಸೇಷನ್ ಮಾಡಲಾಯಿತು. +ಮತಗಟ್ಟೆ ಅಧಿಕಾರಿಗಳಿಗೆ ಎರಡು ಬಾರಿ ತರಬೇತಿ:ಲೋಕಸಭಾ ಚುನಾವಣೆಗೆ ನಿಯೋಜಿಸಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ಎರಡು ಬಾರಿ ತರಬೇತಿಯನ್ನು ನೀಡಲಾಗಿದೆ. +ಮಸ್ಟರಿಂಗ್ ಸೆಂಟರ್ ಗಳಿಂದ ಮತದಾನ ಸಾಮಗ್ರಿಗಳ ಸಂಗ್ರಹ:ನಗರದಲ್ಲಿರುವ ಎಲ್ಲಾ 8984 ಮತಗಟ್ಟೆಗಳಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಈ ಸಂಬಂಧ ನಾಳೆ ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ 9.30ಕ್ಕೆ ಮಸ್ಟರಿಂಗ್ ಕೇಂದ್ರಗಳಿಗೆ ತೆರಳಿ ಮತಗಟ್ಟೆಗಳ ಸಾಮಗ್ರಿಗಳನ್ನು ಸಂಗ್ರಹಿಸಿಕೊಂಡು ಆಯಾ ಚುನಾವಣಾಧಿಕಾರಿಗಳು ವ್ಯವಸ್ಥೆ ಮಾಡಿರುವ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. +ಈ ವೇಳೆ ಸಾಮಾನ್ಯ ವೀಕ್ಷಕರುಗಳಾದ ಗಾಯತ್ರಿ ರಾಥೋರ್, ವಾಣಿ ಮೋಹನ್, ಮಕರಂದ್ ಪಾಂಡುರಂಗ, ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್ , ವಿನೋತ್ ಪ್ರಿಯಾ, ಸ್ನೆಹಲ್ , ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅ„ಕಾರಿಯಾದ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅ„ಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_170_10.txt b/eesanje/url_46_170_10.txt new file mode 100644 index 0000000000000000000000000000000000000000..65ba09f535b0a9207f34806227acc94f0daa54ae --- /dev/null +++ b/eesanje/url_46_170_10.txt @@ -0,0 +1,8 @@ +‘ಲೋಕ’ ಕಣದಲ್ಲಿ ಕಾಂಚಾಣ ಕುಣಿತ : ಒಂದೇ ದಿನದಲ್ಲಿ 23.88 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ +ಬೆಂಗಳೂರು,ಏ.24-ಪ್ರಸಕ್ತ ಲೋಕಸಭಾ ಚುನಾವಣೆಗೆ ಮತದಾನ ಮಾಡುವ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ನಗದು, ಮದ್ಯ, ಡ್ರಗ್ಸ್, ಚಿನ್ನ, ವಜ್ರ, ಉಚಿತ ಉಡುಗೊರೆಗಳ ಜಪ್ತಿಯಾಗುತ್ತಿದೆ. ನಿನ್ನೆ ಒಂದೇ ದಿನ 23.88 ಕೋಟಿ ರೂ. ಮೌಲ್ಯದ ನಗದು ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ ನಿನ್ನೆಯವರೆಗೆ ರಾಜ್ಯದಲ್ಲಿ 430.61 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 136.23 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ ಹಾಗೂ ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದೆ. ಅಬಕಾರಿ ಇಲಾಖೆಯವರು 177.12 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್, ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರೆ ಆದಾಯ ತೆರಿಗೆ ಅಧಿಕಾರಿಗಳು 37.42 ಕೋಟಿ ರೂ. ಮೌಲ್ಯದ ನಗದು, ಚಿನ್ನ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ವಾಣಿಜ್ಯ ತೆರಿಗೆ ಅಧಿಕಾರಿಗಳು 79.84 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾದ ನಗದು, ಮದ್ಯ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳಿಗೆ ಸಂಬಂಧಿಸಿದಂತೆ 2,049 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದ್ದು, 1,801 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಅಡಗಲಿ ಪೊಲೀಸ್ ತಂಡದವರು 12.17 ಲಕ್ಷ ರೂ. ನಗದು, 2.50 ಲಕ್ಷ ರೂ. ಮೌಲ್ಯದ 28.5 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. +23.88 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ನಗದು ವಶ :ಸ್ಥಿರ ಕಣ್ಗಾವಲು ತಂಡದವರು ರಾಮನಗರ ಜಿಲ್ಲೆಯ ಗಂಟಕನದೊಡ್ಡಿ ಚೆಕ್‍ಪೋಸ್ಟ್ ನಲ್ಲಿ 23.11 ಲಕ್ಷ ರೂ. ಹಾಗೂ ಮೈಸೂರು ಜಿಲ್ಲೆಯ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಡವಾಡಿ ಚೆಕ್‍ ಪೋಸ್ಟ್ ನಲ್ಲಿ 13.18 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. +ಆದಾಯ ತೆರಿಗೆ ಇಲಾಖೆಯವರು ಬಸವನಗುಡಿಯಲ್ಲಿ 1,29,24,959 ರೂ. ಮೌಲ್ಯದ 1839.59 ಗ್ರಾಂ ಚಿನ್ನವನ್ನು ಶಂಕರಪುರಂನಲ್ಲಿ 3,10,10,375 ರೂ. ಮೌಲ್ಯದ 4413.66 ಗ್ರಾಂ ಚಿನ್ನ, ಶಾರದಾದೇವಿ ರಸ್ತೆಯಲ್ಲಿ 3,39,60,360 ರೂ. ಮೌಲ್ಯದ 4833.527 ಗ್ರಾಂ ಚಿನ್ನವನ್ನು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,13,64,941 ರೂ. ಮೌಲ್ಯದ 3040.84 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ. +ವಿಜಯನಗರದಲ್ಲಿ 5,33,85,093 ರೂ. ಮೌಲ್ಯದ 7597.22 ಗ್ರಾಂ ಚಿನ್ನ, ಚಾಮರಾಜಪೇಟೆಯಲ್ಲಿ 84,31,200 ರೂ. ಮೌಲ್ಯದ 1200 ಗ್ರಾಂ ಚಿನ್ನದ ಗಟ್ಟಿಯನ್ನು ಹಾಗೂ ಬಸವನಗುಡಿಯಲ್ಲಿ 3,24,950 ರೂ. ಮೌಲ್ಯದ 6.38 ಕ್ಯಾರೆಟ್ ವಜ್ರವನ್ನು, ಶಾರದಾದೇವಿ ರಸ್ತೆಯಲ್ಲಿ 3,14,475 ರೂ. ಮೌಲ್ಯದ 5.99 ಕ್ಯಾರೆಟ್ ವಜ್ರವನ್ನು, ಜಯನಗರದಲ್ಲಿ 6,40,33,668 ರೂ. ಮೌಲ್ಯದ 202.83 ಕ್ಯಾರೆಟ್ ವಜ್ರವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. +ಬಸವನಗುಡಿಯಲ್ಲಿ 17 ಲಕ್ಷ ರೂ. ನಗದು, ಶಂಕರಪುರಂನಲ್ಲಿ 55 ಲಕ್ಷ ರೂ. ನಗದು, ಶಾರದಾದೇವಿ ರಸ್ತೆಯಲ್ಲಿ 16 ಲಕ್ಷ ರೂ. ನಗದು, ಜಯನಗರದಲ್ಲಿ 8,77,800 ರೂ. ನಗದು, 37 ಲಕ್ಷ ರೂ. ನಗದನ್ನು ಬಸವನಗುಡಿಯಲ್ಲಿ ವಶಪಡಿಸಿಕೊಂಡಿದ್ದಾರೆ.ಪುಲಕೇಶಿ ನಗರದಲ್ಲಿ 3,67,50,000 ರೂ. ನಗದು, ಮಹಾಲಕ್ಷ್ಮಿ ಲೇ ಔಟ್‍ನಲ್ಲಿ 63,92,240 ರೂ. ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_170_11.txt b/eesanje/url_46_170_11.txt new file mode 100644 index 0000000000000000000000000000000000000000..2d0d6a87c02290354b010e71c456ae4eda77f2a7 --- /dev/null +++ b/eesanje/url_46_170_11.txt @@ -0,0 +1,10 @@ +ಕನ್ನಡಿಗರ ಮೇಲೆ ಪ್ರಧಾನಿಗೆ ಏಕಿಷ್ಟು ದ್ವೇಷ..? : ಸಿಎಂ ಸಿದ್ದರಾಮಯ್ಯ ಆಕ್ರೋಶ +ಬೆಂಗಳೂರು,ಏ.23-ರಾಜ್ಯದ ಬರ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡದೆ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಮತ ಕೇಳುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. +ವಿಧಾನಸೌಧದ ಬಳಿಯ ಮಹಾತ್ಮಗಾಂಧೀ ಪ್ರತಿಮೆ ಎದುರು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ನಿಂದ ನಡೆಸಲಾದ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದ ಅವರು, ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜ್ಯವನ್ನು ಮತ್ತು ರೈತರನ್ನು ದ್ವೇಷಿಸುತ್ತಾರೆ. ರಾಜ್ಯಕ್ಕೆ ನ್ಯಾಯ ಕೊಡಿ ಎಂದರೆ ಸ್ಪಂದಿಸಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಿಯಾಗಿ ಕೇಂದ್ರ ಸರ್ಕಾರ ರಾಜ್ಯವನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಜ್ಯದಲ್ಲಿ 100 ವರ್ಷಗಳ ಬಳಿಕ ಭೀಕರ ಬರಪರಿಸ್ಥಿತಿ ಇದೆ. ರಾಜ್ಯದಲ್ಲಿ 223 ತಾಲೂಕುಗಳು ಬರಪೀಡಿತವಾಗಿವೆ. ಸೆಪ್ಟೆಂಬರ್ 22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ 18,172 ಕೋಟಿ ರೂ.ಗಳ ಅನುದಾನ ಕೋರಿ ಎನ್ಡಿಆರ್ಎಫ್ನಡಿ ಮನವಿ ಸಲ್ಲಿಸಲಾಗಿತ್ತು. ಸಚಿವರಾದ ಕೃಷ್ಣಭೈರೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ ದೆಹಲಿಗೆ ಹೋಗಿ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಬಂದಿದ್ದರು. +ಖುದ್ದು ತಾವು ದೆಹಲಿಗೆ ತೆರಳಿ ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಅಮಿತ್ ಶಾ ಡಿ.23 ರಂದು ಸಭೆ ನಡೆಸಿ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ ಎಂದು ಕಿಡಿಕಾರಿದರು. +ಅದೇ ಅಮಿತ್ ಶಾ ರಾಜ್ಯಕ್ಕೆ ಬಂದು ರಾಜ್ಯಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವುದು ವಿಳಂಬವಾಗಿತ್ತು ಎಂದು ಟೀಕೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ರಾಜ್ಯಸರ್ಕಾರಕ್ಕೆ ಯಾವುದೇ ಬಾಕಿ ನೀಡಬೇಕಿಲ್ಲ ಎಂದು ಹೇಳಿದರು. ಚುನಾವಣೆ ಘೋಷಣೆಯಾದ ಬಳಿಕ ಆಯೋಗ ಅನುಮತಿ ಕೊಡುವುದಿಲ್ಲ ಎಂದು ಸಬೂಬು ಮುಂದಿಟ್ಟಿದ್ದರು ಎಂದು ಟೀಕಿಸಿದರು. +ಕೇಂದ್ರ ಸಚಿವರು ಹೇಳಿದ ಅಷ್ಟೂ ಹೇಳಿಕೆಗಳು ಸುಳ್ಳು ಎಂದು ಸಾಬೀತಾಗಿವೆ. ರಾಜ್ಯಸರ್ಕಾರ ಅನಿವಾರ್ಯವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಬೇಕಾಯಿತು. ವಿಚಾರಣೆ ಹಂತದಲ್ಲಿ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್ರವರು ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ರವರ ಹೇಳಿಕೆಗನುಸಾರ ಸಮರ್ಥನೆ ಮಾಡಿಕೊಳ್ಳಲಿಲ್ಲ. ಅಲ್ಲಿಗೆ ಹಣ ಬಿಡುಗಡೆ ಮಾಡದೇ ಕೇಂದ್ರ ಸಚಿವರು ನೀಡಿದ ಸಬೂಬುಗಳು ಸುಳ್ಳು ಸಾಬೀತಾಗಿದೆ ಎಂದರು. +ಅನಿವಾರ್ಯವಾಗಿ ಈಗ ಕೇಂದ್ರ ಸರ್ಕಾರ ಪರಿಹಾರ ಪಾವತಿಸಬೇಕಾದ ಸ್ಥಿತಿಗೆ ಸಿಲುಕಿದೆ. ಬರ ನಿರ್ವಹಣೆಗೆ ಹಣ ನೀಡಿದರೆ ಅದನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಾರೆ ಎಂದು ಕೇಂದ್ರ ಸಚಿವರು ಅಪಪ್ರಚಾರ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 36 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. 2024-25 ನೇ ಸಾಲಿಗೆ 52 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಿದ್ದೇವೆ. ಎನ್ಡಿಆರ್ಎಫ್ ಹಣವನ್ನು ಸಂಪೂರ್ಣವಾಗಿ ಬರನಿರ್ವಹಣೆಗೆ ಖರ್ಚು ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. +48 ಸಾವಿರ ಹೆಕ್ಟೇರ್ನಲ್ಲಿ ಬೆಳೆ ನಷ್ಟವಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯಸರ್ಕಾರ ತನ್ನ ಬೊಕ್ಕಸದಿಂದ 600 ಕೋಟಿ ರೂ.ಗಳಿಗೂ ಹೆಚ್ಚು ಹಣ ಖರ್ಚು ಮಾಡಿ 32 ಲಕ್ಷ ರೈತರಿಗೆ ಮೊದಲ ಕಂತಾಗಿ 2 ಸಾವಿರ ರೂ.ಗಳನ್ನು ಪಾವತಿಸಿದೆ. ನಾವು ಮನವಿ ಸಲ್ಲಿಸಿ 7 ತಿಂಗಳಾದರೂ ಕೇಂದ್ರ ಈವರೆಗೂ ಒಂದು ಬಿಡುಗಾಸನ್ನೂ ಬಿಡುಗಡೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. +ಮೊದಲು ಹಣ ಬಿಡುಗಡೆ ಮಾಡಿ, ಆನಂತರ ಪ್ರಧಾನಿ ಮತ್ತು ಕೇಂದ್ರ ಗೃಹಸಚಿವರು ರಾಜ್ಯಕ್ಕೆ ಬಂದು ಮತ ಕೇಳಲಿ. ಬರ, ನೆರೆ ಸಂದರ್ಭದಲ್ಲಿ ಇವರಿಗೆ ಕರ್ನಾಟಕ ನೆನಪಾಗುವುದಿಲ್ಲ. ಚುನಾವಣೆಯಲ್ಲಿ ಮಾತ್ರ ನೆನಪಾಗುತ್ತದೆ. ತೆರಿಗೆ ಹಂಚಿಕೆ, ಭದ್ರಾ ಮೇಲ್ದಂಡೆ, ಬೆಂಗಳೂರು ಕೆರೆಗಳ ಅಭಿವೃದ್ಧಿ, ಹೊರವರ್ತುಲ ರಸ್ತೆ, ಹಣಕಾಸು ಆಯೋಗದ ಮಧ್ಯಂತರ ಅವ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿ ದ್ವೇಷ ಸಾಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_170_12.txt b/eesanje/url_46_170_12.txt new file mode 100644 index 0000000000000000000000000000000000000000..c971e1ef5f1a8b904d70770c1530497852580be2 --- /dev/null +++ b/eesanje/url_46_170_12.txt @@ -0,0 +1,7 @@ +ಬಿಜೆಪಿಗೆ ವಿಶ್ವಕರ್ಮ ಮಹಾ ಸಂಘ ಬೆಂಬಲ +ಬೆಂಗಳೂರು, ಏ.23-ಭಾರತಾದ್ಯಂತ ಸುಮಾರು 12 ಕೋಟಿ ಜನಸಂಖ್ಯೆ ಇರುವ ವಿಶ್ವಕರ್ಮ ಸಮಾಜಕ್ಕೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ತಂದು ಲಕ್ಷಾಂತರ ಕುಟುಂಬಗಳಿಗೆ ನೆರವಾಗಿ, ನಮ್ಮ ಸಮಾಜವನ್ನು ಪ್ರಪಂಚಾದ್ಯಂತ ಗುರುತಿಸುವ ಹಾಗೆ ಮಾಡಿದ್ದಾರೆ. ಆದ್ದರಿಂದ ಬಿಜೆಪಿಗೆ ನಮ್ಮ ಸಮುದಾಯ ಬೆಂಬಲವಾಗಿ ನಿಲ್ಲಲಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಮಹಾ ಸಂಘದ ಅಧ್ಯಕ್ಷ ಡಾ.ಜಯಂತ್ ಕೆ.ಎಂ. ತಿಳಿಸಿದರು. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದ ಹಿತದೃಷ್ಟಿ ಎಂದರೆ ನಮ್ಮ ವಿಶ್ವಕರ್ಮ ಸಮಾಜವು ರಾಜಕೀಯ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಕಾರಣ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಮ್ಮ ಸಮಾಜವನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ನಮ್ಮ ಸಮಾಜಕ್ಕೆ ಬೆಂಬಲ ನೀಡುತ್ತಾರೆಂಬ ನಂಬಿಕೆ ಯಿಂದ ನಮ್ಮ ಸಂಘಟನೆ ಬೆಂಬಲವನ್ನು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ನೀಡುವ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು. +ಮೋದಿಜಿಯವರು ವಿಶ್ವಕರ್ಮ ಸಮ್ಮಾನ್ ಯೋಜನೆಯನ್ನು ಕೊಡುವ ಮುಖಾಂತರ ನಮ್ಮ ಸಮಾಜಕ್ಕೆ ಮನ್ನಣೆ ನೀಡಿದ್ದು, ಇದರಿಂದ ನಮ್ಮ ಸಮಾಜದ ಕಾಯಕವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. +ಅಯೋಧ್ಯ ಶ್ರೀರಾಮನ ವಿಗ್ರಹವನ್ನು ಕೆತ್ತನೆ ಮಾಡಲು ನಮ್ಮ ಸಮಾಜದ ಶಿಲ್ಪಿ ಅರುಣ್ ಯೋಗಿರಾಜ್ ರವರಿಗೆ ಅವಕಾಶ ನೀಡುವ ಮುಖಾಂತರ ನಮ್ಮ ಸಮಾಜದ ಕೀರ್ತಿಯನ್ನು ರಾಷ್ಟ್ರ ಹಾಗೂ ವಿಶ್ವಕ್ಕೆ ತೋರಿಸುವಲ್ಲಿ ಮೋದಿಜಿರವರ ಸಹಕಾರ ಹೆಚ್ಚಿರುವ ಕಾರಣ ನಮ್ಮ ಸಮಾಜವು ಬಿ.ಜೆ.ಪಿ. ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ತೀರ್ಮಾನ ಮಾಡಿದೆ ಎಂದರು. +ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಬಗ್ಗೆ ಮಾತನಾಡಿದ ಅವರು, ಇನ್ನೂ ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಬಿಟ್ಟಿಲ್ಲ, ಯಾವ ಕಾರಣಕ್ಕೆ ಅವರು ಬೇರೆ ಪಕ್ಷಕ್ಕೆ ಹೋಗುತ್ತಿದ್ದಾರೋ ಗೊತ್ತಿಲ್ಲ ಅವರು ಬಿಜೆಪಿಯಲ್ಲಿ ಇರಬೇಕಿತ್ತು ಎಂದರು. +ಈಗ ಬಿಜೆಪಿ ಪಕ್ಷವನ್ನು ನಾವು ಬೆಂಬಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಸಮಾಜಕ್ಕೆ ಆರ್ಥಿಕ ವಾಗಿ, ಸಾಮಾಜಿಕವಾಗಿ ಮುಖ್ಯ ವಾಗಿ ರಾಜಕೀಯವಾಗಿ ನಮಗೆ ಸ್ಥಾನಮಾನ ಗಳನ್ನು ಬಿಜೆಪಿ ಪಕ್ಷ ಕೊಡಬೇಕು ಎಂದು ಬಿಜೆಪಿ ಪಕ್ಷಕ್ಕೆ ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕಿ ಕಾಮಾಕ್ಷಿ, ಜಂಟಿ ಕಾರ್ಯದರ್ಶಿ ದೀಕ್ಷಿತ ಬಿ.ಆರ್., ನಿರ್ದೇಶಕ ಅಮೃತ್ ರಾಜ್ ಬಿ.ಆರ್. ಉಪಸ್ಥಿತರಿದ್ದರು. \ No newline at end of file diff --git a/eesanje/url_46_170_2.txt b/eesanje/url_46_170_2.txt new file mode 100644 index 0000000000000000000000000000000000000000..221fa9b1c03393a1143e093d8fb00dac43546c60 --- /dev/null +++ b/eesanje/url_46_170_2.txt @@ -0,0 +1,4 @@ +ನೇಹಾ ಹಂತಕ ಫಯಾಜ್ ಸಿಐಡಿ ವಶಕ್ಕೆ +ಧಾರವಾಡ,ಏ.24-ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ ಧಾರವಾಡದ ಕೇಂದ್ರ ಕಾರಾಗೃಹದಲ್ಲಿರುವ ಹಂತಕ ಫಯಾಜ್ನನ್ನು ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ. +ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಹುಬ್ಬಳ್ಳಿಯ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸಿಐಡಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದು , ಇಂದು ನ್ಯಾಯಾಲಯದ ಆದೇಶ ಪಡೆದು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಬಂದು ಅಧಿಕಾರಿಗಳು ಫಯಾಜ್ನನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. +ಆನಂತರ ಫಯಾಜ್ನನ್ನು ಬಿವಿಬಿ ಕಾಲೇಜಿನಲ್ಲಿ ಹತ್ಯೆ ಮಾಡಿದ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. \ No newline at end of file diff --git a/eesanje/url_46_170_3.txt b/eesanje/url_46_170_3.txt new file mode 100644 index 0000000000000000000000000000000000000000..fcad0a43852cace4a8ca8adb222c6369b0a22291 --- /dev/null +++ b/eesanje/url_46_170_3.txt @@ -0,0 +1,4 @@ +ರಾಜ್ಯದಲ್ಲಿ 189 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು +ಬೆಂಗಳೂರು,ಏ.24-ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಗಂಭೀರ ಸ್ವರೂಪದ 189 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ 23 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 2 ಪ್ರಕರಣಗಳು ದಾಖಲಾಗಿವೆ. +ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದಂತೆ 15 ಪ್ರಕರಣಗಳು ದಾಖಲಾಗಿದ್ದು, 8 ಬಿಜೆಪಿ, 6 ಕಾಂಗ್ರೆಸ್ ಹಾಗೂ 1 ಪಕ್ಷೇತರ ಅಭ್ಯರ್ಥಿಗೆ ಸಂಬಂಧಿಸಿದೆ. ಚುನಾವಣೆ ಸಂದರ್ಭದಲ್ಲಿ ಮಕ್ಕಳ ಬಳಕೆಗೆ ಸಂಬಂಧಿಸಿದಂತೆ 7 ಬಿಜೆಪಿ, 7 ಕಾಂಗ್ರೆಸ್, ಒಂದು ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. \ No newline at end of file diff --git a/eesanje/url_46_170_4.txt b/eesanje/url_46_170_4.txt new file mode 100644 index 0000000000000000000000000000000000000000..2089220217ed92576f8929890510e1cafeacc226 --- /dev/null +++ b/eesanje/url_46_170_4.txt @@ -0,0 +1,11 @@ +ಮೋದಿ ಆಡಳಿತದಲ್ಲಿ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ : ಡಿಕೆಶಿ +ಬೆಂಗಳೂರು,ಏ.24-ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದ್ದು, ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. +ಪಕ್ಷದ ಕಚೇರಿಯಲ್ಲಿಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಶ್ವಕರ್ಮ ಸಮುದಾಯದ ಪ್ರಮುಖ ನಾಯಕ ಕೆ.ಪಿ.ನಂಜುಂಡಿ ಹಾಗೂ ಇತರೆ ನಾಯಕರನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 2014 ರಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 2800 ರೂ.ಗಳಿತ್ತು. ಈಗ 7,500 ರೂ. ಗಳಾಗಿವೆ. ಕನಿಷ್ಟ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದೆ ಬಡವರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು. +ಕೆ.ಪಿ.ನಂಜುಂಡಿಯವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಕುರಿತು ತಮ್ಮಲ್ಲಿ ಹೇಳಿಕೊಂಡಿದ್ದು, ನಮ್ಮ ಸಮುದಾಯಕ್ಕೆ ಮಾಂಗಲ್ಯ, ಮಾಂಗಲ್ಯ ಸರ ಮಾಡಿಕೊಡುವ ಅವಕಾಶವನ್ನು ದೇವರು ಕೊಟ್ಟಿದ್ದಾರೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಮಾಂಗಲ್ಯ ಸರ ಮಾಡಿಸಿಕೊಳ್ಳಲಾಗದೆ ಸಂಕಟ ಪಡುತ್ತಿರುವ ತಾಯಂದಿರ ಗೋಳು ನೋಡಲಾಗುತ್ತಿಲ್ಲ. ಈ ವಿಷಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದ ತಾವು ಪಕ್ಷದಲ್ಲಿ ಉಳಿಯಬಾರದು ಎಂದು ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರು. +ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳಿಂದ ತಿಂಗಳಿಗೆ 2 ಸಾವಿರ ರೂ. ಉಳಿತಾಯವಾಗುತ್ತಿದೆ. ಈಗ ತಾಯಂದಿರು ಸಣ್ಣಪುಟ್ಟ ಒಡವೆ ಖರೀದಿಗಳಿಗೆ ಮುಂದಾಗುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇಂತಹ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲಿಲ್ಲ ಎಂದು ಕೆ.ಪಿ.ನಂಜುಂಡಿ ಹೇಳಿದ್ದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು. +ಕೆ.ಪಿ.ನಂಜುಂಡಿ ಅವರು ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಹಿಂದುಳಿದ ವರ್ಗದಲ್ಲಿ ಅತ್ಯಂತ ಉತ್ತಮ ಸಂಘಟಕರಾಗಿದ್ದಾರೆ. ಅವರನ್ನು ಕಾಂಗ್ರೆಸ್‍ಗೆ ಮರಳಿ ಕರೆತರಬೇಕೆಂಬುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಒತ್ತಾಸೆಯಾಗಿತ್ತು. ಹೈಕಮಾಂಡ್‍ನ ಸೂಚನೆ ಮೇರೆಗೆ ತಾವು ಆರಂಭದಿಂದಲೂ ನಂಜುಂಡಿ ಅವರನ್ನು ಕಾಂಗ್ರೆಸ್‍ಗೆ ಬರುವಂತೆ ಆಹ್ವಾನ ನೀಡಿದ್ದಾಗಿ ಹೇಳಿದರು. +ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಖುದ್ದು ಆಗಮಿಸಿ ನಂಜುಂಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ನಂಜುಂಡಿ ಅವರೊಂದಿಗೆ ವಿಶ್ವಕರ್ಮ ಸಮುದಾಯದ ಅಧ್ಯಕ್ಷರು ಸೇರಿದಂತೆ ಹಲವು ಮುಖಂಡರು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು. +ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿ, ಬಿಜೆಪಿ ಅಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುವುದಾಗಿ ರಾಜಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಹೇಳಿದ್ದಾರೆ. ಎಸ್‍ಸಿ, ಎಸ್‍ಟಿ, ಓಬಿಸಿಗಳ ಮೀಸಲಾತಿಯನ್ನು ಕಿತ್ತು ಹಾಕುವ ಹುನ್ನಾರವಿದೆ ಎಂದು ಹೇಳಿದರು. +ಕೇಂದ್ರ ಸರ್ಕಾರದಲ್ಲಿ ಎಸ್‍ಸಿ, ಎಸ್‍ಟಿಯವರು ಕಾರ್ಯದರ್ಶಿ ಹುದ್ದೆಗೆ ನೇಮಕವಾಗಲು ಅವಕಾಶ ಸಿಗುವುದಿಲ್ಲ. ಜಂಟಿ ಕಾರ್ಯದರ್ಶಿಗಳಿಗಿಂತ ಮೇಲ್ಪಟ್ಟ ಹುದ್ದೆಗಳಿಗೆ ಮೋದಿಯವರು ಖಾಸಗಿ ವಲಯದಿಂದ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವಕರ್ಮ, ಕೋಲಿ, ಈಡಿಗದಂತಹ ಸೂಕ್ಷ್ಮ ಸಮುದಾಯಗಳಿಗೆ ಅವಕಾಶವೇ ಸಿಗುವುದಿಲ್ಲ. +ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಲ್ಲಿ 73 ಸಾರ್ವಜನಿಕ ಉದ್ಯಮಗಳನ್ನು ಮಾರಾಟ ಮಾಡಿದ್ದಾರೆ. ಅದರಿಂದ ಹಿಂದುಳಿದ ವರ್ಗಗಳಿಗೆ ಸಿಗುತ್ತಿದ್ದ ಶೇ.27 ರಷ್ಟು ಮೀಸಲಾತಿ ಗ್ಯಾರಂಟಿ ರದ್ದುಗೊಂಡಿದೆ ಎಂದು ಆತಂಕ ವ್ಯಕ್ತಪಡಿಸಿದರು. +ಕೇಂದ್ರ ಸರ್ಕಾರದ ಒಟ್ಟಾರೆ ಕಾರ್ಯದರ್ಶಿ ಹುದ್ದೆಗಳಲ್ಲಿ ಒಬ್ಬರೇ ಒಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಿದ್ದಾರೆ. ಇನ್ನು ಎಸ್‍ಸಿ, ಎಸ್‍ಟಿ, ಆದಿವಾಸಿಗಳ ಹಕ್ಕುಗಳ ವಿಷಯದಲ್ಲಂತೂ ಕೇಳುವಂತೆಯೇ ಇಲ್ಲ. ಹಿಂದುಳಿದ ವರ್ಗಗಳ ಆದಾಯ ಮಿತಿಯನ್ನು ಮೋದಿ ಸರ್ಕಾರ ಪರಿಷ್ಕರಣೆ ಮಾಡಿಲ್ಲ. 13 ಲಕ್ಷ ಬ್ಯಾಕ್‍ಲಾಗ್ ಹುದ್ದೆಗಳು ಖಾಲಿ ಉಳಿದಿವೆ. ಹೀಗಾಗಿ ಸಮುದಾಯವಾರು ಭಾರೀ ಅನ್ಯಾಯವಾಗಿದೆ ಎಂದು ವಿವರಿಸಿದರು. \ No newline at end of file diff --git a/eesanje/url_46_170_5.txt b/eesanje/url_46_170_5.txt new file mode 100644 index 0000000000000000000000000000000000000000..c8d5b72616bf45a1d8d3185b0f2116280271392b --- /dev/null +++ b/eesanje/url_46_170_5.txt @@ -0,0 +1,12 @@ +ಹೈವೋಲ್ಟೇಜ್ ಕ್ಷೇತ್ರ ಬೆಂಗಳೂರು ಗ್ರಾಮಾಂತರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ +ಬೆಂಗಳೂರು,ಏ.24-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಡೀ ರಾಷ್ಟ್ರದ ಗಮನಸೆಳೆದಿರುವ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾನದಂದು ಎಲ್ಲ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. +ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2829 ಮತಗಟ್ಟೆಗಳಿದ್ದು, ಮತದಾನ ದಿನದಂದು ಎಲ್ಲ ಮತಗಟ್ಟೆಗಳಲ್ಲೂ ಶೇ.100ರಷ್ಟು ವೆಬ್ ಕಾಸ್ಟಿಂಗ್ ಮಾಡಲಾಗುವುದು. ಅಲ್ಲದೆ ಇತರೆ ಕ್ಷೇತ್ರಗಳಿಗಿಂತ ಎರಡು ಪಟ್ಟು ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರದ ಅರೆಸೇನಾ ಪಡೆಯ 7 ಕಂಪನಿಗಳು ಹಾಗೂ ರಾಜ್ಯದ ಇತರೆ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ಬಳಸಿಕೊಳ್ಳಲಾಗಿದೆ ಎಂದರು. +ಅಭ್ಯರ್ಥಿಗಳ ಕೋರಿಕೆ ಹಾಗೂ ಪೊಲೀಸ್ ವೀಕ್ಷಕರು ಮತ್ತು ಕ್ಷೇತ್ರದಲ್ಲಿನ ವಾತಾವರಣವನ್ನು ಗಮನಿಸಿ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದರು. ಮೊದಲ ಹಂತದ ಚುನಾವಣೆ ನಡೆಯುವ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಒಟ್ಟು 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 2,88,19,342 ಮತದಾರರು ಇದ್ದಾರೆ. +ಎರಡು ಹಂತದ 28 ಕ್ಷೇತ್ರಗಳಲ್ಲಿ 5,47,72,300 ಮತದಾರರು ಇದ್ದು , ಒಟ್ಟು 58,821 ಮತಗಟ್ಟೆಗಳಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ, ಶಾಂತಿಯುತ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. +ಸುರಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸೇರಿದಂತೆ ರಾಜ್ಯದಲ್ಲಿ ಎಡಗೈ ತೋರುಬೆರಳಿಗೆ ಇಂಕ್ ಹಾಕಲಾಗುವುದು. ಈಗಾಗಲೇ ಶೇ.90ಕ್ಕೂ ಹೆಚ್ಚು ವೋಟರ್ ಸ್ಲಿಪ್‍ನ್ನು ತಲುಪಿಸಲಾಗಿದೆ. ಮತದಾನದ ಸಮಯದಲ್ಲಿ ಆ ಸ್ಲಿಪ್ ಅನ್ನು ಎಪಿಕ್ ಕಾರ್ಡ್ ಅನ್ನು ತೋರಿಸಬೇಕು. ಅದಿಲ್ಲದಿದ್ದರೆ ಆಧಾರ್ ಕಾರ್ಡ್, ನರೇಗಾ ಜಾಬ್ ಕಾರ್ಡ್, ಪಾಸ್‍ಪೋರ್ಟ್, ಪ್ಯಾನ್ ಕಾರ್ಡ್ ಸೇರಿದಂತೆ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ ಎಂದರು. +ಶೂನ್ಯ ಅವಧಿ:ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಶೂನ್ಯ ಅವಧಿ ಘೋಷಣೆಯಾಗಿದ್ದು, ಇಂದು ಸಂಜೆ 6 ಗಂಟೆಯಿಂದ ಯಾವುದೇ ರೀತಿಯ ಸಾರ್ವಜನಿಕ ಸಭೆ, ರ್ಯಾಲಿ ನಡೆಸುವಂತಿಲ್ಲ ಮತದಾರರಲ್ಲದ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಮುಖಂಡರು, ನಾಯಕರು ಕ್ಷೇತ್ರ ಬಿಟ್ಟು ತೆರಳಬೇಕು. ಸಂಜೆ 6 ಗಂಟೆಯಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಕಲ್ಯಾಣ ಮಂಟಪ, ಹೋಟೆಲ್‍ಗಳನ್ನು ಸಂಜೆ 6 ಗಂಟೆ ನಂತರ ಪರಿಶೀಲನೆ ಮಾಡಲು ಸೂಚಿಸಲಾಗಿದೆ. +ಯಾವುದೇ ರೀತಿಯ ಸರ್ವೆ, ಸಮೀಕ್ಷೆ, ಅಭಿಪ್ರಾಯ ಸಂಗ್ರಹವನ್ನು ಜೂ.1ರ ಕೊನೆಯ ಹಂತದ ಮತದಾನ ಮುಕ್ತಾಯವಾಗುವವರೆಗೂ ನಿರ್ಬಂಧಿಸಲಾಗಿದೆ. 6 ಗಂಟೆಯ ನಂತರ ಐದು ಜನ ಮೀರದಂತೆ, ಧ್ವನಿ ವರ್ಧಕ ಬಳಸದೆ ಮತಯಾಚನೆ ಮಾಡಬಹುದು ಎಂದರು. ಸಾಮಾನ್ಯ ಜನರು, ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಕ್ಷೇತ್ರ ಬಿಟ್ಟು ತೆರಳುವ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. +ರಜೆ ಘೋಷಣೆ:ಮತದಾನ ನಡೆಯುವ ದಿನದಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು, ಕಾರ್ಖಾನೆಗಳಿಗೂ ಸಾರ್ವತ್ರಿಕ ರಜೆ ನೀಡಲಾಗಿದೆ. ವ್ಯಾಪಾರೋದ್ಯಮ, ಕೈಗಾರಿಕೋದ್ಯಮ, ವಾಣಿಜ್ಯ ಸಂಸ್ಥೆಗಳು ಸೇರಿದಂತೆ ಎಲ್ಲಾ ರೀತಿಯ ಸಂಸ್ಥೆಗಳಲ್ಲಿ ವೇತನ ಸಹಿತ ರಜೆ ನೀಡಲು ಸೂಚಿಸಲಾಗಿದೆ. +ನಾಳೆ ಮತ್ತು ಶುಕ್ರವಾರ ಎಂಸಿಎಂಸಿ ಇಲ್ಲವೇ ಪೂರ್ವ ಪ್ರಮಾಣೀಕರಿಸಿದ ಜಾಹೀರಾತುಗಳನ್ನು ಮಾತ್ರ ಪತ್ರಿಕೆಗಳು ಪ್ರಕಟಿಸಬೇಕು. ಮತಗಟ್ಟೆಗಳ ಬಳಿ 200 ಮೀಟರ್ ದೂರದಲ್ಲಿ ರಾಜಕೀಯ ಪಕ್ಷಗಳ ಒಂದು ಟೇಬಲ್, ಎರಡು ಕುರ್ಚಿಗಳನ್ನು ಹಾಕಿಕೊಳ್ಳಬಹುದಾಗಿದೆ. +65 ಕಂಪನಿ ಅರೆಸೇನಾ ಪಡೆ:ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ 65 ಕಂಪನಿ ಅರೆಸೇನಾ ಪಡೆ, 50 ಸಾವಿರ ಸಿವಿಲ್ ಪೊಲೀಸ್ ಬಳಕೆ ಮಾಡುತ್ತಿದ್ದು, 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ, 19,701 ಮತಗಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ಮಾಡಲಾಗುವುದು. 5 ಸಾವಿರ ಸೂಕ್ಷ್ಮ ವೀಕ್ಷಕರನ್ನು ಕೂಡ ನಿಯೋಜಿಸಲಾಗಿದೆ. +ಕ್ಯೂಆರ್ ಕೋಡ್ ವೋಟರ್ ಸ್ಲಿಪ್:ನಗರಪ್ರದೇಶದ ಮತದಾರರ ಅನುಕೂಲಕ್ಕಾಗಿ ವೋಟರ್ ಸ್ಲಿಪ್‍ನ ಹಿಂಬದಿಯಲ್ಲಿ ಕ್ಯೂಆರ್ ಕೋಡ್ ನಮೂದಿಸಿದ್ದು, ಅದನ್ನು ಸ್ಕ್ಯಾನ್ ಮಾಡಿದರೆ ಮತಗಟ್ಟೆಗೆ ಡೈರೆಕ್ಷನ್ ತೋರಿಸಲಿದೆ. ಮತಗಟ್ಟೆ ಬಳಿ ಇರುವ ಕ್ಯೂ ಪಾರ್ಕಿಂಗ್, ಸ್ಥಳಾವಕಾಶದ ಬಗ್ಗೆಯೂ ಮಾಹಿತಿ ಸಿಗಲಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಈ ಪ್ರಯೋಗ ಯಶಸ್ವಿಯಾಗಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ನಗರಪ್ರದೇಶಗಳಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಮೊದಲ ಬಾರಿಗೆ ಬಳಸಲಾಗುತ್ತಿದೆ ಎಂದು ಎಲ್ಲಾ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್.ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್.ಎಮ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_170_6.txt b/eesanje/url_46_170_6.txt new file mode 100644 index 0000000000000000000000000000000000000000..0069ef37acdf3f2ad48321735b8f163d91edefbb --- /dev/null +++ b/eesanje/url_46_170_6.txt @@ -0,0 +1,5 @@ +ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ +ಬೆಂಗಳೂರು,ಏ.24– ಮೊದಲ ಹಂತದ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಕೇಂದ್ರಗಳಲ್ಲಿ ಮದ್ಯ ಮಾರಾಟಕ್ಕೆ ಇಂದು ಸಂಜೆ ಕಡಿವಾಣ ಬೀಳಲಿದೆ. ಸಂಜೆ 5 ಗಂಟೆ 59 ನಿಮಿಷದಿಂದ 26ರ ಮಧ್ಯರಾತ್ರಿ 12ಗಂಟೆವರೆಗೆ ಎಂಎಸ್‍ಐಎಲ್/ರೆಸ್ಟೋರೆಂಟ್, ಡಾಬಾ ಸೇರಿದಂತೆ ಎಲ್ಲಿಯೂ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿಬಂಧನೆಯನ್ನು ಹಾಕಿದೆ. +ಒಂದು ವೇಳೆ ಆಯೋಗದ ಆದೇಶವನ್ನು ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದರೆ ಅಂಥ ಮಳಿಗೆಗಳನ್ನು ತತ್‍ಕ್ಷಣವೇ ಜಪ್ತಿ ಮಾಡಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದೆ. +ಸಂಜೆ 5 ಗಂಟೆ 59 ನಿಮಿಷದಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಮತದಾನ ನಡೆಯುವ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಹಾಸನ, ಉಡುಪಿ-ಚಿಕ್ಕಮಗಳೂರು ಮತ್ತು ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹಾಕಲಾಗಿದೆ. +ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದೆ. ಮತದಾನ ನಡೆಯುವ 48 ಗಂಟೆಗೂ ಮುನ್ನ ಮದ್ಯ ಮಾರಾಟ ನಿಷೇಧ ಮಾಡುವುದು ಸರ್ವೇ ಸಾಮಾನ್ಯವಾಗಿದೆ. \ No newline at end of file diff --git a/eesanje/url_46_170_7.txt b/eesanje/url_46_170_7.txt new file mode 100644 index 0000000000000000000000000000000000000000..3ab129b802fadb4c78f0f5c800003a5a2e1291f0 --- /dev/null +++ b/eesanje/url_46_170_7.txt @@ -0,0 +1,6 @@ +ಶ್ರೀ ಗುರುರಾಘವೇಂದ್ರ, ವಸಿಷ್ಠ ಬ್ಯಾಂಕ್ ಹಗರಣ ತನಿಖೆಗೆ ವಿಶೇಷ ದಳ ರಚನೆ ಡಿಸಿಎಂ +ಬೆಂಗಳೂರು,ಏ.24-ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸಿ ಠೇವಣಿದಾರರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. +ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುರಾಘವೇಂದ್ರ ಸಹಕಾರ ಬ್ಯಾಂಕ್‍ನಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ತಮ್ಮ ಖಾತೆಯಲ್ಲಿ ಉಳಿತಾಯಕ್ಕೆ ಹಣವನ್ನಿಟ್ಟಿದ್ದರು. ಅದು ಬಿಜೆಪಿ ನಾಯಕರ ಪಾಲಾಗಿದೆ. ಹೀಗಾಗಿ ತೊಂದರೆಗೆ ಸಿಲುಕಿದ ಬಹಳಷ್ಟು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 300 ಕ್ಕೂ ಹೆಚ್ಚು ಪ್ರಾಣಹಾನಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. +ಹಗರಣವನ್ನು ರಾಜ್ಯಸರ್ಕಾರ ಈಗಾಗಲೇ ಸಿಬಿಐ ತನಿಖೆಗೆ ಒಪ್ಪಿಸಿದೆ. ಆದರೆ ಹಗರಣದಲ್ಲಿ ಬಿಜೆಪಿ ನಾಯಕರೇ ಹೆಚ್ಚು ಭಾಗಿಯಾಗಿರುವುದರಿಂದಾಗಿ ಸಿಬಿಐ ಈವರೆಗೂ ತನಿಖೆ ಕೈಗೆತ್ತಿಕೊಂಡಿಲ್ಲ. ಬೇರೆಬೇರೆ ಪ್ರಕರಣಗಳಲ್ಲಿ ನಮ್ಮಂಥವರಿಗೆ ಕಿರುಕುಳ ಕೊಡುವುದರಲ್ಲಿ ಸಿಬಿಐ ತೊಡಗಿದೆ ಎಂದು ಆರೋಪಿಸಿದರು. +ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಸಿಷ್ಠ ಬ್ಯಾಂಕ್ ಠೇವಣಿದಾರರು ಇಂದು ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಯವರನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡರು.ಈ ವೇಳೆ ಠೇವಣಿದಾರರಿಗೆ ಭರವಸೆ ನೀಡಿರುವ ಪ್ರಿಯಾಂಕ ಗಾಂ ಸಿಬಿಐ ಸೂಕ್ತ ತನಿಖೆ ನಡೆಸಿ ನ್ಯಾಯ ಕೊಡಿಸುವುದಾದರೆ ಕೊಡಿಸಿ. ಇಲ್ಲವಾದರೆ, ರಾಜ್ಯಸರ್ಕಾರವೇ ವಿಶೇಷ ತನಿಖಾ ದಳ ರಚನೆ ಮಾಡಿ ಸಂತ್ರಸ್ತರ ನೆರವಿಗೆ ಬರಬೇಕು ಎಂದು ಸೂಚನೆ ನೀಡಿದ್ದಾರೆ. +ಈ ವಿಷಯವಾಗಿ ತಮ್ಮೊಂದಿಗೂ ಚರ್ಚಿಸಿದ್ದು, ಮುಖ್ಯಮಂತ್ರಿಯವರಿಗೆ ಪತ್ರ ಬರೆಯುವುದಾಗಿ ಪ್ರಿಯಾಂಕ ಗಾಂಧಿ ಹೇಳಿರುವುದಾಗಿ ಡಿ.ಕೆ.ಶಿವಕುಮಾರ್ ವಿವರಿಸಿದರು.ಲೋಕಸಭಾ ಚುನಾವಣೆ ಬಳಿಕ ಕಾನೂನು ರೀತಿಯಲ್ಲಿ ಎಸ್‍ಐಟಿ ರಚಿಸಿ ನ್ಯಾಯ ಕೊಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_170_8.txt b/eesanje/url_46_170_8.txt new file mode 100644 index 0000000000000000000000000000000000000000..d49ff945839ea1cee751f2d790d453d185a97ddf --- /dev/null +++ b/eesanje/url_46_170_8.txt @@ -0,0 +1,7 @@ +ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ ನಿಧನ +ಬೆಂಗಳೂರು,ಏ.24-ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎನ್.ಅರ್ಜುನ್ ದೇವ(88) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. +ಕೋಲಾರ ಜಿಲ್ಲೆಯ ವೇಮಗಲ್ ಮೂಲದವರಾದ ಅರ್ಜುನ್ ದೇವ ಅವರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ವೇಮಗಲ್ ಸಮೀಪದ ಚೌಡದೇವನಹಳ್ಳಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. +ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ತಾಯಿನಾಡು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಅವರು, ವಿಧಾನಸೌಧದ ವರದಿಗಾರಿಕೆಗೆ ಹೊಸ ಅರ್ಥ ಕಲ್ಪಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಜಾವಾಣಿ ಪತ್ರಿಕೆಯಿಂದ ನಿವೃತ್ತರಾದ ನಂತರ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮ ಅಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. +ನಂತರ ಅವರು ಸೂರ್ಯೋದಯ ಮತ್ತಿತರ ಪತ್ರಿಕೆಗಳಿಗೂ ಸಂಪಾದಕರಾಗಿ ಕಾರ್ಯ ನಿರ್ವಹಿಸಿ ಜನಮನಗೆದ್ದಿದ್ದರು. ಇವರಿಗೆ 1984ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ವರದಿಗಾಗಿ ನೀಡುವ ಚಿನ್ನದ ಪದಕ ಸೇರಿದಂತೆ ಗಣ್ಯ ಪತ್ರಕರ್ತರಿಗೆ ನೀಡುವ ಹಲವು ಪ್ರಶಸ್ತಿಗಳು ಕೂಡ ಇವರಿಗೆ ಸಂದಿವೆ. +ಇವರ ಗರಡಿಯಲ್ಲಿ ಪಳಗಿದ್ದ ಹಲವಾರು ಪತ್ರಕರ್ತರು ಇಂದು ರಾಜ್ಯದ ವಿವಿಧ ಮಾಧ್ಯಮಗಳಲ್ಲಿ ಪ್ರಮುಖ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಪ್ರಮುಖ ರಾಜಕಾರಣಿಗಳಿಂದಲೂ ಅಜಾತಶತ್ರು ಎಂದೇ ಕರೆಸಿಕೊಳ್ಳುತ್ತಿದ್ದ ಅರ್ಜುನ್ ದೇವ ಅವರ ನಿಧನಕ್ಕೆ ರಾಜಕಾರಣಿಗಳು ಹಾಗೂ ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. +ಶ್ರೀಯುತರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ವರದಿಗಾರರ ಕೂಟ, ಪ್ರೆಸ್‍ಕ್ಲಬ್ ಸೇರಿದಂತೆ ಹಲವಾರು ಸಂಘಟನೆಗಳು ಸಂತಾಪ ಸೂಚಿಸಿವೆ. \ No newline at end of file diff --git a/eesanje/url_46_170_9.txt b/eesanje/url_46_170_9.txt new file mode 100644 index 0000000000000000000000000000000000000000..60246f134452e229cfdb8a9837fcef30266a6a96 --- /dev/null +++ b/eesanje/url_46_170_9.txt @@ -0,0 +1,8 @@ +ಎತ್ತ ಸಾಗುತಿದೆ ಕರ್ನಾಟಕ..? : ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ 20 ಮುಸ್ಲಿಂ ಯುವಕರಿಂದ ಹಲ್ಲೆ +ಕೊಪ್ಪಳ, ಏ.24-ಇಲ್ಲಿನ ಶ್ರೀರಾಮನಗರದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಸುಮಾರು 20 ಮಂದಿ ಮುಸ್ಲಿಂ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಕುಮಾರ್ ರಾಠೋಡ್ ಹಲ್ಲೆಗೊಳಗಾಗದ ವ್ಯಕ್ತಿಯಾಗಿದ್ದು ಸದ್ಯ ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. +ಕಳೆದ ರಾತ್ರಿ ಸನ್‍ಶೈನ್ ಬಾರ್‍ನಲ್ಲಿ ಮದ್ಯ ಸೇವನೆಯ ವೇಳೆ ಕುಮಾರ್ ರಾಠೋಡ್ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಅದೇ ವೇಳೆ ಮುಸ್ಲಿಂ ಯವಕನೊಬ್ಬ ಆಕ್ಷೇಪಿಸಿದ್ದಾನೆ. ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. +ಕೆಲವು ನಿಮಿಷಗಳ ನಂತರ ಬಾರ್‍ನಿಂದ ಹೊರಬಂದಾಗ ಕುಮಾರ್ ರಾಠೋಡ್ ನನ್ನು ಅಡ್ಡಗಟ್ಟಿದ ಸುಮಾರು 30 ಮಂದಿ ಧಮಕಿ ಹಾಕಿದ್ದಾರೆ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. +ಜೈ ಶ್ರೀರಾಮ್ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ ವಿಚಾರವಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕುಮಾರ್ ರಾಠೋಡ್​ಗೆ ಮದ್ಯಪಾನದ ಚಟವಿದೆ. ಬಾರ್​​ನಲ್ಲಿ ಗ್ಲಾಸಿಗೆ ನೀರು ಸುರಿಯುವ ಸಂದರ್ಭ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾನೆ. ಹನುಮ ಜಯಂತಿ ಇರುವ ಕಾರಣ ಆತ ಘೋಷಣೆ ಕೂಗಿದ್ದಾನೆ. ಈ ವೇಳೆ ಅಲ್ಲಿದ್ದ ಮುಸ್ಲಿಂ ಯುವಕನೊಬ್ಬ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. +ಈ ವೇಳೆ ಅವರಿಬ್ಬರ ನಡುವೆ ಜಗಳವಾಗಿದೆ. ಕೆಲವು ನಿಮಿಷಗಳ ನಂತರ ಬಾರ್​​ನಿಂದ ಹೊರಬಂದಾಗ ಅವರ ಸಮುದಾಯದ 20ರಿಂದ 30 ಮಂದಿ ಅಲ್ಲಿಗೆ ಬಂದು ಕುಮಾರ್ ರಾಠೋಡ್ ಮೇಲೆ ಹಲ್ಲೆ ಮಾಡಿದ್ದಾರೆ. ಜತೆಗೆ ಆತನ ಬಂಜಾರ ಸಮುದಾಯದ ಕುರಿತಾಗಿ ಜಾತಿ ನಿಂದನೆಯನ್ನೂ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. +ನಂತರ ಸ್ಥಳೀಯರು ಜಗಳ ನಿಲ್ಲಿಸಿ ಕುಮಾರ್ ರಾಠೋಡ್​ನನ್ನು ಮನೆಗೆ ತಲುಪಿಸಿದರು. ಆದರೆ, ನಂತರ ಆತನಿಗೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಯಿತು ಎಂದೂ ಸ್ಥಳೀಯರು ತಿಳಿಸಿದ್ದಾರೆ. +ಲೋಕಸಭೆ ಚುನಾವಣೆ ಸಂದರ್ಭದಲ್ಲೇ ರಾಜ್ಯದಲ್ಲಿ ಮತೀಯ, ಧರ್ಮ ಸಂಘರ್ಷಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗಷ್ಟೇ ರಾಮನವಮಿ ಸಂದರ್ಭ ಬೆಂಗಳೂರಿನಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಲಾಗಿತ್ತು. ಇದೀಗ ಗಂಗಾವತಿಯ ಶ್ರೀರಾಮ ನಗರದಲ್ಲಿ ಘಟನೆ ನಡೆದಿದೆ. \ No newline at end of file diff --git a/eesanje/url_46_171_1.txt b/eesanje/url_46_171_1.txt new file mode 100644 index 0000000000000000000000000000000000000000..f7922aee01868cda2cd0ff77e0ea6fb537a27102 --- /dev/null +++ b/eesanje/url_46_171_1.txt @@ -0,0 +1,8 @@ +ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂದೆನಿಸುತ್ತಿದೆ : ಪಿ.ರಾಜೀವ್ +ಬೆಂಗಳೂರು, ಏ.23-ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೊಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು. +ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ. ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು. +ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಚಿವ ಕೃಷ್ಣ ಬೈರೇಗೌಡರು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದಾರೆ. ಇವತ್ತು ಕಾಂಗ್ರೆಸ್ ಸಚಿವರ- ಶಾಸಕರ ದಂಡು ವಿಧಾನಸೌಧದಲ್ಲಿ ಹೋರಾಟವನ್ನು ಮಾಡುತ್ತಿದೆ. ವಿಧಾನಸೌಧ ಪ್ರಜಾತಂತ್ರದ ಪ್ರತೀಕವೇ? ಕಾಂಗ್ರೆಸ್ಸಿನ ಕಾರ್ಯಾಲಯವೇ ಎಂದು ಕೇಳಿದರು. +ರಾಜ್ಯದಲ್ಲಿ ನಡೆದ ಮಹಿಳೆಯ ವಿವಸ್ತ್ರ ಪ್ರಕರಣ, ಸಾಮೂಹಿಕ ಅತ್ಯಾಚಾರ, ರಾಮೇಶ್ವರಂ ಕೆಫೆಸ್ಪೋಟ, ಕುಕ್ಕರ್ ಬಾಂಬ್ ಸ್ಪೋಟ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಪ್ರಕರಣಗಳನ್ನು ನಾನು ನೆನಪಿಸಲು ಹೋಗುವುದಿಲ್ಲ. ಕರ್ನಾಟಕದಲ್ಲಿ ಕೇವಲ 3 ದಿನಗಳಲ್ಲಿ 8 ಕೊಲೆ ಪ್ರಕರಣಗಳು ನಡೆದಿವೆ. ಯಾಕೆ ಎಂದ ಅವರು, ರಾಜ್ಯದಲ್ಲಿ ಜನಪರ ಸರಕಾರ ಇದೆಯೇ ಅಥವಾ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಯಾಕೆ ಎಂದು ಪ್ರಶ್ನಿಸಿದರು. +ಕರ್ನಾಟಕವು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಾಗಿ ಅತ್ಯಂತ ಉನ್ನತ ಸ್ಥಿತಿಯಲ್ಲಿ, ದೇಶಕ್ಕೆ ಮಾದರಿ ರಾಜ್ಯವಾಗಿತ್ತು. ಭಿಕ್ಷೆ ಬೇಡುವ ಮುಖ್ಯಮಂತ್ರಿ, ಮೈ ಪರಚಿಕೊಳ್ಳುವ ಸಿಎಂ, ವಿಚಾರಣೆಗೆ ಮೊದಲೇ ತೀರ್ಪನ್ನು ನೀಡುವ ಗೃಹ ಸಚಿವ, ಪ್ರಕರಣದ ಪ್ರಾಥಮಿಕ ಮಾಹಿತಿಯನ್ನು ತಿಳಿದುಕೊಳ್ಳದೆ ಉತ್ತರಿಸುವ ಪೊಲೀಸ್ ಸಚಿವರಿರುವುದು ರಾಜ್ಯದ ದುರ್ದೈವ ಎಂದು ನುಡಿದರು. +ರಾಜ್ಯದಲ್ಲಿ ಕೊಲೆ, ಅತ್ಯಾಚಾರ, ಭಯೋತ್ಪಾದನಾ ಕೃತ್ಯಗಳು ಜಾಸ್ತಿ ಆಗುತ್ತಿವೆ ಯಾಕೆ ಎಂದು ಕೇಳಿದ ಅವರು, ಪೊಲೀಸ್ ಠಾಣೆಯಲ್ಲಿ ನಮಗೆ ರಾಜಾತಿಥ್ಯ ಇದೆ ಎಂದು ಡಿ.ಕೆ.ಶಿವಕುಮಾರರ ಬ್ರದರ್ಸ್ಗೆ ಗೊತ್ತಾಗಿದೆ. ಈಗಿನ ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ನಾವು ಯಾವುದೇ ಅಪರಾಧ ಮಾಡಿದರೂ ನಮ್ಮ ಮನೆಗೆ ಪೊಲೀಸ್ ರಕ್ಷಣೆ ಕೊಡುತ್ತಾರೆ. +ಅಮಾಯಕ ಯುವತಿಯನ್ನು ಕೊಲೆ ಮಾಡಿದರೆ ಪೊಲೀಸ್ ಠಾಣೆಯಲ್ಲಿ ನನಗೆ ರಾಜಾತಿಥ್ಯ ಕೊಟ್ಟು, ನನ್ನ ಮನೆಗೆ ರಕ್ಷಣೆ ನೀಡಲು ಕಾಂಗ್ರೆಸ್ ಸರಕಾರ ಸನ್ನದ್ಧವಾಗಿದೆ ಎಂಬ ಭಾವನೆಯಿಂದ ಇಂಥ ಕೃತ್ಯಗಳು ನಡೆಯುತ್ತಿವೆ ಎಂದು ಪಿ.ರಾಜೀವ್ ಆರೋಪಿಸಿದರು.ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ರಾಜ್ಯ ವಕ್ತಾರ ಎಂ.ಜಿ.ಮಹೇಶ್, ಪ್ರಮುಖರು ಈ ಸಂದರ್ಭದಲ್ಲಿ ಇದ್ದರು. \ No newline at end of file diff --git a/eesanje/url_46_171_10.txt b/eesanje/url_46_171_10.txt new file mode 100644 index 0000000000000000000000000000000000000000..8d8ac289deaf097bee466f56599b029518cea5c9 --- /dev/null +++ b/eesanje/url_46_171_10.txt @@ -0,0 +1,4 @@ +ಹೆರಿಗೆ ವೇಳೆ ಇಬ್ಬರು ಮಹಿಳೆಯರ ಸಾವಿಗೆ ಕಾರಣವಾದ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅಮಾನತು +ಬೆಂಗಳೂರು,ಏ.23-ಹೆರಿಗೆ ಸಂದರ್ಭದಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣವಾದ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಮಾನತುಗೊಳಿಸಿದೆ. +ಬಳ್ಳಾರಿ ಜಿಲ್ಲೆಯ ಮೋಕ ಸಮುದಾಯ ಆರೋಗ್ಯ ಕೇಂದ್ರ ತಜ್ಞೆಯಾಗಿ ಕೆಲಸ ಮಾಡುತ್ತಿರುವ ಡಾ.ಪರಿಮಳ ದೇಸಾಯಿಯವರು ಮಾ.6 ರಂದು ಸಿಂಧುವಾಳ ನಗರದ ರಾಜಮ್ಮ(23) ಅವರಿಗೆ ಹೆರಿಗೆ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದರು. ಮಾ.7 ರಂದು ನ್ಯೂಮೋಕ ವಾಸಿ ಭಾಗ್ಯಮ್ಮ(23) ಎಂಬುವರಿಗೂ ಶಸ್ತ್ರಚಿಕಿತ್ಸೆ ಮಾಡಿದ್ದರು. ಈ ಇಬ್ಬರೂ ಮಹಿಳೆಯರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. +ಶಸ್ತ್ರಚಿಕಿತ್ಸೆಯ ಲೋಪ ಕಂಡುಬಂದಿದೆ. ಬೇಜವಾಬ್ದಾರಿತನ, ಕರ್ತವ್ಯ ನಿರ್ಲಕ್ಷ್ಯತೆ, ಮೇಲುಸ್ತುವಾರಿ ನಿಗಾ ವಹಿಸದೇ ಇರುವುದು, ಮೇಲಧಿಕಾರಿಗಳು ಸಕಾಲಕ್ಕೆ ವರದಿ ಸಲ್ಲಿಸದೇ ಇರುವ ಕಾರಣಕ್ಕಾಗಿ ಡಾ.ಪರಿಮಳ ದೇಸಾಯಿ ಅವರನ್ನು ಶಿಸ್ತುಕ್ರಮ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ್ ಆದೇಶಿಸಿದ್ದಾರೆ. \ No newline at end of file diff --git a/eesanje/url_46_171_11.txt b/eesanje/url_46_171_11.txt new file mode 100644 index 0000000000000000000000000000000000000000..201d332a0e3496e75895543d11aad4b5db4db6bd --- /dev/null +++ b/eesanje/url_46_171_11.txt @@ -0,0 +1,8 @@ +ಪಿಕ್‍ಪ್ಯಾಕೆಟ್ ಮಾಡಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಬಿಜೆಪಿ : ಡಿಕೆಶಿ ವಾಗ್ದಾಳಿ +ಬೆಂಗಳೂರು,ಏ.23-ಬಿಜೆಪಿಯವರು ತಾವು ಮಾಡಿದ ಪಿಕ್‍ಪ್ಯಾಕೆಟ್ ಅನ್ನು ಕಾಂಗ್ರೆಸ್‍ನವರ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ (ವಿಸಿಕೆ) ಪಕ್ಷದ ಅಧ್ಯಕ್ಷ ತೋಳ್ಕಪಿಯನ್ ತಿರುಮವಳವನ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬಿಜೆಪಿಯ ಜಾಹೀರಾತಿನ ವಿರುದ್ಧ ಕಿಡಿಕಾರಿದರು. +ವಿದ್ಯುತ್ ಬಿಲ್ ಅನ್ನು ಏರಿಕೆ ಮಾಡಿದ್ದು ಬಿಜೆಪಿ ಅವಧಿಯಲ್ಲಿ. ನಮ್ಮ ಸರ್ಕಾರ ಎಲ್ಲಾ ಗ್ರಾಹಕರಿಗೂ ಗೃಹಜ್ಯೋತಿ ಯೋಜನೆಯ ಮೂಲಕ ವಿದ್ಯುತ್ ಬಿಲ್ ರಿಯಾಯಿತಿ ನೀಡಿ ಜನರಿಗೆ ಹೊರೆಯಾಗದಂತೆ ಎಚ್ಚರಿಕೆ ವಹಿಸಿದೆ. +ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ಕಳೆದ ತಿಂಗಳೂ 1.50 ರೂ.ನಷ್ಟು ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಿದೆ. ಆದರೆ ಬಿಜೆಪಿಯವರು ಜಾಹೀರಾತಿನಲ್ಲಿ ನಮ್ಮ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದಲ್ಲಿ ಜನರ ಜೇಬಿನ ಕಳ್ಳತನ ಮಾಡುತ್ತಿದೆ. +ಶೇ.40 ರಷ್ಟು ಲಂಚದ ಪ್ರಕರಣ ಬಿಗ್ ಪಿಕ್‍ಪ್ಯಾಕೆಟ್‍ಗೆ ದೊಡ್ಡ ಉದಾಹರಣೆ. ಅದನ್ನೆಲ್ಲಾ ಮರೆತು ಬಿಜೆಪಿ ಕಾಂಗ್ರೆಸ್ ವಿರುದ್ಧ ಪಿಕ್‍ಪ್ಯಾಕೆಟ್ ಆರೋಪ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪಕ್ಷ ಸಾಂಕೇತಿಕ ಹೋರಾಟ ನಡೆಸಿದೆ. ಕೇಂದ್ರದಿಂದ ನಮಗೆ ನಿರಂತರವಾಗಿ ಅನ್ಯಾಯವಾಗುತ್ತಿರುವುದನ್ನು ಜನರ ಗಮನಕ್ಕೆ ತರುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಹಾಸನದಲ್ಲಿ ಕಣ್ಣೀರು ಹಾಕಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಯಾವ ಅನ್ಯಾಯವಾಗಿದೆ ಎಂದು ದೇವೇಗೌಡರು ಕಣ್ಣೀರು ಹಾಕಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿತ್ತು. ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದ ಜನ ಮುಖ್ಯಮಂತ್ರಿ ಮಾಡಿದ್ದಾರೆ, ಹಾಸನದವರಲ್ಲ. ಅವರಿಗೆ ತಮ್ಮ ಕೊಡುಗೆ ಏನು ಎಂದು ಹೇಳಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಹೇಳಿದರು. +ಜೆಡಿಎಸ್ ಅಧಿಕೃತವಾಗಿ ಸ್ರ್ಪಧಿಸಿರುವ 3 ಹಾಗೂ ಅನಕೃತವಾಗಿ ಸ್ಪರ್ಧೆಯಲ್ಲಿರುವ 1 ಕ್ಷೇತ್ರ ಸೇರಿದಂತೆ 4 ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ನುಡಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಹೊಸದಾಗಿ ರಾಜಕಾರಣ ಮಾಡುತ್ತಿಲ್ಲ, ಚುನಾವಣೆಯಲ್ಲಿ ಗೆದ್ದ ದಿನದಿಂದಲೂ ಸೇವೆ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರು ಕೋವಿಡ್ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಔಷಧಿ, ಆಹಾರ, ಚಿಕಿತ್ಸೆ ಸೇರಿದಂತೆ ಯಾವುದಕ್ಕೂ ಸ್ಪಂದಿಸಿರಲಿಲ್ಲ, ಕೊನೆಗೆ ಹೆಣ ಹೂಳಲಿಕ್ಕೂ ಬಂದಿರಲಿಲ್ಲ. ಚುನಾವಣೆ ಎಂಬ ಕಾರಣಕ್ಕೆ ಈಗ ಪದೇಪದೇ ಬರುತ್ತಿದ್ದಾರೆ ಎಂದು ತಿಳಿಸಿದರು. +ವಿಕೆಸಿ ಪಕ್ಷದ ಸಂಸದರು ಅತ್ಯಂತ ಪ್ರಭಾವಿ ಹಾಗೂ ಇಂಡಿಯಾ ಮೈತ್ರಿ ಕೂಟದ ಪಾಲುದಾರರಾಗಿದ್ದಾರೆ. ಅವರ ಪಕ್ಷದಿಂದ ಬೆಂಗಳೂರು ಗ್ರಾಮಾಂತರದಲ್ಲಿ ಚಂದ್ರಶೇಖರ್, ಕೋಲಾರದಲ್ಲಿ ಎಂ.ಸಿ.ವೇಣು, ಬೆಂಗಳೂರು ದಕ್ಷಿಣದಲ್ಲಿ ರಾಜ್‍ಕುಮಾರ್‍ರವರು ಸ್ಪರ್ಧೆ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಈ ಮೂರೂ ಜನ ಚುನಾವಣೆ ನಿವೃತ್ತಿ ಘೋಷಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. \ No newline at end of file diff --git a/eesanje/url_46_171_12.txt b/eesanje/url_46_171_12.txt new file mode 100644 index 0000000000000000000000000000000000000000..54103ac66b7759aaf450ff7ea9ae50b02ff51778 --- /dev/null +++ b/eesanje/url_46_171_12.txt @@ -0,0 +1,6 @@ +ರಾಜ್ಯದ 2ನೇ ಹಂತದ ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು +ಬೆಂಗಳೂರು,ಏ.23-ರಾಜ್ಯದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ನಾಮಪತ್ರ ಹಿಂಪಡೆಯುವಿಕೆ ಮುಕ್ತಾಯಗೊಂಡಿದ್ದು, ಚುನಾವಣಾ ಕಣದಲ್ಲಿ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‍ನ ತಲಾ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಯಾವುದೇ ಕ್ಷೇತ್ರದಲ್ಲಿ ಸ್ರ್ಪಧಿಸಿಲ್ಲ. +ರಾಯಚೂರು ಮತ್ತು ಬಿಜಾಪುರ ಲೋಕಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 8 ಅಭ್ಯರ್ಥಿಗಳಿದ್ದರೆ, ದಾವಣಗೆರೆ ಕ್ಷೇತ್ರದಲ್ಲಿ ಅತೀ ಹೆಚ್ಚು 30 ಅಭ್ಯರ್ಥಿಗಳಿದ್ದಾರೆ. ಚಿಕ್ಕೋಡಿ 18, ಬೆಳಗಾವಿ 13, ಬಾಗಲಕೋಟೆ 22, ಗುಲ್ಬರ್ಗ 14, ಬೀದರ್ 18, ಕೊಪ್ಪಳ 19, ಬಳ್ಳಾರಿ 10, ಹಾವೇರಿ 14, ಧಾರವಾಡ 17, ಉತ್ತರ ಕನ್ನಡ 13, ಶಿವಮೊಗ್ಗ 23 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. +ಇದರಲ್ಲಿ 206 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. ನಾಮಪತ್ರ ಹಿಂಪಡೆಯಲು ಕಡೆಯ ದಿನವಾದ ನಿನ್ನೆ 45 ನಾಮಪತ್ರಗಳನ್ನು ವಾಪಸ್ಸು ಪಡೆಯಲಾಗಿದೆ.ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 247 ಹಾಗೂ ಎರಡನೇ ಹಂತದ 14 ಕ್ಷೇತ್ರಗಳಲ್ಲಿ 227 ಅಭ್ಯರ್ಥಿಗಳು ಸೇರಿದಂತೆ ಒಟ್ಟು 474 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. +ಎರಡು ಹಂತದ 28 ಲೋಕಸಭಾ ಕ್ಷೇತ್ರಗಳಲ್ಲಿ 5.47 ಕೋಟಿ ಮತದಾರರಿದ್ದು, 58,834 ಮತಗಟ್ಟೆಗಳನ್ನು ತೆರಯಲಾಗುತ್ತದೆ. 1832 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಇಲಾಖೆ ಪ್ರಕಟಣೆ ತಿಳಿಸಿದೆ. +ಉಪಚುನಾವಣೆ:ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ಬಿಜೆಪಿ, ಕಾಂಗ್ರೆಸ್‍ನ ತಲಾ ಒಬ್ಬರು ಹಾಗೂ ನಾಲ್ವರು ಸ್ವತಂತ್ರ್ಯ ಅಭ್ಯರ್ಥಿ ಸೇರಿದಂತೆ ಒಟ್ಟು 6 ಮಂದಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.ಮೇ 7 ರಂದು 14 ಕ್ಷೇತ್ರಗಳ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದೆ. \ No newline at end of file diff --git a/eesanje/url_46_171_2.txt b/eesanje/url_46_171_2.txt new file mode 100644 index 0000000000000000000000000000000000000000..d46d4a273afcd6ba9ffce58b42513a056008c29c --- /dev/null +++ b/eesanje/url_46_171_2.txt @@ -0,0 +1,9 @@ +ಪಾಕಿಸ್ತಾನಕ್ಕೆ ಹಾರಲು ಪ್ಲಾನ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಬಾಂಬರ್‌ಗಳು +ಬೆಂಗಳೂರು, ಏ.23-ರಾಮೇಶ್ವರಂ ಕೆಫೆ ಸ್ಪೋಟಿಸಿದ ನಂತರ ಪಾಕಿಸ್ತಾನಕ್ಕೆ ಹಾರಲು ಬಾಂಬರ್ಗಳು ಸಿದ್ಧತೆ ಮಾಡಿಕೊಂಡಿದ್ದರು ಎಂಬ ಸ್ಪೋಟಕ ಮಾಹಿತಿ ಎನ್ಐಎ ತನಿಖೆಯಲ್ಲಿ ಗೊತ್ತಾಗಿದೆ. ಎನ್ಐಎ ತಂಡ ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಬಾಂಬರ್ಗಳನ್ನು ಬಂಧಿಸದಿದ್ದರೆ ಈ ವೇಳೆಗಾಗಲೇ ಅವರು ಪಾಕಿಸ್ತಾನದಲ್ಲಿ ನೆಲೆಸುತ್ತಿದ್ದರು ಎಂಬುವುದು ತಿಳಿದು ಬಂದಿದೆ. +ಬಾಂಬರ್ ಮುಸಾವೀರ್ ಮತ್ತು ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಕೆಫೆ ಸ್ಪೋಟಿಸಿದ ನಂತರ ರಾಜ್ಯದ ಹಲವು ಕಡೆಗಳಲ್ಲಿ ಸಂಚರಿಸಿ ನಂತರ ವಿವಿಧ ರಾಜ್ಯಗಳಲ್ಲೂ ತಲೆಮರೆಸಿಕೊಂಡು ಪಶ್ಚಿಮ ಬಂಗಾಳಕ್ಕೆ ಪರಾರಿಯಾಗಿದ್ದರು. +ಈ ಇಬ್ಬರಿಗೆ ಸಹಾಯ ಮಾಡಿದ್ದ ಆರೋಪಿ ಮುಜಾಮಿಲ್ ತನ್ನ ಹಾಗೂ ಗೆಳೆಯರ ಬ್ಯಾಂಕ್ ಅಕೌಂಟ್ ಹಾಗೂ ಎಟಿಎಂ ಕಾರ್ಡ್ ನೀಡಿದ್ದು ವಿದೇಶದಿಂದಲೂ ಇವರ ಖಾತೆಗೆ ಹಣ ಬರುತ್ತಿತ್ತು ಎಂಬುವುದು ವಿಚಾರಣೆಯಿಂದ ತಿಳಿದುಬಂದಿದೆ. +ಪಶ್ಚಿಮ ಬಂಗಾಳದಿಂದ ಬಾಂಗ್ಲಾಕ್ಕೆ ಹೋಗಿ ಅಲ್ಲಿಂದ ಪಾಕಿಸ್ತಾನಕ್ಕೆ ಹಾರಲು ಈ ಇಬ್ಬರು ಬಾಂಬರ್ಗಳು ಯೋಜನೆ ರೂಪಿಸಿಕೊಂಡು ಹಣಕ್ಕಾಗಿ ಕಾಯುತ್ತಿದ್ದರು. ಅದಕ್ಕಾಗಿ ಇವರಿಗೆ ಕನಿಷ್ಟ ಒಂದು ಲಕ್ಷ ಹಣದ ಅವಶ್ಯಕತೆಯಿತ್ತು. +ಯಾವಾಗ ಎನ್ಐಎಗೆ ಬ್ಯಾಂಕ್ ಅಕೌಂಟ್ಬಗ್ಗೆ ಮಾಹಿತಿ ಲಭ್ಯವಾಯಿತು. ಆ ಬಳಿಕ ಮತೀನ್ ತಾಹ ಹಾಗೂ ಮುಜಾವೀರ್ ಅಕೌಂಟ್ ಬಳಕೆ ನಿಲ್ಲಿಸಿದ್ದರಿಂದ ಆರ್ಥಿಕ ಸಂಕಷ್ಟ ಎದುರಾಗಿ ಹಣ ಪಡೆಯಲು ಸಾಧ್ಯವಾಗದಿದ್ದಾಗ ಪಶ್ಚಿಮ ಬಂಗಾಳದಲ್ಲೇ ಉಳಿದುಕೊಂಡಿದ್ದರು. +ಈ ಮಾಹಿತಿ ಕಲೆ ಹಾಕಿದ ಎನ್ಐಎ ತಂಡ ಕ್ಷಣಾರ್ಧದಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿ ಇಬ್ಬರು ಬಾಂಬರ್ಗಳ ಎಡೆಮುರಿ ಕಟ್ಟಿ ಕರೆತಂದಿದ್ದಾರೆ.ಈ ಆರೋಪಿಗಳು ಟೆಲಿಗ್ರಾಂ, ಸಿಗ್ನಲ್, ಎಂಡ್ಟುಎಂಡ್ ಎನ್ಕ್ರಿಪೈಡ್ ಮಾದರಿಯಲ್ಲಿ ಮಾತುಕತೆ ನಡೆಸುತ್ತಾ ತಾವು ಏನೆಲ್ಲಾ ಮಾಡಬೇಕೆಂಬ ವಿಚಾರದ ಬಗ್ಗೆ ಅಬ್ದುಲ್ ಮತೀನ್ ತಾಹಗೆ ಕಮಾಂಡರ್, ಹ್ಯಾಂಡರ್ಸ್ ಅಥವಾ ಕರ್ನಲ್ ಎಂಬ ಹೆಸರಿನಲ್ಲಿ ನಿರ್ದೇಶನ ಬರುತ್ತಿತ್ತು ಎಂಬುವುದು ವಿಚಾರಣೆಯಿಂದ ಗೊತ್ತಾಗಿದೆ. +ಈ ಹ್ಯಾಂಡ್ಲರ್ ಮೂಲತಃ ಪಾಕಿಸ್ತಾನದ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿದ್ದು, ಈತ ಮಧ್ಯಪ್ರಾಚ್ಯ ದೇಶದಲ್ಲಿ ಇದ್ದುಕೊಂಡು ತಾಹಗೆ ನಿರ್ದೇಶನ ನೀಡಿದ್ದರ ಬಗ್ಗೆಯೂ ಎನ್ಐಎಗೆ ಮಾಹಿತಿ ಲಭ್ಯವಾಗಿದೆ. +ವಿದೇಶದಿಂದ ಹಣದ ನೆರವು:ಈ ಇಬ್ಬರು ಬಾಂಬರ್ಗಳ ಖಾತೆಗಳಿಗೆ ವಿದೇಶದಿಂದ ಹಣ ಬರುತ್ತಿತ್ತು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಯಾವಾಗ ಬ್ಯಾಂಕ್ ಅಕೌಂಟ್ಗಳ ಬಗ್ಗೆ ಮಾಹಿತಿ ಲಭ್ಯವಾಯಿತೋ ಆ ಸಂದರ್ಭದಲ್ಲಿ ಮಾಸ್ಟರ್ ಮೈಂಡ್ ಮತೀನ್ ತಾಹ ಹಾಗೂ ಬಾಂಬರ್ ಮುಸಾವೀರ್ ಅಕೌಂಟ್ ಬಳಸುವುದನ್ನು ನಿಲ್ಲಿಸಿದ್ದರಿಂದ ಇವರಿಗೆ ಆರ್ಥಿಕ ಸಂಕಷ್ಟ ಎದುರಾಗಿ ಪಾಕಿಸ್ತಾನಕ್ಕೆ ಹಾರುವ ಸಂಚು ವಿಫಲವಾಗಿದ್ದರಿಂದ ಎನ್ಐಎಗೆ ಸಿಕ್ಕಿಕೊಂಡಿದ್ದರು. \ No newline at end of file diff --git a/eesanje/url_46_171_3.txt b/eesanje/url_46_171_3.txt new file mode 100644 index 0000000000000000000000000000000000000000..bf5091b94b086368ef0b29db1c36c0fc36f6091d --- /dev/null +++ b/eesanje/url_46_171_3.txt @@ -0,0 +1,6 @@ +ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು +ಬೆಂಗಳೂರು, ಏ.23-ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸುದರ್ಶನ್ ಬಲ್ಲಾಳ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. +ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ಮುಂದುವರೆಯಲಿದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಬಲ್ಲಾಳ್ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಶ್ರೀ ನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀ ನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತವರು ಕ್ಷೇತ್ರ ವರುಣಾ ಇರುವ ಲೋಕಸಭಾ ಕ್ಷೇತ್ರವಾದ ಚಾಮರಾಜನಗರ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದು, ಶ್ರೀನಿವಾಸ್ ಪ್ರಸಾದ್ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದು ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಕಡೆ ವಾಲಿದ್ದಾರೆಯೇ ಎಂಬ ಅನುಮಾನಕ್ಕೆ ಕಾರಣವಾಗಿತ್ತು. +ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶದ ಸಂದರ್ಭದಲ್ಲಿ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿಮನವೊಲಿಸುವ ಪ್ರಯತ್ನ ಮಾಡಿದ್ದರು. ಮೋದಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆದರೆ, ಯಡಿಯೂರಪ್ಪ ಆಹ್ವಾನವನ್ನು ಶ್ರೀನಿವಾಸ್ ಪ್ರಸಾದ್ ನಯವಾಗಿ ತಿರಸ್ಕರಿಸಿದ್ದರು. +ಶ್ರೀನಿವಾಸದ ಪ್ರಸಾದ್ ಅವರು ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ರ್ಪಧಿಸಿ 11 ಬಾರಿ ಜಯಗಳಿಸಿದ್ದಾರೆ. \ No newline at end of file diff --git a/eesanje/url_46_171_4.txt b/eesanje/url_46_171_4.txt new file mode 100644 index 0000000000000000000000000000000000000000..085bff4ba545e99970c8e01d9eb3876a824e7e41 --- /dev/null +++ b/eesanje/url_46_171_4.txt @@ -0,0 +1,6 @@ +ರಾಜ್ಯ ಪೊಲೀಸರು ಅಸಹಾಯಕರಾಗಿದ್ದಾರೆ, ನೇಹಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು : ಬೊಮ್ಮಾಯಿ +ಹುಬ್ಬಳ್ಳಿ,ಏ.23-ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ಪೊಲೀಸರು ಅಸಹಾಯಕರಾಗುತ್ತಿದ್ದಾರೆ. ಹೀಗಾಗಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. +ಇಂದು ಹನುಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಶೋಕನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೇಹಾ ತಂದೆ ನಿರಂಜನ ಹಿರೇಮಠ ಅವರು ರಾಜ್ಯ ಸರ್ಕಾರದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ. +ಹೀಗಾಗಿ ಪ್ರಕರಣ ಸಿಬಿಐಗೆ ಹಸ್ತಾಂತರ ಮಾಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಸೆಂಟರ್ ಆಗಿವೆ. ರಾಜಕಾರಣಿಗಳು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಇದರಿಂದ ಪೊಲೀಸರು ಅಸಹಾಯಕರಾಗುತ್ತಿದ್ದಾರೆ ಎಂದರು. +ಬಿಜೆಪಿಯವರಿಗೆ ಹಿಂದುಗಳ ಕೊಲೆಯಾಗದೆ ಖುಷಿ ಎಂಬ ಸಚಿವ ಸಂತೋಷ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ನೇಹಾ ಹಿರಮೇಠ ಅವರನ್ನು ಒಂದು ಜಾತಿಗೆ ಸಿಮೀತ, ಮಾಡಬೇಡಿ. ಕಾಂಗ್ರೆಸ್ ಪಾಲಿಕೆ ಸದಸ್ಯರಿಗೆ ರಕ್ಷಣೆ ಕೊಡಲು ಆಗಿಲ್ಲ. ಹಾಡ ಹಗಲೇ ಬೆಳೆದು ಬಾಳಬೇಕಾದ ಯುವತಿಯ ಕೊಲೆ ಆಗಿದೆ. ಕಾಂಗ್ರೆಸ್ ನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು. +ಕೆಪಿ ನಂಜುಡಿ ರಾಜೀನಾಮೆ ಕುರಿತು ಕೇಳಿದ ಪ್ರಶ್ನೆಗೆ ಅದು ಪರಿಣಾಮ ಬೀರುವುದಿಲ್ಲ ಅವರು ಕಾಂಗ್ರೆಸ್ ನಲ್ಲಿದ್ರು ಬಿಜೆಪಿಗೆ ಬಂದಿದ್ದರು. ಹೀಗಾಗಿ ರಾಜೀನಾಮೆ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_46_171_5.txt b/eesanje/url_46_171_5.txt new file mode 100644 index 0000000000000000000000000000000000000000..fdc5546aaef45065191205f18eeaf86de36b04c4 --- /dev/null +++ b/eesanje/url_46_171_5.txt @@ -0,0 +1,10 @@ +ಕಾಂಗ್ರೆಸ್ ಸರ್ಕಾರಕ್ಕೆ ಆರ್.ಅಶೋಕ್ ಬಹಿರಂಗ ಸವಾಲು +ಬೆಂಗಳೂರು, ಏ.23-ರಾಜ್ಯದಲ್ಲಿ ಭೀಕರ ಬರಗಾಲ ಇದೆ ಎಂದು ಬೊಬ್ಬೆ ಹಾಕುತ್ತಿರುವ ಕಾಂಗ್ರೆಸ್ ನಾಯಕರು ಈವರೆಗೂ ಎಷ್ಟು ಪರಿಹಾರವನ್ನು ಬಿಡುಗಡೆ ಮಾಡಿದ್ದಾರೆ ಎಂಬುದನ್ನು ಬಹಿರಂಗಪಡಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 223 ತಾಲ್ಲೂಕುಗಲ್ಲಿ ಬರಗಾಲವಿದೆ ಎಂದು ಮುಖ್ಯಮಂತ್ರಿ ಸೇರಿದಂತೆ ಇಡೀ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಎಸ್‍ಡಿಆರ್‍ಎಫ್ ಅಡಿ ನೀವು ಎಷ್ಟು ಹಣವನ್ನು ಬಿಡುಗಡೆ ಮಾಡಿದ್ದೀರಿ? ಜನತೆಯ ಮುಂದಿಡಿ ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ಎಸ್‍ಡಿಆರ್‍ಎಫ್‍ನಡಿ ಜನಕ್ಕೆ ಕೊಟ್ಟು ಇದನ್ನು ರಾಜ್ಯ ಸರ್ಕಾರವೇ ಕೊಟ್ಟಿದ್ದು ಎಂದು ಜನಗಳಿಗೆ ಸುಳ್ಳು ಹೇಳುತ್ತಿದ್ದಾರೆ. +ಸರ್ಕಾರದ ಬೊಕ್ಕಸದಿಂದ ಇದುವರೆಗೂ ನೀವು ಒಂದೇ ಒಂದೂ ನಯಾಪೈಸೆ ಯನ್ನೂ ಬಿಡುಗಡೆ ಮಾಡಿಲ್ಲ. ಯಾವ ಮುಖ ಇಟ್ಟುಕೊಂಡು ಕೇಂದ್ರದ ಬಗ್ಗೆ ಮಾತನಾಡುತ್ತೀರಿ ಎಂದು ಅಶೋಕ್ ಪ್ರಶ್ನಿಸಿದರು. +ಎಸ್‍ಡಿಆರ್‍ಎಫ್‍ನಡಿ ಕೇಂದ್ರ ಸರ್ಕಾರ 2 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ಸರ್ಕಾರದ ಶೇ.25ರಷ್ಟು ಮಾತ್ರ. ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಾದರೂ ಏನು. ಪ್ರತಿದಿನ ಕೇಂದ್ರ ಸರ್ಕಾರ ಮತ್ತು ನರೇಂದ್ರಮೋದಿಯವರನ್ನು ಟೀಕಿಸಿ ಜಾಹೀರಾತು ನೀಡುವುದೇ ಇವರ ಉದ್ಯೋಗವಾಗಿದೆ ಎಂದು ಆರೋಪಿಸಿದರು. +ಕಡೆಪಕ್ಷ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಇಲ್ಲವೇ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಕರ್ನಾಟಕದ ವಿಷಯದ ಬಗ್ಗೆ ಎಂದಾದರೂ ಮಾತನಾಡಿದ್ದಾರಾ? ಇಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಬಾಯಿ ಬಾಯಿ ಬಡಿದುಕೊಳುತ್ತಿದ್ದಾರೆ. ಯಾವ ಯೋಗ್ಯತೆ ಇಟ್ಟುಕೊಂಡು ನೀವು ಕರ್ನಾಟಕದಲ್ಲಿ ಮತ ಕೇಳುತ್ತೀರಿ ಎಂದು ಅಶೋಕ್ ಪ್ರಶ್ನಿಸಿದರು. +ಸರ್ಕಾರದ ಆದೇಶ ಪಾಲನೆ ಮಾಡಬೇಕಾದ ಅಕಾರಿಗಳು ಸರ್ಕಾರದ ಕೈಗೊಂಬೆ ಆಗಿದ್ದಾರೆ. ಡಿ.ಕೆ ಶಿವಕುಮಾರ್‍ಗೆ ಹೇಳೋರಿಲ್ಲ ಕೇಳೋರಿಲ್ಲ. ವಿಧಾನಸೌಧದ ಪಾರ್ಟಿ ಸೇರ್ಪಡೆ ಕಾರ್ಯಕ್ರಮ ಮಾಡಿದರು. ಇದು ಅಪರಾಧ, ಕ್ರಮಕೈಗೊಳ್ತೀನಿ ಎಂದರು ಇದುವರೆಗೂ ಕ್ರಮಕೈಗೊಂಡಿಲ್ಲ. ಚುನಾವಣೆ ವೇಳೆ ವಿಧಾನಸೌಧದ ದುರ್ಬಳಕೆಯಾಗಿದೆ. ಮುಖ್ಯ ಕಾರ್ಯದರ್ಶಿಯವರು ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದು ಏಕೆ ಎಂದು ಆಕ್ಷೇಪಿಸಿದರು. +ಇವರಮೇಲೆ ಕ್ರಮಕೈಗೊಳ್ಳುವಂತೆ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ. ಇಂದು ಮುಖ್ಯ ಕಾರ್ಯದರ್ಶಿಗಳು ಶಿಷ್ಟಾಚಾರ ಪಾಲನೆ ಮಾಡಿಲ್ಲ. ಡಿಕೆಶಿ ಯಾರನ್ನೂ ಹೇಳಲ್ಲ ಕೇಳಲ್ಲ, ಅವರದ್ದೇ ಒಂದು ಗೂಂಡಾ ರಾಜ್ಯ ಮಾಡಿಕೊಂಡಿದ್ದಾರೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು. +ಬರದ ಪರಿಹಾರ ಅನುದಾನ ನೀಡುವುದಕ್ಕೆ ಚುನಾವಣೆ ನೀತಿಸಂಹಿತೆ ಇದೆ. ನ್ಯಾಯಾಲಯ ಕೂಡ ಹೇಳಿದೆ. ನಿರ್ಮಲಾ ಸೀತಾರಾಮನ್ ಕೂಡ ಹೇಳಿದ್ದಾರೆ. ಚುನಾವಣಾ ಆಯೋಗ ಸೂಚಿಸಿದ ಕೂಡಲೇ ಬಿಡುಗಡೆ ಮಾಡುತ್ತೇವೆ ಎಂದು ಅಟಾರ್ನಿ ಜನರಲ್ ಕೂಡ ಹೇಳಿದ್ದಾರೆ. ಕೋರ್ಟ್ ಗಮನಕ್ಕೆ ತಂದಿದ್ದಾರೆ. ನಮ್ಮ ಸಾಲಿಸಿಟರಲ್ ಜನರಲ್ ನ್ಯಾಯಾಲಯದ ಗಮನಕ್ಕೆ ತಂದಿದ್ದು, ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಮುಂದಿನ ಸೋಮವಾರಕ್ಕೆ ಕೇಸ್ ಮುಂದೂಡಿದ್ದಾರೆ. ಅದಕ್ಕೆ ಅವರ ವಕೀಲ ಕಪಿಲ್ ಸಿಬಲ್ ಒಪ್ಪಿದ್ದಾರೆ. ಇದನ್ನ ಕಾಂಗ್ರೆಸ್ ಜಯ ಆಗಿದೆ ಎಂದು ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. +ಹಣ ಬಿಡುಗಡೆ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಅಪೀಲು ಮಾಡಿರುವುದು ನಾವು. ಏನು ಜಯ ಆಯ್ತು ನಿಮಗೆ? ನೀವಿಟ್ಟಿರುವ ಲಾಯರ್ ಏನು ವಾದ ಮಾಡಿದ್ದಾರೆ? ಕೇಂದ್ರದ ಮನವಿಗೆ ಸರ್ವ ಸಮ್ಮತಿ ಇದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_171_6.txt b/eesanje/url_46_171_6.txt new file mode 100644 index 0000000000000000000000000000000000000000..3d9610484629b9fc8c43c799292c54ef9de03043 --- /dev/null +++ b/eesanje/url_46_171_6.txt @@ -0,0 +1,9 @@ +ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೊಲೀಸರ ತಯಾರಿ ಹೇಗಿದೆ..? +ಬೆಂಗಳೂರು, ಏ.23-ರಾಜ್ಯದ ಮೊದಲ ಹಂತದಲ್ಲಿ ಏ.26ರಂದು ಮತದಾನ ನಡೆಯಲಿದ್ದು, ನಗರದ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಗೆ ಒಳಪಡುವ ಐದು ಲೋಕಸಭಾ ಕ್ಷೇತ್ರಗಳ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸುಗಮವಾಗಿ ಮತ ಚಲಾವಣೆ ಮಾಡಲು ಅನುಕೂಲವಾಗುವಂತೆ ಭಾರತದ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. +ನಗರ ಪೊಲೀಸ್ ಘಟಕದಿಂದ ಚುನಾವಣಾ ಕರ್ತವ್ಯಗಳಿಗೆ ಮೂವರು ಹೆಚ್ಚುವರಿ ಪೊಲೀಸ್ ಆಯುಕ್ತರು, 24 ಡಿಸಿಪಿಗಳು, 52 ಎಸಿಪಿಗಳು, 118 ಇನ್‍ಸ್ಪೆಕ್ಟರ್‍ಗಳು, 687 ಪಿಎಸ್‍ಐ/ಎಎಸ್‍ಐ, 8511 ಎಚ್‍ಸಿ/ಪಿಸಿ ಸೇರಿದಂತೆ9,397 ಅಧಿಕಾರಿ ಸಿಬ್ಬಂದಿಗಳು, 3,919 ಗೃಹ ರಕ್ಷಕ ಸಿಬ್ಬಂದಿ, 54 ಸಶಸ್ತ್ರ ತುಕಡಿಗಳು ಹಾಗೂ 11 ಕೇಂದ್ರೀಯ ಪೊಲೀಸ್ ಕಂಪನಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು. +ನಗರ ಪೊಲೀಸರ ಜೊತೆಗೆ ಸಿಎಆರ್‍ಪಿಎಫ್‍ನ 11 ಕಂಪನಿ, ಕೆಎಸ್‍ಆರ್‍ಪಿಯ 14, ಸಿಎಆರ್‍ನ 40 ಪ್ಲಟೂನ್ಸ್‍ಗಳನ್ನು ನೀಯೋಜಿಸಲಾಗಿದೆ. ಐದು ಕ್ಷೇತ್ರಗಳ ವ್ಯಾಪ್ತಿಯಲ್ಲಿ 2564 ಮತಗಟ್ಟೆ ಕೇಂದ್ರಗಳಿದ್ದು, 8088 ಮತಗಟ್ಟೆಗಳಿದ್ದು, ಇದರಲ್ಲಿ 1737 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. +ನಗರದ 8 ವಿಭಾಗಗಳ ವ್ಯಾಪ್ತಿಯಲ್ಲಿ ಕೇಂದ್ರೀಯ ಭದ್ರತಾ ಪಡೆಗಳೊಂದಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಪ್ಲಾಗ್ ಮಾರ್ಚ್‍ಗಳನ್ನು ಕೈಗೊಳ್ಳಲಾಗಿದೆ. 103 ಚೆಕ್‍ ಪೋಸ್ಟ್ ಅಳವಡಿಸಿದ್ದು, 91 ಫ್ಲೈಯಿಂಗ್ ಸ್ಕ್ವಾಡ್‍ಗಳು ಕಾರ್ಯಾಚರಣೆಯಲ್ಲಿರುತ್ತವೆ. ರೌಡಿ ಪಟ್ಟಿಯಲ್ಲಿರುವ ಆಸಾಮಿಗಳು/ಕ್ರಿಮಿನಲ್ ಹಿನ್ನಲೆಯುಳ್ಳ 5117 ಜನರಿಂದ ಭದ್ರತಾ ಕಾಯ್ದೆಯಡಿ ಶಾಂತಿಭಂಗ ಉಂಟು ಮಾಡದಂತೆ ಮುಚ್ಚಳಿಕೆ ಪಡೆಯಲಾಗಿದೆ ಎಂದು ಅವರು ಹೇಳಿದರು. +ನಗರದ 146 ಕಡೆಗಳಲ್ಲಿ ಸಶಸ್ತ್ರ ತುಕಡಿಗಳೊಂದಿಗೆ ಪೊಲೀಸ್ ಪಥಸಂಚಲನ ನಡೆಸಲಾಗಿದೆ. 5533 ಪರಾವನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಜಮೆ ಮಾಡಲಾಗಿದ್ದು , ವಿಶೇಷ ಕಾರ್ಯಾಚರಣೆ ಕೈಗೊಂಡು 1444 ವಾರೆಂಟ್‍ಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. +ನಾಳೆ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚಿತವಾಗಿ ಅಂದರೆ ನಾಳೆ ಸಂಜೆ 6 ಗಂಟೆಯ ನಂತರ ಮತದಾರರು ಅಲ್ಲದವರು ಕ್ಷೇತ್ರ ಬಿಟ್ಟು ಅವರ ಮಾತೃಪಕ್ಷಕ್ಕೆ ತೆರಳಬೇಕು. ಯಾವುದೇ ರೀತಿಯ ಗುಂಪುಗಾರಿಕೆ ಮಾಡುವುದನ್ನು ನಿಷೇಧಿಸಲಾಗಿದೆ. +ಸಾರ್ವಜನಿಕರು ಪೊಲೀಸ್ ಸಹಾಯಕ್ಕಾಗಿ ಚುನಾವಣಾ ಅಕ್ರಮಗಳ ಮಾಹಿತಿ ನೀಡಲು ಪೊಲೀಸ್ ದೂರವಾಣಿ 112ಕ್ಕೆ ಸಂಪರ್ಕಿಸಲು ಆಯುಕ್ತರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು. \ No newline at end of file diff --git a/eesanje/url_46_171_7.txt b/eesanje/url_46_171_7.txt new file mode 100644 index 0000000000000000000000000000000000000000..87f298d1fa17133171015d618425ee14f63a08f5 --- /dev/null +++ b/eesanje/url_46_171_7.txt @@ -0,0 +1,8 @@ +ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ +ಬೆಂಗಳೂರು, ಏ.23-ಲೋಕಸಭಾ ಚುನಾವಣೆಯ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಮೂರೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಏ.28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ7ರಂದು ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಮಧ್ಯ ಕರ್ನಾಟಕ, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. +ಬಹುತೇಕ ಲಿಂಗಾಯಿತರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ 14 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಹೀಗಾಗಿ ರಾಜ್ಯಕ್ಕೆ ಮೋದಿ ಅವರಿಂದ ಹೆಚ್ಚು ಸಾರ್ವಜನಿಕ ಸಭೆಗಳನ್ನು ನಡೆಸಲು ಉದ್ದೇಶಿಸಿದೆ. +2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಭಾಗದ ಎಲ್ಲ ಸ್ಥಾನಗಳನ್ನು ಗೆದ್ದು ಬೀಗಿತ್ತು. ಈ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಮೋದಿ ಅವರಿಂದಲೇ ಬೃಹತ್ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದೆ. +ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ, 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ. +ಮೋದಿ ಕಾರ್ಯಕ್ರಮದ ವೇಳಾಪಟ್ಟಿ:ಏ.28ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಯಾವುದಾದರು ಒಂದು ಹೊಟೇಲ್ನಲ್ಲಿ ತಂಗಲಿದ್ದಾರೆ. ಎಸ್ಪಿಜಿ ಪರಿಶೀಲನೆ ಬಳಿಕ ಹೊಟೇಲ್ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. +ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ. +ಬೃಹತ್ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ. \ No newline at end of file diff --git a/eesanje/url_46_171_8.txt b/eesanje/url_46_171_8.txt new file mode 100644 index 0000000000000000000000000000000000000000..2755a2db60c680d354c32829709380cf2a126868 --- /dev/null +++ b/eesanje/url_46_171_8.txt @@ -0,0 +1,4 @@ +ರಾಜ್ಯದ ಮೊದಲ ಹಂತದ ಚುನಾವಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿಗಳಿಂದ ಶೇ.89.95 ರಷ್ಟು ಮತದಾನ +ಬೆಂಗಳೂರು,ಏ.23-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನಡೆದ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗಳ ಮತದಾನದಲ್ಲಿ ಶೇ.89.95 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. +ಏ.26 ರಂದು ಮತದಾನ ನಡೆಯುವ ಕ್ಷೇತ್ರಗಳಿಗೆ ಸಂಬಂಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗಳಿಗೆ ಏ.19 ರಿಂದ ಏ.21 ರವರೆಗೆ ಮತದಾನ ಮಾಡಲು ಅಂಚೆ ಮತದಾನ ಕೇಂದ್ರಗಳನ್ನು ಆಯಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿತ್ತು. +ಈ ಅವಧಿಯಲ್ಲಿ 5,90,355 ಮತದಾರರಲ್ಲಿ 53,104 ಮತದಾರರು ಅಂಚೆ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_171_9.txt b/eesanje/url_46_171_9.txt new file mode 100644 index 0000000000000000000000000000000000000000..b91d205157a315b40a4979792f19942680afb68e --- /dev/null +++ b/eesanje/url_46_171_9.txt @@ -0,0 +1,11 @@ +ಬರ ನಿರ್ವಹಣೆಗೆ ಹಣ ನೀಡದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು,ಏ.23-ಬರ ನಿರ್ವಹಣೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಆರ್ಥಿಕ ನೆರವು ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ವಿಧಾನ ಸೌಧದ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ, ಭೈರತಿ ಸುರೇಶ್, ಶಾಸಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು. +ಈ ವೇಳೆ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬರ ನಿರ್ವಹಣೆಗೆ ಹಣ ನೀಡದೇ ಕರ್ನಾಟಕದ ಮಣ್ಣಿನ ಮೇಲೆ ಕಾಲಿಡುವ ನೈತಿಕತೆ ಹೊಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಜ್ಯದ ಜನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಕ್ಕಾಗಿ ಪ್ರಧಾನಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ರಾಜ್ಯಕ್ಕೆ ಆರ್ಥಿಕ ನೆರವು ನೀಡದೇ ವಂಚನೆ ಮಾಡುತ್ತಿದ್ದಾರೆ. ಭಾರತೀಯ ಚೊಂಬು ಪಾರ್ಟಿ ಯಾವ ಮುಖ ಇಟ್ಟುಕೊಂಡು ಕನ್ನಡಿಗರ ಬಳಿ ಮತ ಕೇಳುತ್ತಿದೆ ಎಂದು ಪ್ರಶ್ನಿಸಿದರು. +ಇದೇ ವೇಳೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಕೇಂದ್ರ ಸರ್ಕಾರ ಬರನಿರ್ವಹಣೆಗೆ ಹಣ ಬಿಡುಗಡೆ ಮಾಡಿಲ್ಲ. ಹೀಗಾಗಿ ನಾವು ಸುಪ್ರೀಂಕೋರ್ಟ್‍ನ ಮೊರೆ ಹೋಗಬೇಕಾಯಿತು. ನಿನ್ನೆಯ ವಿಚಾರಣೆ ವೇಳೆ ಹಣ ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಆದರೆ ಇನ್ನೂ ಒಂದು ರೂಪಾಯಿ ಕೂಡಾ ನೀಡಿಲ್ಲ. ಆದರೆ ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ನಾಚಿಕೆ, ಮಾನ ಮರ್ಯಾದೆ ಇಲ್ಲದೆ ರಾಜ್ಯದ ಬರ ನಿರ್ವಹಣೆಗೆ ಹಣ ನೀಡಿದ ಪ್ರಧಾನಿಯವರಿಗೆ ಧನ್ಯವಾದ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. +ಸುಪ್ರೀಂಕೋರ್ಟ್‍ನ ನಿರ್ದೇಶನದ ಮೇರೆಗೆ ಬಿಡುಗಡೆಯಾಗುವ ಹಣವನ್ನು ರಾಜ್ಯಸರ್ಕಾರ ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದಿಲ್ಲ. ನೇರವಾಗಿ ರೈತರ ಖಾತೆಗಳಿಗೆ ಬೆಳೆನಷ್ಟ ಪರಿಹಾರವಾಗಿ ಸಂದಾಯ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. +ಸಂಕಷ್ಟ ಸಮಯದಲ್ಲಿ ಹಣ ನೀಡದೇ ಬರ ಮುಗಿದ ಮೇಲೆ ಪರಿಹಾರ ನೀಡಿದರೆ ಪ್ರಯೋಜನವಿಲ್ಲ. ಇದು ರೈತ ಸಮುದಾಯವನ್ನು ಅಪಮಾನ ಮಾಡಿ ಅಪಹಾಸ್ಯ ಮಾಡಿದಂತಾಗುತ್ತದೆ. ಬರ ನಿರ್ವಹಣೆಗೆ ಹಕ್ಕಿನ ಪಾಲು ಕೇಳಿದ್ದಕ್ಕಾಗಿ ರಾಜ್ಯಸರ್ಕಾರದ ಮೇಲೆ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸುಳ್ಳು ಮಾಹಿತಿಗಳ ಮೂಲಕ ಜನರನ್ನು ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿದರು. +ನಾವು ಏನು ಮೋಸ ಮಾಡಿದ್ದೇವೆ, ಅವರು ನಮ್ಮ ಮೇಲೆ ಏಕೆ ಇಷ್ಟು ದ್ವೇಷ ಸಾಧಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಕೃಷ್ಣಭೈರೇಗೌಡ, ಆರ್ಥಿಕ ನೆರವಿಗಾಗಿ ನ್ಯಾಯಯುತ ಹೋರಾಟ ನಡೆಸುತ್ತೇವೆ. ಈ ವಿಷಯದಲ್ಲಿ ನಮಗೆ ರಾಜಕೀಯ ಅಥವಾ ಪ್ರತಿಷ್ಠೆ ಮುಖ್ಯವಲ್ಲ ಎಂದು ಹೇಳಿದರು. +ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ದಿನಬಳಕೆಯ ವಸ್ತುಗಳ ಬೆಲೆ 2-3 ಪಟ್ಟು ಹೆಚ್ಚಾಗಿದೆ. ಬಡ ಹಾಗೂ ಮಧ್ಯಮ ವರ್ಗದದವರ ದುಡಿಮೆ ಶ್ರೀಮಂತರ ಪಾಲಾಗುತ್ತಿದೆ. ನಿರುದ್ಯೋಗದ ಪ್ರಮಾಣ 1947ರ ನಂತರದ ಅತ್ಯಧಿಕ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ. +ಈ ಎಲ್ಲಾ ವಿಚಾರಗಳನ್ನು ಮರೆಮಾಚಲು ಬಿಜೆಪಿಯವರು ಜನರ ಮನಸ್ಸಿನಲ್ಲಿ ಕೋಮು ಭಾವನೆಗಳನ್ನು ಬಿತ್ತುತ್ತಿದ್ದಾರೆ. ಬೆಲೆ ಏರಿಕೆ ಕೇವಲ ಮುಸ್ಲಿಮರಿಗಷ್ಟೇ ಅಲ್ಲ, ಶೇ.85 ರಷ್ಟು ಜನಸಂಖ್ಯೆಯನ್ನು ಹೊಂದಿರುವ ಹಿಂದೂಗಳನ್ನೂ ಕಾಡುತ್ತಿದೆ ಎಂದು ವಿವರಿಸಿದರು. ಈ ವೇಳೆ ಬಿತ್ತಿಪತ್ರಗಳನ್ನು ಹಿಡಿದ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮತ್ತು ಕೇಂದ್ರ ಗೃಹಸಚಿವ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. +ರಣದೀಪ್ ಸಿಂಗ್ ಸುರ್ಜೇವಾಲ ಕನ್ನಡದಲ್ಲೇ ನ್ಯಾಯ ಕೊಡಿ ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದರು. ಪ್ರಧಾನಿ ನರೇಂದ್ರ ಮೋದಿಯವರಿಗೆ ಚೊಂಬು ತೋರಿಸಿದ ದೇವೇಗೌಡರಿಗೆ ಜಯವಾಗಲಿ ಎಂದು ಸಚಿವ ಕೃಷ್ಣ ಭೈರೇಗೌಡ ಘೋಷಣೆ ಕೂಗಿದರು. \ No newline at end of file diff --git a/eesanje/url_46_172_1.txt b/eesanje/url_46_172_1.txt new file mode 100644 index 0000000000000000000000000000000000000000..93a9db9f68a38835bc4487972f7c218013a15cea --- /dev/null +++ b/eesanje/url_46_172_1.txt @@ -0,0 +1,8 @@ +ಏ.26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ +ಬೆಂಗಳೂರು,ಏ.23-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ನಾಳೆ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. +ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚುನಾವಣಾ ಆಯೋಗ ಸಂಬಂಧಪಟ್ಟ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು, ವಸತಿ ಗೃಹಗಳು, ಸಮುದಾಯ ಭವನಗಳು ಸೇರಿದಂತೆ ತಪಾಸಣೆ ನಡೆಸಲು ಸೂಚಿಸಿದೆ. +ಚೆಕ್ ಪೋಸ್ಟ್ ಗಳಲ್ಲಿ ಕೂಡ ತಪಾಸಣೆ ನಡೆಸಿ ಮತದಾರರಲ್ಲದವರನ್ನು ಪತ್ತೆಹಚ್ಚಿ ಹೊರಗೆ ಕಳುಹಿಸಲು ನಿರ್ದೇಶನ ನೀಡಿದೆ.ಈ 14 ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 12 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. 226 ಪುರುಷ ಹಾಗೂ 21 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. +ಹೀಗಾಗಿ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಬೇಸಿಗೆ ಬಿರುಬಿಸಿಲನ್ನು ಲೆಕ್ಕಿಸದೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಡುವೆ ವಾಗ್ವಾದ, ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಪ್ರಚಾರದ ಅಬ್ಬರ ಮುಗಿಲು ಮುಟ್ಟಿದೆ. +ಬಹಿರಂಗ ಪ್ರಚಾರಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದಿರುವುದರಿಂದ ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಪ್ರಚಾರದ ಕಾವು ರಂಗೇರುವಂತಾಗಿದೆ. ಇದಲ್ಲದೆ, ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಹಿತೈಷಿಗಳು ಮನೆಮನೆಗೆ ತೆರಳಿ ಮತದಾರರನ್ನು ಓಲೈಸುವ ಪ್ರಯತ್ನ ನಡೆಸುತ್ತಿದ್ದಾರೆ. +ಬಹಿರಂಗ ಪ್ರಚಾರದ ಜೊತೆಗೆ ನಾನಾ ರೀತಿಯ ತಂತ್ರ, ಕಾರ್ಯತಂತ್ರಗಳ ಮೂಲಕ ಮತದಾರರನ್ನು ಆಕರ್ಷಿಸಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಜೊತೆಗೆ ಪಕ್ಷೇತರರು ಕೂಡ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ 14 ಕ್ಷೇತ್ರಗಳಲ್ಲೂ ಪ್ರಚಾರದ ಕಾವು ಏರತೊಡಗಿದೆ. +ಎಲ್ಲಿ ನೋಡಿದರೂ ಚುನಾವಣೆಯ ವಿಚಾರದಲ್ಲಿ ಚರ್ಚೆಯಾಗುತ್ತಿದೆ. ಜನರಲ್ಲೂ ಕೂಡ ಚುನಾವಣಾ ಜ್ವರ ಶುರುವಾಗಿದೆ. ಆಯಾ ಕ್ಷೇತ್ರದ ಜ್ವಲಂತ ವಿಚಾರಗಳಿಗಿಂತ ಮುಖ್ಯವಾಗಿ ರಾಷ್ಟ್ರೀಯ ವಿಚಾರಗಳು ಪ್ರಮುಖ ಚರ್ಚೆಗೆ ಬಂದಿವೆ.ಅಭ್ಯರ್ಥಿ ಹಾಗೂ ಪಕ್ಷಗಳ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿದ್ದು, ಮತದಾರರನ್ನು ಆಕರ್ಷಿಸಲು ಎಲ್ಲಾ ರೀತಿಯ ಪ್ರಯತ್ನಗಳು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಿರಂತರವಾಗಿ ಮಾಡುತ್ತಿದ್ದಾರೆ. \ No newline at end of file diff --git a/eesanje/url_46_172_10.txt b/eesanje/url_46_172_10.txt new file mode 100644 index 0000000000000000000000000000000000000000..374ea18e102b9484c008f003d588f55238f1a746 --- /dev/null +++ b/eesanje/url_46_172_10.txt @@ -0,0 +1,11 @@ +ಪ್ರಧಾನಿ ಹೇಳಿಕೆ ಘನತೆಗೆ ತಕ್ಕುದಲ್ಲ : ಸಿಎಂ ಸಿದ್ದರಾಮಯ್ಯ +ಶಿವಮೊಗ್ಗ,ಏ.22-ಪ್ರಧಾನಮಂತ್ರಿಯಾಗಿದ್ದವರು ದೇಶದ ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣಬೇಕು. ಆದರೆ ನರೇಂದ್ರ ಮೋದಿಯವರು ಅತ್ಯಂತ ಕೆಳಮಟ್ಟಕ್ಕೆ ಇಳಿದು ಟೀಕೆ ಮಾಡಿರುವುದು ಹುದ್ದೆಯ ಘನತೆಗೆ ಧಕ್ಕೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಮಹಿಳೆಯರ ಮಂಗಳಸೂತ್ರವನ್ನು ಕಿತ್ತು ಮುಸ್ಲಿಂ ಮಹಿಳೆಯರಿಗೆ ಕೊಡಲಾಗುತ್ತಿದೆ ಎಂದು ಪ್ರಧಾನಿ ಹೇಳಿರುವುದು ಅನಾರೋಗ್ಯಕರವಾದ ಟೀಕೆ. ಪ್ರಧಾನಿ ಹುದ್ದೆಯಲ್ಲಿದ್ದವರಿಂದ ಇಂತಹ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ. ಪ್ರಧಾನಿಯಾದ ಅವರು ಎಲ್ಲರನ್ನೂ ಸಮಾನವಾಗಿ ಕಾಣಬೇಕಾಗಿದೆ ಎಂದರು. +ಕಾಂಗ್ರೆಸ್ ಪಕ್ಷ ಸಂಪತ್ತಿನ ಸಮಾನ ಹಂಚಿಕೆಗೆ ಆದ್ಯತೆ ನೀಡುತ್ತದೆ. ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಂಪತ್ತಿನ ಅವಕಾಶಗಳು ಎಲ್ಲರಿಗೂ ಸಮಾನವಾಗಿ ದೊರೆಯಬೇಕು ಎಂಬುದು ಅಂಬೇಡ್ಕರ್ ಅವರ ಆಶಯ. ಕಾಂಗ್ರೆಸ್ ಪಕ್ಷ ಅದಕ್ಕೆ ಪೂರಕವಾಗಿ ನಡೆದುಕೊಳ್ಳುತ್ತಿದೆ. +ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಚೊಂಬು ನೀಡಿದೆ. 15 ಲಕ್ಷ ರೂ. ಹಣ, 2 ಕೋಟಿ ರೂ. ಉದ್ಯೋಗ, ರೈತರ ಆದಾಯ ದ್ವಿಗುಣ ಸೇರಿದಂತೆ ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ರಾಜ್ಯಕ್ಕೆ ತೆರಿಗೆ ಪಾಲಿನಲ್ಲೂ ವಂಚನೆ ಮಾಡಲಾಗಿದೆ. ಈ ಮೂಲಕ ಬಿಜೆಪಿ ಚಿಪ್ಪು ಮತ್ತು ಚೊಂಬು ಈ ಎರಡನ್ನೂ ನೀಡಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. +ಕಾಂಗ್ರೆಸ್ ಡೇಂಜರ್ ಎಂದು ಬಿಜೆಪಿ ನೀಡಿರುವ ಜಾಹೀರಾತಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಮಹಿಳೆಯರಿಗೆ 2 ಸಾವಿರ ರೂ. ನೀಡುತ್ತಿದ್ದೇವೆ. ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದ್ದೇವೆ, ಉಚಿತ ವಿದ್ಯುತ್ ಪೂರೈಕೆಯಾಗುತ್ತಿದೆ, ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿ ಕೊಡುತ್ತಿದ್ದೇವೆ. ಇದರಲ್ಲಿ ಯಾವುದು ಡೇಂಜರ್ ಎಂದು ಸಿದ್ದರಾಮಯ್ಯ ಮರುಪ್ರಶ್ನಿಸಿದರು.ವಿವಿಧತೆಯಲ್ಲಿ ಏಕತೆ ದೇಶಕ್ಕೆ ಒಳ್ಳೆಯದು. ಆದರೆ ಬಿಜೆಪಿ ಏಕತೆಗೆ ಡೇಂಜರ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಆದಾಯ ತೆರಿಗೆ, ಇಡಿ ಸೇರಿದಂತೆ ಯಾವುದೇ ದಾಳಿಗಳಿಗೆ ನಮ್ಮ ವಿರೋಧವಿಲ್ಲ. ಆದರೆ ಅದು ಕಾನೂನುಪ್ರಕಾರ ನಡೆಯಬೇಕು. ರಾಜಕೀಯ ದ್ವೇಷಕ್ಕೆ ಬಳಕೆಯಾಗಬಾರದು. ಬಿಜೆಪಿಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ಅಕ್ರಮ ಸಂಪತ್ತು ಗಳಿಸಿಲ್ಲವೇ?, ಭ್ರಷ್ಟಾಚಾರ ಮಾಡಿಲ್ಲವೇ? ಅವರ ಮೇಲೆ ಏಕೆ ದಾಳಿಯಾಗಿಲ್ಲ? ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ, ಆರ್.ಅಶೋಕ್ ಮೇಲೆ ಎಂದಾದರೂ ದಾಳಿಗಳು ನಡೆದಿದೆಯೇ? ಎಂದು ಪ್ರಶ್ನಿಸಿದರು. +ಈಶ್ವರಪ್ಪ ಅವರಿಗೆ ಮೆದುಳು ಮತ್ತು ನಾಲಿಗೆ ಮೇಲೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಅವರ ಟೀಕೆಗೆ ಪ್ರತಿಕ್ರಿಯಿಸುವುದಿಲ್ಲ. ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಲೋಕಸಭಾ ಚುನಾವಣೆಯಲ್ಲೂ ಅದೇ ರೀತಿ ಮಾತನಾಡುತ್ತಿದ್ದಾರೆ. ಆದರೆ ಜನ ಅದಕ್ಕೆ ಮನ್ನಣೆ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನ ಗೆಲ್ಲಿಸಿಕೊಡುತ್ತಾರೆ ಎಂದು ಹೇಳಿದರು. +ಧಾರವಾಡದಲ್ಲಿರುವ ಫಕೀರೇಶ್ವರ ಮಠ ಜಾತ್ಯತೀತ ನಿಲುವುಗಳಿಗೆ ಬದ್ಧವಾಗಿ ನಡೆದುಕೊಂಡು ಬಂದಿದೆ. ಅಲ್ಲಿನ ಮಠಾೀಧಿಶರ ದಿಂಗಾಲೇಶ್ವರ ಸ್ವಾಮಿಯವರೂ ಕೂಡ ಜಾತ್ಯತೀತರು. ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಅದನ್ನು ಹಿಂಪಡೆದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ನಾವು ಮನವಿ ಮಾಡಿಕೊಂಡಿದ್ದೇವೆ ಎಂದರು. +ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ, ರಾಜ್ಯಸರ್ಕಾರಗಳು ಪ್ರಸ್ತಾವನೆ ಸಲ್ಲಿಸಿದ ಒಂದು ತಿಂಗಳ ಒಳಗಾಗಿ ನೆರೆ ಮತ್ತು ಬರ ಪರಿಸ್ಥಿತಿಗೆ ಪರಿಹಾರ ಪಾವತಿಸಬೇಕು. ಆದರೆ ಕೇಂದ್ರ ಸರ್ಕಾರ 6 ತಿಂಗಳಾದರೂ ಕರ್ನಾಟಕಕ್ಕೆ ಬಿಡಿಗಾಸು ಕೊಟ್ಟಿಲ್ಲ. ನಾವು ಸತತ ಪ್ರಯತ್ನ ನಡೆಸಿದ್ದೇವೆ. ಆದರೂ ಮಲತಾಯಿ ಧೋರಣೆ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ. +ರಾಜ್ಯದ ಖಜಾನೆ ಖಾಲಿಯಾಗಿದೆ ಎಂಬ ಬಿಜೆಪಿಯವರ ಟೀಕೆ ಅಪ್ರಸ್ತುತ. ಯಾವ ಆಧಾರದ ಮೇಲೆ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ? ನಮ್ಮ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಜೊತೆಗೆ ಪಂಚಖಾತ್ರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡಿವೆ ಎಂದು ಮುಖ್ಯಮಂತ್ರಿಗಳು ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_172_11.txt b/eesanje/url_46_172_11.txt new file mode 100644 index 0000000000000000000000000000000000000000..5818aba650c9e06dc83af9092831d838be211cc1 --- /dev/null +++ b/eesanje/url_46_172_11.txt @@ -0,0 +1,6 @@ +ಬರ ನಿರ್ವಹಣೆ ಕಾನೂನು ಸಮರಕ್ಕೆ ಜಯ : ಸಚಿವ ಕೃಷ್ಣಭೈರೇಗೌಡ +ನವದೆಹಲಿ, ಏ.22-ಕರ್ನಾಟಕ ರಾಜ್ಯಕ್ಕೆ ಬರ ನಿರ್ವಹಣೆ ಅನುದಾನ ಪಾವತಿ ವಿಚಾರವಾಗಿ ಒಂದು ವಾರದೊಳಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದಕ್ಕೆ ಸಂಬಂಧಪಟ್ಟಂತಹ ಪೂರ್ವಾನುಮತಿಗಳನ್ನು ಚುನಾವಣಾ ಆಯೋಗಗಳಿಂದ ಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದು, ರಾಜ್ಯಸರ್ಕಾರದ ಕಾನೂನು ಸಮರಕ್ಕೆ ಜಯ ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. +ರಾಜ್ಯದಲ್ಲಿ 223ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡುವಂತೆ ಕಳೆದ ಸೆಪ್ಟೆಂಬರ್ನಲ್ಲಿ ರಾಜ್ಯಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ 17,400 ಕೋಟಿ ರೂ.ಗಳ ಆರ್ಥಿಕ ನೆರವಿಗೆ ಮನವಿ ಮಾಡಿತ್ತು. ಕಂದಾಯ ಸಚಿವ ಕೃಷ್ಣಭೈರೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಲವು ಬಾರಿ ದೆಹಲಿಗೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರುಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. +ಡಿಸೆಂಬರ್ನಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದರು. ಆದರೂ ರಾಜ್ಯಕ್ಕೆ ಯಾವ ಆರ್ಥಿಕ ನೆರವೂ ದೊರೆಯಲಿಲ್ಲ. +ಕೊನೆಗೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ಹೇಳಿಕೆ ನೀಡಿದ್ದು, ಒಂದು ವಾರದೊಳಗಾಗಿ ಬರ ನಿರ್ವಹಣೆಯ ಅನುದಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ. +ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವರು, ದೇಶದ ಇತಿಹಾಸದಲ್ಲೇ ಇಂತಹ ಸಂದರ್ಭಗಳು ಒದಗಿಬಂದಿರಲಿಲ್ಲ. ನಿಯಮಾನುಸಾರ ರಾಜ್ಯದ ಜನರಿಗೆ ದೊರೆಯಬೇಕಾಗಿದ್ದ ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಹತ್ತುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಪ್ರಕರಣ ಒಂದು ಹಂತಕ್ಕೆ ಬಂದಿದೆ. ಕೇಂದ್ರ ಸರ್ಕಾರ ಒತ್ತಡಕ್ಕೆ ಮಣಿದು ತನ್ನ ಅಭಿಪ್ರಾಯವನ್ನು ತಿಳಿಸಿದೆ. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ಗೆ ಧನ್ಯವಾದ ಎಂದಿದ್ದಾರೆ. \ No newline at end of file diff --git a/eesanje/url_46_172_12.txt b/eesanje/url_46_172_12.txt new file mode 100644 index 0000000000000000000000000000000000000000..ca39d101b85973001dbfd3419d614276692bb1de --- /dev/null +++ b/eesanje/url_46_172_12.txt @@ -0,0 +1,4 @@ +ದಾಂಡೇಲಿ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದಾರುಣ ಸಾವು +ಕಾರವಾರ,ಎ.22-ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ ಆರು ಮಂದಿ ಕಾಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಾಂಡೇಲಿಯ ಅಕೊರ್ಡಾ ಬಳಿ ನಡೆದಿದೆ. ಮೃತರನ್ನು ಹುಬ್ಬಳ್ಳಿಯ ಈಶ್ವರನಗರ ನಿವಾಸಿಗಳಾದ ನಜೀರ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಬೀದ್ ಅಹ್ಮದ್ (12) ಎಂದು ಗುರುತಿಸಲಾಗಿದೆ. +ಒಟ್ಟು ಎಂಟು ಮಂದಿ ನಿನ್ನೆ ರಜೆ ಕಾರಣ ಪ್ರವಾಸಕ್ಕೆ ಆಗಮಿಸಿದ್ದರು ಮಧ್ಯಾಹ್ನ ಸಂತೋಷ ಕೊಟ ನಡೆಸಿ ಸಂಜೆ ಮಕ್ಕಳು ಸೇರಿ ಆರು ಮಂದಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದರು.ಇದರಲ್ಲಿ ಒಬ್ಬ ಬಾಲಕಿ ನೀರಿನಲ್ಲಿ ಮುಳುಗಿದ್ದಾಳೆ ಆಕೆಯನ್ನು ರಕ್ಷಿಸಲು ಹೋಗಿ ಉಳಿದವರು ನದಿಯಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಸ್ಥಳಕ್ಕೆ ಧಾವಿಸಿದ ದಾಂಡೇಲಿ ಗ್ರಾಮಾಂತರ ಪೊಲೀಸರು ಅಗ್ನಿಶಮಕ ಸಿಬ್ಬಂದಿ ಹಾಗು ಈಜುಗಾರರ ಸಹಾಯದಿಂದ ಎಲ್ಲಾ ಮೃತದೇಹಗಳನ್ನು ರಾತ್ರಿ ವೇಳೆಗೆ ಪತ್ತೆಯಾಗಿವೆ. ಮೃತದೇಹಗಳನ್ನು ದಾಂಡೇಲಿ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಘಟನೆ ವೇಳೆ ಇಬ್ಬರು ಮಹಿಳೆಯರು ದಡದಲ್ಲೇ ಇದ್ದರು ಸಹಾಯಕ್ಕಾಗಿ ಕೂಗಿಕೊಂಡರು ಯಾವುದೇ ಪ್ರಯೋಜನವಾಗಲಿಲ್ಲ . \ No newline at end of file diff --git a/eesanje/url_46_172_2.txt b/eesanje/url_46_172_2.txt new file mode 100644 index 0000000000000000000000000000000000000000..3edad13afc09d1d84c28fadd5f54d66077ee65e1 --- /dev/null +++ b/eesanje/url_46_172_2.txt @@ -0,0 +1,11 @@ +ಚುನಾವಣಾ ಅಕ್ರಮ : ಈವರೆಗೆ 400 ಕೋಟಿ ದಾಟಿದ ಜಪ್ತಿಯಾದ ಸಂಪತ್ತು +ಬೆಂಗಳೂರು, ಏ.22-ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋಟಿ ಕೋಟಿ ನಗದು, ಕೆ.ಜಿ.ಗಟ್ಟಲೆ ಚಿನ್ನ, ಬೆಳ್ಳಿ, ಲೀಟರ್ಗಟ್ಟಲೆ ಮದ್ಯ ಜಪ್ತಿಯಾಗಿದೆ. ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ ಮಾ.16ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 403.40 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಪ್ರತಿ ದಿನವೂ ಒಂದಲ್ಲ ಒಂದು ಕಡೆ ಈ ರೀತಿಯ ವಸ್ತುಗಳು ತಪಾಸಣೆ ಸಂದರ್ಭದಲ್ಲಿ ಪತ್ತೆಯಾಗುತ್ತಿವೆ. ಭಾರತದ ಚುನಾವಣಾ ಆಯೋಗವೂ ಈ ಬಾರಿಯ ಚುನಾವಣೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾನೂನು ಬಾಹಿರ ಸಾಗಾಣಿಕೆ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಿದೆ. ಹೀಗಾಗಿ ಅಪಾರ ಪ್ರಮಾಣದ ಜಪ್ತಿಯಾಗುತ್ತಿದೆ. +ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಅಧಿಕಾರಿಗಳು ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿರುವ ಪ್ರಕರಣ ಗಳಿಗೆ ಸಂಬಂಧಿಸಿದಂತೆ 1975 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. +ಕರ್ನಾಟಕ ಅಬಕಾರಿ ಕಾಯ್ದೆಯಡಿ 23,522 ಪ್ರಕರಣಗಳು ದಾಖಲಾಗಿವೆ. 1739 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಇಲಾಖೆಯ ಘೋರ ಅಪರಾಧದಡಿಯಲ್ಲಿ 2,781 ಪ್ರಕರಣ ದಾಖಲಾಗಿದ್ದರೆ, ಪರವಾನಗಿ ಉಲ್ಲಂಘನೆಯಡಿಯಲ್ಲಿ 4,155 ಪ್ರಕರಣಗಳು ದಾಖಲಾಗಿವೆ ಎಂದು ಪ್ರಕಟಣೆ ತಿಳಿಸಿದೆ. +ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಅಧಿಕಾರಿಗಳು ಈತನಕ 132.86 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಅಧಿಕಾರಿಗಳು 176.90 ಕೋಟಿ ರೂ. ಮೌಲ್ಯದ ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು 13.80 ಕೋಟಿ ರೂ. ಮೌಲ್ಯದ ವಜ್ರ, ನಗದು, ಚಿನ್ನವನ್ನು ವಶಪಡಿಸಿಕೊಂಡು ಪರಿಶೀಲನೆಗೆ ಒಳಪಡಿಸಿದ್ದಾರೆ. +ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 79.84 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ತಂಡದವರು 46,25,000 ರೂ. ಮೌಲ್ಯದ 185 ಗ್ರಾಂ ಕೊಕೇನ್, 3,27,000 ರೂ. ಮೌಲ್ಯದ 45 ಗ್ರಾಂ ಇಸಿ ಟ್ಯಾಬ್ಲೆಟ್ ಅನ್ನು ಸಿ.ವಿ.ರಾಮನ್ ನಗರದಲ್ಲಿ ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. +2 ಕೋಟಿ ಹಣ ಪತ್ತೆ ಚುರುಕು ಕಂಡ ತನಿಖೆಬೆಂಗಳೂರು,ಏ.22- ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಪತ್ತೆಗೆ ಸಂಬಂಧಪಟ್ಟಂತೆ ಮೂವರ ವಿರುದ್ಧ ಪ್ರಕರಣವನ್ನು ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ. +ಕಳೆದ ಶನಿವಾರ ಮಧ್ಯಾಹ್ನ ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಆದ ಹಿನ್ನೆಲೆ ಚುನಾವಣಾಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲï, ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ. +ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು – ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು. +ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ. \ No newline at end of file diff --git a/eesanje/url_46_172_3.txt b/eesanje/url_46_172_3.txt new file mode 100644 index 0000000000000000000000000000000000000000..fd67ac8210f66138121e8e660470f2be41eaab4b --- /dev/null +++ b/eesanje/url_46_172_3.txt @@ -0,0 +1,7 @@ +ಮತದಾರರನ್ನು ಸೆಳೆಯಲು ಗ್ಯಾರಂಟಿ ಕಾರ್ಡ್ ಹಂಚಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ದೂರು +ಬೆಂಗಳೂರು, ಏ.22-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವಂತಹ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ಪಕ್ಷದಿಂದ ಮನೆ ಮನೆಗೆ ನೀಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. +ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಪಕ್ಷವು ಮನೆಮನೆಗೆ ಗ್ಯಾರಂಟಿ ಕಾರ್ಡ್ಗಳನ್ನು ಕಾಂಗ್ರೆಸ್ ವಿತರಿಸದಂತೆ ತಡೆಯಲು ಆಯೋಗವು ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದೆ. +ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಎಚ್.ಎಂ.ರಮೇಶ್ಗೌಡ, ಆರ್. ಪ್ರಕಾಶ್ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನ ಮನವಿ ಪತ್ರವನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಲ್ಲಿ ಸಲ್ಲಿಸಿದೆ. +ಮತದಾರರ ಮೇಲೆ ಪರಿಣಾಮ ಬೀರುವಂತಹ ಅಂಶವುಳ್ಳ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸದಂತೆ ನಿರ್ಬಂಧಿಸಬೇಕು ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ. 5 ಗ್ಯಾರಂಟಿಯ ನ್ಯಾಯ ಪತ್ರ ಎಂಬ ಹೆಸರಿನ ಪ್ರಣಾಳಿಕೆಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಗಾಗಿ ಬಿಡುಗಡೆ ಮಾಡಿದೆ. +ಪ್ರಣಾಳಿಕೆಯಲ್ಲಿನ ಅಂಶಗಳನ್ನು ಗ್ಯಾರಂಟಿ ಕಾರ್ಡಿನಲ್ಲಿ ಮುದ್ರಿಸಿ ಸರ್ಕಾರದ ಯೋಜನೆಗಳೆಂಬಂತೆ ಕಾಂಗ್ರೆಸ್ನಿಂದ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದೆ. ಕಾಂಗ್ರೆಸ್ ಪಕ್ಷವು ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ವರ್ಗದವರನ್ನು ತಲುಪಲು ಪ್ರಯತ್ನಿಸಿದ್ದು, ಇದು ಮತದಾರರಿಗೆ ಆಮಿಷ ಒಡ್ಡಿದಂತಾಗುತ್ತದೆ. +ಮತದಾರರಿಗೆ ಈ ರೀತಿಯ ಆಮಿಷಗಳು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿವೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ. \ No newline at end of file diff --git a/eesanje/url_46_172_4.txt b/eesanje/url_46_172_4.txt new file mode 100644 index 0000000000000000000000000000000000000000..6f663d8151ae8dc79ccc9446a87c7a277ea18e31 --- /dev/null +++ b/eesanje/url_46_172_4.txt @@ -0,0 +1,10 @@ +ನೇಹಾ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವುದಿಲ್ಲ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಏ.22-ನೇಹಾ ಕೊಲೆ ಆರೋಪಿ ಫಯಾಜ್ನನ್ನು ಒಂದು ಗಂಟೆಯೊಳಗಾಗಿಯೇ ಬಂಧಿಸಿ, ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಕಾನೂನು ಪಾಲನೆ ವಿಷಯದಲ್ಲಿ ಯಾವುದೇ ರಿಯಾಯಿತಿ ತೋರಿಸಿಲ್ಲ. ಆದರೂ ಬಿಜೆಪಿಯವರು ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನೇಹಾಗಾಗಿ ಮತ ನೀಡಿ ಎಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆಕ್ಷೇಪಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನೇಹಾ ಮನೆಗೆ ಬಂದು ಹೋಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನೇಹಾಗಾಗಿ ಮತ ಹಾಕಿ ಎಂದು ಕೇಳುತ್ತಿರುವುದರ ಅರ್ಥವೇನು? ಇದು ಸಂಪೂರ್ಣವಾಗಿ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ಈ ಕಾರಣಕ್ಕಾಗಿಯೇ ತಾವು ಹೆಚ್ಚು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಹೇಳಿದರು. +ತಮ್ಮ ಹಾಗೂ ಮುಖ್ಯಮಂತ್ರಿ ವಿರುದ್ಧ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ. ಸಂತೋಷ. ಅದಕ್ಕೆ ತಕರಾರಿಲ್ಲ. ಆದರೆ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಹಿಂದೂ, ಮುಸಲ್ಮಾನ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಜಾತಿಯವರಾಗಿದ್ದರೂ ಕಾನೂನು ಪ್ರಕಾರವೇ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನನ್ನು ಬಿಟ್ಟು ಯಾರನ್ನೂ ರಕ್ಷಣೆ ಮಾಡುವುದಿಲ್ಲ ಎಂದರು. ಆರೋಪಿ ಮುಸಲ್ಮಾನ್ ಆಗಿರುವುದರಿಂದ ರಕ್ಷಣೆ ಮಾಡುತ್ತಿದ್ದಾರೆ ಎಂಬ ಟೀಕೆಗಳಿವೆ. +ನಮಗೆ ಅದರ ಅಗತ್ಯವೇನಿದೆ? ಆತ ಒಬ್ಬ ವ್ಯಕ್ತಿ, ಕೊಲೆ ಮಾಡಿದ್ದಾನೆ. ಅದಕ್ಕಾಗಿ ಶಿಕ್ಷೆಯಾಗಬೇಕಿದೆ. ಅದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಘಟನೆ ನಡೆದ ಒಂದು ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಜರುಗಿಸಿದ್ದಾರೆ. +ಆರೋಪಿಯ ಹಿಂದೆ ಬೇರೆಯವರೂ ಇದ್ದಾರೆ ಎಂದು ಹೇಳಲಾಗುತ್ತಿದೆ. ಅದನ್ನೂ ತನಿಖೆ ನಡೆಸಲಾಗುತ್ತಿದೆ ಎಂದರು. ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಬಿಐ ಕೂಡ ತನಿಖಾ ಸಂಸ್ಥೆ. ಅಲ್ಲೇನೂ ದೊಡ್ಡ ವ್ಯವಸ್ಥೆಗಳಿಲ್ಲ. ನಮ್ಮಲ್ಲಿ ಆರೋಪಿಯನ್ನು ಹಿಡಿದುಕೊಂಡು ಬಂದಿಲ್ಲ. ಬಿಟ್ಟುಬಿಟ್ಟಿದ್ದಾರೆ. +ಬೇರೆ ದೇಶಕ್ಕೆ ಪರಾರಿಯಾಗಿದ್ದಾರೆ ಎಂದಾಗಿದ್ದರೆ, ಆಗ ಸಿಬಿಐ ತನಿಖೆಯ ಬಗ್ಗೆ ಯೋಚಿಸಬಹುದಿತ್ತು. ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ. ತನಿಖೆ ನಡೆಯುತ್ತಿದೆ. ಫಲಿತಾಂಶ ಏನು ಎಂದು ಕಾದುನೋಡೋಣ. ರಾಜ್ಯದಲ್ಲಿ ಈ ಮೊದಲು ಹಲವು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದೇವೆ. ಅದರಿಂದಾಗಿರುವುದೇನು ಎಂಬುದು ನಮ್ಮ ಕಣ್ಣ ಮುಂದಿದೆ ಎಂದರು. +ನಾವು ಏನಾದರೂ ಹೇಳಿದರೆ ಅದನ್ನು ತಿರುಚುವುದು, ಅನಗತ್ಯವಾಗಿ ಟೀಕೆ ಮಾಡುವುದು ಸರಿಯಲ್ಲ. ಒಂದು ವ್ಯವಸ್ಥೆಯಿದೆ. ಅದರ ಪ್ರಕಾರವೇ ನಾವು ಮುನ್ನಡೆಯಬೇಕಿದೆ ಎಂದು ಹೇಳಿದರು. +ಈ ಲೋಕಸಭಾ ಚುನಾವಣೆಯಲ್ಲಿ ಹಿಂದೆಂದೂ ಇಲ್ಲದಂತಹ ದ್ವೇಷಗಳು ಕಂಡುಬರುತ್ತಿವೆ. ಖುದ್ದು ಪ್ರಧಾನಿಯವರೇ ಧರ್ಮದ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಹಿಂದೆಂದೂ ಈ ರೀತಿ ಇರಲಿಲ್ಲ. ಜನ ಇದನ್ನೆಲ್ಲಾ ಹೇಗೆ ಸ್ವೀಕರಿಸುತ್ತಾರೆ ಎಂಬುದು ಗೊತ್ತಿಲ್ಲ. ನಾಯಕರುಗಳು ಹೇಳಿಕೆ ನೀಡಿದಾಕ್ಷಣ ಜನ ಚಪ್ಪಾಳೆ ಹೊಡೆಯುವುದು ಸಹಜ. ಆದರೆ ನಮ್ಮ ವ್ಯಕ್ತಿತ್ವವನ್ನು ಅದರ ಆಧಾರದ ಮೇಲೆಯೇ ಅಳೆಯುತ್ತಾರೆ. ಚಪ್ಪಾಳೆ ಹೊಡೆದಾಕ್ಷಣ ಹೇಳಿದ್ದು ಸರಿ ಎಂಬುದು ಸಮರ್ಥನೆಯಾಗುವುದಿಲ್ಲ +ಎಂದರು. ಲೋಕಸಭಾ ಚುನಾವಣೆ ಯಲ್ಲಿ ಊಹೆಗೂ ಮೀರಿದ ಫಲಿತಾಂಶ ಬರಲಿದೆ. ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದರು. \ No newline at end of file diff --git a/eesanje/url_46_172_5.txt b/eesanje/url_46_172_5.txt new file mode 100644 index 0000000000000000000000000000000000000000..0163ee3eb9acccd6534233c23715d64e49c64f17 --- /dev/null +++ b/eesanje/url_46_172_5.txt @@ -0,0 +1,4 @@ +ನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ +ಶಿವಮೊಗ್ಗ, ಏ.22-ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಭೀಕರ ಹತ್ಯೆಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ವಿದ್ಯಾರ್ಥಿನಿ ನೇಹಾ ಕೊಲೆಗೆ ಸೂಕ್ತ ನ್ಯಾಯ ದೊರಕಿಸಬೇಕು. ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಲು ಸರ್ಕಾರ ತನಿಖೆಯನ್ನು ಸಿಐಡಿಗೆ ನೀಡಿದೆ. ಪ್ರಕರಣವನ್ನು ವಿಶೇಷ ನ್ಯಾಯಾಲಯಕ್ಕೆ ವಹಿಸಿಕೊಡಲು ಕೂಡ ನಿರ್ಧರಿಸಲಾಗಿದೆ ಎಂದು ಹೇಳಿದರು. +ನಮ್ಮ ಆಡಳಿತ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ ಕಾನೂನು ಸುವ್ಯವಸ್ತೆ ಕಾಪಾಡಲಾಗುತ್ತಿದೆ ಆದರೆ ಹಿಂದಿನ ಬಿಜೆಪಿ ಆಡಳಿತದಲ್ಲಿ ಹೆಚ್ಚು ಅಪರಾಧ ಘಟನೆ ನಡೆದಿವೆ ಎಂದು ಆರೋಪಿಸಿದರು .ನಮ್ಮ ಆಡಳಿತದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_172_6.txt b/eesanje/url_46_172_6.txt new file mode 100644 index 0000000000000000000000000000000000000000..0c562bf0a3f2bf459952b6424e6046d1ed2bce4e --- /dev/null +++ b/eesanje/url_46_172_6.txt @@ -0,0 +1,7 @@ +ಬೆಳಗಾವಿ : ಹಿಂದೂ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮತಾಂತರಕ್ಕೆ ಯತ್ನಿಸಿದ್ದ ಆರೋಪಿಗಳ ಬಂಧನ +ಬೆಳಗಾವಿ, ಏ. 22-ಹುಬ್ಬಳಿಯಲ್ಲಿ ನೇಹಾ ಭೀಕರ ಹತ್ಯೆ ಹಿಂದೆ ಲವ್ ಜಿಹಾದ್ ಮಾತುಗಳು ಕೇಳಿಬರುತ್ತಿರುವ ನಡುವೆ ಕೆಲಸ ಕೊಡಿಸುವುದಾಗಿ ಹೇಳಿ ಹಿಂದೂ ಮಹಿಳೆಯನ್ನು ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಸವದತ್ತಿ ಪೊಲೀಸರು ಬಂಧಿದ್ದಾರೆ. +ಮುನವಳ್ಳಿ ಪಟ್ಟಣದ ಆರೀಫ್ ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಉಮರ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಪ್ರಕರಣ ದಾಖಲಾಗಿದ್ದು ,ಪ್ರಸ್ತುತ ಪ್ರಮುಖ ಆರೋಪಿ ಆರೀಫ್ ಮತ್ತು ಆತನ ಪತ್ನಿ ಬಂಸಲಾಗಿದೆ. ರಾಜ್ಯದಲ್ಲಿ ಲವ್ ಜಿಹಾದ್ನ ಮತ್ತೊಂದು ಕರಾಳ ಮುಖ ಅನಾವರಣಗೊಂಡಿದ್ದು. ಹಿಂದೂ ಯುವತಿಯರಷ್ಟೇ ಅಲ್ಲದೆ ವಿವಾಹಿತೆಯರನ್ನೂ ಲವ್ ಜಿಹಾದ್ ಜಾಲಕ್ಕೆ ತಳ್ಳಲು ಯತ್ನಿಸಿರುವ ಘಟನೆ ಇದಾಗಿದೆ. +ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಸಂತ್ರಸ್ತ ಮಹಿಳೆ ವಾಸವಾಗಿದ್ದು ಆಕೆಯ ಪತಿ ಮುನವಳ್ಳಿ ಪಟ್ಟಣದಲ್ಲಿ ಕಿರಾಣಿ ಅಂಗಡಿ ಹೊಂದಿದ್ದಾರೆ. ಪತಿ ಇಲ್ಲದಿದ್ದಾಗ ಸಂತ್ರಸ್ತ ಮಹಿಳೆ ಆಗಾಗ ಕಿರಾಣಿ ಅಂಗಡಿಯಲ್ಲಿ ಕೂತು, ವ್ಯಾಪಾರ ಮಾಡುತ್ತಿದ್ದರು. ಈ ವಿಚಾರ ತಿಳಿದ ಆರೋಪಿ ಆರೀಫ್ ಬೇಪಾರಿ ನೆರೆ ಮನೆಯವರೆಂದು ಮಹಿಳೆಯನ್ನು ಪರಿಚಯ ಮಾಡಿಕೊಂಡು, ಅವರ ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ. +ಬಳಿಕ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ಬೆಳಗಾವಿಗೆ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬೆಳಗಾವಿ ಬಂದ ಬಳಿಕ ಆರೀಫ್ಗೆ ಮತ್ತೆ ಐವರು ದುಷ್ಕರ್ಮಿಗಳು ಸಾಥ್ ನೀಡಿದ್ದಾರೆ. ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯದ ಮತ್ತು ಮಹಿಳೆಯ ಖಾಸಗಿ ಪೋಟೋಗಳನ್ನು ಸೆರೆಹಿಡಿದು, ಮತಾಂತರಗೊಳ್ಳುವಂತೆ ಬ್ಯ್ಲಾಕ್ಮೇಲ್ಮಾಡಿದ್ದಾರೆ. +ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳು ಇಲ್ಲದಿದ್ದರೆ ಫೋಟೋ ವೈರಲ್ ಮಾಡುತ್ತೇವೆ ಎಂದು ಬೆದರಿಸಿ ಹಣೆಗೆ ಕುಂಕುಮ ಅಳಿಸಿ ನಮಾಜ್ ಮಾಡಲು ಒತ್ತಡ ಹಾಕಿದ್ದಾರೆ.ಇದಲ್ಲದೆ ದುಷ್ಕರ್ಮಿಗಳು ಒತ್ತಾಯ ಪೂರ್ವಕವಾಗಿ ಬುರ್ಖಾ ಕೂಡ ಹಾಕಿಸಿದ್ದಾರೆ. +ದುರಳರ ಜಾಲದಿಂದ ತಪ್ಪಿಸಿಕೊಂಡ ಬಂದ ಸಂತ್ರಸ್ತ ಮಹಿಳೆ ಸವದತ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೂಡಲೆ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನುಸೆರೆ ಹಿಡಿದಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. \ No newline at end of file diff --git a/eesanje/url_46_172_7.txt b/eesanje/url_46_172_7.txt new file mode 100644 index 0000000000000000000000000000000000000000..1050d65fb7ba81ae0c21a312883092cd25c9e962 --- /dev/null +++ b/eesanje/url_46_172_7.txt @@ -0,0 +1,5 @@ +ಕಾಂಗ್ರೆಸ್ ಪರ ಪ್ರಗತಿಪರ ಸಾಹಿತಿಗಳು, ಚಿಂತಕರ ಬ್ಯಾಟಿಂಗ್ +ಬೆಂಗಳೂರು, ಏ.22-ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ಎಂಪಿಗಳು ಜಿಎಸ್ಟಿಯ ಕುರಿತು ಸಂಸತ್ನಲ್ಲಿ ಒಂದು ಮಾತನ್ನು ಎತ್ತದೆ ರಾಜ್ಯಕ್ಕೆ ಮೋಸ ಮಾಡಿ ದ್ದಾರೆ. ಆದ್ದರಿಂದ ಅವರನ್ನು ಬೆಂಗಳೂರಿನ ಜನ ಬೆಂಬಲಿಸಬಾರದು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ಪ್ರಗತಿಪರ ಚಿಂತಕರು ಎಂದು ಮನವಿ ಮಾಡಿದರು +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಮತ್ತು ಚಿಂತಕ ತಲಕಾಡು ಚಿಕ್ಕರಂಗೇಗೌಡ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕರ್ನಾಟಕದ ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ಕೊಡದೆ ಬೇರೆ ರಾಜ್ಯಗಳಿಗೆ ಕೊಟ್ಟು ಅನ್ಯಾಯ ಮಾಡಿದೆ. +ಇಲ್ಲಿ ಬಂದ ಆದಾಯವನ್ನು ಬೇರೆ ರಾಜ್ಯಗಳಿಗೆ ಹಂಚಿ ಉತ್ತರ ರಾಜ್ಯಗಳನ್ನು ಅಭಿವೃದ್ಧಿ ಮಾಡುತ್ತಿದೆ. ಮಲತಾಯಿ ಧೋರಣೆಯನ್ನು ಅನುಸರಿಸುತ್ತಾ ಬಂದಿರುವ ಬಿಜೆಪಿಯನ್ನು ಈ ಬಾರಿ ಯಾರು ಬೆಂಬಲಿಸಬಾರದು ಎಂದರು. +ಬೆಂಗಳೂರು ಲೋಕಸಭಾ ಕ್ಷೇತ್ರಗಳಿಗೆ ನಿಂತಿರುವ ಡಿ.ಕೆ. ಸುರೇಶ್, ಸೌಮ್ಯ ರೆಡ್ಡಿ, ಮನ್ರ್ಸೂರ್ ಆಲಿಖಾನ್, ಪೊ್ರ. ರಾಜೀವ್ ಗೌಡ ಇವರನ್ನು ಬೆಂಬಲಿಸಬೇಕು ಇವರನ್ನು ಬೆಂಬಲಿಸಿದಾಗ ಮಾತ್ರ ನಮ್ಮ ಕನ್ನಡ ನಾಡು ನುಡಿ ಸಂಪತ್ತು ಮತ್ತು ನಮ್ಮ ಅಸ್ಮಿತೆ ಉಳಿಯುತ್ತದೆ. ಇಲ್ಲವಾದಲ್ಲಿ ಕನ್ನಡ ನಾಡಿನ ಜನತೆಗೆ ಉಳಿಗಾಲವಿಲ್ಲ ಎಂದು ಮೋದಿಯನ್ನು ವಿರೋಸಿದರು. ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ಮುಕುಂದರಾಜï, ಭಾರತಿ ಶಂಕರ್ ಮುಂತಾದವರು. \ No newline at end of file diff --git a/eesanje/url_46_172_8.txt b/eesanje/url_46_172_8.txt new file mode 100644 index 0000000000000000000000000000000000000000..a52ae7735c7f845dada54ca3fd2926b4f4ba8981 --- /dev/null +++ b/eesanje/url_46_172_8.txt @@ -0,0 +1,14 @@ +ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ಸಿದ್ರಾಮುಲ್ಲಾಖಾನ್ ಎಂದು ಘೋಷಣೆ ಕೂಗಿ ಆಕ್ರೋಶ +ಬೆಂಗಳೂರು,ಏ.22-ಸಹಪಾಠಿಯಿಂದಲೇ ಬರ್ಬರವಾಗಿ ಹತ್ಯೆಗೀಡಾದ ನೇಹಾ ಕೊಲೆ ಪ್ರಕರಣ ವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ತುಷ್ಟೀಕರಣ ನಿಲ್ಲಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿತು. +ಬಿಜೆಪಿ ರಾಜ್ಯ ಘಟಕವು ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು, ಧಾರವಾಡ, ತುಮಕೂರು, ಹಾವೇರಿ, ಬೆಳಗಾವಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಹುಬ್ಬಳ್ಳಿ-ಧಾರವಾಡ, ಚಿತ್ರದುರ್ಗ, ರಾಮನಗರ, ಮಂಡ್ಯ, ವಿಜಯನಗರ, ದಾವಣಗೆರೆ, ಶಿವಮೊಗ್ಗ ಮತ್ತಿತರ ಕಡೆ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶವನ್ನು ಹೊರಹಾಕಿದರು. +ಹುಬ್ಬಳ್ಳಿಯಲ್ಲಂತೂ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೆ, ಟೈರ್ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿದ್ರಾಮುಲ್ಲಾಖಾನ್, ಡಿಕೆ ಬ್ರದರ್ಸ್ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇಷ್ಟೇ ಅಲ್ಲ, ರಸ್ತೆ ಬಂದ್ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. +ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಟೈರ್ಗೆ ಬೆಂಕಿ ಹಚ್ಚಿ ಫಯಾಜ್ ಫೋಟೋ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೇ ಅಲ್ಲ, ಮಹಿಳಾ ಕಾರ್ಯಕರ್ತರು ಆರೋಪಿ ಫಯಾಜ್ ಫೋಟೋಗೆ ಚಪ್ಪಲಿಯಿಂದ ಹೊಡೆದು ಸಿಟ್ಟು ತೀರಿಸಿಕೊಂಡರು. ಬಿಜೆಪಿಗೆ ಎಬಿವಿಪಿ ಹಾಗೂ ಕೆಲವು ಹಿಂದೂಪರ ಸಂಘಟನೆಗಳು ಕೈಜೋಡಿಸಿದ್ದವು. +ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಪ್ರೀತಂ ಗೌಡ ಹಾಗೂ ರಘು ಕೌಟಿಲ್ಯ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ನಗರದ ಪ್ರಮುಖ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಗಾಂವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗಿಯಾದರು. ಇಷ್ಟೇ ಅಲ್ಲದೆ ತುಮಕೂರು, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕಲಬುರಗಿಯಲ್ಲೂ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಲಾಯಿತು. +ಹುಬ್ಬಳ್ಳಿ-ಧಾರವಾಡದಲ್ಲಿ ಪ್ರತಿಭಟನೆಗೆ ವ್ಯಾಪಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಚಿಕ್ಕೋಡಿ, ಹಾವೇರಿ, ಬಾಗಲಕೋಟೆ ಸೇರಿದಂತೆ ಮತ್ತಿತರ ಕಡೆ ಸ್ವಯಂಪ್ರೇರಿತರಾಗಿ ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಿದರು.ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಮುಸ್ಲಿಂ ಸಮುದಾಯದವರು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಬಂದ್ಗೆ ಬೆಂಬಲ ಸೂಚಿಸಲಾಗಿತ್ತು. +ಜೊತೆಗೆ ಬಂದ್ ಮಾಡಲಾದ ಅಂಗಡಿಗಳಿಗೆ ನೇಹಾ ಶ್ರದ್ಧಾಂಜಲಿಯ ಪೊಸ್ಟರ್ ಅಂಟಿಸಲಾಗಿತ್ತು. ಅಂಜುಮನ್ ಸಂಸ್ಥೆಯಿಂದ ಡಿಸಿ ಕಚೇರಿವರೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪಂಜಿನ ಮೆರವಣಿಗೆ ನಡೆಸಿದ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿತ್ತು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅರ್ಧ ದಿನ ಬಂದ್ಗೆ ಕರೆ ನೀಡಿದ್ದರು. +ಅಂಜುಮನ್ ಸಂಸ್ಥೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಂಜಿನ ಮೆರವಣಿಗೆ ಮಾಡಿ, ಕಪ್ಪುಪಟ್ಟಿ ಧರಿಸಿ ಜಸ್ಟೀಸ್ ಫಾರ್ ನೇಹಾ ಎಂದು ಅಂಗಡಿಗಳಿಗೆ ಭಿತ್ತಿಪತ್ರ ಅಂಟಿಸಿದ್ದಾರೆ. ಮೆರವಣಿಗೆಯಲ್ಲಿ ಅಂಜುಮನ್ ಸಂಸ್ಥೆ ಸದಸ್ಯರು ಮತ್ತು ಜನರು ಭಾಗವಹಿಸಿದ್ದರು. ಇನ್ನು ಹಿಂದೂಪರ ಸಂಘಟನೆಗಳು ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ ನಡೆಸಿ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಹಂತಕ ಫಯಾಜ್ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. +ತುಮಕೂರಿನ ಬಿಜಿಎಸ್ ವೃತ್ತದಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಲೆಗಡುಕ ಸಿದ್ದರಾಮಯ್ಯ, ಸಿದ್ದರಾಮುಲ್ಲಾ ಖಾನ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾದರು. ವ್ಯಾಪಕ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. +ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮೂಲಕ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ನೇಹಾ ಹಿರೇಮಠ ಹತ್ಯೆ ಖಂಡಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡಿದರು. ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಬಳಿ ತಲುಪಿತು. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. +ರಾಜ್ಯಸರ್ಕಾರದ ಅತಿಯಾದ ತುಷ್ಠೀಕರಣದ ನೀತಿಯಿಂದಾಗಿ ಈ ರೀತಿ ಕಗ್ಗೊಲೆಗಳು ನಡೆಯುತ್ತಿವೆ. ನಮಗೆ ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಮನೋಭಾವನೆಗೆ ಕೆಲವರು ಬಂದಿದ್ದಾರೆ. ಓರ್ವ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸಿನಲ್ಲೇ ಇಷ್ಟು ಬರ್ಭರವಾಗಿ ಹತ್ಯೆ ಮಾಡುತ್ತಾರೆ ಎಂದರೆ ಉಳಿದವರಿಗೆ ರಕ್ಷಣೆ ಸಿಗಲು ಸಾಧ್ಯವೇ ಎಂದು ಪ್ರತಿಭಟನಾ ನಿರತರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. +ನೇಹಾಳನ್ನು ಬರ್ಭರವಾಗಿ ಹತ್ಯೆಗೈದ ಆರೋಪಿಗೆ 3 ತಿಂಗಳೊಳಗೆ ಗಲ್ಲುಶಿಕ್ಷೆಯಾಗಬೇಕು. ಇವನ ಪರ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು. ವಿದ್ಯಾರ್ಥಿನಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ನೇಹಾ ಹತ್ಯೆ ಪ್ರಕರಣದಲ್ಲಿ ಲವ್ ಜಿಹಾದ್ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ. +ಬಿಜೆಪಿ ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ಎಲ್ಲಾ ನಾಯಕರು ಇದು ಲವ್ ಜಿಹಾದ್ ಪ್ರಕರಣ ಎಂದೂ, ಇದನ್ನು ಅದೇ ದೃಷ್ಟಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈ ವಿಷಯದಲ್ಲಿ ಮೃದು ಧೋರಣೆ ತಳೆದಿದೆ ಎಂದು ಆರೋಪಿಸಿದೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು. ರಾಜ್ಯದ ಬಹುತೇಕ ಕಡೆ ಪ್ರತಿಭಟನೆ ನಡೆದಿದೆ. \ No newline at end of file diff --git a/eesanje/url_46_172_9.txt b/eesanje/url_46_172_9.txt new file mode 100644 index 0000000000000000000000000000000000000000..48db176f411574e63e5df44d2d658c138f6e82ce --- /dev/null +++ b/eesanje/url_46_172_9.txt @@ -0,0 +1,5 @@ +ಸರ್ಕಾರಿ ನೌಕರರಿಂದ ಅಂಚೆ ಮತದಾನಕ್ಕೂ ಮೀನಾಮೇಷ +ಬೆಂಗಳೂರು,ಏ.22-ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಎಂದು ಸರ್ಕಾರ ಬೊಬ್ಬೆ ಹೊಡೆದುಕೊಳ್ಳುತ್ತಿದ್ದರೂ ಸರ್ಕಾರಿ ನೌಕರರೇ ಮತದಾನಕ್ಕೆ ಮನಸ್ಸು ಮಾಡದಿರುವ ವಿಚಾರ ಇದೀಗ ಬಹಿರಂಗಗೊಂಡಿದೆ. +ಮೂರು ದಿನ ಅಂಚೆ ಮತದಾನಕ್ಕೆ ಅವಕಾಶ ಇದ್ದರು ಹಕ್ಕು ಚಲಾಯಿಸಲು ಸರ್ಕಾರಿ ನೌಕರರು ಹಿಂದೇಟು ಹಾಕಿರುವುದು ಗೊತ್ತಾಗಿದೆ. ಕಳೆದ ಶುಕ್ರವಾರದಿಂದ ಅಂಚೆ ಮತದಾನ ಆರಂಭವಾಗಿದೆ ನಿನ್ನೆ ಭಾನುವಾರದ ರಜೆ ದಿನವಾಗಿದ್ದರೂ ಸಾಕಷ್ಟು ಮಂದಿ ಸರ್ಕಾರಿ ನೌಕರರು ತಮ್ಮ ಹಕ್ಕು ಚಲಾಯಿಸದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. +ಅಂಚೆ ಮತದಾನಕ್ಕೆ ವಿವಿಧ ಇಲಾಖೆಗಳ 1342 ಮಂದಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಸಿಕೊಂಡಿದ್ದರು. ಆದರೆ ಅಂಚೆ ಮತದಾನ ಮಾಡಿರುವುದು ಮಾತ್ರ ಕೇವಲ 426 ಮಂದಿ. ನಗರದ ಮೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇವಲ ಶೇ.31 ರಷ್ಟು ಮಂದಿ ಮಾತ್ರ ಮತದಾನ ಮಾಡಿದ್ದಾರೆ. +ಚುನಾವಣಾ ಕರ್ತವ್ಯ, ಅಗತ್ಯ ಸೇವೆಯಲ್ಲಿ ಕೆಲಸ ನಿರ್ವಹಿಸುತ್ತಿರೋ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು ಆದರೆ ನಗರದ 1342 ಮಂದಿ ನೌಕರರಲ್ಲಿ 916 ಮಂದಿ ಮತದಾನ ಮಾಡದೇ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಬೆಳಕಿಗೆ ಬಂದಿದೆ.ಮತದಾನದ ವಿವರ \ No newline at end of file diff --git a/eesanje/url_46_173_1.txt b/eesanje/url_46_173_1.txt new file mode 100644 index 0000000000000000000000000000000000000000..79608327d90b1cc871a36acb581ec4c2cdf58c1b --- /dev/null +++ b/eesanje/url_46_173_1.txt @@ -0,0 +1,5 @@ +2026ಕ್ಕೆ ಬೆಂಗಳೂರಲ್ಲಿ ಆರಂಭವಾಗಲಿದೆ ಏರ್ ಟ್ಯಾಕ್ಸಿ ಸೇವೆ +ಬೆಂಗಳೂರು,ಏ.22-ಸಿಲಿಕಾನ್ ಸಿಟಿಯಲ್ಲಿ ಮುಂಬರುವ 2026ರಲ್ಲಿ ಎಲೆಕ್ಟ್ರಿಕಲ್ ಏರ್ ಟ್ಯಾಕ್ಸಿ ಸೇವೆ ಆರಂಭವಾಗಲಿದೆ. ಇಂಡಿಗೋದ ಪ್ರವರ್ತಕ ಸಮೂಹದ ಇಂಟರ್‍ಗ್ಲೋಬ್ ಎಂಟರ್‍ಪ್ರೈಸಸ್ ಸಂಸ್ಥೆ ಏರ್ ಟ್ಯಾಕ್ಸಿ ಸೇವೆ ಆರಂಭಿಸಲು ನಿರ್ಧರಿಸಿದೆ. +ನಗರದಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸುವ ಉದ್ದೇಶದಿಂದ ಇಂಟರ್‍ಗ್ಲೋಬ್ ಸಂಸ್ಥೆ ಹಾಗೂ ಅಮೆರಿಕ ಮೂಲದ ಆರ್ಚರ್ ಏವಿಯೇಷನ್ ಸಂಸ್ಥೆಗಳು ನಗರದಲ್ಲಿ ಮ್ಯಾಪಿಂಗ್ ಕಾರ್ಯ ನಡೆಸುತ್ತಿವೆ. +ಮೊದಲ ಹಂತದಲ್ಲಿ ದೆಹಲಿಯಲ್ಲಿ ಏರ್ ಟ್ಯಾಕ್ಸಿ ಸೇವೆ ಆರಂಭಿಸಲಾಗುತ್ತಿದ್ದು ನಂತರ ಸಿಲಿಕಾನ್ ಸಿಟಗೂ ಆ ಸೇವೆಯನ್ನು ವಿಸ್ತರಿಸಲಾಗುವುದು ಎಂದು ತಿಳಿದುಬಂದಿದೆ. ಸರ್ಜಾಪುರ, ಐಟಿಪಿಎಲ್, ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಏರ್ ಟ್ಯಾಕ್ಸಿ ನಿಲ್ದಾಣಗಳ ಗುರುತು ಕಾರ್ಯ ನಡೆಸಲಾಗುತ್ತಿದ್ದ ಡ್ರೋಣ್ ಮಾದರಿಯಲ್ಲಿರುವ ಏರ್ ಟ್ಯಾಕ್ಸಿ ಸೇವೆ ಆರಂಭಿಸಲಾಗುವುದು ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ಏರ್ ಟ್ಯಾಕ್ಸಿ ನಿಲ್ದಾಣ ಹಾಗೂ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವ ಪ್ರದೇಶಗಳ ಗುರುತು ಹಾಕಲಾಗಿದ್ದು, ಏರ್ ಪೋರ್ಟ್ ಗೆ ಏರ್ ಟ್ಯಾಕ್ಸಿಯಲ್ಲಿ ತೆರಳುವವರಿಗೆ 2 ಸಾವಿರಂದ 2,500 ರೂಪಾಯಿ ದರ ನಿಗದಿಪಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.ಉದ್ದೇಶಿತ ಏರ್ ಟ್ಯಾಕ್ಸಿ ಸೇವೆ ಆರಂಭವಾದರೆ ಕೇವಲ 6 ನಿಮಿಷದೊಳಗೆ ಏರ್ ಪೋರ್ಟ್ ಗೆ ತಲುಪಬಹುದಾಗಿದೆ. \ No newline at end of file diff --git a/eesanje/url_46_173_10.txt b/eesanje/url_46_173_10.txt new file mode 100644 index 0000000000000000000000000000000000000000..0fafcaa7d21b65eaab85116d29f16b2249000a91 --- /dev/null +++ b/eesanje/url_46_173_10.txt @@ -0,0 +1,5 @@ +ಇಂಡಿ ಮೈತ್ರಿಕೂಟದಲ್ಲಿ ಮಿತ್ರರು ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ : ದೇವೇಗೌಡರು +ಬೆಂಗಳೂರು,ಏ.21-ಕಾಂಗ್ರೆಸ್ ನೇತೃತ್ವದ ಇಂಡಿ ಮೈತ್ರಿಕೂಟ ಪ್ರಹಸನವಲ್ಲದೆ, ಬೇರೇನೂ ಅಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಟೀಕಿಸಿದ್ದಾರೆ.ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ. ಅದರಲ್ಲಿ ಮೈತ್ರಿಕೂಟದ ಸ್ಥಿತಿ ಯಾವ ಮಟ್ಟದಲ್ಲಿದೆ ಎಂಬುದನ್ನು ಸ್ಪಷ್ಟವಾಗಿ ವರದಿ ಮಾಡಿದಂತಿದೆ. +ಪತ್ರಿಕೆಗಳ ಮುಖ್ಯಾಂಶಗಳನ್ನು ಗಮನಿಸಿದಾಗ ಇಂಡಿ ಮೈತ್ರಿಕೂಟದ ಮಿತ್ರರ್ಯಾರು, ಶತ್ರುಗಳ್ಯಾರು ಎಂಬುದು ಅವರಿಗೇ ಗೊತ್ತಿಲ್ಲ ಎಂಬಂತಾಗಿದೆ ಎಂದು ತಿಳಿಸಿದ್ದಾರೆ. ಪತ್ರಿಕೆಗಳಲ್ಲಿ ವರದಿಯಾಗುತ್ತಿರುವ ಪ್ರಮುಖಾಂಶಗಳನ್ನು ತಮ್ಮ ಪೋಸ್ಟ್ ನ ಜೊತೆ ಗೌಡರು ಟ್ಯಾಗ್ ಮಾಡಿ ಟೀಕಿಸಿದ್ದಾರೆ. +ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳ ನಾಯಕರೇ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿರುವುದನ್ನು ಗಮನಿಸಿ ಗೌಡರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. + . . . ’ . .@@##../f26qR5Bxwm \ No newline at end of file diff --git a/eesanje/url_46_173_11.txt b/eesanje/url_46_173_11.txt new file mode 100644 index 0000000000000000000000000000000000000000..703b224c122bf44a01c5f97a7adeb2ad8dabee71 --- /dev/null +++ b/eesanje/url_46_173_11.txt @@ -0,0 +1,6 @@ +ಶೀಘ್ರದಲ್ಲೇ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ +ಬೆಂಗಳೂರು,ಏ.21-ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪ್ರಶ್ನೆಪತ್ರಿಕೆಗಳಿಗೆ ಆಕ್ಷೇಪಣೆ ಸಲ್ಲಿಸಲು ಏ.27 ರ ಸಂಜೆ 5.30 ರವರೆಗೆ ಕಾಲಾವಕಾಶ ನೀಡಲಾಗಿದೆ. ಸಿಇಟಿಯ ಪ್ರಶ್ನೆಪತ್ರಿಕೆಗಳಿಗೆ ಸದ್ಯದಲ್ಲೇ ಕೀ ಉತ್ತರಗಳನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಗಳು ತಿಳಿಸಿವೆ. +ಏ.18 ಮತ್ತು 19 ರಂದು ನಡೆದ ಜೀವಶಾಸ್ತ್ರ ಮತ್ತು ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಅಭ್ಯರ್ಥಿಗಳು ಇ-ಮೇಲ್ ಮೂಲಕ ಕೆಇಎ ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆಪತ್ರಿಕೆಯ ಪ್ರಶ್ನೆಗಳ ಸಂಖ್ಯೆ, ವಿವರಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. +ಸಿಇಟಿ ಪರೀಕ್ಷೆ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಪಿಯುಸಿ ಪಠ್ಯಕ್ರಮದಲ್ಲಿ ಇಲ್ಲದಂತಹ ಪ್ರಶ್ನೆಗಳನ್ನು ಕೇಳಲಾಗಿದೆ, ಕೆಲವರು ಮರುಪರೀಕ್ಷೆಗೆ ಒತ್ತಾಯಿಸಿದ್ದರೆ, ಮತ್ತೆ ಕಲವರು ಕೃಪಾಂಕ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ನೀಡಿರುವ ಗಡುವು ಮುಗಿದ ನಂತರ ವಿಷಯ ತಜ್ಞರ ಸಭೆ ನಡೆಸಿ ಕೆಇಎ ಮುಂದಿನ ತೀರ್ಮಾನ ಕೈಗೊಳ್ಳುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಏ.18ರಂದು ಜೀವಶಾಸ್ತ್ರ ಮತ್ತು ಗಣಿತ, 19 ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆದಿದ್ದು, ನಿನ್ನೆ ಹೊರನಾಡ ಹಾಗೂ ಗಡಿನಾಡ ಕನ್ನಡಿಗರ ಅಭ್ಯರ್ಥಿಗಳಿಗಾಗಿ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿದೆ. ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆದಿದ್ದಾರೆ. +ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿಕೊಂಡಿದ್ದರು. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 3,18,865 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆ ಬರೆದಿದ್ದರು. \ No newline at end of file diff --git a/eesanje/url_46_173_12.txt b/eesanje/url_46_173_12.txt new file mode 100644 index 0000000000000000000000000000000000000000..de78b9e6b734894f7595d49c24287c3a5af6efe9 --- /dev/null +++ b/eesanje/url_46_173_12.txt @@ -0,0 +1,4 @@ +ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಕಾಂಗ್ರೆಸ್ ದೂರು +ಬೆಂಗಳೂರು,ಏ.21-ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದ ಪ್ರಚಾರಕ್ಕಾಗಿ ಆಮಿಷವೊಡ್ಡಿದ್ದಾರೆ ಎಂದು ಕಾಂಗ್ರೆಸ್ ದೂರು ನೀಡಿದೆ. +ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್ ಒಡೆಯರ್‍ರವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವವರೊಂದಿಗೆ ಸಭೆ ನಡೆಸಿದ್ದಾರೆ. ಆ ವೇಳೆ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿದ್ದಾರೆ. +ಉಡುಗೊರೆಗಳ ಜೊತೆಗೆ ಹಣವನ್ನೂ ನೀಡಲಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಲಾಗಿದೆ. ಮತದಾರರಿಗೆ ಹಣ ನೀಡುವುದಷ್ಟೇ ಅಲ್ಲ, ಮತದಾನದ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ಯದುವೀರ್ ಒಡೆಯರ್ ಅವರ ಸಭೆಯಲ್ಲಿ ಭಾಗವಹಿಸಿದ್ದ ಕೆಲವು ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. \ No newline at end of file diff --git a/eesanje/url_46_173_2.txt b/eesanje/url_46_173_2.txt new file mode 100644 index 0000000000000000000000000000000000000000..cd183632f482698e69581e15527ddc361b69bf79 --- /dev/null +++ b/eesanje/url_46_173_2.txt @@ -0,0 +1,7 @@ +ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ +ಬೆಂಗಳೂರು,ಏ.22-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ನಾಲ್ಕೇ ದಿನಗಳು ಬಾಕಿ ಇರುವಂತೆ ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದಾರೆ. +ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ನರಸಿಂಹದತ್ತ ಒಡೆಯರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿರುವ ಡಾ.ಸಿ.ಎನ್.ಮಂಜುನಾಥ್ ಹಾಗೂ ದಕ್ಷಿಣ ಕನ್ನಡದಿಂದ ಮೊದಲ ಬಾರಿಗೆ ಸ್ಪರ್ಧೆ ಮಾಡಿರುವ ಬೃಜೇಶ್ ಚೌತಲ ಅವರಿಗೆ ಖುದ್ದು ಪ್ರಧಾನಿಯೇ ಪತ್ರ ಬರೆದು, ನೀವು ಗೆದ್ದು ಸಂಸತ್ತಿಗೆ ಆಯ್ಕೆಯಾಗುತ್ತೀರಿ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. +ಮೋದಿ ಬರೆದ ಪತ್ರದಲ್ಲೇನಿದೆ?ನನ್ನ ಸಹೋದ್ಯೋಗಿ ಯದುವೀರ್ ಜೀ ಎಂದು ಪತ್ರ ಆರಂಭಸಿರುವ ಮೋದಿ, ಈ ಪತ್ರ ನಿಮಗೆ ಉತ್ತಮ ಆರೋಗ್ಯವನ್ನು ನೀಡುತ್ತೆ ಎಂದು ಭಾವಿಸುವೆ. ನೀವು ನೇರವಾಗಿ ಜನರ ಸೇವೆ ಮಾಡುವ ಮೂಲಕ ಮೈಸೂರಿನ ಒಡೆಯರ ಪರಂಪರೆಯನ್ನು ಮುನ್ನಡೆಸುತ್ತಿರುವುದು ಶ್ಲಾಘನೆ. ಸುಸ್ಥಿರ ಅಭಿವೃದ್ಧಿ, ಶಿಕ್ಷಣಕ್ಕಾಗಿ ನಿಮ್ಮ ಸಮರ್ಪಣೆ ಸ್ಪಷ್ಟವಾಗಿದೆ. ಜನರ ಆಶೀರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ ಎಂಬ ವಿಶ್ವಾಸವಿದೆ. ನಿಮ್ಮಂತಹ ತಂಡದ ಸದಸ್ಯರು ನನಗೆ ದೊಡ್ಡ ಆಸ್ತಿ ಎಂದು ಹೇಳಿದ್ದಾರೆ. +ಒಂದು ತಂಡವಾಗಿ, ನಿಮ್ಮ ಕ್ಷೇತ್ರ ಮತ್ತು ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಜನತೆಗೆ ಇದು ಮಾಮೂಲಿ ಚುನಾವಣೆಯಲ್ಲ ಎಂದು ಹೇಳ ಬಯಸುತ್ತೇನೆ. ಪ್ರತಿಯೊಬ್ಬರಿಗೂ ಉತ್ತಮ ಜೀವನವನ್ನು ಖಚಿತಪಡಿಸಿಕೊಳ್ಳಲು ಈ ಚುನಾವಣೆಯು ನಮ್ಮ ಧ್ಯೇಯದಲ್ಲಿ ನಿರ್ಣಾಯಕವಾಗಿರುತ್ತದೆ. ಬಿಜೆಪಿ ಪಡೆಯುವ ಪ್ರತಿ ಮತವು ಸ್ಥಿರ ಸರ್ಕಾರ ರಚಿಸುವತ್ತ ಸಾಗುತ್ತದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರದ ಪಯಣಕ್ಕೆ ವೇಗ ನೀಡುತ್ತದೆ ಎಂದಿದ್ದಾರೆ. +ಬೇಸಿಗೆ ಬಿಸಿ ಎಲ್ಲರಿಗೂ ಸಮಸ್ಯೆ ಉಂಟುಮಾಡುತ್ತದೆ ಎಂದು ನನಗೆ ತಿಳಿದಿದೆ. ಆದರೆ ಈ ಚುನಾವಣೆ ನಮ್ಮ ದೇಶದ ಭವಿಷ್ಯಕ್ಕೆ ಅತ್ಯಂತ ಮಹತ್ವದ್ದಾಗಿದೆ. ಬಿಸಿಲಿನ ತಾಪಕ್ಕೂ ಮುನ್ನವೇ ಮತದಾರರು ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ. ನನ್ನ ಪ್ರತಿ ಕ್ಷಣವನ್ನು ನನ್ನ ಸಹ ನಾಗರಿಕರ ಕಲ್ಯಾಣಕ್ಕಾಗಿ ಮೀಸಲಿಡುವೆ. ಈ ಭರವಸೆಯನ್ನು ಪ್ರತಿಯೊಬ್ಬರಿಗೆ ತಿಳಿಸಲು ನಿಮ್ಮನ್ನು ಒತ್ತಾಯಿಸುವೆ. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ನನ್ನ ಶುಭಾಶಗಳನ್ನ ಕಳಿಸಿದ್ದೇನೆ ಎಂದು ಯದುವೀರ್ಗೆ ಬರೆದ ಪತ್ರದಲ್ಲಿ ಮೋದಿ ಉಲ್ಲೇಖಿಸಿದ್ದಾರೆ. +ಇದೇ ರೀತಿ ಡಾ.ಸಿ.ಎನ್.ಮಂಜುನಾಥ್ ಮತ್ತು ಬೃಜೇಶ್ ಚೌತಲಗೆ ಪ್ರಧಾನಿಯವರು ಖುದ್ದು ಪತ್ರ ಬರೆದಿದ್ದು, ಮತದಾರರು ನಿಮ್ಮನ್ನು ಎರಡೂ ಕ್ಷೇತ್ರಗಳಲ್ಲಿ ಆಯ್ಕೆ ಮಾಡಲಿದ್ದಾರೆ. ಜನರ ನಿರೀಕ್ಷೆಗಳು ಹುಸಿಯಾಗದಂತೆ ಅವರ ಸೇವೆಗೆ ಸಿದ್ಧರಾಗಿ ಎಂದು ಕರೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_173_3.txt b/eesanje/url_46_173_3.txt new file mode 100644 index 0000000000000000000000000000000000000000..63cc818e9e5ffcadc9101144d8e7e95ca49f0ba8 --- /dev/null +++ b/eesanje/url_46_173_3.txt @@ -0,0 +1,8 @@ +ಬೆಂಗಳೂರು ಗ್ರಾಮಾಂತರವನ್ನು ಅತೀಸೂಕ್ಷ್ಮ ಕ್ಷೇತ್ರ ವೆಂದು ಪರಿಗಣಿಸುವಂತೆ ಆಯೋಗ ಸೂಚನೆ +ಬೆಂಗಳೂರು,ಏ.22-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಪ್ರತಿಷ್ಠಿತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸುವಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. +ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಅತೀಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸಲಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಗಳನ್ನೂ ತೆಗೆದುಕೊಳ್ಳಬೇಕೆಂದು ಉಪ ಮುಖ್ಯ ಚುನಾವಣಾಧಿಕಾರಿ ನವೀನ್ ಜೋಸೆಫ್ ಎ. ಅವರು ರಾಮನಗರ ಚುನಾವಣಾಧಿಕಾರಿಗೆ ಸೂಚನೆ ನೀಡಿದ್ದಾರೆ. +ಕೆಲ ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ಬಿಜೆಪಿ ಚುನಾವಣಾ ಏಜೆಂಟ್ ಪದ್ಮನಾಭ ಜಿ.ವಿ. ಅವರು ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದರು. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಆಡಳಿತಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯವುದು ಅನಿವಾರ್ಯವಾಗಿದೆ. +ರಾಷ್ಟ್ರೀಯ ಪಕ್ಷಗಳಿಂದ ಪ್ರಬಲ ಅಭ್ಯರ್ಥಿಗಳು ಸ್ಪರ್ಧಿಸಿರುವ ಕಾರಣ ಈ ಕ್ಷೇತ್ರವನ್ನು ಅತೀಸೂಕ್ಷ್ಮವೆಂದು ಪರಿಗಣಿಸಿ ಎಲ್ಲಿ ಅಗತ್ಯವಿದೆಯೋ ಅಂತಹ ಕಡೆ ಸೇನಾಪಡೆ, ಅರೆಸೇನಾಪಡೆ, ಕ್ಷಿಪ್ರಪಡೆ ಸೇರಿದಂತೆ ಮತ್ತಿತರ ಭದ್ರತಾ ಪಡೆಗಳನ್ನು ನಿಯೋಜಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದರು. +ಈ ಪತ್ರವನ್ನು ಮುಖ್ಯ ಚುನಾವಣಾ ಆಯುಕ್ತರಿಗೆ ರವಾನಿಸಲಾಗಿತ್ತು. ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿದ ಆಯೋಗ ಅತೀಸೂಕ್ಷ್ಮ ಎಂದು ಪರಿಗಣಿಲುಸ ನಿರ್ದೇಶನ ನೀಡಿತ್ತು. ಇದೀಗ ಗ್ರಾಮಾಂತರ ಕ್ಷೇತ್ರವು ಅತೀ ಸೂಕ್ಷ್ಮ ಕ್ಷೇತ್ರವೆಂದು ಘೋಷಣೆಯಾಗಿರುವುದರಿಂದ ಮತದಾನಕ್ಕೂ ಮುನ್ನ ಕ್ಷೇತ್ರದಾದ್ಯಂತ ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜನೆ ಮಾಡಲಾಗುತ್ತದೆ. +ಮೂಲಗಳ ಪ್ರಕಾರ, ಒಂದೆರೆಡು ದಿನಗಳಲ್ಲಿ ಸಿಐಎಸ್‍ಎಫ್, ಸಿಆರ್‍ಪಿಎಫ್, ಆರ್‍ಎಎಫ್ ಹಾಗೂ ಸ್ಥಳೀಯ ಪೊಲೀಸರನ್ನು ಕೂಡ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_173_4.txt b/eesanje/url_46_173_4.txt new file mode 100644 index 0000000000000000000000000000000000000000..bc8d1e3fc8337bed2a40a01657a7e46bdf6744e5 --- /dev/null +++ b/eesanje/url_46_173_4.txt @@ -0,0 +1,5 @@ +ಕಾಟನ್‍ಪೇಟೆ ಕಾರಿನಲ್ಲಿ ಸಿಕ್ಕ 2 ಕೋಟಿ ರೂ.ಹಣಕ್ಕೆ ಬಿಜೆಪಿ ಲಿಂಕ್ +ಬೆಂಗಳೂರು,ಏ.22-ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ವೇಳೆ ಕಾರಿನಲ್ಲಿ 2 ಕೋಟಿ ರೂಪಾಯಿ ಹಣ ಪತ್ತೆ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣ ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆಯಾಗಿದ್ದು, ಹಣ ಜಪ್ತಿ ಮಾಡಿಕೊಂಡ ಇಲಾಖೆ ತನಿಖೆ ಚುರುಕುಗೊಳಿಸಿದೆ. +ಕಳೆದ ಶನಿವಾರ ಮಧ್ಯಾಹ್ನ ಕಾಟನ್‍ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುವಾಗ ಕಾರಿನಲ್ಲಿ 2 ಕೋಟಿ ಹಣ ಪತ್ತೆ ಹಿನ್ನೆಲೆ ಚುನಾವಣಾಧಿಕಾರಿ ರವಿ ಅಸೂತಿ ಎಂಬುವರು ನೀಡಿದ ದೂರಿನ ಮೇರೆಗೆ ರಾಜ್ಯ ಬಿಜೆಪಿ ಕಾರ್ಯಾಲಯದ ಕಾರ್ಯದರ್ಶಿ ಲೊಕೇಶ್ ಅಂಬೆಕಲ್ , ಹಣ ಸಾಗಿಸುತ್ತಿದ್ದ ವೆಂಕಟೇಶ್ ಪ್ರಸಾದ್ ಹಾಗೂ ಗಂಗಾಧರ್ ಎಂಬುವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಐಟಿ ಅಧಿಕಾರಿಗಳು ಮಾಹಿತಿ ಮೇರೆಗೆ ಹಣ ಜಪ್ತಿ ಮಾಡಿಕೊಂಡಿದ್ದು, ಇಬ್ಬರು ಆರೋಪಿತರನ್ನು ಹೆಚ್ಚಿನ ವಿಚಾರಣೆ ನಡೆಸಲು ನೊಟೀಸ್ ಜಾರಿ ಮಾಡಿದ್ದಾರೆ. +ಕೋದಂಡರಾಮಪುರ ಕೆನೆರಾ ಬ್ಯಾಂಕಿನಲ್ಲಿ ಕಳೆದ ಮಾರ್ಚ್ 27ರಂದು 5 ಕೋಟಿ ರೂಪಾಯಿ ಹಣ ವಿತ್ ಡ್ರಾ ಮಾಡಲಾಗಿದ್ದು, ಈ ಪೈಕಿ 2 ಕೋಟಿ ಹಣವನ್ನು ಮೈಸೂರು – ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ಬೂತ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕ್ರಮಗಳಿಗೆ ಹಣ ಹಂಚಲು ಹೋಗುತ್ತಿರುವುದಾಗಿ ಆರೋಪಿತರು ಪ್ರಾಥಮಿಕ ತನಿಖೆಯಲ್ಲಿ ಒಪ್ಪಿಕೊಂಡಿದ್ದರು. +ಈ ವೇಳೆ, ಪತ್ತೆಯಾದ ಪತ್ರದಲ್ಲಿ ಮೇಲಿನ ಲೋಕಸಭಾ ಕ್ಷೇತ್ರಗಳ ಬೂತ್ ಮಟ್ಟದ ಕಾರ್ಯಕರ್ತರಿಗೆ ಹಣ ಹಂಚಲು ವೆಂಕಟೇಶ್ ಮೂಲಕ ಹಣ ಸಾಗಿಸುತ್ತಿರುವ ಬಗ್ಗೆ ಉಲ್ಲೇಖವಾಗಿತ್ತು ಎಂದು ಚುನಾವಣಾಧಿಕಾರಿಗಳು ದೂರಿನಲ್ಲಿ ವಿವರಿಸಿದ್ದಾರೆ. ಈ ಸಂಬಂಧ ಪೊಲೀಸರ ಸಮಕ್ಷಮದಲ್ಲಿ ಹಣ ಎಣಿಕೆ ಮಾಡಿ ವಶಕ್ಕೆ ಪಡೆದುಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ. \ No newline at end of file diff --git a/eesanje/url_46_173_5.txt b/eesanje/url_46_173_5.txt new file mode 100644 index 0000000000000000000000000000000000000000..7d6419d93584b566dd858ffbde2401e727291e45 --- /dev/null +++ b/eesanje/url_46_173_5.txt @@ -0,0 +1,6 @@ +ಕೊನೆಗೂ ನಾಮಪತ್ರ ಹಿಂಪಡೆಯಲು ದಿಂಗಾಲೇಶ್ವರ ಸ್ವಾಮೀಜಿ ಸಮ್ಮತಿ +ಬೆಂಗಳೂರು,ಏ.22-ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ಕೊನೆಗೂ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ. ಹಿರಿಯ ಮಠಾಧೀಶರೊಬ್ಬರ ಮನವೊಲಿಕೆ ಹಾಗೂ ರಾಜ್ಯದ ಪ್ರಭಾವಿ ಹಿರಿಯ ಲಿಂಗಾಯತ ಸಮುದಾಯದ ನಾಯಕರ ಮಧ್ಯಪ್ರವೇಶದಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ಮುಂದಾಗಿದ್ದಾರೆ. +ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ಸಮುದಾಯದವರ ಮಾತಿಗೆ ಕಟಿಬಿದ್ದು ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆಯುವುದಾಗಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಸಮುದಾಯದ ಜೊತೆಗೆ ಭಕ್ತರ ವಿರೋಧವನ್ನು ಎದುರು ಹಾಕಿಕೊಳ್ಳಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ದೂರವಾಣಿಯಲ್ಲಿ ಸಂಪರ್ಕಿಸಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. +ನನಗೆ ಈಗಲೂ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಮೇಲೆ ಇರುವ ಅಸಮಾಧಾನ ಸ್ವಲ್ಪವೂ ಕಡಿಮೆಯಾಗಿಲ್ಲ. ಆದರೆ ನೀವು ಮತ್ತು ನಿಮ್ಮ ಕುಟುಂಬದವರು ಮಠದ ಬಗ್ಗೆ ಇಟ್ಟುಕೊಂಡಿರುವ ಗೌರವದಿಂದ ನಿಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ಹಿಂಪಡೆಯುತ್ತಿದ್ದೇನೆ. ಮುಂದಿನ ದಿನಗಳಲ್ಲಾದರೂ ಪ್ರಹ್ಲಾದ್ ಜೋಷಿಗೆ ನಮ್ಮ ಸಮುದಾಯದ ವಿರುದ್ಧ ಷಡ್ಯಂತ್ರ್ಯ ನಡೆಸುವುದು ಇಲ್ಲವೇ ಎರಡು ಮತ್ತು ಮೂರನೇ ಹಂತದ ನಾಯಕರನ್ನು ತುಳಿಯುವ ಪ್ರವೃತ್ತಿ ಬಿಡುವಂತೆ ಸೂಚನೆ ನೀಡಿ ಎಂದು ಸ್ವಾಮೀಜಿ ಹೇಳಿದ್ದಾರೆ. +ಉಳಿದ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ, ಮೊದಲು ನೀವು ನಾಮಪತ್ರ ಹಿಂಪಡೆಯಿರಿ. ಚುನಾವಣೆ ಮುಗಿದ ಬಳಿಕ ಇಬ್ಬರನ್ನೂ ಪರಸ್ಪರ ಭೇಟಿ ಮಾಡಿಸಿ ಸಮಸ್ಯೆ ಇತ್ಯರ್ಥಪಡಿಸುವ ಆಶ್ವಾಸನೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ಇದೇ ವೇಳೆ ಧಾರವಾಡ ಮೂಲದ ಹಿರಿಯ ಸ್ವಾಮೀಜಿಯೊಬ್ಬರು ಮಧ್ಯಪ್ರವೇಶಿಸಿ ನೀವು ಚುನಾವಣೆಗೆ ಸ್ಪರ್ಧಿಸುವುದಾದರೆ ನಮ್ಮ ಅಭ್ಯಂತರವಿಲ್ಲ. ಮೊದಲು ಪೀಠ ತ್ಯಾಗ ಮಾಡಿ, ಇಲ್ಲವೇ ಭಕ್ತರ ಗೌರವಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಿ ಎಂದು ಸೂಚ್ಯವಾಗಿ ಹೇಳಿದ್ದಾರೆ. +ಮಠಾೀಧಿಶರಾಗಿ ಕಾವಿ ಧರಿಸಿ ಚುನಾವಣೆಗೆ ಸ್ಪರ್ಧಿಸುವುದು ಸರಿಯಲ್ಲ. ಒಂದು ವೇಳೆ ಸ್ರ್ಪಸಬೇಕೆಂಬ ನಿರ್ಧಾರ ಅಚಲವಾದರೆ, ಪೀಠ ತ್ಯಾಗ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಹಿರಿಯ ಶ್ರೀಗಳು ತಿಳಿ ಹೇಳಿದ್ದಾರೆ. ಅಂತಿಮವಾಗಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_173_6.txt b/eesanje/url_46_173_6.txt new file mode 100644 index 0000000000000000000000000000000000000000..21025ae6967efcf442ac3365f2d73ac602ec6b4c --- /dev/null +++ b/eesanje/url_46_173_6.txt @@ -0,0 +1,6 @@ +ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು +ಮೈಸೂರು, ಏ. 21– ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ವಿಕಲತೇಚನ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕು ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕನ ಅಂತ್ಯಸಂಸ್ಕಾರಕ್ಕೆ ಗ್ರಾಮದಲ್ಲಿ ಅವಕಾಶ ನೀಡದ ಹಿನ್ನಲೆ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಮೃತದೇಹಕ್ಕೆ ಮುಕ್ತಿ ದೊರಕಿಸಿದ್ದಾರೆ. +ಜಿಲ್ಲಾಧಿಕಾರಿಗಳ ಮೌಖಿಕ ಆದೇಶಕ್ಕೆ ತಹಸೀಲ್ದಾರ್ ಗ್ರಾಮಕ್ಕೆ ಭೇಟಿ ನೀಡಿ ಮುಖಂಡರ ಮನ ಒಲಿಸಿ ಅಂತ್ಯಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಯಿತು.ತರಗನಹಳ್ಳಿಯ ವಾಸಿ ಕುಳ್ಳನಾಯಕನ ಕುಟುಂಬದ ಮೇಲೆ ನಾಲ್ಕು ವರ್ಷಗಳ ಹಿಂದೆ ಮುಖಂಡರು ಬಹಿಷ್ಕಾರ ಹೇರಿದ್ದರು. +ಬಹಿಷ್ಕಾರವನ್ನ ತೆರವುಗೊಳಿಸಲು ಕುಳ್ಳನಾಯಕ ಸರ್ಕಾರಿ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದ್ದರು. ತಾಲ್ಲೂಕು ಆಡಳಿತ ಸೂಕ್ತವಾಗಿ ಸ್ಪಂದಿಸಿರಲಿಲ್ಲ.ಕುಳ್ಳನಾಯಕನ ಮಗ ಮಾದೇಶ ಮೃತಪಟ್ಟಿದ್ದಾನೆ.ಅಂತ್ಯಸಂಸ್ಕಾರ ಮಾಡಲು ಗ್ರಾಮದಲ್ಲಿ ಅವಕಾಶ ನೀಡಿಲ್ಲ ಹಾಗೂ ಯಾರೂ ಸಹ ಮುಂದೆ ಬಂದಿಲ್ಲ.ಇದರಿಂದ ನೊಂದ ಕುಳ್ಳನಾಯಕ ಮಗನ ಮೃತದೇಹವನ್ನ ಜಿಲ್ಲಾಧಿಕಾರಿಗಳ ಕಚೇರಿಗೆ ಕೊಂಡೊಯ್ಯಲು ಮುಂದಾಗಿದ್ದಾನೆ. +ಈ ಮಾಹಿತಿ ಅರಿತ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕುಳ್ಳನಾಯಕನ ಪರಿಸ್ಥಿತಿ ಅರಿತು ಕೂಡಲೇ ತಹಸೀಲ್ದಾರ್ ಗೆ ಸೂಚನೆ ನೀಡಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.ಎಚ್ಚೆತ್ತ ತಹಸೀಲ್ದಾರ್ ಗ್ರಾಮದ ಮುಖಂಡರ ಮನ ಒಲಿಸಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಿದ್ದಾರೆ. +21 ನೇ ಶತಮಾನಕ್ಕೆ ಕಾಲಿಟ್ಟರೂ ಬಹಿಷ್ಕಾರದ ಪಿಡುಗಿನಿಂದ ಹೊರಬರಲು ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳ ಮಧ್ಯ ಪ್ರವೇಶದಿಂದ ಸಧ್ಯ ಅಂತ್ಯಕ್ರಿಯೆ ನಡೆಸಲಾಗಿದ್ದು ಮೃತದೇಹಕ್ಕೆ ಮುಕ್ತಿ ನೀಡಲಾಗಿದೆ. \ No newline at end of file diff --git a/eesanje/url_46_173_7.txt b/eesanje/url_46_173_7.txt new file mode 100644 index 0000000000000000000000000000000000000000..7d028355eb5bb15052f68e23c064681fcc08434a --- /dev/null +++ b/eesanje/url_46_173_7.txt @@ -0,0 +1,7 @@ +ರಾಜ್ಯ ಸರ್ಕಾರವೇ ಜಿಹಾದ್ ಪರ ನಿಂತಿದೆ : ಜೋಶಿ +ಹುಬ್ಬಳ್ಳಿ,ಏ.21-ರಾಜ್ಯ ಸರ್ಕಾರವೇ ಲವ್ ಜಿಹಾದ್ ಪರ ನಿಂತಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಯಾವುದೇ ಹಂತಕ್ಕೆ ಬೇಕಾದರೂ ಇಳಿಯುತ್ತದೆ ಎಂದು ಕೇಂದ್ರ ಸಂಸ ದೀಯ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು. +ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಮತ್ತು ಸಮಾಜ ಇಚ್ಛೆತ್ತುಕೊಳ್ಳಬೇಕು, ಬಹಳ ಜಾಗ್ರತೆಯಿಂದ ಇರಬೇಕು ಎಂದು ಸಲಹೆ ಮಾಡಿದರು. ಸಿಎಂ, ಡಿಸಿಎಂ, ಗೃಹ ಸಚಿವರು ತುಷ್ಟಿಕರಣದ ನೀತಿಯಿಂದಾಗಿ ಹೇಗೆಲ್ಲ ಮಾಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. +ನೇಹಾ ಕನ್ವರ್ಟ್ ಗೆ ಯತ್ನ:ನೇಹಾಳನ್ನು ಕನ್ವರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ ಆಕೆ ಒಪ್ಪಿರಲಿಲ್ಲ ಎಂಬುದನ್ನು ಆಕೆ ತಂದೆಯೇ ಹೇಳಿದ್ದಾರೆ ಎಂದು ಸಚಿವ ಜೋಶಿ ತಿಳಿಸಿದರು. ಆರೋಪಿ ಫಯಾಜ್ ನೇಹಾಳನ್ನು ಕನ್ವರ್ಟ್ ಮಾಡಿ ಮದುವೆ ಮಾಡಿಕೊಳ್ಳಲು ನೋಡಿದ್ದಾನೆ. ಇದಕ್ಕೆ ನೇಹಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ಒಪ್ಪದಿದ್ದಾಗ ಅಂತಿಮವಾಗಿ ಹತ್ಯೆ ಕೃತ್ಯ ವೆಸಗಿದ್ದಾನೆ ಎಂದು ನೇಹಾಳ ತಂದೆ ನಿರಂಜನ್ ಹಿರೇಮಠ್ ಅವರೇ ನನ್ನೆದುರು ಮಾತ್ರವಲ್ಲಾ ಬಹಿರಂಗವಾಗೇ ಹೇಳಿದ್ದಾರೆ ಎಂದರು ಸಚಿವ ಜೋಶಿ. +ಜನಸಾಮಾನ್ಯರ ಗತಿ ಏನು:ಕಾಂಗ್ರೆಸ್ ಕಾರ್ಪೊರೇಟರ್ ಆದ ನನ್ನ ಮಗಳ ಘಟನೆಯಲ್ಲೇ ಹೀಗೆ ವರ್ತಿಸುತ್ತಿದ್ದೀರಿ. ಇನ್ನು ಜನ ಸಾಮಾನ್ಯರ ಗತಿ ಏನು? ನಿರಂಜನ್ ಅವರೇ ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಅಂಥ ದುಸ್ಥಿತಿಗೆ ತಂದಿದ್ದಾರೆ ಎಂದು ಜೋಶಿ ಹರಿ ಹಾಯ್ದರು. +ಕಾಂಗ್ರೆಸ್ನವರಿಗೆ ಕರುಣೆಯೇ ಇಲ್ಲ:ನೇಹಾಳನ್ನು ಹಾಡಹಗಲೇ ಒಂಬತ್ತು-ಹತ್ತು ಬಾರಿ ಚೂರಿ ಇರಿದು ಹತ್ಯೆಗೈದ ದೃಶ್ಯ ನೋಡಿದರೂ ಈ ಕಾಂಗ್ರೆಸ್ಸಿಗರಿಗೆ ಕರುಣೆಯೇ ಇಲ್ಲ. ನೇಹಾಳ ಕುಟುಂಬಕ್ಕೆ ನ್ಯಾಯ ಕೊಡಬೇಕು ಎಂಬ ಕಿಂಚಿತ್ತೂ ಜವಾಬ್ದಾರಿ ಇಲ್ಲ ಎಂದು ಸರ್ಕಾರದ ವಿರುದ್ಧ ಜೋಶಿ ಕಿಡಿ ಕಾರಿದರು. +ತುಷ್ಟಿಕರಣ ಮಿತಿಮೀರಿದೆ:ಡಿಜೆ ಹಳ್ಳಿ-ಕೆಜೆ ಹಳ್ಳಿ, ರಾಮೇಶ್ವರ್ ಕೆಫೇ ಬಾಂಬ್ ಸೋಟ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ಉಡುಪಿಯ ಟಾಯ್ಲೆಟ್ ಒಳಗೆ ಕ್ಯಾಮರಾ ಇಟ್ಟ ಪ್ರಕರಣ ಹೀಗೆ ಎಲ್ಲಾ ಘಟನೆಗಳಲ್ಲೂ ಇವರ ತುಷ್ಟಿಕರಣ ನೀತಿ ಮಿತಿಮೀರಿದೆ. ಇದರಿಂದಾಗಿ ಜನರ ಆಕ್ರೋಶ ಮುಗಿಲು ಮುಟ್ಟಿದೆ ಎಂದು ಎಚ್ಚರಿಸಿದರು. \ No newline at end of file diff --git a/eesanje/url_46_173_8.txt b/eesanje/url_46_173_8.txt new file mode 100644 index 0000000000000000000000000000000000000000..2734edc6bb3ca362bb1f00521708b6406c6b5379 --- /dev/null +++ b/eesanje/url_46_173_8.txt @@ -0,0 +1,10 @@ +ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತಷ್ಟು ಹೆಚ್ಚಾದ ನಾಯಕರ ಪ್ರಚಾರದ ಅಬ್ಬರ +ಬೆಂಗಳೂರು,ಏ.21-ಲೋಕಸಭಾ ಮಹಾಸಮರ ದಲ್ಲಿ ರಾಜ್ಯದ ಮೊದಲ ಅಧ್ಯಾಯಕ್ಕೆ ಬಹಿರಂಗ ಪ್ರಚಾರ ಇನ್ನು ಮೂರು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳೂ ರಣಕಣದಲ್ಲಿ ಆರ್ಭಟಿಸುತ್ತಿದ್ದು, ಮತದಾರರ ಮನಸ್ಸು ಗೆಲ್ಲಲು ಬೆವರಿಳಿಸುತ್ತಿದ್ದಾರೆ. ಕಳೆದೆರಡು ದಿನಗಳಿಂದ ಕೆಲವು ಕಡೆ ಸಣ್ಣಪುಟ್ಟ ಮಳೆಯಾಗಿದ್ದರೂ ಬಿಸಿಲಿನ ಝಳ ತಗ್ಗಿಲ್ಲ. +ಬೇಸಿಗೆಯ ಉಷ್ಣಾಂಶಕ್ಕಿಂತಲೂ ರಾಜಕೀಯದ ಕಾವು ದಿನೇದಿನೇ ಏರುತ್ತಿದೆ. ಏ.24 ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವುದರಿಂದಾಗಿ ಪ್ರತಿಯೊಬ್ಬ ನಾಯಕರೂ ತಮಗೆ ನಿಯೋಜಿಸಿದ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರಮೋದಿ ನಿನ್ನೆ ರಾಜ್ಯಕ್ಕೆ ಭೇಟಿ ನೀಡಿ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿ ತೆರಳಿದ್ದಾರೆ. +ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹುಬ್ಬಳ್ಳಿಗೆ ಭೇಟಿ ನೀಡುತ್ತಿದ್ದು,ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪರವಾಗಿ ಮತ ಯಾಚಿಸಲಿದ್ದಾರೆ. ಜೊತೆಗೆ ಇತ್ತೀಚೆಗಷ್ಟೇ ಕೊಲೆಯಾದ ನೇಹಾ ಹಿರೇಮಠ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. +ಕಾಂಗ್ರೆಸ್ ಸರ್ಕಾರ ಚೊಂಬು ಜಾಹೀರಾತಿನ ಮೂಲಕ ಬಿಜೆಪಿಗೆ ಮುಜುಗರ ಉಂಟುಮಾಡಿದ್ದು, ಇದಕ್ಕೆ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಪತ್ರಿಕಾಗೋಷ್ಠಿ ನಡೆಸಿ ಠಕ್ಕರ್ ನೀಡಿದ್ದಾರೆ.ಯಡಿಯೂರಪ್ಪ ಅವರು ಪತ್ರಿಕಾಗೋಷ್ಠಿಯ ಬಳಿಕ ವಿಶ್ರಾಂತಿ ಪಡೆಯದೆ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ತೆರಳಲಿದ್ದು, ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗಕ್ಕೆ ಪ್ರವಾಸ ಬೆಳೆಸಲಿದ್ದಾರೆ. ಎರಡೂ ಕಡೆ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತಯಾಚನೆ ನಡೆಸಲಿದ್ದಾರೆ. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪರವಾಗಿ ಮತಪ್ರಚಾರ ನಡೆಸಲಿದ್ದಾರೆ. +ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈಸೂರು ನಗರ, ಎಚ್.ಡಿ.ಕೋಟೆ, ನಂಜನಗೂಡು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಇಂದು ಪ್ರಚಾರ ನಡೆಸಿದ್ದಾರೆ.ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವಿಜಯನಗರ, ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಪ್ರಚಾರ ನಡೆಸಿದರು. +ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ ಕೋಲಾರ ಲೋಕಸಭಾ ಕ್ಷೇತ್ರದ ಬಂಗಾರಪೇಟೆ, ಶಿಡ್ಲಘಟ್ಟದಲ್ಲಿ ರೋಡ್ ಶೋ ನಡೆಸಿ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ-2 ಅನ್ನು ಮುಂದುವರೆಸಲಿದ್ದಾರೆ.ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಚುನಾವಣೆ ನಡೆಯಲಿದೆ. +ಈ ಕ್ಷೇತ್ರಗಳಲ್ಲಿ ಹೆಚ್ಚಿನ ಮತ ಸೆಳೆಯಲು 3 ಪಕ್ಷಗಳು ಆಕ್ರಮಣಕಾರಿ ಪ್ರಚಾರ ತಂತ್ರಗಳನ್ನು ಅನುಸರಿಸುತ್ತಿವೆ.ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಕೇಂದ್ರದ ವಿರುದ್ಧ ತಾರತಮ್ಯದ ಅಸ್ತ್ರ ಪ್ರಯೋಗಿಸಿದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಸರ್ಕಾರ ಕಾನೂನು ಸುವ್ಯವಸ್ಥೆ ನಿರ್ವಹಣೆ, ಬರ ನಿರ್ವಹಣೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ವೈಫಲ್ಯ ಕಂಡಿದೆ ಎಂದು ವಾಗ್ದಾಳಿ ನಡೆಸುತ್ತಿವೆ. +ಕೇಂದ್ರ ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮದ ನಡುವೆಯೂ ಅಲ್ಲಲ್ಲಿ ಅಪಾರ ಪ್ರಮಾಣದ ನಗದು, ಉಡುಗೊರೆಗಳು ಹಾಗೂ ಇತರ ವಸ್ತುಗಳು ಕೋಟ್ಯಂತರ ರೂ. ಲೆಕ್ಕದಲ್ಲಿ ಪತ್ತೆಯಾಗುತ್ತಲೇ ಇವೆ. ಉತ್ತರ ಕರ್ನಾಟಕ ಭಾಗ ಹಾಗೂ ಮಲೆನಾಡು ಪ್ರದೇಶದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದ್ದು, ಮೊದಲ ಹಂತದ ಬಳಿಕ ಸ್ವಲ್ಪ ಸಮಯ ವಿಶ್ರಾಂತಿ ಪಡೆದು ಸ್ಟಾರ್ ಪ್ರಚಾರಕರು ಮತ್ತೆ ಎರಡನೇ ಹಂತದ ಕ್ಷೇತ್ರಗಳತ್ತ ದಾಂಗುಡಿ ಇಡಬೇಕಾದ ಅನಿವಾರ್ಯತೆ ಎದುರಾಗಿದೆ. \ No newline at end of file diff --git a/eesanje/url_46_173_9.txt b/eesanje/url_46_173_9.txt new file mode 100644 index 0000000000000000000000000000000000000000..dd29a517676e4b356b9e29da11d9a7e6e4475e90 --- /dev/null +++ b/eesanje/url_46_173_9.txt @@ -0,0 +1,8 @@ +ಗದಗದಲ್ಲಿ ನಾಲ್ವರ ಭೀಕರ ಕೊಲೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ +ಬೆಂಗಳೂರು, ಏ.21-ಗದಗ್ನ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಿರುವುದು ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಆಸ್ತಿ ವಿಚಾರ ಅಥವಾ ವೈಯಕ್ತಿಕ ಕಾರಣಗಳಿಂದ ಈ ಕೊಲೆ ನಡೆದಿರಬಹುದು ಎಂದು ಶಂಕಿಸಿ ಗದಗ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ. +ಐವರು ಸುಪಾರಿ ಹಂತಕರು ಇವರ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಸಹ ಪೊಲೀಸರಿಗೆ ಗೊತ್ತಾಗಿದೆ. ಪರಾರಿಯಾಗಿರುವ ಹಂತಕರ ಬಂಧನಕ್ಕಾಗಿ ರಚಿಸಲಾಗಿರುವ ಐದು ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಒಂದು ತಂಡ ಮಹಾರಾಷ್ಟ್ರ ಮತ್ತೊಂದು ತಂಡ ಹೈದರಾಬಾದ್ಗೂ ತೆರಳಿವೆ. +ನಾಲ್ವರ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಸುತ್ತೇವೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ. +ಗದಗ ನಗರದ ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಕುಟುಂಬ ವಾಸವಾಗಿದೆ. ಸುನಂದಾ ಬಾಕಳೆ ಪುತ್ರ ಕಾರ್ತಿಕ ಬಾಕಳೆಯ (28) ನಿಶ್ಚಿತಾರ್ಥ ಕಾರ್ಯದ ಹಿನ್ನೆಲೆಯಲ್ಲಿ ಸಂಬಂಧಿಕರಾದ ಪರಶುರಾಮ ಕುಟುಂಬ ಕೊಪ್ಪಳದಿಂದ ಸುನಂದಾ ಬಾಕಳೆ ಮನೆಗೆ ಬಂದಿದ್ದರು. +ಪರಶುರಾಮ ಹಾದಿಮನಿ (55), ಪತ್ನಿ ಲಕ್ಷ್ಮಿ (45) ಮತ್ತು ಪುತ್ರಿ ಆಕಾಂಕ್ಷಾ (16) ಸುನಂದಾ ಬಾಕಳೆ ಮನೆಯಲ್ಲಿ ತಂಗಿದ್ದರು.ಏ.19ರ ರಾತ್ರಿ ಪರಶುರಾಮ ಹಾದಿಮನಿ ಪುತ್ರಿ ಆಕಾಂಕ್ಷಾ ಹುಟ್ಟುಹಬ್ಬವನ್ನು ಸುನಂದಾ ಬಾಕಳೆ ಮನೆಯಲ್ಲಿ ಆಚರಿಸಿ ಎಲ್ಲರೂ ಮಲಗಿದ್ದಾರೆ. ಪರಶುರಾಮ ಕುಟುಂಬ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು. +ಮುಂಜಾನೆ ಪರಶುರಾಮ ಕುಟುಂಬ ಮಲಗಿದ್ದ ಕೋಣೆಯ ಗಾಜಿನ ಕಿಟಕಿಯನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಮೇಲೆ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್ನನ್ನೂ ಕೊಲೆ ಮಾಡಿದ್ದರು. ಬಳಿಕ ದುಷ್ಕರ್ಮಿಗಳು ಮನೆಯ ಮಾಲಿಕ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಲಿ ತಟ್ಟಿದ್ದರು. +ಆದರೆ ದಂಪತಿ ಬಾಗಿಲು ತೆಗೆಯದೆ ಕಳ್ಳರು ಬಂದಿರಬಹುದೆಂದು ಶಂಕಿಸಿ ಪೊಲೀಸರಿಗೆ ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಫೋನ್ ಮಾಡಿದ್ದರು. ನೆರೆಹೊರೆಯವರು ಬರುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದು, ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಬಿಸಾಡಿದ್ದಾರೆ. ಸುದ್ದಿ ತಿಳಿದು ಗದಗ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_174_1.txt b/eesanje/url_46_174_1.txt new file mode 100644 index 0000000000000000000000000000000000000000..5e8e2603689b7e33983db39632c2437cce17d270 --- /dev/null +++ b/eesanje/url_46_174_1.txt @@ -0,0 +1,9 @@ +ಮೋದಿಯವರ ಚೊಂಬು ಶ್ರೀಮಂತರಿಗೆ ಮಾತ್ರ ಅಕ್ಷಯಪಾತ್ರೆ : ಸಿಎಂ ಸಿದ್ದರಾಮಯ್ಯ +ಕೋಲಾರ,ಏ.21-ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಏಕೆ ಬರಲಿಲ್ಲ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. +ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಯಾಚಿಸಿದ ಅವರು, ಖಾಲಿ ಚೊಂಬು ಅಕ್ಷಯ ಪಾತ್ರೆಯಾಗಿದ್ದೇ ಆದರೆ ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಪ್ರಶ್ನಿಸಿದರು. +ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ. ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ದರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ? ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. +ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಎಂದು ಕಿಡಿಕಾರಿದರು. +ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸಕ್ಕೆ ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ, ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು. +ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. +ಬಂಗಾರಪೇಟೆಯಲ್ಲಿ ಸಾರ್ವಜನಿಕ ರೋಡ್ ಶೋ ನಲ್ಲಿ ಕೇಂದ್ರ ಸರ್ಕಾರದ ಖಾಲಿ ಚೊಂಬು ಜೋರು ಸದ್ದು ಮಾಡಿತು. ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಜನತೆ ಚೊಂಬು ಚೊಂಬು ಎಂದು ಕೂಗಿದರು. ಮೋದಿಯವರು ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದಿದ್ದರಲ್ಲಾ , ಎಷ್ಟು ಹಣ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು. +ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೀವಿ ಎಂದಿದ್ದರಲ್ಲಾ , ಎಷ್ಟು ಜನರಿಗೆ ನೇಮಕಾತಿ ಆದೇಶ ಬಂತು ಎಂದು ಕೇಳಿದರು. ಜನತೆ ಚೊಂಬು ಎಂದು ಕೂಗಿದರು . ಕೋಲಾರದಲ್ಲಿ ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ಪಾರ್ಕ್, ಟೌನ್ ಶಿಪ್ ಮಾಡುವ ಬೇಡಿಕೆ ಇದೆ. ಈ ಬಗ್ಗೆ ಸಕಾರಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_174_10.txt b/eesanje/url_46_174_10.txt new file mode 100644 index 0000000000000000000000000000000000000000..ef25d1d6ad44ac9e112ccf2a838436dcdd5ffd4e --- /dev/null +++ b/eesanje/url_46_174_10.txt @@ -0,0 +1,6 @@ +ಪ್ರತಿಪಕ್ಷಗಳು ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ : ಸಿದ್ದು ಟೀಕೆ +ಮೈಸೂರು,ಏ.20-ಪ್ರತಿಪಕ್ಷಗಳು ನೇಹಾ ಕುಲಕರ್ಣಿ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಕುಲಕರ್ಣಿ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು. +ಕೊಲೆಗಾರರನ್ನು ಕೂಡಲೇ ಬಂಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು. +ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ :ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ. ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳಿಂದ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು. +ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ :ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು. +ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚಂಬು ಕೊಟ್ಟಿದೆ :ಕಾಂಗ್ರೆಸ್ನ ಚಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ಕೊಟ್ಟಿರುವ ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚಂಬು ಕೊಟ್ಟಿದೆ ಎಂದು ತಿಳಿಸುವುದಾಗಿದೆ. ದೇಶದ ಜನರಿಗೆ 15 ಲಕ್ಷ ರೂ. ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಯಾವುದೂ ಆಗದಿರುವುದಕ್ಕೆ ಚಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_174_11.txt b/eesanje/url_46_174_11.txt new file mode 100644 index 0000000000000000000000000000000000000000..630d6f722d220ebad23bae8552e148da162f79f6 --- /dev/null +++ b/eesanje/url_46_174_11.txt @@ -0,0 +1,7 @@ +ಐದು ವರ್ಷದಲ್ಲಿ ಸಂಸದರ ಸಾಧನೆ ತೀರಾ ಕಳಪೆ +ಬೆಂಗಳೂರು,ಏ.20-ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ರಾಜ್ಯದ ಎಲ್ಲಾ 28 ಸಂಸದರ ಕಾರ್ಯ ವೈಖರಿ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಈ ಪೈಕಿ ಬಹುತೇಕ ಮಂದಿ ತಮ್ಮ ಅಧಿಕಾರಾವಧಿಯ ಐದು ವರ್ಷಗಳಲ್ಲಿ ಕಳಪೆ ಸಾಧನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. +ಎಲ್ಲ ಸಂಸದರ ಸರಾಸರಿ ಹಾಜರಾತಿ ಶೇ.71ರಷ್ಟಿದೆ ಎಂದು ಸಮೀಕ್ಷೆ ಬಹಿರಂಗಪಡಿಸಿದೆ. ಸಂಸತ್ತಿನಲ್ಲಿ ಅವರ ಹಾಜರಾತಿ, ಕೇಳಿದ ಪ್ರಶ್ನೆಗಳು, ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸುವಿಕೆ ಮತ್ತು ಅವರ ಕ್ಷೇತ್ರಗಳಲ್ಲಿನ ಕಾರ್ಯಕ್ಷಮತೆಯನ್ನು ಸಮೀಕ್ಷೆ ಪರಿಗಣಿಸಿದೆ. +ಸಾಮಾಜಿಕ ವಿಜಾ್ಞನಿಗಳಾದ ಎ.ಆರ್.ವಾಸವಿ ಮತ್ತು ಜಾನಕಿ ನಾಯರ್ ಅವರು ಈ ವಿಶ್ಲೇಷಣೆ ನಡೆಸಿದ್ದಾರೆ. ಡಿ.ಕೆ.ಸುರೇಶ್ (ಬೆಂಗಳೂರು ಗ್ರಾಮಾಂತರ) ಮತ್ತು ಪ್ರಹ್ಲಾದ್ ಜೋಶಿ ಅವರು ಕೋವಿಡ್ ಸಮಯದಲ್ಲಿ ಜನರಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ ಎಂದು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಸಂಸದ ಸದಾನಂದಗೌಡ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಹಾಗೂ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಮತ್ತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ಸದನದಲ್ಲಿ ಪ್ರಶ್ನೆ ಎತ್ತಲಿಲ್ಲ. ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ್ದು ಬಿಟ್ಟರೆ ಅನಂತಕುಮಾರ್ ಹೆಗಡೆ (ಉತ್ತರ ಕನ್ನಡ ಸಂಸದ), ಡಿ.ವಿ.ಸದಾನಂದಗೌಡ, ಜೋಶಿ, ರಮೇಶ್ ಜಿಗಜಿಣಗಿ (ವಿಜಯಪುರ), ಶ್ರೀನಿವಾಸ ಪ್ರಸಾದ್ (ಚಾಮರಾಜನಗರ) ಮತ್ತು ಬಚ್ಚೇಗೌಡ (ಚಿಕ್ಕಬಳ್ಳಾಪುರ) ಚರ್ಚೆಯಲ್ಲಿ ಭಾಗವಹಿಸಲಿಲ್ಲ ಎಂದು ವಿಶ್ಲೇಷಣೆ ಹೇಳಿದೆ. ಮಂಗಳಾ ಅಂಗಡಿ (ಬೆಳಗಾವಿ) ಒಂದು ಚರ್ಚೆಯಲ್ಲಿ ಭಾಗವಹಿಸಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ವಿಮಾನ ಒದಗಿಸುವಂತೆ ಕೋರಿದ್ದರು. +ಹನ್ನೊಂದು ಸಂಸದರು ನಿಯನ್ನು ನಿರ್ದೇಶಿಸುವ ಮೂಲಕ ಅಥವಾ ಸಭೆಗಳಿಗೆ ಹಾಜರಾಗುವ ಮೂಲಕ ಸೀಮಿತ ಕೆಲಸ ಮಾಡಿದ್ದಾರೆ. ಹದಿನೈದು ಮಂದಿ ಸಂಸದರು ನಿರಾಸಕ್ತರು ಎಂದು ಪರಿಗಣಿಸಲಾಗಿದೆ. ತೇಜಸ್ವಿ ಸೂರ್ಯ (ಬೆಂಗಳೂರು ದಕ್ಷಿಣ) ಮತ್ತು ಶ್ರೀನಿವಾಸಪ್ರಸಾದ್ ನೆಗೆಟಿವ್ ರೋಲ್ ನಿರ್ವಹಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. +ರಾಜ್ಯಕ್ಕೆ ಜಿಎಸ್ಟಿ ಕೊಡುಗೆಗಳು ಮತ್ತು ತೆರಿಗೆ ಹಂಚಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುರೇಶ್ ಮತ್ತು ರಾಜ್ಯದಲ್ಲಿ ಜನೌಷದಿ ಕೇಂದ್ರಗಳನ್ನು ಉತ್ತೇಜಿಸಲು ಸದಾನಂದ ಗೌಡ ಅವರು ಮಾತ್ರ ಕರ್ನಾಟಕದ ನೀತಿಗಳು ಮತ್ತು ಕಾರ್ಯಕ್ರಮಗಳ ಪರ ಮಾತನಾಡಿದ್ದಾರೆ ಎಂಬುದನ್ನು ಪರಿಗಣಿಸಲಾಗಿದೆ. \ No newline at end of file diff --git a/eesanje/url_46_174_12.txt b/eesanje/url_46_174_12.txt new file mode 100644 index 0000000000000000000000000000000000000000..3302c7677bbceefb409e1df3ed9b9c355a339497 --- /dev/null +++ b/eesanje/url_46_174_12.txt @@ -0,0 +1,8 @@ +ಬೆಂಗಳೂರಲ್ಲಿ ಚಂಬು ಹಿಂದಿಡು ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು,ಏ.20-ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರ ಗಳಲ್ಲಿ ಚಂಬು ಪ್ರತಿಭಟನೆ ನಡೆಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ಇಂದಿನಿಂದ ಆರಂಭವಾಗಿರುವ ಪ್ರತಿಭಟನೆ ಹಂತಹಂತವಾಗಿ ರಾಜ್ಯಾ ದ್ಯಂತ ಪ್ರತಿ ವಿಧಾನಸಭಾ ಕ್ಷೇತ್ರಗಳ ಬ್ಲಾಕ್ ಮಟ್ಟದಲ್ಲಿ ನಡೆಯಲಿದೆ. +ಆಯಾ ಕ್ಷೇತ್ರಗಳ ಶಾಸಕರು, ಸಚಿವರು, ಕಾಂಗ್ರೆಸ್ನ ಅಭ್ಯರ್ಥಿಗಳು, ಪ್ರಮುಖ ನಾಯಕರು, ಕಾರ್ಯ ಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.ಬೆಂಗಳೂರಿನ ಮೇಕ್ರಿ ಸರ್ಕಲ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಶಾಸಕರಾದ ರಿಜ್ವಾನ್ ಹರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಮುಖಂಡರಾದ ವಿಜಯ್ ಮುಗುಂದ್, ಬಿ.ಆರ್.ನಾಯ್ಡು, ಸುೀಂದ್ರ,ಎಚ್.ಎಸ್.ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು. +ಈ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು ಕರುನಾಡಿಗೆ ಚಂಬು ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದಿಂದ ವಸೂಲಿಯಾಗುವ ತೆರಿಗೆಯಲ್ಲಿ ಶೇ.13 ರಷ್ಟು ಮಾತ್ರ ಪಾಲು ನೀಡಲಾಗುತ್ತಿದೆ. ಅನುದಾನ ಹಂಚಿಕೆಯಲ್ಲಿ ಕನ್ನಡಿಗರಿಗೆ ಮೋದಿ ಸರ್ಕಾರ ಚಂಬು ನೀಡಿದೆ ಎಂದು ಕಿಡಿಕಾರಿದರು. +ರಾಜ್ಯದಲ್ಲಿ ಕಳೆದ 6 ತಿಂಗಳಿನಿಂದ ಭೀಕರವಾದ ಬರಪರಿಸ್ಥಿತಿ ಇದೆ. 18,400 ಕೋಟಿ ರೂ. ನೆರವು ಕೇಳಿದರೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ನೀಡಿದ್ದು ಚಂಬು ಮಾತ್ರ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಘೊಷಿತ ಹಣವನ್ನೂ ನೀಡಲಿಲ್ಲ. 14 ನೇ ಹಣಕಾಸು ಆಯೋಗದಿಂದ ನೀಡಬೇಕಿದ್ದ 62 ಸಾವಿರ ಕೋಟಿ ರೂ.ಗಳಿಗೂ ಚಂಬು ನೀಡಿದ್ದಾರೆ. +ರೈತರ ಆದಾಯವನ್ನು ದ್ವಿಗುಣ ಗೊಳಿಸುತ್ತೇವೆ ಎಂದು ಹೇಳಿದ್ದರು. ಬದಲಿಗೆ ಸಿಕ್ಕಿರುವುದು ಚಂಬು ಮಾತ್ರ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ದೇಶದಲ್ಲಿರುವ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಅದಕ್ಕೂ ಚಂಬೇ ಗತಿಯಾಗಿದೆ.ರಾಜ್ಯದಿಂದ ಬಿಜೆಪಿ ಮತ್ತು ಜೆಡಿಎಸ್ನಿಂದ ಆಯ್ಕೆಯಾದ 27 ಲೋಕಸಭಾ ಸದಸ್ಯರು ರಾಜ್ಯಕ್ಕೆ ನೀಡಿರುವ ಕೊಡುಗೆ ಚಂಬು ಮಾತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಮತ್ತೊಂದೆಡೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಖುದ್ದು ಸಚಿವ ಕೃಷ್ಣ ಭೈರೇಗೌಡ ಅವರೇ ಮೋದಿ ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಮೊಳಗಿಸಿ ದರು. ಪ್ರತಿಭಟನೆಯುದ್ದಕ್ಕೂ ಕೇಂದ್ರ ದಿಂದ ರಾಜ್ಯಕ್ಕಾದ ಅನ್ಯಾಯಗಳ ಆಕ್ರೋಶದ ವಾಕ್ಯಗಳೊಂದಿಗೆ ಚಂಬಿನ ಚಿತ್ರವನ್ನು ಮುದ್ರಿಸಿದ್ದ ಭಿತ್ತಿಪತ್ರಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು. ಜೊತೆಗೆ ಸ್ಟೀಲ್ ಚಂಬುಗಳನ್ನು ಪ್ರದರ್ಶಿಸಲಾಗಿದೆ. +ಕರ್ನಾಟಕದ ದುಡಿಮೆಯ ತೆರಿಗೆಗೆ ಕೇಂದ್ರ ಸರ್ಕಾರ ಸರಿಯಾದ ಪಾಲು ನೀಡಿಲ್ಲ. ನಿರಂತರವಾಗಿ ಅನ್ಯಾಯ ಮಾಡುತ್ತಲೇ ಬಂದಿದೆ. ಮೋದಿ ಸರ್ಕಾರದ ಅವಧಿಯಲ್ಲಿ ರೈತರ ಆದಾಯ ದ್ವಿಗುಣಗೊಳ್ಳುವ ಬದಲು ಖರ್ಚು ಹೆಚ್ಚಾಗಿದೆ ಎಂದು ಕೃಷ್ಣ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಪ್ರಚಾರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತದಾರರು ತಿರುಗಿ ಚಂಬನ್ನೇ ನೀಡಬೇಕು ಎಂದು ಕೃಷ್ಣಭೈರೇಗೌಡರು ಸಲಹೆ ನೀಡಿದರು. \ No newline at end of file diff --git a/eesanje/url_46_174_2.txt b/eesanje/url_46_174_2.txt new file mode 100644 index 0000000000000000000000000000000000000000..0098ca1ed4420d3c4a6c54d577a95762ea8367df --- /dev/null +++ b/eesanje/url_46_174_2.txt @@ -0,0 +1,11 @@ +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ : ಆರ್.ಅಶೋಕ್ +ಆನೇಕಲ್, ಏ.21-ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್ ಕಾರ್ಪೊರೇಟರ್ ಗೆ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಂಡು ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. +ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಮುಸ್ಲಿಂ ಮತಾಂಧವಾದಿಗಳಿಗೆ ಈ ಸರ್ಕಾರದಲ್ಲಿ ಬಹಳ ಗೌರವವಿದೆ. ಜೈ ಶ್ರೀರಾಮ್ ಎಂದರೆ, ಮೋದಿ ಕುರಿತು ಹಾಡು ಹಾಕಿದರೆ ಹೊಡೆಯುತ್ತಾರೆ. ಪಾಕ್ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಜೊತೆಗೆ ಪಾಸ್ ಕೂಡ ಕೊಡುತ್ತಾರೆ ಎಂದರು. +ಸಂಸದ ಡಿ.ಕೆ.ಸುರೇಶ್ ಅವರ ರ್ಯಾಲಿಯಲ್ಲಿ ಕೆಲವರು ಪಾಕಿಸ್ತಾನ ಜೈ ಎಂದಿದ್ದಾರೆ. ಆದರೆ ಡಿ.ಕೆ.ಸುರೇಶ್ ಏನೂ ಮಾತಾಡದೆ ಸುಮ್ಮನೆ ನಿಂತಿದ್ದರು. ಈಗಾಗಲೇ ಅವರು ದೇಶ ಒಡೆಯುವ ಮಾತನಾಡಿದ್ದಾರೆ. ಭಾರತ ಮಾತೆಯನ್ನು ಪ್ರೀತಿಸುವ ಬೆಂಗಳೂರು ಗ್ರಾಮಾಂತರದ ಜನರು ಇವರಿಗೆ ಸರಿಯಾದ ಪಾಠ ಕಲಿಸುತ್ತಾರೆ ಎಂದರು. +ಹುಬ್ಬಳ್ಳಿಯಲ್ಲಿ ನಡೆದ ಘಟನೆ ನೋಡಿದರೆ ಕಾಲೇಜು ಆವರಣದಲ್ಲೇ ಭದ್ರತೆ ಇಲ್ಲ ಎನ್ನುವುದು ಸ್ಪಷ್ಟವಾಗಿದೆ. ಕೊಲೆಯಾದ ನೇಹಾ ತಂದೆ ಕಾಂಗ್ರೆಸ್‍ನ ಕಾರ್ಪೊರೇಟರ್ ಲವ್ ಜಿಹಾದ್ ಇದೆ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ಹೀಗೆ ಮಾತನಾಡಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕುಟುಂಬದವರು ಹೇಳಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಇದು ಲವ್ ಕೇಸ್ ಎಂದು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ದೂರಿದರು. +ರಾಮೇಶ್ವರಂ ಕೆಫೆಯಲ್ಲಿ ನಡೆದ ಘಟನೆ ಭಯೋತ್ಪಾದನಾ ಚಟುವಟಿಕೆಯಾಗಿದ್ದು, ಇದನ್ನು ಮಾಡುವವರೆಲ್ಲ ಡಿ.ಕೆ.ಶಿವಕುಮಾರ್ ಅವರ ಸಹೋದರರೇ ಆಗಿದ್ದಾರೆ. ಕುಕ್ಕರ್ ಬಾಂಬ್ ಸ್ಪೋಟ ಮಾಡಿದವನನ್ನು ಬ್ರದರ್ ಎಂದ ಡಿ.ಕೆ.ಶಿವಕುಮಾರ್ ಒಕ್ಕಲಿಗ ಹೇಗಾಗುತ್ತಾರೆ? ಒಕ್ಕಲಿಗ ಮುಖಂಡ ಎಂದು ಹೇಳಿಕೊಂಡು ಮತ ಯಾಚಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದರು. +ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಹೇಳಿಕೆ ನೀಡಿದ ನಂತರ ಕ್ಷಮೆ ಕೇಳುತ್ತಾರೆ. ಕಾಂಗ್ರೆಸ್ ಕಾರ್ಪೊರೇಟರ್ ತಮ್ಮ ಜೊತೆ ಈಗ ಯಾರೂ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಕಾರ್ಯಕರ್ತರನ್ನೇ ಬಿಟ್ಟುಬಿಡುತ್ತಾರೆ ಎಂದರು.ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‍ಗೆ ಚೊಂಬು ಗ್ಯಾರಂಟಿ. ರಾಹುಲ್ ಗಾಂಧಿಗೆ ನಾವು ಚೊಂಬು ಕಳುಹಿಸಿಕೊಡಲಿದ್ದು, ಅವರು ವಿದೇಶಕ್ಕೆ ಹೋಗಿ ಏನಾದರೂ ಮಾಡಲಿ. ಸೋತ ಬಳಿಕ ಅವರು ಖಂಡಿತ ವಿದೇಶಕ್ಕೆ ಹೋಗುತ್ತಾರೆ ಎಂದರು. +ಕಾಂಗ್ರೆಸ್ ಸರ್ಕಾರ ರೈತರಿಗೆ ಬೋರ್‍ವೆಲ್ ಅನುದಾನ ಕಿತ್ತುಕೊಂಡು ಮೊದಲ ಚೊಂಬು ನೀಡಿದೆ. ಕಿಸಾನ್ ಸಮ್ಮಾನ್ ಕಿತ್ತುಕೊಂಡಿದ್ದು ಎರಡನೇ ಚೊಂಬು, ಹಾಲಿನ ಪ್ರೋತ್ಸಾಹಧನ ನುಂಗಿದ್ದು ಮೂರನೇ ಚೊಂಬು, ಬರಗಾಲದ್ದು ನಾಲ್ಕನೇ ಚೊಂಬು, ಕಾವೇರಿ ನೀರನ್ನು ಸ್ನೇಹಕ್ಕೆ ತಮಿಳುನಾಡಿಗೆ ಬಿಟ್ಟಿದ್ದು ಐದನೇ ಚೊಂಬು, ವಿದ್ಯುತ್ ಶುಲ್ಕ ಹೆಚ್ಚಿಸಿದ್ದು ಆರನೇ ಚೊಂಬು. ಹಾಲು, ಮೊಸರು ದರ ಹೆಚ್ಚಳ, ಆಲ್ಕೋಹಾಲ್ ಬೆಲೆ ಹೆಚ್ಚಳ ಸೇರಿದಂತೆ ಹಲವಾರು ಚೊಂಬುಗಳನ್ನು ನೀಡಿದೆ ಎಂದು ಟೀಕೆ ಮಾಡಿದರು. +ಕಾಂಗ್ರೆಸ್ ಬಂತು ನಕ್ಸಲ್ ತಂತು:ಕಾಂಗ್ರೆಸ್ ಬಂತು, ಭಯೋತ್ಪಾದನೆ ಬಂತು, ನಕ್ಸಲ್ ಬಂತು, ಬಾಂಬ್ ಬಂತು ಎಂಬ ಸ್ಥಿತಿ ಉಂಟಾಗಿದೆ. ಹಿಂದೂಗಳನ್ನು ರಕ್ಷಿಸುವ ಶಕ್ತಿ ಇರುವುದು ಶಕ್ತಿಮಾನ್ ನರೇಂದ್ರ ಮೋದಿ ಅವರಿಗೆ ಮಾತ್ರ. ಮೋದಿ ಸರ್ಕಾರ ಬಂದ ಬಳಿಕ ಭಯೋತ್ಪಾದನೆ ನಿಯಂತ್ರಣಕ್ಕೆ ಬಂದಿದೆ. ಬಿಜೆಪಿ ಸರ್ಕಾರ ಇದ್ದಾಗ ಬಾಂಬ್ ಸ್ಪೋಟವಾದರೂ ಆಗ ಅವರನ್ನು ಬೆಂಬಲಿಸದೆ ಹೆಡೆಮುರಿ ಕಟ್ಟಿದ್ದೇವೆ ಎಂದರು. +ಬೆಂಗಳೂರು ಗ್ರಾಮಾಂತರ ಹೃದಯವಂತ ಮಂಜುನಾಥ್ ಬೇಕೋ, ಕಲ್ಲು ಹೃದಯದ ಕಟುಕ ಡಿ.ಕೆ.ಸುರೇಶ್ ಬೇಕೋ ಎಂದು ಜನರು ತೀರ್ಮಾನಿಸುತ್ತಾರೆ. ಮಂಜುನಾಥ್ ಮೂರು ಲಕ್ಷ ಅಂತರದಲ್ಲಿ ಗೆಲ್ಲುತ್ತಾರೆ. ಈ ಕ್ಷೇತ್ರವನ್ನೂ ಗೆದ್ದರೆ ಒಂದು ಸೀಟು ಕೂಡ ಕಾಂಗ್ರೆಸ್‍ಗೆ ಸಿಗುವುದಿಲ್ಲ ಎಂದು ಹೇಳಿದರು. +ಪೆಟ್ರೋಲ್ ದರ ಏರಿಕೆ ಭಾರತದಲ್ಲಿ ನಿಯಂತ್ರಣದಲ್ಲಿದೆ. ಬೆಲೆ ನಿಯಂತ್ರಣಕ್ಕೆ ಬೇಕಾದ ಕ್ರಮಗಳನ್ನು ಮೋದಿ ಸರ್ಕಾರ ಕೈಗೊಂಡಿದೆ. ಪೆಟ್ರೋಲ್ ದರ ಇಡೀ ಜಗತ್ತಿನಲ್ಲಾಗಿದೆ. ಆಗ ರಷ್ಯಾದಿಂದ ತೈಲ ತರಿಸಿಕೊಳ್ಳಲಾಯಿತು ಎಂದರು.ರಾಜ್ಯ ಸರ್ಕಾರ ಬೀಳಲಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ಶಾಸಕರು ಈಗ ಗಂಟು ಮೂಟೆ ಕಟ್ಟಿ ತಯಾರಾಗಿದ್ದಾರೆ. ಬಿಜೆಪಿಯವರು ಸರ್ಕಾರ ಬೀಳಿಸುವುದಿಲ್ಲ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_174_3.txt b/eesanje/url_46_174_3.txt new file mode 100644 index 0000000000000000000000000000000000000000..9ee662dbfffcdb36bfb6cc4de45a55590f457f4d --- /dev/null +++ b/eesanje/url_46_174_3.txt @@ -0,0 +1,9 @@ +ದೀರ್ಘಕಾಲ ಆಡಳಿತ ನಡೆಸಿ ಚೆಂಬು ಕೊಟ್ಟ ಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತೆ : ಬೊಮ್ಮಾಯಿ +ಬೆಂಗಳೂರು,ಏ.21-ಕೇಂದ್ರ ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಆಡಳಿತ ನಡೆಸಿದ ಕಾಂಗ್ರೆಸ್‍ಗೆ ರಾಜ್ಯದ ಜನತೆಗೆ ಚೆಂಬು ಕೊಟ್ಟ ಕೀರ್ತಿ ಸಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಕಲ್ಯಾಣ್ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ವರ್ಷಕ್ಕೆ ರೈತರಿಗೆ 10 ಸಾವಿರ ರೂ. ನೀಡಲಾಗುತ್ತಿತ್ತು. ಅದನ್ನು ನಿಲ್ಲಿಸಿ ಅವರ ಕೈಗೆ ಚೆಂಬು ಕೊಟ್ಟಿದ್ದು ನೀವಲ್ಲವೇ? ಎಂದು ಪ್ರಶ್ನಿಸಿದರು. +ರೈತ ವಿದ್ಯಾನಿಧಿ ನಿಲ್ಲಿಸಿರುವುದು , ಹೆಣ್ಣು ಮಕ್ಕಳಿಗೆ ಕನಿಷ್ಟಪಕ್ಷ ಶೌಚಾಲಯ ಕಟ್ಟಿಸಿಕೊಡದಿರುವುದು, ವಿವೇಕಾನಂದ ಶಾಲೆ, ಆಸ್ಪತ್ರೆ, ರಸ್ತೆ ಎಲ್ಲವನ್ನೂ ಸ್ಥಗಿತಗೊಳಿಸಿ ಕರ್ನಾಟಕ ಮತ್ತು ಕನ್ನಡಿಗರಿಗೆ ಚೆಂಬು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. +ಮಾಜಿ ಪ್ರಧಾನಿ ದೇವೇಗೌಡರು ಆರೂವರೆ ದಶಕದ ತಮ್ಮ ರಾಜಕೀಯ ಅನುಭವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. 2014ರಲ್ಲಿ ಕಾಂಗ್ರೆಸ್ ಸರ್ಕಾರ ದೇಶದ ಜನತೆಗೆ ನಿಜವಾಗಿ ಚೆಂಬನ್ನೇ ಕೊಟ್ಟಿತ್ತು. ಈಗ ಮೋದಿಯವರು ಆ ಚೆಂಬನ್ನು ಅಕ್ಷಯಪಾತ್ರೆ ಮಾಡಿದ್ದಾರೆ. ಸತ್ಯ ಹೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಹಿರಿಯರಾದ ದೇವೇಗೌಡರ ಬಗ್ಗೆಯೂ ಮಾತನಾಡುತ್ತಾರೆ ಎಂದು ಸಿಡಿಮಿಡಿಗೊಂಡರು. +ರೈತರಿಗೆ 54 ಸಾವಿರ ಕೋಟಿ ಪಿಎಂ ಕಿಸಾನ್ ಯೋಜನೆಯಡಿ ನೀಡಲಾಗಿದೆ. 6 ಲಕ್ಷ ಬೀದಿ ವ್ಯಾಪಾರಿಗಳಿಗೆ ವಿಶೇಷ ಅನುದಾನ, ಕೋವಿಡ್ ಸಂದರ್ಭದಲ್ಲಿ ಉಚಿತ ಲಸಿಕೆ, ಎರಡು ವರ್ಷ ಉಚಿತ ಆಹಾರಧಾನ್ಯ ವಿತರಣೆ ಕೊಟ್ಟಿದ್ದಾರೆ. ಇದು ಅಕ್ಷಯ ಪಾತ್ರೆಯೇ ಇಲ್ಲವೇ ಖಾಲಿ ಚೆಂಬೇ ಎಂದು ಬೊಮ್ಮಾಯಿ ಪ್ರಶ್ನಿಸಿದರು. +ಚುನಾವಣೆಗೂ ಮುನ್ನವೇ ನೀವು 10 ಕೆಜಿ ಅಕ್ಕಿ ಕೊಡುತ್ತೇನೆ ಎಂದು ಹೇಳಿದ್ದೀರಿ. ಈಗ ಎಷ್ಟು ಅಕ್ಕಿ ಕೊಡುತ್ತಿದ್ದೀರಿ. ಚೆಂಬಿನ ಜಾಹೀರಾತು ಕೊಟ್ಟಿದ್ದೀರಿ. ನಿಮಗೆ ಆತ್ಮಸಾಕ್ಷಿ ಇದ್ದಿದ್ದರೆ ನಾಚಿಯಾಗಬೇಕಿತ್ತು ಎಂದು ಕಿಡಿಕಾರಿದರು. ನೇರ ಮತ್ತು ಪ್ರತ್ಯಕ್ಷ ತೆರಿಗೆ ಬಗ್ಗೆ ಪ್ರಸ್ತಾಪಿಸದೆ ಕಾಂಗ್ರೆಸ್ ಸುಳ್ಳು ಜಾಹೀರಾತು ನೀಡಿದೆ. ಡೆವಲ್ಯೂಷನ್ ಫಂಡ್ ಬಗ್ಗೆ ಇದೆ. ಇದು ನೆಹರೂ ಕಾಲದಿಂದಲೂ ಈ ಟ್ಯಾಕ್ಸ್ ಇದೆ. ಈ ಬಗ್ಗೆ ಏಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು. +ಯುಪಿಎ ಅವಧಿಯಲ್ಲಿ 2004-14 ರ ವರೆಗೂ 81,795 ಕೋಟಿ. ಎನ್‍ಡಿಎ ಸರ್ಕಾರದಲ್ಲಿ 2014-24ರವರೆಗೂ 2,88,798 ಕೋಟಿ ಬಂದಿದೆ. ಎರಡು ಲಕ್ಷ ಕೋಟಿಗೂ ಹೆಚ್ಚು ಡೆವಲ್ಯೂಷನ್ ಹಣ ಬಂದಿದೆ. ಅನ್ಯಾಯ ಆಗಿದೆ ಎನ್ನುತ್ತಾರೆ. ನಾನು ಕೌಂಟರ್ ಪ್ರಶ್ನೆ ಮಾಡ್ತೀನಿ. ನೂರು ರೂಪಾಯಿ ಅನುಪಾತ ಮಾಡ್ತೀರಿ ಎಂದು ಸವಾಲು ಹಾಕಿದರು. +ಹಿಂದೆ 100ರೂ. ತೆರಿಗೆ ಕಟ್ಟಿದರೆ ರಾಜ್ಯಕ್ಕೆ 13 ರೂ. ಮಾತ್ರ ರಾಜ್ಯಕ್ಕೆ ಬರುತ್ತದೆ ಎಂದು ನಾಯಕರು ಹೇಳುತ್ತಿದ್ದಾರೆ. ಯುಪಿಎ ಸರ್ಕಾರಕ್ಕೆ ಹೋಲಿಸಿದರೆ 4 ರೂ. ಬರುತ್ತಿತ್ತು ಅಂದರೆ ಈಗ 13 ರೂ. ಬರುತ್ತಿದೆ ಎಂದ ಅವರು, ಗ್ರಾಂಟಿ ಯುಪಿಎ ಅವಧಿಯಲ್ಲಿ 2004-14 60,779.84. ಎನ್‍ಡಿಎ ಅವಧಿಯಲ್ಲಿ ಗ್ರಾಂಟ್ 2014-24ರವರೆಗೂ 2,08,832 ಕೋಟಿ. ಐದು ಸಾವಿರ ಕೋಟಿ ಹೆಚ್ಚಾಗಿ ಬಂದಿದೆ ಎಂದು ವಿವರಣೆ ನೀಡಿದರು. +ಕಳೆದ ವರ್ಷವೂ ಹೆಚ್ಚು ಬಂದಿದೆ. 1ಲಕ್ಷ 30 ಸಾವಿರ ಕೋಟಿ ಲೋನ್ ಕೊಟ್ಟಿದ್ದಾರೆ. ಕರ್ನಾಟಕಕ್ಕೆ 6,012 ಕೋಟಿ ಬಂದಿದೆ. ಬಡ್ಡಿ ರಹಿತ ಸಾಲ ನೀಡಿದ್ದು, 15 ವರ್ಷಗಳ ಬಳಿಕ ಸಾಲ ವಾಪಸ್ ನೀಡಬೇಕು ಎಂದು ವಿವರಿಸಿದರು. ಬಹಳ ತಳಮಟ್ಟಕ್ಕೆ ಹೋಗಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ. ಸುಳ್ಳನ್ನ ನೂರು ಬಾರಿ ಹೇಳಿ, ಸತ್ಯ ಮಾಡಲು ಹೊರಟಿದೆ. ಭಾರತದಲ್ಲಿ ಇಷ್ಟು ಕೆಳಮಟ್ಟಕ್ಕೆ ಹೋಗಿರುವ ಕೀಳು ಸರ್ಕಾರ ಮತ್ತೊಂದಿಲ್ಲ. ಯುಪಿಎ ಸರ್ಕಾರ ಇದ್ದಾಗ ಅವರು ಜಾಹೀರಾತು ನೀಡಿದ್ದಾರೆ. \ No newline at end of file diff --git a/eesanje/url_46_174_4.txt b/eesanje/url_46_174_4.txt new file mode 100644 index 0000000000000000000000000000000000000000..734bdba0c6ad91da5bb03e10aa8c85ff600e7df4 --- /dev/null +++ b/eesanje/url_46_174_4.txt @@ -0,0 +1,13 @@ +ಕಾಂಗ್ರೆಸ್‍ ಖಾಲಿ ಚೊಂಬು ಜಾಹೀರಾತಿಗೆ ರೊಚ್ಚಿಗೆದ್ದ ಬಿಜೆಪಿ ನಾಯಕರಿಂದ ಸುದ್ದಿಗೋಷ್ಠಿ +ಬೆಂಗಳೂರು,ಏ.21-ಮುಸ್ಲಿಂ ಗೂಂಡಾಗಳು ನಡೆಸುವ ದಬ್ಬಾಳಿಕೆ ಮತ್ತು ಹಲ್ಲೆಗೆ ರಕ್ಷಣೆ ನೀಡುವುದೇ ಕಾಂಗ್ರೆಸ್ ಗ್ಯಾರಂಟಿ. ಜನರ ಬದುಕನ್ನು ಕಿತ್ತುಕೊಂಡು ದಿವಾಳಿ ಮಾಡಿರುವುದು ಸರ್ಕಾರದ ಸಾಧನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಡ ಕಾರಿದ್ದಾರೆ. +ಕಾಂಗ್ರೆಸ್‍ನ ಜಾಹೀರಾತಿಗೆ ಪ್ರತ್ಯುತ್ತರ ಎಂಬಂತೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ತಮ್ಮ ಮಾತಿನುದ್ದಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದರು. ದರೋಡೆಕೋರರು, ಭಯೋತ್ಪಾದಕರಿಗೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕ ಒಂದೇ ವರ್ಷದಲ್ಲಿ ಮತಾಂಧರ ಯುದ್ಧಭೂಮಿಯಾಗಿ ಪರಿವರ್ತನೆಯಾಗಿದೆ. ಸಿದ್ದರಾಮಯ್ಯ ಸರ್ಕಾರ ಮತಾಂಧ ಶಕ್ತಿಯನ್ನು ತಮ್ಮ ಆಡಳಿತದ ಭಾಗವಾಗಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. +ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ನಡೆಯುತ್ತಿರುವ ಕೊಲೆ , ಸುಲಿಗೆ, ದೌರ್ಜನ್ಯ, ದಬ್ಬಾಕೆಗಳಿಗೆ ಕೊನೆಯೇ ಇಲ್ಲದಂತಾಗಿದೆ. ತುಷ್ಟೀಕರಣದ ನೀತಿಯ ಪರಿಣಾಮವಾಗಿ ಮುಸ್ಲಿಂ ಗೂಂಡಾಗಳಿಗೆ ಸರ್ಕಾರವೇ ರಕ್ಷಣೆ ಗ್ಯಾರಂಟಿ ನೀಡುತ್ತಿದೆ. ಜನರ ನೆಮ್ಮದಿಯ ಬದುಕಿಗೆ ಗ್ಯಾರಂಟಿ ಕೊಡುವವರು ಯಾರು ಎಂದು ಪ್ರಶ್ನೆ ಮಾಡಿದರು. +ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ಕೆಳಗಿಳಿಸಿದ್ದು, ಪಾಕ್ ಪರ ಘೋಷಣೆ, ವಿದ್ಯಾರ್ಥಿನಿ ನೇಹ ಹತ್ಯೆ, ಜೈಶ್ರೀರಾಮ್ ಎನ್ನುವರ ಮೇಲೆ ಹಲ್ಲೆ, ಹರ್ಷಿತ ಪೂಣ್ಣಚ್ಚ ದಂಪತಿ ಮೇಲೆ ದೌರ್ಜನ್ಯ, ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಿಡಿಯೋ ಪ್ರಕರಣ ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿವೆ. ಮಹಿಳೆಯರು, ಮಕ್ಕಳು, ಬದುಕಿನ ಭರವಸೆಯನ್ನೇ ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ದರೋಡೆಕೋರರು, ಭಯೋತ್ಪಾದಕರು, ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅವರ ಬದುಕಿಗೆ ಗ್ಯಾರಂಟಿ ಇದೆಯಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕನ್ನಡಿಗರ ಬದುಕಿಗೆ ಗ್ಯಾರಂಟಿ ಇಲ್ಲ ಎಂದು ಕಳವಳ ವ್ಯಕ್ತಪಡಿಸಿದರು. ಇದು ಮನುಷ್ಯತ್ವ, ಮಾನವೀಯತೆ ಇಲ್ಲದ ಸರ್ಕಾರ. ಕಲ್ಲುಬಂಡೆಯ ಸರ್ಕಾರ. ಅಭಿವೃದ್ಧಿಯನ್ನೇ ಸಂಪೂರ್ಣವಾಗಿ ಮರೆತು ಜನವಿರೋಧಿ ಆಡಳಿತ ನಡೆಸುತ್ತಿದ್ದಾರೆ. +ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಕೂಡ ನಡೆಯುತ್ತಿಲ್ಲ. ಅಧಿಕಾರಕ್ಕೆ ಬಂದ ಮೇಲೆ ಒಂದು ಕಿ.ಮೀ ರಸ್ತೆ ಕೂಡ ಮಾಡಿಲ್ಲ. ನೀರಾವರಿ ಯೋಜನೆಗಳು ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಜನರು ಎಲ್ಲೆಡೆ ಛೀಮಾರಿ ಹಾಕುತ್ತಿದ್ದಾರೆ. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಯಡಿಯೂರಪ್ಪ ಟೀಕಾ ಪ್ರಹಾರ ನಡೆಸಿದರು. +ಕಾಂಗ್ರೆಸ್ ನೀಡುತ್ತಿರುವ ಜಾಹಿರಾತುಗಳಿಗೆ ಕವಡೆಕಾಸಿನ ಕಿಮ್ಮತ್ತಿನ ಬೆಲೆಯೂ ಇಲ್ಲ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲಿದೆ ಎಂಬುದು ಕಾಂಗ್ರೆಸ್ ನಾಯಕರಿಗೆ ಗೊತ್ತಿದೆ. ಹೀಗಾಗಿ ಜನರನ್ನು ದಿಕ್ಕು ತಪ್ಪಿಸುವ ಜಾಹೀರಾತುಗಳನ್ನು ನೀಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. +ಸವಾಲು:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು 20 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ನಾನು ಅವರಿಗೆ ಒಂದು ಬಹಿರಂಗ ಸವಾಲು ಹಾಕುತ್ತೇನೆ. 28 ಕ್ಷೇತ್ರಗಳಲ್ಲಿ ನೀವು ಗೆಲ್ಲಬಹುದಾದ ಕನಿಷ್ಠ 4ರಿಂದ 5 ಲೋಕಸಭಾ ಕ್ಷೇತ್ರಗಳ ಹೆಸರು ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನೀವು ಗ್ಯಾರಂಟಿಯಲ್ಲಿ ಗೆದ್ದೇಬಿಡುತ್ತೀರಿ ಎಂಬ ಭ್ರಮೆಯಲ್ಲಿದ್ದೀರಿ. ಆದರೆ ವಾಸ್ತವ ಚಿತ್ರಣವೇ ಬೇರೆ. ನಿಮ್ಮ ಸುಳ್ಳು ಪ್ರಚಾರ ಡೊಂಬರಾಟಕ್ಕೆ ಜನತೆ ಮನ್ನಣೆ ನೀಡುವುದಿಲ್ಲ ಎಂದು ಹೇಳಿದರು. +ತೆರಿಗೆ ವಿಚಾರವಾಗಿ ಸ್ವತಃ ಪ್ರಧಾನಿಯವರೇ ಕರ್ನಾಟಕಕ್ಕೆ ಕೇಂದ್ರದಿಂದ ಎಷ್ಟು ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ. ಜೊತೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ನಾಳೆ ಅಮಿತ್ ಷಾ ಅವರು ಇದರ ಬಗ್ಗೆ ಮಾತನಾಡಲಿದ್ದಾರೆ ಎಂದರು. +ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಮಾತನಾಡಿ, ನಾವು ವಿಶೇಷ ಕಾಲಘಟ್ಟದಲ್ಲಿ ಇದ್ದೇವೆ. ಈ ಚುನಾವಣೆ ಭಯೋತ್ಪಾದಕ ವಿರುದ್ಧ ಮತ್ತು ಹಿಂದೂ ಧಾರ್ಮಿಕ ವಿಧಿವಿಧಾನ ವಿರುದ್ಧ ನಡೆಯುತ್ತಿದೆ. ಹಿಂದೂಗಳನ್ನು ತೃತಿಯ ದರ್ಜೆ ನಾಗರೀಕರ ತರ ನೋಡಲಾಗುತ್ತಿದೆ. ಮುಸ್ಲಿಂ ಮತಾಂದರನ್ನು, ಭಯೋತ್ಪಾದಕರನ್ನು ಅವರ ಕಾರ್ಯವೈಖರಿ ರೀತಿ ಮಾಡಿಕೊಂಡಿದ್ದಾರೆ. +ಕುಕ್ಕರ್ ಬ್ಲಾಸ್ಟ್ ಇಂದ ಹಿಡಿದು, ಎಲ್ಲವೂ ಅವರೇ ಇದ್ದಾರೆ. ಅವರ ಪರವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇದ್ದಾರೆ. ವಿಶ್ವಮಾನವನ ಸಂದೇಶ ನೀಡಿದ ನಾಡು ಕರ್ನಾಟಕ. ಆದರೆ ಚುನಾವಣೆ ನಡೆಸುವುದೇ ಗೂಂಡಾ ವರ್ತನೆ ರೀತಿ ಇದೆ. ಕರ್ನಾಟಕದಲ್ಲಿ ಯಾರೂ ಮಹಿಳೆಯರು ವೋಟ್ ಹಾಕಲು ಬಾರದ ರೀತಿ ವಾತಾವರಣ ಸೃಷ್ಟಿಯಾಗುತ್ತಿದೆ. ಗ್ಯಾರಂಟಿ ಯಾರಿಗೆ ಗೂಂಡಾಗಳಿಗೆ? ಹಿಂದೂಗಳ ಮೇಲೆ ಸವಾರಿ ಮಾಡುವವರಿಗಾ? ಎಂದು ಪ್ರಶ್ನಿಸಿದರು. +ನಿನ್ನೆ ಮೋದಿ ಅವರು ಬಂದಾಗ ಒಂದು ಮಾತು ಹೇಳಿದ್ದರು. ಜೀವನದ ಭರವಸೆ ನೀಡುವುದೇ ನಮ್ಮ ಗುರಿ. ಈ ಚುನಾವಣೆ ಅತ್ಯಂತ ದೊಡ್ಡ ಸಂದೇಶ ಕಳಿಸುವಂತಾಗಿರಬೇಕು. ಕರ್ನಾಟಕದ ಹಿಡಿತ ತರುವಂತೆ ಆಗ್ರಹ ಮಾಡುತ್ತೇನೆ ಎಂದರು. \ No newline at end of file diff --git a/eesanje/url_46_174_5.txt b/eesanje/url_46_174_5.txt new file mode 100644 index 0000000000000000000000000000000000000000..b5c1b6f0ea69b4944424644f5e9ea9b1fed35eb5 --- /dev/null +++ b/eesanje/url_46_174_5.txt @@ -0,0 +1,6 @@ +ರಾಜ್ಯದಲ್ಲಿ ಈವರೆಗೆ 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ ವಶ +ಬೆಂಗಳೂರು,ಏ.21-ಪ್ರಸಕ್ತ ಲೋಕಸಭಾ ಚುನಾವಣೆ ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಹಣ, ಉಚಿತ ಉಡುಗೊರೆಗಳ ಜಪ್ತಿ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮಾ.16 ರಿಂದ ಇಲ್ಲಿಯವರೆಗೆ ಒಟ್ಟು 402.39 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯ, ಡ್ರಗ್ಸ್, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ರಾಜ್ಯದಲ್ಲಿ ಇದುವರೆಗೂ ಅತೀ ಹೆಚ್ಚು ಮದ್ಯವನ್ನೇ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಮದ್ಯದ ಮೌಲ್ಯ 177 ಕೋಟಿ ರೂ. ದಾಟಿದೆ. 75.31 ಕೋಟಿ ರೂ. ನಗದು, 10.73 ಕೋಟಿ ರೂ. ಡ್ರಗ್ಸ್, 57.67 ಕೋಟಿ ರೂ. ಮೌಲ್ಯದ ಚಿನ್ನ, 1.18 ಕೋಟಿ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರ, 72.27 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. +ಪೊಲೀಸ್, ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ನಡೆಸಿದ ತಪಾಸಣೆ ಸಂದರ್ಭದಲ್ಲಿ 132.17 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. +ಅಬಕಾರಿ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 176.59 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರವನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಇಲಾಖೆಯವರು ನಡೆಸಿದ ತಪಾಸಣೆ ಸಂದರ್ಭದಲ್ಲಿ 79.83 ಕೋಟಿ ರೂ. ಮೊತ್ತದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ಇದುವರೆಗೂ 1,937 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, 1,685 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_174_6.txt b/eesanje/url_46_174_6.txt new file mode 100644 index 0000000000000000000000000000000000000000..2d26da1f4087bced19aee01889b75a541c0ec87d --- /dev/null +++ b/eesanje/url_46_174_6.txt @@ -0,0 +1,5 @@ +ಕರ್ತವ್ಯನಿರತ ಸಿಬ್ಬಂದಿಗೆ ನಾಳೆಯವರೆಗೆ ಅಂಚೆ ಮತದಾನ ಮಾಡಲು ಅವಕಾಶ +ಬೆಂಗಳೂರು,ಏ.21-ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿಗಳಿಗೆ ಅಂಚೆ ಮತದಾನ ಮಾಡಲು ಅನುಕೂಲವಾಗುವಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ ವ್ಯಾಪ್ತಿಯ ಸಿ.ವಿ.ರಾಮನ್‍ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಈ ಕೆಳಕಂಡಂತೆ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. +ಸಿ.ವಿ.ರಾಮನಗರ ಕ್ಷೇತ್ರದ ಕಾಕ್ಸ್ ಟೌನ್‍ನಲ್ಲಿರುವ ಸೇಂಟ್ ಅಲಾಸುಯ್ಸ್ ಹೈಸ್ಕೂಲ್‍ನಲ್ಲಿ ಎರಡು ಅಂಚೆ ಮತದನ ಕೇಂದ್ರಗಳನ್ನು ತೆರೆಯಲಾಗಿದೆ. ಮತಗಟ್ಟೆ ನಂ.1ರಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ಹಾಸನ ಚಾಮರಾಜನಗರ ಕ್ಷೇತ್ರಗಳ ಮತದಾರರಾಗಿರುವ ಕರ್ತವ್ಯನಿರತ ಸಿಬ್ಬಂದಿ ಮತದಾನ ಮಾಡಬಹುದು. +ಬೂತ್ ನಂ.2ರಲ್ಲಿ ಬೆಂಗಳೂರು ಉತ್ತರ, ಉಡುಪಿ, ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳ ಮತದಾರರಾಗಿರುವ ಕರ್ತವ್ಯನಿರತ ಸಿಬ್ಬಂದಿ ಮತದಾನ ಮಾಡಬಹುದು. +ಈ ಮೇಲಿನ ಸೌಲಭ್ಯ ಕೇಂದ್ರಗಳು ಇಂದಿನಿಂದ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಕಾರ್ಯ ನಿರ್ವಹಿಸಲಿವೆ ಎಂದು ಸಹಾಯಕ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_174_7.txt b/eesanje/url_46_174_7.txt new file mode 100644 index 0000000000000000000000000000000000000000..05016052cd2957e94779c4314b1870f13f8a98b4 --- /dev/null +++ b/eesanje/url_46_174_7.txt @@ -0,0 +1,5 @@ +ರಾಜ್ಯದ ಹಲವು ಭಾಗಗಳಲ್ಲಿ ಇನ್ನೆರೆಡು ದಿನ ಮಳೆ +ಬೆಂಗಳೂರು,ಏ.21-ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಸಿಕೊಂಡಿದ್ದು, ಹಲವು ಭಾಗಗಳಲ್ಲಿ ಕಳೆದೆರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೆರೆಡು ದಿನಗಳ ಕಾಲ ಮುಂದುವರೆಯಲಿದೆ. +ವಾತಾವರಣದಲ್ಲಿ ಟ್ರಪ್ ಉಂಟಾಗಿರುವ ಪರಿಣಾಮ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮತ್ತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಆದರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. +ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ನಿನ್ನೆ ಕರಾವಳಿ ಭಾಗದಲ್ಲಿ ಮಳೆಯಾಗಿದ್ದು, ಕಾರವಾರ-8, ಗೋಕರ್ಣ-10.3, ಮುಂಡಗೋಡ-6.4, ಅಳಿಯಾಲ-3.2, ಹೊನ್ನಾವರ-2.8, ಸಿದ್ದಾಪುರ-1.8 ಮಿಲಿ ಮೀಟರ್‍ನಷ್ಟು ಸಾಧಾರಣ ಮಳೆಯಾದ ವರದಿಯಾಗಿದೆ. +ಗದಗ್-65.5, ಕಲಬುರಗಿ-86.4, ಹುಕ್ಕನೂರು-49, ಶಿಗ್ಗಾವಿ-45.2, ಸವಣೂರು-37.5, ಕಲಬುರಗಿ-31.7, ಶಿರಾಹಟ್ಟಿ-26.6, ಅಬ್ಜಲ್‍ಪುರ-19, ಅಳಂದ-13.5, ಕಲಗಟಗಿ-16.6, ಹುಬ್ಬಳ್ಳಿ-10.5, ಯಲಬುರ್ಗ-10, ಲಕ್ಷ್ಮೀಶ್ವರ-5, ಮುದಗಲ್-4.8, ಬೀಳಗಿ-3.5, ಹಾವೇರಿ-2.2, ಬಾದಾಮಿ-1.6, ಮಾಗಡಿ-1.8, ಆನವಟ್ಟಿ-1.2 ಮಿಲಿ ಮೀಟರ್‍ನಷ್ಟು ಸಾಧಾರಣ ಮಳೆಯಾಗಿದೆ. ಉಳಿದಂತೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾದ ವರದಿಯಾಗಿದೆ. \ No newline at end of file diff --git a/eesanje/url_46_174_9.txt b/eesanje/url_46_174_9.txt new file mode 100644 index 0000000000000000000000000000000000000000..13bb7a36a5d408340afd37756384e30f2aed71cd --- /dev/null +++ b/eesanje/url_46_174_9.txt @@ -0,0 +1,6 @@ +ಇಂದು ನೇಹ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ ನಡ್ಡಾ +ಬೆಂಗಳೂರು,ಏ.21-ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನು ಸೃಷ್ಟಿಸಿರುವ ಹುಬ್ಬಳ್ಳಿ-ಬಿ.ವಿ.ಬಿ ಕಾಲೇಜಿನ ವಿದ್ಯಾರ್ಥಿನಿ ನೇಹ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವಾನ ಹೇಳಲಿದ್ದಾರೆ. ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ನಡ್ಡಾ ಅವರು ಹುಬ್ಬಳ್ಳಿಯಲ್ಲಿರುವ ನೇಹ ಅವರ ತಂದೆ ಹಿರೇಮಠ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. +ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಶಾಸಕರಾದ ಅರವಿಂದ್ ಬೆಲ್ಲದ್, ಮಹೇಶ್ ತೆಂಗಿನಕಾಯಿ ಸೇರಿದಂತೆ ಮತ್ತಿತರರು ನಡ್ಡಾ ಅವರಿಗೆ ಸಾಥ್ ನೀಡಲಿದ್ದಾರೆ. ಇನ್ನೊಂದು ಮೂಲದ ಪ್ರಕಾರ ನೇಹ ಅವರ ಪೋಷಕರನ್ನು ನಿವಾಸದಲ್ಲಿ ಭೇಟಿಯಾಗಲು ಸಾಧ್ಯವಾಗಿದ್ದರೆ ನಡ್ಡಾ ಅವರು ತಂಗುವ ಬೆನಿಸಲ್ ಹೋಟೆಲ್‍ಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ. +ಒಂದು ಕಡೆ ನೇಹ ಹತ್ಯೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ವೈಯಕ್ತಿಕ ಕಾರಣಕ್ಕಾಗಿ ಈ ಘಟನೆ ನಡೆದಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದೆ.ಆದರೆ ನೇಹಾಳ ಪೋಷಕರು ಇದನ್ನು ಸಾರಾಸಗಟಾಗಿ ನಿರಾಕರಿಸಿದ್ದು, ಇದೊಂದು ಪೂರ್ವ ನಿಯೋಜಿತ ಮತ್ತು ಲವ್ ಜಿಹಾದ್ ಎಂದು ಆರೋಪಿಸುತ್ತಿದ್ದಾರೆ. ಇದೀಗ ನಡ್ಡಾ ಅವರು ಭೇಟಿ ಕೊಡುತ್ತಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. +ಭೇಟಿ ವಿವರ:ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿರುವ ಜೆ.ಪಿ.ನಡ್ಡಾ ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್‍ಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. +ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ಅವರು, ಪ್ರಹ್ಲಾದ್ ಜೋಶಿ ಪರ ಮತಯಾಚನೆ ಮಾಡಲಿದ್ದು, ಸಂಜೆ 5 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದ ನಂತರ ರಾತ್ರಿ 9 ಗಂಟೆಗೆ ಡೆನಿಸನ್ ಹೋಟೆಲ್‍ನಲ್ಲಿ ಕೋರ್ ಕಮೀಟಿ ಸಭೆ ನಡೆಸಲಿದ್ದಾರೆ. \ No newline at end of file diff --git a/eesanje/url_46_175_1.txt b/eesanje/url_46_175_1.txt new file mode 100644 index 0000000000000000000000000000000000000000..8dda22953fa27135308983f99596e825ec0867cc --- /dev/null +++ b/eesanje/url_46_175_1.txt @@ -0,0 +1,6 @@ +ಯುಪಿಎ ಅವಧಿಯ ಚೆಂಬನ್ನು ನಿನ್ನೆ ಜಾಹೀರಾತು ಕೊಟ್ಟಿದ್ದಾರೆ : ಎಚ್‍ಡಿಡಿ +ಚಿಕ್ಕಬಳಾಪುರ,ಏ.20-ಕಾಂಗೇಸ್‍ನ ಯುಪಿಎ ಸರ್ಕಾರದ 10 ವರ್ಷದ ಅವಧಿಯಲ್ಲಿ ಭ್ರಷ್ಟಾಚಾರ,ಹಗರಣದ ಮೂಲಕ ದೇಶದ ಸಂಪತ್ತು ಲೋಟಿ ಹೊಡೆದು ದೇಶದ ಜನತೆಗೆ ಖಾಲಿ ಚಂಬು ಕೊಟ್ಟಿದ್ದನ್ನು ಪ್ರಚಾರ ಮಾಡಿದ್ದಾರೆ ಅದನ್ನು ಮೋದಿ ಅಕ್ಷಯ ಪಾತ್ರೆಯನ್ನು ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್,ಡಿ.ದೇವೇಗೌಡ ಟೀಕಿಸಿದ್ದಾರೆ. +ಇಲ್ಲಿ ನಡೆದ ಎನ್‍ಡಿಎ ಸಮಾವೇಶದಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಲ್ಲಿ ದೀನ ದಲಿತರ ,ಹರಿಜನರ ಅಭಿವೃದ್ದಿಗೆ ಶ್ರಮಿಸಿದ್ದಾರೆ ಅಂತಹ ವ್ಯಕ್ತಿಯ ಮೇಲೆ ಕ್ಷುಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. +5 ಗ್ಯಾರಂಟಿ ಕೊಟ್ಟ ಕಾಂಗ್ರೇಸ್ ಈಗ 25 ಗ್ಯಾರಂಟಿ ಮುಂದಿಟ್ಟಿದ್ದಾರೆ ಕಳೆದ 10 ವರ್ಷದಲ್ಲಿ ಒಬ್ಬ ವಿರೋಧ ಪಕ್ಷದ ನಾಯಕನನ್ನು ನೀಡದ ಕಾಂಗ್ರೇಸ್ ಅಕಾರದ ಬಯಕೆಯಿಂದಾಗಿ ನಮ್ಮ 400 ಕ್ಷೇತ್ರ ಗೆಲುವ ನಮ್ಮ ಗಾಡಿಗೆ ಅಡ್ಡ ಬರಲು ಸಾಧ್ಯವೇ ಎಂದರು. ಕೋಲಾರ ಚಿಕ್ಕಬಳ್ಳಾಪುರದ ನೀರಿನ ಸಮಸ್ಯೆಬಗೆಹರಿಸಲು ಕೃಷ್ಣ ಅಥವಾ ಕಾವೇರಿ ನೀರು ತರಲು ಪ್ರಯತ್ನ ಮಾಡಬೇಕು .ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸಲು ಕೋಲಾರ ,ಚಿಕ್ಕಬಳ್ಳಾಪುರದ ಸೇರಿ ರಾಜ್ಯದ 28 ಕ್ಷೇತ್ರದಲ್ಲಿ ಗೆದ್ದರೆ ಮಾತ್ತ ಪ್ರಧಾನಿ ಬಳಿ ನೈತಿಕತೆಯಿಂದ ಮಾತನಾಡಬಹುದು ಎಂದು ಹೇಳಿದರು. +ನಿನ್ನೆ ಈ ರಾಜ್ಯದ ಮುಖ್ಯಮಂತ್ರಿ ಜಾಹೀರಾತು ಕೊಟ್ಟಿದ್ದಾರೆ. ಆದರೆ, ಈ ಚೆಂಬನ್ನು ಯಾರು ಕೊಟ್ಟರು. ಡಾ. ಮನಮೋಹನ್ ಸಿಂಗ್ ಅವರು ಈ ರಾಷ್ಟ್ರವನ್ನು ಆಳ್ವಿಕೆ ಮಾಡಿದರು. ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷರಾಗಿದ್ದರು. ಆಗ ದೇಶದಲ್ಲಿ ಕೋಲ್‌ಗೇಟ್, 2ಜಿ ಸ್ಪೆಕ್ಟ್ರಂ, ರೈಲ್‌ಗೇಟ್, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಮ್ಮ ದೇಶದ ಸಂಪತ್ತು ಲೂಟಿ ಮಾಡಿದರು. ಆಗ ದೇಶದ ಆರ್ಥಿಕತೆ ಚೆಂಬು ಬರಿದಾಗಿತ್ತು. ಈ ಕಾಂಗ್ರೆಸ್‌ ನಾಯಕರು ಬರಿದಾದ ಚೆಂಬನ್ನು 2014ರಲ್ಲಿ ಕಾಂಗ್ರೆಸ್‌ ನಾಯಕರು ನರೇಂದ್ರ ಮೋದಿಗೆ ಕೊಟ್ಟಿದ್ದಾರೆ. ಆದರೆ, ಕಳೆದ 10 ವರ್ಷದಲ್ಲಿ ನರೇಂದ್ರ ಮೋದಿ ಅವರು ಇದನ್ನು ಅಕ್ಷಯ ಪಾತ್ರೆಯನ್ನಾಗಿ ಮಾಡಿದ್ದಾರೆ ಎಂದರು. +ನನಗೆ 90 ಮುಗೀತು, ಇನ್ನು 20 ಇದೆ. ಬ್ಲಡ್ ಬಾಯಿಯಲ್ಲಿ ಬರುತ್ತದೆ. ಮೊನ್ನೆ ಕೋಲಾರದಲ್ಲಿ ರಾಹುಲ್‌ ಗಾಂಧಿ ಅವರ ಭಾಷಣದ ಬಗ್ಗೆ ವ್ಯಾಖ್ಯಾನ ಮಾಡಲು ಹೋಗುವುದೇ ಇಲ್ಲ. ನಮ್ಮ ಅಭ್ಯರ್ಥಿ ಮಹೇಶ್ ಬಾಬು ಅವರಿಗೆ ಸಂಬಂಧಪಟ್ಟಂತೆ ಎರಡು ಸಭೆ ಮಾಡಿದ್ದೇವೆ. ಇಂದು ಡಾ. ಸುಧಾಕರ್ ದೊಡ್ಡವರು ಬಂದಿದ್ದಾರೆ. ನಮ್ಮ ಪಕ್ಷದ ಒಬ್ಬ ಶಾಸಕರು, ನಾನು ಬಿಜೆಪಿಗೆ ನೀವು ಹೇಳಿದರೂ ಮಾಡೊಲ್ಲ ಎಂದು ಹೇಳಿದರು. ಆ ಶಾಸಕನ ತಂದೆ ಪಿಳ್ಳಪ್ಪ ಅವರನ್ನು ಒಂದು ರೂ. ಖರ್ಚು ಮಾಡಿಸದೇ ಹೆಗ್ಗಡೆ ವಿರುದ್ಧ ಗೆಲ್ಲಿಸಿದಂತಹ ದೇವೇಗೌಡ ನಿಮ್ಮ ಮುಂದೆ ಹೇಳ್ತಿದೀನಿ. ನಾನು ನನ್ನ ಪಕ್ಷದ ಕಾರ್ಯಕರ್ತರಿಗೆ ನಾನು ಹೇಳುತ್ತಿದ್ದೇನೆ. ನನ್ನ ಆದೇಶ ಡಾ. ಸುಧಾಕರ್ ಅವರಿಗೆ ಕೊಡಿ. ಈ ದೇಶವನ್ನು ಮುಂದಿನ 5 ವರ್ಷ ಆಡಳಿತ ಮಾಡಲು 400 ಸ್ಥಾನ ಗೆಲ್ಲುವ ಗುರಿ ಮುಟ್ಟಲು ನಾವು 28 ಸ್ಥಾನಗಳನ್ನು ಗೆಲ್ಲಿಸಿ ನಮ್ಮ ಕಾಣಿಕೆಯನ್ನು ನಿಮಗೆ ಒಪ್ಪಿಸುತ್ತೇವೆ ಎಂದರು. \ No newline at end of file diff --git a/eesanje/url_46_175_10.txt b/eesanje/url_46_175_10.txt new file mode 100644 index 0000000000000000000000000000000000000000..2aa152d6a8a399ecf78b66a5e7acc0bb5a985ea9 --- /dev/null +++ b/eesanje/url_46_175_10.txt @@ -0,0 +1,9 @@ +ಒಂದೇ ಸ್ವತ್ತಿಗೆ 22 ಬ್ಯಾಂಕುಗಳಲ್ಲಿ ಸಾಲ ಪಡೆದ ಕುಟುಂಬ +ಬೆಂಗಳೂರು,ಏ.19-ಒಂದೇ ಸ್ವತ್ತಿಗೆ ವಿವಿಧ ರೀತಿಯ ನಕಲಿ ದಾಖಲೆ ಸೃಷ್ಟಿಸಿ ಸುಮಾರು 22 ಬ್ಯಾಂಕ್ಗಳಿಗೆ 10 ಕೋಟಿ ರೂ. ವಂಚಿಸಿರುವ ಒಂದೇ ಕುಟುಂಬದ ಐದು ವ್ಯಕ್ತಿಗಳು ಸೇರಿದಂತೆ ಆರು ಮಂದಿಯನ್ನು ಬಂಸುವಲ್ಲಿ ಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.ಈ ವಂಚನೆ ಪ್ರಕರಣದಲ್ಲಿ ನಾಗೇಶ್ ಭಾರದ್ವಾಜ್, ಈತನ ಪತ್ನಿ ಸುಮಾ, ಮೂವರು ಸಂಬಂಕರಾದ ಶೋಭಾ, ಈಕೆಯ ಪತಿ ಶೇಷಗಿರಿ, ಭಾವಮೈದುನ ಸತೀಶ್ ಹಾಗೂ ಸ್ನೇಹಿತೆ ವೇದಾಳನ್ನು ಬಂಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಜಯನಗರ ಮೂರನೇ ಬ್ಲಾಕ್ನಲ್ಲಿರುವ ಕೋ ಆಪರೇಟಿವ್ ಬ್ಯಾಂಕೊಂದರ ಮ್ಯಾನೇಜರ್ ನೀಡಿದ ದೂರಿನ ಆಧಾರದ ಮೇಲೆ ಈ ವಂಚಕರನ್ನು ಬಂಸಲಾಗಿದೆ.ತಮ್ಮ ಬ್ಯಾಂಕ್ನಲ್ಲಿ ಖಾತೆದಾರರಾಗಿರುವ ಪತಿ, ಪತ್ನಿಯರು ಬೇಗೂರು ಗ್ರಾಮದಲ್ಲಿರುವ 2,100 ಅಡಿ ಉದ್ದಳತೆಯ ಜಾಗದಲ್ಲಿ ಕಟ್ಟಡ ಇರುವುದಾಗಿ ಅದನ್ನು ಅಡಮಾನವಾಗಿಟ್ಟುಕೊಂಡು ಕಂತು ಸಾಲ ಮತ್ತು ಯಂತ್ರೋಪಕರಣ ಸಾಲವೆಂದು 1.30 ಕೋಟಿ ರೂ. ಸಾಲ ನೀಡುವಂತೆ ಮನವಿ ಮಾಡಿಕೊಂಡಿದ್ದರು. +ಆದರೆ ಕಟ್ಟಡಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆದಿರುವುದರ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಕಳೆದ 2022 ರ ಡಿಸೆಂಬರ್ನಲ್ಲಿ ಜಯನಗರ ಪೊಲೀಸರಿಗೆ ದೂರು ನೀಡಿದ್ದರು. +ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು ವಂಚಕ ಮಹಿಳೆಯ ಪತಿಯನ್ನು ಮಾರ್ಚ್ 2024 ರಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ಆತನನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಈ ಕೃತ್ಯದಲ್ಲಿ ಆತನ ಪತ್ನಿ, ಪತ್ನಿಯ ತಮ್ಮ, ಅಕ್ಕ, ಭಾವ ಹಾಗೂ ಸ್ನೇಹಿತೆ ಇರುವುದಾಗಿ ತಿಳಿಸಿದ್ದಾನೆ. +ನಾವೆಲ್ಲಾ ನಮ್ಮ ಹೆಸರಿನಲ್ಲಿದ್ದ ಕಟ್ಟಡಕ್ಕೆ ವಿವಿಧ ಸರ್ವೆ ನಂಬರ್, ಸೈಟ್ ನಂಬರ್ಗಳನ್ನು ನಮೂದಿಸುವುದರ ಜೊತೆಗೆ ಸೈಟ್ ಉದ್ದಳತೆಯಲ್ಲೂ ಬದಲಾವಣೆ ಮಾಡಿ ನಕಲಿ ಡೀಡ್ ಮುಖಾಂತರ ರಿಜಿಸ್ಟರ್ ಮಾಡಿಸಿಕೊಂಡು ವಿವಿಧ ಬ್ಯಾಂಕುಗಳಿಗೆ ವಂಚಿಸಿರುವುದಾಗಿ ಬಾಯಿ ಬಿಟ್ಟಿದ್ದಾನೆ. +ಇದೇ ರೀತಿ ಆರೋಪಿಗಳು ಕಂತು ಸಾಲ ಮತ್ತು ಯಂತ್ರೋಪಕರಣದ ಸಾಲವೆಂದು ನಗರದ ವಿವಿಧ 22 ಬ್ಯಾಂಕುಗಳಿಂದ ಸುಮಾರು 10 ಕೋಟಿ ರೂ. ಸಾಲ ಪಡೆದು ವಂಚಿಸಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. +ಆರೋಪಿ ನೀಡಿದ ಮಾಹಿತಿ ಮೇರೆಗೆ ಆತನ ಪತ್ನಿ ಸೇರಿದಂತೆ ಐದು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಎಲ್ಲರನ್ನೂ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದರು. +ವಿವಿಧ ಬ್ಯಾಂಕುಗಳಿಗೆ 10 ಕೋಟಿ ರೂ. ವಂಚಿಸಿರುವ ವಂಚಕರನ್ನು ಬಂಸುವಲ್ಲಿ ಯಶಸ್ವಿಯಾಗಿರುವ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬರಮಪ್ಪ ಜಗಲಾಸರ್, ಎಸಿಪಿ ನಾರಾಯಣ ಸ್ವಾಮಿ, ಜಯನಗರ ಇನ್ಸ್ಪೆಕ್ಟರ್ ಮತ್ತವರ ತಂಡ ಕಾರ್ಯಕ್ಕೆ ಆಯುಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_175_11.txt b/eesanje/url_46_175_11.txt new file mode 100644 index 0000000000000000000000000000000000000000..8d0ddbac8938d3af5b27e1a0995ba8472d4032dd --- /dev/null +++ b/eesanje/url_46_175_11.txt @@ -0,0 +1,9 @@ +ನೇಹಾ ಕೊಲೆ ಹಿಂದೆ ‘ಲವ್ ಜಿಹಾದ್’ ಕೈವಾಡ : ಆರೋಪಿ ಎನ್‍ಕೌಂಟರ್‌ಗೆ ಆಗ್ರಹ +ಹುಬ್ಬಳ್ಳಿ, ಏ.19-ಹಿಂದೂ ಯುವತಿ ನೇಹಾ ಕೊಲೆ ಹಿಂದೆ ಲವ್ ಜಿಹಾದ್ ಕೈವಾಡವಿದ್ದು ಕೂಡಲೇ ಕೊಲೆಗಾರನನ್ನು ಎನ್ಕೌಂಟರ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು. +ಇಲ್ಲಿನ ಕಿಮ್ಸ್ ಶವಾಗಾರಕ್ಕೆ ಕೇಂದ್ರಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಡಹಗಲೇ ಹತ್ಯೆ ಆಗಿರೋದು ನೋಡಿದ್ರೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. +ಮೊನ್ನೆ ತಾನೇ ಐದು ಜನ ಯುವಕರು ಬೈಕ್ ಮೇಲೆ ಹೊಗೋವಾಗ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡೋ ಹೇಯ ಕೃತ್ಯ ನಡೆದಿತ್ತು. ಸಮಾಜಘಾತಕರಿಗೆ ಭಯ ಇಲ್ಲದಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.ಸರ್ಕಾರ ಈಗಲಾದರೂ ಗಂಭೀರವಾಗಿ ಪರಿಗಣಿಸಲಿ. ಆರೋಪ ಪರ ಯಾರು ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದರು. ಅಮಾಯಕ ಹೆಣ್ಣು ಮಗಳ ಕೊಲೆಯಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ಏನು ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದರು. +ಸರ್ಕಾರ ಮೂಕ ಪ್ರೇಕ್ಷಕನಂತಿದೆ: ಸಿ.ಟಿ.ರವಿ ಕಿಡಿಅವರು ಅವಳ ಕುತ್ತಿಗೆಗೆ ಚಾಕು ಹಾಕಿ ಸಾಯಿಸುತ್ತಾರೆ. ಸರ್ಕಾರ ಮೂಕಪ್ರೇಕ್ಷಕನಂತಿರುತ್ತದೆ ಎಂದು ಹುಬ್ಬಳ್ಳಿಯಲ್ಲಿ ಯುವತಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ. +ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್ ದರ್ಬಾರ್ನಲ್ಲಿ ನಮ್ಮ ದುರ್ದೈವ. ಹನುಮಾನ್ ಚಾಲೀಸಾ ಕೇಳುತ್ತೀರಾ? ಅವರು ನಿಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಮತ್ತು ಕಾಂಗ್ರೆಸ್ ಸರ್ಕಾರ ನಿಮ್ಮ ಮೇಲೆಯೇ ಕೇಸ್ ಹಾಕುತ್ತಾರೆ. +ರಾಮಮಂದಿರ ಉದ್ಘಾಟನೆ ವಿಜೃಂಭಣೆಯಿಂದ ಮಾಡ್ತೀರಾ? ಅವರು ರಾಮೇಶ್ವರಂ ಕೆಫೆಗೆ ಬಾಂಬ್ ಇಡುತ್ತಾರೆ ಮತ್ತು ಕಾಂಗ್ರೆಸ್ ಸರ್ಕಾರ ಅದನ್ನು ಲೋ ಇಂಟೆನ್ಸಿಟಿ ಬಾಂಬ್ ಎಂದು ಮೂಲೆಗುಂಪು ಮಾಡುತ್ತದೆ. +ರಾಮನವಮಿ ದಿನ ಜೈ ಶ್ರೀರಾಮ್ ಅನ್ನುತ್ತೀರಾ? ಅವರು ಅಲ್ಲಾ ಅಕ್ಬರ್ ಘೋಷಣೆ ಕೂಗಿ ಎಂದು ಹಲ್ಲೆ ಮಾಡುತ್ತಾರೆ ಮತ್ತು ಸರ್ಕಾರ ಮಗುಮ್ಮಾಗಿ ಕುಳಿತುಕೊಳ್ಳುತ್ತದೆ. ಬಿಜೆಪಿ ಪರ ಚುನಾವಣಾ ಪ್ರಚಾರ ಕೈಗೊಳ್ಳುತ್ತೀರಾ? ಅವರು ನಿಮ್ಮ ಮೇಲೆ ಕಾರು ಹರಿಸಿ ಸಾಯಿಸುತ್ತಾರೆ ಮತ್ತು ಎಲ್ಲರೂ ಮೌನವಾಗಿರುತ್ತಾರೆ. +ನನಗಲ್ಲ ಎನ್ನುವ ಕಾಲ ಇದಲ್ಲ. ಪ್ರತಿಯೊಂದು ಬೆಳವಣಿಗೆಗೂ ನಮ್ಮ ಮೌನವು ಒಂದು ಕಾರಣ. ಇನ್ನಾದರೂ ಎದ್ದು ನಿಲ್ಲು ಹಿಂದೂ, ಸುಮ್ಮನಿದ್ದರೆ ದೇಶವೂ ಇರದು, ಜಾತಿಯು ಇರದು, ನಾನು ಇರೆನು, ನೀನು ಇರಲಾರೆ ಎಂದು ಸಿ.ಟಿ.ರವಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_46_175_12.txt b/eesanje/url_46_175_12.txt new file mode 100644 index 0000000000000000000000000000000000000000..dda031d03f56611c4913b492d19707d5d637b139 --- /dev/null +++ b/eesanje/url_46_175_12.txt @@ -0,0 +1,6 @@ +ಎನ್‌ಕೌಂಟರ್‌ ಕಾನೂನು ಜಾರಿಗೆ ಬರಲೇಬೇಕು : ಸಚಿವ ಸಂತೋಷ್ ಲಾಡ್ +ಹುಬ್ಬಳ್ಳಿ, ಏ.19-ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಬರ್ಬರ ಕೊಲೆ ಪ್ರಕರಣ ದುರದೃಷ್ಟಕರ. ಈ ಪ್ರಕರಣ ಖಂಡನೀಯ. ಎನ್ಕೌಂಟರ್ ಕಾನೂನು ತರಬೇಕಾದ ಅಗತ್ಯವಿದೆ ಎಂದು ಇಲ್ಲಿನ ಕಿಮ್ಸ್ ಶವಗಾರಕ್ಕೆ ಭೇಟಿ ನೀಡಿದ ನಂತರ ಸಚಿವ ಸಂತೋಷ್ಲಾಡ್ ಹೇಳಿದರು. ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಮಾತನಾಡಿದ ಅವರು, ಎನ್ಕೌಂಟರ್ ಬಗ್ಗೆ ಹಲವು ಮುಖಂಡರು ಮಾತನಾಡಿದ್ದಾರೆ. ನಾನು ಏನು ಹೇಳುವುದಿಲ್ಲ. ಆದರೆ ಮುಂದೆ ಇದಕ್ಕೆ ಒಂದು ಕಾನೂನು ಬರಲೇಬೇಕು ಎಂದರು. +ಡ್ರಗ್ಸ್ ಮಾಫಿಯಾ ಬಹಳ ದಿನದಿಂದ ಇದೆ. ಡ್ರಗ್ಸ್ ಬೇರೆ ಬೇರೆ ಕಡೆಯಿಂದ ಬರುತ್ತದೆ. ಇದು ಕೇವಲ ರಾಜ್ಯದ ಸಮಸ್ಯೆಯಲ್ಲ. ಈಗ ಆಗಿರುವ ಘಟನೆಗೆ ಅದಕ್ಕೂ ಹೋಲಿಕೆ ಬೇಡ ಎಂದು ಹೇಳಿದರು. ಎನ್ಕೌಂಟರ್ ಕಾನೂನು ಜಾರಿಗೊಳಿಸಿದರೆÉ ಈ ರೀತಿ ಮಾಡುವವರನ್ನು ಹೊಡೆದು ಉರುಳಿಸಬಹುದು ಎಂದರು. +ಎಲ್ಲ ಸರ್ಕಾರದ ಅವಧಿಯಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಸರ್ಕಾರಗಳ ಅವ„ಯಲ್ಲಿ ಘಟನೆಗಳ ಸಂಖ್ಯೆಗಳನ್ನು ಕೊಡಬಲ್ಲೆ, ಆದರೆ ಅದಕ್ಕೆ ಉತ್ತರಿಸುವ ಪರಿಸ್ಥಿತಿ ಇದಲ್ಲ. ಕೆಲವರು ಇದನ್ನ ರಾಜಕೀಯ ಮಾಡಲು ಹೊರಟಿದ್ದಾರೆ. ಅವರಿಗೆ ಏನು ಅಂತಾ ಹೇಳಲಿ, ಇಂತಹ ಸೂಕ್ಷ್ಮ ವಿಷಯಗಳಲ್ಲಿ ರಾಜಕೀಯಗೊಳಿಸದೇ ಸೂಕ್ಷ್ಮತೆ, ಸ್ವಯಂತೆ ಕಾಯ್ದುಕೊಳ್ಳಬೇಕು ಬಿಜೆಪಿಗರಿಗೆ ಕಿವಿ ಮಾತು ಹೇಳಿದರು. +ಕಳೆದ ಎರಡು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟು 13.30 ಲಕ್ಷ ಯುವತಿಯರು ಮಹಿಳೆಯರು ಕಾಣೆಯಾಗಿದ್ದಾರೆ. ಈ ಬಗ್ಗೆ ಜೋಶಿ ಉತ್ತರಿಸಿಲಿ. ಹುಬ್ಬಳ್ಳಿ ಘಟನೆ ರಾಜಕೀಕರಣಗೊಳಿಸುತ್ತಿರುವ ಬಿಜೆಪಿಯವರು, ಬೆಂಗಳೂರು ಘಟನೆ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ. ಘಟನೆಯನ್ನು ಬೇರೆ ಆಯಾಮದಲ್ಲಿ ನೋಡಬಾರದು. +ತನಿಖೆ ಮುಗಿಯದೇ ರಾಜಕೀಯ ಹೇಳಿಕೆ ನೀಡುವುದು ಸರಿಯಲ್ಲ. ಬಿಜೆಪಿ ಅ„ಕಾರ ಇರುವ ರಾಜ್ಯದಲ್ಲಿ ಇಂತಹ ಘಟನೆ ನಡೆದಿಲ್ಲವೇ, ಅಂಕಿ ಸಂಖ್ಯೆ ಕೊಡಲೇ ಎಂದು ತಿರುಗೇಟು ನೀಡಿದರು. ತನಿಖೆ ಬಗ್ಗೆ ಈಗ ಮಾತನಾಡುವುದಿಲ್ಲ ಎಂದರು.ಘಟನೆ ಆಕಸ್ಮಿಕ ಎಂಬ ಗೃಹಸಚಿವರ ಹೇಳಿಕೆಯನ್ನು ಸಚಿವ ಲಾಡ್ ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_175_2.txt b/eesanje/url_46_175_2.txt new file mode 100644 index 0000000000000000000000000000000000000000..aa751725716d96d9c642cb1eb1d0003bc93206ac --- /dev/null +++ b/eesanje/url_46_175_2.txt @@ -0,0 +1,4 @@ +ಕಾಂಗ್ರೆಸ್ ರೈತ ವಿರೋಧಿ ಎನ್ನುವುದಕ್ಕೆ ಕರ್ನಾಟಕ ಸರ್ಕಾರವೇ ತಾಜಾ ಉದಾಹರಣೆ : ಮೋದಿ ವಾಗ್ದಾಳಿ +ಚಿಕ್ಕಬಳ್ಳಾಪುರ, ಕಾಂಗ್ರೆಸ್ ರೈತ ವಿರೋಧಿ ಎನ್ನುವುದಕ್ಕೆ ಕರ್ನಾಟಕ ಸರ್ಕಾರವೇ ತಾಜಾ ಉದಾಹರಣೆ ಎಂದು ಪ್ರಧಾನಿ ನರೇಂದ್ರಮೋದಿ ಇಂಡಿ ಮೈತ್ರಿ ವಿರುದ್ಧ ವಾಗ್ದಾಳಿ ನೆಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಚಿಕ್ಕಬಳ್ಲಾಪುರ ಅಭ್ಯರ್ಥಿ ಡಾ. ಕೆ ಸುಧಾಕರ್‌ ಹಾಗೂ ಕೋಲಾರ ಅಭ್ಯರ್ಥಿ ಜೆಡಿಎಸ್‌ನ ಮಲ್ಲೇಶ್‌ ಬಾಬು ಪರ ಮತ ಯಾಚಿಸಿ ಮಾಡನಾಡಿ ಅವರು, ನಮ್ಮ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ಸಣ್ಣ ರೈತರಿಗೆ ಆರು ಸಾವಿರ ಮತ್ತು ರಾಜ್ಯ ಬಿಜೆಪಿ ಸರ್ಕಾರ ನಾಲ್ಕು ಸಾವಿರ ಸೇರಿಸಿ ವಾರ್ಷಿಕ ಹತ್ತು ಸಾವಿರ ಸಹಾಯ ದಾನ ನೀಡಲಾಗುತ್ತಿದ್ದು, ಆದರೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ೪ ಸಾವಿರ ವನ್ನು ರದ್ದು ಮಾಡಿ ರೈತರಿಗೆ ಅನ್ಯಾಯ ಮಾಡಿದೆ. ಇದು ಕಾಂಗ್ರೆಸ್ ನ ರೈತ ವಿರೋಧಿ ನಡೆಗೆ ತಾಜಾ ಉದಾಹರಣೆ ಆಗಿದೆ. . ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರೇ ಶಿಕ್ಷೆ ನೀಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಮೋದಿ ಹೇಳಿದ್ದಾರೆ. +ಅಧಿಕಾರದ ಆಸೆಯಲ್ಲಿರುವ ಇಂಡಿ ಮೈತ್ರಿಗೆ ಈಗ ಯಾವುದೇ ನಾಯಕನಿಲ್ಲ. ಭವಿಷ್ಯದ ಬಗ್ಗೆ ಯಾವುದೇ ಯೋಚನೆಗಳೂ ಅವರ ಮೈತ್ರಿಗೆ ಇಲ್ಲ. ಇದಲ್ಲದೆ, ಅವರ ಇತಿಹಾಸ ಪೂರ್ತಿ ಹಗರಣಗಳಿಂದಲೇ ತುಂಬಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರದ ಸೋದರ ಸೋದರಿಯಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ಮೋದಿ, ಸಂತ ಕೈವಾರ ತಾತಯ್ಯ ಹಾಗೂ ಸರ್‌ ಎಂ ವಿಶ್ವೇಶ್ವರಯ್ಯ ಅವರ ನೆಲಕ್ಕೆ ಬಂದಿರುವುದು ಖುಷಿ ಇದೆ. ಮೊದಲ ಹಂತದ ವೋಟಿಂಗ್‌ ದೇಶದ ಉತ್ಸಾಹ ಹೆಚ್ಚಿದೆ. ಈ ಉತ್ಸಾಹ ಇಲ್ಲಿಯೂ ಕಾಣುತ್ತಿದೆ. ಮೊದಲ ಹಂತದ ಮತದಾನ ಎನ್‌ಡಿಎ ಪರವಾಗಿ ಬಂದಿದೆ. ನಾನು ದೇವೇಗೌಡರಿಗೆ ಆಭಾರಿಯಾಗಿದ್ದೇನೆ. 90ರ ವಯಸ್ಸಿನಲ್ಲೂ ಅವರಲ್ಲಿನ ಉತ್ಸಾಹ, ಬದ್ಧತೆ ನನ್ನಂಥ ಯುವಕರಿಗೂ ಪ್ರೇರಣಾದಾಯಿಯಾಗಿದೆ ಎಂದು ಮೋದಿ ಹೇಳಿದರು. +ದೇವೇಗೌಡರು ಇಂಡಿ ಮೈತ್ರಿಯ ಒಬ್ಬೊಬ್ಬರ ಪಾತ್ರವನ್ನು ತುಂಬಾ ಚೆನ್ನಾಗಿ ಹೇಳಿದರು. ಆದರೆ, ಇಂಡಿ ಮೈತ್ರಿಯಲ್ಲಿ ಯಾರೂ ಲೀಡರ್‌ಗಳಿಲ್ಲ. ಭವಿಷ್ಯದಲ್ಲಿ ಯಾವುದೇ ವಿಷನ್‌ಗಳೂ ಇಲ್ಲ. ಆದರೆ, ಅವರ ಹಿಸ್ಟರಿಯಲ್ಲಿ ಇತಿಹಾಸಗಳೇ ತುಂಬಿದಿದೆ. ಚಿಕ್ಕಬಳ್ಳಾಪುರದ ನೆಲ ಈಗಾಗಲೇ ಮತ್ತೊಮ್ಮೆ ಮೋದಿ ಸರ್ಕಾರ ಎಂದು ತೀರ್ಮಾನ ಮಾಡಿದೆ. ಇಂದು ನಿಮ್ಮ ಎದುರು ನನ್ನ ರಿಪೋರ್ಟ್‌ ಕಾರ್ಡ್‌ ಇಟ್ಟು ಆಶೀರ್ವಾದ ಕೇಳಲು ಬಂದಿದ್ದೇನೆ. ನಿಮ್ಮೆಲ್ಲರನ್ನೂ ನನ್ನ ಪರಿವಾರ ಎಂದುಕೊಂಡಿದ್ದೇನೆ. ನಿಮ್ಮ ಸಲುವಾಗಿ ದಿನರಾತ್ರಿ ಕೆಲಸ ಮಾಡುವ ವಿಚಾರದಲ್ಲಿ ಯಾವುದನ್ನೂ ಕಡಿಮೆ ಮಾಡಿಲ್ಲ. ನಿಮ್ಮ ಕನಸುಗಳೇ ನನ್ನ ಸಂಕಲ್ಪ. ಪ್ರತಿ ಕ್ಷಣ ನಿಮ್ಮ ಹೆಸರಿಗೆ, ಪ್ರತಿ ಕ್ಷಣ ದೇಶದ ಹೆಸರಿಗೆ.. ಇದೇ ಕಾರಣಕ್ಕೆ ಬರೀ ಕೆಲಸ ಮಾತ್ರ ಮಾಡೋದಿಲ್ಲ. ಅದರ ಗ್ಯಾರಂಟಿ ಕೂಡ ನೀಡ್ತೇನೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_175_3.txt b/eesanje/url_46_175_3.txt new file mode 100644 index 0000000000000000000000000000000000000000..6ef08567c3b0746e99f1e2214c0fcb2925d67d0f --- /dev/null +++ b/eesanje/url_46_175_3.txt @@ -0,0 +1,5 @@ +ರಾಜ್ಯದ ವಿವಿಧೆಡೆ ವರುಣನ ಸಿಂಚನ +ಬೆಂಗಳೂರು, ಏ.20-ಬಿಸಿಲ ಬೇಗೆಯಿಂದ ಬಸವಳಿದಿದ್ದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವರುಣ ಕೃಪೆ ತೋರಿದ್ದು, ಇಂದು ಬೆಳ್ಳಂಬೆಳಗ್ಗೆ ವಿವಿಧೆಡೆ ಮಳೆಯ ಸಿಂಚನವಾಗಿದೆ.ನಿನ್ನೆ ತುಮಕೂರು, ಮಂಡ್ಯ, ಮಾಗಡಿ, ಮೈಸೂರು, ಚಿಕ್ಕಮಗಳೂರು, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಸೇರಿದಂತೆ ಮತ್ತಿತರ ಕಡೆ ಮಳೆಯಾಗಿದ್ದು, ಇಂದು ಬೆಳಗ್ಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ. +ವಿಜಯನಗರ ಜಿಲ್ಲೆಯಾದ್ಯಂತ ಇಂದು ನಸುಕಿನ ಜಾವ ಮೋಡ ಕವಿದ ವಾತಾವರಣವಿದ್ದು, ಹೊಸಪೇಟೆ ನಗರ, ಹೂವಿನ ಹಡಗಲಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಎರಡು ತಾಸಿಗೂ ಹೆಚ್ಚು ಕಾಲ ಗುಡುಗು ಸಹಿತ ಭಾರೀ ಮಳೆಯಾಗಿದೆ. +ಇನ್ನು ಹುಬ್ಬಳ್ಳಿಯಲ್ಲೂ ಸಹ ಮಳೆಯಾಗಿದ್ದು, ಜನರಿಗೆ ಸಂತಸ ತಂದಿದೆ. ಚಿಕ್ಕಮಗಳೂರು, ಶಿವಮೊಗ್ಗ, ಯಾದಗಿರಿ, ವಿಜಯನಗರ, ಗದಗ, ಬೆಳಗಾವಿ, ಧಾರವಾಡದಲ್ಲೂ ಸಹ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆ ಮಳೆಯಾಗುವ ಸಾಧ್ಯತೆ ಇದೆ. +ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ನಾಡಿನ ಜನತೆಗೆ ವರುಣನ ಸಿಂಚನದಿಂದ ತುಸು ತಂಪೆರೆದಂತಾಗಿದೆ. \ No newline at end of file diff --git a/eesanje/url_46_175_4.txt b/eesanje/url_46_175_4.txt new file mode 100644 index 0000000000000000000000000000000000000000..106cd129edb9de1bb44813d2b506ec49aa66a4fd --- /dev/null +++ b/eesanje/url_46_175_4.txt @@ -0,0 +1,5 @@ +ಗೊಂದಲದ ಗೂಡಾದ ಸಿಇಟಿ ಪರೀಕ್ಷೆ : ಮರುಪರೀಕ್ಷೆಗೆ ರುಪ್ಸಾ ಆಗ್ರಹ +ಬೆಂಗಳೂರು,ಏ.20-ಇತ್ತೀಚೆಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಹೊರಪಠ್ಯ (ಔಟ್ ಆಫ್ ಸಿಲಬೆಸ್) ಪ್ರಶ್ನೆಗಳೇ ಹೆಚ್ಚಾಗಿ ವಿದ್ಯಾರ್ಥಿಗಳು, ಪೊಷಕರು ಆತಂಕಗೊಳಗಾಗಿದ್ದಾರೆ, ಉಪನ್ಯಾಸಕರು ಅಸಹಾಯಕರಾಗಿದ್ದಾರೆ, ಕೂಡಲೇ ಮರು ಪರೀಕ್ಷೆ ನಡೆಸಬೇಕೆಂದು ರುಪ್ಸಾ ಸಂಘಟನೆ ಆಗ್ರಹಿಸಿದೆ. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಇಂಜಿನಿಯರಿಂಗ್, ಮತ್ತಿತರೆ ಕೋರ್ಸ್ಗಳಿಗೆ ಸೇರಲು 3.50 ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದೆರೆಡು ವರ್ಷದಿಂದ ಶ್ರಮ ವಹಿಸಿ ಸಿಇಟಿಗೆ ತಯಾರಾಗಿ ಪರೀಕ್ಷೆ ಎದುರಿಸಿದ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಗಳಲ್ಲಿ ಹೊರಪಠ್ಯ ಪ್ರಶ್ನೆಗಳನ್ನು ಹೆಚ್ಚು ನೀಡಿರುವುದರಿಂದ ಆತಂಕಕ್ಕೆ ಒಳಗಾಗಿದ್ದಾರೆ. +ಒಂದು ವಿಷಯದಲ್ಲಿ ಒಂದು ಅಥವಾ ಎರಡು ಪ್ರಶ್ನೆಗಳು ತಪ್ಪಾಗಿ ಸಹಜ. ಅವುಗಳಿಗೆ ಗ್ರೇಸ್ ಮಾಕ್ರ್ಸ್ ಕೊಡುವಂತಹುದು ಸಾಮಾನ್ಯವಾಗಿತ್ತು. ಆದರೆ ಪ್ರಸ್ತುತ ನಡೆದ ಸಿಇಟಿ ಪರೀಕ್ಷೆಯ ನಾಲ್ಕೂ ವಿಷಯಗಳಲ್ಲಿ ಒಟ್ಟು 46 ಪ್ರಶ್ನೆಗಳು ಪಠ್ಯವನ್ನು ಹೊರತುಪಡಿಸಿ ಕೇಳಿರುವುದು ಅವಾಂತರಗಳಿಗೆ ಕಾರಣವಾಗಿದೆ. 240 ಅಂಕಗಳಲ್ಲಿ 46 ಪ್ರಶ್ನೆಗಳು ಪಠ್ಯಗಳಲ್ಲಿ ಇಲ್ಲದ ಪ್ರಶ್ನೆಗಳು ಬಂದಿರುವುದು ಇದೇ ಮೊದಲು. ಮರುಪರೀಕ್ಷೆಯಿಂದ ಮಾತ್ರ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ. +ಈ ರೀತಿಯ ಬೇಜವಾಬ್ದಾರಿ ಹಾಗೂ ಪ್ರಮಾದಕ್ಕೆ ಕಾರಣರಾದವರನ್ನು ತಕ್ಷಣ ತನಿಖೆಗೊಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಕೂಡಲೇ ಸಿಇಟಿ ಮರು ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ವಿಳಂಬ ಮಾಡಿದರೆ ಮಕ್ಕಳ ಹಿತ ಕಾಯಲು ನಮ್ಮ ಸಂಘಟನೆ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲು ಹಿಂಜರಿಯುವುದಿಲ್ಲ. ಶಿಕ್ಷಣ ಮಂತ್ರಿಗಳು ಕೂಡಲೇ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_175_5.txt b/eesanje/url_46_175_5.txt new file mode 100644 index 0000000000000000000000000000000000000000..5d1ac17390d22e6a348e0a2ca84a40a9d5bd31d2 --- /dev/null +++ b/eesanje/url_46_175_5.txt @@ -0,0 +1,8 @@ +ಗದಗದಲ್ಲಿ ನಾಲ್ವರ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್..! +ಬೆಂಗಳೂರು,ಏ.20-ಗದಗ ನಗರದ ದಾಸರ ಓಣಿಯಲ್ಲಿ ನಿವಾಸಿ ನಗರಸಭಾ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಸುಫಾರಿ ಹಂತಕರು ಕೊಲೆ ಮಾಡಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಈ ಸುಫಾರಿ ಹಂತಕರು ಯಾರು? ಇವರಿಗೆ ಯಾರು ಸುಫಾರಿ ಕೊಟ್ಟರು? ಯಾವ ಕಾರಣಕ್ಕಾಗಿ ಸುಫಾರಿ ಕೊಟ್ಟಿದ್ದಾರೆ ಎಂಬ ಬಗ್ಗೆ ಗದಗ ಪೊಲೀಸರು ತನಿಖೆ ಕೈಗೊಂಡಿದ್ದಾರೆ. +ಇಷ್ಟೊಂದು ಕ್ರೂರವಾಗಿ ಕೊಲೆ ಮಾಡಿರುವುದು ಗಮನಿಸಿ ದರೆ ಇದು ಸುಫಾರಿಹಂತಕರೇ ಈ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಕೌಟುಂಬಿಕ ವೈಷಮ್ಯ ಅಥವಾ ಆಸ್ತಿ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆ ನಿಟ್ಟಿನಲ್ಲಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. +ಆರೋಪಿಗಳ ಬಂಧನಕ್ಕೆ ಈಗಾಗಲೇ ಐದು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡ ಕೊಪ್ಪಳಕ್ಕೆ ಹೋಗಿ ಪರಶುರಾಮ ಕುಟುಂಬದ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಪರಶುರಾಮ ಅವರು ಕೊಪ್ಪಳದ ಭಾಗ್ಯನಗರದ ನಿವಾಸಿಗಳಾಗಿದ್ದು, ನಗರಸಭೆ ಸದಸ್ಯೆ ಸುನಂದಾ ಅವರ ಪುತ್ರ ಕಾರ್ತಿಕ್ ಪುತ್ರ ಕಾರ್ತಿಕ್ ನಿಶ್ಚಿತಾರ್ಥ ನಿಮಿತ್ತ ಏ.17ರಂದು ಇವರ ಮನೆಗೆ ಬಂದಿದ್ದರು. +ಮೊನ್ನೆ ಪರಶುರಾಮ ಅವರ ಪತ್ನಿ ಲಕ್ಷ್ಮಿ ಅವರ ಹುಟ್ಟಹಬ್ಬವಿದುದ್ದರಿಂದ ಅಂದು ರಾತ್ರಿ ಕುಟುಂಬದವರೆಲ್ಲ ಸಂತೋಷದಿಂದ ಹುಟ್ಟಹಬ್ಬ ಆಚರಿಸಿ ಗಾಢ ನಿದ್ರೆಗೆ ಜಾರಿದ್ದರು. ಬೆಳಗಾಗುವಷ್ಟರಲ್ಲಿ ದುಷ್ಕರ್ಮಿಗಳು ಇವರ ಮನೆಗೆ ಹಿಂಭಾಗದ ಕಿಟಕಿ, ಗಾಜು ಒಡೆದು ಆ ಮೂಲಕ ಒಳನುಗ್ಗಿದ್ದಾರೆ. +ಪರಶುರಾಮ್ ಕುಟುಂಬ ಮೊದಲು ದುಷ್ಕರ್ಮಿಗಳ ಕಣ್ಣಿಗೆ ಬಿದ್ದಿದ್ದು, ಪರಶುರಾಮ್, ಇವರ ಪತ್ನಿ ಹಾದಿಮನಿ, ಪುತ್ರಿ ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕುತ್ತಿಗೆ ಕೊಯ್ದ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಅಷ್ಟಕ್ಕೆ ತಮ್ಮ ಕ್ರೌರ್ಯ ನಿಲ್ಲಿಸದೆ ನಿದ್ದೆಗಣ್ಣಿನಿಂದಲೇ ಎದ್ದುಬಂದ ಕಾರ್ತಿಕ್ ಅವರ ಮೇಲೂ ಮಚ್ಚು ಬೀಸಿ ಕೊಲೆ ಮಾಡಿ ನಂತರ ಸುನಂದಾ ಅವರ ಕೊಠಡಿ ಬಳಿ ಹೋಗಿ ಬಾಗಿಲು ತಟ್ಟಿದ್ದು, ಎಷ್ಟು ಹೊತ್ತಾದರೂ ಬಾಗಿಲು ತೆಗೆಯದಿದ್ದಾಗ ತಾವು ಸಿಕ್ಕಿ ಹಾಕಿಕೊಳ್ಳುವ ಭಯದಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. +ಒಂದು ವೇಳೆ ಸುನಂದಾ ಅವರು ಕೊಠಡಿ ಬಾಗಿಲು ತೆಗೆದಿದ್ದರೆ ಅವರನ್ನೂ ಸಹ ಕೊಲೆ ಮಾಡುವ ಸಾಧ್ಯತೆಯಿತ್ತು.ಇಷ್ಟೊಂದು ಭೀಕರವಾಗಿ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿರುವುದ ಗಮನಿಸಿದರೆ ಇದು ಹಣ, ಆಭರಣಕ್ಕಾಗಿ ನಡೆದಿರುವುದಲ್ಲ ಎಂಬುದು ಗೊತ್ತಾಗುತ್ತಿದೆ. ಕೊಲೆಯಾದವರ ಮೈಮೇಲಿದ್ದ ಆಭರಣಗಳು ಹಾಗೆಯೇ ಇವೆ. ಹಾಗಾಗಿ ಇದು ಲಾಭಕ್ಕಾಗಿ ನಡೆದಿರುವುದಲ್ಲ ಎಂಬುದು ಕಂಡುಬಂದಿದೆ. +ಗದಗ ಪಟ್ಟಣ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸುನಂದಾ ಅವರ ಮನೆಯ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿ ಅದರಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳನ್ನು ಆಧರಿಸಿ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ನೀರವ ಮೌನ: ನಗಸಬಾ ಸದಸ್ಯೆ ಸುನಂದಾ ಅವರ ಮನೆಯಲ್ಲಿ ನೀರವ ಮೌನ ಆವರಿಸಿದೆ. ಪುತ್ರ ಹಾಗೂ ಸಂಬಂಕರನ್ನು ಕಳೆದುಕೊಂಡ ಮದುವೆ ಮನೆ ಸ್ಮಶಾನದಂತೆ ಮೌನವಾಗಿದೆ. \ No newline at end of file diff --git a/eesanje/url_46_175_6.txt b/eesanje/url_46_175_6.txt new file mode 100644 index 0000000000000000000000000000000000000000..d5aa92769f17c45627921487e1eebeca009c1121 --- /dev/null +++ b/eesanje/url_46_175_6.txt @@ -0,0 +1,13 @@ +ರಾಜ್ಯದಲ್ಲಿ ಎರಡು ರಾಜಕೀಯ ಕುಟುಂಬಗಳಿಗೆ ಪ್ರತಿಷ್ಠೆಯಾದ ಲೋಕಸಭೆ ಚುನಾವಣೆ +ಬೆಂಗಳೂರು,ಏ.20-ಈ ಬಾರಿಯ ಲೋಕಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ಗೆ ಮಾತ್ರ ಪ್ರತಿಷ್ಠೆಯಾಗಿರದೆ ರಾಜ್ಯದ ಎರಡು ಪ್ರಬಲ ರಾಜಕೀಯ ಕುಟುಂಬ ಗಳಿಗೂ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. +ರಾಜಕೀಯವನ್ನೇ ಅರಗಿಸಿಕೊಂಡಿರುವ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ರೈತ ಹೋರಾಟದ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಭದ್ರ ಬುನಾದಿ ಹಾಕಿ ರಾಜಕೀಯ ನಿವೃತ್ತಿ ಅಂಚಿನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಲೋಕಸಭೆ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. +ಒಂದು ವೇಳೆ ಈ ಚುನಾವಣೆಯಲ್ಲಿ ದೇವೇಗೌಡ ಮತ್ತು ಯಡಿಯೂರಪ್ಪ ಕುಟುಂಬಕ್ಕೆ ಅಪ್ಪಿತಪ್ಪಿಯೂ ಸ್ವಲ್ಪವೇನಾ ದರೂ ಹಿನ್ನಡೆಯಾದರೆ ಎರಡೂ ಕುಟುಂಬಗಳ ರಾಜಕೀಯ ಭವಿಷ್ಯಕ್ಕೆ ಕಲ್ಲು ಬೀಳುವುದರಲ್ಲಿ ಸಂಶಯವಿಲ್ಲ ಎಂದು ಇಬ್ಬರನ್ನೂ ಹತ್ತಿರದಿಂದ ಬಲ್ಲವರು ಹೇಳುತ್ತಿದ್ದಾರೆ. +ಹೀಗಾಗಿಯೇ ದೇವೇಗೌಡ ಮತ್ತು ಯಡಿಯೂರಪ್ಪ ತಮ್ಮ ರಾಜಕೀಯ ಜಿದ್ದನ್ನು ಮರೆತು ಪರಸ್ಪರ ಒಂದಾಗಿ ಹೆಗಲಿಗೆ ಹೆಗಲು ಕೊಟ್ಟು ಮೈತ್ರಿಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಇತ್ತೀಚಿನ ಚುನಾವಣೆಗಳಲ್ಲಿ ಎಚ್ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಕಳಪೆ ಸಾಧನೆ ಮಾಡಿದ್ದು, ಈ ಚುನಾವಣೆ ಕೂಡ ಕೈ ಕೊಟ್ಟರೆ ದೇವೇಗೌಡರ ಕುಟುಂಬದ ರಾಜಕೀಯ ಹಿಡಿತ ಮತ್ತಷ್ಟು ಸಡಿಲಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. +2004ರಲ್ಲಿ 58 ಶಾಸಕರನ್ನು ಹೊಂದಿದ್ದ ಜೆಡಿಎಸ್ ಈಗ ಕೇವಲ 19 ಶಾಸಕರು ಹಾಗೂ ಏಕೈಕ ಸಂಸದ ಸ್ಥಾನಕ್ಕೆ ಇಳಿದಿದೆ. ಜೆಡಿಎಸ್ನ ಅಧಃಪತನಕ್ಕೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪ್ರಮುಖ ಕಾರಣ. 2023ರ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಗಣನೀಯವಾಗಿ ಕಾಂಗ್ರೆಸ್ ಕಡೆ ತಿರುಗಿಸುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿಯಾಗಿದ್ದಾರೆ. +ಡಿ.ಕೆ.ಶಿವಕುಮಾರ್ ಅವರು ಅಗ್ರೆಸ್ಸಿವ್ ಆಗಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುತ್ತಿದ್ದಾರೆ. ಒಕ್ಕಲಿಗ ಮುಖಂಡರ ಜೊತೆ ರಹಸ್ಯ ಸಭೆಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಅದರ ಜೊತೆಗೆ ದೇವೇಗೌಡರ ಕುಟುಂಬದ ಪ್ರಾಬಲ್ಯದಿಂದ ತಮ್ಮನ್ನು ತಾವು ಮುಕ್ತಗೊಳಿಸಬೇಕಾದ ಅಗತ್ಯವನ್ನು ಒಕ್ಕಲಿಗ ಮುಖಂಡರ ಮುಂದೆ ಪ್ರತಿಪಾದಿಸುತ್ತಿದ್ದಾರೆ. ಜೊತೆಗೆ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ನ ಮೂಲಗಳು ಹೇಳಿವೆ. +ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಸಾಕಷ್ಟು ಕ್ಷೇತ್ರಗಳನ್ನು ಗೆದ್ದರೆ ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ಗೆ ಅಸ್ತಿತ್ವದ ಪ್ರಶ್ನೆ ಉಂಟಾಗಲಿದೆ ಎಂದು ಜೆಡಿಎಸ್ನ ಹಿರಿಯ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಒಕ್ಕಲಿಗ ಸಮುದಾಯದ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬಳಸಿಕೊಂಡು ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳನ್ನು ಓಲೈಸಲು ಕಾಂಗ್ರೆಸ್ ಸರ್ವಪ್ರಯತ್ನ ನಡೆಸುತ್ತಿದೆ. +ಈ ಸಮಸ್ಯೆಯನ್ನು ಗ್ರಹಿಸಿರುವ ದೇವೇಗೌಡ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ನರೇಂದ್ರಮೋದಿ ಅವರು ಮೂರನೇ ಅವಗೆ ಪ್ರಧಾನಿಯಾದರೆ ಕೇಂದ್ರ ಸರ್ಕಾರದ ಭಾಗವಾಗಬಹುದು. ಆದರೆ ಒಕ್ಕಲಿಗರು ಗೌಡರ ಕುಟುಂಬವನ್ನು ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತಾರೆಯೇ? ದೇವೇಗೌಡರ ಕುಟುಂಬ ಯಾವಾಗ ರಾಜಕೀಯವಾಗಿ ಕುಸಿತ ಕಂಡಿದೆಯಾ? ಆಗೆಲ್ಲಾ ಒಕ್ಕಲಿಗ ಸಮುದಾಯ ಅವರ ರಕ್ಷಣೆಗೆ ನಿಂತಿದೆ ಎಂಬ ಭಾವನೆ ಸಮುದಾಯದ ಅನೇಕರಲ್ಲಿದೆ. +ಯಡಿಯೂರಪ್ಪಗೆ ಆಂತರಿಕ ಸವಾಲು: ಅತ್ತ ದೇವೇಗೌಡರ ಕುಟುಂಬಕ್ಕೆ ಡಿ.ಕೆ.ಶಿವಕುಮಾರ್ ಸವಾಲಾಗಿದ್ದರೆ, ಇತ್ತ ಬಿಎಸ್ ಯಡಿಯೂರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಪಕ್ಷದಲ್ಲಿಯೇ ಹಲವು ಸವಾಲುಗಳು ಎದುರಾಗಿವೆ. ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷರನ್ನಾಗಿ ಮಾಡಿದ್ದಕ್ಕೆ ರಾಜ್ಯ ಬಿಜೆಪಿ ಘಟಕದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ನಳಿನ್ ಕುಮಾರ್ ಕಟೀಲ್, ಕೆಎಸ್ ಈಶ್ವರಪ್ಪ, ಡಿವಿ ಸದಾನಂದಗೌಡ ಸೇರಿ ಹಲವು ಹಿರಿಯ ಬಿಜೆಪಿ ನಾಯಕರು ವಿಜಯೇಂದ್ರ ಅವರ ಬಡ್ತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. +ಕೆ.ಎಸ್.ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಡಿವಿ ಸದಾನಂದಗೌಡ ಅವರು ಯಡಿಯೂರಪ್ಪನವರ ಕುಟುಂಬವನ್ನು ಚುನಾವಣೆ ಬಳಿಕ ಎದುರಿಸಲು ಪಣ ತೊಟ್ಟಿದ್ದಾರೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಈಶ್ವರಪ್ಪ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. +ಇನ್ನು ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದು, ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದ ಜೆಸಿ ಮಾಧುಸ್ವಾಮಿ, ಬಿಎನ್ ಚಂದ್ರಪ್ಪ, ಮಾಲೀಕಯ್ಯ ಗುತ್ತೇದಾರ್ ಸೇರಿ ಅನೇಕರಿಗೆ ಎಂಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅವರು ಕೆರಳಿದ್ದಾರೆ. ಹೀಗಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ಮೇಲೆ ಒತ್ತಡ ಸೃಷ್ಟಿಯಾಗಿರುವುದು ಸ್ಪಷ್ಟವಾಗಿದೆ. +ಬಿಎಸ್ವೈ ಕುಟುಂಬಕ್ಕೆ ಇದು ಮಾಡು ಇಲ್ಲವೇ ಮಡಿ ಕದನ ಎಂದು ಉತ್ತರ ಕರ್ನಾಟಕದ ಬಿಜೆಪಿಯ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ಗಿಂತ ಎನ್ಡಿಎ ಹೆಚ್ಚು ಸ್ಥಾನಗಳನ್ನು ಗೆದ್ದರೆ, ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಕುಟುಂಬದ ಪ್ರಾಬಲ್ಯ ಮುಂದುವರಿಯುತ್ತದೆ. ಇಲ್ಲದಿದ್ದರೆ, ಬಿವೈ ವಿಜಯೇಂದ್ರ ಅವರು ರಾಜಾ್ಯಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಬರಬಹುದು. ಜೊತೆಗೆ ಕರ್ನಾಟಕ ಬಿಜೆಪಿ ಮೇಲೆ ಬಿಎಸ್ವೈ ಕುಟುಂಬಕ್ಕಿರುವ ಹಿಡಿತ ಸಡಿಲವಾಗಬಹುದು. \ No newline at end of file diff --git a/eesanje/url_46_175_7.txt b/eesanje/url_46_175_7.txt new file mode 100644 index 0000000000000000000000000000000000000000..0d17c4e564ab573b0ab6253be5fe809ae7151e65 --- /dev/null +++ b/eesanje/url_46_175_7.txt @@ -0,0 +1,10 @@ +ನೇಹಾ ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ನಿಲ್ಲದ ಆಕ್ರೋಶ, ರಾಕ್ಷಸ ಫಯಾಜ್‍ ಗಲ್ಲುಶಿಕ್ಷೆಗೆ ಒತ್ತಾಯ +ಹುಬ್ಬಳ್ಳಿ,ಏ.20-ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ನಿರಂಜನ ಅವರ ಪುತ್ರಿ ನೇಹಾ ಹಿರೇಮಠ ಕೊಲೆ ಖಂಡಿಸಿ ಎಬಿವಿಪಿ, ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿವೆ. +ಕೊಲೆ ಆರೋಪಿ ಫಯಾಜ್‍ನನ್ನು ಗಲ್ಲಿಗೇರಿಸಬೇಕೆಂಬ ಆಕ್ರೋಶ ಎಲ್ಲೆಡೆ ಭುಗಿಲೆದ್ದಿದೆ. ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು ಸೇರಿದಂತೆ ಎಲ್ಲೆಡೆ ಪ್ರತಿಭಟನೆಗಳು ತೀವ್ರಗೊಂಡಿವೆ. +ಕೊಲೆ ಖಂಡಿಸಿ ನಿನ್ನೆ ಕೂಡ ಹಲವೆಡೆ ಪ್ರತಿಭಟನೆ ನಡೆಸಲಾಯಿತು. ಇಂದು ಪ್ರತಿಭಟನೆ ತೀವ್ರಗೊಂಡಿದ್ದು, ಹುಬ್ಬಳ್ಳಿಯಲ್ಲಿ ಬಂದ್ ಮಾಡಿದರೆ ಬೆಂಗಳೂರಿನಲ್ಲಿ ಎಬಿವಿಪಿ ಕಾರ್ಯಕರ್ತರು ಗೃಹಸಚಿವ ಡಾ.ಜಿ.ಪರಮೇಶ್ವರ್ ಗೃಹಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು. +ಅತ್ತ ಹುಬ್ಬಳ್ಳಿಯಲ್ಲಿ ಜಯಕರ್ನಾಟಕ ಸಂಘಟನೆ, ದಲಿತ ಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆಯಿಂದಲೇ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಾಂಕೇತಿಕವಾಗಿ ಹುಬ್ಬಳ್ಳಿ ಬಂದ್ ಮಾಡಲಾಗಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಕನ್ನಡಪರ ಸಂಘಟನೆಗಳು ಎಚ್ಚರಿಸಿವೆ. +ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದಿಂದ ಬಿವಿಬಿ ಕಾಲೇಜುವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿವಿಧ ಸಂಘಟನೆಗಳು, ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ನೇಹಾ ಹತ್ಯೆ ರೀತಿಯಲ್ಲಿ ಹಲವು ಪ್ರಕರಣಗಳು ನಡೆಯುತ್ತಿವೆ. ಇದೊಂದು ಲವ್ ಜಿಹಾದ್ ಪ್ರಕರಣವಾಗಿದೆ. ರಾಜ್ಯಸರ್ಕಾರ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಜಯ ಕರ್ನಾಟಕ ಸಂಘಟನೆ ಮುಖಂಡ ಸುಧೀರ ಮುಧೋಳ ಹಾಗೂ ಸಂಘ ಸಂಘಟನೆಯ ಮುಖಂಡೆ ಮಧು ಪಟ್ಟಣಶೆಟ್ಟಿ ಮಾತನಾಡಿ, ಕೊಲೆ ಆರೋಪಿ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. +ಹೊಸೂರು ಸರ್ಕಲ್ ಬಳಿ ಮಾನವ ಸರಪಳಿ ಮಾಡಿ ಪ್ರತಿಭಟನೆ ನಡೆಸಲಾಯಿತು. ನಗರದ ಬಿವಿಬಿ ಕಾಲೇಜು ಸೇರಿದಂತೆ ವಿವಿಧಡೆ ವಿವಿಧ ಸಂಘಟನೆಗಳು ಪ್ರತಿಭಟನಾ ವೇಳೆ ರಾಜ್ಯ ಸರ್ಕಾರದ ಬೇಜವಾಬ್ದಾರಿಂದಲೇ ಈ ಘಟನೆಯಾಗಿದ್ದು ಎಂದು ಅಸಮಾಧಾನ ವ್ಯಕ್ತಪಡಿಸಿದರು. +ರಾಜ್ಯ ಸರ್ಕಾರವು ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳು ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಆಗಿವೆ ಎಂದು ಹೇಳಿದೆ. ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಹಾಗೂ ಇದು ಲವ್ ಜೆಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಯಿತು. +ಪೊಲೀಸ್ ಅಧಿಕಾರಿ ಜೊತೆಗೆ ಮಾತಿನ ಚಕಮಕಿ :ಹುಬ್ಬಳ್ಳಿ ಹೊಸೂರು ಕ್ರಾಸ್ ಬಳಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಮಾನವ ಸರಪಳಿ ಮಾಡಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದರು. ಇದಕ್ಕೆ ಆಕ್ರೋಶಗೊಂಡ ಕಾರ್ಯಕರ್ತರು ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. \ No newline at end of file diff --git a/eesanje/url_46_175_8.txt b/eesanje/url_46_175_8.txt new file mode 100644 index 0000000000000000000000000000000000000000..a80a3cefe8dc21fc13eff020724b04ee08d81aa4 --- /dev/null +++ b/eesanje/url_46_175_8.txt @@ -0,0 +1,8 @@ +ನೇಹಾ ಕುರಿತ “ಲವ್’ ಹೇಳಿಕೆಗೆ ಕ್ಷಮೆ ಕೇಳಿದ ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಏ.20-ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತಮ್ಮ ಹೇಳಿಕೆಯಿಂದ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಯಾಚಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಎಬಿವಿಪಿಯವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ತಾವು ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದೇವೆ, ಬೇಜವಾಬ್ದಾರಿಯಿಂದ ಹೇಳಿಕೆ ನೀಡಿಲ್ಲ. ನಮಗೆ ಬಂದ ವರದಿಯನ್ನು ತಿಳಿಸಿದ್ದೇನೆ. ಪ್ರಕರಣದ ಬಗ್ಗೆ ತನಿಖೆಯಾಗಲಿದೆ. ಆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು. ನನ್ನ ಹೇಳಿಕೆಯಿಂದ ತಂದೆ-ತಾಯಿಯವರಿಗೆ, ಕುಟುಂಬದ ಸದಸ್ಯರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ತನಿಖೆಯ ನಂತರ ಸತ್ಯಾಂಶ ತಿಳಿದುಬರಲಿದೆ ಎಂದು ಹೇಳಿದರು. +ಈ ಹಿಂದೆ ಮತದಾನದ ವೇಳೆ ಏನೆಲ್ಲಾ ನಡೆಯುತ್ತಿತ್ತು ಎಂಬುದನ್ನು ನಾನು ವಿಶ್ಲೇಷಣೆ ಮಾಡಿದ್ದೇನೆ. ಹಾಗೆಂದ ಮಾತ್ರಕ್ಕೆ ನಾನೇ ನಿಂತು ಚುನಾವಣಾ ಅಕ್ರಮ ಮಾಡಿಸಿದ್ದೇನೆ ಎಂದರ್ಥವಲ್ಲ. ಇದರ ಹಿಂದೆ ಮತಪೆಟ್ಟಿಗೆಗಳು ಅಪಹರಣವಾಗುತ್ತಿದ್ದವು. ಬೇರೆ ಬೇರೆ ಕ್ರಮಗಳು ನಡೆಯುತ್ತಿದ್ದವು. ಆ ಕಾರಣಕ್ಕಾಗಿ ಎಲೆಕ್ಟ್ರಾನಿಕ್ ಮತಯಂತ್ರಗಳು ಜಾರಿಗೆ ಬಂದವು ಎಂದು ಹೇಳಿದ್ದೇನೆ. ಈಗ ಮತಯಂತ್ರಗಳಲ್ಲೂ ಲೋಪಗಳಾಗುತ್ತಿವೆ. +ಮೊನ್ನೆ ಕಾಸರಗೋಡಿನಲ್ಲಿ ಮಾಕ್‍ಡ್ರಿಲ್ ಮಾಡಿದಾಗ ಯಾವುದೇ ಬಟನ್ ಒತ್ತಿದರೂ ಮತಗಳು ಬಿಜೆಪಿಗೆ ಮತ ಬೀಳುತ್ತಿತ್ತು ಎಂಬುದು ಗೊತ್ತಾಗಿದೆ. ಇದನ್ನು ಸರಿಮಾಡಿಕೊಳ್ಳಬೇಕೆಂದು ನಾನು ಹೇಳಿದ್ದೇನೆ. ಆದರೆ ಚುನಾವಣಾ ಸಂದರ್ಭದಲ್ಲಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದರು. +ಚುನಾವಣಾ ಕರ್ತವ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದ್ದರಿಂದಾಗಿ ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಹೆಚ್ಚಾಗಿವೆ ಎಂಬುದು ಸರಿಯಲ್ಲ. ಒಂದೆಡೆ ಚುನಾವಣಾ ಕರ್ತವ್ಯವೂ ನಡೆಯಬೇಕು, ಮತ್ತೊಂದೆಡೆ ಕಾನೂನು ಸುವ್ಯವಸ್ಥೆಯೂ ಪಾಲನೆಯಾಗಬೇಕು. ಸಿಬ್ಬಂದಿಯ ಲಭ್ಯತೆಯನ್ನು ನೋಡಿಕೊಂಡು ಪರಸ್ಪರ ರಾಜ್ಯಗಳ ನಡುವೆ ಪೊಲೀಸರನ್ನು ನಿಯೋಜಿಸಲಾಗುತ್ತದೆ ಎಂದು ಹೇಳಿದರು. +ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಎರಡನೇ ಬಾರಿಗೆ ಚುನಾವಣಾ ಪ್ರಚಾರಕ್ಕಾಗಿ ಬರುತ್ತಿದ್ದಾರೆ. ರಾಜ್ಯಕ್ಕೆ ಅವರ ಕೊಡುಗೆ ಏನು ಎಂದು ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ಹಿಂದೆ ನೆರೆ, ಪ್ರಸಕ್ತ ಬರ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಿಲ್ಲ. ಬರ ಅಧ್ಯಯನಕ್ಕಾಗಿ ಕೇಂದ್ರದ ಅಧ್ಯಯನ ತಂಡ ಶಿಫಾರಸ್ಸು ಮಾಡಿದ್ದ ನೆರವನ್ನು ಕೊಟ್ಟಿಲ್ಲ. +ರಾಜ್ಯಕ್ಕೆ ಹೊಸದಾಗಿ ಯಾವುದೇ ಹೊಸ ಯೋಜನೆಗಳನ್ನು ಕೊಟ್ಟಿಲ್ಲ. ತೆರಿಗೆ ಪಾಲಿನಲ್ಲೂ ನ್ಯಾಯಯುತ ಪಾಲು ಕೊಟ್ಟಿಲ್ಲ. ಭದ್ರಾ ಮೇಲ್ದಂಡೆಗೆ ಭರವಸೆ ನೀಡಿದಷ್ಟು ಹಣವನ್ನೂ ಬಿಡುಗಡೆ ಮಾಡಿಲ್ಲ. 26 ಮಂದಿ ಬಿಜೆಪಿಯ ಸಂಸದರಿದ್ದರು. ರಾಜ್ಯಕ್ಕೆ ಯಾವುದೇ ನೆರವು ದೊರೆಯದೇ ಇರುವ ಬಗ್ಗೆ ಪ್ರಧಾನಿಯವರು ಸ್ಪಷ್ಟನೆ ನೀಡಬೇಕಿದೆ ಎಂದು ಹೇಳಿದರು. \ No newline at end of file diff --git a/eesanje/url_46_175_9.txt b/eesanje/url_46_175_9.txt new file mode 100644 index 0000000000000000000000000000000000000000..b545ae7265921784acc3f949858af815a0e30213 --- /dev/null +++ b/eesanje/url_46_175_9.txt @@ -0,0 +1,6 @@ +ನೇಹಾ ಕೊಲೆಗೆ ಪ್ರೀತಿ ಕಾರಣ ಎಂದ ಗೃಹಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ +ಬೆಂಗಳೂರು,ಏ.20-ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ಕೊಲೆಗೆ ಪ್ರೀತಿ ಕಾರಣ ಎಂದು ಹೇಳಿಕೆ ನೀಡಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಇಂದು ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. +ಇಂದು ಬೆಳಿಗ್ಗೆ ಸದಾಶಿವನಗರದ ಗೃಹಸಚಿವರ ಮನೆಯವರೆಗೆ ಬ್ಯಾನರ್ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ಎಬಿವಿಪಿ ಕಾರ್ಯಕರ್ತರು ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಕಿತ್ತೆಸೆದು, ತುಳಿದು ತಮ್ಮ ಆಕ್ರೋಶ ಹೊರಹಾಕಿದರು. +ಸಚಿವರ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಕಾರ್ಯಕರ್ತರನ್ನು ನಿಯಂತ್ರಿಸಲು ಪರದಾಡಬೇಕಾಯಿತು. ಈ ವೇಳೆ ಮನೆಯ ಮುಂದೆ ಧರಣಿ ನಡೆಸಿದ ಕಾರ್ಯಕರ್ತರು, ಸಚಿವರು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಲ್ಲದೆ, ಆರೋಪಿಗೆ ಗಲ್ಲುಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. +ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್ ನಡುವೆ ಪರಸ್ಪರ ಪ್ರೀತಿ ಇತ್ತು ಎಂದು ಗೃಹಸಚಿವರು ಹೇಳಿದ್ದರು. ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ. ಹುಬ್ಬಳ್ಳಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. +ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಆರಂಭದಲ್ಲಿ ಸಚಿವರ ಮನೆಯ ಬಳಿ ಪೊಲೀಸ್ ಸಿಬ್ಬಂದಿ ಸಂಖ್ಯೆ ಕಡಿಮೆಯಿತ್ತು. ಕಾರ್ಯಕರ್ತರ ಪ್ರತಿಭಟನೆ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ. \ No newline at end of file diff --git a/eesanje/url_46_176_1.txt b/eesanje/url_46_176_1.txt new file mode 100644 index 0000000000000000000000000000000000000000..bd97e8e46a04b5fd795b6765fab9d6ad0caa7ad1 --- /dev/null +++ b/eesanje/url_46_176_1.txt @@ -0,0 +1,8 @@ +ನೇಹಾ ಹತ್ಯೆಗೆ ವ್ಯಾಪಕ ಆಕ್ರೋಶ, ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ +ಹುಬ್ಬಳ್ಳಿ,ಏ.19-ವಿದ್ಯಾರ್ಥಿನಿ ನೇಹಾ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ… ಹುಬ್ಬಳ್ಳಿಯಲ್ಲಿ ಮಡುವುಗಟ್ಟಿದ ಆಕ್ರೋಶ… ಪೊಷಕರ ಅಳಲು… ನಿನ್ನೆ ಕೊಲೆಯಾದ ವಿದ್ಯಾರ್ಥಿನಿ ನೇಹಾ ಮೃತದೇಹವನ್ನು ಪೊಷಕರಿಗೆ ಹಸ್ತಾಂತರಿಸುತ್ತಿದ್ದಂತೆ ಸಂಬಂಕರ ರೋಧನ ಹೇಳತೀರದಾಗಿತ್ತು. +ಪ್ರೀತಿಸಲು ನಿರಾಕರಿಸಿದ ಒಂದು ಕಾರಣಕ್ಕೆ ಕಾಲೇಜು ಆವರಣದಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಯೊಬ್ಬ ವಿದ್ಯಾರ್ಥಿನಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಜೀವನದಲ್ಲಿ ಹತ್ತು ಹಲವು ಕನಸುಗಳನ್ನು ಕಟ್ಟಿಕೊಂಡ ಕಾರ್ಪೊರೇಟರ್ ಮಗಳು ನೇಹಾ ಎಂಸಿಎ ಪರೀಕ್ಷೆ ಬರೆದು ಹೊರಬರುತ್ತಿದ್ದಂತೆ ಸವದತ್ತಿ ತಾಲ್ಲೂಕಿನ ಮುನಳ್ಳಿ ಮೂಲದ ಪಯಾಜ್ ಎಂಬ ದುಷ್ಕರ್ಮಿ ಚಾಕುವಿನಿಂದ ಇರಿದಿರಿದು ಭೀಕರವಾಗಿ ಕೊಲೆ ಮಾಡಿದ್ದ. ನೆಲದಲ್ಲಿ ಬಿದ್ದು ಒರಳಾಡಿ ಒರಳಾಡಿ ಯುವತಿ ಪ್ರಾಣ ಬಿಟ್ಟಿದ್ದಳು. +ಪಾಗಲ್ ಪ್ರೇಮಿ ಭೀಕರವಾಗಿ ಯುವತಿಯನ್ನು ಕೊಲೆ ಮಾಡಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡು ಹುಬ್ಬಳ್ಳಿಯಾದ್ಯಂತ ಪ್ರತಿಭಟನೆ, ಆಕ್ರೋಶ ಕಿಚ್ಚು ಭುಗಿಲೆದ್ದಿತ್ತು.ಈ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು, ಶ್ರೀರಾಮಸೇನೆ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆನಡೆಸಿ ಪ್ರಕರಣವನ್ನು ತೀವ್ರವಾಗಿ ಖಂಡಿಸಿವೆ. +ಇದಲ್ಲದೆ, ಕೊಲೆ ಮಾಡಿದ ದುಷ್ಕರ್ಮಿಯ ಊರಾದ ಸವದತ್ತಿಯ ಮುನಳ್ಳಿಯಲ್ಲೂ ಕೂಡ ಬಂದ್, ಪ್ರತಿಭಟನೆ ಮಾಡಲಾಯಿತು. ಈ ಪ್ರಕರಣವನ್ನು ಖಂಡಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಆರೋಪಿಯನ್ನು ಗಲ್ಲಿಗೇರಿಸುವಂತೆ ಹಿಂದೂ ಸಂಘಟನೆಗಳು, ಹಲವು ನಾಗರಿಕ ಸಂಘಟನೆಗಳು, ಮಹಿಳಾ ಸಂಘಟನೆಗಳು ಒತ್ತಾಯಿಸಿವೆ. +ನೇಹಾ ಕೊಲೆ ಖಂಡಿಸಿ ಹುಬ್ಬಳ್ಳಿಯ ಬಿವಿಬಿ ಕಾಲೇಜು ಮುಂಭಾಗ ಎಬಿವಿಪಿ ಕಾರ್ಯಕರ್ತರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ಕಾರ ಕೂಗಿಆರೋಪಿ ಪಯಾಜ್ನನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಮತ್ತೊಂದೆಡೆ ಎನ್ಎಸ್ಯುಐ ಕಾರ್ಯಕರ್ತರು ಕೂಡ ಕಿಮ್ಸ್ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿ ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದರು. +ಹಿಂದೂ ಸಂಘಟನೆಯ ಕಾರ್ಯಕರ್ತರು ವಿದ್ಯಾನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಡಬೇಕೆಂದು ಆಕ್ರೋಶ ಹೊರಹಾಕಿದ್ದಾರೆ.ಅಲ್ಲದೆ, ಆರೋಪಿ ಪರ ಯಾರೂ ವಕಾಲತ್ತು ವಹಿಸಬಾರದು, ಯಾರೂ ಜಾಮೀನಿಗೆ ಅರ್ಜಿ ಸಲ್ಲಿಸಬಾರದು, ಅವರನ್ನು ಎನ್ಕೌಂಟರ್ ಮಾಡಬೇಕೆಂದು ಒತ್ತಾಯಿಸಿದ್ದಾರೆ. +ರಾಜ್ಯದಲ್ಲಿ ಅರಾಜಕತೆಯೇ ಆಡಳಿತದ ಧ್ಯೇಯ. ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕಾಂಗ್ರೆಸ್ ಸರ್ಕಾರದ ಆಡಳಿತದ ಮಂತ್ರ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.ಸಿದ್ದರಾಮಯ್ಯನವರ ಓಲೈಕೆಯ ಪ್ರತಿಫಲವಾಗಿ ಹುಬ್ಬಳ್ಳಿಯ ಕಾಲೇಜಿನಲ್ಲಿ ಹಾಡಹಗಲೇ ವಿದ್ಯಾರ್ಥಿನಿಯ ಬರ್ಬರ ಕೊಲೆಯಾಗಿದೆ. ನಿಮ್ಮ ತುಷ್ಠೀಕರಣಕ್ಕೆ ಇನ್ನೆಷ್ಟು ಅಮಾಯಕರ ಬಲಿಯಾಗಬೇಕು ಎಂದು ಪ್ರಶ್ನಿಸಿದೆ. \ No newline at end of file diff --git a/eesanje/url_46_176_10.txt b/eesanje/url_46_176_10.txt new file mode 100644 index 0000000000000000000000000000000000000000..1ebe46a810ee8330f858d243f70e208be7d69c81 --- /dev/null +++ b/eesanje/url_46_176_10.txt @@ -0,0 +1,11 @@ +“ದರಿದ್ರ ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಇಸ್ಲಾಂಮೀಕರಣ ಹೆಚ್ಚಾಗಿದೆ” : ಆರ್.ಅಶೋಕ್ ಆಕ್ರೋಶ +ಬೆಂಗಳೂರು,ಏ.18-ಕಾಂಗ್ರೆಸ್ ಸರ್ಕಾರಕ್ಕೆ ಧಮ್ಮು, ತಾಕತ್ತು ಇದ್ದರೆ ಜೈಶ್ರೀರಾಮ್ ಎಂದು ಘೋಷಣೆ ಕೂಗಬಾರದೆಂದು ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿರುವವರ ಮೇಲೆ ಗೂಂಡಾ ಕಾಯ್ದೆಯಡಿ ದೂರು ದಾಖಲಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬ್ಬರು ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ. ಇನ್ನು ಕೆಲವರು ಜೈಶ್ರೀರಾಮ್ ಎಂದು ಕೂಗಬಾರದು. ಇಲ್ಲಿ ಅಲ್ಲಾವೋ ಎಂದು ಕೂಗಬೇಕೆಂದು ಜೀವ ಬೆದರಿಕೆ ಹಾಕುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಒಂದು ಮೂಲಭೂತವಾದಿಗಳ ಅಟ್ಟಹಾಸ , ಮತ್ತೊಂದು ಕಡೆ ದರಿದ್ರ ಬಂದಿದೆ ಎಂದು ವಾಗ್ದಾಳಿ ನಡೆಸಿದರು. +ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಿರಂತರವಾಗಿದೆ. ಲಕ್ಷ್ಮಣ ಸವದಿಯವರು ಮಲ್ಲಿಕಾರ್ಜುನ ಖರ್ಗೆ ಕೇಳಿ ಭಾರತ್ ಮಾತಾ ಕೀ ಜೈ ಎನ್ನಬಹುದಾ ಎನ್ನುತ್ತಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ರಾಮ ದೇವರೇ ಅಲ್ಲ ಅಂತಾರೆ. ನಾನು ಮನೆಯಲ್ಲಿ ರಾಮನ ಫೋಟೋನೇ ಇಟ್ಟಿಲ್ಲ ಎನ್ನುತ್ತಾರೆ. ಹಿಂದೂಗಳು ಭಯದಿಂದ ಜೀವನ ಮಾಡುವಂತಹ ಪರಿಸ್ಥಿತಿ ಬಂದಿದೆ ಎಂದರು. +ಚಿಕ್ಕಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದರು. ಒಂದು ರೀತಿಯಲ್ಲಿ ಇವರಿಗೆ ಕಾಂಗ್ರೆಸ್ ನವರು ಬೆಂಬಲ ಕೊಡುತ್ತಿದ್ದಾರೆ. ಸಿದ್ದರಾಮಯ್ಯ ಈಗ ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು. +ನಮ್ಮನ್ನು ಹೇಳುವವರು, ಕೇಳುವವರು ಯಾರೂ ಇಲ್ಲ. ಏನು ಬೇಕಾದರೂ ಮಾಡಬಹುದೆಂಬ ಮನಸ್ಥಿತಿಗೆ ಕೆಲವು ಅಲ್ಪಸಂಖ್ಯಾತ ಮೂಲಭೂತವಾದಿಗಳು ಬಂದಿದ್ದಾರೆ. ಅಲ್ಲಾ ಅಕ್ಬರ್ ಎಂದು ಕೂಗಬೇಕು. ಜೈಶ್ರೀರಾಮ್ ಹೇಳಬಾರದು ಎಂದು ಬೆದರಿಕೆ ಹಾಕಿರುವವರ ವಿರುದ್ಧ ಸರ್ಕಾರ ಕೂಡಲೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ದೇಶದ್ರೋಹ ದೂರು ದಾಖಲಿಸಬೇಕೆಂದು ಒತ್ತಾಯಿಸಿದರು. +ಸಿಕ್ಕಿಬಿದ್ದಿರುವ ಆರೋಪಿಗಳು ಮದ್ಯ ಸೇವಿಸಿದ್ದರು. ಗಾಂಜಾ ಸೇವನೆ ಮಾಡಿದ್ದಾರೆ ಎಂದು ಪೊಲೀಸರು ಕಥೆ ಹೇಳಬಾರದು. ಮುಸ್ಲಿಮರು ಮುನಿಸಿಕೊಳ್ಳಬಹುದೆಂದು ಪೊಲೀಸರಿಗೆ ಒತ್ತಡ ಹಾಕುವ ಕೆಲಸವು ಸರ್ಕಾರದಿಂದ ನಡೆದಿದೆ. ಸುಳ್ಳು ನೆಪ ಹೇಳಿ ಅವರನ್ನು ಹೊರಬಿಟ್ಟರೆ ಮುಂದೆ ಇವರು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲೂ ಹಿಂದೆಮುಂದೆ ನೋಡುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. +ಆರೋಪಿಗಳನ್ನು ರಕ್ಷಿಸುವ ಕಾರ್ಯ ಸರ್ಕಾರದ ಮೇಲೆ ನಡೆಯುತ್ತಿದೆ. ಅವರ ವಿರುದ್ಧ ದೂರು ದಾಖಲಿಸಿದರೆ ಲೋಕಸಭೆ ಚುನಾವಣೆಯಲ್ಲಿ ಮತಗಳು ಕೈ ಕೊಡಬಹುದೆಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ. ಮುಸ್ಲಿಮರು ಏನೇ ಮಾಡಿದರೂ ಅವರನ್ನು ರಕ್ಷಣೆ ಮಾಡಲು ಕಾಗಕ್ಕ ಬೂಬಕ್ಕನ ಕಥೆ ಕಟ್ಟುತ್ತಾರೆ. ತನಿಖೆ ನಡೆಯುವ ಮೊದಲೇ ಗಾಂಜಾ ಸೇವನೆ ಮಾಡಿದ್ದರು, ಮದ್ಯಪಾನ ಸೇವಿಸಿದ್ದು, ಮಾನಸಿಕವಾಗಿ ಅಸ್ವಸ್ಥರು ಎಂದು ತನಿಖೆಯಲ್ಲಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿ ಮುಸ್ಲಿಂ ಮೂಲಭೂತವಾದಿಗಳ ಆಟ ನಡೆಯುವುದಿಲ್ಲ. ಸುಳ್ಳು ಕಾರಣಗಳನ್ನು ಕೊಟ್ಟು ಆರೋಪಿಗಳನ್ನು ಬಿಟ್ಟು ಕಳುಹಿಸಿದರೆ ನಾವು ಸುಮ್ಮನಿರುವುದಿಲ್ಲ. ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಹೇಳಿದರು. ಸಿದ್ದರಾಮಯ್ಯ ನವರ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ದಿನೇದಿನೇ ಇಸ್ಲಾಮಿಕ್ ಸಂಘಟನೆಗಳು, ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರು, ಟಿಪ್ಪು ಸಿದ್ಧಾಂತ ಇಟ್ಟುಕೊಂಡಿರುವವರು ಹೆಚ್ಚಾಗಿದ್ದಾರೆ. ಭಯೋತ್ಪಾದನಾ ಚಟುವಟಿಕೆ, ಇಸ್ಲಾಮೀಕರಣ, ಮತೀಯ ಧೋರಣೆ ಹೆಚ್ಚಾಗಿದೆ. +ಕಾಂಗ್ರೆಸ್‍ನವರು ಹಿಂದೂಗಳನ್ನು ಬೈದು ಬೈದು ಇಸ್ಲಾಂಮೀಕರಣ ಜಾಸ್ತಿಯಾಗಿದೆ. ಗೂಡಾಗಿರಿ ಮಾಡುವ ವ್ಯಕ್ತಿಗಳನ್ನು ನಿಯಂತ್ರಣದಲ್ಲಿ ಇಡುವುದನ್ನು ಬಿಟ್ಟು, ಪರೋಕ್ಷವಾಗಿ ಸರ್ಕಾರ ಬೆಂಬಲ ಕೊಡುತ್ತಿದೆ, ನೀವು ಏನಾದರೂ ಮಾಡ್ಕೊಳ್ಳಿ ವೋಟ್ ಹಾಕಿ ಅನ್ನುತ್ತಾರೆ. ಕಾಂಗ್ರೆಸ್‍ನವರ ಸಪೋರ್ಟ್‍ನಿಂದ ಇಸ್ಲಾಂ ಮೂಲಭೂತವಾದಿಗಳು ಮಿತಿಮೀರಿದ್ದಾರೆ.ಸಿದ್ದರಾಮಯ್ಯ ನವರು ಇವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ. ಅರೆಸ್ಟ್ ಮಾಡಿದ್ದೀರಿ ಬಿರಿಯಾನಿ ಕೊಡುತ್ತೀರಿ, ಬಿಟ್ಟು ಕಳಿಸುತೀರಾ? ಈ ಮೂಲಭೂತ ವಾದ ರಾಜ್ಯಕ್ಕೆ ಅಪಾಯ ತಂದೊಡ್ಡುತ್ತದೆ. ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟ. ಏನಾಗುತ್ತಿದೆ ಇಲ್ಲಿ? ಎಂದು ಆತಂಕ ವ್ಯಕ್ತಪಡಿಸಿದರು. +ಪಿಎಸ್‍ಐ ಹಗರಣ ಕಿಂಗ್‍ಪಿನ್ ಬಿ.ಆರ್.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಕಿಂಗ್‍ಪಿನ್ ಜತೆ ಗುರುತಿಸಿಕೊಳ್ಳುವುದು ಬೇರೆ, ಮತ ಕೇಳುವುದು ಬೇರೆ. ಚುನಾವಣೆ ವೇಳೆ ಮತ ಕೇಳುವುದು ಧರ್ಮ, ಎಲ್ಲರನ್ನೂ ಕೇಳುತ್ತೇವೆ ಎಂದು ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_176_11.txt b/eesanje/url_46_176_11.txt new file mode 100644 index 0000000000000000000000000000000000000000..6ce746dff8fcfb7f5d12b5c22f82f9c701313f14 --- /dev/null +++ b/eesanje/url_46_176_11.txt @@ -0,0 +1,6 @@ +“ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಸಚಿವ ಪ್ರಿಯಾಂಕ್ ಖರ್ಗೆ” +ಬೆಂಗಳೂರು,ಏ.18-ಕಲಬುರಗಿಯಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿಸುವ ಮೂಲಕ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆಯವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ. +ಈ ಕುರಿತು ಇಂದು ಬಿಜೆಪಿ ನಿಯೋಗವು ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಭೇಟಿ ನೀಡಿ ದೂರು ನೀಡಿದೆ.ಮತದಾರರಿಗೆ ಬೆದರಿಕೆ ಹಾಕಿ ಕಾಂಗ್ರೆಸ್ ಅಭ್ಯರ್ಥಿಗೆ ಮತದಾನ ಮಾಡುವಂತೆ ಹೇಳುತ್ತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಇನ್ನೊಂದು ದೂರು ಕೊಡಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಕಾಂಗ್ರೆಸ್‍ನ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಅವರ ಹೆಸರನ್ನು ತೆಗೆಯುವಂತೆ ಸೂಚಿಸಲು ಆಗ್ರಹಿಸಲಾಯಿತು. +ಕುಣಿಗಲ್ ತಾಲ್ಲೂಕಿನ ಚಿಕ್ಕ ಅರ್ಜೇನಹಳ್ಳಿ ಗ್ರಾಮದ ಪ್ರೇಮ್ ಕುಮಾರ್ ಬಿನ್ ಪಿ.ಜಿ.ರಾಮಯ್ಯರವರ ತೋಟಕ್ಕೆ ರಾಜಕೀಯ ವೈಷಮ್ಯದ ಕಾರಣಕ್ಕೆ ಬೆಂಕಿ ಹಚ್ಚಲಾಗಿದೆ. ಈ ಘಟನೆಗೆ ಕಾರಣಕರ್ತರಾದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ನೊಂದಿರುವ ಪ್ರೇಮ್ ಕುಮಾರ್ ಅವರಿಗೆ ಭದ್ರತೆ ಕೊಡಬೇಕು. ಸುಳ್ಳು ಹೇಳಿಕೆಗೆ ಸಹಿ ಹಾಕಿಸಿಕೊಂಡ ಪೊಲೀಸ್ ಅಧಿಕಾರಿಗಳು, ಪೊಲೀಸರನ್ನು ಅಮಾನತುಪಡಿಸಲು ಒತ್ತಾಯಿಸಿ ದೂರು ಕೊಡಲಾಯಿತು. +ಕುಣಿಗಲ್ ವಿಧಾನಸಭಾ ಕ್ಷೇತ್ರದ ಎಲ್ಲ ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಬೇಕು. ಬೆಂಗಳೂರು ಗ್ರಾಮಾಂತರ ಮತ ಕ್ಷೇತ್ರಕ್ಕೆ ಅರೆ ಸೇನಾಪಡೆಯನ್ನು ನಿಯೋಜಿಸಬೇಕು ಎಂದು ಒತ್ತಾಯಿಸಲಾಯಿತು. +ಮನವಿ ಸಲ್ಲಿಸುವ ನಿಯೋಗದಲ್ಲಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ್, ರಾಜ್ಯ ವಕ್ತಾರ ಮೋಹನ್ ವಿಶ್ವ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಸದಸ್ಯ ಯಶವಂತ್ ಮತ್ತು ಪಕ್ಷದ ಪ್ರಮುಖರು ಇದ್ದರು. \ No newline at end of file diff --git a/eesanje/url_46_176_12.txt b/eesanje/url_46_176_12.txt new file mode 100644 index 0000000000000000000000000000000000000000..2376fdbf66f56682998b1af41bbb66efec42a621 --- /dev/null +++ b/eesanje/url_46_176_12.txt @@ -0,0 +1,5 @@ +ಸಿಎಂ ಸಿದ್ದರಾಮಯ್ಯನವರಿದ್ದ ಇದ್ದ ಬಸ್ಸನ್ನು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು +ಬೆಂಗಳೂರು, ಏ.18-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೈಟೆಕ್ ಬಸ್ಸನ್ನು ಹೆದ್ದಾರಿಯ ಅರ್ಧದಲ್ಲೇ ತಡೆದ ಚುನಾವಣಾಧಿಕಾರಿಗಳು ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಭದ್ರತೆಯ ಕಾನ್‍ವೇಯೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದರು. ಹೆದ್ದಾರಿಯ ಚೆಕ್‍ ಪೋಸ್ಟ್ ಬಳಿ ಬಸ್ಸನ್ನು ತಡೆದ ಚುನಾವಣಾ ವೀಕ್ಷಕರು ಸ್ಥಳೀಯ ಅಧಿಕಾರಿಗಳ ಸಹಾಯದೊಂದಿಗೆ ಸಂಪೂರ್ಣ ತಪಾಸಣೆ ನಡೆಸಿದರು. +ಈ ವೇಳೆ ಮುಖ್ಯಮಂತ್ರಿಯವರು ಬಸ್ ಒಳಗೇ ಕುಳಿತಿದ್ದು ತಪಾಸಣೆಗೆ ಸಹಕಾರ ನೀಡಿದರು. ಸಾರ್ವಜನಿಕರು ಮುಖ್ಯಮಂತ್ರಿಯವರನ್ನು ಕುತೂಹಲದಿಂದ ವೀಕ್ಷಿಸಿಸಿದಲ್ಲದೆ ಫೋಟೊ ತೆಗೆದುಕೊಂಡರು.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಪರವಾಗಿ ಪ್ರಚಾರ ನಡೆಸಲು ಸಿದ್ದರಾಮಯ್ಯ ತೆರಳಿದ್ದರು. ಸಿದ್ದರಾಮಯ್ಯ ಪ್ರಚಾರಕ್ಕಾಗಿಯೇ ಹೈಟೆಕ್ ಬಸ್ಸನ್ನು ಸಿದ್ಧಗೊಳಿಸಲಾಗಿದೆ. +ಬೆಂಗಳೂರು ಸುತ್ತಮುತ್ತ ಹಾಗೂ ಇತರ ಭಾಗಗಳಲ್ಲಿ ಪ್ರಚಾರ ನಡೆಸುವಾಗ ಸಿದ್ದರಾಮಯ್ಯ ತಮ್ಮ ಆಪ್ತರೊಂದಿಗೆ ಈ ಬಸ್‍ನಲ್ಲಿ ಪ್ರಯಾಣ ಮಾಡುತ್ತಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ರೋಡ್‍ಶೋನಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. +ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ಕಳೆದ 10 ತಿಂಗಳಲ್ಲಿ 180 ಕೋಟಿ ರೂ. ಅನುದಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗಾಗಿ ನೀಡಿದ್ದಾರೆ. ಈ ಹಿಂದೆ ಬಿಜೆಪಿ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರ ಬೇಜಾವಬ್ದಾರಿತನದಿಂದಾಗಿ ರೈತರ ಜಮೀನುಗಳು ಪರಿಭಾವಿತ ಅರಣ್ಯ ಪ್ರದೇಶ ಎಂದು ಗುರುತಿಸಲ್ಪಟ್ಟಿವೆÉ. ಅದನ್ನು ನಮ್ಮ ಸರ್ಕಾರ ಸುಪ್ರೀಂಕೋರ್ಟ್‍ವರೆಗೆ ಹೋಗಿ ರೈತರಿಗೆ ಬಿಡಿಸಿಕೊಡುವುದಾಗಿ ಭರವಸೆ ನೀಡಿದೆ ಎಂದು ಹೇಳಿದರು. \ No newline at end of file diff --git a/eesanje/url_46_176_2.txt b/eesanje/url_46_176_2.txt new file mode 100644 index 0000000000000000000000000000000000000000..3643410fd08cfe6d700600ea116886e8ba73f8c6 --- /dev/null +++ b/eesanje/url_46_176_2.txt @@ -0,0 +1,7 @@ +ಏ.26ರಂದು ಮೊದಲ ಹಂತದ ಮತದಾನ, ಏ.24ರಂದು ಕ್ಷೇತ್ರ ಬಿಟ್ಟು ತೆರಳುವಂತೆ ರಾಜಕೀಯ ನಾಯಕರಿಗೆ ಆಯೋಗ ಸೂಚನೆ +ಬೆಂಗಳೂರು,ಏ.19- ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳ ಪ್ರಚಾರಕ್ಕೆ ಆಗಮಿಸಿರುವ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಏ.24ರ ಸಂಜೆ 6 ಗಂಟೆಯ ನಂತರ ಕ್ಷೇತ್ರ ಬಿಟ್ಟು ತೆರಳಲು ಭಾರತದ ಚುನಾವಣಾ ಆಯೋಗ ಸೂಚನೆ ನೀಡಿದೆ. +ಆಯಾ ಕ್ಷೇತ್ರದ ಮತದಾರರನ್ನು ರಾಜಕೀಯ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಬಹಿರಂಗ ಪ್ರಚಾರದ ಸಮಯ ಮುಗಿದ ಕೂಡಲೇ ತೆರಳಬೇಕು. ಕ್ಷೇತ್ರ ಬಿಟ್ಟು ತೆರಳಿರುವ ಬಗ್ಗೆ ಆಯಾ ಚುನಾವಣಾ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದೆ. +ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಹೊರಗಿನವರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವುದು ಸಾಮಾನ್ಯ. ಮತದಾನದ ಅವ ಮುಕ್ತಾಯವಾಗುವ 48 ಗಂಟೆಗಳ ಮುಂಚಿತ ಅವಯಲ್ಲಿ ಕ್ಷೇತ್ರದ ಮತದಾರರಲ್ಲದವರು ಆಯಾ ಕ್ಷೇತ್ರದಲ್ಲಿ ಉಪಸ್ಥಿತರಿರಬಾರದು. +ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಯುವ ಉದ್ದೇಶದಿಂದ ಈ ರೀತಿಯ ಕ್ರಮ ಕೈಗೊಂಡಿದೆ. ಆಯೋಗವು ಜಿಲ್ಲಾ ಚುನಾವಣಾ ಅಧಿಕಾರಿ, ಪೊಲೀಸ್ ಅಧಿಕಾರಿಗೆ ನಿರ್ದೇಶನ ನೀಡಿದ್ದು, ಕಲ್ಯಾಣ ಮಂಟಪ, ಸಮುದಾಯ ಭವನಗಳನ್ನು ಪರಿಶೀಲಿಸಿ ಕ್ಷೇತ್ರದ ಮತದಾರರಲ್ಲದವರು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚಿಸಿದೆ. +ವಸತಿ ಗೃಹಗಳು, ಅತಿಥಿ ಗೃಹಗಳನ್ನು ಪರಿಶೀಲಿಸಬೇಕು. ಕ್ಷೇತ್ರದ ಗಡಿಗಳಲ್ಲಿ ಇರುವ ಚೆಕ್ ಪೋಸ್ಟ್ ಗಳಲ್ಲಿ ಹೊರಗಿನಿಂದ ಬರುವ ವಾಹನಗಳ ಚಲನವಲನಗಳ ಮೇಲೆ ನಿಗಾವಹಿಸಬೇಕು, ಗುರುತಿನಚೀಟಿಯನ್ನು ಪರಿಶೀಲಿಸಿ ಕ್ಷೇತ್ರದ ಹೊರಗಿನವರೇ ಅಥವಾ ಅಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ನಿದೇರ್ಶಶನ ನೀಡಿದೆ. ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಏ.24ರ ಸಂಜೆ 6 ಗಂಟೆ ನಂತರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. +ಏ.26ರಂದು ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_46_176_3.txt b/eesanje/url_46_176_3.txt new file mode 100644 index 0000000000000000000000000000000000000000..4772a21b3684effc20443eca02bdc898423921eb --- /dev/null +++ b/eesanje/url_46_176_3.txt @@ -0,0 +1,5 @@ +ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಒಟ್ಟು 241 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ +ಬೆಂಗಳೂರು,ಏ.19-ರಾಜ್ಯದ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯಗೊಂಡಿದೆ. ಏ.12ರಿಂದ ನಿನ್ನೆಯವರೆಗೆ ಒಟ್ಟು 241 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಇದರಲ್ಲಿ 221 ಪುರುಷ, 20 ಮಹಿಳೆಯರು, 143 ಸ್ವತಂತ್ರ ಅಭ್ಯರ್ಥಿಗಳು ಸೇರಿದ್ದಾರೆ. +ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ರ್ಪಸಿದ್ದಾರೆ. ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಚುನಾವಣೆಯಿಂದ ದೂರ ಉಳಿದಿದೆ. ಆದರೆ ಒಬ್ಬ ಅಭ್ಯರ್ಥಿ ಮಾತ್ರ ಬಿಜಾಪುರ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. +ಬಿಜೆಪಿಯ 14 ಅಭ್ಯರ್ಥಿಗಳಿಂದ 45 ನಾಮಪತ್ರಗಳು, ಕಾಂಗ್ರೆಸ್‍ನ 14 ಅಭ್ಯರ್ಥಿಗಳಿಂದ 48, ಎಎಪಿಯಿಂದ ಒಬ್ಬರು, ಬಿಎಸ್‍ಪಿಯಿಂದ 15 ನಾಮಪತ್ರಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದ್ದು, ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಅಂತಿಮ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಕೃತ ಪ್ರಕಟಣೆಯನ್ನು ಹೊರಡಿಸಲಿದ್ದಾರೆ. +ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_46_176_4.txt b/eesanje/url_46_176_4.txt new file mode 100644 index 0000000000000000000000000000000000000000..a47bda123b72828de8ffbdb6ef203f33286e6d5b --- /dev/null +++ b/eesanje/url_46_176_4.txt @@ -0,0 +1,8 @@ +ಒಕ್ಕಲಿಗರ ಸಂಘದಲ್ಲಿ ಒಡಕು, ಎಂ.ಲಕ್ಷ್ಮಣ್ ಗೆ ಮತ ಹಾಕುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ +ಬೆಂಗಳೂರು,ಏ.19-ಪ್ರತಿಷ್ಠೆಯ ಚುನಾವಣಾ ಕಣವಾಗಿ ಪರಿಣಮಿಸಿರುವ ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಸಂಘವು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಲು ತೆಗೆದುಕೊಂಡಿರುವ ತೀರ್ಮಾನಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೈಸೂರಿನ ಒಕ್ಕಲಿಗ ಸಂಘದ ಕೆಲವು ಬೆರಳೆಣಿಕೆಯ ಪ್ರಮುಖರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಹೇಳಿರುವುದು ಸಂಘದಲ್ಲೇ ಬಿರುಕು ಮೂಡಿಸಿದೆ. +ಯಾರನ್ನೂ ಕೇಳದೆ ಸಂಘದ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕೇವಲ ಏಕಪಕ್ಷೀಯವಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಒಕ್ಕಲಿಗ ಸಮುದಾಯ ಮತ ಹಾಕಲಿದೆ ಎಂದು ಹೇಳಿರುವುದು ಸರಿಯಲ್ಲ. ಅಷ್ಟಕ್ಕೂ ಒಕ್ಕಲಿಗ ಸಮುದಾಯವನ್ನು ನಾವು ಯಾವುದೇ ರಾಜಕೀಯ ಪಕ್ಷಕ್ಕೆ ಗ್ರಾಂಟೆಡ್ ಫಾರ್ ಟೇಕನ್ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. +ಸಮುದಾಯದವರು ಯಾರಿಗೆ ಬೇಕಾದರೂ ಮತ ಹಾಕಿಕೊಳ್ಳಲಿ. ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯಕರ್ತವ್ಯ. ನಮ್ಮ ಮತವನ್ನು ನಾವು ಯಾರಿಗೆ ಬೇಕಾದರೂ ಹಾಕುತ್ತೇವೆ. ಒಕ್ಕಲಿಗ ಸಂಘವು ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೀಮಿತವಾಗಿಲ್ಲ. ಬೆರಳೆಣಿಕೆಯ ಮುಖಂಡರು ಸೇರಿ ಇಡೀ ಸಮುದಾಯದವರೇ ಕಾಂಗ್ರೆಸ್ ಪರವಾಗಿ ಮತ ಹಾಕುತ್ತೇವೆ ಎಂದು ಹೇಳಿರುವುದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೆಸರು ಹೇಳಲಿಚ್ಛಿಸದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಲೋಕಸಭೆ ಚುನಾವಣೆಯು ರಾಷ್ಟ್ರೀಯ ವಿಷಯಗಳ ಮೇಲೆ ನಡೆಯುತ್ತದೆ. ರಾಷ್ಟ್ರೀಯ ಭದ್ರತೆ, ಸುರಕ್ಷತೆ, ಆರ್ಥಿಕ ಅಭಿವೃದ್ಧಿ, ದಕ್ಷ ಸರ್ಕಾರ, ಸುಭದ್ರ ನಾಯಕತ್ವ, ಭ್ರಷ್ಟಾಚಾರ ರಹಿತ ಆಡಳಿತ ಹೀಗೆ ಹಲವು ವಿಷಯಗಳ ಆಧಾರದ ಮೇಲೆ ಚುನಾವಣೆ ನಡೆಯುತ್ತದೆ. ನಾವ್ಯಾರು ಗ್ಯಾರಂಟಿಗಳನ್ನು ನೋಡಿಕೊಂಡು ಕಾಂಗ್ರೆಸ್ ಪರವಾಗಿ ಇಲ್ಲವೇ ಬಿಜೆಪಿ, ಜೆಡಿಎಸ್‍ಗೆ ಮತ ಹಾಕುವುದಿಲ್ಲ. ನಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನಮಗಿದೆ. +ಒಕ್ಕಲಿಗರೆಲ್ಲರೂ ಸಾರಾಸಗಾಟಾಗಿ ಕಾಂಗ್ರೆಸ್‍ಗೆ ಮತ ಹಾಕುತ್ತಾರೆ ಎಂದು ಹೇಳಿಕೆ ಕೊಡಲು ಆ ಸಂಘಕ್ಕೆ ಅಕಾರ ಕೊಟ್ಟವರು ಯಾರು? ಹೀಗೆ ಹೇಳುವ ಅಧಿಕಾರವೂ ಅಧ್ಯಕ್ಷರಿಗಾಗಲೀ ಅಥವಾ ಬೇರೆ ಯಾರಿಗೂ ಕೂಡ ಇಲ್ಲ. ಸಂಘ ನೀಡಿರುವ ಹೇಳಿಕೆಗೂ ಸಮುದಾಯಕ್ಕೂ ಸಂಬಂಧವಿಲ್ಲ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕೆಲವರು ತಮ್ಮ ಸ್ವಾರ್ಥಕ್ಕಾಗಿ ಅಥವಾ ಸರ್ಕಾರದಲ್ಲಿ ಸಿಗಬಹುದಾದ ಸ್ಥಾನಮಾನಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಪ್ರಬುದ್ಧ ಮತದಾರರು ಇದರ ಬಗ್ಗೆ ತಲೆಕೆಡಿಸಿಕೊಳ್ಳದೆ ತಮಗೆ ಯಾರು ಉತ್ತಮರೋ ಅವರನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರು ಎಂದು ಕೆಲವರು ಪತ್ರಿಕೆ ಬಳಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. +ಯಾವುದೇ ಒಂದು ಸಮುದಾಯ ರ್ನಿಷ್ಟ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಳ್ಳುವುದು ಸರಿಯಲ್ಲ. ನಮಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲವೂ ಒಂದೇ. ಎಲ್ಲಾ ಪಕ್ಷಗಳಲ್ಲೂ ನಮ್ಮ ಸಮುದಾಯದ ಮುಖಂಡರು ಗುರುತಿಸಿಕೊಂಡಿದ್ದಾರೆ. ಹೀಗೆ ತಮ್ಮ ಸ್ವಾರ್ಥ ಸಾಧನೆಗಾಗಿ ಸಮುದಾಯವನ್ನು ತಪ್ಪು ದಾರಿಗೆ ಎಳೆಯುವುದು ಬೇಡ ಎಂದು ಅನೇಕರು ಮನವಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_46_176_5.txt b/eesanje/url_46_176_5.txt new file mode 100644 index 0000000000000000000000000000000000000000..873814f10d7fb10476df61105111cc92d46ebd0a --- /dev/null +++ b/eesanje/url_46_176_5.txt @@ -0,0 +1,10 @@ +ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ +ಬೆಂಗಳೂರು,ಏ.19-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಒಂದು ವಾರ ಬಾಕಿ ಇರುವಂತೆ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರು ಬೆವರು ಹರಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಕರುನಾಡಿಗೆ ಲಗ್ಗೆ ಇಡಲಿದ್ದಾರೆ. +ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅವರು ನಾಳೆ ಬಹಿರಂಗ ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಮೋದಿಯವರು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಬಹಿರಂಗ ಪ್ರಚಾರವನ್ನು ನಡೆಸಲಿದ್ದಾರೆ. +ಪ್ರಧಾನಿಯವರು ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ನಾಳೆ ಚಿಕ್ಕಬಳ್ಳಾಪುರ (ಬೆಂಗಳೂರು-ಹೈದರಾಬಾದ್) ದ ರಾಷ್ಟ್ರೀಯ ಹೆದ್ದಾರಿ 44 ಬೈಪಾಸ್‍ನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ಹೆದ್ದಾರಿಯ ಬೈಪಾಸ್‍ನ್ನು ನಾಳೆ ಸಂಜೆಯವರೆಗೆ ಬಂದ್ ಮಾಡಲಾಗಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಜಿಲ್ಲಾಡಳಿತ ಮನವಿ ಮಾಡಿಕೊಂಡಿದೆ. +ಹೈದರಾಬಾದ್ ಅಥವಾ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಚದಲಪುರ, ಚೊಕ್ಕಹಳ್ಳಿ ಮುಖಾಂತರ ಚಿಕ್ಕಬಳ್ಳಾಪುರ ನಗರದ ಒಳಗೆ ಪ್ರವೇಶಿಸಿ, ನಂತರ ಚಿಕ್ಕಬಳ್ಳಾಪುರ ಹೊರಗೆ ವಾಪಸಂದ್ರ ಬ್ರಿಡ್ಜ್ ಮೂಲಕ ರಾಷ್ಟ್ರೀಯ ಹೆದ್ದಾರಿ 44 ಅನ್ನು ಸಂಪರ್ಕಿಸಬಹುದು. ವಾಹನ ಸವಾರರು ಯಾವುದೇ ಕಾರಣಕ್ಕೂ ಚಿಕ್ಕಬಳ್ಳಾಪುರ ಬಳಿ ಇರುವ ಬೈಪಾಸ್ ಮೂಲಕ ಸಂಚರಿಸುವಂತಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. +ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ, ಪಕ್ಷದ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಮತ ಯಾಚನೆ ಮಾಡಲಿದ್ದಾರೆ. ಬಳಿಕ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಬಹಿರಂಗ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. +ಲೋಕಸಭಾ ಚುನಾವಣೆಯ ಪ್ರಚಾರದ ದೃಷ್ಟಿಯಿಂದ ಬಿಜೆಪಿ ಕರ್ನಾಟಕದಲ್ಲಿ ಎಂಟು ಕ್ಲಸ್ಟರ್‍ಗಳನ್ನು ಮಾಡಿದೆ. ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ಹಳೆ ಮೈಸೂರು ಭಾಗ ಸೇರಿ ಒಟ್ಟು 8 ಕ್ಲಸ್ಟರ್‍ಗಳನ್ನು ಮಾಡಲಾಗಿದೆ. ಇದರಂತೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಧ್ಯಾಹ್ನ 3ಕ್ಕೆ ಸಮಾವೇಶದ ಬಳಿಕ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ಹಾಗೂ ತುಮಕೂರಿನಲ್ಲೂ ರೋಡ್ ಶೋ ನಡೆಸಲು ಮುಂದಾಗಿದೆ. +ಏ.26ರಂದು ರಾಜ್ಯದ 14 ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. +ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದರೆ ಮೇ 7ರಂದು ಚುನಾವಣೆ ನಡೆಯಲಿದೆ. +ಎರಡನೇ ಹಂತದ ಚುನಾವಣೆಯ ಅಸೂಚನೆ ಏಪ್ರಿಲ್ 12ರಂದು ಹೊರಬಿದ್ದಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದ್ದು , ಏ.22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_176_6.txt b/eesanje/url_46_176_6.txt new file mode 100644 index 0000000000000000000000000000000000000000..9d8d81ec30f1f2a74b21275d5183aefb28202cd8 --- /dev/null +++ b/eesanje/url_46_176_6.txt @@ -0,0 +1,7 @@ +ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ +ಕೊಪ್ಪಳ,ಏ.19-ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. +ಮನೆಯಲ್ಲಿ ಮಲಗಿದ್ದ ಒಂದೆ ಕುಟುಂಬದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಗದಗ ನಗರದ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55) ಪತ್ನಿ ಲಕ್ಷ್ಮೀ (45) ಪುತ್ರಿ ಆಕಾಂಕ್ಷಾ (16 ) ಕೊಲೆಯಾದ ದುರ್ದೈವಿಗಳು. +ಕೊಪ್ಪಳದಿಂದ ಪ್ರಕಾಶ ಬಾಕಳೆ ಮನೆಗೆ ಬಂದಿದ್ದ ಪರುಶುರಾಮ, ಲಕ್ಷ್ಮಿ, ಅಕಾಂಕ್ಷಾ ಮೊದಲನೇ ಮಹಡಿಯ ಕೊಣೆಯಲ್ಲಿ ಮಲಗಿದ್ದರೆಂದು ಹೇಳಲಾಗುತ್ತಿದೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಗಳು ಕೊಲೆಯಾಗಿದ್ದು ವಿಯ ಅಟ್ಟಹಾಸ ಎಂಬಂತಾಗಿದೆ. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ ಕುಟುಂಬಸ್ಥರು. +ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆಯೆ ದುಷ್ಕರ್ಮಿಗಳು ಎಸ್ಕೇಪ್ ಆದರೆಂದು ತಿಳಿದು ಬಂದಿದೆ. ಒಂದು ವೇಳೆ ಬಾಗಿಲು ತೆಗೆದಿದ್ರೆ ನಮ್ಮನ್ನು ಕೊಲೆ ಮಾಡುತ್ತಿದ್ದರೆಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿದ್ದು ಇನ್ನಷ್ಟು ಭಯವನ್ನುಂಟು ಮಾಡಿದೆ. +ಪೋಲಿಸರು ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಬಿ.ಎಸ್.ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ.ಸಂಕದ, ಡಿವೈಎಸ್ಪಿ, ಸಿಪಿಐ, ಪಿಎಸ್‍ಐ ಸೇರಿ ಪೋಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. +ದುಷ್ಕರ್ಮಿಗಳ ಬಂದನಕ್ಕೆ ಜಾಲ :ಈ ಘಟನೆಗೆ ಸಂಬಂಸಿ ನಿಖರವಾದ ಮಾಹಿತಿ ಸಿಕ್ಕಿಲ್ಲ ತನಿಖೆ ತೀವ್ರಗತಿಯಲ್ಲಿ ಸಾಗಿದ್ದು ದುಷ್ಕರ್ಮಿಗಳನ್ನು ತೀವ್ರವಾಗಿ ಪತ್ತೆ ಮಾಡಿ ಬಂದಿಸಲಾಗುವದೆಂದು ಎಸ್ಪಿ ಬಿ.ಎಸ್.ನೇಮಗೌಡ್ರ ತಿಳಿಸಿದ್ದಾರೆ. ಕೊಲೆಗೆ ಕಾರಣ ಏನು ? ಎಂಬುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. \ No newline at end of file diff --git a/eesanje/url_46_176_7.txt b/eesanje/url_46_176_7.txt new file mode 100644 index 0000000000000000000000000000000000000000..72926cce7f560578883e08bac766d28fbff012e6 --- /dev/null +++ b/eesanje/url_46_176_7.txt @@ -0,0 +1,7 @@ +ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ತನಿಖೆ ನಡೆಸುವಂತೆ ಬೊಮ್ಮಾಯಿ ಆಗ್ರಹ +ಹುಬ್ಬಳ್ಳಿ,ಏ.19-ಹಾಡಹಗಲೇ ಕಾಲೇಜು ಕ್ಯಾಂಪಸ್‍ನಲ್ಲಿ ಯುವತಿಯ ಹತ್ಯೆ ಮಾಡಿರುವುದು ಅತ್ಯಂತ ಆಘಾತಕಾರಿ, ಸಮಾಜಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿರುವುದರಿಂದ ರಾಜಾರೋಷವಾಗಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರಕರಣವನ್ನು ಎಸ್‍ಐಟಿಗೆ ವಹಿಸಿ ತನಿಖೆ ನಡೆಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. +ಹುಬ್ಬಳ್ಳಿಯಲ್ಲಿಂದು ನೇಹಾ ಪಾರ್ಥಿವ ಶರೀರ ಇರುವ ಕಿಮ್ಸ್‍ಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಆಘಾತಕರ ವಿಚಾರ. ಈ ರೀತಿ ಹುಬ್ಬಳ್ಳಿಯಲ್ಲಿ ಯಾವತ್ತೂ ನಡೆದಿಲ್ಲ. ಇದೊಂದು ಸಮಾಜದ ನಡುವೆ ಇರುವ ಕ್ಷೋಭೆ. ಸಮಾಜಗಳ ನಡುವೆ ಸಾಮರಸ್ಯ ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಗದಗನಲ್ಲಿ ನಮ್ಮ ನಗರ ಸಭೆಯ ಉಪಾಧ್ಯಕ್ಷರ ಕುಟುಂಬದ ಕಗ್ಗೊಲೆಯಾಗಿದೆ ಎಂದು ದೂರಿದರು. +ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಹೇಳಿದವರ ಮೆಲೆ ಹಲ್ಲೆಯಾಗಿದೆ. ಸಮಾಜ ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಗಳಲ್ಲಿ ರಾಜ ಮರ್ಯಾದೆ ಸಿಗುತ್ತಿದೆ. ಈ ಸರ್ಕಾರದಲ್ಲಿ ಗುಂಡಾಗಳನ್ನು ರಕ್ಷಿಸುವವರು ಇದ್ದಾರೆ ಎನ್ನುವ ನಂಬಿಕೆ ಇರುವುದರಿಂದ ಈ ರೀತಿ ಘಟನೆ ನಡೆಯುತ್ತಿವೆ. ಸರ್ಕಾರ ಇದನ್ನು ಗಂಭಿರವಾಗಿ ಪರಿಣಗಿಸಬೇಕು. ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು. +ಇದು ಕೇವಲ ವೈಯಕ್ತಿಕ ಘಟನೆ. ಇಡೀ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಕರ್ನಾಟಕ ಇನ್ನೊಂದು ಬಿಹಾರ ಆಗುತ್ತಿದೆ. ಗೃಹ ಸಚಿವರು, ಡಿಜಿಪಿ ಏನು ಮಾಡುತ್ತಿದ್ದಾರೆ. ಈ ಸರ್ಕಾರದ ಅವಯಲ್ಲಿ ವಿಧಾನಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಹೇಳುತ್ತಾರೆ. ಗದಗದಲ್ಲಿ ಕುಟುಂಬದ ಕಗ್ಗೊಲೆಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು. +ಹುಬ್ಬಳ್ಳಿ ಕಮೀಷನರ್ ಹೇಳಿಕೆಗಳನ್ನು ನೋಡಿದಾಗ ಅವರು ಯಾವುದೇ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ನೇಹಾ ಹತ್ಯೆ ಪ್ರಕರಣವನ್ನು ಎಸ್‍ಐಟಿ ಮೂಲಕ ತನಿಖೆ ನಡೆಸಬೇಕು. ಅಪರಾಧ ವಿಭಾಗದ ಡಿಜಿಪಿ ಅವರು ಇದರ ಮುಂದಾಳತ್ವ ವಹಿಸಿ ತನಿಖೆ ನಡೆಸಬೇಕು. ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಈ ಪ್ರಕರಣದ ತಾರ್ಕಿಕ ಅಂತ್ಯ ಆಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು. +ಕುಟುಂಬಕ್ಕೆ ಸಾಂತ್ವನ:ಹತ್ಯೆಗೀಡಾದ ನೇಹಾ ಅವರ ತಂದೆಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು, ಈ ರೀತಿಯ ಘಟನೆ ದುರದೃಷ್ಟಕರ ನಾವು ನಿಮ್ಮೊಂದಿಗಿದ್ದೇವೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದರು. \ No newline at end of file diff --git a/eesanje/url_46_176_8.txt b/eesanje/url_46_176_8.txt new file mode 100644 index 0000000000000000000000000000000000000000..07c7a6f7ebe2cba8df50e9e2a3499591fafff488 --- /dev/null +++ b/eesanje/url_46_176_8.txt @@ -0,0 +1,8 @@ +ಜೈಶ್ರೀರಾಮ್ ಘೋಷಣೆಗೆ ಯಾರ ಅನುಮತಿಯೂ ಬೇಕಿಲ್ಲ : ಅಶ್ವತ್ಥ ನಾರಾಯಣ +ಬೆಂಗಳೂರು,ಏ.18-ನಮ್ಮ ರಾಜ್ಯದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಬಾರದೆಂದು ರಾಜಾರೋಷವಾಗಿ ಹಿಂದೂ ಕಾರ್ಯಕರ್ತರಿಗೆ ಬಹಿರಂಗವಾಗಿಯೇ ಜೀವ ಬೆದರಿಕೆ ಹಾಕುತ್ತಾರೆ ಎಂದರೆ ಇಂತಹ ದೇಶದ್ರೋಹಿಗಳಿಗೆ ಕಾಂಗ್ರೆಸ್ ಕುಮ್ಮಕ್ಕೇ ಕಾರಣ ಎಂದು ಮಾಜಿ ಸಚಿವ ಅಶ್ವತ್ಥ ನಾರಾಯಣ ಸರ್ಕಾರದ ವಿರುದ್ಧ ಕೆಂಡ ಕಾರಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಆರಾಧ್ಯ ದೈವ, ಮರ್ಯಾದ ಪುರುಷೋತ್ತಮ ಶ್ರೀರಾಮ್ ಘೋಷಣೆ ಕೂಗಲು ಯಾರ ಅನುಮತಿ ಬೇಕಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ ನಾವು ಏನೂ ಬೇಕಾದರೂ ಮಾಡಬಹುದೆಂದು ಒಂದು ಕೋಮಿನವರಿದ್ದಾರೆ. ಇದಕ್ಕೆಲ್ಲ ಬಿಜೆಪಿ ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು. +ಜೈ ಶ್ರೀರಾಮ್ ಎನ್ನಲು ಯಾರ ಅನುಮತಿಯೂ ಬೇಕಾಗಿಲ್ಲ. ಇವರು ಇಬ್ಬರಿಗೆ ಧಮ್ಕಿ ಹಾಕಿರಬಹುದು. ಲಕ್ಷಾಂತರ ಕಾರ್ಯಕರ್ತರು, ಜೈ ಶ್ರೀರಾಮ್ ಎಂದು ಕೂಗುತ್ತಾರೆ. ನಿಮಗೆ ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿದರು. +ಇದು ಭಾರತ. ನಮಗೆ ಶ್ರೀರಾಮ ಆದರ್ಶ. ಜೈಶ್ರೀರಾಮ್ ಎಂದು ಕೂಗೇ ಕೂಗುತ್ತೇವೆ. ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಅಲ್ಲಾ ಎಂದು ಮಾತ್ರ ಹೇಳಿ, ಶ್ರೀರಾಮ್ ಹೇಳಬೇಡಿ ಅಂದರೆ ಏನಿದು..? ಇಂಥವರಿಗೆಲ್ಲ ಕಾಂಗ್ರೆಸ್ ಪ್ರಚೋದನೆ ಇದೆ ಎಂದು ಆರೋಪಿಸಿದರು.ನಾವೇನ್ ಘೋಷಣೆ ಕೂಗಬೇಕು, ಏನು ಪೂಜೆ ಮಾಡಬೇಕು ಎಂಬ ದುಸ್ಥಿತಿಗೆ ಬಂದಿದೆಯಾ? ಬಹುಸಂಖ್ಯಾತರ ಭಾವನೆಗಳಿಗೆ ಸ್ಪಂದಿಸದ ಸರ್ಕಾರ ಇರಬಾರದು. ತಕ್ಷಣವೇ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. +ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿಂದಲೂ ತುಷ್ಟೀಕರಣ ರಾಜಕಾರಣ, ಅದರ ಬಿಸಿ, ಅದರ ಪ್ರಭಾವ ನಿತ್ಯ ಕಾಣುತ್ತಿದೆ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ಎಂದು ದೂರಿದರು. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡೋರಿಗೆ ಬ್ರದರ್ಸ್, ರಾಮೇಶ್ವರಂ ಬ್ಲಾಸ್ಟ್ ಪ್ರಕರಣ, ಪಾಕಿಸ್ತಾನ ಜಿಂದಾಬಾದ್ ಎಲ್ಲದರಲ್ಲೂ ಸರ್ಕಾರದ ತುಷ್ಟೀಕರಣ ಎದ್ದು ಕಾಣುತ್ತಿದೆ. ವಿದ್ಯಾರಣ್ಯಪುರ ಘಟನೆ ನೋಡಿದಾಗ ನಾವೆಲ್ಲಿದ್ದೀವಿ ಅನ್ನೋ ಅನುಮಾನ ಬರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಕಾಂಗ್ರೆಸ್ನ ಸಂಸ್ಕೃತಿನೇ ಹಾಗೇ ಅವರದ್ದು ಬರೀ ಕಬಳಿಕೆ ಕಬಳಿಕೆ. ಮಾಜಿ ಪ್ರಧಾನಿ ದೇವೇಗೌಡರು ಮಾಡಿರುವ ಆರೋಪಕ್ಕೆ ಮೊದಲು ಡಿ.ಕೆ.ಶಿವಕುಮಾರ್ ಉತ್ತರ ಕೊಡಬೇಕು, ಅದು ಬಿಟ್ಟು ಉಡಾಫೆಯಾಗಿ ಮಾತನಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ನಿನ್ನೆ ಕನಕಪುರದಲ್ಲಿ ಜನ ಸಾಗರವೇ ಹರಿದುಬಂದಿತ್ತು. ಕನಕಪುರದಲ್ಲೇ ಡಿಕೆ ಸಹೋದರರಿಗೆ ಮತ ಹಾಕಿ ಏನು ಪ್ರಯೋಜನ ಎನ್ನುತ್ತಿದ್ದಾರೆ. ಡಿ.ಕೆ.ಸುರೇಶ್ಗೂ ಹಾಗೂ ಡಾ.ಮಂಜುನಾಥ್ ಅವರಿಗೂ ಅಜಗಜಾಂತರ ವ್ಯತ್ಯಾಸ ಇದೆ. ರಾಹುಲ್ ಗಾಂ, ಡಿ.ಕೆ ಸುರೇಶ್ ಒಂದು ಕಡೆ ನರೇಂದ್ರ ಮೋದಿ, ಸಿ.ಎನ್.ಮಂಜುನಾಥ್ ಜೋಡಿ ಒಂದು ಎಂದರು. +ಲೋಕಸಭಾ ಚುನಾವಣೆಯಲ್ಲಿ ಏನಾದರೂ ಮಾಡಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಪಕ್ಷ ಎಲ್ಲಾ ತಂತ್ರವನ್ನು ಮಾಡುತ್ತಿದೆ. ಅದಕ್ಕೆ ಒಂದು ನಿಯಮ ಇಲ್ಲ ನೀತಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಸ್ಥಾನವೂ ಬರುವುದಿಲ್ಲ. ಅವರ ನಾಯಕನೇ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_176_9.txt b/eesanje/url_46_176_9.txt new file mode 100644 index 0000000000000000000000000000000000000000..b31c54db4b9e1b10b16a75a5bb3f251bb28d84e1 --- /dev/null +++ b/eesanje/url_46_176_9.txt @@ -0,0 +1,5 @@ +ಕಚೇರಿಗೆ ನುಗ್ಗಿ ಬಿಜೆಪಿ ಮುಖಂಡನಿಗೆ ಕಾಂಗ್ರೆಸ್ ನಾಯಕರಿಂದ ಧಮ್ಕಿ +ಬೆಂಗಳೂರು, ಏ.18-ಏಕಾಏಕಿ ಬಿಜೆಪಿ ಕಚೇರಿಗೆ ನುಗ್ಗಿ ಇಲ್ಲಿ ಪ್ರಚಾರ ಮಾಡಬಾರದು, ಟೇಬಲ್ ಹಾಕಂಗಿಲ್ಲ, ನಾವು ಹೇಳಿದಂತೆ ಕೇಳಿದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಬಿಜೆಪಿ ಮುಖಂಡನಿಗೆ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ಹಾಗೂ ಇತರರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬೇಗೂರು ವಾರ್ಡಿನ ಬಿಜೆಪಿ ಮುಖಂಡರಾದ ದೊಡ್ಡಕಮ್ಮನಹಳ್ಳಿ ನಿವಾಸಿ ಅಭಿಷೇಕ್ ಅವರು ನಿನ್ನೆ ರಾತ್ರಿ 8 ಗಂಟೆ ಸುಮಾರಿನಲ್ಲಿ ಆಂಜನೇಯ ದೇವಾಲದ ಸಮೀಪ ಬಿಜೆಪಿ ಕಚೇರಿಯಲ್ಲಿ ಸ್ನೇಹಿತರೊಂದಿಗೆ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದರು. +ಆ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಕಮ್ಮನಹಳ್ಳಿ ಶ್ರೀನಿವಾಸ್ ತನ್ನ ಹಿಂಬಾಲಕರೊಂದಿಗೆ ಹೋಗಿ ಏಕಾಏಕಿ ಕಚೇರಿಯೊಳಗೆ ನುಗ್ಗಿ ಅಭಿಷೇಕ್ ಅವರಿಗೆ ಧಮ್ಕಿ ಹಾಕಿದ್ದಾರೆ.ಆ ವೇಳೆ ಆತಂಕಗೊಂಡು ಕಚೇರಿಯಿಂಧ ಹೊರ ಬರಲು ಅಭಿಷೇಕ್ ಹಾಗೂ ಸ್ನೇಹಿತ ಮಂಜುನಾಥ್ ಯತ್ನಿಸಿದಾಗ ಅವರನ್ನು ತಡೆದು ಹಲ್ಲೆ ನಡೆಸಿ, ನೀವಿಲ್ಲಿ ಬಿಜೆಪಿ ಪರ ಪ್ರಚಾರ ಮಾಡಂಗಿಲ್ಲ, ಟೇಬಲ್ ಹಾಕಬಾರದು, ಒಂದು ವೇಳೆ ನಾನು ಹೇಳಿದ ಹಾಗೆ ಕೇಳದಿದ್ದರೆ ಪರಿಣಾಮ ಬೇರೆ ರೀತಿಯೇ ಆಗುತ್ತದೆ ಎಂದು ಬೆದರಿಸಿದ್ದಾರೆ. +ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ವರ್ತನೆಯಿಂದ ಆತಂಕಗೊಂಡ ಅಭಿಷೇಕ್ ಅವರು ತಕ್ಷಣ ಹುಳಿಮಾವು ಪೊಲೀಸರಿಗೆ ದೂರು ನೀಡಿ ಬೆದರಿಕೆ ಹಾಕಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_177_1.txt b/eesanje/url_46_177_1.txt new file mode 100644 index 0000000000000000000000000000000000000000..61eb137394c902f634f8a24ec1e7f63e47f14833 --- /dev/null +++ b/eesanje/url_46_177_1.txt @@ -0,0 +1,5 @@ +ಮುಂದಿನ ಅವಧಿಗೂ ಕಾಂಗ್ರೆಸ್‍ನದ್ದೇ ಸರ್ಕಾರ, ಮುಂದುವರಿಯಲಿವೆ ಗ್ಯಾರಂಟಿಗಳು : ಸಿಎಂ +ಬೆಂಗಳೂರು, ಏ.18-ಪ್ರಸಕ್ತ ಅವಧಿಗಷ್ಟೇ ಅಲ್ಲ, ಮುಂದಿನ ಅವಧಿಗೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಗ್ಯಾರಂಟಿ ಯೋಜನೆಗಳನ್ನು ಅಬಾತವಾಗಿ ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕಾಂಗ್ರೆಸ್‍ನ ಪಂಚಖಾತ್ರಿ ಯೋಜನೆಗಳು ತಾತ್ಕಾಲಿಕ. ಲೋಕಸಭಾ ಚುನಾವಣೆ ಬಳಿಕ ಅವು ಸ್ಥಗಿತಗೊಳ್ಳುತ್ತವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರೇನು ಶಾಸ್ತ್ರ ಹೇಳುತ್ತಾರೆಯೇ? ಎಂದು ಕಿಡಿಕಾರಿದರು. +ತಾತ್ಕಾಲಿಕ ಎಂದರೆ ಏನರ್ಥ? ಈ ಅವಧಿ ಮುಂದಿನ ಅವಧಿಗೂ ನಾವೇ ಅಧಿಕಾರದಲ್ಲಿರುತ್ತೇವೆ. ಯಾವ ಕಾರಣಕ್ಕೂ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿಗಾಗಿ ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ತಿಳಿಸಿದರು. +ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ವಾತಾವರಣದ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಪರವಾದ ಅಲೆಯಿದೆ. ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_177_10.txt b/eesanje/url_46_177_10.txt new file mode 100644 index 0000000000000000000000000000000000000000..8e946eef385ec0d0401010c3f5748f0b14c0fcc1 --- /dev/null +++ b/eesanje/url_46_177_10.txt @@ -0,0 +1,6 @@ +ದ್ವಾರಕೀಶ್ ಚಿತ್ರರಂಗ ಸೇವೆ ಅಪಾರವಾದದ್ದು : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಏ.17-ನಟ, ನಿರ್ಮಾಪಕ ಹಾಗೂ ನಿರ್ದೇಶಕ ದ್ವಾರಕೀಶ್ ಅವರ ನಿಧನ ಇಡೀ ಕನ್ನಡಿಗರಿಗೆ ಬಹಳ ನೋವುಂಟು ಮಾಡಿದ್ದು, ನನಗೂ ನೋವುಂಟು ಮಾಡಿದೆ. ಅವರ ಅಗಲುವಿಕೆಯಿಂದ ಕನ್ನಡಿಗರಿಗೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಅಪಾರ ಕೊಡುಗೆ ನೀಡಿದ್ದಾರೆ. ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ದ್ವಾರಕೀಶ್ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅದನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಅಷ್ಟೆ ಅಲ್ಲ, ನಾಯಕ ನಟರಾಗಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಡಾ.ರಾಜ್ ಕುಮಾರ್ ಮತ್ತು ದ್ವಾರಕೀಶ್ ಅವರ ಜೋಡಿ ಚೆನ್ನಾಗಿತ್ತು. +ವಿಷ್ಣುವರ್ಧನ್, ಅಂಬರೀಶ್ ಜೊತೆ ಕೆಲಸ ಮಾಡಿದ್ದರು, ಚಿತ್ರರಂಗದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದರು. ಎಷ್ಟೆ ಕಷ್ಟ ಬಂದರೂ ಸಹಿಸಿಕೊಂಡು ಚಿತ್ರರಂಗ ಬೆಳೆಯಲು ಅಪಾರ ಕೊಡುಗೆ ನೀಡಿದ್ದರು ಎಂದರು.ಎಲ್ಲಕ್ಕಿಂತ ಮುಖ್ಯವಾಗಿ ಅವರು ನಮ್ಮ ಊರಿನವರು, ಮೈಸೂರಿನವರು, ಹುಣಸೂರಿನಲ್ಲಿ ಹುಟ್ಟಿ, ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿದವರು. +ಮೈಸೂರು ಕಂಡರೆ ಅವರಿಗೆ ಹೆಚ್ಚು ಪ್ರೀತಿ ಇತ್ತು. ನಾನು ಅವರು ಒಮ್ಮೆ ಬೆಂಗಳೂರಿನಿಂದ ಹೆಲಿಕಾಫ್ಟರ್‍ನಲ್ಲಿ ಮೈಸೂರಿಗೆ ಹೋಗಿದ್ದೇವು. ಅಲ್ಲಿ ರೇಸ್ ಕೋರ್ಸ್‍ನಲ್ಲಿ ಇಳಿದಿದ್ದೇವು. ದಾರಿಯುದ್ದಕ್ಕೂ ಸಿನಿಮಾ, ರಾಜಕೀಯ, ಸಾಮಾಜಿಕ ವಿಚಾರಗಳು ಸೇರಿ ಅನೇಕ ವಿಚಾರಗಳನ್ನು ಚರ್ಚೆ ಮಾಡಿದ್ದೇವು. ಕನ್ನಡದ ಸೇವೆ ಮಾಡಿದ ಅಪರೂಪದ ನಟ ಎಂದು ಕೊಂಡಾಡಿದರು. +ಮರಣಾನಂತರ ನೇತ್ರದಾನ ಮಾಡಿರುವುದು ಶ್ಲಾಘನೀಯ, ಸತ್ತ ಮೇಲೂ ಸಾಮಾಜಿಕ ಸೇವೆ ಮಾಡಿರುವ ಅವರು ಮಾದರಿಯಾಗಿದ್ದಾರೆ. ಅವರ ನಿಧನದಿಂದ ಕನ್ನಡ ಚಿತ್ರರಂಗ ಬಹಳ ಬಡವಾಗಿದೆ. ಧರ್ಮಪತ್ನಿ ಕಾಲವಾದ ದಿನವೇ ದ್ವಾರಕೀಶ್ ನಿಧನರಾಗಿದ್ದಾರೆ. ಇಬ್ಬರ ಆತ್ಮಕ್ಕೂ ಶಾಂತಿ ಸಿಗಲಿಲ ಎಂದು ಪ್ರಾರ್ಥಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_177_11.txt b/eesanje/url_46_177_11.txt new file mode 100644 index 0000000000000000000000000000000000000000..c8c2ae487db5cf21c205bd813750bccc8bb41c97 --- /dev/null +++ b/eesanje/url_46_177_11.txt @@ -0,0 +1,8 @@ +ನಾಳೆಯಿಂದ ಮೂರು ದಿನ ಸಿಇಟಿ ಪರೀಕ್ಷೆ +ಬೆಂಗಳೂರು, ಏ.17-ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಮೂರು ದಿನ ನಡೆಯಲಿರುವ ಸಿಇಟಿ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. +ಭಾರೀ ಬಿಗಿಭದ್ರತೆಯೊಂದಿಗೆ ಪರೀಕ್ಷೆ ನಡೆಸಲಿದೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ವಿದ್ಯಾರ್ಥಿ ಜೀವನದ ಮಹತ್ವ ಘಟ್ಟವೆಂದೇ ಪರಿಗಣಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಒಂದು ವಾರದ ಬಳಿಕ ಸಿಇಟಿ ಪರೀಕ್ಷೆ ಆರಂಭವಾಗುತ್ತಿದೆ. ಕಳೆದ ವರ್ಷಕ್ಕಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ. +ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿ ಪ್ರಕಾರ 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರಬಯಸುವವರು ಸೇರಿದ್ದಾರೆ. ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥ್ಗಿಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ. +3,18.865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ. ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆಯಲಿವೆ. ಏ.19ರಂದು ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ. +ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ತೆಗೆದುಕೊಂಡು ಹೋಗಬೇಕು. +ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ರೀತಿಯ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದುವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಧಿಸಿದೆ. +ಅಭ್ಯರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಟ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಿದೆ. \ No newline at end of file diff --git a/eesanje/url_46_177_12.txt b/eesanje/url_46_177_12.txt new file mode 100644 index 0000000000000000000000000000000000000000..d1f284b7237b13049431eb2b846725245a0e1f38 --- /dev/null +++ b/eesanje/url_46_177_12.txt @@ -0,0 +1,8 @@ +ಕೋವಿಡ್ ಹೆಸರಿನಲ್ಲಿ ವಂಚಿಸಿದ್ದವರ ವಿರುದ್ಧ ಕ್ರಮಕ್ಕೆ ಎನ್.ಆರ್.ರಮೇಶ್ ಆಗ್ರಹ +ಬೆಂಗಳೂರು,ಏ.16-ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಬಿಬಿಎಂಪಿಗೆ ವಂಚಿಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಹಾಗೂ ಬಿಎಂಟಿಎಫ್ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. +ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯದ ಆರೋಗ್ಯ ಅಧಿಕಾರಿಯಾಗಿದ್ದ ಡಾ. ಸವಿತ ಮತ್ತು ಶಾಂತಿನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿಗಳಾಗಿದ್ದ ಶ್ರೀನಿವಾಸ್ ಗೌಡ ಅವರು ಭಾರಿ ಅಕ್ರಮ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಆರೋಪಿಗಳು ಶಾಂತಿನಗರ ರೇಂಜ್ ಕೋವಿಡ್ ಸ್ಟಾಪ್ ಡಿಇಒ ಮತ್ತು ಸ್ವಾಬ್ ಕಲೆಕ್ಟರ್ ಸ್ಯಾಲರಿ ಬಿಲ್ ಎಂಬ ಹೆಸರಿನಲ್ಲಿ ಆರೋಗ್ಯ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಖಾತೆಗಳಿಗೆ ತಲಾ ಎಪ್ಪತ್ತೈದು ಸಾವಿರದ ಇನ್ನೂರಾ ಇಪ್ಪತ್ತೈದು ರೂ.ಗಳನ್ನು ನೇರವಾಗಿ ಡಿಸಿ ಬಿಲ್ಗಳ ಮೂಲಕ ವರ್ಗಾವಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿರುತ್ತದೆ. +ಮೇಲೆ ತಿಳಿಸಿರುವ ಕಾರ್ಯವು ಸಂಪೂರ್ಣ ಕಾನೂನು ಬಾಹಿರ ಕಾರ್ಯವಾಗಿದ್ದು, ವಲಯ ಆಯುಕ್ತರ ಅನುಮೋದನೆಯನ್ನು ಪಡೆಯದೇ ಮತ್ತು ವಿಶೇಷ ಆಯುಕ್ತರು (ಆರೋಗ್ಯ) ರವರ ಅನುಮತಿಯನ್ನು ಪಡೆಯದೆಯೇ ನೇರವಾಗಿ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೂರ್ವ ವಲಯ ಆರೋಗ್ಯ ಅಧಿಕಾರಿಗಳಾಗಿದ್ದ ಡಾ. ಸವಿತರವರು ಮತ್ತು ಶಾಂತಿನಗರ ವಿಭಾಗದ ಆರೋಗ್ಯ ವೈದ್ಯಾಧಿಕಾರಿ ಗಳಾಗಿದ್ದ ಡಾ. ಶ್ರೀನಿವಾಸ್ ಗೌಡ ರವರು ಸೇರಿಕೊಂಡು ಪಾಲಿಕೆಗೆ ಹತ್ತಾರು ಲಕ್ಷ ರೂಪಾಯಿಗಳನ್ನು ವಂಚಿಸಿರುತ್ತಾರೆ. +ಅಲ್ಲದೇ, ಯಾವುದೇ ಹಿರಿಯ ಮತ್ತು ಕಿರಿಯ ಆರೋಗ್ಯ ಪರಿವೀಕ್ಷಕರ ಗಮನಕ್ಕೆ ತಾರದೆಯೇ ಅವರವರ ಖಾತೆಗಳಿಗೆ ಹಣವನ್ನು ವರ್ಗಾಯಿಸಿ ನಂತರ ಈ ಹಣವನ್ನು ಡಾ.ಸವಿತ ಅವರ ಮಗನಾದ ಸಿದ್ಧರಾಜು ಚಿರಾಗ್ ಎಂಬುವವರ ಖಾತೆಗೆ ವರ್ಗಾವಣೆ ಮಾಡಿಕೊಂಡಿರುತ್ತಾರೆ. +ಈ ಸಂಬಂಧ ಪಾಲಿಕೆಗೆ ಹತ್ತಾರು ಲಕ್ಷ ರೂಪಾಯಿಗಳಷ್ಟು ಹಣವನ್ನು ವಂಚನೆ ಮಾಡಿರುವ ಪೂರ್ವ ವಲಯದ ಆರೋಗ್ಯ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಾನ್ಯ ಮುಖ್ಯ ಆಯುಕ್ತರನ್ನು ಮತ್ತು ಆಡಳಿತಾಕಾರಿಗಳನ್ನು ಅಗ್ರಹಿಸಿದ್ದಾರೆ. +ಹಾಗೆಯೇ, ಈ ಇಬ್ಬರು ಅಧಿಕಾರಿಗಳ ವಿರುದ್ಧ ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಪ್ರಕರಣ ಗಳನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಬಿಎಂಟಿಎಫ್ನಲ್ಲಿ ದಾಖಲೆಗಳ ಸಹಿತ ದೂರು ದಾಖಲಿಸಿದ್ದಾರೆ. \ No newline at end of file diff --git a/eesanje/url_46_177_2.txt b/eesanje/url_46_177_2.txt new file mode 100644 index 0000000000000000000000000000000000000000..37012a2dabeb549862b8082bdd92cb2c49c849c2 --- /dev/null +++ b/eesanje/url_46_177_2.txt @@ -0,0 +1,5 @@ +ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಂಚೆ ಮತದಾನ +ಬೆಂಗಳೂರು, ಏ.18-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ 14 ಕ್ಷೇತ್ರಗಳಲ್ಲಿ ನಾಳೆಯಿಂದ ಏ.21 ರವರೆಗೆ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಅಂಚೆ ಮತದಾನದ ಸೌಲಭ್ಯ ಕಲ್ಪಿಸಲಾಗಿದೆ. +ಭಾರತ ಚುನಾವಣಾ ಆಯೋಗ ಅಗತ್ಯ ಸೇವೆಗಳೆಂದು ಗುರುತಿಸಿರುವ ವಿದ್ಯುಚ್ಛಕ್ತಿ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ, ವಿಮಾನಯಾನ, ಸಾರಿಗೆ ಸೇವೆ, ಅಗ್ನಿಶಾಮಕ ಸೇವೆಗಳು, ಸಂಚಾರಿ ಪೊಲೀಸ್, ಆಂಬ್ಯುಲೆನ್ಸ್ ಸೇವೆಗಳು, ಬೆಂಗಳೂರು ಮೆಟ್ರೋ ರೈಲು ನಿಗಮ, ಕಂಟ್ರೋಲ್ ರೂಂ, ಗ್ರಾಮೀಣ ಮತ್ತು ನಗರ ಕುಡಿಯುವ ನೀರು ಸರಬರಾಜು ಇಲಾಖೆ, ಬಂಧೀಖಾನೆ ಇಲಾಖೆ ಹಾಗೂ ಮತದಾನದ ದಿನ ಸುದ್ದಿ ಪ್ರಸಾರ ಮಾಡಲು ಅಧಿಕೃತಗೊಳಿಸಿದ ಮಾಧ್ಯಮದ ವರದಿಗಾರರು ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. +ನಾಳೆ ಬೆಳಿಗ್ಗೆ 9 ರಿಂದ ಏ.21 ರ ಸಂಜೆ 5 ಗಂಟೆವರೆಗೆ ಅಂಚೆ ಮತದಾನ ಕೇಂದ್ರಗಳಲ್ಲಿ ಅಗತ್ಯ ಸೇವೆಯಲ್ಲಿ ತೊಡಗಿರುವವರು ಮತದಾನ ಮಾಡಬಹುದಾಗಿದೆ.ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಅಂಚೆ ಮತದಾನ ನಾಳೆಯಿಂದ ಮೂರು ದಿನ ನಡೆಯಲಿದೆ. +ಆಯಾ ಕ್ಷೇತ್ರದಲ್ಲಿ ತಲಾ ಒಂದು ಅಂಚೆ ಮತದಾನ ಕೇಂದ್ರವನ್ನು ತೆರೆಯಲಾಗಿದೆ. ಅಗತ್ಯ ಸೇವೆಗಳ ಇಲಾಖೆಗೆ ಸಂಬಂಧಿಸಿದ ಗೈರುವರ್ಗದ ಮತದಾರರು ನಿಗದಿತ ಅವಯಲ್ಲಿ ಮತ ಚಲಾಯಿಸುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_177_3.txt b/eesanje/url_46_177_3.txt new file mode 100644 index 0000000000000000000000000000000000000000..ee5dbc0c5032d9fea8bc16ee6f71df1988b2f9e6 --- /dev/null +++ b/eesanje/url_46_177_3.txt @@ -0,0 +1,7 @@ +2ನೇ ಹಂತದ ಚುನಾವಣೆ : ನಾಮಪತ್ರ ಸಲ್ಲಿಕೆಗೆ ನಾಳೆ ಕೊನೇದಿನ +ಬೆಂಗಳೂರು, ಏ.18– ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆಯ ದಿನವಾಗಿದ್ದು, ನಿನ್ನೆಯವರೆಗೆ 168 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. +ಈ ಪೈಕಿ 153 ಪುರುಷ, 15 ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ 20 ಅಭ್ಯರ್ಥಿಗಳಿದ್ದರೆ, ಚಿಕ್ಕೋಡಿ, ಬಿಜಾಪುರ, ಬಳ್ಳಾರಿ ಕ್ಷೇತ್ರದಲ್ಲಿ ತಲಾ 9 ಅಭ್ಯರ್ಥಿಗಳಿದ್ದಾರೆ. ಅತೀ ಕಡಿಮೆ ರಾಯಚೂರು ಜಿಲ್ಲೆಯಲ್ಲಿ 6 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. +ಉಳಿದಂತೆ ಬೆಳಗಾವಿ 12, ಬಾಗಲಕೋಟೆ 10, ಕಲಬುರಗಿ 10, ಬೀದರ್ 17, ಕೊಪ್ಪಳ 13, ಹಾವೇರಿ 12, ಧಾರವಾಡ 14, ಉತ್ತರಕನ್ನಡ 12, ಶಿವಮೊಗ್ಗ 15 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. +89 ಮಂದಿ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ 31, ಕಾಂಗ್ರೆಸ್‍ನಿಂದ 40, ಎಎಪಿಯಿಂದ 1 , ಬಿಎಸ್‍ಪಿಯಿಂದ 10, ಜೆಡಿಎಸ್‍ನಿಂದ 1 ನಾಮಪತ್ರ ಸಲ್ಲಿಕೆಯಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +2ನೇ ಹಂತಕ್ಕೆ ನಾಮಪತ್ರ ಸಲ್ಲಿಕೆ ನಾಳೆ ಕೊನೆಗೊಳ್ಳಲಿದ್ದು, ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ವಾಪಸ್ಸು ಪಡೆಯಲು ಏ.22 ಕಡೆಯ ದಿನವಾಗಿದೆ. +ಅಂದು ಸಂಜೆ ಆಯಾ ಕ್ಷೇತ್ರಗಳಲ್ಲಿ ಅಂತಿಮ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಅಕೃತವಾಗಿ ಪ್ರಕಟಿಸಲಾಗುತ್ತದೆ. ಮೇ 7 ರಂದು ಮತದಾನ ನಡೆಯಲಿದೆ. ಎರಡೂ ಹಂತಗಳ ಮತ ಎಣಿಕೆ ಜೂನ್ 4 ರಂದು ನಡೆದು, ಅಂದೇ ಫಲಿತಾಂಶ ಹೊರಬೀಳಲಿದೆ. \ No newline at end of file diff --git a/eesanje/url_46_177_4.txt b/eesanje/url_46_177_4.txt new file mode 100644 index 0000000000000000000000000000000000000000..bc619d446280217d13dba957d4962d1df7765510 --- /dev/null +++ b/eesanje/url_46_177_4.txt @@ -0,0 +1,7 @@ +ಮಂಡ್ಯದಲ್ಲಿ ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ಚುನಾವಣಾ ಪ್ರಚಾರ +ಮಂಡ್ಯ, ಏ.18-ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಉರುಫ್ ಸ್ಟಾರ್ ಚಂದ್ರು ಪರವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಪ್ರಚಾರ ನಡೆಸಿದ್ದಾರೆ. +ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು, ಟಿ.ಕೆ.ಹಳ್ಳಿ, ಹುಸ್ಕೂರು, ಹಾಡ್ಲಿ ಸರ್ಕಲ್, ಬೆಳಕವಾಡಿ, ಬಿ.ಜಿ.ಪುರ, ಸರಗೂರು ಹ್ಯಾಂಡ್‍ ಪೋಸ್ಟ್, ಪೂರಿಗಾಲಿ, ಟಿ.ಕಾಗೇಪುರ, ದುಗ್ಗನಹಳ್ಳಿ, ಬಂಡೂರು, ಹಿಟ್ಟನಹಳ್ಳಿ ಕೊಪ್ಪಲು, ಮಿಕ್ಕೇರೆ, ಕಿರುಗಾವಲು, ಚನ್ನಪಿಳ್ಳೆ ಕೊಪ್ಪಲು, ಮಳವಳ್ಳಿ ನಗರ ಸೇರಿದಂತೆ ಹಲವು ಕಡೆಗಳಲ್ಲಿ ದರ್ಶನ್ ರೋಡ್‍ಶೋ ನಡೆಸಿದರು.ಆರಂಭದಲ್ಲಿ ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರ ಅಲ್ಲ, ವ್ಯಕ್ತಿಯ ಪರ. ತಪ್ಪು ಸಂದೇಶ ಹೋಗಬಾರದು ಎಂದು ಮನವಿ ಮಾಡಿದರು. +5 ವರ್ಷಗಳ ಹಿಂದೆ ಪಿ.ಎಂ.ನರೇಂದ್ರಸ್ವಾಮಿಯವರು ಮಾಡಿದ ಸಹಾಯವನ್ನು ಮರೆಯಲು ಆಗುವುದಿಲ್ಲ. ಸುಮಕ್ಕ ಅವರಿಗೆ ಈ ಬಾರಿ ಬಿಜೆಪಿಯ ಟಿಕೆಟ್ ಸಿಗದೇ ಇದ್ದರೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಬೆಂಬಲ ನೀಡಬೇಕು ಎಂದು ಶಾಸಕ ಉದಯ್ ಅವರು ಆರಂಭದಲ್ಲೇ ತಮ್ಮ ಜೊತೆ ಮಾತುಕತೆ ನಡೆಸಿದ್ದರು. ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಪಿ.ಎಂ.ನರೇಂದ್ರ ಸ್ವಾಮಿ ಮತ್ತು ಉದಯ್ ಅವರ ಕೈ ಬಲಪಡಿಸಬೇಕು ಎಂದು ದರ್ಶನ್ ಮನವಿ ಮಾಡಿದರು. +ಈ ವೇಳೆ ಅಭಿಮಾನಿಗಳು ದರ್ಶನ್ ಅವರಿಗಾಗಿ ಭಾರೀ ಗಾತ್ರದ ಗುಲಾಬಿ ಹಾರವನ್ನು ಹಾಕಲು ಕ್ರೇನ್‍ನಲ್ಲಿ ತಂದಿದ್ದರು. ದರ್ಶನ್ ಅವರ ಭಾಷಣ ಮುಗಿಯುತ್ತಿದ್ದಂತೆ ಕ್ರೇನ್‍ನ ಸಹಾಯದಲ್ಲಿ ನೇತಾಡುತ್ತಿದ್ದ ಹಾರವನ್ನು ಪ್ರಚಾರ ವಾಹನದ ಹತ್ತಿರ ತರುತ್ತಿದ್ದಂತೆ ತೂಕಕ್ಕೆ ಅದು ಅರ್ಧಕ್ಕೆ ತುಂಡರಿಸಿ ಬಿದ್ದಿದೆ. ಬಿದ್ದು ಹೋದ ಹಾರವನ್ನೇ ಎತ್ತಿ ಹಿಡಿದು ಅಭಿಮಾನಿಗಳು ಫೋಟೋ ತೆಗೆಸಿಕೊಂಡರು. +ರೋಡ್ ಶೋ ಉದ್ದಕ್ಕೂ ಅಲ್ಲಲ್ಲಿ ಭಾಷಣ ಮಾಡಿರುವ ದರ್ಶನ್, ಸ್ಟಾರ್ ಚಂದ್ರು ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು. ಈ ವೇಳೆ ಮಾತನಾಡಿದ ಪಿ.ಎಂ.ನರೇಂದ್ರ ಸ್ವಾಮಿ, ದರ್ಶನ್ ಮಂಡ್ಯದ ಸ್ವಾಭಿಮಾನಕ್ಕೆ ಹೋರಾಟ ನಡೆಸಲು ಧರ್ಮದ ಪರ ನಿಲ್ಲುತ್ತಾರೆ ಎಂದು ಹೇಳಿದರು. ಅಲ್ಲಲ್ಲಿ ಅಭಿಮಾನಿಗಳು ಗಲಾಟೆ ಮಾಡುತ್ತಿದ್ದಾಗ ಆಪರೇಷನ್ ಆಗಿದೆ, ಕೈ ನೋವಿದೆ, ಹಾವಳಿ ಇಡಬೇಡಿ ಎಂದು ಮನವಿ ಮಾಡಿದರು. +ರೋಡ್‍ಶೋನಲ್ಲಿ ವಿಧಾನಪರಿಷತ್‍ನ ಮಾಜಿ ಸದಸ್ಯ ಮರಿತಿಬ್ಬೇಗೌಡ ಅವರು ಜೊತೆಯಲ್ಲಿದ್ದರು. ಅಭ್ಯರ್ಥಿಯ ಅನುಪಸ್ಥಿತಿಯಲ್ಲಿ ದರ್ಶನ್ ಸ್ಟಾರ್ ಚಂದ್ರು ಪರವಾಗಿ ಬಿರುಸಿನ ಪ್ರಚಾರ ನಡೆಸಿದರು. \ No newline at end of file diff --git a/eesanje/url_46_177_5.txt b/eesanje/url_46_177_5.txt new file mode 100644 index 0000000000000000000000000000000000000000..0abfcc35afe15aad304e3b929888eb28ae9b9f1a --- /dev/null +++ b/eesanje/url_46_177_5.txt @@ -0,0 +1,4 @@ +ಲೋಕಸಭಾ ಚುನಾವಣೆ : ನಾಳೆ ಮೊದಲ ಹಂತದ ಮತದಾನ, ಸಮೀಕ್ಷೆಗಳಿಗೆ ಆಯೋಗ ನಿಷೇಧ +ಬೆಂಗಳೂರು, ಏ.18-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ಆರಂಭವಾಗಲಿದ್ದು, ನಾಳೆಯಿಂದ ಕೊನೆಯ ಹಂತದ ಮತದಾನ ಮುಕ್ತಾಯವಾಗುವ ಜೂನ್ 1 ರ ಸಂಜೆ 6.30 ಗಂಟೆಯವರೆಗೂ ಮತಗಟ್ಟೆ ಸಮೀಕ್ಷೆಯನ್ನು ಭಾರತದ ಚುನಾವಣಾ ಆಯೋಗ ನಿಷೇಧಿಸಿದೆ. +ನಾಳೆ ಬೆಳಿಗ್ಗೆ 7 ಗಂಟೆಯಿಂದ ಜೂನ್ 1 ರ ಸಂಜೆ 6.30 ರ ನಡುವಿನ ಅವಧಿಯಲ್ಲಿ ಯಾವುದೇ ಮಾಧ್ಯಮದಲ್ಲಿ ಮತದಾನಕ್ಕೆ ಸಂಬಂಧಪಟ್ಟ ಅಭಿಪ್ರಾಯದ ಸಮೀಕ್ಷೆಗಳು ಸೇರಿದಂತೆ ಚುನಾವಣೆಗೆ ಸಂಬಂಧಪಟ್ಟ ಯಾವುದೇ ಸಮೀಕ್ಷೆಯ ಫಲಿತಾಂಶವನ್ನು ಪ್ರಸಾರ ಮಾಡಲು ಆಯೋಗ ನಿರ್ಬಂಧಿಸಿದೆ. +ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ರೀತಿಯ ಸಮೀಕ್ಷೆ ಅಥವಾ ಅಭಿಪ್ರಾಯವನ್ನು ರಾಜ್ಯದ ಎಲ್ಲಾ ಎಲೆಕ್ಟ್ರಾನಿಕ್, ಮುದ್ರಣ ಮಾಧ್ಯಮಗಳು ಸೇರಿದಂತೆ ಯಾವುದೇ ರೀತಿಯ ಮಾಧ್ಯಮದಲ್ಲಿ ಪ್ರಸಾರ ಮಾಡದಿರಲು ಸೂಚಿಸಿದೆ. \ No newline at end of file diff --git a/eesanje/url_46_177_6.txt b/eesanje/url_46_177_6.txt new file mode 100644 index 0000000000000000000000000000000000000000..eaa7ca011d9a073385de167093ba58780bd229b5 --- /dev/null +++ b/eesanje/url_46_177_6.txt @@ -0,0 +1,9 @@ +ರಾಜ್ಯಾದ್ಯಂತ ಇಂದಿನಿಂದ 2024ನೇ ಸಾಲಿನ ಸಿಇಟಿ ಪರೀಕ್ಷೆ ಆರಂಭ +ಬೆಂಗಳೂರು, ಏ.18-ವೃತ್ತಿಪರ ಕೋರ್ಸ್‍ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಇಂದು ರಾಜ್ಯಾದ್ಯಂತ ಆರಂಭವಾಯಿತು. ಭಾರೀ ಬಿಗಿಭದ್ರತೆ ಹಾಗೂ ಕಟ್ಟುನಿಟ್ಟಿನ ಕಟ್ಟುನಿಟ್ಟಿನ ಕ್ರಮಗೊಳಿಂದಿಗೆ ಕರ್ನಾಟಕ ಪರೀಕ್ಷಾ ಪ್ರಾಕಾರ ಪರೀಕ್ಷೆ ನಡೆಸುತ್ತಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಗಳು ತಲುಪಿದ್ದು, ಸುಸೂತ್ರವಾಗಿ ಪರೀಕ್ಷೆ ಆರಂಭವಾಗಿದೆ. +ಈ ತನಕ ಯಾವುದೇ ಗೊಂದಲ ಉಂಟಾಗಿಲ್ಲ ಎಂದು ಕೆಇಎ ಮೂಲಗಳು ತಿಳಿಸಿವೆ. ಕೊನೆಗಳಿಗೆವರೆಗೂ ಕೆಲವೊಂದು ವಿದ್ಯಾರ್ಥಿಗಳು ಪ್ರವೇಶಪತ್ರ ಡೌನ್‍ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ತೊಡಗಿದ್ದರು ಎಂದು ಮೂಲಗಳು ಹೇಳಿವೆ.ಇಂದು ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ಗಣಿತ ಪರೀಕ್ಷೆಗಳು ನಡೆದಿವೆ. +ನಾಳೆ ಬೆಳಿಗ್ಗೆ 10.30ರಿಂದ 11.50 ಗಂಟೆವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಏ.20ರಂದು ಹೊರನಾಡು ಹಾಗೂ ಗಡಿನಾಡು ವಿದ್ಯಾರ್ಥಿಗಳಿಗೆ ಮಾತ್ರ ಕನ್ನಡ ಭಾಷಾ ಪರೀಕ್ಷೆಯು ಬೆಂಗಳೂರು, ಮಂಗಳೂರು, ಬೆಳಗಾವಿಯಲ್ಲಿ ನಡೆಯಲಿದೆ. +ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.ಕರ್ನಾಟಕ ಪರೀಕ್ಷಾ ಪ್ರಾಕಾರದ ಮಾಹಿತಿ ಪ್ರಕಾರ, 3,81,887 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್‍ಗಳಿಗೆ ಸೇರ ಬಯಸುವವರು ಸೇರಿದ್ದಾರೆ. +ಬೆಂಗಳೂರಿನ 170 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 738 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 3,49,637 ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಿದ್ದಾರೆ. +3,18,865 ವಿದ್ಯಾರ್ಥಿಗಳು ಸಿಇಟಿ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಒಟ್ಟು 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಅರ್ಹತೆ ಹೊಂದಿದ್ದಾರೆ.ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಡ್ರೈವಿಂಗ್ ಲೈಸೆನ್ಸ್, ಪಾಸ್‍ ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ದ್ವಿತೀಯ ಪಿಯುಸಿ ಪ್ರವೇಶ ಪತ್ರ ಹಾಜರುಪಡಿಸುವ ಷರತ್ತು ವಿಧಿಸಲಾಗಿತ್ತು. +ಪರೀಕ್ಷಾ ಕೋಠಡಿಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಸ್ಲೈಡ್ ರೂಲ್ಸ್, ಕ್ಯಾಲ್ಕ್ಯುಲೇಟರ್, ವೈಟ್‍ಫ್ಲ್ಯೂಯಿಡ್, ವೈರ್ಲೆಸ್ ಸೆಟ್ಸ್, ಪೇಪರ್ ಚೀಟಿ, ಬುಕ್ಸ್, ಪುಸ್ತಕ ಮೊದಲಾದವುಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವುದನ್ನು ನಿಷೇಸಲಾಗಿತ್ತು. +ಅಭ್ಯರ್ಥಿಗಳು ಪರೀಕ್ಷೆಯು ಪ್ರಾರಂಭವಾಗುವ ಮೊದಲನೆಯ ಬೆಲ್ ಆಗುವ ಕನಿಷ್ಠಪಕ್ಷ ಎರಡು ಗಂಟೆಗೂ ಮೊದಲು ಪರೀಕ್ಷಾ ಕೇಂದ್ರದ ಆವರಣದಲ್ಲಿ ಹಾಜರಿರಬೇಕು. ಮೂರನೇ ಬೆಲ್ ಆದ ನಂತರ ಪರೀಕ್ಷಾ ಕೊಠಡಿ ಪ್ರವೇಶಿಸಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನೀಲಿ ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ ಪೆನ್ನು ಮಾತ್ರ ಬಳಸಬೇಕು ಎಂದು ತಿಳಿಸಲಾಗಿತ್ತು. \ No newline at end of file diff --git a/eesanje/url_46_177_7.txt b/eesanje/url_46_177_7.txt new file mode 100644 index 0000000000000000000000000000000000000000..e9c7446bd34f08832c86bd634926e4f16702ef64 --- /dev/null +++ b/eesanje/url_46_177_7.txt @@ -0,0 +1,5 @@ +ಮನೆಯಿಂದ ಮತದಾನ : ಹಕ್ಕು ಚಲಾಯಿಸಿದ ಶೇ.75.22ರಷ್ಟು ಮಂದಿ +ಬೆಂಗಳೂರು, ಏ.17-ಪ್ರಸಕ್ತ ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ದಿವ್ಯಾಂಗ ಮತದಾರರು ಶೇ.75.22ರಷ್ಟು ಮತದಾನವನ್ನು ಮನೆಯಿಂದ ಮಾಡಿದ್ದಾರೆ. +ಮನೆಯಿಂದ ಮತದಾನ ಮಾಡಲು 48,609 ಮತದಾರರು 12 ಡಿ ನಮೂನೆಯನ್ನು ಸಲ್ಲಿಸಿದ್ದರು. ಅವರಲ್ಲಿ ನಿನ್ನೆಯವರೆಗೆ 36,565 ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. +85 ವರ್ಷಕ್ಕಿಂತ ಮೇಲ್ಪಟ್ಟ 27,505 ಮತದಾರರು ಅಂದರೆ ಶೇ.74.97ರಷ್ಟು ಹಿರಿಯ ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ. 36,689 ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅನುಮೋದಿಸಲಾಗಿದೆ. ಅದೇ ರೀತಿ ಶೇ. 40ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರು ಮನೆಯಿಂದ ಮತ ಚಲಾಯಿಸಿದ್ದಾರೆ. +9,060 ಮತದಾರರು ಮತದಾನ ಮಾಡಿದ್ದಾರೆ. ಅಂದರೆ ಶೇ.76.01ರಷ್ಟು ಮತದಾನ ಮಾಡಿದ್ದಾರೆ. 11,920 ದಿವ್ಯಾಂಗ ಮತದಾರರಿಗೆ ಮನೆಯಿಂದ ಮತದಾನ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.ಏಪ್ರಿಲ್ 13ರಿಂದ ಮನೆಯಿಂದ ಮತದಾನ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ನಾಳೆ ಮನೆಯಿಂದ ಮತದಾನ ಮಾಡಲು ಕಡೆಯ ದಿನವಾಗಿದೆ. \ No newline at end of file diff --git a/eesanje/url_46_177_8.txt b/eesanje/url_46_177_8.txt new file mode 100644 index 0000000000000000000000000000000000000000..95117e06ab5884c6edf604f637e4b35a73fea1f1 --- /dev/null +++ b/eesanje/url_46_177_8.txt @@ -0,0 +1,16 @@ +ವಿಜಯೇಂದ್ರನನ್ನ ಸಿಎಂ ಮಾಡಲು ಯಡಿಯೂರಪ್ಪ ತಂತ್ರ : ಸಿಎಂ ಟೀಕಾ ಪ್ರಹಾರ +ಬೆಂಗಳೂರು, ಏ.17-ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕರಡಿ ಸಂಗಣ್ಣ ಇಂದು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರಡಿ ಸಂಗಣ್ಣ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಇದೇ ವೇಳೆ ಬೆಳಗಾವಿ ಗ್ರಾಮಾಂತರದಲ್ಲಿ ಮೂರು ಬಾರಿ ಮಾಜಿ ಶಾಸಕರಾಗಿದ್ದ ಎಸ್.ಸಿ. ಮಾಳಗಿ, ಮಾಜಿ ಐಎಎಸ್ ಅಧಿಕಾರಿ ಅರಕಲಗೂಡು ಪುಟ್ಟಸ್ವಾಮಿ, ಅಂಬರೀಶ್ ಕರಡಿ, ರಾಜಾಜಿನಗರ ಕ್ಷೇತ್ರ ಹಾಗೂ ದಾಸರಹಳ್ಳಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಪಿ.ಎನ್.ಕೃಷ್ಣ ಮೂರ್ತಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಅವರು ಕಾಂಗ್ರೆಸ್ಗೆ ಸೇರ್ಪಡೆಯಾದರು. +ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯವರು ಕರಡಿ ಸಂಗಣ್ಣವರಿಗೆ ಯಾಕೆ ಟಿಕೆಟ್ ನಿರಾಕರಿಸಿದರು ಎಂದು ಈವರೆಗೂ ನನಗೆ ಅರ್ಥವಾಗಿಲ್ಲ. ಅವರು ಒಳ್ಳೆಯ ಕೆಲಸ ಮಾಡಿ ಹೆಸರು ಗಳಿಸಿದ್ದರು, ಜನಾನುರಾಗಿಯಾಗಿದ್ದರು. ಯಡಿಯೂರಪ್ಪ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಬೇಕು. ಅದಕ್ಕಾಗಿ ಬಿಜೆಪಿಯಲ್ಲಿ ಯಾರು ವಿಜಯೇಂದ್ರನನ್ನು ಒಪ್ಪಿಕೊಳ್ಳುವುದಿಲ್ಲ, ಅವರಿಗೆಲ್ಲಾ ಈ ಬಾರಿ ಯಡಿಯೂರಪ್ಪ ಟಿಕೆಟ್ ತಪ್ಪಿಸಿದ್ದಾರೆ. ಅಲ್ಲಿ ಎರಡು ಪ್ರಬಲ ಗುಂಪುಗಳಿವೆ, ಒಂದು ಯಡಿಯೂರಪ್ಪನ ಗುಂಪು, ಮತ್ತೊಂದು ಸಂತೋಷ್ ಗುಂಪು ಎಂದು ಹೇಳಿದರು. +ಕಳೆದ ಬಾರಿ 25 ಸ್ಥಾನ ಗೆದ್ದಿದ್ದ ಬಿಜೆಪಿಗೆ ಈ ಬಾರಿ ಸೋಲುವ ಆತಂಕ ಇದೆ. ಅದಕ್ಕಾಗಿ ಅನೇಕ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರಕ್ಕೆ ದೇಶಾದ್ಯಂತ ಆಡಳಿತ ವಿರೋಧಿ ಅಲೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮ ಐದು ಗ್ಯಾರಂಟಿಗಳ ಅಲೆ ರಾಜ್ಯದಲ್ಲಿ ಜೋರಾಗಿದೆ ಎಂದರು. +ಜನರಿಗೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಮೂಡಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂಬ ಭಾವನೆ ಇದೆ. ದೇಶದಲ್ಲಿ ಸುಳ್ಳು ಮತ್ತು ಸತ್ಯದ ನಡುವೆ ಸಂಘರ್ಷ ನಡೆಯುತ್ತಿದೆ. ಕಾಂಗ್ರೆಸ್ ಯಾವತ್ತೂ ಸುಳ್ಳು ಹೇಳುವುದಿಲ್ಲ ಎಂಬ ನಂಬಿಕೆಯಿದ್ದರೆ, ಬಿಜೆಪಿ ಎಂದರೆ ನರೇಂದ್ರ ಮೋದಿಯಾದಿಯಾಗಿ ಎಲ್ಲರೂ ಸುಳ್ಳು ಹೇಳುತ್ತಾರೆ ಎಂಬ ಭಾವನೆ ದೃಢವಾಗಿದೆ. +ಮೋದಿ 2014ರ ಲೋಕಸಭೆ ಚುನಾವಣೆಯಲ್ಲಿ ನೀಡಿದ್ದ ಯಾವ ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ತಂದುಕೊಡುತ್ತೇವೆ ಎಂದಿದ್ದರು ಅದು ಈಡೇರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡುವುದು ಈಡೇರಿಲ್ಲ. ಒಳ್ಳೆಯ ದಿನ ಬರಲಿಲ್ಲ. ನಿರುದ್ಯೋಗ ಗಗನ ಮುಟ್ಟಿದೆ, ಬೆಲೆ ಏರಿಕೆ ತೀವ್ರವಾಗಿದೆ. ಹೀಗೆ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ನರೇಂದ್ರ ಮೋದಿ ಪ್ರಸ್ತಾಪಿಸುವುದಿಲ್ಲ. +ಧಾರ್ಮಿಕ ಹಾಗೂ ಭಾವನಾತ್ಮಕ ವಿಚಾರಗಳನ್ನು ಹೇಳಿ ಈವರೆಗೂ ಜನರನ್ನು ದಾರಿ ತಪ್ಪಿಸಿದ್ದಾರೆ. ಈ ಬಾರಿ ಅದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದರು. ಸೋಲಿನ ಅರಿವಾಗುತ್ತಿದ್ದಂತೆ ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ನಾಲ್ಕು ನೂರು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. 200 ಸ್ಥಾನಗಳನ್ನೂ ಗೆಲ್ಲುವುದಿಲ್ಲ, ಅವರೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲೂ ಹಿನ್ನಡೆ ಸ್ಪಷ್ಟವಾಗಿದೆ. ಈ ಬಾರಿ ಬಿಜೆಪಿ ಗೆಲ್ಲಲ್ಲ, ನರೇಂದ್ರ ಮೋದಿ ಪ್ರಧಾನಿಯಾಗಲ್ಲ. ದೇಶಾದ್ಯಂತ ಈ ರೀತಿಯ ಅಂಡರ್ ಕರೆಂಟ್ ಇದೆ ಎಂದರು. +ಗೆಲ್ಲುವ ವಾತಾವರಣ:ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ದೊಡ್ಡ ರಾಜಕೀಯ ಅಲೆ ಶುರುವಾಗಿದೆ. ಐದು ಗ್ಯಾರಂಟಿ ಜಾರಿಯ ಬಳಿಕ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದುಕೊಳ್ಳಲಿದೆ ಎಂಬ ವಿಶ್ವಾಸ ಜನರಲ್ಲಿ ಹೆಚ್ಚಾಗಿದೆ. ತಾವು ನಿನ್ನೆ ಕೇರಳದಲ್ಲಿ ಪ್ರವಾಸ ಕೈಗೊಂಡಿದ್ದು, ಅಲ್ಲಿ 20ಕ್ಕೆ 20 ಸ್ಥಾನಗಳನ್ನೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಗೆಲ್ಲುವ ವಾತಾರಣ ಇದೆ ಎಂದರು. +ಬಿಜೆಪಿಯಲ್ಲಿ 16 ಮಂದಿ ಬಿಜೆಪಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ, ದೇಶದಲ್ಲಿ ನೂರಕ್ಕೂ ಹೆಚ್ಚು ಮಂದಿಯ ಮರು ಸ್ಪರ್ಧೆಗೆ ಟಿಕೆಟ್ ನೀಡಿಲ್ಲ. ಅವರು ಮತ್ತೆ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ಟಿಕೆಟ್ ನಿರಾಕರಿಸಲಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎಗೆ ಸೋಲಿನ ಭಯ ಕಾಡುತ್ತಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟದ ಏಕತೆ ಜನರಲ್ಲಿ ವಿಶ್ವಾಸ ಹೆಚ್ಚಿಸಿದೆ. ಬೆಲೆ ಏರಿಕೆ, ಜಾತಿ- ಧರ್ಮದ ಮೇಲಿನ ದಾಳಿ ಕುರಿತು ಚುನಾವಣೆ ಸಂದರ್ಭದಲ್ಲಿ ಚರ್ಚೆ ನಡೆಯುತ್ತಿದೆ. +ಸಂವಿಧಾನ ಬದಲಾವಣೆ ಮಾಡುವುದಿಲ್ಲಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಿದ್ದಾರೆ. ಹಾಲಿ ಸಂಸದರು ಬಿಜೆಪಿಗೆ ನಾಲ್ಕು ನೂರು ಸ್ಥಾನ ಗೆಲ್ಲಿಸಿ ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ. ಈವರೆಗೂ ಅಂತಹ ಸಂಸದರ ವಿರುದ್ಧ ಕ್ರಮ ಕೈಗೊಂಡಿಲ್ಲ. ಉತ್ತರ ಭಾರತದಲ್ಲಿ ಜನ ದಂಗೆ ಏಳುತ್ತಾರೆ ಎಂದು ಮೋದಿ ಸ್ಪಷ್ಟನೆ ನೀಡಿದ್ದಾರೆ ಎಂದರು. +ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಕರ್ನಾಟಕ ಮತ್ತು ತೆಲಂಗಾಣದಲ್ಲಿ ಸಂಪೂರ್ಣವಾಗಿ ಜಾರಿಗೆ ತಂದಿದ್ದೇವೆ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದವರು ಈಗ ಮೋದಿ ಗ್ಯಾರಂಟಿ ಎಂದು ಜಾಹೀರಾತು ನೀಡಲಾರಂಭಿಸಿದ್ದಾರೆ. ಬಿಜೆಪಿ ಹಿಂದೆ ನೀಡಿದ್ದ ಭರವಸೆಗಳನ್ನು ಎಷ್ಟು ಈಡೇರಿಸಿದ್ದಾರೆ ಎಂದು ಚರ್ಚಿಸಬೇಕಿದೆ. ಮೋದಿ ಗ್ಯಾರಂಟಿ ಎಷ್ಟು ತಲುಪಿದೆ ಎಂಬುದು ಜನರೇ ಹೇಳಬೇಕಿದೆ ಎಂದರು. +ಚುನಾವಣೆ ಬಳಿಕ ಗ್ಯಾರಂಟಿ ಮುಂದುವರೆಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಂದರೆ ಎನ್ಡಿಎ ಅಧಿಕಾರಕ್ಕೆ ಬಂದರೆ ಅವರು ಗ್ಯಾರಂಟಿಯನ್ನು ಮುಂದುವರೆಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಬಿಜೆಪಿಯ ನಾಯಕರಿಗೆ ಅವರ ಹಣೆಯ ಬರಹದಲ್ಲಿ ಗ್ಯಾರಂಟಿ ಮುಟ್ಟಲು ಸಾಧ್ಯವಿಲ್ಲ, ಅದಕ್ಕೆ ರಾಜ್ಯದ ಜನ ಮತ್ತು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಎಚ್ಚರಿಸಿದರು. +ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 20ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಇದು ಖಚಿತವಾಗುತ್ತಿದ್ದಂತೆ ಹತಾಶರಾಗಿ ಕುಮಾರಸ್ವಾಮಿ ಗ್ಯಾರಂಟಿಗಳಿಂದ ಹಳ್ಳಿಯಲ್ಲಿ ತಾಯಂದಿರು ದಾರಿ ತಪ್ಪಿದರು ಎಂದು ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು.ರಾಜ್ಯದಲ್ಲಿ ಎಲ್ಲ ಕಡೆ ಕಾಂಗ್ರೆಸ್ ಗೆಲ್ಲಲಿದೆ. ಶಿವಮೊಗ್ಗದಲ್ಲಿ ಪಕ್ಷ ಭೇದ ಮರೆತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ರನ್ನು ಬೆಂಬಲಿಸುತ್ತಿದ್ದಾರೆ. ಯಡಿಯೂರಪ್ಪನವರ ಮಗ ಈ ಬಾರಿ ಅಲ್ಲಿ ಗೆಲ್ಲುವುದಿಲ್ಲ . ವಿಧಾನಸಭಾ ಚುನಾವಣೆಯಲ್ಲಿ ಗಾಂಬಾವಿಯಿಂದ ನೀರು ತೆಗೆದು ರಸ್ತೆ ತೊಳೆದೆವು, ಅದೇ ರೀತಿ ಬಿಜೆಪಿಯನ್ನು ತೊಳೆಯುತ್ತೇವೆ, ಜನ ಬಿಜೆಪಿಯನ್ನು ನಿರಾಕರಿಸುತ್ತಾರೆ ಎಂದರು. +ಬಿಜೆಪಿಯ ಸಂಸದ ಕರಡಿ ಸಂಗಣ್ಣ ಸಜ್ಜನ ರಾಜಕಾರಣಿ, ಅವರನ್ನು ಆ ಪಕ್ಷದಲ್ಲಿ ಅಪಮಾನಿಸಲಾಗಿದೆ, ಹಾಲಿ ಸಂಸದರಾಗಿರುವ ಅವರು ನಿನ್ನೆ ತಮ್ಮ ಸ್ಥಾನಕ್ಕೆ ಫ್ಯಾಕ್ಸ್ ಮೂಲಕ ರಾಜೀನಾಮೆ ನೀಡಿ, ಇಂದು ಕಾಂಗ್ರೆಸ್ ಸೇರಿದ್ದಾರೆ. ಈ ಬೆಳವಣಿಗೆಗಳು ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಹೆಚ್ಚಿರುವುದನ್ನು ಸ್ಪಷ್ಟ ಪಡಿಸಿವೆ. ಕರಡಿ ಸಂಗಣ್ಣ, ಪರಿಶುದ್ಧ ವ್ಯಕ್ತಿತ್ವ ಹಾಗೂ ದೊಡ್ಡ ಪ್ರಮಾಣದ ಬೆಂಬಲಿಗರನ್ನು ಹೊಂದಿರುವವರು, ಕೊಪ್ಪಳ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪ್ರಭಾವಿಯಾಗಿದ್ದಾರೆ ಎಂದರು. +ಸಂಸದ ಕರಡಿ ಸಂಗಣ್ಣ ಮಾತನಾಡಿ, 14 ವರ್ಷಗಳ ಹಿಂದೆ ಲಕ್ಷ್ಮಣ್ ಸವದಿ ಸಚಿವರಾಗಿದ್ದರು, ಆ ವೇಳೆ ನಾನು ಹೋರಾಟ ನಡೆಸುತ್ತಿದ್ದೆ, ನನ್ನನ್ನು ಭೇಟಿ ಮಾಡಿದ ಸವದಿ ನಿನಗೆ ಹೋರಾಟ ಬೇಕೋ, ಅಭಿವೃದ್ಧಿ ಬೇಕೋ ಎಂದರು. ಅಭಿವೃದ್ಧಿ ಬೇಕು ಎಂದಾಗ ನನ್ನ ಜೊತೆ ಬಾ ಎಂದು ಬಿಜೆಪಿಗೆ ಕರೆದುಕೊಂಡು ಹೋದರು. ಕಾಕತಾಳೀಯ ಎಂಬಂತೆ ಇಂದು ಕಾಂಗ್ರೆಸ್ಗೆ ಬರಲು ಸವದಿ ಅವರೇ ಪ್ರಮುಖ ಕಾರಣ. ಕಾಂಗ್ರೆಸ್ನ ಹೆಚ್.ಜಿ.ರಾಮುಲು ನನಗೆ ರಾಜಕೀಯ ಗುರು,1978ರಲ್ಲಿ ತಾಲ್ಲೂಕು ಬೋರ್ಡ್ ಸದಸ್ಯರಾಗಲು ಬಿ-ಫಾರಂ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ ಮೆಚ್ಚಿ ಇಂದು ಪಕ್ಷ ಸೇರಿದ್ದೇನೆ. ನನ್ನೊಂದಿಗೆ ಅನೇಕರು ಪಕ್ಷ ಸೇರಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ರನ್ನು ಗೆಲ್ಲಿಸುವ ಸವಾಲನ್ನು ನಾವು ತೆಗೆದುಕೊಂಡಿದ್ದೇವೆ ಎಂದರು. +ನನಗೆ ವೈಯಕ್ತಿಕ ಲಾಭದ ಆಸೆ ಇಲ್ಲ, ಎರಡು ಜಿಲ್ಲೆಗಳ ಅಭಿವೃದ್ಧಿಗೆ ಸಹಕಾರ ನೀಡಿ. ತಾಲ್ಲೂಕು ಬೋರ್ಡ್ ಸದಸ್ಯತ್ವದಿಂದ, ನಾಲ್ಕು ಬಾರಿ ಶಾಸಕನಾಗಿ, ಸಂಸದನಾಗಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿದ್ದೇನೆ ಎಂದು ಹೇಳಿದರು.ಸಚಿವ ಶಿವರಾಜ ತಂಗಡಗಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಲಕ್ಷ್ಮಣ ಸವದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_177_9.txt b/eesanje/url_46_177_9.txt new file mode 100644 index 0000000000000000000000000000000000000000..54666e2f3f9dd016d0e102d936900503700a9cea --- /dev/null +++ b/eesanje/url_46_177_9.txt @@ -0,0 +1,10 @@ +ಬಿಜೆಪಿ ಶ್ರೀಮಂತರ ಪಕ್ಷ, ಬಡವರ ಬಗ್ಗೆ ಕಾಳಜಿ ಇಲ್ಲ : ರಾಹುಲ್ ಗಾಂಧಿ +ಮಂಡ್ಯ, ಏ.17- ಬಿಜೆಪಿ ಶ್ರೀಮಂತರ ಪರವಾಗಿ ಮಾತ್ರ ಯೋಚಿಸುತ್ತಿದ್ದು, ಬಡವರ ಬದುಕಿನ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ಭರವಸೆ ನೀಡಿದ್ದಾರೆ. +ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ 2 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಬಿಜೆಪಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆದಿದ್ದರು. ದೇಶದ ಸಂಪತ್ತು ಕೆಲವೇ ಕೆಲವು ವ್ಯಕ್ತಿಗಳ ಬಳಿಕ ಕ್ರೋಢಿಕರಣಗೊಳ್ಳುತ್ತಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳು ಹಣ ಇರುವವರಿಗೆ ಪೂರಕವಾಗಿವೆ. ಜನ ಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದಾರೆ. ಅದರ ಮೇಲೆ ಅವೈಜ್ಞಾನಿಕವಾದ ತೆರಿಗೆ ಪದ್ಧತಿಯಿಂದ ಮತ್ತಷ್ಟು ಭಾರ ಹೊರಿಸಲಾಗಿದೆ ಎಂದು ಟೀಕಿಸಿದರು. +ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅವೈಜ್ಞಾನಿಕವಾದ ಜಿಎಸ್‍ಟಿ ಪದ್ಧತಿಯನ್ನು ಪರಿಷ್ಕರಣೆ ಮಾಡಲಾಗುವುದು, ಆಹಾರ ಪದಾರ್ಥಗಳ ಮೇಲೆ ತೆರಿಗೆ ಹೊರೆಯನ್ನು ತೆಗೆದು ಹಾಕಲಾಗುವುದು, ಸ್ವಾಮೀನಾಥನ್ ವರದಿ ಅನುಸಾರ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯೊಂದಿಗೆ, ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದರು. +ಪ್ರತಿಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಆರ್ಥಿಕ ನೆರವಿನ ಮಹಿಳಾ ನ್ಯಾಯ, ಪ್ರತಿಯೊಬ್ಬ ವಿದ್ಯಾವಂತ ಯುವಕನಿಧಿಗೆ ಮೊದಲ ಉದ್ಯೋಗದ ಗ್ಯಾರಂಟಿಯೊಂದಿಗೆ ಒಂದು ಲಕ್ಷ ರೂಪಾಯಿ ವೇತನ, ಜಾತಿ ಜನಗಣತಿಯ ಮೂಲಕ ಸಾಮಾಜಿಕ ನ್ಯಾಯ ಜಾರಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ದಿನಗೂಲಿಯನ್ನು 400 ರೂಪಾಯಿಗೆ ಏರಿಕೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತರಲಿದೆ ಎಂದು ವಿವರಿಸಿದರು. +ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನಾ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿದೆ. ಜನರನ್ನು ದಿಕ್ಕು ತಪ್ಪಿಸುವ ಭರವಸೆಗಳನ್ನು ನೀಡುವುದಿಲ್ಲ, ಭರವಸೆ ನೀಡಿದ ಮೇಲೆ ಅದನ್ನು ತಪ್ಪದೆ ಈಡೇರಿಸುತ್ತೇವೆ ಎಂದು ಹೇಳಿದರು. +ಆದರೆ ಬಿಜೆಪಿ ನುಡಿದಂತೆ ನಡೆಯುವುದಿಲ್ಲ, ಚುನಾವಣೆ ಕಾಲದಲ್ಲಿ ಜನರನ್ನು ಭಾವನಾತ್ಮಕವಾಗಿ ದಿಕ್ಕು ತಪ್ಪಿಸಿ ಮತ ಗಿಟ್ಟಿಸುವ ಪ್ರಯತ್ನ ನಡೆಸುತ್ತದೆ. ನಂತರ ಅಧಿಕಾರಾವಧಿಯ ಉದ್ದಕ್ಕೂ ಒಂದಲ್ಲ ಒಂದು ಸಮಸ್ಯೆಗಳಿಂದ ಜನ ನರಳುವಂತಾಗುತ್ತದೆ. ಈ ಹಿಂದೆ ನೋಟು ಅಮಾನ್ಯ, ಜನರಿಗೆ ಹೊರೆಯಾಗುವ ತೆರಿಗೆ ಪದ್ಧತಿ ಸೇರಿದಂತೆ ಅನೇಕ ಆರ್ಥಿಕ ಸಮಸ್ಯೆಗಳನ್ನು ಮೋದಿ ಸರ್ಕಾರ ಸೃಷ್ಟಿಸಿದೆ ಎಂದು ಟೀಕಿಸಿದರು. +ಚುನಾವಣಾ ಬಾಂಡ್ ವಿಚಾರದಲ್ಲಿ ಈವರೆಗೂ ಪ್ರಧಾನಿ ಮೌನವಾಗಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐಗಳನ್ನು ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‍ಗಳನ್ನು ಮಾರಾಟ ಮಾಡಲಾಗಿದೆ. ಗುತ್ತಿಗೆ ನೀಡಿದ್ದಕ್ಕೆ ಪ್ರತಿಯಾಗಿ ಬಾಂಡ್‍ಗಳನ್ನು ಖರೀದಿಸುವಂತೆ ಮಾಡಲಾಗಿದೆ. ಇದು ಸ್ಪಷ್ಟವಾದ ಭ್ರಷ್ಟಚಾರ ಪ್ರಕರಣವಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದರು. +ಬಿಜೆಪಿಯ ಅನೇಕ ಸಂಸದರು, ಪ್ರಮುಖರು ಸಂವಿಧಾನ ಬದಲಾವಣೆಯ ಕುರಿತು ಹೇಳಿಕೆ ನೀಡಿದ್ದಾರೆ. ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಅಪಾಯವಿದೆ. ಈಗಾಗಲೇ ಪ್ರಜಾಪ್ರಭುತ್ವವನ್ನು ಧಿಕ್ಕರಿಸಿ ಮೋದಿ ಸರ್ಕಾರ ಸಾಕಷ್ಟು ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. +ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಉದಯ, ಗಣಿಗ ರವಿ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_178_1.txt b/eesanje/url_46_178_1.txt new file mode 100644 index 0000000000000000000000000000000000000000..33dc211b97a4c99816ec2f020130ee52441dcedf --- /dev/null +++ b/eesanje/url_46_178_1.txt @@ -0,0 +1,4 @@ +ಹುಬ್ಬಳ್ಳಿ : ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2 ಕೋಟಿ ಹಣ ಜಪ್ತಿ +ಹುಬ್ಬಳ್ಳಿ, ಏ.16-ಐಟಿ ಅಧಿಕಾರಿಗಳು ಮತ್ತು ಪೊಲೀಸರ ಜಂಟಿ ಕಾರ್ಯಾಚರಣೆ ಹಿನ್ನೆಲೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದ ಮನೆಯಲ್ಲಿ ಬರೋಬ್ಬರಿ 2 ಕೋಟಿ ರೂ. ಗೂ ಹೆಚ್ಚು ನಗದು ಜಪ್ತಿ ಮಾಡಲಾಗಿದೆ. ನಿಂಗಪ್ಪ ಜಟಾದ್ ಎಂಬುವವರ ಮನೆಯಲ್ಲಿ ಮತದಾರರಿಗೆ ಹಂಚಲು 2 ಕೋಟಿ ರೂ. ಹೆಚ್ಚು ನಗದು ಸಂಗ್ರಹಿಸಲಾಗಿತ್ತು ಎನ್ನಲಾಗಿದ್ದು, ಈ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. +ಮತ್ತೊಂದು ಪ್ರಕರಣದಲ್ಲಿ ಚುನಾವಣಾ ನೀತಿ ಸಂಹಿತೆ ಹಾಗೂ ಅಬಕಾರಿ ನಿಯಮ ಉಲ್ಲಂಸಿದ ಹಿನ್ನೆಲೆಯಲ್ಲಿ ಲಾರಿಯಲ್ಲಿದ್ದ 16 ಲಕ್ಷ ರೂ. ಮೌಲ್ಯದ 9420 ಲೀಟರ್ ಬಿಯರ್ ಜಪ್ತಿ ಮಾಡಲಾಗಿದೆ. ಕೆಎಸ್ಬಿಸಿಎಲ್ ಡೀಪೊದಲ್ಲಿ ಲಾರಿಯೊಂದರಲ್ಲಿ ಇದ್ದ 650/500 ಎಂಎಲ್ನ 1100 ಬಿಯರ್ ಬಾಕ್ಸ್ಗಳನ್ನು ವಶಕ್ಕೆ ಪಡೆಯಲಾಗಿದೆ. +ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಖಚಿತ ಮಾಹಿತಿ ಮೇರೆಗೆ ಅಬಕಾರಿ ಇಲಾಖೆ ದಾಳಿ ಮಾಡಿದ್ದು, ಮದ್ಯ ಮತ್ತು ಮದ್ಯಸಾರ ಸಾಗಿಸುವ ವಾಹನಗಳಿಗೆ ಜಿ.ಪಿ.ಎಸ್ ಉಪಕರಣ ಅಳವಡಿಸದೇ ಸುತ್ತೋಲೆ ಉಲ್ಲಂಸಿರುವ ಕಾರಣ ವಾಹನ ಸಮೇತ ಮದ್ಯ ವಶಕ್ಕೆ ಪಡೆಯಲಾಗಿದೆ. \ No newline at end of file diff --git a/eesanje/url_46_178_10.txt b/eesanje/url_46_178_10.txt new file mode 100644 index 0000000000000000000000000000000000000000..7e5c70ca71d0d4c3c694dce6dd01bcfb97f5af1d --- /dev/null +++ b/eesanje/url_46_178_10.txt @@ -0,0 +1,15 @@ +ಬರ ಪರಿಹಾರ ಬಿಡುಗಡೆಗೆ ಚುನಾವಣಾ ಆಯೋಗದ ಅನುಮತಿ ಕೇಳಲಾಗಿದೆ : ಜೈಶಂಕರ್ +ಬೆಂಗಳೂರು,ಏ.15-ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ() ಅಡಿ ಕೇಂದ್ರದಿಂದ ಬರಪರಿಹಾರ ಬಿಡುಗಡೆ ಮಾಡುವ ಬಗ್ಗೆ ಚುನಾವಣಾ ಆಯೋಗದ ಅನುಮತಿ ಕೇಳಲಾಗಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಹೇಳಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಎನ್ಡಿಆರ್ಎಫ್ನಡಿ ಪರಿಹಾರ ಬಿಡುಗಡೆ ಮಾಡಲು ಅದರದ್ದೇ ಆದ ನೀತಿನಿಯಮಗಳಿವೆ. ನಾವು ಚುನಾವಣಾ ಆಯೋಗಕ್ಕೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದೇವೆ. ಚೆಂಡು ಆಯೋಗದ ಅಂಗಳದಲ್ಲಿದೆ ಎಂದರು. ಕರ್ನಾಟಕ ಮಾತ್ರವಲ್ಲದೇ ಅನೇಕ ರಾಜ್ಯಗಳು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. +ಯಾವ ರಾಜ್ಯಗಳಿಗೂ ನಾವು ತಾರತಮ್ಯ ಎಸಗದೆ ಕಾನೂನಿನಡಿ ಎಷ್ಟು ಬಿಡುಗಡೆ ಮಾಡಬೇಕೋ ಅಷ್ಟು ಹಣವನ್ನು ಬಿಡುಗಡೆ ಮಾಡಿದ್ದೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಕಳೆದ ಲೋಕಸಭಾ ಚುನಾವಣೆಯಲ್ಲೇ ಬಿಜೆಪಿ ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದೆ. +ಈ ಬಾರಿ ದೇಶದ ಎಲ್ಲಿಯೂ ಆಡಳಿತ ವಿರೋಧಿ ಅಲೆ ಕಾಣುತ್ತಿಲ್ಲ. ಮೋದಿಯವರ ಆಡಳಿತಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹೀಗಾಗಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. +300 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಈ ಬಾರಿ 400 ಸ್ಥಾನಗಳನ್ನು ಗೆಲ್ಲುವುದು ದುಸ್ಸಾಹಸದ ಮಾತಲ್ಲ. ಏಕೆಂದರೆ ಆಡಳಿತ ಪಕ್ಷಕ್ಕೆ ವಿರೋಧಿ ಅಲೆ ಇದ್ದರೆ ನಮಗೆ ಹಿನ್ನಡೆಯಾಗಬಹುದು ಎನ್ನಲಾಗುತ್ತಿತ್ತು. ಇಡೀ ಭಾರತೀಯರೇ ಮೋದಿ ನಾಯಕತ್ವದಲ್ಲಿ ನಂಬಿಕೆ ಇಟ್ಟಿದ್ದು, ಮತ್ತೆ ಅಧಿಕಾರ ಕೊಡಲು ಸಿದ್ದರಾಗಿದ್ದಾರೆ ಎಂದರು. +ನಾವೆಲ್ಲರೂ ಮತ್ತೊಮ್ಮೆ ಮೋದಿಯವರ ಕೈ ಬಲಪಡಿಸಬೇಕಾದ ಅಗತ್ಯವಿದೆ. ಬಿಜೆಪಿಯ ಸಂಕಲ್ಪ ಪತ್ರ ಬಿಡುಗಡೆಯಾಗಿದೆ. ನಮ್ಮ ಹತ್ತು ವರ್ಷಗಳ ಸಾಧನೆ ಜನರ ಮುಂದಿದೆ. ಮುಂದಿನ ಐದು ವರ್ಷಗಳ ಭರವಸೆಗಳು ಇದರಲ್ಲಿವೆ. ವಿಕಸಿತ ಭಾರತ ಬಗ್ಗೆ ಮೋದಿ ಗ್ಯಾರಂಟಿ ಬಗ್ಗೆ ಹೇಳಿದ್ದೇವೆ ಎಂದರು. ಹತ್ತು ವರ್ಷಗಳ ಹಿಂದೆ ಹದಗೆಟ್ಟ ಆರ್ಥಿಕತೆ ದೇಶದಲ್ಲಿ ಇತ್ತು. + , .://./ +ಇವತ್ತು ದೇಶದ ಆರ್ಥಿಕತೆ ಸೂಕ್ತವಾಗಿದೆ. ಎಲ್ಲ ವರ್ಗಗಳ ವಿಕಾಸಕ್ಕೆ ನಮ್ಮ ಸರ್ಕಾರ ಒತ್ತು ಕೊಟ್ಟಿದೆ. ಕಳೆದ ಹತ್ತು ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡರು. ನಮ್ಮ ದೇಶದಲ್ಲೇ ಮೊದಲು ಕೊರೋನಾ ಲಸಿಕೆ ಬಂತು. ಕೋವಿಡ್ ನಂತರ ಆರ್ಥಿಕತೆ ಚೇತರಿಕೆಗೆ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ. +ವರ್ಷಕ್ಕೆ ಸರಾಸರಿ 08 ವಿಮಾನ ನಿಲ್ದಾಣಗಳ ನಿರ್ಮಾಣ, ಮೂಲಭೂತ ಸೌಕರ್ಯಗಳ ವೃದ್ಧಿ, ಭಯೋತ್ಪಾದನೆ ಚಟುವಟಿಕೆಗಳ ನಿಗ್ರಹಕ್ಕೆ ಕಠಿಣ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ 80 ಕೋಟಿ ಜನ ಫಲಾನುಭವಿಗಳಾಗಿದ್ದಾರೆ. ಈ ಯೋಜನೆ ಮುಂದಿನ ಐದು ವರ್ಷವೂ ಮುಂದುವರೆಯಲಿದೆ. +ಆವಾಸ್ ಯೋಜನೆಯಲ್ಲಿ ಮುಂದಿನ ಐದು ವರ್ಷ ಮೂರು ಕೋಟಿ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಹಿರಿಯರಿಗೆ ಆಯುಷ್ಮಾನ್ ಭಾರತ್ ವಿಸ್ತರಣೆ, ವಿಪುಲ ಉದ್ಯೋಗಾವಕಾಶ, ಮುದ್ರಾ ಯೋಜನೆಯನ್ನು ಸ್ಟಾರ್ಟಪ್ಗಳಿಗೂ ವಿಸ್ತರಣೆ, ಸುರಕ್ಷಿತ್ ಭಾರತ, ಭಯೋತ್ಪಾದನೆಗೆ ತಡೆ, ಗಡಿಗಳ ರಕ್ಷಣೆಗೆ ಬದ್ದವಾಗಿದ್ದು, ಮುಂದಿನ ವರ್ಷಗಳಲ್ಲಿ ಭಾರತವನ್ನು ಮೂರನೇ ಆರ್ಥಿಕ ದೇಶವಾಗಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು. +ನಮ್ಮ ಮುಂದೆ ಸೈಬರ್ ಅಪರಾಧಗಳ ಸವಾಲಿದೆ, ದಿಟ್ಟವಾಗಿ ಎದುರಿಸುತ್ತಿದ್ದೇವೆ. ಬೆಂಗಳೂರಿಗೆ ಸಬರ್ಬನ್ ರೈಲು ಯೋಜನೆ, ಏರ್ಪೊೀರ್ಟ್ ಎರಡನೇ ಟರ್ಮಿನಲ್ ನಿರ್ಮಾಣ, ಐಟಿಬಿಟಿ ಕಂಪೆನಿಗಳಿಗೆ ಬಲ ತುಂಬುವ ಕೆಲಸವಾಗಿದೆ ಎಂದು ಹೇಳಿದರು. ಹೆಚ್ಎಎಲ್ ಮತ್ತು ಅದರ ಷೇರುಗಳು ಹತ್ತು ವರ್ಷದ ಹಿಂದೆ ಅಪಾಯದಲ್ಲಿದ್ದವು. ಈಗ ಅದರ ಷೇರು ಬೆಲೆ 3 ಸಾವಿರ ರೂ. ದಾಟಿದೆ. ಹೆಚ್ಎಎಲ್ ಹಲವು ಮೈಲುಗಲ್ಲು ಸಾಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ಭಾರತೀಯರಿದ್ದ ಹಡಗು ಇರಾನ್ ವಶದಲ್ಲಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದೊಳಗಷ್ಟೇ ಅಲ್ಲ ಹೊರದೇಶದಲ್ಲೂ ಮೋದಿಯವರೇ ಗ್ಯಾರಂಟಿ. ಇರಾನ್ ಸರ್ಕಾರದ ಜತೆ ನಮ್ಮ ಭಾರತೀಯರ ಬಿಡುಗಡೆ ಬಗ್ಗೆ ಮಾತಾಡಿದ್ದೇನೆ. ನಿನ್ನೆ ಈ ನಿಟ್ಟಿನಲ್ಲಿ ಸಕಾರಾತ್ಮಕ ಮಾತುಕತೆ ನಡೆದಿದೆ. ನಮ್ಮ ವಿದೇಶಾಂಗ ಇಲಾಖೆ ಅಧಿಕಾರಿಗಳು ಇರಾನ್ ವಶದಲ್ಲಿರುವ ಭಾರತೀಯರ ಭೇಟಿ ಮಾಡಿದ್ದಾರೆ. ಇದು ನಮಗೆ ಸಮಾಧಾನ ತಂದಿರುವ ವಿಚಾರ. ಆದಷ್ಟು ಬೇಗ ಇರಾನ್ ಭಾರತೀಯರನ್ನ ಬಿಡುಗಡೆ ಮಾಡುವ ಭರವಸೆ ಇದೆ ಎಂದರು. +ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಅನುಮಾನಾಸ್ಪದ ಸರಣಿ ಸಾವು ಪ್ರಕರಣ ಕುರಿತು ಮಾತನಾಡಿದ ಅವರು, ಇದು ನಮಗೆ ಹೆಚ್ಚಿನ ಆತಂಕ ಹುಟ್ಟಿಸಿದೆ, ಆ ವಿದ್ಯಾರ್ಥಿಗಳ ಕುಟುಂಬಳಿಗೆ ದುರಂತ ಈ ರೂಪದಲ್ಲಿ ಎದುರಾಗಿದೆ. ಮೃತರ ಬಗ್ಗೆ ನಾನು ತೀವ್ರ ಸಂತಾಪ ಸೂಚಿಸುತ್ತೇನೆ, ಅವರ ಕುಟುಂಬಗಳಿಗೂ ಸಾಂತ್ವನ ಹೇಳಲು ಬಯಸುತ್ತೇನೆ ಎಂದರು. +ಹಲವು ಕಾರಣಗಳಿಗೆ ಭಾರತೀಯ ವಿದ್ಯಾರ್ಥಿಗಳು ಅಮೆರಿಕದಲ್ಲಿ ಸಾವನ್ನಪ್ಪುತ್ತಿದ್ದಾರೆ. ಹೊಸ ವಿದ್ಯಾರ್ಥಿಗಳು ಅಲ್ಲಿಗೆ ಹೋದಾಗ ರಾಯಭಾರ ಕಚೇರಿ ಅಧಿಕಾರಿಗಳಿಗೆ ನಿಗಾ ಇಡಲು ಸೂಚಿಸಲಾಗಿದೆ. ಅಮೆರಿಕಾದಲ್ಲಿ ವಿದ್ಯಾರ್ಥಿಗಳ ಜೀವ ರಕ್ಷಣೆ, ಭದ್ರತೆ ನಮ್ಮ ಆದ್ಯತೆಗಳಲ್ಲೊಂದಾಗಿದೆ. ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮತ್ತು ಕೆಲಸ ಮಾಡುತ್ತಿರುವವರ ಮಾಹಿತಿ ಕಲೆ ಹಾಕುತ್ತಿದ್ದೇವೆ. ರಕ್ಷಣೆ ಇಲ್ಲದ ಜಾಗಕ್ಕೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದೇವೆ. ಜೊತೆಗೆ ಇಲ್ಲಿಂದಲೂ ಎಲ್ಲ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದರು. \ No newline at end of file diff --git a/eesanje/url_46_178_11.txt b/eesanje/url_46_178_11.txt new file mode 100644 index 0000000000000000000000000000000000000000..78af1bf42eb94060b693b64bf86bb25fa16f2a8a --- /dev/null +++ b/eesanje/url_46_178_11.txt @@ -0,0 +1,7 @@ +ಬೆಂಗಳೂರಿನಲ್ಲೇ ತಂಗಿದ್ದ ಮುಸಾವೀರ್ ಮತ್ತು ಅಬ್ದುಲ್ ಮತಿನ್ +ಬೆಂಗಳೂರು, ಏ.15-ನಗರದ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಪ್ರಮುಖ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತಿನ್ ತಾಹ ಈ ಹಿಂದೆ ಬೆಂಗಳೂರು ನಗರದಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. ಈ ಇಬ್ಬರು ಭಯೋತ್ಪಾದಕ ಸಂಘಟನೆಯಾದ ಐಸಿಎಸ್ ಜೊತೆ ಸಂಪರ್ಕ ಹೊಂದಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. +ಇವರು ಐಸಿಎಸ್ ಜೊತೆ ನೇರ ನಂಟು ಹೊಂದಿದ್ದ ಮೆಹಬೂಬ್ ಪಾಷಾನ ಜೊತೆ ಸತತ ಸಂಪರ್ಕದಲ್ಲಿದ್ದರು. ಮೆಹಬೂಬ್ ಪಾಷಾ 2020 ರಲ್ಲಿ ಬೆಂಗಳೂರಿಗೆ ಬಂದು ತಮ್ಮ ಹೆಸರನ್ನು ಬದಲಿಸಿಕೊಂಡು ಸುದ್ದಗುಂಟೆ ಪಾಳ್ಯದ ಸೂರ್ಯಸಿಟಿ ರೆಸಿಡೆನ್ಸಿಯ 2ನೇ ಮಹಡಿಯಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದುದ್ದು ಎನ್ಐಎ ವಿಚಾರಣೆಯಿಂದ ಗೊತ್ತಾಗಿದೆ. +ಒಂದು ವರ್ಷಕ್ಕೂ ಹೆಚ್ಚು ಕಾಲ ನಗರದಲ್ಲಿ ವಾಸವಾಗಿದ್ದುಕೊಂಡು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದ ಆರೋಪಿ ಮೆಹಬೂಬ್ ಪಾಷಾ ಸಾಮಾಜಿಕ ಕಾರ್ಯ ಮಾಡುವ ನಿಟ್ಟಿನಲ್ಲಿ ನಗರದಲ್ಲಿ ಅಲ್ ಹಿಂದ್ ಐಸಿಸ್ ಹೆಸರಿನಲ್ಲಿ ಎನ್ಜಿಒ ಸ್ಥಾಪನೆ ಮಾಡಲು ಮುಂದಾಗಿದ್ದಲ್ಲದೇ ಈ ಸಂಸ್ಥೆ ಮೂಲಕ ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. +ಗುರುಪ್ಪನಪಾಳ್ಯದ ಮನೆಯೊಂದರಲ್ಲಿ ಶಂಕಿತ ಉ್ರಗರ ಜೊತೆ ಆರೋಪಿ ಮೆಹಬೂಬ್ ಪಾಷಾ ಸಭೆಗಳನ್ನು ನಡೆಸುತ್ತಿದ್ದಾಗ ಈ ಇಬ್ಬರು ಉಗ್ರರು ಭಾಗಿಯಾಗಿದ್ದರು ಎಂಬುವುದು ತಿಳಿದು ಬಂದಿದೆ. ಅಂದು ಸಿಸಿಬಿ ಪೊಲೀಸರು ಮತ್ತು ಗುಪ್ತ ದಳದ ಅಧಿಕಾರಿಗಳು ಮೆಹಬೂಬ್ ಪಾಷಾ ಮನೆ ಮೇಳೆ ದಾಳಿ ಮಾಡಿದಾಗ ಪಾಷ ಸೇರಿದಂತೆ ಹಲವರನ್ನು ಬಂಧಿಸಿದ್ದರು. +ಆ ಸಂದರ್ಭದಲ್ಲಿ ಈ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದರು. ಸಭೆಯಿಂದ ಪ್ರೇರೆಪಣೆಗೊಂಡಿದ್ದ ಈ ಇಬ್ಬರು ಉಗ್ರರು ಶಿವಮೊಗ್ಗದಲ್ಲಿ ದುವಾ ಎಂಬ ಹೆಸರಿನಲ್ಲಿ ಎನ್ಜಿಒ ಸಂಸ್ಥೆ ತೆರೆದು ಸಾಮಾಜಿಕ ಸೇವೆ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಒಟ್ಟುಗೂಡಿಸಿ ಜಿಹಾದಿ ಬೋಧಿಸುತ್ತಿದ್ದರು. +2021ರಲ್ಲಿ ತಲೆ ಮರೆಸಿಕೊಂಡಿದ್ದ ಈ ಇಬ್ಬರು ಉಗ್ರರು ಮಾ.1ರಂದು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿ ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಅಡಗಿ ಕುಳಿತಿದ್ದರು. ಎನ್ಐಎ ಅಧಿಕಾರಿಗಳಿಗೆ ಇದೀಗ ಈ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದು ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. \ No newline at end of file diff --git a/eesanje/url_46_178_12.txt b/eesanje/url_46_178_12.txt new file mode 100644 index 0000000000000000000000000000000000000000..0624943ea0448da0ae27cb7bfb61b3d96821a6f3 --- /dev/null +++ b/eesanje/url_46_178_12.txt @@ -0,0 +1,11 @@ +2ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ, ಶಕ್ತಿ ಪ್ರದರ್ಶನ +ಬೆಂಗಳೂರು,ಏ.15-ಮೊದಲ ಹಂತದ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಿಕೊಳ್ಳಲು ವಿವಿಧ ರಾಜಕೀಯ ಪಕ್ಷಗಳು ಬೆವರು ಹರಿಸುತ್ತಿರುವ ಬೆನ್ನಲ್ಲೇ 2ನೇ ಹಂತದ ಚುನಾವಣೆಗೆ ಸೋಮವಾರ ಹಲವು ದಿಗ್ಗಜರು ನಾಮಪತ್ರ ಸಲ್ಲಿಸಿದ್ದಾರೆ. +ಮೇ 7ರಂದು ನಡೆಯಲಿರುವ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಅಭ್ಯರ್ಥಿಗಳು ಶಕ್ತಿ ಪ್ರದರ್ಶಿಸುವ ಮೂಲಕ ಉಮೇದುವಾರಿಕೆ ಮಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ(ಹಾವೇರಿ), ಜಗದೀಶ್ ಶೆಟ್ಟರ್(ಬೆಳಗಾವಿ), ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ(ಧಾರವಾಡ), ಗೀತಾ ಶಿವರಾಜ್ಕುಮಾರ್(ಶಿವಮೊಗ್ಗ), ಮೃಣಾಲ್ ಹೆಬ್ಬಾಳ್ಕರ್(ಬೆಳಗಾವಿ) ಮತ್ತಿತರ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸಾವಿರಾರು ಕಾರ್ಯಕರ್ತರ ಜೊತೆಗೂಡಿ ಮೆರವಣಿಗೆ ಮೂಲಕ ಆಗಮಿಸಿ ಅನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು. +ಚುನಾವಣೆಗೂ ಮುನ್ನವೇ ಭಾರೀ ಸದ್ದು ಮಾಡಿರುವ ಪ್ರತಿಷ್ಠಿತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚಿತ್ರನಟ ಶಿವರಾಜ್ಕುಮಾರ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ಕುಮಾರ್ 2ನೇ ಬಾರಿಗೆ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಶಿವರಾಜ್ಕುಮಾರ್, ಶಾಸಕರಾದ ಗೋಪಾಲಕೃಷ್ಣ ಗೌಡರು, ಅಪ್ಪಾಜಿಗೌಡ ಸೇರಿದಂತೆ ಹಲವು ಪ್ರಮುಖರು ಹಾಗೂ ಭಾರೀ ಸಂಖ್ಯೆಯ ಕಾರ್ಯಕರ್ತರ ಜೊತೆಗೂಡಿ ತೆರೆದ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ. +ಬಿಜೆಪಿಗೆ ಸವ್ವಾಸೇರು ಎನ್ನುವಂತೆ ಶಕ್ತಿ ಪ್ರದರ್ಶಿಸಿದ ಕಾಂಗ್ರೆಸ್ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಿತ್ತು. ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತೊಮ್ಮೆ ಸಾಂಕೇತಿಕವಾಗಿ ಉಮೇದುವಾರಿಕೆ ಮಾಡಿದರು. +ಇನ್ನು ಶಿವಮೊಗ್ಗದಂತೆ ದಿಂಗಾಲೇಶ್ವರ ಸ್ವಾಮಿ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದಿರುವ ಧಾರವಾಡದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಾಮಪತ್ರ ಸಲ್ಲಿಸಿದರು. ಜೋಷಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಅರವಿಂದ್ ಬೆಲ್ಲದ್ ಸೇರಿದಂತೆ ಘಟಾನುಘಟಿ ನಾಯಕರು ಆಗಮಿಸಿದ್ದರು. +ಕಾಂಗ್ರೆಸ್ ಹಾಗೂ ದಿಂಗಾಲೇಶ್ವರ ಸ್ವಾಮೀಜಿಗೆ ತಿರುಗೇಟು ನೀಡುವಂತೆ ಬಿಜೆಪಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿತ್ತು. ನಾಮಪತ್ರ ಸಲ್ಲಿಕೆಗೂ ಮುನ್ನ ಜೋಷಿ ಅವರು ಧಾರವಾಡದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ನಾಮಪತ್ರ ಸಲ್ಲಿಕೆ ಮಾಡಿದರು. ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ಬೆಳಗಾವಿಯಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ನಾಮಪತ್ರ ಸಲ್ಲಿಸುವ ವೇಳೆ ಭಾಗಿಯಾಗಿದ್ದರು. ಬೆಳಗಾವಿಯ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಅಪಾರ ಬೆಂಬಲಿಗರ ನಡುವೆ ಇಂದು ಜಿಲ್ಲಾಕಾರಿಗೆ ನಾಮಪತ್ರ ಸಲ್ಲಿಸಿದರು. ಸಂಸದೆ ಮಂಗಲಾ ಅಂಗಡಿ, ಶಾಸಕರಾದ ರಮೇಶ ಜಾರಕಿಹೊಳಿ, ಹನಮಂತ ನಿರಾಣಿ, ಮಾಜಿ ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು. +ಬೆಳಗಾವಿ ಜಿಲ್ಲೆಯ ಮತ್ತೊಂದು ಕ್ಷೇತ್ರವಾದ ಚಿಕ್ಕೋಡಿಯಲ್ಲಿ 2ನೇ ಬಾರಿಗೆ ಅದೃಷ್ಟ ಪರೀಕ್ಷಿಸಿ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ್ ಜೊಲ್ಲೆ ಸೀಮಿತ ಬೆಂಬಲಿಗರೊಂದಿಗೆ ಆಗಮಿಸಿ ಉಮೇದುವಾರಿಕೆ ಮಾಡಿದ್ದಾರೆ. ಹಾವೇರಿಯಿಂದ ಮೊದಲ ಬಾರಿಗೆ ಅದೃಷ್ಟ ಪಣಕ್ಕಿಟ್ಟಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಮೇದುವಾರಿಕೆ ಮಾಡಿದ್ದಾರೆ. +ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವರಾದ ಬಿ.ಸಿ.ಪಾಟೀಲ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು. ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಉಮೇದುವಾರಿಕೆ ಮಾಡಿದ್ದಾರೆ. ಸೋಮವಾರ ಕೆಲವು ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಒಂದೆರಡು ದಿನದಲ್ಲಿ ಭಾರೀ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮತ್ತೊಂದು ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಗೊತ್ತಾಗಲಿದೆ. +2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕಡೆಯ ದಿನವಾಗಿದ್ದು, ಶುಭ ಮುಹೂರ್ತ, ಶುಭ ಗಳಿಗೆ ನೋಡಿಕೊಂಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬಿಜಾಪುರ, ಬೀದರ್, ಕಲಬುರಗಿ ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ನಡೆಯಲಿದೆ. \ No newline at end of file diff --git a/eesanje/url_46_178_2.txt b/eesanje/url_46_178_2.txt new file mode 100644 index 0000000000000000000000000000000000000000..587d92b18dcc2f90a155933b0d4f75e7a1424882 --- /dev/null +++ b/eesanje/url_46_178_2.txt @@ -0,0 +1,6 @@ +ಐಟಿ-ಬಿಟಿ ಕಂಪನಿಗಳನ್ನು ಟಾರ್ಗೆಟ್ ಮಾಡಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಕಿರಾತಕರು..! +ಬೆಂಗಳೂರು, ಏ.16-ಐಟಿ-ಬಿಟಿ ಹಬ್ ಎಂದೇ ಕರೆಯಲ್ಪಡುವ ವೈಟ್ಫೀಲ್ಡ್ ನಲ್ಲಿರುವ ಐಟಿ ಕಂಪೆನಿ ಗಳನ್ನು ಗುರಿಯಾಗಿಸಿಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು ತದನಂತರದಲ್ಲಿ ಹೈ ಸೆಕ್ಯುರಿಟಿ ಗಮನಿಸಿ ತಮ್ಮ ಯೋಜನೆ ಬದಲಾಯಿಸಿ ರಾಮಮಂದಿರ ಉದ್ಘಾಟನೆ ವೇಳೆ ಸಂಭ್ರಮಾಚರಣೆ ನಡೆಸಿದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಲಾಯಿತ್ತೆಂದು ಎನ್ಐಎ ತನಿಖಾ ಅಧಿಕಾಧಿರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. +ರಾಮೇಶ್ವರಂ ಕೆಫೆಯಲ್ಲೇ ಏಕೆ ಸ್ಫೋಟಿಸಲಾಯಿತ್ತೆಂದು ತನಿಖಾಕಾಧಿರಿಗಳು ಬಂತ ಇಬ್ಬರು ಉಗ್ರರನ್ನು ವಿಚಾರಣೆಗೊಳಪಡಿಸಿದಾಗ, ಮೊದಲು ವೈಟ್ಫೀಲ್ಡ್ ನಲ್ಲಿ ದೊಡ್ಡ ದೊಡ್ಡ ಐಟಿ-ಬಿಟಿ ಕಂಪೆನಿಗಳಿವೆ. ಒಂದೊಂದು ಕಂಪೆನಿಗಳಲ್ಲಿ ಸಾವಿರಾರು ಮಂದಿ ಸಾಫ್ಟ್ವೇರ್ ಎಂಜಿನಿಯರ್ಗಳು ಕೆಲಸ ಮಾಡುತ್ತಾರೆ. ಈ ಕಂಪೆನಿಗಳಲ್ಲಿ ಬಾಂಬ್ ಸ್ಫೋಸೋಟಿಸಿದರೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆಂದು ಆ ಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದೆವು. +ಆದರೆ ಆ ಪ್ರದೇಶದಲ್ಲಿ ಹೈಸೆಕ್ಯುರಿಟಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮೆರಾಗಳು ಕಣ್ಗಾವಲಿದ್ದವು. ಮತ್ತು ಐಟಿ ಕಂಪೆನಿಯೊಳಗೆ ಹೋಗಲು ಡಿಟೆಕ್ಟರ್ ನಿಂದ ತಪಾಸಣೆ ಮಾಡಲಾಗುತ್ತದೆ. ಹಾಗಾಗಿ ತಾವು ಎಲ್ಲಿ ಸಿಕ್ಕಿಕೊಳ್ಳುತ್ತೇವೆಂಬ ಭಯದಲ್ಲಿ ಐಟಿ ಕಂಪೆನಿ ಸ್ಫೋಟಿಸುವ ಸಂಚನ್ನು ಕೈಬಿಟ್ಟೆವು. +ತದನಂತರದಲ್ಲಿ ವೈಟ್ಫೀಲ್ಡ್ ಪ್ರದೇಶದಲ್ಲೇ ಓಡಾಡಿಕೊಂಡಿದ್ದಾಗ ಈ ಪ್ರದೇಶದಲ್ಲಿ ಬಾಂಬ್ ಸ್ಫೋಟಿಸುವುದು ಕಷ್ಟ ಎಂಬುವುದು ಗೊತ್ತಾಯಿತು. ಆದರೂ ಯಾವುದಾದರೂ ಒಂದು ಸ್ಥಳದಲ್ಲಿ ಸ್ಫೋಟಿಸಬೇಕೆಂದು ಯೋಚಿಸುತ್ತಿದ್ದಾಗ ರಾಮೇಶ್ವರಂ ಕೆಫೆ ಕಂಡು ಬಂತು.ಈ ರಾಮೇಶ್ವರಂ ಕೆಫೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸುತ್ತಮುತ್ತಲಿನ ಐಟಿ-ಬಿಟಿ ಕಂಪೆನಿಗಳ ಉದ್ಯೋಗಗಳೇ ಬರುವುದು ಗಮನಿಸಿದೆವು. ಅಲ್ಲದೆ, ರಾಮಮಂದಿರ ಉದ್ಘಾಟನೆ ಸಮಯದಲ್ಲಿ ಕೆಫೆ ಮುಂಭಾಗ ಅದ್ಧೂರಿ ಸಂಭ್ರಮಾಚರಣೆ ನಡೆದಿತ್ತು. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. +ಈ ರಾಮೇಶ್ವರಂ ಕೆಫೆಯೊಳಗೆ ಹೋಗಲು ಯಾವುದೇ ಸೆಕ್ಯುರಿಟಿಯಾಗಲೀ, ಮೆಟಲ್ ಡಿಟೆಕ್ಟರ್ ಕೂಡ ಇಲ್ಲದಿರುವುದನ್ನು ಗಮನಿಸಿ ಸುಲಭವಾಗಿ ಕೆಫೆಯೊಳಗೆ ಹೋಗಬಹುದೆಂದು ನಿರ್ಧರಿಸಿ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸುವ ನಿರ್ಧಾರಕ್ಕೆ ಬಂದಿದ್ದಾಗಿ ಉಗ್ರ ಮುಸಾವೀರ್ ಹುಸೇನ್ ಹಾಗೂ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಹಾ ವಿಚಾರಣೆ ಸಂದರ್ಭದಲ್ಲಿ ಎನ್ಐಎ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾರೆ. ಈ ಇಬ್ಬರು ಉಗ್ರರನ್ನು ಇನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಎನ್ಐಎ ಕಲೆ ಹಾಕುತ್ತಿದೆ. \ No newline at end of file diff --git a/eesanje/url_46_178_3.txt b/eesanje/url_46_178_3.txt new file mode 100644 index 0000000000000000000000000000000000000000..56ffdfbe28131983131c3269eb5a9dc725280617 --- /dev/null +++ b/eesanje/url_46_178_3.txt @@ -0,0 +1,6 @@ +ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ +ಬೆಂಗಳೂರು,ಏ.16-ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ನಗದು, ಮೂರು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. +ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೈಲಿನಲ್ಲಿರುವ ರೌಡಿಶೀಟರ್ಸ್ ಮತ್ತು ಅಪರಾಗಳು ಜೈಲಿನಿಂದಲೇ ಚುನಾವಣಾ ಅಕ್ರಮಕ್ಕೆ ಕುಮ್ಮಕು ನೀಡುತ್ತಿದ್ದಾರೆ ಎಂಬುದರ ಜೊತೆಗೆ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ಮೇಲೆ ನಿಗಾ ಇಡಲು, ಡ್ರಗ್ಸ್ ಸರಬರಾಜು ಮತ್ತು ಬಳಕೆ, ಮೊಬೈಲ್‍ ಫೋನ್‍ಗಳ ಬಳಕೆ ಸೇರಿದಂತೆ ಇತರೆ ಕುಟೀಲ ಕಾರ್ಯಗಳಲ್ಲಿ ತೊಡಗಿರುವರ ಮೇಲೆ ನಿಗಾವಹಿಸಲು ಈ ದಾಳಿ ನಡೆಸಲಾಗಿದೆ ಎಂದು ಆಯುಕ್ತರು ತಿಳಿಸಿದರು. +ಇತ್ತೀಚಿನ ದಿನಗಳಲ್ಲಿ ಜೈಲುಗಳು ಅಪರಾಧ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಸ್ಥಳವಾಗಿ ಪರಿವರ್ತನೆಯಾಗುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜೈಲುಗಳು ಪೊಲೀಸ್ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಅದು ಬೇರೆ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತವೆ. +ರಾಮೇಶ್ವರಂ ಕೆಫೆ ಸೋಟಕ್ಕೂ ಜೈಲ್ಲಿನಿಂದಲೇ ಸಂಚು ರೂಪಿಸಲಾಗಿತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಎನ್‍ಐಎ ತನಿಖೆ ನಡೆಸುತ್ತಿದ್ದು, ನಾವು ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಮನಃಪರಿವರ್ತನೆ, ಆರೋಗ್ಯ ಸಮಸ್ಯೆ, ವಯಸ್ಸು ಅಥವಾ ರೌಡಿ ಚಟುವಟಿಕೆಗಳಿಂದ ನಿಷ್ಕ್ರಿಯರಾದವರನ್ನು ಹೈಕೋರ್ಟ್‍ನ ಮಾರ್ಗಸೂಚಿಯ ಆಧಾರದ ಮೇಲೆ ರೌಡಿ ಪಟ್ಟಿಯಿಂದ ಅವರ ಹೆಸರುಗಳನ್ನು ತೆರವು ಮಾಡಲಾಗುತ್ತದೆ. +ಅದೇ ರೀತಿ ಸಮಾಜದಲ್ಲಿ ಶಾಂತಿ ಕದಡುವ ವ್ಯಕ್ತಿಗಳ ವಿರುದ್ಧ ರೌಡಿ ಪಟ್ಟಿ ತೆರೆಯಲಾಗುವುದು. ಈ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿರುತ್ತದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಏ.24ರ ಮಧ್ಯರಾತ್ರಿ 12 ಗಂಟೆಯಿಂದ 26 ಮಧ್ಯರಾತ್ರಿ 12ರವರೆಗೆ ಮತ್ತು ಜೂ.3ರ ಮಧ್ಯರಾತ್ರಿ 12ರಿಂದ ಜೂ.4ರ ಮಧ್ಯರಾತ್ರಿವರೆಗೆ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ ಮದ್ಯ ನಿಷೇಧ ಮತ್ತು ಧ್ವನಿವರ್ಧಕಗಳ ಬಳಕೆ ಸಂಪೂರ್ಣವಾಗಿ ನಿಷೇಸಲಾಗುವುದು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಆಯುಕ್ತರು ಮನವಿ ಮಾಡಿದರು. \ No newline at end of file diff --git a/eesanje/url_46_178_4.txt b/eesanje/url_46_178_4.txt new file mode 100644 index 0000000000000000000000000000000000000000..ec4c035ecb2f59d5323dfce420cd2390ed2b5d26 --- /dev/null +++ b/eesanje/url_46_178_4.txt @@ -0,0 +1,8 @@ +ಲೋಕಸಭಾ ಚುನಾವಣೆಯಲ್ಲಿ ಹಣ-ಮದ್ಯದ ಜೊತೆ ಹರಿದುಬಂದ ದೂರುಗಳು +ಬೆಂಗಳೂರು,ಏ.16-ಪ್ರಸಕ್ತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗದು, ಹಣ, ಮದ್ಯ, ಚಿನ್ನಾಭರಣ ದಾಖಲೆ ಪ್ರಮಾಣದಲ್ಲಿ ಜಪ್ತಿಯಾಗುತ್ತಿರುವುದಷ್ಟೇ ಅಲ್ಲ, ದೂರುಗಳ ಸುರಿಮಳೆಯೂ ಆಗುತ್ತಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ಬಂದಾಗಿನಿಂದಲೂ ನಿನ್ನೆಯವರೆಗೆ 357.91 ಕೋಟಿ ರೂ.ನಷ್ಟು ಹಣ ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +1,751 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, 1,388 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಿವಿಜಿಲ್ ಅಪ್ಲಿಕೇಶನ್ ಮೂಲಕ 23,362 ಸ್ವೀಕರಿಸಲಾಗಿತ್ತು. ಈ ಪೈಕಿ 13,935 ದೂರುಗಳು ಅನುಮತಿ ಇಲ್ಲದ ಪೋಸ್ಟರ್, ಬ್ಯಾನರ್‍ಗಳಿಗೆ ಸಂಬಂಧಿಸಿದ್ದರೆ, 1,076 ದೂರುಗಳು ಕಡ್ಡಾಯ ಘೋಷಣೆಯಿಲ್ಲದ ಪೋಸ್ಟರ್‍ಗಳಿಗೆ ಸಂಬಂಧಿಸಿವೆ. ಹಣ ವಿತರಣೆ ಬಗ್ಗೆ 191 ಉಚಿತ ಉಡುಗೊರೆ, ಕೂಪನ್‍ಗಳಿಗೆ ಸಂಬಂಧಿಸಿದಂತೆ 113, ಮದ್ಯ ಹಂಚಿಕೆಗೆ ಸಂಬಂಧಪಟ್ಟಂತೆ 129 ಸೇರಿದಂತೆ ವಿವಿಧ ರೀತಿಯ ದೂರುಗಳನ್ನು ಸಲ್ಲಿಸಲಾಗಿದೆ. +ಒಟ್ಟು 22,045 ದೂರುಗಳು ಸರಿಯಾಗಿವೆ ಎಂದು ಕಂಡುಹಿಡಿದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಇ-ಮೇಲ್ ಮೂಲಕ 183, ಪತ್ರಗಳ ಮೂಲಕ 568 ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮದ ಮೂಲಕ 53 ದೂರುಗಳನ್ನು ಸ್ವೀಕರಿಸಿದ್ದು, ಒಟ್ಟು 860 ದೂರುಗಳನ್ನು ವಿಲೇವಾರಿ ಮಾಡಲಾಗಿದೆ. +ಸುವಿಧ ಅಡಿಯಲ್ಲಿ ಅನುಮತಿಗಾಗಿ 5,337 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 3,918 ಅರ್ಜಿಗಳನ್ನು ಅಂಗೀಕರಿಸಿದ್ದು, 833 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. 220 ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. +ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 104.27 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದರೆ, ಅಬಕಾರಿ ಇಲಾಖೆಯವರು 160.33 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಆದಾಯ ತೆರಿಗೆ ಇಲಾಖೆಯವರು 13.80 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರದ ವಸ್ತುಗಳನ್ನು ವಶಪಡಿಸಿಕೊಂಡಿದ್ದರೆ, ವಾಣಿಜ್ಯ ತೆರಿಗೆ ಅಧಿಕಾರಿಗಳು 79.51 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. +ಅಬಕಾರಿ ಇಲಾಖೆಯವರು 35.24 ಲಕ್ಷ ರೂ. ಮೌಲ್ಯದ 4,978.485 ಲೀ ಮದ್ಯವನ್ನು ಜೆ.ಪಿ.ನಗರದಲ್ಲಿ ಮತ್ತು ವಿದ್ಯಾಪೀಠ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ.77.84 ಲಕ್ಷ ರೂ. ಮೌಲ್ಯದ 4,371.970 ಲೀ ಮದ್ಯವನ್ನು ಬೆಂಗಳೂರು ವಿಹಾರ ಕೇಂದ್ರ ಹಾಗೂ ಬನಶಂಕರಿಯಲ್ಲಿ ವಶಪಡಿಸಿಕೊಂಡಿದ್ದರೆ, 20 ಲಕ್ಷ ರೂ. ನಗದನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_178_5.txt b/eesanje/url_46_178_5.txt new file mode 100644 index 0000000000000000000000000000000000000000..a90602729c121d039ea51b0720326a7c0454f1ce --- /dev/null +++ b/eesanje/url_46_178_5.txt @@ -0,0 +1,8 @@ +ಚುನಾವಣೆ ಘೋಷಣೆ ಬಳಿಕ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ರಾಹುಲ್‍ ಆಗಮನ +ಬೆಂಗಳೂರು,ಏ.16-ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ರಾಹುಲ್‍ಗಾಂಧಿ ನಾಳೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. +ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡುವ ರಾಹುಲ್‍ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. +ಈ ಹಿಂದೆ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ರಾಹುಲ್‍ಗಾಂಧಿ ಹಲವು ಬಾರಿ ರಾಜ್ಯಪ್ರವಾಸ ಕೈಗೊಂಡಿದ್ದರು. ಅದಕ್ಕೂ ಮೊದಲು ಭಾರತ್ ಜೋಡೊ ಯಾತ್ರೆ ಮೂಲಕ ರಾಜ್ಯದ ಚಾಮರಾಜನಗರ, ಮೈಸೂರು, ತುಮಕೂರು, ಬಳ್ಳಾರಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಸ ನಡೆಸಿದರು. +ಈ ನಡುವೆ ಹಲವು ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದರಾದರೂ ಗಮನ ಸೆಳೆಯುವಂಥ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಲ್ಲ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‍ಗಾಂಧಿಯವರ ಪ್ರವಾಸ ಕಾಂಗ್ರೆಸ್‍ನ ಉತ್ಸಾಹವನ್ನು ಹೆಚ್ಚಿಸಿದೆ. +2019 ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಲ್ಲಿ ರಾಹುಲ್‍ಗಾಂಧಿ ಮಾಡಿದ್ದ ಭಾಷಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಅದನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ನಾಯಕರು ಕೋರ್ಟ್ ಮೆಟ್ಟಿಲೇರಿದ್ದರು. ಕೊನೆಗೆ ರಾಹುಲ್‍ಗಾಂಧಿಯವರಿಗೆ 2 ವರ್ಷ ಶಿಕ್ಷೆಯಾಗಿದ್ದಲ್ಲದೆ, ಸಂಸತ್ ಸದಸ್ಯ ಸ್ಥಾನ ಕೂಡ ಅನೂರ್ಜಿತಗೊಂಡಿತ್ತು. ಸುದೀರ್ಘ ಕಾನೂನಿನ ಹೋರಾಟದ ಬಳಿಕ ಗುಜರಾತ್‍ನ ಅಧೀನ ನ್ಯಾಯಾಲಯದ ತೀರ್ಪಿನಿಂದ ರಾಹುಲ್‍ಗಾಂಧಿ ಸುಪ್ರೀಂಕೋರ್ಟ್ ಮೂಲಕ ವಿನಾಯಿತಿ ಪಡೆದಿದ್ದಾರೆ. +ನಾಳೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಹುಲ್‍ಗಾಂಧಿ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿ 4 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಅದಕ್ಕೂ ಮೊದಲು ಕಲಬುರಗಿಯಲ್ಲೂ ಪ್ರಧಾನಿ ಭಾಷಣ ಮಾಡಿದ್ದರು. +ರಾಹುಲ್‍ಗಾಂಧಿ ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರನ್ನು ಸೇರಿಸಲು ಕಾಂಗ್ರೆಸ್ ನಾಯಕರು ತಯಾರಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_46_178_6.txt b/eesanje/url_46_178_6.txt new file mode 100644 index 0000000000000000000000000000000000000000..11012506bebaf09920bd901b255f464fbf90c2cd --- /dev/null +++ b/eesanje/url_46_178_6.txt @@ -0,0 +1,4 @@ +ವ್ಯಾಪಾರಕ್ಕೆಂದು ಸೂಡಾನ್‍ಗೆ ತೆರಳಿದ್ದ ಮೈಸೂರಿನ ಮಹಿಳೆ ಅನುಮಾನಾಸ್ಪದ ಸಾವು +ನವದೆಹಲಿ, ಏ.16-ವ್ಯಾಪಾರಕ್ಕೆಂದು ದೂರದ ಸೂಡಾನ್‍ಗೆ ತೆರಳಿದ್ದ ಮೈಸೂರಿನ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪಕ್ಷಿರಾಜಪುರದ ನಿವಾಸಿ ನಂದಿನಿ ಸೂಡಾನ್‍ನಲ್ಲಿ ಮೃತಪಟ್ಟಿದ್ದಾರೆಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಇಲಾಖೆ ಖಚಿತಪಡಿಸಿದೆ. +ಇದೀಗ ಅವರ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ಸೂಡಾನ್‍ನಲ್ಲಿರುವ ಭಾರತದ ರಾಯಭಾರಿಯನ್ನು ಸಂಪರ್ಕಿಸಿದ್ದಾರೆ. ಮೃತದೇಹವನ್ನು ಸೂಡಾನ್‍ನಿಂದ ನೈಜೀರಿಯಾ ಮೂಲಕ ನವದೆಹಲಿಗೆ ತಂದು ನಂತರ ಬೆಂಗಳೂರು ಮೂಲಕ ಮೈಸೂರಿಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ. +ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಜೈಶಂಕರ್‍ಗೆ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ ಎಂದು ತಿಳಿದುಬಂದಿದೆ. ಕೆಲ ವರ್ಷಗಳ ಹಿಂದೆ ನಂದಿನಿ ವ್ಯಾಪಾರಕ್ಕಾಗಿ ಸೂಡಾನ್‍ಗೆ ತೆರಳಿದ್ದರು. ಅವರಿಗೆ ಪತಿ ಮತ್ತು ಮಕ್ಕಳಿದ್ದಾರೆ. ಶುಕ್ರವಾರ ಪಾರ್ಥೀ ಶರೀರ ತವರಿಗೆ ಬರುವ ಸಾಧ್ಯತೆ ಇದೆ ಎಂದು ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_178_7.txt b/eesanje/url_46_178_7.txt new file mode 100644 index 0000000000000000000000000000000000000000..7e1216afbb281329d92d905b25256a0ef7891644 --- /dev/null +++ b/eesanje/url_46_178_7.txt @@ -0,0 +1,6 @@ +ಕಾಂಗ್ರೆಸ್ ಸರ್ಕಾರದಿಂದ ಭರಪೂರ ಪ್ರತಿಫಲ ಪಡೆಯುತ್ತಿರುವ ನಟ ಪ್ರಕಾಶ್‍ ರಾಜ್ +ಬೆಂಗಳೂರು,ಏ.16-ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಟ ಪ್ರಕಾಶ್ ರೈ ಉರುಫ್ ಪ್ರಕಾಶ್‍ರಾಜ್ ಎಂಬ ಕಲಾವಿದ ದಾರಿ ತಪ್ಪಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪ್ರಕಾಶ್‍ರಾಜ್ ದಾರಿ ತಪ್ಪಿರುವುದಕ್ಕೆ ಸಾಕ್ಷ್ಯವಿದೆ. ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರ್ಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ? ಎಂದು ಪ್ರಕಾಶ್ ರಾಜ್ ಅವರನ್ನು ಪ್ರಶ್ನಿಸಿದೆ. +ಮೊರಾರ್ಜಿ ವಸತಿ ಶಾಲೆಗಳಷ್ಟೇ ಅಲ್ಲ, ಸರ್ಕಾರಿ ವಸತಿ ನಿಲಯಗಳಿಗೆ ಹಣ ಕೊಡಲು ಕಾಂಗ್ರೆಸ್ ಸರಕಾರಕ್ಕೆ ಕೈ ಬರುತ್ತಿಲ್ಲ. ಅಲ್ಲಿನ ಮಕ್ಕಳಿಗೆ ಒಳ್ಳೆಯ ಆಹಾರವಿಲ್ಲ, ನೀರೂ ಇಲ್ಲ. ಸರ್ಕಾರಿ ರಂಗಾಯಣಗಳಿಗೆ ಬಿಡಿಗಾಸೂ ಇಲ್ಲ. ಈಚೆಗಷ್ಟೇ ನೀವು ಸ್ಥಾಪಿಸಿದ ನಿರ್ದಿಗಂತಕ್ಕೆ ಹಣದ ಹೊಳೆ ಸರ್ಕಾರ ಹರಿಸುತ್ತಿದೆ. ನಿಮ್ಮ ಜೋಳಿಗೆ ಭರ್ತಿ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ. +•ಕರ್ನಾಟಕದಲ್ಲಿ@INCKarnatakaಸರಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರಕಾಶ್‌ ರೈ ಉರುಫ್‌@prakashraajಎಂಬ ಕಲಾವಿದ ದಾರಿ ತಪ್ಪಿದ್ದಾರೆ. ಅದಕ್ಕೆ ಇಲ್ಲಿದೆ ಸಾಕ್ಷ್ಯ.ಕಲಾಸೇವೆ ಬಿಟ್ಟು ಕಾಂಗ್ರೆಸ್ಸಿಗೆ ಪರಿಚಾರಿಕೆ ಮಾಡುತ್ತಿರುವ ಅವರಿಗೆ ತಕ್ಕ ಪ್ರತಿಫಲವೂ ಸಂದಾಯವಾಗುತ್ತಿದೆ. ಸರಕಾರದ ಅನಧಿಕೃತ ವಕ್ತಾರನಾದರೆ ಈ ಪರಿ ಲಾಭವಿದೆಯಾ?…../xiKahlW0TY +ಗ್ಯಾರಂಟಿಗಳ ವಿಶೇಷ ತೌಲನಿಕ ಅಧ್ಯಯನಕ್ಕಾಗಿ ಪಾಲಸಿಫ್ರಂಟ್ ಎಂಬ ಮಟ್ಟು-ಪಟ್ಟಿನ ಕಂಪನಿಗೆ ಕೋಟಿ ಕೋಟಿ ಸುರಿದಿರುವ ಕಾಂಗ್ರೆಸ್ ಸರ್ಕಾರ, ನಿಮ್ಮ ನಿರ್ದಿಗಂತಕ್ಕೂ ಹಣ ಸುರಿಯುತ್ತಿದೆ. ಕನ್ನಡ ಸಂಸ್ಕøತಿ ಇಲಾಖೆಯಲ್ಲಿ ಕಸ ಹೊಡೆಯುವವರು ದಿಕ್ಕಿಲ್ಲ, ಕನ್ನಡ ಭವನದಲ್ಲಿ ಧೂಳು ಕೊಡವುವರು ಗತಿ ಇಲ್ಲ. ಇಲ್ಲಿ ನಿಮ್ಮ ಜೋಳಿಗೆಯಲ್ಲಿ ಭರ್ತಿ ಝಣ ಝಣ ಕಾಂಚಾಣ ಹೇಗೆ? ಎಂದು ಪ್ರಶ್ನಿಸಿದೆ. \ No newline at end of file diff --git a/eesanje/url_46_178_8.txt b/eesanje/url_46_178_8.txt new file mode 100644 index 0000000000000000000000000000000000000000..549c3990d833fd121220c2ff15601c0829935681 --- /dev/null +++ b/eesanje/url_46_178_8.txt @@ -0,0 +1,6 @@ +2040ರ ವೇಳೆಗೆ ವಾರ್ಷಿಕ 1 ಮಿಲಿಯನ್ ಮಹಿಳೆಯರನ್ನು ಬಲಿ ಪಡೆಯಲಿದೆಯಂತೆ ಕ್ಯಾನ್ಸರ್..! +ನವದೆಹಲಿ,ಎ.16-ಸ್ತನ ಕ್ಯಾನ್ಸರ್ ಈಗ ವಿಶ್ವದ ಅತ್ಯಂತ ಸಾಮಾನ್ಯವಾದ ಕಾರ್ಸಿನೋಜೆನಿಕ್ ಕಾಯಿಲೆಯಾಗಿದ್ದು, 2040 ರ ವೇಳೆಗೆ ಇದು ವಾರ್ಷಿಕ 1 ಮಿಲಿಯನ್ ಮಹಿಳೆಯರು ಸಾವು ಸಂಭವಿಸುವ ಸಾಧ್ಯತೆಯಿದೆ ಎಂದು ಜಾಗತಿಕ ಅಧ್ಯಯನವೊಂದು ಹೇಳಿದೆ. +2020 ರ ಅಂತ್ಯದವರೆಗೆ ಸುಮಾರು 7.8 ಮಿಲಿಯನ್ ಮಹಿಳೆಯರು ಸ್ತನ ಕ್ಯಾನ್ಸರ್‍ನಿಂದ ಬಳಲುತ್ತಿದ್ದಾರೆ ಮತ್ತು ಅದೇ ವರ್ಷ ಸುಮಾರು 685,000 ಮಹಿಳೆಯರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಲ್ಯಾನ್ಸೆಟ್ ಆಯೋಗ ಹೇಳಿದೆ. ಜಾಗತಿಕವಾಗಿ, ಸ್ತನ ಕ್ಯಾನ್ಸರ್ ಪ್ರಕರಣಗಳು 2020 ರಲ್ಲಿ 2.3 ಮಿಲಿಯನ್‍ನಿಂದ 2040 ರ ವೇಳೆಗೆ 3 ಮಿಲಿಯನ್‍ಗಿಂತಲೂ ಹೆಚ್ಚಾಗುತ್ತದೆ,ಮುಖ್ಯವಾಗಿ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಆಯೋಗವು ಅಂದಾಜಿಸಿದೆ. +2040 ರ ವೇಳೆಗೆ, ರೋಗದಿಂದ ಸಾವುಗಳು ವರ್ಷಕ್ಕೆ ಒಂದು ಮಿಲಿಯನ್ ಆಗುತ್ತವೆ ಎಂದು ಅದು ಸೇರಿಸಿದೆ. ಅಸಮಾನತೆ ,ಹತಾಶೆ, ಸ್ತನ ಕ್ಯಾನ್ಸರ್‍ನಿಂದಾಗಿ ಮಹಿಳೆಯರು ಆರ್ಥಿಕ ಹೊರೆಯಿಂದ ಬಳಲುತ್ತಾರೆ ಮರೆಮಾಚುವುದರಿಂದ ಸಾಮಾನ್ಯವಾಗಿ ಅಪಾಯ ಹೆಚ್ಚಾಗುತ್ತದೆ. ಈ ಸವಾಲುಗಳನ್ನು ನಿಭಾಯಿಸಲು ರೋಗಿಗಳು ಮತ್ತು ಆರೋಗ್ಯ ವೃತ್ತಿಪರರ ನಡುವಿನ ಉತ್ತಮ ಸಂವಹನವ ನಿರ್ಣಾಯಕ ಮಧ್ಯಸ್ಥಿಕೆಯಾಗಿ ಅಗತ್ಯ ಎಂದು ಆಯೋಗ ಸೂಚಿಸಿದೆ. +ಜೀವನದ ಗುಣಮಟ್ಟ, ದೇಹದ ಚಿತ್ರಣ ಮತ್ತು ಚಿಕಿತ್ಸೆಯ ಅನುಸರಣೆಯನ್ನು ಸುಧಾರಿಸುತ್ತದೆ ಮತ್ತು ಬದುಕುಳಿಯುವಿಕೆಯ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ.ಮಹಿಳೆಯರ ಮೂಲಭೂತ ಹಕ್ಕುಗಳಿಗೆ ಐತಿಹಾಸಿಕವಾಗಿ ಎಲ್ಲಾ ವಿಧದಲ್ಲಿ ಪುರುಷರಿಗಿಂತ ಕಡಿಮೆ ಗೌರವವನ್ನು ನೀಡಲಾಗಿದೆ.ಇದು ಸ್ವಾಯತ್ತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅಮೆರಿಕದ ಎಮೋರಿ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್ ರೇಷ್ಮಾ ಜಗ್ಸಿ ಹೇಳಿದ್ದಾರೆ. +ಪ್ರತಿಯೊಬ್ಬ ಆರೋಗ್ಯ ವೃತ್ತಿಪರರು ಕೆಲವು ರೀತಿಯ ಸಂವಹನ ಕೌಶಲ್ಯಗಳ ತರಬೇತಿಯನ್ನು ಪಡೆಯಬೇಕು. ರೋಗಿಗಳು ಮತ್ತು ಆರೋಗ್ಯ ವೃತ್ತಿಪರರ ನಡುವಿನ ಸಂವಹನದ ಗುಣಮಟ್ಟವನ್ನು ಸುಧಾರಿಸುವುದು, ತೋರಿಕೆಯಲ್ಲಿ ಸರಳವಾಗಿದ್ದರೂ, ಸ್ತನ ಕ್ಯಾನ್ಸರ್ ನಿರ್ವಹಣೆಯ ನಿರ್ದಿಷ್ಟ ಸೆಟ್ಟಿಂಗ್‍ಗಳನ್ನು ಮೀರಿದ ಆಳವಾದ ಸಕಾರಾತ್ಮಕ ಪರಿಣಾಮಗಳನ್ನು ಬೀರಬಹುದು ಎಂದು ಜಗ್ಸಿ ಹೇಳಿದರು.ರೋಗಿಗಳಿಗೆ ವ್ಯಾಯಾಮ ಮತ್ತು ಅವರ ಆರೈಕೆ ಆರಿಸಿಕೊಳ್ಳಬೇಕು ಜಾಗೃತಿ ಮೂಡಬೇಕು ಎಂದು ಅವರು ಹೇಳಿದರು. \ No newline at end of file diff --git a/eesanje/url_46_178_9.txt b/eesanje/url_46_178_9.txt new file mode 100644 index 0000000000000000000000000000000000000000..6ac03ba49681c8a127f6a257b9b831909f639f79 --- /dev/null +++ b/eesanje/url_46_178_9.txt @@ -0,0 +1,6 @@ +ದೆಹಲಿ ಸಿಎಂ ಕೇಜ್ರಿಗೆ ಏ.29ರವರೆಗೆ ತಿಹಾರ್ ಜೈಲೇ ಗತಿ +ಹೊಸದಿಲ್ಲಿ, ಅ 15 (ಪಿಟಿಐ) –ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲೂ ಜಾಮೀನು ದೊರೆತಿಲ್ಲದ ಕಾರಣ ಇನ್ನು ಸ್ವಲ್ಪ ದಿನಗಳ ಕಾಲ ತಿಹಾರ್ ಜೈಲಿನಲ್ಲೇ ಕಾಲ ಕಳೆಯುವಂತಹ ಸನ್ನಿವೇಶ ಎದುರಾಗಿದೆ. +ಆಪಾದಿತ ಅಬಕಾರಿ ನೀತಿ ಹಗರಣದಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿರುವ ಮನವಿಯ ಅರ್ಜಿ ವಿಚಾರಣೆಯನ್ನು ಏ.29ರ ನಂತರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿರುವುದರಿಂದ ಕೇಜ್ರಿ ಅವರು ಏ.29ರವರೆಗೆ ಜೈಲಿನಲ್ಲೇ ಇರಬೇಕಾಗುತ್ತದೆ. +ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಈ ಕುರಿತಂತೆ ಜಾರಿ ನಿರ್ದೇಶನಾಲಯದಿಂದ ಪ್ರತಿಕ್ರಿಯೆ ಕೇಳಿದೆ. ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಇಡಿಗೆ ನೋಟಿಸ್ ಜಾರಿ ಮಾಡಿ, ಏಪ್ರಿಲ್ 24 ರೊಳಗೆ ಅರ್ಜಿಗೆ ಉತ್ತರಿಸುವಂತೆ ಸೂಚಿಸಿದೆ ಮತ್ತು ಏಪ್ರಿಲ್ 29 ರಿಂದ ಪ್ರಾರಂಭವಾಗುವ ವಾರದಲ್ಲಿ ಈ ವಿಷಯದ ವಿಚಾರಣೆ ನಡೆಯಲಿದೆ ಎಂದು ಹೇಳಿದರು. +ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರ ಬಂಧನವನ್ನು ಹೈಕೋರ್ಟ್ ಏಪ್ರಿಲ್ 9 ರಂದು ಎತ್ತಿಹಿಡಿದಿತ್ತು. ಅವರು ಪುನರಾವರ್ತಿತ ಸಮನ್ಸ್ಗಳನ್ನು ಬಿಟ್ಟು ತನಿಖೆಗೆ ಸೇರಲು ನಿರಾಕರಿಸಿದ ನಂತರ ಇಡಿಗೆ ಸಣ್ಣ ಆಯ್ಕೆ ಉಳಿದಿದೆ ಎಂದು ಹೇಳಿದರು. ಇಡಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದ ಕಾರಣ ಅವರು ಏಜೆನ್ಸಿ ಕಸ್ಟಡಿಯಲ್ಲಿದ್ದಾರೆ. +ಫೆಡರಲ್ ಆಂಟಿ ಮನಿ ಲಾಂಡರಿಂಗ್ ಏಜೆನ್ಸಿಯ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಗಂಟೆಗಳ ನಂತರ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. \ No newline at end of file diff --git a/eesanje/url_46_179_1.txt b/eesanje/url_46_179_1.txt new file mode 100644 index 0000000000000000000000000000000000000000..3a1f6e2259343bcda4b82c1d281f2701b3d8a8a4 --- /dev/null +++ b/eesanje/url_46_179_1.txt @@ -0,0 +1,11 @@ +ಚುನಾವಣೆ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ 158.94 ಕೋಟಿ ರೂ. ಮೊತ್ತದ ಮದ್ಯ ವಶ +ಬೆಂಗಳೂರು,ಏ.15-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಸಿದ ತಪಾಸಣೆ ಸಂದರ್ಭದಲ್ಲಿ ಭಾರೀ ಪ್ರಮಾಣದ ಮದ್ಯ ಪತ್ತೆಯಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಂದಿನಿಂದ ನಿನ್ನೆಯವರೆಗೆ 158.94 ಕೋಟಿ ರೂ. ಮೊತ್ತದ 142.32 ಲಕ್ಷ ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. +ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ಪ್ರಕಾರ, ಅಬಕಾರಿ ಇಲಾಖೆಯವರು 23.46 ಲಕ್ಷ ರೂ. ಮೌಲ್ಯದ 1,150 ಕೇಸ್ ಪೆಟ್ಟಿಗೆಗಳ 8,970 ಲೀಟರ್ ಮದ್ಯವನ್ನು ಕೊತ್ತನೂರು ಕಮ್ಮಸಂದ್ರ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. 49.88 ಲಕ್ಷ ರೂ. ಮೌಲ್ಯದ 1,155 ಕೇಸ್ ಪೆಟ್ಟಿಗೆಗಳ 9,108 ಲೀಟರ್ ಮದ್ಯವನ್ನು ಕೆ.ಜಿ.ಹಳ್ಳಿಯಲ್ಲಿ ಹಾಗೂ 46.14 ಲಕ್ಷ ರೂ. ಮೌಲ್ಯದ 13,800 ಲೀಟರ್ ಬಿಯರ್ ಅನ್ನು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಳ್ಳಲಾಗಿದೆ. +89.25 ಲಕ್ಷ ಮೌಲ್ಯದ 1,186.200 ಲೀಟರ್ ಮದ್ಯವನ್ನು ಕಾಡುಗೊಂಡನಹಳ್ಳಿಯಲ್ಲಿ 55.62 ಲಕ್ಷ ರೂ.ಮೌಲ್ಯದ 7,386.120 ಲೀಟರ್ ಮದ್ಯವನ್ನು ದೊಡ್ಡಕಮ್ಮನಹಳ್ಳಿಯಲ್ಲಿ ಜಪ್ತಿ ಮಾಡಲಾಗಿದೆ. +ಅದೇ ರೀತಿ 76.86 ಲಕ್ಷ ರೂ. ಮೌಲ್ಯದ 4,811.400 ಲೀಟರ್ ಮದ್ಯವನ್ನು ಕೋಲಾರ ಟೌನ್‍ನ ತಮಕಾ ಕೈಗಾರಿಕಾ ಪ್ರದೇಶದಲ್ಲಿ, 59 ಲಕ್ಷ ಮೌಲ್ಯದ 14,688 ಲೀಟರ್ ಮದ್ಯವನ್ನು ಬಾಗಲಕೋಟೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. +34.02 ಲಕ್ಷ ಮೌಲ್ಯದ 9,108 ಲೀಟರ್ ಮದ್ಯವನ್ನು ಕೂಡ್ಲುಗೇಟ್‍ನಲ್ಲಿ 49.88 ಲಕ್ಷ ಮೌಲ್ಯದ 9,108 ಲೀಟರ್ ಮದ್ಯವನ್ನು ವೈಟ್‍ಫೀಲ್ಡ್‍ನಲ್ಲಿ 27.43 ಲಕ್ಷ ರೂ. ಮೌಲ್ಯದ 8,970 ಲೀಟರ್ ಮದ್ಯವನ್ನು ವೈಟ್‍ಫೀಲ್ಡ್ ಹಾಗೂ 46.14 ಲಕ್ಷ ರೂ. ಮೌಲ್ಯದ 13,800 ಲೀಟರ್ ಮದ್ಯವನ್ನು ಮಾದನಾಯಕನಹಳ್ಳಿಯಲ್ಲಿ ಅಬಕಾರಿ ಇಲಾಖೆಯವರು ವಶಪಡಿಸಿಕೊಂಡಿದ್ದಾರೆ. +27.43 ಲಕ್ಷ ರೂ. ಮೌಲ್ಯದ 8,970 ಲೀಟರ್ ಮದ್ಯವನ್ನು ಸಂಜಯನಗರದಲ್ಲಿ ವಶಪಡಿಸಿಕೊಳ್ಳಲಾಗಿದೆ. ಕ್ಷಿಪ್ರಪಡೆಯವರು 1,34,92,800 ರೂ. ನಗದನ್ನು ಜಯನಗರದಲ್ಲಿ ವಶಪಡಿಸಿಕೊಂಡಿದ್ದು, ಬೇಗೂರು ಪೊಲೀಸ್ ಠಾಣೆ ತಂಡದವರು 10 ಲಕ್ಷ ರೂ. ಮೌಲ್ಯದ 5.557 ಕೆ.ಜಿ. ಗಾಂಜಾವನ್ನು ಬೇಗೂರಿನಲ್ಲಿ ವಶಪಡಿಸಿಕೊಂಡಿದ್ದಾರೆ. +ಕೋಲಾರದ ಸಿಇಎನ್ ಪೊಲೀಸ್ ಠಾಣೆ ತಂಡದವರು 10 ಲಕ್ಷ ರೂ. ಮೌಲ್ಯದ 10.140 ಕೆ.ಜಿ. ಗಾಂಜಾವನ್ನು ಕೋಲಾರದಲ್ಲಿ ವಶಪಡಿಸಿಕೊಂಡಿದ್ದಾರೆ.ಕ್ಷಿಪ್ರಪಡೆಯವರು 20 ಲಕ್ಷ ರೂ. ನಗದನ್ನು ರಾಬರ್ಟ್‍ಸನ್ ಪೇಟೆಯಲ್ಲಿ ಹಾಗೂ ಸ್ಥಿರ ಕಣ್ಗಾವಲು ತಂಡದವರು 12,049 ರೂ. ನಗದನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಕೋಗನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆ ತಿಳಿಸಿದೆ. +ರಾಜ್ಯದಲ್ಲಿ ಇದುವರೆಗೂ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ನಡೆಸಿ ವಶಪಡಿಸಿಕೊಂಡ ನಗದು, ಮದ್ಯ, ಚಿನ್ನ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳ ಮೌಲ್ಯ 355.78 ಕೋಟಿ ರೂ.ಗೆ ಏರಿಕೆಯಾಗಿದೆ. +ಇದರಲ್ಲಿ ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು 104.10 ಕೋಟಿ ರೂ.ಮೊತ್ತದ ನಗದು, ಮದ್ಯ, ಚಿನ್ನ, ಬೆಳ್ಳಿ, ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದಾರೆ. ಅಬಕಾರಿ ಇಲಾಖೆಯವರು 158.58 ಕೋಟಿ ರೂ. ಮೌಲ್ಯದ ಮದ್ಯ ಮತ್ತು ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯವರು 13.60 ಕೋಟಿ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ, ವಜ್ರವನ್ನು ವಶಪಡಿಸಿಕೊಂಡಿದ್ದಾರೆ. +ವಾಣಿಜ್ಯ ತೆರಿಗೆ ಇಲಾಖೆಯವರು 79.50 ಕೋಟಿ ರೂ. ಮೌಲ್ಯದ ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇದುವರೆಗೂ 1,707 ಎಫ್‍ಐಆರ್‍ಗಳನ್ನು ದಾಖಲಿಸಿದ್ದು, ವಿವಿಧ ಪ್ರಕರಣಗಳಡಿ 1,349 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_179_10.txt b/eesanje/url_46_179_10.txt new file mode 100644 index 0000000000000000000000000000000000000000..d789c1fbe8dfbf306d8380580da77fdecc4045b7 --- /dev/null +++ b/eesanje/url_46_179_10.txt @@ -0,0 +1,12 @@ +ಅಂಬೇಡ್ಕರ್ ಮತ್ತೆ ಹುಟ್ಟಿಬಂದರೂ ಸಂವಿಧಾನ ಬದಲಿಸಲಾಗಲ್ಲ ಎಂಬ ಮೋದಿ ಹೇಳಿಕೆಗೆ ಸಿದ್ದು ಕೌಂಟರ್ +ಬೆಂಗಳೂರು,ಏ.14-ಡಾ.ಬಿ.ಆರ್.ಅಂಬೇಡ್ಕರ್ ಅವರು ಮತ್ತೆ ಹುಟ್ಟಿಬಂದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಅವರು ಹೇಳಬೇಕಾಗಿರುವುದು ಅದಲ್ಲ, ಯಾವ ಆರ್‍ಎಸ್‍ಎಸ್ ನಾಯಕರು ಹೇಳಿದರೂ ಸಂವಿಧಾನವನ್ನು ಬದಲಾಯಿಸಲು ಸಾಧ್ಯ ಇಲ್ಲ ಎಂಬುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. +ಸಾಮಾಜಿಕ ಜಾಲಾತಾಣದಲ್ಲಿ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿಯವರು, ಪ್ರಧಾನಿ ನರೇಂದ್ರ ಮೋದಿಯವರೇ, ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಇಲ್ಲವೇ, ಅವರ ಅನುಯಾಯಿಗಳಿಂದ ಅಲ್ಲ, ಅಪಾಯ ಎದುರಾಗಿರುವುದು ನಿಮ್ಮ ಮಾತೃಸಂಸ್ಥೆಯಾದ ಆರ್‍ಎಸ್‍ಎಸ್ ಮತ್ತು ಅದರ ನಾಯಕರಿಂದ. ಇದಕ್ಕೆ ಇತಿಹಾಸ ಸಾಕ್ಷಿ ಇದೆ. ಇತಿಹಾಸವನ್ನು ಮರೆಯಬಾರದೆಂದು ನಮಗೆ ಪಾಠ ಮಾಡಿದವರು ಇದೇ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಹೇಳಿದ್ದಾರೆ. +ಆರ್‍ಎಸ್ ಎಸ್ ಮುಖವಾಣಿಯಾದ ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದ ಸಾಲುಗಳಲ್ಲಿ, ಭಾರತ ಸಂವಿಧಾನದ ಅತ್ಯಂತ ಕೆಟ್ಟ ವಿಚಾರ ಏನಂದರೆ, ಅದರಲ್ಲಿ ಭಾರತೀಯತೆ ಎನ್ನುವುದೇ ಇಲ್ಲ, ಪುರಾತನ ಭಾರತದ ಕಾನೂನು-ಕಟ್ಟಳೆಗಳಾಗಲಿ, ಸಂರಚನೆಗಳಾಗಲಿ, ನುಡಿಗಟ್ಟುಗಳಾಗಲಿ ಯಾವುದೂ ಇಲ್ಲ. ಸ್ವಾರ್ಥದ ಲೈಕುರ್ಗಸ್ ಅಥವಾ ಪರ್ಸಿಯಾದ ಸೊಲೊನ್ ಬರೆಯುವುದಕ್ಕು ಮೊದಲೇ ಮನು ಈ ನಿಯಮಗಳನ್ನು ಇಲ್ಲಿ ರಚಿಸಿದ್ದರು. +“ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕೃತಿ – ಸಂಪ್ರದಾಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. ಇವತ್ತಿಗೂ ಕೋಟ್ಯಂತರ ಹಿಂದೂಗಳು…../6tKlRwfvYO +ಇಂದಿಗೂ ಮನುಸಂಸ್ಮತಿಯಲ್ಲಿ ಮನು ಉಲ್ಲೇಖಿಸಿರುವ ಕಾನೂನುಗಳು ಪ್ರಪಂಚದ ಗೌರವಕ್ಕೆ ಪಾತ್ರವಾಗಿವೆ ಮತ್ತು ಸ್ವಾಭಾವಿಕ ವಿಧೇಯತೆ ಮತ್ತು ಅನುಸರಣೆಯಲ್ಲಿವೆ. ಆದರೆ ನಮ್ಮ ಸಂವಿಧಾನವನ್ನು ರಚಿಸಿದ ಪಂಡಿತರಿಗೆ ಇದ್ಯಾವುದೂ ಲೆಕ್ಕಕ್ಕಿಲ್ಲ ಎಂದು ಟೀಕಿಸಲಾಗಿತ್ತು. ಪ್ರಧಾನಿಯವರು ಇದನ್ನು ಒಪ್ಪುತ್ತಾರೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. +ಪ್ರಧಾನಿಯವರು ಬಾಬಾಸಾಹೇಬ್ ಅಂಬೇಡ್ಕರ್ ಅಧ್ಯಕ್ಷತೆಯ ಸಂವಿಧಾನ ರಚನಾ ಸಮಿತಿ ನೀಡಿದ ಕರಡು ಪ್ರತಿಯನ್ನು ನಮ್ಮ ದೇಶ ಅಂಗೀಕರಿಸಿದ್ದು 1949ರ ನವಂಬರ್ 26ರಂದು. ಅದಾಗಿ ಕೇವಲ ನಾಲ್ಕೇ ದಿನಕ್ಕೆ ಅಂದರೆ 1949ರ ನವಂಬರ್ 30ರಂದು ನಿಮ್ಮ ಮಾತೃಸಂಸ್ಥೆಯಾದ ಆರ್‍ಎಸ್‍ಎಸ್ ಬರೆದಿರುವ ಈ ಸಂಪಾದಕೀಯದ ಬಗ್ಗೆ ಈಗಿನ ನಿಮ್ಮ ನಿಲುವು ಏನು? ಸಂಪಾದಕೀಯದ ಅಭ್ರಿಪ್ರಾಯಗಳನ್ನು ನಿರಾಕರಿಸುತ್ತೀರಾ ಎಂದು ಪ್ರಧಾನಿಯವರಿಗೆ ಮುಖ್ಯಮಂತ್ರಿ ಸವಾಲೆಸೆದಿದ್ದಾರೆ. +ಆರ್‍ಎಸ್‍ಎಸ್‍ನ ಸಂಸ್ಥಾಪಕರಲ್ಲಿ ಒಬ್ಬರಾದ ಎಂ.ಎಸ್.ಗೋಳ್ವಾಲ್ಕರ್, ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆಬೇರೆ ಕಲಮ್ಮುಗಳನ್ನು ಹೆಕ್ಕಿ ತಂದು ಒಟ್ಟುಗೂಡಿಸಿದ ಕಂತೆಯಾಗಿದ್ದು, ಇದರಲ್ಲಿ ಹಲವಾರು ತೊಡಕುಗಳು ಮತ್ತು ಭಿನ್ನ ನಿಲುವುಗಳು ಎದ್ದು ಕಾಣುತ್ತವೆ. ನಮ್ಮದು ಎಂದು ಕರೆದುಕೊಳ್ಳುವ ಯಾವ ಭಾರತೀಯ ಅಂಶವೂ ಇದರಲ್ಲಿಲ್ಲ. ನಮ್ಮ ರಾಷ್ಟ್ರೀಯ ಕಾರ್ಯಯೋಜನೆ ಏನು ಮತ್ತು ನಮ್ಮ ಬದುಕಿನ ಮುಖ್ಯ ಧಾತುವೇನು ಎಂಬುದರ ಬಗ್ಗೆ ಇದರ ನಿರ್ದೇಶಕ ತತ್ವಗಳಲ್ಲಿ ಒಂದೇ ಒಂದು ಪದವಿದೆಯೇ? ಎಂದು ಪ್ರಶ್ನಿಸಿದರು. +ಗೋಳ್ವಾಲ್ಕರ್‌ರನ್ನು ಗುರೂಜಿ ಎಂದೇ ಗೌರವಿಸುವ ಪ್ರಧಾನಿಯವರು ಈವರೆಗೂ ಅವರ ಅಭಿಪ್ರಾಯಗಳಿಗೆ ಸಹಮತ ಇದೆಯೇ ಅಥವಾ ಭಿನ್ನಮತ ಇದೆಯೇ ಎಂದು ಸ್ಪಷ್ಟಪಡಿಸಿಲ್ಲ. ಇನ್ನೂ ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ರತಿಮ ದೇಶಭಕ್ತ ಎಂದು ಬಿಂಬಿಸಲಾದ ವಿನಾಯಕ ದಾಮೋದರ ಸಾವರ್ಕರ್ ಅವರ ಪುಸ್ತಕದಲ್ಲಿ ಸಂವಿಧಾನದ ಬಗ್ಗೆ ಸ್ಪಷ್ಟ ಉಲ್ಲೇಖವಿದೆ. +ವೇದಗಳ ನಂತರ ನಮ್ಮ ಹಿಂದೂ ರಾಷ್ಟ್ರಕ್ಕೆ ಪೂಜನೀಯವಾದ ಗ್ರಂಥವೆಂದರೆ ಮನುಸ್ಮೃತಿಯಾಗಿದ್ದು, ಅನಾದಿ ಕಾಲದಿಂದಲೂ ನಮ್ಮ ಸಂಸ್ಕøತಿ – ಸಂಪ್ರಾದಯ, ಆಲೋಚನೆಗಳು ಮತ್ತು ಆಚಾರಗಳಿಗೆ ಅದುವೇ ಆಧಾರವಾಗಿದೆ. ಶತಮಾನಗಳಿಂದ ನಮ್ಮ ದೇಶವು ಸಾಗಿಬಂದ ಆಧ್ಯಾತ್ಮಿಕ ಮತ್ತು ದೈವಿಕ ಪಥಗಳಿಗೆ ಈ ಕೃತಿಯೇ ಕ್ರೋಢೀಕೃತ ರೂಪವಾಗಿದೆ. +ಇಂದಿಗೂ ಕೋಟ್ಯಂತರ ಹಿಂದೂಗಳು ತಮ್ಮ ಜೀವನ ಮತ್ತು ಆಚರಣೆಗಳಲ್ಲಿ ಅನುಸರಿಸುತ್ತಿರುವ ಕಟ್ಟಳೆಗಳಿಗೆ ಈ ಮನುಸ್ಮೃತಿಯೇ ಮೂಲವಾಗಿದೆ. ಇವತ್ತು ಮನುಸ್ಮೃತಿಯೇ ಹಿಂದೂ ಕಾನೂನು ಎಂದು ಹೇಳಿದ್ದಾರೆ. ಇದಕ್ಕೆ ಪ್ರಧಾನಿಯವರ ಸಹಮತ ಇದೆಯೇ ಇಲ್ಲವೇ ಎಂಬುದನ್ನು ದೇಶದ ಜನರ ಮುಂದೆ ಬಹಿರಂಗಪಡಿಸಲಿ ಎಂದು ಹೇಳಿದ್ದಾರೆ. +ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹುಟ್ಟಿರದೆ ಇದ್ದರೆ ಭಾರತ ಏನಾಗಿರುತ್ತಿತ್ತು ಎನ್ನುವುದನ್ನು ಒಂದು ಕ್ಷಣ ಕಲ್ಪಿಸಿಕೊಂಡರೆ ನಮ್ಮೆಲ್ಲರ ಬದುಕಿನಲ್ಲಿ ಅವರ ಪಾತ್ರದ ಅರಿವಾಗಬಹುದು. ಈ ಕಾರಣಕ್ಕಾಗಿ ಜಾತಿ, ಧರ್ಮ, ಪಂಥ, ಪ್ರದೇಶವನ್ನು ಮೀರಿ ಭಾರತದ ನೆಲದಲ್ಲಿ ಹುಟ್ಟಿದವರು ಮತ್ತು ಹುಟ್ಟಲಿರುವವರೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಋಣಿಗಳಾಗಿರಬೇಕು ಎಂದು ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_179_11.txt b/eesanje/url_46_179_11.txt new file mode 100644 index 0000000000000000000000000000000000000000..a31023cfd282751e7268c8573dd3967b7911ab6b --- /dev/null +++ b/eesanje/url_46_179_11.txt @@ -0,0 +1,9 @@ +ಲೋಕಸಭೆ ಚುನಾವಣೆ ಬಳಿಕ ‘ಗ್ಯಾರಂಟಿ’ ಸರ್ಕಾರದ ಪತನದ ಸುಳಿವು ನೀಡಿದ ರಮೇಶ್ ಜಾರಕಿಹೊಳಿ +ಬೆಂಗಳೂರು,ಏ.14-ಲೋಕಸಭಾ ಚುನಾವಣೆ ಬಳಿಕ ಡಬ್ಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ಹೇಳುವ ಮೂಲಕ ಬಿಜೆಪಿಯ ಶಾಸಕ ರಮೇಶ್ ಜಾರಕಿಹೊಳಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪತನದ ಎಚ್ಚರಿಕೆ ನೀಡಿರುವುದು ರಾಜಕೀಯವಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಶಾಸಕರನ್ನು ಖರೀದಿಸಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರಗಳನ್ನು ಪತನಗೊಳಿಸುವುದನ್ನು ಮುಂದುವರೆಸಲಿದೆ ಎಂದು ಬಿಜೆಪಿಯೇತರ ಪಕ್ಷಗಳು ಮೊದಲಿನಿಂದಲೂ ಆರೋಪಿಸುತ್ತಲೇ ಇವೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 135 ಸ್ವಂತ ಶಾಸಕರು ಹಾಗೂ ಮೂವರು ಪಕ್ಷೇತರರು ಸೇರಿ 138 ಸಂಖ್ಯಾಬಲವನ್ನು ಹೊಂದಿದೆ. ಬಹುಮತಕ್ಕೆ ಸಾಮಾನ್ಯ ಸಂಖ್ಯೆಗಿಂತಲೂ ಹೆಚ್ಚು ಶಾಸಕರನ್ನು ಹೊಂದಿರುವ ಸರ್ಕಾರವನ್ನು ಪತನಗೊಳಿಸುವುದು ಪ್ರಜಾಪ್ರಭುತ್ವದ ವಿರೋಧಿ ಕೃತ್ಯವಾಗಲಿದೆ ಎಂದು ಕಾಂಗ್ರೆಸ್ ನಾಯಕರು ಟೀಕಿಸುತ್ತಲೇ ಇದ್ದಾರೆ. +ಅದನ್ನು ಮೀರಿ ಪದೇಪದೇ ರಾಜ್ಯಸರ್ಕಾರದ ಪತನದ ಬಗ್ಗೆ ಚರ್ಚೆಗಳಾಗುತ್ತಿವೆ. ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಮತಯಾಚನೆ ಮಾಡಿದ್ದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಮುಂದಿನ 5 ವರ್ಷ ನಿಮ್ಮ ಸೇವೆಗೆ ನಾವು ಲಭ್ಯವಿದ್ದೇವೆ. ದೆಹಲಿಯ ನಾಯಕರು ಬಂದು ನಿಮ್ಮ ಕೆಲಸ ಮಾಡಿಕೊಡುವುದಿಲ್ಲ. ನಾವೇ ನಿಮ್ಮ ಕೆಲಸ ಮಾಡಿಕೊಡಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಒತ್ತಡ ಹೇರಿದ್ದರು. +ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಇರುವುದಿಲ್ಲ, ಕೇಂದ್ರದಲ್ಲೂ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ಸರ್ಕಾರಗಳು ಅಧಿಕಾರಕ್ಕೆ ಬರಲಿದೆ ಎಂದು ಪ್ರತಿಪಾದಿಸುವ ಮೂಲಕ ಬಿಜೆಪಿ ನಾಯಕರು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡುತ್ತಿದ್ದಾರೆ. ಪರಸ್ಪರ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾನ ಹುಟ್ಟುವಂತಹ ಚರ್ಚೆಗಳು ಜನರಲ್ಲಿ ಗೊಂದಲ ಮೂಡಿಸುತ್ತಿವೆ. +ಬಿಜೆಪಿ ಕೇಂದ್ರದಲ್ಲಿ ಮರಳಿ ಅಧಿಕಾರ ಹಿಡಿದಿದ್ದೇ ಆದರೆ ಬಿಜೆಪಿಯೇತರ ಆಡಳಿತ ಇರುವ ರಾಜ್ಯಗಳಲ್ಲಿ ಆಪರೇಷನ್ ಕಮಲ ಜೋರಾಗಲಿದೆ. ಕಾಂಗ್ರೆಸ್ ಶಾಸಕರನ್ನು ಸೆಳೆದು ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂಬ ಚರ್ಚೆಗಳು ಚಾಲ್ತಿಯಲ್ಲಿವೆ. +ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶ ಸೇರಿದಂತೆ ಮೂರು ರಾಜ್ಯಗಳಲ್ಲಿ ಮಾತ್ರ ಸ್ವಂತಬಲದ ಮೇಲೆ ಅಧಿಕಾರದಲ್ಲಿದೆ. ಉಳಿದಂತೆ ತಮಿಳುನಾಡು, ಜಾರ್ಖಾಂಡ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಪಾಲುದಾರ ಪಕ್ಷವಾಗಿದೆ. +ಬಿಜೆಪಿ ಈ ಮೊದಲು ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸದೃಢ ಸರ್ಕಾರಗಳನ್ನೇ ಆಪರೇಷನ್ ಕಮಲದ ಮೂಲಕ ಪತನಗೊಳಿಸಿತ್ತು. ಮುಂದುವರೆದು ಮತ್ತೆ ಅಧಿಕಾರಕ್ಕೆ ಬಂದರೆ ಅದೇ ಮಾದರಿಯ ಕಾರ್ಯಾಚರಣೆ ನಡೆಯಬಹುದು. ಬಿಜೆಪಿಯೇತರ ಸರ್ಕಾರಗಳು ಪತನಗೊಳ್ಳಬಹುದು ಎಂಬ ಆತಂಕ ಒಳಗೊಳಗೆ ಇದ್ದೇ ಇದೆ. +ಅದಕ್ಕೆ ಪೂರಕವಾಗಿ ಬಿಜೆಪಿ ನಾಯಕರು ಡಬ್ಬಲ್ ಇಂಜಿನ್ ಸರ್ಕಾರದ ಪ್ರಸ್ತಾಪ ಮಾಡುತ್ತಾ ಆಪರೇಷನ್ ಕಮಲವನ್ನು ಮತ್ತಷ್ಟು ವೈಭವೀಕರಿಸುತ್ತಿದ್ದಾರೆ. ಅದರಲ್ಲೂ 2019 ರಲ್ಲಿ ಕರ್ನಾಟಕದಲ್ಲಿನ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ ಡಬ್ಬಲ್ ಇಂಜಿನ್ ಸರ್ಕಾರದ ಪ್ರಸ್ತಾಪ ಮಾಡಿರುವುದು ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_179_12.txt b/eesanje/url_46_179_12.txt new file mode 100644 index 0000000000000000000000000000000000000000..848e84eca650c34f78c4fc0a6c92cf7ab7d363a3 --- /dev/null +++ b/eesanje/url_46_179_12.txt @@ -0,0 +1,8 @@ +ಭಾನುವಾರವೂ ಬಿಡುವಿಲ್ಲದೆ ರಾಜಕೀಯ ನಾಯಕರ ಮತಬೇಟೆ +ಬೆಂಗಳೂರು,ಏ.14-ಲೋಕಸಭಾ ಚುನಾವಣೆಯ ಕಣ ರಂಗೇರುತ್ತಿದ್ದು, ಘಟಾನುಘಟಿ ನಾಯಕರು ರಂಗ ಪ್ರವೇಶ ಮಾಡಿ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದ್ದಾರೆ. ಭಾನುವಾರ ರಜಾದಿನವಾದರೂ ಕೂಡ ಲೆಕ್ಕಿಸದೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಹಲವಾರು ಕಡೆ ಬಹಿರಂಗ ಸಮಾವೇಶ, ರೋಡ್ ಶೋಗಳಲ್ಲಿ ತೊಡಗಿಸಿಕೊಂಡಿದ್ದಾರೆ. +ಲೋಕಸಭಾ ಚುನಾವಣೆ ಘೋಷಣೆ ಬಳಿಕ ಪ್ರಥಮ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮೈಸೂರಿನಲ್ಲಿ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು. +ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮತಯಾಚನೆ ಮಾಡಿದರು. ಬಳಿಕ ಮಂಗಳೂರಿಗೆ ತೆರಳಿ ರೋಡ್ ಶೋ ನಡೆಸಿದರು. ಇತ್ತ ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗು, ತುಮಕೂರು ಮತ್ತು ಮೈಸೂರು ಜಿಲ್ಲೆಗಳ ಪ್ರವಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ್ದು, ಕೊಡಗು, ತುಮಕೂರು ಜಿಲ್ಲೆಗಳ ಬಹಿರಂಗ ಸಮಾವೇಶಗಳಲ್ಲಿ ಭಾಗಿಯಾಗಿದ್ದರು. ಇಬ್ಬರೂ ನಾಯಕರು ಹೆಲಿಕಾಪ್ಟರ್‍ನಲ್ಲಿ ಮಿಂಚಿನ ವೇಗದಲ್ಲಿ ಸಂಚಾರ ನಡೆಸಿದ್ದಾರೆ. ಮಡಿಕೇರಿಯಿಂದ ತುಮಕೂರಿನ ಕೆ.ಬಿ.ಕ್ರಾಸ್‍ಗೆ, ತುಮಕೂರಿನಿಂದ ಮೈಸೂರಿಗೆ ಕಾಂಗ್ರೆಸ್ ನಾಯಕರನ್ನು ಹೊತ್ತ ಹೆಲಿಕಾಪ್ಟರ್ ಸಂಚಾರ ನಡೆಸಿದೆ. +ರಾತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ. ನಾಳೆ ಜಿದ್ದಾಜಿದ್ದಿನ ರಣಕಣವಾಗಿರುವ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ರಣಕಹಳೆ ಊದಲಿದ್ದಾರೆ. +ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ 10 ದಿನಗಳು ಮಾತ್ರ ಉಳಿದಿವೆ. ಮೊದಲ ಹಂತದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರ ಓಲೈಕೆಗೆ ಉರಿಬಿಸಿಲಿನಲ್ಲೂ ನಾಯಕರು ಬೆವರಿಳಿಸುತ್ತಿದ್ದಾರೆ. ಅಭ್ಯರ್ಥಿಗಳು ಮನೆಮನೆ ಪ್ರಚಾರ, ರೋಡ್‍ಶೋಗಳಲ್ಲಿ ಮತಯಾಚನೆ ನಡೆಸುತ್ತಿದ್ದಾರೆ. +ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.ಅವಧಿ ಕಡಿಮೆ ಇರುವುದರಿಂದಾಗಿ ರಾಜ್ಯ, ರಾಷ್ಟ್ರೀಯ ನಾಯಕರು, ಸ್ಟಾರ್ ಪ್ರಚಾರಕರು ಹಗಲಿರುಳೆನ್ನದೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. \ No newline at end of file diff --git a/eesanje/url_46_179_2.txt b/eesanje/url_46_179_2.txt new file mode 100644 index 0000000000000000000000000000000000000000..7531e7dd973049d22158d86db0656ccb173796d9 --- /dev/null +++ b/eesanje/url_46_179_2.txt @@ -0,0 +1,7 @@ +ಕುಮಾರಸ್ವಾಮಿ ಕ್ಷಮೆ ಕೇಳಿದ ಬಳಿಕವೂ ನಿಲ್ಲದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ +ಬೆಂಗಳೂರು,ಏ.15-ದಾರಿ ತಪ್ಪಿದ ಹೇಳಿಕೆಗೆ ಕ್ಷಮೆ ಕೇಳಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ್ದಾರೆ.ಲೋಕಸಭಾ ಚುನಾವಣೆಯ ಅಖಾಡದಲ್ಲಿ ಕುಮಾರಸ್ವಾಮಿಯವರ ಹೇಳಿಕೆ ಕಾಂಗ್ರೆಸ್‍ಗೆ ಅಸ್ತ್ರವಾಗಿ ಪರಿಣಮಿಸಿದೆ. ಇದನ್ನೇ ಮುಂದಿಟ್ಟುಕೊಂಡು ರಾಜ್ಯಾದ್ಯಂತ ತಾಲ್ಲೂಕು ಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. +ಜಿಲ್ಲಾಮಟ್ಟದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ಜಿಲ್ಲಾಕಾರಿಗಳ ಮೂಲಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.ತಮ್ಮ ಹೇಳಿಕೆಯಿಂದಾದ ಅಚಾತುರ್ಯವನ್ನು ಸರಿಪಡಿಸಲು ನಿನ್ನೆಯಿಂದಲೂ ಎಚ್.ಡಿ.ಕುಮಾರಸ್ವಾಮಿ ಪದೇಪದೇ ಸ್ಪಷ್ಟ ನಿಲುವನ್ನು ನೀಡುತ್ತಿದ್ದಾರೆ. ಇಂದು ಬೆಳಿಗ್ಗೆ ತುರ್ತು ಪತ್ರಿಕಾಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೂ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿದೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆನ್‍ಲೈನ್‍ನಲ್ಲಿ ಸಭೆ ನಡೆಸಿ ಪಂಚಖಾತ್ರಿ ಯೋಜನೆಗಳ ಮಹಿಳಾ ಫಲಾನುಭವಿಗಳು ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ.ಕ್ಷಮಾಪಣೆ, ವಿಷಾದದಂತಹ ನಾಟಕಗಳನ್ನು ನಾವು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಮಹಿಳೆಯರು ಪ್ರತಿಭಟನೆ ಮುಂದುವರೆಸಲಿದ್ದಾರೆ. ಶ್ರೀಸಾಮಾನ್ಯರಿಗೆ ಕುಮಾರಸ್ವಾಮಿಯವರ ಮನೋಭಾವವನ್ನು ಅರ್ಥ ಮಾಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಬೆಳಗಾವಿಯಲ್ಲಿಂದು ಹೇಳಿದ್ದಾರೆ. +ದಾರಿ ತಪ್ಪಿದ ಹೇಳಿಕೆ ರಾಜಕೀಯ ಅಖಾಡದಲ್ಲಿ ಭಾರೀ ಸದ್ದು ಮಾಡುತ್ತಿದೆ. ಪಂಚಖಾತ್ರಿ ಯೋಜನೆಗಳ ಮಹತ್ವವನ್ನು ತಗ್ಗಿಸಲು ಕುಮಾರಸ್ವಾಮಿ ನೀಡಿದ್ದ ಹೇಳಿಕೆ ತಿರುಗುಬಾಣವಾಗಿ ಪರಿಣಮಿಸಿದೆ.ಕುಮಾರಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ವಿಷಯವಾಗಿ ಉಗ್ರವಾಗಿ ಮಾತನಾಡಿದ್ದಾರೆ ಎಂಬ ಅಭಿಪ್ರಾಯವನ್ನು ದೃಢವಾಗಿ ಶ್ರೀಸಾಮಾನ್ಯರಿಗೆ ಅರ್ಥೈಸಲು ಕಾಂಗ್ರೆಸ್ ನಿರ್ಧರಿಸಿದೆ. +ಲೋಕಸಭಾ ಚುನಾವಣಾ ಅಖಾಡದಲ್ಲಿ ಬಿಜೆಪಿಯ ಎಲ್ಲಾ ನಾಯಕರನ್ನೂ ಓವರ್‍ಟೇಕ್ ಮಾಡಿ ಅತ್ಯಂತ ಪ್ರಭಾವಿಯಾಗಿ ಹೊರಹೊಮ್ಮಿದ್ದ ಕುಮಾರಸ್ವಾಮಿ ಶಕ್ತಿ ಕೇಂದ್ರವಾಗಿ ಬಿಂಬಿತವಾಗಿದ್ದರು. ಹಳೆಯ ಮೈಸೂರು ಭಾಗದಲ್ಲಿ ಓಟ್ ಬ್ಯಾಂಕ್ ಗಿಟ್ಟಿಸುವಲ್ಲಿ ಕುಮಾರಸ್ವಾಮಿ ಪಾತ್ರ ಮಹತ್ವದ್ದು ಎಂದು ವಿಶ್ಲೇಷಣೆ ನಡೆದಿತ್ತು. +ಆದರೆ ಬಾಯಿ ತಪ್ಪಿದ ಮಾತುಗಳು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಕಾಂಗ್ರೆಸ್ ಪಕ್ಷ ಹೆಜ್ಜೆಹೆಜ್ಜೆಗೂ ಬಳಸಿಕೊಂಡು ತೀವ್ರ ವಾಗ್ದಾಳಿಗಿಳಿದಿದೆ. ರಾಜ್ಯದಲ್ಲಿ ಮಹಿಳಾ ಮತದಾರರ ಪ್ರಮಾಣ ಶೇ.50 ರಷ್ಟಿದ್ದು, ನಿರ್ಣಾಯಕರಾಗಿದ್ದಾರೆ. ಈಗಾಗಲೇ ಪಂಚಖಾತ್ರಿ ಯೋಜನೆಗಳಿಂದ ಕಾಂಗ್ರೆಸ್ ಪಕ್ಷ ಮಹಿಳಾ ಮತದಾರರ ಬೆಂಬಲವನ್ನು ಗಿಟ್ಟಿಸುವಲ್ಲಿ ಯಶಸ್ವಿಯಾಗಿತ್ತು. ಅದರ ನಡುವೆ ಮಹಿಳಾ ಮತದಾರರನ್ನು ಸೆಳೆಯಲು ಜೆಡಿಎಸ್ ಮತ್ತು ಬಿಜೆಪಿಯವರು ನಾನಾ ರೀತಿಯ ಸರ್ಕಸ್ ನಡೆಸುತ್ತಿದ್ದರು. ಈಗ ಕುಮಾರಸ್ವಾಮಿಯವರ ಹೇಳಿಕೆ ಸಾಕಷ್ಟು ಮುಜುಗರ ಉಂಟುಮಾಡಿದ್ದು, ಪರಿಸ್ಥಿತಿಯನ್ನು ಸರಿದೂಗಿಸಲು ಪರದಾಡುವಂತಹ ಸನ್ನಿವೇಶ ನಿರ್ಮಾಣವಾಗಿದೆ. \ No newline at end of file diff --git a/eesanje/url_46_179_3.txt b/eesanje/url_46_179_3.txt new file mode 100644 index 0000000000000000000000000000000000000000..e44d87460a8c142be5d3d43288fbc5413b9ad384 --- /dev/null +++ b/eesanje/url_46_179_3.txt @@ -0,0 +1,9 @@ +ತಾಯಂದಿರಿಗೆ ನೋವಾಗಿದ್ದರೆ ವಿಷಾದಿಸುತ್ತೇನೆ : ಎಚ್.ಡಿ.ಕುಮಾರಸ್ವಾಮಿ +ಬೆಂಗಳೂರು,ಏ.15-ತುರುವೇಕೆರೆಯಲ್ಲಿನ ಚುನಾವಣಾ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆಯಿಂದ ರಾಜ್ಯದ ಯಾವುದೇ ತಾಯಂದಿರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. ಜೆಡಿಎಸ್ ಮಹಿಳಾ ಮುಖಂಡರೊಂದಿಗೆ ತುರ್ತು ಸುದ್ದಿಗೋಷ್ಠಿಯನ್ನು ನಡೆಸಿದ ಅವರು, ಮಹಿಳೆಯರಿಗೆ ಅಗೌರವ ತರುವಂಥ ಮಾತನ್ನು ಆಡಿಲ್ಲ ಎಂದು ಸ್ಪಷ್ಟಪಡಿಸಿದರು. +ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಾಲ ಮಾಡುತ್ತಿದ್ದಾರೆ. ಸಾಲದ ಹೊರೆ ನಾಡಿನ ಜನರ ಮೇಲೆ ಹೊರಿಸುತ್ತಿದ್ದಾರೆ. ತಾಯಂದಿರಿಗೆ 2 ಸಾವಿರ ರೂ. ನೀಡಿ ಅವರ ಯಜಮಾನರ ಜೇಬಿನಿಂದ ಪಿಕ್‍ಪ್ಯಾಕೇಟ್ ಮಾಡಿ ಐದಾರು ಸಾವಿರ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ತಾಯಂದಿರು ಎಚ್ಚರಿಕೆಯಿಂದಿರಬೇಕು. ಗ್ಯಾರಂಟಿಗೆ ಮರುಳಾಗಿ ದಾರಿ ತಪ್ಪಬಾರದು ಎಂದು ಹೇಳಿದ್ದೇನೆಯೇ ಹೊರತು, ಅಗೌರವದಿಂದಲ್ಲ. ನಾನು ಬಳಸಿರುವ ಶಬ್ದದಲ್ಲಿ ಯಾವುದೇ ಅಶ್ಲೀಲತೆ ಇಲ್ಲ ಎಂದು ಸಮರ್ಥಿಸಿಕೊಂಡರು. +ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಕಾರಿಗಳು ನನ್ನ ಈ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡಿ ಮಹಿಳೆಯರ ಪರವಾಗಿ ಕಂಬನಿ ಮಿಡಿದಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದವರು ಮಹಿಳೆಯರ ಬಗ್ಗೆ ನೀಡಿರುವ ಅಗೌರವ ತರುವಂಥ ಹಲವು ಹೇಳಿಕೆಗಳ ನಿದರ್ಶನವನ್ನು ನೀಡಬಹುದು ಎಂದರು. +ಹೆಣ್ಣು ಮಕ್ಕಳನ್ನು ಬೆದರಿಸಿ, ಜಮೀನು ಬರೆಸಿಕೊಂಡಾಗ ದುಃಖ ಬರಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರವರು ನಟಿ ಹೇಮಾಮಾಲಿನಿಯವರನ್ನು ಕುರಿತು ನೀಡಿರುವ ಹೇಳಿಕೆ ಮಹಿಳೆಯರಿಗೆ ಗೌರವ ತರುವಂಥದ್ದೇ ಎಂದು ಪ್ರಶ್ನಿಸಿದರು. +ಯಾವುದೇ ಆಮಿಷಕ್ಕೆ ಒಳಗಾಗದೇ ತಾಯಂದಿರ ಪರವಾಗಿ ಸಾರಾಯಿ ನಿಷೇಧವನ್ನು ನಾನು ಮುಖ್ಯಮಂತ್ರಿಯಾಗಿ ಮಾಡಿದ್ದೆ. ಕಾಂಗ್ರೆಸ್‍ನವರಿಗೆ ಟೀಕಿಸಲು ವಿಷಯವಿಲ್ಲದೆ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಕಾಂಗ್ರೆಸ್ ವಕ್ತಾರರು ದೆಹಲಿಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ ಏನು ಹೇಳುತ್ತಾರೆ, ಅವರ ಹೇಳಿಕೆ ಹೆಣ್ಣು ಮಕ್ಕಳಿಗೆ ಗೌರವ ತರುವಂಥದ್ದೇ? ಎಂದು ವಾಗ್ದಾಳಿ ನಡೆಸಿದರು. +ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್‍ಕುಮಾರ್‍ರವರು ವಿಧಾನಸಭೆಯಲ್ಲಿ ಏನು ಹೇಳಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಲಿ, ಮದ್ದೂರಿನಲ್ಲಿ ಮಾಜಿ ಶಾಸಕರ ಬಗ್ಗೆ ಆ ಪಕ್ಷದ ಶಾಸಕರು ನೀಡಿರುವ ಹೇಳಿಕೆಗೆ ಸನ್ಮಾನ ಮಾಡಬೇಕೇ?, ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷರು ಕ್ಷಮೆ ಕೋರಿದ್ದಾರೆ. ಹೀಗೆ ಹಲವು ನಿದರ್ಶನವನ್ನು ಕಾಂಗ್ರೆಸ್‍ನವರು ಮಹಿಳೆಯ ಬಗ್ಗೆ ತೋರಿರುವ ಅಗೌರವದ ಬಗ್ಗೆ ನಿದರ್ಶನವಾಗಿ ನೀಡಬಹುದು ಎಂದರು. +ಈ ವಿಚಾರವನ್ನು ಮುಂದಿಟ್ಟುಕೊಂಡು ಜನರ ಮನಸ್ಸನ್ನು ಪರಿವರ್ತನೆ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‍ನ ಮಹಿಳಾ ಪ್ರಾಧಧಿಕಾರಿಗಳಿಗೆ ಈ ವಿಚಾರದಲ್ಲಿ ನೋವುಂಟಾಗಿದೆ. ಅವರದೇ ಪಕ್ಷದವರು ನೀಡಿರುವ ಹೇಳಿಕೆಗಳ ಬಗ್ಗೆ ನೋವಾಗಲಿಲ್ಲವೇ ಎಂದು ಪ್ರಶ್ನಿಸಿದರು.ನಾನು ಕೂಡ ದಾರಿ ತಪ್ಪಿದಾಗ ನನ್ನ ಹೆಂಡತಿ ತಿದ್ದಿ ಸರಿದಾರಿಗೆ ತಂದಿರುವುದನ್ನು ವಿಧಾನಸಭೆಯಲ್ಲಿಯೇ ಪ್ರಸ್ತಾಪಿಸಿದ್ದೇನೆ. ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳಿಗೆ ನೋವು ಕೊಡಲು ಹೋಗಿಲ್ಲ ಎಂದರು. +ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ನೋಟೀಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ, ನಾನು ತಪ್ಪು ಮಾಡಿಲ್ಲ ಎಂದ ಮೇಲೆ ಹೆದರುವ ಅವಶ್ಯಕತೆಯೇ ಇಲ್ಲ ಎಂದು ಹೇಳಿದರು. ರಾಜಕೀಯಕ್ಕೆ ಬರುವ 10 ವರ್ಷ ಮುನ್ನವೇ ಆಸ್ತಿ ಮಾಡಿದ್ದೆ. ಆ ಆಸ್ತಿಯಲ್ಲಿ 20 ಟನ್ ಕೊಬ್ಬರಿ, 50 ಟನ್ ಕಲ್ಲಂಗಡಿ ಹಣ್ಣು, 50 ಲಕ್ಷ ಬಾಳೆ ಬೆಳೆದಿದ್ದೇನೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. \ No newline at end of file diff --git a/eesanje/url_46_179_4.txt b/eesanje/url_46_179_4.txt new file mode 100644 index 0000000000000000000000000000000000000000..8afad09e16ad67a9ad023799f99a19b13ed99a09 --- /dev/null +++ b/eesanje/url_46_179_4.txt @@ -0,0 +1,6 @@ +ಇಸ್ರೇಲ್ ಹಡಗಿನಲ್ಲಿದ್ದ ಭಾರತೀಯರ ಬಿಡುಗಡೆಗೆ ಇರಾನ್ ಸಮ್ಮತಿ +ನವದೆಹಲಿ,ಏ.15-ಇರಾನ್ ವಶಪಡಿಸಿಕೊಂಡಿರುವ ಇಸ್ರೇಲ್ ಸಂಬಂಧಿತ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿಯನ್ನು ಭೇಟಿ ಮಾಡಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಅನುಮತಿ ನೀಡಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಸಿಬ್ಬಂದಿಯ ಪರಿಸ್ಥಿತಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಇರಾನ್ ಸಹವರ್ತಿ ಅಮೀರ್ ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ ನಂತರ ಈ ಭರವಸೆ ಬಂದಿದೆ. +ಜೈಶಂಕರ್ ಅವರು ಈ ವಿಷಯದಲ್ಲಿ ನೆರವು ಕೋರಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ವಶಪಡಿಸಿಕೊಂಡ ಹಡಗಿನ ವಿವರಗಳನ್ನು ನಾವು ಅನುಸರಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ಭಾರತ ಸರ್ಕಾರದ ಪ್ರತಿನಿಧಿಗಳು ಈ ಹಡಗಿನ ಸಿಬ್ಬಂದಿಯನ್ನು ಭೇಟಿ ಮಾಡಲು ಸಾಧ್ಯವಾಗುತ್ತದೆ ಎಂದು ಡಾ. ಅಮೀರ್ ಅಬ್ದುಲ್ಲಾಹಿಯಾನ್ ಹೇಳಿದರು. +ಹಡಗನ್ನು ವಶಪಡಿಸಿಕೊಂಡ ಕೂಡಲೇ ಸಿಬ್ಬಂದಿಯನ್ನು ಬಿಡುಗಡೆ ಮಾಡಲು ಭಾರತವು ಇರಾನ್‍ನೊಂದಿಗೆ ಸಂಪರ್ಕದಲ್ಲಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉಲ್ಬಣಗೊಳ್ಳುವುದನ್ನು ತಪ್ಪಿಸಲು ಮತ್ತು ಸಂಯಮವನ್ನು ವ್ಯಾಯಾಮ ಮಾಡಲು ಜೈಶಂಕರ್ ಕರೆ ನೀಡಿದ್ದಾರೆ. +ಸಿರಿಯಾದಲ್ಲಿನ ತನ್ನ ದೂತಾವಾಸದ ಮೇಲೆ ಇಸ್ರೇಲಿ ದಾಳಿಗಳು ಏಳು ಇರಾನಿನ ಇಸ್ಲಾಮಿಕ್ ಕ್ರಾಂತಿಕಾರಿ ಗಾರ್ಡ್‍ಗಳನ್ನು ಕೊಂದ ವಾರಗಳ ನಂತರ ನೂರಾರು ಡ್ರೋನ್‍ಗಳು ಮತ್ತು ಕ್ಷಿಪಣಿಗಳನ್ನು ಹಾರಿಸುವ ಮೂಲಕ ಇರಾನ್ ಇಸ್ರೇಲ್ ಮೇಲೆ ತನ್ನ ಮೊದಲ ನೇರ ದಾಳಿಯನ್ನು ಪ್ರಾರಂಭಿಸಿದೆ. +ಭಾರತವು ತಕ್ಷಣದ ಉಲ್ಬಣವನ್ನು ತಗ್ಗಿಸಲು ಕರೆ ನೀಡಿದೆ ಮತ್ತು ಅಲ್ಲಿನ ಭಾರತೀಯ ಸಮುದಾಯದೊಂದಿಗೆ ನಿಕಟ ಸಂಪರ್ಕದಲ್ಲಿರಲು ಈ ಪ್ರದೇಶದಲ್ಲಿನ ತನ್ನ ರಾಯಭಾರ ಕಚೇರಿಗಳಿಗೆ ಎಚ್ಚರಿಕೆ ನೀಡಿದೆ. \ No newline at end of file diff --git a/eesanje/url_46_179_5.txt b/eesanje/url_46_179_5.txt new file mode 100644 index 0000000000000000000000000000000000000000..dbef9c64e24359bc9a97f82855c035a96a57d869 --- /dev/null +++ b/eesanje/url_46_179_5.txt @@ -0,0 +1,6 @@ +ರಾಜಕೀಯ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರ ಬಳಸಿಕೊಳ್ಳುವವರು ದೇಶದ್ರೋಹಿಗಳು : ಡಿವಿಎಸ್ ವಾಗ್ದಾಳಿ +ಬೆಂಗಳೂರು,ಏ.14-ತಮ್ಮ ರಾಜಕಾರಣದ ಸ್ವಾರ್ಥಕ್ಕಾಗಿ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವವರು ದೇಶದ್ರೋಹಿಗಳು ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗರ ಮಠವೇ ಇರಲಿ ಅಥವಾ ಬೇರೆ ಯಾವುದೇ ಧಾರ್ಮಿಕ ಕೇಂದ್ರವಾಗಲೀ ಅವುಗಳ ಸಮಾಜಸೇವೆ ಮಾಡುವ ಕೇಂದ್ರಗಳು. ರಾಜಕಾರಣಕ್ಕಾಗಿ ಮಾತನಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. +ಯಾರೂ ಕೂಡ ಯಾವುದೇ ಮಠದ ಮೇಲೆ ಅನಗತ್ಯವಾಗಿ ಟೀಕೆ ಮಾಡುವುದು, ರಾಜಕೀಯಕ್ಕೆ ಎಳೆದು ತರುವುದು ಸರಿಯಲ್ಲ. ಒಕ್ಕಲಿಗರ ಮಠಕ್ಕೆ ತನ್ನದೇ ಆದ ಇತಿಹಾಸ ಮತ್ತು ಪರಂಪರೆ ಇದೆ. ಆ ಮಠವನ್ನು ಯಾರೂ ಕೂಡ ಅನಗತ್ಯವಾಗಿ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು. ಹಿಂದಿನ ಸ್ವಾಮೀಜಿಗಳಾಗಿದ್ದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಕೇವಲ ಒಕ್ಕಲಿಗರಿಗೆ ಮಾತ್ರ ಸೀಮಿತವಾಗಿರಲಿಲ್ಲ ಎಲ್ಲಾ ಸಮುದಾಯವನ್ನು ಮುನ್ನಡೆಸಿದ್ದರು. ಈಗಿನ ಶ್ರೀಗಳು ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದು ಹೇಳಿದರು. +ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದಾಗ ನನಗೆ ಕೊನೆ ಕ್ಷಣದಲ್ಲಿ ಬರುವಂತೆ ಸೂಚನೆ ಬಂದಿತ್ತು. ನಾನು ಅನಗತ್ಯವಾಗಿ ಮಾತನಾಡಬಾರದೆಂದು ಸುಮ್ಮನಿದ್ದೇನೆ. ಮಠಗಳು, ಮಠಾೀಶರ ಬಗ್ಗೆ ಸಮಾಜ ತನ್ನದೇ ಆದ ಗೌರವ ಇಟ್ಟುಕೊಂಡಿರುತ್ತದೆ. ಅದನ್ನು ಉಳಿಸುವುದು ಅಗತ್ಯ ಎಂದರು. +ಕಳೆದ 4 ದಿನಗಳಿಂದ ಬಹಳ ದೊಡ್ಡ ಚರ್ಚೆ ಒಕ್ಕಲಿಗರ ಬಗ್ಗೆ, ಒಕ್ಕಲಿಗರ ಮಠದ ಬಗ್ಗೆ ಚರ್ಚೆ ಆಗುತ್ತಿರುವುದು ಬೇಸರದ ಸಂಗತಿ. ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಳ್ಳದ ಅದ್ಬುತ ಮಠದ ಶ್ರೀಗಳು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬಂದಿದ್ದು ನೋವಿನ ವಿಷಯ. ಚುನಾವಣೆ ವೇಳೆ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಬರೀ ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಒಕ್ಕಲಿಗರ ಸಮುದಾಯದ ಬಗ್ಗೆ ಯಾರೇ ಮಾತನಾಡಿದ್ದು ತಪ್ಪು. ನಾನು ಇದನ್ನು ಸುತಾರಂ ಒಪ್ಪುವುದಿಲ್ಲ ಎಂದರು. +ಶ್ರೀಗಳು ಆದಿಚುಂಚನಗಿರಿ ಮಠ ವಿದ್ಯಾಸಂಸ್ಥೆಗಳು, ಆರೋಗ್ಯ ಸೇವೆಯಲ್ಲಿ ತಮ್ಮ ಕಾರ್ಯಗಳನ್ನು ತೊಡಗಿಸಿಕೊಂಡಿದ್ದಾರೆ. ನಾನು ಸಮುದಾಯದ ವ್ಯಕ್ತಿಯಾಗಿ ನಾನು ಒಪ್ಪುವುದಿಲ್ಲ. ದಕ್ಷಿಣ ಕರ್ನಾಟಕದ ಸುಮಾರು 10 ಜಿಲ್ಲೆಯಲ್ಲಿ ತನ್ನದೇ ಆದ ಸ್ವಾಭಿಮಾನದಿಂದ ಬದುಕುತ್ತಿದ್ದಾರೆ. ಈ ಸಮುದಾಯದವರು ಪ್ರಧಾನಮಂತ್ರಿ ಆಗಿದ್ದಾರೆ, ಮಂತ್ರಿಗಳಾಗಿದ್ದಾರೆ. ಅಲ್ಲದೆ ಯಾವುದೇ ರಾಜಕಾರಣಿ ಕೆಂಪೇಗೌಡರ ಹೆಸರು ಹೇಳದೇ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_179_6.txt b/eesanje/url_46_179_6.txt new file mode 100644 index 0000000000000000000000000000000000000000..e2c9090338382bea6ad037c8de604fc4505e1ee5 --- /dev/null +++ b/eesanje/url_46_179_6.txt @@ -0,0 +1,10 @@ +ಮುಕ್ತ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಸಿದ್ಧತೆ : ಮನೋಜ್ ಕುಮಾರ್ ಮೀನಾ +ಬೆಂಗಳೂರು, ಏ.14-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಇಂದಿಲ್ಲಿ ತಿಳಿಸಿದರು. +ಸಾರ್ವತ್ರಿಕ ಲೋಕಸಭಾ ಚುನಾವಣೆಯ ಅಂಗವಾಗಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೆರೆಯ ತಮಿಳುನಾಡಿನಲ್ಲಿ ಏ.19ರಂದು ಮತದಾನ ನಡೆಯಲಿದೆ. ಈಗಾಗಿ ಏ.17ರಿಂದಲೇ ತಮಿಳುನಾಡು ಗಡಿಯನ್ನು ಸೀಜ್ ಮಾಡಲಾಗುವುದು. +ಅದೇ ರೀತಿ ಕರ್ನಾಟಕದಲ್ಲಿ ಮತದಾನ ನಡೆಯುವ ಎರಡು ದಿನಗಳ ಮುನ್ನ ತಮಿಳುನಾಡು ಅವರು ಗಡಿಯನ್ನು ಸೀಜ್ ಮಾಡಲಿದ್ದಾರೆ. ತಮಿಳುನಾಡಿನಲ್ಲಿ ನಿಯೋಜಿತರಾಗಿರುವ ಕೇಂದ್ರ ಪಡೆಗಳು ರಾಜ್ಯಕ್ಕೆ ಆಗಮಿಸಲಿವೆ. ಜಿಲ್ಲಾ ಎಸ್ಪಿ ಹಾಗೂ ಪೊಲೀಸ್ ವೀಕ್ಷಕರು ಸಮಾಲೋಚನೆ ನಡೆಸಿ ಅಗತ್ಯ ಪ್ರದೇಶಗಳಿಗೆ ನಿಯೋಜನೆ ಮಾಡುತ್ತಾರೆ. ಆಯಾ ಕ್ಷೇತ್ರಗಳಲ್ಲಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ಬಹಿರಂಗ ಪಡಿಸಲಾಗುವುದಿಲ್ಲ. ಚುನಾವಣಾ ಅಕ್ರಮ ತಡೆಯುವುದು ಇದರ ಉದ್ದೇಶವಾಗಿದೆ ಎಂದರು. +ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಲ್ಲಿ 2.88 ಕೋಟಿ ಮತದಾರರಿದ್ದಾರೆ. 11 ಸಾವಿರ ಸೇವಾ ಮತದಾರರಿದ್ದಾರೆ. 1.44 ಕೋಟಿ ಪುರುಷ, 1.43 ಮಹಿಳಾ ಹಾಗೂ 5.99 ಲಕ್ಷ ಯುವ ಮತದಾರರಿದ್ದಾರೆ, ನಿನ್ನೆಯಿಂದ ನೋಂದಾಯಿತ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನರು ಮತದಾನವನ್ನು ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಏ.18ರ ವರೆಗೂ ಈ ಪ್ರಕ್ರಿಯೆ ನಡೆಯಲಿದೆ ಎಂದರು. +30, 602 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಮತದಾನಕ್ಕೆ ಅನುಕೂಲವಾಗುವಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲಾಗಿವುದು. ಶೇ.50ರಷ್ಟು ಮತಗಟ್ಟೆಗಳಲ್ಲಿ ಮತದಾನವನ್ನು ವೆಬ್ ಕಾರ್ಪಿಂಗ್ ಮಾಡಲಾಗುವುದು ಎಂದರು.ಮಾದರಿ ನೀತಿ ಸಂಹಿತೆ ಜಾರಿಗೆ ಬಂದಾಗಿನಿಂದ 24*7 ಮೂರು ಪಾಳಿಯಲ್ಲಿ ವಿವಿಧ ತಂಡಗಳು ಕಾರ್ಯನಿರ್ವಹಿಸುತ್ತಿವೆ. +ಇದುವರೆಗೂ 345 ಕೋಟಿ ರೂ. ಮೌಲ್ಯದ ನಗದು, ಚಿನ್ನಾಭರಣ, ಮದ್ಯ ಜಪ್ತಿ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ 88 ಕೋಟಿ ರೂ. ಜಪ್ತಿ ಮಾಡಲಾಗಿದೆ. ಜಪ್ತಿಯಾದ ನಗದಿನಲ್ಲಿ ಸೂಕ್ತ ದಾಖಲೆ ಒದಗಿಸಿದ ಶೇ.49ರಷ್ಟು ಪ್ರಕರಣದಲ್ಲಿ ಹಣ ಹಿಂದಿರುಗಿಸಲಾಗಿದೆ. ಶೆ.51 ರಷ್ಟು ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಶೇ.90 ಪ್ರಕರಣಗಳಲ್ಲಿ ಚಾರ್ಚ್ಶೀಟ್ ಹಾಕಲಾಗಿದೆ. ಶೇ. 40ರಷ್ಟು ಪ್ರಕರಣದಲ್ಲಿ ಶಿಕ್ಷೆಯಾಗಿದೆ ಎಂದರು. +ಮನೆ ಮನೆಗೆ ತೆರಳಿ ಮತದಾನದ ಜಾಗೃತಿ:ರಾಜ್ಯದ ಸರಾಸರಿ ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಕ್ಷೇತ್ರಗಳಲ್ಲಿ ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಲಾಗುತ್ತಿದೆ. ಐಟಿ-ಬಿಟಿ ಪ್ರಮುಖ ಸಂಸ್ಥೆಗಳಿಗೂ ಸಿಬ್ಬಂದಿಗೆ ರಜೆ ನೀಡಿ ಮತದಾನಕ್ಕೆ ಪ್ರೋತ್ಸಾಹ ನೀಡುವಂತೆ ಕೋರಲಾಗಿದೆ. ಅಲ್ಲದೆ ಏ.20ರಿಂದ ಬೆಸ್ಕಾಂ, ಬೆಂಗಳೂರು ಜಲಮಂಡಳಿ ವತಿಯಿಂದ ಮತದಾರಿಗೆ ಸಂದೇಶ ರವಾನಿಸಲಾಗುವುದು. ಹಾಲಿನ ಪಾಕೆಟ್ ಮೇಲೆಯೂ ಮತದಾನದ ಜಾಗೃತಿ ಸಂದೇಶ ಮುದ್ರಿಸಲಾಗುತ್ತದೆ. +2019ರಲ್ಲಿ 43 ವಿಧಾನ ಸಭಾ ಕ್ಷೇತ್ರಗಳ 5 ಸಾವಿರ ಮತಗಟ್ಟೆಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದರು. ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುವವರು ಜೊತೆಯಲ್ಲಿ ಹಣ ಕೊಂಡೊಯ್ಯುವುದು ಸಾಮಾನ್ಯವಾಗಿದ್ದು, ಅವರಿಗೆ ವಿನಾಕಾರಣ ತೊಂದರೆಯಾಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು. +ಸಂವಾದದಲ್ಲಿ ರಾಜ್ಯ ಹೆಚ್ಚುವರಿ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಕೂರ್ಮಾರಾವ್, ಮಾಧ್ಯಮ ವಿಶೇಷಾಧಿಕಾರಿ ಎ.ವಿ. ಸೂರ್ಯಸೇನ್, ಪ್ರೆಸ್ ಕ್ಷಬ್ ಅಧ್ಯಕ್ಷ ಆರ್. ಶ್ರೀಧರ, ಪ್ರಧಾನ ಕಾರ್ಯದರ್ಶಿ ಬಿ.ಪಿ. ಮಲ್ಲಪ್ಪ ಮತ್ತಿತರರು ಇದ್ದರು. \ No newline at end of file diff --git a/eesanje/url_46_179_7.txt b/eesanje/url_46_179_7.txt new file mode 100644 index 0000000000000000000000000000000000000000..570ec5718da4ff8165c9bb1f72d50c503c052ef0 --- /dev/null +++ b/eesanje/url_46_179_7.txt @@ -0,0 +1,6 @@ +ಮೈಸೂರಲ್ಲಿಂದು ಮೋದಿ ಮತಬೇಟೆ, ಬಿಗಿ ಪೊಲೀಸ್ ಬಂದೋಬಸ್ತ್ +ಮೈಸೂರು, ಏ.14-ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಜೆ 5 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮೋದಿಯವರು ಭಾಷಣ ಮಾಡಲಿದ್ದಾರೆ. +ಮೋದಿ ಆಗಮಿಸುವ ರಸ್ತೆಗಳು ಹಾಗೂ ಮಹಾರಾಜ ಕಾಲೇಜು ಸುತ್ತಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದೆ, ಇಂದು ಬೆಳಗಿನಿಂದಲೇ ಹಿರಿಯ ಪೊಲೀಸ್ ಅಧಿಕಾರಿಗಳು ಗಸ್ತು ತಿರುಗಿ ಭದ್ರತೆಯನ್ನು ಪರಿಶೀಲಿಸಿದರು. ಮಧ್ಯಪ್ರದೇಶದಿಂದ ನೇರ ಮೈಸೂರಿಗೆ ಆಗಮಿಸಲಿರುವ ಪ್ರಧಾನಿ, ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವರು. +ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪರ ಮತಯಾಚಿಸಲಿರುವರು. ವೇದಿಕೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ಅಭ್ಯರ್ಥಿಗಳಾದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಎಚ್.ಡಿ ಕುಮಾರಸ್ವಾಮಿ, ಎಸ್.ಬಾಲರಾಜ್, ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಳ್ಳುವರು. +ಮಹಾರಾಜ ಕಾಲೇಜು ಮೈದಾನದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಬಿಜೆಪಿ ಜೆಡಿಎಸ್ ಸಮಾವೇಶ ನಡೆಯುತ್ತಿರುವುದರಿಂದ ಮೈತ್ರಿ ಪಕ್ಷಗಳ ಕಾರ್ಯಕರ್ತರು ಮುಖಂಡರ ಉತ್ಸಾಹ ಮೇರೆ ಮೀರಿದೆ. +ಸುಮಾರು ಒಂದು ಗಂಟೆ ಕಾಲ ಮೋದಿ ಪ್ರಚಾರ ಭಾಷಣ ಮಾಡಲಿದ್ದು ನಂತರ ಮಂಗಳೂರಿಗೆ ತೆರಳಿ ಅಲ್ಲಿ ರೋಡ್ ಷೋನಲ್ಲಿ ಪಾಲ್ಗೊಳ್ಳುವರು. \ No newline at end of file diff --git a/eesanje/url_46_179_8.txt b/eesanje/url_46_179_8.txt new file mode 100644 index 0000000000000000000000000000000000000000..58961b13eff636d8176a700148e68c262821a4d6 --- /dev/null +++ b/eesanje/url_46_179_8.txt @@ -0,0 +1,8 @@ +ಮೊಬೈಲ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದ ರಾಮೇಶ್ವರಂ ಕೆಫೆ ಸ್ಫೋಟದ ಉಗ್ರರು +ಬೆಂಗಳೂರು,ಏ.14-ತನ್ನ ಬಳಿ ಇದ್ದ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ದೂರದ ಪಶ್ಚಿಮ ಬಂಗಾಳದಲ್ಲಿ ಎನ್‍ಐಎ ಖೆಡ್ಡಾಕ್ಕೆ ಸಿಕ್ಕಿಬಿದ್ದಿದ್ದಾರೆ.ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ನಂತರ ಯಾರಿಗೂ ಸಣ್ಣ ಸುಳಿವು ಬಿಟ್ಟುಕೊಡದೆ ಕೋಲ್ಕತ್ತಾಗೆ ತೆರಳಿ ಖಾಸಗೀ ಹೋಟೆಲ್ ಒಂದರಲ್ಲಿ ಪ್ರವಾಸಿಗರಂತೆ ತಂಗಿದ್ದ ಉಗ್ರರು ಅಲ್ಲೇ ಮೊಬೈಲ್ ಫೋನ್ ರಿಪೇರಿ ಮಾಡಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ಈಸಂಜೆಗೆ ಖಚಿತಪಡಿಸಿವೆ. +ಕೋಲ್ಕತ್ತಾದ ಹೋಟೆಲ್‍ನಲ್ಲಿ ತಲೆಮರೆಸಿಕೊಂಡಿದ್ದ ಉಗ್ರರ ಬಳಿ ಇದ್ದ ಒಬ್ಬನ ಮೊಬೈಲ್ ಕೆಟ್ಟು ಹೋಗಿತ್ತು. ಹೀಗಾಗಿ ಆತ ಸಿಮ್ ತೆಗೆದುಕೊಂಡು ಖಾಲಿ ಮೊಬೈಲ್ ಅನ್ನು ರಿಪೇರಿ ಮಾಡಿಸಲು ಸಮೀಪದ ಮೊಬೈಲ್ ರಿಪೇರಿ ಅಂಗಡಿ ತೆರಳಿ ಮೊಬೈಲ್ ನೀಡಿದ್ದ. +ಮೊಬೈಲ್ ರಿಪೇರಿ ಆದ ನಂತರ ಅಂಗಡಿಯಾತನ ಬಳಿ ಇದ್ದ ಬೇರೆ ಸಿಮ್ ಹಾಕಿ ಪರೀಕ್ಷಿಸಿದ್ದ ಮಾತ್ರವಲ್ಲ ಅದೇ ನಂಬರ್‍ನಿಂದ ಯಾರಿಗೋ ಫೋನ್ ಮಾಡಿದ್ದ ಆ ಸಂದರ್ಭದಲ್ಲಿ ಮೊಬೈಲ್ ಲೊಕೇಷನ್ ಮಾಹಿತಿ ಎನ್‍ಐಎ ಪೊಲೀಸರಿಗೆ ಲಭಿಸಿತ್ತು. ನಂತರ ಎನ್‍ಐಎ ಅಧಿಕಾರಿಗಳು ಅಂಗಡಿ ಬಳಿ ಹೋಗಿ ಮೊಬೈಲ್ ರಿಪೇರಿಗೆ ಬಂದಿದ್ದವರ ಮಾಹಿತಿಯನ್ನು ಪಡೆದುಕೊಂಡರು. ಖಚಿತ ಸುಳಿವಿನ ಆಧಾರದ ಮೇಲೆ ಹೋಟೆಲ್ ಮೇಲೆ ದಾಳಿ ಮಾಡಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. +ಬೆಂಗಳೂರಿನಿಂದ ಪರಾರಿಯಾಗಿದ್ದ ಇಬ್ಬರು ಉಗ್ರರು ಮೊದಲು ಕೋಲ್ಕತ್ತಾದ ಹೋಟೆಲ್ ಒಂದರಲ್ಲಿ ರೂಮ್ ಪಡೆಯುವಾಗ ರಿಜಿಸ್ಟರ್‍ನಲ್ಲಿ ತಮ್ಮ ಹೆಸರು ಬರೆದಿದ್ದರು ಆಗ ಎರಡನೆ ಆರೋಪಿ ಮೊದಲು ತನ್ನ ವಿಶೇಷ ಹೆಸರು ಬರೆದು ನಂತರ ಅದನ್ನು ಹೊಡೆದುಹಾಕಿ ತನ್ನ ನಿಜ ನಾಮಧೇಯ ಬರೆದಿರುವುದು ಪೊಲೀಸರ ತನಿಖೆ ವೇಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. +ನಾವು ಪ್ರವಾಸಿಗರು ಡಾರ್ಜಿಲಿಂಗ್‍ನಿಂದ ಬರುತ್ತಿರುವುದಾಗಿ ಹೋಟೆಲ್ ನವರಿಗೆ ತಿಳಿಸಿ, ಇಲ್ಲಿಂದ ಚೆನ್ನೈಗೆ ಹೋಗುತ್ತಿರುವುದಾಗಿ ಹೇಳಿದ್ದರು. ಆದರೆ, ನಂತರ ಇಬ್ಬರು ಯಾವ ಸುಳಿವು ನೀಡದೆ ಆ ಹೋಟೆಲ್‍ನಿಂದ ಹೊರಟು ಹೋಗಿದ್ದರು. ಜೊತೆಗೆ ನಕಲಿ ಆಧಾರ್‍ಕಾರ್ಡ್ ಬಳಸಿ ರೂಮ್ ಪಡೆದಿದ್ದರು ಎಂದು ಗೊತ್ತಾಗಿದೆ. +ಎನ್‍ಐಎ ಬಲೆಗೆ ಬಿದ್ದಿರುವ ಉಗ್ರರಾದ ಮುಸ್ಸಾವಿರ್ ಹುಸೇನ್ ಶಾಜೆಬ್ ಹಾಗೂ ಅಬ್ದುಲ್ ಮಥೀನ್ ತಾಹಾ ಅವರು ಕಳೆದ 28 ದಿನಗಳಿಂದ ಪಶ್ಚಿಮ ಬಂಗಾಳದಲ್ಲಿ ಪ್ರವಾಸಿಗರಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡುತ್ತಿದ್ದರು ಎಂದು ಪೊಲೀಸ್ ಮೂಲಗಳು ಉಲ್ಲೇಖಿಸಿವೆ. +ಈ ವೇಳೆ ಇಬ್ಬರು ಉಗ್ರರು ಕೋಲ್ಕತ್ತಾದ ನಗರ ವ್ಯಾಪ್ತಿಯಲ್ಲಿರುವ ಮೂರು ಹೋಟೆಲïಗಳಲ್ಲಿ ತಂಗಿದ್ದ ಬಗ್ಗೆ ಹಾಗೂ ಹೋಟೆಲ್ ವೊಂದರಲ್ಲಿ ಉಗ್ರರು ರಿಜಿಸ್ಟರ್‍ನಲ್ಲಿ ತಮ್ಮ ಹೆಸರು ಬರೆಯುತ್ತಿರುವ ಸಿಸಿಟಿವಿ ದೃಶ್ಯಾವಳಿ ಕೂಡ ಪೊಲೀಸರಿಗೆ ಲಭ್ಯವಾಗಿದೆ. \ No newline at end of file diff --git a/eesanje/url_46_179_9.txt b/eesanje/url_46_179_9.txt new file mode 100644 index 0000000000000000000000000000000000000000..158d35cb903654f845ca30c90dccc6760ee2e006 --- /dev/null +++ b/eesanje/url_46_179_9.txt @@ -0,0 +1,9 @@ +ರಾಜ್ಯದ ಹಲವೆಡೆ ಇನ್ನೂ ಮೂರ್ನಾಲ್ಕು ದಿನ ಮಳೆ +ಬೆಂಗಳೂರು,ಏ.14-ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳು ಮುಂದುವರೆಯುವ ಮುನ್ಸೂಚನೆಗಳಿವೆ. +ಕಲ್ಯಾಣ ಕರ್ನಾಟಕ, ಮಲೆನಾಡು, ಕೊಡಗು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು, ಬಿರುಗಾಳಿ, ಆಲಿಕಲ್ಲು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಆದರೆ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದರೂ ಮಳೆಯಾಗುತ್ತಿಲ್ಲ. +ಪೂರ್ವ ಮುಂಗಾರು ಕೂಡ ರಾಜ್ಯದಲ್ಲಿ ಕೈಕೊಟ್ಟಿದೆ. ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟು ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಆವರಿಸಿದೆ. ಇದರ ಬೆನ್ನಲ್ಲೇ ಕುಡಿಯುವ ನೀರಿನ ತೀವ್ರ ಸಂಕಷ್ಟ ಎದುರಾಗಿದೆ. ಬೇಸಿಗೆಯಲ್ಲಿ ಬರುತ್ತಿದ್ದ ಮುಂಗಾರು ಪೂರ್ವ ಮಳೆಯೂ ಕೂಡ ವಾಡಿಕೆ ಪ್ರಮಾಣದಲ್ಲಿ ಆಗುತ್ತಿಲ್ಲ. +ಜನವರಿಯಿಂದ ಇಲ್ಲಿಯವರೆಗೆ ಶೇ.44 ರಷ್ಟು ಮಳೆ ಕೊರತೆ ಕಂಡುಬಂದಿದೆ. ಈ ಅವಧಿಯಲ್ಲಿ 24 ಮಿಲಿ ಮೀಟರ್‍ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದರೆ, ಕೇವಲ 14 ಮಿಲಿ ಮೀಟರ್‍ನಷ್ಟು ಮಾತ್ರ ಮಳೆಯಾಗಿದೆ. +ರಾಜ್ಯದ ಬಹುತೇಕ ಕಡೆ ಒಣಹವೆ ಮುಂದುವರೆದಿದ್ದು, ಮಳೆಯ ಅಭಾವ ಎಲ್ಲೆಡೆ ಕಂಡುಬರುತ್ತಿದೆ. ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಬೀದರ್, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಕೆಲವೆಡೆ ಬಾಳೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಮಳೆಗೆ ಹಾನಿಗೀಡಾಗಿವೆ. +ಬಿರುಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಮೂರ್ನಾಲ್ಕು ದಿನಗಳು ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. +ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ ಹಗುರವಾದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಮೂರ್ನಾಲ್ಕು ದಿನದಿಂದಲೂ ಕಂಡುಬರುತ್ತಿದ್ದರೂ ಮಳೆ ಮಾತ್ರ ಬೀಳುತ್ತಿಲ್ಲ. +ತಾಪಮಾನ ಗರಿಷ್ಠ ಮಟ್ಟ ತಲುಪಿದೆ. ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಮಳೆಯ ನಿರೀಕ್ಷೆಯಲ್ಲೇ ಜನರು ಕಾಲ ದೂಡುತ್ತಿದ್ದಾರೆ. ಆದರೆ ಮಳೆಯಾಗುವ ನಿಖರವಾದ ಮುನ್ಸೂಚನೆಗಳು ಇಲ್ಲಿಯವರೆಗೂ ದೊರೆತಿಲ್ಲ. \ No newline at end of file diff --git a/eesanje/url_46_17_1.txt b/eesanje/url_46_17_1.txt new file mode 100644 index 0000000000000000000000000000000000000000..09cdd7e8ab180d80ec1c3e3bfa0a0144fd6d043c --- /dev/null +++ b/eesanje/url_46_17_1.txt @@ -0,0 +1,6 @@ +5 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದ 50 ಸಾವಿರ ಹುದ್ದೆಗಳ ನೇಮಕಾತಿ : ಸಚಿವ ಶರಣಪ್ರಕಾಶ್‌ ಪಾಟೀಲ್‌ + 50 +ಕಲಬುರಗಿ,ಸೆ.16-ಇಲ್ಲಿ ನಾಳೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ರಾಜ್ಯದ ವ್ಯಾಪ್ತಿಯನ್ನು ಒಳಗೊಂಡಿರುತ್ತದೆ. ಆದರೆ ನಮ ಭಾಗದ ದೀರ್ಘಕಾಲಿಕ ಸಮಸ್ಯೆಗಳು ಹಾಗೂ ಬೇಡಿಕೆಗಳಿಗೆ ಸ್ಪಂದಿಸಲು ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು. +ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2013-18 ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹ್ದುೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹ್ದುೆ ತುಂಬಲಾಗುವುದು. ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹ್ದುೆ ತುಂಬಲಾಗುವುದು ಎಂದು ಹೇಳಿದರು. +ನಮ ಸರ್ಕಾರದ ಅವಧಿ ಮುಗಿಯುವದರೊಳಗೆ 50,000 ಖಾಲಿಹ್ದುೆ ತುಂಬುವುದಾಗಿ ಹಾಗೂ ವಾರ್ಷಿಕ 5000 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ನಾಯಕರಾದ ಖರ್ಗೆ ಹಾಗೂ ಸಿಎಂ ಭರವಸೆ ನೀಡಿದ್ದು, ಅದಕ್ಕೆ ಬದ್ಧವಾಗಿದ್ದೇವೆ ಎಂದರು. +ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು ಮೆಡಿಕಲ್‌ ಕಾಲೇಜುಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಇತ್ತೀಚೆಗೆ ನಡೆಯುತ್ತಿರುವ ಕೆಲವು ಕೋಮು ಸೂಕ್ಷ್ಮ ಘಟನೆಗಳಿಗೆ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_17_10.txt b/eesanje/url_46_17_10.txt new file mode 100644 index 0000000000000000000000000000000000000000..537d0cfea7effba4b884da1256df4223e4df9163 --- /dev/null +++ b/eesanje/url_46_17_10.txt @@ -0,0 +1,5 @@ +ಸುರತ್ಕಲ್‌ : ಮಸೀದಿ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ + ------- +ಮಂಗಳೂರು:ಸುರತ್ಕಲ್‌ ಬಳಿಯ ಕಾಟಿಪಳ್ಳದಲ್ಲಿ ಕಳೆದ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್‌ ನ ಬದ್ರಿಯಾ ಬಳಿ ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್‌ ಮಿಲಾದ್‌ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ. +ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ. +ಉದೇಶಪೂರ್ವಕವಾಗಿ ಈ ಕೃತ್ಯ ಎಸಗಲಾಗಿದೆ ಎಂಬ ಮಾತು ಕೇಳಿಬರುತ್ತಿದೆ .ಪೊಲೀಸರು ಸ್ಥಳೀಯ ಸಿಸಿಟಿವಿ ಪರಿಶೀಲಿಸುತ್ತಿದ್ದು ,ತನಿಖೆ ಮುಂದುವರೆದಿದೆ.ಪಕ್ಕದ ಮನೆ ಮೇಲೆ ಕಲ್ಲು ಎಸೆಯಲು ಹೋಗಿ ಅದು ಪ್ರಾರ್ಥನಾ ಮಂದಿರದ ಕಿಟಕಿಗೆ ಬಿದ್ದಿದೆ. \ No newline at end of file diff --git a/eesanje/url_46_17_11.txt b/eesanje/url_46_17_11.txt new file mode 100644 index 0000000000000000000000000000000000000000..850c1466d87e790c0abe7ffca6f03116bce56b02 --- /dev/null +++ b/eesanje/url_46_17_11.txt @@ -0,0 +1,5 @@ +ವೈಯಾಲಿಕಾವಲ್ ಪೊಲೀಸರಿಂದ ಶಾಸಕ ಮುನಿರತ್ನ ತೀವ್ರ ವಿಚಾರಣೆ +ಬೆಂಗಳೂರು,ಸೆ.15– ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಕೋಲಾರ ಜಿಲ್ಲೆಯ ನಂಗಲಿ ಗ್ರಾಮದ ಬಳಿಯಿಂದ ಮುನಿರತ್ನ ಅವರನ್ನು ಕರೆತಂದು ಬಂಧನದ ಪ್ರಕ್ರಿಯೆ ಮುಗಿದ ನಂತರ ವೈದ್ಯಕೀಯ ತಪಾಸಣೆಗೊಳಪಡಿಸಿ ಬಳಿಕ ಠಾಣೆಗೆ ಕರೆತಂದು ವಿಚಾರಣೆಗೊಳಪಡಿಸಿದ್ದಾರೆ. +ನೀವು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ನಿಂದಿಸಿ ಲಂಚ ಕೇಳಿದ್ದೀರಾ? ಬಿಬಿಎಂಪಿಯ ಮಾಜಿ ಸದಸ್ಯ ವೇಲು ನಾಯ್ಕರ್ ಅವರಿಗೆ ಏಕೆ ಜಾತಿನಿಂದನೆ ಮಾಡಿದ್ದೀರಿ? ಅವರಿಗೂ, ನಿಮಗೂ ಏನು ಸಂಬಂಧ? ಗುತ್ತಿಗೆಯಲ್ಲಿ ಅವರ ಪಾತ್ರವೇನು? ನೀವು ಈ ರೀತಿ ಪದಗಳನ್ನು ಬಳಸಿ ನಿಂದನೆ ಮಾಡಬಹುದೇ? ನೀವು ಜನಪ್ರತಿನಿಧಿಗಳು ಈ ರೀತಿ ಮಾತನಾಡುವುದು ಸರಿಯೇ? ಎಂಬಿತ್ಯಾದಿ ಪ್ರಶ್ನೆಗಳನ್ನು ಎಸಿಪಿಯವರು ಕೇಳಿ ಮಾಹಿತಿಯನ್ನು ಪಡೆದುಕೊಂಡಿ ದ್ದಾರೆ ಎಂದು ತಿಳಿದುಬಂದಿದೆ. +ಮಧ್ಯರಾತ್ರಿ 12ರಿಂದ 1.30ರವರೆಗೆ ಸುಮಾರು ಒಂದೂವರೆ ಗಂಟೆಗಳ ಕಾಲ ಎಸಿಪಿಯವರು ಮುನಿರತ್ನ ಅವರನ್ನು ವಿಚಾರಣೆಗೊಳಪಡಿಸಿದ್ದರೆಂದು ಗೊತ್ತಾಗಿದೆ.ಆ ಆಡಿಯೋದಲ್ಲಿ ಇರುವುದು ನನ್ನ ಧ್ವನಿಯಲ್ಲ. ನಾನು ಜನಪ್ರತಿನಿಧಿ. ಆ ರೀತಿ ಮಾತನಾಡಲಿಲ್ಲ. ನನ್ನ ವಿರುದ್ಧ ಪಿತೂರಿ ಹಾಗೂ ಷಡ್ಯಂತ್ರ ಮಾಡಿದ್ದಾರೆ ಎಂದು ಮುನಿರತ್ನ ತನಿಖಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ. +ಇಂದು ಸಹ ಮುನಿರತ್ನ ಅವರನ್ನು ತನಿಖಾಧಿಕಾರಿಗಳು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ಗೊತ್ತಾಗಿದೆ. ಮುನಿರತ್ನ ಅವರ ಬಂಧನದ ಹಿನ್ನಲೆಯಲ್ಲಿ ವೈಯಾಲಿಕಾವಲ್ ಪೊಲೀಸ್ ಠಾಣೆಯ ಸುತ್ತಮುತ್ತ ಬಿಗಿಯಾದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. \ No newline at end of file diff --git a/eesanje/url_46_17_12.txt b/eesanje/url_46_17_12.txt new file mode 100644 index 0000000000000000000000000000000000000000..7435b303c5c5504a91cac1122f0d109a31d4fba7 --- /dev/null +++ b/eesanje/url_46_17_12.txt @@ -0,0 +1,8 @@ +ಪರಪ್ಪನ ಅಗ್ರಹಾರ ಜೈಲಲ್ಲಿ ಏನೇನೂ ಬದಲಾಗಿಲ್ಲ, ರೌಡಿಗಳ ಬಳಿ ಮೊಬೈಲ್ + +ಬೆಂಗಳೂರು,ಸೆ.15-ಯಾರ್ ಏನೇ ಮಾಡಿದರೂ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿ ಸರಿ ಹೋಗಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ.ನಿನ್ನೆ ಸಂಜೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮತ್ತವರ ತಂಡ ಪರಪ್ಪನ ಅಗ್ರಹಾರದ ಜೈಲಿನ ಮೇಲೆ ನಡೆಸಿದ ದಿಢೀರ್ ದಾಳಿ ವೇಳೆ ರೌಡಿ ವಿಲ್ಸನ್ ಗಾರ್ಡನ್ ನಾಗ ಮತ್ತಿತರರ ಬ್ಯಾರಕ್ಗಳಲ್ಲಿ 15 ಮೊಬೈಲ್ ಫೋನ್ಗಳು, ಚಾರ್ಜರ್ಗಳು, ಪೆನ್ ಡ್ರೈವ್ಗಳು, ಇಯರ್ಫೋನ್ಗಳು, ಎಲೆಕ್ಟ್ರಾನಿಕ್ ಸ್ಟೌವ್ ಮತ್ತಿತರ ವಸ್ತುಗಳು ಪತ್ತೆಯಾಗಿವೆ. +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರನಟ ದರ್ಶನ್, ರೌಡಿ ವಿಲ್ಸನ್ ಗಾರ್ಡನ್ ನಾಗ ಮತ್ತಿತರ ಜೊತೆಗೆ ಜೈಲಿನಲ್ಲಿ ಕುರ್ಚಿ ಮೇಲೆ ಕುಳಿತು ಸಿಗರೇಟ್ ಸೇದುತ್ತಿದ್ದ ಪೋಟೋಗಳು ವೈರಲ್ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿಗತಿ ಬಗ್ಗೆ ಕಳವಳ ಹುಟ್ಟಿಕೊಂಡಿತ್ತು. +ತಕ್ಷಣ ಎಚ್ಚೆತ್ತುಕೊಂಡ ಸರ್ಕಾರ ಪರಪ್ಪನ ಅಗ್ರಹಾರ ಬಂಧಿಖಾನೆಯ 9 ಅಧಿಕಾರಿಗಳನ್ನು ಅಮಾನತು ಮಾಡಿ 30ಕ್ಕೂ ಹೆಚ್ಚು ಸಿಬ್ಬಂದಿ ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿತ್ತು. ನಂತರ ಜೈಲಿನ ಪರಿಸ್ಥಿತಿ ಸರಿ ಹೋಗಬಹುದು ಎಂಬ ಸರ್ಕಾರದ ನಿರೀಕ್ಷೆ ಇದೀಗ ಮತ್ತೆ ಹುಸಿಯಾಗಿದೆ. +ಜೈಲಿನಲ್ಲಿ ರಾಜಾತಿಥ್ಯ, ಮೊಬೈಲ್ ಬಳಕೆ ಕುರಿತಂತೆ ಈಗಾಗಲೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಜೈಲಿನ ಪರಿಸ್ಥಿತಿ ಕುರಿತಂತೆ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಿದ್ದಾರೆ ಆದರೂ ಜೈಲಿನ ಸ್ಥಿತಿ ಸುಧಾರಿಸದಿರುವುದು ಸರ್ಕಾರಕ್ಕೆ ತಲೆನೋವು ತರಿಸಿದೆ. +ಡಿಸಿಪಿ ಸಾರಾ ಫಾತಿಮಾ, ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಎಸಿಪಿ, ಪರಪ್ಪನ ಅಗ್ರಹಾರ ಠಾಣೆಯ ಇನ್‌್ಸಪೆಕ್ಟರ್, ಇತರ ಮೂವರು ಇನ್‌್ಸಪೆಕ್ಟರ್ಗಳು ಸೇರಿದಂತೆ 30 ಪೊಲೀಸರಿದ್ದ ತಂಡ ನಿನ್ನೆ ಸಂಜೆ 6 ರಿಂದ 830ರವರೆಗೆ ನಡೆಸಿದ ದಿಢೀರ್ ದಾಳಿ ವೇಳೆ ಪರಪ್ಪನ ಅಗ್ರಹಾರ ಜೈಲಿನ ಸ್ಥಿತಿ ಇನ್ನು ಸುಧಾರಿಸಿಲ್ಲ ಎನ್ನುವುದಕ್ಕೆ ಅಲ್ಲಿ ಸಿಕ್ಕಿರುವ ವಸ್ತುಗಳೇ ಸಾಕ್ಷಿಯಾಗಿವೆ. +ಚಿತ್ರನಟ ದರ್ಶನ್ ಜೊತೆಗೆ ಕಾಣಿಸಿಕೊಂಡಿದ್ದ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಇನ್ನಿತರ ರೌಡಿಗಳಿರುವ ಬ್ಯಾರಕ್ಗಳ ಮೇಲೆ ದಾಳಿ ನಡೆಸಿದಾಗ ಕೆಲವರ ಬಳಿ ಇದ್ದ 15 ಮೊಬೈಲ್ ಫೋನ್ಗಳು ಮತ್ತಿತರ ಬಹುಪಯೋಗಿ ವಸ್ತುಗಳನ್ನು ವಶಪಡಿಸಿಕೊಂಡು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗಿದೆ. \ No newline at end of file diff --git a/eesanje/url_46_17_2.txt b/eesanje/url_46_17_2.txt new file mode 100644 index 0000000000000000000000000000000000000000..fd130b05323bb2084dddcf960c9ec84c8b5545e1 --- /dev/null +++ b/eesanje/url_46_17_2.txt @@ -0,0 +1,9 @@ +ಜೈಲಿನ ಅಧಿಕಾರಿ, ಸಿಬ್ಬಂದಿಗಳಿಂದಲೇ ‘ದಾಸ’ನಿಗೆ ರಾಜಾತಿಥ್ಯ + +ಬೆಂಗಳೂರು, ಸೆ.16-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇತರರಿಗೆ ಆತಿಥ್ಯ ನೀಡಿದ್ದಾರೆಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. +ಕಾರಾಗೃಹದೊಳಗೆ ರಾಜಾತಿಥ್ಯದ ಬಗ್ಗೆ ತನಿಖೆ ನಡೆಸುತ್ತಿರುವ ಮೂರು ತಂಡಗಳು ತಮ ತನಿಖೆಗಳನ್ನು ತೀವ್ರಗೊಳಿಸಿದ್ದು, ತನಿಖೆ ಅಂತಿಮ ಹಂತಕ್ಕೆ ಬಂದಿದೆ.ನಟ ದರ್ಶನ್‌, ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇತರರು ಕಾರಾಗೃಹದ ಆವರಣದಲ್ಲಿ ಚೇರ್‌ನಲ್ಲಿ ಕುಳಿತು ಟೀಪಾಯಿ ಇಟ್ಟುಕೊಂಡು, ಕೈಯಲ್ಲಿ ಕಾಫಿ ಹಾಗೂ ಸಿಗರೇಟ್‌ ಹಿಡಿದಿರುವಂತಹ ಫೋಟೋ ಗಳು ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. +ಹಾಗಾಗಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಈ ಬಗ್ಗೆ ಮೂರು ಪ್ರಕರಣಗಳು ದಾಖಲಾದವು. ಆ ಪೈಕಿ 2 ಪ್ರಕರಣಗಳಲ್ಲಿ ದರ್ಶನ್‌ ಹೆಸರನ್ನು ಉಲ್ಲೇಖಿಸಲಾಗಿದೆ.ದರ್ಶನ್‌ ಹಾಗೂ ರೌಡಿ ನಾಗನಿಗೆ ಟೀ, ಸಿಗರೇಟ್‌, ಚೇರ್‌ ಕೊಟ್ಟವರ್ಯಾರು ಎಂಬುವುದರ ಬಗ್ಗೆ ಹುಳಿಮಾವು ಠಾಣೆ ಇನ್‌್ಸಪೆಕ್ಟರ್‌ ತನಿಖೆ ನಡೆಸುತ್ತಿದ್ದಾರೆ. +ಜೈಲಿನ ಕೆಲವು ಅಧಿಕಾರಿಗಳು ಹಾಗೂ ಸಿಬ್ಬಂದಿಗಳೇ ರೌಡಿ ವಿಲ್ಸನ್‌ಗಾರ್ಡನ್‌ ನಾಗನ ಮೂಲಕ ಇವೆಲ್ಲವನ್ನು ಸರಬರಾಜು ಮಾಡಲಾಗಿದೆ ಎಂಬುದು ಗೊತ್ತಾಗಿದೆ.ಅಲ್ಲದೆ ಕಾರಾಗೃಹದೊಳಗೆ ರೌಡಿ ಶೀಟರ್‌ ಮಗ ಸತ್ಯನೊಂದಿಗೆ ನಟ ದರ್ಶನ್‌ ವಿಡಿಯೋಕಾಲ್‌ನಲ್ಲಿ ಮಾತನಾಡಿರುವ ಬಗ್ಗೆ ಬೇಗೂರು ಠಾಣೆ ಇನ್‌್ಸಪೆಕ್ಟರ್‌ ತನಿಖೆ ನಡೆಸುತ್ತಿದ್ದಾರೆ. +ರೌಡಿಶೀಟರ್‌ ಮಗ ಸತ್ಯನಿಗೆ ವಿಡಿಯೋಕಾಲ್‌ ಮಾಡಲು ಬಳಸಿರುವ ಮೊಬೈಲ್‌ನ್ನು ಸಹ ಜೈಲು ಅಧಿಕಾರಿಗಳ ಮೂಲಕ ಅಕ್ರಮವಾಗಿ ಪಡೆದಿರುವುದು ತನಿಖೆಯಿಂದ ತಿಳಿದು ಬಂದಿದೆ.ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಅವರು ತನಿಖೆ ಮಾಡುತ್ತಿರುವ ಮತ್ತೊಂದು ಪ್ರಕರಣದಲ್ಲಿ, ಜೈಲು ಅಧಿಕಾರಿಗಳು ತಮ ಕಾರ್ಯವ್ಯಾಪ್ತಿ ಮೀರಿ ಖೈದಿಗಳನ್ನು ಬಳಸಿಕೊಂಡು ಕೆಲಸ ಮಾಡಿರುವುದು ಕಂಡುಬಂದಿದೆ. +ರಾಜಾತಿಥ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಮಾನತುಗೊಂಡಿರುವ ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್‌‍ ನೀಡಲಾಗಿದ್ದು, ಕೆಲವರು ಇನ್ನು ವಿಚಾರಣೆಗೆ ಹಾಜರಾಗಿಲ್ಲ. +ರೌಡಿ ಶೀಟರ್‌ ತನ್ನ ಮಗನಿಗೆ ವಿಡಿಯೋಕಾಲ್‌ ಮಾಡಲು ಬಳಿಸಿರುವ ಮೊಬೈಲ್‌ನ್ನು ಎಫ್‌ಎಸ್‌‍ಎಲ್‌ಗೆ ಹೆಚ್ಚಿನ ತನಿಖೆಗಾಗಿ ಕಳುಹಿಸಲಾಗಿದ್ದು, ಸಂಬಂಧಪಟ್ಟ ಟೆಲಿಕಾಂ ಸಂಸ್ಥೆಗಳಿಗೂ ವರದಿ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ.ಒಟ್ಟಾರೆ ಈ ಮೂರು ಪ್ರಕರಣಗಳ ತನಿಖೆ ಬಹುತೇಕ ಮುಕ್ತಾಯ ಹಂತದಲ್ಲಿವೆ. \ No newline at end of file diff --git a/eesanje/url_46_17_3.txt b/eesanje/url_46_17_3.txt new file mode 100644 index 0000000000000000000000000000000000000000..3322e429440153027a1ce96778b374a22ad68a52 --- /dev/null +++ b/eesanje/url_46_17_3.txt @@ -0,0 +1,6 @@ +ಮಾನವ ಸರಪಳಿ ನೆಪದಲ್ಲಿ ಬಿಟ್ಟಿ ಪ್ರಚಾರ ಗಿಟ್ಟಿಸಿದ ಸಿದ್ದರಾಮಯ್ಯ ಸರ್ಕಾರಕ್ಕೆ ಹೆಚ್ಡಿಕೆ ತರಾಟೆ + +ಬೆಂಗಳೂರು,ಸೆ.16– ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರವನ್ನು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. +ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಜಾಪ್ರಭುತ್ವದ ಸರಪಳಿಯ ತಳ ಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ, ತಾಲೂಕು ಪಂಚಾಯತಿ ಮತ್ತು ಬಿಬಿ ಎಂಪಿ ಚುನಾವಣೆ ನಡೆಸಿಲ್ಲ, ಏಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಅವರು ಕಿಡಿಕಾರಿದ್ದಾರೆ. +ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಅವರು ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_17_4.txt b/eesanje/url_46_17_4.txt new file mode 100644 index 0000000000000000000000000000000000000000..cf20ef02101a258d2d8af49a99417c4318123b65 --- /dev/null +++ b/eesanje/url_46_17_4.txt @@ -0,0 +1,10 @@ +ಸ್ಲೀಪರ್​​ ಸೆಲ್​​ಗಳ ತಾಣವಾಗುತ್ತಿವೆ ಮೈಸೂರು-ಮಲೆನಾಡು : ಸಿ.ಟಿ.ರವಿ ಹೊಸ ಬಾಂಬ್ + : +ಮೈಸೂರು,ಸೆ.16– ಮೈಸೂರು- ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಬಾಂಬ್ ಸಿಡಿಸಿದ್ದಾರೆ. +ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಬಾವುಟ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಮಲೆನಾಡು ಸ್ಲೀಪರ್ ಸೆಲ್ಗಳ ತಾಣವಾಗುತ್ತಿದೆ, ಭಯೋತ್ಪಾದಕ ಕೃತ್ಯ ಎಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸಲಾಗುತ್ತಿತ್ತು. ಅದನ್ನು ಬಜರಂಗದಳ ಪತ್ತೆ ಮಾಡಿತ್ತು. ದೇಶ ವಿರೋಧಿ ಚಟುವಟಿಕೆ ನಡೆಸಿದವರನ್ನು ಸಮಗ್ರ ತನಿಖೆ ನಡೆಸಬೇಕಿತ್ತು. ಆದರೆ ಯಾರೋ ಪ್ರಭಾವಿಗಳು ಹೇಳಿದ್ದಾರೆಂದು ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ, ಇದು ಸರಿಯಲ್ಲ ಎಂದಿದ್ದಾರೆ. +ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುನಿರತ್ನ ಆಡಿಯೋ ಪ್ರಕರಣದ ಹಿಂದೆ ಟೂಲ್ ಕಿಟ್ ಕೆಲಸ ಮಾಡಿದೆ. ಹನಮಂತಪ್ಪ ಆಡಿಯೋಯಿಂದ ಇದು ಸಾಬೀತಾಗಿದೆ. ಕಾಂಗ್ರೆಸ್ ತಮ ಪಕ್ಷದವರಿಗೆ ಒಂದು ನ್ಯಾಯ ಬಿಜೆಪಿಗೆ ಒಂದು ನ್ಯಾಯ ಅನ್ನೋ ನೀತಿ ಅನುಸರಿಸುತ್ತಿದ್ದಾರೆ. +ಕಾಂಗ್ರೆಸ್ ಶಾಸಕ ಚೆನ್ನರೆಡ್ಡಿ ಮೇಲೂ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸುವ ಬದಲು ಸಿಎಂ ತಮ ಮನೆಯಲ್ಲಿ ಬಿರಿಯಾನಿ ಊಟ ಹಾಕಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ನಾಗೇಂದ್ರ ಸೇರಿ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿದೆ. ಯಾರನ್ನ ಬಂಧಿಸುವ ಕೆಲಸ ಮಾಡಿಲ್ಲ. ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಾದ ದಿನವೇ ಬಂಧಿಸಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ವರದಿ ಬರುವ ಮುನ್ನವೇ ಮುನಿರತ್ನ ಅವರನ್ನು ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. +ಇನ್ನೂ ಮಂಗಳೂರು ಬಿ.ಸಿ ರೋಡ್ ನಲ್ಲಿ ಹಿಂದುಗಳಿಗೆ ಸವಾಲಾಕಿರುವ ಪ್ರಕರಣದ ಕುರಿತು ಮಾತನಾಡಿರುವ ಸಿ.ಟಿ ರವಿ, ಇದು ಭಾರತದ ದೇಶಕ್ಕೆ ಹಾಕಿರುವ ಸಾವಲು. ಯುದ್ಧವನ್ನು ನಾವು ಯುದ್ಧವಾಗಿಯೇ ಸ್ವೀಕರಿಸಿ ಉತ್ತರ ಕೊಡುತ್ತೇವೆ ಎಂದು ಗುಡುಗಿದ್ದಾರೆ. +ಹಿಂದೆ ನಮ ಪೂರ್ವಜರು ಕತ್ತಿ ತೋರಿಸಿದಾಗ ಕತ್ತಿಯಿಂದಲೇ ಉತ್ತರ ಕೊಟ್ಟಿದ್ದರು. ಯುದ್ಧಕ್ಕೆ ಸವಾಲು ಹಾಕಿದಾಗ ಯುದ್ಧದ ಮೂಲಕವೇ ಗೆಲ್ಲಬೇಕು. ಸಲಹೆ ಎಲ್ಲಾ ಕೆಲಸ ಮಾಡಲ್ಲ. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ. ಇಲ್ಲವಾದರೇ ನಮ ದೇಶ ಬಾಂಗ್ಲಾದೇಶ, ಪಾಕಿಸ್ತಾನದಂತೆ ಆಗುತ್ತದೆ. ಅದಕ್ಕೆ ನಾವು ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_17_5.txt b/eesanje/url_46_17_5.txt new file mode 100644 index 0000000000000000000000000000000000000000..1dac36c42be0c0cc5e67b23a439e693626817731 --- /dev/null +++ b/eesanje/url_46_17_5.txt @@ -0,0 +1,8 @@ +ಭಾರತಕ್ಕೆ ಪ್ರವೇಶಿಸಿದ ನಿಫಾ ವೈರಸ್, ರಾಜ್ಯದಲ್ಲಿ ಹೈ ಅಲರ್ಟ್ + 24-- +ಬೆಂಗಳೂರು,ಸೆ.16– ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಫಾ ವೈರಸ್ಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ನಗರದಲ್ಲಿರುವ ಹೊರ ರಾಜ್ಯದ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಟ್ಟಿದ್ದು ಹೊರ ಊರಿನಿಂದ ಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ತೀರ್ಮಾನಿಸಲಾಗಿದೆ. +ಅದರಲ್ಲೂ ವಿಮಾನ ನಿಲ್ದಾಣ, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ರಾಜ್ಯದಿಂದ ಹೊರ ಹೋಗುವ ಹಾಗೂ ಒಳಬರುವ ಪ್ರಯಾಣಿಕರನ್ನು ತಪಾಸಣೆಗೊಳಪಡಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. +ಕೇರಳದ ಮಲ್ಲಪ್ಪುರಂ ಜಿಲ್ಲೆಯ ನಿಲಂಬೂರು ಗ್ರಾಮದ 23 ವಿದ್ಯಾರ್ಥಿ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಆತನಿಗೆ ಕೆಲ ದಿನಗಳ ಹಿಂದೆ ಜಾಂಡೀಸ್ ರೀತಿಯ ಕಾಯಿಲೆ ಕಾಣಿಸಿಕೊಂಡಿತ್ತು. ಆರೋಗ್ಯ ಸರಿ ಹೋಗದ ಕಾರಣ ಆತ ತನ್ನ ಊರಿಗೆ ಮರಳಿದ್ದ ಅಲ್ಲಿಯೂ ಆತನಿಗೆ ಸೂಕ್ತ ಚಿಕಿತ್ಸೆ ದೊರೆಯದೆ ಸಾವನ್ನಪ್ಪದ್ದಾನೆ. ಮೃತ ವ್ಯಕ್ತಿಯನ್ನು ತಪಾಸಣೆಗೊಳಪಡಿಸಿದಾಗಾ ಆತನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. +ಮೃತ ವಿದ್ಯಾರ್ಥಿ ಬೆಂಗಳೂರಿನಲ್ಲಿ ನೆಲೆಸಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಆತಂಕ ಮನೆ ಮಾಡಿರುವ ಹಿನ್ನೆಲೆಯಲ್ಲಿ ಕೇರಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಲ್ಲೂ ವಿದ್ಯಾರ್ಥಿ ದಾಖಲಾಗಿದ್ದ ಬೆಂಗಳೂರಿನ ಕಾಲೇಜು ಹಾಗೂ ಆತ ವಾಸಿಸುತ್ತಿದ್ದ ಮನೆ ಮತ್ತಿತರ ಪ್ರದೇಶಗಳಲ್ಲಿ ವಾಸಿಸುತ್ತಿರುವವರನ್ನು ತಪಾಸಣೆಗೊಳಪಡಿಸಲು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. +ಏನೀದು ನಿಫಾ ಸೋಂಕು; ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ನಿಫಾ ಸೋಂಕು ಮಾರಣಾಂತಿಕವಾಗಿದೆ. ಆರಂಭದಲ್ಲಿ ಸಾಮಾನ್ಯ ಜ್ವರ, ತಲೆನೋವು, ಮಾಂಸಖಂಡಗಳ ಸೆಳೆತದಂತೆ ಕಂಡು ಬಂದು ಕೊನೆಗೆ ಆತನ ಜೀವವನ್ನೇ ನಿಫಾ ವೈರಾಣುಗಳು ಬಲಿ ಪಡೆದುಕೊಳ್ಳುತ್ತದೆ. +ನಿಫಾ ಸೋಂಕಿಗೆ ಇದುವರೆಗೂ ಯಾವುದೇ ನಿರ್ದಿಷ್ಟ ಚಿಕಿತ್ಸೆ ಎಂಬುದಿಲ್ಲ. ಆದರೆ, ಸಾಮಾನ್ಯ ರೋಗಿಗೆ ನೀಡುವ ಚಿಕಿತ್ಸೆ ನೀಡಬೇಕಾಗುತ್ತದೆ. ಹೀಗಾಗಿ ನಿಫಾ ಸೋಂಕಿನ ಬಗ್ಗೆ ಎಚ್ಚರವಹಿಸುವ ಅಗತ್ಯವಿದೆ. \ No newline at end of file diff --git a/eesanje/url_46_17_6.txt b/eesanje/url_46_17_6.txt new file mode 100644 index 0000000000000000000000000000000000000000..2dd8f16ae333d6303c8aad21e05cb648f0e6e1b7 --- /dev/null +++ b/eesanje/url_46_17_6.txt @@ -0,0 +1,12 @@ +ಹಂತ ಹಂತವಾಗಿ 2.5 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿ : ಸಚಿವ ಪ್ರಿಯಾಂಕ್ ಖರ್ಗೆ +2.5 : +ಕಲಬುರಗಿ,ಸೆ. 16-ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹ್ದುೆಗಳು ಖಾಲಿ ಇದ್ದು ಹಂತಹಂತವಾಗಿ ಭರ್ತಿ ಮಾಡ ಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು. +ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. +ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದರು. +ನಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ ವರ್ಷವಾದರೂ ಯೋಜನೆ ಬರುತ್ತವೆ ಎಂದು ಹೇಳಿದರು. +ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹ್ದುೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದ ಸಚಿವರು ತಮ ಸರ್ಕಾರ ಬಂದ ಮೇಲೆ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈಗಾಗಲೇ ನಮ ಇಲಾಖೆಯಲ್ಲಿಯೇ 800 ಇಂಜಿನಿರ್ಯ ಗಳ ಹ್ದುೆ ಭರ್ತಿ ಮಾಡಲಾಗಿದೆ ಎಂದರು. +ಮುಂದಿನ ಎರಡು ವರ್ಷದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ನಮ ಭಾಗದ ರಸ್ತೆಗಳ ರಿಪೇರಿ ಹಾಗೂ ಉನ್ನತಿಕರಣ ಮಾಡಲಾಗುವುದು ಎಂದು ಹೇಳಿದ ಖರ್ಗೆ, ಕಲಬುರಗಿ ಹಾಗೂ ಬೀರ್ದ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಮ ಭಾಗದ ಅಭಿವೃದ್ದಿ ವಿಚಾರದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಅವರು ಭರವಸೆ ನೀಡಿದರು. +ಇದೇ ವೇಳೆ ರಾಜಕೀಯ ಆರೋಪಗಳಿಗೆ ತಿರುಗೇಟು ನೀಡಿದ ಪ್ರಿಯಾಂಕ್ ಖರ್ಗೆ, ಕೆಲವರು ಇಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ, ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ಸಚಿವರೂ ಆಗಮಿಸುತ್ತಾರೆ ಎಂಬ ಕಾರಣಕ್ಕೆ ಕೆಲವರು ಪ್ರತಿಭಟನೆ ನಡೆಸುತ್ತಿದ್ದಾರೆ, ಇದು ಅನಾವಶ್ಯಕ, ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲಾಗುತ್ತದೆ. ಮುಜುಗರ ಉಂಟುಮಾಡಬೇಕು ಎಂಬ ಕಾರಣಕ್ಕಾಗಿಯೇ ಪ್ರತಿಭಟನೆ ಮಾಡುವವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದರು. +ಪ್ರತಿಭಟನೆ ಮಾಡುವುದಿದ್ದರೆ ಶಾಸಕ ಮುನಿರತ್ನ ವಿರುದ್ದ ಮಾಡಲಿ ಅದಕ್ಕೂ ಮೊದಲು ಶಿಕ್ಷಣ ಸಂಸ್ಥೆಗಾಗಿ ಪಡೆದ ಜಾಗದಲ್ಲಿ ಬಿರಿಯಾನಿ ಹೊಟೇಲ್ ನಡೆಸುತ್ತಿರುವುದರ ಬಗ್ಗೆ ಸ್ಪಷ್ಟನೆ ನೀಡಲಿ. ಅದು ಬಿಟ್ಟು ಇಲ್ಲಿ ಬಂದು ಡ್ರಾಮಾ ಮಾಡಬಾರದು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಾಂಗ್ ನೀಡಿದರು.ಫಾಸ್ಟ್ ಟ್ರಾಕ್ ಕೋರ್ಟ್ ಆಗಬೇಕಿರುವುದು ಬಿಜೆಪಿ ಹಗರಣದ ಬಗ್ಗೆ ವಿಚಾರಣೆ ನಡೆಸಲು ಹೊರತು ದರ್ಶನ್ ಕೇಸ್ ಬಗ್ಗೆ ವಿಚಾರಣೆ ನಡೆಸಲು ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ನಾಗಮಂಗಲ ಗಲಭೆ ವಿಚಾರ, ಸಮಗ್ರ ತನಿಖೆ ನಡೆಸಲಾಗುತ್ತಿದೆ. ಅದರ ಹಿಂದೆ ಯಾರೇ ಇದ್ದರೂ ಕಾನೂನು ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಈಗಾಗಲೇ ಹೇಳಿದ್ದಾರೆ ಎಂದು ಖರ್ಗೆ, ಗಲಭೆ ಬಗ್ಗೆ ಪರಿಶೀಲನೆ ಮಾಡಲು ಬಿಜೆಪಿ ಸತ್ಯಶೋಧನೆ ಸಮತಿ ರಚಿಸಿರುವ ಬಗ್ಗೆ ವ್ಯಂಗ್ಯವಾಡಿದರು. ರಾಜ್ಯದಲ್ಲಿ ಬರಗಾಲ ಇದ್ದಾಗ ಬಿಜೆಪಿ ಯಾಕೆ ಸತ್ಯಶೋಧನೆ ಸಮಿತಿ ರಚನೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು. +ನಾಗಮಂಗಲ ಗಲಭೆ ಬಗ್ಗೆ ಮಾತನಾಡುವ ಪ್ರಧಾನಿ ಯಡಿಯೂರಪ್ಪನವರ ಪೋಕ್ಸೋ ಕೇಸಿನ ಬಗ್ಗೆ, ಮುನಿರತ್ನ ಕೇಸಿನ ಬಗ್ಗೆ ಏಕೆ ಮಾತನಾಡಲ್ಲ ? ಅವರಿಗೆ ಮಾಹಿತಿ ಹೋಗಿರುತ್ತದೆ ತಾನೇ ? ಎಂದು ಪ್ರಿಯಾಂಕ್ ಪ್ರಶ್ನಿಸಿದರು. \ No newline at end of file diff --git a/eesanje/url_46_17_7.txt b/eesanje/url_46_17_7.txt new file mode 100644 index 0000000000000000000000000000000000000000..5daa7955af9649a35eaeb6cd2e3fee7c369bde1d --- /dev/null +++ b/eesanje/url_46_17_7.txt @@ -0,0 +1,8 @@ +ಆರ್‌ಎಸ್‌‍ಎಸ್‌‍ ಕಚೇರಿಗೆ ನುಗ್ಗಿ ಅನುಚಿತ ವರ್ತಿಸಿದ ಪೋಲಿಸರು ಕ್ಷಮೆಯಾಚಿಸಬೇಕು : ವಿಜಯೇಂದ್ರ + : +ಬೆಂಗಳೂರು,ಸೆ.16-ಪಾಂಡವಪುರದ ಆರ್‌ಎಸ್‌‍ಎಸ್‌‍ ಕಚೇರಿಗೆ ಪೋಲಿಸರು ನುಗ್ಗಿದ ಘಟನೆ ಅತ್ಯಂತ ಖಂಡನೀಯ. ಸರ್ಕಾರ ಈ ಕೂಡಲೇ ಘಟನೆಯ ಕುರಿತು ಕ್ಷಮೆಯಾಚಿಸಲಿ ಪೊಲೀಸ್‌‍ ದರ್ಪ ಮೆರೆದ ಅಧಿಕಾರಿಗಳನ್ನು ಅಮಾನತ್ತಿನಲ್ಲಿಡಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಆರ್‌ಎಸ್‌‍ಎಸ್‌‍ ಕಚೇರಿಗೆ ಪೊಲೀಸರು ನುಗ್ಗಿರುವ ಘಟನೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಸಂವಿಧಾನ ವಿರೋಧಿ ಕ್ರಮ ಹಾಗೂ ಹಿಂದೂ ಸಮಾಜವನ್ನು ಪ್ರಚೋದಿಸುವ ನಡವಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮೊನ್ನೆ ಗಣೇಶೋತ್ಸವ ಮೆರವಣಿಗೆಯ ಮೇಲೆ ನಡೆದ ಗಲಭೆಯಿಂದಾಗಿ ನಾಗಮಂಗಲ ಇನ್ನು ಸಹಜ ಸ್ಥಿತಿಯತ್ತ ಮರಳುತ್ತಿಲ್ಲ ಈ ನಡುವೆ ಬೆಂಕಿಗೆ ತುಪ್ಪ ಸುರಿದಂತೆ ಪೋಲಿಸರು ನಿನ್ನೆ ರಾತ್ರಿ ಪಾಂಡವಪುರದ ಆರ್‌.ಎಸ್‌‍.ಎಸ್‌‍ ಕಚೇರಿಗೆ ನುಗ್ಗಿ ಅನುಚಿತ ವರ್ತನೆ ತೋರಿದ್ದಾರೆ, ಪೊಲೀಸರ ಮೂಲಕ ಕಾಂಗ್ರೆಸ್‌‍ ಸರ್ಕಾರ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸುವ ದಾಟಿಯಲ್ಲಿ ವರ್ತಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆಯೋ ಅಥವಾ ಹಿಂದೂ ಮನಸ್ಥಿತಿಯ ವಿರೋಧಿ ಸರ್ಕಾರದ ನೆರಳಿನಲ್ಲಿದ್ದೇವೆಯೋ ಎಂಬ ಆತಂಕ ಹಿಂದೂ ಸಮಾಜವನ್ನು ಕಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. +ನೈಜ ರಾಷ್ಟ್ರೀಯತೆಯನ್ನು ಪ್ರತಿಪಾದಿಸುವ ಭಾರತೀಯ ಸಮಾಜ ಕಟ್ಟುವ ಉದಾತ್ತ ಉದ್ದೇಶದಿಂದ ಜನತಳೆದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌‍ಎಸ್‌‍)ವನ್ನು ನಿರ್ಬಂಧಿಸಲು ಕಾಂಗ್ರೆಸ್‌‍, ನೆಹರು ಕಾಲದಿಂದಲೂ ಯತ್ನಿಸುತ್ತಲೇ ಬಂದಿದೆ ಎಂದು ಆರೋಪಿಸಿದ್ದಾರೆ. +ಸಮರ್ಪಣೆಯ ಬದ್ಧತೆ, ತ್ಯಾಗದ ಪರಿಪೂರ್ಣತೆಯನ್ನು ಮೈಗೂಡಿಸಿಕೊಂಡಿರುವ ಕೋಟ್ಯಾಂತರ ಸ್ವಯಂಸೇವಕರ ಮಹಾಪಡೆಯನ್ನು ಹೊಂದಿರುವ ಆರ್‌ಎಸ್‌‍ಎಸ್‌‍, ದಬ್ಬಾಳಿಕೆ ಎದುರಾದಷ್ಟು ಹೆಮರವಾಗಿ ಬೆಳೆಯುತ್ತಲೇ ಇರುತ್ತದೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅರಿತು ನಡೆದರೆ ಒಳಿತು ಎಂದು ಅವರು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_17_8.txt b/eesanje/url_46_17_8.txt new file mode 100644 index 0000000000000000000000000000000000000000..167591ec8274c716dd045dc231678269ad7fb4bd --- /dev/null +++ b/eesanje/url_46_17_8.txt @@ -0,0 +1,7 @@ +ನಾಗಮಂಗಲ ಗಲಭೆ ವೇಳೆ ಮತಾಂಧರಿಂದ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ : ಆರ್‌.ಅಶೋಕ್‌ + : . +ಬೆಂಗಳೂರು,ಸೆ.16– ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. +ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಘಟನೆ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್‌ ನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹದ್‌ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್‌ ಮಾಡಿರುವಂತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. +ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.…../ +ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. +ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನು ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ಎನ್‌ಐಗೆ ವಹಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_17_9.txt b/eesanje/url_46_17_9.txt new file mode 100644 index 0000000000000000000000000000000000000000..55dabce6c0ff139eb64a21d8b87f29edcff80dc2 --- /dev/null +++ b/eesanje/url_46_17_9.txt @@ -0,0 +1,9 @@ + ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ + +ಬೆಂಗಳೂರು,ಸೆ.16– ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ (ಎಚ್‌ಎಸ್‌‍ಆರ್‌ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. +ಸೆಪ್ಟೆಂಬರ್‌ 18ರಂದು ಎಚ್‌ಎಸ್‌‍ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್‌ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಸಾರಿಗೆ ಇಲಾಖೆ ಆಯುಕ್ತ ಎ.ಎಂ.ಯೋಗೀಶ್‌ ಹೇಳಿದ್ದಾರೆ. +ಸೋಮವಾರದಿಂದ ದಂಡ ವಿಧಿಸುವುದಾಗಿ ಕರ್ನಾಟಕ ಸಾರಿಗೆ ಇಲಾಖೆ ಘೋಷಣೆ ಮಾಡಿತ್ತು. ಕರ್ನಾಟಕ ಪೊಲೀಸ್‌‍ ಇಲಾಖೆ ಸಂಚಾರ ವಿಭಾಗ, ಸಾರಿಗೆ ಇಲಾಖೆಯವರೂ ಹಳೆ ನಂಬರ್‌ ಪ್ಲೇಟ್‌ ಇದ್ದ ವಾಹನದವರಿಗೆ ದಂಡವನ್ನು ವಿಧಿಸಲು ಆರಂಭಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಮೂರು ದಿನದವರೆಗೆ ಕ್ರಮ ಕೈಗೊಳ್ಳದಂತೆ ಸಾರಿಗೆ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಿಯಾಯ್ತಿ ಸಿಕ್ಕಿದೆ. +ಸುಮಾರು 1.5 ಕೋಟಿ ವಾಹನಗಳು ಇನ್ನೂ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ನ್ನು ಅಳವಡಿಸಿಕೊಂಡಿಲ್ಲ. ಗಡುವು ವಿಸ್ತರಣೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಒಪ್ಪಿಗೆ ಬೇಕು ಎಂದು ಸಾರಿಗೆ ಇಲಾಖೆ ಮೂಲಗಳು ಮಾಹಿತಿ ನೀಡಿವೆ. +ಹಲವು ವಾಹನ ಮಾಲೀಕರು ಹೊಸ ನಂಬರ್‌ ಪ್ಲೇಟ್‌ಗಳಿಗಾಗಿ ಅರ್ಜಿ ಸಲ್ಲಿಸುತ್ತಾರೆ. ಆದರೆ, ವಾಹನ ಮಾರಾಟಗಾರರ ಬಳಿಗೆ ಹೋಗಿ ತಮ ವಾಹನಗಳಿಗೆ ಹೊಸ ನಂಬರ್‌ ಪ್ಲೇಟ್‌ ಗಳನ್ನು ಲಗತ್ತಿಸುತ್ತಿಲ್ಲ. ಹೀಗಾಗಿ ವಾಹನ ಡೀಲರ್‌ಗಳ ಬಳಿ ನೂರಾರು ನಂಬರ್‌ ಪ್ಲೇಟ್‌ಗಳು ಬಿದ್ದಿವೆ. ಅವುಗಳನ್ನು ವಾಹನಗಳಿಗೆ ಅಳವಡಿಸಿದ ನಂತರವೇ, ಎಚ್‌ಎಸ್‌‍ಆರ್‌ಪಿ ಪ್ರಕ್ರಿಯೆಯು ಕೊನೆಗೊಳ್ಳುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. +2019ರ ಏಪ್ರಿಲ್‌ 1ರ ಮೊದಲು ನೋಂದಾಯಿಸಲ್ಪಟ್ಟ ವಾಹನಗಳಿಗೆ ಎಚ್‌ಎಸ್‌‍ಆರ್‌ಪಿ ಕಡ್ಡಾಯಗೊಳಿಸುವ ಅಧಿಸೂಚನೆಯನ್ನು 2023ರ ಆಗಸ್ಟ್‌ನಲ್ಲಿ ಹೊರಡಿಸಿತ್ತು. ಆರಂಭದಲ್ಲಿ 2023ರ ನವೆಂಬರ್‌ 17ರ ಗಡುವನ್ನು ನಿಗದಿಪಡಿಸಲಾಗಿತ್ತು. ನಿಧಾನಗತಿಯ ಅಳವಡಿಕೆಯ ಕಾರಣ ಗಡುವನ್ನು ಮೂರು ಬಾರಿ ವಿಸ್ತರಿಸಲಾಗಿತ್ತು. +ಸಾರಿಗೆ ಇಲಾಖೆ ಅಂಕಿಅಂಶದ ಪ್ರಕಾರ ರಾಜ್ಯದಲ್ಲಿರುವ ಹಳೆಯ ಎರಡು ಕೋಟಿ ವಾಹನಗಳ ಪೈಕಿ ಶೇ.26ರಷ್ಟು ವಾಹನಗಳಿಗೆ ಮಾತ್ರ ಎಚ್‌ಎಸ್‌‍ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಲಾಗಿದೆ. ವಾಹನ ಮಾಲೀಕರ ನೀರಸ ಪ್ರತಿಕ್ರಿಯೆಯಿಂದಾಗಿ ಎಚ್‌ಎಸ್‌‍ಆರ್‌ಪಿ ಅಳವಡಿಕೆ ಗಡುವನ್ನು ಈ ಹಿಂದೆ ಮೂರು ಬಾರಿ ವಿಸ್ತರಣೆ ಮಾಡಲಾಗಿದೆ. \ No newline at end of file diff --git a/eesanje/url_46_180_1.txt b/eesanje/url_46_180_1.txt new file mode 100644 index 0000000000000000000000000000000000000000..e4a8c9d719b1e08ce4b48c272029e465d9273d9c --- /dev/null +++ b/eesanje/url_46_180_1.txt @@ -0,0 +1,7 @@ +ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ನಿವಾಸಕ್ಕೆ ಮಹಿಳಾ ಕಾರ್ಯಕರ್ತರ ಮುತ್ತಿಗೆ +ಬೆಳಗಾವಿ,ಏ.14-ಬೆಳಗಾವಿ ಲೋಕಸಭಾ ಚುನಾವಣಾ ಕಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರ ನಿವಾಸಕ್ಕೆ ಮಹಿಳಾ ಕಾರ್ಯಕರ್ತರು ತಡರಾತ್ರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. +ಬೆಳಗಾವಿಯ ಹಿಂಡಲಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲಿ ಮಾತನಾಡಿದ ಸಂಜಯ್ ಪಾಟೀಲ್, ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರು. +ಇದರಿಂದ ಮಹಿಳಾ ಸಮುದಾಯಕ್ಕೆ ಅಪಮಾನವಾಗಿದೆ. ಸಂಜಯ್ ಪಾಟೀಲ್ ಈ ಮೊದಲು ಮೂರ್ನಾಲ್ಕು ಬಾರಿ ಇದೇ ರೀತಿಯ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ ಎಂದು ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. +ತಡರಾತ್ರಿಯವರೆಗೂ ಸಂಜಯ್ ಪಾಟೀಲ್ ಮನೆ ಮುಂದೆ ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತರು, ಸಂಯಜ್ ಪಾಟೀಲ್ ಮನೆಯಿಂದ ಹೊರಗೆ ಬಂದು ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಬೇಕು. ಸಚಿವರ ವಿರುದ್ಧ ನಿಂದನೆ ಮಾಡಿದ್ದಕ್ಕೆ ಕ್ಷಮೆ ಸಂಜಯ್ ಪಾಟೀಲ್ ಕ್ಷಮೆ ಕೇಳಬೇಕು. ಪೊಲೀಸರು ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. +ಈ ಸಂದರ್ಭದಲ್ಲಿ ಸೀರೆ, ಬಳೆ, ಹೂವುಗಳನ್ನು ಸಂಜಯ್ ಪಾಟೀಲ್ ಭಾವಚಿತ್ರಕ್ಕೆ ತೊಡಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರ ಪ್ರತಿಭಟನೆಯನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಜಯ್‍ಪಾಟೀಲ್‍ರವರ ಆಪ್ತನಿಗೆ ಪ್ರತಿಭಟನಾ ನಿರತ ಮಹಿಳೆಯರು ಕಪಾಳ ಮೋಕ್ಷ ಮಾಡಿದ್ದಾರೆ. ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಕೆ ಮಾಡಿದರು. +ಏನಿದು ಘಟನೆ:ಶನಿವಾರ ಹಿಂಡಲಗಾದಲ್ಲಿ ನಡೆದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್, ‘ಅಕ್ಕನ ಕ್ಷೇತ್ರದಲ್ಲಿಯೇ ಬಿಜೆಪಿ ಸಮಾವೇಶದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಸೇರಿದ್ದಾರೆ. ಅಕ್ಕ ನಿದ್ದೆಗೆಡುವುದು ಗ್ಯಾರಂಟಿ’ .‌ ಅವರಿಂದು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲವೇ ಒಂದು ಎಕ್ಸ್‌ಟ್ರಾ ಪೆಗ್ ಹೆಚ್ಚುವರಿ ಕುಡಿಯಬೇಕು’ ಎಂದು ಹೇಳಿದ್ದರು. \ No newline at end of file diff --git a/eesanje/url_46_180_10.txt b/eesanje/url_46_180_10.txt new file mode 100644 index 0000000000000000000000000000000000000000..58a08dce197ec5fa759b5975ef57cd82f40110ba --- /dev/null +++ b/eesanje/url_46_180_10.txt @@ -0,0 +1,4 @@ +ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ : ಇಂದಿನಿಂದ ಏ.18ರವರೆಗೆ ಅಂಚೆ ಮತದಾನ +ಬೆಂಗಳೂರು,ಏ.13-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಏ.18 ರವರೆಗೆ ಅಂಚೆ ಮತದಾನ ನಡೆಯಲಿದೆ.85 ವರ್ಷಕ್ಕಿಂತ ಮೇಲ್ಪಟ್ಟ ಮತದಾರರು ಶೇ.40 ಕ್ಕಿಂತ ಹೆಚ್ಚಿನ ದಿವ್ಯಾಂಗ ಮತದಾರರು (ಇಡಬ್ಲ್ಯೂಡಿ, ಎವಿಪಿಡಿ) ಮಾತ್ರ ಮನೆಯಿಂದ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. +ಮನೆಯಿಂದ ಮತದಾನ ಮಾಡುವ ಸೌಲಭ್ಯವನ್ನು ಆಯ್ಕೆ ಮಾಡಿಕೊಂಡಿರುವ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮತದಾನ ಮಾಡಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಮನೆಯಿಂದ ಮತದಾನ ಪ್ರಕ್ರಿಯೆಗಳನ್ನು ವೀಕ್ಷಿಸಲು ಸ್ರ್ಪಧಿಸುವ ಅಭ್ಯರ್ಥಿಗಳ ಪರವಾಗಿ ಅಧಿಕೃತ ಪ್ರತಿನಿಧಿಯನ್ನು ನೇಮಿಸಿಕೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ನಮೂನೆ- 12 ಡಿ ಆಯ್ಕೆ ಮಾಡಿದ ಮತದಾರರ ವಿವರ ಕೆಳಕಂಡಂತಿದೆ :ಉಡುಪಿ – ಚಿಕ್ಕಮಗಳೂರು ; 4,665 ಹಿರಿಯ ಮತದಾರರು, 1503 ದಿವ್ಯಾಂಗ ಮತದಾರರುಹಾಸನ ; 2636 ಹಿರಿಯ ಮತದಾರರು, 1377 ಪಿಡಬ್ಲ್ಯೂಡಿದಕ್ಷಿಣ ಕನ್ನಡ ; 6053 ಹಿರಿಯ ಮತದಾರರು, 1975 ಪಿಡಬ್ಲ್ಯೂಡಿಚಿತ್ರದುರ್ಗ ; 2723 ಹಿರಿಯ ಮತದಾರರು, 2059 ಪಿಡಬ್ಲ್ಯೂಡಿತುಮಕೂರು ; 3069 ಹಿರಿಯ ಮತದಾರರು, 889 ಪಿಡಬ್ಲ್ಯೂಡಿಮಂಡ್ಯ ; 2570 ಹಿರಿಯ ಮತದಾರರು, 1075 ಪಿಡಬ್ಲ್ಯೂಡಿಮೈಸೂರು ; 2475 ಹಿರಿಯ ಮತದಾರರು, 918 ಪಿಡಬ್ಲ್ಯೂಡಿಚಾಮರಾಜನಗರ ; 982 ಹಿರಿಯ ಮತದಾರರು, 445 ಪಿಡಬ್ಲ್ಯೂಡಿಬೆಂಗಳೂರು ಗ್ರಾಮಾಂತರ ; 2240 ಹಿರಿಯ ಮತದಾರರು, 768 ಪಿಡಬ್ಲ್ಯೂಡಿಬೆಂಗಳೂರು ಉತ್ತರ ; 1975 ಹಿರಿಯ ಮತದಾರರು, 87 ಪಿಡಬ್ಲ್ಯೂಡಿಬೆಂಗಳೂರು ಕೇಂದ್ರ ; 1752 ಹಿರಿಯ ಮತದಾರರು, 60 ಪಿಡಬ್ಲ್ಯೂಡಿಬೆಂಗಳೂರು ದಕ್ಷಿಣ ; 2469 ಹಿರಿಯ ಮತದಾರರು, 54 ಪಿಡಬ್ಲ್ಯೂಡಿಚಿಕ್ಕಬಳ್ಳಾಪುರ ; 1639 ಹಿರಿಯ ಮತದಾರರು, 941 ಪಿಡಬ್ಲ್ಯೂಡಿಕೋಲಾರ ; 1433 ಹಿರಿಯ ಮತದಾರರು, 806 ಪಿಡಬ್ಲ್ಯೂಡಿ ಮತದಾರರಿದ್ದಾರೆ.14 ಲೋಕಸಭಾ ಕ್ಷೇತ್ರಗಳಲ್ಲಿ 36,691 ಮಂದಿಯಲ್ಲಿ 85 ಮೇಲ್ಪಟ್ಟ ಹಿರಿಯ ಮತದಾರರು ಹಾಗೂ 12,957 ಪಿಡಬ್ಲ್ಯೂಡಿ ಮತದಾರರು, 12 ಡಿ ಮನೆಯಲ್ಲೇ ಮತದಾನ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_180_11.txt b/eesanje/url_46_180_11.txt new file mode 100644 index 0000000000000000000000000000000000000000..b91f464d93a2943a8234e15d1bd95fba0675f0d7 --- /dev/null +++ b/eesanje/url_46_180_11.txt @@ -0,0 +1,4 @@ +ಹೆಜ್ಜಾಲ ಚೆಕ್‌ಪೋಸ್ಟ್‌ನಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ವಶ +ಬೆಂಗಳೂರು, ಏ.12-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ ಗಳಲ್ಲಿ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ10 ಕೆಜಿ ಚಿನ್ನ, 5 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದ್ದಾರೆ. +ಬೆಂಗಳೂರು- ಮೈಸೂರು ರಸ್ತೆಯ ಹೆಜ್ಜಾಲ ಬಳಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ ಬಳಿ ಇಂದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ವಾಹನದಲ್ಲಿ ಚಿನ್ನವನ್ನು ಸಾಗಿಸುತ್ತಿರುವುದು ಕಂಡು ಬಂದಿದ್ದು ಜಪ್ತಿ ಮಾಡಿದ್ದಾರೆ. +ಜಪ್ತಿ ಮಾಡಿಕೊಂಡಿರುವ ಚಿನ್ನಕ್ಕೆ ಸದ್ಯಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಪೊಲೀಸರು `ಈಸಂಜೆ’ಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_180_12.txt b/eesanje/url_46_180_12.txt new file mode 100644 index 0000000000000000000000000000000000000000..2dc0392bd5b7ef3aa7e2d1106271049fd2e27a29 --- /dev/null +++ b/eesanje/url_46_180_12.txt @@ -0,0 +1,6 @@ +ಈಶ್ವರಪ್ಪನವರಿಗೆ ಇನ್ನೂ ಸಮಯವಿದೆ, ಕಾದು ನೋಡೋಣ : ವಿಜಯೇಂದ್ರ +ಬಳ್ಳಾರಿ,ಏ.12-ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ. ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಸಮಯ ಇದೆ, ನೋಡೋಣ. ಬಳ್ಳಾರಿಯ ಬಗ್ಗೆ ಮಾತನಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶ್ರೀರಾಮುಲು ಅವರ ನಾಮ ಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬಳ್ಳಾರಿಗೆ ಆಗಮಿಸಿರುವ ಬಿ.ವೈ. ವಿಜಯೇಂದ್ರ ಅವರು ಸುದ್ದಿಗಾರೊರಂದಿಗೆ ಮಾತನಾಡುತ್ತಾ, ಕೆ.ಎಸ್.ಈಶ್ವರಪ್ಪನವರು ನಾಮಪತ್ರ ಹಿಂಪಡೆಯಲು ಇನ್ನು ಅವಕಾಶವಿದೆ. ಈಗಲೇ ಅಂತಿಮ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವಿ ಮಾಡಿದರು. +ಶ್ರೀರಾಮುಲು ದಾಖಲೆಯ ಅಂತರದ ಗೆಲುವು ಸಾಧಿಸಲಿದ್ದಾರೆ. ರಾಜ್ಯದ 30 ಸಚಿವರನ್ನು ಕರೆತಂದರೂ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಶತಸಿದ್ಧ. ಬಳ್ಳಾರಿಗೆ ಯಡಿಯೂರಪ್ಪ ಸೇರಿದಂತೆ ಇತರ ನಾಯಕರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಮುಖ ಲಿಂಗಾಯತ ಮುಖಂಡರ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನೀಗ ಯಾವುದೇ ಲಿಂಗಾಯತ ಮುಖಂಡರ ಸಭೆ ಮಾಡಿಲ್ಲ. ಕೆಲಕಾಲ ಮಾತನಾಡಿದ್ದೇನಷ್ಟೇ. +ಮುಂದಿನ ದಿನಗಳಲ್ಲಿ ಇಂಟಲೆಕ್ಚುವಲ್ಸ್ ಸಭೆ ಕರೆಯಲಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಲು ಕಾರಣಗಳು ಬಹಳಷ್ಟಿವೆ. ಅದರ ಬಗ್ಗೆ ಈ ಚರ್ಚೆ ಮಾಡಲು ಹೋಗುವುದಿಲ್ಲ. ಎಲ್ಲವನ್ನೂ ಮರೆತು, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿ ಆಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದವರು ಒಂದಾಗಿ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. +ಈ ಚುನಾವಣೆಯು ವಿಜಯೇಂದ್ರ ವರ್ಸಸ್ ಸಿದ್ದರಾಮಯ್ಯ ಅಂತಾನಾ ಎಂಬ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ಹಾಗೇನಿಲ್ಲ, ಹೊಸ ಚರ್ಚೆಗೆ ಅವಕಾಶ ಮಾಡಿಕೊಡುವುದು ಬೇಡ. ಎಲ್ಲ 28 ಕ್ಷೇತ್ರಗಳಲ್ಲಿಯೂ ಬಿಜೆಪಿ – ಜೆಡಿಎಸ್ ಮೈತ್ರಿ ಪಕ್ಷಗಳು ಗೆಲ್ಲಬೇಕು ಎಂಬುದೇ ನಮ್ಮ ಗುರಿಯಾಗಿದೆ. ಆ ಒಂದು ಆತ್ಮವಿಶ್ವಾಸದೊಂದಿಗೆ ನಾವೀಗ ಮುನ್ನುಗ್ಗುತ್ತಿದ್ದೇವೆ ಎಂದರು. +ವಿವಿ ಸಂಘದ ಸಭೆ: ಗಾಂಧಿನಗರದಲ್ಲಿನ ಬಳ್ಳಾರಿಯ ವಿವಿ ಸಂಘಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರ ಸಂಘದ ಸದ್ಯಸ್ಯರ ಜೊತೆ ಕೆಲಕಾಲ ಚರ್ಚೆ ನಡೆಸಿದ್ದಾರೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯು ಬಳ್ಳಾರಿ ಜಿಲ್ಲೆಯಲ್ಲಿ 5 ಸ್ಥಾನಗಳನ್ನು ಕಳೆದುಕೊಂಡಿತ್ತು. ಲಿಂಗಾಯತ ಮತಗಳನ್ನು ಕಳೆದುಕೊಂಡ ಕಾರಣ ಬಿಜೆಪಿ ಸೋಲು ಕಂಡಿತ್ತು. ಹೀಗಾಗಿ ಬಳ್ಳಾರಿ – ವಿಜಯನಗರ ಜಿಲ್ಲೆಗಳ ಪ್ರಮುಖ ಲಿಂಗಾಯತ ಮುಖಂಡರ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_180_2.txt b/eesanje/url_46_180_2.txt new file mode 100644 index 0000000000000000000000000000000000000000..94e759f9f0b6d7c974f6d6eaf7e71ba7d9e538bd --- /dev/null +++ b/eesanje/url_46_180_2.txt @@ -0,0 +1,6 @@ +ಇಂದು ನಡೆಯಿತು 2ನೇ ಹಂತದ ರ್‍ಯಾಂಡಮೈಸೇಷನ್‌ +ಬೆಂಗಳೂರು,ಏ.13-ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು. +ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. +ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17 ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಏ.24 ರಂದು ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ನಡೆಸಲಾಗುತ್ತದೆ. +ಅದಲ್ಲದೆ, ಮತದಾನದ ದಿನ ಕಾರ್ಯನಿರ್ವಹಿಸಲು ಮೈಕ್ರೋ ಅಬ್ಸವರ್ಸ್ ನೇಮಿಸುವ ಹಾಗೂ ಅವರಿಗೆ ತರಬೇತಿ ನೀಡುವ ಕುರಿತು ಸಾಮಾನ್ಯ ವೀಕ್ಷಕರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು. +ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಮಕ್ರಂದ್ ಪಾಂಡುರಂಗ್ , ಬೆಂಗಳೂರು ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೊಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ , ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_180_3.txt b/eesanje/url_46_180_3.txt new file mode 100644 index 0000000000000000000000000000000000000000..c289eb423220c7fcc0f46f8a6bdc97fc4193dbbb --- /dev/null +++ b/eesanje/url_46_180_3.txt @@ -0,0 +1,6 @@ +ಜಯನಗರದಲ್ಲಿ ಎರಡು ಕಾರುಗಳಲ್ಲಿ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಪತ್ತೆ +ಬೆಂಗಳೂರು,ಏ.13-ಪ್ರಸಕ್ತ ಲೋಕಸಭೆ ಚುನಾವಣೆ ಮಾದರಿ ನೀತಿಸಂಹಿತೆ ಕಟ್ಟುನಿಟ್ಟಿನ ಜಾರಿ ಹಿನ್ನಲೆಯಲ್ಲಿ ಜಯನಗರ 4ನೇ ಬ್ಲಾಕ್ನಲ್ಲಿ ಕೋಟ್ಯಂತರ ರೂ. ಹಣ ಪತ್ತೆಯಾಗಿದೆ.ಜಯನಗರ 4ನೇ ಬ್ಲಾಕ್ನ ಗಣಪತಿ ದೇವಾಲಯದ ಬಳಿ 2 ಕಾರು ಹಾಗೂ 1 ಬೈಕ್ನ್ನು ತಡೆದು ಪರಿಶೀಲನೆ ನಡೆಸಿದ ಎಂಸಿಸಿ ತಂಡ ಕಾರುಗಳಲ್ಲಿ ಹಣ ಇರುವುದನ್ನು ಪತ್ತೆಹಚ್ಚಿದೆ. +ಎರಡು ಕಾರಿಗಳಲ್ಲಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯನ್ನು ಪಡೆದ ಎಂಸಿಸಿ ತಂಡ ಗಣಪತಿ ದೇವಾಲಯದ ಬಳಿ ತಡೆದು ತಪಾಸಣೆಗೊಳಪಡಿಸಿದಾಗ, ಒಂದು ಕಾರಿನೊಳಗಿದ್ದ ಬ್ಯಾಗ್ಗಳಲ್ಲಿ ಹಣ ಇರುವುದು ಪತ್ತೆಯಾಗಿದೆ. ಮತ್ತೊಂದು ಕಾರಿನ ಬಾಗಿಲನ್ನು ತೆಗೆಯಲು ಆಗಿಲ್ಲ. ಎರಡೂ ಕಾರುಗಳಲ್ಲಿ ಕೋಟ್ಯಂತರ ರೂ. ಸಾಗಾಣಿಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. +ಈ ಕಾರುಗಳು ಮತ್ತು ಬೈಕ್ ಯಾರಿಗೆ ಸೇರಿದ್ದು ಎಂಬುದರ ಮಾಹಿತಿ ಈತನಕ ತಿಳಿದುಬಂದಿಲ್ಲ. ಕಾರಿನಲ್ಲಿದ್ದ ಹಣವನ್ನು ಯಾರು ಎಲ್ಲಿಗೆ ಕೊಂಡೊಯ್ಯುತ್ತಿದ್ದರು? ಯಾರಿಗೆ ಸೇರಿದ್ದು ಎಂಬ ಮಾಹಿತಿ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಸ್ಪಷ್ಟವಾಗಲಿದೆ. ಕಾರುಗಳಲ್ಲಿನ ಬ್ಯಾಗ್ಗಳಲ್ಲಿ ಹಣ ಇರುವುದರ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿಯನ್ನು ಎಂಸಿಸಿ ತಂಡ ನೀಡಿದೆ. +ಕಾರುಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರಿನ ನೋಂದಾಯಿತ ಸಂಖ್ಯೆಯನ್ನು ಆಧರಿಸಿ ಮಾಲೀಕರಿಗೆ ನೋಟಿಸ್ ನೀಡಲಿದ್ದಾರೆ. ಬಳಿಕ ಹಣದ ಬಗ್ಗೆ ಮಾಹಿತಿ ಕಲೆ ಹಾಕಲಿರುವ ಚುನಾವಣಾ ಅಧಿಕಾರಿಗಳು ಸದ್ಯ ಸಿಕ್ಕಿರುವ ಹಣಕ್ಕೆ ದಾಖಲೆಯನ್ನು ಕೇಳಲಾಗಿದ್ದು, ಸರಿಯಾದ ದಾಖಲೆ ಇಲ್ಲದ ಕಾರಣ ಹಣವನ್ನು ವಶಕ್ಕೆ ಪಡೆಯಲಾಗಿದೆ. +ಒಟ್ಟು ಮೂರು ಕಾರಿನಲ್ಲಿ ಬಂದಿರುವ ಶಂಕೆಯಿದ್ದು, ಅದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಫ್ಯಾರ್ಚುನ್ ಕಾರಿನಲ್ಲಿದ್ದವರು ಕಾರು ಸಮೇತ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಐಷರಾಮಿ ಕಾರುಗಳಲ್ಲಿ ಕೋಟ್ಯಾಂತರ ರೂ. ಹಣ ಇತ್ತು ಎಂದು ಮಾಹಿತಿ ಲಭ್ಯವಾಗಿದ್ದು, ಹಣವನ್ನು ವಶಕ್ಕೆ ಪಡೆದು ಎಣಿಕೆ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿದ್ದಾರೆ. \ No newline at end of file diff --git a/eesanje/url_46_180_4.txt b/eesanje/url_46_180_4.txt new file mode 100644 index 0000000000000000000000000000000000000000..403de0cab7a31ce6d4bab39c97fb6800d9ad0161 --- /dev/null +++ b/eesanje/url_46_180_4.txt @@ -0,0 +1,7 @@ +ರಾಮೇಶ್ವರ ಕೆಫೆ ಸ್ಪೋಟದ ಬಂಧಿತ ಉಗ್ರರು ಹತ್ತು ದಿನ ಎನ್ಐಎ ವಶಕ್ಕೆ +ಬೆಂಗಳೂರು,ಏ.13-ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ನ್ಯಾಯಾಲಯ ಹತ್ತು ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ವಶಕ್ಕೆ ನೀಡಿ ಆದೇಶ ನೀಡಿದೆ. +ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಪ್ರಮುಖ ಆರೋಪಿ ಮುಸಾವಿರ್ ಹುಸೇನ್ ಶಬೀಬ್ ಹಾಗೂ ಮಾಸ್ಟರ್ ಮೈಂಡ್ ಎಂದೇ ಹೇಳಲಾಗುತ್ತಿರುವ ಅಬುಲ್ದ್ ಮತೀನ್ ತಹಾನನ್ನು ಎನ್ಐಎ ಅಧಿಕಾರಿಗಳು ಕೋರಮಂಗಲದಲ್ಲಿರುವ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. +ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯ ಇರುವುದರಿಂದ 15 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಎನ್ಐಎ ಪರ ವಕೀಲರಾದ ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾೀಧಿಶರು ಬಂಧಿತ ಆರೋಪಿಗಳನ್ನು ಹತ್ತು ದಿನಗಳ ಕಾಲ ಎನ್ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದರು. ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಗಳನ್ನು ನ್ಯಾಯಾೀಧಿಶರ ಮುಂದೆ ಹಾಜರುಪಡಿಸುವ ವೇಳೆ ಹೆಚ್ಚಿನ ಬಿಗಿಭದ್ರತೆಯನ್ನು ಒದಗಿಸಲಾಗಿತ್ತು. +ಇದಕ್ಕೂ ಮುನ್ನ ನಿನ್ನೆ ಬಂಧಕ್ಕೊಳಗಾಗಿದ್ದ ಇಬ್ಬರು ಆರೋಪಿಗಳನ್ನು ಕೋಲ್ಕತ್ತಾದಿಂದ ವಿಮಾನದಲ್ಲಿ ಭಾರೀ ಭದ್ರತೆಯಲ್ಲಿ ನಗರಕ್ಕೆ ಮಧ್ಯರಾತ್ರಿ 2 ಗಂಟೆಗೆ ಕರೆತರಲಾಯಿತು. ಬಳಿಕ ಅವರನ್ನು ಮಡಿವಾಳದಲ್ಲಿರುವ ಎಫ್ಎಸ್ಎಲ್ನ ಬಳಿ ಇರುವ ಇಂಟ್ರಾಗೇಷನ್ ಸೆಂಟರ್ನಲ್ಲಿ ತೀವ್ರ ವಿಚಾರಣೆ ನಡೆಸಿ ಮಾಹಿತಿಯನ್ನು ಕಲೆ ಹಾಕಲಾಯಿತು. +ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುದ್ದೆ ಬಡಾವಣೆಯ ನಿವಾಸಿಗಳಾಗಿರುವ ಅಬ್ದುಲ್ ಮತೀನ್ ತಹಾ ಮತ್ತು ಮುಸಾವಿರ್ ಹುಸೇನ್ ಶಬೀಬ್ ಐಸಿಸ್ ಪರ ಒಲವು ಹೊಂದಿರುವ ಉಗ್ರರು ಎಂದು ತಿಳಿದುಬಂದಿದೆ. ಈ ಹಿಂದೆ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ, ಶಿವಮೊಗ್ಗದ ತುಂಗಾ ನದಿ ಬಳಿ ಸಂಭವಿಸಿದ ಬಾಂಬ್ ಸ್ಪೋಟ ಹೀಗೆ ರಾಜ್ಯದ ನಾನಾ ಕಡೆ ನಡೆದಿರುವ ವಿಧ್ವಂಸಕ ಕೃತ್ಯಗಳಲ್ಲಿ ಇವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. +ಕಳೆದ ಮಾ.1ರಂದು ಬೆಂಗಳೂರಿನ ಎಚ್ಎಎಲ್ನ ಕುಂದಲಹಳ್ಳಿ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ಸೋಟ ಪ್ರಕರಣದಲ್ಲಿ ಎನ್ಐಎನಿಂದ ಬಂಧಕ್ಕೆ ಒಳಗಾಗಿರುವ ಈ ಇಬ್ಬರ ಕೈವಾಡ ಇರುವ ಕುರಿತು ವಿವಿಧ ಆಯಾಮಗಳಲ್ಲಿ ಎನ್ಐಎ ಮಾಹಿತಿ ಕಲೆ ಹಾಕುತ್ತಿದೆ. \ No newline at end of file diff --git a/eesanje/url_46_180_5.txt b/eesanje/url_46_180_5.txt new file mode 100644 index 0000000000000000000000000000000000000000..575edbb39b1311f2dae073b3268eaae36ac24b52 --- /dev/null +++ b/eesanje/url_46_180_5.txt @@ -0,0 +1,7 @@ +ಹಿಂದೂಗಳ ಹೆಸರಿನಲ್ಲಿ ಸಂಚು ನಡೆಸಿದ್ದ ರಾಮೇಶ್ವರಂ ಕೆಫೆ ಸ್ಪೋಟದ ಉಗ್ರರು +ಬೆಂಗಳೂರು, ಏ.13-ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಮುಖ ಇಬ್ಬರು ಉಗ್ರರ ಬಗ್ಗೆ ಒಂದೊಂದೇ ರಹಸ್ಯಗಳು ಬಯಲಾಗುತ್ತಿವೆ.ಬಾಂಬರ್ ಮುಸಾವೀರ್ ಹುಸೇನ್ ಶಾಜಿಬ್ ಮತ್ತು ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಬಳಿ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿವೆ. ಈ ಇಬ್ಬರು ನಕಲಿ ಆಧಾರ್ ಮಾಡಿಸಿಕೊಂಡಿರುವುದಲ್ಲದೇ ಹಿಂದೂ ಹೆಸರಿಟ್ಟುಕೊಂಡು ಯಾರಿಗೂ ಅನುಮಾನ ಬಾರದಂತೆ ಸುತ್ತಾಡುತ್ತಿದ್ದರು. +ಎನ್ಐಎ ಅಧಿಕಾರಿಗಳು ಹಾಗೂ ಪಶ್ಚಿಮ ಬಂಗಾಳ ಪೊಲೀಸರು ಈ ಇಬ್ಬರನ್ನು ಕೋಲ್ಕತಾದಲ್ಲಿ ಬಂಧಿಸಿದಾಗ ಇಬ್ಬರು ಬಳಿಯೂ ನಕಲಿ ಆಧಾರ್ ಕಾರ್ಡ್ಗಳು ಪತ್ತೆಯಾಗಿರುವುದು ಹಲವು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಕಲಬುರಗಿಯ ವರ್ದಾ ನಗರದ ನಿವಾಸಿಯಾಗಿರುವ ಸಾಫ್ಟ್ವೆರ್ ಎಂಜಿನಿಯರ್ ಅನಮೂಲ ಕುಲಕರ್ಣಿ ಅವರ ಆಧಾರ್ ಕಾರ್ಡ್ ಉಗ್ರರ ಬಳಿಯಿದ್ದು, ಇವರಿಗೆ ಆಧಾರ್ ಕಾರ್ಡ್ ಹೇಗೆ ಸಿಕ್ಕಿತು ಎಂಬ ಬಗ್ಗೆ ವಿವಿಧ ದೃಷ್ಟಿಕೋನಗಳಲ್ಲಿ ಎನ್ಐಎ ಅಧಿಕಾರಿಗಳು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. +ಅನಮೂಲ ಕುಲಕರ್ಣಿ ಅವರು ಪ್ರಸ್ತುತ ನಗರದ ಖಾಸಗಿ ಕಂಪನಿವೊಂದರಲ್ಲಿ ಸಾಫ್ಟ್ವೇರ್ ಎಂಜಿನಿಯರ್. ಇವರ ಆಧಾರ್ ಕಾರ್ಡ್ ಉಗ್ರರ ಬಳಿ ಪತ್ತೆಯಾದ ಹಿನ್ನೆಲೆಯಲ್ಲಿ ಕುಲಕರ್ಣಿ ಅವರನ್ನು ಸಹ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. +ಮಾ.1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ನಂತರ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸುತ್ತಾ ಪ್ರತಿದಿನ ಜಾಗ ಬದಲಿಸುತ್ತಿದ್ದ ಬಾಂಬರ್ ಮುಸಾವೀರ್ ಹುಸೇನ್ ಶಾಜಿದ್ ಬೆಂಬಲಕ್ಕೆ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ಎನ್ಐಎ ಅಧಿಕಾರಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. +ಹೋಟೆಲ್- ಲಾಡ್ಜ್ಗಳಲ್ಲೇ ವಾಸ್ತವ್ಯ:ಕಳೆದ 12 ದಿನಗಳಿಂದ ಪಶ್ಚಿಮ ಬಂಗಾಳದ ಕೋಲ್ಕಾತಾ ದಲ್ಲಿ ಈ ಇಬ್ಬರು ಒಟ್ಟಾಗಿ ಓಡಾಡಿಕೊಂಡು ಯಾರಿಗೂ ಅನುಮಾನ ಬಾರದಂತೆ ಹಿಂದೂ ಹೆಸರಿಟ್ಟುಕೊಂಡು ತಾವು ತಂಗುತ್ತಿದ್ದ ಹೋಟೆಲ್ ಮತ್ತು ಲಾಡ್ಜ್ಗಳಲ್ಲಿ ಹಿಂದೂ ಹೆಸರನ್ನೇ ನಮೂದಿಸಿ, ತಾವು ಜಾರ್ಖಂಡ್ ಹಾಗೂ ತ್ರಿಪುರ ಮೂಲದವರೆಂದು ಪರಿಚಯಿಸಿಕೊಂಡಿದ್ದರು. +ಕೋಲ್ಕತಾದಲ್ಲಿ ದಿನ ಕಳೆದಂತೆ ವಾಸ್ತವ್ಯ ಬಸಲಿಸುತ್ತಾ ತಮ್ಮ ಹೆಸರನ್ನು ಸಂಜಯ್ ಅಗರ್ವಾಲ್, ಉದಯ್ ದಾಸ್, ಯಶು ಪಟೇಲ್, ವಿಜ್ಞೇಶ್ ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಂಡು ಹೋಟೆಲ್ ಪ್ಯಾರಡೈಸ್, ಲೆನಿನ್ ಸೆರಾನಿ ಹೊಟೆಲ್ ಸೇರಿದಂತೆ ಹಲವು ಹೋಟೆಲ್ಗಳಲ್ಲಿ ತಂಗುತ್ತಾ ಸಾರ್ವಜನಿಕ ವಲಯದಲ್ಲಿ ಆಟೋದಲ್ಲೇ ಸುತ್ತಾಡುತ್ತಿದ್ದರು ಎಂಬುವುದು ತನಿಖೆಯಿಂದ ಗೊತ್ತಾಗಿದೆ. \ No newline at end of file diff --git a/eesanje/url_46_180_6.txt b/eesanje/url_46_180_6.txt new file mode 100644 index 0000000000000000000000000000000000000000..528b6663d6857f0791f4d9a71f5cb0887cdd8de2 --- /dev/null +++ b/eesanje/url_46_180_6.txt @@ -0,0 +1,6 @@ +ರಾಮೇಶ್ವರಂ ಕೆಫೆ ಸ್ಫೋಟಿಸಿದ ಉಗ್ರರ ಬಂಧನ : ಎನ್‍ಐಎ ಮತ್ತು ರಾಜ್ಯ ಪೊಲೀಸರ ಕಾರ್ಯವೈಖರಿಗೆ ಸಿಎಂ ಶ್ಲಾಘನೆ +ಮೈಸೂರು, ಏ.13-ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್‍ಐಎ ತಂಡ ಮತ್ತು ಕರ್ನಾಟಕ ಪೊಲೀಸ್‍ನ ಕಾರ್ಯವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿ ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದು ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಹೇಳಿದ್ದಾರೆ. +ಎನ್‍ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಬಿಜೆಪಿ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಎಂದರು. +ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಗರಮ್ಮಾದರು. +ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ:ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದಿರುವ ಮೋದಿಯವರ ಹೇಳಿಕೆಗೆ ಉತ್ತರಿಸಿದ ಅವರು, ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು. +ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗೂ ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿಧಿರೋಸಿದ್ದರು ಎಂದು ಹೇಳಿದರು. \ No newline at end of file diff --git a/eesanje/url_46_180_7.txt b/eesanje/url_46_180_7.txt new file mode 100644 index 0000000000000000000000000000000000000000..473a2eab0e5c179b6f5e4bb226155db08233aa13 --- /dev/null +++ b/eesanje/url_46_180_7.txt @@ -0,0 +1,5 @@ +ಕಡುಬಡತನದ ಪ್ರತಿಭಾವಂತ ವಿದ್ಯಾರ್ಥಿನಿಗೆ ಪ್ರವೇಶಾತಿ ಕಲ್ಪಿಸಿದ ನಿರ್ಮಲಾನಂದನಾಥ ಶ್ರೀಗಳು +ಬೆಂಗಳೂರು,ಏ.13-ಕಡುಬಡತನಕ್ಕೆ ಸಿಲುಕಿ ಡೋಲಾಯಮಾನ ಸ್ಥಿತಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬರಿಗೆ ಬಿಜಿಎಸ್ ಸಂಸ್ಥೆಯಲ್ಲಿ ಪ್ರವೇಶಾತಿ ಕಲ್ಪಿಸುವ ಮೂಲಕ ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಮಾನವೀಯತೆ ಮೆರೆದಿದ್ದಾರೆ. ನಗರದ ಅಶೋಕ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮೇಘಶ್ರೀ.ಎಂ ವಿದ್ಯಾರ್ಥಿನಿಗೆ ಪ್ರವೇಶ ಶುಲ್ಕ ಕಟ್ಟಲು ಹಣವಿಲ್ಲದ ಕಾರಣ ಆಡಳಿತ ಮಂಡಳಿ ಪ್ರವೇಶಾತಿಯನ್ನು ನಿರಾಕರಿಸಿತ್ತು. +ಈ ವಿಷಯವು ಒಕ್ಕಲಿಗ ಯುವ ಬ್ರಿಗೇಡ್‍ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಅವರ ಗಮನಕ್ಕೆ ಬರುತ್ತಿದ್ದಂತೆ ತಕ್ಷಣವೇ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿಸಿ ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು. ಕಡುಬಡವರಾಗಿರುವ ಮೇಘಶ್ರೀಯವರ ತಾಯಿ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಪುತ್ರಿಯನ್ನು ದ್ವಿತೀಯ ಪಿಯುಸಿಗೆ ಪ್ರವೇಶ ಶುಲ್ಕ ಕಟ್ಟಲು ಸಾಧ್ಯವಾಗದ ಸ್ಥಿತಿಯಲ್ಲಿದ್ದರು. +ತಂದೆ ಇಲ್ಲದೆ ಬಡತನದಲ್ಲೇ ಬೆಳೆದಿರುವ ಈ ವಿದ್ಯಾರ್ಥಿನಿಯು ಪ್ರಥಮ ಪಿಯುಸಿಯಲ್ಲಿ 600 ಅಂಕಗಳಿಗೆ 598 ಅಂಕಗಳನ್ನು ಗಳಿಸಿದ್ದಾಳೆ. ಕನ್ನಡ 99, ಇಂಗ್ಲೀಷ್ 100, ಭೌತಶಾಸ್ತ್ರ 100ಕ್ಕೆ ನೂರು, ರಸಾಯನಶಾಸ್ತ್ರ 100ಕ್ಕೆ 100, ಗಣಿತ 99, ಜೀವಶಾಸ್ತ್ರ 100ಕ್ಕೆ ನೂರು ಅಂಕ ಪಡೆದಿದ್ದಾಳೆ. +ಇತ್ತೀಚೆಗೆ ವಿದ್ಯಾರ್ಥಿನಿಯು ಆದಿಚುಂಚನಗಿರಿ ಪೀಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿ ದ್ವೀತಿಯ ಪಿಯುಸಿ ವ್ಯಾಸಂಕ್ಕಾಗಿ ಸಹಾಯ ಮಾಡುವಂತೆ ಕೋರಿಕೊಂಡಿದ್ದರು. ವಿದ್ಯಾರ್ಥಿನಿಯ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಶ್ರೀಗಳು ತಮ್ಮ ಬಿಜಿಎಸ್ ಸಂಸ್ಥೆಯಲ್ಲಿ ಮುಂದಿನ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_180_8.txt b/eesanje/url_46_180_8.txt new file mode 100644 index 0000000000000000000000000000000000000000..67eb93b64b32078236d3ebfb73e8f793ac9723a2 --- /dev/null +++ b/eesanje/url_46_180_8.txt @@ -0,0 +1,6 @@ +2ನೇ ಹಂತದ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 41 ಅಭ್ಯರ್ಥಿಗಳಿಂದ 57 ನಾಮಪತ್ರ ಸಲ್ಲಿಕೆ +ಬೆಂಗಳೂರು,ಏ.13-ರಾಜ್ಯದ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಮೊದಲ ದಿನ 41 ಅಭ್ಯರ್ಥಿಗಳು 57 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ತಲಾ 5, ಉತ್ತರ ಕನ್ನಡ, ಬಳ್ಳಾರಿ, ಕೊಪ್ಪಳ, ಬಿಜಾಪುರ ಕ್ಷೇತ್ರಗಳಲ್ಲಿ ತಲಾ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. +ಚಿಕ್ಕೋಡಿ, ಬಾಗಲಕೋಟೆ, ಗುಲ್ಬರ್ಗ ಕ್ಷೇತ್ರಗಳಲ್ಲಿ ತಲಾ ಮೂರು ಮಂದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದರೆ, ಬೀದರ್‍ನಲ್ಲಿ ಇಬ್ಬರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿ, ರಾಯಚೂರು, ಹಾವೇರಿ, ಧಾರವಾಡ ಕ್ಷೇತ್ರಗಳಲ್ಲಿ ತಲಾ ಒಬ್ಬರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. +41 ಅಭ್ಯರ್ಥಿಗಳ ಪೈಕಿ 37 ಪುರುಷರು, ನಾಲ್ವರು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. 14 ಪಕ್ಷೇತರರು, 20 ಮಂದಿ ನೋಂದಾಯಿತ ಮಾನ್ಯತೆ ಪಡೆಯದ ಪಕ್ಷಗಳ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.ಬಿಎಸ್‍ಪಿ 2, ಎಎಪಿ 1, ಕಾಂಗ್ರೆಸ್ 11, ಬಿಜೆಪಿಯ ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆಯಾಗಿವೆ. +ಇಂದು ಮತ್ತು ನಾಳೆ ರಜಾ ದಿನವಾಗಿರುವುದರಿಂದ ನಾಮಪತ್ರ ಸಲ್ಲಿಕೆಯಾಗುವುದಿಲ್ಲ. ಸೋಮವಾರದಿಂದ ರಾಜಕೀಯ ಪಕ್ಷಗಳ ಹಾಗೂ ಇತರೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಜೋರಾಗಿ ನಡೆಯಲಿದೆ. +ಈ ಹಂತದಲ್ಲಿ ನಾಮಪತ್ರ ಸಲ್ಲಿಸಲು ಏ.19 ಕಡೆಯ ದಿನವಾಗಿದೆ. ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಯಕ್ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_180_9.txt b/eesanje/url_46_180_9.txt new file mode 100644 index 0000000000000000000000000000000000000000..37eba2c3e743d9639a5116d93837bc56ceb32225 --- /dev/null +++ b/eesanje/url_46_180_9.txt @@ -0,0 +1,6 @@ +ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 307.61 ಕೋಟಿ ಮೊತ್ತದ ನಗದು, ಚಿನ್ನಾಭರಣ ಜಪ್ತಿ +ಬೆಂಗಳೂರು,ಏ.13-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಜಪ್ತಿಯಾಗುತ್ತಿರುವ ನಗದು, ಚಿನ್ನಾಭರಣ, ಮದ್ಯ, ಉಚಿತ ಉಡುಗೊರೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ನಿನ್ನೆಯವರೆಗೆ ರಾಜ್ಯದಲ್ಲಿ 307.61 ಕೋಟಿ ಮೊತ್ತದ ನಗದು, ಚಿನ್ನಾಭರಣ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ಪೊಲೀಸ್ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, 81.33 ಕೋಟಿ ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನ, ಬೆಳ್ಳಿ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಅಬಕಾರಿ ಇಲಾಖೆಯವರು 146.70 ಕೋಟಿ ರೂ. ಮೌಲ್ಯದ ಮದ್ಯ, ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು 13.60 ಕೋಟಿ ರೂ. ಮೌಲ್ಯದ ನಗದು ಚಿನ್ನ ಹಾಗೂ ವಜ್ರದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. +ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು 65.98 ಕೋಟಿ ರೂ. ಮೌಲ್ಯದ ಚಿನ್ನ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. 46.01 ಕೋಟಿ ರೂ. ನಗದು, 147.03 ಕೋಟಿ ರೂ. ಮೌಲ್ಯದ ಮದ್ಯ, 9.75 ಕೋಟಿ ರೂ. ಮೌಲ್ಯದ ಡ್ರಗ್ಸ್, 24.38 ಕೋಟಿ ರೂ. ಮೌಲ್ಯದ ಚಿನ್ನ, 69 ಲಕ್ಷ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರ, 7.73 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 71.94 ಕೋಟಿ ರೂ. ಮೌಲ್ಯದ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. +ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆ ಹಾಗೂ ಬೆಲೆ ಬಾಳುವ ಲೋಹಗಳಿಗೆ ಸಂಬಂಧಿಸಿದಂತೆ 1587 ಎಫ್‍ಐಆರ್‍ಗಳನ್ನು ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸರು ದಾಖಲಿಸಿದ್ದಾರೆ. 1,214 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅಬಕಾರಿ ಇಲಾಖೆ ಘೋರ ಅಪರಾಧದಡಿಯಲ್ಲಿ 2,002 ಪ್ರಕರಣಗಳನ್ನು ದಾಖಲಿಸಲಾಗಿದೆ. ಪರವಾನಗಿ ಉಲ್ಲಂಘನೆಯಡಿಯಲ್ಲಿ 2,531 ಪ್ರಕರಣ, ಎನ್‍ಡಿಪಿಎಸ್ ಅಡಿಯಲ್ಲಿ 119 ಪ್ರಕರಣ ಹಾಗೂ ಅಬಕಾರಿ ಕಾಯ್ದೆ ಉಲ್ಲಂಘನೆಯಡಿಯಲ್ಲಿ 12,766 ಪ್ರಕರಣಗಳನ್ನು ದಾಖಲಿಸಲಾಗಿದೆ. +ಕೊಳ್ಳೇಗಾಲ ಪೊಲೀಸ್ ಠಾಣೆ ತಂಡದವರು 1,02,90,469 ರೂ. ಮೌಲ್ಯದ 2.170 ಕೆ.ಜಿ. ಚಿನ್ನದ ಆಭರಣ, ಸ್ಥಿರ ಕಣ್ಗಾವಲು ತಂಡದವರು ದಾವಣಗೆರೆ ಜಿಲ್ಲೆಯ ಲೋಕಿಕೆರೆ ಚೆಕ್ ಪೋಸ್ಟ್ ನಲ್ಲಿ 12,50,45,115 ರೂ. ಮೌಲ್ಯದ 20.874 ಕೆ.ಜಿ. ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. \ No newline at end of file diff --git a/eesanje/url_46_181_1.txt b/eesanje/url_46_181_1.txt new file mode 100644 index 0000000000000000000000000000000000000000..904d3d00d0aee26a55a0bb1dd2e72b9e3fc801bb --- /dev/null +++ b/eesanje/url_46_181_1.txt @@ -0,0 +1,6 @@ +ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದ ಕವಯಿತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಸಿಎಂ ಅಭಿನಂದನೆ +ಬೆಂಗಳೂರು,ಏ.12-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಕವಯಿತ್ರಿ ಡಾ.ಮಮ್ತಾ ಸಾಗರ್ ಅವರಿಗೆ ಇಂದು ಅಭಿನಂದನೆ ಸಲ್ಲಿಸಿದರು. +ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್ ಅವರು ಜಾಗತಿಕ ಸಾಹಿತ್ಯ ಪ್ರಶಸ್ತಿ ಪಡೆದಿದ್ದು, ಇಂದು ಚಿನ್ನದ ಪದಕ ಮತ್ತು ಪ್ರಶಸ್ತಿ ಪತ್ರ ಸಮೇತ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. +ಜಾಗತಿಕ ಸಾಹಿತ್ಯ ಪ್ರಶಸ್ತಿಯನ್ನು ಪಡೆದ ಖ್ಯಾತ ಕವಯತ್ರಿ ಡಾ|| ಮಮ್ತಾ ಸಾಗರ್ ಅವರು ಇಂದು ನನ್ನನ್ನು ಭೇಟಿಯಾದ ಸಂದರ್ಭದಲ್ಲಿ ಅವರ ಸಾಧನೆಯನ್ನು ಶ್ಲಾಘಿಸಿ, ಅಭಿನಂದಿಸಿದೆ.ಏಪ್ರಿಲ್ 4 ರಿಂದ 6 ರವರೆಗೆ ನೈಜೀರಿಯಾದ ಅಬುಜ ನಗರದಲ್ಲಿ ಜಾಗತಿಕ ಬರಹಗಾರರ ಒಕ್ಕೂಟ ಆಯೋಜಿಸಿದ್ದ ಏಳನೇ ಅಂತಾರಾಷ್ಟ್ರೀಯ ಸಾಹಿತ್ಯೋತ್ಸವದಲ್ಲಿ ಮಮ್ತಾ ಸಾಗರ್ ಅವರು…../EdJTZpd23u +ವೈವಿಧ್ಯವನ್ನು ಸಂಭ್ರಮಿಸುವ ಮೂಲಕ ಹೊಸ ಏಕತೆಯನ್ನು ಕುರಿತು ಚಿಂತಿಸುವ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕರೆಕೊಟ್ಟ ಖ್ಯಾತ ಕವಯಿತ್ರಿ ಡಾ. ಮಮ್ತಾ ಸಾಗರ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು. +ಈ ಬಾರಿಯ ಪ್ರತಿಷ್ಠಿತ ಜಾಗತಿಕ ಒಕ್ಕೂಟದ ಗೌರವ ಪ್ರಶಸ್ತಿಯನ್ನು ನೊಬೆಲ್ ಪ್ರಶಸ್ತಿ ವಿಜೇತ ಬರಹಗಾರ ವೋಲೆ ಸೋಯೆಂಕಾ ಅವರಿಗೆ ಘೋಷಿಸಲಾಗಿದೆ. \ No newline at end of file diff --git a/eesanje/url_46_181_10.txt b/eesanje/url_46_181_10.txt new file mode 100644 index 0000000000000000000000000000000000000000..7d7dd1d36bb2bfa4dd52681b6dc26ae0f24da65f --- /dev/null +++ b/eesanje/url_46_181_10.txt @@ -0,0 +1,5 @@ +ಅಭ್ಯರ್ಥಿಗಳು ಖರ್ಚು, ವೆಚ್ಚ ಕುರಿತು ಚುನಾವಣಾ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದು ಕಡ್ಡಾಯ +ಬೆಂಗಳೂರು,ಏ.11-ಚುನಾವಣಾ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚವನ್ನು ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಸಹಾಯಕ ವೆಚ್ಚ ವೀಕ್ಷಕರಿಂದ ಸಹಿ ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. +ಪ್ರಜಾಪ್ರತಿ ನಿಧಿ ಕಾಯ್ದೆ-1951ರ ಕಲಂ-77ರ ಪ್ರಕಾರ 2024ರ ಲೋಕಸಭಾ ಚುನಾವಣಾ ಅಭ್ಯರ್ಥಿಗಳು ಅಥವಾ ಅಭ್ಯರ್ಥಿಗಳು ನಿಗದಿ ಪಡಿಸಿರುವ ಪ್ರತಿನಿಧಿಗಳು, ಚುನಾವಣಾ ವೆಚ್ಚವನ್ನು ಪ್ರತ್ಯೇಕವಾಗಿ ರಿಜಿಸ್ಟರ್‍ಗಳಲ್ಲಿ ( ಎ ಬಿ ಸಿ) ಗಳಲ್ಲಿ ನಿರ್ವಹಿಸಿ, ಚುನಾವಣಾ ವೆಚ್ಚ ವೀಕ್ಷಕರಿಗೆ ಮತ್ತು ಸಹಾಯಕ ವೆಚ್ಚ ವೀಕ್ಷಕರಿಂದ ಕನಿಷ್ಠ 3 ಬಾರಿ ಪರಿಶೀಲನೆಗೆ ಒಳಪಡಿಸಿ ಸಹಿ ಪಡೆಯುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. +ಆದ್ದರಿಂದ, ತಮಗೆ ಈ ಮೂಲಕ ತಿಳಿಯ ಪಡಿಸುವುದೇನೆಂದರೆ, ಚುನಾವಣಾ ವೆಚ್ಚದ ರಿಜಿಸ್ಟರ್‍ಗಳನ್ನು ಪರಿಶೀಲಿಸಲು ಈ ಕೆಳಕಂಡ ದಿನಾಂಕ, ಸಮಯ ಮತ್ತು ವಿಳಾಸದಲ್ಲಿ ತಪ್ಪದೇ ಹಾಜರಾಗತಕ್ಕದ್ದು ಹಾಗೂ ವೆಚ್ಚಕ್ಕೆ ಸಂಬಂಧಿಸಿದಂತೆ ವೋಚರ್ ಅಥವಾ ಬಿಲ್ ಗಳೊಂದಿಗೆ ಚುನಾವಣಾ ಮೀಸಲು ಖಾತೆಯ ಬ್ಯಾಂಕ್ ಪಾಸ್ ಪುಸ್ತಕವನ್ನು ನಿಗದಿಪಡಿಸಿದ ಹಿಂದಿನ ದಿನಾಂಕಕ್ಕೆ ಇಂದೀಕರಿಸಿಕೊಂಡು ಪರಿಶೀಲನಾ ಸಮಯದಲ್ಲಿ ಹಾಜರು ಪಡಿಸಬೇಕಿದೆ. +ನಾಳೆ, ಏ.18 ಹಾಗೂ ಏ.24ರಂದು ಮೂರು ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿರುವ ಅನೆಕ್ಸ್ 3 ರಲ್ಲಿರುವ ಕೊಠಡಿ ಸಂಖ್ಯೆ 201ರಲ್ಲಿ ಅಭ್ಯರ್ಥಿಗಳ ವೆಚ್ಚ ತಪಾಸಣೆ ನಡೆಯಲಿದೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಚುನಾವಣಾ„ಕಾರಿ ಡಾ.ಕೆ.ಹರೀಶ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_181_11.txt b/eesanje/url_46_181_11.txt new file mode 100644 index 0000000000000000000000000000000000000000..f4fcb61d3224db714496aee9fa2dfc54271411a0 --- /dev/null +++ b/eesanje/url_46_181_11.txt @@ -0,0 +1,3 @@ +ಇಲ್ಲಿದೆ ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ವಿವರ +ಬೆಂಗಳೂರು,ಏ.11-ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಶುಲ್ಕ ಕಟ್ಟಿಸಿಕೊಂಡಿದ್ದರೂ ಕೆಲವು ಖಾಸಗಿ ಕಾಲೇಜುಗಳು ಸೇರಿದಂತೆ 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ಕಳಿಸಿದ ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳ ಪಟ್ಟಿ ಇಂತಿದೆ.1.ವಿನಾಯಕ ಪಿಯು ಕಾಲೇಜ್ ಫಾರ್ ವುಮೆನ್ – ಸುಂಕದಕಟ್ಟೆ2.ಪವನ್ ಪಿಯು ಕಾಲೇಜು – ಶ್ರೀರಾಮಪುರಂ3.ಬಸವರಾಜ್ ಸ್ವಾಮಿ ಪಿಯು ಕಾಲೇಜು – ಲವ ಕುಶ ನಗರ, ಲಗ್ಗೆರೆ4.ಮೊಹರೆ ಪಿಯು ಕಾಲೇಜು – ಬಾಬುಸಪಾಳ್ಯ- ಬೆಂಗಳೂರು5.ವಿನಾಯಕ ಸರಸ್ವತಿ ಪಿಯು ಕಾಲೇಜು – ಹೊಸಪೇಟೆ ಬಳ್ಳಾರಿ6.ಬಸವ ಪಿಯು ಕಾಲೇಜು ಇಂಡಿ ತಾಲೂಕು ವಿಜಯಪುರ7.ದಯಾನಂದ ಪಿಯು ಕಾಲೇಜು ಸಿಂಧಗಿ ವಿಜಯಪುರ8.ವಿಜಯ ಪಿಯು ಕಾಲೇಜು, ಗದಗ9.ಎಸ್ ಕೆ ಆರ್ ಸ್ವಾಮಿ ಕಂಪ್ಯೂಟರ್ ಸೈನ್ಸï ಪಿಯು ಕಾಲೇಜು – ಚಿತ್ರದುರ್ಗ10.ಸುನಾಗರ್ ಪಿಯು ಕಾಲೇಜು – ವಿಜಯಪುರ11.ಎಸ್‍ವಿ ಪಿಯು ಕಾಲೇಜು ಬೀದರ್12.ಜಾಸ್ಮಿನ್ ಪಿಯು ಕಾಲೇಜು ಬೀದರ್13.ಶಾರದಾ ಪಿಯು ಕಾಲೇಜು – ಬೀದರ್14.ಹೆಚ್‍ಎಸ್‍ಬಿ ಪಿಯು ಕಾಲೇಜು – ಹಾವೇರಿ15.ಡಾಕ್ಟರ್ ಬಿ ಆರ್ ಅಂಬೇಡ್ಕರ್ ಪಿಯು ಕಾಲೇಜು – ಹಾವೇರಿ16.ಮಲ್ಲಿಕಾ ಪಿಯು ಕಾಲೇಜು – ಯಾದಗಿರಿ17.ನೀಲಕಂಠ ಪಿಯು ಕಾಲೇಜು – ಯಾದಗಿರಿ18.ಜೆಂಟ್ಸ್ ಕಾಮರ್ಸ್ ಪಿಯು ಕಾಲೇಜು – ಧಾರವಾಡ19.ಟಿಇಎಸ್ ಕಾದರ್ ಪಟೇಲ್ ಪಿಯು ಕಾಲೇಜು – ಕಲಬುರಗಿ20.ಹೆಚ್‍ಕೆ ಗರೀಬ್ ನವಾಜ್ ಪಿಯು ಕಾಲೇಜು – ಕಲಬುರಗಿ21.ಎಸ್‍ಟಿಎಂಇಎಸ್ ಗಲ್ಸರ್ï ಪಿಯು ಕಾಲೇಜು ಯಾದಗಿರಿ22.ಸಾಗರ್ ನಾಡು ಪಿಯು ಕಾಲೇಜು – ಯಾದಗಿರಿ23.ಆದಿತ್ಯ ಪಿಯು ಕಾಲೇಜು – ರಾಯಚೂರು24.ಕೆ ಆರ್ ಸಿ ಗಲ್ಸರ್ï ರೂರಲ್ ಪಿಯು ಕಾಲೇಜು ಕೊಪ್ಪಳ25.ಬ್ರಾಹ್ಮರಂಭ ವುಮೆನ್ ಪಿಯು ಕಾಲೇಜು ಕೊಪ್ಪಳ26.ಶಿರಡಿ ಸಾಯಿ ಪಿಯು ಕಾಲೇಜು ಉಡುಪಿ +ಸರ್ಕಾರಿ ಕಾಲೇಜುಗಳು1.ಗವರ್ನಮೆಂಟ್ ಪಿಯು ಕಾಲೇಜು ದಾವಣಗೆರೆ2.ಗವರ್ನಮೆಂಟ್ ಪಿಯು ಕಾಲೇಜು ಧಾರವಾಡಅನುದಾನಿತ ಕಾಲೇಜುಗಳು1.ಸಿದ್ದಗಂಗಾ ಪಿಯು ಕಾಲೇಜು ಬೆಂಗಳೂರು2.ಸಾರ್ವಜನಿಕ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ರಾಮನಗರ3.ಕೆಎಲ್‍ಇಎಸ್ ಪಿಯು ಕಾಲೇಜು, ಬೀದರ್4.ಜಿವಿಎ ಮೆಮ್ ಕಂಪ್ಯೂಟರ್ ಪಿಯು ಕಾಲೇಜು – ಚಿತ್ರದುರ್ಗ5.ಮೆಥೋಡಿಸ್ಟ್ ಗರ್ಲ್ಸ್ ಪಿಯು ಕಾಲೇಜು ಕೋಲಾರ6.ಸೆಂಟ್ರಲ್ ಕಂಪ್ಯೂಟರ್ ಸೈನ್ಸ್ ಪಿಯು ಕಾಲೇಜು ತುಮಕೂರುವಿಭಜಿತ ಕಾಲೇಜು1.ಡಾಕ್ಟರ್ ಅಂಬೇಡ್ಕರ್ ಪಿಯು ಕಾಲೇಜು – ಇಂದಿರಾನಗರ ಬೆಂಗಳೂರು \ No newline at end of file diff --git a/eesanje/url_46_181_12.txt b/eesanje/url_46_181_12.txt new file mode 100644 index 0000000000000000000000000000000000000000..06983011cbffd4b5eda57879379722194ea70f32 --- /dev/null +++ b/eesanje/url_46_181_12.txt @@ -0,0 +1,5 @@ +ಕರ್ನಾಟಕದಲ್ಲಿ ಮತ್ತೊಂದು ನ್ಯೂಸ್ ಚಾನಲ್, ಫ್ರೀಡಂ ಟಿವಿ ಲೋಕಾರ್ಪಣೆ +ಬೆಂಗಳೂರು,ಏ.11- ಜನ ಸಾಮಾನ್ಯರ ಶಕ್ತಿ ಎಂಬ ಟ್ಯಾಗ್ ಲೈನ್ ಹೊಂದಿರುವ ಫ್ರೀಡಂ ಟಿವಿ ಲೋಕಾರ್ಪಣೆಗೊಂಡಿದೆ. ಪತ್ರಕರ್ತ ಎಲ್ .ಎಂ.ನಾಗರಾಜು ಅವರ ಸಾರಥ್ಯದಲ್ಲಿ ಆರಂಭವಾಗಿರುವ ಫ್ರೀಡಂ ಟಿವಿ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ಆರಂಭಗೊಂಡಿದೆ. ಇಂತಹ ಟಿವಿಯನ್ನು ಪೌರ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು, ಹಾಗೂ ರೈತರ ಪ್ರತಿನಿಧಿಗಳ ಮೂಲಕ ಉದ್ಘಾಟಿಸಿದ್ದು ವಿಶೇಷವಾಗಿತ್ತು. +ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಪಾಲ್ಗೊಂಡು ಜ್ಯೋತಿ ಬೆಳಗಿಸಿದರು. ಹಿರಿಯ ನಟಿ ಪ್ರೇಮಾ ಫ್ರೀಡಂ ಟಿವಿಯ ಸ್ಟುಡಿಯೋ ಉದ್ಘಾಟಿಸಿದರು. ಲಹರಿ ಸಂಸ್ಥೆಯ ಸಂಸ್ಥಾಪಕ ಲಹರಿ ವೇಲು ಅವರು ಪ್ರೊಡಕ್ಷನ್ ಕಂಟ್ರೋಲ್ ರೂಂ ಉದ್ಘಾಟಿಸಿದರು. +ಫ್ರೀಡಂ ಟಿವಿಯ ಸಂಸ್ಥಾಪಕರು, ಮ್ಯಾನೇಜಿಂಗ್ ಡೈರೆಕ್ಟರ್ ಆದ ಎಲ್ .ಎಂ.ನಾಗರಾಜ್ ಮಾತನಾಡಿ, ವಾಹಿನಿಯು ಜನಸಾಮಾನ್ಯರ ಪ್ರತಿನಿಧಿಯಂತೆ ಕೆಲಸ ಮಾಡಲಿದೆ. ಪ್ರಜಾತಂತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಪತ್ರಿಕಾರಂಗದ ಘನತೆ ಹೆಚ್ಚಿಸಲು ಶ್ರಮಿಸಲಿದೆ ಎಂದರು. +ಫ್ರೀಡಂ ಸುದ್ದಿವಾಹಿನಿಯು ದೈನಂದಿನ ಸುದ್ದಿಗಳ ಜೊತೆ ಜೊತೆಯಲ್ಲೇ ಧಾರ್ಮಿಕ, ಆಧ್ಯಾತ್ಮ, ಮನರಂಜನೆ, ಕ್ರೀಡೆ, ಹೀಗೆ ಪ್ರತಿಕ್ಷೇತ್ರದ ಆಗುಹೋಗುಗಳ ಬಗ್ಗೆ ಮಾಹಿತಿ ನೀಡಲಿದೆ. ಎಲ್ಲಾ ಕೇಬಲ್ ನೆಟ್ ವರ್ಕ್‍ಗಳ ಜೊತೆ ಯೂಟ್ಯೂಬ್ , -ಫೇಸ್‍ಬುಕ್, ಟ್ವಿಟರ್, ಇನ್‍ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳ ಮೂಲಕವೂ ಫ್ರೀಡಂ ಟಿವಿ ನಿಮ್ಮ ಮನೆ ಮನೆಗೆ ಬರಲಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_181_2.txt b/eesanje/url_46_181_2.txt new file mode 100644 index 0000000000000000000000000000000000000000..0fa8f9cf141787e881645f7314f1c2ce61a5d1aa --- /dev/null +++ b/eesanje/url_46_181_2.txt @@ -0,0 +1,7 @@ +ಕಾಂಗ್ರೆಸ್‍ನತ್ತ ಮುಖ ಮಾಡಿದ ಮಾಜಿ ಶಾಸಕರು..? +ಬೆಂಗಳೂರು,ಏ.12-ಬಿಜೆಪಿ-ಜೆಡಿಎಸ್ ಮೈತ್ರಿಯ ಅಪಸ್ವರದ ನಡುವೆ ಹಲವು ಕ್ಷೇತ್ರಗಳಲ್ಲಿ ಮಾಜಿ ಶಾಸಕರು ಅಸಮಾಧಾನಗೊಂಡು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಅದರಲ್ಲೂ ಕೌಟುಂಬಿಕ ರಾಜಕಾರಣದಲ್ಲಿ ಒಡೆದಾಳುವ ನೀತಿಯಿಂದ ಸಿಟ್ಟಾಗಿರುವ ಕಲಬುರಗಿ ಜಿಲ್ಲೆಯ ಅಫ್ಜಲ್‍ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದರೆ, ಮಂಡ್ಯ ಜಿಲ್ಲೆಯ ನಾಗಮಂಗಲದ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸಭೆಯಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ. +ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿಯಲ್ಲಿದ್ದು, ಕಳೆದ ಬಾರಿ ಅಫ್ಜಲ್‍ಪುರದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಎಂ.ವೈ.ಪಾಟೀಲ್ ವಿರುದ್ಧ ಸೋಲು ಕಂಡಿದ್ದರು. ಇದಕ್ಕೆ ಮೂಲ ಕಾರಣ ಅವರ ಸಹೋದರ ಸಂಬಂಧಿ ನಿತಿನ್ ಗುತ್ತೇದಾರ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾಗಿತ್ತು. +ಪ್ರಸ್ತುತ ಬಿಜೆಪಿ ನಾಯಕರು ನಿತಿನ್ ಗುತ್ತೇದಾರ್‍ರನ್ನು ಬಿಜೆಪಿಗೆ ಸೇರಿಸಿಕೊಂಡು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ಅಸಮಾಧಾನಗೊಂಡಿರುವ ಮಾಲೀಕಯ್ಯ ಗುತ್ತೇದಾರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರನ್ನು ಭೇಟಿ ಮಾಡಿದ್ದಾರೆ. +ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಲಬುರಗಿಯ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಅವರು ಹಳೆಯ ಸ್ನೇಹಿತರು. ಈ ಕಾರಣಕ್ಕಾಗಿ ಪರಸ್ಪರ ಭೇಟಿಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಡಿ.ಕೆ.ಶಿವಕುಮಾರ್‍ರವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು. +ಇತ್ತ ಮಂಡ್ಯ ಜಿಲ್ಲೆಯ ಪ್ರಮುಖ ನಾಯಕ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾರೆ. ಎಲ್.ಆರ್.ಶಿವರಾಮೇಗೌಡ ಮತ್ತು ಪುತ್ರ ಚೇತನ್‍ಗೌಡ ಇಬ್ಬರೂ ಕೆಲ ತಿಂಗಳುಗಳ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ಚೇತನ್‍ಗೌಡ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರ ತಂದೆ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಅಭ್ಯರ್ಥಿ ಪರವಾದ ಸಭೆಯಲ್ಲಿ ಭಾಗವಹಿಸಿರುವುದು ಕುತೂಹಲ ಕೆರಳಿಸಿದೆ. +ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‍ರವರ ಪುತ್ರಿ ನಿಶಾ ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಹಲವಾರು ಕ್ಷೇತ್ರಗಳಲ್ಲಿ ಇದೇ ರೀತಿಯ ಬೆಳವಣಿಗೆಗಳಾಗಿವೆ. ಚುನಾವಣಾ ಕಾಲದಲ್ಲಿ ಪಕ್ಷಾಂತರಗೊಳ್ಳುವ ಸ್ಥಾನಪಲ್ಲಟಗಳು ಸಾಮಾನ್ಯ ಎಂದು ಹೇಳಲಾಗಿದ್ದರೂ ಪ್ರಮುಖ ನಾಯಕರು ರಾಜಕೀಯ ಮಗ್ಗಲು ಬದಲಿಸುತ್ತಿರುವುದು ಗಮನ ಸೆಳೆದಿದೆ. \ No newline at end of file diff --git a/eesanje/url_46_181_3.txt b/eesanje/url_46_181_3.txt new file mode 100644 index 0000000000000000000000000000000000000000..dac69eaf08e6a31b202506c1100ec6ebe567f65d --- /dev/null +++ b/eesanje/url_46_181_3.txt @@ -0,0 +1,5 @@ +ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ +ಬೆಂಗಳೂರು,ಏ.12-ರಾಜ್ಯದ ಕೆಲವೆಡೆ ಚದುರಿದಂತೆ ಮುಂಗಾರು ಪೂರ್ವ ಮಳೆ ಆಗುತ್ತಿದ್ದು, ರಾಜ್ಯದಲ್ಲಿ ಇನ್ನೆರೆಡು ದಿನ ಇದೇ ರೀತಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರೆಡು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದೆ. +ರಾಜ್ಯದ ಕೆಲವೆಡೆ ಅಲ್ಲಲ್ಲಿ ಮಳೆಯಾಗಲಿದೆ, ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದೆ. ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಚಿಕ್ಕಮಗಳೂರು, ಹಾವೇರಿ, ಧಾರವಾಡ, ಗದಗ, ಹುಬ್ಬಳ್ಳಿ , ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಡಗು, ಶಿವಮೊಗ್ಗ ಸೇರಿದಂತೆ ಕೆಲವೆಡೆ ನಿನ್ನೆ ಮಳೆಯಾಗಿದೆ. +ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ. ಮಳೆ ಬಿದ್ದ ಪರಿಣಾಮ ಗರಿಷ್ಠ ತಾಪಮಾನದಲ್ಲಿ 1 ರಿಂದ 2 ಡಿ.ಸೆ.ನಷ್ಟು ಇಳಿಕೆಯಾಗಿದೆ. +ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಇಂದು ಮತ್ತು ನಾಳೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. \ No newline at end of file diff --git a/eesanje/url_46_181_4.txt b/eesanje/url_46_181_4.txt new file mode 100644 index 0000000000000000000000000000000000000000..c56a1ffc24a0df5a28890ee35582a0a0d162ba7b --- /dev/null +++ b/eesanje/url_46_181_4.txt @@ -0,0 +1,3 @@ +ಲಘು ಹೃದಯಾಘಾತದಿಂದ ಆಸ್ಪತ್ರೆ ಸೇರಿದ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ +ಬೆಂಗಳೂರು,ಏ.12-ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಲಘು ಹೃದಯಾಘಾತಕ್ಕೆ ಒಳಗಾಗಿ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖವಾಗಿರುವುದಾಗಿ ಶರವಣ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಆಸ್ಪತ್ರೆಯಲ್ಲಿ ತಮಗೆ ಸ್ಟಂಟ್ ಅಳವಡಿಸಲಾಗಿದೆ. ಇದೀಗ ಗುಣಮುಖವಾಗಿದ್ದು, ಅಭಿಮಾನಿಗಳು, ಆತ್ಮೀಯರು ಆತಂಕಪಡುವ ಅವಶ್ಯಕತೆಯಿಲ್ಲ. ಎಲ್ಲರ ಪ್ರೀತಿ, ಹಾರೈಕೆ, ಪ್ರಾರ್ಥನೆಯಿಂದ ಹಾಗೂ ಭಗವಂತನ ಕೃಪೆಯಿಂದ ಚೇತರಿಸಿಕೊಳ್ಳುತ್ತಿರುವುದಾಗಿ ಶರವಣ ತಿಳಿಸಿದ್ದಾರೆ. \ No newline at end of file diff --git a/eesanje/url_46_181_5.txt b/eesanje/url_46_181_5.txt new file mode 100644 index 0000000000000000000000000000000000000000..dfed2e07e68d08874e987cb3fab9c08bb094c780 --- /dev/null +++ b/eesanje/url_46_181_5.txt @@ -0,0 +1,13 @@ + : ರಾಮೇಶ್ವರಂ ಕೆಫೆ ಸ್ಪೋಟದ ಪ್ರಮುಖ ರೂವಾರಿಗಳು ಪಶ್ಚಿಮಬಂಗಾಳದಲ್ಲಿ ಅರೆಸ್ಟ್ +ನವದೆಹಲಿ,ಏ.12-ಕರ್ನಾಟಕದ ರಾಜಧಾನಿ ಬೆಂಗಳೂರಿನ ಎಚ್‍ಎಲ್‍ನ ಕುಂದಲಹಳ್ಳಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‍ ಸ್ಫೋಟದ ಪ್ರಮುಖ ರೂವಾರಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗದಲ್ಲಿ ತೀರ್ಥಹಳ್ಳಿ ತಾಲ್ಲೂಕಿನವರಾದ ಮುಸಾವೀರ್ ಹುಸೇನ್ ಶಬೀರ್ ಹಾಗೂ ಅಬ್ದುಲ್ ಮತೀನ್ ಎಂಬುವರನ್ನು ಎನ್‍ಐಎ ಅಧಿಕಾರಿಗಳು ಪಶ್ಚಿಮಬಂಗಾಳದಲ್ಲಿ ಬಂಧಿಸಿದ್ದಾರೆ. +ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದ ಎನ್‍ಐಎ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಖಚಿತ ಸುಳಿವಿನ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಉಗ್ರ ಎಡೆಮುರಿ ಕಟ್ಟಿದ್ದಾರೆ.ಇಬ್ಬರು ಐಸಿಸ್ ಉಗ್ರ ಸಂಘಟನೆಯ ಪರ ಒಲವು ಹೊಂದಿದ್ದು, ವಿಶೇಷವಾಗಿ ದಕ್ಷಿಣ ಭಾಗದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವುದು ಹಾಗೂ ಈ ಸಂಘದ ಮೇಲೆ ವಿದ್ಯಾವಂತ ಯುವಕರನ್ನು ಸೆಳೆಯುವ ಕಾರ್ಯದಲ್ಲಿ ಹಲವು ವರ್ಷಗಳಿಂದ ನಿರತರಾಗಿದ್ದರು. +ಎನ್‍ಐಎ ಮೂಲಗಳ ಪ್ರಕಾರ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಮೋಸ್ಟ್ ವಾಂಟೆಡ್, ಶಂಕಿತ ಉಗ್ರರಾದ ಮುಸ್ಸಾವೀರ್, ಅಬ್ದುಲ್ ಮತೀನ್ ಹಲವು ವರ್ಷಗಳಿಂದ ಉಗ್ರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ತಮಿಳುನಾಡು, ಮಹಾರಾಷ್ಟ್ರದಲ್ಲಿಯೂ ಸಕ್ರಿಯರಾಗಿದ್ದರು ಎಂಬ ವಿಚಾರ ಎನ್‍ಐಎ ತನಿಖೆಯಿಂದ ಗೊತ್ತಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್, ಮುಸ್ಸಾವಿರ್ ಮೊದಲಿನಿಂದಲೂ ಉಗ್ರ ತತ್ವದ ಒಲವು ಹೊಂದಿದ್ದರು. +ಜನವರಿ ಮತ್ತು ಫೆಬ್ರವರಿಯಲ್ಲಿ ಚೆನ್ನೈನಲ್ಲಿ ತಂಗಿದ್ದ ಮುಸಾವೀರ್ ಹುಸೇನ್ ಶಜೀಬ್ ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆಸಿದ್ದಾನೆ ಎನ್ನಲಾಗಿದೆ. ಈತ ಮಾಸ್ಟರ್ ಮೈಂಡ್ ಕೂಡ ಆಗಿರಬಹುದು ಎಂಬ ಬಗ್ಗೆಯೂ ಎನ್‍ಐಎ ತನಿಖೆ ನಡೆಸುತ್ತಿತ್ತು. ಈತನ ಜೊತೆ ಅಬ್ದುಲ್ ಮತೀನ್ ತಹಾ ಕೂಡ ಇದ್ದ ಎಂಬುದು ಗೊತ್ತಾಗಿದೆ. ಈ ಇಬ್ಬರು ಕೂಡ ಅಲ್ ಹಿಂದ್ ಮಾಡ್ಯೂಲ್ ಕೇಸ್‍ನಲ್ಲಿ ಎನ್‍ಐಎಗೆ ಬೇಕಾಗಿದ್ದು, 2020ರಿಂದಲೂ ತಲೆಮರೆಸಿಕೊಂಡಿದ್ದಾರೆ. +ಕಳೆದ ಮಾ.1ರಂದು ನಡೆದ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎನ್‍ಐಎ ಅಧಿಕಾರಿಗಳು ಪ್ರಮುಖ ಆರೋಪಿ ಮುಸಾವೀರ್ ಶಬೀರ್‍ನನ್ನು ಬಂಧಿಸಿತ್ತು.ಚಿಕ್ಕಮಗಳೂರು ದುಬೈನಗರದ ಮುಜಮೀಲ್, ಕೆಫೆಯಲ್ಲಿ ಬಾಂಬ್ ಇರಿಸಿದ್ದ ಶಂಕಿತ ಹಾಗೂ ಇತರರ ಜೊತೆ ಸೇರಿ ಸಂಚು ರೂಪಿಸಿದ್ದ. ಕೆಲ ಪುರಾವೆಗಳನ್ನು ಆಧರಿಸಿ ಮುಜಮೀಲ್‍ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಈತನೇ ಪ್ರಮುಖ ಸಂಚುಕೋರ ಎಂಬುದು ಗೊತ್ತಾಗಿತ್ತು. +18 ಸ್ಥಳಗಳ ಮೇಲೆ ದಾಳಿ:ಬಾಂಬ್ ಇರಿಸಲು ಸಜ್ಜಾಗಿದ್ದ ಮುಸಾವೀರ್, ತಾಹಾಗೆ ಅಗತ್ಯವಿದ್ದ ಕಚ್ಚಾ ಸಾಮಗ್ರಿ ಹಾಗೂ ಇತರೆ ವಸ್ತುಗಳನ್ನು ಮುಜಮೀಲ್ ಪೂರೈಸಿದ್ದ. ರಾಮೇಶ್ವರಂ ಕೆಫೆ ಸ್ಥಳಕ್ಕೆ ತಲುಪಲು ಹಾಗೂ ಅಲ್ಲಿಂದ ಪರಾರಿಯಾಗುವ ಸಂದರ್ಭದಲ್ಲಿ ಸಾರಿಗೆ ವ್ಯವಸ್ಥೆಗೂ ಅನುಕೂಲ ಕಲ್ಪಿಸಿದ್ದ. ಮುಜಮೀಲ್ ಸಹಾಯದಿಂದಲೇ ಮುಸಾವೀರ್, ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಎಂದು ಎನ್‍ಐಎ ಮೂಲಗಳು ಹೇಳಿವೆ. +ಸ್ಪೋಟದಲ್ಲಿ ಭಾಗಿಯಾಗಿದ್ದವರ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ 18 ಸ್ಥಳಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿತ್ತು.ಮುಜಮೀಲ್, ಮುಸಾವೀರ್, ಅಬ್ದುಲ್ ಮತೀನ್ ತಾಹಾ ಮನೆಗಳು ಹಾಗೂ ಅಂಗಡಿಗಳಲ್ಲಿ ಶೋಧ ನಡೆಸಲಾಯಿತು. ದಾಳಿ ಸಂದರ್ಭದಲ್ಲೇ ಮುಜಮೀಲ್ ಸಿಕ್ಕಿಬಿದ್ದಿದ್ದ. +ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯದಲ್ಲಿರುವ ಶಂಕಿತರು, ದೇಶದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಇದೊಂದು ದೊಡ್ಡ ಸಂಚು. ಇದರ ಹಿಂದಿರುವ ಪ್ರತಿಯೊಬ್ಬರನ್ನು ಪತ್ತೆ ಮಾಡಲು ತನಿಖೆ ಮುಂದುವರಿದಿದೆ¿ ಎಂದು ಮೂಲಗಳು ತಿಳಿಸಿವೆ. +ಯಾರು ಈ ಮುಸಾವೀರ್ ಹುಸೇನ್?:ಮುಸಾವೀರ್ ಹುಸೇನ್ ಶಜೀಬ್ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನವನು. ಶಿವಮೊಗ್ಗ ಐಸಿಸ್ ಮಾಡ್ಯೂಲ್‍ನ ಭಾಗವಾಗಿದ್ದ ಈತ ಎನ್‍ಐಎಗೆ ಈ ಹಿಂದೆಯೇ ಬೇಕಾಗಿದ್ದ. 2020ರ ಅಲ್ ಹಿಂದ್ ಮಾಡ್ಯೂಲ್ ಕೇಸ್‍ನಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಎನ್‍ಐಎ ವಾರೆಂಟ್ ಪಟ್ಟಿಯಲ್ಲಿ ಈತನ ಹೆಸರಿದೆ. ಎ-17 ಆಗಿದ್ದು, ತಲೆಮರೆಸಿಕೊಂಡಿದ್ದಾನೆ. ಕೊನೆಯದಾಗಿ ಬೆಂಗಳೂರು ಸ್ಪೋಟ ಪ್ರಕರಣದ ಬಳಿಕ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಈತನ ಜಾಡು ಕಂಡುಬಂದಿದೆ. ಬೆಂಗಳೂರಿನಲ್ಲಿ ರೆಡಿಮೆಡ್ ಗಾರ್ಮೆಂಟ್ಸ್ ವ್ಯವಹಾರವನ್ನು ಮುಸಾವೀರ್ ನಡೆಸುತ್ತಿದ್ದ. ಆದರೆ 2019ರಿಂದ ನಾಪತ್ತೆಯಾಗಿದ್ದಾನೆ ಎಂದು ಅವರ ತಾಯಿ ಹೈಕೋರ್ಟ್‍ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. +ಅಲ್ ಹಿಂದ್‍ನ ಸಕ್ರಿಯ ಸದಸ್ಯ!ಐಸಿಸ್‍ನಿಂದ ಪ್ರೇರೆಪಿತವಾಗಿ ಕಟ್ಟಿದ್ದ ಭಯೋತ್ಪಾದಕ ಸಂಘಟನೆ ಅಲ್ ಹಿಂದ್‍ನ ಸಕ್ರಿಯ ಸದಸ್ಯನಾಗಿ ಮುಸಾವೀರ್ ಹುಸೇನ್ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ. +ಏನಿದು ಅಲ್ ಹಿಂದ್?ಐಸಿಸ್ ಪ್ರೇರೆಪಿತ ಅಲ್ ಹಿಂದ್ ಮಾಡ್ಯೂಲ್ ಅನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದ್ದರು. ದಕ್ಷಿಣ ಭಾರತದ ಮುಸ್ಲಿಂ ಯುವಕರನ್ನು ಸೇರಿಸಿಕೊಂಡು ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಮುಂದಾಗಿದ್ದರು. ಬೆಂಗಳೂರನ್ನೇ ಮೂಲವಾಗಿಟ್ಟುಕೊಂಡು ಕರ್ನಾಟಕ, ತಮಿಳುನಾಡಿನ ಹಲವೆಡೆ ಏ.2019ರಿಂದಲೂ ಸಭೆ ನಡೆಸಿ, ದೇಶದಲ್ಲಿ ವಿಧ್ವಂಶಕ ಕೃತ್ಯ ನಡೆಸಲು ಸಂಚು ರೂಪಿಸಿದ್ದರು. +ಅಬ್ದುಲ್ ಮತೀನ್ ಐಸಿಸ್ ಉಗ್ರರ ಜತೆ ಸಂಪರ್ಕ ಹೊಂದಿದ್ದ ಶಂಕೆಯಿದೆ. ಆನ್‍ಲೈನ್ ಮೂಲಕ ವಿಧ್ವಂಸಕ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದ್ದ ಉಗ್ರನನ್ನು ಅಲ್ ಹಿಂದ್ ಮುಖ್ಯಸ್ಥ ಮೆಹಬೂಬ್ ಪಾಷಾ ಜತೆ ಸಂಪರ್ಕ ಸಾಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿಚಾರವೂ ಅಲ್ ಹಿಂದ್ ಕೇಸ್ ತನಿಖೆಯಲ್ಲಿ ಗೊತ್ತಾಗಿತ್ತು. 2020ರಲ್ಲಿ ಅಲ್ ಹಿಂದ್ ಸಂಘಟನೆಯ ಸಂಚು ವಿಫಲಗೊಂಡು ಮೊಹಮದ್ ಪಾಷಾ ಸೇರಿ 18 ಮಂದಿ ಬಂಧನವಾಗುತ್ತಿದ್ದಂತೆಯೇ ಮತೀನ್, ಮುಸಾವೀರ್ ತಲೆಮರೆಸಿಕೊಂಡಿದ್ದರು. \ No newline at end of file diff --git a/eesanje/url_46_181_6.txt b/eesanje/url_46_181_6.txt new file mode 100644 index 0000000000000000000000000000000000000000..d781c3e66893d3516fed3c0d69e31abefa711927 --- /dev/null +++ b/eesanje/url_46_181_6.txt @@ -0,0 +1,5 @@ +ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿಟ್ಟುಕೊಂಡು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದವನ ಬಂಧನ +ಮಂಗಳೂರು,ಏ. 12:ಪ್ರಯಾಣಿಕನೊಬ್ಬ ಗುದನಾಳದಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದದನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ 58 ಲಕ್ಷ ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. +ಕಳೆದ ರಾತ್ರಿ ದಮ್ಮಾಮ್‍ನಿಂದ ಇಲ್ಲಿಗೆ ವಿಮಾನದಲ್ಲಿ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬ ಹೊರಹೋಗುವಾಗ ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಸೊಂಟದ ಬಳಿ ಬೀಪ್ ಶಬ್ದ ಹೊರಹೊಮ್ಮಿದೆ. +ಅನುಮಾನ ಬಂದು ಆತನನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಆತ ತನ್ನು ಗುದನಾಳದಲ್ಲಿ ಮೂರು ಸುತ್ತಿನ ರಿಂಗ್ ಆಕಾರದ ವಸ್ತುಗಳೊಳಗೆ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. +ನಂತರ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಹೊರತೆಗೆಯಲಾಯಿತು.ಪರಿಶೀಲಿಸಿದಾಗ 24-ಕ್ಯಾರೆಟ್‍ನ 812 ಗ್ರಾಂ ಚಿನ್ನ ಇರುವುದು ತಿಳಿದುಬಂತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_46_181_7.txt b/eesanje/url_46_181_7.txt new file mode 100644 index 0000000000000000000000000000000000000000..ef1015a5aef790349a698c06f26259009894e578 --- /dev/null +++ b/eesanje/url_46_181_7.txt @@ -0,0 +1,8 @@ +ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ, “ಕಾಂಗ್ರೆಸ್ಸಿನ ಗೂಂಡಾ”ನ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ +ಬೆಂಗಳೂರು,ಏ.11-ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸಿ, ಕೂಡಲೇ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಕಾಂಗ್ರೆಸ್ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. +ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್ ಮಾಡಿ ರುವ ಅವರು, ಶಾಂತಿಯುತ ಮತದಾನ ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಲು ಹಾಗೂ ಗ್ರಾಮಾಂತರ ಮತದಾರರ ರಕ್ಷಣೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಶೇಖರ್ ಅವರ ಮೇಲೆ ಕಾಂಗ್ರೆಸ್ಸಿನ ಗೂಂಡಾ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ್ದರೂ ಆತನನ್ನು ಬಂಧಿಸದೇ ಇರುವುದು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ. +ಜಿಲ್ಲೆಯನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿರುವ ಡಿ.ಕೆ.ಬ್ರದರ್ಸ್ ಅಧಿಕಾರ ದರ್ಪ ನೆತ್ತಿಗೇರಿದಂತಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಮತದಾರರನ್ನು ಬೆದರಿಸುವ ಕೆಲಸಕ್ಕೆ ಮುಂದಾಗಿರುವುದು ಅಕ್ಷಮ್ಯ ಅಪರಾಧ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ಹಣ, ಹೆಂಡ ಹಾಗೂ ತೋಳ್ಬಲದ ಗೂಂಡಾಗಿರಿ ರಾಜಕೀಯಕ್ಕೆ ಹೆಸರಾಗಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸಿಗರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಬಂಡೆ ಪುಡಿ ಪುಡಿಯಾಗುವ ವಾತಾವರಣ ಉದ್ಭವಿಸಿರುವ ಹಿನ್ನೆಲೆಯಲ್ಲಿ ಹತಾಶರಾಗಿದ್ದಾರೆ. ಇವರಿಗೆ ವಿರುದ್ಧವಾಗಿ ನಿಂತಿರುವ ಮತದಾರರು ಹಾಗೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಅಮಾನುಷ ಹಲ್ಲೆ ನಡೆಸಿ ಕ್ಷೇತ್ರದಲ್ಲಿ ಭಯ ಮೂಡಿಸುವ ಕೃತ್ಯ ಆರಂಭಿಸಿದ್ದಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. +ಆಯೋಗ ಕಡಿವಾಣ ಹಾಕಬೇಕು :ಇನ್ನು ಇದೇ ವಿಷಯಕ್ಕೆ ಸಬಂಧಿಸಿದಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಕೂಡಾ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸರ್ಕಾರ ವಿರುದ್ದ ಪೊಸ್ಟ್ ಮಾಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕøತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮ ಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದ್ದಾರೆ. +ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರಂಟಿ ಆಗುತ್ತಿದ್ದಂತೆ, ಮುಖ್ಯಮಂತ್ರಿ ಸ್ಥಾನಕ್ಕೆ ಶಾಶ್ವತವಾಗಿ ಕಾಯಬೇಕಾಗುತ್ತದೆ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ.ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. +ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿರುವ ಆಶೋಕ್, ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. \ No newline at end of file diff --git a/eesanje/url_46_181_8.txt b/eesanje/url_46_181_8.txt new file mode 100644 index 0000000000000000000000000000000000000000..22b881e78f6c184699d38a6f41b7b96da05bf08d --- /dev/null +++ b/eesanje/url_46_181_8.txt @@ -0,0 +1,15 @@ +‘ಇನ್ ಕ್ವೆಸ್ಟ್ ಆಫ್ ಗುರು’ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದನಾಥ ಸ್ವಾಮೀಜಿ +ಬೆಂಗಳೂರು,ಏ.11-ನಮ್ಮ ಸಂಸ್ಕøತಿಯನ್ನು ಉತ್ತೇಜಿಸಲು ಮತ್ತು ಭಾರತದ ಮೌಲ್ಯಗಳ ಮೂಲಕ ಜಾಗತಿಕ ಶಾಂತಿಯನ್ನು ಬೆಳೆಸಲು ನಾವು ಏನು ಮಾಡುತ್ತಿದ್ದೇವೆ? ಮಾನವೀಯತೆಯ ಕಲ್ಯಾಣಕ್ಕಾಗಿ ಸನಾತನ ಧರ್ಮದ ಬೋಧನೆಗಳನ್ನು ಹಂಚಿಕೊಳ್ಳುವ ಜವಾಬ್ದಾರಿ ನಮಗಿಲ್ಲವೇ?' ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶ್ನಿಸಿದರು. ಥಿಂಕರ್ಸ್ ಫೋರಂ-ಕರ್ನಾಟಕ ಮಿಥಿಕ್ ಸೊಸೈಟಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇನ್ ಕ್ವೆಸ್ಟ್ ಆಫ್ ಗುರು ಎಂಬ ಪರಿವರ್ತನಾಶೀಲ ಆಧುನಿಕ ಸನಾತನ ಧರ್ಮ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು,ಅಮೆರಿಕ ಮೂಲದ ಲೇಖಕರೊಬ್ಬರು ಭಾರತಕ್ಕೆ ಬಂದು ಸನಾತನ ಧರ್ಮದ ಮೂಲವನ್ನು ಅರ್ಥ ಮಾಡಿಕೊಂಡಿದ್ದು, ಅದನ್ನು ಇನ್ ಕ್ವೆಸ್ಟ್ ಆಫ್ ಗುರು ಪುಸ್ತಕದ ರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಇದು ಭಾರತೀಯರಾದ ನಮ್ಮನ್ನು ನಾವೇ ಕೇಳಿಕೊಳ್ಳಲು ಪ್ರೇರೇಪಿಸುತ್ತದೆ’ ಎಂದು ಹೇಳಿದರು. +ಆನಂದ ಮ್ಯಾಥ್ಯೂಸ್ ಅವರು ಭಾರತದ ಆಧ್ಯಾತ್ಮಿಕತೆಯ ಭಾಗವಾಗಿದ್ದಾರೆ ಮತ್ತು ವಿಶ್ವಾದ್ಯಂತ ಆಧ್ಯಾತ್ಮಿಕ ಅನ್ವೇಷಕರಿಗೆ ಸರಳೀಕೃತ ವೈದಿಕ ಮಾರ್ಗದರ್ಶನವನ್ನು ಒದಗಿಸುತ್ತಾರೆ. ಈ ಕೃತಿ ಜಾಗತಿಕ ನಾಗರಿಕರಿಗೆ ಧರ್ಮ ಮತ್ತು ಸಂಸ್ಕøತಿಯನ್ನು ಪ್ರಚಾರ ಮಾಡಲು ನಾವು ಏನು ಮಾಡುತ್ತಿದ್ದೇವೆ? ಎಂದು ನಮ್ಮನ್ನು ನಾವೇ ಕೇಳಿಕೊಳ್ಳುವಂತೆ ಮಾಡುತ್ತದೆ' ಎಂದು ಹೇಳಿದರು. +ಆಧ್ಯಾತ್ಮಿಕವಾದಿ ಡಿವೈನ್ ಕರ್ನಲ್ ಅಶೋಕ್ ಕಿಣಿ ಮಾತನಾಡಿ,ಆನಂದ ಬರೆದ ಪುಸ್ತಕ ಇನ್ ಕ್ವೆಸ್ಟ್ ಆಫ್ ಗುರು (ಗುರುವಿನ ಅನ್ವೇಷಣೆಯಲ್ಲಿ) ಸನಾತನ ಧರ್ಮದ ಪ್ರಾಯೋಗಿಕ ಅನ್ವಯವನ್ನು ಪರಿಶೋಸುತ್ತದೆ, ತೃಪ್ತಿ ಮತ್ತು ಸಂತೋಷದಾಯಕ ಜೀವನಕ್ಕಾಗಿ ನಮ್ಮ ಪ್ರಾಚೀನ ವೈದಿಕ ತತ್ವಗಳಿಗೆ ಸಮಕಾಲೀನ ವಿಧಾನವನ್ನು ನೀಡುತ್ತದೆ. ಇನ್ ಕ್ವೆಸ್ಟ್ ಆಫ್ ಗುರು ಕೇವಲ ಪುಸ್ತಕವಲ್ಲ. ಇದು ಜಾಗತಿಕ ಯುವಕರು ಮತ್ತು ಆಧ್ಯಾತ್ಮಿಕ ಅನ್ವೇಷಕರು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಆಧುನಿಕ ಪದಗಳಲ್ಲಿ ಪ್ರಸ್ತುತಪಡಿಸಲಾದ ಆಧ್ಯಾತ್ಮಿಕ ರೂಪಾಂತರ ಸಾಧನವಾಗಿದೆ ‘ ಎಂದು ಹೇಳಿದರು. +‘ಇನ್ ಕ್ವೆಸ್ಟ್ ಆಫ್ ಗುರು’ ಆಧ್ಯಾತ್ಮಿಕ ಅನ್ವೇಷಕರನ್ನು ಕರೆದೊಯ್ಯುವ ಪಯಣವನ್ನು ಎಸ್-ವ್ಯಾಸ ಯೋಗ ವಿಶ್ವವಿದ್ಯಾನಿಲಯದ ಪದ್ಮಶ್ರೀಡಾ.ಎಚ್.ಆರ್.ನಾಗೇಂದ್ರ ಗುರುಗಳು ಸುಂದರವಾಗಿ ವಿವರಿಸುತ್ತಾ, “ಆನಂದವೇ ಎಲ್ಲವನ್ನು ವ್ಯಾಪಿಸಿದೆ. ಸೃಷ್ಟಿಯು ಆನಂದದಿಂದ ಬಂದಿದೆ. ಆನಂದ ಇರುವ ಆಳವಾದ ಮೌನದಲ್ಲಿದೆ. ನಮ್ಮ ಧರ್ಮಗ್ರಂಥಗಳು ನಮಗೆ ಯೋಗದ ವ್ಯಾಖ್ಯಾನವನ್ನು ನೀಡುತ್ತವೆ – ದೈವಿಕತೆಯೊಂದಿಗಿನ ವೈಜ್ಞಾನಿಕ ಒಕ್ಕೂಟ. ಅಂತೆಯೇ, ಆನಂದ ಮ್ಯಾಥ್ಯೂಸ್ ಅವರು ಬರೆದ ಈ ಪುಸ್ತಕವು ಖಂಡಿತವಾಗಿಯೂ ನಮ್ಮ ಭಾರತ ದೇಶದ ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ, ಆಧ್ಯಾತ್ಮಿಕತೆ ಮತ್ತು ದೈವಿಕತೆಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸುಲಭವಾಗಿ ಮಾರ್ಗದರ್ಶನ ನೀಡುತ್ತದೆ, ಅವರು ಸಂತೋಷವನ್ನು ಕಂಡುಕೊಳ್ಳಲು ಬ್ರಹ್ಮಾಂಡದೊಳಗಿನ ಎಲ್ಲವೂ ಅನುವು ಮಾಡಿಕೊಡುತ್ತದೆ.” +ನ್ಯಾಯಮೂರ್ತಿ ಪಿ ಕೃಷ್ಣ ಭಟ್ ಅವರು ‘ಇನ್ ಕ್ವೆಸ್ಟ್ ಆಫ್ ಗುರು’ ಆಳವಾದ ಒಳನೋಟಗಳನ್ನು ಹಂಚಿಕೊಂಡರು, “ನಿಜವಾಗಿಯೂ ಸಕಾರಾತ್ಮಕ ಮಾನವರಾಗಲು ಮತ್ತು ಈ ಜೀವನದ ಉದ್ದೇಶವನ್ನು ಪೂರೈಸಲು, ಒಬ್ಬ ಗುರುವನ್ನು ಹೊಂದಿರಬೇಕು ಮತ್ತು ಮಾನವೀಯತೆಯ ಸೇವೆಗೆ ಮೀಸಲಾದ ಉದಾತ್ತ ಗುರಿಯನ್ನು ಹೊಂದಿರಬೇಕು. ವಿವಿಧ ವೃತ್ತಿಗಳು. ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಸರ್ಕಾರಿ ಸೇವೆಯು ಗುರುವಿನ ಮಾರ್ಗದರ್ಶನ ಮತ್ತು ಸಮಾಜದ ಒಳಿತಿಗಾಗಿ ನಿಸ್ವಾರ್ಥ ಸೇವೆಯಿಂದ ನಿಜವಾದ ಯಶಸ್ಸು ಉಂಟಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ನಿರೂಪಿಸುತ್ತದೆ. ‘ಇನ್ ಕ್ವೆಸ್ಟ್ ಆಫ್ ಗುರು’ ಪುಸ್ತಕವು ಈ ಅಮೂಲ್ಯವಾದ ಬೋಧನೆಗಳನ್ನು ನೀಡುತ್ತದೆ.ಅದರ ಮಾರ್ಗದರ್ಶನವನ್ನು ಅನುಸರಿಸುವುದು ಒಬ್ಬನನ್ನು ದೈವಿಕ ಸ್ಥಿತಿಗೆ ಏರಿಸುತ್ತದೆ. ‘ಇನ್ ಕ್ವೆಸ್ಟ್ ಆಫ್ ಗುರು’ ಲೇಖಕ ಆನಂದ ಮ್ಯಾಥ್ಯೂಸ್, 13 ವರ್ಷಗಳ ಹಿಂದೆ ಭಾರತಕ್ಕೆ ಆಗಮಿಸಿದ, ನಮ್ಮ ಆಳವಾದ ಆಧ್ಯಾತ್ಮಿಕತೆಯನ್ನು ಅರ್ಥಮಾಡಿಕೊಂಡು ಆನಂದವಾಗಿ ರೂಪಾಂತರಗೊಂಡಿದ್ದಾರೆ. ಪ್ರಪಂಚದ ಎಲ್ಲಾ ಸಮಸ್ಯೆಗಳಿಗೆ ಭಾರತದಲ್ಲೇ ಉತ್ತರವಿದೆ ಎಂದು ಅವರು ಗುರುತಿಸಿದ್ದಾರೆ. ಆನಂದ ಮ್ಯಾಥ್ಯೂಸ್ ಎಲ್ಲವನ್ನೂ ತ್ಯಜಿಸಿ ಭಾರತದಲ್ಲಿ ಸತ್ಯದ ಅನ್ವೇಷಣೆ ಹುಡುಕಿದರೂ. ಈಗ ಅವರು ಪ್ರಪಂಚದಾದ್ಯಂತದ ಆಧ್ಯಾತ್ಮಿಕ ಅನ್ವೇಷಕರಿಗೆ ಭಾರತದ ಲೋಕ ಜ್ಞಾನವನ್ನು ನೀಡುತ್ತಿದ್ದಾರೆ. +ಈ ಪುಸ್ತಕವು ಸಂತೃಪ್ತ, ಆನಂದದಾಯಕ ಆನಂದ ಜೀವನಕ್ಕಾಗಿ ಸನಾತನ ಧರ್ಮ ಮತ್ತು ವೈದಿಕ ತತ್ವಗಳ ಆಧುನಿಕ ವಿಧಾನದ ಮೂಲಕ ಜ್ಞಾನೋದಯದ ಕಡೆಗೆ ಮಾನವ ಆತ್ಮದ ಪ್ರಯಾಣವನ್ನು ವಿವರಿಸುತ್ತದೆ. ಆಕರ್ಷಣೀಯ ನಿರೂಪಣೆಯ ಮೂಲಕ, ಓದುಗರನ್ನು ಸ್ವಯಂ-ಸಾಕ್ಷಾತ್ಕಾರ ಮತ್ತು ಆಧ್ಯಾತ್ಮಿಕ ಜಾಗೃತಿಯ ಪರಿವರ್ತಕ ಸಮುದ್ರಯಾನಕ್ಕೆ ಕರೆದೊಯ್ಯಲಾಗುತ್ತದೆ, ಸತ್ಯ ಮತ್ತು ಜ್ಞಾನಕ್ಕಾಗಿ ಸಾರ್ವತ್ರಿಕ ಅನ್ವೇಷಣೆಯನ್ನು ಪ್ರತಿಧ್ವನಿಸುತ್ತದೆ. +ಆನಂದ ಮ್ಯಾಥ್ಯೂಸ್ ಅವರು ಭಾರತ್‌ದಲ್ಲಿ ತಮ್ಮ ಆಳವಾದ ರೂಪಾಂತರವನ್ನು ಹಂಚಿಕೊಂಡಿದ್ದಾರೆ, ಮ್ಯಾಥ್ಯೂ ಡೇವಿಡ್ ಝ್‌ಸ್ಕೋಚೆಯಿಂದ ಆನಂದ ಮ್ಯಾಥ್ಯೂಸ್‌ವರೆಗಿನ ಪ್ರಯಾಣ, ಸತ್ಯದ ಅನ್ವೇಷಕರಿಗೆ ಶಾಶ್ವತ ಸಂತೋಷದ ಹಾದಿಗೆ ಮಾರ್ಗದರ್ಶನ ನೀಡುತ್ತಾರೆ. ಅವರ ಗುರು, ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಅವರೊಂದಿಗಿನ ಅವರ ಮುಖಾಮುಖಿಯು ಒಂದು ಮಹತ್ವದ ತಿರುವು ನೀಡಿತು, ಭಾರತದ ಸದಾ ಅವರೋಹಣ ಆಧ್ಯಾತ್ಮಿಕ ಜ್ಞಾನವನ್ನು ಹಂಚಿಕೊಳ್ಳಲು ಸಮರ್ಪಿತವಾದ ಜೀವನದ ಕಡೆಗೆ ಅವರಿಗೆ ಮಾರ್ಗದರ್ಶನ ನೀಡಿತು. +ಅನೇಕರು ಗುರುವಿನ ಭೌತಿಕ ಉಪಸ್ಥಿತಿಯನ್ನು ಅನುಭವಿಸಲು ಸಾಧ್ಯವಾಗದಿರಬಹುದು ಆದರೆ ‘ಇನ್ ಕ್ವೆಸ್ಟ್ ಆಫ್ ಗುರು’ ಎಂಬ ಪದಗಳ ಹಿಂದಿನ ಶಕ್ತಿಯ ಮೂಲಕ, ಆಧ್ಯಾತ್ಮಿಕ ಅನ್ವೇಷಕರು ತಾವು ಪ್ರಬುದ್ಧ ಸಂತನ ಉಪಸ್ಥಿತಿಯಲ್ಲಿ ರೂಪಾಂತರಗೊಳ್ಳುತ್ತಿದ್ದಾರೆ ಎಂದು ಭಾವಿಸುತ್ತಾರೆ. ನಮ್ಮ ಜೀವನದ ಎಲ್ಲಾ ಆಳವಾದ ಪ್ರಶ್ನೆಗಳಿಗೆ ಪುಸ್ತಕವು ಉತ್ತರವನ್ನು ತೋರುತ್ತದೆ. ನೀವು ಓದುತ್ತಿರುವ ನಿಮ್ಮ ಪ್ರಯಾಣ ಎಂದು ನೀವು ಭಾವಿಸುವಿರಿ ಮತ್ತು ಪುಸ್ತಕವು ನಿಮ್ಮೊಂದಿಗೆ ನೇರವಾಗಿ ಮಾತನಾಡುತ್ತಿದೆ. ಆನಂದ ಮ್ಯಾಥ್ಯೂಸ್ ಮತ್ತು ಡಿವೈನ್ ಕರ್ನಲ್ ನಡುವಿನ ಸಂಭಾಷಣೆಯ ಮೂಲಕ – ಅಶೋಕ್ ಕಿಣಿ ಜಿ, ಆಳವಾದ ಆಧ್ಯಾತ್ಮಿಕತೆಯನ್ನು ಹಂಚಿಕೊಳ್ಳುತ್ತಾರೆ ಒಳನೋಟಗಳು ಮತ್ತು ಸಹಾನುಭೂತಿಯ ಮಾರ್ಗದರ್ಶನ, ಯಾವುದೇ ಸವಾಲನ್ನು ಜಯಿಸಲು ಸನಾತನ ಧರ್ಮದ ಸಾರವನ್ನು ಪ್ರಾಯೋಗಿಕವಾಗಿ ಹೇಗೆ ಅನ್ವಯಿಸಬೇಕು ಎಂಬುದನ್ನು ಓದುಗರು ಅರ್ಥಮಾಡಿಕೊಳ್ಳುತ್ತಾರೆ. +ಆಧ್ಯಾತ್ಮಿಕವಾದಿ ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಮಂಗಳೂರು ಭಾಗದ ಕನ್ನಡಿಗ. ಕ್ಯಾಲಿಕಟ್ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ನಂತರ, ಅವರು ಭಾರತೀಯ ಸೇನೆಗೆ ಸೇರಿದರು ಮತ್ತು 20 ವರ್ಷಗಳ ವರ್ಣರಂಜಿತ ಸೇವೆಯನ್ನು ಹೊಂದಿದ್ದರು. ಅವರು ಶ್ರೀಲಂಕಾದಲ್ಲಿ ಭಾರತೀಯ ಶಾಂತಿಪಾಲನಾ ಪಡೆಯಲ್ಲಿದ್ದರು ಮತ್ತು ಅಂಗೋಲಾದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿಯೂ ಸೇವೆ ಸಲ್ಲಿಸಿದರು. ಅವರು ಕಾರ್ಗಿಲ್ ಯುದ್ಧದ ಸಮಯದಲ್ಲಿ ಸಮಾರಂಭಗಳ ಉಸ್ತುವಾರಿ ವಹಿಸಿದ್ದರು ಮತ್ತು ಹುತಾತ್ಮರ ದೇಹಗಳ ಕೊನೆಯ ಪ್ರಯಾಣವನ್ನು ನಿರ್ವಹಿಸಿದರು. +ಮೇಜರ್ ಜನರಲ್ ಡಾ.ಜಿ.ಡಿ.ಬಕ್ಷಿ ಅವರು ಕರ್ನಲ್ ಕಿಣಿಯವರ ಮೇಲೆ ‘ಸ್ಮಶಾನ ಸಾಧನ’ವನ್ನು ಒತ್ತಾಯಿಸಲಾಯಿತು ಎಂದು ವಿವರಿಸುತ್ತಾರೆ, ಅವರು ಈ ಸವಾಲುಗಳನ್ನು ಜೀವನ ಮತ್ತು ದೈವತ್ವದ ಸತ್ಯವನ್ನು ಅರ್ಥಮಾಡಿಕೊಳ್ಳುವ ಅನ್ವೇಷಣೆಯೊಂದಿಗೆ ಆಧ್ಯಾತ್ಮಿಕ ಹಾದಿಯಲ್ಲಿ ಚಲಿಸುವ ಅವಕಾಶವನ್ನಾಗಿ ಪರಿವರ್ತಿಸಬಹುದು. “ಅವರು ಕಾಞಂಗಾಡ್‌ನ ಬಾಬಾ ನಿತ್ಯಾನಂದ, ಅವರ ಎಲ್ಲಾ ಗುರುಗಳು ಮತ್ತು ದೈವಿಕ ತಾಯಿಯಿಂದ ಆಶೀರ್ವದಿಸಿದ್ದಾರೆ” ಎಂದು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜನರಲ್ ಬಕ್ಷಿ ಅವರು ಒತ್ತಿ ಹೇಳಿದರು. “ಡಿವೈನ್ ಕರ್ನಲ್” ಬಿರುದನ್ನು ಅವರಿಗೆ ಮಾಜಿ ರಾಷ್ಟ್ರಪತಿ, ಭಾರತರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಜಿ ಅವರ ಆಧ್ಯಾತ್ಮಿಕ ಮನೋಭಾವವನ್ನು ಗುರುತಿಸಿ, ಧರ್ಮವನ್ನು ಆಧ್ಯಾತ್ಮಿಕ ಶಕ್ತಿಯಾಗಿ ಪರಿವರ್ತಿಸುವ ಮತ್ತು ಸುಸ್ಥಿರ ಜೀವನದ ಸಂದೇಶವನ್ನು ಹರಡುವ ಉದ್ದೇಶದೊಂದಿಗೆ ಡಾ ಕಲಾಂ ಅವರಿಂದ ಗುರು ಮಂತ್ರವನ್ನು ಸ್ವೀಕರಿಸಲು ಅವರು ಆಶೀರ್ವದಿಸಿದರು. +‘ಇನ್ ಕ್ವೆಸ್ಟ್ ಆಫ್ ಗುರು’ ಈಗಾಗಲೇ ಜೀವನವನ್ನು ಸ್ಪರ್ಶಿಸಲು ಪ್ರಾರಂಭಿಸಿದೆ, ಜೀವನದ ಸವಾಲುಗಳನ್ನು ಜಯಿಸಲು ಮತ್ತು ನಿಸ್ವಾರ್ಥ ಸೇವೆಯ ಸಂತೋಷದಾಯಕ ಮಾರ್ಗಗಳನ್ನು ಪ್ರಾರಂಭಿಸಲು ವ್ಯಕ್ತಿಗಳನ್ನು ಪ್ರೇರೇಪಿಸುತ್ತದೆ. ಭಾರತದ ಅತ್ಯಂತ ಹಳೆಯ ಪ್ರಕಾಶಕರಾದ ಮೋತಿಲಾಲ್ ಬನಾರಸಿದಾಸ್ ಪಬ್ಲಿಷಿಂಗ್ ಹೌಸ್ () ಪ್ರಕಟಿಸಿದ ಈ ಪುಸ್ತಕವು ಸನಾತನ ಧರ್ಮದ ಕಾಲಾತೀತ ಬುದ್ಧಿವಂತಿಕೆಗೆ ಸಾಕ್ಷಿಯಾಗಿದೆ. ಅದರ ಆಳವಾದ ಸಂದೇಶವು ಪ್ರೇಕ್ಷಕರೊಂದಿಗೆ ಆಳವಾಗಿ ಪ್ರತಿಧ್ವನಿಸಿತು, ನಿಜವಾದ ಸಂತೋಷ ಮತ್ತು ಸಂತೃಪ್ತಿಯ ಪ್ರಯಾಣವು ಆವಿಷ್ಕರಿಸಲು ಕಾಯುತ್ತಿದೆ ಎಂಬ ಕಟುವಾದ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. +ಈ ಕಾರ್ಯಕ್ರಮವು ಜಗದ್ಗುರು ಶ್ರೀ ಶ್ರೀ ಡಾ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಪ್ರಬಲ ಸಂದೇಶದೊಂದಿಗೆ ಮುಕ್ತಾಯವಾಯಿತು: “ಆನಂದ ಮ್ಯಾಥ್ಯೂಸ್ ರೂಪಾಂತರಗೊಳ್ಳಲು ಸಾಧ್ಯವಾದರೆ, ಭಾರತ ಮತ್ತು ಪ್ರಪಂಚದ ಪ್ರತಿಯೊಬ್ಬ ಯುವಕ, ಪುರುಷ ಮತ್ತು ಮಹಿಳೆ ಬದಲಾಗಬಹುದು.” +ಬೆಂಗಳೂರಿನ ಪ್ರಮುಖ ವ್ಯಕ್ತಿಗಳೊಂದಿಗೆ ಪುಸ್ತಕ ಅನಾವರಣ ಸಮಾರಂಭದ ಭಾಗವಾಗಿದ್ದಕ್ಕಾಗಿ ಸ್ವಾಮೀಜಿ ಅವರು ಆಳವಾದ ಕೃತಜ್ಞತೆ ಮತ್ತು ಸಂತೋಷವನ್ನು ವ್ಯಕ್ತಪಡಿಸಿದರು. ಪುಸ್ತಕವನ್ನು ಬಿಡುಗಡೆ ಮಾಡಲು ಆಹ್ವಾನಿಸಿದ್ದಕ್ಕಾಗಿ ಅವರು ಡಿವೈನ್ ಕರ್ನಲ್ – ಅಶೋಕ್ ಕಿಣಿ ಜಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಂವಾದದ ನೆನಪುಗಳನ್ನು ನೆನಪಿಸಿಕೊಂಡ ಸ್ವಾಮೀಜಿ, ಡಿವೈನ್ ಕರ್ನಲ್ ಅಪಾರವಾದ ಆಧ್ಯಾತ್ಮಿಕ ಜ್ಞಾನವನ್ನು ಹೊಂದಿದ್ದಾರೆ ಎಂದು ಗಮನಿಸಿದರು. ಅವರು ಮ್ಯಾಥ್ಯೂಗೆ ಈ ಆಳವಾದ ಬುದ್ಧಿವಂತಿಕೆಯನ್ನು ನೀಡಲು ಸಮರ್ಥರಾಗಿದ್ದರು, ಅವರಿಗೆ ಆನಂದ ಮ್ಯಾಥ್ಯೂಸ್ ಎಂದು ಸೂಕ್ತವಾಗಿ ಹೆಸರಿಸಿದರು, ಇದು ಜನರ ದುಃಖಗಳನ್ನು ನಿವಾರಿಸುವ ಮತ್ತು ಅವರ ಜೀವನಕ್ಕೆ ಸಂತೋಷವನ್ನು ತರುವ ಆತ್ಮವನ್ನು ಸೂಚಿಸುತ್ತದೆ +ಕಾರ್ಯಕ್ರಮದಲ್ಲಿ ಎಸ್.ವ್ಯಾಸ ಯೋಗ ವಿಶ್ವವಿದ್ಯಾನಿಲಯದ ಪದ್ಮಶ್ರೀ ಡಾ.ಎಚ್.ಆರ್. ನಾಗೇಂದ್ರ ಗುರೂಜಿ, ಮೇಜರ್ ಜನರಲ್ ಡಾ.ಜಿ.ಡಿ.ಭಕ್ಷಿ , ನ್ಯಾಯಮೂರ್ತಿ ಪಿ.ಕೃಷ್ಣ ಭಟ್, ಭಾರತೀಯ ಸೇನೆಯ ಮಾಜಿ ಲೆಫ್ಟಿನೆಂಟ್ ಜನರಲ್‍ಗಳಾದ ಎ.ನಟರಾಜನ್, ಪಿ.ಜಿ.ಕಾಮತ್ ಮುಂತಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_181_9.txt b/eesanje/url_46_181_9.txt new file mode 100644 index 0000000000000000000000000000000000000000..513db4b33241937053d62c96a98d7b2a81ebbfdd --- /dev/null +++ b/eesanje/url_46_181_9.txt @@ -0,0 +1,7 @@ +ಚುನಾವಣಾ ‘ಹಬ್ಬ’ : ಕೈಗೆ ಸಿಗುತ್ತಿಲ್ಲ ಕೂಲಿ ಕಾರ್ಮಿಕರು +ಬೆಂಗಳೂರು, ಏ.11-ಕಟ್ಟಡ ನಿರ್ಮಾಣದ ಕಾರ್ಮಿಕರು ಸಿಕ್ತಿಲ್ಲ… ಕೂಲಿ ಕಾರ್ಮಿಕರು ಬರ್ತಿಲ್ಲ…ದಿನಗೂಲಿ ಕೆಲಸದವರೂ ಕೂಡ ಕೈಗೆ ಸಿಗ್ತಾಯಿಲ್ಲ….ಬಹುತೇಕ ಮಂದಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. +ತಮ್ಮ ತಮ್ಮ ಪಕ್ಷಗಳ ಪ್ರಚಾರಕ್ಕಾಗಿ ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರನ್ನು ಕರೆದೊಯ್ಯುತ್ತಿರುವುದಕ್ಕೆ ನಗರ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮತ್ತಿತರ ಕೆಲಸಗಳಿಗೆ ಸಧ್ಯ ಕಾರ್ಮಿಕರು ಸಿಗುತ್ತಿಲ್ಲ. ಗಾರೆ ಕೆಲಸ, ಇಟ್ಟಿಗೆ ಕೆಲಸ, ಸಿಮೆಂಟ್ ಕಾಂಕ್ರೀಟ್ ಕೆಲಸ, ಪೇಂಟರ್, ಕಾರ್ಪೇಂಟರ್ಗಳ ಹೆಲ್ಪರ್ಗಳಿಗೆ ದಿನವೊಂದಕ್ಕೆ 500 ರೂ. ಸಂಬಳ ಸಿಗುತ್ತಿದೆ. +ಪ್ರಸ್ತುತ ರಾಜಕೀಯ ಪಕ್ಷಗಳ ಬೆಂಬಲಿಗರು ಈ ಮಂದಿಯನ್ನು ಕರೆದೊಯ್ದು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು 500 ರಿಂದ 1000 ರೂ. ಗಳವರೆಗೆ ಕೂಲಿ ನೀಡುತ್ತಿದ್ದಾರೆ. ಹೀಗಾಗಿ ಮೂರು ವಾರಗಳಿಂದ ಈ ವರ್ಗದ ಬಹುತೇಕ ಜನ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯಕ್ಕೆ ತೆರಳುತ್ತಿದ್ದಾರೆ. +ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸಿ, ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸಬೇಕು. ಪ್ರತಿದಿನ ಇಂತಿಷ್ಟು ಮನೆಗಳಿಗೆ ಕರ ಪತ್ರಗಳನ್ನು ಹಂಚಬೇಕು. ಬೆಳಗ್ಗೆಯಿಂದ ಸಂಜೆ ವರೆಗೆ ಮನೆ ಮನೆಗೆ ಕರಪತ್ರ ಹಂಚಿದರೆ ಸಂಜೆ ಅಂದಿನ ಬಟವಾಡೆ ಸಿಗುತ್ತದೆ.ಎರಡರಿಂದ ಮೂರು ವಾರ ಶ್ರಮವಿಲ್ಲದ ಕೆಲಸವೆಂಬುದನ್ನು ಅರಿತು ಬಹಳಷ್ಟು ಕಾರ್ಮಿಕರು ಪ್ರಚಾರ ಕಾರ್ಯಕ್ಕೆ ತೆರಳಿರುವುದರಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ನಗರ, ಪಟ್ಟಣ ಪ್ರದೇಶಗಳಲ್ಲಿ ಕಾರ್ಮಿಕರ ಕೊರತೆ ಕಾಡುತ್ತಿದೆ. +ಮನೆ, ಕಟ್ಟಡ, ಅಪಾರ್ಮೆಂಟ್ಗಳ ನಿರ್ಮಾಣ, ಹಲವೆಡ ಸ್ಥಗಿತಗೊಂಡಿರುವುದು ತಿಳಿದುಬಂದಿದೆ. ಪ್ರತಿದಿನ ಕೆಲಸಕ್ಕೆ ಹೋಗಿ ಶ್ರಮ ವಹಿಸುವ ಗಂಡಾಳಿಗೆ 500 ರಿಂದ 750 ರೂ. ವರೆಗೆ ಕೂಲಿ ಸಿಗುತ್ತದೆ. ಹೆಣ್ಣಾಳಿಗೆ 400 ರಿಂದ 600ರ ವರೆಗೆ ಕೂಲಿ ದೊರೆಯುತ್ತದೆ. +ಆದರೆ ಚುನಾವಣಾ ಪ್ರಚಾರದಲ್ಲಿ ತಲೆಯ ಮೇಲೆ ಪಕ್ಷಗಳ ಟೋಪಿ ಧರಿಸಿ ಹೆಗಲಮೇಲೊಂದು ಶಾಲು ಹಾಕಿಕೊಂಡು, ಕೈಯಲ್ಲಿ ಕರಪತ್ರ ಹಿಡಿದುಕೊಂಡು ಮನೆ ಮನೆಗೆ ಹೋಗಿ ಕೊಟ್ಟು ಬಂದರೆ ಆಯ್ತು. ಅಥವಾ ಪಕ್ಷಗಳ ಮುಖಂಡರು ಆಯೋಜಿಸುವ ಸಭೆ ಸಮಾರಂಭ, ಮೆರವಣಿಗೆಗಳಿಗೆ ಬಾವುಟ ಹಿಡಿದುಕೊಂಡು ಹೋಗಿ ಘೋಷಣೆಗಳನ್ನು ಕೂಗಿ ಬಂದರೆ ಸಾಕು ಊಟ, ತಿಂಡಿ ಆ ದಿನದ ಕೂಲಿ ಸುಲಭವಾಗಿ ಸಿಗುತ್ತದೆ. ಹೀಗಾಗಿ ಬಹುತೇಕ ಕೂಲಿ ಕಾರ್ಮಿಕರು ಪ್ರಚಾರ ಕಾರ್ಯಕ್ಕೆ ತೆರಳಿದ್ದಾರೆ. \ No newline at end of file diff --git a/eesanje/url_46_182_1.txt b/eesanje/url_46_182_1.txt new file mode 100644 index 0000000000000000000000000000000000000000..36b439d99118a52180f32263c1ce40fe5fd8febc --- /dev/null +++ b/eesanje/url_46_182_1.txt @@ -0,0 +1,8 @@ +ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪವರ್ ಸ್ಟಾರ್ ಪವನ್ ಕಲ್ಯಾಣ್ ಪ್ರಚಾರ +ಬೆಂಗಳೂರು,ಏ.11-ತೆಲುಗು ಮತದಾರರನ್ನು ಸೆಳೆಯಲು ಟಾಲಿವುಡ್ ಪವರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರನ್ನು ರಾಜ್ಯಕ್ಕೆ ಬಿಜೆಪಿ ಕರೆ ತರುತ್ತಿದೆ. ತೆಲುಗು ಭಾಷಿಗರು ಹೆಚ್ಚಿರುವ 4 ಕ್ಷೇತ್ರಗಳಲ್ಲಿ ಏಪ್ರಿಲ್ 17ರಂದು ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. +ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 17 ರಂದು ರಾಜ್ಯದಲ್ಲಿ ನಟ ಪವನ್ ಕಲ್ಯಾಣ್ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡಲಿದ್ದಾರೆ. ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುವ ಮೂಲಕ ಅಭ್ಯರ್ಥಿಗಳಾದ ರಾಜಾ ಅಮರೇಶ್ವರ ನಾಯಕ, ಬಿ.ಶ್ರೀರಾಮುಲು, ಡಾ. ಸುಧಾಕರ್, ತೇಜಸ್ವಿ ಸೂರ್ಯ ಪರ ಮತ ಯಾಚಿಸಲಿದ್ದಾರೆ. +ಗಡಿ ಜಿಲ್ಲೆಯಾದ ರಾಯಚೂರು ಆಂಧ್ರಪ್ರದೇಶದ ಜೊತೆ ನಂಟು ಹೊಂದಿದ್ದು, ತೆಲುವು ಭಾಷಿಕರು ಹೆಚ್ಚಿದ್ದಾರೆ. ಜೊತೆಗೆ ಆಂಧ್ರದ ಸಿನಿ ತಾರೆಯರ ಪ್ರಭಾವವೂ ಅವರ ಮೇಲೆ ಹೆಚ್ಚಿದೆ. ಹೀಗಾಗಿ ಅಲ್ಲಿನ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಪ್ರಚಾರ ನಡೆಸಿ ತೆಲುಗು ಭಾಷಿಗರನ್ನು ಸೆಳೆಯುವ ಪ್ರಯತ್ನ ನಡೆಸಲಿದ್ದಾರೆ. +ಇನ್ನೂ ಬಳ್ಳಾರಿಯಂತೂ ತೆಲುಗು ಸೀಮೆಯ ಒಡನಾಟ ಇರಿಸಿಕೊಂಡ ಕ್ಷೇತ್ರ. ಸಹಜವಾಗಿ ರಾಜಕಾರಣದಲ್ಲಿ ತೆಲುಗು ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಪರ ಪವನ್ ಕಲ್ಯಾಣ್ ರೋಡ್ ಶೋ ನಡೆಸುವ ಮೂಲಕ ಮತಯಾಚಿಸಿ ಮತದಾರರನ್ನು ಸೆಳೆಯಲಿದ್ದಾರೆ. ಶ್ರೀರಾಮುಲು ಸ್ನೇಹಿತ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಮಾಡದಂತೆ ನಿರ್ಬಂಧ ಇರುವ ಹಿನ್ನೆಲೆ, ಪವನ್ ಕಲ್ಯಾಣ್ ಪ್ರಚಾರ ಪಕ್ಷಕ್ಕೆ ಹೆಚ್ಚಿನ ಲಾಭ ತಂದುಕೊಡಲಿದೆ ಎನ್ನಲಾಗಿದೆ. +ಚಿಕ್ಕಬಳ್ಳಾಪುರ ಕೂಡ ತೆಲುಗು ಭಾಷಿಗರು ಹೆಚ್ಚಿರುವ ಕ್ಷೇತ್ರ. ತೆಲುಗು ಸಿನಿಮಾಗಳು ಹೆಚ್ಚಾಗಿ ಪ್ರಭಾವ ಬೀರಿರುವ ಕ್ಷೇತ್ರ. ಹಾಗಾಗಿ ಇಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಪರ ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಆ ಮೂಲಕ ತೆಲುಗು ಮತದಾರರ ಮತಗಳು ಬಿಜೆಪಿ ಕಡೆ ವಾಲಿದರೆ, ಬಿಜೆಪಿ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರ. ರಾಜಧಾನಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲೂ ತೆಲುಗು ಮಂದಿ ಹೆಚ್ಚಿದ್ದಾರೆ. +ಈ ಹಿನ್ನೆಲೆ, ಪವನ್ ಕಲ್ಯಾಣ್ ಪ್ರಚಾರ ನಡೆಸಲಿದ್ದಾರೆ. ಇಲ್ಲಿ ಕಳೆದ 32 ವರ್ಷಗಳಿಂದಲೂ ಬಿಜೆಪಿಯೇ ಗೆಲುವು ಪಡೆಯುತ್ತಾ ಬಂದಿದೆ. ಈ ಕ್ಷೇತ್ರದಲ್ಲಿ ಅನಂತ್ ಕುಮಾರ್ ಮೂರು ದಶಕಗಳ ಕಾಲ ಹಿಡಿತ ಹೊಂದಿದ್ದರು. ಅವರ ನಿಧನದ ನಂತರವೂ ಕ್ಷೇತ್ರ ಬಿಜೆಪಿ ಹಿಡಿತದಲ್ಲೇ ಇದೆ. ತೇಜಸ್ವಿ ಸೂರ್ಯ ಎರಡನೇ ಬಾರಿ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. +ಆದರೆ, ಈ ಬಾರಿ ಗೆಲುವಿಗಾಗಿ ಪೈಪೋಟಿ ಜೋರಾಗಿದೆ. ಸೌಮ್ಯ ರೆಡ್ಡಿ ಅವರು ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿದ್ದು, ತೆಲುಗು ಭಾಷಿಕರ ಮೇಲೆ ರಾಮಲಿಂಗಾ ರೆಡ್ಡಿ ಕುಟುಂಬದ ಹಿಡಿತ ಇದೆ. ಹಾಗಾಗಿ ತೆಲುಗು ಮತದಾರರು ಪಕ್ಷದಿಂದ ದೂರ ಸರಿಯದಂತೆ ಮಾಡಲು ಪವನ್ ಕಲ್ಯಾಣ್ ಅವರನ್ನು ಕರೆತಂದು ಪ್ರಚಾರ ಮಾಡಿಸಲಾಗುತ್ತಿದೆ ಎನ್ನಲಾಗಿದೆ. \ No newline at end of file diff --git a/eesanje/url_46_182_10.txt b/eesanje/url_46_182_10.txt new file mode 100644 index 0000000000000000000000000000000000000000..77a7c3bd0a3a50131304c6fb62880f6f4803ee34 --- /dev/null +++ b/eesanje/url_46_182_10.txt @@ -0,0 +1,8 @@ +ಮೇ ತಿಂಗಳಲ್ಲಿ ಮತ್ತಷ್ಟು ಏರಲಿದೆ ತಾಪಮಾನ, ಇರಲಿ ಎಚ್ಚರ +ಬೆಂಗಳೂರು,ಏ.8-ಭಾರತ ಹವಾಮಾನ ಇಲಾಖೆಯು ಮುನ್ಸೂಚನೆ ಅನ್ವಯ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿ ಸೆ. ನಷ್ಟು ಅಧಿಕ ತಾಪಮಾನ ದಾಖಲಾಗುತ್ತಿದೆ. ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. +ರಾಜ್ಯದಲ್ಲಿ ಏಪ್ರಿಲ್, ಮೇ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ. ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳನ್ನು ನೀಡಲಾಗಿದೆ. +ಸಾಧ್ಯವಾದಷ್ಟು ಮಟ್ಟಿಗೆ ಮಧ್ಯಾಹ್ನದ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು, ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯುವುದು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿಬಟ್ಟೆಗಳನ್ನು ಧರಿಸುವುದು, ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು, ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು, ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವುದು, ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್ ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳ ಸೇವನೆ ಮಾಡಬಾರದು ಹಾಗೂ ಬಿಸಿ ಆಹಾರವನ್ನು ಸೇವಿಸುವುದು ಸೇರಿದಂತೆ ಹಲವು ಸಲಹೆಗಳನ್ನು ಆರೋಗ್ಯ ಇಲಾಖೆ ನೀಡಿದೆ. +ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಹಣ್ಣುಗಳನ್ನು ಬಳಸುವುದು. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. +ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಬೆಂಕಿಯ ತಡೆಗಟ್ಟುವಿಕೆ: +ಆಸ್ಪತ್ರೆಗಳು, ಕೈಗಾರಿಕೆಗಳು, ಜನಸಂದಣಿ ಸ್ಥಳಗಳು ಇತ್ಯಾದಿಗಳಲ್ಲಿ ಅಗ್ನಿ ಸುರಕ್ಷತೆಯ ವಿವಿಧ ಅಂಶಗಳ ಮೇಲೆ ಆಗಾಗ್ಗೆ ತಪಾಸಣೆ ಕೈಗೊಳ್ಳುವುದು. ಅಗ್ನಿ ಸುರಕ್ಷತೆಗೆ ತರಬೇತಿಗಳನ್ನು ಕೈಗೊಳ್ಳುವುದು. ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಕಡ್ಡಾಯವಾಗಿ ನಡೆಸುವುದು. +ಅತೀ ಹೆಚ್ಚು ತಾಪಮಾನ ತಡೆಗಟ್ಟುವ ಕುರಿತಂತೆ ಇಲಾಖಾವಾರು ಕರ್ತವ್ಯ / ಜವಾಬ್ದಾರಿಗಳನ್ನು ಅತೀ ಹೆಚ್ಚು, ತಾಪಮಾನದ ಕ್ರಿಯಾ ಯೋಜನೆಗಳಲ್ಲಿ ನಿಗದಿಪಡಿಸಲಾಗಿರುತ್ತದೆ. ಕ್ರಿಯಾ ಯೋಜನೆಗಳಡಿಯಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಅಧಿಕೃತ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_182_11.txt b/eesanje/url_46_182_11.txt new file mode 100644 index 0000000000000000000000000000000000000000..4017bd2341c4f9bda89197efe455495a7913d6a0 --- /dev/null +++ b/eesanje/url_46_182_11.txt @@ -0,0 +1,6 @@ +ನಮ್ಮ ರಾಷ್ಟ್ರ ಮುನ್ನಡೆಸಲು ತಪ್ಪದೆ ಮತ ಚಲಾಯಿಸೋಣ : ರಮೇಶ್ ಅರವಿಂದ್ +ಬೆಂಗಳೂರು, ಏ.8-ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ ಎಂದು ಚುನಾವಣಾ ರಾಯಭಾರಿ ಹಾಗೂ ಚಿತ್ರನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹಲೋ ಎಂದಾಗ ಮಾತ್ರ ನಾವು ಪ್ರಜಾಪ್ರಭುತ್ವಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು. +ಶೇ.20 ರಷ್ಟು ಮಂದಿ ಒಂದಾಗಿ ಕೂಗಿದಾಗ ಹೆಚ್ಚು ಶಬ್ದ ಬರಲು ಸಾಧ್ಯವಿಲ್ಲ. ಅದೇ ಶೇ. 100ರಷ್ಟು ಮಂದಿ ಒಟ್ಟಾಗಿ ಕೂಗಿದಾಗ ಶಬ್ದ ಜೋರಾಗಿ ಬರಲಿದೆ. ಅದೇ ರೀತಿ ಚುನಾವಣೆಯಲ್ಲಿಯೂ ಶೇ. 20 ರಷ್ಟು ಮತದಾನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಎಲ್ಲರೂ ಒಟ್ಟಾಗಿ ಶೇ.100ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು. +ಗೂಗಲ್ನಲ್ಲಿ ನಿಮ್ಮ ಕ್ಷೇತ್ರದ ಆಭ್ಯರ್ಥಿ ಯಾರು, ಏನೇನು ಕೆಲಸ ಮಾಡಿದ್ದಾರೆ, ಅವರ ಹಿನ್ನೆಲೆ ಏನು, ಅವರ ನೀಡಿದ್ದ ಪ್ರಣಾಳಿಕೆಯಲ್ಲಿ ಕಳೆದ 5 ವರ್ಷಗಳಲ್ಲಿ ಏನೆಲ್ಲಾ ಈಡೇರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ. ಯಾವುದಾದರೂ ಅಭ್ಯರ್ಥಿಗೆ ಮತದಾನ ಮಾಡಿದರೆ ಅವರು ನಮಗೆ ಏನು ಮಾಡುತ್ತಾರೆ ಎಂಬುದನ್ನು ಕೂಲಂಕುಶವಾಗಿ ಆಲೋಚಿಸಿ ಮತದಾನ ಮಾಡಿ. ಯಾರೋ ಹೇಳಿದ ಮಾತು ಕೇಳಿ ಮತದಾನ ಮಾಡಬೇಡಿ ಎಂದು ಕಿವಿಮಾತು ಹೇಳಿದರು. +ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏ.26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡುವ ಅವಕಾಶವಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಲು ತಿಳಿಸಿದರು. +ಪ್ರತಿಜ್ಞಾ ವಿಧಿ ಸ್ವೀಕಾರ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಎಂಎಸ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವುದಾಗಿ ತಿಳಿಸಿದರು. ಈ ವೇಳೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸುಂದರಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_182_12.txt b/eesanje/url_46_182_12.txt new file mode 100644 index 0000000000000000000000000000000000000000..b15c7189c0587a2ba60bfe58f47d7440c2029856 --- /dev/null +++ b/eesanje/url_46_182_12.txt @@ -0,0 +1,6 @@ +ದಾವಣಗೆರೆಯಿಂದ ಜಿ.ಬಿ.ವಿನಯ್ ಕುಮಾರ್ ಸ್ಪರ್ಧೆ ಖಚಿತ +ದಾವಣಗೆರೆ,ಏ.8-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕವೂ ದಾವಣಗೆರೆಯಲ್ಲಿ ಟಿಕೆಟ್ ವಂಚಿತ ಜಿ.ಬಿ.ವಿನಯ್ಕುಮಾರ್ ಬಂಡಾಯವಾಗಿ ಸ್ಪರ್ಧೆ ಮಾಡುವ ಇಂಗಿತದಿಂದ ಹಿಂದೆ ಸರಿದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಕುಟುಂಬ ರಾಜಕಾರಣದಿಂದ ರೊಚ್ಚಿಗೆದ್ದು ನಿಂತಿರುವ ವಿನಯ್ಕುಮಾರ್, ಈವರೆಗೂ 6 ಕ್ಷೇತ್ರಗಳಲ್ಲಿ ಸಂಚರಿಸಿ ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ. +ದಾವಣಗೆರೆ ಉತ್ತರ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಜನರ ಅಭಿಪ್ರಾಯ ಪಡೆದ ಬಳಿಕ ಪಕ್ಷೇತರನಾಗಿ ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. +ನಿನ್ನೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇವೆ. ಅದೊಂದು ಸೌಜನ್ಯಯುತವಾದ ಭೇಟಿ. ಭೇಟಿ ಮಾಡಿದಾಕ್ಷಣ ನಾನು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂಬ ಅಭಿಪ್ರಾಯಕ್ಕೆ ಬರಬೇಡಿ, ಮುಖ್ಯಮಂತ್ರಿಯವರ ಬಳಿಯೂ ಪಕ್ಷೇತರನಾಗಿ ನಿಂತರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ಅದಕ್ಕೆ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸಲಹೆ ನೀಡಿದ್ದಾರೆ. +ಮುಂದಿನ ದಿನಗಳಲ್ಲಿ ನಾವು ನಿನ್ನನ್ನು ಬೆಳೆಸುತ್ತೇವೆ, ಉತ್ತಮ ಭವಿಷ್ಯವಿದೆ, ಯಾವುದೇ ನಿರ್ಧಾರ ಮಾಡಬೇಡಿ ಎಂದು ಹೇಳಿದ್ದಾರೆ. ಆದರೆ ತಾವು ಬಂಡಾಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ವ್ಯಾಖ್ಯಾನ ಮಾಡುವುದು ಬೇಡ. ಇನ್ನೆರೆಡು ಕ್ಷೇತ್ರಗಳಲ್ಲಿ ಜನರ ಅಭಿಪ್ರಾಯ ಪಡೆದ ಬಳಿಕ ನನ್ನ ನಿರ್ಧಾರವನ್ನುತಿಳಿಸುತ್ತೇನೆ. ಸದ್ಯಕ್ಕೆ ನಾನಿನ್ನೂ ಪಕ್ಷೇತರರಾಗಿ ಸ್ರ್ಪಧಿಸುವ ಇರಾದೆಯಲ್ಲಿಯೇ ಇರುವುದಾಗಿ ಹೇಳಿದ್ದಾರೆ. +ಶ್ಯಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ವಿನಯ್ಕುಮಾರ್ ರೊಚ್ಚಿಗೆದ್ದಿದ್ದು, ಪಕ್ಷೇತರನಾಗಿ ಸ್ರ್ಪಧಿಸುವ ಪ್ರಯತ್ನ ಮಾಡುತ್ತಿದ್ದಾರೆ. \ No newline at end of file diff --git a/eesanje/url_46_182_2.txt b/eesanje/url_46_182_2.txt new file mode 100644 index 0000000000000000000000000000000000000000..62800c98c78e953e8c3974659150858d508b2f6e --- /dev/null +++ b/eesanje/url_46_182_2.txt @@ -0,0 +1,8 @@ +ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಗೆ ನಾಳೆ ಅಧಿಸೂಚನೆ +ಬೆಂಗಳೂರು,ಏ.11-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಮತಬೇಟೆ ರಂಗೇರಿರುವ ಬೆನ್ನಲ್ಲೇ ಉಳಿದ 14 ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಬಹುತೇಕ ರಾಜ್ಯದ ಮದ್ಯಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. +ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇದೇ ತಿಂಗಳ 19 ಕಡೆಯ ದಿನವಾಗಿದ್ದು, 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ನಡೆಯಲಿದೆ. ಇದೇ ವೇಳೆ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪಚುನಾವಣೆ ನಡೆಯಲಿದ್ದು, ಆಯೋಗ ಅಧಿಸೂಚನೆಯನ್ನು ಹೊರಡಿಸಲಿದೆ. +ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಲೋಕಸಭಾ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕಗಳೇ ಅನ್ವಯವಾಗಲಿದೆ. 2ನೇ ಹಂತದಲ್ಲಿ ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೀದರ್, ವಿಜಾಪುರ, ಕಲಬುರಗಿ, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಜೂನ್ 7 ರಂದು ಮತದಾನ ನಡೆಯಲಿದೆ. +2 ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2,88,08,182 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಇದರಲ್ಲಿ ಪುರುಷರು 1,44,17,530, ಮಹಿಳೆಯರು 1,43,87,585, ತೃತೀಯ ಲಿಂಗಿಗಳು 3067, ಸೇವಾ ಮತದಾರರು 11,160, ಯುವ ಮತದಾರರು 599,444, ದಿವ್ಯಾಂಗ ಮತದಾರರು 2,76,042, 85 ವರ್ಷ ಮೇಲ್ಪಟ್ಟವರು 3,40,856, 2,849 ಸಾಗರೋತ್ತರ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. +ಮೇ 7 ರಂದು ನಡೆಯಲಿರುವ ಚುನಾವಣೆಗೆ ಈ ಬಾರಿ ಸ್ಪರ್ಧಾ ಕಣದಲ್ಲಿ ಘಟಾನುಘಟಿ ನಾಯಕರು ಇದ್ದಾರೆ.ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿ.ವೈ.ವಿಜಯೇಂದ್ರ, ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್ ಕಣದಲ್ಲಿದ್ದಾರೆ. +ದಾವಣಗೆರೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಗಾಯತ್ರಿ ಸಿದ್ದೇಶ್ವರ್, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮಲು, ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬೀದರ್‍ನಲ್ಲಿ ಕೇಂದ್ರ ಸಚಿವ ಭಗವಂತ್ ಕೂಬಾ ಕಣದಲ್ಲಿರುವ ಪ್ರಮುಖರು. +ಇನ್ನು ಕಾಂಗ್ರೆಸ್‍ನಿಂದ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರ ಅಳಿಯ ರಾಧಾಕೃಷ್ಣನ್ ಕಲಬುರಗಿಯಿಂದ, ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ ಚಿಕ್ಕೋಡಿಯಿಂದ, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಬೆಳಗಾವಿಯಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ, ರಾಮಲು ವಿರುದ್ಧ ಶಾಸಕ ತುಕಾರಾಂ, ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಬೀದರ್‍ನಿಂದ ಹೀಗೆ ಘಟಾನುಘಟಿ ನಾಯಕರು ತಮ್ಮ ಅದೃಷ್ಟವನ್ನು ಪಣಕ್ಕಿಟ್ಟಿದ್ದಾರೆ.ಅಂತಿಮವಾಗಿ ಮತದಾರರ ಕೃಪೆ ಯಾರಿಗೆ ಎಂಬುದು ಜೂನ್ 4 ರ ಫಲಿತಾಂಶದವರೆಗೆ ಕಾಯಲೇಬೇಕು. \ No newline at end of file diff --git a/eesanje/url_46_182_3.txt b/eesanje/url_46_182_3.txt new file mode 100644 index 0000000000000000000000000000000000000000..315972b08584b5a1f22acd4179f34635310265e2 --- /dev/null +++ b/eesanje/url_46_182_3.txt @@ -0,0 +1,8 @@ +ಏ.14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಮತಬೇಟೆ, ದೇವೇಗೌಡರ ಸಾಥ್ +ಬೆಂಗಳೂರು,ಏ.11-ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ. +ಕರ್ನಾಟಕ ಬಿಜೆಪಿ ತನ್ನ ರಾಜಕೀಯ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳಾದ ಸಾಮಾನ್ಯ ಜನರಿಗೆ ನಾನು ಮೋದಿ ಪರಿವಾರ, ಮೋದಿಗಾಗಿ ಒಂದು ಭಾನುವಾರ (ಮೋದಿಗಾಗಿ ಭಾನುವಾರ) ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯ ತೀವ್ರಗೊಳಿಸಿದೆ. +ಏಪ್ರಿಲ್ 14 ರಂದು ಮೈಸೂರಿನ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಳ್ಳಲಿರುವ ಪ್ರಧಾನಿ ಮೋದಿ, ದೇವೇಗೌಡ:ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಮತ್ತು ಹಾಸನ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿಗೆ ಪೈಪೋಟಿ ನಡೆಸುತ್ತಿದೆ. +ಸಂಜೆ 4 ಗಂಟೆಗೆ ಸಾರ್ವಜನಿಕರೊಂದಿಗೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನದ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.ಮೈಸೂರಿನಲ್ಲಿ ದೇವೇಗೌಡರ ಉಪಸ್ಥಿತಿಯಿಂದ ಹಳೇ ಮೈಸೂರು ಭಾಗದಲ್ಲಿ ತಮ್ಮ ಪಕ್ಷಕ್ಕೆ ಬಲ ಬರಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇಲ್ಲಿ ಜೆಡಿಎಸ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ. +ರ್ಯಾಲಿ ಮತ್ತು ರೋಡ್ ಶೋನಲ್ಲಿ ಭಾಗವಹಿಸುವ ಜನರಿಗೆ ಪಕ್ಷದ ಚಿಹ್ನೆಯಾದ ಕಮಲದ ಆಧಿಕಾರದಲ್ಲಿ ಮೆಹೆಂದಿಯನ್ನು ತಮ್ಮ ಅಂಗೈಗೆ ಹಾಕಿಕೊಳ್ಳುವಂತೆ ಬಿಜೆಪಿ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. +ಮಂಗಳೂರಿನಲ್ಲಿ ರೋಡ್ ಶೋ :ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆ ವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸಲಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಇದು ಬಲ್ಲಾಳ್ಬಾಗ್, ಪಿವಿಎಸ್ ಜಂಕ್ಷನ್ ಮತ್ತು ನವಭಾರತ ವೃತ್ತದ ಮೂಲಕ ಹಾದುಹೋಗುತ್ತದೆ. ರೋಡ್ ಶೋ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಲು ಪಕ್ಷವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಿದೆ ಎಂದು ಹೇಳಿದರು. +ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ, ಮಂಗಳೂರು, ಮೂಡುಬಿದಿರೆಯಿಂದ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದೇಶಾಂಗ ಸಚಿವ ಜೈ ಶಂಕರ್ 15ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ. \ No newline at end of file diff --git a/eesanje/url_46_182_4.txt b/eesanje/url_46_182_4.txt new file mode 100644 index 0000000000000000000000000000000000000000..6472c3c800c8cfa71288b02029cc81d5cc077a1f --- /dev/null +++ b/eesanje/url_46_182_4.txt @@ -0,0 +1,6 @@ +ಚಮತ್ಕಾರ : ನಾಪತ್ತೆಯಾಗಿ ಭಾರೀ ಸಂಚಲನ ಸೃಷ್ಟಿಸಿದ್ದ ಕಡತ ಕೆಪಿಎಸ್‌ಸಿ ಕಚೇರಿಯಲ್ಲೇ ಪತ್ತೆ.! +ಬೆಂಗಳೂರು,ಏ.10-ಎರಡು ತಿಂಗಳಿಂದ ನಾಪತ್ತೆಯಾಗಿದ್ದ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ಕರ್ನಾಟಕ ಲೋಕಸೇವಾ ಆಯೋಗ ಕಚೇರಿಯಲ್ಲೇ ಪತ್ತೆಯಾಗಿದೆ. +2016 ರಲ್ಲಿ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆ ನಡೆದಿತ್ತು. 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಚ್.ಡಿ. ವಿವೇಕಾನಂದ ಎಂಬುವವರು ಹೈಕೋರ್ಟ್ ಮೊರೆ ಹೋಗಿದ್ದರು. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿಸಲಾಗಿತ್ತು. ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಯಿತು. ಆ ಬಳಿಕ ಕಡತ ನಾಪತ್ತೆಯಾಗಿತ್ತು. +ಬಳಿಕ ಕೆಪಿಎಸ್ಸಿಯ ಎಲ್ಲ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಯ್ತು. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2ಕ್ಕೆ ಹಿಂದಿರುಗಿಸುವಂತೆ ಕೆಪಿಎಸ್ಸಿ ಜಾ್ಞಪನ ಹೊರಡಿಸಿತ್ತು. ಬಳಿಕ ಕೆಪಿಎಸ್ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಸಿದೆ. ಅಧಿಕಾರಿ, ಸಿಬ್ಬಂದಿ ಸುಮಾರು ಒಂದು ತಿಂಗಳು ಕಾಲ ಶೋಧ ನಡೆಸಿದರು. ಆದರೆ ಕಡೆತ ಎಲ್ಲೂ ಸಿಕ್ಕಿರಲಿಲ್ಲ. +ಹೀಗಾಗಿ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗ ಸಭೆ ನಡೆಸಿ ನಿರ್ಧಾರ ಕೈಗೊಂಡು, ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು. +ಘಟನೆ ಸಂಬಂಧ ಮಾಧ್ಯಮಗಳಲ್ಲಿ ಸುದ್ದಿಯಾದ ಬೆನ್ನಲ್ಲೇ ಕಡತ ಪತ್ತೆಯಾಗಿದೆ. ಕಡತ ಪತ್ತೆಯಾದ ಬಗ್ಗೆ ಆಯೋಗದ ಹಿರಿಯ ಅಧಿಕಾರಿಗಳು ಮËಖಿಕವಾಗಿ ವಿಧಾನಸೌಧ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಅಕೃತವಾಗಿ ಪತ್ರದ ಮೂಲಕ ಮಾಹಿತಿ ನೀಡುವಂತೆ ಹೇಳಿದ್ದಾರೆ. ಪತ್ರದಲ್ಲಿ ನೀಡುವ ಮಾಹಿತಿ ಆಧಾರದ ಮೇಲೆ ವಿಧಾನಸೌಧ ಪೊಲೀಸರು ಮುಂದಿನ ಪ್ರಕ್ರಿಯೆ ನಡೆಸಲಿದ್ದಾರೆ. \ No newline at end of file diff --git a/eesanje/url_46_182_5.txt b/eesanje/url_46_182_5.txt new file mode 100644 index 0000000000000000000000000000000000000000..2c11f2e25811b99aa6243384754ee95ed13da566 --- /dev/null +++ b/eesanje/url_46_182_5.txt @@ -0,0 +1,6 @@ +ಬಿಜೆಪಿ-ಜೆಡಿಎಸ್ ಕೃಪಾಪೋಷಿತ ಕಿಡಿಗೇಡಿಗಳಿಂದ ಕೋಮುಭಾವನೆ ಕೆರಳಿಸುವ ಸುಳ್ಳು ಸುದ್ದಿ : ಸಿಎಂ ಕಿಡಿ +ಬೆಂಗಳೂರು,ಏ.10-ಬಿಜೆಪಿ – ಜೆಡಿಎಸ್ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾ ಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. +ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಗೆ ದೂರು ನೀಡಿದ್ದು, ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದ್ದಾರೆ. +ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ…../6Gin6L9Dvz +ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‍ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಮರುಕ ವ್ಯಕ್ತಪಡಿಸಿದ್ದಾರೆ. +ಸುಳ್ಳು ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಎಚ್ಚರಿಕೆ ವಹಿಸಿ. ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_182_6.txt b/eesanje/url_46_182_6.txt new file mode 100644 index 0000000000000000000000000000000000000000..9d3c792bb49e1a1267d4e63886ef68040bdea9e2 --- /dev/null +++ b/eesanje/url_46_182_6.txt @@ -0,0 +1,4 @@ +ಲೋಕಸಭಾ ಚುನಾವಣೆ : ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು, ದಕ್ಷಿಣ ಕನ್ನಡದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳ ಸ್ಪರ್ಧೆ +ಬೆಂಗಳೂರು, ಏ.10-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 247 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತಿ ಹೆಚ್ಚು 29 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತಿ ಕಡಿಮೆ 9 ಅಭ್ಯರ್ಥಿಗಳಿದ್ದಾರೆ.ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 226 ಪುರುಷ ಹಾಗೂ 21 ಮಂದಿ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ನಾಮಪತ್ರ ಪಡೆಯಲು ಕಡೆಯ ದಿನವಾಗಿದ್ದ ಏ.8ರಂದು 52 ಅಭ್ಯರ್ಥಿಗಳು ಉಮೇದುವಾರಿಕೆ ಹಿಂಪಡೆದಿದ್ದರು. +ಬಿಜೆಪಿಯಿಂದ 11, ಜೆಡಿಎಸ್‍ನಿಂದ 3 ಹಾಗೂ ಕಾಂಗ್ರೆಸ್‍ನಿಂದ 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಈ ಬಾರಿಯೂ ಪಕ್ಷೇತರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಕ್ಷೇತ್ರವಾರು ಅಭ್ಯರ್ಥಿಗಳ ವಿವರ ಈ ಕೆಳಕಂಡಂತಿದೆ. +ಉಡುಪಿ-ಚಿಕ್ಕಮಗಳೂರು- 10, ಹಾಸನ-15, ದಕ್ಷಿಣ ಕನ್ನಡ-9, ಚಿತ್ರದುರ್ಗ- 20, ತುಮಕೂರು- 18, ಮಂಡ್ಯ-14, ಮೈಸೂರು- 18, ಚಾಮರಾಜನಗರ- 14, ಬೆಂಗಳೂರು ಗ್ರಾಮಾಂತರ- 15, ಬೆಂಗಳೂರು ಉತ್ತರ- 21, ಬೆಂಗಳೂರು ಕೇಂದ್ರ- 24, ಬೆಂಗಳೂರು ದಕ್ಷಿಣ- 22, ಚಿಕ್ಕಬಳ್ಳಾಪುರ- 29, ಕೋಲಾರ-18 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. \ No newline at end of file diff --git a/eesanje/url_46_182_7.txt b/eesanje/url_46_182_7.txt new file mode 100644 index 0000000000000000000000000000000000000000..abb0e5bcfcda50dc358f7fd956ccc60bd9edd1bb --- /dev/null +++ b/eesanje/url_46_182_7.txt @@ -0,0 +1,10 @@ +ಮಂತ್ರಿಗಿರಿ ಉಳಿಸಿಕೊಳ್ಳಲು ಚುನಾವಣಾ ಕಣದಲ್ಲಿ ಬೆವರು ಹರಿಸುತ್ತಿರುವ ಸಚಿವರು +ಬೆಂಗಳೂರು,ಏ.10-ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಿಗಷ್ಟೇ ಅಲ್ಲ, ಸಂಪುಟದ ಹಲವು ಸಚಿವರಿಗೂ ರಾಜಕೀಯ ಭವಿಷ್ಯದ ಅಳಿವು-ಉಳಿವಿನ ಪ್ರಶ್ನೆಯ ಸವಾಲಾಗಿದೆ. ಗೆಲುವು ಅನಿವಾರ್ಯ ಎಂಬ ಕಾರಣಕ್ಕೆ ಅಭ್ಯರ್ಥಿಗಳೊಂದಿಗೆ ಸಚಿವರು, ಪ್ರಮುಖ ನಾಯಕರು ಹಗಲಿರುಳು ಬೆವರು ಸುರಿಸುತ್ತಿದ್ದಾರೆ. +ಲೋಕಸಭಾ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಹಲವಾರು ವಿಪ್ಲವಗಳು ನಡೆಯುವ ಸಾಧ್ಯತೆಯಿದೆ.ಈ ಹಿಂದೆ ವಿಧಾನಸಭಾ ಚುನಾವಣೆಯ ಬಳಿಕ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದ ಸಂಧಾನದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಲೋಕಸಭಾ ಚುನಾವಣೆಯವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವುದಾಗಿ ಹೈಕಮಾಂಡ್ ಘೋಷಣೆ ಮಾಡಿತ್ತು. ಚುನಾವಣೆ ಬಳಿಕ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾಗುವ ಸಾಧ್ಯತೆಯಿದೆ. ಜೊತೆಯಲ್ಲಿ ಹಲವು ಸಚಿವರ ಸ್ಥಾನಪಲ್ಲಟವಾಗುವ ನಿರೀಕ್ಷೆಗಳಿವೆ. +ಸಚಿವ ಸಂಪುಟ ವಿಸ್ತರಣೆ ವೇಳೆ ಹಲವಾರು ಮಂದಿ ಅಸಮಾಧಾನಗೊಂಡು ಬಂಡಾಯದ ಕಹಳೆ ಊದಲಾರಂಭಿಸಿದರು. ಆ ವೇಳೆ ಅತೃಪ್ತರನ್ನು ಸಮಾಧಾನಪಡಿಸಿದ ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆವರೆಗೂ ಸಮಾಧಾನದಿಂದಿರಿ. ಸಂಪುಟ ಪುನರ್ ರಚನೆಯಾಗಲಿದೆ. ಎಲ್ಲರಿಗೂ ಅವಕಾಶ ಸಿಗಲಿದೆ ಎಂದು ಸಮಾಧಾನ ಪಡಿಸಿದರು. +ಕೆಲವು ಅತೃಪ್ತರಿಗೆ ಇತ್ತೀಚೆಗೆ ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸಿ ಸಮಾಧಾನಪಡಿಸುವ ಪ್ರಯತ್ನವೂ ನಡೆದಿತ್ತು. ಎಲ್ಲರಿಗೂ ಲೋಕಸಭಾ ಚುನಾವಣೆ ಬಳಿಕ ಅವಕಾಶ ದೊರೆಯಲಿದೆ ಎಂಬ ಭರವಸೆಯನ್ನು ನೀಡಲಾಗಿತ್ತು. +ಬಹಳಷ್ಟು ಮಂದಿ ಲೋಕಸಭಾ ಚುನಾವಣೆ ಮುಗಿಯುವುದನ್ನೇ ಕಾದು ಕುಳಿತಿದ್ದಾರೆ. ತಮಗೆ ಈ ಬಾರಿ ಅಧಿಕಾರ ಸಿಗಲಿದೆ ಎಂಬ ನಿರೀಕ್ಷೆಗಳೊಂದಿಗೆ ಚುನಾವಣೆಗಾಗಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ಸಂಪುಟದ ಸಚಿವರುಗಳಿಗೆ ಆಯಾ ಜಿಲ್ಲಾ ಉಸ್ತುವಾರಿ ಇರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಷರತ್ತು ವಿಸಲಾಗಿದೆ. +ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಅದಕ್ಕೆ ಉಸ್ತುವಾರಿ ಸಚಿವರು ಹೊಣೆಗಾರರು ಎಂಬ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ ಸಂಪುಟದ ಸಚಿವರು ತನು-ಮನ-ಧನದ ಜೊತೆಗೆ ಕಾಯಾವಾಚಾ ಕಾಂಗ್ರೆಸ್‍ನ ಗೆಲುವಿಗಾಗಿ ಬೆವರು ಸುರಿಸುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಹಿನ್ನಡೆ ಅನುಭವಿಸುವ ಆತಂಕವಿದೆ. ಅಂತಹ ಕ್ಷೇತ್ರಗಳಿಗೆ ಹೆಚ್ಚಿನ ಸಂಪನ್ಮೂಲ ಒದಗಿಸುವಂತೆ ಸಚಿವರು ಪಕ್ಷದ ವರಿಷ್ಠ ನಾಯಕರಿಗೆ ದುಂಬಾಲು ಬಿದ್ದಿದ್ದಾರೆ. +ಬಹಳಷ್ಟು ಮಂದಿ ಸಚಿವರಿಗೆ ಆರ್ಥಿಕವಾಗಿ ಸಂಪತ್ಭರಿತವಾದ ಇಲಾಖೆಗಳು ದೊರೆತಿಲ್ಲ ಎಂಬ ಅಸಮಾಧಾನಗಳಿವೆ. ಅಂತವರು ಲೋಕಸಭಾ ಚುನಾವಣೆಯಲ್ಲಿ ತಮಗೆ ಸಹಾಯ ಮಾಡಿ ಎಂದು ವರಿಷ್ಠ ನಾಯಕರ ಬಳಿ ಹೆಚ್ಚಿನ ಬೇಡಿಕೆ ಇಡುತ್ತಿರುವುದು ಕಂಡುಬಂದಿದೆ.ಈ ಮೊದಲು ಸಚಿವ ಕೆ.ಎಚ್.ಮುನಿಯಪ್ಪ ಎರಡೂವರೆ ವರ್ಷದ ಬಳಿಕ ಸಚಿವರು ಬೇರೆಯವರಿಗೆ ಅವಕಾಶ ಮಾಡಿಕೊಡಲು ಹುದ್ದೆ ತ್ಯಾಗ ಮಾಡಬೇಕು ಎಂದು ಈ ಹಿಂದೆ ಬಹಿರಂಗವಾಗಿ ಹೇಳಿದ್ದರು. +ಆ ವೇಳೆ ಅವರಿಗೆ ಕೋಲಾರ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ರ್ಪಸುವ, ರಾಷ್ಟ್ರ ರಾಜಕಾರಣಕ್ಕೆ ತೆರಳುವ ಇರಾದೆಯಿತ್ತು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮುನಿಯಪ್ಪ ಅಥವಾ ಅವರ ಕುಟುಂಬಕ್ಕೆ ಲೋಕಸಭೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿಲ್ಲ. ಈಗಲೂ ಅವರು ಸಚಿವ ಸ್ಥಾನ ತ್ಯಾಗದ ಇರಾದೆಯಲ್ಲಿಯೇ ಇದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ.ಬಹಳಷ್ಟು ಮಂದಿ ಸಚಿವರು ಅಭಿವೃದ್ಧಿಗಿಂತಲೂ ವಿವಾದಗಳಲ್ಲಿ ಹೆಚ್ಚು ಸುದ್ದಿ ಮಾಡುತ್ತಿದ್ದಾರೆ. +ಅಂತವರಿಗೆ ಲೋಕಸಭಾ ಚುನಾವಣೆ ಬಳಿಕ ಕೋಕ್ ಸಿಗುವ ಸಾಧ್ಯತೆಯಿದೆ. ಹೊಸಬರಿಗೆ ಅವಕಾಶ ಕೊಡುವುದು ಮತ್ತು ಸಂಪುಟದಲ್ಲಿ ಸುದೀರ್ಘ ಸೇವೆ ಸಲ್ಲಿಸಿದವರನ್ನು ಪಕ್ಷಸಂಘಟನೆಗೆ ತೊಡಗಿಸಿಕೊಂಡು ಮುಂದಿನ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಯಾರಿ ಮಾಡಿರುವುದು ಕಾಂಗ್ರೆಸ್ ನಾಯಕರ ಅಭಿಲಾಷೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_182_8.txt b/eesanje/url_46_182_8.txt new file mode 100644 index 0000000000000000000000000000000000000000..65d562b4e3fa896b4a8ad30fd3e0295e35de240a --- /dev/null +++ b/eesanje/url_46_182_8.txt @@ -0,0 +1,13 @@ +ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಕಂಪ್ಲೀಟ್ ಮಾಹಿತಿ +ಬೆಂಗಳೂರು,ಏ.10-ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮೀಣ ಭಾಗದ ಫಲಿತಾಂಶ ಏರಿಕೆಯಾಗಿದೆ. +2023 ರಲ್ಲಿ 74.67 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಶೇ.6.4 ರಷ್ಟು ಏರಿಕೆಯಾಗಿದ್ದು, ದಾಖಲೆಯ 81.15 ರಷ್ಟು ಫಲಿತಾಂಶ ದಾಖಲಾಗಿರುವುದು ವರ್ಷದಿಂದ ವರ್ಷಕ್ಕೆ ಫಲಿತಾಂಶ ಏರಿಕೆಯಾಗುತ್ತಿರುವುದರ ಸಕಾರಾತ್ಮಕ ಬೆಳವಣಿಗೆಯಾಗಿದೆ.ಕಳೆದ ಮಾರ್ಚ್ 1 ರಿಂದ 27 ರವರೆಗೆ ರಾಜ್ಯದ 1,124 ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ-1 ರ ಪರೀಕ್ಷೆಗೆ ಒಟ್ಟು 6,81,079 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 5,22,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. +ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಘೋಷಿಸಿದರು. ಕಲಾವಿಭಾಗದಲ್ಲಿ ಶೇ.68.36, ವಾಣಿಜ್ಯ ಶೇ.80.94, ವಿಜ್ಞಾನ ಶೇ.89.96 ಫಲಿತಾಂಶ ಹೊರಬಂದಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ದಕ್ಷಿಣ ಕನ್ನಡ, ಉಡುಪಿ, ವಿಜಯಪುರ ಕ್ರಮವಾಗಿ ಮೊದಲ ಸ್ಥಾನದಲ್ಲಿದ್ದರೆ, ಗದಗ ಕೊನೆಯ ಸ್ಥಾನದಲ್ಲಿದೆ. +ಕಲಾವಿಭಾಗದಲ್ಲಿ ಬೆಂಗಳೂರಿನ ಎನ್‍ಎನ್‍ಕೆಆರ್‍ವಿ ಪಿಯು ಕಾಲೇಜಿನ ಮೇಧಾ ಡಿ. 596, ವಿಜಯಪುರದ ಎಸ್‍ಎಸ್ ಪಿಯು ಕಾಲೇಜಿನ ವೇದಾಂತ್ ಜಯನುಬಾ ನವಿ 596, ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಕೂಡ್ಲಗಿಯ ಇಂದು ಪಿಯು ಕಾಲೇಜಿನ ಕವಿತಾ ಬಿ.ವಿ. 596 ಅಂಕಗಳನ್ನು ಪಡೆದಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ 598 ಅಂಕ ಪಡೆದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ. +ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾನಿ ಪಿಯು ಕಾಲೇಜಿನ ಜ್ಞಾನವಿ ಎಂ. 597, ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕುಮದ್ವತಿ ಕಾಲೇಜಿನ ಪವನ್ ಎಂ.ಎಸ್. 596, ಉಡುಪಿಯ ಪೂರ್ಣ ಪ್ರಜ್ಞಾ ಪಿಯು ಕಾಲೇಜಿನ ಹರ್ಷಿತಾ ಎಸ್.ಎಚ್. 596 ಅಂಕ ಪಡೆದಿದ್ದಾರೆ. +ಈ ಬಾರಿ ಪರೀಕ್ಷೆಗೆ ಹಾಜರಾದ 6,22,819 ಹೊಸ ವಿದ್ಯಾರ್ಥಿಗಳ ಪೈಕಿ 5,26,558 (84.59) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನರಾವರ್ತಿತ 36,007 ವಿದ್ಯಾರ್ಥಿಗಳಲ್ಲಿ ಹಾಜರಾದವರ ಪೈಕಿ 15,116 ವಿದ್ಯಾರ್ಥಿಗಳು (41.98), 22,253 ಖಾಸಗಿ ವಿದ್ಯಾರ್ಥಿಗಳ ಪೈಕಿ 10,716 (48.16) ತೇರ್ಗಡೆಯಾಗಿದ್ದಾರೆ. +ಕಲಾ ವಿಭಾಗದಲ್ಲಿ 1,87,891 ಹಾಜರಾದ ವಿದ್ಯಾರ್ಥಿಗಳ ಪೈಕಿ 1,28,448 (68.36), ವಾಣಿಜ್ಯ ವಿಭಾಗದಲ್ಲಿ 2,15,357 ಹಾಜರಾದವರ ಪೈಕಿ 1,74,315 (80.94), ವಿಜ್ಞಾನ ವಿಭಾಗದಲ್ಲಿ 2,77,831 ಹಾಜರಾದವರ ಪೈಕಿ 249927 (89.96) ಫಲಿತಾಂಶ ಪ್ರಕಟಗೊಂಡಿದೆ.ಬಾಲಕರ ಪೈಕಿ ಪರೀಕ್ಷೆಗೆ 3,21,467 ಹಾಜರಾದವರ ಪೈಕಿ 2,47,478 (76.98), ಅದೇ ರೀತಿ ಬಾಲಕಿಯರಲ್ಲಿ 3,59,612 ವಿದ್ಯಾರ್ಥಿನಿಯರಲ್ಲಿ 3,05,212 (84.87) ಫಲಿತಾಂಶ ಹೊರಬಂದಿದೆ. +ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ಗ್ರಾಮಾಂತರ ವಿದ್ಯಾರ್ಥಿಗಳು ತಾವು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಕಡಿಮೆ ಇಲ್ಲ ಎಂಬಂತೆ ಹೆಚ್ಚಿನ ಅಂಕ ಪಡೆದಿದ್ದಾರೆ.ನಗರ ಪ್ರದೇಶದಿಂದ 5,32,279 ಹಾಜರಾದವರ ಪೈಕಿ 4,32,060 (81.10), ಅದೇ ರೀತಿ ಗ್ರಾಮಾಂತರ ಪ್ರದೇಶದಿಂದ 1,48,350 ಹಾಜರಾದ ವಿದ್ಯಾರ್ಥಿಗಳಲ್ಲಿ 1,20,630 (81.31) ಉತ್ತೀರ್ಣರಾಗಿದ್ದಾರೆ. +ಈ ಬಾರಿ ಶೇ.85 ಅಥವಾ ಅದಕ್ಕಿಂತ ಹೆಚ್ಚಿನ ಅಂಗಳನ್ನು 1,53,370 ವಿದ್ಯಾರ್ಥಿಗಳು ಪಡೆದಿದ್ದರೆ ಶೇ.85 ಕ್ಕಿಂತ ಕಡಿಮೆ ಹಾಗೂ ಶೇ. 60 ಅಥವಾ ಶೇ.60 ಕ್ಕಿಂತ ಕಡಿಮೆ ಅಂಕವನ್ನು 2,89,733 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. +ಶೇ.60 ಕ್ಕಿಂತ ಕಡಿಮೆ, ಶೇ.50 ಅಥವಾ ಶೇ.50 ಕ್ಕಿಂತ ಹೆಚ್ಚು ಅಂಕಗಳನ್ನು 72,098, ಶೇ.50 ಕ್ಕಿಂತ ಕಡಿಮೆ ಅಂಕಗಳನ್ನು 37,489 ವಿದ್ಯಾರ್ಥಿಗಳು ಪಡೆದಿದ್ದಾರೆ.ಈ ಬಾರಿ ಅಚ್ಚರಿಯೆಂಬಂತೆ 91 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ. 100 ರಷ್ಟು ಫಲಿತಾಂಶ ಬಂದಿದ್ದರೆ, 2 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. +26 ಅನುದಾನಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದ್ದರೆ, 6 ಕಾಲೇಜುಗಳಲ್ಲಿ ಶೂನ್ಯ, 345 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ರಷ್ಟು ಹಾಗೂ 26 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಹಾಗೂ ಒಂದು ವಿಭಜಿತ ಪದವಿ ಪೂರ್ವ ಕಾಲೇಜಿನಲ್ಲಿ ಶೇ.100 ರಷ್ಟು ಹಾಗೂ ಒಂದು ಕಾಲೇಜಿನಲ್ಲಿ ಶೂನ್ಯ ಫಲಿತಾಂಶ ಸೇರಿದಂತೆ ಒಟ್ಟು 463 ಕಾಲೇಜಿನಲ್ಲಿ ಶೇ.100 ರಷ್ಟು ಫಲಿತಾಂಶ ಮತ್ತು 35 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. +ಜಿಲ್ಲಾವಾರುದಕ್ಷಿಣ ಕನ್ನಡ ಶೇ.95.33ಉಡುಪಿ ಶೇ.95.24ವಿಜಯಪುರ ಶೇ.84.69ಉತ್ತರ ಕನ್ನಡ ಶೇ.89.74ಕೊಡಗು ಶೇ.90.55ಬೆಂಗಳೂರು ದಕ್ಷಿಣ ಶೇ.82.3ಬೆಂಗಳೂರು ಉತ್ತರ ಶೇ.82.25ಶಿವಮೊಗ್ಗ ಶೇ.83.13ಚಿಕ್ಕಮಗಳೂರು ಶೇ.83.28ಬೆಂಗಳೂರು ಗ್ರಾಮಾಂತರ ಶೇ.83.04ಬಾಗಲಕೋಟೆ ಶೇ.78.79ಕೋಲಾರ ಶೇ.79.2ಹಾಸನ ಶೇ.83.14ಚಾಮರಾಜನಗರ ಶೇ.81.92ಚಿಕ್ಕೋಡಿ ಶೇ.78.76ರಾಮನಗರ ಶೇ.78.12ಮೈಸೂರು ಶೇ.79.89ಚಿಕ್ಕಬಳ್ಳಾಪುರ ಶೇ.77.77ಬೀದರ್ ಶೇ.78ತುಮಕೂರು ಶೇ.74.5ದಾವಣಗೆರೆ ಶೇ.75.72ಕೊಪ್ಪಳ ಶೇ.74.8ಧಾರವಾಡ ಶೇ.73.54ಮಂಡ್ಯ ಶೇ.77.47ಹಾವೇರಿ ಶೇ.74.13ಯಾದಗಿರಿ ಶೇ.62.98ಬೆಳಗಾವಿ ಶೇ.73.98ಕಲಬುರಗಿ ಶೇ.69.37ಬಳ್ಳಾರಿ ಶೇ.69.55ರಾಯಚೂರು ಶೇ.66.21ಚಿತ್ರದುರ್ಗ ಶೇ.69.5ಗದಗ ಶೇ.66.91 diff --git a/eesanje/url_46_182_9.txt b/eesanje/url_46_182_9.txt new file mode 100644 index 0000000000000000000000000000000000000000..ee0e11beae2828dde07ca5dae3495bdd1b3ceb07 --- /dev/null +++ b/eesanje/url_46_182_9.txt @@ -0,0 +1,7 @@ +ಯುಗಾದಿ ಸಂಭ್ರಮ ಕಸಿದ ಬರಗಾಲ, ಮಾರುಕಟ್ಟೆ ಕುಸಿದ ಖರೀದಿ +ಬೆಂಗಳೂರು,ಏ. 8-ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿರುತ್ತದೆ. ಆದರೆ ಈ ಯುಗಾದಿಗೆ ಮಾರುಕಟ್ಟೆಗಳಲ್ಲಿ ಹೇಳಿಕೊಳ್ಳುವಷ್ಟು ಜನರಿಲ್ಲ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗಿದೆ. ಕುಡಿಯಲು ನೀರಿಲ್ಲದೆ ಹಬ್ಬದ ಸಂಭ್ರಮ ಕಳೆಗುಂದಿದೆ. ಹಿಂದೂ ಪಂಚಾಂಗದ ಪ್ರಕಾರ, ಯುಗಾದಿ ಹೊಸವರ್ಷವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಬರಗಾಲ ಹಬ್ಬದ ಸಂಭ್ರಮ ಕಸಿದುಕೊಂಡಿದೆ. +ಒಂದು ಕಡೆ ಬಿಸಿಲಿಗೆ ಹೆದರಿ ಜನರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದರೆ, ಮತ್ತೊಂದೆಡೆ ನೀರಿಲ್ಲದೆ ಹೂವು, ಹಣ್ಣು, ತರಕಾರಿ ಬೆಳೆ ಕಡಿಮೆಯಾಗಿದ್ದು, ಇವುಗಳ ಬೆಲೆ ಗಗನಕ್ಕೇರಿರುವುದರಿಂದ ಜನರು ಮಾರುಕಟ್ಟೆಯತ್ತ ಮುಖ ಮಾಡುತ್ತಿಲ್ಲ. +ನಗರದಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಶಾಲಾ-ಕಾಲೇಜು ಗಳಿಗೆ ರಜೆ ಕೂಡ ಬಂದಿದೆ. ಇದರ ಜತೆಗೆ ಸಾಲುಸಾಲು ರಜೆ ಬಂದಿರುವ ಹಿನ್ನೆಲೆಯಲ್ಲಿ ಜನರು ಊರುಗಳತ್ತ ತೆರಳಿದ್ದು, ನಗರದಲ್ಲಿ ಜನರ ಸಂಖ್ಯೆ ಕಡಿಮೆಯಾಗಿದೆ. ಹಾಗಾಗಿ ಮಾರುಕಟ್ಟೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಜನರು ಖರೀದಿಗೆ ಬರುತ್ತಿಲ್ಲ. +ನೀರಿನ ಸಮಸ್ಯೆ ಹಾಗೂ ಬಿಸಿಲಿನ ತಾಪಕ್ಕೆ ಹೂವುಗಳ ಬೆಳೆ ಅಷ್ಟಾಗಿ ಚೆನ್ನಾಗಿ ಬಂದಿಲ್ಲ. ಜತೆಗೆ ಬಿಸಿಲಿನ ತಾಪಕ್ಕೆ ಹೂವುಗಳು ಬೇಗ ಬಾಡುತ್ತಿದ್ದು, ಮಾರುಕಟ್ಟೆಗೆ ಗುಣಮಟ್ಟದ ಹೂವುಗಳು ಸರಬರಾಜಾಗುತ್ತಿಲ್ಲ. ಆದರೂ ಸಹ ಬೆಲೆ ಮಾತ್ರ ಗಗನಕ್ಕೇರಿದೆ. ಮಲ್ಲಿಗೆ ಕೆಜಿಗೆ 500 ರಿಂದ 600ರೂ., ಸೇವಂತಿಗೆ 300 ರಿಂದ 350ರೂ., ಕನಕಾಂಬರ 900 ರಿಂದ 1000ರೂ., ತುಳಸಿ ಒಂದು ಮಾರಿಗೆ 100ರೂ., ಬೇವಿನ ಸೊಪ್ಪು ಒಂದು ಕಟ್ಟಿಗೆ 30ರೂ.ಗೆ ಮಾರಾಟವಾಗುತ್ತಿದೆ. +ಕೆಲವು ದಿನಗಳ ಹಿಂದೆ 100ರೂ. ಗಡಿ ದಾಟಿದ್ದ ಏಲಕ್ಕಿ ಬಾಳೆ 50ರೂ.ಗೆ ಮಾರಾಟವಾಗುತ್ತಿದೆ. ಏಕೆಂದರೆ ಬಿಸಿಲಿಗೆ ಹಣ್ಣುಗಳು ಕಪ್ಪಾಗುತ್ತಿದ್ದು, ಕೇಳುವವರಿಲ್ಲದಂತಾಗಿದೆ.ತರಕಾರಿ ಬೆಲೆಯಲ್ಲೂ ಸಹ ಏರಿಕೆಯಾಗಿದ್ದು, ನಾಟಿ ಬೀನ್ಸ್ ಕೆಜಿ 80ರೂ., ಮೂಲಂಗಿ 40ರೂ., ಬೆಂಡೆಕಾಯಿ 50ರೂ., ಹಾಗಲಕಾಯಿ 60ರೂ., ಹೀರೇಕಾಯಿ 50ರೂ.ಗೆ ಮಾರಾಟವಾಗುತ್ತಿದೆ. +ಬೆಲೆ ಹೆಚ್ಚಾದರೂ ಸರಿಯೇ ನಮ್ಮ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕಲ್ಲ ಎಂದು ಬೆಲೆ ಏರಿಕೆ ನಡುವೆಯೂ ಹಬ್ಬವನ್ನು ಆಚರಿಸುತ್ತಿದ್ದಾರೆ. \ No newline at end of file diff --git a/eesanje/url_46_183_1.txt b/eesanje/url_46_183_1.txt new file mode 100644 index 0000000000000000000000000000000000000000..e6f9b1cf693eeafa7040f39132f13f36f3cf1624 --- /dev/null +++ b/eesanje/url_46_183_1.txt @@ -0,0 +1,9 @@ +ಬರ ಪರಿಹಾರ ವರದಿ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ 2 ವಾರದ ಗಡುವು ನೀಡಿದ ಸುಪ್ರೀಂ +ನವದೆಹಲಿ, ಮಾ.8-ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ()ಯಡಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ ಅನುದಾನ ಕುರಿತು ಎರಡು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿ ಬಿ.ಆರ್. ಗವಾಯಿ ಅವರಿದ್ದ ಏಕಸದಸ್ಯ ಪೀಠ, ಪರಿಹಾರ ಬಿಡುಗಡೆ ಮಾಡಿರುವ ಕುರಿತು ಎರಡು ವಾರದಲ್ಲಿ ವರದಿ ನೀಡ ಬೇಕೆಂದು ಸೂಚಿಸಿದೆ. +ಇದೇ ವೇಳೆ ನ್ಯಾಯಪೀಠ ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಘರ್ಷಕ್ಕಿಳಿಯದೆ ಒಕ್ಕೂ ವ್ಯವಸ್ಥೆಯಡಿ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕೆಂಬ ಮಹತ್ವದ ಸಲಹೆಯನ್ನು ಸಹ ನೀಡಿತು. ಒಂದು ಹಂತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ, ಪ್ರತಿಯೊಂದಕ್ಕೂ ರಾಜ್ಯ ಸರ್ಕಾರಗಳು ನ್ಯಾಯಾಲಯಕ್ಕೆ ಬರಬೇಕೆ? ಎಲ್ಲವನ್ನು ನ್ಯಾಯಾಲಯವೇ ಇತ್ಯರ್ಥಪಡಿಸುವುದಾದರೆ ಕೇಂದ್ರ ಸರ್ಕಾರದ ಪಾತ್ರವೇನೆಂದು ಅಟಾರ್ನಿ ಜನರಲ್ ಪ್ರಶ್ನೆ ಮಾಡಿದರು. +ಇದಕ್ಕೂ ಮುನ್ನ ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪೀಲ್ ಸಿಬಾಲ್ ಅವರು, ಕರ್ನಾಟಕದಲ್ಲಿ ಈ ಬಾರಿ ಭೀಕರ ಬರಗಾಲ ಅವರಿಸಿದೆ. ರಾಜ್ಯದ ಬಹುತೇಕ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಎನ್ಡಿಆರ್ಎಫ್ನಡಿ ಸಿಗಬೇಕಾದ ಪರಿಹಾರ ಸಿಕ್ಕಿಲ್ಲ ಎಂದು ಆಕ್ಷೇಪಿಸಿದರು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಸೇರಿದಂತೆ ಮತ್ತಿತರ ಅಧಿಕಾರಿಗಳ ನಿಯೋಗವು ಕೇಂದ್ರ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ. +ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡದೆ ವಿಳಂಬ ಧೋರಣೆಯನ್ನು ಅನುಸರಿಸುತ್ತಿದೆ. ನಮಗೆ ನ್ಯಾಯಯುತವಾಗಿ ಸಿಗಬೇಕಾದ ಪಾಲು ಸಿಕ್ಕಿದ್ದರೆ ನಾವೇಕೆ ನ್ಯಾಯಾಲಯದ ಮೊರೆ ಹೋಗಬೇಕಿತ್ತು ಎಂದು ಪ್ರಶ್ನಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಟಾನಿ ಜನರಲ್ ವೆಂಕಟರಮಣ, ಕರ್ನಾಟಕಕ್ಕೆ ಸಿಗಬೇಕಾದ ಪರಿಹಾರವನ್ನು ಕಾಲಕಾಲಕ್ಕೆ ಬಿಡುಗಡೆ ಮಾಡಿದ್ದೇವೆ. ಯಾವುದೇ ರಾಜ್ಯಗಳಿಗೂ ತಾರತಮ್ಯ ತೋರಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲ ರಾಜ್ಯಗಳಿಗೂ ಯಾವ ರೀತಿ ನ್ಯಾಯ ಕೊಡಬೇಕೋ ಅದೇ ರೀತಿ ಕೇಂದ್ರ ಸರ್ಕಾರ ಕರ್ನಾಟಕಕ್ಕೂ ಅದೇ ಮಾನದಂಡವನ್ನು ಅನುಸರಿಸಿದೆ ಎಂದು ಸಮರ್ಥಿಸಿಕೊಂಡರು. +ಈ ವೇಳೆ ಕಪಿಲ್ ಸಿಬಾಲ್ ಮತ್ತು ಎಜಿ ವೆಂಕಟರಮಣ ನಡುವೆ ಭಾರೀ ಜಟಾಪಟಿ ನಡೆಯಿತು. ಈ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ನ್ಯಾಯಾೀಧಿಶರು, ಕೇಂದ್ರ ಪರಿಹಾರ ಬಿಡುಗಡೆ ವಿಷಯದಲ್ಲಿ ಸಂಘರ್ಷ ಮಾಡಿಕೊಳ್ಳುವುದು ಬೇಡ ಎಂದು ಸೂಚನೆ ನೀಡಿದರು. ಕರ್ನಾಟಕಕ್ಕೆ ಎಷ್ಟು ಪರಿಹಾರ ನೀಡಿದೆ ಎಂಬುದರ ಬಗ್ಗೆ ನಿಮ್ಮ ಬಳಿ ದಾಖಲೆಗಳು ಇವೆಯೇ ಎಂದು ಅಟಾರ್ನಿ ಜನರಲ್ ಅವರನ್ನು ನ್ಯಾಯಾೀಧಿಶರು ಪ್ರಶ್ನಿಸಿದರು. +ನಮಗೆ ಒಂದಿಷ್ಟು ಸಮಯ ಅವಕಾಶ ಕೊಟ್ಟರೆ ಎಲ್ಲವನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇವೆ ಎಂದು ಅಟಾರ್ನಿ ಜನರಲ್ ಹೇಳಿದರು. ಎರಡೂ ಕಡೆ ವಾದ-ವಿವಾದ ಆಲಿಸಿದ ನ್ಯಾಯಾೀಧಿಶರು ಎರಡು ವಾರಗಳ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. +ಏನಿದು ಅರ್ಜಿ?:ರಾಜ್ಯವು ತೀವ್ರ ಬರದಿಂದ ಸಂಕಷ್ಟಕ್ಕೆ ಸಿಲುಕಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರೆಫ್) ಆರ್ಥಿಕ ನೆರವು ಬಿಡುಗಡೆ ಮಾಡಲು ಕೇಂದ್ರದ ಗೃಹ ಇಲಾಖೆಗೆ ನಿರ್ದೇಶಿಸಬೇಕು ಎಂದು ಕೋರಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. +ಸಂವಿಧಾನದ 32ನೇ ವಿಧಿಯಡಿ ರಿಟ್ ಅರ್ಜಿಯನ್ನು ಕರ್ನಾಟಕ ಸರ್ಕಾರವು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆ ಮಾಡಿದ್ದು, ಕೇಂದ್ರ ಗೃಹ ಇಲಾಖೆಯ ಕ್ರಮವು ಸಂವಿಧಾನದ 14 ಮತ್ತು 21ನೇ ಧಿವಿಯಡಿ ಕಲ್ಪಿಸಿರುವ ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಕ್ಷೇಪಿಸಿತ್ತು. \ No newline at end of file diff --git a/eesanje/url_46_183_10.txt b/eesanje/url_46_183_10.txt new file mode 100644 index 0000000000000000000000000000000000000000..3109d1d2b65d92d7916fca2a6cace9d449ae1c8b --- /dev/null +++ b/eesanje/url_46_183_10.txt @@ -0,0 +1,5 @@ +ಮೋದಿಯ ಹಾದಿ ಸತ್ಯ, ಸಿದ್ದರಾಮಯ್ಯರ ಅವರದ್ದು ಮುಳ್ಳಿನ ದಾರಿ: ಕಾಗೇರಿ +ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಜೀ ಅವರು ನುಡಿದಂತೆ ನಡೆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳಿನ ಭರವಸೆಗಳನ್ನು ನೀಡುವ ಮೂಲಕ ಜನರನ್ನು ಮುಳ್ಳಿನ ಹಾದಿಯಲ್ಲಿ ನಡೆಸುತ್ತಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು. +ಹೋಟೆಲ್ ಜಿ.ಎಂ. ರಿಜಾಯ್ಸ್ ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಸಂವಾದದಲ್ಲಿ ಅವರು ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನುಡಿದಂತೆ ನಡೆದಿದೆ. ಜಿ 20, ಉಜ್ವಲ, ಎಲ್‍ಪಿಜಿ, ಜನೌಷಧ, ಸುಕನ್ಯ ಸಮೃದ್ಧ್ಧಿ, ಮುದ್ರಾ ಯೋಜನೆಗಳಂತಹ ಇನ್ನೂ ಅನೇಕ ಪ್ರಮುಖ ಯೋಜನೆಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ನುಡಿದರು. +2014 ರಲ್ಲಿ ಭಾರತದ ಪ್ರಧಾನಿಯಾಗಿ ಮೋದಿಯವರು ಪ್ರಮಾಣವಚನ ಸ್ವೀಕರಿಸಿದರು. ಅವರ ಹತ್ತು ವರ್ಷಗಳ ಆಡಳಿತದಲ್ಲಿ ಮಾಡಿದಂತಹ ಸಾಧನೆಗಳು ಜನಸಾಮಾನ್ಯರನ್ನು ತಲುಪಿದೆ. ಮಹಾತ್ಮ ಗಾಂಧೀಜಿ ಅವರ ಅಂತ್ಯೋದಯ ಅನ್ನ ಯೋಜನೆಯ ಕನಸನ್ನು ಬಿಜೆಪಿ ಸರ್ಕಾರ ನನಸು ಮಾಡಿದೆ. ಆದರೆ ಕಾಂಗ್ರೆಸ್‍ನವರು ಗಾಂಧೀಜಿ ಅವರನ್ನು ಹೀಯಾಳಿಸುವಂಥÀ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ತಿಳಿಸಿದರು. +ರಾಜ್ಯದ 28ಕ್ಕೆ 28 ಮತ ಕ್ಷೇತ್ರಗಳು ಬಿಜೆಪಿಗೆ ಸುರಕ್ಷಿತ ಕ್ಷೇತ್ರಗಳು, 400ಕ್ಕೂ ಮೀರಿ ಕ್ಷೇತ್ರಗಳನ್ನು ಗೆದ್ದು ಮೋದಿ ಜೀ ಅವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಪ್ರಕಾಶ್ ಶೇಷರಾಘವಾಚಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ಕರುಣಾಕರ ಖಾಸಲೆ ಹಾಗೂ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_183_11.txt b/eesanje/url_46_183_11.txt new file mode 100644 index 0000000000000000000000000000000000000000..e8d2ea8b56ccbe9c1cbc1c0b1f5281f123914592 --- /dev/null +++ b/eesanje/url_46_183_11.txt @@ -0,0 +1,9 @@ +ಪ್ರಚಾರದಿಂದ ಕೆ.ಎಚ್.ಮುನಿಯಪ್ಪ ದೂರ +ಬೆಂಗಳೂರು,ಏ.7- ಕೋಲಾರ ಲೋಕಸಭಾ ಕ್ಷೇತ್ರದ ಬಂಡಾಯ ಈವರೆಗೂ ಶಮನವಾಗಿಲ್ಲ, ಸಚಿವ ಕೆ.ಎಚ್.ಮುನಿಯಪ್ಪ ಈವರೆಗೂ ಕ್ಷೇತ್ರದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸದೆ ದೂರ ಉಳಿದಿರುವುದು ಕಾಂಗ್ರೆಸ್ಸಿಗರಿಗೆ ತಲೆನೋವಾಗಿ ಪರಿಣಮಿಸಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ತಮಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದು, ತಾವು ಅಲ್ಲಿ ಕೆಲಸ ಮಾಡುವುದಾಗಿ ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್ ಕುಮಾರ್ ಹಾಗೂ ಹಾಲಿ ಸಚಿವ ಕೆ.ಎಚ್.ಮುನಿಯಪ್ಪ ನಡುವಿನ ಬಂಡಾಯ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. +ಮುನಿಯಪ್ಪ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಸಲು ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇದಕ್ಕೆ ಒಂದು ಹಂತದಲ್ಲಿ ಹೈಕಮಾಂಡ್ ಒಪ್ಪಿಕೊಂಡಿತ್ತು. ಆದರೆ ಕಾಂಗ್ರೆಸ್‍ನ ಸಚಿವರು, ಶಾಸಕರು ಇದಕ್ಕೆ ಒಪ್ಪದೆ ರಾಜೀನಾಮೆ ನೀಡಲು ಮುಂದಾಗಿದ್ದರು. +ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡಿದರೆ ತಾವು ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪತ್ತನೂರು ಮಂಜುನಾಥ್, ಕೆ.ವೈ.ನಂಜೇಗೌಡ, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್, ಅನಿಲ್‍ಕುಮಾರ್, ಎಸ್.ಎನ್. ನಾರಾಯಣಸ್ವಾಮಿ ಬೆದರಿಕೆ ಹಾಕಿದ್ದರು. ಸಾಲದೆಂಬಂತೆ ಕೋಲಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಜನಸಂಖ್ಯೆ 3.80 ಲಕ್ಷ ಇದೆ. ಆ ಸಮುದಾಯಕ್ಕೆ ಅವಕಾಶ ಮಾಡಿಕೊಡಿ ಎಂದು ಪ್ರತಿಪಾದಿಸುವ ಮೂಲಕ ಮುನಿಯಪ್ಪ ಅವರ ಕುಟುಂಬದ ವಿರುದ್ಧ ಸೆಡ್ಡು ಹೊಡೆದಿದ್ದರು. +ಕೊನೆಗೆ ರಾಜ್ಯ ನಾಯಕರು ಅಳೆದು ತೂಗಿ ಯಾರಿಗೂ ಅಸಮಾಧಾನವಾಗಬಾರದು ಎಂಬ ಕಾರಣಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಎಡಗೈ ಸಮುದಾಯದ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೋಲಾರ ಟಿಕೆಟ್ ಹಂಚಿಕೆಯ ಗೊಂದಲ ಮುಗಿದ ಬಳಿಕ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೋಲಾರ ಜಿಲ್ಲೆಯ ಕುರುಡುಮಲೆಯ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕಾಂಗ್ರೆಸ್‍ನ ಪ್ರಜಾಧ್ವನಿ-2 ಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ರಮೇಶ್‍ಕುಮಾರ್ ಬಣದ ಎಲ್ಲಾ ನಾಯಕರೂ ಹಾಜರಿದ್ದರು. ಸಚಿವ ಮುನಿಯಪ್ಪ ಮತ್ತು ಅವರ ಪುತ್ರಿ ಹಾಗೂ ಶಾಸಕಿಯಾಗಿರುವ ರೂಪ ಶಶಿಧರ್ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು. +ಮಾಜಿ ಸಚಿವ ರಮೇಶ್‍ಕುಮಾರ್, ಪಕ್ಷ ಒಮ್ಮೆ ಟಿಕೆಟ್ ಘೋಷಣೆ ಮಾಡಿದ ಮೇಲೆ ಮುಗಿಯಿತು. ಅದನ್ನು ನಾವೆಲ್ಲರೂ ಒಪ್ಪಿಕೊಳ್ಳಲೇಬೇಕು. ಕೆಲಸ ಮಾಡಲೇಬೇಕು. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಹೇಳುವ ಮೂಲಕ ಮುನಿಯಪ್ಪ ಅವರಿಗೆ ಟಾಂಗ್ ನೀಡಿದ್ದರು.ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. +ನಿನ್ನೆ ಪ್ರಜಾಧ್ವನಿ-2 ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ನನಗೆ ಯಾರೂ ಆಹ್ವಾನ ನೀಡಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರೆದಿಲ್ಲ. ಹೀಗಾಗಿ ನಾನು ಕಾರ್ಯಕ್ರಮಕ್ಕೆ ಹೋಗಲಿಲ್ಲ ಎಂದು ತಿಳಿಸಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅವರೇ ಗೆಲ್ಲಿಸಿಕೊಂಡು ಬರಲಿ, ಏನಾದರೂ ಮಾಡಿಕೊಳ್ಳಲಿ ತಾವು ತಲೆಕೆಡಿಸಿಕೊಳ್ಳುವುದಿಲ್ಲ, ತಮಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಜವಾಬ್ದಾರಿ ವಹಿಸಿದ್ದಾರೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ. +ಮುನಿಯಪ್ಪ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಅವರ ಅಸಮಾಧಾನ ರಾಜ್ಯದಲ್ಲಿ 18 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಮತದಾರರನ್ನು ಹೊಂದಿರುವ ಎಡಗೈ ಸಮುದಾಯದ ಮೇಲೆ ಪರಿಣಾಮ ಬೀರಲಿದೆ. ತನ್ಮೂಲಕ ಚುನಾವಣಾ ಫಲಿತಾಂಶದಲ್ಲೂ ವ್ಯತ್ಯಾಸಗಳಾಗಲಿವೆ ಎಂಬ ಆತಂಕ ಕಾಂಗ್ರೆಸ್ ಅನ್ನು ಕಾಡುತ್ತಿದೆ. ಕೋಲಾರದಲ್ಲಿ ಜಿಲ್ಲೆಗೆ ಸೀಮಿತವಾಗಿರುವ ನಾಯಕರಿಗೆ ಮಣೆ ಹಾಕಿ ರಾಜ್ಯಮಟ್ಟದ ಪ್ರಭಾವಿ ನಾಯಕರನ್ನು ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಮತ ಬ್ಯಾಂಕಿಗೆ ಕೊಳ್ಳಿ ಇಟ್ಟುಕೊಳ್ಳುತ್ತಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ. \ No newline at end of file diff --git a/eesanje/url_46_183_12.txt b/eesanje/url_46_183_12.txt new file mode 100644 index 0000000000000000000000000000000000000000..5030f31e05db2b0df9e42fd6aebb1b95d3b95410 --- /dev/null +++ b/eesanje/url_46_183_12.txt @@ -0,0 +1,5 @@ +ನಾಮಪತ್ರ ವಾಪಸ್‍ಗೆ ನಾಳೆ ಕಡೆ ದಿನ +ಬೆಂಗಳೂರು,ಏ.7- ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ನಾಮಪತ್ರ ಪರಿಶೀಲನೆ ನಿನ್ನೆ ಪೂರ್ಣಗೊಂಡಿದ್ದು, 14 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 74 ನಾಮಪತ್ರಗಳು ತಿರಸ್ಕøತಗೊಂಡಿವೆ.ನಾಮಪತ್ರ ವಾಪಸ್ ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಚುನಾವಣೆಯ ಅಂತಿಮ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ನಾಳೆ ಸಂಜೆ ವೇಳೆಗೆ ಪ್ರಕಟವಾಗಲಿದೆ. +14 ಲೋಕಸಭಾ ಕ್ಷೇತ್ರಗಳಲ್ಲಿ 300 ಅಭ್ಯರ್ಥಿಗಳ 419 ನಾಮಪತ್ರಗಳು ಮಾನ್ಯವಾಗಿದ್ದು, 74 ತಿರಸ್ಕøತಗೊಂಡಿವೆ. ಬಾಕಿ ಉಳಿದಿದ್ದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 32 ಅಭ್ಯರ್ಥಿಗಳ 40 ನಾಮಪತ್ರಗಳ ಪೈಕಿ 4 ನಾಮಪತ್ರಗಳು ತಿರಸ್ಕøತಗೊಂಡಿವೆ. 36 ನಾಮಪತ್ರಗಳು ಪುರಸ್ಕøತವಾಗಿದ್ದು, 28 ಅಭ್ಯರ್ಥಿಗಳ ನಾಮಪತ್ರಗಳು ಮಾನ್ಯವಾಗಿವೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಯುಗಾದಿ ಹಬ್ಬದ ಜೊತೆಯಲ್ಲಿ ಪ್ರಸಕ್ತ ಲೋಕಸಭಾ ಚುನಾವಣೆಯ ಅಖಾಡ ರಂಗೇರಲಿದೆ. ಈಗಾಗಲೇ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರವನ್ನು ಆರಂಭಿಸಿವೆ. ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಪ್ರಚಾರ ಕೈಗೊಂಡು ತಮ್ಮತಮ್ಮ ಆಡಳಿತಾವಯಲ್ಲಿ ಮಾಡಿರುವ ಸಾಧನೆಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತಿದ್ದಾರೆ. +ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡಿದ್ದರೆ, ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯ ನಂತರ ಲೋಕಸಭಾ ಚುನಾವಣೆ ಅಖಾಡ ಕಾವೇರಲಿದೆ. \ No newline at end of file diff --git a/eesanje/url_46_183_2.txt b/eesanje/url_46_183_2.txt new file mode 100644 index 0000000000000000000000000000000000000000..a7b9721cf179c84458edf3ebbabaa8a6f6eba977 --- /dev/null +++ b/eesanje/url_46_183_2.txt @@ -0,0 +1,13 @@ +ಧಾರವಾಡ ಲೋಕಸಭಾದಲ್ಲಿ ಪ್ರಹ್ಲಾದ್ ಜೋಷಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ..! +ಬೆಂಗಳೂರು,ಏ.8-ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಿರುವ ಪ್ರತಿಷ್ಠಿತ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಿರಹಟ್ಟಿ ಭಾವೈಕ್ಯತಾ ಮಹಾಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. +ಸ್ವಾಮೀಜಿಯವರ ಈ ನಿರ್ಧಾರ ಬಿಜೆಪಿಗೆ ಭಾರೀ ಹಾನಿ ಮಾಡುವ ಸಂಭವವಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಹೊಸ ತಂತ್ರವನ್ನು ಹೆಣೆಯಬೇಕಾದ ಸಂದಿಗ್ಧತೆಗೆ ಸಿಲುಕಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ದಿಂಗಾಲೇಶ್ವರ ಸ್ವಾಮೀಜಿಯವರು ತಮ್ಮ ಬೆಂಬಲಿಗರು, ಹಿತೈಷಿಗಳು, ಅಭಿಮಾನಿಗಳ ಜೊತೆ ಸಭೆ ನಡೆಸಿದರು. +ಈ ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ನೀವು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲೇಬೇಕೆಂದು ಬೆಂಬಲಿಗರು ಪಟ್ಟು ಹಿಡಿದ ಕಾರಣ ಅಂತಿಮವಾಗಿ ಸ್ಪರ್ಧೆ ಮಾಡುವುದಾಗಿ ಸ್ವಾಮೀಜಿ ತಮ್ಮ ನಿರ್ಧಾರವನ್ನು ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. +ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ. ನೊಂದ ಜನರು ನಮ್ಮ ಜೊತೆಗೆ ನೋವು ತೊಡಗಿಕೊಂಡರು. ಹೀಗಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. +ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಮತದಾರರಿಗೆ ಮಾಡಿದ ದ್ರೋಹವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಆದರೆ ಮತದಾರರು ನಮ್ಮನ್ನು ಚುನಾವಣೆಗೆ ನಿಲ್ಲಿಸುವ ನಿರ್ಧಾರ ಮಾಡಿದ್ದಾರೆ. +ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ, ಸ್ವಾರ್ಥ ರಾಜಕಾರಣಿಗಳ ವಿರುದ್ಧ ಸ್ವಾಭಿಮಾನಿ ಧರ್ಮ ಗುರುಗಳು ಮಾಡಿದ ಧರ್ಮ ಯುದ್ಧದ ಘೋಷಣೆ ಇದಾಗಿದೆ. ಧರ್ಮ ಯುದ್ಧವು ಕೇವಲ ಈ ಚುನಾವಣೆಗೆ ಸೀಮಿತವಾಗಿಲ್ಲ, ಜೀವ ಇರುವವರೆಗೂ ಮುಂದುವರೆಯಲಿದೆ, ನೊಂದವರ ಕಷ್ಟಕ್ಕೆ ಸ್ಪಂದಿಸಲು ಈ ನಿರ್ಧಾರ ಎಂದು ಹೇಳಿದರು. +ರಾಜ್ಯದಲ್ಲಿ ಲಿಂಗಾಯತ, ಗೌಡ ಜನಾಂಗ ಬಿಟ್ಟರೆ ಕುರುಬ ಸಮಾಜ ದೊಡ್ಡದಿದೆ. ಆದರೆ ಕುರುಬ ಸಮಾಜಕ್ಕೆ ಒಂದೇ ಒಂದು ಟಿಕೆಟ್‍ನ್ನು ಬಿಜೆಪಿ ನೀಡಿಲ್ಲ. ರೆಡ್ಡಿ, ಜಂಗಮ, ಲಂಬಾಣಿ ಸೇರಿ ನೂರಾರು ಸಮಾಜಗಳು ಅಲಕ್ಷ್ಯಕ್ಕೆ ಒಳಗಾಗಿವೆ. ಎಲ್ಲ ಸಮಾಜಗಳು ಇಂದು ಬಿಜೆಪಿಯಿಂದ ನೋವು ಅನುಭವಿಸಿವೆ. +ಈಶ್ವರಪ್ಪನವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಪುತ್ರ ಒಂದೂವರೆ ವರ್ಷದಿಂದ ಕೆಲಸ ಮಾಡಿದರೂ ಟಿಕೆಟ್ ಕೊಡಲಿಲ್ಲ. ಬಿಜೆಪಿ ಹೈಕಮಾಂಡ್ ನಾಯಕರು ಆ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎನ್ನುತ್ತಾರೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. 2% ಇರುವ ಸಮುದಾಯದ ನಾಯಕರಿಗೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ. +ದೊಡ್ಡ ಸಂಖ್ಯೆಯ ಜನರಿಗೆ ಟಿಕೆಟ್ ನೀಡದೆ ಕಡಿಮೆ ಜನಸಂಖ್ಯೆ ಇರುವ ಜಾತಿಗೆ ಮೂರು ಟಿಕೆಟ್ ಕೊಟ್ಟಿದ್ದಾರೆ, ಎಲ್ಲಿದೆ ಸಾಮಾಜಿಕ ನ್ಯಾಯ ಎಂದು ಆಕ್ರೋಶ ಹೊರಹಾಕಿದರು. ಲಿಂಗಾಯತ ಸಮುದಾಯದವರಿಗೆ ಕ್ಯಾಬಿನೆಟ್ ಸ್ಥಾನದಲ್ಲಿ ಖಾತೆ ಕೊಟ್ಟಿದ್ದು ಬರೀ ರಾಜ್ಯ ಖಾತೆ ಅಷ್ಟೇ ಕೊಟ್ಟಿದ್ದಾರೆ. ವಿ. ಸೋಮಣ್ಣ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಲ್ಲಿಸಬಹುದಿತ್ತು. ಆದರೆ ತುಮಕೂರು ಜಿಲ್ಲೆಯಲ್ಲಿ ಸೋಮಣ್ಣ ಅವರನ್ನು ನಿಲ್ಲಿಸಿದ್ದಾರೆ. ಅಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಹೊಡೆದಾಡಲಿ ಎಂದು ಅಭಿಪ್ರಾಯವಿರಬೇಕು ಎಂದರು. +ತೇಜಸ್ವಿ ಸೂರ್ಯ ಅವರನ್ನು ತುಮಕೂರಿನಲ್ಲಿ ನಿಲ್ಲಿಸಿ. ಸೋಮಣ್ಣ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಿಲ್ಲಿಸಬೇಕಿತ್ತು. ಆಗ ಯಾರ ತಾಕತ್ ಹೇಗಿದೆ ಅಂತ ಗೊತ್ತಾಗ್ತಿತ್ತು. ಲಿಂಗಾಯತ ಸಮುದಾಯದ ನಾಯಕರಿಗೆ ಎರಡು ಅಥವಾ ಮೂರು ಅವಧಿಯಲ್ಲಿ ಅವಕಾಶ ಕೊಡುತ್ತಾರೆ. ಬೇರೆ ಸಮುದಾಯದ ನಾಯಕರಿಗೆ ಹತ್ತು ಅವಧಿಯವರೆಗೆ ಅವಕಾಶ ಕೊಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಪ್ರಹ್ಲಾದ್ ಜೋಷಿ ಹೀರೋ ಆಗಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಝಿರೋ ಆಗಿದ್ದಾರೆ. ತಮ್ಮ ಸಮುದಾಯದ ಬೆಳವಣಿಗೆ ಅಷ್ಟೇ ನೋಡುತ್ತಾರೆ. ಬೇರೆ ಸಮುದಾಯದವನ್ನು ಕಡೆಗಣಿಸುತ್ತಾರೆ. ನಮ್ಮ ಸಮುದಾಯವನ್ನು ತುಳಿದು ರಾಜಕಾರಣ ಮಾಡಿದ್ದಾರೆ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಹ್ಲಾದ್ ಜೋಷಿ ಅವರೇ ಕಾರಣ ಎಂದು ಇದೇ ಸಂದರ್ಭದಲ್ಲಿ ಸ್ವಾಮೀಜಿ ಹೇಳಿದರು. +ಯಾರು ಈ ಸ್ವಾಮೀಜಿ:ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಸದಾ ಒಂದಲ್ಲ ಒಂದು ವಿವಾದಿಂದ ಸುದ್ದಿಯಲ್ಲಿದ್ದಾರೆ. ಕೋಮು ಸೌಹಾರ್ದ ಜಾತ್ಯಾತೀತ ಹೋರಾಟ, ಎಡಪಂಥೀಯ ದೃಷ್ಟಿಕೋನದಿಂದ ಬೆಳೆದು ಬಂದ ಅವರು ಹುಬ್ಬಳ್ಳಿಯ ಮೂರುಸಾವಿರ ಮಠದ ಉತ್ತರಾಧಿಕಾರಕ್ಕಾಗಿ ಹೋರಾಟ ಸೇರಿದಂತೆ ಅನೇಕ ಬೆಳವಣಿಗೆಗಳು, ಜೀವ ಬೆದರಿಕೆ, ಭಾವೈಕ್ಯತೆ ಸೇರಿದಂತೆ ಮಠದ ವಿಷಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಅವರು ಗಮನ ಸೆಳೆದವರು. \ No newline at end of file diff --git a/eesanje/url_46_183_3.txt b/eesanje/url_46_183_3.txt new file mode 100644 index 0000000000000000000000000000000000000000..f7ee48a4b25eb7b3e13e887c84a86db3779f1cc7 --- /dev/null +++ b/eesanje/url_46_183_3.txt @@ -0,0 +1,4 @@ +ಸೌದಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉತ್ತರ ಕನ್ನಡದ ಮೂವರ ಸಾವು +ಶಿರಸಿ(ಉತ್ತರಕನ್ನಡ),ಏ.8-ಹಜ್ ಯಾತ್ರೆಗೆ ತೆರಳಿದ್ದ ಜಿಲ್ಲೆಯ ಮುಂಡಗೋಡಿನ ಒಂದೇ ಕುಟುಂಬದ ಮೂವರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. +ಮುಂಡಗೋಡ ಪಟ್ಟಣದ ರೋಣ ಮೆಡಿಕಲ್ಸ್‍ನ ಮಾಲೀಕರಾದ ಫಯಾಜ್ ರೋಣ ಅವರ ಪತ್ನಿ ಅಫ್ರೀನ ಬಾನು ಹಾಗೂ ಅವರ ಅಣ್ಣನ ಮಗ ಅಯಾನ್ ರೋಣ ಮೃತ ದುರ್ದೈವಿಗಳು. +ಅಪಘಾತದಲ್ಲಿ ಫಯಾಜ್ ಅವರ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಾ.26ರಂದು ಮೆಕ್ಕಾ ಮದೀನಾ ದರ್ಶನಕ್ಕೆ ತೆರಳಿದ್ದರು. ಏ.6ರ ರಾತ್ರಿ ಮೆಕ್ಕಾದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. \ No newline at end of file diff --git a/eesanje/url_46_183_4.txt b/eesanje/url_46_183_4.txt new file mode 100644 index 0000000000000000000000000000000000000000..d51fb22494ce11bacad2a4ebdcc7ab1c68bc6e24 --- /dev/null +++ b/eesanje/url_46_183_4.txt @@ -0,0 +1,12 @@ +5, 8 , 9 ಹಾಗೂ 11ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಕ್ಕೆ ಸುಪ್ರೀಂ ತಡೆಯಾಜ್ಞೆ +ನವದೆಹಲಿ,ಏ.8-ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಕಳೆದ ಮಾರ್ಚ್‍ನಲ್ಲಿ 5, 8 , 9 ಹಾಗೂ 11ನೇ ತರಗತಿಗಳಿಗೆ ನಡೆಸಿದ್ದ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸದ್ಯ ಯಾವುದೇ ಶಾಲೆಗಳು ಫಲಿತಾಂಶ ಪ್ರಕಟಿಸಬಾರದು. ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ. +ಮಂಗಳವಾರ 5, 8, ಮತ್ತು 11ನೇ ತರಗತಿಯ ಫಲಿತಾಂಶವನ್ನು ಎದುರು ನೋಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸುಪ್ರೀಂಕೋರ್ಟ್‍ನ ಈ ಆದೇಶ ನಿರಾಸೆ ತಂದಿದೆ. 5, 8, 9 ಹಾಗೂ 11ನೇ ತರಗತಿಗಳಿಗೆ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆಗೆ, ಹೈಕೋರ್ಟ್‍ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ರಾಜೇಶ್.ಕೆ ರೈ ಅವರಿದ್ದ ಪೀಠ ಕೆಲವು ಷರತ್ತುಗಳನ್ನು ವಿಧಿಸಿ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿತ್ತು. +ಮಾರ್ಚ್‍ನಲ್ಲಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶ ನೀಡಿದ್ದ ಹೈಕೋರ್ಟ್, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿತ್ತು. ಅದರಂತೆ ಬಳಿಕ ಶಾಲೆಗಳು ಪರೀಕ್ಷೆಗಳನ್ನು ನಡೆಸಿದ್ದವು. ಇದೀಗ ಫಲಿತಾಂಶ ಪ್ರಕಟವಾಗುವ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ತಡೆಯಾಜ್ಞೆ ಬಂದಿದೆ. +ಆದರೆ ದ್ವಿಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ರೂಪ್ಸಾ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸೋಮವಾರ ಮೌಲ್ಯಾಂಕನ ಪರೀಕ್ಷೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಫಲಿತಾಂಶವನ್ನು ಪ್ರಕಟಿಸಬಾರದೆಂದು ಆದೇಶಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿ ವಿಚಾರಣೆ ವೇಳೆ ರೂಪ್ಸಾ ಪರ ವಾದ ಮಂಡಿಸಿದ್ದ ವಕೀಲರು, 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅಕಾರವಿಲ್ಲ ಎಂದು ರೂಪ್ಸಾ ಪರ ವಕೀಲರು ವಾದ ಮಾಡಿದ್ದರು. +ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆಯಡಿ ತಿಳಿಸಿರುವಂತೆ 6ರಿಂದ 14 ವರ್ಷದ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿಲ್ಲ. ಆದರೂ ರಾಜ್ಯ ಸರ್ಕಾರ ಈ ನಿರ್ಧಾರಕ್ಕೆ ಕೈಗೊಂಡಿದೆ. ಕರ್ನಾಟಕ ಹೈಕೋರ್ಟ್ ದ್ವಿಸದಸ್ಯ ಪೀಠ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಫಲಿತಾಂಶವನ್ನು ಪ್ರಕಟಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. +ಅಲ್ಲದೆ ಮೌಲ್ಯಮಾಪನವನ್ನು ಬೇಕಾಬಿಟ್ಟಿಯಾಗಿ ನಡೆಸಲಾಗಿದೆ. ಉತ್ತಮವಾಗಿ ಓದಿದ ಅಭ್ಯರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ. ಮೌಲ್ಯ ಮಾಪನ ದೋಷದ ಬಗ್ಗೆ ಹಲವಾರು ಖಾಸಗಿ ಶಿಕ್ಷಣ ಸಂಸ್ಥೆಗಳೇ ಅನುಮಾನ ವ್ಯಕ್ತಪಡಿಸಿವೆ. ಇದು ಸಾಕಷ್ಟು ದೋಷಪೂರಿತವಾಗಿರುವುದರಿಂದ ತಡೆಯಾಜ್ಞೆ ನೀಡಬೇಕೆಂದು ವಕೀಲರು ಕೋರಿದರು. ಅಂತಿಮವಾಗಿ ವಾದ ಆಲಿಸಿದ ನ್ಯಾಯಮೂರ್ತಿಗಳು ಮಂಗಳವಾರ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿತು. +ಹಿನ್ನಲೆ:ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ ಬೋರ್ಡ್ ಪರೀಕ್ಷೆ ಹೈಕೋರ್ಟ್ ವಿಭಾಗೀಯ ಪೀಠ ಒಪ್ಪಿಗೆ ಸೂಚಿಸಿತ್ತು. ಬೋರ್ಡ್ ಪರೀಕ್ಷೆ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠದ ಮೆಟ್ಟಲೇರಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿತ್ತು. ಉಳಿದ ವಿಷಯಗಳ ಪರೀಕ್ಷೆ ನಡೆಸಲು ತುರ್ತು ಹಾಗೂ ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. +ಈ ಮೊದಲು ರಾಜ್ಯದಲ್ಲಿ 5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಯತ್ನದಲ್ಲಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆ ಆಗಿತ್ತು. 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್‍ನ ಏಕಸದಸ್ಯ ಪೀಠ ಮಾರ್ಚ್ 10ರಂದು ತೀರ್ಪು ನೀಡಿತ್ತು. +ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸಲು ತೀರ್ಮಾನಿಸಿ 2022ರ ಡಿಸೆಂಬರ್ 12ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಹಾಗೂ ಪೋಷಕರ ಸಂಘಟನೆ ಶಿಕ್ಷಣ ಇಲಾಖೆಯ ಸುತ್ತೋಲೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು. +ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಪ್ರಯತ್ನ ಕಾರ್ಯಸಾಧುವಲ್ಲ ಎಂದು ಸಂಘದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. +ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಶಿಕ್ಷಣ ಇಲಾಖೆ 2022ರ ಡಿಸೆಂಬರ್ 12ರಂದು ಪ್ರಕಟಿಸಿದ್ದ ಸುತ್ತೋಲೆಯನ್ನು ಅನೂರ್ಜಿತಗೊಳಿಸಿ, ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು. ಆದರೆ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆ ನಡೆಸಲು ಷರತ್ತುಬದ್ಧ ಒಪ್ಪಿಗೆ ಸೂಚಿಸಿತ್ತು. \ No newline at end of file diff --git a/eesanje/url_46_183_5.txt b/eesanje/url_46_183_5.txt new file mode 100644 index 0000000000000000000000000000000000000000..42ab9bb50ad26611cfd76d1262aa3068636a292f --- /dev/null +++ b/eesanje/url_46_183_5.txt @@ -0,0 +1,8 @@ +ರಣಬಿಸಿಲಿನ ಎಫೆಕ್ಟ್ : ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಭೀತಿ, 14 ಮಂದಿಗೆ ಕಾಲರಾ ದೃಢ +ಬೆಂಗಳೂರು,ಏ.8-ರಾಜ್ಯದಲ್ಲಿ ರಣರಣ ಬಿಸಿಲಿನ ಬೇಗೆಯ ನಡುವೆ ಕಾಲರಾ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 14 ಕಾಲರಾ ದೃಢಪಟ್ಟಿದ್ದು, ಆತಂಕವನ್ನು ಮತ್ತಷ್ಟು ತೀವ್ರಗೊಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 13 ಕಾಲರಾ ಪ್ರಕರಣಗಳು ದಾಖಲಾಗಿದೆ. +ಬಿಬಿಎಂಪಿ ವ್ಯಾಪ್ತಿಯಲ್ಲಿ 8, ಬೆಂಗಳೂರು ನಗರ ವ್ಯಾಪ್ತಿಯಲ್ಲಿ 5 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ರಾಮನಗರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಕಳೆದ 3 ತಿಂಗಳಲ್ಲಿ 14 ಕಾಲರಾ ರೋಗದ ಪ್ರಕರಣಗಳು ದೃಢಪಟ್ಟಿದ್ದು, ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. +ಕಾಲರಾ ರೋಗಕ್ಕೆ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಬಹುದೆಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಕಲುಷಿತ ನೀರಿನಿಂದ ಈ ರೋಗ ಹರಡುವುದರಿಂದ ಜನ ಕಾದಾರಿಸಿದ ನೀರು ಕುಡಿಯುವುದು ಉತ್ತಮ. ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ಬಹುತೇಕ ಕಡೆ ಕುಡಿಯುವ ನೀರಿಗೆ ಆಹಾಕಾರ ಶುರುವಾಗಿದೆ. ಕಲುಷಿತ ನೀರು, ಕಲುಷಿತ ಆಹಾರ ಪ್ರಮಾಣ ಹೆಚ್ಚಾಗಿದೆ. ಹಾಗಾಗಿ ಕಾಲರಾ ರೋಗಲಕ್ಷಣಗಳು ಪತ್ತೆಯಾಗುತ್ತಿವೆ. +ಬೆಂಗಳೂರು ನಗರದಲ್ಲಿ ಮಾರ್ಚ್‍ನಲ್ಲಿ 2 ಹಾಗೂ ಏಪ್ರಿಲ್‍ನಲ್ಲಿ 3 ರಂತೆ ಒಟ್ಟು 5 ಪ್ರಕರಣಗಳು ಪತ್ತೆಯಾಗಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ ಏಪ್ರಿಲ್‍ನಲ್ಲಿ 5 ಸೇರಿ ಒಟ್ಟು 8 ಪ್ರಕರಣಗಳು ದಾಖಲಾಗಿವೆ.ಬೇಸಿಗೆ ಕಾಲದಲ್ಲಿ ಕಾಲರಾ ರೋಗವು ಉಲ್ಭಣಗೊಳ್ಳುತ್ತಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ನಿಗಾ ವಹಿಸಿದೆ. +ಜನರು ಸ್ವಚ್ಚತೆ ಕಾಪಾಡಿಕೊಳ್ಳುವುದರ ಜೊತೆಗೆ ಬಿಸಿನೀರು ಕುಡಿಯಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಆಯುಕ್ತರಾದ ಡಿ.ರಂದೀಪ್ ತಿಳಿಸಿದ್ದಾರೆ.ವಾಂತಿಬೇಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರಿನ ಬಿಎಂಸಿಆರ್‍ಐ ಮಹಿಳಾ ಹಾಸ್ಟೆಲ್‍ನ 47 ವಿದ್ಯಾರ್ಥಿನಿಯರ ಪೈಕಿ ಮೂವರಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ. ಕೆಲವರಿಗೆ ಹ್ಯಾಂಗಿಂಗ್ ಡ್ರಾಪ್ ವಿಧಾನದ ಹಾಗೂ ಕಲ್ಚರ್ ಪರೀಕ್ಷೆ ಮಾಡಲಾಗಿದ್ದು, ಇಬ್ಬರಲ್ಲಿ ವಿಬ್ರಿಯೋ ಕಾಲರಾ ಪತ್ತೆಯಾಗಿದೆ. ಮತ್ತೊಬ್ಬರಿಗೂ ಪರೀಕ್ಷೆ ನಡೆಸಲಾಗಿದ್ದು, ಇವರಿಗೂ ಪಾಸಿಟೀವ್ ಕಂಡುಬಂದಿದೆ. +ಕಲ್ಚರ್ ಪರೀಕ್ಷೆ ವರದಿ ಬಂದ ನಂತರವಷ್ಟೇ ಕಾಲರಾ ಇದೆಯೋ, ಇಲ್ಲವೋ ಎಂಬ ಬಗ್ಗೆ ದೃಢಪಡಲಿದೆ. ಆಸ್ಪತ್ರೆಗೆ ಸೇರಿದ್ದ ವಿದ್ಯಾರ್ಥಿನಿಯರಲ್ಲಿ 13 ವಿದ್ಯಾರ್ಥಿನಿಯರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮತ್ತೋರ್ವ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಉಳಿದ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. +ಮುನ್ನೆಚ್ಚರಿಕೆ ಕ್ರಮ:ಕಲುಷಿತ ಆಹಾರ ಸೇವನೆಯಿಂದ ದೂರವಿರಿ. ವಾಂತಿ ಬೇಧಿ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸಿ, ರಸ್ತೆಬದಿ ಶುಚಿತ್ವವಿಲ್ಲದೆ ಮಾರಾಟ ಮಾಡುವ ಆಹಾರ, ಪಾನೀಯ ಸೇವನೆ ಬೇಡ, ಹಸಿ ಆಹಾರ, ಶೆಲ್‍ಫಿಶ್ ಸೇವಿಸಬೇಡಿ, ತರಕಾರಿ-ಹಣ್ಣಿನ ಜ್ಯೂಸ್, ರಾಗಿಗಂಜಿಯಂತಹ ದ್ರವ ಆಹಾರಗಳನ್ನು ಹೆಚ್ಚಾಗಿ ಸೇವಿಸಿ. ನೀವು ವಾಸಿಸುವ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ರೋಗ-ರುಜಿನಗಳಿಂದ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. \ No newline at end of file diff --git a/eesanje/url_46_183_6.txt b/eesanje/url_46_183_6.txt new file mode 100644 index 0000000000000000000000000000000000000000..5599fec6dafe29b4711fd93ecf6c7009685d2397 --- /dev/null +++ b/eesanje/url_46_183_6.txt @@ -0,0 +1,6 @@ +ರಾಜ್ಯದಲ್ಲಿ ನಾಮಪತ್ರ ವಾಪಸ್ ಪಡೆಯಲು ಇಂದು ಕೊನೇ ದಿನ +ಬೆಂಗಳೂರು,ಏ.8-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಮುಕ್ತಾಯಗೊಂಡಿದ್ದು, ಸಂಜೆ ವೇಳೆಗೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟವಾಗಲಿದೆ. ಆಯಾ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗುತ್ತದೆ. ಹೀಗಾಗಿ ಇಂದಿನಿಂದಲೇ ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗಲಿದೆ. +ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ನಡುವೆ ಆರೋಪ, ಪ್ರತ್ಯಾರೋಪ ತಾರಕಕ್ಕೇರಲಿದ್ದು, ರೋಡ್ ಶೋ, ಬಹಿರಂಗ ಸಮಾವೇಶದ ಮೂಲಕ ಮತದಾರರ ಮನ ಗೆಲ್ಲಲು ಪ್ರಯತ್ನಿಸಲಾಗುತ್ತಿದೆ. ಮೊದಲ ಹಂತದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರಚಾರದ ಅಬ್ಬರದಲ್ಲಿ ಮುಂದಿವೆ. ಪಕ್ಷೇತರರು ಸೇರಿದಂತೆ ಉಳಿದ ಪಕ್ಷಗಳ ಅಭ್ಯರ್ಥಿಗಳು ಕೂಡ ಪ್ರಚಾರದಲ್ಲಿ ನಿರತರಾಗಿದ್ದಾರೆ. +14 ಲೋಕಸಭಾ ಕ್ಷೇತ್ರಗಳಲ್ಲಿ 300 ಅಭ್ಯರ್ಥಿಗಳ 419 ನಾಮಪತ್ರಗಳು ಮಾನ್ಯವಾಗಿದ್ದು, 74 ನಾಮಪತ್ರಗಳು ತಿರಸ್ಕøತಗೊಂಡಿವೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ರ್ಪಧಿಸಿದ್ದರೆ, ಬಿಜೆಪಿ 11 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 14 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. +ಬಿಎಸ್‍ಪಿ -5 , ನೋಂದಾಯಿತ ಹಾಗೂ ಮಾನ್ಯತೆ ಪಡೆಯದ ಪಕ್ಷಗಳಿಂದ 71, ಹಾಗೂ 102 ಪಕ್ಷೇತರರು ನಾಮಪತ್ರ ಸಲ್ಲಿಸಿದ್ದರು. +ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿವರ:ಉಡುಪಿ-ಚಿಕ್ಕಮಗಳೂರು:ಕೋಟಾ ಶ್ರೀನಿವಾಸಪೂಜಾರಿ(ಬಿಜೆಪಿ) ಜಯಪ್ರಕಾಶ್ ಹೆಗ್ಡೆ (ಕಾಂಗ್ರೆಸ್)ಹಾಸನ:ಪ್ರಜ್ವಲ್ ರೇವಣ್ಣ (ಜೆಡಿಎಸ್), ಶ್ರೇಯಸ್ ಪಟೇಲ್ ಗೌಡ(ಕಾಂಗ್ರೆಸ್)ದಕ್ಷಿಣ ಕನ್ನಡ:ಬ್ರಿಜೇಶ್ ಚೌಟ(ಬಿಜೆಪಿ), ಪದ್ಮರಾಜ್(ಕಾಂಗ್ರೆಸ್)ಚಿತ್ರದುರ್ಗ:ಗೋವಿಂದ ಕಾರಜೋಳ(ಬಿಜೆಪಿ), ಬಿ.ಎನ್.ಚಂದ್ರಪ್ಪ(ಕಾಂಗ್ರೆಸ್)ತುಮಕೂರು:ವಿ.ಸೋಮಣ್ಣ (ಬಿಜೆಪಿ), ಎಸ್.ಪಿ.ಮುದ್ದಹನುಮೇಗೌಡ(ಕಾಂಗ್ರೆಸ್)ಮಂಡ್ಯ:ಎಚ್.ಡಿ.ಕುಮಾರಸ್ವಾಮಿ( ಜೆಡಿಎಸ್), ವೆಂಕಟರಮಣೇ ಗೌಡ(ಕಾಂಗ್ರೆಸ್)ಮೈಸೂರು:ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (ಬಿಜೆಪಿ), ಎಂ.ಲಕ್ಷ್ಮಣ್(ಕಾಂಗ್ರೆಸ್)ಚಾಮರಾಜನಗರ:ಎಸ್.ಬಾಲರಾಜ್(ಬಿಜೆಪಿ), ಸುನೀಲ್ ಬೋಸ್(ಕಾಂಗ್ರೆಸ್)ಬೆಂಗಳೂರು ಗ್ರಾಮಾಂತರ:ಡಾ.ಸಿ.ಎನ್.ಮಂಜುನಾಥ್ (ಬಿಜೆಪಿ), ಡಿ.ಕೆ.ಸುರೇಶ್(ಕಾಂಗ್ರೆಸ್)ಬೆಂಗಳೂರು ಉತ್ತರ:ಶೋಭಾ ಕರಂದ್ಲಾಜೆ(ಬಿಜೆಪಿ), ರಾಜೀವ್ ಗೌಡ (ಕಾಂಗ್ರೆಸ್)ಬೆಂಗಳೂರು ಕೇಂದ್ರ:ಪಿ.ಸಿ.ಮೋಹನ್(ಬಿಜೆಪಿ), ಮನ್ಸೂರ್ ಆಲಿಖಾನ್(ಕಾಂಗ್ರೆಸ್)ಬೆಂಗಳೂರು ದಕ್ಷಿಣ:ತೇಜಸ್ವಿ ಸೂರ್ಯ(ಬಿಜೆಪಿ), ಸೌಮ್ಯ ರೆಡ್ಡಿ(ಕಾಂಗ್ರೆಸ್)ಚಿಕ್ಕಬಳ್ಳಾಪುರ:ಡಾ.ಕೆ.ಸುಧಾಕರ್ (ಬಿಜೆಪಿ), ರಕ್ಷಾ ರಾಮಯ್ಯ(ಕಾಂಗ್ರೆಸ್)ಕೋಲಾರ:ಎಂ.ಮಲ್ಲೇಶ್ ಬಾಬು( ಜೆಡಿಎಸ್), ಕೆ.ವಿ.ಗೌತಮ್(ಕಾಂಗ್ರೆಸ್) \ No newline at end of file diff --git a/eesanje/url_46_183_7.txt b/eesanje/url_46_183_7.txt new file mode 100644 index 0000000000000000000000000000000000000000..64eda039b84641b1210ca7d18d9c305c8de2a469 --- /dev/null +++ b/eesanje/url_46_183_7.txt @@ -0,0 +1,7 @@ +ರಾಜ್ಯದಲ್ಲಿ ಮನೆಯಿಂದಲೇ ಮತದಾನ ಮಾಡುವ ಅರ್ಹತೆ ಹೊಂದಿದ್ದಾರೆ 11 ಲಕ್ಷ ಮತದಾರರು +ಬೆಂಗಳೂರು, ಏ.8-ಕರ್ನಾಟಕದಲ್ಲಿ 85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 5.7 ಲಕ್ಷ ಹಿರಿಯ ನಾಗರಿಕರು ಮತ್ತು 6.13 ಲಕ್ಷ ವಿಕಲಚೇತನರು ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅರ್ಹತೆ ಹೊಂದಿದ್ದಾರೆ ಎಂಬುದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ತಿಳಿದುಬಂದಿದೆ. +ಮನೆಯಿಂದಲೇ ಮತದಾನ ಮಾಡಲು ಬೇಕಾದ ಅರ್ಜಿ ನಮೂನೆ 12ಡಿ (12ಆ) ವಿತರಿಸುವ ಪ್ರಕ್ರಿಯೆಯನ್ನು ಚುನಾವಾಣಾ ಆಯೋಗದ ಅಧಿಕಾರಿಗಳು ಈಗಾಗಲೇ ಆರಂಭಿಸಿದ್ದಾರೆ.ಅರ್ಜಿ ನಮೂನೆ 12ಡಿ ಮೂಲಕ ಅರ್ಹ ಮತದಾರರು ಮನೆಯಿಂದ ಮತ ಚಲಾಯಿಸಲು ಸಹಾಯಕ ಚುನಾವಣಾಧಿಕಾರಿಗೆ ಮನವಿ ಮಾಡಲು ಅವಕಾಶ ನೀಡಲಾಗಿದೆ. ತಾವು ಮತ ಚಲಾಯಿಸಲು ಮತಗಟ್ಟೆಗೆ ಹೋಗುವ ಸ್ಥಿತಿಯಲ್ಲಿಲ್ಲ ಎಂಬುದನ್ನು ಈ ಅರ್ಜಿ ಮೂಲಕ ತಿಳಿಸಬಹುದಾಗಿದೆ. +ಕರ್ನಾಟಕದಲ್ಲಿ ಚುನಾವಣಾ ಅಸೂಚನೆ ಹೊರಡಿಸಿದ ನಂತರ (ಮೊದಲ ಹಂತದ ಮತದಾನಕ್ಕೆ ಮಾರ್ಚ್ 28ರಂದು ಅಧಿಸೂಚನೆ ಹೊರಡಿಸಲಾಗಿದೆ) ಐದು ದಿನಗಳ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಜನರು ಚುನಾವಣಾ ಆಯೋಗದ ವೆಬ್ಸೈಟ್ನಿಂದ (://.,,) ಫಾರ್ಮ್ ಅನ್ನು ಡೌನ್ಲೋಡ್ ಮಾಡಿ, ಅದನ್ನು ಭರ್ತಿ ಮಾಡಿ ಆಯಾ ವ್ಯಾಪ್ತಿಯ ಚುನಾವಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು. +2020ರ ಬಿಹಾರ ವಿಧಾನಸಭೆ ಚುನಾವಣೆ ವೇಳೆ, ಕೋವಿಡ್ ಸಾಂಕ್ರಾಮಿಕದ ಕಾರಣ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವನ್ನು ಒದಗಿಸಲಾಗಿತ್ತು. +ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು ಒಂದು ಲಕ್ಷ ಜನರು ಮನೆಯಿಂದಲೇ ಮತ ಚಲಾಯಿಸಿದ್ದರು. ಮನೆಯಿಂದಲೇ ಮತದಾನಕ್ಕೆ ಮನವಿ ಸಲ್ಲಿಸಿದ್ದ ಸುಮಾರು 80,251 ಹಿರಿಯ ನಾಗರಿಕರ ಪೈಕಿ ಶೇ.95ರಷ್ಟು (76,120) ಮಂದಿ ಮತದಾನ ಮಾಡಿದ್ದರು. ಮನೆಯಿಂದಲೇ ಮತದಾನಕ್ಕೆ ಮನವಿ ಮಾಡಿದ್ದ 19,280 ಅಂಗವಿಕಲರಲ್ಲಿ ಶೇ.97ಕ್ಕಿಂತ (18,811) ಹೆಚ್ಚು ಮಂದಿ ಮತದಾನ ಮಾಡಿದ್ದರು. +ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಹಿರಿಯ ನಾಗರಿಕರು (10,280) ಮನೆಯಿಂದಲೇ ಮತ ಚಲಾಯಿಸಿದ್ದರು. ನಂತರದ ಸ್ಥಾನದಲ್ಲಿ ಬೆಳಗಾವಿ (6,975) ಮತ್ತು ತುಮಕೂರು (6,333) ಇದ್ದವು. ಅಂಗವಿಕಲರ ವಿಭಾಗದಲ್ಲಿ ತುಮಕೂರು ಅತಿ ಹೆಚ್ಚು (2,788) ಮತ್ತು ದಕ್ಷಿಣ ಕನ್ನಡ (1,926) ಮತ್ತು ಬೆಳಗಾವಿ (1,661) ನಂತರದ ಸ್ಥಾನದಲ್ಲಿದ್ದವು. \ No newline at end of file diff --git a/eesanje/url_46_183_8.txt b/eesanje/url_46_183_8.txt new file mode 100644 index 0000000000000000000000000000000000000000..d2109f29665d6ac0bc132b89255c81a9169c7380 --- /dev/null +++ b/eesanje/url_46_183_8.txt @@ -0,0 +1,7 @@ +ರಾಜಕೀಯದಲ್ಲಿ ಮಹಿಳೆಯರಿಗಿಲ್ಲವೇ ಆಸಕ್ತಿ..? ಕರ್ನಾಟಕದಲ್ಲಿ ಕೇವಲ 25 ಮಹಿಳೆಯರಿಂದ ನಾಮಪತ್ರ ಸಲ್ಲಿಕೆ! +ಬೆಂಗಳೂರು,ಏ.8-ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿದ್ದು, 2029ರ ಲೋಕಸಭೆ ಚುನಾವಣೆ ವೇಳೆಗೆ ದೇಶಾದ್ಯಂತ ಜಾರಿಯಾಗುವ ಸಾಧ್ಯತೆಯಿದೆ. +ಆದರೆ, ಕರ್ನಾಟಕದ ಮುಖ್ಯ ಚುನಾವಣಾಕಾಧಿರಿಗಳು ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸುತ್ತಿರುವ ಅಭ್ಯರ್ಥಿಗಳ ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಪ್ರಕಾರ, ಏಪ್ರಿಲ್ 26ರಂದು ನಡೆಯುವ ಚುನಾವಣೆಯ ಅಭ್ಯರ್ಥಿಗಳ ನಾಮನಿರ್ದೇಶನಗಳಲ್ಲಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಮಾಣದಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಇದು ಮಹಿಳಾ ಮೀಸಲಾತಿ ಬಗ್ಗೆ ಚಿಂತೆ ಹುಟ್ಟುಹಾಕುತ್ತಿದೆ. +14 ಕ್ಷೇತ್ರಗಳಿಗೆ (ಮಾರ್ಚ್ 28ರಿಂದ ಏಪ್ರಿಲ್ 4ರವರೆಗೆ) ನಾಮಪತ್ರ ಸಲ್ಲಿಸಿದ ಒಟ್ಟು 338 ಅಭ್ಯರ್ಥಿಗಳ ಪೈಕಿ ಕೇವಲ 25 ಮಹಿಳೆಯರಿದ್ದಾರೆ. ನಾಮಪತ್ರದ ಸಲ್ಲಿಕೆಯ ಶೇ.8ಕ್ಕಿಂತ ಕಡಿಮೆ ಪ್ರತಿನಿಧಿಸುತ್ತಿದ್ದಾರೆ. ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ಮಹಿಳಾ ಪ್ರತಿನಿಧಿಗಳ ಭಾಗವಹಿಸುವಿಕೆಯ ಉದ್ದೇಶಿತ ಗುರಿ ಮತ್ತು ಪ್ರಸ್ತುತ ವಾಸ್ತವತೆಯ ನಡುವಿನ ಈ ವ್ಯತ್ಯಾಸವು ಚುನಾವಣಾ ರಾಜಕೀಯದಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ಬೆಳೆಸುವಲ್ಲಿ ವ್ಯವಸ್ಥಿತ ಸವಾಲುಗಳನ್ನು ಎತ್ತಿ ತೋರಿಸುತ್ತದೆ. +ಮಹಿಳಾ ಮೀಸಲಾತಿ ಮಸೂದೆಯು ನಿರ್ಧಾರ ತೆಗೆದುಕೊಳ್ಳುವ ಪಾತ್ರಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಪ್ರಯತ್ನದಲ್ಲಿರುವಾಗ, ಮಹಿಳಾ ಅಭ್ಯರ್ಥಿಗಳ ಪ್ರಾತಿನಿಧ್ಯವು ಸರ್ಕಾರ ಮತ್ತು ನಾಗರಿಕ ಸಮಾಜ ಸಂಸ್ಥೆಗಳಿಂದ ಸಂಘಟಿತ ಪ್ರಯತ್ನಗಳ ಅಗತ್ಯವನ್ನು ಒತ್ತಿಹೇಳುತ್ತದೆ. +ಮಹಿಳಾ ನಾಯಕತ್ವದಲ್ಲಿ ಹೆಚ್ಚೆಚ್ಚು ಮಂದಿ ತೊಡಗಿಸಿಕೊಳ್ಳುವುದು ಬಲವಾದ ಮತ್ತು ಹೆಚ್ಚು ವೈವಿಧ್ಯಮಯ ರಾಷ್ಟ್ರವಾಗಿ ರೂಪುಗೊಳ್ಳಲು ಸಹಾಯ ಮಾಡುತ್ತದೆ. ಮಹಿಳೆಯರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಅವರ ಕುಂದುಕೊರತೆಗಳನ್ನು ಪರಿಹರಿಸಲು ಸಾಧ್ಯ. ಈ ಕ್ಷೇತ್ರಗಳಲ್ಲಿ ಮಹಿಳಾ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಹೊಂದಿದ್ದರೂ, ಮಹಿಳಾ ಅಭ್ಯರ್ಥಿಗಳ ಕೊರತೆಯು ಕಳವಳಕಾರಿಯಾಗಿದೆ. +ರಾಜಕೀಯ ಪ್ರಾತಿನಿಧ್ಯದಲ್ಲಿ ಲಿಂಗ ಅಂತರವನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳು, ತರಬೇತಿ ಕಾರ್ಯಕ್ರಮಗಳು, ಸಮಾನ ಸಂಪನ್ಮೂಲ ವಿತರಣೆ ಮತ್ತು ನೀತಿ ಅನುಷ್ಠಾನದಂತಹ ಸಮಗ್ರ ಕ್ರಮಗಳು ಅನುಷ್ಟಾನಕ್ಕೆ ಬರಬೇಕು ಎಂಬುದು ಬಹತೇಕ ಮಹಿಳಾ ಮತದಾರರ ಒಕ್ಕೋರಲಿನ ಅಭಿಪ್ರಾಯವಾಗಿದೆ. \ No newline at end of file diff --git a/eesanje/url_46_183_9.txt b/eesanje/url_46_183_9.txt new file mode 100644 index 0000000000000000000000000000000000000000..a7dcbf6b0f73412dcaf8a9f320f2a7646717515f --- /dev/null +++ b/eesanje/url_46_183_9.txt @@ -0,0 +1,8 @@ +ಚುನಾವಣಾ ಕಣದಲ್ಲಿ ಜೋರಾಗೇ ಹರಿದಾಡ್ಡುತ್ತಿದೆ ಹಣ ಮತ್ತು ಉಡುಗೊರೆಗಳು +ಬೆಂಗಳೂರು,ಏ.8-ಪ್ರಸಕ್ತ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಅಬಕಾರಿ, ಆದಾಯ ತೆರಿಗೆ, ವಾಣಿಜ್ಯ ತೆರಿಗೆ ಅಧಿಕಾರಿಗಳು ಹಾಗೂ ಪೊಲೀಸರು ನಡೆಸಿದ ತಪಾಸಣೆ ಸಂದರ್ಭದಲ್ಲಿ ರಾಜ್ಯದಲ್ಲಿ 2,77,59,00,168 ರೂ. ಮೌಲ್ಯದ ನಗದು, ಮದ್ಯ, ಡ್ರಗ್ಸ್, ಚಿನ್ನಾಭರಣ ಹಾಗೂ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದಾರೆ. +ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾ.16 ರಿಂದ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅಂದಿನಿಂದ ನಿನ್ನೆಯವರೆಗೆ ಈ ಪ್ರಮಾಣದ ಜಪ್ತಿ ಮಾಡಲಾಗಿದೆ. ಪೊಲೀಸ್, ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು ಒಟ್ಟು 57,65,83,037 ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರ, ಉಚಿತ ಉಡುಗೊರೆ, ನಗದು, ಮದ್ಯ, ಡ್ರಗ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಅಬಕಾರಿ ಇಲಾಖೆ 1,43,10,75,607 ರೂ. ಮೌಲ್ಯದ ಮದ್ಯ, ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದರೆ, ಆದಾಯ ತೆರಿಗೆ ಇಲಾಖೆ ಒಟ್ಟು 10,98,20,120 ರೂ. ಮೌಲ್ಯದ ನಗದು, ಚಿನ್ನ, ವಜ್ರಾಭರಣಗಳನ್ನು ಜಪ್ತಿ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆಯು 65,84,21,404 ರೂ. ಮೌಲ್ಯದ ಚಿನ್ನ, ಉಚಿತ ಉಡುಗೊರೆ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ನೀತಿ ಸಂಹಿತೆ ಜಾರಿಗೆ ಬಂದಂದಿನಿಂದ ನಿನ್ನೆಯವರೆಗೆ 35,61,95,342 ರೂ. ನಗದನ್ನು 1.43 ಕೋಟಿ ರೂ. ಮೌಲ್ಯದ ಮದ್ಯ, 1.51 ಕೋಟಿ ರೂ. ಮೌಲ್ಯದ ಡ್ರಗ್ಸ್ 9.48 ಕೋಟಿ ರೂ. ಮೌಲ್ಯದ ಚಿನ್ನ, 27.23 ಲಕ್ಷ ಮೌಲ್ಯದ ಬೆಳ್ಳಿ, 9 ಲಕ್ಷ ಮೌಲ್ಯದ ವಜ್ರಾಭರಣ, 71.74 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ.ಜಪ್ತಿ ಮಾಡಲಾದ ನಗದು, ವಸ್ತುಗಳಿಗೆ ಸಂಬಂಧಿಸಿದಂತೆ 1384 ಎಫ್‍ಐಆರ್‍ಗಳನ್ನು ಈತನಕ ದಾಖಲಿಸಲಾಗಿದೆ. +ಅಲ್ಲದೆ, ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸ್ ತಂಡದವರು 4 ಕೋಟಿ ರೂ. ಮೌಲ್ಯದ 4 ಕೆ.ಜಿ. ಡ್ರಗ್ಸ್ ಅನ್ನು ಶೆಟ್ಟಿಹಳ್ಳಿಯಲ್ಲಿ ವಶಪಡಿಸಿಕೊಂಡಿದ್ದಾರೆ. ಕ್ಷಿಪ್ರ ಪಡೆಯವರು ಜೇವರ್ಗಿಯಲ್ಲಿ 18,200 ಕೆ.ಜಿ. ಅಡಿಕೆ ಇದ್ದ 260 ಚೀಲಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 19,87,440 ಆಗಿದೆ ಎಂದು ಅಂದಾಜಿಸಲಾಗಿದೆ. +ಶಿವಮೊಗ್ಗದ ಸೀಗೆಹಟ್ಟಿಯಲ್ಲಿ 12,50,000 ರೂ. ಮೌಲ್ಯದ ಬಟ್ಟೆ, ಸ್ಟೀಲ್ ಮತ್ತು ಎಲೆಕ್ಟ್ರಿಕ್ ವಸ್ತುಗಳನ್ನು ಅಕ್ರಮ ದಾಸ್ತಾನು ಮಾಡಿದ್ದ ಆರೋಪದ ಮೇಲೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ತಂಡದವರು ವಶಪಡಿಸಿಕೊಂಡಿದ್ದಾರೆ. +ಸ್ಥಿರ ಕಣ್ಗಾವಲು ತಂಡದವರು ಮೈಸೂರು ರೈಲ್ವೆ ನಿಲ್ದಾಣ ಚೆಕ್ ಪೋಸ್ಟ್ ನಲ್ಲಿ 11,59,235 ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ.ಅಬಕಾರಿ ಇಲಾಖೆಯವರು 9,54,31,134 ರೂ. ಮೌಲ್ಯದ 56,817.3 ಲೀ ಮದ್ಯವನ್ನು ಹಾಸನ ಲೋಕಸಭಾ ಕ್ಷೇತ್ರದಲ್ಲಿ ವಶಪಡಿಸಿಕೊಂಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_184_1.txt b/eesanje/url_46_184_1.txt new file mode 100644 index 0000000000000000000000000000000000000000..f69a5228383db25f7813e98b753ba50d43b40c6c --- /dev/null +++ b/eesanje/url_46_184_1.txt @@ -0,0 +1,8 @@ +ರಣ ರಣ ಬಿಸಿನಲ್ಲೂ ಪ್ರಚಾರಕ್ಕೆ ರಂಗು +ಬೆಂಗಳೂರು,ಏ.7- ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರತೊಡಗಿದೆ. ರಣ ರಣ ಬಿಸಿಲಿನ ಝಳದ ನಡುವೆ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು, ಹೈಕಮಾಂಡ್ ನಾಯಕರು ರಾಜ್ಯಕ್ಕೆ ದಾಂಗುಡಿ ಇಟ್ಟಿದ್ದಾರೆ. +ನಿನ್ನೆ ಮುಳಬಾಗಿಲಿನ ಕುರುಡುಮಲೆ ದೇವಸ್ಥಾನ ದಿಂದ ವಿಧ್ಯುಕ್ತವಾಗಿ ಪ್ರಚಾರ ಆರಂಭಿಸುವ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಪ್ರಧಾನಿ ಮೋದಿ ಅವರು ಇದೇ 14ರಂದು ರಾಜ್ಯಕ್ಕೆ ಆಗಮಿಸಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಅಭ್ಯರ್ಥಿಗಳ ಅಭಿಮಾನಿಗಳು ಬೆಂಬಲಿಗರು ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ, ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದಾರೆ.ಬೆಳ್ಳಂಬೆಳಗ್ಗೆ ಅಭ್ಯರ್ಥಿಗಳು, ಹಾಗೂ ಅವರ ಬೆಂಬಲಿಗರು ಪಾರ್ಕ್, ಹೋಟೆಲ್, ಬಸ್ ನಿಲ್ದಾಣ ವಿವಿಧ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವುದು ಕಂಡುಬಂತು. ಮೊದಲ ಹಂತದ 14 ಕ್ಷೇತ್ರಗಳಲ್ಲಿ ಮತಪ್ರಚಾರ ಬಿರುಸುಗೊಂಡಿದೆ. +ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಮತ್ತು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ದಾಸರಹಳ್ಳಿ, ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರದ ಅಭ್ಯರ್ಥಿ ರಾಜೀವ್‍ಗೌಡ ಅವರನ್ನು ಅತಿಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು. +ಮಲ್ಲೇಶ್ವರಂನಲ್ಲಿ ರೋಡ್ ಶೋ ನಡೆಸುವ ಮೂಲಕ ಪ್ರಚಾರ ನಡೆಸಿದರು. ಮಹಾಲಕ್ಷ್ಮೀ ಲೇಔಟ್‍ನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ಪಕ್ಷದ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯಾರೆಡ್ಡಿ ಅವರ ಪರವಾಗಿ ಪದ್ಮನಾಭ ನಗರದಲ್ಲಿ ಹಾಗೂ ಬೊಮ್ಮನಹಳ್ಳಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು. +ಬಿಜೆಪಿ ಹಾಗೂ ಜೆಡಿಎಸ್ ಬೆಂಗಳೂರು ಕೇಂದ್ರ ಹಾಗೂ ದಕ್ಷಿಣ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿ ಮತದಾರರ ಮನವೊಲಿಕೆಯಲ್ಲಿ ತೊಡಗಿದ್ದರು. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದು, ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ. +ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲೂ ಗ್ರಾಮದ ಮುಖಂಡರೊಂದಿಗೆ ಸಮಾಲೋಚನೆ, ಸಮುದಾಯದ ಮುಖಂಡರೊಂದಿಗೆ ಚರ್ಚೆ, ಗ್ರಾಮದ ದೇವಾಲಯಗಳಿಗೆ ಅನುದಾನದ ಭರವಸೆಗಳನ್ನು ಅಭ್ಯರ್ಥಿಗಳು ಹಾಗೂ ಅವರ ಪರ ಬೆಂಬಲಿಗರು ಬೆಂಬಲ ನೀಡುತ್ತಾ ಮತಯಾಚನೆ ಮಾಡುತ್ತಿದ್ದಾರೆ. ಬೆಳಿಗ್ಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡುವುದು, ಸಂಜೆ ರೋಡ್ ಶೋ ರ್ಯಾಲಿ, ಮೆರವಣಿಗೆ, ಕಾರ್ಯಕರ್ತರ ಸಭೆ ಮೂಲಕ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ. +ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಾವು ಕೈಗೊಂಡ ಅಭಿವೃದ್ಧಿ ಕೆಲಸಗಳು ಭವಿಷ್ಯದ ಯೋಜನೆಗಳ ಭಿತ್ತಿಪತ್ರಗಳನ್ನು ಹಂಚುವ ಮೂಲಕ ಮತಯಾಚನೆ ಮಾಡಲಾಗುತ್ತಿದೆ. ಹೊಸ ಅಭ್ಯರ್ಥಿಗಳು ಮತದಾರರಿಗೆ ಹೊಸ ಭರವಸೆಗಳನ್ನು ಬಿತ್ತುತ್ತಿದ್ದಾರೆ. \ No newline at end of file diff --git a/eesanje/url_46_184_10.txt b/eesanje/url_46_184_10.txt new file mode 100644 index 0000000000000000000000000000000000000000..9f6fda7f3ec8350fad296df7b80b540bf70d18c5 --- /dev/null +++ b/eesanje/url_46_184_10.txt @@ -0,0 +1,9 @@ +ಸಾವು ಗೆದ್ದ ಕೂಸು ಸಾತ್ವಿಕನ ಮನದಾಳದಿಂದ..!! +ಅಮ್ಮ ಮೆಣಸಿನಕಾಯಿ ಬಜ್ಜಿ ಕೊಟ್ಟಿದ್ರು, ಅದನ್ನ ತಿನ್ಕೊಂಡು ಅಲ್ಲಿ ಒಂದು ಕೋಳಿ ಮರಿ ಹೋಗ್ತಾ ಇತ್ತು. ಅದನ್ನು ನೋಡಿ ಆ ಕಡೆ ಹೋಗ್ತಾ ಇದ್ದೆ. ಏನಾಯ್ತೋ ಏನೋ ಬೋರ್ವೆಲ್ ಪೈಪ್ ಒಳಗೆ ಬಿದೋಗ್ಬಿಟ್ಟೆ….ಕೆಳಗಡೆಗೆ ಹೋಗಿಬಿಟ್ಟೆ. ಕಾಲು ಮೇಲೆ ತಲೆ ಕೆಳಗೆ. ನಂಗೆ ಭಯ ಆಗ್ಬಿಡ್ತು. ಏನಪ್ಪ ಮಾಡೋದು. ಯಾರೂ ನೋಡಿಲ್ವೇ ನಾನು ಬಿದ್ದಿರೋದು. ಅಮ್ಮ ಯಾಕೆ ಇನ್ನೂ ಬರಲಿಲ್ಲ, ಚಿಕ್ಕಪ್ಪ ಯಾಕೆ ಬರಲಿಲ್ಲ, ಅಕ್ಕ ಯಾಕೆ ಬರಲಿಲ್ಲ, ಅಪ್ಪ ಬಂದ್ರೆ ಹೊಡಿಬಹುದು, ಏನ್ ಮಾಡೋದು ಈಗ…. +ತುಂಬಾ ಭಯ ಆಗ್ತಾ ಇತ್ತು. ಯಾರು ಯಾಕೆ ಬರ್ತಾ ಇಲ್ಲ ಅಂತ ಯೋಚನೆ ಮಾಡ್ತಾ ಇದ್ದೆ. ಅಳು ಬಂತು. ಜೋರಾಗಿ ಅತ್ತುಬಿಟ್ಟೆ. ಆಮೇಲೆ ತಲೆ ಕೆಳಗಡೇ ಇದ್ರು ಸ್ವಲ್ಪ ಹೊತ್ತಿಗೆ ನಿದ್ದೆ ಮಾಡಿದೆ. ಎಚ್ಚರ ಆದಾಗ ಹಾಂಗೇ ಇದ್ದೇ. ಈಗ ಭಯ ಇನ್ನೂ ಜಾಸ್ತಿ ಆಯ್ತು. ಗುಮ್ಮ ಬಂದ್ರೆ ಏನ್ಮಾಡೋದು, ಒಬ್ಬನೇ ಇದ್ದೀನಿ, ಅಮ್ಮನೂ ಇಲ್ಲ ಅಂತ…ಏನೂ ಮಾಡೋಕೆ ಆಗ್ತಾ ಇಲ್ಲ, ಯಾಕೆ ಯಾರು ನೋಡಿಲ್ವಾ, ಸ್ವಲ್ಪ ಹೊತ್ತು ನಿದ್ದೆ ಮಾಡೋದು, ಸ್ವಲ್ಪ ಹೊತ್ತು ಅಳೋದು, ಹಾಗೆ ಮಲಗೋದು, ಹೊಟ್ಟೆ ಬೇರೆ ಹಸಿವಾಯ್ತು. ಮೊಮ್ಮು ಕೊಡೋರು ಯಾರು ಇರಲಿಲ್ಲ. ಮತ್ತೆ ಜೋರಾಗಿ ಅತ್ತುಬಿಟ್ಟೆ. ಅಮ್ಮ ಅಪ್ಪ ಅಂತ ಕೂಗಿದೆ…. +ಸ್ವಲ್ಪ ಹೊತ್ತಿನ ನಂತರ ಯಾರೋ ಕಾಲ್ಗೆ ಏನು ಕಟ್ಟಿದಂಗೆ ಆಯ್ತು, ಯಾರು ಇರಬಹುದು, ಯಾಕೆ ನನ್ನ ತಗೋತಾ ಇಲ್ಲ ಅಂತ ಯೋಚನೆ ಮಾಡ್ತಾ ಇದ್ದೆ. ಸ್ವಲ್ಪ ಹೊತ್ತಾದ್ಮೇಲೆ ಅದೇನು ತಣ್ಣಗೆ ಗಾಳಿ ಬಿಟ್ರು, ಹೋ ಯಾರೋ ಬಂದಿದ್ದಾರೆ ಅನ್ಕೊಂಡೆ. ಈಗ ನನ್ನ ಎಳ್ಕೋತಾರೆ ಅಂದ್ಕೊಂಡೆ ಇಲ್ಲ ಯಾರು ಎಳಕೊಂಡೇ ಇಲ್ಲ ಮತ್ತೆ ಭಯ ಆಯಿತು..ಏನೋ ಆಚೆಕಡೆ ಸೌಂಡ್ ಆಗ್ತಾ ಇತ್ತು, ಯಾವುದೋ ಗಾಡಿ ಹೋಗ್ತಾ ಇದ್ದಂಗೆ, ಯಾರೋ ಮಾತಾಡ್ದಂಗೆ, ಓ ಎಲ್ಲಾ ಬಂದಿದ್ದಾರೆ ಅಂತ ಅನ್ಕೊಂಡೆ, ಎಷ್ಟೊತ್ತಾದ್ರೂ ಏನೂ ಆಗಲಿಲ್ಲ, ಎಷ್ಟೊತ್ ನಿದ್ದೆ ಮಾಡಿದ್ನೋ ಏನೋ ಗೊತ್ತಿಲ್ಲ ಕತ್ತಲು ಹಂಗೇ ಇತ್ತು, ಅಮ್ಮನ ಮೇಲೆ ಅಪ್ಪನ ಮೇಲೆ ಕೋಪ ಬಂತು. ಅಜ್ಜೀನೂ ಬರ್ಲಿಲ್ಲ. ಎಲ್ಲರೂ ನನ್ನ ಬಿಟ್ಟುಬಿಟ್ಟವ್ರೆ ಅಂತ ಅನ್ನಿಸ್ತು. +ಅಮ್ಮ ಇಷ್ಟೊತ್ತಾದ್ರೂ ಮಮ್ಮು ತಗೊಂಡು ಬರಲೇ ಇಲ್ಲ ಅಂತ ಕೋಪ ಬರ್ತಾ ಇತ್ತು. ಅಪ್ಪ ನಾನು ಎಲ್ಲಿದ್ದರೂ ಸಾತ್ವಿಕ್ ಅಂತ ಕೂಗಿಕೊಂಡು ಬರಲೇ ಇಲ್ಲ. ಯಾಕೋ ನನಗೂ ಗೊತ್ತಾಗ್ತಿಲ್ಲ. ನಾನೇನಾದ್ರೂ ಜಾಸ್ತಿ ತೀಟೆ ಗಲಾಟೆ ಹಠ ಮಾಡಿ ಅವರು ಕೋಪ ಮಾಡ್ಕೊಂಡವ್ರೋ ಏನೋ ಅಂದ್ಕೊಂಡೆ. +ಏನೋ ಎಷ್ಟೊತ್ತೋ ಹಾಗೆ ಇದ್ದೆ. ಆವಾಗ ಇದ್ದಕ್ಕಿದ್ದಂಗೆ ಅದು ಯಾರೋ ಅಂಕಲ್ ನನ್ನನ್ನ ಎಳ್ಕೊಂಡು ಕೈಯಲ್ಲಿ ಇಟ್ಕೊಂಡು ಅದೇನೋ ಹಗ್ಗದ ಮೇಲೆ ಹಾಕಿ ಕಟ್ಟಿ ಎಳುದ್ರು. ನೋಡುದ್ರೆ ಕತ್ತಲೆಲ್ಲ ಮಾಯ, ಬೆಳಕು ಬಂದ್ಬಿಡ್ತು, ಜನ ಎಲ್ಲಾ ಸುತ್ತ ಇದ್ರೂ ನನಗೆ ಭಯ ಆಗೋಯ್ತು, ಅಳೋಕ್ಕೆ ಶುರು ಮಾಡ್ಬಿಟ್ಟೆ. ಏನಪ್ಪಾ ಏನಾಯ್ತು ನನಗೆ ಇಷ್ಟು ಜನ ಯಾಕ್ ಸೇರಿದ್ದಾರೆ ಅಂತ ಗೊತ್ತಾಗಿಲ್ಲ, ಆಮೇಲೆ ಅಮ್ಮನ್ನ ನೋಡ್ದೇ. ಅಮ್ಮ ಅಲ್ಲೇ ಇದ್ರು. ಬಾಚಿ ತಬ್ಬಿಕೊಂಡ್ರು. ನನಗೆ ಖುಷಿಯಾಗೋಯ್ತು. ಅಪ್ಪ ಓಡಿ ಬಂದು ಎತ್ಕೊಂಡ್ ಬಿಡ್ತು. ಅಪ್ಪ ಅಮ್ಮ ಎಲ್ಲರೂ ಸೇರಿ ಗಾಡಿಯಲ್ಲಿ ಎತ್ಕೊಂಡು ಕರ್ಕೊಂಡು ಹೋದರು. +ಆಸ್ಪತ್ರೆಯಲ್ಲಿ ಎಷ್ಟೊಂದು ಡಾಕ್ಟರ್ ಬಂದು ಏನೇನೋ ಚೆಕ್ ಮಾಡುದ್ರು. ನಂಗೇನೂ ಆಗೇ ಇಲ್ಲ. ನಾನು ಸುಮ್ಮನೆ ಆಟ ಆಡ್ಕೊಂಡು ಇದ್ದೀನಿ. ಎಲ್ಲರೂ ಬಂದು ತಿಂಡಿ ಬೇಕಾ ಮಗನೇ, ಚಾಕಲೇಟ್ ಬೇಕಾ ಮಗು, ಆರಾಮ್ ಇದ್ಯಾ ಕಂದ, ಅಂತ ಜಾಸ್ತಿ ಪ್ರೀತಿ ಮಾಡ್ತಾ ಇದ್ದಾರೆ. ನನಗೂ ಖುಷಿಯೋ ಖುಷಿ.. +ಅದು ಎರಡು ವರ್ಷದ ಪುಟ್ಟ ಮಗುವಾಗಿದ್ದರಿಂದಾಗಿ ಅದಕ್ಕೆ ಸಾವಿನ ಭಯ ಕಾಡಲಿಲ್ಲ. ಭವಿಷ್ಯದ ಭಯ ನೆನಪಾಗಲಿಲ್ಲ. ಸಂಬಂಧಗಳು, ಆಸ್ತಿ ಅಂತಸ್ತುಗಳು, ಅಕಾರಗಳ ಮೋಹವಿರಲಿಲ್ಲ. ಒಂದು ವೇಳೆ ನಮ್ಮಂತ ದೊಡ್ಡವರಾಗಿದ್ದರೆ ಅವರ ಈ ಪರಿಸ್ಥಿತಿಗೆ ಬಿಪಿ ಶುಗರ್ ಎಲ್ಲವೂ ಒಮ್ಮೆಲೇ ಹೆಚ್ಚಾಗಿ ಏನೇನೋ ಇಲ್ಲಸಲ್ಲದ ಊಹೆಗಳು ಬಂದು ಅಲ್ಲಿಯೇ ಸಾಯುವ ಸಾಧ್ಯತೆಗಳಿದ್ದವು. +ಆದರೆ ಮುಗ್ಧ ಮಗುವಿಗೆ ಆ ಯಾವ ಭಾವನೆಗಳೂ ಇರುವುದಿಲ್ಲ. ಆದ್ದರಿಂದಲೇ ಸುಮಾರು 20 ಗಂಟೆಗಳ ದೀರ್ಘಕಾಲ ತಲೆಕೆಳಗಾಗಿ ಇದ್ದರೂ ಮಗು ಆರೋಗ್ಯವಾಗಿ ಹೊರಬಂದಿದೆ ಮತ್ತು ಯಾವುದೇ ಶಾಕ್ ಇಲ್ಲದೆ ಸಹಜವಾಗಿಯೇ ವರ್ತಿಸುತ್ತಿದೆ. ನಾವಾಗಿದ್ದರೆ ಇದೊಂದು ಪುನರ್ಜನ್ಮ ಎಂದು ಅತಿಯಾದ ಭಾವನೆಗಳಿಗೆ ಒಳಗಾಗಿ ಸಿಲುಕುತ್ತಿದ್ದೆವಲ್ಲದೆ ಚೇತರಿಸಿಕೊಳ್ಳುವುದೇ ಕಷ್ಟವಾಗುತ್ತಿತ್ತು. \ No newline at end of file diff --git a/eesanje/url_46_184_11.txt b/eesanje/url_46_184_11.txt new file mode 100644 index 0000000000000000000000000000000000000000..b3acaf3c8f4e3bbbdcd1da9ced1bf55f410dc752 --- /dev/null +++ b/eesanje/url_46_184_11.txt @@ -0,0 +1,4 @@ +ಏ.15 ರಿಂದ ಉತ್ತರಪತ್ರಿಕೆಗಳ ಮೌಲ್ಯಮಾಪನ +ಬೆಂಗಳೂರು,ಏ.6-ಎಸ್ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇಂದು ಮುಗಿದಿದ್ದು, ಏ.15 ರಿಂದ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪ್ರಾರಂಭವಾಗಲಿದೆ. 2023-24 ನೇ ಸಾಲಿನ ಎಸ್ಎಸ್ಎಲ್ಸಿ ಮೊದಲ ವಾರ್ಷಿಕ ಪರೀಕ್ಷೆ ಮಾ.25 ರಿಂದ ಇಂದಿನವರೆಗೆ ರಾಜ್ಯದಲ್ಲಿ ನಡೆದಿದೆ. ಮಾ.25 ರಂದು ಪ್ರಥಮ ಭಾಷಾ ಪರೀಕ್ಷೆಗಳು ನಡೆದಿದ್ದು, ಇಂದು ದ್ವಿತೀಯ ಭಾಷಾ ಪರೀಕ್ಷೆಗಳು ನಡೆದವು. +ರಾಜ್ಯಾದ್ಯಂತ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. 2,750 ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು. +ಎಸ್ಎಸ್‌ಎಲ್‌ಸಿ ಪರೀಕ್ಷೆ ಮುಗಿದಿರುವುದರಿಂದ ಉತ್ತರ ಪತ್ರಿಕೆಗಳ ಮಾಲ್ಯಮಾಪನ ಪ್ರಕ್ರಿಯೆ ರಾಜ್ಯದ 15 ಶೈಕ್ಷಣಿಕ ಜಿಲ್ಲೆಗಳಲ್ಲಿ ಏ.15 ರಿಂದ ಪ್ರಾರಂಭವಾಗಲಿದೆ. ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಮಂಡಳಿಯು ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಮುಖ್ಯ ಶಿಕ್ಷಕರಿಗೆ ಮೌಲ್ಯಮಾಪನಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ನಿರ್ದೇಶನ ನೀಡಲು ಸೂಚಿಸಿದೆ. \ No newline at end of file diff --git a/eesanje/url_46_184_12.txt b/eesanje/url_46_184_12.txt new file mode 100644 index 0000000000000000000000000000000000000000..501f5fa6135f994bd715cbd6b4cbb0a6f736f5d7 --- /dev/null +++ b/eesanje/url_46_184_12.txt @@ -0,0 +1,10 @@ +ಬರ ನಿರ್ವಹಣೆಯಲ್ಲಿ ಸಿಎಂ ವಿಫಲ : ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ +ಬೆಂಗಳೂರು,ಏ.6- ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ಎಲ್ಲ ತಾಲ್ಲೂಕುಗಳಲ್ಲಿ ಬರಗಾಲ ಆವರಿಸಿದೆ. +ಕುಡಿಯಲು ನೀರು, ಜಾನುವಾರುಗಳಿಗೆ ಮೇವಿಲ್ಲದೆ ಜನರು ಗುಳೇ ಹೋಗುತ್ತಿದ್ದಾರೆ. ಈ ಸರ್ಕಾರ ಜನರ ಪಾಲಿಗೆ ಇದ್ದು ಸತ್ತಂತೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಬ್ರಾಂಡ್ ಬೆಂಗಳೂರು ಈಗ ಬಾಡ್ ಬೆಂಗಳೂರು ಆಗಿದೆ. ಡಿ.ಕೆ.ಶಿವಕುಮಾರ್ ನೀರಾವರಿ ಸಚಿವರಾದ ನಂತರ ರಾಜ್ಯದ ಎಲ್ಲಾ ಅಣೆಕಟ್ಟುಗಳು ಖಾಲಿಯಾಗಿವೆ. +ಲೋಕೋಪಯೋಗಿ ಸಚಿವರು ಯಾರು ಎಂಬುದೇ ಜನರಿಗೆ ಗೊತ್ತಿಲ್ಲ. ಒಂದು ಕಿ.ಮೀ ರಸ್ತೆಗೆ ಡಾಂಬರ್ ಹಾಕಿಲ್ಲ. ತಮ್ಮ ಜವಾಬ್ದಾರಿ ಮರೆತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ 11 ತಿಂಗಳ ನಂತರ ಬರಪರಿಹಾರದ ಹಣ ಬಿಡುಗಡೆ ಮಾಡಿದ್ದರು. ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಕೆ ಮಾಡಿದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ಡಿಎ ಸರ್ಕಾರ ದುಪ್ಪಟ್ಟು ಅನುದಾನ ನೀಡಿದೆ. ಕೇಂದ್ರದಿಂದ ಅನುದಾನ ನೀಡುವ ವಿಷಯದಲ್ಲಿ ಯಾವುದೇ ತಾರತಮ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು. +ಜುಲೈ ತಿಂಗಳಲ್ಲೇ ವಾಡಿಕೆಗಿಂತ ಶೇ. 67% ಮಳೆ ಕಡಿಮೆಯಾಗಿದೆ. ಇದಾದ ಬಳಿಕ ಮೂರುವರೆ ತಿಂಗಳು ಕಳೆದ ಮೇಲೆ ಬರ ಬಂದಿದೆ. ಕೆರಗಳು ಬತ್ತಿ ಹೋಗಿದೆ. ಜಲಾಶಯಗಳು ಖಾಲಿ ಖಾಲಿ ಆಗಿದೆ. ಮಳೆಯ ಕೊರತೆಯ ಹಿನ್ನೆಲೆಯಲ್ಲಿ, ಜಲಾಶಯಗಳು ಖಾಲಿ ಖಾಲಿಯಾಗಿದೆ. 508 ಕೆರೆಯಲ್ಲಿ ಮಳೆ ಕಡಿಮೆಯಾದ ಪರಿಣಾಮ ಒಂದು ಹನಿ ನೀರಿಲ್ಲ ಎಂದು ಆಗ್ರಹಿಸಿದರು. +ಸಾಮಾಜಿಕ ಜಾಲತಾಣದಲ್ಲಿ ಹೇಳುತ್ತಾರೆ, ಸವಾಲು ಚರ್ಚೆಗೆ ಬನ್ನಿ ಅಂತಾರೆ.ನಾನು ಈ ಮಾತನ್ನು ಹೇಳಬೇಕೋ, ಹೇಳಬಾರದೋ ಗೊತ್ತಿಲ್ಲ.ಕಾಂಗ್ರೆಸ್ ಪಾರ್ಲಿಮೆಂಟ್ನಲ್ಲಿ ಸತ್ತು ಹೋಗಿತ್ತಾ? ರಾಷ್ಟ್ರೀಯ ಕಾಂಗ್ರೆಸ್ ಸತ್ತು ಹೋಗಿದ್ಯಾ?ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. +ಬರ ಪರಿಹಾರಕ್ಕೆ ಒಬ್ಬೊಬ್ಬ ರೈತರಿಗೆ 25ರಿಂದ 50 ಸಾವಿರ ರೂಪಾಯಿ ನೀಡಬೇಕಿತ್ತು. ಆದರೆ ಕೊಟ್ಟಿರುವುದು ಮಾತ್ರ ಕೇವಲ 2 ಸಾವಿರ ರೂಪಾಯಿ.ಮುಂಗಾರು ಬೆಳೆ ಬೇರೆ, ಹಿಂಗಾರು ಬೆಳೆಯೇ ಬೇರೆ. ಹಿಂಗಾರು ಕೂಡ ಕೈ ಕೊಟ್ಟಿದೆ. ಮಿ.ಸಿದ್ಧರಾಮಯ್ಯಜೀ ಏಕೆ ಹಿಂಗಾರು ಬರವನ್ನು ಮುಚ್ಚಿಟ್ಟಿದ್ದೀರಿ? ಈಗ ಘೋಷಣೆ ಮಾಡಿರುವುದು ಮುಂಗಾರು ಬರ ಮಾತ್ರ. ಈವರೆಗೂ 900 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀವು ಗ್ಯಾರೆಂಟಿಗಳನ್ನು ಎಷ್ಟು ಬೇಕಾದರೀ ಕೊಡಿ. 5 ಏಕೆ 50 ಗ್ಯಾರೆಂಟಿಗಳನ್ನು ಕೊಡಿ. +5 ಗ್ಯಾರಂಟಿ ಅಲ್ಲ, 50 ಗ್ಯಾರಂಟಿ ಬೇಕಾದರೆ ಕೊಡಿ. ಆದರೆ ರೈತರಿಗೆ ಪರಿಹಾರ ಕೊಡಿ. ರೈತರ ಆತ್ಮಹತ್ಯೆ ಆಗುತ್ತಿದೆ, ನಿಮಗೆ ಕಿಂಚಿತ್ತೂ ನೋವು ಇಲ್ವಾ. ಹತ್ತು ತಿಂಗಳಲ್ಲಿ ಯಾವ ಅಭಿವೃದ್ಧಿ ಕೆಲಸ ಆಗಿದೆ ಎಂದು ಪ್ರಶ್ನಿಸಿದರು. +ಜಲಾಶಯ ಕಟ್ಟಿದ್ದೀರಾ? ಶಿಕ್ಷಣ ಸಂಸ್ಥೆ ಮಾಡಿದ್ದೀರಾ? ಅಧಿಕಾರಕ್ಕೆ ಬಂದು ಬಂದು ವರ್ಷವಾಯ್ತು. ಆಸ್ಪತ್ರೆ, ಶಾಲೆ, ಡ್ಯಾಂ ಕಟ್ಟುವುದು ನಮ್ಮ ಕರ್ತವ್ಯ. ಏನನ್ನೂ ಕಟ್ಟಿಲ್ಲ. ಯಾವ ಕೆಲಸವನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಮುಂಗಾರು ಪರಿಹಾರ ಬೇಕು ಎಂದು ಬಿಡುಗಡೆ ಮಾಡಿದ್ದೀರಲ್ಲಾ, ಅದೇ ರೀತಿ ಹಿಂಗಾರು ಪರಿಹಾರದ್ದು ಬಿಡುಗಡೆ ಮಾಡಬೇಕು ಅಲ್ಲವೇ? 6651.15 ಕೋಟಿ ನಾವು ಅಧಿಕಾರದಲ್ಲಿದ್ದಾಗ ನಾಲ್ಕು ವರ್ಷಗಳ ಅಧಿಕಾರದಲ್ಲಿದ್ದಾಗ ಪರಿಹಾರ ಬಿಡುಗಡೆ ಮಾಡಿದ್ದೇವೆ. ಬೆಳೆ ಪರಿಹಾರ ಬಿಡುಗಡೆ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_184_2.txt b/eesanje/url_46_184_2.txt new file mode 100644 index 0000000000000000000000000000000000000000..176401b6bd9940428d5e8a8132e45da69f5a1491 --- /dev/null +++ b/eesanje/url_46_184_2.txt @@ -0,0 +1,5 @@ +ಶಾಸಕರಿಗೆ ಸಾಂಸ್ಕøತಿಕ-ಕ್ರೀಡಾ ಕಾರ್ಯಕ್ರಮ +ಬೆಂಗಳೂರು,ಏ.7- ಪ್ರಸಕ್ತ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ಶಾಸಕರಿಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಕಾರ್ಯಕ್ರಮವನ್ನು ಆಯೋಜಿಸಲು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮುಂದಾಗಿದ್ದಾರೆ.16ನೇ ವಿಧಾನಸಭೆಯ ಶಾಸಕರುಗಳಲ್ಲಿನ ವಿವಿಧ ಸಾಂಸ್ಕøತಿಕ ಕ್ರೀಡಾ ಚಟುವಟಿಕೆಗಳ ಆಸಕ್ತಿಯನ್ನು ಪ್ರೋತ್ಸಾಹಿಸಲು ಕಾರ್ಯಕ್ರಮವೊಂದನ್ನು ಆಯೋಜಿಸಲು ಸಭಾಧ್ಯಕ್ಷರು ನಿರ್ಧರಿಸಿದ್ದಾರೆ. +ಕಲೆ, ಸಾಹಿತ್ಯ, ಸಾಂಸ್ಕøತಿಕ ಚಟುವಟಿಕೆಗಳು ಹಾಗೂ ಕ್ರೀಡೆಯಲ್ಲಿ ಹೊಂದಿರುವ ಆಸಕ್ತಿಯ ಬಗ್ಗೆ ಶಾಸಕರು ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಏ.30ರ ಒಳಗಾಗಿ ಶಾಸಕರು ಕಲೆ, ಸಾಹಿತ್ಯ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಹೊಂದಿರುವ ಆಸಕ್ತಿಯ ಬಗೆಗಿನ ಮಾಹಿತಿಯನ್ನು ಶಾಸನ ರಚನಾ ಶಾಖೆಗೆ ಸಲ್ಲಿಸಲು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. +ನಾಟಕ, ಯಕ್ಷಗಾನ, ಆಶುಭಾಷಣ, ಮಿಮಿಕ್ರಿ, ಏಕಪಾತ್ರ ಅಭಿನಯ, ಚಟುವಟಿಕೆಗಳು ಕಲಾ ವಿಭಾಗದಲ್ಲಿ ಸೇರಿವೆ. ಶಾಸ್ತ್ರೀಯ, ಹಿಂದೂಸ್ಥಾನಿ, ಕರ್ನಾಟಕ ಸಂಗೀತ, ಜಾನಪದ ಗೀತೆ, ಭಾವಗೀತೆ, ಚಿತ್ರಗೀತೆ, ನೃತ್ಯ, ಸಾಂಸ್ಕøತಿಕ ಚಟುವಟಿಕೆಗಳ ವಿಭಾಗದಲ್ಲಿವೆ. +ಇನ್ನು ಕ್ರೀಡಾ ವಿಭಾಗದಲ್ಲಿ ಕಬಡ್ಡಿ, ಈಜು, ಕುಸ್ತಿ, ಫುಟ್ಬಾಲ್, ಕ್ರಿಕೆಟ್, ಕೇರಂ, ಚೆಸ್, ಬಾಸ್ಕೆಟ್ ಬಾಲ್, ಥ್ರೋಬಾಲ್, ಟೇಬಲ್ ಟೆನ್ನಿಸ್, ವಾಲಿಬಾಲ್, ಅಥ್ಲೆಟಿಕ್ಸ್, ಜಿಗಿತ, ಗುಂಡು ಎಸೆತ ಚಟುವಟಿಕೆಗಳಿವೆ. ವಿಶೇಷ ಆಸಕ್ತಿ ಇದ್ದವರು ಮಾಹಿತಿ ನೀಡಲು ಕೋರಿದ್ದಾರೆ. \ No newline at end of file diff --git a/eesanje/url_46_184_3.txt b/eesanje/url_46_184_3.txt new file mode 100644 index 0000000000000000000000000000000000000000..ed45030accca82a9d88922cd650499ea5740912c --- /dev/null +++ b/eesanje/url_46_184_3.txt @@ -0,0 +1,6 @@ +ದೆಹಲಿಯವರು ಬಂದು ಕೆಲಸ ಮಾಡಿಕೊಡುವುದಿಲ್ಲ: ಡಿ.ಕೆ.ಶಿವಕುಮಾರ್ +ಬೆಂಗಳೂರು,ಏ.7- ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಸರ್ಕಾರ ಅಧಿಕಾರದಲ್ಲಿದೆ. ನಿಮ್ಮ ಸಮಸ್ಯೆಗಳಿಗೆ ನಾವು ಪರಿಹಾರ ಹುಡುಕಿಕೊಡಬಹುದೇ ಹೊರತು, ದೆಹಲಿಯವರು ಬಂದು ಕೆಲಸ ಮಾಡಿಕೊಡುವುದಿಲ್ಲ. ಮತ ಹಾಕಿ, ಕೆಲಸ ಕೇಳಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತದಾರರನ್ನು ಒತ್ತಾಯಿಸಿದ್ದಾರೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ.ಕೆ.ಸುರೇಶ್ ಪರವಾಗಿ ರಾಜರಾಜೇಶ್ವರಿ ನಗರದ ಹಲವು ಅಪಾರ್ಟ್‍ಮೆಂಟ್‍ಗಳಲ್ಲಿ ನಿವಾಸಿಗಳ ಸಭೆ ನಡೆಸಿ ಮತಯಾಚನೆ ಮಾಡಿದರು.ಆರ್.ಎನ್.ಎಸ್ ಶಾಂತಿನಿವಾಸ್ ಅಪಾರ್ಟ್‍ಮೆಂಟ್ ಮತ್ತು ಯಶವಂತಪುರದ ಗೋಲ್ಡನ್ ಗ್ರಾಂಡ್ ಅಪಾರ್ಟ್‍ಮೆಂಟ್‍ಗಳಲ್ಲಿ ಪ್ರಚಾರ ನಡೆಸಿದ ಡಿ.ಕೆ.ಶಿವಕುಮಾರ್, ಕೆಲವು ಅಪಾರ್ಟ್‍ಮೆಂಟ್‍ಗಳನ್ನು ಬಿಲ್ಡರ್‍ಗಳು ಮಾಲೀಕರಿಗೆ ಹಸ್ತಾಂತರಿಸಿಲ್ಲ ಮತ್ತು ನಿರ್ವಹಣಾ ಕಾಮಗಾರಿಯನ್ನೂ ಪೂರ್ಣಗೊಳಿಸಿಲ್ಲ. ಇದು ತಮ್ಮ ಗಮನಕ್ಕೆ ಬಂದಿದೆ. +ಗೋಲ್ಡನ್ ಅಪಾರ್ಟ್‍ಮೆಂಟ್‍ನಲ್ಲಿ ಒಂದೂವರೆ ಸಾವಿರ ಮತಗಳಿವೆ. ಅಷ್ಟೂ ಜನ ಡಿ.ಕೆ.ಶಿವಕುಮಾರ್‍ರನ್ನು ಬೆಂಬಲಿಸಿ ಗೆಲ್ಲಿಸಿ. ಬಳಿಕ ನಮ್ಮ ಬಳಿ ಬನ್ನಿ. ನಿಮ್ಮ ಕೆಲಸ ಮಾಡಿಕೊಡುವುದು ನಮ್ಮ ಕರ್ತವ್ಯ. ಅದನ್ನು ಬಿಟ್ಟು ನಾವು ಬಿಜೆಪಿಗೆ, ಮೋದಿಗೆ ಮತ ಹಾಕುತ್ತೇವೆ ಎಂದರೆ ದೆಹಲಿಯವರಿಂದಲೇ ಕೆಲಸ ಮಾಡಿಸಿಕೊಳ್ಳಿ ಎಂದು ಹೇಳಿದರು. +ಬೆಂಗಳೂರಿನಲ್ಲಿ ಬರಪರಿಸ್ಥಿತಿಯಿಂದಾಗಿ 7 ಸಾವಿರ ಬೋರ್‍ವೆಲ್‍ಗಳು ಬತ್ತಿ ಹೋಗಿವೆ. ಆನೇಕಲ್ ದಕ್ಷಿಣ ಭಾಗದ ಕ್ಷೇತ್ರಗಳಿಗೆ ನೀರು ಪಂಪ್ ಮಾಡಲು ಎದುರಾಗುತ್ತಿರುವ ಸಮಸ್ಯೆ ನನಗೆ ಮಾತ್ರ ಗೊತ್ತಿದೆ. ಆದರೂ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂಬ ಕಾರಣಕ್ಕೆ ನಿರಂತರವಾಗಿ ನೀರು ಪೂರೈಕೆ ಮಾಡುತ್ತಿದ್ದೇವೆ ಎಂದರು.ಸಂಸದ ಡಿ.ಕೆ.ಸುರೇಶ್ ಜನಸಾಮಾನ್ಯರ ನಡುವೆ ಇದ್ದು, ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಿ. ನಾವು ಕೊಟ್ಟ ಮಾತನ್ನು ತಪ್ಪುವುದಿಲ್ಲ. ನಿಮ್ಮ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಅಪಾರ್ಟ್‍ಮೆಂಟ್‍ಗಳ ಸಮಸ್ಯೆಗಳನ್ನು ನಿವಾರಿಸುವುದು ಸ್ಥಳೀಯ ಶಾಸಕರ ಕರ್ತವ್ಯ. ಆದರೆ ಅವರು ಅದನ್ನು ಸರಿಯಾಗಿ ನಿರ್ವಹಿಸಿಲ್ಲ. ನೀವು ನಮ್ಮ ಪಕ್ಷಕ್ಕೆ ಮತ ಹಾಕಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೂ ನಾವು ಸ್ಪಂದಿಸುತ್ತೇವೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_184_4.txt b/eesanje/url_46_184_4.txt new file mode 100644 index 0000000000000000000000000000000000000000..a65d8bde67a7b927a3ffa4c726ccffde403c248c --- /dev/null +++ b/eesanje/url_46_184_4.txt @@ -0,0 +1,5 @@ +ರಾಜ್ಯದಲ್ಲಿ 10 ಮಂದಿಗೆ ಕಾಲರಾ ದೃಢ +ಬೆಂಗಳೂರು,ಏ.7- ರಾಜ್ಯದಲ್ಲಿ ಕಾಲರಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿದೆ. ಬೆಂಗಳೂರು, ನಗರ ಜಿಲ್ಲೆ ಹಾಗೂ ರಾಮನಗರದಲ್ಲಿ ಸಾಂಕ್ರಾಮಿಕ ರೋಗದ ಪ್ರಮಾಣ ಏರಿಕೆಯಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮಂದಿಗೆ ಕಾಲರಾ ಇರುವುದು ಪತ್ತೆಯಾಗುತ್ತಿದ್ದಂತೆ ನಗರ ಜಿಲ್ಲೆಯಲ್ಲಿ ಆರು ಹಾಗೂ ರಾಮನಗರದಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. +ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 49 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಾಲರಾ ಇರುವ ಶಂಕೆ ವ್ಯಕ್ತವಾಗಿದ್ದು ಮೂವರಿಗೆ ಕಾಲರಾ ಇರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಾಲರಾ ಇರುವುದು ದೃಢಪಡುತ್ತಿದ್ದಂತೆ ಬೆಂಗಳೂರು ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಿಚನ್ ಬಂದ್ ಮಾಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಕ್ಟೋರಿಯಾ ಆಸ್ಪತ್ರೆ ಕಿಚನ್ ನಿಂದ ತಿಂಡಿ, ಊಟ ಸಪ್ಲೈ ಮಾಡಲಾಗುತ್ತಿದೆ.ಇಂದು ಬೆಳಗ್ಗೆ ವಿದ್ಯಾರ್ಥಿಗಳಿಗೆ ಬ್ರೆಡ್ ಹಾಗೂ ಬಾಳೆಹಣ್ಣು ಹಂಚಿಕೆ ಮಾಡಲಾಗಿದೆ. +ಹಾಸ್ಟೆಲ್ ವಾರ್ಡನ್ ಸಸ್ಪೆಂಡ್;ಮೆಡಿಕಲ್ ಕಾಲೇಜಿನ ಹಾಸ್ಟೆಲ್‍ನಲ್ಲಿ ಕಾಲರಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿನ ವಾರ್ಡನ್ ಅಖಿಲಾಂಡೇಶ್ವರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. +ಹಾಸ್ಟೆಲ್ ತೊರೆದ ವಿದ್ಯಾರ್ಥಿಗಳು:ಕಾಲರಾ ಇರುವುದು ತಿಳಿಯುತ್ತಿದ್ದಂತೆ ಕೆಲ ಮೆಡಿಕಲ್ ವಿದ್ಯಾರ್ಥಿಗಳು ಹಾಸ್ಟೆಲ್ ತೊರೆದಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದಿರುವ ಕೆಲ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್ ಖಾಲಿ ಮಾಡಿ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಅಲ್ಲೇ ಉಳಿದುಕೊಂಡಿರುವ ವಿದ್ಯಾರ್ಥಿಗಳು ಅಲ್ಲಿನ ನೀರು ಕುಡಿಯದೆ ಬಾಟಲ್ ವಾಟರ್‍ಗೆ ಮೊರೆ ಹೋಗಿದ್ದಾರೆ. \ No newline at end of file diff --git a/eesanje/url_46_184_5.txt b/eesanje/url_46_184_5.txt new file mode 100644 index 0000000000000000000000000000000000000000..f697b28382acbde3e08a364d64475d2ac766a654 --- /dev/null +++ b/eesanje/url_46_184_5.txt @@ -0,0 +1,4 @@ +ಡಿಸಿಎಂ ಡಿಕೆಶಿ ಉಪಹಾರ ಕೂಟದಲ್ಲಿ ಬಿಜೆಪಿ ಶಾಸಕ ಕೆ.ಪಿ.ನಂಜುಂಡಿ +ಬೆಂಗಳೂರು,ಏ.7- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಅವರೊಂದಿಗೆ ಉಪಹಾರ ಕೂಟದಲ್ಲಿ ಭಾಗವಹಿಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.ಲೋಕಸಭಾ ಚುನಾವಣಾ ನಿಟ್ಟಿನಲ್ಲಿ ನಾನಾರೀತಿಯ ರಾಜಕೀಯ ತಂತ್ರಗಾರಿಕೆಯನ್ನು ಅನುಸರಿಸುತ್ತಿರುವ ಡಿ.ಕೆ.ಶಿವಕುಮಾರ್‍ರವರು ಪಕ್ಷದ ಸಂಘಟನಾತ್ಮಕ ಬಲವನ್ನು ಸದೃಢಗೊಳಿಸಲು ಯತ್ನಿಸುತ್ತಿದ್ದಾರೆ. ವಿಶ್ವಕರ್ಮ ಸಮುದಾಯದ ಪ್ರಭಾವಿ ನಾಯಕರೂ ಆಗಿರುವ ಕೆ.ಪಿ.ನಂಜುಂಡಿ, ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಅವಧಿಯ ಸೇವೆ ಸಲ್ಲಿಸಿದ್ದರು. +ವಿಧಾನಪರಿಷತ್ ಸದಸ್ಯ ಸ್ಥಾನ, ವಿಧಾನಸಭೆಯಲ್ಲಿ ಸ್ರ್ಪಧಿಸುವ ಅವಕಾಶ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರಾದರೂ ಕಾಂಗ್ರೆಸ್‍ನಲ್ಲಿ ಮನ್ನಣೆ ಸಿಗಲಿಲ್ಲ. ಹೀಗಾಗಿ ಬಿಜೆಪಿಗೆ ವಲಸೆ ಹೋಗಿದ್ದರು. ಅಲ್ಲಿ ಯಡಿಯೂರಪ್ಪ ಅವರು ಕೆ.ಪಿ.ನಂಜುಂಡಿ ಅವರನ್ನು ವಿಧಾನಪರಿಷತ್‍ನ ಸದಸ್ಯರನ್ನಾಗಿ ಮಾಡಿತ್ತು. ಮುಂದಿನ ಜೂನ್ ವೇಳೆಗೆ ಅವರ ಅಧಿಕಾರವಾಧಿ ಪೂರ್ಣಗೊಳ್ಳಲಿದೆ. ಈ ನಡುವೆ ಕಾಂಗ್ರೆಸ್ ಅಧ್ಯಕ್ಷರ ಜೊತೆ ನಂಜುಂಡಿ ಅವರು ಉಪಹಾರ ಕೂಟ ನಡೆಸಿರುವುದು ಕುತೂಹಲ ಕೆರಳಿಸಿದೆ. +ಇದೊಂದು ಸೌಜನ್ಯದ ಭೇಟಿ ಎಂದು ಹೇಳಲಾಗಿದೆಯಾದರೂ ನಾನಾ ರೀತಿಯ ರಾಜಕೀಯ ತಂತ್ರಗಾರಿಕೆಗಳು ಭೇಟಿಯ ಹಿಂದೆ ನಡೆದಿವೆ. ನಂಜುಂಡಿ ಅವರನ್ನು ಮರಳಿ ಕಾಂಗ್ರೆಸ್ ಪಕ್ಷಕ್ಕೆ ತರಲು ಗಾಳ ಹಾಕಲಾಗಿದೆ. ವಿಶ್ವಕರ್ಮ ಸಮುದಾಯದ ರಾಜ್ಯಾಧ್ಯಕ್ಷರೂ ಆಗಿರುವ ಕೆ.ಪಿ.ನಂಜುಂಡಿ ಅವರು ಕಾಂಗ್ರೆಸ್‍ಗೆ ಮರಳಿದ್ದೇ ಆದರೆ ಹಲವು ಕ್ಷೇತ್ರಗಳಲ್ಲಿ ರಾಜಕೀಯವಾಗಿ ಲಾಭವಾಗಲಿದೆ ಎಂಬ ವಿಶ್ಲೇಷಣೆಗಳಿವೆ. \ No newline at end of file diff --git a/eesanje/url_46_184_6.txt b/eesanje/url_46_184_6.txt new file mode 100644 index 0000000000000000000000000000000000000000..1b4e93dd9446d6a8baa6048153a30612f3ee11e7 --- /dev/null +++ b/eesanje/url_46_184_6.txt @@ -0,0 +1,6 @@ +ಮೋದಿ ಅವರ ಅಪ್ಪನ ಮನೆಯ ಆಸ್ತಿಯೇ : ಈಶ್ವರಪ್ಪ +ಶಿವಮೊಗ್ಗ,ಏ.7- ಪ್ರಧಾನಿ ನರೇಂದ್ರಮೋದಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಅಪ್ಪನ ಮನೆಯ ಆಸ್ತಿ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪ್ರಚಾರಕ್ಕೆ ಮೋದಿಯವರ ಫೋಟೋ ಬಳಸಬಾರದು ಎನ್ನಲು ನರೇಂದ್ರಮೋದಿ ಅಶೋಕ್ ಅವರ ಅಪ್ಪನ ಮನೆಯ ಆಸ್ತಿಯೇ ಎಂದು ಪ್ರಶ್ನೆ ಮಾಡಿದರು. +ಮೋದಿಯವರು ಈ ದೇಶದ ಪ್ರಧಾನಿ. ನನಗೆ ನನ್ನ ಫೋಟೋ ಬಳಸಬಾರದೆಂದು ಮೋದಿ ಹೇಳಿದರೆ ಅದನ್ನು ಕೇಳುತ್ತೇನೆ. ಅದನ್ನು ಬಿಟ್ಟು ಅಶೋಕ್ ಸೇರಿದಂತೆ ಬೇರೆ ಯಾರೇ ಹೇಳಿದರೂ ನಾನು ತಲೆ ಕೆಡಸಿಕೊಳ್ಳುವುದಿಲ್ಲ. ಅಷ್ಟಕ್ಕೂ ಮೋದಿ ಬಿಜೆಪಿ ಆಸ್ತಿಯೇ ಹೊರತು ಅಶೋಕ್ ಅಥವಾ ಇನ್ಯಾರದೋ ಮನೆಯ ಆಸ್ತಿಯಲ್ಲ ಎಂದು ತಿರುಗೇಟು ನೀಡಿದರು. +ನನಗೆ ನಾಮಪತ್ರ ಹಿಂಪಡೆಯಲು ಅನೇಕರಿಂದ ಒತ್ತಡ ಬರುತ್ತಿದೆ. ಆದರೆ ನನ್ನ ಸಾವಿರಾರು ಹಿತೈಷಿಗಳು ನಾಮಪತ್ರ ಹಿಂಪಡೆಯಬಾರದೆಂದು ನನಗೆ ಒತ್ತಡ ಹಾಕುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈಗಾಗಲೇ ನಾನು ಸಾಕಷ್ಟು ದೂರ ಸಾಗಿದ್ದೇನೆ. ನನ್ನನ್ನು ಮನವೊಲಿಸುವ ಪ್ರಯತ್ನಗಳು ಈಡೇರುವುದಿಲ್ಲ. ನನ್ನ ನಿರ್ಧಾರ ಈಗಲೂ ಅಚಲ ಎಂದು ಹೇಳಿದರು. +ದೆಹಲಿಗೆ ಬರುವಂತೆ ಗೃಹಸಚಿವ ಅಮಿತ್ ಷಾ ಅವರು ನನಗೆ ಸೂಚಿಸಿದರು. ಅವರ ಮಾತಿಗೆ ಬೆಲೆ ಕೊಟ್ಟು ನಾನು ಹೋಗಿದ್ದೆ. ಕೊನೆ ಕ್ಷಣದಲ್ಲಿ ಬೇರೆ ಕಾರ್ಯಕ್ರಮಗಳ ಒತ್ತಡದಿಂದಾಗಿ ನನ್ನನ್ನು ಭೇಟಿಯಾಗಲು ಸಾಧ್ಯವಿಲ್ಲ. ಇದಕ್ಕೆ ನಾನು ತಲೆಕೆಡಿಸಿಕೊಳ್ಳುವುದೂ ಇಲ್ಲ. ನನ್ನ ಸ್ಪರ್ಧೆಗೆ ಹಿರಿಯರ ಸಮ್ಮತಿ ಇದೆ ಎಂದು ಭಾವಿಸುತ್ತೇನೆ ಎಂದರು. +ಶಿವಮೊಗ್ಗದಲ್ಲಿ ಈ ಬಾರಿ ಅಚ್ಚರಿ ಫಲಿತಾಂಶ ಬರಲಿದೆ. ನಾನು ಗೆದ್ದು ಪ್ರಧಾನಿ ನರೇಂದ್ರಮೋದಿಯವರ ಕೈ ಬಲಪಡಿಸುತ್ತೇನೆ. ಯಾರು ಏನೇ ಮಾತನಾಡಿಕೊಳ್ಳಲಿ ಅದಕ್ಕೆ ಸೊಪ್ಪು ಹಾಕುವುದಿಲ್ಲ. ಈಶ್ವರಪ್ಪ ಎಂದಿಗೂ ಯಾರಿಗೂ ಜಗ್ಗುವ ಮನುಷ್ಯನಲ್ಲ. ನನ್ನ ತೀರ್ಮಾನ ಪಕ್ಷದ ಉಳಿವಿಗಾಗಿ ಎಂದು ಈಶ್ವರಪ್ಪ ಹೇಳಿದರು. \ No newline at end of file diff --git a/eesanje/url_46_184_7.txt b/eesanje/url_46_184_7.txt new file mode 100644 index 0000000000000000000000000000000000000000..4bd92da9eaff988c163b4932d017c668107a0203 --- /dev/null +++ b/eesanje/url_46_184_7.txt @@ -0,0 +1,9 @@ +ಏ. 14ರಂದು ಕರ್ನಾಟಕದಲ್ಲಿ ಮೋದಿ ಪ್ರಚಾರದ ಕಹಳೆ, ರೋಡ್ ಶೋಗೆ ಸಿದ್ಧತೆ +ಬೆಂಗಳೂರು,ಏ.7- ಶತಾಯಗತಾಯ ರಾಜ್ಯದಲ್ಲಿ ಈ ಬಾರಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ದಾಖಲೆ ಬರೆಯುವ ಹೆಗ್ಗುರಿಯೊಂದಿಗೆ ಪ್ರಧಾನಿ ನರೇಂದ್ರಮೋದಿ ಅವರು ಇದೇ 14ರಂದು ರಾಜ್ಯದಲ್ಲಿ ವಿಧ್ಯುಕ್ತವಾಗಿ ಪ್ರಚಾರದ ರಣಕಹಳೆ ಮೊಳಗಿಸಲಿದ್ದಾರೆ. ಇದೇ ತಿಂಗಳ 26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ವಿಶೇಷವಾಗಿ ಒಕ್ಕಲಿಗರ ಬಾಹುಳ್ಯ ವಿರುವ ಕ್ಷೇತ್ರದಲ್ಲಿ ಮೋದಿಯವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬೃಹತ್ ಸಾರ್ವಜನಿಕ ಸಭೆ ಹಾಗೂ ಕೆಲವು ಕಡೆ ರೋಡ್ ಶೋಗಳನ್ನು ನಡೆಸಲಿದ್ದಾರೆ. +ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ದಿನದಂದು ಶಿವಮೊಗ್ಗದಲ್ಲಿ ಪ್ರಚಾರ ನಡೆಸಿದ್ದ ಮೋದಿಯವರು ಇದೇ ಮೊದಲ ಬಾರಿಗೆ ವಿದ್ಯುಕ್ತವಾಗಿ ಪ್ರಚಾರಕ್ಕೆ ಧುಮುಕಲಿದ್ದು, ಚುನಾವಣಾ ಕಾವು ರಂಗೇರಿಸಲಿದ್ದಾರೆ. 14ರಂದು ಭಾನುವಾರ ಕರ್ನಾಟಕಕ್ಕೆ ಆಗಮಿಸಲಿರುವ ಮೋದಿಯವರು ಮೂರು ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ಪ್ರಚಾರ ನಡೆಸಲಿದ್ದಾರೆ. ಮೊದಲು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಸುವ ಮೋದಿಯವರು ಎನ್‍ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಮತಯಾಚನೆ ಮಾಡಲಿದ್ದಾರೆ. +ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಮೋದಿಯವರು ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ನಂತರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲೂ ಮತ್ತೊಂದು ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದಾರೆ. +ದೇವನಹಳ್ಳಿಯಲ್ಲಿ ಪ್ರಚಾರ ನಡೆಸಿದರೆ ಅದು ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರಿಗೆ ವರದಾನವಾಗಲಿದೆ ಎಂಬ ಲೆಕ್ಕಾಚಾರವಿದೆ. ಇನ್ನೊಂದು ಮೂಲದ ಪ್ರಕಾರ ದೇವನಹಳ್ಳಿಯಲ್ಲಿ ಸಾಧ್ಯವಾಗದಿದ್ದರೆ ರಾಮನಗರ, ಚನ್ನಪಟ್ಟಣ ಮಧ್ಯಭಾಗದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಸೇರಿಸಿ ಸಮಾವೇಶ ನಡೆಸಲು ಬಿಜೆಪಿ ಉದ್ದೇಶಿಸಿದೆ ಎಂದು ತಿಳಿದುಬಂದಿದೆ. +ಬೆಂಗಳೂರು ಗ್ರಾಮಾಂತರ ಕ್ಷೇತ್ರವು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತವರು ಕ್ಷೇತ್ರವಾಗಿದ್ದು, ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹೆಸರಾಂತ ಹೃದಯತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಕಣದಲ್ಲಿರುವುದರಿಂದ ಅವರಿಗೆ ಪ್ರಬಲ ಸರ್ಧೆ ಒಡ್ಡಲು ಡಾ.ಮಂಜುನಾಥ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಈಗಾಗಲೇ ಚನ್ನಪಟ್ಟಣದಲ್ಲಿ ಒಂದು ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರೋಡ್ ಶೋ ನಡೆಸಿ ಪ್ರಚಾರಕ್ಕೆ ಚಾಲನೆ ಕೊಟ್ಟಿದ್ದರು. ಇದೀಗ ರಾಮನಗರ ಚನ್ನಪಟ್ಟಣ ಮಧ್ಯಭಾಗದಲ್ಲಿ ಬೃಹತ್ ಸಮಾವೇಶ ನಡೆಸಬೇಕೆಂಬ ಚಿಂತನೆ ಬಿಜೆಪಿ ಪಾಳೆಯದಲ್ಲಿದೆ. +14ರಂದು ಸಂಜೆ ನರೇಂದ್ರಮೋದಿ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬ್ಯಾಟರಾಯನಪುರ ಮತ್ತು ಹೆಬ್ಬಾಳದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇಲ್ಲಿನ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಲಿರುವ ಮೋದಿಯವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಮತದಾರರಿಗೆ ಮನವರಿಕೆ ಮಾಡುವರು. +ಭಾನುವಾರ ರಜಾದಿನವಾಗಿದ್ದರಿಂದ ಬೆಂಗಳೂರಿನಲ್ಲಿ ಅಷ್ಟೊಂದು ಜನ ದಟ್ಟಣೆ ಇಲ್ಲವೇ ವಾಹನ ಸಂಚಾರ ದಟ್ಟಣೆ ಇರುವುದಿಲ್ಲ ಎಂಬ ಕಾರಣಕ್ಕಾಗಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸುಮಾರು 10 ಕಿ.ಮೀ ರೋಡ್ ಶೋ ನಡೆಸಲು ಬಿಜೆಪಿ ಮುಂದಾಗಿದೆ. ಈಗಾಗಲೇ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ನೀಲನಕ್ಷೆಯನ್ನು ಸಿದ್ದಪಡಿಸಲಾಗಿದೆ. +ಏ.14ರ ನಂತರ ನರೇಂದ್ರ ಮೋದಿಯವರು ಮೈಸೂರು ಮತ್ತು ಚಾಮರಾಜನಗರ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಮತ್ತೊಂದು ಬೃಹತ್ ಸಮಾವೇಶ ನಡೆಸುವ ಸಾಧ್ಯತೆ ಇದೆ. ಮೊದಲ ಹಂತದ ಚುನಾವಣೆಯಲ್ಲಿ ನರೇಂದ್ರಮೋದಿ ಅವರು ಸುಮಾರು 4ರಿಂದ 6 ಬೃಹತ್ ಸಮಾವೇಶಗಳನ್ನು ನಡೆಸುವ ಸಂಭವವಿದೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮೋದಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.ಯುಗಾದಿ ಹಬ್ಬದ ನಂತರ ಪ್ರಚಾರ ಕಾವೇರಿಲಿದ್ದು, ಮೋದಿ ರಣತಂತ್ರವನ್ನು ಹೆಣೆದಿದ್ದಾರೆ. \ No newline at end of file diff --git a/eesanje/url_46_184_8.txt b/eesanje/url_46_184_8.txt new file mode 100644 index 0000000000000000000000000000000000000000..e6e64d8652f7929b7d825cde2d15e295f695ab5e --- /dev/null +++ b/eesanje/url_46_184_8.txt @@ -0,0 +1,4 @@ +ಚಿತ್ರದುರ್ಗ; ಖಾಸಗಿ ಬಸ್ ಪಲ್ಟಿ, ಮೂವರ ಸಾವು.. +ಚಿತ್ರದುರ್ಗ, ಏ.7- ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಹೊಳಲ್ಕೆರೆ ಸಮೀಪದ ಹನುಮಂತ ಕಣಿವೇ ತಿರುವಿನ ಬಳಿ ಉರುಳಿಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮುಂಜಾನೆ ನಡೆದಿದೆ. +ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಟ್ರಾವಲ್ಸ್‍ನ ಬಸ್‍ನಲ್ಲಿ ಸುಮಾರು 50 ಜನರು ಪ್ರಯಾಣಿಸುತ್ತಿದ್ದರು ಹೊಳಲ್ಕೆರೆ ಪಟ್ಟಣ ಹೊರವಲಯದ ಅರಣ್ಯ ಕಚ್ಚೇರಿ ಸಮೀಪ ಮುಂಜಾನೆ 4.30ರ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಸಾಗರದ ಜಗದೀಶ್ ,ಹೊನಾವರ ಮೂಲದ ಗಣೇಶ್ ಎಂದು ಗುರುತಿಸ ಲಾಗಿದೆ ಹಾಗೂ ಮತ್ತೊಬ್ಬ ಪುರುಷನ ಗುರುತು ಪತ್ತೆ ಹಚ್ಚಲಾಗುತ್ತಿದೆ ಗಾಯಾಳುಗಳಲ್ಲಿ 10 ಮಂದಿ ಮಹಿಳೆಯರು 6 ಮಕ್ಕಳಿದ್ದು ಎಲ್ಲರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ, +ಚಾಲಕ ತಿರುವಿನಲ್ಲಿ ಎಚ್ಚರ ತಪ್ಪಿದ್ದರಿಂದ ಈ ದುರಂತ ಸಂಭವಿಸಿದೆ .ಬಸ್ ಉರಿಳಿದಾಗ ಕೆಲವರು ನಿದ್ರಿಸುತ್ತಿದ್ದರು ಇದರಿಂದ ಸಾವು ನೋವು ಹೆಚ್ಚಾಗಿದೆ,ಪ್ರಯಾಣಿರ ವಸ್ತುಗಳು ಚಲಾಪಿಲ್ಲಿಯಾಗಿ ಬಿದ್ದಿದ್ದು ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಮತ್ತವರ ತಂಡ,ಅಗ್ನಿಶಮಕ ಸಿಬ್ಭಂದಿ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ, ಆಂಬುಲೆನ್ಸ್‍ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಅಪಘಾತದ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದೆ .ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_184_9.txt b/eesanje/url_46_184_9.txt new file mode 100644 index 0000000000000000000000000000000000000000..ecc2a4350b5e8a374827e7d20fbd15ab9fc8ff9b --- /dev/null +++ b/eesanje/url_46_184_9.txt @@ -0,0 +1,7 @@ +ದಿನೇಶ್ ಗುಂಡೂರಾವ್ ಮಾನಸಿಕ ಅಸ್ವಸ್ಥರಾಗಿದ್ದಾರೆ : ಬಿಜೆಪಿ +ಬೆಂಗಳೂರು,ಏ.6-ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ವ್ಯಕ್ತಿಯೊಬ್ಬರನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದ ಸುದ್ದಿ ಉಲ್ಲೇಖಿಸಿ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ಸಚಿವ ದಿನೇಶ್ ಗುಂಡೂರಾವ್ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥ ರಾಗಿದ್ದಾರೆ ಎಂದು ಟೀಕಿಸಿದೆ. +ಕಾಂಗ್ರೆಸ್ ಐಟಿ ಸೆಲ್ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ. ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ? ಎಂದು ಬಿಜೆಪಿ ಪ್ರಶ್ನಿಸಿದೆ. ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ. ಕೂಡಲೇ ರಾಜ್ಯದ ಜನರ ಮುಂದೆ ಕ್ಷಮೆ ಕೇಳಿ ಮಾನ ಉಳಿಸಿಕೊಳ್ಳಿ ಎಂದು ಆಗ್ರಹಿಸಿದೆ. +ಟ್ವೀಟ್ನಲ್ಲಿ ಏನಿತ್ತು:ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಪೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದರು. +ರಾಷ್ಟ್ರದ ಭದ್ರತೆ ವಿಚಾರವನ್ನೂ ಲೆಕ್ಕಿಸದೇ ರಾಮೇಶ್ವರಂ ಬಾಂಬ್ ಸ್ಪೋಟ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಹೊರಿಸಿದ ರಾಜ್ಯ ಬಿಜೆಪಿ ನಾಯಕರು ಈಗ ಉತ್ತರ ನೀಡಲೇ ಬೇಕು ಎಂದಿದ್ದರು. +ಸಚಿವ@dineshgraoನಿಜಕ್ಕೂ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕಾಂಗ್ರೆಸ್‌ ಐಟಿ ಸೆಲ್‌ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯವೆಂದು ಬಿಂಬಿಸಲು ಹೊರಟಿದ್ದಾರೆ.ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ?ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ.…://./KQtw9UjTYV +ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ.ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದೆ ಎಂದ ಮೇಲೆ…../ \ No newline at end of file diff --git a/eesanje/url_46_185_1.txt b/eesanje/url_46_185_1.txt new file mode 100644 index 0000000000000000000000000000000000000000..00b914fda2974a8688511f07f94e13c2c834ca5b --- /dev/null +++ b/eesanje/url_46_185_1.txt @@ -0,0 +1,13 @@ +ಚುನಾವಣಾ ಅಕ್ರಮಗಳ ತಡೆಗೆ ಖುದ್ದು ಫೀಲ್ಡಿಗಿಳಿದ ಡಿಸಿ, ಎಸ್ಪಿ ಗಳು +ಬೆಂಗಳೂರು,ಏ.6-ಚುನಾವಣಾ ಅಕ್ರಮಗಳ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಹಲವೆಡೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಕಾಧಿರಿಗಳೇ ಅಖಾಡಕ್ಕಿಳಿದು ಖುದ್ದು ಪರಿಶೀಲನೆ ನಡೆಸಲಾರಂಭಿಸಿದ್ದಾರೆ. +ಕೇಂದ್ರ ಚುನಾವಣಾ ಆಯೋಗ ಗುರುವಾರ ಎಲ್ಲಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್ ಮಹಾನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ನಿಷ್ಪಕ್ಷಪಾತ , ನಿರ್ಭೀತ, ನ್ಯಾಯಸಮ್ಮತ ಹಾಗೂ ಕಳಂಕರಹಿತ ಚುನಾವಣೆಯ ಪರಿಸ್ಥಿತಿಯನ್ನು ಖಾತ್ರಿಪಡಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿತು. +ಜೊತೆಗೆ ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ಗಡಿಭಾಗಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಎಚ್ಚರಿಕೆ ನೀಡಿತ್ತು. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಡಳಿತಗಳಿಗೆ ಮಾರ್ಗಸೂಚಿಯನ್ನು ರವಾನಿಸಿದ್ದು, ಅದರ ಆಧಾರದ ಮೇಲೆ ಇಂದು ಹಲವು ಕಡೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಕಾಧಿರಿಗಳು ಕ್ಷೇತ್ರ ಮಟ್ಟದ ಪರಿಶೀಲನೆ ನಡೆಸಿದ್ದಾರೆ. +ತುಮಕೂರಿನಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಲ್ಲಿ ಖುದ್ದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅಶೋಕ್ರವರು ಹಾಜರಿದ್ದು, ಪರಿಶೀಲನೆ ನಡೆಸಿದರು. ಚೆಕ್ ಪೋಸ್ಟ್ ಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಖುದ್ದು ಪರಿಶೀಲಿಸಿದ್ದಲ್ಲದೆ, ಅಂತರ ಜಿಲ್ಲೆಗಳಿಗೆ ಸಂಚರಿಸುವ ಸಾರಿಗೆ ಬಸ್ಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. +ಪ್ರಯಾಣಿಕರ ಸೋಗಿನಲ್ಲಿ ಸಾಗಿಸಲಾಗುವ ಲಗೇಜ್ಗಳಲ್ಲಿ ಅನುಮಾನಾಸ್ಪದ ವಸ್ತುಗಳಿದ್ದರೆ ಅದನ್ನು ಪರಿಶೀಲಿಸುವಂತೆಯೂ ಸೂಚನೆ ನೀಡಲಾಗಿದೆ.ಮತ್ತೊಂದೆಡೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಟೇಲ್ ಚೆಕ್ ಪೊಸ್ಟ್ಗಳಲ್ಲಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಬೆಳಗಾವಿ, ಮಹಾರಾಷ್ಟ್ರ ದೊಂದಿಗೆ ಗಡಿ ಹಂಚಿಕೊಂಡಿದ್ದು, 24 ಗಡಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಒಟ್ಟು 66 ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳು ಹಗಲು-ರಾತ್ರಿ ಮೂರು ಪಾಳಿಯದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. +ಈವರೆಗೂ 40 ಲಕ್ಷ ರೂ.ಗಳ ಮೌಲ್ಯದ ನಗದು ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 2ನೇ ಹಂತದ ಚುನಾವಣಾ ಅಭ್ಯರ್ಥಿಗೆ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ ಬಳಿಕ ಮತ್ತಷ್ಟು ವಸ್ತುಗಳು ಜಪ್ತಿಯಾಗಬಹುದು ಎಂದು ಜಿಲ್ಲಾಧಿಕಾರಿ ನಿತೀಶ್ ಪಟೇಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಈ ಮೊದಲು ವಿಧಾನಸಭಾ ಚುನಾವಣೆ ವೇಳೆ ಇದೇ ಚೆಕ್ ಪೋಸ್ಟ್ ನಲ್ಲಿ ಭಾರಿ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳು ಪತ್ತೆಯಾಗಿದ್ದವು. ಪ್ರಸ್ತುತ ಸಾರ್ವತ್ರಿಕ ಚುನಾವಣೆ ದೇಶದೆಲ್ಲೆಡೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿರುವುದರಿಂದಾಗಿ ಅಕ್ರಮಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. +200 ಕೋಟಿ ರೂ. ಮೌಲ್ಯದ ಗಡಿ ದಾಟುತ್ತಿರುವ ಅಕ್ರಮ :ಕಳೆದ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ನಡೆದ ಒಟ್ಟು ಕಾರ್ಯಾಚರಣೆಯಲ್ಲಿ ಸರಿಸುಮಾರು 100 ಕೋಟಿ ರೂ.ಗಳಷ್ಟು ವಸ್ತುಗಳು ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ ವಿಧಾನಸಭೆಯ ಚುನಾವಣೆಯನ್ನೂ ಮೀರಿದ ಚುನಾವಣಾ ಅಕ್ರಮಗಳ ಸನ್ನದು ಕಂಡುಬರುತ್ತಿದೆ. +ಮಾ.16 ರಂದು ಕೇಂದ್ರ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಅಂದಿನಿಂದಲೂ ನೀತಿ ಸಂಹಿತೆ ಜಾರಿಯಲ್ಲಿದೆ. 21 ದಿನಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 195 ಕೋಟಿ ರೂ. ಮೌಲ್ಯದ ಚುನಾವಣಾ ಅಕ್ರಮಕ್ಕೆ ಸಂಬಂಧಪಟ್ಟಂತಹ ನಗದು ಹಾಗೂ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ನಿನ್ನೆ ಒಂದೇ ದಿನ ಆದಾಯ ತೆರಿಗೆ ಇಲಾಖೆ 4 ಕೋಟಿ ರೂ.ಗೂ ಅಕ ಮೊತ್ತವನ್ನು ಜಪ್ತಿ ಮಾಡಿತ್ತು. ಈವರೆಗೂ 34.59 ಕೋಟಿ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. 1.79 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳನ್ನು, 11.10 ಕೋಟಿ ರೂ. ಮೌಲ್ಯದ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ಈವರೆಗೂ 133 ಕೋಟಿ ರೂ. ಮೊತ್ತದ 133 ಲೀಟರ್ ಮದ್ಯವನ್ನು ಚುನಾವಣಾ ಕರ್ತವ್ಯದಲ್ಲಿರುವ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.5.35 ಕೋಟಿ ರೂ. ಮೌಲ್ಯದ 333 ಕೆ.ಜಿ. ಮಾದಕ ದ್ರವ್ಯ ಸಿಕ್ಕಿಬಿದ್ದಿದ್ದರೆ, 9.43 ಕೋಟಿ ರೂ. ಮೌಲ್ಯದ 16 ಕೆ.ಜಿ. ಗೂ ಅಕ ಪ್ರಮಾಣದ ಚಿನ್ನ, 27 ಲಕ್ಷ ರೂ. ಮೌಲ್ಯದ 59 ಕೆ.ಜಿ. ಬೆಳ್ಳಿ, 9 ಲಕ್ಷ ರೂ. ಮೌಲ್ಯದ 21 ಕ್ಯಾರೆಟ್ ವಜ್ರವನ್ನು ವಶಪಡಿಸಿಕೊಳ್ಳಲಾಗಿದೆ. +ಹಿರಿಯ ಅಧಿಕಾರಿಗಳು ಖುದ್ದು ಅಖಾಡಕ್ಕೆ ಇಳಿದಿರುವುದರಿಂದಾಗಿ ತಪಾಸಣೆ ಮತ್ತಷ್ಟು ಬಿಗಿಯಾಗಲಿದ್ದು, ಮುಂದಿನ ದಿನಗಳಲ್ಲಿ ಚುನಾವಣಾ ಅಕ್ರಮ ನಡೆಸುವವರಿಗೆ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_185_10.txt b/eesanje/url_46_185_10.txt new file mode 100644 index 0000000000000000000000000000000000000000..b08cbbc48f05494afe673ad1060c11049e6d54ca --- /dev/null +++ b/eesanje/url_46_185_10.txt @@ -0,0 +1,13 @@ +ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಜೈಲಲ್ಲಿರುವ ಮಾಝ್ ಮುನೀರ್ A1 +ನವದೆಹಲಿ,ಏ.6-ಕರ್ನಾಟಕದ ರಾಜಧಾನಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಕಳೆದ ಮಾರ್ಚ್ 1ರಂದು ನಡೆದ ಸ್ಪೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಮಹತ್ವದ ಮಾಹಿತಿ ಬಹಿರಂಗಪಡಿಸಿದೆ.ಈ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸಹ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎಂದು ತನಿಖಾ ಸಂಸ್ಥೆ ಗುರುತಿಸಿದೆ. +ಶಿವಮೊಗ್ಗದಲ್ಲಿ ಟ್ರಯಲ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿದ ಮಾಝ್ ಮುನೀರ್‍ನನ್ನೇ ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರುವ ಮೊದಲೇ ಕೆಲವೊಂದು ಕಡೆ ಸ್ಫೋಟಕ್ಕೆ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಆತನನ್ನೇ ಎ1 ಆರೋಪಿಯನ್ನಾಗಿ ಮಾಡಿದೆ. +ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲ್ಲಿನಲ್ಲಿದ್ದ ಮಾಝ್ ಮುನೀರ್‍ನನ್ನು ಎನ್‍ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೈಲಿನಲ್ಲಿ ದಾಳಿ ನಡೆಸಿದ ಬಳಿಕ ಮಾಝ್ ಬ್ಯಾರಕ್‍ನಲ್ಲಿ ಕೆಲವೊಂದು ಪತ್ರಗಳು ಸಿಕ್ಕಿದ್ದವು. ಅವುಗಳು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ ಹಿನ್ನೆಲೆಯಲ್ಲಿ ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. +ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಮತೀನ್ ಮತ್ತು ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದ್ದು, ಈಗ ಬಂಧನ ಆಗಿರೋ ಮುಜಾಮಿಲ್ ಷರೀಫ್ ನಾಲ್ಕನೇ ಆರೋಪಿಯನ್ನಾಗಿ ಮಾಡಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. +ಇಬ್ಬರೂ ತೀರ್ಥಹಳ್ಳಿಯವರು:ಬೆಂಗಳೂರಿನ ಬ್ರೂಕ್‍ಫೀಲ್ಡ್‍ನ ಐಟಿಪಿಎಲ್ ರಸ್ತೆಯಲ್ಲಿರುವ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್, ಅಬ್ದುಲ್ ಇಬ್ಬರೂ ಕೂಡ ಶಿವಮೊಗ್ಗದ ತೀರ್ಥಹಳ್ಳಿಯವರಾಗಿದ್ದಾರೆ. +ತಲೆಮರೆಸಿಕೊಂಡಿರುವ ಇವರ ಪತ್ತೆ ಹಚ್ಚುವ ಮತ್ತು ಬಂಸುವ ನಿಟ್ಟಿನಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದ 18 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಎನ್‍ಐಎ ಮೂಲಗಳು ಮಾಹಿತಿ ನೀಡಿವೆ.ಇದಲ್ಲದೆ, ಪ್ರಮುಖ ಆರೋಪಿಗಳಿಗೆ ಸೋಟಕ ಸಾಮಗ್ರಿ ಪೂರೈಸಿದ ಚಿಕ್ಕಮಗಳೂರಿನ ಕಳಸಾ ನಿವಾಸಿ ಮುಝಮ್ಮಿಲ್ ಶರೀಫ್ ಎಂಬಾತನನ್ನು ಮಾರ್ಚ್ 26ರಂದು ಬಂಸಲಾಗಿದೆ. +ಪೊಲೀಸ್ ಕಸ್ಟಡಿಯಲ್ಲಿರುವ ಈತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಸಾಕ್ಷ್ಯಗಳು ಮತ್ತು ಮಾಹಿತಿಗಳನ್ನು ಸಂಗ್ರಹಿಸಲು ಎನ್‍ಐಎ ತಲೆಮರೆಸಿಕೊಂಡಿರುವ ಮತ್ತು ಬಂಧಿತ ಆರೋಪಿಗಳ ಕಾಲೇಜು ಮತ್ತು ಶಾಲಾ ಸ್ನೇಹಿತರು ಸೇರಿದಂತೆ ಎಲ್ಲ ಪರಿಚಯಸ್ಥರನ್ನು ಕರೆಸಿ ವಿಚಾರಣೆ ನಡೆಸುತ್ತಿದೆ. +ಇದು ಭಯೋತ್ಪಾದಕ ಘಟನೆಯಾಗಿರುವುದರಿಂದ ಸಾಕ್ಷಿಗಳ ಗುರುತಿನ ಯಾವುದೇ ಮಾಹಿತಿಯು ತನಿಖೆಗೆ ಅಡ್ಡಿಯಾಗುವುದರ ಜತೆಗೆ ಅವರನ್ನು ಅಪಾಯಕ್ಕೆ ತಳ್ಳಬಹುದು. ಅಲ್ಲದೇ, ಪರಿಶೀಲಿಸದ ಸುದ್ದಿಗಳು ಪ್ರಕರಣದ ಪರಿಣಾಮಕಾರಿ ತನಿಖೆಗೂ ಅಡ್ಡಿಯಾಗಿವೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಎಲ್ಲರ ಸಹಕಾರವನ್ನು ಎನ್‍ಐಎ ಕೋರಿದೆ. +2022ರ ಆಗಸ್ಟ್ 15ರಂದು ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಶಿವಮೊಗ್ಗದಲ್ಲಿರುವ ಅಮೀರ್ ಅಹಮದ್ ವೃತ್ತದಲ್ಲಿ ಘರ್ಷಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ಬಟ್ಟೆ ಅಂಗಡಿ ನೌಕರ ಪ್ರೇಮ್‍ಸಿಂಗ್‍ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಸಿದಂತೆ ಜಬೀಯುಲ್ಲಾ ಎಂಬಾತನ ಬಂಧನವಾಗುತ್ತದೆ. ಆತನ ವಿಚಾರಣೆ ಮತ್ತು ಮೊಬೈಲ್ ದಾಖಲೆ ಪರಿಶೀಲನೆಯ ವೇಳೆ ಆತ ಹಲವರ ಜೊತೆ ಸಂವಹನ ನಡೆಸಿದ ವಿಚಾರ ತಿಳಿದು ಬರುತ್ತದೆ. ಈ ಆಧಾರದಲ್ಲಿ ತನಿಖೆ ನಡೆಸಿದಾಗ ಟ್ರಯಲ್ ಬಾಂಬ್ ಸ್ಫೋಟದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. +ಈ ಪ್ರಕರಣದ ಆರೋಪಿಯಾಗಿದ್ದ ಶಾರೀಕ್ ನಾಪತ್ತೆಯಾಗಿದ್ದ. ಆದರೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸಿಡಿಸಲು ರಿಕ್ಷಾದಲ್ಲಿ ತೆರಳುತ್ತಿದ್ದಾಗ ಬಾಂಬ್ ಸೋಟಗೊಂಡ ಪರಿಣಾಮ ಶಾರೀಕ್ ಸಿಕ್ಕಿಬಿದ್ದಿದ್ದ.ಬಂಧನಕ್ಕೆ ಒಳಗಾಗಿರುವ ಸೈಯದ್ ಯಾಸಿನ್, ಮಾಜ್ ಮುನೀರ್, ಶಾರೀಕ್ ಅಹ್ಮದ್ ಶಿಮೊಗ್ಗದ ಅಕ್ಷರ ಕಾಲೇಜಿನಲ್ಲಿ ಒಟ್ಟಿಗೆ ದ್ವಿತೀಯ ಪಿಯುಸಿ ಅಭ್ಯಾಸ ಮಾಡಿದ್ದರು. +ಬಳಿಕ ಯಾಸಿನ್ ಶಿವಮೊಗ್ಗದಲ್ಲಿ ಎಂಜಿನಿಯರಿಂಗ್ ಓದಿದ್ದರೆ ಮುನೀರ್ ಮಂಗಳೂರಿನ ಮುಡಿಪು ಸಮಿಪದ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಟೆಕ್ ಓದುತ್ತಿದ್ದ. ತೀರ್ಥಹಳ್ಳಿ ಮೂಲದ ಶಾರೀಕ್ ಮಹ್ಮದ್ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದ. +ಸೈಯದ್ ಯಾಸಿನ್ ನಿವಾಸದಿಂದ 3-4 ದೂರದಲ್ಲಿರುವ ಪುರಲೆ ಸಮೀಪದ ತುಂಗಾ ನದಿ ತೀರದ್ದಲ್ಲಿ ಇವರೆಲ್ಲ ಟ್ರಯಲ್ ಬಾಂಬ್ ಸ್ಫೋಟ ಮಾಡುತ್ತಿದ್ದರು. ಈ ಮೂವರು ಶಿವಮೊಗ್ಗವನ್ನು ಕೇಂದ್ರ ಸ್ಥಳವನ್ನಾಗಿಸಿಕೊಂಡು ಮಂಗಳೂರು ಸೇರಿದಂತೆ ವಿವಿಧೆಡೆ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು. ಮೂವರೂ ಬಾಂಬ್ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದರು. \ No newline at end of file diff --git a/eesanje/url_46_185_11.txt b/eesanje/url_46_185_11.txt new file mode 100644 index 0000000000000000000000000000000000000000..30a580f6435a91976b1d28635c305dcc47c35053 --- /dev/null +++ b/eesanje/url_46_185_11.txt @@ -0,0 +1,7 @@ +ಬೆಂಗಳೂರು : ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಾಲರಾ ದೃಢ +ಬೆಂಗಳೂರು,ಏ.6-ಏಕಾಏಕಿ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿರುವ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರ ಪೈಕಿ ಒಬ್ಬ ವಿದ್ಯಾರ್ಥಿನಿಗೆ ಕಾಲರಾ ಇರುವುದು ಪತ್ತೆಯಾಗಿದೆ. 47 ವಿದ್ಯಾರ್ಥಿನಿಯರಲ್ಲಿ 26 ವರ್ಷದ ಪ್ರಫುಲ್ಲ ಎಂಬ ವಿದ್ಯಾರ್ಥಿನಿಯ ಬ್ಲಡ್ ಸ್ಯಾಂಪಲ್ ನಲ್ಲಿ ಪಾಸಿಟಿವ್ ಬಂದಿರುವುದರಿಂದ ಅವರಿಗೆ ಕಾಲರಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಳಿದ 46 ವಿದ್ಯಾರ್ಥಿನಿಯ ರಕ್ತ ಪರೀಕ್ಷೆ ವರದಿ ಇಂದು ಬರಲಿದೆ. +ಕಳೆದ ರಾತ್ರಿ ಕಾಲೇಜಿನ ಹಾಸ್ಟಲ್‍ನಲ್ಲಿ ಏಕಾ ಏಕಿ ವಿದ್ಯಾರ್ಥಿನೀಯರು ವಾಂತಿ ಮಾಡಿಕೊಡು ತೀವ್ರ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಕೂಡಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಅದರಲ್ಲಿ 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ವೈದ್ಯರು ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ ಎಂದು ಬಿಎಂಸಿಆರ್‍ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ. +ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಾಗುತ್ತಿದೆ. ಹೆಚ್ಚು ತಾಪಮಾನ ನಡುವೆ ಬೆಂಗಳೂರಿನಲ್ಲಿ ಕಾಲರಾ ಭೀತಿ ಶುರುವಾಗಿದೆ. ಇದರಿಂದ ಆರೋಗ್ಯ ಇಲಾಖೆಗೆ ಚಿಂತೆ ಶುರುವಾಗಿದೆ. +ಹೀಗಾಗಿ ಎಲ್ಲಾ ವಿದ್ಯಾರ್ಥಿನಿಯರ ಮಾದರಿಯನ್ನು ಕಲ್ಚರ್ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಹಾಸ್ಟೆಲ್ ನ ನೀರನ್ನ ಪರಿಶೀಲಿಸಲು ಸೂಚನೆ ನೀಡಿದೆ ಇದರ ಜತೆಗೆ ನೀರಿನ ಪರೀಕ್ಷೆ ಮಾಡಿಸಲು ತೀರ್ಮಾನಿಸಿದೆ. ವಿಕ್ಟೋರಿಯಾ ಆಸ್ಪತ್ರೆಯ ಐಸಿಯು ದಾಖಲಾಗಿರುವ ವಿದ್ಯಾರ್ಥಿನಿಯರು ಬಿಟ್ಟು ಉಳಿದವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ವಿದ್ಯಾರ್ಥಿನಿಯರ ಹಾಸ್ಟೆಲಲ್ಲಿ ಕಾಲರಾ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಒಳಗೆ ಯಾರೊಬ್ಬರನ್ನೂ ಬಿಡಲಾಗುತ್ತಿಲ್ಲ; +ಇರಲಿ ಎಚ್ಚರ:ನಗರದಲ್ಲಿ ಈಗಾಗಲೇ ಕೆಲವು ಕಡೆ ವಾಂತಿ ಭೇದಿ ಪ್ರಕರಣಗಳು ಹೆಚ್ಚಾಗಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿ ಕಾಣಿಸಿಕೊಂಡಿರುವುದರಿಂದ ಜನ ಎಚ್ಚೆತ್ತುಕೊಂದು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಇಂತಹ ಸಮಯದಲಿ ಕೈ ಶುದ್ದವಾಗಿರಬೇಕು, ಕೈ ಸ್ವಚ್ಚಗೊಳಿಸಿದ ನಂತರವೇ ಆಹಾರ ಸೇವಿಸಬೇಕು, ಶುದ್ದ ಕುಡಿಯುವ ನೀರು ಬಳಸಬೇಕು, ಚರಂಡಿ ನೀರು ಅಥವಾ ಕುಡಿಯುವ ನೀರಿನ ಪೈಪ್ ಒಟ್ಟಾಗದಂತೆ ನೋಡಿಕೊಳ್ಳಬೇಕು, ಹೊರಗಿನ ಬೀದಿ ಬದಿ ಆಹಾರ ಸೇವಿಸುವುದರಿಂದ ದೂರವುಳಿಯಿರಿ ಎಂದು ವೈದ್ಯರು ಮನವಿ ಮಾಡಿಕೊಂಡಿದ್ದಾರೆ. +ಈಗಾಗಲೇ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಹೋಟೆಲ್‍ಗಳಲ್ಲಿ ಗ್ರಾಹಕರುಗಳಿಗೆ ಕುದಿಸಿ ಆರಿಸಿದ ನೀರು ಪೂರೈಕೆ ಮಾಡುವಂತೆ ಸೂಚನೆ ನೀಡಿದೆ ಇದರ ಜತೆಗೆ ಜನರು ಎಚ್ಚೆತ್ತುಕೊಳ್ಳುವುದರಿಂದ ಕಾಲರಾದಿಂದ ಬಚಾವ್ ಆಗಬಹುದಾಗಿದೆ. \ No newline at end of file diff --git a/eesanje/url_46_185_12.txt b/eesanje/url_46_185_12.txt new file mode 100644 index 0000000000000000000000000000000000000000..20812a323e36c8d22dcd08a41805a566923dca27 --- /dev/null +++ b/eesanje/url_46_185_12.txt @@ -0,0 +1,8 @@ +ರಾಜ್ಯದಲ್ಲಿ ಭಯಾನಕ ಬಿಸಿಲು, 12 ಕಡೆಗಳಲ್ಲಿ ಗರಿಷ್ಠ ತಾಪಮಾನ ದಾಖಲು +ಬೆಂಗಳೂರು,ಏ.5-ಬೇಸಿಗೆಯ ಸುಡು ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈಗಾಗಲೇ ದಾಖಲೆ ಪ್ರಮಾಣದ ತಾಪಮಾನ ಕಂಡುಬರುತ್ತಿದೆ. ರಾಜ್ಯದ 12 ಕಡೆಗಳಲ್ಲಿ ನಿನ್ನೆ ಗರಿಷ್ಠ ತಾಪಮಾನ ದಾಖಲಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಹೆಚ್ಚೂ ಕಡಿಮೆ ಜೂನ್ವರೆಗೂ ಇದೇ ತಾಪಮಾನ ಮುಂದುವರೆಯುವ ನಿರೀಕ್ಷೆಯಿದೆ. ಚದುರಿದಂತೆ ಅಲ್ಲಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬಂದರೂ ವಾಡಿಕೆ ಪ್ರಮಾಣದ ಮುಂಗಾರು ಪೂರ್ವ ಮಳೆಯಾಗು ತ್ತಿಲ್ಲ. ಮಳೆಯಾಗುವ ಮುನ್ಸೂಚನೆ ಗಳೂ ಇಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕಳೆದ ಮೂರು ತಿಂಗಳಿನಿಂದಲೂ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆ ಪ್ರಮಾಣದಲ್ಲಾಗಿಲ್ಲ. ಏಪ್ರಿಲ್ ತಿಂಗಳಿನಲ್ಲೂ ವಾಡಿಕೆ ಮಳೆಯಾಗುವ ಸೂಚನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಹವಾಮಾನ ಇಲಾಖೆ ಮಾಹಿತಿ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. +ಒಂದೂವರೆಯಿಂದ ಮೂರು ಡಿಗ್ರಿ ಸೆಂಟಿಗ್ರೇಡ್ನಷ್ಟು ಸರಾಸರಿಗಿಂತ ಹೆಚ್ಚಾಗಿ ಕಂಡುಬರುತ್ತಿದೆ.ನಿನ್ನೆ ಕೊಪ್ಪಳದಲ್ಲಿ 41.8, ಬಾಗಲ ಕೋಟೆ 41.1, ಬೀದರ್ 39.2, ಕಲಬುರಗಿಯಲ್ಲಿ 42.8, ಗದಗ 40.6, ವಿಜಯಪುರ 40, ಧಾರವಾಡ 39.8, ದಾವಣಗೆರೆ 40.5, ಹಾಸನ 37.4, ಮಂಡ್ಯ 38.2, ಮೈಸೂರು 37, ಬೆಂಗಳೂರು 37 ಡಿಗ್ರಿ ಸೆಂಟಿಗ್ರೇಡ್ನಷ್ಟು ಗರಿಷ್ಠ ತಾಪಮಾನ ದಾಖಲಾಗುತ್ತಿದೆ. +ಈಗಾಗಲೇ ಸರಾಸರಿ 35 ಡಿ.ಸೆ. ನಷ್ಟು ತಾಪಮಾನ ಎಲ್ಲೆಡೆ ಕಂಡುಬರುತ್ತಿದೆ. 36 ರಿಂದ 41 ಡಿ.ಸೆ. ನಷ್ಟು ಸಾಮಾನ್ಯವಾಗಿ ಕಂಡುಬರುತ್ತಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ 40 ಡಿ.ಸೆ. ನಷ್ಟು ಗಡಿಯನ್ನು ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ತಾಪಮಾನ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ. +ನಿರಂತರ ತಾಪಮಾನ ಏರಿಕೆಯಿಂದ ಬಿಸಿಗಾಳಿ ಕಂಡುಬರುತ್ತಿದ್ದು, ತೇವಾಂಶದಲ್ಲೂ ಭಾರೀ ಕುಸಿತವಾಗಿದೆ. ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ದಕ್ಷಿಣ ಒಳನಾಡಿನ ಒಳಭಾಗಗಳಲ್ಲಿ ಚದುರಿದಂತೆ ಮಳೆಯಾಗುವ ಮುನ್ಸೂಚನೆಗಳಿವೆ. +ಏಪ್ರಿಲ್ 12 ರಿಂದ ಮೂರ್ನಾಲ್ಕು ದಿನಗಳ ಕಾಲ ಮೈಸೂರು, ಮಂಡ್ಯ, ಕೊಡಗು, ರಾಮನಗರ, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಗ್ರಾಮದಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡು ಬರುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಯುಗಾದಿ ಹಬ್ಬದ ನಂತರ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಚದುರಿದಂತೆ ಮಳೆಯಾದರೂ, ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳು ಕಂಡುಬರುತ್ತಿಲ್ಲ. ಏಪ್ರಿಲ್, ಮೇ ತಿಂಗಳಿನಲ್ಲಿ ಗುಡುಗು, ಮಿಂಚು, ಗಾಳಿಯಿಂದ ಕೂಡಿದ ಮಳೆಯಾಗುವುದುಸಹಜ ಪ್ರಕ್ರಿಯೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_185_2.txt b/eesanje/url_46_185_2.txt new file mode 100644 index 0000000000000000000000000000000000000000..8b5aa031ac68e742b0998ae98e9f4164f9b93ec4 --- /dev/null +++ b/eesanje/url_46_185_2.txt @@ -0,0 +1,10 @@ +ಸುಲಭವಾಗಿ ಎಲ್ಲಾ 28 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ : ವಿಜಯೇಂದ್ರ +ಬೆಂಗಳೂರು,ಏ.6-ರಾಜ್ಯದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪರವಾದ ಅಲೆ ಎಲ್ಲೆಡೆ ಬೀಸುತ್ತಿದ್ದು, ಇದನ್ನು ಮತವಾಗಿ ಪರಿವರ್ತಿಸಿದರೆ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ನಾವು ಸುಲಭವಾಗಿ ಗೆಲ್ಲಲಿ ದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆ ನಿಮಿತ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವು ಸ್ವಲ್ಪ ಪರಿಶ್ರಮ ಹಾಕಿದರೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯಬಹುದು. ಇದಕ್ಕಾಗಿ ಕಾರ್ಯಕರ್ತರು ಸಜ್ಜಾಗಬೇಕೆಂದು ಕರೆ ಕೊಟ್ಟರು. +ಮೋದಿಯವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತನೆ ಮಾಡಬೇಕು. ನರೇಂದ್ರಮೋದಿಯವರಿಗೆ ಶಕ್ತಿ ತುಂಬುವ ಕೆಲಸ ಮಾಡೋಣ. ದೇಶಾದ್ಯಂತ ಕಿರುದೇಣಿಗೆ ಅಭಿಯಾನ ನಡೆಯುತ್ತಿದೆ. ಪ್ರತಿಯೊಬ್ಬ ಕಾರ್ಯಕರ್ತನೂ ನಮೋ ಆಪ್ ಮೂಲಕ ಭಾಗವಹಿಸಬೇಕು. ಎಷ್ಟಾದರೂ ಸರಿ ದೇಣಿಗೆ ನೀಡಬೇಕು ಎಂದು ಮನವಿ ಮಾಡಿದರು. +ಪ್ರಧಾನಿ ನರೇಂದ್ರಮೋದಿ ಅವರು ಬರೀ ಭಾರತಕ್ಕೆ ನಾಯಕತ್ವ ಕೊಟ್ಟವರಲ್ಲ, ವಿಶ್ವಕ್ಕೆ ನಾಯಕತ್ವ ಕೊಟ್ಟವರು. ಪ್ರಧಾನಿಯಾಗಿ ಹತ್ತು ವರ್ಷ ವಿಶ್ರಾಂತಿ ತೆಗೆದುಕೊಳ್ಳದೇ ಕೆಲಸ ಮಾಡುತ್ತಿರುವವರು ಇದ್ದಾರೆ ಅಂದರೆ ಅದು ನರೇಂದ್ರಮೋದಿ ಮಾತ್ರ ಎಂದರು. +ಬಿಜೆಪಿ ಅಂದರೆ ಅಲ್ಪಸಂಖ್ಯಾತರ ವಿರೋಧಿಗಳು ಎನ್ನುತ್ತಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುವುದಕ್ಕೂ ಮುನ್ನ ಹಿಂದೂ ಮಹಿಳೆಯರಿಗೆ ಯಾವ ರೀತಿ ಗೌರವ ಸಿಗುತ್ತದೋ ಅದೇ ರೀತಿ ಅಲ್ಪಸಂಖ್ಯಾತರ ಮಹಿಳೆಯರಿಗೆ ಗೌರವ ಸಿಗಬೇಕು ಎಂಬ ಕಾರಣಕ್ಕೆ ತ್ರಿವಳಿ ತಲಾಕ್ ರದ್ದು ಮಾಡಿದವರು ಪ್ರಧಾನಿ ನರೇಂದ್ರಮೋದಿ ಎಂದು ನೆನಪು ಮಾಡಿಕೊಟ್ಟರು. +ಈ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ನರೇಂದ್ರ ಮೋದಿಯವರು ಕೊಟ್ಟ ಕಾರ್ಯಕ್ರಮಗಳ ಬಗ್ಗೆ ಮನೆ ಮನೆಗೆ ತಿಳಿಸಬೇಕು. ಯೋಧರ ರೀತಿಯಲ್ಲಿ ನಾವು ಸಂಘಟಿತರಾಗಿ ಕೆಲಸ ಮಾಡಬೇಕು. ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದನ್ನು ನೋಡುವುದಕ್ಕೆ ಬಹಳ ದಿನಗಳು ದೂರವಿಲ್ಲ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. +18 ಕೋಟಿ ಕಾರ್ಯಕರ್ತರು;ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ 18 ಕೋಟಿಗೂ ಹೆಚ್ಚು ಸದಸ್ಯರನ್ನು ಹೊಂದಿರುವುದರ ಜೊತೆಗೆ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಪಕ್ಷ ಎಷ್ಟೇ ಎತ್ತರಕ್ಕೆ ಬೆಳೆದರೂ ಸಹ, ನಮ್ಮ ಪಕ್ಷದ ಸಿದ್ದಾಂತದಲ್ಲಿ ಎಲ್ಲಿಯೂ ಕೂಡ ಕಂಪ್ರಾಮೈಸ್ ಇಲ್ಲದೇ, ತತ್ವ ಸಿದ್ದಾಂತಗಳನ್ನು ಉಳಿಸಿಕೊಂಡು ಹೋಗುತ್ತಿದ್ದೇವೆ ಎಂದರು . +ರಾಜ್ಯದಲ್ಲಿ ಅನಂತಕುಮಾರ್, ವಿ.ಎಸ್.ಆಚಾರ್ಯ, ಶಂಕರಮೂರ್ತಿಗಳು ಸೇರಿ ಹಿರಿಯರ ಮಾರ್ಗದರ್ಶನ, ಬಿ.ಎಸ್. ಯಡಿಯೂರಪ್ಪ ಹೋರಾಟದಿಂದ ಬಿಜೆಪಿ ಹಳ್ಳಿ ಹಳ್ಳಿಗಳಲ್ಲಿ ತಲೆ ಎತ್ತಿ ನಿಂತಿದೆ. ಯಡಿಯೂರಪ್ಪ ಪಾದಯಾತ್ರೆ, ಹೋರಾಟ, ಸೈಕಲ್ ಯಾತ್ರೆಗಳ ಮೂಲಕ ಪಕ್ಷ ಸಂಘಟನೆ ಮಾಡಿದ್ದು, ಕೇಂದ್ರದಲ್ಲಿ ಎಲ್ .ಕೆ. ಅಡ್ವಾಣಿ ಅವರನ್ನು ಮರೆಯಲು ಸಾಧ್ಯವಿಲ್ಲ. ಅಟಲ್ ಬಿಹಾರಿ ವಾಜಪೇಯಿಯವರು ದೇಶವನ್ನು ಮುನ್ನಡಿಸಿದ್ದು, ನರೇಂದ್ರ ಮೋದಿಯಂತ ಪುಣ್ಯಾತ್ಮ ಪ್ರಧಾನಿ ಆದಮೇಲೆ ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಿಲ್ಲ ಎಂದರು. +ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಉಪಸ್ಥಿತರಿದ್ದರು. ತದನಂತರ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಜನತಾ ಪಕ್ಷದ ಸ್ಥಾಪನಾ ದಿನಾಚರಣೆ ನಿಮಿತ್ತ ಮಾಡಿದ ಭಾಷಣವನ್ನು ನಾಯಕರು ವೀಕ್ಷಿಸಿದರು. \ No newline at end of file diff --git a/eesanje/url_46_185_3.txt b/eesanje/url_46_185_3.txt new file mode 100644 index 0000000000000000000000000000000000000000..6884c7bce16e0a33b3ae908345bff9cafd49da8e --- /dev/null +++ b/eesanje/url_46_185_3.txt @@ -0,0 +1,9 @@ +ಲೋಕಸಭಾ ಚುನಾವಣೆ : ರಾಜ್ಯದಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತ +ಬೆಂಗಳೂರು,ಏ.6-ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಹೊರತುಪಡಿಸಿ ರಾಜ್ಯದ ಮೊದಲ ಹಂತದ 13 ಲೋಕಸಭಾ ಕ್ಷೇತ್ರಗಳಲ್ಲಿ ನಿನ್ನೆ ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತಗೊಂಡಿವೆ. 276 ಅಭ್ಯರ್ಥಿಗಳ 384 ನಾಮಪತ್ರಗಳು ಪುರಸ್ಕೃತಗೊಂಡಿವೆ. +ಮಾ.28ರಿಂದ ಏ.4ರವರೆಗೆ 358 ಅಭ್ಯರ್ಥಿಗಳು 492 ನಾಮಪತ್ರಗಳನ್ನು ಸಲ್ಲಿಸಿದ್ದರು. ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ಪುರಸ್ಕೃತಗೊಂಡಿವೆ. ತಿರಸ್ಕೃತಗೊಂಡಿರುವ ನಾಮಪತ್ರಗಳಲ್ಲಿ ಪಕ್ಷೇತರರೇ ಹೆಚ್ಚಾಗಿದ್ದಾರೆ. +ನಾಮಪತ್ರ ವಾಪಸ್ ಪಡೆಯಲು ಏ.8ರವರೆಗೆ ಕಾಲಾವಕಾಶವಿದ್ದು, ಆನಂತರ ಚುನಾವಣಾ ಕಣದಲ್ಲಿ ಉಳಿಯುವ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 10 ಅಭ್ಯರ್ಥಿಗಳ 15 ನಾಮಪತ್ರಗಳು ಪುರಸ್ಕೃತಗೊಂಡಿದ್ದರೆ 4 ನಾಮಪತ್ರಗಳು ತಿರಸ್ಕೃತವಾಗಿವೆ. +ಹಾಸನ ಕ್ಷೇತ್ರದಲ್ಲಿ 18 ಅಭ್ಯರ್ಥಿಗಳ 26 ನಾಮಪತ್ರಗಳು ಪುರಸ್ಕೃತವಾಗಿದ್ದು, 3 ನಾಮಪತ್ರಗಳು ತಿರಸ್ಕೃತಗೊಂಡಿವೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳ 20 ನಾಮಪತ್ರಗಳು ಪುರಸ್ಕೃತವಾಗಿದ್ದರೆ 2 ನಾಮಪತ್ರಗಳು ತಿರಸ್ಕೃತವಾಗಿವೆ. +ಚಿತ್ರದುರ್ಗ ಕ್ಷೇತ್ರದಲ್ಲಿ 24 ಅಭ್ಯರ್ಥಿಗಳ 32 ನಾಮಪತ್ರಗಳು ಪುರಸ್ಕೃತವಾಗಿದ್ದು, 4 ನಾಮಪತ್ರಗಳು ತಿರಸ್ಕೃತಗೊಂಡಿವೆ. ತುಮಕೂರು ಕ್ಷೇತ್ರದ 22 ಅಭ್ಯರ್ಥಿಗಳ 31 ನಾಮಪತ್ರಗಳು ಕ್ರಮಬದ್ಧವಾಗಿವೆ. ಮಂಡ್ಯ ಕ್ಷೇತ್ರದ 19 ಅಭ್ಯರ್ಥಿಗಳ 27 ನಾಮಪತ್ರಗಳು ಸಿಂಧುವಾಗಿದ್ದರೆ, 10 ನಾಮಪತ್ರಗಳು ತಿರಸ್ಕೃತಗೊಂಡಿವೆ. ಮೈಸೂರು ಕ್ಷೇತ್ರದ 24 ಅಭ್ಯರ್ಥಿಗಳ 32 ನಾಮಪತ್ರಗಳು ಪುರಸ್ಕೃತವಾಗಿದ್ದು, 5 ನಾಮಪತ್ರಗಳು ತಿರಸ್ಕಾರಗೊಂಡಿವೆ. +ಚಾಮರಾಜನಗರ ಕ್ಷೇತ್ರದ 22 ಅಭ್ಯರ್ಥಿಗಳ 31 ನಾಮಪತ್ರಗಳು ಪುರಸ್ಕೃತಗೊಂಡಿದ್ದು 5 ನಾಮಪತ್ರಗಳು ತಿರಸ್ಕಾರವಾಗಿವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ 27 ಅಭ್ಯರ್ಥಿಗಳ 38 ನಾಮಪತ್ರಗಳು ಕ್ರಮವಾಗಿದ್ದು, ಏಳು ನಾಮಪತ್ರಗಳು ತಿರಸ್ಕಾರವಾಗಿವೆ. +ಬೆಂಗಳೂರು ಕೇಂದ್ರ ಕ್ಷೇತ್ರದ 28 ಅಭ್ಯರ್ಥಿಗಳು 36 ನಾಮಪತ್ರಗಳು ಪುರಸ್ಕೃತವಾಗಿದ್ದು, 4 ನಾಮಪತ್ರಗಳು ತಿರಸ್ಕಾರವಾಗಿವೆ. ಬೆಂಗಳೂರು ಉತ್ತರ ಕ್ಷೇತ್ರದ 21 ಅಭ್ಯರ್ಥಿಗಳ 30 ನಾಮಪತ್ರಗಳು ಸಿಂಧುವಾಗಿದ್ದು, 6 ಅಭ್ಯರ್ಥಿಗಳ ನಾಮಪತ್ರಗಳು ಅಸಿಂಧುವಾಗಿವೆ. +ಚಿಕ್ಕಬಳ್ಳಾಪುರ ಕ್ಷೇತ್ರದ 32 ಅಭ್ಯರ್ಥಿಗಳ 39 ನಾಮಪತ್ರಗಳು ಪುರಸ್ಕೃತವಾಗಿದ್ದು ನಾಲ್ಕು ನಾಮಪತ್ರ ತಿರಸ್ಕಾರಗೊಂಡಿದ್ದರೆ ಕೋಲಾರ ಕ್ಷೇತ್ರದ 19 ಅಭ್ಯರ್ಥಿಗಳ 27 ನಾಮಪತ್ರಗಳು ಕ್ರಮಬದ್ಧವಾಗಿದ್ದು, 6 ನಾಮಪತ್ರಗಳು ತಿರಸ್ಕೃತಗೊಂಡಿವೆ. ಏ.26ರಂದು 14 ಕ್ಷೇತ್ರಗಳಲ್ಲೂ ಮತದಾನ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. \ No newline at end of file diff --git a/eesanje/url_46_185_4.txt b/eesanje/url_46_185_4.txt new file mode 100644 index 0000000000000000000000000000000000000000..e9b5abdc76e422e666961afcd95fe200db5ab979 --- /dev/null +++ b/eesanje/url_46_185_4.txt @@ -0,0 +1,4 @@ +ಲೋಕಸಭಾ ಚುನಾವಣೆಗೆ ಇಬ್ಬರು ಪೊಲೀಸ್ ವೀಕ್ಷಕರ ನೇಮಕ +ಬೆಂಗಳೂರು,ಏ.6-ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಡಾ.ಸಿ.ಎಂ.ತ್ರಿವಿಕ್ರಮ್ ವರ್ಮ ಅವರನ್ನು ಪೊಲೀಸ್ ವೀಕ್ಷಕರನ್ನಾಗಿ ನೇಮಿಸಲಾಗಿದೆ. +ಬೆಂಗಳೂರು ಉತ್ತರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ಕುಟಿಯಾಲ್ ಅವರನ್ನು ನೇಮಕ ಮಾಡಲಾಗಿದೆ.ಪೊಲೀಸ್ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ಪೊಲೀಸ್ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. +ಡಾ.ಸಿ.ಎನ್.ತ್ರಿವಿಕ್ರಮ್ ವರ್ಮ ಅವರ ಮೊಬೈಲ್ ಸಂಖ್ಯೆ 8904612192 ಮತ್ತು ಹೇಮಂತ್ ಕುಟಿಯಾಲ್ ಅವರ ಮೊಬೈಲ್ ಸಂಖೆ 8296579912 ಆಗಿದ್ದು, ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. \ No newline at end of file diff --git a/eesanje/url_46_185_5.txt b/eesanje/url_46_185_5.txt new file mode 100644 index 0000000000000000000000000000000000000000..948bfe6039f09cfcc9d0074a003268ea344cc6af --- /dev/null +++ b/eesanje/url_46_185_5.txt @@ -0,0 +1,6 @@ +ರಾಜ್ಯದಲ್ಲಿ ಯಾವಾಗ ಬರುತ್ತೆ ಮಳೆ..? ಹವಾಮಾನ ಇಲಾಖೆ ಹೇಳೋದೇನು..? +ಬೆಂಗಳೂರು,ಏ.6-ರಾಜ್ಯದಲ್ಲಿ ಸುಡು ಬಿಸಿಲಿನ ಬೇಗೆಯಿಂದ ಬಸವಳಿದಿರುವ ಜನರಿಗೆ ತುಸು ನಿರಾಳವಾಗುವ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ. ಆದರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯಿಲ್ಲ. ಗಣನೀಯವಾಗಿ ಏರಿಕೆಯಾಗಿರುವ ತಾಪಮಾನ ತಗ್ಗಿಸುವಂತಹ ಮಳೆ ಬರುವ ಸಾಧ್ಯತೆಯೂ ಇಲ್ಲ. +ಈಗಾಗಲೇ ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳು ವಾಡಿಕೆಗಿಂತ ಒಂದೂವರೆಯಿಂದ 3 ಡಿ.ಸೆ.ನಷ್ಟು ಹೆಚ್ಚಾಗಿದ್ದು, ಜನರು ಬಿಸಿಲ ಬೇಗೆಗೆ ಹೈರಾಣರಾಗಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ರಾಜ್ಯದಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಏ.9ರಿಂದ 12ರವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. +ಈ ಸಂದರ್ಭದಲ್ಲಿ ಕೆಲವೆಡೆ ಗುಡುಗು, ಮಿಂಚು ಬಿರುಗಾಳಿ ಸಮೇತ ಮಳೆಯಾಗುವ ಸಂಭವವಿದೆ. ಆದರೆ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳು ಇಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಮಳೆಯಾಗುವ ಸಾಧ್ಯತೆ ತೀವ್ರ ವಿರಳ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಇನ್ನು ಎರಡುಮೂರು ದಿನ ಒಣಹವೆ ಇರಲಿದ್ದು, ತಾಪಮಾನದಲ್ಲಿ ಏರಿಕೆ ಕಂಡುಬಂದಿದೆ. +ಕಲಬುರಗಿಯಲ್ಲಿ 43.3 ಡಿ.ಸೆ. ಉಷ್ಣಾಂಶ ದಾಖಲು:ಬಿಸಿಲ ನಾಡು ಎಂದೇ ಪರಿಗಣಿತವಾಗಿರುವ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 43.3 ಡಿ.ಸೆ.ನಷ್ಟು ದಾಖಲಾಗಿದ್ದು, ರಾಜ್ಯದಲ್ಲೇ ಅತಿಹೆಚ್ಚು ಗರಿಷ್ಠ ತಾಪಮಾನ ಇದಾಗಿದೆ. +ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಗರಿಷ್ಠ ತಾಪಮಾನ 36 ಡಿ.ಸೆ. ಗಡಿ ದಾಟಿದೆ. ರಾಜಧಾನಿ ಬೆಂಗಳೂರಿನಲ್ಲಿ 37 ಡಿ.ಸೆ. ದಾಖಲಾಗಿದೆ. ವಿಜಯಪುರ 41, ಬಾಗಲಕೋಟೆ 42.1, ಧಾರವಾಡ 39.8, ಗದಗ 40.6, ಹಾವೇರಿ 39.8, ಕೊಪ್ಪಳ 41.1 ರಾಯಚೂರು 41.4, ಬೆಳಗಾವಿ 37.5, ಚಿತ್ರದುರ್ಗ, ಚಾಮರಾಜನಗರ 38.6, ದಾವಣಗೆರೆ 39, ಮಂಡ್ಯ 38.6, ಶಿವಮೊಗ್ಗ 38.4, ಮೈಸೂರು 37.5 ಡಿ.ಸೆ.ನಷ್ಟು ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ತೀವ್ರ ಬರದ ಛಾಯೆ ಆವರಿಸಿದ ಪರಿಣಾಮ ಈ ಬಾರಿಯ ಬೇಸಿಗೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಒಂದರ್ಥದಲ್ಲಿ ಬಿಸಿಲ ನಾಡಾಗಿ ಪರಿಣಮಿಸಿದೆ ಎಂದರೆ ತಪ್ಪಾಗಲಾರದು. \ No newline at end of file diff --git a/eesanje/url_46_185_6.txt b/eesanje/url_46_185_6.txt new file mode 100644 index 0000000000000000000000000000000000000000..fa2eddfca691cea2725cf0071cecff7f0e5caa78 --- /dev/null +++ b/eesanje/url_46_185_6.txt @@ -0,0 +1,19 @@ +ರಾಜ್ಯದಲ್ಲಿ ಸ್ಟಾರ್ ಚಂದ್ರು ಶ್ರೀಮಂತ ಅಭ್ಯರ್ಥಿ, ಬ್ರಿಜೇಶ್ ಚೌಟ ಬಡ ಅಭ್ಯರ್ಥಿ +ಬೆಂಗಳೂರು,ಏ.6-ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ವೆಂಕಟರಮಣಗೌಡ ಅಲಿಯಾಸ್ ಸ್ಟಾರ್ ಚಂದ್ರು ಅತಿ ಶ್ರೀಮಂತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. +ಅದೇ ರೀತಿ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ನಿವೃತ್ತ ಸೇನಾಕಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅತಿ ಬಡ ಅಭ್ಯರ್ಥಿಯಾಗಿದ್ದಾರೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಘೋಷಣೆ ಮಾಡಿಕೊಂಡಿರುವ ತಮ್ಮ ಚರಾಚಿರ ಆಸ್ತಿ ವಿವರಗಳಲ್ಲಿ ಇದು ಬಹಿರಂಗಗೊಂಡಿದೆ. +ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವೆಂಕಟರಮಣಗೌಡ ಅಲಿಯಾಸ್ ಸ್ಟಾರ್ ಚಂದ್ರು ಬರೋಬ್ಬರಿ 622 ಕೋಟಿ ಆಸ್ತಿಯನ್ನು ಹೊಂದಿರುವ ಅತಿ ದೊಡ್ಡ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. 2ನೇ ಸ್ಥಾನದಲ್ಲಿ ಪ್ರತಿಷ್ಠಿತ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಉಪಮುಖ್ಯಮಂತ್ರಿ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಬರೋಬ್ಬರಿ 593 ಕೋಟಿ ಆಸ್ತಿಯ ಒಡೆಯರಾಗಿದ್ದಾರೆ. +ಮಂಡ್ಯ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಎನ್‍ಡಿಎ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 217.2 ಕೋಟಿ ರೂ. ಚರಚಿರಾಸ್ತಿ ಹೊಂದಿದ್ದು, 3ನೇ ಅತಿ ಶ್ರೀಮಂತ ಅಭ್ಯರ್ಥಿ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರೋ.ರಾಜೀವ್ ಗೌಡ ಅವರ ಒಟ್ಟು ಆಸ್ತಿ ಮೌಲ್ಯ 134 ಕೋಟಿ ರೂ. ಇವರು ಸ್ಪರ್ಧಾ ಕಣದಲ್ಲಿರುವ 4ನೇ ಅತಿ ಶ್ರೀಮಂತ ಅಭ್ಯರ್ಥಿ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ 99.8 ಕೋಟಿ ಆಸ್ತಿ ಹೊಂದಿದ್ದು, 5ನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. +ಇನ್ನು ರಾಷ್ಟ್ರದ ಗಮನ ಸೆಳೆದಿರುವ ಪ್ರತಿಷ್ಠಿತ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರಾಂತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು 98.3 ಕೋಟಿ ಆಸ್ತಿ ಹೊಂದಿದ್ದು, 6ನೇ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. +ಸ್ಪರ್ಧಾ ಕಣದಲ್ಲಿರುವ ಅತಿ ಬಡ ಅಭ್ಯರ್ಥಿಗಳಲ್ಲಿ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 70.8 ಲಕ್ಷ ರೂ. ಆಸ್ತಿ ಹೊಂದುವ ಮೂಲಕ ಅತಿ ಕಡಿಮೆ ಆದಾಯ ಹೊಂದಿದ ಅಭ್ಯರ್ಥಿಗಳ ಪೈಕಿ ಮೊದಲ ಅಭ್ಯರ್ಥಿಯಾಗಿದ್ದಾರೆ. +ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪದ್ಮರಾಜ್ ಅವರು 1.8 ಕೋಟಿ ಆಸ್ತಿ ಹೊಂದಿದ್ದು, 2ನೇ ಸ್ಥಾನದಲ್ಲಿದ್ದರೆ ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ 1.1 ಕೋಟಿ ಆಸ್ತಿ ಹೊಂದಿದ್ದರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ 2.3 ಕೋಟಿ, ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ 4.1 ಕೋಟಿ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 4.3 ಕೋಟಿ ಆಸ್ತಿ ಹೊಂದಿದ್ದಾರೆ. +ಟಾಪ್ 6 ಶ್ರೀಮಂತ ಅಭ್ಯರ್ಥಿಗಳು1.ವೆಂಕಟರಮಣೇಗೌಡ ಅಲಿಯಾಸ್ ಸ್ಟಾರ್ ಚಂದ್ರುಕ್ಷೇತ್ರ : ಮಂಡ್ಯ, ಪಕ್ಷ : ಕಾಂಗ್ರೆಸ್ಆಸ್ತಿ : 622 ಕೋಟಿ ರೂ. +2.ಡಿ.ಕೆ.ಸುರೇಶ್ಕ್ಷೇತ್ರ : ಬೆಂಗಳೂರು ಗ್ರಾಮಾಂತರ, ಪಕ್ಷ : ಕಾಂಗ್ರೆಸ್ಆಸ್ತಿ : 593 ಕೋಟಿ ರೂ. +3.ಎಚ್.ಡಿ. ಕುಮಾರಸ್ವಾಮಿಕ್ಷೇತ್ರ : ಮಂಡ್ಯ, ಪಕ್ಷ : ಜೆಡಿಎಸ್ಆಸ್ತಿ : 217.2 ಕೋಟಿ ರೂ.4.ಪ್ರೊ. ಎಂವಿ ರಾಜೀವ್‍ಗೌಡ +ಕ್ಷೇತ್ರ : ಬೆಂಗಳೂರು ಉತ್ತರ, ಪಕ್ಷ : ಕಾಂಗ್ರೆಸ್ಆಸ್ತಿ : 134 ಕೋಟಿ ರೂ. +5.ರಕ್ಷಾ ರಾಮಯ್ಯಕ್ಷೇತ್ರ : ಚಿಕ್ಕಬಳ್ಳಾಪುರ, ಪಕ್ಷ : ಕಾಂಗ್ರೆಸ್ಆಸ್ತಿ : 99.8 ಕೋಟಿ ರೂ. +6.ಡಾ ಸಿಎನ್ ಮಂಜುನಾಥ್ಕ್ಷೇತ್ರ : ಬೆಂಗಳೂರು ಗ್ರಾಮಾಂತರ, ಪಕ್ಷ : ಬಿಜೆಪಿಆಸ್ತಿ : 98.3 ಕೋಟಿ ರೂ. +ಟಾಪ್ 6 ಬಡ ಅಭ್ಯರ್ಥಿಗಳು1.ಕ್ಯಾಪ್ಟನ್ ಬ್ರಿಜೇಶ್ ಚೌಟಕ್ಷೇತ್ರ : ದಕ್ಷಿಣ ಕನ್ನಡ, ಪಕ್ಷ : ಬಿಜೆಪಿಆಸ್ತಿ : 70.8 ಲಕ್ಷ ರೂ. +2.ಆರ್ ಪದ್ಮರಾಜ್ಕ್ಷೇತ್ರ : ದಕ್ಷಿಣ ಕನ್ನಡ, ಪಕ್ಷ : ಕಾಂಗ್ರೆಸ್ಆಸ್ತಿ : 1.8 ಕೋಟಿ ರೂ. +3.ಕೋಟ ಶ್ರೀನಿವಾಸ ಪೂಜÁರಿಕ್ಷೇತ್ರ : ಉಡುಪಿ – ಚಿಕ್ಕಮಗಳೂರು, ಪಕ್ಷ : ಬಿಜೆಪಿಆಸ್ತಿ : 1.1 ಕೋಟಿ ರೂ. +4.ಸೌಮ್ಯ ರೆಡ್ಡಿಕ್ಷೇತ್ರ : ಬೆಂಗಳೂರು ದಕ್ಷಿಣ, ಪಕ್ಷ : ಕಾಂಗ್ರೆಸ್ಆಸ್ತಿ : 2.3 ಕೋಟಿ ರೂ. +6.ಗೋವಿಂದ ಕಾರಜೋಳಕ್ಷೇತ್ರ : ಚಿತ್ರದುರ್ಗ, ಪಕ್ಷ : ಬಿಜೆಪಿಆಸ್ತಿ : 4.3 ಕೋಟಿ ರೂ. \ No newline at end of file diff --git a/eesanje/url_46_185_7.txt b/eesanje/url_46_185_7.txt new file mode 100644 index 0000000000000000000000000000000000000000..35d05bb01d23cdaf55390180c0573ce5773d81c3 --- /dev/null +++ b/eesanje/url_46_185_7.txt @@ -0,0 +1,7 @@ +ಶಿವಮೊಗ್ಗದಲ್ಲಿ ಮೋದಿ ಫೋಟೋ ಫೈಟ್, ಕೆವಿಯಟ್ ಅರ್ಜಿ ಸಲ್ಲಿಸಿದ ರೆಬೆಲ್ ಈಶ್ವರಪ್ಪ +ಶಿವಮೊಗ್ಗ, ಏ.6-ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಚಿವ ಕೆ.ಎಸ್ .ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ರಾಜ್ಯದ ಗಮನ ಸೆಳೆದಿದೆ. ಈ ಮಧ್ಯೆ, ಇದೀಗ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಸುವ ವಿಚಾರವಾಗಿ ವಾಕ್ಸಮರ ಆರಂಭಗೊಂಡಿದ್ದು, ಇದೀಗ ಕೋರ್ಟ್ ಮೆಟ್ಟಿಲೇರಿದೆ. ಮೋದಿ ಫೋಟೋ ಬಳಕೆ ವಿಚಾರವಾಗಿ ಶಿವಮೊಗ್ಗ ಕೋರ್ಟ್‍ನಲ್ಲಿ ಈಶ್ವರಪ್ಪ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. +ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು. ರಾಘವೇಂದ್ರಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯಾ ಎಂದು ಕೌಂಟರ್ ಕೊಟ್ಟಿದ್ದರು. ಇದೀಗ ಮೋದಿ ಫೋಟೋಗಾಗಿ ಕೋರ್ಟ್ ಮೊರೆಹೋಗಿದ್ದಾರೆ. +ಲೋಕಸಭೆ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರನ್ನು ಮನವೊಲಿಸುವುದಕ್ಕಾಗಿ ಇತ್ತೀಚೆಗೆ ಬೆಂಗಳೂರಿಗೆ ಬಂದ ಸಂದರ್ಭದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ದೆಹಲಿಗೆ ಬರುವಂತೆ ತಿಳಿಸಿದ್ದರು. ಅದರಂತೆ ದೆಹಲಿಗೆ ತೆರಳಿದ್ದ ಈಶ್ವರಪ್ಪ, ಭೇಟಿಗೆ ಅವಕಾಶ ಸಿಗದೇ ವಾಪಸ್ ಆಗಿದ್ದರು. +ನಂತರ ರಾಜ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಅವರು, ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ಮನಸಿರಬಹುದು. ರಾಜ್ಯದಲ್ಲಿ ಅಪ್ಪ ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಅವರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು. +ಇನ್ನು ಚುನಾವಣಾ ಪ್ರಚಾರದ ವೇಳೆ ಮೋದಿ ಫೋಟೋ ಬಳಕೆ ವಿಚಾರವಾಗಿ ನೋಡುವುದಾದರೆ, ಈ ಹಿಂದೆ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೂಡ ಇಂಥದ್ದೇ ಒಂದು ಪ್ರಕರಣ ವರದಿಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅರುಣ್ ಕುಮಾರ್ ಪುತ್ತಿಲ ಮೋದಿ ಭಾವಚಿತ್ರ ಬಳಸಿದ್ದಲ್ಲದೆ, ಮೋದಿ ಹೆಸರು ಹೇಳಿಕೊಂಡೇ ಚುನಾವಣೆ ಪ್ರಚಾರ ನಡೆಸಿದ್ದರು. +ಸ್ಥಳೀಯ ಬಿಜೆಪಿ ನಾಯಕರ ವಿರೋಧದ ಮಧ್ಯೆಯೂ ಅವರು ಪ್ರಚಾರದಲ್ಲಿ ಮೋದಿ ಹೆಸರು ಬೆಳೆಸಿಕೊಂಡಿದ್ದಲ್ಲದೆ ಚುನಾವಣೆಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿ ಹೈಕಮಾಂಡ್ ವರೆಗೆ ಗಮನ ಸೆಳೆದಿದ್ದರು. ಇತ್ತೀಚಿಗೆ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. \ No newline at end of file diff --git a/eesanje/url_46_185_8.txt b/eesanje/url_46_185_8.txt new file mode 100644 index 0000000000000000000000000000000000000000..25edf5220e4be477566f0dd35bd2394464793d8b --- /dev/null +++ b/eesanje/url_46_185_8.txt @@ -0,0 +1,8 @@ +ಹೊಂದಾಣಿಕೆ ರಾಜಕಾರಣ ಮಾಡುವವರ ಮೇಲೆ ಬಿಜೆಪಿ ಹೈಕಮಾಂಡ್ ಹದ್ದಿನ ಕಣ್ಣು +ಬೆಂಗಳೂರು,ಏ.6-ಇದೇ ತಿಂಗಳ 26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಪ್ರತಿಯೊಂದು ಚಲನವಲನಗಳ ಬಗ್ಗೆ ದೆಹಲಿ ಬಿಜೆಪಿ ನಾಯಕರು ಹದ್ದಿನ ಕಣ್ಣಿಟ್ಟಿದ್ದು, ಹೊಂದಾಣಿಕೆ ರಾಜಕಾರಣ ಮಾಡುವವರ ಮೇಲೆ ವಿಶೇಷ ನಿಗಾ ಇರಿಸಿದೆ. ಬಿಜೆಪಿಯ ನಿರೀಕ್ಷಿತ 400 ಸ್ಥಾನಗಳನ್ನು ಗೆಲ್ಲಲ್ಲು ಒಂದೊಂದು ಕ್ಷೇತ್ರವೂ ಬಹುಮುಖ್ಯ ಎಂಬುದನ್ನು ಅರಿತಿರುವ ಬಿಜೆಪಿ, ರಾಜ್ಯದ ಮೊದಲ 14 ಕ್ಷೇತ್ರಗಳಿಗೆ ನಡೆಯುವ ಪ್ರಚಾರದ ವೇಳೆ ಪ್ರತಿಯೊಬ್ಬ ನಾಯಕರ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದೆ. +ಈ ಹಿಂದೆ ಅಂದರೆ ವಿಧಾನಸಭೆ ಚುನಾವಣೆಯಲ್ಲಿ ಕೆಲವು ಕಡೆ ನಾಯಕರ ಒಳ ಒಪ್ಪಂದದಿಂದಲೇ ಬಿಜೆಪಿಗೆ ಹೊಡೆತ ಬಿದ್ದಿತು ಎಂಬುದು ಫಲಿತಾಂಶದಿಂದ ಗೊತ್ತಾಗಿತ್ತು. ಇದು ಪುನರಾವರ್ತನೆ ಆಗಬಾರದೆಂಬ ಹಿನ್ನಲೆಯಲ್ಲಿ ಒಂದೊಂದು ಕ್ಷೇತ್ರದ ಮೇಲೂ ದೆಹಲಿ ನಾಯಕರು ತೀವ್ರ ನಿಗಾ ಇರಿಸಿದೆ. ರಾಜ್ಯದಲ್ಲಿ ಬಿಜೆಪಿ 25 ಸಂಸದರು, ಒಬ್ಬರು ಸ್ವತಂತ್ರ, ಒಬ್ಬರು ಜೆಡಿಎಸ್ ಮತ್ತು ಒಬ್ಬರು ಕಾಂಗ್ರೆಸ್ ಸಂಸದರಿದ್ದಾರೆ. +ಬಿಜೆಪಿ ಈ ಬಾರಿ 25 ಸ್ಥಾನಗಳಲ್ಲಿ ಸ್ರ್ಪಧಿಸುತ್ತಿದ್ದು, ಮೂರು ಸ್ಥಾನಗಳನ್ನು ಮೈತ್ರಿಕೂಟ ಜೆಡಿಎಸ್‍ಗೆ ಬಿಟ್ಟುಕೊಟ್ಟಿದೆ. ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಮಂದಿಯನ್ನು ಬದಲಿಸಲಾಗಿದ್ದು, ಟಿಕೆಟ್ ಸಿಗದ ನಾಯಕರು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಅವರಲ್ಲಿ ಕೆಲವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿಲ್ಲ, ಹೀಗಾಗಿ ಪಕ್ಷದ ಅಭ್ಯರ್ಥಿಗಳು ಮುಜುಗರಕ್ಕೀಡಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. +ಈ ಕೆಲವು ಅತೃಪ್ತ ನಾಯಕರನ್ನು ಬಿಜೆಪಿಯ ಹಿರಿಯ ನಾಯಕರಾದ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಮತ್ತು ಇತರ ನಾಯಕರು ಮನವೊಲಿಸಿದ್ದಾರೆ, ಸದ್ಯ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೆಲವು ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಪಕ್ಷದ ಕೆಲವು ನಾಯಕರೊಂದಿಗೆ ಅಮಿತ್ ಸಂಧಾನ ನಡೆಸಿದ್ದಾರೆ. ರಾಜ್ಯ ನಾಯಕರಿಗಿಂತ ಪ್ರತಿ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯದ ಬಗ್ಗೆ ಅಮಿತ್ ಶಾ ಅವರಿಗೆ ಹೆಚ್ಚಿನ ಮಾಹಿತಿಯಿದೆ. +ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡುವ, ಕೆಲವು ನಾಯಕರ ಪ್ರತಿ ನಡೆ ಮತ್ತು ಹೇಳಿಕೆಗಳನ್ನು ಗಮನಿಸಲು ಅಮಿತ್ ಶಾ ಅವರ ಪರವಾದ ಒಂದು ತಂಡವಿದೆ. ಈ ತಂಡ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ವರದಿ ಮಾಡುತ್ತದೆ, ನಂತರ ಅವರು ದೆಹಲಿಗೆ ಮಾಹಿತಿ ರವಾನಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. +ಮೈಸೂರು, ಚಿಕ್ಕಬಳ್ಳಾಪುರ, ಹಾಸನ, ಕೊಪ್ಪಳ, ಬೆಳಗಾವಿ, ಮಂಡ್ಯ, ಬೆಂಗಳೂರು ಉತ್ತರ ಮತ್ತು ಇತರ ಕೆಲವು ಕ್ಷೇತ್ರಗಳ ಮೇಲೆ ಕಣ್ಗಾವಲು ಇಡಲಾಗಿದೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ, ನಾವು ಗೆಲ್ಲುವ ಉತ್ತಮ ಅವಕಾಶವಿದ್ದ 20 ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ಪಕ್ಷದ ನಾಯಕರ ನಡುವಿನ ಕಿತ್ತಾಟದಿಂದಾಗಿ ನಕಾರಾತ್ಮಕ ಫಲಿತಾಂಶ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಅದು ಪುನರಾವರ್ತನೆಯಾಗದಂತೆ ದೆಹಲಿಯ ಬಿಜೆಪಿ ತಂಡವು ನಿಗಾ ಇರಿಸಿದೆ. ಏಕೆಂದರೆ ಅದು ಪಕ್ಷದ ಭವಿಷ್ಯವನ್ನು ಹಾಳುಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. +ಹಾಸನದಂತೆ ಕೆಲವೆಡೆ ಬಿಜೆಪಿ ನಾಯಕರು ಜೆಡಿಎಸ್ ಅಭ್ಯರ್ಥಿಗಳಿಗೆ ಸಹಕಾರ ನೀಡುತ್ತಿಲ್ಲ. ಇದು ಕೂಡ ದಿಲ್ಲಿ ನಾಯಕರ ಗಮನಕ್ಕೆ ಬಂದಿದೆ. ಬಿಜೆಪಿ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದ್ದು, ಚುನಾವಣೆ ಮುಗಿದ ಮೇಲೆ ಅತೃಪ್ತ ನಾಯಕರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬಿಜೆಪಿಯ ಮೂಲಗಳು ಹೇಳಿವೆ. \ No newline at end of file diff --git a/eesanje/url_46_185_9.txt b/eesanje/url_46_185_9.txt new file mode 100644 index 0000000000000000000000000000000000000000..55f1db53b07f5e384bf04eedc36aaa4da4faa3e7 --- /dev/null +++ b/eesanje/url_46_185_9.txt @@ -0,0 +1,8 @@ +ಲೋಕಕಣದಲ್ಲಿ ಮೂವರು ಹಾಲಿ ಶಾಸಕರು, ಓರ್ವ ಪರಿಷತ್ ಸದಸ್ಯ : ರಾಜ್ಯದಲ್ಲಿ ಉಪಚುನಾವಣೆ ಅನಿವಾರ್ಯ..? +ಬೆಂಗಳೂರು,ಏ.6-2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮೂವರು ಹಾಲಿ ಶಾಸಕರು ಹಾಗೂ ಒಬ್ಬರು ವಿಧಾನ ಪರಿಷತ್ ಸದಸ್ಯ ಕಣಕ್ಕಿಳಿದಿದ್ದಾರೆ. ಇವರು ಗೆಲುವು ಸಾಧಿಸಿದರೆ ಈ ಕ್ಷೇತ್ರಗಳಿಗೆ ಮತ್ತೊಮ್ಮೆ ಉಪಚುನಾವಣೆ ನಡೆಯುವ ಅನಿವಾರ್ಯತೆ ಎದುರಾಗಲಿದೆ. ಈ ಹಿಂದೆಯೂ ಸಹ ವಿಧಾನಸಭೆ ಸದಸ್ಯರು ಲೋಕಸಭೆಗೆ ಸ್ರ್ಪಧಿಸಿರುವ ಉದಾಹರಣೆಗಳಿವೆ. ಅದೇ ರೀತಿ ವಿಧಾನಸಭೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದು, ಒಂದು ಕ್ಷೇತ್ರಕ್ಕೆ ಮತ್ತೆ ಉಪ ಚುನಾವಣೆ ನಡೆಸಿರುವ ನಿದರ್ಶನಗಳಿವೆ. +ಚನ್ನಪಟ್ಟಣ ಕ್ಷೇತ್ರದ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದರೆ, ಹಾವೇರಿ ಲೋಕಸಭಾ ಕ್ಷೇತ್ರದಿಂದ ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಕಣದಲ್ಲಿದ್ದಾರೆ. ಇನ್ನು ಸಂಡೂರು ಕ್ಷೇತ್ರದ ಶಾಸಕ ಈ.ತುಕರಾಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. +ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ ಹಾಗೂ ಪರಿಷತ್‍ನ ಪ್ರತಿಪಕ್ಷದ ನಾಯಕರೂ ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಕಣದಲ್ಲಿದ್ದಾರೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹಾಗೂ ಒಬ್ಬರು ಸಚಿವರಾಗಿದ್ದವರು, ಮತ್ತೊಬ್ಬರು ಶಾಸಕರು. ಪ್ರಬಲ ಅಭ್ಯರ್ಥಿಗಳಾಗಿರುವ ಈ ನಾಲ್ವರು ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಕ್ರಾಂಗೆಸ್‍ನಿಂದ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪ್ರತಿಸ್ರ್ಪಧಿಯಾಗಿದ್ದರೆ, ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್‍ನ ಕಾರ್ಯಕರ್ತ ಆನಂದಸ್ವಾಮಿ ಗಡ್ಡದೇವರ ಮಠ ಪೈಪೋಟಿ ನೀಡುತ್ತಿದ್ದಾರೆ. +ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಯಾಗಿದ್ದರೆ, ಇವರಿಗೆ ಶಾಸಕ ತುಕರಾಂ ಅವರು ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಮಾಜಿ ಸಂಸದ ಹಾಗೂ ಇತ್ತೀಚೆಗಷ್ಟೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಜಯಪ್ರಕಾಶ್ ಹೆಗ್ಡೆ ಕಣದಲ್ಲಿದ್ದು, ಇಲ್ಲಿ ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಎದುರಾಳಿಯಾಗಿದ್ದಾರೆ. ಇಬ್ಬರಲ್ಲೂ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಲಿ ಶಾಸಕರು ಗೆಲುವು ಕಂಡರೆ ವಿಧಾನಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಾಗುತ್ತದೆ. ನಂತರ ಉಪಚುನಾವಣೆ ಅನಿವಾರ್ಯವಾಗಲಿದೆ. +ಹಾಲಿ ಸಂಸದರ ಅಗ್ನಿಪರೀಕ್ಷೆ:ಹಾಲಿ ಸಂಸದರಾಗಿರುವವರ ಪೈಕಿ ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ, ಬಾಗಲಕೋಟೆಯಿಂದ ಪಿ.ಸಿ. ಗದ್ದಿಗೌಡರ್, ವಿಜಾಪುರದಿಂದ ರಮೇಶ್ ಜಿಗಜಿಣಗಿ, ಕಲಬುರಗಿಯಿಂದ ಉಮೇಶ್ ಜಾಧವ್, ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ್, ಬೀದರ್‍ನಿಂದ ಭಗವಂತ ಖೂಬಾ, ಧಾರವಾಡದಿಂದ ಪ್ರಹ್ಲಾದ್ ಜೋಷಿ, ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ, ಬೆಂಗಳೂರು ಕೇಂದ್ರದಿಂದ ಪಿ.ಸಿ. ಮೋಹನ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಬಿಜೆಪಿಯಿಂದ ಮರು ಆಯ್ಕೆ ಬಯಸಿದ್ದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಕಾಂಗ್ರೆಸ್‍ನಿಂದ, ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನದಿಂದ ಸಂಸತ್ ಮರುಪ್ರವೇಶಿಸುವ ವಿಶ್ವಾಸದಲ್ಲಿದ್ದಾರೆ. +ಹಾಲಿ ಸಂಸದರ ಪೈಕಿ ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಕೊಪ್ಪಳದಲ್ಲಿ ಕರಡಿ ಸಂಗಣ್ಣ, ಬಳ್ಳಾರಿಯಲ್ಲಿ ವೈ.ದೇವೇಂದ್ರಪ್ಪ, ಹಾವೇರಿಯಲ್ಲಿ ಶಿವಕುಮಾರ್ ಉದಾಸಿ, ಉತ್ತರಕನ್ನಡದಲ್ಲಿ ಅನಂತ ಕುಮಾರ್ ಹೆಗಡೆ, ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ್, ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್, ಚಿತ್ರದುರ್ಗದಲ್ಲಿ ಎ.ನಾರಾಯಣಸ್ವಾಮಿ, ತುಮಕೂರಿನಲ್ಲಿ ಜಿ.ಎಸ್.ಬಸವರಾಜ್, ಮೈಸೂರಿನಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ, ಚಿಕ್ಕಬಳ್ಳಾಪುರದಲ್ಲಿ ಬಿ.ಎನ್.ಬಚ್ಚೇಗೌಡ, ಕೋಲಾರದಲ್ಲಿ ಎಸ್.ಮುನಿಸ್ವಾಮಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೊಟ್ಟಿಲ್ಲ. ಇದರಲ್ಲಿ ಕೆಲವು ಸಂಸದರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. +ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದರೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆಯಾಗಿದೆ. ಇನ್ನು ಕಾಂಗ್ರೆಸ್‍ನಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಮರು ಸ್ರ್ಪಸಿದ್ದರೆ, ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ, ಬೆಳಗಾವಿಯಲ್ಲಿ ಮೃಣಾಲ್ ಹೆಬ್ಬಾಳ್ಕರ್, ಬಾಗಲಕೋಟೆಯಲ್ಲಿ ಸಂಯುಕ್ತ ಎಸ್.ಪಾಟೀಲ್, ಬೀದರ್‍ನಲ್ಲಿ ಸಾಗರ್ ಖಂಡ್ರೆ, ಚಾಮರಾಜನಗರದಲ್ಲಿ ಸುನೀಲ್ ಬೋಸ್, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾ ರೆಡ್ಡಿ, ದಾವಣಗೆರೆಯಿಂದ ಪ್ರಭಾ ಮಲ್ಲಿಕಾರ್ಜುನ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್, ಶಿವಮೊಗ್ಗದಿಂದ ಗೀತಾ ಶಿವರಾಜ್‍ಕುಮಾರ್ ಸ್ರ್ಪಸುತ್ತಿದ್ದಾರೆ. ಅದರಲ್ಲೂ ಸಚಿವರ ಕುಟುಂಬದ ಸದಸ್ಯರು ಕಣದಲ್ಲಿರುವುದು ಮತ್ತೊಂದು ವಿಶೇಷ. \ No newline at end of file diff --git a/eesanje/url_46_186_1.txt b/eesanje/url_46_186_1.txt new file mode 100644 index 0000000000000000000000000000000000000000..e2a0f0e9b383ec0201da32d6df312a7f975a2c71 --- /dev/null +++ b/eesanje/url_46_186_1.txt @@ -0,0 +1,6 @@ +ನಾಮಪತ್ರ ವಾಪಸ್ಸಿಗೆ ಏ.8 ಕಡೆಯ ದಿನ +ಬೆಂಗಳೂರು,ಏ.5-ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ನಡೆದಿದೆ. ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಸಂಜೆ ವೇಳೆಗೆ ತಿರಸ್ಕೃತಗೊಂಡ ಹಾಗೂ ಕ್ರಮಬದ್ಧವಾದ ನಾಮಪತ್ರಗಳ ಪ್ರಕಟಣೆ ಹೊರಬೀಳಲಿದೆ. +ನಾಮಪತ್ರ ವಾಪಸ್ಸು ಪಡೆಯಲು ಏ.8 ರವರೆಗೂ ಕಾಲಾವಕಾಶವಿದೆ. ಏ.26 ರಂದು ಮತದಾನ ನಡೆಯಲಿದ್ದು, ಜೂ.4 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಮಾ.28 ರಿಂದ ನಿನ್ನೆಯವರೆಗೆ 14 ಕ್ಷೇತ್ರಗಳಲ್ಲಿ 333 ಪುರುಷ, 25 ಮಹಿಳೆಯರೂ ಸೇರಿದಂತೆ ಒಟ್ಟು 358 ಅಭ್ಯರ್ಥಿಗಳು, 453 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 35 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರೆ, ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತೀ ಕಡಿಮೆ 10 ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದರು. +ಉಡುಪಿ-ಚಿಕ್ಕಮಗಳೂರು-12, ಹಾಸನ-21, ಚಿತ್ರದುರ್ಗ-25, ತುಮಕೂರು-25, ಮಂಡ್ಯ, ಮೈಸೂರು ತಲಾ -26, ಚಾಮರಾಜನಗರ- 24, ಬೆಂಗಳೂರು ಗ್ರಾಮಾಂತರ -30, ಬೆಂಗಳೂರು ಉತ್ತರ-19, ಬೆಂಗಳೂರು ಕೇಂದ್ರ – 29, ಬೆಂಗಳೂರು ದಕ್ಷಿಣ- 31, ಕೋಲಾರ-24, ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. +ಬಿಜೆಪಿಯಿಂದ 12 ಅಭ್ಯರ್ಥಿಗಳಿಂದ 17 ನಾಮಪತ್ರ, ಜೆಡಿಎಸ್ನಿಂದ 3 ಅಭ್ಯರ್ಥಿಗಳಿಂದ 8 ನಾಮಪತ್ರ, ಕಾಂಗ್ರೆಸ್ನಿಂದ 14 ಅಭ್ಯರ್ಥಿಗಳಿಂದ 21 ನಾಮಪತ್ರ, ಬಿಎಸ್ಪಿಯಿಂದ 18, ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಂದ 161, ಪಕ್ಷೇತರರಿಂದ 211 ನಾಮಪತ್ರಗಳು ಸಲ್ಲಿಕೆಯಾಗಿವೆ. \ No newline at end of file diff --git a/eesanje/url_46_186_10.txt b/eesanje/url_46_186_10.txt new file mode 100644 index 0000000000000000000000000000000000000000..b3fe89d00bfe3d775be5a7e2d284444843590772 --- /dev/null +++ b/eesanje/url_46_186_10.txt @@ -0,0 +1,13 @@ +ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಅಂತ್ಯ : ಪ್ರಚಾರ ಅಬ್ಬರ ಶುರು +ಬೆಂಗಳೂರು,ಏ.4-ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದು ಮುಕ್ತಾಯವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಪ್ರಾರಂಭವಾಗಿದೆ.ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಇಂದು ಬಹುತೇಕ ಎಲ್ಲಾ ಅಭ್ಯರ್ಥಿಗಳು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು. ರೋಡ್ ಶೋ, ಬಹಿರಂಗ ಸಮಾವೇಶಗಳ ಮೂಲಕ ಚುನಾವಣೆಯ ಕಣ ರಂಗೇರಿತ್ತು. ಕೊನೆ ದಿನವಾದ್ದರಿಂದ ನಾಮಪತ್ರಗಳ ಸಲ್ಲಿಕೆಗಳ ಭರಾಟೆಯೂ ಜೋರಾಗಿತ್ತು. +ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಇಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ನಾಳೆ ನಡೆಯಲಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ ತಿರಸ್ಕøತಗೊಂಡ ನಾಮಪತ್ರಗಳ ಪ್ರಕಟಣೆ ಮಾಡಲಾಗುತ್ತದೆ. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಸಂಸದರಾದ ಪ್ರಜ್ವಲ್ ರೇವಣ್ಣ , ತೇಜಸ್ವಿ ಸೂರ್ಯ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಡಾ.ಕೆ.ಸುಧಾಕರ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ಎಂ.ಮಲ್ಲೇಶ್ ಬಾಬು ಸೇರಿದಂತೆ ಹಲವರು ಇಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. +ನಾಮಪತ್ರ ಸಲ್ಲಿಕೆಗೂ ಮುನ್ನ ಕೆಲವು ಅಭ್ಯರ್ಥಿಗಳು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಮತ್ತೆ ಕೆಲವರು ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಸೇರಿದಂತೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷಗಳ ನಾಯಕರು ಮತ್ತು ಮುಖಂಡರು ಉಪಸ್ಥಿತರಿದ್ದರು. +ನಾಮಪತ್ರ ಸಲ್ಲಿಸಿದ ಬಳಿಕ ಕೆಲವರು ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಾವೇಶಗಳನ್ನು ನಡೆಸಿ ಅಭ್ಯರ್ಥಿಗಳ ಪರ ಪ್ರಚಾರ ಹಾಗೂ ಮತ ಯಾಚನೆ ಮಾಡಲಾಯಿತು. ಈಗಾಗಲೇ ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಅಬ್ಬರದ ರೋಡ್ ಶೋ ನಡೆಸಿ, ಶಕ್ತಿ ಪ್ರದರ್ಶನ ಮಾಡಿ ಮತ್ತೆ ನಾಮಪತ್ರ ಸಲ್ಲಿಸಿದರೆ, ಮತ್ತೆ ಕೆಲವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು. +ಮಂಡ್ಯ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ರಾಜದತ್ತ ಒಡೆಯರ್ ಸೇರಿದಂತೆ ಬಿಜೆಪಿ-ಜೆಡಿಎಸ್ನ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್.ಮಂಜುನಾಥ್, ರಾಮನಗರ ಜಿಲ್ಲಾಕಾರಿ ಅವಿನಾಶ್ ಮೆನನ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. +ಈ ಸಂದರ್ಭದಲ್ಲಿ ಮಂಜುನಾಥ್ರವರ ಪತ್ನಿ ಅನಸೂಯ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮುನಿರತ್ನ, ಎಂ.ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.ಈಗಾಗಲೇ ಉಮೇದುವಾರಿಕೆಯನ್ನು ಸಲ್ಲಿಸಿದ್ದ ಡಿ.ಕೆ.ಸುರೇಶ್ರವರೂ ಸಹ ಇಂದು ಮತ್ತೊಮ್ಮೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದರು. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್, ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರೊಂದಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.ಸಂಸದ ತೇಜಸ್ವಿ ಸೂರ್ಯ ಅವರು ಮಾಜಿ ಸಚಿವರಾದ ವಿ.ಸುನೀಲ್ಕುಮಾರ್, ಎಸ್.ಸುರೇಶ್ ಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ರೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. +ಇದೇ ಕ್ಷೇತ್ರದಿಂದ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರೂ ಸಹ ತಮ್ಮ ಉಮೇದುವಾರಿಕೆಯನ್ನು ಇಂದು ಸಲ್ಲಿಸಿದರು. ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ಶ್ರೀರಾಮುಲು, ಜೆ.ಸಿ.ಮಾಧುಸ್ವಾಮಿ ಉಪಸ್ಥಿತರಿದ್ದರು. ಈಗಾಗಲೇ ತಮ್ಮ ಉಮೇದುವಾರಿಕೆ ಸಲ್ಲಿಸಿರುವ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಅವರ ಪತ್ನಿ ಭವಾನಿ ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸಿದರು. ಈ ವೇಳೆ ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ ಹಾಜರಿದ್ದರು. +ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮಾ.28 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ನಿನ್ನೆಯವರೆಗೆ ಒಟ್ಟು 199 ಅಭ್ಯರ್ಥಿಗಳು 268 ನಾಮಪತ್ರ ಸಲ್ಲಿಸಿದ್ದಾರೆ.184 ಪುರುಷ ಹಾಗೂ 15 ಮಹಿಳಾ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. +ಬಿಜೆಪಿ 24, ಕಾಂಗ್ರೆಸ್ 29, ಬಿಎಸ್ಪಿ 13, ಸಿಪಿಐಎಂ 1, ಜೆಡಿಎಸ್ 2, ಪಕ್ಷೇತರ 109 , ನೋಂದಾಯಿತ ಮತ್ತು ನೋಂದಾವಣೆಯಾಗದ ಪಕ್ಷಗಳ ಅಭ್ಯರ್ಥಿಗಳಿಂದ 90 ಸೇರಿದಂತೆ ಒಟ್ಟು 268 ನಾಮಪತ್ರಗಳು ಸಲ್ಲಿಕೆಯಾಗಿದ್ದವು. \ No newline at end of file diff --git a/eesanje/url_46_186_11.txt b/eesanje/url_46_186_11.txt new file mode 100644 index 0000000000000000000000000000000000000000..20acf5ba79447ebb4c4e6173b38db6951753e1f3 --- /dev/null +++ b/eesanje/url_46_186_11.txt @@ -0,0 +1,5 @@ +ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಮತ್ತೊಂದು ಮಿನಿ ಸಮರ +ಬೆಂಗಳೂರು, ಏ.4-ಪ್ರಸಕ್ತ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೊಂದು ಮಿನಿ ಮಹಾಸಮರ ನಡೆಯಲಿದೆ. ಜೂನ್ನಲ್ಲಿ 18 ವಿಧಾನಪರಿಷತ್ ಸದಸ್ಯ ಸ್ಥಾನಗಳು ತೆರವಾಗಲಿದ್ದು, ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನಪರಿಷತ್ನ 12 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ. +ವಿಧಾನಪರಿಷತ್ ಸದಸ್ಯರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ತೇಜಸ್ವಿನಿಗೌಡ ಅವರ ರಾಜೀನಾಮೆಯಿಂದ ಈಗಾಗಲೇ ಮೇಲ್ಮನೆ ಎರಡು ಸದಸ್ಯ ಸ್ಥಾನಗಳು ಖಾಲಿಯಿವೆ. ಮೇಲ್ಮನೆ ಸದಸ್ಯರಾದ ರಘುನಾಥ್ ರಾವ್ ಮಲ್ಕಾಪೂರೆ, ಡಾ.ಕೆ. ಗೋವಿಂದರಾಜ್, ಅರವಿಂದ ಕುಮಾರ್ ಅರಳಿ, ಕೆ.ಪಿ. ನಂಜುಂಡಿ ವಿಶ್ವಕರ್ಮ, ಬಿ.ಎಂ. ಫಾರೂಖ್, ಎನ್. ರವಿಕುಮಾರ್, ಎಸ್ ರುದ್ರೇಗೌಡ, ಕೆ. ಹರೀಶ್ಕುಮಾರ್, ಮುನಿರಾಜು ಗೌಡ ಪಿ.ಎಂ. ಹಾಗೂ ಸಚಿವ ಎನ್.ಎಸ್. ಬೋಸರಾಜು ಅವರು ಜೂ.17ರಂದು ನಿವೃತ್ತಿಯಾಗಲಿದ್ದಾರೆ. ಪದವಿ ಧರ ಕ್ಷೇತ್ರದಿಂದ ಆರ್. ದೇವೇಗೌಡ, ಡಾ. ಚಂದ್ರಶೇಖರ್ ಬಿ. ಪಾಟೀಲ್ ಜೂ.21 ರಂದು ನಿವೃತ್ತಿಯಾಗಲಿದ್ದಾರೆ. ಈಗಾಗಲೇ ಒಂದು ಸ್ಥಾನ ಖಾಲಿ ಉಳಿದಿದೆ. +ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿದ್ದ ಮರಿತಿಬ್ಬೇಗೌಡ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಡಾ. ವೈ.ಎ. ನಾರಾಯಣಸ್ವಾಮಿ ಅವರು ಜೂ.21ರಂದು ನಿವೃತ್ತಿಯಾಗಲಿದ್ದಾರೆ. ಖಾಲಿ ಇರುವ ಹಾಗೂ ನಿವೃತ್ತಿಯಿಂದ ತೆರವಾಗುವ ಮೇಲ್ಮನೆಯ ಸದಸ್ಯ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ಘೋಷಿಸಬೇಕಿದೆ. +ಪ್ರಸಕ್ತ ಲೋಕಸಭೆ ಚುನಾವಣೆ ಪ್ರಕ್ರಿಯೆ ಜೂ.6ರ ವೇಳೆಗೆ ಮುಕ್ತಾಯಗೊಳ್ಳಲಿದೆ. ಅಷ್ಟರ ವೇಳೆಗೆ ಮೇಲ್ಮನೆ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾದರೆ ಅಚ್ಚರಿ ಪಡಬೇಕಿಲ್ಲ. ಏ.26 ಹಾಗೂ ಮೇ.7 ರಂದು ಎರಡು ಹಂತದಲ್ಲಿ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಆನಂತರ ವಿಧಾನಪರಿಷತ್ ಚುನಾವಣೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_186_12.txt b/eesanje/url_46_186_12.txt new file mode 100644 index 0000000000000000000000000000000000000000..695f51dedcfb1da4d2004f33956023b42ec74773 --- /dev/null +++ b/eesanje/url_46_186_12.txt @@ -0,0 +1,7 @@ +ಮೈತ್ರಿ ಅಭ್ಯರ್ಥಿಗಳಿಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ : ಬಿ.ವೈ.ವಿಜಯೇಂದ್ರ +ಹಾಸನ,ಏ.4-ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೆ ಅಭೂತಪೂರ್ವವಾದಂತಹ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕು. +ಪ್ರಧಾನಿ ನರೇಂದ್ರಮೋದಿ ಅವರ ಕನಸಿನಂತೆ 2047ರ ವೇಳೆಗೆ ವಿಕಸಿತ ಭಾರತ ಆಗಿ ಪರಿವರ್ತನೆ ಆಗಬೇಕು. ಅದಕ್ಕಾಗಿ ಮತ್ತೊಮ್ಮೆ ನರೇಂದ್ರಮೋದಿ ಪ್ರಧಾನಮಂತ್ರಿ ಆಗಬೇಕು, ಅದು ನನಸಾಗುವ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನರೇಂದ್ರಮೋದಿ ಅವರ ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿರುವುದು ನಮಗೆ ದೊಡ್ಡ ಶಕ್ತಿಯನ್ನು ತಂದುಕೊಟ್ಟಿದೆ.ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಲು ಎಲ್ಲರೂ ಒಗ್ಗಟ್ಟಾಗಿ ದುಡಿಯುತ್ತೇವೆ ಎಂದು ಹೇಳಿದರು. +ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಶಾಸಕ ಪ್ರೀತಂಗೌಡ ಗೈರು ಆಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯ ನಾಯಕರು ಕುಳಿತು ಪದಾಧಿಕಾರಿಗಳ ಸಭೆ ಮಾಡಿದ್ದಾರೆ. ಒಂದೆರಡು ದಿನದಲ್ಲಿ ವಾತಾವರಣ ತಿಳಿಯಾಗಲಿದೆ. ನಮ್ಮ ಕರ್ತವ್ಯ ಕೂಡ ಇರುತ್ತದೆ. +ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇ ಗೌಡರು ಕೂಡ ಆಶೀರ್ವಾದ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರಮೋದಿಯವರ ಬಗ್ಗೆ ಗೌಡರು ಅಚಲ ವಿಶ್ವಾಸವನ್ನು ಹೊಂದಿದ್ದಾರೆ ಎಂದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ದೆಹಲಿ ವರಿಷ್ಠರು ಸಮಾಧಾನ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ವಿಚಾರದ ವಿಚಾರದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದ ಮೇಲೆ ಹೇಳುತ್ತೇನೆ ಎಂದು ಹೇಳಿದರು. +ಪ್ರಜ್ವಲ್ ನಾಮಪತ್ರ ಸಲ್ಲಿಕೆ :ಹಾಸನ ಲೋಕಸಭಾ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿಯಾಗಿ ಸಂಸದ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್, ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸಿ.ಸತ್ಯಭಾಮ ಅವರಿಗೆ ಪ್ರಜ್ವಲ್ ನಾಮಪತ್ರ ಸಲ್ಲಿಸಿದರು. +ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಸೂಚಕರಾಗಿ ಪ್ರಜ್ವಲ್ರವರ ನಾಮಪತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಹಿ ಹಾಕಿ ತೆರಳಿದರು. ಹಾಸನದಲ್ಲಿ ನಡೆದ ರೋಡ್ ಶೋನಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಎಂಎಲ್ಸಿ ಸೂರಜ್ ರೇವಣ್ಣ, ಭವಾನಿ ರೇವಣ್ಣ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_186_2.txt b/eesanje/url_46_186_2.txt new file mode 100644 index 0000000000000000000000000000000000000000..8034f40f975f10f9ebaccde04fef6fc000df4acf --- /dev/null +++ b/eesanje/url_46_186_2.txt @@ -0,0 +1,16 @@ +ಸಾಲುಸಾಲು ರಜೆ : ಹಗಲು ದರೋಡೆಗಿಳಿದ ಖಾಸಗಿ ಬಸ್ ಮಾಲೀಕರು, ಇಲ್ಲಿದೆ ಶಾಕಿಂಗ್ ದರಪಟ್ಟಿ +ಬೆಂಗಳೂರು,ಏ.5-ಸಿಗುವ ಸಾಲು ರಜೆಗಳಿಂದಾಗಿ ಊರಿಗೆ ತೆರಳಿ ಯುಗಾದಿ ಹಬ್ಬ ಆಚರಿಸಲು ತೀರ್ಮಾನಿಸಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್ ಮಾಲೀಕರು ಟಿಕೆಟ್ ಬೆಲೆ ಏರಿಕೆ ಶಾಕ್ ನೀಡಿದ್ದಾರೆ. +ಭಾನುವಾರ ಮಾಮೂಲು ರಜೆ ಸೋಮವಾರ ಒಂದು ದಿನ ಕೆಲಸ ಮಾಡಿದರೆ ಮಂಗಳವಾರ ಯುಗಾದಿ ರಜೆ ಬುಧವಾರ ಕಳೆದರೆ ರಂಜಾನ್ ಹಬ್ಬ ಹೀಗಾಗಿ ಸಾಲು ಸಾಲು ರಜೆ ಸಿಗುವುದರಿಂದ ಜನ ಊರಿಗೆ ತೆರಳಲು ಪ್ಲಾನ್ ಮಾಡಿಕೊಂಡಿದ್ದಾರೆ. ಇದರ ಜತೆಗೆ ಮಕ್ಕಳ ಎಕ್ಸಾಂ ಮುಗಿದು ಅವರಿಗೂ ರಜೆ ಇರುವುದರಿಂದ ನಾಳೆ ರಾತ್ರಿಯೇ ಕೆಲವರು ಊರಿಗೆ ಹೋಗಲು ತಯಾರಾಗಿದ್ದಾರೆ. ಇನ್ನು ಕೆಲವರು ಸೋಮವಾರ ಮತ್ತು ಬುಧವಾರ ರಜೆ ಹಾಕಿ ಒಂದು ವಾರ ಊರಿನಲ್ಲೇ ಹಬ್ಬ ಮಾಡುತ್ತ ಕಾಲ ಕಳೆಯಲು ನಿರ್ಧರಿಸಿದ್ದಾರೆ. +ಇಂತಹ ಸಮಯವನ್ನೇ ಕಾಯುತ್ತಿದ್ದ ಖಾಸಗಿ ಬಸ್ಗಳ ಮಾಲೀಕರು ಟಿಕೆಟ್ ದರ ಏರಿಕೆ ಮಾಡಿ ಜನರಿಗೆ ಶಾಕ್ ನೀಡಿದ್ದಾರೆ. ಮಾಮೂಲಿ ಬಸ್ ದರದ ದುಪ್ಪಟ್ಟು ಬೆಲೆ ಏರಿಕೆ ಮಾಡಿರುವ ಖಾಸಗಿ ಬಸ್ ಮಾಲಿಕರು ಎಸಿ ಬಸ್ಗಳಿಗೆ ವಿಮಾನಯಾನಕ್ಕಿಂತಲೂ ದುಬಾರಿ ಬೆಲೆ ನಿಗದಿಪಡಿಸಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. +ಬೆಂಗಳೂರು-ಶಿವಮೊಗ್ಗ:ಸಾಮಾನ್ಯ ದಿನದದರರೂ.450-ರೂ.600ಇವತ್ತಿನ ಟಿಕೆಟ್ ದರರೂ.950- ರೂ.1250 +ಬೆಂಗಳೂರು- ಹುಬ್ಬಳ್ಳಿ:ಸಾಮಾನ್ಯ ದರರೂ.600- ರೂ.1000ಇಂದಿನ ಟಿಕೆಟ್ರೂ.1200-ರೂ.1600 +ಬೆಂಗಳೂರು-ಮಂಗಳೂರು:ಸಾಮಾನ್ಯ ದಿನದ ದರರೂ.500- ರೂ.1000ಇಂದಿನ ದರರೂ.1000- ರೂ.1400 +ಬೆಂಗಳೂರು-ಕಲಬುರುಗಿ:ಸಾಮಾನ್ಯ ದಿನದ ದರರೂ.900- ರೂ.1300ಇಂದಿನ ದರರೂ.1400-ರೂ.1900 +ಬೆಂಗಳೂರು-ಮಡಿಕೇರಿ:ಸಾಮಾನ್ಯ ದಿನದ ದರರೂ.500- ರೂ.600ಇಂದಿನ ದರರೂ.950- ರೂ.1200 +ಬೆಂಗಳೂರು – ಉಡುಪಿ:ಸಾಮಾನ್ಯ ದಿನದ ದರರೂ.600- ರೂ.950ಇಂದಿನ ದರರೂ.1700-ರೂ.2200 +ಬೆಂಗಳೂರು-ಧಾರವಾಡ:ಸಾಮಾನ್ಯ ದಿನದ ದರರೂ.650- ರೂ.800ಇಂದಿನ ದರರೂ.1350-ರೂ.1750 +ಬೆಂಗಳೂರು-ಬೆಳಗಾವಿ:ಸಾಮಾನ್ಯ ದಿನದ ದರರೂ.500 ರೂ.800ಇಂದಿನ ದರರೂ.1300-ರೂ.1800 +ಬೆಂಗಳೂರು – ದಾವಣಗೆರೆ:ಸಾಮಾನ್ಯ ದಿನದ ದರರೂ.450 ರೂ.600ಇಂದಿನ ದರರೂ.900-ರೂ.1300 +ಬೆಂಗಳೂರು – ಚಿಕ್ಕಮಗಳೂರು:ಸಾಮಾನ್ಯ ದರ ರೂ.550 -600ಇಂದಿನದರರೂ.1100-ರೂ.1300 +ಬೆಂಗಳೂರು – ಬೀದರ್:ಸಾಮಾನ್ಯ ದರ ರೂ.850 -1200ಇಂದಿನದರ ರೂ.1600- 1800 +ಬೆಂಗಳೂರು – ರಾಯಚೂರುಸಾಮಾನ್ಯ ದರ ರೂ.600 -900ಇಂದಿನ ದರರೂ.1250-ರೂ.1600 \ No newline at end of file diff --git a/eesanje/url_46_186_3.txt b/eesanje/url_46_186_3.txt new file mode 100644 index 0000000000000000000000000000000000000000..fe43e5bab85f9bf4de6b8fefa5768ff47b62e465 --- /dev/null +++ b/eesanje/url_46_186_3.txt @@ -0,0 +1,10 @@ +ಅಧಿಕೃತವಾಗಿ ಬಿಜೆಪಿ ಸೇರಿದ ಸುಮಲತಾ ಅಂಬರೀಶ್ +ಬೆಂಗಳೂರು,ಏ.5-ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವಾಭಿಮಾನಿ ಅಸ್ತ್ರದ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಇತಿಹಾಸ ಸೃಷ್ಟಿಸಿದ್ದ ಸುಮಲತ ಅಂಬರೀಶ್ ಇಂದು ವಿಧ್ಯುಕ್ತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಸುಮಲತ ಅಂಬರೀಶ್ ಜೊತೆಗೆ ಮಾಜಿ ಲೋಕಸಭಾ ಸದಸ್ಯ ಎಲ್.ಆರ್.ಶಿವರಾಮೇಗೌಡ ಹಾಗೂ ಸುಮಲತ ಅಂಬರೀಶ್ ಬೆಂಬಲಿಗರು ಕೂಡ ಬಿಜೆಪಿಗೆ ಸೇರ್ಪಡೆಯಾದರು. +ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ಕೇಸರಿ ಶಾಲು ಹೊದ್ದ ಸುಮಲತ ಅಂಬರೀಶ್ ಹಾಗೂ ಬೆಂಬಲಿಗರು ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡರು. +ಅವರ ಸೇರ್ಪಡೆಯಿಂದಾಗಿ ಹಳೇ ಮೈಸೂರು ಭಾಗದಲ್ಲಿ(ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ) ಬಿಜೆಪಿಗೆ ಹೆಚ್ಚಿನ ಶಕ್ತಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಪಕ್ಷ ಸೇರ್ಪಡೆಗೂ ಮುನ್ನ ಸುಮಲತ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. +ನಂತರ ನೇರವಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದರು.ಈ ವೇಳೆ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಕಚೇರಿಗೆ ಆಗಮಿಸುತ್ತಿದ್ದಂತೆ ಜೈಕಾರದ ಘೋಷಣೆಗಳು ಮೊಳಗಿದವು. ಬಿಜೆಪಿ ಸೇರುವ ಮುನ್ನ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸುಮಲತ ಅಂಬರೀಶ್ ಭಾವನಾತ್ಮಕವಾದ ಸಂದೇಶವನ್ನು ಪೋಸ್ಟ್ ಮಾಡಿದ್ದರು. +ಮಂಡ್ಯದ ಅಭಿವೃದ್ಧಿಯನ್ನೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿಗಳಾದ ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಅದರಂತೆಯೇ, ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ ಆಗುತ್ತಿರುವೆ. +ನಮ್ಮ ಕರುನಾಡಿನ ಸಕ್ಕರೆಯ ನಾಡು ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳು, ಡಾ.ಅಂಬರೀಶ್ ಅಭಿಮಾನಿಗಳು ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ನನ್ನ ಸವಿನಯ ಕೋರಿಕೆ ಎಂದು ಬರೆದುಕೊಂಡಿದ್ದಾರೆ. +ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‍ಗಾಗಿ ಸುಮಲತ ಸಾಕಷ್ಟು ಹೋರಾಟ ನಡೆಸಿದ್ದರು. ಬಿಜೆಪಿ ಹೈಕಮಾಂಡ್ ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದಲ್ಲದೇ, ಬೇರೆ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಸುಮಲತಾಗೆ ಆಫರ್ ನೀಡಲಾಗಿತ್ತು. ಆದರೆ ಸುಮಲತ ಮಂಡ್ಯ ಹೊರತುಪಡಿಸಿ ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂಬ ಅಚಲ ನಿರ್ಧಾರ ತೆಗೆದುಕೊಂಡಿದ್ದರು. ಮಂಡ್ಯದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಲಿದ್ದಾರೆ ಎಂಬಮಾತುಗಳೂ ರಾಜಕೀಯ ವಲಯದಲ್ಲಿ ಕೇಳಿ ಬಂದಿದ್ದವು. +ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬೇಸರಗೊಂಡಿದ್ದ ಸಂಸದೆ ಸುಮಲತ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರು ಜೆಪಿನಗರದ ಮನೆಯಲ್ಲಿ ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಬೆಂಬಲ ಮತ್ತು ಸಹಕಾರ ಕೋರಿದ್ದರು. ಬಳಿಕ ಮಂಡ್ಯ ಕ್ಷೇತ್ರದ ಅಭಿಮಾನಿಗಳು ಮತ್ತು ಬೆಂಬಲಿಗರ ಅಭಿಪ್ರಾಯ ಪಡೆದು ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು. +ಮೊನ್ನೆ ಮಂಡ್ಯದಲ್ಲಿ ಸಭೆ ನಡೆಸಿ ಬಿಜೆಪಿ ಸೇರುವುದಾಗಿ ಪ್ರಕಟಿಸಿ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ, ಹಾಗೆಯೇ ಮಂಡ್ಯ ಬಿಟ್ಟು ಬೇರೆ ಎಲ್ಲಿಯೂ ಚುನಾವಣೆಗೆ ನಿಲ್ಲುವುದಿಲ್ಲ ಎಂದು ನಿರ್ಧಾರ ಘೋಷಣೆ ಮಾಡಿದ್ದರು.ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತ ಸ್ವತಂತ್ರ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಜಿದ್ದಾಜಿದ್ದಿನ ಚುನಾವಣೆಯಲ್ಲಿ ಗೆದ್ದು ದೇಶದ ಗಮನ ಸೆಳೆದಿದ್ದರು. ಆ ಸಂದರ್ಭದಲ್ಲಿ ಬಿಜೆಪಿಯು ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಸುಮಲತ ಅವರಿಗೆ ಬೆಂಬಲ ನೀಡಿತ್ತು. \ No newline at end of file diff --git a/eesanje/url_46_186_4.txt b/eesanje/url_46_186_4.txt new file mode 100644 index 0000000000000000000000000000000000000000..3d4d932f39643aceb88c4e1f296380461e33693c --- /dev/null +++ b/eesanje/url_46_186_4.txt @@ -0,0 +1,5 @@ +ಚುನಾವಣಾ ಅಕ್ರಮ : ರಾಜ್ಯದಲ್ಲಿ ಈವರೆಗೆ 30.19 ಕೋಟಿ ನಗದು ಜಪ್ತಿ +ಬೆಂಗಳೂರು,ಏ.5-ಚುನಾವಣಾ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ಭಾರತದ ಚುನಾವಣಾ ಆಯೋಗ ಜರುಗಿಸುತ್ತಿರುವ ಪರಿಣಾಮ 30.19 ಕೋಟಿ ನಗದು ಜಪ್ತಿ ಮಾಡಲಾಗಿದೆ. ಪ್ರಸಕ್ತ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಮಾ.16ರಿಂದ ನಿನ್ನೆಯವರೆಗೆ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಆದಾಯ ತೆರಿಗೆ, ಅಬಕಾರಿ ಅಧಿಕಾರಿಗಳು ರಾಜ್ಯದಲ್ಲಿ ಒಟ್ಟು 30,19,88,517 ರೂ. ನಗದನ್ನು ಜಪ್ತಿ ಮಾಡಿದ್ದಾರೆ. +ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2.20 ಕೋಟಿ ರೂ ಸ್ಥಿರ ಕಣ್ಗಾವಲು ತಂಡದವರು, ಗುಲ್ಬರ್ಗಾ ಲೋಕಸಭಾ ವ್ಯಾಪ್ತಿಯ ಮೇದಕ್ ಚೆಕ್ ಪೋಸ್ಟ್ ನಲ್ಲಿ ನಲ್ಲಿ 35 ಲಕ್ಷ ರೂ. ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮಾಚಗೊಂಡನಹಳ್ಳಿ ಚೆಕ್ ಪೋಸ್ಟ್ ನಲ್ಲಿ 45 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +1,75,43,093 ಉಚಿತ ಉಡುಗೊರೆಗಳನ್ನು ಜಪ್ತಿ ಮಾಡಿದ್ದು, 1,31,92,49,175 ರೂ. ಮೌಲ್ಯದ 1,32, 59,894.85 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ.3,13,55,960 ರೂ. ಮೌಲ್ಯದ 287.18 ಕೆಜಿ ತೂಕದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 9,93,80,132 ರೂ. ಮೌಲ್ಯದ 16.02 ಕೆಜಿ ಚಿನ್ನ, 27,23,150 ರೂ. ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ಮೌಲ್ಯದ 21.17 ಕ್ಯಾರೆಟ್ ಮೌಲ್ಯದ ವಜ್ರಾಭರಣಗಳನ್ನು ಜಪ್ತಿ ಮಾಡಿದ್ದಾರೆ. +ನಗದು, ಮದ್ಯ, ಡ್ರಗ್ಸ್, ಬೆಲೆ ಬಾಳುವ ಲೋಹ, ಉಚಿತ ಉಡುಗೊರೆಗಳನ್ನು ವಶಪಡಿಸಿಕೊಂಡಿರುವ ಪ್ರಕರಣಗಳಿಗೆ ಸಂಬಂಸಿದಂತೆ 1245 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. 790 ವಿವಿಧ ರೀತಿಯ ವಾಹನಗಳನ್ನುವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ಸ್ವೀಕರಿಸಿದ 12,076 ಕರೆಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_186_5.txt b/eesanje/url_46_186_5.txt new file mode 100644 index 0000000000000000000000000000000000000000..844e25551e04381a5aa244ef3615e52197a4fdbf --- /dev/null +++ b/eesanje/url_46_186_5.txt @@ -0,0 +1,15 @@ +ಈಶ್ವರಪ್ಪ ಈಗ ಒಂಟಿ, ಕಟ್ಟರ್ ಹಿಂದುತ್ವವಾದಿಯ ರೋಚಕ ಪೊಲಿಟಿಕಲ್ ಜರ್ನಿ +ಬೆಂಗಳೂರು,ಏ.5-ಕೆ.ಎಸ್.ಈಶ್ವರಪ್ಪ ! ಕಟ್ಟರ್ ಹಿಂದುತ್ವವಾದಿ. ಸಂಘ ಪರಿವಾರದಿಂದ ಎದ್ದು ಬಂದ ನಾಯಕ. ಬಿಜೆಪಿಯ ನಿಷ್ಠಾವಂತ. ಶಿವಮೊಗ್ಗ ಜಿಲ್ಲಾ ರಾಜಕಾರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರ ಜೊತೆ ಗುರುತಿಸಿಕೊಂಡು ಬೆಳೆದುಬಂದವರು.ಇಂತಹ ಈಶ್ವರಪ್ಪ ಈಗ ಸ್ವಪಕ್ಷದವರ ವಿರುದ್ಧವೇ ಸಿಡಿದೆದ್ದು ತಮಗೆ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಎಲ್ಲವನ್ನೂ ನೀಡಿದ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ವಿರುದ್ಧವೇ ಶಿವಮೊಗ್ಗ ಕಣದಲ್ಲಿ ಅಖಾಡಕ್ಕಿಳಿದಿದ್ದಾರೆ. +ಶಿವಮೊಗ್ಗದಲ್ಲಿ ಗೆಲ್ಲಲು ಯಡಿಯೂರಪ್ಪನವರ ಶಕ್ತಿ ಬೆಳೆಸಿಕೊಂಡಿದ್ದ ಈಶ್ವರಪ್ಪ, ಬಹುತೇಕ ಅನಂತಕುಮಾರ್‍ಗೆ ನಿಷ್ಠೆಯಾಗಿದ್ದರು. ಅವರ ನಿಧನದ ನಂತರ ಬಿ.ಎಲ್.ಸಂತೋಷ್ ಜೊತೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಸದ್ಯ ಅವರು ಕೂಡ ಕೈ ಹಿಡಿಯುವ ಸ್ಥಿತಿಯಲ್ಲಿಲ್ಲ. +ಪಕ್ಷ ನಿಷ್ಠೆ, ಸಂಘ ಪರಿವಾರದ ಹಿನ್ನೆಲೆ, ಹಿಂದುತ್ವ ಹೇಳಿಕೊಂಡೇ ಆರ್‍ಎಸ್‍ಎಸ್‍ನ ಕಟ್ಟಾಳುವಾಗಿದ್ದ ಈಶ್ವರಪ್ಪ ಇಂದು ಅಕ್ಷರಶಃ ಏಕಾಂಗಿ. ಅವರ ಬೆನ್ನಿಗೆ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಪ್ರಬಲ ನಾಯಕರು ಇಲ್ಲ. ಒಂದಿಷ್ಟು ಅಭಿಮಾನಿಗಳು ಸದ್ಯ ಜೈ ಜೈ ಎನ್ನುತ್ತಿದ್ದರಾದರೂ ಅವರ ನಿಷ್ಠೆ ಯಾವುದೇ ಸಂದರ್ಭದಲ್ಲಿ ಬದಲಾದರೂ ಅಚ್ಚರಿ ಇಲ್ಲ. +ಒಂದು ಕಾಲದಲ್ಲಿ 28 ಲೋಕಸಭಾ ಕ್ಷೇತ್ರಗಳು, 224 ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್ ನೀಡುವ ಹಂತಕ್ಕೆ ಬೆಳೆದಿದ್ದ ಈಶ್ವರಪ್ಪ ಇಂದು ತಮ್ಮ ಸ್ವಂತ ಮಗನಿಗೆ ಟಿಕೆಟ್ ಕೊಡಿಸಲಾಗದಷ್ಟು ಅಸಹಾಯಕತೆಗೆ ಬಂದಿದ್ದಾರೆ. ಹಾವೇರಿಯಿಂದ ಪುತ್ರ ಕಾಂತೇಶನಿಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಸಿಡಿದೆದ್ದು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸದ್ಯ ಅವರ ಮನವೊಲಿಸುವ ದಾರಿಗಳು ಬಂದ್ ಅಗಿವೆ. +ದೆಹಲಿಗೆ ಬನ್ನಿ ಎಂದು ಹೇಳಿದ್ದ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಭೇಟಿಯಾಗದೆ ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ಅವರು ಶಸ್ತ್ರಗಳಿಲ್ಲದೆ, ರಣರಂಗದಲ್ಲಿ ಸೈನಿಕರು ಇಲ್ಲದೆ ಅಭಿಮನ್ಯುವಿನ ರೀತಿ ಚಕ್ರವ್ಯೂಹ ಭೇದಿಸುತ್ತೇನೆ ಎಂದು ರಣರಂಗಕ್ಕೆ ನುಗ್ಗಿದ್ದಾರೆ.ಶಿವಮೊಗ್ಗ ಜಿಲ್ಲೆ ರಾಜಕಾರಣದಲ್ಲಿ ಯಡಿಯೂರಪ್ಪ ಜೊತೆಗೆ ಗುರುತಿಸಿಕೊಂಡು ಬಂದ ಅವರು, ಎರಡು ಬಾರಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಪುಟದ ಸದಸ್ಯರಾಗಿದ್ದರೂ ಸ್ವ ಇಚ್ಛೆಯಿಂದ ಪದತ್ಯಾಗ ಮಾಡಿ ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ವಹಿಸಿಕೊಂಡಿದ್ದರು. +ಪಕ್ಷ ಸೇವೆ, ಸಂಘ ಪರಿವಾರದ ಮೇಲಿನ ನಿಷ್ಠೆ, ನಾಯಕತ್ವ ಗುಣ, ಹೋರಾಟ ಮನೋಭಾವ, ಬಿರುಸು ನುಡಿ, ವಿವಾದ ಸೃಷ್ಟಿ ಹೀಗೆ ಹಲವಾರು ಕಾರಣಗಳಿದ ಕೆ.ಎಸ್. ಈಶ್ವರಪ್ಪ ರಾಜ್ಯ ರಾಜಕಾರಣದಲ್ಲಿ ವಿಶೇಷವಾಗಿ ಗುರುತಿಸಿಕೊಳ್ಳುತ್ತಲೇ ಬಂದವರು.ಜತೆಗಾರರಾಗಿದ್ದ ಯಡಿಯೂರಪ್ಪ ಬಿಜೆಪಿಯಿಂದ ಸಿಡಿದು ಹೊರ ಹೋದಾಗಲೂ ಇವರು ಕಮಲ ಕೈ ಬಿಡಲಿಲ್ಲ. ಬಿಜೆಪಿ ಕಷ್ಟದಲ್ಲಿದ್ದಾಗಲೆಲ್ಲ ಪಕ್ಷದ ನಾಯಕತ್ವವನ್ನು ವಹಿಸಿಕೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದ್ದರು. +ಮಾತಿನಿಂದಲೇ ಸದಾ ಸುದ್ದಿ:ಯಡಿಯೂರಪ್ಪ ತಮ್ಮ ರಾಜಕೀಯ ನಡೆಗಳಿಂದಾಗಿ ರಾಜ್ಯದಲ್ಲಿ ಹೆಸರು ಮಾಡುತ್ತಿದ್ದರೆ, ಈಶ್ವರಪ್ಪ ತಮ್ಮ ಹರಿತವಾದ ನಾಲಿಗೆಯನ್ನು ಅಡ್ಡಾದಿಡ್ಡಿಯಾಗಿ ಹರಿಯಬಿಟ್ಟು ಸದಾ ಸುದ್ದಿಯಲ್ಲಿರುತ್ತಿದ್ದರು.ಸಚಿವರಾದಾಗಲೂ ಕೂಡ ತಮ್ಮ ಸ್ಥಾನದ ಘನತೆಯನ್ನು ಮರೆತು ಮಾತನಾಡಿದ್ದು ಹಲವಾರು ಬಾರಿ ವಿವಾದಕ್ಕೆ, ಜನರ ಆಕ್ರೋಶಕ್ಕೆ ಕಾರಣವಾಗಿತ್ತು. +ಕಡಿ, ಬಡಿ, ಹೊಡಿ ಮಾತುಗಳಲ್ಲದೆ, ದ್ವೇಷ ಕಾರುವ ಮಾತುಗಳನ್ನು ಆಡುತ್ತಿದ್ದರಿಂದ ಪಕ್ಷದ ನಾಯಕತ್ವಕ್ಕೂ ಹಲವಾರು ಬಾರಿ ಮುಜುಗರ ಉಂಟುಮಾಡಿದ್ದರು. ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಿಸುತ್ತೇವೆ ಎಂಬಂತಹ ಮಾತುಗಳನ್ನು ಆಡಿಯೂ ಈಶ್ವರಪ್ಪ ಅರಗಿಸಿ ಕೊಳ್ಳಬಲ್ಲವರಾಗಿದ್ದರು. +ರಾಜ್ಯ ಬಿಜೆಪಿಯಲ್ಲಿ ಈಶ್ವರಪ್ಪ ಮೊದಲ ಸಾಲಿನ ಲೀಡರ್ ಎನಿಸಿಕೊಂಡವರು. ಚುನಾವಣಾ ರಾಜಕಾರಣದಲ್ಲಿ ಗೆಲ್ಲಲಿ ಅಥವಾ ಸೋಲಲಿ, ಎಲ್ಲ ಸಂದರ್ಭದಲ್ಲೂ ಈಶ್ವರಪ್ಪ ಅವರಿಗೆ ಪಕ್ಷ ಪ್ರಮುಖ ಸ್ಥಾನಮಾನಗಳನ್ನು ನೀಡಿದೆ. 2013ರಲ್ಲಿ ಸೋತಿದ್ದ ಅವರನ್ನು ಪರಿಷತ್‍ಗೆ ಆಯ್ಕೆ ಮಾಡಲಾಯಿತು. +ಸ್ನೇಹದ ಕಡಲಲ್ಲಿ ನೆನಪಿನ ದೋಣಿಯಲ್ಲಿ:ಮಂಡ್ಯ ಮೂಲದ ಬಿ.ಎಸ್.ಯಡಿಯೂರಪ್ಪ, ಬಳ್ಳಾರಿ ಮೂಲದ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ನೇಹಿತರಾಗಿ, ಬಿಜೆಪಿಯಲ್ಲಿ ನಾಯಕರಾಗಿ ಬೆಳೆದಿದ್ದೇ ರೋಚಕ ಕತೆ. ಹೆಚ್ಚು ಕಡಿಮೆ ಇಬ್ಬರ ಕುಟುಂಬದ ಆರ್ಥಿಕ ಸ್ಥಿತಿಯೂ ಒಂದೇ ರೀತಿಯಾಗಿತ್ತು. ಸಂಘ ಪರಿವಾರದ ನಂಟಿನಿಂದಾಗಿ ಇಬ್ಬರಿಗೂ ದಾರಿ ಸ್ಪಷ್ಟವಾಗಿತ್ತು. ಇವರಿಬ್ಬರೂ ಒಂದೇ ಸ್ಕೂಟರ್‍ನಲ್ಲಿ ಸುತ್ತಾಡಿ ಪಕ್ಷ ಸಂಘಟಿಸುತ್ತಿದ್ದರು. ಶಿಕಾರಿಪುರದಲ್ಲಿ ಯಡಿಯೂರಪ್ಪ ರೈತರ ಸಮಸ್ಯೆ, ಶ್ರೀಸಾಮಾನ್ಯರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ಬೆಳೆದರೆ, ಇತ್ತ ಶಿವಮೊಗ್ಗದಲ್ಲಿ ಈಶ್ವರಪ್ಪ ಹಿಂದುತ್ವವನ್ನು ಅಸ್ತ್ರವನ್ನಾಗಿ ಬಳಸಿ ರಾಜಕೀಯವಾಗಿ ಬೇರೂರಿದರು. +ಒಂದು ಕಾಲದಲ್ಲಿ ಇಬ್ಬರೂ ಜೊತೆಗೂಡಿ ಶಿವಮೊಗ್ಗದಲ್ಲಿ ವ್ಯಾಪಾರ ನಡೆಸಿದ್ದರು. ರಾಜಕೀಯವಾಗಿ ಮೇಲೇರುತ್ತಿದ್ದಂತೆಯೇ ಇವರಿಬ್ಬರ ನಡುವಿನ ಬಿರುಕು ಅಗಲವಾಗುತ್ತಾ ಬಂದಿತ್ತು. 2008ರ ಲೋಕಸಭಾ ಚುನಾವಣೆಯಲ್ಲಿ ಮಗ ಬಿ.ಎಸ್.ರಾಘವೇಂದ್ರ ಅವರನ್ನು ಕಣಕ್ಕಿಳಿಸಲು ಯಡಿಯೂರಪ್ಪ ಮುಂದಾದಾಗ ಈಶ್ವರಪ್ಪ ಬಹಿರಂಗವಾಗಿಯೇ ವಿರೋಸಿದ್ದರು. ಇವರಿಬ್ಬರ ಸ್ನೇಹ ಹಳಸಿದ್ದು, ಆಗಲೇ ಎಲ್ಲರಿಗೂ ಗೊತ್ತಾಗಿದ್ದು. +ಮುಂದೆ ಹಲವಾರು ಬಾರಿ ಇವರಿಬ್ಬರೂ ಕಚ್ಚಾಡಿಕೊಂಡಿದ್ದಾರೆ. ಮಾತಿನ ಮೂಲಕ ತಿವಿದುಕೊಂಡಿದ್ದಾರೆ. ಯಡಿಯೂರಪ್ಪ ಲಿಂಗಾಯಿತರ ನಾಯಕರಾಗಿ ಗುರುತಿಸಿಕೊಂಡ ಹಾಗೇ ಈಶ್ವರಪ್ಪ ಕುರುಬರ ನಾಯಕರಾಗಿ ಬೆಳೆಯಬೇಕೆಂದು ರಾಯಣ್ಣ ಬ್ರಿಗೇಡ್ ಕಟ್ಟಿದ್ದರು. ಆದರೆ ಪಕ್ಷದ ವಿಷಯಕ್ಕೆ ಬಂದಾಗ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದೂ ಉಂಟು! +ಖಾತೆಗಳ ಸಮರ್ಥ ನಿರ್ವಹಣೆ:ವಿವಾದಗಳ ಹೊರತಾಗಿಯೂ ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದವರು ಕೆ.ಎಸ್.ಈಶ್ವರಪ್ಪ. ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದರು. ಜಲಸಂಪನ್ಮೂಲ ಸಚಿವರಾಗಿದ್ದರು. ನೀರಾವರಿ ಸಚಿವರಾಗಿ ಕಳಸಾ-ಬಂಡೂರಿ ಯೋಜನೆ ಸಂಬಂಧ ಈಶ್ವರಪ್ಪ ದಿಟ್ಟ ನಿಲುವು ಕೈಗೊಂಡಿದ್ದರು. ಆನಂತರ 2008-2013ರ ಅವಧಿಯ ಬಿಜೆಪಿ ಸರಕಾರದಲ್ಲಿಇಂಧನ, ಗ್ರಾಮೀಣಾಭಿವೃದ್ಧಿ, ಕಂದಾಯ ಇಲಾಖೆಗಳನ್ನು ನಿರ್ವಹಿಸಿದ್ದರು. ಶೆಟ್ಟರ್ ಸಂಪುಟದಲ್ಲಿ ಈಶ್ವರಪ್ಪ ಡಿಸಿಎಂ ಆಗಿದ್ದರು. +ಶಿವಮೊಗ್ಗದಲ್ಲಿ ನಾನು ಗೆದ್ದೇ ತೀರುತ್ತೇನೆ ಎಂದು ಈಶ್ವರಪ್ಪ ಧುಮುಕಿದ್ದಾರೆ. ಅವರ ಎದುರಿರುವುದು ಸಾಮಾನ್ಯ ಆಸಾಮಿಯಲ್ಲ. ಎಲ್ಲ ರಾಜಕೀಯ ಪಟ್ಟುಗಳನ್ನು ಬಲ್ಲ ಮುತ್ಸದ್ದಿ ಬಿಎಸ್‍ವೈ. ಅಂತಿಮ ನಗು ಯಾರದು ಎಂಬುದನ್ನು ಜು.4ರ ಫಲಿತಾಂಶವೇ ನಿರ್ಧರಿಸಲಿದೆ. \ No newline at end of file diff --git a/eesanje/url_46_186_6.txt b/eesanje/url_46_186_6.txt new file mode 100644 index 0000000000000000000000000000000000000000..d7f0a3036cf651890c6025f26e595142c92a1221 --- /dev/null +++ b/eesanje/url_46_186_6.txt @@ -0,0 +1,8 @@ +ಒಂದೇ ಹೆಸರು, ಹಲವು ಅಭ್ಯರ್ಥಿಗಳು : ಮತದಾರರಿಗೆ ಗೊಂದಲ ಸೃಷ್ಟಿಸಲು ‘ಪೋಲಿ’ಟ್ರಿಕ್ಸ್ +ಬೆಂಗಳೂರು,ಏ.5-ರಾಜಕೀಯ ಜಿದ್ದಾಜಿದ್ದಿಗೆ ಹೆಸರುವಾಸಿಯಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದೇ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಐವರು ಮಂಜುನಾಥ್ ಹೆಸರಿನ ಹಾಗೂ ಮೂವರು ಸುರೇಶ್ ಹೆಸರಿನವರ ನಡುವೆ ಹಣಾಹಣಿ ನಡೆಯಲಿದೆ. +ಕಾಂಗ್ರೆಸ್‍ನ ಡಿ.ಕೆ.ಸುರೇಶ್ ಮತ್ತು ಬಿಜೆಪಿಯ ಡಾ.ಸಿ.ಎನ್.ಮಂಜುನಾಥ್ ನಡುವಿನ ಪ್ರತಿಷ್ಠೆಯ ಕದನದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಇದರ ಜೊತೆಗೆ ಸಿ.ಮಂಜುನಾಥ್, ಎನ್.ಮಂಜುನಾಥ್, ಮಂಜುನಾಥ್.ಕೆ ಮತ್ತು ಸಿ.ಎನ್.ಮಂಜುನಾಥ್, ಎಸ್.ಸುರೇಶ್ ಮತ್ತು ಎಂ.ಎನ್.ಸುರೇಶ್ ಕಣಕ್ಕಿಳಿದು ಕ್ಷೇತ್ರದ ಮತದಾರರ ಗಮನ ಸೆಳೆಯಲು ಪೈಪೋಟಿ ನಡೆಸುತ್ತಿದ್ದಾರೆ. +ಆದರೆ ಇದು ಕೇವಲ ಒಂದು ಕ್ಷೇತ್ರದ ಕಥೆಯಲ್ಲ ಮತ್ತು ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‍ನ ರಕ್ಷಾ ರಾಮಯ್ಯ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಡಾ.ಕೆ.ಸುಧಾಕರ್ ಸ್ಪರ್ಧಿಸಿದ್ದು, ಇನ್ನಿಬ್ಬರು ಸುಧಾಕರ್ ಕಣಕ್ಕಿಳಿದಿದ್ದಾರೆ. +ಡಿ.ಸುಧಾಕರ್ ಮತ್ತು ಕೆ.ಸುಧಾಕರ್ ಎಂಬ ಇಬ್ಬರು ಅಭ್ಯರ್ಥಿಗಳು ಪಕ್ಷೇತರರಾಗಿ ಸ್ರ್ಪಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಸುರೇಶ್ ಪೂಜಾರಿ ಮತ್ತು ಸುಪ್ರೀತ್ ಪೂಜಾರಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್ ಮುದ್ದಹನುಮೇಗೌಡ ವಿರುದ್ಧ ಹನುಮಯ್ಯ ಎಂಬುವರು ಕಣಕ್ಕಿಳಿದಿದ್ದಾರೆ. +ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಣಕ್ಕಿಳಿದಿದ್ದು, ಶೋಭಾ ಎಂಬ ಸ್ವತಂತ್ರ ಅಭ್ಯರ್ಥಿ ಹಾಗೂ ಶೋಭನ್ ಬಾಬು ವಿ. ಪುರುಷ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರು ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಮುಕ್ತಾರ್ ಅಲಿ ಖಾನ್ ಅವರೊಂದಿಗೆ ಹಣಾಹಣಿ ನಡೆಸಲಿದ್ದಾರೆ. +ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ, ಅವರ ವಿರುದ್ಧ ಯಡೂರಪ್ಪ ಎಂಬ ಸ್ವತಂತ್ರ ಅಭ್ಯರ್ಥಿ ಕಣಕ್ಕೆ ಇಳಿದಿದ್ದಾರೆ. +ಇನ್ನೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ರ್ಪಸುತ್ತಿರುವ ಮಂಡ್ಯ ಮತ್ತು ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ಸ್ರ್ಪಧಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದಿಂದ ಎಚ್.ಡಿ .ರೇವಣ್ಣ ಎಂಬ ವ್ಯಕ್ತಿ ಸ್ರ್ಪಧಿಸುತ್ತಿದ್ದಾರೆ. ಅವರಲ್ಲಿ ಹಲವರು ಹಣ ನೀಡಿದಾಗ ಕಣದಿಂದ ಹಿಂದೆ ಸರಿಯುತ್ತಾರೆ ಎಂದು ಹಿರಿಯ ರಾಜಕಾರಣಿಯೊಬ್ಬರು ಹೇಳಿದ್ದಾರೆ. ಅವರಿಂದ ಗೆಲ್ಲುವ ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಿಲ್ಲ, ಆದರೆ ಅವರು ಗೊಂದಲ ಸೃಷ್ಟಿಸುತ್ತಾರೆ ಎಂದಿದ್ದಾರೆ. \ No newline at end of file diff --git a/eesanje/url_46_186_7.txt b/eesanje/url_46_186_7.txt new file mode 100644 index 0000000000000000000000000000000000000000..b78c2e60d6044ccb771ad65a1b3a8bbc60940a65 --- /dev/null +++ b/eesanje/url_46_186_7.txt @@ -0,0 +1,7 @@ +ಯುಗಾದಿ, ರಂಜಾನ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ +ಬೆಂಗಳೂರು,ಏ.5-ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ. ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು, ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. +ಕೆಎಸ್‍ಆರ್‍ಟಿಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ 145 ಬಸ್, ಕೆಕೆಆರ್‍ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ನಾಲ್ಕು ನಿಗಮಗಳಿಂದ 2,275 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. +ಸಾಲು ಸಾಲು ರಜೆಏ.7 ಭಾನುವಾರ, 9 ಮಂಗಳವಾರ ಯುಗಾದಿ ಹಬ್ಬ, ಗುರುವಾರ ರಂಜಾನ್ ಇದೆ. ಏ.13 ಎರಡನೇ ಶನಿವಾರ ರಜೆ ಹಾಗೂ 14ರಂದು ಭಾನುವಾರದ ರಜೆ ಇದೆ. ಕೆಲವರು ರಜೆ ಹಾಕಿ ಊರಿಗೆ ತೆರಳಲು ತಯಾರಿ ನಡೆಸಿದ್ದಾರೆ. ಒಟ್ಟು 5 ರಜೆಗಳು ಸಿಗಲಿದೆ. +ವಿದ್ಯಾರ್ಥಿಗಳಿಗೆ ರಜೆ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳಲು ತಯಾರಿ ನಡೆಸಿರುವ ಪೋಷಕರಿಗೆ ಇದು ಅನುಕೂಲವಾಗಲಿದೆ. ಈ ಎಲ್ಲ ಕಾರಣಗಳನ್ನು ಮತ್ತು ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. +ಹಬ್ಬಗಳು ಹಾಗೂ ವಾರಾಂತ್ಯದ ಕಾರಣ ಏಪ್ರಿಲ್ 7 ರಿಂದ ಏಪ್ರಿಲ್ 14ರ ವರೆಗೆ ಬರೋಬ್ಬರಿ 5 ರಜೆಗಳು ಸಿಗಲಿವೆ. ವಿದ್ಯಾರ್ಥಿಗಳಿಗೆ ಬೇಸಗೆ ರಜೆಯೂ ಶುರುವಾದ ಕಾರಣ ಮಕ್ಕಳ ಜೊತೆ ಪ್ರವಾಸಕ್ಕೆ ತೆರಳು ಪೋಷಕರು ಯೋಜನೆ ಹಾಕಿಕೊಂಡಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ಸೇವೆ ಒದಗಿಸಲಾಗುತ್ತಿದೆ. +ಎಲ್ಲೆಲ್ಲಿ ವಿಶೇಷ ಬಸ್ ವ್ಯವಸ್ಥೆ:ನಗರದ ಕೆಂಪೇಗೌಡ ನಿಲ್ದಾಣ, ಸ್ಯಾಟಲೈಟ್ ನಿಲ್ದಾಣ, ಶಾಂತಿನಗರದಿಂದ ವಿಶೇಷ ಬಸ್ ಸೇವೆ ದೊರೆಯಲಿದೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ ಸೇರಿ ಹಲವು ಸ್ಥಳಗಳಿಗೆ ಹೆಚ್ಚುವರಿ ಬಸ್ ಸೇವೆ ದೊರೆಯಲಿದೆ. ನೆರೆರಾಜ್ಯಗಳ ನಗರಗಳಾದ ಹೈದರಾಬಾದ್, ಚೆನ್ನೈ, ಗೋವಾ ಪಣಜಿ, ಶಿರಡಿ, ಎರ್ನಾಕುಲಂಗೆ ವಿಶೇಷ ಬಸ್ ಸೇವೆ ಇರಲಿದೆ. \ No newline at end of file diff --git a/eesanje/url_46_186_8.txt b/eesanje/url_46_186_8.txt new file mode 100644 index 0000000000000000000000000000000000000000..09728c3a6bdb7b12ff60fc6930651492a729edac --- /dev/null +++ b/eesanje/url_46_186_8.txt @@ -0,0 +1,6 @@ +ವಿವಾದಕ್ಕೆ ಎಡೆ ಮಾಡಿಕೊಟ್ಟ ಜೈನ್ ಕಾಲೇಜು ನಡೆ +ಬೆಂಗಳೂರು,ಏ.4-ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿರುವ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಜೈನ್ ಕಾಲೇಜು ವಿದ್ಯಾರ್ಥಿಗಳಿಗೆ ಸೂಚಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ವಿವಿಪುರಂ ನಲ್ಲಿರುವ ಜೈನ್ ಕಾಲೇಜು ವಾಟ್ಸಫ್ ಗ್ರೂಫ್ನಲ್ಲಿ ಈ ರೀತಿಯ ಸಂದೇಶ ಹರಿದಾಡುತ್ತಿರುವುದು ಕಂಡು ಬಂದಿದೆ. +ಸಂದೇಶದಲ್ಲಿ ಇಂದು ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಲಾಗಿದೆ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿದ್ಯಾರ್ಥಿ ಪರಿಷತ್ತಿನ ಸದಸ್ಯರು ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ಬೆಳಗ್ಗೆ 9 ಗಂಟೆಗೆ ಜಯನಗರದ ಮೈಯ್ಯಾಸ್ ಹೋಟೆಲ್ ಬಳಿ ಸೇರಬೇಕು. ಅಲ್ಲಿ ನಿಮಗೆ ಟಿ-ಶರ್ಟ್ ನೀಡಲಾಗುವುದು. ಆದ್ದರಿಂದ ತಡ ಮಾಡಬಾರದು ಎಂದು ಸಂದೇಶದಲ್ಲಿ ಹೇಳಲಾಗಿದೆ. +ನಾಮಪತ್ರ ಸಲ್ಲಿಕೆ ವೇಳೆ ಕಡ್ಡಾಯವಾಗಿ ವಿದ್ಯಾರ್ಥಿಗಳು ಭಾಗವಹಿಸಬೇಕು. ಇದರಿಂದ ಯಾವುದೇ ವಿನಾಯಿತಿಯನ್ನು ನೀಡಲಾಗುವುದಿಲ್ಲ.ಇದಕ್ಕಾಗಿ ನೀವು ಹಾಜರಾತಿ ಪಡೆಯುತ್ತೀರಿ ಎಂದು ಕಾಲೇಜಿನ ಪ್ರತಿಯೊಂದು ತರಗತಿಯ ವಾಟ್ಸಪ್ ಗ್ರೂಪ್ನಲ್ಲೂ ಈ ಸಂದೇಶ ರವಾನೆಯಾಗಿದೆ. +ಅಲ್ಲದೇ, ಕಾಲೇಜಿನ ಆಡಳಿತ ಮಂಡಳಿಯ ಸೂಚನೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಭಾಗದ ತರಗತಿಗಳಿಗೆ ತೆರಳಿ ಮೌಖಿಕವಾಗಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡಿರುವುದಕ್ಕೆ ಹಲವು ವಿದ್ಯಾರ್ಥಿಗಳು ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. +ಇದು ಕೇವಲ ಜೈನ್ ಕಾಲೇಜಿಗೆ ಮಾತ್ರವಲ್ಲದೆ ಆ ಕ್ಷೇತ್ರಕ್ಕೆ ಒಳಪಡುವ ಹಲವಾರು ಕಾಲೇಜುಗಳಿಗೂ ಈ ರೀತಿಯ ಸಂದೇಶಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಈ ಆರೋಪ ಕುರಿತಂತೆ ಜೈನ್ ಕಾಲೇಜು ಆಡಳಿತ ಮಂಡಳಿ ಪ್ರತಿಕ್ರಿಯಿಸಲು ನಿರಾಕರಿಸಿದೆ. \ No newline at end of file diff --git a/eesanje/url_46_186_9.txt b/eesanje/url_46_186_9.txt new file mode 100644 index 0000000000000000000000000000000000000000..ef2c5f1de73ff9aabcaf8a00912cae39d2449992 --- /dev/null +++ b/eesanje/url_46_186_9.txt @@ -0,0 +1,9 @@ +ರಾಜ್ಯ ಸರ್ಕಾರದ ನಿರ್ಲಕ್ಷ್ಯ, ಐಟಿ ಕ್ಷೇತ್ರ ಚಿಂತಾಜನಕ +ಬೆಂಗಳೂರು,ಏ.4-ಕರ್ನಾಟಕ ಸರಕಾರವು ಐಟಿ ಕ್ಷೇತ್ರಕ್ಕೆ ವಿರುದ್ಧವಾದ ನೀತಿ ಅನುಸರಿಸುತ್ತಿದೆ. ಇವತ್ತು ಎಲ್ಲ ಐಟಿ ಬಾಂಧವರ ಸ್ಥಿತಿ ಚಿಂತಾಜನಕವಾಗಿದೆ. ಇದು ಅತ್ಯಂತ ಖೇದಕರ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಟೀಕಿಸಿದರು. +ಸುದ್ದಿಗೋಷ್ಠಿ ಮಾತನಾಡಿದ ಅವರು, ಬೆಂಗಳೂರಿಗೆ ಭಯೋತ್ಪಾದಕರು ಅತಿ ಸುಲಭವಾಗಿ ಬರುತ್ತಿದ್ದಾರೆ. ರಾಮೇಶ್ವರಂ ಕೆಫೆಯಲ್ಲಿ ಸೋಟದಿಂದ ಆತಂಕ ಹೆಚ್ಚಿದೆ. ಬೆಂಗಳೂರು ಭಯೋತ್ಪಾದಕರ ಸ್ಥಳವಾಗುತ್ತಿದೆ ಜೊತೆಗೆ ಕಳೆದ 6 ತಿಂಗಳಿಂದ ನಗರದಲ್ಲಿ ನೀರಿನ ಬರ ಪರಿಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು. +ನೀರಿನ ಟ್ಯಾಂಕರ್ಗಳಿಗೂ ಸರಿಯಾದ ನೀತಿ ರೂಪಿಸಿಲ್ಲ; ಐಟಿ ಉದ್ಯೋಗಿಗಳಿರುವ ಫ್ಲ್ಯಾಟ್ಗಳಲ್ಲಿ ಇವತ್ತು ನೀರು ಸಿಗುತ್ತಿಲ್ಲ. ಕೊಳವೆಬಾವಿ ಕೊರೆಸುವ ದರವೂ ಬಹುತೇಕ ದುಪ್ಪಟ್ಟಾಗಿದೆ. ಸಮರ್ಪಕ ಸಂಚಾರ ವ್ಯವಸ್ಥೆ ಇಲ್ಲದೆ, ಐಟಿ ಉದ್ಯೋಗಿಗಳು ರಸ್ತೆಯಲ್ಲಿ ಕಾಯುವ ದುಃಸ್ಥಿತಿ ಬಂದಿದೆ ಎಂದು ದೂರಿದರು. +ಬೆಂಗಳೂರು ಅಭಿವೃದ್ಧಿ ಸಚಿವರು ಎಂದು ಡಿ.ಕೆಶಿವಕುಮಾರ್ ಅವರಿಗೆ ಸಿದ್ದರಾಮಯ್ಯನವರು ಗುತ್ತಿಗೆ ನೀಡಿದ್ದಾರೆ. ಆದರೆ ಅವರು ಒಂದು ದಿನವೂ ರಸ್ತೆಗಿಳಿದಿಲ್ಲ. ಇದರಿಂದ ಸಾಫ್ಟ್ವೇರ್ ಉದ್ಯಮಗಳು ಬೇರೆಡೆಗೆ ತೆರಳುವ ಸಾಧ್ಯತೆ ಇದೆಯೇ ಎಂಬ ಯೋಚನೆ ಕಾಡುತ್ತಿದೆ ಎಂದರು. +ಗರಿಷ್ಠ ಆದಾಯ ನೀಡುವ ಸಾಫ್ಟ್ವೇರ್ ರಂಗದ ಕುರಿತು ರಾಜ್ಯ ಸರಕಾರ ಅತ್ಯಂತ ನಿರ್ಲಕ್ಷ್ಯ ವಹಿಸಿದೆ. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಸಾಫ್ಟ್ವೇರ್ ಕ್ಷೇತ್ರದ ಸಮಸ್ಯೆಗಳ ಕುರಿತು ಮಾತನಾಡಿಲ್ಲ. ಈ ಕ್ಷೇತ್ರದ ಕುರಿತು ಸಚಿವರು ಒಂದು ಪೈಸೆಯಷ್ಟೂ ತಲೆಕೆಡಿಸಿಕೊಂಡಿಲ್ಲ ಎಂದು ದೂರಿದರು. +ಬೆಂಗಳೂರು ಇಡೀ ವಿಶ್ವದ ಅತಿ ದೊಡ್ಡ ಐ.ಟಿ. ಹಬ್ ಎಂದು ಗುರುತಿಸಿಕೊಂಡಿದೆ. ಸಾಫ್ಟ್ವೇರ್ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ 54 ಲಕ್ಷ ಉದ್ಯೋಗಿಗಳಿದ್ದಾರೆ. ಆ ಪೈಕಿ 18 ಲಕ್ಷ ಜನ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದಾರೆ. +ಒಟ್ಟು ಭಾರತದ ರಫ್ತಿನಲ್ಲಿ ಶೇ.12ರಷ್ಟು ಪಾಲು ಕರ್ನಾಟಕದ ಐಟಿ ಹಬ್ನದು. ವಿಶ್ವಾದ್ಯಂತ ಪ್ರಸಿದ್ಧಿ ಪಡೆದ ಟಿಸಿಎಸ್, ವಿಪೊ್ರೀ, ಇನ್ಫೋಸಿಸ್ , ಮೈಂಡ್ಟ್ರೀ ಮತ್ತಿತರ 10-12 ಕಂಪೆನಿಗಳು ಸೇರಿ 67 ಸಾವಿರ ಕಂಪನಿಗಳು ಬೆಂಗಳೂರಿನಲ್ಲಿ ನೆಲೆಸಿವೆ. ಇವು 18 ಲಕ್ಷ ಉದ್ಯೋಗಿಗಳಿಗೆ ಉದ್ಯೋಗ ಕೊಟ್ಟಿವೆ. ಇದು ಹೆಮ್ಮೆಯ ವಿಚಾರ ಎಂದು ಹೇಳಿದರು. +ವೃತ್ತಿಪರ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿರಣ್ ಕುಮಾರ್ ಅಣ್ಣಿಗೇರಿ, ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕ ವಿಜಯ್ ಕುಮಾರ್, ಆರ್ಥಿಕ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಶಾಂತ್.ಜಿ.ಎಸ್ ಹಾಜರಿದ್ದರು. \ No newline at end of file diff --git a/eesanje/url_46_187_1.txt b/eesanje/url_46_187_1.txt new file mode 100644 index 0000000000000000000000000000000000000000..510dcf8c605eea5632617f0ce2cd0f6e27f714ad --- /dev/null +++ b/eesanje/url_46_187_1.txt @@ -0,0 +1,8 @@ +ಬಿಎಂಡಬ್ಲ್ಯೂ ಕಾರಿನಲ್ಲಿ ಓಡಾಟ, ಸ್ಟಾರ್ ಹೋಟೆಲ್ ವಾಸ್ತವ್ಯ : ಶೋಕಿಲಾಲ ವಂಚಕ ಅರೆಸ್ಟ್ +ಬೆಂಗಳೂರು, ಏ.4-ಸ್ಟಾರ್ ಹೋಟೆಲ್‌ನಲ್ಲಿ ಉಳಿದುಕೊಂಡು ಬಿಎಂಡಬ್ಲ್ಯೂ ಕಾರಿನಲ್ಲೇ ಓಡಾಡಿಕೊಂಡು ಶೋಕಿ ಮಾಡುತ್ತಾ ಹೋಟೆಲ್ ಬಿಲ್ ಕೊಡದೇ ನಕಲಿ ಪೇಮೆಂಟ್ ಸ್ಕ್ರೀನ್ ಶಾಟ್ ತೋರಿಸಿ ವಂಚಿಸಿದ್ದ ಆಂಧ್ರ ಮೂಲದ ವ್ಯಕ್ತಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ನಿವಾಸಿ ಬೋರಡ ಸುಧೀರ್ ಬಂಧಿತ ಆರೋಪಿ. +ಮಾ.31 ರಂದು ಆರೋಪಿ ಸುೀಧಿರ್ ಆನ್ಲೈನ್ ಮೂಲಕ ನಗರದ ಪಂಚತಾರಾ ಹೋಟೆಲ್ನಲ್ಲಿ ರೂಂ ಬುಕ್ ಮಾಡಿದ್ದಾನೆ. ಅಲ್ಲದೇ ಏರ್ ಪೋರ್ಟ್ ನಿಂದ ಕರೆತರಲು ಬಿಎಂಡಬ್ಲ್ಯೂ ಕಾರನ್ನೇ ಕಳುಹಿಸುವಂತೆ ಸೂಚಿಸಿದ್ದ. ಅದರಂತೆ ಹೋಟೆಲ್ನವರು ಏರ್ ಪೋರ್ಟ್ ನಿಂದ ಸುಧೀರ್ ನನ್ನ ಅದೇ ಕಾರಿನ ಕರೆಸಿಕೊಂಡಿದ್ದಾರೆ. ನಂತರ ರೂಂನಲ್ಲಿ ಉಳಿದುಕೊಂಡಿದ್ದ ಈತ 17,346 ರೂ. ಪಾವತಿಸಿರುವುದಾಗಿ ಹೋಟೆಲ್ ಸಿಬ್ಬಂದಿಗೆ ಪೇಮೆಂಟ್ ಮಾಡಿದ ನಕಲಿ ಸ್ಕ್ರೀನ್ಶಾಟ್ ತೋರಿಸಿದ್ದಾನೆ. +ಹಣ ಸಂದಾಯ ಆಗಿಲ್ಲವೆಂದು ಸಿಬ್ಬಂದಿ ಪ್ರಶ್ನಿಸಿದಾಗ ನಿಮ್ಮದೇ ಟೆಕ್ನಿಕಲ್ ಸಮಸ್ಯೆ ಇರಬಹುದು ಎಂದು ಹೇಳಿದಾಗ ಆತನ ಮಾತನ್ನು ನಂಬಿ ರೂಂನಲ್ಲಿ ಉಳಿದುಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ.ಮಾರನೇ ದಿನ (ಏ.1) ತನಗೆ ಓಡಾಡಲು ಬಿಎಂಡಬ್ಲ್ಯೂ ಕಾರ್ ಬೇಕೆಂದು ಕೇಳಿದಾಗ ಹೋಟೆಲ್ನವರು ಅದರಂತೆ ವ್ಯವಸ್ಥೆ ಮಾಡಿದ್ದಾರೆ. +ಅಂದು ಸಂಜೆವರೆಗೂ ಕಾರಿನಲ್ಲಿ ಓಡಾಡಿದ್ದಾನೆ. ಸಂಜೆ ಕಾರು ಚಾಲಕನಿಗೆ ನಾನು ಮತ್ತೆ ಹೋಟೆಲ್ಗೆ ಹೋಗುವುದಿಲ್ಲ. ತನ್ನನ್ನು ಏರ್ ಪೋರ್ಟ್ ಗೆ ಡ್ರಾಪ್ ಮಾಡುವಂತೆ ತಿಳಿಸಿದ್ದಾನೆ. ಆದರೆ ಕಾರು ಚಾಲಕ ತನಗೆ ಹೋಟೆಲ್ನವರು ಡ್ರಾಪ್ ಮಾಡಲು ಹೇಳಿಲ್ಲವೆಂದು ವಾಪಸು ಸುಧೀರ್ ನನ್ನ ಹೋಟೆಲ್ ಬಳಿ ಕರೆದುಕೊಂಡು ಬಂದಿದ್ದಾರೆ. +ಕಾರು ಬಾಡಿಗೆ ಹಾಗೂ ರೂಮಿನ ಬಾಡಿಗೆ ಸೇರಿ 80 ಸಾವಿರ ಪಾವತಿಸುವಂತೆ ಹೋಟೆಲ್ ಸಿಬ್ಬಂದಿ ಸೂಚಿಸಿದಾಗ ಆರೋಪಿಯು ತನ್ನ ಕ್ರೆಡಿಟ್ ಕಾರ್ಡ್ ನೀಡಿದ್ದಾನೆ. ಆದರೆ ಹಣ ಸಂದಾಯವಾಗಿಲ್ಲ. ಈ ವಿಚಾರವಾಗಿ ಹೋಟೆಲ್ ಸಿಬ್ಬಂದಿ ಹಾಗೂ ಈತನ ನಡುವೆ ವಾಗ್ವಾದ ವಾಗಿದೆ. ನಂತರ ಆರೋಪಿಯು ತನ್ನ ಬಳಿ 10,750 ರೂ. ಮಾತ್ರವಿದೆ. ಉಳಿದ ಹಣವನ್ನು ನಂತರ ಕೊಡುವುದಾಗಿ ಹೇಳಿದ್ದಾನೆ. +ರಾತ್ರಿಯಾದರೂ ಬಿಲ್ ಪಾವತಿಸದಿದ್ದಾಗ ಹೋಟೆಲ್ ಸಿಬ್ಬಂದಿ ಬಳಿಕ ಆತನಿಗೆ ಬಿಲ್ ಪಾವತಿಸುವಂತೆ ಕೇಳಿದಾಗ ನಾನು ಪೂರ್ತಿ ಹಣ ಪಾವತಿಸಿರುವುದಾಗಿ ವಾದ ಮಾಡಿದ್ದಾನೆ. ಈತನ ನಡುವಳಿಕೆಯಿಂದ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ತಕ್ಷಣ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. +ಸ್ಥಳಕ್ಕೆ ಆಗಮಿಸಿ ಪೊಲೀಸರು ಆರೋಪಿ ಸುೀಧಿರ್ನ ಮೊಬೈಲ್ ಪಡೆದು ಕರೆಗಳ ಬಗ್ಗೆ ಪರಿಶೀಲಿಸಿದಾಗ, ಸ್ಟಾರ್ ಹೋಟೆಲ್ಗಳಲ್ಲಿ ಉಳಿದುಕೊಳ್ಳಲು ನಕಲಿ ಐಡಿ ಕ್ರಿಯೇಟ್ ಮಾಡಿ ಹಣ ಕಟ್ಟದೇ ವಂಚಿಸಿರುವುದು ಗೊತ್ತಾಗಿದೆ. ಆರೋಪಿಯು ಸೇನಾ ಅಧಿಕಾರಿ ಹೆಸರಿನಲ್ಲಿ ವಂಚಿಸಿರುವ ಬಗ್ಗೆ ಕೊಲ್ಕತಾದಾ ಪ್ರಗತಿ ಮೈದಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಹೈಗ್ರೌಂಡ್ಸ್ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_187_10.txt b/eesanje/url_46_187_10.txt new file mode 100644 index 0000000000000000000000000000000000000000..429bdfbaf748c1ef2433d05251103bf8c83caa62 --- /dev/null +++ b/eesanje/url_46_187_10.txt @@ -0,0 +1,7 @@ +ಬಿಜೆಪಿ ಅಜೆಂಡಾ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು : ಜಿ.ಪರಮೇಶ್ವರ್ +ಕೊರಟಗೆರೆ, ಏ.3-`ಕರ್ನಾಟಕ ಸೇರಿದಂತೆ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಇದು ಪ್ರಜಾ ಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾವಾಗಿದೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. +ಪಟ್ಟಣದ ರಾಜೀವ ಭವನದಲ್ಲಿ ಪಕ್ಷದ ವಿವಿಧ ಪದಾಧಿಕಾರಿಗಳು ಹಾಗೂ ಮುಖಂಡರ ಜೊತೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , `ರಾಜ್ಯಕ್ಕೆ ಬರ ಪರಿಹಾರ ಅನುದಾನ ಹಂಚಿಕೆವಿಚಾರ ಹಾಗೂ ಯೋಜನೆ ನೀಡುವುದರಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ‘ ಎಂದು ಹೇಳಿದರು. +`ದೇಶದಲ್ಲಿ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ ಎಂಬುದನ್ನು ಕೇಂದ್ರ ಸರ್ಕಾರ ಮರೆತಿದೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ಈವರೆಗೂ ಸ್ಪಂದಿಸಿಲ್ಲ, ಅನುದಾನ ನಿಡುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಬಂದಿದೆ. ಇದು ಒಳ್ಳೆಯ ಬೆಳವಣೆಗೆಯಲ್ಲ. +ಜನರು ಬಿಜೆಪಿ ಪಕ್ಷವನ್ನು ತಿರಸ್ಕರಿಸಲಿದ್ದಾರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆಡುವ ಮಾತುಗಳು ಗಮನಿಸಿದರೆ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎನಿಸುತ್ತದೆ, ಒಂದು ದೇಶ ಒಂದು ಚುನಾವಣೆ ಮುಂದಾಗಿದ್ದು ಸಂವಿಧಾನ ಬದಲಾಯಿಸಲು ಪ್ರಾರಂಭಿಸಿದ್ದಾರೆ’ ಎಂದು ಆರೋಪಿಸಿದರು. +`ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುದ್ದಹನುಮೇಗೌಡ ಅವರು ಸಜ್ಜನ ರಾಜಕಾರಣಿ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಲ್ಲಿ ಧ್ವನಿ ಎತ್ತಿದವರು, ಬಿಜೆಪಿಯ ಅಭ್ಯರ್ಥಿ ಸೋಮಣ್ಣ ತುಮಕೂರಿನವರಲ್ಲ ಪಕ್ಷದ ಮುಖಂಡರು ಹೊರಗಿನವರನ್ನು ಆಭ್ಯರ್ಥಿಯನ್ನಾಗಿ ಮಾಡಿದ್ದಾರೆ, ಸಂಸದ ಬಸವರಾಜು ಅವರು ಸಂಸತ್ತನಲ್ಲಿ ಒಮ್ಮೆಯು ರಾಜ್ಯದ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಹೊರಗಿನವರನ್ನು ಗೆಲ್ಲಿಸಿದರೆ ಯಾವ ಕೆಲಸ ಮಾಡಲು ಸಾಧ್ಯವಿಲ್ಲ ಸದಾ ಜನಜರ ಪರವಾಗಿ ನಿಲ್ಲುವ ಮುದ್ದಹನುಮೇಗೌಡರನ್ನು ಜನ ಗೆಲ್ಲಿಸಲಿದ್ದಾರೆ ‘ಎಂದು ಭರವಸೆ ವ್ಯಕ್ತಪಡಿಸಿದರು. +ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಸ್.ಪಿ.ಮುದ್ದಹನುಮೇಗೌಡರು ಏಪ್ರಿಲ್ 4 ರಂದು ಬೆಳಗ್ಗೆ 10.30 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿಸಬೇಕು ಎಂದು ಕಾರ್ಯಕರ್ತರಿಗೆ ಪರಮೇಶ್ವರ್ ಕರೆ ನೀಡಿದರು. \ No newline at end of file diff --git a/eesanje/url_46_187_11.txt b/eesanje/url_46_187_11.txt new file mode 100644 index 0000000000000000000000000000000000000000..4b528e8ec0fe385064bfa3a899d573893dfcbb09 --- /dev/null +++ b/eesanje/url_46_187_11.txt @@ -0,0 +1,10 @@ +ಸುಮಲತಾ ಅವರ ನಿರ್ಧಾರಕ್ಕೆ ಬೆಂಬಲವಾಗಿ ನಿಂತ ನಟ ದರ್ಶನ್ +ಮಂಡ್ಯ, ಏ.3-ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ರಾಜಕಾರಣದಲ್ಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ತಮ್ಮ ರಾಜಕೀಯ ನಿರ್ಧಾರ ಪ್ರಕಟಿಸುವ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸುಮಲತಾರ ಪುತ್ರ ಅಭಿಷೇಕ್ ಅಂಬರೀಶ್ ಬೆನ್ನಿಗೆ ನಿಂತು ಬೆಂಬಲ ವ್ಯಕ್ತ ಪಡಿಸಿದರು. +ಈ ಸಂದರ್ಭದಲ್ಲಿ ಮಾತನಾಡಿದ ದರ್ಶನ್, ಐದು ವರ್ಷದ ಹಿಂದೆ ಪ್ರಚಾರಕ್ಕೆ ಬಂದ ಕಡೆಯಲೆಲ್ಲಾ ಬಿಸಿಲಿನಲ್ಲಿ ಎಳೆನೀರು ಕೊಟ್ಟು ತಂಪೆರೆದಿದ್ದ ರೈತರು ಹಾಗೂ ಪ್ರತಿ ಹಳ್ಳಿಯಲ್ಲೂ ಆರತಿ ಎತ್ತಿ ಆಶೀರ್ವದಿಸಿದ ಮಹಿಳೆಯರಿಗೆ ಕೃತಜ್ಞತೆಗಳು.ಆ ಬಂದು ಯಮ ಕರೆದರೂ ಇರಪ್ಪ ನಮ್ಮ ಅಮ್ಮನ ಒಂದು ಕೆಲಸ ಇದೆ ಮುಗಿಸಿ ಕೊಂಡು ಬರುತ್ತೇನೆ ಎಂದೇ ಹೇಳುತ್ತೇನೆ. ಏಕೆಂದರೆ ನನಗೂ ಆ ಮನೆಗೂ ಅಂತಹ ಬಾಂಧವ್ಯ ಇದೆ ಎಂದರು. +ಕಳೆದ ಬಾರಿ ಬಲಗೈ ಮುರಿದಿತ್ತು. ಈ ಬಾರಿ ಎಡಗೈಗೆ ಹಾನಿಯಾಗಿದೆ. ನಿನ್ನೆ ಆಪರೇಷನ್ ಇತ್ತು. ಆದರೆ ಇಂದು ಅಮ್ಮನ ಜೊತೆ ಇರಬೇಕಾಗಿದ್ದರಿಂದ ಅದನ್ನು ಮುಂದೂಡಿದ್ದೇನೆ. ಸಂಜೆ ಹೋಗಿ ಆಸ್ಪತ್ರೆಗೆ ದಾಖಲಾಗುತ್ತೇನೆ. ನಾಳೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತೇನೆ ಎಂದರು. +ನಾನು ಇಲ್ಲಿಂದ ಹೋಗುವಾಗ ದಯವಿಟ್ಟು ಜಾಗ ಮಾಡಿಕೊಡಿ, ಯಾರು ಕೈ ಎಳೆಯಬೇಡಿ ಎಂದು ಮನವಿ ಮಾಡಿಕೊಂಡ ದರ್ಶನ್, ಐದು ಸುಮಲತಾ ಅವರು ಪಕ್ಷೇತರರಾಗಿ ಮಾಡಿರುವ ಸಾಧನೆ ದೊಡ್ಡದು. ನಾನು ರಾಜಕೀಯ ಮಾತನಾಡಲ್ಲ, ಆದರೆ ಅಮ್ಮ ಏನೇ ನಿರ್ಧಾರ ತೆಗೆದುಕೊಂಡರು ನಾವು ಜೊತೆಯಲ್ಲಿರುತ್ತೇವೆ. ಅದು ಯಾವುದೇ ರೀತಿಯ ನಿರ್ಧಾರವಾಗಿದ್ದರೂ ಜೊತೆಯಲ್ಲಿರುತ್ತೇವೆ. ಮನೆಯ ಮಕ್ಕಳು ಎಂದ ಮೇಲೆ ಮನೆ ಮಕ್ಕಳ ರೀತಿಯಲ್ಲೇ ಇರಬೇಕು. +ಇವತ್ತು ತಾಯಿ ಎಂದು ನಾಳೆ ಇಲ್ಲಪ್ಪ ಅವರಿಗೂ ನನಗೂ ಏನು ಸಂಬಂಧ ಇಲ್ಲ ಎನ್ನಲ್ಲ. ಸಾಯುವವರೆಗೂ ತಾಯಿ ತಾಯಿನೇ. ಅವರು ಏನೇ ಹೇಳಿದರೂ ಅದನ್ನು ನಾನು ನನ್ನ ತಮ್ಮ ಪಾಲಿಸುತ್ತೇವೆ. ಕಣ್ಣು ಮುಚ್ಚಿಕೊಂಡು ಆಳು ಬಾವಿಗೆ ಬೀಳಲು ಎಂದರೆ ಅದಕ್ಕೂ ರೆಡಿ ನಾವು. ಆ ಮನೆಗೂ ನಮಗೂ ಅಷ್ಟು ಭಾಂದವ್ಯ ಇದೆ ಎಂದರು. +ಅಭಿಷೇಕ್ ಅಂಬರೀಶ್ ಮಾತನಾಡಿ, ಕಳೆದ ಐದು ವರ್ಷಗಳ ಹಿಂದೆ ಇಲ್ಲಿಂದಲೇ ಸ್ವಾಭಿಮಾನಿ ಹೋರಾಟ ಆರಂಭಿಸಲಾಯಿತು. ಏನೇ ಆಗಲಿ, ಸರ್ಕಾರ ಬರುತ್ತೆ ಹೋಗುತ್ತೆ, ಚುನಾವಣೆ ಬರುತ್ತೆ ಹೋಗುತ್ತೆ, ನಮ್ಮ ನಿಮ್ಮ ನಡುವಿನ ಸಂಬಂಧವನ್ನು ಯಾರು ಮರೆಯಲಾಗುವುದಿಲ್ಲ. ಪರಿಸ್ಥಿತಿ ಹೇಗೆ ಹೋಗಲಿ ಯಾರು ಬದಲಾಯಿಸಲಾಗಲ್ಲ. ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ. ಮಂಡ್ಯ ಬಿಟ್ಟು ನಾವು ಹೋಗಲ್ಲ. ನಿಮ್ಮ ಋಣ ತೀರಿಸಲು ಜೀವನ ಪೂರ್ತಿ ಶ್ರಮಿಸುತ್ತೇವೆ. ನಾವು ಎಲ್ಲಿಯೂ ಹೋಗಲ್ಲ. ನಿಮ್ಮ ನಡುವೆಯೇ ಇರುತ್ತೇವೆ ಎಂದರು. +ಐದು ವರ್ಷ ಹಲವಾರು ಕಷ್ಟಗಳಿತ್ತು. ನಮ್ಮ ತಾಯಿ ಮಂಡ್ಯ ಜನರಿಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಏನೇ ಆಗಲಿ, ಮಂಡ್ಯ ಎಂದರೆ ಅಂಬರೀಶ್ ಅಣ್ಣ, ಅಂಬರೀಶ್ ಅಣ್ಣ ಎಂದರೆ ಮಂಡ್ಯ ಎಂಬಂತಾಗಿದೆ ಎಂದರು. +ಸದಾ ಗತ್ತಿನಲ್ಲಿ ಮಾತನಾಡುತ್ತಿದ್ದ ಅಭಿಷೇಕ್, ಇಂದು ವಿನಯದಿಂದ ವರ್ತಿಸಿದ್ದು ಕಂಡು ಬಂತು. ಮುಂದೆ ಇರುವವರು ಪಕ್ಕಕ್ಕೆ ಸರಿದು ಹಿಂದೆ ಇರುವವರಿಗೆ ಜಾಗ ಮಾಡಿಕೊಡಿ ಅಣ್ಣಾ, ಕೊನೆಯವರೆಗೂ ನನ್ನ ಧ್ವನಿ ಕೇಳಿಸುತ್ತಿದೆಯೇ ಎಂದು ಸೌಜನ್ಯಪೂರ್ವಕವಾಗಿ ಕೇಳಿ ಗಮನ ಸೆಳೆದರು. +ಇದೇ ವೇಳೆ ಸುಮಲತಾ ಅವರ ಸಾಧನೆಯ ಕೈಪಿಡಿಯನ್ನು ಬಿಡುಗಡೆ ಮಾಡಿದರು. ಮಂಡ್ಯದ ಜನರಿಗಾಗಿ ಮಿಡಿಯುತ್ತಿದೆ ಸ್ವಾಭಿಮಾನಿಯ ಉಸಿರು ಎಂಬ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಆರಂಭದಲ್ಲಿ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_187_12.txt b/eesanje/url_46_187_12.txt new file mode 100644 index 0000000000000000000000000000000000000000..388031f95366510d48c98a73fed87c05735e5d54 --- /dev/null +++ b/eesanje/url_46_187_12.txt @@ -0,0 +1,16 @@ +ಬಿಜೆಪಿಗೆ ಬೆಂಬಲ ಘೋಷಿಸಿ ಸ್ಪರ್ಧೆಯಿಂದ ಹಿಂದೆ ಸರಿದ ಸುಮಲತಾ +ಮಂಡ್ಯ, ಏ.3-ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಯಿಂದ ಹಿಂದೆ ಸರಿದ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ. ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ಬೆಂಬಲಿಗರ ಸಭೆ ನಡೆಸಿ ಮಾತ ನಾಡಿದ ಸುಮಲತಾ, ಕಳೆದ ಐದು ವರ್ಷಗಳ ಸಂಸದೆಯಾಗಿ ತಾವು ಮಾಡಿದ ಸಾಧನೆಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟರು. +ಸುಮಲತಾ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಟೀ ಅಂಗಡಿ, ಹಳ್ಳಿ ಕಟ್ಟೆಯ ಮೇಲೆ ಅಥವಾ ಮಾಧ್ಯಮಗಳ ಮುಂದೆ ಪ್ರಶ್ನಿಸುವವರಿಗೆ ನನ್ನ ಬೆಂಬಲಿಗರು ಉತ್ತರ ನೀಡಬೇಕು. ನಾನು ಮಂಡ್ಯದ ಘನತೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇನೆ ಎಂದರು. ಈಗ ಮತ್ತೊಂದು ಚುನಾವಣೆ, 2019ಕ್ಕಿಂತ ಹೆಚ್ಚಿನ ಸವಾಲು ನಮ್ಮ ಮುಂದೆ ಈಗ ಇದೆ. ಪಕ್ಷೇತರಳಾಗಿ ಸ್ಪರ್ಧಿಸಿದ್ದಾಗ ಬಿಜೆಪಿ ನನಗೆ ಬಾಹ್ಯ ಬೆಂಬಲ ಕೊಟ್ಟಿತ್ತು. +ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನ ಪ್ರಚಾರ ಸಭೆಯಲ್ಲಿ ಅಂಬರೀಶ್ ಹೆಸರನ್ನು ಪ್ರಸ್ತಾಪಿಸಿ ಸುಮಲತಾರಿಗೆ ಮತ ಹಾಕಿ ಎಂದು ಕರೆ ನೀಡಿದ್ದರು. ಅದಕ್ಕೆ ಪ್ರತಿಯಾಗಿ 2023ರ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದೆ ಎಂದರು. ಇಂದು ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಾಗಿದೆ. +ಬದಲಾದ ಪರಿಸ್ಥಿತಿಯಲ್ಲಿ ಯಾರು ಸಂಸದ ರಾಗುತ್ತಾರೋ ಗೋತ್ತಿಲ್ಲ. ನಾನು ಕೊನೆಯ ಕ್ಷಣದವರೆಗು ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಳ್ಳಲಿ ಎಂದು ಪ್ರಯತ್ನ ಪಟ್ಟೆ. ನಾನಾ ರೀತಿಯ ಚರ್ಚೆಗಳು ನಡೆದವು. ಮಂಡ್ಯದ ಬದಲಿಗೆ ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಉತ್ತರ ಸೇರಿ ಬೇರೆ ಯಾವುದೇ ಕ್ಷೇತ್ರಗಳನ್ನಾದರೂ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ನನಗೆ ಸಲಹೆ ನೀಡಿದರು. ನಾನು ಎಲ್ಲೂ ಹೋಗಲ್ಲ. ಇದ್ದರೂ, ಗೆದ್ದರೂ, ಸೋತರು ಮಂಡ್ಯದಲ್ಲೇ ಎಂದು ನಿರ್ಧರಿಸಿದ್ದೇನೆ ಎಂದರು. +ಅಂಬರೀಶ್ ಎಂದಿಗೂ ಸ್ವಾರ್ಥ ರಾಜಕಾರಣ ಮಾಡಿಲ್ಲ. ಅಂಬರೀಶ್ ನಮಗೆ ಸದಾ ಕಾಲ ಮಾರ್ಗದರ್ಶಕರು ಎಂದಾಗ, ಕಾರ್ಯಕರ್ತರಿಂದ ಪಕ್ಷೇತರರಾಗಿ ಸ್ರ್ಪಸುವಂತೆ ಒತ್ತಾಯ ಕೇಳಿ ಬಂತು. ಅದಕ್ಕೆ ಕಣ್ಣೀರು ಹಾಕುತ್ತಾ ಪ್ರತಿಕ್ರಿಯಿಸಿದ ಸುಮಲತಾ, ತಮ್ಮ ವಿರುದ್ಧ ಟೀಕೆಗಳು, ಹೊಗಳಿಕೆಗಳು ಸರ್ವೇ ಸಾಮಾನ್ಯ ಬಿಡಿ, ಎಲ್ಲವನ್ನೂ ದಾಟಿಕೊಂಡೆ ಬಂದಿದ್ದೇನೆ. +ಮೊನ್ನೆ ಆಪ್ತ ವಲಯದ ಬೆಂಬಲಿಗರು ಬೆಂಗಳೂರಿಗೆ ಬಂದು ಚರ್ಚೆ ಮಾಡಿದ್ದಾರೆ. ಪಕ್ಷೇತರರಾಗಿ ಸ್ಪರ್ಧೆ ಮಾಡಿ ಎಂದು ಒತ್ತಡ ಹಾಕಿದರು. ಕೆಲವರು ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಿ, ಬೆಂಬಲ ಕೊಡಿ ಎಂದಿದ್ದರು. ಇನ್ನೂ ಕೆಲವು ನೀವು ಯಾವ ನಿರ್ಧಾರ ತೆಗೆದುಕೊಂಡರು ನಿಮ್ಮ ಜೊತೆಯಲ್ಲಿ ಇರುತ್ತೇವೆ ಎಂದಿದ್ದರು. ನಾನು ಆಪ್ತರು, ವರಿಷ್ಠರ ಜೊತೆ ಚರ್ಚೆ ಮಾಡಿದ್ದೇನೆ. +ದೆಹಲಿಯಿಂದ ಹಿಡಿದ ನಮ್ಮ ಮನೆಯವರೆಗೂ ಎಲ್ಲರ ಜೊತೆಯಲ್ಲೂ ಚರ್ಚಿಸಿದ್ದೇನೆ. ಎಂಪಿ ಚುನಾವಣೆ ಹುಡುಗಾಟ ಅಲ್ಲ. ನಾವು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಪಕ್ಷೇತರರಾಗಿ ಸ್ರ್ಪಧಿಸುವುದಾದರೆ ಯಾವುದೋ ದ್ವೇಷ ಮತ್ತು ಹಠಕ್ಕೆ ಬಿದ್ದು ಸ್ಪರ್ಧೆ ಮಾಡಿದ್ದೇನೆ ಎಂದು ಭಾವಿಸಲಾಗುತ್ತದೆ. ಅದರಿಂದ ಯಾರಿಗೆ ಲಾಭ ಎಂಬ ಪ್ರಶ್ನೆಯೂ ಇದೆ ಎಂದರು. +ನಾನು ನನ್ನ ಸ್ವಾರ್ಥ ನೋಡಿಕೊಳ್ಳುವುದಾದರೆ ಬೇರೆ ಕ್ಷೇತ್ರಗಳಿದ್ದವು. ಕಿಪಿಕಲ್ ರಾಜಕಾರಣಿಯಾಗಿದ್ದರೆ ಒಪ್ಪಿಕೊಳ್ಳುತ್ತಿದ್ದೆ. ಮಂಡ್ಯ ಬಿಟ್ಟರೆ ನನಗೆ ರಾಜಕೀಯವೇ ಬೇಡ. ನನ್ನನ್ನು ನಂಬಿದವರು, ಬೆಂಬಲಿಸಿದವರು, ಅಂಬರೀಶ್‍ರನ್ನು ಪ್ರೀತಿಸುವವರನ್ನು ಬಿಟ್ಟು ಹೋದರೆ ಮಂಡ್ಯದ ಸೊಸೆ ಎನಿಸಿಕೊಳ್ಳಲು ಅರ್ಹಳಲಾಗುವುದಿಲ್ಲ ಎಂದರು. +ಕಾಂಗ್ರೆಸ್ ಸೇರುವಂತೆ ಕೆಲವರು ಹೇಳಿದ್ದಾರೆ. ಅಲ್ಲಿ ನಡೆಯುತ್ತಿರುವ ಒಳ ಮಾತುಗಳು ಜನ ಸಾಮಾನ್ಯರಿಗೆ ಅರ್ಥವಾಗಲ್ಲ. ಕಾಂಗ್ರೆಸ್‍ನ ಹಿರಿಯ ನಾಯಕರೊಬ್ಬರು ಸುಮಲತಾರ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ನನಗೆ ಗೌರವ ಇಲ್ಲದ ಕಡೆ ನಾನು ಹೋಗಲು ಸಾಧ್ಯವಾಗುತ್ತಾ. ಅಂಬರೀಶ್ ಸ್ವಾಭಿಮಾನದ ಗಂಡು, ನಾನು ಅವರಿಂದ ಸ್ವಾಭಿಮಾನ ಕಲಿತಿದ್ದೇನೆ. ಗೌರವ ಇಲ್ಲದ ಕಡೆ ಹೋಗಿ ಎಂದು ನನ್ನನ್ನು ಒತ್ತಾಯ ಮಾಡಬೇಡಿ ಎಂದು ಮನವಿ ಮಾಡಿಕೊಂಡರು. +ಸಂಸದ ಸ್ಥಾನ ಬದಲಾಗಬಹುದು, ಈ ಮಣ್ಣಿನ ಸೊಸೆ ಎಂಬುದನ್ನು ಯಾರು ಕಿತ್ತುಕೊಳ್ಳಲಾಗುವುದಿಲ್ಲ. ಪಕ್ಷದ ಚೌಕಟ್ಟಿನಲ್ಲಿ ಆಸರೆ ತೆಗೆದುಕೊಂಡು ನನ್ನ ಕಾರ್ಯಕರ್ತರಿಗೆ ಶಕ್ತಿ ತುಂಬುವುದಾದರೆ ಆ ನಿರ್ಧಾರವನ್ನೇ ನಾನು ತೆಗೆದುಕೊಳ್ಳಬೇಕಾಗುತ್ತದೆ, ನೀವು ಬೇಡ ಎನ್ನುವವರ ಪಕ್ಷಕ್ಕೆ ನಾನು ಹೋಗುವುದಿಲ್ಲ ಎಂದರು. +ಪಕ್ಷೇತರರಾಗಿದ್ದರೂ ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರದ ಬಿಜೆಪಿ ಸರ್ಕಾರ 4 ಸಾವಿರ ಕೋಟಿ ಅನುದಾನ ನೀಡಿದೆ. ಪ್ರತಿ ವಿಷಯದಲ್ಲೂ ನನ್ನೊಂದಿಗೆ ಚರ್ಚೆ ಮಾಡಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಖುದ್ದು ಪ್ರಧಾನಿಯೇ ನನ್ನೊಂದಿಗೆ ಚರ್ಚೆ ಮಾಡಿ ನಿಮ್ಮಂತಹ ನಾಯಕರು ನಮಗೆ ಬೇಕು, ಬೇರೆ ಪಕ್ಷಕ್ಕೆ ಹೋಗಬೇಡಿ ಎಂದಿದ್ದಾರೆ. ಅದು ನಾಯಕತ್ವ ಬೆಳೆಸುವ ಗುಣ ಎಂದರು. +ಭ್ರಷ್ಟಚಾರ ರಹಿತ ನಾಯಕತ್ವವನ್ನು ನಾನು ಒಪ್ಪಿಕೊಳ್ಳುತ್ತೇನೆ. ಈ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ ಮಂಡ್ಯವನ್ನು ಬಿಟ್ಟು ಹೋಗುತ್ತಿಲ್ಲ. ಒಂದು ಪಕ್ಷದ ಶಕ್ತಿ ಬಳಸಿಕೊಂಡು ಕೆಲಸ ಮಾಡುತ್ತೇನೆ. ಸಂಸದಳಾಗಿ ಇಲ್ಲದೆ ಇರಬಹುದು, ಮುಂದೆ ಬೇರೆನೋ ಆಗಬಹುದು.ಲೋಕಸಭೆ ಟಿಕೆಟ್ ಬಿಟ್ಟುಕೊಟ್ಟು , ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. +ಸೋತವರು ಕೂಡ ಕ್ಷೇತ್ರ ಬಿಟ್ಟುಕೊಡುವುದಿಲ್ಲ. ನಾನು ಗೆದ್ದ ಕ್ಷೇತ್ರವನ್ನು ಬಿಟ್ಟು ಕೊಡುತ್ತಿದ್ದೇನೆ. 50 ವರ್ಷಗಳ ಬಳಿಕ ರಾಜ್ಯದಲ್ಲಿ ಪಕ್ಷೇತರರಾಗಿ ಗೆದ್ದಿದ್ದು ಮಂಡ್ಯದಲ್ಲಿ ಮಾತ್ರ. ಸರ್ಕಾರವನ್ನು ಎದುರಿಸಿ ಗೆದ್ದಿರುವ ಬಗ್ಗೆ ಎಲ್ಲೆಡೆ ಅಭಿಮಾನದಿಂದ ಮಾತನಾಡುತ್ತಾರೆ. ನಾನು ನಿಮಗೆ ಪ್ರಮಾಣ ಮಾಡುತ್ತೇನೆ, ಮಂಡ್ಯದ ಋಣವನ್ನು ಎಂದೆಂದಿಗೂ ಬಿಡುವುದಿಲ್ಲ. ನಿಮ್ಮ ಪ್ರೀತಿ ಸದಾ ಇರಲಿ ಎಂದರು. +ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸ್ಪರ್ಧೆ ಮಾಡಿರುವ ಮೈತ್ರಿ ಅಭ್ಯರ್ಥಿ ಜೆಡಿಎಸ್‍ನ ಕುಮಾರಸ್ವಾಮಿ ಅವರನ್ನು ಬೆಂಬಲಿಸುವ ಬಗ್ಗೆ ನೇರವಾಗಿ ಉತ್ತರ ನೀಡಲಿಲ್ಲ. ನಾನಿನ್ನೂ ಪಕ್ಷೇತರಳಾಗಿದ್ದೇನೆ. ಮೊದಲು ಬಿಜೆಪಿಯನ್ನು ಅಕೃತವಾಗಿ ಸೇರುತ್ತೇನೆ. ನಂತರ ಪಕ್ಷ ಹೇಳಿದ ಸೂಚನೆಯನ್ನು ಪಾಲಿಸುತ್ತೇನೆ ಎಂದರು.ನಟ ದರ್ಶನ್ ಅವರು ಮಂಡ್ಯದಲ್ಲಿ ಪ್ರಚಾರಕ್ಕೆ ಬರುವ ಬಗ್ಗೆ ಅವರೇ ನಿರ್ಧಾರ ತಿಳಿಸಬೇಕು. ನಾನು ಸ್ಪರ್ಧೆ ಮಾಡಿದ್ದರೆ ಅವರು ಬರುವುದಾಗಿ ಹೇಳಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಗೋತ್ತಿಲ್ಲಎಂದರು. +ಬಿಜೆಪಿ ನಾಯಕರು ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ ಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ.ಪಕ್ಷದ ನಿಲುವೇ ನನ್ನ ನಿಲುವಾಗಿರುತ್ತೆ. ಇನ್ನೂ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತೇನೆ. ನನ್ನ ನಿರ್ಧಾರಕ್ಕೆ ಕೆಲವರು ಬೆಂಬಲ ನೀಡುತ್ತಾರೆ, ಇನ್ನೂ ಕೆಲವರು ಮುನಿಸಿಕೊಳ್ಳುತ್ತಾರೆ. ಆದರೂ ನನ್ನ ಜೊತೆ ಇರುತ್ತಾರೆ. ಶೇಕಡ ನೂರಕ್ಕೆ ನೂರರಷ್ಟು ಎಲ್ಲರನ್ನೂ ಮೆಚ್ಚಿಸಲಾಗುವುದಿಲ್ಲ ಎಂದು ಸುಮಲತಾ ಹೇಳಿದರು. \ No newline at end of file diff --git a/eesanje/url_46_187_2.txt b/eesanje/url_46_187_2.txt new file mode 100644 index 0000000000000000000000000000000000000000..c03c0d55498d4aae092462d4d81ae325ec71ce18 --- /dev/null +++ b/eesanje/url_46_187_2.txt @@ -0,0 +1,6 @@ +ಯುಗಾದಿಗೂ ಮುನ್ನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ +ಬೆಂಗಳೂರು,ಏ.4-ಬೇಸಿಗೆ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಡಿಕೆಗಿಂತ ಒಂದೂವರೆಯಿಂದ 3 ಡಿ.ಸೆ.ನಷ್ಟು ಹೆಚ್ಚಾಗಿದೆ. ಇದರಿಂದ ಬಿಸಿ ಗಾಳಿಯು ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಮುನ್ಸೂಚನೆಗಳಿವೆ.ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಏ.6ರಿಂದ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. +ಹಿಂಗಾರು ಪೂರ್ವ ಮಳೆ ದಕ್ಷಿಣ ಒಳನಾಡಿನಲ್ಲಿ ಕಳೆದ ಮೂರು ತಿಂಗಳಿನಿಂದ ಬಿದ್ದಿಲ್ಲ. ಏಪ್ರಿಲ್‍ನಲ್ಲಿ ಮಿಂಚು ಗುಡುಗಿನಿಂದ ಕೂಡಿದ ಮಳೆಯಾಗುವುದು ವಾಡಿಕೆ. ಆದರೆ ಏ.6ರಿಂದ ಮೂರು ದಿನಗಳ ಕಾಲ ರಾಜ್ಯದ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಉಂಟಾಗಿದ್ದರ ಪರಿಣಾಮ ತಾಪಮಾನದಲ್ಲಿ ಸರಾಸರಿಗಿಂತ ಹೆಚ್ಚಾಗಿದೆ. ಇದರಿಂದ ಬಿಸಿ ಗಾಳಿ ಉಂಟಾಗಿ ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಏಪ್ರಿಲ್ ತಿಂಗಳಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗುವ ಸಾಧ್ಯತೆ ಇಲ್ಲ. ಈ ತಿಂಗಳ ವಾಡಿಕೆ ಮಳೆ ಪ್ರಮಾಣ 36 ಮಿ.ಮೀನಷ್ಟಿದೆ. ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದಲ್ಲಿಲ್ಲ. ಜನವರಿಯಿಂದ ಮಾರ್ಚ್ ಅಂತ್ಯದವರೆಗೂ ವಾಡಿಕೆ ಪ್ರಮಾಣದ ಮುಂಗಾರು ಪೂರ್ವ ಮಳೆಯಾಗಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. +ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ಬೇಗೆ ಹಾಗೂ ಬಿಸಿ ಗಾಳಿ ಹೆಚ್ಚಾಗಲಿದೆ. ವಾತಾವರಣದಲ್ಲಿ ತೇವಾಂಶ ಕುಸಿತವಾಗಲಿದೆ. ರಾಜ್ಯದಲ್ಲಿ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶದಲ್ಲೂ ಗಣನೀಯ ಏರಿಕೆ ಉಂಟಾಗಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಗಡಿ ದಾಟಿದೆ. ಕಲಬುರಗಿಯಲ್ಲಿ 42.4 ಡಿ.ಸೆ, ನಷ್ಟು ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ 37.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_187_3.txt b/eesanje/url_46_187_3.txt new file mode 100644 index 0000000000000000000000000000000000000000..db73154c50bc14bb6b7159f6a174199caa457c68 --- /dev/null +++ b/eesanje/url_46_187_3.txt @@ -0,0 +1,7 @@ +ದೆಹಲಿಗೆ ಕರೆಸಿ ಭೇಟಿಯಾಗದೆ ವಾಪಸ್ ಕಳಿಸಿದ ಅಮಿತ್ ಶಾ : ಈಶ್ವರಪ್ಪ ಮತ್ತಷ್ಟು ಧಗ ಧಗ +ಬೆಂಗಳೂರು,ಏ.4-ಮೊದಲೇ ಯಡಿಯೂರಪ್ಪನವರ ಕುಟುಂಬದ ವಿರುದ್ಧ ಕೊತಕೊತ ಕುದಿಯುತ್ತಿರುವ ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಈಗ ಮತ್ತಷ್ಟು ಗರಂ ಆಗಿದ್ದಾರೆ. ದೆಹಲಿಗೆ ಬರುವಂತೆ ಸೂಚಿಸಿದ್ದ ಅಮಿತ್ ಶಾ, ಅವರನ್ನು ಭೇಟಿ ಮಾಡದೇ ವಾಪಸ್ ಕಳುಹಿಸಿದ್ದಾರೆ. +ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಸಭೆ, ಚನ್ನಪಟ್ಟಣದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮಿತ್ ಶಾ, ಬೆಂಗಳೂರಿಗೆ ಆಗಮಿಸಿದ್ದರು. ಆ ವೇಳೆ, ಈಶ್ವರಪ್ಪನವರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈಶ್ವರಪ್ಪನವರ ಸಿಟ್ಟು ತಣ್ಣಗಾಗದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದ್ದರು. +ಸೂಚನೆಯ ಮೇರೆ ಈಶ್ವರಪ್ಪ ನಿನ್ನೆ ಬೆಳಗ್ಗೆ ದೆಹಲಿಗೆ ಪ್ರಯಾಣಿಸಿದ್ದರು. ಆದರೆ, ಇಡೀ ದಿನ ಕಾದರೂ ಅಮಿತ್ ಶಾ ದರ್ಶನ ಸಿಗದೇ ರಾಜ್ಯಕ್ಕೆ ಈಶ್ವರಪ್ಪ ವಾಪಸ್ಸಾಗಿದ್ದಾರೆ. ಈ ಮೂಲಕ, ಈಶ್ವರಪ್ಪ ಮತ್ತೊಂದು ಹಿನ್ನಡೆಯನ್ನು ಎದುರಿಸುವಂತಾಗಿದೆ. ಕೆಲವೊಂದು ಮೂಲಗಳ ಪ್ರಕಾರ, ಈಶ್ವರಪ್ಪನವರ ಸ್ವಯಂಕೃತ ಅಪರಾಧದಿಂದಲೇ ಅಮಿತ್ ಶಾ ಅವರನ್ನು ಭೇಟಿಯಾಗಲು ಒಪ್ಪಿಲ್ಲ ಎಂದು ಹೇಳಲಾಗುತ್ತಿದೆ. ಗೌಪ್ಯವಾಗಿ ಇರಬೇಕಾದ ವಿಚಾರವನ್ನು ಸಾರ್ವಜನಿಕವಾಗಿ ಈಶ್ವರಪ್ಪ ಹೇಳಿದ್ದರು. +ಬೆಂಗಳೂರಿನಲ್ಲಿ ಅಮಿತ್ ಶಾ ಇರುವ ವೇಳೆ ತಮ್ಮ ಜೊತೆಗೆ ಮಾತನಾಡಿದ್ದನ್ನು ಈಶ್ವರಪ್ಪ ಮಾಧ್ಯಮದವರ ಮುಂದೆ ಹೇಳಿದ್ದರು. ಯಡಿಯೂರಪ್ಪನವರ ಕುಟುಂಬದ ಜೊತೆಗಿನ ಭಿನ್ನಾಭಿಪ್ರಾಯವನ್ನು ಶಾ ಅವರಿಗೆ ವಿವರಿಸಿದ್ದೆ, ಕಾಂತೇಶನ ಭವಿಷ್ಯದ ಬಗ್ಗೆ ಅಮಿತ್ ಶಾ ಕೇಳಿದರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಿದ್ದರು. +ಇದಾದ ನಂತರ, ದೆಹಲಿಗೆ ಬರುವ ವಿಚಾರವನ್ನು ಗೌಪ್ಯವಾಗಿ ಇಡದೇ ಅದನ್ನೂ ಮಾಧ್ಯಮದವರ ಮುಂದೆ ಬಹಿರಂಗ ಪಡಿಸಿದ್ದು ಅಮಿತ್ ಶಾ ಸಿಟ್ಟಿಗೆ ಕಾರಣ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ಅಮಿತ್ ಶಾ ಭೇಟಿಗೆ ಅವಕಾಶ ಸಿಗದ ನಂತರ ರಾಜ್ಯಕ್ಕೆ ವಾಪಸ್ ಬರುವ ವೇಳೆ ಮತ್ತೆ ಬಿಜೆಪಿ ವರಿಷ್ಠರ ಬಗ್ಗೆ ಈಶ್ವರಪ್ಪ ಮಾತನಾಡಿದ್ದಾರೆ. ಅವರೇ ದೆಹಲಿಗೆ ಕರೆಸಿ, ಈಗ ಭೇಟಿಗೆ ಅವಕಾಶ ನೀಡುತ್ತಿಲ್ಲ, ಇದರ ಅರ್ಥ ನನ್ನ ಸ್ಪರ್ಧೆಗೆ ಅವರ ಅನುಮತಿಯಿದೆ ಎಂದು ನಾನು ಭಾವಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. +ಚುನಾವಣೆಗೆ ಈಶ್ವರಪ್ಪ ಸ್ರ್ಪಧಿಸಲಿ, ರಾಘವೇಂದ್ರ ಸೋಲಲಿ ಎನ್ನುವ ಅಭಿಪ್ರಾಯದಲ್ಲಿ ಅಮಿತ್ ಶಾ ಇದ್ದಾರೆ. ಈ ಕಾರಣಕ್ಕೆ ಅವರು ನನ್ನನ್ನು ಭೇಟಿಯಾಗಿಲ್ಲ, ನಾನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆಶಯದಂತೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಈಶ್ವರಪ್ಪ ದೆಹಲಿಯಲ್ಲಿ ಹೇಳಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. \ No newline at end of file diff --git a/eesanje/url_46_187_4.txt b/eesanje/url_46_187_4.txt new file mode 100644 index 0000000000000000000000000000000000000000..9c16de1ffc5cc94481bccc91359a209888e073d4 --- /dev/null +++ b/eesanje/url_46_187_4.txt @@ -0,0 +1,6 @@ +20 ಗಂಟೆ ಕಾರ್ಯಾಚರಣೆ ಯಶಸ್ವಿ, ಕೊಳವೆ ಬಾವಿಯಿಂದ ಬದುಕಿ ಬಂದ ಸಾತ್ವಿಕ್ +ಬೆಂಗಳೂರು, ಏ.4-ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಬಾಲಕ ಸಾತ್ವಿಕನ ರಕ್ಷಣೆಗಾಗಿ ಅಹೋರಾತ್ರಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಬಾಲಕನನ್ನು ರಕ್ಷಿಸಿ ಹೊರತೆಗೆಯುವಲ್ಲಿ ಪೊಲೀಸರು ಅಗ್ನಿ ಶಾಮಕ ದಳ, , ಪಡೆ ನಡೆಸಿದ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. +ಕೊಳವೆ ಬಾವಿಯಿಂದ ಹೊರತೆಗೆದ ಬಾಲಕ ಸಾತ್ವಿಕನನ್ನು ಕೂಡಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.20 ಅಡಿಗಳ ಆಳಕ್ಕೆ ಬಿದ್ದಿದ್ದ ತಲೆ ಕೆಳಗಾಗಿ ಬಿದ್ದಿದ್ದ ಬಾಲಕನನ್ನು ಹೊರತೆಗೆಯುವಲ್ಲಿ ರಕ್ಷಣಾ ತಂಡ ನಡೆಸಿದ್ದ ಕಾರ್ಯಾಚರಣೆ ರೋಚಕವಾಗಿತ್ತು.ಲಚ್ಯಾಣ ಗ್ರಾಮದ ಸತೀಶ್ ಮುಜುಗೊಂಡ ಎಂಬುವವರ ಪುತ್ರ ಸಾತ್ವಿಕ್ (2) ನಿನ್ನೆ ಸಂಜೆ 4.45ರ ಸುಮಾರಿಗೆ ಕೊಳವೆ ಬಾವಿಗೆ ಬಿದ್ದಿದ್ದು, 5.30ರಿಂದ ಬಾಲಕನ ರಕ್ಷಣೆಗಾಗಿ ಕಾರ್ಯಾಚರಣೆ ಆರಂಭವಾಗಿತ್ತು. +ಹೈದರಾಬಾದ್‍ನಿಂದ ನಿನ್ನೆ ರಾತ್ರಿ ಆಗಮಿಸಿದ್ದ ಎನ್‍ಡಿಆರ್‍ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟು ಬಾಲಕನ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿತ್ತು. ಸ್ಥಳೀಯ ಅಗ್ನಿಶಾಮಕ ದಳ ಹಾಗೂ ಪೊಲೀಸರು ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಯನ್ನು ವೇಗವಾಗಿ ನಡೆಸಿದರು. ಕೊಳವೆ ಬಾವಿ ಪಕ್ಕದಲ್ಲಿ ಎರಡು ಜೆಸಿಬಿಗಳನ್ನು ಬಳಿಸಿ ಎರಡು ಗುಂಡಿಯನ್ನು ತೆಗೆದು ಮಗು ಇರುವ ಸ್ಥಳದ ಸಮೀಪಕ್ಕೆ ತಲುಪಲಾಯಿತು. +ಪೈಪ್ ಮೂಲಕ ಮಗುವಿಗೆ ಆಮ್ಲಜನಕ ಒದಿಗಿಸಲಾಗುತ್ತಿತ್ತು. ಕ್ಯಾಮೆರಾದಲ್ಲಿ ಬಾಲಕ ಸಾತ್ವಿಕ್‍ನ ಕಾಲು ಅಲುಗಾಡುತ್ತಿರುವ ದೃಶ್ಯ ಕಂಡುಬಂದ ಹಿನ್ನೆಲೆಯಲ್ಲಿ ಪೋಷಕರು, ನೆರೆದಿದ್ದ ಸಾವಿರಾರು ಜನ ಮಗು ಬದುಕಿದೆ, ಇನ್ನೇನು ಮಗುವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗುತ್ತದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲೇ ರಕ್ಷಣಾ ಕಾರ್ಯಾಚರಣೆಗೆ ಗಟ್ಟಿ ಕಲ್ಲು ಅಡ್ಡಿಯಾಗಿತ್ತು. +ಸ್ಟೋನ್ ಬ್ರೇಕರ್ ಬಳಸಿ ಬಂಡೆ ಒಡೆದು ಮಗುವಿನ ಬಳಿ ತಲುಪಿದ ರಕ್ಷಣಾ ಪಡೆ ಪೈಪ್‍ನಲ್ಲಿ ಸಿಲುಕಿದ್ದ ಮಗುವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾಕಾರಿ ಟಿ. ಬುಬಾಲನ್, ಎಸ್ಪಿ ಋಷಿಕೇಶ್ ಸೋನಾವಣೆ, ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಸ್ಥಳದಲ್ಲೇ ಬೀಡು ಬಿಟ್ಟು ಕಾರ್ಯಾಚರಣೆ ಉಸ್ತುವಾರಿ ವಹಿಸಿದ್ದರು. \ No newline at end of file diff --git a/eesanje/url_46_187_5.txt b/eesanje/url_46_187_5.txt new file mode 100644 index 0000000000000000000000000000000000000000..c088a878a0bf82a966f7c81eecb607682733464e --- /dev/null +++ b/eesanje/url_46_187_5.txt @@ -0,0 +1,4 @@ +ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಸುರೇಶ್-ಡಾ.ಸಿ.ಎನ್.ಮಂಜುನಾಥ್ ಮುಖಾಮುಖಿ +ರಾಮನಗರ,ಏ.4-ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್‍ನ ಅಭ್ಯರ್ಥಿ ಡಿ.ಕೆ.ಸುರೇಶ್ ಮತ್ತು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಡಿ.ಕೆ.ಸುರೇಶ್ ಅವರು ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರೊಂದಿಗೆ ತೆರಳಿ 2 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದರು. ಇಂದು ಮತ್ತೊಮ್ಮೆ 2 ಪ್ರತಿಗಳ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. +ರಾಮನಗರದ ಶಾಸಕ ಇಕ್ಬಾಲ್ ಹುಸೇನ್, ವಿಧಾನಸಭಾ ಸದಸ್ಯ ರವಿ ಈ ಸಂದರ್ಭದಲ್ಲಿ ಡಿ.ಕೆ.ಸುರೇಶ್‍ರವರ ಜೊತೆಯಲ್ಲಿದ್ದರು. ಡಾ.ಸಿ.ಎನ್.ಮಂಜುನಾಥ್‍ರವರು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹಾಗೂ ಶಾಸಕ ಮುನಿರತ್ನ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. +ಹೊರಬರುವಾಗ ಎರಡೂ ಪಕ್ಷಗಳ ನಾಯಕರು ಮುಖಾಮುಖಿಯಾದರು. ಡಿ.ಕೆ.ಸುರೇಶ್ ಮತ್ತು ಮುನಿರತ್ನ ಪರಸ್ಪರ ಹಸ್ತಲಾಘವ ಮಾಡಿದ್ದು ಗಮನ ಸೆಳೆಯಿತು. \ No newline at end of file diff --git a/eesanje/url_46_187_6.txt b/eesanje/url_46_187_6.txt new file mode 100644 index 0000000000000000000000000000000000000000..fb0f33b7eedfc4fc7d7f871aff42fe7201956f56 --- /dev/null +++ b/eesanje/url_46_187_6.txt @@ -0,0 +1,4 @@ +ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ +ಬೆಂಗಳೂರು,ಏ.4-ರಾಜ್ಯಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಲೋಕೇಶ್ ಭರಮಪ್ಪ ಜಗಲಸಾರ್ ಅವರನ್ನು ಬೆಂಗಳೂರು ನಗರ ದಕ್ಷಿಣ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ. +ಮೈಸೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯ ಎಸ್‍ಪಿಯಾಗಿರುವ ಗೀತಾ ಎನ್.ಎಸ್. ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ. +ಡಾ.ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ನಗರ ಪೂರ್ವ ವಲಯದ ಉಪಪೊಲೀಸ್ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಕರ್ನಾಟಕ ಲೋಕಾಯುಕ್ತ ಎಸ್‍ಪಿ ಹುದ್ದೆಯ ಸಮವರ್ತಿತ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ವರ್ಗಾವಣೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಡಲಾಗಿದೆ. \ No newline at end of file diff --git a/eesanje/url_46_187_7.txt b/eesanje/url_46_187_7.txt new file mode 100644 index 0000000000000000000000000000000000000000..303138eb300321c9affc19635b56b22075aaea25 --- /dev/null +++ b/eesanje/url_46_187_7.txt @@ -0,0 +1,7 @@ +ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ 26.11 ಕೋಟಿ ನಗದು ಜಪ್ತಿ +ಬೆಂಗಳೂರು,ಏ.3-ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾದಾಗಿನಿಂದ ಅಕ್ರಮವನ್ನು ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದುವರೆಗೂ 26.11 ಕೋಟಿ ಹಣವನ್ನು ಜಪ್ತಿ ಮಾಡಿದೆ.ಅದೇ ರೀತಿ 29.42 ಕೋಟಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, 3.13 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇದುವರೆಗೂ ರಾಜ್ಯದಲ್ಲಿ ಈ ಪ್ರಮಾಣದ ಡ್ರಗ್ಸ್ ಅನ್ನು ಜಪ್ತಿ ಮಾಡಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಆದಾಯ ತೆರಿಗೆ, ಅಬಕಾರಿ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ 26,11,61,464 ರೂ. ನಗದು ಜಪ್ತಿ ಮಾಡಲಾಗಿದೆ. ಇದುವರೆಗೂ 16.02 ಕೆಜಿ ಚಿನ್ನ ವಶಪಡಿಸಿಕೊಂಡಿದ್ದು9.43 ಕೋಟಿ ರೂ. ಮೌಲ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. +27,23,150 ರೂ. ಮೌಲ್ಯದ 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ಮೌಲ್ಯದ 21.17 ಕ್ಯಾರೆಟ್ ವಜ್ರದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಲಾದ ಮದ್ಯ, ಡ್ರಗ್ಸ್, ನಗದು, ಬೆಲೆ ಬಾಳುವ ಲೋಹ, ಉಚಿತ ಉಡುಗೊರೆಗಳಿಗೆ ಸಂಬಂಧಿಸಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. +ರಾಮಮೂರ್ತಿನಗರ ಠಾಣೆಯ ಪೊಲೀಸ್ ತಂಡ 22 ಲಕ್ಷ ಮೌಲ್ಯದ 215ಗ್ರಾಂ ಡ್ರಗ್ಸ್, ದೇವನಹಳ್ಳಿ ಪೊಲೀಸ್ ತಂಡ 85 ಲಕ್ಷ ಮೌಲ್ಯದ 850 ಗ್ರಾಂ ಡ್ರಗ್ಸ್ ಹಾಗೂ ನಗರದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 2.2 ಕೋಟಿ ಹಣ, 25.29 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. +ಕುಗನೊಳಿ ಚೆಕ್ ಪೋಸ್ಟ್ ನಲ್ಲಿ 3ಲಕ್ಷ ಹಣ ಜಪ್ತಿರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ದಾಖಲೆಯಿಲ್ಲದೇ ತೆಗೆದುಕೊಂಡು ಹೋಗುತ್ತಿದ್ದ 3 ಲಕ್ಷ ಹಣವನ್ನು ಜಿಲ್ಲೆಯ ನಿಪ್ಪಾಣಿ ತಾಲೂಕಿನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿಯ ಕುಗನೊಳಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. +ಈ ಮಾರ್ಗದಲ್ಲಿ ಬರುತ್ತಿದ್ದ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದ ಹಣವನ್ನು ಪೊಲೀಸ್ ಸಿಬ್ಬಂದಿ ಸೀಜ್ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಜಿಲ್ಲೆಯ ಕುಡಚಿ ಚೆಕ್ ಪೋಸ್ಟ್ ನಲ್ಲಿ ಲಾರಿಯನ್ನು ತಪಾಸಣೆ ಮಾಡಿದಾಗ 9.86 ಲಕ್ಷ ಮೌಲ್ಯದ ಟಿವಿಗಳು ಸೇರಿದಂತೆ ವಿವಿಧ ಸರಕುಗಳನ್ನು ವಶಕ್ಕೆ ಪಡೆಯಲಾಗಿದೆ. \ No newline at end of file diff --git a/eesanje/url_46_187_8.txt b/eesanje/url_46_187_8.txt new file mode 100644 index 0000000000000000000000000000000000000000..3de93dd805dda77ad485ad0983c68ae863812dfc --- /dev/null +++ b/eesanje/url_46_187_8.txt @@ -0,0 +1,4 @@ +ರಾಜ್ಯಸಭೆ ಸದಸ್ಯತ್ವದಿಂದ ಹನುಮಂತಯ್ಯ, ರಾಜೀವ್ ಚಂದ್ರಶೇಖರ್ ನಿವೃತ್ತಿ +ಬೆಂಗಳೂರು, ಏ.3-ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್ ಚಂದ್ರಶೇಖರ್, ಡಾ. ಎಲ್. ಹನುಮಂತಯ್ಯ, ಡಾ. ಸೈಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ನಿನ್ನೆ ನಿವೃತ್ತರಾಗಿದ್ದಾರೆ. +ಈ ನಾಲ್ವರು ಸದಸ್ಯರ ನಿವೃತ್ತಿಯಿಂದ ತೆರವಾಗುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಚುನಾವಣೆ ನಡೆಸಿತ್ತು. ಎಲ್. ಹನುಮಂತಯ್ಯ ಹಾಗೂ ರಾಜೀವ್ ಚಂದ್ರಶೇಖರ್ ಅವರು ಮರು ಸ್ಪರ್ಧೆಯಿಂದ ದೂರ ಉಳಿದಿದ್ದರು. ಆದರೆ ನಾಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಮರು ಸ್ಪರ್ಧೆ ಮಾಡಿ ಆಯ್ಕೆ ಯಾಗಿದ್ದಾರೆ. +ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಇತ್ತೀಚೆಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಅಜಯ್ ಮಕಾನ್, ಡಾ. ಸೈಯದ್ ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್, ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ ಚುನಾಯಿತರಾಗಿದ್ದಾರೆ. \ No newline at end of file diff --git a/eesanje/url_46_187_9.txt b/eesanje/url_46_187_9.txt new file mode 100644 index 0000000000000000000000000000000000000000..55c98b8d4dd60d2aa266fe20d62d899658c77952 --- /dev/null +++ b/eesanje/url_46_187_9.txt @@ -0,0 +1,8 @@ +ಯುಪಿಐ ಮೂಲಕ ರೈಲ್ವೆ ಟಿಕೆಟ್ ಖರೀದಿಗೆ ಅವಕಾಶ +ಬೆಂಗಳೂರು,ಏ.3-ಇದೇ ಮೊದಲ ಬಾರಿಗೆ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾಯೋಗಿಕವಾಗಿ ಯುಪಿಐ ಮೂಲಕ ಕಾಯ್ದಿರಿಸದ ರೈಲ್ವೆ ಟಿಕೆಟ್ಗಳನ್ನು ಖರೀದಿಸಲು ಅವಕಾಶ ನೀಡಲಾಗಿದೆ. +ಪ್ರಾಯೋಗಿಕವಾಗಿ ರಾಜಧಾನಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಯುಪಿಐ ಮೂಲಕ ಟಿಕೆಟ್ ಖರೀದಿಗೆ ಆವಕಾಶ ನೀಡಲಾಗಿದೆ. ಟಿಕೆಟ್ ಕೌಂಟರ್ಗಳಲ್ಲಿ ಇ ಪಾವತಿಗೆ ಅನುವು ಮಾಡಿಕೊಡಲಾಗಿದೆ. ಇದಕ್ಕೆ ಈಗಾಗಲೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. +ಪ್ರಯಾಣಿಕರು ಟಿಕೆಟ್ ಕೌಂಟರ್ನಲ್ಲಿ ಹೋಗಬೇಕಾದ ಸ್ಥಳಗಳ ಮಾಹಿತಿಯನ್ನು ನೀಡಿದರೆ ಟಿಕೆಟ್ ಇಶ್ಯೂ ಮಾಡಲಾಗುತ್ತಿದೆ. ಸ್ಕ್ರೀನ್ನಲ್ಲಿ ಕ್ಯೂ ಆರ್ ಕೋಡ್ ಕಾಣಿಸಿಕೊಂಡಾಗ ಹಣ ಪಾವತಿಸುವ ಮೂಲಕ ಟಿಕೆಟ್ ಪಡೆಯಬಹುದಾಗಿದೆ. +ಕೆಎಸ್ಆರ್ ಮಾದರಿಯಲ್ಲೇ ನಗರದ ಯಶವಂಪುರ, ಬೆಂಗಳೂರು ಕಂಟೋನ್ಮೆಂಟ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಹಿಂದೆ ಕಾಯ್ದಿರಿಸದ ಟಿಕೆಟ್ ಗಳನ್ನು ನಗದು ರೂಪದಲ್ಲಿ ಮಾತ್ರ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಡಿಜಿಟಲ್ ಪಾವತಿಗೂ ಅವಕಾಶ ನೀಡಿರುವುದರಿಂದ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. +ಕಾಯ್ದಿರಿಸದ ಟಿಕೆಟ್ ಖರೀದಿಸುವಾಗ ಉಂಟಾಗುವ ಚಿಲ್ಲರೆ ಸಮಸ್ಯೆ , ನಗದು ಸಮಸ್ಯೆಗೆ ಯುಪಿಐ ಪೇಮೆಂಟ್ ವ್ಯವಸ್ಥೆಯು ಪರಿಹಾರವನ್ನು ಒದಗಿಸ ಲಿದೆ. ಈ ಮೊದಲು ಟಿಕೆಟ್ ಖರೀದಿಗೆ ನಗದು, ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಗಳ ಮೂಲಕ ಪಾವತಿಗೆ ಅವಕಾಶ ನೀಡಲಾಗಿತ್ತು. +ಇವುಗಳಿಂದ ಪಾವತಿ ಸ್ವೀಕಾರಕ್ಕೆ ಇರುವ ಪ್ರಕ್ರಿಯೆಗಳು ವಿಳಂಬವಾಗುತ್ತಿತ್ತು. ಹೊಸ ವ್ಯವಸ್ಥೆ ಪ್ರಯಾಣಿಕರಿಗೆ ಕಾಲ ವಿಳಂಬವಿಲ್ಲದೆ ಟಿಕೆಟ್ ಪಡೆಯಲು ಸಹಕಾರಿಯಾಗುತ್ತಿದೆ ಎಂದು ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಹಿರಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತ್ರಿನೇತ್ರ ಹೇಳಿದ್ದಾರೆ. +ರೈಲ್ವೆ ಸಚಿವಾಲಯದ ಪ್ರಾಯೋಗಿಕ ಯೋಜನೆ ಇದಾಗಿದ್ದು, ಟಿಕೆಟ್ ಕೌಂಟರ್ ನಲ್ಲಿ ಈ ಮೊದಲು ಯುಪಿಐ ಪೆಮೆಂಟ್ ವ್ಯವಸ್ಥೆ ಇರಲಿಲ್ಲ. ದೇಶಾದ್ಯಂತ ಈ ವ್ಯವಸ್ಥೆಯನ್ನು ಆರಂಭಿಸುವ ಮೊದಲು ಕೆಲವೇ ಕೆಲವು ರೈಲ್ವೆ ನಿಲ್ಧಾಣಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಯುಪಿಐ ಮೂಲಕ ಈಗಾಗಲೇ ಸಾವಿರಾರು ಜನ ಟಿಕೆಟ್ಗಳನ್ನು ಖರೀದಿಸಿ ದ್ದಾರೆ. ಸಂಪೂರ್ಣ ಬೆಂಗಳೂರಿನಲ್ಲಿ ಈ ವ್ಯವಸ್ಥೆಯನ್ನು ಶೀಘ್ರವೇ ಆರಂಭಿಸ ಲಾಗುವುದು ಎಂದು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_188_1.txt b/eesanje/url_46_188_1.txt new file mode 100644 index 0000000000000000000000000000000000000000..6c4fca0cb6c75dfdddbeef0ce38c712ef73c0114 --- /dev/null +++ b/eesanje/url_46_188_1.txt @@ -0,0 +1,7 @@ +ರಾಜಕೀಯ ನಾಯಕರ ‘ಹಾರಾಟ’ ಜೋರು : ಹೆಲಿಕಾಪ್ಟರ್, ವಿಮಾನಗಳ ಬಾಡಿಗೆ ದರ ಶೇ15ರಷ್ಟು ಹೆಚ್ಚಳ +ಬೆಂಗಳೂರು, ಏ.3-ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮೂರು ಪಕ್ಷಗಳಿಂದ ರಾಜಕೀಯ ನಾಯಕರ ಪ್ರಚಾರ ಕೂಡ ಜೋರಾಗಿ ನಡೆಯುತ್ತಿದೆ. ಹೆಚ್ಚಿನ ಸ್ಥಳಗಳಿಗೆ ಭೇಟಿ ನೀಡುವ ಸಲುವಾಗಿ ಹೆಲಿಕಾಪ್ಟರ್‍ಗಳು, ಸಣ್ಣ ವಿಮಾನಗಳಿಗೆ ಭಾರೀ ಬೇಡಿಕೆ ಬಂದಿದ್ದು, ಇದರಿಂದಾಗಿ ಬಾಡಿಗೆ ದರ ಕೂಡ ಶೇ.15ರಷ್ಟು ಹೆಚ್ಚಾಗಿದೆ. +ರಾಜ್ಯದಲ್ಲಿ ಚುನಾವಣೆ ಪ್ರಚಾರ ಹಾಗೂ ಸ್ಟಾರ್ ಪ್ರಚಾರಕರಿಗಾಗಿ ಹೆಲಿಕಾಪ್ಟರ್‍ಗಳಿಗೆ ಬೇಡಿಕೆ ಬಂದಿದೆ. ಈಗಾಗಲೇ ಸುಮಾರು 150 ಹೆಲಿಕಾಪ್ಟರ್‍ಗಳು ಹಾಗೂ ಮಿನಿ ವಿಮಾನಗಳು ಬುಕ್ ಆಗಿವೆ. ಹೆಚ್ಚಿನ ಬೇಡಿಕೆ ಹಿನ್ನೆಲೆ ಹೊರ ರಾಜ್ಯದಿಂದ ಹೆಲಿಕಾಪ್ಟರ್‍ಗಳನ್ನು ತರಿಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧೆಡೆ ಹೆಲಿಕಾಪ್ಟರ್‍ಗಳನ್ನು ಬುಕ್ ಮಾಡಿ ಕಾಯ್ದಿರಿಸಲಾಗುತ್ತಿದೆ. +ಇನ್ನು, ಪ್ರಮುಖವಾಗಿ ಸ್ಟಾರ್ ಪ್ರಚಾರಕರ ಸುರಕ್ಷತೆಗಾಗಿ ಉತ್ತಮ ನಿರ್ವಹಣೆಯ ಡಬಲ್ ಎಂಜಿನ್ ಕಾಪ್ಟರ್ ಮತ್ತು ವಿಐಪಿ ಪೈಲಟ್‍ಗಳನ್ನು ಬೇರೆ ಕಡೆಗಳಿಂದ ಕರೆಸಲಾಗುತ್ತಿದೆ ಎಂದು ಸೇವಾ ಆಪರೇಟರ್‍ಗಳು ತಿಳಿಸಿದ್ದಾರೆ.ಜಕ್ಕೂರು ಏರೊಡ್ರೊಮ್, ಎಚ್‍ಎಎಲ್ ಹಾಗೂ ವೈಟ್‍ಫೀಲ್ಡ್‍ನಲ್ಲಿ ಹೆಲಿಕಾಪ್ಟರ್‍ಗಳು ಸೇವೆಗಾಗಿ ಕಾದು ನಿಲ್ಲಲಿವೆ. +ಚುನಾವಣೆ ಹಿನ್ನೆಲೆ ವಿಶ್ರಾಂತಿಗೆ ಬಿಡುವಿಲ್ಲದಂತೆ ಸಂಚರಿಸಬೇಕಿರುವ ನಾಯಕರಿಗೆ ಒಂದೊಂದು ಕ್ಷಣವೂ ಅಮೂಲ್ಯ. ಸಮಯ ವ್ಯರ್ಥವಾದರೆ ಚುನಾವಣಾ ಅಖಾಡದಲ್ಲಿ ಹಿನ್ನಡೆಯ ಆತಂಕ ಕೂಡ ನಾಯಕರಿಗಿದೆ. ಹಾಗಾಗಿ ಸಮಯದ ಸಮರ್ಥ ನಿರ್ವಹಣೆಗಾಗಿ ಬಹುತೇಕ ನಾಯಕರು ಹೆಲಿಕಾಪ್ಟರ್‍ಗಳ ಮೊರೆ ಹೋಗುತ್ತಿದ್ದಾರೆ. ರಾಜ್ಯದ ಹಲವು ನಾಯಕರು ಸ್ವಂತ ಹೆಲಿಕಾಪ್ಟರ್ ಹಾಗೂ ಚಾರ್ಟೆಡ್ ವಿಮಾನಗಳನ್ನು ಹೊಂದಿದ್ದು, ಅವುಗಳನ್ನು ಕೂಡ ಚುನಾವಣೆಗೆ ಬಳಕೆಯಾಗಲಿವೆ. +ಬಾಡಿಗೆ ಎಷ್ಟಿದೆ?ಎರಡು ಆಸನದ ಹೆಲಿಕಾಪ್ಟರ್‍ಗೆ ಒಂದು ಗಂಟೆಗೆ 2.10 ಲಕ್ಷ ರೂ. ಬಾಡಿಗೆ ಇದ್ದರೆ, 4 ಆಸನದ ಹೆಲಿಕಾಪ್ಟರ್‍ಗಳಿಗೆ ಗಂಟೆಗೆ 2.30 ಲಕ್ಷ ರೂ., 6 ಆಸನದ ಮಿನಿ ವಿಮಾನಕ್ಕೆ ಗಂಟೆಗೆ 2.60 ಲಕ್ಷ ರೂ., 8 ಆಸನದ ಮಿನಿ ವಿಮಾನಕ್ಕೆ ಗಂಟೆಗೆ 3.50 ಲಕ್ಷ ರೂ., 13 ಆಸನದ ಮಿನಿ ವಿಮಾನಕ್ಕೆ ಗಂಟೆಗೆ 4 ಲಕ್ಷ ರೂ. ಬಾಡಿಗೆ ಇದ್ದು, ಎಲ್ಲ ದರಗಳಲ್ಲೂ ಜಿಎಸ್‍ಟಿ ಸೇರಿರಲಿದೆ. ಇದು ಸಿಂಗಲ್ ಇಂಜಿನ್ ಹೆಲಿಕಾಪ್ಟರ್‍ಗಳಾಗಿದ್ದು, ಡಬಲ್ ಇಂಜಿನ್ ಕಾಪ್ಟರ್, ವಿಮಾನಗಳ ಬೆಲೆ ಮತ್ತಷ್ಟು ಹೆಚ್ಚಿರಲಿದೆ ಎಂದು ಏರ್ ಆಂಬುಲೆನ್ಸ್ ನಿರ್ದೇಶಕಿ ಡಾ ಶಮಿತಾ ತಿಳಿಸಿದ್ದಾರೆ. +ಹೆಲಿಕಾಪ್ಟರ್‍ಗಳ ಬಾಡಿಗೆ ದರ!ಕಾಪ್ಟರ್ ವಿಧ (ಸಿಂಗಲ್ ಇಂಜಿನ್)ಗಂಟೆಗೆ ಬಾಡಿಗೆ ದರ (ಜಿಎಸ್‍ಟಿ ಸೇರಿ)2 ಆಸನದ ಹೆಲಿಕಾಪ್ಟರ್2.10 ಲಕ್ಷ ರೂ.4 ಆಸನದ ಹೆಲಿಕಾಪ್ಟರ್2.30 ಲಕ್ಷ ರೂ.6 ಆಸನದ ಮಿನಿ ವಿಮಾನ2.60 ಲಕ್ಷ ರೂ.8 ಆಸನದ ಮಿನಿ ವಿಮಾನ3.50 ಲಕ್ಷ ರೂ.13 ಆಸನದ ಮಿನಿ ವಿಮಾನ4 ಲಕ್ಷ ರೂ. \ No newline at end of file diff --git a/eesanje/url_46_188_10.txt b/eesanje/url_46_188_10.txt new file mode 100644 index 0000000000000000000000000000000000000000..db61aa403c7680fc31a663c00f44aa05af56b690 --- /dev/null +++ b/eesanje/url_46_188_10.txt @@ -0,0 +1,6 @@ +ಲೋಕಸಮರಕ್ಕೆ ರಾಜ್ಯಾದ್ಯಂತ ಬಿಗಿ ಭದ್ರತೆ : ಅಲೋಕ್ ಮೋಹನ್ +ಬೆಂಗಳೂರು, ಏ.2-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭದ್ರತೆ ಹೆಚ್ಚಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹಾಗೂ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ. ದಿನದ 24 ಗಂಟೆಯೂ ಈ ಚೆಕ್ ಪೋಸ್ಟ್ ಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ ಎಂದರು. +ಚೆಕ್ ಪೋಸ್ಟ್ ಳಲ್ಲಿ ಪೊಲೀಸರ ಜೊತೆಗೆ ಆರ್ಟಿಒ ಅಬಕಾರಿ, ಕಂದಾಯ ಹಾಗೂ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇರುತ್ತಾರೆ ಎಂದು ಅವರು ಹೇಳಿದರು.ಈಗಾಗಲೇ ಚುನಾವಣಾ ಬಂದೋಬಸ್ತ್ಗಾಗಿ 15 ಕಂಪನಿ ಕೇಂದ್ರ ಪಡೆಗಳು ಬಂದಿವೆ. ಅವುಗಳನ್ನು ಸ್ಥಳೀಯ ಪೊಲೀಸರ ಜೊತಗೆ ವಿವಿಧ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ. ಇನ್ನೆರಡು ಮೂರು ದಿನಗಳಲ್ಲಿ ಇನ್ನಷ್ಟು ಕೇಂದ್ರ ಪಡೆಯ ಕಂಪನಿಗಳು ರಾಜ್ಯಕ್ಕೆ ಆಗಮಿಸಲಿವೆ ಎಂದು ಅವರು ತಿಳಿಸಿದರು. +ಎಲ್ಲಾ ರೌಡಿಗಳ ಮನೆಗಳ ಮೇಲೆ ಈಗಾಗಲೇ ನಮ್ಮ ಪೊಲೀಸರು ದಾಳಿ ಮಾಡಿ, ಅವರಿಗೆ ಎಚ್ಚರಿಕೆ ನೀಡಿ ಬಾಲ ಬಿಚ್ಚದಂತೆ ತಾಕೀತು ಮಾಡಿದ್ದಾರೆ. ರೌಡಿಗಳು ರಾಜಕಾರಣಿಗಳ ಜೊತೆಯಿರಲಿ ಅಥವಾ ಎಲ್ಲೇ ಇರಲಿ, ಶಾಂತಿ ಮತ್ತು ಸುವ್ಯವಸ್ಥೆಗೆ ದಕ್ಕೆ ತಂದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. +ರೌಡಿಗಳು ಅಥವಾ ಬೇರೆ ಯಾರೇಯಾಗಲಿ ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದರೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಡಿಜಿಪಿ ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_188_11.txt b/eesanje/url_46_188_11.txt new file mode 100644 index 0000000000000000000000000000000000000000..5a194a7b56fc1d98bfa554461128053f14549869 --- /dev/null +++ b/eesanje/url_46_188_11.txt @@ -0,0 +1,5 @@ +ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ 4.10 ಕೋಟಿ ವಂಚಿಸಿದ್ದ ನಾಲ್ವರ ಬಂಧನ +ಬೆಂಗಳೂರು, ಏ.2-ಕೆಪಿಎಸ್‌ಸಿ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂ. ಪಡೆದುಕೊಂಡು ಸಿಎಂ, ರಾಜ್ಯಪಾಲರ ನಕಲಿ ಸಹಿ ಇರುವ ನಡಾವಳಿ ಪತ್ರವನ್ನು ನೀಡಿ ವಂಚಿಸಿದ್ದ ಏಳು ಮಂದಿಯ ಪೈಕಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. +ರಿಯಾಜ್ ಅಹಮ್ಮದ್ (41), ಯೂಸುಫ್ ಸುಬ್ಬೇಕಟ್ಟೆ (47), ಚಂದ್ರಪ್ಪ (44) ಮತ್ತು ರುದ್ರೇಶ್ (35) ಬಂತ ವಂಚಕರು. ಪ್ರಮುಖ ಆರೋಪಿ ರಿಯಾಜ್ ಎಂಬಾತ ತಮ್ಮ ಸ್ನೇಹಿತರಾದ ಯುಸೂಫ್, ಚೇತನ್ ಶಂಕರ್, ಚಂದ್ರಪ್ಪ, ಮಹೇಶ್, ರುದ್ರೇಶ ಮತ್ತು ಹರ್ಷವರ್ಧನ ರೊಂದಿಗೆ ಸೇರಿಕೊಂಡು ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸದಸ್ಯತ್ವ ಕೊಡಿಸುವುದಾಗಿ ನೀಲಮ್ಮ ಎಂ ಬೆಳಮಗಿ(54) ಎಂಬುವವರಿಗೆ ನಂಬಿಸಿ ಅದಕ್ಕೆ 5ಕೋಟಿ ಕೊಡಬೇಕಾಗುವುದು ಎಂದು ಹೇಳಿದ್ದಾರೆ. +ಇವರ ಮಾತನ್ನು ನಂಬಿದ ನೀಲಮ್ಮ ಅವರು ಹಂತ ಹಂತವಾಗಿ ಒಟ್ಟು 4.10 ಕೋಟಿ ರೂ.ಗಳನ್ನು ನಗದು ರೂಪದಲ್ಲಿ ಹಾಗೂ ಬ್ಯಾಂಕ್ ಖಾತೆಯ ಮೂಲಕ ವರ್ಗಾವಣೆ ಮಾಡಿದ್ದಾರೆ.ಈ ವಂಚಕರು ಹಣವನ್ನು ಪಡೆದುಕೊಂಡು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಸಂಬಂಧ ಮುಖ್ಯಮಂತ್ರಿ ಟಿಪ್ಪಣಿ, ನಡಾವಳಿ, ನಕಲಿ ಸಹಿಗಳನ್ನು ಮಾಡಿ, ರಾಜ್ಯಪಾಲರ ಹೆಸರಿನಲ್ಲಿ ಸುಳ್ಳು ರಾಜ್ಯಪತ್ರವನ್ನು ಸೃಷ್ಟಿಸಿ ಮೋಸ ಮಾಡಿರುವುದು ನೀಲಮ್ಮ ಅವರಿಗೆ ಗೊತ್ತಾಗಿದೆ. +ತಕ್ಷಣ ಅವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಂಚಕರ ಜಾಲದ ಬಗ್ಗೆ ಮಾಹಿತಿಗಳನ್ನು ಕಲೆಹಾಕಿ ಪ್ರಮುಖ ಆರೋಪಿ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ ಉಳಿತ ಆರೋಪಿಗಳ ಪತ್ತೆಗಾಗಿ ಶೋಧ ಮುಂದುವರೆಸಿದ್ದಾರೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಕೈಗೊಂಡಿರುತ್ತಾರೆ. \ No newline at end of file diff --git a/eesanje/url_46_188_12.txt b/eesanje/url_46_188_12.txt new file mode 100644 index 0000000000000000000000000000000000000000..07a244a1e830b2172126e5bcc4c0d9ca7818a659 --- /dev/null +++ b/eesanje/url_46_188_12.txt @@ -0,0 +1,7 @@ +ಕೆಪಿಸಿಸಿ ಪುನಾರಚನೆ ಬೆನ್ನಲ್ಲೇ ಶುರುವಾಯ್ತು ಅಸಮಾಧಾನ +ಬೆಂಗಳೂರು,ಏ.2-ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆಯ ಬೆನ್ನಲ್ಲೇ ಅಸಮಾಧಾನ ಹೊಗೆಯಾಡಲಾರಂಭಿಸಿದ್ದು, ಜಿಲ್ಲಾಧ್ಯಕ್ಷರ ಬದಲಾವಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.ಇಂದು ಬೆಳಿಗ್ಗೆ ಪ್ರಕಟಿಸಲಾದ ಪಟ್ಟಿಯಲ್ಲಿ ಕಾಂಗ್ರೆಸ್ ಪಕ್ಷ 43 ಉಪಾಧ್ಯಕ್ಷರು, 138 ಮಂದಿ ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಿದೆ. +ನಿನ್ನೆ 7 ಜಿಲ್ಲೆಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅದಕ್ಕೂ ಮುನ್ನ ಐವರು ಕಾರ್ಯಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ರಾಜ್ಯ ನಾಯಕರು ಸಾಮಾಜಿಕ ನ್ಯಾಯವನ್ನು ಆಧಾರವಾಗಿಟ್ಟುಕೊಂಡು ನೇಮಕಾತಿ ಮಾಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಸ್ಥಳೀಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆಕ್ಷೇಪಗಳು ಕೇಳಿಬಂದಿವೆ. +ಉಡುಪಿ ಮತ್ತು ರಾಯಚೂರು ಜಿಲ್ಲಾಧ್ಯಕ್ಷ ಬದಲಾವಣೆಗೆ ಸ್ಥಳೀಯವಾಗಿ ಆಕ್ಷೇಪಗಳು ಕೇಳಿಬಂದಿವೆ. ರಾಯಚೂರು ಜಿಲ್ಲಾಧ್ಯಕ್ಷರ ನೇಮಕದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದ್ದರೆ, ಉಡುಪಿ ಜಿಲ್ಲಾಧ್ಯಕ್ಷರ ನೇಮಕಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ. +ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ನೇಮಕಾತಿಗಳು ಭಾರೀ ಸಂಚಲನ ಸೃಷ್ಟಿಸಿವೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರು, ನಿಗಮ ಮಂಡಳಿಗಳಲ್ಲಿ ಅವಕಾಶ ಸಿಗದೇ ಇದ್ದವರಿಗೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಆಕಾಂಕ್ಷಿಗಳಾಗಿ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿಸಿಕೊಂಡವರಿಗೆ ಪದಾಧಿಕಾರಿಗಳ ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. +ನಾಯಕತ್ವದ ನಿರ್ಧಾರಗಳನ್ನು ಪ್ರಶ್ನಿಸಿ ತಿರುಗಿಬಿದ್ದಿರುವ ಕೆಲ ಪ್ರಮುಖರನ್ನು ನೂತನ ಪಟ್ಟಿಯಿಂದ ಕೈಬಿಡಲಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ವಿರುದ್ಧ ಕಣಕ್ಕಿಳಿಯುವ ಬಂಡಾಯ ಅಭ್ಯರ್ಥಿಯಾಗಿ ಮುನ್ಸೂಚನೆ ನೀಡಿದ್ದ ವೀಣಾ ಕಾಶಪ್ಪನವರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.ಮಂಡ್ಯದಲ್ಲಿ ಬಂಡಾಯ ಸಾರಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದ ಡಾ.ರವೀಂದ್ರ ಅವರಿಗೆ ಪದಾಧಿಕಾರಿ ಹುದ್ದೆಯಿಂದ ಕೊಕ್ ನೀಡಲಾಗಿದೆ. +ಕೋಲಾರದಲ್ಲಿ ಅವಕಾಶ ವಂಚಿತರಾದ ಮುದ್ದು ಗಂಗಾಧರ್ ಅವರಿಗೆ ಕಾರ್ಯದರ್ಶಿ ಹುದ್ದೆಯಿಂದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಲಾಗಿದೆ. ಹಲವಾರು ನೇಮಕಾತಿಗಳು ಅತೃಪ್ತರನ್ನು ಸಮಾಧಾನಪಡಿಸುವ ಸಲುವಾಗಿ ನಡೆದಿದ್ದು, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕತೆಗೆ ಆದ್ಯತೆ ನೀಡಲಾಗಿದೆ. ಅದರ ಹೊರತಾಗಿಯೂ ಕೆಲವರಿಗೆ ಅವಕಾಶ ಸಿಕ್ಕಿಲ್ಲ. ಮತ್ತೆ ಕೆಲವು ಕಡೆ ಪಕ್ಷನಿಷ್ಠರಿಗೆ ಮಣೆ ಹಾಕಿಲ್ಲ ಎಂಬ ದೂರುಗಳು ಕಂಡುಬಂದಿವೆ.ಯಥಾರೀತಿ ಕುಟುಂಬ ರಾಜಕಾರಣ ಮತ್ತು ಪ್ರಭಾವಿಗಳ ಮಕ್ಕಳಿಗೆ ಆದ್ಯತೆ ನೀಡಲಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. \ No newline at end of file diff --git a/eesanje/url_46_188_2.txt b/eesanje/url_46_188_2.txt new file mode 100644 index 0000000000000000000000000000000000000000..faf4ae754b522c2634e1a3226cc51565b730a19f --- /dev/null +++ b/eesanje/url_46_188_2.txt @@ -0,0 +1,5 @@ +ನನಗೂ ಯಾರ ಅವಶ್ಯಕತೆ ಇಲ್ಲ : ಡಿಕೆಶಿಗೆ ಸುಮಲತಾ ತಿರುಗೇಟು +ಬೆಂಗಳೂರು, ಏ.4-ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ನೀಡಿ ಸುಮಲತಾ ಅವಶ್ಯಕತೆ ತಮಗೆ ಇಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ತಮಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯಕ್ಕೆ ತೆರಳುವ ಮುನ್ನಾ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಅವಶ್ಯಕತೆ ಅವರಿಗೆ ಇಲ್ಲ ಎಂದು ಹೇಳಿದಂತೆಯೇ, ನನಗೂ ಯಾರ ಅವಶ್ಯಕತೆಯೂ ಇಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ನಾನು ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದರೆ ಸುಮಲತಾ ಏಕೆ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ಯಾರು ಕುಂಬಳ ಕಾಯಿ ಕಳ್ಳ ಎಂದು ದೇಶಕ್ಕೆ ಗೊತ್ತಿದೆ. ಈ ಹಂತದಲ್ಲಿ ಅವರು ಒಂದು ರೀತಿ ಹೇಳಿಕೆ ನೀಡುವುದು, ನಾನು ಮತ್ತೊಂದು ರೀತಿ ಹೇಳುವುದು ಬೇಕಿಲ್ಲ. ಮಂಡ್ಯಲೋಕಸಭಾ ಕ್ಷೇತ್ರ ಕುರಿತು ನನ್ನ ನಿರ್ಧಾರವನ್ನು ಅಲ್ಲಿ ಸಭೆ ನಡೆಸಿದ ಬಳಿಕವೇ ಪ್ರಕಟಿಸುತ್ತೇನೆ ಎಂದು ಹೇಳಿದರು. +ಮೊನ್ನೆ ತಮ್ಮನ್ನು ಭೇಟಿ ಮಾಡಿದ ಮಂಡ್ಯದ ಕಾರ್ಯಕರ್ತರು ಮೂರ್ನಾಲ್ಕು ರೀತಿಯ ಅಭಿಪ್ರಾಯಗಳನ್ನು ನೀಡಿದ್ದಾರೆ. ಕೆಲವು ನಾಯಕರ ಜೊತೆಗೆ ರಹಸ್ಯ ಸಭೆ ನಡೆದಿದೆ. ಅದನ್ನೆಲ್ಲಾ ಬಹಿರಂಗ ಪಡಿಸಲಾಗುವುದಿಲ್ಲ. ಕೆಲವರು ಪಕ್ಷೇತರವಾಗಿ ಸ್ಪರ್ಧಿಸಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಜೆಡಿಎಸ್‍ನ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಎಲ್ಲವನ್ನೂ ದೃಷ್ಟಿಯಲ್ಲಿಟ್ಟುಕೊಂಡೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟ ಪಡಿಸಿದರು. +ನಾವು ಅಧಿಕಾರಕ್ಕೆ ರಾಜಕೀಯವಾಗಿ ಅಂಟಿಕೊಂಡಿಲ್ಲ. ತಮ್ಮ ಪತಿ ಕೇಂದ್ರ ಸಚಿವರಾಗಿದ್ದಾಗ ಕಾವೇರಿ ವಿವಾದ ಸೃಷ್ಟಿಯಾಗಿತ್ತು. ಎರಡೇ ತಿಂಗಳಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2018ರಲ್ಲಿ ಕಾಂಗ್ರೆಸ್ ಕೊಟ್ಟ ಬಿ-ಫಾರಂ ಅನ್ನು ವಾಪಸ್ ನೀಡಿದ್ದರು. ಅವರಂತೆಯೇ ನಾವು ಸ್ವಾರ್ಥ ರಾಜಕಾರಣ ಮತ್ತು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದ ಸುಮಲತಾ, ಇಂದು ಮಂಡ್ಯದ ಸಭೆಗೆ ತಮ್ಮೊಂದಿಗೆ ದರ್ಶನ್ ಮತ್ತು ಅಭಿಷೇಕ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_188_3.txt b/eesanje/url_46_188_3.txt new file mode 100644 index 0000000000000000000000000000000000000000..c47f595b04941446ad21ae3d2e82df99f3d4ff14 --- /dev/null +++ b/eesanje/url_46_188_3.txt @@ -0,0 +1,4 @@ +ಟಿಕೆಟ್ ಮೂಲಕ ಕೆಎಸ್‌ಆರ್‌ಟಿಸಿಯಿಂದ ಮತದಾನ ಜಾಗೃತಿ +ಬೆಂಗಳೂರು, ಏ.3-ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಸಿದಂತೆ ಕೆಎಸ್‍ಆರ್‍ಟಿಸಿ ಪ್ರಯಾಣಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಮತದಾನ ನಮ್ಮೆಲ್ಲರ ಹಕ್ಕು. ಏ. 26 ಮತ್ತು ಮೇ 7 ರಂದು ತಪ್ಪದೇ ಮತದಾನ ಮಾಡಿ ಎಂಬ ಸಂದೇಶವನ್ನು ಕೆಎಸ್‌ಆರ್‌ಟಿಸಿ ನೀಡುತ್ತಿದೆ. +ಪ್ರಯಾಣಿಕರಿಗೆ ನೀಡುವ ಟಿಕೆಟ್‍ನಲ್ಲಿ ಈ ಮಾಹಿತಿ ಮುದ್ರಿಸಲಾಗುತ್ತಿದೆ. ಕಳೆದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೂ ಇದೇ ರೀತಿ ಕೆಎಸ್‌ಆರ್‌ಟಿಸಿಯು ಮತದಾನದ ಬಗ್ಗೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಿತ್ತು. +ಚುನಾವಣಾ ಆಯೋಗವು ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಥಾ ಸೇರಿದಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂಬುದು ಆಯೋಗದ ಆಶಯವಾಗಿದೆ. \ No newline at end of file diff --git a/eesanje/url_46_188_4.txt b/eesanje/url_46_188_4.txt new file mode 100644 index 0000000000000000000000000000000000000000..b098cce1b5d4a9b23777506745858400f69a42fc --- /dev/null +++ b/eesanje/url_46_188_4.txt @@ -0,0 +1,9 @@ +ಘಟಾನುಘಟಿ ನಾಯಕರ ಶಕ್ತಿ ಪ್ರದರ್ಶನ : ನಾಮಪತ್ರ ಸಲ್ಲಿಕೆ ಭರಾಟೆ +ಬೆಂಗಳೂರು, ಏ.3-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, ಇಂದು ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಘನಾಘಟಿ ನಾಯಕರು ನಾಮಪತ್ರ ಸಲ್ಲಿಕೆ ಮೂಲಕ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಇದರಿಂದ ಲೋಕಸಭಾ ಚುನಾವಣಾ ಕಣ ರಂಗೇರತೊಡಗಿದೆ. +ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಕೆಲವು ಅಭ್ಯರ್ಥಿಗಳು ಪೂಜೆ ಸಲ್ಲಿಸಿ,ಅನಂತರ ರೋಡ್ ಶೋ ನಡೆಸಿದರು. ಶಕ್ತಿ ಪ್ರದರ್ಶನ ಮೂಲಕ ಕೆಲವರು ನಾಮಪತ್ರ ಸಲ್ಲಿಸಿದ್ದರೆ, ಮತ್ತೆ ಕೆಲವರು ಯಾವುದೇ ಶಕ್ತಿ ಪ್ರದರ್ಶನವಿಲ್ಲದೆ, ಸರಳವಾಗಿ ಉಮೇದುವಾರಿಕೆ ಸಲ್ಲಿಸಿದರು. ಬಹಳಷ್ಟು ಅಭ್ಯರ್ಥಿಗಳು ರೋಡ್ ಶೋ, ಸಾರ್ವಜನಿಕ ಸಭೆ ಬಳಿಕ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. +ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಸುವ ವೇಳೆ ಆಯಾ ಪಕ್ಷದ ನಾಯಕರು, ಮುಖಂಡರು ಅಭ್ಯರ್ಥಿಗಳಿಗೆ ಸಾಥ್ ನೀಡಿದರು. ಇಂದು ಉಮೇದುವಾರಿಕೆ ಸಲ್ಲಿಸಿದವರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮೈಸೂರು ರಾಜ ವಂಶಸ್ಥ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪ್ರಮುಖರಾಗಿದ್ದಾರೆ. +ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ನಿನ್ನೆಯವರೆಗೆ 152 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ 135 ಪುರುಷ, 17 ಮಹಿಳಾ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ 9, ಕಾಂಗ್ರೆಸ್‍ನಿಂದ 8, ಬಿಎಸ್‍ಪಿಯಿಂದ 5 ಹಾಗೂ ಜೆಡಿಎಸ್‍ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. +ರಾಜಕೀಯ ಪಕ್ಷಗಳು ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಿಸಿದ್ದರೂ ಇನ್ನೂ ಕೆಲವರು ತಮ್ಮ ಉಮೇದುವಾರಿಕೆ ಸಲ್ಲಿಸಿಲ್ಲ. ಕೆಲವರು ಶುಭದಿನ, ಮುಹೂರ್ತಕ್ಕಾಗಿ ನಾಳೆವರೆಗೂ ಕಾಯುತ್ತಿದ್ದಾರೆ. ಈಗಾಗಲೇ ಕೆಲವರು ಸಾಂಕೇತಿಕವಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಮತ್ತೊಮ್ಮೆ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸುವವರೂ ಇದ್ದಾರೆ. +ಶೋಭಾಕರಂದ್ಲಾಜೆ ಅವರು ಸಂಜಯನಗರದ ರಾಧಾಕೃಷ್ಣ ದೇವಾಲಯ ಮತ್ತು ಮೈಸೂರು ಬ್ಯಾಂಕ್ ವೃತ್ತದ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ರೋಡ್ ಶೋ ನಡೆಸಿದರು. ಬಳಿಕ ನಗರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆಯನ್ನು ಚುನಾವಣಾಕಾರಿಗಳಿಗೆ ಸಲ್ಲಿಸಿದರು. +ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. +ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ರೋಡ್ ಶೋ ನಡೆಸಿದ ಬಳಿಕ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ನಾಮಪತ್ರ ಸಲ್ಲಿಸಿದರು. ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ತಮ್ಮ ನಾಮಪತ್ರ ಸಲ್ಲಿಸಿದರು.ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರು ಬಿಬಿಎಂಪಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. \ No newline at end of file diff --git a/eesanje/url_46_188_5.txt b/eesanje/url_46_188_5.txt new file mode 100644 index 0000000000000000000000000000000000000000..1363355131a15c2382e2a2ed4bed7b71ece20dc6 --- /dev/null +++ b/eesanje/url_46_188_5.txt @@ -0,0 +1,15 @@ +ಬಿಜೆಪಿಯಲ್ಲಿ ಮುಂದುವರೆದ ‘ರಾಜಾಹುಲಿ’ ಪರ್ವ +ಬೆಂಗಳೂರು,ಎ.3- ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಹೊರಗುಳಿದಿದ್ದಾರೆ ಮತ್ತು ಚುನಾವಣಾ ರಾಜಕೀಯದಲ್ಲಿ ಸಕ್ರಿಯರಾಗದಿದ್ದರೂ ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳಲ್ಲಿ ಅವರ ವರ್ಚಸ್ಸು ಕಡಿಮೆಯಾಗದೆ ಉಳಿದಿದೆ. ಏಕೆಂದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಉಳಿವಿಗಾಗಿ ಕೇಂದ್ರ ನಾಯಕತ್ವ ಅನುಭವಿ ರಾಜಕಾರಣಿ ಯಡಿಯೂರಪ್ಪ ಹಿಂದೆ ಬಿದ್ದಿದೆ. +ಇದು ಅಭ್ಯರ್ಥಿಗಳ ಆಯ್ಕೆಯಾಗಿರಲಿ ಅಥವಾ ಬಹು ಕ್ಷೇತ್ರಗಳಲ್ಲಿ ತಲೆದೋರಿರುವ ಭಿನ್ನಾಭಿಪ್ರಾಯ ಶಮನಗೊಳಿಸುತ್ತಿರಲಿ, ಪಕ್ಷದ 81 ವರ್ಷ ವಯಸ್ಸಿನ ಯಡಿಯೂರಪ್ಪ ಮ್ಯಾನ್ ಆಫ್ ದಿ ಸೀಸನ್ ಆಗಿ ಕಂಡುಬರುತ್ತಾರೆ. ಅಂದಹಾಗೆ ಇವರಲ್ಲಿ ನಿಜವಾಗಿಯೂ ರಾಜಕೀಯ ಪಣ ಹೆಚ್ಚಿದೆ. ಏಕೆಂದರೆ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ಭದ್ರಪಡಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ಅನುಭವಿಗಳ ಮಾತುಗಳನ್ನು ನಿರ್ಲಕ್ಷಿಸಿ ಬೇರೆಯವರಿಗೆ ಟಿಕೆಟ್ ನೀಡಿದ್ದನ್ನು ಪ್ರಶ್ನಿಸುತ್ತಿರುವ ಟೀಕಾಕಾರರನ್ನು ಮೌನಗೊಳಿಸಬೇಕಾಗಿದೆ. +ಈಗಾಗಲೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯದಲ್ಲಿ ಪ್ರಮುಖ ವ್ಯಕ್ತಿಯನ್ನಾಗಿ ಬಿಜೆಪಿ ಕೇಂದ್ರ ನಾಯಕರು ಮಾಡಿದ್ದಾರೆ. ಒಂದು ಕಾಲದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದ ಯಡಿಯೂರಪ್ಪ ಅವರಿಗೆ ಈಗ ಇಷ್ಟೊಂದು ಪ್ರಾಮುಖ್ಯತೆ ಯಾಕೆ ನೀಡುತ್ತಾರೆ ಎಂಬುದಕ್ಕೆ ಕಾರಣ ಹುಡುಕಲು ಕಾಲವಿಲ್ಲ. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ನಾಲ್ಕು ಬಾರಿಯ ಮುಖ್ಯಮಂತ್ರಿ ಜನಾಕರ್ಷಣೆಯನ್ನು ಹೊಂದಿದ್ದಾರೆ ಮತ್ತು ವಿಶೇಷವಾಗಿ ರಾಜಕೀಯವಾಗಿ ಪ್ರಭಾವಿ ಲಿಂಗಾಯತ ಸಮುದಾಯದ ನಡುವೆ ಸಂಪರ್ಕವನ್ನು ಹೊಂದಿದ್ದಾರೆ. ಯಡಿಯೂರಪ್ಪ ಫ್ಯಾಕ್ಟರ್ ಸದುಪಯೋಗಪಡಿಸಿಕೊಳ್ಳಲು ಪಕ್ಷ ಮುಂದಾಗಿರುವುದು ಸ್ಪಷ್ಪವಾಗಿದೆ. +ಈ ತಿಂಗಳ ಆರಂಭದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಪ್ರಧಾನ ಮಂತ್ರಿ ಅವರನ್ನು ಅದ್ಧೂರಿಯಾಗಿ ಹೊಗಳಿದ್ದರು. +ಶಿವಮೊಗ್ಗ ಒಂದು ವಿಶೇಷವಾದ ನಾಡು:ಜನಸಂಘದ ದಿನಗಳಲ್ಲಿ ನಮ್ಮ ಬಗ್ಗೆ ಯಾರಿಗೂ ತಿಳಿದಿಲ್ಲ, ಪುರಸಭೆ ಮಟ್ಟದಲ್ಲಿಯೂ ನಮಗೆ ಸದಸ್ಯರಿಲ್ಲದಿದ್ದಾಗ – ಅಂತಹ ಸಮಯದಲ್ಲಿ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಉಚ್ಛ್ರಾಯ ಸ್ಥಿತಿಗೆ ಬಂದರು. ಇದು ಅವರ ತಪೋಭೂಮಿ ಎಂದು ಮೋದಿ ಹೇಳಿದ್ದರು.ಕೆಲವು ರಾಜಕೀಯ ವೀಕ್ಷಕರು ಮತ್ತು ಬಿಜೆಪಿ ಒಳಗಿನವರ ಪ್ರಕಾರ, ಕಳೆದ ವರ್ಷ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಬದಿಗೆ ತಳ್ಳಲು ಪಕ್ಷ ಪ್ರಯತ್ನಿಸಿತು. ಇದರಿಂದಾಗಿ 224 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಾಂಗ್ರೆಸ್ ಕೆಳಗಿಳಿಸಿತ್ತು. ಪಕ್ಷ ಕೇವಲ 66 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. +ಭ್ರಷ್ಟಾಚಾರ ಸಮಸ್ಯೆ, ಅಲ್ಪಸಂಖ್ಯಾತರ ಮತಗಳನ್ನು ಕಾಂಗ್ರೆಸ್ ಕ್ರೋಢೀಕರಿಸಿದದ್ದು ಮತ್ತು ಲಿಂಗಾಯತರ ಒಂದು ವಿಭಾಗವು ಬಿಜೆಪಿಯಿಂದ ದೂರ ಸರಿದದ್ದು ಬಿಜೆಪಿ ಸೋಲಿಗೆ ಪ್ರಮುಖ ಅಂಶಗಳಾಗಿವೆ. ಇದರಿಂದ ಎಚ್ಚೆತ ಬಿಜೆಪಿ ಹೈಕಮಾಂಡ್ ಕಳೆದ ವರ್ಷ ನವೆಂಬರ್‍ನಲ್ಲಿ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಮತ್ತೊಮ್ಮೆ ಯಡಿಯೂರಪ್ಪ ಅವರ ಮೇಲೆ ನಂಬಿಕೆ ಇಟ್ಟುಕೊಳ್ಳಲು ಪ್ರಾರಂಭಿಸಿತು. +ಶಿವಮೊಗ್ಗದಲ್ಲಿ ಹಿರಿಯ ಪುತ್ರ ಬಿವೈ ರಾಘವೇಂದ್ರ, ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ದಾವಣಗೆರೆಯಲ್ಲಿ ಸಂಸದ ಜಿ ಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ, ಹಾವೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಚಿತ್ರದುರ್ಗದಲ್ಲಿ ಗೋವಿಂದ ಎಂ ಕಾರಜೋಳ. ಸೇರಿದಂತೆ ಹಲವು ನಿಷ್ಠಾವಂತರಿಗೆ ಟಿಕೆಟ್ ಸಿಕ್ಕಿದ್ದರಿಂದ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಡಿಯೂರಪ್ಪನವರ ಛಾಪು ಸ್ಪಷ್ಟವಾಗಿ ಗೋಚರಿಸುತ್ತಿದೆ. +ಸಂಸದ ಪ್ರತಾಪ್ ಸಿಂಹ ಅವರ ಕ್ಷೇತ್ರಕ್ಕೆ ಮೈಸೂರು ಸ್ಥಾನಕ್ಕೆ ಹಿಂದಿನ ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಆಯ್ಕೆ ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತದೆ. ಆದರೆ, ಟಿಕೆಟ್ ಸಿಗದಿದ್ದ ಹಲವು ಆಕಾಂಕ್ಷಿಗಳಿಂದಲೂ ಯಡಿಯೂರಪ್ಪ ಮುಖಭಂಗ ಅನುಭವಿಸಬೇಕಾಯಿತು. ತುಮಕೂರಿನ ಜೆಸಿ ಮಾಧುಸ್ವಾಮಿ, ಮಾಜಿ ಶಾಸಕರಾದ ಎಂಪಿ ರೇಣುಕಾಚಾರ್ಯ, ಚಿತ್ರದುರ್ಗದ ಎಸ್‍ಎ ರವೀಂದ್ರನಾಥ, ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ, ಬೆಳಗಾವಿಯ ಕೆಲ ಮುಖಂಡರು ತಮ್ಮ ಉಮೇದುವಾರಿಕೆಗೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. +ಬೀದರ್ ಮತ್ತು ಚಿತ್ರದುರ್ಗದಂತಹ ಕ್ಷೇತ್ರಗಳಲ್ಲಿ ಪಕ್ಷವು ಭಿನ್ನಾಭಿಪ್ರಾಯವನ್ನು ಎದುರಿಸಿತು. ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಂಡಾಯವೆದ್ದು, ರಾಘವೇಂದ್ರ ಅಭ್ಯರ್ಥಿಯಾಗಿರುವ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ರ್ಪಧಿಸುವುದಾಗಿ ಘೋಷಿಸಿದ್ದಾರೆ. ಪಕ್ಕದ ಹಾವೇರಿಯಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್‍ಗೆ ಟಿಕೆಟ್ ಸಿಗದಿರಲು ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡಿದ್ದಾರೆ. ಯಡಿಯೂರಪ್ಪ ಅತೃಪ್ತ ನಾಯಕರನ್ನು ಭೇಟಿ ಮಾಡಿ ಕೆಲವರನ್ನು ಖುದ್ದು ಭೇಟಿ ಮಾಡಿ ಸಮಾಧಾನ ಹೇಳಿದ್ದರು. +ಯಡಿಯೂರಪ್ಪ ಅವಶ್ಯಕತೆ ಬಿಜೆಪಿಗೆ ಹೆಚ್ಚಾಗಿ ಲಾಭದಾಯಕವಾಗಿದೆ, ಆದರೆ ಇದು ಕೆಲವೊಮ್ಮೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದು ಎರಡು ಅಂಚಿನ ಕತ್ತಿಯಂತೆ. ಪಕ್ಷದೊಳಗೆ ಮತ್ತು ಮತದಾರರಲ್ಲಿ, ವಿಶೇಷವಾಗಿ ಲಿಂಗಾಯತರಲ್ಲಿ ಅವರ ವರ್ಚಸ್ಸು ಮತ್ತು ಮನವಿಯನ್ನು ಅಲ್ಲಗಳೆಯುವಂತಿಲ್ಲ. ಅದೇ ಸಮಯದಲ್ಲಿ, ಇದು ಸ್ವಜನಪಕ್ಷಪಾತ ಮತ್ತು ಪಕ್ಷಪಾತದ ಆರೋಪಗಳ ನಡುವೆ ಪಕ್ಷದೊಳಗೆ ಘರ್ಷಣೆ ಮತ್ತು ಬಿರುಕುಗಳಿಗೆ ಕಾರಣವಾಗಿದೆ. +ಯಡಿಯೂರಪ್ಪ ಅಂಶವು ನಿಸ್ಸಂಶಯವಾಗಿ, ಬಲವಾದ ನಾಯಕತ್ವದ ಅನಿವಾರ್ಯತೆ ಮತ್ತು ಜನಮನವನ್ನು ಸೂಚಿಸುತ್ತದೆ. ಆದರೆ, ಲಿಂಗಾಯತ ಮತಗಳ ಮೇಲೆ ಕೇಂದ್ರೀಕರಿಸುವುದರಿಂದ ಒಕ್ಕಲಿಗರಂತಹ ಇತರ ಸಮುದಾಯಗಳ ನಡುವೆ ತನ್ನ ಸಾಮಾಜಿಕ ನೆಲೆಯನ್ನು ವಿಸ್ತರಿಸುವುದನ್ನು ಸ್ವಲ್ಪಮಟ್ಟಿಗೆ ಸೀಮಿತಗೊಳಿಸಿದೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ಹೇಳುತ್ತಾರೆ. +ಈಶ್ವರಪ್ಪ ಮತ್ತು ದಿವಂಗತ ಎಚ್.ಎನ್.ಅನಂತ್ ಕುಮಾರ್ ಅವರಂತಹ ಇತರ ನಾಯಕರ ಬೆಂಬಲದೊಂದಿಗೆ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಬಿಜೆಪಿ ಕಟ್ಟುವಲ್ಲಿ ಪ್ರಮುಖರು. ವಿವಾದಗಳು ಮತ್ತು ಭ್ರಷ್ಟಾಚಾರ ಆರೋಪಗಳ ಹೊರತಾಗಿಯೂ ಅವರ ನಾಯಕತ್ವದಲ್ಲಿ ಪಕ್ಷವು ಸಾಧನೆ ಮಾಡಿದೆ. ಸತತ ಚುನಾವಣೆಗಳಲ್ಲಿ ಹಾಗೂ ಅವರನ್ನು ಬದಿಗೊತ್ತಿದಾಗಲೆಲ್ಲಾ ಪ್ರದರ್ಶನ ದುರ್ಬಲವಾಗಿತ್ತು. ಇದನ್ನು ಮನಗಂಡ ಹೈಕಮಾಂಡ್ ಮತ್ತೆ ಅವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಆರಂಭದಲ್ಲಿ ಯಡಿಯೂರಪ್ಪ ಇಲ್ಲದೆ ಲಿಂಗಾಯತ ಬೆಂಬಲ ಪಡೆಯಲು ತನ್ನೆಲ್ಲ ಪ್ರಯತ್ನ ಮಾಡಿತ್ತು, ಆದರೆ ಅದರ ಬಗ್ಗೆ ಹೆಚ್ಚು ವಿಶ್ವಾಸವಿರಲಿಲ್ಲ, ನಂತರದ ಹಂತದಲ್ಲಿ ಹಿರಿಯ ನಾಯಕನನ್ನೇ ಕಣಕ್ಕಿಳಿಸಬೇಕಾಯಿತು ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ. +ಕೆಲವು ಇತರ ಸಮುದಾಯಗಳಿಂದ ಬೆಂಬಲವನ್ನು ಬೆಳೆಸಲುಸಹ ಅಪೇಕ್ಷಿತ ಫಲಿತಾಂಶಗಳನ್ನು ನೀಡಿತು. ಯಡಿಯೂರಪ್ಪ ಅವರು ಜುಲೈ 26, 2021 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. 75 ವರ್ಷಕ್ಕಿಂತ ಮೇಲ್ಪಟ್ಟವರನ್ನು ದೂರವಿಡುವ ಬಿಜೆಪಿಯಲ್ಲಿ ಅಲಿಖಿತ ನಿಯಮದೊಂದಿಗೆ ಅವರು ಉನ್ನತ ಹುದ್ದೆಯಿಂದ ನಿರ್ಗಮಿಸಲು ವಯಸ್ಸನ್ನು ಪ್ರಾಥಮಿಕ ಅಂಶವೆಂದು ಉಲ್ಲೇಖಿಸಲಾಗಿತ್ತು. +ಅಲ್ಲದೆ, ವಿಧಾನಸಭೆ ಚುನಾವಣೆಗೂ ಮುನ್ನ ಹೊಸ ನಾಯಕತ್ವಕ್ಕೆ ದಾರಿ ಮಾಡಿಕೊಡಲು ಬಿಜೆಪಿ ಕೇಂದ್ರ ನಾಯಕತ್ವ ಬಯಸಿತ್ತು. ವಿಧಾನಸಭಾ ಚುನಾವಣೆಗೆ ಮುನ್ನ ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಒಟ್ಟು 28 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಆದರೆ ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿಯೊಬ್ಬರು ವಿಜಯಶಾಲಿಯಾಗಿದ್ದರು. \ No newline at end of file diff --git a/eesanje/url_46_188_6.txt b/eesanje/url_46_188_6.txt new file mode 100644 index 0000000000000000000000000000000000000000..2fa58d67e65c8c2c3a85843b52792ca8cb879900 --- /dev/null +++ b/eesanje/url_46_188_6.txt @@ -0,0 +1,5 @@ +ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಸವಾಲು +ಮೈಸೂರು, ಏ.3- ಕೇಂದ್ರ ಬರ ಪರಿಹಾರ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡುತ್ತೇನೆ. ನೀವು ಇದರಲ್ಲಿ ಸುಳ್ಳು ಹೇಳಿದ್ದರೆ ರಾಜೀನಾಮೆ ಕೊಡ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸವಾಲು ಹಾಕಿದ್ದಾರೆ. +ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿನಿಂದ ಬರ ಪರಿಹಾರಕ್ಕಾಗಿ ವರದಿ ಕೊಡುತ್ತಲೇ ಬಂದಿದ್ದೇವೆ. ಕಳೆದ ಡಿಸೆಂಬರ್ 23ರಂದೇ ಸಭೆ ಕರೆದು ತೀರ್ಮಾನ ಮಾಡುತ್ತೇನೆ ಎಂದಿದ್ದರು. ಇದಲ್ಲದೆ, ಕೇಂದ್ರ ಅಧ್ಯಯನ ಸಮಿತಿಯೂ ಕೂಡ ವರದಿ ಕೊಟ್ಟಿತ್ತು. ಇದೆಲ್ಲವನ್ನೂ ನಾನು ಸಾಬೀತು ಮಾಡಲು ಸಿದ್ಧವಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. +ಸತ್ಯಕ್ಕೆ ತಲೆ ಒಡೆದಂತೆ ಅಮಿತ್ ಷಾ ಅವರು ಸುಳ್ಳು ಹೇಳುತ್ತಿದ್ದಾರೆ. ನಾವು ಇದರ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‍ಗೆ ದಾವೆ ಹೂಡಿದ್ದೇವೆ. ವಿವರವನ್ನೂ ಕೂಡ ಸಲ್ಲಿಸಿದ್ದೇವೆ. ಇವೆಲ್ಲ ಸುಳ್ಳೆಂದರೆ ನಾನು ರಾಜೀನಾಮೆ ಕೊಡಲು ಸಿದ್ಧ. ಅಮಿತ್ ಷಾ ಅವರೇ ನೀವು ಹೇಳಿರುವುದು ಸುಳ್ಳಾದರೆ ರಾಜೀನಾಮೆ ನೀಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. +ಎನ್‍ಡಿಆರ್‍ಎಫ್ ಶಿಫಾರಸಿನನ್ವಯ ಐದು ವರ್ಷಕ್ಕೆ ಹಣ ಮೀಸಲಿಟ್ಟಿರುತ್ತಾರೆ. ಖರ್ಚು-ವೆಚ್ಚದ ಬಗ್ಗೆ ಹಣಕಾಸು ಆಯೋಗ ಶಿಫಾರಸು ಮಾಡುತ್ತದೆ. ಆದರೆ, ಕೇಂದ್ರ ಸರ್ಕಾರ ಇದರಲ್ಲಿ ಮಲತಾಯಿ ಧೋರಣೆ ತಳೆಯುತ್ತಿದೆ. ಇದನ್ನೆಲ್ಲ ಅರಿತಿರುವ ಜನರು ಬಿಜೆಪಿ ಸರಿಯಾದ ಬುದ್ಧಿ ಕಲಿಸುತ್ತಾರೆ ಎಂದು ಸಿಎಂ ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_188_7.txt b/eesanje/url_46_188_7.txt new file mode 100644 index 0000000000000000000000000000000000000000..3d0f37d8860b79533edaf2e197db690ef72f8ad4 --- /dev/null +++ b/eesanje/url_46_188_7.txt @@ -0,0 +1,4 @@ +ವಿಶ್ವದ ಹಿರಿಯ ವ್ಯಕ್ತಿ ಪೆರೆಜ್ ಮೋರಾ ಇನ್ನಿಲ್ಲ +ಕ್ಯಾರಕಾಸ್,ಏ.3- ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಕೀರ್ತಿಗೆ ಪಾತ್ರರಾಗಿದ್ದ ವೆನೆಜುವೆಲಾದ ಜುವಾನ್ ವಿಸೆಂಟೆ ಪೆರೆಜ್ ಮೋರಾ ಎಂಬುವರು ವಿಧವಶರಾಗಿದ್ದಾರೆ. ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಮೋರಾ 2022ರಲ್ಲಿ ಗಿನ್ನಿಸ್ ದಾಖಲೆ ಸೇರಿದ್ದರು. ಅವರು 114 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. +ಜುವಾನ್ ವಿಸೆಂಟೆ ಪೆರೆಜ್ ಮೊರಾ ಅವರು 114 ನೇ ವಯಸ್ಸಿನಲ್ಲಿ ಶಾಶ್ವತತೆಗೆ ದಾಟಿದ್ದಾರೆ ಎಂದು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‍ನಲ್ಲಿ ಹೇಳಿದ್ದಾರೆ.ಪೆರೆಜ್ ಅವರು 112 ವರ್ಷ ಮತ್ತು 253 ದಿನಗಳ ವಯಸ್ಸಿನವರಾಗಿದ್ದಾಗ ಫೆಬ್ರವರಿ 4, 2022 ರಂದು ಜೀವಂತವಾಗಿರುವ ಅತ್ಯಂತ ಹಿರಿಯ ವ್ಯಕ್ತಿ ಎಂದು ಅಧಿಕೃತವಾಗಿ ದಾಖಲಾಗಿದ್ದರು. +11 ಮಕ್ಕಳ ತಂದೆಯಾಗಿದ್ದ ಅವರು, 2022 ರ ಹೊತ್ತಿಗೆ 41 ಮೊಮ್ಮಕ್ಕಳು, 18 ಮರಿ ಮ್ಮಕ್ಕಳು ಮತ್ತು 12 ಮರಿ-ಮೊಮ್ಮಕ್ಕಳನ್ನು ಹೊಂದಿದ್ದರು. ಅವರು ಮೇ 27, 1909 ರಂದು ಆಂಡಿಯನ್ ರಾಜ್ಯದ ಟಾಚಿರಾದಲ್ಲಿ ಎಲ್ ಕೋಬ್ರೆ ಪಟ್ಟಣದಲ್ಲಿ ಜನಿಸಿದ್ದರು ಮತ್ತು 10 ಮಕ್ಕಳಲ್ಲಿ ಒಂಬತ್ತನೆಯವರಾಗಿದ್ದರು. ಐದು ವರ್ಷ ವಯಸ್ಸಿನಲ್ಲಿ, ಅವರು ತಮ್ಮ ತಂದೆ ಮತ್ತು ಸಹೋದರರೊಂದಿಗೆ ಕೃಷಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು ಮತ್ತು ಕಬ್ಬು ಮತ್ತು ಕಾಫಿ ಕೊಯ್ಲು ಮಾಡಲು ಸಹಾಯ ಮಾಡಿದರು ಎಂದು 2022 ರ ಗಿನ್ನೆಸ್ ಹೇಳಿಕೆ ತಿಳಿಸಿದೆ.ಪೆರೆಜ್ ಶೆರಿಫ್ ಆಗಲು ಹೋದರು ಮತ್ತು ಕೃಷಿಯಲ್ಲಿ ಕೆಲಸ ಮಾಡುವಾಗ ಭೂಮಿ ಮತ್ತು ಕುಟುಂಬ ವಿವಾದಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಹೊಂದಿದ್ದರು. \ No newline at end of file diff --git a/eesanje/url_46_188_8.txt b/eesanje/url_46_188_8.txt new file mode 100644 index 0000000000000000000000000000000000000000..964737e44605263ab15bb34a87f00a1e0d245dd1 --- /dev/null +++ b/eesanje/url_46_188_8.txt @@ -0,0 +1,7 @@ +ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಅಮಿತ್ ಶಾ +ಬೆಂಗಳೂರು,ಏ.2-ದೇಶಾದ್ಯಂತ ಮೋದಿ ಘೋಷಣೆ ಮೊಳಗುತ್ತಿದೆ. ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದಿಲ್ಲಿ ಹೇಳಿದ್ದಾರೆ.ಅರಮನೆ ಮೈದಾನದಲ್ಲಿಂದು ನಡೆದ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು,ಯುಪಿಎ ಅವಧಿಯಲ್ಲಿ ಭಾರತವನ್ನು ಭ್ರಷ್ಟಾಚಾರದ ಕೂಪಕ್ಕೆ ತಳ್ಳಿದ ಕಾಂಗ್ರೆಸ್ ಇಂದು ಭ್ರಷ್ಟರ ಕೂಟ ಕಟ್ಟಿಕೊಂಡು ಮೋದಿ ವಿರುದ್ಧ ಅಪಪ್ರಚಾರ ನಡೆಸುತ್ತಿದೆ. +ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಈಗ ಮೋದಿ ಪರಿವಾರ ಮತ್ತು ಭ್ರಷ್ಟರ ಕೂಟದ ನಡುವೆ ಹೋರಾಟ ನಡೆಯುತ್ತಿದೆ. ಆದರೆ, ದೇಶದ ಮತದಾರರು ಪಾರದರ್ಶಕ ಆಡಳಿತ ನೀಡಿರುವ ಮೋದಿ ಅವರ ಪರ ನಿಂತಿದ್ದಾರೆ ಎಂದರು. ದೇಶವನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಿದ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತವನ್ನು ಜನ ಇನ್ನೂ ಮರೆತಿಲ್ಲ. 2ಜಿ ಹಗರಣ, ಅಗಸ್ಟ ಹೆಲಿಕಾಪ್ಟರ್ ಹಗರಣ, ಕಲ್ಲಿದ್ದಲು ಹಗರಣ, ಕಾಮನ್ವೆಲ್ತ್ ಹಗರಣ ಸೇರಿದಂತೆ ಸಾಲು ಸಾಲು ಭ್ರಷ್ಟಾಚಾರ ನಡೆಸಿದ್ದವರು ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. +ವಿಶ್ವದಲ್ಲಿ ಭಾರತದ ಆರ್ಥಿಕತೆಯನ್ನು ಐದನೆ ಸ್ಥಾನಕ್ಕೆ ತಂದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. ಈ ಹಿಂದೆ ಲಕ್ಷಾಂತರ ಕೋಟಿ ಲೂಟಿ ಹೊಡೆದಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ನಾವು ಹೇಳಿದ್ದೆವು. ಅದನ್ನು ಇಂದು ನೀವು ನೋಡುತ್ತಿದ್ದೀರಿ. ಮೋದಿ ವಿರುದ್ಧ ಅಪಪ್ರಚಾರಕ್ಕಾಗಿ ಕೆಲವೊಂದು ವ್ಯವಸ್ಥಿತ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಆದರೆ, ಇದು ಜನರ ಮುಂದೆ ನಡೆಯುವುದಿಲ್ಲ. ಮೂರನೆ ಬಾರಿಗೆ ಮೋದಿ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು. +ಕಾಂಗ್ರೆಸ್ನವರು ನಮ್ಮ 2019ರ ಪ್ರಣಾಳಿಕೆ ಬಗ್ಗೆ ವ್ಯಂಗ್ಯವಾಡಿದ್ದರು. ಆದರೆ, ಇಂದು ಅದನ್ನೆಲ್ಲ ಈಡೇರಿಸಿದ್ದೇವೆ. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡಿದ್ದೇವೆ. ಕಾಶ್ಮೀರ ಭಾರತ ನಮ್ಮ ಅವಿಭಾಜ್ಯಅಂಗ ಎಂದು ಸಾಬೀತುಪಡಿಸಿ ಈಗ 371 ಕಾಯ್ದೆಯನ್ನು ರದ್ದುಪಡಿಸಿದ್ದೇವೆ. ನಿರಾಶ್ರಿತ ಹಿಂದೂಗಳಿಗೆ ಸಿಎಎ ಜಾರಿ ಮಾಡಿದ್ದೇವೆ. ರೈತರ ಉತ್ಪನ್ನಗಳಿಗೆ ಬೆಲೆ ಆಯೋಗ ರಚಿಸಿ ನೀಡುತ್ತಿದ್ದೇವೆ. ಇವೆಲ್ಲ ನಮ್ಮ ಭರವಸೆಗಳ ಈಡೇರಿಕೆ ಅಲ್ಲವೆ ಎಂದು ಪ್ರಶ್ನಿಸಿದರು. +ಕಾಂಗ್ರೆಸ್ನವರು ರಾಮಮಂದಿರ ಉದ್ಘಾಟನೆಯನ್ನು ಬಹಿಷ್ಕರಿಸಿದರು. ತುಷ್ಟೀಕರಣ ರಾಜಕಾರಣ ಮಾಡಿದರು. ಆದರೆ ನಾವು ನೂರಾರು ವರ್ಷಗಳ ಕನಸನ್ನು ಸಾಕಾರಗೊಳಿಸಿದ್ದೇವೆ. ಭವ್ಯ ರಾಮಮಂದಿರ ಕಂಗೊಳಿಸುತ್ತಿದೆ ಎಂದು ಹೇಳಿದರು. +ಪ್ರತಿಯೊಬ್ಬರೂ ಮನೆ ಮನೆಗೆ ತೆರಳಿ ನಮ್ಮ ಬಿಜೆಪಿಯ ಮೋದಿ ಗ್ಯಾರಂಟಿಗಳು ಮತ್ತು ದೇಶ ಒಗ್ಗೂಡಿಸುವ, ಸುಭದ್ರಗೊಳಿಸುವ ನಿಟ್ಟಿನಲ್ಲಿ ತಿಳಿಸಬೇಕು. ಕರ್ನಾಟಕದ 28 ಕ್ಷೇತ್ರಗಳನ್ನು ಗೆಲ್ಲಲು ನೀವೆಲ್ಲ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು. \ No newline at end of file diff --git a/eesanje/url_46_188_9.txt b/eesanje/url_46_188_9.txt new file mode 100644 index 0000000000000000000000000000000000000000..7f55b8606142d3b00d6c5b81ec88872ac6e879af --- /dev/null +++ b/eesanje/url_46_188_9.txt @@ -0,0 +1,9 @@ +ಮಿತಿಮೀರಿದ ಬಿಸಿಲು, ಗಗನಕ್ಕೇರಿದ ತರಕಾರಿ ಬೆಲೆ, ಶತಕ ಬಾರಿಸಿದ ಬೀನ್ಸ್ +ಬೆಂಗಳೂರು, ಏ.2-ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕೊಳವೆ ಬಾವಿಗಳು ನೀರಿಲ್ಲದೆ ಬತ್ತುತ್ತಿದ್ದು, ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿ ತರಕಾರಿಗಳ ಬೆಲೆ ಗಗನಕ್ಕೇರುತ್ತಿದೆ. +ರಾಜ್ಯಾದ್ಯಂತ ಈ ಬಾರಿ ಬರಗಾಲ ಆವರಿಸಿದ್ದು, ಮಳೆ ಬಾರದೆ ಬಿಸಿಲ ಝಳಕ್ಕೆ ಜನ-ಜಾನುವಾರುಗಳು ಬಸವಳಿಯು ವಂತಾಗಿದೆ. ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊಳವೆ ಬಾವಿಗಳು ಒಣಗಿದ್ದು, ಕುಡಿಯಲು ನೀರಿಲ್ಲದಂತಾಗಿದೆ. ಇನ್ನು ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಕೆಲ ರೈತರು ಅಡಿಕೆ ಗಿಡಗಳನ್ನು ಉಳಿಸಿಕೊಳ್ಳಲು ದುಪ್ಪಟ್ಟು ಹಣ ನೀಡಿ ಟ್ಯಾಂಕರ್ಗಳ ಮೂಲಕ ನೀರು ಹಾಯಿಸುತ್ತಿದ್ದಾರೆ. +ಸಾಮಾನ್ಯವಾಗಿ ತರಕಾರಿ ಬೆಳಗೆ ಹೆಚ್ಚು ನೀರಿನ ಅವಶ್ಯಕತೆ ಇದೆ . ಜೊತೆಗೆ ಬಿಸಿಲಿನ ತಾಪ ಹೆಚ್ಚಾಗಿದ್ದು, ಇಳುವರಿ ಬರುತ್ತಿಲ್ಲ. ಹಾಗಾಗಿ ರೈತರು ತರಕಾರಿ ಬೆಳೆಯಲು ಹಿಂದೇಟು ಹಾಕಿದ್ದು, ಉತ್ಪಾದನೆಯಲ್ಲಿ ಭಾರೀ ಇಳಿಮುಖವಾಗಿದ್ದು, ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ನುಗ್ಗೆಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿಗಳ ಬೆಲೆ ಹೆಚ್ಚಳವಾಗಿದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಬಳಸುವ ಸೌತೆಕಾಯಿ, ನಿಂಬೆಹಣ್ಣು, ಕ್ಯಾರೆಟ್ , ಬೀನ್ಸ್ ಬೆಲೆ ಹೆಚ್ಚಾಗಿದೆ. +ಈಗ ನುಗ್ಗೆಕಾಯಿ ಸೀಸನ್ ಆಗಿರುವುದ ರಿಂದ 10 ರೂ.ಗೆ ಮೂರರಿಂದ ನಾಲ್ಕು ಮಾರಾಟವಾಗುತ್ತಿದೆ. ಮೂಲಂಗಿ, 35ರೂ., ಹಾಗಲಕಾಯಿ 50, ಬೆಂಡೆಕಾಯಿ 40, ಹಿರೇಕಾಯಿ 40, ಬೀಟ್ರೂಟ್ 30, ಟೊಮ್ಯಾಟೋ 25, ಎಲೆಕೋಸು, 30, ನವಿಲುಕೋಸು, 40, ನಾಟಿ ಬೀನ್ಸ್ 80, ಈರುಳ್ಳಿ 30 ರೂ.ಗೆ ಮಾರಾಟ ಮಾಡಲಾಗುತ್ತಿದೆ. +ಇನ್ನು ಸೊಪ್ಪುಗಳ ಬೆಲೆಯಲ್ಲೂ ಸಹ ಏರಿಕೆಯಾಗಿದೆ . ಕೊತ್ತಂಬರಿ ಕಟ್ ಒಂದಕ್ಕೆ 25 ರೂ., ಸಬ್ಬಸ್ಸಿಗೆ 30, ಪಾಲಕ್ 25, ಮೆಂತ್ಯೆ, 30 ರೂ. ಇದೆ.ಬೀನ್ಸ್ , ಸೌತೆಕಾಯಿ ಹಾಗೂ ನಿಂಬೆಹಣ್ಣಿನ ಬೆಲೆ ದಿನೇ ದಿನೇ ಏರುತ್ತಲೇ ಇದೆ. ಸೌತೆಕಾಯಿ ಕೆಜಿಗೆ 35 ರಿಂದ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ನಿಂಬೆಹಣ್ಣು ದಪ್ಪ 10 ರೂ.ಗೆ ಒಂದು ಹಣ್ಣನ್ನು ಮಾರಲಾಗುತ್ತಿದೆ. ಕೆಲವು ತರಕಾರಿ ಅಂಗಡಿಗಳ ಮಾಲೀಕರು ಬೀನ್ಸ್ ಬೆಲೆ 100 ರೂ. ನಿಗದಿ ಮಾಡಿ ಮಾರಾಟ ಮಾಡುತ್ತಿದ್ದಾರೆ . +ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ತರಕಾರಿಗಳು ಬೆಳಗ್ಗೆ ತಂದರೆ ಸಂಜೆ ವೇಳೆಗೆ ಬಾಡಿ ಹೋಗುತ್ತಿವೆ. ಸೊಪ್ಪಂತೂ ಮಧ್ಯಾಹ್ನಕ್ಕೇ ಬಾಡಿ ಹೊಗುತ್ತದೆ. ಜನರು ಫ್ರೆಶ್ ಆಗಿರುವ ತರಕಾರಿ ಕೇಳುತ್ತಾರೆ. ಈ ಬಿಸಿಲಿನಲ್ಲಿ ಫ್ರೆಶ್ ಎಲ್ಲಿಂದ ತಂದು ಮಾರೋದು. ಕೆಲ ಜಿಲ್ಲೆಗಳಲ್ಲಿ ದಿನಕ್ಕೆ ಎರಡು ಬಾರಿ ಮಾರುಕಟ್ಟೆ ನಡೆದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ದಿನಕ್ಕೆ ಒಂದೇ ಬಾರಿ ಮಾರುಕಟ್ಟೆ ನಡೆಯುತ್ತದೆ. +ಒಂದೇ ಬಾರಿ ಮಾರುಕಟ್ಟೆ ಇರುವ ರೈತರು ದಿನ ಪೂರ್ತಿ ತರಕಾರಿ ಕಿತ್ತು ರಾತ್ರಿ ಚೀಲ ಮಾಡಿ ಬೆಳಗ್ಗೆ ಮಾರುಕಟ್ಟೆಗೆ ತಂದು ಮಾರಬೇಕು. ಇನ್ನು ಕೆಲ ಭಾಗಗಳಲ್ಲಿ ಮುಂಜಾನೆಯಿಂದ ಕೊಯ್ಲು ಮಾಡಿ ಸಂಜೆ ವೇಳೆಗೆ ಮಾರುಕಟ್ಟೆಗೆ ತಂದು ಮಾರಾಟ ಮಾಡಬೇಕು. +ಈ ನಡುವೆ ಚಿಲ್ಲರೆ ವ್ಯಾಪಾರಿಗಳು ಮಾರುಕಟ್ಟೆಯಿಂದ ತಂದು ಮಾರುವಷ್ಟರಲ್ಲಿ ಬಿಸಿಲಿಗೆ ಬಾಡಿ ಹೋಗುತ್ತಿವೆ. ಜಾಸ್ತಿ ತಂದರೆ ಮಾರಾಟವಾಗದೆ ಬಾಡಿ ಹೋಗಿ ಲಾಸ್ ಆಗುತ್ತದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಇದೇ ರೀತಿ ಬಿಸಿಲು ಹೆಚ್ಚಾದರೆ ಎಲ್ಲಾ ತರಕಾರಿಗಳ ಬೆಲೆ ಮತ್ತಷ್ಟು ಹೆಚ್ಚಾಗಲಿದೆ. \ No newline at end of file diff --git a/eesanje/url_46_189_1.txt b/eesanje/url_46_189_1.txt new file mode 100644 index 0000000000000000000000000000000000000000..e57242c6fd06f7d602fa9253b23a03b1e655a2b7 --- /dev/null +++ b/eesanje/url_46_189_1.txt @@ -0,0 +1,11 @@ +ಅಮಿತ್ ಶಾ ಅವರೇ, ರಾಜ್ಯದಲ್ಲಿ ನಿಮಗೆ ಮತ ಕೇಳುವ ನೈತಿಕ ಹಕ್ಕಿಲ್ಲ : ಸಿದ್ದು ವಾಗ್ದಾಳಿ +ಮೈಸೂರು,ಏ.2-ರಾಜ್ಯದಲ್ಲಿ ಭೀಕರ ಪರಿಸ್ಥಿತಿಯಿದ್ದು, ಐದು ತಿಂಗಳಾದರೂ ಒಂದು ರೂಪಾಯಿ ಪರಿಹಾರ ನೀಡದಿರುವ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ಜನರ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಉನ್ನತಾಧಿಕಾರ ಸಮಿತಿಗೆ ಅಮಿತ್ ಶಾ ಅವರೇ ಅಧ್ಯಕ್ಷರಾಗಿದ್ದು, ಸಭೆ ಮಾಡಿ ರಾಜ್ಯದ ಬರ ಪರಿಸ್ಥಿತಿಗೆ ಹಣ ಬಿಡುಗಡೆ ಮಾಡಬೇಕಿತ್ತು. ಅಕ್ಟೋಬರ್‍ನಿಂದ ಈವರೆಗೂ ರಾಜ್ಯಸರ್ಕಾರ ಮೂರು ಬಾರಿ ಮನವಿ ಸಲ್ಲಿಸಿದೆ. ಕೇಂದ್ರ ಅಧ್ಯಯನ ತಂಡವೊಂದು ಪರಿಶೀಲನೆ ನಡೆಸಿ, ವರದಿ ನೀಡಿದೆ. +ನಾನು ಡಿಸೆಂಬರ್ 19 ರಂದು ಪ್ರಧಾನಿಯವರನ್ನು, 20 ರಂದು ಅಮಿತ್ ಶಾರನ್ನು ಭೇಟಿ ಮಾಡಿದ್ದೆ. 23 ರಂದು ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ಪರಿಹಾರ ನೀಡುವ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದರು. +ಐದು ತಿಂಗಳಾದರೂ ಒಂದೂ ರೂಪಾಯಿ ಹಣ ನೀಡಿಲ್ಲ. ಅಮಿತ್ ಶಾ ಅವರೇನು ಅವರ ಮನೆಯಿಂದ ತಂದುಕೊಡುತ್ತಿದ್ದರೇ? ಅಥವಾ ರಾಜ್ಯಕ್ಕೆ ನೀಡುವ ಭಿಕ್ಷೆಯೇ? ನಮ್ಮ ತೆರಿಗೆಯ ಹಣವನ್ನು ನಮಗೇ ಕೊಡಲು ಹಿಂದೇಟು ಹಾಕುತ್ತಿರುವುದೇಕೆ? ಎಂದು ಕಿಡಿಕಾರಿದರು. +ನಾವು ನಮ್ಮ ಪಾಲು ಕೇಳಿದರೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಬಿಜೆಪಿಯ ವಕ್ತಾರರಂತೆ ಸಮರ್ಥಿಸಿಕೊಳ್ಳುತ್ತಾರೆ. ರಾಜ್ಯದ ಮೇಕೆದಾಟು, ಮಹಾದಾಯಿ ಯೋಜನೆಗಳಿಗೆ ಅನುಮತಿ ನೀಡಿಲ್ಲ. ಹಣಕಾಸು ಆಯೋಗದ ಮಧ್ಯಂತರ ವರದಿಯ ಅನುಸಾರ ರಾಜ್ಯಕ್ಕೆ ಆರ್ಥಿಕ ನೆರವು ನೀಡಿಲ್ಲ. ಇದು ಕನ್ನಡಿಗರಿಗೆ ಮಾಡಿದ ಅನ್ಯಾಯವಲ್ಲವೇ? ಮುಂದಿನ ಚುನಾವಣೆಯಲ್ಲಿ ಜನ ಇದಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದರು. +ಮಂಡ್ಯದಲ್ಲಿ ತಾವು ಸ್ಪರ್ಧೆ ಮಾಡಿರುವುದು ದೇವರ ಇಚ್ಛೆ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಈ ಹಿಂದೆ ಮಗನನ್ನು ಕಣಕ್ಕಿಳಿಸಿದ್ದರಲ್ಲಾ ಅದು ಯಾರ ಇಚ್ಛೆ ಎಂದು ತಿರುಗೇಟು ನೀಡಿದರು. +ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಮಗನನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿತ್ತು ಎಂದು ಹೇಳುವ ಕುಮಾರಸ್ವಾಮಿ, ಮೈಸೂರಿನಲ್ಲಿ ಜೆಡಿಎಸ್‍ನವರು ಯಾರಿಗೆ ಚೂರಿ ಹಾಕಿದ್ದರು ಎಂದು ಹೇಳುತ್ತಾರೆಯೇ? ಒಂದು ವೇಳೆ ಮಂಡ್ಯದಲ್ಲಿ ನಾವು ಜೆಡಿಎಸ್‍ಗೆ ಚೂರಿ ಹಾಕಿದ್ದೇವೆ ಎಂಬ ಸಂಭವನೀಯತೆಯನ್ನು ಒಪ್ಪಿಕೊಳ್ಳುವುದಾದರೆ ಮೈಸೂರಿನಲ್ಲಿ ಜೆಡಿಎಸ್‍ನವರ ದ್ರೋಹವನ್ನು ಒಪ್ಪಿಕೊಳ್ಳಬೇಕಲ್ಲವೇ? ಎಲ್ಲಿಯೇ ಆದರೂ ಸಿದ್ಧಾಂತ ಒಂದೇ ಅಲ್ಲವೇ ಎಂದು ಪ್ರಶ್ನಿಸಿದರು. +ಹಾಸನದಲ್ಲಿ ನಾನು ಹೋಗಿ ಪ್ರಚಾರ ಮಾಡದೇ ಇದ್ದರೆ ಜೆಡಿಎಸ್‍ನ ಪ್ರಜ್ವಲ್ ರೇವಣ್ಣ ಗೆಲ್ಲುತ್ತಿರಲಿಲ್ಲ. ಆ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇದ್ದಿದ್ದರಿಂದಾಗಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕಾಯಿತು. ಈ ಬಾರಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಮೂರು ಕ್ಷೇತ್ರಗಳಲ್ಲಿ ಸ್ರ್ಪಧಿಸಿರುವ ಜೆಡಿಎಸ್ ಎಲ್ಲಾ ಕಡೆ ಸೋಲಲಿದೆ ಎಂದರು. +ಹಾಸನದಲ್ಲಿ ಕಾಂಗ್ರೆಸ್ಸಿಗರೆಲ್ಲಾ ಒಟ್ಟಾಗಿದ್ದಾರೆ. ಜನ ನಮ್ಮ ಪರವಾಗಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ 12, 13 ಮತ್ತು 14ನೇ ತಾರೀಖಿನಂದು ನಾವು ಪ್ರಚಾರ ನಡೆಸಲಿದ್ದು, ರಾಜ್ಯಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಸಂಚಾರ ಮಾಡುತ್ತೇವೆ ಎಂದರು. +ನಾಳೆ ಚಾಮರಾಜನಗರ ಮತ್ತು ಮೈಸೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇನೆ. ನಮ್ಮ ಭಾಗದಲ್ಲಿ ಪ್ರಚಾರ ಮುಗಿಸಿ ನಂತರ ಇತರ ಭಾಗಗಳಿಗೆ ತೆರಳುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_189_10.txt b/eesanje/url_46_189_10.txt new file mode 100644 index 0000000000000000000000000000000000000000..c65f462a7910467e4eefde7766fb2b5d7dfc7f40 --- /dev/null +++ b/eesanje/url_46_189_10.txt @@ -0,0 +1,6 @@ +ಕರ್ನಾಟಕಕ್ಕೆ ಇಂದು ಚುನಾವಣಾ ಚಾಣಕ್ಯ ಅಮಿತ್ ಷಾ ಆಗಮನ +ಬೆಂಗಳೂರು,ಏ.1-ಬಿಜೆಪಿ ಚುನಾವಣಾ ಚಾಣುಕ್ಯ ಎಂದೇ ಕರೆಯುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಸಕ್ತ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಮೊದಲ ಬಾರಿ ರಾಜ್ಯದಲ್ಲಿ ಭಾಗಿಯಾಗುತ್ತಿದ್ದಾರೆ. +ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ರ್ಪಧಿ ಗಿಳಿಯುತ್ತಿವೆ. ಎನ್ಡಿಎ ಅಭ್ಯರ್ಥಿಗಳ ಪರ ಷಾ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋನಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಲಿದ್ದಾರೆ. +ಬೆಂಗಳೂರು ಹಾಗೂ ಚನ್ನಪಟ್ಟಣದಲ್ಲಿ ತಲಾ ಒಂದು ಕಾರ್ಯಕ್ರಮ ನಿಗದಿಯಾಗಿವೆ. ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಷಾ ಇಂದು ತಡರಾತ್ರಿ ನಗರಕ್ಕೆ ಆಗಮಿಸಲಿದ್ದಾರೆ. +ಇಂದು ರಾತ್ರಿ ನಗರಕ್ಕೆ ಆಗಮಿಸಲಿರುವ ಷಾ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದು, ನಾಳೆ ಮಧ್ಯಾಹ್ನ ಅರಮನೆ ಮೈದಾನದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಶಕ್ತಿಕೇಂದ್ರ ಪ್ರಮುಖ್ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಚನ್ನಪಟ್ಟಣಕ್ಕೆ ತೆರಳಲಿದ್ದಾರೆ. +ನಾಳೆ ಸಂಜೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಚನ್ನಪಟ್ಟಣದ ಚಿಕ್ಕಮಗಳೂರಿನಿಂದ ಡಿ.ಟಿ.ರಾಮು ವೃತ್ತದವರೆಗೂ ನಡೆಯುವ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರು ಷಾ ಅವರೊಂದಿಗೆ ರೋಡ್ ಶೋನಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_189_11.txt b/eesanje/url_46_189_11.txt new file mode 100644 index 0000000000000000000000000000000000000000..f5d3df301e77601387a343de99cf6c08f69bfed2 --- /dev/null +++ b/eesanje/url_46_189_11.txt @@ -0,0 +1,5 @@ +ಶಿವಕುಮಾರ ಸ್ವಾಮೀಜಿಗೆ ಪ್ರಧಾನಿ ಮೋದಿ ನಮನ +ನವದೆಹಲಿ,ಏ.1-ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. +ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. +ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡ ಬಾಷೆಯಲ್ಲಿ ಸಾಮಾಜಿಕ ಜಾಲ ತಾಣದ ಎಕ್ಸ್ ನಲ್ಲಿ ನವನಮನ ಸಲ್ಲಿಸಿದ್ದಾರೆ. +ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ… \ No newline at end of file diff --git a/eesanje/url_46_189_12.txt b/eesanje/url_46_189_12.txt new file mode 100644 index 0000000000000000000000000000000000000000..0ab3ed8034edd768e46080414fb6720928d3b640 --- /dev/null +++ b/eesanje/url_46_189_12.txt @@ -0,0 +1,8 @@ +ಸಿದ್ದಗಂಗಾ ಮಠದಲ್ಲಿ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಆಚರಣೆ +ತುಮಕೂರು,ಏ.1-ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀಗಳ ಗದ್ದುಗೆಗೆ ಇಂದು ಮುಂಜಾನೆ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹರಗುರು ಚರಮೂರ್ತಿಗಳು ಪೂಜೆ ಸಲ್ಲಿಸಿದರು.ಶ್ರೀಮಠದ ಆವರಣದಲ್ಲಿರುವ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ವಿವಿಧ ಬಗೆಯ ಹೂವುಗಳು ಹಾಗೂ ಹಣ್ಣು ಹಂಪಲುಗಳಿಂದ ಶೃಂಗರಿಸಲಾಗಿತ್ತು. +ಮುಂಜಾನೆಯೇ ಅಭಿಷೇಕ, ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ವಿವಿಧ ಮಠಾೀಶರ ಸಮ್ಮುಖದಲ್ಲಿ ನೆರವೇರಿಸಲಾಯಿತು. ನಂತರ ಶ್ರೀಗಳ ಪುತ್ಥಳಿಯನ್ನು ರುದ್ರಾಕ್ಷಿ ಮಂಟಪದಲ್ಲಿಟ್ಟು ವಿವಿಧ ಜಾನಪದ ಕಲಾತಂಡಗಳೊಂದಿಗೆ ಮಠದ ಆವರಣದಲ್ಲಿ ಮೆರವಣಿಗೆ ನಡೆಸಲಾಯಿತು.ನಂತರ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು. +ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಂತೆ, ರಾಜಕೀಯ ಮುಖಂಡರಿಗೆ, ಶಾಸಕರಿಗೆ, ಸಚಿವರಿಗೆ ವೇದಿಕೆ ಕಾರ್ಯಕ್ರಮಕ್ಕೆ ಆಹ್ವಾನವಿರಲಿಲ್ಲ. ಬೆಳಗ್ಗೆಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಅವರು ಶ್ರೀಮಠಕ್ಕೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಂತರ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು. +ಈ ವೇಳೆ ಮಾತನಾಡಿದ ಅವರು, ಅನ್ನ, ಅಕ್ಷರ, ದಾಸೋಹ ಸೇವೆ ಮಾಡುವುದು ಪುಣ್ಯದ ಕೆಲಸ. ಅದನ್ನು ಶಿವಕುಮಾರಸ್ವಾಮೀಜಿಯವರು ಮಾಡಿದ್ದಾರೆ. ಅವರ ಸೇವೆ ಅಜರಾಮರ. ರಾಜ್ಯದ ವಿವಿಧ ಭಾಗಗಳಿಂದ ಬಂದ ಬಡಮಕ್ಕಳು ಶ್ರೀಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಓದಿದವರು ಜೀವನ ಕಟ್ಟಿಕೊಂಡು ಉನ್ನತ ಹುದ್ದೆಯಲ್ಲಿದ್ದಾರೆ. ದೇಶ, ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದಾರೆ ಎಂದರು. +ಶಿವಕುಮಾರ ಸ್ವಾಮೀಜಿಯವರಿಗೆ ಭಾರತರತ್ನ ಬೇಕಿಲ್ಲ. ಆದರೆ ಅವರ ಸೇವೆ ಗುರುತಿಸಿ ಭಾರತರತ್ನ ಕೊಡಬೇಕೆಂದು ಭಕ್ತರ ಒತ್ತಾಯವಾಗಿದೆ. ಕೇಂದ್ರ ಸರ್ಕಾರ ಯಾಕೋ ಏನೋ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈಗಲಾದರೂ ಶ್ರೀಗಳಿಗೆ ಭಾರತ ರತ್ನ ನೀಡಲಿ ಎಂದು ಒತ್ತಾಯಿಸಿದರು. +ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ಮಠಕ್ಕೆ ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ಗದ್ದುಗೆಯ ದರ್ಶನ ಪಡೆದರು. ನಂತರ ಪ್ರತಿಯೊಬ್ಬ ಭಕ್ತರಿಗೂ ದಾಸೋಹ ಕಲ್ಪಿಸಲಾಗಿದ್ದು, ಶ್ರೀ ಮಠದ ವಿವಿಧೆಡೆ ಪ್ರಸಾದವನ್ನು ನೀಡಲಾಯಿತು. +ಪ್ರತಿ ವರ್ಷದಂತೆ ನಾಮಕರಣಕ್ಕೆ ಹೆಸರು ನೋಂದಾಯಿಸಿಕೊಂಡಿರುವ ಪೋಷಕರು ತಮ್ಮ ಮಕ್ಕಳಿಗೆ ಶಿವಕುಮಾರಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಿದರು. ಒಟ್ಟು 117 ಮಕ್ಕಳಿಗೆ ಇಂದು ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಲಾಯಿತು. ಈ ವೇಳೆ ಉತ್ತರಾಧಿಕಾರಿ ಶಿವಸಿದ್ದೇಶ್ವರ ಸ್ವಾಮೀಜಿ, ಮಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡದ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಗದುಗಿನ ವೀರಶೈವ ಪುಣ್ಯಾಶ್ರಮದ ಕಲ್ಲಯ್ಯ ಅಜ್ಜ ಸೇರಿದಂತೆ ವಿವಿಧ ಮಠಾೀಶರುಗಳು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_189_2.txt b/eesanje/url_46_189_2.txt new file mode 100644 index 0000000000000000000000000000000000000000..5ae4da8acee57d1ba53d32ea12ad68216cc92293 --- /dev/null +++ b/eesanje/url_46_189_2.txt @@ -0,0 +1,4 @@ +ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ, ರಾಜ್ಯದಲ್ಲಿ ಈವರೆಗೆ 96 ಅಭ್ಯರ್ಥಿಗಳಿಂದ ಉಮೇದುವಾರಿಕೆ +ಬೆಂಗಳೂರು,ಏ.2-ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ನಿನ್ನೆಯವರೆಗೆ 96 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏ.4ರವರೆಗೆ ಉಮೇದುವಾರಿಕೆ ಸಲ್ಲಿಸಲು ಕಾಲಾವಕಾಶವಿದೆ. ಮೊದಲ ದಿನ 114, ನಿನ್ನೆ 55 ನಾಮಪತ್ರಗಳು ಸಲ್ಲಿಕೆಯಾಗಿದ್ದವು. +ನಿನ್ನೆ 49 ಮಂದಿ ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ನಿನ್ನೆಯವರೆಗೆ ಬಿಜೆಪಿ 8, ಕಾಂಗ್ರೆಸ್ 6, ಜೆಡಿಎಸ್ ಒಬ್ಬ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಸಲ್ಲಿಕೆಯಾಗಿರುವ ನಾಮಪತ್ರಗಳಲ್ಲಿ 89 ಪುರುಷ, ಏಳು ಮಹಿಳೆಯರು ನಾಮಪತ್ರ ಸಲ್ಲಿಸಿದ್ದಾರೆ. +ಇಂದು ಮಂಗಳವಾರವಾದ ಕಾರಣ ಪ್ರಮುಖ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಲು ಹೆಚ್ಚು ಉತ್ಸಾಹ ತೋರಿಲ್ಲ. ನಾಳೆ ಹಾಗೂ ಗುರುವಾರ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸಲಾಗುತ್ತದೆ. \ No newline at end of file diff --git a/eesanje/url_46_189_3.txt b/eesanje/url_46_189_3.txt new file mode 100644 index 0000000000000000000000000000000000000000..45f1b7cf7cb27f10f45dbf075fcb55384029ce45 --- /dev/null +++ b/eesanje/url_46_189_3.txt @@ -0,0 +1,7 @@ +ಅನುದಾನ ಮುಖ್ಯವಲ್ಲ, ಅನುಷ್ಠಾನ ಮುಖ್ಯ : ಡಾ.ಸಿ.ಎನ್.ಮಂಜುನಾಥ್ +ಬೆಂಗಳೂರು, ಏ.2-ಅನುದಾನ ಮುಖ್ಯವಲ್ಲ, ಆದರೆ ಅನುಷ್ಠಾನ ಮುಖ್ಯ. ಅದಕ್ಕಾಗಿಯೇ ನಮ್ಮ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಯೋಜನೆಗಳಿಂದ ಇಂದು ಉಜ್ವಲ ಭಾರತದ ಗುರಿಯನ್ನು ಹೊಂದಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದ್ದಾರೆ. +ನಾನು ಹೃದ್ರೋಗ ಚಿಕಿತ್ಸಾ ವೈದ್ಯನಾಗಿ ಹೇಳುವುದಾದರೆ, ಆರೋಗ್ಯ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಬದಲಾವಣೆ ಅಪ್ರತಿಮವಾಗಿದೆ. ಈ ಹಿಂದೆ ರಕ್ತನಾಳದಲ್ಲಿ ಸಮಸ್ಯೆ ಕಂಡುಬಂದಾಗ ನಾವು ಸ್ಟೆಂಟ್‍ಗಳನ್ನು ಅಳವಡಿಸುತ್ತಿದ್ದೆವು. ಆಗ ಅದು ಒಂದು ಲಕ್ಷ ರೂ.ನಿಂದ 70 ಸಾವಿರದವರೆಗೆ ಇತ್ತು. ಆದರೆ, ಇಂದು 20 ರಿಂದ 25 ಸಾವಿರ ರೂ.ಗಳಿಗೆ ದೊರೆಯುತ್ತದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಯೋಜನೆಗಳೇ ಕಾರಣ ಎಂದು ಹೇಳಿದರು. +ಕೇವಲ ಆರೋಗ್ಯ, ಸ್ವಚ್ಛ ಭಾರತ, ಉಜ್ವಲ ಯೋಜನೆ, ಕಿಸಾನ್ ಸಮೃದ್ಧಿ ಯೋಜನೆ ಸೇರಿದಂತೆ ಹಲವಾರು ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದು ಜನರ ಬದುಕಿನಲ್ಲಿ ಹೊಸ ಬದಲಾವಣೆ ತರಲಾಗಿದೆ ಎಂದು ತಿಳಿಸಿದರು. +ರಕ್ಷಣಾ ವಲಯದಲ್ಲೂ ಶೇ.49ರಷ್ಟು ಹೂಡಿಕೆಗೆ ಮುಕ್ತ ಅವಕಾಶ ನೀಡಿರುವುದರಿಂದ ಸ್ವಾವಲಂಬಿ ಭಾರತಕ್ಕೆ ದೊಡ್ಡ ಆಯಾಮ ಸಿಕ್ಕಿದೆ. ಹಿಂದೆ ನಾವು ಶಸ್ತ್ರಾಸ್ತ್ರಗಳಿಗಾಗಿ ವಿದೇಶಗಳನ್ನು ಅವಲಂಬಿಸುತ್ತಿದ್ದೆವು. ಆದರೆ, ಈಗ ನಾವು ನಮ್ಮಲ್ಲಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಗಳು ನೇರವಾಗಿ ಸಾಮಾನ್ಯರಿಗೆ ಮುಟ್ಟಿವೆ. ಇದನ್ನು ಜನರಿಗೆ ತಿಳಿಸಿ ಮತ ಕೇಳೋಣ ಎಂದು ನುಡಿದರು. +ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದಾರೆ. ಅದರಲ್ಲಿ ನಮ್ಮ ಬೆಂಗಳೂರು ದಕ್ಷಿಣ, ಕೇಂದ್ರ, ಉತ್ತರ, ಚಿಕ್ಕಬಳ್ಳಾಪುರ ಅಭ್ಯರ್ಥಿಗಳು ಸೇರಿದಂತೆ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ನಾನು ಕೂಡ ಗೆದ್ದು ಆ ಪಟ್ಟಿಯಲ್ಲಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ನಾನು ಯಾವಾಗಲೂ ಚಿಕಿತ್ಸೆ ಮೊದಲು, ಹಣ ಪಾವತಿ ನಂತರ ಎನ್ನುತ್ತಿದ್ದೆ. ಆದರೆ, ಈಗ ಸಾರ್ವತ್ರಿಕ ಜೀವನ ಆರಂಭಿಸಿದ್ದೇನೆ. ಮತ ಮೊದಲು, ಸೇವೆ ನಿರಂತರ ಎಂಬ ಧ್ಯೇಯವಾಕ್ಯವನ್ನು ಮುಂದಿಟ್ಟುಕೊಂಡಿದ್ದೇನೆ. ಇದೇ ವೇಳೆ ನಾವು ಹೆಚ್ಚು ಟೀಕೆಗಳನ್ನು ಮಾಡದೆ ನಮ್ಮ ಸಾಧನೆಗಳನ್ನು ಜನರಿಗೆ ತಿಳಿಸೋಣ. ಏಕೆಂದರೆ, ಟೀಕೆಗಳು ಸಾಯುತ್ತವೆ, ಆದರೆ ಸಾಧನೆ ಜೀವಂತವಾಗಿರುತ್ತದೆ ಎಂದು ಡಾ.ಮಂಜುನಾಥ್ ಹೇಳಿದರು. \ No newline at end of file diff --git a/eesanje/url_46_189_4.txt b/eesanje/url_46_189_4.txt new file mode 100644 index 0000000000000000000000000000000000000000..70831818a845301813b3571359f9816857187cf8 --- /dev/null +++ b/eesanje/url_46_189_4.txt @@ -0,0 +1,8 @@ +ಇನ್ನುಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ : ಸಿಎಂ ಸಿದ್ದು ಘೋಷಣೆ +ಮೈಸೂರು,ಏ.2-ವಯೋಸಹಜ ಕಾರಣಗಳಿಂದಾಗಿ ಇನ್ನುಮುಂದೆ ತಾವು ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೀಗ 77 ವರ್ಷ. ಇನ್ನೂ 4 ವರ್ಷ ಸಮಯವಿದೆ. ಅದು ಮುಗಿಯುವ ವೇಳೆಗೆ 81 ವರ್ಷ ಆಗಲಿದ್ದು, ಆ ಸಂದರ್ಭಕ್ಕೆ ಆರೋಗ್ಯವೂ ಉತ್ತಮವಾಗಿರುವುದಿಲ್ಲ, ಹರ್ಷದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಅದಕ್ಕಾಗಿ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು. +1978 ರಲ್ಲಿ ತಾವು ರಾಜಕೀಯಕ್ಕೆ ಬಂದಿದ್ದು, 50 ವರ್ಷ ಕಳೆಯುತ್ತಿದೆ. ಇಷ್ಟು ಸಾಕು. ಮೇಲ್ನೋಟಕ್ಕೆ ನನಗೆ ವಯಸ್ಸಾಗಿದೆ ಎಂದು ಕಾಣದೇ ಇದ್ದರೂ ನನ್ನ ಒಳಗಿನ ಆರೋಗ್ಯದ ಸಾಮರ್ಥ್ಯ ನನಗೆ ಗೊತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ನಿನ್ನೆ ವರುಣಾ ಕ್ಷೇತ್ರದಲ್ಲಿ ಭಾಷಣ ಮಾಡುವಾಗ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ನಮ್ಮ ಕಾರ್ಯಕ್ರಮಗಳನ್ನು ನಿಲ್ಲಿಸಿಬಿಡುತ್ತಾರೆ. ಹಾಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ನಮ್ಮನ್ನು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಮಾಡಿಕೊಡಿ ಎಂದು ಕೇಳಿದ್ದೇನೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ 48 ಸಾವಿರ ಮತಗಳ ಲೀಡ್ ಇತ್ತು. ಈ ಬಾರಿ 60 ಸಾವಿರಕ್ಕಿಂತಲೂ ಹೆಚ್ಚಿನ ಲೀಡ್ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.ನಾವು ಜನರ ಬದುಕಿನ ಆಧಾರದ ಮೇಲೆ ಮತ ಕೇಳುತ್ತೇವೆ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಜನ ನಮ್ಮ ಕಾರ್ಯಕ್ರಮಗಳನ್ನು ನೋಡಿ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಎಷ್ಟೇ ಹಣಕಾಸಿನ ಅಗತ್ಯವಿದ್ದರೂ ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮೈಸೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಿಸದೇ ಇದ್ದರೂ ಸುಳ್ಳು ವರದಿಯಾಗಿದೆ. ತಮ್ಮಷ್ಟಕ್ಕೇ ತಾವು ಊಹೆ ಮಾಡಿಕೊಂಡು ವರದಿ ಮಾಡುವುದು ಅಪಾಯಕಾರಿ ಎಂದರು. +ಮಾಜಿ ಸಚಿವ ಜನಾರ್ಧನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರ ಬಳಿ ಸೂಕ್ತ ದಾಖಲೆಗಳಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಈ ಹಿಂದೆ ಗಣಿ ಹಗರಣದ ಬಗ್ಗೆ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ, ವರದಿ ನೀಡಿ ಜನಾರ್ದನ ರೆಡ್ಡಿ ಬಳ್ಳಾರಿಯನ್ನು ರಿಪಬ್ಲಿಕ್ ಮಾಡುತ್ತಿದ್ದಾರೆ ಎಂದು ದೂರಿದ್ದರು. ವರದಿಯಲ್ಲಿ ಸಂತೋಷ್ ಲಾಡ್ ಅಥವಾ ಬಿ.ನಾಗೇಂದ್ರ ಅವರ ಹೆಸರು ಇರಲಿಲ್ಲ. ವರದಿಯ ಬಗ್ಗೆ ತಾವು ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ಯಡಿಯೂರಪ್ಪ ಮತ್ತು ಗಣಿ ಉದ್ಯಮಿಗಳು ನನ್ನ ವಿರುದ್ಧ ಜಗಳಕ್ಕೆ ಬಂದರು. ಆದ ಕಾರಣಕ್ಕೆ ತಾವು ಬಳ್ಳಾರಿಯವರೆಗೂ ಪಾದಯಾತ್ರೆ ಮಾಡಿದ್ದಾಗಿ ತಿಳಿಸಿದರು. +ಅಮಿತ್ ಶಾ ಕುರಿತು ತಮ್ಮ ಪುತ್ರ ಯತೀಂದ್ರ ನೀಡಿದ್ದ ಹೇಳಿಕೆಗೆ ನೋಟೀಸ್ ಬಂದಿದೆ. ಅದಕ್ಕೆ ಉತ್ತರ ನೀಡಲಾಗಿದೆ. ಅದರ ಬಗ್ಗೆ ಹೆಚ್ಚಿನ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.ಕೆಪಿಎಸ್‍ಸಿಯಲ್ಲಿ ನೇಮಕಾತಿಯ ದಾಖಲಾತಿಗಳು ಕಡಿಮೆಯಾಗಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.ತಮಗೆ ಯಾವುದೇ ಆತಂಕವಿಲ್ಲ. ಹಾಗಾಗಿ ಸದಾಕಾಲ ಶಾಂತವಾಗಿರುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_189_5.txt b/eesanje/url_46_189_5.txt new file mode 100644 index 0000000000000000000000000000000000000000..53685a3afd48cd2a5ca74e90ac17d2a8f4e067c3 --- /dev/null +++ b/eesanje/url_46_189_5.txt @@ -0,0 +1,5 @@ +ಈಶ್ವರಪ್ಪಗೆ ಅಮಿತ್ ಷಾ ಕರೆ, ದೆಹಲಿಗೆ ಬರುವಂತೆ ಬುಲಾವ್ +ಬೆಂಗಳೂರು,ಏ.2-ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಲು ಮುಂದಾಗಿರುವ ಈಶ್ವರಪ್ಪ ಅವರಿಗೆ ಕೇಂದ್ರ ಸಚಿವ ಅಮಿತ್ ಷಾ ಅವರು ಕರೆ ಮಾಡಿದ್ದ ಹಿನ್ನೆಲೆಯಲ್ಲಿ ನಾಳೆ ಈಶ್ವರಪ್ಪ ದೆಹಲಿಗೆ ತೆರಳಲಿದ್ದಾರೆ. +ನನ್ನ ಮಗ ಕಾಂತೇಶ್‍ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ. ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಬಿಎಸ್‍ವೈ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಎಂದು ಶಪಥ ಮಾಡಿರುವ ಈಶ್ವರಪ್ಪ, ಕಳೆದ 15 ದಿನಗಳಿಂದ ಪ್ರಚಾರ ನಡೆಸುತ್ತಿದ್ದಾರೆ. +ಈಶ್ವರಪ್ಪ ಬಂಡಾಯ ಶಮನಕ್ಕೆ ಬಿಜೆಪಿ ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಈಶ್ವರಪ್ಪ ಅವರಿಗೆ ಕರೆ ಮಾಡಿರುವ ಅಮಿತ್ ಷಾ ಅವರು ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ನಾನು ದೆಹಲಿಗೆ ಬರುತ್ತೇನೆ. ಆದರೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.ನಾನು ಸ್ಪರ್ಧಿಸುತ್ತೇನೆ. ಗೆದ್ದು ಬಿಜೆಪಿಗೆ ಮರಳುತ್ತೇನೆ. ನಿಮ್ಮ ಬೆಂಬಲವಿರಲಿ ಎಂದು ಈಶ್ವರಪ್ಪ ಅವರು ಅಮಿತ್ ಷಾ ಅವರಿಗೆ ಹೇಳಿದ್ದಾರೆಂದು ತಿಳಿದುಬಂದಿದೆ. +ದೆಹಲಿಗೆ ಬಂದಾಗ ಇಲ್ಲಿ ಏನೇನಾಗಿದೆ ಎಂಬುದರ ಬಗ್ಗೆ ಹೇಳುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ. ಒಟ್ಟಾರೆ ಶಿವಮೊಗ್ಗದ ಬಂಡಾಯ ತೀವ್ರಗೊಂಡಿದೆ. ಇದರ ಶಮನಕ್ಕೆ ಹೈಕಮಾಂಡ್ ಎಂಟ್ರಿಯಾಗಿದೆ. ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೊಪ್ಪಳ ಕ್ಷೇತ್ರಗಳ ಬಂಡಾಯವನ್ನು ಶಮನಗೊಳಿಸಿದ್ದ ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಶಮನಕ್ಕೆ ಮುಂದಾಗಿದೆ. ಮುಂದೇನಾಗಲಿದೆಯೋ ಕಾದು ನೋಡಬೇಕು. \ No newline at end of file diff --git a/eesanje/url_46_189_6.txt b/eesanje/url_46_189_6.txt new file mode 100644 index 0000000000000000000000000000000000000000..de7a2c391b5c75eed721a46762b634977e5c9c12 --- /dev/null +++ b/eesanje/url_46_189_6.txt @@ -0,0 +1,6 @@ +ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿ ಪುನಾರಚನೆ +ಬೆಂಗಳೂರು,ಏ.2-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಸಮಿತಿಯನ್ನು ಪುನರ್ ರಚಿಸಲಾಗಿದ್ದು, 7 ಜಿಲ್ಲಾಧ್ಯಕ್ಷರು, 43 ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಮಾಧ್ಯಮ ಮತ್ತು ಸಂವಹನ ಘಟಕಕ್ಕೆ ಅಧ್ಯಕ್ಷರಾಗಿದ್ದ ಸಚಿವ ಪ್ರಿಯಾಂಕ ಖರ್ಗೆ ಅವರ ಬದಲಾಗಿ ಇದೇ ಘಟಕದಲ್ಲಿ ಉಪಾಧ್ಯಕ್ಷರಾಗಿದ್ದ ರಮೇಶ್ ಬಾಬು ಅವರಿಗೆ ಬಡ್ತಿ ನೀಡಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. +ವಿಧಾನಸಭೆ ಟಿಕೆಟ್ ವಂಚಿತೆ ಐಶ್ವರ್ಯ ಮಹದೇವ್ ಅವರನ್ನು ಸಹ ಅಧ್ಯಕ್ಷರನ್ನಾಗಿ, ಇ.ಸತ್ಯಪ್ರಕಾಶ್‍ರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಸಾಮಾಜಿಕ ಜಾಲತಾಣಕ್ಕೆ ವಿಜಯ್ ಮತ್ತಿಕಟ್ಟಿ, ನಿಖಿತ್ ರಾಜ್ ಮೌಲ್ಯ ಅವರನ್ನು ಸಹ ಅಧ್ಯಕ್ಷರನ್ನಾಗಿ ನಿಯೋಜಿಸಲಾಗಿದೆ. ಖಜಾಂಚಿಯನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ರವರ ಆಪ್ತ ವಿನಯ್ ಕಾರ್ತಿಕ್ ಮುಂದುವರೆದಿದ್ದಾರೆ. +ಬಳ್ಳಾರಿ ನಗರ ಜಿಲ್ಲೆಗೆ ಹಿರಿಯ ನಾಯಕ ಅಲ್ಲಮ ವೀರಭದ್ರಪ್ಪ ಅವರ ಪುತ್ರ ಪ್ರಶಾಂತ್, ಬೆಂಗಳೂರು ಪೂರ್ವಕ್ಕೆ ಕೆ.ನಂದಕುಮಾರ್, ಹಾವೇರಿಗೆ ಸಂಜೀವ್ ಕುಮಾರ್ ನೀರಲಂಗಿ, ಕೊಪ್ಪಳಕ್ಕೆ ಅಮರೇಗೌಡ ಬಯ್ಯಾಪುರ, ಉಡುಪಿಗೆ ಕೃಷ್ಣ ಹೆಗ್ಡೆ, ರಾಯಚೂರಿಗೆ ಬಸವರಾಜ್ ಇಟಗಿ, ಶಿವಮೊಗ್ಗಕ್ಕೆ ಆರ್.ಪ್ರಸನ್ನಕುಮಾರ್ ಜಿಲ್ಲಾಧ್ಯಕ್ಷರಾಗಿದ್ದಾರೆ. +ಉಪಾಧ್ಯಕ್ಷರು :ಬಿ.ಎಲ್.ಶಂಕರ್, ಅಜಯ್‍ಕುಮಾರ್ ಸರ್‍ನಾಯಕ್, ಮೆಹಬೂಬ ಸೌದಾಗರ್, ಆನಂದ್ ನ್ಯಾಮೆಗೌಡ, ವಿ.ಎಸ್.ಉಗ್ರಪ್ಪ, ಒಬೆದುಲ್ಲಾ ಶರೀಫ್, ಎಂ.ನಾರಾಯಣಸ್ವಾಮಿ, ವೆಂಕಟರಮಣಯ್ಯ, ಆರ್.ವಿ.ವೆಂಕಟೇಶ್, ಎಂ.ಸಿ.ವೇಣುಗೋಪಾಲ್, ಪಿ.ಆರ್.ರಮೇಶ್, ಎನ್.ಕೃಷ್ಣರಾಜು, ಜಾನ್‍ವೆಸ್ಲೆ, ಐವಾನ್ ಡಿಸೋಜ, ರಮಾನಾಥ್ ರೈ, ಕೆ.ಶಿವಮೂರ್ತಿ, ಮೋಹನ್ ಲಿಂಬಿಕಾಯಿ, ವಿ.ಆರ್.ಸುದರ್ಶನ್, ಸೂರಜ್ ಹೆಗ್ಡೆ ಸೇರಿದಂತೆ 43 ಮಂದಿಯನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. +ಪ್ರಧಾನ ಕಾರ್ಯದರ್ಶಿ :ದಯಾನಂದ್ ಎಸ್.ಪಾಟೀಲ್, ಮುರಳಿ ಕೃಷ್ಣ, ಉಮೇಶ್ ಬಾಬು, ಸುಧಾಕರ್ ಬಡಿಗೆ, ಜಿ.ಎ.ಬಾವ, ಅಗಾ ಸುಲ್ತಾನ್, ಜಿ.ಶೇಖರ್, ಎಂ.ರಾಮಚಂದ್ರಪ್ಪ, ಮತೀಲ್ಡಾ ಡಿಸೋಜ, ಪ್ರವೀಣ್ ಪೀಟರ್, ಎಚ್.ನಾಗೇಶ್, ಎಸ್.ಮನೋಹರ್, ವಿಜಯ್ ಕೆ. ಮುಳಗೊಂದ್, ಮಂಜುಳಾ ನಾಯ್ಡು, ಹುಚ್ಚಪ್ಪ, ಮಿಲಿಂದ್ ಧರ್ಮಸೇನ, ಭಾವನ ರಾಮಣ್ಣ, ಕೆಂಚೇಗೌಡ, ಮದನ್‍ಪಟೇಲ್, ಗುರಪ್ಪ ನಾಯ್ಡು, ಎಸ್.ಎ.ಹುಸೇನ್, ಎಂ.ಉದಯಶಂಕರ್, ಡಾ.ಬಿ.ತಿಪ್ಪೇಸ್ವಾಮಿ, ಮಿಥುನ್ ರೈ, ರಕ್ಷಿತ್ ಶಿವರಾಂ, ರಾಜ್‍ಗೋಪಾಲ ರೆಡ್ಡಿ, ಸ್ವಾಮಿ ಮಳಗಿ, ರಾಜೇಶ್ವರಿ ಪಾಟೀಲ್, ಡಾ.ಡಿ.ಸಿ.ಮುದ್ದುಗಂಗಾಧರ್, ಸಿ.ಆರ್.ಮನೋಹರ್, ಎಂ.ನಾರಾಯಣಸ್ವಾಮಿ, ನಿಕೇತ್‍ರಾಜ್ ಮೌರ್ಯ, ನಿವೇದಿತ್ ಆಳ್ವ, ಪೂರ್ಣಿಮಾ ಶ್ರೀನಿವಾಸ್, ಸೌಮ್ಯರೆಡ್ಡಿ ಸೇರಿದಂತೆ 138 ಮಂದಿಯನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಲಾಗಿದೆ. \ No newline at end of file diff --git a/eesanje/url_46_189_7.txt b/eesanje/url_46_189_7.txt new file mode 100644 index 0000000000000000000000000000000000000000..27894679b3aa7bb9d4af1b47adeaf4d6c4c1f9cc --- /dev/null +++ b/eesanje/url_46_189_7.txt @@ -0,0 +1,5 @@ +ಚನ್ನಪಟ್ಟಣದಲ್ಲಿ ಇಂದು ಅಮಿತ್ ಷಾ ರೋಡ್ ಶೋ, ಮೊಳಗಲಿದೆ ಚುನಾವಣಾ ರಣಕಹಳೆ +ಬೆಂಗಳೂರು,ಏ.2-ಗೊಂಬೆ ನಾಡು ಎಂದೇ ಪ್ರಸಿದ್ದವಾಗಿರುವ ಚನ್ನಪಟ್ಟಣದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರೋಡ್ ಶೋ ನಡೆಸುವ ಮೂಲಕ ಚುನಾವಣಾ ರಣ ಕಹಳೆ ಮೊಳಗಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ. +ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಮೊದಲ ಚುನಾವಣಾ ರ್ಯಾಲಿಯಲ್ಲಿ ಅಮಿತ್ ಷಾ ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಷಾ ಪ್ರಚಾರ ಕೈಗೊಳ್ಳಲಿದ್ದಾರೆ. +ಇಂದು ಸಂಜೆ 5.30ಕ್ಕೆ ಮಂಗಳವಾರಪೇಟೆಯಿಂದ ಚನ್ನಪಟ್ಟಣದ ಡಿ.ಟಿ.ರಾಮು ವೃತ್ತದವರೆಗೂ ನಡೆಯುವ ರೋಡ್ ಶೋ ನಡೆಯಲಿದೆ. ಅಮಿತ್ ಷಾ ಅವರಲ್ಲದೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮೊದಲಾದ ಎನ್‍ಡಿಎ ನಾಯಕರು ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ರೋಡ್ ಶೋನಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಚನ್ನಪಟ್ಟಣದಲ್ಲಿ ಚುನಾವಣಾ ಕಹಳೆ ಮೊಳಗಿಸುವ ಮೂಲಕ ಜೆಡಿಎಸ್-ಬಿಜೆಪಿ ನಾಯಕರ ಜಂಟಿ ಚುನಾವಣಾ ಪ್ರಚಾರಕ್ಕೂ ನಾಂದಿ ಹಾಡಲಿದ್ದಾರೆ. ಈಗಾಗಲೇ ಸ್ಥಳೀಯವಾಗಿ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಮನ್ವಯ ಸಭೆಗಳನ್ನು ನಡೆಸಿ ಚುನಾವಣಾ ಪ್ರಚಾರದಲ್ಲಿ ಉಭಯ ಪಕ್ಷಗಳ ನಾಯಕರು ಪಾಲ್ಗೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_189_8.txt b/eesanje/url_46_189_8.txt new file mode 100644 index 0000000000000000000000000000000000000000..078d3f6eddb493e71001fbe75f5337e18192304d --- /dev/null +++ b/eesanje/url_46_189_8.txt @@ -0,0 +1,5 @@ +ಲೋಕಾಯುಕ್ತಕ್ಕೆ ಶಾಸಕರ ಆಸ್ತಿ ವಿವರ ಸಲ್ಲಿಸಲು ಜೂ.30ರ ಗಡುವು +ಬೆಂಗಳೂರು,ಏ.2-ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2023-24ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಜೂನ್ 30ರೊಳಗೆ ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ. +ನಿಗದಿತ ನಮೂನೆಯಲ್ಲಿ ಶಾಸಕರು ಕಳೆದ ಆರ್ಥಿಕ ಸಾಲಿನ ತಮ್ಮ ಮತ್ತು ಕುಟುಂಬದ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ ನೇರವಾಗಿ ಸಲ್ಲಿಸುವಂತೆ ವಿಧಾನಸಭೆ ಕಾಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಶಾಸಕರು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯನ್ನು ವಿಧಾನಸಭೆ ಸಚಿವಾಲಯಕ್ಕೆ ನೀಡುವಂತೆ ತಿಳಿಸಿದ್ದಾರೆ. ಲೋಕಾಯುಕ್ತರು ಮಾ.22ರಂದು ಪತ್ರ ಬರೆದು ಶಾಸಕರು ಆಸ್ತಿ ವಿವರ ಸಲ್ಲಿಸಲು ಸೂಚಿಸಿರುತ್ತಾರೆ. ಹೀಗಾಗಿ ಎಲ್ಲ ಸದಸ್ಯರಿಗೆ ವಿಧಾನಸಭೆ ಸಚಿವಾಲಯ ಈ ಮಾಹಿತಿಯನ್ನು ರವಾನಿಸಿದೆ. +ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984 ಕಲಂ 7ರ ಉಪ ಕಲಂ(1) ಅಡಿ ಉಲ್ಲೇಖಿಸಿರುವಂತೆ ಪ್ರತಿಯೊಬ್ಬ ವಿಧಾನಸಭೆಯ ಸದಸ್ಯರು ಆಯಾ ವರ್ಷದ ಜೂ.30ರೊಳಗೆ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಸಲ್ಲಿಸಬೇಕಾಗಿದೆ. \ No newline at end of file diff --git a/eesanje/url_46_189_9.txt b/eesanje/url_46_189_9.txt new file mode 100644 index 0000000000000000000000000000000000000000..b99c97a60bdf6735a2905ad72f77c7b85bc88ccd --- /dev/null +++ b/eesanje/url_46_189_9.txt @@ -0,0 +1,8 @@ +ಕರ್ನಾಟಕ ಪೊಲೀಸರ ದಕ್ಷತೆ, ಕಾರ್ಯವೈಖರಿಯನ್ನು ಕೊಂಡಾಡಿದ ರಜನೀಶ್ ಗೋಯಲ್ +ಬೆಂಗಳೂರು,ಏ.2-ಕರ್ನಾಟಕ ಪೊಲೀಸರು ಕಾರ್ಯವೈಖರಿ, ನಿಪುಣತೆ, ದಕ್ಷತೆಯಿಂದ ಇಡೀ ರಾಷ್ಟ್ರದಲ್ಲೇ ಒಳ್ಳೆಯ ಹೆಸರು ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಹೇಳಿದ್ದಾರೆ. +ಕೋರಮಂಗಲದ ಕೆಎಸ್‍ಆರ್‍ಪಿ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಪೊಲೀಸರ ಕಾರ್ಯವೈಖರಿ ಹಾಗೂ ದಕ್ಷತೆ ಬಗ್ಗೆ ನಮಗೆ ಹೆಮ್ಮೆ ಇದ್ದು, ರಾಷ್ಟ್ರದಲ್ಲೇ ಒಳ್ಳೆಯ ಹೆಸರು ಪಡೆದಿದೆ. ಇದಕ್ಕೆ ಉದಾಹರಣೆ ಎಂಬಂತೆ ಕೆಲ ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದ ಘಟನೆಯೊಂದರಲ್ಲೇ ಯಾವುದೇ ಪ್ರಮುಖ ಸಾಕ್ಷಿ ಇಲ್ಲದಿದ್ದರೂ ಕೇವಲ ಎರಡು ಬಸ್ ಟಿಕೆಟ್‍ಗಳನ್ನೇ ಆಧರಿಸಿ ಪ್ರಕರಣವನ್ನು ಭೇದಿಸುವಲ್ಲಿ ಸಫಲರಾಗಿದ್ದಾರೆ ಎಂದು ಶ್ಲಾಘಿಸಿದರು. +ಅಪರಾಧ ಪ್ರಕರಣಗಳು ಎಷ್ಟೇ ಜಟಿಲವಾಗಿದ್ದರೂ ಅದನ್ನು ಬಹಳ ಸಫಲವಾಗಿ ನಿಭಾಯಿಸುವಲ್ಲಿ ಪೊಲೀಸ್ ಇಲಾಖೆಯಲ್ಲಿನ ನಾಯಕತ್ವಕ್ಕೆ ನನ್ನ ಅಭಿನಂದನೆಗಳು ಎಂದರು. ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯನ್ನು ಬಹಳ ಯಶಸ್ವಿಯಾಗಿ ಒಂದೇ ಒಂದು ಮರುಮತದಾನ ನಡೆಯದಂತೆ ನಡೆಸಿಕೊಟ್ಟಿದ್ದೀರಿ. ಇದು ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. +ಈಗ ಲೋಕಸಭಾ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ತಾವೆಲ್ಲರೂ ಮುಕ್ತ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಿಕೊಡುತ್ತೀರೆಂದು ನನಗೆ ವಿಶ್ವಾಸವಿದೆ. ಇದಕ್ಕಾಗಿ ಎಲ್ಲರೂ ಶ್ರಮಪಡಬೇಕು ಎಂದು ಅವರು ತಿಳಿಸಿದರು. +ರಾಜ್ಯ ಅಭಿವೃದ್ಧಿ ಹೊಂದಬೇಕಾದರೆ ರಾಜ್ಯ ಶಾಂತಿ ಯುತವಾಗಿರಬೇಕು. ಅದಕ್ಕಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ. ಇದರಿಂದ ನಮ್ಮ ರಾಜ್ಯ ಉನ್ನತೀಕರಣಗೊಂಡು ಅಗ್ರ ಸ್ಥಾನಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. +2018ರಿಂದ ಸತತ ಏಳು ವರ್ಷಗಳಿಂದ ಈ ಕಾರ್ಯಕ್ರಮಕ್ಕೆ ಬರುತ್ತಿದ್ದೇನೆ. ಅದಕ್ಕೆ ಅವಕಾಶ ಕೊಟ್ಟ ಭಗವಂತನಿಗೆ ಚಿರ ಋಣಿ. ಗೃಹ ಕಾರ್ಯದರ್ಶಿಯಾಗಿ ತಮ್ಮ ಮುಂದಿರುವ ಸವಾಲುಗಳು, ಕೆಲಸದ ಒತ್ತಡ, ಜವಾಬ್ದಾರಿಯನ್ನು ಚೆನ್ನಾಗಿ ಅರ್ಥೈಸಿಕೊಂಡಿದ್ದೇನೆ. ಸರ್ಕಾರದ ಮಟ್ಟದಲ್ಲಿ ತಮಗೆ ಬೇಕಾದಂತಹ ಮೂಲಸೌಕರ್ಯಗಳು, ಹೊಸ ವಾಹನಗಳು, ಆಧುನಿಕ ತಂತ್ರಜ್ಞಾನ ಮತ್ತು ಹೊಸ ಸಿಬ್ಬಂದಿಗಳ ನೇಮಕ, ಸಿಬ್ಬಂದಿ ತರಬೇತಿ ಅವಶ್ಯಕತೆಗಳನ್ನು ಪೂರೈಸಲು ಪ್ರಯತ್ನಿಸಿದ್ದೇನೆ ಎಂದರು. +ಕಾರ್ಯಕ್ರಮದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್‍ಮೋಹನ್, ಕೆಎಸ್‍ಆರ್‍ಪಿಯ ಎಡಿಜಿಪಿ ಉಮೇಶ್‍ಕುಮಾರ್ ಮತ್ತು ಹಿರಿಯ-ಕಿರಿಯ ಪೊಲೀಸ್ ಅಕಾರಿಗಳು, ನಿವೃತ್ತ ಪೊಲೀಸ್ ಅಕಾರಿಗಳ ಕುಟುಂಬಸ್ಥರು ಭಾಗವಹಿಸಿದ್ದರು. \ No newline at end of file diff --git a/eesanje/url_46_18_1.txt b/eesanje/url_46_18_1.txt new file mode 100644 index 0000000000000000000000000000000000000000..54df4f8f0064b74972cdfede7dfc7e6d87d31912 --- /dev/null +++ b/eesanje/url_46_18_1.txt @@ -0,0 +1,7 @@ +ಪ್ರಜಾಪ್ರಭುತ್ವ ದಿನದ ಅಂಗವಾಗಿ 31 ಜಿಲ್ಲೆಗಳಲ್ಲಿ 2500 ಕಿ.ಮೀ ಬೃಹತ್ ಮಾನವ ಸರಪಳಿಗೆ +2500 31 +ಬೆಂಗಳೂರು,ಸೆ.15-ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ರಾಜ್ಯಾದ್ಯಂತ ಬೀದರ್ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳಲ್ಲಿ 2,500 ಕಿ.ಮೀ. ಮಾನವ ಸರಪಳಿಯನ್ನು ನಿರ್ಮಿಸಲಾಗಿದೆ. ಪ್ರಜಾಪ್ರಭುತ್ವದ ಆಶಯಗಳಾದ ಸಮಾನತೆ, ಅಸ್ಪಶ್ಯತೆ ನಿವಾರಣೆ, ಸೌಹಾರ್ದತೆ, ಭಾವೈಕ್ಯತೆ, ಕೋಮುವಾದ ಹತ್ತಿಕ್ಕುವುದು ಸೇರಿದಂತೆ ಹಲವು ಆಶಯಗಳೊಂದಿಗೆ ಇಂದು ನಡೆದ ಮಾನವಸರಪಳಿಯಲ್ಲಿ 25 ಲಕ್ಷಕ್ಕೂ ಹೆಚ್ಚು ಅಧಿಕ ಮಂದಿ ಭಾಗವಹಿಸಿದ್ದರು. +ಶಾಲಾ ಮಕ್ಕಳು, ಶಿಕ್ಷಕರು, ಶೈಕ್ಷಣಿಕ ಸಂಸ್ಥೆಗಳ ಎಲ್ಲರನ್ನೂ ತೊಡಗಿಸಿಕೊಳ್ಳಲಾಗಿತ್ತು. ಭಾರೀ ಉದ್ದದ ಈ ಮಾನವ ಸರಪಳಿ ನಿರ್ಮಾಣ ವಿಶ್ವದಾಖಲೆಗೆ ಸೇರ್ಪಡೆಯಾಗಿದೆ.ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಸಂಸ್ಥೆಯ ಪ್ರತಿನಿಧಿ ಶೈಲಜಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ವಿತರಿಸಿದರು.ಕಾರ್ಯಕ್ರಮದಲ್ಲಿ ವಿಶೇಷ ಅಂಚೆಚೀಟಿಯನ್ನು ಬಿಡುಗಡೆ ಮಾಡಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕೀರಣವು ನಡೆಯಿತು. +ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು. +ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. +ವಿಶ್ವಸಂಸ್ಥೆಯ ಭಾರತೀಯ ಪ್ರತಿನಿಧಿ ಕೆ.ಪಿ.ಅಶ್ವಿನಿಯವರಿಗೆ ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂವಿಧಾನದ ಪೀಠಿಕೆಯನ್ನು ವಿತರಿಸಿದರು. ಜೊತೆಗೆ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ 10 ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೂ ಇದೇ ವೇಳೆ ಸಿದ್ದರಾಮಯ್ಯ ಚಾಲನೆ ನೀಡಿದರು. \ No newline at end of file diff --git a/eesanje/url_46_18_10.txt b/eesanje/url_46_18_10.txt new file mode 100644 index 0000000000000000000000000000000000000000..958da822dde4fe1ab701b53ced06961256d8b4b0 --- /dev/null +++ b/eesanje/url_46_18_10.txt @@ -0,0 +1,11 @@ +ಸಿಎಂ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ +ಬೆಂಗಳೂರು,ಸೆ.14-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ 15 ನಿವೇಶನ ಪಡೆದಿರುವುದು ಒಂದು ಭಾಗವಾದರೆ, ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಆರೋಪಿಸಿದರು. +ಮಾತೆತ್ತಿದರೆ ತಮದು ತೆರೆದ ಪುಸ್ತಕ ಎನ್ನುವ ಅವರು, ಮನೆ ಕಟ್ಟಿದ್ದ ಜಾಗ ಯಾರದೆಂಬುದನ್ನು ಹೇಳಲಿ. ಸಾಕಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಮನೆ ಕಟ್ಟಿದ್ದರು. ಆ ಮನೆ ಮಾರಾಟವಾಗಿದ್ದರೂ ಇದು ಯಾರ ಸ್ವಾಧೀನದಲ್ಲಿದೆ ಎಂಬುದು ಗೊತ್ತಿದೆ, ಈ ಸಂಬಂಧ ದಾಖಲೆಗಳು ತಮ ಬಳಿ ಇವೆ ಎಂದು ಹೇಳಿದರು. +ಆಕ್ರೋಶ : ರೈತರ ಹೆಸರಿನಲ್ಲಿ ಗ್ರಾಹಕರಿಗೆ ಹೊರೆಯಾಗುವಂತೆ ಹಾಲಿನ ದರ ಹೆಚ್ಚಳ ಮಾಡಲು ರಾಜ್ಯಸರ್ಕಾರ ಮುಂದಾಗಿದೆ. ಆದರೆ ವಿವಿಧ ಜಿಲ್ಲೆಗಳಲ್ಲಿ ಪ್ರತಿ ಲೀಟರ್‌ಗೆ ಒಂದೂವರೆಯಿಂದ ಎರಡು ರೂಪಾಯಿವರೆಗೂ ಕಡಿಮೆ ಮಾಡಲಾಗಿದೆ. ರೈತರ ಹಿತ ಕಾಪಾಡುವ ಸರ್ಕಾರ ಏಕೆ ರೈತರ ಹಾಲಿನ ಖರೀದಿ ದರವನ್ನು ಕಡಿಮೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಾಲಿನ ದರ ಏರಿಕೆಯಿಂದ ರೈತರಿಗೂ ಅನುಕೂಲವಿಲ್ಲ. ಗ್ರಾಹಕರಿಗೂ ಲಾಭವಿಲ್ಲ. ಆದರೆ ಸರ್ಕಾರ ಮಾತ್ರ ಹಾಲಿನ ದರ ಏರಿಕೆ ಮಾಡುತ್ತಿದೆ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡಿಯೂರಪ್ಪ ಅವರು ಪ್ರತಿ ಲೀಟರ್‌ ಹಾಲಿಗೆ ಎರಡು ರೂಪಾಯಿ ಪ್ರೋತ್ಸಾಹ ಧನ ನೀಡುವುದನ್ನು ಪ್ರಾರಂಭಿಸಿದರು. ಆನಂತರ 5 ರೂಪಾಯಿಗೆ ಏರಿಕೆಯಾಗಿತ್ತು. ತಾವು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅದನ್ನು ಪ್ರತೀ ಲೀಟರ್‌ಹಾಲಿಗೆ 6 ರೂ. ಪ್ರೋತ್ಸಾಹಧನ ನೀಡಲು ತೀರ್ಮಾನಿಸಲಾಗಿತ್ತು. ಅಷ್ಟರಲ್ಲಿ ಮೈತ್ರಿ ಸರ್ಕಾರವನ್ನೇ ಪತನಗೊಳಿಸಿದರು ಎಂದರು. +ರೈತರ ಸಾಲಮನ್ನಾ ಮಾಡಿದವರು ಯಾರು?, ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಶಕ್ತಿ ತುಂಬಿದರು. ಇಷ್ಟಾದರೂ ರೈತರಿಗೆ ಏನು ಮಾಡಿದ್ದೀರಿ ಎಂದು ಕೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಓಲೈಕೆ ರಾಜಕಾರಣದ ಬಗ್ಗೆ ಎಚ್ಚರಿಕೆಯಿಂದ ಇರಿ:ನಿನ್ನೆ ನಾಗಮಂಗಲಕ್ಕೆ ಭೇಟಿ ನೀಡಿದ್ದು, ಸರ್ವಜನಾಂಗದ ಶಾಂತಿಯ ತೋಟ ನೆಮದಿಯಿಂದ ಇರಬೇಕೆಂಬ ಉದ್ದೇಶದಿಂದಲೇ ಹೊರತು ಬೆಂಕಿ ಹಚ್ಚಲು ಹೋಗಿರಲಿಲ್ಲ. ನಾಗಮಂಗಲದ ಎರಡೂ ಸಮುದಾಯದವರನ್ನು ಭೇಟಿ ಮಾಡಿ ಅವರ ಸಂಕಷ್ಟವನ್ನು ಆಲಿಸಿದ್ದೇನೆ. ಓಲೈಕೆ ರಾಜಕಾರಣ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. +ನಾಗಮಂಗಲದಲ್ಲಿ ಸ್ಥಳ ಪರಿಶೀಲನೆ ಮಾಡಿ ಆಗಿರುವ ಅನಾಹುತದ ಬಗ್ಗೆ ಮಾಹಿತಿ ಪಡೆದಿದ್ದೇನೆ. ನಾಡಿನ ಜನತೆಗೆ ಕೈ ಜೋಡಿಸಿ ಮನವಿ ಮಾಡುತ್ತೇನೆ. ನಮದು ಪ್ರಗತಿ ಪರ ರಾಜ್ಯ, ಓಲೈಕೆ ಮಾಡುವವರ ಬಗ್ಗೆ ಎಚ್ಚರಿಕೆ ವಹಿಸಿ ಎಂದರು. +ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸಲಾಗುತ್ತಿಲ್ಲ. ಕರ್ನಾಟಕಕ್ಕೆ ಬಂದರೆ ಸಹಿವುದಿಲ್ಲ, ಮುಗಿದೇ ಹೋಯಿತು ಎನ್ನುತ್ತಿದ್ದರು. ಅಂತಹ ಸಂದರ್ಭದಲ್ಲೇ ಕೇಂದ್ರ ಸಚಿವನಾಗಿರುವುದು ಅವರಿಗೆ ನೋವು ತಂದಿದೆ. ಇದಕ್ಕೆ ಔಷಧಿಯನ್ನು ಎಲ್ಲಿಂದ ತರಲಿ ಎಂದು ಪರೋಕ್ಷವಾಗಿ ಕಾಂಗ್ರೆಸ್‌‍ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. +ವಾರಕ್ಕೊಮೆ ಬರುವುದು ನಾನು ಗಲಾಟೆ ಮಾಡಿಸುವುದಕ್ಕಲ್ಲ, ಯಾರ್ಯಾರಿಗೆ, ಯಾವ್ಯಾವಾಗ ಧಮ್ಕಿ ಹಾಕಿ ಆಸ್ತಿಗಳನ್ನು ಲೂಟಿ ಮಾಡಿದ್ದಾರೆ, ಅವರ ಹಿನ್ನೆಲೆ ಏನು ಎಂದು ಜಗಜ್ಜಾಹೀರಾಗಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರ ಹೇಳಿಕೆಗೆ ತಿರುಗೇಟು ನೀಡಿದರು.ಮಾಗಡಿ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ, ನಾನೇನು ಮಾಡಿದ್ದೇನೆಂದು ಜನರೇ ಉತ್ತರ ಕೊಡುತ್ತಾರೆ. 2009 ರಿಂದ 2013 ರ ನಡುವೆ ನಡೆದ ಅವ್ಯವಹಾರವನ್ನು ಏಕೆಮುಚ್ಚಿ ಹಾಕಿದರು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_18_11.txt b/eesanje/url_46_18_11.txt new file mode 100644 index 0000000000000000000000000000000000000000..0bfb444b8484070f056f1b468f7729dc4af4ba3f --- /dev/null +++ b/eesanje/url_46_18_11.txt @@ -0,0 +1,7 @@ +ಹಾಲಿನ ದರ ಹೆಚ್ಚಳದ ಮುನ್ಸೂಚನೆ ನೀಡಿದ ಸಚಿವ ಕೆ.ಎನ್.ರಾಜಣ್ಣ + . . +ತುಮಕೂರು, ಸೆ.14– ರಾಜ್ಯದ ರೈತರಿಗೆ ಈಗಾಗಲೇ ಪ್ರತಿ ಲೀಟರ್‌ ಹಾಲಿಗೆ 31ರೂ.ಗಳಿಗೆ ನೀಡಲಾಗುತ್ತಿದೆ ಹಾಗೂ ಗ್ರಾಹಕರಿಗೆ ಒಂದು ಲೀಟರ್ಗೆ 41ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೀಗಿರುವಾಗ ದರ ಪರಿಷ್ಕರಿಸುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ತಿಳಿಸಿದರು. +ಬಿಸಿಸಿ ಬ್ಯಾಂಕ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಿ ರೈತರಿಗೆ ನೀಡಲಾಗುವುದು. ಶೂನ್ಯ ಬಡ್ಡಿ ದರದಲ್ಲಿ 50 ಸಾವಿರದವರೆಗೆ ಅಲ್ಪಾವಧಿ ಸಾಲವನ್ನು ನೀಡಲಾಗುವುದು. ಅಲ್ಪಾವಧಿ, ಮಧ್ಯಮಾವಧಿ ಸಾಲ 15 ಲಕ್ಷ ರೂ. ವರೆಗೆ, ಶೇ.3ರ ಬಡ್ಡಿದರದಲ್ಲಿ ನೀಡಲಾಗುತ್ತಿದೆ. +ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್‌ 1630 ಕೋಟಿ ಠೇವಣಿಯನ್ನು ಸಂಗ್ರಹ ಮಾಡಿದೆ. ಸಾವಿರ ಕೋಟಿ ರೂ. ಕೃಷಿಯೇತರ ಸಾಲ, 759 ಕೋಟಿ ಕೃಷಿ ಸಾಲ ನೀಡಿದೆ. ಅಪೆಕ್‌್ಸ ಬ್ಯಾಂಕ್‌ನಿಂದ ತೆಗೆದುಕೊಂಡ ಸಾಲವನ್ನು ಸಹ ಬ್ಯಾಂಕ್‌ ಮರುಪಾವತಿ ಮಾಡಲಾಗುತ್ತಿದೆ ಎಂದರು. +ಮುಂದಿನ ದಿನಗಳಲ್ಲಿ ವಿಎಸ್‌‍ಎಸ್‌‍ಎನ್‌ಗಳ ಮೂಲಕವೇ ಚಿನ್ನಾಭರಣ ಸಾಲವನ್ನು ನೀಡಲು ಸಹಕಾರಿ ಬ್ಯಾಂಕ್‌ಗಳಿಗೂ ತಿಜೋರಿ ನೀಡಲಾಗುತ್ತಿದೆ. ರೈತರಿಗೆ ಶೇ.11 ಹಾಗೂ ಇತರರಿಗೆ ಶೇ.12ರ ಬಡ್ಡಿ ದರದಲ್ಲಿ ಚಿನ್ನಾಭರಣ ಸಾಲ ನೀಡಲಾಗುವುದು. ಇದರಿಂದ ಜಿಲ್ಲೆಯಲ್ಲಿರುವ ಪಾನ್‌ ಬ್ರೋಕರ್‌ಗಳ ಸಂಖ್ಯೆ ಇಳಿಮುಖವಾಗಲಿದೆ ಎಂದರು. +ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಯಾಗುವುದಿಲ್ಲ. ಅವರೇ ಮುಂದುವರೆಯಲಿ ದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಕಾಂಗ್ರೆಸ್‌‍ ಹೈಕಮಾಂಡ್‌ ಸಿದ್ದರಾಮಯ್ಯನವರ ಪರ ಇದೆ. ಈ ವಿಚಾರದಲ್ಲಿ ಹೈಕಮಾಂಡ್‌ ಬಲಿಷ್ಠವಾಗಿದೆ. ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಶ್ರಮಿಸುತ್ತೇನೆ. ಏಕಶಿಲಾ ಬೆಟ್ಟಕ್ಕೆ ಕೇಬಲ್‌ ಕಾರ್‌ ಅಳವಡಿಸುವ ಕೆಲಸ ನನ್ನ ಅವಧಿಯಲ್ಲೇ ಮುಗಿಸುತ್ತೇನೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರಿಗಳು ಇದ್ದರು. \ No newline at end of file diff --git a/eesanje/url_46_18_12.txt b/eesanje/url_46_18_12.txt new file mode 100644 index 0000000000000000000000000000000000000000..da2b98ad8958af2ee8d2375eacca7dc23c553d39 --- /dev/null +++ b/eesanje/url_46_18_12.txt @@ -0,0 +1,6 @@ +ಕಾರಾಗೃಹ ಇಲಾಖೆಗೆ ಮೇಜರ್‌ ಸರ್ಜರಿ + +ಬೆಂಗಳೂರು, ಸೆ.14-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಕಾರಾಗೃಹದ 43 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. +ಸರ್ಕಾರ ಕಾರಾಗೃಹ ಇಲಾಖೆಗೆ ಸರ್ಜರಿ ಮಾಡಿದ್ದು, ಜೈಲರ್‌ಗಳು, ಮುಖ್ಯ ವೀಕ್ಷಕರು, ವೀಕ್ಷಕರು, ವಾರ್ಡರ್‌ ಸೇರಿದಂತೆ 43 ಮಂದಿ ಸಿಬ್ಬಂದಿಯವರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ವರ್ಗಾವಣೆ ಮಾಡಿದೆ. +ದರ್ಶನ್‌ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಫೋಟೊಗಳು ಬಹಿರಂಗವಾಗುತ್ತಿದ್ದಂತೆ ಸರ್ಕಾರ ಭಾರಿ ಮುಜುಗರಕ್ಕೆ ಈಡಾಗಿತ್ತು. ಈ ನಡುವೆ ಕಾರಾಗೃಹದ 9 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಲೆದಂಡವು ಆಗಿದೆ. +ಬಳಿಕ ನಟ ದರ್ಶನ್‌ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕ್ಕೆ ಹಾಗೂ ಇತರರನ್ನು ಬೇರೆಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ದರ್ಶನ್‌ ಜಾಮೀನಿಗಾಗಿ ಸದ್ಯದಲ್ಲೇ ಅರ್ಜಿ ಸಲ್ಲಿಸಲಿದ್ದಾರೆ. diff --git a/eesanje/url_46_18_2.txt b/eesanje/url_46_18_2.txt new file mode 100644 index 0000000000000000000000000000000000000000..448547a8944e7a457d578bb2ec2c9bd97927a524 --- /dev/null +++ b/eesanje/url_46_18_2.txt @@ -0,0 +1,8 @@ +ಸಿಎಂ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿ ಬಂದ ಅಪರಿಚಿತ, ಕೆಲಕಾಲ ಆತಂಕ + +ಬೆಂಗಳೂರು,ಸೆ.15-ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಅಪರಚಿತನೊಬ್ಬ ಬ್ಯಾರಿಕೇಡ್‌ ಹಾರಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿದ್ದ ವೇದಿಕೆಯತ್ತ ನುಗ್ಗಿದ್ದು, ಭಾರಿ ಆತಂಕ ಮೂಡಿಸಿದ್ದು, ಭದ್ರತಾ ವ್ಯವಸ್ಥೆಗೆ ಸವಾಲೊಡ್ಡಿತ್ತು. +ವಿಧಾನಸೌಧದ ಪೂರ್ವದ್ವಾರದಲ್ಲಿನ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮಕ್ಕಾಗಿ ಬೃಹತ್‌ ವೇದಿಕೆಯನ್ನು ನಿರ್ಮಿಸಲಾಗಿತ್ತು. ಸಾಕಷ್ಟು ಭದ್ರತೆಯನ್ನು ಆಯೋಜಿಸಲಾಗಿತ್ತು. ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಭಾಷಣ ಮಾಡುತ್ತಿದ್ದರು. ಈ ವೇಳೆ ಆಕಾಶನೀಲಿ ಅಂಗಿ ಹಾಗೂ ಕಾಖಿ ಬಣ್ಣದ ಪ್ಯಾಂಟ್‌ ಧರಿಸಿದ್ದ ವ್ಯಕ್ತಿಯೊಬ್ಬ ಕನ್ನಡದ ಶಾಲು ಧರಿಸಿಕೊಂಡಿದ್ದು, ಸಾರ್ವಜನಿಕರ ಗ್ಯಾಲರಿಯಿಂದ ಏಕಾಏಕಿ ವೇದಿಕೆಯತ್ತ ನುಗ್ಗಿದ್ದಲ್ಲದೆ, ಎತ್ತರದ ವೇದಿಕೆ ಏರಲು ನೆಗೆದಿದ್ದಾನೆ. ತಕ್ಷಣವೇ ಎಚ್ಚೆತ್ತುಕೊಂಡು ಅಂಗರಕ್ಷಕರು ವೇದಿಕೆ ಯಲ್ಲಿದ್ದ ಗಣ್ಯರ ಬಳಿ ಬರಲು ಸಾಧ್ಯವಾಗದಂತೆ ಅಪರಿಚಿತ ವ್ಯಕ್ತಿಯನ್ನು ಆರಂಭದಲ್ಲೇ ನಿರ್ಬಂಧಿಸಿದ್ದಾರೆ. +ಈ ಹಂತದಲ್ಲಿ ವ್ಯಕ್ತಿ ತನ್ನ ಕೈಯಲ್ಲಿದ್ದ ಶಾಲನ್ನು ಮುಖ್ಯಮಂತ್ರಿ ಸಿದ್ದರಾಮಯ, ವಿಧಾನಸಭಾ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರುಗಳಾದ ಪ್ರಿಯಾಂಕ್‌ ಖರ್ಗೆ, ಕೆ.ಜೆ.ಜಾರ್ಜ್‌, ದಿನೇಶ್‌ ಗುಂಡೂರಾವ್‌ ಅವರುಗಳ ಕಡೆಗೆ ಎಸೆದಿದ್ದಾನೆ. ಅದನ್ನು ವೇದಿಕೆಯಲ್ಲಿದ್ದ ಕೆಲವು ಅಧಿಕಾರಿಗಳು ತಡೆದಿದ್ದಾರೆ. +ಏಕಾಏಕಿ ಅಪರಿಚಿತ ವ್ಯಕ್ತಿ ನುಗ್ಗಿಬಂದಿದ್ದು, ಒಂದು ಕ್ಷಣ ಆಘಾತಕಾರಿಯಾಗಿ ಗಲಿಬಿಲಿ ಮೂಡಿಸಿದೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆಯಲ್ಲಿ ಯಾವುದೋ ಕಾಗದಪತ್ರವನ್ನು ಗಮನಿಸುತ್ತಿದ್ದರು. ಹೀಗಾಗಿ ಅವರು ವೇದಿಕೆಯತ್ತ ನುಗ್ಗಿಬಂದ ವ್ಯಕ್ತಿಯನ್ನು ಗುರುತಿಸಲು ಸಮಯ ಬೇಕಾಯಿತು. ಉಳಿದಂತೆ ಕೆಲವರು ಆತಂಕದಿಂದ ದಿಢೀರನೇ ಮೇಲೆ ಎದ್ದು ನಿಂತಿದ್ದರು. +ಪೊಲೀಸರು ಅಪರಿಚಿತ ವ್ಯಕ್ತಿಯನ್ನು ಹಿಡಿದು ಎಳೆದೊಯ್ದರು. ತಕ್ಷಣವೇ ಪೊಲೀಸರು ಅಪರಿಚಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಪರಿಚಿತನ ಕೈಯಲ್ಲಿ ಶಾಲು ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳೂ ಕಂಡುಬರಲಿಲ್ಲ. ವ್ಯಕ್ತಿಯ ಹೆಸರಿದ್ದ ಶಾಲನ್ನು ಸಿಬ್ಬಂದಿಗಳು ತೆಗೆದು ಸಿದ್ದರಾಮಯ್ಯ ಅವರ ಮುಂದೆಯೇ ಇಟ್ಟಿದ್ದರು. ನಂತರ ಅದನ್ನು ಗನ್‌ಮ್ಯಾನ್‌ಗಳು ಪಕ್ಕಕ್ಕೆ ಎತ್ತಿಟ್ಟರು. +ಅಪರಿಚಿತ ವ್ಯಕ್ತಿಯನ್ನು ಎಳೆದೊಯ್ಯುವಾಗ ಆತ ಧರಿಸಿದ್ದ ಶಾಲು ಕೂಡ ಬಿದ್ದುಹೋಯಿತು. ಒಂದು ಕ್ಷಣ ಈ ಘಟನೆ ಎಲ್ಲರನ್ನೂ ದಿಗೂಢರನ್ನಾಗಿ ಮಾಡಿತು.ಉತ್ಕೃಷ್ಟವಾದ ಭದ್ರತಾ ವಲಯವಾಗಿರುವ ವಿಧಾನಸೌಧ ಮುಂಭಾಗದಲ್ಲಿಯೇ ಈ ರೀತಿಯ ಘಟನೆ ನಡೆದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.ಅಪರಿಚಿತನನ್ನು ವಶಕ್ಕೆ ಪಡೆದ ಬಳಿಕ ಕಾರ್ಯಕ್ರಮ ಎಂದಿನಂತೆ ಮುಂದುವರೆದಿದ್ದು, ಯಾವುದೇ ವಿಚಲಿತ ವಾತಾವರಣ ಕಂಡುಬರಲಿಲ್ಲ. \ No newline at end of file diff --git a/eesanje/url_46_18_3.txt b/eesanje/url_46_18_3.txt new file mode 100644 index 0000000000000000000000000000000000000000..ff04b37e65fcca0182a4590ff55a1b96b569b497 --- /dev/null +++ b/eesanje/url_46_18_3.txt @@ -0,0 +1,7 @@ +ಬಿಜೆಪಿ ಶಾಸಕ ಮುನಿರತ್ನ ಎರಡು ದಿನ ಪೊಲೀಸ್‌‍ ಕಸ್ಟಡಿಗೆ + +ಬೆಂಗಳೂರು,ಸೆ.15– ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ವೈಯಾಲಿಕಾವಲ್‌ ಠಾಣೆ ಪೊಲೀಸರು ಬಂಧಿಸಿರುವ ಆರ್‌ಆರ್‌ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ನೀಡಿದ್ದಾರೆ. +ಮಾಜಿ ಕಾರ್ಪೋರೇಟರ್‌ ವೇಲು ನಾಯ್ಕರ್‌ ಅವರು ನೀಡಿರುವ ಪ್ರಕರಣದಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದರು. ವೈಯಾಲಿಕಾವಲ್‌ ಠಾಣೆಯಲ್ಲಿ ಅವರ ವಿರುದ್ಧ ಎರಡು ಪ್ರಕರಣಗಳು ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದರು. ಅವರ ಬೆನ್ನು ಹತ್ತಿದ ಪೊಲೀಸರು ಅವರ ಮೊಬೈಲ್‌ ಲೊಕೇಶನ್‌ ಆಧರಿಸಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗ್ರಾಮದ ಬಳಿ ಅವರನ್ನು ವಶಕ್ಕೆ ತೆಗೆದುಕೊಂಡರು. +ನಂತರ ಅವರನ್ನು ಬೆಂಗಳೂರಿಗೆ ಕರೆತಂದು ಬಂಧಿಸಿ ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಒಂದು ವಾರ ಕಾಲ ಪೊಲೀಸ್‌‍ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಆಗ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ದಿನಗಳ ಕಾಲ ಅವರನ್ನು ಪೊಲೀಸ್‌‍ ಕಸ್ಟಡಿಗೆ ನೀಡಿದರು. +ಜಾತಿ ನಿಂದನೆ ಮಾಡಿರುವುದಾಗಿ ಬಿಬಿಎಂಪಿಯ ಮಾಜಿ ಸದಸ್ಯ ವೇಲು ನಾಯ್ಕರ್‌ ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. +ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ 30 ಲಕ್ಷ ರೂ. ಕಮೀಷನ್‌ ಕೊಡುವಂತೆ ಒತ್ತಾಯಿಸಿ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ಸಹ ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. \ No newline at end of file diff --git a/eesanje/url_46_18_4.txt b/eesanje/url_46_18_4.txt new file mode 100644 index 0000000000000000000000000000000000000000..7a22d13964f53586cf0e86e519f2819ac08f4b15 --- /dev/null +++ b/eesanje/url_46_18_4.txt @@ -0,0 +1,7 @@ +ದುರಹಂಕಾರ ಬಿಟ್ಟು ತೆಪ್ಪಗಿರುವಂತೆ ನಟ ದರ್ಶನ್‌ಗೆ ಜೈಲರ್‌ ಎಚ್ಚರಿಕೆ + +ಬೆಂಗಳೂರು, ಸೆ.15-ಜೈಲಿನೊಳಗೆ ನೀಡಿರುವ ಸೌಲಭ್ಯಗಳ ವಿಚಾರದಲ್ಲಿ ಗಲಾಟೆ ಸಷ್ಟಿಸಬೇಡಿ ಎಂದು ಚಿತ್ರ ನಟ ದರ್ಶನ್‌ಗೆ ಬಳ್ಳಾರಿ ಕಾರಾಗಹದ ಜೈಲರ್‌ ಎಚ್ಚರಿಕೆ ನೀಡಿದ್ದಾರೆ. +ನೀವು ಈ ದುರಹಂಕಾರದ ಮತ್ತು ಹಠಮಾರಿ ಧೋರಣೆಯನ್ನು ಮುಂದುವರಿಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜೈಲರ್‌ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. +ಜೈಲಿನೊಳಗೆ ಇರುವುದನ್ನು ಮಾತ್ರ ನೀಡಬಹುದು ಎಂದು ಜೈಲರ್‌ ತಿಳಿಸಿದ್ದರಿಂದ ದರ್ಶನ್‌ ಅವರು ಜೈಲು ಸಿಬ್ಬಂದಿಯೊಂದಿಗೆ ಆಗಾಗ್ಗೆ ವಾಗ್ವಾದ ನಡೆಸುತ್ತಿದ್ದರು ಮತ್ತು ಹೆಚ್ಚುವರಿ ಸೌಲಭ್ಯಗಳು ಬೇಕಾದರೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ. +ದರ್ಶನ್‌ ಬಂಧನದಲ್ಲಿ ಅವರ ನಡವಳಿಕೆ ಮತ್ತು ಜೈಲು ನಿಯಮಗಳಿಗೆ ಬದ್ಧವಾಗಿರುವುದನ್ನು ನ್ಯಾಯಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಜೈಲರ್‌ ನೆನಪಿಸಿದ್ದಾರೆ. ಜೈಲು ಅಧಿಕಾರಿಗಳೊಂದಿಗೆ ಸಹಕರಿಸುವ ಬದಲು ದರ್ಶನ್‌ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಜೈಲರ್‌ ಅವರಿಗೆ ತಿಳಿಸಿದ್ದಾರೆ. +ಜಾಮೀನು ಅರ್ಜಿ ಇನ್ನೂ ನ್ಯಾಯಾಲಯಕ್ಕೆ ಸಲ್ಲಿಕೆಯಾಗದ ಕಾರಣ ದರ್ಶನ್‌ ಜೈಲಿನಲ್ಲಿ ಹತಾಶೆಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ವಿಶಿಷ್ಟ ಪ್ರಕರಣಗಳಲ್ಲಿ, ಕೊಲೆ ಆರೋಪಿಗಳಿಗೆ 90 ದಿನಗಳ ನಂತರ ಅಥವಾ ಚಾರ್ಜ್‌ ಶೀಟ್‌ ಸಲ್ಲಿಸಿದ ನಂತರ ಜಾಮೀನು ನೀಡಲಾಗುತ್ತದೆ. ಆದರೆ, ದರ್ಶನ್‌ ಪ್ರಕರಣದಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆ ವೇಳೆ ಬೆಂಗಳೂರು ಕಾರಾಗಹದಲ್ಲಿ ಐಷಾರಾಮಿ ಸೌಲಭ್ಯ ಪಡೆಯುತ್ತಿರುವ ಫೋಟೋಗಳು ಹರಿದಾಡುತ್ತಿದ್ದ ಪರಿಣಾಮ ಅವರ ಜಾಮೀನು ಅರ್ಜಿ ವಿಚಾರಣೆ ವಿಳಂಬವಾಗಿತ್ತು. \ No newline at end of file diff --git a/eesanje/url_46_18_5.txt b/eesanje/url_46_18_5.txt new file mode 100644 index 0000000000000000000000000000000000000000..5c55298e0160da22e2208167f40f0321090890b3 --- /dev/null +++ b/eesanje/url_46_18_5.txt @@ -0,0 +1,6 @@ +2045ರ ವೇಳೆಗೆ ಭಾರತದಲ್ಲಿ ದುಡಿಯುವ ವಯಸ್ಸಿನ ಜನಸಂಖ್ಯೆ 179 ಮಿಲಿಯನ್‌ಗೆ ಏರಿಕೆ + 179 2045 +ನವದೆಹಲಿ,ಸೆ.15-ಮುಂಬರುವ 2045ರ ವೇಳೆಗೆ ದೇಶದ ದುಡಿಯುವ ವಯಸ್ಸಿನ ಜನಸಂಖ್ಯೆ 179 ಮಿಲಿಯನ್‌ ತಲುಪಲಿದೆ ಎಂದು ಅಂದಾಜಿಸಲಾಗಿದೆ.ಇದು ದೇಶದ ಆರ್ಥಿಕ ಬೆಳವಣಿಗೆಗೆ ಗಮನಾರ್ಹವಾದ ಬೆನ್ನೆಲುಬಾಗಬಹುದು, ವಿಶೇಷವಾಗಿ ದೇಶದ ಹಲವಾರು ಭಾಗಗಳಲ್ಲಿ ಜನಸಂಖ್ಯಾ ವಿಶ್ವಕ್ಕೆ ಪ್ರತಿಕೂಲವಾಗಿದೆ ಎಂದು ಹೊಸ ವರದಿ ಹೇಳಿದೆ. +ಈ ಸಮಯದಲ್ಲಿ, ಭಾರತದ ದುಡಿಯುವ ವಯಸ್ಸಿನ ಜನಸಂಖ್ಯೆಯು ಸುಮಾರು 961 ಮಿಲಿಯನ್‌ ಮತ್ತು ನಿರುದ್ಯೋಗ ದರವು ಐದು ವರ್ಷಗಳ ಕನಿಷ್ಠ ಮಟ್ಟದಲ್ಲಿದೆ.ಭಾರತದ ದುಡಿಯುವ ವಯಸ್ಸಿನ ಜನಸಂಖ್ಯೆಯು (ವಯಸ್ಸು 25-64) ಒಟ್ಟು ಜನಸಂಖ್ಯೆಯ ಅನುಪಾತವಾಗಿ ಏರುತ್ತಿದೆ, ಇದು ಉಳಿತಾಯ ಮತ್ತು ಹೂಡಿಕೆಗಳಿಗೆ ಧನಾತಕವಾಗಿರುತ್ತದೆ ಎಂದು ಜಾಗತಿಕ ಹೂಡಿಕೆ ಸಂಸ್ಥೆ ಜೆಫರೀಸ್‌‍ ಹೇಳಿದೆ. +ಭಾರತದಲ್ಲಿ ಮಹಿಳೆಯರ ಕಾರ್ಮಿಕ ಬಲದ ಭಾಗವಹಿಸುವಿಕೆ ದರಗಳಲ್ಲಿ ಏರಿಕೆ ಪ್ರಾರಂಭವಾಗಿದೆ, ಇದು ಜನಸಂಖ್ಯೆಯ ಜೊತೆಗೆ ಕಾರ್ಮಿಕ ಬಲದ ವಿಸ್ತರಣೆಗೆ ಪ್ರಮುಖ ಪ್ರೇರಕ ಶಕ್ತಿಯಾಗಿದೆ. +2030 ರ ವೇಳೆಗೆ ಕಾರ್ಮಿಕ ಬಲದ ಸೇರ್ಪಡೆಯು 6 ಮಿಲಿಯನ್‌ಗೆ ನಿಧಾನವಾಗುವ ನಿರೀಕ್ಷೆಯಿದೆ ಆದರೆ ಕಷಿ ಉದ್ಯೋಗಗಳಿಂದ ಈ ಅಂತರವನ್ನು ತುಂಬಬೇಕು ಎಂದು ಜೆಫರೀಸ್‌‍ ತನ್ನ ಇತ್ತೀಚಿನ ಟಿಪ್ಪಣಿಯಲ್ಲಿ ಹೇಳಿದೆ. \ No newline at end of file diff --git a/eesanje/url_46_18_6.txt b/eesanje/url_46_18_6.txt new file mode 100644 index 0000000000000000000000000000000000000000..093f7b1a04aa2ddda75a3c4254480d15cd03dbb7 --- /dev/null +++ b/eesanje/url_46_18_6.txt @@ -0,0 +1,11 @@ +ಸಮಾಜವನ್ನು ಒಡೆಯುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳ ಷಡ್ಯಂತ್ರ ಸೋಲಿಸೋಣ : ಸಿಎಂ ಕರೆ + 2,500-- ' ' +ಬೆಂಗಳೂರು,ಸೆ.15- ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್‌ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು. +ನಮ ದೇಶದ ಆಧ್ಯಾತಿಕ ಜ್ಞಾನಿಗಳಾದ ಬುದ್ದ, ಬಸವಣ್ಣನ ಕಾಲದಲ್ಲೇ ನಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅಲ್ಲಮಪ್ರಭುಗಳ ಆಧ್ಯಾತಿಕ ಸಾಹಿತ್ಯಿಕ ಆಸ್ಥಾನವಾದ ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದು ಹೇಳಿದರು. +1949ರ ನವೆಂಬರ್‌ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಅವರು, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು. +ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮಾನವೀಯ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ ಮುನ್ನಡೆಸಿದ್ದೇವೆ ಎಂದು ಹೇಳಿದರು.ನಮ ರಾಷ್ಟ್ರಗೀತೆ ಮತ್ತು ನಮ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮದಾಗಬೇಕು ಎಂದರು. +ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ ಎಂದು ಕರೆ ನೀಡಿದರು. +ಏಕತೆ ಭಜನೆ ಮಾಡುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದರು. +ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಛಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು ಎಂದು ಹೇಳಿದರು.20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದರು. +ಉದ್ಘಾಟನೆ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು. +ಶಾಸಕರಾದ ರಿಜ್ವಾನ್‌ ಅರ್ಷದ್‌ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್‌.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಕೆ.ಜೆ.ಜಾರ್ಜ್‌, ದಿನೇಶ್‌ ಗುಂಡೂರಾವ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್, ವಿಧಾನ ಪ.ರಿಷತ್‌ ಸದಸ್ಯರಾದ ಸಲೀಂ ಅಹಮದ್‌, ಯು.ಬಿ.ವೆಂಕಟೇಶ್‌ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_18_7.txt b/eesanje/url_46_18_7.txt new file mode 100644 index 0000000000000000000000000000000000000000..ebf423da48041b2fd342c4973b4ce720c1e29c3d --- /dev/null +++ b/eesanje/url_46_18_7.txt @@ -0,0 +1,5 @@ +ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ + +ಕೊಡಗು,ಸೆ.15-ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿಯಾಗಿದೆ.ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಈ ಬಾರಿಯ ಪವಿತ್ರ ತೀರ್ಥೋದ್ಭವ ಅ.17 ಮುಂಜಾನೆ 7.40ರ ಶುಭಲಗ್ನದಲ್ಲಿ ನೆರವೇರಲಿದೆ. +ತೀರ್ಥೋದ್ಭವ ಹಿನ್ನೆಲೆಯಲ್ಲಿ ಸೆ.26 ರಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಅಂದು ಬೆಳಿಗ್ಗೆ 8.45 ಕ್ಕೆ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯಕ್ರಮ ನಡೆಯಲಿದ್ದು, ಅ.4 ರ ಬೆಳಿಗ್ಗೆ 10.20ಕ್ಕೆ ಆಜ್ಞಾ ಮುಹೂರ್ತ, 14ರ ಬೆಳಿಗ್ಗೆ 11.35ಕ್ಕೆ ಅಕ್ಷಯಪಾತ್ರೆ ಇರಿಸುವುದು, ಅದೇ ದಿನ ಸಂಜೆ 4.15ಕ್ಕೆ ಕಾಣಿಕೆಡಬ್ಬ ಇಡುವ ಕಾರ್ಯಕ್ರಮ ನಡೆಯಲಿದೆ ಎಂದು ಧರ್ಮದಾಯದತ್ತಿ ಇಲಾಖೆ ತಿಳಿಸಿದೆ. +ತೀರ್ಥಕುಂಡಿಕೆಯಲ್ಲಿ ಅ.17 ರಂದು ಕಾವೇರಿ ಮಾತೆ ತೀರ್ಥರೂಪದಲ್ಲಿ ಉಗಮವಾಗಲಿದ್ದಾಳೆ. ಪ್ರತಿ ವರ್ಷ ಈ ಅದ್ಭುತ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. \ No newline at end of file diff --git a/eesanje/url_46_18_8.txt b/eesanje/url_46_18_8.txt new file mode 100644 index 0000000000000000000000000000000000000000..26c4d445a570a37e1da459f7e698a517398dde8f --- /dev/null +++ b/eesanje/url_46_18_8.txt @@ -0,0 +1,8 @@ +ನಾನು ಮನೆಯಲ್ಲಿ ಕೂರಲ್ಲ, ಜನಪರ ಹೋರಾಟ ಮಾಡುತ್ತೇನೆ : ದೇವೇಗೌಡರು + , : +ಬೆಂಗಳೂರು, ಸೆ.14-ನಾನು ಮನೆಯಲ್ಲಿ ಇನ್ನು ಸುಮ್ಮನೆ ಮಲಗುವುದಿಲ್ಲ. ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟವನ್ನು ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ.ಜೆಪಿ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಡೆಗಳಲ್ಲಿ ಪ್ರವಾಸವನ್ನು ಮಾಡುತ್ತೇನೆ. ಆಗಾಗ್ಗೆ ಪಕ್ಷದ ಕಚೇರಿಗೂ ಬರುತ್ತೇನೆ. ಎನ್‍ಡಿಎ ಮೈತ್ರಿ ಕೂಟದಲ್ಲಿ ನಾವು ಸೇರಿದ್ದು, ಜೆಡಿಎಸ್ ಪಕ್ಷ ಮೈತ್ರಿಗೆ ಯಾವುದೇ ಕಳಂಕ ತರುವುದಿಲ್ಲ ಎಂದರು. +ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಹಾಗೂ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕೂತು ಯಾವ ದೇವೇಗೌಡರು ಹೋರಾಟ ಮಾಡಿದ್ದರೋ ಅದೇ ದೇವೇಗೌಡರು ಈಗ ಮತ್ತೆ ಹೋರಾಟಕ್ಕೆ ಅಣಿಯಾಗಿ ನಿಂತಿದ್ದಾರೆ ಎಂದು ಹೇಳಿದರು. +62 ವರ್ಷ ಶಾಸಕನಾಗಿ, ವಿರೋಧ ಪಕ್ಷದ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ಮೂರು ತಿಂಗಳ ಕಾಲ ಮನೆಯಲ್ಲಿಯೇ ಮಲಗಿಸಿ ಬಿಟ್ರಿ ಎಂದು ಮಾರ್ಮಿಕವಾಗಿ ನುಡಿದ ಅವರು, ನಾನು ಈ ದೇಶದಲ್ಲಿ ತಲೆ ಮರೆಸಿಕೊಳ್ಳುವ ರಾಜಕಾರಣಿ ಆಗಿದ್ನಾ? ಎಂದು ಪ್ರಶ್ನಿಸಿದರು. +ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ಮೂರು ತಿಂಗಳ ಕಾಲ ಮನೆಯ ಬಳಿ ತುಂಬಾ ತೊಂದರೆ ತೆಗೆದುಕೊಂಡಿದ್ದೀರಿ. ದೇವೇಗೌಡರ ಮುಖದಲ್ಲಿ ಏನಾದರೂ ಬದಲಾವಣೆ ಆಗಿದೆಯೇ? ಇನ್ನು ಮುಂದೆ ದೇವೇಗೌಡರ ಹೋರಾಟ ಪ್ರಾರಂಭವಾಗುತ್ತದೆ ಎಂದರು. +ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಅವರು ಪ್ರತಿದಿನ ಪಕ್ಷದ ಕಚೇರಿಗೆ ಬರಲು ಆಗುವುದಿಲ್ಲ. ಅವರಿಗೆ ಜವಾಬ್ದಾರಿ ಹೆಚ್ಚು ಇರುತ್ತದೆ. ಆ ಕಾರಣಕ್ಕಾಗಿಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು ಹಾಗೂ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಸದಸ್ಯತ್ವ ಅಭಿಯಾನದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಅವರು ಹೇಳಿದರು. +ಪ್ರತಿ ಜಿಲ್ಲೆಗೆ ಹೋಗಿ ಸದಸ್ಯತ್ವದ ಬಗ್ಗೆ ಗಂಭೀರವಾಗಿ ಅಭಿಯಾನವನ್ನು ಅವರು ಮಾಡುತ್ತಿದ್ದಾರೆ. ಇದನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇನೆ ಎಂದು ಗೌಡರು ತಿಳಿಸಿದರು. \ No newline at end of file diff --git a/eesanje/url_46_18_9.txt b/eesanje/url_46_18_9.txt new file mode 100644 index 0000000000000000000000000000000000000000..33bec90165a9ea47f1b74fcdab9fba525da12b10 --- /dev/null +++ b/eesanje/url_46_18_9.txt @@ -0,0 +1,7 @@ +ರಾಹುಲ್‌ ಗಾಂಧಿ ಒಬ್ಬ ಅಪ್ರಬುದ್ಧ : ನಾರಾಯಣಸ್ವಾಮಿ ಕಿಡಿ + +ಬೆಂಗಳೂರು,ಸೆ.14- ರಾಹುಲ್‌ ಗಾಂಧಿಯವರು ನಾಯಕರಲ್ಲ. ಒಬ್ಬ ಅಪ್ರಬುದ್ಧ ವ್ಯಕ್ತಿ ಎಂದು ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಳು ಬಿದ್ದ ಮನೆಗೆ ಉಳಿದವನೇ ನಾಯಕ ಎಂಬಂತೆ ಅವರು ಮುಖಂಡರಾಗಿದ್ದಾರೆ. ನೆಹರೂ ಅವರು ತಾವು ಮೀಸಲಾತಿ ವಿರೋಧಿ ಎಂದಿದ್ದರು. ಇಂದಿರಾಗಾಂಧಿ, ರಾಜೀವ್‌ ಗಾಂಧಿಯವರೂ ಅದನ್ನೇ ಮುಂದುವರೆಸಿದ್ದರು. +ಈಗ ರಾಹುಲ್‌ ಗಾಂಧಿಯವರು ಈ ಪರಂಪರೆಯನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.ರಾಹುಲ್‌ ಗಾಂಧಿಯವರು ಲೋಕಸಭೆಯ ವಿಪಕ್ಷ ನಾಯಕರಾಗಿದ್ದು, ಅವರನ್ನು ನಾನು ಗೌರವಿಸಲೇಬೇಕು. ಈ ಗೌರವ ಬೇರೆ; ಭಾರತ ದೇಶದಲ್ಲಿ ತಾವು ಅಧಿಕಾರಕ್ಕೆ ಬಂದಾಗ ಮೀಸಲಾತಿಯನ್ನು ರದ್ದು ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅಮೆರಿಕದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿದರು. +ಕಾಂಗ್ರೆಸ್‌‍ ಪಕ್ಷ ದಲಿತ ವಿರೋಧಿಯಾಗಿತ್ತು; ಮೀಸಲಾತಿಯ ವಿರೋಧಿಯಾಗಿತ್ತು. ಆದರೆ, ವೋಟ್‌ ಬ್ಯಾಂಕಿಗಾಗಿ ಅವರು ತಾವು ಮೀಸಲಾತಿ, ಸಂವಿಧಾನದ ಪರ ಎಂದಿದ್ದರು ಎಂದು ನುಡಿದರು. ರಾಹುಲ್‌ ಗಾಂಧಿಯವರು ಹೋದಲ್ಲೆಲ್ಲ ಕೈಯಲ್ಲಿ ಹಿಡಿದ ಕೆಂಪು ಪುಸ್ತಕವನ್ನು ನಾವು ಬೈಬಲ್‌ ಅಂದುಕೊಂಡಿದ್ದೆವು. ಅದು ಸಂವಿಧಾನ ಎಂದರು. ನಾವು ದಲಿತ ಸಮುದಾಯದವರೆಲ್ಲ ಒಟ್ಟಾಗಿದ್ದೇವೆ. ಈಗ ಆ ಪುಸ್ತಕ ಅಲ್ಲಾಡಿಸಲಿ ಎಂದು ಸವಾಲು ಹಾಕಿದರು. +ಮೀಸಲಾತಿ ತೆಗೆಯಿರಿ ಬನ್ನಿ ನೋಡೋಣ. ನಿಮಗೆ ತಾಕತ್ತಿದ್ದರೆ ಮೀಸಲಾತಿ ತೆಗೆಯಿರಿ ನೋಡೋಣ. ನಮ ಪಕ್ಷದ ವಿರುದ್ಧ ಗೂಬೆ ಕೂರಿಸುತ್ತಿದ್ದೀರಲ್ಲವೇ? ಎಂದ ಅವರು, ಬಿಜೆಪಿ ಮೀಸಲಾತಿ ವಿರೋಧಿಯಲ್ಲ. ಅದನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. +ದಲಿತರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದ್ದು ನಾವು. ದಲಿತರ ಸಬಲೀಕರಣಕ್ಕೆ ನಾವು ಶಕ್ತಿ ತುಂಬಿದ್ದೇವೆ. ನೀವು ಎಸ್‌‍ಇಪಿ, ಟಿಎಸ್‌‍ಪಿ ಹಣ ಹೆಚ್ಚು ಕೊಟ್ಟದ್ದಾಗಿ ಹೇಳಿದಿರಿ. ಒಂದು ಕಡೆ ಲೆಕ್ಕ ತೋರಿಸಿ ಇನ್ನೊಂದು ಕಡೆ ಅದನ್ನೆಲ್ಲ ಕಿತ್ತುಕೊಂಡಿದ್ದೀರಿ ಎಂದು ಆಕ್ಷೇಪಿಸಿದರು. \ No newline at end of file diff --git a/eesanje/url_46_190_1.txt b/eesanje/url_46_190_1.txt new file mode 100644 index 0000000000000000000000000000000000000000..78af193574091e84b7ffa9eebc6dec173985e1a7 --- /dev/null +++ b/eesanje/url_46_190_1.txt @@ -0,0 +1,8 @@ +ಮತ್ತೆ ಮೈಸೂರಿನತ್ತ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಕಾರ್ಯತಂತ್ರ +ಮೈಸೂರು,ಏ.1-ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಲೇಬೇಕೆಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಮತ್ತು ಚಾಮರಾಜನಗರ ಪ್ರವಾಸ ಮಾಡಲಿದ್ದಾರೆ.ಮೈಸೂರು-ಕೊಡುಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ಸಂಭವನೀಯ ಮುಜುಗರವನ್ನು ತಪ್ಪಿಸಿಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. +ಹೀಗಾಗಿ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಕಳೆದ ವಾರ ಮೂರು ದಿನಗಳ ಕಾಲ ಮೈಸೂರಿನಲ್ಲಿ ಠಿಕ್ಕಾಣಿ ಹೂಡಿದ್ದ ಮುಖ್ಯಮಂತ್ರಿಯವರು ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದ್ದರು. +ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿರುವ ಯದುವೀರ್ ಕೃಷ್ಣರಾಜ ಒಡೆಯರ್ ವಿರುದ್ಧವಾಗಿ ಕಾಂಗ್ರೆಸ್‍ನ ಯಾವ ನಾಯಕರೂ ಹಗುರವಾದ ಹೇಳಿಕೆಗಳನ್ನು ನೀಡಬಾರದು. ನಮ್ಮ ಹೋರಾಟ ಏನಿದ್ದರೂ ಬಿಜೆಪಿಯ ವಿರುದ್ಧ ಎಂದು ಸ್ಪಷ್ಟ ಸಂದೇಶ ರವಾನಿಸಿದ್ದರು. +ಇದರಿಂದ ಸ್ಥಳೀಯ ನಾಯಕರು ಮನಸೋಇಚ್ಚೆ ಮಾತನಾಡಿ ಮುಜುಗರ ಸೃಷ್ಟಿಸುವುದಲ್ಲದೆ ಕಾಂಗ್ರೆಸ್‍ಗೆ ಹಿನ್ನಡೆಯಾಗುವಂತೆ ಮಾಡುವ ಸಾಧ್ಯತೆಗಳು ಕ್ಷೀಣವಾಗಿದೆ. ನಾಳೆಯಿಂದ ಕೈಗೊಳ್ಳುವ ಪ್ರವಾಸದಲ್ಲಿ ಚಾಮರಾಜನಗರ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಗಳನ್ನು ನೀಡುತ್ತಿದ್ದಾರೆ. ಅಲ್ಲಿ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. +ಈ ಎರಡೂ ಕ್ಷೇತ್ರಗಳು ಮುಖ್ಯಮಂತ್ರಿಯವರಿಗೆ ಅತ್ಯಂತ ಪ್ರತಿಷ್ಠೆಯ ಕಣಗಳು ಎಂದು ವಿಶ್ಲೇಷಿಸಲಾಗುತ್ತಿದೆ. ನಾಳೆ ಚಾಮರಾಜನಗರದಲ್ಲಿನ ಶಂಕರಮಠಕ್ಕೆ ಭೇಟಿ ನೀಡುವ ಸಿದ್ದರಾಮಯ್ಯ ಅವರು ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. +ಸಂಜೆ ಮೈಸೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಸಲಿದ್ದು, ಆ ಬಳಿಕ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಬುಧವಾರ ಸುತ್ತೂರು ಮಠಕ್ಕೆ ಭೇಟಿ ನೀಡಿ ಆ ಬಳಿಕ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ. +ಮೂರು ದಿನಗಳ ಜಿಲ್ಲಾ ಪ್ರವಾಸದಲ್ಲಿ ಚುನಾವಣೆ ನಿರ್ವಹಣೆ, ಆರ್ಥಿಕ ಸಂಪನ್ಮೂಲ ಕ್ರೂಢೀಕರಣ ಹಾಗೂ ಒಗ್ಗಟ್ಟಿನ ಹೋರಾಟಕ್ಕೆ ಜಿಲ್ಲಾ ನಾಯಕರಿಗೆ ಅಗತ್ಯ ಸಲಹೆಸೂಚನೆಗಳನ್ನು ಮುಖ್ಯಮಂತ್ರಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_190_10.txt b/eesanje/url_46_190_10.txt new file mode 100644 index 0000000000000000000000000000000000000000..a8f3437678d560beb5b6b3c440e52b99a2c4798e --- /dev/null +++ b/eesanje/url_46_190_10.txt @@ -0,0 +1,7 @@ +ರಂಗೇರತೊಡಗಿದೆ ಲೋಕಸಭಾ ಚುನಾವಣೆ, ರೋಡ್ ಶೋ,ರ್‍ಯಾಲಿಗಳಿಗೆ ರಾಜಕೀಯ ಪಕ್ಷಗಳು ಸಜ್ಜು +ಬೆಂಗಳೂರು,ಮಾ.31-ಲೋಕಸಭಾ ಚುನಾವಣಾ ಪ್ರಚಾರದ ಭರಾಟೆ ರಂಗೇರತೊಡಗಿದೆ. ಅಬ್ಬರದ ಪ್ರಚಾರ, ಬೃಹತ್ ಮೆರವಣಿಗೆ, ರೋಡ್ ಶೋ, ರ್ಯಾಲಿ ನಡೆಸಲು ರಾಜಕೀಯ ಪಕ್ಷಗಳು ಸಜ್ಜಾಗಿವೆ.ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ, ಆಶೀರ್ವಾದ ಪಡೆಯುವುದರ ಜೊತೆಗೆ ಮಠ-ಮಂದಿರಗಳಿಗೆ ತೆರಳಿ ಮಠಾೀಶರ ಆಶೀರ್ವಾದ ಪಡೆಯುತ್ತಿದ್ದಾರೆ. +ಕಾರ್ಯಕರ್ತರು, ಬೆಂಬಲಿಗರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮನೆಮನೆಗಳಿಗೆ ತೆರಳಿ ಕರಪತ್ರಗಳನ್ನು ಹಂಚುತ್ತಾ ಈಗಾಗಲೇ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ.ಬೆಳ್ಳಂಬೆಳಿಗ್ಗೆ ಪಾರ್ಕು, ಬಸ್‍ನಿಲ್ದಾಣ, ಹೋಟೆಲ್ ಮುಂತಾದ ಕಡೆ ಅಭ್ಯರ್ಥಿಗಳು ತೆರಳಿ ಅಲ್ಲಿಗೆ ಭೇಟಿ ನೀಡುವ ಜನರೊಂದಿಗೆ ಬೆರೆತು ಮಾತುಕತೆ ನಡೆಸುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. +ತಾಲೂಕು, ಹೋಬಳಿ, ಗ್ರಾಮಮಟ್ಟದಲ್ಲಿ ವಿವಿಧ ಸಮುದಾಯಗಳ ಮುಖಂಡರುಗಳ ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದಾರೆ.ಗ್ರಾಮಗ್ರಾಮಗಳಲ್ಲಿ ಇರುವ ದೇವಾಲಯಗಳಿಗೆ ಭೇಟಿ ನೀಡಿ ಅಲ್ಲಿನ ದೇವಸ್ಥಾನಗಳ ಅಭಿವೃದ್ಧಿಗೆ ಭರವಸೆ, ಆರ್ಥಿಕ ಸಹಾಯ ನೀಡುತ್ತಿರುವುದು ಕಂಡುಬರುತ್ತಿದೆ. +ನೇರವಾಗಿ ಹಣ ನೀಡಿದರೆ ಆಯೋಗದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಗ್ರಾಮಗಳ ದೇವಸ್ಥಾನದ ಅಭಿವೃದ್ಧಿ ನೆಪದಲ್ಲಿ ಆರ್ಥಿಕ ನೆರವನ್ನು ಅಭ್ಯರ್ಥಿಗಳು ನೀಡುವ ಮೂಲಕ ಮತಗಳನ್ನು ಸೆಳೆಯುವ ತಂತ್ರ ಅನುಸರಿಸುತ್ತಿದ್ದಾರೆ.ಮಹಿಳಾ ಸಂಘಟನೆ, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳ ಮುಖಂಡರೊಂದಿಗೆ ಚರ್ಚೆ ನಡೆಸಿ, ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. +ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿದಿನ ಪ್ರವಾಸ, ಪ್ರಚಾರ, ಮುಖಂಡರು, ಕಾರ್ಯಕರ್ತರ ಭೇಟಿ, ಅನ್ಯಪಕ್ಷಗಳ ಮುಖಂಡರು, ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.ಕ್ಷೇತ್ರದಲ್ಲಿ ಸಂಚರಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸುವ ಭರವಸೆ ನೀಡುವ ಮೂಲಕ ಮತಯಾಚನೆಯಲ್ಲಿ ತೊಡಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಸ್ಥಳಗಳಿಗೂ ಅಭ್ಯರ್ಥಿಗಳು ತಲುಪಲು ಸಾಧ್ಯವಾಗದ ಕಾರಣ ತಮ್ಮ ಬೆಂಬಲಿಗರ ಮೂಲಕ ಪ್ರಚಾರ ಶುರುವಿಟ್ಟುಕೊಂಡಿದ್ದಾರೆ. +ಕ್ಷೇತ್ರ ವ್ಯಾಪ್ತಿಯ ವಿಧಾನಸಭೆಯ ಶಾಸಕರು ಅಥವಾ ಮಾಜಿ ಶಾಸಕರ ಮೂಲಕ ಸಭೆ, ಸಮಾರಂಭಗಳನ್ನು ಆಯೋಜಿಸಿ ಗೆಲುವಿನ ರಣತಂತ್ರ ರೂಪಿಸುತ್ತಿದ್ದಾರೆ. ಮೊದಲ ಹಂತದ ಚುನಾವಣೆಗೆ ಕೇವಲ 26 ದಿನಗಳು ಬಾಕಿ ಇವೆ. ಕೆಲವು ಕ್ಷೇತ್ರಗಳಲ್ಲಿ ಇನ್ನೂ ಬಂಡಾಯ ಬಗೆಹರಿದಿಲ್ಲ. ಎಲ್ಲವೂ ಇಕ್ಕಟ್ಟು-ಬಿಕ್ಕಟ್ಟು ಬಗೆಹರಿದು ಬಿ ಫಾರಂ ಪಡೆದ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರಕ್ಕೆ ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರದ ನಾಯಕರೊಂದಿಗೆ ಬೃಹತ್ ರ್ಯಾಲಿ, ಮೆರವಣಿಗೆ, ರೋಡ್‍ಶೋ ಕಾರ್ಯಕ್ರಮಗಳ ಆಯೋಜನೆಯಲ್ಲಿ ತೊಡಗಿದ್ದಾರೆ. \ No newline at end of file diff --git a/eesanje/url_46_190_11.txt b/eesanje/url_46_190_11.txt new file mode 100644 index 0000000000000000000000000000000000000000..ac5b15b7d951f5f280b5fd6f7be732e070f66709 --- /dev/null +++ b/eesanje/url_46_190_11.txt @@ -0,0 +1,4 @@ +ಆರ್‌ಟಿಪಿಎಸ್ 4 ಘಟಕಗಳು ಬಂದ್, ರಾಜ್ಯದಲ್ಲಿ ವಿದ್ಯುತ್ ಕೊರತೆ ಭೀತಿ +ರಾಯಚೂರು, ಮಾ.31:ಇಲ್ಲಿನ ಶಕ್ತಿ ನಗರದಲ್ಲಿರುವ ಆರ್‍ಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ನಾಲ್ಕು ಘಟಕಗಳು ನಿಂತಿದ್ದು ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದೆ.ಇಲ್ಲಿರುವ 8 ಘಟಕದಲ್ಲಿ 4 ಕೈಕೊಟ್ಟಿದ್ದು ಈಗ ತುರ್ತಾಗಿ ಎರಡು ಘಟಕಗಳ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. +ಒಟ್ಟು 1720 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿರೊ ಈಗ ಪ್ರಸ್ತುತ 903 ಮೆ.ವ್ಯಾ.ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗಿದೆ.ರಾಜ್ಯಕ್ಕೆ ಸುಮಾರು 40% ವಿದ್ಯುತ್ ಪೂರೈಕೆ ಮಾಡುವ ಇಲ್ಲಿನ ಘಟಕಗಳು ಕಳೆದ ಎರಡು ದಿನಗಳಿಂದ ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ 1,2,3 ಮತ್ತು 6 ಸೇರಿ ಒಟ್ಟು ನಾಲ್ಕು ಘಟಕಗಳು ಬಂದ್ ಆಗಿವೆ. +ಸದ್ಯ ಸಿಬ್ಬಂದಿ 2 6ನೇ ಘಟಕಗಳ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ ಆದರೆ ಇದು ಯಾವಾಗ ದುರಸ್ತಿಯಾಗುತ್ತೆ ಎಂಬುದು ಹೇಳಲು ಸಾಧ್ಯವಿಲ್ಲ ಹೀಗಾಗಿ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ ವಿದ್ಯುತ್ ಸಮಸ್ಯೆ ಎದುರಾಗುವ ಭೀತಿ ಇದೆ. \ No newline at end of file diff --git a/eesanje/url_46_190_12.txt b/eesanje/url_46_190_12.txt new file mode 100644 index 0000000000000000000000000000000000000000..dc838e6d3b1d498b118ec5488876e4dfa40afc7a --- /dev/null +++ b/eesanje/url_46_190_12.txt @@ -0,0 +1,6 @@ +ಬೆಂಗಳೂರಲ್ಲಿ ಕಳೆದ 15 ವರ್ಷಗಳಲ್ಲೇ ಅತ್ಯಧಿಕ ತಾಪಮಾನ ದಾಖಲೆ +ಬೆಂಗಳೂರು,ಮಾ.31-ರಾಜಧಾನಿ ಬೆಂಗಳೂರು ನಗರದಲ್ಲಿ ಸೂರ್ಯನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ತಲುಪುತ್ತಿದ್ದು,ರಾಯಚೂರು ಜಿಲ್ಲೆಯಲ್ಲಿ ಅತ್ಯಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿ ಮಧ್ಯಾಹ್ನ ಹೊತ್ತು ಜನರು ಹೈರಾಣರಾಗಿದ್ದಾರೆ. +ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಇದು ಕಳೆದ 15 ವರ್ಷಗಳಲ್ಲೇ ದಾಖಲೆಯ ತಾಪಮಾನ ಏರಿಕೆ ,ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಾದ್ಯಂತ ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ. +ರಾಯಚೂರು ಜಿಲ್ಲೆಯಲ್ಲಿ 18 ಸ್ಥಳಗಳು, ಕಲಬುರಗಿ ಜಿಲ್ಲೆಯಲ್ಲಿ 16 ಸ್ಥಳಗಳು, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 5 ಸ್ಥಳಗಳು, ವಿಜಯಪುರ ಜಿಲ್ಲೆಯಲ್ಲಿ 3 ಸ್ಥಳಗಳು, ಬೀದರ್ ಜಿಲ್ಲೆಯಲ್ಲಿ 2 ಸ್ಥಳಗಳು, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ತಲಾ 1 ಸ್ಥಳಗಳಲ್ಲಿ ತಾಪಮಾನ 42 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚು ದಾಖಲಾಗಿದೆ.ಇ ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಎಲ್ಲೂ ಅಲರ್ಟ್ ಘೋಷಿಸಲಾಗಿದೆ. +ಮುಂದಿನ ದಿನದಲ್ಲಿ ಕರ್ನಾಟಕದ ಒಳನಾಡಿನಾದ್ಯಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಲಿದೆ ಮತ್ತು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉಷ್ಣ ಹವೆ ಎಚ್ಚರಿಕೆ ಸಹ ನೀಡಲಾಗಿದೆ ಎಂದು ಹವಾಮಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಹೆಚ್ಚು ಬಿಸಿಲಿನ ವೇಳೆ ಹೊಗೆ ಹೆಚ್ಚು ಓಡಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಮುಂದಿನ ಮಾ. 22, 1931 ರಂದು ಬೆಂಗಳೂರಿನ ಸಾರ್ವಕಾಲಿಕ ದಾಖಲೆ 38.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. \ No newline at end of file diff --git a/eesanje/url_46_190_2.txt b/eesanje/url_46_190_2.txt new file mode 100644 index 0000000000000000000000000000000000000000..feb2d506079709a29d6823b3a3705bb42f51d805 --- /dev/null +++ b/eesanje/url_46_190_2.txt @@ -0,0 +1,9 @@ +15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ : ಇಲ್ಲಿದೆ ಕಂಪ್ಲೀಟ್ ಮಾಹಿತಿ +ಬೆಂಗಳೂರು,ಏ.1-ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್‍ಗಳಿಗೆ ಅನ್ವಯವಾಗಲಿದೆ. +ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‍ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ. +ಈ ಮೊದಲು 1ರಿಂದ 100 ರೂ. ಒಳಗಿನ ವಿದ್ಯುತ್ ದರಕ್ಕೆ 4 ರೂ.ಗಿಂತಲೂ ಹೆಚ್ಚಿನ ದರ ಇತ್ತು. 100 ರೂ. ಮೇಲ್ಪಟ್ಟ ವಿದ್ಯುತ್ ಬಳಕೆಗೆ ಶೂನ್ಯ ಯೂನಿಟ್‍ನಿಂದಲೇ 7 ರೂ. ಅನ್ವಯವಾಗುತ್ತಿತ್ತು. ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿ ಇದ್ದುದ್ದರಿಂದ 200 ಯೂನಿಟ್ ಒಳಗಿನ ವಿದ್ಯುತ್ ಬಳಕೆಯ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಾಗಿರಲಿಲ್ಲ. ಆದರೆ ಗೃಹಜ್ಯೋತಿ ವ್ಯಾಪ್ತಿಯಿಂದ ಹೊರಗುಳಿದ ಗ್ರಾಹಕರಿಗೆ ವಿದ್ಯುತ್ ಶಾಕ್ ಜೋರಾಗೇ ತಗುಲಿತ್ತು. +ಈ ಬಾರಿ ನಡೆದ ವಿಚಾರಣೆಯಲ್ಲಿ ಎಸ್ಕಾಂಗಳು 2024-25ನೇ ಸಾಲಿಗೆ 69,474.75 ಕೋಟಿ ರೂ.ಗಳ ವಾರ್ಷಿಕ ಕಂದಾಯದ ಅಗತ್ಯತೆಯನ್ನು ಪ್ರಸ್ತಾಪಿಸಿದರು. ಇದರಿಂದ 4,863.85 ಕೋಟಿ ರೂ.ಗಳ ಕಂದಾಯ ಕೊರತೆ ಕಂಡುಬಂದಿತ್ತು. ಇದನ್ನು ಸರಿದೂಗಿಸಲು ಪ್ರತಿ ಯೂನಿಟ್‍ಗೆ 49ರಿಂದ 163 ಪೈಸೆಗಳವರೆಗೆ ಸರಾಸರಿ 66 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ 64,944.54 ಕೋಟಿ ಕಂದಾಯ ಅಗತ್ಯತೆಗೆ ಅನುಮೋದನೆ ನೀಡಿದೆ. +ಇದರಿಂದ 290.76 ಕೋಟಿ ರೂ. ಕಂದಾಯ ಹೆಚ್ಚಳ ಪ್ರಸ್ತಾಪವಾಗಿದೆ. ಇದರ ಆಧಾರದ ಮೇಲೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕೆ, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ಏತನೀರಾವರಿ, ಅಪಾರ್ಟ್‍ಮೆಂಟ್‍ಗಳು, ಕೈಗಾರಿಕಾ ಸ್ಥಾವರಗಳಲ್ಲಿ ವಿದ್ಯುತ್ ಬಳಕೆಯಾಗುವ ವಿದ್ಯುತ್‍ನ ದರವನ್ನು ವಿವಿಧ ಹಂತಗಳಲ್ಲಿ ಕಡಿತಗೊಳಿಸಲಾಗಿದೆ. +ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೆ ದರ ಇಳಿಕೆಯಾಗಿರುವುದರಿಂದ ಪ್ರತಿ ಯೂನಿಟ್‍ಗೆ ನೀಡಲಾಗುತ್ತಿದ್ದ 50 ಪೈಸೆ ರಿಯಾಯ್ತಿಯನ್ನು ಮುಂದುವರೆಸುವುದಿಲ್ಲ ಎಂದು ತಿಳಿಸಲಾಗಿದೆ. ನಗರ, ಗ್ರಾಮೀಣ ಪ್ರವರ್ಗಗಳನ್ನು ವಿಲೀನಗೊಳಿಸಿದ್ದ ನಿರ್ಧಾರವನ್ನು ಪರಿಷ್ಕರಿಸಲಾಗಿದ್ದು, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮತ್ತು ಕೈಗಾರಿಕೆ, ಖಾಸಗಿ ಆಸ್ಪತ್ರೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯೂನಿಟ್‍ಗೆ 30 ಪೈಸೆ ರಿಯಾಯ್ತಿಯನ್ನು ಅನುಮೋದಿಸಲಾಗಿದೆ. +ನವೀಕರಿಸಬಹುದಾದ ಇಂಧನ ಮೂಲಗಳಿಂದ ಖರೀದಿಸುವ ವಿದ್ಯುತ್‍ನ ಪ್ರತಿ ಯೂನಿಟ್‍ಗೆ 50 ಪೈಸೆ ಹೆಚ್ಚಿನ ದರವನ್ನು ಮುಂದುವರೆಸಲಾಗಿದೆ ಎಂದು ಕೆಇಆರ್‍ಸಿ ತಿಳಿಸಿದೆ. ಏ.1ರಿಂದ ಪ್ರೀಪೇಮೆಂಟ್ ಮೀಟರ್‍ನ್ನು ಅನುಮೋದಿಸಲು ಅಗತ್ಯವಾದ ವ್ಯವಸ್ಥೆಯನ್ನು ಸೂಚಿಸಬೇಕು. ಜೂ.1ರಿಂದ ಎಲ್‍ಟಿ ಗ್ರಾಹಕರಿಗೆ ಸ್ವಯಂ ಮಾಪಕ ಓದುವಿಕೆಯನ್ನು ಸಾಧ್ಯವಾಗಿಸಲು ಅಗತ್ಯ ಸಾಫ್ಟ್‍ವೇರ್ ಅಳವಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. +ಪ್ರತಿ ಯೂನಿಟ್‍ಗೆ ದರ ಇಳಿಕೆಯ ಪ್ರಮಾಣ:ಎಲ್‍ಟಿ ಗೃಹ ಬಳಕೆ 1.10 ರೂ.ಎಚ್‍ಪಿ ವಾಣಿಜ್ಯ 1.25 ರೂ.ಎಚ್‍ಟಿ ಕೈಗಾರಿಕೆ 50 ಪೈಸೆಎಚ್‍ಟಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು 40 ಪೈಸೆಖಾಸಗಿ ಏತನೀರಾವರಿ 2 ರೂ.ಖಾಸಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು 50 ಪೈಸೆಕೈಗಾರಿಕಾ ಸ್ಥಾವರಗಳು 1 ರೂ.ವಾಣಿಜ್ಯ ಸ್ಥಾವರಗಳು 50 ಪೈಸೆಅಪಾರ್ಟ್‍ಮೆಂಟ್‍ಗಳು ಸೇರಿದಂತೆ ವಾಣಿಜ್ಯ, ಕೈಗಾರಿಕೆ, ಖಾಸಗಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಬೇಡಿಕೆ ಶುಲ್ಕವನ್ನು ಪ್ರತಿ ಕಿಲೋ ವ್ಯಾಟ್‍ಗೆ 10 ರೂ. ಇಳಿಸಲಾಗಿದೆ. \ No newline at end of file diff --git a/eesanje/url_46_190_3.txt b/eesanje/url_46_190_3.txt new file mode 100644 index 0000000000000000000000000000000000000000..7a9602279f55880060cee556e1ce9418ee6e7ae4 --- /dev/null +++ b/eesanje/url_46_190_3.txt @@ -0,0 +1,10 @@ +ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಈವರೆಗೆ 59 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ +ಬೆಂಗಳೂರು, .ಏ.1:ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 59 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. +ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್ ಅವರು ಭರ್ಜರಿ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಗೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಆಶೋಕ್ ಸೇರಿದಂತೆ ಆನೇಕ ಮುಖಂಡರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಭಾಗವಹಿಸಿದರು. +ಬೆಂಗಳೂರು-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಸಾಥ್ ನೀಡಿದರು. +ಶಾಸಕರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು ಮಾಜಿ ಶಾಸಕರು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹೈ-ಹೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೆಗೌಡ (ಸ್ಟಾರ್ ಚಂದ್ರು) ಅವರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು. +ಮಂಡ್ಯದ ಕಾಳಿಕಾಂಬದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಭಾರಿ ಮೆರಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್‍ಜಾನ್ ಶಾಸಕರಾದ ಗಣಿಗ ರವಿ, ರಮೇಶ ಬಂಡಿ ಸಿದ್ದೇಗೌಡ, ದಿನೇಶ್ ಗೂಳಿಗೌಡ, ಮರಿ ತಿಬ್ಬೇಗೌಡ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು. +ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಸಿದ್ದು, ಉಸ್ತುವಾರಿ ಸಚಿವ ರಾಜಣ್ಣ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್‍ಜಾನ್ ಶಾಸಕರಾದ ಶಿವಲಿಂಗೇಗೌಡ, ಎಂ . ಆನಂದ್ , ಮಾಜಿ ಸಚಿವರು, ಶಾಸಕರು ಮುಖಂಡರು ಪಾಲ್ಗೊಂಡಿದ್ದರು. ಈಗಾಗಲೇ ಬೆಂ.ಗ್ರಾ. ಲೋಕಸಭಾ ಕ್ಷೇತ್ರದಿಂದ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. +ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಬ್ಬರ ಅರ್ಭಟವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನುಳಿದಂತೆ ನಾಳೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಸಲಿದ್ದಾರೆ. ಏ.3ರಂದು ಬೆಂ. ಕೇಂದ್ರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಮತ್ತು ಬೆಂ.ಉತ್ತರ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜುಗೌಡ ನಾಮಪತ್ರ ಸಲ್ಲಿಸಲಿದ್ದಾರೆ. +ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಕೃಷ್ಣದತ್ತ ಒಡೆಯರ್, ಚಾಮರಾಜ ನಗರದ ಬಿಜೆಪಿ ಅಭ್ಯರ್ಥಿ ಬಾ¯ರಾಜ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟಾ ಶ್ರೀನಿವಾಸ ಪೂಜಾರಿ, ತುಮಕೂರಿನ ವಿ ಸೋಮಣ್ಣ, ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಡಿ.ವಿ. ಸದಾನಂದ ಗೌಡ, ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಅಶೋಕ್ ಪಾಲ್ಗೊಳ್ಳಲಿದ್ದಾರೆ. +ಏ.4 ರಂದು ತುಮಕೂರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದು ಹನುಮೇಗೌಡ, ಮಂಡ್ಯ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮುಂತ್ರಿ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. \ No newline at end of file diff --git a/eesanje/url_46_190_4.txt b/eesanje/url_46_190_4.txt new file mode 100644 index 0000000000000000000000000000000000000000..81184e1fb3cc898cb38624ba15e551ba0d94890d --- /dev/null +++ b/eesanje/url_46_190_4.txt @@ -0,0 +1,7 @@ +ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಭಯಾನಕ ಬಿಸಿಲು..! +ಬೆಂಗಳೂರು, ಏ.1-ಬೇಸಿಗೆ ಸುಡು ಬಿಲಿಸಿನಿಂದಾಗಿ ವಾತಾವರಣದಲ್ಲಿರುವ ತೇವಾಂಷದಲ್ಲಿ ಗಣನೀಯ ಕುಸಿತವಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಉಂಟುಮಾಡುತ್ತಿದೆ.ತೇವಾಂಶ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆಯಾಸ, ಬಳಲಿಕೆ ಹೆಚ್ಚಾಲಿದೆ. ಅದರಲ್ಲೂ ವಯಸ್ಸಾದ ಹಿರಿಯ ನಾಗರಕರು ಹಾಗು ಮಕ್ಕಳು ಹೆಚ್ಚು ತೊಂದರೆ ಒಳಗಾಗುತ್ತಾರೆಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. +ರಾಜ್ಯದಲ್ಲಿ ಮುಂಗಾರು ಹಿಂಗಾರು ಮಳೆ ಕೈಕೊಟ್ಟು ತೀವ್ರ ಸ್ವರೂಪದ ಬರ ಪರಿಸ್ಥತಿ ಆವರಿಸಿದೆ. ಇದರ ಬೆನ್ನಲ್ಲೆ ಕಳೆದ ಮೂರು ತಿಂಗಳಿಂದ ಮುಂಗಾರು ಪೂರ್ವ ಮಳೆ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ.ಮಾರ್ಚ್‍ನಲ್ಲಿ ಕರಾವಳಿ, ಮಲೆನಾಡು ಸೇರಿದಂತ ಒಂದೆರಡು ಕಡೆ ಸಾಧಾರಾಣ ಮಳೆಯಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. +ಹವಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಮುಂದಿನ ಒಂದುವಾರದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಒಣ ಹವೆ ಮುಂದುವರೆಯಲಿದ್ದು, ತಾಪಮಾನದಲ್ಲಿ ಸರಾಸರಿ 2 ಡಿಗ್ರಿ ಸೆಂಟಿಗ್ರೇಡ್‍ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್. ಪ್ರಕಾಶ್ ತಿಳಿಸಿದರು. +ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ 36 ಡಿಗ್ರಿ ಸೆಂಟಿಗ್ರೇಡ್ ನಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಈ ವಾರದಲ್ಲಿ 37 ರಿಂದ 38 ಡಿ.ಸೆ. ತಲುಪುವ ನಿರೀಕ್ಷೆಯಿದೆ. ಸದ್ಯಕ್ಕೆ ಮಳೆಬರುವಂತಹ ಲಕ್ಷಣಗಳು ಕಂಡುಬರುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. +ಮಧ್ಯಾಹ್ನದ ವೇಳೆ ತೇವಾಂಶ ಶೇ.25ಕ್ಕೆ ಇಳಿಕೆ ಯಾಗಲಿದೆ. ಇದರಿಂದ ಜನರಲ್ಲಿ ಸಹಜವಾಗಿ ಬಳಲಿಕೆ ಕಂಡುಬರಲಿದೆ. ಒಣಹವೆ ಇರುವುದರಿಂದ ಕೆಲವೆಡೆ ಬಿಸಿ ಗಾಳಿ ಕಂಡುಬರುತ್ತಿದೆ ಎಂದರು.ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಬಾಗಲಕೋಟೆಯಲ್ಲಿ 41.2 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದರೇ, ಮಡಿಕೇರಿಯಲ್ಲಿ 33 ಡಿ.ಸೆ.ನಷ್ಟಿದೆ. +ಉಳಿದಂತೆ ಚಾಮರಾಜನಗರ 37.3, ಮಂಡ್ಯ-ಮೈಸೂರು 36.6, ಶಿವಮೊಗ್ಗ 37.8, ಬೆಳಗಾವಿ 36.5, ಬೀದರ್ 38.4, ವಿಜಪುರ 38.5, ಕೊಪ್ಪಳ 39.7, ರಾಯಚೂರು 39.6, ಬೆಂಗಳೂರು 35.4ರಷ್ಟು ಗರಿಷ್ಠ ತಾಪಮಾನ ದಾಖಲಾಗುತ್ತಿದೆ. \ No newline at end of file diff --git a/eesanje/url_46_190_5.txt b/eesanje/url_46_190_5.txt new file mode 100644 index 0000000000000000000000000000000000000000..3821e3ba7a52b3eff66b53ac8801a2eb58dc6c17 --- /dev/null +++ b/eesanje/url_46_190_5.txt @@ -0,0 +1,5 @@ +ತಂಬಾಕು ನಿಷೇಧ ವಿಧಿಸುವ ಉಪಸಮಿತಿ ಅವಧಿ 6 ತಿಂಗಳು ವಿಸ್ತರಣೆ +ಬೆಂಗಳೂರು,ಏ.1-ತಂಬಾಕು ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟುವ ಸಂಬಂಧ ತಂಬಾಕು ಮತ್ತು ಅದರ ಉತ್ಪನ್ನಗಳ ಮೇಲೆ ನಿರ್ಬಂಧ ಹಾಗೂ ನಿಷೇಧ ವಿಧಿಸುವ ಕುರಿತು ವರದಿ ನೀಡಲು ರಚಿತವಾಗಿರುವ ವಿಧಾನಸಭೆಯ ಅರ್ಜಿ ಸಮಿತಿಯ ಉಪಸಮಿತಿಯ ಅವಧಿಯನ್ನು ಆರು ತಿಂಗಳ ಕಾಲ ವಿಸ್ತರಿಸಲಾಗಿದೆ. +ಅರ್ಜಿ ಸಮಿತಿಯ ಉಪಸಮಿತಿಯ ಅವಧಿಯನ್ನು ಮಾ.21ರಿಂದ 6 ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆಯ ಅಧಿಕೃತ ಪ್ರಕಟಣೆ ತಿಳಿಸಿದೆ. +ಕಳೆದ ಡಿ.21ರಂದು ಅರ್ಜಿ ಸಲ್ಲಿಕೆಯ ಉಪಸಮಿತಿಯನ್ನು ರಚಿಸಿ ಮೂರು ತಿಂಗಳ ಒಳಗೆ ವರದಿ ನೀಡಲು ಸೂಚಿಸಲಾಗಿತ್ತು. ತಂಬಾಕು ಉತ್ಪನ್ನಗಳ ಮೇಲೆ ನಿಬಂಧನೆ, ನಿರ್ಬಂಧ ಮತ್ತು ನಿಷೇಧ ವಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ವರದಿ ನೀಡಲು ಈ ಉಪಸಮಿತಿಯನ್ನು ರಚಿಸಲಾಗಿತ್ತು. +ಸರ್ಕಾರದ ಕೆಲವು ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಇನ್ನು ಕೆಲವು ಇಲಾಖೆಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ ವರದಿ ನೀಡಲು 6 ತಿಂಗಳ ಕಾಲಾವಕಾಶವನ್ನು ಉಪಸಮಿತಿ ಕೋರಿದ್ದ ಹಿನ್ನಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಉಪಸಮಿತಿ ಅವಧಿಯನ್ನು ವಿಸ್ತರಿಸಿದ್ದಾರೆ. \ No newline at end of file diff --git a/eesanje/url_46_190_7.txt b/eesanje/url_46_190_7.txt new file mode 100644 index 0000000000000000000000000000000000000000..b39c734dddd59d46bb05e0978ea2edac178efd6d --- /dev/null +++ b/eesanje/url_46_190_7.txt @@ -0,0 +1,5 @@ +ಸುಮಲತಾ ನಿವಾಸಕ್ಕೆ ಭೇಟಿ ನೀಡಿದ ಹೆಚ್‌ಡಿ ಕುಮಾರಸ್ವಾಮಿ +ಬೆಂಗಳೂರು,ಮಾ.31-  ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ.ಕುಮಾರಸ್ವಾಮಿ ಭಾನುವಾರ ಜೆಪಿ ನಗರದ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಿದ್ದು, ಮಹತ್ವದ ಮಾತುಕತೆ ನಡೆಸಿದ್ದಾರೆ. +ಈ ಸಂದರ್ಭದಲ್ಲಿ, ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಇದ್ದರು. ಅಭಿಷೇಕ್ ಅಂಬರೀಶ್, ರಾಕ್ಲೈನ್ ವೆಂಕಟೇಶ್ ಅವರು ಮನೆಯ ದ್ವಾರದಲ್ಲೇ ನಿಂತು ಎಚ್ಡಿಕೆ ಅವರನ್ನು ಬರಮಾಡಿಕೊಂಡು ಮನೆಯೊಳಗೆ ಕರೆದೊಯ್ದರು. ಈ ವೇಳೆ ಎಚ್ಡಿಕೆ ಅವರು ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಹೂಗುಚ್ಛ ನೀಡಿ, ಲೋಕಸಭೆ ಚುನಾವಣೆ ವಿಚಾರವಾಗಿ ಆರೋಗ್ಯಕರ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. +ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಅಂಬರೀಶ್ ಅಣ್ಣನ ಮನೆ ನನಗೆ ಹೊಸದೇನೂ ಅಲ್ಲ. ನಾನು ಅಂಬರೀಶ್ ಒಟ್ಟಿಗೆ ಉಂಡು, ಬೆಳೆದವರು. ಸುಮಲತಾ ಅವರೊಂದಿಗೆ ಭೇಟಿ ಅತ್ಯಂತ ಸೌಹಾರ್ದಯುತವಾಗಿತ್ತು. ಅವರೊಂದಿಗೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದು, ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು, ಬೆಂಬಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು. +ಸಂಸದೆ ಸುಮಲತಾ ಅಂಬರೀಶ್ ಮಾತನಾಡಿ, ಕುಮಾರಸ್ವಾಮಿ ಅವರೊಂದಿಗೆ ಆರೋಗ್ಯಕರ ಚರ್ಚೆಯಾಗಿದೆ. ಹಳೆಯದನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಮಂಡ್ಯ ಕ್ಷೇತ್ರದಲ್ಲಿ ಸಹಕಾರ ನೀಡುವಂತೆ ಕೋರಿದ್ದಾರೆ. ಏಪ್ರಿಲ್ 3 ರಂದು ಮಂಡ್ಯದಲ್ಲಿ ಸಭೆ ಕರೆದಿರುವ ಬಗ್ಗೆ ಅವರಿಗೆ ಹೇಳಿದ್ದೇನೆ. ಅಂದಿನ ಸಭೆಯಲ್ಲಿ ದರ್ಶನ್, ಅಭಿಷೇಕ್ ಇರಲಿದ್ದು, ಬೆಂಬಲಿಗರು, ಹಿತೈಷಿಗಳೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ತಿಳಿಸುವುದಾಗಿ ಹೇಳಿರುವುದಾಗಿ ಸುಮಲತಾ ಹೇಳಿದರು. \ No newline at end of file diff --git a/eesanje/url_46_190_8.txt b/eesanje/url_46_190_8.txt new file mode 100644 index 0000000000000000000000000000000000000000..64ba76449dc25e315f60897368f19f114b10880c --- /dev/null +++ b/eesanje/url_46_190_8.txt @@ -0,0 +1,6 @@ +“ಮಂಜುನಾಥ್ ಗೆದ್ದರೆ ದೇಶದ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆಯಾಗಲಿದೆ” +ಬೆಂಗಳೂರು,ಮಾ.31-ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಾ.ಸಿ.ಎನ್. ಮಂಜುನಾಥ್ ಕಣಕ್ಕಿಳಿದಿದ್ದಾರೆ. ಕ್ಷೇತ್ರದ ಮತದಾರರು ಅವರಿಗೆ ಮತ ನೀಡುವ ಮೂಲಕ ಶಕ್ತಿ ತುಂಬಿದರೆ ದೇಶದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರುವುದು ನಿಶ್ಚಿತ ಎಂದು ಅನಸೂಯ ಮಂಜುನಾಥ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪತಿ ಗೆಲ್ಲುವ ವಿಶ್ವಾಸವಿದೆ. ಕೇಂದ್ರ ಗೃಹ ಸಚಿವ ಅಮಿತ್ಶಾ ಅವರ ಅಪೇಕ್ಷೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಒತ್ತಾಯದ ಮೇರೆಗೆ ಮಂಜುನಾಥ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಧುಮುಕಿದ್ದಾರೆ ಎಂದರು. +ಸ್ಪರ್ಧೆಯ ಬಗ್ಗೆ ಸಂತೋಷವೂ ಇದೆ, ಹಾಗೆಯೇ ನೋವು ಸಹ ಇದೆ. ರಾಜಕೀಯದಲ್ಲಿ ಟೀಕೆ ಬರುತ್ತದೆ ಡಾ.ಮಂಜುನಾಥ್ ಬಹಳ ಸೂಕ್ಷ್ಮ ಮನಸ್ಸಿನವರು. ಚುನಾವಣೆಯನ್ನು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವ ಬಗ್ಗೆ ಆತಂಕವಿದೆ ಎಂದು ತಿಳಿಸಿದ್ದಾರೆ. +ಜಯದೇವ ಆಸ್ಪತ್ರೆ ನಿರ್ದೇಶಕರಾಗಿದ್ದಾಗ ಅವರು ದೊಡ್ಡ ಅಭಿಯಾನ ನಡೆಸಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಸಾಧನೆಯ ಹಿಂದೆ ನನ್ನ ಶಕ್ತಿಯಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಅವರ ಗೆಲುವಿಗೆ ನನ್ನ ಶಕ್ತಿ ಮಾತ್ರ ಸಾಲದು. ರಾಜ್ಯದ ಜನತೆ ಅವರಿಗೆ ತಮ್ಮ ಶಕ್ತಿ ತುಂಬುವ ಅವಶ್ಯಕತೆಯಿದೆ ಎಂದರು. +ಚುನಾವಣೆಯಲ್ಲಿ ಮಂಜುನಾಥ್ ಅವರನ್ನು ಗೆಲ್ಲಿಸಿದರೆ ಜಯದೇವ ಮಾದರಿಯಲ್ಲಿ ದೇಶದ ಆರೋಗ್ಯ ಕ್ಷೇತ್ರದ ಬದಲಾವಣೆ ತರುವುದು ನಿಶ್ಚಿತ ಎಂದು ಭರವಸೆ ನೀಡಿದರು. ಡಾ.ಮಂಜುನಾಥ್ ಅವರ ಪರವಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿಭಿನ್ನವಾಗಿ ಪ್ರಚಾರ ಮಾಡುತ್ತೇನೆ. ಈಗಿನ ಚುನಾವಣೆಯ ಪ್ರಚಾರ ಶೈಲಿ ಬದಲಾಗಿದೆ. ಅದಕ್ಕೆ ತಕ್ಕಂತೆ ಪ್ರಚಾರ ಕಾರ್ಯ ನಡೆಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಮಂಜುನಾಥ್ ಅವರು ಚುನಾ \ No newline at end of file diff --git a/eesanje/url_46_190_9.txt b/eesanje/url_46_190_9.txt new file mode 100644 index 0000000000000000000000000000000000000000..7ea4f1c5d699448e04510102600731afd0a4d8bd --- /dev/null +++ b/eesanje/url_46_190_9.txt @@ -0,0 +1,5 @@ +ಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್ +ಬೆಂಗಳೂರು,ಮಾ.31-ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಜಯರಾಂ ರಮೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕರಾದ ಲಕ್ಷ್ಮಣ್ ಸವದಿ, ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್‍ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಅವಕಾಶ ನೀಡಲಾಗಿದೆ. +ಸಚಿವರಲ್ಲಿ ಕೆ.ಜೆ.ಜಾರ್ಜ್, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆಪ್ರಚಾರಕರ ಪಟ್ಟಿಯಲ್ಲಿದ್ದಾರೆ. +ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಎಚ್.ಎಂ.ರೇವಣ್ಣ, ಸಿಂಧ್ಯಾ, ಡಿ.ಸೋಮಶೇಖರ್, ಎಲ್.ಹನುಮಂತಯ್ಯ, ಸಯ್ಯದ್ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಪಿ.ಟಿ.ಪರಮೇಶ್ವರ್ ನಾಯಕ್, ತನ್ವೀರ್ ಸೇಠ್, ಪುಷ್ಪಾ ಅಮರ್ ನಾಥ್, ಉಮಾಶ್ರೀ ಹಾಗೂ ಎಐಸಿಸಿಯ ಕೆಲ ನಾಯಕರು ಸ್ಟಾರ್ ಪ್ರಚಾರಕರಾಗಿದ್ದಾರೆ. \ No newline at end of file diff --git a/eesanje/url_46_191_1.txt b/eesanje/url_46_191_1.txt new file mode 100644 index 0000000000000000000000000000000000000000..6040b700f5b10982a51312ea76fc5e1165f5a6c1 --- /dev/null +++ b/eesanje/url_46_191_1.txt @@ -0,0 +1,6 @@ +ಏ.4ರಂದು ಬಿಜೆಪಿ ಪ್ರಮುಖ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ +ಬೆಂಗಳೂರು,ಮಾ.30-ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಏ.4ರಂದು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಏ.3ರಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಲಿದ್ದಾರೆ. +ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಏ.1ರಿಂದ ಏ.4ರ ನಡುವೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. +ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸಂಸದ ಪಿ.ಸಿ.ಮೋಹನ್ ಏ.1ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮೈಸೂರು ಕ್ಷೇತ್ರದ ಅಭ್ಯರ್ಥಿ ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್, ತುಮಕೂರು ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಏ.3ರಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್, ದಕ್ಷಿಣಕನ್ನಡ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ, ಚಿಕ್ಕಬಳ್ಳಾಪುರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಏ.4ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. +ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರೋಡ್ ಶೋ ನಡೆಸಲಿದ್ದಾರೆ. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿ ಆನಂತರ ಬಹಿರಂಗ ಸಭೆ ನಡೆಸುವ ಸಾಧ್ಯತೆ ಇದೆ. \ No newline at end of file diff --git a/eesanje/url_46_191_10.txt b/eesanje/url_46_191_10.txt new file mode 100644 index 0000000000000000000000000000000000000000..52716e69112c2c6bcbcfda35e3f43531ece65018 --- /dev/null +++ b/eesanje/url_46_191_10.txt @@ -0,0 +1,8 @@ +ಲೋಕಸಭೆ ಕಣದಲ್ಲಿ ಮೂವರು ಹಾಲಿ ಶಾಸಕರು ಹಾಗೂ ಓರ್ವ ವಿಧಾನಪರಿಷತ್ ಸದಸ್ಯ, ಎದುರಾಗುವುದೇ ಉಪಚುನಾವಣೆ ಅನಿವಾರ್ಯತೆ..? +ಬೆಂಗಳೂರು,ಮಾ.30-ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮೂವರು ಹಾಲಿ ಶಾಸಕರು, ಒಬ್ಬರು ವಿಧಾನಪರಿಷತ್ ಸದಸ್ಯರು ಕಣದಲ್ಲಿದ್ದು, ಗೆಲುವು ಸಾಧಿಸಿದರೆ ಈ ಕ್ಷೇತ್ರಗಳಿಗೆ ಮತ್ತೊಮ್ಮೆ ಉಪಚುನಾವಣೆ ನಡೆಯುವ ಅನಿವಾರ್ಯತೆ ಎದುರಾಗಲಿದೆ. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚನ್ನಪಟ್ಟಣ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್‍ನಿಂದ ಸ್ಪರ್ಧಿಸಿದರೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಶಿಗ್ಗಾವಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಣದಲ್ಲಿದ್ದಾರೆ. +ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಡೂರು ಕ್ಷೇತ್ರದ ಶಾಸಕ ಇ.ತುಕರಾಂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರೂ ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸ್ಪರ್ಧೆ ಮಾಡಿದ್ದಾರೆ. +ಈ ನಾಲ್ವರು ಹಾಲಿ ಶಾಸಕರು ಪ್ರಬಲ ಅಭ್ಯರ್ಥಿಗಳಾಗಿದ್ದು, ತೀವ್ರ ಪೈಪೋಟಿ ನೀಡುತ್ತಿದ್ದಾರೆ. ಮಂಡ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಕ್ರಾಂಗೆಸ್‍ನಿಂದ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಪ್ರತಿಸ್ರ್ಪಧಿಯಾಗಿದ್ದರೆ , ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಂಗ್ರೆಸ್‍ನ ಕಾರ್ಯಕರ್ತ ಆನಂದಸ್ವಾಮಿ ಗಡ್ಡದೇವರ ಮಠ ಪೈಪೋಟಿ ನೀಡುತ್ತಿದ್ದಾರೆ. +ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಬಿಜೆಪಿ ಅಭ್ಯರ್ಥಿಯಾಗಿ ತುಕರಾಂ ಅವರ ವಿರುದ್ಧ ಮತ ಯಾಚನೆ ನಡೆಸುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರಿನಲ್ಲಿ ಮಾಜಿ ಸಂಸದ ಹಾಗೂ ಇತ್ತೀಚೆಗಷ್ಟೇ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಜಯಪ್ರಕಾಶ್ ಹೆಗ್ಡೆ ಕಣದಲ್ಲಿದ್ದು, ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಲಿ ಶಾಸಕರು ಗೆಲುವು ಕಂಡರೆ ವಿಧಾನಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಬೇಕಾಗಿದ್ದು, ಉಪಚುನಾವಣೆಗೆ ಅನಿವಾರ್ಯವಾಗಲಿದೆ. +ಹಾಲಿ ಸಂಸದರ ಪೈಕಿ ಬಿಜೆಪಿ ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಕೊಪ್ಪಳದಲ್ಲಿ ಕರಡಿ ಸಂಗಣ್ಣ, ಬಳ್ಳಾರಿಯಲ್ಲಿ ವೈ.ದೇವೇಂದ್ರಪ್ಪ, ಹಾವೇರಿಯಲ್ಲಿ ಶಿವಕುಮಾರ್ ಉದಾಸಿ, ಉತ್ತರಕನ್ನಡದಲ್ಲಿ ಅನಂತಕುಮಾರ್ ಹೆಗಡೆ, ದಾವಣಗೆರೆಯಲ್ಲಿ ಜಿ.ಎಂ.ಸಿದ್ದೇಶ್ವರ್, ಉಡುಪಿ-ಚಿಕ್ಕಮಗಳೂರಿನಲ್ಲಿ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡದಲ್ಲಿ ನಳೀನ್‍ಕುಮಾರ್ ಕಟೀಲ್, ಚಿತ್ರದುರ್ಗದಲ್ಲಿ ಎ.ನಾರಾಯಣಸ್ವಾಮಿ, ತುಮಕೂರಿನಲ್ಲಿ ಜಿ.ಎಸ್.ಬಸವರಾಜ್, ಮೈಸೂರಿನಲ್ಲಿ ಪ್ರತಾಪ್ ಸಿಂಹ, ಚಾಮರಾಜನಗರದಲ್ಲಿ ಶ್ರೀನಿವಾಸಪ್ರಸಾದ್, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದಗೌಡ, ಚಿಕ್ಕಬಳ್ಳಾಪುರದಲ್ಲಿ ಬಿ.ಎನ್.ಬಚ್ಚೇಗೌಡ, ಕೋಲಾರದಲ್ಲಿ ಎಸ್.ಮುನಿಸ್ವಾಮಿ ಅವರನ್ನು ಬದಲಾಯಿಸಿದೆ. +ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದರೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾವಣೆಯಾಗಿದೆ. ಬದಲಾವಣೆಯಾಗಿರುವವರ ಪೈಕಿ ಕೇಂದ್ರ ಸಚಿವರಾಗಿದ್ದ ಎ.ನಾರಾಯಣಸ್ವಾಮಿ ಅವಕಾಶ ವಂಚಿತರಾಗಿದ್ದಾರೆ.ಇನ್ನು ಕಾಂಗ್ರೆಸ್‍ನಿಂದ ಹಾಲಿ ಸಂಸದ ಡಿ.ಕೆ.ಸುರೇಶ್ ಮರುಸ್ಪರ್ಧಿಸಿದ್ದರೆ, ಚಿಕ್ಕೋಡಿಯಲ್ಲಿ ಪ್ರಿಯಾಂಕ ಜಾರಕಿಹೊಳಿ, ಬೆಳಗಾವಿಯಲ್ಲಿ ಮೃಣಾಳ್ ಹೆಬ್ಬಾಳ್ಕರ್, ಬಾಗಲಕೋಟೆಯಲ್ಲಿ ಸಂಯುಕ್ತ.ಎಸ್ ಪಾಟೀಲ್, ಬೀದರ್‍ನಲ್ಲಿ ಸಾಗರ್ ಖಂಡ್ರೆ, ಚಾಮರಾಜನಗರದಲ್ಲಿ ಸುನೀಲ್ ಬೋಸ್, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯ ರೆಡ್ಡಿ, ದಾವಣಗೆರೆಯಿಂದ ಪ್ರಭಾ ಮಲ್ಲಿಕಾರ್ಜುನ್, ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್, ಶಿವಮೊಗ್ಗದಿಂದ ಗೀತಾ ಶಿವರಾಜ್‍ಕುಮಾರ್, ಸಚಿವರ ಕುಟುಂಬದ ಸದಸ್ಯರಾಗಿ ಕಣದಲ್ಲಿದ್ದಾರೆ. \ No newline at end of file diff --git a/eesanje/url_46_191_11.txt b/eesanje/url_46_191_11.txt new file mode 100644 index 0000000000000000000000000000000000000000..fec7a5a7d782cf73ccbf5b74b3199bf38774c925 --- /dev/null +++ b/eesanje/url_46_191_11.txt @@ -0,0 +1,8 @@ +ಸಮನ್ವಯ ಸವಾಲ್ : ಜೆಡಿಎಸ್ ಜೊತೆ ಕೈ ಜೋಡಿಸುವರೇ ತಳಮಟ್ಟದ ಬಿಜೆಪಿ ಕಾರ್ಯಕರ್ತರು..? +ಬೆಂಗಳೂರು,ಮಾ.30-ಲೋಕಸಭೆ ಚುನವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಗುರಿ ಇಟ್ಟುಕೊಂಡಿರುವ ಬಿಜೆಪಿಗೆ ಜೆಡಿಎಸ್‍ನೊಂದಿಗೆ ಸಮನ್ವಯ ಸಾಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೇಲ್ನೋಟಕ್ಕೆ ನಾವು ಒಂದಾಗಿದ್ದೇವೆ ಎಂದು ಹೇಳುತ್ತಿದ್ದರೂ ತಳಮಟ್ಟದಲ್ಲಿ ಕಾರ್ಯಕರ್ತರು ಜೆಡಿಎಸ್ ಜೊತೆ ಕೈ ಜೋಡಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಪಕ್ಷಕ್ಕೆ ಕಾಡುತ್ತಿದೆ. +ಕಳೆದ ವಿಧಾನಸಭೆಯಲ್ಲಿ ಸೆಣಸಾಡಿಸಿದ್ದ ಹಾವು-ಮುಂಗುಸಿಯಂತೆ ಜೆಡಿಎಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮೈತ್ರಿಯನ್ನು ಮುನ್ನಡೆಸುವುದು ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಜೆಡಿಎಸ್ ಮತ್ತು ಬಿಜೆಪಿ ನಾಯಕರು 2023ರ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ವಿರುದ್ಧ ಸ್ರ್ಪಧಿಸಿದ್ದರು. ಇದಾದ ಒಂದು ವರ್ಷದೊಳಗೆ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದು ಸುಲಭವಲ್ಲ. ಉನ್ನತ ನಾಯಕರು ಕೈ ಜೋಡಿಸುವಷ್ಟು ಸುಲಭದಲ್ಲಿ ತಳಮಟ್ಟದ ಮುಖಂಡರು, ಕಾರ್ಯಕರ್ತರು ಕೈ ಜೋಡಿಸುವುದಿಲ್ಲ. ಅದಲ್ಲದೇ ಈ ಬಾರಿ ಅಲ್ಪಸಂಖ್ಯಾತರ ಮತಗಳು ಕ್ರೋಡೀಕರಣಗೊಳ್ಳಲಿದ್ದು, ಕಾಂಗ್ರೆಸ್ ಚುನಾವಣೆಯಲ್ಲಿ ಮೇಲುಗೈ ಸಾಧಿಸಬಹುದು ಎಂದು ಹೇಳಲಾಗುತ್ತಿದೆ. +ಬಿಜೆಪಿ ಈ ಬಾರಿ 15 ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿತ್ರದುರ್ಗದಿಂದ ಗೋವಿಂದ ಕಾರಜೋಳ ಮತ್ತು ತುಮಕೂರಿನಿಂದ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೂವರು ಕೂಡ ಹಿರಿಯ ನಾಯಕರಾಗಿದ್ದು, ಕಣಕ್ಕಿಳಿದಿರುವ ಕ್ಷೇತ್ರಗಳಲ್ಲಿ ಹೊರಗಿನವರು ಎಂದು ಪರಿಗಣಿಸಲಾಗಿದೆ. ಇಲ್ಲಿ ಸ್ಥಳೀಯರು ಮತ್ತು ಹೊರಗಿನವರೆಂಬ ಸಮರ ನಡೆಯುತ್ತಿದ್ದು, ಬಿಜೆಪಿ ನಾಯಕರ ನಿರ್ಧಾರಗಳಿಗೆ ಸ್ಥಳೀಯ ಮುಖಂಡರು ಅತೃಪ್ತಿ ಹೊರಹಾಕುತ್ತಿದ್ದಾರೆ. +ಇನ್ನು ನಮ್ಮ ಅಭ್ಯರ್ಥಿಗಳು ಯಾರು ಹೊರಗಿನವರಲ್ಲ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಎಂಎಲ್‍ಸಿ ರವಿಕುಮಾರ್ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಮತ್ತು ವಿ.ಸೋಮಣ್ಣ ಅಕ್ಕಪಕ್ಕದ ಕ್ಷೇತ್ರದವರೇ ಆಗಿದ್ದು, ಗೋವಿಂದ ಕಾರಜೋಳ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದಾರೆ. ಇವರೆಲ್ಲರೂ ಕನ್ನಡಿಗರೇ ಇಲ್ಲಿನ ಭಾಷೆ ಮತ್ತು ಸಂಸ್ಕೃತಿಯನ್ನು ತಿಳಿದಿದ್ದಾರೆ. ಇದು ಸಮಸ್ಯೆಯಾಗುವುದಿಲ್ಲ ಎಂದಿದ್ದಾರೆ. +ಒಂದು ಕಡೆ ಟಿಕೆಟ್ ವಂಚಿತರು ಹಾಗೂ ಅವರ ಬೆಂಬಲಿಗರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅತೃಪ್ತರನ್ನು ಯಡಿಯೂರಪ್ಪ ಸೇರಿ ಬಿಜೆಪಿಯ ಹಿರಿಯ ನಾಯಕರು ಸಮಾಧಾನ ಮಾಡುತ್ತಿದ್ದಾರೆ. ಮೈಸೂರು-ಕೊಡಗು, ಬೆಂಗಳೂರು ಉತ್ತರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಭಿನ್ನಮತ ಬಹುತೇಕ ಶಮನವಾಗಿದ್ದರೆ, ಉತ್ತರ ಕನ್ನಡ, ಚಿತ್ರದುರ್ಗ, ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಪಕ್ಷಕ್ಕೆ ಸವಾಲು ಎದುರಾಗಿದೆ. +25 ಬಿಜೆಪಿ ಅಭ್ಯರ್ಥಿಗಳಲ್ಲಿ ಒಂಬತ್ತು ಮಂದಿ ಲಿಂಗಾಯತರು, ನಾಲ್ವರು ಎಸ್‍ಸಿಗಳು, ಮೂವರು ಬ್ರಾಹ್ಮಣರು, ಮೂವರು ಒಕ್ಕಲಿಗರು, ಇಬ್ಬರು ಎಸ್‍ಟಿ, ಒಬ್ಬರು ಬಂಟ್ ಮತ್ತು ಮೂವರು ಇತರೆ ಹಿಂದುಳಿದ ವರ್ಗದವರಿಗೆ ಟಿಕೆಟ್ ನೀಡಲಾಗಿದೆ. ಪಟ್ಟಿಯಲ್ಲಿ ಒಂಬತ್ತು ಲಿಂಗಾಯತರಿಗೆ ಟಿಕೆಟ್ ನೀಡಿ ಒಕ್ಕಲಿಗರಿಗೆ ಕೇವಲ ಮೂರು ಟಿಕೆಟ್‍ಗಳನ್ನು ನೀಡಿರುವುದರಿಂದ ಒಕ್ಕಲಿಗ ಸಂಘದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಇನ್ನು ಜೆಡಿಎಸ್ ಕೂಡ ಇಬ್ಬರು ಒಕ್ಕಲಿಗರನ್ನು ಕಣಕ್ಕಿಳಿಸುತ್ತಿರುವುದರಿಂದ ಒಕ್ಕಲಿಗರ ಪ್ರಾಬಲ್ಯ ಐದಕ್ಕೇರಲಿದೆ ಎಂಬುದು ಬಿಜೆಪಿ ನಾಯಕರ ಮಾತು. ಒಕ್ಕಲಿಗ ಸಮುದಾಯಕ್ಕೆ ಐದು ಟಿಕೆಟ್ ಕೊಡುತ್ತಿರುವುದು ಕಡಿಮೆ ಪ್ರಾತಿನಿಧ್ಯವೇನಲ್ಲ. ಆದರೆ, ಹಳೇ ಮೈಸೂರು ಭಾಗದಲ್ಲಿ ಮಾಜಿ ಸಿಎಂ ಡಿವಿ ಸದಾನಂದಗೌಡ ಹಾಗೂ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಒಕ್ಕಲಿಗ ಪ್ರಾತಿನಿಧ್ಯದ ಬಗ್ಗೆ ಕೆಲ ಮುಖಂಡರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. \ No newline at end of file diff --git a/eesanje/url_46_191_12.txt b/eesanje/url_46_191_12.txt new file mode 100644 index 0000000000000000000000000000000000000000..9c954bb7aa208dcbdd44898435d2e160f8ee47bc --- /dev/null +++ b/eesanje/url_46_191_12.txt @@ -0,0 +1,7 @@ +ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಎಣ್ಣೆ ಹೊಳೆ, ಹಣದ ಮಳೆ, ಆಭರಣಗಳ ಕಳೆ +ಬೆಂಗಳೂರು, ಮಾ.30-ಪ್ರಸಕ್ತ ಲೋಕಸಭಾ ಸಾರ್ವತ್ರಿಕ ಚುನಾವಣಾ ಘೋಷಣೆಯಾಗಿ ಎರಡು ವಾರ ಕಳೆಯುವ ಮುನ್ನವೇ ರಾಜ್ಯದಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರಾಭರಣಗಳು ಹಾಗೂ ಮದ್ಯವನ್ನು ಜಪ್ತಿ ಮಾಡಲಾಗಿದೆ. +ಮಾ.16 ರಂದು ಚುನಾವಣಾ ವೇಳಾಪಟ್ಟಿ ಘೋಷಣೆಯಾಗಿ ಅಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಚುನಾವಣೆ ಹಿನ್ನೆಲೆಯಲ್ಲಿ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಆದಾಯ ಹಾಗೂ ಅಬಕಾರಿ ಅಧಿಕಾರಿಗಳು ತಪಾಸಣೆ ವೇಳೆ ಕೋಟ್ಯಂತರ ರೂ. ಮೌಲ್ಯದ ಮದ್ಯ, ನಗದು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.ಒಟ್ಟು 8,63,337.38 ಲೀಟರ್‍ನಷ್ಟು ಭಾರೀ ಪ್ರಮಾಣದಲ್ಲಿ ಮದ್ಯವನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯವನ್ನು 27,27,59,762 ರೂ. ಎಂದು ಅಂದಾಜಿಸಲಾಗಿದೆ. +ಅದೇ ರೀತಿ 15.32 ಕೆ.ಜಿ. ಚಿನ್ನ 59.04 ಕೆ.ಜಿ. ಬೆಳ್ಳಿ, 21.17 ಕ್ಯಾರೆಟ್ ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 62,42,20,710 ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, 20,85,73,387 ರೂ.ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. +ಕಳೆದ ಲೋಕಸಭಾ ಚುನಾವಣೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನಗದು, ಚಿನ್ನಾಭರಣ ಹಾಗೂ ಮದ್ಯವನ್ನು ಜಪ್ತಿ ಮಾಡುತ್ತಿರುವುದು ಕಂಡುಬರುತ್ತಿದೆ. ಬೆಂಗಳೂರು ನಗರದ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆ ತಂಡದವರು 10.20 ಲಕ್ಷ ರೂ. ಮೌಲ್ಯದ 17.425 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. +ಸ್ಥಿರ ಕಣ್ಗಾವಲು ತಂಡದವರು 6 ಲಕ್ಷ ಮೌಲ್ಯದ 128.74 ಗ್ರಾಂ ಚಿನ್ನದ ಆಭರಣಗಳು ಮತ್ತು ಹವಳವನ್ನು ವಶಪಡಿಸಿಕೊಂಡಿರುವುದಲ್ಲದೆ 14,63,530 ರೂ. ನಗದು ಸೇರಿದಂತೆ ಒಟ್ಟು 20,63,530 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ತುಮಕೂರು ಜಿಲ್ಲೆಯ ಬಟ್ವಾಡಿ ಚೆಕ್‍ ಪೋಸ್ಟ್ ನಲ್ಲಿ ಜಪ್ತಿ ಮಾಡಿದ್ದಾರೆ. +ಅಬಕಾರಿ ಇಲಾಖೆಯವರು 7,344 ಲೀಟರ್ ಭಾರತೀಯ ನಿರ್ಮಿತ ವಿದೇಶಿ ಮದ್ಯವನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜಪ್ತಿ ಮಾಡಿದ್ದು, ಇದರ ಮೌಲ್ಯ 29,50,486 ರೂ. ಎಂದು ಅಂದಾಜಿಸಲಾಗಿದೆ.8,970 ಲೀಟರ್ ಬೀಯರ್ ಅನ್ನು ವೈಟ್‍ಫೀಲ್ಡ್ ಬಳಿ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 29,92,910 ರೂ. ಎಂದು ಅಂದಾಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_191_2.txt b/eesanje/url_46_191_2.txt new file mode 100644 index 0000000000000000000000000000000000000000..8765d4cdf61ca04247e80812103998c6caf60aab --- /dev/null +++ b/eesanje/url_46_191_2.txt @@ -0,0 +1,8 @@ +ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ : ಜಿ.ಪರಮೇಶ್ವರ್ +ಬೆಂಗಳೂರು, ಮಾ.30-ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೆ ಅಧಿಕಾರ ಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳ ಕಾರ್ಯ ನಿರಂತರವಾಗಿ ನಡೆಯುತ್ತದೆ. ಆದರೆ, ಇಷ್ಟುದಿನ ಸುಮ್ಮನಿದ್ದು ಚುನಾವಣೆ ಸಂದರ್ಭದಲ್ಲಿ ಆಸಕ್ತಿ ತೋರಿಸಿರುವುದು ಯಾಕೆ? ಆದಾಯ ತೆರಿಗೆ ಇಲಾಖೆಯವರು ಈಗ ತೆರಿಗೆ ಕಟ್ಟುವಂತೆ ನೋಟೀಸ್ ನೀಡುತ್ತಿರುವುದರ ಅರ್ಥವೇನು? ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಯಾವ ಉದ್ದೇಶಕ್ಕಾಗಿ ಸೀಜ್ ಮಾಡಲಾಗಿತ್ತು? ಎಂದು ಪ್ರಶ್ನಿಸಿದರು. +ಎಲೆಕ್ಟ್ರೋಲ್ ಬಾಂಡ್ಸ್ ಕೊಡಬಹುದು, ಹಣ ಕೊಡುವಂತಿಲ್ಲ ಎಂದು ಕಳೆದ ಚುನಾವಣೆಯಲ್ಲಿ ಹೇಳಲಾಗಿತ್ತು. ಇದಕ್ಕೆ ಚುನಾವಣೆ ಆಯೋಗ ಅನುಮತಿ ನೀಡಿತ್ತು. ಎಲ್ಲ ಪಾರ್ಟಿಯವರು ಎಲೆಕ್ಟ್ರೋಲ್ ಬಾಂಡ್ಸ್ಗಳನ್ನು ಡೊನೇಷನ್ ಮಾದರಿಯಾಗಿ ತೆಗೆದುಕೊಂಡರು. ಈಗ ಎಲೆಕ್ಟ್ರೋಲ್ ಬಾಂಡ್ಸ್ ತೆಗೆದುಕೊಂಡಿರುವುದು ತಪ್ಪು ಎನ್ನಲಾಗುತ್ತಿದೆ. ಬಿಜೆಪಿಯವರು ಹೆಚ್ಚು ಬಾಂಡ್ಸ್ಗಳನ್ನು ತೆಗೆದುಕೊಂಡಿದ್ದು, ರೂ. 8200 ಕೋಟಿ ರೂ. ಗೂ ಹೆಚ್ಚು ತೆಗೆದುಕೊಂಡಿದ್ದಾರೆ. ನಮ್ಮ ಪಕ್ಷಕ್ಕೆ 1800 ಕೋಟಿ ರೂ. ಬಂದಿದೆ. +ಬಿಜೆಪಿಯವರು ರೂ. 8200 ಕೋಟಿ ರೂ. ಪೈಕಿ, 6600 ಕೋಟಿ ರೂ. ಲೆಕ್ಕ ಕೊಟ್ಟಿದ್ದು, ಬಾಕಿ ಹಣದ ಲೆಕ್ಕ ತೋರಿಸಿಲ್ಲ. ಇದಕ್ಕಿದ್ದಂತೆ 1800 ಕೋಟಿ ರೂ. ತೆರಿಗೆ ಕಟ್ಟುವಂತೆ ನಮ್ಮ ಪಕ್ಷಕ್ಕೆ ನೋಟೀಸ್ ಕೊಡುವುದಾದರೆ, ಬಿಜೆಪಿಯವರು ಲೆಕ್ಕ ತೋರಿಸಿರುವ 6600 ಕೋಟಿ ರೂ. ಗೂ ನೋಟಿಸ್ ನೀಡಲಿ. ಬರೀ ಕಾಂಗ್ರೆಸ್ನವರಿಗೆ ನೋಟೀಸ್ ನೀಡಿರುವುದು, ರಾಜಕೀಯ ದುರುದ್ದೇಶ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. +ತುಮಕೂರಿನಿಂದ ಸ್ರ್ಪಧಿಸುವಂತೆ ದೇವೇಗೌಡರನ್ನು ನಾವ್ಯಾರು ಕರೆದಿರಲಿಲ್ಲ:ಕಳೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡ ಅವರನ್ನು ತೂಮಕೂರಿನಿಂದ ಸ್ರ್ಪಧಿಸುವಂತೆ ಯಾರೂ ಕರೆದಿರಲಿಲ್ಲ. ಆಗ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ ದೇವೇಗೌಡ ಅವರು ತುಮಕೂರಿನಿಂದ ಸ್ರ್ಪಧಿಸುತ್ತಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ. ನೀವು ಬರುತ್ತೀರಾ? ಎಂದು ಖುದ್ದಾಗಿ ಕೇಳಿದ್ದೆ. ನಾನು ಇನ್ನು ತೀರ್ಮಾನ ಮಾಡಿಲ್ಲಪ್ಪ. ಬೆಂಗಳೂರು ಉತ್ತರ ಕ್ಷೇತ್ರದಿಂದ ನಿಲ್ಲಲು ತೀರ್ಮಾನ ಮಾಡಿಕೊಂಡಿದ್ದೇನೆ ಎಂದಿದ್ದರು. ತದನಂತರ ನಮ್ಮ ಹೈಕಮಾಂಡ್ ಜೊತೆ ಏನು ಮಾತನಾಡಿಕೊಂಡರೋ ಆ ಭಾಗ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. +ದೇವೇಗೌಡ ಅವರು ತುಮಕೂರಿನಿಂದ ಸ್ರ್ಪಧಿಸುತ್ತಾರೆ ಎಂದು ಹೈಕಮಾಂಡ್ನಿಂದ ಸೂಚನೆ ಬಂತು. ನಾವೆಲ್ಲ ಪ್ರಾಮಾಣಿಕವಾಗಿ ದೇವೇಗೌಡ ಅವರ ಗೆಲುವಿಗಾಗಿ ಕೆಲಸ ಮಾಡಿದ್ದೇವೆ. ಪ್ರಧಾನ ಮಂತ್ರಿಯಾಗಿದ್ದವರು ನಮ್ಮ ಕ್ಷೇತ್ರದಿಂದ ಸ್ರ್ಪಧಿಸುತ್ತಾರೆ ಅಂದಾಗ ಗೆಲ್ಲಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಆದರೆ, ದೇವೇಗೌಡ ಪರವಾಗಿ ಜೆಡಿಎಸ್ ಪಕ್ಷದವರೇ ಕೆಲಸ ಮಾಡಲಿಲ್ಲ ಎಂದು ಹೇಳಿದರು. +ದೇವೇಗೌಡ ಅವರ ಬಗ್ಗೆ ಅಪಾರವಾದ ಗೌರವವಿದೆ. ನಮ್ಮ ರಾಜ್ಯದಿಂದ ಪ್ರಧಾನಿಯಾದ ಏಕೈಕ ವ್ಯಕ್ತಿ. ಅವರ ವ್ಯಕ್ತಿತ್ವದ ಬಗ್ಗೆ ನಮಗೆ ಹೆಮ್ಮೆ ಇದೆ. ನಾವ್ಯಾರೂ ಅವರನ್ನು ಕರೆದುಕೊಂಡು ಹೋಗಿ ಸೋಲಿಸಿಲ್ಲ ಎಂದರು. ಎಚ್ಡಿಕೆ ಅವರ ಆರೋಗ್ಯದ ವಿಚಾರವಾಗಿ ಶಾಸಕ ಬಂಡಿಸಿದ್ದೇಗೌಡ ಅವರ ಹೇಳಿಕೆಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ಚುನಾವಣೆ ಸಂದರ್ಭದಲ್ಲಿ ಯಾರೊಬ್ಬರೂ ವೈಯಕ್ತಿಕ ವಿಚಾರಗಳನ್ನು ಮಾತನಾಡಬಾರದು. ನಮ್ಮ ಮಾತಿನ ಮೇಲೆ ನಮಗೆ ನಿಯಂತ್ರಣ ಇದ್ದರೆ ಒಳ್ಳೆಯದು. ನಾನೇ ಇರಲಿ, ಬೇರೆ ಯಾರೇ ಇರಲಿ ಅದು ಸೂಕ್ತವಲ್ಲ ಎಂದು ಹೇಳಿದರು. +ಕೋಲಾರದಲ್ಲಿ ಎರಡು ಗುಂಪು ಆಗಿರುವುದು ನಿಜ. ಇನ್ನೂ ಸಮಯ ಇದೆ. ಒಟ್ಟಾಗಿ ಕೆಲಸ ಮಾಡುತ್ತಾರೆ. ಕೋಲಾರದಲ್ಲಿ ಈಗಲೂ ಒಳ್ಳೆಯ ವಾತಾವರಣವಿದ್ದು, ಯಾರಿಗೆ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_191_3.txt b/eesanje/url_46_191_3.txt new file mode 100644 index 0000000000000000000000000000000000000000..188cf0b322fb044b9861a668dd2c682c79ee58c1 --- /dev/null +++ b/eesanje/url_46_191_3.txt @@ -0,0 +1,6 @@ +ಏ.1ರಂದು ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ +ತುಮಕೂರು, ಮಾ.30-ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೆ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ಏ.1ರಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಸಂಸ್ಥೆಗಳ ಆಡಳಿತಾಧಿಕಾರಿ ಟಿ.ಕೆ.ನಂಜುಡಪ್ಪ ತಿಳಿಸಿದರು. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಶ್ರೀಗಳ ಜಯಂತಿ ಆಚರಿಸಲಾಗುತ್ತಿದ್ದು, ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಮೈಸೂರು ಸುತ್ತೂರು ಮಠದ ಶ್ರೀ ಶಿವರಾತಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಉದ್ಘಾಟನೆಯನ್ನು ಪತಂಜಲಿ ಯೋಗ ಗುರು ರಾಮದೇವ್ ಮಾಡಲಿದ್ದಾರೆ ಎಂದು ತಿಳಿಸಿದರು. +ದಿವ್ಯ ಸಾನಿಧ್ಯವನ್ನು ಮುಂಡರಗಿ ಮಹಾಸಂಸ್ಥಾನದ ಅಧ್ಯಕ್ಷರಾದ ಡಾ.ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಮಠದ ಅಧ್ಯಕ್ಷರಾದ ಡಾ.ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷರಾದ ಶ್ರೀ ಕಲ್ಲಯ್ಯ ಅಜ್ಜ, ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ವಹಿಸಲಿದ್ದಾರೆ. +ಈ ಬಾರಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಜನಪ್ರತಿನಿಧಿಗಳು ನಾಯಕರುಗಳಿಗೆ ವೇದಿಕೆ ಕಾರ್ಯಕ್ರಮಕ್ಕೆ ಆಮಂತ್ರಣವಿರುವುದಿಲ್ಲ. ಧಾರ್ಮಿಕ ಗುರುಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸಿ ಗುರುವಂದನಾ ಮಹೋತ್ಸವ ನಡೆಸಲಾಗುತ್ತಿದೆ. +ಅಂದು ಬೆಳಗ್ಗೆ ಮುಂಜಾನೆಯಿಂದಲೇ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ವಿಶೇಷ ಪೂಜೆ ನೆರವೇರಲಿದ್ದು, ಪುತ್ಥಳಿಯ ಮೆರವಣಿಗೆ ಕೂಡ ನಡೆಸಲಾಗುವುದು ಎಂದು ತಿಳಿಸಿದರು. ಜಯಂತಿ ಅಂಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ದಾಸೋಹ ಏರ್ಪಡಿಸಿದ್ದು, ಊಟಕ್ಕೆ ಸಿಹಿಬೂಂದಿ, ಖಾರ ಬೂಂದಿ, ಚಿತ್ರಾನ್ನ, ಮಜ್ಜಿಗೆಯನ್ನು ಬಡಿಲಾಗುವುದು ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಸಹಾಯಕ ಆಡಳಿತಾಧಿಕಾರಿ ಮಲ್ಲಿಕಾರ್ಜುನಯ್ಯ, ಶಿವಕುಮಾರಯ್ಯ ಉಪಸ್ಥಿತರಿದ್ದರು. \ No newline at end of file diff --git a/eesanje/url_46_191_4.txt b/eesanje/url_46_191_4.txt new file mode 100644 index 0000000000000000000000000000000000000000..f6a5bbcac4682ef869707b296cf1eca6555acf59 --- /dev/null +++ b/eesanje/url_46_191_4.txt @@ -0,0 +1,5 @@ +20ಕ್ಕೂ ಹೆಚ್ಚು ಬಿಲ್ಡರ್‌ಗಳ ಕಚೇರಿ, ನಿವಾಸಗಳ ಮೇಲೆ ಐಟಿ ದಾಳಿ +ಬೆಂಗಳೂರು, ಮಾ.30- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಂಗ್ರಹ ಹಾಗೂ ಹಣ ವರ್ಗಾವಣೆ ಮೇಲೆ ಕಣ್ಣಿಟ್ಟಿರುವ ಐಟಿ ಅಧಿಕಾರಿಗಳು ರಾಜಧಾನಿ ಬೆಂಗಳೂರಿನ 20 ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. +ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ಬಿಲ್ಡರ್ಗಳು ಫಂಡಿಂಗ್ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ 20 ಕ್ಕೂ ಹೆಚ್ಚು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. +ಕಳೆದ ವಾರವಷ್ಟೆ ಬೆಂಗಳೂರಿನ ಮೇಘನಾ ಫುಡ್ ಗ್ರೂಪ್ ಕಂಪನಿಗೆ ಸೇರಿದ 10 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳನ್ನು ನಡೆಸುತ್ತಿದ್ದು, ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕೋರಮಂಗಲ, ಜಯನಗರ, ಇಂದಿರಾನಗರದಲ್ಲಿರುವ ಶಾಖೆಗಳ ಮೇಲೆ ದಾಳಿ ಮಾಡಲಾಗಿತ್ತು. +ಇಂದು ನಗರದ 20 ಕ್ಕೂ ಹೆಚ್ಚು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.ಚುನಾವಣಾ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಕಳೆದ ವಾರವಷ್ಟೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಭರ್ಜರಿ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. \ No newline at end of file diff --git a/eesanje/url_46_191_5.txt b/eesanje/url_46_191_5.txt new file mode 100644 index 0000000000000000000000000000000000000000..4a992ccec58e26db805f878b0a54f24c6d150ac5 --- /dev/null +++ b/eesanje/url_46_191_5.txt @@ -0,0 +1,7 @@ +ರಾಮೇಶ್ವರಂ ಕೆಫೆ ಸ್ಫೋಟಿಸಲು ಕೇವಲ 5 ಸಾವಿರದಲ್ಲಿ ಬಾಂಬ್ ತಯಾರಿಸಿದ್ದ ಉಗ್ರರು +ಬೆಗಳೂರು, ಮಾ.30-ನಗರದ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ ಬಾಂಬ್ ತಯಾರಿಸಲು ದುಷ್ಕರ್ಮಿಗಳು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದರು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.ಈ ಶಂಕಿತ ಉಗ್ರರು ಬಾಂಬ್ ತಯಾರಿಸಲು ಬೇಕಾದ ಕೆಲವು ಕಚ್ಚಾವಸ್ತುಗಳನ್ನು ಆನ್ಲೈನ್ ಮೂಲಕ ಹಾಗೂ ಮತ್ತೆ ಕೆಲವು ಸಾಮಗ್ರಿಗಳನ್ನು ವಿವಿಧ ಅಂಗಡಿಗಳಲ್ಲಿ ಖರೀದಿಸಿರುವುದು ಗೊತ್ತಾಗಿದೆ. +ಶಂಕಿತ ಉಗ್ರರು ಆನ್ಲೈನ್ನಲ್ಲಿ ಡೆಟೋನೇಟರ್, ಬ್ಯಾಟರಿ, ಟೈಮರ್, ರಂಜಕ ಹಾಗೂ ಅಂಗಡಿಗಳಲ್ಲಿ ನಟ್, ಬೋಲ್ಟ್, ಕೆಲವು ವೈರುಗಳನ್ನು ಖರೀದಿಸಿರುವುದನ್ನು ಎನ್ಐಎ ಪತ್ತೆಹಚ್ಚಿದೆ.ಕೆಫೆ ಸ್ಫೋಟದ ಬಗ್ಗೆ ಎನ್ಐಎ ಈಗಾಗಲೇ ಬಂಧಿಸಿರುವ ಮುಜಾಮಿಲ್ ಶರೀಫ್ ಈ ಎಲ್ಲಾ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿ ಬಾಂಬ್ ತಯಾರಿಸುತ್ತಿದ್ದ ಅಬ್ದುಲ್ ಮತಿನ್ ತಾಹ ಹಾಗೂ ಪ್ರಮುಖ ಆರೋಪಿ ಮುಸಾವೀರ್ಗೆ ನೀಡುತ್ತಿದ್ದನು ಎಂಬುದು ಎನ್ಐಎ ತನಿಖೆಯಿಂದ ಗೊತ್ತಾಗಿದೆ. +ಆನ್ಲೈನ್ ಹಾಗೂ ಅಂಗಡಿಗಳಲ್ಲಿ ಖರೀದಿಸಿದ ಈ ಎಲ್ಲಾ ವಸ್ತುಗಳನ್ನು ಸಂಗ್ರಹಿಸಿ, ಶಂಕಿತ ಉಗ್ರರು ನಗರ ಹೊರವಲಯದಲ್ಲಿ ಬಾಂಬ್ ಸಿದ್ಧ ಪಡಿಸಿದ್ದರು ಎಂಬುದನ್ನು ಎನ್ಐಎ ಪತ್ತೆ ಹಚ್ಚಿದೆ.ಈ ಬಾಂಬ್ ತಯಾರಿಸಲು ಶಂಕಿತ ಉಗ್ರರು ಕೇವಲ ಐದರಿಂದ ಆರು ಸಾವಿರ ರೂ. ವೆಚ್ಚ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. +ಕೆಫೆಯಲ್ಲಿ ಮಾ.1ರಂದು ಬಾಂಬ್ ಸ್ಫೋಟದ ನಂತರ ತನಿಖೆ ಕೈಗೊಂಡ ಎನ್ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ದೊರೆತ ಮಾಹಿತಿಯಿಂದ ಈ ಸ್ಫೋಟದ ಹಿಂದೆ ಶಂಕಿತ ಉಗ್ರರಾದ ಅಬ್ದುಲ್ ಮತಿನ್ ತಾಹ ಮತ್ತು ಮುಸಾವೀರ್ ಇರುವುದು ಗೊತ್ತಾಗಿತ್ತು. +ಅದರ ಜಾಡು ಹಿಡಿದು ಎನ್ಐಎ ಅಧಿಕಾರಿಗಳು ತನಿಖೆ ತೀವ್ರ ಗೊಳಿಸಿ ನಗರದ ಐದು ಕಡೆ, ಚೆನ್ನೈ, ತೀರ್ಥಹಳ್ಳಿ, ಭಟ್ಕಳದಲ್ಲಿ ದಾಳಿ ಮಾಡಿ ಹಲವರನ್ನು ವಿಚಾರಣೆಗೆ ಒಳಪಡಿಸಿ, ಅವರು ನೀಡಿದ ಮಾಹಿತಿ ಮೇರೆಗೆ ಮುಜಾಮಿಲ್ ಶರೀಫ್ ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಅಬ್ದುಲ್ ಮತಿನ್ ತಾಹ ಮತ್ತು ಮುಸಾವೀರ್ ಕೆಫೆ ಸ್ಫೋಟದ ರುವಾರಿಗಳು ಎಂಬುದು ಮತ್ತಷ್ಟು ಖಚಿತವಾಗಿದೆ. +ಈ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಈ ಇಬ್ಬರು ಶಂಕಿತ ಉಗ್ರರ ಛಾಯಾಚಿತ್ರಗಳನ್ನು ಎನ್ಐಎ ಬಿಡುಗಡೆ ಮಾಡಿ ಇವರುಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿ, ಸಾರ್ವಜನಿಕರು ಪತ್ತೆಗೆ ಸಹಕರಿಸುವಂತೆ ಮನವಿ ಮಾಡಿದೆ. ಹಿಂದುವಿನಂತೆ ವೇಶ ಬದಲಿಸಿಕೊಂಡು, ಈ ಇಬ್ಬರು ಹಿಂದೂ ಹೆಸರಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂಬುದು ಗೊತ್ತಾಗಿದ್ದು, ಎನ್ಐಎ ಅಧಿಕಾರಿಗಳು ಹದ್ದಿನ ಕಣ್ಣಿಟ್ಟು ಹಗಲಿರುಳು ಸೋಟದ ಈ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕಾಗಿ ಶ್ರಮಿಸುತ್ತಿದ್ದಾರೆ. \ No newline at end of file diff --git a/eesanje/url_46_191_6.txt b/eesanje/url_46_191_6.txt new file mode 100644 index 0000000000000000000000000000000000000000..156da53a3d209242bf2af6b0c780054346f779f9 --- /dev/null +++ b/eesanje/url_46_191_6.txt @@ -0,0 +1,10 @@ +ಶಿಸ್ತು ಉಲ್ಲಂಘಿಸಿದರೆ ಹುಷಾರ್ : ಸಚಿವರು, ಶಾಸಕರಿಗೆ ಡಿಕೆಶಿ ವಾರ್ನಿಂಗ್ +ಬೆಂಗಳೂರು, ಮಾ.30-ಸಚಿವರು, ಶಾಸಕರೂ ಸೇರಿದಂತೆ ಎಲ್ಲರಿಗೂ ಶಿಸ್ತು ಮುಖ್ಯ. ಲಕ್ಷ್ಮಣರೇಖೆ ದಾಟುವಂತಿಲ್ಲ. ಗೆಲ್ಲುವುದು ಅಥವಾ ಸೋಲುವುದು ಬೇರೆ ವಿಚಾರ. ಆದರೆ ಈಗಲೂ ಶಿಸ್ತನ್ನು ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಚುನಾವಣಾ ಅಭ್ಯರ್ಥಿಗೆ ಸಂಬಂಧಪಟ್ಟಂತೆ ತಾವು ಹಾಗೂ ಮುಖ್ಯಮಂತ್ರಿಯವರು ಸಚಿವ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ರಮೇಶ್ಕುಮಾರ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಎರಡೂ ಬಣಗಳಿಗೂ ಟಿಕೆಟ್ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ಅವರ ಸ್ವಾರ್ಥಗಳಿಗೆ ಮಣೆ ಹಾಕಿಲ್ಲ ಎಂದರು. +ಪರ್ಯಾಯ ಅಭ್ಯರ್ಥಿ ಗೌತಮ್ ಸಾಮಾನ್ಯ ಕಾರ್ಯಕರ್ತ ಪಕ್ಷದ ನಿಷ್ಠಾವಂತ. ಹೈಕಮಾಂಡ್ ಟಿಕೆಟ್ ಕೊಟ್ಟವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಎಲ್ಲರೂ ಹೇಳಿದ್ದರು. ಹೀಗಾಗಿ ನಾವು ನಿರ್ಧಾರ ತೆಗೆದುಕೊಂಡಿದ್ದೇವೆ. ಇದರಲ್ಲಿ ಯಾವುದೇ ಒಳ ಏಟು ಅಥವಾ ಆಂತರಿಕ ಭಿನ್ನಮತ ಇರುವುದಿಲ್ಲ ಎಂದರು.’ +ಕೋಲಾರದಲ್ಲಿ ಬಲಗೈ ಸಮುದಾಯದ ಸಂಖ್ಯೆ ಹೆಚ್ಚಿದೆ. ಹೀಗಾಗಿ ಆ ವರ್ಗಕ್ಕೆ ಟಿಕೆಟ್ ನೀಡಬೇಕು ಎಂಬ ಬೇಡಿಕೆಯಿಟ್ಟಿದ್ದು ನಿಜ. ಆದರೆ ನಾವು ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡಿದ್ದೇವೆ. 10 ಲೋಕಸಭಾ ಕ್ಷೇತ್ರದಲ್ಲಿ ಎಡಗೈ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಎಡಗೈ ಸಮುದಾಯಕ್ಕೆ ಎರಡು ಸ್ಥಾನಗಳನ್ನು ನೀಡುತ್ತಿದ್ದೇವೆ. ಈ ಬಾರಿಯೂ ಅದನ್ನು ಮುಂದುವರೆಸುತ್ತೇವೆ. ಬಿಜೆಪಿಯವರು ಎರಡು ಕ್ಷೇತ್ರಗಳಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಷಾ ರೋಡ್ ಶೋ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೆಚ್ಚು ಪ್ರಬಲರಾದರೆ ಶತ್ರುಗಳ ಸಂಖ್ಯೆಯೂ ಹೆಚ್ಚಾಗುತ್ತದೆ. ಅಮಿತ್ ಷಾ ಬರಲಿ, ಗೌರವಾನ್ವಿತ ಪ್ರಧಾನಿಯವರೂ ಬರಲಿ, ನಮಗೆ ದೇವೇಗೌಡರು, ಅವರ ಕುಟುಂಬದ ಮಗ, ಸೊಸೆ, ಮೊಮ್ಮಗ ಎಲ್ಲರ ವಿರುದ್ಧವೂ ಸ್ರ್ಪಧಿಸಿಯಾಗಿದೆ. ಕಾಂಗ್ರೆಸ್ ಪಕ್ಷ ನಮ್ಮ ನಾಯಕತ್ವ ಸಿದ್ಧಾಂತದ ಮೇಲೆ ಚುನಾವಣೆ ನಡೆಸುತ್ತದೆ ಎಂದರು. +ಕೋವಿಡ್ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವು ನೀಡಲು, ಆಹಾರದ ಕಿಟ್ ನೀಡಲು, ಹೆಣ ಹೊರಲು ಯಾರಿದ್ದರು? ಆಗೆಲ್ಲಾ ಡಿ.ಕೆ.ಸುರೇಶ್ ಮತ್ತು ಕಾಂಗ್ರೆಸ್ ಪಕ್ಷ ಮಾತ್ರ ಕೆಲಸ ಮಾಡಿತ್ತು ಎಂದರು.ಕನಕಪುರದಲ್ಲಿ ಕಲ್ಲು ಮತ್ತು ಹೃದಯ ಎಂಬ ಚರ್ಚೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಲ್ಲು ಒಡೆದರೆ ಪ್ರಕೃತಿ, ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕøತಿ ಎಂದು ಹೇಳಿದರು. +ದೆಹಲಿ ಸೇರಿದಂತೆ ರಾಷ್ಟ್ರಾದ್ಯಂತ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ಆದಾಯ ತೆರಿಗೆ ನೋಟೀಸ್ ನೀಡಿ ಕಿರುಕುಳ ನೀಡಲಾಗುತ್ತಿದೆ. ಹಿರಿಯ ಒಕ್ಕೂಟ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲಿದೆ ಎಂಬ ಆತಂಕದಲ್ಲಿ ಈ ರೀತಿಯ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಟೀಕಿಸಿದರು. +ಕಮ್ಯುನಿಸ್ಟ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ಎನ್ಡಿಎ ಗುರಿಯಾಗಿಸಿಕೊಂಡಿದೆ. ವಿಪಕ್ಷಗಳನ್ನು ದುರ್ಬಲಗೊಳಿಸಲು ಕೇಂದ್ರ ತನಿಖಾ ದಳಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ವೈಯಕ್ತಿಕವಾಗಿ ನನಗೂ ನೋಟೀಸ್ ನೀಡಲಾಗಿದೆ ಎಂದು ಹೇಳಿದರು. +ರಾಜ್ಯದಿಂದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ಬಿಜೆಪಿ ನಾಯಕರೂ ಸೇರಿದಂತೆ ಹಲವರ ವಿರುದ್ಧ ಪ್ರಕರಣಗಳಿವೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ದೋಷಾರೋಪಣ ಪಟ್ಟಿ ಸಲ್ಲಿಸುವುದಿಲ್ಲ. ಆದರೆ ನಮ್ಮ ವಿರುದ್ಧ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. \ No newline at end of file diff --git a/eesanje/url_46_191_7.txt b/eesanje/url_46_191_7.txt new file mode 100644 index 0000000000000000000000000000000000000000..8324febdc6a590732af33839385e4063ff8ee431 --- /dev/null +++ b/eesanje/url_46_191_7.txt @@ -0,0 +1,7 @@ +ಚುನಾವಣಾ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್​​​ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು… +ಬೆಂಗಳೂರು,ಮಾ.30-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಲಿಕಾಫ್ಟರ್ಗಳಿಗೆ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಕಳೆದ ಚುನಾವಣೆಗೆ ಹೊಲಿಸಿದರೆ ಈ ಬಾರಿ ಅದಕ್ಕಿಂತ ಮೂರು ಪಟ್ಟು ಹೆಚ್ಚು ಕಾಫ್ಟರ್ಗಳಿಗೆ ಬೇಡಿಕೆ ಬಂದಿರುವುದು ವಿಶೇಷವಾಗಿದೆ. +ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಆಗಮಿಸುವ ಸ್ಟಾರ್ ಪ್ರಚಾರಕರುಗಳಿಗಾಗಿ ಮೂರು ಪಕ್ಷಗಳ ಮುಖಂಡರುಗಳು ಹೆಲಿಕಾಫ್ಟರ್ ಬುಕ್ಕಿಂಗ್ಗೆ ಮುಗಿ ಬಿದ್ದಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳಿಗೆ -ಫುಲ್ ಡಿಮ್ಯಾಂಡ್ ಬಂದಿದೆ. +ತಮ್ಮ ಪಕ್ಷದ ಅಭ್ಯರ್ಥಿಗಳಿಗಾಗಿ ಕೆಲ ಹೆಲಿಕಾಪ್ಟರ್ ಗಳನ್ನು ಕಾಯ್ದೆರಿಸುವಂತೆ ಎಚ್ಎಎಲ್ ಗೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಮಾತ್ರವಲ್ಲ, ಮೂರು ಪಕ್ಷದ ಸ್ಟಾರ್ ಪ್ರಚಾರಕರಿಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಬೆಂಗಳೂರಿಗೆ ನೂರಾರು ಹೆಲಿಕಾಫ್ಟರ್ಗಳನ್ನು ಕರೆಸಿಕೊಳ್ಳಲಾಗಿದೆ. ಹೆಲಿಕಾಪ್ಟರ್, ಮಿನಿ ವಿಮಾನಗಳಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಫ್ಟರ್ಗಳ ಬಾಡಿಗೆ ದರವನ್ನು ಏರಿಕೆ ಮಾಡಿರುವುದು ವಿಶೇಷವಾಗಿದೆ. +ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ಜೈಪುರ,ದೆಹಲಿ, ಕೋಲ್ಕತಾ ಹಾಗೂ ಕೊಚ್ಚಿಯಿಂದ ಹೆಲಿಕಾಪ್ಟರ್ಗಳನ್ನು ಕರೆಸಿಕೊಳ್ಳಲಾಗಿದ್ದು, ಈ ಬಾರಿ ಶೇ.15ರಷ್ಟು ದರ ಹೆಚ್ಚಳ ಮಾಡಲಾಗಿದೆ.ರಾಜ್ಯದಲ್ಲಿ ಹುಬ್ಬಳ್ಳಿ, ಕಲಬುರ್ಗಿ, ಬೆಂಗಳೂರಿನ ಹೆಚ್ ಎಎಲ್ , ಜಕ್ಕೂರು, ವೈಟ್ ಫೀಲ್ಡ್, ಬೀದರ್ ಬೆಳಗಾವಿ ಏರ್ ಪೋರ್ಟ್ ಹಾಗೂ ಹೆಲಿಪ್ಯಾಡ್ಗಳಲ್ಲಿ ಕಾಫ್ಟರ್ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. +ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಟಾರ್ ಪ್ರಚಾರಕರನ್ನು ಕರೆದೊಯ್ಯುವ ಕಾಫ್ಟರ್ಗಳು ಅಲ್ಲಿಂದ ಅವರನ್ನು ನಿಗದಿತ ಸ್ಥಳಕ್ಕೆ ಕರೆದೊಯ್ಯಲು ಕಾರ್ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾಗಿವೆ. +ಪ್ರತಿಗಂಟೆಗೆ ಕಾಫ್ಟರ್ಗಳ ಬಾಡಿಗೆ 2 ಆಸನದ ಹೆಲಿಕಾಪ್ಟರ್ಗೆ ಒಂದು ಗಂಟೆಗೆ ಎರಡೂವರೆ ಲಕ್ಷ , 4 ಆಸನದ ಹೆಲಿಕಾಪ್ಟರ್ಗೆ ಮೂರು ಲಕ್ಷ , 6 ಆಸನದ ಮಿನಿ ವಿಮಾನಕ್ಕೆ 3.50 ಲಕ್ಷ ರೂ.ಗಳ ಬಾಡಿಗೆ ನಿಗದಿ ಮಾಡಲಾಗಿದೆ. ಅದೇ ರೀತಿ ಎಂಟು ಆಸನದ ಮಿನಿ ವಿಮಾನಕ್ಕೆ 4 ಲಕ್ಷ ರೂ, 13 ಆಸನದ ಮಿನಿವಿಮಾನಕ್ಕೆ ಒಂದು ಗಂಟೆಗೆ ನಾಲ್ಕುವರೆ ಲಕ್ಷ ರೂ.ಗಳ ಬಾಡಿಗೆ ಗೊತ್ತುಪಡಿಸಲಾಗಿದೆ. ಆದರೂ ಕಾಫ್ಟರ್ಗಳ ಬೇಡಿಕೆ ಮಾತ್ರ ಕುಂದಿಲ್ಲ. \ No newline at end of file diff --git a/eesanje/url_46_191_8.txt b/eesanje/url_46_191_8.txt new file mode 100644 index 0000000000000000000000000000000000000000..a39a2635313e81232e041b477a95694cb141681c --- /dev/null +++ b/eesanje/url_46_191_8.txt @@ -0,0 +1,7 @@ +ಅಭ್ಯರ್ಥಿ ಆಯ್ಕೆ ಹೈಡ್ರಾಮಾ ಮುಕ್ತಾಯ, ಮತ್ತಷ್ಟು ರಂಗೇರಲಿದೆ ಲೋಕಸಭೆ ಚುನಾವಣೆ +ಬೆಂಗಳೂರು,ಮಾ.30-ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಚುನಾವಣೆಗಾಗಿ ಪ್ರಮುಖ ರಾಷ್ಟ್ರೀಯ ಪಕ್ಷಗಳು ತಮ್ಮ ಎಲ್ಲಾ ಅಭ್ಯರ್ಥಿಗಳನ್ನು ಪ್ರಕಟಿಸುವ ಮೂಲಕ ಚುನಾವಣಾ ಕಣ ಕಾವೇರಲಾರಂಭಿಸಿದೆ. +ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜೆಡಿಎಸ್, ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಹುರಿಯಾಳುಗಳನ್ನು ನಿಲ್ಲಿಸಿದ್ದರೆ, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿದ್ದಾರೆ. +ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲದೆ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ವಿವಿಧ ಪಕ್ಷಗಳೊಂದಿಗೆ ಇಂಡಿಯಾ ರಾಜಕೀಯ ಕೂಟವನ್ನು ರಚಿಸಿಕೊಂಡಿದೆ. ಆದರೆ ಆ ಪಕ್ಷಗಳಿಂದ ಈವರೆಗೆ ಯಾವುದೇ ಅಭ್ಯರ್ಥಿಗಳು ಕಣದಲ್ಲಿರುವುದು ಕಂಡುಬಂದಿಲ್ಲ. +ನಿನ್ನೆ ಜೆಡಿಎಸ್ ತನ್ನ ಮೂರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಇಂದು ಬೆಳಗ್ಗೆ ಕಾಂಗ್ರೆಸ್ ಕೊನೆಯದಾಗಿ ಕೋಲಾರ ಕ್ಷೇತ್ರಕ್ಕೆ ಕೆ.ವಿ.ಗೌತಮ್ ಅವರನ್ನು ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಮೂರು ಪಕ್ಷಗಳು ತಮ್ಮ ಹುರಿಯಾಳುಗಳನ್ನು ಅಖಾಡಕ್ಕಿಳಿಸಿವೆ. +ಕಾಂಗ್ರೆಸ್‍ಗೆ 4 ಕ್ಷೇತ್ರಗಳಲ್ಲಿ ಬಂಡಾಯದ ಆತಂಕ ಇದ್ದರೆ ಬಿಜೆಪಿಗೆ 7ರಿಂದ 8 ಕ್ಷೇತ್ರಗಳಲ್ಲಿ ಅಸಮಾಧಾನಿತರ ಕಾವು ಹೆಚ್ಚಾಗಿದೆ. ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಏ.4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. +ಕಣದಲ್ಲಿರುವ ಪ್ರಮುಖ ಪಕ್ಷಗಳ ಅಭ್ಯರ್ಥಿಗಳುಚಿಕ್ಕೋಡಿ : ಅಣ್ಣಾಸಾಹೇಬ್‍ಜೊಲ್ಲೆ (ಬಿಜೆಪಿ) ಪ್ರಿಯಾಂಕ ಜಾರಕಿಹೊಳ್ಳಿಬೆಳಗಾವಿ : ಜಗದೀಶ್ ಶೆಟ್ಟರ್(ಬಿಜೆಪಿ) ಮೃಣಾಳ್ ಹೆಬ್ಬಾಳ್ಕರ್ಬಾಗಲಕೋಟೆ : ಪಿ.ಸಿ.ಗದ್ದೀಗೌಡರ್(ಬಿಜೆಪಿ) ಸಂಯುಕ್ತ.ಎಸ್.ಪಾಟೀಲ್ಬಿಜಾಪುರ : ರಮೇಶ್ ಜಿಗಜಿಣಗಿ(ಬಿಜೆಪಿ) ಎ.ರಾಜು ಅಲಗೂರುಕಲಬುರಗಿ : ಉಮೇಶ್ ಜಾಧವ್(ಬಿಜೆಪಿ) ರಾಧಾಕೃಷ್ಣ ದೊಡ್ಡಮನಿರಾಯಚೂರು : ರಾಜಾ ಅಮರೇಶ್ವರ್ ನಾಯಕ(ಬಿಜೆಪಿ) ಜಿ.ಕುಮಾರ್‍ನಾಯಕ್ಬೀದರ್ : ಭಗವಂತ ಖೂಬಾ(ಬಿಜೆಪಿ) ಸಾಗರ್ ಖಂಡ್ರೆಕೊಪ್ಪಳ : ಬಸವರಾಜ್ ಕಾವಟರ್ (ಬಿಜೆಪಿ) ರಾಜಶೇಖರ ಹಿಟ್ನಾಳ್ಬಳ್ಳಾರಿ : ಬಿ.ಶ್ರೀರಾಮುಲು(ಬಿಜೆಪಿ) ಇ.ತುಕಾರಾಂಹಾವೇರಿ : ಬಸವರಾಜ ಬೊಮ್ಮಾಯಿ(ಬಿಜೆಪಿ) ಆನಂದಸ್ವಾಮಿ ಗಡ್ಡದೇವರ ಮಠಧಾರವಾಡ : ಪ್ರಹ್ಲಾದ್ ಜೋಶಿ(ಬಿಜೆಪಿ) ವಿನೋದ್ ಅಸೋಟಿಉತ್ತರಕನ್ನಡ : ವಿಶ್ವೇಶ್ವರ ಹೆಗಡೆ ಕಾಗೇರಿ(ಬಿಜೆಪಿ) ಅಂಜಲಿ ನಿಂಬಾಳ್ಕರ್ದಾವಣಗೆರೆ : ಗಾಯತ್ರಿ ಸಿದ್ಧೇಶ್ವರ್ (ಬಿಜೆಪಿ) ಪ್ರಭಾ ಮಲ್ಲಿಕಾರ್ಜುನ್ಶಿವಮೊಗ್ಗ : ಬಿ.ವೈ.ರಾಘವೇಂದ್ರ(ಬಿಜೆಪಿ) ಗೀತಾ ಶಿವರಾಜ್‍ಕುಮಾರ್ಉಡುಪಿ-ಚಿಕ್ಕಮಗಳೂರು : ಕೋಟಾ ಶ್ರೀನಿವಾಸಪೂಜಾರಿ(ಬಿಜೆಪಿ) ಜಯಪ್ರಕಾಶ್ ಹೆಗ್ಡೆಹಾಸನ : ಪ್ರಜ್ವಲ್ ರೇವಣ್ಣ (ಜೆಡಿಎಸ್) ಶ್ರೇಯಸ್ ಪಟೇಲ್ ಗೌಡದಕ್ಷಿಣ ಕನ್ನಡ : ಬ್ರಿಜೇಶ್ ಚೌಟ(ಬಿಜೆಪಿ) ಪದ್ಮರಾಜ್ಚಿತ್ರದುರ್ಗ : ಗೋವಿಂದ ಕಾರಜೋಳ(ಬಿಜೆಪಿ) ಬಿ.ಎನ್.ಚಂದ್ರಪ್ಪತುಮಕೂರು : ವಿ.ಸೋಮಣ್ಣ (ಬಿಜೆಪಿ) ಎಸ್.ಪಿ.ಮುದ್ದಹನುಮೇಗೌಡಮಂಡ್ಯ : ಎಚ್.ಡಿ.ಕುಮಾರಸ್ವಾಮಿ( ಜೆಡಿಎಸ್) ವೆಂಕಟರಮಣೇ ಗೌಡಮೈಸೂರು : ಯದುವೀರ್ ಒಡೆಯರ್ (ಬಿಜೆಪಿ) ಎಂ.ಲಕ್ಷ್ಮಣ್ಚಾಮರಾಜನಗರ : ಎಸ್.ಬಾಲರಾಜ್(ಬಿಜೆಪಿ) ಸುನೀಲ್ ಬೋಸ್ಬೆಂಗಳೂರು ಗ್ರಾ. : ಡಾ.ಸಿ.ಎನ್.ಮಂಜುನಾಥ್ (ಬಿಜೆಪಿ) ಡಿ.ಕೆ.ಸುರೇಶ್ಬೆಂಗಳೂರು ಉತ್ತರ : ಶೋಭಾ ಕರಂದ್ಲಾಜೆ(ಬಿಜೆಪಿ) ರಾಜೀವ್ ಗೌಡಬೆಂಗಳೂರು ಕೇಂದ್ರ : ಪಿ.ಸಿ.ಮೋಹನ್(ಬಿಜೆಪಿ) ಮನ್ಸೂರ್ ಆಲಿಖಾನ್ಬೆಂಗಳೂರು ದಕ್ಷಿಣ : ತೇಜಸ್ವಿ ಸೂರ್ಯ(ಬಿಜೆಪಿ) ಸೌಮ್ಯ ರೆಡ್ಡಿಚಿಕ್ಕಬಳ್ಳಾಪುರ : ಡಾ.ಕೆ.ಸುಧಾಕರ್ (ಬಿಜೆಪಿ) ರಕ್ಷಾ ರಾಮಯ್ಯಕೋಲಾರ : ಎಂ.ಮಲ್ಲೇಶ್ ಬಾಬು( ಜೆಡಿಎಸ್) ಕೆ.ವಿ.ಗೌತಮ್ \ No newline at end of file diff --git a/eesanje/url_46_191_9.txt b/eesanje/url_46_191_9.txt new file mode 100644 index 0000000000000000000000000000000000000000..655e2be941970a8b2f9a89d5db0dc0be19b8ef5f --- /dev/null +++ b/eesanje/url_46_191_9.txt @@ -0,0 +1,11 @@ +ತೆರಿಗೆ ಭಯೋತ್ಪಾದನೆಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಸಾಧ್ಯವಿಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮಾ.30-ರಾಷ್ಟ್ರದಲ್ಲಿ ತೆರಿಗೆ ಭಯೋತ್ಪಾದನೆಯಿಂದ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಬಿಜೆಪಿಯು ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. +ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ಧ ತೆರಿಗೆ ಭಯೋತ್ಪಾದನೆಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ವ್ಯಂಗ್ಯವಾಡಿದ್ದಾರೆ. +ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪ ಹೊರಿಸಿ 1823 ಕೋಟಿ ರೂ. ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ 4.5 ಲಕ್ಷ ರೂ. ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ 42 ಕೋಟಿ ರೂ. ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ 4263 ಕೋಟಿ ರೂ. ಪಾವತಿಸಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. +ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ ಎಂದಿದ್ದಾರೆ. +ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಡೈರಿಗಳಾಗಲಿ, ಪ್ರಧಾನಿ ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ಬಿರ್ಲಾ-ಸಹಾರಾ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ ಎಂದು ಪ್ರಶ್ನಿಸಿದ್ದಾರೆ. +ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್‍ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಆಡಳಿತಾರೂಢ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದ್ದಾರೆ. +ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗುತ್ತದೆ ಎಂದರು. +ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್‍ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಆರೋಪಿಸಿದ್ದಾರೆ. +ಬಿಜೆಪಿ ಎಂದರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶೀನ್ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೇ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. +ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿದ್ದೇ ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ ಎಂದಿದ್ದಾರೆ. ದೇಶದಲ್ಲಿ 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿಯವರು ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬೆತ್ತಲೆಯಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_46_192_1.txt b/eesanje/url_46_192_1.txt new file mode 100644 index 0000000000000000000000000000000000000000..3f5f1602304daf63edba827d3bd84ade0939a1fa --- /dev/null +++ b/eesanje/url_46_192_1.txt @@ -0,0 +1,9 @@ +ಕೊನೆಗೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಕಣಕ್ಕೆ +ಬೆಂಗಳೂರು,ಮಾ.30-ತೀವ್ರ ಹಗ್ಗಾಟ ಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಕೋಲಾರ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿಯನ್ನಾಗಿ ಕೆ.ವಿ.ಗೌತಮ್ ಅವರನ್ನು ಕಣಕ್ಕಿಳಿಸಿದೆ. ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಿರ್ಣಯದ ಪ್ರಕಾರ ಇಂದು ಕೋಲಾರ ಮೀಸಲು ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. +28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಮೊದಲ ಹಂತದಲ್ಲಿ ಏಳು ಕ್ಷೇತ್ರಗಳಿಗೆ, 2ನೇ ಹಂತದಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಬಾಕಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಕೋಲಾರ ಕಗ್ಗಂಟಾಗಿ ಪರಿಣಮಿಸಿತು. ಅದನ್ನು ಹೊರತುಪಡಿಸಿ ನಿನ್ನೆ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ, ಚಾಮರಾಜನಗರಕ್ಕೆ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ಬಳ್ಳಾರಿಗೆ ಇ.ತುಕಾರಾಂ ಅವರುಗಳನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿತ್ತು. +ಕೋಲಾರ ಜಿಲ್ಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮತ್ತು ಸಚಿವ ಕೆ.ಎಚ್.ಮುನಿಯಪ್ಪ ಅವರ ಬಣಗಳ ನಡುವೆ ಪೈಪೋಟಿಯಿಂದ ಈಗಾಗಲೇ ನಿರ್ಧರಿಸಲಾಗಿದ್ದ ಅಭ್ಯರ್ಥಿಯನ್ನು ತಡೆ ಹಿಡಿಯಲಾಯಿತು. ಸಚಿವ ಕೆ.ಎಚ್.ಮುನಿಯಪ್ಪ ತಾವು ಏಳು ಬಾರಿ ಕೋಲಾರದಿಂದ ಸಂಸದರಾಗಿದ್ದು, ಗೆಲ್ಲುವ ಎಲ್ಲ ಅನುಭವ ತಮಗಿದೆ. ಹೀಗಾಗಿ ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. +ಜೊತೆಗೆ ರಾಜ್ಯದ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರರಲ್ಲಿ ಬಲಗೈ ಸಮುದಾಯಕ್ಕೆ ಅವಕಾಶ ಕೊಟ್ಟಿದ್ದರೆ, ಚಿತ್ರದುರ್ಗದಲ್ಲಿ ಮಾತ್ರ ಎಡಗೈ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ. ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡದೆ ಇದ್ದರೆ ಸಾಮಾಜಿಕ ನ್ಯಾಯದ ಏರುಪೇರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು. +ಕೆ.ಎಚ್.ಮುನಿಯಪ್ಪ ಅವರ ಕುಟುಂಬಕ್ಕೆ ಟಿಕೆಟ್ ನೀಡುವುದನ್ನು ರಮೇಶ್‍ಕುಮಾರ್ ಬಣ ಪ್ರಬಲವಾಗಿ ವಿರೋಧಿಸಿತ್ತು. ಸಚಿವ ಡಾ.ಎಂ.ಸಿ.ಸುಧಾಕರ್, ಕೋಲಾರ ಶಾಸಕ ಕೊತ್ತನೂರು ಮಂಜು, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ವಿಧಾನಪರಿಷತ್ ಸದಸ್ಯರಾದ ನಜೀರ್ ಅಹಮ್ಮದ್, ಅನಿಲ್‍ಕುಮಾರ್ ಅವರು ರಾಜೀನಾಮೆಗೆ ಮುಂದಾಗುವ ಮೂಲಕ ಕಾಂಗ್ರೆಸ್ ಮೇಲೆ ಒತ್ತಡ ಹೇರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂಡಾಯಗಾರರ ಜೊತೆ ಸಂಧಾನ ಸಭೆ ನಡೆಸಿ ಎರಡೂ ಬಣ ಪ್ರತಿಪಾದಿಸುವವರಿಗೆ ಟಿಕೆಟ್ ನೀಡಲು ನಿರ್ಧರಿಸಿದರು. +ಪರ್ಯಾಯ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಎಲ್ಲರದು ಎಂಬ ಸಂದೇಶ ರವಾನಿಸಿದರು. ಅಂತಿಮವಾಗಿ ಎಡಗೈ ಸಮುದಾಯಕ್ಕೆ ಸೇರಿದ ಕೆ.ವಿ.ಗೌತಮ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. +ಸಚಿವ ಕೆ.ಎಚ್.ಮುನಿಯಪ್ಪ ಅವರ ಪ್ರಬಲ ಲಾಬಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಚಿಕ್ಕ ಪೆದ್ದಣ್ಣ ಸೇರಿದಂತೆ ಮುನಿಯಪ್ಪ ಕುಟುಂಬದ ಸದಸ್ಯರು ಅವಕಾಶ ವಂಚಿತರಾಗಿದ್ದಾರೆ. ಇದರ ನಡುವೆ ರಮೇಶ್‍ಕುಮಾರ್ ಅವರ ಬಣ ಪ್ರತಿಪಾದಿಸಿದ ಹಲವು ನಾಯಕರು ನಿರಾಶರಾಗಿದ್ದಾರೆ. +ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರಾಗಿರುವ ಕೆ.ವಿ.ಗೌತಮ್ ಇಂಜಿನಿಯರ್ ಪದವೀಧರರಾಗಿದ್ದು, ಎನ್‍ಎಸ್‍ಯುಐ , ಯುವ ಕಾಂಗ್ರೆಸ್‍ನ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದು, ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಸುಮಾರು 24 ವರ್ಷಗಳ ಕಾಲ ಕೆಲಸ ಮಾಡಿರುವ ಗೌತಮ್ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಇವರ ತಂದೆ ವಿಜಯಕುಮಾರ್ ಬೆಂಗಳೂರು ಮೇಯರ್ ಆಗಿಯೂ ಕೆಲಸ ಮಾಡಿದ್ದಾರೆ. \ No newline at end of file diff --git a/eesanje/url_46_192_10.txt b/eesanje/url_46_192_10.txt new file mode 100644 index 0000000000000000000000000000000000000000..494dd0551ae71ecb2d97a5efa3c4f2fc3836ddcd --- /dev/null +++ b/eesanje/url_46_192_10.txt @@ -0,0 +1,6 @@ +ಮುಂದಿನ 1 ವಾರ ರಾಜ್ಯದಲ್ಲಿ ಭಾರೀ ಬಿಸಿಲು, ಹವಾಮಾನ ಇಲಾಖೆಯ ಮುನ್ಸೂಚನೆ +ಬೆಂಗಳೂರು,ಮಾ.29-ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದೆ. ರಾಜ್ಯದಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದ್ದು, ಜನರು ತತ್ತರಿಸುವಂತೆ ಮಾಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಏ.4 ರವರೆಗೂ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಗಳಿಲ್ಲ. +ಕಳೆದ ಒಂದು ವಾರದ ಹಿಂದೆ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗಿತ್ತು. ಆದರೂ ತಾಪಮಾನದಲ್ಲಿ ಯಾವುದೇ ಇಳಿಕೆ ಕಂಡುಬರಲಿಲ್ಲ. ಮುಂದಿನ ಒಂದು ವಾರದಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿ ಸೆಲ್ಶಿಯಸ್‍ನಷ್ಟು ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ರಾಜಧಾನಿ ಬೆಂಗಳೂರಿನಲ್ಲೂ ಗರಿಷ್ಠ ತಾಪಮಾನ ಗಣನೀಯವಾಗಿ ಹೆಚ್ಚಳವಾಗಿದ್ದು, ಈಗಾಗಲೇ 36 ಡಿಗ್ರಿ ಸೆಲ್ಶಿಯಸ್ ಗಡಿ ದಾಟಿದೆ. ಬೆಂಗಳೂರಿನಲ್ಲಿ 36, ಬಾಗಲಕೋಟೆಯಲ್ಲಿ 40.6, ಕಲಬುರಗಿಯಲ್ಲಿ 40.9, ಹಾವೇರಿ 38.2, ವಿಜಯಪುರ 39, ಕೊಪ್ಪಳ 39.6, ರಾಯಚೂರು 38.8, ಮಂಡ್ಯ 37.4, ಮೈಸೂರು 36.1 ಡಿಗ್ರಿ ಸೆಲ್ಶಿಯಸ್‍ನಷ್ಟು ಗರಿಷ್ಠ ತಾಪಮಾನ ದಾಖಲಾಗಿದೆ. ಹೀಗೆ ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಹೆಚ್ಚಳ ಕಂಡುಬರುತ್ತಿದೆ. +ಆದರೆ ಇದಕ್ಕಿಂತಲೂ ಹೆಚ್ಚಿನ ಪ್ರಮಾಣದ ತಾಪಮಾನ ರಾಜ್ಯದಲ್ಲಿ ದಾಖಲಾಗಿರುವ ನಿದರ್ಶನವಿದೆ. ಅಂದರೆ 1996 ರಲ್ಲಿ ಇದೇ ರೀತಿಯ ತಾಪಮಾನ ರಾಜ್ಯದಲ್ಲಿ ಕಂಡುಬಂದಿತ್ತು. ಆಗ ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಶಿಯಸ್, ಕಲಬುರಗಿಯಲ್ಲಿ 43, ಬಾಗಲಕೋಟೆಯಲ್ಲಿ 41.6, ವಿಜಯಪುರ 41.9, ರಾಯಚೂರು 44.6, ಬಳ್ಳಾರಿ 43, ಕೊಪ್ಪಳ 40.2 ಡಿಗ್ರಿ ಸೆಲ್ಶಿಯಸ್‍ನಷ್ಟು ಮಾರ್ಚ್ ಅಂತ್ಯದ ದಿನಗಳಲ್ಲಿ ಕಂಡುಬಂದಿತ್ತು. +ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟು ತೀವ್ರ ಬರಪರಿಸ್ಥಿತಿ ಉಂಟಾಗಿರುವುದರಿಂದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ, ಸಣ್ಣಪುಟ್ಟ ಕೆರೆಕಟ್ಟೆಗಳು ಬತ್ತಿ ಹೋಗಿವೆ, ಅಂತರ್ಜಲ ತೀವ್ರವಾಗಿ ಕುಸಿದಿವೆ. ಹೀಗಾಗಿ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ, ಉಷ್ಣಾಂಶ ಅಧಿಕವಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_46_192_11.txt b/eesanje/url_46_192_11.txt new file mode 100644 index 0000000000000000000000000000000000000000..1d4e822f916dcab4f2b0d1969cdc039898b179dc --- /dev/null +++ b/eesanje/url_46_192_11.txt @@ -0,0 +1,6 @@ +ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ಗೃಹಸಚಿವ ಪ್ರತಿಕ್ರಿಯೆ +ಬೆಂಗಳೂರು,ಮಾ.29-ನಗರದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿದ್ದು, ಸದ್ಯದ ಹಂತದಲ್ಲಿ ಯಾವುದನ್ನೂ ಬಹಿರಂಗಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಐಎ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ಮಾಹಿತಿಗಳಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. +ರಾಜ್ಯದಲ್ಲಿ ಬಾಕಿ ಇರುವ ನಾಲ್ಕು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಎರಡು ದಿನದ ಒಳಗಾಗಿ ಅಭ್ಯರ್ಥಿಗಳನ್ನು ಘೋಷಿಸಲಿದೆ. ಚುನಾವಣೆ ಎಂದ ಮೇಲೆ ಒಂದೆರಡು ಕ್ಷೇತ್ರಗಳಲ್ಲಿ ಸಂಘರ್ಷ ಇದ್ದೇ ಇರುತ್ತದೆ. ಹಾಗಾಗಿ ಕೋಲಾರ ಒಂದೆರಡು ಮೂರು ಕ್ಷೇತ್ರಗಳಲ್ಲಿ ಪೈಪೋಟಿ ಸಹಜ ಎಂದರು. +ನಿನ್ನೆ ರಾತ್ರಿ ನಡೆದ ಚರ್ಚೆಯಲ್ಲಿ ನಾನೂ ಕೂಡಾ ಭಾಗವಹಿಸಿದ್ದೆ. ಬಹುತೇಕ ಎಲ್ಲವೂ ಅಂತಿಮಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಎಲ್ಲರೂ ಭರವಸೆ ನೀಡಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಪ್ರಕಟಗೊಳ್ಳಲಿದೆ ಎಂದು ಹೇಳಿದರು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ನಾನಾ ರೀತಿಯ ವ್ಯಾಖ್ಯಾನಗಳಾಗಬಹುದು. ಆದರೆ ಜನ ಯಾರಿಗೆ ಮತ ಹಾಕಬೇಕು ಎಂದು ತೀರ್ಮಾನಿಸಲಿದ್ದಾರೆ. ಕೆಲವರು ಮುಂಗಡವಾಗಿಯೇ ನಿರ್ಧಾರ ತೆಗೆದುಕೊಂಡರೆ ಇನ್ನೂ ಕೆಲವರು ವ್ಯಕ್ತಿ ಹಾಗೂ ಪರಿಸ್ಥಿತಿಯನ್ನು ಆಧರಿಸಿ ಕೊನೆಕ್ಷಣದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಾರೆ. +ಪಕ್ಷದ ಕಾರಣಕ್ಕಾಗಿ ಬಹಳಷ್ಟು ಮಂದಿ ಕಟಿಬದ್ಧರಾಗಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ, ಸಿದ್ಧಾಂತದ ದಾರಿ ತಪ್ಪಿದಾಗ ಅನ್ಯಪಕ್ಷಗಳಿಗೆ ವಲಸೆ ಹೋಗುವುದು ಸಾಮಾನ್ಯ. ಅದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್-ಬಿಜೆಪಿಯ ಅಭ್ಯರ್ಥಿಗಳು ಕಾಂಗ್ರೆಸ್‍ನತ್ತ ವಲಸೆ ಬರುತ್ತಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_192_12.txt b/eesanje/url_46_192_12.txt new file mode 100644 index 0000000000000000000000000000000000000000..00b9c9a8c5271342a297f90a768921bf67e99849 --- /dev/null +++ b/eesanje/url_46_192_12.txt @@ -0,0 +1,15 @@ +ಕಳೆದ ಬಾರಿ ರಾಜ್ಯದಲ್ಲಿ ಕಣಕ್ಕಿಳಿದು ಠೇವಣಿ ಕಳೆದುಕೊಂಡವರೆಷ್ಟು..? +ಬೆಂಗಳೂರು,ಮಾ.29-ರಾಜ್ಯದಲ್ಲಿ ಲೋಕಸಮರದ ಅಖಾಡ ರಂಗೇರುತ್ತಿದೆ. ಈಗಾಗಲೇ ಮೈತ್ರಿ ಪಕ್ಷ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಲೋಕಸಮರದ ಗೆಲುವಿಗಾಗಿ ತಮ್ಮದೇ ರಣತಂತ್ರ ರೂಪಿಸುತ್ತಿವೆ. ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಆದರೆ ಇದರಲ್ಲಿ ಬಹುತೇಕರು ಠೇವಣಿ ಕಳೆದುಕೊಂಡಿದ್ದೇ ಹೆಚ್ಚು. +ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆಯ ಪ್ರಕ್ರಿಯೆಯಲ್ಲಿ ತೊಡಗಿವೆ. ರಾಜ್ಯದಲ್ಲೂ 28 ಕ್ಷೇತ್ರಗಳಲ್ಲಿ ಲೋಕ ಸಮರದ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಬಾರಿಯೂ ರಾಜ್ಯದಲ್ಲಿ ದ್ವಿಪಕ್ಷೀಯ ಹೋರಾಟ ಗೋಚರಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ. ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮತ್ತು ಬಿಜೆಪಿ ನಡುವೆ ಚುನಾವಣಾ ಹೋರಾಟ ನಡೆದಿತ್ತು. +2019ರಲ್ಲಿ ರಾಜ್ಯದಲ್ಲಿ ನಡೆದ ಲೋಕ ಸಮರದಲ್ಲಿ ಬಿಜೆಪಿ 25 ಸ್ಥಾನ ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನ ಹಾಗೂ ಒಂದು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಕಳೆದ ಬಾರಿ ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಹಲವು ಅಭ್ಯರ್ಥಿಗಳು ಸ್ಪರ್ಧೆಗೆ ಇಳಿದಿದ್ದರು. ರಾಜ್ಯದ 28 ಕ್ಷೇತ್ರಗಳಲ್ಲಿ ಕಳೆದ ಬಾರಿ ಒಟ್ಟು 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಈ ಪೈಕಿ ಶೇ.88 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. +ಠೇವಣಿ ಮುಟ್ಟುಗೋಲು ಎಂದರೇನು?:ಲೋಕಸಭೆ ಚುನಾವಣೆಗೆ ಸ್ರ್ಪಧಿಸುವ ಪ್ರತೀ ಅಭ್ಯರ್ಥಿ ಭದ್ರತಾ ಠೇವಣಿ ಮೊತ್ತವನ್ನು ನಾಮಪತ್ರ ಸಲ್ಲಿಕೆ ವೇಳೆ ಕ್ಷೇತ್ರದ ಚುನಾವಣಾಕಾರಿಗೆ ಪಾವತಿಸಬೇಕು. ಪ್ರತೀ ಅಭ್ಯರ್ಥಿ 25 ಸಾವಿರ ರೂ. ಭದ್ರತಾ ಠೇವಣಿ ಇಡಬೇಕು. +ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ 25,000 ರೂ. ಭದ್ರತಾ ಠೇವಣಿ ಪಾವತಿಸಬೇಕು. ಪರಿಶಿಷ್ಟ ಸಮುದಾಯದ ಅಭ್ಯರ್ಥಿಗಳು 12,500 ರೂ. ಠೇವಣಿ ಪಾವತಿಸಬೇಕು. ಅಭ್ಯರ್ಥಿ ತಾನು ಸ್ರ್ಪಧಿಸಿರುವ ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಅರ್ಹ ಮತಗಳ 1/6ಗಿಂತ ಹೆಚ್ಚಿಗೆ ಮತ ಗಳಿಸಬೇಕು. ಅಷ್ಟು ಮತಗಳಿಸಿದರೆ ಚುನಾವಣಾಧಿಕಾರಿಗೆ ಪಾವತಿಸಿದ ಠೇವಣಿ ಹಣ ಅಭ್ಯರ್ಥಿಗೆ ಮರಳಿಸಲಾಗುತ್ತದೆ. +ಒಂದು ವೇಳೆ ಅಭ್ಯರ್ಥಿ 1/6ಕ್ಕಿಂತ ಕಡಿಮೆ ಮತಗಳಿಸಿದರೆ, ಆತನ ಠೇವಣಿಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕುತ್ತದೆ. ಅಂದರೆ, ಠೇವಣಿ ಮೊತ್ತವನ್ನು ಅಭ್ಯರ್ಥಿಗಳಿಗೆ ಮರುಪಾವತಿಸುವುದಿಲ್ಲ. ಅಭ್ಯರ್ಥಿಯೊಬ್ಬನ ಚುನಾವಣಾ ಠೇವಣಿ ಮುಟ್ಟುಗೋಲಾದರೆ ಆತನನ್ನು ಕ್ಷೇತ್ರದ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ ಎಂದು ಅರ್ಥ. ಆತ ಹೀನಾಯ ಸೋಲು ಕಂಡಿದ್ದಾನೆ ಎಂಬುದು ಗೊತ್ತಾಗುತ್ತದೆ. +ರಾಜ್ಯದಲ್ಲಿ ಠೇವಣಿ ಕಳೆದುಕೊಂಡವರೆಷ್ಟು?:2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಒಟ್ಟು 478 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಈ ಪೈಕಿ 422 ಅಭ್ಯರ್ಥಿಗಳು ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಅಂದರೆ, ಸ್ಪರ್ಧಿಸಿದ ಅಭ್ಯರ್ಥಿಗಳಲ್ಲಿ ಶೇ.88ರಷ್ಟು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. +ಚುನಾವಣಾ ಆಯೋಗದ ಅಂಕಿ ಅಂಶದಂತೆ ರಾಜ್ಯದಲ್ಲಿ ಲೋಕಸಮರದ ವೇಳೆ ಸ್ರ್ಪಸಿದ್ದ 78 ವಿವಿಧ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳ ಪೈಕಿ 30 ಮಂದಿ ತಮ್ಮ ಠೇವಣಿ ಕಳೆದುಕೊಂಡಿದ್ದಾರೆ. ಮಾನ್ಯತೆ ಪಡೆದ, ದಾಯಿತವಲ್ಲದ ಪಕ್ಷಗಳಿಂದ ಕಣಕ್ಕಿಳಿದಿದ್ದ ಎಲ್ಲಾ 128 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಇನ್ನು ಕಣದಲ್ಲಿ ನಿಂತಿದ್ದ 265 ಪಕ್ಷೇತರ ಅಭ್ಯರ್ಥಿಗಳ ಪೈಕಿ 264 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. +ಕ್ಷೇತ್ರವಾರು ಠೇವಣಿ ಮುಟ್ಟುಗೋಲು ಎಷ್ಟಿದೆ?:ಚಿಕ್ಕೋಡಿ ಕ್ಷೇತ್ರದಲ್ಲಿ ಕಳೆದ ಲೋಕಸಮರದ ವೇಳೆ ಒಟ್ಟು 11 ಅಭ್ಯರ್ಥಿಗಳು ಸ್ರ್ಪಸಿದ್ದರು. ಈ ಪೈಕಿ 9 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ. ಇನ್ನು ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 57 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 55 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಾಗಲಕೋಟೆ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳ ಪೈಕಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಿಜಾಪುರ (ಎಸ್‍ಸಿ) ಕ್ಷೇತ್ರದಲ್ಲಿ ನಿಂತಿದ್ದ 12 ಅಭ್ಯರ್ಥಿಗಳಲ್ಲಿ 10 ಮಂದಿಯ ಠೇವಣಿ ಮುಟ್ಟುಗೋಲಾಗಿದೆ. ಗುಲ್ಬರ್ಗಾ (ಎಸ್‍ಸಿ) ಕ್ಷೇತ್ರದಲ್ಲಿ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು. +ರಾಯಚೂರು (ಎಸ್‍ಟಿ) ಕ್ಷೇತ್ರದಲ್ಲಿ ಕಣದಲ್ಲಿದ್ದ 5 ಅಭ್ಯರ್ಥಿಗಳಲ್ಲಿ 3 ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದರು. ಬೀದರ್ ಕ್ಷೇತ್ರದಲ್ಲಿ ಕಣದಲ್ಲಿದ್ದ 22 ಅಭ್ಯರ್ಥಿಗಳ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಕೊಪ್ಪಳ ಕ್ಷೇತ್ರದಲ್ಲಿನ 14 ಅಭ್ಯರ್ಥಿಗಳಲ್ಲಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು. ಬಳ್ಳಾರಿ (ಎಸ್‍ಟಿ) ಕ್ಷೇತ್ರದಲ್ಲಿ ನಿಂತಿದ್ದ 11 ಅಭ್ಯರ್ಥಿಗಳಲ್ಲಿ 9 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ. +ಹಾವೇರಿ ಕ್ಷೇತ್ರದಲ್ಲಿ ಕಣದಲ್ಲಿದ್ದ 10 ಅಭ್ಯರ್ಥಿಗಳ ಪೈಕಿ 8 ಅಭ್ಯರ್ಥಿಗಳ ಠೇವಣಿ ಮುಟ್ಟುಗೋಲಾಗಿದೆ. ಧಾರವಾಡ ಕ್ಷೇತ್ರದಲ್ಲಿ ಕಣದಲ್ಲಿದ್ದ 19 ಅಭ್ಯರ್ಥಿಗಳ ಪೈಕಿ 17 ಮಂದಿ ಠೇವಣಿ ಕಳೆದುಕೊಂಡಿದ್ದರು. ಉತ್ತರ ಕನ್ನಡ ಕ್ಷೇತ್ರದಲ್ಲಿ ಕಣದಲ್ಲಿದ್ದ 13 ಅಭ್ಯರ್ಥಿಗಳ ಪೈಕಿ 11 ಮಂದಿ ಠೇವಣಿ ಕಳೆದುಕೊಂಡಿದ್ದರು. ದಾವಣಗೆರೆ ಕ್ಷೇತ್ರದಲ್ಲಿ ಕಣದಲ್ಲಿದ್ದ 25 ಅಭ್ಯರ್ಥಿಗಳ ಪೈಕಿ 23 ಮಂದಿ ಠೇವಣಿ ಕಳೆದುಕೊಂಡಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಕಣದಲ್ಲಿದ್ದ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು. +ಇನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಣದಲ್ಲಿದ್ದ 12 ಅಭ್ಯರ್ಥಿಗಳ ಪೈಕಿ 10 ಮಂದಿ ಠೇವಣಿ ಕಳೆದುಕೊಂಡಿದ್ದರು. ಹಾಸನ ಕ್ಷೇತ್ರದಲ್ಲಿ ಕಣದಲ್ಲಿದ್ದ 6 ಅಭ್ಯರ್ಥಿಗಳ ಪೈಕಿ 4 ಮಂದಿ ಠೇವಣಿ ಕಳೆದುಕೊಂಡಿದ್ದರು. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಣದಲ್ಲಿದ್ದ 13 ಅಭ್ಯರ್ಥಿಗಳ ಪೈಕಿ 11 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಿತ್ರದುರ್ಗ (ಎಸ್‍ಸಿ) ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 17 ಮಂದಿ ಠೇವಣಿ ಕಳೆದುಕೊಂಡಿದ್ದರು. +ತುಮಕೂರು ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಮಂಡ್ಯ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಮೈಸೂರು ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಾಮರಾಜನಗರ (ಎಸ್‍ಸಿ) ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದರು, ಈ ಪೈಕಿ 8 ಮಂದಿ ಠೇವಣಿ ಕಳೆದುಕೊಂಡಿದ್ದರು. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಣದಲ್ಲಿದ್ದ 15 ಅಭ್ಯರ್ಥಿಗಳ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣದಲ್ಲಿದ್ದ 31 ಅಭ್ಯರ್ಥಿಗಳ ಪೈಕಿ 29 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕಣದಲ್ಲಿದ್ದ 22 ಅಭ್ಯರ್ಥಿಗಳ ಪೈಕಿ 20 ಮಂದಿ ಠೇವಣಿ ಕಳೆದುಕೊಂಡಿದ್ದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಣದಲ್ಲಿದ್ದ 25 ಅಭ್ಯರ್ಥಿಗಳ ಪೈಕಿ 23 ಮಂದಿ ಠೇವಣಿ ಕಳೆದುಕೊಂಡಿದ್ದರು. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಣದಲ್ಲಿದ್ದ 15 ಅಭ್ಯರ್ಥಿಗಳ ಪೈಕಿ 13 ಮಂದಿ ಠೇವಣಿ ಕಳೆದುಕೊಂಡಿದ್ದರು. ಕೋಲಾರ (ಎಸ್‍ಸಿ) ಕ್ಷೇತ್ರದಲ್ಲಿ ಕಣದಲ್ಲಿದ್ದ 14 ಅಭ್ಯರ್ಥಿಗಳ ಪೈಕಿ 12 ಮಂದಿ ಠೇವಣಿ ಕಳೆದುಕೊಂಡಿದ್ದರು. \ No newline at end of file diff --git a/eesanje/url_46_192_2.txt b/eesanje/url_46_192_2.txt new file mode 100644 index 0000000000000000000000000000000000000000..4ffab6a10f73928e37d414e6934884ba37fe62be --- /dev/null +++ b/eesanje/url_46_192_2.txt @@ -0,0 +1,6 @@ +ಬಿಜೆಪಿ ಸ್ಟಾರ್ ಕ್ಯಾಂಪೇನರ್‌ಗಳ ಪಟ್ಟಿ ಬಿಡುಗಡೆ: ಬಿ.ಎಲ್.ಸಂತೋಷ್‌ ಹಾಗೂ ಈಶ್ವರಪ್ಪಗಿಲ್ಲ ಸ್ಟಾರ್ ಪಟ್ಟ +ಬೆಂಗಳೂರು,ಮಾ.30-ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಸ್ಟಾರ್ ಕ್ಯಾಂಪೇನರ್‍ಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿದೆ. ಬಿಜೆಪಿ ವರಿಷ್ಠ ನಾಯಕರ ಜೊತೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 40 ನಾಯಕರ ಪಟ್ಟಿ ಬಿಡುಗಡೆ ಆಗಿದೆ. ಬಿ.ಎಲ್.ಸಂತೋಷ್ ಅವರನ್ನು ಪಟ್ಟಿಯಿಂದ ಹೊರಗಿಟ್ಟಿದ್ದು, ಯಡಿಯೂರಪ್ಪ ಅಭ್ಯರ್ಥಿಗಳ ಆಯ್ಕೆಯಂತೆ ತಾರಾ ಪ್ರಚಾರಕರ ಪಟ್ಟಿಯಲ್ಲೂ ಮೇಲುಗೈ ಸಾಧಿಸಿದ್ದಾರೆ. +ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಸ್ಸೋಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್, ತಮಿಳುನಾಡು ರಾಜ್ಯಾಧ್ಯಕ್ಷ ಅಣ್ಣಾಮಲೈ, ಯಡಿಯೂರಪ್ಪ ಸೇರಿದಂತೆ ರಾಜ್ಯದ ನಾಲ್ವರು ಮಾಜಿ ಸಿಎಂಗಳು ಹಾಗೂ ಟಿಕೆಟ್ ಕೈತಪ್ಪಿದ ನಳೀನ್‍ಕುಮಾರ್ ಕಟೀಲ್, ಪ್ರತಾಪ್ ಸಿಂಹ, ಎ.ನಾರಾಯಣಸ್ವಾಮಿ, ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರೀತಂಗೌಡ ಸೇರಿದಂತೆ 40 ಮಂದಿ ಸ್ಟಾರ್ ಕ್ಯಾಂಪೇನರ್‍ಗಳಾಗಿ ಆಯ್ಕೆಯಾಗಿದ್ದಾರೆ. +ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಜೈ ಶಂಕರ್, ನಿರ್ಮಲಾ ಸೀತಾರಾಮನ್, ಸ್ಮತಿ ಇರಾನಿ ಜೊತೆಗೆ ಬಿಜೆಪಿ ಅಭ್ಯರ್ಥಿಗಳಾಗಿರುವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿ.ಶ್ರೀರಾಮುಲು ಕೂಡ ಸ್ಟಾರ್ ಕ್ಯಾಂಪೆನರ್‍ಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. +ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ. ವಿ ರಾಜೇಶ್, ಸಂಘಟನೆಯಲ್ಲಿರುವ ಸುನೀಲ್ ಕುಮಾರ್‍ಗೆ ಅವಕಾಶ ನೀಡಲಾಗಿದೆ. +ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಿಂದ ದೂರ ಇಡಲಾಗಿದ್ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್ ಸಂತೋಷ್?ಗೆ ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿಲ್ಲ. ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಕೆ.ಎಸ್.ಈಶ್ವರಪ್ಪಗೂ ಸಹ ಕೋಕ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿಗೂ ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ. \ No newline at end of file diff --git a/eesanje/url_46_192_3.txt b/eesanje/url_46_192_3.txt new file mode 100644 index 0000000000000000000000000000000000000000..d9dc1776f6e8663522350ba14f2662587640bd2d --- /dev/null +++ b/eesanje/url_46_192_3.txt @@ -0,0 +1,8 @@ +ರಾಜ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ : ವಿಜಯೇಂದ್ರ +ಬೆಂಗಳೂರು,ಮಾ.29-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ವಿಶ್ವಾಸದಿಂದ ಕೆಲಸ ಮಾಡಿದರೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. +ಮೈತ್ರಿ ಪಕ್ಷಗಳ ಸಮನ್ವಯ ಸಭೆ ಸಂದರ್ಭದಲ್ಲಿ ಮಾತನಾಡಿದ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಭೆ ಬಹಳ ಹಿಂದೆನೇ ಆಗಬೇಕಿತ್ತು. ಕಾರಣಾಂತರದಿಂದ ಸಭೆ ಇಂದು ನಿರ್ಧಾರವಾಗಿದೆ. ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಒಂದೇ ವೇದಿಕೆಗೆ ಬಂದಿದ್ದೇವೆ ಎಂದರು. +ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಬಲ ಬಂದಂತೆ ಆಗಿದೆ. ಮಂಡ್ಯ ಹಾಗೂ ಮೈಸೂರಲ್ಲಿ ನಾನು, ಕುಮಾರಸ್ವಾಮಿ ಜಂಟಿ ಪ್ರವಾಸ ಮಾಡಿದ್ದೇವೆ. ಬಹಳಷ್ಟು ಸಲ ಹೊಂದಾಣಿಕೆ ರಾಜಕೀಯ ನಡೆದಿದೆ. ಬಿಜೆಪಿ-ಜೆಡಿಎಸ್ ಹಾಗೂ ಜೆಡಿಎಸ್-ಕಾಂಗ್ರೆಸ್ ಸಾಕಷ್ಟು ಸಲ ಹೊಂದಾಣಿಕೆಯಾಗಿದೆ. ಈ ಸಮ್ಮಿಲನ ರಾಜ್ಯದ ಜನರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ ಎಂದರು. +ಬಿಜೆಪಿ-ಜೆಡಿಎಸ್ ಸಮ್ಮಿಲನದಿಂದ ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಕೆಲಸ ಆಗುತ್ತದೆ. ಜೆಡಿಎಸ್-ಎನ್ಡಿಎ ಕೂಟಕ್ಕೆ ಬಂದಿರುವುದನ್ನು ನಮ್ಮ ನಾಯಕರು ಘೋಷಣೆ ಮಾಡಿ ಹಲವು ತಿಂಗಳು ಆಗಿವೆ. ರಾಜ್ಯದ ಮತದಾರರು ಮೈತ್ರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. +ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಬೇಕು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, 28 ಕ್ಷೇತ್ರಗಳಲ್ಲೂ ನಾವು ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿಷ್ಠೆ ಬದಿಗಿಟ್ಟು ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕು ಎಂದರು. +ಈ ಹಿಂದೆ ಬಿಎಸ್ವೈ ಜೊತೆ ಸರ್ಕಾರ ಮಾಡಿದ್ದಾಗ ಒಳ್ಳೆಯ ಆಡಳಿತ ಕೊಟ್ಟಿದ್ದೆವು. ಕೆಲವು ಪರಿಸ್ಥಿತಿಗಳಲ್ಲಿ ಮೈತ್ರಿ ಮುಂದುವರೆಯಲು ಸಾಧ್ಯವಾಗಲಿಲ್ಲ. ಆಗ ನಮ್ಮ ತಂದೆಯವರಿಗೆ ಕೆಲವರು ತಪ್ಪು ಮಾಹಿತಿ ನೀಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಬಾರೀ ನಾವು ಮೈತ್ರಿ ಮಾಡಿಕೊಂಡಿದ್ದರೆ ರಾಜ್ಯದಲ್ಲಿ ಈಗ ಕಾಂಗ್ರೆಸ್ ಬರಲು ಸಾಧ್ಯವಾಗುತ್ತಿರಲಿಲ್ಲ. +ನಮ್ಮಲ್ಲಿದ್ದ ಒಡಕುಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಪ್ರತಿದಿನ ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷ ಮುಗಿದೆ ಹೋಯಿತು ಎಂದು ಮಾತನಾಡುತ್ತಿದ್ದಾರೆ. ದೇಶದ ಭದ್ರತೆಗೆ ಮೋದಿಯವರ ದುಡಿಮೆ ನೋಡಿದ್ದೇವೆ. ಅಮಿತ್ ಶಾ ಅವರ ಮಧ್ಯಸ್ಥಿಕೆಯಿಂದ ಈ ಮೈತ್ರಿಯಾಗಿದೆ. ಅಭ್ಯರ್ಥಿ ಆಯ್ಕೆಯಲ್ಲಿ ಒಡಕು ಬಂದಿರಬಹುದು, ಅದರಿಂದಾಗಿ ತಾವು ನಿರಾಸೆ ಒಳಗಾದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ. ಕೆಲವೊಂದು ಕ್ಷೇತ್ರಗಳಲ್ಲಿ ಭಿನ್ನಾಭಿಪ್ರಾಯ ಇದ್ದಾವೆ. ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದರು. \ No newline at end of file diff --git a/eesanje/url_46_192_4.txt b/eesanje/url_46_192_4.txt new file mode 100644 index 0000000000000000000000000000000000000000..512f81cfa5ff98207a45e7df4f7d090e6b66655c --- /dev/null +++ b/eesanje/url_46_192_4.txt @@ -0,0 +1,8 @@ +ಕಾಂಗ್ರೆಸ್ ಹೊಣೆಗಾರಿಕೆಗಳಿಗೆ ವೀಣಾ ಕಾಶಪ್ಪನವರ್ ರಾಜೀನಾಮೆ +ಬೆಂಗಳೂರು,ಮಾ.29-ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ. ಆದರೆ ಸಂಘಟನಾತ್ಮಕ ಎಲ್ಲಾ ಜವಾಬ್ದಾರಿಗಳಿಗೂ ರಾಜೀನಾಮೆ ನೀಡುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಕ್ರೀನಿಂಗ್ ಕಮಿಟಿವರೆಗೂ ನನ್ನ ಹೆಸರಿತ್ತು. ಅಜಯ್ಕುಮಾರ್ ಸರ್ನಾಯಕ್ ಮತ್ತು ನನ್ನ ಹೆಸರಿಗೆ ಮಾತ್ರ ಬೆಂಬಲ ನೀಡಿದ್ದಾಗಿ ಜಿಲ್ಲೆಯ ಶಾಸಕರು ತಿಳಿಸಿದ್ದರು. ಆದರೆ ಹೈಕಮಾಂಡ್ನ ಸಭೆಗೆ ನನ್ನ ಹೆಸರು ಹೋಗಿಲ್ಲ. ಇದರ ಹಿಂದೆ ಷಡ್ಯಂತ್ರ ಇರುವುದು ಸ್ಪಷ್ಟವಾಗಿ ಕಾಣುತ್ತಿದೆ. ಎಂದು ಆರೋಪಿಸಿದರು. +ಪಂಚಮಸಾಲಿ ಸಮುದಾಯದ ಹೆಣ್ಣುಮಗಳು ಪ್ರಬಲವಾಗಿ ಬೆಳೆಯುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗಿಲ್ಲ. ಕಾಂಗ್ರೆಸ್ನ ಘೋಷಿತ ಅಭ್ಯರ್ಥಿ ಸಂಯುಕ್ತ ಪಾಟೀಲ್ ನೆರೆಯ ಬಿಜಾಪುರ ಜಿಲ್ಲೆಯವರು. ಆಕೆಯ ಗಂಡನ ಮನೆ ಬೀದರ್. ಅಲ್ಲಿಂದ ಬೇಕಾದರೆ ಸ್ಪರ್ಧಿಸಬಹುದಿತ್ತು. ಬಾಗಲಕೋಟೆಗೆ ಬಂದು ಸ್ಪರ್ಧೆ ಮಾಡುವ ಅಗತ್ಯ ಏನಿತ್ತು ಎಂದು ಪ್ರಶ್ನಿಸಿದರು. +ನಿನ್ನೆ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವೀಣಾ ಕಾಶಪ್ಪನವರ್ ಅವರಿಗೆ ವಿಧಾನಪರಿಷತ್ ಸದಸ್ಯತ್ವ ಅಥವಾ ವಿಧಾನಸಭೆಯ ಯಾವುದಾದರೂ ಕ್ಷೇತ್ರವನ್ನು ನಿಗದಿ ಮಾಡುವಂತೆ ಜಿಲ್ಲೆಯ ಹಿರಿಯ ನಾಯಕರೊಬ್ಬರು ಕೈಮುಗಿದು ಕೇಳಿಕೊಂಡರು. +ಆದರೆ ಅದಕ್ಕೆ ಒಪ್ಪದ ನಾಯಕರು ಮೊದಲು ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲಿ. ಅಲ್ಲಿವರೆಗೂ ಯಾವುದೇ ಸ್ಥಾನಮಾನವಿಲ್ಲ ಎಂದಿದ್ದಾರೆ. ಅಲ್ಲಿಗೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಸಮರ್ಥಳು. ಯಾವ ಸ್ಥಾನಮಾನಕ್ಕೂ ಅರ್ಹಳಲ್ಲ ಎಂಬ ಭಾವನೆ ಮೂಡಿದಂತಾಗಿದೆ. ಈ ಬೆಳವಣಿಗೆಯಿಂದ ಮನಸ್ಸಿಗೆ ನೋವಾಗಿದ್ದು, ಆರೋಗ್ಯ ಹದಗೆಟ್ಟಿದೆ. +ಎರಡು ದಿನಗಳ ಕಾಲ ವಿಶ್ರಾಂತಿ ಪಡೆದು ನಂತರ ಬಾಗಲಕೋಟೆಗೆ ಹೋಗಿ ಸ್ಥಳೀಯ ನಾಯಕರು ಹಾಗೂ ಬೆಂಬಲಿಗರ ಜೊತೆ ಚರ್ಚೆ ಮಾಡುತ್ತೇನೆಂದು ಹೇಳಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿದ್ದೇನೆ. ಆ ಸ್ಥಾನಗಳಿಗೆ ರಾಜೀನಾಮೆ ನೀಡುತ್ತೇನೆ. ಕಾಂಗ್ರೆಸ್ ಪಕ್ಷದಲ್ಲೇ ಉಳಿಯಲಿದ್ದು, ಕುಟುಂಬದ ಫೌಂಡೇಶನ್ನಿಂದ ಸಮಾಜಸೇವೆಯನ್ನು ಮುಂದುವರೆಸುವುದಾಗಿ ಸ್ಪಷ್ಟಪಡಿಸಿದರು. +ಸಂಯುಕ್ತ ಪಾಟೀಲ್ ಈ ಹಿಂದಿನ ಚುನಾವಣೆಯಲ್ಲಿ ಸ್ರ್ಪಸಲು ಮುಂದೆ ಬಂದಿರಲಿಲ್ಲ. ಈಗ ಕಾಂಗ್ರೆಸ್ ಅಧಿಕಾರದಲ್ಲಿದೆ. ಜಿಲ್ಲೆಯಲ್ಲಿ 5 ಮಂದಿ ಶಾಸಕರಿದ್ದಾರೆ ಎಂಬ ಕಾರಣಕ್ಕೆ ಚುನಾವಣೆಗೆ ನಿಲ್ಲುತ್ತಿದ್ದಾರೆ. ನಾನು ಚುನಾವಣೆಯಲ್ಲಿ ತಟಸ್ಥಳಾಗಿರುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_192_5.txt b/eesanje/url_46_192_5.txt new file mode 100644 index 0000000000000000000000000000000000000000..6e8909f205ab5fcd17bc7f90bedf09c49ac0f82f --- /dev/null +++ b/eesanje/url_46_192_5.txt @@ -0,0 +1,7 @@ +ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬೆಂಗಳೂರಲ್ಲೇ ತಯಾರಾಗಿತ್ತು ಬಾಂಬ್ +ಬೆಂಗಳೂರು, ಮಾ.29-ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬೆಂಗಳೂರು ಸಮೀಪವೇ ಬಾಂಬ್ ತಯಾರಿಸಲಾಗಿತ್ತು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಮುಜಾಮಿಲ್ ಷರೀಫ್ಎಂಬಾತನನ್ನು ಎನ್ಐಎ ನಿನ್ನೆ ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈ ಮಾಹಿತಿ ಲಭ್ಯವಾಗಿದೆ. +ಆರೋಪಿ ಮುಜಾಮಿಲ್ ಷರೀಫ್ ಈ ಸ್ಪೋಟಕ್ಕೆ ಸಂಚು ರೂಪಿಸಿ ಅದಕ್ಕೆ ಬೇಕಾದ ಸಾಮಗ್ರಿಗಳ ಸಾಗಾಟಕ್ಕೆ ನೆರವು ನೀಡಿರುವುದು ಸಹ ತನಿಖೆಯಿಂದ ಗೊತ್ತಾಗಿದೆ. ತಲೆ ಮರೆಸಿಕೊಂಡಿರುವ ಅಬ್ದುಲ್ ಮತಿನ್ ತಾಹ ಹಾಗೂ ಮುಸಾವೀರ್ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳೆಂದು ಗೊತ್ತಾಗಿದೆ. +ಮಾ.1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ, ಪರಾರಿಯಾಗಿರುವ ಮುಸಾವೀರ್ ಪ್ರಕರಣದ ಪ್ರಮುಖ ಆರೋಪಿ. ಇದರ ಸೂತ್ರದಾರ ಅಬ್ದುಲ್ ಮತಿನ್ ತಾಹ ಎಂದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ತಲೆ ಮರೆಸಿಕೊಂಡಿರುವ ಇವರಿಬ್ಬರ ಬಂಧನಕ್ಕೆ ಎನ್ಐಎ ದೇಶದಾದ್ಯಂತ ಶೋಧ ಮುಂದುವರೆದಿದೆ. +ಆರೋಪಿ ಮುಜಾಮಿಲ್ ಷರೀಫ್ ಕಳೆದ ಒಂದೂವರೆ ವರ್ಷದ ಹಿಂದೆ ಬಸವೇಶ್ವರ ನಗರದ ಹಾವನೂರು ಸರ್ಕಲ್ ಬಳಿ ಚಿಕನ್ ಕೌಂಟಿ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ಎಂಬ ವಿಷಯ ಎನ್ಐಎ ತನಿಖೆಯಿಂದ ಗೊತ್ತಾಗಿದೆ. +ಹೊರ ರಾಜ್ಯಗಳಿಗೆ ಪರಾರಿಯಾಗಿರುವ ಪ್ರಮುಖ ಇಬ್ಬರು ಆರೋಪಿಗಳಿಗೆ ಈ ಆರೋಪಿ ಸಹಕಾರ ನೀಡಿರುವುದು ಎನ್ಐಎ ತನಿಖೆಯಿಂದ ತಿಳಿದು ಬಂದಿದೆ. ಆರೋಪಿ ಮುಸಾವೀರ್ನ ಜವಾಬ್ದಾರಿಯನ್ನು ಮುಜಾಮಿಲ್ ಷರೀಫ್ ಹೊತ್ತುಕೊಂಡಿದ್ದನು ಎಂಬ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಸ್ಫೋಟದ ನಂತರ ಮುಸಾವೀರ್ ತಲೆಮರೆಸಿಕೊಳ್ಳಲು ಈ ಆರೋಪಿ ಸಾರಿಗೆ ವ್ಯವಸ್ಥೆ ಮಾಡಿರುವ ಸಂಗತಿ ಗೊತ್ತಾಗಿದೆ. +ಆರೋಪಿ ಅಬ್ದುಲ್ ಮತಿನ ತಾಹನ ಸೂಚನೆಯಂತೆ ಮುಜಾಮಿಲ್ ಷರೀಫ್ ಸ್ಫೋಟಕ್ಕೆ ಬೇಕಾದ ವಸ್ತುಗಳನ್ನು ಸಾಗಾಟ ಮಾಡಿರುವ ಮಾಹಿತಿ ಸಹ ಎನ್ಐಎ ಕಲೆಹಾಕಿದೆ.ಇತ್ತೀಚಿಗೆ ಎನ್ಐಎ ಕರ್ನಾಟಕದ 12 ಸ್ಥಳಗಳಲ್ಲಿ, ತಮಿಳುನಾಡಿನ 5 ಸ್ಥಳ ಹಾಗೂ ಉತ್ತರ ಪ್ರದೇಶದ ಒಂದು ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ದಾಳಿ ನಡೆಸಿ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಹಲವು ಮಾಹಿತಿಗಳನ್ನು ಕಲೆ ಹಾಕಿ ಪ್ರಮುಖ ಆರೋಪಿಗಳಿಗಾಗಿ ಶೋಧ ತೀವ್ರಗೊಳಿಸಿದೆ. \ No newline at end of file diff --git a/eesanje/url_46_192_6.txt b/eesanje/url_46_192_6.txt new file mode 100644 index 0000000000000000000000000000000000000000..55939ce42705a92c0db46885a74d93b6ef177992 --- /dev/null +++ b/eesanje/url_46_192_6.txt @@ -0,0 +1,7 @@ +7 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಇಂಡಿಯನ್ ಮೂವ್ಮೆಂಟ್ ಪಾರ್ಟಿ +ಬೆಂಗಳೂರು,ಮಾ.29-ಇಂಡಿಯನ್ ಮೂವ್ಮೆಂಟ್ ಪಾರ್ಟಿ ಇಂದು 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇಂಡಿಯನ್ ಮೂವ್ ಮೆಂಟ್ ಪಾರ್ಟಿ ರಾಜ್ಯಾಧ್ಯಕ್ಷರಾದ ಮಹದೇವ್ ಉರಗಾಂವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ರಿಸ್ಟೋಫರ್ ರಾಜ್ ಕುಮಾರ್, ಜೆಡಿಯು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರಯ್ಯ, ಮಹಿಳಾ ಘಟಕದ ಅಧ್ಯಕ್ಷೆ ರಷೀಧಾ ಬೇಗಂ ಮತ್ತಿತರರು ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು. +ಈ ಸಂದರ್ಭದಲ್ಲಿ ಮಾತನಾಡಿದ ಮಹದೇವ್ ಉರಗಾಂವಿ ಅವರು, ಪರಿಹಾರ ಕಂಡುಕೊಳ್ಳುಲು ಇಂಡಿಯನ್ ಮೂವ್ ಮೆಂಟ್ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷರಾದ ಅಬ್ದುಲ್ ಸುಭಾನ್ ರವರ ನೇತೃತ್ವದಲ್ಲಿ ಪಾರ್ಟಿ ಸದೃಢವಾಗಿದೆ ಎಂದರು. +ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ಎಲ್ಲ ವರ್ಗ, ಧರ್ಮ ಜಾತಿಯವರನ್ನ ಸರಿಸಮಾನ ಕಂಡು ಅಭಿವೃದ್ದಿಯತ್ತ ಸಾಗುವುದು ಇಂಡಿಯನ್ ಮೂವ್ ಮೆಂಟ್ ಪಾರ್ಟಿಯ ಉದ್ದೇಶ ಎಂದು ಅವರು ಮಾಹಿತಿ ನೀಡಿದರು. +ಜನಸಾಮಾನ್ಯರ ಬದುಕು ಹಸನಾಗಬೇಕು, ಬಡವರು, ಕೂಲಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಆರ್ಥಿಕ ಭದ್ರತೆ ಮತ್ತು ಆಶ್ರಯ ಸಿಗಬೇಕು ಅದಕ್ಕಾಗಿ ನಮ್ಮ ಹೋರಾಟ ಎಂದು ಅವರು ತಿಳಿಸಿದರು.ಇಂದು ಅಡುಗೆ ಆನಿಲ, ಪೆಟ್ರೋಲ್ ಮತ್ತು ದಿನಬಳಕೆ ಆಹಾರ ಪದಾರ್ಥಗಳು ಬೆಲೆ ಏರಿಕೆಯಿಂದ ಜನ ಜೀವನ ಸಂಕಷ್ಟದಲ್ಲಿ ಇದ್ದಾರೆ. ಅದ್ದರಿಂದ ಇಂಡಿಯನ್ ಮೂವ್ ಮೆಂಟ್ ಪಾರ್ಟಿ ಜನ ಸಾಮಾನ್ಯರಿಗೆ ನೋವಿಗೆ ಧ್ವನಿಯಾಗಿ, ಅವರ ಸಂಕಷ್ಟ ನಿವಾರಣೆ ಮಾಡಲು ಅಧಿಕಾರದಲ್ಲಿ ನಮ್ಮ ಪಾರ್ಟಿ 7 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ ಎಂದರು. +ಈಗ 7ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಮೊದಲನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ ಎರಡನೇಯ ಪಟ್ಟಿಯಲ್ಲಿ 8ಕ್ಷೇತ್ರ ಮತ್ತು ದೇಶದ್ಯಾಂತ 150ಗಳಲ್ಲಿ ಅಭ್ಯರ್ಥಿಗಳು ನಮ್ಮ ಪಕ್ಷದಿಂದ ನಿಲ್ಲುತ್ತಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ರೈತ ಸಂಘ, ಕನ್ನಡ ಪರ ಸಂಘಟನೆಗಳು ಮತ್ತು ಸ್ವಯಂ ಸೇವ ಸಂಘಟನೆಗಳು ನಮ್ಮ ಪಾರ್ಟಿಯ ಲೋಕಸಭಾ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರಕ್ಕೆ ಕೈಜೋಡಿಸಿದ್ದಾರೆ ಎಂದು ಹೇಳಿದರು. +ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕ್ರಿಸ್ಟೋಫರ್ ರಾಜ್ ಕುಮಾರ್, ಕೋಲಾರದಿಂದ ಹರ್ಷ, ಬೆಂಗಳೂರು ಕೇಂದ್ರದಿಂದ ಉಮಾ ಸಿ, ಚಿತ್ರದುರ್ಗ ಎಸ್ಸಿ.ಮೀಸಲು ಕ್ಷೇತ್ರದಿಂದ ಬಿ.ಟಿ.ರಾಮಸುಬ್ಬಯ್ಯ, ದಕ್ಷಿಣ ಕನ್ನಡದಲ್ಲಿ ಸುಪ್ರೀತ್ ಕುಮಾರ್ ಪೂಜಾರಿ, ಚಾಮರಾಜನಗರ ಮೀಸಲು ಕ್ಷೇತ್ರದಿಂದ ಕುಡಲೂರು ಶ್ರೀಧರ್ ಮೂರ್ತಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕೋದಂಡರೆಡ್ಡಿ ಸ್ಪರ್ದಿಸುತ್ತಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_192_7.txt b/eesanje/url_46_192_7.txt new file mode 100644 index 0000000000000000000000000000000000000000..93649fa8b941380c7a2aec2cd152f54744e9ca80 --- /dev/null +++ b/eesanje/url_46_192_7.txt @@ -0,0 +1,7 @@ +ಜನಾರ್ದನ ರೆಡ್ಡಿ ಮೇಲೆ ಕಾಂಗ್ರೆಸ್ ನಾಯಕರು ಆರೋಪ ಸತ್ಯಕ್ಕೆ ದೂರವಾದದ್ದು : ಭೀಮಾಶಂಕರ ಪಾಟೀಲ್ +ಬೆಂಗಳೂರು,ಮಾ.29-ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರು,ಮಾಜಿ ಸಚಿವರಾದ ಜಿ ಜನಾರ್ದನ ರೆಡ್ಡಿ ಅವರ ಮೇಲೆ ಕಾಂಗ್ರೆಸ್ ಪಕ್ಷ ನಾಯಕರು ನೀಡಿರುವ ದೂರು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಮುಖಂಡರು ಭೀಮಾಶಂಕರ ಪಾಟೀಲ್ ಹೇಳಿದ್ದಾರೆ. +ಬಿಜೆಪಿ ಪಕ್ಷದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ವಿಲೀನಗೊಳಿಸುವ ಮೊದಲು ಕಾನೂನು ಬದ್ಧವಾದ ಎಲ್ಲಾ ಪ್ರಕ್ರಿಯೆಗಳನ್ನು ಮಾಡಲಾಗಿದೆ.ವೀಲಿನಕ್ಕೆ ಮುನ್ನ ಪಕ್ಷದ ರಾಜ್ಯ ಪದಾದಿಕಾರಿಗಳ ಸಭೆ ಕರೆದು ಪಕ್ಷದ ಅಧ್ಯಕ್ಷರಾಗಿದ್ದ ಜಿ ಜನಾರ್ದನ ರೆಡ್ಡಿ ಅವರು ತಗೆದುಕೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿ ಇರುವುದಾಗಿ ಸರ್ವಾನುಮತದ ಬೆಂಬಲ ನೀಡಿಲಾಗಿತ್ತು. +ನಂತರ ವೀಲಿನ ಪ್ರಕ್ರಿಯೆ ಮತ್ತು ಬಿಜೆಪಿ ಸೇರ್ಪಡೆ ಸಂಪೂರ್ಣ ಕಾನೂನು ಬದ್ಧವಾಗಿಯೇ ನಡೆದಿದೆ ಆದರೆ ಕಾಂಗ್ರೆಸ್ ಪಕ್ಷ ನಾಯಕರಜನಾರ್ದನ ರೆಡ್ಡಿ ಅವರ ಮೇಲಿನ ಭಯಕ್ಕೆ ಸ್ಪೀಕರ್‍ಗೆ ದೂರು ನೀಡಿ ಕುಟಿಲ ತಂತ್ರ ಅನುಸರಿಸುತ್ತಿದೆ ಎಂದು ದೂರಿದ್ದಾರೆ. +ಜನಾರ್ದನ ರೆಡ್ಡಿ ಅವರು ರಾಜ್ಯ ರಾಜಕಾರಣದ ದೊಡ್ಡ ಶಕ್ತಿ.ಲೋಕಸಭಾ ಚುನಾವಣೆಯಲ್ಲಿ ಅವರನ್ನು ರಾಜಕೀಯವಾಗಿ ಎದುರಿಸಲು ಆಗದೆ ಈ ರೀತಿಯ ಕುತಂತ್ರ ಕಾಂಗ್ರೆಸ್ ಮಾಡುತ್ತಿದೆ.ಇಂಥಹವುಗಳನ್ನು ನಮ್ಮ ನಾಯಕರು ಅವರ ರಾಜಕೀಯ ಜೀವನದಲ್ಲಿ ಅದೇಷ್ಟೋ ನೋಡಿದ್ದಾರೆ ಇವುಗಳಿಗೆ ಬೆದರುವ ಜಾಯಮಾನ ನಮ್ಮ ನಾಯಕರದಲ್ಲ ಎಂದಿದ್ದಾರೆ. + +ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸಿಕೊಂಡು ಬಂದು ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಮುನ್ನುಡಿ ಬರೆಯುವ ಸಂಕಲ್ಪ ನಾವು ನಮ್ಮ ನಾಯಕರು ಮಾಡುತ್ತೇವೆ ಕಾಂಗ್ರೆಸ್ ಪಕ್ಷ ಈ ರೀತಿ ಹುಳುಕು ಹುಡುಕುವ ಕೆಲಸ ಮಾಡುವುದು ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳ ಠೇವಣಿ ಉಳಿಸಿಕೊಳ್ಳುವ ಕಡೆಗೆ ಗಮನಹರಿಸಲಿ ಎಂದು ಭೀಮಾಶಂಕರ ಪಾಟೀಲ್‍ಟೀಕಿಸಿದ್ದಾರೆ. \ No newline at end of file diff --git a/eesanje/url_46_192_8.txt b/eesanje/url_46_192_8.txt new file mode 100644 index 0000000000000000000000000000000000000000..3534023eccd7246227c7aaa6d4b7ad7ada0c9895 --- /dev/null +++ b/eesanje/url_46_192_8.txt @@ -0,0 +1,6 @@ +ಪಿಎಸ್‍ಐ ಮರುಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ +ಬೆಂಗಳೂರು,ಮಾ.29-ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‍ಐ) ಹುದ್ದೆಗಳ ನೇಮಕಾತಿಗೆ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಒಟ್ಟು 545 ಪಿಎಸ್‍ಐ ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಅವರು ಪ್ರಕಟಿಸಲಿದ್ದಾರೆ. +ಸಿಇಟಿ; ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ :ಏ.18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ ಸಿಇಟಿ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಸಲು ಮಾ. 30ರ ಬೆಳಿಗ್ಗೆ 11 ಗಂಟೆಯಿಂದ ಏ.1ರ ಸಂಜೆ 4 ಗಂಟೆಯವರೆಗೆ ಮತ್ತೊಂದು ಅವಕಾಶ ಕೊಡಲಾಗಿದೆ. ಅರ್ಜಿ ಸಲ್ಲಿಸುವವರು ಏ.1ರ ರಾತ್ರಿ 8 ಗಂಟೆಯವರೆಗೂ ಶುಲ್ಕ ಪಾವತಿಸಬಹುದು. ಈ ಅವಕಾಶವನ್ನು ಬಳಸಿಕೊಳ್ಳುವ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ಈ ವಿಷಯದಲ್ಲಿ ಯಾವುದೇ ತಕರಾರುಗಳಿಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. +ಕೆಸೆಟ್ ಪರೀಕ್ಷೆ; ಪರಿಷ್ಕøತ ಕೀ ಉತ್ತರಗಳು ಪ್ರಕಟ :ಜ.23ರಂದು 42 ನಾನಾ ವಿಷಯಗಳಿಗೆ ನಡೆಸಲಾಗಿದ್ದ ಕೆಸೆಟ್ ಪರೀಕ್ಷೆಯ ಪೈಕಿ ಆಕ್ಷೇಪಣೆಗಳು ಕಂಡುಬಂದಿದ್ದ 23 ವಿಷಯಗಳಲ್ಲಿ ಮನಃಶಾಸ್ತ್ರವನ್ನು ಹೊರತುಪಡಿಸಿ, ಮಿಕ್ಕ 22 ವಿಷಯಗಳ ಪರಿಷ್ಕøತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ರಮ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಪದವಿ ಕಾಲೇಜು ಉಪನ್ಯಾಸಕರ ನೇಮಕಕ್ಕೆ ಇದು ಅರ್ಹತಾ ಪರೀಕ್ಷೆ ಆಗಿದ್ದು, ಅಭ್ಯರ್ಥಿಗಳ ಆಕ್ಷೇಪಣೆಗಳನ್ನು ಆಧರಿಸಿ, ಪರಿಷ್ಕøತ ಕೀ ಉತ್ತರಗಳನ್ನು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_46_192_9.txt b/eesanje/url_46_192_9.txt new file mode 100644 index 0000000000000000000000000000000000000000..1514673be26910f7b776f0350b8548cdd3d27657 --- /dev/null +++ b/eesanje/url_46_192_9.txt @@ -0,0 +1,8 @@ +ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ವಾರ್ನಿಂಗ್ ಕೊಟ್ಟ ಬಿಜೆಪಿ +ಬೆಂಗಳೂರು,ಮಾ.29-ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಕನಿಷ್ಠ ಪದಗಳಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೆಂಡ ಕಾರಿರುವ ಬಿಜೆಪಿ ಇದೇ ರೀತಿ ಮಾತು ಮುಂದುವರೆಸಿದರೆ ದೂರು ದಾಖಲಿಸುವ ಎಚ್ಚರಿಕೆಯನ್ನು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಇತಿಮಿತಿಯಲ್ಲಿ ಮಾತನಾಡಿದರೆ ಯತೀಂದ್ರಗೆ ಒಳಿತು. ಇಲ್ಲದಿದ್ದರೆ ನಾವು ಕೂಡ ಅವರಿಗೂ ಕೆಳಮಟ್ಟದ ಭಾಷೆ ಬಳಸಲು ಬರುತ್ತದೆ ಎಂದು ಎಚ್ಚರಿಕೆ ಕೊಟ್ಟರು. +ತಾವು ನೀಡಿರುವ ಹೇಳಿಕೆಗೆ ತಕ್ಷಣವೇ ಯತೀಂದ್ರ ಕ್ಷಮೆಯಾಚಿಸಬೇಕು. ಇದೇ ರೀತಿ ನಾಲಿಗೆ ಹರಿದುಬಿಟ್ಟರೆ ಅವರ ಭಾಷೆಯಲ್ಲೇ ಪ್ರತ್ಯುತ್ತರ ಕೊಡುತ್ತೇವೆ ಎಂದು ಗುಡುಗಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಸಿದ್ದರಾಮಯ್ಯನವರ ಮಗ ಎಂಬ ಕಾರಣಕ್ಕೆ ಯತೀಂದ್ರ ರಾಷ್ಟ್ರೀಯ ನಾಯಕರ ಬಗ್ಗೆ ಮಾತಾಡಿದರೆ ದೊಡ್ಡ ವ್ಯಕ್ತಿಯಾಗಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅವರಿಗೆ ಜ್ಞಾನ ಕಡಿಮೆ ಇದೆ, ಬುದ್ಧಿ ಭ್ರಮಣೆಯಾಗಿದೆ. ಯಾರ ಬಗ್ಗೆ ಮಾತಾಡಬೇಕು ಎಂಬುದೇ ಗೊತ್ತಿಲ್ಲ. ಅಮಿತ್ ಶಾ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಮೈಸೂರು ರಾಜಕೀಯದ ಬಗ್ಗೆ ಮಾತನಾಡುವುದಕ್ಕೂ ಯೋಗ್ಯತೆ ಇಲ್ಲದ ಯತೀಂದ್ರಗೆ ಅಮಿತ್ ಶಾ ಬಗ್ಗೆ ಮಾತನಾಡುವುದು ಸೋಜಿಗ. ಯತೀಂದ್ರ ವಿರುದ್ಧ ದೂರು ದಾಖಲು ಮಾಡುತ್ತೇವೆ ಎಂದರು. +ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಮಾತನಾಡಿ, ಬೇರೆಯವರ ಬಗ್ಗೆ ಹಗುರವಾಗಿ ಮಾತಾಡುವುದು ಮತ್ತು ಬಯ್ಯುವುದನ್ನೇ ಕೆಲವರು ರಾಜಕೀಯದಲ್ಲಿ ದೊಡ್ಡತನ ಅಂದುಕೊಳ್ಳುತ್ತಾರೆ. ಅಂಥವರ ಪಾಲಿಗೆ ಯತೀಂದ್ರ ಸಿದ್ದರಾಯ್ಯ ಸೇರಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ ಎಂದರು. +ತಮ್ಮ ತಂದೆ ಸಿದ್ದರಾಮಯ್ಯ 14 ಬಜೆಟ್ ಮಂಡಿಸಿರುವ ಬಗ್ಗೆ ಯತೀಂದ್ರ ಹೇಳಿಕೊಳ್ಳುತ್ತಿರುತ್ತಾರೆ, ಅವರ ಸಾಧನೆ ಬಗ್ಗೆ ಮಾತಾಡಲಿ ಯಾರು ಬೇಡ ಎನ್ನುತ್ತಾರೆ. ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವರು ಯಾಕೆ ಮಾತಾಡುವುದು? ಎಂದು ಪ್ರಶ್ನಿಸಿದರು. +ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಕಾರಕ್ಕೆ ಬರಲಿದೆ ಮತ್ತು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸದಾನಂದ ಗೌಡ ಹೇಳಿದರು. ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾತನಾಡಿ, ಯತೀಂದ್ರ ಕೀಳುಮಟ್ಟದ ಹೇಳಿಕೆ ಕೊಟ್ಡಿದ್ದಾರೆ. ಮಾತಿನ ಮೇಲೆ ನಿಗಾ ಇರಬೇಕು, ಐರನ್ ಮ್ಯಾನ್ ಅಮಿತ್ ಶಾ ಅವರು ದೇಶ ಉಳಿಸುವುದಕ್ಕೆ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಗುಂಡಾ ಅಂತಾರೆ. ತಕ್ಷಣ ಕ್ಷಮೆ ಕೇಳಬೇಕು. ತಮ್ಮಹೇಳಿಕೆ ವಾಪಸ್ ಪಡೆಯಬೇಕು. ಅಮಿತ್ ಶಾ ಅವರು ನೀಡಿರುವ ಕೊಡುಗೆಯನ್ನು ಯತೀಂದ್ರ ಪರಿವಾರ ಎಳ್ಳಷ್ಟು ಕೊಟ್ಟಿಲ್ಲ. ಸಚಿವರ ಬಗ್ಗೆ ಮಾತನಾಡುವ ಯೋಗ್ಯತೆಯೂ ಇಲ್ಲ ಎಂದು ತಿರುಗೇಟು ನೀಡಿದರು. +ಮಾಜಿ ಸಚಿವ ಸಿ.ಟಿ ರವಿ ಮಾತನಾಡಿ, ಅಪ್ಪನ ಹೆಸರಲ್ಲಿ ಅಕಾರಕ್ಕೆ ಬಂದವರು ಹೀಗೆ.. ಯತೀಂದ್ರ ಎಂದಾದರೂ ಪಕ್ಷದ ಕೆಲಸ ಮಾಡಿದ್ದಾರಾ? ಅಮಿತ್ ಶಾ 1982ರಲ್ಲಿ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಇನ್ನೂ ಎಂಎಲ್‍ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನಿಂದ ಶಾಸಕರಾದವರು ಯತೀಂದ್ರ. ಆದರೆ ನಾವು ವಿದ್ಯಾರ್ಥಿಗಳಾಗಿದ್ದಾಗಲೇ ನಾಯಕರಾಗಿದ್ದೆವು. +ನಮ್ಮ ಮೇಲೂ ಸುಳ್ಳು ಕೇಸ್ ಹಾಕಿ ಗೂಂಡಾ ಕಾಯ್ದೆ ಹಾಕಿದ್ದರು. ಹಾಗಾದ ಮಾತ್ರಕ್ಕೆ ನಾನೂ ಗುಂಡಾನಾ? ಅಪ್ಪನ ಹೆಸರಲ್ಲಿ ಅಕಾರಕ್ಕೆ ಬಂದವರಿಗೆ ಸಾಮಾನ್ಯ ಕಾರ್ಯಕರ್ತರ ಕಷ್ಟ ಹೇಗೆ ತಿಳಿಯುತ್ತದೆ? ಎಂದು ಕಿಡಿಕಾರಿದರು.ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಯತೀಂದ್ರ ಸಿದ್ದರಾಮಯ್ಯ, ಅಮಿತ್ ಶಾ ಓರ್ವ ಗೂಂಡಾ, ರೌಡಿ. ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂಥವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂಥವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದರು. \ No newline at end of file diff --git a/eesanje/url_46_193_1.txt b/eesanje/url_46_193_1.txt new file mode 100644 index 0000000000000000000000000000000000000000..c6af07cc2aba4d24c6da59580368607ab9f6b66d --- /dev/null +++ b/eesanje/url_46_193_1.txt @@ -0,0 +1,6 @@ +ಇಂದು ಬರಹಗಾರ, ಕರ್ನಾಟಕ ಏಕೀಕರಣ ಹೋರಾಟಗಾರ ಹುಲ್ಲೂರು ಶ್ರೀನಿವಾಸ ಜೋಯಿಸರ ಜನ್ಮದಿನ +ನಮ್ಮ ನಾಡಿನ ಮಹಾನ್ ಸಂಶೋಧಕ, ರಾಷ್ಟ್ರಪ್ರೇಮಿ, ಕರ್ನಾಟಕ ಏಕೀಕರಣಕ್ಕೆ ದುಡಿದ, ಪುರೋಹಿತ ಮನೆತನಕ್ಕೆ ಸೇರಿದ ಹುಲ್ಲೂರು ಶ್ರೀನಿವಾಸ ಜೋಯಿಸರು ಮಾರ್ಚ್ 29, 1892ರಲ್ಲಿ ಜನಿಸಿದರು. ಅವರ ಕುಟುಂಬದ ಹಿರಿಯರು ಸುಮಾರು ಮೂರು ನೂರು ವರ್ಷಗಳ ಹಿಂದೆ ಬಳ್ಳಾರಿ ಜಿಲ್ಲೆಯ ಕೊಟ್ಟೂರು ಬಳಿಯ ಅಂಬಳೆ ಗ್ರಾಮದಿಂದ ಚಿತ್ರದುರ್ಗ ಜಿಲ್ಲೆಯ ಹುಲ್ಲೂರಿಗೆ ವಲಸೆ ಬಂದವರು. +ತಂದೆ ಪಾಂಡುರಂಗ ಜೋಯಿಸ್, ತಾಯಿ ಪಾರ್ವತಮ್ಮನವರು. ಶ್ರೀನಿವಾಸ ಜೋಯಿಸರು ಪ್ರಾಥಮಿಕ ಶಿಕ್ಷಣ ಪಡೆದದು ಚಿತ್ರದುರ್ಗದಲ್ಲಿ. ಮೆಟ್ರಿಕ್ ಉತ್ತೀರ್ಣರಾದ ಬಳಿಕ ಕೆಲಕಾಲ ನೌಕರಿಯಲ್ಲಿದ್ದರು. ನಂತರದಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಆರಂಭಿಸಿದರು.ಶ್ರೀನಿವಾಸ ಜೋಯಿಸರು ವೃತ್ತಿಯಲ್ಲಿ ವಕೀಲರಾಗಿದ್ದರೂ ಅಧ್ಯಯನ ಶೀಲರಾಗಿದ್ದು, ಇತಿಹಾಸ ಸಂಶೋಧನೆಯಲ್ಲಿ ಪ್ರಾವೀಣ್ಯತೆ ಪಡೆದಿದ್ದರು. ಅವರು ಕರ್ನಾಟಕ ಏಕೀಕರಣ, ಸ್ವಾತಂತ್ರ್ಯ ಹೋರಾಟಗಳಲ್ಲೂ ಸಕ್ರಿಯರಾಗಿ ಪಾಲ್ಗೊಂಡಿದ್ದರು. +ಚಿತ್ರದುರ್ಗದ ಇತಿಹಾಸದ ಜೊತೆಗೆ ಕರ್ನಾಟಕದ ಇತಿಹಾಸದ ಬಗ್ಗೆ ನೂರಾರು ಲೇಖನಗಳನ್ನು ಬರೆದಿದ್ದಾರೆ. ಐತಿಹಾಸಿಕ ಸ್ಥಳಗಳು, ವ್ಯಕ್ತಿಗಳು, ಘಟನೆಗೆ ಸಂಬಂಸಿದಂತೆ, ಭಾಷೆ, ಧರ್ಮ, ಸಂಸ್ಕೃತಿ, ಶೌರ್ಯ, ಸಾತ್ವಿಕತೆ, ಆದರ್ಶ, ಉದಾರತೆ ಮೊದಲಾದ ಗುಣಗಳನ್ನು ಚಿತ್ರಿಸುವ ಉದ್ದೇಶದಿಂದ ಅವರು ಇಪ್ಪತ್ತೈದು ವರ್ಷಗಳ ಕಾಲ ಸುಮಾರು ಮುನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ. +ಹುಲ್ಲೂರು ಶ್ರೀನಿವಾಸ ಜೋಯಿಸರು ರಚಿಸಿರುವ ಹತ್ತು ಪುಸ್ತಕಗಳಲ್ಲಿ ಗಂಡುಗಲಿ ಕುಮಾರರಾಮ, ಕನ್ನಡ ಕಲಿ ಸಿರುಮನ ಚರಿತೆ ಬಹುಮುಖ್ಯವಾದುವು. ಇವರು ಸಂಪಾದಿಸಿ ಪ್ರಕಟಿಸಿದ ಚಿತ್ರದುರ್ಗದ ಬಖೈರು ಐತಿಹಾಸಿಕ ದಾಖಲೆಯ ಕೃತಿಯಾಗಿದೆ.ಹುಲ್ಲೂರು ಶ್ರೀನಿವಾಸ ಜೋಯಿಸರು ಪತ್ರಿಕಾ ವರದಿಗಾರರಾಗಿ, ಚಿತ್ರದುರ್ಗ ಜಿಲ್ಲೆಯ ಪತ್ರಿಕೋದ್ಯಮಿಗಳ ಸಂಘದ ಅಧ್ಯಕ್ಷರಾಗಿ, ಮೈಸೂರು ಸಂಸ್ಥಾನ ಪತ್ರಿಕೋದ್ಯೋಗಿಗಳ ಸಂಘದ, ಮೈಸೂರು ಪ್ರಾದೇಶಿಕ, ಐತಿಹಾಸಿಕ ಪತ್ರಗಳ ಶೋಧನಾ ಸಮಿತಿ, ಯೋಜನಾ ಸಮಿತಿಗಳ ಸದಸ್ಯರಾಗೂ ಸಹ ಮಹತ್ವದ ಸೇವೆ ಸಲ್ಲಿಸಿದ್ದಾರೆ. +2000 ವರ್ಷದಷ್ಟು ದೀರ್ಘ ಇತಿಹಾಸ ದಾಖಲಿಸಿರುವ ಹುಲ್ಲೂರು ಶ್ರೀನಿವಾಸ ಜೋಯಿಸರು, ತಾವೇ ಸ್ಥಾಪಿಸಿದ ಚಿತ್ರದುರ್ಗದ ಪ್ರಾಚ್ಯವಸ್ತು ಸಂಗ್ರಹಾಲಯದ ಗೌರವ ಕ್ಯೂರೇಟರಾಗಿಯೂ ಸೇವೆ ಸಲ್ಲಿಸಿದ್ದರು. ಈ ಮಹಾನ್ ಸಾಧಕರು 1956ರ ನವೆಂಬರ್ 08 ರಂದು ನಿಧನರಾದರು. ಶ್ರೀನಿವಾಸ ಜೋಯಿಸರಿಗೆ ಇತಿಹಾಸ ಸಂಶೋಧನಾ ಪ್ರಸಕ್ತ ಐತಿಹ್ಯ ವಿಮರ್ಶನ ವಿಚಕ್ಷಣ ಮುಂತಾದ ಬಿರುದು ಗೌರವ ಸಂದಿವೆ. ತ.ರಾ.ಸು. ಮತ್ತು ಜಿ.ವರದರಾಜರಾಯರು ಕ್ರಮವಾಗಿ ಹಂಸಗೀತೆ ಮತ್ತು ಕುಮಾರರಾಮನ ಸಾಂಗತ್ಯ ಕೃತಿಗಳನ್ನು ಶ್ರೀನಿವಾಸ ಜೋಯಿಸರಿಗೆ ಗೌರವ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_193_10.txt b/eesanje/url_46_193_10.txt new file mode 100644 index 0000000000000000000000000000000000000000..3b9f81fafd8b95f174e5372a6d763f1745f0cc4b --- /dev/null +++ b/eesanje/url_46_193_10.txt @@ -0,0 +1,7 @@ +ವಿಶೇಷಚೇತನರ ಮತದಾನಕ್ಕೆ ವಿಶೇಷ ವ್ಯವಸ್ಥೆ +ಬೆಂಗಳೂರು,ಮಾ.27-ಲೋಕಸಭಾ ಚುನಾವಣೆಯಲ್ಲಿ ವಿಶೇಷಚೇತನರು ಯಾವುದೇ ಸಮಸ್ಯೆ ಇಲ್ಲದಂತೆ ಮತದಾನ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ಮನವಿ ಮಾಡಿಕೊಂಡರು. +ಲೋಕಸಭಾ ಚುನಾವಣೆ-2024ರ ಹಿನ್ನಲೆಯಲ್ಲಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರವಾಹನಗಳಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. +ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ. ಅದರಂತೆ, ವಿಶೇಷ ಚೇತನರು, 85 ವರ್ಷ ಮೇಲ್ಪಟ್ಟವರು ಹಾಗೂ ತೃತೀಯ ಲಿಂಗಿಗಳು ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಗುತ್ತಿದೆ ಎಂದರು. +ವಿಶೇಷ ಚೇತನರು ಮತದಾನ ಮಾಡುವ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತಗಟ್ಟೆಗಳ ಬಳಿ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲಾ ವಿಶೇಷ ಚೇತನರು ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಲು ಮನವಿ ಮಾಡಿದರು. +ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರವರು ಜಾಥಾಗೆ ಚಾಲನೆ ನೀಡಿದರು. ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮವು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಪ್ರಾರಂಭವಾಗಿ ಕೆ.ಆರ್ ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಕಂಠೀರವ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯಗೊಳಿಸಲಾಯಿತು. +ಪ್ರತಿಜ್ಞಾ ವಿಧಿ ಸ್ವೀಕಾರ:ಲೋಕಸಭಾ ಚುನಾವಣೆಯ ಹಿನ್ನೆಲೆ ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ವೇಳೆ ನೆರೆದಿದ್ದ ವಿಶೇಷ ಚೇತನರು ಹಾಗೂ ಅಧಿಕಾರಿಗಳು ಪ್ರತಿಜ್ಞಾನ ವಿಧಿ ಸ್ವೀಕರಿಸಿದರು.ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಕಾಂತರಾಜ್ , ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಸೇರಿದಂತೆ ಇನ್ನಿತರೆ ಅ„ಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_193_11.txt b/eesanje/url_46_193_11.txt new file mode 100644 index 0000000000000000000000000000000000000000..01c401db9225fd30d409fe1d914e5db008acccef --- /dev/null +++ b/eesanje/url_46_193_11.txt @@ -0,0 +1,11 @@ +ಬೇಸಿಗೆಯಲ್ಲಿ ವಿದ್ಯುತ್ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ : ಜಾರ್ಜ್ +ಬೆಂಗಳೂರು, ಮಾ.27-ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಸಚಿವರು, ಸದ್ಯ ಪರಿಸ್ಥಿತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದಿದ್ದಾರೆ. +ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚುವುದು ನಿರೀಕ್ಷಿತ. ಅದಕ್ಕಾಗಿ ಬಹಳ ಮುಂಚಿತವಾಗಿ ಸರಿಯಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಯಾವುದೇ ವರ್ಗದ ಗ್ರಾಹಕರಿಗೆ ಲೋಡ್ ಶೆಡ್ಡಿಂಗ್ ಬಿಸಿ ತಟ್ಟದಂತೆ ಇಲಾಖೆ ಎಚ್ಚರವಹಿಸಿದೆ ಎಂದು ತಿಳಿಸಿದರು. +ರಾಜ್ಯದಲ್ಲಿ ಪ್ರತಿ ದಿನದ ವಿದ್ಯುತ್ ಬಳಕೆ 329 ಮಿಲಿಯನ್ ಯೂನಿಟ್ನಷ್ಟಿದ್ದು, ಹಿಂದಿನ ವರ್ಷ ಇದೇ ಅವಯ ವಿದ್ಯುತ್ ಬಳಕೆ ಪ್ರಮಾಣ 300 ಮಿ.ಯೂ. ನಷ್ಟಿತ್ತು. ಕಳೆದ ವರ್ಷದ ಗರಿಷ್ಠ ಲೋಡ್ 15300 ಮೆಗಾ ವ್ಯಾಟ್‍ಗಿಂತ ಹೆಚ್ಚಿದ್ದರೆ, ಈ ವರ್ಷದ ಗರಿಷ್ಠ ಲೋಡ್ 17000 ಮೆಗಾ ವ್ಯಾಟ್‍ಗೆ ಏರಿದೆ ಎಂದು ವಿವರಿಸಿದ್ದಾರೆ. +ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಓದಲು ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ಕೃಷಿ ಪಂಪ್‍ಸೆಟ್‍ಳಿಗೆ 7 ತಾಸು ವಿದ್ಯುತ್ ಪೂರೈಕೆಗೆ ಆದೇಶ ನೀಡಲಾಗಿದೆ. ಬೇಸಿಗೆ ಕಾರಣದಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು ಭರವಸೆ ನೀಡಿದ್ದಾರೆ. +ವಿದ್ಯುತ್ ಬೇಡಿಕೆ ಪೂರೈಕೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿರುವ ಸಚಿವರು, 2024ನೇ ಸಾಲಿನ ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬೇಡಿಕೆಗೆ ಅನುಗುಣವಾಗಿ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಗರಿಷ್ಠ ಉತ್ಪಾದನೆಗೆ ಒತ್ತು ನೀಡಲಾಗಿದೆ. ಉಷ್ಣ ವಿದ್ಯುತ್ ಸ್ಥಾವರಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಮುಖ್ಯ ಆಧಾರವಾಗಿದ್ದು, ರಾಜ್ಯದ 3 ಶಾಖೋತ್ಪನ್ನ ವಿದ್ಯುತ್ ಸ್ಥಾವರಗಳಲ್ಲಿ ಕಳೆದ ವರ್ಷ ಗರಿಷ್ಠ 22 ಸಾವಿರ ಮಿ.ಯೂ. ವಿದ್ಯುತ್ ಉತ್ಪಾದನೆಯಾಗಿದೆ. ಕಳೆದ ವರ್ಷ ಗರಿಷ್ಠ 18 ಸಾವಿರ ಮಿಲಿಯನ್ ಯೂನಿಟ್ ಆಗಿತ್ತು. ಪ್ರಸ್ತುತ 3,250 ಮೆಗಾ ವ್ಯಾಟ್ ಅಥವಾ ದಿನಕ್ಕೆ 75 ಮಿಲಿಯನ್ ಯೂನಿಟ್‍ನಂತೆ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ವಿವರಿಸಿದ್ದಾರೆ. +ಮಳೆ ಅಭಾವದಿಂದ ಪ್ರಸಕ್ತ ವರ್ಷ ಜಲಾಶಯಗಳು ಅರ್ಧದಷ್ಟು ತುಂಬಿರುವ ಕಾರಣ ನೀರನ್ನು ಸಂರಕ್ಷಿಸಿ, ಬಹಳ ಎಚ್ಚರಿಕೆಯಿಂದ ಬಳಸಲಾಗುತ್ತಿದೆ. ಹಾಗಾಗಿ, ಜಲ ವಿದ್ಯುತ್ ಉತ್ಪಾದನೆ ಕೊಂಚ ಮಟ್ಟಿಗೆ ಕುಂಠಿತಗೊಂಡಿದ್ದರೂ, ಮಾರ್ಚ್ ಮತ್ತು ಏಪ್ರಿಲ್‍ನ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ ದಿನವೊಂದಕ್ಕೆ 20 ಮಿ.ಯೂ. ಅಥವಾ 1000 ಮೆ.ವ್ಯಾ ವಿದ್ಯುತ್ ಲಭ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ. +ಉತ್ತರ ಪ್ರದೇಶ, ಪಂಜಾಬ್ ಜತೆಗೆ 2024ರ ಜೂನ್‍ನಲ್ಲೇ ದ್ವಿಪಕ್ಷೀಯ ವಿನಿಮಯ ಒಪ್ಪಂದ ಮಾಡಿಕೊಳ್ಳುವ ಮೂಲಕ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ರಾಜ್ಯಗಳಿಂದ ವಿನಿಮಯ ಆಧಾರದ ಮೇಲೆ ಪ್ರತಿದಿನ ಸರಾಸರಿ 900 ಮೆ.ವ್ಯಾ. ವಿದ್ಯುತ್ ಪಡೆಯಲಾಗುತ್ತಿದೆ. ಮುಂದಿನ ವರ್ಷ ಆ ರಾಜ್ಯಗಳಿಗೆ ಸದರಿ ವಿದ್ಯುತ್ ಅನ್ನು ಹಿಂದಿರುಗಿಸಲಾಗುವುದು ಎಂದು ಹೇಳಿದ್ದಾರೆ. +ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿಗೊಳಿಸಿ, ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಪ್ರಸ್ತುತ 500 ಮೆ.ವ್ಯಾ. ವಿದ್ಯುಚ್ಛಕ್ತಿಯನ್ನು ಖಾಸಗಿ ಉತ್ಪಾದಕರಿಂದ ಪಡೆಯಲಾಗುತ್ತಿದೆ. ಸೌರ ಮತ್ತು ಪವನ ವಿದ್ಯುತ್ ಸ್ಥಾವರಗಳು (ಬಹುತೇಕ ಖಾಸಗಿ ವಲಯ) ಸಾಮಾನ್ಯವಾಗಿ ಮಸ್ಟ್ ರನ್ ಆಧಾರದ ಮೇಲೆ ನಡೆಯುತ್ತವೆ. ಹವಾಮಾನ ಬದಲಾವಣೆಗೆ ಅನುಗುಣವಾಗಿ ಈ ಸ್ಥಾವರಗಳಿಂದ ಉತ್ಪಾದನೆ ಆಗುವ ವಿದ್ಯುತ್ ರಾಜ್ಯಕ್ಕೆ ಲಭ್ಯವಾಗುತ್ತಿದೆ. +ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ತಿನ ಅಗತ್ಯ ಇದೆ ಎಂದು ಮನವರಿಕೆ ಮಾಡಿಕೊಟ್ಟು, ಕೇಂದ್ರ ಗ್ರಿಡ್‍ನಿಂದ ಈ ವರ್ಷ 302 ಮೆಗಾ ವ್ಯಾಟ್ ವಿದ್ಯುತ್ ಪಡೆಯಲಾಗುತ್ತಿದೆ. ಕಳೆದ ವರ್ಷ ಕೇಂದ್ರ ಗ್ರಿಡ್ ಒಪ್ಪಿಸಲಾಗಿದ್ದ 150 ಮೆಗಾವ್ಯಾಟ್ ವಿದ್ಯುಚ್ಛಕ್ತಿಯನ್ನೂ ವಾಪಸ್ ಪಡೆಯಲಾಗಿದೆ. ಈ ಹೆಚ್ಚುವರಿ ವಿದ್ಯುತ್ ಡಿಸೆಂಬರ್ ತಿಂಗಳಿನಿಂದ ರಾಜ್ಯಕ್ಕೆ ಲಭ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ. +ಅನಿರೀಕ್ಷಿತ ಅಥವಾ ಹಠಾತ್ ವಿದ್ಯುತ್ ಬೇಡಿಕೆಯನ್ನು ಪೂರೈಸಲು, ಕೇಂದ್ರ ಸರ್ಕಾರವು ನಿಗದಿಪಡಿಸಿರುವಂತ ವಿದ್ಯುತ್ ವಿನಿಮಯ ಕೇಂದ್ರದಿಂದ ಪಾರದರ್ಶಕವಾಗಿ ವಿದ್ಯುತ್ ಖರೀದಿಸಲಾಗುತ್ತಿದೆ. ರಾಜ್ಯದಾದ್ಯಂತ ಸಮರ್ಪಕ ವಿದ್ಯುತ್ ಸರಬರಾಜಿನ ಮೇಲ್ವಿಚಾರಣೆಗೆ ಪ್ರತಿ ಜಿಲ್ಲೆಗೆ ಮುಖ್ಯ ಇಂಜಿನಿಯರ್ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಕಲ್ಲಿದ್ದಲು ಸಚಿವಾಲಯದಿಂದ ಹೆಚ್ಚುವರಿ ಕಲ್ಲಿದ್ದಲನ್ನು ಸಕಾಲದಲ್ಲಿ ಪಡೆಯಲಾಗಿದೆ, ಆಮದು ಮಾಡಿದ ಹೆಚ್ಚಿನ ವಿದೇಶಿ ಕಲ್ಲಿದ್ದಲನ್ನು ದೇಶೀಯ ಕಲ್ಲಿದ್ದಲಿನೊಂದಿಗೆ ಮಿಶ್ರಣ ಮಾಡಲಾಗುತ್ತಿದೆ. ಯಲಹಂಕ ಬಳಿಯ 370 ಮೆ.ವ್ಯಾ.ಸಾಮರ್ಥ್ಯದ ಅನಿಲ ಸ್ಥಾವರ ಶೀಘ್ರದಲ್ಲೇ ಉತ್ಪಾದನೆ ಆರಂಭವಾಗಲಿದೆ ಎಂದು ಸಚಿವರು ಹರ್ಷ ವ್ಯಕ್ತ ಪಡಿಸಿದ್ದಾರೆ. \ No newline at end of file diff --git a/eesanje/url_46_193_12.txt b/eesanje/url_46_193_12.txt new file mode 100644 index 0000000000000000000000000000000000000000..0a0502bdc47a104f8da208ca03bab3a23522bf40 --- /dev/null +++ b/eesanje/url_46_193_12.txt @@ -0,0 +1,5 @@ +ಟಿಕೆಟ್ ಸಿಗದೆ ನಿರಾಸೆ : ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ರಾಜೀನಾಮೆ +ಬೆಂಗಳೂರು,ಮಾ.27-ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. +ರಾಜೀನಾಮೆ ಪತ್ರವು ಕ್ರಮಬದ್ದವಾಗಿರುವುದರಿಂದ ಅದನ್ನು ಅಂಗೀಕರಿಸಲಾಗಿದೆ ಎಂದು ಸಭಾಪತಿ ಹೊರಟ್ಟಿ ಅವರು ಹೇಳಿದ್ದಾರೆ. ಮೈಸೂರು-ಕೊಡುಗು ಕ್ಷೇತ್ರದ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಟಿಕೆಟ್‍ಗಾಗಿ ಭಾರೀ ಲಾಬಿಯನ್ನೇ ನಡೆಸಿದ್ದರು. ರಾಜ್ಯ ಬಿಜೆಪಿ ನಾಯಕರು ಹಾಗೂ ಕೇಂದ್ರ ವರಿಷ್ಠರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿಕೊಂಡಿದ್ದರು. +ಆದರೆ ಮೈಸೂರು-ಕೊಡುಗು ಕ್ಷೇತ್ರದಿಂದ ಬಿಜೆಪಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೂ ಟಿಕೆಟ್ ಕೊಡದೆ ರಾಜಮನೆತನದ ಯದುವೀರ್ ನರಸಿಂಹದತ್ತ ಒಡೆಯರಿಗೆ ಟಿಕೆಟ್ ಘೋಷಣೆಯಾಗಿತ್ತು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. +ಈ ಹಿಂದೆ ಅವರ ಅಧಿಕಾರ ಅವಧಿ ಜೂನ್ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿತ್ತು. ಈ ಹಿಂದೆ ಕನಕಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಧಿಸಿ ಮಾಜಿ ಪ್ರಧಾನಿ ದೇವೇಗೌಡರನ್ನು ಪರಾಭವಗೊಳಿಸಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರನ್ನು ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆ ಮಾಡಲಾಗಿತ್ತು. \ No newline at end of file diff --git a/eesanje/url_46_193_2.txt b/eesanje/url_46_193_2.txt new file mode 100644 index 0000000000000000000000000000000000000000..42c0e8e88f7296e8097099b5380deaef42921038 --- /dev/null +++ b/eesanje/url_46_193_2.txt @@ -0,0 +1,4 @@ +ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ರೇಣುಕಾಚಾರ್ಯ ನೇಮಕ +ಬೆಂಗಳೂರು,ಮಾ.29-ಟಿಕಟ್ ಸಿಗದೆ ಪಕ್ಷದ ವರಿಷ್ಠರ ವಿರುದ್ಧವೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. +ಈ ಕ್ಷೇತ್ರದಿಂದ ಗಾಯತ್ರಿ ಸಿದ್ದೇಶ್ವರ್‍ಗೆ ಟಿಕೆಟ್ ನೀಡಿದ್ದಕ್ಕೆ ಬೇಸರಗೊಂಡಿದ್ದ ಅವರು, ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಇದೀಗ ಅವರನ್ನು ದಾವಣಗೆರೆ ಜಿಲ್ಲಾ ಸಂಚಾಲರನ್ನಾಗಿ ನೇಮಕ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಪಕ್ಷದ ವರಿಷ್ಠರು ಕೈ ಹಾಕಿದ್ದಾರೆ. +ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್‍ವಾಲ್ ಅವರ ಸೂಚನೆ ಮೇರೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ನೇಮಕ ಮಾಡಿ ತಮ್ಮ ಆದೇಶ ಹೊರಡಿಸಿದ್ದಾರೆ. \ No newline at end of file diff --git a/eesanje/url_46_193_3.txt b/eesanje/url_46_193_3.txt new file mode 100644 index 0000000000000000000000000000000000000000..c14a4238888b8321623b0788d22305f59188a2e5 --- /dev/null +++ b/eesanje/url_46_193_3.txt @@ -0,0 +1,6 @@ +ಲೋಕಸಭಾ ಚುನಾವಣೆ : ರಾಜ್ಯದಲ್ಲಿ ಮೊದಲ ದಿನ 25 ಅಭ್ಯರ್ಥಿಗಳಿಂದ 29 ನಾಮಪತ್ರ ಸಲ್ಲಿಕೆ +ಬೆಂಗಳೂರು,ಮಾ.29-ಪ್ರಸಕ್ತ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಸಂಸದರಾದ ಡಿ.ಕೆ.ಸುರೇಶ್, ಪ್ರಜ್ವಲ್ ರೇವಣ್ಣ ಹಾಗೂ ಬಿಜೆಪಿ ಅಭ್ಯರ್ಥಿ ಬ್ರಿಜೇಸ್ ಚೌತಲ ಸೇರಿದಂತೆ 25 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. +ಡಿ.ಕೆ.ಸುರೇಶ್‍ರವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರು ಸ್ಪರ್ಧೆಗಿಳಿದಿದ್ದರೆ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. +ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನವೇ 23 ಪುರುಷ ಹಾಗೂ ಇಬ್ಬರು ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.25 ಅಭ್ಯರ್ಥಿಗಳಿಂದ ಒಟ್ಟು 29 ನಾಮಪತ್ರಗಳನ್ನು ಸಲ್ಲಿಸಲಾಗಿದೆ. +ಬಿಎಸ್‍ಪಿ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಜೆಡಿಯು, ಜನತಾಪಕ್ಷ, ಯಂಗ್‍ಸ್ಟಾರ್, ಎಂಪೋರ್ಮೆಂಟ್ ಪಕ್ಷಗಳಿಂದ ತಲಾ ಒಬ್ಬರು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರೆ, ಕರ್ನಾಟಕ ರಾಷ್ಟ್ರ ಸಮಿತಿಯಿಂದ 7 ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. +ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾದಿಂದ ಒಬ್ಬರು ಹಾಗೂ ಪಕ್ಷೇತರವಾಗಿ ಒಬ್ಬ ಮಹಿಳಾ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಸ್ವತಂತ್ರ್ಯವಾಗಿ 7 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_193_4.txt b/eesanje/url_46_193_4.txt new file mode 100644 index 0000000000000000000000000000000000000000..781d914a26c0c7b6aeab8394880f2e43375e7481 --- /dev/null +++ b/eesanje/url_46_193_4.txt @@ -0,0 +1,8 @@ +ರಾಜ್ಯದಲ್ಲಿ ಯುವ ಮತದಾರರ ಸಂಖ್ಯೆ ಏರಿಕೆ, 11.24 ಲಕ್ಷ ಮಂದಿಯಿಂದ ಮೊದಲ ಬಾರಿಗೆ ಮತದಾನ +ಬೆಂಗಳೂರು,ಮಾ.28-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಯುವ ಮತದಾರರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಮೊದಲ ಬಾರಿಗೆ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿ ಕೊಂಡಿರುವ ಯುವ ಮತದಾರರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಕಾತರದಿಂದ ಮತದಾನದ ದಿನವನ್ನು ಎದುರು ನೋಡುತ್ತಿದ್ದಾರೆ. +ಇದಕ್ಕೆ ಪೂರಕ ಎಂಬಂತೆ ಚುನಾ ವಣಾ ಆಯೋಗವು ಮತದಾನ ಮಾಡಲು ಯುವ ಮತದಾ ರರನ್ನು ಆಕರ್ಷಿಸಲು ಜಾಥಾ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮತಗಟ್ಟೆಗಳಿಗೆ ಬಂದು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವಂತೆ ಹಲವು ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. +ಅಲ್ಲದೆ 18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹತಾ ದಿನಾಂಕವನ್ನು ಜನವರಿ 1, ಏಪ್ರಿಲ್ 1, ಜುಲೈ 1 ಹಾಗೂ ಅಕ್ಟೋಬರ್ 1 ಎಂದು ನಿಗದಿಪಡಿಸಲಾಗಿದೆ. ಈ ದಿನಾಂಕಗಳಂದು 18 ವರ್ಷ ತುಂಬಿದವರು ಯುವ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ. +ಭಾರತ ಚುನಾವಣಾ ಆಯೋಗ ಪ್ರಕಟಿಸಿರುವ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟು 5,47,08,808 ಮತದಾರರು ಇದ್ದು ಈ ಪೈಕಿ 2,71,21,407 ಪುರುಷ, 2,70,81,748 ಮಹಿಳಾ ಮತದಾರರು ಇದ್ದಾರೆ. ಈ ಪೈಕಿ 18-19ನೇ ವಯಸ್ಸಿನ ಯುವ ಹಾಗೂ ಹೊಸ ಮತದಾರರು ಒಟ್ಟು 11,24,622 ಯುವ ಮತದಾರರು ಇದ್ದಾರೆ. ಇವರಲ್ಲಿ 6,05,068 ಪುರುಷ ಹಾಗೂ 5,19,438 ಮಹಿಳಾ ಹಾಗೂ 116 ತೃತೀಯ ಲಿಂಗಿ ಯುವ ಮತದಾರರು ಇದ್ದಾರೆ. +ಕಳೆದ 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ 18-19 ವರ್ಷದ ಯುವ ಮತದಾರರ ಸಂಖ್ಯೆ 3,88,527ರಷ್ಟು ರಾಜ್ಯದಲ್ಲಿ ಹೆಚ್ಚಳವಾಗಿದೆ. ಇದರಲ್ಲಿ 1,97,046 ಪುರುಷ ಹಾಗೂ 1,9,453 ಮಹಿಳಾ ಹಾಗೂ 28 ಇತರೆ ಮತದಾರರು ಹೆಚ್ಚಾಗಿದ್ದಾರೆ. ಕಳೆದ ಚುನಾವಣೆಯಲ್ಲಿ 10,10,040 ಯುವ ಮತದಾರರು ಇದ್ದರು. +ಕ್ಷೇತ್ರವಾರು ಯುವ ಮತದಾರರ ವಿವರ:ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಅತಿಹೆಚ್ಚು 53,077 ಹಾವೇರಿ ಕ್ಷೇತ್ರದಲ್ಲಿ 50658, ಚಿಕ್ಕೋಡಿಯಲ್ಲಿ 50,589 ಹೆಚ್ಚು ಯುವ ಮತದಾರರು ಇದ್ದಾರೆ. ಅತಿಕಡಿಮೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 27461, ಹಾಸನದಲ್ಲಿ 28526 ಯುವ ಮತದಾರರು ಇದ್ದಾರೆ. +ಬೆಳಗಾವಿ-47095, ಬಾಗಲಕೋಟೆ – 47350, ಬಿಜಾಪುರ -39831, ಗುಲ್ಬರ್ಗಾ-36920, ರಾಯಚೂರು-47394, ಬೀದರ್-39145, ಕೊಪ್ಪಳ 46162, ಧಾರವಾಡ -40763, ಉತ್ತರಕನ್ನಡ-37226, ದಾವಣಗೆರೆ-37934, ಶಿವಮೊಗ್ಗ- 34118, ಉಡುಪಿ-ಚಿಕ್ಕಮಗಳೂರು-29909, ದಕ್ಷಿಣ ಕನ್ನಡ-35763, ಚಿತ್ರದುರ್ಗ- 45676, ತುಮಕೂರು-38829, ಮಂಡ್ಯ-37761, ಮೈಸೂರು-41145, ಚಾಮರಾಜನಗರ- 32482, ಬೆಂಗಳೂರು ಗ್ರಾಮಾಂತರ-47356, ಬೆಂಗಳೂರು ಉತ್ತರ-44464, ಬೆಂಗಳೂರು ಕೇಂದ್ರ-30246, ಚಿಕ್ಕಬಳ್ಳಾಪುರ -43138, ಕೋಲಾರ-45603ರಷ್ಟು ಯುವ ಮತದಾರರು ಇದ್ದಾರೆ. \ No newline at end of file diff --git a/eesanje/url_46_193_5.txt b/eesanje/url_46_193_5.txt new file mode 100644 index 0000000000000000000000000000000000000000..708c1db6899c99d217deafab005910dbb5fd20cd --- /dev/null +++ b/eesanje/url_46_193_5.txt @@ -0,0 +1,6 @@ +ನಾಮಪತ್ರ ಸಲ್ಲಿಕೆ ಆರಂಭ : ಶಾಂತಿ-ಸುವ್ಯವಸ್ಥೆ ಕಾಪಾಡಲು ಏ.8ರವರೆಗೆ ನಿಷೇಧಾಜ್ಞೆ +ಬೆಂಗಳೂರು, ಮಾ.28-ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಇಂದಿನಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದ್ದು, ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಏ.8ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಇಂದು ಬೆಳಗ್ಗೆ 10 ಗಂಟೆಯಿಂದ ಏ.8ರ ಸಂಜೆ 6 ಗಂಟೆ ವರೆಗೆ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ನಾಮಪತ್ರ ಸ್ವೀಕರಿಸುವ ಎಲ್ಲಾ ಚುನಾವಣಾಧಿಕಾರಿಗಳ ಕಚೇರಿಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಬಿ. ದಯಾನಂದ ಆದೇಶ ಹೊರಡಿಸಿದ್ದಾರೆ. +ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಚುನಾವಣಾಕಾರಿಗಳ ಕಚೇರಿಗಳಲ್ಲಿ ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ನಡೆಯಲಿದ್ದು, ಇಂತಹ ಸಂದರ್ಭಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಯ ಬಳಿ ಗುಂಪು ಸೇರುವ ಸಾಧ್ಯತೆಗಳು ಇರುತ್ತವೆ. +ರಸ್ತೆ ತಡೆ, ಮೆರವಣಿಗೆ, ಪ್ರತಿಭಟನೆ ಮೊದಲಾದ ಚಟುವಟಿಕೆಗಳು ನಡೆಯುವ ಸಂಭವವಿರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವ ಸಾಧ್ಯತೆ ಇರುತ್ತದೆ. +ಕೆಲ ದುಷ್ಕರ್ಮಿಗಳು ಮತ್ತು ಸಮಾಜಘಾತುಕ ವ್ಯಕ್ತಿಗಳು ಈ ಸಮಯವನ್ನು ಉಪಯೋಗಿಸಿಕೊಂಡು ಸಾರ್ವಜನಿಕ ಇಲ್ಲವೇ ಸರ್ಕಾರಿ ಆಸ್ತಿ ಪಾಸ್ತಿಗಳಿಗೆ ಹಾನಿವುಂಟು ಮಾಡುವ, ವಾಹನ ಸಂಚಾರ, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆಗ ಭಂಗ ಉಂಟು ಮಾಡುವ ಸಾಧ್ಯತೆಗಳು ಇರುವುದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆಯುಕ್ತರು ಪ್ರತಿಬಂಧಕಾಜ್ಞೆಯನ್ನು ವಿಧಿಸಿರುತ್ತಾರೆ. +ನಿಬಂಧನೆಗಳು*ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು.*ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳನ್ನು ಬಳಸುವಂತಿಲ್ಲ.*ಶಸಾಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನಿತರೆ ಮಾರಕಾಸಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯು ವಂತಿಲ್ಲ.*ಯಾವುದೇ ಸಂರಕ್ಷಾರ್ಹ ಪದಾರ್ಧ ಅಥವಾ ಸೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿ ಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಮತ್ತು ಶೇಖರಿಸುವುದನ್ನು ನಿಷೇಸಲಾಗಿದೆ.*ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಭಿತ್ತಿ ಪತ್ರ ಅಥವಾ ಯಾವುದೇ ವಸ್ತು ಇಲ್ಲವೇ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಸಲಾಗಿದೆ. \ No newline at end of file diff --git a/eesanje/url_46_193_6.txt b/eesanje/url_46_193_6.txt new file mode 100644 index 0000000000000000000000000000000000000000..085f2daab02dffad32d204cfdf27f8aabedaa906 --- /dev/null +++ b/eesanje/url_46_193_6.txt @@ -0,0 +1,5 @@ +ರಾಮೇಶ್ವರ ಕೆಫೆ ಸ್ಫೋಟ : ಮತ್ತಿಬ್ಬರನ್ನು ವಶಕ್ಕೆ ಪಡೆದು ಎನ್‍ಐಎ ವಿಚಾರಣೆ +ಬೆಂಗಳೂರು,ಮಾ.28-ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.ನಿನ್ನೆ ಎನ್‍ಐಎ ಅಧಿಕಾರಿಗಳ ತಂಡ ಬೆಂಗಳೂರು ನಗರ, ತೀರ್ಥಹಳ್ಳಿ, ಭಟ್ಕಳ ಮುಂತಾದ ಕಡೆ ಏಕಕಾಲದಲ್ಲಿ ದಾಳಿ ಮಾಡಿ ಕೆಲವರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದೆ. +ಶಂಕಿತರ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿರುವ ಇಬ್ಬರು ನಿಷೇತ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿರುವ ಅನುಮಾನ ವ್ಯಕ್ತವಾಗಿದೆ. ಈ ಹಿಂದೆ ನಡೆದ ಕೆಲವು ಸ್ಪೋಟ ಪ್ರಕರಣಗಳು ಹಾಗೂ ಇತ್ತೀಚೆಗೆ ನಡೆದ ರಾಮೇಶ್ವರಂ ಕೆಫೆ ಸೋಟವು ಸಾಮ್ಯತೆ ಇರುವುದರಿಂದ ಈ ಹಿಂದಿನ ಪ್ರಕರಣಗಳಲ್ಲಿ ಶಾಮೀಲಾದ ಹಲವರ ಮೇಲೆ ಎನ್‍ಐಎ ನಿಗಾ ಇರಿಸಿದೆ. +ಹಿಂದಿನ ಪ್ರಕರಣದಲ್ಲಿ ಜೈಲಿನಲ್ಲಿರುವ ಹಲವರನ್ನು ಎನ್‍ಐಎ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಂಡಿದ್ದು, ತಲೆಮರೆಸಿಕೊಂಡಿರುವವರ ಮೇಲೂ ತನಿಖಾಕಾಧಿರಿಗಳು ಕಣ್ಣಿಟ್ಟಿದ್ದಾರೆ. ಶಂಕಿತರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನೆರವು ನೀಡಿದವರ ಮೇಲೆಯೂ ಎನ್‍ಐಎ ಹದ್ದಿನ ಕಣ್ಣಿಟ್ಟಿದ್ದು, ಉಗ್ರ ಚಟುವಟಿಕೆಗಳಿಗೆ ನೆರವು ನೀಡಿದ ಆರೋಪ ಎದುರಿಸುತ್ತಿರುವವರನ್ನು ಪತ್ತೆಹಚ್ಚಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ. +ಶಂಕಿತ ವ್ಯಕ್ತಿಗಳ ವಿಚಾರಣೆಯಿಂದ ಸ್ಪೋಟ ಪ್ರಕರಣದ ಆರೋಪಿಯ ಸುಳಿವು ಸಿಗುವ ಸಾಧ್ಯತೆ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಲಾಗಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ನಿನ್ನೆ ಬೆಂಗಳೂರಿನ 5 ಕಡೆ, ಶಿವಮೊಗ್ಗ ಜಿಲ್ಲೆಯ 15 ಸ್ಥಳಗಳಲ್ಲಿ ಹಾಗೂ ತಮಿಳುನಾಡಿನ ಚೆನ್ನೈನ ಆರು ಸ್ಥಳಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. \ No newline at end of file diff --git a/eesanje/url_46_193_7.txt b/eesanje/url_46_193_7.txt new file mode 100644 index 0000000000000000000000000000000000000000..2951a0aaa42cca8fc92df21fd312ae00a883f321 --- /dev/null +++ b/eesanje/url_46_193_7.txt @@ -0,0 +1,8 @@ +ಚುನಾವಣಾ ಕಾಂಚಾಣ : ಈವರೆಗೆ ರಾಜ್ಯದಲ್ಲಿ 55 ಕೋಟಿ ರೂ. ಮೌಲ್ಯದ ನಗದು, ಉಡುಗೊರೆ, ಮದ್ಯ ಜಪ್ತಿ +ಬೆಂಗಳೂರು,ಮಾ.28-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ನಗದು, ಉಚಿತ ಉಡುಗೊರೆ, ಮದ್ಯ, ಚಿನ್ನ, ಬೆಳ್ಳಿ, ವಜ್ರಾಭರಣಗಳು ಸೇರಿದಂತೆ 55.76 ಕೋಟಿ ರೂ. ಮೌಲ್ಯದ ವಸ್ತುಗಳನ್ನು ರಾಜ್ಯದಲ್ಲಿ ಜಪ್ತಿ ಮಾಡಲಾಗಿದೆ. +ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಪ್ರಸಕ್ತ ಚುನಾವಣೆಯಲ್ಲಿ ದುಪ್ಪಟ್ಟು ಹಣ ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ನೀಡಿರುವ ಪ್ರಕಟಣೆ ಪ್ರಕಾರ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ ಒಟ್ಟು 55.76 ಕೋಟಿ ರೂ. ಮೌಲ್ಯದ ನಗದು ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. +ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ 14 ದಿನಗಳ ಅವಯಲ್ಲಿ 26.54 ಕೋಟಿ ರೂ. ಮೊತ್ತದ ನಗದು, ಚಿನ್ನಾಭರಣ, ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ರಸಕ್ತ ಚುನಾವಣೆಯಲ್ಲಿ ಕೇವಲ 10 ದಿನಗಳ ಅವಧಿಯಲ್ಲೇ ಅದರ ಎರಡು ಪಟ್ಟು ವಶಪಡಿಸಿಕೊಳ್ಳಲಾಗಿದೆ. 19.69 ಕೋಟಿ ರೂ. ನಗದು, 3.7 ಕೋಟಿ ರೂ. ಉಚಿತ ಉಡುಗೊರೆ, 26.20 ಕೋಟಿ ರೂ. ಮದ್ಯ, 88 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ, 5.47 ಕೋಟಿ ರೂ. ಮೌಲ್ಯದ ಚಿನ್ನ, 26 ಲಕ್ಷ ರೂ. ಮೌಲ್ಯದ ಬೆಳ್ಳಿ, 9 ಲಕ್ಷ ರೂ. ಮೌಲ್ಯದ ವಜ್ರಾಭರಣಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದೆ. +ಇದುವರೆಗೆ 26.20 ಕೋಟಿ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಇದರಲ್ಲಿ ಕ್ಷಿಪ್ರಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್, ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವುದೂ ಸೇರಿದೆ.4.76 ಕೆ.ಜಿ. ತೂಕದ 4,75,65,652 ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳು 71,16,480 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. +ಒಟ್ಟು 9.74 ಕೆ.ಜಿ ತೂಕದ 5,46,82,132 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ನಗದು, ಮದ್ಯ, ಡ್ರಗ್ಸ್, ಉಚಿತ ಉಡುಗೊರೆ, ಚಿನ್ನ, ಬೆಳ್ಳಿ ಆಭರಣಗಳಿಗೆ ಸಂಬಂಧಿಸಿದಂತೆ 847 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ. 92,664 ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಿದ್ದು, 875 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 15 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಅಬಕಾರಿ ಇಲಾಖೆ ಘೋರ ಅಪರಾಧದಡಿಯಲ್ಲಿ 848 ಪ್ರಕರಣಗಳನ್ನು ದಾಖಲಿಸಲಾಗಿದೆ. +ಪರವಾನಗಿ ಉಲ್ಲಂಘನೆಯಡಿಯಲ್ಲಿ 706 ಪ್ರಕರಣ ದಾಖಲಿಸಿದ್ದು, ಎನ್‍ಡಿಪಿಎಸ್ ಅಡಿಯಲ್ಲಿ 44 ಪ್ರಕರಣಗಳನ್ನು, ಅಬಕಾರಿ ಕಾಯ್ದೆಯಡಿ 3,013 ಪ್ರಕರಣಗಳನ್ನು ದಾಖಲಿಸಲಾಗಿದೆ. 492 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. +ಕ್ಷಿಪ್ರ ಪಡೆಯವರು ಶ್ರವಣಬೆಳಗೊಳದ ಬಳಿ 56,89,146 ರೂ. ನಗದನ್ನು ಸ್ಥಿರ ಕಣ್ಗಾವಲು ತಂಡದವರು ಚಿತ್ರದುರ್ಗದ ಪಿಳ್ಳೇಕೇರನಹಳ್ಳಿ ಚೆಕ್ ಪೋಸ್ಟ್ ನಲ್ಲಿ 20,35,000 ನಗದನ್ನು ವಶಪಡಿಸಿಕೊಂಡಿದ್ದಾರೆ. ತರೀಕೆರೆ ತಾಲ್ಲೂಕಿನ ಎಂ.ಸಿ.ಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸ್ಥಿರ ಕಣ್ಗಾವಲು ತಂಡದವರು 4,21,92,752 ರೂ. ಮೌಲ್ಯದ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದೆ. \ No newline at end of file diff --git a/eesanje/url_46_193_8.txt b/eesanje/url_46_193_8.txt new file mode 100644 index 0000000000000000000000000000000000000000..31004ac0b2d3d6dc1c5a34fd08b7436ec8f33009 --- /dev/null +++ b/eesanje/url_46_193_8.txt @@ -0,0 +1,13 @@ +12 ಹಾಲಿ ಸಂಸದರಿಗೆ ಗೇಟ್‍ಪಾಸ್ : ಸೋತವರು, ಮಾಜಿ ಸಿಎಂಗಳಿಗೆ ಬಿಜೆಪಿ ಚಾನ್ಸ್ +ಬೆಂಗಳೂರು,ಮಾ.28-ಓರ್ವ ಕೇಂದ್ರದ ಹಾಲಿ ಸಚಿವ ಸೇರಿದಂತೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 12 ಮಂದಿ ಹಾಲಿ ಸಂಸದರಿಗೆ ಗೇಟ್‍ಪಾಸ್ ನೀಡಿದೆ.ಮೂವರು ಸಂಸದರ ರಾಜಕೀಯ ನಿವೃತ್ತಿ ಸೇರಿದಂತೆ 12 ಮಂದಿ ಸಂಸದರಿಗೆ ಟಿಕೆಟ್ ನೀಡಲು ನಿರಾಕರಿಸಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. +28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. 2019ರಲ್ಲಿ ಗೆದ್ದಿದ್ದ 12 ಮಂದಿ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಇಬ್ಬರು ಹಾಗೂ 10 ಯುವ ಮುಖಗಳಿಗೆ ಮನ್ನಣೆ ನೀಡಲಾಗಿದೆ. +ಬೆಳಗಾವಿ(ಮಂಗಳ ಸುರೇಶ್ ಅಂಗಡಿ), ಹಾವೇರಿ(ಶಿವಕುಮಾರ್ ಉದಾಸಿ), ಬಳ್ಳಾರಿ(ದೇವೇಂದ್ರಪ್ಪ), ದಾವಣಗೆರೆ(ಜಿ.ಎಂ.ಸಿದ್ದೇಶ್ವರ್), ಕೊಪ್ಪಳ(ಕರಡಿ ಸಂಗಣ್ಣ), ಚಿತ್ರದುರ್ಗ(ಎ.ನಾರಾಯಣಸ್ವಾಮಿ), ದಕ್ಷಿಣಕನ್ನಡ(ನಳೀನ್‍ಕುಮಾರ್ ಕಟೀಲ್), ಉತ್ತರಕನ್ನಡ (ಅನಂತಕುಮಾರ್ ಹೆಗಡೆ), ಬೆಂಗಳೂರು ಉತ್ತರ (ಸದಾನಂದಗೌಡ), ಮೈಸೂರು-ಕೊಡುಗು (ಪ್ರತಾಪ್ ಸಿಂಹ), ಕೋಲಾರ(ಮುನಿಸ್ವಾಮಿ). +ಮೈತ್ರಿಯಾಗಿರುವ ಕಾರಣ ಕಳೆದ ಬಾರಿ ಗೆದ್ದಿದ್ದ ಕೋಲಾರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿರುವ ಕಾರಣ ಹಾಲಿ ಸಂಸದ ಮುನಿಸ್ವಾಮಿಗೂ ಟಿಕೆಟ್ ಕೈತಪ್ಪಿದೆ. ವಯಸ್ಸಿನ ಹಿನ್ನಲೆ, ಆರೋಗ್ಯದ ಕಡೆ ಗಮನ, ವೈಯಕ್ತಿಕ ಕಾರಣಗಳಿಂದಾಗಿ ಜಿ.ಎಚ್.ಬಸವರಾಜ್(ತುಮಕೂರು), ಬಿ.ಎನ್.ಬಚ್ಚೇಗೌಡ(ಚಿಕ್ಕಬಳ್ಳಾಪುರ) ಹಾಗೂ ವಿ.ಶ್ರೀನಿವಾಸ್ ಪ್ರಸಾದ್(ಚಾಮರಾಜನಗರ) ಇವರುಗಳು ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಏಳು ಮಂದಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಣೆ ಹಾಕಿದೆ. ಗೋವಿಂದ ಕಾರಜೋಳ(ಚಿತ್ರದುರ್ಗ), ಬಿ.ಶ್ರೀರಾಮುಲು (ಬಳ್ಳಾರಿ), ವಿಶ್ವೇಶ್ವರ ಹೆಗಡೆ ಕಾಗೇರಿ(ಉತ್ತರಕನ್ನಡ) ಬಸವರಾಜ ಬೊಮ್ಮಾಯಿ( ಹಾವೇರಿ), ಡಾ.ಕೆ.ಸುಧಾಕರ್(ಚಿಕ್ಕಬಳ್ಳಾಪುರ), ವಿ.ಸೋಮಣ್ಣ(ತುಮಕೂರು), ಜಗದೀಶ್ ಶೆಟ್ಟರ್(ಬೆಳಗಾವಿ) ಸ್ಪರ್ಧೆ ಮಾಡಿದ್ದಾರೆ. +ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿರುವುದು ವಿಶೇಷವಾಗಿದೆ. ಬೆಂಗಳೂರು ಉತ್ತರ -ಶೋಭಾ ಕರಂದ್ಲಾಜೆ, ದಾವಣಗೆರೆ- ಗಾಯತ್ರಿ ಸಿದ್ದೇಶ್ವರ್ ಕಣಕ್ಕಿಳಿದಿದ್ದಾರೆ. ಉಡುಪಿ-ಚಿಕ್ಕಮಂಗಳೂರು ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆಗೆ ತೀವ್ರ ವಿರೋಧಿ ಅಲೆ ಇರುವುದರಿಂದ ಬೆಂಗಳೂರು ಉತ್ತರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. +ಇನ್ನು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿರುವುದು ವಿಶೇಷ ಎನಿಸಿದೆ. ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದಿಂದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಒಡೆಯರ್, ಚಾಮರಾಜನಗರದಿಂದ ಬಾಲರಾಜ್ ಸ್ಪರ್ಧೆ ಮಾಡಿದ್ದಾರೆ. ದಕ್ಷಿಣ ಕನ್ನಡದಿಂದ ನಿವೃತ್ತ ಸೇನಾಧಿಕಾರಿ ಬ್ರಿಜೇಶ್ ಚೌಟ, ಕೊಪ್ಪಳದಿಂದ ಬಸವರಾಜ್ ಕಾವಟಗಿ ಸ್ರ್ಪಧಿಸಿದ್ದಾರೆ. +ಈವರೆಗೂ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ ಪ್ರವೇಶಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಮೊದಲ ಬಾರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. +ಟಿಕೆಟ್ ಕೈತಪ್ಪಿದವರು1- ಅನಂತ್ ಕುಮಾರ್ ಹೆಗಡೆ2- ಪ್ರತಾಪ್ ಸಿಂಹ3- ನಳೀನ್ ಕುಮಾರ್ ಕಟೀಲ್4- ಮಂಗಳಾ ಅಂಗಡಿ5- ಬಸವರಾಜ್ ( ತುಮಕೂರು) ನಿವೃತ್ತಿ6 – ಶ್ರೀನಿವಾಸ್ ಪ್ರಸಾದ್ ( ನಿವೃತ್ತಿ7- ಶಿವಕುಮಾರ್ ಉದಾಸಿ ( ನಿವೃತ್ತಿ)8- ನಾರಾಯಣ್ ಸ್ವಾಮಿ ( ಆಸಕ್ತಿ ಇರಲಿಲ್ಲ)9- ಬಚ್ಚೆಗೌಡ ( ನಿವೃತ್ತಿ)10- ಕರಡಿ ಸಂಗಣ್ಣ11- ಸದಾನಂದ ಗೌಡ12 – ದೇವೆಂದ್ರಪ್ಪ +ಸೋತವರಿಗೆ ಮಣೆ1.ವಿಶ್ವೇಶ್ವರ ಹೆಗಡೆ ಕಾಗೇರಿ – ಉತ್ತರ ಕನ್ನಡ2.ಗೋವಿಂದ ಕಾರಜೋಳ – ಚಿತ್ರದುರ್ಗ3.ಡಾ. ಕೆ ಸುಧಾಕರ್ – ಚಿಕ್ಕಬಳ್ಳಾಪುರ4.ವಿ ಸೋಮಣ್ಣ – ತುಮಕೂರು5.ಜಗದೀಶ್ ಶೆಟ್ಟರ್ – ಬೆಳಗಾವಿ.8.ಶ್ರೀರಾಮಲು – ಬಳ್ಳಾರಿ +ಇಬ್ಬರು ಮಾಜಿ ಸಿಎಂಗಳುಜಗದೀಶ್ ಶೆಟ್ಟರ್-ಬೆಳಗಾವಿಬಸವರಾಜ ಬೊಮ್ಮಾಯಿ- ಹಾವೇರಿ +ನಿವೃತ್ತಿಯಾದವರುವಿ.ಶ್ರೀನಿವಾಸ್ ಪ್ರಸಾದ್ಬಿ.ಎನ್.ಬಚ್ಚೇಗೌಡಜಿ.ಎಚ್.ಬಸವರಾಜ್ \ No newline at end of file diff --git a/eesanje/url_46_193_9.txt b/eesanje/url_46_193_9.txt new file mode 100644 index 0000000000000000000000000000000000000000..c1ad5b4f1810663bdc2861dcecc654850c028772 --- /dev/null +++ b/eesanje/url_46_193_9.txt @@ -0,0 +1,6 @@ +ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಳ ಹೊಡೆತದ ಭೀತಿ +ಬೆಂಗಳೂರು,ಮಾ.27-ಟಿಕೆಟ್ ಘೋಷಣೆಯಾದ ನಂತರ ಪಕ್ಷದ ವರಿಷ್ಠರ ವಿರುದ್ಧವೇ ತಿರುಗಿಬಿದ್ದಿದ್ದ ಅಸಮಾಧಾನಿತರ ಭಿನ್ನಮತ ಬಗೆಹರಿಯಲಿದೆ ಎಂದು ಹೇಳಲಾಗುತ್ತಿದೆಯಾದರೂ ಪರಿಸ್ಥಿತಿ ಮಾತ್ರ ಈಗಲೂ ಬೂದಿಮುಚ್ಚಿದ ಕೆಂಡದಂತಿದೆ.ದಾವಣಗೆರೆ, ಬೆಳಗಾವಿ, ಕೊಪ್ಪಳ, ಬೀದರ್, ಉತ್ತರಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ಮತ್ತಿತರ ಕಡೆ ಬಿಕ್ಕಟ್ಟು ಶಮನವಾಗಿದೆ ಎಂದು ಪಕ್ಷದ ಮುಖಂಡರು ಬಿಂಬಿಸುತ್ತಿದ್ದರೂ ಒಳಗಡೆ ಮಾತ್ರ ಒಳ ಹೊಡೆತದ ಭೀತಿ ಧಿಕೃತ ಅಭ್ಯರ್ಥಿಗಳಿಗೆ ಎದುರಾಗಿದೆ. +ಯಾವುದೇ ಕ್ಷಣದಲ್ಲೂ ಭಿನ್ನಮತ ಆಸ್ಪೋಟಗೊಳ್ಳುವ ಸಾಧ್ಯತೆಯಿದ್ದು, ಮತದಾನಕ್ಕೂ ಮುನ್ನವೇ ಬಿಜೆಪಿಗೆ ದುಬಾರಿಯಾದರೂ ಅಚ್ಚರಿ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.ಜಿಲ್ಲಾ ಘಟಕದ ತೀರ್ಮಾನದ ವಿರುದ್ಧವೇ ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಮಧ್ಯಪ್ರವೇಶಿಸಿ ಅಸಮಧಾನಿತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಆದರೆ ಹಾವು-ಮುಂಗುಸಿಯಂತಿದ್ದ ಸಿದ್ದೇಶ್ವರ್ ಮತ್ತು ಎಸ್.ಎ.ರವೀಂದ್ರನಾಥ್ ಬಣ ಪರಸ್ಪರ ಕೈಜೋಡಿಸಿ ಮತಯಾಚನೆ ಮಾಡುತ್ತಾರೆ ಎಂಬುದು ಊಹೆಗೆ ನಿಲುಕದ ಪ್ರಶ್ನೆಯಾಗಿದೆ. ಮಾಜಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ ಈಗಲೂ ಸಿದ್ದೇಶ್ವರ್ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಬೆಳಗಾವಿಯಲ್ಲೂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಹಲವರು ಶೆಟ್ಟರ್ಗೆ ನಮ್ಮ ಬೆಂಬಲ ಇಲ್ಲ ಎಂದು ತೀರ್ಮಾನಕ್ಕೆ ಬಂದಿದ್ದಾರೆ. +ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಆಕಾಂಕ್ಷಿಗಳಾದ ಮಹಾಂತೇಶ್ ಕವಟಗಿ ಮಠ, ರಮೇಶ್ ಕತ್ತಿ ಸೇರಿದಂತೆ ಅನೇಕರು ಮುನಿಸಿಕೊಂಡಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಬುಧವಾರ ಜಿಲ್ಲೆಯ ಪ್ರಮುಖರ ಜೊತೆ ಸಭೆ ನಡೆಸಿ ಎಲ್ಲರೂ ಶೆಟ್ಟರ್ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು. ಸದ್ಯಕ್ಕೆ ಬಿಕ್ಕಟ್ಟು ಶಮನವಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಶೆಟ್ಟರ್ಗೆ ಟಿಕೆಟ್ ನೀಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. +ಉಡುಪಿ ಚಿಕ್ಕಮಗಳೂರಿನಲ್ಲೂ ಪರಿಸ್ಥಿತಿ ಶಾಂತವಾಗಿದೆ ಎಂದು ಹೇಳಲಾಗುತ್ತಿದೆಯಾದರೂ ಮುಖಂಡರ ಮುನಿಸು ಮಾತ್ರ ಶಮನವಾಗುತ್ತಿಲ್ಲ. ಅದರಲ್ಲೂ ಮಾಜಿ ಸಚಿವ ಸಿ.ಟಿ.ರವಿ ಬೆಂಬಲಿಗರು ಈಗಲೂ ಪಕ್ಷದ ಪರವಾಗಿ ಕೆಲಸ ಮಾಡಲು ಒಪ್ಪುತ್ತಿಲ್ಲ. ತುಮಕೂರಿನಲ್ಲಿ ಟಿಕೆಟ್ ಸಿಗದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕೋಪ ನಿಧಾನವಾಗಿ ತಣ್ಣಗಾಗಿದೆ. \ No newline at end of file diff --git a/eesanje/url_46_194_1.txt b/eesanje/url_46_194_1.txt new file mode 100644 index 0000000000000000000000000000000000000000..a2955748c742b939fcd1499492cf26cc8e6ee48d --- /dev/null +++ b/eesanje/url_46_194_1.txt @@ -0,0 +1,5 @@ +ಡಿಕೆಶಿ ಸಿಎಂ ಆಗಲೆಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಕೆ +ಬೆಂಗಳೂರು, ಮಾ.27-ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸುವುದಕ್ಕೂ ಮುನ್ನಾ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಆತ್ಮಲಿಂಗ ಪೂಜೆ ನೇರವೇರಿಸಿದರು. +ಈ ವೇಳೆ ಅರ್ಚಕರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿ ಪೂಜೆ ಸಲ್ಲಿಸಿದರು. ಇತ್ತೀಚೆಗೆ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಜಾರಿ ನಿರ್ದೇಶನದ ಪ್ರಕರಣದಿಂದ ಮುಕ್ತರಾದ ಡಿ.ಕೆ.ಶಿವಕುಮಾರ್ , ದೇವಸ್ಥಾನಗಳ ಭೇಟಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರಮುಖ ದೇವಾಲಯಗಳಿಗೆ ನಿನ್ನೆಯಿಂದ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. +ಇಂದು ಗೋಕರ್ಣ ಹಾಗೂ ಕುಮಟಾದ ಗಣೇಶ ದೇವಸ್ಥಾನಕ್ಕೂ ಭೇಟಿ ನೀಡಿದ್ದಾರೆ. ನಂತರ ಮೈಸೂರಿಗೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಗೋಕರ್ಣದಲ್ಲಿನ ಪೂಜೆಯ ವೇಳೆಯಲ್ಲಿನ ಸಂಕಲ್ಪಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅರ್ಚಕರು ಹೇಳುವುದರಲ್ಲಿ ತಪ್ಪೇನಿಲ್ಲ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ನಾಯಕತ್ವದಲ್ಲಿ ನಾವು ಮುಂದೆ ಹೋಗುತ್ತಿದ್ದೇವೆ. +ಕೆಲವರು ನನ್ನನ್ನ ಸಿಎಂ ಆಗಲಿ ಎಂದು ಹೇಳುತ್ತಾರೆ. ಅವರ ಬಾಯಲ್ಲಿ ಬರುವುದನ್ನ ತಪ್ಪಿಸಲು ಸಾಧ್ಯವೇ? ಅರ್ಚಕರು, ಶಿಷ್ಯಂದಿರು, ಹಿತೈಶಿಗಳು ಸೇರಿ ಯಾರು ಏನೇ ಆಸೆ ಪಟ್ಟರೂ ಪಕ್ಷ ಅಂತಿಮವಾಗಿ ತೀರ್ಮಾನಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.ಪೂಜೆಯ ವೇಳೆ ಸಚಿವ ಮಂಕಾಳ ಸುಬ್ಬುವೈದ್ಯ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_194_10.txt b/eesanje/url_46_194_10.txt new file mode 100644 index 0000000000000000000000000000000000000000..f5525bb65330e125df73d04d2da24e7b36d75c56 --- /dev/null +++ b/eesanje/url_46_194_10.txt @@ -0,0 +1,9 @@ +ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ : ಪರಮೇಶ್ವರ್ +ಬೆಂಗಳೂರು,ಮಾ.26-ಬಿಜೆಪಿ ಸೋಲಿನ ಭಯದಿಂದ ಗಾಬರಿಯ ವಾತಾವರಣದಲ್ಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ಧನ್ ರೆಡ್ಡಿಯವರನ್ನು ಪಕ್ಷಕ್ಕೆ ಸೇರಿಸಿಕೊಂಡ ಕುರಿತು ಪ್ರತಿಕ್ರಿಯಿಸಿದರು. +ಒಂದು ಕಾಲದಲ್ಲಿ ಜನಾರ್ದನರೆಡ್ಡಿಗೂ ನಮಗೂ ಸಂಬಂಧವಿಲ್ಲ ಎಂದು ದೆಹಲಿಯಿಂದ ಬೆಂಗಳೂರಿನವರೆಗೆ ಎಲ್ಲಾ ಮುಖಂಡರೂ ಹೇಳಿಕೆ ನೀಡಿದ್ದರು. ಈಗ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದ ಮಾತ್ರಕ್ಕೆ ಅವರು ಮಾಡಿದ ಕಾನೂನು ಬಾಹಿರ ಕೆಲಸಗಳು ಮರೆತುಹೋಯಿತೇ? ಬಿಜೆಪಿಗೆ ಸೇರಿದಾಕ್ಷಣ ಎಲ್ಲವೂ ಖುಲಾಸೆಯಾದವೇ? ಎಂದು ಪ್ರಶ್ನಿಸಿದರು. +ಬಿಜೆಪಿಯವರು ಸೋಲಿನ ಭಯದಿಂದ ಗಾಬರಿಯ ವಾತಾವರಣದಲ್ಲಿದ್ದಾರೆ. ಅದಕ್ಕಾಗಿ ಈ ಮೊದಲು ದೂರ ಇಟ್ಟವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ಲೋಕಸಭಾ ಚುನಾವಣೆಗೂ ಮುನ್ನ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿಕೆ ನೀಡಿದ್ದರು. ಅದರಂತೆ ನಡೆದುಕೊಂಡಿಲ್ಲ. ಪ್ರಧಾನಿಯವರೇ ಸುಳ್ಳು ಹೇಳಿದ್ದಾರೆ ಎಂದು ನಾವು ಜನರ ಮುಂದೆ ಹೇಳುತ್ತಿದ್ದೇವೆ. ಸಚಿವ ಶಿವರಾಜ ತಂಗಡಗಿ ಮೋದಿ ಮೋದಿ ಎನ್ನುವ ಯುವಕರ ಕಪಾಳಕ್ಕೆ ಬಾರಿಸಬೇಕು ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು. +ಯಾವುದೇ ಪಕ್ಷದವರಾದರೂ ಕೇಂದ್ರ ಚುನಾವಣಾ ಆಯೋಗದ ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ನೀತಿಸಂಹಿತೆ ಉಲ್ಲಂಘಿಸಬಾರದು. ಒಂದು ವೇಳೆ ಶಿವರಾಜ ತಂಗಡಗಿ ಹೇಳಿಕೆಯಲ್ಲಿ ಪ್ರಚೋದನಾಕಾರಿ ಅಂಶಗಳಿದ್ದರೆ ಚುನಾವಣಾ ಆಯೋಗವೇ ಗಮನಿಸುತ್ತದೆ. ಅಗತ್ಯ ಕಂಡುಬಂದರೆ ಪ್ರಕರಣಗಳನ್ನು ದಾಖಲಿಸುತ್ತದೆ. ಈಗಾಗಲೇ ಈ ರೀತಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದರು. +ಶಿವರಾಜ ತಂಗಡಗಿ ಹೇಳಿಕೆಯಿಂದ ಗಲಾಟೆಯಾಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿರುವುದರ ಹಿಂದಿನ ಉದ್ದೇಶವೇನು? ಬಹುಶಃ ಅವರೇ ಗಲಾಟೆ ಮಾಡಿಸಲು ಸಿದ್ಧರಾಗಿರಬಹುದು. ಒಂದು ವೇಳೆ ಅಂತಹ ಪ್ರಯತ್ನಗಳಾದರೆ ಅದಕ್ಕೆ ತಕ್ಕ ಕ್ರಮ ಕೈಗೊಳ್ಳಲು ನಮ್ಮ ವ್ಯವಸ್ಥೆ ಸಿದ್ಧವಾಗಿದೆ ಎಂದು ಗೃಹಸಚಿವರು ಎಚ್ಚರಿಸಿದರು. +ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತಗಳಿಲ್ಲ. ಬಹಳಷ್ಟು ಮಂದಿ ಅರ್ಜಿ ಹಾಕಿದ್ದರು. ಹೈಕಮಾಂಡ್ ಒಬ್ಬರಿಗೆ ಮಾತ್ರ ಟಿಕೆಟ್ ಕೊಡಲು ಸಾಧ್ಯ. ಅವಕಾಶ ವಂಚಿತರು ಎರಡು-ಮೂರು ದಿನ ಬೇಸರದಲ್ಲಿರುತ್ತಾರೆ. ಅನಂತರ ಸರಿ ಹೋಗುತ್ತಾರೆ. ತುಮಕೂರಿನಲ್ಲಿ ಟಿಕೆಟ್ ಆಕಾಂಕ್ಷಿಗಳಾಗಿದ್ದ ಲಿಖಿತ್ ರಾಜ್ ಮೌರ್ಯ ಮತ್ತು ಮುರಳೀಧರ ಹಾಲಪ್ಪನವರು ಈಗ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. +ಜಿಲ್ಲೆಯಲ್ಲಿ 8 ಲೋಕಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಕಾರ್ಯ ನಡೆದಿದೆ. ಕಾರ್ಯಕ್ರಮಗಳಲ್ಲಿ ಲಿಖಿತ್ ರಾಜ್ ಮೌರ್ಯ ಮತ್ತು ಮುರಳೀಧರ ಹಾಲಪ್ಪ ಭಾಗವಹಿಸಿ ಭಾಷಣ ಮಾಡಿದ್ದಾರೆ. ಮುದ್ದಹನುಮೇಗೌಡರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎಂದು ವಿವರಿಸಿದರು. ಬಿಜೆಪಿಯ ನಾಯಕ ಜೆ.ಸಿ.ಮಾಧುಸ್ವಾಮಿ ಅವರು ಬಿಜೆಪಿ ವಿರುದ್ಧ ವ್ಯಕ್ತಪಡಿಸುವ ಅಸಮಾಧಾನದ ಬಗ್ಗೆ ನಾನು ಪ್ರತಿಕ್ರಿಯಿಸಲಾಗುವುದಿಲ್ಲ. ಅವರ ಪರವಾದ ವಕ್ತಾರಿಕೆ ಮಾಡಲು ನಾವು ಸಿದ್ಧರಿಲ್ಲ ಎಂದು ಹೇಳಿದರು. +ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಆಯ್ಕೆ ಮಾಡಲಾಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೊಂದಾಣಿಕೆ ಮಾಡುವುದು ಸಾಮಾನ್ಯ. ಆಕಾಂಕ್ಷಿಗಳನ್ನು ನಿರ್ಲಕ್ಷಿಸಿ ಪಕ್ಷ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದಕ್ಕಾಗಿ ಚರ್ಚೆಗಳು ನಡೆಯುತ್ತಿವೆ ಎಂದರು. \ No newline at end of file diff --git a/eesanje/url_46_194_11.txt b/eesanje/url_46_194_11.txt new file mode 100644 index 0000000000000000000000000000000000000000..08df8c753aa6cf88fdb87b365825cdac3e4f165c --- /dev/null +++ b/eesanje/url_46_194_11.txt @@ -0,0 +1,7 @@ +ಮೈತ್ರಿ ಧರ್ಮಕ್ಕೆ ಬದ್ಧರಾಗಿರುವಂತೆ ಕಾರ್ಯಕರ್ತರಿಗೆ ಕುಮಾರಸ್ವಾಮಿ ಕರೆ +ಬೆಂಗಳೂರು, ಮಾ.26- ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತತ್ವ, ಸಿದ್ಧಾಂತ ಬದ್ಧತೆಗೆ ಧಕ್ಕೆಯಾಗದ ರೀತಿಯಲ್ಲಿ ಮೈತ್ರಿಧರ್ಮ ಪಾಲನೆ ಮಾಡುವ ಮೂಲಕ ಪ್ರಚಾರ ಕೈಗೊಳ್ಳಲು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಈ ಸಂಬಂಧ ಸಲಹಾ ರೂಪದ ಮಾರ್ಗಸೂಚಿ ಪತ್ರವನ್ನು ಲೋಕಸಭಾ ಉಸ್ತುವಾರಿ ನಾಯಕರು, ಸಹ ನಾಯಕರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ಬರೆದಿದ್ದಾರೆ. +ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ರ್ಪಧಿ ಸಲಿದ್ದಾರೆ. ಚುನಾವಣೆಯಲ್ಲಿ ಎರಡೂ ಪಕ್ಷಗಳು ರಾಷ್ಟ್ರೀಯ ಬದ್ಧತೆ ಮತ್ತು ಸುರಕ್ಷತೆಗಾಗಿ ಪರಸ್ಪರ ಬೆಂಬಲಿಸಬೇಕಾಗಿದೆ ಎಂದು ಹೇಳಿದ್ದಾರೆ. +ಪ್ರಚಾರ ಸಭೆಯಲ್ಲಿ ಎರಡೂ ಪಕ್ಷಗಳು ತಮ್ಮ ಪಕ್ಷದ ಚಿಹ್ನೆಗಳನ್ನು ಸಮ ಅಳತೆಯಲ್ಲಿ ಬಳಸಬೇಕು. ಸಾರ್ವಜನಿಕ ಸಭೆಗಳಲ್ಲಿ ಎರಡೂ ಪಕ್ಷಗಳ ಬಾವುಟವನ್ನು ಪ್ರದರ್ಶಿ ಬೇಕು. ಜೆಡಿಎಸ್ ಮತ್ತು ಬಿಜೆಪಿ ನಾಯಕರ ಭಾವಚಿತ್ರವನ್ನು ಭೇದ ವಿಲ್ಲದೆ ಉಪಯೋಗಿಸಬೇಕು ಎಂಬ ಸಲಹೆಯನ್ನು ಅವರು ಪತ್ರದಲ್ಲಿ ಮಾಡಿದ್ದಾರೆ. +ಸಭೆಗಳಲ್ಲಿ ಎರಡೂ ಪಕ್ಷಗಳ ಕಾರ್ಯ ಕರ್ತರು ತಮ್ಮತಮ್ಮ ಪಕ್ಷದ ಸಾಲುಗಳನ್ನು ಕಡ್ಡಾಯವಾಗಿ ಬಳಸಬೇಕು. ರಾಷ್ಟ್ರ ಮತ್ತು ರಾಜ್ಯಮಟ್ಟದ ಉಭಯ ಪಕ್ಷಗಳ ನಾಯಕರ ಸಾಧನೆಗಳನ್ನು ಬಳಸಿಕೊಳ್ಳಬೇಕು. ಮತದಾರರ ಮನವೊಲಿಸಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡುವಂತೆ ಪ್ರಯತ್ನಿಸಬೇಕು. ಒಂದು ವೇಳೆ ಪ್ರಚಾರ ಸಭೆಗಳಲ್ಲಿ ಗೊಂದಲ ಅಥವಾ ಕಠಿಣ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಕೇಂದ್ರ ಕಚೇರಿಗೆ ತಂದು ಪರಿಹರಿಸಿಕೊಳ್ಳಬೇಕು. ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ. +ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಗಳಲ್ಲಿ ಆಯೋಜಿಸುವ ಸಾರ್ವಜನಿಕ ಸಭೆ ಮತ್ತು ಪ್ರಚಾರ ಸಭೆಗಳಲ್ಲಿ ಎರಡೂ ಪಕ್ಷದ ನಾಯಕರು ಯಾವುದೇ ವಿವಾದಾತ್ಮಕ ಹೇಳಿಕೆಗಳಿಗೆ ಆಸ್ಪದ ನೀಡದೆ ಸಮನ್ವಯತೆಯಿಂದ ಚುನಾವಣೆ ನಡೆಸಬೇಕು. ಮೈತ್ರಿ ಅಭ್ಯರ್ಥಿಗಳ ಬಗ್ಗೆ ಯಾವುದೇ ಅಸಮಾಧಾನವನ್ನು ಯಾವುದೇ ಸಂದರ್ಭದಲ್ಲೂ ವ್ಯಕ್ತಪಡಿಸಬಾರದು. +ಜೆಡಿಎಸ್ ಕಾರ್ಯಕರ್ತರು ಸಮನ್ವಯತೆಗೆ ಒತ್ತು ನೀಡಬೇಕು. ಯಾವುದೇ ವ್ಯಕ್ತಿ ಸಮಾಜ ಅಥವಾ ಧರ್ಮನಿಂದನೆಗೆ ಅವಕಾಶ ನೀಡಬಾರದು. ಪಕ್ಷದ ಜನಪರ ಹೋರಾಟಗಳಾದ ಕನ್ನಡ, ಪ್ರಾದೇಶಿಕತೆ, ಜಾತ್ಯತೀತತೆ, ನೀರಾವರಿ ಮತ್ತು ರೈತಪರವಾದ ನಿಲುವುಗಳ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_194_12.txt b/eesanje/url_46_194_12.txt new file mode 100644 index 0000000000000000000000000000000000000000..33e7cccdd4e8f70c6b51b34dec3516a9a3a1c794 --- /dev/null +++ b/eesanje/url_46_194_12.txt @@ -0,0 +1,8 @@ +ಸಚಿವ ಶಿವರಾಜ್ ತಂಗಡಗಿ ಹೇಳಿಕೆ ಪರ-ವಿರೋಧದ ಚರ್ಚೆ +ಬೆಂಗಳೂರು,ಮಾ.26-ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಿಚ್ಚು ಹಚ್ಚಿದ್ದು, ಪರ-ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಕೊಪ್ಪಳ ಲೋಕಸಭಾ ಕ್ಷೇತ್ರದ ಅಖಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸುವಾಗ ಶಿವರಾಜ್ ತಂಗಡಗಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೂ ಕೆಲ ಯುವಕರು ಮೋದಿಯವರ ಅಭಿಮಾನಿಯಾಗಿದ್ದಾರೆ. ಮೋದಿ ಮೋದಿ ಎಂದು ಕೂಗುತ್ತಿರುತ್ತಾರೆ. ಅಂತವರ ಕಪಾಳಕ್ಕೆ ಬಾರಿಸಬೇಕು ಎಂದು ಶಿವರಾಜ್ ತಂಗಡಗಿ ಹೇಳಿಕೆ ನೀಡಿದ್ದರು. +ಬಿಜೆಪಿ ಇದನ್ನೇ ಬಳಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ನಾಯಕರು ತಂಗಡಗಿ ಯವರ ಬೆಂಬಲಕ್ಕೆ ನಿಂತಿದ್ದಾರೆ.2014 ರಿಂದಲೂ ಮೋದಿ ಮೋದಿ ಎಂಬ ಘೋಷಣೆಗಳು ಕಾಂಗ್ರೆಸ್ಸಿಗರ ಪಾಲಿಗೆ ತೀವ್ರ ಮುಜುಗರದ ಸಂಗತಿ ಯಾಗಿವೆ. ಕಾಂಗ್ರೆಸ್ ಕಾರ್ಯ ಕ್ರಮಗಳಿಗೆ ನುಗ್ಗುವ ಬಿಜೆಪಿ ಯುವ ಕಾರ್ಯಕರ್ತರು ಇದ್ದಕ್ಕಿದ್ದಂತೆ ಮೋದಿ ಮೋದಿ ಎಂದು ಕೂಗಿ ಇರಿಸು ಮುರಿಸು ಮಾಡುವುದು ಸಾಮಾನ್ಯವಾಗಿದೆ. +ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಾವಿರಾರು ಜನ ಸೇರಿದ್ದು, ಮೋದಿ ಅಭಿಮಾನಿಗಳ ಮೇಲೆ ತಿರುಗಿ ಬೀಳುವ ಆತಂಕದ ವಾತಾವರಣ ಬಹಳಷ್ಟು ಬಾರಿ ಕಂಡುಬಂದಿತ್ತು. ಆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂಬ ಕಾರಣಕ್ಕೆ ಹಿರಿಯ ನಾಯಕರು ತಮ್ಮ ಪಕ್ಷದ ಕಾರ್ಯಕರ್ತರನ್ನು ತಡೆದಿದ್ದರು. ಹೀಗಾಗಿ ಹಲವು ಬಾರಿ ಮೋದಿ ಪರವಾದ ಘೋಷಣೆಗಳು ಮೊಳಗಿದರೂ ಕೂಡ ಎಲ್ಲಿಯೂ ಕಾಂಗ್ರೆಸ್ಸಿಗರು ತಿರುಗೇಟು ನೀಡಿದ ಉದಾಹರಣೆಗಳಿಲ್ಲ. +ಆದರೆ ಇದೇ ನೆಪದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಪ್ರಭಾವಿ ನಾಯಕರು ಭಾಗವಹಿಸಿದ್ದ ಕಾರ್ಯ ಕ್ರಮಗಳಲ್ಲೂ ಮೋದಿಪರವಾದ ಘೋಷಣೆಗಳನ್ನು ಕೂಗಿದ ಉದಾ ಹರಣೆಗಳಿವೆ. ಈ ರೀತಿ ಘೋಷಣೆ ಕೂಗುವವರಿಗೆ ಸ್ಥಳದಲ್ಲೇ ತಕ್ಕ ಪಾಠ ಕಲಿಸಬೇಕು ಎಂದು ಹಲವಾರು ಸಭೆಗಳಲ್ಲಿ ಚರ್ಚೆಯಾಗಿದೆ ಎಂದು ಮೂಲಗಳೂ ತಿಳಿಸಿವೆ. +ಆದರೆ ಮೋದಿ ಅಭಿಮಾನಿಗಳಿಗೆ ತತ್ಕ್ಷಣದ ಪ್ರತಿಕ್ರಿಯೆ ನೀಡಲು ಮುಂದಾದರೆ ಬಿಜೆಪಿ ಅದನ್ನು ರಾಜಕೀಯವಾಗಿ ಮತ್ತಷ್ಟು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ. ಹಾಗಾಗಿ ಯಾರು, ಯಾವುದೇ ಘೋಷಣೆ ಕೂಗಿದರೂ ಪ್ರತಿಕ್ರಿಯಿಸಬಾರದೆಂದು ಹಿರಿಯ ನಾಯಕರು ತಮ್ಮ ಕಾರ್ಯಕರ್ತರಿಗೆ ತಿಳಿಹೇಳಿ ಸಮಾಧಾನ ಪಡಿಸಿದರು. +ಈ ರೀತಿಯ ಚರ್ಚೆಗಳು ಹಿರಿಯ ನಾಯಕರ ಸಮಾಧಾನ ಕಾಂಗ್ರೆಸ್ನಲ್ಲಿನ ಯುವಕಾರ್ಯಕರ್ತರ ಅಸಹನೆಗೆ ಕಾರಣವಾಗಿದೆ. ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ಆ ಅಸಹನೆಯ ಒಂದು ಭಾಗ ಎಂಬ ಚರ್ಚೆಗಳು ನಡೆಯು ತ್ತಿವೆ. ಒಂದು ವೇಳೆ ಮೋದಿ ಪರವಾಗಿ ಘೋಷಣೆ ಕೂಗುವವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿ ಕ್ರಿಯಿಸಲಾರಂಭಿಸಿದರೆ ಕಾನೂನು ಸುವ್ಯವಸ್ಥೆ ಹದಗೆಡಲಿದೆ ಎಂಬ ಆತಂಕ ಹಿರಿಯ ನಾಯಕರನ್ನು ಈಗಲೂ ಕಾಡುತ್ತಿದೆ. ಶಿವರಾಜ ತಂಗಡಗಿ ಒಂದು ಹೆಜ್ಜೆ ಮುಂದೆ ಹೋಗಿ ಮೋದಿ ಎನ್ನುವವರ ಕಪಾಳಕ್ಕೆ ಬಾರಿಸಬೇಕು ಎಂಬ ಹೇಳಿಕೆ ಪ್ರಚೋದನಾಕಾರಿ ಎಂದು ಬಿಜೆಪಿ ಆರೋಪಿಸಿದೆ. +ಇದನ್ನೇ ಮುಂದಿಟ್ಟುಕೊಂಡು ಬಿಜೆಪಿ ಕಾರ್ಯಕರ್ತರು ಸಿಕ್ಕಸಿಕ್ಕಲ್ಲಿ ಮತ್ತೆ ಮೋದಿ ಮೋದಿ ಎಂಬ ಘೋಷಣೆ ಕೂಗಲಾರಂಭಿಸಿದ್ದಾರೆ. ಯಾವುದು ನಡೆಯಬಾರದು ಎಂಬ ತಾಳ್ಮೆಯಲ್ಲಿ ಕಾಂಗ್ರೆಸ್ ನಾಯಕರು ಇಷ್ಟೂ ದಿನ ತಮ್ಮ ಪಕ್ಷದ ಕಾರ್ಯಕರ್ತರನ್ನು ಸಮಾ ಧಾನಪಡಿಸುತ್ತಿದ್ದರೋ ಅದಕ್ಕೆ ಸಂಪುಟ ಸಚಿವರೇ ಕುಮ್ಮಕ್ಕು ನೀಡಿದಂತಾಗಿದೆ. \ No newline at end of file diff --git a/eesanje/url_46_194_2.txt b/eesanje/url_46_194_2.txt new file mode 100644 index 0000000000000000000000000000000000000000..381610770a936e17d98aa46257591214f259076e --- /dev/null +++ b/eesanje/url_46_194_2.txt @@ -0,0 +1,5 @@ +“ಮುನಿಯಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಿದರೆ 5 ಶಾಸಕರು ರಾಜೀನಾಮೆ ನೀಡ್ತೀವಿ” +ಬೆಂಗಳೂರು, ಮಾ.27- ಸಚಿವ ಕೆ.ಹೆಚ್.ಮುನಿಯಪ್ಪ ಅವರ ಕುಟುಂಬಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿದರೆ, ಒಬ್ಬ ಸಚಿವರು ಸೇರಿದಂತೆ ಐವರು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ ತಿಳಿಸಿದ್ದಾರೆ. +ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಹೆಚ್.ಮುನಿಯಪ್ಪ ಕುಟುಂಬ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೇ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿಧಾನ ಪರಿಷತ್‍ನ ಕಾಂಗ್ರೆಸ್ ಸದಸ್ಯರಾದ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದಿದ್ದಾರೆ. +ಸಭಾಪತಿ ಬಸವರಾಜ ಹೊರಟ್ಟಿ ಅವರ ಭೇಟಿಗೆ 12 ಗಂಟೆಗೆ ಸಮಯ ಕೇಳಿದ್ದೇವೆ. ವಿಧಾನ ಪರಿಷತ್ ಸದಸ್ಯರು ರಾಜಿನಾಮೆ ನೀಡಲಿದ್ದಾರೆ. ಶಾಸಕರು ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ರನ್ನು ಭೇಟಿ ಮಾಡಿ ರಾಜೀನಾಮೆ ನೀಡಲಿದ್ದೇವೆ ಎಂದಿದ್ದಾರೆ. +ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ಮದು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ರಮೇಶ್ ಕುಮಾರ್ ಸೇರಿ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ. \ No newline at end of file diff --git a/eesanje/url_46_194_3.txt b/eesanje/url_46_194_3.txt new file mode 100644 index 0000000000000000000000000000000000000000..9d30b85ccd2384e651b38c3bf5a1438621d8eadd --- /dev/null +++ b/eesanje/url_46_194_3.txt @@ -0,0 +1,6 @@ +ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆಬಿದ್ದ ಇಬ್ಬರು ಪೊಲೀಸರು +ಬೆಂಗಳೂರು, ಮಾ.27-ಲಂಚಕ್ಕೆ ಕೈಯೊಡ್ಡಿದ್ದ ಹೆಡ್‌ಕಾನ್‌ಸ್ಟೆಬಲ್‌ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯದ ಎಸಿಪಿ ಕಚೇರಿ ಬಳಿ ಪೊಲೀಸ್ ಅಧಿಕಾರಿಯ ಜೀಪ್ ಚಾಲಕ ನಾಗರಾಜ್ ಮತ್ತು ಪೀಣ್ಯ ಪೊಲೀಸ್ ಠಾಣೆ ಹೆಡ್‍ಕಾನ್ಸ್‍ಟೆಬಲ್ ಗಂಗಹನುಮಯ್ಯ ಅವರು 50 ಸಾವಿರ ಲಂಚ ಪಡೆಯುವಾಗ ಇನ್ಸ್‍ಪೆಕ್ಟರ್ ವಿಜಯಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ನಗದು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. +ಸುಂಕದಕಟ್ಟೆಯ ಮಾರುತಿನಗರದ ಚೇತನ್ ಎಂಬುವವರು ಗ್ಯಾಸ್ ಸಿಲಿಂಡರ್‍ಗಳ ಗೋದಾಮು ತೆರೆಯಲು ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಅನುಮತಿ ಪತ್ರ ನೀಡಲು 2 ಲಕ್ಷ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಲೋಕಾಯುಕ್ತಕ್ಕೆ ಬಂದ ದೂರಿನ ಆಧಾರದ ಮೇಲೆ ಡಿವೈಎಸ್‍ಪಿ ಉಮಾದೇವಿ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ 50 ಸಾವಿರ ರೂ. ಲಂಚ ಪಡೆಯುವಾಗ ಹೆಡ್‌ಕಾನ್‌ಸ್ಟೆಬಲ್‌ ಹಾಗೂ ಜೀಪ್ ಚಾಲಕ ಸಿಕ್ಕಿಬಿದ್ದಿದ್ದಾರೆ. +ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸಲಾಗುತ್ತಿದೆ. ಮತ್ತೊಂದು ಪ್ರಕರಣದಲ್ಲಿ ಬೆಳಗಾವಿಯ ಖಾನಾಪುರದ ಕಂದಾಯ ಇಲಾಖೆಯ ಎಇಇ ದುರದುಂಡೇಶ್ವರ ಬನ್ನೂರು ಅವರು 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ನೇರವಾಗಿ ಸಿಕ್ಕಿಬಿದ್ದಿದ್ದಾರೆ. +ಗ್ರಾಪಂ ಸದಸ್ಯ ವಿನಾಯಕ್ ಎಂಬುವವರು ಕಾಮಗಾರಿಯೊಂದರ ಅನುಮತಿ ನೀಡಲು 10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಸಂಬಂಧ ಬಂದ ದೂರಿನನ್ವಯ ಇನ್ಸ್‍ಪೆಕ್ಟರ್ ರವಿಕುಮಾರ್ ಅವರ ನೇತೃತ್ವದ ತಂಡ ದಾಳಿ ನಡೆಸಿದಾಗ ಲಂಚ ಪಡೆಯುವ ವೇಳೆ 10 ಸಾವಿರದೊಂದಿಗೆ ಸಿಕ್ಕಿಬಿದ್ದಿದ್ದಾರೆ. +ಇದೇ ಸಂದರ್ಭದಲ್ಲಿ ಅವರ ಮನೆ ಮೇಲೂ ದಾಳಿ ನಡೆಸಿದ ಸಂದರ್ಭದಲ್ಲಿ 27.75 ಲಕ್ಷ ನಗದು ಪತ್ತೆಯಾಗಿದೆ. ಅಧಿಕಾರಿಯನ್ನು ಬಂಧಿಸಿ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_194_4.txt b/eesanje/url_46_194_4.txt new file mode 100644 index 0000000000000000000000000000000000000000..2211e344b7c02cc898ba4d11e1be1f45e1a86fca --- /dev/null +++ b/eesanje/url_46_194_4.txt @@ -0,0 +1,8 @@ +ಸಾಲುಸಾಲಾಗಿ ಕುಮಾರಸ್ವಾಮಿಯವರನ್ನು ಭೇಟಿ ಮಾಡುತ್ತಿರುವ ಬಿಜೆಪಿ ನಾಯಕರು +ಬೆಂಗಳೂರು, ಮಾ.27-ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿಯ ನಾಯಕರು ಹಾಗೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಒಬ್ಬರಾದ ಮೇಲೆ ಒಬ್ಬರಂತೆ ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ. ಜತೆಗೆ ಜೆಡಿಎಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಭರವಸೆ ನೀಡುತ್ತಿದ್ದಾರೆ. +ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಂದ ನಂತರ ಕುಮಾರಸ್ವಾಮಿ ಅವರನ್ನು ರಾಜಕೀಯ ಮುಖಂಡರು ಭೇಟಿಯಾಗುವುದು ಸಾಮಾನ್ಯವಾಗಿದೆ. ಕಳೆದ ಸೋಮವಾರದಿಂದಲೂ ನಿತ್ಯ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುವುದರ ಜತೆಗೆ ಲೋಕಸಭೆ ಚುನಾವಣೆಗೆ ಸಹಕಾರ ಕೋರುವುದು ನಡೆಯುತ್ತಿದೆ. +ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಟಿಕೆಟ್ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ತಮ್ಮ ತಮ್ಮ ಬೆಂಬಲಿಗರೊಂದಿಗೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. +ಕ್ಷೇತ್ರಗಳಲ್ಲಿರುವ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ನಡುವಿನ ಗೊಂದಲ ಬಗೆಹರಿಸುವುದು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದು, ಜಂಟಿ ಪ್ರಚಾರ ಸಭೆಗಳನ್ನು ಹಮ್ಮಿಕೊಳ್ಳುವುದು ಸೇರಿದಂತೆ ಚುನಾವಣೆ ತಯಾರಿ ಕುರಿತಂತೆ ಸಮಾಲೋಚನೆ ನಡೆಸುತ್ತಿದ್ದಾರೆ. +ಇಂದು ಬೆಳಿಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚುನಾವಣೆಯಲ್ಲಿ ಬೆಂಬಲ ಕೋರಿದ್ಧಾರೆ. ಈಗಾಗಲೇ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ನಾರಾಯಣಗೌಡ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಶಾಸಕ ಎಸ್. ಮುನಿರಾಜು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. +ಈ ನಡುವೆ ಸಂಸದ ಮುನಿಸ್ವಾಮಿ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್, ಸಂಸದ ಕರಡಿ ಸಂಗಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕ ಚಂದ್ರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಕೆಲವರು ಜೆಡಿಎಸ್ ಮುಖಂಡರೊಂದಿಗೆ ಭೇಟಿಯಾಗಿದ್ದಾರೆ. ಡಾ. ಸುಧಾರಕರ್ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. +ಅದೇ ರೀತಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಸಂಸದ ಪ್ರಜ್ವಲ್ ರೇವಣ್ಣ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲ ಕೋರಿದ್ದಾರೆ. ಅಲ್ಲದೆ, ಹಾಸನ ಕ್ಷೇತ್ರದಲ್ಲಿನ ಬಿಜೆಪಿ ಮುಖಂಡರ ಅಸಮಾಧಾನ ಹೋಗಲಾಡಿಸುವಂತೆ ಮನವಿ ಮಾಡಿದ್ದಾರೆ, \ No newline at end of file diff --git a/eesanje/url_46_194_5.txt b/eesanje/url_46_194_5.txt new file mode 100644 index 0000000000000000000000000000000000000000..d3fd2062f43cdad9f2104b14bac71f91c9b210b4 --- /dev/null +++ b/eesanje/url_46_194_5.txt @@ -0,0 +1,4 @@ +ನಾಲಿಗೆ ಹರಿಬಿಟ್ಟಿದ್ದ ತಂಗಡಗಿ ವಿರುದ್ಧ ಎಫ್‍ಐಆರ್ ದಾಖಲು +ಬೆಂಗಳೂರು,ಮಾ.27-ಪ್ರಧಾನಿ ನರೇಂದ್ರಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರ ಹಿನ್ನಲೆಯಲ್ಲಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ. +ಬಿಜೆಪಿ ನೀಡಿದ ದೂರಿನ ಮೇರೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾಗಿರುವ ತಂಗಡಿ ವಿರುದ್ಧ ಆಯೋಗ ಎಫ್‍ಐಆರ್ ದಾಖಲಿಸಿಕೊಂಡಿದೆ. ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಭಾಷಣ ಮಾಡುವ ವೇಳೆ ಸಚಿವ ತಂಗಡಗಿಯವರು ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡೆಯಬೇಕೆಂದು ಆವೇಷದಲ್ಲಿ ಹೇಳಿದ್ದರು. +ಇದನ್ನು ಅಸ್ತ್ರ ಮಾಡಿಕೊಂಡಿದ್ದ ಬಿಜೆಪಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. \ No newline at end of file diff --git a/eesanje/url_46_194_6.txt b/eesanje/url_46_194_6.txt new file mode 100644 index 0000000000000000000000000000000000000000..8b0ba339d77caa1056b5e9cd79f5174db1c7074e --- /dev/null +++ b/eesanje/url_46_194_6.txt @@ -0,0 +1,12 @@ +ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಳೆ ಅಧಿಸೂಚನೆ +ಬೆಂಗಳೂರು,ಮಾ.27-ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟವಾದ ಎನ್‍ಡಿಎ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನಕ್ಕೆ ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ. ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. +ನಾಳೆ ಅಯೋಗವು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಬಹುದೊಡ್ಡ ಹಬ್ಬವೆಂದೇ ಹೇಳಲಾಗುವ ಮತಸಮರಕ್ಕೆ ಚಾಲನೆ ಸಿಗಲಿದೆ. ಏ.4 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಏ.26ರಂದು ಮತದಾನ ನಡೆದು ಜೂ.4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಕೇಂದ್ರ ಚುನಾವಣಾ ಆಯೋಗ ಎರಡು ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ. +ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳು ನಾಳೆ ಅಧಿಸೂಚನೆ ಪ್ರಕಟವಾಗಲಿದ್ದು, ಚಿತ್ರದುರ್ಗ ಮಲೆನಾಡಿನ ಚಿಕ್ಕಮಗಳೂರು-ಉಡುಪಿ, ಹಾಸನ ಕರಾವಳಿ ಭಾಗದ ದಕ್ಷಿಣ ಕನ್ನಡ ಕ್ಷೇತ್ರ ಹೊರತುಪಡಿಸಿದರೆ ಬಹುತೇಕ ಹಳೆ ಮೈಸೂರು ಭಾಗದ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲಿ ಕೋಲಾರ ಹಾಗೂ ಚಾಮರಾಜನಗರ ಪರಿಶಿಷ್ಟ ಜಾತಿಗೆ (ಎಸ್.ಸಿ) ಮೀಸಲು ಕ್ಷೇತ್ರಗಳಾಗಿದ್ದರೆ, ಉಳಿದ 12 ಕ್ಷೇತ್ರಗಳು ಸಾಮಾನ್ಯ ಕ್ಷೇತ್ರಗಳಾಗಿವೆ. +2019ರಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಯುಪಿಎ ಮೈತ್ರಿಕೂಟ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡುವಲ್ಲಿ ವಿಫಲವಾಗಿತ್ತು. ಬೆಂಗಳೂರು ಗ್ರಾಮಾಂತರ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿಕೂಟ ಗೆದ್ದರೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿಜೇತರಾಗಿದ್ದರು. ಉಳಿದಂತೆ 11 ಕ್ಷೇತ್ರಗಳಲ್ಲೂ ಪ್ರಧಾನಿ ನರೇಂದ್ರಮೋದಿ ಅಲೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. +ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಅಕಾರದಲ್ಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಕಾಂಗ್ರೆಸ್‍ಗೆ ಕಳೆದ 10 ದಿನಗಳ ಅವಧಿಯಲ್ಲಿ ಮಾಡಿರುವ ಸರ್ಕಾರದ ಸಾಧನೆಗಳು ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂಬ ಅಚಲ ವಿಶ್ವಾಸವಿದೆ. +ಪಂಚ ಗ್ಯಾರಂಟಿಗಳಿಂದ ಮತದಾರರು ಸಂತೃಪ್ತರಾಗಿದ್ದು, ನಮ್ಮನ್ನು ಕೈ ಹಿಡಿಯಲಿದ್ದಾರೆ ಎಂಬ ಅಧಮ್ಯ ವಿಶ್ವಾಸ ಕೈಪಡೆಯಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನಪ್ರಿಯತೆಯನ್ನು ಮತದಾರ ಓರೆಗೆ ಹಚ್ಚಲಿದ್ದಾನೆ. +ಬಿಜೆಪಿ ಸಾರಥ್ಯ ವಹಿಸಿರುವ ಬಿ.ವೈ.ವಿಜಯೇಂದ್ರರಿಗೂ ಪ್ರತಿಷ್ಠೆಯ ಕಣವಾಗಿದ್ದು, ಮೊದಲ ಹಂತದಲ್ಲೇ ಹೆಚ್ಚಿನ ಸ್ಥಾನ ಗೆಲ್ಲಲು ಶಕ್ತಿ ಮೀರಿ ಪ್ರಯತ್ನ ನಡೆಸಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರು-ಕೊಡುಗಿನಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಭಾರೀ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದ್ದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮತ್ತು ಹೆಸರಾಂತ ಹೃದಯ ತಜ್ಞ ಡಾ.ಸಿ.ಎನ್.ಮಂಜುನಾಥ್ ನಡುವೆ ಹಣಾಹಣಿ ಇದೆ. +ಉಳಿದಂತೆ ಸ್ಪರ್ಧಾ ಕಣದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಮುದ್ದಹನುಮೇಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಯಧುವೀರ ಕೃಷ್ಣದತ್ತ ಪಡೆಯರ್ ಸೇರಿದಂತೆ ಹಲವರು ಕಣದಲ್ಲಿದ್ದಾರೆ.ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 5,42,54,500 ಮತದಾರರು ಇದ್ದಾರೆ. ಈ ಪೈಕಿ 2,71,21,407 ಪುರುಷರು, 2,70,81,748 ಮಹಿಳೆಯರು, 4,933 ತೃತೀಯ ಲಿಂಗಿಗಳಿದ್ದಾರೆ. +18ರಿಂದ 19 ವರ್ಷದ ವಯೋಮಾನದ ಯುವ ಮತದಾರರ ಸಂಖ್ಯೆ 11,24,622 ಹಾಗೂ 5,70,168 85 ವರ್ಷ ಮೇಲ್ಪಟ್ಟ ಹಿರಿಯರಿದ್ದಾರೆ. 58,834 ಒಟ್ಟು ಮತಗಟ್ಟೆಗಳು, 12,000 ಚುನವಣಾ ಸಿಬ್ಬಂದಿ ನಿಯೋಜಿಸಲಾಗುತ್ತದೆ.ಉಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಏ.12ರಂದು ಅಸೂಚನೆ ಹೊರಡಿಸಲಾಗುತ್ತದೆ. +ಮತದಾನ ನಡೆಯುವ ಕ್ಷೇತ್ರಗಳು:ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ( ಎಸ್ಸಿ ಮೀಸಲು ಕ್ಷೇತ್ರ), ತುಮಕೂರು, ಮಂಡ್ಯ, ಮೈಸೂರು-ಕೊಡುಗುಚಾಮರಾಜನಗರ ( ಎಸ್ಸಿ ಮೀಸಲು ಕ್ಷೇತ್ರ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ,ಚಿಕ್ಕಬಳ್ಳಾಪುರ, ಕೋಲಾರ ( ಎಸ್ಸಿ ಮೀಸಲು ಕ್ಷೇತ್ರ) +ಚುನಾವಣಾ ಪ್ರಕ್ರಿಯೆಅಧಿಸೂಚನೆ ಮಾ.28( ಗುರುವಾರ)ನಾಮಪತ್ರ ಸಲ್ಲಿಕೆ ಪ್ರಾರಂಭ- ಮಾ.28ರಿಂದ ಏ.4 ಕೊನೆಯ ದಿನನಾಮಪತ್ರ ಪರಿಶೀಲನೆ- ಏ.5ಏ.8- ನಾಮಪತ್ರ ಹಿಂಪಡೆಯಲು ಕೊನೆಯ ದಿನಮತದಾನ -ಏ.26 \ No newline at end of file diff --git a/eesanje/url_46_194_7.txt b/eesanje/url_46_194_7.txt new file mode 100644 index 0000000000000000000000000000000000000000..1b709e27eac5d99fa61c9be45c9ccfbffb1bd952 --- /dev/null +++ b/eesanje/url_46_194_7.txt @@ -0,0 +1,12 @@ +ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ +ಬೆಂಗಳೂರು, ಮಾ.27-ಲೋಕಸಭೆ ಚುನಾವಣೆ ಕಾವಿನ ನಡುವೆಯೇ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚರ-ಸ್ಥಿರ ಅಕ್ರಮ ಸಂಪತ್ತನ್ನು ಪತ್ತೆಹಚ್ಚಿದ್ದಾರೆ. +ರಾಜಧಾನಿ ಬೆಂಗಳೂರು, ಉಡುಪಿ, ಮೈಸೂರು, ಕೊಡಗು, ಕಾರವಾರ, ಬೀದರ್, ಧಾರವಾಡ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. +ಸಾರ್ವಜನಿಕ ವಲಯದಿಂದ ಬಂದ ದೂರುಗಳನ್ನಾಧರಿಸಿ ಪರಿಶೀಲನೆ ನಡೆಸಿದ ನಂತರ 13 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ತಾಣಗಳಲ್ಲೂ ಕೂಡ ತಪಾಸಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ. ರಾಜ್ಯದ ಅತಿ ದೊಡ್ಡ ಶ್ರೀಮಂತ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಪಡೆದಿರುವ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಂತಿರುವ ಬಿಡದಿಯ ಮಂಚನಾಯಕನಹಳ್ಳಿ ಗ್ರಾಪಂ ಪಿಡಿಒ ಯತೀಶ್‍ಚಂದ್ರ ಅವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಅವರು ಇರಲಿಲ್ಲ. ನಂತರ ಮಾಹಿತಿ ಪಡೆದು ಈಗಲ್‍ಟನ್ ರೆಸಾರ್ಟ್‍ನಲ್ಲಿದ್ದ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. +ಇವರು ಕರ್ತವ್ಯ ನಿರ್ವಹಿಸುತ್ತಿದ್ದ ಗ್ರಾಪಂ ಕಚೇರಿ, ಮೈಸೂರು ಸೇರಿದಂತೆ ಏಳಕ್ಕೂ ಹೆಚ್ಚು ಕಡೆ ದಾಳಿ ನಡೆಸಲಾಗಿದೆ. ಈ ವೇಳೆ ಮೈಸೂರಿನಲ್ಲಿ ಪತ್ನಿಯ ಹೆಸರಿನಲ್ಲಿರುವ ಐಷಾರಾಮಿ ಕಟ್ಟಡಗಳು, ವಿವಿಧೆಡೆ ನಿವೇಶನಗಳು ಹಾಗೂ ಹಣ ಹೂಡಿಕೆ ಬಗ್ಗೆ ದಾಖಲೆಗಳು ಪತ್ತೆಯಾಗಿವೆ. +ಇದೇ ವೇಳೆ ನೆರೆಯ ಚನ್ನಪಟ್ಟಣ ತಾಲೂಕಿನ ಮೈಲನಾಯಕನಹಳ್ಳಿ ಗ್ರಾಪಂ ಪಿಡಿಒ ಶೀಬಾ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ವಿಶೇಷವೆಂದರೆ ಇವರು ಕಳೆದ ಒಂದು ತಿಂಗಳ ಹಿಂದೆ ಎರಡು ತಿಂಗಳು ರಜೆ ಹಾಕಿ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಇವರ ನಿವಾಸದಲ್ಲಿ ನಗದು, ಕೆಲ ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. +ಇನ್ನು ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಎಂಜಿನಿಯರ್ ರಂಗನಾಥ್ ಅವರ ಬೆಂಗಳೂರಿನ ನಿವಾಸ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‍ಪಿ ನೇತೃತ್ವದಲ್ಲಿ ಸುಮಾರು 30ಕ್ಕೂ ಹೆಚ್ಚು ಸಿಬ್ಬಂದಿ ಐದು ಕಡೆ ದಾಳಿ ನಡೆಸಿ ಹಲವು ದಾಖಲೆಗಳು, ನಗದು ಹಾಗೂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. +ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಆರ್.ರೇವಣಕರ್ ಅವರ ಕಚೇರಿ ಹಾಗೂ ಐಶ್ವರ್ಯ ರೆಸಿಡೆನ್ಷಿಯಲ್ ಲೇಔಟ್‍ನಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ ಲೋಕಾಯುಕ್ತ ಅಕಾರಿಗಳನ್ನು ಕಂಡು ಮನೆಯವರು ಶಾಕ್ ಆಗಿದ್ದಾರೆ. ತಪಾಸಣೆ ವೇಳೆ ಹಲವು ಆಸ್ತಿಗಳ ದಾಖಲಾತಿಗಳು ಸಿಕ್ಕಿದ್ದು, ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳ ಮೌಲ್ಯವನ್ನು ಪರಿಶೀಲಿಸಲಾಗುತ್ತಿದೆ. +ಬೀದರ್ ಜಿಲ್ಲೆಯ ಬಾಲ್ಕಿ ಕಾರಂಜ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್ ಶಿವಕುಮಾರ ಸ್ವಾಮಿ ಅವರ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ಮನೆ, ಕಲಬುರಗಿಯ ಎಂಬಿ ಕಾಲೋನಿಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಚಿಕ್ಕಬಳ್ಳಾಪುರದ ಕೆಆರ್‍ಡಿಎಲ್‍ನ ಅಧಿಕಾರಿ ಸದಾಶಿವಯ್ಯ ಅವರ ಯಲಹಂಕದಲ್ಲಿರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇವರಿಗೆ ಮೈಸೂರಿನಲ್ಲಿ ಎರಡು ಮನೆ, ಟಿ.ನರಸೀಪುರದಲ್ಲಿ ಮನೆ ಇರುವುದು ಪರಿಶೀಲನೆ ವೇಳೆ ತಿಳಿದುಬಂದಿದ್ದು, ಇನ್ನೂ ಹಲವೆಡೆ ಕೃಷಿ ಜಮೀನು ಹಾಗೂ ನಿವೇಶಗಳನ್ನು ಹೊಂದಿರುವ ಬಗ್ಗೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. +ವಿಜಯಪುರದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಷಣ್ಮುಗಪ್ಪ ತೀರ್ಥ ಅವರಿಗೆ ಲೋಕಾಯುಕ್ತ ಪೊಲೀಸರು ಶಾಕ್ ನೀಡಿದ್ದಾರೆ. ವಿಜಯಪುರದ ಚಾಲುಕ್ಯ ನಗರದಲ್ಲಿರುವ ನಿವಾಸ, ಜಮಖಂಡಿಯಲ್ಲಿರುವ ಮತ್ತೊಂದು ಮನೆ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ. +ಇಲ್ಲಿ ಅಪಾರ ಪ್ರಮಾಣದ ಚರ-ಸ್ಥಿರ ಆಸ್ತಿಗಳ ದಾಖಲೆಗಳು ಪತ್ತೆಯಾಗಿದ್ದು, ಅವರ ಸಂಪತ್ತು ನೋಡಿ ಲೋಕಾಯುಕ್ತರೇ ಬೆರಗಾಗಿದ್ದಾರೆ. ಧಾರವಾಡದ ಅರಣ್ಯ ಸಂಶೋಧನಾ ವಿಭಾಗದ ಆರ್‍ಎಫ್‍ಒ ಮಹೇಶ್ ಹಿರೇಮಠ ಅವರ ಮೂಕಾಂಬಿಕ ನಗರದಲ್ಲಿರುವ ಮನೆ ಹಾಗೂ ಕಚೇರಿಗಳ ಮೇಲೆ ಧಾರವಾಡ ಎಸ್‍ಪಿ ಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. +ಹಲವೆಡೆ ಕೃಷಿ ಜಮೀನು ಹಾಗೂ ಹಲವು ಬ್ಯಾಂಕ್‍ಗಳಲ್ಲಿ ಹೂಡಿಕೆ ಮಾಡಿರುವುದು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರೆದಿದೆ. ಒಟ್ಟಾರೆ ಲೋಕಾಯುಕ್ತ ಅಧಿಕಾರಿಗಳು ಬೇಸಿಗೆಯ ಬಿಸಿ ನಡುವೆಯೇ ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. \ No newline at end of file diff --git a/eesanje/url_46_194_8.txt b/eesanje/url_46_194_8.txt new file mode 100644 index 0000000000000000000000000000000000000000..2873401478cae2ce31c0583cf86a4d1a72e939ae --- /dev/null +++ b/eesanje/url_46_194_8.txt @@ -0,0 +1,7 @@ +ಬಿರುಬಿಸಿಲಿಗೆ ದುಬಾರಿಯಾಯ್ತು ಸೌತೆ, ನಿಂಬೆ, ಎಳನೀರು +ಬೆಂಗಳೂರು, ಮಾ.26-ದಿನದಿಂದ ದಿನಕ್ಕೆ ತಾಪಾಮಾನ ಏರಿಕೆಯಾಗುತ್ತಿದ್ದು, ಸುಡು ಬಿಸಿಲಿನಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಜನರು ಎಳನೀರು, ತಂಪುಪಾನೀಯ, ಕಲ್ಲಂಗಡಿ ಹಾಗೂ ಸೌತೆಕಾಯಿ ಮೊರೆಹೊಗುತ್ತಿದ್ದಾರೆ.ಬಿಸಿಲು ಏರುತ್ತಿದ್ದಂತೆ ಇವರುಗಳ ಬೆಲೆಯೂ ಸಹ ಏರುತ್ತಿದ್ದು ಗ್ರಾಹಕರನ್ನು ಸುಡುತ್ತಿದೆ. ರಾಜ್ಯಾದ್ಯಂತ ಬರಗಾಲ ಆವರಿಸಿದ್ದು, ಮಳೆ ಬಾರದೆ ರಾಜಧಾನಿ ಸೇರಿದಂತೆ ವಿವಿಧೆಡೆ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದರಾಗಿದೆ. ಈ ಬಿಸಿಲಿನಲ್ಲಿ ದೇಹಕ್ಕೆ ಅಷ್ಟೇನೂ ಆಹಾರ ಸೇರುವುದಿಲ್ಲ. ನೀರು ಕುಡಿದು ಕುಡಿದು ಹೊಟ್ಟೆ ತುಂಬುತ್ತದೆ ಅಷ್ಟೆ. +ಈ ಸಮಯದಲ್ಲಿ ಯಾವ ಹಣ್ಣು ತರಕಾರಿ, ಪಾನೀಯ ಸೇವಿಸಬೇಕೆಂಬುದೇ ಒಂದು ಸಮಸ್ಯೆಯಾಗಿದ್ದು, ಇರುವುದರಲ್ಲಿ ನೈಸರ್ಗಿಕ ಪಾನೀಯವನ್ನು ಜನರು ಆಯ್ಕೆ ಮಾಡಿಕೊಳ್ಳುತ್ತಾರೆ. ಇದರಲ್ಲಿ ಎಳನೀರು ಮೊದಲ ಸ್ಥಾನದಲ್ಲಿದೆ. ಇದು ದಾಹನ ನೀಗಿಸುವುದರ ಜೊತೆಗೆ ದೇಹಕ್ಕೆ ಹಲವಾರು ಪೌಶಕಾಂಶಗಳನ್ನು ನೀಡುತ್ತದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಎಳನೀರು ಮಾರಾಟ ಜೋರಾಗಿದೆ. ಆದರೆ ಬೆಲೆ ಮಾತ್ರ ಬಲು ದುಬಾರಿಯಾಗಿದೆ. +ಗುಣಮಟ್ಟ ಹಾಗೂ ಫ್ರೆಶ್ ಆಗಿರುವ ಒಂದು ಎಳನೀರಿಗೆ 35ರಿಂದ 40 ರೂ. ಮಾರಾಟವಾಗುತ್ತದೆ. ಬೆಂಗಳೂರಿಗೆ ಹೆಚ್ಚಾಗಿ ಮದ್ದೂರು, ಮಂಡ್ಯ ಭಾಗದಿಂದ ಎಳನೀರು ಬರುತ್ತಿದ್ದು, ಸಾಗಾಣಿಕೆ ವೆಚ್ಚ, ಕೂಲಿ ಎಲ್ಲವೂ ಸೇರಿ 40 ರೂ. ಗೆ ಮಾರಾಟ ಮಾಡಲಾಗುತ್ತಿದೆ. ಇದು ಹೊರೆಯಾದರೂ ಆರೋಗ್ಯದ ದೃಷ್ಟಿಯಿಂದ ಜನರು ಕುಡಿಯುತ್ತಿದ್ದಾರೆ. +ಬೇಸಿಗೆಯಲ್ಲಿ ಬಸವಳಿದು ಮನೆಗೆ ಬಂದರೆ ಕೂಡಲೇ ಎನರ್ಜಿ ಡ್ರಿಂಕ್ ಆಗಿ ನಿಂಬೆ ಜ್ಯೂಸ್ ಅನ್ನು ಹೆಚ್ಚು ಜನ ಸೇವಿಸುತ್ತಾರೆ. ಆದರೆ ಈ ಸಮಯದಲ್ಲಿ ನಿಂಬೆಹಣ್ಣಿನ ಬೆಲೆ ಮಾತ್ರ ದುಬಾರಿಯಾಗುತ್ತಿದೆ. ಸಾಮಾನ್ಯ ದಿನಗಳಲ್ಲಿ ಒಂದಕ್ಕೆ ಹೆಚ್ಚು ಅಂದರೂ 5 ರೂ. ಇರುತ್ತದೆ. ಆದರೆ ಇಗ ಇದರ ಬೆಲೆ ಒಂದಕ್ಕೆ 10 ರೂ. ಮುಟ್ಟಿದೆ ನೀರಿಲ್ಲದೆ ಗಿಡಗಳು ಒಣಗುತ್ತಿದ್ದು, ತಾಪಕ್ಕೆ ಹೂ, ಪೀಚುಗಳು ಉದುರುತ್ತಿದ್ದು, ಇಳುವರಿ ಕುಂಠಿತವಾಗಿದೆ. ಮಾರುಕಟ್ಟೆಗೆ ಅಗತ್ಯ ಪ್ರಮಾಣದಲ್ಲಿ ಹಣ್ಣು ಬಾರದಿರುವುದರಿಂದ ಬೆಲೆ ಏರಿಕೆಯಾಗಿದೆ. ಇನ್ನು ಯುಗಾದಿ ಹಬ್ಬಕ್ಕೆ ಒಂದು ನಿಂಬೆಹಣ್ಣಿನ ಬೆಲೆ 20ರೂ. ಆದರೂ ಅಚ್ಚರಿ ಪಡುವಂತಿಲ್ಲ. +ನೀರಿನ ಅಂಶ ಹೆಚ್ಚಾಗಿರುವ ಸೌತೆಕಾಯಿ ಬೆಲೆಯಲ್ಲೂ ಸಹ ಹೆಚ್ಚಳವಾಗಿದೆ. ದಾಹ ನೀಗಿಸುವುದರ ಜೊತೆಗೆ ಹಲವಾರು ಔಷಯ ಗುಣಗಳನ್ನು ಹೊಂದಿರುವ ಸೌತೆಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಮಾರುಕಟ್ಟೆಯಲ್ಲಿ ಕೆಜಿಗೆ 35ರಿಂದ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. +ಈ ಬೆಳೆಗೆ ಹೆಚ್ಚು ನೀರಿನ ಅವಶ್ಯಕತೆ ಇದ್ದು, ಬೋರ್ವೆಲ್ಗಳಲ್ಲಿ ಅಂತರ್ಜಲ ಮಾಯವಾಗಿರುವದರಿಂದ ರೈತರು ಬೆಳೆಯಲು ಮುಂದಾಗಿಲ್ಲ. ಜೊತೆಗೆ ಬಿಸಿಲು ಹೆಚ್ಚಾಗಿರುವುದರಿಂದ ಬೇಗ ಬೆಂಡಾಗುತ್ತವೆ.ಈ ಹಿನ್ನೆಲೆಯಲ್ಲಿ ಇಳುವರಿ ಇಳಿಮುಖ ವಾಗಿದ್ದು, ಬೆಲೆ ಹೆಚ್ಚಳವಾಗಿದೆ. ಯುಗಾದಿ ಹೊಸತಡಕಿಗೆ ಹೆಚ್ಚಾಗಿ ಸೌತೆಕಾಯಿ, ಲಿಂಬೆಹಣ್ಣನ್ನು ಬಳಸುವುದರಿಂದ ಇವುಗಳ ಬೆಲೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಒಂದು ಕಡೆ ಬಿಸಿಲು ನೆತ್ತಿಸುಡುತ್ತಿದ್ದರೆ ಮತ್ತೊಂದೆಡೆ ದಾಹನೀಗಿಸುವ ಎಳನೀರು, ಸೌತೆಕಾಯಿ ಹಾಗೂ ಲಿಂಬೆಹಣ್ಣಿನ ಬೆಲೆ ಗ್ರಾಹಕರ ಜೇಬನ್ನು ಸುಡುತ್ತಿದೆ. \ No newline at end of file diff --git a/eesanje/url_46_194_9.txt b/eesanje/url_46_194_9.txt new file mode 100644 index 0000000000000000000000000000000000000000..fb1b15acc282c2efcee72e6c99890ec38acbf08a --- /dev/null +++ b/eesanje/url_46_194_9.txt @@ -0,0 +1,6 @@ +ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್ ಸೂಚನೆ +ಬೆಂಗಳೂರು,ಮಾ.26-ವಿಧಾನಸಭೆಯ ಮಾಜಿ ಉಪ ಸಭಾಪತಿ ಹಾಗೂ ಚಿಂತಾಮಣಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಾರೆಡ್ಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯದ ಆದೇಶ ನೀಡಿದೆ. +ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಲಂ 499ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಆಡಿಷನಲ್ ಚೀಫ್ ಮೆಟ್ರೋಪಾಲಿಟಿನ್ ಮ್ಯಾಜಿಸ್ಟ್ರೇಟ್ ಜೆ. ಪ್ರೀತ್ ಅವರು ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ. +ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶ ಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರಕ್ಕೆ ಸೇರಿರುವ ಕತ್ರಿಗುಪ್ಪೆ ಸರ್ವೇ ನಂ. 125 ಮತ್ತು 126 ಕ್ಕೆ ಸೇರಿರುವ ಸುಮಾರು 350 ಕೋಟಿ ಮೌಲ್ಯದ 4.31 ಎಕರೆ ವಿಸ್ತೀರ್ಣದ ಸರ್ಕಾರಿ ಸ್ವತ್ತಿಗೆ 41 ಮಂದಿ ಸರ್ಕಾರಿ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದರು. +ಈ ಸಂಬಂಧ ಲೋಕಾಯುಕ್ತ ಮತ್ತು ಬಿಎಂಟಿಎಫ್ನಲ್ಲಿ ದೂರುಗಳನ್ನು ಸಲ್ಲಿಸಲಾಗಿತ್ತು ಹಾಗೂ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸದನ ಸಮಿತಿಯ ಅಧ್ಯಕ್ಷರೂ ಆಗಿದ್ದ ಕೃಷ್ಣಾ ರೆಡ್ಡಿ ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಆದೇಶಿಸುವ ಬದಲಾಗಿ, ಪಾಲಿಕೆಯ ಸ್ವತ್ತನ್ನು ಪಾಲಿಕೆಯ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದ ಅಧಿಕಾರಿಯ ವಿರುದ್ಧವೇ ನಿರ್ಣಯ ತೆಗೆದುಕೊಂಡಿದ್ದರು. +ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಲೋಕಾಯುಕ್ತ ಮತ್ತು ಬಿಎಂಟಿಎಫ್ತನಿಖಾ ಸಂಸ್ಥೆಗಳಲ್ಲಿ ರಮೇಶ್ ಅವರು ದೂರುಗಳನ್ನು ದಾಖಲಿಸಿದ್ದರು. ಈ ಸಂಬಂಧ ಅವರ ಬಗ್ಗೆ ಕೃಷ್ಣಾ ರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಸಂಬಂಧ ರಮೇಶ್ ಅವರು ಕೃಷ್ಣಾ ರೆಡ್ಡಿಯವರ ವಿರುದ್ಧ ಖಾಸಗಿ ದೂರನ್ನು ದಾಖಲಿಸಿದ್ದರು. ನ್ಯಾಯಾಲಯದ ಆದೇಶದಂತೆ ಕೃಷ್ಣಾ ರೆಡ್ಡಿಯವರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆದುಕೊಳ್ಳಬೇಕಿದೆ. \ No newline at end of file diff --git a/eesanje/url_46_195_1.txt b/eesanje/url_46_195_1.txt new file mode 100644 index 0000000000000000000000000000000000000000..75dc3a99d515b12bc1d36ee7a817b71bc393ba56 --- /dev/null +++ b/eesanje/url_46_195_1.txt @@ -0,0 +1,9 @@ +ಹಳೇ ಮೈಸೂರು ಭಾಗದಲ್ಲಿ ‘ಆಪರೇಷನ್ ಹಸ್ತ’ ಜೋರು +ಬೆಂಗಳೂರು,ಮಾ.26– ಮೈಸೂರು- ಚಾಮರಾಜನಗರ, ಮಂಡ್ಯ ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಮೂರು ದಿನಗಳಿಂದಲೂ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಬೀಡುಬಿಟ್ಟು ಕಾರ್ಯತಂತ್ರ ರೂಪಿ ಸುವಲ್ಲಿ ನಿರತರಾಗಿದ್ದಾರೆ. +ಇಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿರುವ ಎಚ್.ವಿ.ರಾಜೀವ, ಮೈಸೂರಿನ ಮಾಜಿ ಮಹಾಪೌರರಾಗಿದ್ದ ಬಿ.ಎಲ್.ಭೈರಪ್ಪ, ಹಿರಿಯ ಮುಖಂಡ ಕೆ.ವಿ.ಮಲ್ಲೇಶ್ ಸೇರಿದಂತೆ ನೂರಾರು ಮಂದಿ ಇಂದು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. +ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡಿರುವ ಹಾಗೂ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಯಡಿಯೂರಪ್ಪ ಅವರ ಮಾತನ್ನು ನಿರ್ಲಕ್ಷಿಸಿದ್ದರಿಂದಾಗಿ ಅಸಹನೆಗೊಳಗಾಗಿರುವ ನಾಯಕರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತೃಪ್ತ ನಾಯಕರನ್ನು ಕಾಂಗ್ರೆಸ್ಗೆ ಸೆಳೆದುಕೊಳ್ಳಲಾಗುತ್ತಿದೆ. ಇತ್ತೀಚೆಗೆ ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಅಪ್ಪಾಜಿಗೌಡ, ಮಾಜಿ ಶಾಸಕ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. +ಅದರ ಬೆನ್ನಲ್ಲೇ ಮೈಸೂರಿನಲ್ಲಿ ಬಿಜೆಪಿಯ ಪ್ರಬಾವಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ವಂಚನೆಯಾಗುತ್ತಿದ್ದಂತೆ ಅವರ ಬೆಂಬಲಿಗರು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.ಬಿಜೆಪಿ ಚುನಾವಣೆ ಹಿನ್ನೆಲೆಯಲ್ಲಿ ಕರೆದಿರುವ ಮಂಡ್ಯ ಜಿಲ್ಲೆಯ ಸಭೆಗೆ ಸಂಸದೆ ಸುಮಲತಾ ಅವರಿಗೆ ಆಹ್ವಾನ ಇಲ್ಲ ಎಂಬುದು ಜಿಲ್ಲೆಯ ಬಹಳಷ್ಟು ಮಂದಿ ಬೆಂಬಲಿಗರನ್ನು ಕೆರಳಿಸಿದೆ. +ಹೀಗಾಗಿ ಕಾಂಗ್ರೆಸ್ನತ್ತ ವಲಸೆ ಬರುವವರ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಮೈಸೂರು ಲೋಕಸಭಾ ಕ್ಷೇತ್ರದ ಲಕ್ಷ್ಮಣ್ ಅವರನ್ನು ಗೆಲ್ಲಿಸಿಕೊಳ್ಳಲೇ ಬೇಕೆಂದು ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ತಡರಾತ್ರಿ 2 ಗಂಟೆಯವರೆಗೂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. +ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಒಡೆಯರ್ ಅವರ ವಿರುದ್ಧ ಯಾವುದೇ ಟೀಕೆ ಮಾಡಬಾರದು. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಮತದಾರರ ಮನವೊಲಿಸಬೇಕು. ಬಿಜೆಪಿ ರಾಜ್ಯ ಮತ್ತು ಜಿಲ್ಲೆಗಳಿಗೆ ಮಾಡಿರುವ ಅನ್ಯಾಯಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡಿ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟು ಪ್ರದರ್ಶಿಸಬೇಕು. ಯಾವುದೇ ಕಾರಣಕ್ಕೂ ಅಸಮಾಧಾನ, ಅತೃಪ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ. +ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲದೇ ಇದ್ದರೆ ಜಿಲ್ಲೆಯ ಯಾವುದೇ ನಾಯಕರು ನನ್ನ ಹತ್ತಿರ ಅರ್ಜಿ ಹಿಡಿದು ಬರಬೇಡಿ. ನಿಮ್ಮ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.ಮೈಸೂರು ಜಿಲ್ಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಅಸಮಾಧಾನಿತ ನಾಯಕರ ಪೈಕಿ ಜನಬೆಂಬಲ ಇರುವ ಹಾಗೂ ಸೈದ್ಧಾಂತಿಕ ಸ್ಪಷ್ಟತೆ ಇರುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ. ಹೀಗೆ ಬಂದು ಹಾಗೆ ಹೋಗುವವರನ್ನು ಸೇರಿಸಿಕೊಳ್ಳಬೇಡಿ. ಸೈದ್ಧಾಂತಿಕವಾಗಿ ಬಿಜೆಪಿಯನ್ನು ಅನುಸರಿಸುವುದು, ರಾಜಕೀಯ ಅವಕಾಶಕ್ಕಾಗಿ ಕಾಂಗ್ರೆಸ್ಗೆ ಬರುವವರ ಮೇಲೆ ನಿಗಾ ಇಡಿ ಎಂದು ತಾಕೀತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಚುನಾವಣೆ ಅಧಿಸೂಚನೆ ಜಾರಿಗೆ ಎರಡು ದಿನ ಬಾಕಿ ಇದ್ದು ರಾಜ್ಯಾದ್ಯಂತ ಲೋಕಸಭಾ ಚುನಾವಣೆಯ ಕಾವು ನಿಧಾನಕ್ಕೆ ಏರುತ್ತಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜ್ಯಾದ್ಯಂತ ಪ್ರಚಾರ ನಡೆಸುವ ಅನಿವಾರ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ತಮ್ಮ ತವರು ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ನೀಡಬೇಕಾಗಿದ್ದ ಸಲಹೆ ಸೂಚನೆ ನೀಡಲು ಮೂರು ದಿನಗಳ ಕಾಲ ನಿರಂತರ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_195_10.txt b/eesanje/url_46_195_10.txt new file mode 100644 index 0000000000000000000000000000000000000000..8912e78525b50fc4c2e7acfd9bd2ff0d77ab3d84 --- /dev/null +++ b/eesanje/url_46_195_10.txt @@ -0,0 +1,6 @@ +ಹಲವು ವಿಶೇಷಗಳ ಜೊತೆ ಪರೀಕ್ಷೆ ಆರಂಭ +ಬೆಂಗಳೂರು,ಮಾ.25-ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಸಲಾಗಿರುವ ಎಸ್ಸೆಸ್ಸೆಲ್ಸಿ ಮೊದಲ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ರಾಜ್ಯಾದ್ಯಂತ 2700ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಸುಲಲಿತವಾಗಿ ನಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಕಲು ತಡೆಗಟ್ಟಲು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. +ಇಂದು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪ್ರಥಮ ಭಾಷೆಯ ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ , ಸಂಸ್ಕøತ ವಿಷಯಗಳ ಪರೀಕ್ಷೆಗಳು ನಡೆದವು.ಸರ್ಕಾರಿ, ಅನುದಾನ, ಅನುದಾನರಹಿತ ಹಾಗೂ ಖಾಸಗಿ ಶಾಲೆಗಳು ಸೇರಿದಂತೆ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳನ್ನು ಮಂಡಳಿ ತೆರೆದಿದೆ. +ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ. ಅಲ್ಲದೆ ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. +ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಉತ್ಸಾಹ ಕಂಡುಬಂದಿದೆ. ಪೊಷಕರಲ್ಲಿ ಮಕ್ಕಳ ಭವಿಷ್ಯದ ಕಾಳಜಿ, ದುಗುಡಗಳು ಪರೀಕ್ಷಾ ಕೇಂದ್ರದ ಬಳಿ ಕಂಡುಬಂದವು. +ವಿದ್ಯಾರ್ಥಿಗಳು ನಿಗದಿತ ಅವಗಿಂತಲೂ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ್ದರು. ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಸಗರ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ತಾಯಿ ಗಂಗಮ್ಮ, ಆಕೆಯ ಪುತ್ರ ಮಲ್ಲಿಕಾರ್ಜುನ್ ಒಟ್ಟಿಗೆ ಪರೀಕ್ಷೆ ಬರೆದಿದ್ದು ಗಮನಸೆಳೆದಿತ್ತು. ಅಲ್ಲಲ್ಲಿ ಸಣ್ಣಪುಟ್ಟ ಗೊಂದಲಗಳ ಹೊರತಾಗಿಯೂ ರಾಜ್ಯಾದ್ಯಂತ ಸುಗಮವಾದ ಪರೀಕ್ಷೆ ನಡೆದಿದ್ದು, ಏಪ್ರಿಲ್ 6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_46_195_11.txt b/eesanje/url_46_195_11.txt new file mode 100644 index 0000000000000000000000000000000000000000..711f82a59eafdcdf5e075a4856f80f53579c2a8d --- /dev/null +++ b/eesanje/url_46_195_11.txt @@ -0,0 +1,9 @@ +ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ನಾಳೆ ಪ್ರಕಟ ಸಾಧ್ಯತೆ +ಬೆಂಗಳೂರು,ಮಾ.25-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಂಡಿರುವ ಜೆಡಿಎಸ್ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ನಾಳೆ ಅಧಿಕೃತವಾಗಿ ಪ್ರಕಟಿಸಲಿದೆ. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಜೆಡಿಎಸ್ ಕೋರ್ಕಮಿಟಿ ಸಭೆ ನಾಳೆ ಮಧ್ಯಾಹ್ನ ನಡೆಯಲಿದ್ದು, ಆನಂತರ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದು ಇಂದು ಸಂಜೆ ವೇಳೆಗೆ ನಿರ್ಧಾರವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ , ಕೋಲಾರ ಮೀಸಲು ಕ್ಷೇತ್ರದಿಂದ ಮಲ್ಲೇಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ರ್ಪಧಿಸುವುದು ಬಹುತೇಕ ಖಚಿತವಾಗಿದೆ. +ಆದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕ್ಷೇತ್ರ ಬಿಟ್ಟು ಹೋಗದಂತೆ ಕುಮಾರಸ್ವಾಮಿಯವರನ್ನು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ. +ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಜೆಪಿ ನಗರದ ಮನೆಗೆ ಆಗಮಿಸಿ ವಿಶ್ರಾಂತಿ ಪಡೆಯುತ್ತಿರುವ ಕುಮಾರಸ್ವಾಮಿ ಅವರನ್ನು ನಿನ್ನೆ ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಭೇಟಿಯಾಗಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡಿದ್ದಾರೆ. +ಆ ಸಂದರ್ಭದಲ್ಲಿ ಕುಮಾರಸ್ವಾಮಿ ಮಾತನಾಡಿ, ಕಾರ್ಯಕರ್ತರ ಒತ್ತಾಸೆಗೆ ನಿರಾಸೆ ಮಾಡುವುದಿಲ್ಲ. ಆದರೆ ಚನ್ನಪಟ್ಟಣ ಕ್ಷೇತ್ರದ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಇಂದು ಚನ್ನಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡರು ಎಚ್.ಸಿ.ಜಯಮುತ್ತು ನೇತೃತ್ವದಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಿಟ್ಟು ಹೋಗಬಾರದು. +ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬಾರದು ಎಂದು ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಈಗಾಗಲೇ ಕುಮಾರಸ್ವಾಮಿಯವರು ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ಮಂಡ್ಯದಲ್ಲಿ ನಡೆದ ಸಭೆಯಲ್ಲೂ ಕೂಡ ಕುಮಾರಸ್ವಾಮಿಯವರು ನಿಮಗೆ ನಿರಾಶೆ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಅಭ್ಯರ್ಥಿ ಆಯ್ಕೆಯನ್ನು ಇಂದು ಪ್ರಕಟಿಸುವುದಾಗಿ ಘೋಷಿಸಿದ್ದರು. +ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಪಕ್ಷದ ಮುಖಂಡರು ಹಲವು ಬಾರಿ ಒತ್ತಾಯ ಮಾಡಿದ್ದರು. ಆದರೂ ಸ್ಪರ್ಧೆ ಮಾಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಪದೇಪದೇ ಪುನರುಚ್ಚರಿಸಿದ್ದರು. ಒಂದು ವೇಳೆ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಸ್ರ್ಪಸುವುದರಿಂದ ಹಿಂದೆ ಸರಿದರೆ ನಿಖಿಲ್ ಕುಮಾರಸ್ವಾಮಿಯವರನ್ನು ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_195_12.txt b/eesanje/url_46_195_12.txt new file mode 100644 index 0000000000000000000000000000000000000000..d73288cb6ec68f520fcab58d0b8dd28f8b98ec15 --- /dev/null +++ b/eesanje/url_46_195_12.txt @@ -0,0 +1,8 @@ +ಬಿಜೆಪಿ ಜಾತಿವಾರು ಟಿಕೆಟ್ ಲೆಕ್ಕಾಚಾರ, ವೀರಶೈವ ಲಿಂಗಾಯತರಿಗೆ ಹೆಚ್ಚುಪಾಲು +ಬೆಂಗಳೂರು,ಮಾ.25-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೈಕೊಟ್ಟಿದ್ದ ಲಿಂಗಾಯಿತ ಮತಬ್ಯಾಂಕ್‍ನ್ನು ಭದ್ರ ಮಾಡಿಕೊಳ್ಳಲು ಬಿಜೆಪಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 9 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದೆ. 25 ಕ್ಷೇತ್ರಗಳ ಪೈಕಿ ಪ್ರಕಟಗೊಂಡಿರುವ 24 ಕ್ಷೇತ್ರಗಳ ಜಾತಿವಾರು ಪಟ್ಟಿಯನ್ನು ಅವಲೋಕಿಸಿದಾಗ ತನ್ನ ಸಾಂಪ್ರದಾಯಿಕ ಮತಬ್ಯಾಂಕ್ ಕೈಕೊಡದಂತೆ ಭದ್ರಪಡಿಸಿಕೊಳ್ಳಲು 9 ಕ್ಷೇತ್ರಗಳಲ್ಲಿ ವೀರಶೈವ ಲಿಂಗಾಯತರಿಗೆ ಪ್ರಾಶಸ್ತ್ಯ ನೀಡಲಾಗಿದೆ. ಒಕ್ಕಲಿಗ ಸಮುದಾಯಕ್ಕೆ 3 ಕ್ಷೇತ್ರಗಳು, ಬ್ರಾಹ್ಮಣರಿಗೆ 3, ಪರಿಶಿಷ್ಟ ಜಾತಿಗೆ 3, ಪರಿಶಿಷ್ಟ ಪಂಗಡಕ್ಕೆ 2, ಹಿಂದುಳಿದ ವರ್ಗಕ್ಕೆ 3, ಅತಿ ಹಿಂದುಳಿದ ಮತ್ತು ಕ್ಷತ್ರೀಯ ಸಮುದಾಯಕ್ಕೆ ತಲಾ ಒಂದು ಕ್ಷೇತ್ರವನ್ನು ನೀಡಲಾಗಿದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವೀರಶೈವ ಲಿಂಗಾಯಿತರು ಕೈಕೊಟ್ಟು ಕಾಂಗ್ರೆಸ್ ಬೆಂಬಲಿಸಿದ್ದು, ಫಲಿತಾಂಶದಿಂದಲೇ ಸಾಬೀತಾಗಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಬಿಜೆಪಿ ವರಿಷ್ಠರು ಲಿಂಗಾಯತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅದೇ ಸಮುದಾಯದ ಅಭ್ಯರ್ಥಿಗಳಿಗೆ ಮಣೆ ಹಾಕಿದ್ದಾರೆ. +ಚಿಕ್ಕೋಡಿಯಿಂದ ಅಣ್ಣಾಸಾಹೇಬ್ ಜೊಲ್ಲೆ, ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಬಾಗಲಕೋಟೆಯಿಂದ ಪಿ.ಸಿ.ಗದ್ದಿಗೌಡರು, ಬೀದರ್‍ನಿಂದ ಭಗವಂತ ಖೂಬಾ, ಕೊಪ್ಪಳ – ಬಸವರಾಜ ಕ್ಯಾವಟಗಿಗೆ ಟಿಕೆಟ್ ನೀಡಲಾಗಿದೆ. ಹಾವೇರಿಯಿಂದ ಬಸವರಾಜ ಬೊಮ್ಮಾಯಿ, ದಾವಣಗೆರೆಯಿಂದ ಗಾಯತ್ರಿ ಸಿದ್ದೇಶ್ವರ್, ಶಿವಮೊಗ್ಗದಿಂದ ಬಿ.ವೈ.ರಾಘವೇಂದ್ರ, ತುಮಕೂರಿನಿಂದ ವಿ.ಸೋಮಣ್ಣನವರಿಗೆ ಮಣೆ ಹಾಕಲಾಗಿದೆ. +ರಾಜ್ಯದಲ್ಲಿ ಎರಡನೇ ಅತಿದೊಡ್ಡ ಸಮುದಾಯ ಎಂದು ಹೇಳಲಾಗುತ್ತಿರುವ ಒಕ್ಕಲಿಗ ಸಮುದಾಯಕ್ಕೆ 3 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ, ಚಿಕ್ಕಬಳ್ಲಾಪುರದಿಂದ ಡಾ.ಕೆ.ಸುಧಾಕರ್, ಬೆಂಗಳೂರು ಗ್ರಾಮಾಂತರದಿಂದ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಹಿಂದುಳಿದ ವರ್ಗ ಬಿಲ್ಲವ ಸಮಾಜಕ್ಕೆ ಮೂರು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದ್ದು, ಉಡುಪಿ- ಚಿಕ್ಕಮಗಳೂರಿನಿಂದ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡ – ಬ್ರಿಜೇಶ್ ಚೌಟಲ ಸ್ಪರ್ಧಿಸಲಿದ್ದಾರೆ.. +ಪರಿಶಿಷ್ಟ ಜಾತಿಯವರಿಗೆ 3 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ನೀಡಿದ್ದು, ವಿಜಯಪುರದಿಂದ ರಮೇಶ್ ಜಿಗಜಿಣಗಿ, ಚಾಮರಾಜನಗರದಿಂದ ಬಾಲರಾಜ್ ಅವರಿಗೆ ಸ್ರ್ಪಸಲು ಅವಕಾಶ ನೀಡಲಾಗಿದೆ. ಪರಿಶಿಷ್ಟ ಪಂಗಡದವರಿಗೆ 2 ಕ್ಷೇತ್ರಗಳಲ್ಲಿ ಪಕ್ಷ ಟಿಕೆಟ್ ನೀಡಿದ್ದು ರಾಯಚೂರಿನಿಂದ ರಾಜಾ ಅಮರೇಶ್ ನಾಯಕ್ ಹಾಗೂ ಬಳ್ಳಾರಿಯಿಂದ ಶ್ರೀರಾಮುಲು ಅವರು ಸ್ರ್ಪಸಲಿದ್ದಾರೆ. +ಇನ್ನು ಉಳಿದಂತೆ ಕಲಬುರಗಿಯಿಂದ ಡಾ.ಉಮೇಶ್ ಜಾಧವ್-ಬಂಜಾರ, ಮೈಸೂರು-ಕೊಡುಗು ಕ್ಷೇತ್ರದಿಂದ ಯದುವೀರ ಒಡೆಯರ್, ಕ್ಷತ್ರಿಯ ಸಮುದಾಯಕ್ಕೆ ಮಣೆ ಹಾಕಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿರುವುದರಿಂದ ಅದೇ ಸಮುದಾಯಕ್ಕೆ ಟಿಕೆಟ್ ನೀಡಲೇಕಿದೆ. . +ಜಾತಿ ಬಲಾಬಲ :ಲಿಂಗಾಯಿತ -9ಒಕ್ಕಲಿಗ -3ಬ್ರಾಹ್ಮಣ -3ಹಿಂದುಳಿದ ವರ್ಗ -3ಪರಿಶಿಷ್ಟ ಜಾತಿ -3ಪರಿಶಿಷ್ಟ ಪಂಗಡ -2ಬಂಜಾರ -1ಕ್ಷತ್ರಿಯ -1 \ No newline at end of file diff --git a/eesanje/url_46_195_2.txt b/eesanje/url_46_195_2.txt new file mode 100644 index 0000000000000000000000000000000000000000..a427cde50243e61fab1d6efacdd3494ba20d575d --- /dev/null +++ b/eesanje/url_46_195_2.txt @@ -0,0 +1,7 @@ +ಮತದಾರರಿಗೆ ಆಮಿಷ : ಡಿ.ಕೆ.ಸುರೇಶ್ ವಿರುದ್ಧ ಕ್ರಮಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ +ನವದೆಹಲಿ, ಮಾ.26-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಮುಖ್ಯ ಚುನಾವಣಾಕಾರಿಗೆ ಸೂಚನೆ ನೀಡಿದೆ. +ಕ್ಷೇತ್ರದಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಬಗ್ಗೆ ರಾಜ್ಯ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಯೋಗಕ್ಕೆ ಪತ್ರ ಬರೆದಿದ್ದರು. +ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಚುನಾವಣಾ ಆಯೋಗ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಡಿ.ಕೆ.ಸುರೇಶ್ ಉಲ್ಲಂಘಿಸಿದ್ದರೆ ತತಕ್ಷಣವೇ ಅವರ ಮೇಲೆ ಸೂಕ್ತವಾದ ಕಾನೂನು ಕ್ರಮವನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಆಯುಕ್ತರು ಸೂಚನೆ ಕೊಟ್ಟಿದ್ದಾರೆ. +ಕಳೆದ 21ರಂದು ಆಯೋಗಕ್ಕೆ ಪತ್ರ ಬರೆದಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಭ್ರಷ್ಟಾಚಾರ ಚಟುವಟಿಕೆಗಳು ನಡೆಯುತ್ತಿವೆ. ಮತದಾರರಿಗೆ ಉಚಿತ ಉಡುಗೊರೆಗಳನ್ನು ಹಂಚುತ್ತಿದ್ದಾರೆ. ಈ ಕುರಿತು ನಾವು ಪತ್ರ ಬರೆದರೂ ಚುನಾವಣಾಧಿಕಾರಿಗಳು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು. +ಅಲ್ಲದೆ ಈ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಚುನಾವಣಾಕಾರಿಗಳನ್ನು ತತಕ್ಷಣವೇ ವರ್ಗಾವಣೆಗೊಳಿಸಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಕ್ರಮ ತೆಗೆದುಕೊಳ್ಳಬೇಕೆಂದು ಗೌಡರು ಪತ್ರದಲ್ಲಿ ಮನವಿ ಮಾಡಿದ್ದರು. +ಈ ಕ್ಷೇತ್ರದಿಂದ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಸ್ರ್ಪಧಿಸಲಿದ್ದು, ಅವರ ಮೇಲೆ ಕ್ರಮ ಜರುಗಿಸಲು ಸ್ಥಳೀಯ ಅಧಿಕಾರಿಗಳು ಹಿಂದೆಮುಂದೆ ನೋಡುತ್ತಿದ್ದಾರೆ ಎಂದು ಆಪಾದಿಸಲಾಗಿತ್ತು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಆಯೋಗ ಡಿ.ಕೆ.ಸುರೇಶ್ ವಿರುದ್ದ ಕೇಳಿಬಂದಿರುವ ಆರೋಪಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದೆ. \ No newline at end of file diff --git a/eesanje/url_46_195_3.txt b/eesanje/url_46_195_3.txt new file mode 100644 index 0000000000000000000000000000000000000000..52eb53a75e920277079e1a7b2f5fa50a72c50de4 --- /dev/null +++ b/eesanje/url_46_195_3.txt @@ -0,0 +1,6 @@ +ಕೋಲಾರದಲ್ಲಿ ಕಾಂಗ್ರೆಸ್ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಿಕೊಂಡು ಬರುತ್ತೇವೆ : ಕೆ.ಎಚ್.ಮುನಿಯಪ್ಪ +ಬೆಂಗಳೂರು,ಮಾ.26– ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಕಗ್ಗಂಟು ಇನ್ನೂ ಇತ್ಯರ್ಥಗೊಂಡಿಲ್ಲ. ಈ ನಡುವೆ ಸಚಿವ ಕೆ.ಎಚ್.ಮುನಿಯಪ್ಪ ಯಾರಿಗೇ ಟಿಕೆಟ್ ಕೊಟ್ಟರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ನಾವು ಹೈಕಮಾಂಡ್‍ಗೆ ನೀಡಿದ್ದೇವೆ, ಅದಕ್ಕೆ ಬದ್ದರಾಗಿರುತ್ತೇವೆ ಎಂದು ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನಾನು 7 ಬಾರಿ ಗೆಲುವು ಸಾಧಿಸಿದ್ದೆ. ಅಲ್ಲಿ ಈ ಬಾರಿ ಬಿ.ಎಸ್.ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರ ಕೂಡ ಕಾಂಗ್ರೆಸ್‍ನ ಭದ್ರಕೋಟೆ. ಇಲ್ಲಿ ಡಾ.ಎಂ.ಸಿ.ಸುಧಾಕರ್ ಉಸ್ತುವಾರಿ ಸಚಿವರಾಗಿದ್ದಾರೆ. ನಾನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಯಾಗಿದ್ದೇನೆ. +ಸಾಮಾನ್ಯವಾಗಿ ಇದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದು ನಮ್ಮ ಮೂವರು ಸಚಿವರ ಜವಾಬ್ದಾರಿಯಾಗಿದೆ ಎಂದರು. ಇತ್ತೀಚೆಗೆ ಪಕ್ಷದ ವರಿಷ್ಠ ನಾಯಕರ ಸಭೆಯಲ್ಲಿ ನಾವು ಭಾಗವಹಿಸಿದ್ದು, ಎಲ್ಲರ ಅಭಿಪ್ರಾಯವನ್ನೂ ಹೇಳಿದ್ದೇವೆ. ಯಾರನ್ನೇ ಅಭ್ಯರ್ಥಿ ಮಾಡಿದರೂ ಕಾಂಗ್ರೆಸ್ ಗೆಲ್ಲಿಸುವ ವಾಗ್ದಾನ ಮಾಡಿದ್ದೇವೆ. ಅಭ್ಯರ್ಥಿಯ ಆಯ್ಕೆಯ ಹೊಣೆಗಾರಿಕೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಬಿಡಲಾಗಿದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆಂದು ತಿಳಿಸಿದರು. +ನಾನು ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತೇವೆ. ಆದ್ಯತೆ ಮೇರೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ ಎಂದು ಹೇಳಿದರು.ರಾಜ್ಯದಲ್ಲಿರುವ 5 ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ಸಾಮಾನ್ಯವಾಗಿ 2 ಬಲಗೈ ಹಾಗೂ ಇನ್ನೆರೆಡು ಎಡಗೈ ಸಮುದಾಯಕ್ಕೆ ಹಂಚಿಕೆ ಮಾಡಿ, ಒಂದು ಸ್ಥಾನವನ್ನು ಬೋವಿ ಅಥವಾ ಲಂಬಾಣಿಗೆ ನೀಡುವುದು ಸಂಪ್ರದಾಯ. +ಈ ಬಾರಿ ಮೂರೂ ಕ್ಷೇತ್ರಗಳನ್ನು ಬಲಗೈ ಸಮುದಾಯಕ್ಕೆ ನೀಡಲಾಗಿದೆ. ಎರಡು ಕ್ಷೇತ್ರಗಳಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡುವ ಸಾಧ್ಯತೆಯಿದೆ.ಯಾರಿಗೇ ಟಿಕೆಟ್ ಕೊಟ್ಟರೂ ನಾವು ಅದನ್ನು ಒಪ್ಪಿಕೊಳ್ಳುತ್ತೇವೆ. ಕಾಂಗ್ರೆಸ್ ಅನ್ನು ಗೆಲ್ಲಿಸುತ್ತೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. \ No newline at end of file diff --git a/eesanje/url_46_195_4.txt b/eesanje/url_46_195_4.txt new file mode 100644 index 0000000000000000000000000000000000000000..39a054e4801994768765b16beb1650e320d8af45 --- /dev/null +++ b/eesanje/url_46_195_4.txt @@ -0,0 +1,4 @@ +ಚುನಾವಣೆ ಪ್ರಚಾರಕ್ಕೂ ಮುನ್ನ ಡಿಕೆಶಿ ಟೆಂಪಲ್ ರನ್ +ಬೆಂಗಳೂರು,ಮಾ.26-ಲೋಕಸಭಾ ಚುನಾವಣೆ ಪ್ರಚಾರಕ್ಕೂ ಮುನ್ನ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೇವಸ್ಥಾನಗಳ ಭೇಟಿಗೆ ಮುಂದಾಗಿದ್ದಾರೆ. ಇಂದು ಬೆಳಿಗ್ಗೆ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ, ಶ್ರೀ ಅಣ್ಣಪ್ಪ ದೇವರ ದರ್ಶನ ಪಡೆದ ಬಳಿಕ ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿಯ ಶಾರದಾಂಬೆ, ಗೌರಿಗದ್ದೆಯ ವಿನಯ್ ಗುರೂಜಿ ಆಶ್ರಮ, ಸಂಜೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. +ನಾಳೆ ಕುಮುಟಾದ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ, ಮೈಸೂರಿನ ಚಾಮುಂಡೇಶ್ವರಿ ಅದಕ್ಕೂ ಮೊದಲು ಕಬ್ಬಾಳಮ್ಮ, ಕೆಂಕೇರಮ್ಮ ದೇವಸ್ಥಾನಗಳಿಗೆ ದಿಢೀರ್ ಭೇಟಿ ನೀಡುತ್ತಿದ್ದಾರೆ.ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನದು ಧರ್ಮಯುದ್ಧ ಪ್ರಾರಂಭವಾಗುತ್ತಿದೆ. ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಖಂಡಿತ ಫಲ ಸಿಗುತ್ತದೆ. ನಾನು ಧರ್ಮವನ್ನು ನಂಬುತ್ತೇನೆ. ನಮ್ಮ ನಂಬಿಕೆಗಳ ಮೇಲೆ ಬದುಕುತ್ತೇವೆ ಎಂದರು. +ಎಲ್ಲರೂ ಮಾಡುವುದು ನೆಮ್ಮದಿ, ಶಾಂತಿಗಾಗಿ. ಹೀಗಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ನಾನು ನನ್ನ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.ಈ ಮೊದಲು ವಿಧಾನಸಭಾ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಧರ್ಮಸ್ಥಳಕ್ಕೆ ಬಂದು ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ಅದಕ್ಕೆ ತಕ್ಕ ಹಾಗೆ ಶಕ್ತಿ ಬಂದಿದೆ ಎಂದರು. \ No newline at end of file diff --git a/eesanje/url_46_195_5.txt b/eesanje/url_46_195_5.txt new file mode 100644 index 0000000000000000000000000000000000000000..33a704388c428df3469d0548ddc8171e53f49f4b --- /dev/null +++ b/eesanje/url_46_195_5.txt @@ -0,0 +1,5 @@ +ಕಾಂಗ್ರೆಸ್‍ಗೆ ಈ ಬಾರಿ ಜನ ಶಾಶ್ವತ ಮೋಕ್ಷ ನೀಡುವುದು ಗ್ಯಾರಂಟಿ : ಆರ್.ಅಶೋಕ್ +ಬೆಂಗಳೂರು,ಮಾ.26-ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಪಾಠ ಕಲಿಯದ ಕಾಂಗ್ರೆಸ್‍ಗೆ ಈ ಬಾರಿ ಶಾಶ್ವತವಾದ ಮೋಕ್ಷ ಕಾಣಿಸುವುದು ಕಟ್ಟಿಟ್ಟ ಬುತ್ತಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಿಸಿದ್ದಾರೆ. +ತಮ್ಮ ಅಧಿಕೃತ ಖಾತೆ ಎಕ್ಸ್‍ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. ಮೋದಿ ಮೋದಿ ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ. 2014 ಮತ್ತು 2019ರಲ್ಲಿ ದೇಶದ ಜನರು ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಇನ್ನು ಪಾಠ ಕಲಿತಿಲ್ಲ ಎಂದಿದ್ದಾರೆ. +ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ ಎಂದು ಟೀಕಿಸಿದೆ. +ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. 'ಮೋದಿ ಮೋದಿ' ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ.ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ.2014 ಮತ್ತು 2019 ರಲ್ಲಿ ಈ ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ…../7bFMUR1aFj \ No newline at end of file diff --git a/eesanje/url_46_195_6.txt b/eesanje/url_46_195_6.txt new file mode 100644 index 0000000000000000000000000000000000000000..5362885c57c9d22e1172d73be0842ca218fc6953 --- /dev/null +++ b/eesanje/url_46_195_6.txt @@ -0,0 +1,14 @@ +ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳಿಸುತ್ತಾರಾ ಜನಾರ್ದನ ರೆಡ್ಡಿ..? +ಬೆಂಗಳೂರು,ಮಾ.26-ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದಾಗ ರಾಜ್ಯ ಬಿಜೆಪಿಗೆ ದೊಡ್ಡಮಟ್ಟದ ಡ್ಯಾಮೇಜ್ ಆಗಿತ್ತು. ಅದೇ ರೀತಿಯ ದೊಡ್ಡ ಮಟ್ಟದ ಡ್ಯಾಮೇಜ್ ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದಾಗ ಆಗದೇ ಇದ್ದರೂ, ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವಲ್ಲಿ ಸಫಲವಾಗಿತ್ತು. +ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳ ಘೋಷಣೆ ಜೊತೆಗೆ ಜನಾರ್ದನ ರೆಡ್ಡಿ ಪಕ್ಷವೂ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದ್ದು, ಈಗ ರೆಡ್ಡಿ ಪಕ್ಷ ಬಿಜೆಪಿಯ ಜೊತೆ ವಿಲೀನವಾಗಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಆಗಬಹುದಾಗಿದ್ದ ಹಿನ್ನಡೆ ತದಂತಾಗಿದೆ ಎನ್ನುವ ಲೆಕ್ಕಾಚಾರ ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ. +ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಮತಗಳ ವಿಭಜನೆಯಾಗುವುದನ್ನು ತಡೆಯುವ ಮಾಸ್ಟರ್ ಪ್ಲಾನ್‍ನ ಭಾಗವಾಗಿ ಜನಾರ್ದನರೆಡ್ಡಿ ಘರ್ ವಾಪ್ಸಿ ಮಾಡಿಸುವಲ್ಲಿ ಬಿಜೆಪಿ ಸಫಲವಾಗಿದೆ. ಬಳ್ಳಾರಿ, ಕೊಪ್ಪಳ, ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಬಲವನ್ನು ಮತ್ತಷ್ಟು ಹೆಚ್ಚುವಂತೆ ಮಾಡುವಲ್ಲಿಯೂ ಸಕ್ಸಸ್ ಆಗಿದೆ. +ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿದ್ದ ಕೆಆರ್‍ಪಿಪಿ:ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯದ ನಿರ್ಬಂಧವಿದುದ್ದರಿಂದ ಕೊಪ್ಪಳದ ಗಂಗಾವತಿ ಕ್ಷೇತ್ರವನ್ನು ತಮ್ಮ ಕರ್ಮಭೂಮಿಯಾಗಿಸಿಕೊಂಡು ವಿಧಾನಸಭಾ ಚುನಾವಣಾ ಕಣಕ್ಕಿಳಿದರು. 224 ಕ್ಷೇತ್ರಗಳಲ್ಲಿ 46 ಕ್ಷೇತ್ರಗಳಿಗೆ ಮಾತ್ರ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲುವ ಜೊತೆಗೆ ಹಾಲಿ ಬಿಜೆಪಿ ಶಾಸಕರಾಗಿದ್ದ ಪರಣ್ಣ ಮುನವಳ್ಳಿ ಅವರನ್ನು 3ನೇ ಸ್ಥಾನಕ್ಕೆ ತಳ್ಳಿದ್ದರು. ಪಕ್ಷ ಒಂದೇ ಸ್ಥಾನ ಗೆದ್ದರೂ ಪತ್ನಿ ಲಕ್ಷ್ಮಿ ಅರುಣಾ ಸ್ರ್ಪಧಿಸಿದ್ದ ಬಳ್ಳಾರಿ ನಗರ ಕ್ಷೇತ್ರದಲ್ಲಿ 48577 ಮತ ಪಡೆದು ಎರಡನೇ ಸ್ಥಾನಗಳಿಸಿದರು. ಇಲ್ಲೂ ಬಿಜೆಪಿಗೆ 3ನೇ ಸ್ಥಾನ ದಕ್ಕುವಂತಾಯಿತು. +ಹುನಗುಂದದಲ್ಲಿ 33790, ಸಂಡೂರಿನಲ್ಲಿ 31375, ಲಿಂಗಸಗೂರಿನಲ್ಲಿ 13764, ನಾಗಠಾಣದಲ್ಲಿ 10770 ಮತಗಳನ್ನು ಪಡೆದು ಬಿಜೆಪಿಯ ಕೆಲ ಅಭ್ಯರ್ಥಿಗಳ ಸೋಲಿಗೂ ಕಾರಣವಾಗಿತ್ತು. ಇನ್ನು ಹರಪನಹಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಎಂ ಪಿ ಲತಾ ಮಲ್ಲಿಕಾರ್ಜುನ್ ಅವರು ಜನಾರ್ದನ ರೆಡ್ಡಿ ಅವರ ಇನ್ನೊಬ್ಬ ಸಹೋದರ ಜಿ.ಕರುಣಾಕರ ರೆಡ್ಡಿ(ಬಿಜೆಪಿ) ವಿರುದ್ಧ 13845 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಲತಾ ಮಲ್ಲಿಕಾರ್ಜುನ್‍ಗೆ ಕೆಆರ್‍ಪಿಪಿ ಬೆಂಬಲ ನೀಡಿತ್ತು ಎಂಬ ಮಾತುಗಳು ಕೇಳಿ ಬಂದಿದ್ದವು. +ರೆಡ್ಡಿ ಕಾರಣದಿಂದಾಗಿಯೇ ಅವರ ಆಪ್ತ ಸ್ನೇಹಿತ ಬಿ.ಶ್ರೀರಾಮುಲು, ಸಹೋದರರಾದ ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ, ರಾಮುಲು ಅಳಿಯ ಸುರೇಶ್ ಬಾಬು ಸೋತಿದ್ದು, ರೆಡ್ಡಿ ಸ್ಥಾಪಿತ ಕೆಆರ್‍ಪಿಪಿ ಪಕ್ಷ ಕನಿಷ್ಠ 8-10 ಕ್ಷೇತ್ರಗಳಲ್ಲಿ ಬಿಜೆಪಿಗೆ ಡ್ಯಾಮೇಜ್ ಮಾಡಿತ್ತು ಎನ್ನಲಾಗಿದೆ. +ಕೆಆರ್‍ಪಿಪಿ ವಿಲೀನದಿಂದ ಬಿಜೆಪಿಗೆ ಬಲ:ಇದೀಗ ಪಕ್ಷದ ಏಕೈಕ ಶಾಸಕ ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿ ತನ್ನ ಬೆಂಬಲಿಗರ ಜೊತೆಗೆ ಬಂದಿದ್ದಾರೆ. ಸಹಜವಾಗಿ ಕಲ್ಯಾಣ ಕರ್ನಾಟಕ ವಿಶೇಷವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯ ಚಟುವಟಿಕೆ ಚುರುಕಾಗಿದ್ದ ಕ್ಷೇತ್ರಗಳಲ್ಲಿ ಬಿಜೆಪಿಗೆ ಹೆಚ್ಚಿನ ಬಲ ಸಿಕ್ಕಂತಾಗಲಿದೆ. +ಕಲ್ಯಾಣ ಕರ್ನಾಟಕದಲ್ಲಿ ಗಮನ ಕೇಂದ್ರೀಕರಿಸಿ ಜನಾರ್ದನ ರೆಡ್ಡಿ ರಾಜಕಾರಣ ಮಾಡುತ್ತಿದ್ದು, 20-30 ವಿಧಾನಸಭೆ ಕ್ಷೇತ್ರಗಳಲ್ಲಿ ನಿಕಟ ಸಂಪರ್ಕ ಹೊಂದಿದ್ದಾರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಕ್ಷೇತ್ರದಲ್ಲಿ ಪ್ರಭಾವ ಹೊಂದಿದ್ದಾರೆ, ಈ ಭಾಗಗಳಲ್ಲಿ ಅವರ ವರ್ಚಸ್ಸಿನಿಂದ ಬಿಜೆಪಿಗೆ ಲಾಭ ಆಗಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಿ ಪರ ಲಿಂಗಾಯತ, ಅಹಿಂದ ಮತ ಕ್ರೋಢೀಕರಣಗೊಂಡಿದ್ದವು, ವಿಧಾನಸಭೆಯಲ್ಲಿ ಜನಾರ್ದನ ರೆಡ್ಡಿ ನಿರ್ಲಕ್ಷಿಸಿ ಬೆಲೆ ತೆತ್ತಿದ್ದನ್ನು ಬಿಜೆಪಿ ನಾಯಕರು ಮರೆತಿಲ್ಲ. ಹಾಗಾಗಿ ಜನಾರ್ದನ ರೆಡ್ಡಿ ಅಸ್ತ್ರದೊಂದಿಗೆ ಕಲ್ಯಾಣ ಕರ್ನಾಟಕದಲ್ಲಿ ಪಾರಮ್ಯ ಮೆರೆಯಲು ಬಿಜೆಪಿ ರೆಡ್ಡಿ ಅವರನ್ನು ಕರೆ ತಂದಿದೆ ಎನ್ನಲಾಗುತ್ತಿದೆ. +ಸದ್ಯ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಕ್ಷೇತ್ರಗಳು ಬರಲಿದ್ದು, ಈ ಭಾಗದಲ್ಲಿ ಎಲ್ಲ ಕಡೆ ಜನಾರ್ದನ ರೆಡ್ಡಿಗೆ ಬೆಂಬಲಿಗರು ಇದ್ದರೂ ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿಯಲ್ಲಿ ನಿರ್ಣಾಯಕ ಪಾತ್ರ ವಹಿಸುವಷ್ಟರ ಮಟ್ಟಿಗೆ ರೆಡ್ಡಿ ಹಿಡಿತ ಇದೆ. ಹಾಗಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿಗೆ ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ದೊಡ್ಡ ಮಟ್ಟದ ಧನಾತ್ಮಕ ಅಂಶವಾಗಿದೆ ಎನ್ನಲಾಗುತ್ತಿದೆ. +ರಾಮ ಜನ್ಮಭೂಮಿ ಆಂದೋಲನದಲ್ಲಿ ರೆಡ್ಡಿ:ರಾಮಜನ್ಮಭೂಮಿ ಆಂದೋಲನದ ಮೂಲಕ ಜನಾರ್ದನ ರೆಡ್ಡಿ ಬಿಜೆಪಿ ಜೊತೆ ಗುರುತಿಸಿಕೊಂಡರು. 1999ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸುಷ್ಮಾ ಸ್ವರಾಜ್ ಸ್ರ್ಪಧಿಸಿದಾಗ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ರಾಜಕೀಯವಾಗಿ ಮುನ್ನಲೆಗೆ ಬಂದರು. 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಲ್ಲಿ ಪಾತ್ರ ವಹಿಸಿದರು. +ನಂತರ 2008ರಲ್ಲಿ ಬಿಜೆಪಿ 110 ಸ್ಥಾನ ಗಳಿಸಿದಾಗ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಬಳ್ಳಾರಿಯ ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸೆಪ್ಟೆಂಬರ್ 2011ರಲ್ಲಿ ಸಿಬಿಐ ಬಂಧಿಸಿದಾಗಿನಿಂದ, ರೆಡ್ಡಿ ಅವರಿಂದ ಬಿಜೆಪಿ ದೂರವಿತ್ತು. +2015ರಿಂದ ಜಾಮೀನಿನ ಮೇಲೆ ಹೊರಗಿದ್ದು, 2018ರಲ್ಲಿ ಮತ್ತು 2023ರ ಅಸೆಂಬ್ಲಿ ಚುನಾವಣೆಯ ಮೊದಲು ಬಿಜೆಪಿಗೆ ಮರಳಲು ಪ್ರಯತ್ನಿಸಿದರು. ಅವರ ಪ್ರಯತ್ನಗಳು ವಿಫಲವಾದ ನಂತರ 2022ರಲ್ಲಿ ಸ್ವತಂತ್ರ ಪಕ್ಷ ಪ್ರಾರಂಭಿಸಿದ್ದರು. ಕೇವಲ 15 ತಿಂಗಳಿಗೆ ಬಿಜೆಪಿ ಜೊತೆ ಪಕ್ಷವನ್ನು ವಿಲೀನಗೊಳಿಸಿದ್ದಾರೆ. +ಸ್ವತಃ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರೇ ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆಯಿಂದಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಶಕ್ತಿ ಹೆಚ್ಚಿದಂತಾಗಿದೆ ಎಂದು ಹೇಳಿದ್ದಾರೆ. ರೆಡ್ಡಿ ಪರಮಾತ್ಮ ಶ್ರೀರಾಮುಲು ಕೂಡ ಪಕ್ಷಕ್ಕೆ ಬಾಹುಬಲಿಯ ಬಲ ಸಿಕ್ಕಿದೆ ಎಂದಿದ್ದಾರೆ. ಈ ಬಾರಿ ಬಳ್ಳಾರಿಯಲ್ಲಿ ಶ್ರೀರಾಮುಲು ಅಭ್ಯರ್ಥಿಯಾಗಿದ್ದು, ಅವರ ಗೆಲುವಿಗೆ ರೆಡ್ಡಿ ಸಾಕಷ್ಟು ಶ್ರಮಿಸುವುದು ಸುಳ್ಳಲ್ಲ. ಇದರ ಜೊತೆಗೆ ಬೀದರ್ ಅಭ್ಯರ್ಥಿ ಭಗವಂತ ಖೂಬಾ, ಕೊಪ್ಪಳ ಅಭ್ಯರ್ಥಿ ಬಸವರಾಜ ಕ್ಯಾವಟೂರ್, ಕಲಬುರಗಿ ಉಮೇಶ್ ಜಾಧವ್ ಗೆಲ್ಲಲು ಸಹಕಾರ ನೀಡಲಿದ್ದು ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. \ No newline at end of file diff --git a/eesanje/url_46_195_7.txt b/eesanje/url_46_195_7.txt new file mode 100644 index 0000000000000000000000000000000000000000..667f6eac3fc7006e0602025d106d1eb5ecbbc4ae --- /dev/null +++ b/eesanje/url_46_195_7.txt @@ -0,0 +1,5 @@ +ಸುರಪುರ ಉಪಚುನಾವಣೆ : ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ +ಬೆಂಗಳೂರು,ಮಾ.26-ಶಾಸಕ ರಾಜವೆಂಕಟಪ್ಪ ನಾಯಕ್ ನಿಧನದಿಂದ ತೆರವಾಗಿದ್ದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ರಾಜುಗೌಡ ನಾಯಕ್‍ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ್ದು, ಮತ್ತೊಮ್ಮೆ ರಾಜುಗೌಡ ನಾಯಕ್‍ಗೆ ಮಣೆ ಹಾಕಿದೆ. +ಮೇ 7ರಂದು ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಕಳೆದ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ವೆಂಕಟಪ್ಪ ನಾಯಕ್ ವಿಜೇತರಾಗಿದ್ದರು. ಆದರೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಕೆಲ ದಿನಗಳ ಹಿಂದೆ ನಿಧನರಾಗಿದ್ದರು. ತೆರವಾಗಿದ್ದ ಈ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‍ನಿಂದ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಟಿಕೆಟ್ ಘೋಷಣೆ ಮಾಡಲಾಗಿದೆ. +ಬಿಜೆಪಿ, ಕಾಂಗ್ರೆಸ್ ನೇರ ಪೈಪೋಟಿ:ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಇದು ತಮ್ಮ ಕೊನೆಯ ಚುನಾವಣೆ. ಸೇವೆ ಸಲ್ಲಿಸಲು ಅವಕಾಶ ನೀಡಿ ಎಂದು ಎಂದು ವೆಂಕಟಪ್ಪ ನಾಯಕ ಪ್ರಚಾರ ಮಾಡಿದ್ದರು.25 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷ ಗೆದ್ದಿತ್ತು. ಸಚಿವರಾಗಬೇಕೆನ್ನುವ ಆಸೆ ಇತ್ತು. +ಪಕ್ಷದ ನಿಷ್ಠರಾಗಿದ್ದ ಅವರು ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಫೆಬ್ರುವರಿ 25ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರುನಾಲ್ಕು ಬಾರಿ ಸುರಪುರ ಮತಕ್ಷೇತ್ರದಿಂದ ಆಯ್ಕೆಯಾಗಿದ್ದರು. \ No newline at end of file diff --git a/eesanje/url_46_195_8.txt b/eesanje/url_46_195_8.txt new file mode 100644 index 0000000000000000000000000000000000000000..8f6bbe59c9b3b5e80988e1b63804fd8c2dceb0d9 --- /dev/null +++ b/eesanje/url_46_195_8.txt @@ -0,0 +1,6 @@ +ಸಿದ್ದರಾಮಯ್ಯ ಸರ್ಕಾರಕ್ಕೆ ಬೊಮ್ಮಾಯಿ ಸವಾಲ್ +ಹುಬ್ಬಳ್ಳಿ,ಮಾ.26– ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್‍ಡಿಆರ್‍ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ. +ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್‍ಗೆ ಹೋಗಿದ್ದಾರೆ. ಇದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು ಯುಪಿಎ ಅವಧಿಯಲ್ಲಿ ಹಾಗೂ ಎನ್‍ಡಿಎ ಅವಧಿಯಲ್ಲಿ ಎನ್‍ಡಿ ಆರ್‍ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು. +ಇದೇ ವೇಳೆ ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇನ್ನು ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಪರೋಕ್ಷವಾಗಿ ಕಾಂಗ್ರೆಸ್‍ಗೆ ಕಪಾಳಕ್ಕೆ ಹೊಡೆಯುತ್ತಾರೆ ಎಂದು ಹೇಳಿದರು. +ಇನ್ನು ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತಿದೆ. ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ.ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲ ಕಡೆ ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ. ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರವಾಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದರು. +ರೆಡ್ಡಿ ಬಲ:ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದು ಅವರು ಹೇಳಿದರು. ಇನ್ನು ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರ ಅನುಭವದ ಮಾತು ಎಂದು ಲಾಡ್‍ಗೆ ತಿರುಗೇಟು ನೀಡಿದರು. \ No newline at end of file diff --git a/eesanje/url_46_195_9.txt b/eesanje/url_46_195_9.txt new file mode 100644 index 0000000000000000000000000000000000000000..8135b5a89abbf8750adf6dd96a7897c4f55981cc --- /dev/null +++ b/eesanje/url_46_195_9.txt @@ -0,0 +1,4 @@ +ಏರಿದ ಬಿಸಿಲಿನ ತಾಪ, ತಂಪು ಪಾನೀಯಗಳಿಗೆ ಹೆಚ್ಚಿದ ಡಿಮ್ಯಾಂಡ್ +ಮಾಲೂರು, ಮಾ.25-ಬೇಸಿಗೆಕಾಲ ಆರಂಭವಾಗಿದ್ದು ಪಟ್ಟಣದಲ್ಲಿ ಜನತೆ ಬಿಸಿಲಿನ ಝಳದಿಂದ ತತ್ತರಿಸಿ ಹೋಗಿದ್ದಾರೆ ಬಿಸಿಲಿನ ದಾಹವನ್ನು ತೀರಿಸಿಕೊಳ್ಳಲು ಕಲ್ಲಂಗಡಿ, ಕಬ್ಬಿನ ಹಾಲು , ಎಳನೀರು ಸೇರಿದಂತೆ ತಂಪು ಪಾನೀಯಗಳನ್ನೂ ಹುಡುಕಿಕೊಂಡು ಹೋಗಿ ಬಿಸಿಲಿನ ದಣಿವು ತೀರಿಸಿಕೊಳ್ಳುತ್ತಿದ್ದಾರೆ . +ಏಪ್ರಿಲ್ ,ಮೇ ತಿಂಗಳಲ್ಲಿ ಬಿಸಿಲಿನ ಜಳ ಹೆಚ್ಚಾಗಿರುತ್ತದೆ ಆದರೆ ಪ್ರಸಕ್ತ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ಬೇಸಿಗೆಯ ಜಳ ಹೆಚ್ಚಾಗಿದ್ದು ಪ್ರತಿನಿತ್ಯ ಮಧ್ಯಾಹ್ನದ ವೇಳೆ ಹೆಚ್ಚಿನ ತಾಪಮಾನ ವಿದ್ದು ಸಾರ್ವಜನಿಕರು ಬಿಸಿಲಿನ ಜಳಕ್ಕೆ ತತ್ತರಿಸಿ ಹೋಗುತ್ತಾರೆ ಬಿಸಿಲಿನ ದಾಹ ದಣಿವು ತೀರಿಸಿಕೊಳ್ಳಲು ಕಲ್ಲಂಗಡಿ, ಕಬ್ಬಿನ ಹಾಲು ಎಳನೀರು ಸೇರಿದಂತೆ ತಂಪು ಪಾನೀಯಗಳ ಮೊರೆ ಹೋಗುತ್ತಿದ್ದಾರೆ ಮಧ್ಯಾಹ್ನದ ವೇಳೆ ಸುಡು ಬಿಸಿಲಿನಿಂದಾಗಿ ಸಾರ್ವಜನಿಕರ ಓಡಾಟ ಕಡಿಮೆ ಇರುತ್ತದೆ ಕೆಲವು ಅಂಗಡಿ ಮುಂಗಟ್ಟುಗಳು ಸಂಜೆಯವರೆಗೆ ಮುಚ್ಚಿರುತ್ತಾರೆ. +ಮಾರ್ಚ್ ತಿಂಗಳಿನಲ್ಲಿ ಇಷ್ಟೊಂದು ಬಿಸಿಲಿನ ಝಳ ಇದ್ದರೆ ಏಪ್ರಿಲ್ , ಮೇ ತಿಂಗಳಿನಲ್ಲಿ ಬಿಸಿಲಿನ ಜಳ ಹೇಗಿರುತ್ತದೆ ಎಂದು ಸಾರ್ವಜನಿಕರ ಮಾತನಾಡಿ ಕೊಳ್ಳುತ್ತಾರೆ ಇಂತಹ ಸುಡು ಬಿಸಿಲಿನಲ್ಲಿ ಮತಯಾಚನೆ ಮಾಡುವುದು ಹೇಗೆ ಎಂಬುದು ರಾಜಕಾರಣಿಗಳ ಗೊಂದಲವಾಗಿದೆ. \ No newline at end of file diff --git a/eesanje/url_46_196_1.txt b/eesanje/url_46_196_1.txt new file mode 100644 index 0000000000000000000000000000000000000000..e1ddc73c9a96c930289833432e99050e8c725eb8 --- /dev/null +++ b/eesanje/url_46_196_1.txt @@ -0,0 +1,8 @@ +ಸುಮಲತಾ ಮುಂದಿನ ನಡೆಯೇನು..? ಸಚಿವ ಚೆಲುವರಾಯಸ್ವಾಮಿ ಹೇಳಿದ್ದೇನು..? +ಮಂಡ್ಯ, ಮಾ.25-ಮಾಜಿ ಸಂಸದೆ ಸುಮಲತಾ ಅವರನ್ನು ಈ ಹಿಂದೆ ಕಾಂಗ್ರೆಸ್‍ಗೆ ಬರುವಂತೆ ಆಹ್ವಾನ ನೀಡಲಾಗಿತ್ತು. ಆದರೆ ಆಗ ಅವರು ನಾನೇಕೆ ಆ ಪಕ್ಷಕ್ಕೆ ಹೋಗಲಿ ಎಂದು ಹೇಳಿ ನಮಗೆ ಮುಜುಗರ ಉಂಟು ಮಾಡಿದರು. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಎಚ್ಚರಿಕೆಯ ಹೇಳಿಕೆಗಳನ್ನು ನೀಡುವುದಾಗಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. +ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ಆದರೆ ಈವರೆಗೂ ಸುಮಲತಾ ಅವರ ಜೊತೆ ಯಾವುದೇ ಮಾತುಕತೆ ನಡೆದಿಲ್ಲ. ಈ ಹಿಂದೆ ಸುಮಲತಾ ಅವರನ್ನು ಪಕ್ಷಕ್ಕೆ ಕರೆಯುತ್ತೇವೆ ಎಂದು ನಾನೇ ಹೇಳಿಕೆ ನೀಡಿದಾಗ ಸುಮಲತಾ ಅವರು ನೀಡಿದ ಪ್ರತ್ಯುತ್ತರ ನನಗೆ ಮುಜುಗರ ಉಂಟುಮಾಡಿತ್ತು ಎಂದರು. +ಅಂಬರೀಶ್ ಮತ್ತವರ ಕುಟುಂಬದ ಜೊತೆಗೆ ರಾಜಕೀಯ ಹೊರತಾದ ಸೌಹಾರ್ದತೆಯಿದೆ. ಈಗಲೂ ನಾವು ಸುಮಲತಾ ಅವರ ಜೊತೆ ಉಭಯ ಕುಶಲೋಪರಿ ಮಾತನಾಡುತ್ತೇವೆ. ಆದರೆ ರಾಜಕೀಯ ಚರ್ಚೆ ಮಾಡುವುದಿಲ್ಲ. ನಿನ್ನೆಯವರೆಗೂ ಮಂಡ್ಯದಲ್ಲಿ ಸುಮಲತಾ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ನಿನ್ನೆ ಬಿಜೆಪಿ ವರಿಷ್ಠರ ಮಾಹಿತಿ ಪ್ರಕಾರ ಕೋಲಾರ, ಮಂಡ್ಯ, ಹಾಸನವನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗಿದೆ. ಈಗ ಸುಮಲತಾ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ನಮಗೆ ಗೊತ್ತಿಲ್ಲ ಎಂದು ಹೇಳಿದರು. +ಬಿಜೆಪಿಯ ಮಾಜಿ ಶಾಸಕ ನಾರಾಯಣಗೌಡ ಹಾಗೂ ಜೆಡಿಎಸ್‍ನ ಮಾಜಿ ಶಾಸಕರು ಹಾಗೂ ಕೆ.ಆರ್.ಪೇಟೆ ಗಾಂಧಿ ಎಂದೇ ಹೆಸರಾದ ಕೃಷ್ಣ ಅವರ ಹಿಂಬಾಲಕರು ಕಾಂಗ್ರೆಸ್ ಸೇರುವುದು ಖಚಿತವಾಗಿದೆ.ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡರವರು ಕಾಂಗ್ರೆಸ್‍ಗೆ ಮರಳಿ ಬರುವ ಬಗ್ಗೆ ಅಲ್ಲಲ್ಲಿ ಮಾತನಾಡಿದ್ದಾರೆ. ಆದರೆ ನನ್ನ ಜೊತೆ ನೇರವಾದ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. +ಕುಮಾರಸ್ವಾಮಿಯವರು ಮಂಡ್ಯದಿಂದ ಲೋಕಸಭಾ ಅಭ್ಯರ್ಥಿಯಾಗುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ರಾಮನಗರ ದೇವೇಗೌಡರನ್ನು ಒಮ್ಮೆ ಹಾಗೂ ಕುಮಾರಸ್ವಾಮಿಯವರನ್ನು ಎರಡು ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಅಂತಹ ಜಿಲ್ಲೆಯನ್ನು ಬಿಟ್ಟು ಮಂಡ್ಯಕ್ಕೆ ಬರುತ್ತಿದ್ದಾರೆ ಎಂಬ ಬಗ್ಗೆ ಅಸಮಾಧಾನಗಳು ಕೇಳಿಬರುತ್ತಿವೆ. +ಕುಮಾರಸ್ವಾಮಿಯವರು ಎಲ್ಲಾ ಭಾಗಗಳನ್ನೂ ನನ್ನ ಕರ್ಮಭೂಮಿ ಎನ್ನುತ್ತಾರೆ. ಮಧುಗಿರಿ ವಿಧಾನಸಭಾ ಕ್ಷೇತ್ರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳನ್ನು ನನ್ನ ಕರ್ಮಭೂಮಿ ಎನ್ನುತ್ತಾರೆ. ಕೋಲಾರ, ಮೈಸೂರಿನಲ್ಲಿ ಬೇರೆ ರೀತಿ ಇರುತ್ತಾರೆ. ಹುಟ್ಟೂರು ಹಾಸನ ಎನ್ನುತ್ತಾರೆ. ಮಂಡ್ಯ ನನ್ನ ಮೊದಲ ಆದ್ಯತೆ ಎನ್ನುತ್ತಾರೆ. ತುಮಕೂರನ್ನು ಕರ್ಮಭೂಮಿ ಎಂದು ಹೇಳಿಕೊಳ್ಳುತ್ತಾರೆ. ಅವರು ರಾಷ್ಟ್ರನಾಯಕರ ಮಗ. ನಮಗೆ ಅದರ ಬಗ್ಗೆ ಆಕ್ಷೇಪವಿಲ್ಲ. ಅವರು ಎಲ್ಲಿಂದ ಎಲ್ಲಿಗೆ ಬೇಕಾದರೂ ಬಂದು ಭಾಷಣ ಮಾಡಲಿ. ಆದರೆ ಅಭ್ಯರ್ಥಿಯಾಗುವಾಗ ಕಾರ್ಯಕರ್ತರ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು ಎಂದರು. +ಕುಮಾರಸ್ವಾಮಿಯವರು ರಾಮನಗರವನ್ನು ತಿರಸ್ಕಾರ ಮಾಡಿ ಬರುವ ಬಗ್ಗೆ ಮಂಡ್ಯದ ಜನ ಯೋಚಿಸಬೇಕು. ಅದೇ ರೀತಿ ಸ್ಥಳೀಯರು ಕುಮಾರಸ್ವಾಮಿಯವರ ನಿಲುವುಗಳ ಬಗ್ಗೆ ಪರಿಶೀಲನೆ ಮಾಡಬೇಕಾಗುತ್ತದೆ ಎಂದು ಹೇಳಿದರು. ಮಂಡ್ಯದ ಅಭ್ಯರ್ಥಿ ಸ್ಟಾರ್ ಚಂದ್ರು ಏ.1 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದರು.ತಾಲ್ಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಈಗಾಗಲೇ ಸರಣಿ ಸಭೆಗಳನ್ನು ನಡೆಸಿ ಪ್ರಚಾರ ಮಾಡಲಾಗುತ್ತಿದೆ. ರಾಜ್ಯ ಹಾಗೂ ರಾಷ್ಟ್ರ ನಾಯಕರನ್ನು ವಿವಿಧ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗುತ್ತಿದೆ ಎಂದರು. \ No newline at end of file diff --git a/eesanje/url_46_196_10.txt b/eesanje/url_46_196_10.txt new file mode 100644 index 0000000000000000000000000000000000000000..25dfbc9457e9ccf107ac758ee6adadc703a17894 --- /dev/null +++ b/eesanje/url_46_196_10.txt @@ -0,0 +1,7 @@ +ಜನಾರ್ಧನ ರೆಡ್ಡಿ ಮರಳಿಗೂಡಿಗೆ, ನಾಳೆ ಬಿಜೆಪಿ ಮರುಸೇರ್ಪಡೆ +ಬೆಂಗಳೂರು,ಮಾ.24-ಅಕ್ರಮ ಗಣಿಗಾರಿಕೆ ಆರೋಪದ ಹಿನ್ನಲೆಯಲ್ಲಿ ಬಿಜೆಪಿಯಿಂದ ಅಮಾನತುಗೊಂಡಿದ್ದ ಕೆಕೆಪಿಆರ್ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪುನಃ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ನಾಳೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಮತ್ತಿತರ ಪ್ರಮುಖರ ಸಮ್ಮುಖದಲ್ಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ. +ರೆಡ್ಡಿ ಸೇರ್ಪಡೆಗೆ ಖುದ್ದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೇ ಹಸಿರುನಿಶಾನೆ ತೋರಿದ್ದು, ಯಾವುದೇ ಷರತ್ತುಗಳು ಇಲ್ಲದೆ ಪಕ್ಷದ ನಾಯಕತ್ವ ಮತ್ತು ಸಿದ್ದಾಂತಕ್ಕೆ ಬದ್ದವಾಗಿ ಪಕ್ಷ ಸೇರ್ಪಡೆಗೆ ಸಮ್ಮತಿಸಿದ್ದಾರೆ ಎಂದು ಗೊತ್ತಾಗಿದೆ. +ಜನಾರ್ಧನ ರೆಡ್ಡಿ ಪಕ್ಷ ಸೇರ್ಪಡೆಯಿಂದಾಗಿ ಬಳ್ಳಾರಿ, ಕೊಪ್ಪಳ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.ಕಳೆದ ವಾರವಷ್ಟೇ ರೆಡ್ಡಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯ ಇಂಗಿತವನ್ನು ವ್ಯಕ್ತಪಡಿಸಿದರು. ನಾನು ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಬರುತ್ತೇನೆ. ರಾಜ್ಯ ಘಟಕಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದರು. +ಈ ಹಿನ್ನಲೆಯಲ್ಲಿ ಅಮಿತ್ ಷಾ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರ ಜೊತೆ ಮಾತನಾಡಿ, ರೆಡ್ಡಿ ಸೇರ್ಪಡೆಗೆ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸುವಂತೆ ಸೂಚಿಸಿದ್ದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬರಲು ಮುಂದಾಗಿದ್ದ ಜನಾರ್ಧನ ರೆಡ್ಡಿಗೆ ವರಿಷ್ಠರು ಹಸಿರುನಿಶಾನೆ ತೋರಲಿಲ್ಲ. ಅಕ್ರಮ ಗಣಿಗಾರಿಕೆ ಹಿನ್ನಲೆಯಲ್ಲಿ ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಳ್ಳಬಹುದೆಂಬ ಕಾರಣಕ್ಕಾಗಿ ಹಿಂದೇಟು ಹಾಕಿದ್ದರು. +ಆದರೆ ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಜನಾರ್ಧನ ರೆಡ್ಡಿ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದರು. ಒಂದು ವೇಳೆ ಚುನಾವಣಾ ಪ್ರಚಾರದಲ್ಲಿ ರೆಡ್ಡಿ ಪ್ರಕರಣವನ್ನು ಕಾಂಗ್ರೆಸ್ ನಾಯಕರು ಕೆದಕಿದರೆ ತಿರುಗೇಟು ನೀಡಲು ಬಿಜೆಪಿ ಸಜ್ಜಾಗಿದೆ ಎಂದು ತಿಳಿದುಬಂದಿದೆ.ಒಂದು ಕಾಲದಲ್ಲಿ ಕರ್ನಾಟಕದ ರಾಜ್ಯ ರಾಜಕಾರಣದ ದಿಕ್ಕು ದೆಸೆಯನ್ನೆ ತೀರ್ಮಾನಿಸುವ ಹಂತಕ್ಕೆ ಬೆಳೆದಿದ್ದ ಜನಾರ್ಧನ ರೆಡ್ಡಿಯನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ 2011ರ ಸೆಪ್ಟೆಂಬರ್ 5ರಂದು ಬಂಧಿಸಿತ್ತು. +ಈ ಪ್ರಕರಣದ ನಂತರ ರೆಡ್ಡಿ ರಾಜಕೀಯ ಭವಿಷ್ಯವೇ ಮುಳುಗಿ ಹೋಗಿತ್ತು. ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ ಬಳಿಕ ಜೈಲಿನಿಂದ ಆಚೆ ಬಂದ ನಂತರ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಈಗಲೂ ಕೂಡ ಜನಾರ್ಧನ ರೆಡ್ಡಿ ತವರು ಜಿಲ್ಲೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧವಿದೆ. ಇದೀಗ ಬಿಜೆಪಿಗೆ ಆಗಮನವಾಗುತ್ತಿರುವುದರಿಂದ ಬಳ್ಳಾರಿಯಲ್ಲಿ ರಾಜಕೀಯ ಏರಿಳಿತಗಳು ಉಂಟಾಗುವ ಸಂಭವವಿದೆ. \ No newline at end of file diff --git a/eesanje/url_46_196_11.txt b/eesanje/url_46_196_11.txt new file mode 100644 index 0000000000000000000000000000000000000000..15fb51df12e2672d4acd0ea4cae33f7930beec7c --- /dev/null +++ b/eesanje/url_46_196_11.txt @@ -0,0 +1,8 @@ +ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನದ ಭರವಸೆ : ದೇವೇಗೌಡರು +ಬೆಂಗಳೂರು,ಮಾ.24-ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ವಿಚಾರವನ್ನು ಪ್ರಕಟಿಸಬೇಕು. ಈ ಈ ವಿಚಾರದಲ್ಲಿ ಭಯಪಡುವ ಅಗತ್ಯವಿಲ್ಲ. ಮೂರು ಪಕ್ಷಗಳು ಐಕ್ಯತೆಯಿಂದ ಹೋರಾಟ ಮಾಡಿ ಯೋಜನೆ ಅನುಷ್ಠಾನಗೊಳಿಸಬೇಕಿದೆ ಎಂದರು. +ಮೇಕೆದಾಟು ಯೋಜನೆಗೆ ಮಂಜೂರಾತಿ ನೀಡುವಂತೆ ಪ್ರಧಾನಿ ನರೇಂದ್ರಮೋದಿ ಅವರನ್ನು ಕೂಡ ಒತ್ತಾಯಿಸುತ್ತೇನೆ. ಮೇಕೆದಾಟು ಯೋಜನೆ ಕುರಿತ ವಿಸ್ತೃತವಾದ ಪತ್ರವನ್ನು ಪ್ರಧಾನಿ ನರೇಂದ್ರಮೋದಿ ಹಾಗೂ ಕೇಂದ್ರ ಜಲಶಕ್ತಿ ಸಚಿವರಿಗೆ ಬರೆದಿರುವುದಾಗಿ ಅವರು ಹೇಳಿದರು. ಅಕಾರಿಗಳು ಯೋಜನೆ ಬಗ್ಗೆ ಅಧ್ಯಯನ ಮಾಡಿ 30 ಟಿಎಂಸಿ ನೀರು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ. ಹೀಗಾಗಿ ಪ್ರಧಾನಿಗಳು ಮಂಜೂರಾತಿ ನೀಡಬೇಕು ಎಂದರು. +ತಮಿಳುನಾಡಿನ ಮುಖ್ಯಮಂತ್ರಿ ಅವರ ಪಕ್ಷದ ಪ್ರಣಾಳಿಕೆಯಲ್ಲಿ ಯಾವುದೇ ಕಾರಣದಿಂದಲೂ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಕಾವೇರಿ ನದಿಪಾತ್ರದಲ್ಲಿ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳು, 22 ತಾಲ್ಲೂಕುಗಳು ಬರುತ್ತವೆ. ಇವುಗಳ ಕುಡಿಯುವ ನೀರು ಪೂರೈಸಬೇಕಾದ ಅಗತ್ಯವಿದೆ. ಬೆಂಗಳೂರಿನಲ್ಲಿ ಕಳೆದ 5 ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿದೆ. ಬಹಳಷ್ಟು ಜನರು ಬೆಂಗಳೂರಿನ ಮನೆಗಳಿಗೆ ಬೀಗ ಹಾಕಿ ಅವರವರ ಮನೆಗಳಿಗೆ ವಲಸೆ ಹೋಗಿದ್ದಾರೆ. +ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಇಂತಹ ಸಂದರ್ಭದಲ್ಲೇ ತಮಿಳುನಾಡು ಮುಖ್ಯಮಂತ್ರಿ ನೀಡಿರುವ ವಿಚಾರ ಕಠೋರವಾಗಿದೆ ಎಂದು ಹೇಳಿದರು. ಪರಿಸರವಾದಿಗಳು ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ 5 ಸಾವಿರ ಎಕರೆ ಮುಳುಗಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಯೋಜನೆಗೆ 5 ಸಾವಿರ ಎಕರೆ ಅರಣ್ಯಪ್ರದೇಶ ಮುಳುಗಡೆಯಾಗುವುದಿಲ್ಲ ಎಂದರು. +ಎರಡೂ ರಾಜ್ಯಗಳ ಸ್ಥಳೀಯ ವಾಸ್ತವತೆ, ನೀರಿನ ಲಭ್ಯತೆ, ಕುಡಿಯುವ ನೀರು ಹಾಗೂ ಬೆಳೆಗಳಿಗೆ ಬೇಡಿಕೆ ಮೊದಲಾದ ವಾಸ್ತವಿಕತೆಯ ಆಧಾರದ ಮೇಲೆ ಸಂಕಷ್ಟ ಸೂತ್ರವನ್ನು ರೂಪಿಸಲು ಕಾವೇರಿ ನೀರು ನಿರ್ವಹಣಾ ಪ್ರಾಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿಸಿದರು. ಅಲ್ಲದೆ ಎರಡು ರಾಜ್ಯಗಳ ಹಾಗೂ ಐವರು ಪರಿಣಿತರ ಸಮಿತಿಯನ್ನು ಕಳುಹಿಸುವಂತೆ ಈಗಾಗಲೇ ಮನವಿ ಮಾಡಲಾಗಿತ್ತು ಎಂದು ಹೇಳಿದರು. +ಮೇಕೆದಾಟು ಯೋಜನೆ ಕುರಿತಂತೆ ಸಿದ್ದಪಡಿಸಲಾಗಿರುವ ಯೋಜನಾ ವರದಿ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯು, ಕಾವೇರಿ ನೀರು ನಿರ್ವಹಣಾ ಪ್ರಾಕಾರಕ್ಕೆ ತೀರ್ಮಾನ ಕೈಗೊಳ್ಳಲು ವರ್ಗಾಯಿಸಿದೆ. 5 ವರ್ಷ ಕಳೆದರೂ ಇನ್ನು ಯಾವುದೇ ತೀರ್ಮಾನ ಹೊರಬಂದಿಲ್ಲ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನಪರಿಷತ್ ಸದಸ್ಯರಾದ ಭೋಜೇಗೌಡ, ತಿಪ್ಪೇಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್ ಮತ್ತಿರರು ಇದ್ದರು. diff --git a/eesanje/url_46_196_12.txt b/eesanje/url_46_196_12.txt new file mode 100644 index 0000000000000000000000000000000000000000..5c970ce4ae13dd205fcd0cd203acb80062cf8bc5 --- /dev/null +++ b/eesanje/url_46_196_12.txt @@ -0,0 +1,6 @@ +ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಕಣ್ಗಾವಲು ಎಸ್ಸೆಸ್ಸೆಲ್ಸಿ ಪರೀಕ್ಷೆಗೇಕೆ..? : ರೂಪ್ಸಾ ಪ್ರಶ್ನೆ +ಬೆಂಗಳೂರು,ಮಾ.24-ಯಾವುದೇ ದೊಡ್ಡ ಪರೀಕ್ಷೆಗಳಿಲ್ಲದ ಸಿಸಿ ಕ್ಯಾಮೆರಾ ಮತ್ತು ವೆಬ್ ಕ್ಯಾಮೆರಾಗಳು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯ ಮಾಡಿರುವುದು ಏಕೆ ಎಂದು ರೂಪ್ಸಾ ಸಂಘಟನೆ ಪ್ರಶ್ನಿಸಿದೆ. ಈ ಕುರಿತು ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪತ್ರಿಕಾ ಹೇಳಿಕೆ ನೀಡಿದ್ದು, ಶಿಕ್ಷಣ ಇಲಾಖೆ ಹಾಗೂ ಪ್ರೌಢಶಾಲಾ ಪರೀಕ್ಷಾ ಮಂಡಳಿ ಇತ್ತೀಚಿನ ದಿನಗಳಲ್ಲಿ ವಿಚಿತ್ರವಾಗಿ ನಡೆದುಕೊಳ್ಳುತ್ತಿದೆ. +ಐಎಎಸ್, ನೀಟ್, ಜೆಇಇ, ಪಿಯುಸಿ ಇತ್ಯಾದಿ ಯಾವುದೇ ಪರೀಕ್ಷೆಗೆ ಇಲ್ಲದ ಕಣ್ಗಾವಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾಕೆ? ಇಂಥ ಕೆಟ್ಟ ಅಸಂಪ್ರದಾಯಿಕ ಪದ್ಧತಿಗಳನ್ನು ರೂಪಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. +ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕರಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿ ಅವರಿಗೆ ತರಬೇತಿ ಸಹ ನೀಡಲಾಯಿತು. ಅನಂತರ ಪ್ರೌಢಶಾಲಾ ಶಿಕ್ಷಕರನ್ನು ನೇಮಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅವಮಾನಿಸಲಾಯಿತು. ಈಗ ತರಾತುರಿಯಲ್ಲಿ ಹೊಸದಾಗಿ ಸರ್ಕಾರಿ ಅನುದಾನಿತ ಶಾಲಾ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡು ಅವರಿಗೆ ತರಬೇತಿ ನೀಡಿದ್ದಾರೆ. ಆದರೆ ಅನುದಾನ ರಹಿತ ಶಾಲಾ ಶಿಕ್ಷಕರನ್ನು ದೂರ ಇಟ್ಟು ತರಬೇತಿ ಹೆಸರಿನಲ್ಲಿ ಸಾರ್ವಜನಿಕರ ಹಣವನ್ನು ಪೋಲೂ ಮಾಡಿದ್ದಾರೆ ಎಂದು ಹೇಳಿದ್ದಾರೆ. +ಇವರನ್ನು ನಂಬದೇ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸಿ ಅವುಗಳನ್ನು ವೆಬ್ ಲಿಂಕ್‍ಗೆ ಜೋಡಿಸಿ ಸ್ಥಳೀಯ ಪೊಲೀಸ್ ಸ್ಟೇಷನ್ ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕರಿಗೆ ನೇರ ಸಂಪರ್ಕಕ್ಕೆ ಸಿಗುವಂತೆ ಮಾಡುವ ನಿರ್ಧಾರ ಮಾಡಿ ಮೂರು ದಿನದಲ್ಲಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲೇಬೇಕು ಎಂಬ ಮಕ್ಕಳಿಗೆ ಭಯ ಹುಟ್ಟಿಸುವಂತಹ ದುಬಾರಿ ನಿರ್ಣಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮ, ಪರೀಕ್ಷಾ ಕೊಠಡಿಗಳಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ಸೃಷ್ಟಿ ಮಾಡುವ ಬದಲು ದೊಡ್ಡ ಅಪರಾಧ ತಡೆಯುವರಂತೆ ಈ ರೀತಿ ಮಾಡುವ ಕ್ರಮ ಖಂಡನೀಯ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_196_2.txt b/eesanje/url_46_196_2.txt new file mode 100644 index 0000000000000000000000000000000000000000..3c5ff4aaf30d5fca6e1b9f60e35efbeba14268e3 --- /dev/null +++ b/eesanje/url_46_196_2.txt @@ -0,0 +1,9 @@ +ಬಿಜೆಪಿಗೆ ತಲೆನೋವಾದ ದಾವಣಗೆರೆ ಕ್ಷೇತ್ರ: ಬಂಡಾಯ ಅಭ್ಯರ್ಥಿ ಕಣಕ್ಕೆ..? +ಬೆಂಗಳೂರು,ಮಾ.25-ಪ್ರತಿಷ್ಠೆಯ ಕಣವಾಗಿರುವ ಮಧ್ಯಕರ್ನಾಟಕ ರಾಜಧಾನಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಭಿನ್ನಮತೀಯರು ಮುಂದಾಗಿದ್ದಾರೆ. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್ ಇಲ್ಲವೇ ಎಂ.ಪಿ.ರೇಣುಕಾಚಾರ್ಯ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಸಿದ್ದತೆಯನ್ನು ಮಾಡಿಕೊಂಡಿದ್ದು, ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ. +ಏಕೆಂದರೆ ಪುತ್ರನಿಗೆ ಟಿಕೆಟ್ ಸಿಗದ ಕಾರಣ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ದಾವಣಗೆರೆಯಲ್ಲೂ ಇದೇ ಬೆಳವಣಿಗೆ ಕಂಡುಬಂದಿರುವುದು ಬಿಜೆಪಿಗೆ ಮತ್ತಷ್ಟು ಚಿಂತೆಗೀಡು ಮಾಡಿದೆ. ದಾವಣಗೆರೆ ಹಾಲಿ ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ್‍ಗೆ ವಿರೋಧದ ನಡುವೆಯೂ ಟಿಕೆಟ್ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಟಿಕೆಟ್ ವಂಚಿತರು ಅಧಿಕೃತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ವಿರುದ್ಧವೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. +ಮೂಲಗಳ ಪ್ರಕಾರ ಈ ಕ್ಷೇತ್ರದಿಂದ ಮಾಜಿ ಸಚಿವರಾದ ಎಸ್.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಇಲ್ಲವೇ ಡಾ.ರವಿ ಗೌಡರ್ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈಗಾಗಲೇ ಒಂದು ಸುತ್ತಿನ ಸಭೆ ನಡೆಸಿರುವ ಭಿನ್ನಮತೀಯ ನಾಯಕರು ಯಾವುದೇ ಕಾರಣಕ್ಕೂ ಸಂದಾನಕ್ಕೆ ಒಪ್ಪದೇ ಬಂಡಾಯ ಅಭ್ಯರ್ಥಿಯನ್ನೇ ಕಣದಲ್ಲಿ ಮುಂದುವರೆಸಬೇಕೆಂಬ ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ. +ಬಿಎಸ್‍ವೈ ಕಸರತ್ತು:ಬಹುತೇಕ ಟಿಕೆಟ್ ಹಂಚಿಕೆ ಅಂತಿಮ ಘಟ್ಟ ತಲುಪಿದ್ದರೂ ಬಿಜೆಪಿಯಲ್ಲಿ ಹೊತ್ತಿಕೊಂಡಿರುವ ಭಿನ್ನಮತ ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಅದರಲ್ಲೂ ಮಧ್ಯ ಕರ್ನಾಟಕದ ಎರಡು ಪ್ರಮುಖ ಲೋಕಸಭಾ ಕ್ಷೇತ್ರಗಳಾದ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬಂಡಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಧಿಕೃತ ಅಭ್ಯರ್ಥಿಗೆ ತಲೆನೋವಾಗಿ ಪರಿಣಮಿಸಿದೆ. +ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ಘೋಷಣೆಯಾದ ನಂತರ ಅಧಿಕೃತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‍ಗೆ ಟಿಕೆಟ್ ನೀಡಿರುವುದಕ್ಕೆ ಮುನಿಸಿಕೊಂಡಿರುವ ಭಿನ್ನಮತವನ್ನು ಶಮನಗೊಳಿಸಲು ಖುದ್ದು ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಸೋಮವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಮುಖಂಡರ ಜೊತೆ ಸಂಧಾನ ಸಭೆ ನಡೆಸಲು ಕಸರತ್ತು ನಡೆಸಿದರು. ಸಭೆಗೆ ಮಾಜಿ ಸಂಸದ ಸಿದ್ದೇಶ್ವರ್, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ರಾಮಚಂದ್ರ ಸೇರಿದಂತೆ ಮತ್ತಿತರರು ಆಗಮಿಸಿದ್ದರು. +ಆದರೆ ಸಭೆಗೆ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಮತ್ತಿತರರು ಗೈರು ಹಾಜರಾಗಿದ್ದರು. ಸಭೆಗೆ ಎಲ್ಲರೂ ಬರಬೇಕೆಂದು ಖುದ್ದು ಯಡಿಯೂರಪ್ಪನವರೇ ಸೂಚನೆ ಕೊಟ್ಟಿದ್ದರೂ ಅವರ ಆದೇಶವನ್ನು ಕ್ಕರಿಸಿ ದೂರ ಉಳಿದಿದ್ದರು. ಭಿನ್ನಮತ ಎಲ್ಲವೂ ಸರಿ ಹೋಗುತ್ತದೆ ಎಂದು ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಮುಖರ ಗೈರುಹಾಜರಿ ಪಕ್ಷದೊಳಗೆ ಎಲ್ಲವೂ ಸರಿ ಇಲ್ಲ ಎಂಬುದನ್ನು ಸಾರಿ ಹೇಳುತಿತ್ತು. ಹೀಗಾಗಿ ಮಂಗಳವಾರ ಖುದ್ದು ಯಡಿಯೂರಪ್ಪನವರೇ ಮನವೊಲಿಸಲು ದಾವಣಗೆರೆಗೆ ತೆರಳುತ್ತಿದ್ದಾರೆ. +ಇನ್ನೊಂದೆಡೆ ಟಿಕೆಟ್ ವಂಚಿತರಾಗಿರುವ ಕೊಪ್ಪಳದ ಕರಡಿ ಸಂಗಣ್ಣ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಒಂದೆರಡು ದಿನದಲ್ಲಿ ತಮ್ಮ ನಿರ್ಧಾರನ್ನು ಪ್ರಕಟಿಸುತ್ತೇನೆ ಎಂದು ಕರಡಿ ಸಂಗಣ್ಣ ಹೇಳಿರುವುದು ಪಕ್ಷ ಬಿಡುವ ಮುನ್ಸೂಚನೆ ಎಂದು ಹೇಳಲಾಗುತ್ತಿದೆ. +ಮತ್ತೊಂದೆಡೆ ಶಿವಮೊಗ್ಗದಲ್ಲಿ ಬಂಡಾಯ ಸಾರಿರುವ ಈಶ್ವರಪ್ಪ ಯಾರ ಮಾತಿಗೂ ಜಗ್ಗುತ್ತಿಲ್ಲ. ಕಣದಲ್ಲಿ ಉಳಿಯುತ್ತೇನೆ ಎಂದು ಶಪಥ ಮಾಡಿರುವುದು ಬಿಜೆಪಿಗೆ ತಲೆನೋವು ಉಂಟು ಮಾಡಿದೆ. ಕಾರ್ಯಕರ್ತರ ವಿರೋಧದ ನಡುವೆಯೂ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಜಗದೀಶ್ ಶೆಟ್ಟರ್‍ಗೂ ಬೆಳಗಾವಿಯಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಹೀಗೆ ಹಲವು ಕಡೆ ಬಿಜೆಪಿಗೆ ಭಿನ್ನಮತ ಎದುರಾಗಿರುವುದು ಅಕೃತ ಅಭ್ಯರ್ಥಿಗಳ ಮಂಡೆ ಬಿಸಿ ಮಾಡಿದೆ. \ No newline at end of file diff --git a/eesanje/url_46_196_3.txt b/eesanje/url_46_196_3.txt new file mode 100644 index 0000000000000000000000000000000000000000..a57bfcb63e30b9e4010d20e0015d653ed6e2c704 --- /dev/null +++ b/eesanje/url_46_196_3.txt @@ -0,0 +1,4 @@ +ಎಚ್‍ಡಿಕೆ ಭೇಟಿಯಾದ ತೇಜಸ್ವಿ ಸೂರ್ಯ +ಬೆಂಗಳೂರು,ಮಾ.25-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸಂಸದ ತೇಜಸ್ವಿ ಸೂರ್ಯ ಅವರು ಇಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಜೆ.ಪಿ.ನಗರದ ನಿವಾಸದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ ಅವರೊಂದಿಗೆ ಭೇಟಿಯಾದ ತೇಜಸ್ವಿ ಸೂರ್ಯ ಅವರು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ, ಶುಭ ಹಾರೈಸಿದರು. +ಬಳಿಕ ಲೋಕಸಭಾ ಚುನಾವಣೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರುಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. +ತೇಜಸ್ವಿ ಸೂರ್ಯ ಅವರು ಸೌಹಾರ್ದಯುತವಾಗಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರು. ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಲಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_196_4.txt b/eesanje/url_46_196_4.txt new file mode 100644 index 0000000000000000000000000000000000000000..b0c117470a0b190174c845a761b151e2918dd494 --- /dev/null +++ b/eesanje/url_46_196_4.txt @@ -0,0 +1,8 @@ +‘ಭಾವುಕ ಪತ್ರ’ ಬರೆದ ಬಿಜೆಪಿ ಟಿಕೆಟ್ ವಂಚಿತ ಅನಂತ್ ಕುಮಾರ್ ಹೆಗಡೆ +ಬೆಂಗಳೂರು,ಮಾ.25- :2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆಯಾಗಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಟಿಕೆಟ್ ಕೈತಪ್ಪಿದೆ. ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿಅನಂತ್ ಕುಮಾರ್ ಹೆಗಡೆ ಹಂಚಿಕೊಂಡಿದ್ದಾರೆ. +ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಹೃದಯದಾಳದ ಕೃತಜ್ಞತೆ ಎಂದು ತಿಳಿಸಿದ್ದಾರೆ. ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು. ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. +ಜ್ಞಾನಿಗಳು, ಹಣವಂತರು, ಅಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ. ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. +ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ಕೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ. +ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು. ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು?ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ ಎಂದು ಕ್ಷೇತ್ರದ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ. +ಕಳೆದ ಮೂರು ತಿಂಗಳಿನಿಂದ ಮತ್ತೆ ಮುನ್ನಲೆಗೆ ಬಂದಿದ್ದ ಅನಂತ್ಕುಮಾರ್ ಹೆಗಡೆ ಎಂದಿನಂತೆ ತಮ್ಮ ವಿವಾದಿತ ಹೇಳಿಕೆಗಳ ಮೂಲಕವೇ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ್ದರು. ಇದೆಲ್ಲದರ ಜೊತೆಗೆ ನಾನೇ ಮುಂದಿನ ಅಭ್ಯರ್ಥಿ ಎಂದು ಗುಡುಗಿದ್ದರು. ಇತ್ತೀಚೆಗೆ ಸಭೆಯೊಂದರಲ್ಲಿ ಕುರ್ಚಿಯನ್ನು ಮುಂದಿಟ್ಟು ನನ್ನ ವಿರುದ್ಧ ಸ್ಪರ್ಧೆ ಮಾಡೋರು ಬಂದು ಕುಳಿತುಕೊಳ್ಳಲಿ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ಸವಾಲು ಹಾಕಿದ್ದರು.ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ನೀಡಿದೆ. +ಇನ್ನು ಟಿಕೆಟ್ ತಪ್ಪಿದ ಹಿನ್ನೆಲೆ ಧೀರ್ಘವಾದ ಸಾಲುಗಳನ್ನು ಬರೆದುಕೊಂಡಿರುವ ಅನಂತ್ಕುಮಾರ್ ಹೆಗಡೆ ಎಲ್ಲಿಯೂ ಬಿಜೆಪಿ ಮತ್ತು ಕೇಂದ್ರ ನಾಯಕರ ಬಗ್ಗೆ ಯಾವುದೇ ಸಾಲುಗಳನ್ನು ಬರೆದುಕೊಂಡಿಲ್ಲ. \ No newline at end of file diff --git a/eesanje/url_46_196_5.txt b/eesanje/url_46_196_5.txt new file mode 100644 index 0000000000000000000000000000000000000000..c40fe4aee52fd78c68dd6b52503bbd1fa127c1ff --- /dev/null +++ b/eesanje/url_46_196_5.txt @@ -0,0 +1,12 @@ +12 ವರ್ಷಗಳ ನಂತರ ಮಾತೃಪಕ್ಷ ಬಿಜೆಪಿಗೆ ಮರಳಿದ ಗಾಲಿ ಜನಾರ್ಧನ ರೆಡ್ಡಿ +ಬೆಂಗಳೂರು, ಮಾರ್ಚ್ 25-ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದರ ಹಿನ್ನೆಲೆ, ಜೈಲುವಾಸ ಅನುಭವಿಸಿ ಪಕ್ಷದಿಂದ ಅಮಾನತುಗೊಂಡಿದ್ದ ಗಾಲಿ ಜನಾರ್ಧನ ರೆಡ್ಡಿ 12 ವರ್ಷಗಳ ನಂತರ ತಮ್ಮ ಮಾತೃ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾವೇ ಸ್ಥಾಪಿಸಿದ್ದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯೊಳಗೆ ವಿಲೀನಗೊಳಿಸಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವ ಮೂಲಕ ಬಿಜೆಪಿಯೊಳಗೆ ರಾಜಕೀಯ ಪುನರ್ಜನ್ಮ ಪಡೆಯಲು ರೆಡ್ಡಿ ಮುಂದಾಗಿದ್ದಾರೆ. +ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಆರ್‍ಪಿಪಿ ಪಕ್ಷದ ಸಂಸ್ಥಾಪಕರಾದ ಜನಾರ್ದನ ರೆಡ್ಡಿಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಶ್ರೀರಾಮುಲು, ಸಿ.ಟಿ.ರವಿ, ಆನಂದ್ ಸಿಂಗ್, ಮಾಜಿ ಸಂಸದ ದೇವಂದ್ರಪ್ಪ, ರುಕ್ಮಿಣಿ ಜನಾರ್ಧನ ರೆಡ್ಡಿ ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು. +ಪಕ್ಷಕ್ಕೆ ಸೇರಿದ ಎಲ್ಲರಿಗೂ ಪ್ರಾಥಮಿಕ ಸದಸ್ಯತ್ವ ನೀಡಿ ಕೇಸರಿ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪಕ್ಷ ಸೇರ್ಪಡೆಯಾದ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಜನಾರ್ದನ ರೆಡ್ಡಿ ಸೇರ್ಪಡೆಗೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಆನೆಬಲ ಬಂದಂತಾಗಿದೆ. ಅವರು ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು. +ಬೇರೆ ಬೇರೆ ಕಾರಣಗಳಿಂದ ಪಕ್ಷದಿಂದ ದೂರವಾಗಿದ್ದರು. ಹಿಂದಿನ ಎಲ್ಲ ಕಹಿ ಘಟನೆಗಳನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಲಿದ್ದೇವೆ. ಜನಾರ್ದನ ರೆಡ್ಡಿಗೆ ಪಕ್ಷದಲ್ಲಿ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಹೇಳಿದರು. +ಬಿಜೆಪಿ ರಾಜ್ಯಾಧ್ಯ್ಕಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಹಳ ಸಂತೋಷ ಆಗಿದೆ. ಆತ್ಮೀಯರಾಗಿರುವ ಗಾಲಿ ಜನಾರ್ದನ ರೆಡ್ಡಿ ಶಾಸಕರು ಹೌದು. ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸ್ಥಾಪನೆ ಮಾಡಿ, ಶಾಸಕರಾಗಿದ್ದಾರೆ. ಅವರದ್ದೇ ಆದ ರೀತಿಯಲ್ಲಿ ಪಕ್ಷ ನಡೆಸಿಕೊಂಡು ಬಂದಿದ್ದರು. ಗಾಲಿ ಜನಾರ್ದನ ರೆಡ್ಡಿ ಅವರು ತಾವೇ ಸ್ಥಾಪಿಸಿದ ಪಕ್ಷ ವಿಸರ್ಜನೆ ಮಾಡಿ, ಬಿಜೆಪಿ ಜೊತೆಗೆ ವಿಲೀನ ಮಾಡಿದ್ದಾರೆ. ಅವರ ಸೇರ್ಪಡೆಯಿಂದ ನಮಗೆ ದೊಡ್ಡ ಶಕ್ತಿ ಬಂದಿದೆ. ಮೋದಿ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ ಎಂದರು. +ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಅದಕ್ಕೆ ಕರ್ನಾಟಕದಲ್ಲಿ ಅತ್ಯಂತ ಸ್ಥಾನ ಗೆಲ್ಲಬೇಕು. ಇದೊಂದೇ ವಿಚಾರ ಮುಂದಿಟ್ಟುಕೊಂಡು ಪಕ್ಷ ಸೇರ್ಪಡೆ ಆಗಿದ್ದಾರೆ. ಇಂದು ರಾಜ್ಯದಲ್ಲಿ ಬಿಜೆಪಿಯ ಪರವಾದ ವಾತಾವರಣ ಇದೆ.ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯ ನಿರ್ಮಿಸುವ ಚುನಾವಣೆ.ಪಕ್ಷದ ಬಾವುಟ ನೀಡಿ ಜನಾರ್ದನ ರೆಡ್ಡಿ ಅವರನ್ನು ಬಿವೈ ವಿಜಯೇಂದ್ರ ಮತ್ತೆ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಸರಿ ಪಕ್ಷದಲ್ಲಿ ಕೆಆರ್‍ಪಿಪಿ ಪಕ್ಷವನ್ನೂ ವಿಲೀನಗೊಳಿಸಲಾಗಿದೆ. +ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ ಇದರಿಂದ ನಮಗೆ ಹೆಚ್ಚಿನ ಬಲ ಬಂದಿದೆ ಎಂದು ಹೇಳಿದರು. +ಪಕ್ಷಕ್ಕೆ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತನಾಡಿ, ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ನಾನು ಯಾವುದೇ ಷರತ್ತುಗಳನ್ನು ವಿಸದೆ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಇದು ನನ್ನ ಪಾಲಿಗೆ ಹೊಸ ಅಧ್ಯಾಯ ಎಂದು ಬಣಿಸಿದರು. ನಾನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯೊಂದಿಎಗ ವಿಲೀನ ಮಾಡಿದ್ದಾನೆ. ಯಡಿಯೂರಪ್ಪರ ಆಶೀರ್ವಾದದಿಂದ, ವಿಜಯೇಂದ್ರರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದೇನೆ. ನನ್ನ ಆತ್ಮೀಯ ಗೆಳೆಯ ಶ್ರೀರಾಮುಲು ಅವರಿಗೆ ಧನ್ಯವಾದಗಳು ಎಂದು ಹೇಳಿದರು. +ದೇಶವನ್ನು ಪ್ರಪಂಚದಲ್ಲಿ ಗುರುತಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವಗುರು ಅಂತಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಗೆ ಕರೆಸಿದರು. ಬಾಹ್ಯ ಬೆಂಬಲ ಅಲ್ಲ. ನೀವು ಬರಬೇಕು ಅಂದರು. ಈಗ ನಾನು ಬಿಜೆಪಿ ಸೇರ್ಪಡೆ ಆಗಿದ್ದೇನೆ ಎಂದರು.ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವನಾಗಿ ಕೆಲಸ ಮಾಡಿದ ಅನುಭವವಿದೆ. +ಇಂದು ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರು. ತಂದೆ ಮತ್ತು ಮಗನ ಜೊತೆಗೆ ಕೆಲಸ ಮಾಡುವ ಸೌಭಾಗ್ಯ ಒದಗಿದೆ. ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿ ಮಾಡಲು ಇಡೀ ದೇಶವೇ ಸಜ್ಜಾಗಿದೆ. ಈ ಸಂದರ್ಭದಲ್ಲಿ ನಾನು ಬಿಜೆಪಿಗೆ ಬಂದಿದ್ದೇನೆ. ಯಾವುದೇ ಕಂಡೀಷನ್ ಇಲ್ಲದೇ ಬಿಜೆಪಿಗೆ ಬಂದಿದ್ದೇನೆ. ಪಕ್ಷ ಯಾವ ಜವಾಬ್ದಾರಿ ಕೊಟ್ಟರೂನಿಭಾಯಿಸುತ್ತೇನೆ ಎಂದು ಹೇಳಿದರು. +ಸಾಮಾನ್ಯ ಕಾರ್ಯಕರ್ತನಾಗಿ, ದುಡಿಯುತ್ತೇನೆ ಎಂದ ಗಾಲಿ ಜನಾರ್ದನ ರೆಡ್ಡಿವೇದಿಕೆ ನೋಡುತ್ತಿದ್ದೆರ ನನ್ನ ಮನೆಗೆ ನಾನು ವಾಪಸ್ ಬಂದಿದ್ದೇನೆ ಅನ್ನಿಸುತ್ತಿದೆ. ಬಿಜೆಪಿಯ ತಾಯಿಯ ಮಡಲಿಗೆ ಸುರಕ್ಷಿತವಾಗಿ ಬಂದು ಸೇರಿದ್ದೇನೆ. ನಾನು 13 ವರ್ಷಗಳ ಬಳಿಕ ಬಂದಿದ್ದೇನೆ ಅನ್ನಿಸುತ್ತಿಲ್ಲ. ನಿನ್ನೆ ಹೋಗಿ ಇಂದು ಬಂದಂತೆ ಭಾಸವಾಗುತ್ತಿದೆ ಎಂದು ಜನಾರ್ದನ ರೆಡ್ಡಿ ಹೇಳಿದರು. \ No newline at end of file diff --git a/eesanje/url_46_196_6.txt b/eesanje/url_46_196_6.txt new file mode 100644 index 0000000000000000000000000000000000000000..c4d5fa024b58726641b667ac132d0c019b0ddb33 --- /dev/null +++ b/eesanje/url_46_196_6.txt @@ -0,0 +1,5 @@ +ಪೊಲೀಸರಿಗೆ ದೂರು ನೀಡಲು ಹೊರಟಿದ್ದ ಐವರ ಮೇಲೆ ಟ್ರಕ್ ಹರಿಸಿ ಭೀಕರ ಹತ್ಯೆ +ಜಲವಾರ(ರಾಜಸ್ಥಾನ), ಮಾ.24-ಪೊಲೀಸ್ ಠಾಣೆಗೆ ದೂರು ಕೊಡಲು ಹೊರಟ ಐವರ ಮೇಲೆ ಡಂಪರ್ ಟ್ರಕ್ ಹರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಜಲವಾರ ಜಿಲ್ಲೆಯ ಪಗಾರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ. +ಯಾವುದೋ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಿನ್ನೆ ರಾತ್ರಿ ಜಗಳ ನಡೆದಿದೆ. ನಂತರ ಐವರು ಪಗಾರಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಹೇಳಿ ಹೊರಟಿದ್ದರು. ಇದರಿಂದ ರೊಚ್ಚಗೆದ್ದ ಇನ್ನೊಂದು ಗುಂಪಿನವರು ಡಂಪರ್ ಟ್ರಕನ್ನು ಮತ್ತೊಂದು ಗುಂಪಿನ ಮೇಲೆ ಹರಿಸಿ ಐವರನ್ನು ಹತ್ಯೆ ಮಾಡಿದೆ. ಹತ್ಯೆಯಾದವರಲ್ಲಿ ಇಬ್ಬರು ಸಹೋದರರು ಸೇರಿದ್ದಾರೆ. +ಸ್ಥಳಕ್ಕೆ ಭೇಟಿ ನೀಡಿದ ಭವಾನಿ ಮಂಡಿ ಡಿಎಸ್ಪಿ ಪ್ರೇಮ್ ಚೌಧರಿ ಅವರು ಗ್ರಾಮದಲ್ಲಿ ಕಾನೂನು ಸುಸ್ವವಸ್ಥೆ ಕಾಪಾಡಲು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಬೇರೆ ರಾಜ್ಯಕ್ಕೆ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಈಗಾಗಿ ಪಕ್ಕದ ರಾಜ್ಯಗಳಿಗೂ ಪೊಲೀಸ್ ತಂಡಗಳನ್ನು ಕಳುಹಿಸಿಲಾಗಿದೆ ಎಂದು ಅವರು ಹೇಳಿದರು. +ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚುವರಿ ಎಸ್ಪಿ ಚಿರಂಜಿಲಾಲ್ ಮೀನಾ ನೇತೃತ್ವದಲ್ಲಿ ಪೊಲೀಸ್ ತಂಡಗಳು ವಿವಿಧೆಡೆ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿವೆ. \ No newline at end of file diff --git a/eesanje/url_46_196_7.txt b/eesanje/url_46_196_7.txt new file mode 100644 index 0000000000000000000000000000000000000000..ddcbbc8f60a0a8054f3a8371efb37b824a676c9d --- /dev/null +++ b/eesanje/url_46_196_7.txt @@ -0,0 +1,7 @@ +ಕಾಂಗ್ರೆಸ್‌ಗೆ ಕಗ್ಗಂಟಾದ ನಾಲ್ಕು ಕ್ಷೇತ್ರಗಳು +ಬೆಂಗಳೂರು,ಮಾ.24-24 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯನ್ನು ಸಲೀಸಾಗಿ ಮಾಡಿ ಮುಗಿಸಿದ ಕಾಂಗ್ರೆಸ್ ಪಕ್ಷಕ್ಕೆ ಕೋಲಾರ ಕಬ್ಬಿಣದ ಕಡಲೆಯಾಗಿದ್ದು, ರಾಜ್ಯನಾಯಕರು ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕೈಚೆಲ್ಲಿದ್ದಾರೆ.ಬಾಕಿ ಇರುವ ನಾಲ್ಕು ಕ್ಷೇತ್ರಗಳ ಪೈಕಿ ಬಳ್ಳಾರಿಗೆ ತುಕಾರಾಂ, ಚಾಮರಾಜನಗರಕ್ಕೆ ಮಾಜಿ ಶಾಸಕ ನಂಜುಂಡಸ್ವಾಮಿಯವರ ಪೈಪೊಟಿಯನ್ನು ಹತ್ತಿಕ್ಕಿ ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಅವರಿಗೆ ತೀವ್ರ ಪೈಪೊಟಿ ನೀಡಿರುವ ಮಾಜಿ ಸಚಿವ ಎಂ.ಅರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಟಿಕೆಟ್ ಗಿಟ್ಟಿಸುವುದು ಖಚಿತವಾಗಿದೆ.ಕೋಲಾರ ಕ್ಷೇತ್ರದಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಕೆ.ಎಚ್.ಮುನಿಯಪ್ಪ ಪಟ್ಟು ಹಿಡಿದಿರುವುದರಿಂದಾಗಿ ರಾಜ್ಯ ನಾಯಕರಿಗೆ ತಲೆನೋವು ಎದುರಾಗಿದೆ. +ಅತೀ ಹೆಚ್ಚು ಆಕಾಂಕ್ಷಿಗಳಿದ್ದ ಕೋಲಾರ ಲೋಕಸಭಾ ಕ್ಷೇತ್ರ ಪೈಪೊಟಿ ಹಾಗೂ ಜಿದ್ದಾಜಿದ್ದಿನ ಕಣವಾಗಿದೆ. ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕದೊಡ್ಡಣ್ಣ, ರಾಜ್ಯ ಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ಎಡಗೈ ಸಮುದಾಯದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದರೆ, ಬಲಗೈ ಸಮುದಾಯದಿಂದ ದಲಿತ ಮುಖಂಡ ಮುನಿಯಪ್ಪ, ಡಾ.ಡಿ.ಸಿ.ಮುದ್ದುಗಂಗಾಧರ್ ಟಿಕೆಟ್ ಬಯಸಿದ್ದಾರೆ.ಜಿಲ್ಲೆಯಲ್ಲಿ 30 ವರ್ಷ ಸೋಲಿಲ್ಲದಂತೆ ಚುನಾವಣೆ ಎದುರಿಸಿದ್ದ ಕೆ.ಎಚ್.ಮುನಿಯಪ್ಪ ಅವರಿಗೆ ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಒಳಬಣಗಳೇ ಠಕ್ಕರ್ ನೀಡಿ ಸೋಲಿನ ರುಚಿ ತೋರಿಸಿದ್ದವು. +ವಿಧಾನಸಭಾ ಚುನಾವಣೆಯಲ್ಲಿ ಈ ಅಸಮಾಧಾನ ಸರಿಹೋಗಬಹುದು ಎಂಬ ನಿರೀಕ್ಷೆ ಇತ್ತಾದರೂ ಮತ್ತೆ ಅದು ಭುಗಿಲೆದ್ದಿದೆ. ಕೆ.ಎಚ್.ಮುನಿಯಪ್ಪ ಅವರಿಗೆ ಅಥವಾ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ಕೊಟ್ಟರೆ ಈ ಬಾರಿಯೂ ಕಾಂಗ್ರೆಸ್ ಅಭ್ಯರ್ಥಿ ಸೋಲಲಿದ್ದಾರೆ ಎಂದು ಮಾಜಿ ಸಚಿವ ರಮೇಶ್ಕುಮಾರ್, ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್, ನಂಜೇಗೌಡ ಮತ್ತಿತರರು ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ಗೆ ದೂರು ನೀಡಿ ಬಂದಿದ್ದಾರೆ. +ಭಿನ್ನಮತೀಯರ ಈ ಬಣವನ್ನು ಎದುರು ಹಾಕಿಕೊಂಡೇ ರಾಜಕಾರಣ ಮಾಡಬೇಕೆಂದು ಜಿದ್ದಿಗೆ ಬಿದ್ದಿರುವ ಕೆ.ಎಚ್.ಮುನಿಯಪ್ಪ ತೀವ್ರ ವಿರೋಧದ ನಡುವೆಯೂ ತಮ್ಮ ಅಳಿಯನಿಗೇ ಟಿಕೆಟ್ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. +ನಿನ್ನೆ ಸಂಜೆ ಪಕ್ಷದ ಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಒಮ್ಮತದ ನಿರ್ಣಯಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದ ನಾಯಕರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದು, ಯಾರಿಗೇ ಟಿಕೆಟ್ ಕೊಟ್ಟರೂ ಅದನ್ನು ಸ್ವಾಗತಿಸುವುದಾಗಿ ಹೇಳಿ ಕೈ ತೊಳೆದುಕೊಂಡಿದ್ದಾರೆ.ನಿರೀಕ್ಷೆಯಂತೆಯೇ ಎಲ್ಲವೂ ನಡೆದಿದ್ದರೆ ನಿನ್ನೆ ಪ್ರಕಟಗೊಂಡ 46 ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯೂ ಘೋಷಣೆಯಾಗಬೇಕಿತ್ತು. ಆದರೆ ಸತತ ಸಂಧಾನದ ಹೊರತಾಗಿಯೂ ರಾಜ್ಯ ನಾಯಕರಿಗೆ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ.ಹೀಗಾಗಿ ನಾಲ್ಕೂ ಕ್ಷೇತ್ರಗಳೂ ಮತ್ತೆ ಬಾಕಿ ಉಳಿದುಕೊಂಡಿವೆ. \ No newline at end of file diff --git a/eesanje/url_46_196_8.txt b/eesanje/url_46_196_8.txt new file mode 100644 index 0000000000000000000000000000000000000000..208808011fd3af23f9633e6c9f2201768278c0af --- /dev/null +++ b/eesanje/url_46_196_8.txt @@ -0,0 +1,6 @@ +ರಾಜ್ಯದ 28 ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ : ಸಿಎಂ ಸಿದ್ದರಾಮಯ್ಯ +ಮೈಸೂರು, ಮಾ.24-ರಾಜ್ಯದ 28 ಕ್ಷೇತ್ರಗಳನ್ನೂ ನಾವು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ತವರು ಕ್ಷೇತ್ರ ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರವಷ್ಟೇ ಅಲ್ಲ, ರಾಜ್ಯದ ಎಲ್ಲ ಕ್ಷೇತ್ರಗಳೂ ನಮಗೆ ಪ್ರತಿಷ್ಠೆಯಾಗಿವೆ ಎಂದು ಸ್ಪಷ್ಟಪಡಿಸಿದರು. +ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಅವರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಅದು ನಮಗೇ ಅನುಕೂಲ. ನಮ್ಮ ಚುನಾವಣಾ ಕಾರ್ಯತಂತ್ರಕ್ಕೆ ಅನುಗುಣವಾಗಿ ನಾವು ಸಾಧನೆಯನ್ನು ಮುಂದಿಟ್ಟುಕೊಂಡು ಮತದಾರರ ಬಳಿ ಹೋಗುತ್ತೇವೆ ಎಂದು ಹೇಳಿದರು. +ಚುನಾವಣಾ ಕಾರ್ಯತಂತ್ರದಲ್ಲಿ ಹಲವಾರು ಗುಟ್ಟುಗಳಿರುತ್ತವೆ. ಆದರೆ, ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದ ತಕ್ಷಣವೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಜನರ ಆರ್ಥಿಕ ಬದುಕನ್ನು ಉತ್ತಮಗೊಳಿಸುವತ್ತ ನಾವು ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು. +ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ 52 ಸಾವಿರಕ್ಕೂ ಹೆಚ್ಚು ಹಣವನ್ನು ಮೀಸಲಿಟ್ಟಿದ್ದೇವೆ. ಇದಲ್ಲದೆ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. +ಸದ್ಯ ನಮಗೆ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ನಡೆಯುತ್ತಿದ್ದು, ನಾಳೆ ಅಥವಾ ನಾಡಿದ್ದು ಪ್ರಕಟಿಸಲಾಗುವುದು. ಇದರಲ್ಲಿ ನಮಗೆ ಯಾವುದೇ ಕಗ್ಗಂಟಿಲ್ಲ, ಗೊಂದಲವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೇಂದ್ರ ಸರ್ಕಾರದ ಹಲವಾರು ಯೋಜನೆಗಳು ಇನ್ನೂ ಜಾರಿಗೆ ಬಂದಿಲ್ಲ, ಜನರಿಗೆ ತಲುಪುತ್ತಿಲ್ಲ. ಸಂಘಟಿತರಾಗಿ ನಾವು ಚುನಾವಣೆ ಎದುರಿಸಿ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಸಿಎಂ ತಿಳಿಸಿದರು. \ No newline at end of file diff --git a/eesanje/url_46_196_9.txt b/eesanje/url_46_196_9.txt new file mode 100644 index 0000000000000000000000000000000000000000..b207c6b9a3dd454802706112cbea3ce9056b24f6 --- /dev/null +++ b/eesanje/url_46_196_9.txt @@ -0,0 +1,9 @@ +ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಕ್ಷಣಗಣನೆ +ಬೆಂಗಳೂರು,ಮಾ.24-ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾಗಿರುವ ಎಸ್ಸೆಸ್ಸೆಲ್ಸಿ ಮೊದಲ ವಾರ್ಷಿಕ ಪರೀಕ್ಷೆ ನಾಳೆಯಿಂದ ಏ.6ರವರೆಗೆ ರಾಜ್ಯಾದ್ಯಂತ ನಡೆಯಲಿದ್ದು, ನಕಲು ತಡೆಗಟ್ಟಲು ಈ ಬಾರಿ ಹಿಂದೆಂದಿಗಿಂತಲೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. +ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಸಲು ಸಿದ್ದತೆ ಮಾಡಿಕೊಂಡಿದೆ.ನಾಳೆ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪ್ರಥಮ ಭಾಷೆಯ ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ್ಲಿಷ್ , ಸಂಸ್ಕøತ ವಿಷಯಗಳ ಪರೀಕ್ಷೆ ನಡೆಯಲಿದೆ.ಏ.6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಮತ್ತು ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಕ್ತಾಯವಾಗಲಿದೆ. +ಸರ್ಕಾರಿ, ಅನುದಾನ, ಅನುದಾನರಹಿತ ಹಾಗೂ ಖಾಸಗಿ ಶಾಲೆಗಳು ಸೇರಿದಂತೆ 4,41,910 ಬಾಲಕರು, 4,28,058 ಬಾಲಕಿಯರು ಸೇರಿದಂತೆ 8,69,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳನ್ನು ಮಂಡಳಿ ತೆರೆದಿದೆ. +ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುವ ವ್ಯವಸ್ಥೆ ಕಲ್ಪಿಸಿವೆ. ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಬಹುದು. +ವಿದ್ಯಾರ್ಥಿಗಳ ಜೊತೆ ಸಾರಿಗೆ ಬಸ್ನ ಚಾಲಕರು ಮತ್ತು ನಿರ್ವಾಹಕರು ಅನುಚಿತವಾಗಿ ವರ್ತಿಸದಂತೆ ಇಲಾಖೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ ವರ್ಗದವರು, ಸಿಬ್ಬಂದಿಗಳು ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ. ಅಲ್ಲದೆ ಪರೀಕ್ಷೆ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇತ ಪ್ರದೇಶ ಎಂದು ಘೋಷಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. +ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಸಿಸಿಟಿವಿ ಕ್ಯಾಮೆರಾಗಳ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ನಿರ್ದೇಶಕರು, ಸಹನಿರ್ದೇಶಕ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲಸ್ತುವಾರಿ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಪ್ರಾಂಶುಪಾಲರನ್ನು ಆಯಾ ಜಿಲ್ಲೆಗೆ ಜಿಲ್ಲಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. +ಡಯಟ್ ಉಪನ್ಯಾಸಕರನ್ನು ಪರೀಕ್ಷಾ ಕೇಂದ್ರಗಳನ್ನು ವಿಚಕ್ಷಣ ದಳದ ಜಾಗೃತ ಅಧಿಕಾರಿ, ಜಿಲ್ಲಾಕಾರಿಗಳ ಹಂತದಲ್ಲಿ ವಿಚಕ್ಷಣ ಜಾಗೃತ ದಳ, ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷೆ ಕೇಂದ್ರಗಳಲ್ಲಿ ಸ್ಥಾನಿಕ ಜಾಗೃತ ದಳದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. +ಒಟ್ಟು ವಿದ್ಯಾರ್ಥಿಗಳು -8,69,968ಬಾಲಕರು -4,41,910ಬಾಲಕಿಯರು -4,28,058ಒಟ್ಟು ಪರೀಕ್ಷಾ ಕೇಂದ್ರಗಳು -2,750ಪರೀಕ್ಷೆ -ಮಾ.25ರಿಂದ ಏ.6ರವರೆಗೆಪರೀಕ್ಷಾ ಸಮಯ- 10.15ರಿಂದ ಆರಂಭ \ No newline at end of file diff --git a/eesanje/url_46_197_1.txt b/eesanje/url_46_197_1.txt new file mode 100644 index 0000000000000000000000000000000000000000..1e0faf921eb71450ea96e108b15dada759bc3f3d --- /dev/null +++ b/eesanje/url_46_197_1.txt @@ -0,0 +1,7 @@ +29ರಿಂದ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಆರಂಭ, ಸ್ಟಾರ್ ಪ್ರಚಾರಕರ ಸಾಥ್ +ಬೆಂಗಳೂರು,ಮಾ.24-ರಾಜ್ಯದಲ್ಲಿನ 20ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ನಾಯಕರು ಇದೇ ತಿಂಗಳ 29 ರಿಂದ ಅಧಿಕೃತ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ.ರಾಷ್ಟ್ರೀಯ ನಾಯಕರ ಪೈಕಿ ಹಲವು ಸ್ಟಾರ್ ಪ್ರಚಾರಕರು ರಾಜ್ಯಕ್ಕಾಗಮಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಪೈಕಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಅಲ್ಲಲ್ಲಿ ರೋಡ್‍ಶೋ, ಬಹಿರಂಗ ಸಮಾವೇಶಗಳನ್ನು ಆಯೋಜಿಸಲಾಗಿದೆ. +ಪ್ರತಿ ದಿನ 2 ರಿಂದ 3 ಬಹಿರಂಗ ಸಭೆಗಳು ಹಾಗೂ ನಾಲ್ಕರಿಂದ ಐದು ಕಡೆ ರೋಡ್ ಶೋಗಳಲ್ಲಿ ಸಿದ್ದರಾಮಯ್ಯ ಮತ ಭೇಟೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಚುನಾವಣಾ ಯಾತ್ರೆ ನಡೆಸಲಿದ್ದು, ದಕ್ಷಿಣ ಕರ್ನಾಟಕ ಭಾಗದಲ್ಲಿ ಅದರಲ್ಲೂ ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸರಣಿ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 2ನೇ ಹಂತದಲ್ಲಿ ಚುನಾವಣೆ ನಡೆಯುವ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.ರಾಹುಲ್‍ಗಾಂ ಮತ್ತು ಸೋನಿಯಾಗಾಂಧಿ ಈ ಬಾರಿ ರಾಜ್ಯದಲ್ಲಿ ಹೆಚ್ಚು ಪ್ರವಾಸ ಕೈಗೊಳ್ಳುವ ನಿರೀಕ್ಷೆಗಳಿವೆ. +ಸೋನಿಯಾಗಾಂಧಿಯವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವುದರಿಂದ ಪ್ರಚಾರ ಕಾರ್ಯಗಳಿಗೆ ಹೆಚ್ಚು ಸಮಯ ನೀಡಿದ್ದಾರೆ ಎಂದು ತಿಳಿದುಬಂದಿದೆ.ಈವರೆಗಿನ ವೇಳಾಪಟ್ಟಿಯ ಪ್ರಕಾರ, ಸೋನಿಯಾಗಾಂ ಮೊದಲ ಹಂತದ ಚುನಾವಣೆಗೆ 4 ರಿಂದ 5 ಬಾರಿ 2 ನೇ ಹಂತದ ಚುನಾವಣೆಯಲ್ಲಿ 5 ರಿಂದ 6 ಬಾರಿ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಿಯಾಂಕ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದಾಗಿ ರಾಜ್ಯದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆಗಳು ಕಡಿಮೆ ಇವೆ. +ಉಳಿದಂತೆ ಹಲವು ಸ್ಟಾರ್ ಪ್ರಚಾರಕರು ರಾಜ್ಯದಲ್ಲಿ ಸಂಚಾರ ಮಾಡಿ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಾರೆ ಎಂದು ತಿಳಿದುಬಂದಿದೆ.ಬಿಜೆಪಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪ್ರಚಾರಕ್ಕೆ ಬಳಸಿಕೊಂಡಂತೆ ಕಾಂಗ್ರೆಸ್ ರಾಜ್ಯ ನಾಯಕರಿಗೆ ಆದ್ಯತೆ ನೀಡುತ್ತಿದೆ. 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಮನೆಮನೆ ತಲುಪುವ ಅಭಿಯಾನವನ್ನು ಚುರುಕುಗೊಳಿಸುತ್ತಿದೆ. +ವಿಧಾನಸಭೆಯಲ್ಲಿ ಮನೆಮನೆಗೆ ಗ್ಯಾರಂಟಿ ಕಾರ್ಡ್‍ಗಳನ್ನು ತಲುಪಿಸುವಂತೆ ಲೋಕಸಭಾ ಚುನಾವಣೆಯಲ್ಲಿ ಭರವಸೆ ಕಾರ್ಡ್‍ಗಳನ್ನು ಜನರ ಮನೆಬಾಗಿಲಿಗೆ ತಲುಪಿಸಲು ಕಾರ್ಯಕರ್ತರ ದಂಡನ್ನೇ ಸಜ್ಜುಗೊಳಿಸಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕಾಗಿರುವ ಅನ್ಯಾಯ ಹಾಗೂ ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ. \ No newline at end of file diff --git a/eesanje/url_46_197_10.txt b/eesanje/url_46_197_10.txt new file mode 100644 index 0000000000000000000000000000000000000000..f0975b7f01ee64e99c37d85cbf0eb184c7df6856 --- /dev/null +++ b/eesanje/url_46_197_10.txt @@ -0,0 +1,7 @@ +ದ್ವೇಷ ಭಾಷಣ ಪ್ರಕರಣ : ಶೋಭಾ ಕರಂದ್ಲಾಜೆ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ +ಬೆಂಗಳೂರು,ಮಾ.23-ಪ್ರತಿಭಟನಾ ಸಂದರ್ಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. +ಬೆಂಗಳೂರಿನ ಕಾಟನ್‍ಪೇಟೆ ಪೊಲೀಸರು ರಾಜ್ಯ ಚುನಾವಣಾಧಿಕಾರಿಗಳ ದೂರಿನ ಮೇರೆಗೆ ದಾಖಲಿಸಿರುವ ಎಫ್‍ಐಆರ್‍ಗೆ ತಡೆಯಾಜ್ಞೆ ನೀಡಬೇಕೆಂದು ಶೋಭಾ ಕರಂದ್ಲಾಜೆ ಪರ ಹಿರಿಯ ವಕೀಲ ವೆಂಕಟೇಶ್ ದಳವಾಯಿ ಮೇಲ್ಮನವಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾಯಮೂರ್ತಿ ಕೃಷ್ಣ.ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಎಫ್‍ಐಆರ್‍ಗೆ ತಡೆ ಆದೇಶ ನೀಡಿತು. +ಇದಕ್ಕೂ ಮುನ್ನ ಶೋಭಾ ಕರಂದ್ಲಾಜೆ ಪರ ವಾದ ಮಂಡಿಸಿದ ಹಿರಿಯ ವಕೀಲ ವೆಂಕಟೇಶ್ ದಳವಾಯಿ ಅವರು ಈಗಾಗಲೇ ಕಕ್ಷಿದಾರರು ತಮ್ಮ ಹೇಳಿಕೆ ಕುರಿತಂತೆ ಯಾವುದೇ ಸಮುದಾಯಕ್ಕೂ ನೋವಾಗಬಾರದೆಂಬ ಕಾರಣಕ್ಕಾಗಿ ಸಾರ್ವಜನಿಕವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ. +ಚುನಾವಣಾ ಆಯೋಗ ದೂರು ದಾಖಲಿಸಿಕೊಂಡ ನಂತರ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದನ್ನು ಸಹ ಅಳಿಸಿ ಹಾಕಿದ್ದಾರೆ. ಅವರ ಉದ್ದೇಶ ಯಾರೊಬ್ಬರಿಗೂ ನೋಯಿಸಬಾರದು ಎಂಬುದಾಗಿದೆಯೇ ಹೊರತು ರಾಜ್ಯ ಇಲ್ಲವೇ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಹೇಳಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. +ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೂ ಆಯೋಗದ ಸೂಚನೆ ಮೇರೆಗೆ ಪೊಲೀಸರು ಎಫ್‍ಐಆರ್ ಹಾಕಿದ್ದಾರೆ. ನಮ್ಮ ಕಕ್ಷಿದಾರರ ವಿರುದ್ಧ ದಾಖಲಾಗಿರುವ ಸೆಕ್ಷನ್‍ಗಳು ಮತಕ್ಕಾಗಿ ಪ್ರಚಾರ ಮಾಡುವ ಉದ್ದೇಶಕ್ಕೆ ಇಲ್ಲವೇ ರ್ನಿಧಿಷ್ಟ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವಿರುದ್ಧ ದಾಖಲಾಗುವ ಪ್ರಕರಣಗಳಿಗೆ ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(3), 123(3ಎ), 125 ಸೆಕ್ಷನ್‍ಗಳಡಿ ದೂರು ದಾಖಲಿಸಬೇಕೆಂಬುದನ್ನು ಮನವರಿಕೆ ಮಾಡಿದರು. +ಈ ವೇಳೆ ನ್ಯಾಯಪೀಠ ನಾವು ನಾಜಿ ಆಡಳಿತದಲ್ಲಿ ಇಲ್ಲ. ನಮಗೆ ವಾಕ್ ಸ್ವಾತಂತ್ರ್ಯವಿದೆ. ಈ ಸೆಕ್ಷನ್‍ಗಳಡಿ ಪೊಲೀಸರು ದೂರುಗಳನ್ನು ಹೇಗೆ ದಾಖಲಿಸುತ್ತಾರೆ? ಎಂದು ಪ್ರಶ್ನೆ ಮಾಡಿದರು. ವಾದವನ್ನು ಆಲಿಸಿದ ನಂತರ ನ್ಯಾಯಾಲಯ ಮುಂದಿನ ಆದೇಶದವರೆಗೆ ಶೋಭಾ ಕರಂದ್ಲಾಜೆ ವಿರುದ್ಧ ಕಾಟನ್‍ಪೇಟೆ ಪೊಲೀಸರು ಪ್ರಜಾಪ್ರತಿನಿ ಕಾಯ್ದೆ ಸೆಕ್ಷನ್ 123(3), 123(3ಎ), 125 ಸೆಕ್ಷನ್‍ಗಳಡಿ ದಾಖಲಾಗಿದ್ದ ಎಫ್‍ಐಆರ್‍ಗೆ ತಡೆಯಾಜ್ಞೆ ನೀಡಿತು. \ No newline at end of file diff --git a/eesanje/url_46_197_11.txt b/eesanje/url_46_197_11.txt new file mode 100644 index 0000000000000000000000000000000000000000..e86a3bbdf94a36da29d1aa3aa2ac5494e1ed0452 --- /dev/null +++ b/eesanje/url_46_197_11.txt @@ -0,0 +1,6 @@ +ದಿಕ್ಕುದೆಸೆಯಿಲ್ಲದ ಇಂಡಿ ಮೈತ್ರಿಕೂಟ ನಾವಿಕನಿಲ್ಲದ ಹಡಗಿನಂತಾಗಿದೆ : ಆರ್.ಅಶೋಕ್ +ಬೆಂಗಳೂರು,ಮಾ.23-ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಪ್ರಧಾನಿ ನರೇಂದ್ರಮೋದಿ ಕಾಪ್ಟನ್ ಆದರೆ ಇಂಡಿ ಮೈತ್ರಿಕೂಟ ನಾವಿಕನಿಲ್ಲದ ಹಡಗಿನಂತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನರೇಂದ್ರಮೋದಿ ಅವರೇ ಕ್ಯಾಪ್ಟನ್. ಬಿಜೆಪಿ ಅಧಿಕಾರಕ್ಕೆ ಬಂದು ಪುನಃ ಅವರೇ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ. ಇಂಡಿ ಮೈತ್ರಿಕೂಟಕ್ಕೆ ನಾಯಕನೂ ಇಲ್ಲ, ಯಾರೂ ಇಲ್ಲ ಎಂದು ಕುಹುಕವಾಡಿದರು. +ವಿಪಕ್ಷಗಳ ಇಂಡಿ ಒಕ್ಕೂಟದ ಜೊತೆಗೆ ಶಸ್ತ್ರಸಜ್ಜಿತರಾಗಿದ್ದ ನಿತೀಶ್ ಕುಮಾರ್ ಅಲ್ಲಿ ಶಸ್ತ್ರತ್ಯಾಗ ಮಾಡಿ ನಮ್ಮ ಜೊತೆ ಬಂದಿದ್ದಾರೆ. ಇಂಡಿ ಒಕ್ಕೂಟವು ನಾಯಕತ್ವ ಇಲ್ಲದೆ, ದಿಕ್ಕುಗಾಣದಂತಿದೆ. ಮ್ಯಾಚ್, ಮ್ಯಾಚಿನ ದಿನಾಂಕ ಫಿಕ್ಸ್ ಆಗಿದೆ. ಆಟಗಾರರೂ ಫಿಕ್ಸ್ ಆಗಿದ್ದಾರೆ. ಸಾರ್ವಜನಿಕರೂ ಫಿಕ್ಸ್ ಆಗಿದ್ದಾರೆ. ನಮ್ಮ ಕ್ಯಾಪ್ಟನ್ ನರೇಂದ್ರ ಮೋದಿಯವರು ಎಂದು ನಿಗದಿಯಾಗಿದೆ. ಅವರ ಕ್ಯಾಪ್ಟನ್ ಇನ್ನೂ ಫಿಕ್ಸ್ ಆಗಿಲ್ಲ ಎಂದು ಟೀಕಿಸಿದರು. +ಚುನಾವಣೆ ಬಂದಾಗ ಪ್ರಚಾರ ಬೇಕೇ ಬೇಕು. ಅದೇರೀತಿ ಸುಳ್ಳು ಸುದ್ದಿಗಳು ಬಂದಾಗ ಅದಕ್ಕೆ ಸ್ಪಷ್ಟನೆ ನೀಡುವುದು ಪಕ್ಷದ ಕರ್ತವ್ಯ. ಇವೆರಡನ್ನು ಒಂದೇ ಜಾಗದಲ್ಲಿ ಮಾಡಲಾಗುವುದು ಎಂದರು. ಬಿಜೆಪಿ ನಿರಂತರವಾಗಿ ಮಾಧ್ಯಮ ಸ್ನೇಹಿಯಾಗಿ ಕೆಲಸ ಮಾಡಿದೆ. ಪ್ರತಿ ಚುನಾವಣಾ ಸಂದರ್ಭದಲ್ಲೂ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಇದು ಮಾಧ್ಯಮದವರಿಗೆ ನೆರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಜನರ ಭಾವನೆ, ಜನಮಿಡಿತದೊಂದಿಗೆ ಮೋದಿಯವರು ಗೆಲ್ಲಲಿದ್ದಾರೆ. ನಾಯಕತ್ವ ಘೋಷಣೆ ಆಗುವ ಮೊದಲೇ ಮ್ಯಾಚ್ (ಚುನಾವಣೆ) ನಡೆಯಲಿದ್ದು, ಇಂಡಿ ಒಕ್ಕೂಟ ಸೋತು ಸುಣ್ಣವಾಗಲಿದೆ ಎಂದು ಅಭಿಪ್ರಾಯಪಟ್ಟರು.ಕರ್ನಾಟಕದಲ್ಲೂ ನಮಗೆ ಒಳ್ಳೆಯ ವಾತಾವರಣ ಇದೆ. 10 ತಿಂಗಳಲ್ಲಿ 10 ತಪ್ಪು, 10 ಭ್ರಷ್ಟಾಚಾರಗಳನ್ನು, ಸಮಾಜದ್ರೋಹಿಯಾದ ಕೆಲಸಗಳನ್ನು ಕಾಂಗ್ರೆಸ್ ಮಾಡಿದೆ ಎಂದರು. +ಮಂಡ್ಯದಲ್ಲಿ ಹನುಮಧ್ವಜ ಇಳಿಸಿ ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಹಿಂದೂ ಕಾರ್ಯಕರ್ತರ ರಾಮಜನ್ಮಭೂಮಿಯ ಕೇಸನ್ನು 24 ವರ್ಷಗಳ ಬಳಿಕ ಕೆದಕಿ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು, ಅವರು ಕಾಂಗ್ರೆಸ್ ಕಾರ್ಯಕರ್ತರೆಂದು ಸಾಬೀತಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_197_12.txt b/eesanje/url_46_197_12.txt new file mode 100644 index 0000000000000000000000000000000000000000..5ddc9f57b95590ace06e6e91ac5f1e9a8887a859 --- /dev/null +++ b/eesanje/url_46_197_12.txt @@ -0,0 +1,7 @@ +ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು +ನವದೆಹಲಿ,ಮಾ.23-ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್‍ಐಎಯ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು ಈ ಸಂಘಟನೆಗೆ ಸೆಳೆಯುವುದು ಇವರ ಮುಖ್ಯ ಉದ್ದೇಶವಾಗಿತ್ತು. +ಕಳೆದ ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿ ಸಮೀಪ ಇರುವ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ಹಿಂದೆ ಈ ಇಬ್ಬರ ಕೈವಾಡ ಇರುವುದನ್ನು ಎನ್‍ಐಎ ಪತ್ತೆಹಚ್ಚಿದೆ. ಈ ಹಿಂದೆ ಶಿವಮೊಗ್ಗದ ತುಂಗಾಭದ್ರ ನದಿ ಬಳಿ ಸಂಭವಿಸಿದ ಬಾಂಬ್ ಸ್ಪೋಟ ಹಾಗೂ ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟದಲ್ಲೂ ಇವರದೇ ಕೈವಾಡ ಇತ್ತು ಎಂದು ಎನ್‍ಐಎ ಮೂಲಗಳು ತಿಳಿಸಿವೆ. +ಸುಳಿವು ನೀಡಿದ ಕೂದಲು:ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಪೋಟಿಸುವ ಮುನ್ನ ಶಂಕಿತ ಉಗ್ರ ಮುಸಾಫಿರ್ ಚೆನ್ನೈನ ಮಾಲ್‍ವೊಂದರಲ್ಲಿ ಟೋಪಿಯನ್ನು ಖರೀದಿಸಿದ್ದ. ಅಂದುಕೊಂಡಂತೆ ಹೊಸೂರು ಮೂಲಕ ಕರ್ನಾಟಕ ಪ್ರವೇಶಿಸಿ ಮಾ.1ರಂದು ತನ್ನ ಗುರಿ ಸಾಧಿಸಲು ಕಾರ್ಯತಂತ್ರ ರೂಪಿಸಿದ್ದ. ಅದರಂತೆ ಮಾ.1ರಂದು ಕುಂದಹಳ್ಳಿ ಸಮೀಪ ಇರುವ ರಾಮೇಶ್ವರ ಕೆಫೆಗೆ ತಿಂಡಿ ತಿನ್ನುವ ಸೋಗಿನಲ್ಲಿ ಹೋಗಿ ಬಾಂಬ್ ಇಟ್ಟು ಪರಾರಿಯಾಗಿದ್ದ. ಯಾರಿಗೂ ಕೂಡ ಗೊತ್ತಾಗದಂತೆ ಮುಖಕ್ಕೆ ಕ್ಯಾಪ್ ಧರಿಸಿರುವುದು ಸಿಸಿಟಿವಿಯಲ್ಲಿ ಬಯಲಾಗಿತ್ತು. +ತನ್ನ ಕಾರ್ಯ ಮುಗಿಯುತ್ತಿದ್ದಂತೆ ಮುಸಾಫಿರ್ ನಗರದ ಮಸೀದಿಯೊಂದಕ್ಕೆ ತೆರಳಿ ನಮಾಜ್ ಸಲ್ಲಿಸಿ ತಾನು ಧರಿಸಿದ್ದ ಟೋಪಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಸಾಧ್ಯವಾದರೆ ನನ್ನನ್ನು ಹಿಡಿಯಿರಿ ಎಂದು ಆತನ ಸವಾಲು ಹಾಕಿದ್ದಾನೆ. ಮಸೀದಿ ಬಳಿ ಇದ್ದ ಟೋಪಿಯನ್ನು ಎನ್‍ಐಎ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಎಫ್‍ಎಸ್‍ಎಲ್‍ಗೆ ಕಳುಹಿಸಿಕೊಟ್ಟಿತ್ತು. ಅದರಲ್ಲಿ ಸಂಗ್ರಹವಾಗಿದ್ದ ಒಂದು ಸಣ್ಣ ಕೂದಲಿನಿಂದ ಬಾಂಬ್ ಸ್ಪೋಟದ ರೂವಾರಿ ಈತನೇ ಎಂಬುದು ದೃಢಪಟ್ಟಿದೆ. +ಕೆಲ ದಿನಗಳ ಹಿಂದೆ ಎನ್‍ಐಎ ಅಧಿಕಾರಿಗಳು ತಮಿಳುನಾಡಿನ ಏಳು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಚೆನ್ನೈನ ಮಣ್ಣಾಡಿಯ ಮುತ್ಯಾಲಪೇಟೆ, ರಾಮನಾಥಪುರಂ, ಕೀಲಕ್ಕರೈ ಇತ್ಯಾದಿ ಕಡೆ ದಾಳಿ ನಡೆಸಿತ್ತು. ಈ ವೇಳೆ ಕೆಲವು ಸಂಶಯಾಸ್ಪದ ವಸ್ತುಗಳನ್ನು ವಶಪಡಿಸಿಕೊಂಡಾಗ ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟಕ್ಕೂ ಮುನ್ನ ಶಂಕಿತ ಉಗ್ರರಾದ ಮುಸಾಫಿರ್ ಮತ್ತು ಹುಸೇನ್ ಶಬೀದ್ ಎರಡು ತಿಂಗಳು ಬಾಡಿಗೆ ಮನೆ ಪಡೆದುಕೊಂಡು ವಾಸ ಮಾಡಿದ್ದರು. ದೇಶದ ವಿವಿಧೆಡೆ ಸಂಭವಿಸಿದ ಬಾಂಬ್ ಸ್ಪೋಟ ಮತ್ತು ವಿಧ್ವಂಸಕ ಕೃತ್ಯದಲ್ಲಿ ಈ ಇಬ್ಬರು ಶಾಮೀಲಾಗಿರುವುದು ಎನ್‍ಐಎನಿಂದ ಸಾಬೀತಾಗಿದೆ. +2019ರಿಂದ ಈವರೆಗೂ ಇಬ್ಬರೂ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಐಸಿಸ್ ಸಂಘಟನೆಗೆ ಯುವಕರನ್ನು ಸೆಳೆಯಲು ಗುಪ್ತ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಎನ್‍ಐಎ ಶಂಕಿಸಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಘೋಷಣೆ ಮಾಡಿದೆ.ಅಲ್ಲದೆ ಮಾಹಿತಿ ನೀಡಿದವರ ಹೆಸರು ಮತ್ತು ವಿಳಾಸವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‍ಐಎ ಹೇಳಿದೆ. ಇದೀಗ ತಲೆಮರೆಸಿಕೊಂಡಿರುವ ಈ ಇಬ್ಬರ ಹೆಡೆಮುರಿ ಕಟ್ಟಲು ತಮಿಳುನಾಡು, ಕರ್ನಾಟಕದಲ್ಲಿ ಶೋಧ ಕಾರ್ಯ ಮುಂದುವರೆದಿದೆ. \ No newline at end of file diff --git a/eesanje/url_46_197_2.txt b/eesanje/url_46_197_2.txt new file mode 100644 index 0000000000000000000000000000000000000000..8c21a56d52e8da3aced4440e997176abddb7e6af --- /dev/null +++ b/eesanje/url_46_197_2.txt @@ -0,0 +1,5 @@ +ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ನಕ್ಸಲರ ಓಡಾಟ, ಪೊಲೀಸರು ಆಲರ್ಟ್ +ಮಂಗಳೂರು, ಮಾ.24:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಕಳೆದ ರಾತ್ರಿಬಂದು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.ಮಳೆಯಾಗುತ್ತಿದ್ದ ನಡುವೆ ಸುಮಾರು ಮೂವರು ಶಂಕಿತರ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ. +ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಅಕ ಕಾಲ ಮಾತುಕತೆ ನಡೆಸಿ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ ಎನ್ನಲಾಗುತ್ತಿದೆ.ಬಂದಿದ್ದ ಮೂವರ ಬಳಿಯೂ ಶಸ್ತ್ರಸ್ತ್ರಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ ಪೊಲೀಸರು ಆಲರ್ಟ್ ಆಗಿದ್ದಾರೆ.ಕಳೆದ ವಾರದ ಹಿಂದೆ ದಕ್ಷಿಣ ಕನ್ನಡ-ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ಬಂದಿದ್ದ ಶಂಕಿತ ನಕ್ಸಲರು,ಈಗ ಐನೆಕಿದುಯಲ್ಲಿ ಕಾಣಿಸಿಕೊಂಡಿದ್ದಾರೆ. +ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಎಎನ್‍ಎಫ್ ತಂಡಕ್ಕೆ ಶಂಕಿತರು ಕಾಣಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. +ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು. ಆ ಬಳಿಕ ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯಸಂಪರ್ಕ ಸಾಸಲು ಸಾಧ್ಯವಿದೆ ಎಂದು ಹೇಳಲಾಗುತ್ತಿದೆ ಪ್ರಸ್ತುತ ನಕ್ಸಲ್ ನಿಗ್ರಹ ದಳ ಶೋಧ ಚುರುಕುಗೊಳಿಸಿದೆ. \ No newline at end of file diff --git a/eesanje/url_46_197_3.txt b/eesanje/url_46_197_3.txt new file mode 100644 index 0000000000000000000000000000000000000000..fd7a65ec79771df6afb5a9d3a0ce4e47c62d7741 --- /dev/null +++ b/eesanje/url_46_197_3.txt @@ -0,0 +1,11 @@ +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳು ಯಾರು..? +ಚಿಕ್ಕಬಳ್ಳಾಪುರ, ಮಾ.23-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್, ಬಿಜೆಪಿ ಮೈತ್ರಿಕೂಟದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮೀನ ಮೇಷ ಎಣಿಸುತ್ತಿದೆ. ಇದರಿಂದಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ತಳಮಳ ಉಂಟಾಗಿದೆ. +ರಾಜ್ಯದ ಬಹುತೇಕ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಆಖೈರುಗೊಳಿಸಿ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ, ಕ್ಷೇತ್ರದಲ್ಲಿ ಮತಯಾಚನೆಗಳಿಗೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷವು ಕಾದು ನೋಡುವ ತಂತ್ರ ರೂಪಿಸಿಕೊಂಡಿದೆ. +ಇದರಿಂದಾಗಿ ಪಕ್ಷದಿಂದ ನಾನೇ ಅಭ್ಯರ್ಥಿ, ನಾನೇ ಅಭ್ಯರ್ಥಿ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರೇಸ್ನಲ್ಲಿರುವ ಅಭ್ಯರ್ಥಿಗಳ ತೊಳಲಾಟ ಒಂದು ಕಡೆಯಾದರೆ ಮುಖಂಡರು ಹಾಗೂ ಕಾರ್ಯಕರ್ತರ ತಳಮಳ ತೀವ್ರಗೊಳ್ಳಲಾರಂಭಿಸಿದೆ. ಇಲ್ಲಿ ಯಾವ ಪಕ್ಷವೂ ಯಾವೊಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡದಿರುವುದು ಒಂದು ಕಡೆ ಅಚ್ಚರಿ ಬೆಳವಣಿಗೆ. +ಇನ್ನೊಂದು ಕಡೆ ಕುತೂಹಲಕಾರಿ ಸಂಗತಿಗಳನ್ನು ರಾಜಕೀಯ ಚರ್ಚೆಗಳ ತಾಣವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದ ಅರಳಿಕಟ್ಟೆಗಳು ಮಾರ್ಪಟ್ಟಿವೆ. ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗಳು ಮಾತ್ರ ಅಭ್ಯರ್ಥಿಗಳ ಆಯ್ಕೆ ಆಖೈರು ಗೊಳಿಸಲು ಸಾಧ್ಯವಾಗದೆ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮಟ್ಟಿಗೆ ಅವರ್ನ ಬಿಟ್ ಇವರ್ನ ಬಿಟ್ ಇವರ್ಯಾರು ಅನ್ನೋ ಲೆಕ್ಕಾಚಾರದಲ್ಲಿ ಗೌಣವಾಗಿ ಕುತೂಹಲಕ್ಕೆ ಕಾರಣವಾಗಿದೆ. +ಒಂದೊಂದು ಕಡೆ ಚರ್ಚೆಗಳನ್ನು ಮಾಡುತ್ತಾ ಈ ಬಾರಿಯ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವೊಂದರಲ್ಲೇ ಮೂರು ನಾಲ್ಕು ಮಂದಿ ಚುನಾವಣಾ ಕಣಕ್ಕೆ ಇಳಿಯಲು ರೇಸ್ನಲ್ಲಿದ್ದು, ಈ ಮೂವರು ಅಭ್ಯರ್ಥಿಗಳ ಅವರವರ ಪರವಾಗಿರುವ ಬಹುತೇಕ ಮುಖಂಡರು, ಕಾರ್ಯಕರ್ತರು ಯಾರ ಕಡೆ ನಿಲ್ಲಬೇಕು ಎಂಬ ದ್ವಂದ್ವ ನಿಲುವಿನಲ್ಲಿರುವುದು ಗುಟ್ಟಾಗಿ ಉಳಿದಿಲ್ಲ. ಬಿಜೆಪಿ ಪಕ್ಷದಲ್ಲೂ ಇದೇ ನಿಲುವು ಎಂಬುದರಲ್ಲಿ ಎರಡು ಮಾತಿಲ್ಲ. +ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಡಾ.ಎಂ. ವೀರಪ್ಪ ಮೊಯ್ಲಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಗೌರಿಬಿದನೂರಿನ ಮಾಜಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ಇವರ ನಡುವೆ ಟಿಕೆಟ್ ಪಡೆದುಕೊಳ್ಳಲು ತೀವ್ರ ಪೈಪೊಟಿ ನಡೆದಿದೆ. ಅದೇ ರೀತಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಮಾಜಿ ಮಾಜಿ ಸಚಿವ ಡಾ.ಕೆ. ಸುಧಾಕರ್, ಬಿ.ಡಿ.ಎ. ಛೇರ್ಮನ್ ಶಾಸಕ ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್, ನನ್ನ ಮಗನಿಗೆ ಟಿಕೆಟ್ ಕೊಟ್ಟಿಲ್ಲ ಅಂದ್ರೆ ನನಗೆ ಕೊಡಿ ಅಂತ ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ್ ಹೈ ಕಮಾಂಡ್ಗೆ ಒತ್ತಡ ಹೇರುವ ಮೂಲಕ ಈ ಪಕ್ಷದಲ್ಲೂ ಸಹ ಯಾರೊಬ್ಬರನ್ನು ಆಖೈರುಗೊಳಿಸಿಲ್ಲ. ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್„ಸಲು ಬಹುಭಾಷಾ ಚಿತ್ರನಟಿ ಸುಮಲತಾ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರ ಹೆಸರು ಸಹ ಕೇಳಿ ಬಂದಿತ್ತು. +ಆದರೆ ಎರಡು ದಿನಗಳಿಂದ ಅವರೀರ್ವರ ಹೆಸರು ಆಕಾಂಕ್ಷಿಗಳ ಪಟ್ಟಿಯಿಂದ ನಾಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ಇಚ್ಛಾ ಶಕ್ತಿ ಇಲ್ಲದೆ ಅತಂತ್ರವಾಗಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಎಂಟು ವಿಧಾನಸಭಾ ಕ್ಷೇತ್ರಗಳು ಒಳಪಡಲಿದ್ದು ಕ್ರಮವಾಗಿ ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಯಲಹಂಕ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರಗಳು ಒಳಗೊಂಡಿರುತ್ತದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯು ಭಾರತೀಯ ಜನತಾ ಪಕ್ಷ ಯಲಹಂಕ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇದ್ದು ಇನ್ನು ಉಳಿದಂತೆ ಕಾಂಗ್ರೆಸ್ ಪಕ್ಷವೇ ಅಧಿಕ ವಿಧಾನಸಭಾ ಕ್ಷೇತ್ರದ ಸ್ಥಾನಗಳನ್ನು ಹೊಂದಿರುತ್ತದೆ. ಹೀಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಕಾಂಗ್ರೆಸ್ ಭದ್ರಕೋಟೆಯಂತಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. +ಇದೇ ರೀತಿ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಕಾಂಗ್ರೆಸ್ ಪಕ್ಷಕ್ಕೆ ಒಲಿದಂತೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷಕ್ಕೆ ತನ್ನ ಒಲವನ್ನು ತೋರುವನೇ ಎಂಬುದು ಇದೀಗ ನಿಗೂಢ ಪ್ರಶ್ನೆಯಾಗಿದೆ. ಇದಕ್ಕೆ ಪುಷ್ಟಿಯಾಗಿ ಗ್ಯಾರಂಟಿಗಳ ಮೇಲೆ ಅವಲಂಬಿತವಾಗಿರುವ ಕಾಂಗ್ರೆಸ್ ಸರ್ಕಾರ ಇನ್ನೊಂದೆಡೆ ಮೋದಿ ಅವರ ವೈಯಕ್ತಿಕ ವರ್ಚಸ್ಸು ಮತ್ತು ಹಿಂದುತ್ವ ಈ ಚುನಾವಣೆಯಲ್ಲಿ ಪ್ರಮುಖ ಅಂಶಗಳಾಗಿ ಮಾರ್ಪಡುವ ಎಲ್ಲಾ ಲಕ್ಷಣಗಳು ಚುನಾವಣಾ ಪೂರ್ವದಿಂದಲೇ ಕಂಡು ಬಂದಿದೆ. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ವೈಯಕ್ತಿಕವಾಗಿ ಸ್ವಯಂ 1977ರಲ್ಲಿ ರೂಪಗೊಂಡಿತು ನಂತರ ನಡೆದ ಚುನಾವಣೆಗಳಲ್ಲಿ 1996ರಲ್ಲಿ ಆರ್ ಎಲ್ ಜಾಲಪ್ಪ ಜಾತ್ಯತೀತ ಜನತಾದಳದಿಂದ 2019 ರಲ್ಲಿ ಬಿಎನ್ ಬಚ್ಚೇಗೌಡ ಭಾರತೀಯ ಜನತಾ ಪಕ್ಷದಿಂದ ಗೆಲುವು ಸಾ„ಸಿದ್ದು ಹೊರತು ಪಡಿಸಿದರೆ ಇನ್ನುಳಿದ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಇಲ್ಲಿ ಜಯಗಳಿಸಿರುತ್ತಾರೆ. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ತನ್ನದೇ ಆದ ಕೊಡುಗೆಗಳನ್ನು ನೀಡಿ ತನ್ನದೇ ಆದ ಮಹತ್ವಗಳನ್ನು ಪಡೆದಿದೆ ತನ್ನದೇ ಆದ ಸಮಸ್ಯೆಗಳನ್ನು ಸಹ ಹೊಂದಿದ್ದು ಪ್ರಮುಖವಾಗಿ ಈ ಸಮಸ್ಯೆಗಳ ನಿವಾರಣೆಗೆ ರಾಜಕೀಯವಾಗಿ ಇಚ್ಛಾಶಕ್ತಿ ಇರುವ ಅಭ್ಯರ್ಥಿ ಮೈತ್ರಿ ಪಕ್ಷದಿಂದ ಬರುವವರು ಕಾಂಗ್ರೆಸ್ ಪಕ್ಷದಿಂದ ಬರುವರು ಎಂಬುದು ಇದೀಗ ಮತದಾರರ ಆಕಾಂಕ್ಷೆಗೆ ಒಳಪಟ್ಟಿದೆ. \ No newline at end of file diff --git a/eesanje/url_46_197_4.txt b/eesanje/url_46_197_4.txt new file mode 100644 index 0000000000000000000000000000000000000000..b7573a5c3b027d9af16ef97fe11a7ae10566112c --- /dev/null +++ b/eesanje/url_46_197_4.txt @@ -0,0 +1,5 @@ +ಒಂದು ಕೆಜಿ ಕೋಳಿಗೆ 300 ರೂ..! +ಬೆಂಗಳೂರು,ಮಾ.23-ನೀರಿನ ಕೊರತೆ ಕುಕ್ಕುಟೋದ್ಯಮದ ಮೇಲೂ ಪ್ರಭಾವ ಬೀರಿರುವುದರಿಂದ ಕೋಳಿ ದರ ದುಪ್ಪಾಟ್ಟಾಗಿದೆ. ಹೀಗಾಗಿ ಚಿಕನ್ ಪ್ರಿಯರು ದುಬಾರಿ ಬೆಲೆ ನೀಡಿ ಚಿಕನ್ ಖರೀದಿಸುವುದು ಅನಿವಾರ್ಯವಾಗಿದೆ. ಮಳೆ ಕೊರತೆಯಿಂದ ಕೋಳಿ ಆಹಾರಗಳಾದ ಸೋಯಾ, ಮೈಸ್ ಮತ್ತಿತರ ಫಸಲುಗಳ ಪ್ರಮಾಣ ಕುಸಿತಗೊಂಡಿರುವುದರಿಂದ ಕೋಳಿ ದರ ಏರಿಕೆಯಾಗಿದೆ. +ಒಂದು ಕೆ.ಜಿಗೆ 100 ರಿಂದ 150ರೂ ಇದ್ದ ಕೋಳಿ ಬೆಲೆ ಇದೀಗ 300 ರೂ.ಗಳಿಗೆ ಏರಿಕೆಯಾಗಿದೆ. ಬೆಲೆ ಹೆಚ್ಚಳದ ಬಗ್ಗೆ ತಿಳಿಯದೆ ಚಿಕನ್ ಕೊಳ್ಳಲು ಹೋದವರಿಗೆ ಡಬಲ್ ಬೆಲೆ ಏರಿಕೆಯ ಬಿಸಿ ಮುಟ್ಟಿದೆ. +ರಾಜ್ಯದಲ್ಲಿ 35 ರಿಂದ 40 ಸಾವಿರ ಮಂದಿ ಕೋಳಿ ಸಾಕಾಣಿಕೆದಾರರಿದ್ದು ಪ್ರತೀ ವಾರ 80 ಲಕ್ಷ ಕೋಳಿ ಉತ್ಪಾದನೆ ಮಾಡ್ತಾರೆ ಪ್ರತೀ ಕೆಜಿ ಕೋಳಿ ಉತ್ಪಾದನೆಗೆ ಹಿಂದೆ 60ರಿಂದ 70 ರೂಪಾಯಿ ಖರ್ಚಾಗುತ್ತಿತ್ತು. ಆದ್ರೀಗ ಪ್ರತೀ ಕೆಜಿ ಕೋಳಿ ಉತ್ಪಾದನೆಗೆ 98 ರಿಂದ 100 ರೂಪಾಯಿ ಖರ್ಚಾಗುತ್ತಿದೆಯಂತೆ. +ಇದರಿಂದ ಮಾರುಕಟ್ಟೆಯಲ್ಲಿ ಕೋಳಿಗೆ ಭಾರಿ ಡಿಮ್ಯಾಂಡ್ ಕಂಡುಬಂದಿದೆ. ಹೀಗಾಗಿ 300 ರೂ. ನೀಡಿದರೂ ಕೋಳಿ ಸಿಗೋದು ಅನುಮಾನವಾಗಿದೆ. ನೆರೆ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರದಲ್ಲಿ ಕೋಳಿ ಉತ್ಪಾದನೆ ಕುಸಿತವಾಗಿರುವುದರಿಂದ ಅಲ್ಲಿಯೂ ಕೂಡ ಕೋಳಿ ಬೇಡಿಕೆ ಜಾಸ್ತಿ ಇದೆ, ಹೀಗಾಗಿ ಮತ್ತಷ್ಟು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_197_5.txt b/eesanje/url_46_197_5.txt new file mode 100644 index 0000000000000000000000000000000000000000..fa0687bf9185ff87a8e928367b0d73214a5e7226 --- /dev/null +++ b/eesanje/url_46_197_5.txt @@ -0,0 +1,11 @@ +ರಾಜ್ಯದ ನ್ಯಾಯಾಂಗ ವ್ಯವಸ್ಥೆಯನ್ನು ಶ್ಲಾಘಿಸಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ +ಬೆಂಗಳೂರು,ಮಾ.23- ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಪ್ರಕರಣಗಳ ಇತ್ಯರ್ಥ ಮತ್ತು ನ್ಯಾಯಾಧೀಶರ ಹುದ್ದೆಗಳಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೆ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ. ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 21ನೇ ದ್ವೈವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳಲ್ಲಿ 21.25 ಲಕ್ಷ ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ 20.62 ಲಕ್ಷ ಪ್ರಕರಣಗಳು ಇತ್ಯರ್ಥಗೊಂಡಿವೆ. ಮೂರ್ನಾಲ್ಕು ಲಕ್ಷ ಪ್ರಕರಣಗಳು ಮಾತ್ರ ಬಾಕಿ ಉಳಿದಿವೆ. ಇದು ದೇಶಕ್ಕೆ ಮಾದರಿ ಎಂದರು. +ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಸಹಭಾಗಿತ್ವ ಶೇ.37 ರಷ್ಟಿದೆ. ಆದರೆ ಕರ್ನಾಟಕದ ನೇಮಕಾತಿ ಪ್ರಕ್ರಿಯೆಗಳಲ್ಲಿ 447 ಮಂದಿ ಜಿಲ್ಲಾ ಸಿವಿಲ್ ನ್ಯಾಯಾೀಧಿಶರ ಪೈಕಿ 200 ಮಂದಿ ಮಹಿಳೆಯರಿದ್ದಾರೆ. ಇದು ಶೇ.44 ರಷ್ಟು ಪಾಲು ಹೊಂದಿದೆ ಎಂದು ಹೇಳಿದರು. ಇದು ಯುವಸಮುದಾಯ ಕಾನೂನು ಸೇವೆಯನ್ನು ವೃತ್ತಿಯನ್ನಾಗಿ ಆಯ್ಕೆ ಮಾಡಿ ಕೊಳ್ಳಲು ಪ್ರೇರಣೆಯಾಗಿದೆ. ನ್ಯಾಯಾಂಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ ನೀಡುವ ಸಲುವಾಗಿ ಮತ್ತಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಬದ್ಧತೆ ಪ್ರದರ್ಶಿಸಲಾಗುತ್ತಿದೆ ಎಂದರು. +ಕರ್ನಾಟಕ ಸರ್ಕಾರ ನ್ಯಾಯಾಂಗದ ಸುಧಾರಣೆಗೆ ಸಾಕಷ್ಟು ಆರ್ಥಿಕ ನೆರವು ನೀಡುತ್ತಿದೆ. ಈ ಸೇವಾ ಕೇಂದ್ರಗಳು ಲ್ಯಾಪ್ಟಾಪ್ ಪೂರೈಕೆ ಸೇರಿದಂತೆ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ. ಜನರ ತೆರಿಗೆ ಆದಾಯದ ಬಳಕೆಗೆ ಅನುಗುಣವಾಗಿ ಗುಣಮಟ್ಟದ ಸೇವೆ ಒದಗಿಸಲು ನ್ಯಾಯಾಂಗ ಕೆಲಸ ಮಾಡಬೇಕು ಎಂದರು. +ಜಿಲ್ಲಾ ನ್ಯಾಯಾಲಯಗಳಲ್ಲಿರುವ ಒತ್ತಡ ನನಗೆ ಅರಿವಿದೆ. ಅದನ್ನು ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮಾನವ ಸಂಪನ್ಮೂಲ, ಆಧುನಿಕತೆಯ ಅಳವಡಿಕೆ, ಇತರ ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ದತ್ತಾಂಶ ಸಂಗ್ರಹದಲ್ಲಿ ಇಂದು ಸಾಕಷ್ಟು ಸುಧಾರಣೆಯಾಗಿದೆ. ನ್ಯಾಯಾಲಯ ತನ್ನ ಲಕ್ಷ್ಮಣರೇಖೆಯ ಇತಿಮಿತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದು ಹೇಳಿದರು. +ತಮಗೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ನಾಲ್ಕೈದು ದಿನಗಳ ಹಿಂದೆ ಪ್ರಕರಣದ ವಿಚಾರಣೆಯ ವೇಳೆ ನಾನು ನನ್ನ ಮೊಣಕೈಗಳನ್ನು ವಿಶ್ರಾಂತಿಯ ಸ್ಥಿತಿಯಲ್ಲಿಟ್ಟು ಖುರ್ಚಿಯಲ್ಲಿ ಕುಳಿತುಕೊಂಡಿದ್ದೆ. ಅದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು. ಮುಖ್ಯನ್ಯಾಯಮೂರ್ತಿಯವರು ಪ್ರಕರಣದ ವಿಚಾರಣೆಯಲ್ಲಿ ಅಹಮಿಕೆ ಪ್ರದರ್ಶಿಸುತ್ತಿದ್ದಾರೆ ಎಂಬ ಟೀಕೆಗಳು ಬಂದವು. ಸುಪ್ರೀಂಕೋರ್ಟ್ನ ಸ್ಥಿತಿಯೇ ಹೀಗಾದರೆ ಜಿಲ್ಲಾ ನ್ಯಾಯಾಲಯದ ಸ್ಥಿತಿ ನನಗೆ ಅರ್ಥವಾಗುತ್ತದೆ ಎಂದರು. +ಕರ್ನಾಟಕದೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡ ಚಂದ್ರಚೂಡ್ ಅವರು, ಬೆಂಗಳೂರು ಆಹ್ಲಾದಕರ ನಗರ. ನಾನು ಇಲ್ಲಿನ ಅಳಿಯ. ನನ್ನ ಅತ್ತೆ ಮತ್ತು ಅತ್ತಿಗೆ ನಿವೃತ್ತಿಯ ನಂತರ ಬೆಂಗಳೂರಿನಲ್ಲಿ ವಾಸವಿದ್ದಾರೆ. ಪದೇಪದೇ ಬೆಂಗಳೂರಿಗೆ ಭೇಟಿ ನೀಡುತ್ತಿರುತ್ತೇನೆ. ಬಾಲ್ಯದಲ್ಲಿ ಧಾರವಾಡದಲ್ಲಿ ರಜಾದಿನಗಳನ್ನು ಕಳೆದಿದ್ದೇನೆ ಎಂದರು. +ಜಿಲ್ಲಾ ನ್ಯಾಯಾಲಯಗಳು ಕಾನೂನು ವ್ಯವಸ್ಥೆಯ ಬೆನ್ನೆಲುಬು ಮತ್ತು ಮೂಲಾಧಾರ ಎಂಬುದನ್ನು ನಾನು ಬಲವಾಗಿ ನಂಬುತ್ತೇನೆ. ಜಿಲ್ಲಾ ನ್ಯಾಯಾೀಧಿಶರು ನ್ಯಾಯಾಂಗದ ಸಂಪರ್ಕದ ಮೊದಲ ಬಿಂದು. ನ್ಯಾಯಾಂಗದ ಅಧಿಕಾರಿಗಳು ನ್ಯಾಯ ವಿತರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಕನ್ನಡದಲ್ಲಿ ಹೇಳಿದರು.ಮುಖ್ಯ ನ್ಯಾಯಮೂರ್ತಿಯವರ ಕನ್ನಡ ಭಾಷೆಯ ಬಳಕೆಗೆ ಇಡೀ ಸಭಾಂಗಣ ಎದ್ದು ನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿತು. +ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಅರವಿಂದಕುಮಾರ್ ಮಾತನಾಡಿ, ಕರ್ನಾಟಕ ನ್ಯಾಯದಾನದಲ್ಲಿ ಮುಂಚೂಣಿಯಲ್ಲಿದೆ. 2020-21 ರಲ್ಲಿ ಶೇ.92 ರಷ್ಟು, 2022 ರಲ್ಲಿ ಶೇ.97 ರಷ್ಟು, 2023 ರಲ್ಲಿ ಶೇ.91.78 ರಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ನ್ಯಾಯಾಂಗದ ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು. ಈ ಮೊದಲು ಎಕ್ಸಿಕ್ಯೂಷನ್ ಪ್ರಕರಣಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗಿನ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಕೋವಿಡ್ನ ಕಾರಣದಿಂದಾಗಿ ಹಣದ ಕೊರತೆಯಿದೆ ಎಂದು ಉತ್ತರ ನೀಡಿದ್ದರು. +ಭೂಸ್ವಾಧೀನ ವಿವಾದದಲ್ಲಿ 1.72 ಲಕ್ಷ ರೂ.ಗಳ ಪರಿಹಾರ ಪಾವತಿಸಬೇಕಾಗುತ್ತದೆ. 19 ವರ್ಷ ಪ್ರಕರಣದ ವಿಚಾರಣೆ ನಡೆದು ಪರಿಹಾರದ ಮೊತ್ತ 21 ಲಕ್ಷ ರೂ.ಗಳಿಗೆ ತಲುಪಿದೆ. ಈ ರೀತಿ 400 ಕೋಟಿ ರೂ.ಗಳ ಹಣ ಬಾಕಿ ಉಳಿದಿದೆ ಎಂದು ವಿವರಿಸಿದರು. ನ್ಯಾಯಾಂಗಾಧಿಕಾರಿಗಳು ಕಾಲಕಾಲಕ್ಕೆ ಸಮಾವೇಶಗಳನ್ನು ಮಾಡಿ ಕಾನೂನಿನ ತಿಳಿವಳಿಕೆಗಳನ್ನು ವಿನಿಮಯ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು. +ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯ ಮಾತನಾಡಿ, ಲೋಕ ಅದಾಲತ್ನಲ್ಲಿ 29 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಅವುಗಳಲ್ಲಿ 2 ಲಕ್ಷ ವಿಚಾರಣೆಗೆ ಬಾಕಿ ಇದ್ದ ಪ್ರಕರಣಗಳಾಗಿದ್ದರೆ, 26 ಲಕ್ಷ ತಗಾದೆ ಪೂರ್ವ ಪ್ರಕರಣಗಳಾಗಿವೆ. ನ್ಯಾಯಾೀಧಿಶರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. \ No newline at end of file diff --git a/eesanje/url_46_197_6.txt b/eesanje/url_46_197_6.txt new file mode 100644 index 0000000000000000000000000000000000000000..9a06620810ba01b1987a50c1f86fc707f3cd3053 --- /dev/null +++ b/eesanje/url_46_197_6.txt @@ -0,0 +1,9 @@ +ಗ್ಯಾರಂಟಿ ಯೋಜನೆಗಳನ್ನು ಮತವಾಗಿ ಪರಿವರ್ತಿಸಲು ಡಿಕೆಶಿ ಕರೆ +ಬೆಂಗಳೂರು, ಮಾ.23-ಕಾಂಗ್ರೆಸ್ ಪಕ್ಷದ ಪಂಚಖಾತ್ರಿ ಯೋಜನೆಗಳನ್ನು ಮನೆಮನೆಗೆ ತಲುಪಿಸಿ ಅವನ್ನು ಮತವನ್ನಾಗಿ ಪರಿವರ್ತಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಮತ್ತು ಪಕ್ಷ ನಿಮ್ಮನ್ನು ನಂಬಿದೆ. +ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಿಗೆ, ಸದಸ್ಯರಿಗೆ ಸಂಪುಟದ ಸ್ಥಾನಮಾನ ನೀಡಲಾಗಿದೆ. ಜಿಲ್ಲಾ ಸಮಿತಿಯವರಿಗೆ 50 ಸಾವಿರ ರೂ. ವೇತನ ನೀಡಲಾಗುತ್ತಿದೆ. ಹಾಗೆಯೇ ಜಿಲ್ಲಾ ಸಮಿತಿಯವರಿಗೆ ಜಿಲ್ಲಾ ಪಂಚಾಯಿತಿಯಲ್ಲಿ, ತಾಲೂಕು ಸಮಿತಿಯವರಿಗೆ ತಾಲ್ಲೂಕು ಪಂಚಾಯಿತಿಗಳಲ್ಲಿ ಕಚೇರಿಗಳನ್ನು ನೀಡಲಾಗಿದೆ. ಪ್ರತಿ ತಾಲ್ಲೂಕಿಗೂ 15 ಸಮಿತಿ ಸದಸ್ಯರಿದ್ದಾರೆ ಎಂದು ಹೇಳಿದರು. +15 ಮಂದಿಯೂ ತಮ್ಮ ತಾಲ್ಲೂಕಿನ ಪ್ರತಿ ಪಂಚಾಯಿತಿಗೆ ಇಬ್ಬರಂತೆ ಹಂಚಿಕೆ ಮಾಡಿಕೊಂಡು ಬೂತ್ಗಳಲ್ಲಿ ಎಲ್ಲಾ ಸಮುದಾಯ ಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ಥಳೀಯ ನಾಯಕರ ಜೊತೆ ಸೌಹಾರ್ದತೆಯಿಂದ ಚುನಾವಣೆ ನಡೆಸಬೇಕು. ಕಾಂಗ್ರೆಸ್ಗೆ ಲೀಡ್ ಕೊಡಿ¸ ಬೇಕು ಎಂದು ಸೂಚಿಸಿದರು. +ಸರ್ಕಾರ ನನಗೆ ಉಪಮುಖ್ಯಮಂತ್ರಿ ಎಂದು ಗುರುತಿನ ಚೀಟಿ ನೀಡಿದೆ. ಅದಕ್ಕಿಂತಲೂ ಪ್ರಖರವಾದಂತಹ ಗುರುತಿನ ಚೀಟಿಗಳನ್ನು ಸರ್ಕಾರದ ಚಿಹ್ನೆ ಹಾಗೂ ಸದಸ್ಯರ ಅಧ್ಯಕ್ಷರ ಫೋಟೋಗಳೊಂದಿಗೆ ತಯಾರಿಸಲಾಗಿದೆ. ಅದನ್ನು ಕೊರಳಿಗೆ ಹಾಕಿಕೊಂಡು ನೀವು ವಿಧಾನಸೌಧಕ್ಕೂ ಮುಕ್ತವಾಗಿ ಪ್ರವೇಶಿಸಬಹುದು. ಈ ಕಾರ್ಡ್ ಅಥವಾ ಹುದ್ದೆಗಳನ್ನು ದುರುಪಯೋಗಪಡಿಸಿಕೊಂಡರೆ ಮುಲಾಜಿಲ್ಲದೆ ವಜಾಗೊಳಿಸಲಾಗುತ್ತದೆ. ನೀವು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಸರ್ಕಾರದ ಪ್ರತಿನಿಧಿಗಳು ಎಂಬುದನ್ನು ಮರೆಯಬಾರದು. ಯಾರಾದರೂ ಒಬ್ಬರು ಕೆಟ್ಟ ಹೆಸರನ್ನು ತಂದರೂ ಅದನ್ನು ಸಹಿಸುವುದಿಲ್ಲ ಎಂದು ಹೇಳಿದರು. +ಆರಾಧನಾ, ಆಶಯ, ಆಸ್ಪತ್ರೆ, ಜೆಡಿಪಿ ಸಮಿತಿಗಳ ಸದಸ್ಯರ ಜೊತೆಗೆ ಸಹಕಾರ ಸಂಸ್ಥೆಗಳಲ್ಲಿ ತಲಾ ಮೂವರು ಸದಸ್ಯರ ನೇಮಕಾತಿಗೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಒಂದೆರಡು ತಾಲ್ಲೂಕುಗಳ ನೇಮಕಾತಿಗೆ ಹಿನ್ನಡೆಯಾಗಿರಬಹುದು. ಆದರೆ ಈಗ ಎಲ್ಲಾ ನೇಮಕಾತಿಗೂ ಶಿಫಾರಸು ಮಾಡಿದ್ದೇವೆ, ಮುಖ್ಯಮಂತ್ರಿಯವರು ಸಹಿ ಹಾಕಿದ್ದಾರೆ. ಕಾರ್ಯಕರ್ತರಿಗೆ ಸೂಕ್ತ ಸಮಯದಲ್ಲಿ ಆದೇಶಗಳು ರವಾನೆಯಾಗುತ್ತವೆ ಎಂದರು. +ಪ್ರಧಾನಮಂತ್ರಿ ಸೇರಿದಂತೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಆದರೆ ಈಗ ಅವರೇ ಮೋದಿ ಗ್ಯಾರಂಟಿ ಎಂದು ಹೇಳಿಕೊಂಡು ಹೊರಟಿದ್ದಾರೆ. ಚುನಾವಣೆಯಲ್ಲಿ ಮತ ಪಡೆಯಲು ಬಿಜೆಪಿ-ಜೆಡಿಎಸ್ನವರು 400, 500 ರೂ. ಹಣ ಕೊಡಬಹುದು. ಆದರೆ ನಾವು ಸರ್ಕಾರದಿಂದ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿಯೋಜನೆ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಯಡಿ ನಾಲ್ಕೈದು ಸಾವಿರ ರೂ.ಗಳನ್ನು ಪ್ರತಿ ಕುಟುಂಬಕ್ಕೆ ತಿಂಗಳಿಗೆ ನೀಡುತ್ತಿದ್ದೇವೆ. ಚುನಾವಣೆ ಕಾಲಕ್ಕೆ ರಾಜಕೀಯ ಪಕ್ಷಗಳು ನೀಡುವ 500-600 ರೂ.ಗಳು ಲೆಕ್ಕಕ್ಕಿಲ್ಲ. ಸರ್ಕಾರದ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ, ಜನರಿಗೆ ತಿಳಿವಳಿಕೆ ಮೂಡಿಸುವುದು ಅನುಷ್ಠಾನ ಸಮಿತಿಯ ಪದಾಧಿಕಾರಿಗಳ ಜವಾಬ್ದಾರಿ ಎಂದರು. +ಪ್ರತಿ ಸದಸ್ಯರು ಮನೆಮನೆಗೆ ಭೇಟಿ ನೀಡಿದ ಮಾಹಿತಿಯನ್ನು ವಾರ್ಡ್ ರೂಂಗೆ ವಿಡಿಯೋ ಸಮೇತ ಪುರಾವೆ ಕಳುಹಿಸಬೇಕು. ಎಷ್ಟು ಮನೆಗೆ ಭೇಟಿ ನೀಡಿದ್ದೀರ ಎಂಬ ಕರಾರುವಾಕ್ಕಾದ ಲೆಕ್ಕದ ಕಡೆ ನಾವು ನಿಗಾ ವಹಿಸುತ್ತೇವೆ ಎಂದು ಎಚ್ಚರಿಸಿದರು. ಚುನಾವಣೆ ನಂತರ ನಾವು ಇವುಗಳ ಪ್ರಗತಿಪರಿಶೀಲನೆ ನಡೆಸುವುದಾಗಿ ಹೇಳಿದರು. +ಸಣ್ಣಪುಟ್ಟ ದೇವಸ್ಥಾನಗಳಿಗೆ ಧಾರ್ಮಿಕ ದತ್ತಿ ನಿಧಿ ಬಳಸುವ ವಿಧೇಯಕವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಜೂನ್ ವೇಳೆಗೆ ವಿಧಾನಪರಿಷತ್ನಲ್ಲಿ ನಮಗೆ ಬಹುಮತ ಬರುತ್ತದೆ. ಆಗ ಮತ್ತೊಮ್ಮೆ ಇದೇ ವಿಧೇಯಕವನ್ನು ಅಂಗೀಕಾರ ಮಾಡಿಕೊಳ್ಳುತ್ತೇವೆ. ಬಿಜೆಪಿಯವರು ವಿಧೇಯಕದ ಬಗ್ಗೆ ಅಪಪ್ರಚಾರ ಮಾಡಿದ್ದಾರೆ. ಅವರು ಮಾತ್ರ ಹಿಂದೂಗಳೇ? ನಾವೇನು ಹಿಂದೂಗಳಲ್ಲವೇ? ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_197_7.txt b/eesanje/url_46_197_7.txt new file mode 100644 index 0000000000000000000000000000000000000000..4d9ffb482c113110404e3d4c8aa8106c2e0818ea --- /dev/null +++ b/eesanje/url_46_197_7.txt @@ -0,0 +1,12 @@ +3 ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ ಫೈನಲ್, ಸುಮಲತಾ ರಾಜಕೀಯ ಭವಿಷ್ಯ ಅತಂತ್ರ +ಬೆಂಗಳೂರು,ಮಾ.23-ತೀವ್ರ ಕಗ್ಗಂಟಾಗಿ ಪರಿಣಮಿಸಿದ್ದ ಜೆಡಿಎಸ್-ಬಿಜೆಪಿ ನಡುವಿನ ಸೀಟು ಹಂಚಿಕೆಗೆ ಕೊನೆಗೂ ತೆರೆಬಿದ್ದಿದ್ದು, ದಳಪತಿಗಳಿಗೆ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳು ಅಂತಿಮವಾಗಿದ್ದು, ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ ಅತಂತ್ರಕ್ಕೆ ಸಿಲುಕಿದೆ. ಕೊನೆ ಕ್ಷಣದವರೆಗೂ ಮಂಡ್ಯ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆಯಲು ದೆಹಲಿ ಮಟ್ಟದಲ್ಲಿ ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ. +ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳು ಜೆಡಿಎಸ್ ಪಾಲಾಗಿದ್ದು, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಈಗ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಕಳೆದ ಬಾರಿಯಂತೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆಯೇ ಇಲ್ಲವೇ ಸಕ್ರಿಯ ರಾಜಕಾರಣದಿಂದ ದೂರ ಇರುತ್ತಾರೆಯೇ ಎಂಬುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. +ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕರನ್ನು ಭೇಟಿಯಾಗಿ ಮಂಡ್ಯ ಕ್ಷೇತ್ರದಿಂದ ತಮಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ. +ಆದರೆ ಈ ಬೇಡಿಕೆಗೆ ಸೊಪ್ಪು ಹಾಕದ ವರಿಷ್ಠರು ಮೈತ್ರಿ ಧರ್ಮವನ್ನು ಪಾಲನೆ ಮಾಡಬೇಕಾದ ಇಕ್ಕಟ್ಟಿಗೆ ಸಿಲುಕಿರುವ ಕಾರಣ ಮಂಡ್ಯ ಕ್ಷೇತ್ರವು ದಳಪತಿಗಳ ಪಾಲಾಗಿದೆ. ಇದೇ ರೀತಿ ಕೋಲಾರದಿಂದ ಬಿಜೆಪಿ ಅಭ್ಯರ್ಥಿಯಾಗಿ 2ನೇ ಬಾರಿಗೆ ಕಣಕ್ಕಿಳಿಯಲು ತುದಿಗಾಲಲ್ಲಿ ನಿಂತಿದ್ದ ಸಂಸದ ಮುನಿಸ್ವಾಮಿ ರಾಜಕೀಯ ಭವಿಷ್ಯವೂ ಕೂಡ ಅಡಕತ್ತರಿಗೆ ಸಿಲುಕಿದೆ. +ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಬಿಜೆಪಿ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾಮೋಹನ್ದಾಸ್ ಅಗರವಾಲ್ ಅವರು, ನಾವು ಮೈತ್ರಿಯಂತೆ ಮೂರು ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದೇವೆ. ಈ ಕ್ಷೇತ್ರಗಳಲ್ಲಿ ನಮ್ಮ ಕಾರ್ಯಕರ್ತರು ಅವರ ಅಭ್ಯರ್ಥಿಗಳಿಗೆ ಪಕ್ಷಬೇಧ ಮರೆತು ಗೆಲುವಿಗೆ ಶ್ರಮಿಸಬೇಕೆಂದು ಸೂಚನೆ ನೀಡಿದರು. +ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ರಾಧಾಮೋಹನ್ದಾಸ್, ಜೆಡಿಎಸ್, ಎನ್ಡಿಎ ಮೈತ್ರಿ ಭಾಗವಾಗಿರುವುದರಿಂದ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರವನ್ನು ಅವರಿಗೆ ಬಿಟ್ಟುಕೊಟ್ಟಿದ್ದೇವೆ. ಎರಡೂ ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಅಧಿಕೃತ ಟಿಕೆಟ್ ಘೋಷಣೆಯಾದ ಬಳಿಕ ನನ್ನ ನಿರ್ಧಾರ ಎಂಬ ಸುಮಲತಾ ಅಂಬರೀಶ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಧಾ ಮೋಹನ್ದಾಸ್ ಹೇಳಿಕೆಗೆ ದನಿಗೂಡಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸುಮಲತಾ ಅಂಬರೀಶ್ ಕೇಂದ್ರ ನಾಯಕರನ್ನು ಭೇಟಿ ಮಾಡಿದ್ದಾರೆ. ಅಲ್ಲಿಯೇ ಅವರ ವಿಚಾರ ತೀರ್ಮಾನವಾಗಲಿದೆ. ಚೆಂಡು ಕೇಂದ್ರದ ಅಂಗಳದಲ್ಲಿದೆ ಎಂದು ಹೇಳುವ ಮೂಲಕ ಸುಮಲತಾ ಅಂಬರೀಶ್ಗೆ ಟಿಕೆಟ್ ಕೈ ತಪ್ಪುವುದು ಗ್ಯಾರಂಟಿ ಎಂಬ ಸುಳಿವು ನೀಡಿದರು. +ಇಂದು ರಾತ್ರಿ ಅಥವಾ ನಾಳೆ ಉಳಿದ ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆಯಾಗಬಹುದು. ಎರಡೂ ಪಕ್ಷದವರು ಹಾಲುಜೇನಿನಂತೆ ಒಟ್ಟಾಗಿ ಕೆಲಸ ಮಾಡುತ್ತೇವೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ದಾಖಲೆ ಸೃಷ್ಟಿಸುವುದು ನಮ್ಮ ಗುರಿಯಾಗಿದೆ ಎಂದರು. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ಪ್ರಧಾನಿ ಮೋದಿಗಾಗಿ ಮೂರು ಕ್ಷೇತ್ರದ ಕಾರ್ಯಕರ್ತರೂ ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ದರೂ ಬಿಟ್ಟು ಪಕ್ಷದ ಪರವಾಗಿ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಕರೆ ಕೊಟ್ಟರು. +ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ +25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲೂ ಹಸ್ತಕ್ಷೇಪ ಮಾಡಿಲ್ಲ. ಜೆಡಿಎಸ್ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ. ಕೋಲಾರ, ಮಂಡ್ಯ, ಹಾಸನಗಳಲ್ಲಿ ನಮ್ಮ ಕಾರ್ಯಕರ್ತರು ಪೂರ್ತಿ ಶ್ರದ್ಧೆ, ಮನಃಪೂರ್ವಕವಾಗಿ ಕೆಲಸ ಮಾಡಬೇಕು. ಅಲ್ಲಿ ಯಾರು ಅಭ್ಯರ್ಥಿ ಎಂಬುದು ಮುಖ್ಯ ಅಲ್ಲ. ಮನಃಪೂರ್ವಕವಾಗಿ ಕೆಲಸ ಮಾಡಿ ಎಂದು ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಸರ್ಕಾರ ಆಡಳಿತ ನಡೆಸಿದರೆ 10 ವರ್ಷಗಳ ಬಳಿಕ ಆಡಳಿತ ವಿರೋಧಿ ಅಲೆ ಇರುತ್ತದೆ. ಆದರೆ ಈ ಬಾರಿ ಅಂತಹ ಅಲೆ ಎಲ್ಲಿಯೂ ಕಾಣುತ್ತಿಲ್ಲ ಎಂದು ಹೇಳಿದರು. +ಈಗಾಗಲೇ ಚುನಾವಣೆ ದಿನಾಂಕ ಘೋಷಣೆ ಆಗಿದೆ. ಸಾಕಷ್ಟು ಚುನಾವಣೆ ಜವಬ್ದಾರಿ ತೆಗೆದುಕೊಂಡಿರುವವರಿಗೆ ಮತ್ತೆ ಜವಾಬ್ದಾರಿ ಕೊಡಲಾಗಿದೆ. ಚುನಾವಣೆ ಮತದಾನ ಆಗುವ ಕೊನೆ ಕ್ಷಣದ ವರೆಗೂ ನಿಮಗೆ ಜವಾಬ್ದಾರಿ ಇರಲಿದೆ. ರಾಜ್ಯ, ಜಿಲ್ಲಾ, ಮಂಡಲ ಹಾಗೂ ಬೂತ್ ಮಟ್ಟದಲ್ಲಿ ನಿರ್ವಹಣಾ ಸಮಿತಿ ವಿಸ್ತರಣೆ ಮಾಡಿ ಕಾರ್ಯರೂಪಕ್ಕೆ ತರಬೇಕು ಎಂದು ಕೋರಿದರು. \ No newline at end of file diff --git a/eesanje/url_46_197_8.txt b/eesanje/url_46_197_8.txt new file mode 100644 index 0000000000000000000000000000000000000000..4647c373e74647ca17ea4712daf496c968c9c4bf --- /dev/null +++ b/eesanje/url_46_197_8.txt @@ -0,0 +1,8 @@ +ಒಂದೇ ವಾರದಲ್ಲಿ 9.64 ಕೋಟಿ ನಗದು, ಕೋಟ್ಯಂತರ ಮೌಲ್ಯದ ಚಿನ್ನಾಭರಣ ಜಪ್ತಿ +ಬೆಂಗಳೂರು, ಮಾ.23-ಪ್ರಸಕ್ತ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದ ಆರೇಳು ದಿನಗಳಲ್ಲಿ ರಾಜ್ಯದಲ್ಲಿ 9, 64, 91, 063 ರೂ. ವನ್ನು ಜಪ್ತಿ ಮಾಡಿದ್ದು, ಕೋಟ್ಯಂತರ ಮೌಲ್ಯದ ಚಿನ್ನಾಭರಣ, ಉಚಿತ ಉಡು ಗೊರೆಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಒಟ್ಟು 36,41,21,534 ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ವಶಪಡಿಸಿಕೊಂಡಿದ್ದು, 402 ಪೊಲೀಸರು ದಾಖಲಿಸಿದ್ದಾರೆ. +ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ಷಿಪ್ರ ಪಡೆಗಳು, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಹಾಗೂ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಪ್ರಮಾಣದ ನಗದು ಮತ್ತು ಚಿನ್ನಾಭರಣಗಳನ್ನು ನಿನ್ನೆಯ ವರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. +ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ 65,432 ಶಸಾಸಗಳನ್ನು ಠೇವಣಿ ಮಾಡಲಾಗಿದ್ದು, 831 ಶಸ್ತ್ರಸಗಳನ್ನು ವಶಪಡಿಸಿಕೊಳ್ಳಲಾಗಿದೆ. 8 ಶಸ್ತ್ರಸ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಮತದಾರರಿಗೆ ಹಂಚುವ ಉದ್ದೇಶದ 15,67,335 ರೂ. ಮೌಲ್ಯದ ಉಚಿತ ಉಡುಗೊರೆಯನ್ನು ಜಪ್ತಿ ಮಾಡಲಾಗಿದೆ.2.08 ಕೆಜಿ ಪ್ರಮಾಣದ 1,27,36,480 ರೂ. ಮೌಲ್ಯದ ಚಿನ್ನವನ್ನು ಪೊಲೀಸರು, ಆದಾಯ ತೆರಿಗೆ ಇಲಾಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. +46.33 ಕೆಜಿ ತೂಕದ 21,47,240 ರೂ. ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ 21.17 ಕ್ಯಾರೆಟ್ನ 9 ಲಕ್ಷ ಮೌಲ್ಯದ ವಜ್ರಾಭರಣಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು 36,41,21,534ರೂ. ಮೌಲ್ಯದ ಚಿನ್ನ, ಬೆಳ್ಳಿ, ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. +ಚುನಾವಣೆಯ ನೀತಿ ಸಂಹಿತೆ ಮಾರ್ಚ್ 16ರಿಂದ ಜಾರಿಗೆ ಬಂದಿದ್ದು ನಿನ್ನೆಯವರೆಗೆ 22,85,43,896 ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಲಾಗಿದೆ. ಒಟ್ಟು 7,20,764 ಲೀಟರ್ ಮದ್ಯವನ್ನು ತಪಾಸಣೆ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ, ಅದೇ ರೀತಿ 52.12 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 53,37,370 ರೂ. ಆಗಲಿದೆ ಎಂದು ಅಂದಾಜಿಸಲಾಗಿದೆ. +ಅಬಕಾರಿ ಇಲಾಖೆಯ ಅಪರಾಧದಡಿಯಲ್ಲಿ 471 ಪ್ರಕರಣಗಳನ್ನು ದಾಖಲಿಸಿದ್ದು, ಪರವಾನಗಿ ಉಲ್ಲಂಸಿದ 359 ಪ್ರಕರಣಗಳನ್ನು ದಾಖಲಿಸಿದೆ. ಜೊತೆಗೆ 284 ವಿವಿಧ ರೀತಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. +ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ ಸಂಪಂಗಿರಾಮನಗರದಲ್ಲಿ 28,75,400 ರೂ. ಕೋರಮಂಗಲದಲ್ಲಿ 24,00,000 ರೂ, ಮತ್ತು 86,50,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ 71,16,480 ಮೌಲ್ಯದ 983.71 ಗ್ರಾಂ ಚಿನ್ನ, 9,00,000 ಮೌಲ್ಯದ 21.17 ಕ್ಯಾರೆಟ್ ವಜ್ರವನ್ನು ಮುರುಗೇಶ್ ಪಾಳ್ಯದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_197_9.txt b/eesanje/url_46_197_9.txt new file mode 100644 index 0000000000000000000000000000000000000000..df2bd6bc5b052168b2b2bd7ae8e60d5510861768 --- /dev/null +++ b/eesanje/url_46_197_9.txt @@ -0,0 +1,14 @@ +ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ +ಬೆಂಗಳೂರು,ಮಾ.23-ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸದೇ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. +ಲೋಕಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿಯಾಗಿ ಚುನಾವಣಾ ಉಸ್ತುವಾರಿ ನಿಭಾಯಿಸುತ್ತಿದ್ದಾರೆ. +ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ಇಬ್ಬರ ನಡುವೆಯೂ ಬಲವಾದ ಹೊಂದಾಣಿಕೆ ಕಾಣಸಿಗುತ್ತಿದೆ. ಅದರ ಜೊತೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ನೀಡಲಾಗಿದೆ ಮತ್ತು ಬಹುತೇಕ ಕಡೆ ಅವರ ಕುಟುಂಬದ ಸದಸ್ಯರಿಗೇ ಪಕ್ಷ ಟಿಕೆಟ್ ನೀಡಿದೆ. +ತುಮಕೂರಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಆಡಳಿತಾರೂಢ ಪಕ್ಷವಾಗಿರುವುದರಿಂದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಗೆಲ್ಲದೇ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. +ಈ ಹಿಂದೆ ತುಮಕೂರಿನವರೇ ಆದ ಸಚಿವ ಕೆ.ಎನ್.ರಾಜಣ್ಣ ಕೂಡ ಇದೇ ರೀತಿಯ ಮಾತುಗಳನ್ನಾಡಿದ್ದರು. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಾಯಕತ್ವದ ಬದಲಾವಣೆಗೆ ಅವಕಾಶ ಮಾಡಿಕೊಡಬೇಕಾಗುತ್ತದೆ. ಹೀಗಾಗಿ ಹೆಚ್ಚು ಸ್ಥಾನ ಗೆಲ್ಲುವುದು ಎಲ್ಲರ ಹೊಣೆಗಾರಿಕೆ ಎಂದು ಹೇಳಿದರು. +2019 ರಲ್ಲಿ ನಡೆದ ಲೋಕಸಭಾ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವ್ಯಕ್ತಿ ನಾಯಕತ್ವ ವಹಿಸಿದ್ದರು. ಆದರೆ ಫಲಿತಾಂಶ ನಿರಾಶಾದಾಯಕವಾಗಿತ್ತು. 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 27 ರಲ್ಲಿ ಸೋತಿತ್ತು. ಸಹಜವಾಗಿಯೇ ಇದು ಕಾಂಗ್ರೆಸ್ಗೆ ಭಾರೀ ಹಿನ್ನಡೆಯುಂಟಾಗಿತ್ತು. +ಈ ಹಿನ್ನೆಲೆಯಲ್ಲಿ ಈ ಬಾರಿ ಏಕವ್ಯಕ್ತಿ ನಾಯಕತ್ವದ ಬದಲಾಗಿ ಸಾಮೂಹಿಕ ನಾಯಕತ್ವಕ್ಕೆ ಕಾಂಗ್ರೆಸ್ ಮೊರೆ ಹೋಗಿದೆ. ರಾಜ್ಯದಲ್ಲಿ ಹಿಂದುಳಿದ, ದಲಿತ, ಒಕ್ಕಲಿಗ, ಲಿಂಗಾಯತ, ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಸಾಮಾಜಿಕ ಎಂಜಿನಿಯರಿಂಗ್ ಸೂತ್ರ 2023 ರ ವಿಧಾನಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿದೆ. +ಸಿದ್ದರಾಮಯ್ಯ ಅವರನ್ನು ವೈಭವೀಕರಿಸಿದರೆ ಹಿಂದುಳಿದ ವರ್ಗಗಳ ಕೆಲವು ಜಾತಿಯ ಮತಗಳಷ್ಟೇ ಕಾಂಗ್ರೆಸ್ ಪಾಲಿಗೆ ಉಳಿಯಲಿದ್ದು, ಇತರ ಸಮುದಾಯಗಳಿಂದ ಪ್ರತಿಕೂಲ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ಸೇರಿದಂತೆ ಯಾವುದೇ ಒಬ್ಬ ನಾಯಕನನ್ನು ಮುಂಚೂಣಿಗೆ ನಿಲ್ಲಿಸಿದರೂ ಇತರ ಸಮುದಾಯಗಳು ಕಾಂಗ್ರೆಸ್ನಿಂದ ವಿಮುಖರಾಗುವ ಪರಿಸ್ಥಿತಿ ಇದೆ. ಹೀಗಾಗಿ ಎಲ್ಲಾ ನಾಯಕರನ್ನು ಒಗ್ಗೂಡಿಸಿ ಸಾಮೂಹಿಕ ನಾಯಕತ್ವದಡಿ ಕಾಂಗ್ರೆಸ್ ಚುನಾವಣೆ ನಡೆಸಲು ಮುಂದಾಗಿದೆ. +ಎಸ್.ಆರ್.ಶ್ರೀನಿವಾಸ್ರವರ ಹೇಳಿಕೆ ತುಮಕೂರು ಜಿಲ್ಲೆಯಲ್ಲಿ ಕುರುಬ ಸಮುದಾಯದ ಮತಗಳನ್ನು ಕ್ರೋಡೀಕರಿಸಲು ನೆರವಾಗಲಿದೆ ಎಂಬ ಅಂದಾಜಿದೆ.ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ಎಸ್.ಪಿ.ಮುದ್ದಹನುಮೇಗೌಡ ಲೋಕಸಭಾ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಲಿಂಗಾಯತ ಸಮುದಾಯದ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿದೆ. +ಕಾಂಗ್ರೆಸ್ ಒಕ್ಕಲಿಗ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿದ್ದು, ಅವುಗಳನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ನಾಯಕರು ಚುನಾವಣಾ ಪ್ರಚಾರದಲ್ಲಿ ನಾನಾ ರೀತಿಯ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆಯನ್ನೇ ಚುನಾವಣೆಗೆ ಪಣಕ್ಕಿಡುವುದು ಆಡಳಿತ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂಬ ಆಕ್ಷೇಪ ಕೇಳಿಬಂದಿದೆ. +ಮಾಹಿತಿ ಪಡೆದು ಪ್ರತಿಕ್ರಿಯೆ : ಸಿದ್ದುಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಶಾಸಕರು ನೀಡಿರುವ ಹೇಳಿಕೆಯ ಹಿನ್ನೆಲೆಯ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಬ್ಬಿಯ ಶಾಸಕ ಎಸ್.ಆರ್.ಶ್ರೀನಿವಾಸ್ರವರು ಯಾವ ಸಂದರ್ಭಕ್ಕೆ ಪೂರಕವಾಗಿ ಮಾತನಾಡಿದ್ದಾರೆ ಎಂಬುದು ಗೊತ್ತಿಲ್ಲ. ಅದನ್ನು ತಿಳಿಯದೆ ಮಾತನಾಡುವುದು ಸರಿಯಲ್ಲ. ಮೊದಲು ಯಾವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ ಎಂದರು. +ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ನಾಲ್ಕು ಕ್ಷೇತ್ರಗಳ ಪೈಕಿ ಬಳ್ಳಾರಿಗೆ ಬಹುತೇಕ ಅಭ್ಯರ್ಥಿಯ ಆಯ್ಕೆ ಆಗಿದೆ. ಉಳಿದ ಮೂರು ಕ್ಷೇತ್ರಗಳ ಬಗ್ಗೆ ನಾವು ಹೈಕಮಾಂಡ್ಗೆ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_198_1.txt b/eesanje/url_46_198_1.txt new file mode 100644 index 0000000000000000000000000000000000000000..40cf24b190e4bd74a2f97490c9c8bbdbb5ed603c --- /dev/null +++ b/eesanje/url_46_198_1.txt @@ -0,0 +1,4 @@ +ಹೃದಯ ಶಸ್ತ್ರಚಿಕಿತ್ಸೆಗೊಳಗಾದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ವಾರ್ಡಿಗೆ ಶೀಫ್ಟ್ +ಬೆಂಗಳೂರು,ಮಾ.23-ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮೂರನೇ ಬಾರಿಗೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಿಂದ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ. +ಗುರುವಾರ ಬೆಳಿಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ನುರಿತ ವೈದ್ಯರು ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಿದ್ದರು ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಅವರು ಕುಮಾರಸ್ವಾಮಿ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದರು. +ಆಸ್ಪತ್ರೆಯಲ್ಲಿರುವ ಕುಮಾರಸ್ವಾಮಿ ಅವರನ್ನು ತಜ್ಞ ವೈದ್ಯರ ತಂಡವು ನಿಗಾ ವಹಿಸಿ ಮೇಲ್ವಿಚಾರಣೆ ಮಾಡುತ್ತಿದೆ. ನಾಳೆ ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್‍ಚಾರ್ಜ್ ಆಗಿ ಕುಮಾರಸ್ವಾಮಿ ಅವರು ಮನೆಗೆ ಮರಳಲಿದ್ದಾರೆ. ವೈದ್ಯರ ಸಲಹೆಯಂತೆ ಎರಡು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆದು ಬಳಿಕ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.ಬುಧವಾರದಿಂದ ಲೋಕಸಭೆ ಚುನಾವಣಾ ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_198_10.txt b/eesanje/url_46_198_10.txt new file mode 100644 index 0000000000000000000000000000000000000000..4522175f0d7890d2790b5f57f17908059528dac8 --- /dev/null +++ b/eesanje/url_46_198_10.txt @@ -0,0 +1,10 @@ +ಅಭ್ಯರ್ಥಿಗಳನ್ನು ಗೆಲ್ಲಿಸದಿದ್ದರೆ ಸಚಿವರ ತಲೆದಂಡ +ಬೆಂಗಳೂರು,ಮಾ.22-ಕಾಡಿ ಬೇಡಿ, ಹಠ ಹಿಡಿದು ಕುಟುಂಬದ ಸದಸ್ಯರಿಗೆ ಟಿಕೆಟ್ ಪಡೆದವರು, ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೈಕಮಾಂಡ್ ಷರತ್ತು ವಿಧಿಸಿರುವುದು ಸಂಪುಟದ ಸದಸ್ಯರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.‘ಬೆಳಗಾವಿ ಜಿಲ್ಲೆಯಲ್ಲಿ ಪೈಪೊಟಿ ರಾಜಕಾರಣದ ಭಾಗವಾಗಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕ ಅವರಿಗೆ ಚಿಕ್ಕೋಡಿಯಿಂದ ಟಿಕೆಟ್ ಪಡೆದುಕೊಂಡಿದ್ದಾರೆ.ಇದಕ್ಕೆ ಎದಿರೇಟು ಎಂಬಂತೆ ಮಹಿಳಾ ಮತ್ತು ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಗೆ ತಮ್ಮ ಪುತ್ರ ಮೃಣಾಲ್ಗೆ ಟಿಕೆಟ್ ಗಿಟ್ಟಿಸಿದ್ದಾರೆ. ಆರಂಭದಲ್ಲಿ ಈ ಎರಡೂ ಕ್ಷೇತ್ರಗಳಿಗೆ ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಪ್ರಸ್ತಾಪಿಸಲಾಗಿತ್ತು. ಇಬ್ಬರೂ ನಾಯಕರು ಪ್ರಭಾವಿಗಳಾಗಿರುವುದರಿಂದ ಸ್ಥಳೀಯ ಮುಖಂಡರ ಬಾಯಿ ಮುಚ್ಚಿಸಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಇನ್ನು ಬೀದರ್ ಕ್ಷೇತ್ರಕ್ಕೆ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು.ಒಂದು ಹಂತದಲ್ಲಿ ಕುಟುಂಬ ರಾಜಕಾರಣದ ಕೈ ಮೇಲಾಗುತ್ತಿದೆ. ತಮಗೆ ಅವಕಾಶ ಸಿಗುವುದಿಲ್ಲ ಎಂಬ ಸುಳಿವರಿತ ಅವರು, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೇಸರಿ ಪಾಳೆಯವನ್ನು ಸೇರಲು ಮುಂದಾಗಿದ್ದರು. +ಅವರನ್ನು ಮನವೊಲಿಸಿದ ಕಾಂಗ್ರೆಸ್ ನಾಯಕರು ಟಿಕೆಟ್ ನೀಡುವ ಖಚಿತ ಭರವಸೆಯೊಂದಿಗೆ ಪಕ್ಷದಲ್ಲೇ ಉಳಿಸಿಕೊಂಡಿದ್ದರು. ಆದರೆ ಈಶ್ವರ್ ಖಂಡ್ರೆ ಲಿಂಗಾಯತ ಸಮುದಾಯದ ಟ್ರಂಪ್ ಕಾರ್ಡ್ ಬಳಸಿ ಶ್ಯಾಮನೂರು ಶಿವಶಂಕರಪ್ಪ ಅವರ ಪ್ರಭಾವದ ಮೂಲಕ ಪುತ್ರ ಸಾಗರ್ ಖಂಡ್ರೆ ಅವರಿಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಕೊಪ್ಪಳದಲ್ಲಿ ಕೆ.ರಾಜಶೇಖರ್ ಹಿಟ್ನಾಳ್ಗೆ ಟಿಕೆಟ್ ನೀಡಲಾಗಿದೆ. ಈಗಾಗಲೇ ಇವರ ಸಹೋದರ ರಾಘವೇಂದ್ರ ಹಿಟ್ನಾಳ್ ಶಾಸಕರಾಗಿದ್ದಾರೆ. +ಪ್ರಮುಖವಾಗಿ ಬಾಗಲಕೋಟೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿ ಹಾಗೂ ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ವೀಣಾ ಕಾಶಪ್ಪನವರ್ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆ ಕ್ಷಣದವರೆಗೂ ಅವರಿಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಗಳಿದ್ದವು. ಆದರೆ ಸಚಿವ ಶಿವಾನಂದ ಪಾಟೀಲ್ ಸ್ಥಳೀಯ ನಾಯಕರ ಮೇಲೆ ಪ್ರಭಾವ ಬೀರಿ ಹೈಕಮಾಂಡ್ ಮೇಲೂ ಒತ್ತಡ ಹೇರಿ ತಮ್ಮ ಪುತ್ರಿ ಸಂಯುಕ್ತ ಪಾಟೀಲ್ಗೆ ಟಿಕೆಟ್ ಪಡೆದುಕೊಂಡಿದ್ದಾರೆ. +ಸ್ಥಳೀಯವಾಗಿ ಕೆಲವು ನಾಯಕರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವೀಣಾ ಕಾಶಪ್ಪನವರ್ ಅವರನ್ನು ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ತಯಾರಿಯಲ್ಲಿದ್ದಾರೆ.ಒಂದು ವೇಳೆ ಸಂಯುಕ್ತ ಪಾಟೀಲ್ರನ್ನು ಗೆಲ್ಲಿಸಿಕೊಂಡು ಬರದೇ ಇದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೈಕಮಾಂಡ್ ಶಿವಾನಂದ ಪಾಟೀಲ್ರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ. +ದಾವಣಗೆರೆಯಲ್ಲಿ ಶ್ಯಾಮನೂರು ಶಿವಶಂಕರಪ್ಪ ಅವರ ಮಾತೇ ಅಂತಿಮವಾಗಿದ್ದು, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್ರಿಗೆ ಕಾಂಗ್ರೆಸ್ ನಾಯಕರು ತಾವಾಗಿಯೇ ಕಾಳಜಿ ವಹಿಸಿ ಟಿಕೆಟ್ ನೀಡುವಂತಹ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿತ್ತು.ಅದೇ ರೀತಿ ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾರೆಡ್ಡಿಯವರು ತಮ್ಮ ಪುತ್ರಿ ಸೌಮ್ಯರೆಡ್ಡಿ ಅವರನ್ನು ಕಣಕ್ಕಿಳಿಸುವುದು ಬೇಡ ಎಂದು ಮೇಲ್ನೋಟಕ್ಕೆ ಹೇಳಿದ್ದರು. ಆದರೆ ಆಂತರಿಕವಾಗಿ ರಾಮಲಿಂಗಾರೆಡ್ಡಿ ಅವರನ್ನು ಹೊರತುಪಡಿಸಿದರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣೆ ನೆರವೇರಿಸುವ ನಾಯಕರ ಕೊರತೆ ಇದ್ದಿದ್ದರಿಂದಾಗಿ ಕಾಂಗ್ರೆಸ್ ತಾನಾಗಿಯೇ ಬಾಗಿನದ ತಟ್ಟೆಯಲ್ಲಿ ಸೌಮ್ಯರೆಡ್ಡಿ ಅವರಿಗೆ ಟಿಕೆಟ್ ನೀಡುವಂತಾಗಿದೆ. +ಮೊದಲ ಹಂತದಲ್ಲೇ ಟಿಕೆಟ್ ಘೋಷಣೆಯಾದ ಶಿವಮೊಗ್ಗ ಕ್ಷೇತ್ರದ ಪರಿಸ್ಥಿತಿಯೂ ಹೀಗೇ ಆಗಿತ್ತು. ಸಚಿವ ಮಧು ಬಂಗಾರಪ್ಪ ಸಂಪೂರ್ಣ ಹೊಣೆಗಾರಿಕೆ ವಹಿಸಿಕೊಂಡು ತಮ್ಮ ಸಹೋದರಿ ಗೀತಾ ಶಿವರಾಜ್ಕುಮಾರ್ರನ್ನು ಕಣಕ್ಕಿಳಿಸಿದ್ದಾರೆ.ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಸದೆ ತಮ್ಮ ಕ್ಷೇತ್ರವನ್ನು ಅಳಿಯ ರಾಧಾಕೃಷ್ಣ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಆದರೂ ಇಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಗಲಿಗೆ ಹೊರಿಸಲಾಗಿದೆ. +ಚಾಮರಾಜನಗರ ಕ್ಷೇತ್ರಕ್ಕೆ ತಮ್ಮ ಪುತ್ರನಿಗೇ ಟಿಕೆಟ್ ನೀಡಬೇಕೆಂದು ಸಚಿವ ಎಚ್.ಸಿ.ಮಹದೇವಪ್ಪ ಕೊನೆ ಕ್ಷಣದವರೆಗೂ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಹಠಕ್ಕೆ ಮಣಿದು ಟಿಕೆಟ್ ನೀಡಿದರೆ ಎಚ್.ಸಿ.ಮಹದೇವಪ್ಪನವರ ಸಚಿವ ಸ್ಥಾನದ ಮೇಲೂ ತೂಗುಗತ್ತಿ ನೇತಾಡಲಿದೆ. +ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಬೀದರ್, ಬಾಗಲಕೋಟೆ, ಚಾಮರಾಜನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲದೇ ಇದ್ದರೆ ಸಚಿವರು ತಲೆದಂಡ ತೆರಬೇಕಾದಂತಹ ಪರಿಸ್ಥಿತಿ ಎದುರಾಗಲಿದೆ.ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಗೆಲುವಿಗೆ ಆಯಾ ಸಚಿವರೇ ಹೊಣೆಗಾರಿಕೆ ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ. ಆದರೆ ಕುಟುಂಬದ ಸದಸ್ಯರಿಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದು ಅವಕಾಶ ಪಡೆದುಕೊಂಡವರು ಮತ್ತು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ತಪ್ಪಿಸಿದವರಿಗೆ ಅಧಿಕಾರದ ತ್ಯಾಗ ಸ್ವಯಂ ದಂಡನೆ ಅನುಭವಿಸುವಂತೆ ರಾಜ್ಯ ವರಿಷ್ಠರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_198_11.txt b/eesanje/url_46_198_11.txt new file mode 100644 index 0000000000000000000000000000000000000000..4dad3cb1f4179d3459a33bc87f0a13e2873f32df --- /dev/null +++ b/eesanje/url_46_198_11.txt @@ -0,0 +1,5 @@ +ಕೇಜ್ರಿವಾಲ್ ಬಂಧನದಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ : ಜೋಶಿ +ಹುಬ್ಬಳ್ಳಿ, ಮಾ.22-ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದುರಹಂಕಾರದಿಂದ ಇಡಿ ಸಮನ್ಸ್ ಗಳಿಗೆ ಉತ್ತರಿಸಿಲ್ಲ. ಈಗಾಗಿ ಅವರ ಬಂಧನ ವಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಎದುರು ಸತತವಾಗಿ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅವರ ಬಂಧನವಾಗಿದೆ ಎಂದರು. +ಕಾಂಗ್ರೆಸ್ ಪಕ್ಷದವರು ತೆರಿಗೆ ಕಟ್ಟಿಲ್ಲ. ಹೀಗಾಗಿ ಅವರ ಬ್ಯಾಂಕ್ ಖಾತೆಗಳು ಸೀಜ್ ಆಗಿವೆ. ಆದಾಯ ತೆರಿಗೆ ಸಂಬಂಧಿತ ವಿಷಯದಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಕಾಂಗ್ರೆಸ್ ಪಕ್ಷವನ್ನು ನಾವು ಶಕ್ತಿಹೀನ ಗೊಳಿಸುವ ಅಗತ್ಯವಿಲ್ಲ. ಜನರೇ ಶಕ್ತಿಹೀನಗೊಳಿಸಿದ್ದಾರೆಂದು ಹೇಳಿದರು. +ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂದು ಡಿಎಂಕೆ ನಾಯಕರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಇದನ್ನು ಖಂಡಿಸುತ್ತಾರೆಯೇ? ಕಾಂಗ್ರೆಸ್ನವರು ನಮ್ಮ ನೀರು, ನಮ್ಮ ಹಕ್ಕು ಎಂದು ಕೋವಿಡ್ ಸಂದರ್ಭದಲ್ಲಿ ಪಾದಯಾತ್ರೆ ಮಾಡಿದ್ದರು. ಈಗ ಏನು ಹೇಳುತ್ತಾರೆ? ರಾಹುಲ್ ಗಾಂಧಿ ಇದಕ್ಕೆ ಉತ್ತರ ಕೊಡಬೇಕು ಎಂದರು. +ಡಿಎಂಕೆ ನಿಲುವನ್ನು ಬಿಜೆಪಿ ಖಂಡಿಸುತ್ತದೆ ಎಂದು ಜೋಶಿ ನುಡಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೂ ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದರು. \ No newline at end of file diff --git a/eesanje/url_46_198_12.txt b/eesanje/url_46_198_12.txt new file mode 100644 index 0000000000000000000000000000000000000000..7537d8368f49a8435d8161d187cd64ec25119f4c --- /dev/null +++ b/eesanje/url_46_198_12.txt @@ -0,0 +1,7 @@ +5,8, 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಸಮ್ಮತಿ +ಬೆಂಗಳೂರು, ಮಾ.22-ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8, 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಮತ್ತು 11ನೇ ತರಗತಿಯ ಪರೀಕ್ಷಾ ಮೌಲ್ಯಮಾಪನ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. +ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದು ಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಕೆ.ರಾಜೇಶ್ ರೈ ಅವರು ರದ್ದು ಪಡಿಸಿದ್ದಾರೆ, ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆ ನಡೆಸಬಹುದು ಎಂದ ನ್ಯಾಯ ಪೀಠ ಸೂಚಿಸಿದೆ. +ಪರೀಕ್ಷೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರೆಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧ ಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ವಿಭಾಗೀಯ ಪೀಠವು ಆದೇಶ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕೆಂದು ರೂಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಂಘಗಳು ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಕೋರುವಂತೆ ಸೂಚಿಸಿದೆ. +5,8,9 ತರಗತಿಗಳಿಗೆ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ 1983ರ ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 22 ಮತ್ತು 145 ರ ಅಡಿಯಲ್ಲಿ ನಿಯಮಾವಳಿಗಳನ್ನು ರೂಪಿಸದೆ, ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಏಕ ಸದಸ್ಯ ಪೀಠದ ನ್ಯಾಯಾಧೀಶರು ಅಭಿಪ್ರಾಯಪಟ್ಟಿ, ಇದು ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವು ನಿಯಮಗಳನ್ನು ರೂಪಿಸಬೇಕು ಎಂದು ಆದೇಶಿಸಿದೆ. ಅಂತಹ ನಿಯಮಗಳನ್ನು ಅಂತಿಮಗೊಳಿಸುವ ಮೊದಲು ಮಧ್ಯಸ್ಥಗಾರರಿಂದ ಚರ್ಚಿಸಬೇಕು ಎಂದು ಆದೇಶಿಸಿತ್ತು. +ಆದರೆ, ಈಗ ಪೀಠವು ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಗಳನ್ನು ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಾಯಿದೆ, 2009 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಮಾರ್ಗಸೂಚಿಗಳಾಗಿ ಮಾತ್ರ ಅರ್ಥೈಸಿಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿದೆ. +ಮಾರ್ಚ್ 7 ರಂದು ಪೀಠವು ಬೋರ್ಡ್ ಪರೀಕ್ಷೆಗಳನ್ನು ಮುಂದುವರಿಸಲು ಸರ್ಕಾರಕ್ಕೆ ಅನುಮತಿಸುವ ಏಕ ನ್ಯಾಯಾಧೀಶರ ತೀರ್ಪಿಗೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶವನ್ನು ನೀಡಿದ್ದರೂ, ಮಾರ್ಚ್ 12 ರಂದು ಸುಪ್ರೀಂ ಕೋರ್ಟ್ ವಿಭಾಗೀಯ ಪೀಠದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿತು, ಮೇಲ್ಮನವಿಯ ವಿಚಾರಣೆಯನ್ನು ಆ ಪೀಠಕ್ಕೆ ನಿರ್ದೇಶಿಸಿತ್ತು. ಅರ್ಹತೆಯ ಮೇಲೆ, ನಂತರ ವಿಭಾಗೀಯ ಪೀಠವು ರಾಜ್ಯ ಸರ್ಕಾರ ಮತ್ತು ಅರ್ಜಿದಾರರು-ಶಾಲಾ ಸಂಘಗಳೆರಡರ ಮನವಿಯನ್ನು ಆಲಿಸಿದ ನಂತರ ಮಾರ್ಚ್ 18 ರಂದು ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ವಿಭಾಗೀಯ ಪೀಠವು ಕಾಯ್ದಿರಿಸಿದ ತೀರ್ಪನ್ನು ನೀಡಿ, ಬೋರ್ಡ್ ಪರೀಕ್ಷೆಗೆ ಸಮ್ಮತಿ ಸೂಚಿಸಿದೆ. \ No newline at end of file diff --git a/eesanje/url_46_198_2.txt b/eesanje/url_46_198_2.txt new file mode 100644 index 0000000000000000000000000000000000000000..15c84007d255e00b15881f0357be552a4f92718d --- /dev/null +++ b/eesanje/url_46_198_2.txt @@ -0,0 +1,7 @@ +ಹೈಕೋರ್ಟ್ ಅನುಮತಿ ಬೆನ್ನಲ್ಲೇ 5,8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ +ಬೆಂಗಳೂರು,ಮಾ.23-ರಾಜ್ಯ ಹೈಕೋರ್ಟ್‍ನ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಷ್ಕøತ ವೇಳಾಪಟ್ಟಿಯನ್ನು ಪ್ರಕಟಿಸಿದೆ. +ಮಾ.25 ರಿಂದ 28 ರವರೆಗೆ ಈ ಮೂರೂ ತರಗತಿಗಳಿಗೆ ಪರೀಕ್ಷೆಗಳು ನಡೆಯಲಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರುಗಳಿಗೆ ಮೌಲ್ಯಾಂಕನವನ್ನು ನಡೆಸುವಂತೆ ಎಲ್ಲಾ ಬ್ಲಾಕ್‍ಗಳ ಕ್ಷೇತ್ರ ಶಿಕ್ಷಣಾಕಾರಿಗಳು, ಉಪನಿರ್ದೇಶಕರು ಸೂಚಿಸಿ ಕ್ರಮ ಕೈಗೊಳ್ಳಲು ಮಂಡಳಿ ನಿರ್ದೇಶನ ನೀಡಿದೆ. +2023-24ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 ಕಾರ್ಯವನ್ನು ಮಂಡಳಿಯು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ನಡೆಸುತ್ತಿದೆ. +ವೇಳಾಪಟ್ಟಿ :ಮಾ.25 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ 5ನೇ ತರಗತಿಯ ಪರಿಸರ ಅಧ್ಯಯನ, 8 ನೇ ತರಗತಿಯ ತೃತೀಯ ಭಾಷೆ ಮಧ್ಯಾಹ್ನ 2.30 ರಿಂದ 5, ಮತ್ತು 9ನೇ ತರಗತಿಯ ತೃತೀಯ ಭಾಷೆ ಪರೀಕ್ಷೆ ಮಧ್ಯಾಹ್ನ 2 ರಿಂದ 5 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಮಂಡಳಿ ಪರಿಷ್ಕರಣೆ ಮಾಡಿದೆ. +ಮಾ.26 ರಂದು 5ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆವರೆಗೆ, 8ನೇ ತರಗತಿಯ ಗಣಿತ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಹಾಗೂ 9ನೇ ತರಗತಿಯ ಗಣಿತ ಪರೀಕ್ಷೆಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ. +ಮಾ.27 ರಂದು 8ನೇ ತರಗತಿಯ ವಿಜ್ಞಾನ ಮಧ್ಯಾಹ್ನ 2.30 ರಿಂದ ಸಂಜೆ 5 ಗಂಟೆ, 9ನೇ ತರಗತಿಯ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ರಿಂದ ಸಂಜೆ 5.15 ರವರೆಗೆ ನಡೆಯಲಿದೆ.ಮಾ.28 ರಂದು 8ನೇ ತರಗತಿಯ ಸಮಾಜ ವಿಜ್ಞಾನ ಬೆಳಿಗ್ಗೆ 10 ರಿಂದ 12.30 ಹಾಗೂ 9ನೇ ತರಗತಿಯ ಸಮಾಜ ವಿಜ್ಞಾನ ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿದೆ ಎಂದು ಮಂಡಳಿ ತಿಳಿಸಿದೆ. \ No newline at end of file diff --git a/eesanje/url_46_198_3.txt b/eesanje/url_46_198_3.txt new file mode 100644 index 0000000000000000000000000000000000000000..5c22812fb59cd0d05f875c6a780f436f4991b4eb --- /dev/null +++ b/eesanje/url_46_198_3.txt @@ -0,0 +1,12 @@ +ಕಾಂಗ್ರೆಸ್‌ಗೆ ಕಗ್ಗಂಟಾದ ಕೋಲಾರ ಕ್ಷೇತ್ರ +ಬೆಂಗಳೂರು,ಮಾ.22-ಲೋಕಸಭೆಗೆ ಬಾಕಿ ಇರುವ ಕಾಂಗ್ರೆಸ್ನ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಬಹುತೇಕ ಇತ್ಯರ್ಥಗೊಂಡಿದ್ದು, ಕೋಲಾರ ಕ್ಷೇತ್ರ ಮತ್ತಷ್ಟು ಕಗ್ಗಂಟಾಗಿ ಉಳಿದಿದೆ. ಬಾಕಿ ಇರುವ ಕ್ಷೇತ್ರಗಳ ಪೈಕಿ ಚಾಮರಾಜನಗರಕ್ಕೆ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ. +ಬಳ್ಳಾರಿಗೆ ಸೊಂಡೂರು ಕ್ಷೇತ್ರದ ಶಾಸಕ ಇ.ತುಕಾರಾಂ ಅವರನ್ನೇ ಕಣಕ್ಕಿಳಿಸುವ ನಿರ್ಧಾರವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಹಾಗೂ ಇತರರ ಜೊತೆ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಧಾನ ಸಭೆ ನಡೆಸಿ ಬಹುತೇಕ ಇತ್ಯರ್ಥಗೊಳಿಸಿದ್ದಾರೆ. +ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಸಿದ್ದ ವೀರಪ್ಪ ಮೊಯ್ಲಿಗೆ ಟಿಕೆಟ್ ಬಹುತೇಕ ಖಚಿತವಾಗಿದ್ದು, ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅಭ್ಯರ್ಥಿಯಾಗಲಿದ್ದಾರೆ.ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಬಣ ರಾಜಕೀಯದ ಪೈಪೊಟಿ ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. +ಸಚಿವ ಕೆ.ಎಚ್.ಮುನಿಯಪ್ಪ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ತಮ್ಮ ಮಗಳು ನಂದಿನಿ ಅಥವಾ ಅವರ ಪತಿ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.ಆದರೆ ಚಿಕ್ಕಪೆದ್ದಣ್ಣ ಅವರು ಈವರೆಗೂ ಸಬ್ರಿಜಿಸ್ಟ್ರಾರ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಇನ್ನೂ ಸ್ವಯಂ ನಿವೃತ್ತಿ ತೆಗೆದುಕೊಂಡಿಲ್ಲ. ಆದರೂ ಅವರಿಗೆ ಟಿಕೆಟ್ ಕೇಳುತ್ತಿರುವುದಕ್ಕೆ ಜಿಲ್ಲೆಯ ಇತರ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. +ಸಚಿವ ಡಾ.ಎಂ.ಸಿ.ಸುಧಾಕರ್, ಮಾಜಿ ಸಚಿವ ರಮೇಶ್ ಕುಮಾರ್, ಶಾಸಕರಾದ ಕೊತ್ತನೂರು ಮಂಜುನಾಥ್, ನಂಜೇಗೌಡ ಸೇರಿದಂತೆ ಹಲವಾರು ಮಂದಿ ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಮುನಿಯಪ್ಪ ಅವರ ಕುಟುಂಬ ಹೊರತುಪಡಿಸಿ ಬೇರೆ ಯಾರಿಗೇ ಟಿಕೆಟ್ ಕೊಟ್ಟರೂ ನಮ್ಮ ಸಹಮತ ಇದೆ ಎಂದು ತಿಳಿಸಿಬಂದಿದ್ದಾರೆ. ಕೋಲಾರ ಮೀಸಲು ಕ್ಷೇತ್ರವಾಗಿದ್ದು, ಇಲ್ಲಿ ಎಡಗೈ ಅಥವಾ ಬಲಗೈ ಸಮುದಾಯಕ್ಕೆ ಟಿಕೆಟ್ ನೀಡಬೇಕೆ ಎಂಬ ಪ್ರಶ್ನೆಗಳು ಎದುರಾಗಿವೆ. +ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಈವರೆಗೂ ಎಡಗೈ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುತ್ತಿತ್ತು. ಈ ಬಾರಿ ಬಲಗೈ ಸಮುದಾಯಕ್ಕೆ ಅವಕಾಶ ನೀಡಬೇಕು ಎಂಬ ವಾದಗಳು ಕೇಳಿಬಂದಿವೆ. ಆದರೆ ರಾಜ್ಯದಲ್ಲಿರುವ ಕನಿಷ್ಠ ಜಾತಿಯ 5 ಮೀಸಲು ಕ್ಷೇತ್ರಗಳ ಪೈಕಿ ಬಿಜಾಪುರ ಮತ್ತು ಕಲಬುರಗಿಗೆ ಈಗಾಗಲೇ ಬಲಗೈ ಸಮುದಾಯಕ್ಕೆ ಅವಕಾಶ ನೀಡಲಾಗಿದೆ.ಚಾಮರಾಜನಗರದಲ್ಲೂ ಸಚಿವ ಮಹದೇವಪ್ಪನವರ ಪುತ್ರ ಸುನಿಲ್ಬೋಸ್ಗೆ ಅವಕಾಶ ನೀಡುವ ಮೂಲಕ ಒಟ್ಟು 3 ಕ್ಷೇತ್ರಗಳಲ್ಲಿ ಆದ್ಯತೆ ನೀಡಿದಂತಾಗುತ್ತದೆ. +ಎಡಗೈ ಸಮುದಾಯಕ್ಕೆ ಚಿತ್ರದುರ್ಗದಲ್ಲಿ ಚಂದ್ರಪ್ಪ ಅವರಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಬಾಕಿ ಉಳಿದಿರುವ ಕೋಲಾರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ನೀಡಿದರೆ ಮಾತ್ರ ಸಾಮಾಜಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ ಎಂದು ಚರ್ಚೆಗಳಿವೆ. ರಾಜ್ಯಸಭೆ ಸ್ಥಾನದಿಂದ ನಿರ್ಗಮಿಸಿರುವ ಎಲ್.ಹನುಮಂತ ಅವರಿಗೆ ಟಿಕೆಟ್ ನೀಡಬೇಕು ಎಂದು ದೆಹಲಿಗೆ ತೆರಳಿದ ನಿಯೋಗ ಸಲಹೆ ನೀಡಿದೆ ಎಂದು ಹೇಳಲಾಗುತ್ತಿದೆ. + +ಇತ್ತ ಚಾಮರಾಜನಗರದಲ್ಲಿ ಎಡಗೈ ಸಮುದಾಯಕ್ಕೆ ಅವಕಾಶ ಕೊಟ್ಟು , ಕೋಲಾರದಲ್ಲಿ ಬಲಗೈ ಸಮುದಾಯದ ಡಾ.ಬಿ.ಸಿ.ಮುದ್ದುಗಂಗಾಧರ್ಗೆ ಮಣೆ ಹಾಕುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಹೈಕಮಾಂಡ್ ನಾಯಕರು ಕೆ.ಎಚ್.ಮುನಿಯಪ್ಪ ಅವರಿಗೆ ಖುದ್ದು ಸ್ಪರ್ಧೆ ಮಾಡುವಂತೆ ಸೂಚಿಸಿದ್ದಾರೆ. ಮುನಿಯಪ್ಪ ಅವರೇ ಸ್ರ್ಪಸುವುದಾದರೆ ಬೇರೆ ಅಭ್ಯರ್ಥಿಯನ್ನು ಪರಿಗಣಿಸುವುದಿಲ್ಲ. ಆದರೆ ಕುಟುಂಬಕ್ಕೆ ಮಾತ್ರ ಅವಕಾಶ ನೀಡುವುದಿಲ್ಲ ಎಂದು ಕಡ್ಡಿ ಮುರಿದಂತೆ ತಿಳಿಸಿದ್ದಾರೆ ಎನ್ನಲಾಗಿದೆ. +ಹೀಗಾಗಿ ಮುನಿಯಪ್ಪ ನಾನಾ ರೀತಿಯ ಸರ್ಕಸ್ಗಳನ್ನು ನಡೆಸಿದ್ದು, ಹೈಕಮಾಂಡ್ ಮನವೊಲಿಸಿ ತಮ್ಮ ಕುಟುಂಬಕ್ಕೆ ಟಿಕೆಟ್ ಗಿಟ್ಟಿಸುವ ಪ್ರಯತ್ನ ನಡೆಸಿದ್ದಾರೆ.7 ಬಾರಿ ಸಂಸದರಾಗಿ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಹೊಂದಿರುವ ಮುನಿಯಪ್ಪ, ಅಷ್ಟು ಸುಲಭವಾಗಿ ಕ್ಷೇತ್ರ ಅನ್ಯರ ಪಾಲಾಗಲು ಬಿಟ್ಟುಕೊಡಲು ತಯಾರಿಲ್ಲ ಎಂದು ಹೇಳಲಾಗುತ್ತಿದೆ. +ಮೊದಲ ಹಂತದಲ್ಲಿ 7, ಎರಡನೇ ಹಂತದಲ್ಲಿ 17 ಸೇರಿ 24 ಕ್ಷೇತ್ರಗಳಿಗೆ ನಿರಾಯಸವಾಗಿ ಅಭ್ಯರ್ಥಿಗಳನ್ನು ನಿರ್ಧರಿಸಿದ ಹೈಕಮಾಂಡ್ ಬಾಕಿ ಇರುವ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಕ್ಕೂ ಸಂಧಾನ ಹಾಗೂ ಚರ್ಚೆಯ ಮೂಲಕ ಹುರಿಯಾಳುಗಳನ್ನು ಆಖೈರುಗೊಳಿಸಿದೆ. ಆದರೆ ಕೋಲಾರ ತೀವ್ರ ಕಗ್ಗಂಟಾಗಿದ್ದು, ಇಂದು ಮಧ್ಯಾಹ್ನ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_198_4.txt b/eesanje/url_46_198_4.txt new file mode 100644 index 0000000000000000000000000000000000000000..3678e32230e53691371aa819459b0c4f479d5a42 --- /dev/null +++ b/eesanje/url_46_198_4.txt @@ -0,0 +1,3 @@ +ರಾಣಿಚೆನ್ನಮ್ಮ ವಿವಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ಮುಂದೂಡಿಕೆ +ಬೆಳಗಾವಿ, ಮಾ.22-ರಾಜ್ಯದ ಅತಿದೊಡ್ಡ ವಿಶ್ವವಿದ್ಯಾಲಯ ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆಯನ್ನು ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಹಣಕಾಸು ನಿರ್ವಹಣಾ (ಫೈನಾನ್ಷಿಯಲ್ ಮ್ಯಾನೇಜ್ಮೆಂಟ್) ವಿಷಯದ ಪರೀಕ್ಷೆ ರದ್ದುಗೊಳಿಸಿ ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ. +ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ರಹಸ್ಯ ಭೇದಿಸಲಾಗುವುದು ಮತ್ತು ಈ ಕುರಿತು ಪೊಲೀಸರಿಗೆ ದೂರು ನೀಡಲಾಗುವುದು ಎಂದು ವಿವಿ ಕುಲಪತಿ ಡಾ. ತ್ಯಾಗರಾಜ್ ತಿಳಿಸಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವಿವಿ ಇನ್ನು ಪ್ರಕಟಪಡಿಸಿಲ್ಲ. \ No newline at end of file diff --git a/eesanje/url_46_198_5.txt b/eesanje/url_46_198_5.txt new file mode 100644 index 0000000000000000000000000000000000000000..d5d523c87a8a42a5fbd5dfe3e2c0f2918016eadf --- /dev/null +++ b/eesanje/url_46_198_5.txt @@ -0,0 +1,5 @@ +ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ ಸಾಧ್ಯತೆ +ಬೆಂಗಳೂರು,ಮಾ.22-ಬೇಸಿಗೆಯ ಬಿಸಿಲು ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡು, ಕರ್ನಾಟಕ ಹಾಗೂ ಮಹಾರಾಷ್ಟ್ರದವರೆಗೆ ಟ್ರಪ್ ನಿರ್ಮಾಣವಾಗಿರುವುದರಿಂದ ಭಾಗಶಃ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. +ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ದಕ್ಷಿಣ ಒಳನಾಡು ಹಾಗು ಮಲೆನಾಡಿನ ಕೆಲವು ಭಾಗಗಳಲ್ಲಿ ಮಿಂಚು ಗುಡುಗಿನ ವಾತಾವರಣ ಸೃಷ್ಟಿಯಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಬೇಸಿಗೆಯಲ್ಲಿ ಚದುರಿದಂತೆ ಮಳೆಯಾಗುವುದು ವಾಡಿಕೆ. ಆದರೆ ವ್ಯಾಪಕ ಪ್ರಮಾಣದ ಮಳೆಯಾಗುವುದಿಲ್ಲ. ಕಳೆದ ಮೂರು ತಿಂಗಳಿನಿಂದಲೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಮಾರ್ಚ್ ಅಂತ್ಯದವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಒಂದೆರಡು ಕಡೆ ಅತ್ಯಲ್ಪ ಪ್ರಮಾಣದ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಏಪ್ರಿಲ್ ಮೊದಲ ವಾರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಬಹುದು ಎಂದರು. ಸದ್ಯಕ್ಕೆ ವಾಯುಭಾರ ಕುಸಿತ, ಚಂಡಮಾರುತ ಉಂಟಾಗುವಂತಹ ಲಕ್ಷಣಗಳು ಗೋಚರಿಸುತ್ತಿಲ್ಲ. ರಾಜ್ಯಾದ್ಯಂತ ಒಣಹವೆ ಮುಂದುವರೆಯು ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_198_6.txt b/eesanje/url_46_198_6.txt new file mode 100644 index 0000000000000000000000000000000000000000..9badbb96f78aa1b0867144f2f4575f9dcb6b3865 --- /dev/null +++ b/eesanje/url_46_198_6.txt @@ -0,0 +1,7 @@ +ಮರಿತಿಬ್ಬೇಗೌಡ ಸೇರಿ ಜೆಡಿಎಸ್ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ +ಬೆಂಗಳೂರು,ಮಾ.22-ವಿಧಾನಪರಿಷತ್ ಸ್ಥಾನಕ್ಕೆ ನಿನ್ನೆಯಷ್ಟೇ ರಾಜೀನಾಮೆ ನೀಡಿದ ಮರಿತಿಬ್ಬೇಗೌಡ ಸೇರಿದಂತೆ ಜೆಡಿಎಸ್ನ ಇಬ್ಬರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರಾಗಿದ್ದ ನಾಗಮಂಗಲದ ಅಪ್ಪಾಜಿಗೌಡ, ಮಾಜಿ ಶಾಸಕ ಎಂ.ಶ್ರೀನಿವಾಸ್, ಬಿಜೆಪಿಯ ಬಿಬಿಎಂಪಿ ಮಾಜಿ ಸದಸ್ಯ ಆಶಾ ಸುರೇಶ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. +ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಎಂ.ಶ್ರೀನಿವಾಸ್ ವಿಧಾನಸಭೆಯಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಬಂದಿಲ್ಲ. ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ಪತ್ರ ಕಳುಹಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಅವರನ್ನೂ ಸೇರಿಸಿಕೊಳ್ಳಲಾಗಿದೆ. ಅವರ ಬೆಂಬಲಿಗರು, ಅಳಿಯ ಹಾಗೂ ಇತರರು ಇಂದು ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು. +ಬಿಬಿಎಂಪಿ ಆಶಾ ಸುರೇಶ್ ತಮ್ಮ ಸಂಬಂಧಿಯಾಗಿದ್ದು, ಅವರನ್ನು ಶಾಸಕರನ್ನಾಗಿ ಮಾಡಲು ನಾವು ಪ್ರಯತ್ನ ಪಟ್ಟೆವು. ಆದರೆ ಹಳಿ ತಪ್ಪಿತ್ತು. ಈಗ ಅವರು ಪಕ್ಷಕ್ಕೆ ಮರಳಿದ್ದಾರೆ ಎಂದರು.ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರು ತಮ್ಮ ಪಕ್ಷದ ಒಬ್ಬೊಬ್ಬರೇ ಮುಖಂಡರನ್ನು ನಮ್ಮ ಪಕ್ಷಕ್ಕೆ ಕಳುಹಿಸುತ್ತಿದ್ದಾರೆ. ಇಂದು ಆಶಾ ಸುರೇಶ್, ಸುರೇಶ್, ರಮೇಶ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಡಿ.ಕೆ.ಸುರೇಶ್ರನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. +ಮರಿತಿಬ್ಬೇಗೌಡ ಅವರು ಜೆಡಿಎಸ್ಗೆ ಆಧಾರ ಸ್ತಂಭದಂತಿದ್ದರು. ಪಕ್ಷದ ಮೂಲಸ್ತಂಭವಾಗಿದ್ದ ಅವರು ಕಾಂಗ್ರೆಸ್ಗೆ ಸೇರಿದ್ದರಿಂದ ನಮ್ಮ ಬಲ ಹೆಚ್ಚಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.ಇದೇ ವೇಳೆ ಮಾತನಾಡಿದ ಮರಿತಿಬ್ಬೇಗೌಡ, ನಾನು 2000 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ನಿಂದ ಬೆಂಗಳೂರು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯನಾಗಿದ್ದೆ. 2006 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದೆ. 3 ಮತ್ತು 4 ನೇ ಬಾರಿ ಜೆಡಿಎಸ್ ಪಕ್ಷ ನನಗೆ ಟಿಕೆಟ್ ಕೊಟ್ಟು ಬೆಂಬಲ ನೀಡಿತ್ತು ಎಂದರು. +ಕಳೆದ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಯವರನ್ನು ಅಭ್ಯರ್ಥಿ ಮಾಡುವುದು ಬೇಡ ಎಂದು ನಾನು ಹೇಳಿದ್ದಕ್ಕಾಗಿ ಜೆಡಿಎಸ್ ನಾಯಕರು ನನ್ನ ವಿರುದ್ಧ ಅಸಮಾಧಾನಗೊಂಡಿದ್ದರು. ಆ ಪಕ್ಷದಲ್ಲಿ ಕಾರ್ಯಕರ್ತರ ಅಭಿಪ್ರಾಯಗಳಿಗೆ, ಆಂತರಿಕ ಪ್ರಜಾಪ್ರಭುತ್ವಕ್ಕೆ ಬೆಲೆ ಇಲ್ಲವಾಗಿದೆ. ಕುಟುಂಬದ ನಿರ್ಧಾರಗಳೇ ಪ್ರಮುಖವಾಗಿರುತ್ತವೆ. ಕಾರ್ಯಕರ್ತರ ಮಾತುಗಳನ್ನು ಕೇಳುತ್ತಿಲ್ಲ ಎಂದು ಟೀಕಿಸಿದರು. +ಶಾಸನ ಸಭೆಯಲ್ಲಿ ನಾನು ವಿಷಯಾಧಾರಿತವಾಗಿ ಚರ್ಚೆ ಮಾಡಿದ್ದೇನೆ. ರೈತರ ಮಕ್ಕಳು ಎಂದು ಹೇಳಿಕೊಳ್ಳುವವರು ಎಪಿಎಂಸಿ ಬಿಲ್ಲನ್ನು ವಿಧಾನಪರಿಷತ್ನಲ್ಲಿ ಸೋಲಿಸಿದರು. ನಾನು ಆತ್ಮಸಾಕ್ಷಿಯಿಂದ ಮತ ಹಾಕಿದ್ದೆ ಎಂದು ಹೇಳಿದರು. ರಾಜ್ಯ ಸರ್ಕಾರದ ರೈತಪರ ಯೋಜನೆಯಿಂದ ಪ್ರೇರಿತನಾಗಿ ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು. \ No newline at end of file diff --git a/eesanje/url_46_198_7.txt b/eesanje/url_46_198_7.txt new file mode 100644 index 0000000000000000000000000000000000000000..75c6600d500fcc75da84e8cc27f6563e2aa2fe5a --- /dev/null +++ b/eesanje/url_46_198_7.txt @@ -0,0 +1,5 @@ +ಕಾಂಗ್ರೆಸ್ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ; ಶಿವರಾಜ್ ಗಂಗ +ದಾವಣಗೆರೆ,ಮಾ.22- ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಚನ್ನಗಿರಿ ಕ್ಷೇತ್ರದ ವಿಧಾನಸಭಾ ಸದಸ್ಯ ಶಿವರಾಜ್ ಗಂಗ ಸವಾಲು ಹಾಕಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ತಾಕತ್ತಿದ್ದರೆ ಎಲ್ಲರೂ ಒಟ್ಟಾಗಿ ಬಂದು ಚುನಾವಣೆ ಮಾಡಿ ಬಿಜೆಪಿಯನ್ನು ಗೆಲ್ಲಿಸಿಕೊಳ್ಳಲಿ. ನಾಳೆ ಕಾಂಗ್ರೆಸ್ ಗೆದ್ದ ಬಳಿಕ ನಮ್ಮಲ್ಲಿ ಬಂಡಾಯ ಎದ್ದು ಆ ಕಾರಣಕ್ಕೆ ಸೋಲಾಗಿದೆ ಎಂದು ಸಬೂಬು ಹೇಳಬೇಡಿ ಎಂದರು. +ದಾವಣಗೆರೆ ಲೋಕಸಭೆಗೆ ಕಾಂಗ್ರೆಸ್ ಗೆಲ್ಲುವುದು ಖಚಿತವಾಗಿದೆ. ಹೀಗಾಗಿ ಬಿಜೆಪಿಯವರು ಸೋಲನ್ನು ಅಂದಾಜಿಸಿ ಅದರ ಹೊಣೆಗಾರಿಕೆ ಹೊತ್ತುಕೊಳ್ಳಲು ಈಗಲೇ ಒಟ್ಟಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಂಡಾಯವಿತ್ತು ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. +ನಾನು ಈಗಲೂ ಸವಾಲು ಹಾಕುತ್ತೇನೆ. ಬಿಜೆಪಿಯ ಎಲ್ಲಾ ನಾಯಕರೂ ಒಟ್ಟಾಗಿ ಬನ್ನಿ. ನಿಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ. ಒಂದು ವೇಳೆ ಕಾಂಗ್ರೆಸ್ ಸೋಲು ಕಂಡರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮುಂಗಡವಾಗಿಯೇ ಜೂ.6 ನೇ ತಾರೀಖಿಗೆ ರಾಜೀನಾಮೆ ಪತ್ರವನ್ನು ಬರೆದುಕೊಡುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_198_8.txt b/eesanje/url_46_198_8.txt new file mode 100644 index 0000000000000000000000000000000000000000..6ff07ac8bf661fe55601d399fdf88be2797b2f96 --- /dev/null +++ b/eesanje/url_46_198_8.txt @@ -0,0 +1,4 @@ +ಲೋಕಸಭಾ ಚುನಾವಣೆ ಬಂದೋಬಸ್ತ್‌ಗೆ 15 ಕಂಪನಿ ಕೇಂದ್ರ ಪಡೆ ಆಗಮನ +ಬೆಂಗಳೂರು, ಮಾ.22-ಲೋಕಸಭಾ ಚುನಾವಣೆಯ ಬಂದೋಬಸ್ತ್ಗಾಗಿ ರಾಜ್ಯಕ್ಕೆ ಈವರೆಗೆ 15 ಕಂಪನಿ ಕೇಂದ್ರ ಪಡೆಗಳು ಆಗಮಿಸಿವೆ. ಸಿಐಎಸ್ಎಫ್ನ 10 ಕಂಪನಿಗಳು ಮತ್ತು 5 ಕಂಪನಿ ಗಳು ಆಗಮಿಸಿದ್ದು, ಮತದಾನ ಸಮೀಪಿಸುತ್ತಿದ್ದಂತೆ ಇನ್ನಷ್ಟು ಕೇಂದ್ರ ಪಡೆಗಳು ರಾಜ್ಯಕ್ಕೆ ಬರಲಿವೆ. +ಈ ಕೇಂದ್ರ ಪಡೆಗಳನ್ನು ಮಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ನಿಯೋಜಿಸಲಾಗಿದೆ. ಮತದಾನ ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಯಲು ಹಾಗೂ ಪ್ರಚಾರದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಭದ್ರತೆಗಾಗಿ ಈ ಕೇಂದ್ರ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. +ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಪಡೆಗಳು ಈಗಾಗಲೇ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಪಥಸಂಚಲನ ನಡೆಸಿವೆ. \ No newline at end of file diff --git a/eesanje/url_46_198_9.txt b/eesanje/url_46_198_9.txt new file mode 100644 index 0000000000000000000000000000000000000000..8694467e0c52069b9f38edad75ff39af1acb262b --- /dev/null +++ b/eesanje/url_46_198_9.txt @@ -0,0 +1,7 @@ +ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಮಾ.22-ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರ ಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. +ಕಾವೇರಿಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರ ಹಾಗೂ ಬೆಳಗಾವಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಗೆಲುವು ಸಾಧಿಸಬಹುದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಐದು ಗ್ಯಾರಂಟಿ ಯೋಜನೆಗಳು ಬೆಳಗಾವಿ ಜಿಲ್ಲೆಯ ಲಕ್ಷಾಂತರ ಕುಟುಂಬಗಳ ಮತ್ತು ಮಹಿಳೆಯರ ಬದುಕಿನ ಸಂಕಟವನ್ನು ಕಡಿಮೆ ಮಾಡಿವೆ. ಇದಕ್ಕಾಗಿ ಯುವತಿಯರು ಮತ್ತು ಮಹಿಳೆಯರು ಶೇ. 80 ರಷ್ಟು ನಮ್ಮ ಪರವಾಗಿ ಇದ್ದಾರೆ ಎನ್ನುವ ಸಕಾರಾತ್ಮಕ ವರದಿ ಸಮೀಕ್ಷೆಗಳಿಂದ ಹೊರ ಬಂದಿವೆ. +ನಾವು ಜನರ ಮನೆ ಬಾಗಿಲಿಗೆ ಹೋಗಿ ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ 5-6 ಸಾವಿರ ರೂಪಾಯಿ ಕೊಡುತ್ತಿರುವ ಮತ್ತು ವರ್ಷಕ್ಕೆ 50-60 ಸಾವಿರ ಪ್ರತಿ ಕುಟುಂಬದ ಖಾತೆಗೆ ಜಮೆ ಆಗುತ್ತಿರುವುದನ್ನು ಮನವರಿಕೆ ಮಾಡಿಸಿ, ಜನರ ನಡುವೆ ಗಟ್ಟಿಯಾಗಿ ನಿಂತು ಗೆದ್ದು ಬನ್ನಿ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. +ಮುಖ್ಯಮಂತ್ರಿಗಳ ಭರವಸೆಯ ಮಾತುಗಳಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬೆಳಗಾವಿಯಲ್ಲಿ ನಾವೆಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ ಅರ್ಪಿಸುತ್ತೇವೆ ಎಂದರು. ಉತ್ತರ ಕನ್ನಡದಲ್ಲಿ ಬದಲಾವಣೆ ವಾತಾವರಣ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಜನರು ಈ ಬಾರಿ ಬದಲಾವಣೆ ಬಯಸಿರುವುದು, ಹಿಂದಿನ ಸಂಸದರು ಕ್ಷೇತ್ರಕ್ಕೆ ಏನೂ ಮಾಡಿಲ್ಲ ಎನ್ನುವ ಅಭಿಪ್ರಾಯಗಳು ಉತ್ತರ ಕನ್ನಡ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನುವ ಅಭಿಪ್ರಾಯಗಳು ಸಮೀಕ್ಷೆಗಳಲ್ಲಿ ವ್ಯಕ್ತವಾಗಿವೆ. ಹೀಗಾಗಿ ಇಲ್ಲೂ ಗೆಲುವಿನ ಅವಕಾಶಗಳು ಇವೆ ಎನ್ನುವ ಬಗ್ಗೆಯೂ ಸಭೆಯಲ್ಲಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು. +ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಸೇರಿ ಮಾಜಿ ಸಚಿವ ಲಕ್ಷ್ಮಣ್ ಸವದಿ ಮತ್ತು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ 40 ಕ್ಕೂ ಹೆಚ್ಚು ಮಂದಿ ಜಿಲ್ಲಾ ಮುಖಂಡರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. \ No newline at end of file diff --git a/eesanje/url_46_199_1.txt b/eesanje/url_46_199_1.txt new file mode 100644 index 0000000000000000000000000000000000000000..bd504b07248752b7d8f975a47e7cc4bf9d12912f --- /dev/null +++ b/eesanje/url_46_199_1.txt @@ -0,0 +1,7 @@ +ಭ್ರೂಣ ಪತ್ತೆ-ಹತ್ಯೆಯಲ್ಲಿ ಆರೋಗ್ಯ ಇಲಾಖೆಯೇ ಶಾಮೀಲಾಗಿರುವುದು ನಾಚಿಕೆಗೇಡು : ಆರ್.ಅಶೋಕ್ +ಬೆಂಗಳೂರು,ಮಾ.22-ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಆರೋಗ್ಯ ಇಲಾಖೆ ಮತ್ತು ಸರ್ಕಾರದ ವಿರುದ್ಧ ಸಾಲುಸಾಲು ಪೋಸ್ಟ್ ಗಳನ್ನು ಮಾಡಿ ಕಿಡಿಕಾರಿದ್ದಾರೆ. +ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವಕ್ತಪಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಕಾರಿಗೆ ಯಾರ ಕುಮ್ಮಕ್ಕಿದೆ, ಯಾವ ಬೆಂಬಲದಿಂದ ಅಕಾರಿಗಳ ಈ ಕಳ್ಳಾಟ ನಡೆಯುತ್ತಿದೆ? ಎಂದು ಪ್ರಶ್ನಿಸಿದ್ದಾರೆ. +ಇದನ್ನೆಲ್ಲಾ ನೋಡುತ್ತಿದ್ದರೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅಮಾನುಷ ಭ್ರೂಣ ಪತ್ತೆ-ಹತ್ಯೆ ಜಾಲವನ್ನು ಭೇದಿಸಲು ಹಿಂದೇಟು ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ ಕಾಣದ ಕೈಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. +ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ.ಆರೋಗ್ಯ ಸಚಿವ@dineshgraoಅವರೇ, ಭ್ರೂಣ ಹತ್ಯೆ ಪ್ರಕರಣದ ವರದಿ ಸಲಿಸಬಾರದು ಎಂದು ಇಷ್ಟೊಂದು ಒತ್ತಡ ಹೇರುತ್ತಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…../Lt4b2V9LNv +ಈ ಪ್ರಕರಣದ ಆಳ-ಅಗಲ, ಗಂಭೀರತೆ, ಮತ್ತು ಇದರ ಹಿಂದಿರುವ ಪ್ರಭಾವಿ ಶಕ್ತಿಗಳನ್ನು ಅಂದಾಜಿಸಿಯೇ ನಾನು ಈ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಬೇಕು, ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಒತ್ತಾಯಿಸಲಾಗಿದೆ. +ಮಹಿಳೆಯರ ವೋಟಿಗಾಗಿ ಅವರ ಮೂಗಿಗೆ ತುಪ್ಪ ಸವರುವ ಶಕ್ತಿ, ಗೃಹಲಕ್ಷ್ಮಿ ಗ್ಯಾರಂಟಿಗಳನ್ನು ನೀಡಿದರೆ ಮಹಿಳೆಯರ ಸಬಲೀಕರಣ ಆಗುವುದಿಲ್ಲ ಸಿಎಂ ಸಿದ್ದರಾಮನವರೇ, ಹುಟ್ಟುವ ಮೊದಲೇ ಹೆಣ್ಣು ಮಕ್ಕಳ ಪ್ರಾಣ ಕಸಿದುಕೊಳ್ಳುವ ಈ ಅಮಾನುಷ ಜಾಲವನ್ನು ಭೇದಿಸುವ ಮೂಲಕ ಮಹಿಳಾ ಸಬಲೀಕರಣದ ಬಗ್ಗೆ ತಮ್ಮ ನಿಜವಾದ ಬದ್ಧತೆ ತೋರಿಸಿ ಎಂದು ಸವಾಲು ಹಾಕಿದ್ದಾರೆ. \ No newline at end of file diff --git a/eesanje/url_46_199_10.txt b/eesanje/url_46_199_10.txt new file mode 100644 index 0000000000000000000000000000000000000000..67d52df0620ba520690133a05f90cc8cd6b2b6e0 --- /dev/null +++ b/eesanje/url_46_199_10.txt @@ -0,0 +1,6 @@ +ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಸೋಮಶೇಖರ್, ಹೆಬ್ಬಾರ್ +ಬೆಂಗಳೂರು,ಮಾ.21-ಬಿಜೆಪಿಯ ಭಿನ್ನಮತೀಯರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕರಾದ ಎಸ್.ಟಿ. ಸೋಮ ಶೇಖರ್ ಮತ್ತು ಶಿವರಾಂ ಹೆಬ್ಬಾರ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಈ ಇಬ್ಬರ ನಾಯಕರ ಭೇಟಿ ಕುತೂಹಲ ಕೆರಳಿಸಿದೆ. ಈ ಮೊದಲು ಕಾಂಗ್ರೆಸ್ನಲ್ಲಿ ಶಾಸಕರಾಗಿದ್ದ ಇಬ್ಬರು ನಾಯಕರು 2019 ರಲ್ಲಿ ನಡೆದ ಆಪರೇಷನ್ ಕಮಲದ ಭಾಗವಾಗಿ ಬಿಜೆಪಿ ಸೇರಿದ್ದರು. ಅಲ್ಲಿ ಶಾಸಕರಾಗಿದ್ದುಕೊಂಡು ಕಾಂಗ್ರೆಸ್ ಪರವಾದ ಹೇಳಿಕೆಗಳನ್ನು ನೀಡುತ್ತಾ ಗೊಂದಲ ಮೂಡಿಸುತ್ತಿದ್ದಾರೆ. +ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಅಜಯ್ ಮಕೇನ್ ಪರವಾಗಿ ಮತ ಹಾಕುವ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ಅತ್ತ ಶಿವರಾಂ ಹೆಬ್ಬಾರ್ ಪಕ್ಷದ ನಾಯಕರ ಸೂಚನೆಯನ್ನು ಧಿಕ್ಕರಿಸಿ ಗೈರು ಹಾಜರಾಗಿದ್ದರು. ಇಬ್ಬರೂ ಶಾಸಕರು ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿಗಳು ಪದೇಪದೇ ಕೇಳಿಬರುತ್ತಲೇ ಇವೆ. ಆದರೆ ಅವರು ಬಿಜೆಪಿಯಲ್ಲೇ ಉಳಿದುಕೊಂಡಿದ್ದಾರೆ. +ಉತ್ತರ ಕನ್ನಡ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಶಿವರಾಂ ಹೆಬ್ಬಾರ್ರವರ ಹೆಸರು ಕೇಳಿಬಂದಿತ್ತು. ಬೆಂಗಳೂರು ಉತ್ತರಕ್ಕೆ ಎಸ್.ಟಿ.ಸೋಮಶೇಖರ್ ಅಥವಾ ಅವರ ಪುತ್ರ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಆದರೆ ಅದೆಲ್ಲವೂ ಹುಸಿಯಾಗಿದ್ದು ಕಾಂಗ್ರೆಸ್ ಬೇರೆಯವರ ಹೆಸರನ್ನು ಈಗಾಗಲೇ ಆಖೈರುಗೊಳಿಸಿದೆ. +ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇತ್ತೀಚೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡ ಜೆಡಿಎಸ್ನ ಅಭ್ಯರ್ಥಿ ಜವರಾಯಿಗೌಡ ಅವರ ಮನೆಗೆ ಭೇಟಿ ನೀಡಿದ್ದರು. ಪಕ್ಷದ ಶಾಸಕರಾಗಿದ್ದರೂ ಎಸ್.ಟಿ.ಸೋಮಶೇಖರ್ರವರನ್ನು ಶೋಭಾ ಕರಂದ್ಲಾಜೆ ಭೇಟಿ ಮಾಡಿಲ್ಲ. ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಸೋಮಶೇಖರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಹೋಗಬೇಕು ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದ್ದರು. +ಅತ್ತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲೂ ಶಿವರಾಂ ಹೆಬ್ಬಾರ್ ತೆರೆಮರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಚರ್ಚೆಗಳಿವೆ. ಹೀಗಾಗಿ ಇಂದು ಈ ಇಬ್ಬರೂ ನಾಯಕರು ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಿರುವುದು ಗಮನ ಸೆಳೆದಿದೆ. \ No newline at end of file diff --git a/eesanje/url_46_199_11.txt b/eesanje/url_46_199_11.txt new file mode 100644 index 0000000000000000000000000000000000000000..193c3d94f310b43ffe3ec2efe958cce4117ad2d4 --- /dev/null +++ b/eesanje/url_46_199_11.txt @@ -0,0 +1,4 @@ +ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ +ಬೆಂಗಳೂರು, ಮಾ.21-ಮಾಜಿ ಮಂತ್ರಿಗಳು ಹಾಗೂ ನನ್ನ ತಂದೆಯವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. +ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದಿದ್ದಾರೆ. +ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ \ No newline at end of file diff --git a/eesanje/url_46_199_12.txt b/eesanje/url_46_199_12.txt new file mode 100644 index 0000000000000000000000000000000000000000..b735e1f702440fa6a1400cc649b9c9ebd0a524d0 --- /dev/null +++ b/eesanje/url_46_199_12.txt @@ -0,0 +1,4 @@ +ನನ್ನ ಅವಧಿಯಲ್ಲಿ ವಿಧಾನ ಪರಿಷತ್ತಿಗೆ 11 ಸದಸ್ಯರ ರಾಜೀನಾಮೆ ಸಲ್ಲಿಕೆಯಾಗಿವೆ : ಹೊರಟ್ಟಿ +ಬೆಂಗಳೂರು,ಮಾ.21-ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಧಾನ ಪರಿಷತ್ತಿಗೆ 11 ಸದಸ್ಯರ ರಾಜೀನಾಮೆ ಸಲ್ಲಿಕೆಯಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. +ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ರಾಜೀನಾಮೆ ಸ್ವೀಕರಿಸಿದ ನಂತರ ಮಾತನಾಡಿದ ಅವರು, ನಾಳೆ ಮತ್ತೊಬ್ಬ ಸದಸ್ಯರು ರಾಜೀನಾಮೆ ಕೊಡಲಿದ್ದಾರೆ. ನೇರವಾಗಿ ಹುಬ್ಬಳ್ಳಿಗೆ ಬಂದು ರಾಜೀನಾಮೆ ನೀಡುವ ಸಾಧ್ಯತೆಯಿದೆ. ಅನಿವಾರ್ಯ ಕಾರಣದಿಂದ ಮೇಲ್ ಮೂಲಕವೂ ರಾಜೀನಾಮೆ ಸಲ್ಲಿಸಬಹುದು. ಯಾರು, ಯಾರು ಎನ್ನುವುದು ನಾಳೆ ಗೊತ್ತಾಗಲಿದೆ. ನಾಳೆ ರಾಜೀನಾಮೆ ಕೊಡುತ್ತೇನೆ ಎಂದು ಫೋನ್ ಮಾಡಿ ತಿಳಿಸಿದ್ದಾರೆ ಎಂದು ಹೇಳಿದರು. +ನನ್ನ ಅವಧಿಯಲ್ಲಿ 11 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. 17-10-2018 ರಲ್ಲಿ ವಿ.ಎಸ್.ಉಗ್ರಪ್ಪ, 2-11-2021 ರಲ್ಲಿ ಶ್ರೀನಿವಾಸ್ ಮಾನೆ, 29-11-2021 ರಲ್ಲಿ ಸಿ.ಆರ್.ಮನೋಹರ್, 31-3-2022 ರಲ್ಲಿ ಸಿ.ಎಂ.ಇಬ್ರಾಹಿಂ, 6-3-2023 ರಲ್ಲಿ ಪುಟ್ಟಣ್ಣ, 20-3-2023 ರಲ್ಲಿ ಬಾಬುರಾವ್ ಚಿಂಚನಸೂರು, 12-4-2023ರಲ್ಲಿ ಆರ್.ಶಂಕರ್, 14-4-2023 ಲಕ್ಷ್ಮಣ್ ಸವದಿ, 19-4-2023 ರಲ್ಲಿ ಆಯನೂರು ಮಂಜುನಾಥ್, 25-1-2024 ರಲ್ಲಿ ಜಗದೀಶ್ ಶೆಟ್ಟರ್, 21-4-2024ರಲ್ಲಿ ಮರಿತಿಬ್ಬೇಗೌಡ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_199_2.txt b/eesanje/url_46_199_2.txt new file mode 100644 index 0000000000000000000000000000000000000000..c98b44dca2937085cee025ce0da32ba10119da2b --- /dev/null +++ b/eesanje/url_46_199_2.txt @@ -0,0 +1,5 @@ +ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಎಚ್‍ಡಿಕೆ ಚೇತರಿಕೆ, ಭಾನುವಾರ ಡಿಸ್ಚಾರ್ಜ್ ಸಾಧ್ಯತೆ +ಬೆಂಗಳೂರು,ಮಾ.22-ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಆರೋಗ್ಯವಾಗಿದ್ದಾರೆ ಎಂದು ಕುಮಾರಸ್ವಾಮಿ ಅವರ ಕಚೇರಿ ಮೂಲಗಳು ತಿಳಿಸಿವೆ. +ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ.ಸಾಯಿ ಸತೀಶ್, ಹಂಗೇರಿಯ ತಜ್ಞ ವೈದ್ಯಡಾ.ಗೀಜಾ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಸದ್ಯ ತೀವ್ರ ನಿಗಾ ಘಟಕದಲ್ಲಿದ್ದು ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲ್ವಿಚಾರಣೆಯನ್ನು ಮಾಡುತ್ತಿದೆ. +ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕುಮಾರಸ್ವಾಮಿ ಅವರನ್ನು ವಾರ್ಡ್‍ಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಡಾ.ಸಿ.ಎನ್.ಮಂಜುನಾಥ್ ಅವರು ಮಾತನಾಡಿ, ಕುಮಾರಸ್ವಾಮಿ ಅವರಿಗೆ ಈಗಾಗಲೇ ಎರಡು ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ನಿನ್ನೆ ಮತ್ತೊಂದು ಶಸ್ತ್ರ ಚಿಕಿತ್ಸೆ ಮೂಲಕ ಹೃದಯದ ಕವಾಟ ಬದಲಾವಣೆ ಮಾಡಲಾಗಿದೆ. +ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆಯೇ ಆಂಜಿಯೋಗ್ರಾಂ ಮಾದರಿಯಂತೆ ಯಶಸ್ವಿಯಾಗಿ ಹೃದಯದ ಕವಾಟವನ್ನು ಜೋಡಿಸಲಾಗಿದೆ. ಲವಲವಿಕೆಯಿಂದ ಇದ್ದು ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಈ ನಡುವೆ ನಿನ್ನೆ ಅವರ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿ, ತಮ್ಮ ತಂದೆಯ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದರು. \ No newline at end of file diff --git a/eesanje/url_46_199_3.txt b/eesanje/url_46_199_3.txt new file mode 100644 index 0000000000000000000000000000000000000000..5307f6cfc51f008cc400f2b0a26c7d674fe20def --- /dev/null +++ b/eesanje/url_46_199_3.txt @@ -0,0 +1,12 @@ +ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡಿದ ರಾಷ್ಟ್ರೀಯ ಪಕ್ಷಗಳು +ಬೆಂಗಳೂರು,ಮಾ.22-ಲೋಕಸಭಾ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳು ಮಹಿಳಾ ಮಣಿಗಳಿಗೆ ಹೆಚ್ಚಿನ ಟಿಕೆಟ್ ನೀಡಿರುವುದು ವಿಶೇಷವಾಗಿದೆ. ಆದರೆ ಟಿಕೆಟ್ ಪಡೆದುಕೊಂಡ ಮಹಿಳೆಯರು ಚುನಾವಣೆಯಲ್ಲಿ ಗೆದ್ದು ಲೋಕಸಭೆಗೆ ಪ್ರವೇಶ ಮಾಡಿರುವುದು ತೀರಾ ಕಡಿಮೆ ಪ್ರಮಾಣದಲ್ಲಿ. +1999ರ ಲೋಕಸಭೆ ಚುನಾಣೆಯಲ್ಲಿ ರಾಜ್ಯದಿಂದ ಇಬ್ಬರು ಮಹಿಳೆಯರು ಲೋಕಸಭೆಗೆ ಆಯ್ಕೆಯಾಗಿದ್ದನ್ನು ಹೊರತುಪಡಿಸಿದರೆ ತದನಂತರ ಕೇವಲ ಒಬ್ಬರು ಮಾತ್ರ ಆಯ್ಕೆಯಾಗಿದ್ದಾರೆ. 1999ರ ಚುನಾವಣೆಯಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಹಾಗೂ ಮಾರ್ಗರೇಟ್ ಆಳ್ವ ಅವರು ಕೆನರಾ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ರಾಜ್ಯವನ್ನು ಪ್ರತಿನಿಧಿಸಿದ್ದರು. +ಅದನ್ನು ಬಿಟ್ಟರೆ ಸುಮಾರು 24 ವರ್ಷಗಳ ನಂತರ ರಾಜ್ಯದಿಂದ ಪ್ರತಿ ಚುನಾವಣೆಯಲ್ಲಿ ಓರ್ವ ಮಹಿಳೆ ಮಾತ್ರ ಆಯ್ಕೆಯಾಗಿದ್ದರೆ ಇನ್ನು ಕೆಲವು ಚುನಾವಣೆಯಲ್ಲಿ ಮಹಿಳೆಯರಿಗೆ ಟಿಕೆಟ್‍ನ್ನೇ ಕೊಟ್ಟಿರಲಿಲ್ಲ.ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸಂಸತ್‍ನ ಉಭಯ ಸದನಗಳಲ್ಲಿ ಅಂಗೀಕಾರ ಮಾಡಲಾಗಿದೆ. 2029ರ ಲೋಕಸಭೆ ಚುನಾವಣೆಗೆ ಮಹಿಳಾ ಮೀಸಲಾತಿ ರಾಷ್ಟ್ರಾದ್ಯಂತ ಅನ್ವಯವಾಗಲಿದೆ ಎಂದು ಹೇಳಲಾಗಿದೆ. +ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಹಿಳೆಯರಿಗೆ ಪ್ರಾಮುಖ್ಯತೆ ಕೊಟ್ಟಿದೆ. ಅದರಲ್ಲಿ ಕಾಂಗ್ರೆಸ್ ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇದ್ದು, 6 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದರೆ ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಅದೃಷ್ಟ ಪಣಕ್ಕಿಟ್ಟಿದೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲೂ ಮಹಿಳೆಯರಿಗೆ ಟಿಕೆಟ್ ನೀಡಿಲ್ಲ. +ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‍ಕುಮಾರ್ ಹೆಸರು ಘೋಷಣೆ ಆಗಿತ್ತು. ಇದೀಗ ಎರಡನೇ ಕಾಂಗ್ರೆಸ್ ಲಿಸ್ಟ್‍ನಲ್ಲಿ ಸೌಮ್ಯಾ ರೆಡ್ಡಿ, ಪ್ರಭಾ ಮಲ್ಲಿಕಾರ್ಜುನ, ಅಂಜಲಿ ಲಿಂಬಾಳ್ಕರ್, ಸಂಯುಕ್ತಾ ಪಾಟೀಲ್ ಹಾಗೂ ಪ್ರಿಯಾಂಕ ಜಾರಕಿಹೊಳಿಗೆ ಟಿಕೆಟ್ ಘೋಷಣೆಯಾಗಿದೆ. +ಬಿಜೆಪಿ ಮೊದಲ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ದಾವಣಗೆರೆ ಕ್ಷೇತ್ರದಿಂದ ಜಿ.ಎಂ.ಸಿದ್ದರೇಶ್ವರ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‍ಗೆ ಟಿಕೆಟ್ ಕೊಡಲಾಗಿದೆ. 1996 ಮತ್ತು 1998ರ ಲೋಕಸಭಾ ಚುನಾವಣೆ ವೇಳೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್, ಬಿಜೆಪಿ, ಜೆಡಿಯು ಮಹಿಳೆಯರಿಗೆ ಟಿಕೆಟ್ ನೀಡಿರಲಿಲ್ಲ. +1999ರಲ್ಲಿ ಕಾಂಗ್ರೆಸ್ ಇಬ್ಬರಿಗೆ ಹಾಗೂ ಬಿಜೆಪಿ ಓರ್ವ ಮಹಿಳೆಗೆ ಟಿಕೆಟ್ ಕೊಟ್ಟಿತ್ತು.ದೇಶದ ಗಮನಸೆಳೆದಿದ್ದ ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಸುಷ್ಮಾ ಸ್ವರಾಜ್ ಸ್ಪರ್ಧೆ ಮಾಡಿದ್ದರು. ಇನ್ನೊಂದೆಡೆ ಈಗಿನ ಉತ್ತರಕನ್ನಡ ಕ್ಷೇತ್ರ ಎನಿಸಿರುವ ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಅವರು ಹಿಂದೂ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ಅವರನ್ನು ಪರಾಭವಗೊಳಿಸಿದ್ದರು.2004ರ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಮೂರು ಪಕ್ಷಗಳು ಮಹಿಳೆಯರಿಗೆ ಮಣೆ ಹಾಕಿರಲಿಲ್ಲ. +2009ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರ ಪುನರ್ ವಿಂಗಡಣೆಯಾದ ಪರಿಣಾಮ ಕೆಲವು ಮಹತ್ವದ ಬದಲಾವಣೆ ಉಂಟಾಯಿತು. ಸಾಮಾನ್ಯ ಕ್ಷೇತ್ರವಾಗಿದ್ದ ಬಳ್ಳಾರಿ, ಚಿತ್ರದುರ್ಗ, ರಾಯಚೂರು, ಬಿಜಾಪುರ ಕ್ಷೇತ್ರಗಳು ಮೀಸಲು ಕ್ಷೇತ್ರಗಳಾಗಿ ಬದಲಾದವು. ಬಳ್ಳಾರಿ ಸಾಮಾನ್ಯ ಕ್ಷೇತ್ರವು ಪರಿಶಿಷ್ಟ ಪಂಗಡಕ್ಕೆ ಮೀಸಲಾದರೆ ಬಿಜಾಪುರ, ಚಿತ್ರದುರ್ಗ ಕ್ಷೇತ್ರಗಳು ಪರಿಶಿಷ್ಟ ಜಾತಿಗೆ ಮೀಸಲಾದವು. ಇದೇ ಮೊದಲ ಬಾರಿಗೆ ರಾಜಕೀಯ ಪ್ರವೇಶ ಮಾಡಿದ ಮಾಜಿ ಸಚಿವ ಹಾಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಸಹೋದರಿ ಜೆ.ಶಾಂತ ಕೆಲವೇ ಮತಗಳ ಅಂತರದಿಂದ ಗೆದ್ದಿದ್ದರು. +ನಂತರ 2014 ಮತ್ತು 2019ರಲ್ಲಿ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಗೆದ್ದಿದ್ದರು. ಇದೀಗ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. + +ಮಹಿಳೆಯರು ಸ್ಪರ್ಧಿಸಿರುವ ಕ್ಷೇತ್ರಗಳು:ಬೆಂಗಳೂರು ದಕ್ಷಿಣ – ಸೌಮ್ಯ ರೆಡ್ಡಿದಾವಣಗೆರೆ -ಪ್ರಭಾ ಮಲ್ಲಿಕಾರ್ಜುನಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್ಬಾಗಲಕೋಟೆ – ಸಂಯುಕ್ತ ಪಾಟೀಲ್ಚಿಕ್ಕೋಡಿ – ಪ್ರಿಯಾಂಕ ಜಾರಕಿಹೋಳಿಶಿವಮೊಗ್ಗ – ಗೀತಾ ಶಿವರಾಜ್‍ಕುಮಾರ್ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆದಾವಣಗೆರೆ- ಗಾಯತ್ರಿ ಸಿದ್ದೇಶ್ವರ್ \ No newline at end of file diff --git a/eesanje/url_46_199_4.txt b/eesanje/url_46_199_4.txt new file mode 100644 index 0000000000000000000000000000000000000000..6e9fe107161875774a467243f9301b1bcc4e48fe --- /dev/null +++ b/eesanje/url_46_199_4.txt @@ -0,0 +1,9 @@ +ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆಹೋದ ರಾಜ್ಯ ಬಿಜೆಪಿ +ಬೆಂಗಳೂರು,ಮಾ.22-ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಭಿನ್ನಮತೀಯರ ಬಂಡಾಯ ಸೇರಿದಂತೆ ಪಕ್ಷದ ಸ್ಥಿತಿಗತಿಗಳ ಕುರಿತು ರಾಜ್ಯ ಬಿಜೆಪಿ ಘಟಕ ಕೇಂದ್ರ ವರಿಷ್ಠರಿಗೆ ವರದಿ ನೀಡಿದೆ. ಕೆಲವರು ಪಕ್ಷದ ಚೌಕಟ್ಟನ್ನು ದಾಟಿ ಮುಂದೆ ಹೋಗಿರುವುದರಿಂದ ಅವರನ್ನು ನಾವು ಮನವೊಲಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವರಿಷ್ಠರೇ ಮಧ್ಯಪ್ರವೇಶ ಮಾಡಬೇಕೆಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. +ಪಕ್ಷದ ಹಿರಿಯರಾದ ಕೆ.ಎಸ್.ಈಶ್ವರಪ್ಪ , ಜೆ.ಸಿ.ಮಾಧುಸ್ವಾಮಿ, ಕರಡಿ ಸಂಗಣ್ಣ, ನಮ್ಮ ಸಂಧಾನಕ್ಕಾಗಲಿ ಇಲ್ಲವೇ ಮಾತುಕತೆಗೆ ಜಗ್ಗುತ್ತಿಲ್ಲ. ಅನೇಕ ಬಾರಿ ಅವರ ಜೊತೆ ನಡೆಸಿದ ಸಂಧಾನವು ವಿಫಲವಾಗಿದೆ. ದುಡುಕಿನ ನಿರ್ಧಾರ ಕೈಗೊಳ್ಳುವ ಮೊದಲು ಹಿರಿಯರು ಮಧ್ಯಪ್ರವೇಶಿಸುವಂತೆ ಕೋರಲಾಗಿದೆ. +ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಿನ್ನಮತ ತಾರಕಕ್ಕೇರಿದೆ. ಟಿಕೆಟ್ ಸಿಗದವರು ಅತೃಪ್ತಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಟಿಕೆಟ್ ಕೊಟ್ಟವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. +ರಾಜ್ಯ ಬಿಜೆಪಿ ಘಟಕದ ಎಲ್ಲ ನಾಯಕರು ಅವರ ಜೊತೆ ಸಂಪರ್ಕ ಸಾಧಿಸಲು ಯತ್ನಿಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಒಂದು ವೇಳೆ ಭಿನ್ನಮತೀಯರು ಸ್ಪರ್ಧೆ ಮಾಡಿದರೆ ಅಧಿಕೃತ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಾಗಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೋರಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಟಿಕೆಟ್ ವಂಚಿತರಾಗಿರುವ ನಾಯಕರ ಜೊತೆ ವರಿಷ್ಠರು ಸಾಲು ಸಾಲು ಸಭೆ ನಡೆಸಿದರೂ ಅಸಮಾಧಾನದ ಕಿಚ್ಚು ಮಾತ್ರ ಕಡಿಮೆಯಾಗುತ್ತಿಲ್ಲ. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಬದಲಾವಣೆಯ ಕೂಗು ಕೇಳಿ ಬಂದಿದೆ. ಇತ್ತ ಮಗನಿಗೆ ಹಾವೇರಿ-ಗದಗ ಟಿಕೆಟ್ ತಪ್ಪಿದ್ದಕ್ಕೆ ಬಂಡಾಯದ ಬಾವುಟ ಹಿಡಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ತೊಡೆ ತಟ್ಟಿದ್ದಾರೆ. +ಬಂಡಾಯ ಬಾವುಟ ಹಿಡಿದಿರುವ ಕೆಎಸ್ ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕ. ತಮ್ಮದೇ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದರೂ ಈಶ್ವರಪ್ಪ ಗೈರಾಗುವ ಮೂಲಕ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದರು.ಎಷ್ಟೇ ಮನವಿ ಮಾಡಿದರೂ ಅತೃಪ್ತರು ಸಮಾಧಾನಗೊಳ್ಳದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಎಲ್ಲರ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್‍ಗೆ ರವಾನಿಸಿದ್ದು, ಎಚ್ಚರಿಕೆ ಸಂದೇಶ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದೆ. +ಹಲವೆಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಬಂಡಾಯದ ಕೂಗು ಕೇಳಿ ಬರುತ್ತಿದೆ. ಪಕ್ಷ ವಿರೋಧಿ ಚಟುವಟಿಕೆಗಳಿಂದ ಚುನಾವಣೆಯಲ್ಲಿ ಹಿನ್ನಡೆ ಆತಂಕವೂ ಬಿಜೆಪಿಗೆ ಉಂಟಾಗಿದೆಯಂತೆ. ಇದು ಹೀಗೆಯೇ ಮುಂದುವರಿದರೆ 25+ ಗುರಿ ತಲುಪಲು ಹಿನ್ನಡೆಯಾಗುತ್ತದೆ ಎಂದು ಪಕ್ಷದ ವರಿಷ್ಠರು ಆತಂಕ ವ್ಯಕ್ತಪಡಿಸಿದ್ದಾರೆ. +ಪಕ್ಷದ ನಾಯಕರೇ ಒಳೇಟು ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಅತೃಪ್ತರಿಗೆ ಶೀಘ್ರವೇ ಹೈಕಮಾಂಡ್‍ನಿಂದ ಸಂದೇಶ ರವಾನೆಯಾಗುವ ಸಾಧ್ಯತೆಗಳಿವೆ.ಇನ್ನು ಬೆಳಗಾವಿಯದ್ದು ಮತ್ತೊಂದು ಕಥೆ. ಈ ಕ್ಷೇತ್ರದ ಅಭ್ಯರ್ಥಿಯ ಘೋಷಣೆಗೂ ಮುನ್ನವೇ ಸಂಭವನೀಯ ಕ್ಯಾಂಡಿಟೇಟ್ ಆಗಿರೋ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಗೋಬ್ಯಾಕ್ ಅಭಿಯಾನ ಶುರುವಾಗಿದೆ. ಗೋಬ್ಯಾಕ್ ಕ್ಯಾಂಪೇನ್ ವಿರುದ್ಧ ಬಿಜೆಪಿ ನಾಯಕರು ದೂರು ಸಲ್ಲಿಸಿದ್ದಾರೆ. ಬಿಜೆಪಿ ಮಹಾನಗರ ಘಟಕದಿಂದ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ನಾಯಕರಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ. \ No newline at end of file diff --git a/eesanje/url_46_199_5.txt b/eesanje/url_46_199_5.txt new file mode 100644 index 0000000000000000000000000000000000000000..254098ae1668920de16f81fdeb62f6e96f316bf5 --- /dev/null +++ b/eesanje/url_46_199_5.txt @@ -0,0 +1,7 @@ +ಒಕ್ಕಲಿಗರ ಸಂಘದ ಸದಸ್ಯತ್ವ ನೋಂದಣಿ ಅವಧಿ ಆಗಸ್ಟ್ ವರೆಗೆ ವಿಸ್ತರಣೆ +ಬೆಂಗಳೂರು,ಮಾ.22-ರಾಜ್ಯ ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ನೋಂದಣಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.ಆಗಸ್ಟ್ ಅಂತ್ಯದವರೆಗೂ ಹೊಸ ಸದಸ್ಯತ್ವ ಸಲ್ಲಿಕೆಗೆ ಕಾಲಾವಕಾಶ ನೀಡಿದ್ದು, ನಮ್ಮ ಸಮಾಜದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಸಂಘದ ಸದಸ್ಯತ್ವ ಕೋರಿ ಹೊಸದಾಗಿ ಆಫ್ ಲೈನ್ ಮೂಲಕ 52,264 ಮಂದಿ ಮತ್ತು ಆನ್ ಲೈನ್ ಮೂಲಕ 10,234 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಒಟ್ಟು 62,498 ಮಂದಿ ಹೊಸದಾಗಿ ಸಂಘದ ಸದಸ್ಯತ್ವ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಎರಡೂ ವಿಧಾನದ ಮೂಲಕ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಅರ್ಹರೆಲ್ಲರಿಗೂ ಸಂಘದ ಆಜೀವ ಸದಸ್ಯತ್ವ ನೀಡಲಾಗುತ್ತಿದೆ ಎಂದಿದ್ದಾರೆ. +ಸದಸ್ಯತ್ವ ವಿಸ್ತರಣೆ ಮಾಡುವಂತೆ ಒತ್ತಾಯ ಮಾಡಿದ ಹಿನ್ನೆಲೆಯಲ್ಲಿ ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ಮತ್ತೆ ಆರು ತಿಂಗಳ ಕಾಲಾವಕಾಶ ನೀಡಲು ನಿರ್ಣಯಿಸಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ 18 ವರ್ಷ ತುಂಬಿರುವ ಒಕ್ಕಲಿಗ ಸಮುದಾಯದವರು ಅರ್ಜಿ ಸಲ್ಲಿಸಿ ಹೊಸ ಸದಸ್ಯತ್ವ ಪಡೆಯಬಹುದು. +ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಡಿಸಿಸಿಸಿ ಬ್ಯಾಂಕ್‍ನ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ದಕ್ಷಿಣ ಕನ್ನಡ, ಕೆ.ವಿ.ಜಿ ಬ್ಯಾಂಕ್, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ, ತೀರ್ಥಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘ, ಹೊನ್ನಾವರ ಬೈರವಿ ಮಹಿಳಾ ಸಹಕಾರಿ ಸಂಘ, ಮತ್ತು ಸಿರಸಿ ಕೆನರಾ ಜಿಲ್ಲಾ ಕೋ-ಆಪರೇಟಿವ್ ಬ್ಯಾಂಕ್‍ಗಳಲ್ಲಿ ಸಂಘದ ಸದಸ್ಯತ್ವದ ಅರ್ಜಿಗಳನ್ನು ವಿತರಿಸಲಾಗುತ್ತದೆ. +ಅರ್ಜಿ ಸ್ವೀಕರಿಸಿದ ದಿನಾಂಕದಿಂದ 30 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಆಯಾ ಬ್ಯಾಂಕಿಗೆ ಅರ್ಜಿ ಹಿಂದಿರುಗಿಸಬೇಕು. ಅರ್ಜಿಯೊಂದಿಗೆ ವಿಳಾಸ ದೃಢೀಕರಣಕ್ಕೆ ಸಂಬಂಸಿದಂತೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ ಅಥವಾ ಶಾಲಾ ಟಿ.ಸಿ. ಮತ್ತು ಎರಡು ಇತ್ತೀಚಿನ ಭಾವಚಿತ್ರ ಸೇರಿದಂತೆ ಅರ್ಜಿಯಲ್ಲಿ ಕೋರಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಒದಗಿಸುವುದು ಕಡ್ಡಾಯವಾಗಿದೆ.. +ಅರ್ಜಿ ಸಲ್ಲಿಕೆ ಶುಲ್ಕ 1650 ರೂಪಾಯಿಯನ್ನು ನಿಗದಿಪಡಿಸಲಾಗಿದೆ. ಶುಲ್ಕವನ್ನು ಡೆಬಿಟ್ , ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಸೇರಿದಂತೆ ಆನ್‍ಲೈನ್ ವಿಧಾನ ಮೂಲಕ ಪಾವತಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಸಂಘದ ದೂರವಾಣಿ ಸಂಖ್ಯೆ 080-26611031 ಸಂಪರ್ಕಿಸಬಹುದಾಗಿದೆ. \ No newline at end of file diff --git a/eesanje/url_46_199_6.txt b/eesanje/url_46_199_6.txt new file mode 100644 index 0000000000000000000000000000000000000000..49f670c427abed5620f05c6da2cbbfe386dd6591 --- /dev/null +++ b/eesanje/url_46_199_6.txt @@ -0,0 +1,5 @@ +ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ರಾಜೀನಾಮೆ +ಹುಬ್ಬಳ್ಳಿ,ಮಾ.21-ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಧಾನಪರಿಷತ್ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿಯ ಗೃಹಕಚೇರಿಗೆ ತೆರಳಿದ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದರು. ಮರಿತಿಬ್ಬೇಗೌಡ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಮುಂದಿನ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. +ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡರು, ಸ್ವ ಇಚ್ಛೆಯಿಂದ ಯಾವುದೇ ಒತ್ತಡವಿಲ್ಲದೆ ರಾಜೀನಾಮೆ ಸಲ್ಲಿಸಿದ್ದೇನೆ ಹಾಗೂ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀ ನಾಮೆ ನೀಡಿದ್ದೇನೆ ಎಂದರು. ವಿಧಾನಪರಿಷತ್ನಲ್ಲಿ ನನ್ನ ಮುಂದಿನ ಅವಗೆ ರಾಜೀನಾಮೆ ಸಲ್ಲಿಸಿದ್ದೇನೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಎರಡು ಬಾರಿ ಜೆಡಿಎಸ್ ಪ್ರತಿನಿಯಾಗಿ ಆಯ್ಕೆಯಾಗಿದ್ದೆ. ವರಿಷ್ಠರಾದ ದೇವೇಗೌಡರು, ಕುಮಾರಸ್ವಾಮಿ ಅವರು ನಮ್ಮನ್ನು ಕಡೆಗಣಿಸಿದ್ದಾರೆ. +ನಿಷ್ಠಾವಂತ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನಮ್ಮ ಸಲಹೆಗಳು ಜೆಡಿಎಸ್ ವರಿಷ್ಠರಿಗೆ ಹಿಡಿಸುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡದೆ ತಮಗೆ ಬೇಕಾದವರಿಗೆ ಟಿಕೆಟ್ ಕೊಟ್ಟರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿ ಮಾಡುವುದು ಬೇಡ ಎಂದಿದ್ದೆ. ಅದಕ್ಕೆ ನನ್ನ ಮೇಲೆ ಅವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಿದರು. +ನಮ್ಮ ಪಕ್ಷದ ನಾಯಕರು ಮೊಸಳೆಯ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಎಂದರೆ ಬಿಜೆಪಿ ಎಂದರು. ದೇವೇಗೌಡರು, ಕುಮಾರಸ್ವಾಮಿ- ರೇವಣ್ಣ ಅವರನ್ನು ಬಿಟ್ಟರೆ ಯಾರ ಮಾತನ್ನು ಕೇಳುವುದಿಲ್ಲ. ನಾನು ಯಾವುದೇ ಪಕ್ಷ ಸೇರುವ ತೀರ್ಮಾನ ತೆಗೆದುಕೊಂಡಿಲ್ಲ. ಹಿತೈಷಿಗಳ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_199_7.txt b/eesanje/url_46_199_7.txt new file mode 100644 index 0000000000000000000000000000000000000000..796580b9c36ead65cdddc10aece94f9d7c7202b1 --- /dev/null +++ b/eesanje/url_46_199_7.txt @@ -0,0 +1,4 @@ +ವಿಧಾನಸೌಧ ಸೇರಿದಂತೆ 6 ಕಡೆ ಹೈಟೆಕ್ ಸ್ಕ್ಯಾನರ್ ಅಳವಡಿಕೆ +ಬೆಂಗಳೂರು,ಮಾ.21-ಶಕ್ತಿಸೌಧ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಬೆನ್ನಲ್ಲೇ ಭದ್ರತಾ ದೃಷ್ಟಿಯಿಂದ ವಿಧಾನಸೌಧಕ್ಕೆ ಹೈಟೆಕ್ ಬ್ಯಾಗ್ ಸ್ಕ್ಯಾನರ್ಗಳನ್ನು ಅಳವಡಿಸಲಾಗುತ್ತಿದೆ.ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಾಯೋಗಿಕವಾಗಿ ಮೊದಲ ಬ್ಯಾಗ್ ಸ್ಕ್ಯಾನರ್ ಯಂತ್ರವನ್ನು ಅಳವಡಿಸಲಾಗಿದೆ. +ಒಟ್ಟು 14 ಬ್ಯಾಗ್ ಸ್ಕ್ಯಾನರ್ಗಳನ್ನು ನೀಡಿರುವ ಸರ್ಕಾರ ಹೈಕೋರ್ಟ್ಗೆ 6, ವಿಧಾನಸೌಧಕ್ಕೆ 5 ಸ್ಕ್ಯಾನರ್ಗಳನ್ನು ಅಳವಡಿಸಲು ಸೂಚನೆ ನೀಡಿದೆ.ರಾಜಭವನ, ಲೋಕಾಯುಕ್ತ ಕಚೇರಿ, ವಿಕಾಸಸೌಧ, ಶಾಸಕರ ಭವನ ಹಾಗೂ ಪೊಲೀಸ್ ಆಯುಕ್ತರ ಕಚೇರಿಗೂ ಯಂತ್ರವನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಹೆಚ್ಚುವರಿಯಾಗಿ ಮತ್ತೆರಡು ಯಂತ್ರಗಳನ್ನು ತರಿಸಲು ವ್ಯವಸ್ಥೆ ಮಾಡಲಾಗಿದ್ದು, ಇದೀಗ ಪ್ರಾಯೋಗಿಕವಾಗಿ ಆಯುಕ್ತರ ಕಚೇರಿಯಲ್ಲಿ ಅಳವಡಿಸಲಾಗಿದೆ. +ಈ ಯಂತ್ರ ಬ್ಯಾಗ್ಗಳಲ್ಲಿರುವ ಚಿಕ್ಕ ವಸ್ತುಗಳನ್ನು ಕೂಡ ಪತ್ತೆ ಹಚ್ಚಿ ಬ್ಲ್ಯಾಕ್ ಮಾರ್ಕ್ ವಸ್ತುಗಳನ್ನು ಗ್ರಹಿಸಿ ಸೈರನ್ ರೆಡ್ ಮಾರ್ಕ್ ತೋರಿಸಿ ಭದ್ರತಾ ಸಿಬ್ಬಂದಿಗಳಿಗೆ ಸೂಚನೆ ನೀಡಲಿದೆ. ಇದಕ್ಕಾಗಿ ಪೊಲೀಸರಿಗೆ ತರಬೇತಿಯನ್ನು ನೀಡಿ ಎರಡು ಪಾಳಿಯದಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. \ No newline at end of file diff --git a/eesanje/url_46_199_8.txt b/eesanje/url_46_199_8.txt new file mode 100644 index 0000000000000000000000000000000000000000..5c0544a21e029345fbc695b7e8ef8e690a801e38 --- /dev/null +++ b/eesanje/url_46_199_8.txt @@ -0,0 +1,8 @@ +ಶಾಸಕನಾಗಿ ಕ್ಷೇತ್ರಕ್ಕೆ ಹೋಗಲು ಭಯವಾಗುತ್ತದೆ : ಎಸ್.ಟಿ.ಸೋಮಶೇಖರ್ +ಬೆಂಗಳೂರು,ಮಾ.21-ಶಾಸಕನಾಗಿ ಕ್ಷೇತ್ರಕ್ಕೆ ಹೋಗಲು ನನಗೆ ಭಯವಾಗುವಂತಹ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ರಕ್ಷಣೆ ಕೇಳುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಭ್ಯರ್ಥಿ ಘೋಷಣೆಯಾಗಲಿದೆ. ಇನ್ನು ಮತವನ್ನೇ ಕೇಳಿಲ್ಲ. +ಆಗಲೇ ಬೆಂಕಿ ಉಂಡೆಗಳನ್ನು ಉದುರಿಸುತ್ತಿದ್ದಾರೆ. ತಮಿಳುನಾಡು, ದೆಹಲಿಯಿಂದ ಬಂದು ಬಾಂಬ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರೇನು ಸಂಸದರಾಗಲು ಬಂದಿದ್ದಾರೆಯೋ ಅಥವಾ ಬೆಂಗಳೂರಿನ ಶಾಂತಿ ಹಾಳು ಮಾಡಲು ಬೆಂಕಿ ಹಚ್ಚಲು ಮುಂದಾಗಿದ್ದಾರೆಯೋ ಎಂದು ಪ್ರಶ್ನಿಸಿದರು. +ಈ ಹಿಂದೆ ಬೆಂಗಳೂರು ಉತ್ತರ ಕ್ಷೇತ್ರವನ್ನು ಡಿ.ಬಿ.ಜಯಚಂದ್ರ 5 ವರ್ಷ ಪ್ರತಿನಿಧಿಸಿದ್ದರು. ಡಿ.ವಿ.ಸದಾನಂದಗೌಡ 10 ವರ್ಷ ಸಂಸದರಾಗಿದ್ದರು. ಒಂದು ದಿನವೂ ದ್ವೇಷದ ಭಾಷಣ ಮಾಡಲಿಲ್ಲ. ಸಣ್ಣಪುಟ್ಟ ವ್ಯತ್ಯಾಸವಾಗುವಂತಹ ಘಟನೆಗಳೂ ನಡೆಯಲಿಲ್ಲ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಮೂರೂ ಪಕ್ಷಗಳನ್ನು ಸಮಾನಾಂತರವಾಗಿ ಕಂಡಿದ್ದರು. ಈಗಿನ ಅಭ್ಯರ್ಥಿ ಕ್ಷೇತ್ರಕ್ಕೆ ಕಾಲಿಡುವ ಮುನ್ನವೇ ಬೆಂಕಿ ಉಗುಳಲಾರಂಭಿಸಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. +ಬಿಜೆಪಿ ಅಭ್ಯರ್ಥಿ ಯಾವ ಕ್ಷಣದಲ್ಲಿ ಏನು ಮಾತನಾಡುತ್ತಾರೋ, ಯಾವಾಗ ದ್ವೇಷ ಭಾಷಣ ಮಾಡುತ್ತಾರೋ, ನನ್ನ ವಿರುದ್ಧ ಏನು ಹೇಳಿಕೆಗಳನ್ನು ನೀಡುತ್ತಾರೋ, ಯಾರನ್ನು ಯಾರ ವಿರುದ್ಧ ಎತ್ತಿ ಕಟ್ಟುತ್ತಾರೋ ಎಂಬ ಭಯ ಕಾಡುತ್ತಿದೆ. ಶಾಸಕನಾಗಿ ನನಗೆ ಕ್ಷೇತ್ರಕ್ಕೆ ಹೋಗಲು ಆತಂಕ ಶುರುವಾಗಿದೆ ಎಂದು ಹೇಳಿದರು. +ರಾಜ್ಯಸಭಾ ಚುನಾವಣೆಯಲ್ಲಿ ತಾವು ಮತ ಹಾಕಿದ್ದಕ್ಕಾಗಿ ಬಿಜೆಪಿಯಿಂದ ನೋಟಿಸ್ ಬಂದಿತ್ತು. ಅದಕ್ಕೆ 170 ಪುಟಗಳ ಉತ್ತರ ನೀಡಿದ್ದೇನೆ. ಅವರ ಒಂದು ಪುಟದ ನೋಟಿಸ್ಗೆ ನಾನು ಸಮಗ್ರವಾಗಿ ವಿವಿಧ ನ್ಯಾಯಾಲಯಗಳ ತೀರ್ಪುಗಳು, ಹಿಮಾಚಲ ಪ್ರದೇಶ, ಮಣಿಪುರ, ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ನಡೆದ ಇದೇ ರೀತಿಯ ಬೆಳವಣಿಗೆಗಳನ್ನುಉಲ್ಲೇಖಿಸಿ ಸುದೀರ್ಘ ಉತ್ತರ ನೀಡಿದ್ದೇನೆ ಎಂದರು. +ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ನವರು ಬಿಜೆಪಿಗೆ ಮತ ಹಾಕಿದ್ದರು. ಆ ವೇಳೆ ವಿಪ್ ನೀಡಿದ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಪ್ರಶ್ನೆ ಮಾಡಿ ವಿಪ್ ನೀಡಲು ಅವಕಾಶವಿಲ್ಲ ಎಂದು ವಾದಿಸಿದ್ದರು. ಇಲ್ಲಿ ತದ್ವಿರುದ್ಧವಾದ ಮಾತುಗಳನ್ನಾಡುತ್ತಿದ್ದಾರೆ ಎಂದು ಹೇಳಿದರು.ನನಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನೋಟಿಸ್ಗೆ ನೀಡಿರುವ ಉತ್ತರದಲ್ಲಿ ರಾಜ್ಯ ನಾಯಕರ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರನ್ನು ಇಂದು ಭೇಟಿ ಮಾಡಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದೇನೆ. ಕಳೆದ ಒಂದು ವಾರದಿಂದಲೂ ಅವರನ್ನು ಭೇಟಿ ಮಾಡಲಾಗಲಿಲ್ಲ. ಹೀಗಾಗಿ ಇಂದು ಮನೆಗೆ ಬರಬೇಕಾಯಿತು. ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಿಗೆ ಉಪಮುಖ್ಯಮಂತ್ರಿಯವರು ಫೋನ್ ಮಾಡಿ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದಾರೆ ಎಂದರು. \ No newline at end of file diff --git a/eesanje/url_46_199_9.txt b/eesanje/url_46_199_9.txt new file mode 100644 index 0000000000000000000000000000000000000000..47526ac466b4805850a2eda767ab98ff43a6f2e3 --- /dev/null +++ b/eesanje/url_46_199_9.txt @@ -0,0 +1,6 @@ +ಯಡಿಯೂರಪ್ಪನವರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ +ಬೆಂಗಳೂರು,ಮಾ.21-ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ವಂತ ಮಗನ ಚುನಾವಣಾ ಸ್ಪರ್ಧೆ ಎಂದು ಭಾವಿಸಿ ಕೆಲಸ ಮಾಡುವ ಭರವಸೆಯನ್ನು ನೀಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ತಮ್ಮ ತಂದೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಶೀರ್ವಾದ ಪಡೆಯಲು ಬಂದಿದ್ದೆ. +ನಮ್ಮ ಚುನಾವಣೆ ಎಂದು ಭಾವಿಸಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಈಗಾಗಲೇ ನನ್ನನ್ನು ಹಾಸನ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ ಎಂದರು.ಹಾಸನ ಕ್ಷೇತ್ರದಲ್ಲಿ ಎರಡೆರಡು ಬಾರಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಪ್ರೀತಂ ಗೌಡ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿಲ್ಲ. ಅವರನ್ನು ಸಹ ಸಮಾಧಾನಪಡಿಸುವ ಕೆಲಸ ಮಾಡುತ್ತೇವೆ. +ದೇಶದಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಅಕ ಸ್ಥಾನ ಗೆಲ್ಲಬೇಕೆಂಬುದು ನಮ್ಮ ಗುರಿಯಾಗಿದೆ. ಆ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂದು ನುಡಿದರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾತನಾಡಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಡಿ.ವೈ.ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ನಮ್ಮ ಉದ್ದೇಶ. +ಯಡಿಯೂರಪ್ಪ ಅವರಿಗೆ ರಾಜ್ಯದಲ್ಲಿ ತಮ್ಮದೇ ಆದ ಶಕ್ತಿ ಇದೆ. ಅವರು ಪ್ರಜ್ವಲ್ ಅವರಿಗೆ ಆರ್ಶೀವಾದ ಮಾಡಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದರು. ಪ್ರೀತಂಗೌಡ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿ ಸುವುದಿಲ್ಲ. ಆ ಸಮಸ್ಯೆಗೆ ಯಡಿಯೂರಪ್ಪ, ವಿಜಯೇಂದ್ರ ಪರಿಹಾರ ಕಂಡುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯದ ನೀರಾವರಿ ಯೋಜನೆಗಳಿಗೆ ದೇವೇಗೌಡರು, ಯಡಿಯೂರಪ್ಪ ನವರ ಕೊಡುಗೆ ಇದೆ. ಮೇಕೆದಾಟು ಯೋಜನೆಯನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು. +ಡಿಎಂಕೆ ಪ್ರಣಾಳಿಕೆ ಬಗ್ಗೆ ಕಾಂಗ್ರೆಸ್ನವರೇ ಹೇಳಬೇಕು. ದೇವೇಗೌಡರನ್ನು ಪ್ರಧಾನಿ ಮಾಡಿದ್ದೇವೆ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. ಅದೇ ಕಾಂಗ್ರೆಸ್ನವರು ಯಾವುದೇ ಆಪಾದನೆ ಇಲ್ಲದಿದ್ದರೂ ಅವರನ್ನು ಯಾಕೆ ತೆಗೆದರು ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶಸ್ತ್ರ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರೇವಣ್ಣ, ಅವರಿಗೆ ಶಿವನ ದಯೆ ಇದೆ. ಅವರ ಆರೋಗ್ಯ ಚೆನ್ನಾಗಿದೆ. ದೇವೇಗೌಡರ ಆಶೀರ್ವಾದ, ಜನರ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_19_1.txt b/eesanje/url_46_19_1.txt new file mode 100644 index 0000000000000000000000000000000000000000..cdfc04d75e6f1e12fa741a8d041e5cd36d5a01a5 --- /dev/null +++ b/eesanje/url_46_19_1.txt @@ -0,0 +1,12 @@ +ನಾಗಮಂಗಲ ಗಲಭೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ, ಪೊಲೀಸರ ವೈಫಲ್ಯ + - , +ಬೆಂಗಳೂರು,ಸೆ.14– ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಿದ ಗಲಭೆಗೆ ಪೊಲೀಸರ ಕರ್ತವ್ಯ ವೈಫಲ್ಯವೇ ಕಾರಣ ಎಂಬುದು ಕೇಳಿಬರುತ್ತಿದೆ. +ಇದೇ ಪಟ್ಟಣದಲ್ಲಿ ಕಳೆದ ವರ್ಷವೂ ಸಹ ಗಣೇಶ ಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ನಡೆದಿತ್ತು. ಅದನ್ನು ಗಮನದಲ್ಲಿಟ್ಟುಕೊಂಡು ಮೆರವಣಿಗೆ ಮಾರ್ಗ ಮತ್ತು ಪೊಲೀಸ್‌‍ ಭದ್ರತೆಯನ್ನು ಸೂಕ್ತ ರೀತಿಯಲ್ಲಿ ಮಾಡಬೇಕಿತ್ತು. ಈ ಬಗ್ಗೆ ಮುನ್ನೆಚ್ಚರಿಕೆ ಮತ್ತು ಸೂಕ್ತ ಪೊಲೀಸ್‌‍ ಸಿಬ್ಬಂದಿ ಭದ್ರತೆ ನಿಯೋಜಿಸಿಕೊಳ್ಳದಿರುವುದೇ ಗಲಭೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. +ಒಟ್ಟಾರೆ ನಾಗಮಂಗಲದ ಗಲಭೆ ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎಂಬುದು ಕಂಡುಬರುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪೆಟ್ರೋಲ್‌ ಬಾಂಬ್‌, ತಲ್ವಾರ್‌ಗಳು ಹಾಗೂ ಭಾರೀ ಪ್ರಮಾಣದ ಕಲ್ಲುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದುದು. +ಇದರ ಜೊತೆಗೆ ಪೆಟ್ರೋಲ್‌ ಬಾಂಬ್‌ ಸಂಗ್ರಹಿಸುವ ಮೂಲಕ ಮೊದಲೇ ಗಲಭೆಗೆ ಬೇಕಾದ ವಸ್ತುಗಳನ್ನು ಗೌಪ್ಯವಾಗಿ ಇಟ್ಟುಕೊಂಡಿದ್ದರ ಜೊತೆಗೆ ಭಾರೀ ಸಂಖ್ಯೆಯಲ್ಲಿ ಯುವಕರು ಮಸೀದಿ ರಸ್ತೆ ಬಳಿ ಸೇರಿದ್ದರು ಎಂಬುದು ತಿಳಿದುಬಂದಿದೆ. +ಇಷ್ಟೆಲ್ಲ ನಡೆದರೂ ಸ್ಥಳೀಯ ಪೊಲೀಸರು ಎಚ್ಚೆತ್ತುಕೊಳ್ಳದೆ ಕರ್ತವ್ಯಲೋಪ ಎಸಗಿರುವ ಹಿನ್ನಲೆಯಲ್ಲಿ ಇಷ್ಟೆಲ್ಲ ಅನಾಹುತ ಸಂಭವಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. +ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪೊಲೀಸರು ಸೂಕ್ತ ರೀತಿಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಿಕೊಂಡು ಪೂರ್ವ ಸಿದ್ದತೆ ಮಾಡಿಕೊಂಡಿದ್ದರೆ ಗಲಭೆಯನ್ನು ತಡೆಗಟ್ಟಬಹುದಾಗಿತ್ತು. +ಆದರೆ ಸ್ಥಳೀಯ ಪೊಲೀಸರು ಮೈ ಮರೆತಿದ್ದಾರೆ. ಬದ್ರಿಕೊಪ್ಪಲು ಗ್ರಾಮದಿಂದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೊರಟು ಮಂಡ್ಯ ವೃತ್ತಕ್ಕೆ ಬಂದಾಗ ಅನ್ಯಕೋಮಿನವರು ಖ್ಯಾತಿ ತೆಗೆದಿದ್ದಾರೆ. ಆ ಸಂದರ್ಭದಲ್ಲಿಯೇ ಯುವಕರಿಗೆ ತಿಳಿ ಹೇಳಿಬಹುದಿತ್ತು. ಆದರೆ ಅಲ್ಲೂ ಸಹ ಪೊಲೀಸರು ಕರ್ತವ್ಯ ಲೋಪವೆಸಗಿರುವುದು ಕಂಡುಬಂದಿದೆ. +ಹಾಗಾಗಿ ಮೆರವಣಿಗೆಯ ದಾರಿಯನ್ನು ಬದಲಿಸಿ ಮತ್ತೆ ಪ್ರಾರ್ಥನಾ ಮಂದಿರ ರಸ್ತೆಯಲ್ಲೇ ಮೆರವಣಿಗೆಗೆ ಅವಕಾಶ ನೀಡಿದ್ದರಿಂದ ಮೆರವಣಿಗೆ ಸಾಗುತ್ತಿದ್ದಂತೆ ವಿವಿಧ ಘೋಷಣೆಗಳು ಮೊಳಗಿದಾಗ ಏಕಾಏಕಿ ಕಲ್ಲು ತೂರಾಟ ನಡೆದು ಗಲಭೆಗೆ ಕಾರಣವಾಗಿದೆ. +ಕಳೆದ ಬಾರಿ ಪ್ರತಿಭಟನೆ ನಡೆದ ಅಂಶವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಗಣೇಶಮೂರ್ತಿ ಮೆರವಣಿಗೆ ಯಾವ ರಸ್ತೆಯಲ್ಲಿ ಹೋಗಬೇಕು, ಎಷ್ಟು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಬೇಕು ಎಂಬುದನ್ನು ಮೊದಲೇ ಸಿದ್ದತೆ ಮಾಡಿಕೊಂಡಿದ್ದರೆ ಗಲಾಟೆ ತಪ್ಪಿಸಬಹುದಿತ್ತು. +ಮತ್ತೊಂದೆಡೆ ಪ್ರತಿಭಟನಾ ಯುವಕರಿಗೆ ಮಂಡ್ಯ ವೃತ್ತದ ಬಳಿ ತಿಳಿ ಹೇಳಿ ಮನವೊಲಿಸಿದ್ದರೆ ಗಲಭೆ ಆಗುತ್ತಿರಲಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಒಟ್ಟಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಟೌನ್‌ ಠಾಣೆ ಇನ್‌ಸ್ಪೆಕ್ಟರ್‌ ಅಶೋಕ್‌ ಕುಮಾರ್‌ ಅವರ ತಲೆದಂಡವಾಗಿದೆ. \ No newline at end of file diff --git a/eesanje/url_46_19_10.txt b/eesanje/url_46_19_10.txt new file mode 100644 index 0000000000000000000000000000000000000000..9258560e53e140a9f298464e040428c043ee52ef --- /dev/null +++ b/eesanje/url_46_19_10.txt @@ -0,0 +1,8 @@ +ಹಿಂಸಾಚಾರದಿಂದ ಬೀದಿಗೆ ಬಿದ್ದ ನಾಗಮಂಗಲದ ವ್ಯಾಪಾರಿಗಳ ಬದುಕು + : , +ಮಂಡ್ಯ,ಸೆ.13-ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಿಂದಾಗಿ ವ್ಯಾಪಾರಿಗಳ ಬದುಕು ಬೀದಿಗೆ ಬಿದ್ದಿದೆ. ನಾಗಮಂಗಲ ಪಟ್ಟಣದಲ್ಲಿನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಈ ಭಾಗದ ಜನರ ನೆಮದಿ ಕಸಿದಂತಾಗಿದೆ. +ವ್ಯಾಪಾರಿ ಮುಜೀಬ್‌ ಎಂಬುವರು ಬ್ಯಾಂಕಿನಿಂದ ಸಾಲ ಪಡೆದು ಪಾತ್ರೆ ಅಂಗಡಿ ಇಟ್ಟುಕೊಂಡಿದ್ದು, 25 ಲಕ್ಷ ಸಾಲದ ಹೊರೆ ಅವರ ಮೇಲಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅಂಗಡಿಗೆ ಹಾನಿಯಾಗಿದೆ. ಬ್ಯಾಂಕ್‌ನ ಸಾಲ ತೀರಿಸುವುದಾದರೂ ಹೇಗೆ ಎಂದು ಅವರು ಕಣ್ಣಿರು ಹಾಕಿದ್ದಾರೆ. +ಸೌಹಾರ್ದದ ಪ್ರತೀಕವಾಗಿರುವ ಗಣೇಶ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಬಂದು ಪೂಜೆ ಸಲ್ಲಿಸುತ್ತಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೂ ಸಹ ಹಣ ಕೊಟ್ಟಿದ್ದೇವೆ. ಎಲ್ಲಾ ಶಾಂತಿಯುತವಾಗಿಯೇ ನೆರವೇರಿತ್ತು. ಆದರೆ ವಿಸರ್ಜನೆ ವೇಳೆ ಕೆಲ ಕಿಡಿಗೇಡಿಗಳ ಕೃತ್ಯದಿಂದಾಗಿ ನಾವೆಲ್ಲ ಬೀದಿಗೆ ಬಂದಿದ್ದೇವೆ ಎಂದು ನೊಂದು ಹಲವು ವ್ಯಾಪಾರಸ್ಥರು ಹೇಳಿದ್ದಾರೆ. +ಮತ್ತೊಬ್ಬರು ಬಟ್ಟೆ ಅಂಗಡಿ ಮಾಲೀಕ ಭೀಮರಾಜ್‌ ಎಂಬುವರೂ ಘಟನೆಗೆ ಬೇಸರ ವ್ಯಕ್ತಪಡಿಸಿ, ಮೊನ್ನೆ ರಾತ್ರಿ ಬಟ್ಟೆ ಶೋ ರೂಮ್‌ಗೆ ಬೆಂಕಿ ಹಚ್ಚುತ್ತಿದ್ದಾರೆಂಬ ವಿಷಯ ತಿಳಿದು ಸ್ಥಳಕ್ಕೆ ಬಂದೆ. ಆ ವೇಳೆ ಕೆಲ ಯುವಕರು ಬಾಟಲಿ, ಲಾಂಗ್‌ ಹಿಡಿದು ದಾಳಿಗೆ ಮುಂದಾದಾಗ ಸ್ಥಳದಲ್ಲಿದ್ದ ಪೊಲೀಸರು ಸಹ ಪ್ರಾಣ ಭಯದಿಂದ ಓಡುತ್ತಿದ್ದರು. ಆ ವೇಳೆ ಪ್ರಾಣ ಉಳಿದರೆ ಸಾಕೆಂದು ನಾನು ಕೂಡ ಓಡಿದೆ. +ನನ್ನ ಬಟ್ಟೆ ಅಂಗಡಿ ಸುಟ್ಟು ಕರಲಾಗಿದೆ. ನನ್ನೊಂದಿಗೆ ಬೈಕ್ ಶೋರೂಮ್‌, ಚಪ್ಪಲಿ ಅಂಗಡಿ, ಟೈರ್‌ ಅಂಗಡಿ, ಟೈಲರ್‌ ಅಂಗಡಿ ಸೇರಿ 20ಕ್ಕೂ ಹೆಚ್ಚು ಮಳಿಗೆಗಳ ವ್ಯಾಪಾರಿಗಳುಉ ಹಾಗೂ ಅಲ್ಲಿ ಕೆಲಸ ಮಾಡುತ್ತಿದ್ದಂತಹ ಕಾರ್ಮಿಕರ ಬದುಕು ಅತಂತ್ರವಾಗಿದೆ ಎಂದು ಕಣ್ಣೀರು ಹಾಕಿದರು. ಅಲ್ಲದೆ ರಸ್ತೆಬದಿ ನಿಲ್ಲಿಸಿದ್ದ 20ಕ್ಕೂ ಹೆಚ್ಚು ಬೈಕ್‌ಗಳು, ಸ್ಕೂಟರ್‌ಗಳು ಸಹ ಬೆಂಕಿಯಿಂದಾಗಿ ಹಾನಿಯಾಗಿವೆ. +ಮದ್ಯದಂಗಡಿ ಬಂದ್:ಮುಂಜಾಗ್ರತ ಕ್ರಮವಾಗಿ ನಾಗಮಂಗಲ ಪಟ್ಟಣ ಹಾಗೂ ಸುತ್ತಮುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ಇಂದು ಮಧ್ಯರಾತ್ರಿ 12 ಗಂಟೆವರೆಗೆ ಮುಚ್ಚಲು ಡಿಸಿ ಅವರು ಆದೇಶ ಹೊರಡಿಸಿದ್ದಾರೆ. \ No newline at end of file diff --git a/eesanje/url_46_19_11.txt b/eesanje/url_46_19_11.txt new file mode 100644 index 0000000000000000000000000000000000000000..15651af5f3ac682b66660b9368eb2ce77e97a4a9 --- /dev/null +++ b/eesanje/url_46_19_11.txt @@ -0,0 +1,4 @@ +ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ + +ಬೆಂಗಳೂರು, ಸೆ.13-ಇಬ್ಬರು ಹಿರಿಯ ಐಪಿಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗುಪ್ತಚರ ವಿಭಾಗದ ಎಡಿಜಿಪಿಯಾಗಿದ್ದ ಕೆ.ವಿ.ಶರತ್‌ಚಂದ್ರ ಅವರನ್ನು ಪೊಲೀಸ್‌‍ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಹೆಚ್ಚುವರಿಯಾಗಿ ಸಂಚಾರ ಹಾಗೂ ರಸ್ತೆ ಸುರಕ್ಷತಾ ಮುಖ್ಯಸ್ಥರಾಗಿಯೂ ಜವಾಬ್ದಾರಿ ನೀಡಲಾಗಿದೆ. +ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ರಾಜ್ಯ ಪೊಲೀಸ್‌‍ ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರ ಜತೆಗೆ ವಾರ್ತಾ ಇಲಾಖೆಯ ಆಯುಕ್ತರ ಜವಾಬ್ದಾರಿಯನ್ನೂ ಕೂಡ ಹೆಚ್ಚುವರಿಯಾಗಿ ನೀಡಲಾಗಿದೆ. ಎಡಿಜಿಪಿ ಅಲೋಕ್‌ಕುಮಾರ್‌ ಅವರನ್ನು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದಿಂದ ಬಿಡುಗಡೆ ಮಾಡಲಾಗಿದೆ. \ No newline at end of file diff --git a/eesanje/url_46_19_12.txt b/eesanje/url_46_19_12.txt new file mode 100644 index 0000000000000000000000000000000000000000..13670cb9c37b32924e8905b4736210ba5e30795e --- /dev/null +++ b/eesanje/url_46_19_12.txt @@ -0,0 +1,12 @@ +ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು + : +ಬೆಂಗಳೂರು,ಸೆ.13-ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಸಚಿವರೊಬ್ಬರೇ ಪ್ರಮುಖ ಆರೋಪಿಯಾಗಿರುವುದರಿಂದ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. +ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರಬಂಗಾರಪ್ಪ , ಶಾಸಕ ರಾದ ಬಿ.ಪಿ.ಹರೀಶ್, ಚಂದ್ರಪ್ಪ, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಬಿ.ವಿ.ನಾಯಕ್, ಮಾಜಿ ಶಾಸಕ ಸೋಮಲಿಂಗಪ್ಪ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಾಖಲೆಗಳ ಸಮೇತ ದೂರು ನೀಡಿದೆ. +ಪ್ರಕರಣದ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿ(ಚಾರ್ಜ್ಶೀಟ್)ಯಲ್ಲಿ ಉಲ್ಲೇಖ ಮಾಡಿದ್ದಾರೆ. +ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಈ ಎರಡೂ ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು. +ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಪ್ರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಸಂವಿಧಾನ ಪರಿಚ್ಛೇಧ 46 ಮತ್ತು 14ರ ಪ್ರಕಾರ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮತ ಚುನಾವಣೆ ನಡೆದಿಲ್ಲ ಎಂಬುದು ಸ್ಪಷ್ಟವಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಂಡಿದ್ದರು. ಇ.ಡಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲೂ ಇದು ಸಾಬೀತಾಗಿರುವುದರಿಂದ ಮಾಜಿ ಸಚಿವ ಹಾಗೂ ಹಾಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡುವಂತೆ ಪತ್ರದಲ್ಲಿ ಕೋರಲಾಗಿದೆ. +ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್.ಎಸ್ ಹಿರೇಹಾಳ್ ಎಂಬುವರು ಮತಗಳ ಎಣಿಕೆ ಮುಗಿಯುವ ಮೊದಲೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ಎಲ್ಲವನ್ನು ಪರಿಗಣಿಸಿ ನಾಗೇಂದ್ರ ಸದಸ್ಯತ್ವ ಅನರ್ಹಗೊಳಿಸುವುದು ಮತ್ತು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದು ಮಾಡುವಂತೆ ಮನವಿ ಮಾಡಲಾಗಿದೆ. +ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅರವಿಂದ ಲಿಂಬಾವಳಿ, ವಾಲೀಕಿ ನಿಗಮದ ಹಗರಣದ ಹಣವನ್ನು ಚುನಾವಣೆಗೆ ಬಳಸಿದ್ದು, ಗ್ಯಾರಂಟಿಗಳಿಗೆ 16 ಸಾವಿರ ಕೋಟಿ ಹಣ ದುರುಪಯೋಗವಾಗಿದೆ ಎಂದು ದೂರು ಕೊಟ್ಟಿದ್ದೇವೆ ಎಂದು ಹೇಳಿದರು. +ಪರಾಜಿತ ಅಭ್ಯರ್ಥಿ ಅರುಣ್ ಹಿರೇಹಾಳ್ ಅವರು ಮತ ಎಣಿಕೆ ನಡೆಯುವ ಮುನ್ನವೇ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅದಕ್ಕೆ ಚುನಾವಣಾ ಆಯೋಗ ಯಾವುದೇ ಸ್ಪಷ್ಟನೆ ಕೊಟ್ಟಿಲ್ಲ ಎಂದರು. +ಈಗಾಗಲೇ ಇ.ಡಿ ಕ್ರಮ ಕೈಗೊಂಡಿದೆ. ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ದದ್ದಲ್ ವಜಾ ಗೊಳಿಸಬೇಕು. ರಾಜ್ಯಪಾಲರು ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ನ್ಯಾಯಾಲಯದಲ್ಲೂ ಇದನ್ನು ಪ್ರಶ್ನಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದರು. \ No newline at end of file diff --git a/eesanje/url_46_19_2.txt b/eesanje/url_46_19_2.txt new file mode 100644 index 0000000000000000000000000000000000000000..44860e8934f46e55ee83d24cd6b834e49e67693b --- /dev/null +++ b/eesanje/url_46_19_2.txt @@ -0,0 +1,9 @@ +ಸಿಂಡಿಕೇಟ್‌ ಸದಸ್ಯರ ನೇಮಕಾತಿಯಲ್ಲಿ ಭ್ರಷ್ಟಾಚಾರ : ಕಾಂಗ್ರೆಸ್‌‍ ಕಾರ್ಯಕರ್ತರ ಆರೋಪ + : +ಬೆಂಗಳೂರು,ಸೆ.14-ವಿಶ್ವವಿದ್ಯಾಲಯ ಗಳಿಗೆ ಸಿಂಡಿಕೇಟ್‌ ಸದಸ್ಯರ ನೇಮಕಾತಿಯ ವೇಳೆ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಗಂಭೀರ ಆರೋಪ ಮಾಡಿ, ಆಕ್ರೋಶ ಹೊರಹಾಕಿದ ಘಟನೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. +ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಪಕ್ಷದ ಕಚೇರಿಗೆ ಆಗಮಿಸಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. ಈ ವೇಳೆ ಚಿಕ್ಕಬಳ್ಳಾಪುರದ ಸಮೀವುಲ್ಲಾ ಎಂಬುವರು ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಿಗೆ ಸಿಂಡಿಕೇಟ್‌ ಸದಸ್ಯರನ್ನು ನೇಮಿಸುವಾಗ ಭ್ರಷ್ಟಾಚಾರ ನಡೆದಿದೆ, ಹಣ ಕೊಟ್ಟವರಿಗೆ ಹಾಗೂ ಬಿಜೆಪಿ ಪಕ್ಷದಲ್ಲಿರುವವರನ್ನು ಸಿಂಡಿಕೇಟ್‌ಗೆ ನೇಮಿಸಲಾಗಿದೆ. ನಾವು ಕಾಂಗ್ರೆಸ್‌‍ ಪಕ್ಷದಲ್ಲಿ 10 ರಿಂದ 20 ವರ್ಷ ದುಡಿದಿದ್ದೇವೆ. ತಳಮಟ್ಟದಿಂದ ಸಂಘಟನೆ ಮಾಡಿದ್ದೇವೆ. ಈಗ ನಿಮಗೆ ಬೇಕಾದವರಿಗೆ ಅವಕಾಶ ಮಾಡಿಕೊಡುವುದಾದರೆ ಹಗಲು-ರಾತ್ರಿ ದುಡಿದ ನಾವು ಎಲ್ಲಿಗೆ ಹೋಗಬೇಕು ಎಂದು ಸಚಿವ ಎಂ.ಸಿ.ಸುಧಾಕರ್‌ ವಿರುದ್ಧ ಆಕ್ರೋಶ ಹೊರಹಾಕಿದರು. +ಇದರಿಂದ ತಬ್ಬಿಬ್ಬಾದ ಸಚಿವ ಡಾ.ಸುಧಾಕರ್‌, ಸಿಂಡಿಕೇಟ್‌ಗೆ ಸದಸ್ಯರ ನೇಮಕಾತಿ ಉನ್ನತ ಶಿಕ್ಷಣ ಸಚಿವಾಲಯದಿಂದಾಗಿಲ್ಲ. ಮುಖ್ಯಮಂತ್ರಿ ಕಚೇರಿಯಿಂದ ನೇಮಕಾತಿಯಾಗಿದೆ ಎಂದು ಸಮಾಧಾನ ಪಡಿಸಿದರು. ಆದರೆ ಸಿಟ್ಟಿಗೆದ್ದ ಸಮೀವುಲ್ಲಾ ಟೇಬಲ್‌ ಕುಟ್ಟಿ ಆಕ್ರೋಶ ಹೊರಹಾಕಿದರು. +ಇದು ಪಕ್ಷದ ಕಚೇರಿಯಲ್ಲಿ ಕಾವೇರಿದ ವಾತಾವರಣ ನಿರ್ಮಿಸಿತ್ತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಎಂ.ಸಿ.ಸುಧಾಕರ್‌, ಸಿಂಡಿಕೇಟ್‌ ಸದಸ್ಯರ ನೇಮಕಾತಿ ವಿಚಾರದಲ್ಲಿ ಕೆಲ ಕಾರ್ಯಕರ್ತರಿಗೆ ಅಸಮಾಧಾನವಿದೆ. ಕೆಲವರು ಬೇಸರ ಹಾಗೂ ನೋವನ್ನು ವ್ಯಕ್ತಪಡಿಸಿದ್ದಾರೆ. ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು. +ನಮ ಇಲಾಖೆಯಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಸಿಂಡಿಕೇಟ್‌ ನೇಮಕಾತಿಯಲ್ಲಿ ಬಿಜೆಪಿ, ಆರ್‌ಎಸ್‌‍ಎಸ್‌‍ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ ಎಂಬುದು ಸರಿಯಲ್ಲ. ಶಿಕ್ಷಣ ಕ್ಷೇತ್ರದಲ್ಲಿರುವವರನ್ನು ಪರಿಗಣಿಸಲಾಗಿದೆ. ಬಳ್ಳಾರಿ ಸೇರಿದಂತೆ ಹಲವು ಭಾಗಗಳಿಂದ ಆರೋಪಗಳು ಬಂದಿವೆ. ಸ್ಪಷ್ಟ ಮಾಹಿತಿ ನೀಡಿದರೆ ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. +ಸಿಂಡಿಕೇಟ್‌ಗಳ ನೇಮಕಾತಿಯಲ್ಲಿ ಈ ಹಿಂದೆ ರಾಜ್ಯಪಾಲರು ಬಿಜೆಪಿಯವರನ್ನು ಪರಿಗಣಿಸಿದ್ದರು. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಮ ಇಲಾಖೆ ಹಾಗೂ ಮುಖ್ಯಮಂತ್ರಿ ಕಚೇರಿ ಮೇಲೆ ಒತ್ತಡವಿತ್ತು. ಮುಖ್ಯಮಂತ್ರಿಗಳ ಕಚೇರಿಗೆ ಮಾಹಿತಿ ನೀಡಿದ್ದೆವು. ಅಳೆದೂತೂಗಿ ನೇಮಕಾತಿಯಾಗಿದೆ ಎಂದು ಉತ್ತರಿಸಿದರು. +ಸಚಿವ ಮಧುಬಂಗಾರಪ್ಪ ಮಾತನಾಡಿ, ಇದು ಕಾರ್ಯಕರ್ತರ ಅಸಮಾಧಾನ ಸಹಜ. ಅದನ್ನು ದೊಡ್ಡದಾಗಿ ಬಿಂಬಿಸುವುದು ಬೇಡ. ನಾನು ಜೆಡಿಎಸ್‌‍ನಿಂದ ಬಂದವನು, ತಮೊಂದಿಗೆ ಕೆಲವರು ಕಾಂಗ್ರೆಸ್‌‍ಗೆ ಸೇರ್ಪಡೆಯಾಗಿದ್ದಾರೆ. ಅವರಿಗೂ ಮಾನ್ಯತೆ ನೀಡಬೇಕಾಗುತ್ತದೆ. ಹಾಗೆಂದ ಮಾತ್ರಕ್ಕೆ ಜೆಡಿಎಸ್‌‍ನವರಿಗೆ ಅವಕಾಶ ನೀಡಲಾಗಿದೆ ಎಂಬುದು ಸರಿಯಲ್ಲ, ಕಾರ್ಯಕರ್ತರ ಅಸಮಾಧಾನವನ್ನು ಪರಿಹರಿಸಲಾಗುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_46_19_3.txt b/eesanje/url_46_19_3.txt new file mode 100644 index 0000000000000000000000000000000000000000..74c46679a94da4f80ea0a5f195bc9b9ab3082dd7 --- /dev/null +++ b/eesanje/url_46_19_3.txt @@ -0,0 +1,11 @@ +ಶಾಸಕ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಡಿ.ಕೆ.ಸುರೇಶ್‌ ಒತ್ತಾಯ + +ಬೆಂಗಳೂರು,ಸೆ.14-ಜಾತಿಜಾತಿಗಳ ನಡುವೆ ಸಂಘರ್ಷ ತಂದಿಡುವ, ಹೆಣ್ಣು ಮಕ್ಕಳ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವ ಹಾಗೂ ಜಾತಿನಿಂದನೆ ಮಾಡಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಿ ಕಾನೂನು ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಸದ ಡಿ.ಕೆ.ಸುರೇಶ್‌ ಒತ್ತಾಯಿಸಿದರು. +ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರ ಮಾತುಗಳನ್ನು ಕೇಳಿದರೆ ಅತ್ಯಂತ ಕೀಳುದರ್ಜೆಯ ಭಾಷೆಗಳು ಬಳಕೆಯಾಗಿವೆ. ಅನಾಗರೀಕರು, ಅವಿದ್ಯಾವಂತರು ಕೂಡ ಈ ರೀತಿಯ ಪದಗಳನ್ನು ಬಳಸಲು ಸಾಧ್ಯವಿಲ್ಲ. 80ರ ದಶಕದ ಹಿಂದೆ ಇಂತಹ ಮಾತು ಬರುತ್ತವೇನೋ, ಆದರೆ ಈ ಕಾಲದಲ್ಲೂ ಅನಾಗರೀಕವಾಗಿ ಮಾತನಾಡಿರುವುದು ಅಕ್ಷಮ್ಯ ಅಪರಾಧ ಎಂದರು. +ಒಕ್ಕಲಿಗ ಸಮುದಾಯದ ಗುತ್ತಿಗೆದಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಲಿತ ಸಮುದಾಯವನ್ನು ಹೀನಾಮಾನ ತೆಗಳಿದ್ದಾರೆ. ಇದರ ಬಗ್ಗೆ ಬಿಜೆಪಿಯ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಬೇಕು. ಎನ್‌ಡಿಎ ನಾಯಕರುಗಳಿಗೆ ಮುನಿರತ್ನ ಅವರ ಮಾತುಗಳು ಕೇಳಿಸುತ್ತಿಲ್ಲವೇ? ಎಂದು ಪ್ರಶ್ನಿಸಿದರು. +ಒಂದೆಡೆ ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡಿದರೆ ಮತ್ತೊಂದೆಡೆ ಮಹಿಳಾ ಕುಲವನ್ನೇ ಹೀಯಾಳಿಸಿದ್ದಾರೆ. ಇದನ್ನು ನೋಡಿಕೊಂಡು, ಕೇಳಿಕೊಂಡು ಎನ್‌ಡಿಎ ನಾಯಕರು ಹೇಗೆ ಸುಮನಿದ್ದಾರೆ. ಮುನಿರತ್ನ ಅವರ ಮಾತುಗಳು ಬಿಜೆಪಿ ಮತ್ತು ಆರ್‌ಎಸ್‌‍ಎಸ್‌‍ನ ಆಚಾರ, ಸಂಸ್ಕೃತಿಗಳಿಗೆ ಸಮತವೇ? ಎಂದು ಪ್ರಶ್ನಿಸಿದರು. +ನನಗನ್ನಿಸಿದ ಪ್ರಕಾರ, ಕೇಂದ್ರ ಸಚಿವ ಕುಮಾರಸ್ವಾಮಿ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ನಮ ಮೈತ್ರಿಕೂಟದ ಶಾಸಕರೊಬ್ಬರು ಈ ರೀತಿ ಅಸಭ್ಯವಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ತಕ್ಷಣವೇ ಒತ್ತಡ ಹೇರಬಹುದು. ಕೇಂದ್ರ ಗೃಹಸಚಿವ ಅಮಿತ್‌ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜೊತೆ ಚರ್ಚೆ ಮಾಡಿ ಮುನಿರತ್ನ ಅವರನ್ನು ಕೂಡಲೇ ಅನರ್ಹಗೊಳಿಸಬಹುದು ಎಂಬ ನಿರೀಕ್ಷೆಯಿದೆ ಎಂದರು. +ನಿನ್ನೆ ಮಧ್ಯಾಹ್ನದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಈವರೆಗೂ ಬಿಜೆಪಿ-ಜೆಡಿಎಸ್‌‍ನ ಯಾರೂ ಪ್ರತಿಕ್ರಿಯೆ ನೀಡಿಲ್ಲ. ದೇಶವೇ ಬೆಚ್ಚಿಬೀಳುವಂತಹ ಭಾಷೆಯನ್ನು ಕೇಳಿದ ಬಳಿಕವೂ ಮೌನಕ್ಕೆ ಶರಣಾಗಿದ್ದಾರೆ ಎಂದರೆ ಇದು ಆಘಾತಕಾರಿ ವಿಚಾರ. ಬಿಜೆಪಿಯವರಿಗೆ ಬಹುಷಃ ಮುನಿರತ್ನ ಅವರ ಹೇಳಿಕೆ ಸಹನೀಯವಾಗಬಹುದು. ಈ ಹಿಂದೆ ಪ್ರಧಾನಮಂತ್ರಿ ನರೇಂದ್ರಮೋದಿಯವರ ವಿಚಾರವಾಗಿಯೂ ಮುನಿರತ್ನ ಇದೇ ರೀತಿ ಕೆಟ್ಟದಾಗಿ ಮಾತನಾಡಿದ್ದರು. ಆದರೂ ಅದನ್ನು ಸಹಿಸಿಕೊಂಡು ಅವರನ್ನು ಸಚಿವರನ್ನಾಗಿ ಮಾಡಿದ್ದಾರೆ. ಆದರೆ ಜೆಡಿಎಸ್‌‍ನವರು ಹೇಗೆ ಸಹಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು. +ಮುನಿರತ್ನ ಅವರ ವಿರುದ್ಧ ಈಗಾಗಲೇ ದೂರು ದಾಖಲಾಗಿದೆ. ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಹೆಚ್ಚಾಗಬೇಕು ಎಂದರೆ ಕೂಡಲೇ ಮುನಿರತ್ನ ಅವರನ್ನು ಬಂಧಿಸಬೇಕು. ವ್ಯಾಪಕ ಭ್ರಷ್ಟಾಚಾರ, ಬಹಿರಂಗ ಹಣ ವಸೂಲಿ ಕಾರಣಗಳಿಗೆ ಕ್ರಮ ಕೈಗೊಳ್ಳುವ ಜೊತೆಗೆ ಮಹಿಳೆಯರಿಗೆ ಅಪಮಾನ ಮಾಡಿರುವುದು, ಜಾತಿ ನಿಂದನೆ, ಜಾತಿ ಸಂಘರ್ಷದ ಕಾರಣಕ್ಕೆ ಸ್ವಯಂಪ್ರೇರಿತವಾದ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್‌, ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. +ರಾಜ್ಯಪಾಲರು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಬೇಕು, ಸಂವಿಧಾನ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದು ನಮದೇ ತಂಡ ಎಂದು ಮುನಿರತ್ನ ಅವರ ಆಪ್ತ ದೀಪಕ್‌ ಹೇಳಿರುವ ಕುರಿತು ಪ್ರಸ್ತಾಪವಾಗಿದೆ.ರೌಡಿ ಸುನಿಲ್‌ನ ಹೆಸರು ಗುತ್ತಿಗೆ ವಿಚಾರದಲ್ಲಿ ಚರ್ಚೆಯಾಗಿದೆ. ಇದರ ಬಗ್ಗೆ ತನಿಖೆಯಾಗಬೇಕು ಎಂದರು. +ನಾಗಮಂಗಲದಲ್ಲಿನ ಗಣೇಶ ವಿಸರ್ಜನೆ ವೇಳೆ ಗಲಭೆಗೆ ಕುಮಾರಸ್ವಾಮಿಯವರೇ ಪ್ರಚೋದನೆ ನೀಡಿದ್ದಾರೆ ಎಂದು ನಾನು ಆರೋಪ ಮಾಡಬಹುದು. ಅವರು ಕಾಂಗ್ರೆಸ್‌‍ ಕಾರಣ ಎಂದು ಹೇಳಿದ್ದಾರೆ. ಅದೇ ರೀತಿ ನಾನು ಕುಮಾರಸ್ವಾಮಿಯವರ ಮೇಲೆ ಆರೋಪ ಮಾಡಬಹುದಲ್ಲವೇ? \ No newline at end of file diff --git a/eesanje/url_46_19_4.txt b/eesanje/url_46_19_4.txt new file mode 100644 index 0000000000000000000000000000000000000000..476f3e6ca9664a080c9e00b61fe648fea596fc19 --- /dev/null +++ b/eesanje/url_46_19_4.txt @@ -0,0 +1,10 @@ +ಬಂಧನದ ಭೀತಿ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ನಾಪತ್ತೆ.. ! + +ಬೆಂಗಳೂರು,ಸೆ.14-ಗುತ್ತಿಗೆದಾರರಿಂದ ಹಣ ವಸೂಲಿ ಯತ್ನ, ಕಿರುಕುಳ, ಪರಿಶಿಷ್ಟ ಜಾತಿ ಹಾಗೂ ಒಕ್ಕಲಿಗ ಸಮುದಾಯದ ನಾಯಕರ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡಿರುವುದೂ ಸೇರಿದಂತೆ ವಿವಿಧ ಆರೋಪಗಳಿಗೆ ಗುರಿಯಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. +ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಅವರ ನಿವಾಸದ ಮೇಲೆ ಕೆಲವು ಸಂಘಟನೆಗಳಿಂದ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕರ ಮನೆ ಪ್ರವೇಶಿಸುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ. +ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಪೊಲೀಸರು ಬಂಧಿಸಬಹುದು ಎಂಬ ಭೀತಿಯಿಂದ ಶುಕ್ರವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. ಆಪ್ತ ಸಹಾಯಕನ ಜೊತೆ ಹೊರಹೋಗಿ ಬರುತ್ತೇನೆಂದು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದ ಮುನಿರತ್ನ ಎಲ್ಲಿದ್ದಾರೆಂಬುದು ಗೊತ್ತಿಲ್ಲ. +ಸದ್ಯ ಅವರು ಬಳಸುವ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಪೊಲೀಸರ ಒಂದು ತಂಡ ಮೊಬೈಲ್ ಲೊಕೇಶನ್ ಪತ್ತೆಹಚ್ಚುವ ಕಾರ್ಯದಲ್ಲಿ ನಿರತವಾಗಿದೆ ಎಂದು ಮೂಲಗಳು ತಿಳಿಸಿವೆ. +ಯಾವುದೇ ಕ್ಷಣದಲ್ಲಿ ಪೊಲೀಸರು ತಮನ್ನು ಬಂಧಿಸಬಹುದು ಎಂಬ ಭೀತಿಯಿಂದಾಗಿಯೇ ಯಾರಿಗೂ ಮಾಹಿತಿ ನೀಡದೇ ತಲೆಮರೆಸಿಕೊಂಡಿದ್ದಾರೆ. ಕುಟುಂಬದ ಸದಸ್ಯರು ಕೂಡ ತಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಹಾರಿಕೆ ಉತ್ತರವನ್ನು ನೀಡುತ್ತಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ವಿವಿಧ ಸೆಕ್ಷನ್ಗಳಡಿ ಎಫ್ಐಆರ್ ದಾಖಲಿಸಿರುವುದರಿಂದ ಅವರಿಗೆ ಬಂಧನದ ಭೀತಿ ಶುರುವಾಗಿದೆ. +ಮೂಲಗಳ ಪ್ರಕಾರ, ಅವರು ವಕೀಲರ ಜೊತೆ ಸಂಪರ್ಕದಲ್ಲಿದ್ದು, ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಶನಿವಾರ, ಭಾನುವಾರ ಮತ್ತು ಸೋಮವಾರ ನ್ಯಾಯಾಲಯಗಳಿಗೆ ರಜೆ ಇರುವುದರಿಂದ ಮಂಗಳವಾರದ ನಂತರವೇ ಮುನಿರತ್ನ ಪರ ವಕೀಲರು ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. +ರಾಜಕೀಯ ಸ್ವರೂಪ :ಇನ್ನು ಮುನಿರತ್ನ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಶಥಾಯಗಥಾಯ ಅವರನ್ನು ಬಂಧಿಸಲು ಆಡಳಿತಾರೂಢ ಕಾಂಗ್ರೆಸ್ನಲ್ಲಿರುವ ಕೆಲವು ಪ್ರಭಾವಿಗಳು ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. +ಬಿಜೆಪಿಯಲ್ಲಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಈಗಲೂ ಆತೀಯ ಸಂಬಂಧವನ್ನು ಇಟ್ಟುಕೊಂಡಿದ್ದಾರೆ. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಜೊತೆ ರಾಜಕೀಯ ಜಿದ್ದು ಇಟ್ಟುಕೊಂಡಿದ್ದಾರೆ. ಈಗ ಈ ಪ್ರಕರಣವೇ ಮುನಿರತ್ನಗೆ ಮುಳುವಾಗಿ ಪರಿಣಮಿಸಿದೆ. \ No newline at end of file diff --git a/eesanje/url_46_19_5.txt b/eesanje/url_46_19_5.txt new file mode 100644 index 0000000000000000000000000000000000000000..8763930b60b4b4d212ce2e2d9e8fbcb91c9d88ae --- /dev/null +++ b/eesanje/url_46_19_5.txt @@ -0,0 +1,9 @@ +ಜೀವಬೆದರಿಕೆ, ಜಾತಿನಿಂದನೆ ಆರೋಪ : ಶಾಸಕ ಮುನಿರತ್ನ ವಿರುದ್ಧ 2 ಎಫ್‌ಐಆರ್‌ ದಾಖಲು +2 +ಬೆಂಗಳೂರು, ಸೆ.14-ಜೀವಬೆದರಿಕೆ, ಜಾತಿನಿಂದನೆ, 30ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಾಗಿವೆ.ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬುವರು ಒಂದು ದೂರು ನೀಡಿದರೆ, ವೇಲುನಾಯ್ಕರ್‌ ಎಂಬುವರು ಮತ್ತೊಂದು ದೂರು ನೀಡಿದ್ದಾರೆ. +ಘನತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್‌ಕುಮಾರ್‌ ಅವರು 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿ ಜೀವಬೆದರಿಕೆ ಹಾಕಿದ್ದಾರೆ, ಅವರುಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ಚೆಲುವರಾಜ್‌ ಅವರು ದೂರು ನೀಡಿದ್ದಾರೆ. +ನಿನ್ನೆ ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರನ್ನು ಭೇಟಿ ಮಾಡಿದ ಚೆಲುವರಾಜ್‌ ಅವರು ದೂರು ನೀಡಿ ತಮಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಅವರು ಕೇಳಿದಷ್ಟು ಹಣ ಕೊಡಲಿಲ್ಲವೆಂಬ ಕಾರಣಕ್ಕೆ ಗುತ್ತಿಗೆ ರದ್ದುಗೊಳಿಸುವ ಬೆದರಿಕೆ ಒಡ್ಡಿ, ಕುಟುಂಬದವರಿಗೆ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಅಳಲುತೋಡಿಕೊಂಡಿದ್ದಾರೆ. +ನಾನು ಈ ಹಿಂದೆ ಪೌರಕಾರ್ಮಿಕನಾಗಿ, ಲಾರಿ ಕ್ಲೀನರ್‌, ಚಾಲಕನಾಗಿ ಕೆಲಸ ಮಾಡಿದ್ದು, ಈಗ ಗುತ್ತಿಗೆದಾರನಾಗಿದ್ದೇನೆ. ಶಾಸಕರು ಹಾಗೂ ಅವರ ಆಪ್ತ ಸಹಾಯಕ ಕುಮಾರ್‌ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿ ಅವಮಾನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಮೂರು ದಿನಗಳ ಹಿಂದೆ ಮುನಿರತ್ನ ಅವರ ಆಪ್ತ ವಸಂತ್‌ ಕುಮಾರ್‌ ಎಂಬಾತ ಪೆಟ್ರೋಲ್‌ ಬಂಕ್‌ವೊಂದರ ಬಳಿ ನನ್ನನ್ನು ಭೇಟಿ ಮಾಡಿ, ನೀನು ಶಾಸಕರಿಗೆ ಹಣ ಕೊಡದಿದ್ದರೆ ರೇಣುಕಾಸ್ವಾಮಿಗೆ ಆದ ಗತಿಯೇ ನಿನಗೂ ಬರಲಿದೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದರು. +ಶಾಸಕರು ಜಾತಿನಿಂದನೆ ಮಾಡಿದ್ದಾರೆ, ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ವೇಲುನಾಯ್ಕರ್‌ ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಎರಡು ದೂರುಗಳನ್ನು ದಾಖಲಿಸಿಕೊಂಡಿರುವ ವೈಯಾಲಿಕಾವಲ್‌ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರಿಗೆ ನೋಟಿಸ್‌‍ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. +ಶಾಸಕ ಮುನಿರತ್ನ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ದಲಿತ ಮತ್ತು ಒಕ್ಕಲಿಗ ಸಮುದಾಯಗಳ ಪದಗಳನ್ನು ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸ್ನಾತಕೋತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟ ಜ್ಞಾನಭಾರತಿ ಪೊಲೀಸ್‌‍ ಠಾಣೆಗೆ ದೂರುನೀಡಿದೆ. +ಈ ದೂರನ್ನು ಸಹ ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ವರ್ಗಾಹಿಸಲಾಗಿದೆ.ಜೀವ ಬೆದರಿಕೆ ಪ್ರಕರಣದಲ್ಲಿ ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯಕುಮಾರ್‌, ಸೆಕ್ಯೂರಿಟಿ ಅಭಿಷೇಕ್‌ ಹಾಗೂ ವಸಂತ್‌ಕುಮಾರ್‌ ಹೆಸರುಗಳನ್ನು ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_46_19_6.txt b/eesanje/url_46_19_6.txt new file mode 100644 index 0000000000000000000000000000000000000000..2b752bb3f3a64697389ee629885c705bab77df51 --- /dev/null +++ b/eesanje/url_46_19_6.txt @@ -0,0 +1,8 @@ +ಬಿಜೆಪಿಯವರು ಸತ್ಯ ಶೋಧನೆ ವರದಿ ನೀಡಿದರೆ ಪೊಲೀಸರಿಗೂ ಅನುಕೂಲವಾಗುತ್ತೆ : ಪರಮೇಶ್ವರ್ ಲೇವಡಿ + ' - +ಬೆಂಗಳೂರು,ಸೆ.14-ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಗಲಭೆ ಪ್ರಕರಣದಲ್ಲಿ ಬಿಜೆಪಿಯವರು ಸತ್ಯ ಶೋಧನೆ ಮಾಡಿ ವರದಿ ನೀಡಿದರೆ ಪೊಲೀಸರಿಗೂ ಸುಲಭವಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾಗಮಂಗಲ ಶಾಂತಿಯುತವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದ್ದು, ಹೆಚ್ಚುವರಿ ಭದ್ರತೆ ಹಾಕಲಾಗಿದೆ. ಶಾಂತಿ ಸಭೆ ಕೂಡ ನಡೆಯುತ್ತಿದೆ ಎಂದು ಹೇಳಿದರು. +ಪೊಲೀಸರು ದಾಖಲಿಸಿರುವ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸುವುದು ಅಪ್ರಸ್ತುತ. ಕಾನೂನು ಪ್ರಕಾರ ಏನು ಮಾಡಬೇಕು ಅದನ್ನು ಮಾಡುತ್ತೇವೆ. ಬೇಕಾದ ರೀತಿಯಲ್ಲೆಲ್ಲಾ ನಡೆದುಕೊಳ್ಳಲು ಆಗುವುದಿಲ್ಲ. ಪ್ರಕರಣ ದಾಖಲಿಸಿರುವುದಕ್ಕೆ ಅನುಮಾನ ಪಡುವುದು ಅರ್ಥಹೀನ ಎಂದರು. +ಬಿಜೆಪಿಯವರು ಸತ್ಯಶೋಧನೆ ಮಾಡಿರುವುದಕ್ಕೆ ಆಕ್ಷೇಪವಿಲ್ಲ. ಅವರು ಸತ್ಯಶೋಧನೆ ಮಾಡಲಿ. ಅವರು ನೀಡುವ ವರದಿಯಲ್ಲಿ ಸತ್ಯ ಇದ್ದರೆ ಗಮನಿಸುತ್ತೇವೆ. ನಮ ಪೊಲೀಸರಿಗೂ ಸುಲಭವಾಗುತ್ತದೆ ಎಂದು ಹೇಳಿದರು. +ಯಾದಗಿರಿಯಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ ಹಿನ್ನೆಲೆಯಲ್ಲಿ ದಲಿತ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಪ್ರಕರಣದ ಕುರಿತು ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ. +ದೂರು ನೀಡಿದ ಕಾರಣಕ್ಕೆ ಬಹಿಷ್ಕಾರ ಹಾಕಲಾಗಿದೆ. ಒಟ್ಟು 500 ಜನ ಇರುವ ಗ್ರಾಮದಲ್ಲಿ ದಲಿತ ಸಮುದಾಯದ ಸಂಖ್ಯೆ ಹೆಚ್ಚಿದೆ. ದಲಿತರ ಮಕ್ಕಳಿಗೆ ಪುಸ್ತಕ ತೆಗೆದುಕೊಳ್ಳಲು ಬಿಟ್ಟಿಲ್ಲ, ಊರಿನಲ್ಲಿ ನೀರು ಬಳಸಲು ಆಗುತ್ತಿಲ್ಲ ಎಂಬೆಲ್ಲಾ ದೂರುಗಳಿವೆ. ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದರು. \ No newline at end of file diff --git a/eesanje/url_46_19_7.txt b/eesanje/url_46_19_7.txt new file mode 100644 index 0000000000000000000000000000000000000000..619a4336563332e00b89774379f42911f6b34498 --- /dev/null +++ b/eesanje/url_46_19_7.txt @@ -0,0 +1,10 @@ +ಆಪರೇಷನ್ ಕಮಲಕ್ಕೊಳಗಾಗಿ ಬಿಜೆಪಿ ಸೇರಿದ್ದ 17 ಶಾಸಕರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಮನವಿ + 17 +ಬೆಂಗಳೂರು,ಸೆ.14-ಆಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರವನ್ನು ಪತನಗೊಳಿಸಿ, ಬಿಜೆಪಿ ಸೇರ್ಪಡೆಯಾಗಿದ್ದ ಆಗಿನ 17 ಮಂದಿ ಶಾಸಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17 ಎ ಅಡಿ ತನಿಖೆಗೆ ಅನುಮತಿ ನೀಡುವಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. +ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ರವರು ಸೆ.11 ರಂದು ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದು, 17 ಮಂದಿ ಶಾಸಕರ ವಿರುದ್ಧ ಹೆಚ್ಚುವರಿ ತನಿಖೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.ವಿಳಂಬವಾಗಿ ದೂರು ನೀಡುತ್ತಿರುವುದಕ್ಕೂ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. 2019 ರಲ್ಲಿ ಕಾಂಗ್ರೆಸ್ನ 14, ಜೆಡಿಎಸ್ನ 3 ಶಾಸಕರು ಮೂಲಪಕ್ಷಗಳನ್ನು ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಇದರಿಂದಾಗಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಮಿಶ್ರ ಸರ್ಕಾರ ಪತನವಾಗಿತ್ತು. +ಆ ಸಂದರ್ಭದಲ್ಲಿ ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದರು. ಕಾಂಗ್ರೆಸ್-ಜೆಡಿಎಸ್ ತೊರೆದು ಹೋಗಿದ್ದ ಬಹುತೇಕರು ವಿಧಾನಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಕೆಲವರು ಪುನರ್ ಆಯ್ಕೆಯಾಗಿದ್ದರು. ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ್ದರು. +ಆಪರೇಷನ್ ಕಮಲಕ್ಕೆ ಒಳಗಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆದಿದ್ದು, ನ್ಯಾಯಾಲಯ ಆದೇಶ ನೀಡಿತ್ತು. ತೀರ್ಪಿನ ಪ್ಯಾರ 27 ರಲ್ಲಿ ಪಕ್ಷಾಂತರ ಶಾಸಕರು ಯಡಿಯೂರಪ್ಪ ಅವರಿಗೆ ಅನುಚಿತ ಅನುಕೂಲ ಕಲ್ಪಿಸಿದ್ದಾರೆ. ಪಕ್ಷಗಳು ನೀಡಿದ ವಿಪ್ ಅನ್ನು ಉಲ್ಲಂಘಿಸಿದ್ದಾರೆ. ಶಾಸಕಾಂಗ ಸಭೆಗೆ ಗೈರುಹಾಜರಾಗಿದ್ದಾರೆ ಎಂಬೆಲ್ಲಾ ಅಂಶಗಳನ್ನು ಪ್ರಸ್ತಾಪಿಸಿತ್ತು. +ಆದರೆ ಶಾಸಕರು ಚುನಾವಣೆಯಲ್ಲಿ ಮರು ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು. ಇದನ್ನು ಪ್ರಶ್ನಿಸಿರುವ ಆದರ್ಶ ಅಯ್ಯರ್ ಅವರು ಕುಕೃತ್ಯದ ಹಿಂದೆ ನಡೆದಿರುವ ಭ್ರಷ್ಟ ಕ್ರಮಗಳ ವಿರುದ್ಧ ತನಿಖೆಯಾಗಬೇಕು. ಇಲ್ಲವಾದರೆ ಕಾನೂನಿನ ಮೂಲ ಉದ್ದೇಶ ಉಳಿಯುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ. +ಕೋವಿಡ್ನಿಂದಾಗಿ ದೂರು ನೀಡಲು ವಿಳಂಬವಾಯಿತು. ಅನಂತರ ಚುನಾವಣೆಗಳು ಎದುರಾದವು. ಹೀಗಾಗಿ 17 ಮಂದಿ ಪಕ್ಷಾಂತರಿಗಳ ವಿರುದ್ಧ ತನಿಖೆಗೆ ಅರ್ಜಿ ಸಲ್ಲಿಸಲು ತಡವಾಗಿದೆ ಎಂದು ಆದರ್ಶ ಅಯ್ಯರ್ ವಿಧಾನಸಭಾಧ್ಯಕ್ಷರಿಗೆ ನೀಡಿರುವ ತಮ ಮನವಿಯಲ್ಲಿ ತಿಳಿಸಿದ್ದಾರೆ. +ಈ ಹಿಂದೆ ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲಾಗಿತ್ತು. ರಾಜ್ಯಪಾಲರ ಅನುಮತಿ ಪಡೆಯುವಂತೆ ಸೂಚನೆ ನೀಡಿ ಸ್ಪೀಕರ್ರವರು ಅರ್ಜಿಯನ್ನು ತಿರಸ್ಕರಿಸಿದ್ದರು. ಈಗ ದೂರು ಅರ್ಜಿ ಸ್ಪೀಕರ್ ಅವರ ಅಂಗಳದಲ್ಲಿದೆ. ಆಪರೇಷನ್ ಕಮಲದಿಂದ ಪಕ್ಷ ತೊರೆದವರ ಪೈಕಿ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿದ್ದರು. ಕಾಂಗ್ರೆಸ್ಸಿಗರ ಜೊತೆ ನಿಕಟ ಬಾಂಧವ್ಯ ಹೊಂದಿದ್ದಾರೆ. +ಡಾ.ಸುಧಾಕರ್ ಸಂಸದರಾಗಿದ್ದಾರೆ. ಉಳಿದಂತೆ ಕೆಲವರು ಶಾಸಕರಾಗಿದ್ದರೆ, ಇನ್ನೂ ಕೆಲವರು ಸೋಲು ಕಂಡಿದ್ದಾರೆ. ಈಗ ಪಕ್ಷಾಂತರಿಗಳಿಗೆ ಕಾನೂನಿನ ಸಂಕಷ್ಟ ಎದುರಾಗುವ ಆತಂಕ ಶುರುವಾಗಿದೆ. \ No newline at end of file diff --git a/eesanje/url_46_19_8.txt b/eesanje/url_46_19_8.txt new file mode 100644 index 0000000000000000000000000000000000000000..d35f7817da58e15ac84261058e87bb204e82b265 --- /dev/null +++ b/eesanje/url_46_19_8.txt @@ -0,0 +1,7 @@ +ಸಿಎಂ ವಿರುದ್ಧ ಮತ್ತೊಂದು ಖಾಸಗಿ ದೂರು ದಾಖಲಿಸಿದ ಎನ್‌.ಆರ್‌.ರಮೇಶ್‌ + +ಬೆಂಗಳೂರು, ಸೆ.13-ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎನ್‌.ಆರ್‌.ರಮೇಶ್‌ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಿಸಿ ದ್ದಾರೆ.ಬಿಬಿಎಂಪಿ ಗೆ ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವಂಚಿಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ರಮೇಶ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ. +2015-2017 ರ ಎರಡು ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ಯ 493 ಬಸ್‌‍ ಷೆಲ್ಟರ್‌ ಗಳನ್ನು ತಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡು, 68 ಕೋಟಿ ರೂ.ಗಳಲ್ಲಿ ನಯಾಪೈಸೆಯಷ್ಟೂ ಜಾಹಿರಾತು ಶುಲ್ಕ ಪಾವತಿಸದ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದಾಖಲೆಗಳ ಸಹಿತ ದೂರುಗಳನ್ನು ದಾಖಲಿಸಲಾಗಿತ್ತು. +ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರುಗಳು ದಾಖಲಾದ ನಂತರ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ ಯ ಅಂದಿನ ವಿಶೇಷ ಆಯುಕ್ತರು 12 ಕೋಟಿ ರೂ.ಮೊತ್ತವನ್ನು ಪಾಲಿಕೆಗೆ ಪಾವತಿಸುವಂತೆ ಅಂದಿನ ಸಿದ್ದರಾಮಯ್ಯ ನೇತತ್ವದ ರಾಜ್ಯ ಸರ್ಕಾರಕ್ಕೆ ಡಿಮ್ಯಾಂಡ್‌ ನೋಟೀಸ್‌‍ ಅನ್ನು ನೀಡಿದ್ದರು. +ಆದರೂ ಸಹ ಸಿದ್ದರಾಮಯ್ಯ ಸರ್ಕಾರ ಈ ನೋಟೀಸ್‌‍ಗೆ ಕವಡೆ ಕಾಸಿನ ಕಿಮತ್ತನ್ನೂ ನೀಡಿರಲಿಲ್ಲ. ಸಿದ್ದರಾಮಯ್ಯ ನವರು ಎರಡನೇ ಬಾರಿ ಮುಖ್ಯಮಂತ್ರಿಗಳಾದ ನಂತರ, ಅವರ ಪ್ರಭಾವ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಲೋಕಾಯುಕ್ತ ಪೋಲೀಸರು, ಸಿದ್ದರಾಮಯ್ಯ ಸರ್ಕಾರವು ಬಿಬಿಎಂಪಿಗೆ 68,14,90,236ಗಳಷ್ಟು ಜಾಹಿರಾತು ಶುಲ್ಕವನ್ನು ವಂಚಿಸಿದ್ದ ಹಗರಣ ಕ್ಕೆ ಸಂಬಂಧಿಸಿದಂತೆ ನಾನು ನೀಡಿದ್ದ ದೂರನ್ನು ಯಾವುದೇ ಸೂಚನೆ ಇಲ್ಲದೆಯೇ ಮುಕ್ತಾಯಗೊಳಿಸಿತ್ತು. +ಈ ಮಹಾ ವಂಚನೆಯ ಹಗರಣಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳ ಸಹಿತವಾಗಿ ದೂರನ್ನು ನೀಡಿದ್ದರೂ ಕೂಡ ಪಕ್ಷಪಾತ ಧೋರಣೆಯಿಂದ ಮತ್ತು ಸಿದ್ದರಾಮಯ್ಯ ನವರ ಒತ್ತಡಕ್ಕೆ ಒಳಗಾಗಿ ಸದರಿ ಪ್ರಕರಣವನ್ನು ಮುಕ್ತಾಯ ಗೊಳಿಸಿರುವ ಲೋಕಾಯುಕ್ತ ಪೋಲೀಸರ ನಡೆಯನ್ನು ವಿರೋಧಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದಲ್ಲಿ ಇಂದು ಖಾಸಗಿ ದೂರನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_19_9.txt b/eesanje/url_46_19_9.txt new file mode 100644 index 0000000000000000000000000000000000000000..2b46edcde9b847bb52dbeefb9173c314e688f324 --- /dev/null +++ b/eesanje/url_46_19_9.txt @@ -0,0 +1,6 @@ +ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ : ಯತ್ನಾಳ್‌ + , : +ಬೆಂಗಳೂರು,ಸೆ.13-ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಪಷ್ಟಪಡಿಸಿದ್ದಾರೆ. +ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಪುನರುಚ್ಚರಿಸಿದರು. +ರಾಜ್ಯಪಾಲರಿಗೆ ದೂರು ನೀಡುವ ವೇಳೆ ಪಕ್ಷದ ಪ್ರಮುಖರು ನಿಮ ಬಳಿ ಇಲ್ಲವಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ನಿಮ ಪ್ರಕಾರ ಪ್ರಭಾರಿಗಳು, ಪ್ರಭಾವಿಗಳು ಎಂದರೆ ಯಾರು? ಸಾಮಾನ್ಯ ಕಾರ್ಯಕರ್ತನಾದರೂ ಕೂಡ ಪ್ರಭಾವಿಯೇ ಎಂದು ಹೇಳಿದರು. +ಪಾದಯಾತ್ರೆಗೆ ತೀರ್ಮಾನವನ್ನು ಹೈಕಮಾಂಡ್‌ ಮಾಡುತ್ತದೆ. ಇದೇ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತದೆ. ನಮ ಜೊತೆಗೆ ಎಲ್ಲರೂ ಬರ್ತಾರೆ ಎಂದರು. ಎಸ್‌‍ಪಿಟಿಎಸ್‌‍ಪಿಯ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಗಳಿಗೆ ಬಳಸಿದ್ದಾರೆ.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಹಂಚಿದ್ದಾರೆ ಇದೊಂದು ಕ್ರಿಮಿನಲ್‌ ಹಾಗೂ ಅಕ್ಷಮ್ಯ ಅಪರಾಧ. ಅದಕ್ಕೆ ನಾವೆಲ್ಲರೂ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_1_1.txt b/eesanje/url_46_1_1.txt new file mode 100644 index 0000000000000000000000000000000000000000..a58f8366b7cb4fa8a0a186782df176b79312bee2 --- /dev/null +++ b/eesanje/url_46_1_1.txt @@ -0,0 +1,8 @@ +ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ + +ಬೆಂಗಳೂರು,ಅ.6-ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ.ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. +ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿತ್ತು. +ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ರಸ್ತೆಗಳು ಕಾಲುವೆಗಳಂತೆ ಕಂಡುಬಂದವು. ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು. +ರಾಜಕಾಲುವೆ, ಮ್ಯಾನ್‌ಹೋಲ್‌ಗಳು ಕೆಲವೆಡೆ ಉಕ್ಕಿ ಹರದಿವೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಭಾರೀ ಮಳೆಯಾಗಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅ.8ರವರೆಗೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು ಕೆಲವೆಡೆ ಚದುರಿದಂತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. +ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. diff --git a/eesanje/url_46_1_10.txt b/eesanje/url_46_1_10.txt new file mode 100644 index 0000000000000000000000000000000000000000..a37f695d35b569deb2e68bebaad6fdd306cb002b --- /dev/null +++ b/eesanje/url_46_1_10.txt @@ -0,0 +1,10 @@ +ಸರ್ವರ ಅಭಿಪ್ರಾಯ ಪಡೆದು ಜಾತಿಗಣತಿ ವರದಿ ಜಾರಿ, ಒಳ ಮೀಸಲಾತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ : ಸಿಎಂ + ' : +ರಾಯಚೂರು,ಅ.5-ಕಾಂತರಾಜು ಅವರ ವರದಿಯನ್ನು ಸ್ವೀಕರಿಸಲಾಗಿದೆ. ಅದನ್ನು ಸಂಪುಟದಲ್ಲಿ ಚರ್ಚಿಸಿ ಎಲ್ಲರ ಅಭಿಪ್ರಾಯ ಶೇಖರಿಸಿ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಿದ್ದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಜಾರಿ ಮಾಡುತ್ತೇವೆ ಎಂದು ನಾವು ಎಲ್ಲಿಯೂ ಹೇಳಿಲ್ಲ. ಚರ್ಚೆ ಮಾಡುತ್ತೇವೆ, ಸಣ್ಣಪುಟ್ಟ ಲೋಪದೋಷಗಳಿದ್ದರೆ ಸರಿಪಡಿಸುತ್ತೇವೆ ಎಂದರು. +ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ನಲ್ಲಿ ತೀರ್ಪು ಪ್ರಕಟವಾದ ಬಳಿಕ ನಾನು ಹೇಳಿಕೆ ನೀಡಿದ್ದೇನೆ. ಒಳಮೀಸಲಾತಿ ಕುರಿತು ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸುವಂತೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಸೂಚನೆ ನೀಡಲಾಗಿದೆ. ಇದು ರಾಷ್ಟ್ರಮಟ್ಟದ ವಿಚಾರವಾಗಿರುವುದರಿಂದ ಹೈಕಮಾಂಡ್ ನಾಯಕರ ಜೊತೆ ಕೂಡ ಚರ್ಚೆ ಮಾಡಬೇಕಿದೆ ಎಂದು ಹೇಳಿದರು. +ಸಚಿವರ ಭೇಟಿ ವಿಶೇಷವಲ್ಲ:ಸಚಿವರು ಭೇಟಿ ಮಾಡಿದಾಕ್ಷಣ ಊಹಾಪೋಹ ಹರಡುವುದು ಸರಿಯಲ್ಲ. ಸಚಿವ ಎಚ್.ಸಿ.ಮಹದೇವಪ್ಪ ಅವರ ಮನೆಯಲ್ಲಿ ಸಚಿವರು ಚರ್ಚೆ ನಡೆಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಸಚಿವ ಎನ್.ಎಸ್.ಬೋಸರಾಜು ಯಾರನ್ನೋ ಭೇಟಿ ಮಾಡಿದರೆ ಅದಕ್ಕೆಲ್ಲಾ ಊಹಾಪೋಹ ಹರಡುವುದು ಸರಿಯಲ್ಲ. ಈ ಹಿಂದೆಯೂ ಈ ರೀತಿಯ ಹಲವು ಸಭೆಗಳಾಗಿವೆ. ಎಲ್ಲದಕ್ಕೂ ವದಂತಿ ಸೃಷ್ಟಿಸಲಾಗುತ್ತಿದೆ. ಸಭೆಗಳ ಹಿಂದೆ ತಮನ್ನು ಪದಚ್ಯುತಗೊಳಿಸುವ ಯಾವುದೇ ಪ್ರಯತ್ನಗಳಿಲ್ಲ ಎಂದರು. +ವಿರೋಧಪಕ್ಷದವರು ತಮ ವಿರುದ್ಧ ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ನಾವು ತಕ್ಕ ಉತ್ತರವನ್ನು ರಾಜಕೀಯವಾಗಿಯೇ ನೀಡಿದ್ದೇವೆ ಎಂದರು. ಜಿ.ಟಿ.ದೇವೇಗೌಡರು ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಸತ್ಯ ಹೇಳಿದ್ದಾರೆ. ಜೆಡಿಎಸ್ನ ಕೋರ್ಕಮಿಟಿಯಲ್ಲಿ ಅಧ್ಯಕ್ಷರಾಗಿದ್ದಾರೆ. ಮುಡಾದಲ್ಲಿ ಸದಸ್ಯರಾಗಿದ್ದು, ಜೆಡಿಎಸ್ನ ಹಿರಿಯ ನಾಯಕರಾಗಿ ಅವರು ಸತ್ಯ ಹೇಳಿದ್ದಾರೆ. ಅದರಲ್ಲಿ ಯಾವುದೇ ತಪ್ಪುಗಳಿಲ್ಲ. ಜಿ.ಟಿ.ದೇವೇಗೌಡ ಕೂಡಾ ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಹೇಳಿರುವುದು ನನಗೆ ಗೊತ್ತಿಲ್ಲ. ನಾನು ಮುಡಾದ ಯಾವುದೇ ಸಭೆಯಲ್ಲಿ ಭಾಗವಹಿಸಿರಲಿಲ್ಲ ಎಂದು ಹೇಳಿದರು. +ಬೆಂಗಳೂರು-ಮೈಸೂರು ನಡುವೆ ಪಾದಯಾತ್ರೆ ನಡೆಸುವುದು ಬೇಡ ಎಂದು ಜೆಡಿಎಸ್-ಬಿಜೆಪಿ ನಾಯಕರಿಗೆ ಜಿ.ಟಿ.ದೇವೇಗೌಡ ಸಲಹೆ ನೀಡಿದ್ದರು ಎಂದರು. +ಆರ್.ಅಶೋಕ್ ರಾಜೀನಾಮೆ ಕೊಟ್ಟುಬಿಡಲಿ :ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಸರ್ಕಾರಿ ಜಮೀನನ್ನು ತೆಗೆದುಕೊಂಡು ಹಗರಣ ಮಾಡಿದ್ದರು. ನ್ಯಾಯಾಲಯದಲ್ಲಿ ತಮ ಪರವಾಗಿ ತೀರ್ಪು ಬಂದಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೂ ನಮ ಹಿರಿಯ ಸಚಿವರು ಹಗರಣವನ್ನು ಬಯಲು ಮಾಡಿದ್ದಾರೆ. ಒಂದು ವೇಳೆ ಅಶೋಕ್ರವರು ರಾಜೀನಾಮೆ ಕೊಡುವುದಾದರೆ ಕೊಟ್ಟುಬಿಡಲಿ ಎಂದು ತಿರುಗೇಟು ನೀಡಿದರು. +ಹಿಂದುಳಿದ ವರ್ಗದವರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ :ನನ್ನೊಬ್ಬನಿಗೆ ಸ್ವಾಭಿಮಾನಕ್ಕೆ ಧಕ್ಕೆಯಾಗಿರುವುದಿಲ್ಲ, ಹಿಂದುಳಿದ ವರ್ಗಗಳ ಎಲ್ಲರ ಸ್ವಾಭಿಮಾನಕ್ಕೂ ಧಕ್ಕೆಯಾಗಿದೆ, ಈ ಹಿನ್ನೆಲೆಯಲ್ಲಿ ಮಾನ್ವಿಯಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲಾಗುತ್ತಿದೆ ಎಂದು ಹೇಳಿದರು.ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಸ್ವಾಭಿಮಾನ ಹೆಚ್ಚಾಗಬೇಕು ಎಂಬ ಕಾರಣಕ್ಕೆ ಸಮಾವೇಶ ನಡೆಸಲಾಗುತ್ತಿದೆ. ಇದರ ಉದ್ದೇಶ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದಲ್ಲ ಎಂದರು. +ತುಂಗಭದ್ರಾ ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 130 ಟಿಎಂಸಿ. ಈಗ 102 ಟಿಎಂಸಿ ಮಾತ್ರ ಸಂಗ್ರಹವಾಗುತ್ತಿದೆ. ಸುಮಾರು 30 ಟಿಎಂಸಿ ನೀರಿನಷ್ಟು ಹೂಳು ತುಂಬಿದೆ. ಅಚ್ಚುಕಟ್ಟು ಪ್ರದೇಶದ ಕೊನೆ ಭಾಗಕ್ಕೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಜಲಾಶಯದ 19ನೇ ಗೇಟ್ ಕೊಚ್ಚಿ ಹೋದಾಗ ಐದೇ ದಿನದಲ್ಲಿ ದುರಸ್ತಿ ಮಾಡಿಸಿದ್ದೇವೆ. ನೀರು ಹೊರಹರಿಯವುದನ್ನು ತಡೆಹಿಡಿದಿದ್ದೇವೆ, ಬಾಗಿನ ಅರ್ಪಿಸಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_1_11.txt b/eesanje/url_46_1_11.txt new file mode 100644 index 0000000000000000000000000000000000000000..5eace3a1d8b6121e27ab5061f6cae654714ae2f1 --- /dev/null +++ b/eesanje/url_46_1_11.txt @@ -0,0 +1,6 @@ +ಜೈಲಲ್ಲಿ ರಾಜಾತಿಥ್ಯ ಪ್ರಕರಣ : ಮಧ್ಯಂತರ ವರದಿ ಆಯುಕ್ತರಿಗೆ ಸಲ್ಲಿಕೆ + +ಬೆಂಗಳೂರು,ಅ.4-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಮತ್ತು ರೌಡಿ ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇನ್ನಿತರರಿಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಕೈಗೊಂಡಿರುವ ಆಗ್ನೇಯ ವಿಭಾಗದ ಡಿಸಿಪಿಯವರು ಮಧ್ಯಂತರ ವರದಿಯನ್ನು ನಗರ ಪೊಲೀಸ್‌‍ ಆಯುಕ್ತರಿಗೆ ನೀಡಿದ್ದಾರೆ. +ಹಣದ ಆಮಿಷಕ್ಕೆ ಒಳಗಾಗಿ ಕಾರಾಗೃಹದ ಕೆಲವು ಅಧಿಕಾರಿ ಹಾಗೂ ಸಿಬ್ಬಂದಿ ಇವರುಗಳಿಗೆ ರಾಜಾತಿಥ್ಯ ನೀಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಸಂದರ್ಭದಲ್ಲಿ ನಟ ದರ್ಶನ್‌ ಕಾರಾಗೃಹದ ಬ್ಯಾರೆಕ್‌ ಮುಂದಿನ ಆವರಣದಲ್ಲಿ ಚೇರಿನಲ್ಲಿ ಕುಳಿತು ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ಇತರರೊಂದಿಗೆ ಕಾಫಿ ಕುಡಿಯುತ್ತಾ ಹರಟೆ ಹೊಡೆಯುತ್ತಿದ್ದ ಫೋಟೋಗಳು ವೈರಲ್ಲಾಗುತ್ತಿದ್ದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿತ್ತು. +ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ಮೂರು ಎಫ್‌ಐಆರ್‌ ಸಹ ದಾಖಲಾದವು. ಈ ಪೈಕಿ ಒಂದು ಪ್ರಕರಣವನ್ನು ಎಸಿಪಿ ಹಾಗೂ ಇನ್ನೆರಡು ಪ್ರಕರಣಗಳ ತನಿಖೆಯನ್ನು ಇನ್‌ಸ್ಪೆಕ್ಟರ್‌ಗಳು ನಡೆಸಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದು, ತನಿಖೆ ಕೈಗೊಂಡು ವರದಿಯನ್ನು ಕ್ರೂಢೀಕರಿಸಿ ಆಗ್ನೇಯ ವಿಭಾಗದ ಡಿಸಿಪಿ ಸಾ.ರಾ.ಫಾತಿಮ ಅವರಿಗೆ ಕೊಟ್ಟಿದ್ದರು. +ಇದೀಗ ಡಿಸಿಪಿಯವರು ಆ ವರದಿಯನ್ನು ಆಯುಕ್ತರಿಗೆ ನೀಡಿದ್ದಾರೆಂದು ತಿಳಿದುಬಂದಿದೆ.ನಂತರ ತನಿಖೆಯನ್ನು ಮುಂದುವರೆಸಿರುವ ಎಸಿಪಿ ಮತ್ತು ಇನ್‌ಸ್ಪೆಕ್ಟರ್‌ಗಳು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸದ್ಯದಲ್ಲೇ ಚಾರ್ಜ್‌ಶೀಟ್‌ ಸಲ್ಲಿಸಲಿದ್ದಾರೆ. \ No newline at end of file diff --git a/eesanje/url_46_1_12.txt b/eesanje/url_46_1_12.txt new file mode 100644 index 0000000000000000000000000000000000000000..6861edbafe55675b7ab2756feab56592f5655a68 --- /dev/null +++ b/eesanje/url_46_1_12.txt @@ -0,0 +1,5 @@ +ಕಳಂಕಿತ ಸಿಎಂ ದಸರಾ ಉದ್ಘಾಟಿಸಿದ್ದು ನಾಡಿಗೆ ಅಪಕೀರ್ತಿ : ಜೆಡಿಎಸ್‌‍ + +ಬೆಂಗಳೂರು,ಅ.4-ಮುಡಾ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐತಿಹಾಸಿಕ ಹಿನ್ನಲೆಯ ಭವ್ಯ ಪರಂಪರೆಯ ಮೈಸೂರು ದಸರಾ ಉದ್ಘಾಟಿಸಿದ್ದು, ನಾಡಿಗೆ ಕಪ್ಪುಚುಕ್ಕೆ ಎಂದು ಜೆಡಿಎಸ್‌‍ ಆರೋಪ ಮಾಡಿದೆ. +ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌‍ ಕಳಂಕಿತ ಮುಖ್ಯಮಂತ್ರಿ ಹಣೆಪಟ್ಟಿ ಹೊತ್ತಿರುವ ನೀವು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ ನಾಡಿಗೆ ಅಪಕೀರ್ತಿ ಎಂದು ಹೇಳಿದೆ. +ಹಲವು ಹಗರಣಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಿದ್ದರಾಮಯ್ಯನವರು ಕರುನಾಡ ಜನರ ಆತಸಾಕ್ಷಿಗೆ ದ್ರೋಹ ಬಗೆಯಬಾರದು. ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ ಎಂದು ಜೆಡಿಎಸ್‌‍ ಪ್ರಶ್ನಿಸಿದೆ. \ No newline at end of file diff --git a/eesanje/url_46_1_2.txt b/eesanje/url_46_1_2.txt new file mode 100644 index 0000000000000000000000000000000000000000..908f76a690050dde2d0f8ba87eaa4569f70e1ee2 --- /dev/null +++ b/eesanje/url_46_1_2.txt @@ -0,0 +1,11 @@ +ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ + +ಬೆಂಗಳೂರು,ಅ.6-ರಾಜ್ಯದ ಜನರಿಗೆ ಪ್ರಚೋದನೆ ನೀಡಿ ತಮಗೆ ಹಾಗೂ ತಮ ಕುಟುಂಬಕ್ಕೆ ಹಾನಿ ಮಾಡುವ ಪ್ರಯತ್ನ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸುವಂತೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಈಗ ಮತ್ತೊಂದು ದೂರನ್ನುಪೊಲೀಸ್‌‍ ಮಹಾ ನಿರ್ದೇಶಕರಿಗೆ ನೀಡಿ ಸಚಿವ ಭೈರತಿ ಸುರೇಶ್‌ ಮತ್ತು ಹಿಂದಿನ ಲೋಕಾಯುಕ್ತ ಎಸ್ಪಿ ವಿರುದ್ಧಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. +ನಿನ್ನೆ ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌‍ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು. +ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್‌ ಅವರಿಗೆ ವಾಟ್‌್ಸಆ್ಯಪ್‌ ಮೂಲಕ ದೂರು ನೀಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ. +ಇಂತಹ ಪ್ರಚೋದನೆಯಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತೊಂದರೆಯಾಗುವ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿದ್ದರು. +ಮುಂದುವರೆದು ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರಿಗೆ ದೂರು ನೀಡಿರುವ ಸ್ನೇಹಮಯಿ ಕೃಷ್ಣ, ತಮಗೆ ದೊರೆತಿರುವ ಮಾಹಿತಿಯ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಪ್ರಭಾವಿ ವ್ಯಕ್ತಿಗಳು ಅಧಿಕಾರದ ಪ್ರಭಾವವನ್ನು ಬಳಸಿಕೊಂಡು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ. +ಈ ಬಗ್ಗೆ ಮೈಸೂರು ಲೋಕಾಯುಕ್ತದ ಅಧಿಕಾರಿಗಳು ಕರ್ನಾಟಕ ಲೋಕಾಯುಕ್ತರಿಗೆ ದಾಖಲೆಗಳೊಂದಿಗೆ ಸಮಗ್ರ ವರದಿ ನೀಡಿ ಸರ್ಚ್‌ ವಾರೆಂಟ್‌ ಪಡೆದುಕೊಂಡು ಜು.26 ರಂದು ಶೋಧ ಕಾರ್ಯಾಚರಣೆ ಮೂಲಕ ದಾಖಲೆಗಳನ್ನು ವಶಪಡಿಸಿಕೊಳ್ಳಲು ತಯಾರಾಗಿದ್ದರು. ಆ ಸಮಯದಲ್ಲಿ ಲೋಕಾಯುಕ್ತ ಪೊಲೀಸ್‌‍ ಇನ್‌ಸ್ಪೆಕ್ಟರ್‌ ಆಗಿದ್ದ ಸುಜಿತ್‌ ಅವರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ಮಾಹಿತಿ ನೀಡಿದ್ದರು. +ಕೂಡಲೇ ಭೈರತಿ ಸುರೇಶ್‌ ಹೆಲಿಕಾಫ್ಟರ್‌ನಲ್ಲಿ ಬಂದು ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅವುಗಳನ್ನು ಆಧರಿಸಿಯೇ ಸಿದ್ದರಾಮಯ್ಯನವರು ಪತ್ರಿಕಾಗೋಷ್ಠಿ ನಡೆಸಿ ವಿವರಣೆ ನೀಡಿದರು. ನಂತರ ಸುಜಿತ್‌ ಅವರನ್ನು ಬೆಂಗಳೂರಿನ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಯಿತು ಎಂದು ದೂರಿದ್ದಾರೆ. +ಒಟ್ಟು 9 ಪ್ರಶ್ನೆಗಳನ್ನು ಕೇಳಿರುವ ಸ್ನೇಹಮಯಿ ಕೃಷ್ಣ ಅಕ್ರಮ ನಿವೇಶನಗಳ ಬಗ್ಗೆ ಮೈಸೂರು ಲೋಕಾಯುಕ್ತ ಪೊಲೀಸರು ದಾಖಲೆಗಳೊಂದಿಗೆ ಸಮಗ್ರ ವರದಿಯನ್ನು ಯಾವ ದಿನ ನೀಡಿದ್ದರು. ಇದನ್ನು ಆಧರಿಸಿ ಶೋಧ ಕಾರ್ಯಾಚರಣೆಗೆ ನಿರ್ಧರಿಸಲಾಗಿತ್ತೇ?, ಸರ್ಚ್‌ ವಾರೆಂಟ್‌ ಪಡೆಯಲಾಗಿತ್ತೇ?, ಯಾವ ದಿನ ನಿಗದಿಯಾಗಿತ್ತು?, ಒಂದು ವೇಳೆ ದಾಳಿ ನಡೆಸಿದ್ದರೆ, ಯಾವೆಲ್ಲಾ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ?, ಜು 1ರಿಂದ ಆ.30 ರ ನಡುವೆ ಸುಜಿತ್‌ ಮತ್ತು ಭೈರತಿ ಸುರೇಶ್‌ರವರ ಮೊಬೈಲ್‌ಗಳ ಕರೆ ಮಾಹಿತಿ ಮತ್ತು ಸ್ಥಳ ವಿವರಗಳನ್ನು ಪಡೆದುಕೊಳ್ಳಬೇಕು. ಒಂದು ವೇಳೆ ನೇರವಾಗಿ ಭೇಟಿಯಾಗಿದ್ದರೆ ಯಾವ ಕಾರಣಕ್ಕೆ ಅವರಿಬ್ಬರ ನಡುವೆ ಪರಸ್ಪರ ಸಂಪರ್ಕವೇರ್ಪಟ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. +ಸಚಿವ ಭೈರತಿ ಸುರೇಶ್‌ ಮೈಸೂರಿಗೆ ಯಾವ ಕಾರಣಕ್ಕಾಗಿ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು?, ಎಷ್ಟು ಕಡತಗಳನ್ನು ತೆಗೆದುಕೊಂಡು ಹೋದರು?, ಇದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಯಾವುದಾದರೂ ಪತ್ರಗಳನ್ನು ನೀಡಿದ್ದಾರೆಯೇ?, ಸುಜಿತ್‌ ಅವರನ್ನು ಯಾವ ಕಾರಣಕ್ಕಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ? ಎಂಬ ಅಂಶಗಳು ತನಿಖಾ ಯೋಗ್ಯವಾಗಿವೆ ಎಂದು ಹೇಳಿರುವ ಸ್ನೇಹಮಯಿ ಕೃಷ್ಣ, ಇ-ಮೇಲ್‌ ಮೂಲಕ ದೂರನ್ನು ಪೊಲೀಸ್‌‍ ಮಹಾ ನಿರ್ದೇಶಕರಿಗೆ ರವಾನಿಸಿದ್ದಾರೆ. \ No newline at end of file diff --git a/eesanje/url_46_1_3.txt b/eesanje/url_46_1_3.txt new file mode 100644 index 0000000000000000000000000000000000000000..21f1076ffae01ee0137156b14882af893b2d55b2 --- /dev/null +++ b/eesanje/url_46_1_3.txt @@ -0,0 +1,7 @@ +ಸಿಎಂಗೆ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ , ವ್ಯಾಪಕ ಟೀಕೆ + +ಕೊಪ್ಪಳ,ಅ.6-ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿ ದರ್ಪ ಪ್ರದರ್ಶಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಯಚೂರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಏರ್‌ಪೋರ್ಟ್‌ನತ್ತ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಹನ ಹಾಗೂ ಬೆಂಗಾವಲು ಪಡೆಗಾಗಿ ಗಂಗಾವತಿಯಲ್ಲಿ ಪೊಲೀಸರು ಇತರ ವಾಹನಗಳನ್ನು ತಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. +ವಾಹನಗಳನ್ನು ತಡೆದು ಸುಮಾರು 20 ನಿಮಿಷಗಳ ಕಾಲ ನಿಲ್ಲಿಸಿದರು ಎಂಬ ಅಸಹನೆಗೆ ಈಡಾದ ಶಾಸಕ ಜನಾರ್ಧನ ರೆಡ್ಡಿಯವರು ತಾವೇ ರೇಂಜ್‌ರೋವರ್‌ ಕಾರನ್ನು ಚಲಾಯಿಸಿಕೊಂಡು ಡಿವೈಡರ್‌ ಅನ್ನು ಹತ್ತಿಸಿ ಏಕಮುಖ ಸಂಚಾರ ಮಾರ್ಗದಲ್ಲಿ ಮುಖ್ಯಮಂತ್ರಿಯವರ ಕಾನ್ವೆಗೆ ಎದುರಾಗಿ ಹೋಗಿದ್ದಾರೆ. +ಇದರಿಂದ ತಬ್ಬಿಬ್ಬಾದ ಬೆಂಗಾವಲು ಪಡೆ ಕೆಲಕ್ಷಣ ತಮ ವಾಹನಗಳನ್ನೇ ಸ್ಥಗಿತಗೊಳಿಸಿದೆ. ಜನಾರ್ಧನ ರೆಡ್ಡಿಯವರ ಕಾರು ಮುಂದಕ್ಕೆ ಹೋದ ಬಳಿಕ ಮುಖ್ಯಮಂತ್ರಯವರು ಪ್ರಯಾಣ ಮುಂದುವರೆಸಿದ್ದಾರೆ. +ಜನಾರ್ಧನ ರೆಡ್ಡಿಯವರು ತಾವು ಶಾಸಕರಾಗಿದ್ದು, ಮುಖ್ಯಮಂತ್ರಿಯವರು ಬಂದಾಕ್ಷಣ 20 ನಿಮಿಷಗಳ ಕಾಲ ಕಾದು ನಿಲ್ಲುವ ಅಗತ್ಯವೇನಿದೆ ಎಂದು ಸಿಟ್ಟಿಗೆದ್ದು ಪೊಲೀಸರ ಜೊತೆ ವಾಗ್ವಾದ ನಡೆಸಿದರು ಎನ್ನಲಾಗಿದೆ. ಈ ಹಂತದಲ್ಲಿ ಅಲ್ಲೇ ಇದ್ದ ಜನಾರ್ಧನ ರೆಡ್ಡಿಯವರ ಕೆಲ ಬೆಂಬಲಿಗರೂ ಕೂಡ ಏಕಮುಖ ಸಂಚಾರದಲ್ಲಿ ಕಾರು ಚಲಾಯಿಸುವಂತೆ ಜನಾರ್ಧನ ರೆಡ್ಡಿಯವರನ್ನು ಪ್ರೋತ್ಸಾಹಿಸಿದರು ಎಂದು ತಿಳಿದುಬಂದಿದೆ. +ಮುಖ್ಯಮಂತ್ರಿಯವರ ಬೆಂಗಾವಲು ಪಡೆಗಳ ವಾಹನಗಳಿಂದಾಗಿ ಸಂಚಾರ ಅಸ್ತವ್ಯಸ್ಥಗೊಳ್ಳುವುದು, ಸಾರ್ವಜನಿಕರು ಇಕ್ಕಟ್ಟಿಗೆ ಸಿಲುಕುವುದು ಮತ್ತೊಮೆ ಚರ್ಚೆಗೆ ಗ್ರಾಸವಾಗಿದ್ದರೆ, ಇತ್ತ ಶಾಸಕರೊಬ್ಬರು ನಿಯಮಗಳನ್ನು ಉಲ್ಲಂಘಿಸಿ ಭದ್ರತೆಯ ವೈಫಲ್ಯಕ್ಕೆ ಕಾರಣವಾಗುವಂತೆ ವಾಹನ ಚಲಾಯಿಸುವುದು, ಅದರಲ್ಲೂ ಏಕಮುಖ ಸಂಚಾರ ಮಾರ್ಗದ ನಿಯಮಗಳನ್ನು ಉಲ್ಲಂಘಿಸುವುದು ಪ್ರಶ್ನಾರ್ಹವಾಗಿದೆ. \ No newline at end of file diff --git a/eesanje/url_46_1_4.txt b/eesanje/url_46_1_4.txt new file mode 100644 index 0000000000000000000000000000000000000000..1d780e2345b56ed2592f1a698612cabaa208dae4 --- /dev/null +++ b/eesanje/url_46_1_4.txt @@ -0,0 +1,6 @@ +ಮೈಸೂರು ದಸರಾದಲ್ಲಿ ಇಂದಿನಿಂದ ಡ್ರೋಣ್ ಕಲರವ +1500 - +ಮೈಸೂರು, ಅ.6-ವಿಶ್ವ ವಿಖ್ಯಾತ ಮೈಸೂರು ದಸರಾದ ವಿಶೇಷ ಆಕರ್ಷಣೀಯವಾಗಿ ಇದೇ ಮೊದಲ ಬಾರಿಗೆ ಇಂದಿನಿಂದ ಬೃಹತ್‌ ಡ್ರೋಣ್‌ ಪ್ರದರ್ಶನ ನಡೆಯಲಿದೆ. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಇಂದಿನಿಂದ 12ರ ವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ 8.15ರ ವರೆಗೆ ಡ್ರೋಣ್‌ ಪ್ರದರ್ಶನ ನಡೆಯಲಿದ್ದು, ಮೊದಲ ಎರಡು ದಿನಗಳು ಉಚಿತ ಪ್ರವೇಶವಿದೆ. +ಎಲ್‌ಇಡಿ ಬಲ್‌್ಪ ಅಳವಡಿಸಿರುವ 1500 ಡ್ರೋಣ್‌ಗಳನ್ನು ಆಕಾಶದೆತ್ತರಕ್ಕೆ ಹಾರಿಸಿ ಮೈಸೂರು ಅರಮನೆ, ಚಾಮುಂಡಿ ಬೆಟ್ಟ, ಜಂಬೂ ಸವಾರಿ ಮೆರವಣಿಗೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳು, ಕಲಾಕೃತಿಗಳನ್ನು ವಿನ್ಯಾಸ ಮಾಡಲಾಗಿದೆ ಎಂದು ದಸರಾ ದೀಪಾಲಂಕಾರ ಉಪಸಮಿತಿ ಅಧ್ಯಕ್ಷ ಸಯ್ಯದ್‌ ಇಕ್ಬಾಲ್‌ ತಿಳಿಸಿದ್ದಾರೆ. +ಈಗಾಗಲೇ ಅರಮನೆ ನಗರಿ ಆಕರ್ಷಕ ವಿದ್ಯುತ್‌ ದೀಪಗಳಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಡ್ರೋಣ್‌ ಪ್ರದರ್ಶನ ಮತ್ತಷ್ಟು ಮೆರುಗು ನೀಡಲಿದ್ದು, ಮೈಸೂರಿನ ಅಂದ ಮತ್ತಷ್ಟು ಹೆಚ್ಚಲಿದೆ. +ಪ್ರತಿಯೊಂದು ರಸ್ತೆ ಹಾಗೂ ವೃತ್ತಗಳಿಗೂ ದೀಪಾಲಂಕಾರ ಮಾಡಲಾಗಿದ್ದು, ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ವಿದ್ಯುತ್‌ ದೀಪಾಲಂಕಾರದ ಜತೆಗೆ ಸೆಸ್ಕ್‌ ವತಿಯಿಂದ ವಿದ್ಯುತ್‌ ರಥ ನಿರ್ಮಿಸಲಾಗಿದ್ದು, ಈ ರಥ ನಗರದ ಹಲವೆಡೆ ಸಂಚರಿಸಲಿದೆ. ಇದರಲ್ಲಿ ವಿದ್ಯುತ್‌ ಸುರಕ್ಷತೆ, ಸೋಲಾರ್‌ ಬಳಕೆ ಹಾಗೂ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. \ No newline at end of file diff --git a/eesanje/url_46_1_5.txt b/eesanje/url_46_1_5.txt new file mode 100644 index 0000000000000000000000000000000000000000..e947a4e3909684725e9bc718ca00aa4bd2708ac9 --- /dev/null +++ b/eesanje/url_46_1_5.txt @@ -0,0 +1,12 @@ +ಶಾಸಕ ಮುನಿರತ್ನಗೆ ಅ.19 ರವರೆಗೆ ಮತ್ತೆ ನ್ಯಾಯಾಂಗ ಬಂಧನ + 19th +ಬೆಂಗಳೂರು,ಅ.5-ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಆರೋಪಕ್ಕೆ ಸಿಲುಕಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.ಇದರೊಂದಿಗೆ ಅವರು ಎರಡನೇ ಬಾರಿಗೆ ಜೈಲು ಪಾಲಾಗಿದ್ದಾರೆ. +ಕಳೆದ 10 ದಿನಗಳಿಂದ ವಿಶೇಷ ತನಿಖಾ ತಂಡ(ಎಸ್‌‍ಐಟಿ) ವಶದಲ್ಲಿದ್ದ ಮುನಿರತ್ನ ಅವರನ್ನು ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್‌‍ಐಟಿ ಪೊಲೀಸರು ಮುನಿರತ್ನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. +ವಿಚಾರಣೆ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌‍ಐಟಿ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಲಯ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿತು. ತಕ್ಷಣವೇ ಮುನಿರತ್ನ ಅವರನ್ನು ಪೊಲೀಸರು ಪರಪ್ಪನ ಆಗ್ರಹಾರ ಜೈಲಿಗೆ ಕರೆದೊಯ್ದರು. +ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ನ್ಯಾಯಾಲಯ ಸೂಚಿ ಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಹಾಕಿ ಎಂದು ವಕೀಲರಿಗೆ ಸೂಚಿಸಿದೆ. +ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. +2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್‌‍ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. +ಘಟನೆ ಸಂಬಂಧ ಆರ್‌.ಆರ್‌. ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್‌ ಕುಮಾರ್‌, ಕಿರಣ್‌‍, ಲೋಹಿತ್‌, ಮಂಜುನಾಥ್‌, ಲೋಕಿ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ಮಾಡಿ ರುವುದಾಗಿ ಡಿವೈಎಸ್ಪಿ ದಿನಕರ್‌ ಶೆಟ್ಟಿ ಸಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು. +ಶಾಸಕ ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್‌‍ ಠಾಣೆ ಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಎರಡನೇ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ಹಾಗೂ ಮಹಜರನ್ನು ಈಗಾಗಲೇ ನಡೆಸಿದೆ. +ದೂರುದಾರರಾಗಿರುವ ಮೊದಲ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ ಕೆಲ ಸ್ಥಳಗಳಲ್ಲಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಎರಡನೇ ಸಂತ್ರಸ್ತೆಯು ಎಚ್‌ಐವಿ ಸೋಂಕಿತೆ ಎಂದು ಹೇಳಿಕೊಂಡಿದ್ದು, ಬಿಬಿಎಂಪಿ ಮಾಜಿ ಸದಸ್ಯೆಯೊಬ್ಬರ ಪತಿಯನ್ನು ಹನಿಟ್ರ್ಯಾಪ್‌ ಮಾಡಲು ಮುನಿರತ್ನ ಅವರು ನನ್ನನ್ನು ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. +ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು. \ No newline at end of file diff --git a/eesanje/url_46_1_6.txt b/eesanje/url_46_1_6.txt new file mode 100644 index 0000000000000000000000000000000000000000..939ffa268869fadb0428df0f3c864993da8dae26 --- /dev/null +++ b/eesanje/url_46_1_6.txt @@ -0,0 +1,10 @@ +ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ ವ್ಯವಸ್ಥೆ + +ಬೆಂಗಳೂರು, ಅ.5-ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌‍ಆರ್‌ಟಿಸಿ ಹೆಚ್ಚುವರಿ ಬಸ್‌‍ಗಳ ವ್ಯವಸ್ಥೆ ಮಾಡಿದೆ. ದಸರಾ ರಜೆ ಗಮನದಲ್ಲಿಟ್ಟುಕೊಂಡು ಅಕ್ಟೋಬರ್‌ 9 ರಿಂದ 12ರ ನಡುವೆ 2000 ಹೆಚ್ಚುವರಿ ಬಸ್‌‍ ಕಾರ್ಯಾಚರಣೆ ನಡೆಸಲಿವೆ ಎಂದು ಕೆಎಸ್‌‍ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. +ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌‍ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದ್ದು, ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಆರಂಭಿಸಿದೆ.ಈ ವಿಶೇಷ ಬಸ್‌‍ಗಳು ನಗರದ ಕೆಂಪೇಗೌಡ ಬಸ್‌‍ ನಿಲ್ದಾಣ, ಮೈಸೂರು ರಸ್ತೆ ಬಸ್‌‍ ನಿಲ್ದಾಣ ಮತ್ತು ಶಾಂತಿನಗರ ಬಿಎಂಟಿಸಿ ಬಸ್‌‍ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ. +ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಹೊಸಪೇಟೆ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಾದ ಹೈದರಾಬಾದ್‌, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚರಾಪಲ್ಲಿ, ಪುದುಕೋಟೆ, ಶಿರಡಿ, ಮಧುರೈ, ಪಣಚಿ, ಪೂನಾ, ಯರ್ನಾಕುಲಂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೇ ಮಾಡಲಾಗಿದೆ. +ಮೈಸೂರು ಮತ್ತು ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್ಡಿ ಕೋಟೆ, ಚಾಮರಾಜನಗರ, ಹುಣಸೂರು, ಕೆಆರ್‌ ನಗರ ಮತ್ತು ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರವಾಸಿ/ಯಾತ್ರಾ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌‍ಗಳನ್ನು ನಿಯೋಜನೆಗೊಳಿಸಿದೆ. +ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಆರ್‌ ಹಿಲ್ಸ್‌‍, ನಂಜನಗೂಡು ಮತ್ತು ಚಾಮುಂಡಿ ಬೆಟ್ಟಗಳಿಗೆ ಭೇಟಿ ನೀಡಲು ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್‌ ಟೂರ್‌ ಸೌಲಭ್ಯವನ್ನು ಕೂಡ ಪ್ರಕಟಿಸಿದೆ. ಈ ಬಸ್‌‍ಗೆ ಗಿರಿದರ್ಶಿನಿ ಎಂದು ಹೆಸರಿಡಲಾಗಿದ್ದು, ಹಿರಿಯರಿಗೆ 400 ಹಾಗೂ ಮಕ್ಕಳಿಗೆ 250 ರೂ. ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ. +ಅದೇ ರೀತಿ ಜಲದರ್ಶಿನಿ ಮಾರ್ಗದ ಬಸ್‌‍ಗಳು ಗೋಲ್ಡನ್‌ ಟೆಂಪಲ್‌ (ಬೈಲಕುಪ್ಪೆ), ದುಬಾರೆ ಅರಣ್ಯ, ನಿಸರ್ಗಧಾಮ, ರಾಜಾ ಸೀಟ್‌‍, ಹಾರಂಗಿ ಜಲಾಶಯ ಮತ್ತು ಕೆಆರ್‌ಎಸ್‌‍ನಲ್ಲಿ ಸಂಚರಿಸಲಿವೆ. ಈ ಬಸ್‌‍ಗಳಲ್ಲಿ ವಯಸ್ಕರಿಗೆ 450 ರೂ., ಮಕ್ಕಳಿಗೆ 300 ರೂ ನಿಗದಿ ಮಾಡಲಾಗಿದೆ. +ದೇವದರ್ಶಿನಿ ಬಸ್‌‍ಗಳು ನಂಜನಗೂಡು, ಬ್ಲ್‌‍, ಮುಡುಕುತೊರೆ, ತಲಕಾಡು, ಸೋಮನಾಥಪುರ ಮತ್ತು ಶ್ರೀರಂಗಪಟ್ಟಣವನ್ನು ಒಳಗೊಂಡಿರುತ್ತವೆ. ಈ ಬಸ್‌‍ ಗಳಲ್ಲಿ ಸಂಚರಿಸುವ ಹಿರಿಯರಿಗೆ 300 ಮತ್ತು ಮಕ್ಕಳಿಗೆ 200 ರೂ. ಟಿಕೆಟ್‌ ದರ ನಿಗದಿ ಮಾಡಲಾಗಿದೆ. +ಈ ಬಸ್ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಿಗೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿದರೆ ಶೇ.5ರಷ್ಟು ಹಾಗೂ ಹೋಗುವ, ಬರುವ ಪ್ರಯಾಣದ ಟಿಕೆಟ್ಅನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ಸಿಗಲಿದೆ. .... ವೆಬ್ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್ ಕಾಯ್ದಿರಿಸಬಹುದಾಗಿದೆ. \ No newline at end of file diff --git a/eesanje/url_46_1_7.txt b/eesanje/url_46_1_7.txt new file mode 100644 index 0000000000000000000000000000000000000000..8e696f9cdc7029e63473775868ec54c4733d9ff9 --- /dev/null +++ b/eesanje/url_46_1_7.txt @@ -0,0 +1,10 @@ +ನನ್ನನ್ನು ಬಂಧಿಸಲು ಸಂಚು ನಡೆದಿದೆ : ಸ್ನೇಹಮಯಿ ಕೃಷ್ಣ ಆರೋಪ + : +ಮೈಸೂರು,ಅ.5-ನ್ಯಾಯಕ್ಕಾಗಿ ಹೋರಾಟ ಮಾಡುವವರ ಧ್ವನಿಯನ್ನು ಹತ್ತಿಕ್ಕಲು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ನನ್ನನ್ನು ಬಂಧಿಸುವ ಸಂಚೂ ಕೂಡ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ಅವ್ಯವಹಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸುತ್ತಿರುವ ತಮ ವಿರುದ್ಧ ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲಿಸಿ ಕಿರುಕುಳ ನೀಡುವ ಪ್ರಯತ್ನಗಳಾಗುತ್ತಿವೆ ಎಂದು ದೂರಿದರು. +ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ತಮ ವಿರುದ್ಧ ಒಂದು ಪ್ರಕರಣ ದಾಖಲಿಸಲಾಗಿದೆ. ಸಮಾಜದಲ್ಲಿ ಹೆಚ್ಚಿನ ಅಪರಾಧ ನಡೆಯಲು ಮತ್ತು ಹೋರಾಟಗಳನ್ನು ಹತ್ತಿಕ್ಕಲು ಪೊಲೀಸ್‌‍ ಇಲಾಖೆ ಮೂಲ ಕಾರಣವಾಗಿದೆ. ಪೊಲೀಸರು ಕಾನೂನು ಪ್ರಕಾರ ಕರ್ತವ್ಯ ನಿರ್ವಹಿಸಿದರೆ ಅರ್ಧ ಭಾಗದಷ್ಟು ಅಪರಾಧಗಳು ಕಡಿಮೆಯಾಗುತ್ತವೆ ಎಂದರು. +ಪೊಲೀಸ್‌‍ ವ್ಯವಸ್ಥೆ ಯಾವ ರೀತಿ ದುರುಪಯೋಗ ವಾಗುತ್ತಿದೆ ಎಂಬುದಕ್ಕೆ ತಮ ಬಳಿ ಸಾಕಷ್ಟು ದಾಖಲೆಗಳಿವೆ. ಯಾರ ವಿರುದ್ಧವಾದರೂ ಸೇಡು ತೀರಿಸಿಕೊಳ್ಳಬೇಕು ಎಂದರೆ ಪೊಲೀಸರಿಗೆ ಲಂಚ ಕೊಟ್ಟು ಒಂದು ಬಿಳಿ ಹಾಳೆಯಲ್ಲಿ ದೂರು ಬರೆದುಕೊಟ್ಟರೆ ಸಾಕು. +ಅದನ್ನು ಇಟ್ಟುಕೊಂಡು ಪೊಲೀಸರು ಸರ್ಕಾರದ ಹಣ ಮತ್ತು ನ್ಯಾಯಾಲಯದ ಅಮೂಲ್ಯ ಸಮಯವನ್ನು ಹಾಳು ಮಾಡಲು ಸರ್ವಾಧಿಕಾರಿಗಳಂತೆ ನಡೆದುಕೊಳ್ಳುತ್ತಾರೆ ಎಂದರು. ಈ ವರ್ಷದ ಜು.18ರಂದು ನಂಜನಗೂಡಿನ ವೃತ್ತದಲ್ಲಿ ತಮಗೆ ಮಾನಹಾನಿಯಾಗುವಂತೆ ನಡೆದುಕೊಂಡಿದ್ದಾರೆ ಎಂದು ನಂಜನಗೂಡು ಪೊಲೀಸ್‌‍ ಠಾಣೆಯಲ್ಲಿ ತಮ ವಿರುದ್ಧ ಸುಳ್ಳು ಪ್ರಕರಣ ದಾಖಲು ಮಾಡಲಾಗಿದೆ. +ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರೆ ದೂರು ಆಧಾರರಹಿತ ಎಂದು ಗೊತ್ತಾಗುತ್ತಿತ್ತು. ಆದರೆ ಅದನ್ನು ಮಾಡಿಲ್ಲ. ಸತ್ಯಾಂಶವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡದೇ ಕಾನೂನನ್ನು ಆಟಿಕೆಯಂತೆ ಬಳಕೆ ಮಾಡಿ ನನ್ನನ್ನು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ಸುಳ್ಳು ದೂರು ನೀಡುವವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧವೂ ಪ್ರಕರಣ ದಾಖಲಿಸುವಂತಾಗಬೇಕು ಎಂದು ಹೇಳಿದರು. +ಈ ನಿಟ್ಟಿನಲ್ಲಿ ನಂಜನಗೂಡು ಪೊಲೀಸರಿಗೆ ಸುದೀರ್ಘ ಪತ್ರ ಬರೆದಿದ್ದೇನೆ. 7 ದಿನಗಳಲ್ಲಿ ನನಗೆ ಉತ್ತರ ನೀಡಬೇಕು. ಇಲ್ಲವಾದರೆ ನಾನು ನ್ಯಾಯಾಲಯದ ಮೆಟ್ಟಿಲೇರಿ ಹೋರಾಟ ನಡೆಸುತ್ತೇನೆ. ಮುಡಾ ಪ್ರಕರಣದಲ್ಲಿ ನಾನು ನ್ಯಾಯಾಲಯದ ಮೊರೆ ಹೋಗುತ್ತಿದ್ದಂತೆ ನನ್ನ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ಅಲ್ಲಿಂದಲೇ ತಮನ್ನು ಹೆದರಿಸುವ ಪ್ರಯತ್ನಗಳು ಆರಂಭವಾಯಿತು. ಬಂಧಿಸಿದರೆ ನ್ಯಾಯಾಲಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಈವರೆಗೂ ಸುಮನಿದ್ದಾರೆ ಎಂದರು. +ಮುಡಾ ಹಗರಣದಲ್ಲಿ ಈಗಾಗಲೇ ಜಮೀನಿನ ಸ್ಥಳ ಪರಿಶೀಲನೆಗಳಾಗಿವೆ. ಇಂದಿನಿಂದ ಮುಡಾದಿಂದ ದಾಖಲೆಗಳ ಸಂಗ್ರಹ ಆರಂಭವಾಗಿದೆ. ಈವರೆಗಿನ ಮಹಜರು ಪ್ರಕರಣಗಳು ತೃಪ್ತಿ ನೀಡಿವೆ. ಮುಂದಿನ ತನಿಖೆಯ ಕುರಿತು ಕಾದುನೋಡುವುದಾಗಿ ಹೇಳಿದರು. \ No newline at end of file diff --git a/eesanje/url_46_1_8.txt b/eesanje/url_46_1_8.txt new file mode 100644 index 0000000000000000000000000000000000000000..5feddc1504fbcd2abdcc8aff326ec5f64b42c1c2 --- /dev/null +++ b/eesanje/url_46_1_8.txt @@ -0,0 +1,9 @@ +ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು : ಸಚಿವ ಕೃಷ್ಣ ಭೈರೇಗೌಡ + +ಬೆಂಗಳೂರು,ಅ.5-ಪಶು ಮತ್ತು ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಕಾಯ್ದಿರಿಸಿದಷ್ಟು ಭೂಮಿ ಹೊರತುಪಡಿಸಿ ಹೆಚ್ಚುವರಿ ಗೋಮಾಳ ಇದ್ದರೆ ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಬಹುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. +ಕಂದಾಯ ಇಲಾಖೆಯ ತಹಸೀಲ್ದಾರ್, ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ಸಮೀಕ್ಷೆಯ ಪ್ರಕಾರ ಎಷ್ಟು ಜಾನುವಾರುಗಳಿವೆ, ಅವುಗಳಿಗೆ ಎಷ್ಟು ಜಮೀನು ಅಗತ್ಯವಿದೆ ಎಂದು ನಿಗದಿಯಾಗಿದ್ದು, ಅದಕ್ಕಿಂತಲೂ ಹೆಚ್ಚುವರಿ ಭೂಮಿ ಇದ್ದರೆ ಅದನ್ನು ಜಿಲ್ಲಾಧಿಕಾರಿಗಳಿಂದ ಗುರುತಿಸಿ ರೈತರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದರು. +ಗೋಮಾಳ ಎಂಬ ಕಾರಣಕ್ಕೆ ರೈತರ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು. ಈ ರೀತಿ ಮಾಡಿದರೆ ನ್ಯಾಯಾಲಯದಲ್ಲಿ ನಾವು ಕಷ್ಟ ಎದುರಿಸಬೇಕಾಗುತ್ತದೆ. ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು ತಮಲ್ಲಿರುವ ಜಾನುವಾರುಗಳ ಸಂಖ್ಯೆಗಳನ್ನು ಪರಿಗಣನೆಗೆ ತೆಗೆದುಕೊಂಡು ಭೂಮಿ ಲಭ್ಯತೆಯನ್ನು ಗುರುತಿಸಬೇಕು ಎಂದು ಹೇಳಿದರು. +ಅರಣ್ಯ ಭೂಮಿ ಅಲ್ಲದೇ ಇರುವ ಜಾಗಗಳನ್ನು ಅರ್ಹ ಅರ್ಜಿದಾರರಿಗೆ ಮಂಜೂರು ಮಾಡಲು ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೋಧನೆ ನಡೆಸಿ ಮರು ಪೋಡಿ ಮಾಡಲು ಕ್ರಮ ಕೈಗೊಳ್ಳಬೇಕು. ಬಗರ್‌ ಹುಕುಂ ಸಮಿತಿಯ ಮುಂದೆ ಅರ್ಜಿ ಪರಿಶೀಲನೆಗೆ ಒಳಪಟ್ಟಾಗ ನಕ್ಷೆ, ಪೋಡಿ ಬೇಕು ಎಂದು ಪರದಾಡಬೇಡಿ. ಮುಂಚಿತವಾಗಿಯೇ ಈ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಸೂಚನೆ ನೀಡಿದರು. +ಅರ್ಜಿಗಳನ್ನು ದೀರ್ಘ ಕಾಲದವರೆಗೂ ಬಾಕಿ ಇಡುವುದು ಸರಿಯಲ್ಲ. ಆನ್‌ಲೈನ್‌ ಸೇವೆಯಡಿ ಕಾಲಮಿತಿಯಲ್ಲೇ ಎಲ್ಲವೂ ಇತ್ಯರ್ಥಗೊಳ್ಳಬೇಕು. ಜನ ಬಂದು ಸಲಾಂ ಹೊಡಿಯಲಿ ಎಂದು ಕಾಯುತ್ತಾ ಕುಳಿತುಕೊಳ್ಳುವುದು ಒಳ್ಳೆಯದಲ್ಲ ಎಂದು ಖಾರವಾಗಿ ಹೇಳಿದರು. +ಬಗರ್‌ ಹುಕುಂ ಸಾಗುವಳಿ ಭೂ ಮಂಜೂರಾತಿಗೆ ಸಮಿತಿಗಳ ಸಭೆ ನಡೆಸಬೇಕು. ಶಾಸಕರ ಜೊತೆ ಚರ್ಚಿಸಿ 15 ದಿನಗಳ ಒಳಗಾಗಿ ಸಮಿತಿಗಳಿಗೆ ಸಭೆ ನಡೆಸಿ ಜನರ ಬೇಡಿಕೆ ಹೆಚ್ಚಿರುವುದನ್ನು ಶಾಸಕರಿಗೆ ಮನವರಿಕೆ ಮಾಡಿಕೊಡಿ ಎಂದು ಕೃಷ್ಣ ಭೈರೇಗೌಡ ಸಲಹೆ ನೀಡಿದರು. +ಕೂಡ್ಲಗಿ ತಾಲ್ಲೂಕಿನಲ್ಲಿ ಹೆಚ್ಚು ಬಡವರಿದ್ದಾರೆ. ಆದರೆ ಅಲ್ಲಿ ಅರ್ಜಿಗಳ ವಿಲೇವಾರಿ ತುಂಬಾ ನಿಧಾನಗತಿಯಲ್ಲಿ ನಡೆಯುತ್ತಿದೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಚಿವರು ಎಚ್ಚರಿಸಿದರು. \ No newline at end of file diff --git a/eesanje/url_46_1_9.txt b/eesanje/url_46_1_9.txt new file mode 100644 index 0000000000000000000000000000000000000000..be683d0323c15d7f9ca946536a4918a37fa1cb3f --- /dev/null +++ b/eesanje/url_46_1_9.txt @@ -0,0 +1,7 @@ +ಉಗ್ರರ ವಿರುದ್ಧ ಕಾರ್ಯಾಚರಣೆ, 5 ರಾಜ್ಯಗಳ 22 ಕಡೆ ಎನ್‌.ಐ.ಎ. ದಾಳಿ + 22 5 - -- +ಬೆಂಗಳೂರು,ಅ.5-ಭಯೋತ್ಪಾದನಾ ಸಂಘಟನೆ ಗಳಿಗೆ ಸಂಪನೂಲ ಒದಗಿಸುತ್ತಿರುವ ಉಗ್ರರ ವಿರುದ್ಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಎನ್‌ಐಎ ಜಮು-ಕಾಶೀರ, ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳ 22 ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಹಲವರನ್ನು ಬಂಧಿಸಿದೆ. +ಭಯೋತ್ಪಾದಕ ಸಂಘಟನೆ ಜೈಶ್‌-ಎ ಮಹಮದ್‌ನೊಂದಿಗೆ ಸಂಪರ್ಕ ಹೊಂದಿರುವ ನಾಲ್ವರು ಶಂಕಿತರನ್ನು ಬಂಧಿಸಲಾಗಿದೆ. ಛತ್ರಪತಿ ಸಂಬಾಜಿ ನಗರದಲ್ಲಿ ಒಬ್ಬನನ್ನು, ಮತ್ತೊಬ್ಬನನ್ನು ಮಾಲೆಂಗಾವ್‌ನಲ್ಲಿ ಮತ್ತು ಜಿಲ್ನಾ ಜಿಲ್ಲೆಯಲ್ಲಿ ಇಬ್ಬರು ಶಂಕಿತರನ್ನು ಎನ್‌ಐಎ ಬಂಧಿಸಿದೆ. +ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಈ ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ಸಮರ ಸಾರಿರುವ ಎನ್‌ಐಎ ದೆಹಲಿ, ಉತ್ತರಪ್ರದೇಶ ಮತ್ತು ಅಸ್ಸಾಂನಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಸಂಘಟನೆಗಳಿಗೆ ಸಂಬಂಧಿಸಿದ ಹಲವರನ್ನು ಬಂಧಿಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. +ಈ ವರ್ಷಾಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ತೀವ್ರ ಕುತೂಹಲ ಪಡೆದುಕೊಂಡಿದೆ. ಬಂಧಿತ ಶಂಕಿತರ ವಿಚಾರಣೆ ತೀವ್ರಗೊಂಡಿದೆ. +ಜಮು-ಕಾಶೀರದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆ ನಡೆದಿದ್ದು, ಅ.8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬೆನ್ನಲ್ಲೇ ರಾಷ್ಟ್ರವಿರೋಧಿ ಚಟುವಟಿಕೆಗಳಿಗೆ ಸಂಪನೂಲ ಒದಗಿಸುವ ಸಂಘಟನೆ ಮೇಲೆ ಎನ್‌ಐಎ ದಾಳಿ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. \ No newline at end of file diff --git a/eesanje/url_46_200_1.txt b/eesanje/url_46_200_1.txt new file mode 100644 index 0000000000000000000000000000000000000000..f1f91bcf86f945d931ff583aaeb725023958e5f5 --- /dev/null +++ b/eesanje/url_46_200_1.txt @@ -0,0 +1,4 @@ +ಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ +ಬೆಂಗಳೂರು,ಮಾ.21-ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮೇ.8 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. +ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು. +ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನೆಲಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. \ No newline at end of file diff --git a/eesanje/url_46_200_10.txt b/eesanje/url_46_200_10.txt new file mode 100644 index 0000000000000000000000000000000000000000..58f72c78155001b66389ef2363df9f25c741bbca --- /dev/null +++ b/eesanje/url_46_200_10.txt @@ -0,0 +1,5 @@ +ಪ್ರಣಾಳಿಕೆಯಲ್ಲಿ “ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ” ಎಂದ ಡಿಎಂಕೆ, ಡಿಕೆಶಿಯವರೇ ಈಗ ನಿಮ್ಮ ನಿಲುವೇನು..? +ಬೆಂಗಳೂರು,ಮಾ.21-ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಡಿ ಮೈತ್ರಿ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದಕ್ಕೆ ಕಾಂಗ್ರೆಸ್‍ನ ನಿಲುವು ಏನು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ. +ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮೈತ್ರಿ ಪಕ್ಷವಾದ ಇಂಡಿ, ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. +ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಈಗ ನಮ್ಮ ನೀರು, ನಮ್ಮ ಹಕ್ಕು ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ. +ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_200_11.txt b/eesanje/url_46_200_11.txt new file mode 100644 index 0000000000000000000000000000000000000000..c0525e7498468b4fa95a91fbe185639c03794a79 --- /dev/null +++ b/eesanje/url_46_200_11.txt @@ -0,0 +1,6 @@ +ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಬಿ.ಎನ್.ಬಚ್ಚೇಗೌಡ ರಾಜೀನಾಮೆ +ಬೆಂಗಳೂರು,ಮಾ.21-ಸಕ್ರೀಯ ರಾಜಕರಾಣದಿಂದ ದೂರ ಉಳಿಯಲು ತೀರ್ಮಾನಿಸಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವರ್ಷದ ಆಗಸ್ಟ್‍ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. +ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂಗೀಕರಿಸಬೇಕೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. +2008ರಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕನಾಗಿ, ಸಚಿವನಾಗಿ ಮತ್ತು 2019ರಲ್ಲಿ ಸಂಸದನಾಗಿ ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಬಿಜೆಪಿ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. +ಚುನಾವಣಾ ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದರು. +2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‍ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಂದಿದ್ದವು. \ No newline at end of file diff --git a/eesanje/url_46_200_12.txt b/eesanje/url_46_200_12.txt new file mode 100644 index 0000000000000000000000000000000000000000..38105ff2514369f139c52467e51e010d17c68341 --- /dev/null +++ b/eesanje/url_46_200_12.txt @@ -0,0 +1,5 @@ +ನಾಳೆ ಮುಕ್ತಾಯಗೊಳ್ಳಲಿವೆ ದ್ವಿತೀಯ ಪಿಯುಸಿ ಪರೀಕ್ಷೆಗಳು +ಬೆಂಗಳೂರು,ಮಾ.21-ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಗೆ ನಾಳೆ ತೆರೆ ಬೀಳಲಿದೆ. 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾ.1 ರಿಂದ ಆರಂಭಗೊಂಡಿದ್ದು, ನಾಳೆ ಮಧ್ಯಾಹ್ನ ಮುಕ್ತಾಯಗೊಳ್ಳಲಿದೆ. ಇದುವರೆಗೂ ಪರೀಕ್ಷೆ ಸುಸೂತ್ರವಾಗಿ ಗೊಂದಲವಿಲ್ಲದೆ ಜರುಗಿದೆ. ಮಾ.1 ರಂದು ಕನ್ನಡ, ಅರೆಬಿಕ್ ಭಾಷಾ ಪರೀಕ್ಷೆ ನಡೆದಿತ್ತು. +ಇಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕøತ ಮತ್ತು ಫ್ರೆಂಚ್ ಭಾಷಾ ಪರೀಕ್ಷೆ ನಡೆದಿದೆ. ನಾಳೆ ಬೆಳಿಗ್ಗೆ ಹಿಂದಿ ಭಾಷಾ ಪರೀಕ್ಷೆ ನಡೆಯಲಿದೆ.ರಾಜ್ಯಾದ್ಯಂತ 6,98,624 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದರು. ರಾಜ್ಯದ 5,912 ಪಿಯುಸಿ ಕಾಲೇಜುಗಳಿಂದ 3,30,644 ಬಾಲಕರು ಹಾಗೂ 3,67,980 ಬಾಲಕಿಯರು ಸೇರಿದ್ದಾರೆ. +ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಪರೀಕ್ಷಾ ಅಕ್ರಮ ತಡೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸಿಸಿ ಟಿವಿ ಕಣ್ಗಾವಲನ್ನು ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿತ್ತು. +ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಈಯರ್ ಫೋನ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಸಿತ್ತು.ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಸೇರಿದಂತೆ ಸಾರಿಗೆ ಸಂಸ್ಥೆಗಳು ಪರೀಕ್ಷೆ ಬರೆಯುವ ದಿನದಂದು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದ್ದವು. \ No newline at end of file diff --git a/eesanje/url_46_200_2.txt b/eesanje/url_46_200_2.txt new file mode 100644 index 0000000000000000000000000000000000000000..8620a41e695c41dc80cb8a99cd0f9320d8b7999e --- /dev/null +++ b/eesanje/url_46_200_2.txt @@ -0,0 +1,12 @@ +ಬಿಜೆಪಿ ಬಿಡಲ್ಲ, ಕಾಂಗ್ರೆಸ್ ಸೇರಲ್ಲ : ಬಿಎಸ್‌ವೈ ವಿರುದ್ಧ ಡಿವಿಎಸ್ ಪರೋಕ್ಷ ವಾಗ್ದಾಳಿ +ಬೆಂಗಳೂರು, ಮಾ.21-ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪಕ್ಷದಲ್ಲಿದ್ದುಕೊಂಡೇ ಶುದ್ದೀಕರಣ ಕೆಲಸ ಮಾಡುವುದಾಗಿ ಸ್ವಪಕ್ಷೀಯರ ವಿರುದ್ಧವೇ ಗುಡುಗಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡ ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿತ್ತು. ಹೀಗಾಗಿ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. +ಇದೀಗ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ಖುದ್ದು ಡಿವಿಎಸ್, ನನಗೆ ಕಾಂಗ್ರೆಸ್ ಸೇರುವಂತೆ ಆ ಪಕ್ಷದ ಪ್ರಮುಖರು ಆಹ್ವಾನ ನೀಡಿದ್ದು ನಿಜ. ಆದರೆ ನಾನು ಬಿಜೆಪಿ ಬಿಟ್ಟು ಯಾವುದೇ ಪಕ್ಷಕ್ಕೂ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನಗೆ ಈ ಬಾರಿ ಟಿಕೆಟ್ ಕೈ ತಪ್ಪಿರುವುದಕ್ಕೆ ನಿಜವಾಗಿಯೂ ಬೇಸರವಾಗಿದೆ. ಟಿಕೆಟ್ ಕೈ ತಪ್ಪಿಸಿದವರು ಯಾರು ಎಂಬುದು ನನಗೂ ಗೊತ್ತು. ನಿಮಗೂ ಗೊತ್ತು ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವಿರುದ್ಧ ವಾಗ್ದಾಳಿ ನಡೆಸಿದರು. +ನಾನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಟಿಕೆಟ್ ಕೈ ತಪ್ಪಿದಾಗ ಮನಸ್ಸಿಗೆ ಬೇಸರವಾಗಿದ್ದು ನಿಜ. ಸೀಟ್ ಹಂಚಿಕೆ ಬಗ್ಗೆ ಗೊಂದಲ ಇದ್ದಾಗ, ನಾನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬದಲಿ ಹೆಸರು ಬಂದಾಗ ಕುತೂಹಲ ಹೆಚ್ಚಾಗಿತ್ತು. ನಾನು ಚುನಾವಣೆ ಯಿಂದ ದೂರ ಸರಿದಾಗ ಎಲ್ಲರೂ ನನ್ನನ್ನು ಮನವೊಲಿಸಿದರು ಎಂದು ಹೇಳಿದರು. +ನನ್ನ ಮುಂದಿನ ನಡಿಗೆ ಕರ್ನಾಟಕದ ಬಿಜೆಪಿ ಶುದ್ಧೀಕರಣವಾಗಬೇಕು. ನನಗೆ ಟಿಕೆಟ್ ಕೈತಪ್ಪಿಸಿದವರು ಮುಂದಿನ ದಿನಗಳಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಕೆಲವರು ಮಾಜಿ ಸಚಿವರು ಪಶ್ಚಾತ್ತಾಪ ಪಡುತ್ತಾರೆ. ಸಹಿಸಿಕೊಳ್ಳುವವನಿಗೆ ತಾಳ್ಮೆ ಇದ್ದರೆ ದುಃಖ ಕೊಟ್ಟವನು ಸತ್ತಂತೆ ಎಂದು ಯಾರ ಹೆಸರನ್ನು ಹೇಳದೆ ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದರು. +ಕಾಂಗ್ರೆಸ್ನವರು ನನಗೆ ಯಾವ ಕ್ಷೇತ್ರ ಬೇಕಾದರೂ ಟಿಕೆಟ್ ಕೊಡುತ್ತೇನೆ ಅಂದರು. ಗೆಲ್ಲಿಸಿಕೊಂಡೇ ಬರುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಪಕ್ಷಕ್ಕೆ ಕೊಡಬೇಕಾದ್ದು ಇದೆ. ಸದಾನಂದಗೌಡ ಕೊಟ್ಟ ಕುದುರೆ ಏರಲಾದವನು ಧೀರನು ಅಲ್ಲ ಶೂರನೂ ಅಲ್ಲ ಅಂತ ವಿಶ್ಲೇಷಣೆ ಆಯಿತು. ನಾನು ನನಗೆ ಕೊಟ್ಟ ಎಲ್ಲಾ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದೀನಿ ಎಂದು ಸಮರ್ಥಿಸಿಕೊಂಡರು. +ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು. ರಾಜ್ಯದಲ್ಲಿ ಬಿಜೆಪಿ ಜನಪರ ಮತ್ತು ಜನ ಒಪ್ಪಿಕೊಳ್ಳುವ ಪಕ್ಷ ಆಗಬೇಕು. ಶೇ.40 ಕಮಿಷನ್ ಆರೋಪ, ಸ್ವಜನಪಕ್ಷಪಾತ ಆರೋಪ ಬರಬಾರದು. ಮೋದಿಯವರು ಹೇಳಿದಂತೆ ಜಾತಿವಾದ, ಕುಟುಂಬವಾದ ಹಾಗೂ ಭ್ರಷ್ಟಾಚಾರ ಇರಬಾರದು. ಹೀಗಾಗಿ, ಪಾರ್ಟಿಯ ಶುದ್ದಿಕರಣಕ್ಕೆ ವೇಗ ಕೊಡುತ್ತೇನೆ ಎಂದರು. +ಸದಾನಂದಗೌಡ ಏನು ಮಾಡಬಹುದು ಎಂಬ ಪ್ರಶ್ನೆ ಹುಟ್ಟಬಹುದು. ಇದು ಸಿಂಗಲ್ ಮ್ಯಾನ್ ಆರ್ಮಿ ಅಂದುಕೊಳ್ಳಬಹುದು. ಪೂಜೆ ಮಾಡುವಾಗ ಶುದ್ಧೀಕರಣ ಮಾಡಲು ಹಲವರು ಇರಬಹುದು. ಆದರೆ ಪುರೋಹಿತರು ಒಬ್ಬರೇ ಇರುತ್ತಾರೆ. ಹಾಗೇ ನಾನು. ಸಮಾನ ಮನಸ್ಕರೊಂದಿಗೆ ಶುದ್ಧೀಕರಣದತ್ತ ಗಮನಹರಿಸುತ್ತೇವೆ ಎಂದು ಹೇಳಿದರು. +ವಿಶೇಷವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಬಂದು ನೀವು ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೆ ಅವರಿಗೆ ಪಾರ್ಟಿ ಬೆಲೆ ಕೊಡಲಿಲ್ಲ. ರಾಜ್ಯದಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ನೀಡಲಿಲ್ಲ . ಸಿ.ಟಿ.ರವಿಯನ್ನು ಸೈಡ್ಲೈನ್ ಮಾಡುವ ವ್ಯವಸ್ಥೆ ನಡೆಯುತ್ತಿದೆ. 142 ಜನರು ಸದಾನಂದಗೌಡರೇ ಸ್ಪರ್ಧೆ ಮಾಡಬೇಕು ಎಂದು ಹೇಳಿದರು. ಆದರೆ ದೆಹಲಿಯಲ್ಲಿ ನನ್ನ ಪರ ನಿಲ್ಲದವರು ನಾಯಕರೇ ಅಲ್ಲ ಎಂದು ಕಿಡಿಕಾರಿದರು. +ಮಾಧ್ಯಮ ವಿಶ್ಲೇಷಕರು ಕೂಡ, ನಾನು ಕೊಟ್ಟ ಕುದುರೆ ಏರದವನು ಎಂದರು. ನಾನು ಕೇಂದ್ರಮಂತ್ರಿಯಾಗಿ ಫೇಲ್ ಅಂದರು. ಸಿಎಂ ಆಗಿದ್ದಾಗ ಸಕಾಲ ಯೋಜನೆ ತಂದೆ. ಕೇಂದ್ರ ಸಚಿವನಾಗಿದ್ದಾಗ ರೆಮಿಡಿಸಿವರ್ ಮೆಡಿಸಿನ್ನ್ನು ರಾಜ್ಯಕ್ಕೆ ನೀಡಿದೆ. ಮಾಧ್ಯಮಗಳ ಚರ್ಚೆಗೆ ನಾನು ಕುಗ್ಗುವುದು ಇಲ್ಲ. ಹಿಗ್ಗುವುದು ಇಲ್ಲ ಎಂದರು. +ನಮ್ಮ ರಾಜ್ಯದಲ್ಲಿ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು ಸ್ವಾರ್ಥಿಗಳಾಗಿದ್ದಾರೆ. ಪಕ್ಷದಲ್ಲಿ ತಾನು ತನ್ನ ಮಕ್ಕಳು, ಕುಟುಂಬ, ತನ್ನ ಚೇಳಾಗಳಿಗೆ, ತನ್ನ ಜಾತಿಯವರಿಗೆ ಮಾತ್ರ ಸೀಮಿತ ಎಂಬಂತಾಗಿದೆ. ಮೋದಿಯವರ ಜನಪರ ಪಕ್ಷವಾಗಬೇಕು. ಕುಟುಂಬ ರಾಜಕಾರಣದಿಂದ ಹೊರಬರಬೇಕು ಎಂದು ಪರೋಕ್ಷವಾಗಿ ಯಡಿಯೂರಪ್ಪನವರ ಕುಟುಂಬ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು. +ನನಗೆ ದುಃಖವಾಗಿದೆ ಬೇಸರವಾಗಿದೆ ನೋವಾಗಿದೆ ಅನ್ನೋದು ಹೌದು. ಸಹಿಸಿಕೊಳ್ಳುವವನಿಗೆ ತಾಳ್ಮೆ ಇದ್ದರೆ ನೋವು ಕೊಡುವವರು ಇದ್ದು ಸತ್ತಂತೆ. ನನ್ನ ವಿರೋಗಳು ಪಕ್ಷ ನನಗೆ ಎಲ್ಲಾ ಕೊಟ್ಟಿದೆ ನಾನು ಪಕ್ಷಕ್ಕೆ ಏನು ಕೊಡ್ತಾರೆ. ಹೀಗೆ ಹಲವು ಟೀಕೆ ಟಿಪ್ಪಣಿಗಳು ಚರ್ಚೆ ಆದ್ವು ಅದ್ರೆ ನಾನು ಅದಕ್ಕೆ ಕುಗ್ಗುವುದಿಲ್ಲ ಎಂದರು. \ No newline at end of file diff --git a/eesanje/url_46_200_3.txt b/eesanje/url_46_200_3.txt new file mode 100644 index 0000000000000000000000000000000000000000..ed32f4a872f0afa8fafcb2935961a4d2d2d3dd20 --- /dev/null +++ b/eesanje/url_46_200_3.txt @@ -0,0 +1,6 @@ +ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ; ಅಮೆರಿಕ +ವಾಷಿಂಗ್ಟನ್,ಮಾ.21-ಅರುಣಾಚಲ ಪ್ರದೇಶವನ್ನು ಭಾರತದ ಭೂಪ್ರದೇಶವೆಂದು ಘೋಷಿಸಿರುವ ಅಮೆರಿಕ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ ಪ್ರಾದೇಶಿಕ ಹಕ್ಕುಗಳನ್ನು ಹತ್ತಿಕ್ಕುವ ಯಾವುದೇ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಪರೋಕ್ಷವಾಗಿ ಚೀನಾಗೆ ಟಾಂಗ್ ನೀಡಿದೆ. +ಎಂದು ಚೀನಾ ಸೇನೆಯು ಪ್ರಧಾನಿ ನರೇಂದ್ರ ಮೋದಿ ಅವರ ನಂತರ ರಾಜ್ಯದ ಮೇಲೆ ತನ್ನ ಹಕ್ಕನ್ನು ಪುನರುಚ್ಚರಿಸಿದ ಕೆಲವು ದಿನಗಳ ನಂತರ ಅಧಿಕೃತ ವಕ್ತಾರರು ಹೇಳಿದ್ದಾರೆ. ಅಲ್ಲಿಗೆ ಭೇಟಿ ನೀಡಿ.ಈ ವಾರದ ಆರಂಭದಲ್ಲಿ, ಚೀನಾದ ರಕ್ಷಣಾ ಸಚಿವಾಲಯದ ವಕ್ತಾರ ಹಿರಿಯ ಕರ್ನಲ್ ಜಾಂಗ್ ಕ್ಸಿಯೋಗಾಂಗ್ ಅವರು ಬೀಜಿಂಗ್ ಅರುಣಾಚಲ ಪ್ರದೇಶ ಎಂದು ಕರೆಯಲ್ಪಡುವದನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ನೀಡಿದ್ದ ಹೇಳಿಕೆ ಬೆನ್ನಲ್ಲೆ ಅಮೆರಿಕದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. +ಮಾರ್ಚ್ 9 ರಂದು, ಪ್ರಧಾನಿ ಮೋದಿ ಅವರು ಅರುಣಾಚಲ ಪ್ರದೇಶದಲ್ಲಿ 13,000 ಅಡಿ ಎತ್ತರದಲ್ಲಿ ನಿರ್ಮಿಸಲಾದ ಸೆಲಾ ಸುರಂಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು, ಇದು ಆಯಕಟ್ಟಿನ ನೆಲೆಗೊಂಡಿರುವ ತವಾಂಗ್ಗೆ ಎಲ್ಲಾ ಹವಾಮಾನದ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಗಡಿ ಪ್ರದೇಶದ ಉದ್ದಕ್ಕೂ ಸೈನಿಕರ ಉತ್ತಮ ಚಲನೆಯನ್ನು ಖಚಿತಪಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. +ತಮ್ಮ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಅವರು, ಅರುಣಾಚಲ ಪ್ರದೇಶವನ್ನು ನಾವು ಭಾರತೀಯ ಪ್ರದೇಶವೆಂದು ಗುರುತಿಸಿದ್ದೇವೆ ಮತ್ತು ಆಕ್ರಮಣಗಳು ಅಥವಾ ಅತಿಕ್ರಮಣಗಳು, ಮಿಲಿಟರಿ ಅಥವಾ ನಾಗರಿಕರ ಮೂಲಕ ಪ್ರಾದೇಶಿಕ ಹಕ್ಕುಗಳನ್ನು ಮುಂದಿಡುವ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದಿದ್ದಾರೆ. +ಅರುಣಾಚಲ ಪ್ರದೇಶದ ಮೇಲೆ ಚೀನಾದ ಪ್ರಾದೇಶಿಕ ಹಕ್ಕುಗಳನ್ನು ಭಾರತವು ಪದೇ ಪದೇ ತಿರಸ್ಕರಿಸುತ್ತದೆ, ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಪ್ರತಿಪಾದಿಸಿದೆ. ಈ ಪ್ರದೇಶಕ್ಕೆ ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಬೀಜಿಂಗ್ನ ಕ್ರಮವನ್ನು ನವದೆಹಲಿ ತಳ್ಳಿಹಾಕಿದೆ. \ No newline at end of file diff --git a/eesanje/url_46_200_4.txt b/eesanje/url_46_200_4.txt new file mode 100644 index 0000000000000000000000000000000000000000..0ae4c7ca5e8eac22cc673a0f980876a767d1994c --- /dev/null +++ b/eesanje/url_46_200_4.txt @@ -0,0 +1,13 @@ +17 ಕಾಂಗ್ರೆಸ್‍ ಅಭ್ಯರ್ಥಿಗಳ ಪಟ್ಟಿ ರೆಡಿ, ಬಾಕಿ 4 ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಮೀಟಿಂಗ್ +ಬೆಂಗಳೂರು,ಮಾ.21-ಕಾಂಗ್ರೆಸ್‍ನ ಕೇಂದ್ರ ಚುನಾವಣಾ ಸಮಿತಿ ಸಭೆ ಅನುಮೋದನೆ ನೀಡಿರುವ 17 ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದ್ದು , ಬಾಕಿ ಇದ್ದ 4 ಕ್ಷೇತ್ರಗಳಿಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬಹುತೇಕ ಅಂಗೀಕಾರ ಪಡೆದಿರುವ 17 ಮಂದಿ ಸಂಭವನೀಯರ ಪಟ್ಟಿಯಲ್ಲಿ ಯುವಕರಿಗೆ, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಜೊತೆಯಲ್ಲಿ ಕುಟುಂಬ ರಾಜಕಾರಣಕ್ಕೂ ಮಣೆ ಹಾಕಲಾಗಿದೆ. +ಲಿಂಗಾಯತ ಸಮುದಾಯದ 5, ಗೌಡ ಸಮುದಾಯಕ್ಕೆ 2, ಕುರುಬ, ಅಲ್ಪಸಂಖ್ಯಾತ, ಬಂಟ, ರೆಡ್ಡಿಸಮುದಾಯಗಳಿಗೆ ತಲಾ 1 ಸ್ಥಾನಗಳನ್ನು ನೀಡಲಾಗಿದೆ.ಎಸ್‍ಸಿ ಮೀಸಲು ಕ್ಷೇತ್ರದಲ್ಲಿ ಚಿತ್ರದುರ್ಗವನ್ನು ಎಡಗೈ ಸಮುದಾಯಕ್ಕೆ ನೀಡಲಾಗಿದೆ. ರಾಯಚೂರು ಎಸ್‍ಟಿ ಮೀಸಲು ಕ್ಷೇತ್ರಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಕುಮಾರ್ ನಾಯಕ್‍ರನ್ನು ಕಣಕ್ಕಿಳಿಸಲಾಗುತ್ತಿದೆ. ಚಿಕ್ಕೋಡಿ ಸಾಮಾನ್ಯ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಅವರ ಹೆಸರು ಆಖೈರುಗೊಳ್ಳುವ ಮೂಲಕ ಪರಿಶಿಷ್ಟ ವರ್ಗದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ. +ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಅವರನ್ನು ಲೆಕ್ಕಿಸದೆ ಸಂಯುಕ್ತ ಪಾಟೀಲ್‍ಗೆ ಮಣೆ ಹಾಕಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಸ್ಪರ್ಧೆ ಅನಿಶ್ಚಿತವಾಗಿರುವುದರಿಂದ ರಾಧಾಕೃಷ್ಣ ದೊಡ್ಡಮನಿ ಅವರ ಹೆಸರು ಆಖೈರುಗೊಂಡಿದೆ. ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್‍ಗೆ ಮಣೆ ಹಾಕಲಾಗಿದೆ. ಉತ್ತರ ಕನ್ನಡ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಹಾಗೂ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅಭ್ಯರ್ಥಿಯಾಗಲಿದ್ದಾರೆ. +ಹಿಂದುಳಿದ ವರ್ಗಗಳಿಗೆ ಈ ಬಾರಿ ಹೆಚ್ಚಿನ ಮಣೆ ಹಾಕದೇ ಇರುವುದು ಕಂಡುಬಂದಿದೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಬೀದರ್, ದಾವಣಗೆರೆ, ಬೆಂಗಳೂರು ದಕ್ಷಿಣ ಕ್ಷೇತ್ರಗಳಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ.ಈಗಾಗಲೇ ಪ್ರಕಟಿಸಲಾಗಿರುವ 7 ಕ್ಷೇತ್ರಗಳ ಪೈಕಿ ಶಿವಮೊಗ್ಗ, ಹಾಸನ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಕುಟುಂಬ ರಾಜಕಾರಣಕ್ಕೆ ಆದ್ಯತೆ ನೀಡಲಾಗಿತ್ತು. +ಎರಡನೇ ಹಂತದಲ್ಲಿನ ಸಂಭವನೀಯರ ಪಟ್ಟಿಯನ್ನು ಕಂಡು ಬಹಳಷ್ಟು ನಿಷ್ಟಾವಂತ ಕಾಂಗ್ರೆಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಲೋಕಸಭಾ ಚುನಾವಣೆಗಾಗಿ ಕೆಲವು ವರ್ಷಗಳಿಂದಲೂ ತಯಾರಿ ನಡೆಸಿದ್ದವರು ಕುಟುಂಬ ರಾಜಕಾರಣದ ಅಬ್ಬರದಲ್ಲಿ ಅವಕಾಶ ವಂಚಿತರಾಗಿದ್ದು, ತಮ್ಮ ಅಸಹನೆಯನ್ನು ಹೊರಹಾಕಿದ್ದಾರೆ.ಎರಡನೇ ಪಟ್ಟಿ ಅಕೃತವಾಗಿ ಪ್ರಕಟಗೊಳ್ಳುತ್ತಿದ್ದಂತೆ ಬಂಡಾಯದ ಕಿಡಿ ಹೊತ್ತಿಕೊಳ್ಳುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿದೆ. +ಕೋಲಾರ, ಚಾಮರಾಜನಗರ, ಬಳ್ಳಾರಿ, ಚಿಕ್ಕಬಳ್ಳಾಪುರ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿದ್ದು, ದೆಹಲಿಯಲ್ಲಿ ಹಗ್ಗಜಗ್ಗಾಟ, ಬಲಾಬಲ ಪ್ರದರ್ಶನ ಮುಂದುವರೆದಿದೆ.ಕೋಲಾರ ಮೀಸಲು ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್‍ಗೆ ತಲೆನೋವಾಗಿ ಪರಿಣಮಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಮ್ಮ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂದು ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. +ಕುಟುಂಬಕ್ಕೆ ಅವಕಾಶ ನೀಡಬಾರದು ಎಂದು ಮಾಜಿ ಸಚಿವ ರಮೇಶ್‍ಕುಮಾರ್, ಹಾಲಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಕೊತ್ತನೂರು ಮಂಜುನಾಥ್ ಸೇರಿದಂತೆ ಅನೇಕರು ದೆಹಲಿಗೆ ಹೋಗಿ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್ ವರಿಷ್ಠರು ಕೆ.ಎಚ್.ಮುನಿಯಪ್ಪ ಅವರಿಗೆ ಖುದ್ದು ನೀವು ಚುನಾವಣೆಗೆ ನಿಲ್ಲುವುದಾದರೆ ಯಾವುದೇ ತಕರಾರಿಲ್ಲ. +ಎಲ್ಲರಿಗೂ ಸಮಾಧಾನಪಡಿಸಿ ಅವಕಾಶ ಮಾಡಿಕೊಡುತ್ತೇವೆ. ಆದರೆ ಕುಟುಂಬಕ್ಕೆ ಈ ಬಾರಿ ಅವಕಾಶ ನೀಡಲಾಗುವುದಿಲ್ಲ. ನಿಮ್ಮ ಕುಟುಂಬದಿಂದ ನೀವು ಸಚಿವರಾಗಿದ್ದೀರಿ, ಮಗಳು ಶಾಸಕರಾಗಿದ್ದು, ನಿಗಮದಲ್ಲಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಪಸ್ವರ ತೆಗೆಯದೆ ಪಕ್ಷಕ್ಕಾಗಿ ಕೆಲಸ ಮಾಡಿ ಎಂದು ಸಲಹೆ ನೀಡಿದೆ ಎನ್ನಲಾಗಿದೆ. +ರಮೇಶ್‍ಕುಮಾರ್‍ರವರ ತಂಡ ಮುನಿಯಪ್ಪ ಅವರ ಕುಟುಂಬ ಹೊರತುಪಡಿಸಿ ಬೇರೆ ಯಾರಿಗೇ ಟಿಕೆಟ್ ಕೊಟ್ಟರೂ ಕೆಲಸ ಮಾಡುತ್ತೇವೆ ಎಂದು ಹೇಳಿದ್ದು, ಜಿಲ್ಲಾ ರಾಜಕಾರಣದಲ್ಲಿ ಬಾಕಿ ಇರುವ ಬಿಕ್ಕಟ್ಟನ್ನು ಬಹಿರಂಗಗೊಳಿಸಿದೆ.ಚಾಮರಾಜನಗರದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗಿದೆ. ನನ್ನ ವಿಷಯ ಬಂದಾಗ ಮಾತ್ರ ಮಲತಾಯಿ ಧೋರಣೆ ಏಕೆ ಎಂದು ಹೈಕಮಾಂಡ್ ಮುಂದೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ಪುತ್ರನಿಗೆ ಅವಕಾಶ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಆದ್ಯತೆ ನೀಡಿದ್ದಾರೆ. ಹೀಗಾಗಿ ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಜೆಡಿಎಸ್, ಬಿಜೆಪಿ ಮೈತ್ರಿಯನ್ನು ಎದುರಿಸಬೇಕಾದರೆ ಸಚಿವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಕುಟುಂಬ ರಾಜಕಾರಣದಿಂದ ಹೊರಬರಬೇಕು ಎಂದು ತಿಳಿಹೇಳಿದ್ದಾರೆ ಎನ್ನಲಾಗಿದೆ. +ಬಳ್ಳಾರಿ ಕ್ಷೇತ್ರದಲ್ಲಿ ಶಾಸಕ ತುಕಾರಾಂ ತಮ್ಮ ಪುತ್ರಿಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿರುವುದರಿಂದ ವಿ.ಎಸ್.ಉಗ್ರಪ್ಪ ಅವರ ಹೆಸರು ಕೊನೆಕ್ಷಣದಲ್ಲಿ ತಡೆಹಿಡಿಯಲ್ಪಟ್ಟಿದೆ.ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ತಮಗೆ ಅವಕಾಶ ನಿರಾಕರಿಸಿದರೆ ತಾವು ಸುಮ್ಮನಿರುವುದಿಲ್ಲ ಎಂದು ವೀರಪ್ಪ ಮೊಯ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. +ಹೀಗಾಗಿ ಯುವ ನಾಯಕ ರಕ್ಷಾ ರಾಮಯ್ಯ ಹೆಸರು ಅಂತಿಮ ಹಂತದಲ್ಲಿ ನೆನೆಗುದಿಗೆ ಬಿದ್ದಿದೆ. ಈ ನಾಲ್ಕೂ ಕ್ಷೇತ್ರಗಳಿಗೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿ ನಂತರ ಅಭ್ಯರ್ಥಿಗಳನ್ನು ಆಖೈರುಗೊಳಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ.ಕ್ಷೇತ್ರ – ಸಂಭವನೀಯ ಅಭ್ಯರ್ಥಿಚಿತ್ರದುರ್ಗ – ಚಂದ್ರಪ್ಪರಾಯಚೂರು – ಕುಮಾರ್ ನಾಯಕ್ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿಬಾಗಲಕೋಟೆ – ಸಂಯುಕ್ತ ಪಾಟೀಲ್ಧಾರವಾಡ – ವಿನೋದ್ ಅಸೋಟಿಕೊಪ್ಪಳ – ರಾಜಶೇಖರ್ ಹಿಟ್ನಾಳ್ಕಲಬುರಗಿ – ರಾಧಾಕೃಷ್ಣ ದೊಡ್ಡಮನಿಬೀದರ್ – ಸಾಗರ್ ಖಂಡ್ರೆಮೈಸೂರು – ಎಂ.ಲಕ್ಷ್ಮಣ್ದಕ್ಷಿಣ ಕನ್ನಡ – ಪದ್ಮರಾಜ್ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿಬೆಂಗಳೂರು ಕೇಂದ್ರ – ಮನ್ಸೂರ್ ಆಲಿಖಾನ್ಬೆಂಗಳೂರು ಉತ್ತರ – ಪೆÇ್ರ.ರಾಜೀವ್‍ಗೌಡಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್ \ No newline at end of file diff --git a/eesanje/url_46_200_5.txt b/eesanje/url_46_200_5.txt new file mode 100644 index 0000000000000000000000000000000000000000..0b9c6df2b2e2cf92765443f0f705fecb60b876d8 --- /dev/null +++ b/eesanje/url_46_200_5.txt @@ -0,0 +1,14 @@ +ಚಿಕ್ಕಬಳ್ಳಾಪುರ ಕಾಂಗ್ರೆಸ್ ಟಿಕೆಟ್‍ಗೆ ಭಾರಿ ಫೈಟ್ +ಚಿಕ್ಕಬಳ್ಳಾಪುರ, ಮಾ.21- ಲೋಕಸಭಾ ಚುನಾವಣೆಗೆ ದಿನಗಣನೆ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ರಕ್ಷಾ ರಾಮಯ್ಯ ಹಾಗೂ ಡಾ. ಎಂ. ವೀರಪ್ಪಮೊಯ್ಲಿ ಇವರ ಮಧ್ಯೆ ಟಿಕೆಟ್‍ಗೆ ಫೈಟ್ ನಡೆದಿದ್ದು ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ದೊರಕುವುದು ಎಂಬ ಬಗ್ಗೆ ತೀವ್ರ ಕುತೂಹಲ ಹಾಗೂ ತಳಮಳ ಕಾಂಗ್ರೆಸ್ ಪಕ್ಷದ ಮುಖಂಡರುಗಳಲ್ಲಿ ಮತ್ತು ಕಾರ್ಯಕರ್ತರಲ್ಲಿ ಉಂಟಾಗಿದೆ. +ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಇದೇ ಚಿಕ್ಕಬಳಾಪುರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಎರಡು ಬಾರಿ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಡಾ.ಎಂ ವಿರಪ್ಪಮೊಯ್ಲಿ ರವರು ಈ ಬಾರಿ ಮತ್ತೆ ಇದೇ ಕ್ಷೇತ್ರದಿಂದ ಪುನರಾಯ್ಕೆ ಬಯಸಿ ಟಿಕೆಟ್ ಪಡೆಯಲು ಹರಸಾಹಸ ಪಡುತ್ತಿದ್ದು ಇನ್ನೂ ಟಿಕೆಟ್ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲೇ ದಿನದೂಡುತ್ತಿದ್ದಾರೆ ಇದರ ನಡುವೆ ಯಾರಿಗೆ ಟಿಕೆಟ್ ನೀಡಿದರೂ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವೆ ಎಂದು ಹೇಳುವ ಮೂಲಕ ಮೊಯ್ಲಿ ಅವರು ದ್ವಂದ್ವ ನಿಲುವಿನಲ್ಲಿದ್ದಾರೆ. +ಇನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎಮ್ ಆರ್.ಸೀತಾರಾಮ್ ರವರ ಪುತ್ರ ರಕ್ಷಾರಾಮಯ್ಯ ರವರು ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಖಚಿತವಾಗಿ ಸ್ಪರ್ಧಿಸುತ್ತೇನೆ, ನನಗೆ ಗೆಲುವು ನಿಶ್ಚಿತ ಎಂಬ ನಂಬಿಕೆಯಿಂದ ಕಳೆದ 6-7 ತಿಂಗಳಿನಿಂದ ಕ್ಷೇತ್ರದಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷದ ಮುಖಂಡರುಗಳನ್ನು, ಕಾರ್ಯಕರ್ತರನ್ನು ನಿರಂತರ ಭೇಟಿ ಮಾಡಿ ಸಂಪರ್ಕದಲ್ಲಿ ಇದ್ದಾರೆ. +ಅದೇ ರೀತಿ ಕಾಂಗ್ರೆಸ್ ಪಕ್ಷವು ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದೇ ಆದಲ್ಲಿ ಯುವ ಪಡೆ ರಕ್ಷಾ ರಾಮಯ್ಯ ಪರ ನಿಂತು ಗೆಲುವಿಗೆ ಅಹರ್ನಿಶಿ ಶ್ರಮಿಸುವ ವಿಶ್ವಾಸ ಇಟ್ಟಿದ್ದಾರೆ. ಇದೇ ಹುರುಪಿನಲ್ಲಿ ರಕ್ಷಾ ರಾಮಯ್ಯರವರು ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವೂ ಒಳಗೊಂಡಂತೆ ಲೋಕಸಭಾ ಕ್ಷೇತ್ರದ ಬಹುತೇಕ ಕಡೆ ಸಾವಿರಾರು ಮಂದಿ ಬೆಂಬಲಿಗರೊಂದಿಗೆ ಬೈಕ್ ಮೂಲಕ ತಿರಂಗಾ ಯಾತ್ರೆ ನಡೆಸಿ ಕ್ಷೇತ್ರದ ಜನತೆಯ ಗಮನ ಸೆಳೆದಿದ್ದರಲ್ಲದೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ನಲ್ಲಿ ಎಮ್ ಎಸ್ ರಾಮಯ್ಯ ಯೂತ್ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳ ಹಾಗೂ ನಿರುದ್ಯೋಗಿಗಳಿಗೆ ಸಾಲ ಮೇಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ನಿರುದ್ಯೋಗಿ ಯುವಕ ಯುವತಿಯರ ಗಮನ ಸೆಳೆದಿದ್ದರು. +ಹಾಗೆಯೇ ಇಡೀ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಣೇಶೋತ್ಸವ ಕಾರ್ಯಕ್ರಮಗಳಲ್ಲೂ ಭಾಗವಹಿಸಿ ಯುವಕರ ಗಮನ ಸೆಳೆದಿದ್ದರು.ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ರವರು ನಾನು ಈ ಹಿಂದೆ ಎರಡು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಗೆಲುವು ಸಾಧಿಸಿದ್ದಾರೆ. ನನ್ನ 10 ವರ್ಷಗಳ ಸಂಸತ್ ಸದಸ್ಯತ್ವದ ಅವಯಲ್ಲಿ ನಾನು ಅನೇಕ ಶಾಶ್ವತ ಉಳಿಯುವ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದೇನೆ. ಎತ್ತಿನಹೊಳೆ ನೀರಾವರಿ ಯೋಜನೆಯನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆ. ಈ ಬಾರಿಯೂ ನನ್ನನ್ನೇ ಆಯ್ಕೆ ಮಾಡಿ. ಎರಡು ವರ್ಷಗಳಲ್ಲಿ ನಾನು ಎತ್ತಿನಹೊಳೆ ನೀರನ್ನು ಕ್ಷೇತ್ರದಲ್ಲಿ ಹರಿಸುತ್ತೇನೆ ಎಂದು ಅನೇಕ ಸಭೆಗಳಲ್ಲಿ ಹೇಳುತ್ತಾ ಬಂದಿದ್ದಾರೆ. +ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನೆಲೆಯಲ್ಲಿ ಅವರು ಇತ್ತೀಚೆಗಷ್ಟೇ ನಗರದ ಹೊರವಲಯದ ಕಾಲೇಜಿನಲ್ಲಿ ವಿಶ್ವಸಂಸ್ಕøತಿ ಮಹಾಯಾನ ಎಂಬ ಪುಸ್ತಕ ಬಿಡುಗಡೆ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. +ಹೇಳಿ ಕೇಳಿ ಕಾಂಗ್ರೆಸ್ ಪಕ್ಷಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಭದ್ರಕೋಟೆ ಎಂದು ಈ ಇಂದಿನ ಚುನಾವಣೆಗಳ ಫಲಿತಾಂಶಗಳು ತೋರಿಸಿವೆ. ಆದರೂ ಮೋದಿ ಅಲೆಯಲ್ಲಿ ಈ ಹಿಂದಿನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿ ಎನ್ ಬಚ್ಚೇಗೌಡ ಅವರು ಗೆಲುವು ಕಾಂಗ್ರೆಸ್ ಭದ್ರ ಕೋಟೆ ಛಿದ್ರಗೊಳಿಸಿದ್ದರು. +1968ರಲ್ಲಿ ಚಿಕ್ಕಬಳ್ಳಾಪುರ ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗಿ ಹೊರಹೊಮ್ಮಿದ್ದು ಆ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಉಪ ವಿಭಾಗ ವ್ಯಾಪ್ತಿ ಬಾಗೇಪಲ್ಲಿ ತಾಲೂಕಿನ ತೋಳಪಲ್ಲಿ ಸುಧಾ ವಿ ರೆಡ್ಡಿರವರು ಪ್ರಪ್ರಥಮವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಗೊಂಡಿದ್ದರು. +ಅದಾದ ನಂತರದ ಚುನಾವಣೆಗಳಲ್ಲಿ ಎಂ. ವಿ. ಕೃಷ್ಣಪ್ಪ ಎಸ್. ಎನ್. ಪ್ರಸನ್ನಕುಮಾರ್, ವಿ.ಕೃಷ್ಣ ರಾವ್ 3 ಬಾರಿ, ಆರ್.ಎಲ್.ಜಾಲಪ್ಪ 4 ಬಾರಿ, ಡಾ.ಎಂ.ವೀರಪ್ಪ ಮೊಯ್ಲಿ 2 ಬಾರಿ ಹಾಗೂ ಬಿ.ಎನ್ .ಬಚ್ಚೇಗೌಡರವರು ಬಿಜೆಪಿ ಪಕ್ಷದಿಂದ 2019ರಲ್ಲಿ ಇದೇ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿ ಗೆಲುವು ಸಾಧಿಸಿರುವುದು ಇಲ್ಲಿನ ಹಿಂದಿನ ದಾಖಲೆಯಾಗಿದೆ. +1996ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿದ್ದ ರ್ಆ ಎಲ್ ಜಾಲಪ್ಪ ರವರು ಜಾತ್ಯತೀತ ಜನತಾದಳ ಪಕ್ಷದಿಂದ ಆಯ್ಕೆಗೊಂಡಿದ್ದರು ಅದಾದ ನಂತರ 2019ರಲ್ಲಿ ಬಿಎನ್ ಬಚ್ಚೇಗೌಡ ರವರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸ್ರ್ಪಧಿಸಿ ಗೆಲುವು ಸಾಧಿಸಿದ್ದರು. ಈ ಎರಡು ಅವಧಿಯನ್ನು ಹೊರತುಪಡಿಸಿದರೆ ಇನ್ನುಳಿದ ಎಲ್ಲಾ ಅವಧಿಯಲ್ಲೂ ಕಾಂಗ್ರೆಸ್ ಪಕ್ಷದಿಂದ ಸ್ರ್ಪಧಿಸಿರುವ ಅಭ್ಯರ್ಥಿಗಳೇ ಆಯ್ಕೆ ಆಗಿರುವುದು ಈ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಬಹುಪಾಲು ಜಯ ಕೊಟ್ಟ ಕ್ಷೇತ್ರವಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. +ಇದೀಗ 2024ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಲು ಶತಾಯ ಗತಾಯ ಪ್ರಯತ್ನ ನಡೆಸಿರುವ ಡಾ. ಎಂ ವೀರಪ್ಪ ಮೊಯ್ಲಿ ಹಾಗೂ ರಕ್ಷಾ ರಾಮಯ್ಯ ಇವರಿಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವ ಜಿಜ್ಞಾಸೆಯಲ್ಲಿ ಕ್ಷೇತ್ರ ಉಳಿದಿದೆ. +ಒಟ್ಟಾರೆಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಡಾ.ಎಂ.ವೀರಪ್ಪ ಮೊಯ್ಲಿ, ರಕ್ಷಾ ರಾಮಯ್ಯ ಹಾಗೂ ಬಿಜೆಪಿ ಪಕ್ಷದಿಂದ ಅಲೋಕ್ ವಿಶ್ವನಾಥ್, ಸುಮಲತಾ, ಡಾಕ್ಟರ್ ಕೆ.ಸುಧಾಕರ್, ಇದೀಗ ಮಾಜಿ ಮುಖ್ಯಮಂತ್ರಿ ಡಿ.ವಿ .ಸದಾನಂದ ಗೌಡ ಇವರುಗಳ ಮಧ್ಯೆ ಟಿಕೆಟ್ ಪೈಪೋಟಿ ನಡೆದಿದೆ ಯಾರ ಕೊರಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವು ಹೂಮಾಲೆ ಹಾಕುವುದೋ ಕಾದು ನೋಡಬೇಕು. +(ಎಂ.ಕೃಷ್ಣಪ್ಪ, ಚಿಕ್ಕಬಳ್ಳಾಪುರ) \ No newline at end of file diff --git a/eesanje/url_46_200_6.txt b/eesanje/url_46_200_6.txt new file mode 100644 index 0000000000000000000000000000000000000000..3a316d54520f1fea34cf9fa0232e50c919189c90 --- /dev/null +++ b/eesanje/url_46_200_6.txt @@ -0,0 +1,6 @@ +ಎಲೆಕ್ಟೊರಲ್ ಬಾಂಡ್ ದೇಶದಲ್ಲಿಯೇ ಅತಿ ದೊಡ್ಡ ಭ್ರಷ್ಟಾಚಾರ : ಸುಧೀರ್ ಕುಮಾರ್ ಮುರೊಳ್ಳಿ +ಚಿಕ್ಕಮಗಳೂರು,ಮಾ.21-ಎಲೆಕ್ಟೊರಲ್ ಬಾಂಡ್‍ಗಳು ದೇಶದಲ್ಲಿಯೇ ಅತ್ಯಂತ ದೊಡ್ಡ ಭ್ರಷ್ಟಾಚಾರವಾಗಿದ್ದು, ಸಂಪೂರ್ಣ ಮಾಹಿತಿ ಹೊರಬಂದ ಬಳಿಕ ನಾನೂ ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ಹೇಳಿಕೊಳ್ಳುತ್ತಿದ್ದವರ ಬಣ್ಣ ಬಯಲಾಗಲಿದೆ ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದ್ದಾರೆ. +ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ದೇಶದ ಜನರ ಭಾವನೆಗಳಿಗೆ ಸ್ಪಂದಿಸಿ ಎಲೆಕ್ಟೊರಲ್ ಬಾಂಡ್ ಪ್ರಕರಣದಲ್ಲಿ ಆದೇಶಗಳನ್ನು ನೀಡುತ್ತಿದೆ, ವಾದ ಮಂಡಿಸುತ್ತಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್‍ರವರು ಸಂಗ್ರಹವಾದ ದೇಣಿಗೆಯಲ್ಲಿ ಶೇ.90 ರಷ್ಟು ಪಾಲು ಒಂದೇ ಪಕ್ಷಕ್ಕೆ ಸೇರಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಲೆಕ್ಟೊರಲ್ ಬಾಂಡ್‍ಗಳ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸದೆ, ಮೀನಾಮೇಷ ಎಣಿಸುತ್ತಿರುವುದು ಅನುಮಾನಗಳನ್ನು ಹುಟ್ಟಿಹಾಕಿದೆ ಎಂದು ಹೇಳಿದರು. +ಬಿಜೆಪಿಗೆ ದೇಣಿಗೆ ನೀಡಿರುವ 30 ಕಾರ್ಪೊರೇಟ್ ಸಂಸ್ಥೆಗಳ ಪೈಕಿ 14 ಕಂಪನಿಗಳ ಮೇಲೆ ಒಂದು ಅಥವಾ ಒಂದೂವರೆ ತಿಂಗಳ ಹಿಂದೆ ಸಿಬಿಐ, ಇಡಿ ಅಥವಾ ಜಾರಿ ನಿರ್ದೇಶನಾಲಯದ ದಾಳಿಗಳಾಗಿರುವುದು ಸ್ಪಷ್ಟವಾಗಿದೆ. 40 ಜನರ ಸಾವಿಗೆ ಕಾರಣವಾಗುವಂತಹ ಕಳಪೆ ಕಾಮಗಾರಿ ಮಾಡಿದ ಸಂಸ್ಥೆಯಿಂದ ತಮಿಳುನಾಡಿನಲ್ಲಿ ಜೀವರಕ್ಷಕ ಔಷಧಿಗಳನ್ನು ಕಳಪೆ ಗುಣಮಟ್ಟದಲ್ಲಿ ತಯಾರಿಸುತ್ತಿದ್ದ ಸಂಸ್ಥೆಯಿಂದಲೂ ದೇಣಿಗೆ ಪಡೆಯಲಾಗಿದೆ. ಮತ್ತೊಂದು ಆತಂಕಕಾರಿ ಎಂದರೆ ಪಾಕಿಸ್ತಾನದ ಸಂಸ್ಥೆಗೂ ಎಲೆಕ್ಟೊರಲ್ ಬಾಂಡ್‍ಗಳನ್ನು ಮಾರಾಟ ಮಾಡಲಾಗಿದೆ. +ಈ ಹಿಂದೆ ವಿದೇಶಿ ಸಂಸ್ಥೆಗಳಿಂದ ಹಣ ಪಡೆಯಲು ಅವಕಾಶವಿರಲಿಲ್ಲ. 2017 ರಲ್ಲಿ ಕಾನೂನು ತಿದ್ದುಪಡಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಲೋಕಸಭಾ ಚುನಾವಣೆಗೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯ ಘೋಷಣೆಯಾಗುವವರೆಗೂ ನಾನೂ ಕೂಡ ಆಕಾಂಕ್ಷಿಯಾಗಿರುತ್ತೇನೆ. ಇದು ನಮ್ಮ ಆಂತರಿಕ ಪ್ರಜಾಪ್ರಭುತ್ವ. ಬಿಜೆಪಿಯಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದ ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್ ಅಥವಾ ಜನನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರಿಗೆ ಟಿಕೆಟ್ ನೀಡಿಲ್ಲ. ಸ್ರ್ಪಧಿಸುವುದಿಲ್ಲ ಎಂದು ಹೇಳುತ್ತಿದ್ದ ಕೋಟ ಶ್ರೀನಿವಾಸ್ ಪೂಜಾರಿಗೆ ಅವಕಾಶ ಮಾಡಿಕೊಡಲಾಗಿದೆ. +ತಮ್ಮ ವಿರುದ್ಧ ಗೋ ಬ್ಯಾಕ್ ಚಳವಳಿ ನಡೆಸಿದವರಿಗೆ ಚುನಾವಣೆಯಲ್ಲಿ ಸ್ರ್ಪಧಿಸಲು ಬಿಡುವುದಿಲ್ಲ ಎಂದು ಶೋಭಾ ಕರಂದ್ಲಾಜೆ ಬಹಿರಂಗವಾಗಿ ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿಯ ಆಂತರಿಕ ದ್ವೇಷ ಜಿಲ್ಲೆಯ ಆಡಳಿತದ ಮೇಲೆ ಕೆಟ್ಟ ಪರಿಣಾಮಕ್ಕೆ ಅವಕಾಶವಾಗಬಾರದೆಂದು ಎಚ್ಚರಿಸಿದರು. \ No newline at end of file diff --git a/eesanje/url_46_200_7.txt b/eesanje/url_46_200_7.txt new file mode 100644 index 0000000000000000000000000000000000000000..4879dac3c9792eb7c3ff850c59fbaef4a5f5fddf --- /dev/null +++ b/eesanje/url_46_200_7.txt @@ -0,0 +1,10 @@ +ದೇಶದಲ್ಲೇ 5ನೇ ಸ್ಥಾನಕ್ಕೇರಿದ ಹುಬ್ಬಳ್ಳಿ ವಿಮಾನ ನಿಲ್ದಾಣ +ಹುಬ್ಬಳ್ಳಿ, ಮಾ.21:ಛೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿ ಸಂದಿದ್ದು ಜಗತ್ತಿನ ಭೂಪಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತನ್ನದೇ ಆದ ದಾಖಲೆ ಮಾಡಿದೆ. +1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ. +ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಇಚ್ಛಾಶಕ್ತಿಯಿಂದಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಕಂಡು ಕಂಗೊಳಿಸುತ್ತಿದೆ ಹುಬ್ಬಳ್ಳಿ ವಿಮಾನ ನಿಲ್ದಾಣ.ದೇಶದ ಒಟ್ಟು 58 ವಿಮಾನ ನಿಲ್ದಾಣಗಳಲ್ಲಿ ಟಾಪ್ 5 ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಗ್ರಾಹಕರ ಸೇವೆಯಲ್ಲಿ ಅತ್ಯುನ್ನತ ದರ್ಜೆಗೇರುವ ಮೂಲಕ ಅಭಿವೃದ್ಧಿಯಲ್ಲಿ ರಾಷ್ಟ್ರದ ಗಮನವನ್ನೇ ಸೆಳೆದಿದೆ. +ಮೊನ್ನೆ ಮೊನ್ನೆಯಷ್ಟೇ ಸುಮಾರು 320 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ಎರಡನೇ ಟರ್ಮಿನಲ್ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕು ಸ್ಥಾಪನೆ ನೆರವೇರಿಸಿದ್ದು, ಎರಡೇ ವರ್ಷದಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ರೂಪುಗೊಳ್ಳುತ್ತದೆ. ಈ ಮಧ್ಯೆ ಗ್ರಾಹಕರಿಗೆ ನೀಡುತ್ತಿರುವ ಸೇವೆ ಹಾಗೂ ಸೌಲಭ್ಯಗಳನ್ನು ಪರಿಗಣಿಸಿ ನಡೆಸಲಾದ ಸಮೀಕ್ಷೆಯಲ್ಲಿ 5ನೇ ಸ್ಥಾನ ಪಡೆದಿರುವುದು ಹುಬ್ಬಳ್ಳಿ- ಧಾರವಾಡಗರಿಗೆ ಹೆಮ್ಮೆಯ ಸಂಗತಿಯಾಗಿದೆ. +ಮಧ್ಯಮ ಗಾತ್ರದ ವಿಮಾನ ನಿಲ್ದಾಣಗಳ ವಿಭಾಗದಲ್ಲಿ ಟಾಪ್ 5 ಗೌರವಕ್ಕೆ ಪಾತ್ರವಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡದಾದ ಹಾಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ವಿಮಾನ ನಿಲ್ದಾಣ ಇದಾಗಿದೆ. +ದೇಶದ 58 ಭಾರತೀಯ ವಿಮಾನ ನಿಲ್ದಾಣಗಳನ್ನು ಗ್ರಾಹಕ ಸಂತೃಪ್ತಿ ಸಮೀಕ್ಷೆಗೆ ಒಳಪಡಿಸಿದ್ದು, ಗ್ರಾಹಕರಿಗೆ ಅತ್ಯುತ್ತಮ ಸೇವೆ ಒದಗಿಸುವಲ್ಲಿ ಒಟ್ಟು 5 ಅಂಕಕ್ಕೆ 4.95ರಷ್ಟು ಅಂಕ ಪಡೆಯುವ ಮೂಲಕ 5ನೇ ಸ್ಥಾನ ಪಡೆದುಕೊಂಡಿದೆ ಎಂದು ಸಚಿವ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ. +ಹುಬ್ಬಳ್ಳಿಯಿಂದ ದೇಶದ ಹಲವು ನಗರಗಳಿಗೆ ವಿಮಾನಯಾನ ಸೇವೆ ಆರಂಭವಾಗಿದ್ದು, ದೆಹಲಿ, ಬೆಂಗಳೂರು, ಹೈದ್ರಾಬಾದ್, ಮುಂಬೈ, ಚೆನ್ನೈ ಮುಂತಾದ ನಗರಗಳಿಗೆ ವಿಮಾನ ಸೌಲಭ್ಯ ಲಭ್ಯವಿದೆ. ಇಂಡಿಗೋ, ಸ್ಪೇಸ್ ಜೆಟ್, ಏರ್‍ಇಂಡಿಯಾ, ಅಲಯನ್ಸ್ ಏರ್ ಮುಂತಾದ ಕಂಪನಿಗಳು ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುತ್ತಿವೆ.ಕೆಲ ವರ್ಷಗಳಿಂದ ಇಲ್ಲಿ ಕಾರ್ಗೋ ಸೇವೆಯನ್ನೂ ಆರಂಭಿಸಲಾಗಿದೆ. +ಹುಬ್ಬಳ್ಳಿ ಇದೀಗ ದೇಶದ ಎಲ್ಲ ಪ್ರಮುಖ ನಗರಗಳಿಗೆ ವಿಮಾನಯನ ಮೂಲಕ ಸಂಪರ್ಕ ಸಾಧಿಸುತ್ತಿದೆ. ನಿತ್ಯ ಸುಮಾರು 15 ವಿಮಾನಗಳು ವಾಣಿಜ್ಯ ನಗರಿಗೆ ಬಂದಿಳಿದು ಹಾರಾಟ ನಡೆಸಿವೆ. ಸಾವಿರಾರು ಪ್ರಯಾಣಿಕರು ಸುಖಕರ ಪ್ರಯಾಣ ಮಾಡುತ್ತಿದ್ದಾರೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ರೂಪೇಶಕುಮಾರ ಮಾಹಿತಿ ನೀಡಿದ್ದಾರೆ. +ಅಭಿನಂದನೆ:ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಹುಬ್ಬಳ್ಳಿ 5ನೇ ಸ್ಥಾನ ಪಡೆದಿರುವುದು ಸಂತಸದ ಸಂಗತಿ. ಈ ಮನ್ನಣೆ ಪಡೆಯಲು ಕಾರಣಕರ್ತರಾದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ ಅನೇಕ ನಾಯಕರು ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_200_8.txt b/eesanje/url_46_200_8.txt new file mode 100644 index 0000000000000000000000000000000000000000..b900b04f5e596b642176ce5ab56455fd7ad58113 --- /dev/null +++ b/eesanje/url_46_200_8.txt @@ -0,0 +1,9 @@ +ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮುಹಮ್ಮದ್ ಹ್ಯಾರೀಸ್ ಹೆಸರು +ನವದೆಹಲಿ,ಮಾ.21-ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಕೇರಳ, ಕರ್ನಾಟಕ ಮತ್ತು ಗೋವಾದಾದ್ಯಂತ ವ್ಯಾಪಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರೀಸ್ ಹಾಗೂ ಪುತ್ರ, ಕರ್ನಾಟಕ ಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹ್ಯಾರೀಸ್ ನಲಪಾಡ್ ಹೆಸರು ತಳಕು ಹಾಕಿಕೊಂಡಿದೆ. +ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರ ಅಧಿಕೃತ ಪ್ರೋಟೋಕಾಲ್ ಸ್ಟಿಕ್ಕರ್ ಇರುವ ಕಾರನ್ನು ಬಳಸಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚಿಸಿದ ಆರೋಪಿ ಕೊಚ್ಚಿ ನಿವಾಸಿ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಕರ್ನಾಟಕ ವಿಧಾನಸಭೆಯ ಪ್ರೋಟೋಕಾಲ್( ಶಿಷ್ಟಚಾರ) ವಿಭಾಗವು ಕಾಂಗ್ರೆಸ್ ಶಾಸಕರಿಗೆ ಸ್ಟಿಕ್ಕರ್ ನೀಡಿತ್ತು. +ಜಾರಿನಿರ್ದೇಶನಾಲಯದ ಪ್ರಕಾರ, ಹ್ಯಾರೀಸ್ ಅವರ ಮಗ ಮತ್ತು ಕರ್ನಾಟಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾರಿಸ್ ನಲಪಾಡ್ ಕಾರ್ ಖರೀದಿಸಿದ್ದಾರೆ. ಆದರೆ ಈ ಕಾರನ್ನು ಶಾಸಕರ ನಿಕಟ ಸಂಬಂಧಿ ಮತ್ತು ಅವರ ರಾಜಕೀಯ ಸಹಾಯಕ ನಫೀಹ್ ಮುಹಮ್ಮದ್ ನಾಸರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ. +ಕೇರಳದ ಚಿನ್ನದ ವ್ಯಾಪಾರಿಯ ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಕಾರು ಮತ್ತು ಅದರಲ್ಲಿ ಬಳಸಲಾದ ಕರ್ನಾಟಕ ಸರ್ಕಾರದ ಸ್ಟಿಕ್ಕರ್ ಹ್ಯಾರೀಸ್ ಮತ್ತವರ ಪುತ್ರನಿಗೆ ಸಂಬಂಧಿಸಿದ್ದಾಗಿದೆ ಎಂದು ಇ.ಡಿ ತಿಳಿಸಿದೆ. ಕರ್ನಾಟಕ, ಕೊಚ್ಚಿ ವಲಯ ಕಚೇರಿ ಇತ್ತೀಚೆಗೆ ಕೇರಳದ ಉದ್ಯಮಿ ಮೊಹಮ್ಮದ್ ಹಫೀಜ್ ಮತ್ತು ಇತರರಿಗೆ ಸಂಬಂಧಿಸಿದಂತೆ ಮಾ.14ರಿಂದ ಮಾ.16ರವರೆಗೆ ಕೇರಳ, ಕರ್ನಾಟಕ ಮತ್ತು ಗೋವಾದಾದ್ಯಂತ ಒಂಬತ್ತು ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು. +ದಾಳಿ ವೇಳೆ ಇಡಿ ಅಧಿಕಾರಿಗಳು 1,672.8 ಗ್ರಾಂ ಚಿನ್ನಾಭರಣಗಳು, 12.5 ಲಕ್ಷ ರೂ., ಏಳು ಮೊಬೈಲ್ ಫೋನ್‍ಗಳು ಮತ್ತು ವಿವಿಧ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ, ಆರೋಪಿಗಳಿಗೆ ಸೇರಿದ 4.4 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಬ್ಯಾಲೆನ್ಸ್/ನಿಶ್ಚಿತ ಠೇವಣಿಗಳನ್ನು ಸ್ಥಗಿತಗೊಳಿಸಲು ಇಡಿ ಆದೇಶ ಹೊರಡಿಸಿದೆ. +ಕೇರಳ ಪೊಲೀಸರು, ಗೋವಾ ಪೊಲೀಸರು ಮತ್ತು ಕರ್ನಾಟ ಸಹಕಾರದಿಂದ ತನಿಖೆ ನಡೆಸಲಾಗುತ್ತಿದೆ.ಹೆಚ್ಚುವರಿ ಹಣಕ್ಕಾಗಿ ಕಾನೂನುಬಾಹಿರ ಬೇಡಿಕೆಗಳನ್ನು ಈಡೇರಿಸಲು ಹಫೀಜ್ ಮತ್ತು ಅವನ ಸಹಚರರು ವಂಚನೆ, ಹಣ ದುರುಪಯೋಗ, ನಕಲಿ ಮತ್ತು ದಾಖಲೆಗಳ ತಯಾರಿಕೆ ಸೇರಿದಂತೆ ವಿವಿಧ ಅಪರಾಧಗಳಲ್ಲಿ ತೊಡಗಿದ್ದಾರೆ ಎಂದು ಇ.ಡಿ ಪ್ರಕಟಣೆ ತಿಳಿಸಿದೆ. +ಇ.ಡಿ ಹೇಳಿಕೆಯ ಪ್ರಕಾರ, ನಾಸರ್ ಪ್ರಮುಖ ಆರೋಪಿ ಮುಹಮ್ಮದ್ ಹಫೀಜ್‍ನ ಆಪ್ತ ಸ್ನೇಹಿತ. ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದೆ.ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002ರಡಿ ಇ.ಡಿ ಕೊಚ್ಚಿ ವಲಯದ ಅಧಿಕಾರಿಗಳು ಮಾ.14, 15 ಮತ್ತು 16ರಂದು ಕೊಚ್ಚಿ ನಿವಾಸಿ ಮುಹಮ್ಮದ್ ಹಫೀಜ್ ಮತ್ತು ಇತರರಿಗೆ ಸೇರಿದ ಕರ್ನಾಟಕ, ಕೇರಳ ಮತ್ತು ಗೋವಾದ ಒಂಬತ್ತು ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿತ್ತು. +ಹಣ ದುರುಪಯೋಗ, ನಕಲಿ ದಾಖಲೆಗಳ ಸೃಷ್ಟಿಸಿ ವಂಚನೆಗೆ ಸಂಬಂಸಿದಂತೆ ಐಪಿಸಿ ಸೆಕ್ಷನ್‍ಗಳಡಿ ಕರ್ನಾಟಕ, ಕೇರಳ ಮತ್ತು ಗೋವಾದಲ್ಲಿ ಪೊಲೀಸರು ದಾಖಲಿಸಿದ ಎಫ್‍ಐಆರ್‍ಗಳಲ್ಲಿ ಹಫೀಜ್ ಮತ್ತು ಅವನ ಸಹಚರರು ಹೆಸರಿದೆ. ಹಫೀಜ್ ತನ್ನ ಅತ್ತೆಯಂದಿರಿಂದ 108.73 ಕೋಟಿ ರೂ. ಮೌಲ್ಯದ ವರದಕ್ಷಿಣೆ ಪಡೆದಿದ್ದಾನೆ. \ No newline at end of file diff --git a/eesanje/url_46_200_9.txt b/eesanje/url_46_200_9.txt new file mode 100644 index 0000000000000000000000000000000000000000..835f4f4c543b41715bfc8122bf88b03b9fc301aa --- /dev/null +++ b/eesanje/url_46_200_9.txt @@ -0,0 +1,7 @@ +ಭಾರತ ಮತ್ತು ಹಿಂದೂಗಳ ರಕ್ಷಣೆಗೆ ಮೋದಿ ಅನಿವಾರ್ಯ : ಪ್ರಮೋದ ಮುತಾಲಿಕ್ +ಹುಬ್ಬಳ್ಳಿ, ಮಾ.21:ಪರ -ವಿರೋಧ, ಟೀಕೆ ಟಿಪ್ಪಣೆಗಳನ್ನೆಲ್ಲ ಪಕ್ಕಕ್ಕಿಟ್ಟು, ದೇಶದ, ಹಿಂದೂಗಳ ಸುರಕ್ಷತೆ ಹಿನ್ನೆಲೆಯಲ್ಲಿ ಮೋದಿ ನಾಯಕತ್ವ ಅಗತ್ಯ ಇದೆ ಎಂದು ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು. ಶ್ರೀರಾಮ ಸೇನೆ ವತಿಯಿಂದ ಹಳೇ ಹುಬ್ಬಳ್ಳಿ ವೃತ್ತದಲ್ಲಿ ಹಮ್ಮಿಕೊಂಡಿದ್ದ ಮೋದಿ ಗೆಲ್ಲಿಸಿ, ಭಾರತ ಉಳಿಸಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ದೇಶಕ್ಕೆ ಏನಾದರೂ ಮಾಡಬಹುದು ಎನ್ನುವ ಇಚ್ಛಾಶಕ್ತಿ ಇದ್ದರೆ, ಅದಕ್ಕೆ ಮೋದಿ ನಿದರ್ಶನ. +2014 ರ ಮೊದಲಿನ ಭಾರತ, ನಂತರದ ಭಾರದವನ್ನು ವಿಂಗಡಿಸಿ ವಿಶ್ಲೇಷಣೆ ಮಾಡಿದರೆ ಎಲ್ಲವೂ ಅರಿವಿಗೆ ಬರುತ್ತದೆ. ಆವಾಗ ನಾವು ನಿರ್ಣಯ ತೆಗೆದುಕೊಳ್ಳಬೇಕು. ಕುಕ್ಕರ್, ಸೀರೆ ನೀಡಿದರು ಎಂದು ಮತ ಚಲಾಯಿಸಬಾರದು. ಎಲ್ಲರಿಗೂ ವಿಚಾರ ಮಾಡುವ ವಿವೇಚನೆಯಿದೆ ಎಂದು ತಿಳಿಸಿದರು. +ಕಾಂಗ್ರೆಸ್ ಪಕ್ಷ ಬ್ರಿಟಿಷರು ಹುಟ್ಟು ಹಾಕಿರುವ ಸಂಸ್ಥೆಯಾಗಿದೆ. ಸ್ವಾತಂತ್ರ್ಯಕ್ಕಾಗಿ ಹುಟ್ಟುಹಾಕಿದ್ದ ಕಾಂಗ್ರೆಸ್ ಅನ್ನ ವಿಸರ್ಜಿಸಿ ಎಂದು ಗಾಂಧೀಜಿ ಸ್ಪಷ್ಟವಾಗಿ ಹೇಳಿದ್ದರು. ಅವರ ಕೈಲಿ ಕಾಂಗ್ರೆಸ್ ಇದ್ದರೆ ದೇಶ ಭ್ರಷ್ಟವಾಗುತ್ತದೆ ಎಂದು ಹೇಳಿದ್ದರು. ಆದರೆ, ಅವರಿಗೆ ಕಾಂಗ್ರೆಸ್ ಬಿಟ್ಟರೆ ಬೇರೆ ಗತಿಯಿಲ್ಲವಾಗಿತ್ತು. ದೇಶವನ್ನು ಹಾಳುಗೆಡವಿದರು, ಬರ್ಬಾದ ಮಾಡಿದರು ಎಂದು ಕಿಡಿ ಕಾರಿದರು. +ದೇಶ ವಿಂಗಡಣೆ ಮಾಡಲು ನಾನು ಒಪ್ಪುತ್ತಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಪಾಕಿಸ್ತಾನ ಮಾಡುವುದೇ ಆದರೆ, ಪಾಕಿಸ್ತಾನಕ್ಕೆ ಮುಸ್ಲಿಮರನ್ನು, ಭಾರತದಲ್ಲಿ ಹಿಂದುಗಳು ಇರಬೇಕು ಎಂದು ಅಂಬೇಡ್ಕರ್ ಹೇಳಿದ್ದರು. ಇದನ್ನು ಇತಿಹಾಸದ ದಾಖಲೆಗಳೇ ಹೇಳುತ್ತವೆ. ಅದು ಆಗದ ಕಾರಣ ನಾವು ಸಮಸ್ಯೆ ಅನುಭವಿಸುತ್ತಿದ್ದೇವೆ ಎಂದರು. +ನಿಮ್ಮ ರಾಮಮಂದಿರದ ಮೇಲೆ ಮಸೀದಿ ಕಟ್ಟಿದ್ದೇವೆ ಎಂದು ಚುಚ್ಚುತ್ತಿದ್ದರು. ಈಗ ಅದೇ ಜಾಗದಲ್ಲಿ ರಾಮಮಂದಿರ ನಿರ್ಮಿಸಲಾಗಿದೆ. ಕಾಂಗ್ರೆಸ್ ಬಾಬರನ ಪರವಾಗಿ ನಿಂತು, ರಾಮ ಕಾಲ್ಪನಿಕ, ದೇವರಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಬರೆದುಕೊಟ್ಟಿತ್ತು. 500 ವರ್ಷಗಳ ನಂತರ ರಾಮಮಂದಿರ ಉದ್ಘಾಟನೆಯಾಗಿದೆ ಎಂದು ಮುತಾಲಿಕ್ ಹೇಳಿದರು. +ಶ್ರೀಸತ್ಯಪ್ರಭುದೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶ್ರೀಕಾಂತ ಜಿ., ಚಂದ್ರಶೇಖರ ಗೋಕಾಕ, ಮಹಾದೇವ ದಂಡಿನ, ಮಂಜುನಾಥ ಕಾಟ್ಕರ, ಗಣೇಶ ಪೂಜಾರ, ವಿಜಯ ಸಾಲಿಮಠ, ಲೋಕೇಶ ಗುಂಜಾಳ, ಅಣ್ಣಪ್ಪ ದೀವಟಗಿ ಸೇರಿದಂತೆ ಅನೇಕರಿದ್ದರು. \ No newline at end of file diff --git a/eesanje/url_46_201_1.txt b/eesanje/url_46_201_1.txt new file mode 100644 index 0000000000000000000000000000000000000000..8a929a267ed1bc221062ca00638264b12f1cb0af --- /dev/null +++ b/eesanje/url_46_201_1.txt @@ -0,0 +1,10 @@ +ಪಕ್ಷವಿರೋಧಿ ಚುಟುವಟಿಕೆ ನಡೆಸುವ ‘ಅತೃಪ್ತರಿಗೆ’ ಬಿಜೆಪಿ ವಾರ್ನಿಂಗ್ +ಬೆಂಗಳೂರು,ಮಾ.20-ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಇಲ್ಲವೇ ಅಧಿಕೃತ ಅಭ್ಯರ್ಥಿ ವಿರುದ್ಧ ಚಟುವಟಿಕೆಗಳನ್ನು ನಡೆಸಿದರೆ ಅಂಥವರನ್ನು ಮುಲಾಜಿಲ್ಲದೆ ಪಕ್ಷದಿಂದಲೇ ಹೊರಹಾಕಲಾಗುತ್ತದೆ ಎಂದು ರಾಜ್ಯ ಬಿಜೆಪಿ ಘಟಕ ಭಿನ್ನಮತಿಯರಿಗೆ ಎಚ್ಚರಿಕೆ ಕೊಟ್ಟಿದೆ. ಪಕ್ಷಕ್ಕೆ ಯಾರೊಬ್ಬರು ಅತೀತರಲ್ಲ. ವ್ಯಕ್ತಿಗಿಂತ ಪಕ್ಷ ದೊಡ್ಡದು. ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಸಿದ್ಧಾಂತದೊಂದಿಗೆ ಬಿಜೆಪಿಯನ್ನು ಸಂಘಟಿಸಿದ್ದೇವೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದಿಂದಲೇ ಗೇಟ್ ಪಾಸ್ ಗ್ಯಾರಂಟಿ ಎಂದು ಅಸಮಾಧಾನಿತರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ. +ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಗಾಯತ್ರಿಗೆ ಸಿದ್ದೇಶ್ವರ್‍ಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಅನೇಕರು ಭಿನ್ನಮತ ಸಾರಿದ್ದಾರೆ. ಮಾಜಿ ಶಾಸಕರಾದ ಎಂ.ಪಿ.ರೇಣಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಕರುಣಾಕರ ರೆಡ್ಡಿ, ಗುರು ಸಿದ್ದನಗೌಡರ್ ಸೇರಿದಂತೆ ಅನೇಕ ಮುಖಂಡರು ಪಕ್ಷದ ತೀರ್ಮಾನಕ್ಕೆ ಸೆಡ್ಡು ಹೊಡೆದು ಬಂಡಾಯದ ಬಾವುಟ ಹಾರಿಸಿದ್ದಾರೆ. +ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಘಟಕ ತಕ್ಷಣವೇ ವರಿಷ್ಠರು ಆಯ್ಕೆ ಮಾಡಿರುವ ಗಾಯತ್ರಿ ಸಿದ್ದೇಶ್‍ಗೆ ಬೆಂಬಲ ನೀಡಬೇಕು. ಭದ್ರಕೋಟೆಯನ್ನು ಉಳಿಸಿಕೊಳ್ಳುವತ್ತ ಕಾರ್ಯೋನ್ಮುಖರಾಗಿ. ಒಂದು ವೇಳೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದೆ. +ದಾವಣಗೆರೆ ಮಾತ್ರವಲ್ಲದೆ ಅಸಮಾಧಾನಗೊಂಡಿದ್ದಾರೋ ಅಂಥವರಿಗೆ ಖುದ್ದು ದೂರವಾಣಿ ಕರೆ ಮಾಡಿರುವ ಮಾಜಿ ಸಿಎಂ ಯಡಿಯೂರಪ್ಪ ತಕ್ಷಣವೇ ಭಿನ್ನಮತವನ್ನು ಬದಿಗೊತ್ತಿ, ಕೂಡಲೇ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಸೂಚನೆ ನೀಡಿದ್ದಾರೆ. +ಅದರಲ್ಲೂ ತಮ್ಮ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವರೊಬ್ಬರಿಗೆ ದೂರವಾಣಿ ಕರೆ ಮಾಡಿ ತಕ್ಷಣವೇ ಗುಂಪುಗಾರಿಕೆ ನಡೆಸುವುದನ್ನು ನಿಲ್ಲಿಸಬೇಕು. ಕಳೆದ ಒಂದು ವಾರ ನೀವು ನಡೆಸುತ್ತಿರುವ ಚಟುವಟುಕೆಗಳನ್ನು ನಾನು ಮಾತ್ರವಲ್ಲದೆ ದೆಹಲಿ ನಾಯಕರು ಕೂಡ ಗಮನಿಸಿದ್ದಾರೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ. ಇಲ್ಲದಿದ್ದರೆ ಪಕ್ಷದಿಂದಲೇ ಕಿತ್ತು ಹಾಕಲು ನಾನೇ ಹೇಳಬೇಕಾಗುತ್ತದೆ ಎಂದು ನೇರ ಮಾತುಗಳಲ್ಲಿ ಎಚ್ಚರಿಕೆ ಕೊಟ್ಟಿದ್ದಾರೆ. +ಪಕ್ಷದಲ್ಲೇ ಇದ್ದು ಕೆಲಸ ಮಾಡುವುದಾದರೆ ಮಾಡು. ಇಲ್ಲವಾದರೆ ಬೇರೆ ಪಕ್ಷಕ್ಕೆ ಹೋಗುತ್ತೀಯ ಹೋಗು, ಟಿಕೆಟ್ ಸಿಕ್ಕಿಲ್ಲ ಎಂಬ ಒಂದೇ ಕಾರಣಕ್ಕಾಗಿ ಪಕ್ಷ ವಿರೋ ಚಟುವಟಿಕೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ನೀನು ಮಾತ್ರವಲ್ಲದೆ ಸಾಲದ್ದಕ್ಕೆ ಬೇರೆಯವರನ್ನು ಗುಡ್ಡೆ ಹಾಕುತ್ತಿದ್ದೀಯೀ, ಗುಂಪುಗಾರಿಕೆ ನಡೆಸಬಾರದೆಂದು ಹೇಳಿದರೂ ಪದೇ ಪದೇ ಅದನ್ನೇ ಮಾಡುತ್ತಿದ್ದೀಯಾ… ಇರುವುದಾದರೆ ಇರು, ಹೋಗುವುದಾದರೆ ಹೋಗು ಎಂದು ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. +ಬೇರೆ ಬೇರೆ ಕಾರಣಗಳಿಗಾಗಿ ಗಾಯತ್ರಿ ಸಿದ್ಧೇಶ್ವರ್‍ಗೆ ಟಿಕೆಟ್ ನೀಡಲಾಗಿದೆ. ಇಷ್ಟವೋ, ಕಷ್ಟವೋ ಪಕ್ಷದ ತೀರ್ಮಾನಕ್ಕೆ ಬದ್ಧರಾಗಬೇಕು. ಪದೇ ಪದೇ ಈ ರೀತಿ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ವರ್ತಿಸಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸಬೇಕಾಗುತ್ತದೆ. ಕೊನೆಯ ಬಾರಿ ಹೇಳುತ್ತಿದ್ದೇನೆ ತಕ್ಷಣವೇ ಸಭೆಗಳನ್ನು ನಡೆಸುವುದನ್ನು ನಿಲ್ಲಿಸಬೇಕು, ಪದೇ ಪದೇ ಪುನಾವರ್ತನೆ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಬಿಎಸ್‍ವೈಗುಡುಗಿದ್ದಾರೆ. +ಇನ್ನು ದಾವಣಗೆರೆ ಭಿನ್ನಮತವನ್ನು ಬಗೆಹರಿಸುವಂತೆ ಜಿಲ್ಲಾ ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಮಾಡಿತ್ತು. ಪರಿಸ್ಥಿತಿ ಕೈಮೀರುವ ಮೊದಲೇ ಮಧ್ಯಪ್ರವೇಶಿಸಬೇಕೆಂಬುದು ಹಲವರ ಮನವಿಯಾಗಿತ್ತು. ಇದಕ್ಕೆ ಸೊಪ್ಪು ಹಾಕದ ವಿಜಯೇಂದ್ರ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ನಾವು ಮಾತುಕತೆ, ಸಂಧಾನ ನಡೆಸುವುದಿಲ್ಲ. ನಾನು ಒಬ್ಬರ ಜೊತೆ ರಾಜಿಸಂಧಾನ ನಡೆಸಿದ ಅವರು ಬೇರೆ ಹಾದಿ ತುಳಿಯುತ್ತಾರೆ. +ನೀವು ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಲು ಆರಂಭಿಸಿ. ಭಿನ್ನಮತದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಇವರು ಎಷ್ಟು ದಿನ ಭಿನ್ನಮತದ ಚಟುವಟಿಕೆಗಳನ್ನು ನಡೆಸುತ್ತಾರೋ ನಡೆಸಲಿ. ಕಾರ್ಯಕರ್ತರಿಗಿಂತ ನಾಯಕರೇನು ದೊಡ್ಡವರಲ್ಲ. ನಾವು ಎಲ್ಲವನ್ನೂ ಎದುರಿಸಲು ಸಿದ್ಧರಿದ್ದೇವೆ ಎಂದು ಬಿ.ವೈ.ವಿಜಯೇದ್ರ ಎಚ್ಚರಿಕೆಯನ್ನು ಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_201_10.txt b/eesanje/url_46_201_10.txt new file mode 100644 index 0000000000000000000000000000000000000000..debd356f41c656f53e8f4021114c965748b81663 --- /dev/null +++ b/eesanje/url_46_201_10.txt @@ -0,0 +1,5 @@ +ನಗರ್ತಪೇಟೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ : ಕಾಂಗ್ರೆಸ್ +ಬೆಂಗಳೂರು,ಮಾ.20-ಇಲ್ಲಿನ ನಗರ್ತಪೇಟೆಯ ಗಲಭೆ ಪ್ರಕರಣವನ್ನು ಬಿಜೆಪಿ ದುರುದ್ದೇಶಪೂರ್ವಕವಾಗಿ ವೈಭವೀಕರಿಸುತ್ತಿದೆ. ರಾಜಕೀಯ ಲಾಭಕ್ಕಾಗಿ ಕೋಮು ಸಂಘರ್ಷ ಪ್ರಚೋದಿಸಲಾಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸುತ್ತಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಕಾರಣಕ್ಕಾಗಿ ಬಿಜೆಪಿಯ ಎಲ್ಲಾ ನಾಯಕರೂ ನಗರ್ತಪೇಟೆಗೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದಾರೆ. +ಅದೇ ಬಿಜೆಪಿ ನಾಯಕರು ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಬಾಯಿ ಬಿಡುತ್ತಿಲ್ಲ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂಬುದನ್ನು ತಿಳಿಸುತ್ತಿಲ್ಲ. ರಾಜ್ಯಸರ್ಕಾರ ತನ್ನ ಇತಿಮಿತಿಯಲ್ಲಿ ಬರ ನಿರ್ವಹಣೆ ಮಾಡುತ್ತಿದೆ. ಆದರೆ ಸರ್ಕಾರವನ್ನು ಹೊಣೆ ಮಾಡುತ್ತಿರುವ ಬಿಜೆಪಿಯವರು ಜನರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಕಾಂಗ್ರೆಸ್‍ನ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‍ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ನಗರ್ತಪೇಟೆಯ ಗಲಭೆಯನ್ನು ಆಧಾರವಾಗಿಟ್ಟುಕೊಂಡು ಪ್ರತಿಭಟನೆಗೆ ಪ್ರಚೋದನೆ ನಡೆಸಿದ ಸಂಸದ ತೇಜಸ್ವಿಸೂರ್ಯ ವಿರುದ್ಧ ವಾಗ್ದಾಳಿ ನಡೆಸಲಾಗಿದೆ. ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡಲು ಹೋಗಿದ್ದರು, ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್‍ನಲ್ಲಿ ವಿಮಾನದಿಂದ ಹಾರಲು ಹೋಗಿದ್ದರು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. +ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದ ತೇಜಸ್ವಿ ಸೂರ್ಯ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ, ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳುಹಿಸುವುದು ನಿಶ್ಚಿತ ಎಂದು ತಿರುಗೇಟು ನೀಡಿದೆ. \ No newline at end of file diff --git a/eesanje/url_46_201_11.txt b/eesanje/url_46_201_11.txt new file mode 100644 index 0000000000000000000000000000000000000000..7f7fae7549a3ce1474e6434d6a5e0202caf174e0 --- /dev/null +++ b/eesanje/url_46_201_11.txt @@ -0,0 +1,6 @@ +ಯಾವುದೇ ಕಾರಣಕ್ಕೂ ಡಿವಿಎಸ್ ಕಾಂಗ್ರೆಸ್ ಸೇರಲ್ಲ : ಎಸ್.ಹರೀಶ್ +ಬೆಂಗಳೂರು,ಮಾ.20-ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಅವರು ಮಾತೃಪಕ್ಷ ಬಿಜೆಪಿಯನ್ನು ಬಿಟ್ಟು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ಈಗ ಕೇಳಿಬರುತ್ತಿರುವ ಸುದ್ದಿಗಳೆಲ್ಲವೂ ಊಹಾಪೋಹ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸ್ಪಷ್ಟಪಡಿಸಿದ್ದಾರೆ. +ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸದಾನಂದ ಗೌಡರಂತಹ ನಿಷ್ಠಾವಂತ ಶಿಸ್ತುಬದ್ದ ಕಾರ್ಯಕರ್ತ ಬಿಜೆಪಿ ಯಲ್ಲಿ ಯಾರು ಇಲ್ಲ. ಇವರೊಬ್ಬ ಸ್ಥಿತಪ್ರಜ್ಞ ರಾಜಕಾರಣಿ. ಯಾವುದೇ ಕಾರಣಕ್ಕೂ ಅವರು ಕಾಂಗ್ರೆಸ್ ಸೇರಲಾರರು ಎಂದು ಹೇಳಿದ್ದಾರೆ. ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಮ್ಮ ಸದಾನಂದ ಗೌಡರು ಕಾಂಗ್ರೆಸ್ ಪಕ್ಷವನ್ನು ಸೇರುವುದು ಸತ್ಯಕ್ಕೆ ದೂರವಾದ ಮಾತು. +ಸದಾನಂದ ಗೌಡರು ಶಿಸ್ತಿನ ಸಿಪಾಯಿ. ಸಂಘ ಪರಿವಾರದ ಸದಸ್ಯರು. ಅವರು ಕಾಂಗ್ರೆಸ್ ಇಂದ ಆಫ಼ರ್ ಬಂದಿದೆ ಎಂದಷ್ಟೇ ಹೇಳಿದ್ದು. ಆದರೆ ಸೇರುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಹಾರಿಕೆ ಸುದ್ದಿ ಹರಡುವವರು ದೇಶದ್ರೋಹಿಗಳು ಎಂದು. ಈಗ ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಅಪ್ರಚಾರ ಮಾಡುವವರು ಈಗ ಸಾಲಿಗೆ ಸೇರುವವರು. ಮೋದಿ ಅಲೆಯನ್ನು ನೋಡಿ ಈಗಲೇ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ನಾಯಕರು ಜನರ ಹಾದಿ ತಪ್ಪಿಸಲು ಈ ರೀತಿಯ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸದಾನಂದಗೌಡರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು. ಇದೀಗ ಈ ವದಂತಿಗಳಿಗೆ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರೂ ಆಗಿರುವ ಎಸ್.ಹರೀಶ್ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. \ No newline at end of file diff --git a/eesanje/url_46_201_12.txt b/eesanje/url_46_201_12.txt new file mode 100644 index 0000000000000000000000000000000000000000..40252f2b8e515f40e13144f2826e54662237dd94 --- /dev/null +++ b/eesanje/url_46_201_12.txt @@ -0,0 +1,9 @@ +ಅನಂತಕುಮಾರ್ ಹೆಗಡೆ ಜಾಗಕ್ಕೆ ಎಂಟ್ರಿ ಆಗ್ತಾರಾ ಕುಮಾರ್ ಬಂಗಾರಪ್ಪ ..? +ಬೆಂಗಳೂರು,ಮಾ.20-ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡರಿಗೆ ಚಿಕ್ಕಬಳ್ಳಾಪುರ, ಭಿನ್ನಮತಕ್ಕೆ ಕ್ಯಾರೆ ಎನ್ನದೆ ಜಗದೀಶ್ ಶೆಟ್ಟರ್‍ಗೆ ಬೆಳಗಾವಿ, ಅಚ್ಚರಿ ಬೆಳವಣಿಗೆ ಎಂಬಂತೆ ಉತ್ತರ ಕನ್ನಡದಿಂದ ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ಸಿಗುವ ಸಂಭವವಿದೆ. ರಾಜ್ಯದ ಐದು ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಯಾವುದೇ ಕ್ಷಣದಲ್ಲಿ ಟಿಕೆಟ್ ಘೋಷಣೆ ಮಾಡುವ ಸಂಭವವಿದೆ. +ಕಳೆದ ರಾತ್ರಿ ಬಿಜೆಪಿ ವರಿಷ್ಠರು ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವರ ಜೊತೆ ಟಿಕೆಟ್ ಹಂಚಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ. +ಜೆಡಿಎಸ್‍ಗೆ ಹಾಸನ, ಮಂಡ್ಯ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಉಳಿದಿರುವ ಐದು ಕ್ಷೇತ್ರಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಯಚೂರು, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಾವುದೇ ಕ್ಷಣದಲ್ಲೂ ಟಿಕೆಟ್ ಘೋಷಣೆಯಾಗುವ ಸಂಭವವಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಸದಾನಂದಗೌಡರನ್ನು ಪಕ್ಷದಲ್ಲೇ ಉಳಿಸಿಕೊಂಡು ಅವರಿಗೆ ಬೆಂಗಳೂರಿಗೆ ಹೊಂದಿಕೊಂಡಿರುವ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ ಇದೆ. +ಮಾಜಿ ಸಚಿವ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಅವರ ನಡುವೆ ಟಿಕೆಟ್ ಪಡೆಯಲು ತೀವ್ರ ಸ್ಪರ್ಧೆ ಏರ್ಪಟ್ಟಿತ್ತು.ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡಿದರೆ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಹಿನ್ನೆಲೆಯಲ್ಲಿ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎಂಬಂತೆ ಚಿಕ್ಕಬಳ್ಳಾಪುರದಿಂದ ಸದಾನಂದಗೌಡರಿಗೆ ಅದೃಷ್ಟ ಖುಲಾಯಿಸುವ ಸಂಭವವಿದೆ. +ಹೀಗಾಗಿಯೇ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಸದಾನಂದಗೌಡರು ರದ್ದುಪಡಿಸಿ ತಮ್ಮ ಸ್ವಕ್ಷೇತ್ರ ಪುತ್ತೂರಿಗೆ ತೆರಳಿದ್ದಾರೆ. ಇನ್ನು ಧಾರವಾಡ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‍ಗೆ ಪಕ್ಷದ ಹಲವರ ವಿರೊಧದ ನಡುವೆಯೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲು ವರಿಷ್ಠರು ಸಮ್ಮತಿಸಿದ್ದಾರೆ. +ಯಾವ ಬಂಡಾಯದ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಕ್ಷೇತ್ರದಲ್ಲಿ ನೀವು ಪ್ರಚಾರವನ್ನು ಆರಂಭಿಸಿ. ಉಳಿದಿದ್ದನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಶೆಟ್ಟರ್‍ಗೆ ಟಿಕೆಟ್ ತಪ್ಪಿಸಲು ದೆಹಲಿಗೆ ತೆರಳಿದ್ದ ಬೆಳಗಾವಿಯ ಬಿಜೆಪಿ ನಿಯೋಗಕ್ಕೆ ಸಮಯ ಅವಕಾಶವನ್ನು ಕೊಡದೆ ವಾಪಸ್ ಕಳುಹಿಸಿದ್ದಾರೆ. +ಸಂವಿಧಾನ ಕುರಿತು ವಿವಾದತ್ಮಕ ಹೇಳಿಕೆ ನೀಡಿದ್ದ ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಬಹುತೇಕ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ. ಈ ಕ್ಷೇತ್ರದಿಂದ ಅಚ್ಚರಿ ಎಂಬಂತೆ ಮಾಜಿ ಸಂಸದ ಕುಮಾರ್ ಬಂಗಾರಪ್ಪ ಅಭ್ಯರ್ಥಿಯಾಗುವ ಸಾಧ್ಯತೆಗಳು ಕಂಡುಬಂದಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಿಂದ ಸೋತ ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಸರಿದಿದ್ದ ಅವರು ಇತ್ತೀಚೆಗೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. +ಜಿಲ್ಲೆಯಲ್ಲಿ ಈಡಿಗರು, ನಾಮಧಾರಿಗಳು ಸೇರಿದಂತೆ ಹಿಂದುಳಿದ ವರ್ಗಗಳ ಮತಗಳೇ ನಿರ್ಣಾಯಕವಾಗಿರುವುದರಿಂದ ಕುಮಾರ ಬಂಗಾರಪ್ಪ ಅವರನ್ನು ಅಭ್ಯರ್ಥಿ ಮಾಡಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಉಳಿದಂತೆ ಚಿತ್ರದುರ್ಗದಿಂದ ಸಚಿವ ಎ.ನಾರಾಯಣಸ್ವಾಮಿ, ರಾಯಚೂರಿನಿಂದ ಬಿ.ವಿ.ನಾಯಕ್ ಇಲ್ಲವೇ ತಿಪ್ಪರಾಜ್ ಹವಾಲ್ದಾರ್ ಅಭ್ಯರ್ಥಿಯಾಗುವ ಸಂಭವವಿದೆ. \ No newline at end of file diff --git a/eesanje/url_46_201_2.txt b/eesanje/url_46_201_2.txt new file mode 100644 index 0000000000000000000000000000000000000000..814d02853b51e8909ece338a64729ca46a2a4560 --- /dev/null +++ b/eesanje/url_46_201_2.txt @@ -0,0 +1,9 @@ +ಚುನಾವಣಾ ಪ್ರಚಾರ ಆರಂಭಿಸಿದ ಗೀತಾ ಶಿವರಾಜಕುಮಾರ್ +ಶಿವಮೊಗ್ಗ,ಮಾ.20-ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಇಂದು ಇಲ್ಲಿಗೆ ಆಗಮಿಸಿದ್ದು, ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.ನಟ ಡಾ.ಶಿವರಾಜಕುಮಾರ್ ತಮ್ಮ ಪತ್ನಿ ಗೀತಾ ಅವರಿಗೆ ಸಾಥ್ ನೀಡಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಳಿಗ್ಗೆ ಭದ್ರಾವತಿಯ ಕಾರೆಹಳ್ಳಿಗೆ ಆಗಮಿಸಿದ ಗೀತಾ ಶಿವರಾಜಕುಮಾರ್ ಶಿವರಾಜ್ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. +ಕಾರ್ಯಕರ್ತರು ಬೈಕ್ ರ್ಯಾಲಿಯೊಂದಿಗೆ ಬರಮಾಡಿಕೊಂಡರು. ಕಾರೆಹಳ್ಳಿಯ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವರಾಜ್ಕುಮಾರ್ ದಂಪತಿ ದೇವರಿಗೆ ಪೂಜೆ ಸಲ್ಲಿಸಿದರು. ಸ್ಥಳೀಯ ಶಾಸಕರಾದ ಬಿ.ಕೆ.ಸಂಗಮೇಶ್, ಬೇಳೂರು ಗೋಪಾಲಕೃಷ್ಣ ಮತ್ತಿತರರು ಜೊತೆಗೂಡಿದ್ದರು. ಕಾರ್ಯಕರ್ತರು, ಅಭಿಮಾನಿಗಳು ಶಿವರಾಜಕುಮಾರ್ ದಂಪತಿಯ ಕಾರಿಗೆ ಮುತ್ತಿಕೊಂಡು ಜಯಘೋಷಗಳನ್ನು ಮೊಳಗಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. +ನಂತರ ಶಿವಮೊಗ್ಗ ನಗರಕ್ಕೆ ಆಗಮಿಸಿದ ಶಿವರಾಜ್ಕುಮಾರ್ ದಂಪತಿಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭದ್ರಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೀತಾ ಶಿವರಾಜಕುಮಾರ್, ಕಾರ್ಯಕರ್ತರು ಮತ್ತು ಜನರ ಉತ್ಸಾಹ ನೋಡಿದರೆ ಮನಸ್ಸಿಗೆ ನೆಮ್ಮದಿಯಾಗುತ್ತದೆ. +ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಉದ್ದೇಶದಿಂದಲೇ ಸ್ಪರ್ಧೆ ಮಾಡಿದ್ದೇನೆ. ಜನರ ಪ್ರತಿಕ್ರಿಯೆ ನೋಡಿದರೆ ನಮ್ಮ ವಿಶ್ವಾಸ ಹೆಚ್ಚುತ್ತಿದೆ ಎಂದರು.ಶಿವರಾಜ್ಕುಮಾರ್ ಮಾತನಾಡಿ, ಇಂದಿನಿಂದಲೇ ಪ್ರಚಾರ ಆರಂಭಿಸುತ್ತೇವೆ. ಮಾ.24 ರಿಂದ ನಿರಂತರವಾಗಿ ಪ್ರಚಾರಗಳು ಜರುಗಲಿವೆ. ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ನಾನು ಗೀತಾ ಅವರ ಪರವಾಗಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದರು. +2019 ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ಕುಮಾರ್ ಸ್ಪರ್ಧೆ ಮಾಡಿದ್ದರು. ಅವರ ಸಹೋದರ ಮಧು ಬಂಗಾರಪ್ಪ ಆಗ ಜೆಡಿಎಸ್ನ ಶಾಸಕರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದ್ದು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾಗಿದ್ದಾರೆ. ಅವರ ಬೆನ್ನಲ್ಲೇ ಗೀತಾ ಶಿವರಾಜಕುಮಾರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. +ಮಾ.8 ರಂದು ಕಾಂಗ್ರೆಸ್ ಪ್ರಕಟಿಸಿದ 7 ಕ್ಷೇತ್ರಗಳ ಮೊದಲ ಪಟ್ಟಿಯಲ್ಲಿ ಗೀತಾ ಶಿವರಾಜಕುಮಾರ್ ಗೆ ಶಿವಮೊಗ್ಗದಲ್ಲಿ ಸ್ರ್ಪಧಿಸಲು ಅವಕಾಶ ನೀಡಿತ್ತು. ಮೊನ್ನೆ ಬೆಂಗಳೂರಿನಲ್ಲಿ ಚಲನಚಿತ್ರ ನಿರ್ಮಾಪಕರನ್ನು ಭೇಟಿ ಮಾಡಿದ್ದ ಶಿವರಾಜ್ಕುಮಾರ್ ದಂಪತಿ ಇಂದು ಕ್ಷೇತ್ರಕ್ಕೆ ಭೇಟಿ ನೀಡಿದರು. +ಶಿವಮೊಗ್ಗ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಶಿವರಾಜ್ಕುಮಾರ್ ದಂಪತಿ ಈ ಬಾರಿ ಶಿವಮೊಗ್ಗದಲ್ಲಿ ಗೆಲುವು ಸಾಧಿಸಬೇಕೆಂಬ ಪಣ ತೊಟ್ಟಿದ್ದು, ಪ್ರಚಾರಕ್ಕೆ ಧುಮುಕಿದ್ದಾರೆ.ಜಿಲ್ಲೆಯ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದು, ಗೀತಾ ಶಿವರಾಜ್ಕುಮಾರ್ರನ್ನು ಗೆಲ್ಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. +ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ರಾಘವೇಂದ್ರ ಶಿವಮೊಗ್ಗದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಮರು ಆಯ್ಕೆಯನ್ನು ಬಯಸಿ ಸ್ಪರ್ಧಿಸುತ್ತಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರಗಳ ಪೈಕಿ ಶಿವಮೊಗ್ಗ ಗಮನ ಸೆಳೆದಿದೆ. \ No newline at end of file diff --git a/eesanje/url_46_201_3.txt b/eesanje/url_46_201_3.txt new file mode 100644 index 0000000000000000000000000000000000000000..e41fb31bf8cf7bdeb9bcbf2e5931e2b5b5d4ff03 --- /dev/null +++ b/eesanje/url_46_201_3.txt @@ -0,0 +1,13 @@ +ಬಾಕಿ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಸರಣಿ ಸಭೆ +ಬೆಂಗಳೂರು,ಮಾ.20-ಲೋಕಸಭಾ ಚುನಾವಣೆಗೆ ಬಾಕಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿ ಇಂದೂ ಕೂಡ ಕಾಂಗ್ರೆಸ್ ನಾಯಕರು ಸರಣಿ ಸಭೆಗಳನ್ನು ಮುಂದುವರೆಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡುಬಿಟ್ಟಿದ್ದು, ವರಿಷ್ಠರ ಜೊತೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ. +ಈಗಾಗಲೇ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಬಾಕಿ ಇರುವ 21 ಕ್ಷೇತ್ರಗಳ ಪೈಕಿ ನಿನ್ನೆ ಮೊದಲ ಸುತ್ತಿನ ಸಭೆಯಲ್ಲಿ 16 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಆಖೈರುಗೊಂಡಿದೆ. ಬಾಕಿ ಉಳಿದ 5 ಕ್ಷೇತ್ರಗಳು ಕಗ್ಗಂಟಾಗಿದ್ದು, ಅವುಗಳನ್ನು ಇತ್ಯರ್ಥಪಡಿಸಲು ಹರಸಾಹಸ ನಡೆಸಲಾಗುತ್ತಿದೆ. +ಕಲಬುರಗಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಕ್ಷೇತ್ರಗಳಿಗೆ ತೀವ್ರ ಗೊಂದಲ ಉಂಟಾಗಿದೆ. ಹೀಗಾಗಿ ಮುಖ್ಯಮಂತ್ರಿಯವರೊಂದಿಗೆ ಹೈಕಮಾಂಡ್ ಪದೇಪದೇ ಚರ್ಚೆಗಳನ್ನು ನಡೆಸುತ್ತಿದೆ. ಸಂಜೆ ನಡೆಯುವ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಒಮ್ಮೆಲೇ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. +ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಲಕ್ಷ್ಮಣ್, ರಾಯಚೂರಿಗೆ ಕುಮಾರ್‍ನಾಯಕ್, ಕೊಪ್ಪಳಕ್ಕೆ ರಾಜಶೇಖರ್ ಹಿಟ್ನಾಳ್, ಬೀದರ್‍ಗೆ ರಾಜಶೇಖರ್ ಪಾಟೀಲ್, ದಾವಣಗೆರೆಗೆ ಪ್ರಭಾ ಮಲ್ಲಿಕಾರ್ಜುನ್, ಚಿತ್ರದುರ್ಗಕ್ಕೆ ಚಂದ್ರಪ್ಪ, ಧಾರವಾಡಕ್ಕೆ ವಿನೋದ್ ಅಸೋಟಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಬೆಳಗಾವಿಗೆ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿಗೆ ಪ್ರಿಯಾಂಕ ಜಾರಕಿಹೊಳಿ, ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್, ಬೆಂಗಳೂರು ಕೇಂದ್ರಕ್ಕೆ ಮನ್ಸೂರ್ ಆಲಿಖಾನ್, ಬೆಂಗಳೂರು ದಕ್ಷಿಣಕ್ಕೆ ಸೌಮ್ಯರೆಡ್ಡಿ ಸ್ರ್ಪಧಿಸುವುದು ಖಚಿತವಾಗಿದೆ. +ದಕ್ಷಿಣ ಕನ್ನಡಕ್ಕೆ ಪದ್ಮರಾಜ್‍ರ ಹೆಸರು ಬಹುತೇಕ ಆಖೈರುಗೊಂಡಿದ್ದರೂ ವಿನಯ್‍ಕುಮಾರ್ ಸೊರಕೆ ಅವರ ಪರವಾಗಿ ಕೆಲವು ನಾಯಕರು ಲಾಬಿ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರನ್ನು ಕಡೆಗಣಿಸಿ, ಸಚಿವ ಶಿವಾನಂದ ಪಾಟೀಲ್‍ರ ಪುತ್ರಿ ಸಂಯುಕ್ತ ಪಾಟೀಲರನ್ನು ಕಣಕ್ಕಿಳಿಸುವ ಚರ್ಚೆಗಳಾಗುತ್ತಿವೆ. +ಒಂದು ವೇಳೆ ವೀಣಾ ಕಾಶಪ್ಪನವರಿಗೆ ಟಿಕೆಟ್ ತಪ್ಪಿದರೆ, ಪಂಚಮಸಾಲಿ ಸಮುದಾಯದ ರಾಜ್ಯಾಧ್ಯಕ್ಷರೂ ಹಾಗೂ ಶಾಸಕರೂ ಆಗಿರುವ ವಿಜಯಾನಂದ ಕಾಶಪ್ಪನವರು ಅಸಮಾಧಾನಗೊಳ್ಳಲಿದ್ದು, ಸಹಜವಾಗಿ ಸಮುದಾಯದ ಅಸಮಾಧಾನಕ್ಕೆ ಕಾರಣವಾಗುವ ಆತಂಕ ಇದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಲಿಂಗಾಯತರ ಟ್ರಂಪ್‍ಕಾರ್ಡ್ ಅನ್ನು ಬಳಸಿ ಮತಗಳಿಕೆ ಮಾಡಿಕೊಂಡಿತ್ತು. ಸಮುದಾಯದ ಪ್ರಭಾವಿ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ವ್ಯಾಪಕ ಪ್ರಚಾರಗಳು ಕಾಂಗ್ರೆಸ್‍ಗೆ ಲಾಭ ತಂದುಕೊಟ್ಟಿದ್ದವು. ಈ ಬಾರಿ ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡುತ್ತಿದೆ ಎಂಬ ಪ್ರಚಾರಗಳು ಆರಂಭವಾಗಿವೆ. ಅದಕ್ಕೆ ಪೂರಕವಾಗಿ ಕಾಂಗ್ರೆಸ್ ಒಕ್ಕಲಿಗ ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡಿ ಮತ ಗಳಿಸುವ ಪ್ರಯತ್ನ ನಡೆಸುತ್ತಿದೆ. +ಬೆಂಗಳೂರು ಉತ್ತರ ಕ್ಷೇತ್ರದಿಂದ ಶಾಸಕ ಪ್ರಿಯಕೃಷ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಬಯಸಿದ್ದಾರೆ. ಆದರೆ ಅವರು ಇದಕ್ಕೆ ಒಪ್ಪಲು ಸಿದ್ಧರಿಲ್ಲ. ಮತ್ತೊಬ್ಬ ಪ್ರಬಲ ಆಕಾಂಕ್ಷಿ ರಾಜೀವ್ ಗೌಡ ತಮಗೆ ಅವಕಾಶ ಕೊಟ್ಟರೆ ಗೆದ್ದು ಬರುವುದಾಗಿ ಪ್ರತಿಪಾದಿಸುತ್ತಿದ್ದಾರೆ.ಉಳಿದಂತೆ ಉಡುಪಿ, ಚಿಕ್ಕಮಗಳೂರು, ಮೈಸೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲು ನಿರ್ಧರಿಸಲಾಗಿದೆ. +ಈಗಾಗಲೇ ಘೋಷಿತ ಕ್ಷೇತ್ರಗಳ ಪೈಕಿ ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ಟಿಕೆಟ್ ನೀಡಲಾಗಿದೆ.ಚಿತ್ರದುರ್ಗದಲ್ಲಿ ಎಂ.ಚಂದ್ರಪ್ಪ ಸ್ರ್ಪಸಲಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಬೇರೆಯವರ ಹೆಸರೂ ಚರ್ಚೆಯಲ್ಲಿದೆ. ಕಲಬುರಗಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಧಿಸುವುದಿಲ್ಲ ಎಂದು ಅಭಿಪ್ರಾಯ ತಿಳಿಸಿದ್ದು, ಅವರ ಮನವೊಲಿಸುವ ಪ್ರಯತ್ನ ನಡೆದಿದೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಅವರ ಅಳಿಯ ರಾಧಾಕೃಷ್ಣ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗುತ್ತಿದೆ. +ಕೋಲಾರಕ್ಕೆ ತಮ್ಮ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಸಚಿವ ಕೆ.ಎಚ್.ಮುನಿಯಪ್ಪ ಹಠ ಹಿಡಿದಿದ್ದಾರೆ. ಇದರ ನಡುವೆ ರಾಜ್ಯಸಭೆಯ ಮಾಜಿ ಸದಸ್ಯ ಎಲ್.ಹನುಮಂತಯ್ಯ ಅವರ ಮಧ್ಯಪ್ರವೇಶವಾಗಿರುವುದು ಟಿಕೆಟ್ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗುವಂತೆ ಮಾಡಿದೆ. +ಬಳ್ಳಾರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರನ್ನೇ ಮತ್ತೆ ಕಣಕ್ಕಿಳಿಸಬೇಕೆಂಬ ಒತ್ತಡಗಳಿವೆ. ಚಾಮರಾಜನಗರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್ ಅವರ ಹೆಸರು ಅಂತಿಮಗೊಂಡಿದ್ದರೂ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಒಂದಿಷ್ಟು ಅಡ್ಡಗಾಲು ಎದುರಾಗಿದೆ. +ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಬೇಕು ಎಂದು ಮುಖ್ಯಮಂತ್ರಿ ಪ್ರತಿಪಾದಿಸುತ್ತಿದ್ದರೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಕ್ಷೇತ್ರ ಬಿಟ್ಟುಕೊಡಲು ನಿರಾಕರಿಸುತ್ತಿದ್ದಾರೆ.ಬೀದರ್‍ನಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂದು ಸಚಿವ ಈಶ್ವರ್ ಖಂಡ್ರೆ ಒತ್ತಾಯ ಮಾಡುತ್ತಿದ್ದಾರೆ. \ No newline at end of file diff --git a/eesanje/url_46_201_4.txt b/eesanje/url_46_201_4.txt new file mode 100644 index 0000000000000000000000000000000000000000..23439427ac2a3865ab74818177e89f2ee0aa0ff7 --- /dev/null +++ b/eesanje/url_46_201_4.txt @@ -0,0 +1,11 @@ +ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ಜಾಹಿರಾತುಗಳಿಗೆ ಪೂರ್ವಾನುಮತಿ ಕಡ್ಡಾಯ +ಬೆಂಗಳೂರು,ಮಾ.20-ಪ್ರಸ್ತುತ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮಾ.16ರಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ರಾಜಕೀಯ ಜಾಹಿರಾತುಗಳಿಗೆ ಚುನಾವಣಾ ಆಯೋಗದ ಪೂರ್ವಾನುಮತಿ ಅಗತ್ಯ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದರು. +ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಲೋಕಸಭೆ ಚುನಾವಣೆ 2024ರ ಅಂಗವಾಗಿ ಚುನಾವಣೆ ಸಮಯದಲ್ಲಿ ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. +ಮತದಾನ ಪ್ರಾರಂಭವಾಗುವ 48 ಗಂಟೆಗೂ ಮುನ್ನ ಸಮೀಕ್ಷೆ ಮಾಡುವಂತಿಲ್ಲ. ಮುದ್ರಣ ಮಾಧ್ಯಮಗಳು ಆ ಸಂದರ್ಭದಲ್ಲಿ ಪ್ರಕಟಿಸುವ ಜಾಹಿರಾತುಗಳಿಗೆ ಆಯೋಗದ ಪೂರ್ವಾನುಮತಿ ಪಡೆಯಬೇಕು. ದೃಶ್ಯ ಮಾಧ್ಯಮಗಳು ಕೂಡ ಪ್ರಕಟಿಸುವ ಜಾಹಿರಾತಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು. +ಚುನಾವಣಾ ಸಂದರ್ಭದಲ್ಲಿ ಮಾಧ್ಯಮಗಳ ಪಾತ್ರವು ಪ್ರಮುಖವಾಗಿದೆ. ಎಂಸಿಎಂಸಿ ಸಮಿತಿಯ ಅನುಮತಿ ಪಡೆಯಬೇಕು. ಗುರುತಿಸಲ್ಪಟ್ಟ ಅಗತ್ಯ ಸೇವೆಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಅಂಚೆ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ನೋಡೆಲ್ ಅಧಿಕಾರಿಗಳನ್ನು ಅದಕ್ಕಾಗಿ ನೇಮಿಸಲಾಗಿದೆ ಎಂದು ಹೇಳಿದರು. +ಮತಗಟ್ಟೆ ಸಮೀಕ್ಷೆ ಇಲ್ಲ:ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಿಂದ ಕೊನೆಯ ಹಂತದ ಮತದಾನ ಮುಗಿಯುವವರೆಗೂ ಮತಗಟ್ಟೆ ಅಭಿಪ್ರಾಯ ಸಂಗ್ರಹ ಅಥವಾ ಸಮೀಕ್ಷೆ ಮಾಹಿತಿಯನ್ನು ಪ್ರಕಟಿಸುವಂತಿಲ್ಲ ಎಂದು ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ತಿಳಿಸಿದರು. ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಮಾಡಲು ಅವಕಾಶವಿಲ್ಲ. ಹಾಗೊಂದು ವೇಳೆ ಮಾಡಿದರೆ ಅಪರಾಧವಾಗಲಿದೆ. ಒಬ್ಬರೇ ಅಭ್ಯರ್ಥಿ ಪರವಾಗಿ ಸುದ್ದಿ ಪ್ರಕಟಿಸಿದರೆ ಅದು ಪಾವತಿ ಸುದ್ದಿಯಾಗುತ್ತದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಎರಡೂವರೆ ಸಾವಿರ ಪ್ರಕರಣಗಳು ದಾಖಲಾಗಿದ್ದವು ಎಂದರು. +ಬರ ಪರಿಹಾರ ಕಾರ್ಯಗಳಿಗೆ ಅಡ್ಡಿ ಇಲ್ಲ:ಈಗಾಗಲೇ ರಾಜ್ಯದಲ್ಲಿ ಘೋಷಣೆಯಾಗಿರುವ ಬರಪೀಡಿತ ತಾಲ್ಲೂಕುಗಳಲ್ಲಿ ಬೋರ್‍ವೆಲ್ ಕೊರೆಸುವುದು, ನೀರು ಪೂರೈಕೆಯಂತಹ ತುರ್ತು ಕಾರ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ನೈಸರ್ಗಿಕ ವಿಕೋಪಕ್ಕೆ ಸಂಬಂಧಿಸಿದ ಸಭೆಯ ಹೊರತು ಬೇರೆ ರೀತಿಯ ಸಭೆಗಳನ್ನು ಮುಖ್ಯಮಂತ್ರಿಗಳು, ಸಚಿವರು ಮಾಡುವಂತಿಲ್ಲ. ಒಂದು ವೇಳೆ ಅಗತ್ಯಬಿದ್ದರೆ ಮುಖ್ಯ ಚುನಾವಣಾಧಿಕಾರಿಗಳ ಅನುಮತಿ ಪಡೆಯಬೇಕು. +ಸಾರ್ವಜನಿಕ ರ್ಯಾಲಿಗಳಲ್ಲಿ ವಾಹನಗಳ ಮಿತಿಯನ್ನು 10ಕ್ಕೆ ನಿಗದಿಗೊಳಿಸಲಾಗಿದೆ. ಜಾಹಿರಾತು ಪ್ರಕಟಣೆಗೆ ಆಯೋಗದ ಪೂರ್ವ ಪ್ರಮಾಣಿಕರಣವಾಗಬೇಕು ಎಂದು ಹೇಳಿದರು. ಈಗಾಗಲೇ ರಾಜಕೀಯ ಪಕ್ಷಗಳಿಗೂ ನೀತಿ ಸಂಹಿತೆ ಪಾಲನೆ ಮಾಡಲು ಸೂಚನೆ ನೀಡಲಾಗಿದೆ ಎಂದರು. +ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಮಾತನಾಡಿ, ಚುನಾವಣಾ ಆಯೋಗ ನಿಗದಿಪಡಿಸಿರುವ ಅತ್ಯವಶ್ಯಕ 16 ಸೇವೆಗಳಲ್ಲಿ ಮಾಧ್ಯಮದವರು ಬರುತ್ತಾರೆ. ಇಡೀ ದಿನ ಚುನಾವಣಾ ಕಾರ್ಯಕ್ಕೆ ನಿಯೋಜನೆಯಾದವರು ನಮೂನೆ 12ಡಿ ಬಳಕೆ ಮಾಡಬೇಕು. ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಂಥವರಿಗೆ ಅಂಚೆ ಮತದಾನ ಕೇಂದ್ರದಲ್ಲಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು. +ವಿಶೇಷ ಅಧಿಕಾರಿ(ಐಟಿ ಮತ್ತು ಮಾಧ್ಯಮ) ಎ.ವಿ.ಸೂರ್ಯಸೇನ ಮಾತನಾಡಿ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮಾಹಿತಿ ಪರಿಶೀಲನೆಗೆ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಸೋಶಿಯಲ್ ಮೀಡಿಯ ನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವ ಮಾಹಿತಿಯನ್ನು ಪರಿಶೀಲಿಸಲಾಗುತ್ತದೆ. ಅಭ್ಯರ್ಥಿ ಹಾಗೂ ಪಕ್ಷದ ವೈಯಕ್ತಿಕ ಖಾತೆಯಲ್ಲಿ ವೈಯಕ್ತಿಕ ವಿಚಾರ ಪ್ರಕಟಿಸಿದರೆ ಚುನಾವಣಾ ವೆಚ್ಚಕ್ಕೆ ಪರಿಗಣಿಸಲಾಗುವುದಿಲ್ಲ. +ಆದರೆ ಪ್ರಾಯೋಜಿತವಾಗಿದ್ದರೆ ಅದು ಚುನಾವಣಾ ವೆಚ್ಚಕ್ಕೆ ಸೇರ್ಪಡೆಯಾಗುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಪ್ರಕಟವಾಗುವ ಮಾಹಿತಿಯನ್ನು ಟ್ರಾಕ್ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕ ಮಂಜುನಾಥ್ ದೊಳ್ಳಿನ, ಹಿರಿಯ ಪತ್ರಕರ್ತ ಈಶ್ವರ್ ದೈತೋಟ ಉಪಸ್ಥಿತರಿದ್ದರು. \ No newline at end of file diff --git a/eesanje/url_46_201_5.txt b/eesanje/url_46_201_5.txt new file mode 100644 index 0000000000000000000000000000000000000000..fb0bc474423e4ec626d5f8107a7a9315a5070fd8 --- /dev/null +++ b/eesanje/url_46_201_5.txt @@ -0,0 +1,6 @@ +ಜೆಡಿಎಸ್ ಜೊತೆ ಮೈತ್ರಿಯಲ್ಲಿ ಅಪಸ್ವರದ ವರದಿಗಳ ಬೆನ್ನಲ್ಲೇ ಬಿಜೆಪಿ ಅಲರ್ಟ್ +ಬೆಂಗಳೂರು,ಮಾ.20-ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ತಿಳಿಸಿದ್ದಾರೆ. +ಕರ್ನಾಟಕದಲ್ಲಿ ಮೈತ್ರಿ ವಿಚಾರವಾಗಿ ಯಾವುದೇ ಗೊಂದಲ ಬೇಡ. ಎಲ್ಲವನ್ನೂ ಕುಳಿತು ಮಾತನಾಡಿ ಬಗೆಹರಿಸೋಣ. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡುವುದು ಬೇಡ. ನಿಮ್ಮ ಹೃದಯದ ಚಿಕಿತ್ಸೆ ಸುಸೂತ್ರವಾಗಿ ನೆರವೇರಲಿ. ನಿಮ್ಮ ಆರೋಗ್ಯ ಸುಧಾರಿಸಿದ ನಂತರ ಮಾತುಕತೆ ನಡೆಸೋಣ. ಸದ್ಯದ ಮಟ್ಟಿಗೆ ನಿಮ್ಮ ಆರೋಗ್ಯವೇ ಮೊದಲ ಆದ್ಯತೆ ಆಗಿರಲಿ ಎಂದಿದ್ದಾರೆ. +ನೀವು ಗುಣಮುಖರಾದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಪ್ರಧಾನಿ ನರೇಂದ್ರಮೋದಿ ಅವರನ್ನು ಒಂದೇ ವೇದಿಕೆಯಲ್ಲಿ ಬರುವಂತೆ ಮಾಡಿ ಕಾರ್ಯಕ್ರಮ ಮಾಡೋಣ ಎಂದು ಬಿಜೆಪಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸುವೆ. ಸೋಮವಾರ ಪಕ್ಷದ ಸಭೆ ನಡೆಸಿದ್ದ ಕುಮಾರಸ್ವಾಮಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಬಿಜೆಪಿ ನಾಯಕರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. +ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಅಭಿಯಾನ ನಡೆದರೂ ಆ ಜಿಲ್ಲೆಗಳ ಜೆಡಿಎಸ್ ನಾಯಕರ ಬಳಿ ಸೌಜನ್ಯಕ್ಕೂ ಮಾತುಕತೆ ನಡೆಸಿಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೂ ಆಹ್ವಾನ ನೀಡಿಲ್ಲ. ಅಲ್ಲದೆ ಕೇವಲ ಎರಡು ಸೀಟಿಗಾಗಿ ಬಿಜೆಪಿ ಜೊತೆ ಇಷ್ಟೆಲ್ಲ ಹೊಂದಾಣಿಕೆ ಮಾಡುವ ಅಗತ್ಯವಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅಲರ್ಟ್ ಆಗಿದೆ. +ಈ ಎಲ್ಲ ಬೆಳವಣಿಗೆಗಳ ಮಧ್ಯೆಯೂ ಮಂಗಳವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಅರೆಸೇನಾ ಪಡೆಗಳನ್ನು ಚುನಾವಣಾ ಭದ್ರತೆಗಾಗಿ ಕಳುಹಿಸಬೇಕು ಎಂದು ಆಗ್ರಹಿಸಿದ್ದರು. ಬಳಿಕ ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದರು. \ No newline at end of file diff --git a/eesanje/url_46_201_6.txt b/eesanje/url_46_201_6.txt new file mode 100644 index 0000000000000000000000000000000000000000..c6fda759e1dc4f9471262525300349cd26a76df6 --- /dev/null +++ b/eesanje/url_46_201_6.txt @@ -0,0 +1,8 @@ +ಬೆಂಗಳೂರಿನಲ್ಲಿ 8300 ಜನರ ಬಳಿ ಲೈಸೆನ್ಸ್ಡ್ ಗನ್..! +ಬೆಂಗಳೂರು, ಮಾ.20-ನಗರದಲ್ಲಿ 8300 ಮಂದಿ ಶಸ್ತ್ರಾಸ್ತ್ರಗಳ ಪರವಾನಗಿ (ಗನ್ ಲೈಸೆನ್ಸ್) ಪಡೆದಿದ್ದಾರೆ.ಗಣ್ಯವ್ಯಕ್ತಿಗಳು, ಜಮೀನ್ದಾರರು, ಸೆಕ್ಯುರಿಟಿ ಗಾರ್ಡ್ಗಳು, ಉದ್ಯಮಿಗಳು ಹಾಗೂ ಇತರರು ಬಂದೂಕು, ಡಬಲ್ ಬ್ಯಾರೆಲ್ ಗನ್, ಸಿಂಗಲ್ ಬ್ಯಾರೆಲ್ ಗನ್, ಶಾರ್ಟ್ ಗನ್, ಪಿಸ್ತೂಲು, ರಿವಾಲ್ವರ್ಗಳಿಗೆ ಪರವಾನಗಿ ಪಡೆದಿದ್ದಾರೆ. +ಆಸ್ತಿ ಮತ್ತು ಸಂಪತ್ತು ರಕ್ಷಣೆಗಾಗಿ, ಜೀವ ಭಯದಿಂದ ಶಸ್ತ್ರಾಸ್ತ್ರಗಳಿಗೆ ಪರವಾನಗಿ ಪಡೆದು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೂಡಲೇ ಜಾರಿಗೆ ಬರುವಂತೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಸ್ತ್ರಾಸ್ತ್ರ ಹೊಂದಿರುವವರು ತಮ್ಮ ಶಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಲು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಆದೇಶಿಸಿದ್ದಾರೆ. +ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾರ್ವಜನಿಕರ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಯನ್ನು ಕಾಪಾಡುವ ಸಲುವಾಗಿ ಶಸ್ತ್ರ ಪರವಾನಗಿಯನ್ನು ಮಂಜೂರು ಮಾಡುವುದು ಹಾಗೂ ಪರವಾನಗಿ ಹೊಂದಿರುವ ಸಾರ್ವಜನಿಕರು ತಾವು ಹೊಂದಿರುವ ಆಯುಧಗಳನ್ನು ಒಯ್ಯುವುದಾಗಲಿ, ಇಟ್ಟುಕೊಳ್ಳುವುದು, ಬಳಕೆಯನ್ನು ನಿಬರ್ಂಸಲಾಗಿದೆ. +ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಶಸ್ತ್ರಗಳನ್ನು ಠೇವಣಿ ಮಾಡಿದ ಪರವಾನಗಿದಾರರು ಜೂನ್ 11ರ ನಂತರ ಠಾಣೆಯ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ತಮ್ಮ ಶಸ್ತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳಬಹುದಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. +ವಿನಾಯಿತಿ: ಶಸ್ತ್ರ ಪರವಾನಗಿ ಹೊಂದಿರುವ ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಸ್ತ್ರ, ಪರವಾನಿಗೆ ಹೊಂದಿರುವ ನ್ಯಾಷನಲ್ ರೈಫಲ್ ಅಸೋಸಿಯೇಷನ್ ಸದಸ್ಯರುಗಳಿಗೆ ಮತ್ತು ಕೊಡವ ಸಮಾಜದ ಶಸ್ತ್ರ ಪರವಾನಿಗೆದಾರರಿಗೆ ಶಸ್ತ್ರಗಳನ್ನು ಠಾಣೆಯಿಂದ ಠೇವಣಿ ಮಾಡುವ ಪ್ರಕ್ರಿಯೆಯಿಂದ ವಿನಾಯಿತಿ ನೀಡಲಾಗಿದೆ. ಶಸ್ತ್ರ ಪರವಾನಗಿ ವಿನಾಯಿತಿ ಕೋರಿ ತಮ್ಮ ವಿಭಾಗದ ಉಪಪೊಲೀಸ್ ಆಯುಕ್ತರವರ ಕಚೇರಿಯಲ್ಲಿ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. +ಅಂತಹ ಅರ್ಜಿಗಳನ್ನು ಸಂಬಂಧಪಟ್ಟ ಉಪಪೊಲೀಸ್ ಆಯುಕ್ತರು ಪರಿಶೀಲಿಸಿ ಸ್ಪಷ್ಟ ಅಭಿಪ್ರಾಯ ವರದಿಯೊಂದಿಗೆ ಮುಂದಿನ ಕ್ರಮಕ್ಕಾಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಪರಿಶೀಲನಾ ಸಮಿತಿಗೆ ಕಳುಹಿಸಲಾಗುತ್ತದೆ. +ಪರಿಶೀಲನಾ ಸಮಿತಿ:ಈ ಪರಿಶೀಲನಾ ಸಮಿತಿಯಲ್ಲಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರು ಹಾಗೂ ಆಡಳಿತ ವಿಭಾಗದ ಡಿಸಿಪಿ ಇರುತ್ತಾರೆ. ಇವರು ಶಸ್ತ್ರ ಪರವಾನಗಿ ವಿನಾಯಿತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಯಾರಿಗೆ ವಿನಾಯಿತಿ ನೀಡಬೇಕೆಂದು ನಿರ್ಧರಿಸುತ್ತಾರೆ. \ No newline at end of file diff --git a/eesanje/url_46_201_7.txt b/eesanje/url_46_201_7.txt new file mode 100644 index 0000000000000000000000000000000000000000..ec360c117643fd86f0e95eae3bee98ee35de31f1 --- /dev/null +++ b/eesanje/url_46_201_7.txt @@ -0,0 +1,8 @@ +ರಾಜ್ಯದಲ್ಲಿ ಕುರುಡು ಕಾಂಚಾಣ ಕುಣಿತ : 1.42 ಕೋಟಿ ನಗದು, 4.7 ಕೋಟಿ ರೂ. ಮೌಲ್ಯದ ವಸ್ತುಗಳು ವಶ +ಬೆಂಗಳೂರು,ಮಾ.20-ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ನಾಲ್ಕು ದಿನ ಕಳೆಯುವಷ್ಟರಲ್ಲೇ ಕುರುಡು ಕಾಂಚಾಣ ಬಾರಿ ಸದ್ದು ಮಾಡುತ್ತಿದ್ದು , 1.42 ಕೋಟಿ ನಗದು ಸೇರಿದಂತೆ ಒಟ್ಟು 4.7 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ. ತಡರಾತ್ರಿ ಮಿಂಚಿನ ಕಾರ್ಯಾಚರಣೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 14 ಲಕ್ಷ ರೂ. ಬೆಲೆ ಸೀರೆಗಳನ್ನು ಜಪ್ತಿ ಮಾಡಿದ್ದಾರೆ. +ಶನಿವಾರ, ಭಾನುವಾರ, ಸೋಮವಾರ, ಮಂಗಳವಾರ ಸೇರಿದಂತೆ ನಾಲ್ಕು ದಿನಗಳಲ್ಲಿ ರಾಜ್ಯದ ವಿವಿಧೆಡೆ ಈವರೆಗೂ 1.42 ಕೋಟಿ ನಗದು, 5.45 ಲಕ್ಷ ಮೌಲ್ಯದ ಉಚಿತ ಉಡುಗೊರೆ, ಡ್ರಗ್ಸ್, ಮದ್ಯ ಸೇರಿದಂತೆ ಸರಿಸುಮಾರು 5 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಈವರೆಗೂ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ 135 ಎಫ್‍ಐಆರ್‍ಗಳನ್ನು ದಾಖಲಿಸಿ ನಗದು, ಬೆಲೆ ಬಾಳುವ ಉಡುಗೊರೆಗಳು, ಸಂಗ್ರಹಿಸಿಟ್ಟಿದ್ದ ಸೀರೆ, ಡ್ರಗ್ಸ್ ಸೇರಿದಂತೆ ವಶಪಡಿಸಿಕೊಂಡಿರುವ ವಸ್ತುಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. +ಮಂಡ್ಯದ ಕೆ.ಆರ್‍ಪೇಟೆಯಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 99,20,000 ಹಣವನ್ನು ಜಪ್ತಿ ಮಾಡಿದರೆ, ಮೈಸೂರಿನ ಹುಣಸೂರು ತಾಲ್ಲೂಕಿನಲ್ಲಿ 15 ಲಕ್ಷ ಜಪ್ತಿ ಮಾಡಲಾಗಿದೆ.ಇನ್ನು ಪೊಲೀಸ್, ಕ್ಷಿಪ್ರಪಡೆ, ಸ್ಥಿರ ಕಣ್ಗಾವಲು ತಂಡ 994.31 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡಿದೆ. ಇದರ ಮೌಲ್ಯ 2,37 ಲಕ್ಷ ರೂ.ಗಳು. ಜೊತೆಗೆ ಅಬಕಾರಿ ಇಲಾಖೆ 98,644 ಲೀಟರ್ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದು, ಇದರ ಮೌಲ್ಯ 3.17 ಕೋಟಿ ರೂ.ಇದರ ಜೊತೆಗೆ ಡ್ರಗ್ಸ್ ಮೂಲಕವೂ ಮತರಾರರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. +ಈವರೆಗೆ 3.565 ಕೆಜಿ ಮೌಲ್ಯ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದರ ಮೌಲ್ಯ 5,06, 950 ಲಕ್ಷವಾಗಿದೆ. ಈ ಎಲ್ಲಾ ಅಕ್ರಮಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ 135 ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಚುನಾವಣೆ ಯಾವುದೇ ಭಯಭೀತಿ ಇಲ್ಲದೆ ನಡೆಯುವ ಉದ್ದೇಶದಿಂದ 825 ಸಶಸ್ತ್ರಾಗಳನ್ನು ವಶಕ್ಕೆ ವಶಕ್ಕೆ ಪಡೆದುಕೊಳ್ಳಲಾಗಿದೆ. 7 ಸಶಸ್ತ್ರಗಳ ಪರವಾನಗಿ ರದ್ದು ಮಾಡಲಾಗಿದೆ. ಇನ್ನು ಅಬಕಾರಿ ಇಲಾಖೆಯಡಿ 142 ಪ್ರಕರಣ, ಪರವಾನಗಿ ಉಲ್ಲಂಘನೆ ಅಡಿಯಲ್ಲಿ 126 ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. +ಕೇವಲ ನಾಲ್ಕು ದಿನದಲ್ಲೇ ಇಷ್ಟು ಪ್ರಮಾಣದಲ್ಲಿ ಆಯೋಗ ಹತ್ತಿರತ್ತಿರ 5 ಕೋಟಿ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಮತದಾನ ನಡೆಯಲು ಇನ್ನು ಒಂದು ತಿಂಗಳಿಗೂ ಹೆಚ್ಚು ಕಾಲಾವಕಾಶ ಇರುವುದರಿಂದ ಕುರುಡು ಕಾಂಚಾಣ ಚುನಾವಣಾ ಸಂದರ್ಭದಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. +ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಆಯೋಗ ಈ ಬಾರಿಯೂ ರಾಜ್ಯದೆಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಮುಖ್ಯವಾಗಿ ಜಿಲ್ಲೆಗಳು, ತಾಲ್ಲೂಕುಗಳು ಸಂಪರ್ಕಿಸುವ ಚೆಕ್ ಪೋಸ್ಟ್ ಗಳು, ಗಡಿಭಾಗ ಸೇರಿದಂತೆ ಮತ್ತಿತರ ಕಡೆ ಭದ್ರತಾ ಪಡೆಯನ್ನು ಹೆಚ್ಚಿಸಲಾಗಿದೆ. ವಿಶೇಷವಾಗಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಮೊದಲ ಬಾರಿಗೆ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. +ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುವ ತಂತ್ರವನ್ನು ಕರಗತ ಮಾಡಿಕೊಂಡಿದ್ದಾರೆ ಎಂಬುದಕ್ಕೆ ವಶಪಡಿಸಿಕೊಂಡಿರುವ ವಸ್ತುಗಳೇ ಸಾಕ್ಷಿಯಾಗಿವೆ. \ No newline at end of file diff --git a/eesanje/url_46_201_8.txt b/eesanje/url_46_201_8.txt new file mode 100644 index 0000000000000000000000000000000000000000..9113169364a147f4d52587119e6aff84b805d5eb --- /dev/null +++ b/eesanje/url_46_201_8.txt @@ -0,0 +1,12 @@ +22ರಂದು ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಯಡಿಯೂರಪ್ಪ +ನವದೆಹಲಿ,ಮಾ.20-ರಾಜ್ಯದ ಬಾಕಿರುವ ಐದು ಲೋಕಸಭಾ ಕ್ಷೇತ್ರಗಳಿಗೆ ಇದೇ 22ರಂದು ಕೇಂದ್ರ ವರಿಷ್ಠರು ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಜೊತೆ ಚರ್ಚಿಸಲಾಗಿದೆ. 22ರಂದು ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಚರ್ಚಿಸಿದ ಬಳಿಕ ಅಂತಿಮ ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದರು. +ಬೆಳಗಾವಿ, ಉತ್ತರಕನ್ನಡ, ಕೋಲಾರ, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲಾಗಿದೆ. ಕೆಲವು ಕಾರಣಗಳಿಂದ ಚಿತ್ರದುರ್ಗ ಮತ್ತು ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಬಹುತೇಕ ಮೂರು ಕ್ಷೇತ್ರಗಳಿಗೆ 22ರಂದು ಅಭ್ಯರ್ಥಿ ಹೆಸರು ಘೋಷಣೆಯಾಗಬಹುದು. ಯಾರನ್ನು ಕಣಕ್ಕಿಳಿಸಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸುತ್ತದೆ. ವರಿಷ್ಠರ ತೀರ್ಮಾನವನ್ನು ಎಲ್ಲರೂ ಗೌರವಿಸಬೇಕು, ಪ್ರಧಾನಿ ನರೇಂದ್ರಮೋದಿ ಅವರನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾದರೆ ನಾವು ಎಲ್ಲದಕ್ಕೂ ಸಿದ್ಧರಾಗಬೇಕೆಂದು ಮನವಿ ಮಾಡಿದರು. +ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕೋಲಾರ ಕ್ಷೇತ್ರವನ್ನು ನಾವು ಜೆಡಿಎಸ್‍ಗೆ ಬಿಟ್ಟುಕೊಡಬೇಕು. ನಮ್ಮ ಸಂಸದರಾಗಿರುವ ಮುನಿಸ್ವಾಮಿಗೆ ಈಗಾಗಲೇ ಮಾಹಿತಿಯನ್ನು ನೀಡಲಾಗಿದೆ. ಇದಕ್ಕೆ ಅವರು ಸಮ್ಮತಿಸಿದ್ದಾರೆ. ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಬಿಎಸ್‍ವೈ ಸ್ಪಷ್ಟಪಡಿಸಿದರು. +ಟಿಕೆಟ್ ಆಕಾಂಕ್ಷಿಗಳಾಗಿದ್ದ ಜೆ.ಸಿ.ಮಾಧುಸ್ವಾಮಿ, ಕರಡಿ ಸಂಗಣ್ಣ ಸೇರಿದಂತೆ ಅಸಮಾಧಾನಿತರ ಜೊತೆ ನಾನು ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅವರಿಗೆ ಯಾವುದೇ ರೀತಿಯ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಸೂಚಿಸಲಾಗಿದೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು. +ಇನ್ನು ಪಕ್ಷದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ, ಮಗನಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಪುತ್ರನಿಗೆ ನಾನೇಕೆ ಟಿಕಟ್ ತಪ್ಪಿಸಲಿ, 25 ಕ್ಷೇತ್ರಗಳಿಗೆ ನಾನೊಬ್ಬನೆ ತೀರ್ಮಾನಿಸುವುದಿಲ್ಲ. ವರಿಷ್ಠರು ಅಳೆದುತೂಗಿ ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂದು ಸಮರ್ಥಿಸಿಕೊಂಡರು. ಈಶ್ವರಪ್ಪನವರಿಗೆ ಆತುರದ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಲಾಗಿದೆ. ನಾನೇ ಅವರ ಜೊತೆ ಮಾತುಕತೆ ನಡೆಸಲು ಸಿದ್ಧನಿದ್ದೇನೆ. ಆದರೆ ಅವರು ಆಧಾರ ರಹಿತ ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಸಿಡಿಮಿಡಿಗೊಂಡರು. +ಕಳೆದ ಜೂನ್‍ನಲ್ಲೇ ಪುತ್ರನಿಗೆ ವಿಧಾನಪರಿಷತ್ ಸ್ಥಾನ ನೀಡುತ್ತೇವೆ ಎಂದು ಹೇಳಿದ್ದೆವು. ಅದಕ್ಕೆ ಅವರು ಒಪ್ಪಲಿಲ್ಲ. ಹಾವೇರಿಗೆ ಬೇರೆ ಬೇರೆ ಕಾರಣಗಳಿಗಾಗಿ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಇದನ್ನು ಅವರು ಅರ್ಥ ಮಾಡಿಕೊಳ್ಳದಿದ್ದರೆ ಹೇಗೆ? ಎಂದು ಬಿಎಸ್‍ವೈ ಪ್ರಶ್ನಿಸಿದರು. +ಕರಡಿಸಂಗಣ್ಣ , ಡಿ.ವಿ.ಸದಾನಂದಗೌಡ ಸೇರಿದಂತೆ ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ನಂಬಿಕೆ ಇದೆ. ಎಲ್ಲರೂ ಮೋದಿಗಾಗಿ ಶ್ರಮಿಸಬೇಕು. ರಾಜ್ಯದಲ್ಲಿ ಉತ್ತಮ ಫಲಿತಾಂಶ ಬರಬೇಕೆಂದರೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು. +28 ಕ್ಷೇತ್ರಗಳಲ್ಲಿ ನಾವು ಗೆಲ್ಲುವ ವಾತಾವರಣವಿದೆ. ಜೆಡಿಎಸ್ ಮತ್ತು ನಾವು ಒಗ್ಗಟ್ಟಾಗಿ ಪ್ರಚಾರ ನಡೆಸಿದರೆ ಇದೇನೂ ಕಷ್ಟಕರವಲ್ಲ. ಕಾಂಗ್ರೆಸ್ ಸರ್ಕಾರದಿಂದ ಜನರು ಬೇಸತ್ತು ಬಿಜೆಪಿಯತ್ತ ನೋಡುತ್ತಿದ್ದಾರೆ. ಇದನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ನಾನೇ ಪ್ರಚಾರ ಮಾಡುತ್ತೇನೆ. ಮೋದಿಯವರನ್ನು ಮೂರನೇ ಬಾರಿಗೆ ಅಕಾರಕ್ಕೆ ತರಬೇಕೆಂದರೆ ನಾವೆಲ್ಲರೂ ಶ್ರಮಿಸಬೇಕು. ಇದಕ್ಕಾಗಿ ಎಲ್ಲರೂ ಒಂದಾಗಬೇಕೆಂದು ಹೇಳಿದರು. +ಕಾಂಗ್ರೆಸ್‍ನವರು 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಅವರಿಗೆ ಸೂಕ್ತವಾದ ಅಭ್ಯರ್ಥಿಗಳೇ ಸಿಗುತ್ತಿಲ್ಲ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಸಂಪರ್ಕ ಮಾಡಿ ನಮ್ಮ ಪಕ್ಷಕ್ಕೆ ಬನ್ನಿ ಎಂದು ಗೋಗರೆಯುತ್ತಿದ್ದಾರೆ. ಪ್ರಧಾನಿ ಮೋದಿ ಮುಂದೆ ಅವರಿಗೆ ಹೇಳಿಕೊಳ್ಳುವ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. +ನನಗೆ ರಾಜ್ಯಪಾಲರನ್ನಾಗಿ ಮಾಡುವ ಆಶ್ವಾಸನೆ ನೀಡಲಾಗಿತ್ತು. ಸ್ಥಾನಮಾನಕ್ಕಿಂತ ಪಕ್ಷದ ಹಿತ ಮುಖ್ಯ ಎಂಬ ಕಾರಣಕ್ಕಾಗಿ ಅಧಿಕಾರವನ್ನು ತ್ಯಾಗ ಮಾಡಿದ್ದೇನೆ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ದುಡುಕಿನಲ್ಲಿ ಆತುರದ ನಿರ್ಧಾರ ಕೈಗೊಳ್ಳಬೇಡಿ ಎಂದು ಬಿಎಸ್‍ವೈ ಸಲಹೆ ಮಾಡಿದರು. \ No newline at end of file diff --git a/eesanje/url_46_201_9.txt b/eesanje/url_46_201_9.txt new file mode 100644 index 0000000000000000000000000000000000000000..0d6032cd7af0022267627b0cf846535d78e7dee8 --- /dev/null +++ b/eesanje/url_46_201_9.txt @@ -0,0 +1,11 @@ +ಕೃಷ್ಣಗಿರಿಯಲ್ಲಿ ಉಗ್ರರಿಗೆ ತರಬೇತಿ ನೀಡುತ್ತಿರುವ ಮಾಹಿತಿಯಿದ್ದರೂ ಕೇಂದ್ರ ಸುಮ್ಮನಿರೋದೇಕೆ..? : ಡಿ.ಕೆ.ಸುರೇಶ್ ಪ್ರಶ್ನೆ +ಬೆಂಗಳೂರು,ಮಾ.20-ಭಯೋತ್ಪಾದಕರಿಗೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ತರಬೇತಿ ನೀಡಲಾಗುತ್ತಿದೆ, ಅವರು ಬೆಂಗಳೂರು ಸೇರಿದಂತೆ ವಿವಿಧ ಕಡೆ ಬಾಂಬ್ ಸ್ಪೋಟಿಸುತ್ತಿದ್ದಾರೆ ಎಂಬ ಮಾಹಿತಿ ಗೊತ್ತಿದ್ದರೂ ಕ್ರಮ ತೆಗೆದುಕೊಳ್ಳದೆ ಕೇಂದ್ರ ಸರ್ಕಾರ ಮುಚ್ಚಿಟ್ಟಿರುವುದು ಯಾವ ಕಾರಣಕ್ಕೆ ಎಂದು ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದಲೂ ಕೇಂದ್ರದ ತನಿಖಾ ಸಂಸ್ಥೆಗಳು ಬಿಜೆಪಿಯವರ ಅಧೀನದಲ್ಲಿವೆ. ಬೇಹುಗಾರಿಕೆಯನ್ನು ಕಾಂಗ್ರೆಸ್‍ನವರ ವಿರುದ್ಧ ಛೂ ಬಿಡುವ ಬದಲಾಗಿ ಭಯೋತ್ಪಾದಕರ ವಿರುದ್ಧ ಬಳಸಿದ್ದರೆ ಬಾಂಬ್ ಸ್ಪೋಟದಂತಹ ಅನಾಹುತಗಳು ನಡೆಯುತ್ತಿರಲಿಲ್ಲ ಎಂದರು. +ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿದೆ. ಅವರು ದೇಶದ ವಿವಿಧೆಡೆ ಹೋಗಿ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಂದ ಮೇಲೆ ಭಯೋತ್ಪಾದನಾ ತರಬೇತಿ ಬಗ್ಗೆ ಅವರಿಗೆ ಮಾಹಿತಿ ಇದೆ ಎಂದರ್ಥ ಎಂದರು. +ಎಲ್ಲವೂ ಗೊತ್ತಿದ್ದರೂ ಏಕೆ ಕ್ರಮ ಕೈಗೊಳ್ಳಲಿಲ್ಲ, ಮುಚ್ಚಿಟ್ಟಿರುವುದು ಏಕೆ, ಯಾವ ಉದ್ದೇಶಕ್ಕೆ ಇದನ್ನು ಬಳಸಿಕೊಳ್ಳಲು ಬಯಸುತ್ತಿದ್ದಾರೆ . ಮುಚ್ಚಿಟ್ಟಿರುವುದರ ವಿರುದ್ಧ ತನಿಖೆ ಮತ್ತು ಕ್ರಮ ಎರಡೂ ಆಗಬೇಕಿದೆ ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದರು. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಟೀಕೆಗಳಿಗೆ ಉತ್ತರಿಸುವ ಸ್ಥಿತಿಯಲ್ಲಿ ನಾನಿಲ್ಲ. ಅವರು ಆರೋಗ್ಯ ಸರಿಯಿಲ್ಲ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲು ಅವರು ಗುಣಮುಖರಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನಂತರ ಅವರ ಟೀಕೆಗಳಿಗೆ ಪ್ರತಿಕ್ರಿಯಿಸುತ್ತೇನೆ ಎಂದರು. +ರಾಜಕಾರಣದಲ್ಲಿ ಎದುರಾಳಿ ಬಲಿಷ್ಠವಾಗಿರಬೇಕು. ಆಗಲೇ ಪ್ರಜಾಪ್ರಭುತ್ವಕ್ಕೆ ಅರ್ಥ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕುಮಾರಸ್ವಾಮಿ ಆರೋಗ್ಯ ಚೇತರಿಸಿಕೊಳ್ಳಲಿ. ಆದಷ್ಟು ಬೇಗ ಚುನಾವಣೆಗೆ ಮರಳಲಿ ಎಂದು ಹೇಳಿದರು. +ಕಾಂಗ್ರೆಸ್ ಪಕ್ಷ ಯಾರ ಕುತ್ತಿಗೆಯನ್ನೂ ಕೊಯ್ದಿಲ್ಲ, ಎಚ್.ಡಿ.ದೇವೇಗೌಡವರನ್ನು ದೇಶದ ಪ್ರಧಾನಿ ಮಾಡಿತ್ತು. ಹೀಗಾಗಿ ಅವರು ದೇಶಾದ್ಯಂತ ಗುರುತಿಸಿಕೊಂಡರು. ಇಲ್ಲವಾದರೆ 30 ಮಂದಿ ಮಾಜಿ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿರುತ್ತಿದ್ದರು. ಕಾಂಗ್ರೆಸ್ ಪಕ್ಷ ಯಾರಿಗೂ ಅನ್ಯಾಯ ಮಾಡಿಲ್ಲ ಎಂದರು. +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಾತ್ಯತೀತ ನಿಲುವಿನ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆಗಳು ಸ್ಮರಣಾರ್ಹ. ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ. ಈ ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳು ಬೇಕಿಲ್ಲ. ಪ್ರಾದೇಶಿಕ ಪಕ್ಷಗಳು ಸಾಕು ಎಂದು ಅವರು ಹೇಳಿದ್ದನ್ನು ನೆನಪಿಸಿಕೊಳ್ಳಬೇಕು ಎಂದರು. ಬಿಜೆಪಿಯವರು ಸಣ್ಣದನ್ನು ದೊಡ್ಡದಾಗಿ ಮಾಡುವ ಕಲೆಯಲ್ಲಿ ಸಿದ್ಧ ಹಸ್ತರು. ನಗರ್ತಪೇಟೆಯಲ್ಲಿನ ಪ್ರಕರಣವನ್ನು ವ್ಯಾಪಕವಾಗಿ ಬೆಂಬಲಿಸಿದ್ದಾರೆ. ಮಾಧ್ಯಮಗಳು ಅವರಿಗೆ ವ್ಯಾಪಕ ಪ್ರಚಾರ ನೀಡುತ್ತವೆ ಎಂಬ ಕಾರಣಕ್ಕಾಗಿಯೇ ಗಲಾಟೆ ಮಾಡುತ್ತಾರೆ ಎಂದು ಹೇಳಿದರು. +ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ. ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ, ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಬೆಂಗಳೂರು ಗ್ರಾಮಾಂತರದಲ್ಲಿ ನಾನು ಕೆಲಸ ಮಾಡಿದ್ದೇನೆ, ಅದಕ್ಕೆ ಕೂಲಿ ಕೇಳುತ್ತಿದ್ದೇನೆ. ಇಡೀ ದೇಶವೇ ಕೋವಿಡ್ ಸಂದರ್ಭದಲ್ಲಿ ಮನೆಯಲ್ಲಿದ್ದಾಗ ನಾನು ಬೀದಿಯಲ್ಲಿನ ಜನರ ನಡುವೆ ಕೆಲಸ ಮಾಡುತ್ತಿದ್ದೆ. ನಾನು ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ ಚರ್ಚೆಯಾಗುವುದಿಲ್ಲ. ಅನಗತ್ಯವಾಗಿ ವಿವಾದಕ್ಕೆ ಸಿಲುಕಿಸಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂದು ಕುಮಾರಸ್ವಾಮಿಯವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಸುರೇಶ್, ಉಡುಗೊರೆಗಳನ್ನು ಕೊಟ್ಟು, ಜನರ ಮನವೊಲಿಸುವ ಅವಶ್ಯಕತೆ ನಮಗಿಲ್ಲ. ಕುಮಾರಸ್ವಾಮಿ ಪ್ರಚಾರಕ್ಕಾಗಿ ಟೀಕೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_202_1.txt b/eesanje/url_46_202_1.txt new file mode 100644 index 0000000000000000000000000000000000000000..f54b2124e6fd5ce67be8ae7c5e36ee28001b7a86 --- /dev/null +++ b/eesanje/url_46_202_1.txt @@ -0,0 +1,4 @@ +ಬೆಂ.ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಿಂದ ಸೀರೆ ಹಂಚಿಕೆ : ಜೆಡಿಎಸ್ ಆರೋಪ +ಬೆಂಗಳೂರು,ಮಾ.20-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಸೀರೆ ಹಂಚಿಕೆ ಮಾಡಲು ಪ್ರಯತ್ನಿಸಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ರಾಮನಗರದ ದ್ಯಾವರಸೇಗೌಡನದೊಡ್ಡಿ ಬಳಿ ಸೀರೆ ಬಂಡಲ್‍ಗಳಿದ್ದ ಲಾರಿ ಪತ್ತೆಯಾಗಿತ್ತು. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸೇರಿದ್ದು ಎಂದು ಜೆಡಿಎಸ್ ಆಪಾದಿಸಿದೆ. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಕ್ಕರ್ ಹಂಚಲಾಗುತ್ತದೆ ಎಂದು ಆರೋಪ ಮಾಡಿದ್ದರು. ಜೆಡಿಎಸ್ ಕಾರ್ಯಕರ್ತರು ಈ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದು, ಮತದಾರರಿಗೆ ಆಮಿಷ ಒಡ್ಡುತ್ತಿರುವುದನ್ನು ಬಯಲು ಮಾಡುತ್ತಿದ್ದಾರೆ. +ಚುನಾವಣಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದಾರೆ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಸಹಕಾರ ನೀಡಲಾಗುತ್ತಿದೆ ಎಂಬ ಅನುಮಾನ ಉಂಟಾಗಿದೆ ಎಂದು ಜೆಡಿಎಸ್ ಪ್ರಕಟಣೆಯಲ್ಲಿ ಆರೋಪಿಸಿದೆ. \ No newline at end of file diff --git a/eesanje/url_46_202_10.txt b/eesanje/url_46_202_10.txt new file mode 100644 index 0000000000000000000000000000000000000000..7dd5cef157b8ad7b8a819d756f690d1cdb2ed2c0 --- /dev/null +++ b/eesanje/url_46_202_10.txt @@ -0,0 +1,15 @@ +ಹನುಮಾನ್ ಚಾಲೀಸಾ ವಿವಾದ : ಹಿಂದೂ-ಬಿಜೆಪಿ ಕಾರ್ಯಕರ್ತರ ಭಾರಿ ಪ್ರತಿಭಟನೆ, ನಗರ್ತಪೇಟೆ ಉದ್ವಿಗ್ನ +ಬೆಂಗಳೂರು, ಮಾ.19-ಮೊಬೈಲ್ ಶಾಪ್‍ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಹಿಂದೂ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ನಗರ್ತಪೇಟೆಯಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರೂ, ಬಂಧನಕ್ಕೆ ಒಳಗಾದವರು ಹಲ್ಲೆ ಮಾಡಿದ ವ್ಯಕ್ತಿಗಳಲ್ಲ. ಹಲ್ಲೆ ಮಾಡಿದ ಯುವಕರನ್ನು ರಕ್ಷಿಸಲು ಬೇರೆ ಯುವಕರನ್ನು ಬಂಧಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಲು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದರು. +ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುರ್ಮಾ, ಸಂಸದರಾದ ಶೋಭಾ ಕರಂದ್ಲಾಜೆ , ತೇಜಸ್ವೀ ಸೂರ್ಯ, ಪಿ.ಸಿ. ಮೋಹನ್ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು. +ಭಾರೀ ಸಂಖ್ಯೆಯಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಸ್ಥಳದಲ್ಲೇ ಭಜನೆ ಮಾಡಲು ಮುಂದಾದರು. ಜೊತೆಗೆ ನಮಗೆ ರ್ಯಾಲಿ ನಡೆಸಲು ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದರು. ಆದರೆ, ಪೂರ್ವಾನುಮತಿ ಪಡೆಯದ ಕಾರಣ ಪೊಲೀಸರು ನಿರಾಕರಿಸಿದ್ದು, ಪರಿಸ್ಥಿತಿಯನ್ನು ಕೈ ಮೀರುವಂತೆ ಮಾಡಿತು. +ರ್ಯಾಲಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಕ್ಕೆ ಸ್ಥಳದಲ್ಲೇ ಜಮಾಯಿಸಿದ್ದ ಕಾರ್ಯಕರ್ತರು ಪೊಲೀಸರ ವರ್ತನೆಗೆ ಕಿಡಿಕಾರಿದರು. ಘಟನಾ ಸಂಬಂಧ ರ್ಯಾಲಿಯಲ್ಲಿ ಅಂಗಡಿ ಮಾಲೀಕನಾದ ಮುಖೇಶ್ ಕೂಡ ಭಾಗಿಯಾಗಿದ್ದ. ಆತನನ್ನು ಪೊಲೀಸರು ಬಂಧಿಸಿ ಕರೆದುಕೊಂಡು ಹೋಗುತ್ತಿದ್ದಾಗ ರ್ಯಾಲಿಗೆ ಬಂದಿದ್ದ ಶಾಸಕ ಸುರೇಶ್ ಅವರು ಪೊಲೀಸ್ ಜೀಪಿಗೆ ಅಡ್ಡ ನಿಂತರು. ಈ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನೇ ಎಳೆದಾಡಿದ ಘಟನೆ ನಡೆಯಿತು. +ಸುರೇಶ್ ಕುಮಾರ್ ಅವರನ್ನು ಪೊಲೀಸರು ಕೈ ಹಿಡಿದು ಎಳೆದಾಡಿದ್ದು, ಪರಿಸ್ಥಿತಿಯನ್ನು ಇನ್ನಷ್ಟು ವಿಕೋಪಕ್ಕೆ ತಿರುಗುವಂತೆ ಮಾಡಿತು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಕಂಡ ಪೊಲೀಸರು ದಾರಿಮಧ್ಯೆಯೇ ಧರಣಿ ನಡೆಸಲು ಮುಂದಾಗಿದ್ದ ಶೋಭಾ ಕರದ್ಲಾಂಜೆ , ಸುರೇಶ್ ಕುಮಾರ್ ಅವರನ್ನು ವಶಕ್ಕೆ ಪಡೆಯಲು ಮುಂದಾದಗ ತಳ್ಳಾಟ-ನೂಕಾಟ, ಗದ್ದಲ-ಕೋಲಾಹಲ ಉಂಟಾಯಿತು. +ಮುಖೇಶ್ ಮೇಲೆ ಹಲ್ಲೆಖಂಡಿಸಿ ಆ ರಸ್ತೆಯಲ್ಲಿನ ವರ್ತಕರು ಪೊಲೀಸ್ ಠಾಣೆ ಮುಂದೆ ನ್ಯಾಯಕ್ಕಾಗಿ, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಿಸಿದರು. ಕೆಲವು ವರ್ತಕರು ಮುಖೇಶ್ ಅಂಗಡಿ ಬಳಿ ಹನುಮಾನ್ ಚಾಲೀಸಾ ಪಠಿಸಿದರೆ, ಇನ್ನೂ ಕೆಲವರು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದ್ದರು. +ಹಿಂದೂ ವಿರೋಧಿ ಸರ್ಕಾರ:ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತದಲ್ಲಿದೆ. ಒಂದು ಕೋಮಿನವರು ತಾವು ಏನು ಬೇಕಾದರೂ ಮಾಡಬಹುದು. ನಮ್ಮನ್ನು ಸರ್ಕಾರ ರಕ್ಷಣೆ ಮಾಡುತ್ತದೆ ಎಂಬ ಭಾವನೆ ಇದೆ. ಹನುಮಾನ್ ಚಾಲೀಸಾ ಹಾಕಿದ್ದ ಎಂಬ ಒಂದೇ ಒಂದು ಕಾರಣಕ್ಕಾಗಿ ಅಮಾನುಷವಾಗಿ ಹಲ್ಲೆ ಮಾಡುತ್ತಾರೆ ಎಂದರೆ, ಇವರಿಗೆ ಕುಮ್ಮಕ್ಕು ಕೊಟ್ಟವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪೊಲೀಸರು ಬಂಧಿಸಿರುವುದಕ್ಕೂ ಈ ಪ್ರಕಣಕ್ಕೂ ಸಂಬಂಧವೇ ಇಲ್ಲ. ಪ್ರಮುಖ ಆರೋಪಿಗಳನ್ನು ಬಿಟ್ಟು, ಬೇರೆಯವರನ್ನು ಬಂಧಿಸಿದ್ದಾರೆ. ಮೇಲ್ನೋಟಕ್ಕೆ ಈ ಪ್ರಕಣದಲ್ಲಿ ಪೊಲೀಸರು ಶಾಮೀಲಾಗಿರುವಂತೆ ಕಂಡು ಬಂದಿದೆ. ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸರಿಯಾದ ತನಿಖೆ ನಡೆಯುವುದು ಅನುಮಾನ ಎಂದು ಹೇಳಿದರು. +ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಒಂದು ಸಮುದಾಯದವರ ಆಟಾಟೋಪ ಹೇಳತೀರದಾಗಿದೆ. ಇದಕ್ಕೆ ಸರ್ಕಾರ ಕೂಡಾ ಕುಮ್ಮಕ್ಕು ನೀಡುತ್ತಿದೆ. ಇದು ಸ್ಪಷ್ಟವಾಗಿ ಹಿಂದೂ ವಿರೋಧಿ ಸರ್ಕಾರವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. +ಘಟನೆ ಹಿನ್ನೆಲೆ:ನಮಾಜ್ ಮಾಡುವ ಸಮಯಕ್ಕೆ ಹನುಮಾನ್ ಚಾಲೀಸಾ ಹಾಕಿದ ಎಂಬ ಕಾರಣಕ್ಕೆ ಅನ್ಯಕೋಮಿನ ಕೆಲ ಯುವಕರು ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದರು. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದಿತ್ತು. +ಅಂಗಡಿ ಮಾಲೀಕ ಕಬ್ಬನ್ ಪೇಟೆ ನಿವಾಸಿಯಾಗಿರುವ ಮುಖೇಶ್ (26) ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯ ಮಸೀದಿ ರಸ್ತೆಯಲ್ಲಿ ಅಂಗಡಿ ಇಟ್ಟಿದ್ದರು. ಇವರ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಘಟನೆ ಬಳಿಕ ಬಿಜೆಪಿ ಇಬ್ಬರು ಸಂಸದರು ಅಂಗಡಿ ಮಾಲೀಕನನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದರು. +ಮೊಬೈಲ್ ಬಿಡಿಭಾಗಗಳ ಅಂಗಡಿಯ ಮುಖೇಶ್ ಮೇಲೆ ಭಾನುವಾರ ದಾಳಿ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮುಖೇಶ್ ದೂರು ನೀಡಿದ್ದಾರೆ. +ಹಲ್ಲೆಗೊಳಗಾದ ಮುಖೇಶ್ ಕೃಷ್ಣ ಟೆಲಿಕಾಂ ಹೆಸರಿನಲ್ಲಿ ಅಂಗಡಿ ನಡೆಸುತ್ತಿದ್ದ. ಘಟನೆ ದಿನ ಹನುಮಾನ್ ಚಾಲೀಸಾ ಹಾಕಿ ಕೇಳುತ್ತಿದ್ದ. ಈ ವೇಳೆ ಅಲ್ಲಿಗೆ ಬಂದ ಈ ಬಂತ ಮೂವರು ಆರೋಪಿಗಳು ನಿನ್ನ ಅಂಗಡಿಯಿಂದ ಹೆಚ್ಚು ಸೌಂಡ್ ಬಂದು ಬೇರೆಯವರಿಗೆ ತೊಂದರೆ ಆಗುತ್ತಿದೆ ಎಂದು ಕೆಣದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿದೆ. +ನೋಡ ನೋಡುತ್ತಿದ್ದಂತೆ ಅಂಗಡಿ ಒಳಗಿನಿಂದ ಮುಖೇಶ್ನನ್ನು ಎಳೆದಾಡಿದ್ದಾರೆ. ಮೂವರು ಸೇರಿ ರಸ್ತೆ ಎಳೆದು ತಂದು ಆತನನ್ನು ಕೆಡವಿ ಮನಬಂದಂತೆ ಥಳಿಸಿದ್ದಾರೆ. ಉಗುರುಗಳಿಂದ ಮುಖ ಪರಚಿದ್ದಾರೆ ಎನ್ನಲಾಗಿದೆ. ಕಾಲಲ್ಲಿ ಒದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಬಳಿಕ ಅಲ್ಲಿಂದ ಆರೋಪಿಗಳು ತೆರಳಿದ್ದಾರೆ. ಹಲ್ಲೆಗೆ ಒಳಗಾದ ಸಂತ್ರಸ್ತ ಕೂಡಲೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. \ No newline at end of file diff --git a/eesanje/url_46_202_11.txt b/eesanje/url_46_202_11.txt new file mode 100644 index 0000000000000000000000000000000000000000..487ecc6f45eabd9117f7a1fc721675277999536c --- /dev/null +++ b/eesanje/url_46_202_11.txt @@ -0,0 +1,7 @@ +ಶೆಟ್ಟರ್‌ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ : ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ +ಹುಬ್ಬಳ್ಳಿ,ಮಾ.19-ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ. +ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೊ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆಯಿತು. ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದರು. +ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್‍ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ. ಬಿಜೆಪಿ ವರಿಷ್ಠರು ಅವರ ಕುತಂತ್ರಕ್ಕೆ ಒಳಗಾದಗೆ ಶೆಟ್ಟರ್‍ಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಹೋದ್ರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಿ, ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮುಂತಾದವರಿದ್ದರು. +ಶೆಟ್ಟರ್ ದೆಹಲಿಗೆ :ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಟಿಕೇಟ್ ಆಕಾಂಕ್ಷಿಯಾಗಿರುವ ಶೆಟ್ಟರ್ ಈಗ ಮತ್ತೇ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದಾರೆ. ಶೆಟ್ಟರ್ ಅವರೇ ಬೆಳಗಾವಿ ಅಭ್ಯರ್ಥಿ ಆಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ನಾಯಕರೊಬ್ಬರ ನಿವಾಸದಲ್ಲಿ ಸಭೆ ನಡೆಸಿದ ವಿರೀ ಪಡೆ ನಾಯಕರು ಬೇರ ತಂತ್ರ ರೂಪಿಸಿದ್ದಾರೆ. +ಈ ನಡುವೆ ಕಾಟಾಚಾರಕ್ಕೆ ಬೆಳಗಾವಿಗೆ ಜಗದೀಶ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದ್ದು, ರಾಷ್ಟ್ರೀಯ ನಾಯಕರ ತೀರ್ಮಾನವೇ ಅಂತಿಮ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ ಆದೆ ಇದ್ದಕ್ಕೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಲ್ ಸಂತೋಷ ಬಣವಾದ ಪ್ರಭಾಕರ್ ಕೋರೆ, ಈರಣ್ಣ ಕಡಾಡಿ, ಮಹಾಂತೇಶ ಕವಟಿಗಿಮಠ ಸೇರಿದಂತೆ ಅನೇಕರು ವಿರೋಧ ವ್ಯಕ್ಕತಪಡಿಸಿದ್ದಾರೆ. +ಜಗದೀಶ್ ಶೆಟ್ಟರ್ ಅವರ ಬೀಗರಾದ ಹಾಲಿ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರನ್ನು ಬದಲಿಸಲು ಸಿದ್ಧತೆ ಆಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮಿತಿ ಮೀರಿರುವ ಭಿನ್ನಮತವನ್ನು ಈ ಮೂಲಕ ನಿಯಂತ್ರಿಸಬಹುದುಧಾರವಾಡ ಸಹಿತ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೆಟ್ಟರ್ ಪ್ರಭಾವವಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಮತ ಚದುರದಂತೆ ನೋಡಿಕೊಳ್ಳುವುದು ಎನ್ನಲಾಗಿದೆ. \ No newline at end of file diff --git a/eesanje/url_46_202_12.txt b/eesanje/url_46_202_12.txt new file mode 100644 index 0000000000000000000000000000000000000000..a2e60b5d7d711dc82545e7925c654aff82ee0f54 --- /dev/null +++ b/eesanje/url_46_202_12.txt @@ -0,0 +1,6 @@ +ಟಿಕೆಟ್‍ಗಾಗಿ ಸಿಎಂ ಮನೆಗೆ ವೀಣಾ ಬೆಂಬಲಿಗರ ಮುತ್ತಿಗೆ +ಬೆಂಗಳೂರು, ಮಾ.18- ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ನುಗ್ಗುವ ಪ್ರಯತ್ನ ನಡೆಸಿದರು. ಬಾಗಲಕೋಟೆಯಿಂದ ಆಗಮಿಸಿದ ಮಹಿಳೆಯರ ತಂಡ ಇಂದು ಬೆಂಗಳೂರಿನಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಲು ಯತ್ನಿಸಿತ್ತು. +ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಬಳಿ ಬಿಗಿ ಕಾವಲು ಆಯೋಜಿಸಲಾಗಿದ್ದು, ಸಾಮಾನ್ಯ ಕಾರ್ಯಕರ್ತರನ್ನು ಒಳಗೆ ಬಿಡಲು ಪೊಲೀಸರು ಹಿಂದೆಮುಂದೆ ನೋಡುತ್ತಾರೆ. ಈ ಹಂತದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲೇಬೇಕು ಎಂದು ಹಠಕ್ಕೆ ಬಿದ್ದ ಮಹಿಳೆಯರು ಒಳ ಹೋಗಲು ಯತ್ನಿಸಿದರು. ಪೊಲೀಸರು ಅವರ ಮನವೋಲಿಸಿ ವಾಪಾಸ್ ಕಳುಹಿಸಿದರು. +ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾಗಿನಿಂದಲೂ ವೀಣಾ ಕಾಶಪ್ಪನವರು ಜನಸಾಮಾನ್ಯರ ಹಾಗೂ ಮಹಿಳೆಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡುವ ಬದಲು ಮುಖ ಪರಿಚಯ ಇಲ್ಲದವರನ್ನು ಕಣಕ್ಕಿಳಿಸಿದರೆ ನಾವು ಮತದಾನ ಮಾಡದೇ ಚುನಾವಣೆಗೆ ಬಹಿಷ್ಕಾರ ಹಾಕುತ್ತೇವೆ ಎಂದು ಎಚ್ಚರಿಸಿದರು. +ಕೋವಿಡ್ ಸಂದರ್ಭದಲ್ಲೂ ಸಾಕಷ್ಟು ಕೆಲಸ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬೇರೆ ಯಾರಿಗೂ ಟಿಕೆಟ್ ನೀಡುವುದನ್ನು ಸಹಿಸುವುದಿಲ್ಲ, ವೀಣಾ ಕಾಶಪ್ಪನವರಿಗೆ ಟಿಕೆಟ್ ನೀಡಬೇಕು. ಈ ನಿಟ್ಟಿನಲ್ಲಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮಾಧ್ಯಮದವರ ಕಾಲಿಗೆ ಬೀಳುವ ಮೂಲಕ ಮಹಿಳೆಯರು ಮನವಿ ಮಾಡಿಕೊಂಡರು. +ವೀಣ ಕಾಶಪ್ಪನವರಿಗೆ ಟಿಕೆಟ್ ಕೊಡದಿದ್ದರೆ ನಾವು ಮನೆ ಮನೆಗೆ ಹೋಗಿ ಮತದಾನ ಮಾಡದಂತೆ ಪ್ರಚಾರ ಮಾಡುತ್ತೇವೆ. ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಸಿದರು. ಕಳೆದ ಐದು ವರ್ಷಗಳಿಂದಲೂ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾಗಲೇ ನಿಮಗೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಬೇಕಿತ್ತು. ಇಷ್ಟು ವರ್ಷ ಕೆಲಸ ಮಾಡಿದ ಅವರಿಗೆ ಕೊನೆ ಕ್ಷಣದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸಿದರು. \ No newline at end of file diff --git a/eesanje/url_46_202_2.txt b/eesanje/url_46_202_2.txt new file mode 100644 index 0000000000000000000000000000000000000000..0680c7d2e94d21974288236b9dae637c24a4a086 --- /dev/null +++ b/eesanje/url_46_202_2.txt @@ -0,0 +1,5 @@ +ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಾಳೆ ಹೆಚ್‌ಡಿಕೆಗೆ ಶಸ್ತ್ರಚಿಕಿತ್ಸೆ +ಬೆಂಗಳೂರು,ಮಾ.20-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ನಿನ್ನೆ ಚೆನ್ನೈಗೆ ತೆರಳಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿ ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಿದ್ದು, ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಶಸ್ತ್ರಚಿಕಿತ್ಸೆ ಬಳಿಕ ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಬೆಂಗಳೂರಿಗೆ ಮರಳಲಿದ್ದಾರೆ. ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ಮಾಡಲಿದ್ದಾರೆ. +ಶಸ್ತ್ರಚಿಕಿತ್ಸೆ ಬಗ್ಗೆ ಕುಮಾರಸ್ವಾಮಿಯವರೇ ಮಾಹಿತಿ ನೀಡಿ ಹುಟ್ಟಿನಿಂದ ಹೃದಯ ಸಂಬಂಧಿ ಸಮಸ್ಯೆಯಿದೆ. ಈಗಾಗಲೇ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲಾಗಿದೆ. ಬಿಡುವಿಲ್ಲದ ರಾಜಕೀಯ ಜೀವನದ ಶೈಲಿಯಿಂದಾಗಿ ಸಮಸ್ಯೆ ಉಂಟಾಗಿದೆ. +ಈ ಬಾರಿ ಉನ್ನತ ಮಟ್ಟದ ಶಸ್ತ್ರಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದರು.ಆಸ್ಪತ್ರೆಯಿಂದ ಮರಳಿದ ಬಳಿಕ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. \ No newline at end of file diff --git a/eesanje/url_46_202_3.txt b/eesanje/url_46_202_3.txt new file mode 100644 index 0000000000000000000000000000000000000000..c83c2b8cc6fe274eb6b5e6be08e39b3928081deb --- /dev/null +++ b/eesanje/url_46_202_3.txt @@ -0,0 +1,4 @@ +ಏ.1ರಿಂದ ದುಬಾರಿಯಾಗಲಿವೆ ಔಷಧಗಳು +ಬೆಂಗಳೂರು,ಮಾ.19-ಏಪ್ರಿಲ್ 1ರಿಂದ ಔಷಧಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಪೈನ್ಕಿಲ್ಲರ್, ಆ್ಯಂಟಿ ಇನೆಕ್ಷನ್ ಸೇರಿದಂತೆ ಸುಮಾರು 800 ಪ್ರಮುಖ ಔಷಧಗಳ ಬೆಲೆಯಲ್ಲಿ ಏರಿಕೆ ಕಂಡು ಬರಲಿದೆ. ಹೋಲ್ಸೇಲ್ ಪ್ರೈಸ್ ಇಂಡೆಕ್ಸ್ ಬದಲಾವಣೆಯ ನಂತರ ರಾಷ್ಟ್ರೀಯ ಅಗತ್ಯ ಪಟ್ಟಿಯಲ್ಲಿ ಔಷಧಿಗಳ ಬೆಲೆಯಲ್ಲಿ ಶೇ. 0.0055ರಷ್ಟು ಹೆಚ್ಚಳವನ್ನು ಸರ್ಕಾರ ಅನುಮೋದಿಸಲಿದೆ. +ಹಣದುಬ್ಬರದ ಪರಿಣಾಮವಾಗಿ ಔಷಧ ಕಂಪನಿಗಳು ಬೆಲೆ ಏರಿಕೆ ಮಾಡುವಂತೆ ಕೆಲ ದಿನಗಳಿಂದ ಬೇಡಿಕೆ ಇಟ್ಟಿದ್ದವು. 2022ರಲ್ಲಿ ಔಷಧಗಳ ಬೆಲೆಯನ್ನು ಶೇ.10ರಿಂದ 12ರವರೆಗೆ ಹೆಚ್ಚಿಸಲಾಯಿತು. ಔಷಧ ತಯಾರಿಕೆಗೆ ಬಳಸುವ ಪದಾರ್ಥಗಳ ಬೆಲೆ ಶೇ.15ರಿಂದ 130ರಷ್ಟು ಏರಿಕೆಯಾಗಿದೆ ಎಂದು ಉದ್ಯಮಿ ಮತ್ತು ಔಷಧಿ ತಜ್ಞರು ಹೇಳಿದ್ದಾರೆ. +ಸಾವಿರಕ್ಕೂ ಹೆಚ್ಚು ಔಷಧಿ ತಯಾರಿಕರ ನೇತೃತ್ವದ ಗುಂಪು ಬೆಲೆ ಏರಿಕೆಗೆ ಸರ್ಕಾರಕ್ಕೆ ಮನವಿ ಮಾಡಿತ್ತು.ಈ ಹಿನ್ನೆಲೆಯಲ್ಲಿ ಇದೀಗ ಔಷಧಿಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಅಗತ್ಯ ಔಷಧಿಗಳ ಪಟ್ಟಿಯಲ್ಲಿ ಹೆಚ್ಚಿನ ಜನರಿಗೆ ಉಪಯುಕ್ತವಾಗುವ ಔಷಧಿಗಳನ್ನು ಸೇರಿಸಲಾಗಿದೆ. diff --git a/eesanje/url_46_202_4.txt b/eesanje/url_46_202_4.txt new file mode 100644 index 0000000000000000000000000000000000000000..7a7a056dffb428a79ba68744aaa293be3ad3eb56 --- /dev/null +++ b/eesanje/url_46_202_4.txt @@ -0,0 +1,4 @@ +ಈ ಬಾರಿ ಸಿಇಟಿಗೆ ದಾಖಲೆಯ 3.75 ಲಕ್ಷ ಅಭ್ಯರ್ಥಿಗಳು ನೋಂದಣಿ +ಬೆಂಗಳೂರು, ಮಾ.19-ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಗೆ ಈ ಬಾರಿ ದಾಖಲೆ ಮಟ್ಟದ ನೋಂದಣಿಯಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಸಾಮಾನ್ಯ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ನಲ್ಲಿ ನಡೆಸುವ ಸಿಇಟಿ ಪರೀಕ್ಷೆಗೆ 3.75. 399 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಕಳೆದ ವರ್ಷಕ್ಕಿಂತ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. +ಸಿಇಟಿಗೆ ಅರ್ಜಿ ಸಲ್ಲಿಸಲು ನೀಡಿದ ಗಡುವು ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳು ಮತ್ತು ಪೊಷಕರ ಬೇಡಿಕೆ ಮೇರೆಗೆ ಮಾ.18 ರಿಂದ 20ರವರೆಗೆ 3 ದಿನಗಳ ಅವಕಾಶ ನೀಡಲಾಗಿದೆ. ನೋಂದಾಯಿಸಿದವರಿಗೆ ಶುಲ್ಕ ಪಾವತಿಸಲು ಮಾ.21 ಕೊನೆಯ ದಿನವಾಗಿರುತ್ತದೆ. ಇದು ಕಡೆಯ ಅವಕಾಶವಾಗಿದ್ದು, ಮತ್ತೆ ಕಾಲಾವಯನ್ನು ವಿಸ್ತರಿಸುವುದಿಲ್ಲವೆಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ. +ಪ್ರಾಧಿಕಾರದ ವೆಬ್ಸೈಟ್ // .. ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಮಾಡಿಕೊಳ್ಳಬಹುದು. ಏ.18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ಈಗ ಅರ್ಜಿ ಸಲ್ಲಿಸುವವರು ಬೆಂಗಳೂರು ನಗರ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_202_5.txt b/eesanje/url_46_202_5.txt new file mode 100644 index 0000000000000000000000000000000000000000..88db18973a8adca957bd5327d554726ba058af24 --- /dev/null +++ b/eesanje/url_46_202_5.txt @@ -0,0 +1,9 @@ +ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ +ಬೆಂಗಳೂರು,ಮಾ.19-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ನಾಲ್ಕು ಲಕ್ಷ ಕುಕ್ಕರ್ಗಳನ್ನು ಕಾಂಗ್ರೆಸ್ನವರು ಲೋಡ್ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಈ ರೀತಿಯ ಆಮಿಷವೊಡ್ಡುವುದನ್ನು ತಡೆಯಬೇಕೆಂದು ಒತ್ತಾಯಿಸಿದರು. +ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಚುನಾವಣಾ ಸಂದರ್ಭದಲ್ಲಿ ಕುಕ್ಕರ್ ಹಂಚುತ್ತಿದ್ದಾರೆಂದು ಪೊಟೋ ಸಹಿತ ಆರೋಪಿಸಿದರು. +ಯಾವುದೇ ಸ್ಟಿಕ್ಕರ್ ಇಲ್ಲದೆ ಹಂಚಿಕೆ ಮಾಡಲಾಗುತ್ತಿದೆ. ಮರಳವಾಡಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 2 ಲಾರಿ ಕುಕ್ಕರ್ಗಳನ್ನು ಜೆಡಿಎಸ್ ಕಾರ್ಯಕರ್ತರು ಪತ್ತೆಹಚ್ಚಿದ್ದಾರೆ.ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ಹೋಗಿದ್ದಾಗ ಏನು ಇರಲಿಲ್ಲವೆಂದು ಹೇಳುತ್ತಾರೆಂದರು. ಈಗಾಗಲೇ ಸೀರೆ ಮತ್ತು ಕುಕ್ಕರ್ಗಳನ್ನು ಹಂಚಲಾಗಿದೆ. +ಮತ್ತೆ ಹಂಚಿಕೆ ಮಾಡಲು ಉದ್ದೇಶಿಸಿದ್ದಾರೆಂದು ಆರೋಪಿಸಿದರು. ಮತದಾರರಿಗೆ ಆಮಿಷವೊಡ್ಡುವುದನ್ನು ಚುನಾವಣಾ ಆಯೋಗ ಗಮನಿಸಬೇಕು. ಕಠಿಣ ಕ್ರಮ ಕೈಗೊಳ್ಳುವ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಹೇಳಿದರು. ಮಂಡ್ಯದಲ್ಲಿ ಒಂದು ಕೋಟಿ ರೂ. ಹಣ ಸೀಸ್ ಆಗಿದ್ದು, ಅದು ಅಡಿಕೆ ವ್ಯಾಪಾರಿಗೆ ಸಂಬಂಧಿಸಿದ್ದಾ? ಎಂದು ಪ್ರಶ್ನಿಸಿದರು. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರನ್ನು ಸೋಲಿಸಲು ಈ ರೀತಿಯ ಪ್ರಯತ್ನ ಮಾಡುತ್ತಿದ್ದಾರೆಂದು ಆರೋಪಿಸಿದರು. +ಗೊಂದಲವಿಲ್ಲ: +ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ. ನಿನ್ನೆ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚುನಾವಣಾ ಮೈತ್ರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕ್ಷಣದವರೆಗೂ ಯಾವ ಕ್ಷೇತ್ರ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ ಎಂದರು. +ದೇವೇಗೌಡರ ಸಲಹೆ ಮೇರೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ನಾವು ಸ್ಪರ್ಧೆ ಮಾಡುವುದಾಗಿ ಹೇಳಿದ್ದೇವೆ. ಕೋರ್ ಕಮಿಟಿ ಸಭೆಯಲ್ಲಿ 2 ಕ್ಷೇತ್ರಗಳಿಗೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ ಎಂಬ ವಿಚಾರ ಚರ್ಚೆಯಾಗಿತ್ತು. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಎರಡೂ ಪಕ್ಷಗಳೂ ಹೋರಾಟ ನಡೆಸುತ್ತಿವೆ. \ No newline at end of file diff --git a/eesanje/url_46_202_6.txt b/eesanje/url_46_202_6.txt new file mode 100644 index 0000000000000000000000000000000000000000..a82487333aa3fa550d4d9f8381797d31b7836b12 --- /dev/null +++ b/eesanje/url_46_202_6.txt @@ -0,0 +1,5 @@ +ಕಡಿಮೆ ಮತದಾನವಾಗಿದ್ದ 1786 ಬೂತ್‌ಗಳ ಮೇಲೆ ಚುನಾವಣಾ ಆಯೋಗದ ಕಣ್ಣು +ಬೆಂಗಳೂರು, ಮಾ.19-ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ 1786 ಬೂತ್ಗಳ ಮೇಲೆ ಚುನಾವಣಾ ಆಯೋಗದ ಅಧಿಕಾರಿಗಳು ಹದ್ದಿನಕಣ್ಣಿಟ್ಟಿದ್ದಾರೆ. ನಗರದ ಮತಗಟ್ಟೆ ಸಮೀಕ್ಷೆ ನಡೆಸಿರುವ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಕಳೆದ ಎರಡು ಲೋಕಸಬಾ ಚುನಾವಣೆಗಳಲ್ಲೂ 1786ಬೂತ್ಗಳಲ್ಲಿ ಕಡಿಮೆ ಮತದಾನವಾಗಿರುವುದು ಕಂಡು ಬಂದಿದೆ. +ಹೀಗಾಗಿ ಆ ಬೂತ್ಗಳಲ್ಲಿ ಈ ಬಾರಿ ಹೆಚ್ಚು ಮತದಾನವಾಗುವಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಡಿಮೆ ಮತದಾನ ಆಗಿರೋ ಪ್ರದೇಶಗಳ ಪಟ್ಟಿಮಾಡಿರುವ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಈ ಬಾರಿ 1700 ಬೂತ್ಗಳಲ್ಲಿ ಯಾವುದೇ ಕಾರಣಕ್ಕೂ ಕಡಿಮೆ ಮತದಾನವಾಗದಂತೆ ನೋಡಿಕೊಳ್ಳಿ ಎಂದು ಚುನಾವಣಾ ಸಿಬ್ಬಂಧಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. +ಹಾಗಾದರೆ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಅತ್ಯಂತ ಕಡಿಮೆ ಮತದಾನವಾದ 1786ಬೂತ್ಗಳು ಯಾವುದು ಎಂದರೆ ಅವು ಹೀಗೀವೆ ನೋಡಿ. ಯಲಹಂಕ ವಿಧಾನಸಭಾ ಕ್ಷೇತ್ರದ 123 ಬೂತ್ಗಳು, ಬ್ಯಾಟರಾಯನಪುರದ 114, ಯಶವಂತಪುರದ 131, ದಾಸರಹಳ್ಳಿಯ 99, ಮಹದೇವಪುರದ 135, ಬೆಂಗಳೂರು ದಕ್ಷಿಣದ 139, ಆನೇಕಲ್ನ 103, ಕೆ.ಆರ್.ಪುರದ 86, ಮಹಾಲಕ್ಷ್ಮೀ ಬಡಾವಣೆಯ 41, ಮಲ್ಲೇಶ್ವರಂನ 51, ಹೆಬ್ಬಾಳದ 40, ಪುಲಿಕೇಶಿನಗರದ 41, ಸರ್ವಜ್ಞನಗರದ 50, ಸರ್.ಸಿ.ವಿ.ರಾಮನ್ನಗರದ 44, ರಾಜರಾಜೇಶ್ವರಿನಗರದ 43, ಶಿವಾಜಿನಗರದ 27, ಶಾಂತಿನಗರದ 26, ಗಾಂ„ನಗರದ 55, ರಾಜಾಜಿನಗರದ 29, ಚಾಮರಾಜಪೇಟೆಯ 47 ಹಾಗೂ ಚಿಕ್ಕಪೇಟೆಯ 20 ಬೂತ್ಗಳಲ್ಲಿ ಶೇ.55ಕ್ಕಿಂತ ಕಡಿಮೆ ಮತದಾನವಾಗಿದೆ. +ಅದೇ ರೀತಿ ಗೋವಿಂದರಾಜನಗರದ 51, ವಿಜಯನಗರದ 46, ಬಸವನಗುಡಿಯ 24, ಪದ್ಮನಾಭನಗರದ 40, ಬಿಟಿಎಂ ಬಡಾವಣೆಯ 39, ಜಯನಗರದ 36 ಹಾಗೂ ಬೊಮ್ಮನಹಳ್ಳಿಯ 98 ವಿಧಾನಸಭಾ ಕ್ಷೇತ್ರಗಳ 1786 ಬೂತ್ಗಳಲ್ಲಿ ಕಡಿಮೆ ಮತದಾನವಾಗಿತ್ತು ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. diff --git a/eesanje/url_46_202_7.txt b/eesanje/url_46_202_7.txt new file mode 100644 index 0000000000000000000000000000000000000000..2adf285845811b658af4205183e3c507953d9178 --- /dev/null +++ b/eesanje/url_46_202_7.txt @@ -0,0 +1,6 @@ +ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ +ಬೆಂಗಳೂರು,ಮಾ.19-ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರುಣ್ ಮತ್ತು ಜಾಹಿದ್ ಬಂಧಿತ ಆರೋಪಿಗಳು. ನಿನ್ನೆ ಕುಂಬಾರಪೇಟೆಯ ಸುಲೇಮಾನ್, ಶಹಾನವಾಜ್ ಮತ್ತು ರೋಹಿತ್ನನ್ನು ಬಂಧಿಸಿದ್ದು, ಇದೀಗ ಮತ್ತಿಬ್ಬರನ್ನು ಬಂಧಿಸುವ ಮೂಲಕ ಆರೋಪಿಗಳ ಸಂಖ್ಯೆ ಐದಕ್ಕೆ ಏರಿದೆ. +ನಗರ್ತಪೇಟೆಯ ಸಿದ್ದಣ್ಣಗಲ್ಲಿಯಲ್ಲಿನ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಮೊನ್ನೆ ಸಂಜೆ ಹಿಂದಿ ಭಜನೆ ಹಾಕಿದ್ದಾಗ ಧ್ವನಿ ವರ್ಧಕ ಶಬ್ದ ಜೋರಾಗಿ ಕೇಳಿಸುತ್ತಿದೆಯೆಂದು ಗುಂಪೊಂದು ಏಕಾಏಕಿ ಅಂಗಡಿ ಬಳಿ ಹೋಗಿ ನೀವು ಹಾಕಿದ ಹಾಡಿನಿಂದ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ, ಹಾಡನ್ನು ನಿಲ್ಲಿಸುವಂತೆ ಮುಖೇಶ್ ಜೊತೆಗೆ ಜಗಳವಾಡಿ ಅವರನ್ನು ಅಂಗಡಿಯಿಂದ ಹೊರಗೆಳೆದು ಕೈಗಳಿಂದ ಮುಖಕ್ಕೆ ಗುದ್ದಿ ದೊಣ್ಣೆಯಿಂದ ಹೊಡೆದು ಪರಾರಿಯಾಗಿತ್ತು. ಹಲ್ಲೆಗೊಳಗಾದ ಮುಖೇಶ್ ಅವರು ಪೊಲೀಸರಿಗೆ ದೂರು ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. +ಅಂದು ಘಟನೆ ಖಂಡಿಸಿ ನಗರ್ತಪೇಟೆಯ ನೂರಾರು ವರ್ತಕರು ಹಲಸೂರು ಗೇಟ್ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಪುಂಡರನ್ನು ಆದಷ್ಟು ಬೇಗ ಬಂಧಿಸಬೇಕೆಂದು ಒತ್ತಾಯಿಸಿದ್ದರು. ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಹೋಗಿ ಆ ರಸ್ತೆಗಳಲ್ಲಿನ ಸಿಸಿ ಟಿವಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ದೃಶ್ಯಾವಳಿ ಆಧರಿಸಿ ನಿನ್ನೆ ಮೂವರು ಹಾಗೂ ಇದೀಗ ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. +ಆರೋಪಿಗಳ ಪೈಕಿ ಸುಲೇಮಾನ್ ವಿರುದ್ಧ ಅಪಹರಣ ಹಲ್ಲೆ, ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿನಲ್ಲಿದ್ದು, ನಂತರದ ದಿನಗಳಲ್ಲಿ ಬಿಡುಗಡೆಯಾಗಿದ್ದನು. ಉಳಿದ ಆರೋಪಿಗಳ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ಹಲ್ಲೆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. +ಮತ್ತೊಂದೆಡೆ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದ್ದು ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಹಾಗೂ ಮುಖಂಡರು, ಕಾರ್ಯಕರ್ತರು ಘಟನಾ ಸ್ಥಳಕ್ಕೆ ಹೋಗಿ ಮುಖೇಶ್ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಶೀಘ್ರ ಎಲ್ಲ ಆರೋಪಿಗಳನ್ನು ಬಂಸದಿದ್ದರೆ ನಗರ್ತಪೇಟೆ ಬಂದ್ ಮಾಡುವುದಾಗಿ ಎಚ್ಚರಿಸಿದ್ದರು. \ No newline at end of file diff --git a/eesanje/url_46_202_8.txt b/eesanje/url_46_202_8.txt new file mode 100644 index 0000000000000000000000000000000000000000..a19bdd7ad105f7fe34a8ade10fa5c017caec58f5 --- /dev/null +++ b/eesanje/url_46_202_8.txt @@ -0,0 +1,7 @@ +ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಗೊಂದಲಗಳನ್ನು ವರಿಷ್ಠರೇ ನಿವಾರಿಸುತ್ತಾರೆ : ವಿಜಯೇಂದ್ರ +ಬೆಂಗಳೂರು,ಮಾ.19-ಬಿಜೆಪಿ ಹಾಗೂ ಜೆಡಿಎಸ್ ನಡುವೆ ಹೊಂದಾಣಿಕೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ರಾಷ್ಟ್ರೀಯ ನಾಯಕರು ಎಲ್ಲ ವನ್ನು ಬಗೆಹರಿಸುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ವಿಜಯೇಂದ್ರ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ಎರಡೂ ಪಕ್ಷಗಳ ನಡುವೆ ಸಣ್ಣಪುಟ್ಟ ಗೊಂದಲಗಳಿದ್ದರೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಮಧ್ಯ ಪ್ರವೇಶ ಮಾಡಿ ಗೊಂದಲ ಬಗೆಹರಿಸುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಗೊಂದಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. +ಜೆಡಿಎಸ್ನವರಿಗೂ ಸಮಾಧಾನ ಆಗುವ ರೀತಿಯಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕಳೆದ ತಡರಾತ್ರಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟರಾದ ಹೆಚ್.ಡಿ.ದೇವೆಗೌಡರ ಜೊತೆಗೂ ರಾತ್ರಿ ಚರ್ಚೆ ನಡೆಸಲಾಗಿದೆ. ಇಂದು ಬೆಳಿಗ್ಗೆ ದೂರವಾಣಿ ಮೂಲಜ ಕುಮಾರಸ್ವಾಮಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು. +ಯಾವ ಸಂದರ್ಭದಲ್ಲಿ ಏನೇನು ಮಾಡಬೇಕು ಎಂಬುದರ ಕುರಿತು ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಏನೆ ಸಣ್ಣಪುಟ್ಟ ಗೊಂದಲಗಳಿದ್ದರೂ ಸುಖಾಂತ್ಯವಾಗುತ್ತೆದೆ ಎಂದರು.ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಬಹುತೇಕ ಯಶಸ್ವಿಯಾಗಿದೆ.ಒಂದು ವಾರಗಳ ಕಡಿಮೆ ಅವಧಿಯಲ್ಲಿ ಕಲಬುರಗಿ ಶಿವಮೊಗ್ಗ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿದೆ.ಅವರನಪ್ರಿಯತೆ ದಿನೇ ದಿನೆ ಎತ್ತರಕ್ಕೆ ಹೋಗುತ್ತಿದೆ.ಇದರಿಂದ ರಣಭೂಮಿಯಲ್ಲಿದ್ದ ಕಾರ್ಯಕರ್ತರಿಗೆ ಉತ್ಸಾಹ ಬಂದಿದೆ ಎಂದು ಮಚ್ಚುಗೆ ವ್ಯಕ್ತಪಡಿಸಿದರು. +ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡಗೆ ಕಾಂಗ್ರೆಸ್ ಗಾಳ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿ.ವೈ.ವಿಜಯೇಂದ್ರ ಅವರು, ಕಳೆದ ಒಂದು ವಾರದ ಘಟನೆಗಳನ್ನ ಅವಲೋಕಿಸಲಾಗಿದೆ. ಕಾಂಗ್ರೆಸ್ ನಾಯಕರಿಗೆ ಅವರ ಮುಖಂಡರಿಗಿಂತ ಬಿಜೆಪಿ ನಾಯಕರ ಮೇಲೆ ಪ್ರೀತಿ ವಿಶ್ವಾಸ ಬಂದಿದೆ.ನನಗೆ ವಿಶ್ವಾಸ ಇದೆ ಎಲ್ಲವೂ ಸರಿ ಹೋಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. +ಸದಾನಂದಗೌಡರು ನಮ್ಮ ಪಕ್ಷದಲ್ಲೇ ಉಳಿಯುತ್ತಾರೆ. ಇದೇ ರೀತಿ ನಮ್ಮ ಪಕ್ಷದ ಮತ್ತೊಬ್ಬ ಹಿರಿಯರಾದ ಕೆ.ಎಸ್.ಈಶ್ವರಪ್ಪಗೆ ಸತ್ಯ ಅರ್ಥಾವಾದ ಮೇಲೆ ಸರಿ ಹೋಗುತ್ತೆದೆ. ಜಗೀಶ್ ಶೆಟ್ಟರ್ ಸ್ಪರ್ಧೆ ಕುರಿತು ಬಹಿರಂಗ ಚರ್ಚೆ ಮಾಡುವುದಿಲ್ಲ. ಇಂದು ಮತ್ತು ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲವೂ ತೀರ್ಮಾನ ಆಗುತ್ತೆದೆ ಎಂದು ಹೇಳಿದರು. \ No newline at end of file diff --git a/eesanje/url_46_202_9.txt b/eesanje/url_46_202_9.txt new file mode 100644 index 0000000000000000000000000000000000000000..a0e2dd4629f529ea563f9c96516fbd2947aa1f89 --- /dev/null +++ b/eesanje/url_46_202_9.txt @@ -0,0 +1,6 @@ +ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗೆ ಸಾಲ +ಬೆಂಗಳೂರು,ಮಾ.18: ದೇಶೀಯ ಮಾರುಕಟ್ಟೆ ಶಿಕ್ಷಣ ಸಾಲ ನೀಡುವ ಫಿನ್ಟೆಕ್ ಸ್ಟಾರ್ಟ್ಅಪ್ನಲ್ಲಿನ ತಮ್ಮ ಯಶಸ್ಸಿನಿಂದ ಉತ್ತೇಜಿತರಾದ ಪ್ರೊಫೆಲ್ಡ್ , ಮೆಟ್ರೋಗಳಲ್ಲಿ ಮತ್ತು ಭಾರತದ ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಂದ ಶಿಕ್ಷಣ ಸಾಲಗಳಿಗೆ ಗಮನಾರ್ಹ ಬೇಡಿಕೆಯನ್ನು ನಿಸುವುದಕ್ಕಾಗಿ ತಮ್ಮ ಅಧ್ಯಯನದ ವಿದೇಶಿ ಸಾಲಗಳನ್ನು ಘೋಷಿಸಿದೆ. ವಿದ್ಯಾರ್ಥಿಗಳ/ಪೊಷಕರ ಅರ್ಹತೆಗೆ ಅನುಗುಣವಾಗಿ ವಿಶಿಷ್ಟವಾದ ವಿಮೆಯ ವಿಧಾನದ ಮೂಲಕ ಗರಿಷ್ಠ 10 ವರ್ಷಗಳ ಅವಗೆ ವಿದೇಶಗಳಿಗೆ ಪ್ರಯಾಣಿಸುವ ಅರ್ಹ ವಿದ್ಯಾರ್ಥಿಗಳಿಗೆ 50 ಲಕ್ಷದವರೆಗಿನ ಸಾಲಗಳು ಲಭ್ಯವಿರುತ್ತವೆ. ಈ ಉಪಕ್ರಮವು ಉದ್ಯೋಗಿ ವ್ಯಕ್ತಿಗಳಿಗೆ ವೇಗವಾದ ಮತ್ತು ಹೆಚ್ಚು ತಡೆರಹಿತ ಹಣಕಾಸು ಪ್ರಕ್ರಿಯೆಯನ್ನು ಬಯಸುತ್ತದೆ, ಹಾಗೆಯೇ ಸ್ವಯಂ ಉದ್ಯೋಗಿ ವ್ಯಕ್ತಿಗಳಿಗೆ ಸಹಾಯ ಮಾಡುತ್ತದೆ. +ಪ್ರೊಫೆಲ್ಡ್ ನಲ್ಲಿ , ಶಿಕ್ಷಣದ ಪ್ರವೇಶವನ್ನು ಪ್ರಜಾಪ್ರಭುತ್ವಗೊಳಿಸುವ ನಮ್ಮ ದೃಷ್ಟಿಗೆ ನಾವು ಬದ್ಧರಾಗಿದ್ದೇವೆ. 2030 ರ ವೇಳೆಗೆ 7 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಭಾರತದ ಮಹತ್ವಾಕಾಂಕ್ಷೆಯನ್ನು ಪೂರೈಸುವ ಭವಿಷ್ಯದ ನಾಯಕರ ಕೌಶಲ್ಯಗಳನ್ನು ತರಬೇತಿ ಮತ್ತು ಅಭಿವೃದ್ಧಿಗೊಳಿಸುವುದು ಕಡಿಮೆ ಬ್ಯಾಂಕಿನ ಜನಸಂಖ್ಯೆಯ ಹೆಚ್ಚಿನ ಭಾಗವನ್ನು ಪೂರೈಸುವ ಒಂದು ಸಮಗ್ರ ವಿಧಾನವಾಗಿದೆ. ಇದಕ್ಕಾಗಿ, ಭಾರತೀಯ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ತರಬೇತಿ ಪಡೆಯುವುದು ಮುಖ್ಯವಾಗಿದೆ. ಜಗತ್ತಿನಲ್ಲಿ. ಅರ್ಹ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ನಾವು ಈ ವರ್ಷ 100 ಕೋಟಿ ವಿನಿಯೋಗವನ್ನು ನೋಡುತ್ತಿದ್ದೇವೆ”ಎಂದು ಪ್ರೊಫೆಲ್ಡ್ ಸಹ-ಸಂಸ್ಥಾಪಕ ಬ್ರಿಜೇಶ್ ಸಾಮಂತರಾಯರು ಹೇಳಿದರು. +ಪೊ್ರಪೆಲ್ಡ್ನ ಉತ್ಪನ್ನ ಕೊಡುಗೆಗಳು ಎಲ್ಲಾ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ. ಪೊ್ರಪೆಲ್ಡ್ ಮೇಲಾಧಾರ-ಮುಕ್ತ ಸಾಲಗಳನ್ನು ನೀಡುತ್ತದೆ, ತ್ವರಿತ ಅನುಮೋದನೆಗಳನ್ನು ಖಾತ್ರಿಪಡಿಸುತ್ತದೆ ಮತ್ತು ಕನಿಷ್ಠ ದಾಖಲೆಗಳನ್ನು ಕೇಳುವ ಮೂಲಕ ತೊಡಕಿನ ಪ್ರಕ್ರಿಯೆಗಳನ್ನು ಕಡಿತಗೊಳಿಸುತ್ತದೆ. +ಪೊ್ರಪೆಲ್ಡ್ ಶೈಕ್ಷಣಿಕ ನೇರ ಮಾರಾಟದ ಏಜೆಂಟ್ಗಳು ಮತ್ತು ಶಿಕ್ಷಣ ಸಾಲದ ಆSಂಗಳೊಂದಿಗೆ ವಿದೇಶದಲ್ಲಿ ಶಿಕ್ಷಣ ಹಣಕಾಸು ವ್ಯಾಪ್ತಿಯನ್ನು ವಿಸ್ತರಿಸಲು ಕಾರ್ಯತಂತ್ರದ ಪಾಲುದಾರಿಕೆಯನ್ನು ಹೊಂದಿದೆ. ಈ ಮೈತ್ರಿಗಳು ಹೆಚ್ಚಿನ ಪ್ರೇಕ್ಷಕರಿಗೆ ಹಣಕಾಸು ಆಯ್ಕೆಗಳನ್ನು ವಿಸ್ತರಿಸುವ ಮೂಲಕ ಪೊ್ರಪೆಲ್ಡ್ ಮತ್ತು ಆSಂ ಗಳೆರಡಕ್ಕೂ ಪ್ರಯೋಜನವನ್ನು ನೀಡುತ್ತವೆ ನಿರ್ದಿಷ್ಟವಾಗಿ ಕಟ್ಟುನಿಟ್ಟಾದ ವಿಮೆ ಅಥವಾ ದೀರ್ಘವಾದ ಅನುಮೋದನೆ ಪ್ರಕ್ರಿಯೆಗಳಿಂದಾಗಿ ಸಾಂಪ್ರದಾಯಿಕ ಸಾಲದಾತರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿಗಳು ಮತ್ತು ಗ್ರಾಹಕರ ತೃಪ್ತಿ ಮತ್ತು ನಿಷ್ಠೆಯನ್ನು ಹೆಚ್ಚಿಸುತ್ತವೆ. +ಪೊ್ರಪೆಲ್ಡ್ ವೇಗವಾದ ಅನುಮೋದನೆ ಪ್ರಕ್ರಿಯೆ, ಕನಿಷ್ಠ ದಾಖಲಾತಿ ಮತ್ತು ಅನನ್ಯ ಅಂಡರ್ರೈಟಿಂಗ್ನಿಂದಾಗಿ ಶ್ರೇಣಿ 3 ನಗರಗಳನ್ನು ತಲುಪಲು ತಮ್ಮ ಗ್ರಾಹಕರ ನೆಲೆಯನ್ನು ವಿಸ್ತರಿಸಲು ಡಿಎಸ್ಐ ಗಳಿಗೆ ಸಹಾಯ ಮಾಡುತ್ತಿದೆ. ಕಡಿಮೆ ಟರ್ನ್ಅರೌಂಡ್ ಸಮಯ ಮತ್ತು ವಿಶಾಲ ವ್ಯಾಪ್ತಿಯು ಉದ್ಯೋಗಿ ಮತ್ತು ಸ್ವಯಂ ಉದ್ಯೋಗಿಗಳ ವಿಶಾಲ ಪೊ್ರಫೈಲ್ಗಳನ್ನು ಪೂರೈಸಲು ಅವರಿಗೆ ಸಹಾಯ ಮಾಡುತ್ತದೆ ಎಂದು ರವಿ ಗೋಯಲ್ ಹೇಳಿದರು. \ No newline at end of file diff --git a/eesanje/url_46_203_1.txt b/eesanje/url_46_203_1.txt new file mode 100644 index 0000000000000000000000000000000000000000..1dae3732934f63af880ab46603754903a3cb2c80 --- /dev/null +++ b/eesanje/url_46_203_1.txt @@ -0,0 +1,9 @@ +ಶಿವಮೊಗ್ಗದಲ್ಲಿ ಮೋದಿ ಗರ್ಜನೆ +ಬೆಂಗಳೂರು,ಮಾ.18- ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕದಲ್ಲಿ ಮತ್ತೆ ರಣಕಹಳೆ ಮೊಳಗಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಕಲ್ಯಾಣ ಕರ್ನಾಟಕದ ಮುಖ್ಯ ಕೇಂದ್ರ ಕಲಬರುಗಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಮೋದಿಯವರು ಇಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮಧ್ಯ ಕರ್ನಾಟಕದ ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ ಬಿಜೆಪಿಯಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿದರು. +ಶಿವಮೊಗ್ಗದ ಅಲ್ಲಮ್ಮಪ್ರಭು ಕ್ರೀಡಾಂಗಣದಲ್ಲಿ ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಮೋದಿ, ರಾಜ್ಯದಲ್ಲಿ ಈ ಬಾರಿ 28 ಕ್ಷೇತ್ರಗಳಲ್ಲೂ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲ ನೀಡಬೇಕೆಂದು ಕೋರಿದರು. +ಎಂದಿನಂತೆ ಕನ್ನಡದಲ್ಲೇ ತಮ್ಮ ಭಾಷಣವನ್ನು ಆರಂಭಿಸಿದ ಮೋದಿಯವರು ತಮ್ಮ ಅರ್ಧಗಂಟೆಗಳ ಭಾಷಣದಲ್ಲಿ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಗಳನ್ನು ತರಾಟೆಗೆ ತೆಗೆದುಕೊಂಡರು.ಕರ್ನಾಟಕದಲ್ಲಿ ಇಲ್ಲಿನ ಜನತೆ ನನಗೆ ಒಂದು ಗ್ಯಾರಂಟಿಯನ್ನು ನೀಡಬೇಕು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲಿಸಿ ಕಾಂಗ್ರೆಸ್‍ಗೆ ಒಂದೇ ಒಂದು ಕ್ಷೇತ್ರವನ್ನು ಸಹ ಬಿಟ್ಟು ಕೊಡುವುದಿಲ್ಲ ಎಂದು ವಾಗ್ದಾನ ಮಾಡಬೇಕು. ಕರುನಾಡಿನಲ್ಲಿ ಎಲ್ಲಾ ಕಡೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲ್ಲಬೇಕೆಂದು ಮನವಿ ಮಾಡಿಕೊಂಡರು. +ಕಾಂಗ್ರೆಸ್ ಕರ್ನಾಟಕವನ್ನು ಗ್ಯಾರಂಟಿ ನೆಪದಲ್ಲಿ ಲೂಟಿ ಹೊಡೆಯುತ್ತಿದೆ. ಇಲ್ಲಿನ ಹಣವು ದೆಹಲಿ ಪಾಲಾಗುತ್ತದೆ. ಅಲ್ಲಿನ ನಾಯಕರು ಕರುನಾಡನ್ನು ಎಟಿಎಂ ಮಾಡಿಕೊಂಡಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡಬೇಡಿ. ಎನ್‍ಡಿಎ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸಿ ಎಂದು ಹೇಳಿದರು. +ಹತ್ತು ವರ್ಷಗಳಲ್ಲಿ ನಾವು ಒಂದೇ ಒಂದು ಹಗರಣವಿಲ್ಲದೆ ಸರ್ಕಾರವನ್ನು ಮುನ್ನಡೆಸಿದ್ದೇವೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನಾವು ಅಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಖಚಿತ. ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್‍ಗೆ ಮರಳಾಗಬೇಡಿ. ವಿಶ್ವದಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಬೇಕಾದರೆ ಬಿಜೆಪಿಯನ್ನು ಗೆಲ್ಲಿಸಿ ಎಂದು ವಿನಮ್ರವಾಗಿ ಕೋರಿದರು. +ರಾಜ್ಯದ ರೈತರಿಗೆ ಬಿಜೆಪಿ ಸಾಲು ಸಾಲು ಅನ್ಯಾಯ:ಸಿಎಂ ಟೀಕೆ +ಕರ್ನಾಟಕದಲ್ಲಿ ಎಟಿಎಂ ಸರ್ಕಾರವನ್ನು ಬುಡಸಮೇತವಾಗಿ ಕಿತ್ತೊಯ್ಯುವ ಸಂಕಲ್ಪವನ್ನು ಮತದಾರರು ಮಾಡಬೇಕು. ಕಳೆದ ಬಾರಿ 25 ಕ್ಷೇತ್ರಗಳಲ್ಲಿ ಗೆಲ್ಲಿಸಿಕೊಟ್ಟಿದ್ದೀರಿ. ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲಿಸಿ ದಾಖಲೆ ಬರೆಯಬೇಕೆಂದು ಮನವಿ ಮಾಡಿದರು. ಇದಕ್ಕೂ ಮುನ್ನ ತೆಲಂಗಾಣದಿಂದ ವಿಶೇಷ ವಿಮಾನದಲ್ಲಿ ಸೋಗಾನೆ ಬಳಿ ಇರುವ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಿವಮೊಗ್ಗ ಜಿಲ್ಲಾ ಘಟಕ ಆತ್ಮೀಯವಾಗಿ ಬರಮಾಡಿಕೊಂಡರು. +ಅಲ್ಲಿಂದ ಅಲ್ಲಮ್ಮಪ್ರಭು ಕ್ರೀಡಾಂಗಣಕ್ಕೆ ಆಗಮಿಸಿದ ಮೋದಿ ಅವರು ನಂತರ ತೆರೆದ ಜೀಪ್‍ನಲ್ಲಿ ಕ್ರೀಡಾಂಗಣದ ಮಧ್ಯಭಾಗದಿಂದ ಸಮಾವೇಶ ನಡೆಯುವ ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಮೋದಿಯವರಿಗೆ ನೆರೆದಿದ್ದ ಭಾರೀ ಕಾರ್ಯಕರ್ತರ ಹರ್ಷೋದ್ಘಾರ, ಜೈಕಾರ, ಜೈ ಮೋದಿ ಎಂಬ ಘೋಷಣೆಗಳು ಮಾರ್ಧನಿಸಿದವು.ಹಾವೇರಿಯಿಂದ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಈಶ್ವರಪ್ಪ ಗೈರುಹಾಜರು ಎದ್ದು ಕಾಣುತ್ತಿತ್ತು. \ No newline at end of file diff --git a/eesanje/url_46_203_10.txt b/eesanje/url_46_203_10.txt new file mode 100644 index 0000000000000000000000000000000000000000..0f0b7f9feb0103a53ba4d3785ef67a2a2a14e41b --- /dev/null +++ b/eesanje/url_46_203_10.txt @@ -0,0 +1,4 @@ +ದಕ್ಷಿಣ ಕನ್ನಡದಲ್ಲಿ ಶುರುವಾದ ನಕ್ಸಲ್ ಚಟುವಟಿಕೆ +ಮಂಗಳೂರು, ಮಾ.18-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕ್ಸಲರು ಮತ್ತೆ ಕಾಣಿಸಿಕೊಂಡಿದ್ದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ 5 ವರ್ಷಗಳಿಂದ ನಿಯಂತ್ರಣದಲ್ಲಿದ್ದ ನಕ್ಸಲ್ ಚಟುವಟಿಕೆ ಮತ್ತೆ ಶುರುವಾಗಿದೆ. ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದಕ್ಕೆ ಎಂಟು ಮಂದಿ ನಕ್ಸಲರ ತಂಡ ಆಗಮಿಸಿ ದಿನಸಿ ಖರೀದಿಸಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. +ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಎಚ್ಚೆತ್ತ ಪೆಪೊಲೀಸ್ ಪಡೆ ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ. ನಕ್ಸಲರು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಕೂಜಿಮಲೆ, ಕಲ್ಮಕಾರ್‍ಕ್ಕೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಕೆಲ ದಿನಗಳ ಹಿಂದೆ ಕೊಲ್ಲೂರು ಭಾಗದಲ್ಲಿ ಕಾಣಿಸಿಕೊಂಡಿದ್ದ ನಕ್ಸಲರು, ಇದೀಗ ದಕ್ಷಿಣ ಕನ್ನಡದ ಗಡಿ ಭಾಗದಲ್ಲಿ ಪ್ರತ್ಯಕ್ಷವಾಗಿದ್ದಾರೆ. +ಕಳೆದ ಫೆಬ್ರವರಿಯಲ್ಲಿ ಕೇರಳದಿಂದ ಬೈಂದೂರುಗೆ ಆಗಮಿಸಿರುವ ಅನುಮಾನ ವ್ಯಕ್ತವಾಗಿತ್ತು. ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ನಕ್ಸಲರ ತಂಡ ಬೈಂದೂರು ತಾಲ್ಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ಮೂಡಿತ್ತು. 20 ವರ್ಷಗಳ ಹಿಂದೆ ಆತ ನಕ್ಸಲೈಟ್ ಆಗಿದ್ದು ಕೇರಳದಲ್ಲಿ ಈತ ತನ್ನ ಚಟುವಟಿಕೆ ಇತ್ತು. ಮೂವರು ಸಶಸ್ತ್ರಧಾರಿಯಾಗಿ ಬೈಂದೂರಿಗೆ ಆಗಮಿಸಿರುವ ಮಾಹಿತಿ ಲಭ್ಯವಾಗಿತ್ತು. ನಕ್ಸಲರ ಓಡಾಟ ಮಾಹಿತಿ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದಾರೆ. \ No newline at end of file diff --git a/eesanje/url_46_203_11.txt b/eesanje/url_46_203_11.txt new file mode 100644 index 0000000000000000000000000000000000000000..d6264f77db71cf3a856abe8b19d4e48e87e98d2a --- /dev/null +++ b/eesanje/url_46_203_11.txt @@ -0,0 +1,8 @@ +ರಾಜ್ಯದ ಬರ ಪರಿಸ್ಥಿತಿ ನಿವಾರಣೆಗೆ ಮೋದಿ ನಿರಾಕರಣೆ: ಕಾಂಗ್ರೆಸ್ +ನವದೆಹಲಿ, ಮಾ.18 (ಪಿಟಿಐ)- ಬಹುತೇಕ ಭಾಗಗಳಲ್ಲಿ ಭೀಕರ ಬರ ಪರಿಸ್ಥಿತಿಯಿಂದಾಗಿ ಕರ್ನಾಟಕ ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದೆ ಆದರೂ ಮೋದಿ ಸರಕಾರವು ರಾಜ್ಯದ ಜನತೆಗೆ ಸಹಾಯ ಮಾಡಲು ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತ ನಾಡಲಿರುವ ದಿನದಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ಪ್ರಧಾನಿ ಇಂದು ಕರ್ನಾಟಕದ ಶಿವಮೊಗ್ಗದಲ್ಲಿದ್ದಾರೆ, ಅವರು ತಮ್ಮ ಭಾಷಣದಲ್ಲಿ ರಾಜ್ಯದ ಕೆಲವುಪ್ರಮುಖ ಸಮಸ್ಯೆಗಳನ್ನು ತಿಳಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭೀಕರ ಬರ ಪರಿಸ್ಥಿತಿಯಿಂದಾಗಿ ಕರ್ನಾಟಕವು ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿದೆ ಎಂದು ರಮೇಶ್ ಹೇಳಿದರು. +ಬರ ಪರಿಹಾರಕ್ಕಾಗಿ 18,172 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮೋದಿ ಸರ್ಕಾರಕ್ಕೆ ಮನವಿ ಮಾಡಿದೆ, ಮೋದಿ ಸರ್ಕಾರ ಇದುವರೆಗೆ ಕರ್ನಾಟಕದ ಜನರಿಗೆ ಸಹಾಯ ಮಾಡಲು ಏಕೆ ನಿರಾಕರಿಸಿದೆ? ಅವರು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಹೇಳಿದರು. +ಗ್ರಾಮೀಣ ಆರ್ಥಿಕತೆಯ ಮೇಲಿನ ಬರ-ಸಂಬಂ„ತ ಒತ್ತಡವನ್ನು ನಿವಾರಿಸಲು ಸಹಾಯ ಮಾಡಲು, ಕರ್ನಾಟಕ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೆಗಾ) ಅಡಿಯಲ್ಲಿ ಕೆಲಸದ ದಿನಗಳ ಸಂಖ್ಯೆಯನ್ನು 100 ರಿಂದ 150 ಕ್ಕೆ ಹೆಚ್ಚಿಸಲು ಪ್ರಯತ್ನಿಸಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. +ಆನ್‍ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು +ಬರಗಾಲದ ಅವಧಿಯಲ್ಲಿ ಹಾಗೆ ಮಾಡಲು ಯೋಜನೆಯಲ್ಲಿ ಅವಕಾಶವಿದೆ, ಆದರೆ, ಮೋದಿ ಸರ್ಕಾರವು ಯೋಜನೆಯ ವಿಸ್ತರಣೆಯನ್ನು ಅನುಮೋದಿಸುವಲ್ಲಿ ವಿಫಲವಾಗಿದೆ, ಅದು ಅವರಿಗೆ ವೇತನ ಪಾವತಿಗೆ 1600 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ವಿಫಲವಾಗಿದೆ. ಕರ್ನಾಟಕದ ಎಂಜಿಎನ್‍ಆರ್‍ಇಜಿಎಸ್ ಕಾರ್ಮಿಕರಿಗೆ ಮೋದಿ ಸರ್ಕಾರ ಯಾವಾಗ ವೇತನ ನೀಡಲಿದೆ ಎಂದು ಅವರು ಪ್ರಶ್ನಿಸಿದರು. +2023 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಕರ್ನಾಟಕ ಸರ್ಕಾರವು ತನ್ನ ಅನ್ನ ಭಾಗ್ಯ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡುವ ಪ್ರಯತ್ನವನ್ನು ಮೋದಿ ಸರ್ಕಾರವು ಅಡ್ಡಿಪಡಿಸಿದೆ ಎಂದು ಅವರು ಹೇಳಿದರು. ಯೋಜನೆಯ ಬೇಡಿಕೆಗಳನ್ನು ಪೂರೈಸಲು ಅಗತ್ಯವಿರುವ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತಿ ಕೆಜಿಗೆ 34 ರೂ.ಗೆ ಕರ್ನಾಟಕ ಸರ್ಕಾರಕ್ಕೆ ಮಾರಾಟ ಮಾಡಲು ಆರಂಭದಲ್ಲಿ ಒಪ್ಪಿಕೊಂಡ ನಂತರ, ಭಾರತೀಯ ಆಹಾರ ನಿಗಮ ನಂತರ ಕರ್ನಾಟಕ ಸರ್ಕಾರಕ್ಕೆ ಅಕ್ಕಿ ಮಾರಾಟ ಮಾಡಲು ನಿರಾಕರಿಸಿದೆ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_46_203_12.txt b/eesanje/url_46_203_12.txt new file mode 100644 index 0000000000000000000000000000000000000000..f19c4efc6d2ed9360f58e89fd54d6db0b0471627 --- /dev/null +++ b/eesanje/url_46_203_12.txt @@ -0,0 +1,6 @@ +ಆನ್‍ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು +ನವದೆಹಲಿ,ಮಾ.18 – ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರಿಗೆ ಆನ್‍ಲೈನ್ ಮೂಲಕ ಹಣದ ಆಮಿಷವೊಡ್ಡುವವರ ಮೇಲೆ ಆಯೋಗ ಹದ್ದಿನ ಕಣ್ಣಿಟ್ಟಿದೆ. ಫೋನ್ ಪೇ, ಪೇಟಿಎಂ ಸೇರಿದಂತೆ ಯಾವುದೇ ರೀತಿಯ ಯುಪಿಐ ಆಪ್‍ಗಳ ಮೂಲಕ ರವಾನೆಯಾಗುವ ಹಣಕಾಸು ವಹಿವಾಟಿನ ಮೇಲೆ ಚುನಾವಣಾ ಆಯೋಗ ನಿಗಾವಹಿಸಿದೆ. ಮತದಾರರಿಗೆ ಯಾವುದೇ ಸ್ವರೂಪದಲ್ಲಿ ಆಮಿಷ ಒಡ್ಡಿ ಮತಗಳನ್ನು ಸೆಳೆಯಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ. +ಇಷ್ಟಾದರೂ ಕೆಲವು ರಾಜಕಾರಣಿಗಳು ತಂತ್ರಜ್ಞಾನಗಳನ್ನು ಬಳಸಿಕೊಂಡು ಜನರಿಗೆ ಹಣ ರವಾನೆ ಮಾಡುತ್ತಿದ್ದಾರೆ. ಅದರಲ್ಲೂ ತಾಂತ್ರಿಕವಾಗಿ ಸಾಕಷ್ಟು ಜ್ಞಾನ ಸಂಪಾದಿಸಿರುವ ಬೆಂಗಳೂರು ಜನತೆಗೆ ವಿನೂತನ ತಂತ್ರಜ್ಞಾನದ ಮೂಲಕ ಹಣ ರವಾನಿಸುವುದು ಕಷ್ಟವೇನಲ್ಲ. ಹೀಗಾಗಿ, ಚುನಾವಣಾ ಆಯೋಗ ಇದಕ್ಕಾಗಿ ಪ್ರತ್ಯೇಕ ತಂಡವನ್ನೇ ರಚನೆ ಮಾಡಿ ನಿಗಾ ವಹಿಸಿದೆ. +28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ +ಫೋನ್ ಪೇನ್ ಪೇ, ಗೂಗಲ್ ಪೇ ಹಾಗೂ ಪೆಟಿಎಂ ಸಂಸ್ಥೆಗಳ ಜೊತೆ ಸಭೆ ನಡೆಸಿ ಪ್ರತಿ ದಿನದ ವಹಿವಾಟು, ಯಾವುದೇ ವ್ಯಕ್ತಿಯಿಂದ ನಿರ್ದಿಷ್ಟ ಮೊತ್ತದ ಹಣ ಹೆಚ್ಚಿನ ಸಂಖ್ಯೆಯ ಜನರಿಗೆ ರವಾನೆ ಮಾಡುತ್ತಿದ್ದರೆ ಅಂಥವರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಮುಂದಾಗಿದ್ದು ಪ್ರತಿದಿನದ ಯುಪಿಐ ಡಿಜಿಟಲ್ ಹಣದ ವಹಿವಾಟಿನ ಮೇಲೆ ನಿಗಾ ಇಡಲು ಮುಂದಾಗಿದ್ದಾರೆ. +ಮತದಾರರನ್ನು ಓಲೈಕೆ ಮಾಡಲು ಪೋನ್ ಪೇ, ಗೂಗಲ್ ಪೇ, ಯುಪಿಐ ತಂತ್ರಜ್ಞಾನದ ನೆರವಿನೊಂದಿಗೆ ಆದಷ್ಟು ಬೇಗ ಬಹುತೇಕ ಜನರಿಗೆ ಹಣ ಕಳಿಸಬಹುದು, ಯಾರಿಂದಲೂ ಪತ್ತೆ ಮಾಡಲು ಸಾಧ್ಯವಿಲ್ಲ ಎಂಬ ಭ್ರಮೆ ಇದ್ರೆ ಬಿಟ್ಟು ಬಿಡಿ ಆಯೋಗ ಪ್ರತಿಯೊಂದು ಡಿಜಿಟಲ್ ವಹಿವಾಟಿನ ಮೇಲೂ ಹದ್ದಿನ ಕಣ್ಣಿಟ್ಟಿದ್ದು ಅನುಮಾನ ಬಂದ ಖಾತೆ ಗಳ ಮೇಲೆ ತನಿಖೆ ನಡೆಸಲು ಕೂಡಾ ಮುಂದಾಗಿದೆ. \ No newline at end of file diff --git a/eesanje/url_46_203_2.txt b/eesanje/url_46_203_2.txt new file mode 100644 index 0000000000000000000000000000000000000000..3cf8b58fd0d6d75a7ae87a72cd00dd424fe4d50f --- /dev/null +++ b/eesanje/url_46_203_2.txt @@ -0,0 +1,7 @@ +ವಜ್ರದ ಹರಳೆಂದು ನಂಬಿಸಿ ಕೋಟ್ಯಂತರ ಹಣ ಲಪಟಾಯಿಸಲು ಯತ್ನ +ಬೆಂಗಳೂರು,ಮಾ.18- ವಜ್ರದ ಹರಳುಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ಹೈದರಾಬಾದ್‍ನಿಂದ ವ್ಯಕ್ತಿಯೊಬ್ಬರನ್ನು ಕರೆಸಿಕೊಂಡು ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ನಂಬಿಸಿ ಕೋಟ್ಯಂತರ ಹಣ ಲಪಟಾಯಿಸಲು ಯತ್ನಿಸಿರುವ ನಾಲ್ವರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. +ಹೈದರಾಬಾದ್ ಮೂಲದ ಲಕ್ಷ್ಮಿನಾರಾಯಣ ಎಂಬುವರಿಗೆ ರವಿ ಎಂಬಾ ವಾಟ್ಸಪ್ ಕರೆ ಮಾಡಿ ವ್ಯವಹಾರದ ಸಂಬಂಧ ಬೆಂಗಳೂರಿನ ಏರ್ಪೋರ್ಟ್‍ನಲ್ಲಿನ ತಾಜ್ ಹೋಟೆಲ್‍ಗೆ ಬರುವಂತೆ ತಿಳಿಸಿದ್ದಾನೆ. ಅದರಂತೆ ಲಕ್ಷ್ಮಿನಾರಾಯಣ ಅವರು ಮಾ.15ರಂದು ಬೆಳಗ್ಗೆ 11.30 ಸುಮಾರಿಗೆ ಹೈದರಾಬಾದ್‍ನಿಂದ ಸ್ನೇಹಿತರಾದ ನಾಗೇಂದ್ರ ಮತ್ತು ರಾಮ್‍ಕುಮಾರ್ ಜೊತೆ ಬಂದಿದ್ದಾರೆ. +ಹೋಟೆಲ್‍ನ ಲಾಬಿಯಲ್ಲಿ ಈ ಮೂವರು ಕುಳಿತಿದ್ದಾಗ ರವಿ ಅಲ್ಲಿಗೆ ಬಂದಿದ್ದು, ತನ್ನೊಂದಿಗಿದ್ದ ನವೀನ್‍ಕುಮಾರ್, ಗೂರ್ ಅಹಮ್ಮದ್, ಅಬ್ದುಲ್ ದಸ್ತಗೀರ್ ಎಂದು ಪರಿಚಿಯಿಸಿ ಇವರು ವಜ್ರದ ವ್ಯವಹಾರ ಮಾಡುತ್ತಿರುವುದಾಗಿ ಹೇಳಿದ್ದಾನೆ. ನಂತರ ತನ್ನ ಬಳಿಯಿದ್ದ ಬ್ಯಾಗ್‍ನಿಂದ 10 ಒಡವೆ ಬಾಕ್ಸ್‍ಗಳನ್ನು ಒಂದೊಂದಾಗಿ ತೆಗೆದು ತೋರಿಸಿ ಇವು ವಜ್ರದ ಹರಳುಗಳು, ಮಾರುಕಟ್ಟೆಯಲ್ಲಿ ಸುಮಾರು 10 ಕೋಟಿ ರೂ.ಗಳಾಗುತ್ತದೆ ಎಂದು ತಿಳಿಸಿದ್ದಾನೆ. +ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ +ಆ ಹರಳುಗಳನ್ನು ಯಾವುದೋ ಎರಡು ಮೆಷಿನ್‍ಗಳಿಂದ ಪರಿಶೀಲಿಸಿದವರಂತೆ ನಟಿಸಿ ಅವುಗಳು ಅಸಲಿ ಎಂದು ಲಕ್ಷಿನಾರಾಯಣ ಅವರನ್ನು ನಂಬಿಸಲು ಯತ್ನಿಸಿದ್ದಾರೆ. ನೀವು ಈ ಹರಳುಗಳನ್ನು ಖರೀದಿಸಲು ಒಪ್ಪಿದರೆ 1ರಿಂದ 3 ಕೋಟಿ ರೂ. ಕಡಿಮೆ ಬೆಲೆಗೆ ಕೊಡುವುದಾಗಿ ತಿಳಿಸಿದ್ದಾರೆ. ಲಕ್ಷ್ಮಿನಾರಾಯ ಅವರಿಗೆ ಹರಳುಗಳ ಬಗ್ಗೆ ಅನುಮಾನ ಬಂದು ಖುದ್ದು ತಮ್ಮ ಜೊತೆಯಲ್ಲಿದ್ದ ಸ್ನೇಹಿತರೊಂದಿಗೆ ಪರೀಕ್ಷಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ. +ತಕ್ಷಣ ಲಕ್ಷ್ಮಿನಾರಾಯಣ ಅವರು ತಮ್ಮ ಸ್ನೇಹಿತರೊಂದಿಗೆ ಅಲ್ಲಿಂದ ತೆರಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಗೆ ಬಂದು ನಕಲಿ ವಜ್ರದ ಹರಳುಗಳನ್ನು ಅಸಲಿ ಎಂದು ತಮಗೆ ತೋರಿಸಿ ಹಣ ಲಪಟಾಯಿಸಲು ಯತ್ನಿಸಿದ ರವಿ ಸೇರಿದಂತೆ ನಾಲ್ವರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_203_3.txt b/eesanje/url_46_203_3.txt new file mode 100644 index 0000000000000000000000000000000000000000..81274f6e415878fbdcc4d9d378bc4d33389cbb3c --- /dev/null +++ b/eesanje/url_46_203_3.txt @@ -0,0 +1,8 @@ +ರಾಜ್ಯದ ರೈತರಿಗೆ ಬಿಜೆಪಿ ಸಾಲು ಸಾಲು ಅನ್ಯಾಯ:ಸಿಎಂ ಟೀಕೆ +ಬೆಂಗಳೂರು, ಮಾ.18- ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಎಂದಿದ್ದಾರೆ. +ರೈತ ಚಳವಳಿಗಳ ತವರು ನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಪ್ರಧಾನಿಯವರನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. +2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದ್ದಾರೆ. +ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ +ರಾಜ್ಯದಲ್ಲಿ ಬರ ಘೋಷಣೆ ಮಾಡಿ 6 ತಿಂಗಳುಗಳ ಕಳೆದಿದೆ. ರೂ.18,177 ಕೋಟಿ ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ ಎಂದು ಕಿಡಿಕಾರಿದ್ದಾರೆ. +ಬರದಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 150ಕ್ಕೆ ಹೆಚ್ಚಳ ಮಾಡ ಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದರೂ ಈ ವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೂ.5,300 ಕೋಟಿ ಅನುದಾನ ಘೋಷಿಸಿ ವರ್ಷಗಳೇ ಕಳೆದರೂ ಈ ವರೆಗೆ ನಯಾಪೈಸೆ ರಾಜ್ಯಕ್ಕೆ ಬಂದಿಲ್ಲ. ಮಹದಾಯಿ ಮತ್ತು ಮೇಕೆದಾಟು ಯೋಜನೆಗಳಿಗೆ ಕೇಂದ್ರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿವೆ. ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸಂಕಷ್ಟಸೂತ್ರ ರಚನೆಗೆ ಮಧ್ಯಸ್ಥಿಕೆ ವಹಿಸದೆ ಕೇಂದ್ರ ಸರ್ಕಾರ ನಾಡಿನ ರೈತರನ್ನು ಕೈಬಿಟ್ಟಿದೆ. ರಾಜ್ಯದ ರೈತರಿಗೆ ಮಾತ್ರ ಯಾಕೆ ಈ ಸಾಲು ಸಾಲು ಅನ್ಯಾಯಗಳು ಎಂದು ಕೆಣಕಿದ್ದಾರೆ. +ದೇಶದ ಕೃಷಿ ಕ್ಷೇತ್ರವನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳ ಕೈಗಿಡುವ ದುಷ್ಟ ಆಲೋಚನೆಯೊಂದಿಗೆನ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ 3 ರೈತ ವಿರೋಧಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿತು. ಈ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಹೋರಾಟ ಮಾಡುತ್ತಿದ್ದ 750ಕ್ಕೂ ಹೆಚ್ಚು ರೈತರು ಅನಾರೋಗ್ಯ, ಹವಾಮಾನ ವೈಪರಿತ್ಯ, ಪೊಲೀಸ್ ದೌರ್ಜನ್ಯಗಳಿಗೆ ಬಲಿಯಾದರು. ಇವರಿಗೆ ನ್ಯಾಯ ಕೊಡಿಸಬೇಕಾದವರು ನೀವಲ್ಲವೇ ನರೇಂದ್ರ ಮೋದಿ ಅವರೇ ಎಂದು ಕೆಂಡ ಕಾರಿದ್ದಾರೆ. \ No newline at end of file diff --git a/eesanje/url_46_203_4.txt b/eesanje/url_46_203_4.txt new file mode 100644 index 0000000000000000000000000000000000000000..e4fd7d4e59e987a7a29eed5c18220e49d2e86b91 --- /dev/null +++ b/eesanje/url_46_203_4.txt @@ -0,0 +1,6 @@ +ನೀತಿ ಸಂಹಿತೆ: ಬೆಂಗಳೂರಿನಾದ್ಯಂತ ಕಟ್ಟೆಚ್ಚರ +ಬೆಂಗಳೂರು,ಮಾ.18- ಲೋಕಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ನಗರ ಪೊಲೀಸರು ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3ರಂತೆ ನಗರಾದ್ಯಂತ 100ಕ್ಕೂ ಹೆಚ್ಚು ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ತೆರೆದು ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ. +ಉತ್ತರ ವಿಭಾಗದಲ್ಲಿ 20, ಪಶ್ಚಿಮ 22, ಕೇಂದ್ರ ವಿಭಾಗದಲ್ಲಿ 22 ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಅಕಾರಿ ಮತ್ತು ಸಿಬ್ಬಂದಿಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಾರೆ.ಚೆಕ್‍ಪೋಸ್ಟ್‍ಗಳಲ್ಲಿ ಪೊಲೀಸರ ಜೊತೆಗೆ ಬಿಬಿಎಂಪಿ, ಆರ್‍ಟಿಒ ಅಬಕಾರಿ, ಕಮರ್ಷಿಯಲ್ ಟಾಕ್ಸ್ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇರುತ್ತಾರೆ. +ಚೆಕ್‍ಪೋಸ್ಟ್ ಮಾರ್ಗವಾಗಿ ಬರುವಂತಹ ಎಲ್ಲ ವಾಹನಗಳನ್ನು ಸಂಪೂರ್ಣ ಪರಿಶೀಲಿಸಲಾಗುತ್ತಿದ್ದು, ಅಕ್ರಮವಾಗಿ ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳನ್ನು ಸಾಗಿಸುವುದು ಕಂಡುಬಂದರೆ ಅವುಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಒಂದು ವೇಳೆ ಸಾಗಿಸುವ ಹಣ ಅಥವಾ ವಸ್ತುಗಳಿಗೆ ಸೂಕ್ತ ದಾಖಲೆ ಒದಗಿಸಿದರೆ ಅವುಗಳನ್ನು ಹಿಂದಿರುಗಿಸಲಾಗುತ್ತದೆ. +ಕ್ಷೇತ್ರ ಹಂಚಿಕೆ ಗೊಂದಲವಿಲ್ಲ : ಜಿ.ಟಿ.ದೇವೇಗೌಡ +ನೀತಿ ಸಂಹಿತೆ ಜಾರಿಯಾದ ಮೊದಲ ದಿನವಾದ ನಿನ್ನೆ ಅಶೋಕನಗರ ಪೊಲೀಸ್ ಠಾಣೆಯ ರೆಸಿಡೆನ್ಸಿ ರಸ್ತೆಯ ಚೆಕ್‍ಫೋಸ್ಟ್‍ನಲ್ಲಿ ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ 13.16 ಲಕ್ಷ ದಾಖಲೆ ಇಲ್ಲದ ಹಣ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಒಟ್ಟಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದೆಲ್ಲೆಡೆ ಖಾಕಿ ಕಣ್ಗಾವಲಿದ್ದು, ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. \ No newline at end of file diff --git a/eesanje/url_46_203_5.txt b/eesanje/url_46_203_5.txt new file mode 100644 index 0000000000000000000000000000000000000000..bf3e06ad6d365ea21af52abab9538024b126f680 --- /dev/null +++ b/eesanje/url_46_203_5.txt @@ -0,0 +1,5 @@ +ಕ್ಷೇತ್ರ ಹಂಚಿಕೆ ಗೊಂದಲವಿಲ್ಲ : ಜಿ.ಟಿ.ದೇವೇಗೌಡ +ಬೆಂಗಳೂರು,ಮಾ.18-ಲೋಕಸಭೆ ಚುನಾವಣೆಗೆ ಸಂಬಂಸಿದಂತೆ ಕ್ಷೇತ್ರಗಳ ಹಂಚಿಕೆ ಗೊಂದಲವಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ಗೆ ಯಾವ ಯಾವ ಕ್ಷೇತ್ರಗಳನ್ನು ನೀಡಲಾಗಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇದೆ ಎಂದರು. +ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ನಮಗೆ ಬಿಟ್ಟುಕೊಡಿ ಎಂದು ನಾವು ಕೇಳಿಲ್ಲ. ಆದರೆ ಬಿಜೆಪಿಯವರೇ ತೆಗೆದುಕೊಳ್ಳಿ ಎಂದು ಹೇಳುತ್ತಿರುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಬಂದಿದ್ದಾರೆ. ನಾವು ಅವರೊಂದಿಗೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. +ಎರಡು ಬ್ಯಾಂಕ್‍ಗಳಲ್ಲಿ ಒಂದೇ ಆಸ್ತಿಪತ್ರ ಅಡಮಾನವಿಟ್ಟು ಸಾಲ ಪಡೆದ ಚಾಲಾಕಿ ದಂಪತಿ +ಜೆಡಿಎಸ್‍ಗೆ ಮೂರು ಅಥವಾ ನಾಲ್ಕು ಕ್ಷೇತ್ರಗಳನ್ನು ಬಿಟ್ಟು ಕೊಡಿ ಎಂದು ಬಿಜೆಪಿಯವರನ್ನು ಕೇಳಿದ್ದೇವೆ ಹೊರತು ಎಂಟ್ಹತ್ತು ಕ್ಷೇತ್ರಗಳನ್ನು ಕೇಳಿಲ್ಲ. ಗೆಲ್ಲಲು ಅವಕಾಶ ಇರುವ ನಮ್ಮ ಪಕ್ಷದ ಶಕ್ತಿ ಇರುವ ಕ್ಷೇತ್ರಗಳನ್ನು ಮಾತ್ರ ಕೇಳಿದ್ದೇವೆ. ಬಿಜೆಪಿ ಅಭ್ಯರ್ಥಿ ಇರುವ ಕಡೆಯೂ ನಮ್ಮ ಪಕ್ಷದ ಮತಗಳು ಸಾಕಷ್ಟಿವೆ. ಅವುಗಳನ್ನು ಬಿಜೆಪಿ ಅಭ್ಯರ್ಥಿಗಳಿಗೆ ಹಾಕಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_203_6.txt b/eesanje/url_46_203_6.txt new file mode 100644 index 0000000000000000000000000000000000000000..8a097574b4d080ce151d1b1ab028f428b244f17d --- /dev/null +++ b/eesanje/url_46_203_6.txt @@ -0,0 +1,10 @@ +ಮಾಜಿ ಸಿಎಂ ಡಿ.ವಿ.ಸದಾನಂದಗೌಡರಿಗೆ `ಕೈ’ ಗಾಳ.! +ಬೆಂಗಳೂರು,ಮಾ.18- ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮತ್ತೊಮ್ಮೆ ಸ್ರ್ಪಧಿಸುವ ಇಂಗಿತದಲ್ಲಿದ್ದ ಡಿ.ವಿ.ಸದಾನಂದಗೌಡ ನಾಳೆ ಪತ್ರಿಕಾಗೋಷ್ಠಿ ಕರೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ಕರೆದಿರುವ ಸದಾನಂದಗೌಡ, ತಮ್ಮ ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಪ್ರಕಟಿಸುವ ಸಾಧ್ಯತೆ ಇದೆ. +ಇದರ ಬೆನ್ನಲ್ಲೇ ನನಗೆ ಕಾಂಗ್ರೆಸ್ ಸೇರುವಂತೆ ಕೆಲವು ನಾಯಕರು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರ ಜೊತೆ ನಾನು ಚರ್ಚಿಸಿ ತೀರ್ಮಾನಿಸಬೇಕೆಂದು ಡಿವಿಎಸ್ ಹೇಳಿರುವುದು ಬಿಜೆಪಿ ತೊರೆದು ಕೈನತ್ತ ಮುಖ ಮಾಡಿದ್ದರಾ ಎಂಬ ಅನುಮಾಗಳು ವ್ಯಕ್ತವಾಗಿದೆ. ನನ್ನನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿರುವುದು ನಿಜ. ಇನ್ನು ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದರೂ ನಾನು ಯಾವುದೇ ನಿರ್ಧಾರವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನನ್ನ ನಿರ್ಧಾರಗಳನ್ನು ನನ್ನ ಕುಟುಂಬದ ಸದಸ್ಯರ ಜತೆ ಚರ್ಚಿಸಬೇಕು. ನಂತರ, ನಾನು ಮುಂದಿನ ತೀರ್ಮಾನವನ್ನು ಬಹಿರಂಗವಾಗಿ ಹೇಳುತ್ತೇನೆ ಎಂದರು. +ನನ್ನ ಪಕ್ಷದ ಪ್ರಮುಖರೊಬ್ಬರು ನನ್ನ ಜೊತೆಗೆ ಸಮಾಲೋಚನೆ ಮಾಡಿದ್ದಾರೆ. ನಿನ್ನೆ ನಮ್ಮ ಮನೆಗೆ ಆಗಮಿಸಿ, ಮಾತುಕತೆ ನಡೆಸಿದ್ದಾರೆ. ಅವರು ಹೇಳಿರುವ ಮಾತನ್ನು ನಾನು ಈಗ ಹೇಳಲು ಆಗುವುದಿಲ್ಲ. ನಿಮಗೆ ಏನೇ ಸುದ್ದಿ ಬಂದರೂ ಅರ್ಧ ಘಂಟೆ, ಒಂದು ಘಂಟೆ ಮಾತ್ರ. ನಾಳೆ ಎಲ್ಲವನ್ನೂ ತಿಳಿಸುತ್ತೇನೆ ಎಂದು ಹೇಳಿದ್ದಾರೆ. +ನರೇಂದ್ರ ಮೋದಿ ಆಗಮನದ ಸಂದರ್ಭದಲ್ಲಿ ಕೆ.ಎಸ್.ಈಶ್ವರಪ್ಪರ ಬಂಡಾಯ ವಿಚಾರವಾಗಿ ಮಾತನಾಡಿದ ಡಿವಿಎಸ್, ನಾನು ಈಶ್ವರಪ್ಪರ ಬಳಿ ಮಾತನ್ನಾಡಿದ್ದೇನೆ. ನಾನು ಅವರಿಗೆ ಹೇಳಿದ್ದೆ. ಯಾರಿಗೆಲ್ಲಾ ಅನ್ಯಾಯ ಆಗಿದೆಯೋ, ಅವರೆಲ್ಲಾ ಒಂದುಗೂಡಿ ಹೈಕಮಾಂಡ್ ನಾಯಕರ ಬಳಿ ಹೋಗೋಣ ಎಂದಿದ್ದೆ. ಆದರೆ ಈಶ್ವರಪ್ಪನವರು ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಅದು ಅವರ ನಿಲುವು. ಅವರ ನಿಲುವು ಬಗ್ಗೆ ನಾನೇನು ಹೇಳುವುದಿಲ್ಲ. ನಾನು ನಾಳೆ ನನ್ನ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಮಾಹಿತಿ ನೀಡಿದರು. +ಬೆಂಗಳೂರು ಉತ್ತರದಲ್ಲಿ ಶೇ.100 ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಎಂದೇಳಿ ಕೊನೇ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ನಾಳೆ ಸುದ್ದಿಗೋಷ್ಠಿ ಕರೆಯುತ್ತೇನೆ. ನಾಳೆ ಯಾವ ನಿರ್ಣಯ ಎಂದು ಈಗಲೇ ಹೇಳಿಬಿಟ್ಟರೆ, ನಾಳೆಗೆ ಏನೂ ಉಳಿಯೊಲ್ಲ. ರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದು ಬೇಜಾರಾಗಿದೆ ಎಂದು ಬೆಂಗಳೂರಿನಲ್ಲಿ ಸದಾನಂದಗೌಡ ಹೇಳಿದರು. +ಈ ಹಿಂದೆ ಬೆಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸದಾನಂದಗೌಡರು ಕೆಲ ತಿಂಗಳ ಹಿಂದೆ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳುವುದಾಗಿ ಘೋಷಣೆ ಮಾಡಿದ್ದರು. ಆದರೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪುನಃ ಇದೇ ಕ್ಷೇತ್ರದಿಂದ ಮತ್ತೊಮ್ಮೆ ಸ್ರ್ಪಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಆದರೆ ಬಿಜೆಪಿ ವರಿಷ್ಠರು ಈ ಕ್ಷೇತ್ರಕ್ಕೆ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಅವರಿಗೆ ಅಸಮಾಧಾನ ಉಂಟು ಮಾಡಿತ್ತು. +ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ +ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸದಾನಂದ ಗೌಡ ಅವರು ಹೈಕಮಾಂಡ್ ನಿರ್ಧಾರಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸೌಜನ್ಯಕ್ಕಾದರೂ ವರಿಷ್ಠರು ನನ್ನ ಅಭಿಪ್ರಾಯ ಕೇಳಲಿಲ್ಲ ಎಂದು ಆಪ್ತರ ಬಳಿ ತಮ್ಮ ನೋವು ತೋಡಿಕೊಂಡಿದ್ದರು. ಇದೀಗ ಏಕಾಏಕಿ ಸದಾನಂದಗೌಡ ಅವರು ತಮ್ಮ ನಿಲುವು ಬದಲಾಯಿಸಿದ್ದಾರೆ. ಈ ಬೆಳವಣಿಗೆಗಳ ನಡುವೆ ಅವರನ್ನು ಕಾಂಗ್ರೆಸ್‍ಗೆ ಸೆಳೆಯಲು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಖಾಡಕ್ಕೆ ಇಳಿದಿದ್ದಾರೆ ಎಂದು ತಿಳಿದುಬಂದಿದೆ. +ಒಂದು ವೇಳೆ ಡಿವಿಎಸ್ ಕಾಂಗ್ರೆಸ್‍ಗೆ ಸೇರ್ಪಡೆಯಾದರೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಭವವಿದೆ. ಹೀಗಾಗಿ ಮಂಗಳವಾರ ನಡೆಯಲಿರುವ ಪತ್ರಿಕಾಗೋಷ್ಠಿ ಎಲ್ಲರ ಕುತೂಹಲವನ್ನು ಕೆರಳಿಸಿದೆ. \ No newline at end of file diff --git a/eesanje/url_46_203_7.txt b/eesanje/url_46_203_7.txt new file mode 100644 index 0000000000000000000000000000000000000000..00a076418e6de4518865d0a2e0034a6ebf127b41 --- /dev/null +++ b/eesanje/url_46_203_7.txt @@ -0,0 +1,7 @@ +ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ +ಬೆಂಗಳೂರು, ಮಾ.18- ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದನ್ನುಪ್ರಶ್ನಿಸಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸುಲೇಮಾನ್, ಶನವಾಜ್ ಮತ್ತು ರೋಹಿತ್ ಬಂಧಿತರು. ಉಳಿದವರಿಗಾಗಿ ಶೋಧ ಮುಂದುವರೆದಿದೆ.ನಗರ್ತಪೇಟೆಯ ಸಿದ್ದಣ್ಣ ಗಲ್ಲಿಯಲ್ಲಿ ಮುಖೇಶ್ ಎಂಬುವರು ಮೊಬೈಲ್ ಬಿಡಿ ಭಾಗಗಳ ಅಂಗಡಿ ಇಟ್ಟುಕೊಂಡಿದ್ದಾರೆ. +ಇಲ್ಲಿನ ಪ್ರಾರ್ಥನಾ ಮಂದಿರದ 200 ಮೀಟರ್ ದೂರದಲ್ಲಿ ಮುಖೇಶ್ ಅವರ ಅಂಗಡಿ ಇದೆ. ನಿನ್ನೆ ಸಂಜೆ 7.30ರ ಸುಮಾರಿನಲ್ಲಿ ತಮ್ಮ ಅಂಗಡಿಯಲ್ಲಿ ಹಿಂದಿ ಭಜನೆ ಹಾಡು ಹಾಕಿದ್ದರು. ಇದರಿಂದ ಕೋಪಗೊಂಡ ಅನ್ಯಕೋಮಿನ ಆರೇಳು ಮಂದಿಯ ಗುಂಪು ಏಕಾಏಕಿ ಅಂಗಡಿ ಬಳಿ ಹೋಗಿ ನಿಮ್ಮ ಅಂಗಡಿಯಲ್ಲಿ ಹಾಕಿರುವ ಹಾಡಿನಿಂದ ಪ್ರಾರ್ಥನೆ ನಡೆಸಲು ತೊಂದರೆಯಾಗುತ್ತಿದೆ ಹಾಡನ್ನು ನಿಲ್ಲಿಸುವಂತೆ ಹೇಳಿ ಜಗಳವಾಡಿದ್ದಾರೆ.ಮಾತಿಗೆ ಮಾತು ಬೆಳೆದಾಗ ಗಲಾಟೆ ವಿಕೋಪಕ್ಕೆ ತಿರುಗಿ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆಳೆದು ಕೈ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಗಂಪು ಪರಾರಿಯಾಗಿದೆ. +ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ +ಘಟನೆಯನ್ನು ಖಂಡಿಸಿ ವರ್ತಕರು ಠಾಣೆ ಮುಂದೆ ಜಮಾಯಿಸಿ ಹಲ್ಲೆ ಮಾಡಿದ ಪುಂಡರನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದರು. ಕಳೆದ 15 ದಿನಗಳಿಂದಲೂ ಅಂಗಡಿ ಬಳಿ ಬಂದು ಕೆಲ ಪುಂಡರು ಕಿರುಕುಳ ನೀಡುತ್ತಿದ್ದಾರೆಂದು ವರ್ತಕರು ಆರೋಪಿಸಿದ್ದಾರೆ. +ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ@INCKarnatakaದ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ.ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ.ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ…../XYSDTZN0GT +ಹಲ್ಲೆಗೊಳಗಾದ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಂಗಡಿ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಹಲ್ಲೆ ನಡೆಸಿದ ಮೂವರನ್ನು ಬಂಸಿ ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_203_8.txt b/eesanje/url_46_203_8.txt new file mode 100644 index 0000000000000000000000000000000000000000..dae524f564d2612ba670258a8b1d0ac0e4ef4264 --- /dev/null +++ b/eesanje/url_46_203_8.txt @@ -0,0 +1,6 @@ +ಎರಡು ಬ್ಯಾಂಕ್‍ಗಳಲ್ಲಿ ಒಂದೇ ಆಸ್ತಿಪತ್ರ ಅಡಮಾನವಿಟ್ಟು ಸಾಲ ಪಡೆದ ಚಾಲಾಕಿ ದಂಪತಿ +ಮೈಸೂರು, ಮಾ. 18- ಒಂದೇ ಆಸ್ತಿಯನ್ನು ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ಧ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಾಲ ಪಡೆದು ವಂಚಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. +ಮೈಸೂರಿನ ಜೆಪಿ ನಗರ ನಿವಾಸಿಗಳಾದ ನಿರಂಜನ್ ಹಾಗೂ ನಂದಿನಿ ದಂಪತಿ ವಿರುದ್ದ ಚೀಟಿಂಗ್ ಪ್ರಕರಣ ದಾಖಲಾಗಿದೆ. ನಿರಂಜನ್ ಹಾಗೂ ನಂದಿನಿ ರವರಿಗೆ ಸೇರಿದ ಆಸ್ತಿಯ ಮೂಲ ದಾಖಲಾತಿಗಳನ್ನ ಸರಸ್ವತಿಪುರಂ ಬ್ರಾಂಚ್ ನ ಬ್ಯಾಂಕ್ ಆಫ್ ಬರೋಡದಲ್ಲಿ ಅಡಮಾನವಿಟ್ಟು 2016 ರಲ್ಲಿ 49.99 ಲಕ್ಷ ಸಾಲ ಪಡೆದಿದ್ದಾರೆ. +ದಕ್ಷಿಣ ಕನ್ನಡದಲ್ಲಿ ಶುರುವಾದ ನಕ್ಸಲ್ ಚಟುವಟಿಕೆ +ಸಾಲ ಪಡೆದು 8 ವರ್ಷಗಳಾದರೂ ಹಣ ಮರುಪಾವತಿಸಿಲ್ಲ. ಸಾಲದ ಹಣ ಬಡ್ಡಿ ಸೇರಿ 79,71,306 ರೂ. ಪಾವತಿಸಬೇಕಿರುತ್ತದೆ. ಈ ಮಧ್ಯೆ ಬೆಂಗಳೂರಿನ ಬನಶಂಕರಿ ಬಡಾವಣೆಯಲ್ಲಿರುವ ಸುರಭಿ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನಲ್ಲೂ ಸಹ ಇದೇ ದಾಖಲಾತಿಗಳನ್ನ ತಿದ್ದುಪಡಿ ಮಾಡಿ ಸಾಲ ಪಡೆದಿರುವುದು ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕರ ಗಮನಕ್ಕೆ ಬಂದಿದೆ. ಅಲ್ಲದೆ ಈ ಬಗ್ಗೆ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನವರೂ ಸಹ ಪತ್ರ ವ್ಯವಹಾರ ಮಾಡಿ ದಂಪತಿಯ ವಂಚನೆ ಬಯಲಿಗೆ ತಂದಿದ್ದಾರೆ. +ಈ ಸಂಬಂಧ ಬ್ಯಾಂಕ್ ಆಫ್ ಬರೋಡ ವ್ಯವಸ್ಥಾಪಕ ಎಂ.ಯೋಗೇಶ್ ರವರು ದಂಪತಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. \ No newline at end of file diff --git a/eesanje/url_46_203_9.txt b/eesanje/url_46_203_9.txt new file mode 100644 index 0000000000000000000000000000000000000000..7e7b27ab575d7a524de66f91ab225fcbdf9ca27a --- /dev/null +++ b/eesanje/url_46_203_9.txt @@ -0,0 +1,8 @@ +ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ +ಬೆಂಗಳೂರು,ಮಾ.18- ಲೋಕಸಭಾ ಚುನಾವಣಾ ಪ್ರಚಾರ ದಲ್ಲಿ ಬಿಜೆಪಿಯು ತಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯವಾಗಿ ಹಿಂದಿಯಲ್ಲಿ ಮಾಡುವ ಭಾಷಣಗಳನ್ನು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ಕೃತಕ ಬುದ್ದಿಮತ್ತೆ(ಎಐ) ಆಧರಿತ ತಂತ್ರಜ್ಞಾನವನ್ನು ಬಳಸುತ್ತಿದೆ. +ಬಿಜೆಪಿ ಈಗಾಗಲೇ ರೆಕಾರ್ಡ್ ಮಾಡಿದ ಭಾಷಣಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಭಾಷಣ ಮಾಡುವ ಸಮಯದಲ್ಲೇ ಇತರ ಭಾಷೆಗಳಿಗೆ ಅನುವಾದಿಸಲು ಮುಂದಾಗಿದೆ. +ಮೂರು ತಿಂಗಳ ಹಿಂದೆ, ವಾರಣಾಸಿಯಲ್ಲಿ ಕಾಶಿ ತಮಿಳು ಸಂಗಮಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಗವಹಿಸಿದ್ದರು. ಈ ವೇಳೆ ಭಾರತ ಸರ್ಕಾರ ಅಭಿವೃದ್ಧಿಪಡಿಸಿದ ಆ್ಯಪ್ ಭಾಷಿಣಿ ಮೂಲಕ ಮೋದಿಯವರ ಹಿಂದಿ ಭಾಷಣವನ್ನು ತಮಿಳಿಗೆ ನೇರ ಭಾಷಾಂತರಿಸಲು ಪ್ರಯತ್ನಿಸಲಾಯಿತು. ಪ್ರೇಕ್ಷಕರು ತಮ್ಮ ಸ್ಮಾರ್ಟ್‍ಫೋನ್‍ಗಳನ್ನು ಬಳಸಿಕೊಂಡು ತಮಿಳಿನಲ್ಲಿ ಅದನ್ನು ಕೇಳಲು ಸಾಧ್ಯವಾಯಿತು. ಆದರೆ ಕೆಲವು ತಾಂತ್ರಿಕ ದೋಷಗಳು ಕಂಡುಬಂದಿತ್ತು ಮತ್ತು ಭಾವನಾತ್ಮಕ ವಿಚಾರ ಕಣ್ಮರೆಯಾಗಿತ್ತು. +ಆನ್‍ಲೈನ್ ಹಣ ವರ್ಗಾವಣೆ ಮೇಲೆ ಚು.ಆಯೋಗ ಹದ್ದಿನ ಕಣ್ಣು +ಇದೀಗ ಅವರು ಅದರ ಮೇಲೆ ಕೆಲಸ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಪ್ರೇಕ್ಷಕರು ಯಾವುದೇ ಭಾರತೀಯ ಭಾಷೆಯಲ್ಲಿ ನೇರವಾಗಿ ಭಾಷಣಗಳನ್ನು ಕೇಳಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಈ ಪ್ರಯೋಗ ಈಗಾಗಲೇ ಪ್ರಾರಂಭವಾಗಿದೆ ಮತ್ತು ಸೀಮಿತ ಪ್ರೇಕ್ಷಕರಿಗೆ ಪ್ರಾಯೋಗಿಕ ಆಧಾರದ ಮೇಲೆ ಮಾಡಲಾಗಿದೆ. ಈಗಾಗಲೇ, ಪಕ್ಷದ ಸಾಮಾಜಿಕ ಮಾಧ್ಯಮ ಮತ್ತು ಸಂವಹನ ತಂಡಗಳು ಹೆಚ್ಚಿನ ಸಂಖ್ಯೆಯ ಜನರನ್ನು ತಲುಪಲು ಎಐಅನ್ನು ವ್ಯಾಪಕವಾಗಿ ಬಳಸುತ್ತಿವೆ. ಇತರ ಭಾಷೆಗಳಲ್ಲಿ ಮಾತನಾಡುವ ಮೋದಿ ಮತ್ತು ಪಕ್ಷದ ಇತರ ನಾಯಕರ ಕೆಲವು ಕ್ಲಿಪ್ಪಿಂಗ್‍ಗಳನ್ನು ಆಯ್ಕೆ ಮಾಡುತ್ತಿದ್ದೇವೆ. ಬಳಸಿ, ನಾವು ಅದೇ ವಿಡಿಯೋಗೆ ಕನ್ನಡದಲ್ಲಿ ಧ್ವನಿಯನ್ನು ನೀಡುತ್ತೇವೆ. ಕ್ಲಿಪ್‍ಗಳನ್ನು ನಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‍ಗಳಲ್ಲಿ ಬಳಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಕರ್ನಾಟಕದಲ್ಲಿ ಬಿಜೆಪಿ 32,835 ವಾಟ್ಸಾಪ್ ಗುಂಪುಗಳನ್ನು ಹೊಂದಿದೆ ಮತ್ತು ಅದರ ಬ್ರಾಡ್‍ಕಾಸ್ಟ್ ಪಟ್ಟಿಯಲ್ಲಿ 3.58 ಲಕ್ಷ ಜನರನ್ನು ಹೊಂದಿದೆ. ನಾವು ವಾಟ್ಸಾಪ್ ಗ್ರೂಪ್‍ಗಳಲ್ಲಿ ಕನ್ನಡದಲ್ಲಿ (ವಾಯ್ಸ್‍ಓವರ್ ಮತ್ತು ಪಠ್ಯ) ಭಾಷಣಗಳನ್ನು ಹೊಂದಿರುವ ಎಐ ಆಧರಿತ ವಿಡಿಯೋಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಅವುಗಳನ್ನು ಪ್ರಸಾರ ಮಾಡುತ್ತೇವೆ. +ಕೆಲವೇ ಸೆಕೆಂಡುಗಳಲ್ಲಿ ನಾವು ಹಲವಾರು ಜನರನ್ನು ತಲುಪುತ್ತೇವೆ. ಅವರು ಇತರ ಗುಂಪುಗಳಲ್ಲಿ ಹಂಚಿಕೊಳ್ಳಲು ಪ್ರಾರಂಭಿಸುತ್ತಾರೆ. ಈ ಮೂಲಕ ನಾವು ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಕನ್ನಡೇತರ ಭಾಷೆಗಳಲ್ಲಿ ಮಾತನಾಡುವ ಯಾವುದೇ ನಾಯಕರ ಭಾಷಣಗಳನ್ನು ಕನ್ನಡ ಮಾತನಾಡುವ ಜನರಿಗೆ ತಲುಪಿಸಬಹುದು ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_204_1.txt b/eesanje/url_46_204_1.txt new file mode 100644 index 0000000000000000000000000000000000000000..8c9cc8cf92b9590b2e61ac3054c6a36a1a418272 --- /dev/null +++ b/eesanje/url_46_204_1.txt @@ -0,0 +1,5 @@ +ರಾಜ್ಯದ ವಿವಿಧೆಡೆ ಮಳೆ ಮುನ್ಸೂಚನೆ +ಬೆಂಗಳೂರು,ಮಾ.18- ಮುಂದಿನ ಎರಡು ಮೂರು ದಿನಗಳಲ್ಲಿ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದವಾರ ಚಿಕ್ಕಮಗಳೂರು ಜಿಲ್ಲೆಯ ಹಲವಡೆ ಮಳೆಯಾಗಿತ್ತು. ನಿನ್ನೆ ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗಿದ್ದು, ಮುಂದಿನ 2-3 ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಸಾಧಾರಣವಾಗಿ ಮಳೆಯಾಗಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. +ತಮಿಳುನಾಡಿನಲ್ಲಿ ಕಾಣಿಸಿಕೊಂಡಿರುವ ಟ್ರಪ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಕರ್ನಾಟಕದ ಮೇಲೂ ಬೀರಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಇತರ ಪ್ರದೇಶಗಳಲ್ಲಿ ಮಳೆಯಾಗುವ ಸಂಭವ ಇದೆ. +28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ +ಸದ್ಯ ಈ ಭಾಗದಲ್ಲಿ ಮೋಡ ಕವಿದ ವಾತಾವರಣವಿದ್ದು, ಇನ್ನೆರಡು ದಿನದಲ್ಲಿ ಮಳೆ ನಿರೀಕ್ಷಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬೇಸಿಗೆಯಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.ಮಾರ್ಚ್‍ನಿಂದ ಮೇ ವರೆಗೆ ರಾಜ್ಯದ ಉತ್ತರ ಒಳಭಾಗಗಲ್ಲಿ ತಾಪಮಾನ ಹೆಚ್ಚಾಗಿರುತ್ತದೆ. ತಿಂಗಳಾಂತ್ಯದಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಭಾಗಗಳಲ್ಲಿ ಸುಡುವ ಶಾಖದಿಂದ ಜನರು ನಿರಾಳವಾಗಬಹುದು. \ No newline at end of file diff --git a/eesanje/url_46_204_10.txt b/eesanje/url_46_204_10.txt new file mode 100644 index 0000000000000000000000000000000000000000..a6b47631dc2c6cab4ab02a8b635fea34508b06a1 --- /dev/null +++ b/eesanje/url_46_204_10.txt @@ -0,0 +1,7 @@ +ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ : ಇಲ್ಲಿದೆ ಡೀಟೇಲ್ಸ್ +ನವದೆಹಲಿ,ಮಾ.16-ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಈ ಬಾರಿಯೂ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.ಏ.26ರಂದು 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಮೇ 7ರಂದು ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದು, ಜೂನ್4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. +ಮೊದಲ ಹಂತ 14 ಲೋಕಸಭಾ ಕ್ಷೇತ್ರಗಳಿಗೆ ಮಾ.28ರಂದು ಅಧಿಸೂಚನೆ ಹೊರಡಲಿದ್ದು, ಮಾ.28ರಿಂದ ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಮೇ 5ರಂದು ನಾಮಪತ್ರಗಳ ಪರಿಶೀಲನೆ ನಡೆದು, ಏ.8ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಎರಡನೇ ಹಂತದ ಮತದಾನ ನಡೆಯಲಿರುವ ಮೇ 7ರ 14 ಲೋಕಸಭಾ ಕ್ಷೇತ್ರಗಳಿಗೆ ಏ.12ರಂದು ಅಸೂಚನೆ ಹೊರಡಲಿದೆ. ಏ.12ರಿಂದ ಏ.19ರವರೆಗೆ ನಾಮಪತ್ರ ಸಲ್ಲಿಸಬಹುದು. +ಏ.20ರಂದು ನಾಮಪತ್ರಗಳ ಪರಿಶೀಲನೆ, ಏ.22ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಬಾರಿ ಒಟ್ಟು – 5,37,85,815 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಮತದಾನ ನಡೆಸಲು ಆಯೋಗ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ತಿಳಿಸಿದರು. +ಏ.26ರಂದು ಮೊದಲ ಹಂತದ ಮತದಾನವು ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು , ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. +ಮೇ 7ರಂದು ಎರಡನೇ ಹಂತದ ಮತದಾನವು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ,ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯಲಿದೆ. +ರಾಜ್ಯದ ಒಟ್ಟು ಮತದಾರರು 5,37,85,815ಪುರುಷ -2,69,33,750ಮಹಿಳಾ – 2,68,47,145ಇತರೆ ಮತದಾರರು – 4,920ಒಟ್ಟು ಮತಗಟ್ಟೆಗಳ ಸಂಖ್ಯೆ-58,834 \ No newline at end of file diff --git a/eesanje/url_46_204_11.txt b/eesanje/url_46_204_11.txt new file mode 100644 index 0000000000000000000000000000000000000000..53b1f8886f13964e76aa97ed9c9d2e40a4f44ae1 --- /dev/null +++ b/eesanje/url_46_204_11.txt @@ -0,0 +1,9 @@ +ಮದರಸಾದಿಂದ ಮಾನವ ಕಳ್ಳ ಸಾಗಣೆ..! +ಬೆಂಗಳೂರು,ಮಾ.16-ಸಂಪಿಗೆಹಳ್ಳಿಯ ಅಶ್ವಥನಗರದ ಮದರಸಾ ಮೇಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ದಾಳಿ ಮಾಡಿ ನೀಡಿರುವ ದೂರನ್ನು ಮಕ್ಕಳ ರಕ್ಷಣಾ ನಿರ್ದೇಶನಾಲಯ(ಸಿಡಬ್ಲ್ಯುಸಿ)ಕ್ಕೆ ವರ್ಗಾಯಿಸಿದ್ದು, ಅವರು ನೀಡುವ ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ. +ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ದೂರಿನ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ತನಿಖೆ ನಡೆಸುವುದಾಗಿ ಹೇಳಿದರು. ಮಾನವ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕಂಗೂನ್ ಅವರು ಸಂಪಿಗೆಹಳ್ಳಿ ಸಮೀಪದ ಅಮರಜ್ಯೋತಿ ಲೇಔಟ್ನ ಅಶ್ವಥನಗರದಲ್ಲಿರುವ ಮದರಸಾ ಮೇಲೆ ನಿನ್ನೆ ದಾಳಿ ಮಾಡಿದ್ದಾರೆ. +ಆ ಸಂದರ್ಭದಲ್ಲಿ 20 ಬಾಲಕಿಯರು ಮದರಸಾದಲ್ಲಿ ಪತ್ತೆಯಾಗಿದ್ದಾರೆ. ದಾಳಿ ವೇಳೆ ಕೆಲವು ಗೂಂಡಾಗಳನ್ನು ಕರೆಸಿ ಧಮ್ಕಿ ಹಾಕಲಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ಯಾವುದೇ ಗಲಾಟೆ ನಡೆದಿಲ್ಲ. ಮದರಸಾದಲ್ಲಿರುವ ಬಾಲಕಿಯರನ್ನು ಬೆಳೆಸಿ ಗಲ್ ರಾಷ್ಟ್ರಗಳಿಗೆ ಮಾನವ ಕಳ್ಳಸಾಗಾಣೆ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ. +ಮದರಸಾದಲ್ಲಿದ್ದ ಈ ಮಕ್ಕಳಿಗೆ ಸೂಕ್ತ ಶಿಕ್ಷಣ ನೀಡದೆ ಧಾರ್ಮಿಕ ಶಿಕ್ಷಣ ನೀಡುತ್ತಿದುದು ಗೊತ್ತಾಗಿದೆ. ಯಾವುದೇ ಲೈಸನ್ಸ್ ಇಲ್ಲದೆ ಮದರಸಾ ನಡೆಸುತ್ತಿದ್ದಾರೆ ಎಂಬ ಆರೋಪ ಸಹ ಇದೆ. ಮದರಸಾದಲ್ಲಿದ್ದವರ ಪೈಕಿ ಕೆಲವರು ಅನಾಥರಾಗಿದ್ದರೆ ಇನ್ನು ಕೆಲವು ಬಾಲಕಿಯರು ಪೊಷಕರಿದ್ದು ಅನಾಥರಾಗಿ ಇಲ್ಲಿ ಬೆಳೆಯುತ್ತಿರುವ ವಿಷಯ ತಿಳಿದು ಪ್ರಿಯಾಂಕ್ ಕಂಗೂನ್ ಅವರ ನೇತೃತ್ವದ ತಂಡ ದಾಳಿ ಮಾಡಿದೆ. +ದಾಳಿ ಸಂದರ್ಭದಲ್ಲಿ ಆಯೋಗದ ಮಹಿಳಾ ಆಪ್ತ ಸಮಾಲೋಚಕಿಯರು ಬಾಲಕಿಯರ ಜೊತೆ ಮಾತನಾಡಿದಾಗ ಅನಾಥ ಆಶ್ರಮದ ಮುಖ್ಯಸ್ಥೆ ಸಲ್ಮಾ ಎಂಬುವರು ಕುವೈತ್ನಲ್ಲಿರುವ ಯುವಕರ ಜೊತೆ ಮದುವೆ ಮಾಡಿಸಲು ನಮ್ಮನ್ನು ಬೆಳೆಸಿ ಅಲ್ಲಿಗೆ ಕಳುಹಿಸುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮಾನವ ಕಳ್ಳಸಾಗಾಣೆದಾರರ ಜೊತೆ ಈ ಮದರಸಾ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. +ಕಂಗೂನ್ ಟ್ವೀಟ್: +ದಾಳಿಯ ಬಗ್ಗೆ ಎಕ್ಸ್ನಲ್ಲಿ ಪ್ರಿಯಾಂಕ್ ಕಂಗೂನ್ ಅವರು ಟ್ವೀಟ್ ಮಾಡಿದ್ದು, ಮದರಸಾದ ಬಾಲಕಿಯರನ್ನು ಸಿಡಬ್ಲ್ಯಡಿಸಿ ಮುಂದೆ ಹಾಜರುಪಡಿಸಲು ಮುಂದಾದಾಗ ಸಲ್ಮಾ ಎಂಬ ಮಹಿಳೆ ಮತ್ತು ಶಮೀರ್ ಎಂಬಾತ ಗೂಂಡಾಗಳನ್ನು ಕರೆಸಿ ಜಗಳಕ್ಕೆ ಯತ್ನಿಸಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಗೂಂಡಾಗಳನ್ನು ನಿಯಂತ್ರಿಸಲಾಗಿದೆ. +ಪೊಲೀಸರ ಸಲಹೆ ಮೇರೆಗೆ ತಮ್ಮ ಜೊತೆಯಲ್ಲಿದ್ದ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬರಲಾಯಿತು ಎಂದು ಅವರು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_46_204_12.txt b/eesanje/url_46_204_12.txt new file mode 100644 index 0000000000000000000000000000000000000000..a8cdf5836dcb8ddbb62778d2662311a25c30feac --- /dev/null +++ b/eesanje/url_46_204_12.txt @@ -0,0 +1,5 @@ +ಮೋಸದಿಂದ ತಂದೆಯ ಸ್ವತ್ತನ್ನು ಪಡೆದ ಸಹೋದರಿ ಸೇರಿ ನಾಲ್ವರ ವಿರುದ್ಧ ಕೇಸ್ +ಬೆಂಗಳೂರು,ಮಾ.16-ತಂದೆಗೆ ಸೇರಿದ ಎರಡು ಕಂಪೆನಿಗಳ ಸ್ವತ್ತನ್ನು ಮೋಸ ಮಾಡಿ ಪಡೆದುಕೊಂಡು ತಂದೆಯ ಅನಾರೋಗ್ಯದ ನೆಪವೊಡ್ಡಿ ಅಕ್ರಮ ಬಂಧನದಲ್ಲಿಟ್ಟುಕೊಂಡಿರುವ ಸಹೋದರಿ ಸೇರಿದಂತೆ ನಾಲ್ವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಭರತ್ರಾಜ್ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. +ಭರತ್ರಾಜ್ ಅವರ ತಂದೆವೆಂಕಟಪ್ಪ ಲಕ್ಷ್ಮೀ ನಾರಾ ಯಣ್ ಎಂಬುವವರು ನಾರಿಮನ್ ಶೆಲ್ಟರ್ ಪ್ರೈವೇಟ್ ಲಿಮಿಟೆಡ್ ಮತ್ತು ನವ ನಾರಿಮನ್ ಎಂಬ ಎರಡು ಕಂಪೆನಿ ತೆರೆದಿದ್ದು, ಡೈರೆಕ್ಟರ್-ಛೇರ್ಮನ್ ಆಗಿರುತ್ತಾರೆ.ಈ ನಡುವೆ ವೆಂಕಟಪ್ಪ ಅವರು ಅನಾರೋಗ್ಯದಿಂದಾಗಿ ಹಾಸಿಗೆ ಹಿಡಿದಿದ್ದು, ಕಂಪೆನಿ ರಕ್ಷಣೆ ಮಾಡಲು ಭರತ್ರಾಜ್ ಅವರಿಗೆ ಎಂಡಿ ಹಾಗೂ ಡೈರೆಕ್ಟರ್ ಆಗಿ ನೇಮಿಸಿದ್ದು, ಇವರು ಕಂಪೆನಿಗಳ ಹಣಕಾಸಿನ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿದ್ದಾರೆ. +ಆ ಸಂದರ್ಭದಲ್ಲಿ ಕಂಪೆನಿಯ ಚೀಫ್ ಅಕೌಂಟೆಂಟ್ ಚೌಡರೆಡ್ಡಿ ಮತ್ತು ಆಟಿಡರ್ ಮೋಹನ್ ಮೋಸದಿಂದ 10 ರಿಂದ 15 ಕೋಟಿ ರೂ.ಗಳ ಸುಳ್ಳು ಲೆಕ್ಕ ನೀಡಿ ಮೋಸ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಭರತ್ರಾಜ್ ಅವರು ದೂರು ನೀಡಿದ್ದಾರೆ.ಅಲ್ಲದೆ, ತಂದೆ ವೆಂಕಟಪ್ಪ ಅವರ ಸಹಿಯನ್ನು ನಕಲಿ ಮಾಡಿ ಶೇರ್ಗಳನ್ನು ಸಹೋದರಿ ತೇಜವತಿ ವಿಜಯಲಕ್ಷ್ಮಿ ನಾರಾಯಣ್ ಹಾಗೂ ಪ್ರೇಮ ಜವರೇಗೌಡ ಅವರ ಹೆಸರಿಗೆ ವರ್ಗಾವಣೆ ಮಾಡಿಕೊಂಡಿರುತ್ತಾರೆ. +ಸಹೋದರಿ ತೇಜವತಿ ಅವರು ತಮ್ಮ ತಂದೆಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದು, ತಾವು ಭೇಟಿಯಾಗಲು ಬಿಡದೆ ಬೆದರಿಕೆ ಹಾಕಿದ್ದಲ್ಲದೆ ಯಾವುದೋ ಔಷಗಳನ್ನು ಅವರಿಗೆ ಕೊಟ್ಟು ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ತೊಂದರೆ ಉಂಟುಮಾಡಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸಹೋದರಿ ತೇಜವತಿ, ಪ್ರೇಮಾ ಹಾಗೂ ಚೌಡರೆಡ್ಡಿ ಮತ್ತು ಮೋಹನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭರತ್ರಾಜ್ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_204_2.txt b/eesanje/url_46_204_2.txt new file mode 100644 index 0000000000000000000000000000000000000000..25647d507f429dee95ef433526038595c05c8318 --- /dev/null +++ b/eesanje/url_46_204_2.txt @@ -0,0 +1,7 @@ +28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ +ಶಿವಮೊಗ್ಗ,ಮಾ.18- ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹಾರೈಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಪ್ರಪಂಚ ಭಾರತದ ಲೋಕಸಭಾ ಚುನಾವಣೆಯನ್ನು ಎದುರು ನೋಡುತ್ತಿದೆ. ನಮ್ಮ ದೇಶದ ಪ್ರತಿ ಹಳ್ಳಿಯ ಜನ ಮೋದಿ ಮೋದಿ ಎನ್ನುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು 25 ಸ್ಥಾನ ಗೆದ್ದಿದ್ದೇವೆ. ಈ ಬಾರಿ 28ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. +ಕಾಂಗ್ರೆಸ್‍ನವರು ದೇಶದಲ್ಲಿ ಬಿಜೆಪಿ ಒಡೆದ ಮನೆ ಅನ್ನುತ್ತಿದ್ದಾರೆ. ಇಡೀ ದೇಶದಲ್ಲಿ ಬಿಜೆಪಿ ಪಕ್ಷ ಒಂದೇ ಇದೆ. ಆದರೆ ಕನ್ಯಾಕುಮಾರಿಯಿಂದ ಕಾಶ್ಮೀರ ತನಕ ಒಂದೇ ಒಂದು ಕಾಂಗ್ರೆಸ್ ಪಕ್ಷ ಒಟ್ಟಿಗೆ ಇಲ್ಲ. ಕರ್ನಾಟಕದಲ್ಲೂ ಕೂಡ ಕಾಂಗ್ರೆಸ್ ಎಷ್ಟು ಹೋಳಾಗಿದೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ಟಕ್ಕರ್ ನೀಡಿದರು. ಕುಟುಂಬ ರಾಜಕಾರಣದ ಬಗ್ಗೆ ಟ್ವೀಟ್ ಮಾಡುವ ಅಧಿಕಾರ ಕಾಂಗ್ರೆಸ್‍ಗೆ ಇದೆಯೇ ಎಂಬುದು ನನ್ನ ಪ್ರಶ್ನೆ. ಕಾಂಗ್ರೆಸ್‍ನಲ್ಲಿ ನೆಹರು, ಇಂದಿರಾಗಾಂಧಿ ಕುಟುಂಬದವರೇ ಆಳಿದ್ದಾರೆ. ಕಾಂಗ್ರೆಸ್ ಪಕ್ಷ ಇರುವುದೇ ಒಂದು ಕುಟುಂಬದ ಹಿಡಿತದಲ್ಲಿ ಎಂದು ಕಿಡಿಕಾರಿದರು. +ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ವಿರೋಧವೇ ಇದೆ. ಬಿಜೆಪಿ ಪಕ್ಷ ವ್ಯಕ್ತಿ ಮೇಲೆ ನಿಂತಿಲ್ಲ, ಪಕ್ಷ ಉಳಿಸಬೇಕು ಎಂದಿರುವ ಪಕ್ಷ. ನಮ್ಮ ಎಲ್ಲಾ ನಾಯಕರು ಒಟ್ಟಿಗೆ ಇರುತ್ತೇವೆ. ಬಿಜೆಪಿಯಲ್ಲಿ ಸ್ಥಾನಮಾನದ ಪ್ರಶ್ನೆ ಇಲ್ಲ. ಪಕ್ಷದಲ್ಲಿ ಎಲ್ಲರೂ ಕಾರ್ಯಕರ್ತರೇ. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕರ್ತರೇ ಎಂದರು. +ಪೊನ್ಮುಡಿಗೆ ಪ್ರಮಾಣ ವಚನ ಬೋಧಿಸಲು ರಾಜ್ಯಪಾಲರ ನಿರಾಕರಣೆ +ನಾವು 28 ಸ್ಥಾನಗಳನ್ನು ಗೆದ್ದು ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡುತ್ತೇವೆ. ಮೊದಲು ದೇಶ. ಅಮೇಲೆ ಪಕ್ಷ ಮತ್ತು ವ್ಯಕ್ತಿ. ನಮ್ಮ ಪಕ್ಷಕ್ಕೆ ಮೊದಲು ದೇಶ ಮುಖ್ಯ. ನಾವು ಯಾವ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಹೋಗಲ್ಲ. ಒಟ್ಟಾಗಿ ನಾವು ಹೋಗುತ್ತೇವೆ, ಒಟ್ಟಿಗೆ ಗೆಲ್ಲುತ್ತೇವೆ. ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದು ಹೇಳಿದರು. +ಸ್ವತಂತ್ರ ಬಂದಾಗಿನಿಂದಲೂ ಒಂದೇ ಕುಟುಂಬದ ಕೈಯಲ್ಲಿ ಕಾಂಗ್ರೆಸ್ ಪಕ್ಷ ಇದೆ. ಇವರಿಗೆ ಯಡಿಯೂರಪ್ಪ, ಅವರ ಮಗನ ಬಗ್ಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಹಕ್ಕಿಲ್ಲ. ನನಗೆ ಪಕ್ಷ ಏನು ಜವಾಬ್ದಾರಿ ಕೊಡುತ್ತದೆಯೋ ಅದನ್ನು ನಿರ್ವಹಿಸುತ್ತೇನೆ. ನಮ್ಮದು ಸಾಮೂಹಿಕ ನೇತೃತ್ವದ ಪಕ್ಷವಾಗಿದ್ದು ಲೋಕಸಭೆ ಟಿಕೆಟ್ ಹಂಚಿಕೆ, ಲೋಕಸಭೆ ಚುನಾವಣಾ ಪ್ರಚಾರ ಎಲ್ಲಾ ಸಾಮೂಹಿಕವಾಗಿಯೆ ನಡೆಯುತ್ತದೆ ಎಂದು ತಮ್ಮ ಪಕ್ಷವನ್ನು ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_204_3.txt b/eesanje/url_46_204_3.txt new file mode 100644 index 0000000000000000000000000000000000000000..126a8f15a565b68002cf1d7fed9b50d2ec66b567 --- /dev/null +++ b/eesanje/url_46_204_3.txt @@ -0,0 +1,6 @@ +ಆರ್​ಸಿಬಿ ಕಪ್ ಗೆಲ್ಲುತ್ತಿದ್ದಂತೆ ವೈರಲ್ ಆದ ಪವರ್ ಸ್ಟಾರ್ ಪುನೀತ್ ಮಾತು +ಬೆಂಗಳೂರು, ಮಾ.18- ಹದಿನಾರು ವರ್ಷಗಳ ವನವಾಸದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕಪ್ ನಮ್ದೇ ಎಂಬ ಮಾತಿಗಿಂತ ಕಪ್ಪು ನಮ್ದು ಎಂಬ ಮಾತನ್ನು ಆಡುತ್ತಿದ್ದಾರೆ. ಈ ನಡುವೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜನ್ಮದಿನದಿಂದಲೇ ಆರ್‍ಸಿಬಿ ಆಟಗಾರ್ತಿಯರು ಕಪ್ ಗೆದ್ದಿರುವುದು ವಿಶೇಷವಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಆಡಿದ ಮಾತು ವೈರಲ್ ಆಗಿದೆ. +ಮಾರ್ಚ್ 17 ರಂದು ನವದೆಹಲಿಯ ಅರುಣ್‍ಜೇಟ್ಲಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವನಿತೆಯರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‍ಗಳ ರೋಚಕ ಗೆಲುವು ಸಾಧಿಸಿ ಡಬ್ಲ್ಯುಪಿಎಲ್ ಟ್ರೋಫಿಗೆ ಮುತ್ತಿಕ್ಕಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಟನೆಯ ಜಾಕಿ ಚಿತ್ರದ ಒಂದು ಗೀತೆಯಲ್ಲಿ ಹೆಣ್ಮಕ್ಳೇ ಸ್ಟ್ರಾಂಗು ಗುರು ಎಂಬ ಸಾಲಿದ್ದು , ಈ ಮಾತು ಆರ್‍ಸಿಬಿ ಆಟಗಾರ್ತಿಯರಿಗೇ ಸೂಕ್ತವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. +ಇನ್ನು ಕರುನಾಡಿನ ಕಣ್ಮಣಿ ಪುನೀತ್ ರಾಜ್‍ಕುಮಾರ್ ನಟನೆಯ ಯುವ ಚಿತ್ರದಲ್ಲಿ ಹುಡುಗರಲ್ಲಿ ರೋಷ ಹುಟ್ಟಿಸಬೇಕಾದರೆ ಅವರನ್ನು ಕಿಚಾಯಿಸಬೇಕು. ಅಲ್ಲದೆ ಕಪ್ ಅನ್ನು ಹುಡುಗರೇ ಗೆಲ್ಲಲಿ ಅಥವಾ ಹುಡುಗಿಯರೇ ಗೆಲ್ಲಲಿ ಕಪ್ ಗೆಲ್ಲುವುದೇ ಮುಖ್ಯ ತಾನೇ ಎಂಬ ಪವರ್‍ಫುಲ್ ಡೈಲಾಗ್ ಹೊಡೆದಿದ್ದರು. ಈ ಡೈಲಾಗ್ ಕೂಡ ಈಗ ಸಾಕಷ್ಟು ವೈರಲ್ ಆಗಿದ್ದು , ಡಬ್ಲ್ಯುಪಿಎಲ್‍ನಲ್ಲಿ ಸ್ಮೃತಿ ಮಂಧಾನಾ ಪಡೆ ಕಪ್ ಗೆದ್ದ ರೀತಿಯಂತೆ ಐಪಿಎಲ್‍ನಲ್ಲಿ ಫಾಫ್ ಡುಪ್ಲೆಸಿಸ್ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆಲ್ಲಲಿ ಎಂದು ಕೋಟ್ಯಾನುಕೋಟಿ ಅಭಿಮಾನಿಗಳು ಹಂಬಲಿಸುತ್ತಿದ್ದಾರೆ. +ಅಂದಹಾಗೆ 2ನೇ ಆವೃತ್ತಿಯ ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಶೆಫಾಲಿ ವರ್ಮಾ (44 ರನ್) ಸ್ಪೋಟಕ ಆಟದ ನೆರವಿದ್ದರೂ ಕನ್ನಡತಿ ಶ್ರೇಯಾಂಕಾ ಪಾಟೀಲ್ (12ಕ್ಕೆ 4), ಸೋಫಿ ಮೊಲಿನಾಕ್ಸ್ (3 ವಿಕೆಟ್) ಮತ್ತು ಶೋಭನಾ ಆಶಾ(2 ವಿಕೆಟ್) ಅವರ ಸ್ಪಿನ್ ಚಮತ್ಕಾರದಿಂದ 113 ರನ್‍ಗಳಿಗೆ ನಿಯಂತ್ರಿಸಿದರು. +ನಂತರ ಬ್ಯಾಟ್ ಮಾಡಿದ ಆರ್‍ಸಿಬಿ ನಾಯಕಿ ಸ್ಮೃತಿ ಮಂಧಾನಾ (31 ರನ್), ಸೋಫಿ ಡಿವೈನ್ (32 ರನ್) ಹಾಗೂ ಎಲೀಸ್ ಪೆರಿ (ಅಜೇಯ 35) ರನ್‍ಗಳ ನೆರವಿನಿಂದ 19.3 ಓವರ್‍ಗಳಲ್ಲೇ 135 ರನ್ ಗಳಿಸಿ ಚಾಂಪಿಯನ್‍ಪಟ್ಟವನ್ನು ಮುಡಿಗೇರಿಸಿಕೊಂಡಿತು. ಆರ್‍ಸಿಬಿಯ ಎಲಿಸ್ ಪೆರಿ ಆರೆಂಜ್ ಕ್ಯಾಪ್ , ಶ್ರೇಯಾಂಕ ಪಾಟೀಲ್ ಪರ್ಪಲ್ ಕ್ಯಾಪ್ ಗೆದ್ದರೆ, ಫೈನಲ್ ಪಂದ್ಯದಲ್ಲಿ ಮನಮೋಹಕ ಬೌಲಿಂಗ್ ಪ್ರದರ್ಶನ ತೋರಿಸಿದ ಸೋಫಿ ಮೊಲಿನಾಕ್ಸ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು. \ No newline at end of file diff --git a/eesanje/url_46_204_4.txt b/eesanje/url_46_204_4.txt new file mode 100644 index 0000000000000000000000000000000000000000..735c521fe74beb66e52e64be43d7c0f9ffe0524a --- /dev/null +++ b/eesanje/url_46_204_4.txt @@ -0,0 +1,5 @@ +ಸಾಹಿತ್ಯ ಅಕಾಡೆಮಿ ಸದಸ್ಯತ್ವ ತಿರಸ್ಕರಿಸಿದ ಅಕ್ಕಯ್ ಪದ್ಮಶಾಲಿ, ಕಾಂಗ್ರೆಸ್ ನಾಯಕರಿಗೆ ಮುಜುಗರ +ಬೆಂಗಳೂರು,ಮಾ.17-ಲೈಂಗಿಕ ಅಲ್ಪಸಂಖ್ಯಾತ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರು ರಾಜ್ಯಸರ್ಕಾರ ನೀಡಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವವನ್ನು ತಿರಸ್ಕರಿಸಿರುವುದರಿಂದ ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅಕ್ಕಯ್ ಪದ್ಮಶಾಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ, ಆಯ್ಕೆ ಮಾಡಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆಗಳು. ಆದರೆ ನನ್ನ ಸದಸ್ಯತ್ವವನ್ನು ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. +ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯ ವಿಚಾರವಾಗಿ ತಾವು ನಡೆಸಿರುವ ಹೋರಾಟ ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಮತ್ತು ಸಾಮಾಜಿಕ ಬಹಿಷ್ಕಾರದ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ. +ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ವಿಧಾನಪರಿಷತ್‍ನ ಸದಸ್ಯತ್ವ ಅಥವಾ ರಾಜ್ಯಸಭೆಯ ಸದಸ್ಯತ್ವ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. +ಸರ್ವಜನಾಂಗದ ಸಾಂಕೇತದಡಿಯಲ್ಲಿ ನಾವು ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಬೇಕಿದೆ. ಹೀಗಾಗಿ ವಿಶೇಷ ಕಾಳಜಿ ವಹಿಸಿ ನಮ್ಮ ಸಮುದಾಯಕ್ಕೆ ಆದ್ಯತೆ ನೀಡಬೇಕೆಂದು ಮನವಿ ಸಲ್ಲಿಸಿದರು. \ No newline at end of file diff --git a/eesanje/url_46_204_5.txt b/eesanje/url_46_204_5.txt new file mode 100644 index 0000000000000000000000000000000000000000..d7cb6555d12fffc9dc879a945e736161982a574d --- /dev/null +++ b/eesanje/url_46_204_5.txt @@ -0,0 +1,4 @@ +ಏ.1ರಿಂದ ಪೂರ್ವಾನ್ವಯವಾಗುವಂತೆ 7ನೇ ರಾಜ್ಯ ವೇತನ ಆಯೋಗ ವರದಿ ಜಾರಿಗೆ ಒತ್ತಾಯ +ಬೆಂಗಳೂರು,ಮಾ.17-ರಾಜ್ಯಸರ್ಕಾರಿ ನೌಕರರು, ನಿವೃತ್ತಿ ನೌಕರರು ಹಾಗೂ ಕುಟುಂಬ ಪಿಂಚಣಿದಾರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ರಾಜ್ಯ ವೇತನ ಆಯೋಗ ನೀಡಿರುವ ವರದಿಯ ಶಿಫಾರಸ್ಸುಗಳನ್ನು 2023 ರ ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ರಾಜ್ಯಸರ್ಕಾರವನ್ನು ಒತ್ತಾಯಿಸಿದೆ. +7 ನೇ ವೇತನ ಆಯೋಗವು ನಿನ್ನೆ ತನ್ನ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಇದಕ್ಕಾಗಿ ಆಯೋಗ ಅಧ್ಯಕ್ಷರಾಗಿದ್ದ ಸುಧಾಕರ್ ಅವರನ್ನು ಹಾಗೂ ವರದಿ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷ ಡಾ.ಎಲ್.ಭೈರಪ್ಪ ತಿಳಿಸಿದ್ದಾರೆ. +ರಾಜ್ಯ ಸರ್ಕಾರಿ ನೌಕರರಿಗೆ, ನಿವೃತ್ತಿ ನೌಕರರಿಗೆ, ಕುಟುಂಬ ಪಿಂಚಣಿದಾರರಿಗೆ ವೇತನ, ಭತ್ಯೆಗಳನ್ನು, ನಿವೃತ್ತ ವೇತನ ಹಾಗೂ ಪಿಂಚಣಿಯನ್ನು ಆಯೋಗದ ಶಿಫಾರಸ್ಸಿನಂತೆ ಪರಿಷ್ಕರಿಸಲು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. diff --git a/eesanje/url_46_204_6.txt b/eesanje/url_46_204_6.txt new file mode 100644 index 0000000000000000000000000000000000000000..5f5203be42805e2feed463891162966fe8e54750 --- /dev/null +++ b/eesanje/url_46_204_6.txt @@ -0,0 +1,9 @@ +ವಾಟರ್ ಟ್ಯಾಂಕರ್‌ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸುವಂತೆ ಆರ್.ಅಶೋಕ್ ಒತ್ತಾಯ +ಬೆಂಗಳೂರು,ಮಾ.17-ಅಕ್ರಮ ತಡೆಯಲು ನೀರು ಸರಬರಾಜು ಮಾಡುವ ಟ್ಯಾಂಕರ್‍ಗಳಿಗೆ ಜಿಪಿಎಸ್ ಟ್ರಾಕರ್ ಅಳವಡಿಸಬೇಕು. ಜನಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಟ್ಯಾಂಕರ್ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನೋಂದಣಿಗೊಂಡಿರುವ ಖಾಸಗಿ ಟ್ಯಾಂಕರ್‍ಗಳಿಗೆ ವಿಶೇಷ ಸಂಖ್ಯೆ ನೀಡಿ, ಗುರುತಿನಚೀಟಿ ಅಂಟಿಸಬೇಕು. ಜಿಲ್ಲಾಡಳಿತ ನೀಡಿರುವ ದರ ಪಟ್ಟಿ ಹಾಗೂ ದೂರು ಸಂಖ್ಯೆಯನ್ನು ಟ್ಯಾಂಕರ್‍ಗಳ ಮೇಲೆ ಕಡ್ಡಾಯವಾಗಿ ನಮೂದಿಸಬೇಕು ಎಂದು ಸಲಹೆ ಮಾಡಿದ್ದಾರೆ. +ಬೆಂಗಳೂರಿನ ನೀರಿನ ಸಮಸ್ಯೆ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಸಂಬಂಧಪಟ್ಟವರ ಸಭೆ ಕರೆದಿದ್ದಾರೆ. ಬರಗಾಲವಿದೆ ಎಂದು ಗೊತ್ತಿದ್ದರೂ ಕಳೆದ ಆರೇಳು ತಿಂಗಳಿಂದ ಯಾವುದೇ ಮುಂಜಾಗ್ರತೆ ವಹಿಸದೆ, ಪೂರ್ವಸಿದ್ಧತೆ ಮಾಡಿಕೊಳ್ಳದೆ, ಪರ್ಯಾಯ ಮಾರ್ಗಗಳನ್ನು ಹುಡುಕದೆ ಕಾಲಹರಣ ಮಾಡಿದ ಸಿದ್ದರಾಮಯ್ಯನವರ ಸರ್ಕಾರದ ಬೇಜವಾಬ್ದಾರಿ, ನಿರ್ಲಕ್ಷ್ಯ ಧೋರಣೆಯೇ ನೀರಿನ ಸಮಸ್ಯೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ. +ನಾಳೆ ಕರೆದಿರುವ ಸಭೆಯೂ ಸಹ ಕೇವಲ ಕಾಟಾಚಾರಕ್ಕೆ ನಡೆಯುವ ಮತ್ತೊಂದು ನಾಮಕಾವಸ್ತೆ ಸಭೆ ಆಗದಿರಲಿ ಎನ್ನುವ ಉದ್ದೇಶದಿಂದ ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡುತ್ತಿರುವುದಾಗಿ ಹೇಳಿದ್ದಾರೆ. +ಟ್ಯಾಂಕರ್‍ಗಳ ನೋಂದಣಿಗೆ ನೀಡಲಾಗಿದ್ದು ಗಡುವು ಮುಕ್ತಾಯವಾಗಿ ಎರಡು ದಿನಗಳು ಕಳೆದಿದ್ದರೂ, ಇನ್ನೂ ಟ್ಯಾಂಕರ್ ಗಳ ನೋಂದಣಿ ಪೂರ್ತಿಯಾಗಿಲ್ಲ. ಬೆಂಗಳೂರಲ್ಲಿ 3,500ಕ್ಕೂ ಹೆಚ್ಚು ಖಾಸಗಿ ಟ್ಯಾಂಕರ್‍ಗಳಿವೆ. ಆದರೆ ನೋಂದಣಿ ಆಗಿರುವುದು ಕೇವಲ 1,700 ಮಾತ್ರ. ಅಂದರೆ ಶೇ.50ಕ್ಕೂ ಹೆಚ್ಚು ಟ್ಯಾಂಕರ್‍ಗಳು ಇನ್ನೂ ನೋಂದಣಿ ಆಗಿಲ್ಲ. ಟ್ಯಾಂಕರ್ ಮಾಫಿಯಾ, ಸುಲಿಗೆಗೆ ಕಡಿವಾಣ ಹಾಕಬೇಕಾದರೆ ಕಡ್ಡಾಯವಾಗಿ ಯಾವುದೇ ಮುಲಾಜಿಲ್ಲದೆ ಎಲ್ಲಾ ಟ್ಯಾಂಕರ್‍ಗಳ ನೋಂದಣಿ ಮಾಡಿಸಬೇಕು ಎಂದು ಆಗ್ರಹಿಸಿದ್ದಾರೆ. +ಜಲಮಂಡಳಿ ವತಿಯಿಂದ ಉಚಿತವಾಗಿ ನೀರು ಸರಬರಾಜು ಮಾಡುವ ಟ್ಯಾಂಕರ್‍ಗಳ ಮೇಲೆ ಸ್ಟಿಕ್ಕರ್ ಅಂಟಿಸುವುದು ಕಡ್ಡಾಯ ಎಂಬ ನಿಯಮ ಇದ್ದರೂ ಇನ್ನೂ ಹಲವಾರು ಕಡೆ ಸ್ಟಿಕ್ಕರ್ ಅಂಟಿಸಿಲ್ಲ. ಸ್ಟಿಕ್ಕರ್ ಇಲ್ಲದಿದ್ದರೆ ನೀರಿನ ದುರ್ಬಳಕೆಯಾಗುವ ಸಾಧ್ಯತೆ ಇದ್ದು, ಅಕಾರಿಗಳು ಕಡ್ಡಾಯವಾಗಿ ಸ್ಟಿಕ್ಕರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. +ಸಾರ್ವಜನಿಕರಿಗೆ ನೀಡಿರುವ ಜಲಮಂಡಳಿ/ ಬಿಬಿಎಂಪಿ ಸಹಾಯವಾಣಿ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳಿದ್ದು, ಖಾಸಗಿ ಕಾಲ್ ಸೆಂಟರ್ ತೆರೆಯುವ ಮೂಲಕ ಜಲಮಂಡಳಿ ಸಹಾಯವಾಣಿಯನ್ನು ಜನಸ್ನೇಹಿ ಮಾಡಲು ಕ್ರಮಕೈಗೊಳ್ಳಬೇಕು. ಕೇವಲ ಬೆಂಗಳೂರಿನ ಹೃದಯ ಭಾಗ ಮತ್ತು ಪ್ರತಿಷ್ಠಿತ ಬಡಾವಣೆಗಳಲ್ಲಿ ಮಾತ್ರವಲ್ಲದೆ ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‍ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ಕೂಡ ವಿಶೇಷ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ. +ಸರ್ಕಾರ ಸಮರೋಪಾದಿಯಲ್ಲಿ ಈ ಮೇಲಿನ ಕ್ರಮಗಳನ್ನು ಜಾರಿ ಮಾಡಿದರೆ ಮಾತ್ರ ನಾಳಿನ ಸಭೆಯಲ್ಲಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿ, ಗುರಿ ಹಾಗೂ ಕಾಲಮಿತಿ ನಿಗದಿ ಮಾಡಲು ಸಾಧ್ಯ. ಇಲ್ಲವಾದರೆ ಇದು ಮತ್ತೊಂದು ಕಾಟಾಚಾರದ ಸಭೆ ಆಗುವುದರಲ್ಲಿ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_204_7.txt b/eesanje/url_46_204_7.txt new file mode 100644 index 0000000000000000000000000000000000000000..9904d00c8fbf5a7270faea2751dce13dfb2bd26d --- /dev/null +++ b/eesanje/url_46_204_7.txt @@ -0,0 +1,11 @@ +ಮತ್ತೆರಡು ಹೊಸ ಗ್ಯಾರಂಟಿಗಳನ್ನು ಘೋಷಿಸಿದ ಕಾಂಗ್ರೆಸ್ +ಬೆಂಗಳೂರು,ಮಾ.16- ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಮತ್ತೆರಡು ಹೊಸ ಗ್ಯಾರಂಟಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಘೋಷಣೆ ಮಾಡಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೇದಾರ್ ನ್ಯಾಯ್ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವುದಾಗಿ ಭರವಸೆ ನೀಡಿದರು. +ಈಗಾಗಲೇ ಯುವ, ಮಹಿಳೆಯರು, ಕೃಷಿಕರ ಹೆಸರಿನಲ್ಲಿ ಮೂರು ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಇಂದು ಹೆಚ್ಚುವರಿಯಾಗಿ ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೇದಾರ್ ನ್ಯಾಯ್ ಘೋಷಣೆಗಳನ್ನು ಹೊಸದಾಗಿ ಪ್ರಕಟಿಸಿದರು.ಕಳೆದ ಹತ್ತು ವರ್ಷಗಳಿಂದಲೂ ಕೇಂದ್ರ ಸರ್ಕಾರ ಕಾರ್ಮಿಕ ಕಾನೂನುಗಳನ್ನು ದಿಕ್ಕು ತಪ್ಪಿಸಿ ಶ್ರಮಿಕರಿಗೆ ಅನ್ಯಾಯ ಮಾಡಿದೆ. ಈ ಹಿಂದೆ ನಮ್ಮ ಸರ್ಕಾರ ಹಲವು ಯೋಜನೆಗಳ ಮೂಲಕ ಕಾರ್ಮಿಕರಿಗೆ, ಶ್ರಮಿಕರಿಗೆ ಸಹಾಯ ಮಾಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದುರ್ಬಲರ ಬಗ್ಗೆ ಆಸಕ್ತಿ ಇಲ್ಲ. ಶ್ರೀಮಂತರ ಮೇಲಷ್ಟೇ ಅವರ ಗಮನ. ಹೀಗಾಗಿ ಹಲವು ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸಿದ್ದಾರೆ ಎಂದು ಹೇಳಿದರು. +ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹಲವು ಕಡೆ ಪ್ರವಾಸ ಮಾಡಿ, ಕಾರ್ಮಿಕ ಸಂಘಟನೆಗಳ ಜೊತೆ ಚರ್ಚೆ ನಡೆಸಿದ ಬಳಿಕ ಕಾರ್ಮಿಕರ ಹಿತರಕ್ಷಣೆಗೆ ಶ್ರಮಿಕ್ ನ್ಯಾಯ್ ಭರವಸೆಯನ್ನು ಘೋಷಿಸುತ್ತಿದ್ದೇವೆ. ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕನಿಷ್ಠ ವೇತನ, ಸಾಮಾಜಿಕ ನ್ಯಾಯ, ಭವಿಷ್ಯ ನಿ, ಆರೋಗ್ಯ ಮತ್ತು ಜೀವವಿಮೆಯಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. +ಉದ್ಯೋಗ ಖಾತ್ರಿ ಯೋಜನೆಯನ್ನು ಈ ಮೊದಲು ಮೋದಿ ಟೀಕಿಸಿದ್ದರು. ಅದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುತ್ತಿಲ್ಲ. ಬರಪೀಡಿತ ಪ್ರದೇಶಗಳಲ್ಲಿ 150 ಉದ್ಯೋಗಗಳನ್ನು ಜಾರಿ ಮಾಡುತ್ತಿಲ್ಲ. ನಮ್ಮ ಸರ್ಕಾರ ಅಕಾರಕ್ಕೆ ಬಂದರೆ ನರೇಗಾ ಯೋಜನೆ ದಿನಗೂಲಿಯನ್ನು 400 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದರು.ಭವಿಷ್ಯ ನಿ ಬಡ್ಡಿದರವನ್ನು ನಾನು ಕಾರ್ಮಿಕ ಸಚಿವನಾಗಿದ್ದಾಗ ಶೇ.9.5 ರಷ್ಟು ನೀಡಲಾಗಿತ್ತು. ಆನಂತರ 10 ವರ್ಷದಲ್ಲಿ ಶೇ.9 ರ ಮೇಲೆ ಭವಿಷ್ಯ ನಿಗೆ ಬಡ್ಡಿಯನ್ನೇ ನೀಡಿಲ್ಲ ಎಂದು ಹೇಳಿದರು. +ಹಿಸ್ಸೇದಾರ್ ನ್ಯಾಯ್ ಭರವಸೆ ಬಡವ ಮತ್ತು ಶ್ರೀಮಂತರ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವದ ಉಪಕ್ರಮವಾಗಿದೆ. ಮೋದಿ ಅವರ ಆಡಳಿತಾವಯಲ್ಲಿ ಬಡವರು ಹೆಚ್ಚು ಬಡವರಾಗುತ್ತಿದ್ದಾರೆ, ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ. ಸಂಪತ್ತಿನ ಸಮಾನ ಹಂಚಿಕೆಯಾಗಿಲ್ಲ, ಇದಕ್ಕಾಗಿ ಜಾತಿ ಜನಗಣತಿ ಆಗಬೇಕು. ಜಾತಿ, ಸಮುದಾಯ ಎಷ್ಟು ಸೌಲಭ್ಯ ಪಡೆದಿದೆ, ಅಭಿವೃದ್ಧಿಯಾಗಿದೆ ಎಂಬುದನ್ನು ಗುರುತಿಸಿ ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಬೇಕು ಎಂದರು. +ರಾಜ್ಯದಲ್ಲಿ ನಡೆದಿರುವ ಜಾತಿ ಜನಗಣತಿಗೆ ಸ್ವಪಕ್ಷೀಯರು ವಿರೋಧ ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ತನ್ನ ನಿರ್ಧಾರವನ್ನು ಹೇಳಿಯಾಗಿದೆ. ಅದನ್ನು ಸಿದ್ದರಾಮಯ್ಯ ಆಗಲಿ, ಡಿ.ಕೆ.ಶಿವಕುಮಾರ್ ಆಗಲೀ ಯಾರೇ ಆಗಲಿ ಅನುಸರಿಸಲೇಬೇಕು ಎಂದು ಕಟ್ಟಾದೇಶ ಹೊರಡಿಸಿದರು. +1951 ರಲ್ಲಿ ನೆಹರೂ ನೇತೃತ್ವದಲ್ಲಿ ಚುನಾವಣೆ ನಡೆಸಿದಾಗ ಬೆಂಗಳೂರಿನಲ್ಲೇ ಪ್ರಣಾಳಿಕೆಗೆ ಅಂತಿಮ ರೂಪ ನೀಡಲಾಯಿತು. ಈ ಊರು ನಮಗೆ ಅದೃಷ್ಟ ತರುತ್ತದೆ ಎಂದರು. 5 ಪ್ರಮುಖ ಆಶ್ವಾಸನೆಗಳಲ್ಲಿ ಒಟ್ಟು 25 ಭರವಸೆಗಳನ್ನು ಕಾಂಗ್ರೆಸ್ ಜನರ ಮುಂದಿಡುತ್ತಿದೆ. ಸರ್ಕಾರಿ ನೇಮಕಾತಿಗಳಿಗೆ ಒತ್ತು ನೀಡುವುದು, ಅರಕ್ಷಣಾ ಭರವಸೆಯಡಿ ಮೀಸಲಾತಿ ಮಿತಿಯನ್ನು ಶೇ.50 ಕ್ಕಿಂತಲೂ ಹೆಚ್ಚು ವಿಸ್ತರಿಸುವುದು, ರೈತರಿಗೆ ಸುಭದ್ರ ಆದಾಯದ ಭರವಸೆ, ಆದಿವಾಸಿಗಳಿಗೆ ಮರ ಕಡಿಯುವ ಅಕಾರ, ಶ್ರಮಿಕ್ ಸನ್ಮಾನ್ ಯೋಜನೆಯಡಿ ನರೇಗಾ ಯೋಜನೆಯ ಕೂಲಿ ಹೆಚ್ಚಳ, ನಗರ ಪ್ರದೇಶದವರ ಉದ್ಯೋಗ ಖಾತ್ರಿಗೆ ಶೆಹರಿ ರೋಜ್‍ಗಾರ್ ಯೋಜನೆ, ಸಾಮಾಜಿಕ ಸುರಕ್ಷಾ ಯೋಜನೆ ನಮ್ಮ ಭರವಸೆಗಳಾಗಿವೆ ಎಂದು ಹೇಳಿದರು. +ನಾವು ಕೊಟ್ಟ ಭರವಸೆಗಳನ್ನು ತಪ್ಪದೇ ಈಡೇರಿಸಿದ್ದೇವೆ. ಅದಕ್ಕೆ ಈಗಾಗಲೇ ಹಲವು ರಾಜ್ಯಗಳ ಚುನಾವಣೆಯಲ್ಲಿ ನೀಡಿದ ಭರವಸೆ ಮತ್ತು ಅನುಷ್ಠಾನಕ್ಕೆ ತಂದ ಮಾದರಿಗಳೇ ಸಾಕ್ಷಿ ಎಂದರು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ. 75 ಕ್ಕಿಂತಲೂ ಹೆಚ್ಚಿನ ಸುಳ್ಳು ಹೇಳುತ್ತಾರೆ. ಆದರೆ ಮಾಧ್ಯಮದವರು ಅವರನ್ನೇ ಬೆಂಬಲಿಸುತ್ತಾರೆ. ಇದಕ್ಕೆ ಮಾಧ್ಯಮ ಸಂಸ್ಥೆಯ ಮಾಲೀಕತ್ವದ ನಿಲುವುಗಳು ಕಾರಣವಾಗಿರಬಹುದು ಎಂದು ಹೇಳಿದರು. +ಪ್ರಧಾನಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ., ರೈತರ ಆದಾಯ ತ್ರಿಗುಣ ಸೇರಿದಂತೆ ಹಲವು ಭರವಸೆಗಳನ್ನು ನೀಡಿದ್ದರು. ಯಾವುದೂ ಈಡೇರಿಲ್ಲ.ಗುಜರಾತ್‍ನಲ್ಲಿ ಬುಲೆಟ್ ಟ್ರೈನ್ ಕಾಣುತ್ತಿಲ್ಲ, ಕರ್ನಾಟಕಕ್ಕೆ ನಾನು ರೈಲ್ವೆ ಸಚಿವನಾಗಿ 9 ತಿಂಗಳು ಕೆಲಸ ಮಾಡಿದಾಗ 21 ಹೊಸ ರೈಲುಗಳನ್ನು ನೀಡಿದ್ದೆ. 10 ವರ್ಷದಲ್ಲಿ 1 ಹೊಸ ರೈಲು ಬಂದಿಲ್ಲ. ಬಣ್ಣ ಬಳಿದು, ಹೆಸರು ಬದಲಾಯಿಸಿ, ವಂದೇ ಭಾರತ್ ಎಂದು ಹೇಳುವ ಮೂಲಕ ಮೋದಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಕಿಡಿಕಾರಿದರು. +ಇಂದು ನನ್ನ ಕ್ಷೇತ್ರ ಕಲಬುರಗಿಗೆ ಪ್ರಧಾನಿ ಬರುತ್ತಿದ್ದಾರೆ. ಬರಲಿ, ಸಂತೋಷ. ಆದರೆ ಅವರ ಕೊಡುಗೇ ಏನೆಂದು ತಿಳಿಸಲಿ, ಏಮ್ಸ್ ಆಸ್ಪತ್ರೆ ಮಂಜೂರು ಮಾಡುವಂತೆ ನಾನು ಮನವಿ ಮಾಡಿದ್ದೆ. ಸಿದ್ದರಾಮಯ್ಯ ಜಮೀನು ನೀಡುತ್ತಿಲ್ಲ ಎಂದು ಸುಳ್ಳು ಹೇಳಿದರು. ಸಿದ್ದರಾಮಯ್ಯ ಅಕಾರಕ್ಕೆ ಬರುವ ಮುನ್ನವೇ ಕಲಬುರಗಿಯಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 4 ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಜಾಗವೂ ಇತ್ತು. ಆದರೆ ಮೋದಿ ಏಮ್ಸ್ ಮಂಜೂರು ಮಾಡಲಿಲ್ಲ ಎಂದು ಆಕ್ರೋಶ ಹೊರಹಾಕಿದರು.ರಾಜ್ಯಗಳಿಗೆ ನ್ಯಾಯಯುತವಾಗಿ ಬರಬೇಕಾದ ತೆರಿಗೆ ಪಾಲಿನಲ್ಲಿಯೂ ಮೋದಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. \ No newline at end of file diff --git a/eesanje/url_46_204_8.txt b/eesanje/url_46_204_8.txt new file mode 100644 index 0000000000000000000000000000000000000000..8abd39a1fcd2aea69dd26a3ec306a3beb9b0e71a --- /dev/null +++ b/eesanje/url_46_204_8.txt @@ -0,0 +1,5 @@ +543 ಕ್ಷೇತ್ರಗಳಲ್ಲೂ ಇಂಡಿಯಾ ಮಿತ್ರಕೂಟ ಸ್ಪರ್ಧೆ : ಖರ್ಗೆ +ಬೆಂಗಳೂರು,ಮಾ.16-ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವೆ ಯಾವುದೇ ಗೊಂದಲಗಳಿಲ್ಲ. ಕ್ಷೇತ್ರಗಳ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಹುತೇಕ ಮಾ.17 ಅಥವಾ 18 ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ ಲೋಕಸಭೆಯ 543 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದೆ. ಕೆಲವು ಕಡೆ ನಮಗೆ ಬೇಕಾದ ಕ್ಷೇತ್ರವನ್ನು ಅವರು ಕೇಳುತ್ತಾರೆ. ಅವರಿಗೆ ಬೇಕಾದ ಕ್ಷೇತ್ರಗಳನ್ನು ನಾವು ಕೇಳುತ್ತಿದ್ದೇವೆ. ಹೀಗಾಗಿ ಚರ್ಚೆಗಳು ಚಾಲನೆಯಲ್ಲಿವೆ. ತಮಿಳುನಾಡಿನಲ್ಲಿ ಕಾಂಗ್ರೆಸ್‍ಗೆ 10 ಸ್ಥಾನಗಳನ್ನು ಬಿಟ್ಟುಕೊಡಲಾಗಿದೆ. ಉತ್ತರ ಪ್ರದೇಶದಲ್ಲೂ ಈಗಾಗಲೇ ಒಪ್ಪಂದವಾಗಿದೆ. ಆಪ್ ಪಕ್ಷ ದೆಹಲಿಯಲ್ಲಿ ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಸಣ್ಣಪುಟ್ಟ ಸಮಸ್ಯೆಗಳನ್ನು ಚರ್ಚೆ ಮೂಲಕ ಬಗೆಹರಿಸಿದ್ದೇವೆ. ಮಹಾರಾಷ್ಟ್ರಕ್ಕೆ ಕಾಂಗ್ರೆಸ್ ನಾಯಕರು ತೆರಳಿದ್ದು, ಕ್ಷೇತ್ರಗಳ ಹೊಂದಾಣಿಕೆ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. +ಮೋದಿಯವರು 400 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ, ಮೋದಿ ಇದ್ದ ಮೇಲೆ ಎಲ್ಲವೂ ಸಾಧ್ಯ ಎಂದು ಬಿಂಬಿಸಿಕೊಳ್ಳುತ್ತಾರೆ. ಆದರೂ ಚುನಾವಣೆಯಲ್ಲಿ ಮಾತ್ರ ಪರದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಇಂಡಿಯಾ ಮೈತ್ರಿಕೂಟಗಳ ನಡುವೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರವಾದರೆ ಅದನ್ನೂ ಅಳವಡಿಸಿಕೊಂಡು ಚುನಾವಣೆಯಲ್ಲಿ ದೇಶಾದ್ಯಂತ ಪ್ರಚಾರ ಮಾಡುವುದಾಗಿ ತಿಳಿಸಿದರು. +ರಾಜ್ಯದಲ್ಲಿ ಎಷ್ಟು ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ನೀಡಿದ್ದೇವೆ. ಅದು ರಹಸ್ಯ, ಬಹಿರಂಗಪಡಿಸುವುದಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದ ಖರ್ಗೆಯಯವರು, ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಶಾಸಕರಲ್ಲದೇ ಇರುವ ಪ್ರಭಾವಿ ನಾಯಕರ ಸಹಭಾಗಿತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನು ಮಿತ್ರ ಪಕ್ಷಗಳು ನಿರ್ಧರಿಸಲಿವೆ ಎಂದರು. \ No newline at end of file diff --git a/eesanje/url_46_204_9.txt b/eesanje/url_46_204_9.txt new file mode 100644 index 0000000000000000000000000000000000000000..6b999aba80013c8e853933c3435627565298d18f --- /dev/null +++ b/eesanje/url_46_204_9.txt @@ -0,0 +1,5 @@ +ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೂ ದಿನಾಂಕ ನಿಗದಿ +ನವದೆಹಲಿ,ಮಾ.16-ಲೋಕಸಭೆ ಚುನಾವಣೆ ಜೊತೆಯಲ್ಲೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ನಡೆಯಲಿದೆ.ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯ್ಕ್ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಭಾರತದ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದೆ. +ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ 26 ವಿಧಾನಸಭಾ ಕ್ಷೇತ್ರಗಳಿಗೂ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಚುನಾವಣೆ ನಡೆಸುವುದಾಗಿ ಪ್ರಕಟಿಸಿದರು. +ಉಪಚುನಾವಣೆಗೆ ಏಪ್ರಿಲ್ 12 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸಬಹುದು. ಏ.19 ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ಏ.20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ವಾಪಸ್ ಪಡೆಯಲು ಏ.22 ರವರಗೆ ಕಾಲಾವಕಾಶವಿದೆ. +ಮೇ 7 ರಂದು ಮತದಾನ ನಡೆಯಲಿದ್ದು, ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ಜೂನ್ 4 ರಂದೇ ಈ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_205_1.txt b/eesanje/url_46_205_1.txt new file mode 100644 index 0000000000000000000000000000000000000000..b16bd94efc9ac965fd8e055cc262ff049f86d69a --- /dev/null +++ b/eesanje/url_46_205_1.txt @@ -0,0 +1,5 @@ +ಲೋಕಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಕಡತ ಯಜ್ಞ +ಬೆಂಗಳೂರು,ಮಾ.16-ಲೋಕಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಡತ ಯಜ್ಞಕ್ಕೆ ಕೈ ಹಾಕಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಕೇಂದ್ರ ಚುನಾವಣಾ ಆಯೋಗ ಮಾಧ್ಯಮ ಗೋಷ್ಠಿಯನ್ನು ಕರೆದಿದೆ. ಬಹುತೇಕ ಲೋಕಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ತತ್ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. +ಮುಂದಿನ 2 ತಿಂಗಳ ಕಾಲ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ನೀತಿ ಸಂಹಿತೆ ಜಾರಿಯಲ್ಲಿರು ವುದರಿಂದ ಬೇರೆ ಯಾವುದೇ ಯೋಜನೆಗಳಿಗೆ ಮಂಜೂರಾತಿ ನೀಡುವುದು ಕಷ್ಟಸಾಧ್ಯವಾಗುತ್ತದೆ. ಅದಕ್ಕಾಗಿ ಸಂಪುಟದ ವಿವಿಧ ಸಚಿವರು ಮುಖ್ಯಮಂತ್ರಿಯವರ ಬೆನ್ನು ಬಿದ್ದಿದ್ದು, ಬಾಕಿ ಇರುವ ಕಡತಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಿದ್ದಾರೆ. +ಬೃಹತ್ ಮಧ್ಯಮ ಕೈಗಾರಿಕೆ, ಲೋಕೋಪಯೋಗಿ, ಕೆಐಡಿಪಿ, ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕøತಿ, ವಸತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಕಡತಗಳಿಗೆ ತರಾತುರಿಯಲ್ಲಿ ಅನುಮೋದನೆ ಪಡೆದುಕೊಳ್ಳುವ ಪ್ರಯತ್ನಗಳಾಗಿವೆ. +ಮುಖ್ಯಮಂತ್ರಿಯವರು ಇಂದು ತಮ್ಮ ಅಕೃತ ನಿವಾಸದಿಂದ ಹೊರಹೋಗಿದ್ದು ರಹಸ್ಯ ಸ್ಥಳದಲ್ಲಿ ಕುಳಿತು ಕಡತಗಳನ್ನು ಇತ್ಯರ್ಥಪಡಿಸುವುದರಲ್ಲಿ ಕಾರ್ಯೋನ್ಮುಖರಾಗಿದ್ದರು. ಇದಕ್ಕೂ ಮುನ್ನ ಅಕೃತ ನಿವಾಸ ಕಾವೇರಿಯಲ್ಲಿ ನೂರಾರು ಜನ ಅರ್ಜಿಗಳೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದರು. \ No newline at end of file diff --git a/eesanje/url_46_205_10.txt b/eesanje/url_46_205_10.txt new file mode 100644 index 0000000000000000000000000000000000000000..ea9de79e167bf8f5d58b2ceb1313b3488c317aef --- /dev/null +++ b/eesanje/url_46_205_10.txt @@ -0,0 +1,7 @@ +7ನೇ ವೇತನ ಆಯೋಗ ವರದಿ ಸ್ವೀಕಾರಕ್ಕೆ ಸರ್ಕಾರ ಹಿಂದೇಟು.! +ಬೆಂಗಳೂರು,ಮಾ.15-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ವರದಿ ಸಿದ್ಧಗೊಂಡಿದ್ದು, ಅದನ್ನು ಸ್ವೀಕರಿಸಲು ರಾಜ್ಯಸರ್ಕಾರ ಹಿಂದೇಟು ಹಾಕುತ್ತಿದೆ. ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವ ಇಂದಿಗೆ ಮುಕ್ತಾಯಗೊಳ್ಳುತ್ತಿದೆ. ಉನ್ನತ ಮೂಲಗಳ ಪ್ರಕಾರ, ಸಿದ್ಧವಾಗಿರುವ ವರದಿ ಸಲ್ಲಿಸಲು ಆಯೋಗ ತಯಾರಿದೆ. ಆದರೆ ಸರ್ಕಾರವೇ ಹಿಂದೇಟು ಹಾಕುತ್ತಿದೆ ಎಂದು ತಿಳಿದುಬಂದಿದೆ. +ಈಗಾಗಲೇ ಪಂಚಖಾತ್ರಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಬಳಕೆ ಸೇರಿದಂತೆ ಒಟ್ಟು ಯೋಜನಾ ವೆಚ್ಚಕ್ಕೆ 1.20 ಲಕ್ಷ ಕೋಟಿ ರೂ.ಗಳನ್ನು ನಿಗದಿ ಮಾಡಿರುವ ಸರ್ಕಾರಕ್ಕೆ ರಾಜ್ಯಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಹಣಕಾಸಿನ ಕೊರತೆ ಎದುರಾಗಿದೆ ಎಂದು ಹೇಳಲಾಗುತ್ತಿದೆ. +ಈ ಹಿನ್ನೆಲೆಯಲ್ಲಿ ವರದಿಯನ್ನು ಸ್ವೀಕರಿಸುವ ಬದಲು ಮತ್ತಷ್ಟು ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲೇ ಈಗಾಗಲೇ 2 ಬಾರಿ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸಿದ್ಧಪಡಿಸಲಾಗಿರುವ ಆಯೋಗದ ವರದಿಯಲ್ಲಿ ಸರ್ಕಾರಿ ನೌಕರರಿಗೆ ಶೇ.30 ರಷ್ಟು ವೇತನ ಹೆಚ್ಚು ಮಾಡಬೇಕು ಎಂಬ ಶಿಫಾರಸ್ಸುಗಳಿವೆ ಎನ್ನಲಾಗಿದೆ. ಈಗಾಗಲೇ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳವನ್ನು ಹಿಂದಿನ ಸರ್ಕಾರವೇ ಜಾರಿ ಮಾಡಿತ್ತು. +ಚುನಾವಣಾ ಪ್ರಣಾಳಿಕೆಯಲ್ಲಿಯೇ 7ನೇ ವೇತನ ಆಯೋಗದ ವರದಿ ಜಾರಿಯ ಭರವಸೆ ಕಾಂಗ್ರೆಸ್ ನೀಡಿತ್ತು. ಸಿದ್ದರಾಮಯ್ಯನವರ ಸರ್ಕಾರ ಅಧಿಕಾರ ಕ್ಕೆ ಬಂದ ಬಳಿಕ ಪಂಚಖಾತ್ರಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದ್ದು, ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿವೆ. +ಇಂದು ಆಯೋಗದ ಅವಧಿ ಮುಗಿಯುತ್ತಿದೆ. ನಾಳೆ ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ನಿರೀಕ್ಷೆಗಳಿವೆ. ಅಷ್ಟರೊಳಗಾಗಿ ವರದಿ ಸ್ವೀಕರಿಸಬೇಕು. ಇಲ್ಲವೇ ಆಯೋಗದ ಅವಧಿಯನ್ನು ವಿಸ್ತರಿಸಬೇಕಿದೆ.ವೇಳಾಪಟ್ಟಿ ಪ್ರಕಟಗೊಂಡ ಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಸರ್ಕಾರವು ಯಾವುದೇ ಹೊಸ ಯೋಜನೆ ಅಥವಾ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ವೇತನ ಪರಿಷ್ಕರಣೆಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರು ಸಹಜವಾಗಿಯೇ ಗೊಂದಲಕ್ಕೆ ಒಳಗಾಗಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ವೇತನ ಪರಿಷ್ಕರಣೆಯಾಗುವ ಸಾಧ್ಯತೆ ತೀರಾ ವಿರಳವಾದಂತಾಗಿದೆ. +ಎರಡು ಬಾರಿ ಅವಧಿ ವಿಸ್ತರಣೆ:ಸುಧಾಕರ್ ರಾವ್ ನೇತೃತ್ವದಲ್ಲಿ ರಾಜ್ಯಸರ್ಕಾರ 2022 ರ ನವೆಂಬರ್ 19 ರಂದು ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವ ಗಡುವು ನೀಡಿತ್ತು. ಆನಂತರ 2023 ರ ಮೇ 15 ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಿಸಲಾಗಿತ್ತು. ಬಳಿಕ 2023 ರ ನವೆಂಬರ್ 6 ರಂದು ಆಯೋಗದ ಅವಧಿಯನ್ನು ಇಂದಿನವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು. \ No newline at end of file diff --git a/eesanje/url_46_205_11.txt b/eesanje/url_46_205_11.txt new file mode 100644 index 0000000000000000000000000000000000000000..fc9c7cf4fbc5794bc278ed78cef127bd32119c5d --- /dev/null +++ b/eesanje/url_46_205_11.txt @@ -0,0 +1,9 @@ +ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ +ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಕ್ಸೋ ಕಾಯ್ದೆ ದಾಖಲಾಗಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯದ ಪ್ರಭಾವಿ ಜನನಾಯಕರಾಗಿರುವ ಬಿಎಸ್ ವೈ ವಿರುದ್ಧ ಮಹಿಳೆಯೊಬ್ಬಳು ತನ್ನ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ಕೊಟ್ಟಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. +ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ. ಇದರ ಬೆನ್ನಲ್ಲೇ ಸದಾಶಿವನಗರ ಪೊಲೀಸರು ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಬಂದು ಯಡಿಯೂರಪ್ಪ ನವರಿಂದ ಹೇಳಿಕೆ ದಾಖಲಿಸಿಕೊಂಡು ಹೋಗಿದ್ದಾರೆ. +ತಮ್ಮ ಪುತ್ರಿಗೆ ಲೈಂಗಿಕ ಕಿರುಕುಳವಾಗಿದೆ ಎಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಮಹಿಳೆ, ಈ ಹಿಂದೆ ಇದೇ ರೀತಿ 50ಕ್ಕೂ ಹೆಚ್ಚು ದೂರುಗಳನ್ನು ಪ್ರಭಾವಿಗಳ ಮೇಲೆ ನೀಡಿರುವುದು ಗಮನಾರ್ಹವಾಗಿದೆ. ಈ ನಡುವೆ ದೂರು ನೀಡಿರುವ ಮಹಿಳೆ ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿದ್ದು, ಇದು ಹಲವು ಸಂಶಯಗಳನ್ನು ಹುಟ್ಟುಹಾಕಿದೆ. +ವಿಡಿಯೋದಲ್ಲಿ ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಹನಿಟ್ರಾಪ್ನಲ್ಲಿ ಕೆಡವಲು ದೂರು ನೀಡಿರುವ ಮಹಿಳೆ ಸತತ ಪ್ರಯತ್ನ ನಡೆಸಿದ್ದಾರೆ.ಈ ಹಿಂದೆಯೂ ಇದೇ ಮಹಿಳೆ ಯಡಿಯೂರಪ್ಪ ಅವರನ್ನು ನಾನು ಮೂಲತಃ ಶಿವಮೊಗ್ಗದವರೆಂದು ಪರಿಚಯ ಮಾಡಿಕೊಂಡು ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ಕೊಟ್ಟು ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದರು. +ಅಲ್ಲದೆ ಹಾಲಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಜೊತೆ ಫೋಟೊ ಮತ್ತು ಸೆಲ್ಫಿ ತೆಗೆದುಕೊಂಡಿರುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಕುಟುಂಬದವರಿಂದ ವರದಕ್ಷಿಣೆ ಕಿರುಕುಳ ನೀಡಲಾಗಿದೆ ಎಂದು ಬಿಎಸ್ವೈ ಬಳಿ ಅವಲತ್ತು ತೋಡಿಕೊಂಡಿದ್ದ ಮಹಿಳೆಗೆ ಖುದ್ದು ಸಹಾಯ ಮಾಡಿ ನ್ಯಾಯ ಒದಗಿಸಿಕೊಡುವ ಭರವಸೆಯನ್ನು ನೀಡಿದ್ದರು ಎನ್ನಲಾಗಿದೆ. +ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಯಡಿಯೂರಪ್ಪನವರೇ ಕರೆ ಮಾಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮಾಡುವಂತೆ ಸೂಚನೆ ನೀಡಿದ್ದರು. ಏಕಾಏಕಿ ಯಡಿಯೂರಪ್ಪ ವಿರುದ್ಧವೇ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿರುವುದು ಹುಬ್ಬೇರುವಂತೆ ಮಾಡಿದೆ. ಅದರಲ್ಲೂ ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಅವರ ರಾಜಕೀಯ ಎದುರಾಳಿಗಳ ಕೈವಾಡ ಇದೆಯೇ ಎಂಬ ಸಂಶಯ ಎದುರಾಗಿದೆ. +ಇನ್ನು ಪ್ರಕರಣ ಕುರಿತಂತೆ ಕಾನೂನು ಮೂಲಕವೇ ಹೋರಾಟ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಉಪಕಾರ ಮಾಡಿದವರಿಗೆ ಇಂತಹ ದೂರುಗಳು ಬರುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಪ್ರಕರಣದಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ ಎಂದು ಹೇಳಿದ್ದಾರೆ. +ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು, ಯಡಿಯೂರಪ್ಪನವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಜೊತೆಗೆ ಪ್ರಭಾವಿ ನಾಯಕರು. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ತಕ್ಷಣ ಅವರನ್ನು ಬಂಸಬೇಕೆಂಬ ನಿಯಮವಿಲ್ಲ. ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಯಾರು ಏನು ಹೇಳಬೇಕೋ ಅದನ್ನು ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಾಣ್ಮೆಯಿಂದ ಪ್ರತಿಕ್ರಿಯೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_205_12.txt b/eesanje/url_46_205_12.txt new file mode 100644 index 0000000000000000000000000000000000000000..890398d25235a03f518c2f6ba83b528a86d4feb8 --- /dev/null +++ b/eesanje/url_46_205_12.txt @@ -0,0 +1,7 @@ +ನಾಳೆ ರಾಜ್ಯಕ್ಕೆ ಮೋದಿ ಆಗಮನ, ಮೊಳಗಲಿದೆ ರಣಕಹಳೆ +ಬೆಂಗಳೂರು,ಮಾ.15-ಲೋಕ ಸಭೆ ಚುನಾವಣೆ ಮಹಾಸಮರಕ್ಕೆ ದಿನಗಣನೆ ಪ್ರಾರಂಭವಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕರುನಾಡಿನಲ್ಲಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ರಣ ಕಹಳೆ ಮೊಳಗಿಸಲಿದ್ದಾರೆ. ಕಲಬುರಗಿಯ ಎನ್ಎಂಆರ್ವಿ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಅಂದಾಜು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿಯವರು ಭಾಷಣ ಮಾಡಲಿದ್ದಾರೆ. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಅನೇಕ ನಾಯಕರು ಭಾಗಿಯಾಗಲಿದ್ದಾರೆ. ಕಲಬುರಗಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಟ್ಟು ಕೊಂಡು ಮೋದಿ ಬಿಜೆಪಿ ಪರವಾಗಿ ಪ್ರಚಾರವನ್ನು ನಡೆಸಲಿದ್ದಾರೆ. +2019ರ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಕಲ್ಯಾಣ ಕರ್ನಾಟಕದ ಎಲ್ಲಾ ಲೋಕಸಭಾ ಕ್ಷೇತ್ರಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಆದರೆ 2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಈ ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು. +ಇದೀಗ ಪುನಃ ಬಿಜೆಪಿ ತನ್ನ ಪಾರುಪತ್ಯ ಮೆರೆಯಲು ಮುಂದಾಗಿದ್ದು, ಲೋಕಸಭೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿಯ ತಾರಾ ಪ್ರಚಾರಕರು ಆಗಿರುವ ಮೋದಿ ಅವರಿಂದ ಭರ್ಜರಿ ಸಾರ್ವಜನಿಕ ಸಮಾರಂಭ ನಡೆಸಿ ಮತ ಬುಟ್ಟಿಗೆ ಕೈಹಾಕಲಿದೆ.ಬಿಜೆಪಿ ಬಿಡುಗಡೆ ಮಾಡಿರುವ 20 ಕ್ಷೇತ್ರಗಳ ಪಟ್ಟಿಯಲ್ಲಿ ಕಲಬುರಗಿಯಿಂದ ಡಾ.ಉಮೇಶ್ ಜಾಧವ್, ಬಳ್ಳಾರಿಯಿಂದ ಶ್ರೀರಾಮುಲು, ಕೊಪ್ಪಳದಿಂದ ಬಸವರಾಜ್ ಕ್ಯಾವಟಗಿ, ಬಾಗಲಕೋಟೆಯಿಂದ ಗದ್ದಿಗೌಡರ್, ಬೀದರ್ನಿಂದ ಭಗವಂತ ಕೂಬ, ಬಿಜಾಪುರದಿಂದ ರಮೇಶ್ ಜಿಗಜಿಣಗಿಗೆ ಟಿಕೆಟ್ ಘೋಷಣೆ ಮಾಡಿದೆ. +ಆದರೆ ಬೇರೆ ಬೇರೆ ಕಾರಣಗಳಿಂದ ರಾಯಚೂರಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬಿಜೆಪಿ ನಾಯಕರು ಟೊಂಕ ಕಟ್ಟಿ ನಿಂತಿದ್ದಾರೆ. ಏಳು ಲೋಕಸಭಾ ಕ್ಷೇತ್ರಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಕರೆತರುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. +ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭದ್ರಕೋಟೆಯಾಗಿದೆ. ಸೋಲಿಲ್ಲದ ಸರದಾರ ಎಂದೇ ಖ್ಯಾತಿಯಾಗಿದ್ದ ಖರ್ಗೆ ಅವರನ್ನು ಕಳೆದ ಬಾರಿ ಬಿಜೆಪಿ ವಿಶೇಷ ರಣತಂತ್ರ ಹೆಣೆದು ಸೋಲಿನ ರುಚಿ ತೋರಿಸಿತ್ತು. ಇದೀಗ ಕಾಂಗ್ರೆಸ್ ಈ ಕ್ಷೇತ್ರಕ್ಕೆ ತನ್ನ ಹುರಿಯಾಳನ್ನು ಈವರೆಗೂ ಘೋಷಣೆ ಮಾಡಿಲ್ಲ. ಆದರೂ ಬಿಜೆಪಿ ತನ್ನ ಕಮಲವನ್ನು ಅರಳಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. \ No newline at end of file diff --git a/eesanje/url_46_205_2.txt b/eesanje/url_46_205_2.txt new file mode 100644 index 0000000000000000000000000000000000000000..50b3db76f10f3cd4a777e00042233c042473048a --- /dev/null +++ b/eesanje/url_46_205_2.txt @@ -0,0 +1,10 @@ +ಸಿಎಂಗೆ 7ನೇ ರಾಜ್ಯ ವೇತನ ಆಯೋಗ ವರದಿ ಸಲ್ಲಿಕೆ, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು +ಬೆಂಗಳೂರು,ಮಾ.16-ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗ ಇಂದು ವರದಿ ಸಲ್ಲಿಸಿದ್ದು, ಶೇ.27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸ್ಸು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವರದಿಯನ್ನು ಪಡೆದುಕೊಂಡರು. +ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ವೇತನ ಆಯೊಗದ ವರದಿಯಲ್ಲಿ ಹಲವಾರು ಶಿಫಾರಸ್ಸುಗಳಿವೆ. ಅವುಗಳಲ್ಲಿ ಪ್ರಮುಖವಾಗಿ ಸರ್ಕಾರಿ ನೌಕರರ ವೇತನವನ್ನು ಶೇ.27.5ರಷ್ಟು ಹೆಚ್ಚಿಸಬೇಕು ಎಂಬುದು ಸೇರಿದೆ. ಆಯೋಗದ ಶಿಫಾರಸ್ಸನ್ನು ಆರ್ಥಿಕ ಇಲಾಖೆ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಸಲಹೆ ನೀಡಲಿದೆ. ಆ ಬಳಿಕ ವರದಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು. +2022ರ ನವೆಂಬರ್ 19ರಂದು ರಾಜ್ಯ ಸರ್ಕಾರ 7ನೇ ವೇತನ ಆಯೋಗವನ್ನು ರಚನೆ ಮಾಡಿತ್ತು. ಮಧ್ಯಂತರ ವರದಿಯಲ್ಲಿ ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.17ರಷ್ಟನ್ನು ಹೆಚ್ಚಳ ಮಾಡಿ ಹಿಂದಿನ ಸರ್ಕಾರ ಆದೇಶ ಹೊರಡಿಸಿತ್ತು. ಇಂದು ಸಲ್ಲಿಕೆಯಾಗಿರುವ ಅಂತಿಮ ವರದಿ ಅನುಷ್ಠಾನಕ್ಕೆ ಬರುವವರೆಗೂ ಶೇ.17ರ ಪ್ರಮಾಣ ಮಧ್ಯಂತರ ಪರಿಹಾರ ಮುಂದುವರೆಯಲಿದೆ ಎಂದು ಹೇಳಿದರು. +ಆಯೋಗಕ್ಕೆ ಅಂತಿಮ ವರದಿ ನೀಡಲು ಈಗಾಗಲೇ ಮೂರು ತಿಂಗಳ ಕಾಲಾವಕಾಶ ವಿಸ್ತರಣೆ ಮಾಡಲಾಗಿತ್ತು. ನಿನ್ನೆಗೆ ಅದು ಮುಕ್ತಾಯಗೊಂಡಿದೆ. ತಾವು ನಿನ್ನೆ ಮೈಸೂರಿನಲ್ಲಿ ಇದ್ದುದ್ದರಿಂದ ವರದಿ ಪಡೆದುಕೊಳ್ಳಲಾಗಿರಲಿಲ್ಲ. ಇಂದು ವರದಿ ಸ್ವೀಕರಿಸಿದ್ದೇನೆ. ಅಂತಿಮ ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17 ಸಾವಿರದಿಂದ 27 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಉಳಿದಂತೆ ಹಲವು ಶಿಫಾರಸ್ಸುಗಳ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು. +ಆಯೋಗದ ಅಧ್ಯಕ್ಷರಾಗಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರು ವರದಿ ಬಗ್ಗೆ ಮಾಹಿತಿ ನೀಡಿದ್ದು, ಮೂಲ ವೇತನದಲ್ಲಿ ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಶೇ.17ರಷ್ಟು ವೇತನ ಪರಿಷ್ಕರಣೆ ಅಂತಿಮ ವರದಿ ಜಾರಿಯಾದ ಬಳಿಕ ಸ್ಥಗಿತಗೊಳ್ಳಲಿದೆ. ಒಟ್ಟಾರೆ. 27.5ರ ಒಳಗಿನ ಪ್ರಮಾಣದಲ್ಲಿ ಸರ್ಕಾರ ವೇತನ ಪರಿಷ್ಕರಣೆ ಮಾಡಬಹುದು ಎಂದು ಹೇಳಿದರು. +ಈಗಾಗಲೇ ಶೇ.31ರಷ್ಟು ಡಿಎ ಹೆಚ್ಚಳವಾಗಿದೆ. 2017-18ರಲ್ಲಿ ಮೂಲ ವೇತನ 17 ಸಾವಿರ ರೂ.ಗಳಷ್ಟಾಗಿದ್ದು, ಈ ಎಲ್ಲ ಆರ್ಥಿಕ ಅನುಕೂಲಗಳನ್ನು ಒಳಗೊಂಡು 27 ಸಾವಿರ ರೂ.ಗಳಿಗೆ ಹೆಚ್ಚಾಗಬಹುದು ಎಂದು ತಿಳಿಸಿದರು. ಎಚ್‍ಆರ್‍ಎ ಸೇರಿದಂತೆ ಇತರೆ ಆರ್ಥಿಕ ಸೌಲಭ್ಯಗಳನ್ನು ಹೆಚ್ಚಿಸಲು ಸಲಹೆ ನೀಡಲಾಗಿದೆ. ಜೊತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರದ ಪದ್ಧತಿಯನ್ನೇ ರೂಢಿಸಿಕೊಳ್ಳುವಂತೆ ಶಿಫಾರಸ್ಸು ಮಾಡಲಾಗಿದೆ. ಪ್ರತಿ 5 ವರ್ಷಕ್ಕೊಮ್ಮೆ ವೇತನ ಆಯೋಗ ರಚಿಸುವುದು ಮತ್ತು ವೇತನ ಹೆಚ್ಚಳ ಮಾಡಲಾಗುತ್ತಿದೆ. +ಆದರೆ ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರಿ ನೌಕರರ ವೇತನಗಳು ಹೆಚ್ಚಳವಾಗಿಲ್ಲ. ಇದಕ್ಕಾಗಿ ಕೇಂದ್ರದ ಮಾರ್ಗಸೂಚಿಗಳನ್ನೇ ಪಾಲನೆ ಮಾಡಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವಿನ ತಾರತಮ್ಯ ತಗ್ಗಲಿದೆ. ಕೇಂದ್ರ ಸರ್ಕಾರಿ ವೇತನ ಆಯೋಗಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರದ ಆಯೋಗಗಳು ಅಸ್ತಿತ್ವಕ್ಕೆ ಬರಲಿದೆ ಎಂದು ವಿವರಿಸಿದರು. +ಶೇ.27.5ರಷ್ಟು ವೇತನ ಪರಿಷ್ಕರಣೆಯನ್ನು 2022ರ ಜುಲೈ 1ರಿಂದ ಪೂರ್ವಾನ್ವಯಗೊಳಿಸುವಂತೆ ಅಂತಿಮ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.ಆಯೋಗದ ಶಿಫಾರಸ್ಸನ್ನು ಪರಿಪೂರ್ಣವಾಗಿ ಅನುಷ್ಠಾನಕ್ಕೆ ತಂದರೆ 2024-25ನೇ ಸಾಲಿಗೆ 17,447 ಕೋಟಿ ರೂ.ಗಳ ಆರ್ಥಿಕ ಹೊರೆಯಾಗಲಿದೆ ಎಂದು ಸುಧಾಕರ್ ರಾವ್ ತಿಳಿಸಿದರು. +ಆಯೋಗದ ಸದಸ್ಯರಾದ ಪಿ.ಬಿ.ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಸದಸ್ಯ ಕಾರ್ಯದರ್ಶಿ ಹೆಪ್ಸಿಬಾರಾಣಿ ಪೊರ್ಲಾಪಾಟಿ, ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜರಾಯ ರೆಡ್ಡಿ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರರು ಉಪಸ್ಥಿತರಿದ್ದರು. diff --git a/eesanje/url_46_205_3.txt b/eesanje/url_46_205_3.txt new file mode 100644 index 0000000000000000000000000000000000000000..13b1ab558451a1914d3c70ecea8c5c392ff2c9ec --- /dev/null +++ b/eesanje/url_46_205_3.txt @@ -0,0 +1,4 @@ +ಕೆಎಸ್‌ಆರ್‌ಟಿಸಿ ಸಿಬ್ಬಂದಿ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಆದೇಶ +ಬೆಂಗಳೂರು,ಮಾ.16-ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ತುಟ್ಟಿಭತ್ಯೆ ಹಿಂಬಾಕಿ, ಗಳಿಕೆ ರಜೆ ನಗದೀಕರಣ ಹಾಗೂ ಉಪಧನದ ಬಾಕಿ ಮೊತ್ತ ಒಟ್ಟು 84 ಕೋಟಿ ರೂ.ಗಳನ್ನು ಪಾವತಿಸಲು ಆದೇಶಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷರ ನಿರ್ದೇಶನದಂತೆ ಪಾವತಿಸಲು ಕೆಎಸ್‌ಆರ್‌ಟಿಸಿ ಯ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಆದೇಶಿಸಿದ್ದಾರೆ. +ಕೆಎಸ್‌ಆರ್‌ಟಿಸಿ ಯ ಸಿಬ್ಬಂದಿಗಳಿಗೆ (ನಿವೃತ್ತ ಸಿಬ್ಬಂದಿ ಸೇರಿ) 2022-23ರ ಮೇಯಿಂದ ಗಳಿಕೆ ರಜೆ ನಗದೀಕರಣದ ಮೊತ್ತ 24 ಕೋಟಿ ರೂ. ಹಾಗೂ 2022ರ ಜುಲೈನಿಂದ ನವೆಂಬರ್‍ವರೆಗೆ 5 ತಿಂಗಳು, 2023 ಜನವರಿಯಿಂದ ಜುಲೈವರೆಗಿನ 7 ತಿಂಗಳು ಮತ್ತು ಕಳೆದ ಜುಲೈನಿಂದ ಅಕ್ಟೋಬರ್‍ವರೆಗಿನ 4 ತಿಂಗಳುಗಳ ಹಿಂಬಾಕಿ ತುಟ್ಟಿಭತ್ಯೆ ಮೊತ್ತ 54 ಕೋಟಿ ರೂ. ಪಾವತಿಸಲು ಆದೇಶಿಸಲಾಗಿದೆ. +2024ರ ಜನವರಿಯಲ್ಲಿ ಸಂಸ್ಥೆಯ ಸೇವೆಯಿಂದ ನಿವೃತ್ತರಾದ ಸಿಬ್ಬಂದಿಗಳ ಉಪಧನ 6 ಕೋಟಿ ರೂ. ಮೊತ್ತವನ್ನು ನಿನ್ನೆ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_205_4.txt b/eesanje/url_46_205_4.txt new file mode 100644 index 0000000000000000000000000000000000000000..6d635d639ae2cb05d4027800cbaad153f447487b --- /dev/null +++ b/eesanje/url_46_205_4.txt @@ -0,0 +1,4 @@ +ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಒಪ್ಪಿಸಲು ಆದೇಶ +ಬೆಂಗಳೂರು,ಮಾ.16-ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಠೇವಣಿ ಮಾಡಬೇಕಾಗಿದೆ.ಲೋಕಸಭೆ ಚುನಾವಣೆಗೆ ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಚುನಾವಣೆಯನ್ನು ಮುಕ್ತ ಮತ್ತು ಶಾಂತಿಯುತವಾಗಿ ನಡೆಸಲು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿ ಕುರಿತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿ ರಚಿಸಿ ಆದೇಶಿಸಲಾಗಿದೆ. +ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿಯಿಂದ ವಿನಾಯಿತಿ ಪಡೆಯಲಿಚ್ಚಿಸುವವರು ಮಾರ್ಚ್ 19ರೊಳಗೆ ತಮ್ಮ ಮನವಿಗಳನ್ನು ಸಕಾರಣದೊಂದಿಗೆ ತಮ್ಮ ವ್ಯಾಪ್ತಿಯ ಡಿವೈಎಸ್ಪಿ ಕಚೇರಿಗೆ ಸಲ್ಲಿಸಬಹುದಾಗಿದೆ. +ಸಾರ್ವಜನಿಕರಿಂದ ಸ್ವೀಕೃತವಾದ ಮನವಿಗಳನ್ನು ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಸ್ಕ್ರೀನಿಂಗ್ ಕಮಿಟಿಯ ನಿರ್ಣಯವು ಅಂತಿಮವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಡಾ.ಶಿವಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_205_5.txt b/eesanje/url_46_205_5.txt new file mode 100644 index 0000000000000000000000000000000000000000..726de2f364f329d803954545f382f3c87ff17305 --- /dev/null +++ b/eesanje/url_46_205_5.txt @@ -0,0 +1,3 @@ +ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆಗೆ 6 ತಿಂಗಳ ಕಾಲಾವಕಾಶ +ಬೆಂಗಳೂರು,ಮಾ.16- ರಾಜ್ಯದಲ್ಲಿನ ಸಾರ್ವಜನಿಕ ಸೇವಾ ವಲಯಗಳಿಗೆ ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಗಾಣಿಕೆ ವಾಹನಗಳಿಗೆ ವೈಕಲ್ ಲೊಕೇಶನ್ ಟ್ರಾಕಿಂಗ್ ಡೇವಿಸ್ ವಿತ್ ಎಮೆರ್ಜೆನ್ಸಿ ಪ್ಯಾನಿಕ್ ಬಟನ್ (ವಿಎಲ್‍ಟಿಡಿಇಪಿಬಿ) ಸಾಧನಗಳನ್ನು ಅಳವಡಿಸಿಕೊಳ್ಳುವ ಕಾಲಮಿತಿಯನ್ನು 6 ತಿಂಗಳವರೆಗೆ ನೀಡಲಾಗಿದೆ. +ಸೆ.10 ರವರೆಗೂ ವಿಎಲ್‍ಟಿಡಿಇಪಿಬಿ ಸಾಧನ ಅಳವಡಿಸಿಕೊಳ್ಳಲು ಸಾರಿಗೆ ಇಲಾಖೆ ಕಾಲಾವಕಾಶ ನೀಡಿ ತಿದ್ದುಪಡಿ ಆದೇಶ ಹೊರಡಿಸಿದೆ.ಈ ಸಾಧನ ಅಳವಡಿಸುವ ಯೋಜನೆಯನ್ನು 2023 ರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ನಿಗದಿಪಡಿಸಲಾಗಿತ್ತು. ಆದರೆ ಜನವರಿ 2 ರಂದು ತಿದ್ದುಪಡಿ ಆದೇಶ ಹೊರಡಿಸಿ ಮುಂದಿನ ಆದೇಶದವರೆಗೆ ಮುಂದೂಡಲಾಗಿತ್ತು. ಈ ಯೋಜನೆಯನ್ನು ಮಾ.11 ರಿಂದ ಜಾರಿಗೆ ಬರುವಂತೆ ನಿಗದಿಪಡಿಸಿ ಆದೇಶಿಸಲಾಗಿದೆ. \ No newline at end of file diff --git a/eesanje/url_46_205_6.txt b/eesanje/url_46_205_6.txt new file mode 100644 index 0000000000000000000000000000000000000000..1ee16cab455da3468ab6e91fad55eb91bdba304b --- /dev/null +++ b/eesanje/url_46_205_6.txt @@ -0,0 +1,7 @@ +ಇಂದಿನಿಂದ ವೈರಮುಡಿ ಜಾತ್ರೋತ್ಸವ ಪ್ರಾರಂಭ +ಮೇಲುಕೋಟೆ,ಮಾ.16- ಐತಿಹಾಸಿಕ ಬಹ್ಮೋತ್ಸವಗಳಲ್ಲಿ ಪ್ರಮುಖವಾದ ಶ್ರೀ ಚೆಲುವನಾರಾಯಣ ಸ್ವಾಮಿಯವರ ವೈರಮುಡಿ ಕಿರೀಟಧಾರಣ ಮಹೋತ್ಸವ ಇದೇ 21ರಿಂದ ರಾತ್ರಿ 8ಗಂಟೆಗೆ ಆರಂಭವಾಗಲಿದೆ.ಹತ್ತು ದಿನಗಳ ಬ್ರಹ್ಮೋತ್ಸವದಲ್ಲಿ ನಾಲ್ಕನೆ ತಿರುನಾಳ್ ದಿನವಾದ ಮಾ.21ರ ರಾತ್ರಿ ಶ್ರೀದೇವಿ, ಭೂದೇವಿ ಸಮೇತರಾಗಿ ಗರುಡಾರೂಢನಾದ ಚೆಲುವನಾರಾಯಣನ ವೈರಮುಡಿ ಉತ್ಸವ ರಾತ್ರಿ 8 ಗಂಟೆಗೆ ಮಹಾಮಂಗಳಾರತಿಯೊಂದಿಗೆ ಆರಂಭವಾಗಲಿದೆ. +ತಡರಾತ್ರಿ ವೈರಮುಡಿ ಉತ್ಸವ ಮುಗಿದ ತಕ್ಷಣ ಸ್ವಾಮಿಗೆ ವಜ್ರ ಖಚಿತ ರಾಜಮುಡಿ ಉತ್ಸವ ನೆರವೇರಲಿದೆ. ಭಾರತದಲ್ಲಿ ಒಂದೇ ರಾತ್ರಿ ಎರಡು ವಜ್ರಖಚಿತ ಕಿರೀಟ ತೊಡಿಸುವ ಸಂಪ್ರದಾಯ ಮೇಲುಕೋಟೆಯಲ್ಲಿ ಮಾತ್ರ ಆಚರಣೆಯಲ್ಲಿದ್ದು ರಾಜ್ಯ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಪಾಲ್ಗೊಳ್ಳಲಿದ್ದಾರೆ. +ಬ್ರಹ್ಮೋತ್ಸವದ ಪ್ರಮುಖ ಉತ್ಸವಗಳು:ವೈರಮುಡಿ ಜಾತ್ರಾಮಹೋತ್ಸವ ಇಂದು ಅಂಕುರಾರ್ಪಣದೊಂದಿಗೆ ಆರಂಭವಾಗಿ ಮಾ. 28 ರ ಶೇರ್ತಿ ಸೇವೆಯವರೆಗೆ 13 ದಿನಗಳ ಕಾಲ ನಡೆಯಲಿದೆ. ಬ್ರಹ್ಮೋತ್ಸವದಲ್ಲಿ ಮಾ.24 ರ ಭಾನುವಾರ ನಡೆಯುವ ಮಹಾರಥೋತ್ಸವ 25 ರಂದು ರಾತ್ರಿ ಕಲ್ಯಾಣಿಯಲ್ಲಿ ನಡೆಯುವ ತೆಪ್ಪೋತ್ಸವ 26 ರಂದು ಬೆಳಿಗ್ಗೆ 11 ಗಂಟೆಗೆ ತೀರ್ಥಸ್ನಾನ ಸಂಜೆ 5 ಗಂಟೆಗೆ ನಡೆಯುವ ಪಟ್ಟಾಭಿಷೇಕ ಮಹೋತ್ಸವಗಳು ಅತ್ಯಂತ ಪ್ರಮುಖ ಉತ್ಸವಗಳಾಗಿವೆ. +ನಾಳೆ ಸಂಜೆ 5 ಗಂಟೆಗೆ ಕಲ್ಯಾಣಿಯ ಧಾರಾಮಂಟಪದಲ್ಲಿ ಕಲ್ಯಾಣೋತ್ಸವ ಮಾ.18 ರಂದು ಬೆಳಿಗ್ಗೆ 9 ಗಂಟೆಗೆ ದ್ವಜಾರೋಹಣ, 19 ರಂದು ರಾಮಾನುಜಾಚಾರ್ಯರಿಗೆ ಅಭಿಷೇಕ 20 ರಂದು ಸಂಜೆ ಕಲ್ಯಾಣಿಯಲ್ಲಿ ನಾಗವಲ್ಲೀ ಮಹೋತ್ಸವ 22 ರ ಪ್ರಹ್ಮಾದ ಪರಿಪಾಲನೋತ್ಸವ 23 ರಂದು ರಾತ್ರಿ ಗಜೇಂದ್ರಮೋಕ್ಷ ಉತ್ಸವ 27 ರಂದು ನಡೆಯುವ ಮಹಾಭಿಷೇಕ ಮಹೋತ್ಸವಗಳು ವಿಶೇಷ ಉತ್ಸವಗಳಾಗಿದೆ. +ಸ್ವಾಮಿಗೆ ವಾಹನೋತ್ಸವ ವೈಭವ :ವಿಶೇಷ ಉತ್ಸವಗಳ ಜೊತೆಗೆ ವಾಹನೋತ್ಸವಗಳು ಸಹ ಚೆಲುವನಾರಾಯಣನಿಗೆ ನೆರವೇರುತ್ತದೆ. ವಾಹನೋತ್ಸವಗಳು ಪ್ರತಿದಿನ ರಾತ್ರಿ ನಡೆಯಲಿದ್ದು, ಮಾ.18ರಂದು ಹಂಸ ವಾಹನ 19ರಂದು ಶೇಷವಾಹನ, 20ರಂದು ಚಂದ್ರಮಂಡಲ ವಾಹನ, 22ರಂದು ಗರುಡ ವಾಹನ, 23ರಂದು ಗಜ ಮತ್ತು ಅಶ್ವವಾಹನ, 24 ರಂದು ರಾತ್ರಿ ಬಂಗಾರದ ಪಲ್ಲಕ್ಕಿ, 25ರಂದು ಅಶ್ವವಾಹನೋತ್ಸವ, 26 ಪುಷ್ಪಮಂಟಪ ವಾಹನ, 27 ಹಮುಮಂತ ವಾಹನೋತ್ಸವಗಳು ನಡೆಯಲಿದೆ. +ವಿಶೇಷ ವ್ಯವಸ್ಥೆ:ಇಡೀ ಮೇಲುಕೋಟೆಗೆ ಆಕರ್ಷಕ ದೀಪಾಲಂಕಾರ, ಸ್ವಾಮಿಯ ಉತ್ಸವಕ್ಕೆ ವಿಶೇಷ ತೋಮಾಲೆಗಳ ಅಲಂಕಾರ, ಮೈಸೂರು, ಬೆಂಗಳೂರು, ಮಂಡ್ಯ ಹಾಸನ ಚನ್ನರಾಯಪಟ್ಟಣ ನಾಗಮಂಗಲ ಮುಂತಾದ ಸ್ಥಳಗಳಿಂದ ವಿಶೇಷಬಸ್ ಸೌಕರ್ಯ, ಸುಜ್ಜಿತ ವೈಧ್ಯಕೀಯ ಸೇವೆ, ನಿರಂತರ ಸ್ವಚ್ಚತೆ ಶುದ್ಧಕುಡಿಯುವ ನೀರಿನ ಪೂರೈಕೆ, ವೈರಮುಡಿ, ರಥೋತ್ಸವ ನಾಗವಲ್ಲೀ ಉತ್ಸವಗಳಂದು ದೇವಾಲಯದ ಆವರಣಗಳಿಗೆ ಪುಷ್ಪಾಲಂಕಾರ, ಪ್ರತಿ ಉತ್ಸವ ಹಾಗೂ ವಾಹನೋತ್ಸವಗಳಿಗೆ ಕನ್ನಡ ಸಂಸ್ಕøತಿ ಇಲಾಖೆ ಪ್ರಾಯೋಜನೆ ಹಾಗೂ ಎಸ್.ಎಸ್ ಐ. ಸಾಂಸ್ಕøತಿಕ ವೇದಿಕೆ ಸಹಯೋಗದಲ್ಲಿ ನಾದೋಪಾಸನ ಸೇವೆ ಮಂಗಳವಾದ್ಯ ನಿಯೋಜನೆ ಇರಲಿದೆ. \ No newline at end of file diff --git a/eesanje/url_46_205_7.txt b/eesanje/url_46_205_7.txt new file mode 100644 index 0000000000000000000000000000000000000000..6a2d4290e67dbeb6dc23c5d91ca3fbb0d6ddbbd3 --- /dev/null +++ b/eesanje/url_46_205_7.txt @@ -0,0 +1,8 @@ +ಲೈಂಗಿಕ ದೌರ್ಜನ್ಯ ಆರೋಪ ಕುರಿತು ಯಡಿಯೂರಪ್ಪ ಹೇಳಿದ್ದೇನು..? +ಬೆಂಗಳೂರು,ಮಾ.15-ಹದಿನೇಳು ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಸಾರಾ ಸಗಾಟಾಗಿ ನಿರಾಕರಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾನೂನು ಮೂಲಕವೇ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. +ತಮ್ಮ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆ ದೂರು ದಾಖಲಾದ ಬೆನ್ನಲ್ಲೇ ತುರ್ತು ಪತ್ರಿಕಾಗೋಷ್ಟಿ ನಡೆಸಿದ ಅವರು, ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪವನ್ನು ಸಾರಾಸಗಟಾಗಿ ತಿರಸ್ಕರಿಸಿದರು. ಖಂಡಿತವಾಗಿ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಉಪಕಾರ ಮಾಡಲು ಹೋಗಿ ನನಗೆ ಸಂಕಷ್ಟ ಎದುರಾಗಿದೆ. ಕಾನೂನು ಮೂಲಕವೇ ಹೋರಾಟ ಮಾಡುತ್ತೇನೆ. ಇದರಲ್ಲಿ ರಾಜಕೀಯ ಬೆರೆಸಲು ನಾನು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಹಿಳೆ ಮತ್ತು ಮಗಳು ನನ್ನ ಬಳಿ ಸಹಾಯ ಕೇಳಿ ಬಂದಿದ್ದರು. ನಾನು ಕೈಲಾದಷ್ಟು ಸಹಾಯ ಮಾಡಿ ಕಳುಹಿಸಿದ್ದೆ. ಉಪಕಾರ ಮಾಡಿದವರಿಗೆ ಈ ರೀತಿ ಕಾನೂನಿನ ಸಂಕಷ್ಟ ಎದುರಾಗುತ್ತದೆ ಎಂಬುದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ತಾಯಿ-ಮಗಳು ಅನೇಕ ಬಾರಿ ಬಂದು ಹೋಗಿದ್ದಾರೆ. ಅದಾದನಂತರ ಅವರು ಏನೇನೊ ಮಾತನಾಡಿದರು. ನಾನು ಯಾವುದಕ್ಕೂ ತಲೆ ಕೆಡಿಸಿಕೊಂಡಿರಲಿಲ್ಲ. ಈ ರೀತಿ ನನ್ನ ವಿರುದ್ಧವೇ ದೂರು ದಾಖಲಾಗಿರುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಕೆಲವರು ಬಾರಿ ಸಹಾಯ ಮಾಡುವಾಗಲೂ ಹತ್ತಾರು ಬಾರಿ ಯೋಚನೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ನನ್ನ ಪರಿಸ್ಥಿತಿ ಬೇರೆಯವರಿಗೂ ಬರಬಹುದು ಎಂದು ಎಚ್ಚರಿಸಿದರು. +ಒಂದೂವರೆ ತಿಂಗಳ ಹಿಂದೆ ನಮ್ಮ ಮನೆಗೆ ಕಣ್ಣೀರು ಹಾಕುತ್ತಾ ಬಂದಿದ್ದರು. ನನಗೆ ಅನ್ಯಾಯವಾಗಿದೆ ನ್ಯಾಯ ಒದಗಿಸಿ ಎಂದು ಕೇಳಿಕೊಂಡಿದ್ದರು. ನಾನೇ ಆ ಮಹಿಳೆಯನ್ನು ನಗರ ಪೊಲೀಸ್ ಆಯುಕ್ತರ ಬಳಿ ಕಳುಹಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದೆ. ಈಗ ಯಾರೋ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇರಲಿ ಬಿಡಿ. ಕಾನೂನು ಮೂಲಕವೇ ಹೋರಾಟ ಮಾಡುತ್ತೇನೆ ಎಂದರು. +ಇದು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ದೂರು ನೀಡಿರುವುದು ರಾಜಕೀಯ ಪ್ರೇರಿತವೇ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಖಂಡಿತವಾಗಿಯೂ ಹಾಗೆ ಹೇಳಲಾರೆ. ಮಹಿಳೆ ಯಾವ ಕಾರಣಕ್ಕಾಗಿ ದೂರು ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನದಿಂದಲೇ ಹೇಳಿದರು. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ವಾತಾವರಣವಿದೆ. ಈ ಬಾರಿ ನಾವು ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ. ದೇಶದಲ್ಲಿ ಮತ್ತೆ ಮೋದಿಯವರು ಪ್ರಧಾನಿಯಾಗುವುದು 100ಕ್ಕೆ ನೂರರಷ್ಟು ಖಚಿತ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು. 17 ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನಲೆಯಲ್ಲಿ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. \ No newline at end of file diff --git a/eesanje/url_46_205_8.txt b/eesanje/url_46_205_8.txt new file mode 100644 index 0000000000000000000000000000000000000000..2376d494a9bce200234ec338a5be6a41edf2f665 --- /dev/null +++ b/eesanje/url_46_205_8.txt @@ -0,0 +1,7 @@ +ವಾರಣಾಸಿ ಮಾದರಿಯಲ್ಲಿ ತುಮಕೂರು ಅಭಿವೃದ್ಧಿ : ವಿ.ಸೋಮಣ್ಣ +ತುಮಕೂರು, ಮಾ.15-ಹೊರಗಿನ ಅಭ್ಯರ್ಥಿ ಎನ್ನುವ ವಿಷಯ ನಿನ್ನೆಗೆ ಮುಗಿದು ಹೋಗಿದೆ. ನಾಳೆಯಿಂದ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೆಲಸ ಆರಂಭಿಸುತ್ತೇನೆ. ಕಲ್ಪತರು ನಾಡನ್ನು ವಾರಣಾಸಿ ರೀತಿಯಲ್ಲಿ ಅಭಿವೃದ್ಧಿ ಪಡಿಸುತ್ತೇನೆ ಎಂದು ಲೋಕಸಭಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿ. ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ. +ಲೋಕಸಭಾ ಟಿಕೇಟ್ ದೊರೆತ ಹಿನ್ನೆಲೆಯಲ್ಲಿ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ನಂತರ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿಯವರ ಆಶೀರ್ವಾದ ಪಡೆದು ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇದ್ದ ಕ್ಷೇತ್ರವನ್ನು ಬಿಟ್ಟುಕೊಟ್ಟು ಬೇರೆ ಎರಡು ಕ್ಷೇತ್ರದಲ್ಲಿ ಸ್ರ್ಪಧಿಸಿ ಸೋತಿದ್ದೆ. +ಹೈಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ಕೆಲಸಗಾರ ಮನೆಯಲ್ಲೇ ಕೂರೋದು ಬೇಡ ಅಂತ ಲೋಕಸಭೆ ಟಿಕೆಟ್ನ್ನು ತುಮಕೂರು ಕ್ಷೇತ್ರದಿಂದ ನೀಡಿದೆ. ನನಗೆ ಕ್ಷೇತ್ರ ಹೊಸ ದೇನು ಅಲ್ಲ. ಮೊದಲಿನಿಂ ದಲೂ ಚಿರಪರಿಚಿತ.ಶ್ರೀ ಸಿದ್ದಗಂಗಾ ಶ್ರೀಗಳು, ಬಾಲಗಂಗಾಧರನಾಥ ಶ್ರೀಗಳು ಸೇರಿದಂತೆ ವಿವಿಧ ಮಠಾೀಶರ ಆಶೀರ್ವಾದ ಇದೆ. ರಾಷ್ಟ್ರದಲ್ಲಿ ಒಂದೇ ವಾರಣಾಸಿ ಇರೋದು. +ತುಮಕೂರು ಕೂಡ ಒಂದು ವಾರಣಾಸಿ ಆಗಬೇಕೆಂದು ಸಂಕಲ್ಪ ಮಾಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿಷಾ, ನಮ್ಮ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಅವರೆಲ್ಲರೂ ನನ್ನನ್ನು ಆಯ್ಕೆ ಮಾಡಿ ತುಮಕೂರಿಗೆ ಕಳುಹಿಸಿದ್ದಾರೆ. ನಾಳೆಯಿಂದಲೇ ಚುನಾವಣೆ ಪ್ರಚಾರ ಪ್ರಾರಂಭ ಮಾಡುತ್ತೇನೆ ಎಂದರು. +ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು 28 ಕ್ಷೇತ್ರಗಳನ್ನು ಗೆಲ್ಲಬೇಕು. ಹೊರಗೆ- ಒಳಗೆ ಎಂಬುದನ್ನು ನಿನ್ನೆಗೆ ಮುಗಿದುಹೋದ ವಿಚಾರ. ಎಲ್ಲರೂ ಒಳಗಿನವರೇ. 32 ಜಿಲ್ಲೆಗಳು ನಮ್ಮದೇ. ಮಾಜಿ ಸಚಿವ ಮಾಧುಸ್ವಾಮಿ ಅವರ ವೈಯಕ್ತಿಕ ಹೇಳಿಕೆ ಸಹಜ. ನಾಳೆ ಅವರನ್ನು ಭೇಟಿ ಮಾಡುತ್ತೇನೆ. ಮಠ, ಗುರುಕುಲ ದೇವಾಲಯ ಸೇರಿದಂತೆ ಸಂಜೆಯವರೆಗೂ ವಿವಿಧ ಕಡೆ ಭೇಟಿ ನೀಡುತ್ತೇನೆ. +ನಂತರ ಮಾಧುಸ್ವಾಮಿಯನ್ನು ಭೇಟಿಯಾಗುತ್ತೇನೆ. ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಭಾರಿ ಆಯ್ಕೆಯಾಗಬೇಕು ಎಂಬುದೇ ನಮ್ಮ ಗುರಿ ಎಂದು ತಿಳಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ಗೌಡ, ಮಾಜಿ ಶಾಸಕ ಲಕ್ಷ್ಮೀನಾರಾಯಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ, ಬಾವಿಕಟ್ಟೆ ನಾಗಣ್ಣ, ಮಧುಗಿರಿ ಗಂಗರಾಜು, ಭೀಮನಕುಂಟೆ ಹನುಮಂತೇಗೌಡ ಮತ್ತಿತರರಿದ್ದರು. \ No newline at end of file diff --git a/eesanje/url_46_205_9.txt b/eesanje/url_46_205_9.txt new file mode 100644 index 0000000000000000000000000000000000000000..e140c703f70b98052a8ec264fb069aaac86523d5 --- /dev/null +++ b/eesanje/url_46_205_9.txt @@ -0,0 +1,9 @@ +ಡಾ.ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ +ಬೆಂಗಳೂರು,ಮಾ.15-ಹಠಾತ್ ಹಾಗೂ ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ಸುವರ್ಣ ಸಮಯದ ಚಿಕಿತ್ಸೆ ನೀಡಿ ಜೀವ ರಕ್ಷಿಸುವ ಕರ್ನಾಟಕ ರತ್ನ ಡಾ.ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಧಾರವಾಡದಲ್ಲಿಂದು ಚಾಲನೆ ನೀಡಿದರು. +ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಾಸಕ ಕೋನ ರೆಡ್ಡಿ, ಇಲಾಖೆಯ ಆಯುಕ್ತ ರಂದೀಪ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಅತ್ಯಂತ ಜನಪ್ರಿಯ ನಟ ಡಾ.ಪುನೀತ್ ರಾಜಕುಮಾರ್ ಕೇವಲ ನಟನೆಯಿಂದಷ್ಟೇ ಅಲ್ಲ, ಜನಪರ ಹಾಗೂ ಮಾನವೀಯ ಸೇವೆಗಳ ಮೂಲಕ ಪ್ರಖ್ಯಾತರಾಗಿದ್ದರು. ಅವರಿಗೆ ತೀವ್ರ ಹೃದಯಾಘಾತವಾದಾಗ ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ ದೊರೆತಿದ್ದರೆ ಕಿರಿಯ ವಯಸ್ಸಿನಲ್ಲೇ ಸಾವನ್ನಪ್ಪುತ್ತಿರಲಿಲ್ಲ ಎಂದರು. +ಹೃದಯಾಘಾತ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ದೊರೆತರೆ ಜೀವರಕ್ಷಣೆ ಸಾಧ್ಯವಾಗಲಿದೆ. ಬಹಳಷ್ಟು ಪ್ರಕರಣಗಳಲ್ಲಿ ಹೃದಯಾಘಾತಕ್ಕೊಳದಾಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲೇ ಜೀವಹಾನಿಯಾಗುತ್ತಿದೆ. ಒಂದು ವೇಳೆ ಆಸ್ಪತ್ರೆ ತಲುಪಿದ ಬಳಿಕವೂ ಜೀವ ಉಳಿದರೆ ಹೃದಯ ತೀವ್ರವಾಗಿ ದುರ್ಬಲಗೊಂಡಿರುತ್ತದೆ. ಇದನ್ನು ಮನಗಂಡು ನಮ್ಮ ಸರ್ಕಾರ 71 ತಾಲೂಕು ಹಾಗೂ 15 ಜಿಲ್ಲಾಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ಆಧಾರಿತವಾಗಿ ತುರ್ತು ಚಿಕಿತ್ಸೆ ನೀಡುವ ಯೋಜನೆಯನ್ನು ಆರಂಭಿಸಿದೆ ಎಂದು ಹೇಳಿದರು. +ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ಗೆ 30 ಸಾವಿರ ರೂ.ಗಳ ವೆಚ್ಚ ತಗುಲಲಿದೆ. ತೀವ್ರ ಅಪಘಾತಕ್ಕೀಡಾದವರಿಗೆ ತಕ್ಷಣ ಇದನ್ನು ನೀಡಿದರೆ ಜೀವರಕ್ಷಣೆಯಷ್ಟೇ ಅಲ್ಲ, ಹೃದಯ ದುರ್ಬಲತೆ ತಪ್ಪಲಿದೆ. 71 ತಾಲೂಕು ಹಾಗೂ 15 ಜಿಲ್ಲಾಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ವ್ಯವಸ್ಥೆಯಿದ್ದು, 65 ಕ್ಕೂ ಹೆಚ್ಚು ತಜ್ಞ ವೈದ್ಯರು ಹಬ್ಗಳಲ್ಲಿ ಕೆಲಸ ಮಾಡುತ್ತಾರೆ. +ತುರ್ತು ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಮೊದಲು ಇಸಿಜಿ ಮಾಡಲಾಗುತ್ತದೆ. ಮೊಬೈಲ್ ಮತ್ತು ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಬಳಕೆಯಾಗುವುದರಿಂದ ತಜ್ಞ ವೈದ್ಯರು ಅದನ್ನು ನೇರವಾಗಿ ಪರಿಶೀಲನೆ ನಡೆಸಲಿದ್ದಾರೆ. ಗಂಭೀರ ಸ್ವರೂಪದ ಹೃದಯಾಘಾತವಾಗಿದ್ದರೆ 6 ನಿಮಿಷದಲ್ಲಿ ಪತ್ತೆ ಹಚ್ಚಿ ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ ನೀಡಲು ಸ್ಥಳೀಯ ಅಧಿಕಾರಿಗಳಿಂದ ಮುನ್ಸೂಚನೆ ನೀಡಲಾಗುತ್ತದೆ. ಅನಂತರ ಹೆಚ್ಚುವರಿ ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗುವುದು ಎಂದರು. +ಇದರ ಜೊತೆಗೆ ತುರ್ತು ಸಂದರ್ಭದಲ್ಲಿಯೂ ಎಲೆಕ್ಟ್ರಾನ್ ಶಾಕ್ ಮೂಲಕ ಜೀವ ರಕ್ಷಿಸುವ ಸ್ಟೆಮಿ ಕಿಟ್ಗಳನ್ನು ರೈಲ್ವೆ, ಬಸ್ ಹಾಗೂ ವಿಮಾನನಿಲ್ದಾಣ, ಜನನಿಬಿಡ ಪ್ರದೇಶಗಳಲ್ಲಿ ಸ್ಥಾಪಿಸಲಾಗುತ್ತದೆ. ಅಲ್ಲಿ ಆರೋಗ್ಯ ಸಿಬ್ಬಂದಿಗಳೂ ಇರುತ್ತಾರೆ. ಹೃದಯಾಘಾತಕ್ಕೆ ಒಳಗಾಗಿದ್ದರೆ ಪ್ರಾಥಮಿಕ ಚಿಕಿತ್ಸೆ ಕೊಡಲು ಈ ಕಿಟ್ಗಳು ಸಹಾಯ ಮಾಡಲಿದೆ ಎಂದರು. +ಅತ್ಯಂತ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಪುನೀತ್ ರಾಜ್ಕುಮಾರ್ ಹುಟ್ಟಿದ ದಿನವಾದ ಮಾ.17 ರಂದು ಉದ್ಘಾಟನೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೇಂದ್ರ ಚುನಾವಣಾ ಆಯೋಗ ಯಾವ ಕ್ಷಣದಲ್ಲಾದರೂ ಲೋಕಸಭೆಗೆ ಚುನಾವಣೆ ಘೋಷಣೆ ಮಾಡುವ ನಿರೀಕ್ಷೆ ಇರುವುದರಿಂದ ಎರಡು ದಿನ ಮೊದಲೇ ಚಾಲನೆ ನೀಡುತ್ತಿದ್ದೇವೆ ಎಂದರು. +ರಾಜ್ಯಾದ್ಯಂತ 2,800 ಸ್ಟೆಮಿ ಉಪಕರಣಗಳನ್ನು ಒದಗಿಸಲಾಗಿದೆ. ಟೆನೆಕ್ಟ್ ಪ್ಲೇಸ್ ಇಂಜೆಕ್ಷನ್ನಿಂದ ಹಲವು ಜೀವರಕ್ಷಣೆಯಾಗಿದ್ದು, ಅದರಲ್ಲಿ 25 ವರ್ಷದೊಳಗಿನ ನಾಲ್ವರು ಯುವಜನರಿದ್ದಾರೆ ಎಂದು ಹೇಳಿದರು.ತಮ್ಮ ಸರ್ಕಾರ ಪ್ರತಿಯೊಂದು ಜೀವವನ್ನು ಅತ್ಯಮೂಲ್ಯ ಎಂದು ಪರಿಗಣಿಸಿದೆ. ಆರಂಭಿಕ ಹಂತದಲ್ಲಿ 71 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಸಂಪರ್ಕ ಸೌಲಭ್ಯವಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲೂ ವಿಸ್ತರಣೆ ಮಾಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ತಾಲೂಕು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸುತ್ತೇವೆ. ಬಡವರಷ್ಟೇ ಅಲ್ಲ, ಶ್ರೀಮಂತರು ಕೂಡ ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವ ವಾತಾವರಣ ನಿರ್ಮಿಸುವ ಗುರಿ ನಮ್ಮದು ಎಂದರು. \ No newline at end of file diff --git a/eesanje/url_46_206_1.txt b/eesanje/url_46_206_1.txt new file mode 100644 index 0000000000000000000000000000000000000000..b38d2e2074ef50ec1bdbedd31165f7238231f0f1 --- /dev/null +++ b/eesanje/url_46_206_1.txt @@ -0,0 +1,6 @@ +ನನ್ನ ರಾಜಕೀಯ ಪ್ರವೇಶಕ್ಕೆ ರಾಜಮಾತೆಯ ವಿರೋಧವಿದೆ ಎಂಬುದು ಸುಳ್ಳು : ಯದುವೀರ್ ಒಡೆಯರ್ +ಮೈಸೂರು,ಮಾ.15-ಮೈಸೂರು ರಾಜಮನೆತನದಲ್ಲಿ ನಮ್ಮ ಪೂರ್ವಿಕರ ಬಗ್ಗೆ ಜನ ಪೂಜ್ಯನೀಯ ಭಾವನೆ ಹೊಂದಿದ್ದಾರೆ, ಅದಕ್ಕೆ ನಾನು ಚಿರ ಋಣಿ. ನಮ್ಮ ವೃತ್ತಿ ಬದುಕಿನ ಅವಕಾಶವನ್ನು ಸೃಷ್ಟಿಸಿಕೊಳ್ಳುವ ಸಮಯ ಈಗ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿಯೂ ಆಗಿರುವ ರಾಜ ಮನೆತನದ ಯದುವೀರ್ ಒಡೆಯರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ರಾಜಕೀಯಕ್ಕೆ ಪ್ರವೇಶಿಸಲು ರಾಜಮಾತೆ ಪ್ರಮೋದಾ ದೇವಿಯವರ ವಿರೋಧ ಇತ್ತು ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಅವರ ಆಶೀರ್ವಾದ ಮತ್ತು ಸಹಮತಿ ಇಲ್ಲದೆ ಏನೂ ನಡೆಯುವುದಿಲ್ಲ ಎಂದು ಹೇಳಿದರು. +ಮೈಸೂರು ಲೋಕಸಭಾ ಕ್ಷೇತ್ರವನ್ನು ದಕ್ಷಿಣ ಭಾರತದಲ್ಲಿ ಆಕರ್ಷಣೀಯವಾದ ಪ್ರವಾಸೋದ್ಯಮ ಕೇಂದ್ರ ಮಾಡುವುದು ತಮ್ಮ ಗುರಿ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.ಜೀವನದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಆದರೆ ಅವುಗಳಿಗೆ ಮೌಲ್ಯವಿದ್ದರೆ ಮಾನ್ಯತೆ ದೊರೆಯುತ್ತದೆ. ಇಲ್ಲವಾದರೆ ನಿರ್ಲಕ್ಷಿಸಬೇಕಾಗುತ್ತದೆ. ಸಾಮಾನ್ಯ ಜೀವನದಲ್ಲಿ ಟೀಕೆಗಳು ಸಹಜ, ರಾಜಕಾರಣದಲ್ಲಿ ಅದು ಇನ್ನೂ ಒಂದಿಷ್ಟು ಹೆಚ್ಚಾಗಿರಬಹುದು. ಆದರೆ ಎಲ್ಲವನ್ನೂ ನುಂಗಿಕೊಳ್ಳಬೇಕಾಗುತ್ತದೆ ಎಂದರು. +ನಮ್ಮ ಪೂರ್ವಿಕರ ಮೇಲೆ ಮೈಸೂರು ಜನ ಪೂಜ್ಯನೀಯ ಭಾವನೆ ಹೊಂದಿದ್ದಾರೆ. ಅದನ್ನು ನಮ್ಮ ಬಗ್ಗೆ ಎಂದು ಭಾವಿಸಲಾಗುವುದಿಲ್ಲ. ಜನಸೇವೆಗೆ ಅಕಾರ ಬಹಳ ಮುಖ್ಯ. ನೀತಿ, ನಿರೂಪಣೆಯಿಂದಲೇ ಜನರಿಗೆ ಸಹಾಯ ಮಾಡಲು ಅವಕಾಶವಿದೆ. ಹೀಗಾಗಿ ನಾನು ರಾಜಕೀಯಕ್ಕೆ ಬರಲು ನಿರ್ಧರಿಸಿದ್ದೆ. ಇದಕ್ಕಾಗಿ ಸಾಕಷ್ಟು ಪೂರ್ವ ತಯಾರಿಗಳನ್ನುಮಾಡಿಕೊಂಡಿದ್ದೆ ಎಂದು ಹೇಳಿದರು. +ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಿನ್ಸಿಪಾಲರ ಬಳಿ ಹೋಗಿ ನನಗೆ ಏಕೆ ರ್ಯಾಂಕ್ ನೀಡಲಾಗಿದೆ ಎಂದು ನಾನು ಪ್ರಶ್ನೆ ಮಾಡಲಾಗುವುದಿಲ್ಲ. ರಾಜಕಾರಣದಲ್ಲಿ ಇದೆಲ್ಲಾ ಸಹಜ. ಟಿಕೆಟ್ ಘೋಷಣೆಯಾಗುವ ಸಂದರ್ಭದಲ್ಲಿ ಪ್ರತಾಪ್ ಸಿಂಹ ತಮಗೆ ಕರೆ ಮಾಡಿದ್ದರು, ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿ ಶುಭ ಹಾರೈಸಿದ್ದರು ಎಂದರು. +ತಾವು ಎಸಿಯಲ್ಲಿ ಕುಳಿತಿದ್ದ ವ್ಯಕ್ತಿ, ಜನಸಾಮಾನ್ಯರೊಂದಿಗೆ ಸಂಪರ್ಕ ಇರುವುದಿಲ್ಲ ಎಂಬುದು ಸರಿಯಲ್ಲ. ಕಳೆದ 9 ವರ್ಷಗಳಿಂದಲೂ ನಾನು ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಬಿಜೆಪಿ ರಾಷ್ಟ್ರೀಯ ನಾಯಕರು ತಮಗೆ ಪ್ರೇರಣೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾಗತಿಕವಾಗಿ ಪ್ರಖ್ಯಾತರಾಗಿರುವುದಷ್ಟೇ ಅಲ್ಲ, ಹಲವಾರು ಗಂಭೀರ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_206_10.txt b/eesanje/url_46_206_10.txt new file mode 100644 index 0000000000000000000000000000000000000000..0860ea547da11b0d494b3ce75a4abcda11c43cd4 --- /dev/null +++ b/eesanje/url_46_206_10.txt @@ -0,0 +1,9 @@ +ಇಂದು ನಡೆದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ, ಇಲ್ಲಿದೆ ಡೀಟೈಲ್ಸ್ +ಬೆಂಗಳೂರು, ಮಾ.14-ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳ(ಎಸ್ ಐಟಿ)ಕ್ಕೆ ವಹಿಸಲು ಇಂದು ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ನಡೆಸಿದ ನ್ಯಾ.ಬಿ.ವೀರಪ್ಪ ನೇತೃತ್ವದ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಮತ್ತೊಂದು ತನಿಖೆ ನಡೆಸಲು ಶಿಫಾರಸ್ಸು ಮಾಡಲಾಗಿದೆ. ಅದರಂತೆ ಎಸ್‍ಐಟಿ ತನಿಖೆ ನಡೆಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಹೇಳಿದರು. +ಪಿಎಸ್‍ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದ ಕೆಲವರು ಸಮಿತಿ ನೀಡಿದ್ದ ಸಮನ್ಸ್‍ಗೆ ಹಾಜರಾಗಿ ತಮ್ಮ ಹೇಳಿಕೆ ನೀಡಿಲ್ಲ. ಸಮಿತಿಯು 113 ಜನ ಆರೋಪಿಗಳನ್ನು ಗುರುತಿಸಿದೆ. ಖಾಸಗಿ ವ್ಯಕ್ತಿಗಳು, ಮಧ್ಯವರ್ತಿಗಳು, ಸರ್ಕಾರಿ ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾದ ಆರೋಪವಿದೆ. ಭ್ರಷ್ಟಾಚಾರ, ಕ್ರಿಮಿನಲ್ ಆರೋಪವೂ ಇದೆ. ಈಗಾಗಿ ಎಸ್‍ಐಟಿ ತನಿಖೆ ಸೂಕ್ತ ಎಂಬ ನಿರ್ಧಾರ ಮಾಡಲಾಯಿತು. ಸಿಐಡಿ ಕೂಡ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 17 ಪ್ರಕರಣಗಳ ತನಿಖೆಯನ್ನು ನಡೆಸುತ್ತಿದೆ ಎಂದರು. +ಕೆಂಪೇಗೌಡ ಬಡಾವಣೆ ಸೇರಿದಂತೆ 2016ರಿಂದ 2018ರ ನಡುವೆ ಬಿಡಿಎನಿಂದ ನಿವೇಶನ ಹಂಚಿಕೆಯಾಗಿ ಕಂತು ಪಾವತಿಸಲಾಗದವರಿಗೆ ಮೂರು ತಿಂಗಳ ಕಾಲಾವಕಾಶ ನೀಡಿ ಶೇ.12ರ ಬಡ್ಡಿದರದಲ್ಲಿ ಕಂತು ಪಾವತಿಸಿ ಲೀಸ್ ಕಂ ಸೇಲ್ ಡೀಡ್ ಮಾಡಿಕೊಳ್ಳಲು ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. +ಬೆಂಗಳೂರು ಅರಮನೆ ಮೈದಾನದ ಎರಡೂ ಕಡೆಯ ರಸ್ತೆ ಅಗಲೀಕರಣಕ್ಕೆ 2006-07ರಲ್ಲಿ ಭೂಸ್ವಾಧೀನ ಮಾಡಿಕೊಂಡಿದ್ದು, ಸುಮಾರು ಹದಿನೈದುವರೆ ಎಕರೆಗೆ ಟಿಡಿಆರ್ ನೀಡಲು ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಟಿಡಿಆರ್ ನೀಡಿಲ್ಲ ಎಂಬ ವಿಚಾರದ ಸುಪ್ರೀಂಕೋರ್ಟ್‍ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಮುಂದಿನ ವಾರ ವಿಚಾರಣೆಗೆ ಬರಲಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಖುದ್ದು ಹಾಜರಿಗೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು. +ಭುವನೇಶ್ವರಿ ಪ್ರತಿಮೆ:ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ರಸ್ತೆಯ ಎಡಭಾಗದಲ್ಲಿ ನಾಡದೇವತೆ ಭುನೇಶ್ವರಿ ಕೈಯಲ್ಲಿ ಹಳದಿ-ಕೆಂಪು ಧ್ವಜ ಹಿಡಿದಿರುವ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಇದಕ್ಕೆ 23 ಕೋಟಿ ರೂ. ವೆಚ್ಚವಾಗಲಿದೆ. ತಕ್ಷಣಕ್ಕೆ ಕಾಮಗಾರಿ ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು. +ಹೆಬ್ಬಾಳದಿಂದ ಜೆಪಿನಗರದ ವರಗೆ ಇರುವ ಹೊರ ವರ್ತುಲ ರಸ್ತೆಯಲ್ಲಿ ಅಂದರೆ, ಹೆಬ್ಬಾಳ-ತುಮಕೂರು ರಸ್ತೆ- ಮಾಗಡಿ ರಸ್ತೆ- ಮೈಸೂರು ರಸ್ತೆ ಮಾರ್ಗವಾಘಿ 32.15 ಕಿ.ಮೀ. ಮೆಟ್ರೋ ಮೂರನೇ ಹಂತದ ಮಾರ್ಗ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ಇದಕ್ಕೆ 15, 611 ಕೋಟಿ ರೂ. ವೆಚ್ಚವಾಗಲಿದೆ. ಅಲ್ಲದೆ, ವಿಜಯನಗರದ ಹೊಸಹಳ್ಳಿಯಿಂದ ಮಾಗಡಿ ರಸ್ತೆಯ ಕಡಬಗೆರೆವರೆಗೆ ಹನ್ನೆರಡುವರೆ ಕಿ.ಮೀ. ಉದ್ದದ ಮತ್ತೊಂದು ಮೆಟ್ರೋ ಮಾರ್ಗ ನಿರ್ಮಿಸಲು ಸಮ್ಮಿತಿಸಲಾಗಿದೆ. ಇದಕ್ಕೆ ಶೇ.80-85ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಲಿದ್ದು, ಉಳಿದ ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಈ ಯೋಜನೆಯನ್ನು 2028ರ ವೇಳೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು. +ಎನ್ ಜಿಎಫ್‍ನ ಸುಮಾರು 65 ಎಕರೆ ಪ್ರದೇಶದಲ್ಲಿ ಟ್ರೀ ಪಾರ್ಕ್ ನಿರ್ಮಿಸಲಾಗುವುದು. ಅಲ್ಲಿ ವಾಕಿಂಗ್ ಪಥ, ಸೈಕಲ್ ಪಥ, ಆಟದ ಮೈದಾನ ನಿರ್ಮಿಸಲಾಗುವುದು ಇದಕ್ಕೆ 11 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸದಾಗಿ 33 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದು ಹಾಗೂ 40 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು. +ಮೈಸೂರಿನ ಮಹರಾಣಿ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಿಗೆ 170 ಕೋಟಿ ರೂ. ವೆಚ್ಚದಲ್ಲಿ ಹೊಸ ಹಾಸ್ಟೆಲ್ ನಿರ್ಮಿಸಲಾಗುವುದು. ಕೃಷಿ ಕ್ಷೇತ್ರದ ನವೋದ್ಯಮಕ್ಕೆ ಉತ್ತೇಜನ ನೀಡಲು 67.5 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಗ್ರಿಇನೋವೇಷನ್ ಸೆಂಟರ್ ಸ್ಥಾಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ವಿವರಿಸಿದರು. \ No newline at end of file diff --git a/eesanje/url_46_206_11.txt b/eesanje/url_46_206_11.txt new file mode 100644 index 0000000000000000000000000000000000000000..f277c381ae8688aee5734807ca9e3a2ab5a36c02 --- /dev/null +++ b/eesanje/url_46_206_11.txt @@ -0,0 +1,6 @@ +ಚುನಾವಣೆ ನಂತರ ಬೆಂಗಳೂರಿಗರಿಗೆ ಕಾದಿದೆ ‘ವಾಟರ್ ಶಾಕ್” : ಡಿಕೆಶಿ ಸುಳಿವು +ಬೆಂಗಳೂರು,ಮಾ.14-ಬಿಡಬ್ಲ್ಯೂಎಸ್ಎಸ್ಬಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆ ಬಳಿಕ ನೀರಿನ ದರ ಏರಿಕೆಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ವಿಧಾನಸೌಧದ ಮೆಟ್ಟಿಲುಗಳ ಬಳಿ ನೀರು ಉಳಿಸಿ, ಬೆಂಗಳೂರು ಬೆಳೆಸಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜಕೀಯ ಕಾರಣಗಳಿಗಾಗಿ ಕಳೆದ 10-11 ವರ್ಷಗಳಿಂದಲೂ ನೀರಿನ ದರ ಪರಿಷ್ಕರಣೆಯಾಗಿಲ್ಲ. +ಬಿಡಬ್ಲ್ಯೂಎಸ್ಎಸ್ಬಿಯಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಕಾರಣಗಳಿಗಾಗಿ ಖರ್ಚುಗಳು ಜಾಸ್ತಿಯಾಗಿವೆ. ಅದನ್ನು ಸಾರ್ವಜನಿಕರಿಂದ ನಾವು ಪಡೆದುಕೊಳ್ಳುತ್ತಿಲ್ಲ. ಕೆಎಸ್ಆರ್ಟಿಸಿಯಲ್ಲಿ ಡೀಸೆಲ್ ದರ ಹೆಚ್ಚಾಗುತ್ತಿದ್ದಂತೆ ಪ್ರಯಾಣ ದರ ಏರಿಕೆಯಾಗಿದೆ. ಆದರೆ ನೀರಿನ ವಿಚಾರದಲ್ಲಿ ಖರ್ಚು ಹೆಚ್ಚಾದರೂ ದರ ಪರಿಷ್ಕರಣೆಯಾಗುತ್ತಿಲ್ಲ. ಲೋಕಸಭೆ ಚುನಾವಣೆ ಬಳಿಕ ಈ ನಿಟ್ಟಿನಲ್ಲಿ ತಾವು ಮಹತ್ವದ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು. +ಇಂದು ಬಿಡಬ್ಲ್ಯೂಎಸ್ಎಸ್ಬಿಯಿಂದ 4 ಆ್ಯಪ್ಗಳನ್ನು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗಿದೆ. ಅಂತರ್ಜಲವನ್ನು ಆಧರಿಸಿ ಹೊಸ ಬೋರ್ವೆಲ್ಗಳಿಗೆ ಅನುಮತಿ ನೀಡುವ ಅಂತರ್ಜಲ , ನೀರಿನ ಸೋರಿಕೆಯನ್ನು ತಪ್ಪಿಸಲು ಜಲಮಿತ್ರ, ಸಂಸ್ಕರಿಸಿದ ನೀರಿನ ಹಂಚಿಕೆಗಾಗಿ ಜಲಸ್ನೇಹಿ, ನೀರಿನ ಮಿತವ್ಯಯಕ್ಕೆ ಜಲಸಂರಕ್ಷಕ ಎಂಬ ನಾಲ್ಕು ಆ್ಯಪ್ಗಳನ್ನು ಲೋಕಾರ್ಪಣೆ ಮಾಡಲಾಗಿದೆ. +ಬಿಡಬ್ಲ್ಯೂಎಸ್ಎಸ್ಬಿಯಿಂದ ಭೀಕರ ಬರ ಪರಿಸ್ಥಿತಿ ನಡುವೆಯೂ ಬೆಂಗಳೂರು ನಾಗರಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. 6,900 ಬೋರ್ವೆಲ್ಗಳು ಬತ್ತಿ ಹೋಗಿವೆ. ಇರುವ 7,000 ಬೋರ್ವೆಲ್ಗಳನ್ನು ಬಳಸಿಕೊಂಡು ನೀರು ಪೂರೈಸುತ್ತಿದ್ದೇವೆ. ಟ್ಯಾಂಕರ್ಗಳನ್ನು ವಶಕ್ಕೆ ತೆಗೆದುಕೊಂಡು ದಂಧೆಗೆ ಕಡಿವಾಣ ಹಾಕಲಾಗಿದೆ. ಆದರೂ ಕೆಲವರು ಚೇಷ್ಟೆಗಳನ್ನು ಮಾಡುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು. +ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳ ಜವಾಬ್ದಾರಿ ನಿರ್ವಹಣೆ ತಮಗೆ ಸಮಾಧಾನ ತಂದಿದೆ. ದೂರದೃಷ್ಟಿಯಲ್ಲಿದ್ದುಕೊಂಡು ನೀರನ್ನು ಮುಂದಿನ ಪೀಳಿಗೆಗೂ ಉಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದರು.ಚುನಾವಣೆ ಕಾಲವಾಗಿರುವುದರಿಂದ ರಾಜಕೀಯಕ್ಕಾಗಿ ವಿರೋಧಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗಿದೆ ಎಂಬ ವದಂತಿಯನ್ನು ಹರಡುತ್ತಿದ್ದಾರೆ. ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_206_12.txt b/eesanje/url_46_206_12.txt new file mode 100644 index 0000000000000000000000000000000000000000..8f0ac2f7f936870fa3ca92865e6a379e5847bcd4 --- /dev/null +++ b/eesanje/url_46_206_12.txt @@ -0,0 +1,13 @@ +ಟಿಕೆಟ್ ಘೋಷಣೆ ಬೆನ್ನಲ್ಲೇ ಒಡೆದ ಮನೆಯಾಯ್ತು ಬಿಜೆಪಿ +ಬೆಂಗಳೂರು,ಮಾ.14-ಸಾಕಷ್ಟು ಅಳೆದು ತೂಗಿ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಘೋಷಣೆ ಮಾಡುತ್ತಿದ್ದಂತೆ ಅವಕಾಶ ವಂಚಿತರು ಸಿಡಿದೆದ್ದಿದ್ದು, ಬಂಡಾಯದ ಬಿಸಿ ಜೋರಾಗಿದೆ. ಟಿಕೆಟ್ ಘೋಷಣೆ ಬೆನ್ನೆಲ್ಲೇ ಬೆಂಗಳೂರು ಉತ್ತರ, ಕೊಪ್ಪಳ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಬೀದರ್, ಶಿವಮೊಗ್ಗ, ಚಿಕ್ಕೋಡಿ, ತುಮಕೂರು ಕ್ಷೇತ್ರದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಸ್ಥಳೀಯ ನಾಯಕರ ಅಸಮಾಧಾನದಿಂದ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ. +ಸುಮಾರು 10 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಟಿಕೆಟ್ ಸಿಗದಿರುವವರು ಸ್ವಪಕ್ಷೀಯರ ವಿರುದ್ಧವೇ ಬಂಡಾಯ ಸಾರಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತಂತೆ ಆಪ್ತರ ಸಭೆ ಕರೆಯುವ ಮೂಲಕ ಅಧಿಕೃತ ಅಭ್ಯರ್ಥಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. +ವಿಶೇಷವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರಗೆ ಟಿಕೆಟ್ ಘೋಷಣೆಯಾಗಿದೆ. ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗಬಹುದು ಎಂದು ನಿರೀಕ್ಷಿಸಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮೊದಲ ಬಾರಿಗೆ ಪಕ್ಷದ ವಿರುದ್ಧವೇ ಕೆಂಡ ಕಾರಿದ್ದಾರೆ. +ಹಾವೇರಿಯಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ನಾಳೆ ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿರುವ ಈಶ್ವರಪ್ಪ ರಾಘವೇಂದ್ರರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇವೆಂದು ಬೆದರಿಕೆ ಹಾಕಿದ್ದಾರೆ. ಇದು ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಪಕ್ಕದ ದಾವಣಗೆರೆಯಲ್ಲೂ ಭಿನ್ನಮತ ಜೋರಾಗಿದೆ. ಅಚ್ಚರಿ ಬೆಳವಣಿಗೆ ಎಂಬಂತೆ ಹಾಲಿ ಸಂಸದ ಜಿ.ಎಂ.ಸಿದ್ದೇಶ್ಗೆ ಟಿಕೆಟ್ ಕೈತಪ್ಪಿತು. ಆದರೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದು ಹಲವರ ಕಣ್ಣು ಕೆಂಪಾಗುವಂತೆ ಮಾಡಿದೆ. +ಗಾಯತ್ರಿ ಸಿದ್ದೇಶ್ವರ್ಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಗುರು ಸಿದ್ದನಗೌಡರ್, ಜಿಲ್ಲಾ ಬಿಜೆಪಿ ಮುಖಂಡರು ಸಭೆ ನಡೆಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. +ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿರುವುದಕ್ಕೂ ವಿರೋಧ ವ್ಯಕ್ತವಾಗಿದೆ. ಸ್ವತಃ ಬಿಜೆಪಿ ಕಾರ್ಯಕರ್ತರೇ ಗೋ ಶೋಭಕ್ಕ ಗೋ ಅಭಿಯಾನವನ್ನು ಆರಂಭಿಸಿದ್ದಾರೆ. ಬರುವ ದಿನಗಳಲ್ಲಿ ಇದು ಬಿಜೆಪಿಗೆ ಬಿಸಿತುಪ್ಪವಾಗುವುದರಲ್ಲಿ ಅನುಮಾನವೇ ಇಲ್ಲ. +ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಬಿಜೆಪಿಗೆ ಯಾವುದೇ ರೀತಿಯ ಭಿನ್ನಮತ ತಟ್ಟಿಲ್ಲ. ತುಮಕೂರಿನಲ್ಲೂ ಬಂಡಾಯ ದಿನದಿನಕ್ಕೂ ಜೋರಾಗುತ್ತಿದೆ. ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ನಡೆ ಬಿಜೆಪಿಗೆ ದುಬಾರಿಯಾಗುವ ಸಾಧ್ಯತೆಯಿದೆ. ಮಾಜಿ ಸಚಿವ ವಿ.ಸೋಮಣ್ಣರಿಗೆ ಟಿಕೆಟ್ ಕೊಟ್ಟಿರುವುದು ಮಾಧುಸ್ವಾಮಿ ಬೆಂಬಲಿಗರ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಬಿಜೆಪಿ ಅಭ್ಯರ್ಥಿ ವಿರುದ್ಧ ಜಿಲ್ಲೆಯಾದ್ಯಂತ ಅಭಿಯಾನ ಪ್ರಾರಂಭವಾಗಿದೆ. +ಚುನಾವಣೆಗೂ ಮುನ್ನವೇ ರಾಜ್ಯದ ಗಮನ ಸೆಳೆದಿದ್ದ ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಇಬ್ಬರ ಜಗಳ ಮೂರನೆಯವರಿಗೆ ಲಾಭವಾಗಿದೆ. ಈ ಕ್ಷೇತ್ರದ ಮೇಲೆ ಮಾಜಿ ಸಚಿವರಾದ ಸಿ.ಟಿ.ರವಿ, ಡಿ.ಎನ್.ಜೀವರಾಜ್ ಹಾಗೂ ಪ್ರಮೋದ್ ಮಧ್ವರಾಜ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಇದೀಗ ಅಚ್ಚರಿಯೆಂಬಂತೆ ವಿಧಾನಪರಿಷತ್ನ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸಪೂಜಾರಿಗೆ ಟಿಕೆಟ್ ಘೋಷಿಸಲಾಗಿದೆ. +ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಸಿ.ಟಿ.ರವಿ ಅವರ ರಾಜಕೀಯ ಭವಿಷ್ಯವೇ ಡೋಲಾಯಮಾನವಾಗಿದೆ. ಬೆಂಗಳೂರು ಉತ್ತರದಲ್ಲೂ ಟಿಕೆಟ್ ಕೈತಪ್ಪಿದ್ದು, ಸದ್ಯ ವರಿಷ್ಠರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ರ್ಪಧಿಸುವಂತೆ ಮನವೊಲಿಸುತ್ತಿದ್ದಾರೆ. ಬಳ್ಳಾರಿಯಲ್ಲಿ ರಾಮಲುಗೆ ಟಿಕೆಟ್ ಕೊಟ್ಟಿರುವುದು ಹಾಲಿ ಸಂಸದ ದೇವೇಂದ್ರಪ್ಪ ಮತ್ತು ಅವರ ಬೆಂಬಲಿಗರು ಪಕ್ಷದ ವಿರುದ್ಧ ತಿರುಗಿಬಿದ್ದಿದ್ದಾರೆ. +ಅದೇ ರೀತಿ ಕೊಪ್ಪಳದಲ್ಲಿ ಕರಡಿ ಸಂಗಣ್ಣರಿಗೆ ಟಿಕೆಟ್ ತಪ್ಪಿರುವುದರಿಂದ ಅವರು ಕಾಂಗ್ರೆಸ್ ಕಡೆ ಮುಖ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಇದು ನಡೆದರೆ ಬಿಜೆಪಿಗೆ ದುಬಾರಿಯಾಗಿ ಪರಿಣಮಿಸುವ ಸಾಧ್ಯತೆಯಿದೆ.ಬೀದರ್ ಕ್ಷೇತ್ರದಲ್ಲಿ ಎಲ್ಲ ಶಾಸಕರ ನೇರ ವಿರೋಧ ಹೊಂದಿರುವ ಭಗವಂತ ಖೂಬಾ ಅವರಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಕ್ಷೇತ್ರದಲ್ಲಿ ಮಣೆ ಹಾಕಿದೆ. ಮಾಜಿ ಸಚಿವ ಪ್ರಭು ಚೌಹಾಣ್ ಅವರು ಖೂಬಾ ಅವರಿಗೆ ಟಿಕೆಟ್ ನೀಡದಂತೆ ಪ್ರಬಲ ವಿರೋಧ ವ್ಯಕ್ತಪಡಿಸಿದ್ದರು. ಸಭೆಯಲ್ಲೂ ನೇರ ವಾಗ್ದಾಳಿ ನಡೆಸಿದ್ದರು. ಇದೀಗ ಮತ್ತೆ ಖೂಬಾಗೆ ಟಿಕೆಟ್ ಘೋಷಣೆಯಾಗಿದ್ದು, ಕ್ಷೇತ್ರದಲ್ಲಿ ಅಸಮಾಧಾನ ಪಕ್ಷಕ್ಕೆ ಮುಳುವಾಗುವ ಆತಂಕ ಎದುರಾಗಿದೆ. +ಕೊಪ್ಪಳ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಡಾ.ಬಸವರಾಜ ತ್ಯಾವಟೂರು ಅವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ. ಕ್ಷೇತ್ರದ ಹಾಲಿ ಸಂಸದರಾಗಿರುವ ಸಂಗಣ್ಣ ಕರಡಿ ಅವರು ತಟಸ್ಥರಾದರೆ ಬಸವರಾಜ ಗೆಲುವು ಸುಲಭವಾಗಲಿದೆ.ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಅಸಮಾಧಾನದ ನಡುವೆ ಬೆಂಬಲಿಗರು ನ್ಯೂಟ್ರಲ್? ಆಗುವ ಸಾಧ್ಯತೆ ಇದೆ. ತುಮಕೂರು ಕ್ಷೇತ್ರದಲ್ಲಿ ವಿ.ಸೋಮಣ್ಣರಿಗೆ ಟಿಕೆಟ್ ಘೋಷಣೆಯಾಗಿದೆ. +ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳ ಮೇಲೆ ಹಾಗೂ ನಳಂಬ ಲಿಂಗಾಯತ ಸಮುದಾಯ ಹಿಡಿತ ಹೊಂದಿರುವ ಮಾಧುಸ್ವಾಮಿ ಅವರು ಮುಂದಿನ ನಡೆ ಕುತೂಹಲ ಮೂಡಿಸಿದೆ. ಇನ್ನೊಂದೆಡೆ, ಚಾಮರಾಜನಗರದಲ್ಲಿ ಶ್ರೀನಿವಾಸ್ ಪ್ರಸಾದ್ ಕುಟುಂಬಕ್ಕೆ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನ ಏಳದು ಎಂದು ಹೇಳಲು ಸಾಧ್ಯವಿಲ್ಲ.ಚಿಕ್ಕೋಡಿ ಕ್ಷೇತ್ರದಲ್ಲಿ ರಮೇಶ್ ಕತ್ತಿ ತಟಸ್ಥವಾದರೆ ಅಣ್ಣಾ ಸಾಹೇಬ್ ಜೊಲ್ಲೆ ಗೆಲುವು ಕಷ್ಟಕರವಾಗಲಿದೆ. \ No newline at end of file diff --git a/eesanje/url_46_206_2.txt b/eesanje/url_46_206_2.txt new file mode 100644 index 0000000000000000000000000000000000000000..bdeaa0860ae8a9db9c18c7a7ee13e0155dc454df --- /dev/null +++ b/eesanje/url_46_206_2.txt @@ -0,0 +1,5 @@ +ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ +ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಮತ್ತೊಮ್ಮೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಾ.21 ರಂದು ಕುಮಾರಸ್ವಾಮಿಯವರಿಗೆ ಪರಿಣಿತ ತಜ್ಞ ವೈದ್ಯರಿಂದ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ದೆಹಲಿ ಪ್ರವಾಸದಿಂದ ಮರಳಿದ ನಂತರ ಚಿಕಿತ್ಸೆಗಾಗಿ ಕುಮಾರಸ್ವಾಮಿಯವರು ಚೆನ್ನೈಗೆ ತೆರಳಲಿದ್ದಾರೆ. ಮಾ.19 ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಲಿದ್ದಾರೆ. ಮಾ.21 ರಂದು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಮಾ.25 ರ ನಂತರ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮರಳುವ ಸಾಧ್ಯತೆಯಿದೆ. +ಹೀಗಾಗಿ ಒಂದು ವಾರ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇತ್ತೀಚೆಗೆ ಅವರು ಲಘು ಪಾಶ್ರ್ವವಾಯು ಸಮಸ್ಯೆಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದರು. ಈಗಾಗಲೇ ಅವರು ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.ಈ ಸಂಬಂಧ ಹಾಸನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿರುವ ಕುಮಾರಸ್ವಾಮಿಯವರು, ಜನರ ಕೆಲಸದ ವಿಚಾರದಲ್ಲಿ ನಾನು ನನ್ನ ಆರೋಗ್ಯವನ್ನೂ ಲೆಕ್ಕಿಸುತ್ತಿಲ್ಲ. ಎಷ್ಟೇ ಆರೋಗ್ಯ ಸಮಸ್ಯೆ ಇದ್ದರೂ ನಾನು ರಾಜ್ಯಕ್ಕಾಗಿ ದುಡಿಯುತ್ತಿದ್ದೇನೆ. +ಚಿಕ್ಕ ವಯಸ್ಸಿನಿಂದಲೇ ನನಗೆ ಅರೋಗ್ಯ ಸಮಸ್ಯೆ ಇದೆ ಎಂದು ಹೇಳಿದ್ದರು. ಈಗಾಗಲೇ ಎರಡು ಬಾರಿ ಹೃದಯ ಚಿಕಿತ್ಸೆ ಆಗಿದೆ. ಈಗ ಮತ್ತೆ ಆಪರೇಷನ್‍ಗೆ ಹೋಗಬೇಕಾದ ಪರಿಸ್ಥಿತಿಗೆ ಬಂದಿದ್ದೇನೆ. ನನಗೆ ನನ್ನ ಆರೋಗ್ಯಕ್ಕಿಂತ ಜನರ ಹಿತ ಮುಖ್ಯ. ಇನ್ನೊಂದು ವಾರದಲ್ಲಿ ನಾನು ಮತ್ತೆ ಅಸ್ಪತ್ರೆಗೆ ಸೇರಬೇಕು. ಮಾ. 21ಕ್ಕೆ ಆಪರೇಷನ್ ಆಗುತ್ತದೆ. ಆಪರೇಷನ್ ಆದ ಬಳಿಕ ನಾನು ಮೂರು ದಿನ ವಿಶ್ರಾಂತಿ ಪಡೆದು ನಂತರ ನಮ್ಮ ಹಾಗು ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು. \ No newline at end of file diff --git a/eesanje/url_46_206_3.txt b/eesanje/url_46_206_3.txt new file mode 100644 index 0000000000000000000000000000000000000000..f2009a5dee00bb9a039fd88e9e39eb713a2947a1 --- /dev/null +++ b/eesanje/url_46_206_3.txt @@ -0,0 +1,7 @@ +ಡಾ.ಮಂಜುನಾಥ್ ಪ್ರತಿಸ್ಪರ್ಧಿಯಾಗುತ್ತಿದ್ದಂತೆ ಅಲರ್ಟ್ ಆದ ಡಿಕೆ ಬ್ರದರ್ಸ್ +ಬೆಂಗಳೂರು,ಮಾ.15-ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಘೋಷಣೆಯಾಗುತ್ತಿದ್ದಂತೆ ಹೈ ಅಲರ್ಟ್ ಆಗಿರುವ ಡಿ.ಕೆ. ಸಹೋದರರು ಕ್ಷೇತ್ರದ ಪ್ರಮುಖ ನಾಯಕರ ಜೊತೆ ಉಪಹಾರ ಕೂಟ ನಡೆಸಿದ್ದಾರೆ.ಕ್ಷೇತ್ರದ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಸ್ರ್ಪಧಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪ್ರಮುಖರೊಂದಿಗೆ ಉಪಹಾರ ಸೇವಿಸಿ ಚುನಾವಣಾ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಕೂಡ ಚುನಾವಣೆಯ ತಯಾರಿ ಮಾಡಿಕೊಳ್ಳಬೇಕು. ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತವಾಗಿದ್ದು, ಆ 2 ಪಕ್ಷಗಳಿಂದ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚುತ್ತಿದೆ ಎಂದರು. ಇಷ್ಟು ವರ್ಷ ಕಾಂಗ್ರೆಸ್ ಮತ್ತು ಜನತಾದಳದ ನಡುವೆ ಸ್ಪರ್ಧೆ ಇತ್ತು. +ಈಗ ಜನತಾದಳ ಇಲ್ಲ. ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಕುಟುಂಬವೇ ಬಿಜೆಪಿ ಜೊತೆ ದಳವನ್ನು ಸೇರಿಸಿದ್ದಾರೆ. ಮುಂದೆ ನಮ್ಮ ರಾಜಕೀಯ ಭವಿಷ್ಯ ಏನು ಎಂದು ಕಾರ್ಯಕರ್ತರು ಆತಂಕಗೊಂಡಿದ್ದಾರೆ ಎಂದು ಹೇಳಿದರು. ಜನತಾದಳದ ಕಾರ್ಯಕರ್ತರು, ಪ್ರಮುಖರು ತಮ್ಮ ವಿರುದ್ಧ ಸತತ ಹೋರಾಟ ನಡೆಸಿದ್ದರು. ಈಗ ಆತಂಕಗೊಂಡಿರುವ ಕಾರ್ಯಕರ್ತರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳುವಂತೆ ನಮ್ಮ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದೇವೆ ಎಂದರು. +ಬೆಂಗಳೂರು ಗ್ರಾಮಾಂತರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ಡಿ.ಕೆ. ಸಹೋದರರಿಗೆ ಹಿನ್ನಡೆಯಾಗಲಿದೆ ಎಂದು ಕುಮಾರಸ್ವಾಮಿ ಹೇಳುತ್ತಿರುವುದು ಅಪ್ರಸ್ತುತ. ಮೊದಲು ಅವರು ಜನತಾದಳದ ಬಗ್ಗೆ ಮಾತನಾಡಲಿ. ಆಮೇಲೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೇಳಿಕೆ ನೀಡಲಿ ಎಂದು ಹೇಳಿದರು. +ಬೆಂಗಳೂರು ಅರಮನೆ ಮೈದಾನ ಸುತ್ತ ಇರುವ ಜಾಗವನ್ನು ಸ್ವಾೀಧಿನಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲು ಈ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ತೀರ್ಮಾನವಾಗಿತ್ತು. ಈ ಕುರಿತು ಪ್ರಕರಣ ನ್ಯಾಯಾಲಯದ ವಿಚಾರಣೆಯಲ್ಲಿದೆ. ನ್ಯಾಯಮೂರ್ತಿಗಳು ಅಕಾರಿಗಳಿಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಿದ್ದಾರೆ. +ಈ ವಿಚಾರವಾಗಿ ನಾನು ನಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದೆ. ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಾಗಿರಲಿಲ್ಲ. ಏನು ಚರ್ಚೆಗಳಾಗಿವೆ ಎಂದು ತಿಳಿದುಕೊಳ್ಳುತ್ತೇನೆ ಎಂದರು.ನಮ್ಮ ಸರ್ಕಾರ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_206_4.txt b/eesanje/url_46_206_4.txt new file mode 100644 index 0000000000000000000000000000000000000000..68337ef618bc3358990b1da945507a9162f10bb8 --- /dev/null +++ b/eesanje/url_46_206_4.txt @@ -0,0 +1,8 @@ +ಅರ್ಹರಲ್ಲದ ಅಭಿಯಂತರರಿಗೆ ಮುಂಬಡ್ತಿ ನೀಡಿದವರ ವಿರುದ್ಧ ಲೋಕಾಗೆ ದೂರು +ಬೆಂಗಳೂರು,ಮಾ.15-ಇಲಾಖಾ ಮುಂಬಡ್ತಿ ಸಮಿತಿ ಅಧ್ಯಕ್ಷರ ಅನುಮೋದನೆ ಪಡೆಯದೇ ಎಸ್‍ಇ ಹುದ್ದೆಗೆ ಮುಂಬಡ್ತಿ ನೀಡಿರುವ ಮತ್ತು ಅರ್ಹತೆ ಇಲ್ಲದಿದ್ದರೂ ಅದೇ ವ್ಯಕ್ತಿಗೆ ಸಿಇ ಹುದ್ದೆಗೆ ಮುಂಬಡ್ತಿ ನೀಡಿರುವ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. +ಸಮತಿ ಅಧ್ಯಕ್ಷರ ಒಪ್ಪಿಗೆ ಇಲ್ಲದೆ ಇಬ್ಬರು ಅಭಿಯಂತರರಿಗೆ ನಿಯಮ ಮೀರಿ ಮುಂಬಡ್ತಿ ನೀಡಿರುವ ಶ್ರೀಧರ್, ಯೋಗೇಶ್ ಹಾಗೂ ಲಕ್ಷ್ಮೀಸಾಗರ್ ಎಂಬುವವರ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಎನ್.ಆರ್.ರಮೇಶ್ ಅವರು ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. +ಪ್ರಸ್ತುತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ದಕ್ಷಿಣ ವಲಯದ ಅ„ೀಕ್ಷಕ ಅಭಿಯಂತರರಾಗಿ ಮತ್ತು ಪ್ರಭಾರಿ ಮುಖ್ಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ವಿ ರಾಜೇಶ್ ಅವರು ಮೂಲತಃ ಬಿಇ (ಮೆಕ್ಯಾನಿಕಲ್‍ವಿದ್ಯಾರ್ಹತೆ ಪಡೆದವರಾಗಿರುತ್ತಾರೆ. +ಆರ್ಥಿಕವಾಗಿ ಬಹಳ ಪ್ರಭಾವಿಗಳಾಗಿರುವ ರಾಜೇಶ್ ಹಾಗೂ ರಾಘವೇಂದ್ರ ಪ್ರಸಾದ್ ಎಂಬ ಅಧಿಕಾರಿಗಳಿಗೆ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅಧೀಕ್ಷಕ ಅಭಿಯಂತರ ಹುದ್ದೆಗೆ ಮುಂಬಡ್ತಿ ನೀಡುವ ಸಲುವಾಗಿ ಆಡ್‍ಓಕ್ ಸಭೆ ನಡೆಸಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. +ಆದರೂ, ರಾಜೇಶ್ ಮತ್ತು ರಾಘವೇಂದ್ರ ಪ್ರಸಾದ್ ಅವರುಗಳಿಗೆ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅಧೀಕ್ಷಕ ಅಭಿಯಂತರ ಹುದ್ದೆಗೆ ಪದೋನ್ನತಿ ನೀಡುವ ನಿರ್ಣಯವನ್ನು ಈ ಸಭೆಯಲ್ಲಿ ಕೈಗೊಳ್ಳಲಾಗಿರುತ್ತದೆ. ಆದರೆ ಈ ನಿರ್ಣಯ ನೂರಕ್ಕೆ ನೂರರಷ್ಟು ಕಾನೂನು ಬಾಹಿರ ನಿರ್ಣಯವಾಗಿದ್ದು, ಇಲಾಖೆ ಮುಂಬಡ್ತಿ ಸಮಿತಿಯ ಅಧ್ಯಕ್ಷರು ಈ ನಿರ್ಣಯಕ್ಕೆ ತಮ್ಮ ಅನುಮೋದನೆಯನ್ನೇ ನೀಡಿರುವುದಿಲ್ಲ ಎನ್ನುವುದನ್ನು ಅವರು ಉಲ್ಲೇಖಿಸಿದ್ದಾರೆ. +ಬಿಬಿಎಂಪಿಯ ಅಧೀಕ್ಷಕ ಅಭಿಯಂತರರು ಮತ್ತು ಮುಖ್ಯ ಅಭಿಯಂತರರ ಹುದ್ದೆಗಳಿಗೆ ನಿಯೋಜನೆಗೊಳ್ಳಬೇಕಾದ ಅಧಿಕಾರಿಯು ಬಿಇ(ಸಿವಿಲ್) ವಿದ್ಯಾರ್ಹತೆನ್ನು ಕಡ್ಡಾಯವಾಗಿ ಪಡೆದಿರಬೇಕೆಂಬ ನಿಯಮವಿದ್ದರೂ ಬಿಇ ಮೆಕ್ಯಾನಿಕಲ್ ವಿದ್ಯಾರ್ಹತೆ ಪಡೆದಿರುವ ರಾಜೇಶ್ ಅವರಿಗೆ ಕಾನೂನುಬಾಹಿರವಾಗಿ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಅ„ೀಕ್ಷಕ ಅಭಿಯಂತ ರ ಹದ್ದೆಗೆ ಮುಂಬಡ್ತಿ ನೀಡಿದ ಕೇವಲ 17 ತಿಂಗಳಲ್ಲಿ ಮತ್ತೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮುಖ್ಯ ಅಭಿಯಂತರರ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ. +ಈ ಎರಡು ಕಾನೂನುಬಾಹಿರ ಮುಂಬಡ್ತಿ ನೀಡಿರುವ ಡಿಬಿಸಿಯ ಮೂವರು ಸದಸ್ಯರ ವಿರುದ್ಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಂದಿನ ಉಪ ಆಯುಕ್ತ (ಆಡಳಿತ) ರವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂಪೂರ್ಣ ದಾಖಲೆಗಳ ಸಹಿತ ಸರ್ಕಾರದ ಮಾನ್ಯ ಮುಖ್ಯ ಕಾರ್ಯದರ್ಶಿಗಳನ್ನು ಮತ್ತು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನೀಡಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ. \ No newline at end of file diff --git a/eesanje/url_46_206_5.txt b/eesanje/url_46_206_5.txt new file mode 100644 index 0000000000000000000000000000000000000000..59b7dfac18669c76393cf980489636e5ae861d94 --- /dev/null +++ b/eesanje/url_46_206_5.txt @@ -0,0 +1,5 @@ +ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು +ಬೀದರ್,ಮಾ.14:ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. +ಕಳೆದ 3 ದಿನದ ಹಿಂದೆ ಔರಾದ್ ತಮ್ಮ ನಿವಾಸದಲ್ಲಿದ್ದ ವೇಳೆ ಪ್ರಭು ಚೌಹಾಣ್ ಅವರ ಎದೆ ಬಡಿತದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. +ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಪ್ರಭು ಚೌಹಾಣ್ ಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಪ್ರಭು ಚೌಹಾಣ್ ಆರೋಗ್ಯ ಸ್ಛಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. +ಬೀದರ್ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್‍ಟಿಕೆಟ್‍ಭಗವಂತ್ ಖೂಬಾಗೆ ನೀಡಲಾಗಿದೆ. \ No newline at end of file diff --git a/eesanje/url_46_206_6.txt b/eesanje/url_46_206_6.txt new file mode 100644 index 0000000000000000000000000000000000000000..743774a9addadba26af75fcb69b71787eb83fccc --- /dev/null +++ b/eesanje/url_46_206_6.txt @@ -0,0 +1,7 @@ +ಬಿಎಸ್‌ವೈ ವಿರುದ್ಧ ಪೋಕ್ಸೋ ಕೇಸ್ : ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..? +ಬೆಂಗಳೂರು,ಮಾ.15-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮಹಿಳೆಯೊಬ್ಬರ ಮೇಲಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ಮತ್ತು ಗಂಭೀರ ಪ್ರಕರಣ. ವಿಚಾರಣೆ ನಡೆಯದೆ, ಸತ್ಯಾಸತ್ಯ ತಿಳಿಯದೆ ಅಸ್ಪಷ್ಟ ಮಾಹಿತಿ ನೀಡುವುದು ಸರಿಯಲ್ಲ ಎಂದು ಹೇಳಿದರು. +ಮಹಿಳೆ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ. ಮಹಿಳೆಗೆ ಮಾನಸಿಕ ಅಸ್ವಸ್ಥತೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಟೈಪ್ ಮಾಡಿ, ಸಹಿ ಹಾಕಿದ ದೂರನ್ನು ನೀಡಲಾಗಿದೆ. ಅದು ಕೈಬರಹದಲ್ಲಿಲ್ಲ ಎಂದು ಹೇಳಿದರು. +ಒಂದು ಕಡೆ ಇದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಗರಿಕರಿಗೆ ಸೇರಿದ ಪ್ರಕರಣ, ಮತ್ತೊಂದು ಕಡೆ ಮಹಿಳೆಯ ಆಪಾದನೆ. ಹೀಗಾಗಿ ಎಚ್ಚರಿಕೆಯಿಂದ ಸೂಕ್ಷ್ಮವಾಗಿ ಪ್ರಕರಣವನ್ನು ನೋಡಬೇಕಿದೆ. ಪೊಲೀಸರು ತನಿಖೆ ನಡೆಸುತ್ತಾರೆ. ಪ್ರಾಥಮಿಕವಾಗಿ ಸತ್ಯಾಂಶ ಕಂಡುಬಂದರೆ ಪ್ರತಿವಾದಿಯನ್ನು ವಶಕ್ಕೆ ಪಡೆಯುವುದು ಸೇರಿದಂತೆ ಅಗತ್ಯವಾದ ಕಾನೂನು ಕ್ರಮ ಕೈಗೊಳ್ಳುತ್ತಾರೆ. +ಪ್ರತಿಪಾದಿವಾದಿಯಿಂದ ದೂರುದಾರರಿಗೆ ಅಪಾಯವಿದೆ ಎಂದಾದರೆ ರಕ್ಷಣೆ ನೀಡುವುದೂ ಪೊಲೀಸರ ಜವಾಬ್ದಾರಿ. ಇಂತಹ ಪ್ರಕರಣದಲ್ಲಿ ಯಾರ ಸೂಚನೆಯೂ ಇಲ್ಲದೆ ಪೊಲೀಸರು ಮಹಿಳೆಯರಿಗೆ ರಕ್ಷಣೆ ನೀಡುವುದು ಸಾಮಾನ್ಯಎಂದರು. ತನಿಖೆಯ ವೇಳೆ ಎಲ್ಲಾ ಸತ್ಯಾಂಶಗಳು ಹೊರಬರುತ್ತವೆ. ದೂರಿನ ಹಿಂದಿರುವ ಉದ್ದೇಶ ಮತ್ತು ದುರುದ್ದೇಶದ ಕುರಿತು ಪರಿಶೀಲಿಸಲಾಗುತ್ತದೆ ಎಂದ ಅವರು, ಈ ಪ್ರಕರಣದಲ್ಲಿ ರಾಜಕಾರಣ ಇಲ್ಲ. +ನಾನಾಗಲೀ, ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ರಾಜಕಾರಣ ಮಾಡುವ ಆಸಕ್ತಿ ಹೊಂದಿಲ್ಲ. ಮಹಿಳೆ ದೂರು ಕೊಟ್ಟಾದ ಅದನ್ನು ದಾಖಲಿಸಬೇಕಾಗುತ್ತದೆ. ಪೊಲೀಸರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಬಾಯಿಸಿದ್ದಾರೆ ಎಂದು ಸ್ಪಷ್ಪಪಡಿಸಿದರು. +ಇದೇ ವೇಳೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಘಟನೆ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಹಿಳೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ. ವಾಸ್ತವಾಂಶಗಳ ಬಗ್ಗೆ ಗೃಹಸಚಿವರೇ ಪ್ರತಿಕ್ರಿಯಿಸುತ್ತಾರೆ ಎಂದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಪರಸ್ಪರ ಭೇಟಿ ಕುತೂಹಲ ಕೆರಳಿಸಿತ್ತು. \ No newline at end of file diff --git a/eesanje/url_46_206_7.txt b/eesanje/url_46_206_7.txt new file mode 100644 index 0000000000000000000000000000000000000000..6278efea6603d88491d9b90070c07e362832108d --- /dev/null +++ b/eesanje/url_46_206_7.txt @@ -0,0 +1,3 @@ +ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು +ಬೆಂಗಳೂರು, ಮಾ.15: ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರ ದೂರಿನ ಆಧಾರದ ಮೇಲೆ ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಕಳೆದ ಫೆಬ್ರವರಿ 2 ರಂದು ನಡೆದ ಸಭೆಯಲ್ಲಿ ಯಡಿಯೂರಪ್ಪ ಅವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲ ಆರೋಪಿಸಿದ್ದಾರೆ.ಪೊಲೀಸರ ಪ್ರಕಾರ, ಬಿಜೆಪಿ ನಾಯಕನ ವಿರುದ್ಧ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯಡಿಯೂರಪ್ಪ ಅವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. \ No newline at end of file diff --git a/eesanje/url_46_206_8.txt b/eesanje/url_46_206_8.txt new file mode 100644 index 0000000000000000000000000000000000000000..f3ad8c38c55c16e828a971f234d285b9c0611a75 --- /dev/null +++ b/eesanje/url_46_206_8.txt @@ -0,0 +1,6 @@ +ಬಿಜೆಪಿ ಟಿಕೆಟ್ ಸಿಕ್ಕ ನಂತರ ಮಹಾರಾಜ ಯದುವೀರ್ ಮೊದಲ ಪ್ರತಿಕ್ರಿಯೆ +ಮೈಸೂರು, ಮಾ. 14-ಮೈಸೂರು ಮತ್ತು ಕೊಡಗಿನ ಸರ್ವಾಂಗಿಣ ಅಭಿವೃದ್ಧಿಗಾಗಿ ಕೆಲಸ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಮನವಿ ಮಾಡಿದ್ದಾರೆ. + +ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಹೆಸರು ಅಧಿಕೃತವಾಗಿ ಪ್ರಕಟಣೆಯಾಗುತ್ತಿದ್ದಂತೆ ಈ ಬಗ್ಗೆ ಫೇಸ್ಬುಕಲ್ಲಿ ಪೊಸ್ಟ್ ಮಾಡಿ, ತಮಗೆ ಬಿಜೆಪಿ ಟಿಕೆಟ್ ದೊರೆತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿ ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗೆ ಇದೆ ಎಂದು ಹೇಳಿದ್ದಾರೆ. +ಈ ಮೂಲಕ ನನಗೆ ಪ್ರಜಾ ಬಾಂಧವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯ ನೀಡಿದ್ದೀರಿ ಈಗ ಈ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. +ತಮ್ಮ ಮೇಲೆ ನಂಬಿಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಎಲ್ ಸಂತೋಷ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದ ಎಂದು ತಿಳಿಸಿ ಕಳೆದೆರಡು ಅವಧಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಸಂಸದ ಪ್ರತಾಪ್ ಸಿಂಹ ಅವರನ್ನು ಅಭಿನಂದಿಸಿದ್ದಾರೆ. \ No newline at end of file diff --git a/eesanje/url_46_206_9.txt b/eesanje/url_46_206_9.txt new file mode 100644 index 0000000000000000000000000000000000000000..c09905dcabc27ffa5be818d8a5730a2406a88383 --- /dev/null +++ b/eesanje/url_46_206_9.txt @@ -0,0 +1,5 @@ +ಕಾಣೆಯಾದವರ ಪತ್ತೆಗೆ ಸಹಕರಿಸಿ +ಚಿಕ್ಕಬಳ್ಳಾಪುರ, ಮಾ.14-ನಗರ ಹಾಗೂ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣಗಳಲ್ಲಿ ಗೃಹಿಣಿ ಹಾಗೂ ಯುವತಿ ನಾಪತ್ತೆಯಾಗಿ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಚಿಕ್ಕಬಳ್ಳಾ ಪುರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಚನ ಬಲೆ ಗ್ರಾಮದ ನಿವಾಸಿ ಚಂದನ (24)ಎಂಬ ಯುವತಿ ಮನೆಯಿಂದ ಮಾರ್ಚ್ 7 ರಂದು ಬೆಳಗಿನ ಜಾವ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. +ಚಂದನ ನಾಪತ್ತೆಯಾಗಿರುವ ಬಗ್ಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಹೋದರ ಮೋಹನ್ ದೂರು ನೀಡಿದ್ದು ಕಾಣೆಯಾಗಿರುವ ಚಂದನ ಅವರನ್ನು ಹುಡುಕಿಕೊಡ ಬೇಕೆಂದು ಮನವಿ ಮಾಡಿದ್ದಾರೆ.ಚಹರೆ: 24 ವರ್ಷದ ಚಂದನ, 5.5 ಅಡಿ ಎತ್ತರ, ಗೋ ಮೈಬಣ್ಣ, ಸಾಧಾರಣ ಮೈಕಟ್ಟು, ದುಂಡು ಮುಖ, ಕನ್ನಡ, ತೆಲುಗು ಮತ್ತು ಇಂಗ್ಲಿಷ್ ಮಾತನಾಡುತ್ತಾಳೆ. +ಮಹಿಳೆ ನಾಪತ್ತೆ:ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಸೇರಿದ ಚಿಕ್ಕಬಳ್ಳಾ ಪುರ 12ನೇ ವಾರ್ಡಿನ ಬಾಪೂಜಿ ನಗರದ ನಿವಾಸಿ 34 ವರ್ಷದ ಗೃಹಿಣಿ ದೇವಮ್ಮ ಮಾರ್ಚ್ 2 ರಂದು ಕಾಣೆಯಾಗಿದ್ದು, ಇವರು ಕೆಲಸಕ್ಕೆ ಎಂದು ಹೋದವರು ಮತ್ತೆ ಮನೆಗೆ ಮರಳಿ ಬಂದಿರುವುದಿಲ್ಲ. ಈ ಬಗ್ಗೆ ಎಲ್ಲೆಡೆ ಹುಡುಕಾಡಿದರು ಪತ್ತೆ ಆಗಿಲ್ಲ. ನಾಪತ್ತೆಯಾದ ದೇವಮ್ಮ ರವರನ್ನು ಪತ್ತೆ ಮಾಡಿಕೊಡಬೇಕೆಂದು ಪತಿ ವೆಂಕಟೇಶ್ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. +ಚಹರೆ: ದೇವಮ್ಮ, 34 ವರ್ಷ, 4.5 ಅಡಿ ಎತ್ತರ, ಗೋ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲು ಮುಖ, ರೆಡ್ ಕರ್ಲ ಚೂಡಿರ್ಧಾ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ. ಇವರಿಬ್ಬರ ಬಗ್ಗೆ ಮಾಹಿತಿ ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆ ಅಥವಾ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಗೆ ತಿಳಿಸಬೇಕು ಎಂದು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_207_1.txt b/eesanje/url_46_207_1.txt new file mode 100644 index 0000000000000000000000000000000000000000..d1eef160bfde22f00fd471bda0d20423f4bb9b9d --- /dev/null +++ b/eesanje/url_46_207_1.txt @@ -0,0 +1,6 @@ +ಸಿಎಂ ವಕ್ತಾರರಾಗಿ ಪ್ರಿಯಾಂಕ್ ಖರ್ಗೆ ಸೇರಿ ಐವರು ಸಚಿವರ ನೇಮಕ +ಬೆಂಗಳೂರು, ಮಾ.13-ಸರ್ಕಾರದ ವತಿಯಿಂದ ಗಂಭೀರ ವಿಚಾರಗಳ ಕುರಿತು ಗೊಂದಲಕಾರಿ ಹೇಳಿಕೆಗಳು ಹೊರಬರುವುದನ್ನು ನಿಯಂತ್ರಿಸುವ ಸಲುವಾಗಿ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಐವರು ಸಚಿವರನ್ನು ವಕ್ತಾರರನ್ನಾಗಿ ನೇಮಿಸಿದ್ದಾರೆ. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. +ಈ ಐವರು ಸಚಿವರಿಗೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಬೇಕು ಎಂದು ಆದೇಶಿಸಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ಗೊಂದಲಕಾರಿ ಹೇಳಿಕೆಗಳು ನೀಡಬಾರದು ಎಂಬ ಉದ್ದೇಶಕ್ಕಾಗಿ ಸರ್ಕಾರಕ್ಕೆ ವಕ್ತಾರರನ್ನು ನೇಮಿಸಲಾಗಿದೆ. +ಈ ಐವರಲ್ಲಿ ಪ್ರಿಯಾಂಕ್ ಖರ್ಗೆ, ಕೃಷ್ಣಭೈರೇಗೌಡ ಅವರು ಈ ಹಿಂದೆ ಪಕ್ಷದ ವಕ್ತಾರರಾಗಿಯೂ ಕೆಲಸ ಮಾಡಿದ್ದರು. ಈ ಐದು ಮಂದಿಯೂ ಸೈದ್ಧಾಂತಿಕವಾಗಿ ಆಡಳಿತಾತ್ಮಕವಾಗಿ ಅನುಭವಿಗಳಾಗಿದ್ದು, ಬಿಜೆಪಿ ವಿರುದ್ಧ ಆಕ್ರಮಣಕಾರಿ ವಾಗ್ದಾಳಿಗೆ ಹೆಸರುವಾಸಿಯಾಗಿದ್ದಾರೆ. +ಕೆಲವು ಕ್ಲಿಷ್ಟ ಹಾಗೂ ಸಂಕೀರ್ಣ ಸಂದರ್ಭದಲ್ಲಿ ಸರ್ಕಾರದ ನಿಲುವುಗಳನ್ನು ಬಲವಾಗಿ ಸಮರ್ಥಿಸಿಕೊಂಡು ಎದುರಾಳಿಗಳಿಗೆ ತಿರುಗೇಟು ನೀಡುವಲ್ಲಿ ಹಲವು ಬಾರಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಸಂತೋಷ್ ಲಾಡ್ ಮತ್ತು ಕೃಷ್ಣ ಭೈರೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ವಿಶ್ಲೇಷಣಾತ್ಮಕವಾಗಿ ಟೀಕೆ ಮಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಳೆದೂ, ತೂಗಿ ಸಂಪುಟದ ಯುವ ಸಚಿವರನ್ನು ವಕ್ತಾರರನ್ನಾಗಿ ನೇಮಿಸಿದ್ದಾರೆ. \ No newline at end of file diff --git a/eesanje/url_46_207_10.txt b/eesanje/url_46_207_10.txt new file mode 100644 index 0000000000000000000000000000000000000000..fc2c57855d27ed650912174ac674152e3d3f1ac9 --- /dev/null +++ b/eesanje/url_46_207_10.txt @@ -0,0 +1,7 @@ +ನೀರಿಲ್ಲ ನೀರಿಲ್ಲ : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ +ಬೆಂಗಳೂರು,ಮಾ.12- ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದರೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸಮಪರ್ಕವಾಗಿ ನಿರ್ವಹಣೆ ಮಾಡಿಲ್ಲ ಎಂದು ಪ್ರತಿಪಕ್ಷ ಬಿಜೆಪಿ, ನೀರಿಲ್ಲ ನೀರಿಲ್ಲ ಎಂದು ಹೇಳುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿತು. +ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ.ರಾಮಮೂರ್ತಿ, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಸೆಂಟ್ರಲ್ ಅಧ್ಯಕ್ಷ ಸಪ್ತಗಿರಿ ಗೌಡ, ಮುಖ್ಯ ವಕ್ತಾರ ಅಶ್ವಥ್ ನಾರಾಯಣ, ಬಿಬಿಎಂಪಿ ಮಾಜಿ ಸದಸ್ಯರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಮುಖಂಡರಾದ ಉಮೇಶ್ ಶೆಟ್ಟಿ, ಅರುಣ್ ಸೋಮಣ್ಣ ಸೇರಿದಂತೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. +ಕುದುರೆ ಮೇಲೆ ಗಾಡಿಯ ಮೇಲೆ ಖಾಲಿ ಟ್ಯಾಂಕ್, ಅದರ ಮೇಲೆ ಕೊಡ ಇಟ್ಟು ನೂರಾರು ಮಹಿಳೆಯರು ಖಾಲಿ ಹಿಡಿದು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಸೃಷ್ಟಿಸಿರುವ ನೀರಿಲ್ಲ ನೀರಿಲ್ಲ, ಸರ್ಕಾರದ ಬಳಿ ಹಣ ಇಲ್ಲ, ಎಲ್ಲವೂ ಪಾಪರ್ ಎಂದು ವಿನೂತನವಾಗಿ ಕೂಗುತ್ತಾ ಪ್ರತಿಭಟನೆಯನ್ನು ನಡೆಸಿದರು. +ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದ ಬರಗಾಲ ಆವರಿಸಿದೆ. ಕುಡಿಯಲು ನೀರಿಲ್ಲದೆ ಜನರು ಗುಳೇ ಹೋಗುತ್ತಿದ್ದಾರೆ. ಜಾನುವಾರುಗಳು ಕೂಡ ನೀರಿಲ್ಲದಂತಾಗಿದೆ. ಸರ್ಕಾರ ಜನರ ಪಾಲಿಗೆ ಇದ್ದ ಇಲ್ಲದಂತಾಗಿದೆ ಎಂದು ವಾಗ್ದಾಳಿ ನಡೆಸಿದರು. +ಬರ ನಿರ್ವಹಣೆ ಮಾಡಬೇಕಿರುವ ಸರ್ಕಾರ ಗ್ಯಾರಂಟಿ ಸಮಾವೇಶಗಳನ್ನು ನಡೆಸುತ್ತಾ ಜನರ ಸಂಕಷ್ಟಗಳಿಗೆ ಸ್ಪಂದಿಸುವುದನ್ನೇ ಮರೆತಿದೆ. ಯಾವೊಬ್ಬ ಸಚಿವರು ಜಿಲ್ಲಾ ಪ್ರವಾಸವನ್ನಾಗಲಿ, ಇಲ್ಲವೇ ಕೆಡಿಪಿ ಸಭೆಯನ್ನು ನಡೆಸಿಲ್ಲ. ಇಂಥ ಸರ್ಕಾರ ನಮಗೆ ಬೇಕೆ ಎಂದು ಪ್ರಶ್ನೆ ಮಾಡಿದರು. +ರಾಜ್ಯದಲ್ಲಿ ನಮಗೆ ನೀರೇ ಇಲ್ಲದಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಅಲ್ಲಿನ ಡಿಎಂಕೆ ಸರ್ಕಾರವನ್ನು ಸಂತೃಪ್ತಗೊಳಿಸಲು ಹೊರಟಿದೆ. ಕನ್ನಡಿಗರ ವಿಶ್ವಾಸದ್ರೋಹಿ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಸ್ವಾಭಿಮಾನಿ ಕನ್ನಡಿಗರು ತಕ್ಕ ಪಾಠ ಕಲಿಸಬೇಕೆಂದು ಹರೀಶ್ ಕರೆ ಕೊಟ್ಟರು. \ No newline at end of file diff --git a/eesanje/url_46_207_11.txt b/eesanje/url_46_207_11.txt new file mode 100644 index 0000000000000000000000000000000000000000..a88ea69f0335016f193f26b663a37304ffae3206 --- /dev/null +++ b/eesanje/url_46_207_11.txt @@ -0,0 +1,5 @@ +ಸುಧೀರ್ ಕುಮಾರ್ ಮುರೊಳ್ಳಿಗೆ ದಕ್ಕುತ್ತಾ ಉಡುಪಿ- ಚಿಕ್ಕಮಗಳೂರು ಟಿಕೆಟ್..? +ಬೆಂಗಳೂರು, ಮಾ.12- ಉಡುಪಿ- ಚಿಕ್ಕಮಗಳೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಕುಮಾರ್ ಮುರೊಳಿ ಅವರು ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ ಇವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. +ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಗೊಳಿಸುವ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನೆಡದ ಸ್ಕ್ರೀನಿಂಗ್ ಕಮಿಟಿ ಸಭೆಯ ಸಂದರ್ಭದಲ್ಲಿ ಸುರ್ಜೇವಾಲ ಅವರನ್ನ ಭೇಟಿ ಮಾಡಿದ ಸುೀರ್ ಕುಮಾರ್ ಮುರೊಳಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣಾ ಕ್ಷೇತ್ರಕ್ಕೆ ಸ್ಪರ್ಧೆಗೆ ಅವಕಾಶಕ್ಕೆ ಮನವಿ ಮಾಡಿದ್ದಾರೆ. +ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಮತ್ತಿತರರು ಇವರೊಂದಿಗೆ ತೆರಳಿ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಿ ಸುಧೀರ್ ಕುಮಾರ್ ಪರ ಬ್ಯಾಟಿಂಗ್ ಬೀಸಿದ್ದಾರೆ. +ಹಿಂದುಳಿದ ವರ್ಗಗಳ ಆಯೋಗಗಳ ಮಾಜಿ ಅಧ್ಯಕ್ಷರಾಗಿರುವ ಇಂದು ಕಾಂಗ್ರೆಸ್ ಸೇರುತ್ತಿರುವ ಕೆ. ಜಯಪ್ರಕಾಶ್ ಹೆಗಡೆ ಅವರನ್ನ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಕಣಕ್ಕೆ ಇಳಿಸಲು ಹೈಕಮಾಂಡ್ ನಾಯಕರು ಮುಂದಾಗಿದ್ದಾರೆ. ಆದರೆ ಸುೀರ್ ಮುರೊಳಿ ಅವರು ತಮಗೆ ಟಿಕೆಟ್‍ಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಸ್ಥಳೀಯ ಮುಖಂಡರು ಇವರ ಬೆಂಬಲಕ್ಕೆ ನಿಂತ್ತಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕು. \ No newline at end of file diff --git a/eesanje/url_46_207_12.txt b/eesanje/url_46_207_12.txt new file mode 100644 index 0000000000000000000000000000000000000000..0436ace01652c230037e91000c642c9fc40fb72b --- /dev/null +++ b/eesanje/url_46_207_12.txt @@ -0,0 +1,5 @@ +ಬಿ.ಆರ್.ಪಾಟೀಲರಿಗೆ ಶಾಂತವೇರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿ +ಬೆಂಗಳೂರು, ಮಾ.12- ಕನ್ನಡ ಜನಶಕ್ತಿ ಕೇಂದ್ರ ನೀಡುವ ತತ್ವನಿಷ್ಠ ಹೋರಾಟಗಾರ ಶಾಂತವಾರಿ ಗೋಪಾಲಗೌಡ ಸಂಸ್ಕೃತಿ ಪ್ರಶಸ್ತಿಗೆ ಶಾಸಕರಾದ ಬಿ. ಆರ್. ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಜನಶಕ್ತಿ ಕೇಂದ್ರ ಕಳೆದ 26 ವರ್ಷಗಳಿಂದ ನಾಡಿನ ಶ್ರೇಷ್ಠ ಸಮಾಜ ಸೇವಕರಿಗೆ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಪ್ರಶಸ್ತಿಯನ್ನ ನೀಡುತ್ತಾ ಬಂದಿದೆ. +ಈ ಪ್ರಶಸ್ತಿಯು 25 ಸಾವಿರ ನಗದು, ಕಂಚಿನ ಫಲಕ ಹಾಗೂ ಪ್ರಶಸ್ತಿ ಪತ್ರವನ್ನ ಒಳಗೊಂಡಿರುತ್ತದೆ ಎಂದು ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ.ಮಾ.14ರ ಸಂಜೆ 5 ಗಂಟೆಗೆ ಕನ್ನಡ ಭವನದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. +ಹಂಪಿ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ವಿಚಿ ಬೋರಲಿಂಗಯ್ಯ, ಲೇಖಕರಾದ ಡಾ. ನಟರಾಜ್ ಹುಳಿಯಾರ್, ನ್ಯಾಯವಾದಿಗಳಾದ ಕೆ. ದಿವಾಕರ್, ಶಾಂತವೇರಿ ಗೋಪಾಲಗೌಡ ಪ್ರತಿಷ್ಠಾನದ ಕಾರ್ಯದರ್ಶಿ ರಾಮ್‍ಮನೋಹರ್ ಮತ್ತಿತರೇ ಗಣ್ಯರು ಪಾಲ್ಗೊಳ್ಳಲಿದ್ದಾರೆ. +ಪ್ರಶಸ್ತಿಗೆ ಭಾಜನಾರಾಗಿರುವ ಬಿ.ಆರ್. ಪಾಟೀಲ್ ಅವರುಅಳಂದ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ನಿರಂತರವಾಗಿ ಜನಸೇವೆ ಮಾಡುತ್ತಿದಾರೆ. ಗಾಂ, ಲೋಹಿಯಾ, ಜಯಪ್ರಕಾಶ್ ನಾರಾಯಣ್, ಅಂಬೇಡ್ಕರ್ ಮುಂತಾದ ನಾಯಕರ ಪ್ರಭಾವಕ್ಕೆ ಒಳಗಾದ ಪಾಟೀಲರು ಶಿಕ್ಷಣ, ಮಳೆನೀರು ಕೊಯ್ಲು, ವ್ಯಸನ ಮುಕ್ತ ಸಮಾಜ, ಯುವಕರ ಭವಿಷ್ಯಕ್ಕಾಗಿ ಚಿಂತನೆ, ಗ್ರಾಮೀಣ ಉದ್ಯೋಗ ಅವಕಾಶಕ್ಕಾಗಿ ಪ್ರಯತ್ನ ಮುಂತಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆದರ್ಶ ರಾಜಕಾರಣಿಯಾಗಿ ಜನಮಾನಸದಲ್ಲಿ ನೆಲೆನಿಂತಿದ್ದಾರೆ. \ No newline at end of file diff --git a/eesanje/url_46_207_2.txt b/eesanje/url_46_207_2.txt new file mode 100644 index 0000000000000000000000000000000000000000..f77d86c0d26a99ac236991beb3500f2b6bc5eb03 --- /dev/null +++ b/eesanje/url_46_207_2.txt @@ -0,0 +1,6 @@ +ಕರ್ನಾಟಕದಲ್ಲೂ ಜಾರಿಯಾಗುತ್ತಾ ಸಿಎಎ..? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..? +ಬೆಂಗಳೂರು, ಮಾ.13-ಕೇಂದ್ರ ಸರ್ಕಾರ ಅಸೂಚಿಸಿರುವ ಸಿಎಎ ಜಾರಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಬಗ್ಗೆ ಈವರೆಗೂ ಚರ್ಚೆಯಾಗಿಲ್ಲ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟದ ಇತರ ಸಚಿವರುಗಳು ಚರ್ಚೆ ನಡೆಸಿ, ಅದನ್ನು ಅಂಗೀಕರಿಸಬೇಕೊ ಅಥವಾ ತಿರಸ್ಕರಿಸಬೇಕೊ ಎಂಬ ಬಗ್ಗೆ ಸಂಪುಟದಲ್ಲಿ ತೀರ್ಮಾನಿಸಲಾಗುವುದು. +ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸಿಎಎಯನ್ನು ಜಾರಿಗೊಳಿಸುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿಗಳು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ. ಆದರೆ ಯಾವ ರೀತಿ ಎಂದು ಸದ್ಯಕ್ಕೆ ಹೇಳಲಾಗುವುದಿಲ್ಲ ಎಂದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಿಂದ ಸ್ಪರ್ಧೆ ಮಾಡಿದ್ದಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರಲಿದೆ ಎಂದು ಹೇಳಿದರು. +ಖರ್ಗೆಯವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸ್ಪರ್ಧೆಯ ಬಗ್ಗೆ ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಇದರಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅವರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅವರ ಜೊತೆಯಲ್ಲಿರುತ್ತೇವೆ ಎಂದರು. +ಬ್ಯಾಡಗಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಭೆಗೆ ಸಂಬಂಧಪಟ್ಟಂತೆ 42 ಮಂದಿಯನ್ನು ಬಂಸಲಾಗಿದೆ. ಸಿಸಿಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗಲಾಟೆಯಲ್ಲಿ ಭಾಗಿಯಾಗಿದ್ದ ಕೆಲವರು ಆಂಧ್ರ ಪ್ರದೇಶಕ್ಕೆ ಓಡಿಹೋಗಿದ್ದಾರೆ. ಕೆಲವರು ಅಲ್ಲಿಂದಲೇ ಬಂದಿರುವ ಮಾಹಿತಿ ಇದೆ. +ಮೆಣಸಿನಕಾಯಿ ಬೆಲೆ ಕುಸಿತದಿಂದಾಗಿ ಸಿಟ್ಟಾದ ರೈತರು ತತ್ಕ್ಷಣಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಗಲಭೆಯ ಹಿಂದೆ ವ್ಯವಸ್ಥಿತ ಪಿತೂರಿ ಇದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ. ಬಂತರ ಪೈಕಿ ಪ್ರತಿಯೊಬ್ಬರನ್ನೂ ತಪಾಸಣೆಗೊಳಪಡಿಸುತ್ತಿದ್ದು, ಗಲಾಟೆಯಲ್ಲಿ ಅವರ ಪಾತ್ರ ಏನು ಎಂಬುದನ್ನು ಪತ್ತೆ ಹಚ್ಚುವ ಕೆಲಸವಾಗುತ್ತಿದೆ ಎಂದು ಹೇಳಿದರು.ಗಲಾಟೆಗೆ ಪ್ರಚೋದನೆ ಇರುವುದೂ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_207_3.txt b/eesanje/url_46_207_3.txt new file mode 100644 index 0000000000000000000000000000000000000000..9f6eeca76beb3288b1925ddbdac712bde75fd45d --- /dev/null +++ b/eesanje/url_46_207_3.txt @@ -0,0 +1,12 @@ +ಇಂದಿನಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭ +ಬೆಂಗಳೂರು, ಮಾ.13-ನೋಂದಣಿ ಸಮಯದಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಆಸ್ತಿ ಯೋಜನೆಯಡಿ ನನ್ನ ಆಸ್ತಿ, ನನ್ನ ಗುರುತು ಎಂಬ ಉದ್ದೇಶದಿಂದ ಈ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ಕೆಲವೆಡೆ ಪೈಲಟ್ ಆಗಿ ಮಾಡಲಾಗಿದೆ. ಇದನ್ನು ಇಂದಿನಿಂದ ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಹೇಳಿದರು. +ಕಂದಾಯ ಇಲಾಖೆಯನ್ನು ಆಧುನೀಕರಣ ಮಾಡಬೇಕು, ಬೆರಳ ತುದಿಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಮಾಡಲಾಗುತ್ತಿದೆ. ಅದರ ಒಂದು ಭಾಗವಾಗಿ ಸಹ ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು. +ಈ ಸಂಬಂಧ ನಮ್ಮ ಗ್ರಾಮಾಕಾರಿಗಳು 19 ಲಕ್ಷ ರೈತರನ್ನು ಸಂಪರ್ಕಿಸಿದ್ದಾರೆ. ಅದರಲ್ಲಿ 6 ಲಕ್ಷ ಪಹಣಿಗಳಿಗೆ ಸಂಬಂಸಿದಂತೆ ಅದರ ಖಾತೆದಾರರು ಮೃತಪಟ್ಟಿದ್ದಾರೆ. ಹೀಗೆ ಮೃತಪಟ್ಟವರ ಹೆಸರಿನಲ್ಲಿ ಪಹಣಿಗಳು ಇದ್ದರೆ ದುರಪಯೋಗ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಆಧಾರ್ ಜೋಡಣೆ ಮಾಡುವುದರಿಂದ ಯಾರದ್ದೋ ಆಸ್ತಿ ಮತ್ತಾರೋ ನೋಂದಣಿ ಮಾಡಿಸಿಕೊಳ್ಳುವಂತಹ ಅಕ್ರಮಗಳಿಗೆ ಕಡಿವಾಣ ಹಾಕಬಹದು ಎಂದು ಹೇಳಿದರು. +ಆಸ್ತಿಗಳ ನೋಂದಣಿ ಸಮಯದಲ್ಲಿಯೂ ಸಹ ಆಧಾರ್ ಕಾರ್ಡ್ ಕಡ್ಡಾಯವಾಗಿ ಕೇಳಲಾಗುತ್ತದೆ. ಆಗ ಆಧಾರ್ ಸಂಖ್ಯೆ ಕೊಡದಿದ್ದರೆ ಅದು ಅನುಮಾನಕ್ಕೆ ಕಾರಣವಾಗಿ ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ತದನಂತರ ನೋಂದಣಿ ಮಾಡಿದರೆ ಒಂದಷ್ಟು ಅಕ್ರಮಗಳನ್ನು ತಡೆದಂತಾಗುತ್ತದೆ ಎಂದು ಆಧಾರ್ ಜೋಡಣೆಯ ಅಗತ್ಯತೆಯನ್ನು ವಿವರಿಸಿದರು. +ಲೋಕಸಭಾ ಚುನಾವಣೆ ಘೋಷಣೆಯಾದರೂ ಸಹ ಅದರ ಮಧ್ಯೆಯೂ ಆಧಾರ್ ಜೋಡಣೆ ಕಾರ್ಯ ಮಾಡಬೇಕು ಎಂದು ಗ್ರಾಮಾಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಗ್ರಾಮಾಕಾರಿಗಳೇ ಮನೆ ಮನೆಗೆ ತೆರಳಿ ಪಹಣಿ ಮತ್ತು ಆಧಾರ್ ಜೋಡಣೆ ಕಾರ್ಯ ಮಾಡುತ್ತಾರೆ. ಸಾರ್ವಜನಿಕರೂ ಸಹ ತಮ್ಮ ಸಮೀಪದ ಕಂದಾಯ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಸಲು ಸಹ ಅವಕಾಶ ನೀಡಲಾಗಿದೆ ಎಂದು ಹೇಳಿದರು. +ಆಟೋಮ್ಯುಟೇಷನ್ : +ಬ್ಯಾಂಕ್‍ಗಳಲ್ಲಿ ಸಾಲ ಪಡೆದರೆ, ಸಾಲ ತೀರುವಳಿಯಾದರೆ, ವಿಭಾಗ ಮಾಡಿಕೊಂಡರೆ, ಆಸ್ತಿಯನ್ನು ಅಡಮಾನ ಇಟ್ಟರೆ, ಎಸಿ ನ್ಯಾಯಾಲಯದ ಆದೇಶಗಳಾಗಿದ್ದರೆ ಹೀಗೆ ಸಣ್ಣಪುಟ್ಟ ಬದಲಾವಣೆಗಳು ಆದಾಗ ಅದರ ವಿವರವನ್ನು ಪಹಣಿಯಲ್ಲಿ ದಾಖಲಿಸುವುದನ್ನು ಸ್ವಯಂಚಾಲಿತ ಮಾಡಲಾಗಿದೆ. ಇದಕ್ಕಾಗಿ ಗ್ರಾಮಾಕಾರಿಗಳು ಧೃಢೀಕರಣ (ಥಂಬ್ ಕೊಡುವುದು) ಮಾಡುವುದು ಅಗತ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. +ಆಯಾ ಪಹಣಿ ಮೇಲೆ ಬ್ಯಾಂಕ್‍ಗಳು, ನ್ಯಾಯಾಲಯಗಳು ಹೀಗೆ ವಿವಿಧ ಮೂಲಗಳಿಂದ ನೀಡುವ ಮಾಹಿತಿಯನ್ನು ನೇರವಾಗಿ ಪಡೆದು ಅದನ್ನು ಪಹಣಿಯಲ್ಲಿ ದಾಖಲಿಸಲಾಗುತ್ತದೆ. ಇದಕ್ಕಾಗಿ ರೈತರು ಸರ್ಕಾರಿ ಕಚೇರಿಗಳಿಗೆ ಹತ್ತಾರು ಬಾರಿ ಅಲೆದಾಡುವ ಅಗತ್ಯವನ್ನು ತಪ್ಪಿಸಲಾಗುತ್ತಿದೆ. ಇದರಿಂದ ರೈತರ ಸಮಯ, ಅಕಾರಿಗಳ ಸಮಯ ಪೋಲಾಗುವುದು ಮತ್ತು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದಂತಾಗುತ್ತದೆ ಎಂದು ಹೇಳಿದರು. +ಈಗಾಗಲೇ 14,21,116 ಪಹಣಿಗಳಲ್ಲಿ ಈ ರೀತಿ ಸ್ವಯಂಚಾಲಿತ ದಾಖಲೀಕರಣ ಮಾಡಲಾಗಿದೆ. ಇದರಲ್ಲಿ ಶೇ.72ರಷ್ಟು ಸ್ವಯಂ ಚಾಲಿತ ಮಾಡಿದರೆ, ಉಳಿದ ಶೇ.28ರಷ್ಟು ಪ್ರಕರಣಗಳ ಪಹಣಿಗಳನ್ನು ಹಳೆಯ ವ್ಯವಸ್ಥೆಯಲ್ಲಿ ಉಳಿಸಿಕೊಳ್ಳಲಾಗಿದೆ. ಕಾರಣ ಹಕ್ಕು ಬದಲಾವಣೆ, ಸಿವಿಲ್ ನ್ಯಾಯಾಲಯಗಳಲ್ಲಿ ವ್ಯಾಜ್ಯ ಇರುವಂತಹ ಪ್ರಕರಣಗಳಲ್ಲಿ 15 ದಿನಗಳ ಕಾಲ ಆಕ್ಷೇಪಣೆಗೆ ಕಾಲಾವಕಾಶ ಒದಗಿಸಿ ಆ ಬಳಿಕ ದಾಖಲೀಕರಣ ಮಾಡಬೇಕಾಗಿರುತ್ತದೆ. ಆದ್ದರಿಂದ ಇದರಲ್ಲಿ ಹಳೆಯ ವ್ಯವಸ್ಥೆ ಇಟ್ಟುಕೊಂಡು, ಮುಂದೆ ಎಲ್ಲಾ ಪಹಣಿಗಳಿಗೆ ಆಧಾರ್ ಜೋಡಣೆ ಪೂರ್ಣಗೊಂಡ ಬಳಿಕ ಇವುಗಳನ್ನು ಸಹ ಆಟೋಮ್ಯೂಟೇಷನ್ ವ್ಯಾಪ್ತಿಗೆ ತರುವ ಪ್ರಯತ್ನ ಮಾಡಲಾಗುವುದು ಎಂದರು. +ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಭಾನುವಾರವೂ ನೋಂದಣಿ :ಬೆಂಗಳೂರು ಸೇರಿ ಮಹಾನಗರ ಪಾಲಿಕೆ ವ್ಯಾಪ್ತಿಯ ನೋಂದಣಿ ಕಚೇರಿಗಳನ್ನು ಭಾನುವಾರವೂ ಸಹಿತ ಕಾರ್ಯನಿರ್ವಹಿಸುವಂತೆ ಆದೇಶ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು. +ಅನೇಕ ಜನರು ನೋಂದಣಿಗಾಗಿ ತಮ್ಮ ಕೆಲಸ ಕಾರ್ಯಗಳಿಗೆ ರಜಾ ಹಾಕಿ ಬರಬೇಕಾಗುತ್ತದೆ. ನಗರ ಪ್ರದೇಶಗಳಲ್ಲಿ ಇದರಿಂದ ಕೆಲವರಿಗೆ ಅನಾನುಕೂಲವೂ ಆಗುತ್ತಿದೆ. ಆದ್ದರಿಂದ ಒಂದು ಕಂದಾಯ ಜಿಲ್ಲೆಯಲ್ಲಿ ಕನಿಷ್ಠ 6-7 ನೋಂದಣಾ ಕಚೇರಿಗಳು ಇರುತ್ತವೆ. ರೋಸ್ಟರ್ ಆಧಾರದ ಮೇಲೆ ಒಂದೊಂದು ವಾರ ಒಂದೊಂದು ನೋಂದಣಾಕಾರಿ ಕಚೇರಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು \ No newline at end of file diff --git a/eesanje/url_46_207_4.txt b/eesanje/url_46_207_4.txt new file mode 100644 index 0000000000000000000000000000000000000000..80574e47ffb345614380a034e9af18eb6428a984 --- /dev/null +++ b/eesanje/url_46_207_4.txt @@ -0,0 +1,10 @@ +10 ದಿನ ಲಭ್ಯವಿರುವುದಿಲ್ಲ ಎಸ್ಕಾಂಗಳ ಆನ್‍ಲೈನ್ ಸೇವೆಗಳು +ಬೆಂಗಳೂರು, ಮಾ.13-ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಇದೇ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‍ಲೈನ್ ಸೇವೆಗಳು ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. +ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್‍ಲೈನ್ ಸೇವೆಗಳು ಈ ಅವಯಲ್ಲಿ ಲಭ್ಯವಿರುವುದಿಲ್ಲ. ಆನ್‍ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. +ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಆದರೆ, ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ. +ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್‍ಗಳನ್ನು ನೀಡಲಿ್ದÁರೆ, ಆದರೆ ಈ ಬಿಲ್‍ಗಳನ್ನು ಇದೇ 20 ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ. +ಬೆಸ್ಕಾಂ:ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲï, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲï, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು. +ಸೆಸ್ಕ್:ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು. +ಜೆಸ್ಕಾಂ:ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ. +ಹೆಸ್ಕಾಂ:ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್ , ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್‍ಲೈನ್ ಸೇವೆಗಳು ಲಭ್ಯವಿರುವುದಿಲ್ಲ. +ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿ ಹೊಂದಿದ ಮಾಹಿತಿ ತಂತ್ರಜ್ಞರ ತಂಡ 24×7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳಲಾಗುತ್ತಿದೆ. \ No newline at end of file diff --git a/eesanje/url_46_207_5.txt b/eesanje/url_46_207_5.txt new file mode 100644 index 0000000000000000000000000000000000000000..540f8bd6cf1dfb6a2311d511ceaec1609f7c8fd0 --- /dev/null +++ b/eesanje/url_46_207_5.txt @@ -0,0 +1,6 @@ +ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಶಂಕಿತನೊಬ್ಬನನ್ನು ವಶಕ್ಕೆ ಪಡೆದ ಎನ್‍ಐಎ +ಬೆಂಗಳೂರು, ಮಾ.13-ರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ತಿಳಿದವನು ಎಂದು ಭಾವಿಸಲಾದ ಬಳ್ಳಾರಿ ಕೌಲ್‍ಬಜಾರ್ ಪ್ರದೇಶದ ವಾಸಿ ಶಬ್ಬಿರ್ ಎಂಬಾತನನ್ನು ಆತನ ಪ್ರವಾಸದ ಇತಿಹಾಸದ ಆಧಾರದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. +ಎನ್‍ಐಎ ಅಧಿಕಾರಿಗಳು ಕಳೆದ ವಾರ ಸೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತ ಆರೋಪಿಯ ಭಾವಚಿತ್ರಗಳನ್ನು ಬಹಿರಂಗಪಡಿಸಿದರು. ಆತ ಎಲ್ಲೆಲ್ಲಿ ಸಂಚರಿಸಿದ್ದಾನೆ ಎಂಬ ಮಾಹಿತಿಗಳನ್ನು ಬೆನ್ನತ್ತಿದ್ದ ಎನ್‍ಐಎ ಅಧಿಕಾರಿಗಳು ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗೊಳಪಡಿಸಿದ್ದಾರೆ. +ಬಸ್ ನಿಲ್ದಾಣ ಹಾಗೂ ಆರೋಪಿ ಸಂಚರಿಸಿರುವ ರಸ್ತೆಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ಆತ ಬೆಂಗಳೂರು, ತುಮಕೂರು, ಬಳ್ಳಾರಿ, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಚರಿಸಿರುವ ಕುರುಹುಗಳು ದೊರೆತಿವೆ. ಮುಖ್ಯ ಆರೋಪಿಯ ಈ ಪ್ರವಾಸದ ಇತಿಹಾಸವನ್ನು ತಪಾಸಣೆಗೊಳಪಡಿಸುವಾಗ ಶಬ್ಬಿರ್ ಎಂಬಾತನ ಮೇಲೆ ಶಂಕೆ ವ್ಯಕ್ತವಾಗಿದೆ. ಈತನಿಗೆ ಬೆಂಗಳೂರು ಸೋಟದ ಬಗ್ಗೆ ಮಾಹಿತಿ ಇತ್ತು ಎಂಬ ಅಂಶಗಳು ಬಹಿರಂಗಗೊಂಡಿವೆ ಎಂದು ಹೇಳಲಾಗಿದೆ. +ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಶಂಕಿತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರ ಹೊರತಾಗಿಯೂ ಮುಖ್ಯ ಆರೋಪಿಯ ಬೆನ್ನತ್ತಿರುವ ತನಿಖಾಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಸೋಟದ ಪ್ರಮುಖ ಆರೋಪಿಯ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿದೆ. ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಬಾಂಬ್ ಸೋಟಿಸಲಾಗಿತ್ತು. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಇದು ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. +ಆರಂಭದಲ್ಲಿ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ ಸೋಟದಲ್ಲಿ ಭಾಗಿಯಾಗಿರುವ ದುಷ್ಕರ್ಮಿ ಯಾವುದೇ ಸುಳಿವು ದೊರೆಯದಂತೆ ಪೂರ್ವಯೋಜಿತ ಹುನ್ನಾರ ನಡೆಸಿರುವುದು ಕಂಡುಬಂದಿದೆ. ಹೀಗಾಗಿ ಘಟನೆ ನಡೆದು 13 ದಿನಗಳು ಕಳೆದರೂ ಪ್ರಮುಖ ಆರೋಪಿಯನ್ನು ಬಂಸಲು ಸಾಧ್ಯವಾಗಿಲ್ಲ. ಸಿಸಿಬಿ ಮತ್ತು ಎನ್‍ಐಎ ಅಧಿಕಾರಿಗಳು ಹಲವಾರು ತಂಡಗಳನ್ನು ರಚಿಸಿಕೊಂಡು ದುಷ್ಕರ್ಮಿಯನ್ನು ಎಡೆಮುರಿ ಕಟ್ಟಲು ಹಗಲಿರುಳು ಶ್ರಮಿಸುತ್ತಿದ್ದಾರೆ. \ No newline at end of file diff --git a/eesanje/url_46_207_6.txt b/eesanje/url_46_207_6.txt new file mode 100644 index 0000000000000000000000000000000000000000..0d2ee8ae21bfb16bec20277159ea87602d2ed1ae --- /dev/null +++ b/eesanje/url_46_207_6.txt @@ -0,0 +1,6 @@ +ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್, ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ +ಬೆಂಗಳೂರು,ಮಾ.12-ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕøತ ತುಟ್ಟಿಭತ್ಯೆಯು ಜನವರಿ 1ರಿಂದ ಪೂರ್ವಾನ್ವಯವಾಗಲಿದೆ. ಪರಿಷ್ಕøತ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಪಾವತಿ ಮಾಡಲಾಗುತ್ತದೆ. +ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವ, ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಈ ಪರಿಷ್ಕøತ ತುಟ್ಟಿಭತ್ಯೆ ದರವು ಅನ್ವಯವಾಗಲಿದೆ. +ನಿವೃತ್ತಿ ವೇತನದಾರರಿಗೂ ಜ.1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಿದ್ದು, ಮೂಲ ನಿವೃತ್ತಿ ವೇತನ, ಕುಟುಂಬ ನಿವೃತ್ತಿ ವೇತನದ ಶೇ.38.75ರಿಂದ ಶೇ.42.5ಕ್ಕೆ ಹೆಚ್ಚಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತಿ ವೇತನದಾರರಿಗೂ ಈ ಆದೇಶ ಅನ್ವಯವಾಗಲಿದೆ. ಜಿಲ್ಲ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‍ಚಾರ್ಜ್ ನೌಕರರಿಗೂ ಹಾಗೂ ಸರ್ಕಾರದಿಂದ ಸಹಾಯ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಕಾಲಿಕ ವೇತನ ಶ್ರೇಣಿಯಲ್ಲಿರುವ ಪೂರ್ಣಾವ ನೌಕರರಿಗೂ ಈ ಆದೇಶ ಅನ್ವಯಿಸಲಿದೆ. +ಆದರೆ ಯು.ಜಿ.ಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‍ಜೆಪಿಸಿ ವೇತನಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ. +ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು ಮಾರ್ಚ್ ತಿಂಗಳ ವೇತನ ಬಟವಾಡೆಗೂ ಮೊದಲು ಪಾವತಿ ಮಾಡುವಂತಿಲ್ಲ. ಈ ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನವೆಂದು ಪರಿಗಣಿಸುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. diff --git a/eesanje/url_46_207_7.txt b/eesanje/url_46_207_7.txt new file mode 100644 index 0000000000000000000000000000000000000000..b15d2a5d3b9de262cbc7c69ed92e52de2fb1b4b4 --- /dev/null +++ b/eesanje/url_46_207_7.txt @@ -0,0 +1,7 @@ +ದಾಬಸ್‌ಪೇಟೆ ಕೈಗಾರಿಕಾ ಪ್ರದೇಶಗಳಿಗೆ ವಿದ್ಯುತ್ ಕಂಟಕ +ಬೆಂಗಳೂರು,ಮಾ.12- ಸಾವಿರಾರು ಕೋಟಿ ವಹಿವಾಟು ನಷ್ಟ, ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗುತ್ತಿರುವ ಯಂತ್ರೋಪಕರಣಗಳು, ಅಧಿಕಾರಿಗಳ ನಿರ್ಲಕ್ಷ್ಯ, ಹೇಳುವವರು, ಕೇಳುವವರಿಲ್ಲದ ಪರಿಸ್ಥಿತಿ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಪ್ರತಿದಿನ ಕಂಡುಬರುತ್ತಿರುವ ದೃಶ್ಯಗಳು. +ಎಂಎಸ್ಎನ್ಇಗಳು ಸೇರಿದಂತೆ ದೊಡ್ಡ ಪ್ರಮಾಣದ ಕೈಗಾರಿಕೆಗಳು ದಾಬಸ್‌ಪೇಟೆ ಕೈಗಾರಿಕಾ ವಲಯದಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತವೆ, ಸಾವಿರಾರು ಕೋಟಿ ವಹಿವಾಟು ನಡೆಯುತ್ತದೆ, ಲಕ್ಷಾಂತರ ಕಾರ್ಮಿಕರು ಕೆಲಸ ನಿರ್ವಹಿಸುತ್ತಾರೆ. +ಆದರೆ ಪ್ರತಿದಿನ 6 ರಿಂದ 7 ಬಾರಿ ಕರೆಂಟ್ ಕಟ್ ಮಾಡುವ ಮೂಲಕ ಕೈಗಾರಿಕೆಗಳಿಗೆ ಭಾರೀ ಪ್ರಮಾಣದ ಹೊಡೆತ ಬೀಳುತ್ತಿದೆ. ಏಕಾಏಕಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಕಟ್ ಆಗುವುದರಿಂದ ಕೋಟ್ಯಂತರ ಬೆಲೆ ಬಾಳುವ ಯಂತ್ರೋಪಕರಣಗಳಿಗೆ ಹಾನಿಯಾಗುತ್ತದೆ. ವಿದ್ಯುತ್ ಕಡಿತದ ಬಗ್ಗೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಸಮಸ್ಯೆಯನ್ನು ಕೇಳಿಸಿಕೊಳ್ಳುವ ವ್ಯವಧಾನವೂ ಇಲ್ಲ. ಕೈಗಾರಿಕೆಗಳ ಪರಿಸ್ಥಿತಿ ಆಲಿಸುವ ದಯೆ, ಕರುಣೆ ಯಾವುದೂ ಕೂಡ ಅಧಿಕಾರಿಗಳಿಗೆ, ಇಲಾಖೆಗೆ ಇದ್ದಂತೆ ಇಲ್ಲ. +ಈ ಪರಿಸ್ಥಿತಿಯ ವಿರುದ್ಧ ಹಲವು ಕೈಗಾರಿಕೋದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕೈಗಾರಿಕೋದ್ಯಮ ಯಶಸ್ವಿಯಾಗಬೇಕಾದರೆ ಮೂಲಭೂತ ಸೌಕರ್ಯಗಳು ಅಗತ್ಯ. ನೀರು, ವಿದ್ಯುತ್, ಮಾನವ ಸಂಪನ್ಮೂಲ ಇರಬೇಕು. ಆದರೆ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ನ ಸಮಸ್ಯೆ ಅಗಾಧವಾಗಿ ಕಾಡುತ್ತಿದೆ. +ಇದರಿಂದ ಉತ್ಪಾದನಾ ವಲಯದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ರೀತಿಯಾದರೆ ಕೈಗಾರಿಕೋದ್ಯಮಿಗಳು ಇಲ್ಲಿಂದ ಸ್ಥಳಾಂತರ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಸ್ಯೆಗಳನ್ನು ಪರಿಹರಿಸಿ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಟ್ಟರೆ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಯಾಗುತ್ತದೆ. ಆದರೆ ಸಮಸ್ಯೆ ಆಲಿಸಬೇಕಾದವರಿಗೆ ಕಣ್ಣು, ಕಿವಿ, ದಯಾ, ದಾಕ್ಷಿಣ್ಯ ಯಾವುದೂ ಇಲ್ಲದಿದ್ದರೆ ಯಾರು ಕೈಗಾರಿಕಾ ಸ್ಥಾಪನೆ ಮಾಡುತ್ತಾರೆ? ಬಂಡವಾಳ ಹೂಡಲು ಮುಂದೆ ಬರುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ. +ಬೇಸಿಗೆ ಸಂದರ್ಭದಲ್ಲಿ ಸ್ವಲ್ಪ ವಿದ್ಯುತ್ ಸಮಸ್ಯೆ ಇರುತ್ತದೆ. ಕೈಗಾರಿಕೋದ್ಯಮಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕಾಗಿರುವುದು ಪ್ರಭುತ್ವದ ಜವಾಬ್ದಾರಿ. ಆದರೆ ವ್ಯವಸ್ಥೆ ಕಲ್ಪಿಸುವುದಿರಲಿ, ಸಮಸ್ಯೆ ಆಲಿಸುವ ಸಂಯಮ ತೋರಿಸದೇ ಇರುವುದು ಎಷ್ಟು ಸಮಂಜಸ, ವಿದ್ಯುತ್ ದರ ಹೆಚ್ಚಳ ಮಾಡಿರುವುದಲ್ಲದೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿರುವುದು ಕೂಡ ಕೈಗಾರಿಕೋದ್ಯಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. \ No newline at end of file diff --git a/eesanje/url_46_207_8.txt b/eesanje/url_46_207_8.txt new file mode 100644 index 0000000000000000000000000000000000000000..677c339cd659c3d8cabeaeeda1b9cdfed6be599d --- /dev/null +++ b/eesanje/url_46_207_8.txt @@ -0,0 +1,7 @@ +ರಾಮೇಶ್ವರಂ ಕೆಫೆ ಬಾಂಬರ್ ಕುರಿತ ಅಚ್ಚರಿಯ ಮಾಹಿತಿ ಬಹಿರಂಗ +ಬೆಂಗಳೂರು,ಮಾ.12- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ್ದ ಬಾಂಬರ್ ಮೂಲತಃ ಕರಾವಳಿ ಮೂಲದ ವ್ಯಕ್ತಿಯಾಗಿದ್ದು ಆತನಿಗೆ ರಾಜ್ಯ ರಾಜಧಾನಿ ಬೆಂಗಳೂರಿನ ಬಗ್ಗೆ ಇಂಚಿಂಚೂ ಮಾಹಿತಿಯೂ ತಿಳಿದಿತ್ತು. ಹೀಗಾಗಿಯೇ ಆತ ಯಾರಿಗೂ ಸುಳಿವು ನೀಡದಂತೆ ನಗರದಿಂದ ತಲೆಮರೆಸಿಕೊಳ್ಳಲು ಸಾಧ್ಯವಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ. +ಬೆಂಗಳೂರಿನ ಆಳ ಅಗಲ ಚೆನ್ನಾಗಿ ಬಲ್ಲವನ್ನಾಗಿದ್ದ ಬಾಂಬರ್ ಮೂಲತಃ ಕರಾವಳಿ ಮೂಲದವನಾಗಿದ್ದು, ಕೆಲ ವರ್ಷಗಳ ಹಿಂದೆ ರಾಜ್ಯ ತೊರೆದು ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ ಮತ್ತಿತರ ರಾಜ್ಯಗಳಲ್ಲಿ ಆಸ್ತವ್ಯ ಹೂಡಿದ್ದ ಎಂಬುದು ತನಿಖೆಯಲ್ಲಿ ಬಹಿರಂಗಗೊಂಡಿದೆ. +ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಡುವ ದಿನ ಬಾಂಬರ್ ಚೆನ್ನೈನಿಂದ ತಿರುಪತಿ ರೈಲಿನಲ್ಲಿ ಬೆಂಗಳೂರಿಗೆ ಬಂದು ಬಾಂಬ್ ಸ್ಪೋಟಿಸಿ ನಂತರ ಬಿಎಂಟಿಸಿ ಬಸ್ನಲ್ಲಿ ರಾಜಾಜಿನಗರದ ಸುಜಾತ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕೆಎಸ್ಆರ್ಟಿಸಿ ಬಸ್ನಲ್ಲಿ ತುಮಕೂರಿಗೆ ತೆರಳಿ ಅಲ್ಲಿಂದ ಬಳ್ಳಾರಿ ಹಾಗೂ ಹೈದ್ರಾಬಾದ್ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಸಂಚರಿಸಿ ನಂತರ ಆತ ಹೈದ್ರಾಬಾದ್ಗೆ ತೆರಳಿ ತಲೆಮರೆಸಿಕೊಂಡಿದ್ದಾನೆ ಎಂಬುದು ಎನ್ಐಗೆ ಗೊತ್ತಾಗಿದೆ. +ರಾಜ್ಯದಲ್ಲಿ ಇದುವರೆಗೂ ಕುಕ್ಕರ್ ಹಾಗೂ ಟಿಫಿನ್ ಬಾಕ್ಸ್ ಬಾಂಬ್ಗಳನ್ನು ಸ್ಪೋಟಿಸಲಾಗಿತ್ತು. ಆದರೆ, ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವುದು ಸಿಲ್ವರ್ ಪ್ಲಾಸ್ಟಿಕ್ ಬಾಂಬ್ ಆಗಿರುವುದು ವಿಶೇಷವಾಗಿದೆ. ಇದೇ ಮೊದಲ ಬಾರಿಗೆ ಹೊಸ ಮಾದರಿಯ ಬಾಂಬ್ ಸ್ಪೋಟಿಸಿರುದರಿಂದ ಬಾಂಬರ್ ಐಸಿಸ್ ಉಗ್ರರ ಅಣತಿ ಮೇರೆಗೆ ಈ ಕೃತ್ಯ ನಡೆಸಿದ್ದಾನೆ ಎನ್ನುವುದು ತಿಳಿದುಬಂದಿದೆ. +ಐಸಿಸ್ ಉಗ್ರ ಸಂಘಟನೆಯಿಂದ ಪ್ರೇರಿಪಿತಗೊಂಡಿದ್ದ ಬಾಂಬರ್ ಆ ಸಂಘಟನೆಯಿಂದ ತರಬೇತಿ ಪಡೆದ ನಂತರವೇ ರಾಮೇಶ್ವರಂ ಕೆಫೆಯಲ್ಲಿ ಸಿಲ್ವರ್ ಪ್ಲಾಸ್ಟಿಕ್ ಮಾದರಿಯ ಬಾಂಬ್ ಸ್ಪೋಟಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಾಂಬ್ ಸ್ಪೋಟಕ್ಕೂ ಮುನ್ನ ಬಾಂಬರ್ ಶಿವನಸಮುದ್ರ, ಗುಂಡ್ಲುಪೇಟೆ, ತಮಿಳುನಾಡಿನ ಕೃಷ್ಣಗಿರಿ ಹಾಗೂ ಕೇರಳ ಗಡಿಭಾಗದ ಅರಣ್ಯಪ್ರದೇಶಗಳಲ್ಲಿ ತರಬೇತಿ ಪಡೆದಿರುವುದು ತನಿಖೆ ವೇಳೆ ಬಯಲಾಗಿದೆ. +ಚಾಣಕ್ಷ ಬಾಂಬರ್ ಇದೀಗ ಹೈದ್ರಾಬಾದ್ ಸುತ್ತಮುತ್ತಲ ಪ್ರದೇಶಗಳಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇರುವುದರಿಂದ ಆಂಧ್ರ, ತೆಲಂಗಾಣ, ತಮಿಳುನಾಡು ಹಾಗೂ ಕೇರಳದಲ್ಲಿ ಬೀಡುಬಿಟ್ಟಿರುವ ಎನ್ಐಎ ಅಧಿಕಾರಿಗಳು ಆತನ ಬಂಧನಕ್ಕೆ ಜಾಲ ಬೀಸಿದ್ದಾರೆ. \ No newline at end of file diff --git a/eesanje/url_46_207_9.txt b/eesanje/url_46_207_9.txt new file mode 100644 index 0000000000000000000000000000000000000000..5a09d45ed40ef64838ddc1b05d33ac0de4e6efe6 --- /dev/null +++ b/eesanje/url_46_207_9.txt @@ -0,0 +1,6 @@ +ಮಧು ಮತ್ತು ಕುಮಾರ್ ಬಂಗಾರಪ್ಪ ಒಂದಾಗ್ತಾರಾ..? : ಶಿವಣ್ಣ ಹೇಳೋದೇನು..? +ಬೆಳಗಾವಿ,ಮಾ.12- ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಅವರಾಗಿಯೇ ಒಂದಾಗಬೇಕೆ ಹೊರತು ನಾನು ಒಂದು ಮಾಡಲು ಆಗುವುದಿಲ್ಲ ಎಂದು ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ. ನಾನು ಬಂಗಾರಪ್ಪ ಅವರ ಅಳಿಯ, ಮಗನಲ್ಲ. ಅವರ ನಡುವಿನ ಹೊಂದಾಣಿಕೆ ಮಾಡಲು ನಾನ್ಯಾರು ಎಂದು ಪ್ರಶ್ನಿಸಿದರು. +ಈ ಬಾರಿ ತಮ್ಮ ಪತ್ನಿ ಗೀತಾ ಶಿವರಾಜ್‍ಕುಮಾರ್‍ರವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ರ್ಪಧಿಸುತ್ತಿದ್ದಾರೆ. ನಾನು ಅವರಿಗೆ ಹೆಚ್ಚು ಬೆಂಬಲ ನೀಡಬೇಕಿದೆ. ಹೀಗಾಗಿ ಚುನಾವಣೆ ಪ್ರಚಾರದಲ್ಲಿ ಭಾಗವಹಿಸುತ್ತೇನೆ ಎಂದರು. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದೆ. ಈ ಬಾರಿ ಗೀತಾ ಶಿವರಾಜ್‍ಕುಮಾರ್‍ರ ಪರವಾಗಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ. ಇದರ ನಡುವೆ ಚಿತ್ರೀಕರಣದ ಸಮಯ ನೋಡಿಕೊಂಡು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು. +ಗೀತಾ ಅವರ ಚುನಾವಣಾ ಪ್ರಚಾರಕ್ಕೆ ಬೇರೆ ಚಿತ್ರನಟರನ್ನು ಕರೆತರುವುದರ ಬಗ್ಗೆ ನಾವು ಯಾರನ್ನೂ ಬಲವಂತ ಮಾಡುವುದಿಲ್ಲ. ಈ ಬಾರಿ ಬಿಸಿಲು ಹೆಚ್ಚಿದೆ. ಹೀಗಾಗಿ ಎಲ್ಲರಿಗೂ ಅವರದೇ ಆದ ಕೆಲಸ ಕಾರ್ಯದೊತ್ತಡಗಳಿರುತ್ತವೆ. ನಮ್ಮ ಸ್ನೇಹ ಸಂಬಂಧವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು. +ಗೀತಾ ಅವರು ಈ ಬಾರಿ ಗೆಲುವು ಕಾಣುವ ವಿಶ್ವಾಸವಿದೆ. ಇದನ್ನು ಹೊರತುಪಡಿಸಿದಂತೆ ತಾವು ರಾಜಕೀಯವಾಗಿ ಬೇರೆ ವಿಚಾರಗಳನ್ನು ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_208_1.txt b/eesanje/url_46_208_1.txt new file mode 100644 index 0000000000000000000000000000000000000000..a47a36406387ef54e5bb51ac7998c557a1540421 --- /dev/null +++ b/eesanje/url_46_208_1.txt @@ -0,0 +1,7 @@ +ನಾಶಿಪುಡಿ ಬಂಧನಕ್ಕೂ ಬ್ಯಾಡಗಿ ಗಲಭೆ ಪ್ರಕರಣಕ್ಕೂ ಸಂಬಂಧವಿಲ್ಲ : ಗೃಹಸ ಚಿವ ಪರಮೇಶ್ವರ್ +ಬೆಂಗಳೂರು,ಮಾ.12- ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿನ ಹಿಂಸಾಚಾರ ಹಾಗೂ ದರ ಕುಸಿತ ಕುರಿತಂತೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ವಿಂಟಾಲ್‍ಗೆ 20 ಸಾವಿರ ರೂ.ಗಳಿದ್ದ ಮೆಣಸಿನಕಾಯಿಯ ದರ ಏಕಾಏಕಿ 8 ಸಾವಿರಕ್ಕೆ ಕುಸಿದಿದೆ. ಇದರಿಂದ ನಷ್ಟಕ್ಕೊಳಗಾಗುವ ಆತಂಕದಲ್ಲಿ ರೈತರು ಸಹಜವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಏಕಾಏಕಿ ಆ ಪ್ರಮಾಣದಲ್ಲಿ ಧಾರಣೆ ಕುಸಿಯಲು ಯಾರು ಕಾರಣ ಎಂಬುದನ್ನು ತನಿಖೆ ನಡೆಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು. +ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಏಷ್ಯಾದಲ್ಲೇ ದೊಡ್ಡದಾಗಿದೆ. ಅಲ್ಲಿಗೆ ರಾಜ್ಯ ಹಾಗೂ ಆಂಧ್ರ ಪ್ರದೇಶದ ರೈತರು, ವರ್ತಕರು ಬರುತ್ತಾರೆ. ಗಲಾಟೆ ಯಾರು ಮಾಡಿದರು, ಬೆಂಕಿ ಯಾರು ಹಚ್ಚಿದ್ದು ಎಂಬ ವಿಚಾರಣೆ ನಡೆಯುತ್ತಿದೆ, ಪೊಲೀಸರು ಈವರೆಗೂ 45 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದರು. +ಆರೇಳು ವಾಹನಗಳನ್ನು ಸುಟ್ಟುಹಾಕಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ವಾಹನಕ್ಕೂ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ತಮಗೂ ತುಂಬಾ ಬೇಸರವಾಗಿದೆ ಎಂದು ಹೇಳಿದರು.ಗಲಾಟೆಗೆ ಯಾರು ಕಾರಣ ಅಥವಾ ದರ ಕುಸಿತದ ಹಿಂದೆ ಸಂಚಿದೆಯೇ ಎಂಬುದನ್ನು ಪತ್ತೆ ಹಚ್ಚಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ತಿಳಿಸಿದರು. +ಮೆಣಸಿನಕಾಯಿ ಧಾರಣೆಯನ್ನು ಎಪಿಎಂಸಿಯವರೇ ನಿಯಂತ್ರಿಸುತ್ತಿದ್ದರು. ಇದ್ದಕ್ಕಿದ್ದಂತೆ ದರ ಕುಸಿಯಲು ಏನು ಕಾರಣ ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದರು.ಇತ್ತೀಚೆಗೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ಯಾಡಗಿ ಮೂಲದ ಆರೋಪಿ ನಾಶಿಪುಡಿ ಎಂಬುವರನ್ನು ಬಂಧಿಸಿರುವುದಕ್ಕೂ, ಈ ಗಲಭೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹಸಚಿವರು ಸ್ಪಷ್ಟಪಡಿಸಿದರು.ಮೆಣಸಿನಕಾಯಿ ದರ ನಿಗದಿಗೆ ಮತ್ತೆ ಇಂದು ಮರು ಟೆಂಡರ್ ನಡೆಸಲಾಗುವುದು. ಎಪಿಎಂಸಿ ಯಥಾಸ್ಥಿತಿಯಲ್ಲಿಯೇ ಕಾರ್ಯಾಚರಣೆ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದ ಆರೋಪಿ ಬಗ್ಗೆ ನಾನಾ ರೀತಿಯ ವದಂತಿಗಳು ಹರಡುತ್ತಿವೆ. ಆರೋಪಿಯನ್ನು ಬಂಧಿಸುವವರೆಗೂ ಯಾವುದೂ ಖಚಿತವಲ್ಲ. ತನಿಖಾಧಿಕಾರಿಗಳು ಶೀಘ್ರವೇ ಬಾಂಬರ್‍ನನ್ನು ಬಂಧಿಸಲಿದ್ದಾರೆ ಎಂದು ಅವರು ತಿಳಿಸಿದರು. +ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿರುವುದರ ಹಿಂದೆ ರಾಜಕೀಯದ ಉದ್ದೇಶವಿದೆ ಎಂಬುದು ಒಂದು ವಾದ. ಆದರೆ, ಅದರಲ್ಲಿ ಯಾವ ನಿಯಮಗಳಿವೆ ಎಂದು ನೋಡದ ಹೊರತು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದರು. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಾಂತರಾಜು ವರದಿ ಪ್ರಸ್ತಾಪವಾಗಲಿದೆಯೋ, ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಕಾಂಗ್ರೆಸ್‍ನ 21 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ನಿನ್ನೆ ರಾಜ್ಯ ಸ್ಕ್ರೀನಿಂಗ್ ಸಮಿತಿ ಸಭೆ ನಡೆದಿದೆ. ಇಂದೂ ಕೂಡ ಚರ್ಚೆಗಳು ಮುಂದುವರೆದಿವೆ. ನಮ್ಮಲ್ಲಿ ಅಭ್ಯರ್ಥಿಗಳ ಕೊರತೆಯಿಲ್ಲ. ಹೆಚ್ಚು ಮಂದಿ ಆಕಾಂಕ್ಷಿಗಳಿದ್ದಾರೆ. ಸಹಜವಾಗಿ ಎಲ್ಲಾ ಪಕ್ಷಗಳಲ್ಲಿರುವಂತೆ ನಮ್ಮಲ್ಲೂ ಗೊಂದಲಗಳಿವೆ. ಶೀಘ್ರವೇ ಅದನ್ನು ನಾಯಕರು ಬಗೆಹರಿಸುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_208_10.txt b/eesanje/url_46_208_10.txt new file mode 100644 index 0000000000000000000000000000000000000000..42866eba6053e20e354427dad982627c853a3ace --- /dev/null +++ b/eesanje/url_46_208_10.txt @@ -0,0 +1,7 @@ +ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆಗೆ ಎಚ್‍ಡಿಕೆ ಮಹತ್ವದ ಮಾತುಕತೆ +ಬೆಂಗಳೂರು,ಮಾ.11- ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆ, ಕಾರ್ಯತಂತ್ರ, ಪ್ರಚಾರ, ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾಳೆ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ವಿಚಾರವನ್ನು ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸಲಿದ್ದಾರೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್‍ಗೆ ನಾಲ್ಕು ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಡಲಿದೆ ಎಂದು ಹೇಳಲಾಗುತ್ತಿದೆ. ಹಾಸನ, ಮಂಡ್ಯ, ಕೋಲಾರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈಗಾಗಲೇ ಸಮ್ಮತಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ತುಮಕೂರು ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಜೆಪಿ ಬಿಟ್ಟುಕೊಡುವ ನಿರೀಕ್ಷೆ ಇದೆ ಎನ್ನಲಾಗಿದೆ. +ಇಂದು ನವದೆಹಲಿಯಲ್ಲಿ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುವ ಸಾಧ್ಯತೆಯಿದ್ದು, ಇದಾದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರು ಕುಮಾರಸ್ವಾಮಿಯವರಿಗೆ ಮಾತುಕತೆಗೆ ಆಹ್ವಾನ ನೀಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಈಗಾಗಲೇ ಕುಮಾರಸ್ವಾಮಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಹಲವು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ. +ಈ ಬಾರಿ ಚುನಾವಣಾ ಪೂರ್ವ ಮೈತ್ರಿ ವಿಚಾರ ಅಂತಿಮಗೊಳ್ಳಲಿದೆ. ಉಭಯ ಪಕ್ಷಗಳ ಅಭ್ಯರ್ಥಿ ಆಯ್ಕೆ ವಿಚಾರ, ಎನ್‍ಡಿಎ ಅಭ್ಯರ್ಥಿಗಳ ಪರವಾಗಿ ಜಂಟಿ ಪ್ರಚಾರ, ಕಾಂಗ್ರೆಸ್ ಮಣಿಸಲು ಉಭಯ ಪಕ್ಷಗಳು ಕೈಗೊಳ್ಳಬೇಕಿರುವ ಕಾರ್ಯತಂತ್ರ ಮೊದಲಾದ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. +ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ ಬಳಿಕ ರಾಜ್ಯದಲ್ಲಿ ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಕುಮಾರಸ್ವಾಮಿ ಪ್ರಕಟಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿಯೊಂದಿಗಿನ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಕುಮಾರಸ್ವಾಮಿಯವರಿಗೆ ವಹಿಸಿದ್ದಾರೆ. +ಅದರಂತೆ ಕುಮಾರಸ್ವಾಮಿ ಈಗಾಗಲೇ ಕ್ಷೇತ್ರವಾರು ಪಕ್ಷದ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ. ಚುನಾವಣಾ ಪೂರ್ವ ತಯಾರಿ ಸಂದರ್ಭದಲ್ಲಿ ವ್ಯಕ್ತವಾದ ಅಭಿಪ್ರಾಯದ ಸಾರಾಂಶವನ್ನು ಬಿಜೆಪಿ ನಾಯಕರ ಗಮನಕ್ಕೂ ತರಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_208_11.txt b/eesanje/url_46_208_11.txt new file mode 100644 index 0000000000000000000000000000000000000000..9899ccd802f853526a87464308789b485362d102 --- /dev/null +++ b/eesanje/url_46_208_11.txt @@ -0,0 +1,4 @@ +ತೋಟದ ಮನೆಯ ತಲೆ ಬುರುಡೆಗಳನ್ನಿಟ್ಟು ಪೂಜೆ ಮಾಡುತ್ತಿದ್ದ ವ್ಯಕ್ತಿ ವಶಕ್ಕೆ +ಬಿಡದಿ ,ಮಾ.11- ಸ್ಮಶಾನದಲ್ಲಿ ಪೂಜೆ ಮಾಡಿ ತೋಟದ ಮನೆಯೊಂದರಲ್ಲಿ ತಲೆ ಬುರುಡೆಗಳನಿಟ್ಟುಕೊಂಡಿದ್ದ ಇಲ್ಲಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನವರ ತಲೆಬುರುಡೆಗಳು ಪತ್ತೆಯಾಗಿದ್ದು ಈ ಸಂಬಂಧ ಬಲರಾಮ್ ಎಂಬ ವ್ಯಕ್ತಿ ವಶಕ್ಕೆ ಪಡೆದಿದ್ದಾರೆ. +ಕಳೆದ ರಾತ್ರಿ ಸ್ಮಶಾನದಲ್ಲಿ ಯಾರೂ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್‍ಹೊರಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ತಲೆ ಬುರುಡೆ ಸಂಗ್ರಹ ಮಾಡುತ್ತಿರುವ ಗಂಬೀರ ಆರೋಪ ಕೇಳಿ ಬಂದಿದೆ. ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. +ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿದಾಗ ತನ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದು ವಿಚಾರಣೆ ಮುಂದುವರೆದಿದೆ. \ No newline at end of file diff --git a/eesanje/url_46_208_12.txt b/eesanje/url_46_208_12.txt new file mode 100644 index 0000000000000000000000000000000000000000..f50b5fc0a1275be25c54775ab10c0719a13c00b4 --- /dev/null +++ b/eesanje/url_46_208_12.txt @@ -0,0 +1,6 @@ +ನಾಳೆ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಸಂಭವ +ಬೆಂಗಳೂರು,ಮಾ.11- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ವಿವಾದವಿಲ್ಲದ ಕ್ಷೇತ್ರ, ಎಲ್ಲಿ ಹಾಲಿಗಳಿಗೆ ಮತ್ತೊಮ್ಮೆ ಅವಕಾಶ ನೀಡಲು ನಿರ್ಧರಿಸಲಾಗಿದೆಯೋ ಅವರ ಹೆಸರುಗಳು ನಾಳೆ ಪಟ್ಟಿಯಲ್ಲಿ ಪ್ರಕಟಗೊಳ್ಳಲಿವೆ. ಸಂಜೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಷಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಂಬಂಧ ಸಭೆ ನಡೆಯಲಿದ್ದು, ಬಹುತೇಕ ನಾಳೆಯೇ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಎರಡು ಹಂತದಲ್ಲಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲು ನಿರ್ಧರಿಸಿದ್ದು, ನಾಳೆ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ. ಮೊದಲ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಪರ್ಧೆ ಮಾಡಲಿರುವ ಸಂಸದರ ಹೆಸರು, ವಿವಾದವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಕೇಂದ್ರ ಸಚಿವರಾಗಿರುವ ರಾಜ್ಯಸಭಾ ಸದಸ್ಯರ ಸ್ಪರ್ಧೆಗೆ ಅವಕಾಶ ನೀಡಿದರೆ ಅವರ ಹೆಸರು ಇರಲಿದೆ ಎನ್ನಲಾಗಿದೆ. +ಈ ಬಾರಿಯ ಪಟ್ಟಿಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಯಡಿಯೂರಪ್ಪ ಮೇಲುಗೈ ಸಾಧಿಸಲಿದ್ದಾರೆ ಎನ್ನಲಾಗಿದೆ. ಗೋ ಬ್ಯಾಕ್ ಅಭಿಯಾನದ ನಡುವೆಯೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ದಾವಣಗೆರೆಯಲ್ಲಿ ಎಂ.ಪಿ. ರೇಣುಕಾಚಾರ್ಯ, ಬೀದರ್‍ನಲ್ಲಿ ಭಗವಂತ ಖೂಬಾ, ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ, ಮೈಸೂರಿನಲ್ಲಿ ಪ್ರತಾಪ್ ಸಿಂಹ, ದಕ್ಷಿಣ ಕನ್ನಡದಿಂದ ನಳಿನ್ ಕುಮಾರ್ ಕಟೀಲ್, ಹಾವೇರಿಯಿಂದ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಪರ ಯಡಿಯೂರಪ್ಪ ಬಲವಾಗಿ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. + +ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ:ಬೆಂಗಳೂರು ಉತ್ತರ – ನಿರ್ಮಲಾ ಸೀತಾರಾಮನ್/ ಡಿ.ವಿ.ಸದಾನಂದ ಗೌಡ/ ಸಿ.ಟಿ.ರವಿಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯಬೆಂಗಳೂರು ಸೆಂಟ್ರಲ್ – ಜೈಶಂಕರ್/ಪಿ.ಸಿ.ಮೋಹನ್ಬೆಂಗಳೂರು ಗ್ರಾಮಾಂತರ – ಡಾ.ಸಿ.ಎನ್.ಮಂಜುನಾಥ್/ಸಿ.ಪಿ.ಯೋಗೀಶ್ವರ್ಬೆಳಗಾವಿ – ಜಗದೀಶ್ ಶೆಟ್ಟರ್/ಮಂಗಳಾ ಅಂಗಡಿಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿಬೀದರ್ – ಭಗವಂತ್ ಖೂಬಾಕಲಬುರಗಿ – ಉಮೇಶ್ ಜಾಧವ್ವಿಜಯಪುರ – ರಮೇಶ್ ಜಿಗಜಿಣಗಿ/ಗೋವಿಂದ ಕಾರಜೋಳಬಾಗಲಕೋಟೆ – ಪಿ.ಸಿ.ಗದ್ದಿಗೌಡರ್ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿ.ವಿ.ನಾಯಕಕೊಪ್ಪಳ – ಸಂಗಣ್ಣ ಕರಡಿ / ಡಾ.ಬಸವರಾಜ್ ಕ್ಯಾವಟರ್ಹುಬ್ಬಳ್ಳಿ ಧಾರವಾಡ – ಪ್ರಹ್ಲಾದ್ ಜೋಶಿಹಾವೇರಿ – ಬಸವರಾಜ ಬೊಮ್ಮಾಯಿ/ಕೆ.ಇ.ಕಾಂತೇಶ್/ಜಗದೀಶ್ ಶೆಟ್ಟರ್/ಬಿ.ಸಿ.ಪಾಟೀಲ್ಬಳ್ಳಾರಿ – ಬಿ.ಶ್ರೀರಾಮುಲುದಕ್ಷಿಣ ಕನ್ನಡ – ನಳಿನ್ ಕುಮಾರ್ ಕಟೀಲ್/ನಿರ್ಮಲಾ ಸೀತಾರಾಮನ್/ಕ್ಯಾ.ಬ್ರಿಜೇಶ್ ಚೌಟಉತ್ತರ ಕನ್ನಡ – ಅನಂತ ಕುಮಾರ್ ಹೆಗ್ಡೆ/ವಿಶ್ವೇಶ್ವರ ಹೆಗಡೆ ಕಾಗೇರಿಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆ/ಸಿ.ಟಿ.ರವಿಶಿವಮೊಗ್ಗ – ಬಿ.ವೈ.ರಾಘವೇಂದ್ರಚಿತ್ರದುರ್ಗ – ಎ ನಾರಾಯಣಸ್ವಾಮಿ/ಮಾದಾರ ಚನ್ನಯ್ಯ ಸ್ವಾಮೀಜಿದಾವಣಗೆರೆ – ಜಿ.ಎಂ.ಸಿದ್ದೇಶ್ವರ್/ಎಂ.ಪಿ.ರೇಣುಕಾಚಾರ್ಯತುಮಕೂರು – ವಿ.ಸೋಮಣ್ಣ/ಜೆಸಿ ಮಾಧುಸ್ವಾಮಿಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್/ಅಲೋಕ್ ವಿಶ್ವನಾಥ್ಮೈಸೂರು – ಪ್ರತಾಪ್ ಸಿಂಹಚಾಮರಾಜನಗರ – ಡಾ.ಮೋಹನ್ ಕುಮಾರ್ / ಎಸ್ ಬಾಲರಾಜ್ಮಂಡ್ಯ – ಜೆಡಿಎಸ್‍ಗೆ ಹಂಚಿಕೆ ಸಾಧ್ಯತೆಕೋಲಾರ – ಜೆಡಿಎಸ್‍ಗೆ ಹಂಚಿಕೆ ಸಾಧ್ಯತೆಹಾಸನ – ಜೆಡಿಎಸ್‍ಗೆ ಹಂಚಿಕೆ ಸಾಧ್ಯತೆ diff --git a/eesanje/url_46_208_2.txt b/eesanje/url_46_208_2.txt new file mode 100644 index 0000000000000000000000000000000000000000..b91bc4a0abd0fef7943509b9c4943e7d1b8ae3cb --- /dev/null +++ b/eesanje/url_46_208_2.txt @@ -0,0 +1,4 @@ +8 ಬಾಂಗ್ಲಾ ಪ್ರಜೆಗಳ ಬಂಧನ +ಥಾಣೆ, ಮಾ 12 (ಪಿಟಿಐ) ಅಕ್ರಮವಾಗಿ ಭಾರತದಲ್ಲಿ ತಂಗಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ನವಿ ಮುಂಬೈ ಟೌನ್‍ಶಿಪ್‍ನಿಂದ ಎಂಟು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಸುಳಿವಿನ ಮೇರೆಗೆ ನವಿ ಮುಂಬೈ ಪೊಲೀಸರ ಮಾನವ ಕಳ್ಳಸಾಗಣೆ ವಿರೋಧಿ ಘಟಕ ಬೇಲಾಪುರ ಪ್ರದೇಶದ ಶಹಬಾಜ್ ಗ್ರಾಮದ ವಸತಿ ಸಮುಚ್ಚಯದಲ್ಲಿರುವ ಫ್ಲಾಟ್ ಮೇಲೆ ದಾಳಿ ನಡೆಸಿತು. +20 ರಿಂದ 40 ವರ್ಷ ವಯಸ್ಸಿನ ಬಾಂಗ್ಲಾದೇಶದ ಐವರು ಮಹಿಳೆಯರು ಮತ್ತು ಮೂವರು ಪುರುಷರು ಕಳೆದ ನಾಲ್ಕು ವರ್ಷಗಳಿಂದ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ತಂಗಿರುವುದು ಸಾಬೀತಾಗಿದೆ ಎಂದು ಎನ್‍ಆರ್‍ಐ ಸಗ್ರಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. +ಎಂಟು ವ್ಯಕ್ತಿಗಳನ್ನು ಬಂಧಿಸಿ ಪಾಸ್‍ಪೋರ್ಟ್ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_46_208_3.txt b/eesanje/url_46_208_3.txt new file mode 100644 index 0000000000000000000000000000000000000000..b0c8b82ed1349e4d0a913dd60ae51fa4f4be51ac --- /dev/null +++ b/eesanje/url_46_208_3.txt @@ -0,0 +1,2 @@ +ಸುರ್ಜೆವಾಲರನ್ನು ಭೇಟಿಯಾದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸುಧೀರ್ ಮುರೊಳ್ಳಿ +ಬೆಂಗಳೂರು,ಮಾ.11- ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೆತ್ರದ ಟಿಕೆಟ್ ಹಂಚಿಕೆ ಕುರಿತಂತೆ ಮಹತ್ತರ ಬೆಳವಣಿಗೆ ಯಾಗಿದ್ದು, ಉಭಯ ಜಿಲ್ಲೆಗಳ ನಾಯಕರು ಇಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ಸುರ್ಜೆವಾಲರವರು ಅವರನ್ನು ಭೇಟಿಮಾಡಿ ಕಾಂಗ್ರೆಸ್ ವಕ್ತಾರರಾದ ಸುಧೀರ್ ಮುರೊಳ್ಳಿ ಅವರಿಗೆ ಟಿಕೆಟ್ ಘೋಷಿಸಬೇಕೆಂದು ಮನವಿ ಮಾಡಿದರು. ಶಾಸಕ ಟಿ. ಡಿ ರಾಜೇ ಗೌಡ, ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸುಮಾರು ಅರ್ಧ ಗಂಟೆ ಕಾಲ ಚರ್ಚಿಸಿದರು. \ No newline at end of file diff --git a/eesanje/url_46_208_4.txt b/eesanje/url_46_208_4.txt new file mode 100644 index 0000000000000000000000000000000000000000..1bc03f3c2cace119f56bdf6b35133496a286a789 --- /dev/null +++ b/eesanje/url_46_208_4.txt @@ -0,0 +1,5 @@ +ಡ್ಯಾನ್ಸ್ ವೇಳೆ ಕಾಲು ತಾಗಿತೆಂದು ಯುವಕನ ಕೊಂದಿದ್ದ ಮೂವರು ಖಾಕಿ ಬಲೆಗೆ +ಬೆಂಗಳೂರು,ಮಾ.11- ಶಿವರಾತ್ರಿ ಹಬ್ಬದಂದು ಡ್ಯಾನ್ಸ್ ಮಾಡುವಾಗ ಕಾಲು ತಾಗಿತೆಂಬ ಕ್ಷುಲ್ಲಕ ಕಾರಣಕ್ಕೆ ಯುವಕನೊಂದಿಗೆ ಜಗಳವಾಡಿ ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚೇತನ್, ರಂಗ ಮತ್ತು ಪವನ್ ಬಂಧಿತ ಆರೋಪಿಗಳು. +ಶ್ರೀನಗರ ನಿವಾಸಿಯಾದ ಯೋಗೇಶ್(23) ಶಿವರಾತ್ರಿ ಹಬ್ಬದ ಆಚರಣೆಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದ ಗಿರಿನಗರದ ಶನಿ ಮಹಾತ್ಮ ದೇವಸ್ಥಾನದ ಬಳಿ ಸ್ನೇಹಿತರೊಂದಿಗೆ ಹೋಗಿದ್ದಾನೆ. ಆ ಸಂದರ್ಭದಲ್ಲಿ ಹಾಡಿಗೆ ಎಲ್ಲರೂ ಕುಣಿಯುತ್ತಿದ್ದುದನ್ನು ನೋಡಿ ಯೋಗೇಶ್ ಸಹ ಡ್ಯಾನ್ಸ್ ಮಾಡುತ್ತಿದ್ದಾಗ ಮತ್ತೊಂದು ಗುಂಪಿನ ಯುವಕರಿಗೆ ಆಕಸ್ಮಿಕವಾಗಿ ಕಾಲು ತಾಗಿದೆ. +ಆ ವಿಷಯವನ್ನೇ ದೊಡ್ಡದು ಮಾಡಿಕೊಂಡು ಯೊಗೇಶ್ ಜೊತೆ ಜಳಗವಾಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳೀಯರು ಇಬ್ಬರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ. ಬೆಳಗಿನ ಜಾವ 2.30ರ ಸುಮಾರಿನಲ್ಲಿ ಯೋಗೇಶ್ ಬೈಕ್‍ನಲ್ಲಿ ತನ್ನ ಮನೆಗೆ ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಹೋದ ಯುವಕರ ಗುಂಪು ಬೈಕ್ ಅಡ್ಡಗಟ್ಟಿ ಹಲ್ಲೆ ನಡೆಸಿದೆ. +ತಕ್ಷಣ ತಪ್ಪಿಸಿಕೊಳ್ಳಲು ಯೋಗೇಶ್ ಓಡಿ ಹೋಗುತ್ತಿದ್ದಾಗ ಮನೆಯೊಂದರ ಗೇಟ್ ಒಳಗೆ ಹೋಗಿದ್ದಾನೆ. ಆದರೂ ಬಿಡದೆ ಗುಂಪು ಬೆನ್ನಟ್ಟಿ ಬಂದು ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿತ್ತು. ತೀವ್ರ ರಕ್ತಸ್ರಾವದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯೋಗೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಮನೆಯವರೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_208_5.txt b/eesanje/url_46_208_5.txt new file mode 100644 index 0000000000000000000000000000000000000000..78eeaa98c4a1b1c677165b2561a08a88ed371c1b --- /dev/null +++ b/eesanje/url_46_208_5.txt @@ -0,0 +1,4 @@ +ರೌಡಿ ಶಿವನನ್ನು ಕೊಂದಿದ್ದ 6 ಆರೋಪಿಗಳು ಅಂದರ್ +ಬೆಂಗಳೂರು, ಮಾ.11- ಹಳೇ ದ್ವೇಶದಿಂದ ಮನೆ ಸಮೀಪವೇ ನಡು ರಸ್ತೆಯಲ್ಲಿ ರೌಡಿ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರು ಮಂದಿಯನ್ನು ಕಾಟನ್‍ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಟೀಫನ್, ಚಂದ್ರಶೇಖರ್, ಶಿಬು, ಶೇಖರ್, ಮಣಿ ಮತ್ತು ಕಿರಣ್ ಬಂಧಿತ ಆರೋಪಿಗಳು. +ಕಳೆದ ಶುಕ್ರವಾರ ಶಿವರಾತ್ರಿಯಂದು ಫ್ಲವರ್ ಗಾರ್ಡನ್ ನಿವಾಸಿ ಶಿವ ಅಲಿಯಾಸ್ ಶರತ್ (35) 9.30ರ ಸುಮಾರಿನಲ್ಲಿ ಮನೆಗೆ ನಡೆದು ಹೋಗುತ್ತಿದ್ದಾಗ ಐದಾರು ಮಂದಿ ದುಷ್ಕರ್ಮಿಗಳು ಈತ ಬರುವುದನ್ನೇ ಕಾದು ಹೊಂಚು ಹಾಕಿ ಇನ್ನೇನು ಮನೆ ಸ್ವಲ್ಪ ದೂರ ಇರುವಂತೆಯೇ ಏಕಾಏಕಿ ದಾಳಿ ಮಾಡಿ ಮಚ್ಚು, ಲಾಂಗ್, ಡ್ರ್ಯಾಗರ್‍ನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. +ಹಲ್ಲೆಯಿಂದ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೌಡಿ ಶಿವನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದನು. ಈ ಬಗ್ಗೆ ಕಾಟನ್‍ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರು ಮಂದಿ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_208_6.txt b/eesanje/url_46_208_6.txt new file mode 100644 index 0000000000000000000000000000000000000000..5051a93a19f2a0f5381239af7271df6b931b115e --- /dev/null +++ b/eesanje/url_46_208_6.txt @@ -0,0 +1,9 @@ +ಸರ್ವಾಧಿಕಾರ ಧೋರಣೆಯಿಂದ ಸಂವಿಧಾನ ಬದಲಾವಣೆಗೆ ಒಳಸಂಚು : ಸಿಎಂ ವಾಗ್ದಾಳಿ +ಬೆಂಗಳೂರು,ಮಾ.11- ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ ಬದಲಾವಣೆ ಮಾಡುವ ಒಳಸಂಚನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಗ್ರಾಹಕರ ವ್ಯವಹಾರಗಳ ಹಾಗೂ ಮಾಪನ ಶಾಸ್ತ್ರ ಇಲಾಖೆ ವತಿಯಿಂದ ನಗರ ದಲ್ಲಿಂದು ಆಹಾರ ಸೌಧ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗಡೆಯವರು ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದರು. ಕೇಂದ್ರ ಸಚಿವರಾಗಿದ್ದಾಗಲೂ ಈ ಮಾತನ್ನು ಅವರು ಹೇಳಿದ್ದರು. +ಇದು ಬಿಜೆಪಿಯ ಒಳಸಂಚಾಗಿದೆ. ಸಂವಿಧಾನದ ಬಗ್ಗೆ ಅನಗತ್ಯವಾಗಿ ಮಾತನಾಡಿದ್ದಾರೆ. ಸಂವಿಧಾನದಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ತರಬೇಕಾದರೆ ಸರ್ಕಾರಕ್ಕೆ ಮೂರನೇ ಎರಡರಷ್ಟು ಬಹುಮತವಿರಬೇಕು. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಬೇಕಾಗಿದೆ ಎಂದು ಮುಖ್ಯಮಂತ್ರಿಯವರು ಆಪಾದಿಸಿದರು. +ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿಯ ಒಳಸಂಚು. ಆದ್ದರಿಂದ ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ. ಆದ್ದರಿಂದ ಬಿಜೆಪಿಯವರು ತಮ್ಮ ಈ ಯೋಚನೆಯನ್ನು ಅನಂತಕುಮಾರ್ ಅವರ ಮೂಲಕ ಹೇಳಿಸುತ್ತಿದ್ದಾರೆ ಎಂದರು. +ಅನಂತಕುಮಾರ್ ಹೆಗಡೆರವರ ಹೇಳಿಕೆ ವೈಯಕ್ತಿಕ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಂತ್ರಿಮಂಡಲದಲ್ಲಿದ್ದಂತಹವರು ಹಾಗೂ ಹಿರಿಯ ಸಂಸದರಾಗಿರುವ ಅನಂತಕುವರ್ ಹೆಗಡೆರವರ ಹೇಳಿಕೆ ಹೇಗೆ ವೈಯಕ್ತಿಕವಾಗುತ್ತದೆ? ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದೇ ಮನುಸ್ಮೃತಿಯ ತತ್ವಗಳನ್ನು ಜಾರಿಗೊಳಿಸುವ ಉದ್ದೇಶ ಹೊಂದಿದ್ದಾರೆ. ಆದರೆ ನಮ್ಮ ಸಂವಿಧಾನ ಸಮಸಮಾಜ ನಿರ್ಮಾಣದ ತತ್ವವನ್ನು ಹೊಂದಿದ್ದು, ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು. +ಲೋಕಸಭೆ ಚುನಾವಣೆಗೆ ಕಾಂಗ್ರೆಸ್‍ನ ಎರಡನೇ ಪಟ್ಟಿ ಬಿಡುಗಡೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸ್ಕ್ರೀನಿಂಗ್ ಸಮಿತಿಯ ಸಭೆ ನಡೆಯುತ್ತಿದ್ದು, ಶಿಫಾರಸುಗಳನ್ನು ಮಾತ್ರ ಮಾಡಲಾಗುವುದು. ಇದರ ಬಗ್ಗೆ ತೀರ್ಮಾನವನ್ನು ರಾಷ್ಟ್ರೀಯ ಚುನಾವಣಾ ಸಮಿತಿಯು ಕೈಗೊಳ್ಳುತ್ತದೆ ಎಂದು ಹೇಳಿದರು. +ಅನ್ನಭಾಗ್ಯ ಜಾರಿಗೆ ತರುವ ಆಹಾರ ಇಲಾಖೆಗೆ ಸ್ವಂತ ಕಟ್ಟಡ :ಆಹಾರ ಇಲಾಖೆಯ ಸ್ವಂತ ಕಟ್ಟಡ ನಿರ್ಮಿಸಿ, ಒಂದೇ ಸೂರಿನಡಿ ಇಲಾಖೆಯ ಎಲ್ಲ ಕಚೇರಿಗಳ ಕಾರ್ಯಚಟುವಟಿಕೆಗಳು ನಡೆಸುವಂತೆ ಅನುಕೂಲವಾಗಲು ಆಹಾರಸೌಧ ಕಟ್ಟಡದ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ. ಆಹಾರ ಇಲಾಖೆಯಿಂದಲೇ ಅನ್ನಭಾಗ್ಯ ಗ್ಯಾರಂಟಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ಪ್ರಮುಖ ಇಲಾಖೆ ಎಂದು ತಿಳಿಸಿದರು. +ಆಲಿಅಸ್ಕರ್ ರಸ್ತೆಯಲ್ಲಿರುವ ಮಾಪನ ಸೌಧದ ಪಕ್ಕ 30 ಸಾವಿರ ಚದರ ಅಡಿ ಜಾಗದಲ್ಲಿ 49.05 ಕೋಟಿ ರೂ. ವೆಚ್ಚದಲ್ಲಿ ಆಹಾರಸೌಧ ನಿರ್ಮಿಸಲಾಗುತ್ತಿದೆ. ಅಂತ್ಯೋದಯ, ಅನ್ನಭಾಗ್ಯ ಯೋಜನೆಯಡಿ 10,84,406, ಕೇಂದ್ರ ಸರ್ಕಾರದ ಆದ್ಯತಾ ಕುಟುಂಬದಲ್ಲಿ 1,03,38,001 ಹಾಗೂ ರಾಜ್ಯ ಸರ್ಕಾರದ ಆದ್ಯತಾ ಕುಟುಂಬದಲ್ಲಿ 13,21,492 ಪಡಿತರ ಚೀಟಿದಾರರಿದ್ದಾರೆ. ಆದ್ಯತೇತರ 25,00,018 ಸೇರಿದಂತೆ ಒಟ್ಟು 1,52,43,917 ಪಡಿತರ ಚೀಟಿಗಳಿಗೆ 2.35 ಲಕ್ಷ ಮೆಟ್ರಿಕ್ ಟನ್ ಮಾಸಿಕ ಆಹಾರ ಪದಾರ್ಥ ವಿತರಿಸಲಾಗುತ್ತಿದೆ. ಜುಲೈನಿಂದ ಜನವರಿ ಅಂತ್ಯದವರೆಗೆ 4595 ಕೋಟಿ ರೂ.ಗಳನ್ನು (ಅಕ್ಕಿ ಬದಲಿಗೆ) ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. +ಕಾನೂನು ಮಾಪನ ಶಾಸ್ತ್ರ ಇಲಾಖೆಯು 2023-24 ನೇ ಸಾಲಿಗೆ 56 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಹೊಂದಿದ್ದು, 70 ಕೋಟಿ ರೂ. ರಾಜಸ್ವ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸೇರಿದಂತೆ ಇಲಾಖೆಯ ಅಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_208_7.txt b/eesanje/url_46_208_7.txt new file mode 100644 index 0000000000000000000000000000000000000000..ecdb377990cc019c8bce2ccf04d1f3b35f53e9db --- /dev/null +++ b/eesanje/url_46_208_7.txt @@ -0,0 +1,5 @@ +25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು : ಬಿಎಸ್‌ವೈ ವಿಶ್ವಾಸ +ಬೆಂಗಳೂರು,ಮಾ.11- ರಾಜ್ಯದಲ್ಲಿ ಈ ಬಾರಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಬಿಜೆಪಿ, ಜೆಡಿಎಸ್ ನೇತೃತ್ವದ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಭಾರೀ ಮತದ ಅಂತರದಿಂದ ಗೆಲ್ಲಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರಮೋದಿ ಅವರು ಪ್ರಧಾನಿಯಾಗಬೇಕೆಂಬುದು ಇಡೀ ದೇಶದ ಜನತೆಯ ಇಚ್ಛೆಯಾಗಿದೆ. ಹೀಗಾಗಿ 28 ಕ್ಷೇತ್ರಗಳ ಪೈಕಿ ನಾವು 25ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ದಿನಾಂಕಗಳು ನಿಗದಿಯಾಗಿದೆ. ಯಾವ ದಿನಾಂಕದಂದು ಎಲ್ಲಿ ಸಭೆ ನಡೆಸಬೇಕೆಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಈಗಾಗಲೇ ಇದಕ್ಕಾಗಿ ಸಿದ್ದತೆಗಳು ನಡೆದಿವೆ ಎಂದರು. +ಮೈಸೂರು, ಕೊಡಗು ಲೋಕಸಭಾ ಕ್ಷೇತ್ರಕ್ಕೆ ರಾಜವಂಶಸ್ಥ ಯದುವೀರ್ ಒಡೆಯರ್ ಅವರನ್ನು ಸಂಪರ್ಕಿಸಿದ್ದೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಆ ವಿಷಯದ ಬಗ್ಗೆ ನಾನು ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದು ತುಸು ಗರಂ ಆಗಿಯೇ ಪ್ರತಿಕ್ರಿಯಿಸಿದರು. ಸಂಜೆ ಚುನಾವಣಾ ಮಂಡಳಿ ಸಭೆ ನಡೆಯಲಿದೆ. ನಾನು ಕೂಡ ಸಭೆಯಲ್ಲಿ ಭಾಗಿಯಾಗುತ್ತಿದ್ದೇನೆ. ಬಹುತೇಕ ಇಂದು ಎಲ್ಲಾ ನಿರ್ಧಾರವಾಗಲಿದೆ ಎಂದು ಹೇಳಿದರು. +ದೆಹಲಿಯಲ್ಲಿ ಇಂದು ಕರ್ನಾಟಕದಿಂದ ಸ್ಪರ್ಧೆ ಮಾಡುವವರ ಹೆಸರು ಅಂತಿಮಗೊಳ್ಳಲಿದೆ. ವಿಜಯೇಂದ್ರ ಅಲ್ಲೇ ಇದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಳುವುದು ನಿಶ್ಚಯವಾಗಿದೆ ಎಂದು ತಿಳಿಸಿದರು. ಮೈಸೂರು ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ಸಂಪರ್ಕ ಮಾಡಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಗಿದ್ದರೆ ಆ ವಿಚಾರ ಇಲ್ಲಿ ಪ್ರಸ್ತಾಪ ಮಾಡುವುದಿಲ್ಲ ಎಂದರು. ಹಾಲಿ ಸಂಸದರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು ಈ ಬಗ್ಗೆ ಇಲ್ಲಿ ಚರ್ಚೆ ಮಾಡುವುದಿಲ್ಲ ಎಂದಷ್ಟೇ ಹೇಳಿದರು. \ No newline at end of file diff --git a/eesanje/url_46_208_8.txt b/eesanje/url_46_208_8.txt new file mode 100644 index 0000000000000000000000000000000000000000..0cedfb03390928cdf6247454fdea650bec31c607 --- /dev/null +++ b/eesanje/url_46_208_8.txt @@ -0,0 +1,3 @@ + : ರಾಮೇಶ್ವರಂ ಕೆಫೆ ಸ್ಫೋಟಿಸಿದ ಬಾಂಬರ್ ಗುರುತು ಪತ್ತೆಹಚ್ಚಿದ ಎನ್‍ಐಎ +ಬೆಂಗಳೂರು, ಮಾ. 11- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಬಾಂಬರ್ ಯಾರೆಂಬುದು ಎನ್‍ಐಎನ್‍ಗೆ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಹೈದ್ರಾಬಾದ್ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ಬಾಂಬರ್‍ಗಾಗಿ ಶೋಧ ನಡೆಸುತ್ತಿದ್ದಾರೆ. +ನಿನ್ನೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ರಾಯಚೂರು ಸೇರಿದಂತೆ ಮುಂತಾದ ಜಿಲ್ಲೆಗಳಲ್ಲಿ ಆರೋಪಿಗಾಗಿ ಶೋಧ ನಡೆಸಿದ್ದಾರೂ ಪತ್ತೆಯಾಗಲಿಲ್ಲ. ಇದೀಗ ಹೈದ್ರಾಬಾದ್ ಸೇರಿದಂತೆ ದೇಶದಾದ್ಯಂತ ಆರೋಪಿ ಬಂಧನಕ್ಕಾಗಿ ಎನ್‍ಐಎ ಅಧಿಕಾರಿಗಳು ಹಗಲಿರುಳು ಶೋಧ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_208_9.txt b/eesanje/url_46_208_9.txt new file mode 100644 index 0000000000000000000000000000000000000000..ad88213a5d3ac08dc732b50bd8156515a185ac88 --- /dev/null +++ b/eesanje/url_46_208_9.txt @@ -0,0 +1,8 @@ +ರಾಜ್ಯದಲ್ಲಿ ಕಲರ್ ಕಾಟನ್ ಕ್ಯಾಂಡಿ ನಿಷೇಧ, ಗೋಬಿ ಪ್ರಿಯರು ನಿರಾಳ +ಬೆಂಗಳೂರು,ಮಾ.11- ಅನೈಸರ್ಗಿಕ ವಾಗಿ ಕೃತಕ ಬಣ್ಣ ಬರುವಂತಹ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿರುವ ಕೆಂಪು ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗುತ್ತಿದೆ. ಅದೇ ರೀತಿ ಗೋಬಿ ಮಂಚೂರಿ ಪದಾರ್ಥ ಮೇಲೂ ನಿಗಾ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. +ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳ ಗುಣಮಟ್ಟ ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಕಳಪೆಯಾಗಿದೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಗಳ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೊಳಪಡಿಸಲಾಗಿದೆ ಎಂದು ಹೇಳಿದರು. +ಟಾರ್‍ಟ್ರಾಸೈನ್, ಸನ್‍ಸೆಟ್ ಯೆಲ್ಲೋ, ಕಾರ್ಮೋಸಿನ್ ಮತ್ತು ರೋಡಮೈನ್-ಬಿ ಇವುಗಳನ್ನು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ರೋಡಮೈನ್-ಬಿ ಯಾವುದೇ ಆಹಾರ ಪದಾರ್ಥಗಳಲ್ಲೂ ಬಳಕೆ ಮಾಡದಂತಹ ನಿಷೇತ ಅಪಾಯಕಾರಿ ಆಹಾರ ಪದಾರ್ಥವಾಗಿದೆ. ಇನ್ನು ಟಾರ್‍ಟ್ರಾಸೈನ್, ಸನ್‍ಸೆಟ್ ಯೆಲ್ಲೊ ಮತ್ತು ಕಾರ್ಮೋಸಿನ್ ರಾಸಾಯನಿಕಗಳನ್ನು ನಿಗದಿತ ಆಹಾರ ಪದಾರ್ಥಗಳಲ್ಲಿ ಪ್ಯಾಕಿಂಗ್ ಮಾಡುವಾಗ ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಬಳಕೆ ಮಾಡಲು ಅವಕಾಶ ಇದೆ. +ಹೊಸದಾಗಿ ತಯಾರಿಸಲಾಗುವ ಪದಾರ್ಥಗಳಲ್ಲಿ ಇವುಗಳನ್ನು ಬಳಸಲು ಅವಕಾಶವಿಲ್ಲ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯಾದ್ಯಂತ 171 ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೊಳಪಡಿಸಿದಾಗ 107 ಮಾದರಿಗಳಲ್ಲಿ ಅಸುರಕ್ಷಿತವಾದ ಕೃತಕ ಬಣ್ಣಗಳನ್ನು ಬಳಸಲಾಗಿದೆ. 64 ರಲ್ಲಿ ಕೃತಕ ಬಣ್ಣಗಳಿಲ್ಲದೆ ಸುರಕ್ಷಿತ ಮಾದರಿಗಳನ್ನು ಅನುಸರಿಸಲಾಗಿದೆ ಎಂದರು. ಕಾಟನ್ ಕ್ಯಾಂಡಿಯ 25 ಮಾದರಿಗಳನ್ನು ಸಂಗ್ರಹಿಸಿದಾಗ ಅವುಗಳ ಪೈಕಿ 15 ಮಾದರಿಗಳಲ್ಲಿ ಅಸುರಕ್ಷಿತವಾದ ರೋಡಮೈನ್-ಬಿ ಬಳಸಿರುವುದು ಸಾಬೀತಾಗಿದೆ ಎಂದು ವಿವರಿಸಿದರು. +ಆಹಾರ ಸುರಕ್ಷತೆ ಮತ್ತು ಗುಣದರ್ಜೆ ಕಾಯ್ದೆ 2006ರನ್ವಯ 7 ವರ್ಷದಿಂದ ಜೀವಾವವರೆಗೂ ಶಿಕ್ಷೆ ವಿಸಲು ಅವಕಾಶವಿದೆ. ಆಹಾರ ಸುರಕ್ಷತಾ ಇಲಾಖೆ ಅಸೂಚನೆ ಹೊರಡಿಸಿದ್ದು, ಇಂದಿನಿಂದ ಅಪಾಯಕಾರಿ ರಾಸಾಯನಿಕ ಬಳಕೆ ಮಾಡುವ ಬಣ್ಣದ ಕಾಟನ್ ಕ್ಯಾಂಡಿಗಳನ್ನು ನಿಷೇಸುತ್ತಿದೆ. ಬಣ್ಣರಹಿತವಾದ ಕ್ಯಾಂಡಿಗಳ ಮಾರಾಟ ಅಥವಾ ಬಳಕೆಗೆ ಯಾವುದೇ ನಿಷೇಧವಿಲ್ಲ ಎಂದು ಹೇಳಿದರು. +ಗೋಬಿ ಮಂಚೂರಿಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಸುವುದನ್ನು ಪತ್ತೆ ಹಚ್ಚಲು ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಇದಕ್ಕಾಗಿ ಅಧಿಕಾರಿಗಳ ತಂಡ ಈಗಾಗಲೇ ಕ್ರಮ ತೆಗೆದುಕೊಂಡಿದೆ. ಆಹಾರ ಸುರಕ್ಷಿತಾ ನಿಯಮವನ್ನು ಉಲ್ಲಂಘಿಸುವವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು. +ಬೀದಿ ಬದಿಯ ವ್ಯಾಪಾರಿಗಳು ಮಾತ್ರವಲ್ಲದೆ, ರೆಸ್ಟೋರೆಂಟ್, ಸ್ಟಾರ್ ಹೋಟೆಲ್‍ಗಳಲ್ಲೂ ತಪಾಸಣೆ ಮತ್ತು ಮಾದರಿ ಸಂಗ್ರಹ ಮಾಡುವುದಾಗಿ ತಿಳಿಸಿದರು. ಅಡುಗೆಗೆ ಬಳಸುವ ಖಾದ್ಯ ತೈಲದ ಸುರಕ್ಷತೆಯ ಬಗ್ಗೆಯೂ ಗಮನ ಹರಿಸಲಾಗುತ್ತದೆ. ಕೆಲವು ಹೋಟೆಲ್‍ಗಳಲ್ಲಿ ಅಡುಗೆ ಎಣ್ಣೆಯನ್ನು ಮರು ಬಳಕೆ ಮಾಡುವ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು. ಆಹಾರ ಮತ್ತು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_209_1.txt b/eesanje/url_46_209_1.txt new file mode 100644 index 0000000000000000000000000000000000000000..e1ee091c0504e44a350dd3ae37aa667252ff1548 --- /dev/null +++ b/eesanje/url_46_209_1.txt @@ -0,0 +1,5 @@ +ಅನಂತ್‍ಕುಮಾರ್ ಹೆಗಡೆಯವರನ್ನು ಪಕ್ಷದಿಂದ ಹೊರಹಾಕಿ : ಗೃಹ ಸಚಿವ ಪರಮೇಶ್ವರ್ +ಬೆಂಗಳೂರು,ಮಾ.11- ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುತ್ತಿರುವ ಸಂಸದ ಅನಂತಕುಮಾರ್ ಹೆಗಡೆ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರನ್ನು ಪ್ರಧಾನಿ ನರೇಂದ್ರಮೋದಿಯವರು ಮುಕ್ತ ಕಂಠದಿಂದ ಹೊಗಳಿದ್ದಾರೆ. ಸಂವಿಧಾನ ಇಲ್ಲದೇ ಹೋಗಿದ್ದರೆ ನಾನು ಪ್ರಧಾನಮಂತ್ರಿ ಆಗುತ್ತಿರಲಿಲ್ಲ ಎಂದಿದ್ದಾರೆ. ಆದರೆ ಅವರ ಪಕ್ಷದ ಸಂಸದರೊಬ್ಬರು ಪದೇಪದೇ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. +ನಾನು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷಕ್ಕೆ ಮುಜುಗರ ತರುವ ಮಾತುಗಳನ್ನಾಡಿದರೆ ಸರಿಪಡಿಸಬೇಕು. ಆದರೆ, ಸಂಸದ ಅನಂತಕುಮಾರ್ ಅವರ ಹೇಳಿಕೆಯಿಂದ ದೂರ ಇದ್ದೇವೆ ಎಂದು ಹೇಳಿದರೆ ಸಾಲದು. ಅವರನ್ನು ಪಕ್ಷದಿಂದ ಹೊರಹಾಕಬೇಕು ಅಥವಾ ನಿಯಂತ್ರಿಸಬೇಕು. ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸ್ರ್ಪಧಿಸಲು ಸರಿಯಾದ ಅಭ್ಯರ್ಥಿಯೇ ಇಲ್ಲ ಎಂದು ಬಿಜೆಪಿಯವರು ಹೇಳಿಕೊಳ್ಳಬಹುದು. ಆದರೆ, ಚುನಾವಣೆ ನಂತರ ವಾಸ್ತವಾಂಶ ಏನೆಂಬುದು ಗೊತ್ತಾಗಲಿದೆ. ಸಚಿವ ಎಚ್.ಸಿ.ಮಹದೇವಪ್ಪ ಅವರ ಸ್ಪರ್ಧೆಯ ಮಾತುಗಳು ಕೇಳಿಬರುತ್ತಿವೆ. ಮಹದೇವಪ್ಪ ನನಗೆ ಟಿಕೆಟ್ ಬೇಡ, ತಮ್ಮ ಮಗನಿಗೆ ನೀಡುವಂತೆ ಹೇಳುತ್ತಿದ್ದಾರೆ. ಅಂತಿಮ ತೀರ್ಮಾನ ಹೈಕಮಾಂಡ್ ಮಾಡಲಿದೆ ಎಂದು ತಿಳಿಸಿದರು. +ತುಮಕೂರಿನಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿರೋಧ ಮಾಡುತ್ತಿರುವವರ ಮನವೊಲಿಸುವ ಕೆಲಸವನ್ನು ನಿನ್ನೆಯಿಂದ ಆರಂಭಿಸಲಾಗಿದೆ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಡುವಂತೆ ಅಸಮಾಧಾನಿತರಲ್ಲಿ ಮನವಿ ಮಾಡಲಾಗಿದೆ. ಚುನಾವಣೆ ಎಂದ ಮೇಲೆ ಅಸಮಾಧಾನ ಸಹಜ. ಎಲ್ಲರನ್ನು ಜತೆಗೆ ಕರೆದುಕೊಂಡು ಹೋಗುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_209_10.txt b/eesanje/url_46_209_10.txt new file mode 100644 index 0000000000000000000000000000000000000000..56d6b353707e88762ff8e77802229fc5680cfd73 --- /dev/null +++ b/eesanje/url_46_209_10.txt @@ -0,0 +1,6 @@ +ಲೋಕಸಭೆ ಚುನಾವಣೆ : ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ +ಬೆಂಗಳೂರು, ಮಾ.10-ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಾರದೊಳಗೆ ಅಂತಿಮಗೊಳ್ಳಲಿದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಿರಂತರವಾಗಿ ಲೋಕಸಭಾ ಕ್ಷೇತ್ರವಾರು ಸಭೆ ನಡೆಸಿ ಚುನಾವಣೆ ಸಿದ್ಧತೆ ಬಗ್ಗೆ ಪಕ್ಷದ ಮುಖಂಡರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ, ಆಯಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. +ಎನ್‍ಡಿಎ ಮೈತ್ರಿಕೂಟ ಸೇರಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಜತೆಗೂಡಿ ಚುನಾವಣೆ ಎದುರಿಸಬೇಕಾಗಿದೆ. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಮೈತ್ರಿ ಧರ್ಮದ ವಿಚಾರದಲ್ಲಿ ಲೋಪವಾಗಬಾರದು ಎಂಬ ಸಲಹೆಯನ್ನು ಕುಮಾರಸ್ವಾಮಿ ನೀಡಿದ್ದಾರೆ. ಜೆಡಿಎಸ್‍ಗೆ ಮೂರರಿಂದ ನಾಲ್ಕು ಕ್ಷೇತ್ರಗಳು ದೊರೆಯುವ ಸಾಧ್ಯತೆ ಇದ್ದು, ಆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆದಿದ್ದಾರೆ. ಬಿಜೆಪಿ ಕೇಂದ್ರ ನಾಯಕರ ಆಹ್ವಾನದ ಮೇರೆಗೆ ಸದ್ಯದಲ್ಲೇ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಅವರು, ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನೆ ನಡೆಸಿ ಅಂತಿಮಗೊಳಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಬಿಜೆಪಿ ಚುನಾವಣಾ ಸಮಿತಿ ಸಭೆ ನಡೆದ ಬಳಿಕ ಕುಮಾರಸ್ವಾಮಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗುತ್ತದೆ. ಬಿಜೆಪಿ ನಾಯಕರೊಂದಿಗೆ ಚುನಾವಣಾ ಸಿದ್ಧತೆ ಮತ್ತು ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಾರದೊಳಗೆ ಮಿತ್ರ ಪಕ್ಷಗಳ ನಡುವೆ ಸೀಟು ಹಂಚಿಕೆಯಾಗಲಿದೆ ಎಂದು ಮೂಲಗಳು ಹೇಳಿವೆ. +ಹಾಸನ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಘೋಷಿಸಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರಗಳಲ್ಲಿ ಸ್ರ್ಪಧಿಸುವಂತೆ ಪಕ್ಷದ ಮುಖಂಡರ, ಕಾರ್ಯಕರ್ತರ ಒತ್ತಡವಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಸಲಹೆಯಂತೆ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಸದ್ಯಕ್ಕೆ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರ ಹೆಸರು ಮುಂಚೂಣಿಯಲ್ಲಿದೆ. ಕುಮಾರಸ್ವಾಮಿ ಅವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡದಿದ್ದರೆ, ಪುಟ್ಟರಾಜು ಅವರೇ ಅಭ್ಯರ್ಥಿಯಾಗುವುದು ಖಚಿತ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಕೋಲಾರ ಮೀಸಲು ಕ್ಷೇತ್ರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಹಾಗೂ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಮತ್ತೊಂದು ಕ್ಷೇತ್ರ ದೊರೆಯುವ ನಿರೀಕ್ಷೆಯಲ್ಲಿ ಜೆಡಿಎಸ್ ಇದೆ. ಕ್ಷೇತ್ರ ಹಂಚಿಕೆಯಾದ ಬೆನ್ನಲ್ಲೇ ಅಭ್ಯರ್ಥಿ ಆಯ್ಕೆ ಮಾಡಲಿದ್ದು, ಈಗಾಗಲೇ ಚುನಾವಣೆ ತಯಾರಿ ಆರಂಭಿಸಲಾಗಿದೆ ಎಂದು ಮೂಲಗಳು ಹೇಳಿವೆ. \ No newline at end of file diff --git a/eesanje/url_46_209_11.txt b/eesanje/url_46_209_11.txt new file mode 100644 index 0000000000000000000000000000000000000000..7e6073cb3689eab4cb7ab7b1be41d311d3cb6a19 --- /dev/null +++ b/eesanje/url_46_209_11.txt @@ -0,0 +1,4 @@ +ಈಶ್ವರಪ್ಪನವರ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ : ಯಡಿಯೂರಪ್ಪ +ಶಿವಮೊಗ್ಗ,ಮಾ.10- ಲೋಕಸಭ ಚುನಾವಣೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪುತ್ರನಿಗೆ ಟಿಕೆಟ್ ಕೊಡಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಟಿಕೆಟ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪುತ್ರ ಕಾಂತೇಶ್‍ಗೆ ಈಗಲೂ ಕಾಲ ಮಿಂಚಿಲ್ಲ, ಅವರು ನನ್ನ ಜೊತೆ ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ. +ಅಮಿತ್ ಶಾ ಜೊತೆ ಮಾತಾನಾಡಿಸುತ್ತೇನೆ. ಸೀಟ್ ಕೊಡಿಸಲು ನನ್ನಿಂದಾಗುವ ಎಲ್ಲಾ ಪ್ರಯತ್ನ ಮಾಡುತ್ತೇನೆ. ಎಲ್ಲಾ ರೀತಿಯ ಪ್ರಯತ್ನ ಮಾಡಲು ನಾನು ಸಿದ್ಧನಿದ್ದೇನೆ ಎಂದರು. ಈಶ್ವರಪ್ಪ ಬಂದರೆ ಜೊತೆಗೆ ಕರೆದುಕೊಂಡು ಮಾತನಾಡಬಹುದು. ನಿಮ್ಮ ಮೂಲಕ ಅವರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಬನ್ನಿ ಈಶ್ವರಪ್ಪನವರೇ ದೆಹಲಿಗೆ ಹೋಗೋಣ, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇನೆ. ನಾನು ನಿಮ್ಮ ಜೊತೆ ಇದ್ದೇನೆ ಎಂದು ಹೇಳಿದರು. +ಸಿಇಸಿ ಸಭೆ: ಇಂದು ನಡೆಯಬೇಕಿದ್ದ ಚುನಾವಣೆ ಸಮಿತಿ (ಸಿಇಸಿ) ಸಭೆ ಮುಂದೂಡಲಾಗಿದೆ. ಹೀಗಾಗಿ ನಾಳೆ ಮತ್ತೆ ಕರೆಯಬಹುದು. ಈ ಸಭೆಯಲ್ಲಿ ಪ್ರಧಾನಿ ಭಾಗಿಯಾಗಬಹುದು. ಹಾಗಾಗಿ ಒಂದು ದಿನ ಮುಂದೂಡಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_209_12.txt b/eesanje/url_46_209_12.txt new file mode 100644 index 0000000000000000000000000000000000000000..b18b38138b2819ab0d89d38dc7a9ab903f48111d --- /dev/null +++ b/eesanje/url_46_209_12.txt @@ -0,0 +1,5 @@ +ಹೊಸಬರಿಗೆ ಅವಕಾಶ : ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಕಸರತ್ತು +ಬೆಂಗಳೂರು,ಮಾ.10- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಮುಂದುವರೆದಿದ್ದು, ಆಕಾಂಕ್ಷಿಗಳಲ್ಲಿ ಢವಡವ ಶುರುವಾಗಿದೆ. ನಾಳೆ ದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆದ ಬಳಿಕ ಘೋಷಣೆಯಾಗುವ ಸಾಧ್ಯತೆ ಇದೆ. +ಇದೀಗ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಅಚಲವಾದ ವಿಶ್ವಾಸ ಇಟ್ಟುಕೊಂಡಿದ್ದ ಅಭ್ಯರ್ಥಿಗಳಿಗೆ ಎಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಲಿದೆಯೋ ಎಂಬ ಭೀತಿ ಎಲ್ಲರಲ್ಲೂ ಕಾಡುತ್ತಿದೆ. ಕೆಲವು ಲೋಕಸಭಾ ಕ್ಷೇತ್ರಗಳನ್ನು ಹೊರತುಪಡಿಸಿದರೆ ಎರಡಕ್ಕಿಂತ ಹೆಚ್ಚು ಆಕಾಂಕ್ಷಿಗಳಿರುವ ಕ್ಷೇತ್ರಗಳಲ್ಲಿ ಟಿಕೆಟ್ ಸಿಗುವ ಬಗ್ಗೆ ಯಾರಿಗೂ ಕೂಡ ಗ್ಯಾರಂಟಿ ಇಲ್ಲ. ಕೆಲವರು ಸಿಕ್ಕೇ ಸಿಗುತ್ತದೆ ಎಂಬ ಆತ್ಮವಿಶ್ವಾಸದಲ್ಲಿದ್ದರೆ, ಇನ್ನು ಕೆಲವರು ಮನಸ್ಸಿನಲ್ಲಿ ಮಂಡಕ್ಕಿ ಮೇಯುತ್ತಿದ್ದಾರೆ. +ಶಿವಮೊಗ್ಗ, ಕಲಬುರಗಿ, ಚಿಕ್ಕೋಡಿ ಹೊರತುಪಡಿಸಿದರೆ ಉಳಿದ 25 ಲೋಕಸಭಾ ಕ್ಷೇತ್ರಗಳಿಗೂ ಖಚಿತವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ಊಹೆಗೂ ನಿಲುಕದ ಪ್ರಶ್ನೆಯಾಗಿದೆ. ಎಲ್ಲವೂ ಅಂತೆಕಂತೆ ಮೇಲೆ ನಡೆಯುತ್ತಿರುವುದರಿಂದ ಅಭ್ಯರ್ಥಿಗಳಲ್ಲಿ ಕ್ಷಣ ಕ್ಷಣಕ್ಕೂ ತಳಮಳ ಹೆಚ್ಚಾಗುತ್ತಿದೆ. +ರಾಜಧಾನಿ ಬೆಂಗಳೂರಿನ ಮೂರು ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಉತ್ತರ, ಸೆಂಟ್ರಲ್ ಕ್ಷೇತ್ರಗಳಲ್ಲಿ ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕೇಂದ್ರ ಸಚಿವರಾದ ಜಯಶಂಕರ್, ನಿರ್ಮಲ ಸೀತಾರಾಮನ್, ಬೆಂಗಳೂರು ಉತ್ತರಕ್ಕೆ ಸುಮಲತ ಅಂಬರೀಶ್, ಡಾ.ಮಂಜುನಾಥ್, ವಿವೇಕ್ ಸುಬ್ಬಾರೆಡ್ಡಿ ಹೆಸರುಗಳು ಕೇಳಿಬಂದಿವೆ. \ No newline at end of file diff --git a/eesanje/url_46_209_2.txt b/eesanje/url_46_209_2.txt new file mode 100644 index 0000000000000000000000000000000000000000..8e6bcf7439b05f82ffff3732a29d1ff88a1faf83 --- /dev/null +++ b/eesanje/url_46_209_2.txt @@ -0,0 +1,4 @@ +ಎನ್‍ಸಿಬಿ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ +ಬೆಂಗಳೂರು,ಮಾ.10- ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. +## 📌 1596 , .📌02 .📌 .📌 .@@@BhallaAjay26@dg_ncb@@@PIB_Karnataka…../1uUKzwHdKH +ಆಂಧ್ರ ಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಎನ್‍ಸಿಬಿ ಅಧಿಕಾರಿಗಳಿಗೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಔರದ್ ತಾಲ್ಲೂಕಿನ ವನಮಾರಪ್ಪನಹಳ್ಳಿ ಚೆಕ್‍ಪೋಸ್ಟ್ ಬಳಿ ಎನ್‍ಸಿಬಿ ಹಾಗೂ ಬೀದರ್ ಜಿಲ್ಲಾ ಪೊಲೀಸರು ಲಾರಿಯನ್ನು ತಡೆದು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್‍ನನ್ನು ಬಂಧಿಸಿ ಎನ್‍ಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. \ No newline at end of file diff --git a/eesanje/url_46_209_3.txt b/eesanje/url_46_209_3.txt new file mode 100644 index 0000000000000000000000000000000000000000..71404aaefb2311cd8b4816b6f1cf7ab3df8f8111 --- /dev/null +++ b/eesanje/url_46_209_3.txt @@ -0,0 +1,5 @@ +ಜಲಕ್ಷಾಮದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ಧ ರೈತರ ಆಕ್ರೋಶ +ಮಂಡ್ಯ,ಮಾ.10- ಜಲಕ್ಷಾಮದ ನಡುವೆ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಪ್ರದರ್ಶಿಸಿದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರು ಹಾಗೂ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿಂದು ಹಮ್ಮಿಕೊಂಡಿದ್ದ ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೆ ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆ ಯತ್ನ ಮಾಡಿದರು. +ಕೆಆರ್‍ಎಸ್ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಕುಸಿತಗೊಂಡು ಇಲ್ಲಿನ ಬೆಳೆಗಳು ನೆಲಕಚ್ಚಿವೆ. ಕುಡಿಯಲು ನೀರಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಸರ್ಕಾರ ತಮಿಳುನಾಡಿಗೆ ನೀರು ಹರಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ ರೈತ ಸಂಘದ ಮುಖಂಡರಾದ ಕೆ.ಬೋರಯ್ಯ, ಸುನಂದ ಜಯರಾಮ್, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಅಂಬುಜಮ್ಮ, ಇಂಡವಾಲ ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್, ಮಾಂತಪ್ಪ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. +ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನೆಕಾರರು, ಪಕ್ಕದ ತಮಿಳುನಾಡಿಗೆ ನೀರು ಹರಿಸಿ ಜಿಲ್ಲೆಯ ಜನತೆಗೆ ಮೋಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ಇಲ್ಲಿನ ರೈತರು ನೀರಿಲ್ಲದೆ ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ಕೊಟ್ಟಿಲ್ಲ. ಜನಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ಇಂತಹ ಸಂಕಷ್ಟ ಪರಿಸ್ಥಿತಿ ಎದುರಾಗಿದೆ. ಮೊದಲು ನಾಲೆಗಳಿಗೆ ನೀರು ಬಿಡುಗಡೆ ಮಾಡಿ ಎಂದು ರೈತರು ಒತ್ತಾಯಿಸಿದರು. +ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ನೀರು ಬಿಡಲಾಗುತ್ತಿದೆ ಎಂದು ಸಬೂಬು ಹೇಳಿ ಸರ್ಕಾರ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಕೆಆರ್‍ಎಸ್ ಅಣೆಕಟ್ಟೆಯಿಂದ 4 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವುದು ಏಕೆ ಎಂದು ರೈತ ಮುಖಂಡರು ಪ್ರಶ್ನಿಸಿದರು. ರೈತರ ಹಿತ ಕಾಪಾಡದೆ ರೈತರ ಬೆಳೆಗಳ ರಕ್ಷಣೆಗೆ ನೀರು ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡಿಗೆ ನೀರು ಹರಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಅನ್ಯಾಯ ಮಾಡಿ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_209_4.txt b/eesanje/url_46_209_4.txt new file mode 100644 index 0000000000000000000000000000000000000000..7f92b24554a76f320c933b9ee98eb911dfbbf89e --- /dev/null +++ b/eesanje/url_46_209_4.txt @@ -0,0 +1,10 @@ +ಬಿಜೆಪಿಯಲ್ಲಿ ಟಿಕೆಟ್ ಗೊಂದಲ, ಹೆಚ್ಚಿದ ಲಾಬಿ +ಬೆಂಗಳೂರು,ಮಾ.10-ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಮಾಡುವ ಮುನ್ನವೇ ಬಿಜೆಪಿಯಲ್ಲಿ ಬಣ ರಾಜಕೀಯ ಮುನ್ನೆಲೆಗೆ ಬಂದಿದ್ದು, ತಮ್ಮ ಅತ್ಯಾಪ್ತರಿಗೆ ಟಿಕೆಟ್ ಕೊಡಿಸುವ ಮುಖಂಡರ ವರ್ತನೆಗೆ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ. ಈ ಬಾರಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲು ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹೆಚ್ಚಾಗಿದೆ. +ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಬಾರದೆಂದು ಕಾರ್ಯಕರ್ತರನ್ನು ಪರೋಕ್ಷವಾಗಿ ಮಾಜಿ ಸಚಿವ ಸಿ.ಟಿ.ರವಿ ಎತ್ತಿ ಕಟ್ಟುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆದರೆ ಇದೇ ಕ್ಷೇತ್ರದಿಂದ ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸಲೇಬೇಕೆಂದು ದೆಹಲಿ ಮಟ್ಟದಲ್ಲೂ ಲಾಬಿಗಿಳಿದಿರುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ತುಮಕೂರಿನಲ್ಲೂ ಬಣ ರಾಜಕೀಯ ತಾರಕಕ್ಕೇರಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ಟಿಕೆಟ್ ಕೊಡಿಸಲು ಬಿಜೆಪಿಯ ನಿಷ್ಠಾವಂತ ಬಣ ಮುಂದಾಗಿದೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ರ್ಪಧಿಸಿ ಸೋತಿದ್ದ ಸೋಮಣ್ಣನವರಿಗೆ ಟಿಕೆಟ್ ನೀಡಬೇಕೆಂಬುದು ಬಿಜೆಪಿಯ ಒಂದು ಬಣದ ವಾದವಾಗಿದೆ. ಇಲ್ಲಿ ಕೂಡ ಯಡಿಯೂರಪ್ಪನವರ ಮಧ್ಯಪ್ರವೇಶವಾಗಿದ್ದು ತಮ್ಮ ಆಪ್ತ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸುತ್ತಿದ್ದಾರೆ. ತುಮಕೂರಿನಲ್ಲೂ ಬಿಜೆಪಿ ಎರಡು ಬಣವಾಗಿರುವುದು ಸ್ಪಷ್ಟವಾಗಿದೆ. ಈವರೆಗೂ ಟಿಕೆಟ್ ನೂರಕೆ ನೂರರಷ್ಟು ಖಚಿತ ಎಂದು ಹೇಳಲಾಗುತ್ತಿದ್ದ ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹಗೆ ಎರಡು ದಿನಗಳಿಂದ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿಗಳು ಬಲವಾಗಿ ಹಬ್ಬಿದೆ. +ರಾಜವಂಶಸ್ಥ ಯದುವೀರ ಒಡೆಯರ್ ಹೆಸರು ಏಕಾಏಕಿ ಮುನ್ನಲೆಗೆ ಬಂದಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ನೀಡಬೇಕೆಂದು ಶಾಸಕರಾದ ಜಿ.ಟಿ.ದೇವೆಗೌಡ, ಶ್ರೀವತ್ಸ ಸೇರಿದಂತೆ ಇಡೀ ಜಿಲ್ಲಾ ಬಿಜೆಪಿ ಘಟಕ ಅವರ ಬೆನ್ನಿಗೆ ನಿಂತಿದೆ. ಮೂಲಗಳ ಪ್ರಕಾರ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹಬ್ಬಿಸಿದ್ದೇ ಬಿಜೆಪಿಯ ಪ್ರಭಾವಿ ನಾಯಕರೊಬ್ಬರು ಎಂಬ ಆರೋಪ ಕೇಳಿಬರುತ್ತಿದೆ. ಹೀಗಾಗಿ ಮೈಸೂರು ಜಿಲ್ಲಾ ಬಿಜೆಪಿ ಘಟಕದಲ್ಲೂ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. +ಮಧ್ಯ ಕರ್ನಾಟಕದ ರಾಜಧಾನಿ ಎನಿಸಿರುವ ದಾವಣಗೆರೆಯಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್‍ಗೆ ಟಿಕೆಟ್ ನೀಡಬಾರದೆಂದು ಇಡೀ ಜಿಲ್ಲಾ ಬಿಜೆಪಿ ಘಟಕ ವಿರೋಧ ವ್ಯಕ್ತಪಡಿಸಿದೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಯುವ ನಾಯಕ ಡಾ.ರವಿಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಯಡಿಯೂರಪ್ಪ ಸಿದ್ದೇಶ್ ಪರವಾಗಿ ನಿಂತರೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರೇಣುಕಾಚಾರ್ಯ ಪರವಾಗಿ ಲಾಬಿ ನಡೆಸಿದ್ದಾರೆ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಲಾಭ ಎಂಬಂತೆ ಇದೀಗ ಸಿದ್ದೇಶ್ ಅವರ ಪತ್ನಿ ಗಾಯತ್ರಿ ಸಿದ್ದೇಶ್ ಹೆಸರು ಮುನ್ನಲೆಗೆ ಬಂದಿದೆ. ಇಲ್ಲೂ ಕೂಡ ಬಿಜೆಪಿ ಬಣ ಜಗಳ ಬೀದಿಗೆ ಬಂದಿರುವುದು ಸ್ಪಷ್ಟಾಗಿ ಗೋಚರಿಸಿದೆ. +ಹಾವೇರಿಯಲ್ಲೂ ಬಿಜೆಪಿ ಬಣ ರಾಜಕೀಯ ಸ್ಪೋಟಗೊಂಡಿದೆ. ಮಾಜಿ ಸಚಿವ ಈಶ್ವರಪ್ಪ, ತಮ್ಮ ಪುತ್ರ ಕೆ.ಇ.ಕಾಂತೇಶ್‍ಗೆ ಟಿಕೆಟ್ ನೀಡಬೇಕೆಂದರೆ ಮತ್ತೊಂದು ಬಣ ಬಸವರಾಜ್ ಬೊಮ್ಮಾಯಿಗೆ ಮಣೆ ಹಾಕಿದೆ.ಆದರೆ ಇಲ್ಲೂ ಕೂಡ ಯಡಿಯೂರಪ್ಪ ಸುಪ್ರೀಂಕೋರ್ಟ್‍ನಲ್ಲಿ ಅಡ್ವೊಕೇಟ್ ಆಗಿರುವ ಸಂದೀಪ್ ಪಾಟೀಲ್‍ಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ. ಹೀಗಾಗಿ ಹಾವೇರಿ ಜಿಲ್ಲಾ ಬಿಜೆಪಿ ಇಬ್ಭಾಗವಾಗಿದೆ. ಉತ್ತರ ಕನ್ನಡ ಜಿಲ್ಲೆಯಿಂದ ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ನೀಡಬಾರದೆಂದು ಸ್ವಪಕ್ಷೀಯರೇ ಒತ್ತಾಯಿಸಿದ್ದಾರೆ. ಎಂದಿನಂತೆ ಹೆಗಡೆ ಪರವಾಗಿ ಯಡಿಯೂರಪ್ಪ ನಿಂತರೆ ಮತ್ತೊಂದು ಬಣ ಕಾಗೇರಿ ಪರವಾಗಿಯೂ ಲಾಬಿ ನಡೆಸಿದೆ. +ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ +ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ಗೆ ಟಿಕೆಟ್ ನೀಡಲು ಜಿಲ್ಲಾ ಘಟಕ ವಿರೋಧ ವ್ಯಕ್ತಪಡಿಸಿದೆ. ಸ್ಥಳೀಯರಿಗೆ ಯಾರಿಗಾದರೂ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.ಬೀದರ್‍ನಲ್ಲೂ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಲು ಸ್ವಪಕ್ಷಿಯವರಿಂದಲೇ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಕಾರ್ಯಕರ್ತರ ವಿರೋಧ ಕಟ್ಟಿಕೊಂಡು ಅವರಿಗೆ ಟಿಕೆಟ್ ಕೊಟ್ಟರೆ ನೋಟಾಕ್ಕೆ ಮತ ಹಾಕುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಇಲ್ಲಿಯೂ ಕೂಬಾ ಪರವಾಗಿ ಯಡಿಯೂರಪ್ಪ ಲಾಬಿ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಈ ಬೆಳವಣಿಗೆಯಿಂದ ಶಾಸಕರಾದ ಪ್ರಭು ಚವ್ಹಾಣ್, ಬಸವ ಕಲ್ಯಾಣ ಶಾಸಕ ಶರಣು ಸಲಗಾರ ಮತ್ತಿತರರು ಚುನಾವಣಾ ಚಟುವಟಿಕೆಗಳಿಂದ ದೂರ ಉಳಿಯುವ ಬೆದರಿಕೆ ಹಾಕಿದ್ದಾರೆ. +ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಹೆಬ್ ಜೊಲ್ಲೆಗೆ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಈ ಕ್ಷೇತ್ರದಿಂದ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರ ಸಹೋದರ ರಮೇಶ್ ಕತ್ತಿಗೆ ಟಿಕೆಟ್‍ನೀಡಬೇಕೆಂಬ ಬೇಡಿಕೆ ಇದೆ.ಅಣ್ಣಾ ಸಾಹೇಬ್ ಜೊಲ್ಲೆ ಪರವಾಗಿ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಲಾಬಿ ನಡೆಸಿದರೆ ರಮೇಶ್ ಕತ್ತಿ ಪರವಾಗಿ ಯಡಿಯೂರಪ್ಪ ಲಾಬಿ ಮಾಡಿದ್ದಾರೆ. ಉಳಿದಂತೆ ಚಿಕ್ಕಬಳ್ಳಾಪುರದಲ್ಲೂ ಬಿಜೆಪಿ ಬಣ ರಾಜಕೀಯ ಜೋರಾಗಿದೆ. ಒಂದು ಬಣ ಮಾಜಿ ಸಚಿವ ಡಾ.ಕೆ.ಸುಧಾಕರ್ ಪರವಾಗಿದ್ದರೆ, ಯಡಿಯೂರಪ್ಪ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್‍ಗೆ ಟಿಕೆಟ್ ಕೊಡಿಸಲು ಮುಂದಾಗಿದ್ದಾರೆ.ಹೀಗೆ ಬಹುತೇಕ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯ ಬಣ ರಾಜಕೀಯ ಬೀದಿಗೆ ಬಂದಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವುದೇ ವರಿಷ್ಠರಿಗೆ ಕಗ್ಗಂಟಾಗಿ ಪರಿಣಮಿಸಿದೆ. \ No newline at end of file diff --git a/eesanje/url_46_209_5.txt b/eesanje/url_46_209_5.txt new file mode 100644 index 0000000000000000000000000000000000000000..1a52eb7c732e211ac05143d35452e6b82248f48c --- /dev/null +++ b/eesanje/url_46_209_5.txt @@ -0,0 +1,5 @@ +ಎನ್‍ಐಎ ಕೈಗೆ ಸಿಗದ ಬಾಂಬರ್, ಹೈದರಾಬಾದ್ ಕರ್ನಾಟಕದಲ್ಲಿ ಶೋಧ +ಬೆಂಗಳೂರು,ಮಾ.10- ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಏನೇ ತಿಪ್ಪರಲಾಗ ಹಾಕಿದರೂ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸೀದಾ ಬಿಎಂಟಿಸಿ ಬಸ್ ಹತ್ತಿ ರಾಜಾಜಿನಗರದ ಸುಜಾತ ಥಿಯೇಟರ್ ಬಸ್‍ಸ್ಟಾಂಡ್‍ಗೆ ಬಂದಿಳಿದು ಅಲ್ಲಿಂದ ಕೆಎಸ್‍ಆರ್‍ಟಿಸಿ ಬಸ್ ಹತ್ತಿ ತುಮಕೂರು, ಬಳ್ಳಾರಿ, ಬೀದರ್, ಗುಲ್ಬರ್ಗಾ, ರಾಯಚೂರು ಮೂಲಕ ಭಟ್ಕಳ ತಲುಪಿದ್ದ ಬಾಂಬರ್ ನಂತರ ಎಲ್ಲಿಗೆ ಹೋಗಿದ್ದಾನೆ ಎಂಬುದು ಇನ್ನೂ ಪತ್ತೆಯಾಗಿಲ್ಲ. +ಹೀಗಾಗಿ ಹೈದರಾಬಾದ್ ಕರ್ನಾಟಕದಲ್ಲಿ ಬೀಡುಬಿಟ್ಟಿರುವ ಎನ್‍ಐಎ ಅಧಿಕಾರಿಗಳು ಅಲ್ಲಿನ ಗಲ್ಲಿ ಗಲ್ಲಿಗಳಲ್ಲೂ ಬಾಂಬರ್‍ಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಆತನ ಸುಳಿವು ಮಾತ್ರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ ಪಟ್ಟುಬಿಡದ ಎನ್‍ಐಎ ಅಧಿಕಾರಿಗಳು ತಮ್ಮ ತಂತ್ರವನ್ನೆಲ್ಲಾ ಬಳಸಿ ಆರೋಪಿಗಾಗಿ ಶೋಧ ಮುಂದುವರೆಸಿದ್ದು ಆತನ ಬಂಧನಕ್ಕಾಗಿ ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಸುಜಾತ ಬಸ್ ನಿಲ್ದಾಣದಿಂದ ತುಮಕೂರಿಗೆ ಬಾಂಬರ್ ಹೋಗಿರುವುದು ಖಚಿತವಾಗುತ್ತಿದ್ದಂತೆ ಅಲ್ಲಿಗೆ ದೌಡಾಯಿಸಿದ್ದ ಪೊಲೀಸರು ತುಮಕೂರು ಮತ್ತು ಬಳ್ಳಾರಿಯ ಇಂಚಿಂಚು ಜಾಗವನ್ನು ಜಾಲಾಡಿದ್ದರೂ ಆತನ ಸುಳಿವು ಮಾತ್ರ ಪತ್ತೆಯಾಗಿರಲಿಲ್ಲ. +ಹೀಗಾಗಿ ಬಂದ ದಾರಿಗೆ ಸುಂಕವಿಲ್ಲದಂತೆ ಹಿಂತಿರುಗಿದ್ದ ತಂಡಗಳು ಇದೀಗ ಬಾಂಬರ್ ಪತ್ತೆಗಾಗಿ ಹೈದರಾಬಾದ್ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿರುವ ಎನ್‍ಐಎ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರ ವಿಶೇಷ ತಂಡ ಅನುಮಾನಸ್ಪದ ಸ್ಥಳಗಳ ಮೇಲೆ ದಿಢೀರ ದಾಳಿ ನಡೆಸಿ ಅನುಮಾನ ಬಂದವರನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ. ಇದೆಲ್ಲದರ ನಡುವೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಹಾಗೂ ಬಳ್ಳಾರಿಯಲ್ಲಿ ಕೆಲವು ಶಂಕಿತರನ್ನು ಪಡೆದು ವಿಚಾರಣೆಗೆ ಒಳಪಡಿಸಿದ್ದರೂ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. +ಬಾಂಬ್ ಇಟ್ಟ ನಂತರ ಆರೋಪಿ ತಲೆಗೆ ಟೋಪಿ ಹಾಕಿಕೊಂಡು ಮುಖ ಮುಚ್ಚಿಕೊಂಡು ಹೋಗುತ್ತಿದ್ದ ಬಗ್ಗೆ ಸಿಕ್ಕ ಚಹರೆ ಆಧಾರದ ಮೇಲೆ ಶಂಕಿತನ ಫೆÇೀಟೋಗಳನ್ನು ಸಾರ್ವಜನಿಕ ವಲಯದಲ್ಲಿ ಹರಿಬಿಟ್ಟು ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದರೂ ಆರೋಪಿ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಎನ್‍ಐಎ ಅಧಿಕಾರಿಗಳ ತಂಡ ಬಾಂಬರ್‍ಗಾಗಿ ಶೋಧ ಮುಂದುವರೆಸಿದ್ದು ಯಾವಾಗ ಚಾಲಾಕಿ ಆರೋಪಿಯನ್ನು ಬಂಧಿಸುವರೋ ಕಾದುನೋಡಬೇಕಿದೆ. \ No newline at end of file diff --git a/eesanje/url_46_209_6.txt b/eesanje/url_46_209_6.txt new file mode 100644 index 0000000000000000000000000000000000000000..443580e2ceffb867af9b698b5b1e7bc517b7a9d5 --- /dev/null +++ b/eesanje/url_46_209_6.txt @@ -0,0 +1,6 @@ +ಶೋಭಕ್ಕ ಕಳಿಸಿ, ಬಿಜೆಪಿ ಉಳಿಸಿ : ಚುನಾವಣಾ ಸಮಿತಿ ಸದಸ್ಯರ ಎದುರೇ ಕಾರ್ಯಕರ್ತರ ಘೋಷಣೆ +ಬೆಂಗಳೂರು,ಮಾ.10- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಲೇಬಾರದು ಎಂದು ಒತ್ತಾಯಿಸಿ ಪಕ್ಷದ ಕಚೇರಿಯಲ್ಲೇ ನೂರಾರು ಕಾರ್ಯಕರ್ತರು, ಬಿಜೆಪಿ ಉಳಿಸಿ, ಶೋಭಕ್ಕನ ಕಳುಹಿಸಿ ಎಂಬ ಅಭಿಯಾನವನ್ನು ಚುನಾವಣಾ ಸಮಿತಿ ಸದಸ್ಯರ ಎದುರೇ ನಡೆಸಿದ್ದಾರೆ. ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಮಿತಿಯ ಸದಸ್ಯರ ಸಭೆಯನ್ನು ಕರೆಯಲಾಗಿತ್ತು. ಸಮಿತಿ ಸದಸ್ಯರಾದ ಆರಗ ಜ್ಞಾನೇಂದ್ರ, ಭಾನುಪ್ರಕಾಶ್ ಅವರು ಬಿಜೆಪಿ ಕಚೇರಿಗೆ ಬರುತ್ತಿದ್ದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. +ಶೋಭಕ್ಕ ಕಳುಹಿಸಿ-ಬಿಜೆಪಿ ಉಳಿಸಿ, ಬೇಡವೇ ಬೇಡ ಶೋಭಕ್ಕ ಬೇಡ ಎಂದು ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಸ್ಥಳೀಯರಿಗೆ ಮಾತ್ರ ಟಿಕೆಟ್ ಕೊಟ್ಟರೆ ನಾವು ಈ ಬಾರಿ ಮತ ಹಾಕುತ್ತೇವೆ. ಇಲ್ಲದಿದ್ದರೆ ಮತದಾನ ದಿನ ಎಲ್ಲರೂ ಮತ ಹಾಕದೆ ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಸಿದರು. +ಶೋಭ ಕರಂದ್ಲಾಜೆ ಮೂಲತಃ ದಕ್ಷಿಣಕನ್ನಡದವರು. ಉಡುಪಿ-ಚಿಕ್ಕಮಗಳೂರಿಗೂ ಅವರಿಗೂ ಸಂಬಂಧವೇ ಇಲ್ಲ. ಯಾವ ಕಾರಣಕ್ಕಾಗಿ ಅವರಿಗೆ ಟಿಕೆಟ್ ನೀಡುತ್ತಿದ್ದೀರಿ? ಗೆದ್ದ ಮೇಲೆ ಕ್ಷೇತ್ರದ ಕಡೆ ತಲೆಯನ್ನೇ ಹಾಕಿಲ್ಲ. ಈ ಹಿಂದೆ ಅತಿವೃಷ್ಟಿ ಉಂಟಾದಾಗ ಹಾಗೂ ಪ್ರಸ್ತುತ ಬರಗಾಲ ಬಂದರೂ ಸಂಕಷ್ಟದಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿಲ್ಲ ಎಂದು ಹರಿಹಾಯ್ದರು. +ಯಾರನ್ನು ಕೇಳಿ ಶೋಭಾ ಅವರ ಹೆಸರನ್ನು ಈ ಕ್ಷೇತ್ರಕ್ಕೆ ಅಂತಿಮ ಮಾಡಿದ್ದಾರೆ. ಉಡುಪಿಯಲ್ಲಿ ಐದು ಶಾಸಕರು ಇದ್ದಾರೆ. ಚಿಕ್ಕಮಗಳೂರಿನಲ್ಲಿ ನಾವು ಕಳೆದ ವಿಧಾನಸಭೆ ಚುನಾವಣೆಯಲ್ಲಿ 5 ಕ್ಷೇತ್ರವನ್ನು ಕಳೆದುಕೊಂಡೆವು. ಕಾಂಗ್ರೆಸ್ ಜೊತೆ ಸೇರಿಕೊಂಡು ಬಿಜೆಪಿ ಅಭ್ಯರ್ಥಿಗಳನ್ನೇ ಅವರು ಸೋಲಿಸಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. +ಒಂದು ಹಂತದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಹರಿಹಾಯ್ದ ಕಾರ್ಯಕರ್ತರು, ಶೋಭ ಹೆಸರನ್ನು ಅಂತಿಮಗೊಳಿಸುವ ಮುನ್ನ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತಲ್ಲವೇ? ಒಂದು ವೇಳೆ ನಮ್ಮ ವಿರೋಧ ಕಟ್ಟಿಕೊಂಡು ಶೋಭ ಅವರಿಗೆ ಟಿಕೆಟ್ ನೀಡಿದರೆ ಬಿಜೆಪಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. \ No newline at end of file diff --git a/eesanje/url_46_209_7.txt b/eesanje/url_46_209_7.txt new file mode 100644 index 0000000000000000000000000000000000000000..8f003db2d59986e5b8b132e7364a104db1342ccb --- /dev/null +++ b/eesanje/url_46_209_7.txt @@ -0,0 +1,12 @@ +ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನ ಪುತ್ರಿ ಬದಲು ಬೇರೆಯವರು ಸ್ಪರ್ಧಿಸಲಿ : ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು, ಮಾ.10- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಬದಲು, ಬೇರೆಯವರು ಸ್ಪರ್ಧಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಹಳಷ್ಟು ಮಂದಿ ಪ್ರಬಲ ಅಭ್ಯರ್ಥಿಗಳಿದ್ದಾರೆ. ಅವರಿಗೆ ಅವಕಾಶ ಸಿಗಲಿ. ಹೈಕಮಾಂಡ್ ಯಾರಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಕಾದು ನೋಡುತ್ತಿದ್ದೇವೆ. ನಮ್ಮ ಪುತ್ರಿ ಸೌಮ್ಯ ರೆಡ್ಡಿ ಸ್ರ್ಪಧಿಸುತ್ತಾರೆ ಎಂದು ಮಾಧ್ಯಮಗಳಲ್ಲಿ ಕೇಳಿ ಬರುತ್ತಿದೆ. ಆದರೆ ನಾವು ಹೇಳುತ್ತಿಲ್ಲ. ನಾನು ಸ್ಪರ್ಧೆ ಮಾಡುವ ಇರಾದೆಯೂ ಇಲ್ಲ ಎಂದು ಸ್ಪಷ್ಟ ಪಡಿಸಿದರು. +ರಾಜ್ಯದ ಲೋಕಸಭಾ ಕ್ಷೇತ್ರಗಳ ಪೈಕಿ ನಮ್ಮ ಪಕ್ಷ ಈಗಾಗಲೇ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಿಜೆಪಿ ಒಂದು ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ನಮ್ಮಲ್ಲಿ ಕೆಲವು ಕ್ಷೇತ್ರಗಳಿಗೆ ಭಾರೀ ಬೇಡಿಕೆ ಇದೆ, ಮೂರ್ನಾಲ್ಕು ಮಂದಿ ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಲ್ಲಿ ಅಂತಹ ಒತ್ತಡಗಳಿಲ್ಲ, ಹೆಚ್ಚಿನ ಆಕಾಂಕ್ಷಿಗಳು, ಅಭ್ಯರ್ಥಿಗಳು ಇಲ್ಲ, ಹಾಗಾಗಿ ಅವರು ಒಂದೇ ಕಂತಿನಲ್ಲಿ ಪಟ್ಟಿ ಬಿಡುಗಡೆ ಮಾಡಬಹುದು ಎಂದರು. +ಪ್ರಧಾನಿ ನರೇಂದ್ರ ಮೋದಿ ಎಲ್ಲ ಕಡೆ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಮಾರ್ಚ್ 13ರವರೆಗೂ ಅವರ ಪ್ರವಾಸವಿದೆ. ಆ ಬಳಿಕ ಪ್ರಧಾನಿ ಹೇಳಿದ ನಂತರ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗಲಿದೆ. ಆಯೋಗವೂ ಈ ರೀತಿ ವರ್ತಿಸುತ್ತಿರುವುದು ಸರಿಯಲ್ಲ ಎಂದು ಹೇಳಿದರು. +ಬರ ನಿರ್ವಹಣೆ ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ. ಬರ ನಿರ್ವಹಣೆಗೆ ಕೇಂದ್ರ ಸರ್ಕಾರ ಈವರೆಗೂ ಬಿಡಿಗಾಸು ಕೊಟ್ಟಿಲ್ಲ. ಪ್ರಕೃತಿ ವಿಕೋಪ, ಬರ ಹಾಗೂ ನೆರೆ ಸಂದರ್ಭದಲ್ಲಿ ಯಾವ ರೀತಿ ನೆರವು ನೀಡಬೇಕು ಎಂದು ಎನ್‍ಡಿಆರ್‍ಎಫ್ ನಿಯಮಾವಳಿಗಳಲ್ಲಿ ಸ್ಪಷ್ಟ ಮಾರ್ಗಸೂಚಿಗಳಿವೆ. ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡದೇ ಇರುವುದನ್ನು ವಿರೋಧಿಸಿ ಬಿಜೆಪಿಯವರು ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಿತ್ತು. ಬೆಂಗಳೂರಿನಲ್ಲಿ ಧರಣಿ ನಡೆಸುತ್ತಾರಂತೆ, ಅವರಿಗೆ ನಾಚಿಕೆಯಾಗಬೇಕು ಎಂದರು. +ಬರ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ ಎಂದು ಹೇಳುತ್ತಿರುವ ಬಿಜೆಪಿಯವರಿಗೆ ಎನ್‍ಡಿಆರ್‍ಎಫ್ ನಿಯಮಾವಳಿಗಳು ಗೋತ್ತಿಲ್ಲವೇ ? ಬಿಡಿಗಾಸು ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂಬ ಅರಿವಿಲ್ಲವೇ ಎಂದು ರಾಮಲಿಂಗಾ ರೆಡ್ಡಿ ಪ್ರಶ್ನಿಸಿದರು. ಬಿಜೆಪಿಯವರಿಗೆ ರೈತರು. ಮಹಿಳೆಯರು, ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲ. ಅವರಿಗೆ ಹಣ ಮತ್ತು ಕುರ್ಚಿ ಎರಡೇ ಮುಖ್ಯ. ಜನರ ಹಿತ ರಕ್ಷಣೆ ಮುಖ್ಯವಲ್ಲ. ವಿಧಾನಸೌಧದ ಮುಂದೆ ಯಾವ ಮುಖ ಇಟ್ಟುಕೊಂಡು ಧರಣಿ ನಡೆಸುತ್ತಾರೆ ಎಂದು ಕಿಡಿಕಾರಿದರು. +ಪ್ರಕೃತಿ ವಿಕೋಪದಿಂದ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿರುವುದು ಒಂದು ಕಡೆಯಾದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ರಾಜ್ಯ ವಿರೋಧಿ ನಿಲುವಿನಿಂದ ರಾಜ್ಯದ ಜಲಾಶಯಗಳು ಬರಿದಾಗಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪದೇ ಪದೇ ಆದೇಶ ನೀಡಿ, ತಮಿಳುನಾಡಿಗೆ ನೀರು ಬಿಡಿಸಿತ್ತು. ರಾಜ್ಯದ ಬಿಜೆಪಿ ಸಂಸದರು, ಕೇಂದ್ರ ಸಚಿವರು ಮಧ್ಯ ಪ್ರವೇಶ ಮಾಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಪ್ರಾಧಿಕಾರ ಆದೇಶ ಕೊಡದಂತೆ ತಡೆಯಬಹುದಿತ್ತು. ಆದರೆ ಆ ರೀತಿ ಮಾಡಲಿಲ್ಲ. ಕೇಂದ್ರದ ಬಳಿ ಅಧಿಕಾರ ಇದ್ದರೂ ರಾಜ್ಯದ ಪರವಾಗಿ ನಿಲುವು ತೆಗೆದುಕೊಳ್ಳಲಿಲ್ಲ. ಬೆಂಗಳೂರಿನ ಲೋಕಸಭಾ ಸದಸ್ಯರು ಬಾಯಿ ಬಿಡಲಿಲ್ಲ ಎಂದು ಆರೋಪಿಸಿದರು. +ಬೆಂಗಳೂರಿನಲ್ಲಿ ಬೋರ್‍ವೆಲ್‍ಗಳು ಅರ್ಧಕ್ಕರ್ಧ ಬತ್ತಿ ಹೋಗಿವೆ. ದೊಡ್ಡ ಮಳೆ ಬರುವವರೆಗೂ ಬೆಂಗಳೂರಿಗೆ ನೀರಿನ ಸಮಸ್ಯೆ ತಪ್ಪುವುದಿಲ್ಲ. ಆದರೂ ನಮ್ಮ ಸರ್ಕಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಪಾಲಿಕೆ ಎಲ್ಲಾ ಟ್ಯಾಂಕರ್‍ಗಳನ್ನು ಬಾಡಿಗೆ ಪಡೆದು ಜನರಿಗೆ ನೀರು ಪೂರೈಸುತ್ತಿದೆ ಎಂದರು. +ಕುಡಿಯುವ ನೀರಿನ ಸಮಸ್ಯೆಯನ್ನು ನಮ್ಮ ಸರ್ಕಾರವಾಗಿರುವುದಕ್ಕೆ ಇಷ್ಟರ ಮಟ್ಟಿಗೆ ನಿಭಾಯಿಸುತ್ತಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದರೆ ಓಡಿ ಹೋಗುತ್ತಿದ್ದರು. ಈ ಹಿಂದೆ ಬೆಂಗಳೂರಿನಲ್ಲಿ ತಾಜ್ಯ ವಿಲೇವಾರಿ ಸಮಸ್ಯೆ ಎದುರಾದಾಗ ಸರಿಯಾಗಿ ನಿರ್ವಹಣೆ ಮಾಡಿರಲಿಲ್ಲ. ನಗರದಲ್ಲಿ ಹತ್ತು ಅಡಿ ವರೆಗೂ ಕಸದ ರಾಶಿ ಬಿದ್ದಿದ್ದನ್ನು ನೋಡಿದ್ದೇವೆ. ಇನ್ನೂ ರಸ್ತೆಯಲ್ಲಿ ಲಕ್ಷಗಟ್ಟಲೇ ಗುಂಡಿಗಳಿದ್ದವು. +ಇವರ ಕೈನಲ್ಲಿ ನಿರ್ವಹಣೆ ಮಾಡಲಾಗಲ್ಲಿಲ. ಕೊನೆಗೆ ಹೈಕೋರ್ಟ್ ಜವಾಬ್ದಾರಿ ತೆಗೆದುಕೊಂಡು ರಸ್ತೆಗುಂಡಿಗಳನ್ನು ಮುಚ್ಚಿಸಿತ್ತು. ಹೈಕೋರ್ಟ್‍ಗೆ ಇದೇನಾ ಕೆಲಸ, ಸರ್ಕಾರ ಸಮರ್ಥವಾಗಿದ್ದರೆ ನ್ಯಾಯಾಲಯ ಮಧ್ಯ ಪ್ರವೇಶ ಮಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿರಲಿಲ್ಲ. ಹಿಂದಿನ ಸರ್ಕಾರದಲ್ಲಿ ಎಲ್ಲವನ್ನೂ ನ್ಯಾಯಾಲಯವೇ ಮುಂದೆ ನಿಂತು ನಿರ್ವಹಣೆ ಮಾಡಬೇಕಿತ್ತು ಎಂದರು. +ಈಗಲೂ ರಾಜ್ಯದ ಬರ ನಿರ್ವಹಣೆಗೆ ಹಣ ಕೊಡಿಸಲು ಬಿಜೆಪಿಯ ದೊಡ್ಡ ದೊಡ್ಡ ನಾಯಕು ಬಾಯಿ ಬಿಡುತ್ತಿಲ್ಲ. 25 ಜನ ಎಂಪಿಗಳು, ಪ್ರಹ್ಲಾದ್ ಜೋಶಿಯವರಂತಹ ಕೇಂದ್ರ ಸಚಿವರು ಇದ್ದರೂ ಏಕೆ ಹಣ ಸಿಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂದರೆ ನಮ್ಮ ರಾಜ್ಯದ ನಾಯಕರು ನಡುಗುತ್ತಾರೆ. ಇಂತಹವರ ಕೈನಲ್ಲಿ ಅಕಾರ ಕೊಟ್ಟರೆ ರಾಜ್ಯ ಮತ್ತು ದೇಶ ಉಳಿಯುತ್ತದೆಯೇ ಎಂದು ಪ್ರಶ್ನಿಸಿದರು. +ನಿಗಮ ಮಂಡಳಿಗಳಿಗೆ ಪ್ರಮುಖ ಕಾರ್ಯಕರ್ತರನ್ನು ಈಗಾಗಲೇ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ, ಇನ್ನೂ ಸದಸ್ಯರನ್ನು ನೇಮಿಸಬೇಕಿದೆ. ಅದಕ್ಕಾಗಿ ಬೆಂಗಳೂರು ನಗರದ ಕಾರ್ಯಕರ್ತರ ಪಟ್ಟಿ ನೀಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿದ್ದೇನೆ. ಮತ್ತೊಂದು ಕಾರಣವೆಂದರೆ ನಮ್ಮ ಪಕ್ಷದ ಪುಟ್ಟಣ್ಣ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಗೆಲುವಿಗಾಗಿ ಮತದಾರರನ್ನು ಅಭಿನಂದಿಸಲು ಉಪಮುಖ್ಯಮಂತ್ರಿ ಮತ್ತು ತಾವು ಜೊತೆಯಲ್ಲೇ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇವೆ ಎಂದರು. \ No newline at end of file diff --git a/eesanje/url_46_209_8.txt b/eesanje/url_46_209_8.txt new file mode 100644 index 0000000000000000000000000000000000000000..e56227b601a1cce99c2132a1d860ffd6b2d20fb6 --- /dev/null +++ b/eesanje/url_46_209_8.txt @@ -0,0 +1,7 @@ +ಬಿಜೆಪಿ ಕಪಟ ನಾಟಕ ಬಿಟ್ಟು ಕೇಂದ್ರದಿಂದ ಹಣ ಕೊಡಿಸಲಿ : ಡಿಕೆಶಿ +ಬೆಂಗಳೂರು, ಮಾ.10- ವಿರೋಧ ಪಕ್ಷವಾಗಿರುವ ಬಿಜೆಪಿಯ ನಾಯಕರು ಕಪಟ ನಾಟಕ ಬಿಟ್ಟು ರಾಜ್ಯದ ಬರ ಪರಿಹಾರಕ್ಕೆ ಕೇಂದ್ರದಿಂದ ಮೊದಲು ಹಣ ಕೊಡಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಹೋರಾಟ ಹಮ್ಮಿಕೊಂಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಮಾನ-ಮರ್ಯಾದೆ ಇದ್ದರೆ ಬಿಜೆಪಿಯವರು ಮೊದಲು ಬರ ಪರಿಹಾರಕ್ಕೆ ಹಣ ಕೊಡಿಸಲಿ. ಬರಗಾಲದಂತಹ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಉದ್ಯೋಗವನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವುದು ಕಡ್ಡಾಯ. ಅದಕ್ಕೂ ಅನುಮತಿ ಕೊಡಿಸಲಿ ಎಂದು ಸವಾಲು ಹಾಕಿದರು. +ಬರ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ವ್ಯಾಪಕವಾಗಿವೆ. ಕಾಂಗ್ರೆಸ್ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿದಾಳಿ ಆರಂಭಿಸಿದೆ. ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಣ ಬಿಡುಗಡೆ ಮಾಡಿದೆ. ಬೆಳೆ ನಷ್ಟಕ್ಕೆ ರೈತರ ಖಾತೆಗಳಿಗೆ ಮೊದಲ ಕಂತಿನ ಪರಿಹಾರವನ್ನಾಗಿ ತಲಾ ಎರಡು ಸಾವಿರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. +ಬರದಿಂದಾಗಿ ರಾಜ್ಯದಲ್ಲಿ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ 18 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳೆದ ಸೆಪ್ಟಂಬರ್ 23ರಂದು ಪ್ರಸ್ತಾವನೆ ಸಲ್ಲಿಸಿದೆ. ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಖುದ್ದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೆ ಈವರೆಗೂ ರಾಜ್ಯಕ್ಕೆ ಹಣ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸಿಕ್ಕ ಸಿಕ್ಕ ಕಡೆಯಲೆಲ್ಲಾ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. +ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ರಾಜ್ಯ ಸರ್ಕಾರ ತನ್ನದೇ ಬೊಕ್ಕಸದ ಹಣದಿಂದ ಬರ ನಿರ್ವಹಣೆ ಮಾಡಬೇಕು. ಕೇಂದ್ರ ಸರ್ಕಾರದ ನೆರವು ಕಾಯಬಾರದು ಎಂದು ತಿರುಗೇಟು ನೀಡುತ್ತಿದೆ. +ರಾಜ್ಯದಿಂದ ನೇರ ಹಾಗೂ ಪರೋಕ್ಷ ತೆರಿಗೆ ಮೂಲಗಳಿಂದ ನಾಲ್ಕುವರೆ ಸಾವಿರ ಕೋಟಿ ರೂಪಾಯಿಗಳ ಸಂಪನ್ಮೂಲ ಸಂಗ್ರಹಿಸುತ್ತಿದೆ. ನೂರು ರೂಪಾಯಿಗೆ ಪ್ರತಿಯಾಗಿ 13 ರೂಪಾಯಿ ಮಾತ್ರ ವಾಪಾಸ್ ನೀಡುತ್ತಿದೆ. ಅದನ್ನು ಕನಿಷ್ಠ 50 ರೂಪಾಯಿಗೆ ಹೆಚ್ಚಿಸಬೇಕು ಅಥವಾ ಬರ ನಿರ್ವಹಣಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. +ಕಾಂಗ್ರೆಸ್ ಸೃಷ್ಟಿಸುತ್ತಿರುವ ಜನಾಭಿಪ್ರಾಯಗಳಿಗೆ ವಿರುದ್ಧವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಡಿ.ಕೆ.ಶಿವಕುಮಾರ ಖಾರವಾಗಿ ಪ್ರತಿಕ್ರಿಯಿಸಿದ್ದು, ಮಾನಮರ್ಯಾದೆ ಇದ್ದರೆ ಕೇಂದ್ರದಿಂದ ಬರ ನಿರ್ವಹಣೆಗೆ ಹಣ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ. \ No newline at end of file diff --git a/eesanje/url_46_209_9.txt b/eesanje/url_46_209_9.txt new file mode 100644 index 0000000000000000000000000000000000000000..4d31648b4e3c8fd1eab81d34643e96b3e46e038d --- /dev/null +++ b/eesanje/url_46_209_9.txt @@ -0,0 +1,4 @@ +ಏರಿದ ಝಳ, ಕುಸಿದ ಜಲ, ಜನ ಕಂಗಾಲು..! +ಬೆಂಗಳೂರು, ಮಾ.10-ತೀವ್ರ ಬರದಿಂದಾಗಿ ನೀರಿನ ಸಮಸ್ಯೆ ಉಲ್ಬಣಗೊಂಡಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಬೇಸಿಗೆಯ ಆರಂಭದಲ್ಲಿ ಬಿಸಿಲಿನ ಝಳ ಏರತೊಡಗಿದ್ದು, ಜನರು ತತ್ತರಿಸುವಂತಾಗಿದೆ. ಬೆಳಿಗ್ಗೆಯಿಂದಲೇ ಸೆಖೆ ಕಂಡುಬರುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸರಾಸರಿ 35 ಡಿ.ಸೆ.ನಷ್ಟು ದಾಖಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ 38 ಡಿ.ಸೆ.ಗಡಿ ದಾಟಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಒಣ ಹವೆ ಮುಂದುವರೆದಿದೆ. ಮಾ.16 ವರೆಗೂ ಮಳೆಯಾಗುವ ಸಾಧ್ಯತೆಗಳು ಇಲ್ಲ. ಹೀಗಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ. +ಮಾರ್ಚ್‍ನಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ವಾಡಿಕೆಯಾದರೂ ಸದ್ಯಕ್ಕೆ ಮಳೆಯಾಗುವ ಲಕ್ಷಣಗಳಿಲ್ಲ. ಇದರಿಂದ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಬರದಿಂದಾಗಿ ಸರಾಸರಿ ಒಂದರಿಂದ ಎರಡು ಡಿ.ಸೆ.ನಷ್ಟು ಗರಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿದೆ. ಗರಿಷ್ಠ ತಾಪಮಾನ ಕರಾವಳಿ ಭಾಗದಲ್ಲೂ ಸರಾಸರಿ 35ರಿಂದ 36 ಡಿ.ಸೆ.ನಷ್ಟಿದ್ದರೆ, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ 38ರಿಂದ 40 ಡಿ.ಸೆ.ನಷ್ಟು ದಾಖಲಾಗುತ್ತಿದೆ. ಅದೇ ರೀತಿ ದಕ್ಷಿಣ ಒಳನಾಡಿನಲ್ಲೂ 35 ಡಿ.ಸೆ. ಗಡಿ ದಾಟಿದ್ದು, 34ರಿಂದ 37 ಡಿ.ಸೆ.ನಷ್ಟು ದಾಖಲಾಗುತ್ತಿದೆ. +ಬೇಸಿಗೆಯ ಪ್ರಾರಂಭದಲ್ಲಿ ಪ್ರಖರ ಬಿಸಿಲು ಇರುವುದರಿಂದ ಜನರ ಆರೋಗ್ಯದ ಕಡೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಗತ್ಯ. ಸಾಧ್ಯವಾದಷ್ಟು ಮಧ್ಯಾಹ್ನದ ಬಿಸಿಲಿನ ವೇಳೆ ಕೊಡೆ ಬಳಸುವುದು ಸೂಕ್ತ. ನೆರಳಿನಲ್ಲಿ ಕೆಲಸ ಮಾಡುವುದು ಸೂಕ್ತ. ಜತೆಗೆ ಆಗಾಗ್ಗೆ ನೀರು ಕುಡಿಯಬೇಕು. ಹಣ್ಣು, ಎಳ ನೀರು ಸೇರಿದಂತೆ ತಂಪು ಪಾನೀಯಗಳನ್ನು ಹೆಚ್ಚು ಸೇವಿಸಬೇಕು ಎಂದು ತಜ್ಞರು ಸಲಹೆ ಮಾಡಿದ್ದಾರೆ. \ No newline at end of file diff --git a/eesanje/url_46_20_1.txt b/eesanje/url_46_20_1.txt new file mode 100644 index 0000000000000000000000000000000000000000..f4d86ba581b3ff3bd46d89cd8662e44a853b9122 --- /dev/null +++ b/eesanje/url_46_20_1.txt @@ -0,0 +1,10 @@ +ಪ್ರಜ್ವಲ್ ರೇವಣ್ಣ ಪ್ರಕರಣದ ಚಾರ್ಜ್‌ಶೀಟ್‌ ಸೋರಿಕೆ : ಎಚ್.ಡಿ.ರೇವಣ್ಣ ಆರೋಪ + : +ಬೆಂಗಳೂರು,ಸೆ.13-ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನವೇ ದೋಷಾರೋಪ ಪಟ್ಟಿ ಸೋರಿಕೆಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಇಂದಿಲ್ಲಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ರೇವಣ್ಣ ಅವರ ವಿರುದ್ಧ 2ನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಯಿಸಿದರು. +ಸರ್ಕಾರದ ನ್ಯೂನತೆ, ಲೋಪದೋಷಗಳನ್ನು ಮುಚ್ಚಿಕೊಳ್ಳಲು ಏನೇನು ನಡೆಯುತ್ತಿದೆ ಎಂಬುದು ಗೊತ್ತಿದೆ. ಸೋರಿಕೆಯಾದ ವಿಚಾರಗಳು ಯಾರ್ಯಾರ ಕೈ ಸೇರುತ್ತಿದೆ ಎನ್ನುವುದು ಗೊತ್ತಿದೆ ಎಂದರು.ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸುವ ಮುನ್ನ ಸೋರಿಕೆ ಮಾಡುತ್ತಿರುವವರು ಯಾರು?, ನ್ಯಾಯ ಕೊಡಿಸುವವರು ಯಾರು? ಎಂದು ಪ್ರಶ್ನಿಸಿದರು. +ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಇಡಿ ಮಾಜಿ ಸಚಿವ ನಾಗೇಂದ್ರ ಅವರನ್ನು ಎ1 ಆರೋಪಿ ಎಂದು ಹೇಳಿದೆ. ಆದರೆ ಎಸ್ಐಟಿ ಆ ರೀತಿ ಆರೋಪಿಯನ್ನಾಗಿ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಬಿಟ್ಟು ನಮನ್ನು ಹೆದರಿಸುವ ಪ್ರಯತ್ನ ಮಾಡುತ್ತಿದೆ. ನಾನು 40 ವರ್ಷ ದಿಂದ ರಾಜಕಾರಣದಲ್ಲಿದ್ದೇನೆ. 25 ವರ್ಷ ಶಾಸಕನಾಗಿದ್ದೇನೆ. +ಯಾವುದಕ್ಕೂ ಹೆದರುವುದಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ನ್ಯಾಯಾಲಯ ನೇಣಿಗೆ ಹಾಕಲಿ. ವಿಧಾನಸಭೆಯಲ್ಲಿ ಶಾಸಕನಾಗಿ, ಸಚಿವನಾಗಿ ನನ್ನ ವಿರುದ್ಧ ತನಿಖೆ ಮಾಡಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದರು.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಸಿಓಡಿ ತನಿಖೆ ಮಾಡಿಸಿದ್ದರು. ಬಳಿಕ ಅದೇ ಅಧಿಕಾರಿ ದೇವೇಗೌಡರ ಕಾಲು ಕಟ್ಟಿದ್ದರು ಎಂದು ಹೇಳಿದರು. +ನಮಗೆ ದೇವರ ಮೇಲೆ ನಂಬಿಕೆ, ಕಾನೂನಿನ ಮೇಲೆ ನಂಬಿಕೆ, ನ್ಯಾಯಾಂಗದ ಬಗ್ಗೆ ಗೌರವವಿದೆ. ನಮ ಮೇಲಿನ ಆರೋಪಗಳ ಬಗ್ಗೆ ನ್ಯಾಯಾಲಯದ ಮೂಲಕವೇ ಹೋರಾಟ ನಡೆಸಿದ್ದೇವೆ ಎಂದು ಅವರು ತಿಳಿಸಿದರು. +ವಿಚಾರಣೆ ನೆಪದಲ್ಲಿ ನಮ ಮನೆಯ ಕೆಲಸಗಾರರು, ಅಡುಗೆಭಟ್ಟರು, ಆಪ್ತ ಸಹಾಯಕರನ್ನು ಬಿಟ್ಟಿಲ್ಲ. ವಿಚಾರಣೆ ಮಾಡಿದ್ದಾರೆ. ಈ ಹಿಂದೆಯೇ ಬಿಜೆಪಿ ನಾಯಕರು ಹೇಳಿದ್ದರು. ಕಾಂಗ್ರೆಸ್ ಅನ್ನು ನಂಬಬೇಡಿ ಎಂದು. ವಿಚಾರಣೆ ನೆಪದಲ್ಲಿ ನಮಗೆ ಯಾವ ರೀತಿ ತೊಂದರೆ ಕೊಟ್ಟರು ಎಂಬುದನ್ನು ಎಳೆಎಳೆಯಾಗಿ ವಿಧಾನಸಭೆ ಅಧಿವೇಶನದಲ್ಲಿ ಹೇಳುತ್ತೇನೆ. ಎಸ್ಐಟಿ ಯಾವ ರೀತಿ ತನಿಖೆ ನಡೆಸುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. +ನಾಗಮಂಗಲದ ಘಟನೆಗೆ ಸರ್ಕಾರವೇ ನೇರ ಹೊಣೆ :ನಾಗಮಂಗಲದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ. ರಾಜ್ಯಸರ್ಕಾರವೇ ನೇರ ಹೊಣೆ ಎಂದು ರೇವಣ್ಣ ಇದೇ ಸಂದರ್ಭದಲ್ಲಿ ಆರೋಪಿಸಿದರು. +ಕಳೆದ ಬಾರಿಯೂ ಗಲಾಟೆಯಾಗಿತ್ತು. ಆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ, ಬಿಗಿಯಾದ ಪೊಲೀಸ್ ವ್ಯವಸ್ಥೆ ಮಾಡಬೇಕಿತ್ತು, ಮಾಡಿಲ್ಲ. ಆದರೂ ಗೃಹಸಚಿವರು ಈ ಘಟನೆ ಸಣ್ಣದು ಎಂದು ಹೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_20_10.txt b/eesanje/url_46_20_10.txt new file mode 100644 index 0000000000000000000000000000000000000000..37eab23185bae4263bf07647d64d5efecb01c0a5 --- /dev/null +++ b/eesanje/url_46_20_10.txt @@ -0,0 +1,8 @@ +ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿ, ಸಿಟಿ ರೌಡ್ಸ್ ಹಾಕಿದ ಸಿಎಂ + +ಬೆಂಗಳೂರು,ಸೆ.12-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಅನುಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.ವಿಧಾನಸೌಧದ ಮೆಟ್ಟಿಲುಗಳ ಬಳಿ ಬಿಎಂಟಿಸಿಯ ನೂತನ ಬಸ್‌‍ಗಳಿಗೆ ಚಾಲನೆ ನೀಡಿದ ಬಳಿಕ ತಮ ಪ್ರಯಾಣ ಆರಂಭಿಸಿದ ಸಿದ್ದರಾಮಯ್ಯ ಅವರು, ರಾಜಭವನ ರಸ್ತೆ ಮೂಲಕ ಚಾಲುಕ್ಯ ಸರ್ಕಲ್‌, ಹೈಗ್ರೌಂಡ್ಸ್ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯಲ್ಲಿ ಪ್ರಯಾಣ ಮುಂದುವರೆಸಿದರು. +ಮೇಕ್ರಿವೃತ್ತದ ಬಳಿಯಿಂದ ಹೆಬ್ಬಾಳಕ್ಕೆ ತೆರಳಿ ಅಲ್ಲಿ ಹೆಚ್ಚುವರಿ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಜೊತೆಗೆ ಅಲ್ಲಿಯೇ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಕಾಮಗಾರಿಯನ್ನು ಖುದ್ದು ಪರಿಶೀಲಿಸಿದರು. +ಕೆ.ಆರ್‌.ಪುರಂಗೆ ತೆರಳಿದ ಮುಖ್ಯಮಂತ್ರಿಗಳು ಹೊರವರ್ತುಲ ರಸ್ತೆ ದುರಸ್ಥಿ ಹಾಗೂ ಬಿಎಂಆರ್‌ಸಿಎಲ್‌ನ ಮೆಟ್ರೋ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಕೆಲ ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣಾಭೈರೇಗೌಡ ಹೊರವರ್ತುಲ ರಸ್ತೆಯಲ್ಲಿನ ಗುಂಡಿಗಳ ಫೋಟೊ ಲಗತ್ತಿಸಿ ಯಾರಾದರೂ ಈ ಗುಂಡಿಗಳನ್ನುಮುಚ್ಚಿಸಿ ಎಂದು ಮನವಿ ಮಾಡಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರದ ಸಚಿವರೇ ಈ ರೀತಿ ಅಂಗಲಾಚುವ ಪರಿಸ್ಥಿತಿ ಬಂದಿದೆ. ಬೆಂಗಳೂರಿನಲ್ಲಿ ಯಾರು, ಯಾರ ಮಾತನ್ನೂ ಕೇಳುತ್ತಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿದ್ದವು. +ಕೆ.ಆರ್‌.ಪುರಂ ಸಂಪರ್ಕಿಸುವ ಹೊರವರ್ತುಲ ರಸ್ತೆಗಳಲ್ಲಿ ತೀವ್ರ ಸ್ವರೂಪದ ಗುಂಡಿಗಳು ಕಂಡುಬಂದಿದ್ದವು. ಜೊತೆಗೆ ಬೆಂಗಳೂರಿನಾದ್ಯಂತ ಇರುವ ಎಲ್ಲಾ ಗುಂಡಿಗಳನ್ನು 15 ದಿನದೊಳಗೆ ದುರಸ್ಥಿ ಮಾಡದೇ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಪಡಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದರು. +ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತರಾತುರಿಯಲ್ಲಿ ಗುಂಡಿಗಳನ್ನು ಮುಚ್ಚುತ್ತಿದ್ದು, ಕೆಲವು ಕಡೆ ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿರುವುದು ಕಂಡುಬಂದಿದೆ.ಡಿ.ಕೆ.ಶಿವಕುಮಾರ್‌ ಅಮೆರಿಕಾ ಪ್ರವಾಸದಲ್ಲಿದ್ದರೂ ಬೆಂಗಳೂರಿನಲ್ಲಿ ಗುಂಡಿ ಮುಚ್ಚುವ ಕೆಲಸ ಭರದಿಂದ ಮುಂದುವರೆದಿದೆ. ಈ ನಡುವೆ ಸಿದ್ದರಾಮಯ್ಯ ಅವರು ಬೆಂಗಳೂರು ವೀಕ್ಷಣೆ ನಡೆಸಿದ್ದಾರೆ. +ಕೆ.ಆರ್‌.ಪುರಂನಿಂದ ವೀರಣ್ಣನಪಾಳ್ಯ ಜಂಕ್ಷನ್‌, ನಾಗಾವರ ಜಂಕ್ಷನ್‌, ಬೆಂಗಳೂರು ಮುಖ್ಯರಸ್ತೆಯನ್ನು ಪರಿಶೀಲಿಸಿ ಕೆ.ಆರ್‌.ಪುರಂ ಬಳಿ ಯುಟರ್ನ್‌ ಪಡೆದು ಇಂದಿರಾನಗರ ಮಾರ್ಗವಾಗಿ ಗುರುದ್ವಾರ ಜಂಕ್ಷನ್‌, ಹಲಸೂರು ರಸ್ತೆ, ಕಬ್ಬನ್‌ ರಸ್ತೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲಲ್ಲಿ ಕಂಡುಬಂದ ರಸ್ತೆಗುಂಡಿಗಳನ್ನು ವೀಕ್ಷಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. \ No newline at end of file diff --git a/eesanje/url_46_20_11.txt b/eesanje/url_46_20_11.txt new file mode 100644 index 0000000000000000000000000000000000000000..ff53bac11ebf3eb37f716cca8d7d85b9bc9d1f64 --- /dev/null +++ b/eesanje/url_46_20_11.txt @@ -0,0 +1,11 @@ +ಇದೇ 22 ರಂದು ನಡೆಯಬೇಕಿದ್ದ ಪಿಎಸ್‌‍ಐ ನೇಮಕಾತಿ ಪರೀಕ್ಷೆ ಸೆ.28ಕ್ಕೆ ಮುಂದೂಡಿಕೆ + 28th + +ಬೆಂಗಳೂರು,ಸೆ.12-ಅಭ್ಯರ್ಥಿಗಳ ಮನವಿಗೆ ಕೊನೆಗೂ ಮಣಿದಿರುವ ರಾಜ್ಯಸರ್ಕಾರ ಇದೇ ತಿಂಗಳ 22 ರಂದು ನಿಗದಿಯಾಗಿದ್ದ ಪಿಎಸ್‌‍ಐ ನೇಮಕಾತಿ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿದೆ.ಇದೇ 22 ರಂದು ಯುಪಿಎಸ್‌‍ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಅದೇ ದಿನ ನಡೆಸಲು ಉದ್ದೇಶಿಸಿದ್ದ ಪಿಎಸ್‌‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. +ಏಕಕಾಲಕ್ಕೆ ಎರಡು ಪರೀಕ್ಷೆಗಳು ನಡೆಯುವುದರಿಂದ ಗೊಂದಲ ಉಂಟಾಗುತ್ತದೆ. ಹೀಗಾಗಿ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕೆಂಬುದು ಅಭ್ಯರ್ಥಿಗಳ ಮನವಿಯಾಗಿತ್ತು. +ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಿಎಸ್‌‍ಐ ಪರೀಕ್ಷೆಯನ್ನು ಸೆ.22ರ ಬದಲು 28ಕ್ಕೆ ನಡೆಸಲು ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಕ್ರಮವನ್ನು ತೆಗೆದುಕೊಂಡಿದ್ದೇವೆಂದು ಹೇಳಿದರು.ಬೆಂಗಳೂರು ಸೇರಿದಂತೆ ಒಟ್ಟು 6 ಜಿಲ್ಲೆಗಳ 164 ಕೇಂದ್ರಗಳಲ್ಲಿ ಪೊಲೀಸ್‌‍ ಸಬ್‌ಇನ್‌್ಸಪೆಕ್ಟರ್‌ ನೇಮಕಾತಿಯ ಪರೀಕ್ಷೆಯನ್ನು ಇದೇ 22 ರಂದು (ಭಾನುವಾರ) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಲಾಗಿತ್ತು. +ಅದೇ ದಿನ ಯುಪಿಎಸ್‌‍ಸಿ ಪರೀಕ್ಷೆ ನಿಗದಿಯಾಗಿದ್ದರಿಂದ ಪರೀಕ್ಷೆಯನ್ನು ಮುಂದೂಡಬೇಕೆಂದು ಪ್ರತಿಪಕ್ಷ ಬಿಜೆಪಿ ಜೊತೆಗೆ ಅಭ್ಯರ್ಥಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದರು. +ಸೆ.28 ರಂದು ನಿಗದಿಯಂತೆ ಪರೀಕ್ಷೆ ನಡೆಯಲಿದೆ. ಈ ಬಗ್ಗೆ ಯಾರಿಗೂ ಗೊಂದಲ ಬೇಡ. ಯುಪಿಎಸ್‌‍ಸಿ ಹಾಗೂ ಪಿಎಸ್‌‍ಐ ಪರೀಕ್ಷೆ ಏಕಕಾಲಕ್ಕೆ ನಡೆಯುತ್ತಿದ್ದುದರಿಂದ ಅಭ್ಯರ್ಥಿಗಳ ಮನವಿ ಮೇರೆಗೆ ಮುಂದೂಡಿಕೆ ಮಾಡಲಾಗಿದೆ ಎಂದು ಪರಮೇಶ್ವರ್‌ ತಿಳಿಸಿದರು.ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಒಟ್ಟು 66,999 ಮಂದಿ ಪಿಎಸ್‌‍ಐ ಪರೀಕ್ಷೆ ಬರೆಯಲಿದ್ದರು. +ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದೆ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ನೇತೃತ್ವದ ನಿಯೋಗ ಪರಮೇಶ್ವರ್‌ ಅವರನ್ನು ಭೇಟಿ ಮಾಡಿ ಪಿಎಸ್‌‍ಐ ಪರೀಕ್ಷೆ ಮುಂದೂಡಬೇಕೆಂದು ಮನವಿ ಮಾಡಿದ್ದರು. +ಪಿಎಸ್‌‍ಐ ಹಾಗೂ ಯುಪಿಎಸ್‌‍ಸಿ ಪರೀಕ್ಷೆ ಏಕಕಾಲದಲ್ಲಿ ನಡೆಯುವುದರಿಂದ ಗೊಂದಲ ಉಂಟಾಗುತ್ತದೆ. ಹೀಗಾಗಿ ಪರೀಕ್ಷೆಯನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡುವಂತೆ ಅಶ್ವತ್ಥನಾರಾತಣ ನೇತೃತ್ವದ ನಿಯೋಗ ಮನವಿ ಮಾಡಿಕೊಂಡಿತ್ತು. +ರಾಜ್ಯಸರ್ಕಾರ 384 ಪೊಲೀಸ್‌‍ ಸಬ್‌ ಇನ್ಸ್ ಪೆಕ್ಟರ್‌ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಇದೇ 22 ರಂದು ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. 402 ಅಭ್ಯರ್ಥಿಗಳಲ್ಲಿ 102 ಅಭ್ಯರ್ಥಿಗಳು ಯುಪಿಎಸ್‌‍ಸಿ ಪರೀಕ್ಷೆಯನ್ನೂ ಸಹ ತೆಗೆದುಕೊಂಡಿದ್ದರು. ಹೀಗಾಗಿ ಮುಂದೂಡಬೇಕೆಂಬುದು ಅವರ ಆಗ್ರಹವಾಗಿತ್ತು. ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಮೂಲಕ 384 ಪಿಎಸ್‌‍ಐ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. \ No newline at end of file diff --git a/eesanje/url_46_20_12.txt b/eesanje/url_46_20_12.txt new file mode 100644 index 0000000000000000000000000000000000000000..ccf959efae4d63574c4929331ba593afa6a3ae47 --- /dev/null +++ b/eesanje/url_46_20_12.txt @@ -0,0 +1,9 @@ +ನಾಗಮಂಗಲದ ಗಲಭೆಗೆ ಸಿಎಂ, ಡಿಸಿಎಂ ಹೊಣೆ : ಸುನಿಲ್‌ ಕುಮಾರ್‌ +, : +ಬೆಂಗಳೂರು,ಸೆ.12– ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟೋಲ್‌ ಬಾಂಬ್‌ ಸ್ಪೋಟಿಸಿ ತಲ್ವಾರ್‌ ಝಳಪಿಸಿದ್ದಾರೆ. +ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಸರ್ಕಾರವನ್ನು ಪ್ರಶ್ನೆಸಿದ್ದಾರೆ. +ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. +ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. ಇದರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಹೊರಬೇಕು ಎಂದು ಒತ್ತಾಯಿಸಿದ್ದಾರೆ. +ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. 1/2@ +ಮತ್ತೊಂದು ಟ್ವೀಟ್‌ ಮಾಡಿರುವ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ, ನಾಗಮಂಗಲ ಕೋಮುಗಲಭೆ; ಒಂದು ಸಮುದಾಯದ ಪುಂಡರ ಉದ್ದೇಶಪೂರ್ವಕ ದಾಂಧಲೆ. +ಪೆಟೋಲ್‌ ಬಾಂಬ್‌ ಎಸೆದು ಕೋಮುಗಲಭೆಗೆ ಪ್ರಚೋದನೆ ನೀಡಿದ ಮುಸ್ಲಿಮ್‌ ಗಲಭೆಕೋರರನ್ನು ಬಂಧಿಸುವುದನ್ನು ಬಿಟ್ಟು ಸಮಿತಿಯ ಸದಸ್ಯರನ್ನು ಬಂಧಿಸಿದ ಪೋಲೀಸರ ಕೃತ್ಯ ಅಕ್ಷಮ್ಯ. ಕೊಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_20_2.txt b/eesanje/url_46_20_2.txt new file mode 100644 index 0000000000000000000000000000000000000000..0ec69f4a9ceefd6c0526b1703d2db8c5b9424e3f --- /dev/null +++ b/eesanje/url_46_20_2.txt @@ -0,0 +1,17 @@ +ನಾಗಮಂಗಲ ಗಲಭೆ ಕಾಂಗ್ರೆಸ್ ಪ್ರಾಯೋಜಿತ : ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ + +ನಾಗಮಂಗಲ(ಮಂಡ್ಯ),ಸೆ.13– ಗಣೇಶ ಮೆರವಣಿಗೆ ವೇಳೆ ಪಟ್ಟಣದಲ್ಲಿ ನಡೆದ ಗಲಭೆ ಪೂರ್ವಯೋಜಿತ ಕೃತ್ಯ, ವ್ಯವಸ್ಥಿತ ಪಿತೂರಿ. ಅಷ್ಟೇ ಅಲ್ಲ ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. +ನಾಗಮಂಗಲದ ಗಲಭೆ ಪೀಡಿತ ಪ್ರದೇಶಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಅವರು ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ವ್ಯವಸ್ಥಿತವಾಗಿ ಗಲಭೆಗಳನ್ನು ಸೃಷ್ಟಿ ಮಾಡುವುದು ಕಾಂಗ್ರೆಸ್ಗೆ ಕರತಲಾಮಲಕ. +ಹಿಂದಿನಿಂದಲೂ ಅದನ್ನು ಮಾಡಿಕೊಂಡು ಬಂದಿದೆ. 1990ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ರಾಮನಗರ, ಚನ್ನಪ್ಪಟ್ಟಣದಲ್ಲಿ ಕೋಮುಗಲಭೆ ಸೃಷ್ಟಿಸಿ ಬೆಂಕಿ ಹಾಕಲಾಗಿತ್ತು. ಅವಳಿ ಪಟ್ಟಣಗಳು ಹೊತ್ತಿ ಉರಿದವು. ಅದೇ ಮಾದರಿಯಲ್ಲಿ ನಾಗಮಂಗಲದಲ್ಲಿ ಗಲಭೆ ಎಬ್ಬಿಸಲಾಗಿದೆ ಎಂದು ಆರೋಪಿಸಿದರು.ಡಿಜಿ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಸುಟ್ಟು ಹಾಕಲಾಯಿತು. ಅದಕ್ಕೂ ಕಾಂಗ್ರೆಸ್ ನಾಯಕರೇ ಕಾರಣ. ಆ ಪ್ರಕರಣದಲ್ಲಿ ಜೈಲಿಗೆ ಹೋದವರು ಏನಾಗಿದ್ದಾರೋ ಗೊತ್ತಿಲ್ಲ. ನಾಗಮಂಗಲದಲ್ಲಿ ಈಗ ಯಾವ ದುರುದ್ದೇಶ ಇಟ್ಟುಕೊಂಡು ಗಲಭೆ ಸೃಷ್ಟಿಸಿದ್ದಾರೋ ಗೊತ್ತಿಲ್ಲ ಎಂದರು. +ನಾಗಮಂಗಲದಲ್ಲಿಯೂ ಕಾಂಗ್ರೆಸ್ ಚಿತಾವಣೆಯ ಬಗ್ಗೆ ಅನುಮಾನ ಇದೆ. ಈಗ ಚನ್ನಪಟ್ಟಣದಲ್ಲಿ ಉಪ ಚುನಾವಣೆ ಬರುತ್ತಿದೆ. ಬೇರೆ ಬೇರೆ ಘಟನೆಗಳು ಕೂಡ ನಡೆಯುತ್ತಿವೆ. ಹೀಗಾಗಿ ಒಂದು ಸಮುದಾಯದ ಓಲೈಕೆ ಮಾಡಲು ಈ ಸಂಚು ರೂಪಿಸಿರಬಹುದು. ಇಡೀ ಘಟನೆಯನ್ನು ನೋಡಿದರೆ ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್ ಇದೆ ಎಂದು ಶಂಕೆ ವ್ಯಕ್ತಪಡಿಸಿದರು. +ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಸ್ಥಳೀಯ ಪೊಲೀಸರ ಕರ್ತವ್ಯ ಲೋಪವೂ ಕಾರಣ ಎಂದ ಅವರು, ನಿಜವಾದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಶಿಕ್ಷೆಯಾಗಲು ಪೊಲೀಸರು ಕೆಲಸ ಮಾಡಬೇಕು ಎಂದರು. +ಗಲಭೆಯ ಎಫ್ಐಆರ್ ಪ್ರತಿಯನ್ನು ಹಿಡಿದು ಮಾತನಾಡಿದ ಎಚ್ಡಿಕೆ, ಆರೋಪ ಪಟ್ಟಿ ಸಂಪೂರ್ಣ ಲೋಪದಿಂದ ಕೂಡಿದೆ. ಪೊಲೀಸರ ವರ್ತನೆ ಸಂಶಯಾಸ್ಪದವಾಗಿದೆ ಎಂದು ಹೇಳಿದರು. ಕೇವಲ 100-150 ಜನ ಇದ್ದ ಮೆರವಣಿಗೆಗೆ ಸ್ಥಳೀಯ ಪೊಲೀಸರಿಗೆ ಭದ್ರತೆ ಒದಗಿಸಲು ಸಾಧ್ಯವಾಗಿಲ್ಲ. ಸ್ಥಳದಲ್ಲಿ ಗಲಾಟೆ ಆರಂಭವಾಗುವುದಕ್ಕೆ ಕೇವಲ ಹತ್ತು ನಿಮಿಷಗಳ ಮೊದಲು ಮೀಸಲು ಪೊಲೀಸ್ ಪಡೆಯನ್ನು ಬೇರೆಡೆಗೆ ಕಳಿಸಲಾಗಿದೆ. ಅಲ್ಲದೆ ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಡಿವೈಎಸ್ಪಿ ಸ್ಥಳದಲ್ಲೇ ಇರಲಿಲ್ಲ ಎಂದು ಸ್ಥಳೀಯರೇ ಹೇಳಿದ್ದಾರೆ. ಹಾಗಾದರೆ ಈ ಇಬ್ಬರು ಅಧಿಕಾರಿಗಳು ಎಲಿದ್ದರು? ಮೀಸಲು ಪಡೆಯನ್ನು ಬೇರೆಡೆಗೆ ಕಳಿಸಿದ್ದು ಯಾಕೆ? ಎಂದು ಪ್ರಶ್ನಿಸಿದರು. +ಹತ್ತೇ ನಿಮಿಷದಲ್ಲಿ ಕಲ್ಲು, ಪೆಟ್ರೋಲ್ ಬಾಂಬ್ಗಳು ಎಲ್ಲಿಂದ ಬಂದವು? ಎಂದು ಅನುಮಾನ ವ್ಯಕ್ತಪಡಿಸಿ, ಮೆರವಣಿಗೆ ಹೊರಟಿದ್ದವರ ಮೇಲೆ ಕಲ್ಲು, ಚಪ್ಪಲಿ, ಪೆಟ್ರೋಲ್ ಬಾಂಬ್ ಗಳನ್ನು ಎಸೆಯಲಾಗಿದೆ. ಕೇವಲ ಹತ್ತು ನಿಮಿಷದಲ್ಲಿ ಅಷ್ಟು ಪ್ರಮಾಣದ ಕಲ್ಲು, ಚಪ್ಪಲಿ, ಕಬ್ಬಿಣದ ಪೈಪ್ ಗಳು, ಪೆಟ್ರೋಲ್ ಬಾಂಬ್ ಗಳು ಎಲ್ಲಿಂದ ಬಂದವು? ಹತ್ತೇ ನಿಮಿಷದಲ್ಲಿ ಇವನ್ನೆಲ್ಲಾ ಸಂಗ್ರಹ ಮಾಡಿಕೊಳ್ಳಲು ಸಾಧ್ಯವೇ? ಇಡೀ ಗಲಭೆಯ ರೀತಿಯನ್ನು ನೋಡಿದರೆ ಹಿಂದೆ ದೊಡ್ಡ ಪಿತೂರಿ ಅಡಗಿರುವಂತೆ ತೋರುತ್ತದೆ ಎಂದರು. +ಇಷ್ಟೊಂದು ದೊಡ್ಡ ಗಲಭೆ ಆಗಿದೆ. ಯೋಜಿತವಾಗಿ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಆದರೂ ಇವರೂ ಸಣ್ಣ, ಆಕಸಿಕ ಘಟನೆ ಎನ್ನುತ್ತಾರೆ, ಇವರನ್ನು ಗೃಹ ಸಚಿವರು ಎಂದು ಕರೆಯಬೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಾಂಗ್ರೆಸ್ ನಾಯಕರು ತಮ ನಡವಳಿಕೆಯನ್ನು ಸರಿ ಮಾಡಿಕೊಳ್ಳಬೇಕು. ಹಳೆ ಮೈಸೂರು ಭಾಗದಲ್ಲಿ ಎರಡೂ ಸಮುದಾಯದ ಜನರು ಸೌಹಾರ್ದತೆಯಿಂದ ಜೀವನ ಮಾಡುತ್ತಿದ್ದಾರೆ. ರಾಜಕೀಯಕ್ಕಾಗಿ ಜನರ ಬದುಕು ಛಿದ್ರ ಮಾಡಬೇಡಿ. ಇದು ಸಣ್ಣ ವಿಷಯ. ಇದಕ್ಕೆ ಮಹತ್ವ ಕೊಡುವುದು ಬೇಡ ಎನ್ನುತ್ತಾರೆ ಗೃಹ ಸಚಿವರು. ಈ ರೀತಿ ಹೇಳಿಕೆ ಮೂಲಕ ಜನರಿಗೆ ಯಾವ ಸಂದೇಶ ಕೊಡುತ್ತಾರೆ ಅವರು? ಮೆರವಣಿಗೆಗೆ ಅನುಮತಿ ಕೊಟ್ಟಿರುವುದೇ ನೀವು. +ಮೆರವಣಿಗೆಗೆ ಭದ್ರತೆ ಕೊಡಬೇಕಾದ ಹೊಣೆಯೂ ನಿಮದೇ. ಘಟನೆ ಸ್ಥಳದಲ್ಲಿ ಆಗ ಎಷ್ಟು ಜನ ಪೊಲೀಸರನ್ನು ನಿಯೋಜನೆ ಮಾಡಿದ್ದಿರಿ? ನಿಮ ಇನಸ್ಪೆಕ್ಟರ್ ಎಲ್ಲಿ ಇದ್ದರು. ಘಟನೆಗೂ ಮುನ್ನ ಇಲ್ಲಿದ್ದ ಮೀಸಲುಪಡೆ ವಾಹನವನ್ನು ವಾಪಸ್ ಕರೆಸಿಕೊಂಡಿದ್ದಾರೆ. ಘಟನೆ ನಡೆದ ಒಂದು ಗಂಟೆಗೆ ವಿಷಯ ಮಾಧ್ಯಮದವರಿಗೆ ಗೊತ್ತಾಗುತ್ತದೆ. ಪೊಲೀಸರಿಗೆ ಯಾಕೆ ಗೊತ್ತಾಗಿಲ್ಲ? ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. +ಅಧಿಕಾರಿ ಅಮಾನತು ಕಣ್ಣೊರೆಸುವ ತಂತ್ರ: ನಾನು ನಾಗಮಂಗಲಕ್ಕೆ ಬರುತ್ತೇನೆ ಎಂದು ಗುರುವಾರವೇ ಹೇಳಿದ್ದೆ. ಅಂದು ಸಂಜೆ ಬಿಜೆಪಿ ನಾಯಕರು ಸ್ಥಳಕ್ಕೆ ಬಂದಿದ್ದರು. ಅದಕ್ಕಾಗಿಯೇ ಇನ್ಸ್ಪೆಕ್ಟರ್ ಅಶೋಕ್ ರನ್ನು ಸಸ್ಪೆಂಡ್ ಮಾಡಿದ್ದಾರೆ. ಇದು ಕಣ್ಣೊರೆಸುವ ತಂತ್ರ ಎಂದರು.ಮಸೀದಿ ಬಳಿ 10 ನಿಮಿಷ ಡಾನ್‌್ಸ ಮಾಡಲು ಬಿಟ್ಟವರು ಯಾರು? ಆಗ ಪೊಲೀಸರು ಏನು ಮಾಡುತಿದ್ದರು? ಹೆಚ್ಚುವರಿ ಪೊಲೀಸರು ಇದ್ದರೆ ಪರಿಸ್ಥಿತಿ ನಿಯಂತ್ರಣ ಮಾಡಬಹುದಿತ್ತು. ಮೆರವಣಿಗೆ ವೇಳೆ ಇನಸ್ಪೆಕ್ಟರ್, ಡಿವೈಎಸ್ಪಿ ಯಾರೂ ಇರಲಿಲ್ಲ. ಆದರೆ ಎಫ್ಐಆರ್ನಲ್ಲಿ ಅವರು ಇದ್ದರು ಎಂದು ಬರೆಯಲಾಗಿದೆ. ಇದು ಯಾವ ಜಾದು? ಎಂದು ಪ್ರಶ್ನಿಸಿದರು. +ಆತ ತ್ರಿಕಾಲಜ್ಞಾನಿಯೇ?:ದೂರು ನೀಡಿರುವ ಅಧಿಕಾರಿ ರವಿಗೆ ರಾತ್ರಿ 1.30ರಲ್ಲಿ ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಹೆಸರುಗಳು ಹೇಗೆ ಗೊತ್ತು? ಪೆಟ್ಟು ತಿಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಅಷ್ಟು ಜನರ ಹೆಸರುಗಳು ನೆನಪಾಗಿದ್ದು ಹೇಗೆ? ಆತನಿಗೆ ಎಷ್ಟು ನೆನಪಿನ ಶಕ್ತಿ ಇದೆ! ಆತನೇನು ತ್ರಿಕಾಲಜ್ಞಾನಿಯೇ? ಎಂದು ಕೇಂದ್ರ ಸಚಿವರು ಅಚ್ಚರಿ ವ್ಯಕ್ತಪಡಿಸಿದರು. +ಪ್ರತಿಯೊಂದರಲಿಯೂ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ. ಇಲ್ಲಿ ಅಮಾಯಕ ಜನರ ಬದುಕು ಬೀದಿಗೆ ಬಂದಿದೆ. ಗಲಭೆಯಲ್ಲಿ ಪೊಲೀಸರನ್ನು ಕೊಲೆ ಮಾಡಲು ಬಂದಿದ್ದಾರೆ ಎಂದು ಎಫ್ಐಆರ್ನಲ್ಲಿ ಬರೆದಿದ್ದಾರೆ. ಪೊಲೀಸರಿಗೆ ಭದ್ರತೆ ನೀಡದ ದರಿದ್ರ ಸರ್ಕಾರ ರಾಜ್ಯದಲ್ಲಿದೆ. ಆಗಿರುವ ಲೋಪ ಒಪ್ಪಿಕೊಳ್ಳುವುದು ಬಿಟ್ಟು ಸಮುದಾಯಗಳ ನಡುವೆ ಕಂದಕ ತೊಡುವುದು ಸರಿಯಲ್ಲ ಎಂದು ಅವರು ಕಿಡಿಕಾರಿದರು. +ಇದೇ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗಲಭೆಯಲ್ಲಿ ಆಸ್ತಿಪಾಸ್ತಿ, ಜೀವನೋಪಾಯ ಕಳೆದುಕೊಂಡ ಅನೇಕರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಅವರು ಪರಿಹಾರವಾಗಿ ನೀಡಿದರು.ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಅವರು ಹೇಳಿದರು. +ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಸೇರಿ ಅನೇಕ ಮುಖಂಡರು ಜತೆಯಲ್ಲಿ ಇದ್ದರು. ಇದಕ್ಕೂ ಮುನ್ನ ದುಷ್ಕರ್ಮಿಗಳ ದಾಳಿಗೆ ತುತ್ತಾದ ಅಂಗಡಿ, ಮಳಿಗೆಗಳನ್ನು ವೀಕ್ಷಿಸಿ ಆಸ್ತಿ ಕಳೆದುಕೊಂಡ ವ್ಯಾಪಾರಿಗಳಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. \ No newline at end of file diff --git a/eesanje/url_46_20_3.txt b/eesanje/url_46_20_3.txt new file mode 100644 index 0000000000000000000000000000000000000000..ab9adb024c2842f740b9748cc99e196d34a1da0d --- /dev/null +++ b/eesanje/url_46_20_3.txt @@ -0,0 +1,6 @@ +ನಾಗಮಂಗಲ ಗಲಭೆ : ಕೆರಳಿದ ಹಿಂದೂ ಸಂಘಟನೆಗಳಿಂದ ಗಣೇಶಮೂರ್ತಿ ಹಿಡಿದು ಪ್ರತಿಭಟನೆ + +ಬೆಂಗಳೂರು, ಸೆ.13-ನಾಗಮಂಗಲದಲ್ಲಿ ಗಣೇಶ ಉತ್ಸವದ ಮೇಲೆ ನಡೆದ ದಾಳಿ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯಸರ್ಕಾರ ಎನ್ಐಎ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಇಂದು ಪುರಭವನದ ಬಳಿ ಗಣೇಶಮೂರ್ತಿ ಹಿಡಿದು ಪ್ರತಿಭಟನೆ ನಡೆಸಿವೆ. +ನಾಗಮಂಗಲ ಕಿಚ್ಚು ಈಗ ಬೆಂಗಳೂರಿಗೂ ವ್ಯಾಪಿಸಿದ್ದು, ಇಂದು ಗಣೇಶಮೂರ್ತಿಗಳನ್ನು ಹಿಡಿದು ನೂರಾರು ಮಂದಿ ಪುರಭವನದ ಬಳಿ ಜಮಾಯಿಸಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಕೆಲವು ಕಿಡಿಗೇಡಿಗಳು ಯಾವುದೇ ಭಯವಿಲ್ಲದೆ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ನಾಗಮಂಗಲದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಆಸ್ತಿಪಾಸ್ತಿ ಹಾನಿಗೊಳಿಸಿದ್ದಾರೆ. +ಆದರೆ, ಇದನ್ನು ಗೃಹ ಸಚಿವರು ಸಣ್ಣ ಕಲ್ಲು ತೂರಾಟ ಎಂದು ಬಣ್ಣಿಸಿದ್ದಾರೆ. ಇದನ್ನು ನೋಡಿದರೆ ತುಷ್ಟೀಕರಣ ರಾಜಕಾರಣ ರಾಜ್ಯದಲ್ಲಿ ತಾಂಡವವಾಡುತ್ತಿದೆ ಎಂದು ದೂರಿದರು.ಗಣೇಶ ಮೂರ್ತಿಗಳನ್ನು ಹೊತ್ತು ಘೋಷಣೆ ಕೂಗಿದಾಗ ಪೊಲೀಸರು ಅವರನ್ನು ತಡೆದು ವಶಕ್ಕೆ ಪಡೆದರು. ಆದರೂ ಜಗ್ಗದೆ ರಸ್ತೆ ಮಧ್ಯೆಯೇ ಕುಳಿತು ನ್ಯಾಯ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. +ಈ ವೇಳೆ ಪೊಲೀಸರು ಗಣೇಶಮೂರ್ತಿಗಳನ್ನು ವಶಕ್ಕೆ ಪಡೆದು ತೆಗೆದುಕೊಂಡು ಹೋಗಿ ತಮ ಜೀಪ್ನಲ್ಲಿರಿಸಿದರು. ಈ ವೇಳೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಸದಸ್ಯರನ್ನು ವಶಕ್ಕೆ ಪಡೆಯಲಾಯಿತು. \ No newline at end of file diff --git a/eesanje/url_46_20_4.txt b/eesanje/url_46_20_4.txt new file mode 100644 index 0000000000000000000000000000000000000000..9412ee48d9a2bbcdad0c62c212b280ce3c9d3b12 --- /dev/null +++ b/eesanje/url_46_20_4.txt @@ -0,0 +1,11 @@ +ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗಲೆಲ್ಲ ಟಿಪ್ಪು ಸಂತತಿಯವರು ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಾರೆ : ತೇಜಸ್ವಿ ಸೂರ್ಯ + +ಬೆಂಗಳೂರು,ಸೆ.13-ಕರ್ನಾಕಟದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ಟಿಪ್ಪು ಸಂತತಿಯಂತಿರುವ ಕೆಲವು ಮತೀಯ ಶಕ್ತಿಗಳು ರಾತ್ರೋರಾತ್ರಿ ಎದ್ದು ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ ಹಲ್ಲೆ ನಡೆಸುತ್ತಾರೆ ಎಂಬುದು ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ. +ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಾಜಿ ಸದಸ್ಯ ಉಮೇಶ್ ಶೆಟ್ಟಿ ಅವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ಏನು ನಡೆದಿದೆ ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ. ನಮ ಗಣಪತಿಯನ್ನು ವಿಸರ್ಜನೆ ಮಾಡುವಾಗ ಕೋಮುಗಲಭೆ ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದರು. +ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಾಗ ಸುಮನಿರುತ್ತಿದ್ದ ಕೆಲವು ಮತೀಯ ಶಕ್ತಿಗಳು ದಿಢೀರನೇ ಎದ್ದುಬಿಡುತ್ತಾರೆ. ಇಂತವರಿಗೆ ಕೆಲವು ರಾಜಕೀಯ ಪಕ್ಷಗಳು ಉದ್ದೇಶಪೂರಕವಾಗಿಯೇ ಬೆಂಬಲ ನೀಡುತ್ತವೆ. ಇದು ತುಷ್ಠೀಕರಣದ ನೀತಿಯೇ ಕಾರಣ ಎಂದು ವಾಗ್ದಾಳಿ ಮಾಡಿದರು. +ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ವಿದೇಶದಲ್ಲಿ ಕುಳಿತು ಭಾರತದ ಮಾನವನ್ನು ಹರಾಜು ಮಾಡುತ್ತಿದ್ದಾರೆ. ಹುಟ್ಟಿದ ದೇಶದ ಬಗ್ಗೆ ಏನು ಮಾತನಾಡಬೇಕೆಂಬ ಸಾಮಾನ್ಯ ಜ್ಞಾನವೂ ಅವರಿಗಿಲ್ಲ. ಅವರ ಮಾತುಗಳನ್ನು ಯಾರೂ ನಂಬುವ ಸ್ಥಿತಿಯಲ್ಲಿಲ್ಲ. ಇಂತವರು ಒಂದೊಂದು ದಿನ ದೇಶದ ಸಮಗ್ರತೆ, ಭಾವೈಕ್ಯತೆ, ಸಾಮರಸ್ಯದ ಬಗ್ಗೆ ಮಾತನಾಡಿದರೂ ಅಚ್ಚರಿಯಿಲ್ಲ ಎಂದು ವ್ಯಂಗ್ಯವಾಡಿದರು. +ರಾಹುಲ್‌ಗಾಂಧಿ ಮಾತನ್ನು ಯಾರೊಬ್ಬರೂ ಕೇಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ಅವರ ಮಾತುಗಳಲ್ಲಿ ಬರೀ ಸುಳ್ಳುಗಳೇ ತುಂಬಿವೆ. ಆರ್‌ಎಸ್‌‍ಎಸ್‌‍, ಬಿಜೆಪಿ, ಸಂಘಪರಿವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವುದೇ ಅವರ ಒಂದಂಶದ ಕಾರ್ಯಕ್ರಮವಾಗಿದೆ ಎಂದು ಕಿಡಿಕಾರಿದರು. +ವಿದೇಶದಲ್ಲಿ ಅವರು ಭೇಟಿ ಮಾಡಿರುವ ವ್ಯಕ್ತಿಗಳು ಅವರ ಇತಿಹಾಸ ತೆಗೆದು ನೋಡಿದರೆ ಎಲ್ಲರಿಗೂ ಗೊತ್ತಾಗುತ್ತದೆ. ಭಾರತದ ಶತ್ರುಗಳು ರಾಹುಲ್‌ಗಾಂಧಿಯವರ ಸ್ನೇಹಿತರಾಗಿದ್ದಾರೆ. ಇಂತವರು ದೇಶದ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಎಂದು ತೇಜಸ್ವಿಸೂರ್ಯ ಕಿಡಿಕಾರಿದರು. +ಓಬಿಸಿಗೆ ಅನ್ಯಾಯ ಆಗುತ್ತದೆ ಎಂದು ಇಲ್ಲಿ ಹೇಳುತ್ತಾರೆ. ವಿದೇಶದಲ್ಲಿ ಕುಳಿತು ನಮ ಪಕ್ಷ ಅಧಿಕಾರಕ್ಕೆ ಬಂದರೆ ಮೀಲಸಾತಿ ರದ್ದುಪಡಿಸುತ್ತೇವೆ ಎನ್ನುತ್ತಾರೆ. ನೆಹರು, ರಾಜೀವ್‌ಗಾಂಧಿ ಆದಿಯಾಗಿ ಎಲ್ಲರೂ ಮೀಸಲಾತಿ ವಿರೋಧಿಗಳೇ. ಹೀಗಾಗಿ ಅವರ ಹೇಳಿಕೆ ನಮಗೇನೂ ಆಶ್ಚರ್ಯ ಉಂಟುಮಾಡಿಲ್ಲ ಎಂದು ಹೇಳಿದರು. +ಮಂಡಲ್‌ ಆಯೋಗದ ಬಗ್ಗೆ ರಾಜೀವ್‌ಗಾಂಧಿ ಏನು ಭಾಷಣ ಮಾಡಿದ್ದಾರೆ ಎಂಬುದನ್ನು ರಾಹುಲ್‌ಗಾಂಧಿ ದಾಖಲೆಗಳನ್ನು ತೆಗೆದುಕೊಂಡು ನೋಡಬೇಕು. ಮೀಸಲಾತಿ ಕೊಡುವ ನೆಪದಲ್ಲಿ ಬುದ್ದುಗಳಿಗೆ ನಾವು ಅವಕಾಶ ಕೊಡಲು ಆಗುವುದಿಲ್ಲ ಎಂದು ಎಸ್‌‍ಸಿ/ಎಸ್‌‍ಟಿ, ಓಬಿಸಿಗೆ ಅನ್ಯಾಯ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವವರೆಗೂ ಓಬಿಸಿಗಳಿಗೆ ಮೀಸಲಾತಿ ಕೊಟ್ಟಿರಲಿಲ್ಲ ಎಂದು ತಿಳಿಸಿದರು. +ಸಿಖ್ಖರ ಮೇಲೆ ನರಮೇಧ ನಡೆಸಿದ್ದು ಕಾಂಗ್ರೆಸ್‌‍. ಇಂದಿರಾಗಾಂಧಿಯವರು ಹತ್ಯೆಗೀಡಾದಾಗ ಸೇಡು ತೀರಿಸಿಕೊಳ್ಳಲು ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಬರ್ಭರವಾಗಿ ಸಾವಿರಾರು ಜನರನ್ನು ಹತ್ಯೆ ಮಾಡಲಾಯಿತು. ಅಂತಹ ಸಮುದಾಯದ ಬಗ್ಗೆ ರಾಹುಲ್‌ಗಾಂಧಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_20_5.txt b/eesanje/url_46_20_5.txt new file mode 100644 index 0000000000000000000000000000000000000000..0bc5adb97a943177c7616d6e09d8a6219365aac9 --- /dev/null +++ b/eesanje/url_46_20_5.txt @@ -0,0 +1,5 @@ +ನಾಗಮಂಗಲ ಕೋಮುಗಲಭೆ : ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ ಎಫ್‌ಎಸ್‌‍ಎಲ್‌ ತಂಡ + : +ನಾಗಮಂಗಲ,ಸೆ.13-ಪಟ್ಟಣದ ಬದ್ರಿಕೊಪ್ಪಲಿನಲ್ಲಿ ನಡೆದ ಗಲಭೆ ಸ್ಥಳಕ್ಕೆ ಎಫ್‌ಎಸ್‌‍ಎಲ್‌ ತಂಡ ಭೇಟಿ ನೀಡಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸ್ಥಳೀಯ ಪೊಲೀಸರೊಂದಿಗೆ ಬೆರಳಚ್ಚು ತಜ್ಞರ ತಂಡ ಆಗಮಿಸಿದ್ದು, ಸುಟ್ಟು ಕರಕಲಾದ ಅಂಗಡಿಗಳಿಗೆ ತೆರಳಿ ಅದರ ಮಾಲೀಕರುಗಳಿಂದ ಮಾಹಿತಿ ಪಡೆದು, ಸ್ಥಳದಲ್ಲಿ ದೊರೆತ ವಸ್ತುಗಳು, ಬಾಟಲಿಗಳು, ಕಲ್ಲುಗಳು, ದೊಣ್ಣೆಗಳನ್ನು ವಶಕ್ಕೆ ಪಡೆದಿದೆ. +ಪೆಟ್ರೋಲ್‌ ಬಾಂಬ್‌ನಿಂದಾಗಿ ವಸ್ತುಗಳು ಕರಕಲಾಗಿರುವುದು ಕಂಡುಬಂದಿದ್ದು, ಸಂಗ್ರಹಿಸಿರುವ ವಸ್ತುಗಳನ್ನೆಲ್ಲಾ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು.ಇದು ಪೂರ್ವನಿಯೋಜಿತ ಸಂಚು ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಸ್ಥಳದಲ್ಲಿ ಬಿಗಿಭದ್ರತೆ ಒದಗಿಸಲಾಗಿದೆ. ಪೊಲೀಸರು ವಾಹನಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. +ಸ್ಥಳದಲ್ಲಿ ಮೈಸೂರು ವಲಯದ ಡಿಐಜಿಪಿ ಡಾ.ಬೋರಲಿಂಗಯ್ಯ ಮೊಕ್ಕಾಂ ಹೂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಾಳೆವರೆಗೂ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ.ಮೊನ್ನೆ ರಾತ್ರಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪ್ರಾರ್ಥನಾ ಮಂದಿರದ ಬಳಿ ಬರುತ್ತಿದ್ದಂತೆ ಕಿಡಿಗೇಡಿಗಳು ಏಕಾಏಕಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ 14ಕ್ಕೂ ಹೆಚ್ಚು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡು 52 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. \ No newline at end of file diff --git a/eesanje/url_46_20_6.txt b/eesanje/url_46_20_6.txt new file mode 100644 index 0000000000000000000000000000000000000000..d55b1df82a9c274c58ace08120b692ded112f2e8 --- /dev/null +++ b/eesanje/url_46_20_6.txt @@ -0,0 +1,10 @@ +ನಾಗಮಂಗಲ ಗಲಭೆ : ಕರ್ತವ್ಯ ನಿರ್ಲಕ್ಷ್ಯದ ಆರೋಪದಲ್ಲಿ ಇನ್ಸ್‌ಪೆಕ್ಟರ್‌ ಅಶೋಕ್‌ ಕುಮಾರ್‌ ಅಮಾನತು + : +ಬೆಂಗಳೂರು,ಸೆ.13-ನಾಗಮಂಗಲ ಗಲಾಟೆಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್‌‍ ಇನ್ಸ್ ಪೆಕ್ಟರ್‌ ಅಶೋಕ್‌ ಕುಮಾರ್‌ನನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಮೆರವಣಿಗೆ ಹೊರಡಬೇಕಿದ್ದ ದಾರಿಯನ್ನು ಮುಂಚಿತವಾಗಿ ನೀಡಲಾಗಿತ್ತು. ಇದನ್ನು ಇನ್‌ಸ್ಪೆಕ್ಟರ್‌ ಬದಲಾಯಿಸಿದ್ದರು ಎಂದರು. +ಯಾವುದೇ ಘಟನೆಗಳಾದರೆ ನಿಮನ್ನೇ ಹೊಣೆ ಮಾಡುವುದಾಗಿ ಪೊಲೀಸ್‌‍ ಅಧಿಕಾರಿಗಳಿಗೆ ಮೊದಲೇ ಎಚ್ಚರಿಸಿದ್ದೇವೆ. ಡಿವೈಎಸ್‌‍ಪಿ ಮೇಲೂ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣಗಳೇನು ಎಂಬುದರ ಕುರಿತು ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು. +ಯಾವುದೇ ಅಹಿತಕರ ಘಟನೆ ನಡೆಯದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೆವು. ಅದರ ಆಧಾರದ ಮೇಲೆ ಡಿಜಿ ಯವರು ವೀಡಿಯೋ ಕಾನ್ಫರೆನ್‌್ಸಮೂಲಕ ಸಂಬಂಧಪಟ್ಟ ಎಲ್ಲ ಎಸ್‌‍ಪಿ ಮತ್ತು ಅಧಿಕಾರಿಗಳಿಗೆ ತಿಳಿಸಿದ್ದರು. ಸಾರ್ವಜನಿಕರೊಂದಿಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ, ಎಸ್‌‍ಪಿ ಎಲ್ಲರು ಸಹ ಸಭೆಗಳನ್ನು ನಡೆಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಕೆಎಸ್‌‍ಆರ್‌ಪಿ ವಾಹನ ಇಟ್ಟುಕೊಂಡು ಸಜ್ಜಾಗಿದ್ದರು ಎಂದರು. +ಸರ್ಕಾರದ ಕುಮಕ್ಕು ನೀಡಿದ್ದು, ಇದು ಪೂರ್ವನಿಯೋಜಿತ ಘಟನೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಸರ್ಕಾರದವರಾದರೂ ಹೋಗಿ ಗಲಾಟೆ ಮಾಡಿ ಎಂದು ಹೇಳುತ್ತಾರೆಯೇ? ಈ ರೀತಿ ಆಗಬಾರದಾಗಿತ್ತು ಎಂದು ಹೇಳುವುದೇ ತಪ್ಪ. ಇವರಿಗೆ ಕನ್ನಡ ಭಾಷೆ ಅರ್ಥವಾಗುವುದಿಲ್ಲವೇ? ನಾವು ಹಳ್ಳಿಯಿಂದ ಬಂದವರು, ಹಳ್ಳಿ ಭಾಷೆಯಲ್ಲಿ ಹೇಳುತ್ತೇವೆ. +ಪಠ್ಯಪುಸ್ತಕದ ಭಾಷೆ ಬಳಸುತ್ತೇವೆಯೇ? ಒಂದು ಮಾತನ್ನು ಸ್ಪಷ್ಟವಾಗಿ ಹೇಳಲಿಚ್ಛಿಸುತ್ತೇನೆ. ರಾಜ್ಯದಲ್ಲಿ ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದರು.ಯಾರೇ ಆಗಿರಲಿ, ಗಣೇಶ ಹಬ್ಬ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಅನವಶ್ಯಕವಾಗಿ ಗೊಂದಲಗಳನ್ನು ಸೃಷ್ಟಿಸಿ, ಗಲಾಟೆ ಮಾಡಿದರೆ ಸುಮನೆ ಬಿಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕೋ, ಕಟ್ಟುನಿಟ್ಟಾಗಿ ಮುಲಾಜಿಲ್ಲದೇ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. +ಯಾವುದೇ ಸಮುದಾಯವನ್ನು ತುಷ್ಟಿಕರಣ ಮಾಡುವ ಅಗತ್ಯತೆ ನಮಗೆ ಇಲ್ಲ. ಹೇಳಿಕೆಗಳನ್ನು ತಿರುಚಿ, ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡಿಕೊಂಡರೆ ನಾವೇನು ಮಾಡಲಾಗುವುದಿಲ್ಲ ಎಂದರು. +ನಾನು ಗೃಹ ಸಚಿವನಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ. ಬಿಜೆಪಿಯವರಿಂದ ಸರ್ಟಿಫಿಕೇಟ್‌ ಬೇಕಿಲ್ಲ. ನನಗೂ ಜವಾಬ್ದಾರಿ ಇದೆ. ಜವಾಬ್ದಾರಿ ಇಲ್ಲದೆ, ಆ ಸ್ಥಾನದಲ್ಲಿ ಕುಳಿತಿಲ್ಲ. ಕೆಲಸ ಮಾಡುತ್ತಿದ್ದೇವೆ. ನಾಗಮಂಗಲ ಘಟನೆಯನ್ನು ಸಮರ್ಥನೆ ಮಾಡುತ್ತಿದ್ದೇವೆಯೇ? ಯಾರು ಕಾರಣ ಆಗಿದ್ದಾರೆ, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ? ಈಗಾಗಲೇ 52 ಜನರನ್ನು ಸುಮನೆ ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು. +ಬಿಜೆಪಿಯವರು ಹೇಳಿಕೆಗಳನ್ನು ತಿರುಚಿ ವ್ಯಾಖ್ಯಾನ ಮಾಡಿಕೊಳ್ಳಲಿ. ಪರಮೇಶ್ವರ ಹೀಗೆ ಹೇಳಿದರು, ಸಣ್ಣದೆಂದರು, ದೊಡ್ಡದು ಎಂದರು ಹೇಳಿಕೊಳ್ಳಲಿ. ನನಗು ಅವರಂತೆ ಮಾತನಾಡುವುದಕ್ಕೆ ಬರುತ್ತದೆ. ನಾನು ನಿನ್ನೆಯೇ ಈ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ವಿಪಕ್ಷದವರಿಗೆ ಮನವಿ ಮಾಡಿದ್ದೇನೆ. ಆದರೂ ರಾಜಕೀಯ ಮಾಡುತ್ತೇವೆ ಅನ್ನುವುದಾದರೆ ಮಾಡಲಿ. ನಾವು ನಿಭಾಯಿಸುತ್ತೇವೆ ಎಂದರು. ಇಂತಹ ಘಟನೆಗಳಾದ ಸಂದರ್ಭದಲ್ಲಿ ಪರಿಹಾರ ಕೊಡಲು ಕೆಲವು ನಿಯಮಗಳಿವೆ. ಘಟನೆಯ ತನಿಖಾ ವರದಿ ಬಂದ ನಂತರ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_20_7.txt b/eesanje/url_46_20_7.txt new file mode 100644 index 0000000000000000000000000000000000000000..643c1228fcde92bacd29df49b3d514c46c759632 --- /dev/null +++ b/eesanje/url_46_20_7.txt @@ -0,0 +1,11 @@ +ಬಿಜೆಪಿಯೊಳಗಿನ ಮುಸುಕಿನ ಗುದ್ದಾಟಕ್ಕೆ ಕಡಿವಾಣ ಹಾಕುವುದೇ ವಿಜಯೇಂದ್ರಗೆ ಸವಾಲು + +ಬೆಂಗಳೂರು,ಸೆ.13– ಆರ್ಎಸ್ಎಸ್ ನಾಯಕರ ಮಧ್ಯಪ್ರವೇಶದಿಂದಾಗಿ ಸದ್ಯ ಪರಿಸ್ಥಿತಿ ತಿಳಿಗೊಂಡಿದೆ ಎಂದು ಹೇಳಲಾಗುತ್ತಿದೆಯಾದರೂ ಬಿಜೆಪಿಯೊಳಗಿನ ಮುಸುಕಿನ ಗುದ್ದಾಟಕ್ಕೆ ಕಡಿವಾಣ ಹಾಕುವುದೇ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸವಾಲಾಗಿ ಪರಿಣಮಿಸಿದೆ.ಸಂಘ ಪರಿವಾರ ನಾಯಕರ ಮಧ್ಯಪ್ರವೇಶದಿಂದ ಹಾವು ಮುಂಗುಸಿಯಂತಿದ್ದ ವಿಜಯೇಂದ್ರ ಹಾಗೂ ಯತ್ನಾಳ್ ತಂಡವನ್ನು ಸದ್ಯಕ್ಕೆ ಒಗ್ಗೂಡಿಸುವಲ್ಲಿ ಆರ್ಎಸ್ಎಸ್ ನಾಯಕರು ಯಶಸ್ವಿಯಾಗಿದ್ದಾರೆ. +ಪರಸ್ಪರ ಮುಖ ಕೊಟ್ಟು ಮಾತನಾಡದ ಸ್ಥಿತಿಯಲ್ಲಿದ್ದ ಬಿಜೆಪಿಯ ನಿಷ್ಠಾವಂತ ಮತ್ತು ಭಿನ್ನಮತೀಯ ನಾಯಕರು ಒಗ್ಗಟ್ಟಾಗಿ ಪಕ್ಷ ಸಂಘಟನೆ ಮಾಡುತ್ತೇವೆಂದು ಹಿರಿಯರ ಬಳಿ ವಾಗ್ದಾನ ಮಾಡಿದ್ದಾರೆ.ಆದರೆ ಯತ್ನಾಳ್ ಹಾಗೂ ಅವರ ತಂಡವನ್ನು ನಿಭಾಯಿಸಿಕೊಂಡು ಪಕ್ಷವನ್ನು ಮುನ್ನಡೆಸುವುದು ವಿಜಯೇಂದ್ರ ಅವರಿಗೆ ಅಷ್ಟು ಸುಲಭವಲ್ಲ ಎಂದು ಪಕ್ಷದವರೇ ಹೇಳುತ್ತಿದ್ದಾರೆ. +ಏಕೆಂದರೆ ಯತ್ನಾಳ್ ಬಣದಲ್ಲಿರುವ ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ, ಬಿ.ಪಿ.ಹರೀಶ್ ಮತ್ತಿತರರು ಒಂದಲ್ಲೊಂದು ರೀತಿ ಸಿಎಂ ಸಿದ್ದಾರಾಮಯ್ಯನವರ ಜೊತೆ ಅನ್ಯೋನ್ಯವಾಗಿಯೇ ಇದ್ದಾರೆ. +ಮೇಲ್ನೋಟಕ್ಕೆ ಯತ್ನಾಳ್ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯನವರು ಹೇಳಿಕೊಂಡರೂ ಅವರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಯಥೇಚ್ಚವಾಗಿ ಅನುದಾನ ಬಿಡುಗಡೆ ಹಾಗೂ ಅಧಿಕಾರಿಗಳ ವರ್ಗಾವಣೆ ಶರವೇಗದಲ್ಲಿ ನಡೆಯುತ್ತದೆ ಎಂಬ ಅಸಮಧಾನ ಬಿಜೆಪಿಯಲ್ಲೇ ಕೇಳಿಬರುತ್ತಿದೆ. +ಮುಡಾ ಹಗರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಜಂಟಿ ಪಾದಯಾತ್ರೆ ನಡೆಯುತ್ತಿದ್ದಾಗ ಪಕ್ಷಕ್ಕೆ ಉದ್ದೇಶಪೂರ್ವಕವಾಗಿ ಮುಜುಗರವಾಗಲೆಂದು ಹೇಳಿಕೆ ಕೊಟ್ಟಿದ್ದು ಯತ್ನಾಳ್. +ಇದು ಸರ್ಕಾರದ ಸೂಚನೆ ಮೇರೆಗೆ ಯತ್ನಾಳ್ ಹಾಗೂ ಅವರ ತಂಡ ಉದ್ದೇಶಪೂರ್ವಕವಾಗಿಯೇ ಬಿಜೆಪಿಯನ್ನು ವಿಶೇಷವಾಗಿ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಯಾಗಿಟ್ಟುಕೊಂಡು ನಡೆಸಿದ ವ್ಯವಸ್ಥಿತ ಷಡ್ಯಂತರ ಎಂಬ ಗುಸುಗುಸು ಜಗನ್ನಾಥ ಭವನದಲ್ಲಿ ರಿಂಗಣಿಸುತ್ತಿದೆ. +ಮುಂದಿನ ದಿನಗಳಲ್ಲಿ ನಾವು ಪಕ್ಷದ ಅಣತಿಯಂತೆ ನಡೆದುಕೊಳ್ಳುತ್ತೇವೆ ಎಂದು ಯತ್ನಾಳ್ ಹೇಳಿಕೊಂಡಿದ್ದರೂ ಅವರ ಮಾತನ್ನು ಯಾರೂ ಕೂಡ ಅಷ್ಟು ಸುಲಭವಾಗಿ ನಂಬುವ ಸ್ಥಿತಿಯಲ್ಲಿಲ್ಲ. +ಕ್ಷಣಚಿತ್ತ ಕ್ಷಣಪಿತ್ತ ಎಂಬಂತಿರುವ ಯತ್ನಾಳ್ ಯಾವಾಗ ಸ್ವಪಕ್ಷೀಯರ ವಿರುದ್ಧವೇ ತಿರುಗಿಬೀಳುತ್ತಾರೆ. ಇನ್ನ್ಯಾವಾಗ ಪಕ್ಷದ ಪರವಾಗಿರುತ್ತಾರೆ ಎಂಬುದು ಸ್ವತಃ ಅವರ ಮನೆಯ ಸದಸ್ಯರಿಗೇ ಗೊತ್ತಿಲ್ಲ ಎಂದು ಹತ್ತಿರದವರೇ ಹೇಳುತ್ತಾರೆ.ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲುವ ಅನಿವಾರ್ಯತೆ ಬಿಜೆಪಿಗಿದೆ. +ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 19ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬೀಗಿತ್ತು.ಆದರೆ ಲೋಕಸಭೆ ಚುನಾವಣೆ ನಂತರ ಪರಿಸ್ಥಿತಿ ಸಾಕಷ್ಟು ಬಿಗಡಾಯಿಸಿದ್ದು, ಒಂದು ಕಡೆ ಕಾಂಗ್ರೆಸ್ ಪುಟಿದೆದ್ದಿದ್ದರೆ ಬಿಜೆಪಿ ಆಂತರಿಕ ಕಚ್ಚಾಟದಿಂದ ಬಳಲುತ್ತಿದೆ. ಮೂರು ಸ್ಥಾನಗಳಲ್ಲಿ ಕಡೆಪಕ್ಷ ಎರಡು ಸ್ಥಾನಗಳನ್ನಾದರೂ ಗೆದ್ದರೆ ವಿಜಯೇಂದ್ರ ನಾಯಕತ್ವಕ್ಕೆ ಒಂದಿಷ್ಟು ಶಕ್ತಿ ಬರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ವಿಜಯೇಂದ್ರ ಎಲ್ಲರನ್ನೂ ನಿಭಾಯಿಸಿಕೊಂಡು ಪಕ್ಷ ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ. \ No newline at end of file diff --git a/eesanje/url_46_20_8.txt b/eesanje/url_46_20_8.txt new file mode 100644 index 0000000000000000000000000000000000000000..8f15e64f02baebf816477f1cd030fa56ef48d4c1 --- /dev/null +++ b/eesanje/url_46_20_8.txt @@ -0,0 +1,7 @@ +ಸೆ.22 ರ ಬದಲಾಗಿ ಸೆ.28 ರಂದು ಪಿಎಸ್‌‍ಐ ನೇಮಕಾತಿ ಪರೀಕ್ಷೆ : ಗೃಹಸಚಿವ ಪರಮೇಶ್ವರ್‌ + 28 22 +ಬೆಂಗಳೂರು,ಸೆ.12-ಪಿಎಸ್‌‍ಐ 402 ಹುದ್ದೆಗಳ ನೇಮಕಾತಿಗೆ ಸೆ.22 ರ ಬದಲಾಗಿ ಸೆ.28 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಮೊದಲ ಹಂತದ ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಈಗಾಗಲೇ ಮರುಪರೀಕ್ಷೆ ನಡೆಸಿ ಅಂತಿಮ ಫಲಿತಾಂಶ ಪ್ರಕಟಿಸಿ ನೇಮಕಾತಿ ಆದೇಶ ನೀಡುವ ಹಂತದಲ್ಲಿದ್ದೇವೆ. +ಎರಡನೇ ಹಂತದಲ್ಲಿ 402 ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ಸೆ.22 ಕ್ಕೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಬಹಳಷ್ಟು ಮಂದಿ ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಮನವಿ ಮಾಡಿದ್ದರು. +ಯುಪಿಎಸ್‌‍ಸಿಗೆ ಸೆ.22 ರಂದೇ ಮುಖ್ಯ ಪರೀಕ್ಷೆ ನಡೆಯುತ್ತಿದೆ. ಈಗಾಗಲೇ ಪ್ರಿಲಿಮ್ಸೌನಲ್ಲಿ ಯಶಸ್ಸು ಗಳಿಸಿ ಮುಖ್ಯ ಪರೀಕ್ಷೆಗೆ ರಾಜ್ಯದಿಂದ 100 ಮಂದಿ ಆಯ್ಕೆಯಾಗಿದ್ದು, ಅವರಿಗೆ ಅವಕಾಶ ತಪ್ಪಿಹೋಗಲಿದೆ ಎಂದು ವಿವರಿಸಲಾಗಿತ್ತು. ಬಿಜೆಪಿಯ ಅಶ್ವತ್ಥನಾರಾಯಣ ಹಾಗೂ ಇತರ ನಾಯಕರು ಕೂಡ ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದರು. +ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜೊತೆ ಚರ್ಚೆ ನಡೆಸಿದಾಗ ಡಿಸೆಂಬರ್‌ವರೆಗೂ ಯಾವುದೇ ಸ್ಲಾಟ್‌ಗಳು ಖಾಲಿ ಇಲ್ಲ ಎಂದು ತಿಳಿಸಲಾಗಿತ್ತು. ಮತ್ತೆ ಹಿರಿಯ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಸಹಕಾರ ಬೇಕಿದೆ. ಪ್ರತಿ ಭಾನುವಾರವೂ ಡಿಸೆಂಬರ್‌ವರೆಗೂ ಪರೀಕ್ಷೆಗಳು ನಿಗದಿಯಾಗಿವೆ ಎಂದು ವಿವರಿಸಿದರು. +ಸಚಿವರ ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೆ.28ಕ್ಕೆ 402 ಪಿಎಸ್‌‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿಗದಿ ಮಾಡಲಾಗಿದೆ. ಅಂದು ಶನಿವಾರವಾಗಿದ್ದು, ಪಿಯುಸಿ ತರಗತಿಗಳನ್ನು ರದ್ದುಗೊಳಿಸಲು ಮನವಿ ಮಾಡಲಾಗಿದೆ ಎಂದರು.ಪೊಲೀಸ್‌‍ ಕಾನ್‌್ಸಟೇಬಲ್‌ಗಳ ನೇಮಕಾತಿಗೆ ವಯೋಮಿತಿಯನ್ನು ಹೆಚ್ಚಿಸುವ ಕುರಿತು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಪದ್ಧತಿಗಳು ಹಾಗೂ ಕ್ರಮಗಳ ಮಾಹಿತಿಗಳನ್ನು ಕಲೆ ಹಾಕಿದ್ದೇವೆ. ಪೊಲೀಸ್‌‍ ಮಹಾನಿರ್ದೇಶಕರು ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_20_9.txt b/eesanje/url_46_20_9.txt new file mode 100644 index 0000000000000000000000000000000000000000..ab5ef21eaac66c42cefb69440d98c4edd1890596 --- /dev/null +++ b/eesanje/url_46_20_9.txt @@ -0,0 +1,9 @@ +ನಾಗಮಂಗಲ ಗಲಭೆ : ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದಂತೆ ಸಚಿವ ಚೆಲುವರಾಯಸ್ವಾಮಿ ಮನವಿ + : +ಮಂಡ್ಯ,ಸೆ.12-ನಾಗಮಂಗಲದ ಗಣೇಶನ ಗಲಭೆ ಪ್ರಕರಣದಲ್ಲಿ ಅನಗತ್ಯವಾಗಿ ಪ್ರಚೋದನಾಕಾರಿ ಹೇಳಿಕೆ ನೀಡದೇ ಪರಿಸ್ಥಿತಿ ತಿಳಿಗೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪ್ರವಾಸದಲ್ಲಿದ್ದು ನಿನ್ನೆ ಸಂಜೆಯಷ್ಟೇ ವಿಮಾನದಲ್ಲಿ ಬಂದಿಳಿದೆ. +ಈ ನಡುವೆ ನಾಗಮಂಗಲದಲ್ಲಿ ಗಲಭೆ ಸಂಭವಿಸಿದೆ ಎಂದು ಮಾಹಿತಿ ತಿಳಿಯಿತು. ತಕ್ಷಣವೇ ಎಸ್ಪಿ, ಐಜಿಪಿ, ಎಡಿಜಿಪಿ ಅವರಿಗೆ ಕರೆ ಮಾಡಿ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದೆ. ಸ್ಥಳೀಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ. ಗಣಪತಿ ಮೂರ್ತಿಯ ಮೆರವಣಿಗೆಯ ವೇಳೆ ಎರಡು ಸಮುದಾಯಗಳ ನಡುವೆ ಕೂಗಾಟ ಹಾಗೂ ಘರ್ಷಣೆ ನಡೆದಿದೆ. +ಒಂದು ಸಮುದಾಯ ಪೊಲೀಸ್‌‍ ಠಾಣೆಯ ಮುಂದೆ ಗಣೇಶನನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದೆ, ಆಗ ಮತ್ತೆ ವಾಗ್ವಾದ ನಡೆದು ಸಂಘರ್ಷ ಹೆಚ್ಚಾಗಿದೆ. ತಕ್ಷಣವೇ ಪೊಲೀಸರು ಸ್ಥಳಕ್ಕೆ ಬಂದು ತಿಳಿ ಹೇಳುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು. +ಅನಗತ್ಯವಾಗಿ ಸಂಘರ್ಷ ಬೇಡ. ಅನಾಹುತಗಳಾದರೆ ಅದರಿಂದಾಗುವ ನಷ್ಟ ತೀವ್ರವಾಗಿರುತ್ತದೆ. ಯಾರೂ ದುಡುಕಬೇಡಿ, 40 ವರ್ಷಗಳಿಂದ ನಾಗಮಂಗಲದಲ್ಲಿ ಶಾಂತಿ ನೆಲೆಸಿದೆ. ದೇವರ ಕೆಲಸ ಗಲಭೆಗೆ ಕಾರಣವಾಗುವುದು ಬೇಡ ಎಂದು ತಾವು ಮನವಿ ಮಾಡಿದ್ದು, ಕೊನೆಗೆ ಗಣೇಶ ವಿಸರ್ಜನೆಯಾಗಿದೆ. +ಸಂಘರ್ಷದಲ್ಲಿ ಒಂದಿಷ್ಟು ಸಣ್ಣಪುಟ್ಟ ಘಟನೆಗಳು ನಡೆದಿವೆ. ಅಂಗಡಿಗಳಿಗೆ, ಬೈಕ್‌ಗಳಿಗೆ ಹಾನಿಯಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಮ ಜೊತೆ ಚರ್ಚೆ ನಡೆಸಿದ್ದಾರೆ. ಅಧಿಕಾರಿಗಳಿಗೂ ಸೂಕ್ತ ಸೂಚನೆ ನೀಡಿದ್ದಾರೆ ಎಂದು ಹೇಳಿದರು. +ಮೊದಲಿಗೆ ನಮ ಆದ್ಯತೆ ಪರಿಸ್ಥಿತಿಯನ್ನು ತಹಬದಿಗೆ ತಂದು ಶಾಂತಿ ನೆಲೆಸುವುದಾಗಿದೆ. ನಂತರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಪೊಲೀಸರು ಈಗಾಗಲೇ ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದರು. +ಇಲ್ಲಿ ಅಧಿಕಾರದ ಪ್ರಶ್ನೆ ಇಲ್ಲ. ಸಾರ್ವಜನಿಕರ ನೆಮದಿಯ ವಿಚಾರವಾಗಿದೆ. ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷರ ಪುತ್ರ ಭಾಗಿಯಾಗಿರುವುದು, ಪೊಲೀಸರ ವೈಫಲ್ಯ, ಎರಡೂ ಸಮುದಾಯಗಳ ನಾಯಕರ ಲೋಪಗಳು ಸೇರಿದಂತೆ ಎಲ್ಲಾ ವಿಚಾರಗಳನ್ನೂ ಸಾವಧಾನದಿಂದ ಪರಿಶೀಲಿಸಬೇಕು. ಸದ್ಯಕ್ಕೆ ನಮಗೆ ಜನರ ಹಿತದೃಷ್ಟಿ ಮುಖ್ಯ ಎಂದು ಹೇಳಿದರು. \ No newline at end of file diff --git a/eesanje/url_46_210_1.txt b/eesanje/url_46_210_1.txt new file mode 100644 index 0000000000000000000000000000000000000000..4c469b2f72d071a366a083227a405a26ec9923aa --- /dev/null +++ b/eesanje/url_46_210_1.txt @@ -0,0 +1,6 @@ +ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಪಣ +ಬೆಂಗಳೂರು, ಮಾ.10- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮೆಟ್ಟಿಲುಗಳ ಬಳಿ ಚಾಲನೆ ನೀಡಿದರು. +ಇದೇ ವೇಳೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಗ್ರೀನ್ ಬೆಂಗಳೂರು, ಮಾದಕ ವ್ಯಸನ ಮುಕ್ತ ಸಮಾಜ, ಸೈಬರ್ ಕ್ರೈಮ್ ತಡೆ ಮತ್ತು ಎಲ್ಲರಿಗೂ ಆರೋಗ್ಯ ಎಂಬ ಧ್ಯೇಯಕ್ಕಾಗಿ ಪ್ರತಿ ವರ್ಷ ಪೊಲೀಸ್ ಓಟವನ್ನು ಆಯೋಜಿಸಿ ಜಾಗೃತಿ ಮೂಡಿಸುತ್ತಾರೆ ಎಂದರು. ಪರಿಸರ ಸ್ನೇಹಿಯಾದ ಹಸಿರು ಬೆಂಗಳೂರು ನಿರ್ಮಾಣ ಮಾಡುವ ಅಗತ್ಯ ಇದೆ. ಬೆಂಗಳೂರಿನಲ್ಲಿ ಹಸಿರು ಕಡಿಮಾಗುತ್ತಿದೆ. ಅದನ್ನು ಹೆಚ್ಚಿಸಬೇಕಿದೆ. ಅದೇ ರೀತಿ ಎಲ್ಲರ ದೈಹಿಕ ಕ್ಷಮತೆಗಾಗಿ ಓಟ ಅಗತ್ಯವಿದೆ. ವಿಶೇಷವಾಗಿ ಯುವಕರು ಸಮಾಜದಲ್ಲಿ ಅರ್ಧ ಸಂಖ್ಯೆಯಲ್ಲಿದ್ದಾರೆ. ಎಷ್ಟು ವರ್ಷ ಬದುಕುತ್ತೇವೆಯೋ ಅಷ್ಟು ವರ್ಷವೂ ಆರೋಗ್ಯವಂತರಾಗಿ ಜೀವಿಸಬೇಕು ಎಂದರು. +ಸಮಾಜದಲ್ಲಿ ಯುವಜನ ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಯುವಕ-ಯುವತಿಯರೇ ದೇಶದ ಸಂಪತ್ತು, ಅವರು ವ್ಯವಸನಿಗಳಾಗುತ್ತಿರುವುದು ದೃಷ್ಟಕರ. ಈ ನಿಟ್ಟಿನಲ್ಲೆ ಸರ್ಕಾರದ ಪ್ರಯತ್ನ ಮಾತ್ರ ಯಶಸ್ವಿಯಾಗುವುದಿಲ್ಲ. ಸಮಾಜವೂ ಕೈಜೋಡಿಸಬೇಕು ಆಗ ಮಾತ್ರ, ಬೆಂಗಳೂರು, ಕರ್ನಾಟಕ ಹಾಗೂ ಇಡೀ ದೇಶವನ್ನು ಮಾದಕ ವ್ಯಸನ ಮುಕ್ತ ಮಾಡಲು ಸಾಧ್ಯವಾಗುತ್ತದೆ ಎಂದರು. +ಸೈಬರ್ ಕ್ರೈಮ್ ದಿನೇ ದಿನೇ ಹೆಚ್ಚಾಗುತ್ತಿದೆ. ಅದು ಕಡಿಮೆಯಾಗಬೇಕು ಎಂದರೆ ಜನರಲ್ಲಿ ಜಾಗೃತಿ ಅಗತ್ಯ. ಪೊಲೀಸರು ಎಷ್ಟೇ ಕಷ್ಟ ಪಟ್ಟರೂ, ತಡೆಗೆ ಪ್ರಯತ್ನ ಪಟ್ಟರು, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿದರೂ ಸೈಬರ್ ಕ್ರೈಮ್ ಕಡಿಮೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಅಗತ್ಯ. ಅಪರಾಧ ಮಾಡಬಾರದು, ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದು ಜನರಲ್ಲಿ ಅರಿವು ಮೂಡಬೇಕು ಎಂದರು. ಎಲ್ಲರೂ ಆರೋಗ್ಯವಂತರಾಗಿ, ಸಮಾಜದ ಆಸ್ತಿಯಾಗಿ ಬಾಳಬೇಕು. ಎಲ್ಲ ಅಪರಾಧಗಳ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು. +ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_210_10.txt b/eesanje/url_46_210_10.txt new file mode 100644 index 0000000000000000000000000000000000000000..e180e8eab4565b1f37a5543525612a81152f0573 --- /dev/null +++ b/eesanje/url_46_210_10.txt @@ -0,0 +1,8 @@ +ಸ್ವಪಕ್ಷೀಯರ ವಿರುದ್ಧವೇ ಶೋಭಾ ಕರದ್ಲಾಂಜೆ ಆರೋಪ +ಬೆಳಗಾವಿ,ಮಾ.9- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ನನಗೆ ಟಿಕೆಟ್ ಕೈ ತಪ್ಪಿಸಲು ನಮ್ಮ ಪಕ್ಷದಲ್ಲೇ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ ಎಂದು ಸಚಿವೆ ಶೋಭಾ ಕರದ್ಲಾಂಜೆ ಅವರು, ಸ್ವಪಕ್ಷೀಯರ ವಿರುದ್ಧವೇ ಸ್ಪೋಟಕ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು. +ಪಕ್ಷದ ಕೆಲಸ ಕೊಡಲಿ, ಸರ್ಕಾರದ ಕೆಲಸ ಕೊಡಲಿ ಪ್ರಮಾಣಿಕ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ. ಇದು ಎಲ್ಲರಿಗೂ ಅನ್ವಯ ಆಗುತ್ತದೆ. ಕೆಲಸ ಮಾಡಿದವರಿಗೆ ಅವಕಾಶ ಸಿಕ್ಕಿಯೇ ಸಿಗುತ್ತದೆ. ಜಾತಿ ಸಮೀಕರಣ ಕಾರಣಕ್ಕೆ ಕೆಲ ಸಂದರ್ಭದಲ್ಲಿ ಇದು ವ್ಯತ್ಯಾಸ ಆಗಬಹುದಷ್ಟೇ. ನಮ್ಮ ಶ್ರಮ, ನಮ್ಮ ಕೆಲಸವನ್ನು ಹೈಕಮಾಂಡ್ ಗುರುತಿಸುತ್ತೆ ಎಂಬುದಕ್ಕೆ ನಾನೇ ಉದಾಹರಣೆ. ನನ್ನ ವಿರುದ್ಧ ನಡೆಯುತ್ತಿರುವ ಪಿತೂರಿಯಿಂದ ನನಗೆ ಅನುಕೂಲ ಆಗಲಿದೆ. +ಪಿತೂರಿ ಮಾಡಿದಾಗಲೇ ಹೈಕಮಾಂಡ್ ನಮ್ಮ ಬಗ್ಗೆ ಗಮನ ಕೊಡುತ್ತದೆ. ವಿರೋಧ ಏಕೆ ಮಾಡುತ್ತಿದ್ದಾರೆ ಎಂಬುದರ ವರದಿ ತರಿಸಿಕೊಳ್ಳುತ್ತಾರೆ, ಆಗ ಸತ್ಯ ಗೊತ್ತಾಗುತ್ತದೆ. ನನ್ನ ಕ್ಷೇತ್ರದಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ, ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ. ಯಾವಾಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದಷ್ಟೇ ಹೇಳುತ್ತಿದ್ದರು ಎಂದು ಮಾರ್ಮಿಕವಾಗಿ ನುಡಿದರು. +ನನ್ನನ್ನು ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕಿದಾಗಲೇ ಇದರ ಹಿಂದಿನ ಸತ್ಯ ಗೊತ್ತಾಗುತ್ತದೆ. ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ತಿಳಿಯಲಿದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. +ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ ಕೇಳಲು ಹೊರಟಿದೆ. ಬಿಜೆಪಿ ಯಾವ ಮಾನದಂಡ ಇಟ್ಟುಕೊಂಡು ಲೋಕಸಭೆಯಲ್ಲಿ ಮತ ಕೇಳಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೋಭಾ, ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ. 10 ವರ್ಷಗಳ ಅಭಿವೃದ್ಧಿಯ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆದಂಥ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ಇದು ನಮ್ಮ ಶಕ್ತಿ. ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ, ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಮೋದಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತ ಕೇಳುತ್ತೇವೆ ಎಂದು ಹೇಳಿದ್ದಾರೆ. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಲಿದೆಯೇ ಎಂಬ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷದಿಂದ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ ಎಂದು ಸಮರ್ಥಿಸಿಕೊಂಡರು. ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದು ಶೋಭಾ ಹೇಳಿದ್ದಾರೆ. +ಚುನಾವಣೆ ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿದ ಕುರಿತು, ಬೆಲೆ ಇಳಿಕೆಗೂ ಚುನಾವಣೆಗೂ ಸಂಬಂಧವಿಲ್ಲ. ಗ್ಯಾಸ, ಪೆಟ್ರೋಲ್‍ನಲ್ಲಿ ನಾವಿನ್ನೂ ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಅವರು ಯೋಜನೆ ರೂಪಿಸುತ್ತಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಖಾದ್ಯ ತೈಲದಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ಎಲ್ಲವನ್ನೂ ನಾವು ವಿದೇಶದಿಂದ ಸರಬರಾಜು ಮಾಡಿಕೊಳ್ಳಬೇಕಾಗುತ್ತದೆ. ವಿದೇಶಿ ಮಾರುಕಟ್ಟೆ ಆಧಾರದ ಮೇಲೆ ಬೆಲೆ ನಿಗದಿ ಆಗುತ್ತದೆ. ಇದರಲ್ಲೂ ನಾವು ಸ್ವಾವಲಂಬನೆ ಸಾಧಿಸಲು ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದಾರೆ ಎಂದರು. \ No newline at end of file diff --git a/eesanje/url_46_210_11.txt b/eesanje/url_46_210_11.txt new file mode 100644 index 0000000000000000000000000000000000000000..44893aa61ca1fb310a6706ff8066fd3a231c87bd --- /dev/null +++ b/eesanje/url_46_210_11.txt @@ -0,0 +1,7 @@ +ದಲಿತ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ : ಪರಮೇಶ್ವರ್ +ಬೆಂಗಳೂರು,ಮಾ.9- ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಸ್ಥಿರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಲೋಕಸಭಾ ಚುನಾವಣೆ ಎದುರಾಗಿರುವ ಸಂದರ್ಭದಲ್ಲಿ ದಲಿತ ಮುಖ್ಯಮಂತ್ರಿ ಕುರಿತ ಚರ್ಚೆ ಅಪ್ರಸ್ತುತ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿ, ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದಿರುವುದಕ್ಕೆ ಈಗಾಗಲೇ ಪ್ರತಿಕ್ರಿಯಿಸಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಮುಂದಿರುವ ಗುರಿ. ಇದು ಸಾಧ್ಯವಾದರೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಬಲ ಬರುತ್ತದೆ ಎಂದರು. +ದಲಿತ ಮುಖ್ಯಮಂತ್ರಿಯ ವಿಚಾರವಾಗಿ ಬೇರೆಬೇರೆ ವಿಚಾರಗಳು ಚರ್ಚೆಯಲ್ಲಿವೆ. ಕೆಲವರು ಇದು ಸೂಕ್ತ ಸಮಯ ಅಲ್ಲ ಎಂದರೆ, ಇನ್ನೂ ಕೆಲವರು ಅವಕಾಶ ಮಾಡಿಕೊಟ್ಟು ದಲಿತ ಸಮುದಾಯದ ಮತ ಮತ್ತಷ್ಟು ಕಾಂಗ್ರೆಸ್‍ಗೆ ಬರಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇದೆಲ್ಲವನ್ನೂ ಈಗ ಚರ್ಚೆ ಮಾಡುವುದು ಬೇಡ ಎಂದು ಹೇಳಿದರು. +ಪರಿಶಿಷ್ಟರ ಜನಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಸಾಮಾನ್ಯ ಕ್ಷೇತ್ರಗಳಲ್ಲಿ ಪರಿಶಿಷ್ಟ ಸಮುದಾಯದ ನಾಯಕರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವಕಾಶ ನೀಡಬೇಕು ಎಂಬ ಬೇಡಿಕೆ ಇರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ರೀತಿ ಎಲ್ಲಿಯೂ ನಡೆದಿರುವ ಪ್ರಸ್ತಾವನೆಗಳಿಲ್ಲ. ಐದು ಮೀಸಲು ಕ್ಷೇತ್ರಗಳಿವೆ. ಅಲ್ಲಿ ಟಿಕೆಟ್ ಕೊಡುತ್ತಾರೆ ಎಂದರು. ಇಲ್ಲಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಪ್ರತಿದಿನವೂ ಹೊಸ ಹೊಸ ಸುಳಿವು, ಮಾಹಿತಿಗಳು ದೊರೆಯುತ್ತಿವೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಅದನ್ನು ಮುಂದಿಟ್ಟುಕೊಂಡೇ ಕಾರ್ಯಾಚರಣೆ ನಡೆಯುತ್ತಿದೆ. ಎನ್‍ಐಎ ಸಿಸಿಬಿ ಪೊಲೀಸರು ಜಂಟಿಯಾಗಿ ಆರೋಪಿಯ ಬೆನ್ನತ್ತಿದ್ದಾರೆ ಎಂದರು. +ವಿಧ್ವಂಸಕ ಕೃತ್ಯಗಳಿಗೆ ಜೈಲಿನಿಂದಲೇ ಸಂಚು ನಡೆಸಿರುವ ಚರ್ಚೆಗಳಾಗುತ್ತಿವೆ. ಎನ್‍ಐಎ ಕೂಡ ಇದನ್ನು ಗಮನಿಸಿದೆ. ಜೈಲಿನಲ್ಲಿನ ಚಟುವಟಿಕೆಗಳನ್ನು ನಿಯಂತ್ರಿಸಲು ಕೆಲವು ಸಲಹೆಗಳನ್ನು ಮಾಡಲಾಗಿದೆ ಎಂದು ಹೇಳಿದರು. ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಕಾನೂನು ರೀತಿಯ ಕ್ರಮ ಕೈಗೊಂಡಿದ್ದೇವೆ. ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್‍ಗೆ ಪ್ರಮಾಣ ವಚನ ಬೋಧಿಸಬಾರದು ಎಂದು ನಿವೃತ್ತ ಅಧಿಕಾರಿಗಳು ಪತ್ರ ಬರೆಯುವುದನ್ನು ತಡೆಯಲಿಕ್ಕೆ ಸಾಧ್ಯವಿಲ್ಲ. ಬಿಜೆಪಿಯವರು ಹೇಳಿದಾಕ್ಷಣ ನಾಸಿರ್ ಹುಸೇನ್ ಮೇಲೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದರು. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಚುನಾವಣೆಯಲ್ಲಿ ಸ್ರ್ಪಧಿಸುವ ಬಗ್ಗೆ ನಾವ್ಯಾರೂ ಅಭಿಪ್ರಾಯ ಹೇಳುವುದು ಸರಿಯಲ್ಲ. ಹಿರಿಯರಾದ ಅವರೇ ಖುದ್ದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು. ತುಮಕೂರು ಲೋಕಸಭಾ ಕ್ಷೇತ್ರ ಗೆಲ್ಲುವ ಕ್ಷೇತ್ರ. ಅದನ್ನು ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಲು ಪ್ರಯತ್ನಿಸುತ್ತೇವೆ. ಬಹಳಷ್ಟು ಮಂದಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಅವರಿಗೆ ಅಸಮಾಧಾನ ಸಹಜ. ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆ ಮಾತುಕತೆ ನಡೆಸಿ ಮುಂದಿನ ದಿನಗಳಲ್ಲಿ ಅವಕಾಶ ದೊರೆಯಲಿದೆ ಎಂದು ಭರವಸೆ ನೀಡಿ ಮನವೊಲಿಸುತ್ತೇವೆ ಎಂದರು. +ಕಾಂಗ್ರೆಸ್ ಪಕ್ಷ 2 ಬಾರಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿ ಕೆಪಿಸಿಸಿ ಅಧ್ಯಕ್ಷರು ಯಾರ ಹೆಸರಿಗೆ ಶಿಫಾರಸ್ಸು ಮಾಡಿದ್ದರೋ ಅವರಿಗೆ ಹೈಕಮಾಂಡ್ ಟಿಕೆಟ್ ಕೊಟ್ಟಿದೆ. ಭವಿಷ್ಯದ ಹಿತದೃಷ್ಟಿಯಿಂದ ಇದನ್ನು ನಾವು ಒಪ್ಪಿಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು. \ No newline at end of file diff --git a/eesanje/url_46_210_12.txt b/eesanje/url_46_210_12.txt new file mode 100644 index 0000000000000000000000000000000000000000..eeaa458438816fe928f4ba116eeafa34a785165d --- /dev/null +++ b/eesanje/url_46_210_12.txt @@ -0,0 +1,6 @@ +ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ : ಸಚಿವ ಮಧು ಬಂಗಾರಪ್ಪ +ಬೆಂಗಳೂರು,ಮಾ.9- ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯವರಿಗೂ ಗೆಲುವು ಸುಲಭವಲ್ಲ ಎಂಬುದನ್ನು ಮರೆಯಬಾರದು ಎಂದರು. +ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‍ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ಪಕ್ಷದ ತೀರ್ಮಾನ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಪಕ್ಷದ ಎಲ್ಲರ ಮೇಲೂ ಇದೆ. ಅದನ್ನು ನಾವು ಯಶಸ್ವಿಯಾಗಿ ನಿಭಾಯಿಸುತ್ತೇವೆ ಎಂದು ಹೇಳಿದರು. ಈ ಹಿಂದೆ ಗೀತಾ ಶಿವರಾಜ್‍ಕುಮಾರ್ ಬೇರೆ ಪಕ್ಷದಿಂದ ಸ್ರ್ಪಧಿಸಿದ್ದರು. ಆಗ ಯಶಸ್ವಿಯಾಗಿರಲಿಲ್ಲ. ಈಗ ಕಾಂಗ್ರೆಸ್‍ನಿಂದ ಅಭ್ಯರ್ಥಿಯಾಗಿದ್ದಾರೆ. ಪಕ್ಷ ನಮಗೆ ಒಳ್ಳೆಯ ಸ್ಥಾನಮಾನ ನೀಡಿದೆ. ನಮ್ಮ ಸರ್ಕಾರ ಜನರಿಗೆ ಉತ್ತಮ ಯೋಜನೆಗಳನ್ನು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಯೊಂದು ಕುಟುಂಬದ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದರು. +ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ. ಗೀತಾ ಶಿವರಾಜ್‍ಕುಮಾರ್ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಪುತ್ರಿಯಾಗಿ, ಸ್ಟಾರ್ ನಟ ಶಿವರಾಜ್‍ಕುಮಾರ್ ಅವರ ಪತ್ನಿಯಾಗಿ, ನನ್ನ ಅಕ್ಕನಾಗಿ ಕಣಕ್ಕಿಳಿಯುತ್ತಿದ್ದಾರೆ. ಅವರನ್ನು ಗೆಲ್ಲಿಸಿಕೊಂಡು ಬರಲು ಪಕ್ಷದ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪುನರ್ ಉಚ್ಚರಿಸಿದರು. +ಚಿತ್ರರಂಗದ ದೊಡ್ಮನೆ ಕುಟುಂಬ ಡಾ.ರಾಜಕುಮಾರ್‍ರವರ ಸೊಸೆ ಗೀತಾ ಶಿವರಾಜ್‍ಕುಮಾರ್ ರಾಜಕೀಯಕ್ಕೆ ಬರುವ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳಾಗಿವೆ. ಪದೇಪದೇ ಅಂತಹುದೇ ಪ್ರಶ್ನೆಗಳು ಅನಗತ್ಯ. ಶಿವರಾಜ್‍ಕುಮಾರ್ ಅವರೇ ಈಗಾಗಲೇ ಇಂತಹ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಗೀತಾ ಅವರು ಮೊದಲು ಬಂಗಾರಪ್ಪ ಅವರ ಪುತ್ರಿ. ಹೀಗಾಗಿ ಅವರು ರಾಜಕೀಯಕ್ಕೆ ಬರುವುದು ಸಹಜ ಎಂದರು. +ನಾವು ಅನ್ಯ ಪಕ್ಷದಂತೆ ಬೇರೆಯವರ ಹೆಸರಿನಲ್ಲಿ ಮತ ಕೇಳುವುದಿಲ್ಲ. ನಾವು ನಮ್ಮದೇ ಹೆಸರಿನಲ್ಲಿ ಚುನಾವಣೆ ನಡೆಸುತ್ತೇವೆ. ನಮ್ಮ ಸರ್ಕಾರದ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಮಾಡುತ್ತೇವೆ. ಬಿಜೆಪಿಯವರು ಚುನಾವಣೆಗೋಸ್ಕರ ಗ್ಯಾರಂಟಿ ಹೇಳುತ್ತಿದ್ದಾರೆ. ನಾವು ಜನರಿಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಹೀಗಾಗಿ ಮತದಾರರು ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ. ತಾಯಂದಿರೇ ಅಸ್ತಿತ್ವಕ್ಕೆ ತಂದಿರುವ ನಮ್ಮ ಸರ್ಕಾರಕ್ಕೆ ಅವರಿಂದಲೇ ಬೆಂಬಲ ಸಿಗುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_46_210_2.txt b/eesanje/url_46_210_2.txt new file mode 100644 index 0000000000000000000000000000000000000000..d23e09df802d4fa5d523fb2a9ed88eb614d0623f --- /dev/null +++ b/eesanje/url_46_210_2.txt @@ -0,0 +1,5 @@ +ಗ್ಯಾರಂಟಿ ಪ್ರಚಾರ ವೆಚ್ಚದ ಶ್ವೇತಪತ್ರಕ್ಕೆ ಎಚ್‍ಡಿಕೆ ಆಗ್ರಹ +ಬೆಂಗಳೂರು, ಮಾ.10- ರಾಜ್ಯ ಸರ್ಕಾರದ ಗ್ಯಾರಂಟಿ ಸಮಾವೇಶಗಳಿಗೆ, ಜಾಹೀರಾತುಗಳಿಗೆ ಮಾಡಿರುವ ಖರ್ಚು ಕುರಿತು ಶ್ವೇತಪತ್ರ ಹೊರಡಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಜಾಹೀರಾತು ಜಾತ್ರೆಗಳಿಗೆ ವರ್ಷದಿಂದ ಎಷ್ಟು ಸಾವಿರ ಕೋಟಿ ರೂ. ಸುರಿದಿದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. +ನಾಡಿನ ಜನರ ಮುಂದೆ ಈ ಖರ್ಚಿನ ಲೆಕ್ಕ ಇಡಿ. ಬೇಕಾದರೆ ಗ್ಯಾರಂಟಿ ಪ್ರಚಾರ ಸಮಾವೇಶ ಖರ್ಚು ಬಾಬತ್ತಿನ ಶ್ವೇತಪತ್ರ ಹೊರಡಿಸಿ. ಸರ್ಕಾರದ ಅಸಲಿ ಬಣ್ಣ ಏನೆಂಬುದು ಜನರಿಗೆ ಗೊತ್ತಾಗಲಿ ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ. ಒಂದು ವರ್ಷದಿಂದ ನಿಮ್ಮ ಇಡೀ ಸರ್ಕಾರದ ಬದುಕು ಜಾಹೀರಾತು ಮೇಳದಲ್ಲೇ ಮುಗಿದು ಹೋಗಿದೆ. ನಿಮ್ಮ ಹಿಂದೆ ಮುಂದೆ ಸುತ್ತುವ ಪಟಾಲಂನ ಏಜೆನ್ಸಿಗಳ ಮೂಲಕ ಜಾಹೀರಾತು ಜಾತ್ರೆಯನ್ನು ಎಗ್ಗಿಲ್ಲದೆ ಮಾಡುತ್ತಿದ್ದೀರಿ. ಬರದಲ್ಲಿ ಬೆಂದು ಕಣ್ಣೀರು ಹಾಕುತ್ತಿರುವ ಜನರ ಹಣವನ್ನು ಹೀಗೆ ಪ್ರಚಾರಕ್ಕಾಗಿ ಸುರಿಯುತ್ತಿರುವ ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ರಾಜ್ಯ ಇತಿಹಾಸದಲ್ಲಿ ಕಂಡು ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. +ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದನಂತೆ. ಸಿದ್ದರಾಮಯ್ಯನವರೇ ನಮ್ಮ ನೀರೋ, ರಾಜ್ಯದ ಪಾಲಿನ ಝೀರೋ. ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ. ಆ ಚಿಂತೆಯೇ ನಿಮ್ಮ ಪಕ್ಷ, ಸರ್ಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ. ಪ್ರಜೆಗಳ ಮಾತು, ಆ ಪರಮೇಶ್ವರನ ಮಾತು ಒಂದೇ, ಸುಳ್ಳಾಗದು ಎಂದು ಅವರು ಕಟಕಿಯಾಡಿದ್ದಾರೆ. \ No newline at end of file diff --git a/eesanje/url_46_210_3.txt b/eesanje/url_46_210_3.txt new file mode 100644 index 0000000000000000000000000000000000000000..19bbdec641672031164911e3c2283ad79fbbb4a1 --- /dev/null +++ b/eesanje/url_46_210_3.txt @@ -0,0 +1,12 @@ +ಸೋಮವಾರ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ +ಬೆಂಗಳೂರು,ಮಾ.9- ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 7 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಇದೀಗ ಬಿಜೆಪಿ ಕೂಡಾ ತನ್ನ ಹುರಿಯಾಳುಗಳನ್ನು ಅಂತಿಮಗೊಳಿಸಿದ್ದು, ಬಹುತೇಕ ನಾಳೆ ಅಥವಾ ಸೋಮವಾರ ಪ್ರಕಟಗೊಳ್ಳುವ ಸಂಭವವಿದೆ. ನಾಳೆ ನವದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಕರ್ನಾಟಕದ 20 ಸ್ರ್ಪಧಿಗಳ ಹೆಸರು ಅಂತಿಮವಾಗುವ ಸಾಧ್ಯತೆ ಇದೆ. +ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ ಬಗ್ಗೆ ವಿಸ್ತೃತ ಚರ್ಚೆ ನಡೆದು ಅಂತಿಮಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದೆ. ಬಳಿಕ ಎರಡನೇ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. +ಇದೇ ಸಂದರ್ಭದಲ್ಲಿ ಕರ್ನಾಟಕದ 18 ರಿಂದ 20 ಲೋಕಸಭಾ ಕ್ಷೇತ್ರಗಳನ್ನೂ ಒಳಗೊಂಡಂತೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬರುವ ಸೋಮವಾರ ಅಥವಾ ಮಂಗಳವಾರ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಸರತ್ತು ನಡೆಸಿದ್ದಾರೆ. +ಆ ಕಸರತ್ತಿನ ಬಳಿಕ ಕೆಲವು ಕ್ಷೇತ್ರಗಳಿಗೆ ಒಂದು ಹೆಸರು, ಇನ್ನು ಕೆಲವು ಕ್ಷೇತ್ರಗಳಿಗೆ ಒಂದಕ್ಕಿಂತ ಹೆಚ್ಚು ಹೆಸರುಗಳ ಪಟ್ಟಿಯನ್ನು ಸಾಧಕ-ಬಾಧಕಗಳೊಂದಿಗೆ ವರಿಷ್ಠರಿಗೆ ನೀಡಲಾಗಿದೆ. ಈ ಪಟ್ಟಿಯನ್ನು ಮುಂದಿಟ್ಟುಕೊಂಡು ಭಾನುವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ.ಸಂತೋಷ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರನ್ನೊಳಗೊಂಡ ಕೇಂದ್ರ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. +ಈಗಾಗಲೇ ಕಳೆದ ವಾರ ಪ್ರಕಟಿಸಿದ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 195 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಇದೀಗ ಭಾನುವಾರದ ಸಭೆಯ ಬಳಿಕ ಎರಡನೇ ಪಟ್ಟಿ ಅಂತಿಮಗೊಳಿಸಿ ಸೋಮವಾರ ಅಥವಾ ಮಂಗಳವಾರ ಬಿಡುಗಡೆ ಮಾಡುವ ಉದ್ದೇಶವಿದೆ. ಇದರಲ್ಲಿ ರಾಜ್ಯದ ಒಟ್ಟು 28 ಲೋಕಸಭಾಕ್ಷೇತ್ರಗಳ ಪೈಕಿ ಗೊಂದಲವಿಲ್ಲದ ಅಥವಾ ಇತ್ಯರ್ಥಗೊಳ್ಳುವ 18 ರಿಂದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಂಭವವಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಮಿತ್ರ ಪಕ್ಷ ಜೆಡಿಎಸ್‍ಗೆ ಮೂರರಿಂದ ನಾಲ್ಕು ಕ್ಷೇತ್ರಗಳನ್ನು ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದ್ದು, ಅಧಿಕೃತವಾಗಿ ಅಂತಿಮಗೊಂಡಿಲ್ಲ. ಈ ಸಂಬಂಧ ಮಾತುಕತೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಆ ಮಾತುಕತೆ ವಿಳಂಬವಾದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳ ಬಗ್ಗೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡುವುದಿಲ್ಲ. ಅಂಥ ನಾಲ್ಕೈದು ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಬಹುದು ಎನ್ನಲಾಗಿದೆ. +ಕರ್ನಾಟಕಕ್ಕೆ ಸಂಬಂಧಿಸಿದಂತೆ ಎಲ್ಲಾ 28 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮತ್ತು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾದ ಸ್ಥಾನಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೂರು ವರದಿಗಳನ್ನು ಮುಂದಿಟ್ಟುಕೊಂಡು ಕ್ಷೇತ್ರವಾರು ಸಮೀಕ್ಷೆಗಳನ್ನು ತಾಳೆ ಹಾಕಲಾಗಿದೆ. ಪ್ರತಿ ಕ್ಷೇತ್ರದ ಬಗ್ಗೆ ರಾಜ್ಯ ನಾಯಕರ ಅಭಿಪ್ರಾಯ ಪಡೆಯಲಾಗಿದೆ. ಮಾತುಕತೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಇಂದು ಕೂಡ ಬಿಜೆಪಿ ಹೈಕಮಾಂಡ್ ಸಭೆ ನಡೆಸಿದೆ. ಆದರೆ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ? ಯಾರಿಗೆ ಕೊಕ್ ನೀಡಲಾಗುತ್ತದೆ? ಯಾರಿಗೆ ಮತ್ತೆ ಟಿಕೆಟ್ ಸಿಗುತ್ತದೆ ಎಂಬ ಗುಟ್ಟನ್ನು ಅಮಿತ್ ಶಾ ಬಿಟ್ಟುಕೊಟ್ಟಿಲ್ಲ. +ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರಗಳಾದ ಹಾಸನ, ಮಂಡ್ಯ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್ ಪಾಲಾಗುವ ಸಂಭವ ಹೆಚ್ಚಿದೆ. ಈ ಬಗ್ಗೆ ಬಿಜೆಪಿ ಸಿಇಸಿ ಸಭೆಯಲ್ಲಿ ಚರ್ಚೆ ನಡೆದಿದೆ. ಮೂರು ದಿನಗಳ ಕಾಲ ದೆಹಲಿಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಮತ್ತಿತರ ನಾಯಕರು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸಾಗಿದ್ದಾರೆ. ನಾಳೆ ಬೆಳಿಗ್ಗೆ ದೆಹಲಿಗೆ ತೆರಳುವ ಸಾಧ್ಯತೆ ಹೆಚ್ಚಿದೆ. +ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಮಾಜಿ ಸಚಿವರುಗಳಾದ ಡಾ.ಕೆ.ಸುಧಾಕರ್, ಸಿ.ಟಿ.ರವಿ ಹಾಗೂ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳಿಗೆ ಟಿಕೆಟ್ ಸಿಗುವುದರ ಬಗ್ಗೆ ಕೊನೆ ಕ್ಷಣದವರೆಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಇದೇ ರೀತಿ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಉತ್ತರ ಕನ್ನಡದ ಸಂಸದ ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್‍ಕಟೀಲ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರುಗಳ ರಾಜಕೀಯ ಭವಿಷ್ಯವೂ ಏನಾಗಲಿದೆ ಎಂಬುದರ ಬಗ್ಗೆ ತೀರ್ಮಾನವಾಗಲಿದೆ. +ಯಾರಿಗೆ ಕೊಕ್ ಸಾಧ್ಯತೆ? :ಶ್ರೀನಿವಾಸ್ ಪ್ರಸಾದ್ (ಚಾಮರಾಜನಗರ), ದೇವೇಂದ್ರಪ್ಪ (ಬಳ್ಳಾರಿ), ಮಂಗಳಾ ಅಂಗಡಿ (ಬೆಳಗಾವಿ), ಜಿಎಸ್ ಬಸವರಾಜು (ತುಮಕೂರು), ಶಿವಕುಮಾರ್ ಉದಾಸಿ (ಹಾವೇರಿ), ರಮೇಶ್ ಜಿಗಜಿಣಗಿ (ವಿಜಯಪುರ), ಸಂಗಣ್ಣ ಕರಡಿ (ಕೊಪ್ಪಳ), ನಾರಾಯಣಸ್ವಾಮಿ (ಚಿತ್ರದುರ್ಗ), ರಾಜÁ ಅಮರೇಶ್ವರ ನಾಯಕ್ (ರಾಯಚೂರು). +ಘೋಷಣೆಯಾಗಬಹುದಾದ ಕ್ಷೇತ್ರಗಳು :ಶಿವಮೊಗ್ಗ, ಚಿಕ್ಕೋಡಿ, ದಾವಣಗೆರೆ, ಕಲಬುರಗಿ, ಬಳ್ಳಾರಿ, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ, ತುಮಕೂರು, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ. \ No newline at end of file diff --git a/eesanje/url_46_210_4.txt b/eesanje/url_46_210_4.txt new file mode 100644 index 0000000000000000000000000000000000000000..e2a1815696b8ac5e4e4b824e8e598505bc341f88 --- /dev/null +++ b/eesanje/url_46_210_4.txt @@ -0,0 +1,5 @@ +ರಾಜ್ಯದೆಲ್ಲೆಡೆ ಮೋದಿ ಅಲೆ ಇದೆ : ವಿಜಯೇಂದ್ರ +ಬೆಂಗಳೂರು,ಮಾ.9- ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ ಎಂದು ವಿಶ್ಲೇಷಿಸಿದರು. +28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇಂದು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎಂದು ರಾಜ್ಯಾಧ್ಯಕ್ಷನಾಗಿ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ನುಡಿದರು. +ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲ ವಿವರ ಲಭಿಸಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ ಎಂದು ಅವರು ಹೇಳಿದರು. +ಡಿ.ಕೆ.ಶಿವಕುಮಾರ್‍ರ ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್ ಅಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_210_5.txt b/eesanje/url_46_210_5.txt new file mode 100644 index 0000000000000000000000000000000000000000..2b7f886bd08cd051133dab1daf0c98779c4a242d --- /dev/null +++ b/eesanje/url_46_210_5.txt @@ -0,0 +1,10 @@ +ಕಾಂಗ್ರೆಸ್ ಪಟ್ಟಿಗೆ ಬಹುತೇಕ ಕ್ಷೇತ್ರಗಳಿಗೆ ಸಹಮತ +ಬೆಂಗಳೂರು,ಮಾ.9- ಕಾಂಗ್ರೆಸ್ ಅಳೆದು ತೂಗಿ ನಿನ್ನೆ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಅದರಲ್ಲಿ ತುಮಕೂರು , ಮಂಡ್ಯ ಹೊರತುಪಡಿಸಿದರೆ ಉಳಿದೆಲ್ಲಾ ಕಡೆ ಬಹುತೇಕ ಸಹಮತ ಕಂಡುಬಂದಿದೆ. ಕಳೆದ ತಿಂಗಳಷ್ಟೇ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮುದ್ದಹನುಮೇಗೌಡರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆ ಮಾಡುವ ಮೂಲಕ ಜಿಲ್ಲೆಯ ರಾಜಕಾರಣದಲ್ಲಿ ಸಚಿವ ಕೆ.ಎನ್.ರಾಜಣ್ಣ ಅವರ ಕೈ ಮೇಲಾಗಿದೆ. +ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್‍ಗಾಗಿ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಪುತ್ರ ಸಂತೋಷ್, ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಪತ್ನಿ ಭಾರತಿ, ಕಾಂಗ್ರೆಸ್ ಮುಖಂಡರಾದ ಮುರಳೀಧರ್ ಹಾಲಪ್ಪ, ನಿಕೇತ್‍ರಾಜ್ ಮೌರ್ಯ ಸೇರಿದಂತೆ ಹಲವು ಮಂದಿ ಆಕಾಂಕ್ಷಿಗಳಿದ್ದರು. ಆದರೆ ಅವರೆಲ್ಲರನ್ನೂ ಕಡೆಗಣಿಸಿದ ಸಚಿವ ರಾಜಣ್ಣ ಪದೇಪದೇ ಪಕ್ಷ ಬದಲಾಯಿಸುವ ಎಸ್.ಪಿ.ಮುದ್ದಹನುಮೇಗೌಡರನ್ನು ಕಾಂಗ್ರೆಸ್‍ಗೆ ಮರಳಿ ತರಲು ಮುತುವರ್ಜಿ ವಹಿಸಿದ್ದರು. ಒಂದು ಹಂತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ವಿರೋಧ ವ್ಯಕ್ತಪಡಿಸಿದರಾದರೂ ಅವರನ್ನು ಮನವೊಲಿಸಿ ಮುದ್ದಹನುಮೇಗೌಡರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿರುವ ರಾಜಣ್ಣ ಹೈಕಮಾಂಡ್ ಮೇಲೂ ಪ್ರಭಾವ ಬೀರಿ ಮೊದಲ ಪಟ್ಟಿಯಲ್ಲೇ ಟಿಕೆಟ್ ಕೊಡಿಸುವ ಮೂಲಕ ಎಲ್ಲಾ ವಿರೋಧಗಳನ್ನು ಬದಿಗೆ ಸರಿಸುವ ಯತ್ನ ನಡೆಸಿದ್ದಾರೆ. ಕೆಲವೊಮ್ಮೆ ವಿವಾದಿತ ಹೇಳಿಕೆ ನೀಡುವ ಮೂಲಕ ಚರ್ಚೆಗೆ ಗ್ರಾಸವಾಗುವ ರಾಜಣ್ಣ, ಮುದ್ದಹನುಮೇಗೌಡರಿಗೆ ಟಿಕೆಟ್ ಕೊಡಿಸುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ರಯತ್ನ ಮಾಡಿದ್ದಾರೆ. +ತುಮಕೂರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಅದರ ಕೀರ್ತಿಗೆ ರಾಜಣ್ಣ ಭಾಜನರಾಗಲಿದ್ದಾರೆ. ಒಂದು ವೇಳೆ ಸೋತರೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಜಿಲ್ಲಾ ಉಸ್ತುವಾರಿ ಸಚಿವರು ಜವಾಬ್ದಾರರಾಗಬೇಕಾಗುತ್ತದೆ. ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಒಲ್ಲದ ಮನಸ್ಸಿನಿಂದ ಮುದ್ದಹನುಮೇಗೌಡರ ಗೆಲುವಿಗೆ ಶ್ರಮಿಸಬೇಕಿದೆ. +ರಾಜಣ್ಣ ಸಂಪುಟ ವಿಸ್ತರಣೆ ಬಳಿಕ ತುಮಕೂರು ಜಿಲ್ಲೆಯ ಉಸ್ತುವಾರಿಗಾಗಿ ಪಟ್ಟುಹಿಡಿದಿದ್ದರು. ಆದರೆ ಪರಮೇಶ್ವರ್ ಅವರ ಪ್ರಭಾವದ ಮುಂದೆ ಸಫಲರಾಗಲಿಲ್ಲ. ಕೊನೆಯ ಹಂತದಲ್ಲಿ ಹಾಸನ ಜಿಲ್ಲೆಗೆ ಉಸ್ತುವಾರಿ ಸಚಿವರಾದರು. ಅಲ್ಲಿಯೂ ಕೂಡ ಹಿರಿಯ ಕಾಂಗ್ರೆಸಿಗ ಹಾಗೂ ಮಾಜಿ ಶಾಸಕ ಗಂಡಸಿ ಶಿವರಾಂ ಅವರನ್ನು ಏಕವಚನದಲ್ಲಿ ಮಾತನಾಡಿಸುವ ಮೂಲಕ ವಿವಾದಕ್ಕೆ ಗುರಿಯಾದರು. ಗಂಡಸಿ ಶಿವರಾಂ ಹಾಸನ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿದ್ದರೂ ಅದನ್ನು ತಪ್ಪಿಸಿ ಯುವ ನಾಯಕ ಎಂ.ಶ್ರೇಯಸ್ ಪಟೇಲ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. +ರಾಜಣ್ಣ ಎರಡು ಕ್ಷೇತ್ರಗಳಲ್ಲೂ ತಮ್ಮದೇ ಆದ ರಾಜಕೀಯ ತಂತ್ರಗಾರಿಕೆ ಚಲಾಯಿಸುತ್ತಿದ್ದು, ಹಲವು ಕಾಂಗ್ರೆಸ್ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿದ್ದಾರೆ. ಇತ್ತ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಡಿ.ಆರ್.ಪಾಟೀಲ್ ಪ್ರಬಲ ಆಕಾಂಕ್ಷಿಯಾಗಿದ್ದರು. ಅಲ್ಲಿ ಆನಂದ ಸ್ವಾಮಿ ಗಡ್ಡದೇವರ ಮಠ ಅವರಿಗೆ ಟಿಕೆಟ್ ನೀಡಲಾಗಿದೆ. ಸಣ್ಣಪುಟ್ಟ ಅಸಮಾಧಾನಗಳು ಹೊಗೆಯಾಡುತ್ತಿವೆಯಾದರೂ ಅದನ್ನು ನಿಭಾಯಿಸಬಹುದು ಎಂದು ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಶಿವಮೊಗ್ಗದಲ್ಲಿ ಗೀತಾ ಶಿವರಾಜ್‍ಕುಮಾರ್ ಅವರಿಗೆ ಟಿಕೆಟ್ ಸಿಗಲಿದೆ ಎಂದು ಮೊದಲಿನಿಂದಲೂ ಇದ್ದ ನಿರೀಕ್ಷೆ ಯಶಸ್ವಿಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ವೆಂಕಟರಾಮೇಗೌಡ ಅವರಿಗೆ ಟಿಕೆಟ್ ಘೋಷಣೆ ಮಾಡಿರುವುದು ಕೆಲವು ಆಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಾರಿ ಜಿಲ್ಲಾ ಉಸ್ತುವಾರಿ ಸಚಿವರೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಹೊಣೆ ಹೊರಬೇಕೆಂದು ಸ್ಪಷ್ಟ ಸೂಚನೆಗಳಿವೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹಾಗೂ ಶಾಸಕರ ಸಹಮತದ ಮೇರೆಗೆ ಸ್ಟಾರ್ ಚಂದ್ರು ಎಂದೇ ಗುರುತಿಸಿಕೊಂಡಿರುವ ವೆಂಕಟರಮಣಗೌಡ ಅವರಿಗೆ ಟಿಕೆಟ್ ಘೋಷಣೆಯಾಗಿದೆ. +ಬಿಜಾಪುರದ ರಾಜು ಅಲಗೂರು ಅವರಿಗೆ ಹೆಚ್ಚಿನ ವಿರೋಧಗಳು ಕಂಡುಬರುತ್ತಿವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಹೆಸರು ಮೊದಲ ಪಟ್ಟಿಯಲ್ಲೇ ಪ್ರಕಟವಾಗಿದ್ದು, ಪ್ರಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮೊದಲ ಪಟ್ಟಿಯಲ್ಲೇ ಚಿಕ್ಕಮಗಳೂರು, ಉಡುಪಿ ಕ್ಷೇತ್ರ ಹಾಗೂ ಚಿತ್ರದುರ್ಗ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಬೇಕಿತ್ತು. ಆದರೆ ಚಿಕ್ಕಮಗಳೂರು, ಉಡುಪಿ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಬಹುದು ಎಂದು ಹೇಳಲಾಗುತ್ತಿರುವ ಜಯಪ್ರಕಾಶ್ ಹೆಗಡೆ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಅವರ ಪಕ್ಷ ಸೇರ್ಪಡೆ ಬಳಿಕ ಪರಿಗಣಿಸಬಹುದು ಎಂದು ಷರತ್ತು ವಿಸಲಾಗಿದೆ. +ಚಿತ್ರದುರ್ಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎಲ್.ಚಂದ್ರಪ್ಪ ಆಕಾಂಕ್ಷಿಯಾಗುತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಸಿದ್ದರಾಮಯ್ಯನವರ ಆಪ್ತ ಎಚ್.ಆಂಜನೇಯ ಆಕಾಂಕ್ಷಿಯಾಗಿದ್ದು, ಅವರ ಲಾಬಿಯಿಂದಾಗಿ ಮೊದಲ ಪಟ್ಟಿಯಲ್ಲಿ ಚಂದ್ರಪ್ಪ ಅವರ ಹೆಸರು ತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ. ಒಂದೇ ಹೆಸರಿರುವ 15 ಕ್ಷೇತ್ರಗಳ ಪೈಕಿ ಬಹುತೇಕ ಇತ್ಯರ್ಥಗೊಂಡಿದೆ. ಮಾರ್ಚ್ 11 ರಂದು ಕೇಂದ್ರ ಚುನಾವಣಾ ಸಮಿತಿಯ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅಂದು ಮತ್ತಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗಲಿದೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_210_6.txt b/eesanje/url_46_210_6.txt new file mode 100644 index 0000000000000000000000000000000000000000..ba6145dd0d8a658c94eaffc65f8bcb8792a63ab0 --- /dev/null +++ b/eesanje/url_46_210_6.txt @@ -0,0 +1,4 @@ +ಮನೆ ಬಳಿಯೇ ಕಾಟನ್‍ಪೇಟೆ ರೌಡಿಯ ಭೀಕರ ಹತ್ಯೆ +ಬೆಂಗಳೂರು, ಮಾ.9- ಮನೆ ಸಮೀಪವೇ ನಡು ರಸ್ತೆಯಲ್ಲಿ ರೌಡಿ ಮೇಲೆ ದಾಳಿ ಮಾಡಿದ ಮೂರ್ನಾಲ್ಕು ಮಂದಿಯ ಗುಂಪು ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಫ್ಲವರ್ ಗಾರ್ಡನ್ ನಿವಾಸಿ ಶಿವ ಅಲಿಯಾಸ್ ಶರತ್ (35) ಕೊಲೆಯಾದ ರೌಡಿ. ಕಾಟನ್‍ಪೇಟೆ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. +ರಾತ್ರಿ ಹೊರಗೆ ಹೋಗಿದ್ದ ರೌಡಿ ಶಿವ 9.30ರ ಸುಮಾರಿನಲ್ಲಿ ಮನೆಗೆ ನಡೆದು ಹೋಗುತ್ತಿದ್ದಾಗ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು ಈತ ಬರುವುದನ್ನೇ ಕಾದು ಹೊಂಚು ಹಾಕಿ ಇನ್ನೇನು ಮನೆ ಸ್ವಲ್ಪ ದೂರ ಇರುವಂತೆಯೇ ಏಕಾಏಕಿ ದಾಳಿ ಮಾಡಿ ಮಚ್ಚು, ಲಾಂಗ್, ಡ್ರ್ಯಾಗರ್‍ನಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. +ಹಲ್ಲೆಯಿಂದ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ರೌಡಿ ಶಿವನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ. ಸುದ್ದಿ ತಿಳಿದು ಕಾಟನ್‍ಪೇಟೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧಕಾರ್ಯ ಕೈಗೊಂಡಿದ್ದಾರೆ. ಹಳೆ ದ್ವೇಷದಿಂದ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_210_7.txt b/eesanje/url_46_210_7.txt new file mode 100644 index 0000000000000000000000000000000000000000..3b4af521db198dc1e1700351f7b36dfde681247f --- /dev/null +++ b/eesanje/url_46_210_7.txt @@ -0,0 +1,3 @@ +ಸುದೀರ್ ಮುರೊಳ್ಳಿಗೆ ಎಂಪಿ ಟಿಕೆಟ್ ನೀಡಲು ಒತ್ತಾಯ +ಚಿಕ್ಕಮಗಳೂರು, ಮಾ.9- ಶೃಂಗೇರಿಯ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಭೆನಡೆಸಿ ಸುದೀರ್ ಮುರೊಳ್ಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ರಾಜ್ಯದ ಹಾಗು ರಾಷ್ಟ್ರದ ನಾಯಕರನ್ನು ಒತ್ತಾಯಿಸಲಾಯಿತು. ಪಕ್ಷಕ್ಕಾಗಿ ದುಡಿಯುತ್ತಿರುವ ಹಾಗು ರಾಜಕಾರಣ , ಸಾಹಿತ್ಯ , ಕಾನೂನು , ಆಡಳಿತ , ಎಲ್ಲದರಲ್ಲೂ ಅನುಭವ ವಿರುವ ಯುವ ಮುಂದಾಳು ಮುರೊಳ್ಳಿಗೆ ಟಿಕೆಟ್ ಕೊಟ್ಟರೆ ಎರಡು ಜಿಲ್ಲೆಯ ಜನ ತುಂಬಾ ಹುರುಪಿನಿಂದ ಕೆಲಸ ಮಾಡುತ್ತಾರೆ ಹಾಗಾಗಿ ಮುರೊಳ್ಳಿಗೆ ಟಿಕೆಟ್ ಕೊಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು. +ಈಗಾಗಲೇ ಉಡುಪಿಯಾ ಪರಾಜಿತ ಅಭ್ಯರ್ಥಿಗಳು ಉಡುಪಿ ಜಿಲ್ಲಾ ಯುವ ಅಧ್ಯಕ್ಷರು ,ಉಡುಪಿ ಬ್ಲಾಕ ಅದ್ಯಕ್ಶರು , ಏನ್ ಎಸ್ ಐ ಯು ಅಧ್ಯಕ್ಷರು, ಚಿಕ್ಕಮಗಳೂರಿನ ಶಾಸಕರುಗಳು ಸುದೀರ್ ಮುರೊಳ್ಳಿಗೆ ಬೆಂಬಲ ನೀಡಿದ್ದು ಜೊತೆಗೆ ಶೃಂಗೇರಿ ಕ್ಷೇತ್ರದ ಟಿ ಡಿ ರಾಜೇಗೌಡರು ಮುಖ್ಯಮಂತ್ರಿ ,ಉಪ ಮುಖ್ಯ ಮಂತ್ರಿಗಳಿಗೆ , ಪತ್ರ ಬರೆದು ಸುದೀರ್ ಮುರೊಳ್ಳಿಗೆ ಟಿಕೆಟ್ ಕೊಡುವಂತೆ ಒತ್ತಾಯಿಸಿದ್ದಾರೆ ಹಾಗಾಗಿ ಕಾರ್ಯಕರ್ತರಾಗಿ ನಾವು ಕೂಡ ಸಭೆನಡೆಸಿ ವರಿಷ್ಠರಿಗೆ ಒತ್ತಾಯಿಸುತ್ತಿದ್ದೇವೆ ಎಂದು ಸಭೆಯಲ್ಲಿ ನೆರೆದಿದ್ದ ಎಲ್ಲಾ ಕಾರ್ಯಕರ್ತರು ಒಕ್ಕೊರಲಿನಿಂದ ತಿಳಿಸಿದರು. \ No newline at end of file diff --git a/eesanje/url_46_210_8.txt b/eesanje/url_46_210_8.txt new file mode 100644 index 0000000000000000000000000000000000000000..6d4a7bffa7285f852512bbe3766cd3d7a2924b97 --- /dev/null +++ b/eesanje/url_46_210_8.txt @@ -0,0 +1,6 @@ +ರಾಜ್ಯದ ಜನ ಬರಗಾಲದ ನೋವನ್ನು ಅನುಭವಿಸುತ್ತಿದ್ದಾರೆ : ಅಶೋಕ್ +ಬೆಂಗಳೂರು,ಮಾ.9- ರಾಜ್ಯದಲ್ಲಿ ಜನರು ಕಳೆದ 5 ತಿಂಗಳುಗಳಿಂದ ಬರಗಾಲದ ನೋವನ್ನು ಅನುಭವಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬರಗಾಲಪೀಡಿತ ಎಂದು ಘೋಷಿಸುವ ಮೊದಲು ಅಳೆದು ತೂಗಿ 3 ತಿಂಗಳು ಮುಂದೆ ಹಾಕಿದ್ದರು. ರಾಜ್ಯ ಸರಕಾರದಲ್ಲಿ ಹಣ ಇಲ್ಲದ ಕಾರಣ ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದರು ಎಂದು ಆಕ್ಷೇಪಿಸಿದರು. +ಜನರು ಗುಳೆ ಹೋಗುತ್ತಿದ್ದಾರೆ ಎಂದರೆ ಸರಕಾರ ಒಪ್ಪುತ್ತಿಲ್ಲ. ಹಾಗಿದ್ದರೆ ಮನೆಗಳಿಗೆ ಯಾಕೆ ಬೀಗ ಹಾಕಿದ್ದಾರೆ ಎಂದು ಪ್ರಶ್ನಿಸಿದರು. ಹಳ್ಳಿಗಳಲ್ಲಿ ಕೇವಲ ವಯಸ್ಸಾದವರು ಇದ್ದಾರೆ. ಯುವಕರು, ಮಧ್ಯ ವಯಸ್ಕರರು ಹಳ್ಳಿಗಳಲ್ಲಿ ಇಲ್ಲ. ಹಾಗಿದ್ದರೆ ಅವರು ಎಲ್ಲಿದ್ದಾರೆ ಎಂದು ಕೇಳಿದರು. ಗೋವಾ, ಮಂಗಳೂರು, ಹೈದರಾಬಾದ್ ಕಡೆ ಜನರು ಗುಳೆ ಹೋಗುತ್ತಿದ್ದಾರೆ ಎಂದು ವಿವರಿಸಿದರು. +ಸರಕಾರವು ಕುಂಭಕರ್ಣ ನಿದ್ರೆಯಲ್ಲಿದೆ. ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿದೆ. ಎಲ್ಲವನ್ನೂ ಮುಚ್ಚಿಡುತ್ತಿದೆ. ಬಾಗಿಲು ಹಾಕಿದರೂ ಮುಚ್ಚಿಡುವುದು, ಪಾಕಿಸ್ತಾನ ಜಿಂದಾಬಾದ್ ಎಂದರೂ ಮುಚ್ಚಿಡುತ್ತದೆ. ಬರಗಾಲ ಇಲ್ಲ ಎಂಬಂತೆ ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಅಂತಾರಾಷ್ಟ್ರೀಯ ಚಾನೆಲ್ನಲ್ಲಿ ಇದು ಸುದ್ದಿಯಾಗಿದೆ. ಹೀಗಿದ್ದರೂ ಐ.ಟಿ, ಬಿ.ಟಿಯವರು ಬೆಂಗಳೂರಿಗೆ ಹೋಗಲು ಇಷ್ಟ ಪಡುತ್ತೀರಾ ಎಂದು ಆ್ಯಂಕರ್ ಕೇಳಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ. ಕಿವಿಯಾರೆ ಕೇಳಿದ್ದೇನೆ. ಬೆಂಗಳೂರಿನ ಮಾನ ಮರ್ಯಾದೆಯನ್ನು ಈ ಕಾಂಗ್ರೆಸ್ ಸರಕಾರ ಹರಾಜು ಹಾಕಿದೆ ಎಂದು ಟೀಕಿಸಿದರು. +ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಐಟಿ ಸಿಟಿ, ಬಿ.ಟಿ. ಸಿಟಿ ಎಂಬ ಹೆಸರಿದೆ. ಬಿಸಿನೆಸ್ ವಿಷಯದಲ್ಲಿ ಬೆಂಗಳೂರಿಗೆ ಆದ್ಯತೆ ಕೊಡಲಾಗುತ್ತಿತ್ತು ಎಂದ ಅವರು, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡದಂತೆ ನಾವು ಆಗ್ರಹಿಸಿದ್ದೆವು. ಆದರೆ, ಇಂಡಿ ಒಕ್ಕೂಟದ ಭಾಗಿದಾರ ಪಕ್ಷವೆಂಬ ಕಾರಣಕ್ಕೆ ಸ್ಟಾಲಿನ್ ಅವರ ಕೋರಿಕೆ ಮೇರೆಗೆ ನೀರನ್ನು ಬಿಟ್ಟಿದ್ದಾರೆ. ಈಗ ಶೇ 60 ಬೋರ್ವೆಲ್ಗಳು ಬತ್ತಿ ಹೋಗಿವೆ. ಕುಡಿಯುವ ನೀರಿಗೂ ಹಾಹಾಕಾರ ಇದೆ ಎಂದು ವಿವರಿಸಿದರು. +ಕಾವೇರಿ ನೀರನ್ನೂ ಶೇ 20ರಿಂದ ಶೇ 30ರಷ್ಟು ಕಡಿಮೆ ಮಾಡಿದ್ದಾರೆ. ಆದರೆ, ಇದರ ಕುರಿತು ಅಧಿಕಾರಿಗಳು ಬಾಯಿ ಬಿಡುತ್ತಿಲ್ಲ. ಮುಂದೆ ಮಳೆ ಬರದೆ ಇದ್ದರೆ ಸಮಸ್ಯೆ ತೀವ್ರಗೊಳ್ಳಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_210_9.txt b/eesanje/url_46_210_9.txt new file mode 100644 index 0000000000000000000000000000000000000000..5d44071b37715f69f64baba48e100a62d328fffb --- /dev/null +++ b/eesanje/url_46_210_9.txt @@ -0,0 +1,4 @@ +ರಾಮೇಶ್ವರಂ ಕೆಫೆ ಬಾಂಬರ್‌ನ ಮತ್ತಷ್ಟು ಫೋಟೋ ಬಿಡುಗಡೆ ಮಾಡಿದ ಎನ್‍ಐಎ +ಬೆಂಗಳೂರು, ಮಾ.9- ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿ ಬಂಧನಕ್ಕಾಗಿ ಹರಸಾಹಸ ಪಡುತ್ತಿರುವ ಎನ್‍ಐಎ ಅಧಿಕಾರಿಗಳು ದುಷ್ಕರ್ಮಿಯ ಇನ್ನಷ್ಟು ಫೋಟೋಗಳನ್ನು ಎಕ್ಸ್‍ನಲ್ಲಿ ಬಿಡುಗಡೆ ಮಾಡಿದ್ದಾರೆ. ಆರೋಪಿಯ ವಿವಿಧ ಭಂಗಿಯಲ್ಲಿರುವ ನಾಲ್ಕು ಫೋಟೋಗಳನ್ನು ಎನ್‍ಐಎ ಎಕ್ಸ್‍ನಲ್ಲಿ ಬಿಡಗುಡೆ ಮಾಡಿ ಆರೋಪಿಯ ಸುಳಿವು ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. + #. 📞 08029510900, 8904241100 ..@. .  .#../ +ಈಗಾಗಲೇ ಎನ್‍ಐಎ ದುಷ್ಕರ್ಮಿ ಬಗ್ಗೆ ಖಚಿತ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದೆ. ಸುಳಿವು ನೀಡಿದವರ ಹೆಸರು, ವಿಳಾಸವನ್ನು ಗೌಪ್ಯವಾಗಿಡುವುದಾಗಿ ಸಹ ತಿಳಿಸಿದೆ. ಈ ಆರೋಪಿ ಬಗ್ಗೆ ಮಾಹಿತಿ ದೊರೆತಲ್ಲಿ ಶೀಘ್ರವೇ ತಿಳಿಸುವಂತೆ ಎನ್‍ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ. \ No newline at end of file diff --git a/eesanje/url_46_211_1.txt b/eesanje/url_46_211_1.txt new file mode 100644 index 0000000000000000000000000000000000000000..2a19924ce324c65489109685cf6ad3e57a44b68d --- /dev/null +++ b/eesanje/url_46_211_1.txt @@ -0,0 +1,4 @@ +ಮೈಸೂರು : ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರನ ಭೀಕರ ಹತ್ಯೆ +ಮೈಸೂರು,ಮಾ.9- ಸಾಂಸ್ಕøತಿಕ ನಗರಿಯಲ್ಲಿ ಮಾಜಿ ಕಾರ್ಪೊರೇಟರ್ ಅಯಾಜ್ ಪಂಡು ಸಹೋದರ ಭೀಕರವಾಗಿ ಹತ್ಯೆಯಾಗಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಅಕ್ಮಲ್ ಕೊಲೆಯಾದ ವ್ಯಕ್ತಿ. ರಾಜೀವ್ ನಗರ ನಿಮ್ರಾ ಮಸೀದಿ ಬಳಿ ಆಯರ್ ಬೇಕರಿ ಮುಂಭಾಗ ದುಷ್ಕರ್ಮಿಗಳು ದಾಳಿ ಮಾಡಿ ಹತ್ಯೆಗೈದಿದ್ದಾರೆ. +ನಿನ್ನೆ ರಾತ್ರಿ ಸುಮಾರು 9.30ರಲ್ಲಿ ಸ್ಕೂಟರ್‍ನಲ್ಲಿ ತೆರಳುತ್ತಿದ್ದ ಅಕ್ಮಲ್‍ರನ್ನು ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದೆ. ಕಾರ್ಯಕ್ರಮವೊಂದರಲ್ಲಿ ಫ್ಲೆಕ್ಸ್ ತೆರವು ಮಾಡಿದ ವಿಚಾರದಲ್ಲಿ ಮತ್ತೊಂದು ಗುಂಪಿನ ವರ್ತನೆ ಖಂಡಿಸಿ ಅಕ್ಮಲ್ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡಿದ್ದರು. ಇದೇ ವಿಚಾರದಲ್ಲಿ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. +ವಿಷಯ ತಿಳಿಯುತ್ತಿದ್ದಂತೆ ಉದಯಗಿರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_211_10.txt b/eesanje/url_46_211_10.txt new file mode 100644 index 0000000000000000000000000000000000000000..fda58149ecd21d1eefe5a4ef8f7428de9f69a74b --- /dev/null +++ b/eesanje/url_46_211_10.txt @@ -0,0 +1,5 @@ +ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ ರದ್ದುಗೊಳಿಸಿದ ಸರ್ಕಾರ +ಬೆಂಗಳೂರು,ಮಾ.8- ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ರಾಜ್ಯಸರ್ಕಾರ ರದ್ದುಗೊಳಿಸಿದ್ದು, ಹೈಕೋರ್ಟ್‍ಗೆ ಪ್ರಮಾಣ ಪತ್ರ ಸಲ್ಲಿಸಿದೆ. 2021 ರ ಜುಲೈ 14 ರಂದು ಬಿಜೆಪಿ ಸರ್ಕಾರ ಕರ್ನಾಟಕ ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಸ್ಕೀಮ್ ಅನ್ನು ಅನುಷ್ಠಾನಕ್ಕೆ ತಂದಿತ್ತು. ಸರ್ಕಾರದ ಯೋಜನೆಯಾಗಿದ್ದರಿಂದಾಗಿ ಹಲವಾರು ನವೋದ್ಯಮಗಳು ಈ ಆದೇಶದ ಅನುಸಾರ ಆರಂಭಗೊಂಡಿದ್ದವು. +ಮತ್ತೊಂದೆಡೆ ಬೈಕ್ ಟ್ಯಾಕ್ಸಿ ಸೇವೆ ನಿಯಮ ಬಾಹಿರ ಎಂಬ ಆದೇಶಗಳಿದ್ದು, ಟ್ಯಾಕ್ಸಿ, ಆಟೋ ಸೇರಿದಂತೆ ತೆರಿಗೆ ಪಾವತಿಸುವ ವಾಹನಗಳ ಮಾಲಿಕರು ಗದ್ದಲ ಎಬ್ಬಿಸಿದ್ದರು. ಹಲವಾರು ಕಡೆ ಇದು ವ್ಯಾಪಕ ಪ್ರತಿಭಟನೆ ಮತ್ತು ಗಲಾಟೆಗಳಿಗೂ ಕಾರಣವಾಗಿತ್ತು. ಬೈಕ್ ಟ್ಯಾಕ್ಸಿಗಳಿಂದಾಗಿ ಆಟೋ ಮತ್ತು ನಾಲ್ಕು ಚಕ್ರದ ಟ್ಯಾಕ್ಸಿ ಸೇವೆಗೆ ನಷ್ಟವಾಗುತ್ತಿದೆ ಎಂಬ ಆಕ್ರೋಶಗಳಿದ್ದವು. ಜೊತೆಯಲ್ಲಿ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆ ಮಹಿಳೆಯರ ಸುರಕ್ಷತೆಗೆ ಪೂರಕವಾಗಿಲ್ಲ ಎಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಕೆಲವು ಪ್ರಕರಣಗಳೂ ವರದಿಯಾಗಿದ್ದವು. +ಈ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಬಿಎಂಆರ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ನೀಡಿದೆ. ಅದನ್ನು ಆಧರಿಸಿ ರಾಜ್ಯಸಾರಿಗೆ ಇಲಾಖೆ ಮಾರ್ಚ್ 6 ರಂದು ಆದೇಶ ಹೊರಡಿಸಿದ್ದು, ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿದೆ. ಪೆಟ್ರೋಲ್‍ನಿಂದ ಚಲಿಸುವ ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಗಳಿಗೆ ಮೊದಲಿನಿಂದಲೂ ನಿರ್ಬಂಧ ಇದೆ. +ಪರಿಸರಸ್ನೇಹಿಯಾಗಿರುವ ಎಲೆಕ್ಟ್ರಿಕಲ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಜಾರಿಗೊಳಿಸಿದ್ದ ಯೋಜನೆಗೆ ತೀವ್ರ ವಿರೋಧಗಳು ಕೇಳಿಬಂದಿದ್ದವು. ನ್ಯಾಯಾಲಯಗಳಲ್ಲೂ ಪ್ರಕರಣ ದಾಖಲಾಗಿತ್ತು. ರಾಜ್ಯಸರ್ಕಾರ ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್‍ಗೆ ಕೇವಿಯಟ್ ಸಲ್ಲಿಸಿದೆ. \ No newline at end of file diff --git a/eesanje/url_46_211_11.txt b/eesanje/url_46_211_11.txt new file mode 100644 index 0000000000000000000000000000000000000000..c3f4e2db10aea57c5ee8c918c9ad2f5f9352b83b --- /dev/null +++ b/eesanje/url_46_211_11.txt @@ -0,0 +1,7 @@ +ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಹೆಚ್ಚಳಕ್ಕೆ ಕ್ರಮ : ದಯಾನಂದ +ಬೆಂಗಳೂರು,ಮಾ.8-ಪೊಲೀಸ್ ಇಲಾಖೆಯಲ್ಲಿ ಶೇ.25ರಷ್ಟು ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳು ಇರಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಸಿಬ್ಬಂದಿಗಳ ನಿಯೋಜನೆಗೆ ವಿಶೇಷ ಬಡ್ತಿ ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. +ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮೈಸೂರು ರಸ್ತೆಯಲ್ಲಿನ ನಗರ ಸಶಸ್ತ್ರ ಮೀಸಲು ಪಡೆ (ಕೇಂದ್ರಸ್ಥಾನ) ಕವಾಯತು ಮೈದಾನದಲ್ಲಿ ನಡೆದ ಮಾಸಿಕ ವಿಶೇಷ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳ ಕವಾಯುತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಇಲಾಖೆಯಲ್ಲಿ ಶೇ.8ರಷ್ಟು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಖ್ಯೆಯನ್ನು ಶೇ.25ಕ್ಕೆ ಹೆಚ್ಚಿಸಲು ಸರ್ಕಾರದ ಉದ್ದೇಶವಾಗಿದೆ. ಗೃಹಸಚಿವರು ಸಹ ಈ ವಿಷಯವನ್ನು ಪ್ರಸ್ತಾಪಿಸಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಸಿಬ್ಬಂದಿಗಳ ಹೆಚ್ಚಳಕ್ಕೆ ನೇಮಕಾತಿಗಳನ್ನು ಮಾಡಿಕೊಳ್ಳುವ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ. +ಈ ಹಿಂದೆ ಟೈಪಿಂಗ್, ರಿಸಪ್ಷನ್ ಡೆಸ್ಕ್ ಮತ್ತು ಮಹಿಳಾ ಆರೋಪಿಗಳಿದ್ದಾಗ ಮಾತ್ರ ಮಹಿಳಾ ಸಿಬ್ಬಂದಿಗಳನ್ನು ಬಳಕೆ ಮಾಡಲಾಗುತ್ತಿತ್ತು. ಆದರೆ ಈಗ ಇಲಾಖೆಯ ಎಲ್ಲ ಸ್ತರಗಳಲ್ಲೂ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದು, ಪಿಸ್ತೂಲ್ ಹಿಡಿದುಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ಸಂಚಾರಿ ವಿಭಾಗದಲ್ಲಿ ಮಹಿಳಾ ಸಿಬ್ಬಂದಿಯ ಪಾತ್ರ ಮಹತ್ವವಾಗಿದೆ. ಅವರಿಗೆ ಉತ್ತೇಜನ, ಪ್ರೋತ್ಸಾಹ, ಸ್ಪೂರ್ತಿ, ಹುರಿದುಂಬಿಸುವ ಕಾರ್ಯಗಳನ್ನು ಮಾಡಬೇಕು. ಏಕೆಂದರೆ ಇತ್ತೀಚಿನ ದಿನಗಳಲ್ಲಿ ವರ್ಕ್ ಲೈಫ್ ಬ್ಯಾಲೆನ್ಸ್ ಎಂಬ ಪದ ಬಳಕೆ ಪ್ರಚಲಿತವಾಗುತ್ತಿದೆ. +ಒಬ್ಬ ವ್ಯಕ್ತಿಗೆ ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನ ಸರಿದೂಗಿಸಿಕೊಂಡು ಹೋಗಬೇಕು. ಇಲ್ಲದಿದ್ದರೆ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಪರಿಣಿತರು ವಿಶ್ಲೇಷಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನವಷ್ಟೇ ಅಲ್ಲದೆ ವೃತ್ತಿ ಜೀವನ ಮತ್ತು ಕುಟುಂಬ ಜೀವನವೂ ಇರುತ್ತದೆ. ಪ್ರತಿ ಮಹಿಳೆಯು ಕುಟುಂಬದ ಜವಾಬ್ದಾರಿಯನ್ನು ಹೊಂದಿರುತ್ತಾರೆ. ತಾಯಿಯಾಗಿ, ಪತ್ನಿಯಾಗಿ, ಸಹೋದರಿಯಾಗಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿರುತ್ತಾರೆ. ಬಹುಮುಖ್ಯವಾಗಿ ತಾಯಿ ಪಾತ್ರ ನಿರ್ವಹಿಸುವುದರಿಂದ ಕುಟುಂಬ ಅವರ ಮೇಲೆ ನಿರ್ಭರಿತವಾಗಿರುತ್ತದೆ. ಅದರಿಂದ ಅವರು ವೃತ್ತಿ ಜೀವನದ ಜೊತೆಗೆ ಕುಟುಂಬ ಜೀವನವನ್ನು ಸಮತೋಲನವಾಗಿ ನಡೆಸಬೇಕಾಗುತ್ತದೆ. ಅದಕ್ಕೆ ಪೂರಕವಾಗಿ ಇಲಾಖೆ ಮತ್ತು ಸರ್ಕಾರವು ಸಹಕಾರ ಮತ್ತು ಉತ್ತೇಜನ ನೀಡಬೇಕು ಎಂದರು. +ಪೆರೇಡ್‍ನಲ್ಲಿ ಭಾಗವಹಿಸಿದ್ದ ಒಟ್ಟು 10 ತಂಡಗಳ ಪ್ರತಿ ಸದಸ್ಯನಿಗೆ ಒಂದು ಸಾವಿರ ರೂ.ನಂತೆ ಮೂರು ಲಕ್ಷ ನಗದು ಮತ್ತು ರಾಣಿ ಚೆನ್ನಮ್ಮ ಪಡೆಗೆ ವಿಶೇಷ 30 ಸಾವಿರ ರೂ. ಸೇರಿ ಒಟ್ಟು 3,30,000 ರೂ. ಬಹುಮಾನ ಘೋಷಣೆ ಮಾಡಿ 100ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಗೆ ಪ್ರಶಂಸನಾ ಪತ್ರ ವಿತರಿಸಿದರು. +ಈ ಮೈದಾನವು ಐತಿಹಾಸಿಕ ದಾಖಲೆಯಾಗಿದ್ದು, 1973ರ ನವೆಂಬರ್ 1ರಂದು ಪೊಲೀಸ್ ಧ್ವಜವನ್ನು ಹಸ್ತಾಂತರ ಮಾಡಿದ ಸುವರ್ಣ ಮಹೋತ್ಸವ ಜೊತೆಗೆ ಇಂದು ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಐತಿಹಾಸಿಕವಾಗಲಿದೆ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಇಲಾಖೆಯ ಎಲ್ಲಾ ಮಹಿಳಾ ಸಿಬ್ಬಂದಿಗಳಿಗೆ ಶುಭಾಷಯ ಕೋರಿದರು. \ No newline at end of file diff --git a/eesanje/url_46_211_12.txt b/eesanje/url_46_211_12.txt new file mode 100644 index 0000000000000000000000000000000000000000..5d30c2ee2496c40640e9bab9f9b43614930cea0d --- /dev/null +++ b/eesanje/url_46_211_12.txt @@ -0,0 +1,8 @@ +ಕೆಲ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸುಳಿವು ನೀಡಿದ ಅಶೋಕ್ +ಬೆಂಗಳೂರು,ಮಾ.8- ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಸುಳಿವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿ ಬಗ್ಗೆ ಚರ್ಚೆಯಾಗಿದೆ. ಸವಿಸ್ತಾರವಾಗಿ ವರಿಷ್ಠರ ಜೊತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. +ವರಿಷ್ಠರು ಅಭ್ಯರ್ಥಿಗಳ ಮಾಹಿತಿ ಮತ್ತು ಅವರ ಹಿನ್ನೆಲೆಯನ್ನು ತೆಗೆದುಕೊಂಡಿದ್ದಾರೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಚರ್ಚೆ ಬಹುತೇಕ ಒಂದು ಹಂತಕ್ಕೆ ಬಂದಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಬೇಕಿದೆ ಎಂದರು. ಹೈಕಮಾಂಡ್ ನಾಯಕರಿಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಯಾರಿಗೆ ಟಿಕೆಟ್ ಯಾರಿಗೆ ಇಲ್ಲ ಅನ್ನೋದು ಮುಖ್ಯ ಅಲ್ಲ. ಯಾರಿಗೇ ಕೊಟ್ಟರೂ ನಾವು ಅವರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಈ ಬಾರಿ ಹೊಸ ಮುಖಗಳಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಇನ್ನೊಂದು ಸುತ್ತಿನ ಮಾತುಕತೆ ನಡೆದ ಬಳಿಕ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಮೈಸೂರು, ಮಂಡ್ಯ, ಕಲಬುರಗಿ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದರು. +ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದರ ಬಗ್ಗೆ ನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಮುಂದಿನ ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರೊಂದಿಗೆ ಮಾತಾಡುತ್ತಾರೆ. ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಾರೆ ಎಂದರು. +ಮಂಡ್ಯದಲ್ಲಿ ಬಿಜೆಪಿಯಿಂದ ಶೇ.500ರಷ್ಟು ನಾನೇ ಸ್ಪರ್ಧೆ ಮಾಡುತ್ತೇನೆ ಎಂಬ ಬಗ್ಗೆ ಸಂಸದೆ ಸುಮಲತಾ ಹೇಳಿಕೆ ವಿಚಾರವಾಗಿ ಮಾತನಾಡಿದ ಅಶೋಕ್, ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಆಡಳಿತ ಎಡಬಿಡಂಗಿ ಸರ್ಕಾರವಾಗಿದೆ. ಮನಸ್ಸಿಗೆ ಬಂದಂತೆ ಐದು ಗ್ಯಾರಂಟಿ ಘೋಷಿಸಿ ಅದನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಬೇಜವಾಬ್ದಾರಿಯಿಂದ ಕೆಆರ್‍ಎಸ್ ನೀರನ್ನು ತಮಿಳುನಾಡಿಗೆ ಬಿಟ್ಟು ಕೊಟ್ಟಿದ್ದಾರೆ. ಇದೇ ಕಾರಣ ಇವತ್ತು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಆಗಿರುವುದಕ್ಕೆ ಇಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. +ಬೆಂಗಳೂರಿನ ವಾರ್ಡ್ ಮಟ್ಟದಲ್ಲಿ ಒಂದು ಸಭೆಯನ್ನೂ ಮಾಡಿಲ್ಲ. ಕೋವಿಡ್ ಸಂದರ್ಭದಲ್ಲಿ ಸಭೆ ಮಾಡಿ ಸಮರ್ಥವಾಗಿ ನಿಭಾಯಿಸಿದ್ದೇವೆ. ಕೇಂದ್ರ ಸರ್ಕಾರದ ಮೇಲೆ ಹೇಳುತ್ತೀರಲ್ಲಾ ನಾಚಿಕೆ ಆಗುವುದಿಲ್ಲವೇ? ಎಂದು ಕಿಡಿಕಾರಿದ ಅವರು, ರಾಜ್ಯದಲ್ಲಿ ಕುಡಿಯುವ ನೀರನ್ನು ಒದಗಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ಪಾತಾಳಕ್ಕೆ ಇಳಿದಿದೆ ಎಂದು ಆರೋಪಿಸಿದರು. +ಕಾಂಗ್ರೆಸ್‍ನಲ್ಲಿ ದಲಿತ ಸಿಎಂಗಾಗಿ ಕೂಗು ವಿಚಾರವಾಗಿ ಇದೇ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಲ್ಲಿರುವ ದಲಿತರನ್ನು ಮುಖ್ಯಮಂತ್ರಿ ಅಲ್ಲ, ಉಪಮುಖ್ಯಮಂತ್ರಿಗಳನ್ನೂ ಮಾಡಲ್ಲ. ಪಾಪ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಎಲ್ಲರು ಕ್ಯೂ ನಲ್ಲಿದ್ದಾರೆ. ಸಿದ್ದರಾಮಯ್ಯ ಮಗ ಬೇರೆ ನಮ್ಮ ಅಪ್ಪನೇ ಐದು ವರ್ಷ ಸಿಎಂ ಅಂತಾರೆ ಎಂದು ಅಶೋಕ್ ತಿರುಗೇಟು ನೀಡಿದರು. \ No newline at end of file diff --git a/eesanje/url_46_211_2.txt b/eesanje/url_46_211_2.txt new file mode 100644 index 0000000000000000000000000000000000000000..e6f866b22f854f6442d2e9eed76ddb87182b1dda --- /dev/null +++ b/eesanje/url_46_211_2.txt @@ -0,0 +1,4 @@ +ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ : ನಟ ಡಾಲಿ ಧನಂಜಯ್ +ಮಂಡ್ಯ,ಮಾ.9- ಚಲನಚಿತ್ರವೇ ನನ್ನ ಜೀವನ, ನನಗೆ ಅದರಲ್ಲೇ ಆಸಕ್ತಿ, ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಗಳಿಲ್ಲ ಎಂದು ನಟ ನಿರ್ಮಾಪಕ ಡಾಲಿ ಧನಂಜಯ್ ಹೇಳಿದರು. +ಜಿಲ್ಲೆಯ ಕೆರೆಗೋಡಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಯವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಸಂದರ್ಭಗಳು ಬಂದಿಲ್ಲ. ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದು ಹೇಳಿದರು. +ಕಳೆದ ವಿಧಾನಸಭೆ ಚುನಾವಣೆಯಲ್ಲೂ ಪ್ರಚಾರಕ್ಕಾಗಿ ನನಗೆ ಆಹ್ವಾನವಿತ್ತು. ಆದರೆ ನಾನು ಭಾಗವಹಿಸಿರಲಿಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಗಳು ಕಡಿಮೆ ಎಂದರು. ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವ ಎಲ್ಲಾ ಪಕ್ಷದ ಅಭ್ಯರ್ಥಿಗಳಿಗೂ ಶುಭವಾಗಲಿ. ನಾನು ಯಾವುದೇ ಒಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಮಾತನಾಡುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_211_3.txt b/eesanje/url_46_211_3.txt new file mode 100644 index 0000000000000000000000000000000000000000..0a4ca8e3202a4696870cc16d7207a32e03efc8d1 --- /dev/null +++ b/eesanje/url_46_211_3.txt @@ -0,0 +1,6 @@ +ಬಳ್ಳಾರಿಯಲ್ಲಿ ಕೆಆರ್‌ಪಿಪಿ ಸ್ಪರ್ಧೆ, ಶ್ರೀರಾಮಲುಗೆ ಚಿಂತೆ +ಬೆಂಗಳೂರು,ಮಾ.9- ಮುಂಬರುವ ಲೋಕಸಭಾ ಸಭಾ ಚುನಾವಣೆಗೆ ಬಳ್ಳಾರಿ ಸಜ್ಜುಗೊಳ್ಳುತ್ತಿದ್ದು, ಈ ನಡುವಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂಬ ಜನಾರ್ದನ ರೆಡ್ಡಿಯವರ ಹೇಳಿಕೆ ಮಾಜಿ ಸಚಿವ ಹಾಗೂ ಬಿಜೆಪಿ ಲೋಕಸಭಾ ಟಿಕೆಟ್ ಆಕಾಂಕ್ಷಿ ಬಿ.ಶ್ರೀರಾಮುಲು ಅವರಲ್ಲಿ ಕಳವಳನ್ನುಂಟು ಮಾಡಿದೆ. ಬಳ್ಳಾರಿ ಗ್ರಾಮಾಂತರದಿಂದ ಸ್ರ್ಪಧಿಸಿ ಸೋತಿದ್ದ ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಆದರೆ ಕಲ್ಯಾಣ ರಾಜ್ಯಪ್ರಗತಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಜನಾದರ್ನ ರೆಡ್ಡಿಯವರು ಹೇಳಿದ್ದಾರೆ. +ಒಂದು ವೇಳೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತ ಹಂಚಿಕೆಯಾಗುವ ಭೀತಿ ಶ್ರೀರಾಮುಲುಗೆ ಎದುರಾಗಿದೆ. ಇದು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಆತಂಕಗೊಂಡಿರುವ ಶ್ರೀರಾಮುಲು ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ರೆಡ್ಡಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. +ಬಳ್ಳಾರಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ರೆಡ್ಡಿ ಅವರು ಕಳೆದ ವಾರ ಸಭೆ ಕರೆದಿದ್ದರು ಎಂದು ಕೆಆರ್‍ಪಿಪಿ ಕಾರ್ಯಕರ್ತರೊಬ್ಬರು ಹೇಳಿದ್ದಾರೆ. ಕೆಆರ್‍ಪಿಪಿ ಆರಂಭಿಸಿದಾಗ ಶ್ರೀರಾಮುಲು ಅವರು ಬೆಂಬಲ ನೀಡದಿರುವ ಬಗ್ಗೆ ಸಭೆಯಲ್ಲಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಮತ್ತು ರೆಡ್ಡಿ ಪತ್ನಿ ಅವರ ಅರುಣಾ ಲಕ್ಷ್ಮಿ ವಿರುದ್ಧ ಕೆಲಸ ಮಾಡಿದ್ದರು. ಈಗ ನಮ್ಮ ಸಹಾಯ ಅಪೇಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. +ಜನಾರ್ದನ ರೆಡ್ಡಿ ಅವರು ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಶ್ರೀರಾಮುಲು ಅವರನ್ನು ಬೆಂಬಲಿಸಿದ್ದರು. ಆದರೆ, ಕಳೆದ ಕೆಲವು ವರ್ಷಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಶ್ರೀರಾಮುಲು ರೆಡ್ಡಿ ಪರವಾಗಿ ನಿಲ್ಲಲಿಲ್ಲ. ಹೀಗಾಗಿ ಈ ಬಾರಿ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ನಮ್ಮ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತ ಎಂದು ಹೇಳಿದ್ದಾರೆ. +ಕೆಲ ದಿನಗಳ ಹಿಂದಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದರು. ಇದೀಗ ಶ್ರೀರಾಮುಲು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಿಲ್ಲುವುದು ಹಾಗೂ ಮತಗಳನ್ನು ವಿಭಜಿಸುವ ರಾಜಕೀಯ ತಂತ್ರವಾಗಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_211_4.txt b/eesanje/url_46_211_4.txt new file mode 100644 index 0000000000000000000000000000000000000000..84f6e3345b59f2fc53ccf097495db052625330dc --- /dev/null +++ b/eesanje/url_46_211_4.txt @@ -0,0 +1,5 @@ +ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಇನ್ನಷ್ಟು ಅಭ್ಯರ್ಥಿಗಳ ಪ್ರಕಟಣೆ : ಡಿಕೆಶಿ +ಬೆಂಗಳೂರು,ಮಾ.9- ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. +ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನು ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ ಮತ್ತಷ್ಟು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು. +17 ಕ್ಷೇತ್ರಗಳಿಗೆ ನೀವು ಪಟ್ಟಿ ತೆಗೆದುಕೊಂಡು ಹೋಗಿದ್ದಿರಿ ಎಂದು ಕೇಳಿದಾಗ, ನಾನು ಎಷ್ಟು ಪಟ್ಟಿ ತೆಗೆದುಕೊಂಡು ಹೋಗಿದ್ದೆ ಎಂಬುದು ಮುಖ್ಯವಲ್ಲ. ಇದು ನನ್ನ ಪಕ್ಷ ಅಲ್ಲ. ನಮ್ಮ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ.ವೇಣುಗೋಪಾಲ, ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಚರ್ಚೆ ಮಾಡುತ್ತಾರೆ. +ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಈಗ ಪ್ರಕಟವಾಗಿರುವ 7 ಕ್ಷೇತ್ರಗಳ ಪೈಕಿ ಎಷ್ಟರಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಕೇಳಿದಾಗ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_211_5.txt b/eesanje/url_46_211_5.txt new file mode 100644 index 0000000000000000000000000000000000000000..fb211d17127858428023000512203f6571648a6a --- /dev/null +++ b/eesanje/url_46_211_5.txt @@ -0,0 +1,6 @@ +2 ತಿಂಗಳಿನಿಂದ ಮಳೆಯಾಗಿಲ್ಲ, ಬೇಸಿಗೆ ಬಿಸಿಲ ಅಬ್ಬರ +ಬೆಂಗಳೂರು : ಬೇಸಿಗೆ ಆರಂಭದಲ್ಲೇ ಬಿಸಿಲಿನ ಬೇಗೆ ತೀವ್ರಗೊಂಡಿದ್ದು, ಜನರು ತತ್ತರಿ ಸುವಂತಾಗಿದೆ. ಕಳೆದ 2 ತಿಂಗಳಿನಿಂದ ರಾಜ್ಯದಲ್ಲಿ ಮಳೆಯಾಗಿಲ್ಲ. ಅಲ್ಲದೆ ಮುಂಗಾರು, ಹಿಂಗಾರು ಹಂಗಾಮಿನಲ್ಲಿ ತೀವ್ರ ಬರ ಉಂಟಾಗಿರುವುದರಿಂದ ವಾತಾವರಣ ದಲ್ಲಿ ಸರಾಸರಿ 1 ರಿಂದ 2 ಡಿ.ಸೆ. ಹೆಚ್ಚಳವಾಗಿದೆ. +ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೊಂದು ವಾರದಲ್ಲಿ 2-3 ಡಿ.ಸೆ. ನಷ್ಟು ಉಷ್ಣಾಂಶ ಹೆಚ್ಚಾಗುವ ಸಾಧ್ಯತೆಯಿದೆ. ಕಲಬುರಗಿಯಲ್ಲಿ 39.1 ಡಿ.ಸೆ. ನಷ್ಟು ಗರಿಷ್ಟ ಉಷ್ಣಾಂಶ ದಾಖಲಾಗಿದ್ದು, ಬೆಳಗಾವಿಯಲ್ಲಿ ಗರಿಷ್ಟ ಉಷ್ಣಾಂಶ 15.8 ಡಿ.ಸೆ. ನಷ್ಟು ದಾಖಲಾಗಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಜನರು ಎಳನೀರು, ಮಜ್ಜಿಗೆ ಸೇರಿದಂತೆ ತಂಪು ಪಾನೀಯ ಹಾಗೂ ಕಲ್ಲಂಗಡಿ, ಕರಬೂಜ ಸೇರಿದಂತೆ ವಿವಿಧ ಹಣ್ಣುಗಳ ಮೊರೆ ಹೋಗುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ. +ಬಿಸಿಲಿನಿಂದ ಕೊಡೆ ಬಳಸಬೇಕು ಹಾಗೂ ಸಾಧ್ಯವಾದಷ್ಟು ಹೆಚ್ಚು ನೆರಳಿನ ವಾತಾವರಣದಲ್ಲಿ ಕೆಲಸ ಮಾಡುವುದು ಆರೋಗ್ಯಕರ. ಇಲ್ಲದಿದ್ದರೆ ಪ್ರಖರವಾದ ಬಿಸಿಲು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟುಮಾಡಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಾರ್ಚ್ 14 ರವರೆಗೂ ರಾಜ್ಯದಲ್ಲಿ ಒಣ ಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಂಡುಬರುತ್ತಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. +ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ, ಬಾಗಲಕೋಟೆ, ಧಾರವಾಡ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 36 ಡಿ.ಸೆ. ನಿಂದ 39 ಡಿ.ಸೆ. ವರೆಗೂ ದಾಖಲಾಗುತ್ತಿದೆ. ಅದೇ ರೀತಿ ಕರಾವಳಿಯಲ್ಲಿ 34 ರಿಂದ 36 ಡಿ.ಸೆ. ನಷ್ಟು ಗರಿಷ್ಟ ಉಷ್ಣಾಂಶ ಕಂಡುಬರುತ್ತಿದ್ದರೆ, ದಕ್ಷಿಣ ಒಳನಾಡಿನಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. 35 ರಿಂದ 37 ಡಿ.ಸೆ.ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಬೆಂಗಳೂರಿನಲ್ಲಿ ಉಷ್ಣಾಂಶ ಈಗಾಗಲೇ 35 ಡಿ.ಸೆ. ಗಡಿ ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. +ಸರಾಸರಿಗಿಂತ ಸುಮಾರು 2 ಡಿ.ಸೆ. ನಷ್ಟು ಗರಿಷ್ಠ ತಾಪಮಾನ ಹೆಚ್ಚಾಗಲು ರಾಜ್ಯದಲ್ಲಿ ಉಂಟಾಗಿರುವ ತೀವ್ರ ಸ್ವರೂಪದ ಬರ ಕಾರಣ ಎನ್ನಲಾಗಿದೆ. ಅಂತರ್ಜಲ ಕುಸಿತ, ಕೆರೆಕಟ್ಟೆಗಳು ಬತ್ತಿರುವುದು, ಭೂಮಿಯಲ್ಲಿ ತೇವಾಂಶ ಕಡಿಮೆಯಾಗಿರುವುದು, ನಿರಂತರವಾಗಿ ಬಿಸಿಲು ಇರುವುದರಿಂದ ವಾತಾವರಣದಲ್ಲಿನ ತೇವಾಂಶವು ಕಡಿಮೆಯಾಗಿದೆ. ಇದರಿಂದ ಬೆಳಿಗ್ಗೆಯಿಂದಲೇ ಜನರು ಸೆಖೆಯಿಂದ ಬಳಲುವಂತಾಗಿದೆ. ಮಾರ್ಚ್-ಏಪ್ರಿಲ್‍ನಲ್ಲಿ ಪೂರ್ವ ಮುಂಗಾರು ಮಳೆಯಾಗುವುದು ವಾಡಿಕೆ. ಆದರೆ ಕಳೆದ ಎರಡು ತಿಂಗಳಿನಿಂದ ಬೇಸಿಗೆ ಮಳೆಯು ಬಿದ್ದಿಲ್ಲ. ಸದ್ಯಕ್ಕೆ ಇನ್ನೆರಡು ವಾರ ಅಕಾಲಿಕ ಮಳೆಯಾಗುವ ಸಾಧ್ಯತೆಗಳು ವಿರಳ ಎನ್ನುತ್ತಾರೆ ಹವಾಮಾನ ತಜ್ಞರು. \ No newline at end of file diff --git a/eesanje/url_46_211_6.txt b/eesanje/url_46_211_6.txt new file mode 100644 index 0000000000000000000000000000000000000000..fef0505185ca4c32ab768111605e58eda3ec2956 --- /dev/null +++ b/eesanje/url_46_211_6.txt @@ -0,0 +1 @@ +ಲೋಕಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್ diff --git a/eesanje/url_46_211_7.txt b/eesanje/url_46_211_7.txt new file mode 100644 index 0000000000000000000000000000000000000000..80b268bffcd4a7d32614798c4289fb7f3149f943 --- /dev/null +++ b/eesanje/url_46_211_7.txt @@ -0,0 +1,6 @@ +ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರ ಮುತ್ತಿಗೆ +ಮೈಸೂರು,ಮಾ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣದಲ್ಲಿ ಜನಸ್ಪಂದನ ಸಭೆ ನಡೆಸಲು ಮುಂದಾಗಿದ್ದ ಮಾಜಿ ಶಾಸಕ ಯತೀಂದ್ರ ಅವರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿ ವಾಪಸ್ ಕಳುಹಿಸಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಮುದ್ದುಬೀರನಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಯತೀಂದ್ರ ಸಿದ್ದರಾಮಯ್ಯ ಅವರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. +ಕಳೆದ ಚುನಾವಣೆಯಲ್ಲಿ ಯತೀಂದ್ರ ಇದೇ ಕ್ಷೇತ್ರವನ್ನು ಪ್ರತಿನಿಸಿದ್ದರು. ಈ ಬಾರಿ ತಮ್ಮ ತಂದೆ ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಯತೀಂದ್ರ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಪ್ರತಿಯೊಂದು ಗ್ರಾಮಕ್ಕೂ ಖುದ್ದು ತೆರಳುವ ಯತೀಂದ್ರ ಜನರ ಅಹವಾಲುಗಳನ್ನು ಕೇಳುತ್ತಿದ್ದಾರೆ. ಅದೇ ರೀತಿ ಮುದ್ದುಬೀರನಹುಂಡಿಗೆ ಆಗಮಿಸಿದಾಗ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಒಳಗೆ ಬರದಂತೆ ನಿರ್ಬಂಧಿಸಿದ್ದಾರೆ. +ಒಂದು ಹಂತದಲ್ಲಿ ಬಲವಂತವಾಗಿ ಯತೀಂದ್ರ ಜನಸ್ಪಂದನ ನಡೆಸಲು ಮುಂದಾದಾಗ ಸ್ಥಳೀಯರು ಎಳೆದಾಡಿದ್ದಾರೆ. ಈ ಹಂತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ಥಳೀಯ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಆದರೂ ಗ್ರಾಮಸ್ಥರು ಯಾವುದಕ್ಕೂ ಜಗ್ಗದೇ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ಯತೀಂದ್ರ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಅಲ್ಲಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ. +ಗ್ರಾಮದ ರಸ್ತೆ ನಿರ್ಮಾಣದ ವಿಚಾರಕ್ಕೆ ಸಂಬಂಧಪಟ್ಟಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಚುನಾವಣಾ ಕಾಲದಲ್ಲಿ ಆಗಮಿಸುವ ರಾಜಕಾರಣಿಗಳು ಆನಂತರ ಜನರ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ಎಂದು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.ತೀವ್ರ ಗದ್ದಲದ ನಡುವೆ ಕೂಡ ಯತೀಂದ್ರ ಸಹನೆ ಕಳೆದುಕೊಳ್ಳದೆ ಸಾವಧಾನದಿಂದಲೇ ಗ್ರಾಮಸ್ಥರ ಆಕ್ರೋಶಗಳಿಗೆ ಪ್ರತಿಕ್ರಿಯಿಸಿದರು ಎಂದು ಸ್ಥಳೀಯರು ವಿವರಿಸಿದ್ದಾರೆ. +ಇತ್ತೀಚೆಗೆ ಸಂಸದ ಪ್ರತಾಪ ಸಿಂಹ ಅವರಿಗೆ ಕ್ಷೇತ್ರದಲ್ಲಿ ಇದೇ ರೀತಿಯ ವಿರೋಧಗಳು ವ್ಯಕ್ತವಾಗಿದ್ದವು. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡ ಬಳಿಕ ಹಳೆ ಮೈಸೂರು ಭಾಗದಲ್ಲಿ ವಿಪಕ್ಷಗಳ ಧ್ವನಿ ಏರಿಕೆಯಾಗಿದ್ದು, ಕಾಂಗ್ರೆಸಿಗರಿಗೆ ಕೆಲವು ಕಡೆ ವಿರೋಧಗಳು ಕಂಡುಬರುತ್ತಿವೆ. \ No newline at end of file diff --git a/eesanje/url_46_211_8.txt b/eesanje/url_46_211_8.txt new file mode 100644 index 0000000000000000000000000000000000000000..912a296c3ca218b7e58dcbf1707db955b9c2fc14 --- /dev/null +++ b/eesanje/url_46_211_8.txt @@ -0,0 +1,7 @@ +ಮಿತಿಮೀರಿದ ತುಷ್ಟೀಕರಣ ಆರೋಪಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಸರ್ಕಾರದಿಂದ ಮತ್ತೊಂದು ಆದೇಶ +ಬೆಂಗಳೂರು,ಮಾ.8- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಅತಿಯಾದ ತುಷ್ಟೀಕರಣ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡುವಂತಹ ಸರ್ಕಾರಿ ಆದೇಶವೊಂದು ಹೊರಬಿದ್ದಿದೆ. ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆಎಸ್‍ಎಫ್‍ಸಿ)ಮೂಲಕ ಶೇ.6ರ ಬಡ್ಡಿ ದರದಲ್ಲಿ 10 ಕೋಟಿ ರೂ. ಸಾಲ ಪಡೆಯುವ ಆದೇಶವನ್ನು ಹೊರಡಿಸಿದೆ. +ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡುವ ಬಡ್ಡಿ ಸಹಾಯಧನ ಯೋಜನೆಯಡಿ ಸಾಲ ಪಡೆಯುವ ಉದ್ಯಮಿಗಳು ರಾಜ್ಯ ಹಣಕಾಸು ನಿಗಮದ ಆಯಾ ಜಿಲ್ಲಾ ಮಟ್ಟದ ಕಚೇರಿಗಳಿಗೆ ನೇರವಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಲು ಯಾವುದೇ ಮಂಜೂರಾತಿ ಸಮಿತಿ ಇರುವುದಿಲ್ಲ. ಕರ್ನಾಟಕ ರಾಜ್ಯ ಹಣಕಾಸು ನಿಗಮದ ಸಾಲ ಮಂಜೂರಾತಿ ನಿಯಮಗಳನ್ವಯ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಮಾಡತಕ್ಕದ್ದು ಎಂದು ಅಲ್ಪಸಂಖ್ಯಾತ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆ ಅೀನ ಕಾರ್ಯದರ್ಶಿ ನಾಗರಾಜ್ ಅವರು ಸುತ್ತೋಲೆ ಹೊರಡಿಸಿದ್ದಾರೆ. +ಸಾಮಾನ್ಯವಾಗಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ಕೆಎಸ್‍ಎಫ್‍ಸಿ ವತಿಯಿಂದ ಈವರೆಗೆ 5ರಿಂದ 6 ಕೋಟಿ ರೂ. ಸಾಲವನ್ನು ಶೇ.6ರಿಂದ ಶೇ.11.5ರ ಬಡ್ಡಿ ದರದಲ್ಲಿ ಷರತ್ತುಬದ್ದ ಜಾಮೀನಿನೊಂದಿಗೆ ನೀಡುತ್ತಿತ್ತು. ಉದ್ಯಮಶೀಲರು ಸ್ಥಾಪಿಸುವ ಕೈಗಾರಿಕಾ ಘಟಕಗಳಿಗೆ ಸಾಲ ನೀಡುವಾಗ ಮಂಜೂರಾತಿ ಸಮಿತಿಯು ಕೂಲಂಕಷವಾಗಿ ಪರಿಶೀಲಿಸಿ ಬಳಿಕ ಸಾಲವನ್ನು ಮಂಜೂರು ಮಾಡಬೇಕೆಂಬ ನಿಯಮವನ್ನು ಹಾಕಲಾಗುತ್ತಿತ್ತು. +ಸರ್ಕಾರದ ಅತಿಯಾದ ನಿಯಮಗಳಿಂದಾಗಿ ಬೇಸತ್ತು ಉದ್ಯಮಗಳನ್ನು ಸ್ಥಾಪಿಸಬೇಕೆಂದು ಮುಂದೆ ಬರುತ್ತಿದ್ದ ಮಹಿಳೆಯರು ಹಿಂದೇಟು ಹಾಕುತ್ತಿದ್ದರು. ಬ್ಯಾಂಕ್‍ನ ನಿಯಮಗಳನ್ನು ನೋಡಿ ಸಾಲ ಪಡೆಯುವುದೇ ಬೇಡ ಎಂಬ ತೀರ್ಮಾನಕ್ಕೆ ಬರುತ್ತಿದ್ದರು. ಇದೀಗ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಹಜ್ ಮತ್ತು ವಕ್ ಇಲಾಖೆ ಹೊರಡಿಸಿರುವ ಆದೇಶವು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಕೇವಲ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ್ದಾರೆ ಎಂಬ ಒಂದೇ ಕಾರಣಕ್ಕಾಗಿ ಶೇ.6ರ ಬಡ್ಡಿ ದರದಲ್ಲಿ 10 ಕೋಟಿ ರೂ. ಸಾಲವನ್ನು ಮಂಜೂರಾತಿ ಸಮಿತಿಯ ಅನುಮತಿ ಇಲ್ಲದೆ ನೀಡುವಂತೆ ಸೂಚನೆ ಕೊಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. +ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು ಉದ್ಯಮ ಸ್ಥಾಪನೆ ಮಾಡಲು ಮುಂದೆ ಬರುವವರಿಗೆ ಷರತ್ತುಬದ್ಧ ನಿಯಮಗಳನ್ನು ವಿಧಿಸಿ ಸಾಲ ಮಂಜೂರಾತಿ ನೀಡುತ್ತಿತ್ತು. ಈಗ ಒಂದೇ ಸಮುದಾಯವನ್ನು ಓಲೈಕೆ ಮಾಡಲು ನಿಯಮಗಳನ್ನು ಗಾಳಿಗೆ ತೂರಿ ಅಲ್ಪಸಂಖ್ಯಾತರಿಗೆ ಇಷ್ಟು ದೊಡ್ಡ ಮೊತ್ತದ ಸಾಲವನ್ನು ನೀಡುವ ಔಚಿತ್ಯವಾದರೂ ಏನು ಎಂಬುದು ಬಹುತೇಕ ಮಹಿಳಾ ಉದ್ಯಮಿಗಳ ಮೂಲಭೂತ ಪ್ರಶ್ನೆಯಾಗಿದೆ.ಉದ್ಯಮಿಗಳನ್ನು ಉತ್ತೇಜಿಸುವ ವಿಚಾರದಲ್ಲೂ ಸರ್ಕಾರದ ತಾರತಮ್ಯವೇಕೆ? ಸಮಾನವಾಗಿ ಎಲ್ಲಾ ಉದ್ದಿಮೆದಾರರನ್ನು ಸರ್ಕಾರ ನೋಡಬೇಕಿದೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. +ಒಂದೊಂದು ವರ್ಗಕ್ಕೆ ಒಂದೊಂದು ರೀತಿಯ ಬಡ್ಡಿ ವಿಧಿಸಿ ಸಾಲ ನೀಡುವುದರ ಹಿಂದಿರುವ ಔಚಿತ್ಯವೇನು? ಎಲ್ಲಾ ಉದ್ದಿಮೆದಾರರಿಗೂ ಏಕರೂಪ ಬಡ್ಡಿ ದರ ನಿಗದಿಪಡಿಸಿ ಸಾಲ ನೀಡುವುದು ಸೂಕ್ತವಲ್ಲವೇ? ಈ ರೀತಿಯ ಸರ್ಕಾರದ ಓಲೈಕೆ ಸರಿಯಾದ ಕ್ರಮವಲ್ಲ ಎಂದು ಅಸಮಾಧಾನ ಉದ್ಯಮ ವಲಯದಿಂದ ವ್ಯಕ್ತವಾಗಿದೆ. \ No newline at end of file diff --git a/eesanje/url_46_211_9.txt b/eesanje/url_46_211_9.txt new file mode 100644 index 0000000000000000000000000000000000000000..2cf15c2605c5b5f51d4fc9a50034625927b408b4 --- /dev/null +++ b/eesanje/url_46_211_9.txt @@ -0,0 +1,5 @@ +ಬೆಂಗಳೂರು ಬಾಂಬ್ ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು..! +ಬೆಂಗಳೂರು,ಮಾ.8- ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು ನಡೆದಿರಬಹುದೆಂಬ ಶಂಕೆ ವ್ಯಕ್ತಪಡಿಸಿ ಎನ್‍ಐಎ ಅಧಿಕಾರಿಗಳ ತಂಡ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎನ್‍ಐಎ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿರುವ ಶಂಕಿತ ಉಗ್ರನೊಬ್ಬನನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ಈ ಶಂಕಿತ ಉಗ್ರ ಐಸಿಎಸ್‍ನಿಂದ ಪ್ರೇರಣೆಗೊಂಡು ತನ್ನದೇ ಆದ ತಂಡ ಕಟ್ಟಿಕೊಂಡು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ. +ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್‍ಐಎ ಅಧಿಕಾರಿಗಳು ಕಳೆದ ಡಿಸೆಂಬರ್‍ನಲ್ಲಿ ಈ ಶಂಕಿತ ಉಗ್ರನ ಮನೆ ಮೇಲೆ ದಾಳಿ ಮಾಡಿ ಆತನನ್ನು ಬಂಧಿಸಿ ಮನೆಯಲ್ಲಿ ಅಡಗಿಸಿಟ್ಟಿದ್ದ ರಾಸಾಯನಿಕ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ದುಷ್ಕರ್ಮಿ ನಗರದಿಂದ ತುಮಕೂರು ಮೂಲಕ ಬಳ್ಳಾರಿಗೆ ಹೋಗಿದ್ದಾನೆಂದು ತಿಳಿದುಬಂದಿದೆ. +ಬಳ್ಳಾರಿಯ ಶಂಕಿತ ಉಗ್ರ ಸುಲೇಮಾನ್ ಮನೆಯಲ್ಲಿ ದಾಳಿ ವೇಳೆ ಸಿಕ್ಕಿದ ರಾಸಾಯನಿಕ ವಸ್ತುಗಳು ಮತ್ತು ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಿಸಿರುವ ಬಾಂಬ್‍ಗೆ ಬಳಸಲಾಗಿರುವ ರಾಸಾಯನಿಕ ವಸ್ತುಗಳು ಒಂದೇ ಎಂಬುದು ತನಿಖೆಯಿಂದ ಗೊತ್ತಾಗಿದೆ. ಆರೋಪಿಯು ಕೆಫೆಯಲ್ಲಿ ಬಾಂಬ್ ಇಟ್ಟ ನಂತರ ಬಳ್ಳಾರಿಗೆ ಹೋಗಿ ನಂತರ ಬೀದರ್-ಭಟ್ಕಳಕ್ಕೆ ಬಸ್‍ಗಳಲ್ಲಿ ಪ್ರಯಾಣಿಸಿ ತಲೆಮರೆಸಿಕೊಂಡಿರುವ ಹಿನ್ನಲೆಯಲ್ಲಿ ಬೆಂಗಳೂರು ಸ್ಪೋಟಕ್ಕೆ ಬಳ್ಳಾರಿಯಲ್ಲಿ ಸಂಚು ನಡೆದಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. +ಎನ್‍ಐಎ ಅಧಿಕಾರಿಗಳು ಗುರುವಾರ ರಾತ್ರಿಯಿಡೀ ತುಮಕೂರು, ಬಳ್ಳಾರಿಯಲ್ಲಿ ದುಷ್ಕರ್ಮಿಗಾಗಿ ಶೋಧ ನಡೆಸಿದರು. ಇಂದು ಸಹ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_212_1.txt b/eesanje/url_46_212_1.txt new file mode 100644 index 0000000000000000000000000000000000000000..e7251ecf1e175fafe72fff4fb3a6c589770ec4e8 --- /dev/null +++ b/eesanje/url_46_212_1.txt @@ -0,0 +1,4 @@ +ರಾಷ್ಟ್ರಪತಿಗಳಿಂದ ಗೌರವ ಡಾಕ್ಟರೇಟ್ ಪಡೆದ ಶತಾವಧಾನಿ ಆರ್.ಗಣೇಶ್ +ನವದೆಹಲಿ, ಮಾ.8- ಶತಾವಧಾನಿ ಆರ್.ಗಣೇಶ್ ಅವರಿಗೆ ದೆಹಲಿಯ ಕೇಂದ್ರೀಯ ಸಂಸ್ಕøತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿರುವುದಕ್ಕೆ ಗಣ್ಯಾತಿಗಣ್ಯರು ಶುಭ ಹಾರೈಸಿದ್ದಾರೆ. +ಗಮಕ, ಅಷ್ಟಾವಧಾನ, ವ್ಯಾಕರಣ ಕಲೆಯಲ್ಲಿ ಅಪ್ರತಿಮ ಸಾಧನೆ ಮಾಡಿರುವ ಆರ್.ಗಣೇಶ್ ಅವರು ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದಾರೆ. +ಸಾರಸ್ವತ ಲೋಕದ ವಿದ್ವತ್ ಮುಕುಟದಂತಿರುವ ಶತಾವಧಾನಿ ಆರ್.ಗಣೇಶ್ ಅವರಿಗೆ ಕೇಂದ್ರೀಯ ಸಂಸ್ಕøತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಘೋಷಿಸಿದ್ದು, ಇದು ಕರ್ನಾಟಕ ರಾಜ್ಯಕ್ಕೆ ಸಂದ ಗೌರವ ಎಂದು ಅನೇಕ ಸಾಹಿತಿಗಳು, ಕಲಾವಿದರು ಪ್ರಶಂಸಿಸಿದ್ದಾರೆ. \ No newline at end of file diff --git a/eesanje/url_46_212_10.txt b/eesanje/url_46_212_10.txt new file mode 100644 index 0000000000000000000000000000000000000000..ea0740333ea3f5199e7d89009480e1f4264dc237 --- /dev/null +++ b/eesanje/url_46_212_10.txt @@ -0,0 +1,11 @@ +ರಾಮೇಶ್ವರಂ ಕೆಫೆ ಬಾಂಬರ್ ಪತ್ತೆಗೆ ರಾತ್ರಿಯಿಡೀ ಕಾರ್ಯಾಚರಣೆ +ಬೆಂಗಳೂರು,ಮಾ.7- ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಎನ್‍ಐಎ ಮತ್ತು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡಗಳು ರಾತ್ರಿ ರಾಜ್ಯದ ಹಲ ವೆಡೆ ಶೋಧ ನಡೆಸಿವೆ. ಆರೋಪಿ ಬಾಂಬ್ ಸ್ಪೋಟಿಸಿ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಿ ನಂತರ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ತುಮಕೂರು ತದನಂತರ ಬಳ್ಳಾರಿ, ಅಲ್ಲಿಂದ ಭಟ್ಕಳ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಸಂಚರಿಸಿ ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. +ಈ ಹಿನ್ನೆಲೆಯಲ್ಲಿ ತನಿಖಾ ತಂಡಗಳು ಕೇರಳ, ಗೋವಾ, ಮಹಾರಾಷ್ಟ್ರ, ಮುಂತಾದ ರಾಜ್ಯಗಳಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿವೆ. ಈಗಾಗಲೇ ಎನ್‍ಐಎ ತಂಡಗಳು ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ದಾಳಿ ಮಾಡಿ ಕೆಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಂಡಿವೆ. ತನಿಖಾ ತಂಡಗಳಿಗೆ ಲಭ್ಯವಾಗಿರುವ ಮಾಹಿತಿ ಆಧಾರದಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿವೆ. +ಆರೋಪಿಯು ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ನಂತರ ಐಟಿಪಿಎಲ್ ರಸ್ತೆಯಲ್ಲಿ ಬಿಎಂಟಿಸಿ ಬಸ್ ಹತ್ತಿ ಕಾಡುಗೋಡಿಯಲ್ಲಿ ಇಳಿದು ಅಲ್ಲಿಂದ ಮೆಜೆಸ್ಟಿಕ್‍ಗೆ ಬಂದು ಅಲ್ಲಿಂದ ಮತ್ತೊಂದು ಬಸ್ ಹತ್ತಿ ರಾಜಾಜಿನಗರದ ಸುಜಾತ ನಿಲ್ದಾಣದಲ್ಲಿ ಇಳಿದಿದ್ದಾನೆ. ಸುಜಾತದಿಂದ ಕೆಎಸ್‍ಆರ್‍ಟಿಸಿ ಬಸ್ ಹತ್ತಿ ತುಮಕೂರಿಗೆ ಹೋಗಿ ಅಲ್ಲಿಂದ ಬಳ್ಳಾರಿಗೆ ಪ್ರಯಾಣಿಸಿದ್ದಾನೆ. ಅಲ್ಲಿಂದ ಮಂತ್ರಾಲಯ-ಗೋಕರ್ಣ ಬಸ್‍ನಲ್ಲಿ ಪ್ರಯಾಣಿಸಿ ಭಟ್ಕಳಕ್ಕೆ ಹೋಗಿ ಅಲ್ಲಿ ತಂಗಿದ್ದು ನಂತರ ಕೇರಳಕ್ಕೆ ಬಸ್‍ನಲ್ಲಿ ಪ್ರಯಾಣಿಸಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದೆ. +ತುಮಕೂರಿನಲ್ಲಿ ಶೋಧ:ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸೋಟಿಸಿ ಪರಾರಿಯಾಗಿರುವ ಆರೋಪಿ ನಗರದಲ್ಲಿ ಓಡಾಡಿರುವ ಅನುಮಾನ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆತನ ಪತ್ತೆಗಾಗಿ ಸ್ಥಳೀಯ ಪೊಲೀಸರೊಂದಿಗೆ ಎನ್‍ಐಎ ಅಧಿಕಾರಿಗಳ ತಂಡ ಶೋಧ ನಡೆಸಿದೆ. ಆರೋಪಿಯು ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದನೆಂಬ ಮಾಹಿತಿ ಈ ತಂಡಕ್ಕೆ ಲಭ್ಯವಾದ ಹಿನ್ನಲೆಯಲ್ಲಿ ರಾತ್ರಿ ದಿಢೀರ್ ತೆರಳಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು. +ಎಸ್‍ಪಿ ಅಶೋಕ್ ಹಾಗೂ ಡಿಎಸ್‍ಪಿ ಮತ್ತು ಎನ್‍ಐಎ ಅಧಿಕಾರಿಗಳು ನಗರದ ವಿವಿಧ ಸ್ಥಳಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಆರೋಪಿಯು ತುಮಕೂರಿನಲ್ಲಿ ಓಡಾಡಿರುವ ಶಂಕೆ ವ್ಯಕ್ತವಾಗಿರುವುದರಿಂದ ಮಹಾನಗರ ಪಾಲಿಕೆ ಆವರಣದಲ್ಲಿರುವ ಸ್ಮಾರ್ಟ್‍ಸಿಟಿಯ ಸಿಸಿಟಿವಿ ಕಂಟ್ರೋಲ್ ರೂಮ್‍ಗೆ ತೆರಳಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. +ಅಲ್ಲದೆ ನಗರದ ಹಲವು ರಸ್ತೆಗಳು ಮತ್ತು ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿನ ಸಿಸಿ ಕ್ಯಾಮೆರಾಗಳ ಫುಟೇಜ್‍ಗಳನ್ನು ಪಡೆದುಕೊಂಡು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ತಡರಾತ್ರಿವರೆಗೂ ಸ್ಥಳೀಯ ಪೊಲೀಸರು ಎನ್‍ಐಎ ಅಧಿಕಾರಿಗಳ ತಂಡದೊಂದಿಗೆ ಇದ್ದು ತನಿಖೆಗೆ ಸಹಕರಿಸಿದರು. ಆರೋಪಿಯು ಯಾವ ಸ್ಥಳದಲ್ಲಿ ಉಳಿದುಕೊಂಡಿದ್ದ ಎಲ್ಲೆಲ್ಲಿ ಓಡಾಡಿದ್ದದಾನೆ. ಆರೋಪಿಗೆ ಯಾರಾದರೂ ಉಳಿದುಕೊಳ್ಳಲು ನೆರವು ನೀಡಿದ್ದಾರೆಯೆ ಅಥವಾ ಹೋಟೆಲ್‍ನಲ್ಲಿ ತಂಗಿ ಹೋಗಿದ್ದನೇ ಎಂಬಿತ್ಯಾದಿ ಮಾಹಿತಿಗಳನ್ನು ಎನ್‍ಐಎ ಅಧಿಕಾರಿಗಳ ತಂಡ ಸಂಗ್ರಹಿಸುತ್ತಿದೆ. +ಬಳ್ಳಾರಿ:ತುಮಕೂರಿನಿಂದ ಬಳ್ಳಾರಿಗೆ ಆರೋಪಿ ಹೋಗಿರುವ ಮಾಹಿತಿ ಹಿನ್ನಲೆಯಲ್ಲಿ ಎನ್‍ಐಎ ತಂಡಗಳು ಅಲ್ಲಿಯೂ ಇಂದು ಬೆಳಗಿನ ಜಾವದವರೆಗೂ ಪರಿಶೀಲನೆ ನಡಸಿವೆ. ಬಳ್ಳಾರಿ ಬಸ್ ನಿಲ್ದಾಣ ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೇರಳ: ಆರೋಪಿಯು ಬಸ್ ಮೂಲಕ ಕೇರಳಕ್ಕೆ ಪ್ರಯಾಣಿಸಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅಲ್ಲಿಯೂ ಸಹ ತನಿಖಾ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಈಗಾಗಲೇ ತನಿಖಾ ತಂಡಗಳು ರಾಜ್ಯದ ವಿವಿಧ ಕಡೆಗಳಲ್ಲಿ ಹಾಗೂ ಹೊರರಾಜ್ಯಗಳಲ್ಲೂ ಆರೋಪಿಗಾಗಿ ಹಗಲಿರುಳು ಹುಡುಕಾಟ ನಡೆಸುತ್ತಿವೆ. +ಘಟನೆ ಹಿನ್ನೆಲೆ:ಮಾ.1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಗರದ ರಾಮೇಶ್ವರಂ ಕೆಫೆಗೆ ಹೋದ ಆರೋಪಿಯು ಯಾರಿಗೂ ಸ್ವಲ್ಪವೂ ಅನುಮಾನ ಬಾರದಂತೆ ಇಡ್ಲಿ ತಿಂದು ಕೈ ತೊಳೆಯುವ ಜಾಗದಲ್ಲಿ ಟೈಮರ್ ಬಾಂಬ್ ಇದ್ದ ಬ್ಯಾಗ್ ಇಟ್ಟು ಹೋದ ಕೆಲವೇ ನಿಮಿಷಗಳಲ್ಲಿ ಬಾಂಬ್ ಸ್ಪೋಟ ಸಂಭವಿಸಿ ಮಹಿಳೆ ಸೇರಿದಂತೆ 9 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಪೋಟದಿಂದಾಗಿ ಹೋಟೆಲ್‍ನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿತ್ತು. +ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಎಫ್‍ಎಸ್‍ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದಿನಿಂದ ರಾಜ್ಯ ಪೊಲೀಸ್ ತನಿಖಾ ತಂಡಗಳು ಎನ್‍ಐಎ ತಂಡ ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಕಾರ್ಯಾಚರಣೆ ಚುರುಕುಗೊಂಡಿದೆ. +10 ಲಕ್ಷ ಬಹುಮಾನ:ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿದೆ. ಆರೋಪಿಯ ಸುಳಿವು ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದೆಂದು ಎನ್‍ಐಎ ಸೂಚಿಸಿದೆ. \ No newline at end of file diff --git a/eesanje/url_46_212_11.txt b/eesanje/url_46_212_11.txt new file mode 100644 index 0000000000000000000000000000000000000000..4b0da5e9ace40fbc0d7b6716703ca2e709b50bb5 --- /dev/null +++ b/eesanje/url_46_212_11.txt @@ -0,0 +1,6 @@ +ಅಭ್ಯರ್ಥಿ ಆಯ್ಕೆ ಕಗ್ಗಂಟು : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಗೊಂದಲ +ಬೆಂಗಳೂರು,ಮಾ.7- ಲೋಕಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ರಾಜ್ಯದ ಕ್ಷೇತ್ರಗಳಿಗೆ ಮತ್ತಷ್ಟು ಹುರಿಯಾಳುಗಳನ್ನು ಆಖೈರುಗೊಳಿಸುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ರಾಷ್ಟ್ರಮಟ್ಟದಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಕೇಂದ್ರ ಚುನಾವಣಾ ಸಮಿತಿ ಸಭೆ ಸಂಜೆ ನಡೆಯಲಿದ್ದು, ಅದರಲ್ಲಿ ಸದಸ್ಯರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಅಂಬಿಕಾ ಸೋನಿ, ಅಭಿರಂಜನ್ ಚೌಧರಿ, ಡಾ.ಅಮಿ ಯಾಗ್ನಿಕ್, ಕೆ.ಸಿ.ವೇಣುಗೋಪಾಲ್, ಕರ್ನಾಟಕದ ಕೆ.ಜೆ.ಜಾರ್ಜ್, ಮಧುಸೂದನ್ ಮಿಸ್ತ್ರಿ, ಡಾ.ಮೊಹಮ್ಮದ್ ಜಾವೇದ್, ಪಿ.ಎಲ್.ಪೂನಿಯಾ, ಪ್ರತಿಮಾ ಸಿಂಗ್, ಸಲ್ಮಾನ್ ಖುರ್ಷಿದ್, ಓಂಕಾರ್ ಮಕ್ರಮ್, ಟಿ.ಎಸ್.ಸಿಂಗ್ ಡಿಯೊ ಉಪಸ್ಥಿತರಿರುವ ಸಾಧ್ಯತೆಗಳಿವೆ. +ರಾಜ್ಯಗಳ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಕರ್ನಾಟಕದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಉನ್ನತ ಮೂಲದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿ ಪ್ರಯಾಣವನ್ನು ಮುಂದೂಡಿದ್ದಾರೆ. +ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನಾಳೆ ದೆಹಲಿಗೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ. ಆ ಬಳಿಕ ಅಂತಿಮವಾಗಿ ಎಐಸಿಸಿಗೆ ಪಟ್ಟಿಯನ್ನು ರವಾನಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಬಾರಿ ಸ್ಕ್ರೀನಿಂಗ್ ಸಮಿತಿ ಹಾಗೂ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಸಿ ಚರ್ಚಿಸಲಾಗಿದೆ.ಹಲವು ಕ್ಷೇತ್ರಗಳಿಗೆ ಅನ್ಯ ಪಕ್ಷಗಳಿಂದ ವಲಸೆ ಬರುವ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಇರುವುದರಿಂದ ಉದ್ದೇಶಪೂರ್ವಕವಾಗಿಯೇ ವಿಳಂಬ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. + : ಬೆಂಗಳೂರಲ್ಲಿ ವಾಟರ್ ಟ್ಯಾಂಕರ್‌ಗೆ ರೇಟ್ ಫಿಕ್ಸ್, ಇಲ್ಲಿದೆ ಡೀಟೇಲ್ಸ್ +ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆದ ಬಳಿಕ ಒಮ್ಮೆಲೇ 28 ಕ್ಷೇತ್ರಗಳಿಗೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿಂದು ನಡೆಯಲಿರುವ ಸಭೆಯಲ್ಲಿ ಈಗಾಗಲೇ ರವಾನೆಯಾಗಲಿರುವ ಸಂಭವನೀಯ ಪಟ್ಟಿಯ ಬಗ್ಗೆ ಚರ್ಚಿಸಲಾಗುತ್ತಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಹೈಕಮಾಂಡ್‍ನ ನಿರ್ದೇಶನವನ್ನು ಪಡೆದು ಡಿ.ಕೆ.ಶಿವಕುಮಾರ್ ಮರಳಲಿದ್ದಾರೆ ಎನ್ನಲಾಗಿದೆ. ಬಳಿಕ ರಾಜ್ಯದಲ್ಲಿ ನಡೆಯುವ ಸಭೆ ಮಹತ್ವದ್ದಾಗಲಿದ್ದು, ಕೆಲವೇ ದಿನಗಳಲ್ಲಿ ಟಿಕೆಟ್ ಘೋಷಣೆಯಾಗಲಿದೆ. \ No newline at end of file diff --git a/eesanje/url_46_212_12.txt b/eesanje/url_46_212_12.txt new file mode 100644 index 0000000000000000000000000000000000000000..73838445c788c6de1d7b8a5bf70cfa94bd46bc5a --- /dev/null +++ b/eesanje/url_46_212_12.txt @@ -0,0 +1,4 @@ +ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ : ಸಿಎಂ ಸಿದ್ದರಾಮಯ್ಯ +ಬೀದರ್,ಮಾ.7- ಲೋಕಸಭಾ ಚುನಾವಣೆಗೆ ಇನ್ನೆರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿನ ಬಸವಕಲ್ಯಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ದೆಹಲಿಯಲ್ಲಿಂದು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಲ್ಲಿ ಚರ್ಚೆಯಾಗುವ ನಿರೀಕ್ಷೆಯಿದೆ. ಇನ್ನೆರಡು ಮೂರು ದಿನಗಳಲ್ಲಿ ಪಟ್ಟಿಯನ್ನು ಪ್ರಕಟಿಸುವ ಅವಕಾಶವಿದೆ ಎಂದರು. +ಬೆಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗಳು ಮತ್ತು ರಾಜ್ಯದ ಸಿಸಿಬಿ ಪೊಲೀಸರು ಜಂಟಿಯಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮಹತ್ವದ ಸುಳಿವುಗಳು ದೊರೆತಿವೆ. ತನಿಖೆ ಜಾರಿಯಲ್ಲಿರುವುದರಿಂದ ಈ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನುಡಿದರು. +ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಎಚ್.ಸಿ.ಮಹದೇವಪ್ಪ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ ಎಂದರು.ಬಸವ ಕಲ್ಯಾಣ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಜಿಲ್ಲಾಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಅಗತ್ಯವಿದ್ದರೆ ಇನ್ನೂ ಹೆಚ್ಚಿನ ಹಣ ಒದಗಿಸುವುದಾಗಿ ತಿಳಿಸಿದರು. \ No newline at end of file diff --git a/eesanje/url_46_212_2.txt b/eesanje/url_46_212_2.txt new file mode 100644 index 0000000000000000000000000000000000000000..0e4947df156356fef588f71ff1b5047b2009105a --- /dev/null +++ b/eesanje/url_46_212_2.txt @@ -0,0 +1,6 @@ +ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯ +ಬೆಂಗಳೂರು,ಮಾ.8- ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯಗೊಳಿಸಲಾಗಿದೆ. ಎಸ್‍ಎಸ್‍ಎಲ್‍ಸಿ 2023-24 ನೇ ಸಾಲಿನ ವಾರ್ಷಿಕ ಮೊದಲ ಪರೀಕ್ಷೆಯು ಮಾ.25 ರಿಂದ ಏ.6 ರವರೆಗೆ ನಡೆಯಲಿದೆ. ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ದೇಶನ ನೀಡಿದೆ. +ಇಲಾಖೆಯು ಎಲ್ಲಾ ಉಪನಿರ್ದೇಶಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ನಿರ್ದೇಶನ ನೀಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವ ಬಗ್ಗೆ ಪರಿಶೀಲಿಸಿ ದೃಢಪಡಿಸಿಕೊಳ್ಳಲು ಆಯಾ ಜಿಲ್ಲೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಶೀಲಿಸಿಕೊಳ್ಳಲು ನಿರ್ದೇಶಿಸಲಾಗಿದೆ. +ಪರೀಕ್ಷಾ ಕೇಂದ್ರಗಳಲ್ಲಿನ ಪರೀಕ್ಷಾ ಮುಖ್ಯ ಅೀಧಿಕ್ಷಕರು ಪರೀಕ್ಷೆಗಾಗಿ ಕಚೇರಿಯನ್ನು ಮಾಡಿಕೊಂಡಿರುವ ಅಂದರೆ ಮಾರ್ಗಾಧಿಕಾರಿಗಳಿಂದ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿ ಅಲ್ಮೆರಾದಲ್ಲಿಟ್ಟುಕೊಳ್ಳುವ, ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೊಠಡಿಗಳಿಗೆ ಹಂಚಿಕೆ ಮಾಡುವ, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್ ಮಾಡುವ ಕಾರ್ಯವನ್ನು ನಿರ್ವಹಿಸುವ ಕಚೇರಿ ಕೊಠಡಿಗೆ ಪರೀಕ್ಷಾ ಕೊಠಡಿ ಹಾಗೂ ಕೊಠಡಿಗಳ ಕಾರಿಡಾರ್‍ಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. +ಪರೀಕ್ಷಾ ದಿನದಂದು ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಪರೀಕ್ಷಾ ಮುಖ್ಯ ಅೀಧಿಕ್ಷಕರು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಂಡ ದಿನದಂದು ಎಲ್ಲಾ ಪರೀಕ್ಷಾ ದಿನಗಳ ಸಿಸಿಟಿವಿ ಪುಟೇಜ್ ಸಾಫ್ಟ್‍ಕಾಪಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಡ್ಡಾಯವಾಗಿ ಸಲ್ಲಿಸುವ ಸೂಚನೆ ನೀಡಲಾಗಿದೆ. +ಅಲ್ಲದೆ, ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾ ಪರೀಕ್ಷೆ ಸಮಯದಲ್ಲಿ ಚಾಲನೆ ಇರುವುದನ್ನು ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಒಂದೇ ಕಡೆ ವೀಕ್ಷಿಸಲು ಅನುಕೂಲವಾಗುವಂತೆ ಸಾಫ್ಟ್‍ವೇರ್ ಅಳವಡಿಸಿಕೊಂಡು ವೀಕ್ಷಣೆಗೆ ಸಂಬಂಧಿಸಿದ ಲಿಂಕ್ ಅನ್ನು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. \ No newline at end of file diff --git a/eesanje/url_46_212_3.txt b/eesanje/url_46_212_3.txt new file mode 100644 index 0000000000000000000000000000000000000000..3be8572984e2aa43419a3202c0944dbd7139dc52 --- /dev/null +++ b/eesanje/url_46_212_3.txt @@ -0,0 +1,9 @@ +ಕುಟುಂಬ ರಾಜಕಾರಣ ಆರೋಪಕ್ಕೆ ದೇವೇಗೌಡರು ಗರಂ +ಹಾಸನ,ಮಾ.7- ನಮ್ಮ ಕುಟುಂಬದ ವಿರುದ್ಧ ಕೇವಲ ಕುಟುಂಬ ರಾಜಕಾರಣ ಎಂಬ ಆರೋಪವನ್ನು ಹೊರತುಪಡಿಸಿದರೆ ಬೇರೇನೂ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಐದು ವರ್ಷಗಳ ಸಾಧನಾ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾತೆತ್ತಿದ್ದರೆ ನಾನು ಪ್ರಧಾನಿಯಾಗಿದ್ದೆ, ಮಗ ಮುಖ್ಯಮಂತ್ರಿಯಾಗಿದ್ದ, ಇನ್ನೊಬ್ಬ ಮಗ ಮಂತ್ರಿ, ಮೊಮ್ಮಗ ಎಂಪಿ, ಮಗದೊಬ್ಬ ಎಂಎಲ್‍ಸಿ ಅನ್ನೋದು ಬಿಟ್ಟರೆ ವಿರೋಧಿಗಳಿಗೆ ಬೇರೇನೂ ಇಲ್ಲ ಎಂದು ತಿರುಗೇಟು ನೀಡಿದರು. +ಲೋಕಸಭಾ ಚುನಾವಣೆಗೆ ಶತದಿನವೂ ಇಲ್ಲ. ಆಗಲೇ ನಮ್ಮ ಮೇಲೆ ಗದಾಪ್ರಹಾರ ಶುರು ಮಾಡಿದ್ದಾರೆ. ಅರಸೀಕೆರೆ, ಹಾಸನದಲ್ಲಿ ಸಿಎಂ-ಡಿಸಿಎಂ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಟೀಕಾ ಪ್ರಹಾರ ಮಾಡಿದ್ದಾರೆ ಎಂದರು. ಹಾಸನ ಸರ್ಕಾರಿ ಆಸ್ಪತ್ರೆ ಉದ್ಘಾಟನೆ ಸಂಬಂಧ ಸಿಎಂ-ಡಿಸಿಎಂ ವಿರುದ್ಧ ಕಿಡಿಕಾರಿದ ಗೌಡರು, ಆಸ್ಪತ್ರೆ ಆಗಿದ್ದು ಯಾವಾಗ ಸತ್ಯ ಹೇಳಿ, ಶಂಕುಸ್ಥಾಪನೆ ಆಗಿದ್ದು ಯಾವಾಗ, ಮೆಡಿಕಲ್ ಕಾಲೇಜು ಉಳಿಸಿದ್ದ ಸನ್ನಿವೇಶ ನನಗೆ ಗೊತ್ತಿದೆ. ಧರ್ಮಸಿಂಗ್ ಸಿಎಂ ಆಗಿದ್ದಾಗ ಅಡಿಗಲ್ಲು ಹಾಕಿದ್ದು. ಅಂದು ಪ್ರಧಾನಿಯಾಗಿದ್ದ ನರಸಿಂಹರಾವ್, ವಿಶ್ವಬ್ಯಾಂಕ್‍ನಿಂದ ಬಂದಿದ್ದ 880 ಕೋಟಿ ಹಣವನ್ನು ದೇವೇಗೌಡರಿಗೆ ಗೌರವ ಕೊಡಬೇಕು ನೀಡಿದ್ದರು ಎಂದು ನೆನೆಪಿಸಿಕೊಂಡರು. +ಪ್ರಜ್ವಲ್‍ಗೆ ಮಾರ್ಗದರ್ಶನ: ಪ್ರಜ್ವಲ್ ಕೆಲಸ ಮಾಡಿರುವ ವಿಚಾರಗಳನ್ನು ಜನರಿಗೆ ಮುಟ್ಟಿಸಬೇಕು. ಇಲ್ಲವಾದರೆ ನಮ್ಮ ಎದುರಾಳಿಗಳು ನಮ್ಮನ್ನು ಬಿಡುವುದಿಲ್ಲ. ರಾಜ್ಯ ಸಭೆಯಲ್ಲಿ ನನಗಿನ್ನೂ ಎರಡೂವರೆ ವರ್ಷ ಇದೆ. ನಾನು ಪ್ರಜ್ವಲ್ ಹಿಂದೆ ನಿಲ್ಲುತ್ತೇನೆ, ಸಲಹೆ ಸಹಕಾರ ನೀಡುತ್ತೇನೆ, ಈ ಜಿಲ್ಲೆಯ ಜನರ ಋಣ ತೀರಿಸಬೇಕಿದೆ ಎಂದರು. +ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ 24 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಅದಕ್ಕೆ ಅಸೂಯೆ ಪಡುತ್ತೀರಾ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದ ಅವರು, ನಿಮ್ಮ ಎಲ್ಲಾ ಭಾಗ್ಯಗಳಿಗೂ ಕುಮಾರಸ್ವಾಮಿ ಹಣ ಒದಗಿಸಿ ಎಂದು ಇದೇ ಸಿದ್ದರಾಮಯ್ಯ ಅಸೆಂಬ್ಲಿಯಲ್ಲಿ ಹೇಳಿದ್ದರು. ನನ್ನ ಭಾಗ್ಯಗಳಿಗೆ ಹಣ ಇಟ್ಟು ಆಮೇಲೆ ಸಾಲ ಮನ್ನಾ ಮಾಡಿ ಎಂದಿದ್ದರು ಎಂದು ವಾಗ್ದಾಳಿ ನಡೆಸಿದರು. +ಇದೇ ವೇಳೆ ನಾನು ಜ್ವರ ಬಂದು ಮನೆಯಲ್ಲಿ ಮಲಗಿದ್ದಾಗ, ರಾಜಣ್ಣ ಬಂದು ಸೋಲುತ್ತೇನೆ ಪ್ರಚಾರಕ್ಕೆ ಬನ್ನಿ ಅಂದರು. ಜ್ವರ ಇದ್ದರೂ ಪ್ರಚಾರಕ್ಕೆ ಹೋಗಿ ರಾಜಣ್ಣನ ಗೆಲ್ಲಿಸಿದೆ ಎಂದು ಹೇಳಿದರು. ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ, ನಾನು ಸಂಸದನಾದಾಗಿನಿಂದ ಸುಮ್ಮನೆ ಕೂತಿಲ್ಲ. ಪ್ರತಿದಿನ ಒಂದಲ್ಲ ಒಂದು ಕಡೆ ಓಡಾಡಿದ್ದೀನಿ. ಐದು ವರ್ಷದಲ್ಲಿ ನನ್ನ ಕೈಲಾದಷ್ಟು ಕೆಲಸ ಮಾಡಿದ್ದೀನಿ ಎಂದರು. +ಮುಂದೆ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ನಿಮ್ಮ ಜೊತೆ ಇರುತ್ತೇನೆ. ನಿಮಗೆ, ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡುತ್ತೇನೆ, 27ನೇ ವರ್ಷಕ್ಕೇ ಸಂಸದನಾದೆ, ಸಣ್ಣಪುಟ್ಟ ತಪ್ಪುಗಳಾಗಿದ್ದರೆ ಕ್ಷಮೆ ಇರಲಿ ಎಂದರು. 5 ವರ್ಷ ಜನಪರ ಕೆಲಸ ಮಾಡಿದ್ದೇನೆ. ನಮ್ಮ ಶಾಸಕರ ಸಹಕಾರದಿಂದ ಇಷ್ಟು ಕೆಲಸ ಮಾಡಲು ಸಾಧ್ಯವಾಯಿತು. 7 ಫ್ಯಾಕ್ಟರಿಗಳನ್ನು ಹಾಸನಕ್ಕೆ ತರುವ ಕೆಲಸ ಮಾಡಿದ್ದೇನೆ. ಸ್ಥಳೀಯರಿಗೆ ಕೆಲಸ ಸಿಗಬೇಕು. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ. ಮತ್ತೊಮ್ಮೆ ನನ್ನನ್ನು ಆಯ್ಕೆ ಮಾಡಿ ಮತ್ತಷ್ಟು ಕೆಲಸ ಮಾಡಲು ಅವಕಾಶ ಕೊಡಿ ಎಂದು ಮನವಿ ಮಾಡಿದರು. +ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಜಿಲ್ಲೆಗೆ ನೀರಾವರಿ, ರಸ್ತೆ, ರೈಲ್ವೆ ಹೀಗೆ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇವೆ. ನಾವು ಮಾಡಿದ್ದನ್ನು ಕಾಂಗ್ರೆಸ್‍ನವರು ಉದ್ಘಾಟನೆ ಮಾಡಿದ್ದಾರೆ. ಆ ಕೆಲಸ ಯಾರ ಕಾಲದಲ್ಲಿ ಆಗಿತ್ತು ಎಂದು ಪ್ರಶ್ನಿಸಿದರು. ಕಳೆದ ಬಾರಿಗಿಂತ ಈ ಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಹೆಚ್ಚಿನ ಅಂತದಲ್ಲಿ ಗೆಲ್ಲಿಸಬೇಕು. ಯಾರೇ ಅಭ್ಯರ್ಥಿಯಾಗಲಿ, ಅದು ದೇವೇಗೌಡರು, ಕುಮಾರಣ್ಣನವರಿಗೆ ಬಿಟ್ಟದ್ದು, ಯಾರೇ ಆದರೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಎಂದು ವಿನಂತಿಸಿದರು. +ಕಾರ್ಯಕ್ರಮದಲ್ಲಿ ಶಾಸಕರಾದ ಸಿ.ಎನ್. ಬಾಲಕೃಷ್ಣ, ಹೆಚ್.ಪಿ.ಸ್ವರೂಪ್ ಪ್ರಕಾಶ್, ಮಾಜಿ ಶಾಸಕರಾದ ಹೆಚ್.ಕೆ.ಕುಮಾರಸ್ವಾಮಿ, ಕೆ.ಎಸ್.ಲಿಂಗೇಶ್, ವೈ.ಎಸ್.ವಿ.ದತ್ತಾ, ಮುಖಂಡರಾದ ಕೆ.ಎಂ.ರಾಜೇಗೌಡ, ತೋ.ಚ.ಅನಂತಸುಬ್ಬರಾಯ ಎಸ್ ದ್ಯಾವೇಗೌಡ, ಹೊಂಗೆರೆ ರಘು ಸ್ವಾಮಿಗೌಡ ಮೊದಲಾದವರಿದ್ದರು. \ No newline at end of file diff --git a/eesanje/url_46_212_4.txt b/eesanje/url_46_212_4.txt new file mode 100644 index 0000000000000000000000000000000000000000..f201e209f7012ee470f73e98f0d2786f4039097a --- /dev/null +++ b/eesanje/url_46_212_4.txt @@ -0,0 +1,6 @@ +ಮಂಡ್ಯದಿಂದ ಸಿ.ಎಸ್.ಪುಟ್ಟರಾಜು ಸ್ಪರ್ಧೆ +ಬೆಂಗಳೂರು,ಮಾ.7- ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನಿನ್ನೆ ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಸಭೆ ನಡೆಸಿದರು. +ಎನ್‍ಡಿಎ ಅಭ್ಯರ್ಥಿಯಾಗಿ ಪುಟ್ಟರಾಜು ಅವರನ್ನು ಸ್ಪರ್ಧೆಗಿಳಿಸಿದರೆ ಗೆಲುವಿಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಗಿದೆ. ಆದರೆ ಅಭ್ಯರ್ಥಿ ಯಾರೆಂಬುದನ್ನು ಇನ್ನೂ ಅಧಿಕೃತವಾಗಿ ತೀರ್ಮಾನ ಮಾಡಿಲ್ಲ. ಕಳೆದ ಬಾರಿ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಈ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಒತ್ತಡವೂ ಇದೆ. +ಸಭೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ಯಾರನ್ನು ಸ್ಪರ್ಧೆಗಿಳಿಸಬೇಕು, ಚುನಾವಣೆ ಸಿದ್ಧತೆ ಹೇಗಿರಬೇಕು ಎಂಬ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್ ಅವರು ಭಾಗವಹಿಸಿದ್ದರು. ಮಂಡ್ಯ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಎಲ್ಲರ ಅಭಿಪ್ರಾಯವನ್ನು ಕುಮಾರಸ್ವಾಮಿಯವರು ಪಡೆದುಕೊಂಡಿದ್ದಾರೆ. +ಅಭ್ಯರ್ಥಿ ಆಯ್ಕೆ ಕಗ್ಗಂಟು : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಗೊಂದಲ +ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡು ವುದಾಗಿ ಕುಮಾರಸ್ವಾಮಿ ಸಭೆಗೆ ತಿಳಿಸಿದ್ದಾರೆ. ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿ ನಿಂದ ಕೆಲಸ ಮಾಡಬೇಕು. ಮೈತ್ರಿ ಧರ್ಮ ಪಾಲಿಸುವ ಮೂಲಕ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ಲೋಪಕ್ಕೆ ಅವಕಾಶ ಮಾಡಿಕೊಡಬಾರದು ಎಂದು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯಲ್ಲಿ ಎನ್‍ಡಿಎ ಅಭ್ಯರ್ಥಿ ಪರ ಕೆಲಸ ಮಾಡಿ ನಾನು ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡುತ್ತೇನೆ. ಅವರ ಪರವಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂಬ ಕಿವಿಮಾತು ಹೇಳಿದ್ದಾರೆ. \ No newline at end of file diff --git a/eesanje/url_46_212_5.txt b/eesanje/url_46_212_5.txt new file mode 100644 index 0000000000000000000000000000000000000000..4cde33339c0045933db47bfa9ea2421095086e52 --- /dev/null +++ b/eesanje/url_46_212_5.txt @@ -0,0 +1,8 @@ +ಬಿಜೆಪಿಯ 10 ಹಾಲಿ ಸಂಸದರಿಗೆ ಟಿಕೆಟ್ ಡೌಟ್..? +ಬೆಂಗಳೂರು,ಮಾ.7- ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಸುಮಾರು 10 ಹಾಲಿ ಬಿಜೆಪಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಹಿರಿಯ ನಾಯಕರು ನವದೆಹಲಿಯಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಶನಿವಾರ ಅಥವಾ ಭಾನುವಾರ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ. +ಸಭೆಯಲ್ಲಿ ರಾಜ್ಯ ನಾಯಕರಾದ ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ ವಿಜಯೇಂದ್ರ, ಆರ್.ಅಶೋಕ್, ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡುವ ಕುರಿತು ತಡರಾತ್ರಿವರೆಗೂ ಚರ್ಚೆ ನಡೆಸಿದ್ದಾರೆ. +ಎಲ್ಲಾ 28 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಒಟ್ಟಿಗೆ ಘೋಷಿಸಲಾಗುವುದು. ಬಿಜೆಪಿಗೆ 25 ಮತ್ತು ಜೆಡಿಎಸ್‍ಗೆ ಮೂರು ಸ್ಥಾನಗಳನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.ಇನ್ನೂ ಸಭೆಯಲ್ಲಿ ಕೆಲ ಕ್ಷೇತ್ರಗಳ ಅಭ್ಯರ್ಥಿಗಳನ್ನ ಬದಲಾಯಿಸುವ ಬಗ್ಗೆ ಚರ್ಚೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಿಚಾರದಲ್ಲಿ ಅನುಸರಿಸಿದ ನಿಯಮವನ್ನ ಲೋಕಸಭಾ ಚುನಾವಣೆಗೆ ಅನುಸರಿಸಬೇಕು ಎನ್ನುವ ಚರ್ಚೆಯಾಗಿತ್ತು. ಈ ಚರ್ಚೆಯಿಂದಾಗಿ ಮೊದಲು 13 ಕ್ಷೇತ್ರಗಳಲ್ಲಿ ಬದಲಾವಣೆ ಮಾಡಬಹುದು ಎನ್ನಲಾಗಿತ್ತು. ಆದರೆ, ಇದೀಗ 5ರಿಂದ 10 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸುವ ಬಗ್ಗೆ ಚರ್ಚೆ ನಡೆದಿದೆ. +ಬೀದರ್ ಸಂಸದ ಭಗವಂತ ಖೂಬಾ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಎ ನಾರಾಯಣಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ಬೆಳಗಾವಿ ಸಂಸದೆ ಮಂಗಳಾ ಅಂಗಡಿ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್‍ಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ. +ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕರ್ನಾಟಕದಿಂದ ಸ್ರ್ಪ ಸಬಹುದು ಎಂದು ಹೇಳಲಾಗುತ್ತಿದೆ. ಕೆಲವು ದಶಕಗಳ ಹಿಂದೆ ಪ್ರೊಬೇಷನರಿ ಅಧಿಕಾರಿಯಾಗಿ ಚಿಕ್ಕೋಡಿಯಲ್ಲಿ ಕೆಲಸ ಮಾಡಿದ ಅವರು ತಾತ ಮತ್ತು ಅಜ್ಜಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರು ಕರ್ನಾಟಕದಿಂದ ಸ್ರ್ಪಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗಿದೆ. ಅಭ್ಯರ್ಥಿಗಳ ಗೆಲುವಿನ ಅಂಶದ ಬಗ್ಗೆ ಸಮೀಕ್ಷೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸಂಪರ್ಕ ಕಳೆದುಕೊಂಡ ಸಂಸದರಿಗೆ ಟಿಕೆಟ್ ನೀಡುವುದನ್ನು ಪಕ್ಷ ವಿರೋಧಿಸುತ್ತಿದೆ. ಸಂಸದರಾಗಿ ಅವರ ಸಾಧನೆಯನ್ನೂ ಪಕ್ಷದ ನಾಯಕತ್ವ ಪರಿಗಣಿಸಿದೆ. +ಈ ಅಂಶಗಳ ಹೊರತಾಗಿ ಪಕ್ಷವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಬಲ್ಲ ಹೊಸ ಮುಖಗಳನ್ನು ಪರಿಗಣಿಸಲಾಗುವುದು. ನಾವು ಮುಂದಿನ ಪೀಳಿಗೆಯ ನಾಯಕರನ್ನು ರೂಪಿಸುತ್ತಿದ್ದೇವೆ. ಕೆಲವು ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮ ಸಂಸದರ ಕಾರ್ಯವೈಖರಿಯಿಂದ ಸಂತುಷ್ಟರಾಗಿಲ್ಲ. ಇದನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. +ಸಂಭವನೀಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಬೆಳಗಾವಿ – ಜಗದೀಶ್ ಶೆಟ್ಟರ್ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆಬೀದರ್ – ಭಗವಂತ್ ಖೂಬಾಕಲಬುರಗಿ – ಉಮೇಶ್ ಜಾಧವ್ವಿಜಯಪುರ – ರಮೇಶ್ ಜಿಗಜಿಣಗಿಬಾಗಲಕೋಟೆ – ಪಿಸಿ ಗದ್ದಿಗೌಡರ್ರಾಯಚೂರು – ರಾಜಾ ಅಮರೇಶ್ವರ್ ನಾಯಕ / ಬಿವಿ ನಾಯಕಕೊಪ್ಪಳ – ಸಂಗಣ್ಣ ಕರಡಿ / ಡಾ ಬಸವರಾಜ್ ಕ್ಯಾವಟರ್ಧಾರವಾಡ – ಪ್ರಹ್ಲಾದ್ ಜೋಶಿಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್ಬಳ್ಳಾರಿ – ಬಿ.ಶ್ರೀರಾಮುಲುದಕ್ಷಿಣ ಕನ್ನಡ – ನಳೀನ್‍ಕುಮಾರ್ ಕಟೀಲ್/ಬ್ರಿಜೇಶ್ ಚೌತಲಉತ್ತರಕನ್ನಡ – ಅನಂತ ಕುಮಾರ್ ಹೆಗ್ಡೆ, ವಿಶ್ವೇಶ್ವರ ಹೆಗಡೆ ಕಾಗೇರಿಉಡುಪಿ – ಚಿಕ್ಕಮಗಳೂರು – ಶೋಭಾ ಕರಂದ್ಲಾಜೆಶಿವಮೊಗ್ಗ – ಬಿ.ವೈ.ರಾಘವೇಂದ್ರಚಿತ್ರದುರ್ಗ- ಎ.ನಾರಾಯಣಸ್ವಾಮಿ/ಮಾದಾರ ಚೆನ್ನಯ್ಯ ಸ್ವಾಮೀಜಿದಾವಣಗೆರೆ – ಜಿಎಂ ಸಿದ್ದೇಶ್ವರ್/ಎಂ.ಪಿ.ರೇಣುಕಾಚಾರ್ಯತುಮಕೂರು – ವಿ.ಸೋಮಣ್ಣಬೆಂಗಳೂರು ಉತ್ತರ – ಡಿ.ವಿ.ಸದಾನಂದಗೌಡ/ಸಪ್ತಗಿರಿ ಗೌಡಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯಬೆಂಗಳೂರು ಸೆಂಟ್ರಲ್ – ಜೈಶಂಕರ್ / ಪಿ.ಸಿ.ಮೋಹನ್ಬೆಂಗಳೂರು ಗ್ರಾಮಾಂತರ – ಡಾ ಸಿಎನ್ ಮಂಜುನಾಥ್ಚಿಕ್ಕಬಳ್ಳಾಪುರ – ಡಾ.ಕೆಸುಧಾಕರ್ / ಅಲೋಕ್ ವಿಶ್ವನಾಥ್ಮೈಸೂರು – ಪ್ರತಾಪ್ ಸಿಂಹಚಾಮರಾಜನಗರ – ಡಾ.ಮೋಹನ್ ಕುಮಾರ್/ಎಸ್ ಬಾಲರಾಜ್ \ No newline at end of file diff --git a/eesanje/url_46_212_6.txt b/eesanje/url_46_212_6.txt new file mode 100644 index 0000000000000000000000000000000000000000..693f2bddd6a947da2f0f89e3b0f44b00312ed652 --- /dev/null +++ b/eesanje/url_46_212_6.txt @@ -0,0 +1,13 @@ +ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭವನೀಯರ ಪಟ್ಟಿ ರವಾನೆ, ವಲಸಿಗರಿಗೆ ಮಣೆ..! +ಬೆಂಗಳೂರು,ಮಾ.7- ಆಪರೇಷನ್ ಕಮಲದಿಂದ ಬಿಜೆಪಿ ಸೇರಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಡಾ.ಸುಧಾಕರ್, ಶಿವರಾಂ ಹೆಬ್ಬಾರ್ ಸೇರಿದಂತೆ ಐದು ಮಂದಿ ವಲಸಿಗರನ್ನೊಳಗೊಂಡು ಕಾಂಗ್ರೆಸ್ ಸಂಭವನೀಯರ ಪಟ್ಟಿಯನ್ನು ಹೈಕಮಾಂಡ್‍ಗೆ ರವಾನಿಸಿದೆ. ಇದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಏಕ ವ್ಯಕ್ತಿಯ ಹೆಸರನ್ನು ಶಿಫಾರಸು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರಕ್ಕೆ ಹಾಲಿ ಸಂಸದ ಡಿ.ಕೆ.ಸುರೇಶ್ ಮರುಸ್ಪರ್ಧೆ ಮಾಡಲಿದ್ದಾರೆ. ಮೈಸೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಹೆಸರಿನ ಜೊತೆಗೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೆಸರು ಪ್ರಬಲವಾಗಿ ಕೇಳಿಬಂದಿದೆ. +ಮಂಡ್ಯ ಕ್ಷೇತ್ರಕ್ಕೆ ಸ್ಥಳೀಯ ಕೆಲ ಮುಖಂಡರ ವಿರೋಧದ ನಡುವೆಯೂ ಉದ್ಯಮಿ ಸ್ಟಾರ್ ಚಂದ್ರು ಕಣಕ್ಕಿಳಿ ಯುವುದು ಖಚಿತವಾಗಿದೆ. ಕಲ್ಪತರು ನಾಡು ತುಮಕೂರಿಗೆ ಕಳೆದ ವಾರವಷ್ಟೇ ಬಿಜೆಪಿಯಿಂದ ವಲಸೆ ಬಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಟಿ.ಬಿ. ಜಯಚಂದ್ರಅವರು ತಮ್ಮ ಪುತ್ರ ಸಂತೋಷ್ ಅವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವ ನಾಯಕ ನಿಖಿಲ್ ರಾಜ್ ಮೌರ್ಯ ಅವರ ಪರವಾದ ಒಲವು ವ್ಯಕ್ತಪಡಿಸಿದ್ದಾರೆ. +ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಹಿರಿಯ ನಾಯಕ ವೀರಪ್ಪ ಮೊಯ್ಲಿ ಅದೇ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಮೊದಲು ಜಿ-23 ಗುಂಪಿನಲ್ಲಿ ಸೇರಿಕೊಂಡು ರಾಹುಲ್ ಗಾಂಧಿ ವಿರುದ್ಧ ಬಂಡಾಯದ ಕಹಳೆ ಊದಿದ್ದರು ಎಂಬ ಆಕ್ಷೇಪಗಳಿವೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಎಂ.ಆರ್.ಸೀತಾರಾಮ್ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರನ್ನು ಕಣಕ್ಕಿಳಿಸುವ ಉಮೇದಿನಲ್ಲಿದ್ದಾರೆ. +ಇತ್ತ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬಿಡಿಎ ಅಧ್ಯಕ್ಷರೂ ಆಗಿರುವ ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಹೆಸರು ಕೇಳಿಬರುತ್ತಿದೆ. ಈ ಕ್ಷೇತ್ರದಲ್ಲಿ ಹ್ಯಾರಿಸ್ ಜಯ ಗಳಿಸಿದ್ದಾದರೆ, ತೆರವಾಗುವ ಶಾಂತಿನಗರ ವಿಧಾನಸಭಾ ಕ್ಷೇತ್ರಕ್ಕೆ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲ್ಪಾಡ್ ಅಧ್ಯಕ್ಷರಾಗಲಿದ್ದಾರೆ ಎಂಬ ಆಂತರಿಕ ಚರ್ಚೆಗಳಿವೆ. ಡಿ.ಕೆ.ಶಿವಕುಮಾರ್‍ರವರು ನಲ್ಪಾಡ್ ಬೆಂಬಲಕ್ಕಿದ್ದಾರೆ. ಅತ್ತ ಚಿಕ್ಕಬಳ್ಳಾಪುರ ಕ್ಷೇತ್ರ ರಕ್ಷಾ ರಾಮಯ್ಯ ಅವರಿಗೆ ಸಿಕ್ಕರೆ, ಬೆಂಗಳೂರು ಕೇಂದ್ರಕ್ಕೆ ಹ್ಯಾರಿಸ್‍ರವರಿಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಪರಸ್ಪರ ಹಂಚಿಕೆ ರಾಜಕಾರಣದ ಮೂಲಕ ಒಗ್ಗಟ್ಟು ಪ್ರದರ್ಶಿಸಲಿದ್ದಾರೆ ಎನ್ನಲಾಗಿದೆ. +ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಅತಿ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಗೆಲುವು ಕಂಡರೆ ಅವರು ಹಾಲಿ ಪ್ರತಿನಿಧಿಸುತ್ತಿರುವ ದೇವನಹಳ್ಳಿ ಕ್ಷೇತ್ರಕ್ಕೆ ಮುನಿಯಪ್ಪ ಅವರ ಕುಟುಂಬದ ಸದಸ್ಯರಿಗೆ ವಿಧಾನಸಭೆಯಲ್ಲಿ ಟಿಕೆಟ್ ನೀಡಬೇಕು ಎಂಬ ಷರತ್ತಿದೆ. +ಗೆಲುವಿನ ದೃಷ್ಟಿಯಿಂದ ಸಂಪುಟದ ಸಚಿವರನ್ನು ಕಣಕ್ಕಿಳಿಸುವುದು ಕಾಂಗ್ರೆಸ್‍ನ ಒತ್ತಾಸೆಯಾಗಿದ್ದರೂ ಕೋಲಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬದ ಆಪ್ತ ಡಾ.ಬಿ.ಸಿ.ಮುದ್ದು ಗಂಗಾಧರ್ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ಕ್ಷೇತ್ರದಿಂದ ಕೈಗೆ ಬಂದಿದ್ದ ಬಿ-ಫಾರಂ ಅನ್ನು ಮಧು ಗಂಗಾಧರ್ ತ್ಯಾಗ ಮಾಡಿ ಪಕ್ಷದ ಶಿಸ್ತಿನ ಸಿಪಾಯಿ ಎನಿಸಿಕೊಂಡಿದ್ದರು. ಆ ನಿಷ್ಠೆಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುವುದು ಎಂಬ ಚರ್ಚೆಗಳಿವೆ. +ಬಿಜೆಪಿಯಲ್ಲಿರುವ ಡಾ.ಸುಧಾಕರ್ ಅವರ ಹೆಸರು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪ್ರಬಲವಾಗಿ ಕೇಳಿಬಂದಿವೆ. ಈ ಇಬ್ಬರೂ ಇನ್ನೂ ಬಿಜೆಪಿಯಲ್ಲೇ ಇದ್ದಾರೆ. ಕೊನೇ ಕ್ಷಣದಲ್ಲಿ ಶಿವರಾಂ ಹೆಬ್ಬಾರ್ ರಾಜೀನಾಮೆ ನೀಡಿ ಬಿಜೆಪಿ ಸೇರಬಹುದು. ಒಂದು ವೇಳೆ ಅದು ಸಾಧ್ಯವಾಗದೇ ಇದ್ದರೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಉತ್ತರ ಕನ್ನಡ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗುವುದು ಎಂದು ಹೇಳಲಾಗುತ್ತಿದೆ. +ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಲು ಪ್ರಯತ್ನಿಸುತ್ತಿದ್ದಾರೆ. ಅಲ್ಲಿ ಅವಕಾಶ ಗಿಟ್ಟದಿದ್ದರೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರಕ್ಕೆ ಪ್ರೊ.ರಾಜೀವ್‍ಗೌಡ, ಮಾಜಿ ಎಂಎಲ್‍ಸಿ ನಾರಾಯಣಸ್ವಾಮಿ ಕೂಡ ಲಾಬಿ ನಡೆಸುತ್ತಿದ್ದಾರೆ.ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ , ಶಿವಮೊಗ್ಗಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಪತ್ನಿ ಗೀತಾ ಶಿವರಾಜ್‍ಕುಮಾರ್, ದಾವಣಗೆರೆಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾ, ಚಿತ್ರದುರ್ಗಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಎನ್.ಚಂದ್ರಪ್ಪ, ಬೀದರ್‍ಗೆ ಮಾಜಿ ಸಚಿವ ರಾಜಶೇಖರ್ ಪಾಟೀಲ್, ವಿಜಯಪುರ ಕ್ಷೇತ್ರಕ್ಕೆ ಮಾಜಿ ಶಾಸಕ ರಾಜು ಅಲಗೂರು, ಹಾಸನಕ್ಕೆ ಶ್ರೇಯಸ್ ಪಟೇಲ್ ಹೆಸರುಗಳಿವೆ. +ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಸುೀಧಿರ್ ಮುರೋಳಿಯವರಿಗೆ ಟಿಕೆಟ್ ನೀಡಬೇಕೆಂದು ಎರಡೂ ಜಿಲ್ಲೆಗಳ ನಾಯಕರು ಮೊನ್ನೆ ಬೆಂಗಳೂರಿಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮತ್ತೊಂದೆಡೆ ಹಿಂದುಳಿದ ವರ್ಗಗಳ ಆಯೋಗದ ನಿರ್ಗಮಿತ ಅಧ್ಯಕ್ಷ ಹಾಗೂ ಬಿಜೆಪಿಯಲ್ಲಿರುವ ಜಯಪ್ರಕಾಶ್ ಹೆಗ್ಡೆ ಅವರ ಹೆಸರು ಚಾಲ್ತಿಯಲ್ಲಿದೆ.ಹಾವೇರಿಗೆ ಮಾಜಿ ಶಾಸಕ ಡಿ.ಆರ್. ಪಾಟೀಲ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು ಎಂಬ ಕಾರಣಕ್ಕೆ ವಿಧಾನಪರಿಷತ್ ಸದಸ್ಯ ಸಲೀಂ ಅಹಮ್ಮದ್ ಹೆಸರು ಕೇಳಿಬರುತ್ತಿದೆ. +ಬಳ್ಳಾರಿ ಕ್ಷೇತ್ರಕ್ಕೆ ಸಚಿವ ಬಿ.ನಾಗೇಂದ್ರ ಅವರನ್ನು ಕಣಕ್ಕಿಳಿಸುವ ಚರ್ಚೆಗಳಿದ್ದು, ಶಾಸಕ ತುಕಾರಾಂ ಅವರ ಪುತ್ರಿ ಚೈತನ್ಯ ಸೌಪರ್ಣಿಕ ಮತ್ತು ಮಾಜಿ ಸಂಸದ ಉಗ್ರಪ್ಪ ಅವರ ಹೆಸರು ಚಾಲ್ತಿಯಲ್ಲಿವೆ. ಬಾಗಲಕೋಟೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರ್ ಅಥವಾ ಮಾಜಿ ಶಾಸಕ ಆನಂದ ನ್ಯಾಮೇಗೌಡ, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ವಿನಯ್‍ಕುಮಾರ್ ಸೊರಕೆ ಅಥವಾ ಪದ್ಮರಾಜ್, ರಾಯಚೂರು ಕ್ಷೇತ್ರಕ್ಕೆ ಕುಮಾರ್‍ನಾಯಕ್ ಅಥವಾ ರವಿ ಪಾಟೀಲ್ ಕಣಕ್ಕಿಳಿಯುವ ನಿರೀಕ್ಷೆಗಳಿವೆ. +ಚಾಮರಾಜನಗರ ಕ್ಷೇತ್ರಕ್ಕೆ ಸಚಿವಎಚ್.ಸಿ.ಮಹದೇವಪ್ಪ ತಮ್ಮ ಪುತ್ರ ಸುನಿಲ್ ಬೋಸ್‍ರನ್ನು ಕಣಕ್ಕಿಳಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಕಲಬುರ್ಗಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ರ್ಪಧಿಸುವ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸದ ಹಿನ್ನೆಲೆಯಲ್ಲಿ, ಅವರ ಅಳಿಯ ರಾಧಾಕೃಷ್ಣರ ಹೆಸರು ಚಾಲ್ತಿಯಲ್ಲಿದೆ. ಕೊಪ್ಪಳ ಕ್ಷೇತ್ರಕ್ಕೆ ಅಮರೇಗೌಡ ಬಯ್ಯಾಪುರ ಅಥವಾ ರಾಜಶೇಖರ್ ಹಿಟ್ನಾಳ್ ಅಭ್ಯರ್ಥಿಗಳಾಗಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಹಳಷ್ಟು ಮಂದಿ ವಲಸಿಗರ ಹೆಸರುಗಳಿದ್ದು, ಪರಸ್ಪರ ಕುಟುಂಬದ ಸದಸ್ಯರೇ ಹೆಚ್ಚಿನ ಲಾಬಿ ನಡೆಸುತ್ತಿದ್ದಾರೆ. +ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಬೆಂಗಳೂರು ಗ್ರಾಮಾಂತರ : ಡಿ.ಕೆ.ಸುರೇಶ್ಮೈಸೂರು : ಎಂ ಲಕ್ಷ್ಮಣ,ಮಂಡ್ಯ : ಸ್ಟಾರ್ ಚಂದ್ರು(ವೆಂಕಟರಮಣಗೌಡ)ತುಮಕೂರು:ಎಸ್.ಪಿ. ಮುದ್ದಹನುಮೇಗೌಡ,ಚಿಕ್ಕಬಳ್ಳಾಪುರ : ರಕ್ಷಾ ರಾಮಯ್ಯ/ವೀರಪ್ಪಮೊಯ್ಲಿಕೋಲಾರ : ಕೆ.ಎಚ್.ಮುನಿಯಪ್ಪ/ಡಾ.ಬಿ.ಸಿ.ಮುದ್ದುಗಂಗಾಧರ್ಬೆಂಗಳೂರು ಕೇಂದ್ರ : ಎನ್.ಎ.ಹ್ಯಾರಿಸ್ಬೆಂಗಳೂರು ಉತ್ತರ : ಪ್ರೊ.ರಾಜೀವ್‍ಗೌಡ/ ಕುಸುಮ/ಡಾ.ಸುಧಾಕರ್ಬೆಂಗಳೂರು ದಕ್ಷಿಣ : ಸೌಮ್ಯ ರೆಡ್ಡಿಉತ್ತರ ಕನ್ನಡ : ಅಂಜಲಿ ನಿಂಬಾಳ್ಕರ್/ಶಿವರಾಮ್ ಹೆಬ್ಬಾರ್ಚಾಮರಾಜನಗರ : ಸಚಿವ ಡಾ.ಎಚ್.ಸಿ. ಮಹದೇವಪ್ಪ/ಸುನೀಲ್ ಬೋಸ್ಹಾಸನ : ಶ್ರೇಯಸ್ ಪಟೇಲ್ಉಡುಪಿ-ಚಿಕ್ಕಮಗಳೂರು : ಸುೀಧಿರ್ ಮುರೋಳಿ/ಜಯಪ್ರಕಾಶ ಹೆಗ್ಡೆಶಿವಮೊಗ್ಗ : ಗೀತಾ ಶಿವರಾಜಕುಮಾರ್ದಾವಣಗೆರೆ : ಪ್ರಭಾ ಮಲ್ಲಿಕಾರ್ಜುನ/ ವಿನಯ್ ಕುಮಾರ್ಚಿತ್ರದುರ್ಗ : ಬಿ.ಎನ್.ಚಂದ್ರಪ್ಪಹಾವೇರಿ : ಡಿ.ಆರ್.ಪಾಟೀಲ/ ಸಲೀಂ ಅಹಮದ್ವಿಜಯಪುರ :ರಾಜು ಆಲಗೂರಬೀದರ್ : ರಾಜಶೇಖರ ಪಾಟೀಲ್ಬಳ್ಳಾರಿ : ಸಚಿವ ಬಿ.ನಾಗೇಂದ್ರ/ ಚೈತನ್ಯ ಸೌಪರ್ಣಿಕಬಾಗಲಕೋಟೆ : ಆನಂದ ನ್ಯಾಮಗೌಡ/ ವೀಣಾ ಕಾಶಪ್ಪನವರ್ದಕ್ಷಿಣ ಕನ್ನಡ : ವಿನಯ್ ಕುಮಾರ್ ಸೊರಕೆ/ ಪದ್ಮರಾಜ್ರಾಯಚೂರು : ಕುಮಾರ್ ನಾಯ್ಕ /ರವಿ ಪಾಟೀಲ್ ನಾಯ್ಕಕಲಬುರಗಿ : ಮಲ್ಲಿಕಾರ್ಜುನ ಖರ್ಗೆ/ರಾಧಾಕೃಷ್ಣಕೊಪ್ಪಳ : ಅಮರೇಗೌಡ ಬಯ್ಯಾಪುರ / ರಾಜಶೇಖರ ಹಿಟ್ನಾಳ್ \ No newline at end of file diff --git a/eesanje/url_46_212_7.txt b/eesanje/url_46_212_7.txt new file mode 100644 index 0000000000000000000000000000000000000000..cc21090a30697c399695f50afce3d3e921cb2d5b --- /dev/null +++ b/eesanje/url_46_212_7.txt @@ -0,0 +1,4 @@ +ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆರೋಪಿಯ ರೇಖಾಚಿತ್ರ ವೈರಲ್ +ಬೆಂಗಳೂರು,ಮಾ.7- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾಯಾಗಿರುವ ಆರೋಪಿಯ ತೀವ್ರ ಶೋಧದ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಿಸಿಟಿವಿ ದೃಶ್ಯಗಳು ವೈರಲ್ಲಾಗುತ್ತಿವೆ. ಇದನ್ನೇ ಆಧಾರವಾಗಿಟ್ಟುಕೊಂಡು ರೇಖಾಚಿತ್ರಕಾರರೊಬ್ಬರು ಆರೋಪಿಯ ಹೋಲುವ ಕೆಲ ಚಿತ್ರಗಳನ್ನು ಬರೆದು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಇದನ್ನು ಎನ್‍ಐಎ ಮತ್ತು ಬೆಂಗಳೂರು ನಗರ ಪೊಲೀಸ್ ಖಾತೆಗಳಿಗೂ ಟ್ಯಾಗ್ ಮಾಡಿದ್ದಾರೆ. +ಆರೋಪಿಯು ಮಾಸ್ಕ್, ಟೋಪಿ, ಕನ್ನಡಕ ಧರಿಸಿ ಹೇಗೆ ಕಾಣುತ್ತಾನೆ ಮತ್ತು ಟೋಪಿ, ಮಾಸ್ಕ್ಇಲ್ಲದೆ ಹೇಗೆ ಕಾಣಬಹುದು ಎಂಬುದನ್ನ ತಮ್ಮದೇ ಕಲ್ಪನೆಯಲ್ಲಿ ಚಿತ್ರಕಾರ ಹರ್ಷ ಊಹಿಸಿಕೊಂಡು ಪೂರ್ತಿ ಮುಖದ ರೇಖಾಚಿತ್ರ ಬಿಡಿಸಿದ್ದಾರೆ. ಈ ಚಿತ್ರಗಳನ್ನು ತಮ್ಮ ಅಕೃತ ಜಾಲತಾಣ ಎಕ್ಸ್‍ನಲ್ಲಿ ಪೊಸ್ಟ್ ಮಾಡಿ ತನಿಖಾ ಸಂಸ್ಥೆಗಳಿಗೆ ಈ ರೇಖಾಚಿತ್ರಗಳು ಸಹಾಯವಾಗಬಹುದು ಎಂದು ಬರೆದುಕೊಂಡಿದ್ದಾರೆ. +ಆರೋಪಿಯ ಬಗ್ಗೆ ಎನ್‍ಐಎಗೆ ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದು, ಸಾರ್ವಜನಿಕರು ಸಹ ಈ ಚಿತ್ರಗಳನ್ನು ಆಧಾರವಾಗಿಟ್ಟುಕೊಂಡು ಆರೋಪಿಯ ಪತ್ತೆ ಕಾರ್ಯಕ್ಕೆ ಸಹಾಯವಾಗಲಿದೆ. \ No newline at end of file diff --git a/eesanje/url_46_212_8.txt b/eesanje/url_46_212_8.txt new file mode 100644 index 0000000000000000000000000000000000000000..f75b728aade85fe2fd1ae62501751a7a44e39879 --- /dev/null +++ b/eesanje/url_46_212_8.txt @@ -0,0 +1,7 @@ +ಪಬ್ಲಿಕ್ ಪರೀಕ್ಷೆ ತಡೆ ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ +ಬೆಂಗಳೂರು,ಮಾ.7- ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5, 7, 8, 9 ಮತ್ತು 11ನೇ ತರಗತಿಗೆ ನಿಗದಿಯಾಗಿದ್ದ ಪಬ್ಲಿಕ್ ಪರೀಕ್ಷೆ ಸುತ್ತೋಲೆಯನ್ನು ರದ್ದುಪಡಿಸಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನಿಲಯ್ ವಿಪಿನ್‍ಚಂದ್ರ ಅಂಜೇರಿಯಾ ಹಾಗೂ ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಅವರನ್ನೊಳಗೊಂಡ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಮರುಪರಿಶೀಲನೆ ಮಾಡುವಂತೆ ಮೇಲ್ಮನೆಯಲ್ಲಿ ಮನವಿ ಮಾಡಿದೆ. +ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಬುಧವಾರ ಹೈಕೋರ್ಟ್ ನ್ಯಾಯಮೂರ್ತಿ ರವಿ.ಎಸ್ ಹೊಸಮನಿ ಅವರನ್ನೊಳಗೊಂಡ ಏಕಸದಸ್ಯ ಪೀಠ 5, 7, 8, 9 ಮತ್ತು 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು 2023 ಡಿಸೆಂಬರ್ ತಿಂಗಳಿನಲ್ಲಿ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿ ಆದೇಶ ನೀಡಿತ್ತು. +ಮಾರ್ಚ್ 11ರಿಂದ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಎಲ್ಲಾ ರೀತಿಯ ಸಿದ್ಧತೆ ನಡೆಸಿಕೊಂಡಿದೆ. ಈ ಹಂತದಲ್ಲಿ ಏಕಸದಸ್ಯ ಪೀಠ, ಶಿಕ್ಷಣ ಇಲಾಖೆ ಸುತ್ತೋಲೆ ರದ್ದುಪಡಿಸಿರುವ ಕಾರಣ ಪರೀಕ್ಷೆ ನಡೆಸಲು ಹಲವು ಸಮಸ್ಯೆ ಎದುರಾಗಲಿದೆ. ಆದ್ದರಿಂದ ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು. ಪರೀಕ್ಷಾ ವೇಳಾಪಟ್ಟಿ ಸಿದ್ಧಗೊಂಡಿದೆ ಎಂದು ಕೋರಿದರು. ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿಗಳು, ಈ ಪೀಠ ಇರುವುದಿಲ್ಲ. ಹೀಗಾಗಿ, ಮತ್ತೊಂದು ಪೀಠವನ್ನು ರಚನೆ ಮಾಡಿ ಇಂದೇ ವಿಚಾರಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. +ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ, ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ, ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿಗಾಗಿ ಸಂಸ್ಥೆ ಸಲ್ಲಿಸಿದ್ದ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ ಬುಧವಾರ ಸುತ್ತೋಲೆ ರದ್ದುಪಡಿಸಿ ತೀರ್ಪು ಪ್ರಕಟಿಸಿತ್ತು. +ಹೈಕೋರ್ಟ್‍ನ ಈ ಆದೇಶದಿಂದ ಮಾರ್ಚ್ 13ರಿಂದ 19 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. ಅಲ್ಲದೆ ಸೆಕ್ಷನ್ 22ರ ಪ್ರಕಾರ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯ ಮೂಲಕ ಆಂತರಿಕ ಅಥವಾ ಬಾಹ್ಯ ಮೌಲ್ಯಮಾಪನ ಮಾಡುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು. ಸೆಕ್ಷನ್ 145 (4)ರ ಪ್ರಕಾರ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾದಲ್ಲಿ ಶಾಸನ ಸಭೆಯಲ್ಲಿ ಚರ್ಚಿಸಿದ ಬಳಿಕ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಲಾಗಿದೆ. +ಆದರೆ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಈ ರೀತಿಯ ಯಾವುದೇ ನಿಯಮಗಳಿಗೆ ತಿದ್ದುಪಡಿ ಮಾಡಿಲ್ಲ. ಆದ್ದರಿಂದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಮುಂದಾಗಿರುವ ಕ್ರಮ ಶಿಕ್ಷಣ ಕಾಯ್ದೆ ಸೆಕ್ಷನ್ 22ಕ್ಕೆ ತದ್ವಿರುದ್ಧವಾಗಿದೆ ಎಂದು ನ್ಯಾಯಪೀಠ ತಿಳಿಸಿತ್ತು. ದೊಡ್ಡಮಟ್ಟದ ವಿದ್ಯಾರ್ಥಿಗಳಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಸರ್ಕಾರ ಬದಲಾವಣೆ ತರಬೇಕಾದರೆ ಯಾವುದೇ ಆಕ್ಷೇಪಗಳು ಇಲ್ಲದಂತೆ ಮತ್ತು ಕಡ್ಡಾಯವಾಗಿ ನಿಗದಿಪಡಿಸಿರುವ ಕಾರ್ಯವಿಧಾನದ ಮೂಲಕ ತರಬೇಕು. ಹೀಗಾಗಿ, ಶಿಕ್ಷಣ ಇಲಾಖೆ ಸುತ್ತೋಲೆ ದೋಷಪೂರಿತವಾಗಿದೆ ಎಂದು ಪೀಠ ತಿಳಿಸಿತ್ತು. \ No newline at end of file diff --git a/eesanje/url_46_212_9.txt b/eesanje/url_46_212_9.txt new file mode 100644 index 0000000000000000000000000000000000000000..4bcc51664d13bfa58a5e2a8e6ad4dd8fa19ef2f4 --- /dev/null +++ b/eesanje/url_46_212_9.txt @@ -0,0 +1,4 @@ +ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ +ಬೆಂಗಳೂರು,ಮಾ.7- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರನ್ನು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. 39ನೇ ಎಸಿಎಂಎಂ ನ್ಯಾಯಾಲಯ ನಾಶಿಪುಡಿ ಅವರನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. +ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ನಾಸಿರ್ ಹುಸೇನ್ ವಿಜಯೋತ್ಸವ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಪ್ರಕರಣದಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ್ ಅಹಮ್ಮದ್, ಮೊಹಮ್ಮದ್ ಇಲ್ತಾಜ್ ಎಂಬುವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳನ್ನು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚುವರಿ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. +ಇಬ್ಬರು ಆರೋಪಿಗಳಾದ ಮುನ್ನಾವರ್ ಅಹಮ್ಮದ್ ಇಲ್ತಾಜ್ ಅವರನ್ನು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಹೆಚ್ಚುವರಿ ವಿಚಾರಣೆಗಾಗಿ ನಾಶಿಪುಡಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿತ್ತು. ಇಂದಿಗೆ ಪೊಲೀಸ್ ಕಸ್ಟಡಿಯ ಅವಧಿ ಮುಗಿದ ಕಾರಣ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ ನ್ಯಾಯಾೀಧಿಶರು ನಾಶಿಪುಡಿ ಅವರಿಗೆ 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು. \ No newline at end of file diff --git a/eesanje/url_46_213_1.txt b/eesanje/url_46_213_1.txt new file mode 100644 index 0000000000000000000000000000000000000000..7ddc8932fd3726e327fbf8e1d8cdb5920ff0a8eb --- /dev/null +++ b/eesanje/url_46_213_1.txt @@ -0,0 +1,7 @@ +ನಾಸೀರ್ ಹುಸೇನ್‍ಗೆ ಪ್ರಮಾಣವಚನ ಬೋಧಿಸದಂತೆ ಉಪರಾಷ್ಟ್ರಪತಿಗಳಿಗೆ ಪತ್ರ +ಬೆಂಗಳೂರು,ಮಾ.7- ವಿಧಾನಸಭೆ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್‍ಗೆ ಉಪರಾಷ್ಟ್ರಪತಿಗಳು ಅಧಿಕಾರ ಗೌಪ್ಯತೆ ಪ್ರಮಾಣವಚನ ಬೋಧಿಸಬಾರದು ಎಂದು ನಿವೃತ್ತ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ. ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಮದನ್ ಗೋಪಾಲ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸ್ವಯಂ ನಿವೃತ್ತಿ ಪಡೆದ ಭಾಸ್ಕರ್ ರಾವ್ ನೇತೃತ್ವದಲ್ಲಿ 17 ಐಎಎಸ್ ಅಧಿಕಾರಿಗಳ ಸಹಿವುಳ್ಳ ಪತ್ರವನ್ನು ರಾಜ್ಯಸಭೆಯ ಸಭಾಪತಿಯಾಗಿರುವ ಉಪರಾಷ್ಟ್ರಪತಿ ಜಗದೀಶ್ ಧನ್ಕರ್‍ಗೆ ಪತ್ರ ಬರೆದಿದ್ದಾರೆ. +ನಿವೃತ್ತ ಐಎಎಸ್ ಅಧಿಕಾರಿಗಳಾದ ಎಂ ಮದನ್ ಗೋಪಾಲ್, ಎಂ ಲಕ್ಷ್ಮೀನಾರಾಯಣ, ಅನಿಲ್ ಕುಮಾರ್, ಮುದ್ದುಮೋಹನ್, ನಿವೃತ್ತ ಐಪಿಎಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಗೋಪಾಲ್ ಹೊಸೂರ್ ಸೇರಿದಂತೆ 22 ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ. ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಪ್ರಕರಣ ಇತ್ಯರ್ಥವಾಗುವರೆಗೂ ಪ್ರಮಾಣ ವಚನ ಬೋಧಿಸದಂತೆ ಮನವಿ ಮಾಡಿದ್ದಾರೆ. +ಕಳೆದ ಫೆ.27ರಂದು ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜೇತರಾದ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಪೊಲೀಸರು ನಾಸೀರ್ ಹುಸೇನ್ ಅವರ ಮೂವರು ಬೆಂಬಲಿಗರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇವರೆಲ್ಲರೂ ನಾಸೀರ್ ಹುಸೇನ್ ಅವರ ಬೆಂಬಲಿಗರಾಗಿರುವುದರಿಂದ ಉಪರಾಷ್ಟ್ರಪತಿಗಳು ದೇಶ ವಿರೋಧಿ ಘೋಷಣೆ ಕೂಗಲು ಕುಮ್ಮಕ್ಕು ನೀಡಿದ ಆರೋಪದ ಮೇಲೆ ಅಧಿಕಾರ ಗೌಪ್ಯತೆ ಬೋಧಿಸಬಾರದೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. +ಸುಮಾರು ಮೂರು ಪುಟಗಳ ಪತ್ರ ಬರೆದಿರುವ ಅಧಿಕಾರಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವುದು ದೇಶವಿರೋಧಿ ಚಟುವಟಿಕೆಗೆ ಸಮ. ಇದನ್ನು ಗಂಭೀರವಾಗಿ ಪರಿಗಣಿಸಿ ನಾಸೀರ್ ಹುಸೇನ್‍ಗೆ ಅಧಿಕಾರ ಗೌಪ್ಯತೆ ಬೋಧಿಸಬಾರದು. ನಿಮಗಿರುವ ಅಧಿಕಾರವನ್ನು ಚಲಾಯಿಸಿ ಎಂದು ಕೋರಿದ್ದಾರೆ. ಅಧಿಕಾರಿಗಳ ಈ ನಿಲುವನ್ನು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬೆಂಬಲಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಅವರು ಪೋಸ್ಟ್ ಮಾಡಿ ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. +ರಾಜ್ಯಸಭಾ ಚುನಾವಣೆಯಲ್ಲಿ ಚುನಾಯಿತರಾಗಿರುವ ಕಾಂಗ್ರೆಸ್ ನಾಯಕ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ಘಟನೆ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಬಾರದು ಎಂದು 17 ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಘನತೆವೆತ್ತ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಹಿರಿಯ ಅಧಿಕಾರಿಗಳ ನಿಲುವನ್ನು ಸ್ವಾಗತಿಸುತ್ತೇನೆ ಮತ್ತು ಬೆಂಬಲಿಸುತ್ತೇನೆ ಎಂದಿದ್ದಾರೆ. +ದೇಶದ್ರೋಹಿಗಳನ್ನು ಪೋಷಿಸಿ, ಬೆಂಬಲಿಸಿ ಅವರು ರಾಷ್ಟ್ರ ವಿದ್ರೋಹದ ಕೆಲಸ ಮಾಡಿದ ಮೇಲೂ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗೆ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಒಳಗೆ ಪ್ರವೇಶಿಸುವ ಅರ್ಹತೆಯೇ ಇಲ್ಲ. ಇಂತಹ ವ್ಯಕ್ತಿಗಳಿಗೆ ರಾಜ್ಯಸಭಾ ಸದಸ್ಯತ್ವ ನೀಡಲು ಹೊರಟಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ದೇಶಪ್ರೇಮವಿದ್ದರೆ ನಾಸಿರ್ ಹುಸೇನ್ ಅವರಿಂದ ರಾಜೀನಾಮೆ ಪಡೆದು ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_213_10.txt b/eesanje/url_46_213_10.txt new file mode 100644 index 0000000000000000000000000000000000000000..76644db8cb5d47513cf18cb6d27fb191c1a5fbee --- /dev/null +++ b/eesanje/url_46_213_10.txt @@ -0,0 +1,11 @@ +ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು +ಬೆಂಗಳೂರು,ಮಾ.6- ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಈ ಆದೇಶದಿಂದ ಇದೇ ಮಾರ್ಚ್ 9ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ. +ಕಳೆದ ಡಿಸೆಂಬರ್ನಲ್ಲಿ ರಾಜ್ಯ ಸರ್ಕಾರ 2024ನೇ ಶೈಕ್ಷಣಿಕ ವರ್ಷದಿಂದ ಅನ್ವಯವಾಗುವಂತೆ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಶಾಲೆಗಳ ಸಂಘ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿತ್ತು. ಎರಡೂ ಕಡೆಯ ವಾದವನ್ನು ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ರವಿ ಹೊಸಮನಿ ಅವರು ಇಂದು ತೀರ್ಪು ಪ್ರಕಟಿಸಿ ಸರ್ಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ರದ್ದುಪಡಿಸಿದರು. +ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು. ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರಿ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಅರ್ಜಿದಾರರ ಸಂಘ ಕೋರಿತ್ತು. +ಖಾಸಗಿ ಶಾಲೆಗಳ ಪರವಾಗಿ ವಕೀಲ ಸುದರ್ಶನ್ ವಾದ ಮಂಡಿಸಿದ್ದರೆ, ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಂದಿನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು 5ನೇ ತರಗತಿ ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. +ಆನಂತರ ಅಧಿಕಾರ ಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್ ಪರೀಕ್ಷೆ ನಡೆಸುವ ಚಿಂತನೆ ಮಾಡಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಹಾಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಈ ಹಿಂದೆ ಹೇಳಿದ್ದರು. +ಈ ಹಿಂದೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಶಾಲಾ ಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ ಪರೀಕ್ಷೆ ನಡೆಸುವ ರಾಜ್ಯ ಶಿಕ್ಷಣ ಇಲಾಖೆಯ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮೇಲ್ಮನವಿ ಸಲ್ಲಿಸಿದ್ದರು. 2022-23ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ಸಂಘವು ತಕರಾರು ಅರ್ಜಿ ಸಲ್ಲಿಸಿತ್ತು. +ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಮೌಲ್ಯಮಾಪನ ಬದಲಾವಣೆಗೆ ಸರ್ಕಾರ ಕೈಗೊಂಡಿರುವ ನಿರ್ಣಯವು ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂಬುದು ಸಂಘದ ಆಕ್ಷೇಪಣೆಯಾಗಿತ್ತು. +ಶಿಕ್ಷಣ ಇಲಾಖೆ ವಾರ್ಷಿಕ ಚಟುವಟಿಕೆಗಳ ಪಟ್ಟಿಯಲ್ಲಿ ಐದು ಮತ್ತು ಎಂಟನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿರಲಿಲ್ಲ. ಏಕಾಏಕಿಯಾಗಿ ತೀರ್ಮಾನವನ್ನು ಪ್ರಕಟಿಸಿತ್ತು. ಇದರ ನಡುವೆ ಸರ್ಕಾರಿ ಶಾಲೆಗಳಿಗೆ ಪಬ್ಲಿಕ್ ಪರೀಕ್ಷೆಯ ಪಠ್ಯಪುಸ್ತಕ ನೀಡಿತ್ತು. ಆದರೆ ಖಾಸಗಿ ಶಾಲೆಗಳಿಗೆ ಅದನ್ನು ನೀಡಲೇ ಇಲ್ಲ. ಇಡೀ ರಾಜ್ಯಕ್ಕೆ ಒಂದೇ ಮಾದರಿ ಪರೀಕ್ಷೆ ನಡೆಸಬೇಕು ಎಂದು ಏಕಪಕ್ಷೀಯ ಆದೇಶವನ್ನು ನೀಡಿತ್ತು. +ಹಿನ್ನೆಲೆ:ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರ್ಕಾರಿ ಅನುದಾನಿತ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮËಲ್ಯಮಾಪನ-2 ಹಾಗು 11 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮËಲ್ಯನಿರ್ಣಯ ಮಂಡಳಿಯಿಂದಲೇ ನಡೆಸುವಂತೆ 12 ಷರತ್ತುಗಳೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. +ಈಗಾಗಲೇ 5, 8ನೇ ತರಗತಿಗೆ ಮೌಲ್ಯಾಂಕನ ಹಾಗೂ ಎಸ್ಸೆಸ್ಸೆಲ್ಸಿ ದ್ವಿತೀಯ ಪಿಯುಸಿಗೆ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಸಲಾಗುತ್ತಿತ್ತು. \ No newline at end of file diff --git a/eesanje/url_46_213_11.txt b/eesanje/url_46_213_11.txt new file mode 100644 index 0000000000000000000000000000000000000000..96af844c28861618910b58b9934ada5dc44c631b --- /dev/null +++ b/eesanje/url_46_213_11.txt @@ -0,0 +1,5 @@ +ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಬಿಡುಗಡೆ ಮಾಡಿದ ಸರ್ಕಾರ +ಬೆಂಗಳೂರು,ಮಾ.6- ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ವಸತಿ ವ್ಯವಸ್ಥೆ 386 ನಿರ್ಮಾಣದಡಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಿಗೆ ಷರತ್ತುಗೊಳಪಟ್ಟು ಅನುದಾನ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. +ವಿವಿಧ ಗಣ್ಯರು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳಿಂದ ಅನುದಾನ ಕೋರಿ ಸ್ವೀಕೃತವಾದ ಪ್ರಸ್ತಾವನೆಗಳನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಪರಿಶೀಲಿಸಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದುರಸ್ಥಿ, ಜೀರ್ಣೋದ್ಧಾರ, ನಿರ್ಮಾಣ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಸಂಘ ಸಂಸ್ಥೆಗಳ ದುರಸ್ಥಿ, ಜೀರ್ಣೋದ್ಧಾರ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ಸರ್ಕಾರವನ್ನು ಆಯುಕ್ತರು ಕೋರಿದ್ದರು. +ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಕೆಲವು ಷರತ್ತುಗಳನ್ನ ವಿಸಿ ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಧಾರ್ಮಿಕ ಸಂಸ್ಥೆಗಳಿಗೆ ಮಂಜೂರು ಮಾಡಲಾದ ಅನುದಾನವನ್ನು ಖಜಾನೆ-2 ರ ಮೂಲಕ ಜಿಲ್ಲಾಕಾರಿಗಳ ಡಿಡಿಓ ಸಂಕೇತಕ್ಕೆ ಅಪ್ಲೋಡ್ ಮಾಡುವುದು, ಜಿಲ್ಲಾಕಾರಿಗಳು ನಿಯಮಾನುಸಾರ ಈ ಅನುದಾನವನ್ನು ಡ್ರಾ ಮಾಡಲು ಕ್ರಮ ವಹಿಸಬೇಕು. +ಅನುದಾನ ಬಿಡುಗಡೆ ಮಾಡಿರುವ ಸಂಸ್ಥೆಯು ನಿಯಮಾನುಸಾರ ನೀಡಬಹುದಾದ ಮೊತ್ತವನ್ನು ಮುಂಗಡ ರಸೀದಿ ಪಡೆದು ಬಿಲ್ ಪಾವತಿಸಬೇಕು ಎಂಬುದು ಸೇರಿದಂತೆ ಕೆಲವು ಷರತ್ತುಗಳನ್ನು ಆದೇಶದಲ್ಲಿ ವಿಸಲಾಗಿದೆ. 2 ಲಕ್ಷದಿಂದ 50 ಲಕ್ಷ ರೂ.ವರೆಗೂ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ರಾಮದುರ್ಗದ ಶಿವಪ್ರತಿಷ್ಠಾಪನಾ ಸೇವಾ ಸಮಿತಿಗೆ 50 ಲಕ್ಷ ರೂ. ಮಂಜೂರು ಮಾಡಲಾಗಿದೆ. \ No newline at end of file diff --git a/eesanje/url_46_213_12.txt b/eesanje/url_46_213_12.txt new file mode 100644 index 0000000000000000000000000000000000000000..070ed71c3aa409fcf9a3607bcb93eb2d9afab5d0 --- /dev/null +++ b/eesanje/url_46_213_12.txt @@ -0,0 +1,4 @@ +ಆಸಿಡ್ ದಾಳಿ ಸಂತ್ರಸ್ತರಿಗೆ 4 ಲಕ್ಷ ರೂ ಪರಿಹಾರ, ವೈದ್ಯಕೀಯ ವೆಚ್ಚ ಭರಿಸಲಿದೆ ಸರ್ಕಾರ +ಮಂಗಳೂರು, ಮಾ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ಆಯೋಗ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ಸಾಂತ್ವಾನ,ದೈಯೇ ಹೇಳಿ ಅವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಮತ್ತು ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು. +ವಿದ್ಯಾರ್ಥಿಗಳು ಚೆನ್ನಾಗಿದ್ದಾರೆ. ನಾನು ಈಗ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಮಾತ್ರ ಚಿಂತಿಸುತ್ತಿದ್ದೇನೆ, ಶಿಕ್ಷಣ ಸಚಿವರೊಂದಿಗೆ ಮಾತನಾಡಿದ ನಂತರ ದಿನದಲ್ಲಿ ವರಿಗೆ ಪರೀಕ್ಷೆ ಬರೆಯುವ ಕುರಿತು ಎದುರಾಗಿರುವ ಚಿಂತೆ ಪರಿಹರಿಸುತ್ತೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪ್ರಸ್ತುತ ಪರೀಕ್ಷಾ ಚಕ್ರದಲ್ಲಿಯೇ ಪಿಯು ಬೋರ್ಡ್ ನಡೆಸುತ್ತಿರುವ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದೇ ಎಂದು ವಿದ್ಯಾರ್ಥಿಗಳು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಅವರಿಗೆ ವ್ಯವಸ್ಥೆ ಮಾಡುವಂತೆ ಶಿಕ್ಷಣ ಸಚಿವರನ್ನು ಮನವಿ ಮಾಡಿದರು. +ನಾನು ಮಕ್ಕಳ ಚಿಂತೆ ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ. ನನಗೂ ಪಿಯುಸಿ ಓದುತ್ತಿರುವ ಮಗನಿದ್ದಾನೆ. ನಾನು ಶಿಕ್ಷಣ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಚೌಧರಿ ಹೇಳಿದರು. ಮೂವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದರು, ಆದರೆ ಅವರಲ್ಲಿ ಇಬ್ಬರಿಗೆ ಎರಡು ವಾರಗಳ ಸಾಮಾನ್ಯ ಚಿಕಿತ್ಸೆಯ ನಂತರ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ ಆದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮುಂದೆ ಈ ರೀತಿ ಘಟನೆ ನಡೆಯದಂತೆ ತಪ್ಪಿತಸ್ಥನಿಗೆ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_213_2.txt b/eesanje/url_46_213_2.txt new file mode 100644 index 0000000000000000000000000000000000000000..bfc7fbb6e224a0b72615df665f1657448c444971 --- /dev/null +++ b/eesanje/url_46_213_2.txt @@ -0,0 +1,6 @@ +ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಆಸಿಡ್ ಮಾರಾಟ ನಿಷೇಧ +ಬೆಂಗಳೂರು,ಮಾ.7-ಆಸಿಡ್ ದಾಳಿ ಪ್ರಕರಣವನ್ನು ಹತ್ತಿಕ್ಕುವ ಸಲುವಾಗಿ ರಾಜ್ಯದಲ್ಲಿ ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಒಂದೆರೆಡು ದಿನದೊಳಗಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಗೆ ಪತ್ರ ಬರೆಯಲಿದ್ದು, ಆಸಿಡ್ ಮುಕ್ತ ಮಾರಾಟವನ್ನು ನಿಷೇಧಿಸುವಂತೆ ಶಿಫಾರಸು ಮಾಡಿದ್ದಾರೆ. ಆ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಬೇಕಿದೆ ಎಂದರು. +ಆಸಿಡ್ ಸುಲಭವಾಗಿ ಕೈಗೆ ಸಿಗಬಾರದು. ಹಾಗಾಗಿ ರಾಸಾಯನಿಕಗಳನ್ನು ಅಧಿಕೃತವಾಗಿ ಮಾರಾಟ ಮಾಡುವವರ ಮೂಲಕವಷ್ಟೇ ಆಸಿಡ್ ಖರೀದಿ ಮತ್ತು ಮಾರಾಟ ವಹಿವಾಟು ನಡೆಯಬೇಕು. ಈ ನಿಟ್ಟಿನಲ್ಲಿ ಕಡಿವಾಣವು ಅಗತ್ಯವಿದೆ ಎಂದು ತಿಳಿಸಿದರು. +ಶೀಘ್ರ ಬಂಧನ :ಬೆಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೀಘ್ರವೇ ಆರೋಪಿಯನ್ನು ಬಂಧಿಸಲಾಗುತ್ತದೆ. ಕಳೆದ ಎರಡು ಮೂರು ದಿನಗಳ ತನಿಖೆಯಲ್ಲಿ ಮಹತ್ವದ ಮಾಹಿತಿಗಳು ದೊರೆತಿವೆ. ಆರೋಪಿ ಬಸ್‍ನಲ್ಲಿ ಸಂಚರಿಸಿರುವುದು ಎಲ್ಲರಿಗೂ ಗೊತ್ತಿದೆ. ಪದೇ ಪದೇ ಬಟ್ಟೆ ಬದಲಾಯಿಸಿದ್ದಾನೆ. ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ್ದಾನೆ ಎಂಬ ಸುಳಿವು ದೊರೆತಿದೆ. ತನಿಖೆಯ ಹಿತದೃಷ್ಟಿಯಿಂದ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. +ಈವರೆಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ಬಂಧಿಸಿಲ್ಲ. ಈ ಬಗ್ಗೆ ತಪ್ಪು ಮಾಹಿತಿ ಇದೆ. ಮುಖ್ಯಮಂತ್ರಿಯವರೂ ಕೂಡ ಅಸ್ಪಷ್ಟ ಮಾಹಿತಿಯಿಂದ ಐದು ಮಂದಿ ಆರೋಪಿಗಳ ಬಂಧನವಾಗಿದೆ ಎಂದು ಹೇಳಿಬಿಟ್ಟಿದ್ದಾರೆ. ಆದರೆ ಯಾರನ್ನೂ ಬಂಧಿಸಿಲ್ಲ ಎಂದರು. ಶಂಕಿತರನ್ನು ಕರೆದು ವಿಚಾರಣೆ ನಡೆಸಿ ಕಳುಹಿಸಲಾಗಿದೆ. ಮಾಹಿತಿ ಕಲೆ ಹಾಕುವ ಸಲುವಾಗಿ ಕರೆತಂದವರನ್ನು ಬಂಧಿಸಿಲ್ಲ. +ರಾಷ್ಟ್ರೀಯ ತನಿಖಾ ದಳ ನಿನ್ನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕಿತನ ಭಾವಚಿತ್ರವನ್ನು ಬಹಿರಂಗಪಡಿಸಿ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದೆ. ತನಿಖೆ ಮಹತ್ವದ ಹಂತದಲ್ಲಿದ್ದು, ಶೀಘ್ರವಾಗಿಯೇ ಆರೋಪಿಯನ್ನು ಸೆರೆ ಹಿಡಿಯಲಾಗುವುದು ಎಂದರು. \ No newline at end of file diff --git a/eesanje/url_46_213_3.txt b/eesanje/url_46_213_3.txt new file mode 100644 index 0000000000000000000000000000000000000000..4ef6c62af64af9eb1f239c99394eea6e9b93d720 --- /dev/null +++ b/eesanje/url_46_213_3.txt @@ -0,0 +1,7 @@ +ಸಿಎಂ ಡಿಸಿಎಂಗೆ ಜೀವ ಬೆದರಿಕೆ ಹಾಕಿದ ಇ-ಮೇಲ್ ಮೂಲ ಶೋಧಕ್ಕೆ ಮುಂದಾದ ಪೊಲೀಸರು +ಬೆಂಗಳೂರು, ಮಾ.6- ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಇತರರಿಗೆ ಬಂದಿರುವ ಜೀವ ಬೆದರಿಕೆ ಈಮೇಲ್ ಕರೆಯ ಬೆನ್ನು ಹತ್ತಿರುವ ನಗರ ಪೊಲೀಸರು ಈಮೇಲ್ ಮೂಲ ಶೋಸಲು ಮುಂದಾಗಿದ್ದಾರೆ. +ಈ ಕುರಿತಂತೆ ಸ್ವಿಜರ್ಲ್ಯಾಂಡ್ನಲ್ಲಿರುವ ಸಂಸ್ಥೆಗೆ ಪತ್ರ ಬರೆದು ಮಾಹಿತಿ ಕೋರಿರುವ ಪೊಲೀಸರು ಅಲ್ಲಿನ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಶಾಹಿದ್ ಖಾನ್ ಎಂಬ ಹೆಸರಿನಲ್ಲಿ ಬಂದಿರುವ ಈ ಮೇಲ್ ವಿಷಯದ ಮಾಹಿತಿ ಕೋರಿ ಸ್ಟಿಜರ್ಲ್ಯಾಂಡ್ ಮೂಲದ ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಸಂಸ್ಥೆಗೆ ಪೊಲೀಸರು ಪತ್ರ ಬರೆದಿದ್ದಾರೆ. +ಈ ವ್ಯಕ್ತಿ ಪೊ್ರೀಟೊಮೇಲ್.ಕಾಮ್ ಮೂಲಕ ಈಮೇಲ್ ಮಾಡಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ಪೊಲೀಸರು ಪತ್ರ ಬರೆದು ಸಂಸ್ಥೆಯ ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಎಂಡ್ ಟು ಎಂಡ್ ಎನ್ಕ್ರಿಪ್ಟೆಡ್ ಇ ಮೇಲ್ ಸರ್ವಿಸ್ ನೀಡುವ ಸ್ಟಿಜರ್ಲ್ಯಾಂಡ್ ಮೂಲದ ಕಂಪನಿಯಾಗಿದ್ದು ಈ ವ್ಯಕ್ತಿ ಕಳುಹಿಸಿರುವ ಜೀವ ಬೆದರಿಕೆ ಕರೆಯ ಬಗ್ಗೆ ಅಗತ್ಯ ಮಾಹಿತಿ ನೀಡುವಂತೆ ಕೇಳಿಕೊಳ್ಳಲಾಗಿದೆ. +2013 ರಲ್ಲಿ ಸ್ವಿಜರ್ಲ್ಯಾಂಡ್ನ ಪ್ಲಾನ್ -ಲೆಸ್-ಔಟ್ಸ್ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಡ್ ಟು ಎಂಡ್ ಸಂಸ್ಥೆ ಶೀಘ್ರದಲ್ಲೇ ಮಾಹಿತಿ ನೀಡುವ ಸಾಧ್ಯತೆ ಇದ್ದು, ಅಲ್ಲಿನ ಮಾಹಿತಿ ದೊರೆತ ನಂತರ ತನಿಖೆ ಚುರುಕುಗೊಳಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಏನಿದು ಜೀವಬೆದರಿಕೆ ಪ್ರಕರಣ:ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ನಗರ ಪೊಲೀಸ್ ಆಯುಕ್ತ ದಯಾನಂದ ಸೇರಿದಂತೆ 10ಕ್ಕೂ ಹೆಚ್ಚು ಗಣ್ಯರನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ಶಾಹಿದ್ ಖಾನ್ ಎಂಬ ಹೆಸರಿನಲ್ಲಿ ಜೀವ ಬೆದರಿಕೆ ಈಮೇಲ್ ಕಳುಹಿಸಿದ್ದ ಮಾತ್ರವಲ್ಲ, ಮುಂದಿನ ಶನಿವಾರ ನಗರದಲ್ಲಿ ಅಂಬಾರಿ ಉತ್ಸವ ಬಸ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಬಾಂಬ್ ಸೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. +ರಾಮೇಶ್ವರಂ ಕೆಫೆ ಸೋಟ ಪ್ರಕರಣದ ಬೆನ್ನಲ್ಲೇ ಈ ವ್ಯಕ್ತಿ ಈಮೇಲ್ ಮಾಡಿ ರಾಮೇಶ್ವರಂ ಕೆಫೆ ಪ್ರಕರಣ ಕೇವಲ ಟ್ರಯಲ್ ಮುಂದಿದೆ ಮಾರಿ ಹಬ್ಬ ಎಂದು ಎಚ್ಚರಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. \ No newline at end of file diff --git a/eesanje/url_46_213_4.txt b/eesanje/url_46_213_4.txt new file mode 100644 index 0000000000000000000000000000000000000000..f4d20ddba65bafe07ddf4ad7ad51b327dae695e1 --- /dev/null +++ b/eesanje/url_46_213_4.txt @@ -0,0 +1,5 @@ +ಬಾಂಬ್ ಬೆದರಿಕೆ ಇ-ಮೇಲ್ : ಬೆಂಗಳೂರಿನಾದ್ಯಂತ ಹೈಅಲರ್ಟ್ +ಬೆಂಗಳೂರು,ಮಾ.6- ಜನನಿಬಿಡ ಸ್ಥಳಗಳಲ್ಲಿ ಬಾಂಬ್ ಸೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ತಪಾಸಣೆಯನ್ನು ಚುರುಕುಗೊಳಿಸಿದೆ. ಲಗೇಜ್ ಬ್ಯಾಗ್ಗಳನ್ನು ಪೊಲೀಸರು ಖುದ್ದು ಪರಿಶೀಲನೆಗೊಳಪಡಿಸುತ್ತಿದ್ದು, ಸೋಟಕ ಪತ್ತೆ ಯಂತ್ರಗಳ ಮೂಲಕ ತಪಾಸಣೆ ನಡೆಸುತ್ತಿದ್ದಾರೆ. +ಅನುಮಾನ ಬಂದ ಕಡೆ ಬ್ಯಾಗ್ಗಳನ್ನು ಇಂಚಿಂಚೂ ಪರಿಶೀಲನೆಗೊಳಪಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಆಯುಕ್ತರು, ಪೊಲೀಸ್ ಮಹಾ ನಿರ್ದೇಶಕರ ಕಚೇರಿಗೆ ಇ-ಮೇಲ್ ಬಂದಿದ್ದು, ಅದರಲ್ಲಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಒಂದು ವೇಳೆ ಹಣ ನೀಡದೇ ನಿರ್ಲಕ್ಷಿಸಿದರೆ ಮುಂದಿನ ಹಂತದಲ್ಲಿ ಅಂಬಾರಿ ಉತ್ಸವ ಬಸ್ಗಳಲ್ಲಿ ಬಾಂಬ್ ಸೋಟ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. +ಜನನಿಬಿಡ ಸ್ಥಳಗಳನ್ನು ಗುರಿಯಾಗಿಸಿ ದಾಳಿ ಮಾಡುವುದಾಗಿ ಬೆದರಿಕೆಯೊಡ್ಡಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮುಂಜಾಗ್ರತಾ ಕ್ರಮ ವಹಿಸಲು ಪೊಲೀಸರಿಗೆ ಸೂಚನೆ ನೀಡಿದೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿ ಪ್ರತಿಯೊಂದು ಲಗೇಜ್ ಬ್ಯಾಗ್ಗಳನ್ನು ತಪಾಸಣೆಗೊಳಪಡಿಸಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಸ್ಗಳಲ್ಲೂ ಕೂಡ ಅನಾಮಧೇಯ ಬ್ಯಾಗ್ಗಳನ್ನು ಪರಿಶೀಲಿಸಲಾಗುತ್ತಿದೆ. ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. +ನಗರದಲ್ಲಿ ಮಾ.1 ರಂದು ರಾಮೇಶ್ವರಂ ಕೆಫೆ ಸೋಟದ ಬಳಿಕ ಆತಂಕದ ವಾತಾವರಣ ನಿರ್ಮಾಣವಾಗಿದೆ.ಸೋಟಗೊಳಿಸಿದ ದುಷ್ಕøತ್ಯವೆಸಗಿದ ಆರೋಪಿಯನ್ನು ಪತ್ತೆ ಹಚ್ಚಲು 5 ದಿನ ಕಳೆದರೂ ಬಂಸಲಾಗಿಲ್ಲ. ಅತ್ಯಂತ ವ್ಯವಸ್ಥಿತವಾಗಿ ನಡೆದಿರುವ ಸೋಟ ಪ್ರಕರಣ ಪೊಲೀಸರಿಗಷ್ಟೇ ಅಲ್ಲ, ರಾಷ್ಟ್ರೀಯ ತನಿಖಾ ದಳಕ್ಕೂ ಸವಾಲಾಗಿದೆ.ಈ ನಡುವೆ ಕಳೆದ ನಾಲ್ಕು ದಿನಗಳ ಹಿಂದೆ ಪ್ರಮುಖರ ಕಚೇರಿಗಳಿಗೆ ಬಂದಿದ್ದ ಇ-ಮೇಲ್ ಬೆದರಿಕೆ ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ. \ No newline at end of file diff --git a/eesanje/url_46_213_5.txt b/eesanje/url_46_213_5.txt new file mode 100644 index 0000000000000000000000000000000000000000..3dcae1bd3557bec6550a05e64f1be57b8154fe07 --- /dev/null +++ b/eesanje/url_46_213_5.txt @@ -0,0 +1,10 @@ +ರಾಮೇಶ್ವರಂ ಕೆಫೆ ಬಾಂಬರ್ ಸುಳಿವು ನೀಡಿದವರೆಗೆ 10 ಲಕ್ಷ ಬಹುಮಾನ ಘೋಷಣೆ +ಬೆಂಗಳೂರು, ಮಾ.6- ನಗರದ ಐಟಿಪಿಎಲ್ ರಸ್ತೆಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ನೀಡಿದವರಿಗೆ ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಘೋಷಿಸಿದೆ. +ಮಾರ್ಚ್ ಒಂದರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ ಶಂಕಿತ ಆರೋಪಿಯ ಭಾವಚಿತ್ರ ಬಿಡುಗಡೆ ಮಾಡಿರುವ ಎನ್ಐಎ, ಆರೋಪಿಯನ್ನು ಬಂಧಿಸಲು ಅನುಕೂಲವಾಗುವ ಮಾಹಿತಿ ನೀಡಿದವರಿಗೆ ಈ ನಗದು ಬಹುಮಾನ ನೀಡುವುದಾಗಿ ಪ್ರಕಟಿಸಿದೆ. +ಅಲ್ಲದೆ, ಆರೋಪಿಯ ಬಗ್ಗೆ ಸುಳಿವು ನೀಡಿದವರ ಮಾಹಿತಿಯನ್ನು ಗೌಪ್ಯವಾಗಿಡುವುದಾಗಿ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29510900, 8904241100, ಇ ಮೇಲ್: ..@. ಸಂಪರ್ಕಿಸಬಹುದಾಗಿದೆ ಎಂದು ಎನ್ಐಎ ಬಿಡುಗಡೆ ಮಾಡಿರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದೆ. + 10 . .../F4kYophJFt +ಬಾಂಬರ್ ಪತ್ತೆಗೆ ಮ್ಯಾಪಿಂಗ್ :ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸೋಟಿಸಿ ಪರಾರಿಯಾಗಿರುವ ದುಷ್ಕರ್ಮಿಗಾಗಿ ಸಿಸಿಬಿ ಪೊಲೀಸ್ ತಂಡಗಳು ಮ್ಯಾಪಿಂಗ್ ಮಾಡಿ ಮಾಹಿತಿ ಕಲೆ ಹಾಕುತ್ತಿವೆ. ಸೋಟ ಸಂಭವಿಸಿ 5 ದಿನ ಕಳೆದರೂ ಆರೋಪಿಯ ಸುಳಿವು ಸಿಕ್ಕಿಲ್ಲ. ಆತನ ಪತ್ತೆಗಾಗಿ ಸಿಸಿಬಿ ಪೊಲೀಸ್ ತಂಡಗಳು ಹರಸಾಹಸಪಡುತ್ತಿವೆ. ವಿವಿಧ ಆಯಾಮಗಳಲ್ಲಿ ಆರೋಪಿಯ ಸುಳಿವಿಗಾಗಿ ಬೆನ್ನತ್ತಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಪತ್ತೆಗಾಗಿ ಮ್ಯಾಪಿಂಗ್ ಮಾಡಿದ್ದಾರೆ. +ಆರೋಪಿಯು ಕೆಫೆಗೆ ಬಂದು ಹೋದ ಮಾರ್ಗಗಳಲ್ಲಿ ಹಾಗೂ ಕೆಫೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ.ಆರೋಪಿಯು ಸ್ಥಳೀಯನೇ ಅಥವಾ ಹೊರರಾಜ್ಯದವನೇ, ಎಲ್ಲಿಂದ ಆತ ಪ್ರಯಾಣ ಆರಂಭಿಸಿದ, ಎಲ್ಲಿ ಪ್ರಯಾಣ ಕೊನೆಗೊಳಿಸಿ ಎಲ್ಲಿಗೆ ಹೋಗಿದ್ದಾನೆಂಬ ಯಾವುದಾದರೊಂದು ಮಾರ್ಗದಲ್ಲಿ ಸುಳಿವು ಸಿಕ್ಕಿದರೂ ಸಹ ಆರೋಪಿಯ ಪತ್ತೆಗೆ ಸಹಕಾರಿಯಾಗಲಿದೆ.ಆತ ಎಲ್ಲಿಯೂ ತನ್ನ ಮುಖ ಚಹರೆ ಗುರುತು ಪತ್ತೆಯಾಗದಂತೆ ಟೋಪಿ ಧರಿಸಿ ಕನ್ನಡಕ ಹಾಕಿಕೊಂಡು ಮಾಸ್ಕ್ ಹಾಕಿ ಬಹಳ ಚಾಣಾಕ್ಷತೆ ವಹಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. +ಓಡಾಡಿದ ಸ್ಥಳಗಳಲ್ಲಿ ಆತ ಚಾಲಾಕಿತನದಿಂದ ಎಲ್ಲಿಯೂ ತನ್ನ ಮುಖ ಕಾಣದಂತೆ ಮರೆಮಾಚಿದ್ದಾನೆ. ಸಿಸಿ ಕ್ಯಾಮೆರಾ ದೃಶ್ಯಾವಳಿಗಳಲ್ಲೂ ಕೂಡ ಸ್ಪಷ್ಟವಾಗಿ ಆತನ ಮುಖ ಕಾಣುತ್ತಿಲ್ಲ. ಸ್ವಲ್ಪ ಸ್ವಲ್ಪ ಮಾತ್ರ ಕಾಣುತ್ತಿದ್ದು, ಯಾವುದಾದರೂ ಸಿಸಿಕ್ಯಾಮೆರಾದಲ್ಲಿ ಸಂಪೂರ್ಣ ಮುಖ ಕಾಣಿಸುತ್ತದೆಯೇ ಎಂದು ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಿಸಿಕ್ಯಾಮೆರಾಗಳನ್ನು ಕೂಲಂಕುಷವಾಗಿ ತಂಡಗಳು ಪರಿಶೀಲನೆ ನಡೆಸುತ್ತಿವೆ. +ಆರೋಪಿಯು ಕೆಫೆಗೆ ಬಂದು ಇಡ್ಲಿ ತಿಂದು ತನ್ನ ಬಳಿ ಇದ್ದ ಕಪ್ಪು ಬಣ್ಣದ ಬ್ಯಾಗ್ನ್ನು ಕೈತೊಳೆಯುವ ಜಾಗದಲ್ಲಿಟ್ಟು, ಹೊರಗೆ ನಡೆದುಕೊಂಡು ಹೋಗಿ ಕುಂದಲಹಳ್ಳಿಯಲ್ಲಿ ಬಸ್ ಹತ್ತಿ ಕಾಡುಗೋಡಿಯಲ್ಲಿ ಇಳಿದಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.ಆ ಸ್ಥಳದಿಂದ ಆರೋಪಿ ಎಲ್ಲಿಗೆ ಹೋಗಿದ್ದಾನೆಂಬ ಬಗ್ಗೆ ಸ್ಪಷ್ಟ ಸುಳಿವು ಸಿಕ್ಕಿಲ್ಲ. ಹೀಗಾಗಿ ಕುಂದಲಹಳ್ಳಿ, ಕೆ.ಆರ್.ಪುರ, ಬಯ್ಯಪ್ಪನಹಳ್ಳಿ ಮೆಟ್ರೊ ನಿಲ್ದಾಣ, ಮಾರತ್ತಹಳ್ಳಿ , ಹೆಬ್ಬಾಳ ಹಾಗೂ ಎಚ್ಎಎಲ್ ಸೇರಿದಂತೆ ರಾಮೇಶ್ವರ ಕೆಫೆ ವ್ಯಾಪ್ತಿಯ ನಾಲ್ಕೈದು ಕಿ.ಮೀ ಸುತ್ತಮುತ್ತಲಿನ ಮಾರ್ಗದ ಪ್ರಮುಖ ರಸ್ತೆಗಳು, ಮುಖ್ಯರಸ್ತೆ ಕೂಡುವ ಸಣ್ಣ ರಸ್ತೆಗಳು, ಆಯಾಯ ಪ್ರದೇಶಗಳ ರಸ್ತೆಗಳಲ್ಲಿರುವ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಎರಡು ರೀತಿಯಲ್ಲಿ ಮ್ಯಾಪಿಂಗ್ ನಡೆಸಿದ್ದಾರೆ. +ಒಂದು ರಿವರ್ಸ್ ಮ್ಯಾಪಿಂಗ್ ಮತ್ತೊಂದು ಫಾರ್ವಡ್ ಮ್ಯಾಪಿಂಗ್ ಮಾಡಿ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಯು ಘಟನೆಗೂ ಮುನ್ನ ಯಾವ ಮಾರ್ಗದಲ್ಲಿ ಹೇಗೆ ಕೆಫೆಗೆ ಬಂದ ನಂತರ ಯಾವ ಮಾರ್ಗದಲ್ಲಿ ಹೇಗೆ ಹೋದ ಎಂಬ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಒಟ್ಟಾರೆ ಈ ಪ್ರಕರಣ ನಗರ ಪೊಲೀಸರ ನಿದ್ದೆಗೆಡಿಸಿದ್ದು, ಆರೋಪಿ ಪತ್ತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. \ No newline at end of file diff --git a/eesanje/url_46_213_6.txt b/eesanje/url_46_213_6.txt new file mode 100644 index 0000000000000000000000000000000000000000..5a7c9368ffada4b036bda7ec38a5a8c80d5fda1a --- /dev/null +++ b/eesanje/url_46_213_6.txt @@ -0,0 +1,4 @@ +ವಿಧಾನಸೌಧದಲ್ಲಿ ಭದ್ರತೆ ಹೆಚ್ಚಳ +ಬೆಂಗಳೂರು,ಮಾ.6- ನಗರದ ರಾಮೇಶ್ವರಂ ಕೆಫೆ ಬಾಂಬ್ ಸೋಟ ಪ್ರಕರಣದ ನಂತರ ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧದ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. +ವಿಧಾನಸೌಧ, ವಿಕಾಸಸೌಧ ಪ್ರವೇಶಿಸುವ ದ್ವಾರಗಳಲ್ಲಿ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ತೀವ್ರ ತಪಾಸಣೆಗೊಳಪಡಿಸಿ ಪೊಲೀಸರು ಒಳಪ್ರವೇಶಿಸಲುಉ ಅವಕಾಶ ಮಾಡಿಕೊಡುತ್ತಿದ್ದಾರೆ. ಪ್ರವೇಶದ್ವಾರದಲ್ಲೇ ಬ್ಯಾಗ್ಗಳನ್ನು ಪರಿಶೀಲನೆ ಮಾಡಿದ ನಂತರ ಒಳಹೋಗಲು ಅವಕಾಶ ಮಾಡಿಕೊಡಲಾಗುತ್ತಿದೆ. +ಎರಡು ಸೌಧಗಳ ನಾಲ್ಕು ದಿಕ್ಕಿನಲ್ಲಿರುವ ಪ್ರವೇಶ ದ್ವಾರಗಳಲ್ಲಿ ಲೋಹ ಶೋಧದ ಮೂಲಕ ಪರಿಶೀಲನೆ ಮಾಡಲಾಗುತ್ತಿದೆ. ಬ್ಯಾಗ್ಗಳನ್ನು ಕಡ್ಡಾಯವಾಗಿ ಸ್ಕ್ಯಾನ್ ಮಾಡಿದ ನಂತರ ಒಳಪ್ರವೇಶಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಪರಿಚಯಸ್ಥರು, ಅಧಿಕಾರಿ, ಸಿಬ್ಬಂದಿ ಎಂಬ ಯಾವ ಸಡಿಲಿಕೆಯೂ ಇಲ್ಲದೆ ಕಟ್ಟುನಿಟ್ಟಿನ ತಪಾಸಣೆಯನ್ನು ಮಾಡಲಾಗುತ್ತಿದೆ. \ No newline at end of file diff --git a/eesanje/url_46_213_7.txt b/eesanje/url_46_213_7.txt new file mode 100644 index 0000000000000000000000000000000000000000..f6339258ad80ac578ead12fad3a2bcfa4df849a6 --- /dev/null +++ b/eesanje/url_46_213_7.txt @@ -0,0 +1,7 @@ +ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಆಯ್ಕೆ? +ಬೆಂಗಳೂರು,ಮಾ.6- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ.ಈ ಕ್ಷೇತ್ರದಿಂದ ಮಂಜುನಾಥ್ ಅವರ ಲ್ಲದೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಇನ್ನು ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಎನ್ಡಿಎ ಮೈತ್ರಿಕೂಟದ ರಾಜ್ಯ ನಾಯಕರು ನಿನ್ನೆ ಎಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಭೆ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆಸಿದ್ದಾರೆ.ಸಭೆಯಲ್ಲಿ ಈ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ರ್ಪಸಬೇಕೆಂಬ ಒತ್ತಡವನ್ನು ಹಾಕಲಾಗಿದೆ. ಅಲ್ಲದೆ ಡಾ.ಸಿ.ಎನ್.ಮಂಜುನಾಥ್ ಹಾಗೂ ಸಿ.ಪಿ.ಯೋಗೇಶ್ವರ್ ಅವರನ್ನು ಸ್ಪರ್ಧೆಗಿಳಿಸುವ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಾಗಿದೆ. +ಈ ಕ್ಷೇತ್ರದಿಂದ ಎನ್ಡಿಎ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಮಾಡಲಿದ್ದಾರೆ ಎಂಬ ವಿಚಾರ ಈಗಾಗಲೇ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮೂವರಲ್ಲಿ ಯಾರನ್ನು ಕಣಕ್ಕಿಳಿಸಿದರೆ ಗೆಲುವು ಸುಲಭವಾಗಲಿದೆ ಎಂಬ ವಿಚಾರದ ಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ. +ಸಭೆಯಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವಿವಿಧ ವಿಧಾಸಭಾ ಕ್ಷೇತ್ರಗಳ ಮುಖಂಡರು ಭಾಗವಹಿಸಿದ್ದರು. ಪ್ರಮುಖವಾಗಿ ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಮುನಿರತ್ನ, ಡಿ.ನಾಗರಾಜಯ್ಯ, ರಾಜ್ಯಸಭೆಯ ಮಾಜಿ ಸದಸ್ಯ ಡಿ.ಕುಪೇಂದ್ರ ರೆಡ್ಡಿ, ಶಾಸಕ ಎಂ.ಕೃಷ್ಣಪ್ಪ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್, ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ಜಯಮುತ್ತು, ನಿರ್ದೇಶಕ ಡಾ.ನಾರಾಯಣ ಸ್ವಾಮಿ, ಕೃಷ್ಣಕುಮಾರ್, ಕುಣಿಗಲ್ ಜಗದೀಶ್, ಕೊಟ್ಟಿಗೆರೆ ಮಂಜುನಾಥ್, ಸಿದ್ದಮರಿಗೌಡ ಕನಕಪುರ ಸೇರಿದಂತೆ ಬಿಜೆಪಿ, ಜೆಡಿಎಸ್ನ ಹಲವು ಮುಖಂಡರು ಭಾಗವಹಿಸಿ ಚರ್ಚೆ ನಡೆಸಿದ್ದಾರೆ. +ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆಗಿಳಿಸಲಿರುವ ಅಭ್ಯರ್ಥಿಯನ್ನು ಶೀಘ್ರ ಆಯ್ಕೆ ಮಾಡಿ ಅಕೃತವಾಗಿ ಪ್ರಕಟಿಸುವಂತೆ ಸಭೆಯಲ್ಲಿ ಭಾಗವಹಿಸಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಒತ್ತಾಯಿಸಿದ್ದಾರೆ.ಚುನಾವಣಾ ವೇಳಾಪಟ್ಟಿ ಪ್ರಕಟವಾಗುವವರೆಗೂ ಕಾಯದೇ ಅಕೃತ ಅಭ್ಯರ್ಥಿಯನ್ನು ಪ್ರಕಟಿಸಬೇಕು. ಅವರ ಗೆಲುವಿಗೆ ಉಭಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಿದ್ದಾರೆ. +ಶೀಘ್ರ ಅಭ್ಯರ್ಥಿ ಘೋಷಣೆ ಮಾಡುವ ಮುಖಂಡರ ಆಗ್ರಹಕ್ಕೆ ಎಚ್.ಡಿ.ಕುಮಾರಸ್ವಾಮಿ ಕೂಡ ಸಮ್ಮತಿ ಸೂಚಿಸಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ಯಾರೇ ಸ್ಪರ್ಧೆಗಿಳಿದರೂ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_213_8.txt b/eesanje/url_46_213_8.txt new file mode 100644 index 0000000000000000000000000000000000000000..580585ad983b26ebc19220731127b1b771c56b9a --- /dev/null +++ b/eesanje/url_46_213_8.txt @@ -0,0 +1,9 @@ +ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ +ಬೆಂಗಳೂರು,ಮಾ.6- ಬೆಂಗಳೂರು ರಾಮೇಶ್ವರಂ ಕೆಫೆ ಸೋಟ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹೀಗೇ ಮುಂದುವರೆದರೆ ಶೀಘ್ರವೇ ಪ್ರಕರಣ ಭೇದಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಬಹುತೇಕ ಆರೋಪಿಯನ್ನು ಪತ್ತೆ ಹಚ್ಚುವ ಸನಿಹದಲ್ಲಿದ್ದೇವೆ ಎಂದು ಹೇಳಿದರು. +ಅಧಿಕಾರಿಗಳು ತಮಗೆ ನೀಡಿರುವ ಮಾಹಿತಿ ಪ್ರಕಾರ ಮಹತ್ವದ ಮಾಹಿತಿಗಳು ಸಿಕ್ಕಿವೆ. ಹೊಸ ಹೊಸ ವಿಚಾರಗಳು ದೊರೆತಿವೆ. ಈವರೆಗೂ ಯಾರನ್ನೂ ಬಂಧಿಸಿಲ್ಲ. ಅನುಮಾನ ಬಂದವರನ್ನು ಕರೆತಂದು ಹೇಳಿಕೆ ಪಡೆಯುವುದು, ಮಾಹಿತಿ ಪಡೆಯುವುದನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. +ರಾಷ್ಟ್ರೀಯ ತನಿಖಾ ದಳ ಈವರೆಗೂ ಅಕೃತವಾಗಿ ಪ್ರಕರಣದ ತನಿಖೆಯ ಉಸ್ತುವಾರಿ ವಹಿಸಿಕೊಂಡಿಲ್ಲ. ನಿನ್ನೆ ಬೆಂಗಳೂರಿಗೆ ಬಂದು ತನಿಖೆಯ ಹೊಣೆಗಾರಿಕೆ ತೆಗೆದುಕೊಳ್ಳಬೇಕಿತ್ತು. ಆದರೆ ಎನ್ಐಎ ಅಧಿಕಾರಿಗಳು ಬಂದಿಲ್ಲ. ಅವರು ಬಂದು ಅಕೃತವಾಗಿ ಮಾಹಿತಿ ಪಡೆದು ತನಿಖೆಯ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ. ಇದುವರೆಗೂ ಆ ರೀತಿ ಆಗಿಲ್ಲ. ಬಹುಶಃ ಇಂದು ಬರಬಹುದು. ಅವರು ಎಷ್ಟು ಜನರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ತಮಗೆ ಇಲ್ಲ ಎಂದರು. +ಪಾಕಿಸ್ತಾನ ಪರವಾಗಿ ವಿಧಾನಸಭೆಯಲ್ಲಿ ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗಿದೆ. ತನಿಖೆ ಅಗತ್ಯವಿದ್ದು, ಈ ಹಂತದಲ್ಲಿ ಹೆಚ್ಚಿನ ಚರ್ಚೆ ನಡೆಸುವುದು ಸೂಕ್ತವಲ್ಲ. ರಾಜ್ಯಸಭಾ ಸಮಿತಿ ಸದಸ್ಯ ನಾಸಿರ್ ಹುಸೇನ್ ಜೊತೆ ರೌಡಿಯೊಬ್ಬ ಕಾಣಿಸಿಕೊಂಡಿರುವ ಫೋಟೋಗಳು ವೈರಲ್ ಆಗಿರುವ ಬಗ್ಗೆ ಚರ್ಚೆ ಅಪ್ರಸ್ತುತ. ಪಾಕಿಸ್ತಾನದ ಪರ ಘೋಷಣೆಗೆ ಸಂಬಂಧಪಟ್ಟಂತೆ ಸರ್ಕಾರ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಂಡಿದೆ. ಬಿಜೆಪಿಯವರು ಯಾವುದೇ ಟೀಕೆ ಮಾಡಲಿ, ದೂರು ಕೊಡಲಿ, ಅದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. +ಗೆಲುವೇ ಮಾನದಂಡ :ಲೋಕಸಭಾ ಚುನಾವಣೆಯಲ್ಲಿ ಗೆಲುವೇ ಮಾನದಂಡವಾಗಿದೆ. ಹೀಗಾಗಿ ಗೆಲ್ಲುವವರಿಗೆ ಟಿಕೆಟ್ ನೀಡಲಾಗುವುದು. ಪಕ್ಷದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಲಾಗಿದೆ. ನಮ್ಮಿಂದಲೂ ಮಾಹಿತಿ ಕಲೆ ಹಾಕಿದೆ. ಕಾರ್ಯಕರ್ತರ ಅಭಿಪ್ರಾಯಗಳನ್ನೂ ಸಂಗ್ರಹಿಸಲಾಗಿದೆ ಎಂದರು. +ಕುಟುಂಬ ರಾಜಕಾರಣ, ಬೇರೆ ಬೇರೆ ವಿಚಾರಗಳ ಚರ್ಚೆ ಸದ್ಯಕ್ಕೆ ಅಪ್ರಸ್ತುತ. ಸದ್ಯಕ್ಕೆ ನಾವು ಗೆಲ್ಲಬೇಕು, ಅಷ್ಟೇ ಮುಖ್ಯ. ಉಳಿದ ಎಲ್ಲಾ ವಿಚಾರಗಳು ಅನಂತರ ಚರ್ಚೆಯಾಗುತ್ತವೆ. ನಾಳೆ ಕೇಂದ್ರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. +ಈವರೆಗೂ 2 ಸ್ಕ್ರೀನಿಂಗ್ ಕಮಿಟಿ ಸಭೆಗಳು ನಡೆದಿವೆ. ಅದರಲ್ಲಿ ಬಹುತೇಕ ಒಂದೊಂದು ಕ್ಷೇತ್ರಕ್ಕೆ ಒಂದೊಂದೇ ಹೆಸರನ್ನು ನಿರ್ಣಯಿಸಲಾಗಿದೆ. ನಾಳೆ ನಡೆಯುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬಹುತೇಕ ವಾರ, ಹತ್ತು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಯಿದೆ. ಅದನ್ನು ಪಕ್ಷದ ಅಧ್ಯಕ್ಷರು ಖಚಿತಪಡಿಸುತ್ತಾರೆ ಎಂದರು. +ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಮ್ಮೆಲೇ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಯಲ್ಲಿ ಆಯಾ ಉಸ್ತುವಾರಿ ಸಚಿವರು, ಶಾಸಕರು, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯದ ನಾಯಕರು ಕೂಡ ಇದೇ ರೀತಿಯ ತಾಕೀತು ಮಾಡಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_213_9.txt b/eesanje/url_46_213_9.txt new file mode 100644 index 0000000000000000000000000000000000000000..52368ed4b608aee624eff97d32b633762cbbc5ee --- /dev/null +++ b/eesanje/url_46_213_9.txt @@ -0,0 +1,4 @@ +“ಮುಂದಿನ ಸಿಎಂ ಶಿವಣ್ಣ” : ಕಾರ್ಯಕರ್ತರ ಘೋಷಣೆ +ಹುಬ್ಬಳ್ಳಿ,ಮಾ.6- ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಕೇಳಿಬಂದಿದೆ.ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದರು. ಸುದ್ದಿಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಮಾತನಾಡಲು ಆಗಮಿಸು ತ್ತಿದ್ದಂತೆ ಕೆಲವರು ಮುಂದಿನ +ಮುಖ್ಯಮಂತ್ರಿ ಶಿವಣ್ಣ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ ಮೌನವಾಗಿದ್ದು, ಘೋಷಣೆಗಳನ್ನುಆಲಿಸಿದ್ದಾರೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಯತೀಂದ್ರ ಮುಂದಿನ 5 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿಕೆ ನೀಡಿದ್ದರು. ಆ ಕುರಿತಂತೆ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು. +ಇತ್ತ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ದಲಿತರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ ಎಂದು ಅಸಮಾಧಾನ ಹೊರಹಾಕಿದ್ದ ಬೆಳವಣಿಗೆ ನಡೆದಿದೆ. \ No newline at end of file diff --git a/eesanje/url_46_214_1.txt b/eesanje/url_46_214_1.txt new file mode 100644 index 0000000000000000000000000000000000000000..4ec76f8279db2f46a1ca0ecdea290a629ce7ff1e --- /dev/null +++ b/eesanje/url_46_214_1.txt @@ -0,0 +1,10 @@ +ಮೋದಿ ದೇಶದ ಸಮರ್ಥ ನಾಯಕ : ಎಚ್‍ಡಿಡಿ +ಬೆಂಗಳೂರು,ಮಾ.5- ಪ್ರಧಾನಿ ನರೇಂದ್ರಮೋದಿ ಅವರು ದೇಶದ ಸಮರ್ಥ ನಾಯಕರಾಗಿದ್ದು, ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುತ್ತಾರೆ ಎಂಬ ನಂಬಿಕೆ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷಿಯಲ್ಲಿ ಮಾತನಾಡಿದ ಅವರು, ಒಡೆದು ಹೋಗಿದ್ದ ಕಾವೇರಿ ನ್ಯಾಯಾೀಧಿಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು. +ಬೆಂಗಳೂರಿನಲ್ಲಿ ಕುಡಿಯುವ ನೀರಿಲ್ಲದೆ ಜನರು ಕಣ್ಣೀರು ಹಾಕುತ್ತಿದ್ದಾರೆ. ಹೇಮಾವತಿ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಕೊಡುವುದಿಲ್ಲ ಎಂದು ಹೇಳಿದ್ದೀರಿ. ಹೇಮಾವತಿ ಜಲಾಶಯದ ನೀರನ್ನು ಬಳಸಿ ಬೆಂಗಳೂರು, ತುಮಕೂರು, ಹಾಸನ, ಮಂಡ್ಯ ಜಿಲ್ಲೆಗಳಿಗೆ ನೀರು ಕೊಟ್ಟು ಜನರನ್ನು ಉಳಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. +ತಮಿಳುನಾಡಿಗೆ ಮಾಸಿಕ ಎರಡೂವರೆ ಟಿಎಂಸಿ ಅಡಿಯಂತೆ ಮೇ ಅಂತ್ಯದವರೆಗೆ 10 ಟಿಎಂಸಿ ನೀರು ಬಿಡಬೇಕಾಗಿದೆ. ಆದರೆ ಬೆಂಗಳೂರಿನ ಜನತೆ ನೀರಿಲ್ಲದೆ ಕಣ್ಣೀರು ಹಾಕುತ್ತಿದ್ದಾರೆ. ನಾನು ಸಂಸತ್‍ನಲ್ಲಿ ಕುಡಿಯುವ ನೀರಿನ ವಿಚಾರ ಪ್ರಸ್ತಾಪಿಸಿದಾಗ ಮನಮೋಹನ್ ಸಿಂಗ್ ಸರ್ಕಾರದಲ್ಲಿದ್ದ ರಾಜ್ಯ ಪ್ರತಿನಿಧಿಸುವ ನಾಲ್ವರು ಸಚಿವರು ಸಹಾಯಕ್ಕೆ ಬರಲಿಲ್ಲ ಎಂದರು. +ಜಲಸಂಪನ್ಮೂಲ ಖಾತೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಂದಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಟ್ಯಾಂಕರ್‍ಗೆ ಎರಡೂವರೆ ಸಾವಿರ ರೂ. ನೀಡಬೇಕಾದ ಪರಿಸ್ಥಿತಿ ಎದುರಾಗಿದೆ. ಬೆಳಗ್ಗೆಯಿಂದ ಸಂಜೆಯವರೆಗೂ ಮೋದಿ ವಿರುದ್ದ ಆರೋಪ ಮಾಡುತ್ತಾ, ಟೀಕೆ ಮಾಡುತ್ತಾ ಕಾಲ ಕಳೆಯುತ್ತೀರಿ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಣಕಾಸು ಆಯೋಗದ ತೀರ್ಮಾನ ಮಾಡಿದ್ದು ಬಿಟ್ಟರೆ ಏನು ಕೊಟ್ಟಿದ್ದಾರೆ ಹೇಳಿ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿ ಏನು ಕೊಟ್ಟಿದ್ದಾರೆ ಹೇಳಿ, ಪ್ರಧಾನಿ ಮೋದಿಯವರು ರಾಷ್ಟ್ರದ ಸಮರ್ಥ ನಾಯಕ. ಇಡೀ ವಿಶ್ವ ಒಪ್ಪಿಕೊಂಡಿದೆ. ಅವರ ಬಗ್ಗೆ ಮಾತನಾಡಲು ಇವರು ಯಾರು? ಇತಿಮಿತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗಾಳಿ ನಡೆಸಿದರು. +ಜೆಡಿಎಸ್ ಬಗ್ಗೆ ಮುಖ್ಯಮಂತ್ರಿ ನೀಡಿದ್ದ ಹೇಳಿಕೆಗಳು ಪತ್ರಿಕೆಗಳಲ್ಲಿ ವರದಿಯಾಗಿರುವುದನ್ನು ಉಲ್ಲೇಖಿಸಿ ಮಾತನಾಡಿದ ಗೌಡರು, ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎಷ್ಟು ದಿನದಿಂದ ಇದೆ, ಎಷ್ಟು ಬಗೆಹರಿಸಿದ್ದೀರಿ, 10 ತಿಂಗಳಲ್ಲಿ ಎಷ್ಟು ಪ್ರವಾಸ ಮಾಡಿದ್ದೀರಿ, ವಿಧಾನಮಂಡಲದ ಅಧಿವೇಶನ ಹೊರತುಪಡಿಸಿದರೆ ಈ ಮಂತ್ರಿ, ಆ ಮಂತ್ರಿ ಮನೆಯಲ್ಲಿ ಊಟ, ಪಕ್ಷದ ಜಂಟಿ ಸಭೆ ಹೊರತು ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದರು. +ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಫಲಾನುಭವಿಗಳಿಗೆ ತಲುಪಿದೆಯೋ ಇಲ್ಲವೋ ಎಂಬುದರ ಪರಿಶೀಲನೆ, ವಿಶ್ಲೇಷಣೆ ಮಾಡಲು ಐವರು ಮಾಜಿ ಸಚಿವರನ್ನು ನೇಮಿಸಿದ್ದೀರಿ, ಜಿಲ್ಲಾ ಮಟ್ಟದಲ್ಲೂ ನೇಮಿಸುವುದಾಗಿ ಹೇಳಿದ್ದೀರಿ, ಇದು ಎಂಥ ಆಡಳಿತ? ತೀವ್ರ ಬರದ ನಡುವೆಯೂ ನಿಗಮ ಮಂಡಳಿಗಳ 95 ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದೀರಿ ಎಂದು ಸರ್ಕಾರದ ಆಡಳಿತದ ವೈಖರಿಯನ್ನು ತರಾಟೆಗೆ ತೆಗೆದುಕೊಂಡರು. +ನೆಲಮಂಗಲಕ್ಕೆ ಹೇಮಾವತಿ ನೀರು ಕೊಡುವುದಾಗಿ ಮೂರು ತಿಂಗಳ ಹಿಂದೆ ಹೇಳಿದ್ದರು. ಈಗ ವೃಷಭಾವತಿ ನೀರನ್ನು ಕೊಡುವುದಾಗಿ ಹೇಳುತ್ತಿದ್ದಾರೆ. ಜನರು ನಿಮ್ಮನ್ನ ನಂಬಬೇಕಾ? ಎಂದು ವಾಗ್ದಾಳಿ ನಡೆಸಿದರು. ಎತ್ತಿನಹೊಳೆ ಯೋಜನೆಗೆ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಲನೆ ನೀಡಲಾಗಿತ್ತು. ಆಗ 8323 ಕೋಟಿ ರೂ. ಇದ್ದದ್ದು ಈಗ 23,252 ಕೋಟಿ ರೂ.ಗೆ ಏರಿಕೆಯಾಗಿದೆ. ಈ ಯೋಜನೆಯಲ್ಲಿ ನಿಮ್ಮ ಪಾತ್ರವೇನು? ಕೋಲಾರ ಚಿಕ್ಕಬಳ್ಳಾಪುರಕ್ಕೆ ನೀರು ತರುವ ಯೋಜನೆಯಲ್ಲವೇ? ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹೇಮಾವತಿಯಿಂದ ಅರಸೀಕೆರೆಗೆ ನೀರು ಕೊಡಲಾಯಿತು. +ಐದು ಗ್ಯಾರಂಟಿಗಳಿಂದ ಜನರು ಸಂತೋಷವಾಗಿದ್ದಾರೆ ಎಂದು ಹೇಳಿದ್ದೀರಿ, ಹಾಗಾದರೆ 15 ದಿನಕ್ಕೊಮ್ಮೆ ನೀರು, ಒಂದು ಟ್ಯಾಂಕರ್ ನೀರಿಗೆ 2500 ರೂ. ಕೊಡಬೇಕೆಂದು ಕಣ್ಣೀರು ಹಾಕುತ್ತಿರುವುದು ಏಕೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಐದೂ ಪೈಸೆ ತೆಗೆದುಕೊಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಹೇಳುವ ಸಿದ್ದರಾಮಯ್ಯನವರು ಆ ಸ್ಥಾನಕ್ಕೆ ಗೌರವ ತಂದಿದ್ದಾರೆಯೇ? ತಮ್ಮ ಸಂಬಂಧಿ ಅಥವಾ ಅವರ ಸಮಾಜಕ್ಕೆ ಸೇರಿದ ಕಿರಿಯ ಅಧಿಕಾರಿಯನ್ನು ನೀರಾವರಿ ಇಲಾಖೆಗೆ ನೇಮಕ ಮಾಡಿದ್ದಾರೆ. ಇದೊಂದು ನಿದರ್ಶವಷ್ಟೇ, ಎಸಿಬಿ ರಚನೆ ಮಾಡಿದರು ಏನಾಯ್ತು ಎಂದು ಟೀಕಾ ಪ್ರಹಾರ ನಡೆಸಿದರು. +ಮಾಜಿ ಶಾಸಕ ಡಾ.ಅನ್ನದಾನಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ್, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಮೇಶ್ ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_214_10.txt b/eesanje/url_46_214_10.txt new file mode 100644 index 0000000000000000000000000000000000000000..06483e44c9720f681d7170282d5755e162865d7f --- /dev/null +++ b/eesanje/url_46_214_10.txt @@ -0,0 +1,5 @@ +ಪಾಕ್‍ಪರ ಘೋಷಣೆ ಕೂಗಿಲ್ಲ ಎಂದವರು ಕ್ಷಮೆಯಾಚಿಸಬೇಕು : ಬೊಮ್ಮಾಯಿ +ಬೆಳಗಾವಿ,ಮಾ.5- ಮಾಧ್ಯಮಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಸ್ಪಷ್ಟವಾಗಿತ್ತು. ಆದರೂ ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತುದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ದೇಶದ್ರೋಹಿಗಳಿಗಿಂತ ಇವರ ನಡೆಯೇ ಆತಂಕಕ್ಕೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್ ಪರ ಘೋಷಣೆ ಕೂಗಿದ ಸಂಬಂಧ ಎಫ್‍ಎಸ್‍ಎಲ್ ವರದಿ ಬಂದು ನಾಲ್ಕು ದಿನ ಕಳೆದಿದೆ. ಎರಡು ದಿನಗಳ ಹಿಂದೆ ಎನ್‍ಐಎ ಎಫ್‍ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಆದರೆ ಸರ್ಕಾರ ಮಾತ್ರ ಈಗಲೂ ಹೊಣೆಗೇಡಿತನದ ಹೇಳಿಕೆ ನೀಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತೇವೆ ಎಂದು ಕಾಂಗ್ರೆಸ್ ದೂರಿದೆ. ಪತ್ರಕರ್ತರನ್ನು ಗುರಿ ಮಾಡಿಕೊಂಡು ಹೇಳಿಕೆ ನೀಡುತ್ತಿದ್ದಾರೆ. ಈಗ ಎಫ್‍ಎಸ್‍ಎಲ್ ವರದಿ ಪಾಕ್ ಪರ ಘೋಷಣೆ ಕೂಗಿರುವುದು ನಿಜ ಎಂದು ಸ್ಪಷ್ಟಪಡಿಸಿದೆ. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಈಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. +ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ, ಸರ್ಕಾರ ಬಂದು 9 ತಿಂಗಳು ಕಳೆದರೂ ಯಾವುದೇ ಹೊಸ ಯೋಜನೆ ರೂಪಿಸಿಲ್ಲ. ನೀರಾವರಿ ಯೋಜನೆಗಳ ನಿರ್ಲಕ್ಷ್ಯ ಮಾಡಿದೆ. ಹಳೆಯ ಯೋಜನೆ ಮತ್ತೆ ಚಾಲನೆ ನೀಡುತ್ತಿದ್ದಾರೆ. ಅಧಿಕಾರಿಗಳು ಮಿಸ್ ಗೈಡ್ ಮಾಡುತ್ತಿದ್ದು, ಮುಖ್ಯಮಂತ್ರಿಗಳು ಇದರ ಪರಿಶೀಲನೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. +ಬೆಳಗಾವಿಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಹಿನ್ನೆಲೆ ಬೆಳಗಾವಿಯಲ್ಲೇ ಬಿಜೆಪಿ- ಜೆಡಿಎಸ್ ಮೈತ್ರಿಯ ಸೀಟು ಹಂಚಿಕೆ ಬಗ್ಗೆ ಚರ್ಚೆ ಆಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಬೆಳಗಾವಿಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ದೆಹಲಿಯಲ್ಲಿ ಆಗಲಿದೆ ಎಂದರು. ಇದೇ ವೇಳೆ ಹಾವೇರಿಯಿಂದ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ನಾನು ಈಗಾಗಲೇ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_214_11.txt b/eesanje/url_46_214_11.txt new file mode 100644 index 0000000000000000000000000000000000000000..e023202282eee07918cecb869df5fc22fabce775 --- /dev/null +++ b/eesanje/url_46_214_11.txt @@ -0,0 +1,10 @@ +ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ : ಕಾಂಗ್ರೆಸ್ ನಡೆಗೆ ವ್ಯಾಪಕ ಟೀಕೆ +ಬೆಂಗಳೂರು,ಮಾ.5- ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಆರೋಪಿಗಳ ಪರ ವಕಾಲತ್ತು ವಹಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್‍ಗಾಗಿ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ ಎಂಬ ಟೀಕೆಗಳು ವ್ಯಾಪಕವಾಗಿ ಕೇಳಿಬರಲಾರಂಭಿಸಿದೆ. ಫೆಬ್ರವರಿ 27 ರಂದು ರಾಜ್ಯಸಭಾ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ನಡುವೆ ಕಾಂಗ್ರೆಸ್‍ನ ವಿಜೇತ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ಗುಂಪಿನಲ್ಲಿದ್ದವರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದರು. ಕೆಲ ಘಂಟೆಗಳಲ್ಲೇ ಇದು ಸುದ್ದಿಯಾಗಿ ಪ್ರಸಾರಗೊಂಡು ವ್ಯಾಪಕ ಚರ್ಚೆಗೆ ಗ್ರಾಸವಾಯಿತು. +ಅದರ ಬೆನ್ನ ಹಿಂದೆಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿಲ್ಲ. ನಾಸಿರ್ ಸಾಬ್ ಜಿಂದಾಬಾದ್ ಎಂಬ ಘೋಷಣೆ ಕೂಗಲಾಗಿದೆ ಎಂದು ಆಡಿಯೋವೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ಗ್ರೂಪ್‍ನಲ್ಲಿ ಹರಿಯಬಿಡಲಾಗಿತ್ತು. ಅಲ್ಲಿಂದ ಕೆಲ ಸಚಿವರು ಮೇಲಿಂದ ಮೇಲೆ ಆರೋಪಿಗಳ ಪರ ವಕಾಲತ್ತು ವಹಿಸಲಾರಂಭಿಸಿದರು. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರು ಅದೇ ದಿನ ರಾತ್ರಿಯೇ ಟ್ವೀಟ್ ಮಾಡಿ ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ತೀರ್ಪು ನೀಡಿದ್ದರು. ವಿಚಿತ್ರ ಎಂದರೆ ಈ ವಿಚಾರವಾಗಿ ಸಂಪುಟದ ಸಚಿವರಲ್ಲಿ ಒಮ್ಮತದ ಕೊರತೆ ಕಂಡುಬಂದಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಗಳು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಒದ್ದು ಒಳಗೆ ಹಾಕುತ್ತೇವೆ ಎಂದಿದ್ದವರು ಮಾರನೇ ದಿನ ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದರು. +ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಎಫ್‍ಎಸ್‍ಎಲ್ ವರದಿ ಬಂದ ಬಳಿಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಲ್ಲದೆ ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದೇವೆ. ಅವರು ತನಿಖೆ ನಡೆಸಲು ಸಮರ್ಥರಿದ್ದಾರೆ. ಯಾವ ಸಂದರ್ಭದಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ ಎಂದು ಹೇಳಿದ್ದರು. +ಗೃಹಸಚಿವರು ವಿಶ್ವಾಸ ವ್ಯಕ್ತಪಡಿಸಿದ ತನಿಖಾಕಾರಿಗಳ ಸಾಮಥ್ರ್ಯ ಒಂದು ವಾರವಾದರೂ ಗೊಂದಲದಲ್ಲೇ ಇದ್ದದ್ದು ಪ್ರಶ್ನಾರ್ಹವಾಗಿದೆ. ಎಫ್‍ಎಸ್‍ಎಲ್ ಕ್ಷೇತ್ರದಲ್ಲಿ ಕೆಲಸ ಮಾಡುವ ಖಾಸಗಿ ಸಂಸ್ಥೆ ವಿವಾದಿತ ಆಡಿಯೋ, ವಿಡಿಯೋಗಳ ಬಗ್ಗೆ ಎರಡು ದಿನದಲ್ಲೇ ವರದಿ ನೀಡಿತ್ತು. ಅದು ಸಾಮಾಜಿಕ ಜಾಲತಾಣದಲ್ಲಿ ಮೂರು ದಿನಗಳ ಹಿಂದೆಯೇ ಅಲೆದಾಡಿತ್ತು. ಆದರೂ ಸರ್ಕಾರ ಎಫ್‍ಎಸ್‍ಎಲ್ ವರದಿ ಬಂದಿಲ್ಲ ಎಂಬ ಸಬೂಬುಗಳ ಮೂಲಕವೇ ಒಂದು ವಾರ ಕಾಲಾಹರಣ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. +ಖಾಸಗಿ ಸಂಸ್ಥೆಯ ಎಫ್‍ಎಸ್‍ಎಲ್ ವರದಿಯನ್ನು ಬಿಜೆಪಿ ನಾಯಕರು ಬಹಿರಂಗಪಡಿಸಿ ಟ್ವೀಟ್ ಮೇಲೆ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದಾಗ ಅನಿವಾರ್ಯವಾಗಿ ಒತ್ತಡಕ್ಕೆ ಸಿಲುಕಿದ ಸರ್ಕಾರ ನಿನ್ನೆ ರಾತ್ರಿ ಆರೋಪಿಗಳನ್ನು ಬಂಧಿಸಿದೆ. ದುರಂತ ಎಂದರೆ ನಿನ್ನೆ ಮಧ್ಯಾಹ್ನ ಕೂಡ ಸಚಿವರಾದ ಪ್ರಿಯಾಂಕ್ ಖರ್ಗೆ, ಮಧು ಬಂಗಾರಪ್ಪ ಘಟನೆಯ ಬಗ್ಗೆ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದರು. +ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವರು ಗೊಂದಲಕಾರಿ ಹೇಳಿಕೆಗಳನ್ನು ನೀಡಿದ್ದರು. ಅಂತಿಮವಾಗಿ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ಪೊಲೀಸರು ಎಫ್‍ಎಸ್‍ಎಲ್ ವರದಿ ಮತ್ತು ಸಾಂದರ್ಭಿಕ ಸಾಕ್ಷಿಗಳನ್ನು ಆಧರಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಾಂದರ್ಭಿಕ ಸಾಕ್ಷಿಗಳು ಆರಂಭದಿಂದಲೂ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ದೃಢತೆಯಲ್ಲೇ ಇದ್ದವು. ಎಫ್‍ಎಸ್‍ಎಲ್ ವರದಿ ತಾಂತ್ರಿಕ ಅಂಶಗಳಿಂದ ಕೂಡಿದ್ದರಿಂದಾಗಿ ಸರ್ಕಾರದ ವಾದವನ್ನು ಜನ ಕೂಡ ನಂಬಿದ್ದರು. ಆದರೆ ಖಾಸಗಿ ವರದಿ ಬಹಿರಂಗವಾದ ಬಳಿಕ ಬೇರೆ ದಾರಿ ಕಾಣದೆ ಕ್ರಮ ಕೈಗೊಂಡಿದ್ದು ಸರ್ಕಾರದ ಸಾಮಥ್ರ್ಯವನ್ನು ಪ್ರಶ್ನಿಸುವಂತೆ ಮಾಡಿದೆ. +ಬೆಂಗಳೂರು ಸ್ಪೋಟ ಪ್ರಕರಣದಲ್ಲೂ ಮೂರು ದಿನಗಳ ಬಳಿಕ ಎನ್‍ಐಎ ತನಿಖೆಗೆ ವಹಿಸಲಾಗಿದೆ. ಅತೀ ಹೆಚ್ಚು ಅತ್ಯಾಧುನಿಕತೆ ಹಾಗೂ ಸಾಮಥ್ರ್ಯ ಹೊಂದಿರುವ ರಾಜ್ಯದ ಪೊಲೀಸರು ಘಟನೆಯಾಗಿ 36 ಗಂಟೆ ಕಳೆದರೂ ಸಿಸಿಟಿವಿಯ ಪರಿಶೀಲನೆಯಲ್ಲೇ ಕಾಲಾಹರಣ ಮಾಡಿದ್ದು ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. +ಬಿಜೆಪಿ ಆರಂಭದಿಂದಲೂ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ, ಮತ ಬ್ಯಾಂಕ್‍ಗಾಗಿ ಓಲೈಕೆಯಲ್ಲೇ ಮುಳುಗಿದೆ ಎಂಬ ಟೀಕೆ ಮಾಡುತ್ತಲೇ ಬಂದಿದೆ. ಪಾಕಿಸ್ತಾನ್ ಪರ ಜಿಂದಾಬಾದ್ ಪ್ರಕರಣ ಸೇರಿದಂತೆ ಬೆಂಗಳೂರಿನ ಸ್ಪೋಟ ಪ್ರಕರಣಗಳಲ್ಲಿ ಬಿಜೆಪಿ ಟೀಕೆ ಕಾಂಗ್ರೆಸ್ ಅನ್ನು ತಲೆ ತಗ್ಗಿಸುವಂತೆ ಮಾಡಿದೆ. ರಾಜಕಾರಣಕ್ಕಾಗಿ ಆಂತರಿಕ ಭದ್ರತಾ ವಿಷಯದಲ್ಲೂ ರಾಜಿ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್‍ನ ನಡವಳಿಕೆಗಳು ಸಾಕಷ್ಟು ಟೀಕೆಗೆ ಗುರಿಯಾಗಿವೆ. \ No newline at end of file diff --git a/eesanje/url_46_214_12.txt b/eesanje/url_46_214_12.txt new file mode 100644 index 0000000000000000000000000000000000000000..99611d6ccec630bc149e37687c82052081da3894 --- /dev/null +++ b/eesanje/url_46_214_12.txt @@ -0,0 +1,13 @@ +ಲಂಚ ಕೇಳಿದ್ದೇನೆ ಎಂದು ಹೇಳಿದರೆ ಅದೇ ದಿನ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಮಾ.4- ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆಗೆ ಐದು ಪೈಸೆ ಲಂಚ ಕೇಳಿದ್ದೇನೆ ಎಂದು ಯಾವುದಾದರೂ ಗುತ್ತಿಗೆದಾರರು ಹೇಳಿದರೆ ಅದೇ ದಿನ ನಾನು ರಾಜೀನಾಮೆ ನೀಡುತ್ತೇನೆ ಮತ್ತು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. +ಇಂದಿನಿಂದ ಆರಂಭವಾದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಮಾವೇಶ 2024ರಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನದಲ್ಲಿ 16ನೇ ಬಜೆಟ್‍ಗಳನ್ನು ಮಂಡನೆ ಮಾಡಿದ್ದು, ಹಣಕಾಸು ಸಚಿವನಾಗಿ ಎಲ್‍ಒಸಿ ಬಿಡುಗಡೆಗೆ ಗುತ್ತಿಗೆದಾರರಿಂದ ಐದು ಪೈಸೆ ಲಂಚ ಕೇಳಿದ್ದೇನೆ ಎಂದರೆ ಯಾರಾದರೂ ಹೇಳಿದರೆ ಅವತ್ತೆ ರಾಜೀನಾಮೆ ಕೊಡುತ್ತೇನೆ ಮತ್ತು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಏರಿದ ಧ್ವನಿಯಲ್ಲಿ ಹೇಳಿದರು.ಗುತ್ತಿಗೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವುದು ನಿಜ, ಅದನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕಾಗುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಗುತ್ತಿಗೆದದಾರರ ಪಾತ್ರ ಪ್ರಮುಖವಾಗಿದೆ, ಸರ್ಕಾರದ ಜೊತೆ ಕೈ ಜೊಡಿಸಬೇಕು. ಪಾರದರ್ಶಕತೆ ಪಾಲಿಸಬೇಕು ಎಂದರು. +ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈ ಕಾರ್ಯಕ್ರಮದಲ್ಲಿ ಏನು ಹೇಳುತ್ತಾರೆ ಎಂದು ಕೇಳಿಸಿಕೊಂಡು ಬಂದು ನನಗೆ ಹೇಳಲು ಸಚಿವ ಸತೀಶ್ ಜಾರಕಿಹೊಳಿಗೆ ಸೂಚಿಸಿದ್ದೇನೆ. ಸಂಘದಿಂದ ಕೊಟ್ಟಿರುವ ಮನವಿಯಲ್ಲಿ ಗುತ್ತಿಗೆಯಲ್ಲಿ ಪ್ಯಾಕೇಜ್ ಪದ್ಧತಿ ರದ್ದು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮೊನ್ನೆ ರಾಜ್ಯ ಸರ್ಕಾರ ನಾಲ್ಕು ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯ ಹೆದ್ಧಾರಿಗೆ ಕಾಮಗಾರಿ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಅದರಲ್ಲಿ ಪ್ಯಾಕೇಜ್ ಇಲ್ಲ. ಇದರಿಂದ ಸಣ್ಣ ಗುತ್ತಿಗೆದಾರರಿಗೆ, ರಾಜ್ಯದವರಿಗೆ ಅನುಕೂಲವಾಗಲಿದೆ. ಈ ಹಿಂದೆ ಹೊರ ರಾಜ್ಯದ ಗುತ್ತಿಗೆದಾರರು ರಾಜ್ಯಕ್ಕೆ ಬಂದು ಬಿಟ್ಟಿದ್ದಾರೆ. ಅವರನ್ನೆಲ್ಲಾ ಒಮ್ಮೆಲೆ ಓಡಿಸಲಾಗುವುದಿಲ್ಲ. ಮುಂದೆ ರಾಜ್ಯದ ಗುತ್ತಿಗೆದಾರರಿಗೆ ಆದ್ಯತೆ ನೀಡಲಾಗುವುದು ಎಂದರು. +ಕೆಂಪಣ್ಣ ಸರ್ಕಾರ ರಚನೆಯಾದ ಮೇಲೆ ನಾಲ್ಕೈದು ಬಾರಿ ನನ್ನನ್ನು ಭೇಟಿ ಮಾಡಿದ್ದಾರೆ, ಆಗೆಲ್ಲಾ ಪ್ಯಾಕೇಜ್ ರದ್ದು ಮಾಡಬೇಕು, ಬಾಕಿ ಬಿಲ್ ಕೊಡಬೇಕು ಎಂದು ಹೇಳಿದ್ದಾರೆ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಇಷ್ಟು ಬಾಕಿ ಬಿಲ್ ಇರಲಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿ ಜಾಸ್ತಿಯಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೂ, ಮಂಡಳಿಗಳಲ್ಲಿ ಅನುಮೋದನೆ ಪಡೆದು 1.20 ಲಕ್ಷ ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಟೆಂಡರ್ ಕರೆದು ಗುತ್ತಿಗೆ ನೀಡಿದ್ದಾರೆ. ಬಾಕಿ ಬಿಲ್‍ಗಳನ್ನು ಒಮ್ಮೆಲೆ ಬಿಡುಗಡೆ ಮಾಡಿ ಎಂದು ಗುತ್ತಿಗೆದಾರರು ಒತ್ತಾಯಿಸಿದ್ದಾರೆ. ಹಾಗೆ ಹಣ ಬಿಡುಗಡೆ ಮಾಡಲು ನಾನೇನು ನೋಟು ಪ್ರಿಂಟ್ ಮಾಡುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ನಾನು ಸುಳ್ಳು ಹೇಳಲಿಕ್ಕಾವುದಿಲ್ಲ, ಬಾಕಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಗುತ್ತಿಗೆದಾರರು ಕೆಲಸ ಮಾಡಿದ್ದಾರೆ ಅವರದು ತಪ್ಪಿದೆ ಎಂದು ನಾನು ಹೇಳುವುದಿಲ್ಲ. ಆದರೆ ಹಣ ಇಲ್ಲದೆ ಇದ್ದರೂ ಕೆಲಸ ಮಾಡಬಾರದು ಎಂದರು. ಸರ್ಕಾರ ಹೇಳಿದ್ದಕ್ಕೆ ನಾವು ಕೆಲಸ ಮಾಡಿದ್ದೇವೆ ಎಂದು ಗುತ್ತಿಗೆದಾರರು ಹೇಳಿದರು, ಮೂರನೇ ಒಂದು ಭಾಗ ಅನುದಾನ ಲಭ್ಯವಿದ್ದರೆ ಮಾತ್ರ ಕೆಲಸ ಮಾಡಬೇಕು. ಇಲ್ಲದೆ ಹೋದರೆ ನಾನು ಹೇಳಿದರೂ ಕೆಲಸ ಮಾಡಬಾರದು, ಸರ್ಕಾರ ಹೇಳುತ್ತದೆ ಎಂದು ಕೆಲಸ ಮಾಡಿದರೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು. +ಗುತ್ತಿಗೆದಾರರ ಸಂಘಕ್ಕೆ ಜಾಗ ಕೊಡಿ, ಅಲ್ಲಿ ಗುಣಮಟ್ಟ ಪರಿಶೀಲನಾ ಪ್ರಯೋಗಾಲಯ ಸ್ಥಾಪನೆ ಮಾಡುತ್ತೇವೆ ಎಂದು ಸಂಘದಿಂದ ಮನವಿ ಸಲ್ಲಿಸಲಾಗಿದೆ. ಇದು ಸಂತೋಷದ ವಿಚಾರ, ಸಂಘದ ಪದಾಧಿಕಾರಿಗಳು ಜಾಗ ಹುಡುಕಿಕೊಟ್ಟರೆ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು. +ವೇದಿಕೆಯಲ್ಲಿ ಮುಖ್ಯಮಂತ್ರಿಗಳ ಬಳಿ ಬಂದ ಕೆಂಪಣ್ಣ ಕಂದಾಯ ಅಧಿಕಾರಿಗಳಿಗೆ ನೀವು ನಿರ್ದೇಶನ ಕೊಟ್ಟರೆ ಅವರು ಐದು ಎಕರೆ ಜಾಗ ಹುಡುಕಿಕೊಡುತ್ತಾರೆ ಎಂದರಲ್ಲದೆ, ಕಂದಾಯ ಭವನ ನಿರ್ಮಾಣಕ್ಕೆ ಇನ್ನೂ 2 ಕೋಟಿ ರೂಪಾಯಿಗಳ ಅಗತ್ಯ ಇದೆ ಎಂದಾಗ, ಸರ್ಕಾರದಿಂದ ಬಾಕಿ ಕೆಲಸ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ಕೆಆರ್‍ಎಸ್ ಕಟ್ಟಿ ಎಷ್ಟು ವರ್ಷವಾಗಿದೆ. ಈಗಲೂ ಅದು ಸದೃಢವಾಗಿದೆ. ಗುಣಮಟ್ಟ ನಿಯಂತ್ರಣ ಹಾಗೂ ಪಾರದರ್ಶಕತೆ ಪಾಲನೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಹೇಳಿದರು. +ಈ ಹಿಂದೆ ಶೇ.40ರಷ್ಟು ಕಮಿಷನ್ ಲಂಚದ ವಿಚಾರಣೆಗೆ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಆಯೋಗ ಇನ್ನೂ ವರದಿ ನೀಡಿಲ್ಲ, ವರದಿ ಬಂದ ಮೇಲೆ ಶೇ.40ರಷ್ಟು ಕಮಿಷನ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಲೂ ಯಾರಾದರೂ ಕಮಿಷನ್ ಕೇಳುತ್ತಿದರೆ ಸಂತ್ರಸ್ಥ ಗುತ್ತಿಗೆದಾರರು ಆಯೋಗಕ್ಕೆ ದೂರು ನೀಡಿ ಎಂದು ಸಲಹೆ ನೀಡಿದರು. +ನಮ್ಮ ಸರ್ಕಾರ ಭ್ರಷ್ಟಚಾರ ಮಟ್ಟ ಹಾಕಿ, ಜನಪರ ಹಾಗೂ ಸರ್ವತೋಮುಖ ಅಭಿವೃದ್ಧಿ ಕೆಲಸ ಮಾಡಲಿದೆ, ಗುತ್ತಿಗೆದಾರ ಸಹಕಾರ ಇಲ್ಲದೆ ಸರ್ಕಾರ ಒಳ್ಳೆಯ ಕೆಲಸ ಮಾಡಲು ಕಷ್ಟವಾಗುತ್ತದೆ. ಗುತ್ತಿಗೆದಾರರ ಯಾವುದೇ ಅಹವಾಲು ಇದ್ದರೂ ಕಾರ್ಯಕ್ರಮದಲ್ಲಿ ಇರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತನ್ನಿ ಸರ್ಕಾರ ಸ್ಪಂದಿಸಲಿದೆ. ನಾವು ನಿಮ್ಮ ಪರವಾಗಿದ್ದೇವೆ ಎಂದು ಹೇಳಿದರು. +ಒಂದೇ ಸಾರಿ ಬಿಲ್ ಕೊಡಲು ಸಾಧ್ಯವಿಲ್ಲ, ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಬಜೆಟ್‍ನಲ್ಲಿ ಘೋಷಿಸಿತ್ತು. ಈವರೆಗೂ ಒಂದು ಕೂಡ ರೂಪಾಯಿ ಬಿಡುಗಡೆಯಾಗಿಲ್ಲ. ನಾವು ತೆರಿಗೆ ಸಂಗ್ರಹಿಸಿ ಕೊಟ್ಟರೆ ಕೇಂದ್ರ ಸರ್ಕಾರದಿಂದ 13 ಸಾವಿರ ರೂಪಾಯಿ ಮಾತ್ರ ವಾಪಾಸ್ ಬರುತ್ತಿದೆ. ಅದರಲ್ಲಿ ಸಂಬಳ ನೀಡಬೇಕು, ಬೇರೆಲ್ಲಾ ಕೆಲಸ ಮಾಡಬೇಕಿದೆ, ಜೊತೆಗೆ ಅಭಿವೃದ್ಧಿಯನ್ನೂ ಮಾಡಬೇಕು ಎಂದು ಹೇಳಿದರು. +ಸಚಿವರಾದ ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಗುತ್ತಿಗೆದಾರರ ಸಂಘದ ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ಅಧಿಕಾರಿಗಳು ಬೇಕಾದಂತೆ ಷರತ್ತು ಹಾಕಿ, ತಮಗೆ ಬೇಕಾದವರಿಗೆ ಗುತ್ತಿಗೆ ಸಿಗುವಂತೆ ಮಾಡುತ್ತಿದ್ದಾರೆ ಅದನ್ನು ತಪ್ಪಿಸಬೇಕು. ವಿವಿಧ ಇಲಾಖೆಗಳಲ್ಲಿ 18 ಸಾವಿರ ಕೋಟಿ ರೂಪಾಯಿ ಬಿಲ್ ಬಾಕಿ ಇದೆ, ಅದನ್ನು ತಕ್ಷಣವೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಜನರಿಗೆ ಭಾಗ್ಯ ಕೊಟ್ಟಂತೆ, ಗುತ್ತಿಗೆದಾರರಿಗೂ ಯಾವುದಾರೂ ಒಂದು ಭಾಗ್ಯ ನೀಡಬೇಕು. ನಿರ್ಮಿತಿ ಕೇಂದ್ರದಿಂದಲೇ ಭ್ರಷ್ಟಚಾರ ಆರಂಭವಾಗುತ್ತಿದೆ. ಅದನ್ನು ಸರಿ ಪಡಿಸಬೇಕು, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಹಾಗೂ ಜಿಎಸ್‍ಟಿಯಿಂದಾಗುತ್ತಿರುವ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ಮನವಿ ಮಾಡಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವಸತಿ ಸಚಿವ ಜಮೀರ ಅಹಮದ್ ಖಾನ್, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_214_2.txt b/eesanje/url_46_214_2.txt new file mode 100644 index 0000000000000000000000000000000000000000..c7a5fcc4dd8ed3a395057962a472b54ace1f47a5 --- /dev/null +++ b/eesanje/url_46_214_2.txt @@ -0,0 +1,7 @@ +ಸಮರ್ಪಕ ಬರ ನಿರ್ವಹಣೆಗೆ ಸಿಎಂ ಸೂಚನೆ +ಬೆಂಗಳೂರು,ಮಾ.5- ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಸೃಷ್ಟಿ ಹಾಗೂ ಮೇವಿನ ಕೊರತೆಯಾಗದಂತೆ ಬರ ನಿರ್ವಹಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಹಾಗೂ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳು ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಿದ ಮುಖ್ಯಮಂತ್ರಿಯವರು ಮಹತ್ವದ ಸೂಚನೆಗಳನ್ನ ನೀಡಿದ್ದಾರೆ. +ಕುಡಿಯುವ ನೀರಿನ ಸಮಸ್ಯೆ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು, ಜಿಲ್ಲಾಡಳಿತ ಕೈ ಕಟ್ಟಿ ಕುಳಿತಿರುವುದೇಕೆ ಎಂದು ಈ ಸಂದರ್ಭದಲ್ಲಿ ಅಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯಸರ್ಕಾರ ಸುಮಾರು 900 ಕೋಟಿ ರೂ.ಗಳನ್ನು ಕುಡಿಯುವ ನೀರು ಸೇರಿದಂತೆ ಬರ ನಿರ್ವಹಣೆಗಾಗಿ ಬಿಡುಗಡೆ ಮಾಡಿದೆ. ಆದರೆ ಅದರ ಬಳಕೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. +ಈ ಹಿಂದಿನಿಂದಲೂ ಟ್ಯಾಂಕರ್‍ನಲ್ಲಿ ನೀರು ಪೂರೈಸಿದ ಬಿಲ್ ಪಾವತಿಯಾಗಿಲ್ಲ. ಹೀಗಾಗಿ ಹೊಸ ಬಿಲ್‍ಗಳ ಪಾವತಿಗೆ ತಾಂತ್ರಿಕ ಸಮಸ್ಯೆ ಇದೆ ಎಂದು ಕೆಲ ಅಧಿಕಾರಿಗಳು ಸಬೂಬು ಹೇಳಿದರು ಎಂದು ಮೂಲಗಳು ತಿಳಿಸಿವೆ. ಅವೈಜ್ಞಾನಿಕವಾಗಿ ಈ ಹಿಂದೆ ನೀರು ಪೂರೈಕೆ ಹಾಗೂ ಇತರೆ ಬಿಲ್‍ಗಳನ್ನು ಸೃಷ್ಟಿಸಲಾಗಿತ್ತು ಎಂಬ ಆರೋಪಗಳಿವೆ. ಅದಕ್ಕೆ ನಮ್ಮ ಸರ್ಕಾರ ಹೊಣೆಯಾಗಲು ಸಾಧ್ಯವಿಲ್ಲ. ಬರ ಪರಿಸ್ಥಿತಿ ತೀವ್ರಗೊಂಡಿರುವ ಪ್ರಸ್ತುತ ದಿನಮಾನದಲ್ಲಿ ನವೆಂಬರ್ ನಂತರ ನೀರು ಪೂರೈಸುವ ಟ್ಯಾಂಕರ್‍ಗಳಿಗೆ 15 ದಿನಗಳಿಗೊಮ್ಮೆ ಬಿಲ್ ಪಾವತಿಸಬೇಕು ಎಂದು ಸೂಚಿಸಿದ್ದಾರೆ. +ಉದ್ಯೋಗ ಸೃಷ್ಟಿಗೆ ನರೇಗಾ ಯೋಜನೆಯಡಿ ಲಭ್ಯವಿರುವ ಅನುದಾನಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಬೇಕು. 100 ದಿನಗಳ ಮಾನವ ಉದ್ಯೋಗ ಒದಗಿಸಲಾಗುತ್ತದೆ. ಅದನ್ನು 150 ದಿನಗಳಿಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಅಲ್ಲಿಂದ ಯಾವುದೇ ಅನುಮೋದನೆ ದೊರೆತಿಲ್ಲ. ಏಪ್ರಿಲ್ ಬಳಿಕವೂ ಕೇಂದ್ರದ ಸಹಮತ ದೊರೆಯದೇ ಇದ್ದರೆ ರಾಜ್ಯಸರ್ಕಾರವೇ ತನ್ನ ಆರ್ಥಿಕ ಇತಿಮಿತಿಯಲ್ಲಿ ಮಾನವ ದಿನಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಈ ವೇಳೆ ಭರವಸೆ ನೀಡಿದ್ದಾರೆ. +ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು ಎಂದು ಸೂಚಿಸಿದ ಮುಖ್ಯಮಂತ್ರಿಗಳು, ಬ್ಯಾಂಕ್ ಸಾಲ ವಸೂಲಾತಿಗೆ ಆತುರ ತೋರಿಸದಂತೆ ಆಯಾ ಜಿಲ್ಲಾಕಾರಿಗಳು ಬ್ಯಾಂಕರ್‍ಗಳಿಗೆ ತಿಳುವಳಿಕೆ ನೀಡುವಂತೆಯೂ ಸಲಹೆ ನೀಡಿದ್ದಾರೆ. ಕೆಲವು ಕಡೆ ಬ್ಯಾಂಕ್ ನೋಟಿಸ್‍ಗಳಿಂದಾಗಿ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ವರದಿಯಾಗಿವೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದ್ದಾರೆ. +ಬರ ನಿರ್ವಹಣೆಯನ್ನು ಸಮರೋಪಾದಿಯಲ್ಲಿ ನಿಭಾಯಿಸಬೇಕು. ಕಂದಾಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಇಂಧನ ಸೇರಿದಂತೆ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ತಾಕೀತು ಮಾಡಿದ್ದಾರೆ. ಬಹಳಷ್ಟು ಜಿಲ್ಲೆಗಳಿಂದ ಉಸ್ತುವಾರಿ ಸಚಿವರು ಆನ್‍ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಬರ ನಿರ್ವಹಣೆ ಕಾಮಗಾರಿಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿ, ಕಾಲಕಾಲಕ್ಕೆ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿ ಇದೇ ವೇಳೆ ಆದೇಶಿಸಿದ್ದಾರೆ. \ No newline at end of file diff --git a/eesanje/url_46_214_3.txt b/eesanje/url_46_214_3.txt new file mode 100644 index 0000000000000000000000000000000000000000..4cab4488af002387f9c391620bcb987e2d004c72 --- /dev/null +++ b/eesanje/url_46_214_3.txt @@ -0,0 +1,6 @@ +ಸಿಎಂ ಗೃಹ ಕಚೇರಿಗೂ ತಟ್ಟಿದ ನೀರಿನ ಬವಣೆ +ಬೆಂಗಳೂರು,ಮಾ.5- ಬರ ಪರಿಸ್ಥಿತಿಯಿಂದಾಗಿ ರಾಜ್ಯನ್ನು ಕಾಡುತ್ತಿರುವ ನೀರಿನ ಬವಣೆಯ ಬಿಸಿ ಮುಖ್ಯಮಂತ್ರಿ ಗೃಹಕಚೇರಿಗೂ ತಟ್ಟಿದೆ. ಬೆಂಗಳೂರಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವು ದರಿಂದಾಗಿ ಇದೇ ಮೊದಲ ಬಾರಿಗೆ ಪಿಡಬ್ಲ್ಯೂಎಸ್‍ಎಸ್‍ಬಿ ಟ್ಯಾಂಕರ್ ಮೂಲಕ ಗೃಹಕಚೇರಿ ಕೃಷ್ಣಾಗೆ ನೀರು ಸರಬರಾಜು ಮಾಡಲಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಾರ್ಯದರ್ಶಿಗಳು ಹಾಗೂ ಜಿಲ್ಲಾಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ಮೂಲಕ ನೀರಿನ ಬವಣೆ ಹಾಗೂ ಭರ ನಿರ್ವಹಣೆಯ ಬಗ್ಗೆ ಚರ್ಚೆ ನಡೆಸಲು ಸಭೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಗೃಹಕಚೇರಿ ಕೃಷ್ಣಾಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಯಿತು. +ರಾಜ್ಯಾದ್ಯಂತ ಈಗಾಗಲೇ 300 ಕ್ಕೂ ಹೆಚ್ಚು ಗ್ರಾಮೀಣ ಪ್ರದೇಶಗಳು ಹಾಗೂ 700 ಕ್ಕೂ ಹೆಚ್ಚು ನಗರ ವಾರ್ಡ್‍ಗಳಲ್ಲಿ ನೀರಿನ ಸಮಸ್ಯೆಯಿದ್ದು, ಟ್ಯಾಂಕರ್ ಮೂಲಕ ಪೂರೈಸಲಾಗುತ್ತಿದೆ. ಇನ್ನೂ ಕೆಲವು ಕಡೆ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನೀರು ಪೂರೈಕೆಯ ಟ್ಯಾಂಕರ್‍ಗಳನ್ನು ನೋಂದಣಿ ಮಾಡಿಕೊಳ್ಳಬೇಕು. ಮನಸೋ ಇಚ್ಛೆ ಹಣ ವಸೂಲಿ ಮಾಡುವಂತಿಲ್ಲ ಎಂದು ಸರ್ಕಾರ ನಿರ್ದೇಶನ ನೀಡಿದೆ. +ಮಾ.7 ರವರೆಗೆ ಟ್ಯಾಂಕರ್ ನೋಂದಣಿಯನ್ನು ನೀಡಲಾಗಿದ್ದು, ಅದೇ ದಿನ ನೀರು ಪೂರೈಕೆಯ ದರ ನಿಗದಿ ಮಾಡುವ ಸಾಧ್ಯತೆಯಿದೆ. ಭವಿಷ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೇರಿ ಸುಮಾರು 7 ಸಾವಿರ ಜನವಸತಿ ಪ್ರದೇಶಗಳಲ್ಲಿ ನೀರಿನ ಸಮಸ್ಯೆಯಾಗುವ ಅಂದಾಜಿದೆ. ಅಲ್ಲಿಗೆ ಟ್ಯಾಂಕರ್ ಮೂಲಕ ಮತ್ತು ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲು ಮೇಲಿಂದ ಮೇಲೆ ಸಭೆ ನಡೆಸಲಾಗುತ್ತಿದೆ. +ಅದರ ಹೊರತಾಗಿಯೂ ಅಲ್ಲಲ್ಲಿ ನೀರಿಲ್ಲದೆ ಜನಸಾಮಾನ್ಯರು ಖಾಲಿ ಕೊಡಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿರುವುದು, ಪರದಾಡುತ್ತಿರುವುದು ಕಂಡುಬರುತ್ತಿದೆ. ಜನಸಾಮಾನ್ಯರ ಪರಿಸ್ಥಿತಿ ಈ ರೀತಿಯಾದರೆ ರಾಜ್ಯಾಂಗದ ಅಕಾರ ಹಿಡಿದಿರುವ ಸಿಎಂ ಅವರ ಕಚೇರಿಯಲ್ಲೂ ನೀರಿನ ಬವಣೆ ಅಚ್ಚರಿ ಮೂಡಿಸಿದೆ. \ No newline at end of file diff --git a/eesanje/url_46_214_4.txt b/eesanje/url_46_214_4.txt new file mode 100644 index 0000000000000000000000000000000000000000..ff90821030224f52c6b837a359885c24ffe8074d --- /dev/null +++ b/eesanje/url_46_214_4.txt @@ -0,0 +1,7 @@ +24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ +ಬೆಂಗಳೂರು,ಮಾ.4- ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸಿರುವಂತೆ ಖಾಸಗಿ ಸುದ್ದಿ ವಾಹಿನಿ ಯೊಂದು ನಡೆಸಿರುವ ಸಮೀಕ್ಷೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‍ಡಿಎ ಮೈತ್ರಿಕೂಟ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇಂಡಿಯಾ ಟಿವಿ ಸಿಎನ್‍ಎಕ್ಸ್ ಸಹಭಾಗಿತ್ವದಲ್ಲಿ ನಡೆಸಿರುವ ದಕ್ಷಿಣ ಭಾರತ 130 ಲೋಕಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 60 ಸ್ಥಾನ ಹಾಗೂ ಎನ್‍ಡಿಎ ಮೈತ್ರಿಕೂಟ 38 ಹಾಗೂ 32 ಕ್ಷೇತ್ರಗಳು ವೈಎಸ್‍ಆರ್ ಕಾಂಗ್ರೆಸ್, ಟಿಡಿಪಿ, ಎಐಎಡಿಎಂಕೆ, ಬಿಆರ್‍ಎಸ್, ಎಐಎಂಐಎಂ ಪಕ್ಷಗಳ ಪಾಲಾಗಲಿವೆ ಎಂದು ಸಮೀಕ್ಷೆ ತಿಳಿಸಿದೆ. +ಉತ್ತರಭಾರತದಲ್ಲಿ ಬಿಜೆಪಿಗೆ ಭಾರೀ ಬಹುಮತ ಸಿಗುವ ಸಾಧ್ಯತೆ ಇದ್ದರೆ, ಇದಕ್ಕೆ ವ್ಯತಿರಿಕ್ತ ಎಂಬಂತೆ ದಕ್ಷಿಣ ಭಾರತದಲ್ಲಿ ಬಿಜೆಪಿ ಕರ್ನಾಟಕ, ತೆಲಂಗಾಣ, ಗೋವಾ ಮತ್ತು ತಮಿಳುನಾಡಿನಲ್ಲಿ ಖಾತೆ ತೆರೆಯುವ ಸಂಭವವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಎನ್‍ಡಿ ಮೈತ್ರಿಕೂಟ 24 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡರೆ ಆಡಳಿತಾರೂಢ ಕಾಂಗ್ರೆಸ್ 4 ಸ್ಥಾನಗಳನ್ನು ಮಾತ್ರ ಗೆಲ್ಲಬಹುದೆಂದು ಚುನಾವಣಾಪೂರ್ವ ಸಮೀಕ್ಷೆ ಹೇಳಿದೆ. +ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಪ್ರಧಾನಿ ನರೇಂದ್ರಮೋದಿ ಅವರ ವರ್ಚಸ್ಸಿನ ಪರಿಣಾಮ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಲಕ್ಷಣಗಳಿದ್ದು, ಕಾಂಗ್ರೆಸ್‍ಗೆ ಆಂತರಿಕ ಸಮಸ್ಯೆಗಳೇ ಹಿನ್ನಡೆ ಕಾರಣ ಎಂದು ತಿಳಿಸಿದೆ. ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದ್ದರೆ ಉಳಿದ ಕಡೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವಿನ ರಣಕೇಕೆ ಹಾಕಲಿದೆ. +ಇನ್ನು ವಲಯವಾರು ಸಮೀಕ್ಷೆಯನ್ನು ಗಮನಿಸಿದರೆ ಉತ್ತರ ಕರ್ನಾಟಕದ 11 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯೂ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದರೆ, ಕಾಂಗ್ರೆಸ್ 2 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಹೇಳಲಾಗಿದೆ. ಕರಾವಳಿಯಲ್ಲಿ ಮೂರು ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ದಕ್ಷಿಣ ಕರ್ನಾಟಕದ 10 ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿ – ಜೆಡಿಎಸ್ ಮೈತ್ರಿ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎನ್ನಲಾಗಿದೆ. +ಇನ್ನು, ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. ಕಾಂಗ್ರೆಸ್ ಮೂರು ಕ್ಷೇತ್ರಗಳ ಗಳಿಕೆ ಮಾಡಲಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಕೂಡ ಒಂದು ಸ್ಥಾನವನ್ನು ಹೆಚ್ಚು ಗಳಿಸಲಿದೆ. +ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ತುಮಕೂರಿನಲ್ಲಿ ಗೆಲ್ಲುವ ಸಾಧ್ಯತೆ ಇದೆ. ಜೆಡಿಎಸ್ ಹಾಸನ ಹಾಗೂ ಮಂಡ್ಯದಲ್ಲಿ ಗೆಲುವು ಸಾಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಕಾಣಲಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ಭಾರೀ ಮುನ್ನಡೆ ಸಾಧಿಸಿದರೆ ಕೇರಳದಲ್ಲಿ ಎಲ್‍ಡಿಎಫ್, ತೆಲಂಗಾಣದಲ್ಲಿ ಕಾಂಗ್ರೆಸ್, ಆಂಧ್ರಪ್ರದೇಶದಲ್ಲಿ ವೈಎಸ್‍ಆರ್ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಕೇವಲ ದಕ್ಷಿಣ ಭಾರತದ 130 ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಸಮೀಕ್ಷೆ ನಡೆಸಲಾಗಿದೆ. \ No newline at end of file diff --git a/eesanje/url_46_214_6.txt b/eesanje/url_46_214_6.txt new file mode 100644 index 0000000000000000000000000000000000000000..62bfb6b1f098ddba156249137e6d5330be1c34ab --- /dev/null +++ b/eesanje/url_46_214_6.txt @@ -0,0 +1,5 @@ +ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆಶಿಗೆ ಬಿಗ್ ರಿಲೀಫ್ +ನವದೆಹಲಿ,ಮಾ.5- ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕರ್ನಾಟಕದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಗೆಲುವು ತಂದುಕೊಟ್ಟಂತಾಗಿದೆ. +ಇಡಿ ಅಧಿಕಾರಿಗಳು ತಮ್ಮ ವಿರುದ್ಧ ದಾಖಲಿಸಿದ್ದ 120ಬಿ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ-ವಿವಾದವನ್ನು ಆಲಿಸಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಏಕಸದಸ್ಯ ಪೀಠ ಇಡಿ ದಾಖಲಿಸಿದ್ದ ದೂರನ್ನು ರದ್ದುಗೊಳಿಸಿ ವಿಚಾರಣೆಗೆ ತಡೆ ನೀಡಿತು. +ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಡಿಕೆಶಿ ವಿರುದ್ದ ಸೆಕ್ಷನ್ 120ಬಿ ಆರೋಪವಿದೆ. ಇದರ ಜತೆಗೆ ಮತ್ತೊಂದು ಅಧಿಸೂಚಿತ ಕೇಸ್ ಇರಬೇಕೆಂದಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ದೆಹಲಿಯ ಡಿಕೆಶಿ ಹಾಗೂ ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದ ಸಮಯದಲ್ಲಿ ಸುಮಾರು 8.59 ಕೋಟಿ ರೂ. ಹಣ ಜಪ್ತಿ ಮಾಡಲಾಗಿತ್ತು. +ಈ ಹಣ ಅಕ್ರಮವೋ ಅಥವಾ ಸಕ್ರಮವೋ ಎಂಬ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಬೇಕಿತ್ತು.ಈ ಕುರಿತು ತನಿಖೆ ನಡೆಸುವ ಸಲುವಾಗಿ ಇಡಿ ನೀಡಿದ್ದ ಸಮನ್ಸ್ ವಿರುದ್ಧ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಹಣ ತನಿಖೆಗೆ ಯೋಗ್ಯ ಎಂದು ಹೈಕೋರ್ಟ್ ಹೇಳಿತ್ತು. \ No newline at end of file diff --git a/eesanje/url_46_214_7.txt b/eesanje/url_46_214_7.txt new file mode 100644 index 0000000000000000000000000000000000000000..7c0d2e758324ba399e046a795ad20ae49d5710ed --- /dev/null +++ b/eesanje/url_46_214_7.txt @@ -0,0 +1,9 @@ +ಪಾಕ್ ಪರ ಘೋಷಣೆ ಪ್ರಕರಣ, ಬಂಧಿತ ಮೂವರ ತೀವ್ರ ವಿಚಾರಣೆ +ಬೆಂಗಳೂರು, ಮಾ.5- ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿಗಳಾದ ಮಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ ಅಹಮದ್, ಮಹಮ್ಮದ್ ಇಲ್ತಾಜ್ ಎಂಬುವವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂದಿಸಿ ಕೋರಮಂಗಲದ 39ನೇ ಎಸಿಎಂಎಂ ನ್ಯಾಯಾದೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾದೀಶರು ಆರೋಪಿಗಳನ್ನು ಮಾ.6ರವರೆಗೆ ಪೊಲೀಸರ ಕಸ್ಟಡಿಗೆ ನೀಡಿದರು. +ಈ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪೂರ್ವಪರ ಪರಿಶೀಲನೆ ಪಾಕ್ ಪರ ಘೋಷಣೆ ಹಿಂದಿನ ಉದ್ದೇಶ ಏನಾಗಿತ್ತು ಇದಕ್ಕೆ ಯಾರಾದರೂ ಕುಮ್ಮಕ್ಕು ನೀಡಿದ್ದಾರಾ, ಇದು ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕವೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. +ಬಂಧಿತರ ಮೂವರ ಮೊಬೈಲ್‍ಗಳನ್ನು ವಶಕ್ಕೆ ತೆಗೆದುಕೊಂಡು ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಎಪ್‍ಎಸ್‍ಎಲ್ ವರದಿಯಲ್ಲಿ ದೃಡಪಡುತ್ತಿದ್ದಂತೆ ವಿಧಾನಸೌಧ ಪೊಲೀಸರು 40ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಿ 15 ಮಂದಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದರು. ನಿನ್ನೆ ಮಧ್ಯಾಹ್ನ ಪೊಲೀಸರ ಕೈಗೆ ಎಪ್‍ಎಸ್‍ಎಲ್ ವರದಿ ಸಿಗುತ್ತಿದ್ದಂತೆ ಘೋಷಣೆ ಕೂಗಿದ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. +ಫೆ. 27ರಂದು ರಾಜ್ಯಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ನಾಸೀರ್ ಹುಸೇನ್ ವಿಜಯೋತ್ಸವ ಆಚರಣೆ ವೇಳೆ ಪಾಕ್ ಪರ ಘೋಷಣೆಗಳು ಕೇಳಿಬಂದಿದ್ದವು. ಮಾಧ್ಯಮಗಳಲ್ಲಿ ಭಾರಿ ಪ್ರಮಾಣದ ಸುದ್ದಿ ಬಿತ್ತರವಾಗಿತ್ತು. ಪಾಕ್ ಪರ ಘೋಷಣೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ವಿಧಾನಸೌಧ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ಕೈಗೆತ್ತಿಕೊಂಡಿದ್ದರು. +ಕೋಟಿ ಕುಳ ನಾಶಿ ಪುಡಿ:ಮೊಹಮ್ಮದ್ ಶಪಿ ನಾಶಿ ಪುಡಿ ಸಾಮಾನ್ಯ ವ್ಯಕ್ತಿಯಲ್ಲ. ಹಾವೇರಿ ಜಿಲ್ಲೆ ಬ್ಯಾಡಗಿಯಲ್ಲಿ ಮೆಣಸಿನ ಕಾಯಿ ವ್ಯಾಪಾರ ಮಾಡುವ ಕೋಟ್ಯಾಂತರ ವ್ಯವಹಾರ ನಡೆಸುತ್ತಿರುವವರೆಂದು ಪೊಲೀಸ್ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಇವರನ್ನು ಧ್ವನಿ ಪರೀಕ್ಷೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಂದರ್ಭದಲ್ಲಿ ನಾನು ನೂರಾರು ಕೋಟಿಗೆ ಬಾಳುತ್ತೇನೆ, ನಾನು ಪಾಕ್ ಪರ ಘೋಷಣೆ ಕೂಗಿಲ್ಲ, ಎಂದು ಹೇಳಿರುವುದು ತಿಳಿದು ಬಂದಿದೆ. +ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಕಟ್ಟಾ ಬೆಂಬಲಿಗನಾಗಿದ್ದು, ಮುಂದಿನ ವಿಧಾನಸಭೆಯ ಬ್ಯಾಡಗಿ ಕ್ಷೇತ್ರದ ಚುನಾವಣೆಗೆ ಸ್ಪರ್ದಿಸಲು ಈಗಿನಿಂದಲೇ ಬಾರಿ ಸಿದ್ದತೆ ನಡೆಸಿದ್ದ ಸುಮಾರು 50 ವರ್ಷಗಳಿಂದ ಮೆಣಸಿಕಾಯಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದಾನೆ. ರಾಜ್ಯಸಭೆ ಚುನಾವಣೆಯ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಪ್ರಕರಣದಲ್ಲಿ ಈತ ಮೊದಲನೇ ಆರೋಪಿ. +ದೆಹಲಿ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಇಲ್ತಾಜ್:ಇಲ್ತಾಜ್ ದೆಹಲಿ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ನಾಸೀರ್ ಹುಸೇನ್ ಅವರ ಕಟ್ಟ ಬೆಂಬಲಿಗ. ರಾಜ್ಯಸಭೆ ಚುನಾವಣೆಯ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಆಗಮಿಸಿದ್ದ. ಪಾಕ್ ಜಿಂದಾಬಾದ್ ಘೋಷಣೆಯಲ್ಲಿ ಈತ ಎರಡನೇ ಆರೋಪಿಯಾಗಿದ್ದಾನೆ. +ಜಯಮಹಲ್‍ನ ಮುನಾವರ್:ಮೊದಲು ಆರ್‍ಟಿ ನಗರದಲ್ಲಿ ವಾಸವಾಗಿದ್ದ ಈತ ಇತ್ತೀಚೆಗೆ ಜಯಮಹಲ್‍ನಲ್ಲಿ ನೆಲೆಸಿದ್ದ ಸಣ್ಣ-ಪುಟ್ಟ ವ್ಯಾಪಾರಗಳನ್ನು ಮಾಡಿಕೊಂಡಿದ್ದಾನೆ. ಪಾಕ್ ಪರ ಜಿಂದಾಬಾದ್ ಘೋಷಣೆ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ. ಆರೋಪಿಗಳನ್ನು ಬಂಸಿರುವ ಪೆÇಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_214_8.txt b/eesanje/url_46_214_8.txt new file mode 100644 index 0000000000000000000000000000000000000000..7f9b044517a53f28a3ab4e797785922297de4644 --- /dev/null +++ b/eesanje/url_46_214_8.txt @@ -0,0 +1,7 @@ +ಸುಧೀರ್ ಕುಮಾರ್ ಮುರೊಳ್ಳಿಗೆ ಲೋಕಸಭಾ ಟಿಕೆಟ್‍ಗಾಗಿ ತೀವ್ರಗೊಂಡ ಲಾಬಿ +ಬೆಂಗಳೂರು,ಮಾ.5- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸುಧೀರ್ ಮುರೋಳಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಜಿಲ್ಲೆಗಳ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆಯವರು ಇತ್ತೀಚೆಗೆ ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳಿವೆ. ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲು ಸ್ಥಳೀಯ ವಾಗಿ ತೀವ್ರ ವಿರೋಧ ವ್ಯಕ್ತವಾಗಿದೆ. +ಎರಡೂ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಒಟ್ಟಾಗಿ ಮುಖ್ಯಮಂತ್ರಿ ಯವರ ಬಳಿ ನಿಯೋಗ ಬಂದಿದ್ದು, ಕಾಂಗ್ರೆಸ್ ಪಕ್ಷದಲ್ಲೇ ಇರುವ ಹಾಗೂ ಸ್ಥಳೀಯರಾದ ಸುಧೀರ್ ಮುರೋಳಿ ಟಿಕೆಟ್ ನೀಡಬೇಕೆಂದು ಒತ್ತಡ ಹೇರಿದ್ದಾರೆ. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ, ವಿನಯ್‍ಕುಮಾರ್ ಸೊರಕೆ, ಕಾಂಗ್ರೆಸ್ ನಾಯಕರಾದ ಕಾರ್ಕಳದ ಉದಯ್‍ಕುಮಾರ್ ಶೆಟ್ಟಿ, ಕುಂದಾಪುರದ ದಿನೇಶ್ ಹೆಗ್ಡೆ, ಉಡುಪಿಯ ರಮೇಶ್ ಕಾಂಚನ್, ಉಡುಪಿಯ ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಸೌರವ್ ಬಲ್ಲಾಳ್, ಉಡುಪಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಉಮಾ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ನಿಯೋಗ ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ. +ಜಯಪ್ರಕಾಶ್ ಹೆಗ್ಡೆ ಈ ಮೊದಲು ಬಿಜೆಪಿ ಸೇರಿದ್ದರು. ಯಡಿಯೂರಪ್ಪ ಸರ್ಕಾರ ಅವರನ್ನು ಹಿಂದುಳಿದ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿತ್ತು. ಆ ಬಳಿಕ ಜಯಪ್ರಕಾಶ್ ಹೆಗ್ಡೆ ಸಕ್ರಿಯ ರಾಜಕೀಯದಿಂದ ವಿಮುಖರಾಗಿದ್ದರು. ಸ್ವಾಯತ್ತ ಸಂಸ್ಥೆಯಾಗಿರುವ ಹಿಂದುಳಿದ ವರ್ಗಗಳ ಆಯೋಗದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದರು. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಿಷಯವಾಗಿ ಒಂದಿಷ್ಟು ಗೊಂದಲಗಳಿವೆ. ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಕ್ಷೇತ್ರದಲ್ಲಿ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಿ.ಟಿ.ರವಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಗೊಂದಲದ ನಡುವೆ ಜಯಪ್ರಕಾಶ್ ಹೆಗ್ಡೆ ತಮಗೂ ಟಿಕೆಟ್ ನೀಡಿ ಎಂದು ಹಿರಿಯ ನಾಯಕರ ಮುಂದೆ ಮನವಿ ಸಲ್ಲಿಸಿದ್ದರು ಎನ್ನಲಾಗಿದೆ. +ಅತ್ತ ಬಿಜೆಪಿಯಲ್ಲೂ ಪ್ರಯತ್ನ ಮಾಡುತ್ತಾ, ಇತ್ತ ಕಾಂಗ್ರೆಸ್‍ನಲ್ಲೂ ಸ್ರ್ಪಧಿಸುವುದಾಗಿ ಸುದ್ದಿ ಹರಡಿ ಗೊಂದಲ ಮೂಡಿಸುತ್ತಿದ್ದಾರೆ. ಅವರನ್ನು ಸೇರಿಸಿಕೊಳ್ಳುವುದಾದರೆ ಅದು ಹೈಕಮಾಂಡ್ ಇಷ್ಟ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಡುವುದು ಸರಿಯಲ್ಲ. ಪಕ್ಷ ನಿಷ್ಠರಿಗೆ ಹಾಗೂ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಲಾಗಿದೆ. +ವಲಸಿಗ ನಾಯಕರಿಗೆ ಮಣೆ ಹಾಕಿದರೆ ಪಕ್ಷ ನಿಷ್ಠರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಹೀಗಾಗಿ ಕಾಂಗ್ರೆಸ್, ಪಕ್ಷದ ಸಿದ್ದಾಂತ, ವೈಚಾರಿಕತೆ ಹಾಗೂ ಕಾರ್ಯಕ್ರಮಗಳ ಮೇಲೆ ನಂಬಿಕೆ ಇಟ್ಟವರನ್ನು ಪರಿಗಣಿಸಬೇಕು. ಅಧಿಕಾರಕ್ಕಾಗಿ ಪದೇಪದೇ ಪಕ್ಷ ಬದಲಾಯಿಸುವವರಿಗೆ ಮಣೆ ಹಾಕಬಾರದು. ಸ್ಥಳೀಯರ ಭಾವನೆಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಿರ್ಧಾರ ತೆಗೆದುಕೊಂಡಿದ್ದೇ ಆದರೆ ಲೋಕಸಭೆ ಚುನಾವಣೆಯಲ್ಲಿ ಆಗುವ ಪರಿಣಾಮಗಳಿಗೆ ನಾವು ಹೊಣೆಯಾಗುವುದಿಲ್ಲ ಎಂದು ನಿಯೋಗದ ನಾಯಕರು ಎಚ್ಚರಿಸಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_214_9.txt b/eesanje/url_46_214_9.txt new file mode 100644 index 0000000000000000000000000000000000000000..91b71ca902203edcfabbb27005ff00e454dd94f5 --- /dev/null +++ b/eesanje/url_46_214_9.txt @@ -0,0 +1,11 @@ +ಬಿಜೆಪಿ ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಮಾ.5-ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಖಚಿತವಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸರ್ಕಾರ ಸಂದರ್ಭೋಚಿತವಾಗಿ ನಡೆದುಕೊಂಡಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ನಿಜ. ಆದರೆ ಯಾರು ಕೂಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಅದರ ಕುರಿತಂತೆ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳನ್ನು ನಿನ್ನೆ ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆದುಕೊಂಡಿದ್ದೇವೆ. ಇಷ್ಟೇ ಜನ ಇದ್ದಾರೆಯೇ ಅಥವಾ ಬೇರೆಯವರು ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸುತ್ತೇವೆ ಎಂದರು. +ಎಫ್‍ಎಸ್‍ಎಲ್ ವರದಿಯನ್ನು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿರುವುದರಿಂದ, ವರದಿಯನ್ನು ಬಹಿರಂಗಪಡಿಸುವ ಅಗತ್ಯ ಏನಿದೆ. ನಾನೇ ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅದನ್ನು ಖಚಿತಪಡಿಸಿಕೊಂಡ ಬಳಿಕವೇ ನಾವು ಕ್ರಮ ಕೈಗೊಂಡಿದ್ದೇವೆ. ವಿರೋಧಪಕ್ಷಗಳು ಹೇಳಿದಾಕ್ಷಣ ಸಾಕ್ಷ್ಯ ಆಧಾರವಿಲ್ಲದೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪುನರ್ ಉಚ್ಚರಿಸಿದರು. +ಘಟನೆಗೆ ಸಂಬಂಧಪಟ್ಟಂತೆ ಗೃಹಸಚಿವನಾಗಿ ನಾನು ಅಥವಾ ನಮ್ಮ ಇಲಾಖೆಯ ಡಿಜಿಪಿ, ಪೊಲೀಸ್ ಆಯುಕ್ತರು ನೀಡುವ ಹೇಳಿಕೆಗಳು ಮಾತ್ರ ಅಧಿಕೃತ. ಉಳಿದಂತೆ ಬೇರೆಯವರಿಗೆ ಹೆಚ್ಚಿನ ಮಾಹಿತಿಗಳು ಇರುವುದಿಲ್ಲ. ಅವರು ಏನೇ ಹೇಳಿದರೂ ಅದು ವೈಯಕ್ತಿಕ ಅಭಿಪ್ರಾಯಗಳು ಮಾತ್ರ ಎಂದರು. +ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್, ಬಿಜೆಪಿಯವರು ಹೇಳಿದಂತೆಲ್ಲಾ ಕ್ರಮ ಕೈಗೊಳ್ಳಲಾಗುವುದಿಲ್ಲ. ರಾಜ್ಯದಲ್ಲಿ ಕಾನೂನು ನಿಯಮಗಳು ಅಸ್ತಿತ್ವದಲ್ಲಿವೆ ಎಂದರು. ಈ ಘಟನೆಯಲ್ಲಿ ಸರ್ಕಾರಕ್ಕೆ ಯಾವುದೇ ಮುಜುಗರವಾಗಿಲ್ಲ. ಪಾಕ್ ಪರ ಘೋಷಣೆ ಕೂಗಲು ಸರ್ಕಾರವೇನು ಪ್ರಾಯೋಜಕತ್ವ ನೀಡಿರಲಿಲ್ಲ. ಘೋಷಣೆ ಖಚಿತವಾಗಬೇಕೆಂದು ಕಾಯುತ್ತಿದ್ದೆವು. ಈಗ ಖಚಿತವಾಗಿದೆ. ಆರೋಪಿಗಳನ್ನು ಬಂಧಿಸಿದ್ದೇವೆ. ಇದಕ್ಕಾಗಿ ಸರ್ಕಾರವನ್ನು ಪ್ರಶಂಸಿಸಬೇಕು. ನಾವು ಒಳ್ಳೆಯ ಕೆಲಸ ಮಾಡಿದ್ದೇವೆ. ಯಾವುದೇ ಮುಲಾಜಿಲ್ಲದೇ ಆರೋಪಿಗಳನ್ನು ಬಂಧಿಸಿದ್ದೇವೆ ಎಂದರು. +ಘಟನೆಯ ದಿನ ವಿಧಾನಸೌಧದ ಭದ್ರತೆಗೆ ನಿಯೋಜರಾಗಿದ್ದ ಪೊಲೀಸ್ ಅಧಿಕಾರಿಗಳಿಂದ ಲೋಪಗಳಾಗಿದ್ದರೆ ಅಂತವರ ವಿರುದ್ಧವೂ ಕ್ರಮ ಜರುಗಿಸಲಾಗುತ್ತದೆ. ಇದಕ್ಕೆ ನಮಗೆ ಯಾರ ಸಲಹೆಯೂ ಬೇಕಿಲ್ಲ ಎಂದು ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರರು ಆರೋಪಿಗಳ ಕುರಿತು ಸಮರ್ಥಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಆಯಾ ಇಲಾಖೆಯ ಸಚಿವರಿಗೆ ಮಾತ್ರ ಸ್ಪಷ್ಟ ಮಾಹಿತಿ ಇರುತ್ತದೆ. ಉಳಿದವರಿಗೆ ಹೆಚ್ಚಿನ ತಿಳುವಳಿಕೆ ಇರುವುದಿಲ್ಲ. ಆದರೆ ಸರ್ಕಾರವಾಗಿ ಸಂಪುಟದ ಸಚಿವರು ಹೇಳಿಕೆಗಳನ್ನು ನೀಡಿರುತ್ತಾರೆ. ಆದರೆ ಅವರ ಎಲ್ಲಾ ಮಾತುಗಳಿಗೂ ನಾನು ಸ್ಪಷ್ಟನೆ ನೀಡಲು ಸಾಧ್ಯವಿಲ್ಲ. ಸಂಬಂಧಪಟ್ಟವರೇ ಉತ್ತರ ನೀಡಬೇಕು ಎಂದರು. +ಸ್ಪೋಟ ಪ್ರಕರಣ; ಜಂಟಿ ತನಿಖೆ :ಬೆಂಗಳೂರಿನ ರಾಮೇಶ್ವರಂ ಕೆಫೆಸ್ಪೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದವರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ರಾಜ್ಯದ ಸಿಸಿಬಿ ಪೊಲೀಸರು ಕೂಡ ತನಿಖೆಗೆ ಕೈ ಜೋಡಿಸಿದ್ದಾರೆ. ಯಾರೇ ತನಿಖೆ ಮಾಡಲಿ ಪ್ರಕರಣವನ್ನು ಬೇಸುವುದು ಮತ್ತು ಸ್ಪೋಟಕ್ಕೆ ಯಾರು ಕಾರಣ ಎಂಬುದನ್ನು ಪತ್ತೆ ಹಚ್ಚುವುದು ನಮಗೆ ಮುಖ್ಯ. +ಬೆಂಗಳೂರು ಸ್ಪೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಆಗಮಿಸಿದೆ. ನಮ್ಮ ಪೊಲೀಸರು ಪ್ರಕರಣವನ್ನು ಅವರಿಗೆ ಹಸ್ತಾಂತರಿಸಲಿದ್ದಾರೆ. ನಮಗಿರುವ ಮಾಹಿತಿಯನ್ನು ಎನ್‍ಐಎ ಜೊತೆ ಹಂಚಿಕೊಳ್ಳಲಾಗುವುದು. ಬಸ್‍ನಲ್ಲಿ ಸಂಚರಿಸಿದ ದೃಶ್ಯಾವಳಿಗಳನ್ನು ನೂರಾರು ಕಡೆ ಪರಿಶೀಲಿಸಿ ಸಂಗ್ರಹಿಸಲಾಗಿದೆ. ಕೆಲವು ಮಾಹಿತಿಗಳು ದೊರೆತಿವೆ. ತನಿಖೆ ದೃಷ್ಟಿಯಿಂದ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು. +ಜೈಲಿನಲ್ಲಿ ಕೆಲ ಚಟುವಟಿಕೆಗಳು ನಡೆಯುತ್ತಿರುವ ಮಾಹಿತಿ ಆಧರಿಸಿ ನಮ್ಮ ಪೊಲೀಸರು ದಾಳಿ ನಡೆಸಿ ಈ ಮೊದಲು ಪರಿಶೀಲಿಸಿದ್ದರು. ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ತಂಡಗಳನ್ನು ರಚಿಸಲಾಗಿತ್ತು. ರಾಜ್ಯದ ಭಯೋತ್ಪಾದಕ ನಿಗ್ರಹ ದಳವೂ ಕೂಡ ತನಿಖೆಯಲ್ಲಿ ಭಾಗಿಯಾಗಿದೆ ಎಂದು ತಿಳಿಸಿದರು. ಎನ್‍ಐಎ ತನಿಖಾ ಕಚೇರಿ ಬೆಂಗಳೂರಿನಲ್ಲಿ ಈಗಾಗಲೇ ಅಸ್ತಿತ್ವದಲ್ಲಿದೆ. ಮಂಗಳೂರಿನಲ್ಲಿ ಕಚೇರಿ ತೆರೆಯುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು. +ಮಂಡ್ಯ ಪ್ರಕರಣದಲ್ಲೂ ಕ್ರಮ :2022ರ ನವೆಂಬರ್‍ನಲ್ಲಿ ಬಿಜೆಪಿಯವರೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಆಗ ಬಿಜೆಪಿ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿದೆ. ಕಾನೂನು ಎಲ್ಲರಿಗೂ ಒಂದೇ. ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಅಪರಾಧ. ಹೀಗಾಗಿ ಮಂಡ್ಯ ಜಿಲ್ಲಾ ಪೊಲೀಸರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಬಿಜೆಪಿಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಆ ವೇಳೆ ಘಟನೆಯ ಬಗ್ಗೆ ನಮ್ಮ ಗಮನಕ್ಕೆ ಬಂದಿರಲಿಲ್ಲ. ಈಗ ಬಂದಿದೆ. ಹೀಗಾಗಿ ಕ್ರಮ ಕೈಗೊಂಡಿದ್ದೇವೆ ಎಂದರು. \ No newline at end of file diff --git a/eesanje/url_46_215_1.txt b/eesanje/url_46_215_1.txt new file mode 100644 index 0000000000000000000000000000000000000000..a3a14c5b6dec1d642202ad121c7621b69baa3744 --- /dev/null +++ b/eesanje/url_46_215_1.txt @@ -0,0 +1,7 @@ +ಬಾಂಬ್ ಸ್ಫೋಟ ಪ್ರಕರಣ: ದುಷ್ಕರ್ಮಿಯ ರೇಖಾಚಿತ್ರ ತಯಾರಿಸಿ ಕಾರ್ಯಾಚರಣೆ +ಬೆಂಗಳೂರು, ಮಾ.4- ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಮಿಂಚಿನಂತೆ ಮರೆಯಾಗಿರುವ ದುಷ್ಕರ್ಮಿಯ ರೇಖಾಚಿತ್ರವನ್ನು ನಗರ ಪೊಲೀಸರು ತಯಾರಿಸಿದ್ದಾರೆ. ಕಳೆದ ಶುಕ್ರವಾರ ಮಧ್ಯಾಹ್ನ ಐಟಿಪಿಎಲ್ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಬಸ್‍ನಲ್ಲಿ ಬಂದು ತಿಂಡಿ ತಿಂದು ಕೈ ತೊಳೆಯುವ ಜಾಗದಲ್ಲಿ ತಾನು ತಂದಿದ್ದ ಕಪ್ಪು ಬಣ್ಣದ ಬ್ಯಾಗ್‍ನ್ನು ಇಟ್ಟು ಹೋಗಿರುವ ಪ್ರತಿಯೊಂದು ದೃಶ್ಯಾವಳಿಗಳು ಕೆಫೆಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. +ಆರೋಪಿಯು ಸುಮಾರು 25ರಿಂದ 30 ವರ್ಷದವನಂತೆ ಕಾಣುತ್ತಿದ್ದು, ಶರ್ಟ್, ಪ್ಯಾಂಟ್ ಧರಿಸಿ ನಂ.10 ಸಂಖ್ಯೆ ಇರುವ ಟೋಪಿ ಹಾಕಿಕೊಂಡು, ಕೂಲಿಂಗ್ ಗ್ಲಾಸ್, ಕಲರ್ ಮಾಸ್ಕ್ ಧರಿಸಿರುವುದು ಸಿಸಿ ಟಿವಿಯ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ಅಲ್ಲದೆ ಆತ ಬಸ್ ಇಳಿದು ಹೋಟೆಲ್‍ಗೆ ಅತಿವೇಗವಾಗಿ ಟೈಮ್ ನೋಡಿಕೊಂಡು ಬರುವ ದೃಶ್ಯ ಹಾಗೂ ಮರದ ಮರೆಯಲ್ಲಿ ನಿಂತು ಎಲ್ಲೆಲ್ಲಿ ಸಿಸಿಕ್ಯಾಮೆರಾಗಳಿವೆ, ಯಾವ ಗ್ರಾಹಕರು ಹೋಟೆಲ್‍ಗೆ ಬರುತ್ತಿದ್ದಾರೆ ಎಂಬುದನ್ನು ಸಹ ಆತ ಗಮನಿಸುತ್ತಿರವ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಎಲ್ಲಾ ದೃಶ್ಯಾವಳಿಗಳನ್ನು ಆಧರಿಸಿ ನಗರ ಪೊಲೀಸರು ದುಷ್ಕರ್ಮಿಯ ರೇಖಾಚಿತ್ರವನ್ನು ತಯಾರಿಸಿ ಆತನ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ. +ಇನ್ನೂ ಪತ್ತೆಯಾಗದ ಆರೋಪಿರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿ ಇನ್ನೂ ಸಿಕ್ಕಿಲ್ಲ. ಘಟನೆ ನಡೆದು ನಾಲ್ಕು ದಿನಗಳಾದರೂ ನಿಖರವಾಗಿ ದುಷ್ಕರ್ಮಿ ಯಾರೆಂಬುದು ನಗರ ಪೊಲೀಸರಿಗೆ ತಿಳಿದುಬಂದಿಲ್ಲ.ಕಳೆದ ಶುಕ್ರವಾರದಿಂದ ಸಿಸಿಬಿ ಪೊಲೀಸರು ಸೇರಿದಂತೆ 8 ವಿಶೇಷ ತಂಡಗಳು ನಿರಂತರವಾಗಿ ಆರೋಪಿ ಪತ್ತೆ ಕಾರ್ಯದಲ್ಲಿ ತೊಡಗಿವೆಯಾದರೂ ಸಹ ಆತ ಸಿಕ್ಕಿಲ್ಲ. ಸಿಸಿಬಿ ಪೊಲೀಸರ ಒಂದು ತಂಡ ಆರೋಪಿ ಮೊಬೈಲ್ ಬಳಸಿರಬಹುದೆಂದು ಟವರ್ ಡಂಪ್ ಹಾಗೂ ಸಿಡಿಆರ್‍ನ್ನು ಅನಾಲಿಸಿಸ್ ಮಾಡುತ್ತಿದೆ. +ಮತ್ತೊಂದು ತಂಡ ರಾಮೇಶ್ವರಂ ಕೆಫೆಯಿಂದ ತಮಿಳುನಾಡು ಗಡಿವರೆಗೆ ಹಾಗೂ ಕೆಫೆಯಿಂದ ವೈಟ್‍ಫೀಲ್ಡ್ ಮಾರ್ಗದಲ್ಲಿ ಚನ್ನಸಂದ್ರ, ಸರ್ಜಾಪುರ ಮಾರ್ಗದ ಸಾವಿರಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸಿದರೂ ಸಹ ಆರೋಪಿ ಬಾಂಬ್ ಇಟ್ಟ ಬಳಿಕ ಯಾವ ಮಾರ್ಗದಲ್ಲಿ ಹೋಗಿದ್ದಾನೆ ಎಂಬ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.ಮತ್ತೊಂದೆಡೆ ಆರೋಪಿಯು ಬಾಂಬ್ ಇಡುವ ವೇಳೆ ಧರಿಸಿದ್ದ ಶರ್ಟ್ ಹಾಗೂ ಪ್ಯಾಂಟ್ ಬದಲಾಯಿಸಿ ಟೀ-ಶರ್ಟ್, ಜೀನ್ಸ್‍ಪ್ಯಾಂಟ್ ಧರಿಸಿ ಪರಾರಿಯಾಗಿದ್ದಾ ನೆಂಬ ಶಂಕೆಯು ವ್ಯಕ್ತವಾಗಿದೆ. ಅಲ್ಲದೆ, ಆರೋಪಿ ಎರಡು-ಮೂರು ಬಸ್‍ಗಳನ್ನು ಬದಲಾಯಿಸಿ ರಾಜ್ಯದ ಗಡಿ ಬಿಟ್ಟು ಹೊರರಾಜ್ಯಕ್ಕೆ ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದೆ. +ಹಾಗಾಗಿ ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಟಿಲಿಜೆನ್ಸ್ ಸೆಲ್‍ಟಿನ್ ಸಂಪರ್ಕದಲ್ಲಿ ನಗರ ಪೊಲೀಸರು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ತನಿಖಾ ತಂಡಗಳು ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿಯ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಗಾಗಿ ಶೋಧ ನಡೆಸುತ್ತಿವೆ. +ಆರೋಪಿಯು ರಾಮೇಶ್ವರ ಕೆಫೆಗೆ ಬಸ್‍ನಲ್ಲಿ ಬಂದಿದ್ದು, ರವೆ ಇಡ್ಲಿ ತಿಂದು ಕೈತೊಳೆಯುವ ಜಾಗದಲ್ಲಿ ಬಾಂಬ್ ಇಟ್ಟು ಬಂದ ದಾರಿಯಲ್ಲಿ ಹೋಗದೆ ಬೇರೆ ರಸ್ತೆಯ ಮುಖಾಂತರ ಪರಾರಿಯಾಗಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. \ No newline at end of file diff --git a/eesanje/url_46_215_10.txt b/eesanje/url_46_215_10.txt new file mode 100644 index 0000000000000000000000000000000000000000..6dac6512a8f1699bc417d640218818a8fce5ea9b --- /dev/null +++ b/eesanje/url_46_215_10.txt @@ -0,0 +1,7 @@ +ಬಾಂಬ್ ಪ್ರಕರಣ ಅಗತ್ಯ ಬಿದ್ದರೆ ಎನ್ಐಎಗೆ : ಸಿಎಂ ಸಿದ್ದರಾಮಯ್ಯ +ಚಿಕ್ಕಮಗಳೂರು, ಮಾರ್ಚ್ 03: ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸುವ ಬಗ್ಗೆ ಅಗತ್ಯ ಬಿದ್ದರೆ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕ ಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಮೇಶ್ವರ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ ಎಂದರು. +ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಲ್ಲವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. +ಬಿಜೆಪಿ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತುಬ್ರಾಂಡ್ ಬೆಂಗಳೂರು ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ಬಿಜೆಪಿ ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಕಾಲದಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು. 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು ಎಂದು ಕೇಳಿದರು. ಇದು ಎನ್.ಐ.ಎ, ಅವರ ವೈಫಲ್ಯವಲ್ಲವೇ ಎಂದು ಪ್ರಶ್ನಿಸಿದರು. ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ರಾಜಕೀಯ ಮಾಡಬಾರದು ಎಂದರು. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಸ್ಫೋಟ ವಾಗಿತ್ತು.ಆಗ ಬಿಜೆಪಿ ಅಧಿಕಾರದಲ್ಲಿದ್ದರು ಎಂದರು. +ನಿಯಮಾವಳಿಗಳಂತೆ ಬರಪೀಡಿತ ತಾಲ್ಲೂಕುಗಳ ಘೋಷಣೆಚಿಕ್ಕಮಗಳೂರು ಜಿಲ್ಲೆಯನ್ನು ಬರ ಪೀಡಿತ ತಾಲ್ಲೂಕು ಗಳ ಪಟ್ಟಿಯಿಂದ ಹೊರಗಿಟ್ಟಿರುವ ಬಗ್ಗೆ ಮಾತನಾಡಿ ಬರಪೀಡಿತ ಎಂದು ಘೋಷಣೆ ಮಾಡಲು ಕೆಲವು ನಿಯಮಾವಳಿಗಳು ಇದ್ದು ಅದರಂತೆ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. 17 ತಾಲ್ಲೂಕು ಉಳಿದುಕೊಂಡಿವೆ ಎಂದರು. +ಮಂಗನ ಕಾಯಿಲೆ: ಆರೋಗ್ಯ ಸಚಿವರ ಬಳಿ ಚರ್ಚೆಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಮೂವರು ಮೃತಪಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿ, ಆರೋಗ್ಯ ಸಚಿವರ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದರು. +ಲೋಕಸಭೆಗೆ ತಯಾರಿ ಇನ್ನಷ್ಟು ತೀವ್ರಗೊಳಿಸಲಾಗುವುದುಲೋಕಸಭೆಗೆ ತಯಾರಿ ನಡೆದಿದ್ದು,ಸಿದ್ಧತೆ ಇನ್ನಷ್ಟು ತೀವ್ರಗೊಳಿಸುವುದಾಗಿ ತಿಳಿಸಿದರು. ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು. ಅಕ್ರಮ ಭೂ ಒತ್ತುವರಿಗೆ ಸಂಬಂಧಿಸಿದಂತೆ 25 ತಹಶೀಲ್ದಾರ ನೇಮಕಾತಿಯಾಗಿದ್ದು ವರದಿ ನೀಡಿದ್ದಾರೆ ಈ ಬಗ್ಗೆ ಪರಿಶೀಲನಾ ಹಂತದಲ್ಲಿದ್ದು, ಕಂದಾಯ ಸಚಿವರ ಬಳಿ ಮಾತನಾಡುವುದಾಗಿ ಹೇಳಿದರು. ಆರ್.ಅಶೋಕ್ ಅವರು ಏನಾದರೂ ಮಾಡಿ ಕಾಂಗ್ರೆಸ್ ಗೆ ಮತ ಹಾಕಿ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮತ ನೀಡಿ ಎಂದು ಕೇಳಿರಬಹುದು, ಏನಾದರೂ ಮಾಡಿ ಎಂದು ಕೇಳುತ್ತಾರೆಯೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_215_11.txt b/eesanje/url_46_215_11.txt new file mode 100644 index 0000000000000000000000000000000000000000..b432e5bc9de04a58fab3aeaab05a9a1a17545c5e --- /dev/null +++ b/eesanje/url_46_215_11.txt @@ -0,0 +1,8 @@ +ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿ : ಆರ್.ಅಶೋಕ್ +ಬೆಂಗಳೂರು, ಮಾ.3- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ- ನೆಮ್ಮದಿಯ ಭರವಸೆ ಲಭಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. +ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಎಚ್ಚೆತ್ತುಕೊಳ್ಳಲು ಇನ್ನೆಷ್ಟು ಬಾಂಬ್ ಬ್ಲಾಸ್ಟ್ ಆಗಬೇಕು? ಈ ಸರ್ಕಾರ ಯಾಕೆ ಕಣ್ಮುಚ್ಚಿ ಕುಳಿತಿದೆ? ಯಾರನ್ನು ಓಲೈಸುತ್ತಿದೆ? ಎಫ್‍ಎಸ್‍ಎಲ್ ವರದಿ ಬಿಡುಗಡೆ ಮಾಡದೆ ಇರಲು ಸರ್ಕಾರದ ಮೇಲೆ ಸೋನಿಯಾ ಗಾಂಧಿ- ರಾಹುಲ್ ಗಾಂಧಿಯವರ ಒತ್ತಡ ಇದೆಯೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. +ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮನಸ್ಸನ್ನು ಪೂರ್ತಿ ಕಲ್ಮಶ ಮಾಡುವ ಕಡೆಗೆ ಹೋಗುತ್ತಿದೆ. ಕೆಂಗಲ್ ಹನುಮಂತಯ್ಯನವರು ಕಟ್ಟಿಸಿದ ವಿಧಾನಸೌಧ ರಾಜ್ಯದ ಹೃದಯವಿದ್ದಂತೆ. ಅಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿರುವುದು ಅಕ್ಷಮ್ಯ ಎಂದು ತಿಳಿಸಿದರು.ಅಲ್ಪಸಂಖ್ಯಾತರು ತಮಗೆ ಮತ ಹಾಕಿದರೆ ಸಾಕು, ಬಹುಸಂಖ್ಯಾತರನ್ನು ಬಗ್ಗು ಬಡಿಯುತ್ತೇವೆ ಎಂಬ ನೀತಿ ಕಾಂಗ್ರೆಸ್ ಪಕ್ಷದ್ದು ಎಂದು ಅವರು ತಿಳಿಸಿದರು. +ನೀವೇನಾದರೂ ಮಾಡಿ; ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿ. ಮೈಸೂರಿನಲ್ಲಿ ಅವರ ಶಾಸಕರ ಹತ್ಯೆ ಪ್ರಯತ್ನ ಮಾಡಿದರೂ ಏನೂ ಮಾಡುವುದಿಲ್ಲ ಎಂಬ ಕರ್ನಾಟಕದ ಕಾಂಗ್ರೆಸ್ ಮನಸ್ಥಿತಿ ಗಂಡಾಂತರ ತರುವಂತಿದೆ ಎಂದು ಆಕ್ಷೇಪ ಸೂಚಿಸಿದರು. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದಕರೆಂಬ ಇಲಿಗಳು ಬಿಲಕ್ಕೆ ಬಂದು ಹುಲಿಗಳಾಗಿವೆ. ನಮ್ಮನ್ನೇನೂ ಮಾಡುವುದಿಲ್ಲ ಎಂಬ ಮನಸ್ಥಿತಿ ಭಯೋತ್ಪಾದಕರದ್ದಾಗಿದೆ. ಇದು ದೊಡ್ಡ ಆಘಾತ ತಂದಿದೆ. ಸರ್ಕಾರವು ಅವರ ಬಗ್ಗೆ ಸಹಾನುಭೂತಿ ತೋರುವುದು ಆಘಾತಕಾರಿ ವಿಚಾರ ಎಂದು ತಿಳಿಸಿದರು. +ರಾಜ್ಯ ಸರ್ಕಾರವು ಕೋಮುವಾದದ ಕಡೆ ವಾಲುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆಯ ಪ್ರವೃತ್ತಿ ಮುಂದುವರೆದಿದೆ. ಅಲ್ಪಸಂಖ್ಯಾತರ ಬಗ್ಗೆ ಬರುವ ವಿಷಯಗಳನ್ನು ಕಾಂಗ್ರೆಸ್ಸಿಗರು ನಿರಂತರವಾಗಿ ಮುಚ್ಚಿಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಬಾಂಬ್ ಸ್ಪೋಟದ ಆರೋಪಿಗಳನ್ನು ಅಮಾಯಕರು, ಮೈ ಬ್ರದರ್ಸ್ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದು ಟೀಕಿಸಿದರು. +ವಿಧಾನಸೌಧದಲ್ಲಿ ಕೆಲದಿನಗಳ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ. ಆ ರೀತಿ ಹೇಳಿಲ್ಲ; ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.ಫಾರೆನ್ಸಿಕ್ ವರದಿಯಲ್ಲಿ ಹಾಗೆ ಆಗಿಲ್ಲ ಎಂದು ಬರಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಾಧ್ಯಮಗಳು ಘೋಷಣೆ ಕೂಗಿದ್ದು ನಿಜ ಎಂದು ಪ್ರಕಟಿಸಿದರೂ ಕಾಂಗ್ರೆಸ್‍ವರು ಅದನ್ನು ಮುಚ್ಚಿಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. +ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಆಗಿದೆ. ಆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಹೋಗಿ, ಇದು ಬಿಸಿನೆಸ್ ರೈವಲ್ರಿ; ತಿಂಡಿ ವಿಚಾರದಲ್ಲಿ ಒಳಜಗಳ ಎಂದಿದ್ದರು. ಈಗ ಅದು ಭಯೋತ್ಪಾದಕರ ಕೃತ್ಯ ಎಂದು ಗೊತ್ತಾಗಿದೆ. ಆದರೂ ಅದನ್ನು ಮುಚ್ಚಿಡುತ್ತಿದ್ದಾರೆ ಎಂದು ಟೀಕಿಸಿದರು. \ No newline at end of file diff --git a/eesanje/url_46_215_12.txt b/eesanje/url_46_215_12.txt new file mode 100644 index 0000000000000000000000000000000000000000..c7f7d40df64ec7403d15d720fb6ecc2e59ae58b1 --- /dev/null +++ b/eesanje/url_46_215_12.txt @@ -0,0 +1,8 @@ +ತಪ್ಪಿಸಿಕೊಳ್ಳಲು ಮಾಸ್ಟರ್ ಪ್ಲಾನ್ ರೂಪಿಸಿದ್ದ ರಾಮೇಶ್ವರಂ ಕಫೆ ಬಾಂಬರ್ +1ಬೆಂಗಳೂರು,ಮಾ.3- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಪೊಲೀಸರನ್ನು ಯಾಮಾರಿಸಲು ಮಾಸ್ಟರ್ ಪ್ಲಾನ್ ಹಾಕಿದ್ದ ಎನ್ನುವುದು ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ. ಬಾಂಬ್ ಇಡಲು ಹೋಗಿದ್ದಾಗ ಶರ್ಟ್ ಮೇಲೆ ಶರ್ಟ್ ಹಾಕಿಕೊಂಡು ನಂತರ ಎಸ್ಕೇಪ್ ಆಗುವ ವೇಳೆ ಬಟ್ಟೆ ಬದಲಿಸಲು ಪ್ಲಾನ್ ರೂಪಿಸಿದ್ದನಂತೆ. ಇದರ ಜೊತೆಗೆ ಹಲವಾರು ಬಸ್ ಚೇಂಜ್ ಮಾಡಿ ಟ್ರಾವೆಲಿಂಗ್ ಮಾಡಿದ್ದ ಎಂಬ ಅಂಶವೂ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಟಿಕೆಟ್ ಪಡೆಯದೇ ಬಸ್‍ನಲ್ಲಿ ಪ್ರಯಾಣ ಮಾಡಿರುವ ಆರೋಪಿ ಒಂದು ಬಸ್ ಹತ್ತಿ ಮುಂದಿನ ಸ್ಟಾಪ್‍ನಲ್ಲಿ ಇಳಿದು ಮತ್ತೊಂದು ಬಸ್ ಹತ್ತಿ ನಂತರವೂ ಮುಂದಿನ ಸ್ಟಾಪ್‍ನಲ್ಲಿ ಇಳಿದಿದ್ದಾನೆ ಇದೇ ರೀತಿ 15ಕ್ಕೂ ಹೆಚ್ಚ ಬಸ್‍ಗಳಲ್ಲಿ ಆತ ಟಿಕೆಟ್ ಪಡೆಯದೆ ಸಂಚರಿಸಿದ್ದಾನೆ ಎಂದು ತಿಳಿದುಬಂದಿದೆ. ಬಟ್ಟೆ ಬದಲಿಸುವುದರ ಜೊತೆಗೆ ಹಲವಾರು ಬಸ್‍ಗಳಲ್ಲಿ ಪ್ರಯಾಣ ಮಾಡಿರುವ ಶಂಕಿತ ಹೊರ ರಾಜ್ಯಕ್ಕೆ ಎಸ್ಕೆಪ್ ಆಗಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. +ಬಾಂಬ್ ಸ್ಪೋಟ ಮತ್ತು ಉಗ್ರ ಕೃತ್ಯಗಳ ತನಿಖೆಯಲ್ಲಿ ಖ್ಯಾತಿ ಗಳಿಸಿರುವ ಮಹಾರಾಷ್ಟ್ರ ಹಾಗೂ ತೆಲಂಗಾಣ ಎಟಿಸಿ ಹಾಗೂ ಕೌಂಟರ್ ಇಂಲಿಜೆನ್ಸ್ ಸೆಲ್ ಟೀಂ ಸಂಪರ್ಕದಲ್ಲಿ ಬೆಂಗಳೂರು ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ. ತೆಲಂಗಾಣ ಸೆಲ್ ತಂಡದವರು ಈಗಾಗಲೇ ಘಟನಾ ಸ್ಥಳದ ಸ್ಯಾಂಪಲ್ಸ ಪಡೆದು ಹೋಗಿರುವುದು ಗೊತ್ತಾಗಿದೆ.ತಮಿಳುನಾಡು, ಕೇರಳ ಹಾಗೂ ತೆಲಂಗಾಣದಲ್ಲಿ ಬೀಡುಬಿಟ್ಟಿರೋ ಬೆಂಗಳೂರು ಪೊಲೀಸರು ಆರೋಪಿಯ ಬಂಧನಕ್ಕಾಗಿ ಜಾಲ ಬೀಸಿದ್ದಾರೆ.ಪಲಾಯನ ಮಾಡಿರುವ ಆರೋಪಿ ಬಂಧನಕ್ಕಾಗಿ ಸಿಸಿಬಿ ಸೇರಿದಂತೆ ಇನ್ನೂರಕ್ಕೂ ಹೆಚ್ಚು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. +ಒಂಟಿ ತೋಳ ಭಯೋತ್ಪಾದಕ:ಒಬ್ಬನೇ ವ್ಯಕ್ತಿ ಬಾಂಬ್ ತಯಾರಿಸಿ ಸ್ಪೋಟಿಸುವ ಸಂಪೂರ್ಣ ಜವಾಬ್ದಾರಿ ಹೊಂದಿದ್ದರೆ ಅವನನ್ನು ಒಂಟಿ ತೋಳ ಭಯೋತ್ಪಾದಕ ಎಂದು ಕರೆಯಲಾಗುತ್ತದೆ. ಅಮೇರಿಕಾದಲ್ಲಿ ಈ ರೀತಿಯ ಭಯೋತ್ಪಾದನೆಗೆ ಇಂತಹ ಹೆಸರು ನೀಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಒಂಟಿ ತೋಳ ಭಯೋತ್ಪಾದಕ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. +ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಬಾಂಬರ್ ಫ್ಲಾನ್ ಹೇಗಿತ್ತು ಗೊತ್ತಾ..?ಬ್ಲಾಸ್ಟ್ ಆರೋಪಿ ಬಾಂಬ್ ಇಟ್ಟ ಒಂದೂವರೆ ಗಂಟೆ ಬಳಿಕ ಬಾಂಬ್ ಸ್ಪೋಟ ಆಗುವಂತೆ ಟೈಮ್ ಫಿಕ್ಸ್ ಮಾಡಿದ್ದು ಆತ ಬೆಂಗಳೂರಿನಿಂದ ತಮಿಳುನಾಡಿಗೆ ಪರಾರಿಯಾಗುವ ಉದ್ದೇಶದಿಂದ ಎನ್ನುವುದು ಪೊಲೀಸರಿಗೆ ಗೊತ್ತಾಗಿದೆ. ರಾಮೇಶ್ವರಂ ಕೆಫೆಯಿಂದ ಹೊಸೂರು ಬಾರ್ಡರ್ ಗೆ ಹೋಗೋಕೆ 59 ನಿಮಿಷಗಳು ಬೇಕು ಒಂದು ವೇಳೆ ಟ್ರಾಫಿಕ್ ಇದ್ರೂ 1 ಗಂಟೆ 15 ನಿಮಿಷದಲ್ಲಿ ರೀಚ್ ಆಗಬಹುದು ಎಂಬ ಉದ್ದೇಶದಿಂದ ಒಂದೂವರೆ ಗಂಟೆಯಲ್ಲಿ ಬೆಂಗಳೂರು ಬಿಟ್ಟು ಹೊರಹೋಗಲು ಫ್ಲಾನ್ ಮಾಡಿರೋ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಪೊಲೀಸರು ರಾಮೇಶ್ವರಂ ಕೆಫೆ ಯಿಂದ ತಮಿಳುನಾಡು ಬಾರ್ಡರ್ ವರೆಗಿನ ಎಲ್ಲಾ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.ಆರೋಪಿ ರಾಮೇಶ್ವರಂ ಕೆಫೆಯಿಂದ ವೈಟ್ ಫೀಲ್ಡ ಗೆ ಹೋಗಿರೋ ಬಗ್ಗೆ ಮಾಹಿತಿ ಇದೆ ನಂತರ ಅಲ್ಲಿಂದ ಚೆನ್ನಸಂದ್ರ ಮೂಲಕ ಸರ್ಜಾಪುರ, ಅತ್ತಿಬೆಲೆ ಮೂಲಕ ಎಸ್ಕೇಪ್ ಆಗಿರೋ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. +ಬಾಂಬ್ ಇಟ್ಟವನನ್ನು ನೋಡಿದ್ದೇನೆ:ರಾಮೇಶ್ವರಂ ಕೆಫೆ ಮ್ಯಾನೇಜರ್ ಹರಿಹರನ್ ಎಂಬುವರು ಬಾಂಬ್ ಇಟ್ಟು ಪರಾರಿಯಾಗಿರುವ ಆರೋಪಿಯನ್ನು ನೋಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಸಾಮಾನ್ಯ ವ್ಯಕ್ತಿಯಂತೆ ಬಂದಿದ್ದ ಬಾಂಬರ್ ಇಡ್ಲಿ ತೆಗೆದುಕೊಂಡು ಒಂದು ಕಡೆ ಕೂತಿದ್ದ ನಾನು ಅವನನ್ನು ನೋಡ್ದೆ, ಕೆಲ ಹೊತ್ತಿನಲ್ಲೇ ಆತ ನಾಪತ್ತೆಯಾಗಿದ್ದ ಆತ ಕೂತಿದ್ದ ಜಾಗದಲ್ಲಿ ಒಂದು ಸಣ್ಣ ಟಿಫಿನ್ ಬಾಕ್ಸ್ ಇತ್ತು ಎಂದು ಅವರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಆ ಬಾಕ್ಸ್ ಗಾಯಾಳು ಸ್ವರ್ಣಾಂಭ ಅವರದ್ದು ಅಂತಾ ಅಂದುಕೊಂಡಿದ್ದೇ ಆದರೆ ಸ್ಪೋಟಗೊಂಡಿದ್ದು ಅದೇ ಟಿಫಿನ್ ಬಾಕ್ಸ್ ಎಂದು ಅವರು ಹೇಳಿದ್ದಾರೆ. +ಸ್ವರ್ಣಾಂಭ ಚಿಕಿತ್ಸೆ ಮುಂದುವರಿಕೆ:ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗಾಯಾಳು ಸ್ವರ್ಣಾಂಭಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದ ಕೆಲವರು ನಿನ್ನೆ ಡಿಸ್ಚಾರ್ಜ್ ಆಗಿದ್ದಾರೆ. \ No newline at end of file diff --git a/eesanje/url_46_215_2.txt b/eesanje/url_46_215_2.txt new file mode 100644 index 0000000000000000000000000000000000000000..4efc08eac393424beef6d4aa1b4e9390271c7aef --- /dev/null +++ b/eesanje/url_46_215_2.txt @@ -0,0 +1,5 @@ +ಡಾ.ಮಂಜುನಾಥ್ ವ್ಯಕ್ತಿತ್ವಕ್ಕೆ ಕಳಂಕ ಬರುವ ತೀರ್ಮಾನ ಮಾಡುವುದಿಲ್ಲ: ಎಚ್.ಡಿ. ದೇವೇಗೌಡರು +ಬೆಂಗಳೂರು,ಮಾ.4- ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ.ಸಿ.ಎನ್.ಮಂಜುನಾಥ್ ಅವರು ರಾಷ್ಟ್ರ ರಾಜಕಾರಣಕ್ಕೆ ಬರಬೇಕೆಂಬ ಪ್ರೀತಿ ವಿಶ್ವಾಸದ ಒತ್ತಾಯವಿದೆ. ಆದರೆ ಅದಕ್ಕೆ ಅವರು ಸಮ್ಮತಿ ಕೊಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರಾಗಿ, ನಿರ್ದೇಶಕರಾಗಿ ಸಲ್ಲಿಸಿದ ಸೇವೆಯಿಂದಾಗಿ ಅವರಿಗೆ ರಾಷ್ಟ್ರದಲ್ಲೇ ಉನ್ನತ ಮಟ್ಟದ ಗೌರವ ಸ್ಥಾನವಿದೆ. ಆ ವ್ಯಕ್ತಿತ್ವಕ್ಕೆ ಕಳಂಕ ಬರುವ ಯಾವ ತೀರ್ಮಾನವನ್ನು ನಾನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಇವತ್ತಿನ ರಾಜಕೀಯ ವ್ಯವಸ್ಥೆ ಎಷ್ಟು ಕೆಟ್ಟು ಹೋಗಿದೆ ಎಂಬುದು ನಮಗೆ ಗೊತ್ತಿದೆ. ನಾಡಿನ ಜನರು ಪ್ರೀತಿ ವಿಶ್ವಾಸದಿಂದ ಅವರು ರಾಜಕೀಯಕ್ಕೆ ಬರಬೇಕೆಂದು ಬಯಸುತ್ತಿದ್ದಾರೆ. ಇವರಿಗೂ ಮಂಜುನಾಥ್‍ರವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವಿಲ್ಲ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗೌಡರು, ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವ ಅಮಿತ್ ಷಾ ಎಚ್.ಡಿ.ಕುಮಾರಸ್ವಾಮಿ ಅವರುಗಳು ಚರ್ಚೆ ಮಾಡಿದ ನಂತರ ತೀರ್ಮಾನವಾಗಲಿದೆ. ನಮಗೆ ಎಷ್ಟು ಕ್ಷೇತ್ರ ಕೊಡುತ್ತಾರೆ, ಯಾವ ಯಾವ ಕ್ಷೇತ್ರ ಕೊಡುತ್ತಾರೆ ಎಂಬುದು ಇನ್ನೊಂದು ವಾರದಲ್ಲಿ ಗೊತ್ತಾಗಲಿದೆ ಎಂದರು. +ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸುವುದರಲ್ಲಿ ಹಿಂದೆ ಬಿದ್ದಿದೆ ಎಂದು ಹೇಳುವುದಿಲ್ಲ. ಆ ಘಟನೆ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ನೀಡಿರುವ ಹೇಳಿಕೆಯನ್ನು ಗಮನಸಿದ್ದೇನೆ. ಅಗತ್ಯಬಿದ್ದರೆ ಘಟನೆಯನ್ನು ಎನ್‍ಐಎಗೆ ವಹಿಸುವುದಾಗಿ ಮುಖ್ಯಮಂತಿ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ಆದಷ್ಟು ಶೀಘ್ರ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಶಿಕ್ಷೆಗೊಳಪಡಿಸಬೇಕು ಎಂದು ಅವರು ತಿಳಿಸಿದರು. +ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಇದೇ ವೇಳೆ ಗೌಡರು ತಿಳಿಸಿದರು. \ No newline at end of file diff --git a/eesanje/url_46_215_3.txt b/eesanje/url_46_215_3.txt new file mode 100644 index 0000000000000000000000000000000000000000..d86340aa124c145c1e53b07e303b57acc1204da8 --- /dev/null +++ b/eesanje/url_46_215_3.txt @@ -0,0 +1,4 @@ +ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕೊಲೆ +ಬೆಂಗಳೂರು, ಮಾ.4- ಸಿಲಿಕಾನ್ ಸಿಟಿಯಲ್ಲಿ ಕನ್ನಡದ ಕೊಲೆಯಾಗಿದೆ. ಹೌದು ನಗರದ ಕೆಲವು ಪ್ರದೇಶಗಳ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡದ ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುವ ಮೂಲಕ ಕೆಲವರು ಕಸ್ತೂರಿ ಕನ್ನಡದ ಕೊಲೆ ಮಾಡಿದ್ದಾರೆ. ಅದರಲ್ಲೂ ಅನ್ಯಭಾಷಿಕರೇ ಹೆಚ್ಚಾಗಿ ವಾಸಿಸುವ ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಏರ್​ಪೋರ್ಟ್ ರೋಡ್, ರೆಸಿಡೆನ್ಸಿ ಮತ್ತಿತರ ಪ್ರದೇಶಗಳಲ್ಲಿ ಈ ರೀತಿಯ ಅನ್ಯಾಯವಾಗಿದೆ. +ನಗರದಲ್ಲಿರುವ ಎಲ್ಲಾ ಮಳಿಗೆ, ಕಚೇರಿ ಹಾಗೂ ಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಶೇ.60 ರಷ್ಟು ಪ್ರಾಧನ್ಯತೆ ನೀಡಬೇಕು ಎಂಬ ಭರದಲ್ಲಿ ಕೆಲವರು ಈ ಎಡವಟ್ಟು ಮಾಡಿಕೊಂಡಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ಜಾರಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಕೆಲ ಸಂಸ್ಥೆಯವರು ಇಂಗ್ಲೀಷ್ ಪದಗಳನ್ನು ಗೂಗಲ್ ಅನುವಾದ ಮಾಡಿಕೊಂಡು ಅದೇ ರೀತಿಯ ಕನ್ನಡ ಪದಗಳನ್ನು ನಾಮಫಲಕಗಳಲ್ಲಿ ಹಾಕಿಕೊಂಡಿರುವುದು ಇದೀಗ ಎಲ್ಲೆಡೆ ರಾರಾಜಿಸುತ್ತಿದೆ. +ಇಂತಹ ಪದಗಳನ್ನು ನಾಮಫಲಕಗಳಲ್ಲಿ ಬಳಕೆ ಮಾಡಿ ಕನ್ನಡವನ್ನು ಕೊಲೆ ಮಾಡುವ ಮೊದಲು ತಮ್ಮ ತಪ್ಪನ್ನು ಸರಿಪಡಿಸಿಕೊಂಡು ಅಚ್ಚಕನ್ನಡದ ಕಸ್ತೂರಿ ಪದಗಳನ್ನು ಬಳಕೆ ಮಾಡಿಕೊಳ್ಳುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_215_4.txt b/eesanje/url_46_215_4.txt new file mode 100644 index 0000000000000000000000000000000000000000..17874ea3c4401bf3a261eec0325803320f812e60 --- /dev/null +++ b/eesanje/url_46_215_4.txt @@ -0,0 +1,6 @@ +ಇಂದು ಬೆಳಗಾವಿಗೆ ಜೆ.ಪಿ.ನಡ್ಡಾ ಭೇಟಿ : ಲೋಕಸಭಾ ಅಭ್ಯರ್ಥಿಗಳ ಕುರಿತು ಚರ್ಚೆ +ಬೆಂಗಳೂರು,ಮಾ.4-ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಆಗಮಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ.ಬೆಳಗಾವಿಯ ವೆಲ್‍ಕಮ್ ಐಟಿಸಿ ಹೋಟೆಲ್‍ನಲ್ಲಿ ರಾತ್ರಿ 9ಕ್ಕೆ ನಡೆಯಲಿರುವ ಈ ಸಭೆಗೆ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖರ ಸಭೆ ನಡೆಸಲಾಗುತ್ತದೆ. +ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಕೋರ್ ಕಮಿಟಿ ಸದಸ್ಯರು, ನಾಲ್ಕು ಜಿಲ್ಲೆಗಳ ಪ್ರಮುಖರು ಭಾಗಿಯಾಗಲಿದ್ದಾರೆ. ಜೊತೆಗೆ ಹಾಲಿ ಶಾಸಕರು, ಸಂಸದರು, ಮಾಜಿ ಶಾಸಕರು, ಪಕ್ಷದ ಮುಖಂಡರು, ಟಿಕೆಟ್ ಆಕಾಂಕ್ಷಿಗಳನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ. +ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಅಭಿಪ್ರಾಯವನ್ನು ಪಡೆಯಲಿರುವ ನಡ್ಡಾ ನಂತರ ಪಕ್ಷದ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸ್ಸು ಮಾಡಲಿದ್ದಾರೆ ಎಂದು ತಿಳಿದುಬಂದಿದೆ.ಬೆಳಗಾವಿ, ಚಿಕ್ಕೋಡಿ, ವಿಜಾಪುರ ಹಾಗೂ ಬಾಗಲಕೋಟೆ ಕ್ಷೇತ್ರಗಳಿಗೆ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಸರ್ವಸಮ್ಮತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಸಭೆಯನ್ನು ನಡೆಸಲಾಗುತ್ತದೆ. +ನಾಳೆ ಬೆಳಗ್ಗೆ 11 ಗಂಟೆಗೆ ಚಿಕ್ಕೋಡಿಯಲ್ಲಿ ಬಿಜೆಪಿ ಬೂತ್ ಮೇಲ್ಪಟ್ಟ ಕಾರ್ಯಕರ್ತರ ಸಭೆ ನಡೆಯಲಿದೆ. ಸಂಜೆ 4.30ಕ್ಕೆ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ ಪ್ರಬುದ್ಧರ ಸಭೆಯಲ್ಲಿ ವೈದ್ಯರು, ಉದ್ಯಮಿಗಳು, ವಕೀಲರು, ಇಂಜಿನಿಯರ್, ಶಿಕ್ಷಣ ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾವಿರಾರು ಜನರು ಭಾಗವಹಿಸಲಿದ್ದಾರೆ. ವಿಶೇಷವಾಗಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ಲೋಕಸಭಾ ಚುನಾವಣೆಯ ತಯಾರಿ, ಮತ್ತೆ ಸಂಘಟನೆಯ ದೃಷ್ಟಿಕೋನದಿಂದ ಈ ಸಭೆ ನಡೆಯಲಿದೆ. +ಈ ವೇಳೆ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಕೆಲಸಗಳನ್ನು ವಿಸ್ತೃತವಾಗಿ ತಿಳಿಸಲಾಗುತ್ತದೆ. ಅಲ್ಲದೇ ಭವಿಷ್ಯದಲ್ಲಿ ಪ್ರಥಮ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಸಭೆಯಲ್ಲಿ ಜೆ.ಪಿ.ನಡ್ಡಾ ಮಾತನಾಡಲಿದ್ದಾರೆ. \ No newline at end of file diff --git a/eesanje/url_46_215_5.txt b/eesanje/url_46_215_5.txt new file mode 100644 index 0000000000000000000000000000000000000000..87eb8967113d2d2c5c7ea19ade6f490589045e9f --- /dev/null +++ b/eesanje/url_46_215_5.txt @@ -0,0 +1,5 @@ +ಪ್ರಭಾಕರ್ ಚಿಣಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲು ಒತ್ತಾಯ +ಬೆಂಗಳೂರು,ಮಾ.4- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಕಾರ್ಯದರ್ಶಿ ಪ್ರಭಾಕರ್ ಚಿಣಿ ಅವರಿಗೆ ಕೊಪ್ಪಳ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಬೇಕೆಂದು ಜಿಲ್ಲಾ ಘಟಕ ಮನವಿ ಮಾಡಿದೆ. ಈ ಸಂಬಂಧ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ನೇತೃತ್ವದ ಕೊಪ್ಪಳ ಜಿಲ್ಲಾ ಬಿಜೆಪಿ ನಿಯೋಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದೆ. +ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿರುವ ನಿಯೋಗವು ಅವರಿಗೆ ಟಿಕೆಟ್ ನೀಡಿದರೆ ಕಾರ್ಯಕರ್ತರು ಗೆಲ್ಲಿಸಿಕೊಡಲಿದ್ದಾರೆ ಎಂಬ ಆಶ್ವಾಸನೆ ನೀಡಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿರುವ ಪ್ರಭಾಕರ್ ಚಿಣಿ ಅವರು ಜಿಲ್ಲೆಯಲ್ಲಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನು ಜನರಿಗೆ ತಲುಪಿಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ ಎಂದು ನಿಯೋಗವು ಮನವರಿಕೆ ಮಾಡಿಕೊಟ್ಟಿದೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಆದರೂ ಧೃತಿಗೆಡದೆ ಲೋಕಸಭೆ ಚುನಾವಣೆಗೆ ಜಿಲ್ಲೆಯಾದ್ಯಂತ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುತ್ತಿದ್ದಾರೆ. ಪ್ರಭಾಕರ್ ಚಿಣಿಗೆ ಟಿಕೆಟ್ ಸಿಕ್ಕರೆ ಜಿಲ್ಲೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದೆ. ಹಾಲಿ ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರಿಗೆ ನಾವು ವಿರೋಧವಿಲ್ಲ. ಆದರೆ ಹಿಂದುಳಿದ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಪ್ರಭಾಕರ್ ಚಿಣಿಗೆ ಟಿಕೆಟ್ ಸಿಗಬೇಕು, ರಾಜಕೀಯ ಕ್ಷೇತ್ರಕ್ಕೆ ಉತ್ತಮ ಚಾರಿತ್ರ ಹಿನ್ನಲೆವುಳ್ಳವರು ಬರಬೇಕೆಂಬ ಪ್ರಧಾನಿ ನರೇಂದ್ರಮೋದಿ ಆಶಯಕ್ಕೆ ಇದು ಸಕಾರಾತ್ಮಕವಾಗುತ್ತದೆ ಎಂದು ನಿಯೋಗವು ಹೇಳಿದೆ. +ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ಕೋರ್ ಕಮಿಟಿ ಶಿಫಾರಸ್ಸು ಮಾಡುವ ವೇಳೆ ಪ್ರಭಾಕರ್ ಚಿಣಿಗೆ ಸಕಾರಾತ್ಮಕವಾಗಿ ಪರಿಣಮಿಸುವುದಾಗಿ ರಾಜ್ಯ ವರಿಷ್ಠರು ನಿಯೋಗಕ್ಕೆ ಆಶ್ವಾಸನೆ ನೀಡದ್ದಾರೆ ಎಂದು ಗೊತ್ತಾಗಿದೆ. \ No newline at end of file diff --git a/eesanje/url_46_215_6.txt b/eesanje/url_46_215_6.txt new file mode 100644 index 0000000000000000000000000000000000000000..d936e08f1fd593adc7fd70fbf4d9aad8f061af07 --- /dev/null +++ b/eesanje/url_46_215_6.txt @@ -0,0 +1,5 @@ + ವರದಿ ಮುಚ್ಚಿಡುವ ಪ್ರಯತ್ನ ಮಾಡಲ್ಲ : ಗೃಹ ಸಚಿವ ಪರಮೇಶ್ವರ +ಬೆಂಗಳೂರು, ಮಾ.4- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ಎಫ್‍ಎಸ್‍ಎಲ್‍ನಿಂದ ಸಂಪೂರ್ಣ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಈ ವರದಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ ಬಂದ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪದೇ ಪದೇ ವರದಿ ಮುಚ್ಚಿಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ. ಖಾಸಗಿ ವರದಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು. +ಎಫ್‍ಎಸ್‍ಎಲ್‍ನಿಂದ ಸಂಪೂರ್ಣ ವರದಿ ಬಂದ ನಂತರ ಬಹಿರಂಗ ಪಡಿಸಲಾಗುವುದು. ಆ ಬಗ್ಗೆ ಅನುಮಾನ ಬೇಡ ಎಂದ ಅವರು, ವಿಡಿಯೋ ಪರಿಶೀಲಿಸಲು ಖಾಸಗಿ ಲ್ಯಾಬೊರೋಟರಿ ಇದೆಯೇ? ಖಾಸಗಿಯಾಗಿ ವಿಡಿಯೋ ಪರಿಶೀಲಿಸಲು ಯಾವ ಅನುಮತಿ ಇತ್ತು? ಖಾಸಗಿಯಾಗಿ ಪರಿಶೀಲನೆಗೆ ಒಳಪಡಿಸಬಹುದೇ? ಯಾರು ಎನ್‍ಓಸಿ ಕೊಟ್ಟಿದ್ದರು? ಆರೋಪಿತ ವಿಡಿಯೋಗೆ ಸಂಬಂಧಿಸಿದ ವಿಚಾರ ಬಹಿರಂಗಗೊಳಿಸಲು ಅಧಿಕಾರವಿದೆಯೇ ಎಂಬ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಎನ್‍ಐಎ ಹಾಗೂ ಎನ್‍ಎಸ್‍ಜಿ ತಂಡಗಳು ಆಗಮಿಸಿ ತನಿಖೆ ನಡೆಸುತ್ತಿವೆ. ಬಾಂಬ್ ಸ್ಪೋಟ ಘಟನೆ ನಡೆದ ಬಳಿಕ ಎನ್‍ಐಎ ಮತ್ತು ಎನ್‍ಸ್‍ಜಿ ತಂಡಗಳು ತನಿಖೆ ನಡೆಸುತ್ತಿವೆ. ನಮ್ಮ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದರು. +ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ಸಲಹೆ, ಸೂಚನೆಗಳನ್ನು ನೀಡಲಾಗಿದೆ. ಪ್ರಕರಣ ತನಿಖೆ ನಡೆಯುತ್ತಿರುವುದರಿಂದ ಕೆಲವು ವಿಚಾರಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದರು. ಸ್ಪೋಟ ಪ್ರಕರಣದ ಮೂಲ ಪತ್ತೆ ಹಚ್ಚಬೇಕಾಗಿದೆ. ವೈಯಕ್ತಿಕ ವಿಚಾರಕ್ಕೆ ಬಾಂಬ್ ಸ್ಪೋಟ ಮಾಡಲಾಗಿದೆಯೇ? ಯಾವುದಾದರೂ ಸಂಘಟನೆ ಕೈವಾಡ ಅದರ ಹಿಂದೆ ಇದೆಯೇ? ಎಂಬುದು ತನಿಖೆ ಪೂರ್ಣಗೊಂಡ ನಂತರ ಗೊತ್ತಾಗಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_215_7.txt b/eesanje/url_46_215_7.txt new file mode 100644 index 0000000000000000000000000000000000000000..447540476393eb304150bf7996724d5355b761ab --- /dev/null +++ b/eesanje/url_46_215_7.txt @@ -0,0 +1,4 @@ +ಮಂಗಳೂರಿನಲ್ಲಿ ಮೂವರು ವಿದ್ಯಾರ್ಥಿಗಳ ಮೇಲೆ ಆ್ಯಸಿಡ್ ದಾಳಿ +ಮಂಗಳೂರು, ಮಾ.4- ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ಎರಚಿರುವ ಘಟನೆ ನಗರದ ಕಡಬ ಸರ್ಕಾರಿ ಕಾಲೇಜಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂವರು ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರಿಗೆ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. +ಮುಖಕ್ಕೆ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದಿದ್ದ ದುಷ್ಕರ್ಮಿ ಏಕಾಏಕಿ ಕಾಲೇಜು ಆವರಣದಲ್ಲಿ ನಿಂತಿದ್ದ ಯುವತಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೇರಳ ಮೂಲದ ಈ ಆರೋಪಿಯನ್ನು ತಕ್ಷಣ ಹಿಡಿಯಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. +ಈತ ಯಾರಿಗೆ ಆ್ಯಸಿಡ್ ಎರಚಲು ಬಂದಿದ್ದ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ವಿದ್ಯಾರ್ಥಿನಿಯೊಬ್ಬಳನ್ನು ಟಾರ್ಗೆಟ್ ಮಾಡಿ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಪರೀಕ್ಷೆ ಆರಂಭಗೊಳ್ಳುವ ಕೆಲವೇ ನಿಮಿಷಗಳಲ್ಲಿ ಈ ಘಟನೆ ನಡೆದಿರುವುದು ಮಂಗಳೂರಿನಲ್ಲಿ ಆತಂಕ ಮೂಡಿಸಿದೆ. \ No newline at end of file diff --git a/eesanje/url_46_215_8.txt b/eesanje/url_46_215_8.txt new file mode 100644 index 0000000000000000000000000000000000000000..2834535b86eb117e9b7ea69d239815c0516994c5 --- /dev/null +++ b/eesanje/url_46_215_8.txt @@ -0,0 +1,9 @@ +ಪಾಕ್ ಪರ ಘೋಷಣೆ : ಬಿಜೆಪಿಯಿಂದ ಎಫ್‍ಎಸ್‍ಎಲ್ ವರದಿ ಬಹಿರಂಗ +ಬೆಂಗಳೂರು,ಮಾ.4- ರಾಜ್ಯ ರಾಜಕಾರಣದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್)ದ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ವಿಧಾನ ಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್‍ಎಸ್‍ಎಲ್ ವರದಿಯಲ್ಲಿ ಬಹಿರಂಗವಾಗಿದೆ. +ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು ನಾಸೀರ್ ಸಾಬ್ ಜಿಂದಾಬಾದ್ ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ ಎಫ್‍ಎಸ್‍ಎಲ್ ವರದಿಯಲ್ಲಿ ಬಟಾ ಬಯಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ. ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿಗಳ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದೆ. +ಫೆ.27ರಂದು ರಾಜ್ಯಸಭೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್‍ನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ವಿಜಯಶಾಲಿಯಾದರು. ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸುದ್ದಿ ಸಾಕಷ್ಟು ಚರ್ಚೆಯಾಗಲು ಆರಂಭವಾಗುತ್ತಿದ್ದಂತೆ ಪಾಕ್ ಪರ ಘೋಷಣೆ ಕೇಳಿ ಬಂದಿದೆ ಎನ್ನಲಾಗಿರುವ ವಿಡಿಯೋ ತುಣಕನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವಿಡಿಯೋ ತುಣುಕು ಎಫ್‍ಎಸ್‍ಎಲ್ ವರದಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಧೃಡಪಟ್ಟಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಸರ್ಕಾರ ಈ ಬಗ್ಗೆ ಅಧಿಕೃತವಾಗಿ ಯಾವುದೇ ವರದಿ, ಹೇಳಿಕೆಯನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. +ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಖಾಸಗಿ ಎಫ್‍ಎಸ್‍ಎಲ್ ವರದಿ ಈಗಾಗಲೇ ಈ ಕುರಿತು ಧೃಡೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. ಬೆಂದ ಮನೆಯಲ್ಲಿ ಗಳ ಇರಿಯುವ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನ ಸೌಧದಲ್ಲೇ ಪಾಕಿಸ್ತಾನ್ ಜಿಂದಾಬಾದ್‍ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮಾನ್ಯ@siddaramaiahನವರೇ,ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು…../RWWmeMcc4O +ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ಪಾಕಿಸ್ತಾನ್ ಜಿಂದಾಬಾದ್ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ವಿಧಾನಸೌಧದ ಆವರಣದಲ್ಲೇ ಪಾಕ್ ಪರ ಘೋಷಣೆ ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯ ತೋರಿದ್ದಾರೆ. ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಪೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವತಂತ್ರ್ಯ ದೊರೆತ ವಾತಾವರಣ ನಿರ್ಮಾಣವಾಗಿದೆ, ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕಳೆದ ಫೆ.27ರಂದು ರಾಜ್ಯಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾರೆ ಎಂದು ಆರೋಪಿಸಲಾಗಿತ್ತು. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿತ್ತು. ಪಾಕಿಸ್ತಾನ ಜಿಂದಾಬಾದ್ ಕೂಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಪ್ರಿಯಾಂಕ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಸಮರ್ಥಿಸಿಕೊಂಡಿದ್ದರು. \ No newline at end of file diff --git a/eesanje/url_46_215_9.txt b/eesanje/url_46_215_9.txt new file mode 100644 index 0000000000000000000000000000000000000000..8e1d519bb7c6470a8b97c8979790546fd7c128db --- /dev/null +++ b/eesanje/url_46_215_9.txt @@ -0,0 +1,4 @@ + ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್‍ಐಎಗೆ ಹಸ್ತಾಂತರ +ನವದೆಹಲಿ, ಮಾ.4 (ಪಿಟಿಐ) ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‍ಐಎ) ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು. +ಮೂಲಗಳ ಪ್ರಕಾರ ಸ್ಪೋಟದ ತನಿಖೆಯನ್ನು ಎನ್‍ಐಎಗೆ ಹಸ್ತಾಂತರಿಸಲಾಗಿದೆ. ಟೋಪಿ, ಮುಖವಾಡ ಮತ್ತು ಕನ್ನಡಕ ಧರಿಸಿದ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಹಾಗೂ ಶಿವಮೊಗ್ಗದ ನದಿ ತೀರದಲ್ಲಿ ನಡೆಸಿದ್ದ ಟ್ರಯಲ್ ಬ್ಲಾಸ್ಟ್ ಪ್ರಕರಣದ ಹೊಣೆಯನ್ನು ಸಿರಿಯಾ ಮೂಲದ ಐಸಿಸ್ ಸಂಘಟನೆ ಒಪ್ಪಿಕೊಂಡಿತ್ತು. ಆದರೆ, ಬೆಂಗಳೂರಿನ ರಾಮೇಶ್ವರಂ ಕೆಫೆ ಪ್ರಕರಣದ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಗಳು ಒಪ್ಪಿಕೊಂಡಿಲ.ಆದರೂ ಮೇಲಿನ ಎರಡು ಪ್ರಕರಣಗಳಿಗೂ ರಾಮೇಶ್ವರಂ ಪ್ರಕರಣಕ್ಕೂ ಸಾಮ್ಯತೆ ಇರುವುದನ್ನು ಮನಗಂಡಿದ್ದ ಬೆಂಗಳೂರು ಪೊಲೀಸರು ಆರೋಪಿ ಬಂಧನಕ್ಕೆ ಇನ್ನಿಲ್ಲದ ಕಾರ್ಯಾಚರಣೆ ನಡೆಸುತ್ತಿವೆ. +ಆರೋಪಿ ತಮಿಳುನಾಡು ಇಲ್ಲವೇ ಕೇರಳಕ್ಕೆ ಪರಾರಿಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಲವಾರು ವಿಶೇಷ ಪೊಲೀಸ್ ತಂಡಗಳು ನೆರೆ ರಾಜ್ಯಕ್ಕೆ ದೌಡಾಯಿಸಿ ಆರೋಪಿ ಎಡೆಮುರಿ ಕಟ್ಟಲು ಹರಸಾಹಸ ನಡೆಸುತ್ತಿವೆ.ರಾಮೇಶ್ವರಂ ಕೆಫೆಗೆ ರಾಷ್ಟ್ರೀಯ ಭದ್ರತಾ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೂ ಆದರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರಕರಣ ಬೇಧಿಸಲು ನಮ ಪೊಲೀಸರೇ ಸಮರ್ಥರಾಗಿದ್ದಾರೆ ಎಂದು ಹೇಳಿಕೊಂಡಿದ್ದರು. ಆದರೆ, ಇದೀಗ ಪ್ರಕರಣದ ಗಂಭೀರತೆ ಅರಿತ ನಂತರ ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. \ No newline at end of file diff --git a/eesanje/url_46_216_1.txt b/eesanje/url_46_216_1.txt new file mode 100644 index 0000000000000000000000000000000000000000..f19e71a7e5fd60ab6aeac133827bc65efbcaa8f2 --- /dev/null +++ b/eesanje/url_46_216_1.txt @@ -0,0 +1,7 @@ +ಭಾರತ ಪೋಲಿಯೋ ಮುಕ್ತ ರಾಷ್ಟ್ರ ಸ್ಥಿತಿ ಕಾಪಾಡಿಕೊಳ್ಳಬೇಕು : ದಿನೇಶ್‍ ಗುಂಡೂರಾವ್ +ಬೆಂಗಳೂರು, ಮಾ.3-ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿರುವುದನ್ನು ನಾವು ಮುಂದಿನ ದಿನಗಳಲ್ಲೂ ಕಾಯ್ದುಕೊಳ್ಳುವುದು ಮುಖ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಇಂದಿನಿಂದ ಮಾರ್ಚ್ 6ರ ವರೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. +ವೈಲ್ಡ್ ಪೋಲಿಯೋ ವೈರಸ್‍ನ ಪಸರಿಸುವಿಕೆಯು ಇಂದಿಗೂ ಜಗತ್ತಿನಾದ್ಯಂತ ಮಕ್ಕಳನ್ನು ಬಾಧಿಸುತ್ತಿದೆ. ಇದರಲ್ಲಿ ನೆರೆ ರಾಷ್ಟ್ರಗಳೂ ಸೇರಿರುವುದು ಭಾರತಕ್ಕೆ ಕಳವಳಕಾರಿಯಾಗಿದೆ. ಹೀಗಾಗಿ ಪೋಲಿಯೋ ನಿರ್ಮೂಲನೆ ಸ್ಥಿತಿಯನ್ನು ಭಾರತ ಕಾಯ್ದುಕೊಳ್ಳಬೇಕಿದೆ. ಭಾರತದ ಪರಿಣಿತರ ಸಲಹಾ ಸಮೂಹದ ಶಿಫಾರಸಿನನ್ವಯ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಈ ಲಸಿಕೆ ಹಾಕಲು ರಾಷ್ಟ್ರೀಯ ಪೋಲಿಯೋ ಲಸಿಕಾ ಅಭಿಯಾನವನ್ನು ಇಂದಿನಿಂದ ಮಾರ್ಚ್ 6ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು. +ಇಂದು ಪೋಲಿಯೋ ಬೂತ್‍ಗಳಲ್ಲಿ, ಮುಂದಿನ 2 – 3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್ ತಿಳಿಸಿದ್ದಾರೆ. +ಪಿ-2 ವಿಧದ ಪೋಲಿಯೋ ಸೋಂಕು ಜಾಗತಿಕ ಮಟ್ಟದಲ್ಲಿ ನಿರ್ಮೂಲನೆಯಾಗಿದೆ. ಪಿ-3 ಯ ಯಾವುದೇ ಪ್ರಕರಣಗಳು ವರದಿಯಾಗಿರುವುದಿಲ್ಲ. ಇದಕ್ಕೆ ಅಕೃತವಾಗಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಕ್ಟೋಬರ್ 2019ರಲ್ಲಿ ಪ್ರಮಾಣಪತ್ರ ಪಡೆದಿದೆ. ಈಗ ಪಿ-1 ಪ್ರಕರಣಗಳು ಮಾತ್ರವೇ ವರದಿಯಾಗುತ್ತಿವೆ. 2011ರ ಜನವರಿ 13ರಲ್ಲಿ ಪಶ್ಚಿಮ ಬಂಗಾಳದಲ್ಲಿ ಕೊನೆಯ ಪೋಲಿಯೋ ಪ್ರಕರಣವು ವರದಿಯಾಗಿತ್ತು. ಇದಾದ ಮೇಲೆ ಭಾರತದಲ್ಲಿ ಇದುವರೆವಿಗೂ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿರುವುದಿಲ್ಲ ಎಂದರು. +ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಪ್ರತಿ ಶಿಶುವಿಗೆ 5 ವರಸೆ ಒಪಿವಿ(ಓರಲ್ ಪೋಲಿಯೋ ವ್ಯಾಕ್ಸಿನ್) ಮತ್ತು 3 ವರಸೆ ಐಪಿವಿ(ಇನ್ಜಕ್ಟಬಲ್ ಪೋಲಿಯೋ ವ್ಯಾಕ್ಸಿನ್) ಲಸಿಕೆಗಳನ್ನು ನೀಡಲಾಗುತ್ತಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು. +ಸುಮಾರು 33712 ಪೋಲಿಯೋ ಬೂತ್‍ಗಳನ್ನ ತೆರೆಯಲಾಗಿದ್ದು, 111370 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ. 963 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, 7206 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಪಡೆದಿದ್ದರೂ ಸಹ ಈ ಅಭಿಯಾನದಲ್ಲಿ ಮತ್ತೆ ಲಸಿಕೆ ಹಾಕಿಸುವುದು ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಭೇಟಿ ಮಾಡಿ ಅಥವಾ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಎಂದರು. \ No newline at end of file diff --git a/eesanje/url_46_216_10.txt b/eesanje/url_46_216_10.txt new file mode 100644 index 0000000000000000000000000000000000000000..1b34c2c2bd201edb036cd342823dc0446bcf2133 --- /dev/null +++ b/eesanje/url_46_216_10.txt @@ -0,0 +1,5 @@ +ಹೆಬ್ಬಾರ್-ಎಸ್.ಟಿ.ಸೋಮಶೇಖರ್‌ಗೆ ಬಿಜೆಪಿ ನೋಟಿಸ್ +ಬೆಂಗಳೂರು,ಮಾ.2- ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಹಿನ್ನಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವ ಕುರಿತು ಶಾಸಕರಾದ ಎಸ್.ಟಿ.ಸೋಮ ಶೇಖರ್ ಮತ್ತು ಶಿವರಾಮ್ ಹೆಬ್ಬಾರ್‍ಗೆ ಬಿಜೆಪಿ ನೋಡಟಿಸ್ ಜಾರಿ ಮಾಡಿದೆ. ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡರ್ ಪಾಟೀಲ್ ಅವರು ಈ ಇಬ್ಬರು ಶಾಸಕರಿಗೆ ಕಾರಣ ಕೇಳಿ ಮಾ.5ರೊಳಗೆ ಉತ್ತರ ನೀಡಬೇಕೆಂದು ನೋಟಿಸ್ ಕಳುಹಿಸಿದ್ದಾರೆ. +ಸಂವಿಧಾನದ 10ನೇ ಶೆಡ್ಯೂಲ್‍ನಡಿ ಬರುವ ಪಕ್ಷಾಂತರ ಮತ್ತು ಅನರ್ಹತೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ. ಕಳೆದ ಫೆ.26ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ್ದಾರೆಂಬ ಆರೋಪವಿದೆ. ಬಿಜೆಪಿ ಅಧಿಕೃತ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ ಮತ ಹಾಕುವಂತೆ ಬಿಜೆಪಿ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆಂಬ ಆರೋಪವಿದೆ. +ಬಿಜೆಪಿ ಚುನಾವಣಾ ಏಜೆಂಟರಾಗಿದ್ದ ಸುನೀಲ್‍ಕುಮಾರ್ ಅವರಿಗೆ ಮತದಾನಕ್ಕೂ ಮುನ್ನ ತೋರಿಸಿಯೇ ಅಡ್ಡ ಮತದಾನ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅನಾರೋಗ್ಯದ ಕಾರಣ ಮತದಾನಕ್ಕೆ ಬಾರದೆ ಗೈರು ಹಾಜರಾಗಿದ್ದರು. ನನಗೆ ಆರೋಗ್ಯ ಸರಿ ಇಲ್ಲದ ಕಾರಣ ನಾನು ಮತದಾನ ಮಾಡಲು ಹೋಗಿರಲಿಲ್ಲ. ಇದರಲ್ಲಿ ಯಾವುದೇ ದುರದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು. +ಆದರೆ ಇದನ್ನು ಒಪ್ಪದ ಬಿಜೆಪಿ ಮತದಾನ ಹಿಂದಿನ ದಿನ ಸೋಮವಾರ ಶಿವರಾಮ್ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್, ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಅವರ ಕಾರಿನಲ್ಲಿ ಕಾಂಗ್ರೆಸ್ ಶಾಸಕರು ತಂಗಿದ್ದ ಹೆಬ್ಬಾಳ ಸಮೀಪದ ಮ್ಯಾನತಾಟೆಕ್ ಪಾರ್ಕ್ ಹತ್ತಿರ ಹಿಲ್ಟನ್ ರೆಸಾರ್ಟ್‍ಗೆ ಭೇಟಿ ನೀಡಿದ್ದರೆಂಬ ಮಾತು ಕೇಳಿಬಂದಿತ್ತು. ಇದೀಗ ಈ ಇಬ್ಬರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಾಸಕ ಸ್ಥಾನವನ್ನು ಅನರ್ಹಗೊಳಿಸಲು ಬಿಜೆಪಿ ಮುಂದಾಗಿದೆ. \ No newline at end of file diff --git a/eesanje/url_46_216_11.txt b/eesanje/url_46_216_11.txt new file mode 100644 index 0000000000000000000000000000000000000000..587fd6d66ae3500f96427eeef1213af33c85dbc4 --- /dev/null +++ b/eesanje/url_46_216_11.txt @@ -0,0 +1,7 @@ +ರಾಮೇಶ್ವರಂ ಕೆಫೆ ಸ್ಫೋಟ : ಉಗ್ರನ ಪತ್ತೆಗೆ ಪೊಲೀಸರ ಹರ ಸಾಹಸ +ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಿ ಪರಾರಿಯಾಗಿರುವ ಉಗ್ರ ಯಾರೆಂಬುದು ಈತನಕ ನಗರ ಪೊಲೀಸರಿಗೆ ತಿಳಿದುಬಂದಿಲ್ಲ. ಆತನ ಗುರುತು ಪತ್ತೆಗಾಗಿ ನಗರ ಪೊಲೀಸರು ಮತ್ತು ಕೇಂದ್ರ ತನಿಖಾ ತಂಡಗಳು ಹರಸಾಹಸ ಪಡುತ್ತಿವೆ. ಸುಮಾರು 25 ರಿಂದ 30 ವರ್ಷದ ಉಗ್ರ ನಿನ್ನೆ ಮಧ್ಯಾಹ್ನ ಸುಮಾರು 12 ಗಂಟೆಯಲ್ಲಿ ಮೊದಲೇ ಮಾಡಿಕೊಂಡ ಸಂಚಿನಂತೆ ತನ್ನ ಗುರುತು ಯಾರಿಗೂ, ಎಲ್ಲಿಯೂ ಗೊತ್ತಾಗದಂತೆ ತಲೆಗೆ ಬಿಳಿಬಣ್ಣದ ಟೋಪಿ, ಮುಖಕ್ಕೆ ಮಾಸ್ಕ್ ಹಾಗೂ ಕನ್ನಡಕವನ್ನು ಧರಿಸಿ ಕಪ್ಪು ಬಣ್ಣದ ಬ್ಯಾಗ್ ಹಾಕಿಕೊಂಡು ಹೋಟೆಲ್ ಒಳಗೆ ಪ್ರವೇಶಿಸಿದ್ದಾನೆ. +ನಂತರ ಕ್ಯಾಶಿಯರ್ ಕೌಂಟರ್ ಬಳಿ ಹೋಗಿ ಹಣ ಕೊಟ್ಟು ಟೋಕನ್ ತೆಗೆದುಕೊಂಡು ರವೆ ಇಡ್ಲಿಯನ್ನು ಟೇಬಲ್ ಬಳಿ ತಂದಿಟ್ಟುಕೊಂಡು ತಿಂದು ನಂತರ ಕೈ ತೊಳೆಯಲು ವಾಶ್‍ಬೇಸಿನ್ ಬಳಿ ಹೋಗಿ ಯಾರಿಗೂ ಅನುಮಾನ ಬಾರದಂತೆ ತಾನು ತಂದಿದ್ದ ಬ್ಯಾಗ್‍ಅನ್ನು ಕೆಳಗಿಟ್ಟು ಕೈ ತೊಳೆದುಕೊಂಡು ತಾನು ಕಟ್ಟಿದ್ದ ವಾಚ್‍ನಲ್ಲಿ ಟೈಂ ನೋಡಿಕೊಂಡು ಹೊರಹೋಗಿದ್ದಾನೆ ಈ ಎಲ್ಲಾ ದೃಶ್ಯಗಳು ಹೋಟೆಲ್‍ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. +ಆತ ಹೋದ ಸುಮಾರು ಒಂದು ಗಂಟೆಯ ಅಂತರದಲ್ಲಿ ಬ್ಯಾಗ್‍ನಿಂದ 2 ಬಾರಿ ಸ್ಪೋಟವಾಗಿದ್ದು, ಘಟನಾ ಸ್ಥಳದಲ್ಲಿ ನಟ್ಟು, ಬೋಲ್ಟು, ಬ್ಯಾಟರಿ ಪತ್ತೆಯಾಗಿವೆ. ಒಟ್ಟಾರೆ ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಆತನ ಚಲನವಲನ ಸೆರೆಯಾಗಿದ್ದು, ಆ ಆಧಾರದಲ್ಲಿ ಆತನ ಪತ್ತೆ ಕಾರ್ಯ ಮುಂದುವರೆದಿದೆ. +ಸಿಸಿ ಕ್ಯಾಮೆರಾಗಳ ಪರಿಶೀಲನೆ +ಬೆಂಗಳೂರು,ಮಾ.2- ರಾಮೇಶ್ವರಂ ಕೆಫೆ ಐಟಿಪಿಎಲ್ ರಸ್ತೆಯಲ್ಲಿದ್ದು, ಆ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳ ಫುಟೇಜ್‍ಗಳನ್ನು ತನಿಖಾ ತಂಡವೊಂದು ಪರಿಶೀಲನೆ ನಡೆಸುತ್ತಿದೆ. ಆರೋಪಿಯು ಈ ಸ್ಥಳಕ್ಕೆ ಬಸ್‍ನಲ್ಲಿ ಬಂದು ಇಳಿದಿರುವ ಹಿನ್ನಲೆಯಲ್ಲಿ ಈ ಮಾರ್ಗಗಳಲ್ಲಿ ನಿನ್ನೆ ಸಂಚರಿಸಿರುವ ಎಲ್ಲ ಬಸ್‍ಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಸಿಸಿಬಿ ತಂಡವೊಂದು ಪರಿಶೀಲಿಸುತ್ತಿದೆ. +ಆರೋಪಿಯು ಯಾವ ಸ್ಥಳದಿಂದ ಯಾವ ಬಸ್‍ನಲ್ಲಿ ಬಂದ, ಎಲ್ಲಿ ಇಳಿದ, ಕೆಫೆಯಲ್ಲಿ ಬಾಂಬ್ ಇಟ್ಟು ಯಾವ ಕಡೆಗೆ, ಎಲ್ಲಿಗೆ ಹೋಗಿದ್ದಾನೆ ಎಂಬ ಬಗ್ಗೆ ತನಿಖಾ ತಂಡಗಳು ಸಿಸಿಟಿವಿ ಫುಟೇಜ್‍ಗಳನ್ನು ಕೂಲಂಕುಷವಾಗಿ ಪರಿಶೀಲಿಸುತ್ತಿದ್ದಾರೆ. ಮತ್ತೊಂದು ತಂಡ ರಾಮೇಶ್ವರಂ ಕೆಫೆಗೆ ತೆರಳಿ ಮತ್ತೊಮ್ಮೆ ಸಿಸಿಕ್ಯಾಮೆರಾ ಫುಟೇಜ್‍ಗಳನ್ನು ಪರಿಶೀಲಿಸುತ್ತಿದೆ. ಪೊಲೀಸರ ನಿದ್ದೆಗೆಡಿಸಿರುವ ಆರೋಪಿಗಾಗಿ ತನಿಖಾ ತಂಡಗಳು ಹಗಲಿರುಳು ಶ್ರಮಿಸುತ್ತಿವೆ. \ No newline at end of file diff --git a/eesanje/url_46_216_12.txt b/eesanje/url_46_216_12.txt new file mode 100644 index 0000000000000000000000000000000000000000..a4d4800e89d72339ce010414dcad45f7524b309e --- /dev/null +++ b/eesanje/url_46_216_12.txt @@ -0,0 +1,7 @@ +ಬಾಂಬ್ ಸ್ಪೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ : ವಿಜಯೇಂದ್ರ +ಬೆಂಗಳೂರು,ಮಾ.2- ಬಾಂಬ್ ಸ್ಪೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್‍ಎಸ್‍ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ದೃಢಪಟ್ಟಿದೆ ಎಂದರು. +ಇಂಥ ಸಂದರ್ಭದಲ್ಲಿ ರಾಜ್ಯ ಸರಕಾರ, ಸಚಿವರ ಹೇಳಿಕೆಗಳು ಕೇವಲ ಬಿಜೆಪಿ ಮಾತ್ರವಲ್ಲ, ಸಾಮಾನ್ಯಜನರಿಗೂ ವಿಶ್ವಾಸ ಹುಟ್ಟಿಸುವಂತಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ದೇಶದ್ರೋಹಿಗಳ ಬಗ್ಗೆ ಸಚಿವರು ಆ ರೀತಿ ಘೋಷಣೆ ಕೂಗಿಯೇ ಇಲ್ಲ ಎಂದಿದ್ದರು. ಬಿಜೆಪಿಯವರಿಗೆ ಮಾಡುವುದಕ್ಕೆ ಕೆಲಸ ಇಲ್ಲ ಎಂದಿದ್ದರು. ವಿಧಾನಸೌಧಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಸಿ.ಸಿ.ಟಿ.ವಿ. ಫೂಟೇಜ್ ಗಮನಿಸಿ ಅರ್ಧ ಗಂಟೆಯಲ್ಲಿ ಅವರನ್ನೆಲ್ಲ ಹಿಡಿದು ಒಳಗೆ ಹಾಕಬೇಕಿತ್ತು. ಅದನ್ನೂ ಮಾಡಿಲ್ಲ ಎಂದು ಆಕ್ಷೇಪಿಸಿದರು. +ಎಫ್‍ಎಸ್‍ಎಲ್ ವರದಿ ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಘಟನೆ ನಡೆದು ನಾಲ್ಕೈದು ದಿನ ಕಳೆದಿದೆ. ಇವತ್ತಿಗೂ ಎಫ್.ಎಸ್.ಎಲ್ ವರದಿ ಬಂದಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಎಫ್.ಎಸ್.ಎಲ್ ವರದಿ ಬಂದಿದೆ; ಪಾಕ್ ಪರ ಘೋಷಣೆ ದೃಢವಾಗಿದೆ ಎಂದು ಪತ್ರಿಕೆಗಳು, ಮಾಧ್ಯಮಗಳು ವರದಿ ಮಾಡಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳು ಎಫ್.ಎಸ್.ಎಲ್ ವರದಿ ಬಂದೇ ಇಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ ಎಂದು ವಿವರಿಸಿದರು. +ರಾಜ್ಯದ ಜನರಲ್ಲೂ ಆತಂಕ ಕಾಡುತ್ತಿದೆ. ಇಂಥ ಘಟನೆಗಳನ್ನು ಎಷ್ಟು ಗಂಭೀರವಾಗಿ ರಾಜ್ಯ ಸರಕಾರ ತೆಗೆದುಕೊಳ್ಳಬೇಕೋ, ಇಂಥ ಘಟನೆ ನಡೆದಾಗ ಪೊಲೀಸ್ ಅಧಿಕಾರಿಗಳು ಎಷ್ಟು ಗಂಭೀರವಾಗಿ ವರ್ತಿಸಬೇಕೋ ಅಂಥ ಗಂಭೀರತೆ ಮೇಲ್ನೋಟಕ್ಕೆ ಕಾಣುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು. ಪಾಕಿಸ್ತಾನ ಜಿಂದಾಬಾದ್ ಘಟನೆ ಕುರಿತು ನಿರ್ಧರಿಸಲು 5 ದಿನ ಬೇಕೇ? ಇದು ನಾಚಿಕೆಗೇಡಿನ ಸಂಗತಿ ಅಲ್ಲವೇ ಎಂದು ಮರುಪ್ರಶ್ನೆ ಹಾಕಿದರು.ಹಾದಿಬೀದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಲ್ಲ. ವಿಧಾನಸೌಧದಲ್ಲಿ ಕೂಗಿರುವಾಗ ದೇಶದ್ರೋಹಿಗಳನ್ನು ಬಂಧಿಸಿಲ್ಲವೆಂದರೆ ನಿಮ್ಮ ಇಚ್ಛಾಶಕ್ತಿ ಕೊರತೆಯೇ? ಅಥವಾ ದೇಶದ್ರೋಹಿಗಳನ್ನು ರಕ್ಷಿಸುವ ಪ್ರಯತ್ನದ ಜೊತೆಗೆ, ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ಆಗುವುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ; ಅದನ್ನು ಸ್ಪಷ್ಟವಾಗಿ ಹೇಳುವಂತೆ ಆಗ್ರಹಿಸಿದರು. +ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರಕಾರದ ನಡವಳಿಕೆ ಮತ್ತು ಸಚಿವರ ಹೇಳಿಕೆಗಳು, ಶಿವಮೊಗ್ಗದ ಟಿಪ್ಪು ಜಯಂತಿ ಸಂದರ್ಭದಲ್ಲಿ ದೇಶದ್ರೋಹಿಗಳ ಅಟ್ಟಹಾಸ, ಕುಕ್ಕರ್ ಬ್ಲಾಸ್ಟ್‍ನಲ್ಲಿ ಅಪರಾಧಿಗಳನ್ನು ಅಮಾಯಕರೆಂದು ಬಿಂಬಿಸುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರ ಹೇಳಿಕೆಗಳು ರಾಜ್ಯದಲ್ಲಿ ಅಶಾಂತಿ ಮೂಡಲು ಕಾರಣವಾಗುತ್ತಿದೆ ಎಂದು ತಿಳಿಸಿದರು. +ಗೌರವಾನ್ವಿತ ಮುಖ್ಯಮಂತ್ರಿಗಳು, ಸರಕಾರ ಇಂಥ ಘಟನೆಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡದಂತೆ ನಿಲ್ಲಿಸಬೇಕು ಎಂದು ಅವರು ಕಳಕಳಿಯಿಂದ ಮನವಿ ಮಾಡುವುದಲ್ಲದೆ ಆಗ್ರಹಿಸುವುದಾಗಿ ಹೇಳಿದರು. ಏನೂ ಆಗಿಯೇ ಇಲ್ಲ ಎಂಬಂತೆ ಸಚಿವರು ಮನಸೋ ಇಚ್ಛೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಟೀಕಿಸಿದರು. \ No newline at end of file diff --git a/eesanje/url_46_216_2.txt b/eesanje/url_46_216_2.txt new file mode 100644 index 0000000000000000000000000000000000000000..53b167a7f087e080be9c6f8c055e6f28e1ddb726 --- /dev/null +++ b/eesanje/url_46_216_2.txt @@ -0,0 +1,9 @@ +ಬಿಜೆಪಿ ಸಂಕಲ್ಪ : 3 ಲಕ್ಷ ಜನರ ಅಭಿಪ್ರಾಯ ಸಂಗ್ರಹಕ್ಕೆ ಚಾಲನೆ +ಬೆಂಗಳೂರು, ಮಾ.3- ಬಿಜೆಪಿ ಸಂಕಲ್ಪ ಪತ್ರಕ್ಕಾಗಿ ರಾಜ್ಯದ ಕನಿಷ್ಠ 3 ಲಕ್ಷ ಜನರ ಅಭಿಪ್ರಾಯ ಸಂಗ್ರಹದ ಗುರಿ ಇದೆ. ದೇಶದಲ್ಲಿ 1 ಕೋಟಿ ಜನರ ಅಭಿಪ್ರಾಯ ಸಂಗ್ರಹಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಕಲ್ಪ ಪತ್ರ ಜನಾಭಿಪ್ರಾಯ ಸಂಗ್ರಹಣಾ ಅಭಿಯಾನದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಲಹಾ ಪೆಟ್ಟಿಗೆ ಇಡಲಾಗುತ್ತದೆ. ಮಿಸ್ಡ್ ಕಾಲ್ ನೀಡುವುದರ ಮೂಲಕ ಪಾಲ್ಗೊಳ್ಳಬಹುದು. ಕರೆ ಮಾಡಲು ಸಂಖ್ಯೆ : 909090-2124 ನೀಡಲಾಗಿದೆ ಎಂದರು. +ಮುಂದಿನ ಲೋಕಸಭಾ ಚುನಾವಣೆಯ ಕ್ಷಣಗಣನೆ ಸಂದರ್ಭದಲ್ಲಿ ನರೇಂದ್ರ ಮೋದಿಜೀ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಚಿಂತನೆಯಂತೆ ಪ್ರಣಾಳಿಕೆ ಬದಲು ಜನಾಭಿಪ್ರಾಯ ಪಡೆದು ಸಂಕಲ್ಪ ಪತ್ರದ ಮೂಲಕ ಚುನಾವಣೆ ಎದುರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಬಿಜೆಪಿ ಕೇಂದ್ರ ಸರಕಾರವು 2014ರ, 2019ರ ಚುನಾವಣೆ ಸಂದರ್ಭದಲ್ಲಿ ನೀಡಿದ ಬಹುತೇಕ ಎಲ್ಲ ಭರವಸೆಗಳನ್ನು ಈಡೇರಿಸಿದೆ. 10 ವರ್ಷದ ಮೋದಿಜೀ ಅವರ ಆಡಳಿತಾವಧಿಯಲ್ಲಿ ಭರವಸೆ ಈಡೇರಿಸಿದ್ದಲ್ಲದೆ, ಯೋಜನೆ ಶಂಕುಸ್ಥಾಪನೆ ಜೊತೆಗೆ ಉದ್ಘಾಟನಾ ದಿನಾಂಕ ನಿಗದಿಪಡಿಸಿ ಸಕಾಲದಲ್ಲಿ ಪೂರ್ಣಗೊಳಿಸಿದ್ದನ್ನು ನೋಡಿದ್ದೇವೆ ಎಂದು ವಿವರಿಸಿದರು. +ಜನಸಂಘ ಕಾಲದಿಂದ ಪ್ರಣಾಳಿಕೆಯಲ್ಲಿ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನಕ್ಕೆ ಕಾರಣವಾದ ಜಮ್ಮು- ಕಾಶ್ಮೀರದ 370ನೇ ವಿಧಿ ರದ್ದು ಮಾಡುವ ಮೂಲಕ ಮೋದಿಯವರು ನುಡಿದಂತೆ ನಡೆದಿದ್ದಾರೆ. ಅಯೋಧ್ಯೆಯಲ್ಲಿ ಬಾಲರಾಮನ ಭವ್ಯ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಈ ಬಾರಿ ಘೋಷಣಾ ಪತ್ರ ಪ್ರಣಾಳಿಕೆ ಬದಲು ಸಂಕಲ್ಪ ಪತ್ರ ಮುಂದಿಡಲಾಗುವುದು ಎಂದರು. +ಸ್ವಾತಂತ್ರ್ಯೋತ್ಸವದ 100ನೇ ವರ್ಷಾಚರಣೆ ವೇಳೆ 2047ರಲ್ಲಿ ನಮ್ಮ ಭಾರತ ವಿಕಸಿತ ಭಾರತ ಎಂಬ ಸಂಕಲ್ಪವನ್ನು ಮೋದಿಜೀ ಅವರು ಮುಂದಿಟ್ಟಿದ್ದಾರೆ. ಅದನ್ನು ಸಾಕಾರಗೊಳಿಸಲು ಅಭಿಪ್ರಾಯ ಸಂಗ್ರಹದ ಅಭಿಯಾನ ಆರಂಭಿಸಿದೆ. ಸಮಾಜದ ರೈತರು, ಮಹಿಳೆಯರು, ಯುವಜನತೆ ಸೇರಿ ಎಲ್ಲ ವರ್ಗದ ಜನರಿಂದ ಅಭಿಮತ ಸಂಗ್ರಹಿಸಲಿದ್ದೇವೆ ಎಂದು ವಿವರಿಸಿದರು. ಕರ್ನಾಟಕದಲ್ಲಿ ಅಭಿಯಾನ ಮಾರ್ಚ್ 3 ರಿಂದ 15 ರ ತನಕ ನಡೆಯಲಿದೆ. “ವಿಕಸಿತ ಭಾರತ – ಇದು ಮೋದಿ ಗ್ಯಾರಂಟಿ” ಈ ವಿಷಯದ ಕುರಿತು ರಾಜ್ಯಾದ್ಯಂತ ವಿಡಿಯೋ ವ್ಯಾನ್ ಹಾಗೂ ಸಲಹೆ ಪೆಟ್ಟಿಗೆಗಳ ಮೂಲಕ ಮುಂದಿನ 5 ವರ್ಷಗಳ ಗುರಿಯ ಕುರಿತು ರಾಜ್ಯದ ಜನರ ಆಶೀರ್ವಾದ ಪಡೆದು ಸಲಹೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು. +ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮಾತನಾಡಿ, ಭಾರತ ವಿಶ್ವಗುರುವಾಗುವುದು ಎಲ್ಲರ ಬಯಕೆ. ಇದಕ್ಕಾಗಿ ಪ್ರತಿ ಪ್ರಜೆಯ ಸಂಕಲ್ಪವನ್ನು ದಾಖಲಿಸಲು ಈ ಅಭಿಯಾನ ಮಾಡಲಾಗುತ್ತಿದೆ. ರಸ್ತೆ ಬದಿ ವ್ಯಾಪಾರಿ, ಪೊಲೀಸ್ ಕಾನ್‍ಸ್ಟೆಬಲ್, ಇಂಜಿನಿಯರ್, ಕ್ರೀಡಾಪಟು ಸೇರಿ ಪ್ರತಿಯೊಬ್ಬರ ಭಾವನೆಗೆ ಅವಕಾಶವಿದೆ ಎಂದು ವಿವರಿಸಿದರು. +ಬಿಜೆಪಿ ಸಂಕಲ್ಪ ಪತ್ರವು ವಿಸ್ತøತ ಅಭಿಪ್ರಾಯವನ್ನು ಹೊಂದಿರುತ್ತದೆ. ಶಿಕ್ಷಣ, ಕ್ರೀಡೆ, ಧಾರ್ಮಿಕ ಭಾವನೆಗಳ ರಕ್ಷಣೆ ಸೇರಿ ಎಲ್ಲ ಭಾವನೆಗಳ ಸಂಗ್ರಹ ನಡೆಯಲಿದೆ. ಕರ್ನಾಟಕದಲ್ಲಿ 3 ಲಕ್ಷಕ್ಕಿಂತ ಹೆಚ್ಚು ಜನರು ಅಭಿಪ್ರಾಯ ನೀಡುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮೋದಿ ಗ್ಯಾರಂಟಿ ನಿಜವಾದುದು. ಇತರ ಪಕ್ಷಗಳದು ನೀರಿನ ಮೇಲೆ ಗುಳ್ಳೆ ಇದ್ದಂತೆ ಎಂದು ಜನರಿಗೂ ಅರಿವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬ ನೈಜ ಗ್ಯಾರಂಟಿಯನ್ನು ಮೋದಿಜೀ ಕೊಟ್ಟಿದ್ದಾರೆ. ಓಲೈಕೆ ರಾಜಕಾರಣ ಬಿಜೆಪಿಯದಲ್ಲ ಎಂದು ಹೇಳಿದರು. ಜನರು ಈ ಅಭಿಯಾನದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ನೀಡಬೇಕು ಎಂದು ಮನವಿ ಮಾಡಿದರು. +ರಾಜ್ಯ ಉಪಾಧ್ಯಕ್ಷೆ ಮತ್ತು ಅಭಿಯಾನದ ಸಹ ಸಂಚಾಲಕಿ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ಮಾತನಾಡಿ, ಸಂಕಲ್ಪ ಪತ್ರಕ್ಕೆ ಡಿಜಿಟಲ್ ಮೀಡಿಯ ಮೂಲಕ ಅಥವಾ ನಮೋ ಆಪ್ ಮೂಲಕ ದಾಖಲಿಸಲು ಅವಕಾಶವಿದೆ. ಇದನ್ನು ಬಳಸಿಕೊಳ್ಳಿ ಎಂದು ವಿನಂತಿಸಿದರು. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಖ್ಯಾತ ಕ್ರಿಕೆಟ್ ತಾರೆ ವೆಂಕಟೇಶಪ್ರಸಾದ್, ಸಾಹಿತಿ- ಐಎಎಸ್ ಅಧಿಕಾರಿ, ಅಭಿಯಾನದ ಸಹ ಸಂಚಾಲಕ ಸಿ.ಆರ್.ಸೋಮಶೇಖರ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮತ್ತಿತರರು ಉಪಸ್ಥಿತರಿದ್ದರು. +ನರೇಂದ್ರ ಮೋದಿಯವರ ಸರಕಾರದ ಸಾಧನೆಗಳ ವಿಡಿಯೋ ಪ್ರದರ್ಶನವಿತ್ತು. ಕ್ರಿಕೆಟ್ ತಾರೆ ವೆಂಕಟೇಶಪ್ರಸಾದ್ ಸೇರಿ ಹಲವರು ಇದೇ ಸಂದರ್ಭದಲ್ಲಿ ತಮ್ಮ ಅಭಿಪ್ರಾಯವನ್ನು ಸಲಹಾ ಪೆಟ್ಟಿಗೆಗೆ ಹಾಕಿದರು. \ No newline at end of file diff --git a/eesanje/url_46_216_3.txt b/eesanje/url_46_216_3.txt new file mode 100644 index 0000000000000000000000000000000000000000..d2c5adf76bea448792c352fe8d3b86a307792755 --- /dev/null +++ b/eesanje/url_46_216_3.txt @@ -0,0 +1,5 @@ +ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ : ಕತಾರ್‌ನಲ್ಲಿ ಚೈತ್ರಾ ಹೆಬ್ಬಾರ್ ಪತ್ತೆ +ಮಂಗಳೂರು,ಮಾ.3- ನಾಪತ್ತೆಯಾಗಿದ್ದ ಪಿಎಚ್‍ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಪ್ರವಾಸಿ ವೀಸಾದ ಮೂಲಕ ಕತಾರ್‍ಗೆ ತೆರಳಿರುವುದು ಗೊತ್ತಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿರುವ ಚೈತ್ರಾ ಹೆಬ್ಬಾರ್ ನನಗೆ ಪ್ರೀತಿಸೋ ಹಕ್ಕಿಲ್ಕವೇ, ಅಲ್ಲದೆ, ನನ್ನ ಇಚ್ಛೆಯಂತೆ ನಾನು ಬಂದಿದ್ದೇನೆ, ನನಗೆ ಬದುಕೋ ಹಕ್ಕಿಲ್ಲವೇ? ಎಂದು ಪ್ರಶ್ನಿಸಿದ್ದಾಳೆ. +ಕಳೆದ ಫೆಬ್ರವರಿ 17 ರಂದು ಪಿಜಿಯಿಂದ ಬೆಳಗ್ಗೆ 9 ಗಂಟೆಗೆ ಸ್ಕೂಟಿಯಲ್ಲಿ ತೆರಳಿದ ಆಕೆ ನಾಪತ್ತೆಯಾಗಿದ್ದಳು. ಆಕೆಯ ದೊಡ್ಡಪ್ಪ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ವೇಳೆ ಚೈತ್ರಾಳ ಸ್ಕೂಟಿ ಸುರತ್ಕಲ್ ಬಳಿ ಪತ್ತೆಯಾಗಿತ್ತು. ಸುರತ್ಕಲ್‍ನಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿರುವುದು ಗೊತ್ತಾಗಿತ್ತು. ಪಿಜಿ ಬಳಿ ಬರುತ್ತಿದ್ದ ಪುತ್ತೂರಿನ ಶಾರೂಖ್ ಮೇಲೆ ದೂರು ದಾಖಲಾಗಿತ್ತು ಆತನ ಪತ್ತೆಗೆ ಮುಂದಾದ ಪೊಲೀಸರರಿಗೆ ಆತ ಹಿಮಾಚಲ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದ ವಿಚಾರಣೆ ವೇಳೆ ಚೈತ್ರಾ- ಶಾರೂಖ್ ನಡುವಿನ ಪ್ರೀತಿ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. +ಮಂಗಳೂರಿನಿಂದ ಬೆಂಗಳೂರು ನಂತರ ಗೋವಾ-ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶಕ್ಕೆ ತೆರಳಿದ್ದ ಚೈತ್ರಾ, ಅಲ್ಲಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಕತಾರ್ ದೇಶಕ್ಕೆ ಪ್ರಯಾಣ ಮಾಡಿದ್ದಾಳೆ. ಆ ದೇಶಕ್ಕೆ ಹೋಗಲು ಶಾರೂಖ್ ಎಲ್ಲಾ ವ್ಯವಸ್ಥೆ ಮಾಡಿದ್ದನು ಎಂದು ತಿಳಿದುಬಂದಿದೆ. ಈ ಹಿಂದೆ ಕತಾರ್‍ನಲ್ಲೇ ಕೆಲಸ ಮಾಡಿಕೊಂಡಿದ್ದ ಶಾರೂಖ್, ಪ್ರಕರಣವೊಂದರಲ್ಲಿ ಜೈಲು ಸೇರಿ ಕಾರಣ ಆತ ಯುಐಇ ಪ್ರವೇಶ ನಿರ್ಬಂಧಿಸಲಾಗಿದ್ದ ಕಾರಣ ಆತ ಇಲ್ಲೇ ಉಳಿದಿದ್ದ. +ಸದ್ಯ ಚೈತ್ರಾ ಕತಾರ್‍ನ ಭಾರತೀಯ ರಾಯಭಾರಿ ಕಚೇರಿ ಮೂಲಕ ಇಮೇಲ್ ಸಂದೇಶ ರವಾನಿಸಿದ್ದು, ಮೂರು ತಿಂಗಳು ಕಳೆದು ಊರಿಗೆ ಬರೋದಾಗಿ ಹೇಳಿದ್ದಾಳೆ. ಹೀಗಾಗಿ ಶಾರೂಖ್‍ನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಇಬ್ಬರೂ ಪ್ರಬುದ್ದರಾಗಿರುವ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ. ಡ್ರಗ್ಸ್ ನ ಆಸೆ ಆಮೀಷ ತೋರಿಸಿ ಬ್ರೈನ್ ವಾಶ್ ಮಾಡಿದ್ದಾನೆ. ಇದು ಲವ್ ಜಿಹಾದ್ ದೊಡ್ಡ ಷಡ್ಯಂತ್ರ ಎಂದು ಬಜರಂಗದಳ ಆರೋಪಿಸಿದೆ. \ No newline at end of file diff --git a/eesanje/url_46_216_4.txt b/eesanje/url_46_216_4.txt new file mode 100644 index 0000000000000000000000000000000000000000..15f6b762b1587d799aadd3ebee1289e3f7d23864 --- /dev/null +++ b/eesanje/url_46_216_4.txt @@ -0,0 +1,8 @@ +ಬಿಜೆಪಿಯ ಹಲವರಿಗೆ ಟಿಕೆಟ್ ಕೈ ತಪ್ಪುವ ಭೀತಿ +ಬೆಂಗಳೂರು,ಮಾ.3- ವಿಧಾನಸಭಾ ಚುನಾವಣೆಯಲ್ಲಿ ಸೋತು ಲೋಕಸಭಾ ಚುನಾವಣೆಯಲ್ಲಿ ಮರು ರಾಜಕೀಯ ಪ್ರವೇಶ ಪಡೆಯಲು ಮುಂದಾಗಿದ್ದ ಬಿಜೆಪಿಯ ಹಲವು ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ತಮ್ಮ ಪುತ್ರರು, ಕುಟುಂಬದವರು, ಸಂಬಂಧಿಕರು ಹಾಗೂ ಕೊನೆ ಕ್ಷಣದಲ್ಲಿ ತಾವೇ ಅಭ್ಯರ್ಥಿಯಾಗಬೇಕೆಂದು ಕಳೆದ ಹಲವು ದಿನಗಳಿಂದ ಕ್ಷೇತ್ರದಲ್ಲಿ ತೆರೆಮರೆಯಲ್ಲಿ ಪ್ರಚಾರ ನಡೆಸಿದ್ದ ಹಲವು ಆಕಾಂಕ್ಷಿಗಳಿಗೆಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಸ ಪ್ರಯೋಗ ನಡೆಸಿ ಕೈ ಸುಟ್ಟುಕೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ಬಿಜೆಪಿ ವರಿಷ್ಠರು ಈ ಬಾರಿ ಅಂತಹ ಯಾವುದೇ ದುಸ್ಸಾಹಸಕ್ಕೆ ಕೈ ಹಾಕದಿರಲು ಮುಂದಾಗಿದ್ದಾರೆ. ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಯಲ್ಲಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್‍ರಿಗೆ ಟಿಕೆಟ್ ನೀಡಬಾರದೆಂದು ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಕ್ಷೇತ್ರದಲ್ಲಿ ಮಾಜಿ ಸಚಿವ ರೇಣುಕಾಚಾರ್ಯ, ಜಗಳೂರು ಕ್ಷೇತ್ರದ ಶಾಸಕ ಡಾ.ಗುರುಸಿದ್ದನಗೌಡರ್ ಪುತ್ರ ಡಾ.ರವಿ ಸೇರಿದಂತೆ ಹಲವರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. +ಇದೀಗ ಬಿಜೆಪಿ ಸಿದ್ದೇಶ್‍ರಿಗೆ ಕೈ ತಪ್ಪಿದರೆ ಜಿಲ್ಲೆಯಲ್ಲಿ ಪ್ರಬಲವಾಗಿರುವ ಸಾಧು ಲಿಂಗಾಯತ ಸಮುದಾಯ ಕೈಕೊಡಬಹುದು ಎಂಬ ಭೀತಿಯಿಂದ ವಿಧಿಯಿಲ್ಲದೆ ಸಿದ್ದೇಶ್‍ರಿಗೆ ಮಣೆ ಹಾಕುವ ಸಂಭವ ಎದುರಾಗಿದೆ. ಹೀಗಾಗಿ ರೇಣುಕಾಚಾರ್ಯರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ. ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್‍ಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ಈಶ್ವರಪ್ಪ ನಡೆಸಿದ ಪ್ರಯತ್ನ ಕೈಗೂಡುವ ಸಾಧ್ಯತೆಗಳು ಕ್ಷೀಣಿಸಿವೆ. ಈ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಣಕ್ಕಿಳಿದರೆ ಕಾಂತೇಶ್‍ಗೆ ಟಿಕೆಟ್ ಕೈ ತಪ್ಪಲಿದೆ. +ಉಡುಪಿ, ಚಿಕ್ಕಮಗಳೂರು ಕ್ಷೇತ್ರದಿಂದ ಸ್ರ್ಪಸಲು ಮಾಜಿ ಸಚಿವರಾದ ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್, ಜೀವರಾಜ್ ಅವರುಗಳಿಗೂ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಹಾಲಿ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರನ್ನೇ ಮುಂದುವರೆಸಲು ಬಿಜೆಪಿ ತೀರ್ಮಾನಿಸಿದೆ. ಟಿಕೆಟ್ ಕೊಡಬಾರದೆಂದು ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ನಡೆಸಿದ ಅಭಿಯಾನಕ್ಕೂ ಬಿಜೆಪಿ ವರಿಷ್ಠರು ಸೊಪ್ಪು ಹಾಕುವ ಸಾಧ್ಯತೆಗಳು ಕಡಿಮೆ. +ಈ ಕ್ಷೇತ್ರದಿಂದ ಮಾಜಿ ಸಚಿವ ನಾಗರಾಜ ಶೆಟ್ಟಿ ಹಾಗೂ ಸಂಘಪರಿವಾರದ ಬ್ರಿಜೇಶ್ ಚೌತಲ ಆಕಾಂಕ್ಷಿಯಾಗಿದ್ದರು. ಆದರೆ ಕಟೀಲ್‍ಗೆ ಮತ್ತೊಮ್ಮೆ ಅದೃಷ್ಟ ಖುಲಾಯಿಸುವ ಸಾಧ್ಯತೆಗಳು ಹೆಚ್ಚಾಗುತ್ತಿವೆ.ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅನಂತಕುಮಾರ್ ಹೆಗ್ಡೆಯೇ ಉತ್ತರ ಕನ್ನಡ ಕ್ಷೇತ್ರದಿಂದ ಪುನಃ ಕಣಕ್ಕಿಳಿಯಲಿದ್ದಾರೆ. ಒಂದು ವೇಳೆ ಹೆಗ್ಡೆಗೆ ಕೈ ತಪ್ಪಿದ್ದರೆ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಪ್ರಬಲ ಆಕಾಂಕ್ಷಿಯಾಗಿದ್ದರು. +ತುಮಕೂರಿನಲ್ಲಿ ಹಾಲಿ ಸದಸ್ಯ ಬಸವರಾಜು ಸ್ಪರ್ಧೆಯಿಂದ ಹಿಂದೆ ಸರಿದಿರುವ ಕಾರಣ ಮಾಜಿ ಸಚಿವರಾದ ಜಿ.ಟಿ.ಮಾಧುಸ್ವಾಮಿ ಮತ್ತು ವಿ.ಸೋಮಣ್ಣ ಹೆಸರುಗಳು ಪ್ರಬಲವಾಗಿ ಕೇಳಿಬಂದಿದ್ದವು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಚಾಮರಾಜನಗರ ಮತ್ತು ವರುಣ ಕ್ಷೇತ್ರಕ್ಕೆ ಹೋಗಿ ಸೋಲು ಅನುಭವಿಸಿದ್ದ ವಿ.ಸೋಮಣ್ಣಗೆ ಟಿಕೆಟ್ ಬಹುತೇಕ ಪಕ್ಕಾ ಖಾತರಿಯಾಗಿದೆ. ಇದರಿಂದಾಗಿ ಮಾಧುಸ್ವಾಮಿಗೆ ತೀರಾ ನಿರಾಸೆಯಾಗಿದೆ. +ಹೀಗೆ ಅನೇಕ ಕ್ಷೇತ್ರಗಳಲ್ಲಿ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಬಹುತೇಕ ಆಕಾಂಕ್ಷಿಗಳಿಗೆ ಟಿಕೆಟ್ ಸಿಗುವ ಲಕ್ಷಣಗಳು ಕ್ಷೀಣಿಸಿದ್ದು, 2028 ರ ವಿಧಾನಸಭೆ ಚುನಾವಣೆಯವರೆಗೂ ಕಾಯಲೇಬೇಕಾದ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದಾರೆ. \ No newline at end of file diff --git a/eesanje/url_46_216_5.txt b/eesanje/url_46_216_5.txt new file mode 100644 index 0000000000000000000000000000000000000000..b01ce72e5fe2d7c4993ccd093ad929b811063d28 --- /dev/null +++ b/eesanje/url_46_216_5.txt @@ -0,0 +1,8 @@ +ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ : ಎನ್‍ಐಎ, ಎನ್‍ಎಸ್‍ಜಿ ತಂಡ ಪರಿಶೀಲನೆ +ಬೆಂಗಳೂರು,ಮಾ.3- ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸವಾಲಾಗಿ ಪರಿಣಮಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾ ಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾವಹಾರಿಕ ವೈಷಮ್ಯ, ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ಸಂಘಟನೆಯವರು 2ದುಷ್ಕøತ್ಯ ನಡೆಸಿರುವ ಸಾಧ್ಯತೆ, ಬೆಂಗಳೂರು ಮಹಾನಗರಕ್ಕೆ ಬಂಡವಾಳ ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷಿತವಲ್ಲದ ನಗರ ಎಂಬ ಹಣೆಪಟ್ಟಿ ಕಟ್ಟುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. +ಇವಿಷ್ಟೇ ಅಲ್ಲದೆ, ನಾವು ಬೇರೆಬೇರೆ ಆಯಾಮಗಳಲ್ಲೂ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದೇವೆ. ಹೋಟೆಲ್ ಮಾಲಿಕರು 11 ಶಾಖೆಗಳನ್ನು ಮಾಡಿದ್ದು, 12ನೇ ಶಾಖೆ ಪ್ರಾರಂಭ ಮಾಡಲು ಮುಂಗಡ ಕೊಟ್ಟಿದ್ದು, ಉದ್ಯಮದ ವೈಷಮ್ಯವಿರಬಹುದು ಎಂದೂ ಕೂಡ ಇಲ್ಲಿನವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನೊಳಗೊಂಡಂತೆ ತನಿಖೆ ನಡೆಸುತ್ತಿದ್ದೇವೆ. ಭಯೋತ್ಪಾದಕ ಸಂಘಟನೆಗಳು ಈ ಕೃತ್ಯ ಎಸಗಿರಬಹುದೇ ಎಂಬ ಶಂಕೆ ಹಿನ್ನೆಲೆಯಲ್ಲಿ ಎನ್‍ಐಎ, ಎನ್‍ಎಸ್‍ಜಿ ತಂಡಗಳು ಕೂಡ ಪರಿಶೀಲನೆ ನಡೆಸುತ್ತಿವೆ. ಒಟ್ಟಾರೆ ಪ್ರಕರಣ ಸವಾಲಾಗಿ ಪರಿಣಮಿಸಿದ್ದು, ಎಲ್ಲಾ ರೀತಿಯಲ್ಲೂ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು. +ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಕ್ಯಾಮೆರಾಗಳನ್ನು ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ನಡೆದ ಸಂದರ್ಭದಲ್ಲಿ 26 ಬಸ್‍ಗಳು ಬಂದು ಹೋಗಿವೆ. ಆ ಬಸ್‍ಗಳಲ್ಲಿ ಕ್ಯಾಮೆರಾಗಳನ್ನು ಕೂಡ ಪರಿಶೀಲನೆ ಮಾಡಲಾಗಿದ್ದು, ಮಾಸ್ಕ್ ಮತ್ತು ಕ್ಯಾಪ್ ಧರಿಸಿದ ವ್ಯಕ್ತಿ ಪ್ರಯಾಣಿಸಿದ ಬಸ್ಸನ್ನು ಗುರುತಿಸಲಾಗಿದೆ. ಹೆಚ್ಚಿನ ತಾಂತ್ರಿಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದಿಲ್ಲ ಎಂದು ಗೃಹ ಸಚಿವರು ತಿಳಿಸಿದರು. +ಇದು ಕಡಿಮೆ ತೀವ್ರತೆಯ ಸ್ಪೋಟವಾಗಿದ್ದರಿಂದ ಹೆಚ್ಚು ಅನಾಹುತಗಳು ಸಂಭವಿಸಿಲ್ಲ. ಬೋಲ್ಟ್, ಮೊಳೆಗಳು ಮೇಲ್ಮುಖವಾಗಿ ಬಂದು ಮೇಲೆ ಸಿಡಿದಿವೆ. ಅವು ಅಕ್ಕ ಪಕ್ಕ ಸಿಡಿದಿದ್ದರೆ ಮತ್ತಷ್ಟು ಅನಾಹುತಗಳು ಸಂಭವಿಸುವ ಸಾಧ್ಯತೆಯಿತ್ತು ಎಂದು ಹೇಳಿದರು. ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದಲ್ಲಿ ಬಳಸಿದ ತಾಂತ್ರಿಕತೆಯಂತೆ ಈ ಸ್ಪೋಟದಲ್ಲೂ ಬ್ಯಾಟರಿಯನ್ನು ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. +ಎಲ್ಲವೂ ತನಿಖೆಯ ನಂತರ ತಿಳಿದು ಬರಬೇಕು. ಸುಮ್ಮನೇ ಊಹಾಪೋಹದ ಹೇಳಿಕೆಗಳನ್ನು ನೀಡಲು ಆಗುವುದಿಲ್ಲ. ಈ ಘಟನೆ ಸಂಬಂಧ ಯಾರು, ಏನೇ ಹೇಳಿಕೆ ನೀಡಿದರೂ ಅದು ಅಧಿಕೃತವಾಗುವುದಿಲ್ಲ. ಮುಖ್ಯಮಂತ್ರಿಗಳು ಅಥವಾ ನಾನು, ಗೃಹ ಇಲಾಖೆಯ ಮುಖ್ಯಸ್ಥರು ನೀಡುವ ಹೇಳಿಕೆ ಮಾತ್ರ ಅಧಿಕೃತವಾಗುತ್ತದೆ ಎಂದು ಸ್ಪಷ್ಟಪಡಿಸಿದರು. +ಮ್ಯಾಜಿಕ್ ಮಾಡಲು ಆಗಲ್ಲ:ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಂಬಂಧ ಎಫ್‍ಎಸ್‍ಎಲ್ ವರದಿ ವಿಳಂಬ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ವಿವರಗಳನ್ನು ತಾಂತ್ರಿಕವಾಗಿ, ಕರಾರುವಕ್ಕಾಗಿ ನೀಡಬೇಕು. ನಿಮಗೆ ಏನು ಬೇಕೋ ಅದನ್ನು ಕೊಡಲಿಕ್ಕೆ ಆಗುವುದಿಲ್ಲ. 6 ಗಂಟೆಯಲ್ಲಿ, 8 ಗಂಟೆಯಲ್ಲಿ, 48 ಗಂಟೆಯಲ್ಲಿ ಕೊಡುತ್ತೇನೆ ಎಂದು ಹೇಳಲು ಆಗುವುದಿಲ್ಲ. ನಾವೇನೂ ಮ್ಯಾಜಿಕ್ ಮಾಡಲು ಬರುವುದಿಲ್ಲ. ಅಲ್ಲಿಂದ ವರದಿ ಬಂದ ನಂತರ ಬಹಿರಂಗಪಡಿಸುವುದಾಗಿ ಹೇಳಿದರು. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದರು. +ಇದೊಂದು ಕ್ಷುಲ್ಲಕ ವಿಷಯ. ಇದನ್ನು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಡಾ.ಶರಣ ಪಾಟೀಲ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಅವರಿಗೆ ಮಾಹಿತಿಯ ಕೊರತೆಯಿದೆ. ಹಾಗಾಗಿ ಅವರು ಆ ರೀತಿ ಹೇಳಿರಬಹುದು. ನಾವು ಕೊಡುವ ಮಾಹಿತಿ ಅಧಿಕೃತವಾಗಿರುತ್ತದೆ ಎಂದು ಹೇಳಿದರು.ಯಾವುದನ್ನೂ ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ರಾಜಕೀಯ ಮಾಡದೇ ಸಹಕರಿಸಬೇಕೆಂದು ಮನವಿ ಮಾಡಿದರು. \ No newline at end of file diff --git a/eesanje/url_46_216_6.txt b/eesanje/url_46_216_6.txt new file mode 100644 index 0000000000000000000000000000000000000000..42195b2bc57e24e3278bcba3c1362de9b49678f2 --- /dev/null +++ b/eesanje/url_46_216_6.txt @@ -0,0 +1,4 @@ +ಅರ್ಕಾವತಿ ನದಿಯಲ್ಲಿ ವ್ಯಾಪಕ ಕೊಳಚೆ ಕಳೆ +ಬೆಂಗಳೂರು, ಮಾ.3- ದೇವನಹಳ್ಳಿಯ ನಂದಿ ಬೆಟ್ಟದಲ್ಲಿ ಹುಟ್ಟಿ ಕಾವೇರಿ ನದಿ ಸೇರುವ ಅರ್ಕಾವತಿ ನದಿಯಲ್ಲಿ ಕೊಳಚೆ ನೀರಿನಲ್ಲಿ ಬೆಳೆಯುವ ಕಳೆ ವ್ಯಾಪಕವಾಗಿದೆ. ನದಿಯ ಉದ್ದಕ್ಕೂ ಕಳೆ ಹರಡಿಕೊಂಡಿದೆ. ದಿನದಿಂದ ದಿನಕ್ಕೆ ಕಳೆಯ ವ್ಯಾಪ್ತಿ ವಿಸ್ತರಣೆಯಾಗುತ್ತಿದ್ದು, ನೀರಿನಲ್ಲಿ ಬೆಳೆಯುವ ತಾವರೆ ಸೇರಿದಂತೆ ಇತರ ಸಸ್ಯಗಳು ಮರೆಯಾಗುತ್ತಿವೆ. ಚರಂಡಿಯಂತಹ ಕೊಳಚೆ ನೀರಿನಲ್ಲಿ ಬೆಳೆಯುವ ಹಯಸಿಂತ್ ಎಂಬ ಕಳೆ ನದಿಯಲ್ಲಿ ಕಂಡುಬರುತ್ತಿದೆ. +ಬೆಂಗಳೂರಿಗೆ ಕುಡಿಯುವ ನೀರು ಪೂರೈಸುತ್ತಿದ್ದ ತಿಪ್ಪಗೊಂಡನಹಳ್ಳಿ ಜಲಾಶಯದ ನೀರು ಕಲುಷಿತಗೊಂಡು ವರ್ಷಗಳೇ ಕಳೆದಿವೆ. ಹೀಗಾಗಿ ಕುಡಿಯುವ ನೀರಿಗೆ ಬಳಕೆಯಾಗುತ್ತಿಲ್ಲ. ಈ ಜಲಾಶಯದಲ್ಲೂ ಕಳೆ ಕಂಡುಬರುತ್ತಿದೆ. ಈ ನೀರು ಮಂಚನಬೆಲೆ ಜಲಾಶಯ ತಲುಪಲಿದೆ. ಮಂಚನಬೆಲೆ ಜಲಾಶಯದಿಂದ ನದಿಗೆ ಅಲ್ಪಪ್ರಮಾಣದಲ್ಲಿ ನೀರು ಬಿಡುವುದರಿಂದ ಯಾವಾಗಲೂ ನೀರು ಇರುತ್ತದೆ. +ಇದರಿಂದ ನದಿಯ ಇಕ್ಕೆಲಗಳ ಕೃಷಿಗೆ ಹಾಗೂ ಜನ-ಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗಿತ್ತು. ಇತ್ತೀಚೆ ಕೊಳಚೆ ನೀರಿನಲ್ಲಿ ಬೆಳೆಯುವ ಕಳೆ ವ್ಯಾಪಕವಾಗಿ ಹರಡುಕೊಳ್ಳುತ್ತಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ನೀರಿನ ಬಣ್ಣ ಕೂಡ ಬದಲಾಗಿದೆ. ಕೊಳಚೆ ನೀರಿನಲ್ಲಿ ಬೆಳೆಯುವ ಹಯಸಿಂತ್ ಎಂಬ ಕಳೆಯನ್ನು ರೈತರು ಜೈವಿಕ ಗೊಬ್ಬರ ತಯಾರಿಕೆಗೆ ಬಳಸಬಹುದು ಎನ್ನುತ್ತಾರೆ ಸಸ್ಯಶಾಸ್ತ್ರಜ್ಞರು. ನದಿಯ ಉದ್ದಕ್ಕೂ ಹರಡಿಕೊಂಡಿರುವ ಈ ಕಳೆ ತೆಗೆದು ಪುನರುಜ್ಜೀವನಗೊಳಿಸದಿದ್ದರೆ ಮುಂದೊಂದು ದಿನ ಅರ್ಕಾವತಿ ನದಿಯೂ ವೃಷಭಾವತಿಯಂತೆ ಕಲುಷಿತ ನದಿಯಾಗುವುದನ್ನು ತಳ್ಳಿಹಾಕುವಂತಿಲ್ಲ. \ No newline at end of file diff --git a/eesanje/url_46_216_7.txt b/eesanje/url_46_216_7.txt new file mode 100644 index 0000000000000000000000000000000000000000..30f0cfb2b4e623a6fbe48cc46f9a8bfbf5c61086 --- /dev/null +++ b/eesanje/url_46_216_7.txt @@ -0,0 +1,8 @@ +ಅನ್ನ-ಅಕ್ಷರ-ಸೂರು ಸಿದ್ದರಾಮಯ್ಯ ಆಡಳಿತದ ಪ್ರಮುಖ ಆಧ್ಯತೆಗಳು +ಬೆಂಗಳೂರು‌ ಮಾ2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತು ಕನಸಿಗೆ ವಸತಿ ಇಲಾಖೆ ಯಲ್ಲಿ ಕ್ರಾಂತಿಕಾರಕ ತೀರ್ಮಾನ ತೆಗೆದುಕೊಂಡಿದೆ. ರಾಜ್ಯಾ ದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆ ಇಂದು ನಡೆಯುತ್ತಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಇಲಾಖೆ ಹೊಣೆ ಗಾರಿಕೆ ವಹಿಸಿಕೊಂಡ ನಂತರ ಬಡವರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲಾಗಿದೆ. ವರ್ಷಗಳ ಕಾಲ ಸ್ವಂತ ಮನೆಯ ಬಡವರ ಕನಸು ನನಸಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನೂ ಬಡವರಿಗೆ ವಿತರಿಸಿಲ್ಲದಿರುವುದನ್ನು ಖಂಡಿಸಿ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಿ ಹೋರಾಟ ನಡೆಸಿದ್ದರು. +ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಆರಂಭಿಸಲಾದ ವಸತಿ ಯೋಜನೆಯ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯವಾಗದೆ ನೆನೆಗುದಿಗೆ ಬಿದ್ದಿತ್ತು. ಮುಖ್ಯಮಂತ್ರಿಗಳ ಸಲಹೆಯಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನಿರಂತರ ಪ್ರಯತ್ನ ದಿಂದ ಬಡ ಕುಟುಂಬಗಳು ಪಾವತಿಸಬೇಕಿದ್ದ ಫಲಾನುಭವಿಗಳ ವಂತಿಗೆಯನ್ನು ಸರ್ಕಾರವೇ ಭರಿಸುತ್ತಿದೆ. +ಬಡ ಕುಟುಂಬಗಳ ಆರ್ಥಿಕ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟು ಹತ್ತಾರು ಬಾರಿ ಅಧಿಕಾರಿಗಳ ಸಭೆ ನಡೆಸಿಫಲಾನುಭವಿಗಳ ಪಾಲಿನ ವಂತಿಗೆ ಮೊತ್ತ 6170 ಕೋಟಿ ರೂ.ಸಂಪೂರ್ಣ ವಾಗಿ ಸರ್ಕಾರವೇ ಭರಿಸುವ ಮಹತ್ವದ ತೀರ್ಮಾನ ಸಂಪುಟ ಸಭೆ ಕೈಗೊಳ್ಳುವಂತೆ ಮಾಡುವಲ್ಲಿ ಜಮೀರ್ ಅಹಮದ್ ಖಾನ್ ಯಶಸ್ವಿ ಆಗಿದ್ದರ ಫಲವಾಗಿ ಇಂದು ಸುಸೂತ್ರವಾಗಿ ಬಡವರಿಗೆ ಮನರಗಳ ಹಂಚಿಕೆ ಆಗುತ್ತಿದೆ. +1,80,253 ಮನೆಗಳ ಕಾಮಗಾರಿ ಪೂರ್ಣ ಗೊಳಿಸಲು ಮೊದಲನೇ ಕಂತು 500 ಕೋಟಿ ರೂ. ಬಿಡುಗಡೆ ಆಗಿದ್ದು ಮೊದಲ ಹಂತದಲ್ಲಿ 36, 789 ಮನೆ ಗಳನ್ನು ಇಂದು ಹಂಚಿಕೆ ಮಾಡಲಾಗುತ್ತಿದೆ.ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಯಲ್ಲಿ 1047 ಮನೆ ನಿರ್ಮಿಸಿದ್ದು ಇಂದು 480 ಮನೆ ಹಂಚಿಕೆ ಮಾಡಲಾಗುತ್ತಿದೆ. ಇದೇ ರೀತಿ ರಾಜ್ಯಾದ್ಯಂತ ನಿರ್ಮಿಸಿರುವ ಮನೆಗಳನ್ನು ಏಕ ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೆ ಮಾಡಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರ ದಲ್ಲಿದ್ದು ಕಾರ್ಯಕ್ರಮ ಕ್ಕೆ ಚಾಲನೆ ನೀಡಲಿದ್ದಾರೆ. +ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ತಲಾ 4.50 ಲಕ್ಷ ರೂ. ಪಾವತಿಸಬೇಕಿತ್ತಾದರೂ ಇದೀಗ 1 ಲಕ್ಷ ರೂ. ಪಾವತಿಸಿದರೆ ಉಳಿದ ಮೊತ್ತ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ವಾಗಲಿದ್ದು 3 ಲಕ್ಷ ಸಬ್ಸಿಡಿ ಹೊರತು ಪಡಿಸಿದರೆ ಉಳಿದ ಮೊತ್ತ ಫಲಾನುಭವಿ ಕೊಡಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು.ಇದೀಗ ಸರ್ಕಾರ ದ ತೀರ್ಮಾನ ದಿಂದ 1,80,253 ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ. +ಸಂಕಷ್ಟದಲ್ಲಿದ್ದ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ತೀರ್ಮಾನ ನಮ್ಮ ಅವಧಿಯಲ್ಲಿ ಕೈಗೊಂಡಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ನಮ್ಮ ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾಳಜಿ, ಹಣಕಾಸು ಇಲಾಖೆ ಅಧಿಕಾರಿಗಳ ಸಹಕಾರ ದಿಂದ ಬಡವರು ಶಾಶ್ವತ ಸೂರು ಪಡೆದಂತಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ‌ ಕನಸು ಮತ್ತು‌ ಕಾಳಜಿ ಸಾಕಾರಗೊಳ್ಳುತ್ತಿದೆ. \ No newline at end of file diff --git a/eesanje/url_46_216_8.txt b/eesanje/url_46_216_8.txt new file mode 100644 index 0000000000000000000000000000000000000000..89005f7e0f861f2a53309bf6c2dbbfaaac4d226f --- /dev/null +++ b/eesanje/url_46_216_8.txt @@ -0,0 +1,6 @@ +ವಸತಿ ಯೋಜನೆಯ ಜಿಎಸ್‍ಟಿ ಮನ್ನಾಕ್ಕೆ ಡಿಸಿಎಂ ಒತ್ತಾಯ +ಬೆಂಗಳೂರು,ಮಾ.2- ಬಡವರ ಮನೆ ನಿರ್ಮಾಣಕ್ಕೆ ರೂಪಿಸಲಾಗಿರುವ ವಸತಿ ಯೋಜನೆಗಳಿಂದ ಸಂಗ್ರಹಿಸುತ್ತಿರುವ ಜಿಎಸ್‍ಟಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಸರ್ವರಿಗೂ ಸೂರು ಯೋಜನೆಯಡಿ ಕೆ.ಆರ್.ಪುರಂನ ನಗರೇಶ್ವರ ನಾಗೇನಹಳ್ಳಿಯಲ್ಲಿ ನಿರ್ಮಿಸಿರುವ 33,789 ಮನೆಗಳ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಮನೆ ನಿರ್ಮಾಣಕ್ಕೆ ಒಂದೂವರೆ ಲಕ್ಷ ರೂ.ಗಳ ಅನುದಾನ ನೀಡುವ ಕೇಂದ್ರಸರ್ಕಾರ ಜಿಎಸ್‍ಟಿ ರೂಪದಲ್ಲಿ 1.26 ಲಕ್ಷ ರೂ.ಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು. +ವೇದಿಕೆಯಲ್ಲಿದ್ದ ಬಿಜೆಪಿಯ ಶಾಸಕ ಭೈರತಿ ಬಸವರಾಜು ಅವರತ್ತ ತಿರುಗಿದ ಡಿ.ಕೆ.ಶಿವಕುಮಾರ್, ಈ ರೀತಿಯ ಅವೈಜ್ಞಾನಿಕ ಜಿಎಸ್‍ಟಿಯನ್ನು ಅದರಲ್ಲೂ ಬಡವರ ಯೋಜನೆಯಲ್ಲಿನ ಹಣವನ್ನು ಕಸಿದುಕೊಳ್ಳುವ ತೆರಿಗೆ ಪದ್ಧತಿಯನ್ನು ಕಡಿತ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿ ಎಂದು ಸಲಹೆ ನೀಡಿದರು. ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಯನ್ನು ಸಮರ್ಥವಾಗಿ ಜಾರಿಗೆ ತರುತ್ತಿದೆ. ಎಲ್ಲಾ ಸೌಲಭ್ಯ ಗಳೂ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುತ್ತಿವೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಜನ ಜೈಕಾರಗಳ ಮೂಲಕ ಸ್ಪಂದಿಸಿದರು. +ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದರು. ಈಗ ಅವರೇ ನಮ್ಮ ಗ್ಯಾರಂಟಿಗಳನ್ನು ಕದ್ದು ಮೋದಿ ಗ್ಯಾರಂಟಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದು ಬಿಜೆಪಿ ಗ್ಯಾರಂಟಿಯಲ್ಲ, ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು. +ಈ ವೇಳೆ ವೇದಿಕೆಯಲ್ಲಿ ಒಬ್ಬರು ಡೂಪ್ಲಿಕೇಟ್ ಗ್ಯಾರಂಟಿ ಎಂದು ಹೇಳಿದಾಗ, ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಫಲಾನುಭವಿಗಳ ಸಮಾವೇಶದಲ್ಲಿ ರಾಜ್ಯಸರ್ಕಾರದ ಗ್ಯಾರಂಟಿಗಳು ಜನರ ಬದುಕನ್ನು ಸುಧಾರಣೆ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಜ್ಞಾನಿ ಅರಗ ಜ್ಞಾನೇಂದ್ರ ಇದನ್ನು ಡೂಪ್ಲಿಕೇಟ್ ಗ್ಯಾರಂಟಿ ಎಂದು ಟೀಕಿಸಿರುವುದನ್ನೂ ಗಮನಿಸಿದ್ದೇನೆ ಎಂದರು. +ಟೀಕೆ ಮಾಡುವ ಬಿಜೆಪಿಯವರು ತಮ್ಮ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಗೃಹಲಕ್ಷ್ಮಿಯ 2 ಸಾವಿರ ರೂ.ಗಳನ್ನು ತೆಗೆದುಕೊಳ್ಳಬೇಡಿ, ಶಕ್ತಿ ಯೋಜನೆಯ ಸೌಲಭ್ಯ ಪಡೆಯದೆ ದುಡ್ಡು ಕೊಟ್ಟು ಬಸ್‍ನಲ್ಲಿ ಓಡಾಡಲು ಹೇಳಿ ಎಂದು ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು. ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ಟೀಕೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮದೇ ಯೋಜನೆಗಳನ್ನು ಕದ್ದು ಪ್ರಚಾರ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_216_9.txt b/eesanje/url_46_216_9.txt new file mode 100644 index 0000000000000000000000000000000000000000..04be427f925c0c8a864d8b2483c787af1924234e --- /dev/null +++ b/eesanje/url_46_216_9.txt @@ -0,0 +1,7 @@ +ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ +ಬೆಂಗಳೂರು,ಮಾ.2- ಕೃಷಿ ಇಲಾಖೆಯಲ್ಲಿ ಖಾಲಿ ಇರುವ 100 ಕೃಷಿ ಅಧಿಕಾರಿಗಳು, 680 ಸಹಾಯಕ ಕೃಷಿ ಅಧಿಕಾರಿಗಳು ಸೇರಿದಂತೆ 750 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ 10 ತಿಂಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳ ಕುರಿತು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. +ಆರ್ಥಿಕ ಇಲಾಖೆ ಈ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದು ಇನ್ನು ಒಂದು ವಾರದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಲೋಕಸೇವಾ ಆಯೋಗಕ್ಕೆ ಕಳುಹಿಸಲಾಗುವುದು. ಮೊದಲ ಹಂತದಲ್ಲಿ ಈ ಹುದ್ದೆಗಳ ನೇಮಕಾತಿ ಆಗುತ್ತಿದ್ದು, ಇನ್ನೆರಡುಮೂರು ವರ್ಷದಲ್ಲಿ ಖಾಲಿ ಇರುವ ಸುಮಾರು 2700 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸುಮಾರು 20 ವರ್ಷದಿಂದ ಬಾಕಿ ಉಳಿದಿದ್ದ ಮುಂಬಡ್ತಿಯನ್ನು ನೀಡಲಾಗಿದೆ. 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿ ಸೇರಿದಂತೆ ಒಟ್ಟು 582 ಮಂದಿಗೆ ಮುಂಬಡ್ತಿ ನೀಡಲಾಗಿದೆ ಎಂದು ಹೇಳಿದರು. +ಐದು ವರ್ಷದಿಂದ ನಿಲ್ಲಿಸಲಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಆರಂಭಿಸಲಾಗಿದ್ದು, 10 ಸಾವಿರ ಕೃಷಿ ಹೊಂಡಗಳನ್ನು ನಿರ್ಮಿಸಲಾಗುತ್ತಿದೆ. ಕೃಷಿ ಯಾಂತ್ರಿಕತೆಯಲ್ಲಿ ಪ್ರೋತ್ಸಾಹ ನೀಡಲು 63 ಸಾವಿರ ಫಲಾನುಭವಿಗಳಿಗೆ 284.92 ಕೋಟಿ ರೂ. ಸಹಾಯಧನ ನೀಡಲಾಗಿದೆ. 2.34 ಲಕ್ಷ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕ ಅಳವಡಿಕೆ 484 ಕೋಟಿ ರೂ. ಸಹಾಯಧನ ನೀಡಲಾಗಿದೆ ಎಂದು ತಿಳಿಸಿದರು. ರೈತ ಕರೆ ಕೇಂದ್ರದಲ್ಲಿ ಏಕರೂಪ ಸಂಖ್ಯೆಯನ್ನು ಸ್ಥಾಪಿಸಲಾಗಿದೆ. ತೊಗರಿ ಬೇಳೆಯ ನಶೆರೋಗಕ್ಕೆ ಪರಿಹಾರವಾಗಿ 2.98 ಲಕ್ಷ ರೈತರಿಗೆ 223 ಕೋಟಿ ರೂ. ಪರಿಹಾರ ನೀಡಿದ್ದು, ಕೆ-ಕಿಸಾನ್ ತಂತ್ರಾಂಶದಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ನಕಲಿ ಆಗುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದರು.ಈ ವರ್ಷ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಮುಂದಿನ ವರ್ಷವೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. +ಉತ್ತಮ ಮಳೆ: ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹೆಚ್ಚುವರಿ 297 ಕೋಟಿ ರೂ. ಅನುದಾನವನ್ನು ಪಡೆಯಲಾಗಿದೆ ಎಂದು ತಿಳಿಸಿದರು. +ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ 25 ಲಕ್ಷ ರೈತರು ಬೆಳೆವಿಮೆ ನೋಂದಣಿ ಮಾಡಿಸಿದ್ದು, ಈಗಾಗಲೇ 600 ಕೋಟಿ ರೂ. ಪಾವತಿಸಲಾಗಿದೆ. ಮಾರ್ಚ್ ಅಂತ್ಯಕ್ಕೆ 800 ಕೋಟಿ ರೂ. ಪಾವತಿಸಲಿದ್ದು, ಒಟ್ಟು 1400 ಕೋಟಿ ರೂ. ಬೆಳೆ ವಿಮೆ ಪಾವತಿ ಮಾಡಿದಂತಾಗಿದೆ. ಕೇಂದ್ರ ಸರ್ಕಾರ ಭರ ಪರಿಹಾರ ನೀಡುವಲ್ಲಿ ಉದಾಸೀನ ಮಾಡಿದ್ದರೂ ರಾಜ್ಯ ಸರ್ಕಾರ 2000 ರೂ. ಪರಿಹಾರ ನೀಡುತ್ತಿದೆ ಎಂದು ಹೇಳಿದರು. +ಜಲಾನಯನ ಅಭಿವೃದ್ಧಿ ಇಲಾಖೆಯಲ್ಲೂ 73.77 ಲಕ್ಷ ಹೆಕ್ಟೇರ್ ಪ್ರದೇಶಗಳನ್ನು ಉಪಚರಿಸಲಾಗಿದೆ. ಮನ್ರೇಗಾ ಸೇರಿದಂತೆ 881.16 ಕೋಟಿ ರೂ. ಕಾರ್ಯಕ್ರಮ, 9398 ನೀರು ಸಂಗ್ರಹಣ ವಿನ್ಯಾಸ 1,07,059 ಸುಧಾರಣೆ ಮಾಡಲಾಗಿದೆ. 585.90 ಕೋಟಿ ರೂ. ವೆಚ್ಚವಾಗಿದೆ ಎಂದು ಅಂಕಿ ಅಂಶಗಳ ಸಾಧನೆಯ ಮಾಹಿತಿ ನೀಡಿದರು.ಗೋಷ್ಠಿಯಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ.ಪುತ್ರ, ಜಲಾನಯನ ಅಭಿವೃದ್ಧಿ ಆಯುಕ್ತ ಗಿರೀಶ್, ನಿರ್ದೇಶಕ ಶ್ರೀನಿವಾಸ್, ಕೆಫೆಕ್ ವ್ಯವಸ್ಥಾಪಕ ನಿರ್ದೇಶಕ ಪಂಥನಾಳ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_217_1.txt b/eesanje/url_46_217_1.txt new file mode 100644 index 0000000000000000000000000000000000000000..8af1181e46a5dab880ae8ab8f6bad36037bf6fb0 --- /dev/null +++ b/eesanje/url_46_217_1.txt @@ -0,0 +1,6 @@ +ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಕಿಂಗ್‍ಪಿನ್ ನಯಾಜಿ ಸೆರೆ +ಬೆಂಗಳೂರು,ಮಾ.2- ಕಳೆದ 2016ರಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಗೌಸ್ ನಯಾಜಿಯನ್ನು 8 ವರ್ಷಗಳ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಬಂಧಿಸಿದೆ. ಮೂಲತಃ ಭಯೋತ್ಪಾದಕ ಸಂಘಟನೆಯೊಂದರ ಜೊತೆ ಗುರುತಿಸಿಕೊಂಡಿದ್ದ ಮೊಹಮ್ಮದ್ ಗೌಸ್ ನಯಾಜಿ ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ. ಇದರ ಬಗ್ಗೆ ಖಚಿತ ಸುಳಿವು ಹಿಡಿದ ಎನ್‍ಐಎ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. +2016ರ ಅ.16ರಂದು ಬೆಳಗ್ಗೆ 9ಕ್ಕೆ ಶಿವಾಜಿನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಮುಂಭಾಗ ಸ್ನೇಹಿತರೊಂದಿಗೆ ನಿಂತಿದ್ದ ರುದ್ರೇಶ್ ಅವರನ್ನು 2 ಬೈಕ್‍ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್‍ಐಎ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಆರ್‍ಟಿನಗರ ಎರಡನೇ ಬ್ಲಾಕ್‍ನ ನಿವಾಸಿ ಮೊಹಮ್ಮದ್ ಗೌಸ್ ನಯಾಝಿ ಅಲಿಯಾಸ್ ಗೌಸ್ ಭಾಯ್ ಎಂಬಾತನಿಗೆ ಶೋಧ ನಡೆಸುತ್ತಿತ್ತು. +ಪ್ರಕರಣದಲ್ಲಿ ಶಾಮೀಲಾಗಿದ್ದರು ಎನ್ನಲಾದ ಆರೋಪಿಗಳೆಲ್ಲರೂ ಜೈಲಿನಲ್ಲಿದ್ದಾರೆ. ಆದರೆ ಮೊಹಮ್ಮದ್ ಗೌಸ್ ತಲೆಮರೆಸಿಕೊಂಡಿದ್ದು, ಆತನ ಸುಳಿವೂ ಸಿಕ್ಕಿರಲಿಲ್ಲ. ಆದ್ದರಿಂದ ಮೊಹಮ್ಮದ್ ಗೌಸ್ ನಯಾಝಿ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು. ಜೊತೆಗೆ ಆತನ ಸುಳಿವು ಸಿಕ್ಕಿದರೆ ಎನ್‍ಐಎ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಲ್ಲಿ ಬಂಧಿತರಾಗಿದ್ದ ಒಂದನೇ ಆರೋಪಿ ಇರ್ಫಾನ್ ಪಾಷಾ ಹಾಗೂ ನಾಲ್ಕನೇ ಆರೋಪಿ ಮೊಹಮ್ಮದ್ ಮುಜೀಬ್ ಉಲ್ಲಾ ಅರ್ಜಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. +ವಿಚಾರಣೆಯನ್ನು ಎನ್‍ಐಎ ವಿಶೇಷ ನ್ಯಾಯಲಯದ ನ್ಯಾಯಾೀಧಿಶ ಡಾ. ಕಸನಪ್ಪ ನಾಯಕ್ ಕೈಗೆತ್ತಿಕೊಂಡಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಯಾರೋ ಅಪರಿಚಿತ ದುಷ್ಕರ್ಮಿಗಳು ಮೋಟರ್ ಬೈಕ್‍ನಲ್ಲಿ ಬಂದು ರುದ್ರೇಶ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಆದರೆ ಪ್ರಕರಣಕ್ಕೆ ಯಾವುದೇ ಸಂಬಂಧ, ಆಧಾರವಿಲ್ಲದಿದ್ದರೂ ಅರ್ಜಿದಾರರನ್ನು ಎನ್‍ಐಎ ಅಧಿಕಾರಿಗಳು 2016ರ ಅಕ್ಟೋಬರ್ 27ರಂದು ಬಂಧಿಸಿದ್ದಾರೆ. ಅಧಿಕಾರಿಗಳು ಆರೋಪಿಸಿರುವಂತೆ ಅವರು ಪಿಎಫ್‍ಐ ಸದಸ್ಯರೂ ಅಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಕೋರಿದ್ದರು. +ಎನ್‍ಐಎ ಪರ ವಾದ ಮಂಡಿಸಿದ್ದ ವಿಶೇಷ ಅಭಿಯೋಜಕ ಪಿ. ಪ್ರಸನ್ನ ಕುಮಾರ್, ಆರೋಪಿಗಳು ಆರ್‍ಎಸ್‍ಎಸ್ ಪಥಸಂಚಲನದ ವೇಳೆ ಕನಿಷ್ಠ ಇಬ್ಬರು ಕಾರ್ಯಕರ್ತರನ್ನು ಕೊಲ್ಲುವ ಉದ್ದೇಶದೊಂದಿಗೆ ಸಾಕಷ್ಟು ಸಭೆ ನಡೆಸಿದ್ದರು. ಅದರಂತೆ ಪೂರ್ವಯೋಜಿತ ತಯಾರಿ ಮಾಡಿ ಕಾರ್ಯಕರ್ತ ರುದ್ರೇಶ್‍ನನ್ನು ಹತ್ಯೆ ಮಾಡಿದ್ದಾರೆ. ಈ ಸಂಬಂಧ ಎನ್‍ಐಎ ಎಲ್ಲ ಸಾಂದರ್ಭಿಕ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಅಲ್ಲದೇ, ಆರೋಪಿಗಳಿಗೆ ಈ ಹಿಂದೆಯೂ ವಿಚಾರಣಾ ನ್ಯಾಯಾಲಯ ಹಾಗೂ ಹೈಕೋರ್ಟ್ ಜಾಮೀನು ನಿರಾಕರಿಸಿವೆ. ಆರೋಪಿಗಳ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳಿದ್ದು ಅವರಿಗೆ ಜಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು. ಹೀಗಾಗಿ ನ್ಯಾಯಾಲಯ ವಾದ ಪ್ರತಿವಾದ ಆಲಿಸಿ ಎನ್‍ಐಎ ಪರ ವಿಶೇಷ ಅಭಿಯೋಜಕರ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನನ್ನು ನಿರಾಕರಿಸಿತ್ತು. \ No newline at end of file diff --git a/eesanje/url_46_217_10.txt b/eesanje/url_46_217_10.txt new file mode 100644 index 0000000000000000000000000000000000000000..d661bfaf678f16dd4f5bc253bf412b26ecf41130 --- /dev/null +++ b/eesanje/url_46_217_10.txt @@ -0,0 +1,4 @@ +ಆರ್‌ಟಿಓ ಕಾಮಗಾರಿ ಕ್ರಿಯಾ ಯೋಜನೆಗೆ ಅಸ್ತು +ಬೆಂಗಳೂರು,ಮಾ.2- ಸಾರಿಗೆ ಇಲಾಖೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಕಟ್ಟಡಗಳು ಮತ್ತು ವಾಹನ ಚಾಲನಾ ಪರೀಕ್ಷಾ ಪಥಗಳ ನಿರ್ಮಾಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ 20 ಕೋಟಿ ರೂ.ಗಳ ಪರಿಷ್ಕøತ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. +2023-24 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಆರ್‍ಟಿಓ ಕಟ್ಟಡಗಳು ಮತ್ತು ವಾಹನ ಚಾಲನೆ ಪರೀಕ್ಷಾ ದಾರಿಗಳು 386 ನಿರ್ಮಾಣದ ಅಡಿಯಲ್ಲಿ ಸಾರಿಗೆ ಇಲಾಖೆಗೆ 20 ಕೋಟಿ ರೂ. ಅನುದಾನ ಒದಗಿಸಲಾಗಿದೆ.ವಿಜಯಪುರ, ಕೊಪ್ಪಳ, ಶಿರಸಿ, ಬೀದರ್, ಕಲಬುರಗಿ, ದಾಂಡೇಲಿ, ಭಾಲ್ಕಿ, ಚಿಂತಾಮಣಿ, ಬೆಳಗಾವಿ, ಯಾದಗಿರಿ, ಚಂಚಾಪುರ, ಕೆಜಿಎಫ್, ಮಧುಗಿರಿ, ಗೋಕಾಕ್, ರಾಣೆಬೆನ್ನೂರು ಆರ್‍ಟಿಓ ಕಚೇರಿಗಳ ಒಳವಿನ್ಯಾಸ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. +ಕ್ರಿಯಾಯೋಜನೆ ಅನ್ವಯ ಮಾತ್ರ ಅನುಮೋದಿತ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಕರ್ನಾಟಕ ಪಾರದರ್ಶಕ ಕಾಯ್ದೆಯನ್ವಯ ಕಡ್ಡಾಯ ಕಾಮಗಾರಿಗಳನ್ನು ಕೈಗೊಳ್ಳಬೇಕು. ಬಿಡುಗಡೆಯಾದ ಅನುದಾನವನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆ ಇಲ್ಲದೆ ಬೇರೆ ಕಾಮಗಾರಿಗೆ ಬಳಸುವಂತಿಲ್ಲ. ಅನುದಾನವನ್ನು ಕಾಮಗಾರಿಗಳ ಟೆಂಡರ್ ಮೊತ್ತಕ್ಕೆ ಅನುಗುಣವಾಗಿ ಬಿಡುಗಡೆ ಮಾಡುವ ಷರತ್ತನ್ನು ವಿಧಿಸಲಾಗಿದೆ. \ No newline at end of file diff --git a/eesanje/url_46_217_11.txt b/eesanje/url_46_217_11.txt new file mode 100644 index 0000000000000000000000000000000000000000..c4fc2ff7b6175945a51392266e4084c39a948342 --- /dev/null +++ b/eesanje/url_46_217_11.txt @@ -0,0 +1,4 @@ +28 ದಿನಗಳಲ್ಲಿ ಮಾದಪ್ಪನ ಹುಂಡಿಯಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹ +ಹನೂರು, ಮಾ.2- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮಲೈ ಮಹದೇಶ್ವರಸ್ವಾಮಿ ಹುಂಡಿಯಲ್ಲಿ 28 ದಿನಗಳಲ್ಲಿ 1.82 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಾಲೂರು ಬೃಹನ್ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಕಾರ್ಯದರ್ಶಿ ರಘು ಎ.ಈ.ಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. +28 ದಿನಗಳಲ್ಲಿ 1.82 ಕೋಟಿ ರೂ. ನಗದು, 41 ಗ್ರಾಂ. ಚಿನ್ನ ಹಾಗೂ 1.200 ಕೆಜಿ ಬೆಳ್ಳಿ ಸಂಗ್ರಹವಾಗಿದೆ.ಅಲ್ಲದೆ, 2000ರೂ. ನೋಟುಗಳು 14 ಹಾಗೂ ಐದು ಪೌಂಡ್ಸ್ ಒಂದು ನೋಟು, ಐದು ಡಾಲರ್ಸ್‍ನ ಮೂರು ವಿದೇಶಿ ನೋಟುಗಳು ಸಂಗ್ರಹವಾಗಿವೆ. ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಮತ್ತು ಮ.ಬೆಟ್ಟ ಪೊಲೀಸರ ಬಂದೋಬಸ್ತ್ ನಲ್ಲಿ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಹುಂಡಿ ಹಣ ಎಣಿಕೆ ಕಾರ್ಯ ತಡರಾತ್ರಿ 8ರ ವರೆಗೂ ನಡೆಯಿತು. +ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು ಎ.ಈ. ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಹಣಕಾಸು ಲೆಕ್ಕ ಪತ್ರ ಸಲಹೆಗಾರ ನಾಗೇಶ್, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬ್ಯಾಂಕ್ ಅಫ್ ಬರೋಡಾ ವ್ಯವಸ್ಥಾಪಕರು ಈ ಸಂದರ್ಭದಲ್ಲಿದ್ದರು. diff --git a/eesanje/url_46_217_12.txt b/eesanje/url_46_217_12.txt new file mode 100644 index 0000000000000000000000000000000000000000..e62da5dff1262d6243a0f2e6e994352d892d6ff9 --- /dev/null +++ b/eesanje/url_46_217_12.txt @@ -0,0 +1,7 @@ +ಯುವಕನ ಅಪಹರಿಸಿ ಸುಲಿಗೆ ಮಾಡಿ ಕೊಲೆಗೆ ಯತ್ನಿಸಿದ್ದ ರೌಡಿಗಳ ಸೆರೆ +ಬೆಂಗಳೂರು, ಮಾ.3- ಹಣಕ್ಕಾಗಿ ಯುವಕನನ್ನು ಕಾರಿನಲ್ಲಿ ಅಪಹರಿಸಿ ಸುಲಿಗೆ ಮಾಡಿ ನಂತರ ಕೊಲೆಗೆ ಯತ್ನಿಸಿದ್ದ ಕುಖ್ಯಾತ ರೌಡಿ ಸೇರಿದಂತೆ ನಾಲ್ವರು ರೌಡಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಕೆರೆಹಳ್ಳಿ ಕೇಕ್ ಆಫ್ ದಿ ಡೇ ಅಂಗಡಿಯ ಹತ್ತಿರದಿಂದ ಓರ್ವ ಯುವಕನನ್ನು ಹಣಕ್ಕಾಗಿ ಕಾರಿನಲ್ಲಿ ರೌಡಿಗಳು ಅಪಹರಣ ಮಾಡಿ, ನಂತರ ಆತನ ಮೊಬೈಲ್ ಮತ್ತು ನಗದು ಹಣವನ್ನು ಸುಲಿಗೆ ಮಾಡಿದ್ದರು.ತದನಂತರ ಅಪಹರಣಗೊಂಡ ಯುವಕನ ಸ್ನೇಹಿತನಿಗೆ ಮೊಬೈಲ್ ಕರೆ ಮಾಡಿ 3 ಲಕ್ಷ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಈ ಬಗ್ಗೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. +ಅಪಹರಣಕಾರರನ್ನು ಪತ್ತೆ ಹಚ್ಚಲು ಸಿಸಿಬಿ ಪೊಲೀಸರು ಒಂದು ತಂಡವನ್ನು ರಚಿಸಿದ್ದರು. ಈ ತಂಡವು ವಿವಿಧ ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡು ಅಪಹರಣಗೊಂಡಿದ್ದ ವ್ಯಕ್ತಿಯನ್ನು ರಕ್ಷಿಸಿ ನಾಲ್ವರು ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಪಹರಣ ಮಾಡಿದ ನಾಲ್ವರ ಪೈಕಿ ಒಬ್ಬ ಚನ್ನಮ್ಮನಕೆರೆ ಅಚ್ಚುಕಟ್ಟು, ಚಾಮರಾಜಪೇಟೆ ಮತ್ತು ಸುಬ್ರಮಣ್ಯಪುರ ಪೊಲೀಸ್ ಠಾಣೆಗಳಲ್ಲಿ ರೌಡಿ ಹಾಳೆಯನ್ನು ಹೊಂದಿರುತ್ತಾನೆ. +ಈತನ ಇತರೆ ಮೂವರು ಸಹಚರರು ಸಹ ವಿವಿಧ ಪೊಲೀಸ್ ಠಾಣೆಗಳಲ್ಲಿ ರೌಡಿ ಹಾಳೆಯನ್ನು ಹೊಂದಿರುತ್ತಾರೆ.ವಶಕ್ಕೆ ಪಡೆದ ನಾಲ್ವರು ರೌಡಿಗಳನ್ನು ಸುದೀರ್ಘವಾಗಿ ವಿಚಾರಣೆ ಮಾಡಿದಾಗ, 3 ಲಕ್ಷ ಹಣವನ್ನು ಪಡೆದ ನಂತರ ಅಪಹರಣಕ್ಕೊಳಗಾದ ಯುವಕನನ್ನು ಕೊಲೆ ಮಾಡಿ, ಸಾಕ್ಷಿ ನಾಶ ಪಡಿಸುವ ಉದ್ದೇಶವನ್ನು ಹೊಂದಿದ್ದರ ಬಗ್ಗೆ ತಿಳಿದು ಬಂದಿರುತ್ತದೆ. ಈ ಕಾರ್ಯಾಚರಣೆಯನ್ನು ಸಿ.ಸಿ.ಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ)ದ ಅಧಿಕಾರಿ ಮತ್ತು ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. +ನೈಜೀರಿಯಾ ಪ್ರಜೆಗಳ ಸೆರೆ : 67ಲಕ್ಷ ರೂ.ಮೌಲ್ಯದ ಡ್ರಗ್ಸ್ ಜಪ್ತಿ +ಬೆಂಗಳೂರು, ಮಾ.1- ನೈಜೀರಿಯಾ ದೇಶದ ಇಬ್ಬರು ಪ್ರಜೆಗಳನ್ನು ಯಲಹಂಕ ಉಪ ನಗರ ಠಾಣೆ ಪೊಲೀಸರು ಬಂಧಿಸಿ 67.50 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತು ಕೊಕೈನ್ ಮತ್ತು ಎಂಡಿಎಂಎ ಕ್ರಿಸ್ಟೀಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಬ್ಬಂದಿಯವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ವೀರಸಾಗರ ಗ್ರಾಮ, ಜಾರಕ್‍ಬಂಡೆ ಕಾವಲು ಮುಖ್ಯ ರಸ್ತೆಯಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ. +ಆರೋಪಿಗಳು ನಿಷೇಧಿತ ಮಾದಕ ವಸ್ತುಗಳಾದ ಕೊಕೇನ್ ಮತ್ತು ಎಂಡಿಎಂಎ ಕ್ರಿಸ್ಟೇಲ್‍ಗಳನ್ನು ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 1 ಕೆ.ಜಿ 25 ಗ್ರಾಂ ತೂಕದ ಕೊಕೇನ್ ಹಾಗೂ 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟೇಲ್‍ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ 67.50 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಯಲಹಂಕ ಉಪವಿಭಾಗ ಠಾಣೆ ಇನ್ಸ್‍ಪೆಕ್ಟರ್ ಸುಧಾಕರ್ ರೆಡ್ಡಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. \ No newline at end of file diff --git a/eesanje/url_46_217_2.txt b/eesanje/url_46_217_2.txt new file mode 100644 index 0000000000000000000000000000000000000000..0f4531ff8249f0da66127aa5995374e5a4fd8b82 --- /dev/null +++ b/eesanje/url_46_217_2.txt @@ -0,0 +1,4 @@ +“ಸಾರಿಗೆ ಇಲಾಖೆ ಖಾಸಗೀಕರಣ ಬೇಡ” +ಬೆಂಗಳೂರು,ಮಾ.2- ಸಾರಿಗೆ ಇಲಾಖೆಯನ್ನು ಖಾಸಗೀರಣ ಮಾಡಲು ಮುಂದಾದರೆ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಎಚ್ಚರಿಸಿದೆ. ಈ ಕೂಡಲೆ ಸಾರಿಗೆ ಇಲಾಖೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕು ಇಲ್ಲದಿದ್ದರೆ ಮಾ.5 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಫೆಡರೇಷನ್ ಎಚ್ಚರಿಕೆ ನೀಡಿದೆ. +ಈಗಾಗಲೇ ಬಿಎಂಟಿಸಿಯಲ್ಲಿ 600 ಎಲೆಕ್ಟ್ರಿಕ್ ಬಸ್‍ಗಳನ್ನು ಖಾಸಗಿ ಮಾಲೀಕತ್ವದಲ್ಲಿ ಓಡಿಸಲಾಗುತ್ತಿದೆ. ಇದೀಗ ಮತ್ತೆ ಕೆಎಸ್‍ಆರ್‍ಟಿಸಿಯಲ್ಲಿ ಖಾಸಗಿ ಮಾಲೀಕತ್ವದಲ್ಲಿ 600 ಬಸ್ ಸಂಚಾರಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ಸರ್ಕಾರ ಸಾರಿಗೆ ಇಲಾಖೆಯನ್ನು ಖಾಸಗೀಕರಣ ಮಾಡುವತ್ತ ಹೆಜ್ಜೆ ಇಟ್ಟಿರುವುದು ಸಾಬೀತಾಗಿದೆ. +ಹೀಗಾಗಿ ನಾವು ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿಕೊಂಡಿದ್ದೇವೆ ಒಂದು ವೇಳೆ ನಮ್ಮ ಮಾತು ಮೀರಿ ಖಾಸಗೀಕರಣಕ್ಕೆ ಮುಂದಾದರೆ ಮಾ.5 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟಟನೆ ನಡೆಸಲಾಗುವುದು ಎಂದು ಫೆಡರೇಷನ್ ಎಚ್ಚರಿಸಿದೆ. \ No newline at end of file diff --git a/eesanje/url_46_217_3.txt b/eesanje/url_46_217_3.txt new file mode 100644 index 0000000000000000000000000000000000000000..7be9dcf549f52f9e9392d8e3a88c6b896f418453 --- /dev/null +++ b/eesanje/url_46_217_3.txt @@ -0,0 +1,4 @@ +ರಾಮೇಶ್ವರಂ ಕೆಫೆ ಸ್ಪೋಟ : ಗಾಯಾಳುಗಳಿಗೆ ಸಿಎಂ ಸಾಂತ್ವನ +ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟದಿಂದ ಗಾಯಗೊಂಡವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಯವರು ನೇರವಾಗಿ ಆಸ್ಪತ್ರೆಗೆ ತೆರಳಿದರು. ಅಲ್ಲಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. +ಇದೇ ವೇಳೆ ರೋಗಿಗಳ ಜೊತೆಯೂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಧೈರ್ಯವಾಗಿರಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾಂತ್ವನ ಹೇಳಿದರು. ಗಾಯಗೊಂಡವರ ಕುಟುಂಬದ ಸದಸ್ಯರ ಜೊತೆ ಕೂಡಾ ಮಾತುಕತೆ ನಡೆಸಿದರು. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಈಗಾಗಲೇ ಹೇಳಿಕೆ ನೀಡಲಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಪರಿಶೀಲನೆ ನಡೆಸಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ನಿನ್ನೆ ರಾತ್ರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. \ No newline at end of file diff --git a/eesanje/url_46_217_4.txt b/eesanje/url_46_217_4.txt new file mode 100644 index 0000000000000000000000000000000000000000..3c101e54ecf86aadc766763dea7b13c1c4dcc787 --- /dev/null +++ b/eesanje/url_46_217_4.txt @@ -0,0 +1,5 @@ +ಎಸ್‍ಎಂಕೆಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ +ಬೆಂಗಳೂರು,ಮಾ.2- ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿರುವುದರಿಂದ ವಿಶ್ವವಿದ್ಯಾಲಯಕ್ಕೆ ಕೀರ್ತಿ ಹೆಚ್ಚಿರುವುದರ ಜತೆಗೆ ಮಂಡ್ಯ ಜನರಿಗೆ ಗೌರವ ಸಂದಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹೇಳಿದ್ದಾರೆ. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಳೆ ನಡೆಯಲಿರುವ 104ನೆ ಮೈಸೂರು ವಿವಿ ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ವಿವಿ ನಿರ್ಧರಿಸಿರುವುದು ಸ್ವಾಗತಾರ್ಹ. ಮೈಸೂರು ವಿವಿಗೆ ವೈಯಕ್ತಿಕವಾಗಿ ಮತ್ತು ಮಂಡ್ಯ ಜನತೆ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ. +ಮೈಸೂರು ವಿವಿಯ ಹಳೆಯ ವಿದ್ಯಾರ್ಥಿಯಾದ ಎಸ್.ಎಂ.ಕೃಷ್ಣ ಅವರು ಅಮೆರಿಕದ ಟೆಕ್ಸಾಸ್ ರಾಜ್ಯದ ಸದರನ್ ಮೆಥಡಿಸ್ ವಿವಿಯಲ್ಲಿ ಅಂತಾರಾಷ್ಟ್ರೀಯ ಕಾನೂನು ಬಗ್ಗೆ ಉನ್ನತ ಶಿಕ್ಷಣ ಪಡೆದು ವಾಷಿಂಗ್ಟನ್‍ನಲ್ಲಿರುವ ಜಾರ್ಜ್ ವಾಷಿಂಗ್ಟನ್ ವಿವಿಯಲ್ಲಿ ಪ್ರತಿಷ್ಠಿತ ಫುಲ್‍ಬ್ರೈಟ್ ವಿದ್ಯಾರ್ಥಿವೇತನ ಪಡೆದುಕೊಂಡಿದ್ದರು. +ಎಸ್‍ಎಂಕೆ ಅವರು ಆರು ದಶಕಗಳ ಕಾಲ ಸುದೀರ್ಘ ಸಾಮಾಜಿಕ, ರಾಜಕೀಯ ಸೇವೆ ಸಲ್ಲಿಸಿ ಶ್ರೇಷ್ಠ ರಾಜಕಾರಣಿ ಎನಿಸಿಕೊಂಡಿದ್ದಾರೆ. ಅವರ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮ ವಿಭೂಷಣ ಪ್ರಶಸ್ತಿ ನೀಡಿತ್ತು.ಕರ್ನಾಟಕ ವಿಧಾನಸಭೆ, ವಿಧಾನ ಪರಿಷತ್, ರಾಜ್ಯಸಭೆ, ಲೋಕಸಭೆ ಹಾಗೂ ವಿಧಾನಸಭಾ ಅಧ್ಯಕ್ಷರಾಗಿ, ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜಪಾಲರಾಗಿ, ಕೇಂದ್ರ ಸಚಿವರಾಗಿ ಗಣನೀಯ ಸೇವೆ ಸಲ್ಲಿಸಿದ ಅವರ ಸಾಧನೆಗಳಿಗೆ ಸಂದ ಗೌರವ ಎಂದು ದಿನೇಶ್ ಬಣ್ಣಿಸಿದ್ದಾರೆ. \ No newline at end of file diff --git a/eesanje/url_46_217_5.txt b/eesanje/url_46_217_5.txt new file mode 100644 index 0000000000000000000000000000000000000000..b1cf5f916629a0303ec88f04efdd38bca49a7b37 --- /dev/null +++ b/eesanje/url_46_217_5.txt @@ -0,0 +1,7 @@ +ಜನಾರ್ದನ ರೆಡ್ಡಿ ಪುನಃ ಬಿಜೆಪಿಗೆ ಕರೆತರಲು ಮುಂದುವರೆದ ಯತ್ನ +ಬೆಂಗಳೂರು,ಮಾ.2- ಮಾಜಿ ಸಚಿವ, ಗಂಗಾವತಿ ಶಾಸಕ ಜನಾದರ್ನ ರೆಡ್ಡಿ ಅವರನ್ನು ಪುನಃ ಬಿಜೆಪಿಗೆ ಕರೆತರುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿವೆ. ಮಾಜಿ ಸಚಿವ ಶ್ರೀರಾಮುಲು ತಮ್ಮ ಆಪ್ತ ಸ್ನೇಹಿತನನ್ನು ಮರಳಿ ಮನೆಗೆ ಕರೆತರಲು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು, ಈ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಜೊತೆಯೂ ಮಾತುಕತೆ ನಡೆಸಿದ್ದಾರೆ. +ಜನಾರ್ದನ ರೆಡ್ಡಿ ಬಿಜೆಪಿಗೆ ಬಂದರೆ ಪಕ್ಷಕ್ಕೆ ಮತ್ತಷ್ಟು ಬಲ ಬರಲಿದೆ ಎಂದಿದ್ದಾರೆ. ಆದರೆ, ಜನಾರ್ದನ ರೆಡ್ಡಿ ನಡೆ ಇನ್ನು ನಿಗೂಢವಾಗಿದೆ. ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ ಜನಾರ್ಧನ ರೆಡ್ಡಿ, ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸ್ರ್ಪಧಿಸಿ ಗೆದ್ದಿರುವುದರ ಜೊತೆಗೆ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲೂ ಜನಾಧರ್ನ ರೆಡ್ಡಿ ಪ್ರಭಾವ ಬೀರಿದರೆ ಕಷ್ಟವಾಗುತ್ತದೆ ಎಂದು ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಲು ತೆರೆಮರೆಯ ಪ್ರಯತ್ನಗಳು ನಡೆಯುತ್ತಲೇ ಇವೆ. +ಕೆಲ ದಿನಗಳ ಹಿಂದಷ್ಟೇ ಶ್ರೀರಾಮುಲು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆಗ ಜನಾರ್ಧನ ರೆಡ್ಡಿ ಬಗ್ಗೆ ಚರ್ಚೆಯಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ ಜನಾರ್ಧನ ರೆಡ್ಡಿ ಜನಪ್ರಿಯ ನಾಯಕ. ಅವರು ಪಕ್ಷಕ್ಕೆ ವಾಪಸ್ ಬಂದರೆ ಬಿಜೆಪಿಗೆ ಬಲ ಬರಲಿದೆ. ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ಮೈಸೂರಿಗೆ ಅಮಿತ್ ಶಾ ಆಗಮಿಸಿದಾಗಲೂ ಜನಾರ್ಧನ ರೆಡ್ಡಿ ಬಗ್ಗೆ ಚರ್ಚೆಯಾಗಿದೆ. ಶ್ರೀರಾಮುಲು ಅವರು ಪ್ರತಿ ಅವಕಾಶದಲ್ಲೂ ತಮ್ಮ ಆಪ್ತ ಸ್ನೇಹಿತನನ್ನು ಮರಳಿ ಪಕ್ಷಕ್ಕೆ ಕರೆತರಲು ಶ್ರಮಪಡುತ್ತಿರುವುದು ಕಂಡುಬರುತ್ತಿದೆ. +ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಜನಾಧರ್ನ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಯತ್ನಗಳಿಗೆ ವೇಗ ಸಿಕ್ಕಿತ್ತು. ಆದರೆ ಜನಾಧರ್ನ ರೆಡ್ಡಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ, ಬೇಕಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮತ ಹಾಕುವ ಮೂಲಕ ಜನಾರ್ಧನ ರೆಡ್ಡಿ ಎಲ್ಲರನ್ನು ಅಚ್ಚರಿಗೊಳಪಡಿಸಿದ್ದರು. ಈ ಮೂಲಕ ಬಿಜೆಪಿ ಕಡೆ ನನ್ನ ನಡೆಯಿಲ್ಲ ಎಂಬುದನ್ನು ರೆಡ್ಡಿ ಸ್ಪಷ್ಟಪಡಿಸಿದ್ದರು. +ಬಿಜೆಪಿ ಸೇರ್ಪಡೆಗೆ ಹಿಂದೇಟು ಏಕೆ?:ಕಳೆದ ವರ್ಷ ವಿಧಾನಸಭಾ ಚುನಾವಣೆ ವೇಳೆ ತಮಗೆ ಟಿಕೆಟ್ ನೀಡಲಿಲ್ಲ ಎಂಬ ಸಿಟ್ಟು ಜನಾಧರ್ನ ರೆಡ್ಡಿಯವರಿಗಿದೆ. ಬಿಜೆಪಿ ಪರ ಒಲವು ಹೊಂದಿದ್ದರು ಕೂಡ ಟಿಕೆಟ್ ನಿರಾಕರಿಸಿದ ಕೇಂದ್ರದ ನಾಯಕರೇ ತಮ್ಮನ್ನು ಸಂಪರ್ಕಿಸಲಿ ಎನ್ನುವ ಇರಾದೆಯಲ್ಲಿ ಜನಾರ್ದನ ರೆಡ್ಡಿ ಇದ್ದಾರೆ. ಈಗಾಗಲೇ ಎಲ್ಲರ ಕಡೆಯಿಂದಲೂ ವಸ್ತುಚಿತ್ರಣವನ್ನು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನಾಧರ್ನ ರೆಡ್ಡಿ ಅವರನ್ನು ಸಂಪರ್ಕಿಸುವ ಸಾಧ್ಯತೆ ಇದೆ. ಅದಾದ ಬಳಿಕ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. +ರೆಡ್ಡಿ-ಶ್ರೀರಾಮುಲು ಸ್ನೇಹ!ಕರ್ನಾಟಕ ರಾಜಕೀಯದಲ್ಲಿ ಅತ್ಯುತ್ತಮ ಸ್ನೇಹಿತರೆಂದರೆ ಅದು ಶ್ರೀರಾಮುಲು ಹಾಗೂ ಜನಾಧರ್ನ ರೆಡ್ಡಿ ಎಂದು ಹೇಳಲಾಗುತ್ತಿತ್ತು. ಆದರೆ, ವಿಧಾನಸಭಾ ಚುನಾವಣೆ ವೇಳೆ ಕೆಲ ಕಾರಣಗಳಿಗೆ ಇಬ್ಬರ ನಡುವೆ ವೈಮನಸ್ಸು ಮೂಡಿದೆ. ಈ ಹಿನ್ನೆಲೆ ಇಬ್ಬರು ಅಂತರ ಕಾಯ್ದುಕೊಂಡಿದ್ದಾರೆ. ಶ್ರೀರಾಮುಲು ಅವರೇ ಆಸಕಿವಹಿಸಿ ತಮ್ಮ ಸ್ನೇಹಿತನನ್ನು ಬಿಜೆಪಿಗೆ ವಾಪಸ್ ಕರೆತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನಾರ್ಧನ ರೆಡ್ಡಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_217_6.txt b/eesanje/url_46_217_6.txt new file mode 100644 index 0000000000000000000000000000000000000000..731b273cc1ea0e03d147291d23d0b4cd4e36e839 --- /dev/null +++ b/eesanje/url_46_217_6.txt @@ -0,0 +1,6 @@ +ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟಕ್ಕೆ ಐಸಿಸ್ ನಂಟು!? +ಬೆಂಗಳೂರು,ಮಾ.2- ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಸೋಟಕ್ಕೂ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಹಾಗೂ ಶಿವಮೊಗ್ಗ ನದಿ ತೀರದಲ್ಲಿ ನಡೆಸಿದ್ದ ಟ್ರಯಲ್ ಬ್ಲಾಸ್ಟ್ ಪ್ರಕರಣಗಳ ನಡುವೆ ಸಾಮ್ಯ ಇರುವ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಐಸಿಸ್ ಸಂಘಟನೆ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಸಂಭವಿಸಿದ್ದ ಬಾಂಬ್ ಬ್ಲಾಸ್ಟ್ ಮಾದರಿಯಲ್ಲೇ ರಾಮೇಶ್ವರಂ ಕೆಫೆಯಲ್ಲೂ ಸ್ಪೋಟ ಸಂಭವಿಸಿರುವುದು ಸ್ಥಳದಲ್ಲಿ ಸಿಕ್ಕ ವಸ್ತುಗಳ ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿರುವ ಹಿನ್ನೆಲಯಲ್ಲಿ ಈ ಪ್ರಕರಣದಲ್ಲೂ ಐಸಿಎಸ್ ಉಗ್ರರ ಕರಿನೆರಳು ಇರಬಹುದು ಎಂದು ಶಂಕಿಸಲಾಗಿದೆ. +ರಾಮೇಶ್ವರಂ ಕೆಫೆ ಸ್ಪೋಟದಲ್ಲಿ ಬಳಕೆಯಾಗಿರುವ ಡಿಟೋನೇಟರ್, ಬ್ಯಾಟರಿ ಸೇರಿ ಹಲವು ವಸ್ತುಗಳು ಮಂಗಳೂರು ಕುಕ್ಕರ್ ಬ್ಲಾಸ್ಟ್ ಮಾದರಿಯಲ್ಲೇ ನಡೆದಿರುವುದು ಈ ಎಲ್ಲ ಅನುಮಾನಗಳಿಗೆ ಇಂಬು ನೀಡುವಂತಿವೆ ಎಂದು ಪೊಲೀಸ್ ಮೂಲಗಳು ಈಸಂಜೆಗೆ ಖಚಿತಪಡಿಸಿವೆ. ದೇಶದ್ರೋಹಿಗಳು ರಾಮೇಶ್ವರಂ ಕೆಫೆ ಪ್ರಕರಣದಲ್ಲಿ ಕುಕ್ಕರ್ ಬದಲಿಗೆ ಪ್ಲಾಸ್ಟಿಕ್ ಕವರ್ ಬಳಕೆ ಮಾಡಿ ಎರಡು ಕಂಟೈನರ್‍ಗಳನ್ನು ಸೃಷ್ಟಿ ಮಾಡಿ ಎರಡು ಬಾಂಬ್‍ಗಳನ್ನಿಟ್ಟು ಒಂದಾದ ನಂತರ ಒಂದು ಸ್ಪೋಟಗೊಳ್ಳುವಂತೆ ಟೈಮ್ ಫಿಕ್ಸ್ ಮಾಡಿರುವುದು ಗೊತ್ತಾಗಿದೆ. ಬಾಂಬ್ ಇಟ್ಟ ಶಂಕಿತ ವ್ಯಕ್ತಿ ಹೊರನಡೆದ ಒಂದು ಗಂಟೆಯ ತರುವಾಯ ಸ್ಪೋಟ ಸಂಭವಿಸಿದೆ. +ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೂ ರಾಮೇಶ್ವರಂ ಕೆಫೆ ಪ್ರಕರಣಕ್ಕೂ ಸಾಮ್ಯತೆ ಇರುವುದರಿಂದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿಗಳನ್ನು ವಿಚಾರಣೆ ನಡೆಸಲು ಪೊಲೀಸರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರಿಕ್ ಮತ್ತು ಆತನ ಸಹಚರರು ಪರಪ್ಪನ ಆಗ್ರಹಾರ ಜೈಲಿನಲ್ಲಿದ್ದು ಅವರನ್ನು ಬಾಡಿ ವಾರೆಂಟ್ ಮೇಲೆ ಕರೆತಂದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ. +ಎರಡೂ ಕಡೆ ನಡೆದ ಸ್ಪೋಟದ ವೇಳೆ ಹೊರಸೂಸಿರುವ ಹೊಗೆ ಒಂದೇ ಮಾದರಿಯಲ್ಲಿದೆ. ಈ ಎರಡೂ ಸ್ಪೋಟಗಳಲ್ಲೂ ಒಂದೇ ಮಾದರಿಯ ವಸ್ತುಗಳ ಬಳಕೆ ಮಾಡಲಾಗಿದೆ. ಎರಡೂ ಕಡೆ ಬ್ಯಾಟರಿ, ಡಿಟೊನೇಟರ್‍ಗಳು, ನಟ್ಟು, ಬೋಲ್ಟ ಬಳಕೆ ಮಾಡಿರುವುದು ಪತ್ತೆಯಾಗಿರುವುದರಿಂದ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ತಡರಾತ್ರಿ ರಾಮೇಶ್ವರಂ ಕೆಫೆಗೆ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಯಾಂಪಲ್ಸ ಸಂಗ್ರಹ ಮಾಡಿಕೊಂಡಿದ್ದಾರೆ. +ಘಟನಾ ಸ್ಥಳದ ಬಳಿಯ ಸಿಸಿಟಿವಿಯಲ್ಲಿ ಆರೋಪಿಯ ಚಲನವಲನ ದೃಶ್ಯ ಸೆರೆಯಾಗಿದ್ದು ಆತನ ಗುರುತು ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದಷ್ಟು ಬೇಗ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದ ಬಗ್ಗೆ ಪಕ್ಕಾ ಮಾಹಿತಿ ಇದ್ದವನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಮೇಶ್ವರಂ ಕೆಫೆಯಲ್ಲಿನ ಸಿಟಿಟಿವಿ ಹೊರತುಪಡಿಸಿ ಬೇರೆ ಕಡೆ ಇರುವ ಸಿಸಿ ಕ್ಯಾಮೆರಾಗಳಲ್ಲಿ ಆರೋಪಿ ಕಾಣಿಸಿಕೊಂಡಿಲ್ಲದಿರುವುದು ಆತನ ಚಾಣಕ್ಷತೆಗೆ ಸಾಕ್ಷಿಯಾಗಿದೆ. \ No newline at end of file diff --git a/eesanje/url_46_217_7.txt b/eesanje/url_46_217_7.txt new file mode 100644 index 0000000000000000000000000000000000000000..9ee1bc9fd4fc49bea56f4150c056519102dd4970 --- /dev/null +++ b/eesanje/url_46_217_7.txt @@ -0,0 +1,5 @@ +ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಅಜ್ಞಾತ ಸ್ಥಳದಲ್ಲಿ ನಾಲ್ವರ ವಿಚಾರಣೆ +ಬೆಂಗಳೂರು,ಮಾ.2- ಸಿಲಿಕಾನ್ ಸಿಟಿಯ ಜನರನ್ನು ಬೆಚ್ಚಿ ಬೀಳಿಸಿದ್ದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಗುಪ್ತಚರ ಇಲಾಖೆ ಅಧಿಕಾರಿಗಳು ನಾಲ್ವರನ್ನು ವಶಕ್ಕೆ ಪಡೆದು, ಅಜ್ಞಾತ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆಗೊಳ ಪಡಿಸಿದ್ದಾರೆ. ಹೋಟೆಲ್ ಹಾಗೂ ಅಕ್ಕಪಕ್ಕದ ರಸ್ತೆಯಲ್ಲಿರುವ ಸಿಸಿಟಿವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅದರಲ್ಲಿ ಸೆರೆಯಾಗಿದ್ದ ಶಂಕಿತ ಆರೋಪಿಯ ಫೋಟೋ ಆಧಾರದ ಮೇಲೆ ಆತನನ್ನೇ ಹೋಲುವ ನಾಲ್ವರನ್ನು ತಡರಾತ್ರಿಯೇ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಸ್ಥಳದಲ್ಲಿ ದೊರೆತ ಸಿಸಿಟಿವಿ ಟವರ್ ಲೊಕೇಶನ್ ಹಾಗೂ ಪೊಲೀಸರ ಶಂಕೆ ಆಧಾರದಲ್ಲಿ ತನಿಖೆ ನಡೆಯುತ್ತಿದೆ. +ಕೇರಳ, ತಮಿಳು ನಾಡಿನಲ್ಲಿ ಶೋಧ :ಘಟನೆ ಸಂಭವಿಸುತ್ತಿದ್ದಂತೆ ಆರೋಪಿಗಳ ಪತ್ತೆಗಾಗಿ 10 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ವಿವಿಧ ಭಾಗಗಳಿಗೆ ಹೋಗಿ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ. ರಾಮೇಶ್ವರಂ ಕೆಫೆಯ ಪ್ರಮುಖ ಬ್ರಾಂಚ್ ತಮಿಳುನಾಡಿನಲ್ಲಿದ್ದು, ಅಲ್ಲಿಯೂ ಆಡಳಿತ ಮಂಡಳಿಯ ಕೆಲ ಸಿಬ್ಬಂದಿಗಳನ್ನು ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. +ಈ ಹಿಂದೆ ನಗರದಲ್ಲಿ ನಡೆದಿದ್ದ ಬಾಂಬ್ ಬ್ಲಾಸ್ಟ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನೂ ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಬ್ದುಲ್ ಕಲಾಂ ಅವರ ಸ್ಪೂರ್ತಿಯಿಂದ ರಾಮೇಶ್ವರಂ ಕೆಫೆಯನ್ನು ತೆರೆಯಲಾಗಿದ್ದು, ಭಾರತದಾದ್ಯಂತ ಬ್ರಾಂಚ್‍ಗಳನ್ನು ಹೊಂದಿದೆ. ಈ ರಾಮೇಶ್ವರಂ ಕೆಫೆ ದೇಗುಲದ ಮಾದರಿಯಲ್ಲಿ ನಿರ್ಮಾಣವಾಗಿದೆ. ನಗರದಲ್ಲೂ ಹಲವು ಬ್ರಾಂಚ್‍ಗಳಿದ್ದು, ಈ ಕೆಫೆ ಜನಸಾಮಾನ್ಯರ ಹಾಗೂ ಐಟಿಬಿಟಿ ಉದ್ಯೋಗಿಗಳ ಫೇವರಿಟ್ ಸ್ಪಾಟ್ ಎಂದೇ ಹೇಳಲಾಗುತ್ತದೆ. +ಈ ಕೆಫೆಗೆ ನಿನ್ನೆ ಮಧ್ಯಾಹ್ನ ಊಟದ ಸಮಯಕ್ಕೆ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದನ್ನು ಗಮನದಲ್ಲಿಟ್ಟುಕೊಂಡು ಆರೋಪಿಯು ಬಹಳ ಚಾಣಾಕ್ಷತೆಯಿಂದ ಹೋಟೆಲ್ ಒಳಗೆ ಪ್ರವೇಶಿಸಿ ಬ್ಯಾಗ್ ಇಟ್ಟು ಹೋದ 1 ಗಂಟೆಯ ಅಂತರದಲ್ಲಿ ಬ್ಯಾಗ್ ಸ್ಪೋಟಗೊಂಡ ಪರಿಣಾಮ ಮಹಿಳೆ ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. \ No newline at end of file diff --git a/eesanje/url_46_217_8.txt b/eesanje/url_46_217_8.txt new file mode 100644 index 0000000000000000000000000000000000000000..9d42c72800d125cb697537e358a472a59a840e6a --- /dev/null +++ b/eesanje/url_46_217_8.txt @@ -0,0 +1,7 @@ +ನಾಳೆಯಿಂದ ಮಾರ್ಚ್6ರ ವರೆಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ +ಬೆಂಗಳೂರು, ಮಾ.2- ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ರಾಜ್ಯಾದ್ಯಂತ ನಾಳೆಯಿಂದ ಮಾರ್ಚ್ 6ರವರೆಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆ ಹಮ್ಮಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾಲ್, ಟೂಲ್ ಪ್ರದೇಶ ಹಾಗೂ ಇತರ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. +ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆಯನ್ನು ನೀಡುವ ಮೂಲಕ ಚಾಲನೆ ನೀಡಲಿದ್ದಾರೆ. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಉಳಿದ ಮೂರು ದಿನ ಮನೆಗಳಿಗೆ ಭೇಟಿ ನೀಡಿ ಲಸಿಕೆಯನ್ನು ನೀಡಲಾಗುವುದು. +ಲಸಿಕಾ ಕಾರ್ಯದಲ್ಲಿ ತೊಡಗುವ ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ಗೌರವ ಧನ ಸೂಕ್ತ ಸಮಯದಲ್ಲಿ ಸಿಗುವಂತೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ. ಶಾಲಿನಿ ರಜನೀಶ್ ಸೂಚಿಸಿದ್ದರು. +ಕಳೆದ ಬಾರಿ ಕಡಿಮೆ ಪ್ರಗತಿ ಹೊಂದಿರುವ ದುರ್ಬಲ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸುವ ಮೂಲಕ ಈ ಬಾರಿ ಐದು ವರ್ಷದೊಳಗಿನ ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಲು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ನಡೆದ ರಾಜ್ಯ ಮಟ್ಟದ ಚಾಲನಾ ಸಮಿತಿ ಸಭೆಯಲ್ಲಿ ನಿರ್ದೇಶನ ನೀಡಿದ್ದರು. +ಕಳೆದ ಬಾರಿ ಯಾವ ಪ್ರದೇಶದಲ್ಲಿ ಯಾವ ಕಾರಣಕ್ಕೆ ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನದಲ್ಲಿ ಕಡಿಮೆ ಪ್ರಗತಿ ಹೊಂದಲಾಗಿದೆಯೋ, ಅಂತಹ ಪ್ರದೇಶಗಳನ್ನು ಗುರುತಿಸಿ, ಕಾರಣ ಪತ್ತೆ ಹಚ್ಚಿ ಸೂಕ್ತ ಮೂಲಸೌಕರ್ಯ ಒದಗಿಸುವ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಅಕಾರಿಗಳು ಕ್ರಮವಹಿಸಬೇಕು. ಆರೋಗ್ಯ ಇಲಾಖೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಆರೋಗ್ಯ ಕ್ಷೇತ್ರ ಸೇರಿದಂತೆ ಇತರ ಪೂರಕ ಸಂಘಸಂಸ್ಥೆಗಳ ಸಹಕಾರ ಪಡೆದು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ನೀಡಬೇಕು ಎಂದು ಅವರು ಸೂಚನೆ ನೀಡಿದರು. +ನಗರ ಅಥವಾ ಗ್ರಾಮೀಣ ಪ್ರದೇಶಕ್ಕೆ ಅನುಕೂಲವಾಗುವ ಸೂಕ್ತ ಯೋಜನೆಯನ್ನು ರೂಪಿಸಿಕೊಂಡು, ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಅನುಷ್ಠಾನಗೊಂಡರೆ, ಎಲ್ಲಾ ಅರ್ಹ ಮಕ್ಕಳು ಲಸಿಕೆ ಪಡೆಯಬಹುದು. ಪಲ್ಸ್ ಪೋಲಿಯೋ ಲಸಿಕೆಯ ಅನುಷ್ಠಾನ ಕಾರ್ಯದಲ್ಲಿ ಸೂಕ್ತ ಮೇಲುಸ್ತುವಾರಿ ಹಾಗೂ ನಿರ್ವಹಣೆಯಾಗಬೇಕು. ಇದರಿಂದ, ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದರು. \ No newline at end of file diff --git a/eesanje/url_46_217_9.txt b/eesanje/url_46_217_9.txt new file mode 100644 index 0000000000000000000000000000000000000000..19ab9c0278474a949fa6172fafee15d4c07720e8 --- /dev/null +++ b/eesanje/url_46_217_9.txt @@ -0,0 +1,9 @@ +ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥರಿದ್ದಾರೆ : ಪರಮೇಶ್ವರ್ +ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಸ್ಪೋಟಕ ಪ್ರಕರಣವನ್ನು ತನಿಖೆ ನಡೆಸಲು ನಮ್ಮ ಪೊಲೀಸ್ ಅಧಿಕಾರಿಗಳೇ ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಗೃಹಸಚಿವ ಡಾ.ಜಿ.ಪರಮೇಶ್ವರ್ ರಾಷ್ಟ್ರೀಯ ಸಂಸ್ಥೆಗಳ ತನಿಖೆಗೆ ವಹಿಸುವ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದ ಎಫ್‍ಎಸ್‍ಎಲ್ ಪ್ರಯೋಗಾಲಯ ಸಮರ್ಥ ಹಾಗೂ ಅತ್ಯಾಧುನಿಕವಾಗಿದೆ. ನಿನ್ನೆ ಘಟನೆ ನಡೆದ ತಕ್ಷಣ ತಜ್ಞರ ದೊಡ್ಡ ತಂಡ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿದೆ. ಬಾಂಬ್‍ನಲ್ಲಿ ಟೈಮರ್ ಅಳವಡಿಸಿರುವುದು, ಯಾವ ರೀತಿಯ ಸ್ಪೋಟಕ ಬಳಸಲಾಗಿದೆ, ಬಾಂಬ್ ಸಾಮಥ್ರ್ಯ ಎಷ್ಟು ಎಂಬೆಲ್ಲಾ ವಿವರಗಳನ್ನೂ ಕಲೆ ಹಾಕಿಕೊಂಡಿದ್ದಾರೆ. ಇದೂ ಕೂಡ ತನಿಖೆಗೆ ಸಹಾಯವಾಗಲಿದೆ ಎಂದರು. +ಆರೋಪಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬಾಂಬ್ ಸ್ಪೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಅನೇಕ ತಂಡಗಳನ್ನು ರಚನೆ ಮಾಡಲಾಗಿದೆ. ತನಿಖೆ ಆಳವಾಗಿ ನಡೆಯುತ್ತಿದೆ. ಕೆಲ ಕುರುಹುಗಳು ಸಿಕ್ಕಿವೆ. ಆ ಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನೂ ಸಂಗ್ರಹಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು. +ರಾಮೇಶ್ವರಂ ಕೆಫೆ ಮಾರ್ಗದಲ್ಲಿ ನಿನ್ನೆ 26 ಬಸ್‍ಗಳು ಸಂಚರಿಸಿವೆ. ಅವುಗಳಲ್ಲೂ ಸಿಸಿಟಿವಿ ಕ್ಯಾಮರಾ ಇದೆ. ಅದರಲ್ಲಿ ಪ್ರಯಾಣಿಕರ ದೃಶ್ಯಗಳು ಸಂಗ್ರಹವಾಗಿರುತ್ತವೆ. ಬಿಎಂಟಿಸಿ ಸಹಕಾರದೊಂದಿಗೆ ಅದನ್ನೂ ಪರಿಶೀಲಿಸಲಾಗುತ್ತಿದೆ. ಆರೋಪಿ ಎಲ್ಲಿಂದ ಎಲ್ಲಿಗೆ ಪ್ರಯಾಣಿಸಿದ್ದಾನೆ. ಎಲ್ಲಿ ಇಳಿದಿದ್ದಾನೆ. ಬಸ್‍ನಲ್ಲಿ ಆತನ ನಡವಳಿಕೆ ಹೇಗಿತ್ತು. ಈ ಹಿಂದೆ ಎಲ್ಲಿಂದ ಬಂದಿದ್ದನು ಎಂಬೆಲ್ಲಾ ಮಾಹಿತಿಗಳನ್ನು ಪತ್ತೆ ಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು. +ಆರೋಪಿ ಎಷ್ಟೇ ಪ್ರಯತ್ನ ಪಟ್ಟರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅವರ ಪ್ಲಾನ್ ಆಫ್ ಆಕ್ಷನ್ ಕೂಡ ನಾವು ಕಲೆ ಹಾಕಿದ್ದೇವೆ. ಯಾವ ಸಂಘಟನೆ ಕೈವಾಡವಿದೆ ಎಂಬುದು ಗೊತ್ತಿಲ್ಲ. ನಿನ್ನೆ ನಾವು ಸ್ಥಳಕ್ಕೆ ಹೋಗಿದ್ದಾಗ ರಾಮೇಶ್ವರಂ ಕೆಫೆಯವರು ನಾಲ್ಕೈದು ಹೋಟೆಲ್‍ಗಳನ್ನು ಮಾಡಿದ್ದು, ಯಶಸ್ವಿ ಉದ್ಯಮ ನಡೆಸುತ್ತಿದ್ದರು. ಆ ಹೊಟ್ಟೆ ಉರಿಗೂ ಈ ರೀತಿ ಕೃತ್ಯಗಳು ನಡೆದಿರಬಹುದು ಎಂಬ ಶಂಕೆ ಕೇಳಿಬಂದಿದ್ದವು, ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. +ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿ ಹಾಗೂ ಗೃಹಸಚಿವರ ರಾಜಿನಾಮೆ ಕೇಳುವುದೇ ಕೆಲಸವಾಗಿದೆ. 2022 ರಲ್ಲಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾಗಿದೆ. ಆಗ ಬಿಜೆಪಿಯವರು ಆಡಳಿತದಲ್ಲಿದ್ದು ರಾಜೀನಾಮೆ ಕೊಟ್ಟಿದ್ದರೇ ಎಂದು ತಿರುಗೇಟು ನೀಡಿದರು. ಆಡಳಿತ ಪಕ್ಷವಾಗಿ ನಮಗೆ ಜವಾಬ್ದಾರಿ ಇದೆ. ಯಾರನ್ನೂ ಬಿಡುವುದಿಲ್ಲ. ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ. ರಾಜ್ಯ ಮತ್ತು ಬೆಂಗಳೂರಿನ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಹಲವು ಯೋಜನೆಗಳನ್ನು ಕೈಗೊಂಡಿದ್ದೇವೆ. +ಪೊಲೀಸ್ ಗಸ್ತು ಹೆಚ್ಚಳ, ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಳಕೆ, 7,500 ಸಿಸಿಟಿವಿಗಳ ಅಳವಡಿಕೆ ಸೇರಿದಂತೆ ಹಲವು ಕ್ರಮಗಳಿಂದ ಬೆಂಗಳೂರನ್ನು ಸಾಮಾನ್ಯ ನಾಗರಿಕರ ಹಾಗೂ ಮಹಿಳೆಯರ ಸುರಕ್ಷತಾ ನಗರವನ್ನಾಗಿಸಲು ಪ್ರಯತ್ನಿಸುತ್ತಿದ್ದೇವೆ. ಸಿಸಿಟಿವಿಗಳ ದೃಶ್ಯಾವಳಿಗಳು ತನಿಖೆಗೆ ಮಹತ್ವದ ಸಹಕಾರಿಯಾಗಿವೆ ಎಂದು ಹೇಳಿದರು. +ವಿರೋಧಪಕ್ಷಗಳೂ ಸೇರಿದಂತೆ ಎಲ್ಲರೂ ತನಿಖೆಗೆ ಸಹಕಾರ ನೀಡಬೇಕು. ಈ ವಿಷಯದಲ್ಲಿ ರಾಜಕೀಯ ಮಾಡಬಾರದು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗೆ ಸಂಬಂಧಪಟ್ಟಂತೆ ಈವರೆಗೂ ಎಫ್‍ಎಸ್‍ಎಲ್‍ನ ವರದಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_218_1.txt b/eesanje/url_46_218_1.txt new file mode 100644 index 0000000000000000000000000000000000000000..39a27f567674ecbf4dbcd1ba3e223d94d2ba7e5e --- /dev/null +++ b/eesanje/url_46_218_1.txt @@ -0,0 +1,5 @@ +ಪಾಕ್ ಜಿಂದಾಬಾದ್ ಘೋಷಣೆಯ ಮತ್ತಷ್ಟು ವಿಡಿಯೋ ಎಫ್‍ಎಸ್‍ಎಲ್‍ಗೆ ರವಾನೆ +ಬೆಂಗಳೂರು, ಮಾ.1- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮತ್ತಷ್ಟು ಖಚಿತಪಡಿಸಿಕೊಳ್ಳಲು ವಿಧಾನಸೌಧ ಠಾಣೆ ಪೊಲೀಸರು ಇನ್ನಷ್ಟು ವಿಡಿಯೋ ತುಣುಕುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ. ಘಟನೆ ಬೆಳಕಿಗೆ ಬಂದ ನಂತರ ವಿಧಾನಸೌಧ ಠಾಣೆ ಪೊಲೀಸರು ಕೆಲವು ಖಾಸಗಿ ಸುದ್ದಿ ವಾಹಿನಿಗಳು ಘಟನೆ ಬಗ್ಗೆ ಪ್ರಸಾರ ಮಾಡಿದ ವಿಡಿಯೋ ಕ್ಲಿಪ್ಪಿಂಗ್ ಪಡೆದುಕೊಂಡು ಅವುಗಳನ್ನು ಈಗಾಗಲೇ ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ. +ಈ ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಲು ಮತ್ತಷ್ಟು ಸಾಕ್ಷ್ಯಾಧಾರಗಳು ಬೇಕೆಂದು ಎಫ್‍ಎಸ್‍ಎಲ್ ಅಧಿಕಾರಿಗಳು ತನಿಖಾಧಿಕಾರಿಗಳಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಮೊಗಸಾಲೆಯಲ್ಲಿರುವ ಸಿಸಿಟಿವಿ ಫುಟೇಜ್‍ಗಳನ್ನು ತೆಗೆದುಕೊಂಡು ಪೊಲೀಸರು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದಾರೆ. ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು ಈತನಕ 14 ಮಂದಿಯನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. +ರಾಜ್ಯಸಭಾ ಸದಸ್ಯ ನಾಸಿರ್ ಬೆಂಬಲಿಗ ಬ್ಯಾಡಗಿ ಮಹಮ್ಮದ್ ಶಫಿ ಸೇರಿದಂತೆ ಮೂವರ ಧ್ವನಿಗಳ ಸ್ಯಾಂಪಲ್ ಪಡೆದುಕೊಂಡಿದ್ದು, ಅವುಗಳನ್ನು ಸಹ ಎಫ್‍ಎಸ್‍ಎಲ್‍ಗೆ ನೀಡಲಾಗಿದೆ. ಇದರ ಜತೆಗೆ ಇನ್ನಷ್ಟು ವಿಡಿಯೋ ಹಾಗೂ ಇನ್ನಿತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಕಳುಹಿಸಲಾಗಿದೆ. ಈ ಪ್ರಕರಣ ಗಂಭೀರವಾಗಿರುವುದರಿಂದ ತನಿಖಾಧಿಕಾರಿಗಳು ಈತನಕ ನೀಡಿರುವ ಎಲ್ಲ ವಿಡಿಯೋ ಕ್ಲಿಪ್ಪಿಂಗ್ ಮತ್ತು ಸಾಕ್ಷ್ಯಾಧಾರಗಳನ್ನು ಎಫ್‍ಎಸ್‍ಎಲ್ ಅಧಿಕಾರಿ ಹಾಗೂ ಸಿಬ್ಬಂದಿ ಪ್ರತಿಯೊಂದನ್ನೂ ಕೂಲಂಕಶವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. +ಈ ಪ್ರಕರಣದ ಎಫ್‍ಎಸ್‍ಎಲ್ ಸಂಪೂರ್ಣ ವರದಿ ಬರಲು ಮತ್ತಷ್ಟು ಸಮಯದ ಅಗತ್ಯವಿದೆ. ವರದಿ ಬಂದ ನಂತರವಷ್ಟೇ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡುತ್ತಿದ್ದ ಅವರು, ಆದಷ್ಟು ಬೇಗ ವರದಿ ನೀಡುವಂತೆ ನಾವು ಎಫ್‍ಎಸ್‍ಎಲ್ ಅಧಿಕಾರಿಗಳಲ್ಲಿ ಮನವಿ ಮಾಡಿರುವುದಾಗಿ ಅವರು ತಿಳಿಸಿದರು. \ No newline at end of file diff --git a/eesanje/url_46_218_10.txt b/eesanje/url_46_218_10.txt new file mode 100644 index 0000000000000000000000000000000000000000..f0847f767c085ec6e4ea2e0109560381904d2247 --- /dev/null +++ b/eesanje/url_46_218_10.txt @@ -0,0 +1,6 @@ +ಅಂಗಾಂಗ ದಾನಿಗಳ ಕುಟುಂಬದವರಿಗೆ ಪ್ರಶಂಸಾ ಪತ್ರ ವಿತರಣೆ +ಬೆಂಗಳೂರು,ಮಾ.1- ಅಂಗಾಂಗ ದಾನ ಮಾಡಿದ ಕುಟುಂಬದವರಿಗೆ ತೊಂದರೆಯಾದರೆ ಸರ್ಕಾರ ಅವರ ಬಗ್ಗೆ ಕಾಳಜಿ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಅಂಗಾಂಗ ದಾನಿಗಳ ಕುಟುಂಬದ ಸದಸ್ಯರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದ ಬಳಿಕ ಮಾತನಾಡಿದ ಅವರು, ಕುಟುಂಬದ ಸದಸ್ಯರು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು. +ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಿಟ್ಟರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಇದೇ ವೇಳೆ ಭರವಸೆ ನೀಡಿದರು. +ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನಕ್ಕಾಗಿ ಫೆ.27 ರವರೆಗೂ 8,374 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮೂತ್ರಪಿಂಡಕ್ಕಾಗಿ ಹೆಚ್ಚು ಬೇಡಿಕೆಯಿದ್ದು, 5,942 ಮಂದಿ ಮನವಿ ಮಾಡಿದ್ದಾರೆ. ಯಕೃತ್‍ಗಾಗಿ 2043, ಹೃದಯಕ್ಕಾಗಿ 187, ಶ್ವಾಸಕೋಶಕ್ಕಾಗಿ 79, ಹೃದಯ ಮತ್ತು ಶ್ವಾಸಕೋಶಕ್ಕಾಗಿ 30, ಯಕೃತ್ ಮತ್ತು ಮೂತ್ರಪಿಂಡಕ್ಕೆ 61, ಮೂತ್ರಪಿಂಡ ಮತ್ತು ಮೇದೊಜೀರಕ ಗ್ರಂಥಿಗಾಗಿ 29, ಹೃದಯ ಮತ್ತು ಮೂತ್ರಪಿಂಡಕ್ಕಾಗಿ 2, ಸಣ್ಣ ಕರುಳಿಗಾಗಿ ಒಬ್ಬರು ಅರ್ಜಿ ಸಲ್ಲಿಸಿದ್ದಾರೆ. +ಒಬ್ಬ ಅಂಗಾಂಗ ದಾನಿಯಿಂದ ಹೃದಯ, 2 ಮೂತ್ರಪಿಂಡಗಳು, ಪಿತ್ತಜನಕಾಂಗ ಸೇರಿ ಬಹು ಅಂಗಾಂಗಗಳಿಂದ 8 ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷ 278 ಮಂದಿ ಅಂಗಾಂಗ ದಾನ ಮಾಡಿದ್ದಾರೆ. ದೇಶದಲ್ಲೇ ನಾವು 2 ನೇ ಸ್ಥಾನದಲ್ಲಿದ್ದೇವೆ. ಪ್ರಸಕ್ತ ವರ್ಷ 21 ಜನರಿಂದ ಅಂಗಾಂಗ ದಾನ ಪಡೆಯಲಾಗಿದೆ. ರಾಜ್ಯ ಅಂಗ ಮತ್ತು ಅಂಗಾಂಗ ಕಸಿ ಸಂಸ್ಥೆಯಲ್ಲಿ 11,527 ಮಹಿಳೆಯರೂ ಸೇರಿ 20,029 ಮಂದಿ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ವಿವರಿಸಿದರು. +ಕಾರ್ಯಕ್ರಮದಲ್ಲಿ 7 ಕುಟುಂಬಗಳ ಸದಸ್ಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಹಾಗೂ ಆಯುಕ್ತ ಡಿ.ರಂದೀಪ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_218_11.txt b/eesanje/url_46_218_11.txt new file mode 100644 index 0000000000000000000000000000000000000000..5bde0dbe686ecac4019616d13dc77eda8da5f643 --- /dev/null +++ b/eesanje/url_46_218_11.txt @@ -0,0 +1,7 @@ +: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಐಇಡಿ ಸ್ಫೋಟ..! +ಬೆಂಗಳೂರು, ಮಾ.1- ನಗರದ ಪ್ರಖ್ಯಾತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿ ಘಟನೆಯಲ್ಲಿ 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಸ್ಪೋಟಗೊಂಡ ಪರಿಣಾಮ ಕೆಫೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಗ್ರಾಹಕರು ಕೆಫೆಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. +ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣವೇನೆಂಬುದು ನಿಗೂಢವಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. +ಐಇಡಿ ಬಳಕೆ ಶಂಕೆ : +ನಗರದ ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಬಳಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೆಫೆಯಲ್ಲಿನ ಕೈ ತೊಳೆಯುವ ವಾಷ್‍ಬೇಸಿನ್ ಬಳಿ ಸ್ಪೋಟಕಗಳಿದ್ದ ಬ್ಯಾಗನ್ನು ಇಟ್ಟು ಸ್ಪೋಟಿಸಲಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸ್ಪೋಟದಿಂದ ಒಟ್ಟು 9 ಮಂದಿ ಗಾಯಗೊಂಡಿದ್ದು, ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಘಟನಾ ಸ್ಥಳದಲ್ಲಿ ಸಿಕ್ಕಿರುವ ಸ್ಪೋಟದ ಅವಶೇಷಗಳನ್ನು ಪೊಲೀಸರು ಸಂಗ್ರಹಿಸಿ, ಪರಿಶೀಲಿಸಿ, ಹೆಚ್ಚಿನ ಮಾಹಿತಿಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಕೆಫೆಗೆ ಎನ್‍ಐಎ ಹಾಗೂ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ , ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಮೋಹನ್ ಅವರು ಭೇಟಿಪರಿಶೀಲಿಸಿದ್ದಾರೆ. + … \ No newline at end of file diff --git a/eesanje/url_46_218_12.txt b/eesanje/url_46_218_12.txt new file mode 100644 index 0000000000000000000000000000000000000000..0b2ee5e5eb43accaa7e10212bcf266fe9f4af52e --- /dev/null +++ b/eesanje/url_46_218_12.txt @@ -0,0 +1,9 @@ +ಹಿಂದುಳಿದ ವರ್ಗಗಳ ವರದಿ ಅಧ್ಯಯನಕ್ಕೆ ಸಂಪುಟ ಉಪಸಮಿತಿ ರಚನೆಗೆ ಚಿಂತನೆ +ಬೆಂಗಳೂರು,ಮಾ.1- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿಯನ್ನು ಮತ್ತಷ್ಟು ಅಧ್ಯಯನಕ್ಕೆ ಒಳಪಡಿಸಲು ಸಚಿವ ಸಂಪುಟ ಉಪಸಮಿತಿ ರಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. 2015 ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ನೇತೃತ್ವದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮಾಹಿತಿಗಳನ್ನು ಜಯಪ್ರಕಾಶ್ ಹೆಗ್ಡೆ ಅವರ ಸಮಿತಿ ದತ್ತಾಂಶ ಸಮೀಕರಿಸಿ ಸರ್ಕಾರಕ್ಕೆ ವರದಿ ನೀಡಿದೆ. +ಅದರಲ್ಲಿ ಜಾತಿವಾರು ಜನಸಂಖ್ಯೆಯ ವಿವರಗಳಿದ್ದು, ವಿಧಾನಸಭಾ ಕ್ಷೇತ್ರವಾರು ಜಾತಿ ಜನಗಣತಿಯ ಅಂಕಿ ಅಂಶಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಆದರೆ ವರದಿಯ ಮಾಹಿತಿಗಳು ಅಧಿಕೃತವಾಗಿ ಇನ್ನೂ ಹೊರಬಂದಿಲ್ಲ. ನಿನ್ನೆ ಇದ್ದಕ್ಕಿದ್ದಂತೆ ಮಾಧ್ಯಮಗಳಲ್ಲಿ ಕೆಲವು ದತ್ತಾಂಶಗಳು ಬಹಿರಂಗಗೊಂಡಿವೆ. ಅದು ಕೆಲ ಸಮುದಾಯವನ್ನು ಮತ್ತಷ್ಟು ಕೆರಳುವಂತೆ ಮಾಡಿದೆ. +ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್ ಪಾಲಿಗೆ ಬಿಸಿ ತುಪ್ಪವಾಗಿದೆ. ವರದಿಗೆ ಕಾಂಗ್ರೆಸ್‍ನ ಹಿರಿಯ ಶಾಸಕರಾಗಿರುವ ಶ್ಯಾಮನೂರು ಶಿವಶಂಕರಪ್ಪ ಬಹಿರಂಗವಾಗಿ ವಿರೋಧಿಸಿದ್ದಾರೆ. ಒಕ್ಕಲಿಗ ಸಮುದಾಯ ಕೂಡ ವರದಿಯನ್ನು ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದೆ. ಈ ಹಂತದಲ್ಲಿ ವರದಿಯಲ್ಲಿರುವ ದತ್ತಾಂಶಗಳನ್ನು ಬಹಿರಂಗಗೊಳಿಸಿದರೆ ಅದು ಲೋಕಸಭೆ ಚುನಾವಣೆಯ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆಯಿದೆ. +ವಾಣಜ್ಯ ಬಳಕೆ ಎಲ್‍ಪಿಜಿ ದರ ಹೆಚ್ಚಳ +8 ವರ್ಷಗಳ ಹಿಂದೆ ನಡೆದ ಸಮೀಕ್ಷೆಯ ದತ್ತಾಂಶಗಳನ್ನು ಈಗಲೂ ಪಾಲನೆ ಮಾಡುವುದು ಅವೈಜ್ಞಾನಿಕ ಎಂಬುದು ವರದಿಯನ್ನು ವಿರೋಧಿಸುವವರ ಅಭಿಪ್ರಾಯವಾಗಿದೆ. ವರದಿ ನೀಡಿದ ಜಯಪ್ರಕಾಶ್ ಹೆಗ್ಡೆಯವರು, ಆಗಿನ ಸಮೀಕ್ಷಾ ಮಾಹಿತಿಗಳ ಜೊತೆಗೆ ನಮ್ಮ ಆಯೋಗ ವರ್ತಮಾನದ ಅಂಕಿ ಅಂಶಗಳನ್ನು ಕಲೆ ಹಾಕಿ ಸಮಗ್ರವಾಗಿ 2024 ರ ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದ್ದಾರೆ. +ಈ ವರದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹೊಸ್ತಿಲಿನಲ್ಲಿ ಅನಗತ್ಯವಾಗಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಈ ಹಿಂದೆ ಲಿಂಗಾಯತ ಹಾಗೂ ವೀರಶೈವ ಧರ್ಮದ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ನಡೆಸಿದ ಚರ್ಚೆಗಳು ಅಡ್ಡಪರಿಣಾಮ ಬೀರಿ 2018 ರ ವಿಧಾನಸಭಾ ಹಾಗೂ 2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪೆಟ್ಟು ತಿನ್ನಬೇಕಾಯಿತು. ಈಗ ಜಾತಿ ಜನಗಣತಿಯ ವರದಿಯನ್ನು ಬಹಿರಂಗಪಡಿಸಿ ವಿವಾದಕ್ಕೆ ಸಿಲುಕುವುದು ಬೇಡ ಎಂದು ಬಹುತೇಕ ಶಾಸಕರು, ಸಚಿವರು, ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. +ವರದಿಯನ್ನು ವಿಧಾನಮಂಡಲದಲ್ಲಿ ಮಂಡಿಸುವುದರ ಮೂಲಕ ಬಹಿರಂಗಪಡಿಸುವುದು ಅಥವಾ ನೇರವಾಗಿ ಸರ್ಕಾರವೇ ಪ್ರಕಟಿಸುವ ಆಯ್ಕೆಗಳು ಚರ್ಚೆಯಲ್ಲಿವೆ. ಆದರೆ ಸದ್ಯಕ್ಕೆ ಅದ್ಯಾವುದರ ಗೋಜಿಗೂ ಹೋಗದೆ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸುವ ಮೂಲಕ ಬೀಸುವ ದೊಣ್ಣೆಯಿಂದ ತಲೆ ತಪ್ಪಿಸಿಕೊಳ್ಳುವ ಚರ್ಚೆಗಳು ನಡೆದಿವೆ. ಸಚಿವ ಸಂಪುಟ ಉಪಸಮಿತಿ ರಚನೆಯಾಗಿದ್ದೇ ಆದರೆ ಅಲ್ಲಿಗೆ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ಸರ್ಕಾರ ವರದಿಯನ್ನು ಬಹಿರಂಗಪಡಿಸುವ ಅಥವಾ ಅನುಷ್ಠಾನಗೊಳಿಸುವ ಇಕ್ಕಟ್ಟಿಗಾಗಲೀ ಸಿಲುಕುವ ಅನಿವಾರ್ಯತೆ ಇರುವುದಿಲ್ಲ. +ಲೋಕಸಭೆ ಚುನಾವಣೆ ಬಳಿಕ ಪರಿಸ್ಥಿತಿಯನ್ನು ಆಧರಿಸಿ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸಂಪುಟದ ಸಹದ್ಯೋಗಿಗಳು ಮುಖ್ಯಮಂತ್ರಿಯವರಿಗೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_218_2.txt b/eesanje/url_46_218_2.txt new file mode 100644 index 0000000000000000000000000000000000000000..7dd67567b3c7ec95c66e801e8ff593a5a36c0b8d --- /dev/null +++ b/eesanje/url_46_218_2.txt @@ -0,0 +1,4 @@ +ಮಾ.3ರಂದು ಕರ್ನಾಟಕ ರಾಜ್ಯ ಮುಕ್ತ ವಿವಿಯ 19ನೇ ಘಟಿಕೋತ್ಸವ +ಮೈಸೂರು, ಮಾ. 1- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 19ನೇ ಘಟಿಕೋತ್ಸವ ಮಾರ್ಚ್ 3ರಂದು ನಡೆಯಲಿದೆ ಎಂದು ಮುಕ್ತ ವಿವಿಯ ಕುಲಪತಿ ಪ್ರೊ. ಶರಣಪ್ಪ ಅವರು ತಿಳಿಸಿದ್ದಾರೆ. ನಗರದ ಮುಕ್ತಗಂಗೋತ್ರಿಯಲ್ಲಿ ರುವ ಕೆಎಸ್ಒಯು ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರೊ. ಶರಣಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದರು. ಈ ಬಾರಿಯ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ ಎಂದವರು ತಿಳಿಸಿದರು. +ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಡಾ. ಹೆಚ್‌ಸಿ ಸತ್ಯನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆಎಂ ವೀರೇಶ್ ಹಾಗೂ ಎಸ್ ಬಿ ಸಿ ಶಿಕ್ಷಣ ಕಾರ್ಯದರ್ಶಿ ಮೀರ ಶಿವಲಿಂಗಯ್ಯ ಅವರುಗಳಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಾಗುತ್ತಿದೆ ಎಂದವರು ಈ ಸಂದರ್ಭದಲ್ಲಿ ತಿಳಿಸಿದರು. 10276 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 7,869 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದವರು ತಿಳಿಸಿದರು. 30 ಮಂದಿಗೆ ಚಿನ್ನದ ಪದಕ, 37 ಮಂದಿಗೆ ನಗದು ಬಹುಮಾನ ವಿತರಿಸಲಾಗುತ್ತದೆ ಎಂದವರು ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಪರೀಕ್ಷಾಂಕಗಳು ಸಚಿವ ಪ್ರೊ. ಕೆಬಿ ಪ್ರವೀಣ್, ಕುಲ ಸಚಿವ ಪ್ರೊ. ಕೆ ಎಲ್ ಎನ್ ಮೂರ್ತಿ ಡೀನ್ ಅಕಾಡೆಮಿಕ್ ಪ್ರೊ. ಲಕ್ಷ್ಮಿ, ಡೀನ್ ಸ್ಟಡಿ ಸೆಂಟರ್ ಪ್ರೊ. ರಾಮನಾಥನ್ ನಾಯ್ಡು, ಪ್ರಭಾರ ಹಣಕಾಸು ಅಧಿಕಾರಿ ಡಾ. ಬಿ ಎಂ ರಮೇಶ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_218_3.txt b/eesanje/url_46_218_3.txt new file mode 100644 index 0000000000000000000000000000000000000000..581852bc3a6614af912dae78e44f89e94a1b6ff2 --- /dev/null +++ b/eesanje/url_46_218_3.txt @@ -0,0 +1,6 @@ +ಅಗಲಿದ ಕೆ.ಶಿವರಾಮ್‍ಗೆ ಗಣ್ಯರ ಅಶ್ರುತರ್ಪಣ +ಬೆಂಗಳೂರು, ಮಾ.1- ನಿನ್ನೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಚಿತ್ರನಟ ರಾಜಕಾರಣಿ ಕೆ. ಶಿವರಾಮ್ ಅವರ ಅಂತಿಮ ದರ್ಶನಕ್ಕೆ ಅಪಾರ ಅಭಿಮಾನಿ ಬಳಗ ಹರಿದು ಬಂದಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನದ ವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗ, ರಾಜಕೀಯ ಕ್ಷೇತ್ರದ ಗಣ್ಯರು, ಅಧಿಕಾರಿ ವರ್ಗದವರು ಆಗಮಿಸಿ ಶಿವರಾಮ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. +ಸಚಿವರಾದ ಈಶ್ವರ ಖಂಡ್ರೆ, ಪ್ರಿಯಾಂಕ ಖರ್ಗೆ, ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವ ಎಚ್. ಆಂಜನೇಯ, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಧಾನ ಪರಿಷತ್ ಸದಸ್ಯ, ಬಿಜೆಪಿ ಮುಖಂಡ ಛಲವಾದಿ ನಾರಾಯಣ ಸ್ವಾಮಿ, ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ. ಸುರೇಶ್, ನಿರ್ದೇಶಕ ತರುಣ್ ಸುದೀರ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. +ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದ ಕೆ. ಶಿವರಾಮ್ ಅವರು ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಾಮಾಜಿಕ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು. ಎಲ್ಲಾ ಕ್ಷೇತ್ರಗಳಿಂದ ಆಗಮಿಸಿದ್ದ ಗಣ್ಯರು ಅವರಿಗೆ ನಮನ ಸಲ್ಲಿಸಿದರು. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಕೆಂಗೇರಿಯ ಛಲವಾದಿ ಮಹಾಸಭಾ ಆವರಣದಲ್ಲಿ ನಡೆಸಬೇಕೆಂದು ಬೆಂಬಲಿಗರು ಒತ್ತಾಯಿಸಿದ್ದು, ಈ ಕುರಿತು ಸಚಿವ ಎಚ್.ಸಿ. ಮಹದೇವಪ್ಪ ಅವರಿಗೆ ಮನವಿ ಮಾಡಿದ್ದಾರೆ. ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. +ಸರಕಾರದಿಂದ ಅನುಮತಿ ಸಿಕ್ಕರೆ ಕೆಂಗೇರಿಯಲ್ಲಿರುವ ಛಲವಾದಿ ಮಹಾಸಭಾ ಆವರಣದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಲಿದೆ. ಇಲ್ಲದಿದ್ದರೆ ಬಿಡದಿ ಸಮೀಪದ ಶಿವರಾಮ್ ಅವರ ಸ್ವಗ್ರಾಮ ಊರಗಳ್ಳಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆಯೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. +ಶಿವರಾಮ್ ಅವರು ಮೊಟ್ಟಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಿರಿಮೆಗೆ ಪಾತ್ರರಾಗಿದ್ದರು. ಇವರು ಐಎಎಸ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದಲ್ಲದೆ, ಸಿನಿಮಾ ರಂಗದಲ್ಲಿ ನಾಡಿನಾದ್ಯಂತ ಮನೆಮಾತಾಗಿದ್ದರು. ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ನಂತರ ರಾಜಕಾರಣಿ ಆಗಬೇಕೆಂಬ ಹಂಬಲದೊಂದಿಗೆ ಬಿಜೆಪಿ ಪಕ್ಷ ಸೇರಿ ಛಲವಾದಿ ಮಹಾಸಭಾ ಹುಟ್ಟು ಹಾಕಿ ಕೆಳ ಸಮುದಾಯಕ್ಕೆ ಆಸರೆಯಾಗಿದ್ದರು. \ No newline at end of file diff --git a/eesanje/url_46_218_4.txt b/eesanje/url_46_218_4.txt new file mode 100644 index 0000000000000000000000000000000000000000..6e833bdfd749ad604533e00537f85bfac1991961 --- /dev/null +++ b/eesanje/url_46_218_4.txt @@ -0,0 +1,5 @@ +ರೇಪ್ ಅಂಡ್ ಮರ್ಡರ್ ಆರೋಪಿ ಆಟೋ ಚಾಲಕನ ಸೆರೆ +ಬೆಂಗಳೂರು, ಮಾ.1- ನಿರ್ಜನ ಪ್ರದೇಶದ ಕಟ್ಟಡವೊಂದಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿ ಮಹಡಿಯಿಂದ ಕೆಳಗೆ ತಳ್ಳಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಖತರ್ನಾಕ್ ಆಟೋ ಚಾಲಕನನ್ನು ಬಂದಿಸುವಲ್ಲಿ ಸಂಪಂಗಿರಾಮನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ನಿವಾಸಿ, ಆಟೋ ಚಾಲಕ ಮುಬಾರಕ್ (38) ಬಂದಿತ ಆರೋಪಿ. +ಕೆಲ ದಿನಗಳ ಹಿಂದೆ ಸಂಪಂಗಿರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಚ್ ರಸ್ತೆಯಲ್ಲಿನ ನಿವೇಶನದ ಬಹುಮಹಡಿ ಕಟ್ಟಡದ ಕೆಳಗೆ ಬಿದ್ದಿದ್ದ ಯುವತಿಯ ಶವ ಕುರಿತಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿರುತ್ತಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದಾಗಿ ವರದಿ ಬಂದಿರುತ್ತದೆ. ವರದಿಯನ್ನಾಧರಿಸಿ ತನಿಖೆ ಕೈಗೊಂಡ ಪೊಲೀಸರು ಸಿಕ್ಕ ಮಾಹಿತಿ ಮೇರೆಗೆ ಆಟೋ ಚಾಲಕ ಮುಬಾರಕ್‍ನನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸುತ್ತಾರೆ. +ವಿಚಾರಣೆ ಸಂದರ್ಭದಲ್ಲಿ ರಾತ್ರಿ ಪಾಳಿಯಲ್ಲಿ ಆಟೋ ಓಡಿಸುತ್ತಿದ್ದಾಗ ಸಿಟಿ ಮಾರುಕಟ್ಟೆ ಸಮೀಪ ಸಿಕ್ಕ ಯುವತಿಯನ್ನು ಕೆಎಚ್ ರಸ್ತೆಯಲ್ಲಿ ಖಾಲಿ ಬಿದ್ದಿದ್ದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವುದಾಗಿ ಬಾಯಿಬಿಟ್ಟಿದ್ದಾನೆ. ಅತ್ಯಾಚಾರ ಸಂದರ್ಭದಲ್ಲಿ ಯುವತಿ ಕೂಗಿಕೊಂಡು ಈ ವಿಚಾರವನ್ನು ನಮ್ಮ ಪೋಷಕರಿಗೆ ತಿಳಿಸುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮೊದಲನೆ ಮಹಡಿಯಿಂದ ಆಕೆಯನ್ನು ಕೆಳಗೆ ತಳ್ಳಿ ಪರಾರಿಯಾದೆ ಎಂದು ತಿಳಿಸಿದ್ದಾನೆ. +ಆತ ನೀಡಿದ ಮಾಹಿತಿಯನ್ನಾಧರಿಸಿ ಮುಬಾರಕ್‍ನನ್ನು ಬಂದಿಸಿರುವ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೇಪ್ ಅಂಡ್ ಮರ್ಡರ್ ಆಗಿರುವ ಯುವತಿಯ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಆದರೆ ಆಕೆ ಧರಿಸಿದ್ದ ಚೂಡಿದಾರ್ ಸಂಗ್ರಹಿಸಿಡಲಾಗಿದ್ದು, ಆಕೆಯ ಪೋಷಕರ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಸಂಪಂಗಿರಾಮನಗರ ಪೋಲೀಸರು `ಈಸಂಜೆ’ಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_218_5.txt b/eesanje/url_46_218_5.txt new file mode 100644 index 0000000000000000000000000000000000000000..3558760f739525436ab5cbf834062e0b7f392635 --- /dev/null +++ b/eesanje/url_46_218_5.txt @@ -0,0 +1,8 @@ +ವೀಲಿಂಗ್ ಮಾಡಿದರೆ ವಾಹನ ಸೀಜ್, ಡ್ರೈವಿಂಗ್ ಲೈಸೆನ್ಸ್ ರದ್ದು +ಬೆಂಗಳೂರು,ಮಾ.1- ರಸ್ತೆಗಳಲ್ಲಿ ವೀಲಿಂಗ್ ಮಾಡುವವರೇ ಎಚ್ಚರ… ಇನ್ನು ಮುಂದೆ ನೀವು ಎಲ್ಲೆಂದರಲ್ಲಿ ವೀಲಿಂಗ್ ಮಾಡಿದರೆ ಪೊಲೀಸರು ಎಫ್‍ಐಆರ್ ದಾಖಲಿಸಿ ಲೈಸೆನ್ಸ್ ರದ್ದು ಮಾಡುವುದರ ಜೊತೆಗೆ ನಿಮ್ಮ ವಾಹನಗಳನ್ನು ಜಪ್ತಿ ಮಾಡಲಿದ್ದಾರೆ ಇರಲಿ ಎಚ್ಚರ..! ಇತ್ತೀಚೆಗೆ ಜನನಿಬಿಡ ರಸ್ತೆಗಳಲ್ಲಿ ವೀಲಿಂಗ್ ಮಾಡುತ್ತಾ ಬೇರೆ ವಾಹನ ಸವಾರರಿಗೆ ಕಿರಿಕಿರಿ ಉಂಟುಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. +ಫೆಬ್ರವರಿ 21 ರಿಂದ 29ರವರೆಗೆ ನಗರದಲ್ಲಿ ಸಂಚಾರಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 91 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ 91 ಪ್ರಕರಣಗಳ ಪೈಕಿ 74 ವಾಹನಗಳನ್ನು ಜಪ್ತಿ ಮಾಡಿ 59 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ 24 ಮಂದಿ ಅಪ್ರಾಪ್ತರಾಗಿರುವುದು ವಿಶೇಷವಾಗಿದೆ. ವೀಲಿಂಗ್ ಮಾಡುತ್ತಿದ್ದ ಅಪ್ರಾಪ್ತರ 23 ಪೋಷಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದು 18 ಮಂದಿಯ ಲೈಸೆನ್ಸ್‍ಗಳನ್ನು ಅಮಾನತುಪಡಿಸಲಾಗಿದೆ. ಇದರ ಜೊತೆಗೆ 38 ವಾಹನಗಳ ಆರ್‍ಸಿ ರದ್ದಿಗೆ ಆರ್‍ಟಿಒ ಕಚೇರಿಗೆ ರವಾನಿಸಲಾಗಿದೆ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಮಹದೇವಪುರದಲ್ಲೂ ಕಾರ್ಯಾಚರಣೆ:ಫೆಬ್ರವರಿ 29 ರಂದು ಮಹದೇವಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆ ಸಂದರ್ಭದಲ್ಲಿ ಬಿ ನಾರಾಯಣಪುರ ಹೊರವರ್ತುಲ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿ ಸವಾರನ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಕುಲ್ದೀಪ್‍ಕುಮಾರ್ ಆರ್.ಜೈನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ದಂಡ ಪಾವತಿಗೂ ಬಂತು ಕ್ಯೂಆರ್ ಕೋಡ್ +ಬೆಂಗಳೂರು, ಮಾ.1- ಇಂದಿನಿಂದ ಸಂಚಾರ ನಿಯಮ ಉಲ್ಲಂಘನೆ ವಾಹನಗಳ ಮಾಲೀಕರಿಗೆ ಕಳುಹಿಸುವ 133 ನೊಟೀಸ್‍ನ ಬಲಭಾಗದಲ್ಲಿ ಕ್ಯೂಆರ್ ಕೋಡ್‍ಗಳನ್ನು ಕಳುಹಿಸಲಾಗುತ್ತದೆ. ನಗರ ಸಂಚಾರ ವಿಭಾಗದಲ್ಲಿ ಸಂಪರ್ಕ ರಹಿತ ನಿಯಮ ಜಾರಿಯಡಿ ದಾಖಲು ಮಾಡುವ ನಿಯಮ ಉಲ್ಲಂಘನಾ ಪ್ರಕರಣಗಳಿಗೆ ಆಟೋಮೇಷನ್ ಸೆಂಟರ್ ವಿಭಾಗದಿಂದ ನಿಯಮ ಉಲ್ಲಂಘನೆ ಮಾಡುವ ವಾಹನ ಮಾಲೀಕರಿಗೆ ಮೋಟಾರು ವಾಹನ ಕಾಯ್ದೆಯಡಿ ನೊಟೀಸ್‍ಗಳನ್ನು ಮುದ್ರಿಸಿ ಅಂಚೆ ಮುಖಾಂತರ ಕಳಿಸಲಾಗುತ್ತದೆ. +ಈ ಕ್ಯೂಆರ್ ಕೋಡ್ ಮುಖಾಂತರ ನಿಯಮ ಉಲ್ಲಂಘನೆಯ ವಿಧ, ಸ್ಥಳ, ದಿನಾಂಕ, ಸಮಯ ಹಾಗೂ ದಂಡದ ಮೊತ್ತದ ವಿವರಗಳ ಜೊತೆಗೆ ಬಹುಮುಖ್ಯವಾಗಿ ಸಾಕ್ಷ್ಯಾಧಾರಿತ ಛಾಯಾಚಿತ್ರವನ್ನು ಸಹ ವೀಕ್ಷಿಸಬಹುದಾಗಿದೆ.ಉಲ್ಲಂಘನೆಯ ದಂಡದ ಮೊತ್ತವನ್ನು ಆನ್‍ಲೈನ್‍ನಲ್ಲಿ ಪಾವತಿಸಲು ಸಾರ್ವಜನಿಕರಿಗೆ ಅನುವು ಮಾಡಿಕೊಡಲು ಅದೇ ಕ್ಯೂಆರ್ ಕೋಡ್‍ನಲ್ಲಿ ಪಾವತಿಯ ಲಿಂಕ್‍ನ್ನು ಸಹ ಒದಗಿಸಲಾಗಿರುತ್ತದೆ. +ನಿಯಮ ಉಲ್ಲಂಘನೆಗಳಿಗೆ ಸಂಬಂಧಪಟ್ಟ ಯಾವುದೇ ದೂರು, ವಿವಾದಗಳಿದ್ದಲ್ಲಿ .. ಲಾಗಿನ್ ಆಗುವ ಮೂಲಕ ಅಥವಾ ಕೆಎಸ್‍ಪಿ ಆ್ಯಪ್‍ನ್ನು ಪ್ಲೇಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಉಲ್ಲಂಘನೆ ವಿವರಗಳನ್ನು ವೀಕ್ಷಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅಥವಾ ದಂಡ ಪಾವತಿಸಬಹುದಾಗಿದೆ.2021ರ ನಂತರದ ನಿಯಮ ಉಲ್ಲಂಘನೆಗಳಿಗೆ ಮಾತ್ರ ಸಾಕ್ಷ್ಯಾಧಾರಿತ ಛಾಯಾಚಿತ್ರಗಳು ಅದರಲ್ಲಿ ಲಭ್ಯವಿರುತ್ತದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_218_6.txt b/eesanje/url_46_218_6.txt new file mode 100644 index 0000000000000000000000000000000000000000..0c06f45a58646cac687e52ce060b8a4aea93285d --- /dev/null +++ b/eesanje/url_46_218_6.txt @@ -0,0 +1,8 @@ +ಪಾಕ್ ಪರ ಘೋಷಣೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಸರ್ಕಾರದ ನಡೆ +ಬೆಂಗಳೂರು,ಮಾ.1- ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸರ್ಕಾರದ ನಿಧಾನಗತಿಯ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದ್ದು, ಚುನಾವಣಾ ಸಂದರ್ಭದಲ್ಲಿ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಘಟನೆ ನಡೆದು 36 ಗಂಟೆಗಳು ಕಳೆದರೂ ಈವರೆಗೂ ಯಾರನ್ನೂ ಬಂಧಿಸದೇ ಇರುವುದು ಪ್ರಶ್ನಾರ್ಹವಾಗಿದೆ. 12 ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ತನಿಖೆಯಲ್ಲಿ ಸತ್ಯಾಂಶ ಪತ್ತೆಯಾಗಿದ್ದರೆ ಸರ್ಕಾರ ಅದನ್ನಾದರೂ ಧೈರ್ಯವಾಗಿ ಪ್ರಕಟಿಸದೆ ಮೀನಾಮೇಷ ಎಣಿಸುತ್ತಿರುವುದು ಅಚ್ಚರಿ ಮೂಡಿಸಿದೆ. +ವಿಧಾನಸೌಧದಲ್ಲಿ ನಡೆದ ಘಟನೆಯಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಲಾಗಿದೆಯೇ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ದೃಶ್ಯಾವಳಿಗಳನ್ನು ಎಫ್‍ಎಸ್‍ಎಲ್‍ಗೆ ರವಾನಿಸಲಾಗಿತ್ತು. ಅದರಲ್ಲಿ ಕೆಲವು ವಿಡಿಯೋಗಳ ಎಫ್‍ಎಸ್‍ಎಲ್ ವರದಿ ಬಂದಿದೆಯಾದರೂ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತಷ್ಟು ವಿಡಿಯೋಗಳು ಹಾಗೂ ಧ್ವನಿ ಮಾದರಿಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಲಾಗುತ್ತಿದೆ. +ಬಿರುಸುಗೊಂಡ ರಾಜಕೀಯ ವಾಗ್ವಾದ:ರಾಜ್ಯ ಸರ್ಕಾರದ ನಿಧಾನಗತಿಯ ಧೋರಣೆಯನ್ನೇ ಆಧಾರವಾಗಿಟ್ಟುಕೊಂಡು ಬಿಜೆಪಿ ಹೆಜ್ಜೆ ಹೆಜ್ಜೆಗೂ ಕಾಂಗ್ರೆಸ್ ಸರ್ಕಾರ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ಟೀಕೆ ಮಾಡುತ್ತಿದೆ. ಭಯೋತ್ಪಾದಕರು ವಿಧಾನಸೌಧದ ಆವರಣಕ್ಕೇ ಬರಲು ಬಿಡಲಾಗಿದೆ. ಇದೇ ರೀತಿ ಮುಂದುವರೆದರೆ ದೇಶದ ಭದ್ರತೆಗೆ ಅಪಾಯ ಬಂದೊದಗಲಿದೆ ಎಂದು ಸಾರ್ವಜನಿಕವಾಗಿ ವ್ಯಾಪಕ ಪ್ರಚಾರ ಮಾಡುತ್ತಿದೆ. ಬಿಜೆಪಿಯ ಟೀಕೆಗಳಿಗೆ ಕಾಂಗ್ರೆಸ್‍ನ ಪ್ರತಿಕ್ರಿಯೆಗಳು ನೀರಸವಾಗಿವೆ. ತನ್ನ ಹಳೆಯ ಸಾಂಪ್ರದಾಯಿಕ ಶೈಲಿಯಲ್ಲಿ ಕಾಂಗ್ರೆಸ್, ನಾವು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ದೇಶದ ಪ್ರೇಮದ ಬಗ್ಗೆ ನಮಗೆ ಪಾಠ ಕಲಿಸಬೇಕಿಲ್ಲ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಕೂಗಿದ್ದೇ ನಿಜವಾಗಿದ್ದರೆ, ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದೆಲ್ಲಾ ಸಮರ್ಥನೆ ಗಳನ್ನು ನೀಡುತ್ತಿದೆ. +ಸಚಿವರು, ಮುಖ್ಯಮಂತ್ರಿ ಹೇಳಿಕೆಗಳು ಬಿಜೆಪಿಯ ಆಕ್ರಮಣಕಾರಿ ವಾಗ್ದಾಳಿಗಳ ಮುಂದೆ ಸಪ್ಪೆ ಎನಿಸಲಾರಂಭಿಸಿವೆ. ಜನಮಾನಸದಲ್ಲಿ ಕಾಂಗ್ರೆಸ್ ಸರ್ಕಾರದ ನಡಾವಳಿಯ ಮೇಲೆ ಅನುಮಾನಗಳು ಗಟ್ಟಿಗೊಳ್ಳುತ್ತಿವೆ. ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ವ್ಯವಸ್ಥಿತ ವಾಗಿ ಮುಚ್ಚಿ ಹಾಕುತ್ತಿದೆ ಎಂದು ಬಿಜೆಪಿ ಈಗಾಗಲೇ ಜನರನ್ನು ನಂಬಿಸಿದೆ. ಒಂದು ವೇಳೆ ಪ್ರಕರಣದ ನೈಜತೆ ಹೊರಬಂದರೂ ಕೂಡ ಜನ ಅದನ್ನು ಅನುಮಾನದ ದೃಷ್ಟಿಯಿಂದಲೇ ನೋಡುವಂತಾಗಿದೆ. +ಎಫ್‍ಎಸ್‍ಎಲ್ ವರದಿಯಲ್ಲಿ ಈ ರೀತಿ ಘಟನೆ ನಡೆದಿಲ್ಲ ಎಂದು ವರದಿ ಬಂದರೆ ಅದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತಷ್ಟು ವಾಗ್ದಾಳಿಗೆ ಇಳಿಯುವ ಸಾಧ್ಯತೆಯಿದೆ. ಪ್ರಕರಣ ನಡೆದು 36 ಘಂಟೆ ಕಳೆದರೂ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೆ ಹಂತಹಂತವಾಗಿ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ.ಪ್ರಯೋಗಾಲಯ ಸೇರಿದಂತೆ ಎಲ್ಲಾ ಹಂತ ದಲ್ಲೂ ಪ್ರಭಾವ ಬಳಸಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿ ಕೊಳ್ಳಲಾಗಿದೆ ಎಂಬ ಆರೋಪಗಳು ಬಿಜೆಪಿಯಿಂದ ತೂರಿಬರುವ ಸಾಧ್ಯತೆಯಿದೆ.ಸೂಕ್ಷ್ಮವಾಗಿರುವ ಇಂತಹ ಬಹಳಷ್ಟು ಪ್ರಕರಣಗಳಲ್ಲಿ ಮೊದಲು ಆರೋಪಿಗಳನ್ನು ಬಂಧಿಸಿ ಅನಂತರ ವಿಚಾರಣೆ ನಡೆಸುವುದು ಕಂಡುಬರುತ್ತದೆ. ಆದರೆ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದರೆ ಅಮಾಯಕರ ವಿರುದ್ಧ ಕ್ರಮ ಕೈಗೊಂಡಂತಾಗುತ್ತದೆ ಎಂಬ ಧೋರಣೆಯನ್ನು ಸರ್ಕಾರ ಅನುಸರಿಸುತ್ತಿದೆ. ಇದು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಬಿಜೆಪಿ ಟೀಕಿಸುತ್ತಿದೆ. +ಸೈದ್ಧಾಂತಿಕ ರಾಜಕೀಯ ಕುರಿತಂತೆ ಜನಸಾಮಾನ್ಯ ರಲ್ಲಿ ಈಗಾಗಲೇ ಸ್ಪಷ್ಟ ವಿಭಜನೆ ಕಂಡುಬಂದಿದೆ. ಕಾಂಗ್ರೆಸ್ ಬೆಂಬಲಿತ ಸೈದ್ಧಾಂತಿಕ ನಿಲುವನ್ನು ಹೊಂದಿರುವವರು ಬಿಜೆಪಿಯ ಧೋರಣೆಗಳನ್ನು ಟೀಕಿಸುವುದು ಒಂದೆಡೆಯಾದರೆ, ಬಿಜೆಪಿ ಮತ್ತು ಅದರ ಬೆಂಬಲಿತ ಸಿದ್ಧಾಂತದ ಅನುಯಾಯಿಗಳು ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿದೆ ಎಂದು ನಂಬುವಂತಹ ವಾತಾವರಣ ನಿರ್ಮಾಣವಾಗುತ್ತಿದೆ.ಸೈದ್ಧಾಂತಿಕ ತಟಸ್ಥತೆ ಹೊಂದಿರುವವರಿಗೆ ರಾಜ್ಯಸರ್ಕಾರದ ನಡವಳಿಕೆಗಳು ಗೊಂದಲ ಮೂಡಿಸುತ್ತಿದ್ದು, ಉದ್ದೇಶಪೂರ್ವಕವಾಗಿಯೇ ಸರ್ಕಾರ ತನಿಖೆಯನ್ನು ವಿಳಂಬ ಮಾಡು ತ್ತಿದೆಯೇ? ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿ ದೆಯೇ ಎಂಬ ಅನುಮಾನ ಕಾಡಲಾರಂಭಿಸಿದೆ. +ವಿಧಾನಮಂಡಲದ ಅವೇಶನ ನಡೆಯುತ್ತಿ ದ್ದರೂ ಸರ್ಕಾರ ಘಟನೆಗೆ ಸ್ಪಷ್ಟತೆಯ ತಾರ್ಕಿಕ ಅಂತ್ಯ ನೀಡುವಲ್ಲಿ ವೈಫಲ್ಯ ಅನುಭವಿಸಿದೆ. ದಿನೇದಿನೇ ಇದೇ ಘಟನೆಯನ್ನು ಆಧಾರ ವಾಗಿಟ್ಟುಕೊಂಡು ಹಿಂದಿನ ಹಲವು ಪ್ರಕರಣಗಳನ್ನು ಜೊತೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ವಿರುದ್ಧ ವ್ಯಾಪಕ ಟೀಕೆಗಳು ಕಂಡುಬರುತ್ತಿವೆ. ಎಫ್‍ಎಸ್‍ಎಲ್ ಈವರೆಗೂ ನೀಡಿರುವ ವರದಿಯನ್ನು ಬಹಿರಂಗಪಡಿಸಲೂ ಕೂಡ ಸರ್ಕಾರ ಹಿಂದೇಟು ಹಾಕುತ್ತಿರುವುದು ಮತ್ತಷ್ಟು ಅನುಮಾನಗಳಿಗೆ ಪುಷ್ಟಿ ನೀಡಿದಂತಾಗಿದೆ. \ No newline at end of file diff --git a/eesanje/url_46_218_7.txt b/eesanje/url_46_218_7.txt new file mode 100644 index 0000000000000000000000000000000000000000..5ece141baca5d7d8ac85e2ef0797e972c000d520 --- /dev/null +++ b/eesanje/url_46_218_7.txt @@ -0,0 +1,9 @@ +ಪಾಕ್ ಜಿಂದಾಬಾದ್ ಘೋಷಣೆಕಾರರಿಗೆ ಸರ್ಕಾರದ ಬೆಂಬಲ: ಶ್ರೀನಿವಾಸ್ ಪೂಜಾರಿ ಆರೋಪ +ಬೆಂಗಳೂರು, ಮಾ.1- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ದುಷ್ಕರ್ಮಿಗಳನ್ನು ರಾಜ್ಯ ಸರ್ಕಾರವೇ ರಕ್ಷಣೆ ಮಾಡಲು ಮುಂದಾಗಿದೆ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕರಣ ನಡೆದು ಮೂರು ದಿನಗಳಾದರೂ ಸರ್ಕಾರ ಇದುವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಸುಳ್ಳು ಕಾರಣಗಳನ್ನು ಕೊಟ್ಟು ಆರೋಪಿಗಳನ್ನು ರಕ್ಷಣೆ ಮಾಡಲು ಮುಂದಾಗಿರುವುದು ಅತ್ಯಂತ ದುರದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಅಲ್ಲೂ ಇಲ್ಲೋ ಪಾಕಿಸ್ತಾನದ ಪರ ಘೋಷಣೆಗಳು ಕೇಳಿ ಬರುತ್ತಿದ್ದವು ಆದರೆ ವಿಧಾನಸೌಧದ ಆವರಣದಲ್ಲೇ ಪಾಕ್ ಪರ ಕೂಗಿರುವುದು ನೋವಿನ ಸಂಗತಿ ಅಂದರೆ, ಕೆಂಗಲ್ ಹನುಮಂತಯ್ಯ ಕಟ್ಟಿದ ವಿಧಾನಸೌಧದಲ್ಲಿ ಘೋಷಣೆ ಮೊಳಗಿದೆ ಎಂದರು. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ ರುವ ನಾಸೀರ್ ಹುಸೇನ್ ಎಂಬುವವರು ಘಟನೆಯನ್ನು ಇಷ್ಟಾದರೂ ಖಂಡಿಸುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ ಪೂಜಾರಿ, ನಿನ್ನೆ ನಾವು ರಾಜ್ಯಪಾಲರನ್ನು ಭೇಟಿಯಾಗಿದ್ದೇವೆ. ಅವರು ನ್ಯಾಯ ಕೊಡಿಸುವ ಭರವಸೆ ಕೊಡಿಸುತ್ತೇನೆ ಎಂದಿದ್ದಾರೆ. ಅದು ನಮಗೆ ತೃಪ್ತಿ ತಂದಿದೆ ಎಂದು ಹೇಳಿದರು. +ಅನ್ನಭಾಗ್ಯ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಕೇಂದ್ರ ಸರ್ಕಾರ ಪ್ರತಿ ತಿಂಗಳು 22 ಲಕ್ಷ ಕ್ವಿಂಟಾಲ್ ಅಕ್ಕಿ ಕಳುಹಿಸುತ್ತಿದೆ. ಆದರೆ, ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಜನರಿಗೆ ಸುಳ್ಳು ಹೇಳಿದ್ದಾರೆ. ಕೇಂದ್ರ ಸರ್ಕಾರ ಕೊಡುವ ಅಕ್ಕಿಯಿಂದಲೇ ಕಾಂಗ್ರೆಸ್ ಅನ್ನಭಾಗ್ಯ ಕಾರ್ಯಕ್ರಮ ಮಾಡಿದೆ ಎಂದರು. +ಬಿಜೆಪಿ ಸಂವಿಧಾನ ವಿರೋಧಿ ಎನ್ನುತ್ತಾರೆ. ಮೊನ್ನೆ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಸಂವಿಧಾನದ ಸಭೆ ನಡೆಸಿದ್ದಾರೆ. ನಿತಾಶ ಕೌಲ್ ಎಂಬವರನ್ನು ವಿದೇಶದಿಂದ ಕರೆಸಿ ಭಾಷಣ ಮಾಡಿಸಲು ಮುಂದಾಗಿದ್ದರು. ಸಂವಿಧಾನಕ್ಕೆ ಮೋಸ ಮಾಡಿದವರು ಯಾರಾದರೂ ಇದ್ದರೇ, ಅದು ಕಾಂಗ್ರೆಸ್‍ನವರು ಮಾತ್ರ ಎಂದರು. +ಬ್ರಿಟಿಷ್ ಬರಹಗಾರ್ತಿಯಾಗಿರುವ ನಿತಾಶಾ ಕೌಲ್ ಭಾರತದ ವಿರುದ್ಧ ಅಜೆಂಡಾ ಹೊಂದಿದ್ದಾರೆ ಎಂಬ ಆರೋಪವಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಂವಿಧಾನ ಜಾಗೃತಿ ಸಭೆಗೆ ಭಾಷಣ ಮಾಡಲು ಕಾಂಗ್ರೆಸ್ ಸರ್ಕಾರ ನಿತಾಶ ಕೌಲ್ ಅವರಿಗೆ ಆಹ್ವಾನ ನೀಡಿತ್ತು. ಇದನ್ನು ವಿಹೆಚ್‍ಪಿ ವಿರೋದಿಸಿತ್ತು. ಅಲ್ಲದೆ, ಸಂಘಟನೆಯ ನಾಯಕ ಗಿರೀಶ್ ಭಾರದ್ವಾಜ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಒಸಿಐ ಕಾರ್ಡ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. +ನಮ್ಮ ದೇಶದ ಹಿತಾಸಕ್ತಿಗಳಿಗೆ ವಿರುದ್ಧವಾದ ದುರುದ್ದೇಶಪೂರಿತ ಅಜೆಂಡಾದೊಂದಿಗೆ ಅವರು ಆಗಾಗ್ಗೆ ಭಾರತಕ್ಕೆ ಭೇಟಿ ನೀಡುತ್ತಾರೆ. ಭಾರತದಲ್ಲಿನ ಯಾವುದೇ ಕಾರ್ಯಕ್ರಮಗಳಿಗೆ ಡಾ ಕೌಲ್ ಅವರನ್ನು ಅತಿಥಿಯಾಗಿ ಆಹ್ವಾನಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದು ಭಾರದ್ವಾಜ್ ಪತ್ರದಲ್ಲಿ ತಿಳಿಸಿದ್ದರು. ಬೇಸರದಲ್ಲಿ ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಸರ್ಕಾರದಲ್ಲಿ 500 ಮೀ ರಸ್ತೆ ಹಾಕಲು ದುಡ್ಡಿಲ್ಲ. ಶಾಸಕರು ಗೆದ್ದವರು ಬೇಸರದಲ್ಲಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸಗಳು ಆಗಿಲ್ಲ. ಇಡೀ ಸದನದಲ್ಲಿ ಸುಳ್ಳು ಹೇಳಲು ಸರ್ಕಾರ ಬಳಕೆ ಮಾಡಿಕೊಂಡಿದೆ ಎಂದು ಕೋಟಿ ಹೇಳಿದರು. +ಕಾಂತರಾಜು ವರದಿಯೋ? ಡಾ. ಹೆಗ್ಡೆ ವರದಿಯೋ?ಕಾಂತರಾಜು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕಾರ ಮಾಡಿದ್ದಾರೆ. ಆದರೆ, ಇದು ಕಾಂತರಾಜು ವರದಿಯೋ ಅಥವಾ ಡಾ ಹೆಗ್ಡೆ ವರದಿಯೋ ಎನ್ನುವುದನ್ನು ಮೊದಲು ಹೇಳಬೇಕು. ಈ ಹಿಂದೆ ದ್ವಾರಕಾನಾಥ್ ವರದಿ ಕೊಟ್ಟಾಗ ಸರ್ಕಾರಕ್ಕೆ ಸಲ್ಲಿಸುವುದರ ಜತೆಗೆ ವರದಿ ಬಹಿರಂಗ ಮಾಡಿದ್ದರು. ಈಗ ಸಿಎಂ ಸಿದ್ದರಾಮಯ್ಯ ಸಹ ವರದಿಯನ್ನು ಬಹಿರಂಗಪಡಿಸದಂತೆ ಹೇಳಿದ್ದಾರೆ ಎಂದು ತಿಳಿಸಿದರು. +ಸಿಎಂ ಅವರು ರಾಜಕೀಯ ಮಾಡುತ್ತಾ ಇದ್ದಾರೆ ಅಷ್ಟೇ. ಅತ್ತ ದಾವಣಗೆರೆ ಹಾಗೂ ಕನಕಪುರದಿಂದ ಸಿಡಿಲುಗುಡುಗು ಬಂದಿದೆ. ಶಾಮನೂರು ಶಿವಶಂಕರಪ್ಪ ಹಾಗೂ ಡಿ.ಕೆ.ಶಿವಕುಮಾರ್ ಭಯದಿಂದ ಸಿಎಂ ವರದಿ ಮುಚ್ಚಿಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ವರದಿ ಬಹಿರಂಗಪಡಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು. \ No newline at end of file diff --git a/eesanje/url_46_218_8.txt b/eesanje/url_46_218_8.txt new file mode 100644 index 0000000000000000000000000000000000000000..20abf8c4d1f2513faeef150225f93c2ae4fdb004 --- /dev/null +++ b/eesanje/url_46_218_8.txt @@ -0,0 +1,9 @@ +ಹಿಂದುಳಿದ ವರ್ಗಗಳ ಆಯೋಗದ ವರದಿಗೆ ಒಕ್ಕಲಿಗರ ಹೋರಾಟ ಸಮಿತಿ ವಿರೋಧ +ಬೆಂಗಳೂರು,ಮಾ.1- ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ರಾಜ್ಯ ಒಕ್ಕಲಿಗರ ಹೋರಾಟ ಸಮಿತಿ ವಿರೋಧಿಸಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಗಾ.ನಂ.ಶ್ರೀಕಂಠಯ್ಯ, ನಮ್ಮ ಸಮಾಜದ ಮಠಾೀಧಿಶರು, ಸಚಿವರು, ಶಾಸಕರು, ಸಂಸದರು, ಸಮಾಜದ ಹಿರಿಯರು ಸಭೆ ಸೇರಿ ಚರ್ಚಿಸಿ ಮುಂದಿನ ಹೋರಾಟದ ರೂಪು ರೇಷೆಗಳನ್ನ ನಿರ್ಧರಿಸಲಾಗುವುದು ಎಂದು ಹೇಳಿದರು. +ಸಂಪೂರ್ಣ ವರದಿಯನ್ನು ಪಡೆದು ಕಾಂತರಾಜು ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮನೆಮನೆ ಸರ್ವೆ ಮಾಡಿ ಮಾಹಿತಿ ಪಡೆದಿಲ್ಲ ಎಂಬ ಆರೋಪವಿದ್ದು, ಆ ವರದಿ ಸ್ವೀಕರಿಸಿದಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂದರು. ನಮ್ಮ ಸಮಾಜದ ಮಠಾೀಧಿಶರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳು, ಮಾಜಿ ಉಪಮುಖ್ಯಮಂತ್ರಿಗಳು, ಸಂಸದರು, ಸಚಿವರು, ಶಾಸಕರು ಹಾಗೂ ಸಮಾಜದ ಹಿರಿಯರು ಸಹಿ ಮಾಡಿದ್ದ ಮನವಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅವೈಜ್ಞಾನಿಕ ವರದಿ ಸ್ವೀಕರಿಸದಂತೆ ಕೋರಲಾಗಿತ್ತು ಎಂದು ಅವರು ಹೇಳಿದರು. +ಕಳೆದ 2014-15 ನೇ ಸಾಲಿನಲ್ಲಿ ಸಂಗ್ರಹಿಸಲಾದ ದತ್ತಾಂಶದ ಮಾಹಿತಿ ವರದಿಯಲ್ಲಿದೆ ಎಂದು ತಿಳಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಪ್ರಕಾರ ಪ್ರತಿ 10 ವರ್ಷಕ್ಕೊಮ್ಮೆ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಬೇಕಾಗಿದೆ. ಈ ವರದಿಗೆ ದತ್ತಾಂಶ ಸಂಗ್ರಹಿಸಿ ಸುಮಾರು 10 ವರ್ಷವಾಗಿರುವುದರಿಂದ ವರದಿಯನ್ನು ತಿರಸ್ಕರಿಸುವಂತೆ ಮನವಿ ಮಾಡಲಾಗಿತ್ತು ಎಂದು ಅವರು ತಿಳಿಸಿದರು. +ಒಕ್ಕಲಿಗ ಸಮಾಜದ ಎಲ್ಲಾ ಉಪಪಂಗಡಗಳನ್ನು ಒಟ್ಟಿಗೆ ಸೇರಿಸಿ ವರದಿ ನೀಡಬೇಕೆಂದು ಮಾಡಿದ್ದ ಮನವಿಯನ್ನು ಆಯೋಗ ಪರಿಗಣಿಸಿಲ್ಲ. ಜಾತಿ ಜನಗತಣತಿಯನ್ನು ಮಾಡಲಾಗಿದೆ ಎನ್ನಲಾಗಿದೆ ಎಂದರು. ರಾಜ್ಯದ ಜನಸಂಖ್ಯೆ 7 ಕೋಟಿ 20 ಲಕ್ಷವಿದ್ದು, ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ 5 ಕೋಟಿ 98 ಲಕ್ಷ ಮಾತ್ರ ಇತ್ತು. ಉಳಿದ 1 ಕೋಟಿ 22 ಲಕ್ಷ ಜನಸಂಖ್ಯೆಯ ಸಮೀಕ್ಷೆ ಮಾಡಿಲ್ಲ ಎಂದು ಅವರು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ, ಸಂಚಾಲಕರಾದ ಟಿ.ವೆಂಕಟೇಶ್, ಶಿವಲಿಂಗೇಗೌಡ, ರಾಮಚಂದ್ರ ಕೆ.ಆರ್. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. +ಸಾಮಾಜಿಕ, ಶೈಕ್ಷಣಿಕ ವರದಿ ಬಹಿರಂಗಗೊಳಿಸದಿರಲು ಒಕ್ಕಲಿಗರ ಸಂಘ ಆಗ್ರಹಬೆಂಗಳೂರು,ಮಾ.1- ಅವೈಜ್ಞಾನಿಕವಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗಗೊಳಿಸಿ ಅನುಷ್ಠಾನಕ್ಕೆ ಮುಂದಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ತಿಳಿಸಿದರು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ 2015ರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ನಿನ್ನೆ ಸಲ್ಲಿಕೆಯಾಗಿದೆ. ಆ ವರದಿಯನ್ನು ಸ್ವೀಕಾರ ಮಾಡಿರುವುದು ಸರಿಯಲ್ಲ. ಆ ವರದಿಯನ್ನು ಬಹಿರಂಗಗೊಳಿಸುವುದು ಹಾಗೂ ಅನುಷ್ಠಾನಗೊಳಿಸಲು ಸರ್ಕಾರ ಮುಂದಾದರೆ ಕಾನೂನು ಪ್ರಕಾರ ಹೋರಾಟಕ್ಕೂ ಮುಂದಾಗುತ್ತೇವೆ ಎಂದರು. +ಅವೈಜ್ಞಾನಿಕವಾಗಿದೆ ಎಂಬ ಆರೋಪಕ್ಕೆ ಒಳಗಾಗಿರುವ ಸಮೀಕ್ಷಾ ವರದಿಯ ಬಗ್ಗೆ ಸಂಘ ತೀವ್ರ ವಿರೋಧ ವ್ಯಕ್ತಪಡಿಸಲಿದೆ. ಒಂದು ವೇಳೆ ಅನುಷ್ಠಾನಕ್ಕೆ ಮುಂದಾದರೆ ನಮ್ಮ ಸಮುದಾಯದ ಮಠಾೀಧಿಶರು, ಉಪಮುಖಮಂತ್ರಿಗಳು, ಸಚಿವರು, ವಿವಿಧ ಸಂಘಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧಾರ ಮಾಡುತ್ತೇವೆ ಎಂದು ಅವರು ತಿಳಿಸಿದರು. +ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ಅವಧಿಯಲ್ಲಿ ಸಿದ್ದಪಡಿಸಲಾದ ಸಾಮಾಜಿಕ, ಶೈಕ್ಷಣಿಕ ವರದಿಯು ಅವೈಜ್ಞಾನಿಕವಾಗಿದೆ ಎಂಬ ಆರೋಪವಿತ್ತು. ಅಲ್ಲದೆ 8 ವರ್ಷಗಳಷ್ಟು ಹಳೆಯ ದತ್ತಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಆ ವರದಿಯನ್ನು ಸ್ವೀಕರಿಸಬಾರದು ಮತ್ತು ಅನುಷ್ಠಾನಕ್ಕೆ ತರಬಾರದು ಎಂದು ಸಂಘ ಆಗ್ರಹಿಸಿತ್ತು. ಆದರೂ ಮುಖ್ಯಮಂತ್ರಿಯವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆ ಅವರಿಂದ ವರದಿ ಸ್ವೀಕಾರ ಮಾಡಿದ್ದಾರೆ. +ಒಂದು ವೇಳೆ ಸಮೀಕ್ಷಾ ವರದಿ ಅಗತ್ಯವಿದ್ದರೆ ಹೊಸದಾಗಿ ವೈಜ್ಞಾನಿಕ ರೀತಿಯಲ್ಲಿ ಸಮೀಕ್ಷೆ ನಡೆಸಬೇಕೆಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು. ಆದರೂ ಅವೈಜ್ಞಾನಿಕವಾಗಿದೆ ಎಂಬ ಆರೋಪ ಇರುವ ವರದಿಯನ್ನು ಸ್ವೀಕರಿಸಲಾಗಿದೆ. ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನೋಡಿ ಸಂಘ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_218_9.txt b/eesanje/url_46_218_9.txt new file mode 100644 index 0000000000000000000000000000000000000000..7e151413c78904ff5143b8a93d180e6ea6ea4181 --- /dev/null +++ b/eesanje/url_46_218_9.txt @@ -0,0 +1,8 @@ +ಜಾತಿ ಜ್ವಾಲೆ : ಸರ್ಕಾರಕ್ಕೆ ಶ್ಯಾಮನೂರು ಶಿವಶಂಕರಪ್ಪ ಗಂಭೀರ ಎಚ್ಚರಿಕೆ +ಬೆಂಗಳೂರು,ಮಾ.1- ಒಂಬತ್ತು ವರ್ಷಗಳಷ್ಟು ಹಳೆಯದಾದ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ತಿರಸ್ಕರಿಸಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ. ಒಂದು ವೇಳೆ ಸರ್ಕಾರ ಅದನ್ನು ಅಂಗೀಕರಿಸಲು ಮುಂದಾದರೆ ನಾವು ಸುಮ್ಮನೇ ಕೂರುವುದಿಲ್ಲ. ಏನು ಮಾಡಬೇಕು ಎಂಬ ನಿರ್ಧಾರ ಮಾಡುತ್ತೇವೆ ಎಂದು ಆಡಳಿತ ಪಕ್ಷವಾಗಿರುವ ಕಾಂಗ್ರೆಸ್‍ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಗಂಭೀರ ಎಚ್ಚರಿಕೆ ನೀಡಿದ್ದಾರೆ. +ನಗರದಲ್ಲಿಂದು ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗ್ಡೆ ನಿನ್ನೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅದರಲ್ಲಿ ಲಿಂಗಾಯತ-ವೀರಶೈವ, ಒಕ್ಕಲಿಗರು, ಬ್ರಾಹ್ಮಣರು ಸೇರಿ 1.82 ಲಕ್ಷ ಜನಸಂಖ್ಯೆ ಹೊಂದಿದ್ದಾರೆ ಎಂದು ತಿಳಿಸಲಾಗಿದೆ. ಉಳಿದವರು 3 ಕೋಟಿ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಲಿಂಗಾಯತ-ವೀರಶೈವ ಸಮುದಾಯದ ಉಪಜಾತಿಗಳನ್ನು ಒಳಗೊಂಡು ಒಟ್ಟು ಜನಸಂಖ್ಯೆ 2 ಕೋಟಿಗೂ ಹೆಚ್ಚಿದೆ ಎಂದು ಹೇಳಿದರು. +ಒಂಬತ್ತು ವರ್ಷಗಳಷ್ಟು ಹಳೆಯದಾದ ವರದಿಯನ್ನು ಈಗ ತಂದಿದ್ದಾರೆ. ಸಮೀಕ್ಷೆ ಮಾಡಿದ್ದು ಕಾಂತರಾಜು, ಸರ್ಕಾರಕ್ಕೆ ವರದಿ ನೀಡಿರುವುದು ಹೆಗ್ಡೆಯವರು. ಇದು ಯಾರ ವರದಿ? ಎಂದು ಬಿಜೆಪಿಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿರುವ ಅಭಿಪ್ರಾಯ ಸರಿಯಾಗಿದೆ ಎಂದು ಶ್ಯಾಮನೂರು ಶಿವಶಂಕರಪ್ಪ ಬೆಂಬಲ ವ್ಯಕ್ತಪಡಿಸಿದರು. +ನಮ್ಮ ಸಮುದಾಯದ ಜನಸಂಖ್ಯೆ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಹೀಗಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿ ಅವೈಜ್ಞಾನಿಕ ಎಂದು ನಾವು ಸ್ಪಷ್ಟವಾಗಿ ಹೇಳುತ್ತಿದ್ದೇವೆ. ಒಂದು ವೇಳೆ ಸರ್ಕಾರ ನಮ್ಮ ಮಾತನ್ನು ಪರಿಗಣಿಸದೇ ಇದ್ದರೆ ನಾವು ಸುಮ್ಮನೇ ಕೂರುವುದಿಲ್ಲ. ಅಗತ್ಯ ಕ್ರಮ ಕೈಗೊಂಡು ವರದಿ ಅವೈಜ್ಞಾನಿಕ ಎಂಬುದನ್ನು ಸಾಬೀತುಪಡಿಸುತ್ತೇವೆ ಎಂದು ಸವಾಲು ಹಾಕಿದರು. ಸಮುದಾಯದಿಂದ ಖಾಸಗಿಯಾಗಿ ಸಮೀಕ್ಷೆ ನಡೆಸಬೇಕೆಂಬ ಚಿಂತನೆ ಇದೆ. ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ. ವೈಜ್ಞಾನಿಕವಾಗಿ ಮತ್ತೊಮ್ಮೆ ಸಮೀಕ್ಷೆ ನಡೆಸುವುದಾದರೆ ಒಪ್ಪಿಕೊಳ್ಳುತ್ತೇವೆ ಎಂದರು. +ವರದಿಯನ್ನು ಸ್ವೀಕರಿಸಿರುವುದು ತಪ್ಪು ಎಂದು ನಾನು ಹೇಳುವುದಿಲ್ಲ. ಅದನ್ನು ಸಂಪುಟದಲ್ಲೂ ಚರ್ಚಿಸಬೇಕಾಗುತ್ತದೆ. ಆದರೆ ಅನುಷ್ಠಾನಕ್ಕೆ ಮುಂದಾದರೆ ವಿರೋಧ ವ್ಯಕ್ತಪಡಿಸುತ್ತೇನೆ. ದಲಿತರ ಸಂಖ್ಯೆ ಹೆಚ್ಚಿದೆ ಎಂದು ವರದಿಯಲ್ಲಿ ನಮೂದಿಸಿರುವುದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ಆದರೆ ನಮ್ಮ ಸಮುದಾಯ ಕಡಿಮೆ ಇದೆ ಎಂದು ಹೇಳುತ್ತಿರುವುದನ್ನು ಒಪ್ಪುವುದಿಲ್ಲ. ಅವರು ಹೇಳುತ್ತಿರುವುದಕ್ಕಿಂತಲೂ ನಮ್ಮ ಸಂಖ್ಯೆ ದ್ವಿಗುಣವಾಗಿದೆ. ಸಮೀಕ್ಷೆಯ ಪುನರ್ ಪರಿಶೀಲನಾ ಸಮಿತಿ ರಚಿಸುವಂತೆಯೂ ಸರ್ಕಾರವನ್ನು ಆಗ್ರಹಿಸುತ್ತೇವೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಿಲ್ಲ ಎಂದು ಒಂದು ಹಂತದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಶ್ಯಾಮನೂರು ಶಿವಶಂಕರಪ್ಪ, ವರದಿಯ ವಿರುದ್ಧ ಪ್ರತಿಭಟನೆ ನಡೆಸುತ್ತೀರಾ ಎಂಬ ಪ್ರಶ್ನೆಗೆ, ಯಾಕೆ ಜೈಲಿಗೆ ಹೋಗಬೇಕಾ ಎಂದು ಮರು ಪ್ರಶ್ನಿಸಿದರು. ಈ ಹಿಂದೆ ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮದ ವಿಚಾರವಾಗಿ ವಿವಾದಕ್ಕೀಡಾಗಿ ಕಾಂಗ್ರೆಸ್ ಪೆಟ್ಟು ತಿಂದಿದೆ. ಈಗ ಜಾತಿ ಸಮೀಕ್ಷಾ ವರದಿಯಿಂದ ಮತ್ತಷ್ಟು ಸಮಸ್ಯೆ ಎದುರಿಸಲಿದೆಯೇ ಎಂಬ ಪ್ರಶ್ನೆಗೆ, ನಕ್ಕು ಮೌನಕ್ಕೆ ಶರಣಾದರು. ಪದೇಪದೇ ಪ್ರಶ್ನೆಗಳು ಎದುರಾದಾಗ ಸದ್ಯಕ್ಕೆ ನಾನು ಈ ಪ್ರಶ್ನೆಗೆ ಉತ್ತರ ಹೇಳುವುದಿಲ್ಲ ಎಂದು ಜಾರಿಕೊಂಡರು. +ಆಯೋಗದ ವರದಿಯನ್ನು ಬಹಿರಂಗಗೊಳಿಸುವ ಮೂಲಕ ಜಾತಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಗಳಿವೆ. ಜಾತಿಜಾತಿಗಳನ್ನು ಛೂ ಬಿಡುತ್ತಾರೆ ಎಂದು ಶ್ಯಾಮನೂರು ಶಿವಶಂಕರಪ್ಪ ತಮ್ಮದೇ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಉದ್ದೇಶಪೂರ್ವಕವಾಗಿಯೇ ಜಾತಿ ಜನಗಣತಿಯ ವರದಿಯನ್ನು ಕೆಣಕಲಾಗಿದೆ ಎಂದು ಆಕ್ಷೇಪಿಸಿದರು. ದಾವಣಗೆರೆ ಲೋಕಸಭಾ ಚುನಾವಣೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದು ನಿಮ್ಮ ಅಭಿಪ್ರಾಯ ಎಂದಾಗ ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ ಅವರನ್ನು ಕೇಳಿ ಎಂದು ತಮ್ಮ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್‍ರತ್ತ ಬೊಟ್ಟು ಮಾಡಿದರು. \ No newline at end of file diff --git a/eesanje/url_46_219_1.txt b/eesanje/url_46_219_1.txt new file mode 100644 index 0000000000000000000000000000000000000000..821c7a1603de173d80f6f5e4aa121eb74e306b43 --- /dev/null +++ b/eesanje/url_46_219_1.txt @@ -0,0 +1,8 @@ +ಎಫ್‍ಎಸ್‍ಎಲ್ ವರದಿ ಸರ್ಕಾರದ ಕೈ ಸೇರಿಲ್ಲ : ಜಿ.ಪರಮೇಶ್ವರ್ +ಬೆಂಗಳೂರು,ಮಾ.1- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ ಎಫ್‍ಎಸ್‍ಎಲ್ ವರದಿ ಸರ್ಕಾರದ ಕೈ ಸೇರಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ವರದಿ ಬರುವುದು ಬಾಕಿ ಇದೆ. ಒಂದು ಚಾನೆಲ್‍ನಲ್ಲಿ ಪ್ರಸಾರವಾದ ದೃಶ್ಯ ಅಥವಾ ಒಂದು ಕ್ಲಿಪ್ಪಿಂಗ್‍ಗೆ ಸಂಬಂಧಿಸಿದಂತೆ ತನಿಖೆ ಸೀಮಿತವಾಗುವುದಿಲ್ಲ. ಇರುವ ಎಲ್ಲಾ ದೃಶ್ಯಗಳನ್ನೂ ಪಡೆದುಕೊಂಡು ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ. ಆದಷ್ಟು ಬೇಗ ವರದಿ ನೀಡುವಂತೆ ಪ್ರಯೋಗಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಅದರ ಪ್ರಕಾರ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. +ಈಗಾಗಲೇ 7 ಜನರನ್ನು ಕರೆಸಿ, ಹೇಳಿಕೆ ಪಡೆದು, ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದೇವೆ. ಪ್ರಯೋಗಾಲಯದ ವರದಿ ಬಂದ ಬಳಿಕ ಧ್ವನಿ ಮಾದರಿಗಳನ್ನು ಹೋಲಿಕೆ ಮಾಡಲಾಗುತ್ತದೆ. ಶಂಕೆ ಇರುವವರ ಧ್ವನಿ ಮಾದರಿಗಳನ್ನೂ ಸಂಗ್ರಹಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು. +ಸಂಪುಟ ಸಭೆಯಲ್ಲಿ ತೀರ್ಮಾನ :ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ವರದಿಗೆ ಸಂಬಂಧಿಸಿದಂತೆ ಸಂಪುಟ ತೆಗೆದುಕೊಳ್ಳುವ ನಿರ್ಧಾರದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಯವರು ನಿನ್ನೆಯ ಸಭೆಯಲ್ಲಿ ತಿಳಿಸಿದ್ದಾರೆ.ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ನಿನ್ನೆ ವರದಿ ನೀಡಿದೆ. ಅದರ ಕುರಿತು ನಿನ್ನೆ ಸಂಪುಟದಲ್ಲಿ ಔಪಚಾರಿಕ ಚರ್ಚೆ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಸವಿಸ್ತಾರವಾದ ಚರ್ಚೆ ನಡೆಸಲಾಗುವುದು. +ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಬೇಕೇ ಅಥವಾ ಸರ್ಕಾರವೇ ನೇರವಾಗಿಯೇ ವರದಿಯನ್ನು ಬಹಿರಂಗ ಪಡಿಸಬೇಕೇ ಎಂಬುದನ್ನು ಸಂಪುಟ ನಿರ್ಧರಿಸಬೇಕಾಗುತ್ತದೆ. ಎಲ್ಲಾ ಸಚಿವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು. +ದತ್ತಾಂಶ ಹಾಗೂ ಶಿಫಾರಸುಗಳು ಅಧಿಕೃತವಾಗಿ ಹೊರಗೆ ಬರುವವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ. ಸದ್ಯಕ್ಕೆ ಏನೇ ಚರ್ಚೆಗಳಾದರೂ ಅದು ವದಂತಿ ಮಾತ್ರ. ಆ ಜಾತಿ ಜನಸಂಖ್ಯೆ ಜಾಸ್ತಿ ಇದೆ, ಈ ಜಾತಿ ಜನಸಂಖ್ಯೆ ಜಾಸ್ತಿ ಇದೆ ಎಂಬ ಕುರಿತು ಚರ್ಚೆಗಳು ನಡೆಯುತ್ತಿವೆ. ವರದಿ ತೆರೆದು ನೋಡಿದ ಬಳಿಕವಷ್ಟೇ ಸತ್ಯಾಂಶ ಗೊತ್ತಾಗಲಿದೆ ಎಂದರು. +ಕಾಂಗ್ರೆಸ್‍ನ ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಸೇರಿದಂತೆ ಹಲವರಿಗೆ ನಮ್ಮ ಸಮುದಾಯದ ಸಂಖ್ಯೆ ಕಡಿಮೆ ಇದೆ ಎಂಬ ಆತಂಕ ಇರುವಂತಿದೆ. ಒಂದು ವೇಳೆ ಜನಸಂಖ್ಯೆ ಕಡಿಮೆ ಎಂದಾದರೆ ರಾಜಕೀಯವಾಗಿ ತೊಂದರೆಯಾಗಬಹುದು ಎಂಬ ಅನುಮಾನಗಳೂ ಇವೆ. ಆದರೆ ವರದಿ ಬಹಿರಂಗಗೊಂಡ ನಂತರ ಅದಕ್ಕೆ ಅಕೃತ ಉತ್ತರ ದೊರೆಯಲಿದೆ. ಆವರೆಗೂ ನನ್ನನ್ನೂ ಸೇರಿದಂತೆ ಹಲವರು ವದಂತಿಗಳನ್ನು ಸೃಷ್ಟಿಸುತ್ತಲೇ ಇರುತ್ತಾರೆ ಎಂದು ತಿಳಿಸಿದರು. +ನಿನ್ನೆ ಸರ್ಕಾರ ಸ್ವೀಕರಿಸಿರುವ ವರದಿ ಕಾಂತರಾಜು ಅಥವಾ ಜಯಪ್ರಕಾಶ್ ಹೆಗ್ಡೆ ಅವರ ವರದಿಯೆಂದಾಗುವುದಿಲ್ಲ. ಅದು ಹಿಂದುಳಿದ ವರ್ಗಗಳ ಆಯೋಗದ ವರದಿ ಮಾತ್ರ ಎಂದು ಸ್ಪಷ್ಟಪಡಿಸಿದರು.ನಿನ್ನೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಅಂತ್ಯಕ್ರಿಯೆಗೆ ಛಲವಾದಿ ಮಹಾಸಭಾದ ಜಾಗದಲ್ಲಿ ಸ್ಥಳಾವಕಾಶ ನೀಡಬೇಕು ಎಂಬ ಬೇಡಿಕೆಯಿದೆ. ನಾನೂ ಈ ಕುರಿತು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿದ್ದೇನೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_219_10.txt b/eesanje/url_46_219_10.txt new file mode 100644 index 0000000000000000000000000000000000000000..d36f68744eefa6c8739c7763db99da661b6d36c1 --- /dev/null +++ b/eesanje/url_46_219_10.txt @@ -0,0 +1,8 @@ +ಸಿಎಂ ಭೇಟಿ ಮಾಡಿದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆ +ಬೆಂಗಳೂರು,ಫೆ.29- ಕಳೆದ 8 ವರ್ಷಗಳ ಹಗ್ಗಜಗ್ಗಾಟದ ಬಳಿಕ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಕೊನೆಗೂ ಸ್ವೀಕರಿಸಿದೆ. ಹಲವು ಪ್ರಬಲ ಸಮುದಾಯಗಳ ತೀವ್ರ ವಿರೋಧದ ನಡುವೆಯೂ ಲೋಕಸಭೆ ಚುನಾವಣೆ ಹಂತದಲ್ಲೇ ವರದಿ ಸ್ವೀಕರಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಸವಾಲಿನ ಸನ್ನಿವೇಶಕ್ಕೆ ಮುಖಾಮುಖಿಯಾಗಿದೆ. +2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ನೇತೃತ್ವದಲ್ಲಿ 162 ಕೋಟಿ ರೂ. ವೆಚ್ಚ ಮಾಡಿ ಮನೆಮನೆಗೆ ತೆರಳಿ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಿತ್ತು. ಅದರಲ್ಲಿ ಸುಮಾರು 70 ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಮಾಹಿತಿಯನ್ನು ಕಲೆ ಹಾಕಲಾಗಿತ್ತು.ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಆಡುಮಾತಿನಲ್ಲಿ ಜಾತಿಜನಗಣತಿ ಎಂದು ಪ್ರಚಲಿತವಾಗಿತ್ತು. +ಸಿದ್ದರಾಮಯ್ಯನವರ ಸರ್ಕಾರದ ಕೊನೆಯ ಅವಧಿಯಲ್ಲಿ ವರದಿ ಸಿದ್ಧವಾಗಿದ್ದರೂ ಅದನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ನಂತರ ನೀತಿ ಸಂಹಿತೆ ಎದುರಾಗಿತ್ತು. ಅತಂತ್ರ ವಿಧಾನಸಭೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಅವರ ಒಂದು ವರ್ಷ ಏಳು ತಿಂಗಳ ಅವಧಿಯಲ್ಲಿ ವರದಿ ಸ್ವೀಕಾರಗೊಳ್ಳಲಿಲ್ಲ. +ನಂತರ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಜೈಪ್ರಕಾಶ್ ಹೆಗ್ಡೆ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದರು. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೂ ವರದಿ ಸಲ್ಲಿಕೆಯಾಗಲಿಲ್ಲ.ವಿಧಾನಸಭೆ ಚುನಾವಣೆ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ವರದಿಯನ್ನು ಸ್ವೀಕರಿಸುವುದಾಗಿ ಹೇಳುತ್ತಿತ್ತು. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರ ಅಕಾರವ ಡಿಸೆಂಬರ್ಗೆ ಮುಕ್ತಾಯಗೊಂಡರೂ ಕೂಡ 2 ಬಾರಿ ಅಕಾರ ಅವ ವಿಸ್ತರಣೆ ಮಾಡಲಾಗಿತ್ತು. ಇಂದಿಗೆ ಆ ಅವ ಮುಕ್ತಾಯಗೊಳ್ಳುತ್ತಿರುವುದರಿಂದ ವರದಿ ಸಲ್ಲಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ ಜಯಪ್ರಕಾಶ್ ಹೆಗ್ಡೆ ಮುಚ್ಚಿದ ಲಕೋಟೆಯಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. +ಮೂಲಗಳ ಪ್ರಕಾರ ಕಾಂತರಾಜು ವರದಿಯ ದತ್ತಾಂಶಗಳನ್ನು ಆಧಾರವಾಗಿಟ್ಟುಕೊಂಡು ಜಯಪ್ರಕಾಶ್ ಹೆಗ್ಡೆ ಪ್ರತ್ಯೇಕ ವರದಿ ಸಿದ್ಧಪಡಿಸಿದ್ದಾರೆ. ಪ್ರಬಲ ಸಮುದಾಯಗಳು ತಮ್ಮ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂದು ವಿರೋಧ ವ್ಯಕ್ತಪಡಿಸುತ್ತಿದ್ದವು. ಒಕ್ಕಲಿಗ ಸಮುದಾಯ ವರದಿಯನ್ನು ಸ್ವೀಕರಿಸಬಾರದು. ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿತ್ತು. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿ ಸೇರಿದಂತೆ ಶಾಸಕ ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಸಹಿ ಹಾಕಿದ್ದರು. +ವೀರಶೈವ ಸಮುದಾಯವು ವರದಿಯನ್ನು ವಿರೋಸಿ ಕಾಂಗ್ರೆಸ್ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಮನವಿ ನೀಡಿತ್ತು. ವರದಿಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವ ಬದಲಾಗಿ ವೀರಶೈವ ಲಿಂಗಾಯತ ಸಮುದಾಯದ ಉಪಪಂಗಡಗಳನ್ನು ಏಕೀಕೃತ ನಮೂನೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕೆಂಬ ಮನವಿ ಮಾಡಲಾಗಿತ್ತು.ಜಯಪ್ರಕಾಶ್ ಹೆಗ್ಡೆ ಆಯೋಗ ಸಕಾರಾತ್ಮಕವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ. +ಕಾಂತರಾಜು ಆಯೋಗದ ಶಿಫಾರಸ್ಸಿನ ಮೂಲಪ್ರತಿ ನಾಪತ್ತೆಯಾಗಿದೆ ಎಂಬ ದೂರುಗಳಿವೆ. ಜಯಪ್ರಕಾಶ್ ಹೆಗ್ಡೆ ಸಮೀಕ್ಷೆಯ ದತ್ತಾಂಶಗಳನ್ನೇ ಆಧಾರವಾಗಿಟ್ಟುಕೊಂಡು ಮೀಸಲಾತಿ ಪರಿಷ್ಕರಣೆ, ಸರ್ಕಾರಿ ಸೌಲಭ್ಯಗಳ ಹಂಚಿಕೆ ಸೇರಿದಂತೆ ಹಲವು ವಿಚಾರಗಳಲ್ಲಿ ಗಮನಾರ್ಹವಾದ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗಿದೆ. ಆಯೋಗದ ವರದಿ ಇಂದು ಸಂಜೆ ನಡೆಯುವ ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_219_11.txt b/eesanje/url_46_219_11.txt new file mode 100644 index 0000000000000000000000000000000000000000..dc3322bf85ce44f0e8d28fd73ec71c7908c65248 --- /dev/null +++ b/eesanje/url_46_219_11.txt @@ -0,0 +1,9 @@ +ಸಿಎಂ ಬಜೆಟ್ ಉತ್ತರದ ವೇಳೆ ವಿಪಕ್ಷ ಧರಣಿ, ಸಭಾತ್ಯಾಗ +ಬೆಂಗಳೂರು,ಫೆ.29- ವಿಧಾನಸೌಧದಲ್ಲಿ ಪಾಕಿ ಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಸಬೇಕು. ಆ ಘಟನೆಯ ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ನಿನ್ನೆ ವಿಧಾನಸಭೆಯಲ್ಲಿ ನಡೆಸಿದ ಪ್ರತಿಭಟನೆಯನ್ನು ಇಂದು ಮುಂದುವರೆಸಿದ ಬಿಜೆಪಿ ಶಾಸಕರು, ಕಾಗಪತ್ರಗಳನ್ನು ಹರಿದು ತೂರಿ, ಸರ್ಕಾರದ ವಿರುದ್ಧ ಕೆಲಕಾಲ ಘೋಷಣೆ ಕೂಗಿ ಸಭಾತ್ಯಾಗ ಮಾಡಿದರು. +ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಬಿಜೆಪಿಯ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಇಡೀ ಪ್ರಪಂಚವೇ ನಮ್ಮ ಕಡೆ ನೋಡುತ್ತಿದೆ. ಆದರೂ ದೇಶದ್ರೋಹಿಗಳ ಮೇಲೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಯಾರನ್ನೂ ಬಂಧಿಸಿಲ್ಲ. ಸರ್ಕಾರ ಮೌನವಾಗಿದೆ. ಹೀಗಾದರೆ ರಾಜ್ಯದ ಜನತೆಗೆ ಯಾವ ಸಂದೇಶ ರವಾನೆಯಾಗುತ್ತದೆ. ರಕ್ಷಣೆ ಕೊಡಲಿ ಎಂಬ ಉದ್ದೇಶದಿಂದ ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ವಿಧಾನಸೌಧ ಉಗ್ರರ ತಾಣವಾಗಲು ಬಿಡಬೇಕಾ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಈ ವಿಚಾರದ ಬಗ್ಗೆ ನಿನ್ನೆ ಚರ್ಚೆಯಾಗಿದೆ. ಸರ್ಕಾರವು ಉತ್ತರ ಕೊಟ್ಟಿದೆ. ಘಟನೆ ಬಗ್ಗೆ ತನಿಖೆ ಕೈಗೊಂಡಿರುವುದಾಗಿ ಹೇಳಿದೆ. ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. ಧರಣಿ ಕೈಬಿಟ್ಟು ಸುಗಮ ಕಲಾಪಕ್ಕೆ ಸಹಕಾರ ಕೊಡಬೇಕು ಎಂದರು. ಆಗ ಆರ್.ಅಶೋಕ್ ಅವರು, ಕೋಲಾರದಲ್ಲಿ ಈ ಹಿಂದೆ ದಲಿತರನ್ನು ಸುಟ್ಟು ಹಾಕಿದರು. ಆಗ ಗೃಹಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯಲ್ಲಿ ಕಣ್ಣೀರು ಹಾಕಿದರು. ಅದು ಅವರ ಕಳಕಳಿ. ಆದರೆ ಈ ಸರ್ಕಾರಕ್ಕೆ ಯಾವುದೇ ಜವಾಬ್ದಾರಿ ಇಲ್ಲ. ನೈತಿಕ ಹೊಣೆ ಹೊತ್ತಿಲ್ಲ ಎಂದು ಆರೋಪಿಸಿದರು. +ಏಳು ಜನರ ಹೇಳಿಕೆ: ಮಧ್ಯಪ್ರವೇಶಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ ವಿಚಾರದ ಬಗ್ಗೆ ನಿನ್ನೆ ಉತ್ತರ ನೀಡಲಾಗಿದೆ. ಆ ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಕರೆದು ವಿಚಾರ ಮಾಡಿ ಅವರ ಹೇಳಿಕೆ ಪಡೆಯಲಾಗಿದೆ. ತನಿಖೆ ಮುಂದುವರೆದಿದೆ. ಒಂದೊಂದು ಮಾಧ್ಯಮ ಒಂದೊಂದು ರೀತಿ ಹೇಳಿವೆ. ಅದರ ನೈಜ್ಯತೆ ತಾಂತ್ರಿಕವಾಗಿ ತಿಳಿಯಲು ವಿವಿಜ್ಞಾನ ಪ್ರಯೋಗಾಲಯದ ವರದಿ ಕೇಳಲಾಗಿದೆ. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. +ಒಂದು ವೇಳೆ ಆರೋಪಿಸಿದಂತೆ ಪಾಕಿಸ್ತಾನದ ಪರ ಘೋಷಣ ಕೂಗಿದ್ದೇ ಆದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.ಆದರೂ ತೃಪ್ತರಾಗದ ಬಿಜೆಪಿ ಶಾಸಕರು ಧರಣಿ ಮುಂದುವರೆಸಿ ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು. ಆಗ ಮಾತನಾಡಿದ ಸಭಾಧ್ಯಕ್ಷರು, ಬಡವರು ಹಸಿದ ಹೊಟ್ಟೆಯಲ್ಲೇ ಇರಬೇಕೆ. ಜನಸಾಮಾನ್ಯರ ವಿಚಾರಗಳು ಚರ್ಚೆಯಾಗಬೇಕಲ್ಲವೇ ಎಂದು ಹೇಳಿದರು. ಅದಕ್ಕೂ ಕಿವಿಗೊಡದ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. +ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.ಮತ್ತೆ ಮಾತನಾಡಿದ ಅಶೋಕ್, ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಕರೆದು ಮಾತನಾಡಿ ಕಳುಹಿಸಿದ್ದಾರೆ. ಅದರ ಬದಲು ಬಿರಿಯಾನಿ ಕೊಟ್ಟು ಶಾಲು ಹೊದಿಸಿ ಸನ್ಮಾನ ಮಾಡಬೇಕಿತ್ತು ಎಂದು ವ್ಯಂಗ್ಯವಾಡಿದರು. +ಅವರ ಮೇಲೆ ದೇಶದ್ರೋಹದ ಕೇಸ್ ಹಾಕಿಲ್ಲ. ಅವರನ್ನು ಬಂಧಿಸಿಲ್ಲ. ಸರ್ಕಾರಕ್ಕೆ ಯಾವ ನೈತಿಕತೆ ಇದೆ. ದೇಶ ಉಳಿಯಬೇಲ್ಲವೇ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳ ಮನವಿಗೂ ಬಿಜೆಪಿ ಸದಸ್ಯರು ಮಣಿಯದಿದ್ದಾಗ ಸಭಾಧ್ಯಕ್ಷರು ಉತ್ತರ ನೀಡಲು ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಒಂದೆಡೆ ಮುಖ್ಯಮಂತ್ರಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಶಾಸಕರು ಧರಣಿ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಾಗದಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿ ಗದ್ದಲವನ್ನುಂಟು ಮಾಡಿದರು. +ಜೆಡಿಎಸ್ ಸದಸ್ಯರು ಕೂಡ ಧರಣಿಯಲ್ಲಿ ಭಾಗಿಯಾಗಿ ಬಿಜೆಪಿ ಶಾಸಕರ ಪ್ರತಿಭಟನೆಗೆ ಬೆಂಬಲ ನೀಡಿದರು. ಕೆಲಕಾಲ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲವೆಬ್ಬಿಸಿದರು. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಲಿತರಾಗದೆ ಉತ್ತರವನ್ನು ಮುಂದುವರೆಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಜೆಡಿಎಸ್ ಸದಸ್ಯರು ಕೂಡ ಇವರನ್ನು ಹಿಂಬಾಲಿಸಿದರು. \ No newline at end of file diff --git a/eesanje/url_46_219_12.txt b/eesanje/url_46_219_12.txt new file mode 100644 index 0000000000000000000000000000000000000000..7250f36075f3c77aec4a2b462ee78e6a8f07daa3 --- /dev/null +++ b/eesanje/url_46_219_12.txt @@ -0,0 +1,7 @@ +ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು +ಬೆಂಗಳೂರು,ಫೆ.29- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ತಕ್ಷಣವೇ ಸರ್ಕಾರವನ್ನು ವಜಾ ಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಅವರು ಪ್ರವಾಸದಲ್ಲಿದ್ದ ಕಾರಣ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಉಪನಾಯಕರಾದ ಅರವಿಂದ್ ಬೆಲ್ಲದ್, ಸುನೀಲ್ ವಲ್ಯಾಪುರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎರಡೂ ಸದನಗಳ ಶಾಸಕರು ರಾಜ್ಯಪಾಲರ ಕಾರ್ಯದರ್ಶಿಗೆ ದೂರು ನೀಡಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸರ್ಕಾರವನ್ನು ವಜಾ ಮಾಡಿ ಎಂದು ಮನವಿ ನೀಡಿದ್ದೇವೆ. ಕಾಂಗ್ರೆಸ್ ಸರ್ಕಾರದಲ್ಲಿ ಭಯೋತ್ಪಾದನಾ ಚಟುವಟಿಕೆ ಆರಂಭವಾಗಿದೆ. ಗಲಾಟೆ, ಗಲಭೆ ಶುರುವಾಗಿದೆ ಎಂದು ದೂರಿದರು. +ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಿಲ್ಲ. ಮುಖ್ಯಮಂತ್ರಿಗಳೇ ಅವರನ್ನು ಬಿಡಿ ಎಂದಿದ್ದಾರೆ. ಗೃಹಸಚಿವರು ಕೂಡ ವಿಚಾರಣೆ ಮಾಡಿ ಬಿಟ್ಟಿದ್ದೇವೆ ಎಂದಿದ್ದಾರೆ. ಪ್ರಕರಣ ಮುಚ್ಚಿ ಹಾಕಿದ್ದಾರೆ. ಇಂದು ವರದಿ ಕೊಡಬಹುದಿತ್ತು. ಆದರೆ ಅವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ ಎಂದು ಆಕ್ಷೇಪಿಸಿದರು. +ಸರ್ಕಾರ ಎಫ್‍ಎಸ್‍ಎಲ್ ವರದಿಯನ್ನೂ ತಿರುಚುವ ಪ್ರಯತ್ನವನ್ನು ಮಾಡಲಿದೆ. ಪಾಪಿ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಬೇರೆ ಯಾವುದೇ ಸರ್ಕಾರ ಇದಿದ್ದರೆ ಸಿಎಂ ರಾಜೀನಾಮೆ ಕೊಡುತ್ತಿದ್ದರು. ವಿಧಾನಸೌಧವನ್ನು ಸ್ಲೀಪರ್ ಸೆಲ್ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಂಗಲ್ ಹನುಮಂತಯ್ಯ ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹಾಕಿಸಿದ್ದಾರೆ. ಅವರ ಹೇಳಿಕೆಗೆ ವಿರೋಧಿ ನೀತಿ ತಾಳುತ್ತಿದೆ ಈ ಸರ್ಕಾರ ಎಂದು ದೂರಿದರು. +ಮಾಧ್ಯಮದಲ್ಲಿ ಬಂದ ಮೇಲೂ ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಮಾಡಲಾಗುತ್ತಿದೆ. ಈ ಸರ್ಕಾರ ಕಿತ್ತೊಗೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.ನಾವು ಜನರಿಗೆ ಮನವಿ ಮಾಡುತ್ತೇವೆ. ಎಲ್ಲಾ ಘಟನೆ ನೀವು ನೋಡುತ್ತಿದ್ದೀರಿ. ಹಿಂದೂ ವಿರೋ ನೀತಿ ತಾಳಿರುವ ಕಾಂಗ್ರೆಸ್‍ಗೆ ತಕ್ಕ ಪಾಠ ಕಲಿಸಬೇಕೆಂದು ಮನವಿ ಮಾಡಿದರು. ರಾಜ್ಯಸಭಾ ಸದಸ್ಯ ಅಂದರೆ ಏಳುವರೆ ಕೋಟಿ ಜನರ ಪ್ರತಿನಿ. +ಅವರು ಕರೆತಂದಿರುವ 25 ಜನರು ಮುಸ್ಲಿಮರು. ಒಬ್ಬ ಹಿಂದೂವನ್ನೂ ಕರೆತಂದಿಲ್ಲ. ಸೆಕ್ಯುಲರ್ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಕಾ ಕೋಮುವಾದಿ ಸರ್ಕಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಧಾನಿ ಮೋದಿ ಬಗ್ಗೆ, ಬಿಜೆಪಿ ಬಗ್ಗೆ ವಿಷ ತುಂಬುವುದೇ ಕೆಲಸ. ಟಿಪ್ಪು ಸುಲ್ತಾನ್ ಐಡಿಯಾಲಜಿ ಅವರ ತಲೆಯಲ್ಲಿ ಹೊಕ್ಕಿದೆ. ಸಿದ್ದರಾಮಯ್ಯ ಅವರ ತಲೆಯಲ್ಲಿ ಕಾರ್ಕೋಟಕ ವಿಷ ತುಂಬಿದೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_219_2.txt b/eesanje/url_46_219_2.txt new file mode 100644 index 0000000000000000000000000000000000000000..2e0fe8a12b82caf86e437393db4441b14791ed32 --- /dev/null +++ b/eesanje/url_46_219_2.txt @@ -0,0 +1,11 @@ +28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ-ಜೆಡಿಎಸ್‍ನಿಂದ ಚಿಹ್ನೆ ವಿನಿಮಯ ತಂತ್ರ +ಬೆಂಗಳೂರು,ಮಾ.1- ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳನ್ನೂ ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ-ಜೆಡಿಎಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಹೊಸ ರಣತಂತ್ರ ಹೆಣೆಯುತ್ತಿರುವ ಮೈತ್ರಿ ನಾಯಕರು ಚಿಹ್ನೆ ವಿನಿಮಯ ಎಂಬ ಹೊಸ ಸೂತ್ರದ ಮೊರೆ ಹೋಗುತ್ತಿದ್ದಾರೆ. ಅಂದರೆ, ಒಂದು ಪಕ್ಷದ ಅಭ್ಯರ್ಥಿಯನ್ನು ಮತ್ತೊಂದು ಪಕ್ಷದ ಚಿಹ್ನೆಯಡಿ ಕಣಕ್ಕೆ ಇಳಿಸಲು ವರಿಷ್ಠರು ಮುಂದಾಗಿದ್ದಾರೆ. +ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರ ಅಳಿಯ, ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಬೆಂಗಳೂರಿನ ಪ್ರಮುಖ ಕ್ಷೇತ್ರದಲ್ಲಿ ಬಿಜೆಪಿ ಚಿಹ್ನೆಯಡಿ ಕಣಕ್ಕಿಳಿಸಲು ಮೈತ್ರಿ ನಾಯಕರು ಮುಂದಾಗಿದ್ದಾರೆ. ಅದೇ ರೀತಿ, ತುಮಕೂರಿನಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ವಿ.ಸೋಮಣ್ಣ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. +ಇನ್ನು ಚಿಕ್ಕಬಳ್ಳಾಪುರದಲ್ಲಿ ಮಾಜಿ ಆರೋಗ್ಯ ಸಚಿವ, ಬಿಜೆಪಿ ನಾಯಕ ಡಾ.ಕೆ.ಸುಧಾಕರ್ ಅವರು ಜೆಡಿಎಸ್ ಚಿಹ್ನೆಯಡಿ ಸ್ರ್ಪಧಿಸುವ ಸಾಧ್ಯತೆ ಇದೆ. ಮೈಸೂರು – ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜೆಡಿಎಸ್ ನಾಯಕ ಸಾರಾ ಮಹೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮೈತ್ರಿಯಲ್ಲಿ ಹೊಸ ಚಿಂತನೆಯೊಂದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮುನ್ನುಡಿ ಹಾಕುತ್ತಿರುವಂತೆ ಕಾಣುತ್ತಿದೆ. +ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ +ಇದೊಂದು ಹೊಸ ಚಿಂತನೆಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಅಭ್ಯರ್ಥಿಗಳ ಬಗ್ಗೆ ಆತ್ಮೀಯತೆಯ ಪ್ರಜ್ಞಾಯನ್ನು ಬೆಳೆಸುವುದು ಈ ಚಿಂತನೆಯ ಪ್ರಮುಖ ಉದ್ದೇಶ ಆಗಿದೆ. ಗೆಲ್ಲುವುದೇ ಮುಖ್ಯ ಮಾನದಂಡವಾಗಿದ್ದು, ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂದು ಬಿಜೆಪಿಯ ಪ್ರಮುಖರೊಬ್ಬರು ಹೇಳಿದ್ದಾರೆ. +ಎಲ್ಲ ಆಯ್ಕೆಗಳ ಅನ್ವೇಷಣೆ!ಮುಂದಿನ ವಾರ ಅಭ್ಯರ್ಥಿಗಳ ಮೊದಲ ಪಟ್ಟಿಯ ಕುರಿತು ಅಂತಿಮ ಸುತ್ತಿನ ಚರ್ಚೆ ನಡೆಯಲಿದೆ. ಅಲ್ಲಿ ಕ್ಷೇತ್ರಗಳ ಹಂಚಿಕೆ, ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ ಎಂಬ ನಿರೀಕ್ಷೆ ಇದೆ.ಸಾಧ್ಯವಿರುವ ಎಲ್ಲ ಆಯ್ಕೆಗಳನ್ನು ನಾವು ಅನ್ವೇಷಿಸುತ್ತಿದ್ದೇವೆ ಎಂದು ಹೇಳಿರುವುದು ಚಿಹ್ನೆ ವಿನಿಮಯದ ಸಾಧ್ಯತೆಯನ್ನು ತೆರೆದಿಟ್ಟಿದೆ. ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಚಿಂತನೆಯಿದ್ದು, ಅವರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ಅದೇ ರೀತಿ, ಮೈಸೂರಿನಿಂದ ಸಾರಾ ಮಹೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆಯೂ ಮಾತುಕತೆ ನಡೆದಿದೆ. +ಬಿಜೆಪಿ ಮತ್ತು ಜೆಡಿಎಸ್ ಹೃದಯ ತಜ್ಞ ಡಾ ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಬೇಕು ಎಂಬ ಚಿಂತನೆ ಇದೆ. ಆದರೆ ಚುನಾವಣೆಗೆ ಸ್ರ್ಪಧಿಸುವ ಬಗ್ಗೆ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಮಂಜುನಾಥ್ ಹೇಳಿದ್ದಾರೆ. ದೇಶಾದ್ಯಂತ ಜನರು ನಾನು ಸಂಸದನಾಗಬೇಕೆಂದು ಬಯಸಿದ್ದು, ಚುನಾವಣೆಗೆ ಸ್ರ್ಪಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಒಂದು ವೇಳೆ ನಾನು ರಾಜಕೀಯಕ್ಕೆ ಬಂದರೂ ಶುದ್ಧ ರಾಜಕೀಯಕ್ಕಿಂತ ಸೇವಾ ಕೇಂದ್ರಿತ ರಾಜಕೀಯ ಮಾಡುತ್ತೇನೆ ಎಂದು ಮಂಜುನಾಥ್ ಹೇಳಿರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. +ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲೂ ಹಲವು ಸಮಸ್ಯೆಗಳಿವೆ. ಸದ್ಯಕ್ಕೆ ಮಂಜುನಾಥ್ ಅವರ ಹೆಸರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ಆದರೆ, ಅವರು ಅಲ್ಲಿ ಸ್ರ್ಪಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದು, ಮಂಜುನಾಥ್ ಅವರಿಗಾಗಿ ಯಾವ ಕ್ಷೇತ್ರವನ್ನು ಬಿಜೆಪಿ ಮೀಸಲಿಡುತ್ತದೆ ಎಂಬುದನ್ನು ನೋಡಬೇಕಿದೆ. ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಸ್ರ್ಪಧಿಸಲ್ಲ ಎಂದಿರುವುದರಿಂದ ಬೆಂಗಳೂರು ಉತ್ತರದಲ್ಲಿ ಸಿಎನ್ ಮಂಜುನಾಥ್ ಅವರು ಸ್ರ್ಪಧಿಸಬಹುದು ಎನ್ನಲಾಗಿದೆ. +ಇನ್ನು, ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ತುಮಕೂರು ಕ್ಷೇತ್ರದಲ್ಲಿ ಟಿಕೆಟ್ ನೀಡುವ ಪ್ರಸ್ತಾಪಕ್ಕೆ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕ ಎನ್.ಎಸ್.ಶಿವಶಂಕರ ರೆಡ್ಡಿ ಬಿಜೆಪಿ ಕಡೆ ಬರಲು ಮುಂದಾಗಿದ್ದು, ಅಲ್ಲಿ ಮಾಜಿ ಸಚಿವ ಡಾ ಕೆ ಸುಧಾಕರ್‍ಗೆ ಟಿಕೆಟ್ ಕೈತಪ್ಪುವ ಆತಂಕ ಕಾಡುತ್ತಿದೆ. +ಇನ್ನು, ಹೊಸ ಚಿಹ್ನೆ ವಿನಿಮಯ ತಂತ್ರದಡಿ ಅಭ್ಯರ್ಥಿಗಳು ತಮ್ಮ ಮಾತೃಪಕ್ಷವನ್ನು ತೊರೆದು ಬೇರೆ ಪಕ್ಷಕ್ಕೆ ಸೇರಬೇಕಾಗುತ್ತದೆ. ಆದರೆ, ಎಲ್ಲ ಮುಖಂಡರು ಈ ತಂತ್ರದ ಪರವಾಗಿಲ್ಲ. ಕಾರ್ಯಕರ್ತರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಟಿಕೆಟ್‍ಗಾಗಿ ಪಕ್ಷ ಬದಲಾಯಿಸುವುದನ್ನು ತಳಮಟ್ಟದ ಕಾರ್ಯಕರ್ತರು ಒಪ್ಪಲ್ಲ ಅನಿಸುತ್ತೆ. ಪಕ್ಷದ ಹಿತದೃಷ್ಟಿಯಿಂದ ನಮ್ಮ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಬಿಜೆಪಿಯ ಮತ್ತೊಬ್ಬ ನಾಯಕರು ಹೇಳಿದ್ದಾರೆ. \ No newline at end of file diff --git a/eesanje/url_46_219_3.txt b/eesanje/url_46_219_3.txt new file mode 100644 index 0000000000000000000000000000000000000000..55f4dfc7abe1ca6740cc06128508938540a7fb77 --- /dev/null +++ b/eesanje/url_46_219_3.txt @@ -0,0 +1,11 @@ +ಬೆಂಗಳೂರಲ್ಲಿ ಭೀಕರ ಜಲಕ್ಷಾಮದ ಭೀತಿ : ಜಿಲ್ಲಾಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡ ಸಭೆ +ಬೆಂಗಳೂರು,ಮಾ.1- ರಾಜ್ಯದ ಬರ ನಿರ್ವಹಣೆಯಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾಸಿಕ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆಯನ್ನು ಕಡೆಗಣಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವುದಾಗಿ ಎಚ್ಚರಿಸಿದ್ದಾರೆ. +ಪ್ರತಿಯೊಂದು ಜಿಲ್ಲೆಯಲ್ಲೂ ಬರ ಪರಿಸ್ಥಿತಿ, ಬೆಳೆನಷ್ಟ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆ, ಉದ್ಯೋಗ ಸೃಜನೆ ಸೇರಿದಂತೆ ಹಲವು ವಿಚಾರಗಳಲ್ಲಿ ಜಿಲ್ಲಾಡಳಿತಗಳು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಸಚಿವರು ಮಾಹಿತಿ ಪಡೆದುಕೊಂಡರು. ಕೆಲವು ಜಿಲ್ಲೆಗಳು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಮತ್ತಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕು. ಕಲಬುರಗಿ, ರಾಯಚೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಜನ ಗಂಭೀರ ಸಮಸ್ಯೆ ಅನುಭವಿಸುತ್ತಿರುವುದು ವರದಿಯಾಗಿದೆ. ತಾಲ್ಲೂಕು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಇಂತಹ ಸಮಸ್ಯೆಗಳನ್ನು ಮುಂಚಿತವಾಗಿಯೇ ಗುರುತಿಸಿ ಜನರಿಗೆ ನೆರವಾಗಲು ಕ್ರಮ ಕೈಗೊಳ್ಳುವಂತೆ ಸಚಿವರು ತಾಕೀತು ಮಾಡಿದ್ದಾರೆ. +ಫೆ. 28ರವರೆಗಿನ ಮಾಹಿತಿ ಪ್ರಕಾರ, 117 ಗ್ರಾಮಗಳಿಗೆ 181 ಟ್ಯಾಂಕರ್ ಮೂಲಕ ಹಾಗೂ 354 ಗ್ರಾಮಗಳಿಗೆ 419 ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲಾಗುತ್ತಿದೆ. 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್‍ಗಳಿಗೆ 17 ಟ್ಯಾಂಕರ್‍ಗಳ ಮೂಲಕ ಹಾಗೂ 29 ವಾರ್ಡ್‍ಗಳಿಗೆ 17 ಖಾಸಗಿ ಬೋರ್‍ವೆಲ್‍ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ. +ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಒಟ್ಟು 7,412 ಗ್ರಾಮಗಳನ್ನು ಹಾಗೂ 1,115 ವಾರ್ಡ್‍ಗಳನ್ನು ಗುರುತಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಒಟ್ಟು 7108 ಖಾಸಗಿ ಬೋರ್‍ವೆಲ್‍ಗಳನ್ನು ಗುರುತಿಸಲಾಗಿದೆ. +ಪ್ರಸಕ್ತ ಸಾಲಿನ ಪ್ರಕೃತಿ ವಿಕೋಪ ಪರಿಹಾರ ನಿಯಡಿ ರೂ.930.14 ಕೋಟಿ ಹಂಚಿಕೆಯಾಗಿದ್ದು, ಇದರ ಪೈಕಿ ಕೇಂದ್ರದ ಪಾಲು 697.60 ಕೋಟಿ ರೂ. ಹಾಗೂ ರಾಜ್ಯದ ಪಾಲು 232.54 ಕೋಟಿ ರೂ. ಇರುತ್ತದೆ. ಈ ಅನುದಾನದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಅನುದಾನ 885.67 ಕೋಟಿ ರೂ. ಸೇರಿದಂತೆ ಒಟ್ಟು 1810.81 ಕೋಟಿ ರೂ. ಸಂಪೂರ್ಣ ಅನುದಾನವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಸಹಮತ ನೀಡಿದ್ದು, ಈವರೆಗೆ 1602.45 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ. +ಜಿಲ್ಲಾಧಿಕಾರಿಗಳ ಖಾತೆಯಲ್ಲಿ 725.92 ಕೋಟಿ ರೂ. ಹಾಗೂ ತಹಸೀಲ್ದಾರ್ ಖಾತೆಯಲ್ಲಿ 135.40 ಕೋಟಿ ರೂ. ಸೇರಿದಂತೆ ಒಟ್ಟು 861.32 ಕೋಟಿ ರೂ. ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ. +ಬರ ಘೋಷಿತ ತಾಲ್ಲೂಕುಗಳಲ್ಲಿ ಕುಡಿಯುವ ನೀರು ಮತ್ತು ಮೇವು ಒದಗಿಸಲು ಶಾಸಕರ ಅಧ್ಯಕ್ಷತೆಯಲ್ಲಿ 15 ದಿನಗಳಿಗೊಮ್ಮೆ ಟಾಸ್ಕ್‍ಫೋರ್ಸ್ ಸಭೆ ನಡೆಸಲಾಗುತ್ತಿದ್ದು, ಈವರೆಗೆ ತಾಲ್ಲೂಕು ಮಟ್ಟದ 566 ಟಾಸ್ಕ್‍ಫೋರ್ಸ್ ಸಭೆಗಳನ್ನು ನಡೆಸಲಾಗಿದೆ. ಪ್ರಕೃತಿ ವಿಕೋಪ ನಿವಾರಣೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಸಭೆಯನ್ನು 15 ದಿನಗಳಿಗೊಮ್ಮೆ ನಡೆಸಲಾಗುತ್ತಿದ್ದು, ಈವರೆಗೆ 262 ಸಭೆಗಳನ್ನು ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ವಿವರಣೆ ನೀಡಿದ್ದಾರೆ. +ಭೂಮಿ ತಂತ್ರಾಂಶಗಳ ದತ್ತಾಂಶ, ಬೆಳೆ ಸಮೀಕ್ಷೆಯ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಪ್ರಕಾರ 33.25 ಲಕ್ಷ ರೈತರಿಗೆ 631.12 ಕೋಟಿ ರೂ. ಮೊದಲ ಕಂತಿನ ಪರಿಹಾರವನ್ನು ನೇರವಾಗಿ ಖಾತೆಗೆ ವರ್ಗಾಯಿಸಲಾಗಿದೆ ಎಂದು ವಿವರಿಸಿದ್ದಾರೆ. +ಅಂತರರಾಜ್ಯ ಮೇವು ಸಾಗಾಣಿಕೆಯನ್ನು ನಿರ್ಬಂಧಿಸಿ ನವೆಂಬರ್ 22ರಂದೇ ಆದೇಶ ಹೊರಡಿಸಲಾಗಿದೆ. ಮೇವಿನ ಕಿಟ್ ಖರೀದಿಸಲು ಎಸ್‍ಡಿಆರ್‍ಎಫ್ ಅಡಿ ಪಶುಸಂಗೋಪನೆ ಇಲಾಖೆಗೆ 20 ಕೋಟಿ ರೂ. ನೀಡಲಾಗಿದ್ದು, 7.62 ಲಕ್ಷ ಮಿನಿ ಕಿಟ್‍ಗಳನ್ನು ಖರೀದಿಸಲಾಗಿದೆ. ಈ ಕಿಟ್‍ಗಳನ್ನು 4.19 ಲಕ್ಷ ರೈತರಿಗೆ ಉಚಿತವಾಗಿ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 144 ಲಕ್ಷ ಟನ್ ಮೇವು ಲಭ್ಯವಿದ್ದು ಮುಂದಿನ 27 ವಾರಗಳ ಬಳಕೆಗೆ ಸಾಕಾಗುತ್ತದೆ. ಗೋಶಾಲೆ ಹಾಗೂ ಮೇವಿನ ಬ್ಯಾಂಕ್‍ಗಳನ್ನು ಎಸ್‍ಡಿಆರ್‍ಎಫ್‍ಮಾರ್ಗಸೂಚಿಯ ಪ್ರಕಾರ ಅರ್ಹತೆಯಂತೆ ಸ್ಥಾಪಿಸಲು ಡಿ.4 ರಂದು ಸುತ್ತೋಲೆ ಹೊರಡಿಸಲಾಗಿದೆ. +ಟ್ಯಾಂಕರ್ ಹಾಗೂ ಖಾಸಗಿ ಬೋರ್‍ವೆಲ್‍ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಪೂರೈಸಲು ಹಾಗೂ 15 ದಿನಗಳಲ್ಲಿ ಬಿಲ್ ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ. \ No newline at end of file diff --git a/eesanje/url_46_219_4.txt b/eesanje/url_46_219_4.txt new file mode 100644 index 0000000000000000000000000000000000000000..be469d44846c46ab6d14c6e5e8cdaf13f78f7ab4 --- /dev/null +++ b/eesanje/url_46_219_4.txt @@ -0,0 +1,7 @@ +ಕೇಸರಿ ಶಾಲಿಗೆ ತಡೆ : ಮೊತೊಮ್ಮೆ ಸುದ್ದಿಯಾದ ಕಾಂಗ್ರೆಸ್ ಸರ್ಕಾರದ ನಡೆ +ಬೆಂಗಳೂರು,ಮಾ.1- ಪಾಕಿಸ್ತಾನ್ ಜಿಂದಾಬಾದ್ ಎಂಬ ದೇಶದ್ರೋಹಿ ಘೋಷಣೆಯ ಗೊಂದಲಗಳು ಬಗೆಹರಿಯುವ ಮುನ್ನವೇ, ವಿಧಾನಸೌಧಕ್ಕೆ ಕೇಸರಿ ಶಾಲು ತೆಗೆದುಕೊಂಡು ಹೋಗುವುದನ್ನು ತಡೆಯಲಾಗಿತ್ತು ಎಂಬ ಮತ್ತೊಂದು ಮುಜುಗರದ ವಿಚಾರ ಬಯಲಾಗಿದೆ. ಪ್ರತಿಹಂತದಲ್ಲೂ ರಾಜ್ಯಸರ್ಕಾರವನ್ನು ಹಿಂದುತ್ವದ ವಿರೋಧಿ ಎಂದು ಬಿಂಬಿಸಲು ಬಿಜೆಪಿಗೆ ಮೇಲಿಂದ ಮೇಲೆ ಪೂರಕವಾದ ಅಸ್ತ್ರಗಳು ದೊರೆಯುತ್ತಿವೆ. +ನಿನ್ನೆ ಬಿಜೆಪಿ ಸದಸ್ಯರು ವಿಧಾನಮಂಡಲಕ್ಕೆ ಕೇಸರಿ ಶಾಲು ಧರಿಸಿ ಭಾಗವಹಿಸಲು ಮುಂದಾಗಿದ್ದರು. ಇದಕ್ಕಾಗಿ ವಿಧಾನಪರಿಷತ್ ಸದಸ್ಯ ಸಿ.ಕೇಶವ ಪ್ರಸಾದ್ ಕೇಸರಿ ಶಾಲುಗಳ ಪ್ಲಾಸ್ಟಿಕ್ ಚೀಲದೊಂದಿಗೆ ವಿಧಾನಸೌಧ ಪ್ರವೇಶಿಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಸಿಟ್ಟಾದ ಕೇಶವಪ್ರಸಾದ್‍ರವರು ಕೇಸರಿ ಶಾಲು ತಡೆಯಲು ನೀವ್ಯಾರು? ನಿಮಗೆ ಯಾವ ಅಧಿಕಾರ ಇದೆ? ಈ ರೀತಿ ಕೆಲಸ ಮಾಡಲು ಯಾರು ಹೇಳಿದ್ದು ಎಂದು ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. +ತಪಾಸಣಾ ಕಾರ್ಯದಲ್ಲಿ ತೊಡಗಿದ್ದ ಮಹಿಳಾ ಸಬ್‍ಇನ್ಸ್‍ಪೆಕ್ಟರ್ ಒಬ್ಬರು ನಮಗೆ ಹಿರಿಯ ಅಧಿಕಾರಿಗಳಿಂದ ಮೌಖಿಕ ಆದೇಶವಿದೆ. ಕೇಸರಿ ಶಾಲು, ಕೇಸರಿ ಬಟ್ಟೆಗಳನ್ನು ತೆಗೆದುಕೊಂಡು ಹೋಗದಂತೆ ತಡೆಯಿರಿ ಎಂದು ಹೇಳಿದ್ದಾರೆ. ನಾವು ಯಾರನ್ನೂ ಅಗೌರವಿಸಿಲ್ಲ ಅಥವಾ ಅವಮಾನ ಮಾಡಿಲ್ಲ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದರು. +ಮಜಾವಾದಿ@siddaramaiahಸರ್ಕಾರಕ್ಕೆ ಕೇಸರಿ ಶಾಲು, ತಿಲಕ ಕಂಡರೆ ಲುಂಗಿ ಒದ್ದೆಯಾಗುವುದಕ್ಕೆ ವಿಧಾನಸೌಧದ ಒಳಗೆ ಬಿಜೆಪಿಯ ಶಾಸಕರು ಕೇಸರಿ ಶಾಲು ಹಾಕಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಮೌಖಿಕ ಆದೇಶ ಹೊರಡಿಸಿದೆ.ಅಧಿಕೃತವಾಗಿ ಲಿಖಿತ ಆದೇಶ ಹೊರಡಿಸುವುದಕ್ಕೂ ಎದೆಗಾರಿಕೆ ಇಲ್ಲದ ಹೇಡಿ ಸರ್ಕಾರ, ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಅವರ ಮೂಲಕ…../OOMqMd75vF +ಅದೇ ವೇಳೆಗೆ ಅಲ್ಲಿಗೆ ಬಂದ ವಿಧಾನಪರಿಷತ್‍ನ ಹಿರಿಯ ಸದಸ್ಯ ರಘುನಾಥ್ ಮಲ್ಕಾಪುರೆ ಹಾಗೂ ರುದ್ರೇಗೌಡ ಅವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಕಾನೂನು ಮಾಡುವುದು ನಾವು, ಅದರ ಪಾಲನೆ ನಮಗೆ ಗೊತ್ತಿದೆ. ಕೇಸರಿ ಶಾಲು ನಮ್ಮ ಅಸ್ಮಿತೆ. ಅದನ್ನು ತಡೆಯುವಂತೆ ನಿಮಗೆ ಯಾವ ಆದೇಶವಿದೆ ತೋರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +ಒಂದು ಹಂತದಲ್ಲಿ ಯಾರು ಏನು ಮಾಡುತ್ತಾರೋ ನೋಡೋಣ, ನೀವು ಕೇಸರಿ ಶಾಲನ್ನು ಒಳಗೆ ತನ್ನಿ ಎಂದು ರಘುನಾಥ್ ಮಲ್ಕಾಪುರೆ ತಮ್ಮ ಸಹದ್ಯೋಗಿ ಕೇಶವ ಪ್ರಸಾದ್‍ರಿಗೆ ಬೆಂಬಲ ನೀಡಿದ್ದಾರೆ. ಇದರಿಂದ ನಿಸ್ಸಾಹಯಕರಾದ ಪೊಲೀಸರು ಬೇರೆ ದಾರಿ ಕಾಣದೆ ತಟಸ್ಥರಾಗಿ ನಿಲ್ಲುವಂತಾಗಿದೆ. \ No newline at end of file diff --git a/eesanje/url_46_219_5.txt b/eesanje/url_46_219_5.txt new file mode 100644 index 0000000000000000000000000000000000000000..989970a65cb6fce6a7a75f3d272b4c9be5901097 --- /dev/null +++ b/eesanje/url_46_219_5.txt @@ -0,0 +1,5 @@ +ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ +ಬೆಂಗಳೂರು,ಮಾ.1- ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು, 6 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1,224 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿಗೆ 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಸೇರಿ 6.9 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. +ಪರೀಕ್ಷಾ ಕೇಂದ್ರಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಸರ್ಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಸೆಂಟರ್‍ಗಳನ್ನು ಮುಚ್ಚಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಂಡಿದೆ. +ಧಾರ್ಮಿಕ ಸಂಸ್ಥೆಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ +ಇಂದು ಮೊದಲು ಮಾತೃಭಾಷೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಪರೀಕ್ಷೆ ನಡೆಯಲಿದೆ. ಮಾರ್ಚ್ 22 ರವರೆಗೂ ಪಿಯುಸಿ ಪರೀಕ್ಷೆಗಳು ನಡೆಯಲಿವೆ. \ No newline at end of file diff --git a/eesanje/url_46_219_6.txt b/eesanje/url_46_219_6.txt new file mode 100644 index 0000000000000000000000000000000000000000..c26e1de36bcc74f5331b2b3f8ae0e59798e278c9 --- /dev/null +++ b/eesanje/url_46_219_6.txt @@ -0,0 +1,8 @@ +ನಿವೃತ್ತ ಐಎಎಸ್ ಆಧಿಕಾರಿ, ನಟ ಕೆ.ಶಿವರಾಮ್ ಇನ್ನಿಲ್ಲ +ಬೆಂಗಳೂರು, ಫೆ.29- ಕೆಲ ದಿನಗಳಿಂದ ಆಸ್ಪತ್ರೆ ಸೇರಿದ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ, ನಟ, ರಾಜಕಾರಣಿ ಕೆ.ಶಿವರಾಮ್ ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ನೆನ್ನೆ ಹೃದಯಾಘಾತದಿಂದ ಇಹಲೋಕ ತೆಜಿಸಿದ್ದಾರೆ. +ಮೊಟ್ಟ ಮೊದಲ ಬಾರಿಗೆ ಕನ್ನಡ ದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಹಿರಿಮೆಗೆ ಪಾತ್ರರಾಗಿದ್ದ ಶಿವರಾಮ್ ಅವರಿಗೆ ಕಳೆದ 6 ದಿನಗಳ ಹಿಂದೆ ರಕ್ತದ ಒತ್ತಡ ದಲ್ಲಿ ಏರಿಳಿತವಾಗಿ ಹೃದಯಾಘಾತದವಾಗಿತ್ತು.ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿತ್ತು. ಇವರು ಚಿಕಿತ್ಸೆಗೆ ಸ್ಪಂದಿಸದೆ ಮತ್ತೊಮ್ಮೆ ಹೃದಯಾಘಾತವಾಗಿ ಇಹಲೋಹ ತ್ಯಜಿಸಿದ್ದಾರೆ. +ಇವರು ಐಎಎಸ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದಷ್ಟೇ ಅಲ್ಲದೆ ಸಿನಿಮಾ ರಂಗದಲ್ಲೂ ನಾಡಿನ ಮನೆ ಮಾತಾಗಿದ್ದವರು. ಅವರು ಅಭಿನಯಿಸಿದ ಬಾ ನಲ್ಲೆ ಮಧು ಚಂದ್ರಿಕೆ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಹೆಸರು ತಂದು ಕೊಟ್ಟಿತ್ತು. ನಂತರ ಅನೇಕ ಪಾತ್ರೆಗಳ ಮೂಲಕ ಜನರ ಹತ್ತಿರವಾಗಿದ್ದರು +ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿಯಾದ ನಂತರ. ರಾಜಕಾರಣಿ ಆಗಬೇಕೆಂಬ ಹಂಬಲದೊಂದಿಗೆ ಬಿಜೆಪಿ ಪಕ್ಷ ಸೇರಿಕೊಂಡರು . ಛಲವಾದಿ ಮಹಾಸಭಾವನ್ನು ಹುಟ್ಟು ಹಾಕಿ ಕೆಳ ಸಮುದಾಯಕ್ಕೆ ಆಸರೆಯಾದರು. ಲೋಕಸಭೆ ಗೆ ಸ್ಪರ್ಧಿಸಿದ್ದರು. ಮೊದಲ ಪ್ರಯತ್ನದಲ್ಲಿ ಸೋಲು ಕಂಡಿದ್ದರು. +ಈ ಬಾರಿ ಬಿಜೆಪಿಯಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ತಯಾರಿ ಮಾಡಿಕೊಂಡಿದ್ದರು. ಸುಮಾರು ಮೂರ್ನಾಲ್ಕು ತಿಂಗಳಿಂದ ಪ್ರವಾಸ ಮಾಡಿ ಬಳಲಿದ್ದರು. ವಾರದ ಹಿಂದೆ ಹೃದಯಾಘಾತವಾಗಿ ಆಸ್ಪತ್ರೆ ಸೇರಿದ್ದರು. ಅವರನ್ನು ಬದುಕಿಸುವ ಎಲ್ಲಾ ಪ್ರಯತ್ನ ವಿಫಕವಾಗಿ ಇಹಲೋಕ ತ್ಯಜಿಸಿದ್ದಾರೆ. +ಬೆಳಗ್ಗೆ 9 ಗಂಟೆಯಿಂದ ಮದ್ಯಾಹ್ನ 3 ಗಂಟೆಯ ತನಕ ರವೀಂದ್ರ ಕಲಾಕ್ಷೇತ್ರದಲ್ಲಿ ಕೆ. ಶಿವರಾಮ್ ಅವರ ಪಾರ್ಥೀವ ಶರೀರವನ್ನು ಅಂತಿ‌ಮ ದರ್ಶನಕ್ಕೆ ಇಡಲಾಗುವುದು ಎಂದು ಅವರ ಅಳಿಯ ಹಾಗು ನಟ ಪ್ರದೀಪ್ ತಿಳಿಸಿದ್ಸಾರೆ.ಸಿನಿಮಾ ,ರಾಜಕಾರಣ ಮತ್ತು ಆಡಳಿತ ಕ್ಷೇತ್ರದಲ್ಲಿ ಅವರ ಸ್ನೇಹಿತರು, ಒಡನಾಡಿಗಳು ಮತ್ತು ಅಭಿಮಾನಿಗಳಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಿದ ನಂತರ ಸಂಜೆ ಎಲ್ಲಿ ಅಂತ್ಯಕ್ರಿಯೆ ನಡೆಸಯವ ಬಗ್ಗೆ ನಿರ್ದಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. +ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೆನ್ನೆ ಆಸ್ಪತ್ರೆಗೆ ಹೋಗಿ ಸಂತಾಪ ಸೂಚಿಸಿದ್ದರು. ಇವರ ಅಕಾಲಿಕ ಆಗಲಿ ನಾಡಿನ ಸಿರಿಗಣ್ಯರು ಮತ್ತು ರಾಜಕಾರಣಿಗಳು ಕಂಬನಿ ಮಿಡಿದಿದ್ದಾರೆ \ No newline at end of file diff --git a/eesanje/url_46_219_7.txt b/eesanje/url_46_219_7.txt new file mode 100644 index 0000000000000000000000000000000000000000..1ec808d2339041ac80d2092a9f18caa3c55861a7 --- /dev/null +++ b/eesanje/url_46_219_7.txt @@ -0,0 +1,5 @@ +ಧಾರ್ಮಿಕ ಸಂಸ್ಥೆಗಳ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ +ಬೆಂಗಳೂರು,ಫೆ.29- ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ಮತ್ತು ವಿಧಾನಪರಿಷತ್ನಿಂದ ತಿರಸ್ಕøತಗೊಂಡ ರೂಪದಲ್ಲಿ ಇದ್ದ 2024 ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿತು. +ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು ವಿಧೇಯಕವನ್ನು ಸದನದಲ್ಲಿ ಮಂಡಿಸಿ ಪುನರ್ ಪರ್ಯಾಲೋಚಿಸಬೇಕು ಎಂದು ಕೋರಿದರು. ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್ ಮತಕ್ಕೆ ಹಾಕಿದಾಗ ಧ್ವನಿಮತದ ಅಂಗೀಕಾರ ದೊರೆಯಿತು. +ಈ ವಿಧೇಯಕವು ಗ್ರೂಪ್ ಎ ದೇವಾಲಯಗಳ ಅಕಾರ ಕ್ಷೇತ್ರ ವ್ಯಾಪ್ತಿಯೊಳಗೆ ಯಾತ್ರಾರ್ಥಿಗಳಿಗೆ ಸುರಕ್ಷತೆಯನ್ನು ಕಲ್ಪಿಸಲು ನಿರ್ಮಾಣ ಮತ್ತು ನಿರ್ವಹಣೆ ಮೊದಲಾದವುಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು, ಪುನರ್ ಪರಿಶೀಲಿಸಲು ಮತ್ತು ಪ್ರಸ್ತಾವನೆಗಳನ್ನು ಸಲ್ಲಿಸಲು ಜಿಲ್ಲಾ ಹಾಗೂ ರಾಜ್ಯಮಟ್ಟದ ಉನ್ನತ ಸಮಿತಿಗಳನ್ನು ರಚಿಸುವ ಉದ್ದೇಶ ಒಳಗೊಂಡಿದೆ. +ಅಲ್ಲದೆ ಸಾಮಾನ್ಯ ಸಂಗ್ರಹಣಾ ನಿಯ ಮೊತ್ತವನ್ನು ಹೆಚ್ಚಿಸಲು, ಅಸೂಚಿತ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯಲ್ಲಿ ವಿಶ್ವ ಕರ್ಮ ಹಿಂದೂ ದೇವಾಲಯ ವಾಸ್ತುಶಿಲ್ಪ ಮತ್ತು ಶಿಲ್ಪಶಾಸ್ತ್ರದಲ್ಲಿ ಕೌಶಲ್ಯ ಉಳ್ಳ ವ್ಯಕ್ತಿಯನ್ನು ಸೇರಿಸುವ ಉದ್ದೇಶ ಒಳಗೊಂಡಿದೆ. \ No newline at end of file diff --git a/eesanje/url_46_219_8.txt b/eesanje/url_46_219_8.txt new file mode 100644 index 0000000000000000000000000000000000000000..06f9db3ece628c3b3b162c7cdee8dc3ba0bc8be1 --- /dev/null +++ b/eesanje/url_46_219_8.txt @@ -0,0 +1,6 @@ +ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ +ಬೆಂಗಳೂರು, ಫೆ.29- ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದು ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದೆ.ರಾಜ್ಯಾದ್ಯಂತ ನಾಳೆಯಿಂದ ಆರಂಭವಾಗಲಿರುವ ಪರೀಕ್ಷೆಗೆ ಸುಮಾರು 6,90,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ನಾಳೆ ಕನ್ನಡ ಹಾಗೂ ಅರೇಬಿಕ್ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿವೆ. +ಮಾರ್ಚ್ 22ರ ವರೆಗೆ ನಡೆಯಲಿರುವ ಪರೀಕ್ಷೆಗೆ ಯಾವುದೇ ಅಡೆತಡೆಯಾಗದಂತೆ ಮತ್ತು ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮಂಡಳಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಆಯಾ ನಗರ ಹಾಗೂ ತಾಲ್ಲೂಕು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ವರೆಗೂ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. +ಒಟ್ಟಾರೆ ಸುಮಾರು 1124 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಲ್ಟಿಕೆಟ್ಗಳನ್ನು ಹೊಂದಿರಬೇಕು ಮತ್ತು ಕಾಲೇಜಿನ ಐಡೆಂಟಿಟಿ ಕಾರ್ಡ್ ಕೂಡ ಹೊಂದಿರಬೇಕು.ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚೆ ಬಂದು ತಮ್ಮ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದಂತೆ ವೆಬ್ಸೈಟ್ಗಳಲ್ಲಿ ನೀಡಿರುವ ಮಾಹಿತಿಯನ್ನು ವಿದ್ಯಾರ್ಥಿಗಳು ಪರಿಶೀಲಿಸಿ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಕೊಠಡಿಗಳಲ್ಲಿ ಗಡಿಯಾರ, ಸಿಸಿಟಿವಿ ಕಣ್ಗಾವಲು ಇದ್ದು, ಹೊರಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗುತ್ತಿದೆ. +ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅೀಕ್ಷಕರನ್ನು ನೇಮಕ ಮಾಡಲಾಗಿದೆ. ಮುಖ್ಯ ಅೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನ ಬಳಸುವುದನ್ನು ಕಡ್ಡಾಯವಾಗಿ ನಿಷೇಸಲಾಗಿದೆ. ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಲಾಗಿದೆ. \ No newline at end of file diff --git a/eesanje/url_46_219_9.txt b/eesanje/url_46_219_9.txt new file mode 100644 index 0000000000000000000000000000000000000000..e494eac000f923dbc233fcb836efea06730aab9b --- /dev/null +++ b/eesanje/url_46_219_9.txt @@ -0,0 +1,4 @@ +ಪಾಕ್ ಪರ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಗ್ಯಾರಂಟಿ +ಬೆಂಗಳೂರು,ಫೆ.29- ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ಭರವಸೆ ನೀಡಿದರು.ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಸಬೇಕು, ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷದ ಸದಸ್ಯರು ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ, ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. +ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಸ್ವತಂತ್ರವಾಗಿ ಎಫ್ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಆ ಘಟನೆಗೆ ಸಂಬಂದಿಸಿದಂತೆ 7 ಜನರ ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಆದರೂ ಪ್ರತಿಪಕ್ಷಗಳ ಶಾಸಕರು ಧರಣಿ ನಡೆಸಿ ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಸುಗಮ ಕಲಾಪಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಆದರೂ ಬಿಜೆಪಿ ಶಾಸಕರು ಮಣಿಯದಿದ್ದಾಗ, ದೇಶಭಕ್ತಿಯ ವಿಚಾರದಲ್ಲಿ ನಾವು ನಿಮ್ಮಿಂದ ಪಾಠ ಕಲಿಯಬೇಕಿಲ್ಲ. ನಿಮಗಿಂತ 100 ಪಾಲು ಹೆಚ್ಚು ನಮಗೆ ಇದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು. +1925ರಲ್ಲಿ ಆರ್ಎಸ್ಎಸ್ ಅಸ್ತಿತ್ವಕ್ಕೆ ಬಂದಿತು. ಹೆಗಡೆವಾರು, ಗೋಲವಾಲ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ ? ನಮ್ಮ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾದ ಪಕ್ಷ ಎಂದು ಸಮರ್ಥಿಸಿಕೊಂಡರು. ಮಹಾತ್ಮಗಾಂಧೀಜಿಯವರನ್ನು ಗುಂಡಿಕ್ಕಿ ಕೊಂದ ನಾಥೋರಾಮ್ ಗೂಡ್ಸೆ ಅವರನ್ನು ಪೂಜೆ ಮಾಡುವವರು ಅವರಿಂದ ನಾವು ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದರು.ಜೆಡಿಎಸ್ನವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಎಸ್ ಅನ್ನು ತೆಗೆದು ಜನತಾ ದಳ ಎಂದಿಟ್ಟುಕೊಳ್ಳುವುದು ಸೂಕ್ತ. ಬೇಕಿದ್ದರೆ ಜನತಾದಳ ಬಿಜೆಪಿ ಎಂದಿಟ್ಟುಕೊಳ್ಳಲಿ ಎಂದು ಟೀಕಿಸಿದರು. \ No newline at end of file diff --git a/eesanje/url_46_21_1.txt b/eesanje/url_46_21_1.txt new file mode 100644 index 0000000000000000000000000000000000000000..83bcc345b3124715bc10de1bb6e498360e890aad --- /dev/null +++ b/eesanje/url_46_21_1.txt @@ -0,0 +1,8 @@ +ನಾಗಮಂಗಲ ಕೋಮುಗಲಭೆಯನ್ನು ಅತ್ಯುಗ್ರವಾಗಿ ಖಂಡಿಸಿದ ಬಿ.ವೈ.ವಿಜಯೇಂದ್ರ +.. +ಬೆಂಗಳೂರು,ಸೆ.12– ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂಧ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಘಟನೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. +ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅತ್ಯುಗ್ರವಾಗಿ ಖಂಡಿಸುತ್ತೇನೆ. ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ. +ಕಾಂಗ್ರೆಸ್‌‍ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದೋಹಿ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ, ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. +ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದುಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ.ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು…../EQmoLyzjj4 +ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. +ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್‌‍ ಸರ್ಕಾರವೇ ಹೊರಬೇಕಾಗುತ್ತದೆ. ಕಾಂಗ್ರೆಸ್‌‍ನ ಮತಬ್ಯಾಂಕ್‌ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದು ವಿಜಯೇಂದ್ರ ಸರ್ಕಾರದ ಮೇಲೆ ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_21_10.txt b/eesanje/url_46_21_10.txt new file mode 100644 index 0000000000000000000000000000000000000000..10a46f6046b7b84c4025e20901d75a41a43f951f --- /dev/null +++ b/eesanje/url_46_21_10.txt @@ -0,0 +1,6 @@ +ನೂತನ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಹಿಂದೆ ಮಾಧ್ಯಮಗಳನ್ನು ನಿಯಂತ್ರಿಸುವ ಹುನ್ನಾರ : ಆರ್‌.ಅಶೋಕ್‌ + +ಬೆಂಗಳೂರು,ಸೆ.11-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ಜಾಹೀರಾತು ಪರಿಶೀಲನಾ ಸಮಿತಿ ರಚನೆ ಮಾಡಿರುವುದು ಮಾಧ್ಯಮಗಳನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಶಂಕೆ ವ್ಯಕ್ತಪಡಿಸಿದ್ದಾರೆ. +ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌, ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ. ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‌‍ ಸರ್ಕಾರ, ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ ಅವರನ್ನು ಸಮಿತಿಯಲ್ಲಿ ನೇಮಕ ಮಾಡಿದೆ.ಸಿಎಂ ಸಿದ್ದರಾಮಯ್ಯನವರೇ, ಜಾಹೀರಾತುಗಳನ್ನು ಪರಿಶೀಲನೆ ಮಾಡಲು ತಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ? ಎಂದು ಪ್ರಶ್ನಿಸಿದ್ದಾರೆ. +ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು ಎಂದು ಅಶೋಕ್‌ ಸಲಹೆ ಮಾಡಿದ್ದಾರೆ. \ No newline at end of file diff --git a/eesanje/url_46_21_11.txt b/eesanje/url_46_21_11.txt new file mode 100644 index 0000000000000000000000000000000000000000..4ecc84f9fb20cb0bb4fe4b6077348d786b4ba8b6 --- /dev/null +++ b/eesanje/url_46_21_11.txt @@ -0,0 +1,8 @@ +ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ : ಪ್ರತಾಪ್‌ ಸಿಂಹ + +ಮೈಸೂರು,ಸೆ.11– ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಹಾಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ನೀಡಿದ್ದಾರೆ. +ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಲವು ಸೈದ್ದಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್‌‍ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು ಎಂದು ಅವರು ಹೇಳಿದರು. +ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಹೊಡೆದಾಟದ ಬಗ್ಗೆ ಮಾತನಾಡುವುದಿಲ್ಲ. ಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದರು. +ಅಮೃತ್‌ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು ಎಂದು ನಾನು ಹೇಳಿದರೆ ವಿವಾದವಾಗುತ್ತದೆ. ಪೈಪ್‌ಲೈನ್‌ ಎಲ್ಲಿ ತಡೆದು ನಿಂತಿದೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್‌ ಒಡೆಯರ್‌ ಅವರಿಗೆ ಪ್ರತಾಪ್‌ ಸಿಂಹ ಟಾಂಗ್‌ ಕೊಟ್ಟರು. +ಚಾಮುಂಡಿ ಬೆಟ್ಟದ ದೇವಿಕೆರೆ ಮೇಲೆ ನಮಾಜ್‌ ಮಾಡುತ್ತಿದ್ದರು. ಚಾಮುಂಡಿ ಬೆಟ್ಟದಲ್ಲಿ 12 ಮುಸ್ಲಿಂ ಷಾಪ್‌ ಇತ್ತು. ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ ಜಾಗದಲ್ಲಿ ಇವರು ಯಾಕೆ ಅಂಗಡಿ ಇಡಬೇಕು. ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು ತೆಗೆಸಿದ್ದೆ ಎಂದು ಹೇಳಿದರು. +ಚಾಮುಂಡೇಶ್ವರಿಗೆ ಅವಮಾನದ ರೀತಿಯಲ್ಲಿದ್ದ ಮಹಿಷ ದಸರಾ ತಡೆಯುವ ಕೆಲಸ ಮಾಡಿದೆ. ಅವತ್ತು ಚಾಮುಂಡೇಶ್ವರಿ ತಾಯಿಗೆ ಅನ್ಯಾಯ ಆಗುವಾಗ ಮಾತನಾಡಿಲ್ಲ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಟ್ರವರ್ಸಿ ಮಾಡುತ್ತಾರೆ ಎಂದು ಹೇಳುವ ಮೂಲಕ ಈ ಹಿಂದೆ ಸಂಸದರಾಗಿದ್ದ ಸಂದರ್ಭದಲ್ಲಿ ತಮ ಹೋರಟವನ್ನು ನೆನಪಿಸಿಕೊಂಡರು. \ No newline at end of file diff --git a/eesanje/url_46_21_12.txt b/eesanje/url_46_21_12.txt new file mode 100644 index 0000000000000000000000000000000000000000..d9ad435d21478555268119856675438ea20c86ee --- /dev/null +++ b/eesanje/url_46_21_12.txt @@ -0,0 +1,11 @@ +ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ : ನಾಳೆ ಅಂತಿಮ ತೀರ್ಪು ಸಾಧ್ಯತೆ + : +ಬೆಂಗಳೂರು,ಸೆ.11-ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಒಂದು ವೇಳೆ ನಾಳೆ ಸಾಧ್ಯವಾಗದಿದ್ದರೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಾದ ಪ್ರತಿವಾದವನ್ನು ಮುಗಿಸಿ ಅಂತಿಮ ತೀರ್ಪು ನೀಡಬಹುದು ಇಲ್ಲವೇ ತೀರ್ಪನ್ನು ಕಾಯ್ದಿರಿಸಬಹುದು. +ನಾಳೆ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಅಭಿಷೇಕ್‌ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಇವರ ವಾದ ಮುಗಿದ ಬಳಿಕ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಸುಪ್ರೀಂಕೋರ್ಟ್‌ನ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತ ಅವರು ಅಂತಿಮ ವಾದ ಮಂಡಿಸುವರು. +ಹೀಗಾಗಿ ಹೈಕೋರ್ಟ್‌ನಲ್ಲಿ ನಾಳೆ ಸಿಎಂ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಬಹುದಾದ ವಾದ-ವಿವಾದ ನಡೆಯಲಿದೆ. ಕಳೆದ ಬಾರಿ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಗುರುವಾರ ಅರ್ಜಿ ವಿಚಾರಣೆ ಮುಗಿಸೋಣ ಎಂದು ಅರ್ಜಿದಾರರಿಗೆ ಮೌಖಿಕ ಸೂಚನೆ ನೀಡಿದ್ದರು. +ದೂರುದಾರರ ಪರವಾಗಿ ಲಕ್ಷ್ಮಿ ಅಯ್ಯಂಗಾರ್‌, ರಾಘವನ್‌, ರಂಗನಾಥ್‌ , ಸರ್ಕಾರದ ಪರವಾಗಿ ಅಡ್ವೋಕೆಟ್‌ ಜನರಲ್‌ ಶಶಿಕುಮಾರ್‌ ಶೆಟ್ಟಿ, ರವಿವರ್ಮ ಕುಮಾರ್‌ ಸೇರಿದಂತೆ ಘಟಾನುಘಟಿ ದಿಗ್ಗಜರೇ ವಾದ ಮಂಡಿಸಿದ್ದರು. +ಏನಾಗಲಿದೆ ಸಿಎಂ ಭವಿಷ್ಯ?:ಮುಡಾ ಪ್ರಕರಣ ಸಂಬಂಧ ದೂರುದಾರರಾದ ಸ್ನೇಹಮಯಿ ಕೃಷ್ಣ, ಟಿ.ಜೆ.ಅಬ್ರಹಾಂ ನೀಡಿದ ದೂರಿನ ಮೇರೆಗೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ರಾಜ್ಯಪಾಲರ ತೀರ್ಮಾನವನ್ನು ಪ್ರಶ್ನಿಸಿ ಪ್ರಾಸಿಕ್ಯೂಷನ್‌ ರದ್ದುಪಡಿಸಬೇಕೆಂದು ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. +ಇದೀಗ ಗುರುವಾರ ಅರ್ಜಿ ವಿಚಾರಣೆಯ ವಾದ-ಪ್ರತಿವಾದ ಮುಗಿದು ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ ನೀಡಲಿರುವ ತೀರ್ಪು ಕರ್ನಾಟಕದಲ್ಲಿ ಕಾಂಗ್ರೆಸ್‌‍ ನೇತೃತ್ವದ ಸರ್ಕಾರಕ್ಕೆ ನಿರ್ಣಾಯಕವಾಗಲಿದೆ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ ಅವರು ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ ಕ್ರಮವನ್ನು ಎತ್ತಿಹಿಡಿದರೆ ಸಿದ್ದರಾಮಯ್ಯನವರಿಗೆ ಕಾನೂನಿನ ಸಂಕಷ್ಟ ಎದುರಾಗಲಿದೆ. +ಒಂದು ವೇಳೆ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದರೆ ಥಾವರ್‌ಚಂದ್‌ ಗೆಹ್ಲೋಟ್‌ಗೆ ಭಾರೀ ಮುಖಭಂಗವಾಗಲಿದೆ. ವಾದ- ಪ್ರತಿವಾದದ ವೇಳೆ ಈ ಹಿಂದೆ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನೀಡಿರುವ ಅನೇಕ ತೀರ್ಪುಗಳನ್ನು ಉಲ್ಲೇಖ ಮಾಡಿದ್ದರು. +ಅರ್ಜಿದಾರರ ಪರವಾಗಿ ವಾದಿಸಿದ್ದ ಬಹುತೇಕ ವಕೀಲರು ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದೇ ವಾದಿಸಿದ್ದರು. ಆದರೆ ಸಿಎಂ ಪರವಾಗಿ ವಾದಿಸಿದ್ದ ಅಭಿಷೇಕ್‌ ಮನುಸಿಂಘ್ವಿ , ಶಶಿಕಿರಣ್‌ ಶೆಟ್ಟಿ ಅವರುಗಳು ರಾಜ್ಯಪಾಲರ ಕ್ರಮವನ್ನು ಸಂವಿಧಾನ ಬಾಹಿರ ಎಂದು ಆಕ್ಷೇಪಿಸಿದ್ದರು.ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಹೈಕೋರ್ಟ್‌ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ ಕಾನೂನಿನ ಕುಣಿಕೆ ಬಿಗಿಯಾಗಲಿದೆ. +ತಕ್ಷಣವೇ ತನಿಖಾ ಸಂಸ್ಥೆಗಳು ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಆಗ ಸುಪ್ರೀಂಕೋರ್ಟ್‌ ಮೊರೆ ಹೋಗಿ ತಡೆಯಾಜ್ಞೆ ತರಬೇಕು ಇಲ್ಲವೇ ಕಾನೂನು ಎದುರಿಸಬೇಕಾಗುತ್ತದೆ. ಹೀಗೆ ಹೈಕೋರ್ಟ್‌ ನೀಡಲಿರುವ ತೀರ್ಪು ಸಿದ್ದರಾಮಯ್ಯನವರ ರಾಜಕೀಯ ಅಳಿವು-ಉಳಿವಿನ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_21_2.txt b/eesanje/url_46_21_2.txt new file mode 100644 index 0000000000000000000000000000000000000000..bb5cae82624c3974dc838105c583abef055cb34a --- /dev/null +++ b/eesanje/url_46_21_2.txt @@ -0,0 +1,7 @@ +ನಾಗಮಂಗಲ ಕೋಮುಗಲಭೆ : ಜಿಹಾದಿಗಳ ಬಾಲ ಕತ್ತರಿಸುವಂತೆ ಆರ್‌.ಅಶೋಕ್‌ ಆಕ್ರೋಶ + +ಬೆಂಗಳೂರು,ಸೆ.12-ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಗೆ ಕೆಲವು ಮತೀಯ ಶಕ್ತೀಗಳೇ ಕಾರಣವಾಗಿದೆ. ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಾಂಗ್ರೆಸ್‌‍ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ಇಂತಹ ಮತಾಂತ ಶಕ್ತೀಗಳ ವಿರುದ್ದ ನಿರ್ದಾಕ್ಷ್ಯಣ್ಯವಾಗಿ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ರವರಿಗೆ ಮನವಿ ಮಾಡಿಕೊಂಡಿದ್ದಾರೆ. +ಕಾಂಗ್ರೆಸ್‌‍ ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್‌ ಬ್ಯಾಂಕ್‌ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್‌‍ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್‌ ಮನಸ್ಥಿತಿಗೆ ಕಾಂಗ್ರೆಸ್‌‍ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ ಎಂದು ಆತಂಕ ಹೊರಹಾಕಿದ್ದಾರೆ. +ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್‌‍ ಆಡಳಿತದಲ್ಲಿ ರಾಜ್ಯದಲ್ಲಿ ಕಣರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್‌‍ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ. +ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟೋಲ್‌ ಬಾಂಬ್‌ ಸ್ಫೋಟಿಸುವುದು, ತಲ್ವಾರ್‌ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ ಎಂದು ಆಶೋಕ್‌ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. \ No newline at end of file diff --git a/eesanje/url_46_21_3.txt b/eesanje/url_46_21_3.txt new file mode 100644 index 0000000000000000000000000000000000000000..f92530ea1ce7e35972ad484f089150b94e5ee307 --- /dev/null +++ b/eesanje/url_46_21_3.txt @@ -0,0 +1,9 @@ +ಶಾಲೆಗಳಲ್ಲಿ ಪಾಠ ಮಾಡದೇ ರಾಜಕೀಯ ಮಾಡುವ ಶಿಕ್ಷಕರ ವಿರುದ್ಧ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ + : +ಬೆಳಗಾವಿ,ಸೆ.11– ಶಾಲೆಗಳಲ್ಲಿ ಪಾಠ ಮಾಡದೇ ಇತರೇ ಕೆಲಸ ಮಾಡುತ್ತ ತಿರುಗಾಡುವ ಶಿಕ್ಷಕರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರಿಹಾಯ್ದಿದ್ದಾರೆ. +ಸುದ್ದಿಗಾರರಿಗೆ ಮಾತನಾಡಿದ ಅವರು, ಶಿಕ್ಷಕರಾದವರು ಶಾಲೆಯಲ್ಲೇ ಇದ್ದು ಮಕ್ಕಳಿಗೆ ಶಿಕ್ಷಣ ನೀಡಲಿ. ಅದು ಬಿಟ್ಟು ರಾಜಕೀಯ, ಸಂಘಟನೆ, ವ್ಯವಹಾರ ಮಾಡುತ್ತ ತಿರುಗಾಡುತ್ತಿದ್ದಾರೆ ಎಂಬ ದೂರುಗಳಿವೆ. ಶಿಕ್ಷಣಾಧಿಕಾರಿಗಳ ನಿಯಂತ್ರಣದಲ್ಲೂ ಇಲ್ಲದಂತೆ ವರ್ತಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. +ಶಿಕ್ಷಕರು ಇಲ್ಲವೇ ಸರಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದ ಮಾತ್ರಕ್ಕೆ ಅದನ್ನೇ ಮುಖ್ಯ ಕಾಯಕ ಮಾಡಿಕೊಂಡರೆ ಹೇಗೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. +ನ್ಯಾಯಾಲಯ ಎನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎನ್ನುವುದು ನಮೆಲ್ಲರ ಆಸೆ, ಅವರು ಮುಂದುವರೆಯುತ್ತಾರೆ ಎಂದರು.ಕೋರ್ಟ್ ನಲ್ಲಿ ದೆಹಲಿ ಸಿಎಂ ಅರವಿಂದ ಕ್ರೇಜಿ ವಾಲ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರದ್ದು ಕೇಸ್ ಇದೆ, ಇವರಿಗೆ ಸಿದ್ದರಾಮಯ್ಯ ಅಷ್ಟೇ ಯಾಕೆ ಕಾಣುತ್ತಾರೆ ಎಂದು ಬಿಜೆಪಿಯನ್ನು ಪ್ರಶ್ನಿಸಿದರು. +ನಮ ತಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬೇಕಾದಷ್ಟು ಕೇಸ್ ಗಳನ್ನ ನಾವು ಸಹ ನೋಡಿದ್ದೇವೆ, ಇದರ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಸಿಎಂ ರೇಸ್ ನಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಿನವರು ಇದ್ದಾರೆ ಎಂಬ ಬಿಜೆಪಿ ನಾಯಕರ ಆರೋಪ. ನಾನು ಅಷ್ಟು ದೊಡ್ಡ ಮನುಷ್ಯ ಅಲ್ಲ, ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದರು. +ಬಿಜೆಪಿಗೆ ಸಿದ್ದರಾಮಯ್ಯ ಭಯ ಇದೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಅಷ್ಟೇ ಅಲ್ಲಾ ಜೆಡಿಎಸ್ ಸೇರಿ ಎಲ್ಲ ವಿರೋಧ ಪಕ್ಷದವರಿಗೂ ಭಯ ಇದೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇದ್ದೇ ಇರುತ್ತದೆ ಎಂದರು. +ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದರೆ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮರು ಪ್ರಶ್ನೆ ಹಾಕಿದರು. ದೀಪಾವಳಿ ನಂತರ ಸರ್ಕಾರ ಪತನ ಆಗುತ್ತೆ ಎಂಬ ಬಿಜೆಪಿ ನಾಯಕರು ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ ಎಂದು ಅವರು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_21_4.txt b/eesanje/url_46_21_4.txt new file mode 100644 index 0000000000000000000000000000000000000000..8754def70ec618871b61fa5cbd9225660a846bf3 --- /dev/null +++ b/eesanje/url_46_21_4.txt @@ -0,0 +1,6 @@ +ಸಿಎಂ ಆಗುವುದಾದರೆ ಸತೀಶ್ ಜಾರಕಿಹೊಳಿಯವರನ್ನು ಬೆಂಬಲಿಸುತ್ತೇವೆ : ಬಿಜೆಪಿ ಶಾಸಕ ವಿಠಲ್ ಬೆಂಬಲ + : +ಬೆಳಗಾವಿ, ಸೆ.11-ಲೋಕಾಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿಯಾಗುವುದಾದರೆ ಅದು ಸಂತೋಷದ ವಿಚಾರ. ಅವರು ಪಕ್ಷತೀತವಾಗಿ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ಶಾಸಕ ವಿಠಲ್ ಸೋಮಣ್ಣ ಹಲಗೇಕರ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕದ ವ್ಯಕ್ತಿ ಮುಖ್ಯಮಂತ್ರಿಯಾದರೆ, ಅದರಲ್ಲೂ ನಮ ಜಿಲ್ಲೆಯವರಾದರೆ ಪಕ್ಷ ಬೇದ ಮರೆತು, ಅಭಿವೃದ್ದಿ ಕೆಲಸಗಳಾಗುತ್ತವೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ. ಅವರಿಗೆ ಅವಕಾಶ ಸಿಗುವ ನಿರೀಕ್ಷೆಯಿದೆ ಎಂದರು. +ಸತೀಶ್ ಜಾರಕಿಹೊಳಿ ನಮಗೂ ಆತಿಯರಾಗಿರುವುದರಿಂದ ಅವರು ಮುಖ್ಯಮಂತ್ರಿಯಾದರೆ ಸಹಜವಾಗಿಯೇ ನನಗೆ ಖುಷಿಯಾಗುತ್ತದೆ. ತಾವು ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಕೆಲಸ ಮಾಡಿದ್ದು, ಖಾನಾಪುರ ಕ್ಷೇತ್ರದ ಬಗ್ಗೆ ವ್ಯಾಪಕ ಪರಿಚಯವಿದೆ ಅಭಿವೃದ್ದಿಗೆ ಹೆಚ್ಚು ಕೆಲಸ ಮಾಡುತ್ತೇನೆ ಎಂದರು. +ಕಾಂಗ್ರೆಸ್ ಸರ್ಕಾರಕ್ಕೆ 136 ಶಾಸಕರ ಬೆಂಬಲ ಇದೆ. ಹೀಗಾಗಿ ನಮ ಬೆಂಬಲದ ಅಗತ್ಯ ಇಲ್ಲ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಹೇಳಿದಾಕ್ಷಣ ಬೇರೆ ಏನೋ ರಾಜಕೀಯ ನಡೆಯುತ್ತದೆ ಎಂಬ ವಿಶ್ಲೇಷಣೆ ಅನಗತ್ಯ. ಮುಖ್ಯಮಂತ್ರಿ ಬದಲಾವಣೆಗೆ ಕಾಂಗ್ರೆಸ್ನಲ್ಲಿರುವ ಬೆಂಬಲವೇ ಸಾಕು. ನಾವು ವೈಯಕ್ತಿಕವಾಗಿ ಖುಷಿ ಪಡುತೇವೆ ಎಂದು ಹೇಳಿದರು. \ No newline at end of file diff --git a/eesanje/url_46_21_5.txt b/eesanje/url_46_21_5.txt new file mode 100644 index 0000000000000000000000000000000000000000..1da73db262200b0c425d00ac446ade1afa995ae8 --- /dev/null +++ b/eesanje/url_46_21_5.txt @@ -0,0 +1,6 @@ +ಅಭಿವೃದ್ಧಿ ಕೆಲಸಗಳಿಗೆ ಪಂಚ ಗ್ಯಾರಂಟಿಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ + +ಮಂಡ್ಯ, ಸೆ.11-ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯಹೇಳಿದ್ದಾರೆ. ಯಾವ ಊರಿಗೆ ಹೋದರೂ ಇದೇ ಮಾತುಗಳು ಕೇಳಿಬರುತ್ತಿವೆ. ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ. +ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆ ಗಳಿಂದ ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ. +ನೀವು ಗೆದ್ದು ಒಂದೂವರೆ ವರ್ಷವಾಗಿದೆ, ಏನು ಕೆಲಸ ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ಜನರ ಅಭಿವೃದ್ಧಿಗೆ ಹಲವು ಇಲಾಖೆಗಳಿಂದ ಅನುದಾನವೇಸಿಗುತ್ತಿಲ್ಲ. ಹೀಗಾಗಿ ಅಭಿವೃದ್ಧಿಗೆ ಹಣದ ಅವಶ್ಯಕತೆ ಇದೆ. +ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿಗೇ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_21_6.txt b/eesanje/url_46_21_6.txt new file mode 100644 index 0000000000000000000000000000000000000000..49fa60f2756ad5ae1f95e3c0f055779c73efcb7c --- /dev/null +++ b/eesanje/url_46_21_6.txt @@ -0,0 +1,11 @@ +ಬಿಜೆಪಿ ಅವಧಿ ಹಗರಣಗಳ ತನಿಖೆ ಶೀಘ್ರ ಸಮಿತಿ ಸಭೆ : ಡಾ.ಜಿ.ಪರಮೆಶ್ವರ್ + +ಬೆಂಗಳೂರು, ಸೆ.11-ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಪರಿಶೀಲನೆ ನಡೆಸಿ, ಸಚಿವ ಸಂಪುಟಕ್ಕೆ ವರದಿ ನೀಡಲು ರಚಿಸಲಾಗಿರುವ ಸಮಿತಿಯ ಸಭೆಯನ್ನು ಶೀಘ್ರವೇ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪರಮೆಶ್ವರ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆ ಪ್ರಗತಿ, ಸಮನ್ವಯ ಮುಂತಾದ ಕಾರ್ಯ ಗಳಿಗೆ ಕ್ರಮವಹಿಸಲು ತಮ ನೇತೃತ್ವದಲ್ಲಿ ಇತರ ನಾಲ್ವರ ಸಚಿವರನ್ನೊಳಗೊಂಡ ಸಮಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿದ್ದಾರೆ. +ಸಮಿತಿಯ ಸಭೆ ಇನ್ನೊಂದು ವಾರದೊಳಗಾಗಿ ನಡೆಯಲಿದೆ ಎಂದು ಹೇಳಿದರು.ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಗುರುತಿಸಿ, ಪಟ್ಟಿ ಮಾಡಲಾಗಿದೆ. ಕೆಲವು ತೀರ್ಮಾನವಾಗಿದ್ದು, ಇನ್ನೂ ಕೆಲವು ಬಾಕಿ ಇವೆ. ವಿವಿಧ ಹಂತಗಳಲ್ಲಿರುವ ಅವುಗಳನ್ನು ಪರಿಶೀಲಿಸಿ ಸಚಿವ ಸಂಪುಟ ಸಭೆಗೆ ವರದಿ ನೀಡಲಾಗುವುದು. ಸಚಿವ ಸಂಪುಟ ಸಭೆಯೇ ಹಿಂದಿನ ಸರ್ಕಾರದ ಹಗರಣಗಳ ತನಿಖೆಯನ್ನು ನೇರ ನಿಗಾವಣೆ ವಹಿಸಬೇಕೆಂದು ಚರ್ಚಿಸಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿದೆ ಎಂದರು. +ಬಹಳಷ್ಟು ಪ್ರಕರಣಗಳು ದೂಳು ಹಿಡಿದಿವೆ. ಈಗಾಗಲೇ ಇಲಾಖಾವಾರು ವಿಚಾರಣೆ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ತಾವು ಸೂಚನೆ ನೀಡಿದ್ದು, ಪ್ರತಿ ಮೂರು ತಿಂಗಳಿಗೊಮೆ ಪ್ರಗತಿ ಪರಿಶೀಲನೆ ನಡೆಸುವಾಗ ಬಾಕಿ ಪ್ರಕರಣಗಳನ್ನು ಗಮನಿಸಲಾಗುತ್ತಿದೆ ಎಂದು ಹೇಳಿದರು.ಸಮಿತಿ ರಚನೆಯನ್ನು ದ್ವೇಷದ ರಾಜಕಾರಣ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಾರೆ, ಅದು ಅವರ ಹಕ್ಕು. ಆಡಳಿತ ಮಾಡುವ ನಮಗೆ ಹೆಚ್ಚಿನ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ನೀಡಬೇಕು. ಹೀಗಾಗಿ ನಮ ಕೆಲಸವನ್ನು ನಾವು ಮಾಡುತ್ತೇವೆ ಎಂದರು. +ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ಪಾತ್ರ ಇಲ್ಲ ಎಂದು ನಾವು ಹೇಳಿದ್ದೇವೆ. ತನಿಖೆ ನಡೆಸಿದ ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ತನಿಖಾ ಸಂಸ್ಥೆ ನಾಗೇಂದ್ರ ಅವರ ಪಾತ್ರ ಇದೆ ಎಂದು ಹೇಳಿದೆ. ಆದರೆ ಅಂತಿಮವಾಗಿ ಆರೋಪವನ್ನು ಸಾಬೀತುಪಡಿಸಬೇಕಿದೆ ಎಂದರು. +ಹಲವಾರು ಬಾರಿ ನಾವು ಹೇಳಿದಕ್ಕೆ ಸಾಕ್ಷ್ಯ ಸಿಕ್ಕಿರುವುದಿಲ್ಲ, ಹಲವು ಬಾರಿ ಅವರು ಹೇಳಿರುವುದಕ್ಕೂ ಸಾಕ್ಷ್ಯ ಸಿಕ್ಕಿರುವುದಿಲ್ಲ. ಇದೇ ಹಗರಣದಲ್ಲಿ ಎಸ್ಐಟಿ ನಡೆಸಿರುವ ತನಿಖೆಯ ಆದ್ಯತೆಯೇ ಬೇರೆ, ಇಡಿ ತನಿಖೆಯ ಆದ್ಯತೆಯೇ ಬೇರೆ. ಎರಡು ತನಿಖೆಗಳು ನಡೆಯಲಿದ್ದು, ಅಂತಿಮವಾಗಿ ಎರಡನ್ನು ಪರಿಗಣಿಸಲಾಗುವುದು. ಎರಡು ತನಿಖಾ ಸಂಸ್ಥೆಗಳು ಒಂದೇ ಪ್ರಕರಣದ ವಿಚಾರಣೆ ನಡೆಸಿದಾಗ ಭಿನ್ನ ರೀತಿಯ ಮಾಹಿತಿಗಳು ಹೊರಬರುತ್ತವೆ ಎಂದು ಹೇಳಿದರು. +ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಅನಗತ್ಯ ಹೇಳಿಕೆಗಳು ಬರುತ್ತಿರುವುದು ಸರಿಯಲ್ಲ. ನಮಗೆ ಜನ ಮತ ನೀಡಿ ಗೆಲ್ಲಿಸಿದ್ದಾರೆ. ಉತ್ತಮ ಆಡಳಿತ ನಡೆಸುವತ್ತಾ ಗಮನ ಹರಿಸಬೇಕು. ಬಿಜೆಪಿ ಅವರು ಸರ್ಕಾರ ಅಸ್ಥಿರಗೊಳಿಸುವ ಅಥವಾ ಜನಪರ ಯೋಜನೆಗಳ ಅನುಷ್ಠಾನವನ್ನು ತಡೆಯುವ ಹುನ್ನಾರ ನಡೆಸಿದ್ದಾರೆ. ಇದನ್ನು ಬದಿಗೊತ್ತಿ ಕೆಲಸ ಮಾಡಬೇಕಿದೆ ಎಂದು ಹೇಳಿದರು. +ಪ್ರಸ್ತುತ ದಿನಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇಳಿ ಬರುತ್ತಿರುವ ಹೇಳಿಕೆಗಳ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿದೇಶದಿಂದ ವಾಪಸ್ ಬಂದ ಬಳಿಕ ಕ್ರಮ ಕೈಗೊಳ್ಳಬಹುದು ಎಂದರು.ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬುದು ಕೆಲವರ ವೈಯಕ್ತಿಕ ಅಭಿಪ್ರಾಯ ಎಂದ ಪರಮೇಶ್ವರ್, ಪಡಿತರ ಚೀಟಿಗಳನ್ನು ಕಡಿತ ಮಾಡುವುದು ಸರ್ಕಾರದ ಉದ್ದೇಶವಲ್ಲ. +ಆದಾಯ ಪಾವತಿ ಮಾಡುವವರು ಬಡವರಿಗೆ ತಲುಪಬೇಕಾದ ಯೋಜನೆಗಳಿಗೆ ಸುಳ್ಳು ದಾಖಲೆ ಸಲ್ಲಿಸಿ, ಫಲಾನುಭವಿಗಳಾಗುವುದು ಸರಿಯಲ್ಲ. ಅಂತವರ ಸೌಲಭ್ಯಗಳನ್ನು ಕಡಿತ ಮಾಡುವುದು ತಪ್ಪಲ್ಲ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಏನೇನೊ ಹೇಳುತ್ತಾರೆ. ಅದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ದೊಡ್ಡ ಕೆಲಸ ಮಾಡಲಿ ಎಂದು ಸಲಹೆ ನೀಡಿದರು. +ಅಮೆರಿಕಾದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಮತ್ತು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಪರಸ್ಪರ ಭೇಟಿಯಾಗಿರುವುದು ಆಕಸಿಕ. ಫೋಟೋ ನೋಡಿ ನನಗೆ ಖುಷಿಯಾಯಿತು. ಒಂದೇ ಹೋಟೆಲ್ನಲ್ಲಿದ್ದಾರೆ, ಪರಸ್ಪರ ಎದುರಾದಾಗ ಮಾತನಾಡಿಸದೆ ಓಡಿಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_21_7.txt b/eesanje/url_46_21_7.txt new file mode 100644 index 0000000000000000000000000000000000000000..bfb5efb0579e5279e2354d9685cdd1513823ee06 --- /dev/null +++ b/eesanje/url_46_21_7.txt @@ -0,0 +1,10 @@ +ಬಳ್ಳಾರಿ ಸಂಸದರ ಆಯ್ಕೆ ರದ್ದುಗೊಳಿಸಲು ಚುನಾವಣಾ ಆಯೋಗಕ್ಕೆ ಆಗ್ರಹ + +ಬೆಂಗಳೂರು,ಸೆ.11– ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ ಹಣ ಬಳಕೆಯಾಗಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಕೇಂದ್ರ ಚುನಾವಣಾ ಆಯೋಗ ಈ ಕೂಡಲೇ ಮಧ್ಯಪ್ರವೇಶಸಿ ಈ ಆಯ್ಕೆ ಯನ್ನು ರದ್ದುಗೊಳಿ ಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರದ ಸಚಿವರೊಬ್ಬರು ಈ ಹಗರಣದಲ್ಲಿ ಭಾಗಿಯಾಗಿರುವುದು ಸ್ಪಷ್ಟವಾದರೂ ಅದರ ಹೊಣೆಯನ್ನು ಹೊರುವಲ್ಲಿ ಮುಖ್ಯಮಂತ್ರಿಗಳು ಹಾಗೂ ಇಡೀ ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಪ್ರಶ್ನಿಸಿದ್ದಾರೆ. +ಇಡಿ ತನಿಖೆ ಇನ್ನಷ್ಟು ವಿಸ್ತರಿಸಿದರೆ ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬೆನ್ನಿಗೆ ನಿಂತಿದ್ದ ದೊಡ್ಡ ಶಕ್ತಿಗಳ ಮುಖವಾಡವೂ ಬಯಲಾಗುತ್ತದೆ. ಮುಂದಿನ ವಿಚಾರಣೆಯಲ್ಲಿ ಈ ಹಗರಣದ ಪೂರ್ಣ ಸತ್ಯ ಬಯಲಾಗಲಿದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. +ಲೂಟಿಯಾದ ಹಣ ಯಾರ್ಯಾರಿಗೋ ಹರಿದು ಹಂಚಿ ಹೋಗಿರುವ ಭಾಗದಲ್ಲಿ ಲೋಕಸಭಾ ಚುನಾವಣೆಗೆ ಬಹುದೊಡ್ಡ ಮೊತ್ತ ಬಳಕೆಯಾಗಿರುವುದು ಸ್ಪಷ್ಟವಾಗಿದೆ. ರಾಜ್ಯದ ಲೋಕಸಭಾ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ಯಾವ ಪರಿಯಲ್ಲಿ ಚುನಾವಣೆಯಲ್ಲಿ ಗೆದ್ದಿದೆ ಎನ್ನುವುದನ್ನು ಬಳ್ಳಾರಿಯ ಲೋಕಸಭೆಯ ಫಲಿತಾಂಶದಲ್ಲಿ ಉತ್ತರ ದೊರಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ದುರ್ಮಾರ್ಗಗಳಿಂದ ಗಳಿಸಿದ ಕಪ್ಪು ಹಣದಿಂದ ಚುನಾವಣೆ ಗೆಲ್ಲುತ್ತಿದ್ದ ಕಾಂಗ್ರೆಸ್ ಇದೀಗ ಸರ್ಕಾರಿ ಖಾತೆಯಿಂದ ಲೂಟಿಯಾದ ಹಣದಿಂದಲೂ ಚುನಾವಣೆ ನಿರ್ವಹಿಸುವಷ್ಟು ಕೀಳುಮಟ್ಟದ ಕ್ರಿಮಿನಲ್ ಮಾರ್ಗ ಅನುಸರಿಸುತ್ತಿದೆ. ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಯಾವ ಲಜ್ಜೆಗೇಡಿ ಮಾರ್ಗವನ್ನು ಅನುಸರಿಸಲು ಹಿಂದೇಟು ಹಾಕುವುದಿಲ್ಲ ಎಂಬುದನ್ನು ಕಾಂಗ್ರೆಸ್ ಸಾಬೀತುಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣದ ಲೂಟಿಕೋರತನದ ಹಣವನ್ನು ಚುನಾವಣೆಗೆ ಬಳಸಿಕೊಂಡಿರುವುದು ಲಜ್ಜೆತನದ ಪರಮಾವಧಿಯಾಗಿದೆ. ಜಾರಿ ನಿರ್ದೇಶನಾಲಯದ ಮಧ್ಯಪ್ರವೇಶದಿಂದಾಗಿ ಲೂಟಿಯಾದ ಹಣದ ಮೂಲ ಪತ್ತೆಯಾಗಿದ್ದು, ನಿಜವಾದ ಅಪರಾಧಿಗಳ ಮುಖವಾಡ ಬಯಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. +ಇತಿಹಾಸದಲ್ಲಿ ಕಂಡು ಕೇಳರಿಯದ ಸರ್ಕಾರಿ ಖಾತೆಗಳಿಗೆ ಕನ್ನ ಹಾಕಿದ ಹಗರಣ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದ ಮೇಲುಸ್ತುವಾರಿಯಲ್ಲೇ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಬೇಲಿಯೇ ಎದ್ದು ಹೊಲ ಮೇಯ್ದ ಉದಾಹರಣೆ ಉಲ್ಲೇಖಿಸಲು ಭವಿಷ್ಯತ್ತಿನಲ್ಲಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಮೊದಲನೆಯ ಸ್ಥಾನದಲ್ಲಿ ನಿಲ್ಲುತ್ತದೆ ಎಂದು ಟೀಕಿಸಿದ್ದಾರೆ. +ಸದ್ಯ ಇಡಿ ಪಾರದರ್ಶಕವಾಗಿ ತನಿಖೆ ನಡೆಸಿ ಕಾಂಗ್ರೆಸ್ ಸರ್ಕಾರದ ಸಚಿವರೇ ಭಾಗಿಯಾಗಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_21_8.txt b/eesanje/url_46_21_8.txt new file mode 100644 index 0000000000000000000000000000000000000000..cd337b8433d2813da0e5b33d5b63f2b45d02be7f --- /dev/null +++ b/eesanje/url_46_21_8.txt @@ -0,0 +1,5 @@ +“ಮುಂದಿನ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಜೈ” + +ಬೆಂಗಳೂರು, ಸೆ.11– ರಾಜಕೀಯ ಸೂಕ್ಷ್ಮ ಸಂದರ್ಭದಲ್ಲೇ, ಮುಂದಿನ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿಗೆ ಜೈ ಎಂಬ ಘೋಷಣೆಗಳು ಮೊಳಗಿವೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮನೆ ಬಳಿ ಆಗಮಿಸಿದ ಕಾರ್ಯಕರ್ತರು ಪರಮೇಶ್ವರ್ ಹಾಗೂ ಅವರ ಪತ್ನಿ ಕನ್ನಿಕಾ ಪರಮೇಶ್ವರ್ ಚಿತ್ರವನ್ನು ಪೆನ್ಸಿಲ್ ಸ್ಕೆಚ್ ಮಾಡಿದ ಫೋಟೋವನ್ನು ಉಡುಗೊರೆ ನೀಡಿದರು. +ಈ ವೇಳೆ ಮುಂದಿನ ಮುಖ್ಯಮಂತ್ರಿ ಪರಮೇಶ್ವರ್ ಸಾಹೇಬರಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದರಿಂದ ಸಿಟ್ಟಾದ ಪರಮೇಶ್ವರ್ ಕೈ ಎತ್ತಿ ಕಾರ್ಯಕರ್ತರನ್ನು ಹೊಡೆಯುವಂತೆ ನಟಿಸಿದರು. +ಇದಕ್ಕೆ ಕಾರ್ಯಕರ್ತರು ನಗುತ್ತಲೇ ಪ್ರತಿಕ್ರಿಯಿಸಿದರು. ಈಗಲೇ ಸಾಕಷ್ಟು ವಿವಾದಗಳಿವೆ. ಇಂತದರಲ್ಲಿ ನೀವು ಬೇರೆ ಎಂದು ಸಿಡಿಮಿಡಿಗೊಂಡು ಪರಮೇಶ್ವರ್ ಕಾರು ಏರಿ ಹೊರಟರು. \ No newline at end of file diff --git a/eesanje/url_46_21_9.txt b/eesanje/url_46_21_9.txt new file mode 100644 index 0000000000000000000000000000000000000000..67d6329fcfe30524d056c6ab7c364a073ffbc381 --- /dev/null +++ b/eesanje/url_46_21_9.txt @@ -0,0 +1,12 @@ +ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿ, ಆಸ್ತಿಗಳ ನಗದೀಕರಣಕ್ಕೆ ಸರ್ಕಾರ ನಿರ್ಧಾರ + +ಬೆಂಗಳೂರು, ಸೆ.11-ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ (ಅಸೆಟ್ ಮಾನಿಟೈಸೇಷನ್) ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ. +ತೆರಿಗೆಯೇತರ ಆದಾಯ ಸಂಪನೂಲಗಳನ್ನು ಹೆಚ್ಚಿಸಲು, ಸರ್ಕಾರದ ಆಸ್ತಿಗಳ ಸಮರ್ಪಕ ಬಳಕೆ, ನಿರ್ವಹಣೆ ಮತ್ತು ತನೂಲಕ ಖಾಸಗಿ ಬಂಡವಾಳವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಕರ್ಷಿಸಲು ಸಲಹೆಗಳನ್ನು ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ. +ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹ ಸಾಮರ್ಥ್ಯ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕ ರಣದ ಅವಕಾಶವನ್ನು ಗುರುತಿಸಲು ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿಯನ್ನು ರಚಿಸಲಾಗಿದೆ. +ಸಮಿತಿಯಲ್ಲಿ ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರಿಯ ಮಂಡಳಿ ಮಾಜಿ ಅಧ್ಯಕ್ಷ ನಜೀಬ್ ಶಾ, ನಿವೃತ್ತ ಐಎಎಸ್ ಅಧಿಕಾರಿ ಎಚ್. ಶಶೀಧರ್, ಐಎಸ್ಇಸಿ ಸಂಸ್ಥೆಯ ಪ್ರೊಫೆಸರ್ ಡಾ. ಕೃಷ್ಣರಾಜು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ. +ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಕಾರ್ಯವ್ಯಾಪ್ತಿಯು ಇಲಾಖೆಗಳ ಕೆಲವು ಯೋಜನೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಸೀಮಿತಗೊಂಡಿದೆ. ಹೊಸ ಮೂಲ ಸೌಕರ್ಯಗಳು ಹಾಗೂ ಸಂಪನೂಲಗಳನ್ನು ಸೃಷ್ಟಿಸಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ಯುವ ವಿಶಾಲ ಕಾರ್ಯವ್ಯಾಪ್ತಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಪಾಲುಗಾರಿಕೆಯನ್ನು ಹೆಚ್ಚಿಸಲು, ಆಸ್ತಿ ನಗದೀಕರಣ ಗುರುತಿಸಲು ಸಮಿತಿ ಕೆಲಸ ನಿರ್ವಹಿಸಬೇಕಿದೆ ಎಂದು ಕಳೆದ ಆಗಸ್ಟ್ 23ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. +ಈ ಸಮಿತಿಯು ಹೊಸ ತೆರಿಗೆಯೇತರ ಆದಾಯದ ಮೂಲಗಳನ್ನು ಗುರುತಿಸಬೇಕು, ಖಾಸಗಿ ಸಹಭಾಗಿತ್ವದಲ್ಲಿ ಆಸ್ತಿ ನಗದೀಕರಣ ಮೂಲಕ ಆದಾಯ ಹೆಚ್ಚಿಸಲು ಇರುವ ಹೊಸ ಅವಕಾಶಗಳು ಹಾಗೂ ಕಾರ್ಯ ಸಾಧ್ಯವಾದ ಯೋಜನೆಗಳನ್ನು ಗುರುತಿಸಬೇಕು, ರಾಜ್ಯದ ಪ್ರಸ್ತುತ ತೆರಿಗೆಗಳು, ತೆರಿಗೆಯೇತರ ಆದಾಯದ ಮೂಲಗಳನ್ನು ವಿಸ್ತರಿಸಲು ಮತ್ತು ತೆರಿಗೆ ಸಂಗ್ರಹಣೆಯನ್ನು ಹೆಚ್ಚಿಸಲು ಕಾರ್ಯ ಸಾಧ್ಯವಿರುವ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕು ಎಂದು ಸೂಚಿಸಲಾಗಿದೆ. +ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಸ್ತಿ ನಗದೀಕರಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಬಲಿಷ್ಠ ನಿಯಮಾವಳಿಗಳು, ಪರಿಣಾಮಕಾರಿ ಕಾರ್ಯತಂತ್ರ ಮತ್ತು ಪಾರದರ್ಶಕ ಕಾರ್ಯವಿಧಾನಗಳನ್ನು ರೂಪಿಸಬೇಕು. +ಯಾವುದೇ ಇತರ ನಿಬಂಧನೆಗಳನ್ನು ಸರ್ಕಾರ ಸಮಿತಿಗೆ ಕಾಲಕಾಲಕ್ಕೆ ಸೂಚಿಸಬಹುದಾಗಿದ್ದು, ಸಮಿತಿ ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಂಡು, ಪರಶೀಲನಾರ್ಹ ಅಂಶಗಳಿಗೆ ಅಗತ್ಯ ಎನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. +ಸಮಿತಿ 12 ತಿಂಗಳೊಳಗಾಗಿ ಶಿಫಾರಸ್ಸುಗಳ ವರದಿಯನ್ನು ಸಲ್ಲಿಸಬೇಕು ಎಂದು ಆರ್ಥಿಕ ಇಲಾಖೆ ಆದೇಶಿಸಿದೆ. ಕೇಂದ್ರ ಸರ್ಕಾರ ಆಸ್ತಿ ನಗದೀಕರಣ ಯೋಜನೆಯನ್ನು ಜಾರಿಗೆ ತಂದಾಗ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಸರ್ಕಾರದ ಸ್ವತ್ತುಗಳನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿದ್ದವು. +ಈಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸ್ಥಳೀಯ ಸ್ವತ್ತುಗಳನ್ನು ಪರಭಾರೆ ಮಾಡಲು ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಅದರಲ್ಲೂ ಪಂಚಖಾತ್ರಿ ಯೋಜನೆಗಳನ್ನು ರಾಜಕೀಯ ಕಾರಣಕ್ಕೆ ಜಾರಿಗೆ ತಂದು ಸಂಪನೂಲ ಕ್ರೂಢೀಕರಣಕ್ಕೆ ಆಸ್ತಿಗಳ ಪರಭಾರೆಗೆ ಮುಂದಾಗಿರುವುದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. \ No newline at end of file diff --git a/eesanje/url_46_220_1.txt b/eesanje/url_46_220_1.txt new file mode 100644 index 0000000000000000000000000000000000000000..2e9ee9e64fe6293c02c13c338df4e512c314cb3f --- /dev/null +++ b/eesanje/url_46_220_1.txt @@ -0,0 +1,4 @@ +ಹಣಕಾಸು ವಿಚಾರಕ್ಕೆ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್ಸ್ ಕೈಕೈಮಿಲಾಯಿಸಿ ಫೈಟ್ +ಬೆಂಗಳೂರು,ಫೆ.29- ಹಣಕಾಸು ವಿಚಾರದಲ್ಲಿ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳು ಜಗಳವಾಡಿ ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಹಿಂದೆ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‍ಸ್ಟೆಬಲ್ ಗಂಗಪ್ಪ ಎಂಬುವರು ಮತ್ತೊಬ್ಬ ಕಾನ್‍ಸ್ಟೆಬಲ್ ಮುಲ್ತಾನಿ ಎಂಬುವರ ಬಳಿ 40 ಸಾವಿರ ರೂ. ಸಾಲ ಪಡೆದುಕೊಂಡಿದ್ದಾರೆ. +ಇತ್ತೀಚೆಗೆ ಗಂಗಪ್ಪ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಮುಲ್ತಾನಿಯವರು ಫೋನ್ ಮಾಡಿದರೂ ಸಿಗುತ್ತಿರಲಿಲ್ಲ. ಹಣವೂ ಹಿಂದಿರುಗಿಸಿರಲಿಲ್ಲ. ಮೂರು ದಿನಗಳ ಹಿಂದೆ ಗಂಗಪ್ಪ ಅವರು ಕರ್ತವ್ಯದ ಮೇಲೆ ಕೆಜಿಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ಆ ವೇಳೆ ಅಲ್ಲೇ ಕೆಲಸ ನಿರ್ವಹಿಸುತ್ತಿದ್ದ ಮುಲ್ತಾನಿ ಅವರು ಇವರನ್ನು ಗಮನಿಸಿ ಹಣ ಕೇಳಿದ್ದಾರೆ. +ಫೋನ್ ಮಾಡಿದರೂ ನೀನು ಸಿಗುತ್ತಿಲ್ಲ. ಹಣವೂ ಹಿಂದಿರುಗಿಸಿಲ್ಲ ಎಂದು ಮುಲ್ತಾನಿ ಅವರು ಕೇಳಿದಾಗ ಇಬ್ಬರ ನಡುವೆ ಪೊಲೀಸ್ ಠಾಣೆ ಬಳಿಯೇ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದು, ಸಾರ್ವಜನಿಕರು ಪೊಲೀಸ್ ಕಾನ್‍ಸ್ಟೆಬಲ್‍ಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_220_10.txt b/eesanje/url_46_220_10.txt new file mode 100644 index 0000000000000000000000000000000000000000..4ca93fa8aee50a88ae9f8c5673b1be0bc4f1803f --- /dev/null +++ b/eesanje/url_46_220_10.txt @@ -0,0 +1,12 @@ +ಸದನ ಕೋಲಾಹಲ : ಸರ್ಕಾರ ರಾಜೀನಾಮೆಗೆ ವಿಪಕ್ಷ ಪಟ್ಟು +ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ನಿನ್ನೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ವಿಚಾರ ವಿಧಾನಸಭೆಯಲ್ಲಿಂದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ರಣಾಂಗಣವನ್ನೇ ನಿರ್ಮಿಸಿತ್ತು. ಹಲವು ಬಾರಿ ಗದ್ದಲಗಳಾಗಿ 2 ಬಾರಿ ಕಲಾಪ ಮುಂದೂಡ ಬೇಕಾಯಿತು. ಘಟನೆಯ ನೈತಿಕ ಹೊಣೆ ಹೊತ್ತು ಸರ್ಕಾರ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಘಟನೆ ಕುರಿತು ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿ, ಚರ್ಚೆಗೆ ಅವಕಾಶ ಕೇಳಿದರು. ಈ ಹಂತದಲ್ಲಿ ಬಿಜೆಪಿ ಶಾಸಕರು ರಾಷ್ಟ್ರಧ್ವಜದೊಂದಿಗೆ ವಿಧಾನಸಭೆಗೆ ಆಗಮಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್ ಚರ್ಚೆಗೆ ಅವಕಾಶ ಮಾಡಿಕೊಟ್ಟರು. ಚರ್ಚೆ ಮಾಡಿದ ಆರ್.ಅಶೋಕ್‍ರವರು ಘಟನೆಯ ಹಿಂದಿರುವ ಶಕ್ತಿಗಳನ್ನು ಮಟ್ಟ ಹಾಕಬೇಕು. ರಾಜ್ಯಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್‍ರ ಗೆಲುವಿನ ಸಂಭ್ರಮಾಚರಣೆ ವೇಳೆಯಲ್ಲೇ ಈ ರೀತಿ ಘೋಷಣೆ ಕೂಗಿರುವುದು ಗಮನಾರ್ಹ. ಅವರನ್ನು ಯಾರು ಕರೆತಂದಿದ್ದರು ಎಂಬ ವಿಚಾರಗಳು ಚರ್ಚೆಯಾಗಬೇಕು. ಸರ್ಕಾರ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ. ಈವರೆಗೂ ಒಬ್ಬ ಆರೋಪಿಯನ್ನೂ ಬಂಧಿಸಿಲ್ಲ ಎಂದು ಕಿಡಿಕಾರಿದರು. +ವಿ.ಸುನಿಲ್‍ಕುಮಾರ್‍ರವರು ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ)ದಿಂದ ವಿಚಾರಣೆಯಾಗಬೇಕೆಂದು ಆಗ್ರಹಿಸಿದರು. ಬಸನಗೌಡ ಪಾಟೀಲ್ ಯತ್ನಾಳ್, ಇಲ್ಲಿನ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನದ ಪರವಾಗಿ ಪ್ರೀತಿ ತೋರಿಸುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಚರ್ಚೆಗಳು ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡು ಪುಲ್ವಾಮ ದಾಳಿ, ಸರ್ಜಿಕಲ್ ಸ್ಟ್ರೈಕ್, ದೇಶ ವಿಭಜನೆ, ಪಾಕ್ ಪರವಾದ ಧ್ವಜಾರೋಹಣದ ಆರೋಪ, ದೇಶಪ್ರೇಮ ಸೇರಿದಂತೆ ಹಲವು ವಿಚಾರಗಳ ಪ್ರಸ್ತಾಪಕ್ಕೆ ಕಾರಣವಾಯಿತು. +ಬಿಜೆಪಿ ಸದಸ್ಯರು, ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಶಾಸಕರು ದೇಶಭಕ್ತಿಯ ಬಗ್ಗೆ ಬಿಜೆಪಿಯಿಂದ ಪಾಠ ಕಲಿಯಬೇಕಿಲ್ಲ, ದೇಶವಿಭಜನೆಯನ್ನು ಮೊದಲು ಪ್ರಸ್ತಾಪಿಸಿದ್ದೇ ಬಿಜೆಪಿ ಸಿದ್ದಾಂತ ಆಧಾರಿತ ನಾಯಕರು ಎಂದು ಆಕ್ರೋಶ ವ್ಯಕ್ತಪಡಿಸಿದರು. +ಅಷ್ಟಕ್ಕೇ ಸುಮ್ಮನಾಗದ ಕಾಂಗ್ರೆಸ್ ಶಾಸಕರು, ಹಲವು ಕಡೆಗಳಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರು ಹಾಗೂ ಧ್ವಜಾರೋಹಣ ಮಾಡಿದವರು ಸಿಕ್ಕಿಬಿದ್ದಿದ್ದಾರೆ. ಅವರ ಹಿನ್ನೆಲೆ ನೋಡಿದರೆ ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ. ರಾಜಕೀಯ ಲಾಭಕ್ಕಾಗಿ ಅನ್ಯ ಧರ್ಮದವರ ಮೇಲೆ ಗೂಬೆ ಕೂರಿಸುವ ಹುನ್ನಾರಗಳು ನಡೆದಿದೆ ಎಂದು ಕಿಡಿಕಾರಿದರು. ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ, ತಮ್ಮ ಕ್ಷೇತ್ರದಲ್ಲಿ 2020, 2022 ರಲ್ಲಿ 2 ಪ್ರತ್ಯೇಕ ಪ್ರಕರಣಗಳು ನಡೆದಿವೆ. ಅದನ್ನು ಬಜರಂಗದಳ ಹಾಗೂ ಬಿಜೆಪಿ ಬೆಂಬಲಿತ ಸಂಘಟನೆಯವರು ಮಾಡಿ ಅಲ್ಪಸಂಖ್ಯಾತರ ತಲೆಗೆ ಕಟ್ಟುವ ಹುನ್ನಾರ ನಡೆಸಿದ್ದರು. ಪ್ರತಿಬಾರಿಯೂ ಈ ರೀತಿಯ ಸಂಚು ನಡೆದಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಘಟನೆ ಬಗ್ಗೆಯೂ ನಮಗೆ ಅನುಮಾನಗಳಿವೆ. ಒಂದು ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ಆಗಿದ್ದರೆ ಅಂತವರನ್ನು ಗಲ್ಲಿಗೆ ಹಾಕಿ ಎಂದು ಒತ್ತಾಯಿಸಿದರು. +ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಾಕಿಸ್ತಾನ ಪರ ಘೋಷಣೆ ಕೂಗುವವರು ತಾಯ್ಗಂಡರು ಎಂದು ಆಕ್ರೋಶಭರಿತ ವಾಗ್ದಾಳಿ ನಡೆಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‍ನ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ, ಆರೋಪಿಗಳ ವಿರುದ್ಧ ಟೀಕೆ ಮಾಡಲು ನಮ್ಮ ಆಕ್ಷೇಪವಿಲ್ಲ. ಆದರೆ ಸದನದಲ್ಲಿ ಬಳಸಬೇಕಾದ ಭಾಷೆಗಳ ಬಗ್ಗೆ ನಿಯಮಾವಳಿಗಳನ್ನು ಅನುಸರಿಸಬೇಕಾಗುತ್ತದೆ. ಅವರ ರೀತಿಯಲ್ಲಿಯೇ ನಾವೂ ಕೂಡ ಬೋ… ಮಕ್ಕಳು, ಸೂ… ಮಕ್ಕಳು ಎಂದು ಬಳಸಬೇಕಾಗುತ್ತದೆ. ಅದಕ್ಕೂ ಅವಕಾಶ ಕೊಡುತ್ತೀರಾ ಎಂದು ಪ್ರಶ್ನಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್, ಪಾಕಿಸ್ತಾನದ ಪರವಾಗಿರುವವರನ್ನು ಖಂಡಿಸಲು ನೀವು ಯಾವುದೇ ಭಾಷೆಯನ್ನು ಬಳಸಿದರೂ ಅದಕ್ಕೆ ನಾನು ಅನುಮತಿ ಕೊಡುತ್ತೇನೆ ಎಂದು ಪ್ರಕಟಿಸಿ ಯತ್ನಾಳ್ ಅವರನ್ನು ಬೆಂಬಲಿಸಿದರು. ಮುಂದುವರೆದ ಸಭಾಧ್ಯಕ್ಷರು ತಾವೂ ಕೂಡ ಬೋ… ಮಕ್ಕಳು ಎಂಬ ಕಠಿಣ ಪದ ಬಳಸಿ ದೇಶದ್ರೋಹಿಗಳ ವಿರುದ್ಧ ಕಿಡಿಕಾರಿದರು. +ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ನಿಮ್ಮಂತ ದೇಶ ಭಕ್ತರು ಅಭಿನಾಂದನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಭಾಧ್ಯಕ್ಷರು ನಾವೆಲ್ಲಾ ಭಾರತೀಯರು ಎಂದು ಸಮರ್ಥಿಸಿಕೊಂಡರು. ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಶಾಸಕರು ಪಕ್ಷಬೇಧ ಮರೆತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಂಡು ಗಲ್ಲು ಶಿಕ್ಷೆಗೆ ಒಳಪಡಿಸಿ ಎಂದು ಒತ್ತಾಯಿಸಿದರು. ಬಿಜೆಪಿಯವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ಸಿಗರು ಆಕ್ಷೇಪಿಸಿದರು. +ಸುದೀರ್ಘ ಚರ್ಚೆಗೆ ಉತ್ತರ ನೀಡಿದ ಗೃಹಸಚಿವ ಪರಮೇಶ್ವರ್, ಘಟನೆಯನ್ನು ಪರಿಶೀಲಿಸಲಾಗುತ್ತಿದೆ. ದೇಶದ್ರೋಹದ ಘೋಷಣೆಯನ್ನು ಕೂಗಿದ್ದರೆ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಎಫ್‍ಎಸ್‍ಎಲ್ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಅದರ ಬಳಿಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. +ಈ ಉತ್ತರದಿಂದ ತೃಪ್ತರಾಗದ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಆರ್.ಅಶೋಕ್, ಗೃಹಸಚಿವರು ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಆದರೆ ನಿನ್ನೆ ಘಟನೆ ನಡೆದಾಗ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ನಾಸಿರ್ ಹುಸೇನ್ ಏಕೆ ಖಂಡನೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.ಈ ಸರ್ಕಾರ ಘಟನೆಯನ್ನು ಹಗುರವಾಗಿ ತೆಗೆದುಕೊಂಡಿದೆ. ಪಾಕಿಸ್ತಾನ ಪರವಾದ ಘೋಷಣೆ ಕೂಗಿದ ಬಳಿಕವೂ ಅದನ್ನು ಸಹಿಸಿಕೊಂಡರೆ ಬದುಕಿದ್ದೂ ವ್ಯರ್ಥ. ಸರ್ಕಾರ ಅಕಾರಕ್ಕೆ ಅಂಟಿಕೊಳ್ಳದೆ ತಕ್ಷಣವೇ ರಾಜೀನಾಮೆ ನೀಡಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು. +ಇದಕ್ಕೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸಭಾಧ್ಯಕ್ಷರ ಮುಂದಿನ ಬಾವಿಗೆ ಇಳಿದು ಧರಣಿ ನಡೆಸಿದರು.ಚರ್ಚೆಯ ಉದ್ದಕ್ಕೂ ವಾದ-ವಿವಾದ, ವಾಗ್ವಾದ, ವಾಕ್ಸಮರಗಳು ಯಥೇಚ್ಛವಾಗಿ ಕಂಡುಬಂದವು.10.30 ರ ಸುಮಾರಿಗೆ ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಮುಂದೂಡಿದ್ದರು. ನಂತರ 1.15 ರ ಸುಮಾರಿಗೆ ಬಿಜೆಪಿಯವರು ಧರಣಿ ನಡೆಸಿದ್ದರಿಂದಾಗಿ ಮತ್ತೊಮ್ಮೆ ಕಲಾಪವನ್ನು ಮುಂದೂಡಬೇಕಾಯಿತು. \ No newline at end of file diff --git a/eesanje/url_46_220_11.txt b/eesanje/url_46_220_11.txt new file mode 100644 index 0000000000000000000000000000000000000000..4800bc87bed3443ca3a547ed3fa7ac0ff5a90fd4 --- /dev/null +++ b/eesanje/url_46_220_11.txt @@ -0,0 +1,7 @@ +ಕಾಂಗ್ರೆಸ್-ಬಿಜೆಪಿ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ +ಬೆಂಗಳೂರು,ಫೆ.28- ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ವಿಧಾನಸಭೆಯಲ್ಲಿ ನಡೆಯಿತು. ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ನಡೆದ ವಿಜಯೋತ್ಸವದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದಡಿ ಬಿಜೆಪಿ ಶಾಸಕ ವಿ.ಸುನಿಲ್‍ಕುಮಾರ್ ಮಾತನಾಡುವಾಗ ಶಾಸಕರ ಮನೆಗೆ ಬೆಂಕಿ ಹಾಕಿದವರನ್ನು ಅಮಾಯಕರು, ಕುಕ್ಕರ್ ಬಾಂಬ್ ಆರೋಪಿಯನ್ನು ಬ್ರದರ್ ಎಂದು ಕರೆದರು ಎಂದು ಹೇಳಿ ಬಳಸಿದ ಶಬ್ದ ಕಾಂಗ್ರೆಸ್ ಶಾಸಕರನ್ನು ಕೆರಳಿಸಿತು. +ಇದಕ್ಕೆ ಕಾಂಗ್ರೆಸ್‍ನವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯ ಪ್ರವೇಶಿಸಿದ ಯು.ಟಿ.ಖಾದರ್, ವಿಷಯದ ಬಗ್ಗೆ ಕಾಳಜಿ ಇದ್ದರೆ ಚರ್ಚೆ ಮಾಡಿ, ರಾಜಕೀಯ ಏಕೆ ಪ್ರಸ್ತಾಪ ಮಾಡುತ್ತೀರಿ ಎಂದರು. ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಅವರು ಎಷ್ಟೇ ಪ್ರಚೋದಿಸಿ ಮಾತನಾಡಿದರೂ ಸುಮ್ಮನೇ ಇದ್ದೇವೆ. ವಿಷಯದ ವಾಸ್ತವತೆ ಮೇಲೆ ಬೆಳಕು ಚೆಲ್ಲುತ್ತಿಲ್ಲ. ನಮ್ಮ ತಾಳ್ಮೆ ಪರೀಕ್ಷೆ ಮಾಡುತ್ತಿದ್ದಾರೆ. ಸುಳ್ಳುಗಳ ಕಟ್ಟುಕಥೆ ಕಟ್ಟುತ್ತಿದ್ದಾರೆ. +ಸುನಿಲ್‍ಕುಮಾರ್ ಪ್ರಸ್ತಾಪಿಸಿದ ಶಬ್ದವನ್ನು ಕಡತದಿಂದ ತೆಗೆಯಬೇಕು ಎಂದಾಗ ಪರಿಶೀಲಿಸುವ ಭರವಸೆಯನ್ನು ಸಭಾಧ್ಯಕ್ಷರು ನೀಡಿದರು. ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಕಡತದಿಂದ ಏಕೆ ತೆಗೆಯಬೇಕೆಂದು ಆಕ್ಷೇಪಿಸಿದರು. ಈ ಹಂತದಲ್ಲಿ ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ, ಸಚಿವ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಸೇರಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಮಾತುಮುಂದುವರೆಸಿದ ಸುನಿಲ್‍ಕುಮಾರ್ ಸರ್ಜಿಕಲ್ ಸ್ಟ್ರೈಕ್ ಆದಾಗ ಸಾಕ್ಷಿ ಕೇಳಿದ್ದು ಯಾವ ಪಕ್ಷ ಎಂದು ಪ್ರಶ್ನಿಸಿದರು. +ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ +ಆಗಲೂ ಏರಿದ ಧ್ವನಿಯಲ್ಲಿ ಆಡಳಿತ ಮತ್ತು ವಿರೋಧಪಕ್ಷಗಳ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕೃಷ್ಣಭೈರೇಗೌಡ ಮಾತನಾಡಿ, 40 ಸೈನಿಕರು ಮೃತಪಟ್ಟರೂ ಯಾರನ್ನಾದರೂ ಬಂಸಿದ್ದಾರಾ? ಅವರ ಸಾವಿಗೆ ಯಾರು ಕಾರಣ? 5 ವರ್ಷವಾಯಿತು ಯಾವೊಬ್ಬ ಕಾರಣಕರ್ತರನ್ನು ಪತ್ತೆ ಹಚ್ಚಿಲ್ಲ ಎಂದರು. ಇದಕ್ಕೆ ಸಚಿವ ಶಿವರಾಜ್ ತಂಗಡಗಿ ಧ್ವನಿಗೂಡಿಸಿ ಮಾತನಾಡಿದರು. ಆಗ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಮಾತನಾಡಲು ಮುಂದಾದಾಗ ನಾಳೆ ಬೆಳಿಗ್ಗೆಯವರೆಗೂ ಮಾತನಾಡಲು ಅವಕಾಶ ಕೊಡಲಾಗುವುದು. ಯಾರ್ಯಾರು ಮಾತನಾಡಬೇಕೆನ್ನುತ್ತೀರೊ ಅವರ ಪಟ್ಟಿ ಕೊಡಿ ಎಂದು ಸಭಾಧ್ಯಕ್ಷರು ಕೇಳಿದರು. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಘೋಷಣೆ ಕೂಗಿ ವ್ಯಕ್ತಿಯನ್ನು ರಾಜಾಜಿನಗರದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಅವರ ಬಾಯಿ ಮುಚ್ಚಿದ್ದಾರೆ. ಆ ರೀತಿ ಘೋಷಣೆ ಕೂಗದೇ ಇದ್ದರೆ ಏಕೆ ಬಾಯಿ ಮುಚ್ಚಬೇಕಿತ್ತು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_220_12.txt b/eesanje/url_46_220_12.txt new file mode 100644 index 0000000000000000000000000000000000000000..c23beb74e8c450bc07f9649991861e1be28a9396 --- /dev/null +++ b/eesanje/url_46_220_12.txt @@ -0,0 +1,5 @@ +ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್ +ಕಾರವಾರ,ಫೆ.28- ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಆಗಲಿಲ್ಲ ಎಂದು ಯಲ್ಲಾಪುರದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ. ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು. +ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ. ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ. ಅದು ಜಿಲ್ಲಾಮಟ್ಟದಲ್ಲಿ ಮಾತ್ರ ಎಂದು ಹೇಳಿದ್ದಾರೆ. +ಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್ +ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಾಧಾನ ಇಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_220_2.txt b/eesanje/url_46_220_2.txt new file mode 100644 index 0000000000000000000000000000000000000000..5774333fb784b802af7b3bbe47dc294c234f7d29 --- /dev/null +++ b/eesanje/url_46_220_2.txt @@ -0,0 +1,5 @@ +‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ : ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯ ವಿಚಾರಣೆ +ಬೆಂಗಳೂರು,ಫೆ.29- ವಿಧಾನಸೌಧದ ಮೊಗಸಾಲೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಧಾನಸೌಧ ಠಾಣೆ ಪೊಲೀಸರು ಮೊಹಮ್ಮದ್ ಶಫಿ ನಾಶಿಪುಡಿ ಸೇರಿದಂತೆ 8 ಮಂದಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. +ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್‍ರವರು ಗೆದ್ದು ವಿಧಾನಸೌಧದ ಮೊಗಸಾಲೆಯಲ್ಲಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಯಾರ್ಯಾರು ಇದ್ದರು, ಅವರ ಪರ ಯಾರ್ಯಾರು ಘೋಷಣೆ ಕೂಗುತ್ತಿದ್ದರು, ಅಂತವರ ಒಂದು ಪಟ್ಟಿಯನ್ನು ಪೊಲೀಸರು ಮಾಡಿಕೊಂಡಿದ್ದಾರೆ. +ಘಟನೆಗೆ ಸಂಬಂಸಿದಂತೆ ಮಾಧ್ಯಮಗಳಲ್ಲಿ ಬಿತ್ತರವಾದ ವಿಡಿಯೋ ತುಣುಕುಗಳನ್ನು ಪೊಲೀಸರು ಕೂಲಂಕುಶವಾಗಿ ಪರಿಶೀಲನೆ ನಡೆಸಿ ಈ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆದರೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿ ಯಾರು ಎಂಬುದನ್ನು ನಿಖರವಾಗಿ ಇನ್ನೂ ಪತ್ತೆ ಹಚ್ಚಲಾಗಿಲ್ಲ. ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್‍ರ ಬೆಂಬಲಿಗ ಬ್ಯಾಡಗಿ ಮೆಣಸಿನಕಾಯಿ ವ್ಯಾಪಾರಿ ಮೊಹಮ್ಮದ್ ಶಫಿ ನಾಶಿಪುಡಿಯ ಧ್ವನಿ ಹೋಲಿಕೆ ಹಿನ್ನೆಲೆಯಲ್ಲಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. +ಬ್ಯಾಡಗಿಯ ಬಿಜೆಪಿ ಮುಖಂಡರು ಸಹ ಈ ವ್ಯಾಪಾರಿಯ ಮೇಲೆ ಶಂಕೆ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ನಾಸಿರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಿಯಾಣೆ ಆ ರೀತಿ ಘೋಷಣೆ ಕೂಗಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಮೊಹಮ್ಮದ್ ಶಫಿ ತಿಳಿಸಿದ್ದಾನೆಂದು ಗೊತ್ತಾಗಿದೆ. \ No newline at end of file diff --git a/eesanje/url_46_220_3.txt b/eesanje/url_46_220_3.txt new file mode 100644 index 0000000000000000000000000000000000000000..8cf1c88679da2ecbd0bbd7eff90475883c81ca31 --- /dev/null +++ b/eesanje/url_46_220_3.txt @@ -0,0 +1,5 @@ +ದೇಶದ್ರೋಹಿಗಳಿಗೆ ಬೆಂಬಲ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು +ಬೆಂಗಳೂರು,ಫೆ.29- ದೇಶದ್ರೋಹಿಗಳಿಗೆ ಬೆಂಬಲ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ತಿಳಿಸಿದರು.ಬಜೆಟ್ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿಯವರು ವಿಧಾನಸಭೆಯಲ್ಲಿ ಉತ್ತರ ನೀಡುತ್ತಿದ್ದರು. ಈ ಹಂತದಲ್ಲಿ ಬಿಜೆಪಿ ಶಾಸಕರು ಸಭಾಧ್ಯಕ್ಷರ ಮುಂದಿನ ಬಾವಿಯಲ್ಲಿ ನಿಂತು ಧರಣಿ ನಡೆಸಿ ಘೋಷಣೆ ಕೂಗುವುದನ್ನು ಮುಂದುವರೆಸಿದರು. +ಆದರೂ ಮುಖ್ಯಮಂತ್ರಿಯವರು ತಮ್ಮ ಉತ್ತರವನ್ನು ಮುಂದುವರೆಸಿದರು. ಕಾಗದ ಪತ್ರಗಳನ್ನು ಹರಿದು ತೂರಿದ ಬಿಜೆಪಿ ಶಾಸಕರು ನಾನಾ ರೀತಿಯ ಘೋಷಣೆಗಳ ಮೂಲಕ ಮುಖ್ಯಮಂತ್ರಿಗಳ ಉತ್ತರಕ್ಕೆ ಅಡ್ಡಿಪಡಿಸಿದರು. ಆದರೂ ಸಿದ್ದರಾಮಯ್ಯ ಜಗ್ಗದೇ ತಮ್ಮ ಮಾತುಗಳನ್ನು ಮುಂದುವರೆಸಿ ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಎಳೆಎಳೆಯಾಗಿ ವಿವರಿಸಲಾರಂಭಿಸಿದರು. +ಇದರಿಂದ ಸಿಡಿಮಿಡಿಗೊಂಡ ಬಿಜೆಪಿ ಶಾಸಕರು ಏರಿದ ಧ್ವನಿಯಲ್ಲಿ ಘೋಷಣೆ ಕೂಗುತ್ತಿದ್ದರು. ಕೊನೆಗೆ ಆರ್.ಅಶೋಕ್‍ರವರು ವಿಧಾನಸಭೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. 68 ಘಂಟೆ ಕಳೆದರೂ ಒಬ್ಬ ಆರೋಪಿಯನ್ನೂ ಬಂಸಿಲ್ಲ. ಈ ಸರ್ಕಾರ ಹಿಂದೂ ವಿರೋಯಾಗಿದೆ. ದೇಶದ್ರೋಹಿಗಳಿಗೆ ಬೆಂಬಲ ಕೊಡುತ್ತಿದೆ. ಮೊನ್ನೆ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣದೊಳಗೂ ಘೋಷಣೆ ಕೂಗಬಹುದು. ಘೋಷಣೆ ಕೂಗಿದ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು. +ದೇಶದ್ರೋಹಿಗಳ ಜೊತೆ ಶಾಮೀಲಾಗಿರುವ ಈ ಸರ್ಕಾರವನ್ನು ವಜಾಗೊಳಿಸಬೇಕೆಂದು ನಾವು ರಾಜ್ಯಪಾಲರಿಗೆ ದೂರು ನೀಡುತ್ತೇವೆ, ಸಭಾತ್ಯಾಗ ಮಾಡುತ್ತೇವೆ ಎಂದು ಹೇಳಿ ತಮ್ಮ ಶಾಸಕರೊಂದಿಗೆ ಕಲಾಪದಿಂದ ಹೊರನಡೆದರು.ಈ ವೇಳೆ ಸಿದ್ದರಾಮಯ್ಯನವರು ನಿಮ್ಮ ಕೈಲಿ ಬೇರೇನೂ ಆಗುವುದಿಲ್ಲ, ಸರಿ ನಡಿಯಿರಿ ಎಂದು ಲೇವಡಿ ಮಾಡಿದರು. \ No newline at end of file diff --git a/eesanje/url_46_220_4.txt b/eesanje/url_46_220_4.txt new file mode 100644 index 0000000000000000000000000000000000000000..5701433af0bef296182f0d4547f6a58b8894343c --- /dev/null +++ b/eesanje/url_46_220_4.txt @@ -0,0 +1,6 @@ +‘ಹರ್ ಘರ್ ಮೋದಿ’ ಎಂದು ಕೂಗಿದ ಬಿಜಿಪಿಯವರಿಗೆ ‘ಜೈ ಸೀತಾರಾಮ್’ ಘೋಷಣೆ ಕೂಗಿ ತಿರುಗೇಟು ನೀಡಿದ ಸಿಎಂ +ಬೆಂಗಳೂರು,ಫೆ.29- ವಿಧಾನಸಭೆಯ ಸಭಾಂಗಣದಲ್ಲಿ ಬಿಜೆಪಿಯವರು ಹರ್‍ಘರ್ ಮೋದಿ ಘೋಷಣೆ ಕೂಗಿದಾಗ ಅದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಸೀತಾರಾಮ್ ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು.ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಬಿಜೆಪಿಯವರು ಧರಣಿ ನಡೆಸುತ್ತಿದ್ದರು. ರಾಜ್ಯಸಭೆ ಚುನಾವಣೆ ಗೆಲುವಿನ ಸಂಭ್ರಮಾಚರಣೆಯ ವೇಳೆ ಕಾಂಗ್ರೆಸ್‍ನ ನಾಸಿರ್ ಹುಸೇನ್ ಜೊತೆಯಲ್ಲಿ ನಿಂತಿದ್ದವರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಿಜೆಪಿ ಧರಣಿ ನಡೆಸುತ್ತಿತ್ತು. +ಆ ವೇಳೆಯಲ್ಲಿ ಬಿಜೆಪಿಯವರು ಧರಣಿ ನಡೆಸುತ್ತಲೇ ಕಾಗದ ಪತ್ರಗಳನ್ನು ತೂರುವ ಮೂಲಕ ನಾನಾ ರೀತಿಯ ಘೋಷಣೆಗಳನ್ನು ಮೊಳಗಿಸಿದರು.ಮೋದಿ ಮೋದಿ ಎಂದು ಬಿಜೆಪಿ ಶಾಸಕರು ಕೂಗುತ್ತಿದ್ದಂತೆ ಸಿದ್ದರಾಮಯ್ಯ ಜೈ ಸೀತಾರಾಮ್ ಎಂದು ಕೂಗಿದರು.ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಶಾಸಕರು ಜೈ ಸೀತಾರಾಮ್ ಎಂದು ಜೈಕಾರ ಹಾಕಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಯಾರು ಏನು ಹೇಳುತ್ತಿದ್ದಾರೆಂಬುದೇ ಕೇಳಿಸದಾಯಿತು. +ಮುಂದುವರೆದ ಬಿಜೆಪಿ ಶಾಸಕರು ಹರ್‍ಹರ್ ಮೋದಿ, ಹರ್‍ಘರ್ ಮೋದಿ ಎಂದು ಘೋಷಣೆ ಕೂಗಿದರು. ಅದಕ್ಕೆ ಕೆಂಡ ಕಾರಿದ ಸಿದ್ದರಾಮಯ್ಯ ಮೋದಿ ಇಲ್ಲಿದ್ದಾರೆಯೇ? ಮತ್ತೆ ಅವರ ಹೆಸರನ್ನು ಏಕೆ ಕರೆಯುತ್ತೀರಿ ಎಂದು ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದರ ಬಗ್ಗೆ ಚರ್ಚೆ ಮಾಡುವ ಬದಲಾಗಿ ಮೋದಿ ಮೋದಿ ಎಂದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.ಆದರೂ ಸುಮ್ಮನಾಗದ ಬಿಜೆಪಿಯವರು ಹಲವು ರೀತಿಯ ಘೋಷಣೆಗಳನ್ನು ಮುಂದುವರೆಸಿದರು. +ಬಿಜೆಪಿಯವರು ಜೈ ಕೆಂಪೇಗೌಡ ಎಂದು ಘೋಷಣೆ ಕೂಗಿದರು. ಅದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಆಚರಣೆ ಮಾಡುವುದನ್ನು ಜಾರಿಗೆ ತಂದಿದ್ದು ನಾವು. ನೀವು ಬರೀ ಘೋಷಣೆ ಕೂಗುತ್ತೀರ, ನಾವು ಕೆಲಸ ಮಾಡಿ ತೋರಿಸುತ್ತೇವೆ ಎಂದರು. +ಬಿಜೆಪಿಯವರು ಜೈ ಸಿದ್ಧರಾಮೇಶ್ವರ ಎಂದು ಘೋಷಣೆ ಕೂಗಿದಾಗ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವಣ್ಣನವರನ್ನು ನಾಡಿನ ಸಾಂಸ್ಕøತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಸರ್ಕಾರ. ವಿಜಯಪುರ ಮಹಿಳಾ ವಿಶ್ವವಿದ್ಯಾನಿಲಯಕ್ಕೆ ಅಕ್ಕಮಹಾದೇವಿ ಹೆಸರನ್ನು ನಾಮಕರಣ ಮಾಡಿದ್ದೇವೆ ಎಂದು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದರು.ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ ಬಳಿಕ ಕಾಂಗ್ರೆಸ್ ಶಾಸಕರು ಜೈ ಜೈ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. \ No newline at end of file diff --git a/eesanje/url_46_220_5.txt b/eesanje/url_46_220_5.txt new file mode 100644 index 0000000000000000000000000000000000000000..23033e6128c9e450039595af189bfd9ba021f2e2 --- /dev/null +++ b/eesanje/url_46_220_5.txt @@ -0,0 +1,11 @@ +ವಿಧಾನಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.29- ಕೇವಲ 12 ಸಾವಿರ ರೂ.ಗಳ ಹಣ ಕೊಟ್ಟು ಬಡವರ ಮನೆ ನಿರ್ಮಾಣದ ಯೋಜನೆಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯೊಂದು ಹೆಸರನ್ನಿಟ್ಟುಕೊಂಡು ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ರಾಜ್ಯಸರ್ಕಾರದ ಆಯವ್ಯಯದ ಮೇಲೆ ನಡೆದ ಸುದೀರ್ಘ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿಯವರು ಕೇಂದ್ರದ ತಾರತಮ್ಯವನ್ನು ಎಳೆಎಳೆಯಾಗಿ ಬಿಡಿಸಿಟ್ಟು ವಾಗ್ದಾಳಿ ನಡೆಸಿದರು. +ಪ್ರಧಾನಮಂತ್ರಿ ಆವಾಜ್ ಯೋಜನೆಗೆ ಕೇಂದ್ರ ಸರ್ಕಾರ ಕೇವಲ ಒಂದೂವರೆ ಲಕ್ಷ ರೂ.ಗಳನ್ನು ಮಾತ್ರ ನೀಡುತ್ತದೆ. ಅದರಲ್ಲಿ ಜಿಎಸ್‍ಟಿ ರೂಪದಲ್ಲಿ 1.38 ಲಕ್ಷ ರೂ.ಗಳನ್ನು ವಾಪಸ್ ತೆಗೆದುಕೊಳ್ಳುತ್ತಾರೆ. ರಾಜ್ಯಸರ್ಕಾರ ಈ ಯೋಜನೆಗೆ 6 ರಿಂದ 7 ಲಕ್ಷ ರೂ.ಗಳನ್ನು ನೀಡುತ್ತಿದೆ. ಆದರೂ ಹೆಸರು ಮಾತ್ರ ಪ್ರಧಾನಮಂತ್ರಿ ಆವಾಜ್ ಯೋಜನೆಯಾಗಿದೆ ಎಂದು ಆರೋಪಿಸಿದರು. +ಕೇಂದ್ರ ಪುರಸ್ಕøತ ಯೋಜನೆಗಳಿಗೆ ರಾಜ್ಯಸರ್ಕಾರದ ಪಾಲು ಶೇ.50 ಕ್ಕಿಂತಲೂ ಹೆಚ್ಚಿನದಾಗಿದೆ. ಈ ಹಿಂದೆ ಮನಮೋಹನ್‍ಸಿಂಗ್‍ರವರು ಪ್ರಧಾನಿಯಾಗಿದ್ದಾಗ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಶೇ.70 ರಿಂದ 80 ರಷ್ಟು ಆರ್ಥಿಕ ನೆರವು ನೀಡುತ್ತಿದ್ದರು. ರಾಜ್ಯದ ಪಾಲು ಶೇ.20 ರಿಂದ 30 ರಷ್ಟಿತ್ತು. ಪ್ರತಿವರ್ಷ ಇದು ಹೆಚ್ಚಾಗುತ್ತಾ ಬಂದಿದೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಪಾಲು ಸರಿಸಮನಾಗಿ ಹಂಚಿಕೆಯಾಗುತ್ತಿದೆ. ಆದರೂ ಪ್ರಧಾನಿಯವರು ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ವಿವರಿಸಿದರು. +ಸರ್ವ ಶಿಕ್ಷಣ ಅಭಿಯಾನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿ, ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ಪ್ರಧಾನಮಂತ್ರಿ ಆವಾಜ್ ಯೋಜನೆಗಳಲ್ಲಿ ರಾಜ್ಯಸರ್ಕಾರ ಕೇಂದ್ರಕ್ಕಿಂತಲೂ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ. ಅದನ್ನು ಮರೆಮಾಚಿ ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಸರ್ವ ಶಿಕ್ಷಣ ಅಭಿಯಾನದಲ್ಲಿ ಕೇಂದ್ರ ವರ್ಷಕ್ಕೆ 770 ಕೋಟಿ ರೂ. ಕೊಟ್ಟರೆ, ರಾಜ್ಯ 472 ಕೋಟಿ ರೂ. ನೀಡುತ್ತಿದೆ. ಇದರ ಹೊರತಾಗಿ ರಾಜ್ಯಸರ್ಕಾರ ಹೆಚ್ಚುವರಿಯಾಗಿ 1,528 ಕೋಟಿ ರೂ.ಗಳನ್ನು ಖರ್ಚು ಮಾಡುತ್ತಿದೆ. +ಮಧ್ಯಾಹ್ನದ ಬಿಸಿಯೂಟಕ್ಕೆ ಕೇಂದ್ರದ ಪಾಲು 594 ಕೋಟಿ, ರಾಜ್ಯದ ಪಾಲು 340 ಕೋಟಿ, ಹೆಚ್ಚುವರಿಯಾಗಿ ರಾಜ್ಯಸರ್ಕಾರ 967 ಕೋಟಿ ರೂ. ನೀಡುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಮೋದಿ ಗ್ಯಾರಂಟಿ ಎಂದು ದೊಡ್ಡದಾಗಿ ಪ್ರಚಾರ ಪಡೆಯುತ್ತಿದ್ದಾರೆ. ಅದಕ್ಕೆ ಕೇಂದ್ರ ನೀಡುತ್ತಿರುವುದು 187 ಕೋಟಿ ರೂ. ಮಾತ್ರ. ರಾಜ್ಯ 124 ಕೋಟಿ ರೂ. ಹೊಂದಾಣಿಕೆ ಹಣದ ಜೊತೆಗೆ ಹೆಚ್ಚುವರಿಯಾಗಿ 624 ಕೋಟಿ ರೂ.ಗಳನ್ನುಒದಗಿಸುತ್ತಿದೆ. +ವಿಧವಾ ವೇತನ, ವಿಶೇಷ ಚೇತನರ ಮಾಸಾಶನ, ವೃದ್ಧಾಪ್ಯ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗೆ ಕೇಂದ್ರ ಸರ್ಕಾರ 520 ಕೋಟಿ ರೂ. ಕೊಟ್ಟರೆ, ರಾಜ್ಯಸರ್ಕಾರ 324 ಕೋಟಿ ರೂ. ಹೊಂದಾಣಿಕೆಯ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 8,569 ಕೋಟಿ ರೂ.ಗಳನ್ನು ನೀಡುತ್ತಿದೆ.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಕೇಂದ್ರದ ಪಾಲು ಶೇ.32 ರಷ್ಟಿದ್ದರೆ, ರಾಜ್ಯದ ಪಾಲು ಶೇ.28 ರಷ್ಟು. ನಾವು ಹೆಚ್ಚುವರಿಯಾಗಿ ಶೇ.33 ರಷ್ಟು ಹಣವನ್ನು ಖರ್ಚು ಮಾಡುತ್ತಿದ್ದೇವೆ. +ಇನ್ನು ಬಡವರಿಗೆ ಮನೆ ನಿರ್ಮಿಸಿಕೊಡುವ ಪ್ರಧಾನಮಂತ್ರಿ ಆವಾಜ್ ಯೋಜನೆಯಲ್ಲಿ ಕೇಂದ್ರದ ಪಾಲು ಜಿಎಸ್‍ಟಿ ನಂತರ ಕೇವಲ 12 ಸಾವಿರ ರೂ. ಮಾತ್ರ.ಒಟ್ಟಾರೆ ಕೇಂದ್ರ ಸರ್ಕಾರಗಳ ಪುರಸ್ಕøತ ಯೋಜನೆಗಳಡಿ ರಾಜ್ಯಸರ್ಕಾರಕ್ಕೆ ದೊರೆಯುತ್ತಿರುವುದು 13,005 ಕೋಟಿ ರೂ. ಮಾತ್ರ. +ಇದನ್ನು ಯಾವ ರೀತಿ ಮೋದಿ ಗ್ಯಾರಂಟಿ ಎಂದು ಕರೆಯಬೇಕೆಂದು ಪ್ರಶ್ನಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎಂದು ಮೋದಿ ಟೀಕಿಸಿದರು.ನಾವು ಪಂಚಖಾತ್ರಿ ಯೋಜನೆಗಳ ಜಾರಿ ಬಳಿಕವೂ ಆರ್ಥಿಕವಾಗಿ ಸಬಲರಾಗಿದ್ದೇವೆ, ಸದೃಢರಾಗಿದ್ದೇವೆ. ಈ ವರ್ಷ ರಾಜಸ್ವದ ಕೊರತೆಯಿದೆ. ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚುವರಿ ಆದಾಯದ ಬಜೆಟ್ ಮಂಡಿಸುವ ವಿಶ್ವಾಸವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದರು. +ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಮೋದಿಯವರು ಈಗ ನಮ್ಮದೇ ಗ್ಯಾರಂಟಿಗಳನ್ನು ಕದ್ದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಬರ ನಿರ್ವಹಣೆಗೆ ಹಣ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಘೋಷಿಸಿದ ಹಣವೂ ಬಿಡುಗಡೆಯಾಗಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಹೆಚ್ಚುವರಿಯಾಗಿ 5,495 ಕೋಟಿ ರೂ.ಗಳನ್ನು ನೀಡಬೇಕು ಎಂಬ ಶಿಫಾರಸ್ಸು ಇತ್ತು. ಅದನ್ನು ತಿರಸ್ಕರಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಂತಿಮ ವರದಿಯಲ್ಲಿ ವಿಶೇಷ ಅನುದಾನದ ಪ್ರಸ್ತಾಪ ಇರಲಿಲ್ಲ. ಹಾಗಾಗಿ ನೀಡಲಿಲ್ಲ ಎಂದಿದ್ದಾರೆ. +ಆದರೆ ಮಧ್ಯಂತರ ವರದಿಯಲ್ಲಿನ ಎಲ್ಲಾ ಶಿಫಾರಸ್ಸುಗಳನ್ನು ಕೇಂದ್ರ ಅನುಷ್ಠಾನಗೊಳಿಸಿದೆ. ರಾಜ್ಯಕ್ಕೆ ವಿಶೇಷ ಅನುದಾನ ನೀಡಬೇಕೆಂಬುದನ್ನು ಮಾತ್ರ ತಿರಸ್ಕರಿಸಲಾಗಿದೆ ಎಂದು ದೂರಿದರು. ಕೆರೆ ಅಭಿವೃದ್ಧಿ, ಪೆರಿಫಿರಲ್ ರಿಂಗ್ ರಸ್ತೆ ಅಭಿವೃದ್ಧಿ ಸೇರಿದಂತೆ 11,495 ಕೊಟಿ ರೂ.ಗಳ ಹೆಚ್ಚುವರಿ ಹಣವನ್ನು ನೀಡದೇ ತಿರಸ್ಕರಸುವ ಮೂಲಕ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅನ್ಯಾಯ ಮಾಡಿದ್ದಾರೆ. ಬಿಜೆಪಿಯ 25 ಮಂದಿ ಸಂಸದರು ಸೇರಿದಂತೆ ಆ ಪಕ್ಷದ ಯಾವ ನಾಯಕರಿಗೂ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ಎದುರು ನಿಂತು ರಾಜ್ಯಕ್ಕೆ ನ್ಯಾಯ ಕೇಳುವ ದಮ್ಮು, ತಾಕತ್ತು ಇಲ್ಲ. ಇವರು ಕನ್ನಡ ದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_220_6.txt b/eesanje/url_46_220_6.txt new file mode 100644 index 0000000000000000000000000000000000000000..8b6c67e595e064ecd727ce373c004da00f4516af --- /dev/null +++ b/eesanje/url_46_220_6.txt @@ -0,0 +1,4 @@ +ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರ ಘೋಷಣೆ +ಬೆಂಗಳೂರು,ಫೆ.29- ಬಹುನಿರೀಕ್ಷಿತ ನಿಗಮ, ಮಂಡಳಿ, ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ಘೋಷಿಸಲಾಗಿದೆ. ಕಳೆದ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಪಟ್ಟಿಯನ್ನು ಅಂತಿಮಗೊಳಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.ವಿಧಾನಪರಿಷತ್ ಮಾಜಿ ಸದಸ್ಯರೊಬ್ಬರು ಸೇರಿದಂತೆ 44 ಹಿರಿಯ ಕಾಂಗ್ರೆಸ್ ಮುಖಂಡರಿಗೆ ನಿಗಮ ಮಡಳಿ ಅಧ್ಯಕ್ಷ ಪಟ್ಟ ಲಭಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ ಅದೃಷ್ಟ ಒಲಿದಿದೆ. +ಪ್ರಮುಖವಾಗಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕರಾಗಿ ಹಾಸ್ಯನಟ ಸಾಧು ಕೋಕಿಲ ಅವರನ್ನು ನೇಮಿಸಲಾಗಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ.ನಾಗಲಕ್ಷ್ಮಿ ಚೌಧರಿ ಅವರನ್ನು ನೇಮಿಸಲಾಗಿದೆ. +ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆಮುಂಡರಗಿ ನಾಗರಾಜು – ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಕಾರ ಉಪಾಧ್ಯಕ್ಷಬಿ.ಹೆಚ್.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷಡಾ.ಅಂಶುಮಂತ್ – ಭದ್ರಾ ಕಾಡಾ ಅಧ್ಯಕ್ಷಜೆ.ಎಸ್.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಕಾರ ಅಧ್ಯಕ್ಷಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷದೇವೇಂದ್ರಪ್ಪ ಮರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಕಾರದ ಅಧ್ಯಕ್ಷಎಸ್.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆಹೆಚ್.ಸಿ.ಸುೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷಡಾ.ನಾಗಲಕ್ಷ್ಮಿ ಚೌಧರಿ – ಕರ್ನಾಟಕ ರಾಜ್ಯ ಮಹಿಳಾ ಆಯೋಗಎಚ್.ಎಸ್.ಸುಂದರೇಶ್- ಶಿವಮೊಗ್ಗ ನಗಾರಭಿವೃದ್ಧಿ ಪ್ರಾಕಾರಎಂ.ಆರ್.ಮಂಜುನಾಥ್ – ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಜಯಣ್ಣ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಸಂಪತ್ ರಾಜ್ – ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಪದ್ಮಾವತಿ – ಮಹಿಳಾ ಅಭಿವೃದ್ಧಿ ನಿಗಮಶ್ರೀನಿವಾಸ್ – ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಶಾಕಿರ್ ಸನದಿ – ಹುಬ್ಬಳ್ಳಿ, ಧಾರವಾಡ ನಗರಾಭಿವೃದ್ಧಿ ಪ್ರಾಧ್ಗಿಕಾರಸೋಮಣ್ಣ ಬೇವಿನಮರದ – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಕಾರಮೆಹಬೂಬ್ ಪಾಷ – ಕಂಠೀರವ ಸ್ಟುಡಿಯೋಕೀರ್ತಿ ಗಣೇಶ್ – ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಮಜರ್‍ಖಾನ್ – ದೇವರಾಜ ಅರಸು ಟ್ರಕ್ ಟರ್ಮಿನಲ್ಸವಿತಾ ರಘು – ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗಲಲಿತ್ ರಾಘವ್ – ಕರ್ನಾಟಕ ವಿದ್ಯುತ್ ಕಾರ್ಖಾನೆಜಿ.ಎಸ್.ಮಂಜುನಾಥ್ – ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಮಾಲಾ ನಾರಾಯಣ ರಾವ್ – ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತರಿಜ್ವಾನ್ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮಕೇಶವರೆಡ್ಡಿ – ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಕಾರತಾಜ್‍ಪೀರ್ – ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಕಾರಗಂಗಾಧರ್ – ಮೈಸೂರು ಸಕ್ಕರೆ ಕಾರ್ಖಾನೆಅಲ್ತಾಫ್ – ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಕಾರಮರಿಸ್ವಾಮಿ – ಮೈಸೂರು ಕಾಡಾ ಅಧ್ಯಕ್ಷಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. \ No newline at end of file diff --git a/eesanje/url_46_220_7.txt b/eesanje/url_46_220_7.txt new file mode 100644 index 0000000000000000000000000000000000000000..c299e18f93520120fe07a1ee94b950c7df275df9 --- /dev/null +++ b/eesanje/url_46_220_7.txt @@ -0,0 +1,6 @@ +ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಚಪ್ಪಾಳೆ ಹೊಡೆದು, ಭಜನೆ ಮಾಡಿ ಬಿಜೆಪಿ ಪ್ರತಿಭಟನೆ +ಬೆಂಗಳೂರು,ಫೆ.29- ರಾಜ್ಯಸಭೆ ಚುನಾವಣಾ ಫಲಿತಾಂಶದ ನಂತರ ನಡೆದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ಬಂಧಿಸಿಲ್ಲ ಎಂದು ಆರೋಪಿಸಿ ಸರ್ಕಾರದ ಉತ್ತರಕ್ಕೆ ತೃಪ್ತರಾಗದೆ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿಂದು ಚಪ್ಪಾಳೆ ಬಡಿದು ಭಜನೆ ಮಾಡುವ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದರು. +ಪ್ರತಿಪಕ್ಷಗಳ ಶಾಸಕರ ಧರಣಿಯ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮೇಲಿನ ಚರ್ಚೆಗೆ ಒಂದೆಡೆ ಉತ್ತರ ನೀಡುತ್ತಿದ್ದರೆ, ಮತ್ತೊಂದೆಡೆ ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ನಡೆಸುತ್ತಿದ್ದ ಬಿಜೆಪಿ ಶಾಸಕರು ವಿವಿಧ ರೀತಿಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. +ಸ್ವಲ್ಪ ಹೊತ್ತಿನ ನಂತರ ಬಾವಿಯಲ್ಲಿ ಸುತ್ತುವರೆಯುತ್ತಾ, ಚಪ್ಪಾಳೆ ಬಡಿಯುತ್ತಾ ಪ್ರತಿಭಟನೆ ನಡೆಸಿದರು. ಅಲ್ಲದೆ ಕಾಗದಪತ್ರಗಳನ್ನು ಹರಿದು ಸಭಾಧ್ಯಕ್ಷರ ಪೀಠದತ್ತ ತೂರಿದರು. ಬಿಜೆಪಿ ಶಾಸಕರಿಗೆ ಬೆಂಬಲ ನೀಡಿ ಧರಣಿಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಶಾಸಕರು ಮಾತ್ರ ಮೌನವಾಗಿದ್ದರು. +ಭಜನೆ ರೀತಿ ಚಪ್ಪಾಳೆ ತಟ್ಟುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಸಭೆ ಚುನಾವಣೆಯಲ್ಲಿ ಅಡ್ಡ ಮತ ಹಾಕಿದ್ದನ್ನು ಮರೆಮಾಚಲು ನಾಟಕವಾಡುತ್ತಿದ್ದಾರೆ. ಇಲ್ಲಿ ಭಜನೆ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು. +ರಾಜ್ಯಸಭೆ ಚುನಾವಣೆಯಲ್ಲಿ ಒಬ್ಬರು ನೇರವಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರೆ ಇನ್ನೊಬ್ಬ ಬಿಜೆಪಿ ಶಾಸಕರು ಮತದಾನ ಮಾಡದೆ ಗೈರು ಹಾಜರಾಗಿದ್ದಾರೆ. ಆದರೆ ಇಲ್ಲಿ ಭಜನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಶಾಸಕರು ಬಾವಿಯಲ್ಲಿಲ್ಲ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿದ್ದಾರೆ ಅನಿಸುತ್ತಿದೆ ಎಂದರು. ಮುಖ್ಯಮಂತ್ರಿ ಉತ್ತರ ನೀಡುತ್ತಿದ್ದಂತೆ ಬಿಜೆಪಿ ಶಾಸಕರು ಧರಣಿ ನಡೆಸಿ ಗದ್ದಲ ಎಬ್ಬಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಲೇ ಇದ್ದರು. \ No newline at end of file diff --git a/eesanje/url_46_220_8.txt b/eesanje/url_46_220_8.txt new file mode 100644 index 0000000000000000000000000000000000000000..513a5d18000312a7c61abaf8c40f8de264adda9b --- /dev/null +++ b/eesanje/url_46_220_8.txt @@ -0,0 +1,8 @@ +ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವನಾರು..? ಹೇಗೆ ತಪ್ಪಿಸಿಕೊಂಡ..? : ಸರ್ಕಾರದ ಸುತ್ತ ಹಲವು ಅನುಮಾನಗಳ ಹುತ್ತ +ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಬಿಜೆಪಿ ಶರವೇಗದಲ್ಲಿ ರಾಜಕೀಯ ಮಾಡುತ್ತಿದ್ದರೆ, ಕಾಂಗ್ರೆಸ್ ಅನುಸರಿಸುತ್ತಿರುವ ನಿಧಾನಗತಿಯ ಧೋರಣೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ನಿನ್ನೆ ಸಂಜೆ ರಾಜ್ಯಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್‍ನ ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಕೆಲವು ವ್ಯಕ್ತಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ ಎಂದು ದೂರಲಾಗಿದೆ. +ಅದರ ಬೆನ್ನಲ್ಲೇ ಮುಖ್ಯಮಂತ್ರಿಯವರ ಅಧಿಕೃತ ಮೂಲಗಳಿಂದ ಮತ್ತೊಂದು ವಿಡಿಯೋವನ್ನು ಬಹಿರಂಗಗೊಳಿಸಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿಲ್ಲ, ನಾಸಿರ್ ಸಾಬ್ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ ಎಂದು ಸಮರ್ಥಿಸಿಕೊಳ್ಳುವ ಪ್ರಯತ್ನ ನಡೆದಿದೆ. ಆದರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಿಜೆಪಿ ಪಾದರಸದಂತೆ ಚುರುಕಾಗಿದ್ದು, ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದೆ. ತಡರಾತ್ರಿಯವರೆಗೂ ವಿಧಾನಸೌಧದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದೆ. ಪೊಲೀಸರಿಗೆ ದೂರು ನೀಡಿದೆ. +ಇಂದು ಬೆಳಿಗ್ಗೆ ಶಾಸಕರ ಭವನದಿಂದ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ನಾನಾರೀತಿಯ ಚಟುವಟಿಕೆಗಳ ಮೂಲಕ ವಿವಾದಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಆದರೆ ಘಟನೆ ಕುರಿತು ಆರೋಪ ಕೇಳಿ ಬಂದ ತಕ್ಷಣವೇ ನಾಸಿರ್ ಹುಸೇನ್ ಅವರ ಪ್ರತಿಕ್ರಿಯೆ ವಿವಾದಕ್ಕೀಡಾಗುವ ಮೂಲಕ ಆರಂಭದಲ್ಲೇ ಕಾಂಗ್ರೆಸ್ ಪ್ರಕರಣವನ್ನು ನಿಭಾಯಿಸುವಲ್ಲಿ ಎಡವಟ್ಟು ಮಾಡಿಕೊಂಡಿದೆ. ಲೋಕಸಭೆ ಚುನಾವಣೆಯ ಸಂದರ್ಭವಾಗಿರುವುದರಿಂದ ಅತ್ಯಂತ ಸೂಕ್ಷ್ಮವಾಗಿ ಪ್ರಕರಣ ನಿಭಾಯಿಸಬಹುದಾಗಿದ್ದರೂ ಎಲ್ಲಾ ಅವಕಾಶಗಳನ್ನೂ ಕೈಚೆಲ್ಲಿರುವ ಸರ್ಕಾರ ವಿರೋಧಪಕ್ಷಗಳಿಗೆ ಘೋಷಣೆಯ ಅಸ್ತ್ರ ಕೊಟ್ಟಿದೆ. +ಶಕ್ತಿ ಕೇಂದ್ರ ವಿಧಾನಸೌಧ ಅತ್ಯಂತ ಸಂಕೀರ್ಣ ಹಾಗೂ ಸೂಕ್ಷ್ಮ ಭದ್ರತಾ ವಲಯ. ವಿಧಾನಸೌಧ ಪ್ರವೇಶಿಸಬೇಕಾದರೆ ನಾನಾ ರೀತಿಯ ತಪಾಸಣೆಗಳಿರುತ್ತವೆ. ಸೂಕ್ತ ದಾಖಲೆ ಪತ್ರಗಳು ಹಾಗೂ ಪರಿಚಯ ಪತ್ರಗಳು ಇಲ್ಲದೇ ಇದ್ದರೆ ವಿಧಾನಸೌಧದ ಒಳಗೆ ಬರಲು ಕಷ್ಟಸಾಧ್ಯ. ಹೀಗಿದ್ದರೂ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದವರು ಯಾರು ಎಂದು ಪತ್ತೆ ಹಚ್ಚಲು 15 ಘಂಟೆ ಕಳೆದರೂ ಸಾಧ್ಯವಾಗದೇ ಇರುವುದು ಅಚ್ಚರಿಗೆ ಕಾರಣವಾಗಿದೆ. +ನಿನ್ನೆ ರಾಜ್ಯಸಭಾ ಚುನಾವಣೆಯಾಗಿದ್ದ ರಿಂದಾಗಿ ವಿಧಾನಸೌಧದಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. ಸಿಬ್ಬಂದಿಗಳು ಹೆಜ್ಜೆ ಹೆಜ್ಜೆಗೂ ನಿಗಾ ವಹಿಸಿದ್ದರು. ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದೇ ಆಗಿದ್ದರೆ ತಕ್ಷಣವೇ ಆರೋಪಿಗಳನ್ನು ಪೊಲೀಸರು ಏಕೆ ವಶಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಪ್ರಶ್ನೆಗಳು ಕಾಡಲಾರಂಭಿಸಿವೆ. ಘೋಷಣೆ ಕೂಗಿರುವುದರಲ್ಲಿ ಗೊಂದಲ ಇದೆ ಎಂಬ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಸರ್ಕಾರ ಮಾತನಾಡುತ್ತಿದೆ. ಈ ಹಿಂದೆ ಫ್ರೀಡಂ ಪಾರ್ಕ್‍ನಲ್ಲಿ ಯುವತಿಯೊಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಕಾರಣಕ್ಕಾಗಿ ತಕ್ಷಣವೇ ಬಂಧನಕ್ಕೊಳಗಾಗಿದ್ದರು. ಅದೇ ರೀತಿ ನಿನ್ನೆ ಪೊಲೀಸರು ಚುರುಕಾಗಿ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂಬ ಪ್ರಶ್ನೆ ಕಾಡಲಾರಂಭಿಸಿವೆ. +ಒಂದು ವೇಳೆ ವಿವಾದಾಸ್ಪದ ಘೋಷಣೆ ಕೂಗಿದ ಬಳಿಕ ಆರೋಪಿಯು ತಪ್ಪಿಸಿಕೊಂಡು ಪರಾರಿಯಾದರು ಎಂಬುದೇ ಆಗಿದ್ದರೆ ವಿಧಾನಸೌಧದಿಂದ ಹೊರಹೋಗುವ ಎಲ್ಲಾ ದಿಕ್ಕುಗಳಲ್ಲೂ ಸಿಸಿಟಿವಿ ಕ್ಯಾಮರಾಗಳಿವೆ. ಶಂಕಿತರು ವಾಹನದಲ್ಲಿ ಬಂದಿದ್ದರೇ? ನಡೆದುಕೊಂಡು ಬಂದಿದ್ದರೇ? ಎಂಬೆಲ್ಲಾ ಮಾಹಿತಿಗಳನ್ನು ಕ್ಷಣಾರ್ಧದಲ್ಲಿ ಪಡೆಯಲು ಅವಕಾಶಗಳಿವೆ. ಹಾಗಿದ್ದರೂ ನಿನ್ನೆ ಸಂಜೆಯಿಂದ ಇಂದು ಬೆಳಗಿನವರೆಗೂ ಪೊಲೀಸರು ವಿಳಂಬ ಮಾಡಿದ್ದೇಕೆ ಎಂಬ ಪ್ರಶ್ನೆಗಳು ಮೂಡಿವೆ. +ರಾಜಕೀಯವಾಗಿಯಷ್ಟೇ ಅಲ್ಲದೆ ಸಾಮಾಜಿಕವಾಗಿಯೂ ವಿವಾದಿತ ಘೋಷಣೆ ಅಪಾಯಕಾರಿ ಪರಿಣಾಮ ಬೀರುತ್ತದೆ. ಇಂತಹ ಸೂಕ್ಷ್ಮತೆಯ ಅರಿವಿದ್ದರೂ ಕೂಡ ಆಡಳಿತ ಯಂತ್ರ ಎಡವಿದ್ದೇಕೆ? ಇದರ ಹಿಂದೆ ರಾಜಕೀಯ ಒತ್ತಡಗಳಿವೆಯೇ ಎಂಬ ಅನುಮಾನಗಳು ಮೂಡಿಬರುತ್ತಿವೆ. \ No newline at end of file diff --git a/eesanje/url_46_220_9.txt b/eesanje/url_46_220_9.txt new file mode 100644 index 0000000000000000000000000000000000000000..ebd684281904918fc05abd6ea61e285e93e6a068 --- /dev/null +++ b/eesanje/url_46_220_9.txt @@ -0,0 +1,7 @@ +ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ +ಬೆಂಗಳೂರು, ಫೆ.28- ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಯನ್ನು ಬಂಧಿಸದೆ ಕಾಲಹರಣ ಮಾಡಿರುವ ಸರ್ಕಾರದ ಧೋರಣೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿದೆ. ತುಮಕೂರಿನಲ್ಲಿಂದು ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಲ್ಲಿ ಪೊಲೀಸರು ಕೂಡ ಗಾಯಗೊಂಡಿದ್ದಾರೆ. +ಸರ್ಕಾರ ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಚೇರಿಗೆ ತೆರಳುವ ಮುನ್ನವೇ ಪೊಲೀಸರು ಅವರನ್ನು ತಡೆಯಲು ಮುಂದಾದಾಗ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಮೈಸೂರಿನಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಧೋರಣೆ ಖಂಡಿಸಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. +ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್ +ಹಾಸನದಲ್ಲಿ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿ ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೇ ರೀತಿ ಚಿಕ್ಕಮಗಳೂರಿನಲ್ಲೂ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಜೆಡಿಎಸ್ ಕಾರ್ಯಕರ್ತರು ಕೂಡ ಸಾಥ್ ನೀಡಿದ್ದಾರೆ. +ಗುಜರಾತ್‍ನ ಕರಾವಳಿಯಲ್ಲಿ ಬರೋಬ್ಬರಿ 3,300 ಕೆಜಿ ಡ್ರಗ್ಸ್ ವಶ +ಸರ್ಕಾರದ ವಿರುದ್ಧ ಕ್ಕಾರದ ಘೋಷಣೆ ಕೂಗಿ ದೇಶದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು. ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು. ಇದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲೂ ಪ್ರತಿಭಟನೆ ಕಾವು ಹೆಚ್ಚಾಗಿದೆ. ಪೊಲೀಸರು ಕಾಂಗ್ರೆಸ್ ಕಚೇರಿ ಹಾಗೂ ಶಾಸಕರ ಮನೆಗಳಿಗೆ ಬಿಗಿಭದ್ರತೆ ನೀಡಿದ್ದಾರೆ. \ No newline at end of file diff --git a/eesanje/url_46_221_1.txt b/eesanje/url_46_221_1.txt new file mode 100644 index 0000000000000000000000000000000000000000..3f2a0a970fd37579f63934a7c73de5d348ab556c --- /dev/null +++ b/eesanje/url_46_221_1.txt @@ -0,0 +1,6 @@ +ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಾಗಿ ಪೊಲೀಸರ ಹುಡುಕಾಟ +ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಪರಾರಿಯಾಗಿರುವ ಆರೋಪಿಗಾಗಿ ನಗರ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿಯ ಬಂಧನಕ್ಕೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆ ತಂಡಗಳು ಈಗಾಲೇ ಕಾರ್ಯಾಚರಣೆ ಆರಂಭಿಸಿವೆ. ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಲಾಗಿದೆಯೆಂಬ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸಿದ್ದು, ಹೆಚ್ಚಿನ ತನಿಖೆಗಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. +ಆ ವರದಿ ಬಂದ ನಂತರ ಯಾರು ಆ ಘೋಷಣೆಗಳನ್ನು ಕೂಗಿದ್ದಾರೆ ಎಂಬುವುದು ಸ್ಪಷ್ಟವಾಗಿ ತಿಳಿದು ಬರಲಿದೆ.ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರ ವಿಧಾನಸೌಧದ ಆವರಣದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಕೈಗೊಳ್ಳಲಾಗಿದೆಯೆಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಅವರು ಈ ಸಂಜೆಗೆ ತಿಳಿಸಿದ್ದಾರೆ. +ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ +ಘಟನೆ ನಡೆಯುತ್ತಿದ್ದಂತೆ ವಿಧಾನಸೌಧದ ಪೊಲೀಸ್ ಠಾಣೆಗೆ ತೆರಳಿದ ಡಿಸಿಪಿ ಶೇಖರ್ ಅವರುತಡರಾತ್ರಿಯವರೆಗೂ ಠಾಣೆಯಲ್ಲೇ ಉಳಿದುಕೊಂಡು ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಜೊತೆಗೆ ಚರ್ಚಿಸಿ ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಜೊತೆ ಯಾರ್ಯಾರು ಎಲ್ಲಿಂದ ವಿಧಾನಸೌಧಕ್ಕೆ ಬಂದಿದ್ದರು ಎಂಬುವುದರ ಬಗ್ಗೆ ತನಿಖಾ ತಂಡವೊಂದು ಮಾಹಿತಿ ಸಂಗ್ರಹಿಸುತ್ತಿದೆ. +ಮತ್ತೊಂದು ತಂಡವು ತಂತ್ರಜ್ಞಾನ ವಿಶ್ಲೇಷಣೆ ಹಾಗೂ ವಿಡಿಯೋಗಳ ಪರಿಶೀಲನೆಗಳ ಕಾರ್ಯದಲ್ಲಿ ತೊಡಗಿದೆ.ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ರವಿಕುಮಾರ್ ಸಹ ಠಾಣೆಗೆ ದೂರು ನೀಡಿದ್ದಾರೆ. \ No newline at end of file diff --git a/eesanje/url_46_221_10.txt b/eesanje/url_46_221_10.txt new file mode 100644 index 0000000000000000000000000000000000000000..8fc2210f92d68875a0047101934a5c5a87375b60 --- /dev/null +++ b/eesanje/url_46_221_10.txt @@ -0,0 +1,8 @@ +ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್ +ಬೆಂಗಳೂರು,ಫೆ.28- ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಪಿಎಫ್‍ಐ ಮತ್ತು ಎಸ್‍ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ ಪ್ರಕರಣ ಸಂಬಂಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. +ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಕಾನೂನು ಪ್ರಕಾರ ಆದೇಶ ಹೊರಡಿಸಿದ ಅಧಿಕಾರಿ ಅಥವಾ ಅವರಿಗಿಂತ ಮೇಲಿನ ಶ್ರೇಣಿಯ ಅಧಿಕಾರಿ ದೂರು ದಾಖಲಿಸಬೇಕಿದೆ. ಈ ಪ್ರಕರಣದಲ್ಲಿಇನ್‍ಸ್ಪೆಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಆ ದೂರು ಪರಿಗಣಿಸಿ ಅರ್ಜಿದಾರರ ವಿರುದ್ಧ ಮ್ಯಾಜಿಸ್ಪ್ರೇಟ್ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ ಎಂಬ ವಾದ ಪುರಸ್ಕರಿಸಿ ನ್ಯಾಯಾಲಯ ಸೂಲಿಬೆಲೆ ವಿರುದ್ಧದ ಪ್ರಕರಣ ರದ್ದುಗೊಳಿಸಿದೆ. +ರಾಜ್ಯಸಭೆ ಚುನಾವಣೆ: ಎನ್‌ಡಿಎ ಮೈತ್ರಿಗೆ ಸೋಲು, ಕಾಂಗ್ರೆಸ್- ಬಿಜೆಪಿಯ ಅಭ್ಯರ್ಥಿಗಳಿಗೆ ಗೆಲುವು +ಅಲ್ಲದೇ, ರಾಜಶೇಖರಾನಂದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಹಾಗೂ ಸುಪ್ರೀಂ ಕೋರ್ಟ್ ಈ ಸಂಬಂಧ ನೀಡಿರುವ ತೀರ್ಪನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸೂಲಿಬೆಲೆ ಪ್ರತಿನಿಧಿಸಿದ್ದ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಭಾಗದಲ್ಲಿ ಪ್ರತಿಭಟನೆ ನಡೆಸಬಾರದು ಎಂದು ಆದೇಶ ಹೊರಡಿಸಿದೆ. +ಈ ಆದೇಶ ಉಲ್ಲಂಘಿಸಿ ಮತ್ತು ಪೂರ್ವಾನುಮತಿ ಪಡೆಯದೇ ಬೆಂಗಳೂರಿನ ಟೌನ್‍ಹಾಲ್ ಮುಂದೆ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡಿದ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಎಸ್ ಜೆ ಪಾರ್ಕ್ ಠಾಣೆಯ ಇನ್‍ಸ್ಪೆಪೆಕ್ಟರ್ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿದಾರರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ ಎಂದರು. +ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು +ನಿಯಮದ ಪ್ರಕಾರ ಇನ್‍ಸ್ಪೆಕ್ಟರ್ ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಹೀಗಾಗಿ ಅರ್ಜಿದಾರರ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು. \ No newline at end of file diff --git a/eesanje/url_46_221_11.txt b/eesanje/url_46_221_11.txt new file mode 100644 index 0000000000000000000000000000000000000000..17a4ea050a2c0f78fa738bf6a1a9369194d8f409 --- /dev/null +++ b/eesanje/url_46_221_11.txt @@ -0,0 +1,6 @@ +ರಾಜ್ಯಸಭೆ ಚುನಾವಣೆ: ಎನ್‌ಡಿಎ ಮೈತ್ರಿಗೆ ಸೋಲು, ಕಾಂಗ್ರೆಸ್- ಬಿಜೆಪಿಯ ಅಭ್ಯರ್ಥಿಗಳಿಗೆ ಗೆಲುವು +ಬೆಂಗಳೂರು,ಫೆ.27- ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಆಡಳಿತಾರೂಢ ಕಾಂಗ್ರೆಸ್ ನ ಮೂರೂ ಹಾಗೂ ಬಿಜೆಪಿಯ ಒಬ್ಬ ಅಭ್ಯರ್ಥಿ ಆಯ್ಕೆಯಾಗಿದ್ದು ಜೆಡಿಎಸ್ ಅಭ್ಯರ್ಥಿ ಪರಾಭವಗೊಂಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ನಡೆದ ಮತ ಎಣಿಕೆ ಪೂರ್ಣಗೊಂಡಿದ್ದು, ರಾಜ್ಯಸಭೆ ಚುನಾವಣೆ ಅಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. +ಕಾಂಗ್ರೆಸ್ ನ ಅಜಯ್ ಮಕನ್ (47), ಜಿ.ಸಿ.ಚಂದ್ರಶೇಖರ್(45) , ಡಾ. ಸೈಯದ್ ನಾಸಿರ್ ಹುಸೇನ್(47) ಹಾಗೂ ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆ(47) ಜಯಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರರೆಡ್ಡಿ(36) ಪರಾಭವಗೊಂಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ನಂತರ ಅವರಿಗೆ ಎರಡನೇ ಅಪಜಯವಾಗಿದೆ. +ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ : 12.5 ಲಕ್ಷ ಮೌಲ್ಯದ ಫ್ಲೇವರ್ ವಶಕ್ಕೆ.. +ವಿಧಾನಪರಿಷತ್ತಿನ ಬೆಂಗಳೂರು ಶಿಕ್ಶಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ದಿಸಿದ್ದ ಎ. ಪಿ. ರಂಗನಾಥ ರವರ ಸೋಲು ಮೈತ್ರಿಕೂಟದ ಮೊದಲ ಸೋಲಾಗಿತ್ತು. ಜೆಡಿಎಸ್ ಎನ್ ಡಿ ಎ ಕೂಟಕ್ಕೆ ಸೇರಿದ ಈ ಎರೆಡು ಚುನಾವಣೆಯಲ್ಲಿ ಸೋಲುವ ಮೂಲಕ ತೀವ್ರ ಮುಜುಗರಕ್ಕೆ ಒಳಗಾಗಿದೆ. ಆದರೆ ಕಾಂಗ್ರೆಸ್ ನ ಅಭ್ಯರ್ಥಿಗಳು ಎರಡು ಚುನಾವಣೆಯಲ್ಲಿ ಗೆಲ್ಲುವ ಮೂಲಕ ಎನ್ ಡಿ ಎ ವಿರುದ್ಧ ಜಯಗಳಿಸಿದ್ದ ಸಂಭ್ರಮದಲ್ಲಿ ಬೀಗುತ್ತಿದೆ. +ಎನ್ ಡಿ ಎ ಮೈತ್ರಿಕೂಟಕ್ಕೆ ಎರಡು ಚುನಾವಣೆಗಳು ಅಗ್ನಿಪರೀಕ್ಷೆಯಾಗಿದ್ದು, ಲೋಕಸಭೆ ಚುನಾವಣೆಗೆ ದಿಕ್ಸೂಚಿಯೆಂದೇ ಬಿಂಬಿಸಲಾಗಿತ್ತು. ಗೆಲ್ಲುವಿನ ಗುರಿ ತಲುಪಲು ಅಗತ್ಯವಿರುವ ಶಾಸಕರ ಸಂಖ್ಯೆ ವಿಧಾನಸಭೆಯಲ್ಲಿ ಇಲದಿದ್ದರು, ಜೆಡಿಎಸ್ ರಾಜ್ಯಸಭೆ ಚುನಾವಣೆಗೆ ಸ್ಫರ್ದೆಮಾಡಿ ಆತ್ಮಸಾಕ್ಷಿ ಮತಗಳನ್ನು ನಿರೀಕ್ಷೆ ಮಾಡಿತ್ತು. ಅದು ಜೆಡಿಎಸ್ ಗೆ ಫಲ ನೀಡಲಿಲ್ಲ. ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರಿಗೆ ಮತದಾನ ನಡೆದಿದ್ದು. 223 ಶಾಸಕರ ಪೈಕಿ 222 ಶಾಸಕರು ಮತ ಚಲಾಯಿಸಿದ್ದು, ಬಿಜೆಪಿಯ ಶಾಸಕ ಶಿವರಾಂ ಹೆಬ್ಬಾರ್ ಮತ ಚಲಾಯಿಸಿಲ್ಲ. \ No newline at end of file diff --git a/eesanje/url_46_221_2.txt b/eesanje/url_46_221_2.txt new file mode 100644 index 0000000000000000000000000000000000000000..40b8c6845e9571f65b2fa8aef16626cc570d6185 --- /dev/null +++ b/eesanje/url_46_221_2.txt @@ -0,0 +1,9 @@ +ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ +ಬೆಂಗಳೂರು,ಫೆ.28- ರಾಜ್ಯಸಭೆ ಚುನಾವಣಾ ಫಲಿತಾಂಶದ ನಂತರ ನಡೆದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಶಾಸಕ ಸುನಿಲ್‍ಕುಮಾರ್ ವಿಧಾನಸಭೆಯಲ್ಲಿ ಒತ್ತಾಯಿಸಿದರು. ನಿನ್ನೆ ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂದು ಅವರು ಆರೋಪಿಸಿದರು. +ಈ ಘಟನೆಯ ನೈತಿಕ ಹೊಣೆಯನ್ನು ಮುಖ್ಯಮಂತ್ರಿ ಹೊತ್ತು ಸ್ಪಷ್ಟನೆ ನೀಡಬೇಕು, ಅಲ್ಲಿವರೆಗೂ ಬಿಜೆಪಿ ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದರು. ಘೋಷಣೆ ಕೂಗಿದವರು ಪಾಕ್ ಧ್ವಜ ಹಾರಿಸಲು ಹಿಂಜರಿಯುವುದಿಲ್ಲ ಎಂದು ಅವರು ಆರೋಪಿಸಿದರು. +ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ಮನಸ್ಥಿತಿಯವರು ವಿಧಾನಸೌಧದ ಒಳಗೆ, ಹೊರಗೆ ಇದ್ದರೆ ಅದನ್ನು ದೊಡ್ಡ ಪ್ರಮಾಣದಲ್ಲಿ ಖಂಡಿಸಬೇಕು. ಸಂತೋಷದ ಸಂಭ್ರಮಾಚರಣೆಗೆ ಆಕ್ಷೇಪಣೆ ಇಲ್ಲ. ಘೋಷಣೆ ಕೂಗಿದ ವ್ಯಕ್ತಿಯ ಬಾಯಿಯನ್ನು ಮತ್ತೊಬ್ಬರು ಮುಚ್ಚುತ್ತಾರೆ. ಆ ರೀತಿ ಘೋಷಣೆ ಕೂಗದಿದ್ದರೆ ಬಾಯಿ ಮುಚ್ಚುವ ಅಗತ್ಯವಿರಲಿಲ್ಲ. ಕಾಂಗ್ರೆಸ್ ಪರವಾಗಿಯೋ ಅಥವಾ ವಿಜೇತ ಅಭ್ಯರ್ಥಿ ಪರವಾಗಿಯೋ ಘೋಷಣೆ ಕೂಗಿದರೆ ಆಕ್ಷೇಪವಿರಲಿಲ್ಲ. ಭಾರತ ವಿರೋಧಿ ಧೋರಣೆಯುಳ್ಳ ನಿತೀಶ್ ಕೌಲ್ ಎಂಬ ವ್ಯಕ್ತಿಯನ್ನು ಕರೆಸಿ ಭಾಷಣ ಮಾಡಿಸಿದ್ದಾರೆ ಎಂದು ಆರೋಪಿಸಿದರು. +ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..? +ಆಗ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಆ ರೀತಿಯ ಅವಕಾಶ ಕೊಟ್ಟಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಘೋಷಣೆ ಕೂಗಿದ ಗುಂಪನ್ನು ಹೊರಹೋಗಲು ಬಿಟ್ಟಿದ್ದಾರೆ. ಇದುವರೆಗೂ ಒಬ್ಬರನ್ನೂ ಬಂಧಿಸಿಲ್ಲ. ಇದರ ಹಿಂದಿರುವ ಶಕ್ತಿ ಯಾವುದು ಎಂದು ಪ್ರಶ್ನಿಸಿದರು. +ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ತರಾತುರಿಯಲ್ಲಿ ಪಡೆಯಲಾಗುತ್ತಿದೆ. ಆದರೆ ಬೇರೆ ಘಟನೆಯಲ್ಲಿ ತಿಂಗಳಾನುಗಟ್ಟಲೆ ವರದಿ ಬರುವುದಿಲ್ಲ. ಕಳೆದ 9 ತಿಂಗಳಿನಲ್ಲಿ ಸರ್ಕಾರ ನಡೆದುಕೊಂಡ ಧೋರಣೆಯೇ ಇಂತಹ ಘಟನೆ ನಡೆಯಲು ಕಾರಣ ಎಂದು ಟೀಕಿಸಿದರು. ರಾಜ್ಯಪಾಲರ ಭಾಷಣದಲ್ಲಿ ಪತ್ರಿಕೆಗಳು ಬರೆದಿದ್ದ ಒಳ್ಳೆ ಸುದ್ದಿಯನ್ನು ಮುಖ್ಯಮಂತ್ರಿ ಸದನದಲ್ಲಿ ಉಲ್ಲೇಖಿಸಿದರು. ಆದರೆ ಈ ಘಟನೆಗೆ ಸಂಬಂಧಿಸಿದಂತೆ ವರದಿ ಮಾಡಿದವರನ್ನು ಬೆದರಿಸುವುದು ಎಷ್ಟು ಸರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಯವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ವಿಚಾರವನ್ನು ವಾಚಿಸಿದರು. +ರಣರಂಗವಾದ ಪರಿಷತ್ : ಏಕವಚನದಲ್ಲೇ ವಾಗ್ದಾಳಿ +ಕೈ ಮುಗಿದು ಒಳಗೆ ಬಾ, ಧೈರ್ಯವಾಗಿ ಪ್ರಶ್ನಿಸಿ ಎಂದು ಹೇಳುವ ಸರ್ಕಾರ ವಾಸ್ತವ ವಿಚಾರವನ್ನು ಬೆಳಕಿಗೆ ತರುವ ಪತ್ರಕರ್ತರನ್ನು ಗದರಿಸುತ್ತದೆ. ಜಿನ್ನಾ ಮಾನಸಿಕ ಸರ್ಕಾರ ಇರುವುದರಿಂದ ಇಂತಹ ಘಟನೆ ನಡೆಯುತ್ತಿರುವುದರ ಹೊಣೆ ಸರ್ಕಾರವೇ ಹೆರಬೇಕು ಎಂದು ಒತ್ತಾಯಿಸಿದರು. ಶಾಸಕರ ಭವನದಿಂದ ವಿಧಾನಸೌಧಕ್ಕೆ ರಾಷ್ಟ್ರಧ್ವಜ ಹಿಡಿದು ನಾವು ಬಂದಿದ್ದೇವೆ. ಆದರೆ 2022 ರ ಫೆ.18 ರಂದು ಹಿಜಾಬ್ ಘಟನೆ ಚರ್ಚೆ ಮಾಡುವಾಗ ಕಾಂಗ್ರೆಸ್ ಶಾಸಕರು ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನ ಮಾಡಿದ್ದರು ಎಂದು ಹೇಳಿದ್ದರು. \ No newline at end of file diff --git a/eesanje/url_46_221_3.txt b/eesanje/url_46_221_3.txt new file mode 100644 index 0000000000000000000000000000000000000000..4567e2368e70c706dd472af9598f2fc97e1493bc --- /dev/null +++ b/eesanje/url_46_221_3.txt @@ -0,0 +1,7 @@ +ಮಾ.1ರಿಂದ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ, ತಪ್ಪಿದರೆ ದಂಡ ಫಿಕ್ಸ್ +ಬೆಂಗಳೂರು,ಫೆ.27- ಮುಂದಿನ ತಿಂಗಳ ಆರಂಭದ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರದಿದ್ದರೆ ಅಂತಹ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದಾಗುವುದರ ಜೊತೆಗೆ ಭಾರಿ ಪ್ರಮಾಣದ ದಂಡ ಪಾವತಿಸಬೇಕಾಗುತ್ತದೆ. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಆದರೂ ಇನ್ನು ನೂರಾರು ಮಂದಿ ಕನ್ನಡ ಅನುಷ್ಠಾನಕ್ಕೆ ಮೀನಾಮೇಷ ಎಣಿಸುತ್ತಿದ್ದಾರೆ. +ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಅಧಿಕಾರಿಗಳು ಕನ್ನಡ ಭಾಷಾ ಫಲಕ ಅಳವಡಿಕೆ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಳಗಿನ ಜಾವ ಕಸ ಸಂಗ್ರಹಿಸಲು ಮನೆ ಬಾಗಿಲಿಗೆ ಬರುವ ಕಸದ ಗಾಡಿಗಳ ಮೂಲಕ ಕನ್ನಡ ನಾಮಫಲಕ ಬಳಕೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಪ್ರದರ್ಶನದ ಅನುಷ್ಠಾನ ಪ್ರಾಧಿಕಾರವಾಗಿರುವ ಬಿಬಿಎಂಪಿಯ ಆರೋಗ್ಯ ವಿಭಾಗದವರು ಇದುವರೆಗೂ 50,000 ಕ್ಕೂ ಹೆಚ್ಚು ವ್ಯಾಪಾರಿಗಳು ಮತ್ತು ಅಂಗಡಿಗಳಿಗೆ ನೋಟಿಸ್ ಕಳುಹಿಸಿದ್ದಾರೆ. +ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..? +ಆರೋಗ್ಯ ನಿರೀಕ್ಷಕರು, ಮಾರ್ಷಲ್‍ಗಳನ್ನು ನಿಯೋಜಿಸಿ ಮತ್ತು ನಿರಂತರ ತಪಾಸಣೆಯ ಮೂಲಕ ಇದುವರೆಗೂ 40 ಸಾವಿರಕ್ಕೂ ಹೆಚ್ಚು ಅಂಗಡಿ ಮತ್ತು ಸಂಸ್ಥೆಗಳಲ್ಲಿ ಕನ್ನಡ ಭಾಷಾ ಫಲಕ ಜಾರಿಗೊಳಿಸಲಾಗಿದೆ ಉಳಿದವರು ನಾಳೆಯೊಳಗೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಮಾಡುವಂತೆ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರಿಗಳು ಕರ್ನಾಟಕ ಸರ್ಕಾರ ಮತ್ತು ಬಿಬಿಎಂಪಿ ಹೊರಡಿಸಿದ ಆದೇಶವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಪ್ರದರ್ಶಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಲಯ ಮಟ್ಟದ ಅಧಿಕಾರಿಗಳಿಗೆ ಬಿಬಿಎಂಪಿ ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. +ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ +ಆದೇಶ ಪಾಲಿಸದ ಅಧಿಕಾರಿಗಳಿಗೂ ಬಿಸಿ ಮುಟ್ಟಿಸಲಾಗಿದ್ದು, ನಿಯಮಗಳನ್ನು ಪಾಲಿಸಿದ ಕೆಆರ್ ಪುರಂನ ಹಿರಿಯ ಆರೋಗ್ಯ ನಿರೀಕ್ಷಕರನ್ನು ಬಿಬಿಎಂಪಿ ಅಮಾನತುಗೊಳಿಸಲಾಗಿದೆ. ಒಟ್ಟಾರೆ, ಮಾರ್ಚ್ ಒಂದರ ನಂತರ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಕೆ ಇರಬೇಕು ಇಲ್ಲದಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_221_4.txt b/eesanje/url_46_221_4.txt new file mode 100644 index 0000000000000000000000000000000000000000..9e494c5591e67c6c463b7a78b1cb487d544288c8 --- /dev/null +++ b/eesanje/url_46_221_4.txt @@ -0,0 +1,9 @@ +ರಣರಂಗವಾದ ಪರಿಷತ್ : ಏಕವಚನದಲ್ಲೇ ವಾಗ್ದಾಳಿ +ಬೆಂಗಳೂರು,ಫೆ.28- ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾನೆ. ಅವನ ಬಾಯಿ ಮುಚ್ಚಿಸಿ ಎಂದು ಅಬ್ದುಲ್ ಜಬ್ಬರ್ ಬಿಜೆಪಿಯ ಎನ್.ರವಿಕುಮಾರ್ ಕುರಿತು ಬಳಸಿದ ಏಕವಚನ ಪದ ಪ್ರಯೋಗದಿಂದ ವಿಧಾನಪರಿಷತ್ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತು. ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮಾತನಾಡಲು ಅವಕಾಶ ನೀಡಿದ್ದರು. +ಮಾತನಾಡುವ ವೇಳೆ ರವಿಕುಮಾರ್, ಇದು ದೇಶದ್ರೋಹಿ ಸರ್ಕಾರ. ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ನೈತಿಕತೆ ಇಲ್ಲ. ಇಂಥ ನಿಷ್ಕ್ರಿಯ ಸರ್ಕಾರ ಇದ್ದರೂ ಒಂದೇ ಇಲ್ಲದಿದ್ದರೂ ಒಂದೇ ಆದ್ದರಿಂದ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯುತ್ತಿತ್ತು. ಇದರ ನಡುವೆ ಅಬ್ದುಲ್ ಜಬ್ಬರ್ ಎದ್ದು ನಿಂತು, ಇವನು ಮಾತೇತ್ತಿದ್ದರೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾನೆ. ಮೊದಲು ಇವನ ಬಾಯಿ ಬಂದ್ ಮಾಡಿ ಎಂದಿದ್ದು, ವಿವಾದಕ್ಕೆ ಬೆಂಕಿಗೆ ತುಪ್ಪ ಸುರಿದಂತೆ ಮಾಡಿತು. +ಏಕವಚನದಲ್ಲಿ ಮಾತನಾಡಿದರೆ ಸರಿ ಇರುವುದಿಲ್ಲ. ಗೌರವ ಕೊಟ್ಟು , ಗೌರವ ತೆಗೆದುಕೊಳ್ಳಿ. ಇಲ್ಲದಿದ್ದರೆ ನೆಟ್ಟಗಿರುವುದಿಲ್ಲ ಎಂದು ರವಿಕುಮಾರ್ ಏರಿದ ಧ್ವನಿಯಲ್ಲಿ ಅಬ್ಬರಿಸುತ್ತಾ ಪ್ರತಿಪಕ್ಷಗಳ ಸದಸ್ಯರತ್ತ ಮುನ್ನುಗ್ಗಿದರು. ಇದಕ್ಕೆ ಸಾಥ್ ನೀಡಿದ ತುಳಸಿ ಮುನಿರಾಜು ಗೌಡ, ತಾಕತ್ತಿದ್ದರೆ ಬಾ ಎನ್ನುತ್ತಲೇ ಅಬ್ದುಲ್ ಜಬ್ಬರ್ ವಿರುದ್ದ ಮುಗಿಬಿದ್ದರು. ಆಗ ಬಿಜೆಪಿಯ ಶಾಸಕರು ಸದನದ ಬಾವಿಗೆ ನುಗ್ಗಿ ಏಕವಚನದಲ್ಲಿ ಮಾತನಾಡಿರುವ ಜಬ್ಬರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. +ಒಂದು ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ನಿರ್ಮಾಣವಾಯಿತು. ಸಭಾಪತಿ ಪೀಠದ ಎದುರೇ ಬಿಜೆಪಿ ಸದಸ್ಯರು ಜಬ್ಬರ್ ವರ್ತನೆಗೆ ಕೆಂಡಕಾರಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಸಭಾನಾಯಕ ಭೋಸ್‍ರಾಜ್, ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಮತ್ತಿತರರು ಪರಿಸ್ಥಿತಿಯನ್ನು ನಿಭಾಯಿಸಲು ಹರಸಾಹಸಪಟ್ಟರು. +ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ +ಜಬ್ಬಾರ್ ವಿರುದ್ಧ ಇಡೀ ಬಿಜೆಪಿ ಸದಸ್ಯರು ಮುಗಿಬಿದ್ದರು. ಆಗ ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಗಮನಿಸಿದ ಸಭಾಪತಿಗಳು, ಸದನವನ್ನು ಕೆಲಕಾಲ ಮುಂದೂಡಿದರು. ಇದಕ್ಕೂ ಮುನ್ನ ಮಾತನಾಡಿದ ರವಿಕುಮಾರ್, ಇದು ದೇಶದ್ರೋಹಿ ಸರ್ಕಾರ. ಪ್ರಕರಣ ನಡೆದು ಹಲವು ಗಂಟೆಗಳಾಗಿದ್ದರೂ ಯಾರನ್ನೂ ಬಂಧಿಸಿಲ್ಲ. ಕೇವಲ ನೆಪ ಮಾತ್ರಕ್ಕೆ ದೂರು ದಾಖಲಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು. +ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ : ಪ್ರಿಯಾಂಕ್ ಖರ್ಗೆ +ದೇಶದ್ರೋಹಿ ಸರ್ಕಾರ ಎಂದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಹರಿಪ್ರಸಾದ್ ಕ್ರಿಯಾಲೋಪ ಎತ್ತಿದರು. ಸದಸ್ಯ ರವಿಕುಮಾರ್ ನಮ್ಮ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿಮ್ಮ ಪ್ರಧಾನಿ ನರೇಂದ್ರಮೋದಿಗೆ ತಾಕತ್ತಿದ್ದರೆ ನಮ್ಮ ಸರ್ಕಾರದ ವಿರುದ್ಧ ದೂರು ದಾಖಲಿಸಲು ಹೇಳಿ ಇಲ್ಲದಿದ್ದರೆ ಸದಸ್ಯರ ಮೇಲೆ ದೂರು ದಾಖಲಿಸಬೇಕಾಗುತ್ತದೆ ಎಂದು ಆಗ್ರಹಿಸಿದರು. ಆಗ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಭಾರೀ ಗದ್ದಲ ಉಂಟಾಯಿತು. ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಸಭಾಪತಿ ಹೊರಟ್ಟಿ ಅವರು ನೀವು ಇದೇ ರೀತಿ ವರ್ತಿಸಿದರೆ ಸದನವನ್ನು ನಾನು ಮುಂದೂಡುತ್ತೇನೆ ಎಂದು ಎಚ್ಚರಿಕೆ ಕೊಟ್ಟರು. \ No newline at end of file diff --git a/eesanje/url_46_221_5.txt b/eesanje/url_46_221_5.txt new file mode 100644 index 0000000000000000000000000000000000000000..dac487846019afe24ef85c945b48a0f442e791eb --- /dev/null +++ b/eesanje/url_46_221_5.txt @@ -0,0 +1,7 @@ +ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕುರಿತು ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..? +ಬೆಂಗಳೂರು,ಫೆ.28- ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಎಫ್‍ಎಸ್‍ಎಲ್‍ನವರು ವೈಜ್ಞಾನಿಕ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಪೋಸ್ಟಿಂಗ್ ಮಾಡಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಎಂದು ಹೇಳಲಾಗಿದೆ ಅಂತ ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ರು ಅಂತ ಹೇಳಲಾಗುತ್ತಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದರು. +ಈಗಾಗಲೇ ಎಫ್‍ಎಸ್‍ಎಲ್‍ನವರು ಪರೀಶೀಲನೆ ಕೈಗೊಂಡಿದ್ದಾರೆ. ಎಲ್ಲ ವೀಡಿಯೋ ತುಣುಕುಗಳನ್ನು ಸಂಗ್ರಹಿಸುತ್ತಿದ್ದಾರೆ. ಅಧಿಕೃತವಾಗಿ ಸುದ್ದಿ ವಾಹಿನಿಯಲ್ಲಿ ಮೊದಲು ಪ್ರಸಾರವಾದ ವೀಡಿಯೋಗಳನ್ನು ಎಫ್‍ಎಸ್‍ಎಲ್‍ನವರು ಪಡೆಯಲಿದ್ದಾರೆ. ವೈಜ್ಞಾನಿಕವಾಗಿ ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಬಿಜೆಪಿಯವರು ಕೊಟ್ಟಿರುವ ದೂರನ್ನು ಸುಮೋಟೋ ಜತೆ ಸೇರಿಸಲಾಗುವುದು ಎಂದು ಹೇಳಿದರು. +ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ ಪಾಕ್ ಪರ ಘೋಷಣೆ +ಘಟನೆಗೆ ಸಂಬಂಧಿಸಿದಂತೆ ಕೂಲಂಕುಷವಾಗಿ ಎಲ್ಲವನ್ನು ಪರಿಶೀಲನೆ ನಡೆಸಲಾಗುತ್ತಿವೆ. ಘೋಷಣೆ ಕೂಗಿದರೂ ಎನ್ನಲಾದ ಸ್ಥಳದಲ್ಲಿ ಯಾರಿದ್ದರು ಅನ್ನುವುದನ್ನು ಗುರುತಿಸಿ, ಅವರನ್ನು ವಿಚಾರಣೆ ನಡೆಸಲಾಗುತ್ತೆದೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ಖಚಿತವಾದರೆ ತಪ್ಪಿತಸ್ಥನ ವಿರುದ್ಧ ಏನೆಲ್ಲ ಕಾನೂನು ರೀತ್ಯ ಕ್ರಮ ಜರುಗಿಸಬೇಕೊ ಅದು ಆಗುತ್ತದೆ. ಯಾವುದೇ ಕಾರಣಕ್ಕೂ ರಾಜೀ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. +ಯಾರೋ ಒಬ್ಬ ಮಾಡಿದ್ದನೆಂಬುದನ್ನು ಕಾಂಗ್ರೆಸ್ ಪಕ್ಷಕ್ಕೆ ತಳುಕು ಹಾಕುವುದು ಸರಿಯಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡಿ, ವರದಿ ಆಧರಿಸಿ ಏನೆಲ್ಲ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದು ಆಗುತ್ತದೆ. ಬಿಜೆಪಿ ಪಕ್ಷ ಶೂರವಾದಗಿನಿಂದಲೂ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ ಎಂದು ಹೇಳುತ್ತಲೇ ಇದ್ದಾರೆ. ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ ಎಂದು ಪ್ರಶ್ನಿಸಿದರು. +ಆತ್ಮಸಾಕ್ಷಿ ಪರ ಎಸ್.ಟಿ.ಸೋಮಶೇಖರ್ ಮತ :ಬಿಜೆಪಿಯರ ಪ್ರತಿಭಟನೆ ತಪ್ಪು ಅಂತ ಹೇಳುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲಿ. ಸದನದ ಒಳಗೆ ಪ್ರತಿಭಟಿಸುವುದಾದರೆ ಸ್ಪೀಕರ್ ಅನುಮತಿ ಬೇಕಾಗುತ್ತದೆ ಎಂದರು. ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರು ಆತ್ಮಸಾಕ್ಷಿ ಪರ ಮತ ಹಾಕುವುದಾಗಿ ಹೇಳಿದ್ದರು. ಅದರಂತೆ ಮಾತಿನ ಪ್ರಕಾರ ಮತ ಚಲಾಯಿಸಿರಬಹುದು. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ತಿಳಿಸಿದರು. \ No newline at end of file diff --git a/eesanje/url_46_221_6.txt b/eesanje/url_46_221_6.txt new file mode 100644 index 0000000000000000000000000000000000000000..d33d83f7a6bfffc17e3f666ee99e04d0b5236f8d --- /dev/null +++ b/eesanje/url_46_221_6.txt @@ -0,0 +1,9 @@ +ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.28- ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೇ ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆಯೇ? ಇಲ್ಲವೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. +ಸಂಬಂಧಪಟ್ಟ ವಿಡಿಯೋಗಳನ್ನು ಈಗಾಗಲೇ ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ. ಘೋಷಣೆ ಕೂಗಿದ್ದೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ರೀತಿಯ ಕೃತ್ಯಗಳಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಅನಿವಾರ್ಯ. ದೇಶದ್ರೋಹಿಗಳನ್ನು ಮಟ್ಟ ಹಾಕಲಾಗುವುದು ಎಂದು ತಿಳಿಸಿದರು. +ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ +ಸಚಿವ ಜಮೀರ್ ಅಹಮ್ಮದ್ ಖಾನ್:ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದ್ದೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಆ ರೀತಿಯ ಘಟನೆ ಆಗಿಲ್ಲ ಎಂದು ರಾಜ್ಯಸಭೆಯ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಸ್ಪಷ್ಟನೆ ಕೊಟ್ಟಿದ್ದಾರೆ. ಅದರ ನಂತರವೂ ತನಿಖೆಗಾಗಿ ವಿಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿಕೊಡಲಾಗಿದೆ, ತನಿಖೆ ಮುಂದುವರೆದಿದೆ. ಘೋಷಣೆ ಕೂಗಿದ್ದರೆ ತಕ್ಕ ಶಿಕ್ಷೆ ಆಗುವುದು ಅಗತ್ಯ ಎಂದು ಹೇಳಿದರು. +ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ. ಮುಖಭಂಗ ಅನುಭವಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ವಿಷಯಗಳಿಲ್ಲ. ನಿನ್ನೆ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರ ರಾಜೀನಾಮೆ ಕೇಳುವುದು ಅಗತ್ಯವಿಲ್ಲ. ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದೇ ಆಗಿದ್ದರೆ ಅಂತವರನ್ನು ದೇಶದ್ರೋಹಿ ಎನ್ನುತ್ತೇನೆ ಎಂದರು. +ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್ +ಸಚಿವ ಮಧು ಬಂಗಾರಪ್ಪ :ಬೆಂಗಳೂರು,ಫೆ.28- ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ ಇದರಲ್ಲಿ ಬೇರೆ ಸ್ವರೂಪವೇ ಇದೆ. ಬಿಜೆಪಿಯವರು ಇಂತಹ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುವ ಕೆಟ್ಟ ಚಾಳಿ ಖಂಡನೀಯ ಎಂದರು. +ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರ ವಿರುದ್ಧ ನಾವೆಲ್ಲಾ ಸೇರಿ ಧಿಕ್ಕಾರ ಕೂಗಬೇಕಿದೆ. ಈ ವಿಚಾರವನ್ನು ಸಂಪೂರ್ಣವಾಗಿ ಗೃಹ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆ ನೋಡಿಕೊಳ್ಳುತ್ತದೆ. ತಪ್ಪುಗಳಾಗಿದ್ದರೆ ಸಂಬಂಧಪಟ್ಟವರು ರಾಜೀನಾಮೆ ನೀಡುವುದ ಅಗತ್ಯ ಎಂದರು. ಬಿಜೆಪಿಯವರು ವಾಸ್ತವವನ್ನು ತಿಳಿದುಕೊಳ್ಳುವ ಮೊದಲೇ ಮಾಧ್ಯಮಗಳ ವಿಡಿಯೋ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಖಂಡನೀಯ ಎಂದರು. \ No newline at end of file diff --git a/eesanje/url_46_221_7.txt b/eesanje/url_46_221_7.txt new file mode 100644 index 0000000000000000000000000000000000000000..55a4d31fc5b07a71a45e0307550a8b0c28942e4d --- /dev/null +++ b/eesanje/url_46_221_7.txt @@ -0,0 +1,6 @@ +ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ : ಪ್ರಿಯಾಂಕ್ ಖರ್ಗೆ +ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಮುಂದಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ 11 ಗಂಟೆಗೆ ವರದಿ ಬರಲಿದೆ. ಅದರ ಬಳಿಕ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. +ನಿನ್ನೆವರೆಗಿನ ಮಾಹಿತಿ ಪ್ರಕಾರ ಇದೊಂದು ಕಾಲ್ಪನಿಕ ಘಟನೆ. ನಾವು ವಿಡಿಯೋದಲ್ಲಿರುವ ಆಡಿಯೋವನ್ನು ಪರಿಶೀಲಿಸಿದ್ದೇವೆ. ಅದರಲ್ಲಿ ಯಾವುದೇ ಘೋಷಣೆಗಳು ಪಾಕಿಸ್ತಾನದ ಪರವಾಗಿ ಕೂಗಿರುವುದು ಕಂಡುಬಂದಿಲ್ಲ. ನಾಸಿರ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ, ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ ಎಂದರು. ಆ ರೀತಿ ಘೋಷಣೆ ಕೂಗಿದ್ದರೆ ವೈಯಕ್ತಿಕ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ. ಈ ರೀತಿಯ ಘೋಷಣೆಗಳನ್ನು ಕೂಗುವುದು ದೇಶದ್ರೋಹ ಘಟನೆಯಾಗುತ್ತದೆ. +ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು +ಆಡಿಯೋ ಫೋರಂ ಸಿಟ್‍ನಲ್ಲಿ ಪ್ರಸಾರವಾಗುತ್ತಿರುವ ವಿಡಿಯೋ, ಆಡಿಯೋ ಮಿಸ್ ಆಗಿರುವುದಾಗಿ ಹೇಳಲಾಗಿತ್ತು. ಆದರೂ ನಾವು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದರು. ಸುಳ್ಳು ಸುದ್ದಿಗಳ ಪ್ರಸಾರ ತಡೆಗೆ ಕಾನೂನು ಕೂಡ ಇದೆ. ಮಾಧ್ಯಮ 4 ನೆ ಅಂಗವಾಗಿದ್ದು ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು ಎಂದರು. +ಬಿಜೆಪಿ ಚುನಾವಣೆ ಸೋಲಿನಿಂದ ಹತಾಶರಾಗಿ ಹೋರಾಟಕ್ಕಿಳಿದಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್ ಅವರು ಮಾಧ್ಯಮದ ಪ್ರತಿನಿಗಳನ್ನು ಏಕವಚನದಲ್ಲಿ ಮಾತನಾಡಿದ್ದು ಸರಿಯಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_221_8.txt b/eesanje/url_46_221_8.txt new file mode 100644 index 0000000000000000000000000000000000000000..0ba30fa44fcefea70697150ca840c60cfbdd7c0f --- /dev/null +++ b/eesanje/url_46_221_8.txt @@ -0,0 +1,11 @@ +ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ +ಬೆಂಗಳೂರು,ಫೆ.28- ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‍ನಲ್ಲಿ ಗದ್ದಲ ಕೋಲಾಹಲ ಸೃಷ್ಟಿಸಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿನದ ಕಲಾಪವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ವಿಷಯ ಪ್ರಸ್ತಾಪಿಸಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ ಏರ್ಪಟ್ಟು ಸದನವನ್ನು ಕೆಲ ಮುಂದೂಡಲಾಯಿತು. +ವಿಷಯ ಪ್ರಸ್ತಾಪಿಸಿದ ಕೋಟಾ ಶ್ರೀನಿವಾಸ್ ಪೂಜಾರಿ, ಕೆಲವು ಕಿಡಿಗೇಡಿಗಳು ಪಾಕಿಸ್ತಾನ ಪರ ವಿಧಾನಸೌಧದ ಆವರಣದಲ್ಲೇ ಘೋಷಣೆ ಕೂಗಿದ್ದಾರೆ. ಇದು ಎಲ್ಲರಿಗೂ ಆತಂಕ ಸೃಷ್ಟಿಸಿದೆ. ಇಂದು ಪಾಕಿಸ್ತಾನ ಜಿಂದಾಬದ್ ಎಂಬುವರು ನಾಳೆ ವಿಧಾನಸೌಧಕ್ಕೆ ಬಾಂಬ್ ಇಡುವುದಿಲ್ಲ ಎಂಬುದಕ್ಕೆ ಖಾತರಿ ಏನು? ಎಂದು ಪ್ರಶ್ನಿಸಿದರು. ಸರ್ಕಾರ ಕೇವಲ ಸುಮೊಟೊ ಪ್ರಕರಣ ದಾಖಲಿಸಿದರೆ ಸಾಲದು. ಇದರಲ್ಲಿ ಯಾರೇ ಭಾಗಿಯಾಗಿದ್ದರೂ ತಕ್ಷಣವೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯ ಮಾಡಿದರು. +ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೇವಲ ಕಣ್ಣೊರೆಸುವ ತಂತ್ರ ಮಾಡುತ್ತಿದೆ. ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದರೆ ಇದೊಂದು ಬೇಜಾವಬ್ದಾರಿ ಸರ್ಕಾರ. ತಕ್ಷಣವೇ ಸದನಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದರು. +ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್ +ನಾಸಿರ್ ಹುಸೇನ್ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ಮಾಧ್ಯಮದವರನ್ನು ಬೆದರಿಸಿದ್ದಾರೆ. ಹಾಗಾದರೆ ಮಾಧ್ಯಮದವರಿಗೆ ಮುಕ್ತ ಸ್ವತಂತ್ರ ಇಲ್ಲವೇ? ಇದರಲ್ಲಿ ಯಾರು ಕೂಡ ರಾಜಕಾರಣ ಬೆರಸಬಾರದು. ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಈ ಸರ್ಕಾರದಂತ ಕೆಟ್ಡ ಸರ್ಕಾರ ಇಲ್ಲ. ಪಾಕಿಸ್ತಾನ ಘೋಷಣೆ ಕೂಗಿದವರ ಪರ ದಾಖಲೆ ಹುಡುಕ್ತಿದ್ದೀರ. ಇಂಥ ಸರ್ಕಾರ ಬೇರೆ ಕಡೆ ಇದ್ದಿದ್ದರೆ ವಜಾ ಆಗುತ್ತಿತ್ತು. ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. +ಆಗ ಸರ್ಕಾರದ ಪರವಾಗಿ ಕಾನೂನು ಮತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಉತ್ತರಿಸಿ, ನಾನು ಪ್ರಾಮಾಣಿಕವಾಗಿ ಹೇಳುವುದಾದರೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ನನಗೆ ಸ್ಪಷ್ಟವಾಗಿ ಕೇಳಿಲ್ಲ. ಆದರೂ ಇದನ್ನು ಗಂಭೀರವಾಗಿ ಪರಿಗಣಿಸಿಯೇ ದೂರು ದಾಖಲಿಸಿದ್ದೇವೆ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ. ಇದರಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. +ನನಗೆ ಕೇಳಿದ್ದನ್ನು ಹೇಳಿದ್ದೇನೆ.ಇದಾರಚೆಗೆ ಘೋಷಣೆ ಕೇಳಿದ್ದರೆ ದೂರು ನೀಡಿದ್ದೀರಿ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್, ಸಚಿವರಿಗೆ ಆರೋಪಿ ಪಾಕ್ ಪರ ಘೋಷಣೆ ಕೂಗಿರುವ ದನಿ ಕೇಳಿಲಿಲ್ಲವೆಂದರೆ ಅವರ ಕಿವಿ ಕಿವುಡಾಗಿರಬೇಕು ಎಂದು ವ್ಯಂಗ್ಯವಾಡಿದರು. ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಸಚಿವರಿಗೆ ಸುಳ್ಳು ಹೇಳಲು ಬರುವುದಿಲ್ಲ. ನಿಮಗೆ ಮಾನಮರ್ಯಾದೆ ಇದ್ದರೆ ಮೊದಲು ಕ್ರಮ ಕೈಗೊಳ್ಳಿ ಎಂದರು. +ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್ +ಸರ್ಕಾರಕ್ಕೆ ನಾಚಿಕೆಅನ್ನೋದೇ ಇಲ್ವಾ? ಸಿಎಂ ಬಂದು ಇಲ್ಲಿ ಉತ್ತರ ಕೊಡಬೇಕು. ಇಡೀ ರಾಜ್ಯಕ್ಕೆ ಕೇಳಿದ ಘೋಷಣೆ ಸರ್ಕಾರಕ್ಕೆ ಕೇಳಿಲಿಲ್ಲವೇ? ಕಾಂಗ್ರೆಸ್ ಧೋರಣೆ ಪಾಕಿಸ್ತಾನ ಪರವೋ ಯಾರ ಪರ? ಎಂದು ಪ್ರಶ್ನಿಸಿದರು. ಆಗ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದಿದ್ದು ಯಾರು? ಕಾಂಗ್ರೆಸ್ ಬದ್ದತೆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು. +ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಯಾರೇ ಆಗಲಿ ಇದನ್ನು ಸರ್ಕಾರ ಲಘುವಾಗಿ ತೆಗೆದುಕೊಳ್ಳಬಾರದು. ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ ಎಂದರೆ ಹೇಗೆ? ಕೂಡಲೇ ಕಾನೂನು ಕ್ರಮ ಜರುಗಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕೆಂದು ಸೂಚನೆ ನೀಡಿದರು. ನಂತರ ಸದನವನ್ನು ನಡೆಸಲು ಸಭಾಪತಿಗಳು ಮುಂದಾದಾಗ ಪ್ರತಿಪಕ್ಷದ ಸದಸ್ಯರು ತೀವ್ರ ಗದ್ದಲ ಎಬ್ಬಿಸುತ್ತಿದ್ದಂತೆ ಸದನವನ್ನು ಕೆಲಕಾಲ ಮುಂದೂಡಿದರು. \ No newline at end of file diff --git a/eesanje/url_46_221_9.txt b/eesanje/url_46_221_9.txt new file mode 100644 index 0000000000000000000000000000000000000000..9014b582bd0d28b369f61cf14f442e80f515182e --- /dev/null +++ b/eesanje/url_46_221_9.txt @@ -0,0 +1,6 @@ +ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್ +ಬೆಂಗಳೂರು,ಫೆ.28- ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ ಒಂದು ವೇಳೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ವಿಧಾನಸಭೆಯಲ್ಲಿ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸೋಮವಾರ ಸಕಾಲಕ್ಕೆ ಆಗಮಿಸಿದ್ದ ಶಾಸಕರ ಹೆಸರುಗಳನ್ನು ಪ್ರಕಟಿಸಿದ ನಂತರ ಸಭಾಧ್ಯಕ್ಷರು ಅಧಿಕಾರಿಗಳಿಂದ ನನಗೆ ಮಾಹಿತಿ ಬಂದಿದೆ. +ರಾಷ್ಟ್ರಧ್ವಜವನ್ನು ಸದನದೊಳಗೆ ತಂದಿದ್ದಾರೆ ಎಂಬ ಮಾಹಿತಿ ಇದೆ. ನನ್ನ ಜವಾಬ್ದಾರಿ, ಕರ್ತವ್ಯವನ್ನು ನಿಭಾಯಿಸಬೇಕು. ಯಾರೂ ಕೂಡ ಅವಮಾನ ಮಾಡಬಾರದು. ಸದನದ ಹೊರಗೆ ನಡೆದಿರುವ ಘಟನೆ ಬಗ್ಗೆ ಚರ್ಚೆ ಮಾಡಲು ಅಡ್ಡಿಯಿಲ್ಲ. ಅದರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. +ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್ +ಆಗ ವಿರೋಧಪಕ್ಷದ ಶಾಸಕರ ಆರ್.ಅಶೋಕ್ ಸೇರಿದಂತೆ ಬಿಜೆಪಿಯ ಎಲ್ಲಾ ಶಾಸಕರು ಆಕ್ರೋಶ ವ್ಯಕ್ತಪಡಿಸಿ, ಅಗೌರವ ನಾವು ಮಾಡಿಲ್ಲ, ಒಂದು ವೇಳೆ ನಾವು ಮಾಡಿದ್ದರೆ ಕಾನೂನು ಕ್ರಮ ಜರುಗಿಸಿ ಎಂದು ಸಿಡಿಮಿಡಿಗೊಂಡರು. ಅಶೋಕ್ ಮಾತನಾಡಿ, ಭಾರತದ ಧ್ವಜವನ್ನು ಹಿಡಿದು ಬರುವುದು ತಪ್ಪೇ? ಯಾರು ನಿಮಗೆ ಬಾವುಟವನ್ನು ತಂದಿದ್ದಾರೆ ಎಂದು ಹೇಳಿದರು ಎಂದು ಪ್ರಶ್ನಿಸಿದರಲ್ಲದೆ, ಭಾರತದ ಧ್ವಜವನ್ನು ಹಿಡಿಯಲು ನಮಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು. +ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಹಲವು ಸದಸ್ಯರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದಾಗ ಗೊಂದಲ ಉಂಟಾಯಿತು. ಆಗ ಸಭಾಧ್ಯಕ್ಷರು ಸದನದ ಹೊರಗೆ ನಡೆದಿರುವ ವಿಚಾರ ಬಗ್ಗೆ ಸರ್ಕಾರ ತನಿಖೆ ಮಾಡಲಿ, ತಕ್ಷಣ ತಪ್ಪಿತಸ್ಥರಿದ್ದರೆ ಕ್ರಮ ಕೈಗೊಳ್ಳಲಿ, ಅಂತಹ ವಿಚಾರವನ್ನು ಯಾರೂ ಸಹಿಸುವುದಿಲ್ಲ ಎಂದರು. \ No newline at end of file diff --git a/eesanje/url_46_222_1.txt b/eesanje/url_46_222_1.txt new file mode 100644 index 0000000000000000000000000000000000000000..3e7355b3190b9e6dfd6b58ace2ebb690a5cfd046 --- /dev/null +++ b/eesanje/url_46_222_1.txt @@ -0,0 +1,5 @@ +ಹುಕ್ಕಾ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ : 12.5 ಲಕ್ಷ ಮೌಲ್ಯದ ಫ್ಲೇವರ್ ವಶಕ್ಕೆ.. +ಬೆಂಗಳೂರು, ಫೆ.27- ಹುಕ್ಕಾ ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಹುಕ್ಕಾಬಾರ್‍ಗಳನ್ನು ನಿಷೇಧಿಸಿ ಆದೇಶಿಸಿದ್ದರೂ ಈ ಆದೇಶ ಉಲ್ಲಂಘಿಸಿ ಮಹಾಲಕ್ಷ್ಮಿ ಲೇಔಟ್, ಎಚ್‍ಎಎಲ್ ಮತ್ತು ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಾನೂನು ಬಾಹಿರವಾಗಿ ಹುಕ್ಕಾಬಾರ್ ನಡೆಸುತ್ತಿದ್ದವರ ವಿರುದ್ಧ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. +ಮಹಾಲಕ್ಷ್ಮಿ ಲೇಔಟ್‍ನಲ್ಲಿ ಇಬ್ಬರನ್ನು ವಶಕ್ಕೆ ಪಡೆದು 2 ಲಕ್ಷ ಮೌಲ್ಯದ ಐದು ಹುಕ್ಕಾ ಪಾಟ್‍ಗಳು, ಹುಕ್ಕಾ ಫ್ಲೇವರ್‍ಗಳು, ಚಾರ್‍ಕೋಲ್‍ಬಾಕ್ಸ್ ಮತ್ತು ಹುಕ್ಕಾ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ತೆರೆಯಲಾಗಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು 10 ಲಕ್ಷ ಮೌಲ್ಯದ 710 ಹುಕ್ಕಾ ಫ್ಲೇವರ್‍ಗಳು, ಹುಕ್ಕಾ ಪ್ಯಾಕೆಟ್-36 ಸೆಟ್, ಫಾಯಿಲ್ ಪೇಪರ್- 28 ಬಾಕ್ಸ್, ಫಿಲ್ಟರ್‍ಗಳು-19, ಹುಕ್ಕಾ ಪೈಪ್-25 ಮತ್ತು ನಗದನ್ನು ವಶಪಡಿಸಿಕೊಂಡಿದ್ದಾರೆ. +ಜೆಡಿಎಸ್ ಗೆಲುವಿಗೆ ಬಿಜೆಪಿ ಆಸಕ್ತಿವಹಿಸಿಲ್ಲ: ಡಿಸಿಎಂ ಡಿಕೆಶಿ +ಕೆಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರನ್ನು ವಶಕ್ಕೆ ಪಡೆದು ಮೂರು ಹುಕ್ಕಾ ಫ್ಲೇವರ್‍ಗಳು, ಐದು ಹುಕ್ಕಾ ಪಾಟ್ ಸೆಟ್ ಹಾಗೂ ನಗದು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು ಯಶಸ್ವಿಯಾಗಿ ಕೈಗೊಂಡಿತ್ತು. \ No newline at end of file diff --git a/eesanje/url_46_222_10.txt b/eesanje/url_46_222_10.txt new file mode 100644 index 0000000000000000000000000000000000000000..8c2f63f695e4b9d8e5f26a8d1c2330358b683e1d --- /dev/null +++ b/eesanje/url_46_222_10.txt @@ -0,0 +1,7 @@ +ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ +ಬೆಂಗಳೂರು,ಫೆ.27- ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.ರಾಜ್ಯಸಭೆ ಚುನಾವಣೆಯಲ್ಲಿ ಐವರು ಅಭ್ಯರ್ಥಿಗಳು ಕಣದಲ್ಲಿದ್ದರು. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್ 3, ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಅವಕಾಶವಿತ್ತು. ಹೆಚ್ಚುವರಿಯಾಗಿರುವ ಜೆಡಿಎಸ್‍ನ ನಾಯಕ ಹಾಗೂ ಎನ್‍ಡಿಎ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಬಾಕಿ ಉಳಿದ ಮತಗಳನ್ನು ಹಾಕಲು ಸಲಹೆ ನೀಡಲಾಗಿತ್ತು. +ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಅಡ್ಡಮತದಾನ ಮಾಡಲಿದ್ದಾರೆ ಎಂಬ ವದಂತಿಗಳು ವ್ಯಾಪಕವಾಗಿದ್ದವು. ಸುಮಾರು 11.15 ಕ್ಕೆ ಆಗಮಿಸಿದ ಎಸ್.ಟಿ.ಸೋಮಶೇಖರ್ ಕೆಲವೇ ನಿಮಿಷಗಳಲ್ಲಿ ಮತ ಹಾಕಿ ಹೊರಬಂದರು. ತಾವು ಆತ್ಮಸಾಕ್ಷಿಯ ಮತ ಹಾಕಿರುವುದಾಗಿ ಹೇಳಿದರು. ಮಾಧ್ಯಮದ ಪ್ರತಿನಿಧಿಗಳು 5 ನಿಮಿಷ ಅಡ್ಡ ಹಾಕಿಕೊಂಡು ನಾನಾ ರೀತಿಯ ಪ್ರಶ್ನೆ ಮಾಡಿದರು. ಆಗ ಒಂದೇ ವಾಕ್ಯದಲ್ಲಿ ಉತ್ತರಿಸಿದ ಎಸ್.ಟಿ.ಸೋಮಶೇಖರ್, ಆತ್ಮಸಾಕ್ಷಿಗನುಗುಣವಾಗಿ ಮತ ಹಾಕಿದ್ದೇನೆ ಎಂದು ಪುನರುಚ್ಚರಿಸಿದರು. +ನಿಗದಿತ ಚುನಾವಣಾ ಏಜೆಂಟ್‍ಗೆ ತಾವು ಮತ ಹಾಕಿರುವುದನ್ನು ತೋರಿಸಿದ್ದಾಗಿ ತಿಳಿಸಿದ್ದಾರೆ. ಮತಗಟ್ಟೆಯಲ್ಲಿ ಬಿಜೆಪಿ ಚುನಾವಣಾ ಏಜೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅರವಿಂದ್ ಬೆಲ್ಲದ್ ಅವರಿಗೆ ತಮ್ಮ ಮತಪತ್ರವನ್ನು ತೋರಿಸಿದ್ದಾರೆ. ಈ ವೇಳೆ ಅರವಿಂದ್ ಬೆಲ್ಲದ್ ಅವರ ಮುಖ ಬಾಡಿ ಹೋಯಿತು ಎಂದು ಹೇಳಲಾಗಿದೆ. +ವಿಧಾನಸೌಧ ಮೊಗಸಾಲೆಯಲ್ಲಿ ಅಡ್ಡ ಮತದಾನದ್ದೇ ಸದ್ದು +ಈ ವೇಳೆ ಡಿ.ಕೆ.ಶಿವಕುಮಾರ್‍ರವರು ಮತಗಟ್ಟೆಯಲ್ಲೇ ಇದ್ದು ಸೋಮಶೇಖರ್ ಮೇಲೆ ತೀವ್ರ ನಿಗಾ ವಹಿಸಿದ್ದರು. ಅಡ್ಡಮತದಾನವಾಗುತ್ತಿದ್ದಂತೆ ಬಿಜೆಪಿಯಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಮತ್ತು ಜೆಡಿಎಸ್‍ನ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. +ಪಕ್ಷಾಂತರ ನಿಷೇಧ ಕಾಯ್ದೆಯ ತೂಗುಗತ್ತಿಯ ನಡುವೆಯೂ ಅಡ್ಡಮತದಾನ ನಡೆದಿರುವುದು ಮಹತ್ವದ ರಾಜಕೀಯ ತಿರುವನ್ನು ಸೃಷ್ಟಿಸಿದೆ. ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್‍ರವರು ಮಧ್ಯಾಹ್ನವಾದರೂ ಮತಗಟ್ಟೆಯತ್ತ ಸುಳಿಯದೇ ಇರುವುದು ಕೇಸರಿ ಪಾಳಯದಲ್ಲಿ ಆತಂಕ ಸೃಷ್ಟಿಸಿತು. \ No newline at end of file diff --git a/eesanje/url_46_222_11.txt b/eesanje/url_46_222_11.txt new file mode 100644 index 0000000000000000000000000000000000000000..009f991477f167ec6e2d225c9968ee2356cd25d1 --- /dev/null +++ b/eesanje/url_46_222_11.txt @@ -0,0 +1,8 @@ +ಜೆಡಿಎಸ್-ಬಿಜೆಪಿ ನಾಯಕರ ನಡುವೆ ಲೋಕಸಭಾ ಚುನಾವಣೆ ಕುರಿತು ಸ್ವಾರಸ್ಯಕರ ಚರ್ಚೆ +ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಜೆಡಿಎಸ್-ಬಿಜೆಪಿ ನಾಯಕರ ನಡುವೆ ಸ್ವಾರಸ್ಯಕರ ಚರ್ಚೆಯಾಗಿದೆ. ಮತದಾನದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಆಪ್ತ ಸಮಾಲೋಚನೆಯಲ್ಲಿ ತೊಡಗಿದ್ದರು. +ಬಿಜೆಪಿಯ ಅಭ್ಯರ್ಥಿಯ ಗೆಲುವಿನ ಬಳಿಕ ಹೆಚ್ಚುವರಿಯಾಗಿರುವ ಮತಗಳನ್ನು ಯಾವ ರೀತಿ ಹಂಚಿಕೆ ಮಾಡಬೇಕು ಎಂಬ ಕುರಿತು ಚರ್ಚೆ ನಡೆಯುತ್ತಿದ್ದಾಗ ಜೆಡಿಎಸ್ ನಾಯಕರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಆಗಮಿಸಿದರು. ರಾಜ್ಯಸಭಾ ಚುನಾವಣೆ ಬಗ್ಗೆ ಬಿಟ್ಟು ಹಾಕಿ. ನಾವು ಸುಮ್ಮನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ. ನಮ್ಮ ಮುಂದೆ ಇರುವುದು ಲೋಕಸಭಾ ಚುನಾವಣೆ. ಅದರ ಬಗ್ಗೆ ಗಂಭೀರವಾಗಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. +ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್‍ರವರು ಗಲಾಟೆ ಮಾಡುತ್ತಿದ್ದಾರೆ. ಇತ್ತ ಬೆಂಗಳೂರು ಗ್ರಾಮಾಂತರದಿಂದ ಜಯದೇವ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಬಿಜೆಪಿಯಿಂದ ಕಣಕ್ಕಿಳಿಯುತ್ತಾರೆ ಎಂದು ಚರ್ಚೆಯಾಗುತ್ತಿದೆ. ಮಂಜುನಾಥ್‍ರನ್ನು ನಿಮ್ಮ ಪಕ್ಷದಿಂದ ಕಣಕ್ಕಿಳಿಸುವುದಾದರೆ ವಿ.ಸೋಮಣ್ಣ ಅವರನ್ನು ತುಮಕೂರಿನಿಂದ ನಮ್ಮ ಪಕ್ಷದ ಅಭ್ಯರ್ಥಿಯಾಗಲು ಬಿಟ್ಟುಕೊಡಿ ಎಂದು ಸಲಹೆ ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಧಮ್ಕಿ, ಬೆದರಿಸುವುದು ಕಾಂಗ್ರೆಸ್‍ನವರ ಅಭ್ಯಾಸ: ಕುಮಾರಸ್ವಾಮಿ +ತುಮಕೂರಿನಲ್ಲಿ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಅಹಿಂದಾ ಮತಗಳು ಮತ್ತು ಮುದ್ದಹನುಮೇಗೌಡರ ವೈಯಕ್ತಿಕ ಮತಗಳಿಂದ ಕಾಂಗ್ರೆಸ್ ಗೆದ್ದರೂ ಗೆಲ್ಲಬಹುದು. ಅದಕ್ಕೆ ಪ್ರತಿತಂತ್ರ ಎಂದರೆ ಲಿಂಗಾಯತ ಸಮುದಾಯದ ಸೋಮಣ್ಣ ಅವರನ್ನು ಜೆಡಿಎಸ್‍ನಿಂದ ಕಣಕ್ಕಿಳಿಸಿದರೆ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸಮೀಕರಣದಿಂದಾಗಿ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. +ಜೆಡಿಎಸ್ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದ ಕ್ಷೇತ್ರಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಯುತ್ತಿದ್ದಾಗ ಬಿಜೆಪಿ ನಾಯಕರು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ನೀವು ಹೈಕಮಾಂಡ್ ಜೊತೆ ನೇರ ಸಂಪರ್ಕದಲ್ಲಿದ್ದೀರ. ನಿಮ್ಮ ಅಭಿಪ್ರಾಯವನ್ನು ಅಲ್ಲಿಯೇ ತಿಳಿಸುವುದು ಸೂಕ್ತ ಎಂದು ಪ್ರತಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ. +ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಳೆ ದೆಹಲಿಗೆ ತೆರಳಲಿದ್ದು, ಮೈತ್ರಿ ನಡುವಿನ ಕ್ಷೇತ್ರ ಹಂಚಿಕೆ ಹಾಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_222_12.txt b/eesanje/url_46_222_12.txt new file mode 100644 index 0000000000000000000000000000000000000000..8f83b1d028ea8daaf5a256ea210aecfe53d5f036 --- /dev/null +++ b/eesanje/url_46_222_12.txt @@ -0,0 +1,6 @@ +ವಿಧಾನಸೌಧ ಮೊಗಸಾಲೆಯಲ್ಲಿ ಅಡ್ಡ ಮತದಾನದ್ದೇ ಸದ್ದು +ಬೆಂಗಳೂರು,ಫೆ.27- ತೀವ್ರ ಕುತೂಹಲ ಕೆರಳಿಸಿದ ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮುಕ್ತಾಯವಾಗುತ್ತಾ ಬಂದರೂ ಅಡ್ಡಮತದಾನದ ಚರ್ಚೆಗಳು ಸದ್ದು ಮಾಡುತ್ತಲೇ ಇದ್ದವು. ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿಯವರಿಗೆ ಆತ್ಮಸಾಕ್ಷಿಯ ಮತಗಳು ಬರುತ್ತವೆ ಎಂದು ಹೇಳುತ್ತಾ ಗೊಂದಲ ಮೂಡಿಸುತ್ತಿದ್ದರೆ,ಬಿಜೆಪಿ ನಾಯಕರು ಕಾಂಗ್ರೆಸ್‍ನಿಂದ ಅಡ್ಡಮತದಾನವಾಗಿ ಬಿಜೆಪಿಯ ನಾರಾಯಣ ಸ ಬಾಂಡಗೆಯವರೊಂದಿಗೆ ಎನ್‍ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್‍ನ ಕುಪೇಂದ್ರ ರೆಡ್ಡಿ ಕೂಡ ಗೆಲ್ಲುತ್ತಾರೆ ಎಂದು ಹೇಳಿಕೊಳ್ಳುತ್ತಾ ತಿರುಗಾಡುತ್ತಿದ್ದರು. +ಜೆಡಿಎಸ್‍ನ ಶಾಸಕ ಜಿ.ಟಿ.ದೇವೇಗೌಡ ನಮ್ಮ ಪಕ್ಷದ ಕುಪೇಂದ್ರ ರೆಡ್ಡಿ ಅನುಭವಿ ರಾಜಕಾರಣಿ. ಅವರಿಗೆ ಆತ್ಮಸಾಕ್ಷಿಯ ಮತಗಳು ಬಿದ್ದು, ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದಕ್ಕೆ ವ್ಯತಿರಿಕ್ತವಾಗಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನಮ್ಮ ಬಳಿ 135 ಶಾಸಕರಿದ್ದರು. ಒಬ್ಬರು ನಿಧನರಾಗಿದ್ದರಿಂದಾಗಿ ಸಂಖ್ಯಾಬಲ 134ಕ್ಕೆ ಇಳಿದಿದೆ. ಮೂವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಪ್ರತಿ ಅಭ್ಯರ್ಥಿಗಳು ಗೆಲ್ಲಲು 45 ಮತಗಳು ಬೇಕಿದ್ದು, ಕಾಂಗ್ರೆಸ್ ಬಳಿ ಮೂವರು ಅಭ್ಯರ್ಥಿಗಳ ಗೆಲುವಿಗಾಗಿ ತಲಾ 47 ಮತಗಳಿವೆ. ಹೀಗಾಗಿ ನಮ್ಮ ಅಭ್ಯರ್ಥಿಗಳೇ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. +ಧಮ್ಕಿ, ಬೆದರಿಸುವುದು ಕಾಂಗ್ರೆಸ್‍ನವರ ಅಭ್ಯಾಸ: ಕುಮಾರಸ್ವಾಮಿ +ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್-ಬಿಜೆಪಿ ಶಾಸಕರಿಗೆ ಅಡ್ಡಮತದಾನದ ಭಯ ಇರಬಹುದು. ಆದರೆ ಕಾಂಗ್ರೆಸ್‍ನಲ್ಲಿ ಇಲ್ಲ. ಚುನಾವಣೆಯಲ್ಲಿ ಹಣದುಂದುವೆಚ್ಚದಂತಹ ಕೆಟ್ಟ ವ್ಯವಸ್ಥೆ ಜಾರಿಗೆ ತಂದವರು ಬಿಜೆಪಿಯವರು ಎಂದು ವಾಗ್ದಾಳಿ ನಡೆಸಿದರು. +ಸಚಿವ ಶರಣ ಪ್ರಕಾಶ್ ಪಾಟೀಲ್, ಕಾಂಗ್ರೆಸ್ ಶಾಸಕಾಂಗ ಸಭೆಗೆ ನಮ್ಮ ಎಲ್ಲಾ ಶಾಸಕರೂ ಹಾಜರಾಗಿದ್ದರು. ಯಾರೂ ಅಡ್ಡಮತದಾನ ಮಾಡುವ ಸಾಧ್ಯತೆಗಳಿಲ್ಲ. ನಮ್ಮವರು ಸಂವಿಧಾನ ವಿರೋ ಕೆಲಸ ಮಾಡುವುದಿಲ್ಲ. ಬೇರೆಯವರಿಗೂ ಆಮಿಷ ಒಡ್ಡುವುದಿಲ್ಲ ಎಂದರು. \ No newline at end of file diff --git a/eesanje/url_46_222_2.txt b/eesanje/url_46_222_2.txt new file mode 100644 index 0000000000000000000000000000000000000000..75b84f427d5e3ddc925f9a2a786c1566c44e3aca --- /dev/null +++ b/eesanje/url_46_222_2.txt @@ -0,0 +1,8 @@ +ಸೋಮಶೇಖರ್ ವಿರುದ್ಧ ಕಾನೂನ ಕ್ರಮ: ಆರ್.ಅಶೋಕ್ +ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಕಾನೂನ ಕ್ರಮ ಕೈಗೊಳ್ಳಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಿನ್ನೆ ಕೂಡ ಎಸ್.ಟಿ.ಸೋಮಶೇಖರ್ ತಮಗೆ ಕರೆ ಮಾಡಿ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದರು. +ಈಗ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಏನು ಮಾಡುತ್ತಾರೆ ಗೊತ್ತಿಲ್ಲ. ಕಳೆದ 4 ತಿಂಗಳಿನಿಂದ ಈ ಇಬ್ಬರು ಸಿಎಂ ಹಗೂ ಡಿಸಿಎಂ ಜೊತೆ ತಿರುಗಾಡುತಿದ್ದರು. ವಿಧಾನಸಭಾ ಚುನಾವಣೆ ನಡೆದು 9 ತಿಂಗಳಾಗಿಲ್ಲ. ಆಗಲೇ ಪಕ್ಷಾಂತರ ಮಾಡುವುದನ್ನು ಜನ ಕ್ಷಮಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಉಚ್ಚಾಟನೆ ಸಾಧ್ಯತೆ! +ಶಿವರಾಮ ಹೆಬ್ಬಾರ್ ಇಂದು ಬೆಳಗ್ಗೆ ಕೂಡ ತಮ್ಮ ಸಂಪರ್ಕದಲ್ಲಿದ್ದು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದಿದ್ದರು. ಈಗ ಅವರ ನಡವಳಿಕೆ ಪ್ರಶ್ನಾರ್ಹವಾಗಿದೆ ಎಂದರು. ಎಸ್.ಟಿ.ಸೋಮಶೇಖರ್ ಬಿಜೆಪಿಯಲ್ಲಿ ಸಚಿವರಾಗಿದ್ದರು. ಪ್ರಭಾವಿ ಜಿಲ್ಲೆಯಲ್ಲಿ ಮೈಸೂರಿನ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈಗ ಅಡ್ಡ ಮತದಾನ ಮಾಡಿ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡ್ಡಮತದಾನ, ಪಕ್ಷ ದ್ರೋಹದ ವಿರುದ್ಧ ಆಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ವಕೀಲ ವಿವೇಕ ರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಕಾನೂನು ತಜ್ಞರ ಜೊತೆ ಕೂಡ ಸಮಲೋಚನೆ ನಡೆಯುತ್ತಿದೆ ಸಾಧ್ಯವಿರುವ ಎಲ್ಲಾ ಕಾನುನು ಕ್ರಮ ಕೈಗೊಳ್ಳುತ್ತೇವೆ ಎಂದರು. +ಈ ಇಬ್ಬರೂ ಶಾಸಕರಿಗೂ ವ್ಹಿಪ್ ಜಾರಿ ಮಾಡಲಾಗಿತ್ತು. ಅವರ ಕಚೇರಿ ಹಾಗೂ ಮನೆಗಳಿಗೆ ವ್ಹಿಪ್ ಕಳುಹಿಸುವ ಜೊತೆಗೆ ಆಪ್ತ ಸಹಾಯಕರಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗಿದೆ. ಪಕ್ಷದ ಚಿಹ್ನೆಯಡಿ ಗೆದ್ದು ದ್ರೋಹ ಮಾಡಿರುವುದನ್ನು ಮತದಾರರು ಕ್ಷಮಿಸಲ್ಲ ಎಂದು ಪುನರುಚ್ಚರಿಸಿದರು. +ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ +ಎನ್‍ಡಿಎ ಅಭ್ಯರ್ಥಿಯಾಗಿರುವ ಜೆಡಿಎಸ್‍ನ ಕುಪೇಂದ್ರರೆಡ್ಡಿ ಸೋಲು ಯಾವುದೇ ಮುಜುಗರ ಉಂಟುಮಾಡಿಲ್ಲ. ಪ್ರಯೋಗಾತ್ಮಕವಾಗಿ ಅವರನ್ನು ಕಣಕ್ಕಿಳಿಸಲಾಗಿತ್ತು. ಹೀಗಾಗಿ ಬಿಜೆಪಿ ಅಥವಾ ಜೆಡಿಎಸ್‍ನ ಸೋಲು ಎಂದು ಪರಿಗಣಿಸುವ ಅಗತ್ಯವಿಲ್ಲ ಎಂದರು. \ No newline at end of file diff --git a/eesanje/url_46_222_3.txt b/eesanje/url_46_222_3.txt new file mode 100644 index 0000000000000000000000000000000000000000..fe5a5d001667ed1808b1b7ff3d5ea26ab20a15a7 --- /dev/null +++ b/eesanje/url_46_222_3.txt @@ -0,0 +1,5 @@ +ಜೆಡಿಎಸ್ ಗೆಲುವಿಗೆ ಬಿಜೆಪಿ ಆಸಕ್ತಿವಹಿಸಿಲ್ಲ: ಡಿಸಿಎಂ ಡಿಕೆಶಿ +ಬೆಂಗಳೂರು,ಫೆ.27-ಬಿಜೆಪಿ-ಜೆಡಿಎಸ್ ಮೈತ್ರಿ ಸರಿಯಿದೆಯೋ, ಇಲ್ಲವೋ ಎಂಬುದನ್ನು ರಾಜ್ಯಸಭೆ ಚುನಾವಣಾ ಫಲಿತಾಂಶ ನೀಡಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಮತದಾರರು ಹಾಗೂ ಶಾಸಕರು ಒಪ್ಪಿಕೊಳ್ಳಬೇಕು. ಅದು ಸರಿಯೇ ಅಥವಾ ಇಲ್ಲವೇ ಎಂಬುದನ್ನು ಜನ ತೀರ್ಮಾನಿಸಬೇಕು. ಈ ಫಲಿತಾಂಶ ಅದನ್ನು ಸಾಬೀತು ಪಡಿಸಲಿದೆ ಎಂದರು. +ಚುನಾವಣಾ ಅಭ್ಯರ್ಥಿಗಳು ಆತ್ಮಸಾಕ್ಷಿ ಮತ ಕೇಳಿದ್ದರು. ಅದರಂತೆ ಮತಗಳು ಚಲಾವಣೆಯಾಗಿರಬಹುದು. ಎಸ್.ಟಿ.ಸೋಮಶೇಖರ್ ಅವರು ಯಾರ ಪರ ಮತ ಹಾಕಿದ್ದಾರೆ ಗೊತ್ತಿಲ್ಲ. ಅವರ ಹೇಳಿಕೆ ನೋಡಿಲ್ಲ. ಒಂದು ವೇಳೆ ಅಡ್ಡ ಮತದಾನವಾಗಿದ್ದರೆ ಅದರ ಕುರಿತು ಹೇಳಿಕೆ ನೀಡಬೇಕಿರುವುದು ಬಿಜೆಪಿ ಎಂದು ಸ್ಪಷ್ಟಪಡಿಸಿದರು. +ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ +ಜೆಡಿಎಸ್‍ನ ಕುಪೇಂದ್ರರೆಡ್ಡಿ ಅವರನ್ನು ಗೆಲ್ಲಿಸಲು ಬಿಜೆಪಿ ಯಾವ ಪ್ರಯತ್ನವನ್ನೂ ಮಾಡಿಲ್ಲ. ಬಿಜೆಪಿ ಅಭ್ಯರ್ಥಿ ಗೆಲ್ಲಲು 45 ಮತಗಳು ಬೇಕಿತ್ತು. ಬಾಕಿ ಉಳಿದ ಮತಗಳನ್ನು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಯವರಿಗೆ ಹಾಕಿಸಬಹುದಿತ್ತು. ಆದರೆ ಬಿಜೆಪಿ ತಮ್ಮ ಅಭ್ಯರ್ಥಿಗೆ 48 ಮತಗಳನ್ನು ಹಾಕಿಸಿದೆ. ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿ ಆಸಕ್ತಿ ವಹಿಸಿಲ್ಲ ಎಂಬುದು ಗೊತ್ತಾಗುತ್ತದೆ ಎಂದರು. \ No newline at end of file diff --git a/eesanje/url_46_222_4.txt b/eesanje/url_46_222_4.txt new file mode 100644 index 0000000000000000000000000000000000000000..5e9cc98c8dd3c1c626a841538dce76e495f2415a --- /dev/null +++ b/eesanje/url_46_222_4.txt @@ -0,0 +1,8 @@ +ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್ ಉಚ್ಚಾಟನೆ ಸಾಧ್ಯತೆ! +ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ಬಿಜೆಪಿಯಿಂದಲೇ ಉಚ್ಚಾಟಿಸುವ ಸಾಧ್ಯತೆ ಇದೆ.ಪಕ್ಷದ ವ್ಹಿಪ್ ಉಲ್ಲಂಘಿಸಿ ಕಾಂಗ್ರೆಸ್ ಪರವಾಗಿ ಮತ ಹಾಕಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಘಟಕ ಸೋಮಶೇಖರ್‍ರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸಬೇಕೆಂದು ಕೇಂದ್ರದ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಲಿದೆ. ಶಾಸಕರಾಗಿರುವುದರಿಂದ ಸೋಮಶೇಖರ್ ಮೇಲೆ ರಾಜ್ಯಘಟಕ ಶಿಸ್ತು ಕ್ರಮ ಜರುಗಿಸಲು ಆಗುವುದಿಲ್ಲ. ಹೀಗಾಗಿ ಅವರ ವಿರುದ್ಧ ಕೇಂದ್ರದ ಶಿಸ್ತುಸಮಿತಿಯೇ ನಿರ್ಧಾರ ತೆಗೆದುಕೊಳ್ಳಬೇಕಾಗಿರುವುದರಿಂದ ಒಂದೆರಡು ದಿನಗಳಲ್ಲೇ ಶಿಫಾರಸು ಪತ್ರ ರವಾನೆಯಾಗಲಿದೆ ಎಂದು ಹೇಳಲಾಗುತ್ತಿದೆ. +ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿರುವುದು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಮುಜುಗರ ಸೃಷ್ಟಿಸಿದೆ. ಭವಿಷ್ಯದಲ್ಲಿ ಯಾರೊಬ್ಬರೂ ಪಕ್ಷದ ಶಿಸ್ತು ಉಲ್ಲಂಘನೆ ಮಾಡಬಾರದೆಂದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ. +ಈಗಾಗಲೇ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದು, ಪಕ್ಷದಿಂದಲೇ ಉಚ್ಚಾಟನೆ ಮಾಡುವ ಸಾಧ್ಯತೆಗಳು ನಿಚ್ಛಳವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಯಶವಂತಪುರದಿಂದ ಗೆದ್ದ ನಂತರ ಸೋಮಶೇಖರ್ ಬಿಜೆಪಿಯಿಂದ ಅಂತರ ಕಾಪಾಡಿಕೊಂಡು ಕಾಂಗ್ರೆಸ್‍ಗೆ ಹತ್ತಿರವಾಗಿದ್ದರು. +4 ಡ್ರಗ್ ಪೆಡ್ಲರ್‌ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ +ಇತ್ತೀಚೆಗೆ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರ ಮತಯಾಚನೆ ಮಾಡಿ ಬಿಜೆಪಿ-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎ.ಪಿ.ರಂಗನಾಥ್ ವಿರುದ್ಧವಾಗಿ ಕೆಲಸ ಮಾಡಿದ್ದರು. ಹೀಗೆ ಪ್ರತಿಹಂತದಲ್ಲೂ ಬಿಜೆಪಿಗೆ ಮುಜುಗರ ಸೃಷ್ಟಿಸುತ್ತಿರುವ ಎಸ್.ಟಿ.ಸೋಮಶೇಖರ್‍ರವರನ್ನು ಪಕ್ಷದಿಂದಲೇ ಹೊರ ಹಾಕಬೇಕೆಂಬ ಒತ್ತಡಗಳು ಕೇಳಿಬಂದಿವೆ. +ಶಾಸಕ ಸ್ಥಾನಕ್ಕೆ ಸೋಮಶೇಖರ್ ರಾಜೀನಾಮೆ? +ಈ ಹಿಂದೆ ವಿಜಯ್‍ಮಲ್ಯ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದಾಗ ಬಿಜೆಪಿಯ ಹಲವು ಶಾಸಕರು ಪಕ್ಷದ ಅಕೃತ ಅಭ್ಯರ್ಥಿ ವಿರುದ್ಧವಾಗಿ ಮತ ಚಲಾಯಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ಹಲವು ಶಾಸಕರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿತ್ತು. ಈಗ ಸೋಮಶೇಖರ್ ವಿರುದ್ಧವೂ ಇದೇ ಅಸ್ತ್ರವನ್ನು ಬಳಸಲು ಬಿಜೆಪಿ ಮುಂದಾಗಿದೆ. ಇದಕ್ಕೆ ಮುನ್ಸೂಚನೆ ಎಂಬಂತೆ ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ನಾವು ಶಿಸ್ತು ಕ್ರಮ ಜರುಗಿಸುವಂತೆ ವಿಧಾನಸಭೆಯ ಸಭಾಧ್ಯಕ್ಷರಿಗೆ ದೂರು ನೀಡುತ್ತೇವೆಂದು ಹೇಳಿದ್ದಾರೆ. \ No newline at end of file diff --git a/eesanje/url_46_222_5.txt b/eesanje/url_46_222_5.txt new file mode 100644 index 0000000000000000000000000000000000000000..fa48991c3f261059a60fe73af81255f25463ffe6 --- /dev/null +++ b/eesanje/url_46_222_5.txt @@ -0,0 +1,13 @@ +ಅಡ್ಡಮತದಾನ: ಅನರ್ಹತೆ ಪರ- ವಿರೋಧ ಚರ್ಚೆ +ಬೆಂಗಳೂರು,ಫೆ.27- ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವವರ ಶಾಸಕ ಸ್ಥಾನದ ಅನರ್ಹತೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ರಾಜಕೀಯವಾಗಿ ಮತ್ತೊಂದು ವಿಚಾರಮಂಥನಕ್ಕೆ ಅವಕಾಶ ಮಾಡಿಕೊಟ್ಟಿದೆ. ರಾಜ್ಯಸಭಾ ಚುನಾವಣೆಯಲ್ಲಿ ಮುಕ್ತ ಮತದಾನವಾಗಿರುವುದರಿಂದ ಅಡ್ಡಮತದಾನ ಮಾಡಿದವರನ್ನು ಅನರ್ಹಗೊಳಿಸಲು ಅವಕಾಶ ಇಲ್ಲ ಎಂದು ಹಿರಿಯ ವಕೀಲರು ಆದ ಕಾಂಗ್ರೆಸ್ ಪಕ್ಷದ ಶಾಸಕ ಎ.ಎಸ್.ಪೊನ್ನಣ್ಣ ಪ್ರತಿಪಾದಿಸಿದ್ದಾರೆ. +ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಲಾದ ಎಸ್.ಟಿ.ಸೋಮಶೇಖರ್ ಸೇರಿದಂತೆ ಯಾವುದೇ ಶಾಸಕರನ್ನು ಅನರ್ಹಗೊಳಿಸಲು ಅವಕಾಶ ಇಲ್ಲ. ಹೀಗಾಗಿ ರಾಜಕೀಯ ಪಕ್ಷಗಳು ನೀಡಿದ ವ್ಹಿಪ್‍ಗಳು ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ರಾಜ್ಯಪ್ರಧಾನಕಾರ್ಯದರ್ಶಿ ಹಾಗೂ ಶಾಸಕರಾಗಿರುವ ವಿ.ಸುನಿಲ್‍ಕುಮಾರ್‍ರವರು ಅಡ್ಡಮತದಾನ ಶಾಸಕರ ಅನರ್ಹತೆಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ. +ಪಕ್ಷ ರಾಜ್ಯಸಭೆಯಲ್ಲಿ ಯಾರಿಗೆ ಮತ ಹಾಕಬೇಕೆಂದು ವ್ಹಿಪ್ ನೀಡಿದೆ. ಅದನ್ನು ಉಲ್ಲಂಘಿಸುವುದು ಪಕ್ಷಾಂತರ ನಿಷೇಧ ಕಾಯ್ದೆಗೆ ಒಳಪಡುತ್ತದೆ. ನಮ್ಮ ಪಕ್ಷದಿಂದ ಬೂತ್ ಏಜೆಂಟ್ ಆಗಿರುವವರು ಯಾರು, ಯಾರಿಗೆ ಮತ ಹಾಕಿದ್ದಾರೆ ಎಂಬುದನ್ನು ಗುರುತು ಮಾಡಿಕೊಂಡಿದ್ದಾರೆ. ಒಂದು ವೇಳೆ ಅಡ್ಡಮತದಾನವಾಗಿದ್ದರೆ ಅದನ್ನು ಪರಿಶೀಲಿಸಿ ಪಕ್ಷವು ಕ್ರಮ ಕೈಗೊಳ್ಳುತ್ತದೆ ಮತ್ತು ಶಾಸಕರನ್ನು ಅನರ್ಹಗೊಳಿಸಲು ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಹೇಳಿದರು. +4 ಡ್ರಗ್ ಪೆಡ್ಲರ್‌ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ +ವಿಚಾರ ಮಂಥನ :ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪರವಾಗಿ ಹಲವಾರು ಮಂದಿ ಅಡ್ಡಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ವ್ಯಾಪಕವಾಗಿದ್ದವು. ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಶಿವರಾಂ ಹೆಬ್ಬಾರ್ ಮಧ್ಯಾಹ್ನದವರೆಗೂ ಮತಗಟ್ಟೆಗೆ ಬಂದಿರಲಿಲ್ಲ. ಇನ್ನು ಜೆಡಿಎಸ್‍ನ ಶಾಸಕರಾದ ಕರೆಮ್ಮ, ತಾವು ತಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿಯವರಿಗೇ ಮತ ಹಾಕಿರುವುದಾಗಿ ಸ್ಪಷ್ಪಡಿಸಿದರು. +ಮತ್ತೊಬ್ಬ ಶಾಸಕ ಶರಣಗೌಡ ಕಂದಕೂರ್, ನಾವು ಆತ್ಮಸಾಕ್ಷಿಗನುಗುಣವಾಗಿ ಮತ ಹಾಕಿದ್ದೇನೆ. ಪಕ್ಷ ವ್ಹಿಪ್ ನೀಡಿದೆ. ಅದನ್ನು ಉಲ್ಲಂಘನೆ ಮಾಡಿಲ್ಲ. ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.ಇನ್ನು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಶಾಸಕ ಜನಾರ್ದನ ರೆಡ್ಡಿ, ತಾವು ಆತ್ಮಸಾಕ್ಷಿ ಮತ ಚಲಾಯಿಸಿರುವುದಾಗಿ ಹೇಳಿದರು. ಪದೇ ಪದೇ ಪ್ರಶ್ನೆಗಳು ಎದುರಾದಾಗ ನಾನು ಯಾರಿಗೆ ಮತ ಹಾಕಿದ್ದೇನೆ ಎಂದು ನಿಮಗೆ ಏಕೆ ಹೇಳಬೇಕು ಎಂದು ಖಾರವಾಗಿ ಪ್ರಶ್ನಿಸಿದರು. +ಪಕ್ಷೇತರರಾದ ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಪಕ್ಷೇತರರಾಗಿರುವುದರಿಂದ ಇವರಿಗೆ ಯಾವುದೇ ವ್ಹಿಪ್‍ಗಳು ಅನ್ವಯಾಗುವುದಿಲ್ಲ. ಕಾನೂನಿನ ಗೋಜಲೂ ಇರುವುದಿಲ್ಲ. ಆದರೆ ಪಕ್ಷದ ಚಿನ್ಹೆ ಹೇಳಿ ಚುನಾಯಿತರಾಗಿರುವ ಶಾಸಕರು ಅಡ್ಡಮತದಾನ ಮಾಡಿದ ವೇಳೆ ಅನರ್ಹತೆಗೆ ಒಳಗಾಗುತ್ತಾರೆ ಎಂಬ ಚರ್ಚೆಗಳಿವೆ. +ಮೂಲಭೂತ ಪ್ರಶ್ನೆಯೆಂದರೆ, ಈ ಚುನಾವಣೆಯಲ್ಲಿ ಪ್ರತಿಯೊಂದು ರಾಜಕೀಯ ಪಕ್ಷದ ಪರವಾಗಿ ಮತಗಟ್ಟೆಯಲ್ಲಿ ಒಬ್ಬ ಏಜೆಂಟ್ ಹಾಜರಿರುತ್ತಾರೆ. ಶಾಸಕರು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಕ್ರಮಸಂಖ್ಯೆಯನ್ನು ನಮೂದಿಸಿ ಮತ ಹಾಕಬೇಕು. ಮತ ಹಾಕುವ ಮೊದಲು ನೋಂದಣಿ ಪುಸ್ತಕದಲ್ಲಿ ಹೆಸರು ಹಾಗೂ ಇತರ ವಿವರಗಳನ್ನು ದಾಖಲಿಸಲಾಗುತ್ತದೆ. +ಆದರೆ ಮತಪತ್ರದಲ್ಲಿ ಮತ ಹಾಕಿದವರ ಹೆಸರಿನ ಉಲ್ಲೇಖ ಇರುವುದಿಲ್ಲ. ಮತ ಚಲಾಯಿಸಿದ ಕ್ರಮ ಸಂಖ್ಯೆ ಮಾತ್ರ ಗೋಚರವಾಗುತ್ತದೆ. ಮತ ಹೇಳಿಕೆಯಲ್ಲಿ ಯಾರು, ಯಾರಿಗೆ ಮತ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯಲು ಸಾಧ್ಯವಿಲ್ಲ ಮತ್ತು ಅದನ್ನು ಸಾಬೀತುಪಡಿಸುವುದೂ ಕೂಡ ಕಷ್ಟಸಾಧ್ಯ. ಚುನಾವಣಾ ಏಜೆಂಟ್‍ಗೆ ಶಾಸಕರು ಮತಪತ್ರವನ್ನು ತೋರಿಸಿದಾಗ ಅಡ್ಡಮತದಾನವಾಗಿರುವುದು ಸ್ಪಷ್ಟವಾಗಿ ಕಂಡುಬಂದರೂ ಕೂಡ ಅದನ್ನು ಸಾಬೀತುಪಡಿಸುವುದು ಸದ್ಯದ ನಿಯಮಾವಳಿಗಳಲ್ಲಿ ಗೊಂದಲಕಾರಿಯಾಗಿದೆ ಎಂದು ಮೂಲಗಳು ತಿಳಿಸಿವೆ. +ಹೀಗಾಗಿ ಕಾಂಗ್ರೆಸ್ ಪಕ್ಷದ ಧುರೀಣರು, ಜೆಡಿಎಸ್-ಬಿಜೆಪಿ ಶಾಸಕರಿಗೆ ಭಯ ಬೀಳಬೇಡಿ, ಆತ್ಮಸಾಕ್ಷಿಯ ಮತ ಹಾಕಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದ್ದಾಗಿ ತಿಳಿದುಬಂದಿದೆ. ಅದರನ್ವಯ ಒಬ್ಬರು ಅಡ್ಡಮತದಾನ ಮಾಡಿರುವುದು ಖಚಿತವಾಗಿದ್ದು, ಮತ್ತೊಬ್ಬರು ಅಡ್ಡಮತದಾನ ಮಾಡಿದ್ದಾರೆಯೇ? ಇಲ್ಲವೇ? ಎಂಬ ಗೊಂದಲ ಮುಂದುವರೆದಿದೆ. +ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ +ಇವರ ಅನರ್ಹತೆ ಬಗ್ಗೆ ಬಿಜೆಪಿ ತಕ್ಷಣವೇ ಕಾನೂನು ಪ್ರಕ್ರಿಯೆ ಆರಂಭಿಸಲಿದೆ ಎಂದು ಹೇಳಲಾಗಿದೆ. ಆದರೆ ಅದು ಅರೆ ನ್ಯಾಯಾಲಯವಾಗಿರುವ ಸಭಾಧ್ಯಕ್ಷರ ಕಚೇರಿಯಲ್ಲಿ ಇತ್ಯರ್ಥವಾಗಲು ಕಾಲಾವಕಾಶದ ಅಗತ್ಯವಿದೆ ಎಂದು ಹೇಳಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಪಕ್ಷದ ಚಿನ್ಹೆ ಬಳಕೆ ಮಾಡುವುದಿಲ್ಲ. ಹೀಗಾಗಿ ಇದು ಮುಕ್ತ ಮತದಾನದ ಚುನಾವಣೆಯಾಗಿದೆ. ವ್ಹಿಪ್ ನೀಡಲು ಅವಕಾಶ ಇಲ್ಲ. ಪಕ್ಷಾಂತರ ನಿಷೇಧ ಕಾಯ್ದೆ ಕೂಡ ಅನ್ವಯವಾಗುವುದಿಲ್ಲ. ಈ ಕುರಿತು ಸುಪ್ರೀಂಕೋರ್ಟಿನ ಹಲವು ತೀರ್ಪುಗಳು ಸ್ಪಷ್ಟವಾದ ನಿರ್ದೇಶನ ನೀಡಿವೆ ಎಂದು ಹೇಳಿದರು. \ No newline at end of file diff --git a/eesanje/url_46_222_6.txt b/eesanje/url_46_222_6.txt new file mode 100644 index 0000000000000000000000000000000000000000..4411babb360412684e22c8b38931bb64334a03a3 --- /dev/null +++ b/eesanje/url_46_222_6.txt @@ -0,0 +1,9 @@ +ನಾಲ್ವರು ಮೊಬೈಲ್ ಸುಲಿಗೆಕೋರರ ಬಂಧನ: 70 ಮೊಬೈಲ್ ವಶ +ಬೆಂಗಳೂರು, ಫೆ.27- ಒಂಟಿಯಾಗಿ ಹೋಗುವ ಸಾರ್ವಜನಿಕರನ್ನು ಗುರಿಯಾಗಿಟ್ಟುಕೊಂಡು ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ನಾಲ್ವರು ದರೋಡೆಕೋರರನ್ನು ನಗರ ಪೊಲೀಸರು ಬಂಧಿಸಿ 70 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಕೆಆರ್‍ ಪುರ:ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವಾಗ ಹಿಂದಿನಿಂದ ಬೈಕ್‍ನಲ್ಲಿ ಬಂದ ದರೋಡೆಕೋರರು ಅವರ ಕೈಯಲಿದ್ದ ಮೊಬೈಲ್ ಪೋನ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 20 ಲಕ್ಷ ಬೆಲೆ ಬಾಳುವ ಒಟ್ಟು 68 ವಿವಿಧ ಕಂಪನಿಯ ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ಮಹದೇವಪುರ ಪೊಲೀಸ್ ಠಾಣೆಯ ಒಟ್ಟು 9 ಮೊಬೈಲ್ ದರೋಡೆ ಪ್ರಕರಣಗಳು ಪತ್ತೆಯಾಗಿದ್ದು ಹೆಚ್ಚಿನ ತನಿಖೆ ಕೈಕೊಳ್ಳಲಾಗಿದೆ. +ಈ ಇಬ್ಬರು ಆರೋಪಿಗಳು ನಗರದ ಜನನಿಬಿಡ ಪ್ರದೇಶಗಳಾದ ಟಿನ್‍ಪ್ಯಾಕ್ಟರಿ, ಮಾರತ್ತಹಳ್ಳಿ, ಹೆಬ್ಬಾಳ, ಸಿಲ್ಕ್ ಬೋರ್ಡ್ ಮುಂತಾದ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಒಂಟಿ ವ್ಯಕಿಗಳನ್ನು ಗುರಿಯಾಗಿಟ್ಟುಕೊಂಡು ಅವರು ಗಳಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. +ನಂತರ ಅವುಗಳನ್ನು ತಮ್ಮ ಸ್ವಂತ ಊರು ಹಿರಿಯೂರಿನಲ್ಲಿ ಮಾರಾಟ ಮಾಡಿ ಬಂದ ಹಣದಿಂದ ದುಶ್ಚಟಗಳಿಗೆ ಬಳಸಿಕೊಳ್ಳುತ್ತಿದ್ದುದ್ದು ವಿಚಾರಣೆಯಿಂದ ತಿಳಿದು ಬಂದಿದೆ. ಈ ಕಾರ್ಯಚರಣೆಯನ್ನು ವೈಟ್‍ಫಿಲ್ಡ್ ವಿಭಾಗದ, ಉಪ ಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ್, ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ನೇತೃತ್ವದಲ್ಲಿ, ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿಯವರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಗೊಳಿಸಿರುತ್ತಾರೆ. +ಇಬ್ಬರ ಬಂಧನ:ಇಂದಿರಾನಗರ ಠಾಣೆ ಪೊಲೀಸರು ಇಬ್ಬರು ಮೊಬೈಲ್ ಸುಲಿಗೆಕೋರರನ್ನು ಬಂಧಿಸಿ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ವಿನೋದ್ ಮತ್ತು ಸ್ಟೀಫನ್ ರಾಜು ಬಂತ ಮೊಬೈಲ್ ದರೋಡೆಕೋರರು. ಜನವರಿ 31ರಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ವ್ಯಕ್ತಿಯೊಬ್ಬರಿಗೆ ಕೈಯಿಂದ ಹಲ್ಲೆ ಮಾಡಿ, ಹೆದರಿಸಿ ಅವರ ಜೇಬಿನಲ್ಲಿದ್ದ ಒಂದು ಒಪೋ ಮೊಬೈಲ್ ಮತ್ತು 2,300 ಹಣವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. +4 ಡ್ರಗ್ ಪೆಡ್ಲರ್‌ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ +ನಂತರ ಅವರು 112ಗೆ ಕರೆಮಾಡಿ ಮೊಬೈಲ್ ಹಾಗೂ ನಗದು ಹಣವನ್ನು ಕಿತ್ತುಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದರು. 112ನಿಂದ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದ ಹೊಯ್ಸಳ-30 ರ ವಾಹನದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಈ ದೂರನ್ನು ಪರಿಶೀಲಿಸುವಂತೆ ಸೂಚಿಸಿದ್ದರು.ಅದರಂತೆ ಹೊಯ್ಸಳ ಅಧಿಕಾರಿ ಮತ್ತು ಸಿಬ್ಬಂದಿಯವರು ಕೂಡಲೆ ಕಾರ್ಯೋನ್ಮುಖರಾಗಿ ಸುಲಿಗೆ ಮಾಡಿ ಮೋಟಾರ್ ಸೈಕಲ್‍ನಲ್ಲಿ ಪರಾರಿಯಾಗುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿರುತ್ತಾರೆ. +ಆರೋಪಿಗಳು ಇಂದಿರಾನಗರದ ಪೊಲೀಸ್‍ಠಾಣೆಯ-1 ಸುಲಿಗೆ ಪ್ರಕರಣ, ಹಲಸೂರು ಪೊಲೀಸ್ ಠಾಣೆಯ-1 ಸುಲಿಗೆ ಪ್ರಕರಣ, ಹೆಣ್ಣೂರು ಪೊಲೀಸ್ ಠಾಣೆಯ-3 ದರೋಡೆಗೆ ಯತ್ನದ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ಯಿಂದ ತಿಳಿದು ಬಂದಿರುತ್ತದೆ. ಇಂದಿರಾನಗರ ಪೊಲೀಸ್‍ಠಾಣೆಯ ಇನ್ಸ್‍ಪೆಕ್ಟರ್ ಸುದರ್ಶನ್ ಮತ್ತು ಸಿಬ್ಬಂದಿ ಈ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. \ No newline at end of file diff --git a/eesanje/url_46_222_7.txt b/eesanje/url_46_222_7.txt new file mode 100644 index 0000000000000000000000000000000000000000..34bdcafd37037848d7b4fbeb8d008d0a6786345c --- /dev/null +++ b/eesanje/url_46_222_7.txt @@ -0,0 +1,6 @@ +4 ಡ್ರಗ್ ಪೆಡ್ಲರ್‌ಗಳ ಬಂಧನ : 2.35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ +ಬೆಂಗಳೂರು, ಫೆ.27- ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರ್‍ಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡು ಮೂವರು ವಿದೇಶಿ ಡ್ರಗ್ ಪೆಡ್ಲರ್‍ಗಳು ಸೇರಿದಂತೆ ನಾಲ್ವರನ್ನು ಬಂಧಿಸಿ ಅವರುಗಳಿಂದ ಒಟ್ಟು 2.35 ಕೋಟಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 730 ಗ್ರಾಂ ಎಂ.ಡಿ.ಎಂಎ ಕ್ರಿಸ್ಟೆಲ್, 1273 ಎಕ್ಸ್‍ಟಸಿ ಪಿಲ್ಸ್‍ಗಳು, 42 ಗ್ರಾಂ ಹೈಡ್ರೋಗಾಂಜ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಸೋಲದೇವನಹಳ್ಳಿ ಪೊಲೀಸ್ ಠಾಣೆಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ವಿದೇಶಿ ಡ್ರಗ್‍ಪೆಡ್ಲರ್‍ಗಳು ಪ್ರವಾಸಿ ವೀಸಾದಡಿ ಭಾರತಕ್ಕೆ ಬಂದಿದ್ದರು. ಒಬ್ಬ ಮೊದಲಿಗೆ ಮುಂಬೈನಲ್ಲಿ ನೆಲೆಸಿ ಎನ್‍ಡಿಪಿಎಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದನು. ಈತನು ಜೈಲಿನಿಂದ ಬಿಡುಗಡೆಯಾದ ನಂತರ ನಗರಕ್ಕೆ ಬಂದು ಮತ್ತೊಬ್ಬ ವಿದೇಶಿ ಡ್ರಗ್‍ಪೆಡ್ಲರ್‍ನ ಜೊತೆಗೂಡಿ ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದುದ್ದು ತನಿಖೆಯಿಂದ ತಿಳಿದು ಬಂದಿದೆ. +ಎಸ್‍ಟಿಎಸ್ ವಿರುದ್ಧ ಹೆಚ್‌ಡಿಕೆ ಟೀಕೆ: ಸ್ಥಳದಿಂದ ಕಾಲ್ಕಿತ್ತ ಅಶೋಕ್, ಬೊಮ್ಮಾಯಿ +ಈ ಪ್ರಕರಣದಲ್ಲಿ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 2 ಮೊಬೈಲ್ ಫೋನ್‍ಗಳು ಹಾಗೂ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಓರ್ವ ವಿದೇಶಿ ಡ್ರಗ್‍ಪೆಡ್ಲರ್ ಕಳೆದ ಫೆಬ್ರವರಿಯಲ್ಲಿ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಇಲ್ಲಿನ ಪರಿಚಯಸ್ಥ ಮತ್ತು ಇತರೆ ವಿದೇಶಿ ಪ್ರಜೆಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು. +ಈತನಿಂದ 1.81 ಕೋಟಿ ಮೌಲ್ಯದ 236 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 1273 ಎಕ್ಸ್‍ಟಸಿ ಪಿಲ್ಸ್‍ಗಳು ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಒಂದು ಮೊಬೈಲ್ ಫೋನ್‍ನ್ನು ವಶಪಡಿಸಿಕೊಳ್ಳಲಾಗಿದೆ. ಆರ್.ಎಂ.ಸಿ.ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯು ಇಂಡಿಯನ್ ಫೋಸ್ಟ್ ಮೂಲಕ ಹೈಡ್ರೋಗಾಂಜಾವನ್ನು ಖರೀದಿಸಿ ತರಿಸಿಕೊಂಡಿದ್ದ. ಖಚಿತ ಮಾಹಿತಿಯ ಮೇರೆಗೆ, ಆತನನ್ನು ವಶಕ್ಕೆ ಪಡೆದುಕೊಂಡು 3 ಲಕ್ಷ ಮೌಲ್ಯದ 42 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‍ನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಯನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಕೈಗೊಂಡಿತ್ತು. \ No newline at end of file diff --git a/eesanje/url_46_222_8.txt b/eesanje/url_46_222_8.txt new file mode 100644 index 0000000000000000000000000000000000000000..0be870e2d26963bdcc6faae279765967ec3e4d3b --- /dev/null +++ b/eesanje/url_46_222_8.txt @@ -0,0 +1,8 @@ +ಶಾಸಕ ಸ್ಥಾನಕ್ಕೆ ಸೋಮಶೇಖರ್ ರಾಜೀನಾಮೆ? +ಬೆಂಗಳೂರು,ಫೆ.27- ಮಹತ್ವದ ಬೆಳವಣಿಗೆಯಲ್ಲಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಇಂದು ಸಂಜೆಯೇ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಬಲವಾಗಿ ಹಬ್ಬಿದೆ. ಸಂಜೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಲಿರುವ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. +ಈಗಾಗಲೇ ಉಭಯ ಶಾಸಕರು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಸಮಯಾವಕಾಶವನ್ನು ಕೇಳಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ತಮ್ಮನ್ನು ಭೇಟಿಯಾಗಬಹುದು ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಭಾಧ್ಯಕ್ಷರು ಅಂಗೀಕರಿಸಿದ ನಂತರ ಅಧಿಕೃತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ಮಾತುಕತೆ ನಡೆಸಿರುವ ಇಬ್ಬರೂ ಶಾಸಕರು ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. +ಮೂಲಗಳ ಪ್ರಕಾರ ಯಶವಂತಪುರ ಕ್ಷೇತ್ರದ ಶಾಸಕರಾಗಿರುವ ಎಸ್.ಟಿ.ಸೋಮಶೇಖರ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಪ್ರಬಲ ಅಭ್ಯರ್ಥಿಗಳು ಸಿಗದಿರುವ ಹಿನ್ನೆಲೆಯಲ್ಲಿ ಎಸ್.ಟಿ.ಸೋಮಶೇಖರ್‍ರವರನ್ನೇ ಅಭ್ಯರ್ಥಿ ಮಾಡಲು ಪಕ್ಷದ ವಲಯದಲ್ಲಿ ಚಿಂತನ ಮಂಥನ ನಡೆದಿದೆ. +ಮಹಾರಾಷ್ಟ್ರ ಕಾಂಗ್ರೆಸ್‍ಗೆ ಮತ್ತೊಂದು ಶಾಕ್ : ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ್ ರಾಜೀನಾಮೆ +ಉತ್ತರಕನ್ನಡ ಜಿಲ್ಲೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶಿವರಾಂ ಹೆಬ್ಬಾರ್ ಕೂಡ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಇಲ್ಲಿ ಕೂಡ ಕಾಂಗ್ರೆಸ್‍ಗೆ ಪ್ರಬಲ ಅಭ್ಯರ್ಥಿಗಳು ಇಲ್ಲದಿರುವ ಕಾರಣ ಕಾಂಗ್ರೆಸ್ ಅವರನ್ನೇ ಹುರಿಯಾಳನ್ನಾಗಿಸುವ ಚಿಂತನೆಯಲ್ಲಿದೆ. ಹೆಬ್ಬಾರ್ ಕೂಡ ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಉತ್ತರ ಕನ್ನಡ ಜಿಲ್ಲೆಯಿಂದ ತಮ್ಮನ್ನು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಮಾಡಿದರೆ ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಪುತ್ರನಿಗೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. +ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ +ಇದಕ್ಕೆ ಬಹುತೇಕ ಕೆಪಿಸಿಸಿ ನಾಯಕರು ಸಮ್ಮತಿ ನೀಡಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.ಈ ಹಿಂದೆ ಕಾಂಗ್ರೆಸ್‍ನಲ್ಲಿದ್ದ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಶಾಸಕರಿಗೆ ವ್ಹಿಪ್ ಅನ್ವಯವಾಗುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಈ ಇಬ್ಬರೂ ರಾಜೀನಾಮೆ ನೀಡಲಿದ್ದಾರೆಯೇ ಎಂಬುದು ಯಕ್ಷಪ್ರಶ್ನೆಯಾಗಿದೆ. \ No newline at end of file diff --git a/eesanje/url_46_222_9.txt b/eesanje/url_46_222_9.txt new file mode 100644 index 0000000000000000000000000000000000000000..bf6875e6f936a71e13fa2576ed42da6ec027f821 --- /dev/null +++ b/eesanje/url_46_222_9.txt @@ -0,0 +1,6 @@ +ಎಸ್‍ಟಿಎಸ್ ವಿರುದ್ಧ ಹೆಚ್‌ಡಿಕೆ ಟೀಕೆ: ಸ್ಥಳದಿಂದ ಕಾಲ್ಕಿತ್ತ ಅಶೋಕ್, ಬೊಮ್ಮಾಯಿ +ಬೆಂಗಳೂರು,ಫೆ.27- ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸುತ್ತಿದ್ದಂತೆ ಅಕ್ಕಪಕ್ಕ ನಿಂತಿದ್ದ ಬಸವರಾಜ ಬೊಮ್ಮಾಯಿ ಮತ್ತು ಆರ್.ಅಶೋಕ್ ಸದ್ದಿಲ್ಲದಂತೆ ಜಾಗ ಖಾಲಿ ಮಾಡಿದ ಪ್ರಸಂಗ ನಡೆಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್‍ರೊಂದಿಗೆ ಕುಮಾರಸ್ವಾಮಿಯವರು ರಾಜ್ಯಸಭೆ ಚುನಾವಣೆಯ ಮತಗಟ್ಟೆಯ ಸುತ್ತಮುತ್ತ ಓಡಾಡುತ್ತಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. +ಸುದ್ದಿಗಾರರೊಂದಿಗೆ ಮಾತನಾಡಲು ಆರ್.ಅಶೋಕ್, ಬಸವರಾಜ ಬೊಮ್ಮಾಯಿ ಆಗಮಿಸಿದ್ದರು. ಅವರ ಬೆನ್ನ ಹಿಂದೆಯೇ ಕುಮಾರಸ್ವಾಮಿ ಯವರು ಬಂದರು. ಬಿಜೆಪಿ ಶಾಸಕರಾದ ಶಿವರಾಂ ಹೆಬ್ಬಾರ್, ಎಸ್.ಟಿ.ಸೋಮಶೇಖರ್‍ರವರು ಮತ ಹಾಕಲು ಬರದೇ ಇದ್ದವರ ಬಗ್ಗೆ ಪ್ರಶ್ನೆಗಳು ಎದುರಾದವು. ಅದಕ್ಕೆ ಉತ್ತರಿಸಿದ ಆರ್.ಅಶೋಕ್, ಶಿವರಾಂ ಹೆಬ್ಬಾರ್ ತಮ್ಮೊಂದಿಗೆ ಚರ್ಚೆ ಮಾಡಿದ್ದು, 10.30 ಸುಮಾರಿಗೆ ಆಗಮಿಸಿ ಮತ ಚಲಾಯಿಸುವುದಾಗಿ ತಿಳಿಸಿದ್ದಾರೆ. ಎಸ್.ಟಿ.ಸೋಮಶೇಖರ್‍ರವರೊಂದಿಗೆ ಚರ್ಚೆ ಮಾಡುತ್ತಿದ್ದೇವೆ ಎಂದು ಹೇಳಿದರು. +ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ +ಎಸ್.ಟಿ.ಸೋಮಶೇಖರ್‍ರವರು ಈಗಾಗಲೇ ಹೇಳಿಕೆ ನೀಡಿದ್ದು, ಅಭಿವೃದ್ಧಿಗೆ ನನ್ನ ಮತ ಎಂದಿದ್ದಾರೆ ಎಂಬಉಪಪ್ರಶ್ನೆ ಎದುರಾದಾಗ ಬಸವರಾಜ ಬೊಮ್ಮಾಯಿಯವರು, ಈ ಹಿಂದೆ ಎಸ್.ಟಿ.ಸೋಮಶೇಖರ್ ಅವರ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗಿದೆ. ಅಭಿವೃದ್ಧಿಯೂ ಆಗಿದೆ ಎಂದು ಸಮರ್ಥನೆ ನೀಡಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಕುಮಾರಸ್ವಾಮಿಯವರು, ಬಿಜೆಪಿ ಸರ್ಕಾರದಲ್ಲಿ ಎಸ್.ಟಿ.ಸೋಮಶೇಖರ್ 3 ವರ್ಷ ಸಚಿವರಾಗಿ ಕೆಲಸ ಮಾಡಿದ್ದಾರೆ.ಕಾಂಗ್ರೆಸ್‍ನಿಂದ ಬಿಜೆಪಿಗೆ ಹೋಗುವಾಗ ಅಭಿವೃದ್ಧಿ ಕಾರಣಕ್ಕಾಗಿ ಪಕ್ಷಾಂತರ ಮಾಡುತ್ತಿರುವುದಾಗಿ ಹೇಳಿದರು. +ಬಿಜೆಪಿ ಆಡಳಿತದಲ್ಲಿ ಯಥೇಚ್ಚವಾಗಿ ಅನುದಾನ ಪಡೆದಿದ್ದಾರೆ. ಇದರಿಂದ ವೈಯಕ್ತಿಕವಾಗಿ ಅವರ ಅಭಿವೃದ್ಧಿಯಾಗಿದೆ, ಕ್ಷೇತ್ರದ ಅಭಿವೃದ್ಧಿ ಆಗಿಲ್ಲ ಎಂದು ಕಂಡುಬರುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಬಿಜೆಪಿ ಶಾಸಕರ ಬಗ್ಗೆ ಕುಮಾರಸ್ವಾಮಿಯವರ ಟೀಕಾ ಪ್ರಹಾರ ಬಸವರಾಜ ಬೊಮ್ಮಾಯಿ ಮತ್ತು ಅಶೋಕ್‍ರಿಗೆ ಇರಿಸು ಮುರಿಸು ಉಂಟು ಮಾಡಿತು. ತಕ್ಷಣವೇ ಅವರು ಅಲ್ಲಿಂದ ನಿರ್ಗಮಿಸಿದರು. \ No newline at end of file diff --git a/eesanje/url_46_223_1.txt b/eesanje/url_46_223_1.txt new file mode 100644 index 0000000000000000000000000000000000000000..5108881bcdaf7985a1889b85e275af993a4d5a04 --- /dev/null +++ b/eesanje/url_46_223_1.txt @@ -0,0 +1,6 @@ +ಧಮ್ಕಿ, ಬೆದರಿಸುವುದು ಕಾಂಗ್ರೆಸ್‍ನವರ ಅಭ್ಯಾಸ: ಕುಮಾರಸ್ವಾಮಿ +ಬೆಂಗಳೂರು,ಫೆ.27- ರಾಜ್ಯಸಭೆ ಚುನಾವಣೆಯಲ್ಲಿ ಸೋಲು-ಗೆಲುವಿಗಿಂತಲೂ ಮುಖ್ಯವಾಗಿ ನಮ್ಮ ಪಕ್ಷದ ಶಾಸಕರ ನಿಷ್ಠೆ ಮತ್ತು ಪ್ರಾಮಾಣಿಕತೆಯ ಸಾಬೀತಿಗಾಗಿ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾಗಿ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. +ವಿಧಾನಸೌಧದಲ್ಲಿಂದು ರಾಜ್ಯಸಭೆ ಚುನಾವಣೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಚನೆಯಾದ ಆರಂಭದಲ್ಲೇ ಜೆಡಿಎಸ್‍ನಿಂದ 12 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಮಾಡುತ್ತಿದ್ದರು. ನೀವು 13ನೇಯವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಎಂದು ನಮ್ಮ ಶಾಸಕರಿಗೆ ಕರೆ ಮಾಡಲಾಗುತ್ತಿತ್ತು. ಕೆಲವರಿಗೆ ಅಭಿವೃದ್ಧಿಗೆ ಹಣ ನೀಡುತ್ತೇವೆ ಎಂಬ ಆಮಿಷವನ್ನು ಒಡ್ಡಿದ್ದರು. ಅದರಲ್ಲಿ ಕಾಂಗ್ರೆಸ್ಸಿಗರು ಎಷ್ಟು ಯಶಸ್ವಿಯಾಗಿದ್ದಾರೆ ಎಂಬುದನ್ನು ಪರಿಶೀಲಿಸಲು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಲಾಗಿದೆ ಎಂದರು. +ಇಲ್ಲಿ ಸೋಲು-ಗೆಲುವಿನ ಪ್ರಶ್ನೆಯಿಲ್ಲ. ಬಿಜೆಪಿ-ಜೆಡಿಎಸ್‍ನ ಮೈತ್ರಿಯ ಬಳಿಕ ಇದು ಎರಡನೇ ಸೋಲು ಎಂಬ ವ್ಯಾಖ್ಯಾನವೂ ಸರಿ ಇಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಬೇರೆ ರೀತಿಯ ಕಾರಣಗಳಿವೆ. ಬೆಳ್ಳಿ ಬಟ್ಟಲು ಹಂಚಿದ್ದಾರೆ. ಜೊತೆಗೆ ಶಿಕ್ಷಕರ ಕ್ಷೇತ್ರದ ಮತದಾರರಲ್ಲಿ ಅನುದಾನಿತ ಶಾಲೆಗಳ ಪ್ರಮಾಣ ಹೆಚ್ಚಿತ್ತು. ಅವರನ್ನು ಹೆದರಿಸಿ ಬ್ಲಾಕ್‍ಮೇಲ್ ಮಾಡುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದರು. +ಕುಟುಂಬ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಸಹಜ. ಆದರೆ ಜೆಡಿಎಸ್‍ನ 19 ಶಾಸಕರು ಒಟ್ಟಾಗಿದ್ದಾರೆ. ಶರಣಗೌಡ ಕಂದಕೂರ್, ಕರೆಮ್ಮ ಸೇರಿದಂತೆ ನಮ್ಮ ಪಕ್ಷದ ಎಲ್ಲಾ ಶಾಸಕರು ಒಂದು ಕುಟುಂಬವಾಗಿ ಒಟ್ಟಾಗಿದ್ದೇವೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಸ್ಪಷ್ಟಪಡಿಸಿದರು. +ಕಾಂಗ್ರೆಸ್ ಶಾಸಕರಿಗೆ ಧಮ್ಕಿ ಹಾಕಿ ಬೆದರಿಸಿ ಮತ ಕೇಳಲಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮದು ಆ ಸಂಸೃತಿ ಅಲ್ಲ. ಧಮ್ಕಿ ಹಾಕುವುದು, ಬೆದರಿಸುವುದು ಕಾಂಗ್ರೆಸ್‍ನವರ ಅಭ್ಯಾಸಗಳು ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_223_10.txt b/eesanje/url_46_223_10.txt new file mode 100644 index 0000000000000000000000000000000000000000..5ff83ffe41407b21e1bf90842fa66444ac9a6a6f --- /dev/null +++ b/eesanje/url_46_223_10.txt @@ -0,0 +1,7 @@ +ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್ +ಬೆಂಗಳೂರು,ಫೆ.26- ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಧಮ್ಯ ವಿಶ್ವಾಸದಲ್ಲಿದ್ದು, ಇದೇ ತಿಂಗಳ 29ರಂದು ಪ್ರಕಟಗೊಳ್ಳಲಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಜ್ಯದ 10ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಟಿಕೆಟ್ ಘೋಷಣೆ ಮಾಡಲಿದೆ.ಇದೇ ತಿಂಗಳ 29ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಂದು ಪಕ್ಷವು ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಸೇರಿದಂತೆ ಅಂದಾಜು 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಲಿ 10ಕ್ಕೂ ಹೆಚ್ಚು ಸಂಸದರಿಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ. +ಶಿವಮೊಗ್ಗ-ಬಿ.ವೈ.ರಾಘವೇಂದ್ರ, ಮೈಸೂರು-ಕೊಡುಗು- ಪ್ರತಾಪ್ ಸಿಂಹ, ಚಿತ್ರದುರ್ಗ- ಎ.ನಾರಾಯಣಸ್ವಾಮಿ, ಡಾ.ಉಮೇಶ್ ಜಾಧವ್-ಕಲಬುರಗಿ, ಪ್ರಹ್ಲಾದ್ ಜೋಷಿ-ಧಾರವಾಡ, ಬಿ.ಶ್ರೀರಾಮುಲು -ಬಳ್ಳಾರಿ, ಅಮರೇಶ್ ನಾಯಕ್-ರಾಯಚೂರು, ಉತ್ತರಕನ್ನಡ-ಅನಂತಕುಮಾರ್ ಹೆಗಡೆ, ದಕ್ಷಿಣ ಕನ್ನಡ -ನಳೀನ್‍ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು-ಶೋಭಾ ಕರಂದ್ಲಾಜೆ, ಚಿಕ್ಕೋಡಿ-ಅಣ್ಣಾ ಸಾಹೇಬ್ ಜೊಲ್ಲೆ ಅವರುಗಳಿಗೆ ಟಿಕೆಟ್ ಮೊದಲ ಪಟ್ಟಿಯಲ್ಲೇ ಘೋಷಣೆಯಾಗುವ ಸಂಭವವಿದೆ. +ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು.. +ತೀವ್ರ ಜಿದ್ದಾಜಿದ್ದಿನಿಂದ ಕೂಡಿರುವ ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಉತ್ತರ, ಚಾಮರಾಜನಗರ, ತುಮಕೂರು, ದಾವಣಗೆರೆ, ಕೊಪ್ಪಳ, ಹಾವೇರಿ, ಬೆಳಗಾವಿ, ಬೀದರ್, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಟಿಕೆಟ್ ಘೋಷಣೆಯಾಗುವ ಸಂಭವವಿದೆ. +ಜೆಡಿಎಸ್‍ಗೆ ಯಾವ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ನಂತರ ಉಳಿದ ಕ್ಷೇತ್ರಗಳಿಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಬಿಜೆಪಿ ವರಿಷ್ಠರು ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 29ರಂದು ನಡೆಯಲಿರುವ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರುಗಳು ಭಾಗವಹಿಸಲಿದ್ದಾರೆ. \ No newline at end of file diff --git a/eesanje/url_46_223_11.txt b/eesanje/url_46_223_11.txt new file mode 100644 index 0000000000000000000000000000000000000000..7404e0a11f2ccb4fbd3d5b7cfff23f34ad80b117 --- /dev/null +++ b/eesanje/url_46_223_11.txt @@ -0,0 +1,5 @@ +ಟೈರ್ ಸ್ಪೋಟಗೊಂಡು ಬೊಲೇರೊ ಪಲ್ಟಿ : ಮೂವರು ದಾರುಣ ಸಾವು +ದಾವಣಗೆರೆ,ಫೆ.26- ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೇರೊ ಟೆಂಪೊ ವಾಹನ ಹೋಗುತ್ತಿದ್ದಾಗ ಏಕಾಏಕಿ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬಳಿ ತಡರಾತ್ರಿ ಸಂಭವಿಸಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಮಂತ್ರಾಲಯಂ ತಾಲ್ಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಇವರ ಹೆಸರು ತಿಳಿದುಬಂದಿಲ್ಲ. +ಘಟನೆಯಲ್ಲಿ ಗಾಯಗೊಂಡಿರುವ ಐದು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚಿಂತಾಜನಕವಾಗಿರುವ ಮತ್ತೊಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಭತ್ತು ಮಂದಿ ಬೊಲೇರೊ ಟೆಂಪೊ ವಾಹನದಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿಯನ್ನು ತೆಗೆದುಕೊಂಡು ತಮ್ಮೂರಿಗೆ ವಾಪಸ್ ಆಗುತ್ತಿದ್ದರು. +ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ.. +ದಾವಣಗೆರೆ ನಗರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರ ಪಂಜಾಬಿ ಡಾಬಾ ಬಳಿ ರಾತ್ರಿ 11.30 ರ ಸುಮಾರಿನಲ್ಲಿ ಏಕಾಏಕಿ ವಾಹನದ ಟೈರ್ ಸ್ಪೋಟಗೊಂಡು ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_223_12.txt b/eesanje/url_46_223_12.txt new file mode 100644 index 0000000000000000000000000000000000000000..174ef994870feaddb80b253dc1f397171b424ae9 --- /dev/null +++ b/eesanje/url_46_223_12.txt @@ -0,0 +1,7 @@ +ರೌಡಿ ಶೀಟರ್ ಸೈನೆಡ್ ಜಾವೆದ್ ಬಂಧನ +ಮೈಸೂರು,ಫೆ.26- ನಗರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಒಬ್ಬನನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿಯಲ್ಲಿರುವ ಜಾವೆದ್ ಖಾನ್ ಅಲಿಯಾಸ್ ಸೈನೆಡ್ ಜಾವೆದ್ (42) ಬಂತ ರೌಡಿ ಶೀಟರ್. +ಈತನ ಮೇಲೆ ಈಗಾಗಲೇ ಹಲವು ಪ್ರಕರಣಗಳಿದ್ದರೂ ಮತ್ತೊಂದು ಕೃತ್ಯಕ್ಕೆ ಸಂಚು ಹಾಕುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ಮಾಡಿ ಸೆರೆ ಹಿಡಿದರು. ಸಿಕ್ಕಿಬಿದ್ದ ವೇಳೆ ಜಾವೇದ್ ಖಾನ್ ಬಳಿ ವಿವಿಧ ನಮೂನೆಯ ಮೂರು ಡ್ರಾಗರ್‍ಗಳು ದೊರೆತಿದೆ. ನಂಬರ್ ಪ್ಲೇಟ್ ಇಲ್ಲದ ಸುಜುಕಿ ಆಕ್ಸಿಸ್‍ನಲ್ಲಿ ಡ್ರಾಗರ್‍ಗಳನ್ನು ಇಟ್ಟುಕೊಂಡಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. +ಠಾಣೆಗೆ ಕರೆಸಿ ಎಚ್ಚರಿಕೆ ಕೊಡುವ ಬದಲು ರೌಡಿಶೀಟರ್‍ಗಳು ಇರುವ ಸ್ಥಳವನ್ನೇ ಹುಡುಕಿಕೊಂಡು ಹೋಗಿ ಪರಿಶೀಲನೆ ಮಾಡುವ ಜವಾಬ್ದಾರಿಯನ್ನು ಸಿಸಿಬಿ ಪೊಲೀಸರಿಗೆ ನೀಡಲಾಗಿದೆ. ಫೆ.23 ರ ರಾತ್ರಿ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಉನ್ನತಿ ನಗರದಲ್ಲಿ ಇನ್ಸ್‍ಪೆಕ್ಟರ್ ಪೂವಯ್ಯ ಮತ್ತು ಟೀಂ ರೌಂಡ್ಸ್ ಮಾಡುತ್ತಿದ್ದ ವೇಳೆ ಜಾವೆದ್ ಖಾನ್ ಮಾರಕಾಸ್ತ್ರಗಳ ಸಮೇತ ಸಿಕ್ಕಿ ಬಿದ್ದಿದ್ದಾನೆ. +ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ.. +2019 ರಲ್ಲಿ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾವೆದ್ ಖಾನ್ ಪಿಸ್ತೂಲ್ ಮಾರಾಟ ಮಾಡುವ ಯತ್ನದಲ್ಲಿ ವೇಳೆ ಸಿಸಿಬಿ ತಂಡಕ್ಕೆ ಸಿಕ್ಕಿ ಬಿದ್ದಿದ್ದ. ಬೆಂಗಳೂರು ಸಿಸಿಬಿ ಪೊಲೀಸರು ಜಾವೆದ್ ಖಾನ್ ಸೇರಿದಂತೆ 6 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳಿಂದ ಮೂರು ಪಿಸ್ತೂಲ, ಒಂದು ರಿವಾಲ್ವರ್ ಹಾಗೂ 8 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದರು. ಸದ್ಯ ಈ ಪ್ರಕರಣದಲ್ಲಿ ಜಾವೆದ್ ಆರೋಪಿಯಾಗೇ ಇದ್ದಾನೆ. ಅಲ್ಲದೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 307 ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲಿದೆ. ಇದೀಗ ಜಾವೇದ್ ಖಾನ್ ಎನ್.ಆರ್.ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ. +ನಗರ ಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್, ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್, ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್‍ಪೆಕ್ಟರ್ ಪೂವಯ್ಯ ನೇತೃತ್ವದಲ್ಲಿ ಪಿಎಸ್‍ಐ ರಾಜು ಕೊನಕೇರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಜಾವೇದ್ ಖಾನ್‍ನನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. \ No newline at end of file diff --git a/eesanje/url_46_223_2.txt b/eesanje/url_46_223_2.txt new file mode 100644 index 0000000000000000000000000000000000000000..a105e667558c65ad3cf3b041051db42d7b52c4f4 --- /dev/null +++ b/eesanje/url_46_223_2.txt @@ -0,0 +1,7 @@ +ಜೆಡಿಎಸ್‍ನವರಿಗೆ ಆತ್ಮವೇ ಇಲ್ಲ: ಸಿಎಂ ಸಿದ್ದರಾಮಯ್ಯ ಲೇವಡಿ +ಬೆಂಗಳೂರು,ಫೆ.27- ಜೆಡಿಎಸ್‍ನವರಿಗೆ ಆತ್ಮವೇ ಇಲ್ಲ. ಇನ್ನು ಆತ್ಮಸಾಕ್ಷಿಯ ಮತ ಎಲ್ಲಿಂದ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‍ನವರು ತಮ್ಮ ಗೆಲುವಿಗಾಗಿ ಬೇರೆ ಬೇರೆ ಪ್ರಯತ್ನ ಮಾಡಿದರು. ಆದರೆ ಅದರಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದರು. +ಎಲ್ಲರೂ ತಾವು ಗೆಲ್ಲುವುದಕ್ಕಾಗಿಯೇ ಸ್ರ್ಪಧಿಸುತ್ತೇವೆ ಎನ್ನುತ್ತಾರೆ, ಸೋಲುತ್ತೇವೆ ಎಂದು ಯಾರೂ ಹೇಳುವುದಿಲ್ಲ. ಜೆಡಿಎಸ್‍ಗೆ ಅಗತ್ಯ ಸಂಖ್ಯಾಬಲದಷ್ಟು ಮತಗಳು ಇರಲಿಲ್ಲ. ಹೀಗಾಗಿ ಅಭ್ಯರ್ಥಿಯನ್ನು ಅವರು ಕಣಕ್ಕಿಳಿಸುವುದು ಅಗತ್ಯವಿರಲಿಲ್ಲ. ಆದರೂ ಸ್ಪರ್ಧೆ ಮಾಡಿದ್ದಾರೆ ಎಂದು ಹೇಳಿದರು. +ಪರೀಕ್ಷೆಗಳಿಗೆ ತೆರಳುತ್ತಿದ್ದಾಗ ಅಪಘಾತ: 4 ವಿದ್ಯಾರ್ಥಿಗಳ ಸಾವು +ನಮ್ಮ ಪಕ್ಷದ ಎಲ್ಲಾ ಶಾಸಕರೂ ಪಕ್ಷನಿಷ್ಠರಾಗಿದ್ದಾರೆ. ಹೋಟೆಲ್‍ನಿಂದ ನೇರವಾಗಿ ಇಲ್ಲಿಗೆ ಬಂದು ಮತ ಹಾಕಿದ್ದಾರೆ. ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರಿಂದಾಗಿ ಚುನಾವಣೆ ನಡೆಯಬೇಕಾದ ಪರಿಸ್ಥಿತಿ ಎದುರಾಯಿತು ಎಂದು ಮುಖ್ಯಮಂತ್ರಿ ತಿಳಿಸಿದರು. ತಮ್ಮ ಅಭ್ಯರ್ಥಿಗೆ ಆತ್ಮಸಾಕ್ಷಿ ಮತ ದೊರೆಯುತ್ತವೆ ಎಂದು ಜೆಡಿಎಸ್ ನಾಯಕರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಜೆಡಿಎಸ್‍ನವರಿಗೆ ಆತ್ಮವೇ ಇಲ್ಲ, ಇನ್ನು ಸಾಕ್ಷಿ ಎಲ್ಲಿಂದ ಬರಬೇಕು? ಜಾತ್ಯತೀತ ಎಂದು ಹೆಸರಿಟ್ಟುಕೊಂಡು ಈಗ ಯಾರ ಜೊತೆ ಸೇರಿದ್ದಾರೆ? ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಅವರಿಗೆ ಆತ್ಮ ಎಲ್ಲಿದೆ ಎಂದು ಪ್ರಶ್ನಿಸಿದರು. +ಕಾಂಗ್ರೆಸ್‍ಗೆ ರಾಜ್ಯಸಭೆ ಚುನಾವಣೆಯಲ್ಲಿ 3 ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವಷ್ಟು ಸಂಖ್ಯಾಬಲ ಇದೆ. ಹೀಗಾಗಿ ಬೇರೆ ಪಕ್ಷದವರಿಗೆ ಆಸೆ, ಆಮಿಷ ತೋರಿಸಿ ಸೆಳೆದುಕೊಳ್ಳುವ ಅಗತ್ಯ ಇಲ್ಲ. 134 ಶಾಸಕರು , ಒಂದು ಸ್ವತಂತ್ರ ಒಳಗೊಂಡಂತೆ 135 ಸಂಖ್ಯಾಬಲವಿದೆ. ಅದರ ಜೊತೆಗೆ ಪಕ್ಷೇತರರಾದ ಲತಾ ಮಲ್ಲಿಕಾರ್ಜುನ್, ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಜನಾರ್ದನ ರೆಡ್ಡಿ ಕೂಡ ನಮಗೆ ಮತ ಹಾಕುತ್ತಿದ್ದಾರೆ. ಜೆಡಿಎಸ್ ಅಥವಾ ಬಿಜೆಪಿಯ ಶಾಸಕರಿಗೆ ಆಮಿಷವೊಡ್ಡುವ ಅಗತ್ಯ ನಮಗಿಲ್ಲ ಎಂದು ಹೇಳಿದರು. +ಕಾಂಗ್ರೆಸ್ ಶಾಸಕರಿಂದ ಅಡ್ಡಮತದಾನವಾಗಲಿದೆ ಎಂಬ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಬಿಜೆಪಿಯವರು ಮೊದಲು ತಮ್ಮ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_223_3.txt b/eesanje/url_46_223_3.txt new file mode 100644 index 0000000000000000000000000000000000000000..cc82e444f2781fb9c0e8204e794e5a32359c959d --- /dev/null +++ b/eesanje/url_46_223_3.txt @@ -0,0 +1,8 @@ +ಲೋಕಸಭಾ ಚುನಾವಣೆಗೆ ಮೈಸೂರಿನಿಂದ 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ +ಮೈಸೂರು,ಫೆ.27- ಈ ಬಾರಿಯ ಲೋಕಸಭಾ ಚುನಾವಣೆಗೆ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಸುಮಾರು 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ ಮಾಡಲಿದೆ. ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಅಳಿಸಲಾಗದ ಶಾಯಿ ತಯಾರಿಸುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ 10 ಎಂಎಲ್ ಪ್ರಮಾಣದ 26.55 ಲಕ್ಷ ಅಳಿಸಲಾಗದ ಶಾಯಿ ಬಾಟಲು ಪೂರೈಕೆ ಮಾಡುತ್ತಿದೆ. +10 ಎಂಎಲ್ ಬಾಟಲಿಯಿಂದ 700 ಮತದಾರರ ಬೆರಳಿಗೆ ಅಳಿಸಲಾಗದ ಶಾಯಿ ಗುರುತು ಹಾಕಬಹುದು. ಮಾರ್ಚ್ 15ರೊಳಗೆ ದೇಶದ ಎಲ್ಲಾ ರಾಜ್ಯಗಳ ಚುನಾವಣಾ ಆಯುಕ್ತರ ಕಚೇರಿಗಳ ಬೇಡಿಕೆಗೆ ಅನುಗುಣವಾಗಿ ಅಳಿಸಲಾಗದ ಶಾಯಿ ಪೂರೈಕೆ ಮಾಡುವಂತೆ ಆದೇಶ ನೀಡಲಾಗಿದೆ. +ಪರೀಕ್ಷೆಗಳಿಗೆ ತೆರಳುತ್ತಿದ್ದಾಗ ಅಪಘಾತ: 4 ವಿದ್ಯಾರ್ಥಿಗಳ ಸಾವು +ಈಗಾಗಲೇ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಗೋವಾ, ಅರುಣಾಚಲ ಪ್ರದೇಶ, ತ್ರಿಪುರ, ನಾಗಲ್ಯಾಂಡ್, ಮಿಜೋರಾಂ ರಾಜ್ಯಗಳಿಗೆ ಮೈಲ್ಯಾಕ್ ಆಡಳಿತ ವರ್ಗ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡಿದೆ. ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ವಿಶ್ವದ 30ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಅಳಿಸಲಾಗದ ಶಾಯಿಯನ್ನ ಪೂರೈಕೆ ಮಾಡುತ್ತಿದ್ದು ಇದು ಸಾಂಸ್ಕøತಿಕ ನಗರಿಯ ಹೆಮ್ಮೆ. +ಭಾರತೀಯ ಚುನಾವಣಾ ಆಯೋಗ ಕಳೆದ ಡಿಸೆಂಬರ್ ನಲ್ಲೇ ಅಳಿಸಲಾಗದ ಶಾಯಿ ಪೂರೈಕೆಗೆ ಬೇಡಿಕೆ ಇಟ್ಟಿತ್ತು. 26.55 ಲಕ್ಷ ಅಳಿಸಲಾಗದ ಶಾಯಿ ಬಾಟಲುಗಳ ಪೂರೈಕೆಯಿಂದ ಮೈಲ್ಯಾಕ್ 55 ಕೋಟಿ ವಹಿವಾಟು ಮಾಡುತ್ತಿದೆ.1937ರಲ್ಲಿ ಅಂದಿನ ಮೈಸೂರು ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದ ಫಲವಾಗಿ ಮೈಲ್ಯಾಕ್ ತಲೆ ಎತ್ತಿತು. +8 ಶಾಸಕರನ್ನು ಅನರ್ಹಗೊಳಿಸಿದ ಆಂಧ್ರ ಸ್ಪೀಕರ್ +ಸ್ವಾತಂತ್ರ್ಯ ನಂತರ ಮೈಸೂರು ಸರ್ಕಾರದ ಅೀಧಿನಕ್ಕೆ ಒಳಪಟ್ಟ ಮೈಲ್ಯಾಕ್ ನಂತರ ಮೈಸೂರು ಲ್ಯಾಕ್ ಅಂಡ್ ಪೇಂಟ್ಸ್ ಲಿಮಿಟೆಡ್ ಎಂದು ಮರು ನಾಮಕರಣಗೊಂಡಿತು. ಬಳಿಕ 1989 ರಿಂದ ವಾರ್ನಿಷ್ ಉತ್ಪಾದನೆ ಆರಂಭಿಸಿತು,ತದನಂತರ ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ಎಂದು ಮರು ನಾಮಕರಣ ಮಾಡಲಾಯಿತು. \ No newline at end of file diff --git a/eesanje/url_46_223_4.txt b/eesanje/url_46_223_4.txt new file mode 100644 index 0000000000000000000000000000000000000000..b58865cbffc2164a4318bff37c04ed073fe8417a --- /dev/null +++ b/eesanje/url_46_223_4.txt @@ -0,0 +1,7 @@ +ನನಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ: ಸುಮಲತಾ ಅಂಬರೀಶ್ +ಮಂಡ್ಯ,ಫೆ.26- ನನಗೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ, ಅದರಲ್ಲಿ ಅನುಮಾನವಿಲ್ಲ. ಆದರೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ನನ್ನ ಹೋರಾಟ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಯಾದ ತಕ್ಷಣ ನನ್ನ ಜೊತೆ ಶತ್ರುತ್ವ ಬೆಳೆಯಬೇಕು ಎಂದೇನೂ ಇಲ್ಲ. ಜೆಡಿಎಸ್ ಈಗ ಎನ್‍ಡಿಎ ಭಾಗವಾಗಿದೆ. ನಾನೂ ಕೂಡ ಎನ್‍ಡಿಎ ಭಾಗವಾಗಿದ್ದೇನೆ ಎಂದರು. +ನಿನ್ನೆ ನಡೆದ ಸಭೆಯಲ್ಲಿ ಬಹಳಷ್ಟು ಮಂದಿ ನೀವು ಮಂಡ್ಯ ಬಿಟ್ಟು ಹೋಗಬೇಡಿ, ನಾವು ನಿಮ್ಮನ್ನು ನಂಬಿಕೊಂಡಿದ್ದೇವೆ ಎಂದು ಹೇಳಿದ್ದಾರೆ. ಬಿಜೆಪಿ ನನಗೆ ಟಿಕೆಟ್ ನೀಡುವುದು ಖಚಿತ. ಮಂಡ್ಯ ಕ್ಷೇತ್ರದಲ್ಲೇ ಬಿಜೆಪಿ ಟಿಕೆಟ್ ಸಿಗಬೇಕು ಎನ್ನುವುದು ನನ್ನ ಆಶಯ. ಈ ಬಗ್ಗೆ ಹೈಕಮಾಂಡ್ ನಾಯಕರಿಗೂ ನಾನು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ಹೇಳಿದರು. +ಕನ್ನಡ ಕಡ್ಡಾಯ ನಾಮಫಲಕ ಅಳವಡಿಕೆಗೆ ಎರಡೇ ದಿನ ಬಾಕಿ +ಕಳೆದ ಒಂದು ವರ್ಷದಿಂದಲೂ ಸಂಸದೆಯಾಗಿ ನಾನು ಬಿಜೆಪಿಗೆ ಸಂಸತ್‍ನಲ್ಲಿ ಎಲ್ಲಾ ಹಂತದಲ್ಲೂ ಬೆಂಬಲ ನೀಡಿದ್ದೇನೆ. ವಿಧಾನಸಭೆ ಚುನಾವಣೆಯಲ್ಲೂ ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದೇನೆ. ಜನರ ಅಭಿಪ್ರಾಯ ಕೂಡ ಮಂಡ್ಯ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡರೆ ಪಕ್ಷ ಸಂಘಟನೆ ಬಲಗೊಳ್ಳುತ್ತದೆ ಎಂಬುದಾಗಿದೆ ಎಂದರು.ನನಗೆ ಬಿಜೆಪಿ ಟಿಕೆಟ್ ಸಿಕ್ಕರೆ ಜೆಡಿಎಸ್‍ನವರು ಮೈತ್ರಿ ಧರ್ಮದ ಭಾಗವಾಗಿ ನನಗೆ ಬೆಂಬಲ ನೀಡಿಯೇ ನೀಡುತ್ತಾರೆ. ನಾನು ಕೂಡ ಅವರ ಬೆಂಬಲ ಕೇಳುತ್ತೇನೆ ಎಂದು ಹೇಳಿದರು. +ಬೇರೆ ಕ್ಷೇತ್ರದಲ್ಲಿದ್ದಂತೆ ಮಂಡ್ಯದಲ್ಲಿ ಬಿಜೆಪಿ ಸಂಘಟನೆ ಪ್ರಬಲವಾಗಿಲ್ಲ. ಈ ಎಲ್ಲಾ ಅಂಶಗಳನ್ನೂ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಜೆಡಿಎಸ್‍ನವರು ತಮ್ಮ ಸಂಘಟನಾ ದೃಷ್ಟಿಯಿಂದ ಯೋಚಿಸುವುದು ಸಹಜ. ಹಿರಿಯ ನಾಯಕರು ತಮ್ಮ ಅನುಭವದ ಆಧಾರದ ಮೇಲೆ ಎಲ್ಲವನ್ನೂ ಚರ್ಚಿಸಿ ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. +ಹೊಸ ಸಂಸತ್‍ನಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಬಿಜೆಪಿ ಸರ್ಕಾರ ಅಂಗೀಕರಿಸಿದೆ. ಹೀಗಾಗಿ ಎಲ್ಲೆಲ್ಲಿ ಅವಕಾಶ ಲಭ್ಯವಿದೆಯೋ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡಲು ವರಿಷ್ಠರು ಪ್ರಯತ್ನಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನನಗೆ ಅವಕಾಶ ಸಿಗಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_223_5.txt b/eesanje/url_46_223_5.txt new file mode 100644 index 0000000000000000000000000000000000000000..7a45c924041240ed70a8edbd39697ce49efb70dd --- /dev/null +++ b/eesanje/url_46_223_5.txt @@ -0,0 +1,20 @@ +ರಾಜಾ ವೆಂಕಟಪ್ಪ ನಾಯಕಗೆ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ +ಬೆಂಗಳೂರು,ಫೆ.26- ವಿಧಾನಸಭೆ ಸದಸ್ಯರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ವಿಧಾನಸಭೆಯಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಸದನ ಪ್ರಾರಂಭವಾದಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿನ್ನೆ ನಿಧನರಾಗಿರುವುದನ್ನು ಸದನಕ್ಕೆ ತಿಳಿಸಿ ಸಂತಾಪ ನಿರ್ಣಯವನ್ನು ಮಂಡಿಸಿದರು. +ರಾಜಾ ವೆಂಕಟಪ್ಪ ನಾಯಕ ಅವರು 1957 ರ ನವೆಂಬರ್ 23 ರಂದು ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಜನಿಸಿದ್ದರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಅವರು, 1987 ರಲ್ಲಿ ಪೇಠ ಅಮ್ಮಾಪುರ ಮಂಡಲ ಪಂಚಾಯಿತಿಯ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿ ಅದೇ ಅವಧಿಯಲ್ಲಿ ಮಂಡಲ ಪ್ರಧಾನರಾಗಿ ಸೇವೆ ಸಲ್ಲಿಸುವ ಮೂಲಕ ಜನಾನುರಾಗಿಯಾಗಿದ್ದರು. 1994 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಚುನಾಯಿತರಾಗಿದ್ದ ಅವರು, 1999, 2013 ಹಾಗೂ 2023 ರಲ್ಲಿ ಹದಿನಾರನೇ ವಿಧಾನಸಭೆಗೆ ಆಯ್ಕೆಯಾಗಿ ಪ್ರಸ್ತುತ ಸದನದಲ್ಲಿ ಸದಸ್ಯರಾಗಿ ಸಕ್ರಿಯರಾಗಿದ್ದರು. ಇತ್ತೀಚೆಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಎಲ್ಲಾ ಸಮುದಾಯದ ವಿಶ್ವಾಸಕ್ಕೆ ಪಾತ್ರರಾಗಿದ್ದರು. ಸರಳ ಸಜ್ಜನಿಕೆಯ ನಾಯಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. +ಪ್ರತಿಯೊಬ್ಬರ ಸಾವು ನಮಗೆಲ್ಲಾ ದೊಡ್ಡ ಮಟ್ಟದ ಸಂದೇಶವನ್ನು ನೀಡುತ್ತದೆ. ನಿನ್ನೆ ಮೊನ್ನೆಯವರೆಗೆ ನಮ್ಮೊಂದಿಗೆ ಇದ್ದವರು ನಿನ್ನೆ ನಿಧನರಾಗಿದ್ದಾರೆ. ದೇವರು ಎಷ್ಟು ವರ್ಷ ಆಯಸ್ಸು ಕೊಡುತ್ತಾನೋ ಅಷ್ಟು ದಿನ ನೆಮ್ಮದಿ ಜೀವನ ನಡೆಸಬೇಕು, ಇನ್ನೊಬ್ಬರ ನೆಮ್ಮದಿಗೂ ಸಹಕರಿಸಬೇಕು. ದ್ವೇಷ, ಕೋಪ, ಸಣ್ಣಪುಟ್ಟ ವಿಚಾರಕ್ಕೆ ತೊಂದರೆ ಕೊಡುವುದರಿಂದ ಮುಂದೆ ಪಶ್ಚಾತ್ತಾಪಪಡಬೇಕಾಗಬಹುದು. ದ್ವೇಷರಹಿತ, ಅಸೂಯೆ ರಹಿತ ಜೀವನ ನಡೆಸುವಂತಾಗಲಿ ಎಂದು ಹೇಳಿ ರಾಜಾ ವೆಂಕಟಪ್ಪ ನಾಯಕ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು. +ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುರಪುರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನೋಡಲು ಹೋಗಿದ್ದೆ. ಆಗ ಅವರು ತುರ್ತು ಚಿಕಿತ್ಸಾ ಘಟಕದಲ್ಲಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನಿಸಿರಲಿಲ್ಲ. ಕಾಂಗ್ರೆಸ್‍ನ ನಿಷ್ಠಾವಂತ ಶಾಸಕ, ನಾಲ್ಕು ಬಾರಿ ಶಾಸಕರಾಗಿದ್ದು, ಅತ್ಯಂತ ಸರಳ, ಸಜ್ಜನಿಕೆಯಿಂದ ಇದ್ದರು. ತಮ್ಮ ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಳಕಳಿ ಹೊಂದಿದ್ದರು. ತಮ್ಮ ಅನಾರೋಗ್ಯವನ್ನು ಲೆಕ್ಕಿಸದೆ ಜನಪರ ಕಾರ್ಯ ಮಾಡುತ್ತಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೂ ಆಪ್ತರಾಗಿದ್ದರು. ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ ರಾಜಾ ವೆಂಕಟಪ್ಪ ನಾಯಕರವರ ಅಗಲಿಕೆಯ ದುಃಖ ಭರಿಸಲಿ ಎಂದು ಹೇಳಿದರು. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಐದು ವರ್ಷ ಈ ಸದನದ ಸದಸ್ಯರಾಗಿರುವಂತೆ ಚುನಾವಣಾ ಆಯೋಗ ಗ್ಯಾರಂಟಿ ಕೊಟ್ಟಿತ್ತು. ಆದರೆ ವಿಧಿ ಅವಕಾಶ ಮಾಡಿಕೊಡಲಿಲ್ಲ. ಸರಳ, ಸಜ್ಜನಿಕೆಯುಳ್ಳವರಾಗಿದ್ದ ಅವರು, ಅವರಾಯಿತು, ಅವರ ಕ್ಷೇತ್ರವಾಯಿತು ಎಂಬಂತಿದ್ದರು. ಅವರ ಮನೆತನ ಸ್ವಾತಂತ್ರ್ಯ ಹೋರಾಟದ ಮನೆತನವಾಗಿತ್ತು ಎಂದು ಸ್ಮರಿಸಿದರು. +ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, 1987 ರಿಂದಲೂ ಅವರು ನನಗೆ ಪರಿಚಯ. ನಾಲ್ಕು ಬಾರಿ ಶಾಸಕರಾಗಿದ್ದರು. ರಾಜ ರಾಜನಾಗಿ, ಬಡವ ಬಡವನಾಗಿ, ಶ್ರೀಮಂತ ಶ್ರೀಮಂತನಾಗಿರಲು ಸಾಧ್ಯವಿಲ್ಲ . ಆದರೆ ಸಂಬಂಧ ಮಾತ್ರ ಶಾಶ್ವತವಾಗಿ ಇರುತ್ತದೆ. ನಾಲ್ಕು ದಿನದ ಹಿಂದೆ ಆಸ್ಪತ್ರೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದೆ. ರಾಜ್ಯಸಭೆ ಚುನಾವಣೆಗೆ ಮತ ಹಾಕುವುದಾಗಿ ಹೇಳಿದ್ದರು. ಯಾರಿಗೂ ತೊಂದರೆ ಕೊಟ್ಟವರಲ್ಲ. ಅವರ ಅಭಿಮಾನಿಯೊಬ್ಬ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಜಾತಶತ್ರು ಎಂದು ಅವರು ಜನಪ್ರಿಯರಾಗಿದ್ದರು ಎಂದು ಅವರ ಒಡನಾಟದ ಘಟನಾವಳಿಗಳನ್ನು ಮೆಲುಕು ಹಾಕಿದರು.ಸಚಿವರಾದ ಜಮೀರ್ ಅಹಮ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ಡಾ.ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ಶಾಸಕರಾದ ಮಾನಪ್ಪ ವಜ್ಜಲ್, ಆರಗ ಜ್ಞಾನೇಂದ್ರ, ಅಜಯ್ ಧರ್ಮಸಿಂಗ್, ನಾಗರಾಜ, ಎನ್.ಟಿ.ಶ್ರೀನಿವಾಸ್ ಅವರು ಮಾತನಾಡಿ ರಾಜಾ ವೆಂಕಟಪ್ಪ ನಾಯಕ ಅವರ ಸೇವೆಯನ್ನು ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು. +ಬಳಿಕ ಸದನದ ಸದಸ್ಯರೆಲ್ಲಾ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷರು ಮಾತನಾಡಿ, ಸದನದಲ್ಲಿ ಕೈಗೊಂಡ ಸಂತಾಪ ನಿರ್ಣಯದ ಪ್ರತಿಯನ್ನು ಅವರ ಕುಟುಂಬ ವರ್ಗಕ್ಕೆ ಕಳುಹಿಸಿಕೊಡುವುದಾಗಿ ಪ್ರಕಟಿಸಿದರು. +ವಿಧಾನಪರಿಷತ್‍ +ಬೆಂಗಳೂರು,ಫೆ.26- ಭಾನುವಾರ ಅಕಾಲಿಕ ನಿಧನರಾದ ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರಿಗೆ ವಿಧಾನಪರಿಷತ್‍ನಲ್ಲಿ ಭಾವಪೂರ್ಣ ಸಂತಾಪ ಸೂಚಿಸಲಾಯಿತು. ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು. +ಬಳಿಕ ಮಾತನಾಡಿದ ಅವರು, ರಾಜಾ ವೆಂಕಟಪ್ಪ ನಾಯಕ್ ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾಪೆರ್ರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೇಳಿದರು. +ಬಳಿಕ ಸಂತಾಪ ನಿರ್ಣಯದ ವೇಳೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದರು, ರಾಜಾ ವೆಂಕಟಪ್ಪ ನಾಯಕ್ ಅವರು ಎಂದಿಗೂ, ಯಾರಿಗೂ ನೋಯಿಸದ ನೇರ ನಿಷ್ಠೂರವಾದಿ ರಾಜಕಾರಣಿಯಾಗಿದ್ದರು. ಅವರೊಬ್ಬ ಸ್ನೇಹಜೀವಿಯೂ ಕೂಡ. ಇಂಥವರು ರಾಜಕಾರಣದಲಿ ತುಂಬಾ ಅಪರೂಪ. ಇಷ್ಟು ಬೇಗ ನಮ್ಮನ್ನು ಬಿಟ್ಟು ಅಗಲುತ್ತಾರೆ ಎಂಬ ಸಣ್ಣ ಸುಳಿವು ಕೂಡ ಇರಲಿಲ್ಲ ಎಂದು ವಿಷಾದಿಸಿದರು. +ಸಭಾನಾಯಕ ಹಾಗೂ ಸಚಿವ ಭೋಸ್‍ರಾಜ್ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ್ ಅವರು ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ತಂದೆಯೂ ಕೂಡ ಎರಡು ಬಾರಿ ಕಾಂಗ್ರೆಸ್‍ನಿಂದ ಗೆದ್ದಿದ್ದರು. ಬಡವರು, ಶೋಷಿತರು, ದೀನದಲಿತರು, ಹಿಂದುಳಿದ ವರ್ಗದವರ ಬಗ್ಗೆ ಅಪಾರ ಕಾಳಜಿಯನ್ನು ಇಟ್ಟುಕೊಂಡಿದ್ದರು. +ಕಾಂಗ್ರೆಸ್‍ ಶಾಸಕರಿಗೆ ವ್ಹಿಪ್ ಜಾರಿ +ವಿಶೇಷವಾಗಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ತಮ್ಮದೇ ಆದ ಕನಸು ಹೊಂದಿದ್ದರು. ಅವರ ಅಗಲಿಕೆ ತುಂಬಾ ನೋವು ತಂದಿದೆ ಎಂದು ಕಂಬನಿ ಮಿಡಿದರು. ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ್ ಅವರನ್ನು ಆ ಭಾಗದಲ್ಲಿ ಬಡವರ ಬಂಧು ಎಂದು ಕರೆಯುತ್ತಿದ್ದರು. ರಾಜಮನೆತನದಿಂದ ಬಂದಿದ್ದರೂ ಎಂದಿಗೂ ಹಮ್ಮು-ಬಿಮ್ಮು ತೋರಿದವರಲ್ಲ.ಹೇಳಬೇಕಾದುದನ್ನು ನೇರವಾಗೇ ಹೇಳುತ್ತಿದ್ದ ನಿಷ್ಠೂರವಾದಿ. ರಾಜ್ಯವು ಒಬ್ಬ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದರು. +ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ನಾನು ಕಲಬುರಗಿ ಜಿಲ್ಲೆಯ ಉಸ್ತುವಾರಿಯಾದ ನಂತರ ನನಗೆ ಅವರು ಆತ್ಮೀಯರಾಗಿದ್ದರು. ಕಾಂಗ್ರೆಸ್‍ನಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಒದಗಿಸಬೇಕೆಂಬುದು ಅವರ ಉದ್ದೇಶವಾಗಿತ್ತು. ಆದರೆ ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆಂದು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಹೇಳಿದರು. +ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ್ ನಮ್ಮ ಸಂಬಂಕರೂ ಹೌದು. 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾಗ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದು ಬಿಡುಗಡೆಯಾಗಿ ಬರುತ್ತೇನೆ ಎಂದು ಹೇಳಿದ್ದರು. ಆದರೆ ವಿಯಾಟ ಬೇರೆಯಾಗಿತ್ತು ಎಂದು ವಿಷಾದಿಸಿದರು. ಸದಸ್ಯೆ ತೇಜಸ್ವಿನಿ ರಮೇಶ್ ಕೂಡ ಮಾತನಾಡಿ, ನಾನು ಪತ್ರಕರ್ತೆಯಾಗಿದ್ದಾಗ ಅವರನ್ನು ಸಂದರ್ಶನ ಮಾಡುವ ಅವಕಾಶ ಸಿಕ್ಕಿತ್ತು. ರಾಜಮನೆತನದಿಂದ ಬಂದಿದ್ದರೂ ಸಾಮಾನ್ಯ ಜನರ ಬಗ್ಗೆ ಇದ್ದ ಕಳಕಳಿ ಕಂಡು ನಾನೇ ಆಶ್ಚರ್ಯಚಕಿತಳಾಗಿದ್ದೇನೆ ಎಂದು ಸ್ಮರಿಸಿದರು. +ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿ, ರಾಜಾ ವೆಂಕಟಪ್ಪ ನಾಯಕ ಒಬ್ಬ ೀಮಂತ ನಾಯಕ. ಕಾಂಗ್ರೆಸ್ ಪಕ್ಷದ ನಿಷ್ಠಾವಂತರಾಗಿದ್ದ ಅವರು ನಂಬಿದ ತತ್ವ ಸಿದ್ಧಾಂತದಿಂದ ಎಂದೂ ಹಿಂದೆ ಸರಿದವರಲ್ಲ ಎಂದು ಕಂಬನಿ ಮಿಡಿದರು. ಸಂತಾಪ ಸೂಚಿಸಿದ ಬಳಿಕ ಮೃತರ ಗೌರವಾರ್ಥ ಎಲ್ಲ ಸದಸ್ಯರು ಒಂದು ನಿಮಿಷ ಎದ್ದು ಮೌನಾಚರಣೆ ಸಲ್ಲಿಸಿದರು. +ಸಂತಾಪ ನಿರ್ಣಯದ ಬಳಿಕ ಪ್ರಕಟಣೆ ಓದಿದ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನ ಸಲಹಾ ಸಮಿತಿಯಲ್ಲಿ ತೆಗೆದುಕೊಂಡು ನಿರ್ಣಯದಂತೆ ರಾಜಾ ವೆಂಕಟಪ್ಪ ನಾಯಕ್ ಹಾಲಿ ಸದಸ್ಯರಾಗಿರುವುದರಿಂದ ಅವರಿಗೆ ಗೌರವ ಸೂಚಿಸಿ ಸದನವನ್ನು ಒಂದು ದಿನದ ಮಟ್ಟಿಗೆ ಮುಂದೂಡಬೇಕೆಂದು ತೀರ್ಮಾನಿಸಲಾಗಿದೆ. ಅದರಂತೆ ಬುಧವಾರ ಬೆಳಗ್ಗೆ 9.30ಕ್ಕೆ ಸದನವನ್ನು ಮುಂದೂಡಲಾಗಿದೆ ಎಂದು ಪ್ರಕಟಿಸಿದರು. \ No newline at end of file diff --git a/eesanje/url_46_223_6.txt b/eesanje/url_46_223_6.txt new file mode 100644 index 0000000000000000000000000000000000000000..fa57a3cfd537273045c7e5c5e7e486c682e61842 --- /dev/null +++ b/eesanje/url_46_223_6.txt @@ -0,0 +1,5 @@ +ರೆಸಾರ್ಟ್‌ನತ್ತ ತೆರಳಿದ ಕಾಂಗ್ರೆಸ್‍ ಶಾಸಕರು +ಬೆಂಗಳೂರು,ಫೆ.26- ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಶಾಸಕರನ್ನು ಇಂದು ನಗರದ ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಲಾಗಿದೆ. ಇಂದು ಬೆಳಿಗ್ಗೆ ನಡೆದ ವಿಧಾನಸಭೆಯ ಕಲಾಪ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ಸಂತಾಪ ಸೂಚಕ ಸಭೆಯಾಗಿ ಪರಿವರ್ತನೆಯಾಯಿತು. ಭಾವಪೂರ್ಣ ಶ್ರದ್ಧಾಂಜಲಿಯ ಬಳಿಕ ಕಾಂಗ್ರೆಸ್ ಶಾಸಕರು ಮಾನ್ಯತಾ ಟೆಕ್ ಪಾರ್ಕ್‍ನಲ್ಲಿರುವ ಖಾಸಗಿ ಹೋಟೆಲ್‍ಗೆ ಸ್ಥಳಾಂತರಗೊಂಡಿದ್ದಾರೆ. +ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ +ಇಂದು ರಾತ್ರಿ ಹೋಟೆಲ್‍ನಲ್ಲಿ ತಂಗಲಿರುವ ಶಾಸಕರು ಶಾಸಕಾಂಗ ಸಭೆಯ ಬಳಿಕ ನಾಳೆ ಒಟ್ಟಾಗಿ ಬಸ್‍ನಲ್ಲಿ ವಿಧಾನಸಭೆಗೆ ಆಗಮಿಸಿ ಮತದಾನ ಮಾಡಲಿದ್ದಾರೆ. 135 ಶಾಸಕರ ಸಂಖ್ಯಾಬಲದಿಂದ ಕಾಂಗ್ರೆಸ್‍ನಲ್ಲಿ ರಾಜಾ ವೆಂಕಟಪ್ಪ ನಾಯಕರ ನಿಧನದ ಬಳಿಕ 134 ಶಾಸಕರ ಸಂಖ್ಯಾಬಲವಾಗಿದೆ. ಜೊತೆಗೆ ನಾಲ್ಕು ಮಂದಿ ಪಕ್ಷೇತರ ಶಾಸಕರ ಬೆಂಬಲವನ್ನು ಕಾಂಗ್ರೆಸ್ ನಾಯಕರು ಕೇಳಿದ್ದಾರೆ. ಶತಾಯಗತಾಯ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂಬ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಅಡ್ಡ ಮತದಾನವಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದು ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದಾರೆ. ಕೆಲವು ಹಿರಿಯ ಶಾಸಕರು ಶಾಸಕಾಂಗ ಸಭೆಗೆ ಗೈರು ಹಾಜರಾಗುವ ಸಾಧ್ಯತೆಯಿದೆ. ಆದರೆ ಮತದಾನಕ್ಕೆ ನೇರವಾಗಿ ಆಗಮಿಸಿ ಪಕ್ಷದ ಅಭ್ಯರ್ಥಿ ಪರವಾಗಿ ಮತ ಚಲಾಯಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೂ ಕಾಂಗ್ರೆಸ್‍ನಲ್ಲಿ ಒಳಗೊಳಗೇ ಆತಂಕ ಗೂಡು ಕಟ್ಟಿದೆ. \ No newline at end of file diff --git a/eesanje/url_46_223_7.txt b/eesanje/url_46_223_7.txt new file mode 100644 index 0000000000000000000000000000000000000000..8aff291ae34e26f3e6a1d930dc09a0ec673a847c --- /dev/null +++ b/eesanje/url_46_223_7.txt @@ -0,0 +1,5 @@ +ಕುಪೇಂದ್ರ ರೆಡ್ಡಿ ಗೆಲ್ಲಿಸುವ ಶಕ್ತಿ ಬಿಜೆಪಿ-ಜೆಡಿಎಸ್‍ಗೆ ಇಲ್ಲ; ರಿಜ್ವಾನ್ +ಬೆಂಗಳೂರು,ಫೆ.26- ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಳೆ ನಡೆಯುವ ಚುನಾವಣೆಯಲ್ಲಿ 5ನೇ ಅಭ್ಯರ್ಥಿಯನ್ನು ಗೆಲ್ಲಿಸುವ ಶಕ್ತಿ ಬಿಜೆಪಿ-ಜೆಡಿಎಸ್‍ಗೆ ಇಲ್ಲ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‍ನ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಬಹುದು. ಅದೇ ರೀತಿ ಬಿಜೆಪಿಯವರು ಒಬ್ಬರನ್ನು ಗೆಲ್ಲಿಸಿಕೊಳ್ಳಬಹುದು. ಆದರೂ 5 ನೇ ಅಭ್ಯರ್ಥಿಯನ್ನು ಏಕೆ ಬಿಜೆಪಿ-ಜೆಡಿಎಸ್‍ನವರು ಸ್ಪರ್ಧೆಗಿಳಿಸಿದ್ದಾರೆ ಎಂದು ಪ್ರಶ್ನಿಸಿದರು. +ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಐಟಿ, ಇಡಿ, ಸಿಬಿಐನಿಂದ ನೋಟಿಸ್ ಕೊಡಿಸುವ, ಒತ್ತಡ ಹಾಕಿಸುವ ಪ್ರಯತ್ನ ಮಾಡಬಹುದು. ಆಪರೇಷನ್ ಕಮಲ ಮಾಡಿ ಕೋಟ್ಯಂತರ ರೂ. ಭ್ರಷ್ಟಾಚಾರದ ಹಣ ಸುರಿಯುತ್ತಾರೆ. ಇಂತಹ ಅವರ ನೀತಿ ತಂತ್ರ ಇದ್ದೇ ಇರುತ್ತದೆ. ನಮ್ಮ ಶಾಸಕರನ್ನು ಒಂದೆಡೆ ಸೇರಿಸಿ ಸಮಾಲೋಚನೆ ನಡೆಸಿ ರಾಜ್ಯಸಭೆ ಚುನಾವಣೆಯಲ್ಲಿ ಯಾವ ರೀತಿ ಮತದಾನ ಮಾಡಬೇಕು.ಯಾವ ಅಭ್ಯರ್ಥಿಗೆ ಯಾವ ಶಾಸಕರು ಮತ ಹಾಕಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಬಾರಿ 70 ಕ್ಕಿಂತ ಅಧಿಕ ಶಾಸಕರು ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಅವರಿಗೆ ಇದು ಮೊದಲ ರಾಜ್ಯಸಭಾ ಚುನಾವಣೆಯಾಗಿದೆ. ಹೀಗಾಗಿ ಒಂದೆಡೆ ಸೇರುತ್ತಿದ್ದೇವೆ. ರಾಜ್ಯಸಭಾ ಚುನಾವಣೆ ನಂತರ ಲೋಕಸಭೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು. +ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ +ಲೋಕಸಭಾ ಚುನಾವಣೆಗೆ ಸ್ರ್ಪಧಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ತೀರ್ಮಾನ ಏನಾಗುತ್ತೋ ಗೊತ್ತಿಲ್ಲ. ಚುನಾವಣೆಗೆ ಸ್ರ್ಪಧಿಸಲು ಬಹಳಷ್ಟು ಜನ ಅರ್ಹರಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಖಾನ್, ಶಾಸಕ ಎನ್.ಎ.ಹ್ಯಾರಿಸ್ ಅಲ್ಲದೆ ಹೊಸಬರು ಕೂಡ ಆಕಾಂಕ್ಷಿಗಳಾಗಿದ್ದಾರೆ. ಪಕ್ಷದಲ್ಲಿ ಏನೇ ತೀರ್ಮಾನವಾದರೂ ಅದಕ್ಕೆ ಬದ್ಧರಾಗಿರುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ಇದೆ ಎಂದರು. \ No newline at end of file diff --git a/eesanje/url_46_223_8.txt b/eesanje/url_46_223_8.txt new file mode 100644 index 0000000000000000000000000000000000000000..9272543610b4863271cbc8b6f6c264a26f8cd34b --- /dev/null +++ b/eesanje/url_46_223_8.txt @@ -0,0 +1,4 @@ +ಕಾಂಗ್ರೆಸ್‍ ಶಾಸಕರಿಗೆ ವ್ಹಿಪ್ ಜಾರಿ +ಬೆಂಗಳೂರು,ಫೆ.26- ಕಾಂಗ್ರೆಸ್‍ನ ಎಲ್ಲಾ ಶಾಸಕರಿಗೂ ವ್ಹಿಪ್ ನೀಡಿರುವುದಾಗಿ ರಾಜ್ಯಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗಿದೆ. ಖಾಸಗಿ ಹೋಟೆಲ್‍ನಲ್ಲಿ ಎಲ್ಲಾ ಶಾಸಕರು ರಾತ್ರಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾಸಕರೆಲ್ಲಾ ಹೋಟೆಲ್‍ನಿಂದ ವಿಧಾನಸೌಧಕ್ಕೆ ಬಸ್ಸಿನಲ್ಲಿ ಬಂದು ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸುತ್ತೇವೆ. +ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್ +ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮತದಾನ ಮಾಡುವ ಕುರಿತಂತೆ ತರಬೇತಿ ನೀಡಲಾಗುತ್ತದೆ. ಕಾಂಗ್ರೆಸ್‍ನಲ್ಲಿ ಅಡ್ಡ ಮತದಾನದ ಭೀತಿಯಿಲ್ಲ. ಒಂದು ವೇಳೆ ಅಡ್ಡಮತದಾನವಾದರೆ ವಿಧಾನಸಭಾಧ್ಯಕ್ಷರಿಗೆ ದೂರು ನೀಡಿ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುತ್ತದೆ. ಹೀಗಾಗಿ ಯಾರೂ ಅಡ್ಡಮತದಾನ ಮಾಡುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_223_9.txt b/eesanje/url_46_223_9.txt new file mode 100644 index 0000000000000000000000000000000000000000..c43361ca0501ac7b6a5b65cb915e26b5e4757ba6 --- /dev/null +++ b/eesanje/url_46_223_9.txt @@ -0,0 +1,10 @@ +ನಿರುದ್ಯೋಗ ತಗ್ಗಿಸಲು ಪ್ರತಿ ವರ್ಷ ಬೃಹತ ಉದ್ಯೋಗ ಮೇಳ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.26- ರಾಜ್ಯದಲ್ಲಿ ನಿರುದ್ಯೋಗವನ್ನು ತಗ್ಗಿಸಲು ಇನ್ನು ಮುಂದೆ ಪ್ರತಿ ವರ್ಷ ಪ್ರಾದೇಶಿಕವಾರು ಬೃಹತ ಉದ್ಯೋಗ ಮೇಳವನ್ನು ಆಯೋಜಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸ ಜಿಟಿಟಿಸಿ ಕೇಂದ್ರಗಳನ್ನು ತೆರೆಯುವುದಾಗಿ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಯುವ ಸಮೃದ್ಧಿ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, 580ಕ್ಕೂ ಹೆಚ್ಚು ಕಂಪನಿಗಳ ಉದ್ಯೋಗದಾತರು ಸಮ್ಮೇಳನದಲ್ಲಿ ಭಾಗವಹಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗ ನೀಡಲು ಮುಂದೆ ಬಂದಿದ್ದಾರೆ. ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು. +ಸರ್ಕಾರದ ವತಿಯಿಂದ ದೇಶದಲ್ಲಿ ಅತಿ ದೊಡ್ಡದಾದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇನ್ನು ಮುಂದೆ ಮೈಸೂರು, ಬೆಂಗಳೂರು, ಬೆಳಗಾವಿ, ಕಲಬುರಗಿ ಪ್ರಾದೇಶಿಕವಾರು ಉದ್ಯೋಗ ಮೇಳವನ್ನು ಪ್ರತಿ ವರ್ಷ ಆಯೋಜಿಸಲಾಗುವುದು. ಜೊತೆಗೆ ಮಾರುಕಟ್ಟೆ ಬೇಡಿಕೆ ಆಧಾರಿತವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿಪಡಿಸಲು ಕೌಶಲ್ಯ ತರಬೇತಿ ನೀಡಲಾಗುತ್ತದೆ. +ಈಗಾಗಲೇ ಐಟಿಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಉದ್ಯೋಗಧಾರಿತ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಸರ್ಕಾರಿ ಟೋಲ್‍ರೂಮ್-ಟ್ರೈನಿಂಗ್ ಸೆಂಟರ್(ಜಿಟಿಟಿಸಿ)ಗಳನ್ನು ತೆರೆಯಲಾಗಿದೆ. ಮತ್ತಷ್ಟು ಕೇಂದ್ರಗಳನ್ನು ತೆರೆದು ಕೌಶಲ್ಯ ತರಬೇತಿಯನ್ನು ಹೆಚ್ಚಿಸುವುದಾಗಿ ಹೇಳಿದರು.ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗುತ್ತಲೇ ಇದೆ. 2014ರಲ್ಲಿ ಶೇ.2.1ರಷ್ಟಿದ್ದ ನಿರುದ್ಯೋಗದ ಪ್ರಮಾಣ 2023ರ ವೇಳೆಗೆ ಶೇ.8.40ರಷ್ಟಾಗಿದೆ. ಲೋಕಸಭೆ ಚುನಾವಣೆ ವೇಳೆ ನರೇಂದ್ರಮೋದಿ ಅವರು ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಉದ್ಯೋಗ ಸೃಷ್ಟಿಸುವ ಬದಲಾಗಿ ಉದ್ಯೋಗ ನಷ್ಟವಾಗುತ್ತಿದೆ. ಭರವಸೆ ಈಡೇರಿಕೆಯಾಗಿದ್ದರೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಅದು ಸಾಧ್ಯವಾಗಿಲ್ಲ ಎಂದು ದೂರಿದರು. +ಫೆ.29ಕ್ಕೆ ಬಿಜೆಪಿ ಮೊದಲ ಪಟ್ಟಿ: ರಾಜ್ಯದ 10 ಕ್ಷೇತ್ರ ಸೇರಿ 150 ಅಭ್ಯರ್ಥಿಗಳು ಫೈನಲ್ +ನಿರುದ್ಯೋಗದ ಸಮಸ್ಯೆ ಹೆಚ್ಚಾದರೆ ದೇಶದ ಸಂಪತ್ತು ಸೃಷ್ಟಿಸಬೇಕಾದ ಯುವಜನ ನಿರರ್ಥಕವಾಗುತ್ತದೆ. ಇದು ಅಭಿವೃದ್ಧಿಗೆ ಘಾಸಿ ಮಾಡುತ್ತದೆ. ದೇಶದಲ್ಲಿ ನಿರುದ್ಯೋಗ ಸವಾಲಿನಂತೆ ಬೆಳೆದು ನಿಂತಿದ್ದು, ಅದನ್ನು ನಿವಾರಿಸಬೇಕಾದರೆ ಪ್ರಾಮಾಣಿಕ ಪ್ರಯತ್ನಗಳು ಅಗತ್ಯ. ರಾಜ್ಯ ಸರ್ಕಾರ ಪದವೀಧರ ನಿರುದ್ಯೋಗಿಗಳಿಗೆ ಮತ್ತು ಡಿಫ್ಲೋಮೊದಾರರಿಗೆ ನಿರುದ್ಯೋಗ ಭತ್ಯೆ ನೀಡುತ್ತಿದೆ. ಜೊತೆಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು. +ಉದ್ಯೋಗ ಮೇಳದಲ್ಲಿ 75 ಸಾವಿರ ಮಂದಿ ಈವರೆಗೂ ನೋಂದಣಿಯಾಗಿದ್ದಾರೆ. ಉದ್ಯೋಗ ಪಡೆಯುವವರಿಗೆ ಶುಭವಾಗಲಿ ಎಂದು ಮುಖ್ಯಮಂತ್ರಿ ಹಾರೈಸಿದರು. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, 75 ಸಾವಿರ ಮಂದಿ ನೋಂದಾಣಿಯಾಗಿರುವುದು ದೇಶದಲ್ಲೇ ಐತಿಹಾಸಿಕ ದಾಖಲೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರದವರೆಗೂ ವಿವಿಧ ವಿದ್ಯಾರ್ಹತೆಗಳನ್ನು ಹೊಂದಿರುವವರು ಮೇಳದಲ್ಲಿ ಭಾಗವಹಿಸಿದ್ದಾರೆ. ಒಂದು ಲಕ್ಷ ಉದ್ಯೋಗಗಳ ನೇಮಕಾತಿಗೆ ಖಾಸಗಿ ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು. +ಪಂಚಖಾತ್ರಿಗಳಲ್ಲಿ ಒಂದಾಗಿರುವ ಯುವನಿ ಕಾರ್ಯಕ್ರಮ ಯುವ ಸಮುದಾಯದ ಬೆನ್ನಲೆಬುಗಿದೆ. 1.40 ಲಕ್ಷ ಪದವೀಧರರು ಹಾಗೂ ಡಿಫ್ಲೋಮೊದಾರರ ಬ್ಯಾಂಕ್ ಖಾತೆಗಳಿಗೆ ಯುವನಿಧಿ ಹಣ ಸಂದಾಯವಾಗುತ್ತಿದೆ. ಸರ್ಕಾರ ಯುವ ಸಮುದಾಯದ ಜೊತೆಗಿರಲಿದೆ ಎಂದು ಭರವಸೆ ನೀಡಿದರು. ಯುವನಿಧಿ ಅಡಿ ನೋಂದಣಿಯಾಗಿರುವವರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಇಂದು ನೆಪಮಾತ್ರಕ್ಕೆ ಉದ್ಯೋಗ ಮೇಳ ನಡೆಯುತ್ತಿಲ್ಲ. ಎಲ್ಲರಿಗೂ ಉದ್ಯೋಗ ಕೊಡಿಸಲಾಗುತ್ತಿದೆ. ಉದ್ಯೋಗ ಸಿಗದೆ ಇದ್ದ ನೋಂದಾಯಿತರ ದತ್ತಾಂಶಗಳ ಮೇಲೆ ನಿಗಾ ಇಡಲಾಗುವುದು. ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದು, ಅಗತ್ಯ ತರಬೇತಿ ಹಾಗೂ ಕೌಶಲ್ಯ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು. +ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು.. +ದೇಶದ ಎಲ್ಲಾ ರಾಜ್ಯಗಳಿಗಿಂತಲೂ ಮಾದರಿಯಾಗಿ ನಿರುದ್ಯೋಗ ನಿವಾರಣೆಗೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಭರವಸೆ ನೀಡಿದರು. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, ಯುವಕರ ಸಮಸ್ಯೆಗಳಿಗೆ ಸರ್ಕಾರದ ಯಂತ್ರ ಸ್ಪಂದಿಸಲಿದೆ. ಬಜೆಟ್‍ನಲ್ಲಿ ಶಿಕ್ಷಣಕ್ಕಿಂತಲೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಮನವಿ ನೀಡಲಾಗಿತ್ತು. ಮುಖ್ಯಮಂತ್ರಿಯವರು ಅದಕ್ಕೆ ಸ್ಪಂದಿಸಿದ್ದಾರೆ. ಭವಿಷ್ಯದಲ್ಲಿ ಯುವಜನರ ಸಮಗ್ರ ಅಭಿವೃದ್ಧಿಗೆ ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹಾಗು ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಯುವ ಸಮೃದ್ಧಿ ಲಾಂಛನವನ್ನು ಅನಾವರಣಗೊಳಿಸಲಾಯಿತು. \ No newline at end of file diff --git a/eesanje/url_46_224_1.txt b/eesanje/url_46_224_1.txt new file mode 100644 index 0000000000000000000000000000000000000000..a68d92659b3b2c2d08234d6dc08eb56f26fcf5cf --- /dev/null +++ b/eesanje/url_46_224_1.txt @@ -0,0 +1,5 @@ +ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಯುವಕ ಸಾವು.. +ನೆಲಮಂಗಲ,ಫೆ.26- ಬೈಕ್ ವೀಲಿಂಗ್ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯ ನವಯುಗ ಟೋಲ್ ಬಳಿ ರಾತ್ರಿ ನಡೆದಿದೆ.ದಾಸರಹಳ್ಳಿ ಮೂಲದ ರಾಜೇಶ್(20) ಮೃತ ಯುವಕ. ರಾತ್ರಿ ಒಂದು ಘಂಟೆ ಸುಮಾರಿಗೆ ತಂಡ ತಂಡವಾಗಿ ನವಯುಗ ಟೋಲ್‍ನ ಎಕ್ಸಪ್ರೆಸ್ ಹೈವೇಗೆ ಬಂದ ವೀಲಿಂಗ್ ಪುಂಡರು ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನವಯುಗ ಟೋಲ್ ಬಳಿ ಜಮಾಯಿಸಿ ನಂತರ ತಂಡ ತಂಡವಾಗಿ ನೆಲಮಂಗಲದವರೆಗೆ ವೀಲೀಂಗ್ ಮಾಡಿಕೊಂಡು ಬಂದಿದ್ದಾರೆ. +ನೆಲಮಂಗಲದ ಸುಭಾಷ್‍ನಗರದ ಬಳಿಯಿರುವ ಟೋಲ್ ಹತ್ತಿರ ವಾಪಸ್ಸು ಬೆಂಗಳೂರು ಕಡೆಗೆ ಹೋಗುವ ಸಲುವಾಗಿ ಹೆದ್ದಾರಿ ಡಿವೈಡರ್ ಹತ್ತಿಸುತ್ತಿದ್ದಾಗ ಇದೇ ತಂಡದ ಶಾಹಿಲ್ ವೀಲಿಂಗ್ ಮಾಡಿಕೊಂಡು ಬಂದು ಡಿಕ್ಕಿ ಹೊಡೆದ ರಭಸಕ್ಕೆ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. +ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್‌ಎಸ್‌ಎಸ್ +ಗಾಯಗೊಂಡಿದ್ದ ಶಾಹಿಲ್‍ನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದ್ದು, ಆತನ ಸ್ಥಿತಿಯೂ ಗಂಭೀರವಾಗಿದೆ. ಈ ಸಂಬಂಧ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_224_10.txt b/eesanje/url_46_224_10.txt new file mode 100644 index 0000000000000000000000000000000000000000..7110357fb9ad44ed1c0a5783e0c11a3cb931a62a --- /dev/null +++ b/eesanje/url_46_224_10.txt @@ -0,0 +1,5 @@ +ನಡು ರಸ್ತೆಯಲ್ಲೇ ಯುವಕನ ಭೀಕರ ಕೊಲೆ +ಆನೇಕಲ್. ಫೆ. 25- ಹಳೆ ವೈಷ್ಯಮ್ಯದ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲಿ ಯುವಕನನ್ನುಮಾರಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸೂರ್ಯನಗರ ಪೋಲಿಸ್ ಠಾಣೆಯ ವ್ಯಾಪ್ತಿಯ ಮರಸೂರು ಗ್ರಾಮ ಬಳಿ ಇಂದು ಮುಂಜಾನೆ ನಡೆದಿದೆ. +ಜಯ್ ಕುಮಾರ್(27) ಕೊಲೆಯಾದ ಯುವಕನಾಗಿದ್ದು ಈತ ಕಳೆದ 2017ರಲ್ಲಿ ಮನೋಜ್ ಬಬ್ಲು ಎಂಬ ವ್ಯಕ್ತಿಯ ಕೊಲೆ ಕೇಸ್‍ನಲ್ಲಿ ಜೈಲು ಸೇರಿದ್ದು ಜಾಮೀನಿನ ಮೇಲೆ ಏಳು ತಿಂಗಳ ಹಿಂದೆ ಹೊರಗೆ ಬಂದಿದ್ದ. ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಮೊಬೈಲ್ ಕರೆ ಮಾಡಿ ಮನೆಯಲ್ಲಿ ಮಲಗಿದ್ದವನನ್ನು ಹೊರ ಕರೆದು ನಂತರ ಸ್ವಲ್ಪ ದೂರ ಮಾತನಾಡುತ್ತಾ ಕರೆದುಕೊಂಡು ಹೋಗಿ ತಲೆಗೆ ಮಾರಕಾಸ್ತ್ರ ದಿಂದ ಹೊಡೆದಿದ್ದಾರೆ. +ರಾಜ್ಯಸಭಾ ಚುನಾವಣೆಗೆ ಮೂರು ಪಕ್ಷಗಳಲ್ಲೂ ತಂತ್ರ-ಪ್ರತಿತಂತ್ರ +ಜಯ್ ಕುಮಾರ್ ಕುಸಿದು ಬೀಳುತ್ತಿದ್ದಂತೆ ಸುಮಾರು ನಾಲ್ಕೈದು ಮಂದಿ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಆಗಿದ್ದ ಮನೋಜ್ ಕಡೆಯವರು ಈ ಕೊಲೆ ಮಾಡಿಸಿದ್ದಾರೆ ಎಂದು ಜಯ್ ಪೋಷಕರು ದೂರಿದ್ದಾರೆ. ನಡು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವವನ್ನು ನೋಡಿದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಎಸ್.ಪಿ. ಮಲ್ಲಿಕಾರ್ಜುನ್ ಬಾಲದಂಡಿರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.ಆನೇಕಲ್ ಭಾಗದಲ್ಲಿ ಮತ್ತೆ ಅಪರಾಧ ಚಟುವಟಿಕೆ ಹೆಚ್ಚಾಗುತ್ತಿದ್ದು ಸ್ಥಳೀಯರು ಆತಂಕಗೊಂಡಿದ್ದಾರೆ. \ No newline at end of file diff --git a/eesanje/url_46_224_11.txt b/eesanje/url_46_224_11.txt new file mode 100644 index 0000000000000000000000000000000000000000..b644565419dcf4dfe5aa321e87e929e1f7cb6104 --- /dev/null +++ b/eesanje/url_46_224_11.txt @@ -0,0 +1,7 @@ +ಮನೆ ಬಾಗಿಲಿಗೆ ಇ – ಸ್ಟ್ಯಾಂಪ್ : ಸದ್ಯದಲ್ಲೇ ಸರ್ಕಾರಿ ವೆಬ್‍ಸೈಟ್ ಆರಂಭ +ಬೆಂಗಳೂರು, ಫೆ.25- ರಾಜ್ಯ ಸರ್ಕಾರದ ಸಹಕಾರದೊಂದಿಗೆ ಲೀಗಲ್ ಕರ್ನಾಟಕ.ಕಾಂ ಮೂಲಕ ಮನೆಬಾಗಿಲಿಗೆ ಇ-ಸ್ಟಾಂಪ್ ಪೇಪರ್ ಹಾಗೂ ಕಾನೂನು ದಾಖಲೆ ಕರಡು ಪ್ರತಿ (ಡ್ರಾಫ್ಟ್) ತಲುಪಿಸುವ ಯೋಜನೆ ಸದ್ಯದಲ್ಲೇ ಜಾರಿಗೆ ಬರಲಿದೆ. +ಮನೆ ಬಾಡಿಗೆ ಅಥವಾ ಲೀಸ್‍ಗೆ ಸಂಬಂಧಪಟ್ಟಂತೆ ಒಪ್ಪಂದ ಮಾಡಿಕೊಳ್ಳಲು ಇ-ಸ್ಟಾಂಪ್ ಪತ್ರಕ್ಕಾಗಿ ಸಹಕಾರಿ ಸೊಸೈಟಿಗಳಿಗೆ ತೆರಳಬೇಕಿತ್ತು. ಕೆಲವು ಸಂದರ್ಭದಲ್ಲಿ ರಜೆ ಅಥವಾ ಸರ್ವರ್ ಸಮಸ್ಯೆಯಿಂದ ತುರ್ತಾಗಿ ಬೇಕಾದಾಗ ಇದು ಸಿಗುತ್ತಿರಲಿಲ್ಲ. ಪ್ರತಿನಿತ್ಯ ಸಾರ್ವಜನಿಕರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ 24 ಗಂಟೆ ಕಾಲ ಆನ್‍ಲೈನ್ ಮೂಲಕ ಇ-ಸ್ಟಾಂಪ್ ಪೇಪರ್ (ಒಪ್ಪಂದ ಪತ್ರ), ಕಾನೂನು ದಾಖಲೆ ಕರಡು ಪ್ರತಿಯನ್ನು ಜನರಿಗೆ ತಲುಪಿಸುವ ಸೇವೆಯನ್ನು ಸಂಸ್ಥೆ ಪ್ರಾರಂಭಿಸಲಿದೆ. +ಸರ್ಕಾರ ಪತನದ ಕನಸು ಈಡೇರಲ್ಲ: ಸಚಿವ ಎಂ.ಬಿ.ಪಾಟೀಲ್ +ಇ-ಸ್ಟಾಂಪ್ ಪೇಪರ್ ಜತೆಗೆ ಒಪ್ಪಂದ ಮಾಡಿಕೊಳ್ಳಲು ಬೇಕಾದ ಅಂಶಗಳನ್ನೊಳಗೊಂಡ ಪ್ರತಿಯೂ ಸಿಗಲಿದೆ. ಇದಕ್ಕಾಗಿ ಸಂಸ್ಥೆ ಪ್ರತ್ಯೇಕವಾಗಿ ಲೀಗಲ್ ಕರ್ನಾಟಕ.ಕಾಂ ವೆಬ್‍ಸೈಟ್ ಸಿದ್ಧಪಡಿಸಿದೆ. ಕರಾರು ಒಪ್ಪಂದ ಮಾಡಿಕೊಳ್ಳುವವರು ವೆಬ್‍ಸೈಟ್‍ನಲ್ಲಿ ತಮ್ಮ ವಿವರಗಳನ್ನು ನಮೂದಿಸಿದರೆ ಅರ್ಧ ಗಂಟೆಯಲ್ಲಿ ಇ-ಸ್ಟಾಂಪ್ ಆಧಾರಿತ ಕರಡು ಪ್ರತಿಯು (ಡ್ರಾಫ್ಟ್) ಗ್ರಾಹಕರು ಇರುವ ಜಾಗದಲ್ಲೇ ಬರಲಿದೆ. +ರಾಜ್ಯ ಸರ್ಕಾರವು 2008ರಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆ ಜಾರಿಗೊಳಿಸಿತ್ತು. ಅದರಂತೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಆಸ್ತಿ ಖರೀದಿ ಮತ್ತು ಮಾರಾಟ ನೋಂದಣಿಗೆ, ಮನೆ ಲೀಸ್ ಅಥವಾ ಬಾಡಿಗೆಗೆ ಮಾಡಿಕೊಳ್ಳಲು, ಪರಸ್ಪರ ಪಾಲುದಾರಿಕೆಗೆ, ಆಸ್ತಿಗಳ ಅಡಮಾನಕ್ಕೆ, ಸಾಲ ಪಡೆಯುವುದಕ್ಕೆ, ಆಸ್ತಿ ವರ್ಗಾವಣೆಗೆ, ವ್ಯವಹಾರ ನಡೆಸುವುದಕ್ಕೆ, ಕಟ್ಟಡ, ಗುತ್ತಿಗೆ ಒಪ್ಪಂದಕ್ಕೆ, ಮಾದರಿ ಸೇವಾ, ಸಹಭಾಗಿತ್ವ ಸೇರಿ ವಿವಿಧ ಬಗೆಯ ಒಪ್ಪಂದ ಮಾಡಿಕೊಳ್ಳುವುದಕ್ಕೆ ಇ-ಸ್ಟಾಂಪ್ ಪೇಪರ್ ಅವಶ್ಯಕತೆ ಇರುತ್ತದೆ. +ಹಾಗಾಗಿ ಈ ಮೇಲಿನ ಯಾವುದೇ ವ್ಯವಹಾರವನ್ನೂ ಇ-ಸ್ಟಾಂಪ್ ಪೇಪರ್ ಮೂಲಕ ಅಧಿಕೃತ ಒಪ್ಪಂದ ಮಾಡಿಕೊಂಡು ಕಾನೂನು ಬದ್ಧತೆ ದೃಢೀಕರಿಸಲಾಗುತ್ತದೆ. ಹಾಗಾಗಿ ಈ ಸಂಸ್ಥೆಯು ಒಪ್ಪಂದ ಪತ್ರ, ಅಫಿಡವಿಟ್‍ಗಳಿಂದ ಹಿಡಿದು ಡೀಡ್‍ಗಳ ಜತೆಗೆ ಲೀಗಲ್ ಡಾಕ್ಯುಮೆಂಟ್ ಡ್ರಾಫ್ಟಿಂಗ್ ಸೇವೆಯನ್ನೂ ಪರಿಣತ ಕಾನೂನು ತಂಡದಿಂದ ಒದಗಿಸಲಿದೆ. \ No newline at end of file diff --git a/eesanje/url_46_224_12.txt b/eesanje/url_46_224_12.txt new file mode 100644 index 0000000000000000000000000000000000000000..3425311d6374f7a9073cc2ade1359ac2b275b38a --- /dev/null +++ b/eesanje/url_46_224_12.txt @@ -0,0 +1,7 @@ +ಕ್ಷೇತ್ರ ಹೊಂದಾಣಿಕೆ ಅಂತಿಮ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಕಸರತ್ತು +ಬೆಂಗಳೂರು,ಫೆ.25-ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ಬಹುತೇಕ ಅಂತಿಮಗೊಂಡಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಚುನಾವಣಾ ಪೂರ್ವ ಸಮೀಕ್ಷೆಯನ್ನು ಬಿಜೆಪಿ ನಡೆಸಿದ್ದು, ಸಮೀಕ್ಷಾ ವರದಿ ಆಧರಿಸಿ ಗೆಲ್ಲುವ ವರ್ಚಸ್ಸುಳ್ಳ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಉಭಯ ಪಕ್ಷಗಳ ನಾಯಕರು ತೀರ್ಮಾನಿಸಿದ್ದಾರೆ. ಹೀಗಾಗಿ ಕ್ಷೇತ್ರ ಹಂಚಿಕೆಯಲ್ಲಿ ಅದಲು ಬದಲಾದರೂ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. +ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಗರಿಷ್ಠ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂಬ ಗುರಿಯನ್ನು ಬಿಜೆಪಿ ಮತ್ತು ಜೆಡಿಎಸ್ ಹೊಂದಿವೆ. ಆ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣಾ ಸಿದ್ಧತೆಯನ್ನು ನಡೆಸಲು ಮುಂದಾಗುತ್ತಿವೆ. ರಾಜ್ಯ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಚುನಾವಣಾ ಸಿದ್ಧತೆಯಲ್ಲಿ ಜೆಡಿಎಸ್ ಸಕ್ರಿಯವಾಗಲಿದೆ. ರಾಜ್ಯಸರ್ಕಾರದ ವಿರುದ್ಧ ಬಿಜೆಪಿಯೊಂದಿಗೆ ಸೇರಿ ಜಂಟಿ ಹೋರಾಟ ಮಾಡಲು ನಿರ್ಧರಿಸಲಾಗಿದೆ. +ಇತ್ತೀಚೆಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಕ್ಷೇತ್ರ ಹಂಚಿಕೆಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆ. ಕೋಲಾರ, ಹಾಸನ, ಮಂಡ್ಯ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಸಮ್ಮತಿಸಿದ್ದಾರೆ. ಜೊತೆಗೆ ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದಲ್ಲಿ ಯಾವುದಾದರೂ ಒಂದು ಕ್ಷೇತ್ರವನ್ನು ಜೆಡಿಎಸ್‍ಗೆ ನೀಡುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಇನ್ನೊಂದು ಕ್ಷೇತ್ರ ಯಾವುದು ಎಂಬುದು ಸ್ಪಷ್ಟವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ವಿದೇಶಿ ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶ +ಪಕ್ಷದ ವತಿಯಿಂದ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಜೆಡಿಎಸ್ ನಾಯಕರು ಸಭೆ ನಡೆಸಿ ಶೀಘ್ರದಲ್ಲೇ ಅಂತಿಮಗೊಳಿಸಲಿದ್ದಾರೆ. ಆಯಾ ಕ್ಷೇತ್ರದ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಲು ನಿರ್ಧರಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣನವರೇ ಅಭ್ಯರ್ಥಿ ಎಂದು ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಕಟಿಸಿದ್ದಾರೆ. ಮಂಡ್ಯದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಹೆಸರು ಮುಂಚೂಣಿಯಲ್ಲಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೇ ಈ ಕ್ಷೇತ್ರದಿಂದ ಸ್ರ್ಪಧಿಸಬೇಕು ಎಂಬ ಒತ್ತಡವಿದೆ. +ಕೋಲಾರ ಮೀಸಲು ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿ ಯಾರೆಂಬುದು ಇನ್ನೂ ಖಚಿತವಾಗಿಲ್ಲ. ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕುಮಾರಸ್ವಾಮಿಯವರು ಮಾಡಲಿದ್ದಾರೆ.ಒಟ್ಟಾರೆ ಲೋಕಸಭಾ ಚುನಾವಣೆಯನ್ನು ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸುವುದು, ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲ ಪಡೆಯುವುದು, ಬಿಜೆಪಿ ಅಭ್ಯರ್ಥಿಗಳಿರುವ ಕ್ಷೇತ್ರದಲ್ಲಿ ಜೆಡಿಎಸ್ ಬೆಂಬಲ ನೀಡುವ ಬಗ್ಗೆ ಕಾರ್ಯಕರ್ತರನ್ನು ಹುರಿದುಂಬಿಸುವ ಕಾರ್ಯದಲ್ಲಿ ಕುಮಾರಸ್ವಾಮಿ ಮಗ್ನರಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_224_2.txt b/eesanje/url_46_224_2.txt new file mode 100644 index 0000000000000000000000000000000000000000..7d4a06f07418650be4d9f40cf02019d9b639329b --- /dev/null +++ b/eesanje/url_46_224_2.txt @@ -0,0 +1,5 @@ +ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ.. +ಕಡೂರು,ಫೆ.26- ಉತ್ತಮ ಮಳೆ,ಬೆಳೆಯಾಗಲಿದ್ದು ಕಮಲ ಅರಳಲಿದೆ ಎಂಬಾರ್ಥದಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದಿದೆ. ಕಡೂರು ತಾಲೂಕಿನ ಜಿಗಣೆಹಳ್ಳಿ ಐತಿಹಾಸಿಕ ಮೈಲಾರಲಿಂಗೇಶ್ವರ ಸ್ವಾಮಿಯು ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್ ಎಂದು ಕಾರ್ಣಿಕ ನುಡಿಗೆ ಭಕ್ತರು ಖುಷಿಪಟ್ಟಿದ್ದಾರೆ. +ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗಲೇ, ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರ ಹಿಡಿಯಲಿದೆ ಎಂಬರ್ಥದಲ್ಲಿ ಜತೆಗೆ, ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ ನುಡಿ ಎಂದು ವುಖ್ಯಾನಿಸಲಾಗಿದೆ. +ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್‌ಎಸ್‌ಎಸ್ +ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಈ ಭಾಗದಲ್ಲಿ ಪ್ರಸಿದ್ಧಿ ಪಡೆದಿದೆ ಭವಿಷ್ಯ ಸಾಕಷ್ಡು ಭರಿ ನಿಜವಾಗಿದೆ. ಸಾವಿರಾರು ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗಿದ್ದಾರೆ ದೇವರ ದರ್ಶನ ಪಡೆದು ಸತೋಷಪಟ್ಟಿದ್ದಾರೆ. \ No newline at end of file diff --git a/eesanje/url_46_224_3.txt b/eesanje/url_46_224_3.txt new file mode 100644 index 0000000000000000000000000000000000000000..1294711e7bc8e49606d56cb7660c677cdeda81b4 --- /dev/null +++ b/eesanje/url_46_224_3.txt @@ -0,0 +1,9 @@ +ವೀರಪ್ಪನ್ ಪುತ್ರಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿತ್ತು ಆರ್‌ಎಸ್‌ಎಸ್ +ಬೆಂಗಳೂರು,ಫೆ.26- ಕಾಡುಗಳ್ಳ ವೀರಪ್ಪನ್ ಅವರ ಪುತ್ರಿ ವಿದ್ಯಾ ವೀರಪ್ಪನ್ ಇಂದು ವಕೀಲೆಯಾಗಿದ್ದು ತಮಿಳುನಾಡು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷರಾಗಿ ರಾಜಕೀಯ ಜೀವನಕ್ಕೂ ಕಾಲಿಟ್ಟಿದ್ದು ಯಶಸ್ವಿ ರಾಜಕಾರಣಿಯಾಗುವ ಎಲ್ಲ ಲಕ್ಷಣಗಳನ್ನು ತೋರಿಸಿದ್ದಾರೆ. ಕಾಡುಗಳ್ಳ ವೀರಪ್ಪನ್ ಅವರ ಪುತ್ರಿಯ ಈ ಯಶಸ್ಸಿಗೆ ಆರ್‍ಎಸ್‍ಎಸ್ ಕಾರಣ ಎನ್ನುವುದು ಇಲ್ಲಿ ಉಲ್ಲೇಖಾರ್ಹವಾದದ್ದು ಏಕೆಂದರೆ ವಿದ್ಯಾಳನ್ನು ದತ್ತು ಪಡೆದು ಲಾ ಓದಿಸಿದ ವನವಾಸಿ ಕಲ್ಯಾಣ ಆಶ್ರಮ ಆರ್‍ಎಸ್‍ಎಸ್‍ನ ಅಂಗಸಂಸ್ಥೆಯಾಗಿರುವುದು ಪ್ರಮುಖ ಕಾರಣವಾಗಿದೆ. +ಕಾಡುಗಳ್ಳನ ಪುತ್ರಿಯ ವಿದ್ಯಾಭ್ಯಾಸಕ್ಕೆ ಆರ್‍ಎಸ್‍ಎಸ್ ಅಂಗಸಂಸ್ಥೆ ಸಹಕರಿಸಿರುವ ವಿಷಯವನ್ನು ಅಮಿತ್ ಸಿಂಗ್ ರಾಜಾವತ್ ಎನ್ನುವರು ಎಕ್ಸ್ ಮಾಡಿದ್ದು ಅವರ ಈ ಪೋಸ್ಟ್ ಗೆ ಸಹಸ್ರಾರು ಸಂಖ್ಯೆಯ ಲೈಕ್‍ಗಳು ಬಂದಿರುವುದು ವಿಶೇಷ. ಬೆಂಗಳೂರಿನ ಲಾ ಕಾಲೇಜಿನಲ್ಲಿ ಐದು ವರ್ಷಗಳ ಪದವಿ ಪೂರ್ಣಗೊಳಿಸಿರುವ ವಿದ್ಯಾ ವೀರಪ್ಪನ್ ಇಂದು ತಮಿಳುನಾಡು ರಾಜಕಾರಣದಲ್ಲಿ ಬ್ಯುಸಿಯಾಗಿದ್ದು, ತಂದೆ ಮಾಡಿದ ತಪ್ಪಿಗೆ ಪ್ರಾಯಶ್ಚಿತವಾಗಿ ಜನಸೇವೆ ಮಾಡುವ ಗುರಿ ಇರಿಸಿಕೊಂಡಿದ್ದು ಮುಂಬರುವ ಚುನಾವಣೆಯಲ್ಲಿ ಸ್ರ್ಪಧಿಸಿ ಶಾಸಕರಾಗಿ ಹೊರಹೊಮ್ಮಿದರೂ ಆಶ್ಚರ್ಯಪಡುವಂತಿಲ್ಲ ಎಂದು ಆಶಾಭಾವ ವ್ಯಕ್ತಪಡಿಸಿದ್ದಾರೆ ಕೆಲವರು. +ಮೆಟ್ರೋದಲ್ಲಿ ರೈತನ ಪ್ರಯಾಣಕ್ಕೆ ತಡೆ: ಸಿಬ್ಬಂದಿ ವರ್ತನೆಗೆ ವ್ಯಾಪಕ ಆಕ್ರೋಶ +ವಿದ್ಯಾ ಮೂರನೇ ತರಗತಿ ಓದುತ್ತಿದ್ದಾಗ ತಂದೆ ವೀರಪ್ಪನ್ ಅವರನ್ನು ನೋಡಿದ ನೆನಪು ಮಾತ್ರ ಅವರಲ್ಲಿದೆ. ನನ್ನ ತಂದೆಯೊಂದಿಗೆ ಆಗ ಕೇವಲ 30 ನಿಮಿಷಗಳ ಕಾಲ ಮಾತನಾಡಿದ್ದು ನೆನಪಿದೆ ಉಳಿದಂತೆ ಅವರ ಯಾವುದೇ ನೆನಪು ನನ್ನಲ್ಲಿ ಉಳಿದಿಲ್ಲ ಎನ್ನುತ್ತಾರೆ ವಿದ್ಯಾ ವೀರಪ್ಪನ್. +ಇದೀಗ ಆರ್‍ಎಸ್‍ಎಸ್ ಅಂಗಸಂಸ್ಥೆಯಿಂದ ಸಹಾಯದಿಂದ ವಕೀಲರಾಗಿರುವ ವಿದ್ಯಾ ಅವರು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸುವ ಗುರಿಯನ್ನು ಇರಿಸಿಕೊಂಡಿದ್ದಾರಾದರೂ ಅವರ ಪ್ರಯತ್ನಕ್ಕೆ ಇನ್ನು ಫಲ ಸಿಕ್ಕಿಲ್ವಂತೆ. ನಾನು ಕಾಡುಗಳ್ಳ ವೀರಪ್ಪನ್ ಪುತ್ರಿ ಎಂದು ಜನ ನನ್ನನ್ನು ತಿರಸ್ಕರಿಸಿಲ್ಲ ನನಗೆ ಅವರಿಂದ ಪ್ರೀತಿ ಸಿಗುತ್ತಿದೆ ಅವರ ಋಣ ತೀರಿಸಲು ನನ್ನ ಕೈಲಾದ ಸೇವೆ ಮಾಡಬೇಕು ಎಂಬ ಗುರಿ ಇರಿಸಿಕೊಂಡಿದ್ದೇನೆ ಎಂದು ವಿದ್ಯಾ ತಿಳಿಸಿದ್ದಾರೆ. +ಇದರ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿ ಪಡೆದು ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಕೇಸರಿ ಪಕ್ಷಕ್ಕೆ ನೆಲೆಯಿಲ್ಲದ ತಮಿಳುನಾಡಿನಲ್ಲಿ ಆ ಪಕ್ಷದ ಗೆಲುವಿಗೆ ಸಹಕರಿಸುವ ಕಾರ್ಯದಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ ಎಂದು ವಿದ್ಯಾ ಹೇಳಿಕೊಂಡಿದ್ದಾರೆ. +ಸಿಎಂ – ಡಿಸಿಎಂ ಜೊತೆ ಜನಾರ್ಧನ ರೆಡ್ಡಿ ರಹಸ್ಯ ಮಾತುಕತೆ +ತಮಿಳುನಾಡು ಮತ್ತು ಕರ್ನಾಟಕದ ದಟ್ಟ ಅರಣ್ಯದಲ್ಲಿ ಕಾಡುಗಳ್ಳನಾಗಿದ್ದ ವೀರಪ್ಪನ್ ಕನ್ನಡದ ಖ್ಯಾತ ಚಿತ್ರನಟ ಡಾ.ರಾಜ್‍ಕುಮಾರ್ ಅವರನ್ನು ಅಪಹರಿಸಿ ಭಾರಿ ಸಂಚಲನ ಸೃಷ್ಟಿಸಿದ್ದ ಇಂತಹ ಕಾಡುಗಳ್ಳನನ್ನು ಎಸ್‍ಟಿಎಫ್ ಅಧಿಕಾರಿಗಳು 2014 ಅಕ್ಟೋಬರ್ 18ರಂದು ಹತ್ಯೆ ಮಾಡಿದ್ದರು. \ No newline at end of file diff --git a/eesanje/url_46_224_4.txt b/eesanje/url_46_224_4.txt new file mode 100644 index 0000000000000000000000000000000000000000..dbf1e0c6623ef77ca5e477b8a80ba0e75bd116b3 --- /dev/null +++ b/eesanje/url_46_224_4.txt @@ -0,0 +1,7 @@ +ಸಿಎಂ – ಡಿಸಿಎಂ ಜೊತೆ ಜನಾರ್ಧನ ರೆಡ್ಡಿ ರಹಸ್ಯ ಮಾತುಕತೆ +ಬೆಂಗಳೂರು,ಫೆ.26- ರಾಜ್ಯಸಭೆ ಚುನಾವಣೆಯ ಮತದಾನಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಕೆಕೆಪಿಪಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಜನಾರ್ಧನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಅವರೊಂದಿಗೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿರುವ ಜನಾರ್ಧನ ರೆಡ್ಡಿ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. +ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಆಗಮಿಸಲು ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿದ್ದಾಗಿ ರೆಡ್ಡಿ ಹೇಳಿದ್ದರಾದರೂ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇರುವುದನ್ನು ಅಲ್ಲಗೆಳೆಯುವಂತಿಲ್ಲ.ನಾಳೆ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕಾದ ಸಂಗ್ದತೆಯಲ್ಲಿರುವ ಕಾಂಗ್ರೆಸ್‍ಗೆ ಒಂದೊಂದು ಮತವು ಕೂಡ ಅಭ್ಯರ್ಥಿಗಳ ಸೋಲುಗೆಲುವಿನ ಹಣೆಬರಹವನ್ನು ತೀರ್ಮಾನಿಸುತ್ತದೆ. +ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ್ ಹಠಾತ್ ನಿಧನದಿಂದ ಒಂದು ಮತದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಇದೀಗ ಜನಾರ್ಧನ ರೆಡ್ಡಿಯನ್ನೇ ಆಪರೇಷನ್ ಹಸ್ತ ನಡೆಸಿರಬಹುದು ಎನ್ನಲಾಗುತ್ತಿದೆ.ಬಿಜೆಪಿಯಿಂದ ತುಸು ಅಂತರ ಕಾಯ್ದುಕೊಂಡಿರುವ ರೆಡ್ಡಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತ ಹಾಕಬಹುದೆಂದು ಹೇಳಲಾಗುತ್ತಿದೆ. +ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ +5ನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ಬೆಂಬಲಿತ ಕುಪೇಂದ್ರ ರೆಡ್ಡಿಯನ್ನು ಸೋಲಿಸಲೇಬೇಕೆಂದು ಕಾಂಗ್ರೆಸ್ ಪಣ ತೊಟ್ಟಿದ್ದು, ನಾಲ್ವರು ಪಕ್ಷೇತರ ಶಾಸಕರಿಗೆ ಗಾಳ ಹಾಕಿದೆ. ಈಗಾಗಲೇ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ, ಲತಾ ಮಲ್ಲಿಕಾರ್ಜುನ್ ಕಾಂಗ್ರೆಸ್‍ಗೆ ಬೆಂಬಲ ಸೂಚಿಸಿದ್ದು, ಈಗ ರೆಡ್ಡಿ ಕೂಡ ಕೈಗೆ ಜೈ ಎನ್ನುವ ಸಾಧ್ಯತೆ ಇದೆ. +ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ರೆಡ್ಡಿ, ಇದೊಂದು ಸೌಹಾರ್ದಯುತ ಭೇಟಿ. ಆನೆಗುಂದಿಯಲ್ಲಿ ನಡೆಯುವ ಉತ್ಸವಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿಕೊಂಡಿದ್ದಾರೆ. ನಾನು ಇನ್ನು ಇದರ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_224_5.txt b/eesanje/url_46_224_5.txt new file mode 100644 index 0000000000000000000000000000000000000000..e2cf38cc5780567e5e7eaf8f24910606bcfd733c --- /dev/null +++ b/eesanje/url_46_224_5.txt @@ -0,0 +1,7 @@ +ಮೆಟ್ರೋದಲ್ಲಿ ರೈತನ ಪ್ರಯಾಣಕ್ಕೆ ತಡೆ: ಸಿಬ್ಬಂದಿ ವರ್ತನೆಗೆ ವ್ಯಾಪಕ ಆಕ್ರೋಶ +ಬೆಂಗಳೂರು,ಫೆ.26- ರೈತರೊಬ್ಬರು ಕೊಳೆ ಬಟ್ಟೆ ಹಾಕಿದ್ದಾರೆ ಎಂಬ ಕಾರಣಕ್ಕೆ ಮೆಟ್ರೊ ಪ್ರಯಾಣಕ್ಕೆ ನಿರಾಕರಿಸಿದ ಭದ್ರತಾ ಸಿಬ್ಬಂದಿಗಳಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ರಾಜಾಜಿನಗರದಲ್ಲಿ ನಡೆದಿದ್ದು, ವ್ಯಾಪಕ ಆಕ್ರೋಶಗಳ ಬೆನ್ನಲ್ಲೇ ಬಿಎಂಆರ್‍ಸಿಎಲ್ ಭದ್ರತಾ ಮೇಲ್ವಿಚಾರಕರನ್ನು ಕೆಲಸದಿಂದ ವಜಾಗೊಳಿಸಿದೆ. +ಹಿರಿಯ ರೈತರೊಬ್ಬರು ಮೆಟ್ರೊದಲ್ಲಿ ಪ್ರಯಾಣಿಸಲು ರಾಜಾಜಿನಗರ ನಿಲ್ದಾಣಕ್ಕೆ ಆಗಮಿಸಿದರು. ಟಿಕೆಟ್ ಕೂಡ ಖರೀದಿಸಿದ್ದರು. ಆದರೆ ಅವರ ಬಟ್ಟೆ ಕೊಳೆಯಾಗಿದೆ, ತಲೆ ಮೇಲೆ ಗಂಟು ಹೊತ್ತುಕೊಂಡಿದ್ದಾರೆ. ಇತರ ಪ್ರಯಾಣಿಕರಿಗೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ರೈತರಿಗೆ ಪ್ರಯಾಣಿಸಲು ಭದ್ರತಾ ಸಿಬ್ಬಂದಿ ಅವಕಾಶ ನಿರಾಕರಿಸಿದರು. +ಇದನ್ನು ಗಮನಿಸಿದ ಸಹಪ್ರಯಾಣಿಕರು ಮಧ್ಯಪ್ರವೇಶಿಸಿ ಭದ್ರತಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ರೈತರು ತಂದಿರುವ ಗಂಟಿನಲ್ಲಿ ಬಟ್ಟೆ ಹೊರತುಪಡಿಸಿ ಬೇರೆ ಯಾವ ಅಪಾಯಕಾರಿ ವಸ್ತುಗಳೂ ಇಲ್ಲ. ಒಂದು ವೇಳೆ ಸುರಕ್ಷತೆಗೆ ಧಕ್ಕೆಯಾಗುವಂತ ವಸ್ತುಗಳಿದ್ದರೆ ಅದನ್ನು ಕಿತ್ತು ಬಿಸಾಕಿ ಅಥವಾ ಪ್ರಯಾಣಕ್ಕೆ ನಿರಾಕರಿಸಿ.ಬಟ್ಟೆ ಕೊಳೆಯಾಗಿದೆ ಎಂಬ ಕಾರಣಕ್ಕೆ ಅವರನ್ನು ಒಳಗೆ ಬಿಡುವುದಿಲ್ಲವೆಂದರೆ ಅದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. +ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ +ಬೆಂಗಳೂರು ಮೆಟ್ರೊ ವಿವಿಐಪಿ ಸಾರಿಗೆ ವ್ಯವಸ್ಥೆ ಅಲ್ಲ. ನಾವು ತಣಮಣ ಹೊಳೆಯುವ ಬಟ್ಟೆಗಳನ್ನೇ ಧರಿಸಿದ್ದೇವೆ ಅಂದಮಾತ್ರಕ್ಕೆ ನಮಗೆ ಉಚಿತ ಪ್ರಯಾಣದ ಸೌಲಭ್ಯವಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೈತರನ್ನು ಸಹ ಪ್ರಯಾಣಿಕರು ತಮ್ಮೊಂದಿಗೆ ಕರೆದುಕೊಂಡು ಹೋಗಲು ಮುಂದಾದಾಗ ಸಿಬ್ಬಂದಿ ಮತ್ತೆ ಅಡ್ಡಿಪಡಿಸಿದ್ದಾರೆ. ಈ ವೇಳೆ ಹಲವಾರು ಸಾರ್ವಜನಿಕರು ಮಧ್ಯಪ್ರವೇಶಿಸಿದ್ದು, ಸಿಬ್ಬಂದಿಗಳ ವರ್ತನೆಗೆ ಕಿಡಿಕಾರಿದ್ದಾರೆ. +ಕೊನೆಗೆ ಸಾರ್ವಜನಿಕರ ಒತ್ತಡಕ್ಕೆ ಮಣಿದು ಸಿಬ್ಬಂದಿ ರೈತರ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದರ ಬೆನ್ನಲ್ಲೇ ಸಿಬ್ಬಂದಿಗಳ ವರ್ತನೆಯನ್ನು ಸ್ಥಳೀಯರು ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದಾರೆ. ಈ ವಿಡಿಯೋ ವ್ಯಾಪಕ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭದ್ರತಾ ಸಿಬ್ಬಂದಿಗಳ ವರ್ತನೆಗೆ ಖಂಡನೆ ವ್ಯಕ್ತವಾಗಿವೆ.ಎಚ್ಚೆತ್ತುಕೊಂಡ ಬಿಎಂಆರ್‍ಸಿಎಲ್ ನಮ್ಮ ಮೆಟ್ರೊ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮ ವಿಷಾದಿಸುತ್ತದೆ ಎಂದು ತಿಳಿಸಿದೆ. \ No newline at end of file diff --git a/eesanje/url_46_224_6.txt b/eesanje/url_46_224_6.txt new file mode 100644 index 0000000000000000000000000000000000000000..50a7bdb9f5491cf226d463dc15ae8cc623e4edb5 --- /dev/null +++ b/eesanje/url_46_224_6.txt @@ -0,0 +1,7 @@ +ಬಿಜೆಪಿಯಿಂದ ಸುಮಲತಾ ಅಂಬರೀಶ್ ಬೀದಿಪಾಲು ; ಲಕ್ಷ್ಮಣ್ +ಬೆಂಗಳೂರು,ಫೆ.25- ಬಿಜೆಪಿಯವರು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‍ರ ರಾಜಕೀಯ ಭವಿಷ್ಯವನ್ನು ಸಂಪೂರ್ಣವಾಗಿ ಹಾಳು ಮಾಡಿ ಬೀದಿಪಾಲು ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ದೂರಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿ ನರೇಂದ್ರ ಮೋದಿ ಮುಂದಿನ ಹತ್ತು ವರ್ಷವೂ ಪ್ರಧಾನಿಯಾಗಿರಬೇಕು ಎಂದು ಭಾಷಣ ಮಾಡಿಕೊಂಡು ಬರುತ್ತಿದ್ದರು. ಈಗ ಅವರನ್ನೇ ಬಿಜೆಪಿ ಕೈಬಿಡುವ ಸ್ಥಿತಿ ಇದೆ. ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾದರೆ, ಸುಮಲತಾಗೆ ಕ್ಷೇತ್ರ ಇಲ್ಲವಾಗುತ್ತದೆ. ಅವರಿಗೆ ಬೇರೆ ಯಾವ ಪಕ್ಷವೂ ಟಿಕೆಟ್ ಕೊಡುವ ಲಕ್ಷಣಗಳಿಲ್ಲ ಎಂದರು. +ಕಾಂಗ್ರೆಸ್‍ಗೆ ಬರುತ್ತಾರೆಂಬ ವದಂತಿಗಳು ಕೇಳಿಬರುತ್ತಿವೆ. ಮಂಡ್ಯ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ. ಈ ಹಂತದಲ್ಲಿ ಸುಮಲತಾ ಅವರನ್ನು ಕರೆತಂದು ಟಿಕೆಟ್ ನೀಡುವ ಸಾಧ್ಯತೆ ನಮ್ಮಲ್ಲಿಲ್ಲ ಎಂದು ಹೇಳಿದರು. +ಬಿಜೆಪಿಯವರು ಅಯೋಧ್ಯೆ-ಮೈಸೂರು ನಡುವಿನ ರೈಲಿಗೆ ಬೆಂಕಿ ಹಚ್ಚುವುದಾಗಿ ಅಲ್ಪಸಂಖ್ಯಾತ ಯುವಕರು ಬೆದರಿಕೆ ಹಾಕಿದ್ದಾರೆ ಎಂದು ಬಾಯಿ ಬಡಿದುಕೊಳ್ಳುತ್ತಿರುವುದು ಕಂಡುಬರುತ್ತಿದೆ. ಆ ರೀತಿ ಬೆದರಿಕೆ ಹಾಕಿರುವ ಯಾರೂ ಈವರೆಗೆ ಸಿಕ್ಕಿಬಿದ್ದಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಟೀಕೆ ಮಾಡುತ್ತಿದೆ. ರೈಲು ಹಾಗೂ ಅದರ ಹಳಿಗಳ ಮೇಲೆ ನಡೆಯುವ ಯಾವುದೇ ಕೃತ್ಯಗಳಿಗೆ ರೈಲ್ವೆ ಪೊಲೀಸರೇ ಹೊಣೆಗಾರರು. ರೈಲ್ವೆ ಇಲಾಖೆ ಸಂಪೂರ್ಣ ಕೇಂದ್ರ ಸರ್ಕಾರದ ಅೀಧಿನದಲ್ಲಿದೆ. ಅಲ್ಲಿ ನಡೆದ ಕೃತ್ಯಕ್ಕೆ ರಾಜ್ಯಸರ್ಕಾರವನ್ನು ದೂಷಿಸುವುದು ರಾಜಕೀಯ ಷಡ್ಯಂತ್ರ ಎಂದರು. +ನ್ಯೂಯಾರ್ಕ್‍ನಲ್ಲಿ ಭಾರತೀಯ ಪ್ರಜೆ ಸಾವು +ಬಿಜೆಪಿಯವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಸತತ ಪ್ರಯತ್ನ ಮಾಡುತ್ತಿದ್ದಾರೆ. ಮಂಗಳೂರಿನ ಜೆರೇಸಾ ಶಾಲೆಯ ವಿಚಾರವನ್ನು ಮುಂದಿಟ್ಟುಕೊಂಡು ಗಲಭೆ ಎಬ್ಬಿಸಿದ್ದಾರೆ. ನಿನ್ನೆ ಹುಣಸೂರಿನಲ್ಲಿ ಈಡಿಗ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪಿರಿಯಾಪಟ್ಟಣದ ದರ್ಗಾವೊಂದರಲ್ಲಿ ದೇವರ ಮೂರ್ತಿಯಿಟ್ಟು ಗಲಭೆ ಸೃಷ್ಟಿಸುವ ಯತ್ನ ನಡೆಯುತ್ತಿದೆ ಎಂದು ಹೇಳಿದರು. +ಸಿದ್ದರಾಮಯ್ಯ ಅವರ ಸರ್ಕಾರ 1.9 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಆರೋಪ ಮಾಡಿದ್ದಾರೆ. ಸುಳ್ಳು ಹೇಳಲು ಒಂದು ಮಿತಿಯಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು 4 ಲಕ್ಷ ಕೋಟಿ ರೂ. ಸಾಲ ಮಾಡಿವೆ. ಸಿದ್ದರಾಮಯ್ಯ ಕಳೆದ 9 ತಿಂಗಳ ತಮ್ಮ ಅಧಿಕಾರವಯಲ್ಲಿ 1 ರೂ. ಕೂಡ ಸಾಲ ಮಾಡಿಲ್ಲ. 2024-25ನೇ ಸಾಲಿನ ಬಜೆಟ್‍ನಲ್ಲಿ 1.05 ಲಕ್ಷ ಕೋಟಿ ರೂ. ಸಾಲ ಮಾಡುವ ಅವಕಾಶವನ್ನು ಸೃಷ್ಟಿಸಿಕೊಂಡಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_224_7.txt b/eesanje/url_46_224_7.txt new file mode 100644 index 0000000000000000000000000000000000000000..6d5cee40775d1fea80e9252dd24be9c918c2c9d1 --- /dev/null +++ b/eesanje/url_46_224_7.txt @@ -0,0 +1,9 @@ +ಕೇಂದ್ರ ಸಚಿವರಾದ ಜೈಶಂಕರ್- ನಿರ್ಮಲಾ ಕರ್ನಾಟಕದಿಂದ ಸ್ಪರ್ಧೆ..? +ಬೆಂಗಳೂರು,ಫೆ.25- ಕೇಂದ್ರದ ಪ್ರಭಾವಿ ಸಚಿವರಾಗಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಬಿಜೆಪಿ ಭದ್ರಕೋಟೆಯ ಕ್ಷೇತ್ರಗಳಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಸಾಧ್ಯತೆ ದಟ್ಟವಾಗಿದೆ. +ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸಚಿವರಾಗಿರುವ ಈ ಇಬ್ಬರೂ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಿ, ನೇರ ಚುನಾವಣೆ ಮೂಲಕವೇ ಲೋಕಸಭೆಗೆ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ಹೈಕಮಾಂಡ್ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ಸಮೀಕ್ಷೆ ನಡೆಸಿ ಆಂತರಿಕ ವರದಿ ಪಡೆಯಲಾಗುತ್ತಿದೆ ಎಂದು ತಿಳಿದುಬಂದಿದೆ. ರಾಜ್ಯದ 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂಬ ಗುರಿ ಇಟ್ಟುಕೊಂಡಿರುವ ಬಿಜೆಪಿ, ಉತ್ತಮ ರಾಜತಾಂತ್ರಿಕರೂ ಆಗಿರುವ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಿಂದ ಟಿಕೆಟ್ ನೀಡಿ ಲೋಕಸಭೆ ಚುನಾವಣೆಗೆ ರಂಗು ನೀಡಲು ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. +ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ +ಕರಾವಳಿ ಕ್ಷೇತ್ರದಿಂದ ಸ್ಪರ್ಧೆ?:ನಿರ್ಮಲಾ ಸೀತಾರಾಮನ್ ಅವರನ್ನು ಪಕ್ಷದ ಭದ್ರಕೋಟೆಯಾಗಿರುವ ಕರಾವಳಿಯ ಕ್ಷೇತ್ರಗಳಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ದಕ್ಷಿಣಕನ್ನಡ, ಉಡುಪಿ-ಚಿಕ್ಕಮಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಅಥವಾ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಿಂದ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. +ನಿರ್ಮಲಾ ಸೀತಾರಾಮನ್ ಈಗಾಗಲೇ ಕರಾವಳಿ ಭಾಗದ ಉಡುಪಿ ಜೊತೆ ನಿಕಟ ಸಂಪರ್ಕ ಹೊಂದಿದವರಾಗಿದ್ದಾರೆ. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗುವ ಮೂಲಕ ಬೆಂಗಳೂರಿನೊಂದಿಗೂ ನಂಟು ಹೊಂದಿದ್ದಾರೆ. ಜೈಶಂಕರ್ ಅವರು ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಅಭ್ಯಸಿಸುವ ಮೂಲಕ ಬೆಂಗಳೂರಿನ ಜೊತೆ ಸಂಪರ್ಕ ಹೊಂದಿದ್ದಾರೆ. ಬೆಂಗಳೂರಿನ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಯಾವುದಾದರೂ ಒಂದು ಕಡೆಯಿಂದ ಅವರನ್ನು ಚುನಾವಣೆಗೆ ನಿಲ್ಲಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಸಮಾಲೋಚನೆ ನಡೆಯುತ್ತಿದೆ ಎಂದು ಹೇಳಲಾಗಿದೆ. +ಬೇಸಿಗೆಗೂ ಮುನ್ನವೇ ಜಲಕ್ಷಾಮದ ಭೀತಿ : ಎಲ್ಲೆಡೆ ಭುಗಿಲೇಳುತ್ತಿರುವ ನೀರಿನ ಹಾಹಾಕಾರ +ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸಚಿವರಾಗಿರುವವರನ್ನು ಲೋಕಸಭೆಗೆ ಆಯ್ಕೆ ಮಾಡುವ ಉದ್ದೇಶ ಬಿಜೆಪಿ ಹೈಕಮಾಂಡ್‍ಗಿದೆ. ಈ ಕಾರಣದಿಂದಲೇ ಕೇಂದ್ರ ಸಚಿವರಾದ ಉದ್ಯಮಿ ಆರ್.ಸಿ.ಚಂದ್ರಶೇಖರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮರು ಆಯ್ಕೆ ಮಾಡದೇ, ಲೋಕಸಭೆಗೆ ಸ್ರ್ಪಧಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಆರ್.ಸಿ.ಚಂದ್ರಶೇಖರ್ ಅವರು ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಕೇರಳದ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. +ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದಲೇ ಸ್ರ್ಪಸುವುದು ಅಂತಿಮವಾದರೆ ಬಿಜೆಪಿ ಭದ್ರಕೋಟೆಗಳಿಂದ ಗೆದ್ದು ಹಾಲಿ ಸಂಸದರಾಗಿರುವ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ನಳೀನ್‍ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಿಎಂ ಸದಾನಂದ ಗೌಡ ಅವರ ಸ್ಪರ್ಧೆಗೆ ಕುತ್ತು ಬರುವ ಸಂಭವವಿದೆ ಎನ್ನಲಾಗಿದೆ. \ No newline at end of file diff --git a/eesanje/url_46_224_8.txt b/eesanje/url_46_224_8.txt new file mode 100644 index 0000000000000000000000000000000000000000..39e4b92deeaa20d29c86283f8528ad658c4fcfd9 --- /dev/null +++ b/eesanje/url_46_224_8.txt @@ -0,0 +1,12 @@ +ಬೇಸಿಗೆಗೂ ಮುನ್ನವೇ ಜಲಕ್ಷಾಮದ ಭೀತಿ : ಎಲ್ಲೆಡೆ ಭುಗಿಲೇಳುತ್ತಿರುವ ನೀರಿನ ಹಾಹಾಕಾರ +ಬೆಂಗಳೂರು,ಫೆ.25- ಮಳೆ ಕೊರತೆಯಿಂದಾಗಿ ಒಂದೆಡೆ ಭೀಕರ ಬರ ಪರಿಸ್ಥಿತಿ ಇದ್ದರೆ ಮತ್ತೊಂದೆಡೆ ಬೇಸಿಗೆ ಆರಂಭಕ್ಕೂ ಮುನ್ನ ಎದುರಾಗಿರುವ ಜಲಕ್ಷಾಮ ಆತಂಕ ಮೂಡಿಸಿದೆ. ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ಬಯಲುಸೀಮೆಯಲ್ಲಷ್ಟೇ ಅಲ್ಲದೆ ಕರಾವಳಿ, ಮಲೆನಾಡು ಭಾಗದಲ್ಲೂ ನೀರಿನ ಕೊರತೆ ವರದಿಯಾಗುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. +ಕಳೆದ ಜನವರಿಯಲ್ಲಿ ಸುಮಾರು 2000 ಗ್ರಾಮಗಳಲ್ಲಿ ನೀರಿನ ಕೊರತೆಯಾಗಲಿದೆ ಎಂಬ ಮುನ್ಸೂಚನಾ ವರದಿ ಇತ್ತು. ಅಂತರ್ಜಲಮಟ್ಟ ಕುಸಿತದಿಂದಾಗಿ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಹೊಸ ನೀರಿನ ಸೆಲೆ ಹಾಗೂ ಮೂಲಗಳ ಶೋಧ, ಬೋರ್‍ವೆಲ್‍ಗಳನ್ನು ಕೊರೆಸುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಪಂಚಖಾತ್ರಿ ಯೋಜನೆಗಳ ಜೊತೆಗೆ ಬರದಿಂದ ಎದುರಾಗಿರುವ ಹೆಚ್ಚುವರಿ ಆರ್ಥಿಕ ಹೊರೆ ಸರ್ಕಾರವನ್ನು ಹೈರಾಣು ಮಾಡಿದೆ. ಇನ್ನು ಫೆಬ್ರವರಿ ತಿಂಗಳಿನಲ್ಲೇ ಬಿಸಿಲ ಧಗೆ ತೀವ್ರಗೊಳ್ಳುತ್ತಿದೆ. ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. +ಬೆಂಗಳೂರಿನಲ್ಲಿ ಅಪಾಟ್‍ಮೆಂಟ್‍ಗಳ ಜನ ಕೂಡ ಬಿಂದಿಗೆ ಹಿಡಿದು ಸಾರ್ವಜನಿಕ ನಲ್ಲಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಬಂದೊದಗಿದೆ. ಕಾವೇರಿ ನೀರಾವರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ನಿರ್ವಹಣಾ ಮಂಡಳಿಗಳ ಆದೇಶಗಳ ಅನುಸಾರ ತಮಿಳುನಾಡಿಗೆ ಪದೇ ಪದೇ ಕಾವೇರಿ ನೀರು ಹರಿಸಲಾಗಿತ್ತು. +ಪರಿಣಾಮ ಪ್ರಸ್ತುತ ಕೆಆರ್‍ಎಸ್‍ನಲ್ಲಿ 16.32 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಗೆ 3ಂ.67 ನೀರಿನ ಸಂಗ್ರಹವಿತ್ತು . ಪ್ರಸ್ತುತ ಜಲಾಶಯದ ಒಟ್ಟು ಸಾಮಥ್ರ್ಯದಲ್ಲಿ ಶೇ.33ರಷ್ಟು ಮಾತ್ರ ನೀರಿದೆ.ಬೆಂಗಳೂರಿನ ಕುಡಿಯುವ ನೀರಿಗಾಗಿ 19 ಟಿಎಂಸಿಯನ್ನು ಕಾಯ್ದಿರಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಜಲಾಶಯದಲ್ಲಿ ಸಂಗ್ರಹ ಇರುವುದೇ 16 ಟಿಎಂಸಿ ಆಗಿರುವುದರಿಂದ ಇನ್ನು ಮೂರು ಟಿಎಂಸಿ ಕೊರತೆ ಕಂಡುಬಂದಿದೆ. +ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ +ಮಳೆಗಾಲ ಶುರುವಾಗುವ ಜೂನ್‍ವರೆಗೂ ಇರುವ ನೀರನ್ನು ಸರಿದೂಗಿಸಲು ಜಲಮಂಡಳಿ ಪ್ರಯಾಸಪಡುತ್ತಿದೆ. ಅದಕ್ಕಾ ಮೂರ್ನಾಲ್ಕು ದಿನಗಳಿಗೊಮ್ಮೆ ಅರ್ಧ ಗಂಟೆ ಮಾತ್ರ ನೀರು ಬಿಡಲಾಗುತ್ತಿದೆ. ಕೊಳವೆ ಬಾವಿಗಳು ಕೂಡ ಬತ್ತಿ ಹೋಗಿರುವುದರಿಂದ ಜಲಕ್ಷಾಮ ಭೀಕರವಾಗಿದೆ. ಪರಿಸ್ಥಿತಿಯ ಲಾಭ ಪಡೆದ ಟ್ಯಾಂಕರ್ ಮಾಫಿಯಾ ದುಪ್ಪಟ್ಟು ದರ ಏರಿಕೆಮಾಡಿದೆ. +ಬೆಲೆ ಏರಿಕೆಯಿಂದ ಜನ ಸಂಕಷ್ಟಕ್ಕೊಳಗಾಗಿ ಪರದಾಡುತ್ತಿದ್ದು, ಅವರಿಗೆ ನೀರಿನ ಹೆಚ್ಚುವರಿ ಹೊರೆ ಕೂಡ ಹೆಗಲು ಭಾರ ಎನ್ನಿಸುವಂತಾಗಿದೆ. ಕಾವೇರಿ ನದಿಪಾತ್ರದ 4 ಜಲಾಶಯಗಳಲ್ಲಿ ಕಳೆದ ಇದೇ ವರ್ಷಕ್ಕೆ 67 ಟಿಎಂಸಿ ನೀರಿತ್ತು. ಪ್ರಸ್ತುತ 45.34 ಟಿಎಂಸಿ ಮಾತ್ರ ನೀರಿದೆ. ಶೇ.60ರಷ್ಟು ಕೊರತೆ ದೆ. ಇನ್ನು ಮಲೆನಾಡು ಭಾಗದ ಲಿಂಗನಮಕ್ಕಿ, ಸೂಫ, ವರಾಹಿ ಜಲಾಶಯಗಳಲ್ಲಿ ಕಳೆದ ವರ್ಷ 155 ಟಿಎಂಸಿ ಇತ್ತು. ಪ್ರಸ್ತುತ 109 ಟಿಎಂಸಿ ಮಾತ್ರ ಲಭ್ಯವಿದೆ. +ಕಲ್ಯಾಣ ಕರ್ನಾಟಕ ಭಾಗದ ಜಲಮೂಲವಾಗಿರುವ ಕೃಷ್ಣ ನದಿಪಾತ್ರದ ಜಲಾಶಯಗಳಲ್ಲಿ ಕಳೆದ ವರ್ಷ 215 ಟಿಎಂಸಿ ಇದ್ದರೆ ಈ ವರ್ಷ 148 ಟಿಎಂಸಿ ಮಾತ್ರ ಬಾಕಿ ಇದೆ. ಬಯಲುಸೀಮೆಯ ವಾಣಿವಿಲಾಸ ಸಾಗರದಲ್ಲಿ ಕಳೆದ ವರ್ಷಕ್ಕಿಂತಲೂ 9 ಟಿಎಂಸಿ ಕೊರತೆ ನೀಡಿದೆ. +ಮಹಾನಗರಿಗಳು ಹಾಗೂ ನಗರ ಪ್ರದೇಶಗಳಲ್ಲಿ ನೀರಿನ ಅಭಾವ ಒಂದೆಡೆಯಾದರೆ ಗ್ರಾಮೀಣ ಪ್ರದೇಶದಲ್ಲಿ ಜನಜಾನುವಾರುಗಳು ನೀರಿಲ್ಲದೆ ಪರದಾಡುವಂತಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನ ಮಧ್ಯಂತರದಲ್ಲಿ ಮಳೆ ಸುರಿದು ಕೆರೆಕಟ್ಟೆಗಳು ತುಂಬಿಕೊಳ್ಳದೆ ಇದ್ದರೆ ಜನ ನೀರಿಗಾಗಿ ಒದಾಡುವುದಲ್ಲದೇ ಮುಂದಿನ ಲೋಕಸಭೆ ಚುನಾವಣೆಗೆ ಇದು ಬಹುಚರ್ಚಿತ ವಿಷಯವಾಗುವ ಸಾಧ್ಯತೆ ಇದೆ. +ನಡು ರಸ್ತೆಯಲ್ಲೇ ಯುವಕನ ಭೀಕರ ಕೊಲೆ +ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ.ಯಾವುದೇ ಸಮಸ್ಯೆಗಳಿಲ್ಲ ಎಂಬ ಸ್ಪಷ್ಟನೆಗಳು ಪದೇ ಪದೇ ಕೇಳಿಬರುತ್ತಿವೆ. ಮೇಲಿಂದ ಮೇಲೆ ಸಭೆಗಳು ನಡೆಯುತ್ತಿದ್ದು, ಸಮಸ್ಯೆಗೆ ಅವಕಾಶ ಕೊಡುವುದಿಲ್ಲ ಎಂಬ ಆಶ್ವಾಸನೆಗಳು ಜರುಯುತ್ತಿವೆ. ಆದರೆ ಜಲಾಶಯಗಳಲ್ಲೂ ನೀರಿಲ್ಲ. ಅಂತರ್ಜಲದಲ್ಲೂ ನೀರಿಲ್ಲದೆ ಇರುವಾಗ ಪೂರೈಕೆ ಮಾಡುವುದಾದರೂ ಎಲ್ಲಿಂದ ಎಂಬ ಪ್ರಶ್ನೆಗಳು ಎದುರಾಗಿವೆ.ನೀರು ಪೂರೈಕೆಯ ಸವಾಲನ್ನು ಸಮರ್ಥವಾಗಿ ನಿಭಾಯಿಸದೆ ಇದ್ದರೆ ಭವಿಷ್ಯದಲ್ಲಿ ಬರಗಾಲಕ್ಕಿಂತಲೂ ನೀರಿನ ಬವಣೆಯೇ ತೀವ್ರವಾಗಿ ಕಾಡುವ ಆಂತಕವಿದೆ. \ No newline at end of file diff --git a/eesanje/url_46_224_9.txt b/eesanje/url_46_224_9.txt new file mode 100644 index 0000000000000000000000000000000000000000..4473505987326402578e9ebc1c5cf48823cbe927 --- /dev/null +++ b/eesanje/url_46_224_9.txt @@ -0,0 +1,4 @@ +ಕರ್ನಾಟಕ ಸಿಜೆ ಆಗಿ ನ್ಯಾ.ಅಂಜಾರಿಯಾ ಪ್ರಮಾಣ ಸ್ವೀಕಾರ +ಬೆಂಗಳೂರು,ಫೆ.25- ಕರ್ನಾಟಕ ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಅಧಿಕಾರ ಗೌಪ್ಯತೆ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ಅನಂತರ ಕಡತಗಳಿಗೆ ಸಹಿ ಹಾಕಿ ವಿಪಿನ್ ಚಂದ್ರ ಅಧಿಕಾರ ಸ್ವೀಕರಿಸಿದರು. +ಮನೆ ಬಾಗಿಲಿಗೆ ಇ – ಸ್ಟ್ಯಾಂಪ್ : ಸದ್ಯದಲ್ಲೇ ಸರ್ಕಾರಿ ವೆಬ್‍ಸೈಟ್ ಆರಂಭ +ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯಪಾಲರು, ಮುಖ್ಯಮಂತ್ರಿಯಾದಿಯಾಗಿ ಗಣ್ಯರು ನೂತನ ನ್ಯಾಯಮೂರ್ತಿಗಳಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಕಾರ್ಯಕ್ರಮ ನಿರೂಪಿಸಿದರು. \ No newline at end of file diff --git a/eesanje/url_46_225_1.txt b/eesanje/url_46_225_1.txt new file mode 100644 index 0000000000000000000000000000000000000000..be34266867e1b5717f0dacb606d4c69aca2bbbea --- /dev/null +++ b/eesanje/url_46_225_1.txt @@ -0,0 +1,12 @@ +ರಾಜ್ಯಸಭಾ ಚುನಾವಣೆಗೆ ಮೂರು ಪಕ್ಷಗಳಲ್ಲೂ ತಂತ್ರ-ಪ್ರತಿತಂತ್ರ +ಬೆಂಗಳೂರು,ಫೆ.25- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕೂ ಸ್ಥಾನಗಳಿಗೆ ಫೆ.27 ರಂದು ನಡೆಯಲಿರುವ ದ್ವೈ ವಾರ್ಷಿಕ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸುವ ಮೂರೂ ರಾಜಕೀಯ ಪಕ್ಷಗಳು ವಿಪ್ ಜಾರಿ ಮಾಡುವ ಸಾಧ್ಯತೆ ಇದೆ. ಚುನಾವಣಾ ಕಣದಲ್ಲಿ ಕಾಂಗ್ರೆಸ್‍ನಿಂದ ಮೂವರು ಬಿಜೆಪಿ ಹಾಗೂ ಜೆಡಿಎಸ್‍ನಿಂದ ತಲಾ ಒಬ್ಬ ಅಭ್ಯರ್ಥಿಗಳು ಇದ್ದಾರೆ. ಮಂಗಳವಾರ ನಡೆಯಲಿರುವ ಮತದಾನದಲ್ಲಿ ಅಡ್ಡಮತದಾನವಾಗಬಾರದು ಎಂಬ ಕಾರಣಕ್ಕೆ ನಾನಾ ರೀತಿಯ ರಣತಂತ್ರಗಳನ್ನು ಅನುಸರಿಸಲಾಗುತ್ತಿದೆ. +ಆಡಳಿತಾರೂಢ ಕಾಂಗ್ರೆಸ್‍ನಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್ ಮಕೇನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್‍ನ ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಮರು ಆಯ್ಕೆಗೆ ಕಣದಲ್ಲಿದ್ದಾರೆ. ಬಿಜೆಪಿಯಿಂದ ನಾರಾಯಣ ಸ ಬಾಂಡಗೆ, ಜೆಡಿಎಸ್‍ನಿಂದ ರಾಜ್ಯಸಭೆಯ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. +ಕಾಂಗ್ರೆಸ್ 135 ಸ್ಥಾನಗಳನ್ನು ಹೊಂದಿದ್ದು, ಮೂವರು ಅಭ್ಯರ್ಥಿಗಳನ್ನು ಸುಲಭವಾಗಿ ಗೆಲ್ಲಿಸಿಕೊಳ್ಳುವ ಅವಕಾಶ ಹೊಂದಿದೆ. ಆದರೂ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಚ್ಛಿಸದ ನಾಯಕರು ಪಕ್ಷೇತರರಾದ ಜನಾರ್ಧನರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಲತಾ ಮಲ್ಲಿಕಾರ್ಜುನ, ಪುಟ್ಟಸ್ವಾಮಿಗೌಡ ಅವರನ್ನು ಸಂಪರ್ಕದಲ್ಲಿಟ್ಟುಕೊಂಡು ಕಾಂಗ್ರೆಸ್‍ಗೆ ಮತ ಹಾಕುವಂತೆ ಮನವೊಲಿಸುತ್ತಿದ್ದಾರೆ. +ಆನೆ ದಾಳಿಯಿಂದ ಜೀವ ಹಾನಿ: ಕರ್ನಾಟಕಕ್ಕೆ ಮೊದಲ ಸ್ಥಾನ +ಕಾಂಗ್ರೆಸ್‍ಗೆ ಈ ಹಿಂದೆ ವಿಧಾನಪರಿಷತ್ ಚುನಾವಣೆಗಳಲ್ಲಿ ಅಡ್ಡಮತದಾನದ ಬಿಸಿ ತಾಗಿದೆ. ಈ ಬಾರಿ ಹೈಕಮಾಂಡ್ ಅಜಯ್ ಮಕೇನ್ ಅವರನ್ನು ಗೆಲ್ಲಿಸಿಕೊಳ್ಳಲೇಬೇಕೆಂದು ಸೂಚನೆ ನೀಡಿದೆ. ಅದರ ಜೊತೆಗೆ ಯಾವುದೇ ಒಬ್ಬ ಅಭ್ಯರ್ಥಿಗೆ ಹಿನ್ನಡೆಯಾದರೂ ಅದು ರಾಜಕೀಯ ಸ್ಥಿತ್ಯಂತರಿಗಳಿಗೆ ಕಾರಣವಾಗಲಿದೆ.ಈ ಹಿಂದೆ ಮಹಾರಾಷ್ಟ್ರದಲ್ಲಿ ರಾಜ್ಯಸಭೆ ಚುನಾವಣೆ ವೇಳೆಯಲ್ಲಿ ರಾಜಕೀಯ ವಿಪ್ಲವಗಳು ನಡೆದು ಕಾಂಗ್ರೆಸ್, ಶ್ರೀಸೇನೆ, ಎನ್‍ಸಿಪಿ ಸಂಯುಕ್ತದ ಮಹಾ ವಿಕಾಸ ಅಘಾಡಿ ಸರ್ಕಾರ ಪತನವಾಗಿತ್ತು. ಆ ಕಹಿ ಅನುಭವದ ಆಧಾರದ ಮೇಲೆ ಕಾಂಗ್ರೆಸ್ ನಾಯಕರು ಅಗತ್ಯಕ್ಕಿಂತಲೂ ಹೆಚ್ಚಿನ ಮುತುವರ್ಜಿ ವಹಿಸಿ ರೆಸಾರ್ಟ್ ರಾಜಕೀಯದ ಮೊರೆ ಹೋಗಿದ್ದಾರೆ. +ಯಾವುದೇ ಸಂದರ್ಭದಲ್ಲಿ ಸಣ್ಣ ಅವಕಾಶ ಸಿಕ್ಕರೂ ಸರ್ಕಾರಕ್ಕೆ ಮುಳುವಾಗುವಂತಹ ಬೆಳವಣಿಗೆಗಳಾಗುವ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಲು ಪ್ರತಿಪಕ್ಷಗಳು ರಣತಂತ್ರ ರೂಪಿಸುವಲ್ಲಿ ನಿರತವಾಗಿವೆ. ಇದಕ್ಕೆ ಅವಕಾಶ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಅಖಾಡಕ್ಕೆ ಇಳಿದಿದ್ದಾರೆ. +ನಾಳೆ ವಿಧಾನಮಂಡಲ ಅಧಿವೇಶನದ ಬಳಿಕ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಅದರಲ್ಲಿ ಯಾವ ಶಾಸಕರು, ಯಾರಿಗೆ ಮತ ಚಲಾಯಿಸಬೇಕು ಎಂಬ ಸೂಚನೆ ನೀಡಲಾಗುತ್ತದೆ. ಪ್ರಥಮ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಹಾಕಬೇಕು ಹಾಗೂ ದ್ವಿತೀಯ ಪ್ರಾಶಸ್ತ್ಯ ಮತವನ್ನು ಯಾವ ಅಭ್ಯರ್ಥಿಗೆ ಹಾಕಬೇಕು ಎಂಬ ತರಬೇತಿ ನೀಡಲಾಗುತ್ತದೆ. +ಅದರಂತೆ ಮಂಗಳವಾರ ನಡೆಯುವ ಮತದಾನದಲ್ಲಿ ಆಡಳಿತಾರೂಢ ಶಾಸಕರು ಆಯಾ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಸೂಚಿಸಲಾಗುತ್ತದೆ. ಪ್ರತಿ ಅಭ್ಯರ್ಥಿಯ ಗೆಲುವಿಗೆ 45 ಶಾಸಕರ ಮತಗಳ ಅಗತ್ಯವಿದೆ. ಕಾಂಗ್ರೆಸ್ ತನ್ನ ಶಾಸಕರನ್ನು ತಲಾ ಒಬ್ಬ ಅಭ್ಯರ್ಥಿಗೆ 45 ರಂತೆ ಹಂಚಿಕೆ ಮಾಡಿ ಹೆಚ್ಚುವರಿಯಾಗಿರುವ ಪಕ್ಷೇತರ ಮತಗಳನ್ನು ಸೇರಿಸಿ 46 ಮತಗಳ ಗಡಿ ದಾಟಿಸುವ ಪ್ರಯತ್ನ ನಡೆಸುತ್ತಿದ್ದಾರೆ. +ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ +ಪ್ರತಿಪಕ್ಷವಾದ ಬಿಜೆಪಿ ಕೂಡ ತನ್ನ ಅಭ್ಯರ್ಥಿ ನಾರಾಯಣ ಸ ಬಾಂಡಗೆ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ಹಾಗೂ ಜೆಡಿಎಸ್ ಕೂಡ ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸುವಂತೆ ಶಾಸಕರಿಗೆ ವಿಪ್ ನೀಡಲಿದೆ. ಬಿಜೆಪಿಯ ಹೆಚ್ಚುವರಿ ಮತಗಳನ್ನು ಹಾಗೂ ದ್ವಿತೀಯ ಪ್ರಾಶಸ್ತ್ಯದ ಮತವನ್ನು ಜೆಡಿಎಸ್ ಅಭ್ಯರ್ಥಿಗೆ ಹಾಕಲು ತೀರ್ಮಾನಿಸುವ ಸಂಭವವಿದೆ. ಹಾಗೆಯೇ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕುವ ಜೆಡಿಎಸ್ ಮತ್ತು ಬಿಜೆಪಿಯ ಶಾಸಕರು ದ್ವಿತೀಯ ಪ್ರಾಶಸ್ತ್ಯದ ಮತವನ್ನು ಬಿಜೆಪಿಯ ಅಭ್ಯರ್ಥಿಗೆ ಹಾಕುವಂತೆ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. +ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ ನಂತರ ಉಭಯ ಪಕ್ಷಗಳು ಜಂಟಿಯಾಗಿ ಚುನಾವಣೆಯನ್ನು ಎದುರಿಸುತ್ತಿವೆ. ಹಾಗೆಯೇ ಹೋರಾಟವನ್ನು ಒಟ್ಟಾಗಿ ಮಾಡುತ್ತಿವೆ. ಆಯಾ ಪಕ್ಷಗಳ ಮುಖ್ಯ ಸಚೇತಕರು ಶಾಸಕರಿಗೆ ವಿಪ್ ನೀಡಲಿದ್ದು, ಒಂದು ವೇಳೆ ರಾಜ್ಯಸಭೆ ಚುನಾವಣೆಯಲ್ಲಿ ಸೂಚಿಸಿದ ಅಭ್ಯರ್ಥಿಗೆ ಮತ ಹಾಕದೇ ಉಲ್ಲಂಘನೆ ಮಾಡಿದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗುತ್ತದೆ. \ No newline at end of file diff --git a/eesanje/url_46_225_10.txt b/eesanje/url_46_225_10.txt new file mode 100644 index 0000000000000000000000000000000000000000..1b1b6a184f81b2c8f65db8ad577b38eca3d64f47 --- /dev/null +++ b/eesanje/url_46_225_10.txt @@ -0,0 +1,8 @@ +ರಾಜ್ಯಸಭೆ ಚುನಾವಣೆ: ಬಿಜೆಪಿಗೆ ಅಡ್ಡಮತದಾನ ಭೀತಿ +ಬೆಂಗಳೂರು,ಫೆ.24- ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ತನ್ನ ಅಧಿಕೃತ ಅಭ್ಯರ್ಥಿಯನ್ನು ಗೆಲ್ಲಿಸುವುದರ ಜೊತೆಗೆ ಜೆಡಿಎಸ್‍ನ 5 ನೇ ಅಭ್ಯರ್ಥಿ ಗೆಲುವಿಗೆ ರಣತಂತ್ರ ರೂಪಿಸುತ್ತಿರುವ ಬಿಜೆಪಿಗೆ ಅಡ್ಡಮತದಾನದ ಭೀತಿ ಎದುರಾಗಿದೆ. ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡಿರುವ ಕೆಲವು ಶಾಸಕರ ಮೂಲಕ ಅಡ್ಡಮತದಾನ ಮಾಡಿಸಿ ಜೆಡಿಎಸ್ ಬೆಂಬಲಿತ ಕುಪೇಂದ್ರ ರೆಡ್ಡಿಯವರನ್ನು ಗೆಲ್ಲಿಸಲು ಮುಂದಾಗಿದ್ದ ಬಿಜೆಪಿಗೆ ತನ್ನ ಕಾರ್ಯತಂತ್ರವೇ ತಿರುಗುಬಾಣವಾಗುವ ಸಾಧ್ಯತೆ ಇದೆ. +ಬಿಜೆಪಿಯಲ್ಲಿ ಇದ್ದರೂ ಕಾಂಗ್ರೆಸ್ ಜೊತೆ ಒಡನಾಟವಿಟ್ಟುಕೊಂಡಿರುವ ಬೆಂಗಳೂರು ನಗರದ ಯಶವಂತಪುರ ವಿಧಾನಸಭೆ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಶಾಸಕ ಅರೆಬೈಲು ಶಿವರಾಂ ಹೆಬ್ಬಾರ್ ಮೇಲೆ ಅನುಮಾನದ ಶಂಕೆ ವ್ಯಕ್ತವಾಗಿದೆ. ಈ ಇಬ್ಬರೂ ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದು, ರಾಜ್ಯಸಭಾ ಚುನಾವಣೆ ವೇಳೆ ಪಕ್ಷದ ಅಧಿಕೃತ ಅಭ್ಯರ್ಥಿ ಬದಲಿಗೆ ಕೈ ಅಭ್ಯರ್ಥಿಗೆ ಮತ ಹಾಕಬಹುದೆಂಬ ಅನುಮಾನ ಬಿಜೆಪಿ ವಲಯದಲ್ಲೇ ಕಾಡುತ್ತಿದೆ. ಹೀಗಾಗಿ ಈ ಇಬ್ಬರ ಚಲನವಲನದ ಮೇಲೆ ಬಿಜೆಪಿ ಹದ್ದಿನ ಕಣ್ಣಿಟ್ಟಿದ್ದು ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವಾಗಿ ಮತ ಚಲಾಯಿಸದಂತೆ ಕೊನೆ ಕ್ಷಣದವರೆಗೂ ಮನವೊಲಿಸುವ ಕಸರತ್ತು ನಡೆಸುತ್ತಿದೆ. +ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು +ಬಿಜೆಪಿ ಅದಿಕೃತ ಅಭ್ಯರ್ಥಿ ನಾರಾಯಣ ಸ ಭಾಂಡಗೆ 46 ಮತಗಳನ್ನು ನಿಗದಿಪಡಿಸಿರುವ ಬಿಜೆಪಿ ಉಳಿಯಲಿರುವ ಹೆಚ್ಚುವರಿ 20 ಮತಗಳನ್ನು ಜೆಡಿಎಸ್‍ನ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ವರ್ಗಾವಣೆ ಮಾಡಲಿದೆ.ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಿಲ್ಲ ಎಂದು ಪರೋಕ್ಷವಾಗಿ ಪಕ್ಷದ ನಾಯಕರಿಗೆ ತಮ್ಮ ತೀರ್ಮಾನವನ್ನು ತಿಳಿಸಿದ್ದಾರೆಂದು ತಿಳಿದುಬಂದಿದೆ.ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಜೆಪಿ ಮತದಾನದ ವೇಳೆ ಒಟ್ಟು 3 ತಂಡಗಳನ್ನು ರಚನೆ ಮಾಡಿದೆ. ಬೆಳಿಗ್ಗೆ 8 ಗಂಟೆಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್‍ರವರ ಕೊಠಡಿಗೆ ಆಗಮಿಸಿ ಅಲ್ಲಿಯೇ ಬೆಳಗಿನ ಉಪಾಹಾರ ಸೇವಿಸುವಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚಿಸಿದ್ದಾರೆ. +ನಾರಾಯಣ ಸ ಭಾಂಡಗೆ ಚಲಾಯಿಸಲಿರುವ ಶಾಸಕರ ಪಟ್ಟಿಯಲ್ಲಿ ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಅವರುಗಳ ಹೆಸರುಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.ಯಾವುದೇ ಕಾರಣಕ್ಕೂ ಕುಪೇಂದ್ರ ರೆಡ್ಡಿಗೆ ನಾನು ಬೆಂಬಲ ನೀಡುವುದಿಲ್ಲ ಎಂದು ಎಸ್.ಟಿ.ಸೋಮಶೇಖರ್ ಹೇಳಿರುವ ಕಾರಣ ಬಿಜೆಪಿ ಈ ತಂತ್ರವನ್ನು ರೂಪಿಸಿದೆ. ಜೆಡಿಎಸ್ ಅಭ್ಯರ್ಥಿಗೆ ಹೆಚ್ಚುವರಿ ಮತಗಳನ್ನು ಬಿಜೆಪಿಯ ಸಂಘ ಪರಿವಾರದ ಹಿನ್ನೆಲೆಯುಳ್ಳ ಶಾಸಕರು ಮತ ಹಾಕಲಿದ್ದಾರೆ. ಒಂದೇ ಒಂದು ಮತವೂ ಕೂಡ ಅಡ್ಡಮತದಾನವಾಗದಂತೆ ನೋಡಿಕೊಳ್ಳಬೇಕು ಎಂದು ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರುಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. +ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..! +ಎರಡು ಪಕ್ಷಗಳ ಶಾಸಕರನ್ನು ರೆಸಾರ್ಟ್‍ಗೆ ಕರೆದೊಯ್ಯುವ ಬಗ್ಗೆ ಪಕ್ಷದ ವಲಯದಲ್ಲಿ ತೀರ್ಮಾನವಾಗಿಲ್ಲ. ಸೋಮವಾರ ವಿಧಾನಮಂಡಲದ ಎರಡೂ ಸದನಗಳ ಕಾರ್ಯಕಲಾಪ ಮುಗಿದ ನಂತರ ವಿಜಯೇಂದ್ರ, ಆರ್.ಅಶೋಕ್ ಮತ್ತು ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_225_11.txt b/eesanje/url_46_225_11.txt new file mode 100644 index 0000000000000000000000000000000000000000..493f7938872cc541e6abfb25a8a20606a2b57ed1 --- /dev/null +++ b/eesanje/url_46_225_11.txt @@ -0,0 +1,6 @@ +ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..! +ಬೆಂಗಳೂರು,ಫೆ.24- ಮಕ್ಕಳು, ಮಹಿಳೆಯರು ಹಾಗೂ ತಿಂಡಿ ಪ್ರಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ರಾಜ್ಯದಲ್ಲೂ ಬ್ಯಾನ್ ಆಗುವ ಸಾಧ್ಯತೆಗಳಿವೆ. ಅತಿಯಾದ ಕಲರ್ ಬಳಕೆ ಹಾಗೂ ರಾಸಾಯನಿಕ ಬೆರಕೆ ಹೊಂದಿರುವ ಚೈನೀಸ್ ತಿಂಡಿಯಾದ ಗೋಬಿ ಮಂಚೂರಿಯನ್ನು ಗೋವಾದಲ್ಲಿ ಈಗಾಗಲೇ ನಿಷೇಧಿಸಲಾಗಿದೆ. +ಅದೇ ರೀತಿ ತಮಿಳುನಾಡಿನ ಸರ್ಕಾರಿ ಪ್ರಯೋಗಾಲಯದಲ್ಲಿ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಯಲ್ಲಿ ರೋಡಮೈನ್-ಬಿ ಕ್ಯಾನ್ಸರ್‍ಕಾರಕ ಅಂಶ ಇರುವುದು ದೃಢಪಟ್ಟಿರುವುದರಿಂದ ಕ್ಯಾಂಡಿಯನ್ನು ಅಲ್ಲಿ ಬ್ಯಾನ್ ಮಾಡಲಾಗಿದೆ. ಹೀಗಾಗಿ ಕ್ಯಾನ್ಸರ್‍ಕಾರಕ ಅಂಶಗಳಿರುವ ಕಾಟನ್ ಕ್ಯಾಂಡಿ ಮತ್ತು ನಗರದ ಬಹುತೇಕ ರಸ್ತೆ ಬದಿಗಳಲ್ಲಿ ಮಾರಾಟ ಮಾಡುವ ಗೋಬಿ ಮಂಚೂರಿ ಮೇಲೆ ಆಹಾರ ಮತ್ತು ಸುರಕ್ಷತಾ ಇಲಾಖೆ ಅಧಿಕಾರಿಗಳ ಕಣ್ಣು ಬಿದ್ದಿದೆ. +ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು +ಬೀದಿ ಬದಿ ಹಾಗೂ ಹೋಟೆಲ್‍ಗಳಲ್ಲಿ ಮಾರಾಟ ಮಾಡುವ ಗೋಬಿ ಮಂಚೂರಿ ಮತ್ತು ರಸ್ತೆಗಳಲ್ಲಿ ಮಾರುವ ಕಾಟನ್ ಕ್ಯಾಂಡಿಗಳ ಕಲರ್ ಜೆಲ್ಲಿಗಳ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.ಬೆಂಗಳೂರು ಸೇರಿದಂತೆ ರಾಜ್ಯದ್ಯಾಂತ ಸಂಗ್ರಹಿಸಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯ ಟೆಸ್ಟಿಂಗ್ ವರದಿ 10 ದಿನಗಳ ಬಳಿಕ ಹೊರ ಬೀಳಲಿದೆ. ಒಂದು ವೇಳೆ ಈ ಎರಡು ತಿಂಡಿಗಳಲ್ಲಿ ರಾಸಾಯನಿಕ ಅಂಶ ಇರುವುದು ದೃಢಪಟ್ಟರೆ ರಾಜ್ಯದಲ್ಲೂ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯನ್ನು ಬ್ಯಾನ್ ಮಾಡಲಾಗುವುದು ಎಂದು ಅಕಾರಿಗಳು ತಿಳಿಸಿದ್ದಾರೆ. +ಈಗಾಗಲೇ ಗೋವಾದಲ್ಲಿ ಗೋಬಿ ಮಂಚೂರಿಯಲ್ಲಿ ರಾಸಾಯನಿಕ ಅಂಶ ಇರುವುದು ಹಾಗೂ ತಮಿಳುನಾಡಿನ ವರದಿಯಲ್ಲಿ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್‍ಕಾರಕ ಅಂಶ ಇರುವುದು ಸಾಬೀತಾಗಿರುವುದರಿಂದ ನಮ್ಮ ವರದಿಯಲ್ಲೂ ಇದೇ ಫಲಿತಾಂಶ ಬರುವ ಸಾಧ್ಯತೆ ಇರುವುದರಿಂದ ಇನ್ನು ಮುಂದೆ ಜನ ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಬ್ಯಾನ್ ಆಗೋದು ಬಹುತೇಕ ಖಚಿತ ಎನ್ನುವಂತಾಗಿದೆ. \ No newline at end of file diff --git a/eesanje/url_46_225_12.txt b/eesanje/url_46_225_12.txt new file mode 100644 index 0000000000000000000000000000000000000000..a0243e7663fe4b70224227337873502f05356982 --- /dev/null +++ b/eesanje/url_46_225_12.txt @@ -0,0 +1,4 @@ +ನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ +ಕೆಜಿಎಫ್,ಫೆ.24 – ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನ್‍ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಾಳೆ ನಡೆಯಲಿದೆ. ಅದರಂತೆ, ಕೆಜಿಎಫ್ ಪೊಲೀಸ್ ಜಿಲ್ಲೆಯ ಎರಡು ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಬೆಳಗ್ಗೆ 11 ರಿಂದ 12.30 ಗಂಟೆಯ ತನಕ ಸುಮಾರು 3000 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. +ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮೊಬೈಲ್ ಎಸ್‍ಎಂಎಸ್ ಮೂಲಕ ಮಾಹಿತಿ ಬರಲಿದೆ. ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‍ಸೈಟ್‍ನಿಂದಲೂ ಕರೆಪತ್ರ ಡೌನ್‍ಲೋಡ್ ಸಹ ಮಾಡಿಕೊಳ್ಳಬಹುದು ಎಂದು ಪೊಲೀಸ್ ನೇಮಕಾತಿ ಪ್ರಾಧಿಕಾರವು ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಶೂ ಧರಿಸಿ ಪರೀಕ್ಷಾ ಕೇಂದ್ರದೊಳಗೆ ಹೋಗುವುದನ್ನು ನಿಷೇಧಿಸಲಾಗಿದೆ. ವಸ್ತ್ರ ಸಂಹಿತೆ ನಿಯಮವನ್ನೂ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆ ಪಾಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ. +ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ, ಕಾಲುಂಗರ ಹೊರತುಪಡಿಸಿ ಲೋಹದ ಆಭರಣ ಧರಿಸದಂತೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಸಿವಿಲ್ ಕಾನ್‍ಸ್ಟೆಬಲ್ (ಪುರುಷ, ಮಹಿಳಾ, ತೃತೀಯ ಲಿಂಗ) ಹಾಗೂ ಸೇವಾನಿರತ ಮತ್ತು ಬ್ಯಾಕ್‍ಲಾಗ್ ಸೇರಿದಂತೆ 1137 ಹುದ್ದೆಗಳ ನೇಮಕಾತಿಗೆ ರಾಜ್ಯವ್ಯಾಪ್ತಿ ಪರೀಕ್ಷೆಯು ಏಕಕಾಲದಲ್ಲಿ ನಡೆಯಲಿದೆ. \ No newline at end of file diff --git a/eesanje/url_46_225_2.txt b/eesanje/url_46_225_2.txt new file mode 100644 index 0000000000000000000000000000000000000000..206a5f7c902bc0f1714dcbc369924c3cb02c4382 --- /dev/null +++ b/eesanje/url_46_225_2.txt @@ -0,0 +1,9 @@ +ಸರ್ಕಾರ ಪತನದ ಕನಸು ಈಡೇರಲ್ಲ: ಸಚಿವ ಎಂ.ಬಿ.ಪಾಟೀಲ್ +ಬೆಂಗಳೂರು,ಫೆ.25- ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ-ಜೆಡಿಎಸ್ ಕನಸು ಈಡೇರುವುದಿಲ್ಲ, ಆಪರೇಷನ್ ಕಮಲ ನಡೆಸಿದರೂ ಯಾರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ಪತನ ಮಾಡಲು ಮತ್ತು ಹೊಸ ಸರ್ಕಾರ ರಚಿಸಲು ಬಿಜೆಪಿ-ಜೆಡಿಎಸ್‍ಗೆ 50 ಶಾಸಕರು ಬೇಕು. ನಮ್ಮ ಪಕ್ಷದಿಂದ ಅಷ್ಟು ಶಾಸಕರು ಆಪರೇಷನ್ ಕಮಲಕ್ಕೆ ಸಿಲುಕಿ ಪಕ್ಷಾಂತರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಬಿಜೆಪಿಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿಯೇ ಇರಲಿ. ರಾಜ್ಯದ ಜನ ಅವರ ಪಕ್ಷವನ್ನು ಸೋಲಿಸಿ ಕಾಂಗ್ರೆಸ್ 135 ಸ್ಥಾನ ಗೆಲ್ಲಿಸಿದ್ದಾರೆ. ಇದನ್ನು ಮರೆತು ಪದೇ ಪದೇ ಸರ್ಕಾರ ಪತನಗೊಳ್ಳುತ್ತದೆ ಎಂಬ ಭಾವನೆ ಬಿತ್ತಲು ಯತ್ನಿಸುತ್ತಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ ಎಂದರು.ಶೋಭಾ ಕರಂದ್ಲಾಜೆಯವರು ವಾಪಸ್ ಹೋಗಬೇಕೆಂದು ಅವರ ಕ್ಷೇತ್ರದಲ್ಲಿಯೇ ಜನ ಪ್ರತಿಭಟನೆ ಮಾಡುತ್ತಿದ್ದಾರೆ. +ಅವರ ಪಕ್ಷದವರೇ ವಿರೋಧ ಮಾಡುತ್ತಿದ್ದಾರೆ. ಅವರು ನಮ್ಮ ಸರ್ಕಾರವನ್ನು ಪತನಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಮೊದಲು ಶೋಭಕ್ಕ ತಮ್ಮ ಟಿಕೆಟ್ ಅನ್ನು ಗಟ್ಟಿ ಮಾಡಿಕೊಳ್ಳಲಿ, ಅನಂತರ ಸರ್ಕಾರ ರಚಿಸಲು 50 ಮಂದಿ ಶಾಸಕರನ್ನು ಎಲ್ಲಿಂದ ಕರೆತರುತ್ತಾರೆ ಎಂದು ಹೇಳಲಿ ಎಂದರು. +ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ +ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಮತದಾನ ಮಾಡುವವರು ಅದನ್ನು ಮತಗಟ್ಟೆಯಲ್ಲಿರುವ ಏಜೆಂಟ್‍ಗೆ ತೋರಿಸಿ ಹಾಕಬೇಕಿದೆ. ಹೀಗಾಗಿ ಅಡ್ಡಮತದಾನ ಮಾಡುವ ಸಾಧ್ಯತೆ ಇಲ್ಲ. ನಾವು ಒಟ್ಟಾಗಿ ಇರಬೇಕು ಎಂಬ ಕಾರಣಕ್ಕಾಗಿ ಖಾಸಗಿ ಹೋಟೆಲ್‍ನಲ್ಲಿ ಶಾಸಕಾಂಗ ಸಭೆ ನಡೆಸುತ್ತಿದ್ದೇವೆ. ಇದು ಅಡ್ಡಮತದಾನದ ಭಯಕ್ಕಾಗಿ ಅಲ್ಲ ಎಂದು ಸ್ಪಷ್ಟಪಡಿಸಿದರು. +ಕಾಂಗ್ರೆಸ್ ಪಕ್ಷ ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಜೊತೆಗೆ ನಮ್ಮ ಹೆಚ್ಚುವರಿ ಮತಗಳೂ ಇವೆ. ವಿರೋಧಪಕ್ಷಗಳಿಂದಲೂ ಒಂದೆರಡು ಮತಗಳು ಹೆಚ್ಚುವರಿಯಾಗಿ ಬರುವ ನಿರೀಕ್ಷೆಗಳಿವೆ ಎಂದರು. +ವಿದೇಶಿ ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶ +ಈ ಬಾರಿ ಅಡ್ಡ ಮತದಾನ ಮಾಡಿದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಆ ಬಳಿಕ ಮತ್ತೊಮ್ಮೆ ಉಪಚುನಾವಣೆಗೆ ಹೋಗಬೇಕು. ಅಂತಹ ತಾಕತ್ತು ಯಾರಿಗಿದೆ? ಸದ್ಯದ ಪರಿಸ್ಥಿತಿಯಲ್ಲಿ ಯಾರೂ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ. ಜೆಡಿಎಸ್-ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತದಾರರಿಂದ ಅಡ್ಡಮತದಾನ ಮಾಡಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಕಾಂಗ್ರೆಸ್ ಪಕ್ಷವನ್ನು ಸಿ.ಟಿ.ರವಿ ಕ್ರಿಮಿನಲ್ ಪಕ್ಷ ಎಂದು ಕರೆದಿದ್ದಾರೆ. ಇಂತಹ ಹೇಳಿಕೆಗಳಿಂದಾಗಿಯೇ ಜನ ಅವರನ್ನು ಸೋಲಿಸಿ ಮನೆಗೆ ಕಳುಹಿಸಿದ್ದಾರೆ. ಆದರೂ ಇನ್ನೂ ಬುದ್ಧಿ ಕಲಿತಿಲ್ಲ ಎಂದರು. \ No newline at end of file diff --git a/eesanje/url_46_225_3.txt b/eesanje/url_46_225_3.txt new file mode 100644 index 0000000000000000000000000000000000000000..ea7fe457b098b176646bd5538598d4ccfd47bd21 --- /dev/null +++ b/eesanje/url_46_225_3.txt @@ -0,0 +1,13 @@ +ಆನೆ ದಾಳಿಯಿಂದ ಜೀವ ಹಾನಿ: ಕರ್ನಾಟಕಕ್ಕೆ ಮೊದಲ ಸ್ಥಾನ +ಬೆಂಗಳೂರು, ಫೆ.25- ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಸ್ರ್ಪಧಿಸುತ್ತಿರುವ ವಯನಾಡು ಅರಣ್ಯ ಪ್ರದೇಶದಲ್ಲಿ ಆನೆ ದಾಳಿ ಸಂಘರ್ಷದಿಂದ ಮೃತಪಟ್ಟ ಇಬ್ಬರಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ಪಾವತಿಸಿದ್ದಕ್ಕೆ ವ್ಯಾಪಕ ಟೀಕೆಗಳು ಕೇಳಿ ಬಂದಿವೆ, ಅದರ ನಡುವೆ ಆನೆಗಳು ಕೇರಳಕ್ಕೆ ತಲುಪಿದ ಬಗ್ಗೆ ಅಲ್ಲಿನ ಅರಣ್ಯ ಅಧಿಕಾರಿಗಳು ಸುದೀರ್ಘ ಮಾಹಿತಿ ನೀಡಿದ್ದಾರೆ. +ಕೇರಳದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಡಿ ಜಯಪ್ರಸಾದ್ ಮಾಹಿತಿ ನೀಡಿದ್ದು, ಆನೆ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ ನಂತರ ವಯನಾಡ್‍ನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಅರಣ್ಯ ಅಧಿಕಾರಿಗಳು ವನ್ಯ ಜೀವಿ ಸಂಘರ್ಷ ತಡೆಯಲು ಸಂಘಟಿತ ಪ್ರಯತ್ನ ಮಾಡುತ್ತಿದ್ದಾರೆ. ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕಂದಾಯ, ಎಲ್‍ಎಸ್‍ಜಿಡಿ ಮತ್ತು ಪೋಲೀಸ್‍ನಂತಹ ಇತರ ಹಲವು ಇಲಾಖೆಗಳ ಸಕ್ರಿಯ ಸಹಭಾಗಿತ್ವ ಅಗತ್ಯ ಎಂದು ತಿಳಿಸಿದ್ದಾರೆ. +ಹುಲಿಗಳು ಮತ್ತು ಆನೆಗಳಿಗೆ ಸ್ಮಾರ್ಟ್-ಬೇಲಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ವಯನಾಡಿನ ಚೆತಲಯಂ ವ್ಯಾಪ್ತಿಯಲ್ಲಿ ಒಂದು ಮಾದರಿಯನ್ನು ಸ್ಥಾಪಿಸಲಾಗುವುದು. ಕೇರಳ ಅರಣ್ಯ ಇಲಾಖೆಯು ವಯನಾಡ್‍ಗೆ ಆಗಮಿಸಿರುವ ಪರಿಸರ ಮತ್ತು ಅರಣ್ಯ ಸಚಿವಾಲಯದ ತಂಡದ ಎದುರು ಸ್ಥಳೀಯರು ಕರ್ನಾಟಕ, ತಮಿಳುನಾಡು ಮತ್ತು ನೆರೆಯ ಅರಣ್ಯ ಪ್ರದೇಶಗಳಲ್ಲಿ ವನ್ಯ ಜೀವಿಗಳು ಸ್ಥಳಾಂತರವಾಗುತ್ತಿರುವ ಕುರಿತು ಅಧ್ಯಯನ ನಡೆಸುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಸಾಮಥ್ರ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವನ್ಯ ಜೀವಿಗಳನ್ನು ಸ್ಥಳಾಂತರಿಸಿದರೆ ಪರಿಶೀಲನೆ ನಡೆಸುವುದಾಗಿ ಸಚಿವಾಲಯದ ತಂಡ ಭರವಸೆ ನೀಡಿದೆ. +ಸರ್ಕಾರಗಳ ಬಹುತೇಕ ನಿರ್ಧಾರಗಳು ತಾತ್ಕಾಲಿಕ ಪರಿಹಾರಗಳಿಗೆ ಸೀಮಿತವಾಗಿವೆ. ಸಮಸ್ಯೆಗೆ ವೈಜ್ಞಾನಿಕ ಪರಿಹಾರವನ್ನು ಹುಡುಕುತ್ತಿಲ್ಲ ಎಂದು ಪ್ರಾಣಿಗಳ ಮಾಹಿತಿ ಸಂಗ್ರಹಣೆ ಮತ್ತು ಸಂರಕ್ಷಣೆಯಲ್ಲಿ ವಿವಿಧ ಸರ್ಕಾರಗಳೊಂದಿಗೆ ನಿಕಟವಾಗಿ ಕೆಲಸ ಮಾಡುವ ಆನೆ ತಜ್ಞರು ಆಕ್ಷೇಪಿಸಿದ್ದಾರೆ. +ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ +ಪ್ರಸ್ತುತ ವಯನಾಡ್‍ನಲ್ಲಿರುವ ಬೇಲೂರು ಮಖಾನಾ ಆನೆಯನ್ನು ಕರ್ನಾಟಕದ ಬೇಲೂರಿನಲ್ಲಿ ಸೆರೆ ಹಿಡಿಯಲಾಯಿತು, ಬಂಡೀಪುರದಿಂದ ತಂದು ವಯನಾಡಿಗೆ ಬಿಡಲಾಗಿದೆ. ವಯನಾಡ್‍ನಲ್ಲಿ ಈಗಾಗಲೇ ಇತರ ಆನೆಗಳು ಇದ್ದಿದ್ದರಿಂದ ಹೊಸದಾಗಿ ಬಂದ ಆನೆ ಜನವಸತಿ ಪ್ರದೇಶಕ್ಕೆ ತೆರಳುವುದು ಅನಿವಾರ್ಯವಾಗಿತ್ತು. ಮುನ್ನಾರ್‍ನ ಆರಿಕೊಂಬನ್ ಆನೆಯನ್ನು ಮೊದಲು ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಯಿತು, ಅಲ್ಲಿ ಈಗಾಗಲೇ ಹೆಚ್ಚು ಆನೆಗಳಿದ್ದರಿಂದ ಅದು ಕಾಡಿನಿಂದ ಹೊರ ಬರದಲು ಪ್ರಾರಂಭಿಸಿದಾಗ, ಮತ್ತೆ ಸೆರೆಹಿಡಿದು ಕಲಕ್ಕಾಡ್-ಮುಂಡಂತುರೈ ಮೀಸಲು ಪ್ರದೇಶಕ್ಕೆ ಕಳುಹಿಸಲಾಯಿತು. ಅದು ಅಲ್ಲಿಯೂ ನೆಲೆ ನಿಂತಿಲ್ಲ. ಸಹಜವಾಗಿ ಹೊರ ಬಂದಿದೆ. ಇದರಿಂದ ವನ್ಯ ಜೀವಿ ಮತ್ತು ಮಾನವ ಸಂಘರ್ಷವಾಗಿದೆ ಎಂದು ತಜ್ಞರು ವ್ಯಾಖ್ಯಾನಿಸಿದ್ದಾರೆ. ಪ್ರಸ್ತುತ ಅಂದಾಜಿನ ಪ್ರಕಾರ, ಕೇರಳವು ಸರಿಸುಮಾರು 2,000 ರಿಂದ 2,500 ಆನೆಗಳನ್ನು ಹೊಂದಿದೆ. +ಕೇರಳ ರಾಜ್ಯ ಅರಣ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ ಕಳೆದ ಮೂರು ವರ್ಷಗಳಿಂದ ವನ್ಯ ಜೀವಿ ಸಂಘರ್ಷದಿಂದ ಮಾನವ ಸಾವುಗಳು ಗಮನಾರ್ಹವಾಗಿ ಕಡಿಮೆಯಾಗಿದೆ. 2021-2022ರಲ್ಲಿ ದಾಖಲಾದ ಸಂಖ್ಯೆಗಳಿಗೆ ಹೋಲಿಸಿದರೆ 2023-2024ರ ಅವಧಿಯಲ್ಲಿ ಕೇರಳದಲ್ಲಿ ಆನೆಗಳ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ ಕಡಿಮೆಯಾಗಿದೆ. +2023-2024ರ ಅವಧಿಯಲ್ಲಿ ಆನೆ ದಾಳಿಗೆ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2022-2023ರಲ್ಲಿ 27 ಮತ್ತು 2021-2022ರಲ್ಲಿ 35 ಸಾವುಗಳು ವರದಿಯಾಗಿವೆ. ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿರುವ ಒಡಿಶಾ, ಜಾರ್ಖಂಡ್ ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಹೋಲಿಸಿದರೆ ಈ ಸಂಖ್ಯೆಗಳು ತುಂಬಾ ಕಡಿಮೆಯಾಗಿದೆ.ಜಾರ್ಖಂಡ್ ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಆನೆಗಳ ದಾಳಿಯಲ್ಲಿ ವಾರ್ಷಿಕವಾಗಿ ಸರಾಸರಿ 100 ಕ್ಕೂ ಹೆಚ್ಚು ಜನರು ಸಾಯುತ್ತಾರೆ. ಕರ್ನಾಟಕ ಅರಣ್ಯ ಇಲಾಖೆಯು ಕಳೆದ ಐದು ವರ್ಷಗಳಲ್ಲಿ ಮಾನವ-ಆನೆ ಸಂಘರ್ಷದಿಂದ 148 ಮಾನವ ಸಾವುನೋವುಗಳು ವರದಿಯಾಗಿವೆ ಎಂದು ತಿಳಿಸಿದೆ. +ಒಡಿಶಾ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಐದು ವರ್ಷಗಳ ಅವಧಿಯಲ್ಲಿ ಮಾನವ-ಪ್ರಾಣಿ ಸಂಘರ್ಷಗಳಲ್ಲಿ ಕ್ರಮವಾಗಿ 499, 385 ಮತ್ತು 358 ಜನರನ್ನು ಕಳೆದುಕೊಂಡಿವೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯವು ಸಂಸತ್‍ನಲ್ಲಿ ಉತ್ತರಿಸಿದೆ. ಕೇರಳ ಅರಣ್ಯ ಇಲಾಖೆಯು ಕಳೆದ ಐದು ವರ್ಷಗಳಲ್ಲಿ, ರಾಜ್ಯದಲ್ಲಿ ಕಾಡುಹಂದಿಗಳ ದಾಳಿಯಿಂದ ಸಾವುಗಳು ಗಣನೀಯವಾಗಿ ಹೆಚ್ಚಿವೆ ಎಂದು ತಿಳಿಸಿದೆ. +ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ +2016-2017ರಲ್ಲಿ ಕಾಡುಹಂದಿ ದಾಳಿಯಲ್ಲಿ ನಾಲ್ಕು ಮಾನವ ಸಾವುನೋವುಗಳು ವರದಿಯಾಗಿದ್ದವು, 2023-2024ರ ವೇಳೆಗೆ ಈ ಸಂಖ್ಯೆ 11ಕ್ಕೆ ಏರಿದೆ. ಹುಲಿ ದಾಳಿಯಿಂದ ಕಳೆದ ನಾಲ್ಕು ವರ್ಷಗಳಿಂದ ವರ್ಷಕ್ಕೆ ಒಂದು ಸಾವು ಸಂಭವಿಸಿದೆ. 2023-2024ರಲ್ಲಿ ಭಾರತೀಯ ಗೌರ್ ದಾಳಿಯಿಂದಾಗಿ ಮೂರು ಸಾವುಗಳು ವರದಿಯಾಗಿವೆ. ಕಾಡು ಪ್ರಾಣಿಗಳ ದಾಳಿಯಲ್ಲಿ ಗಾಯಗೊಂಡವರ ಪ್ರಕರಣಗಳು ಕಡಿಮೆಯಾಗಿದೆ. +2020-2021ರ ಅವಯಲ್ಲಿ ಅತಿ ಹೆಚ್ಚು ಗಾಯಗಳು ವರದಿಯಾಗಿದ್ದು, 988 ಪ್ರಕರಣಗಳು ದಾಖಲಾಗಿವೆ. 2021-2022 ಅವಧಿಯಲ್ಲಿ ಈ ಸಂಖ್ಯೆ 758 ಕ್ಕೆ ಇಳಿದಿದೆ ಎಂದು ದತ್ತಾಂಸ ತಿಳಿಸಿದೆ. ಪ್ರಸ್ತುತ ದತ್ತಾಂಶವು ಕಾಡು ಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಹಾವು ಕಡಿತದ ಸಾವುಗಳನ್ನು ಒಳಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ಗುಡ್ಡಗಾಡು ಜಿಲ್ಲೆ ವಯನಾಡ್ ಮಾನವ-ಪ್ರಾಣಿ ಸಂಘರ್ಷದ ಪ್ರಮುಖ ಪ್ರದೇಶವಾಗಿದೆ. ಕಣ್ಣೂರಿನ ಅರಾಲಂ, ಕೊಯಮತ್ತೂರು-ಪಾಲಕ್ಕಾಡ್ ಗಡಿ ಪ್ರದೇಶಗಳು ಮತ್ತು ಇಡುಕ್ಕಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ. \ No newline at end of file diff --git a/eesanje/url_46_225_4.txt b/eesanje/url_46_225_4.txt new file mode 100644 index 0000000000000000000000000000000000000000..ac12217a8f68a86946cdea3a0c1406da1968b87f --- /dev/null +++ b/eesanje/url_46_225_4.txt @@ -0,0 +1,7 @@ +ಪಕ್ಷಾತೀತವಾಗಿ ಮಹಿಳಾ ನೌಕರರ ಸಂಘ ಮುನ್ನಡೆಯಲಿ: ಲಕ್ಷ್ಮೀ ಹೆಬ್ಬಾಳ್ಕರ್ +ಬೆಂಗಳೂರು, ಫೆ.24- ಮಹಿಳೆ ಎಲ್ಲಾ ರಂಗದಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾಳೆ. ಇಂದು ನಾನು ಉದ್ಘಾಟಿಸಿರುವ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಪಕ್ಷಾತೀತವಾಗಿ ನಡೆಯಲಿ. ರಾಜಕೀಯ ಚಟುವಟಿಕೆಯಿಂದ ಸಂಪೂರ್ಣ ದೂರ ಇರಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಹೇಳಿದರು. +ನಗರದ ಟೌನ್‍ಹಾಲ್‍ನಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಉದ್ಘಾಟಿಸಿ ಮಾತನಾಡಿದ ಸಚಿವರು, ಇದೊಂದು ಅರ್ಥಪೂರ್ಣ ಸಂಘಟನೆಯಾಗಲಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಕ್ಕೂ ಸಂಘಟನೆ ವಿಸ್ತರಣೆಯಾಗಲಿ ಎಂದು ಹಾರೈಸಿದರು. ಸಾಮಾಜಿಕ ಕಾಳಜಿ ಬದ್ಧತೆಯಿಂದ ಕೆಲಸ ಮಾಡಿ, ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗಿ, ಧೈರ್ಯದಿಂದ ಮುಂದೆ ಹೋಗಿ. ಸಂಘದೊಂದಿಗೆ ನಾವಿದ್ದೇವೆ. ಹೋರಾಟಕ್ಕೆ ಮತ್ತೊಂದು ಹೆಸರೇ ಹೆಣ್ಣು ಎಂದು ಹೇಳಿದರು. +ಸರ್ಕಾರದ ಬಹುನಿರೀಕ್ಷಿತ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲು ಸರ್ಕಾರಿ ನೌಕರರ ಶ್ರಮ ಸಾಕಷ್ಟಿದೆ. ನೌಕರರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಫಲವಾಗಿ ಇಂದು ಯೋಜನೆಗಳು ಯಶಸ್ವಿಯಾಗಿವೆ. ನಮ್ಮ ರಾಜ್ಯದಲ್ಲಿ ಶೇ.52ರಷ್ಟು ಸರ್ಕಾರಿ ಮಹಿಳಾ ನೌಕರರಿದ್ದು, ಇದು ಇಡೀ ದೇಶಕ್ಕೆ ಮಾದರಿಯಾಗಿರುವ ವಿಚಾರ ಎಂದು ಸಚಿವರು ಹೇಳಿದರು. +ದ್ವೇಷ ಭಾವನೆ ಸೃಷ್ಟಿಸುವುದರಿಂದ ದೇಶಕ್ಕೆ ಉಳಿಗಾಲವಿಲ್ಲ; ಡಾ.ಜಿ.ಪರಮೇಶ್ವರ್ +12ನೇ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗೆ ಉತ್ತಮ ಸ್ಥಾನ ನೀಡಿದ್ದರು. ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯುತ್ತಿದ್ದೇವೆ. ಬಸವ ತತ್ವದಡಿಯಲ್ಲಿಯೇ ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದ್ದು, ಹೀಗಾಗಿ ಬಸವಣ್ಣನವರನ್ನು ಸರ್ಕಾರ ಸಾಂಸ್ಕøತಿಕ ರಾಯಭಾರಿ ಎಂದು ಘೋಷಿಸಿದೆ ಎಂದು ಹೇಳಿದರು. +ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವರಾದ ಮೋಟಮ್ಮ, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ರೋಶನಿ ಗೌಡ, ಗೌರವಾಧ್ಯಕ್ಷರಾದ ಗೀತಾಮಣಿ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸೇರಿದಂತೆ ಸಂಘದ ಪದಾಕಾರಿಗಳು, ನೂರಾರು ಮಹಿಳಾ ನೌಕರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_225_5.txt b/eesanje/url_46_225_5.txt new file mode 100644 index 0000000000000000000000000000000000000000..817136913e69ff95cacab12610009bd0ea926858 --- /dev/null +++ b/eesanje/url_46_225_5.txt @@ -0,0 +1,9 @@ +ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಭಾವ ತಪ್ಪಿಸಲು ಅಧಿಕಾರಿಗಳಿಗೆ ಸೂಚನೆ +ಬೆಂಗಳೂರು,ಫೆ.24- ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್ ಅವರು ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. +ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಗಳನ್ನು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. +ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆಯ ಆಯಾ ವಲಯಗಳಿಗೆ ಬೋರ್ ವೆಲ್‍ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್ ವೆಲ್‍ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. +ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಘಟಕಗಳು ನಿಂತಿವೆ, ಕೂಡಲೆ ಬೋರ್ ವೆಲ್‍ಗಳನ್ನು ಹಾಕಿ ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್‍ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. +ಜಲಮಂಡಳಿಯ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ರವರು ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1472 ಎಂ.ಎಲï.ಡಿ ನಿರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈ 2024 ರವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ ಎಂದು ಹೇಳಿದರು. +ನಗರದಲ್ಲಿ ಜಳಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫ್ಲಷಿಂಗ್, ರೀಡ್ರಿಲ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು. ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್‍ಗಳ ಜೊತೆಗೆ 18 ಹೊಸ ಟ್ಯಾಂಕರ್‍ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್ ಗಳನ್ನು ಬಾಡಿಗೆಗೆ ಪಡೆಯಲು ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು. +ಸಿಂಟೆಕ್ಸ್ ಟ್ಯಾಂಕ್‍ಗಳ ವ್ಯವಸ್ಥೆ ಮಾಡಿ:ನಗರದ ಆರ್‍ಆರ್ ನಗರ ವಲಯದಲ್ಲಿ ಈಗಾಗಲೇ ಪ್ರಮುಖ ಸ್ಥಳದಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‍ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. +110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ಬಿಬಿಎಂಪಿ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿ ಹೆಚ್ಚು ಸಮಸ್ಯೆ ಇದ್ದು, ಹಳ್ಳಿಗಳಿಗೆ ಹೆಚ್ಚು ಒತ್ತು ನೀಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬೋರ್‍ವೆಲ್‍ಗಳನ್ನು ಕೊರೆಯಬೇಕು. ಜೊತೆಗೆ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. 110 ಹಳ್ಳಿಗಳಲ್ಲಿ ನೀರಿನ ಅಭಾವವನ್ನು ನೀಗಿಸುವ ಸಲುವಾಗಿ ಜಲಮಂಡಳಿ ಅಧಿಕಾರಿ ಮತ್ತು ಸಿಬ್ಬಂದಿಗಳು ವಲಯ ಆಯುಕ್ತರ ಅೀಧಿನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳು ಹಾಜರಿದ್ದರು. \ No newline at end of file diff --git a/eesanje/url_46_225_6.txt b/eesanje/url_46_225_6.txt new file mode 100644 index 0000000000000000000000000000000000000000..dae3f1b03c4b5624206a758d63342cccde4bab14 --- /dev/null +++ b/eesanje/url_46_225_6.txt @@ -0,0 +1,11 @@ +ದ್ವೇಷ ಭಾವನೆ ಸೃಷ್ಟಿಸುವುದರಿಂದ ದೇಶಕ್ಕೆ ಉಳಿಗಾಲವಿಲ್ಲ; ಡಾ.ಜಿ.ಪರಮೇಶ್ವರ್ +ಬೆಂಗಳೂರು,ಫೆ.24- ಅಯೋಧ್ಯೆಯಿಂದ ಮರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಬೆದರಿಕೆ ಹಾಕಲಾಗಿದೆ ಎಂಬ ಪ್ರಕರಣವನ್ನು ಅನಗತ್ಯವಾಗಿ ವೈಭವೀಕರಿಸಲಾಗುತ್ತಿದೆ. ಭಾವನಾತ್ಮಕ ವಿಚಾರಗಳನ್ನು ಕೆಣಕಿ ವ್ಯವಸ್ಥೆ ಹಾಳು ಮಾಡುವುದರಿಂದ ದೇಶಕ್ಕೆ ಉಳಿಗಾಲ ಇರುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷಗಳಿಂದಲೂ ದೇಶ ಸೌಹಾರ್ದಯುತವಾಗಿ ನಡೆದುಕೊಂಡು ಬರುತ್ತಿದೆ. ಬಿಜೆಪಿಯವರು ಈವರೆಗೂ ಅಭಿವೃದ್ಧಿ ವಿಚಾರವನ್ನು ಚರ್ಚೆ ಮಾಡುತ್ತಿಲ್ಲ. ಬೇರೆ ಧರ್ಮದವರನ್ನು ದ್ವೇಷಿಸುವುದು, ಅದಕ್ಕಾಗಿ ಪ್ರಚೋದಿಸುವಂತಹ ಭಾವನಾತ್ಮಕ ವಿಚಾರಗಳನ್ನೇ ಪ್ರಸ್ತಾಪಿಸುತ್ತಿದ್ದಾರೆ. ಇದು ದೇಶಕ್ಕೆ ಒಳ್ಳೆಯದಲ್ಲ. ದ್ವೇಷ ಭಾವನೆಯನ್ನು ವ್ಯಾಪಕವಾಗಿ ಬಿತ್ತಲಾಗುತ್ತಿದೆ. 75 ವರ್ಷಗಳಿಂದಲೂ ಇಲ್ಲದೇ ಇರುವಂತಹ ಅಸಹನೀಯ ವಾತಾವರಣವನ್ನುಸೃಷ್ಟಿಸಲು ಯತ್ನಿಸಲಾಗುತ್ತಿದೆ ಎಂದು ದೂರಿದರು. +ವರ್ಗಾವಣೆ ಮಾಡಿ ಇಲ್ಲವೇ ದಯಾ ಮರಣಕ್ಕೆ ಅವಕಾಶ ನೀಡಿ: ಪತ್ರ ಬರೆದ ಪೊಲೀಸರು +ಅಯೋಧ್ಯೆಯಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದ ಆಸ್ತ ರೈಲನ್ನು ಹೊಸಪೇಟೆಯಲ್ಲಿ ನೀರು ತುಂಬಿಸಿಕೊಳ್ಳಲು ನಿಲ್ಲಿಸಿದ್ದಾರೆ. ಅದೇ ಸಂದರ್ಭದಲ್ಲಿ ಮತ್ತೊಂದು ಫ್ಲಾಟ್‍ಫಾರಂನಲ್ಲಿ ಬೇರೊಂದು ರೈಲು ನಿಂತಿದೆ. ಅದರಲ್ಲಿ ನಿಂತಿದ್ದ ಮುಸಲ್ಮಾನ ವ್ಯಕ್ತಿಯೊಬ್ಬ ಸ್ಕೈವಾಕ್‍ನಲ್ಲಿ ದಾಟಿ ಆ ಕಡೆಗೆ ಹೋಗುವ ಬದಲಾಗಿ ನಿಂತಿದ್ದ ರೈಲುಗಳ ನಡುವಿನಿಂದಲೇ ಹಾದು ಹೋಗಿದ್ದಾರೆ. ಆತ ಗಡ್ಡ ಬಿಟ್ಟಿದ್ದ. ಮುಸಲ್ಮಾನ್ ಎಂದು ಗೊತ್ತಾಗುತ್ತಿದ್ದಂತೆ ಆತನನ್ನು ಛೇಡಿಸಿ, ಬೈದು, ಗಲಾಟೆ ಮಾಡಿದ್ದಾರೆ. ಆತ ರೈಲನ್ನು ಸುಟ್ಟುಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಾಗಿದೆ. ರೈಲಿನಲ್ಲಿ ಅಷ್ಟೊಂದು ಜನ ಇದ್ದಾಗ ಒಬ್ಬ ವ್ಯಕ್ತಿ ಸುಟ್ಟು ಹಾಕುತ್ತೇನೆ ಎಂದು ಹೇಳಿಕೆ ನೀಡಿದ್ದಾನೆಯೋ, ಇಲ್ಲವೋ ಗೊತ್ತಿಲ್ಲ. ಪರಿಶೀಲನೆ ನಡೆಯುತ್ತಿದೆ. ಆತ ಪಾಕಿಸ್ತಾನದ ಪರವಾಗಿ ಮಾತನಾಡಿದ್ದ ಎಂದೆಲ್ಲಾ ವೈಭವೀಕರಣ ಮಾಡಿದ್ದಾರೆ ಎಂದು ದೂರಿದರು. +ಆತ ರಕ್ಷಣಾ ಇಲಾಖೆಯಲ್ಲಿ ಕೆಲಸ ಮಾಡಿ ನಿವೃತ್ತನಾದ ಬಳಿಕ ರೈಲ್ವೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾನೆ. ಆತನನ್ನು ಬಂಧಿಸಿ ಬಿಟ್ಟು ಕಳುಹಿಸಿಲ್ಲ. ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆನಂತರವೂ ಆತ ಎಲ್ಲಿ ಹೋಗುತ್ತಾನೆ. ಚಲನವಲನಗಳೇನು ಎಂಬ ಬಗ್ಗೆ ನಿಗಾ ವಹಿಸಲಾಗುತ್ತದೆ ಎಂದರು.ಬಿಜೆಪಿಯವರಿಗೆ ಬೇರ ಸಮುದಾಯದವರ ಮೇಲೆ ದ್ವೇಷ ಸೃಷ್ಟಿಸಿ ಅಶಾಂತಿ ನಿರ್ಮಿಸುವುದೇ ಅವರ ಉದ್ದೇಶ. ಇದರಿಂದ ದೇಶಕ್ಕೆ ಉಳಿಗಾಲ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು. +ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರ ನೇತೃತ್ವದಲ್ಲಿ ನಡೆದ ಭೋಜನಾಕೂಟದಲ್ಲಿ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಗಳಾಗಿವೆ ಎಂದರು. ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಈಗಾಗಲೇ ಒಂದು ಬಾರಿ ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆಯಾಗಿದೆ. 2ನೇ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುತ್ತದೆ. ಸಚಿವರ ಸ್ಪರ್ಧೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು. ನಿನ್ನೆಯ ಸಭೆಯಲ್ಲಿ ಇಂತಹ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. +ನಮ್ಮ ಪಕ್ಷದಲ್ಲಿ ಲೋಕಸಭೆ ಚುನಾವಣೆಯ ಬಗ್ಗೆ ತಯಾರಿ ನಡೆದಿದೆ. ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ. ತುಮಕೂರು ಲೋಕಸಭೆ ಚುನಾವಣೆ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಯಾವ ಪಕ್ಷಕ್ಕೆ ಹೋಗುತ್ತದೆ ಎಂಬುದು ನಮಗೆ ಮುಖ್ಯವಲ್ಲ ಎಂದರು. +ಎಸ್.ಪಿ.ಮುದ್ದಹನುಮೇಗೌಡ ಮರು ಸೇರ್ಪಡೆಗೆ ಯಾರಿಗೂ ಅಸಮಾಧಾನವಿಲ್ಲ. ಶಾಸಕರಾದ ಷಡಾಕ್ಷರಿ, ಟಿ.ಬಿ.ಜಯಚಂದ್ರ ಅವರು ಎಸ್.ಪಿ.ಮುದ್ದಹನುಮೇಗೌಡರು ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದರು ಎಂದ ಮಾತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬುದು ಸರಿಯಲ್ಲ. ಪಕ್ಷ ತೀರ್ಮಾನ ಮಾಡಿದ ಮೇಲೆ ನಾವೆಲ್ಲಾ ಕೆಲಸ ಮಾಡಲೇಬೇಕಿದೆ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಯಾರು, ಯಾರಿಗೆ ಮತ ಹಾಕಬೇಕು ಎಂಬುದನ್ನು ರಾಜ್ಯನಾಯಕರು ನಿರ್ಧರಿಸಿ ಶಾಸಕರಿಗೆ ಸೂಚನೆ ನೀಡಲಿದ್ದಾರೆ. ಅದರಂತೆ ಮತದಾನ ನಡೆಯಲಿದೆ ಎಂದರು. +ಮಂಡ್ಯಗೆ ಸುಮಲತಾ, ಬೆಂ.ಗ್ರಾಮಾಂತರಕ್ಕೆ ಡಾ.ಮಂಜುನಾಥ್‌ಗೆ ಬಿಜೆಪಿ ಟಿಕೆಟ್..! +ವಿರೋಧಪಕ್ಷದ ಅಭ್ಯರ್ಥಿಗಳು ಕಾಂಗ್ರೆಸ್ ಶಾಸಕರಿಗೆ ಆಮಿಷವೊಡ್ಡಿ ಮತ ಸೆಳೆಯಲು ಅಡ್ಡ ಮತದಾನ ಹಾಕಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬುದರ ಕುರಿತು ಈಗಾಗಲೇ ಶಾಸಕರು ದೂರು ನೀಡಿದ್ದಾರೆ. ಅದರ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಕಾನೂನಾತ್ಮಕವಾಗಿ ತಮ್ಮದೇ ಆದ ಕ್ರಮ ಕೈಗೊಳ್ಳುತ್ತಾರೆ. ಕುಪೇಂದ್ರ ರೆಡ್ಡಿಯವರನ್ನು ವಿಚಾರಣೆ ಮಾಡಬೇಕೆ ಅಥವಾ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ಜೊತೆಗೆ ದೂರಿನ ಅಂಶಗಳ ಮೇಲೆ ನಿರಂತರವಾಗಿ ನಿಗಾ ವಹಿಸುತ್ತಾರೆ. ಇನ್ನು ಪಕ್ಷವಾಗಿ ಕಾಂಗ್ರೆಸ್ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೊ ಅದರ ಬಗ್ಗೆ ಈಗಾಗಲೇ ಗಮನ ಹರಿಸಿದೆ ಎಂದು ಹೇಳಿದರು. \ No newline at end of file diff --git a/eesanje/url_46_225_7.txt b/eesanje/url_46_225_7.txt new file mode 100644 index 0000000000000000000000000000000000000000..35f6fbf19bc06e6686ae6d4466873d3981c0b735 --- /dev/null +++ b/eesanje/url_46_225_7.txt @@ -0,0 +1,6 @@ +ವರ್ಗಾವಣೆ ಮಾಡಿ ಇಲ್ಲವೇ ದಯಾ ಮರಣಕ್ಕೆ ಅವಕಾಶ ನೀಡಿ: ಪತ್ರ ಬರೆದ ಪೊಲೀಸರು +ಬೆಂಗಳೂರು,ಫೆ.24- ಪತಿ-ಪತ್ನಿಯರು ಒಂದೇ ಘಟಕ ಇಲ್ಲವೇ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಲು ನಿರಾಕರಿಸುತ್ತಿರುವುದರಿಂದ ರೋಸಿ ಹೋಗಿರುವ ರಾಜ್ಯದ ಪೊಲೀಸರು ವರ್ಗಾವಣೆ ಮಾಡಿ ಇಲ್ಲವೇ ಸಾಮೂಹಿಕ ದಯಾ ಮರಣಕ್ಕೆ ಅವಕಾಶ ನೀಡಿ ಎಂದು ಒತ್ತಾಯಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. +ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಹಾಗೂ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆ ಇಲ್ಲದೆ ಸಿಬ್ಬಂದಿಗಳು ಪರಿತಪಿಸುತ್ತಿದ್ದಾರೆ. ಪತಿ-ಪತ್ನಿಯರು ಒಂದೇ ಘಟಕ ಇಲ್ಲವೇ ಒಂದೇ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ ಕೆಸಿಎಸ್‍ಆರ್ ನಿಯಮವೂ ಇದೇ ಹೇಳಿದರೂ ಮೇಲಾಧಿಕಾರಿಗಳು ನಿಯಮ ಪಾಲಿಸದಿರುವುದು ನಮಗೆ ಭಾರಿ ಅನ್ಯಾಯ ಮಾಡಿದಂತಾಗಿದೆ ಎಂದು ನೊಂದ ಪೊಲೀಸರು ಪತ್ರದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. +ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಕಿತ್ತೊಗೆಯಬೇಕಿದೆ: ಸಿಎಂ ಸಿದ್ದರಾಮಯ್ಯ +ಮೂರು ವರ್ಷ ಕಳೆದರೂ ಅಂತರ್ ಜಿಲ್ಲಾ ವರ್ಗಾವಣೆ ಮಾಡುತ್ತಿಲ್ಲ ಎಂದು ನಾವು ಗೃಹ ಸಚಿವರಿಗೆ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಮಾಧ್ಯಮಗಳ ಮುಂದೆ ಮಾತ್ರ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಎಂದು ಹೇಳಿ ಕೈ ತೊಳೆದುಕೊಳ್ಳುತ್ತಿದ್ದಾರೆ. +ನಾವುಗಳು ಕಳೆದ 10 ರಿಂದ 15 ವರ್ಷಗಳಿಂದ ತಂದೆ-ತಾಯಿ, ಹೆಂಡತಿ ಮಕ್ಕಳನ್ನು ಬಿಟ್ಟು ಜೀವನ ಸಾಗಿಸುವಂತಾಗಿದೆ. ಹೀಗಾಗಿ ನಮ್ಮ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕೆಲವು ಪ್ರಕರಣಗಳು ವಿಚ್ಛೇದನದ ಹಂತ ತಲುಪಿವೆ ಎಂದು ಅವರುಗಳು ತಮ್ಮ ಗೋಳು ಹಂಚಿಕೊಂಡಿದ್ದಾರೆ. ಇನ್ನು ಮದುವೆಯಾಗಿ 5 ವರ್ಷ ಕಳೆದರೂ ಪತಿ-ಪತ್ನಿ ಒಂದೇ ಕಡೆ ಕೆಲಸ ಮಾಡಲು ಸಾಧ್ಯವಾಗದಿರುವುದರಿಂದ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶವಿರುವುದಿಲ್ಲ. ಹೀಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ನೆಮ್ಮದಿ ಹಾಳಾಗಿ ನಮ್ಮ ಆರೋಗ್ಯದಲ್ಲಿ ಏರುಪೇರಾಗಿದೆ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಮಗೆ ವರ್ಗಾವಣೆ ಭಾಗ್ಯ ಕಲ್ಪಿಸಿ ಇಲ್ಲವೇ ಸಾಮೂಹಿಕ ದಯ ಮರಣಕ್ಕೆ ಅನುಮತಿ ನೀಡಿ ಎಂದು ನೂರಾರು ಪೊಲೀಸರು ರಾಷ್ಟ್ರಪತಿಗಳಿಗೆ ದಯಾ ಮರಣ ಪತ್ರ ಬರೆದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_225_8.txt b/eesanje/url_46_225_8.txt new file mode 100644 index 0000000000000000000000000000000000000000..e997696d47df376c4e2bb574a5959fa75ff6757b --- /dev/null +++ b/eesanje/url_46_225_8.txt @@ -0,0 +1,10 @@ +ಮಂಡ್ಯಗೆ ಸುಮಲತಾ, ಬೆಂ.ಗ್ರಾಮಾಂತರಕ್ಕೆ ಡಾ.ಮಂಜುನಾಥ್‌ಗೆ ಬಿಜೆಪಿ ಟಿಕೆಟ್..! +ಬೆಂಗಳೂರು,ಫೆ.24- ಕಳೆದ ಬಾರಿಯಂತೆಯೂ ಈ ಬಾರಿಯೂ ಮತದಾನಕ್ಕೂ ಮುನ್ನವೇ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಸಕ್ಕರೆನಾಡು ಮಂಡ್ಯ ಲೋಕಸಭಾ ಕ್ಷೇತ್ರ ಬಹುತೇಕ ಬಿಜೆಪಿ ಪಾಲಾಗುವ ಸಾಧ್ಯತೆಯಿದೆ.ಜಿದ್ದಾಜಿದ್ದಿನ ಕಣವಾಗಿರುವ ಈ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಹಿಂದೇಟು ಹಾಕಿದ್ದು, ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರೇ ಕಮಲ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ನಿಚ್ಛಳವಾಗಿದೆ. +ವರಿಷ್ಠರಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆ ಸುಮಲತಾ ಅಂಬರೀಶ್ ಮಂಡ್ಯದಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪಕ್ಷದ ಸಭೆ ನಡೆಸಿರುವುದು ಇದಕ್ಕೆ ಪುಷ್ಠಿ ನೀಡಿದಂತಿದೆ. ಮೂರು ದಿನಗಳ ಹಿಂದೆ ನವದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹಸಚಿವ ಅಮಿತ್ ಷಾ ಜೊತೆ ಸೀಟು ಹೊಂದಾಣಿಕೆ ಕುರಿತಂತೆ ಮಾತುಕತೆ ನಡೆಸಿದ್ದರು. +ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..! +28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ತನ್ನ ಭದ್ರ ಕೋಟೆ ಎನಿಸಿರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಅಥವಾ ತುಮಕೂರು ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂಬ ಪ್ರಸ್ತಾವನೆಯನ್ನು ಕುಮಾರಸ್ವಾಮಿಯವರು ಅಮಿತ್ ಷಾ ಮುಂದಿಟ್ಟಿದ್ದರು. ಜೆಡಿಎಸ್‍ನ ಈ ಬೇಡಿಕೆಯನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಅಮಿತ್ ಷಾ ಹಾಸನ ಮತ್ತು ಕೋಲಾರದಲ್ಲಿ ಜೆಡಿಎಸ್ ಚಿನ್ಹೆಯಡಿ ಅಧಿಕೃತ ಅಭ್ಯರ್ಥಿಗಳು ಸ್ರ್ಪಧಿಸಬೇಕು. ಉಳಿದಂತೆ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. +ಅದರಲ್ಲೂ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು ಅಮಿತ್ ಷಾ ಒಪ್ಪದೆ ಬಿಜೆಪಿ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ ಎಂಬ ಸುಳಿವನ್ನು ನೀಡಿದ್ದಾರೆ. ನಾವು ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೆ ಸೋಲುವ ಸಾಧ್ಯತೆಯಿದೆ. ಹೀಗಾಗಿ ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್‍ರವರೇ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಈ ಕ್ಷೇತ್ರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಉಳಿದಿದ್ದನ್ನು ನಮಗೆ ಬಿಡಿ ಎಂದು ಅಮಿತ್ ಷಾ ಹೇಳಿದ್ದಾಗಿ ತಿಳಿದುಬಂದಿದೆ. +ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೆ ಇಲ್ಲಿ ಕೂಡ ಹಿನ್ನೆಡೆಯಾಗಬಹುದು. ಈ ಕ್ಷೇತ್ರದಿಂದ ಜೆಡಿಎಸ್ ಚಿನ್ಹೆಯಡಿ ಬಿಜೆಪಿ ಬೆಂಬಲದೊಂದಿಗೆ ಖ್ಯಾತ ವೈದ್ಯ ಡಾ.ಸಿ.ಎನ್.ಮಂಜುನಾಥ್‍ರನ್ನು ಕಣಕ್ಕಿಳಿಸಿದರೆ ಫಲಿತಾಂಶ ಏನು ಬೇಕಾದರೂ ಆಗಬಹುದು. ಕ್ಷೇತ್ರದಲ್ಲಿ ಡಿಕೆ ಸಹೋದರರಿಗೆ ಪ್ರಬಲ ಸ್ಪರ್ಧೆಯೊಡ್ಡಬೇಕಾದರೆ ಮೈತ್ರಿ ಪಕ್ಷದಿಂದಲೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು. +ನಾವು ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿಯಾದರೆ ಫಲಿತಾಂಶದ ಬಗ್ಗೆ ನಾನು ಗ್ಯಾರಂಟಿ ಕೊಡುತ್ತೇನೆ. ಅವರಿಗೆ ಚಿನ್ಹೆಗಿಂತ ಅವರೇ ಒಂದು ದೊಡ್ಡ ಚಿನ್ಹೆಯಾಗಿದ್ದಾರೆ. ಮತದಾರರಿಗೂ ಅವರ ಬಗ್ಗೆ ಸಕಾರಾತ್ಮಕವಾದ ಅಭಿಪ್ರಾಯವಿದೆ. ಹೀಗಾಗಿ ಮಂಜುನಾಥ್‍ರವರನ್ನು ಮನವೊಲಿಸುವಂತೆ ಕುಮಾರಸ್ವಾಮಿಗೆ ಅಮಿತ್ ಷಾ ಸಲಹೆ ಕೊಟ್ಟಿದ್ದಾರೆ. +ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು +ಅಂತಿಮವಾಗಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ಎರಡೂ ಕಡೆ ಸ್ಪರ್ಧೆ ಮಾಡಿದರೆ, ಮೂರು ಕ್ಷೇತ್ರಗಳಲ್ಲಿ ಎರಡು ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು, ಉಳಿದ ಕಡೆ ಅಂದರೆ 23 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. \ No newline at end of file diff --git a/eesanje/url_46_225_9.txt b/eesanje/url_46_225_9.txt new file mode 100644 index 0000000000000000000000000000000000000000..d43f6cdf44dba14c69e8e21e4066b9f2b7d383c2 --- /dev/null +++ b/eesanje/url_46_225_9.txt @@ -0,0 +1,11 @@ +ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಕಿತ್ತೊಗೆಯಬೇಕಿದೆ: ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.24- ಸಂವಿಧಾನದ ಆಶಯಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುವವರನ್ನು ಅಧಿಕಾರದಿಂದ ಕಿತ್ತೊಗೆಯಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿದೆ. ಸಾಮಾಜಿಕ, ಆರ್ಥಿಕ ವ್ಯವಸ್ಥೆಯನ್ನು ಒಳಗೊಂಡಂತೆ ಸಮಗ್ರ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯನ್ನು ಒಳಗೊಂಡು ಸಂವಿಧಾನ ರಚನೆಯಾಗಿದೆ. ಅದರಲ್ಲಿ ಸಮಾನತೆ, ಭ್ರಾತೃತ್ವ, ರಾಷ್ಟ್ರೀಯತೆಯನ್ನು ಪ್ರತಿಪಾದಿಸಲಾಗಿದೆ ಎಂದರು. +ಆದರೆ ಸಂವಿಧಾನದ ವಿರೋಧಿಗಳು ಅನಗತ್ಯವಾಗಿ ಅಪಪ್ರಚಾರ ನಡೆಸಿದ್ದಾರೆ. ಸಂವಿಧಾನ ಜಾರಿಗೆ ಬಂದ ದಿನದಿಂದಲೂ ಅದರ ವಿರುದ್ಧ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಸಂವಿಧಾನಕ್ಕೆ ಅಪಾಯವಾಗುವ ಸನ್ನಿವೇಶವನ್ನು ಯಾರೂ ಸಹಿಸಬಾರದು. ಸಂವಿಧಾನದ ರಕ್ಷಣೆಯಿಂದ ಮಾತ್ರ ನಾವು ಉಳಿಯಲು ಸಾಧ್ಯ. ಅದಕ್ಕೆ ಅಪಾಯವಾದರೆ ನಾವು ಎಲ್ಲರೂ ಕಷ್ಟಕ್ಕೆ ಸಿಲುಕುತ್ತೇವೆ ಎಂಬುದನ್ನು ಯುವಜನರಾದಿಯಾಗಿ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. +ಭಾರತ ಹಲವು ಧರ್ಮ, ಜಾತಿ, ಭಾಷೆ, ಸಂಸ್ಕøತಿಯ ವೈವಿಧ್ಯತೆಯ ನಾಡು. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನ ರಚನೆ ಕರಡು ಸಮಿತಿಯಲ್ಲಿ ಭಾಷಣ ಮಾಡಿದ ಅಂಬೇಡ್ಕರ್‍ರವರು ವೈವಿಧ್ಯತೆಯ ವೈರುಧ್ಯದ ವ್ಯವಸ್ಥೆಗೆ ನಾವು ಕಾಲಿಡುತ್ತಿದ್ದೇವೆ. ಸಂವಿಧಾನದಿಂದ ರಾಜಕೀಯ ಅವಕಾಶಗಳು ಸಿಗಬಹುದು. ಆದರೆ ಆರ್ಥಿಕ, ಸಾಮಾಜಿಕ ಸಮಾನತೆ ಸೃಷ್ಟಿಯಾಗದೇ ಇದ್ದರೆ ಸಂಕಟಕ್ಕೆ ಒಳಗಾದವರು ಪ್ರಜಾಪ್ರಭುತ್ವ ರಾಜಕೀಯ ವ್ಯವಸ್ಥೆಯನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಎಚ್ಚರಿಸಿದ್ದರು ಎಂದರು. +ನಾಳೆ ಕಾನ್‍ಸ್ಟೆಬಲ್ ಲಿಖಿತ ಪರೀಕ್ಷೆ: ವಸ್ತ್ರ ಸಂಹಿತೆ ಪಾಲಿಸಲು ಆದೇಶ +ಸಂವಿಧಾನದ ಆಶಯಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರಗಳ ಕರ್ತವ್ಯ. ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳುವವರಿಂದ ಅದರ ಆಶಯಗಳನ್ನು ಜಾರಿಗೆ ತರಲು ಸಾಧ್ಯ ಇಲ್ಲ. +ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ ಮತ್ತು ನ್ಯಾಯ ವ್ಯವಸ್ಥೆಗೆ ಪ್ರಜೆಗಳು ಮಾಲೀಕರು. ಒಂದು ವೇಳೆ ಅದು ವೈಪಲ್ಯವಾದರೆ ಸಂವಿಧಾನವನ್ನು ಕಿತ್ತೊಗೆಯುವುದಕ್ಕೆ ಆಸಕ್ತಿ ತೋರಿಸಬಾರದು. ಸಂವಿಧಾನಕ್ಕೆ ವಿರುದ್ಧವಾಗಿರುವವರನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.ನಮ್ಮ ದೇಶದಲ್ಲೂ ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುವ ಜನರಿಂದ ಸಂವಿಧಾನದ ಆಶಯಗಳು ಈಡೇರಲು ಸಾಧ್ಯವೇ? ಸಾಮಾಜಿಕ ಅಸಮಾನತೆ, ವರ್ಗ ಸಂಘರ್ಷಗಳು ನಿವಾರಣೆ ಸಾಧ್ಯವೇ ಎಂದು ಪ್ರಶ್ನಿಸಿದರು. +ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ಜ.26 ರಿಂದ ಆರಂಭಗೊಂಡ ಸಂವಿಧಾನದ ಜಾಥಾ ರಾಜ್ಯದ 5,600 ಕ್ಕೂ ಹೆಚ್ಚು ಪಂಚಾಯತ್‍ಗಳಲ್ಲಿ ಸಂಚರಿಸಿದೆ. ಜನರಿಂದ ಅಭೂತಪೂರ್ವ ಸ್ಪಂದನೆ ದೊರೆತಿದೆ. ಇಂದು ಮತ್ತು ನಾಳೆ ಎರಡೂ ದಿನ ಚಿಂತಕರು, ತಜ್ಞರು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. +ಸಂವಿಧಾನ ಜಾರಿಯಾಗಿ 75 ವರ್ಷ ಕಳೆದರೂ ಅದರ ಪೂರ್ಣ ಆಶಯಗಳು ಈಡೇರಿಲ್ಲ. ಕೃಷಿಕರು, ಕಾರ್ಮಿಕರು ಈಗಲೂ ಅವಕಾಶಕ್ಕಾಗಿ ಆಕಾಶದತ್ತ ನೋಡುವ ಪರಿಸ್ಥಿತಿ ಇದೆ. ಸಂವಿಧಾನವನ್ನು ಒಪ್ಪದ ವ್ಯಕ್ತಿಗಳ ಕೈಲಿ ರಾಜಕೀಯ ವ್ಯವಸ್ಥೆ ಇದ್ದಿದ್ದರಿಂದಾಗಿ ಅದು ಪೂರ್ಣ ಪ್ರಮಾಣದ ಸಾಕಾರಗೊಂಡಿಲ್ಲ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಉತ್ತಮ ಸ್ತಬ್ಧ ಚಿತ್ರಕ್ಕೆ ಪ್ರಶಸ್ತಿ ನೀಡಲಾಯಿತು. ಅತ್ಯುತ್ತಮ ಚಟುವಟಿಕೆಗಾಗಿ ತುಮಕೂರು, ದಾವಣಗೆರೆ, ಮೈಸೂರು, ಕೊಡಗು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲಾಕಾರಿಗಳಿಗೆ ನಗದು ಪುರಸ್ಕಾರ ನೀಡಲಾಯಿತು ಹಾಗೂ ಸಂವಿಧಾನ ಪೀಠಿಕೆ ವಾಚನದಲ್ಲಿ ಭಾಗವಹಿಸಿದ್ದ ಮಕ್ಕಳಿಗೂ ಪ್ರಶಸ್ತಿ ನೀಡಲಾಯಿತು. +ರಾಜ್ಯದಲ್ಲೂ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ಬ್ಯಾನ್..! +ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ವಾಚಿಸಿದರು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಹೈಕೋರ್ಟ್‍ನ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಎಸ್.ಟಿ.ಸೋಮಶೇಖರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_226_1.txt b/eesanje/url_46_226_1.txt new file mode 100644 index 0000000000000000000000000000000000000000..5062a5f7f7c7c9a2d57601f9b4bb84f4d2089c74 --- /dev/null +++ b/eesanje/url_46_226_1.txt @@ -0,0 +1,5 @@ +ಕನ್ನಡ ಅನುಷ್ಠಾನಕ್ಕೆ ಸಹಕರಿಸದ ಅಧಿಕಾರಿ ಅಮಾನತು +ಬೆಂಗಳೂರು,ಫೆ.24- ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಆದೇಶ ಪಾಲಿಸದೆ ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಮಹದೇವಪುರ ವಲಯದ ಹಿರಿಯ ಆರೋಗ್ಯ ಪರಿವೀಕ್ಷಕ ಕೆ.ಎಲ್.ವಿಶ್ವನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳ ಮೇಲೆ ಹಾಕಲಾಗುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಾಶಸ್ತ್ರ ನೀಡಬೇಕು ಒಂದು ವೇಳೆ ಈ ನಿಯಮ ತಪ್ಪುವ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಅನ್ಯಭಾಷೆಯಲ್ಲಿರುವ ಫಲಕಗಳನ್ನು ಬಟ್ಟೆಯಿಂದ ಮುಚ್ಚಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದರು. +ಕನ್ನಡ ಅನುಷ್ಠಾನ ಜಾರಿಗೊಳಿಸದ ಮಳಿಗೆಗಳ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರವನ್ನು ಆಯಾ ವಲಯಗಳ ಹಿರಿಯ ಆರೋಗ್ಯ ಪರಿವೀಕ್ಷಕರಿಗೆ ನೀಡಲಾಗಿತ್ತು. ಆದರೆ, ಮಹದೇವಪುರ ವಲಯದ ಹಿರಿಯ ಆರೋಗ್ಯ ಪರಿವೀಕ್ಷಕ ವಿಶ್ವನಾಥ್ ಅವರು ಆಯುಕ್ತರ ಆದೇಶಕ್ಕೂ ಕಿಮ್ಮತ್ತು ನೀಡದೆ ಬೇಜವಬ್ದಾರಿತನ ಪ್ರದರ್ಶಿಸಿರುವುದು ಕಂಡು ಬಂದಿದೆ. +ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..! +ವಿಶ್ವನಾಥ್ ಅವರ ಈ ಬೇಜವಬ್ದಾರಿತನವನ್ನು ಗಂಭೀರವಾಗಿ ಪರಿಗಣಿಸಿರುವ ಮಹದೇವಪುರ ವಲಯ ಜಂಟಿ ಆಯುಕ್ತರು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಆದೇಶದ ಮೇರೆಗೆ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡಿರುವ ವಿಶ್ವನಾಥ್ ಅವರಿಗೆ ಕೆಸಿಎಸ್‍ಆರ್ ನಿಯಮದಂತೆ ಜೀವಾನಾಧರ ಭತ್ಯೆ ನೀಡಬೇಕು ಹಾಗೂ ಅವರು ಕೇಂದ್ರ ಸ್ಥಾನಬಿಟ್ಟು ಬೇರೆಡೆಗೆ ತೆರಳದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ವೈದ್ಯಾಧಿಕಾರಿಗಳಿಗೆ ಜಂಟಿ ಆಯುಕ್ತರು ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_226_10.txt b/eesanje/url_46_226_10.txt new file mode 100644 index 0000000000000000000000000000000000000000..58a927b4bc2979b824bdc7f6381f96d90a7230b9 --- /dev/null +++ b/eesanje/url_46_226_10.txt @@ -0,0 +1,6 @@ +ಮಾರ್ವಾಡಿ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಅಸ್ಸಾಂ ವ್ಯಕ್ತಿ ವಶಕ್ಕೆ +ಬೆಂಗಳೂರು, ಫೆ.23- ಅಸ್ಸಾಂನಿಂದ ನಗರಕ್ಕೆ ರೈಲಿನಲ್ಲಿ ಬಂದು ಮಾರ್ವಾಡಿ ಮನೆಗಳಲ್ಲೇ ಕಳ್ಳತನ ಮಾಡಿ ವಾಪಸ್ ತನ್ನ ಊರಿಗೆ ಪರಾರಿಯಾಗುತ್ತಿದ್ದ ಅಸ್ಸಾಂ ಕಳ್ಳನನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಪತ್ತೆಹಚ್ಚಿ ಸುಮಾರು ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಈ ಆರೋಪಿಯು ನಗರದಲ್ಲಿ ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಅಸ್ಸಾಂನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಬಂದ ಹಣದಿಂದ ಕಾರು ಹಾಗೂ ಬಟ್ಟೆಗಳನ್ನು ಖರೀದಿಸಿ ವಿಲಾಸಿ ಜೀವನ ನಡೆಸುತ್ತಿದ್ದನು. +ನಗರದಲ್ಲಿನ ಮಾರ್ವಾಡಿ ಮನೆಗಳೇ ಈತ ಟಾರ್ಗೇಟ್. ಅಸ್ಸಾಂನಿಂದ ನಗರಕ್ಕೆ ರೈಲಿನಲ್ಲಿ ಬಂದು ಮೆಜೆಸ್ಟಿಕ್‍ನ ಲಾಡ್ಜ್‍ನಲ್ಲಿ ರೂಂ ಮಾಡಿ ರಾತ್ರಿ ಉಳಿದುಕೊಂಡು ಬೆಳಗಾಗುತ್ತಿದ್ದಂತೆ ಬೈಕ್‍ನಲ್ಲಿ ಸುತ್ತಾಡುತ್ತ ಬೀಗ ಹಾಕಿರುವ ಮಾರ್ವಾಡಿ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದನು. ಇತ್ತೀಚೆಗೆ ಶೇಷಾದ್ರಿಪುರಂನ ಮಾರ್ವಾಡಿ ಒಬ್ಬರ ಮನೆಯ ಕಿಟಕಿ ಮುರಿದು ಒಳನುಗ್ಗಿ ಸುಮಾರು 2.1 ಕೆಜಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಅಸ್ಸಾಂಗೆ ಪರಾರಿಯಾಗಿದ್ದನು. +ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸುಮಾರು 250ಕ್ಕೂ ಹೆಚ್ಚು ಸಿಸಿ ಟಿವಿಗಳನ್ನು ಪರಿಶೀಲಿಸಿ ಕೊನೆಗೂ ಆರೋಪಿಯನ್ನು ಪತ್ತೆಹಚ್ಚಿ ಅಸ್ಸಾಂಗೆ ಹೋಗಿ ಆತನನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದಿದ್ದಾರೆ. ಈ ಆರೋಪಿ ಈ ಮಾರ್ವಾಡಿ ಮನೆ ಕಳ್ಳತನ ಮಾಡುವ ಮೊದಲು ಅಂದೇ ಸದಾಶಿವನಗರದ ಮನೆಯಲ್ಲಿ ಕಳ್ಳತನ ಮಾಡಲು ನುಗ್ಗಿದ್ದಾಗ ಅಲ್ಲಿ ಏನೂ ಸಿಕ್ಕಿರಲಿಲ್ಲ. +ಇದೀಗ ಶೇಷಾದ್ರಿಪುರಂ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_226_11.txt b/eesanje/url_46_226_11.txt new file mode 100644 index 0000000000000000000000000000000000000000..c1be967d618c399e11b0893cbc9775e93ce33226 --- /dev/null +++ b/eesanje/url_46_226_11.txt @@ -0,0 +1,15 @@ +ವಿಧಾನಸಭೆಯಲ್ಲಿ ವಿಪಕ್ಷ ಧರಣಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ +ಬೆಂಗಳೂರು, ಫೆ.23- ಕರ್ನಾಟಕದ ಹಿತರಕ್ಷಣೆ ಮಾಡುವಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿ ವಿಧಾನಸಭೆಯಲ್ಲಿ ನಿನ್ನೆ ಕೈಗೊಂಡ ನಿರ್ಣಯವನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಆರಂಭಿಸಿರುವ ಧರಣಿಯನ್ನು ಸದನದಲ್ಲಿ ಇಂದೂ ಮುಂದುವರೆಸಿ ಗದ್ದಲ ಎಬ್ಬಿಸಿದ್ದರಿಂದ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. +ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆಗ ಅಶೋಕ್ ಮಾತನಾಡಿ, ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರದ ವಿರುದ್ಧ ಏಕಾಏಕಿ ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಣಯವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. +ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಳೆದ ಬಾರಿ ನಡೆದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಿದಂತೆ ಎಲ್ಲಾ ಮಸೂದೆಗಳನ್ನು ಅಂಗೀಕರಿಸಲು ಕಾರ್ಯಕಲಾಪ ನಡೆಸಲು ಸಹಕಾರ ನೀಡಿದ್ದೇವೆ. ಸಭಾಧ್ಯಕ್ಷರ ಸಲಹೆ ಮೇರೆಗೆ ಕಾರ್ಯ ಕಲಾಪ ಸುಗಮವಾಗಿ ನಡೆಯಲು ಸಮ್ಮತಿಸಿದ್ದೇವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕದ್ದುಮುಚ್ಚಿ ಮಾಡುವುದು ಏನಿತ್ತು ಎಂದು ಪ್ರಶ್ನಿಸಿದರು. +ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್ +ಕೇಂದ್ರ ಸರ್ಕಾರದ ವಿರುದ್ಧ ಸದನದ ಹೊರಗೆ ಮಾತನಾಡಬಹುದು. ಆದರೆ, ಸದನಲ್ಲಿ ನಿರ್ಣಯ ಮಂಡಿಸಲು ನಿಯಮಾವಳಿ ಪಾಲಿಸಬೇಕು. ನಿನ್ನೆ ತಂದಂತಹ ನಿರ್ಣಯ ಕಾರ್ಯಸೂಚಿಯಲ್ಲೂ ಇಲ್ಲ. ನಿಯಮಾವಳಿ ಪ್ರಕಾರ ಇಲ್ಲ. ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. +ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ನಿಯಮಾವಳಿಗಳನ್ನು ಗಾಳಿಗೆ ತೂರಿ ಸಂವಿಧಾನ ವಿರೋಧಿ ನಿರ್ಣಯ ಮಂಡಿಸಿದ್ದಾರೆ ಎಂದು ಟೀಕಿಸಿದರು. ಆಗ ಮಾತನಾಡಿದ ಎಚ್.ಕೆ.ಪಾಟೀಲ್ ಅವರು, ಕರ್ನಾಟಕದ ಹಿತ ರಕ್ಷಣೆ ಮಾಡುವ ಅಂಶಗಳು ನಿರ್ಣಯದಲ್ಲಿವೆ. ಕೇಂದ್ರದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನಷ್ಟೇ ಹೇಳಿದ್ದೇವೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ನಾಡಿನ ಏಳು ಕೋಟಿ ಜನರ ಮತ್ತು ಸದನದ ಒಕ್ಕೊರಲ ಧ್ವನಿ ಇದರಲ್ಲಿ ಅಡಗಿದೆ ಎಂದು ಸಮರ್ಥಿಸಿಕೊಂಡರು. +ಬಿಜೆಪಿ ಶಾಸಕರು ಮಾಡಿದ ಆರೋಪವನ್ನು ತಳ್ಳಿ ಹಾಕಿದರಲ್ಲದೆ, ಧರಣಿ ನಡೆಸುತ್ತಿರುವ ಪ್ರತಿಪಕ್ಷಗಳ ಶಾಸಕರ ಧೋರಣೆಯನ್ನು ಖಂಡಿಸಿದರು. ಜೊತೆಗೆ ನಿರ್ಣಯ ಮಂಡಿಸಲು ನಿಮ್ಮ ಪರವಾನಗಿ ತೆಗೆದುಕೊಳ್ಳಬೇಕಿಲ್ಲ ಎಂದು ತಿರುಗೇಟು ನೀಡಿದರು. ಕಾಯ್ದೆ, ಕಾನೂನು ಮತ್ತು ನಿಯಮಾವಳಿ ಪ್ರಕಾರವೇ ನಿರ್ಣಯ ಮಂಡಿಸಿದ್ದೇವೆ. ಕರ್ನಾಟಕದ ಹಿತರಕ್ಷಣೆಗೆ ಸಂಬಂಧಿಸಿದ ಅಂಶಗಳು ನಿರ್ಣಯದಲ್ಲಿವೆ. ಅನ್ಯಾಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಂಕಿ-ಅಂಶಗಳ ಸಹಿತ ಮಂಡನೆ ಮಾಡಿ ಅನುಮೋದನೆ ಪಡೆದಿದ್ದೇವೆ. ನಿಮಗೆ ರಾಜಕೀಯ ಬೇಕೋ? ಜನರ ಹಿತರಕ್ಷಣೆ ಬೇಕೋ ಎಂಬುದನ್ನು ನೀವೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು. +ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ದನಿಗೂಡಿಸಿ ನಿಮ್ಮ ಸರ್ಕಾರ ಇz್ದದ್ದಾಗ ಗೋಹತ್ಯೆ ನಿಷೇಧ ಕಾನೂನು ಸೇರಿದಂತೆ ಏನೆಲ್ಲೇ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬುದು ನಮಗೂ ಗೊತ್ತಿಗೆ. ಆಗ ನೀವು ಯಾವ ನಿಯಮಾವಳಿಯನ್ನು ಪಾಲಿಸಿದ್ದೀರಿ ಎಂದು ಪ್ರಶ್ನಿಸಿದ್ದಲ್ಲದೆ ನೀವು ನಮಗೆ ಪಾಠ ಮಾಡಲು ಬರಬೇಡಿ ಎಂದರು.ಮತ್ತೆ ಅಶೋಕ್ ಮಾತನಾಡಿ, ಕೇಂದ್ರವನ್ನು ಟೀಕಿಸಲು ಗ್ರಾಮ ಪಂಚಾಯ್ತಿ, ಜಿಲ್ಲೆ ಪಂಚಾಯ್ತಿ, ಲೋಕಸಭೆ, ವಿಧಾನಸಭೆ ಇದೆ. ಲೋಕಸಭೆಯಲ್ಲಿ ನಿಮ್ಮ ಸಂಸದರು ಏನು ಮಾಡುತ್ತಿದ್ದಾರೆ? ಅಲ್ಲಿ ಮಾತನಾಡುವ ಧೈರ್ಯವಿಲ್ಲದೆ, ಬಾಯಿ ಮುಚ್ಚಿಕೊಂಡಿದ್ದಾರೆ ಎಂದಾಗ ಕಾಂಗ್ರೆಸ್ ಶಾಸಕರು ನಿಮ್ಮ ಸಂಸದರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. +ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕೇಂದ್ರ ಮತ್ತು ರಾಜ್ಯದ ನಡುವೆ ಅನುದಾನ ಹಂಚಿಕೆ, ಅಧಿಕಾರಕ್ಕೆ ಸಂಬಂಧಿಸಿದಂತೆ ಕಳೆದ 75 ವರ್ಷಗಳಿಂದಲೂ ಚರ್ಚೆ ನಡೆಸಲಾಗುತ್ತಿದೆ. ಒಟ್ಟು55 ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಆಡಳಿತ ನಡಸಿವೆ ಎಂದು ಹೇಳುತ್ತಿದ್ದರು.ಪ್ರತಿಯಾಗಿ ಆಡಳಿತ ಪಕ್ಷದ ಶಾಸಕರು ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸದನದಲ್ಲಿ ಕಾವೇರಿದ ವಾತಾವರಣ ಉಂಟಾಯಿತು. ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ನಡುವೆ ವಾಗ್ವಾದ ನಡೆದು ಇಡೀ ಸದನ ಗೊಂದಲದ ಗೂಡಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಕಲಾಪವನ್ನು ಕೆಲ ಕಾಲ ಮುಂದೂಡಿದರು. +ಮತ್ತೆ ಸದನ ಸಮಾವೇಶಗೊಂಡಾಗ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿದರು. ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ ಸೇರಿದಂತೆ ಸಾಕಷ್ಟು ಮಹತ್ವದ ವಿಚಾರಗಳಿವೆ. ಕಾರ್ಯಕಲಾಪಗಳ ಪಟ್ಟಿ ಪ್ರಕಾರ ಸದನ ನಡೆಸಬೇಕು ಎಂದು ಕೋರಿದರು. ಆಗ ಅಶೋಕ್ ಮಾತನಾಡಿ, ಸದನದ ಕಾರ್ಯಕಲಾಪಗಳನ್ನು ನಡೆಸಲು ನಾವು ಸಹಕರಿಸುತ್ತೇವೆ. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಏಕಾಏಕಿ ಮಂಡನೆ ಮಾಡಿ ಅಂಗೀಕರಿಸಿರುವ ನಿರ್ಣಯವನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ನಮಗೂ ನಿರ್ಣಯ ಮಂಡನೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನಲ್ಲಿ ಕಾವೇರಿದ ವಾತಾವರಣ ಉಂಟಾಯಿತು. ಪ್ರತಿಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸಭಾಧ್ಯಕ್ಷರು ಕಾರ್ಯಕಲಾಪ ನಡೆಸಲು ಸಹಕರಿಸುವಂತೆ ಮನವಿ ಮಾಡಿದರು. ಆಗಲೂ ಗದ್ದಲ ಮುಂದುವರೆಯಿತು.ಗದ್ದಲದ ನಡುವೆ ಸಭಾಧ್ಯಕ್ಷರು ಕಾರ್ಯದರ್ಶಿಯವರ ವರದಿ ಮಂಡನೆ ಹಾಗೂ ಸಭೆಯ ಮುಂದಿಡಲಾಗುವ ಕಾಗದ ಪತ್ರಗಳ ಮಂಡನೆಗೆ ಅವಕಾಶ ನೀಡಿ ಶಾಸನ ರಚನಾ ಕಲಾಪ ಕೈಗೆತ್ತಿಕೊಂಡು ವಿಧೇಯಕ ಮಂಡನೆ ಹಾಗೂ ಅನುಮೋದನೆಗೆ ಅವಕಾಶ ಕಲ್ಪಿಸಿದರು. +ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ +ಗದ್ದಲ-ಗೊಂದಲದ ನಡುವೆಯೂ ಅಶೋಕ್ ಅವರು ಸಿದ್ಧಪಡಿಸಿದ ನಿರ್ಣಯವನ್ನು ಮಂಡಿಸಿದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ(ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾದರು. +ನಂತರ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, 2024ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನುಮಂಡಿಸಿ ಅನುಮೋದನೆ ಪಡೆದರು. ಬಳಿಕ ಸಭಾಧ್ಯಕ್ಷರು ವಿಧಾನ ಪರಿಷತ್ತಿನಿಂದ ಅನುಮೋದನೆಗೊಂಡಿರುವ 7 ವಿಧೇಯಕಗಳ ಮಾಹಿತಿಯನ್ನು ಸದನದ ಮುಂದಿಟ್ಟರು. ಆ ನಂತರ ಸದನಲ್ಲಿ ಗೊಂದಲದ ವಾತಾವರಣ ತಿಳಿಯಾಗುವ ಸೂಚನೆಗಳು ಕಂಡುಬರದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು. \ No newline at end of file diff --git a/eesanje/url_46_226_12.txt b/eesanje/url_46_226_12.txt new file mode 100644 index 0000000000000000000000000000000000000000..4099a2cc2f4c3dc4f33af7a8a9d772e58dcad737 --- /dev/null +++ b/eesanje/url_46_226_12.txt @@ -0,0 +1,7 @@ +ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ +ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು ಜಾಗದ ಅಭಾವ ಇರುವ ಕಾರಣ ಈ ಸ್ಥಳದಲ್ಲಿ ದಿನಕ್ಕೆ 30 ರೂ. ನೀಡಿ ರಾತ್ರಿ ವೇಳೆ ತಮ್ಮ ವಾಹನಗಳನ್ನು ನಿಲ್ಲಿಸುತ್ತಿದ್ದರು. +ನಿನ್ನೆ ಈ ಸ್ಥಳದಲ್ಲಿ ಸುಮಾರು 30-35 ವಾಹನಗಳನ್ನು ನಿಲುಗಡೆ ಮಾಡಲಾಗಿತ್ತು. ಇಂದು ಮುಂಜಾನೆ 1.30ರ ಸುಮಾರಿನಲ್ಲಿ ಈ ಪ್ಲಾಸ್ಟಿಕ್ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.ಬೆಂಕಿಯ ಕೆನ್ನಾಲಿಗೆ ಪಾರ್ಕಿಂಗ್ ಸ್ಥಳದಲ್ಲಿದ್ದ ಪ್ರಯಾಣಿಕರ ಆಟೋಗಳು, ಗೂಡ್ಸ್‍ವಾಹನ, ವ್ಯಾನ್‍ಗೂ ವ್ಯಾಪಿಸಿದ್ದರಿಂದ ನೋಡನೋಡುತ್ತಿದ್ದಂತೆ ಎಲ್ಲಾ ವಾಹನಗಳು ಹೊತ್ತಿ ಉರಿಯುತ್ತಿದ್ದವು. +ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್ +ತಕ್ಷಣ ಸುದ್ದಿ ತಿಳಿದ ಏಳು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಟ್ಟು ಇಂದು ಬೆಳಗ್ಗೆ 8 ಗಂಟೆವರೆಗೂ ಸತತ ಪ್ರಯತ್ನದಿಂದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಸ್ಥಳದಲ್ಲಿ ಪ್ರಯಾಣಿಕರ ಆಟೋಗಳು, ಲಗೇಜ್ ಆಟೋಗಳು ಹಾಗೂ ಬಟ್ಟೆ ವ್ಯಾಪಾರಿಗಳ ವಾಹನಗಳನ್ನು ನಿಲ್ಲಿಸಲಾಗಿತ್ತು. +ಜೀವನೋಪಾಯಕ್ಕಾಗಿ ತಮ್ಮ ವೃತ್ತಿಗನುಸಾರವಾಗಿ ಇಟ್ಟುಕೊಂಡಿದ್ದ ವಾಹನಗಳನ್ನು ಕಳೆದುಕೊಂಡಿರುವ ಚಾಲಕರು ಕಣ್ಣೀರು ಹಾಕಿದ್ದಾರೆ. ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್‍ಸಕ್ಯೂರ್ಟ್‍ನಿಂದ ಬೆಂಕಿ ಹತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. \ No newline at end of file diff --git a/eesanje/url_46_226_2.txt b/eesanje/url_46_226_2.txt new file mode 100644 index 0000000000000000000000000000000000000000..aea7ca555fb95e2495eb6d9493c008705ac0de35 --- /dev/null +++ b/eesanje/url_46_226_2.txt @@ -0,0 +1,7 @@ +ಸಚಿವರಿಗೆ ಡಿಸಿಎಂ ಡಿಕೆಶಿ ಭೋಜನಕೂಟ +ಬೆಂಗಳೂರು,ಫೆ.24- ಲೋಕಸಭೆ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಬಲಾಬಲ ಕ್ರೋಡೀಕರಣಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಡರಾತ್ರಿ ಸದಾಶಿವನಗರದ ಮನೆಯಲ್ಲಿ ಸಂಪುಟದ ಸಚಿವರ ಜೊತೆ ಭೋಜನಕೂಟ ಏರ್ಪಡಿಸಿ ಚರ್ಚೆ ನಡೆಸಿದ್ದಾರೆ. 8 ಜನ ಸಚಿವರನ್ನುಹೊರತುಪಡಿಸಿದರೆ ಉಳಿದ ಎಲ್ಲರೂ ನಿನ್ನೆಯ ಭೋಜನಕೂಟದಲ್ಲಿ ಭಾಗವಹಿ ಸಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆಯಾಗಿದೆ. +ಕೆಲವು ಕ್ಷೇತ್ರಗಳಲ್ಲಿ 2-3 ಕ್ಕಿಂತಲೂ ಹೆಚ್ಚಿನ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಅವರ ನಡುವೆ ಚರ್ಚೆ ನಡೆಸಿ ಯಾವುದೇ ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಸೌಹಾರ್ದಯುತವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಪ್ರಮುಖ ವಿಚಾರವಾಗಿ ಚರ್ಚೆಯಾಗಿದೆ. ಜೊತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆಗಳಾಗಿವೆ. +ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಹೊಣೆಗಾರಿಕೆ ಒಪ್ಪಿಕೊಳ್ಳಬೇಕು. ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲದೆ, ರಾಷ್ಟ್ರಮಟ್ಟದಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಶ್ರಮಿಸಬೇಕಿದೆ. ಹೀಗಾಗಿ ಹೈಕಮಾಂಡ್‍ನ ಸಂದೇಶದನುಸಾರ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು. ಆಂತರಿಕವಾಗಿ ಸಣ್ಣಪುಟ್ಟ ಭಿನ್ನಮತಗಳಿದ್ದರೂ ಅದರ ಬಗ್ಗೆ ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ನೀಡಲಾಗಿದೆ. +ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..! +ಜಿಲ್ಲಾ ನಾಯಕರುಗಳ ನಡುವೆ ಹೊಂದಾಣಿಕೆ ಮೂಡಿಸುವುದು ಉಸ್ತುವಾರಿ ಸಚಿವರ ಜವಾಬ್ದಾರಿ. ಈಗಾಗಲೇ ನಿಗಮ ಮಂಡಳಿಗಳ ನೇಮಕಾತಿಯಿಂದಾಗಿ ಶಾಸಕರ ನಡುವಿನ ಅಸಮಾಧಾನವನ್ನು ಸರಿಪಡಿಸಲಾಗಿದೆ. ಕಾರ್ಯಕರ್ತರ ನಿಗಮ ಮಂಡಳಿ ನೇಮಕಾತಿಗೆ ಸಚಿವರು ಶೀಘ್ರವೇ ಪಟ್ಟಿಯನ್ನು ರವಾನಿಸಬೇಕು ಮತ್ತು ಕೆಳಹಂತದ ಸಮಿತಿಗಳ ನೇಮಕಾತಿಗೂ ಕಾರ್ಯಕರ್ತರ ಹೆಸರುಗಳನ್ನು ಸೂಚಿಸಬೇಕೆಂದು ನಿನ್ನೆಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸಚಿವರಿಗೆ ಸೂಚನೆ ನೀಡಿದ್ದಾರೆ. +ಬಿಜೆಪಿ ಅನುಸರಿಸುತ್ತಿರುವ ರಾಜಕೀಯ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸುವುದು ಅತ್ಯಗತ್ಯ. ಸುಳ್ಳು ಮತ್ತು ಭಾವನಾತ್ಮಕ ರಾಜಕಾರಣಕ್ಕೆ ಎಲ್ಲಾ ಸಚಿವರೂ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಲಹೆ ಕೊಡಲಾಗಿದೆ. ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ ಸಭೆಯಲ್ಲಿ ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಕೂಡ ಔತಣಕೂಟದಲ್ಲಿ ಉಪಸ್ಥಿತರಿದ್ದರು. ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ, ಎಸ್.ಎಸ್.ಮಲ್ಲಿಕಾರ್ಜುನ್, ರಹೀಂ ಖಾನ್, ಭೈರತಿ ಸುರೇಶ್, ಕೃಷ್ಣಭೈರೇಗೌಡ ಸೇರಿದಂತೆ ಕೆಲವು ಸಚಿವರ ಗೈರು ಹಾಜರಿ ಎದ್ದುಕಾಣುತ್ತಿತ್ತು. \ No newline at end of file diff --git a/eesanje/url_46_226_3.txt b/eesanje/url_46_226_3.txt new file mode 100644 index 0000000000000000000000000000000000000000..9a73c668a2488cff507b241ae851d74da16fe2d7 --- /dev/null +++ b/eesanje/url_46_226_3.txt @@ -0,0 +1,10 @@ +ರಾಜ್ಯಸರ್ಕಾರ ಬೆದರಿಸಲು ಪ್ರಕರಣ ದಾಖಲಿಸಿದೆ : ಕುಪೇಂದ್ರರೆಡ್ಡಿ +ಬೆಂಗಳೂರು,ಫೆ.24- ಪ್ರಜಾಪ್ರಭುತ್ವದಲ್ಲಿ ಯಾರು, ಯಾರನ್ನು ಬೇಕಾದರೂ ಭೇಟಿ ಮಾಡಿ ಮತ ಕೇಳುವ ಅವಕಾಶಗಳಿವೆ. ತಮ್ಮನ್ನು ಬೆದರಿಸಲು ರಾಜ್ಯಸರ್ಕಾರ ದುರುದ್ದೇಶಪೂರ್ವಕವಾಗಿ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ಪ್ರಕರಣ ದಾಖಲಿಸಿದೆ ಎಂದು ರಾಜ್ಯಸಭಾ ಚುನಾವಣೆಯ ಎನ್‍ಡಿಎ ಅಭ್ಯರ್ಥಿ ಕುಪೇಂದ್ರರೆಡ್ಡಿ ಆರೋಪಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು ನೀಡಿರುವುದು ಮತ್ತು ಕೇಸು ದಾಖಲಿಸುವ ಕ್ರಮ ಕೂಡ ಕ್ರಮಬದ್ಧವಾಗಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ದೂರು ನೀಡಿದ್ದಾರೆ. ಅದರಲ್ಲಿ ಫೆ.22 ರಂದು ನಡೆಯಲಿರುವ ಚುನಾವಣೆಯಲ್ಲಿ ಎಂದು ನಮೂದಿಸಲಾಗಿದೆ. ರಾಜ್ಯಸಭೆ ಚುನಾವಣೆಯಿರುವುದು ಫೆ.27 ರಂದು. 22 ರಂದು ಯಾವ ಚುನಾವಣೆ ನಡೆಯಲಿದೆ ಎಂಬ ಬಗ್ಗೆ ನನಗಂತೂ ಮಾಹಿತಿ ಇಲ್ಲ. ಆತುರಾತುರವಾಗಿ ದೂರು ಕೊಡುವಾಗ ಈ ರೀತಿಯ ಲೋಪಗಳು ಕಂಡುಬಂದಿವೆ. +ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ +ವಾಸ್ತವವಾಗಿ ಚುನಾವಣೆಗೆ ಸಂಬಂಧಪಟ್ಟಂತೆ ಯಾವುದೇ ತಕರಾರುಗಳಿದ್ದರೂ ಅದನ್ನು ಆಯೋಗಕ್ಕೆ ಲಿಖಿತವಾಗಿ ತಿಳಿಸಬೇಕು. ಆಯೋಗ ಪೊಲೀಸ್ ಆಯುಕ್ತರಿಗೆ ದೂರನ್ನು ರವಾನಿಸುತ್ತಲಿದೆ. ಆಯುಕ್ತರು ಪರಿಶೀಲನೆ ನಡೆಸಿ ಮೇಲ್ನೋಟಕ್ಕೆ ಸತ್ಯಾಂಶ ಕಂಡುಬಂದಿದ್ದರೆ ಮ್ಯಾಜಿಸ್ಟ್ರೇಟ್‍ರ ಅನುಮತಿ ಪಡೆದು ಪ್ರಕರಣ ದಾಖಲಿಸಬೇಕು. ಆದರೆ ಇಲ್ಲಿ ಏಕಾಏಕಿ ಶಾಸಕರು ದೂರು ನೀಡುತ್ತಾರೆ. ಸೆಕ್ಷನ್ 506 ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಇದು ಸಂಪೂರ್ಣ ನಿಯಮ ಬಾಹಿರವಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದರು. +ನನ್ನನ್ನು ಬೆದರಿಸುವ ಸಲುವಾಗಿಯೇ ಪ್ರಕರಣ ದಾಖಲಿಸಲಾಗಿದೆ. ಒಮ್ಮೆ ರಾಜ್ಯಸಭಾ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದ್ದೇನೆ. ನೆಲದ ಕಾನೂನಿನ ಅರಿವು ನನಗೂ ಇದೆ. ಇಂತಹ ಬೆದರಿಕೆಯ ತಂತ್ರಗಳಿಗೆ ನಾನು ಬಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಮತ ಕೇಳಲು ಎಲ್ಲರಿಗೂ ಅವಕಾಶಗಳಿವೆ. ಯಾರು, ಯಾರನ್ನು ಬೇಕಾದರೂ ತಮಗೆ ಮತ ನೀಡುವಂತೆ ಮನವಿ ಮಾಡಬಹುದು. +ಒಂದು ವೇಳೆ ಈ ರೀತಿ ಮತ ಕೇಳಿದ್ದಕ್ಕೆಲ್ಲಾ ಪ್ರಕರಣ ದಾಖಲಿಸುತ್ತಾ ಹೋದರೆ ಮುಂದಿನ ದಿನಗಳಲ್ಲಿ ಚುನಾವಣೆ ಮತ್ತು ರಾಜಕೀಯ ಬೇರೆಯದೇ ಸ್ವರೂಪವನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದರು. ನನಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಇದೆ. ಈ ಹಿಂದೆ ನಾನು ಸ್ರ್ಪಧಿಸಿದ್ದಾಗ ಇದೇ ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಶಾಸಕರನ್ನು ಸೆಳೆದುಕೊಂಡು ಅಡ್ಡ ಮತದಾನ ಮಾಡಿಸಿ ನನ್ನನ್ನು ಸೋಲಿಸಿದರು. ಮತ್ತೊಂದು ಬಾರಿ ಜೆಡಿಎಸ್‍ನ ಆರೇಳು ಶಾಸಕರನ್ನು ಕಾಂಗ್ರೆಸಿಗರು ಸೆಳೆದುಕೊಂಡಿದ್ದರು. ಅದನ್ನು ಶಾಸಕರ ಖರೀದಿ ಎಂದು ಹೇಳಲು ಸಾಧ್ಯವೇ ಎಂದು ಕುಪೇಂದ್ರರೆಡ್ಡಿ ಪ್ರಶ್ನಿಸಿದರು. +ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..! +ನಾನು ಈ ಬಾರಿ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲೇ ಸ್ಪರ್ಧೆ ಮಾಡಿದ್ದೇನೆ. ಸೋಲು-ಗೆಲುವು ಅನಂತರದ ವಿಚಾರ. ಈ ಬಾರಿಯೂ ಸೋಲಿಸುವುದಾದರೆ ಸೋಲಿಸಲಿ ಎಂದು ಹೇಳಿದ ಕುಪೇಂದ್ರರೆಡ್ಡಿಯವರು, ಕಾಂಗ್ರೆಸ್‍ನಲ್ಲೂ ನನಗೆ ಬಹಳಷ್ಟು ಸ್ನೇಹಿತರಿದ್ದಾರೆ. ಅವರಿಂದ ನಾನು ಆತ್ಮಸಾಕ್ಷಿ ಮತ ಕೇಳುತ್ತೇನೆ ಎಂದು ಹೇಳಿದರು. +ಹಿನ್ನೆಲೆ: ರಾಜ್ಯಸಭೆ ಚುನಾವಣೆಯಲ್ಲಿ 4 ಸ್ಥಾನಗಳನ್ನು ಮಾತ್ರ ಗೆಲ್ಲಲು ಅವಕಾಶವಿದ್ದು, ಜೆಡಿಎಸ್-ಬಿಜೆಪಿ ಜಂಟಿಯಾಗಿ ಕುಪೇಂದ್ರರೆಡ್ಡಿಯವರನ್ನು 5ನೇ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿವೆ. ಕಾಂಗ್ರೆಸ್‍ನ ಶಾಸಕ ಗಣಿಗ ರವಿಕುಮಾರ್ ವಿಧಾನಸೌದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂಖ್ಯಾಬಲದ ಕೊರತೆಯಿದ್ದರೂ ಕುಪೇಂದ್ರರೆಡ್ಡಿಯವರು ಪಕ್ಷೇತರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೇರಿದಂತೆ ಹಲವು ಶಾಸಕರನ್ನು ಸಂಪರ್ಕಿಸಿ ಆಮಿಷವೊಡ್ಡುತ್ತಿದ್ದು, ಅಡ್ಡ ಮತದಾನಕ್ಕೆ ಪ್ರೇರೇಪಿಸುತ್ತಿದ್ದಾರೆ ಎಂದು ದೂರಿದ್ದಾರೆ. ಇದರ ಆಧಾರದ ಮೇಲೆ ಪ್ರಕರಣವೂ ದಾಖಲಾಗಿದೆ. \ No newline at end of file diff --git a/eesanje/url_46_226_4.txt b/eesanje/url_46_226_4.txt new file mode 100644 index 0000000000000000000000000000000000000000..b7c30bf74bde42fd1e1e46fcb36bae80d3eb6d6d --- /dev/null +++ b/eesanje/url_46_226_4.txt @@ -0,0 +1,8 @@ +ಮಂಡ್ಯ ಕ್ಷೇತ್ರದಿಂದ ಸುಮಲತಾ ಕಣಕ್ಕೆ ಇಳಿಯುವುದು ಫಿಕ್ಸ್..! +ಬೆಂಗಳೂರು,ಫೆ.24- ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ರ್ಪಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ ಬೆನ್ನಲ್ಲೇ ಜೆಡಿಎಸ್-ಬಿಜೆಪಿ ಮೈತ್ರಿಗೆ ಠಕ್ಕರ್ ನೀಡುವ ಬೆಳವಣಿಗೆಗಳು ಕಂಡುಬರುತ್ತಿವೆ.ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಬಳಿಕ ಮಂಡ್ಯ ಸೇರಿದಂತೆ 3 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲಾಗುತ್ತದೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಮಲತಾ ಅಂಬರೀಶ್, ತಾವು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸುವುದಾಗಿ ಹೇಳಿದ್ದಾರೆ. +ಜೆಡಿಎಸ್-ಬಿಜೆಪಿ ನಡುವೆ ಸ್ಥಾನ ಹೊಂದಾಣಿಕೆಯ ಬಗ್ಗೆ ಕೇಳಿಬರುತ್ತಿರುವ ಚರ್ಚೆಗಳು ಯಾವುದೂ ಖಚಿತವಾಗಿಲ್ಲ. ಎಲ್ಲವೂ ಅಂತೆಕಂತೆ ಸ್ವರೂಪದಲ್ಲಿವೆ. ಅಕೃತ ಘೋಷಣೆವರೆಗೂ ಎಲ್ಲವೂ ವದಂತಿಗಳು ಮಾತ್ರಎಂದಿದ್ದಾರೆ. ನಾನು ಸ್ರ್ಪಧಿಸಲು ಹಲವು ಆಯ್ಕೆಗಳಿವೆ. ನಾನು ಎಲ್ಲಿ ನಿಲ್ಲಬೇಕು, ಯಾವ ರೂಪದಲ್ಲಿ ಟಿಕೆಟ್ ಪಡೆದುಕೊಳ್ಳಬೇಕು ಎಂಬುದೇ ಆಗಿದ್ದರೆ ಹಲವು ಸುಲಭ ಮಾರ್ಗಗಳಿವೆ. ಆದರೆ ಇಲ್ಲಿ ಪ್ರಮುಖ ಪ್ರಶ್ನೆ ಇರುವುದು ಮಂಡ್ಯದಲ್ಲಿ ಬಿಜೆಪಿ ಬೆಳವಣಿಗೆಗಾಗಿ ಪಕ್ಷವನ್ನು ಪ್ರಭಲವಾಗಿ ಕಟ್ಟಲು ನಾನು ಟಿಕೆಟ್ ಕೇಳುತ್ತಿದ್ದೇನೆ. ನನಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸದಲ್ಲಿ ಕೊನೆ ಕ್ಷಣದವರೆಗೂ ಇರುತ್ತೇನೆ. ಹೈಕಮಾಂಡ್ ಕೂಡ ಮಂಡ್ಯವನ್ನು ಬಿಜೆಪಿಗೆ ಉಳಿಸಿಕೊಡಲಿದೆ ಎಂಬ ವಿಶ್ವಾಸವಿದೆ ಎಂದರು. +ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ +ಈ ನಡುವೆ ಸುಮಲತಾ ಅಂಬರೀಶ್ ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದು, ಚುನಾವಣೆ ಸ್ಪರ್ಧೆ ಬಗ್ಗೆ ಸ್ಪಷ್ಟ ನಿಲುವು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅಂಬರೀಶ್‍ರವರ ಬೆಂಬಲಿಗ ಶಶಿ, ಕಳೆದ 5 ವರ್ಷಗಳಿಂದ ಮಂಡ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಹೈಕಮಾಂಡ್ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‍ರವರಿಗೇ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು. +ಇತ್ತೀಚೆಗೆ ಸುಮಲತಾ ಅಂಬರೀಶ್‍ರವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದಾಗ ನೀಡಿದ ಭರವಸೆ ಪ್ರಕಾರ ಮಂಡ್ಯವನ್ನು ಬಿಜೆಪಿ ತನ್ನಲ್ಲೇ ಉಳಿಸಿಕೊಳ್ಳಲಿದೆ ಎಂಬ ನಿರೀಕ್ಷೆಗಳಿವೆ ಎಂದು ಹೇಳಿದರು. ಸುಮಲತಾ ಅಂಬರೀಶ್‍ರವರು ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದವರು. ಅವರನ್ನು ರಾಜಕೀಯದಲ್ಲೇ ಉಳಿಸಿಕೊಳ್ಳಬೇಕು ಎಂಬುದು ನಮ್ಮೆಲ್ಲರ ಆಶಾಭಾವನೆ. ಒಂದು ವೇಳೆ ಬಿಜೆಪಿ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳದೇ ಹೋದರೆ ಪ್ಲಾನ್ ಬಿ ಸಿದ್ಧವಿದೆ. ಏನೇ ಆದರೂ ಸುಮಲತಾ ಅಂಬರೀಶ್ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಂತೂ ಇದ್ದೇ ಇರುತ್ತಾರೆ. +ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ +ಈ ಹಿಂದೆ 2019 ರಲ್ಲಿ ಸುಮಲತಾ ಅಂಬರೀಶ್‍ರವರಿಗೆ ಯಾವ ಪಕ್ಷವೂ ಟಿಕೆಟ್ ನೀಡಲಿಲ್ಲ. ಪಕ್ಷೇತರವಾಗಿ ಸ್ರ್ಪಸಿದ ಅವರಿಗೆ ಜನ ಬೆಂಬಲ ನೀಡಿ ಗೆಲ್ಲಿಸಿದ್ದಾರೆ. ಈ ಬಾರಿ ಕೂಡ ಜನಬೆಂಬಲ ದೊರೆಯುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_46_226_5.txt b/eesanje/url_46_226_5.txt new file mode 100644 index 0000000000000000000000000000000000000000..f58721bf46f8a03a8980e9cd99adb9eeece69b26 --- /dev/null +++ b/eesanje/url_46_226_5.txt @@ -0,0 +1,7 @@ +ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿಎಂ ಬಳಿ ಹಣವಿಲ್ಲ: ಅನಂತಕುಮಾರ್ ಹೆಗಡೆ +ಕಾರವಾರ ಫೆ.24: ರಾಜ್ಯ ಸರ್ಕಾರ ದಿವಾಳಿಯಾಗಿದ್ದು ,ರಾಜ್ಯ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಾಗ್ದಾಳಿ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳಿಗೆ, ಶಾಸಕರಿಗೆ ಅನುದಾನ ಕೊಡಲು ಹಣ ಇಲ್ಲ ಅಂತಾರೆ. ಹಿಂದುಳಿದವರು, ಎಸ್‍ಸಿ, ಎಸ್‍ಟಿ ವರ್ಗದವರಿಗೆ ನೀಡಿದ್ದ 11 ಸಾವಿರ ಕೋಟಿ ರೂ. ನಾಪತ್ತೆಯಾಗಿದೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ. +ರಾಜ್ಯ ಲೂಟಿ ಹೊಡೆದು, ದಿವಾಳಿ ಮಾಡಿ, ಮತ ಪಡೆಯಲು ಹೊರಟಿದ್ದಾರೆ. ಇಂತಹ ದರಿದ್ರ ಸರ್ಕಾರ ನಾನೆಲ್ಲೂ ನೋಡಿಲ್ಲ. ನಮಗೆ ಕೇಂದ್ರ ಸರ್ಕಾರ ತೆರಿಗೆ ಹಣ ಕೊಟ್ಟಿಲ್ಲವೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ತಮಿಳುನಾಡು, ಆಂಧ್ರ, ಕೇರಳಕ್ಕೆ ಇಲ್ಲದ ವೇದನೆ ಇವರಿಗೆ ಏಕೆ?ಅವರಿಗೆ ಎಲ್ಲವೂ ಸರಿಹೋಗುತ್ತಿದೆ. ಸಿದ್ದರಾಮುಲ್ಲ ಖಾನ್‍ಗೆ ಏಕೆ ತೊಂದರೆ? ಎಂದು ಪ್ರಶ್ನಿಸಿದ್ದಾರೆ. +ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ +ಶೇ ಶೇ.99 ರಷ್ಟು ಹಿಂದೂಗಳು ತೆರಿಗೆ ಕಟ್ಟುತ್ತಾರೆ. ನಮ್ಮ ಹಣ ತೆಗೆದುಕೊಂಡು ಹೋಗಿ ಮಸೀದಿ, ಚರ್ಚ್‍ಗೆ ಏಕೆ ನೀಡಿದ್ದೀರಿ? ನಮ್ಮ ತೆರಿಗೆ ಹಣ ನಮಗೆ ನೀಡಿ. ರಾಜ್ಯದ ದೇವಸ್ಥಾನಗಳ ಜೀರ್ಣೂದಾರಕ್ಕೆ ಹಣ ನೀಡಲು ಸರ್ಕಾರದಲ್ಲಿ ದುಡ್ಡಿಲ್ಲ. ಆದರೆ ಮಸೀದಿಗೆ ಕೊಡಲು ರಾಜ್ಯ ಸರ್ಕಾರದ ಬಳಿ ದುಡ್ಡಿದೆ ಎಂದು ಕಿಡಿಕಾರಿದರು.ಹಿಂದೂಗಳು ಕಟ್ಟಿರುವ ತೆರಿಗೆ ಹಣದಿಂದ ರಾಜ್ಯ ಸರ್ಕಾರ ನಡೆಯುತ್ತಿದೆ. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಅಂತಾ ನಾವು ಕುಳಿತರೇ ಸ್ಥಿತಿ ಏನಾಗುತ್ತೆ? ಸಣ್ಣಬುದ್ಧಿ ಮಾಡಲ್ಲ, ಹಿಂದೂ ಸಮಾಜದ ಬಗ್ಗೆ ಹೇಳುವವರು, ಕೇಳುವವರು ಇಲ್ಲವಾ? ಎಂದು ಪ್ರಶ್ನಿಸಿದರು. +ನರೇಂದ್ರ ಮೋದಿಗೆ ವೋಟು ಕೊಡುವವರು ಧರ್ಮಕ್ಕಾಗಿ ಕೊಡುತ್ತಾರೆ. ಒಂದು ಸಾವಿರ ವರ್ಷದಿಂದ ನಮ್ಮ ಮೇಲೆ ಯಾರು ದಬ್ಬಾಳಿಕೆ ನಡೆಸುತ್ತಿದ್ದರೂ, ಅದಕ್ಕೆ ಪ್ರತಿಯಾಗಿ ರಾಮಮಂದಿರ ಕಟ್ಟಿ ನಿಲ್ಲಿಸಿದ್ದೇವೆ. ಪಂಜಾಬ್ ಗಡಿತಲ್ಲಿ ರೈತರ ಹೆಸರಿನಲ್ಲಿ ಖಲಿಸ್ತಾನಿಗಳು ಗಲಾಟೆ ಮಾಡುತ್ತಾರೆ. ಇಡೀ ದೇಶದಲ್ಲಿ ಇಲ್ಲದಿರುವ ಗಲಾಟೆ, ಅನ್ಯಾಯ ಅವರಿಗೇನಾಗಿದೆ? ರೈತರ ಹೋರಾಟವಲ್ಲ, ಖಲಿಸ್ತಾನಿಗಳ ಹೋರಾಟ ಎಂದು ದೂರಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿದರು. +ಪ್ತಧಾನಿ ಮೋದಿಯವರ ಕೆಲಸ ನೋಡಿ ಎಷ್ಟೋ ದೇಶಗಳು ಅವರನ್ನು ಕೊಂಡಾಡುತ್ತಿವೆ. ಅಷ್ಟೇ ಹೊಟ್ಟೆ ಕಿಚ್ಚು ಪಡುವವರೂ ಇದ್ದಾರೆ. ಇದಕ್ಕೆಲ್ಲೆ ಮುಕ್ತಿ ಬೇಕಂದರೆ ದೇಶದಲ್ಲಿ ಮತ್ತೆ ಬಿಜೆಪಿ ಗೆಲ್ಲಬೇಕು ಎಂದು ಹೇಳಿದರು. \ No newline at end of file diff --git a/eesanje/url_46_226_6.txt b/eesanje/url_46_226_6.txt new file mode 100644 index 0000000000000000000000000000000000000000..42be0d53cef6c2a03be035d5163173fc55ffc571 --- /dev/null +++ b/eesanje/url_46_226_6.txt @@ -0,0 +1,5 @@ +ಚಿನ್ನ -ಬೆಳ್ಳಿ ಅಂಗಡಿ ಮಾಲೀಕರಿಗೆ ಅನಗತ್ಯ ಕಿರುಕುಳ ನೀಡಬೇಡಿ +ಬೆಂಗಳೂರು ಫೆ.23- ಚಿನ್ನ ಬೆಳ್ಳಿ ಆಭರಣ ಮಾಲೀಕರಿಗೆ ಹಾಗೂ ಗಿರವಿ ಅಂಗಡಿಯವರಿಗೆ ಅನಗತ್ಯವಾಗಿ ಕಿರುಕುಳ ನೀಡದಂತೆ ಸಂಬಂಧಪಟ್ಟ ಪೊಲೀಸರಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆಭರಣ ತಯಾರು ಮಾಡುವವರಿಗೆ ಅನಗತ್ಯವಾಗಿ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಸದಸ್ಯರು ನನ್ನ ಗಮನಕ್ಕೆ ತಂದಿದ್ದಾರೆ. ನಾಳೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಇದೆ. ಈ ಸಂದರ್ಭದಲ್ಲಿ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು. +ಅನಗತ್ಯವಾಗಿ ಪೊಲೀಸರು ಕಿರುಕುಳ ನೀಡುವುದಿಲ್ಲ ಎಂಬ ಆಶಾಭಾವನೆಯನ್ನು ಇಟ್ಟುಕೊಂಡಿದ್ದೇನೆ. ಆಭರಣಗಳಲ್ಲಿ ವ್ಯತ್ಯಾಸವಾದಾಗ ಗ್ರಾಹಕರು ದೂರು ನೀಡುತ್ತಾರೆ. ಇಲ್ಲವೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಬೇಕು ಎಂದಾಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುತ್ತಾರೆ. ಆದರೂ ಸದಸ್ಯರ ಕಳಕಳಿಯನ್ನು ಅರ್ಥಮಾಡಿಕೊಂಡು ಅವರಿಗೆ ಕಿರುಕುಳ ನೀಡುವುದನ್ನು ತಪ್ಪಿಸುವುದಾಗಿ ಹೇಳಿದರು. +ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ +ಇದಕ್ಕೂ ಮುನ್ನ ಮಾತನಾಡಿದ ಶರವಣ, ಚಿನ್ನ ಬೆಳ್ಳಿ ಆಭರಣ ಅಂಗಡಿ ಮಾಲೀಕರ ಮೇಲೆ ದಿನೇ ದಿನೇ ದೌರ್ಜನ್ಯ ಹೆಚ್ಚುತ್ತಲೇ ಇದೆ. ಸರ್ಕಾರ ಇದರ ಬಗ್ಗೆ ಗಮನಹರಿಸಬೇಕೆಂದು ಶರವಣ ಮನವಿ ಮಾಡಿದರು.ಪೊಲೀಸ್ ಅಧಿಕಾರಿಗಳು ಸೂಕ್ತ ತನಿಖೆ ಮಾಡುವ ಮೊದಲೇ, ಅಂಗಡಿ ಮಾಲೀಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಅವರಿಗೂ ಸ್ವಾಭಿಮಾನವಿದೆ, ಬದುಕುವ ಹಕ್ಕಿದೆ ಅದಕ್ಕೆ ಭಂಗ ಮಾಡದೆ. ಅವರಿಗೆ ಕಿರುಕುಳ ನೀಡುತ್ತಿರುವ ಪೊಲೀಸ್ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಟಿ. ಎ. ಶರವಣ ಅವರು ಗೃಹಮಂತ್ರಿಗಳನ್ನು ಕೈಮುಗಿದು ಮನವಿ ಮಾಡಿಕೊಂಡರು. \ No newline at end of file diff --git a/eesanje/url_46_226_7.txt b/eesanje/url_46_226_7.txt new file mode 100644 index 0000000000000000000000000000000000000000..c1ea1b8556a870a126c378126d25fb0a86646015 --- /dev/null +++ b/eesanje/url_46_226_7.txt @@ -0,0 +1,6 @@ +ಚರ್ಚೆಯಿಲ್ಲದೆ ವಿಧಾನಸಭೆಯಲ್ಲಿ 2 ವಿಧೇಯಕಗಳ ಅಂಗೀಕಾರ +ಬೆಂಗಳೂರು ಫೆ.23- ಬಗರ್‍ಹುಕುಂ ಸಾಗುವಳಿ ಮಂಜೂರಾತಿ ಸಮಿತಿಗೆ ಶಾಸಕರಿಗೆ ಪರ್ಯಾಯವಾಗಿ ಸದಸ್ಯರ ನೇಮಕಾತಿಗೆ ಅನುಕೂಲವಾಗುವಂತೆ ತಿದ್ದುಪಡಿ ಮಾಡಲಾಗಿರುವ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಗದ್ದಲದ ನಡುವೆ ಅಂಗೀಕಾರ ದೊರೆಯಿತು. +ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಯಲ್ಲಿ ಮಸೂದೆಯ ಪರ್ಯಾಲೋಚನೆಗೆ ಮನವಿ ಮಾಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ವಿಧಾನಸಭಾಧ್ಯಕ್ಷರು ಸೇರಿದಂತೆ ಹಿರಿಯ ಶಾಸಕರಿಗೆ ಕಾರ್ಯದೊತ್ತಡದಿಂದಾಗಿ ಅಥವಾ ಬೇರೆ ಬೇರೆ ಕಾರ್ಯಗಳಿಗೆ ತಮ್ಮ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಕಷ್ಟಸಾಧ್ಯವಾಗುತ್ತದೆ. ಅಂತಹ ವೇಳೆ ಶಾಸಕರ ಲಿಖಿತ ಸಹಮತದ ಮೇರೆಗೆ ಸಮಿತಿಯ ಪರ್ಯಾಯ ಸದಸ್ಯರನ್ನು ನೇಮಿಸಲು ಈ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. +ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ +ಜೊತೆಗೆ ತಮ್ಮ ಕ್ಷೇತ್ರದಲ್ಲಿ ಲಭ್ಯ ಇರುವ ಸರ್ಕಾರಿ ಜಮೀನಿನ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಲು ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು. ವಿಧೇಯಕ ಮಂಡನೆ ವೇಳೆ ಬಿಜೆಪಿ-ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಯಾವುದೇ ಚರ್ಚೆ ಇಲ್ಲದೆ ವಿಧೇಯಕ ಮಂಡನೆಯಾಯಿತು. ಸಭಾಧ್ಯಕ್ಷ ಯು.ಟಿ.ಖಾದರ್ ಚರ್ಚೆಯಲ್ಲಿ ಭಾಗವಹಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. +ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣಾ ತಿದ್ದುಪಡಿ ವಿಧೇಯಕವನ್ನು ಪರ್ಯಾಲೋಚನೆಗೆ ಮನವಿ ಮಾಡಿದರು.ವಿಧಾನಪರಿಷತ್ ಮತ್ತು ವಿಧಾನಸಭೆಯ ಸದಸ್ಯರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಸಲಹೆಗಾರರು, ಯಾವುದೇ ಆಯೋಗದ ಅಧ್ಯಕ್ಷರು, ಸದಸ್ಯರು, ರಾಜ್ಯ ಪರಿವರ್ತನಾ ಸಂಸ್ಥೆಯ ಉಪಾಧ್ಯಕ್ಷರ ಹುದ್ದೆಗೆ ನೇಮಕಗೊಂಡ ಸಂದರ್ಭದಲ್ಲಿ ಅನರ್ಹತೆಗೆ ಒಳಗಾಗುವ ಅವಕಾಶದಿಂದ ವಿನಾಯ್ತಿ ನೀಡಲಾಗಿದೆ ಎಂದು ವಿವರಿಸಿದರು. ಈ ವಿಧೇಯಕ ಕೂಡ ಯಾವುದೇ ಚರ್ಚೆ ಇಲ್ಲದೆ ಅಂಗೀಕಾರಗೊಂಡಿತು. \ No newline at end of file diff --git a/eesanje/url_46_226_8.txt b/eesanje/url_46_226_8.txt new file mode 100644 index 0000000000000000000000000000000000000000..f62f185bf7813f35d6ccdc52add60c7893adb9c7 --- /dev/null +++ b/eesanje/url_46_226_8.txt @@ -0,0 +1,11 @@ +ಎಸ್‍ಸಿ/ಎಸ್‍ಟಿ ಅನುಧಾನ ಗ್ಯಾರಂಟಿಗೆ ಬಳಕೆ: ಆಡಳಿತ – ಪ್ರತಿಪಕ್ಷ ಶಾಸಕರ ವಾಕ್ಸಮರ +ಬೆಂಗಳೂರು ಫೆ.23- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಅನುದಾನವನ್ನ ಬಳಕೆ ಮಾಡಿಕೊಳ್ಳುತ್ತಿರುವ ವಿಷಯ ವಿಧಾನಪರಿಷತ್‍ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಕೆಲಕಾಲ ಭಾರೀ ವಾಕ್ಸಮರ ನಡೆಯಿತು. +ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದ ಪ್ರಶ್ನೆಗೆ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಉತ್ತರಿಸಿ, ಗ್ಯಾರಂಟಿಗಳ ಅನುಷ್ಠಾನಕ್ಕೆ ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಹಣ ಬಳಕೆ ಮಾಡಿಕೊಂಡಿಲ್ಲ. ನಮ್ಮ ಪ್ರತಿಪಕ್ಷದ ಸದಸ್ಯರು ಅನಗತ್ಯವಾಗಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ನಮ್ಮ ಇಲಾಖೆಯಲ್ಲಿ ಮೀಸಲಿಟ್ಟಿದ್ದ ಅನುದಾನವನ್ನು ಬಳಕೆ ಮಾಡಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. ಕಾಯ್ದೆಯ ಸೆಕ್ಷನ್ 7ಡಿಗೆ ತಿದ್ದುಪಡಿ ಮಾಡಲಾಗಿದೆ. +ದಲಿತರ ಹಣವನ್ನು ದಲಿತರಿಗೇ ಬಳಕೆ ಮಾಡುತ್ತಿದ್ದೇವೆ. ಇದರಲ್ಲಿ ಒಂದೊಂದು ಪೈಸೆಯೂ ದುರುಪಯೋಗವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು. ವಾಸ್ತವವಾಗಿ ಹಿಂದಿನ ಸರ್ಕಾರವೇ ಈ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದೆ. ಇಲ್ಲಿ ಮೀಸಲಿಟ್ಟ ಹಣವನ್ನು ಬೇರೆ ಯಾವುದೇ ಕಾರ್ಯಕ್ರಮಗಳಿಗೂ ಬಳಕೆ ಮಾಡಬಾರದೆಂಬ ನಿಯಮವಿದೆ. ಆದರೂ ಹಿಂದಿನ ಸರ್ಕಾರ ನಿಯಮ ಉಲ್ಲಂಘಿಸಿ ಬೇರೆ ಕೆಲಸಗಳಿಗೆ ಬಳಕೆ ಮಾಡಲಾಗಿದೆ. ನಿಮ್ಮ ಬಿಜೆಪಿ ಸರ್ಕಾರ ಸೆಕ್ಷನ್ 7ಡಿಗೆ ತಿದ್ದುಪಡಿ ಮಾಡಿತ್ತು. ನಾವು ಕೂಡ ಅದನ್ನೇ ಮಾಡಿದ್ದೇವೆ ಎಂದು ಸಮರ್ಥನೆ ಮಾಡಿಕೊಂಡರು. +ವಿಧಾನಸಭೆಯಲ್ಲಿ ವಿಪಕ್ಷ ಧರಣಿ: ಸೋಮವಾರಕ್ಕೆ ಕಲಾಪ ಮುಂದೂಡಿಕೆ +ಗೃಹ ಲಕ್ಷ್ಮಿ ಯೋಜನೆಗೆ 3,156.31 ಕೋಟಿ, ಅನ್ನ ಭಾಗ್ಯಕ್ಕೆ 853.32 ಕೋಟಿ, ಗೃಹ ಜ್ಯೋತಿ ಗೆ 1,464.34.ಕೋಟಿ, ಶಕ್ತಿ ಯೋಜನೆಗೆ 686.38 ಕೋಟಿ, ಯುವನಿಧಿಗೆ 1.67 ಕೋಟಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಯೋಜನೆಯಡಿ ಮೀಸಲಾದ ಅನುದಾನದಲ್ಲಿ ಐದು ಗ್ಯಾರಂಟಿಗಳಿಗೆ ಒಟ್ಟು 6, 162.02 ಕೋಟಿ ಬಳಕೆ ಮಾಡಲಾಗಿದೆ. +ಪ್ರತಿಯೊಂದು ಗ್ಯಾರಂಟಿಗಳಲ್ಲಿ ಎಸ್ಸಿ,ಎಸ್ಟಿ ಫಲಾನುಭವಿ ಗೃಹ ಲಕ್ಷ್ಮಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ:ಎಸ್.ಸಿ – 21,74,519, ಎಸ್.ಟಿ – 8,62,846ಅನ್ನ ಭಾಗ್ಯ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ:ಎಸ್.ಸಿ – 59,15,002ಎಸ್.ಟಿ – 25,90,678ಗೃಹ ಜ್ಯೋತಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆಎಸ್.ಸಿ – 8,57,324ಎಸ್.ಟಿ – 3,68,997ಯುವನಿಧಿ ಗ್ಯಾರಂಟಿ ಫಲಾನುಭವಿಗಳ ಸಂಖ್ಯೆಎಸ್.ಸಿ – 21, 986ಎಸ್.ಟಿ – 9,220 +ಶಕ್ತಿ ಗ್ಯಾರಂಟಿಯಲ್ಲಿ ಒಟ್ಟು 153,27 ಟಿಕೆಟ್ ಉಚಿತವಾಗಿ ನೀಡಲಾಗಿದೆ. ಅದರಲ್ಲಿ ಎಸ್ಸಿ, ಎಸ್ಟಿ ಮಾಹಿತಿ ಸಂಗ್ರಹ ಮಾಡುವುದು ಕಷ್ಟವಾಗಿದೆ. ಶಕ್ತಿ ಯೋಜನೆಗೆ 2800.00 ಕೋಟಿ ಅನುದಾನ ಒದಗಿಸಲಾಗಿದೆ. ಹಾಗಾಗಿ ಎಸ್.ಸಿ, ಎಸ್.ಟಿ ಫಲಾನುಭವಿಗಳ ಸಂಖ್ಯೆಯ ಮಾಹಿತಿಯಿದ್ದು ಹಣ ದುರ್ಬಳಕೆ ಆಗಿಲ್ಲ ಎಂದು ವಿವರಿಸಿದರು. +ಕಳೆದ ಬಾರಿ ಪ್ರಶ್ನೆ ಕೇಳಿದಾಗ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಲ್ಲ ಎಂದು ಹೇಳಿದ್ದರು ಈಗ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ದಲಿತರ ಮೂಲಕವೇ ದಲಿತರ ಸಮಾದಿ ಕಟ್ಟುವ ಕೆಲಸ ಸರ್ಕಾರ ಮಾಡುತ್ತಿದೆ. ಗ್ಯಾರಂಟಿಗಳಿಗೆ ಹಣ ಘೋಷಣೆ ನಿಮ್ಮ ತೇವಲಿಗೆ ಘೋಷಣೆ ಮಾಡಿದ್ದೀರಾ ಎಂದು ಪ್ರಶ್ನಿಸಿದರು. ಮಹಾದೇವಪ್ಪ ನಿಮಗೆ ಅಳಿಯ ಯಾರು, ಮಗಳ ಗಂಡ ಯಾರು ಗೊತ್ತಿಲ್ಲ ಅನಿಸುತ್ತದೆ. ಮಹಾದೇವಪ್ಪ ಅವರ ಪರಮಾತ್ಮ ಆಡಿಸಿದಂತೆ ಆಡುವವರು. +ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ +ನಿಮ್ಮ ಪರಮಾತ್ಮ ಯಾರು ಎಂದು ನಮಗೆ ಗೊತ್ತಿದೆ ಎಂದು ಹಾಸ್ಯ ಮಾಡಿದರು. ಎಸ್.ಸಿ. ಎಸ್. ಟಿಪಿ- ಟಿ.ಎಸ್.ಪಿ ಯೋಜನೆಯಡಿ ಮೀಸಲಾದ ಅನುದಾನದಲ್ಲಿ ಗ್ಯಾರಂಟಿಗಳಿಗೆ ಬಳಕೆ ಮಾಡಲಾಗಿದೆ. ಪ್ರತಿಯೊಂದು ಗ್ಯಾರಂಟಿಗಳಲ್ಲಿ ಎಸ್ಸಿ,ಎಸ್ಟಿ ಫಲಾನುಭವಿಗಳ ಸಂಖ್ಯೆ ಎಷ್ಟು ಆ ಫಲಾನುಭವಿಗಳಿಗೆ ನೀಡಲಾದ ವೆಚ್ಚ ಎಷ್ಟು…? ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಲ್ಲಿ ಒಂದು ವೇಳೆ ಎಸ್ಸಿ, ಎಸ್ಟಿ ಫಲಾನುಭವಿಗಳ ಮಾಹಿತಿ ಇಲ್ಲದೆ ಹೋದರೆ ಹಣ ದುರ್ಬಳಕೆ ಮಾಡಿಕೊಂಡಂತೆ ಅಲ್ಲವೇ ಇದು ದಲಿತರಿಗೆ ಮಾಡಿದ ಅನ್ಯಾಯ ಎಂದ ಛಲವಾದಿ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_226_9.txt b/eesanje/url_46_226_9.txt new file mode 100644 index 0000000000000000000000000000000000000000..82cbb198985f675aa00e31654aeaa5fffbd235d0 --- /dev/null +++ b/eesanje/url_46_226_9.txt @@ -0,0 +1,9 @@ +ವೀಲಿಂಗ್ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಅಪ್‍ಲೋಡ್ : ಸವಾರ ಪೊಲೀಸ್ ವಶಕ್ಕೆ +ಬೆಂಗಳೂರು, ಫೆ.23- ಔಟರ್ ರಿಂಗ್ ರಸ್ತೆ-ಪ್ಲೈಓವರ್‍ಗಳ ಮೇಲೆ ಸಾರ್ವಜನಿಕರ ಪ್ರಾಣಕ್ಕೆ ಹಾನಿಯಾಗುವಂತೆ ದ್ವಿ ಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಾ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದ ಸವಾರನನ್ನು ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಪತ್ತೆಹಚ್ಚಿದ್ದಾರೆ. ವೀಲಿಂಗ್ ಮಾಡುತ್ತ ಸಹಚರರ ಮೂಲಕ ವಿಡಿಯೋಗಳನ್ನು ಅಪ್‍ಲೋಡ್ ಮಾಡುತ್ತಿದ್ದವರನ್ನು ಪತ್ತೆ ಮಾಡಲು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯಕ್ತರು ಒಂದು ತಂಡವನ್ನು ನೇಮಿಸಿದ್ದರು. +ಈ ತಂಡವು ನಿನ್ನೆ ಕಾರ್ಯಾಚರಣೆ ನಡೆಸಿ ಸುಮನಹಳ್ಳಿ ಪ್ಲೈ ಓವರ್ ಮೇಲೆ ಮೀಲಿಂಗ್ ಮಾಡುತ್ತಿದ್ದ ಸವಾರನನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ಆತನ ವಿರುದ್ದ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ. ಆರೋಪಿ ಹೊಂಡಾ ಡಿಯೋ ವಾಹನದಲ್ಲಿ ವೀಲಿಂಗ್ ಮಾಡುತ್ತಾ ಸದರಿ ವೀಲಿಂಗ್ ದೃಶ್ಯಾವಳಿಗಳನ್ನು ತನ್ನ ಸ್ನೇಹಿತರುಗಳಿಂದ ವಿಡಿಯೋ/ರೀಲ್ಸ್ ಮಾಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿರುತ್ತೆ. +ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ +ಈ ಬಗ್ಗೆ ತನಿಖೆ ಮುಂದಿವರೆಸಿ ಆರೋಪಿ ಹಾಗೂ ಆತನಿಗೆ ಸಹಕರಿಸಿದ ಇತರರ ವಿರುದ್ದ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಿದ್ದಾರೆ. ಈ ಕಾರ್ಯಾಚರಣೆಯನ್ನು ಪಶ್ಚಿಮ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸದಾನಂದ ಎ. ತಿಪ್ಪಣ್ಣವರ ನೇತೃತ್ವದಲ್ಲಿ ಇನ್ಸ್‍ಪೆಕ್ಟರ್ ಯೋಗೇಶ್ ಹಾಗೂ ಸಿಬ್ಬಂದಿಗಳ ತಂಡ ಕೈಗೊಂಡಿರುತ್ತೆ. +ವೀಲಿಂಗ್: ಸವಾರ ಪೊಲೀಸ್ ವಶಕ್ಕೆಬೆಂಗಳೂರು, ಫೆ.23- ವೀಲಿಂಗ್ ಮಾಡುವವರನ್ನು ಪತ್ತೆಹಚ್ಚಿಲು ಹಲಸೂರು ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಸವಾರನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಸ್ವಾಮಿ ವಿವೇಕಾನಂದ ರಸೆ ್ತಯಲ್ಲಿ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಸವಾರನೊಬ್ಬ ಈ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ವಾಹನ ಸಮೇತ ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಎಫ್‍ಐಆರ್ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್. ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ರಸ್ತೆ ಹಂಪ್ಸ್ ಎಗರಿ ಬಿದ್ದು ಡೆಲಿವರಿ ಬಾಯ್ ಸಾವುಬೆಂಗಳೂರು, ಫೆ.23- ಅತಿ ವೇಗವಾಗಿ ಬರುತ್ತಿದ್ದ ಸ್ಕೂಟರ್ ರಸ್ತೆ ಹಂಪ್ಸ್ ಬಳಿ ಬ್ರೇಕ್ ಹಾಕಿದಾಗ ಹಾರಿ ಬಿದ್ದು ಅಮೆಜಾನ್ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೊಮ್ಮಸಂದ್ರ ನಿವಾಸಿ ಅಭಿಷೇಕ್ (26) ಮೃತಪಟ್ಟ ಡೆಲಿವರಿ ಬಾಯ್.ಕೋನಪ್ಪ ಅಗ್ರಹಾರ ಜಂಕ್ಷನ್ ಕಡೆಯಿಂದ ಹೊಸೂರು ರಸ್ತೆ ಜಂಕ್ಷನ್ ಕಡೆಗೆ ರಾತ್ರಿ 10.40ರ ಸುಮಾರಿನಲ್ಲಿ ಅಭಿಷೇಕ್ ತನ್ನ ಸ್ಕೂಟರ್‍ನಲ್ಲಿ ಅತಿ ವೇಗವಾಗಿ ಹೋಗುತ್ತಿದ್ದರು. +ಮಾರ್ವಾಡಿ ಮನೆಗಳಲ್ಲಿ ಕಳ್ಳತನ ಮಾಡುತಿದ್ದ ಅಸ್ಸಾಂ ವ್ಯಕ್ತಿ ವಶಕ್ಕೆ +ಬೆರಟೇನ ಅಗ್ರಹಾರದ ಮೆಟ್ರೋ ನಿಲ್ದಾಣದ ಬಳಿ ರಸ್ತೆ ಹಂಪ್ ಇರುವುದು ಗಮನಿಸಿ ತಕ್ಷಣ ಬ್ರೇಕ್ ಹಾಕಿದ್ದರಿಂದ ನಿಯಂತ್ರಣ ತಪ್ಪಿ ಸುಮಾರು 35 ರಿಂದ 40 ಅಡಿ ದೂರ ಹಾರಿ ಬಿದ್ದಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆತನನ್ನು ಸಾರ್ವಜನಿಕರು ತಕ್ಷಣ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ಪರೀಕ್ಷಿಸಿ ದಾರಿಮಧ್ಯೆಯೇ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಸುದ್ದಿ ತಿಳಿದು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಠಾಣೆ ಪೊಲೀಸರು ಸ್ತಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_227_1.txt b/eesanje/url_46_227_1.txt new file mode 100644 index 0000000000000000000000000000000000000000..decfedafc717a0c87301b4c8d58882e0e8752dbb --- /dev/null +++ b/eesanje/url_46_227_1.txt @@ -0,0 +1,10 @@ +ಸಿದ್ದು ದ್ವಿಮುಖ ನೀತಿ: ವಿಜಯೇಂದ್ರ ಟೀಕೆ +ಬೆಂಗಳೂರು ಫೆ.23- ಕೇಂದ್ರ ಬಿಜೆಪಿ ಸರಕಾರವನ್ನು ಮತ್ತು ನರೇಂದ್ರ ಮೋದಿಯವರನ್ನು ನಿರಂತರವಾಗಿ ಟೀಕಿಸುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದ್ವಿಮುಖ ನೀತಿಯನ್ನು ಅನಾವರಣಗೊಳಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು.ಮಲ್ಲೇಶ್ವರದ ಹವ್ಯಕ ಭವನದಲ್ಲಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯುತ್ ನಿಯಂತ್ರಣ ಪ್ರಾಧಿಕಾರ ವಿದ್ಯುತ್ ದರ ಏರಿಸಿದೆ ಎನ್ನುವ ಮುಖ್ಯಮಂತ್ರಿಗಳು ಹಣಕಾಸು ಆಯೋಗವು ತೆರಿಗೆ ಹಂಚಿಕೆಯನ್ನು ನಿರ್ಧರಿಸಿದ್ದನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ಆಕ್ಷೇಪಿಸಿದರು. +ಮೋದಿಜೀ ಅವರ ಬಗ್ಗೆ ದೇಶ ಮಾತ್ರವಲ್ಲದೆ ಜಗತ್ತಿನಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದು ಕಾಂಗ್ರೆಸ್ಸಿಗರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ದೇಶದ ಹಿತದೃಷ್ಟಿ, ದೇಶದ ರಕ್ಷಣೆಗಾಗಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜನರು ಬಯಸಿದ್ದಾರೆ. ರಾಜ್ಯದಲ್ಲೂ 28ಕ್ಕೆ 28 ಸೀಟುಗಳನ್ನು ಬಿಜೆಪಿ- ಜೆಡಿಎಸ್ ಪಕ್ಷಗಳು ಗೆಲ್ಲಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಕರ್ತರು, ಪ್ರಮುಖರು ಮೋದಿಯವರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕಿದೆ ಎಂದು ತಿಳಿಸಿದರು. +ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ +ಬಿಜೆಪಿ ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂಬ ಆತಂಕ ಕಾಂಗ್ರೆಸ್ ಸರ್ಕಾರಕ್ಕಿದೆ ಈ ದುಷ್ಟ, ಭ್ರಷ್ಟ, ದುರಹಂಕಾರಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲು ಮುಂದಾಗಬೇಕು ಎಂದ ಅವರು, ಗೆಲುವಿನ ಸವಾಲನ್ನು ಸವಾಲಾಗಿ ಸ್ವೀಕಾರ ಮಾಡೋಣ ಎಂದು ಕರೆ ನೀಡಿದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಪರಾಭವದಿಂದ ಕಾಂಗ್ರೆಸ್ ಪಕ್ಷಕ್ಕೆ ಆತಂಕ ಉಂಟಾಗಿದೆ ಎಂದ ಅವರು, ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ನಾವೇ ಮೋದಿ ಎಂದು ಭಾವಿಸಿ ಹಗಲಿರುಳೆನ್ನದೆ ದುಡಿಯಬೇಕು. ಅಭ್ಯರ್ಥಿಯ ಬಗ್ಗೆ ತಲೆ ಕೆಡಿಸಿಕೊಳ್ಳದಿರಿ. ಅಭ್ಯರ್ಥಿ ಯಾರೇ ಇದ್ದರೂ ಕಮಲದ ಹೂವನ್ನು ಗೆಲ್ಲಿಸಲು ಮುಂದಾಗಿ ಎಂದು ಮನವಿ ಮಾಡಿದರು. +ಒಬಿಸಿ ಮೋರ್ಚಾದ ಪದಾಧಿಕಾರಿಗಳು ತಾವು ಬಿಜೆಪಿ ಕಾರ್ಯಕರ್ತರು ಎಂಬುದನ್ನು ಮರೆಯಬಾರದು. ಮೋದಿಜೀ ಅವರ ಬಗೆಗಿನ ಹೆಮ್ಮೆಯನ್ನು ಕಾರ್ಯರೂಪಕ್ಕೆ ತರಬೇಕು. ನಮ್ಮ ಪದಾಧಿಕಾರಿಗಳು ತಮ್ಮ ಬೂತ್ ಕಡೆ ಗಮನ ಹರಿಸಬೇಕು. ಮತದಾರರ ಪಟ್ಟಿ, ಬೂತ್ ಕಡೆ ಗಮನ ಕೊಡಬೇಕು. ಎಷ್ಟು ಹೆಸರು ಸೇರ್ಪಡೆ ಆಗಿದೆ. ಎಷ್ಟು ಹೆಸರು ರದ್ದಾಗಿದೆ ಎಂಬ ಕಡೆ ಗಮನಿಸಬೇಕು ಎಂದು ಸೂಚಿಸಿದರು. +100 ಮತ ಬಂದಿದ್ದರೆ ಅದನ್ನು 200 ಮಾಡುವುದು ಹೇಗೆ? 500 ಮತ ಬಂದಿದ್ದರೆ ಅದನ್ನು ಮತ್ತಷ್ಟು ಹೆಚ್ಚಿಸುವ ಕಡೆ ಗಮನ ಹರಿಸಬೇಕಿದೆ. ಕ್ಷೇತ್ರಕ್ಕೆ ತೆರಳಿ ಬೂತ್ ಬಲಪಡಿಸುವ ಕಡೆ ಯೋಜನೆ ಮತ್ತು ಕಾರ್ಯಕ್ರಮ ರೂಪಿಸಬೇಕು ಎಂದು ತಿಳಿಸಿದರು. ಸೂರ್ಯ ಚಂದ್ರ ಇರುವುದು ಹೇಗೆ ಸತ್ಯವೋ ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ ಎಂದು ನುಡಿದ ವಿಜಯೇಂದ್ರ ಅವರು, ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಲೋಕಸಭಾ ಚುನಾವಣಾ ಫಲಿತಾಂಶ ಕರ್ನಾಟಕದಲ್ಲೂ ಬರಲಿದೆ. 28ಕ್ಕೆ 28 ಸ್ಥಾನ ನಮ್ಮದಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಕೇವಲ 8-9 ತಿಂಗಳಲ್ಲಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದೆ. ರಾಜ್ಯಕ್ಕೆ ಸಂಬಂಸಿ ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಅದು ಪ್ರಕಟಿಸಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರಕಾರವು ಉತ್ತರ ಕರ್ನಾಟಕದ 7800 ಕೋಟಿ ಮೊತ್ತದ ನೀರಾವರಿ ಯೋಜನೆಗೆ ಅನುಮೋದನೆ ಕೊಟ್ಟಿತ್ತು. ಅದರ ಅನುಷ್ಠಾನಕ್ಕೆ ಕಾಂಗ್ರೆಸ್ ಮುಂದಾಗಿಲ್ಲ. ಖಜಾನೆಯಲ್ಲಿ ದುಡ್ಡಿಲ್ಲದಿರುವುದು ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು. +ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್ +ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಯಶ್‍ಪಾಲ್ ಸುವರ್ಣ, ಒಬಿಸಿ ಮೋರ್ಚಾ ರಾಜ್ಯ ಪ್ರಭಾರಿ ಎಸ್.ಕೆ.ಕವೆರೇಂಧನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ತಪಸ್ವಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅವ್ವಣ್ಣ ಮ್ಯಾಕರಿ, ಬಿ.ಸೋಮಶೇಖರ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_227_10.txt b/eesanje/url_46_227_10.txt new file mode 100644 index 0000000000000000000000000000000000000000..6b36049c90667d842c455208c5a7ff11c4f3b1c8 --- /dev/null +++ b/eesanje/url_46_227_10.txt @@ -0,0 +1,6 @@ +ಆರ್ಥಿಕ ಸಬಲರಿಂದಲೇ ಕಾರ್ಮಿಕರಾಗಿ ನೋಂದಣಿ: ಸಂತೋಷ್ ಲಾಡ್ +ಬೆಂಗಳೂರು ಫೆ.23- ಫೆರಾರಿ ಕಾರು, ಜಿಎಸ್‍ಟಿ ಪಾವತಿಸುವವರು, ಜಮೀನುದಾರರು ಸೇರಿದಂತೆ ಆರ್ಥಿಕ ಸುಸ್ಥಿತಿಯಲ್ಲಿರುವವರೇ ಕಾರ್ಮಿಕ ಇಲಾಖೆಯ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಹಿರಂಗಪಡಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾರ್ಮಿಕ ಇಲಾಖೆಯಡಿ ಹೆಚ್ಚಿನ ಸವಲತ್ತುಗಳು ಸಿಗುತ್ತಿರುವ ಕಾರಣ ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಸ್ಥಿತಿವಂತರೇ ನಮ್ಮ ಇಲಾಖೆಯಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರದ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು. +2007ರಲ್ಲಿ ಕಾರ್ಮಿಕರ ಮಂಡಳಿ ಸ್ಥಾಪನೆಯಾಗಿತ್ತು. ಪ್ರಾರಂಭದಲ್ಲಿ ಮೂರು ಲಕ್ಷ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದರು. 2007ರಲ್ಲಿ ಇದರ ಸಂಖ್ಯೆ 12 ಲಕ್ಷ ಇದ್ದು ಕಾರ್ಮಿಕರ ಸಂಖ್ಯೆ ಇದ್ದಕ್ಕಿದ್ದಂತೆ 39 ಲಕ್ಷಕ್ಕೆ ಏರಿಕೆಯಾಯಿತು. ಇದೀಗ ಇದು 51 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಕೆಲವು ಕಾರ್ಮಿಕರ ನೋಂದಣಿಗೆ ಒತ್ತಡಗಳು ಇರುತ್ತವೆ. 51 ಲಕ್ಷದಲ್ಲಿ 46 ಲಕ್ಷ ಕಾರ್ಮಿಕರು ಅರ್ಹರಿದ್ದರೆ ಉಳಿದವರು ಅನರ್ಹರಾಗಿದ್ದಾರೆ. +ಹಾವೇರಿ ಜಿಲ್ಲೆಯಲ್ಲಿ 3 ಲಕ್ಷ ಕಾಮಿಕರಲ್ಲಿ 2.7 ಲಕ್ಷ ಕಾರ್ಮಿಕರು ಅನರ್ಹರಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ನೋಂದಣಿಯಾಗಿರುವ ಕಾರ್ಮಿಕರು ಅರ್ಹರೋ ಅಥವಾ ಅನರ್ಹರೋ ಎಂಬುದನ್ನು ಅಂಬೇಡ್ಕರ್ ಸೇವಾ ಕೇಂದ್ರದ ಮೂಲಕ ತನಿಖೆ ಮಾಡಿಸುತ್ತೇವೆ ಎಂದರು. ನಮ್ಮ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಹೊರಗುತ್ತಿಗೆ ಪಡೆದುಕೊಂಡು ತನಿಖೆ ಮಾಡಿಸುತ್ತೇವೆ. ಯಾವುದೇ ಒಬ್ಬ ಕಾರ್ಮಿಕ ನೋಂದಣಿ ಮಾಡಿಕೊಳ್ಳಬೇಕಾದರೆ ಗ್ರಾಮಪಂಚಾಯ್ತಿಯ ಪಿಡಿಒ ಇಂದ ಹಿಡಿದು ವಿವಿಧ ಹಂತಗಳಲ್ಲಿ ಪರಿಶೀಲನೆಯಾದ ಬಳಿಕವೇ ಈ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ ಸರ್ಕಾರದ ಸವಲತ್ತುಪಡೆಯುವ ಏಕೈಕ ಉದ್ದೇಶದಿಂದಲೇ ಆರ್ಥಿಕವಾಗಿ ಸದೃಢ ಇರುವವರು ಇದರಲ್ಲಿ ಸೇರಿಕೊಂಡಿದ್ದಾರೆ. ತನಿಖೆ ನಡೆದ ನಂತರ ಇದರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.+ +ಭಾರತವು 10 ಟ್ರಿಲಿಯನ್‍ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ-ಡಬ್ಲೂಇಎಫ್ +ನಿಜವಾದ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ಸಿಗಬೇಕೆಂಬುದು ನಮ್ಮ ಉದ್ದೇಶ. ತನಿಖೆಯಲ್ಲಿ ಅನರ್ಹರು ಇದ್ದರೆ ಮುಲಾಜಿಲ್ಲದೆ ತೆಗೆದು ಹಾಕುತ್ತೇವೆ. ಒಂದು ವೇಳೆ ಇದರಲ್ಲಿ ಅಧಿಕಾರಿಗಳು ಶಾಮೀಲಾಗಿರುವುದು ಕಂಡುಬಂದರೆ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. \ No newline at end of file diff --git a/eesanje/url_46_227_11.txt b/eesanje/url_46_227_11.txt new file mode 100644 index 0000000000000000000000000000000000000000..acdf493ba556c6e9a98f5974ed1955f76747591e --- /dev/null +++ b/eesanje/url_46_227_11.txt @@ -0,0 +1,9 @@ +ಎಂಎಸ್‍ಐಎಲ್‍ನಲ್ಲಿ ಎಸ್‍ಸಿ, ಎಸ್‍ಟಿ ಮೀಸಲಾತಿಗೆ ಶಿಫಾರಸ್ಸು +ಬೆಂಗಳೂರು,ಫೆ.22- ಎಂಎಸ್‍ಐಎಲ್ ಸಂಸ್ಥೆಯಡಿ ಪರಿಶಿಷ್ಟ ಜಾತಿ, ಪಂಗಡದವರಿಗೂ ಅವಕಾಶ ಕಲ್ಪಿಸಲು ಎಂ ಪ್ಯಾನಲ್ ಮಾಡಿಸಿಕೊಳ್ಳಲು ಕಡ್ಡಾಯವಾಗಿ ಮೀಸಲಾತಿ ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಶಿಫಾರಸ್ಸು ಮಾಡಿದೆ. ವಿಧಾನಸಭೆಯಲ್ಲಿಂದು ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಂಡಿಸಿದ ಸಮಿತಿಯ 2023-24 ನೇ ಸಾಲಿನ 16 ನೇ ವಿಧಾನಸಭೆಯ 2 ನೇ ವರದಿಯಲ್ಲಿ ಈ ಶಿಫಾರಸ್ಸು ಮಾಡಲಾಗಿದೆ. +ಸಂಸ್ಥೆಯಡಿ ನಡೆಯುತ್ತಿರುವ ಎಲ್ಲಾ ಘಟಕಗಳಲ್ಲಿ ಹೊರಗುತ್ತಿಗೆ ಯಲ್ಲಿ ಪಡೆಯುತ್ತಿರುವ ಮಾನವ ಸಂಪನ್ಮೂಲವನ್ನು ಕಡ್ಡಾಯವಾಗಿ ಮೀಸಲಾತಿ ಅನುಸರಿಸಬೇಕು. ಬಡವರು ಹಾಗೂ ಎಸ್‍ಸಿ/ಎಸ್ಟಿ ಜನಾಂಗದವರು ವಾಸಿಸುತ್ತಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಜನವಸತಿ ಕೇಂದ್ರ ತೆರೆಯಲು ಶಿಫಾರಸ್ಸು ಮಾಡಿದೆ. ರಾಜ್ಯದ ಗಡಿಭಾಗದಲ್ಲಿ ಹೊರರಾಜ್ಯದ ಸೇಂದಿ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳುವುದನ್ನು ತಪ್ಪಿಸಲು ಎಂಎಸ್‍ಐಎಲ್ ಮಳಿಗೆಗಳನ್ನು ತೆರೆಯಲು ಸೂಚಿಸಿದೆ. +ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ನಿವೇಶನಗಳನ್ನು ಶೇ.24.1 ರಷ್ಟು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಮೀಸಲಿಡಬೇಕು. ಮೂಲೆ ನಿವೇಶನಗಳು ಹಾಗೂ ವಾಣಿಜ್ಯ ಉದ್ದೇಶಗಳಿಗಾಗಿ ನಿವೇಶನ ಹರಾಜು ಮಾಡುವಾಗ ಎಸ್‍ಸಿ/ಎಸ್ಟಿ ಮೀಸಲು ಬಿಂದುಗಳನ್ನು ಗುರುತಿಸಿ ಪ್ರಕಟಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಎಂಎಸ್‍ಎಂಇ ಯಲ್ಲೂ ಎಸ್‍ಸಿ/ಎಸ್ಟಿ ಜನಾಂಗದವರಿಗೆ ಶೇ.24.1 ರಷ್ಟು ಸೌಲಭ್ಯಗಳನ್ನು ಮೀಸಲಿಡಬೇಕು ಎಂದು ತಿಳಿಸಲಾಗಿದೆ. +ಎಸ್‍ಸಿ/ಎಸ್ಟಿ ಜನಾಂಗದವರನ್ನು ಕುಶಲಕರ್ಮಿಗಳನ್ನಾಗಿಸಲು ಪರಿಣಾಮಕಾರಿ ಕ್ರಮ ರೂಪಿಸಬೇಕು. ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲೂ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಬಾರಿಗೆ ವಿಶೇಷ ಅನುದಾನವನ್ನು ಪಡೆಯಲು ಶಿಫಾರಸ್ಸು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ. +ರಾಜಕಾರಣಕ್ಕೆ ಬರಲ್ಲ, ಚುನಾವಣೆಗೆ ನಿಲ್ಲಲ್ಲ : ಡಾಲಿ ಧನಂಜಯ್ +ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಕಲ್ಲು ಗಣಿ ಅಥವಾ ಮರಳು ಗಣಿ ಹಂಚಿಕೆ ಮಾಡುವ ಸಂದರ್ಭದಲ್ಲಿ ಹೆಚ್ಚಿನ ಉತ್ಪನ್ನಗಳು ಸಿಗುವ ಬ್ಲಾಕ್‍ಗಳನ್ನು ಇತರೆ ಸಮುದಾಯದವರಿಗೆ ನೀಡಿ ಕಡಿಮೆ ಪ್ರಮಾಣದ ಉತ್ಪನ್ನ ಲಭಿಸುವ ಬ್ಲಾಕ್‍ಗಳನ್ನು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಹಂಚಿಕೆ ಮಾಡುತ್ತಿರುವುದು ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಬ್ಲಾಕ್‍ಗಳ ಹಂಚಿಕೆಯನ್ನು ಕಡ್ಡಾಯವಾಗಿ ರೋಸ್ಟರ್ ಮಾದರಿಯಲ್ಲಿ ಹಂಚಿಕೆ ಮಾಡಬೇಕೆಂದು ಶಿಫಾರಸ್ಸು ಮಾಡಲಾಗಿದೆ. +ಗಣಿಗಳಿಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳ ಹಂತದಲ್ಲಿ ಪರವಾನಗಿ ನೀಡದ ಎಸ್‍ಸಿ/ಎಸ್ಟಿ ಜನಾಂಗದವರಿಗೆ 2 ವಾರಗಳಲ್ಲಿ ಪರವಾನಗಿ ನೀಡಬೇಕು. ಗಣಿಗೆ ಸಂಬಂಧಿಸಿದಂತೆ ಟೆಂಡರ್ ಮತ್ತು ಲೀಸ್ ಎರಡರಲ್ಲಿಯೂ ಕಡ್ಡಾಯವಾಗಿ ಮೀಸಲಾತಿ ಅನುಸರಿಸಬೇಕು ಎಂದು ವರದಿ ಶಿಫಾರಸ್ಸು ಮಾಡಿದೆ. +ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಅವ ಮುಗಿದಿದ್ದರೂ ಶೌಚಾಲಯ ಟೆಂಡರ್ ಅನ್ನುಮುಂದುವರೆಸಲಾಗುತ್ತಿದ್ದು, ಕೂಡಲೇ ರದ್ದುಪಡಿಸಿ ಮೀಸಲಾತಿ ಅನ್ವಯ ಕ್ರಮ ಕೈಗೊಳ್ಳಬೇಕು. ಎಸ್‍ಸಿ/ಎಸ್ಟಿ ಜನಾಂಗದವರು ಜಾಹೀರಾತು ವಲಯದಲ್ಲಿ ತೊಡಗಿಸಿಕೊಳ್ಳಲು ಕಡ್ಡಾಯವಾಗಿ ಶೇ.24.1 ರಷ್ಟನ್ನು ಮೀಸಲಾತಿ ನೀಡಬೇಕು. ಮುಖ್ಯ ವಾಣಿಜ್ಯ ಸ್ಥಳಗಳಲ್ಲಿ ರೋಸ್ಟರ್ ಬಿಂದುಗಳ ರೀತಿಯಲ್ಲಿ ಟೆಂಡರ್ ಕಡತಗಳನ್ನು ಎಸ್‍ಸಿ/ಎಸ್ಟಿ ಜನಾಂಗದವರಿಗೆ ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ. \ No newline at end of file diff --git a/eesanje/url_46_227_12.txt b/eesanje/url_46_227_12.txt new file mode 100644 index 0000000000000000000000000000000000000000..5aa509e03ce7c2e6c2aa315547f2134d0eb62a73 --- /dev/null +++ b/eesanje/url_46_227_12.txt @@ -0,0 +1,5 @@ +ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್‍ಗೆ +ಬೆಂಗಳೂರು, ಫೆ.22- ಬಿಜೆಪಿಯಲ್ಲಿರುವ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಇಂದು ಮರಳಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಪಕ್ಷಾಂತರ ಮಾಡಿರುವ ಎಸ್.ಪಿ.ಮುದ್ದ ಹನುಮೇ ಗೌಡರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ.ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಎಸ್.ಪಿ. ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್‍ಗೆ ಬರ ಮಾಡಿಕೊಳ್ಳಲಿದ್ದಾರೆ. +“ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ” +ಎಸ್.ಪಿ. ಮುದ್ದಹನುಮೇಗೌಡ ಅವರ ಸೇರ್ಪಡೆಗೆ ಸಂಬಂಧಪಟ್ಟಂತೆ ತುಮಕೂರು ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ವಿರೋಧಗಳು ಕಂಡು ಬಂದಿವೆ. ಎಸ್.ಪಿ. ಮುದ್ದಹನುಮೇಗೌಡ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ತಯಾರಿಯಲ್ಲಿದ್ದಾರೆ. ಈ ಹಿಂದೆ ಕಾಂಗ್ರೆಸ್‍ನಿಂದಲೇ ಸಂಸದರಾಗಿದ್ದ ಎಸ್.ಪಿ.ಮುದ್ದಹನುಮೇಗೌಡ 2019 ರಲ್ಲಿ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಕಾರಣಕ್ಕೆ ಟಿಕೆಟ್ ವಂಚಿತರಾಗಿದ್ದರು. ಅನಂತರ ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳಿಗೂ ಹಲವು ಬಾರಿ ಪಕ್ಷಾಂತರ ಮಾಡಿದ್ದರು. ಈಗ ಮತ್ತೆ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಲು ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. +ಅದರ ಹೊರತಾಗಿಯೂ ಮೇಲ್ಮಟ್ಟದ ನಾಯಕರು ಎಸ್.ಪಿ. ಮುದ್ದಹನುಮೇಗೌಡ ಅವರನ್ನು ಕರೆ ತಂದಿದ್ದು, ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸುವ ಅವಕಾಶ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಬಿಜೆಪಿಯಲ್ಲಿ ಹೊಂದಿಕೊಳ್ಳಲಾಗದೆ ಅಸಹನೆಯಿಂದ ಕುದಿಯುತ್ತಿರುವ ಕೆಲವು ಶಾಸಕರು ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_227_2.txt b/eesanje/url_46_227_2.txt new file mode 100644 index 0000000000000000000000000000000000000000..c2a7ef4a8138dda07b8cc72ec03ec530ff3c3047 --- /dev/null +++ b/eesanje/url_46_227_2.txt @@ -0,0 +1,5 @@ +ಗ್ಯಾರಂಟಿ ಯೋಜನೆಗೆ ಕಾರ್ಮಿಕ ಇಲಾಖೆಯ ಸೆಸ್ ಹಣ ಬಳಕೆ ಇಲ್ಲ: ಲಾಡ್ +ಬೆಂಗಳೂರು ಫೆ.23- ಕಾರ್ಮಿಕ ಇಲಾಖೆಯ ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸದಸ್ಯ ಪ್ರಕಾಶ್ ಸಿಂಗ್ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತದೆ ಎಂಬ ಆಧಾರ ರಹಿತ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನಮ್ಮ ಇಲಾಖೆಯಲ್ಲೇ 10 ಸಾವಿರ ಕೋಟಿ ಅನುದಾನವಿದೆ. ಹೀಗಾಗಿ ಸೆಸ್ ಹಣವನ್ನು ಬಳಕೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಪುನರುಚ್ಚರಿಸಿದರು. +ಕಾರ್ಮಿಕ ಇಲಾಖೆಯ ಸೆಸ್ ಹಣವನ್ನು ಗ್ಯಾರಂಟಿ ಯೋಜನೆಗೆ ಕೊಡುತ್ತಿಲ್ಲ. ಕಾರ್ಮಿಕ ಇಲಾಖೆಯಲ್ಲಿ 10 ಸಾವಿರ ಕೋಟಿ ಅನುದಾನ ಇದೆ. ಸದ್ಯ ಇಲಾಖೆಯಲ್ಲಿ ಇರುವುದು 6500 ಕೋಟಿ ಮಾತ್ರ.2500 ಕೋಟಿ ವಿದ್ಯಾರ್ಥಿ ವೇತನಕ್ಕೆ ಕೊಡಬೇಕಾಗುತ್ತದೆ. ಮೊದಲು 2 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಹೀಗಾಗಿ ಹೆಚ್ಚು ವಿದ್ಯಾರ್ಥಿ ವೇತನ ಕೊಡಲಾಗುತ್ತಿತ್ತು. ಈಗ 12 ಲಕ್ಷ ಕಾರ್ಮಿಕ ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಿದ್ದಾರೆ. ಹೀಗಾಗಿ ಹಿಂದೆ ಇದ್ದಷ್ಟು ವಿದ್ಯಾರ್ಥಿ ವೇತನ ಕೊಡಲು ಸಾಧ್ಯವಿಲ್ಲ. ಹೀಗಾಗಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಕಡಿಮೆ ಮಾಡಲಾಗಿದೆ. ಇದನ್ನ ಸದ್ಯ ಜಾಸ್ತಿ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಸಂತೋಷ ಲಾಡ್ ಸ್ಪಷ್ಟನೆ ನೀಡಿದರು. +ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ +ಇದಕ್ಕೂ ಮುನ್ನ ಬಿಜೆಪಿ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನ ಈ ಸರ್ಕಾರ ಕಡಿಮೆ ಮಾಡಿದೆ. 25 ಸಾವಿರ ಇದ್ದ ವಿದ್ಯಾರ್ಥಿ ವೇತನಕ್ಕೆ 4600 ರೂ ಕೊಡಲಾಗುತ್ತಿದೆ. 8 ಸಾವಿರ ಇರುವ ವಿದ್ಯಾರ್ಥಿ ವೇತನ 1 ಸಾವಿರಕ್ಕೆ ಇಳಿದಿದೆ. ವಿದ್ಯಾರ್ಥಿ ವೇತನ ಜೊತೆಗೆ ವೈದ್ಯಕೀಯ ವೆಚ್ಚವನ್ನು ಕಡಿತ ಮಾಡಲಾಗಿದೆ. ಕಾರ್ಮಿಕ ಮಕ್ಕಳಿಗೆ ಮಾಡುವುದು ಸರಿಯಲ್ಲ. ಈ ಸಮಸ್ಯೆ ಪರಿಹಾರ ಮಾಡಿ ಎಂದು ಕೋರಿಕೊಂಡರು. \ No newline at end of file diff --git a/eesanje/url_46_227_3.txt b/eesanje/url_46_227_3.txt new file mode 100644 index 0000000000000000000000000000000000000000..588b822ce35020869b0f3d9b0085dd67bfdc36d7 --- /dev/null +++ b/eesanje/url_46_227_3.txt @@ -0,0 +1,6 @@ +ವಿದಾನಸಭೆಯಲ್ಲಿ ಮೋದಿ ಮೋದಿ ಘೋಷಣೆ +ಬೆಂಗಳೂರು ಫೆ.23- ವಿಧಾನಸಭೆಯ ಸಭಾಂಗಣದ ಒಳಗೂ ಬಿಜೆಪಿ ಶಾಸಕರು ಮೋದಿ ಮೋದಿ ಎಂದು ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಕೇಂದ್ರದ ಅನುದಾನದ ತಾರತಮ್ಯದ ವಿರುದ್ಧ ನಿರ್ಣಯ ಮಂಡಿಸಿದ್ದನ್ನು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯ ಒಳಗೆ ಧರಣಿ ನಡೆಸಿ ಕೋಲಾಹಲ ಸೃಷ್ಟಿಸಿದರು.ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರ ತರಹೇವಾರಿ ಘೋಷಣೆಗಳು, ಧಿಕ್ಕಾರಗಳನ್ನು ಕೂಗಿದರು. ಕಾಂಗ್ರೆಸ್‍ನ ಟೀಕೆಗಳು, ಬಳಸುವ ಭಾಷೆ, ಸಂಸ್ಕøತಿ ಇವುಗಳ ಬಗ್ಗೆ ಅನುಕಂಪ ಸೂಚಿಸುವಂತಹ ಛೇ.. ಛೇ.. ಎಂದು ಹೇಳುವ ಮೂಲಕ ಮೂದಲಿಸಿದರು. +ಏನಿಲ್ಲ ಏನಿಲ್ಲ ಎಂಬ ಟ್ರೋಲ್ ಹಾಡನ್ನು ಶಾಸಕರು ಧರಣಿ ನಡೆಸುವ ವೇಳೆ ಹಾಡಿದ್ದು ಗಮನಸೆಳೆಯಿತು. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ಶಾಸಕರು ಹಾಡುಗಾರಿಕೆ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಿದ್ದಾರೆ. ಅವರಿಗಾಗಿ ಒಂದು ದಿನ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಿಧಾನಸಭೆ ಸಚಿವಾಲಯದ ವತಿಯಿಂದ ಆಯೋಜಿಸಲಾಗುವುದು ಎಂದು ಹೇಳಿದರು. +ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ +ಸರ್ಕಾರದ ವಿಧೇಯಕಗಳ ಮಂಡನೆ, ಪರ್ಯಾಲೋಚನೆ, ಚರ್ಚೆಗಳಿಗೆ ಅಡ್ಡಿಪಡಿಸುವಂತೆ ಜೋರಾಗಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಗದ್ದಲದ ನಡುವೆಯೇ ಎರಡು ವಿಧೇಯಕಗಳು ಯಾವುದೇ ಚರ್ಚೆ ಇಲ್ಲದೆ ಅಂಗೀಕಾರಗೊಂಡವು. ಸಭಾಧ್ಯಕ್ಷರು ವಿಧೇಯಕಗಳ ಮೇಲಿನ ಚರ್ಚೆಯಲ್ಲಿ ಭಾಗವಹಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಕೊನೆಗೆ ದನಿ ಮತದ ಮೂಲಕವೇ ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ ಎಂದು ಘೋಷಿಸಲಾಯಿತು. +ಗದ್ದಲ ನಡುವೆಯೇ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ನಿರ್ಣಯಕ್ಕೆ ಪ್ರತಿಯಾಗಿ ಖಂಡನಾ ನಿರ್ಣಯವನ್ನು ಮಂಡಿಸಿ ಸೇಡು ತೀರಿಸಿಕೊಂಡರು. ಎಷ್ಟೇ ಪ್ರಯತ್ನಪಟ್ಟರೂ ಗದ್ದಲ, ಧರಣಿ ತಹಬದಿಗೆ ಬರದೇ ಇದ್ದುದರಿಂದ ಸಭಾಧ್ಯಕ್ಷ ಯು.ಟಿ.ಖಾದರ್ ಕಲಾಪದಲ್ಲಿ ಇಂದಿನ ಪ್ರಶ್ನೋತ್ತರ ಸೂಚನೆ, ಗಮನಸೆಳೆಯುವ ಸೂಚನೆ ಹಾಗೂ ಶೂನ್ಯವೇಳೆ ಕಲಾಪಗಳನ್ನು ಸೋಮವಾರ ಬೆಳಗ್ಗೆ 9.30ಕ್ಕೆ ಮುಂದೂಡಿದರು. \ No newline at end of file diff --git a/eesanje/url_46_227_4.txt b/eesanje/url_46_227_4.txt new file mode 100644 index 0000000000000000000000000000000000000000..b86b3cc5cd65da3480831b6939b5562cd9fbafde --- /dev/null +++ b/eesanje/url_46_227_4.txt @@ -0,0 +1,9 @@ +ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ +ಬೆಂಗಳೂರು, ಫೆ.23- ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂಬ ಬಗ್ಗೆ ಒತ್ತಡವಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಒಳ್ಳೆಯ ಭಾವನೆ ಇದೆ. ಅವರು ಸಹ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದಾಗ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ ಎಂದರು.ಮಂಜುನಾಥ್ ಅವರು ಚುನಾವಣೆಗೆ ಸ್ರ್ಪಧಿಸುವ ವಿಚಾರದಲ್ಲಿ ಬಹಿರಂಗವಾಗಿ ಇದುವರೆಗೂ ಏನನ್ನೂ ಹೇಳಿಲ್ಲ. ರಾಜಕೀಯ ಪ್ರವೇಶ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಮಯ ಬಂದಾಗ ಈ ಎಲ್ಲಾ ವಿಚಾರ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. +ಪ್ರೇಕ್ಷಣೀಯ ಸ್ಥಳವಾಗಿ ಬದಲಾಗಲಿದೆ ಫ್ರೀಡಂಪಾರ್ಕ್ +ಫೆ.27ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್‍ನಿಂದ ಮಾಜಿ ಸಂಸದ ಕುಪೇಂದ್ರರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ಅವರಿಗೆ ಗೆಲುವು ತಂದುಕೊಡಬೇಕು ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಾಗುತ್ತಿದೆ. ನಮ್ಮ ಆಸೆ ಈಡೇರಲಿದೆಯೇ ಎಂಬುದು ಅಂದು ಸಂಜೆ ಬಹಿರಂಗವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. +ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಬೇಕೆಂಬ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿ ಭೇಟಿ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಮಿತ್ ಷಾ ಅವರು ಸಹ ಹಲವು ಸಲಹೆ- ಸೂಚನೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದರು. +ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ +ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಹೋರಾಟ ಮಾಡಲಿದ್ದು, ಏನೇ ತೀರ್ಮಾನ ಕೈಗೊಂಡರೂ ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಬಿಜೆಪಿ ಹಮ್ಮಿಕೊಳ್ಳಲಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಸ್ಪಷ್ಟಪಡಿಸಿದರು. +ಆರೋಗ್ಯ ಸರಿ ಇಲ್ಲದ ಕಾರಣ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. \ No newline at end of file diff --git a/eesanje/url_46_227_5.txt b/eesanje/url_46_227_5.txt new file mode 100644 index 0000000000000000000000000000000000000000..197dc1aa2172e4738ef734106a76f2e20f0ef4c0 --- /dev/null +++ b/eesanje/url_46_227_5.txt @@ -0,0 +1,7 @@ +ಪ್ರೇಕ್ಷಣೀಯ ಸ್ಥಳವಾಗಿ ಬದಲಾಗಲಿದೆ ಫ್ರೀಡಂಪಾರ್ಕ್ +ಬೆಂಗಳೂರು,ಫೆ.23- ಪ್ರತಿಭಟನೆಗಳಿಗೆಂದೇ ಮೀಸಲಾಗಿರುವ ಸ್ವಾತಂತ್ರ್ಯ ಉದ್ಯಾನವನವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಲು ಬಿಬಿಎಂಪಿ ಪ್ಲಾನ್ ಮಾಡಿದೆ. ಪ್ರತಿನಿತ್ಯ ಪ್ರತಿಭಟನೆ ನಡೆಸಲಾಗುತ್ತಿರುವ ಉದ್ಯಾನವನವನ್ನು ಪ್ಷೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಿ ಅದರಿಂದ ಆದಾಯ ಬರುವಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ. +21 ಹೆಕ್ಟೆರ್ ಪ್ರದೇಶದಲ್ಲಿ ವಿಸ್ತಾರಗೊಂಡಿರುವ ಸ್ವಾತಂತ್ರ್ಯ ಉದ್ಯಾನವನವನ್ನು ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲು ಬಿಬಿಎಂಪಿ 5 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಉದ್ಯಾನವನವನ್ನು ನವೀಕರಣ ಮಾಡಿ ಪ್ರೇಕ್ಷಣೀಯ ಸ್ಥಳದ ಜೊತೆ ಹೆರಿಟೇಜ್ ಹಬ್ ಮಾಡುವುದರ ಜೊತೆಗೆ ಫ್ರೀಡಂ ಪಾರ್ಕ್‍ನಲ್ಲಿ ಅಸ್ತಿತ್ವದಲ್ಲಿರುವ ಕಟ್ಟಡಗಳ ನವೀಕರಣ, ಹಳೆಯ ಸೆಂಟ್ರಲ್ ಜೈಲ್ ರಚನೆಗಳು, ವಿದ್ಯುತೀಕರಣ ಹಾಗೂ ದುರಸ್ತಿಗಾಗಿ ಬಿಬಿಎಂಪಿ ಯೋಜನೆ ರೂಪಿಸಿದೆ. +ಅಭಿವೃದ್ಧಿಯಾದ ಉದ್ಯಾನವನಕ್ಕೆ ಹೆಚ್ಚು ಜನರನ್ನು ಆಕರ್ಷಿಸುವ ಉದ್ದೇಶದಿಂದ ರಾಮಚಂದ್ರ ರಸ್ತೆಯಿಂದ ಫ್ರೀಡಂ ಪಾರ್ಕ್‍ಗೆ ಎರಡನೇ ಪ್ರವೇಶ ದ್ವಾರ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಫ್ರೀಡಂ ಪಾರ್ಕ್‍ನ ಅಸ್ತಿತ್ವದಲ್ಲಿರುವ ರಚನೆಗಳ ನವೀಕರಣ ಮತ್ತು ವಿದ್ಯುದ್ದೀಕರಣಕ್ಕಾಗಿ ಟೆಂಡರ್ ಕರೆಯಲಾಗಿದ್ದು, ಸಂಪೂರ್ಣ ಕಾಮಗಾರಿಗೆ 5 ಕೋಟಿ ರೂಪಾಯಿ ವೆಚ್ಚ ಆಗಬಹುದು ಎಂದು ಅಂದಾಜಿಸಲಾಗಿದೆ. +ಬೆಂಗಳೂರಿನಲ್ಲಿ ಹೊಸ 372 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಚಿಂತನೆ : ಡಿ.ಕೆ.ಶಿವಕುಮಾರ್ +ಈ ಹಿಂದೆ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಉದ್ಯಾನವನವನ್ನು ನವೀಕರಿಸಲಾಗಿತ್ತು. ಆ ಸಮಯದಲ್ಲಿ ಖಾಲಿ ಇದ್ದ ಸ್ಥಳದಲ್ಲಿ ಆಂಫಿ ಥಿಯೇಟರ್, ಹೊರ ಸಭಾಂಗಣ ಹಾಗೂ ಗಾರ್ಡನ್ ಅನ್ನು ಹೊಸದಾಗಿ ನಿರ್ಮಾಣ ಮಾಡಲಾಗಿತ್ತು. ಆದ್ರೆ ಕಳಪೆ ಕಾಮಗಾರಿಯಿಂದ ಎಲ್ಲವೂ ಸಂಪೂರ್ಣವಾಗಿ ಹಾಳಾಗಿದೆ. ಜೊತೆಗೆ ಪಾರ್ಕ್ ಒಳಗಿರುವ ಹಳೆಯ ಜೈಲು ಕುಸಿಯುವ ಹಂತದಲ್ಲಿದೆ ಎನ್ನುವ ಮಾಹಿತಿ ಇದೆ. +ಉದ್ಯಾನವನ ನವೀಕರಿಸಲು ಬಿಬಿಎಂಪಿ 8 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ಅಂದಾಜಿಸಿತ್ತು. ಆದರೆ ಇದೀಗ ನವೀಕರಣಕ್ಕೆ 5 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಹೀಗಾಗಿ ಆಂಫಿಥಿಯೇಟರ್‍ವೊಳಗೆ ಹವಾನಿಯಂತ್ರಣ ಮತ್ತು ಅಕೌಸ್ಟಿಕ್ಸ್ ಯೋಜನೆಗಳನ್ನು ಬಿಬಿಎಂಪಿ ಕೈಬಿಟ್ಟಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_227_6.txt b/eesanje/url_46_227_6.txt new file mode 100644 index 0000000000000000000000000000000000000000..51a181406e8fe607cae9202b51ba12f4308888bf --- /dev/null +++ b/eesanje/url_46_227_6.txt @@ -0,0 +1,6 @@ +ಬೆಂಗಳೂರಿನಲ್ಲಿ ಹೊಸ 372 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಚಿಂತನೆ : ಡಿ.ಕೆ.ಶಿವಕುಮಾರ್ +ಬೆಂಗಳೂರು ಫೆ.23- ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಆಲೋಚಿಸಿದ್ದೇವೆ ಎಂದು ಬೆಂಗಳೂರು ಮಹಾನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ಬಿಜೆಪಿಯ ಭಾರತಿ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಬೆಂಗಳೂರಿನಲ್ಲಿ 907 ಸಾರ್ವಜನಿಕ ಶೌಚಾಲಯಗಳಿವೆ. ಹೆಚ್ಚುವರಿಯಾಗಿ ಇನ್ನು 372 ನೂತನ ಶೌಚಾಲಯಗಳನ್ನು ಆರಂಭಿಸಲು ಚಿಂತನೆ ನಡೆಸಿದ್ದೇವೆ. ಸ್ಥಳದ ಲಭ್ಯತೆ ನೋಡಿಕೊಂಡು ಶೀಘ್ರದಲ್ಲೇ ಒಂದು ನಿರ್ಧಾರಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.ಶೌಚಾಲಯಗಳನ್ನು ಉಚಿತವಾಗಿ ನೀಡಬೇಕೆಂದು ಸದಸ್ಯರು ಸಲಹೆ ಕೊಟ್ಟಿದ್ದಾರೆ. ಆದರೆ ಇದನ್ನು ಉಚಿತವಾಗಿ ನೀಡಿದರೆ ನಿರ್ವಹಣೆ ಮಾಡುವುದು ಕಷ್ಟಸಾಧ್ಯ. ಕಡೇಪಕ್ಷ ಎಲ್ಲ ಶೌಚಾಲಯಗಳಲ್ಲೂ ಏಕರೂಪ ಮಾದರಿಯ ದರವನ್ನು ನಿಗದಿಪಡಿಸಲು ಅಧಿಕಾರಿಗಳ ಜೊತೆ ಚರ್ಚೆ ಮಾಡುವುದಾಗಿ ಹೇಳಿದರು. +ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ +ಕಡೆಪಕ್ಷ ಸಾರ್ವಜನಿಕ ಶೌಚಾಲಯಗಳ ಸ್ಥಿತಿಗತಿ ಹೇಗಿರುತ್ತದೆ ಎಂಬುದು ಸದಸ್ಯೆ ಭಾರತಿ ಶೆಟ್ಟಿ ಅವರು ಹೋಗಿ ನೋಡಿರುವುದು ಅಭೀನಂದನೀಯ. ಏಕೆಂದರೆ ಇಂತಹ ಸಾರ್ವಜನಿಕ ಶೌಚಾಲಯಗಳಿಗೆ ಜನಪ್ರತಿನಿಧಿಗಳು ಹೋಗುವುದೂ ಇಲ್ಲ. ತಲೆಕೆಡಿಸಿಕೊಳ್ಳುವುದೂ ಇಲ್ಲ. ನಾನು ಕನಕಪುರಕ್ಕೆ ಹೋಗುವ ವೇಳೆ ಅಲ್ಲಲ್ಲಿ ಭೇಟಿ ಕೊಡುತ್ತೇನೆ. ಶೌಚಾಲಯಗಳಲ್ಲಿ ಅನೇಕ ರೀತಿಯ ಸಮಸ್ಯೆಗಳಿರುವುದು ನನ್ನ ಗಮನಕ್ಕೆ ಬಂದಿದೆ. ಹೊಸದಾಗಿ ಶೌಚಾಲಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡುವುದಾಗಿ ತಿಳಿಸಿದರು. +ಇವುಗಳನ್ನು ಟಿಪಿಟಿ ಮಾದರಿಯಲ್ಲಿ ನಿರ್ಮಿಸಬೇಕೆ ಅಥವಾ ಸರ್ಕಾರದ ಮಟ್ಟದಲ್ಲೇ ನಿರ್ಮಾಣ ಮಾಡಬೇಕೇ? ಎಂಬುದರ ಬಗ್ಗೆಯೂ ಚರ್ಚೆ ಮಾಡುತ್ತೇವೆ. ದರ ಕಡಿಮೆ ಮಾಡುವ ಬಗ್ಗೆ ಸದಸ್ಯರು ಮನವಿ ಮಾಡಿಕೊಂಡಿದ್ದಾರೆ. ಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_227_7.txt b/eesanje/url_46_227_7.txt new file mode 100644 index 0000000000000000000000000000000000000000..e266db6ab3d4a55d60773488cab86be9b8f3ebab --- /dev/null +++ b/eesanje/url_46_227_7.txt @@ -0,0 +1,11 @@ +ಸಾರಾಯಿ ನಿಷೇಧದಿಂದ ಸಂಕಷ್ಟಪೀಡಿತ ಕುಟುಂಬಗಳಿಗೆ ನೆರವಿಗೆ ಒತ್ತಾಯ +ಬೆಂಗಳೂರು ಫೆ.23- ಸಾರಾಯಿ ನಿಷೇಧದಿಂದ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರ ಮಾನವೀಯತೆಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪಕ್ಷಬೇಧ ಮರೆತು ವಿಧಾನಪರಿಷತ್‍ನಲ್ಲಿ ಒತ್ತಾಯಿಸಲಾಯಿತು. ಬಿ.ಕೆ.ಹರಿಪ್ರಸಾದ್ ಅವರು ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿ 2006ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಏಕಾಏಕಿ ಸಾರಾಯಿ ಮಾರಾಟ ನಿಷೇಧ ಮಾಡಿದ ಪರಿಣಾಮ ಅನೇಕ ಕುಟುಂಬಗಳು ಬೀದಿಗೆ ಬಿದ್ದಿವೆ. ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. +ದೂರದೃಷ್ಟ ಇಲ್ಲದೆ ಅವರಿಗೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸದೆ ಉಪಕಸುಬನ್ನು ಏಕಾಏಕಿ ನಿಲ್ಲಿಸಿದ ಪರಿಣಾಮ ಇಂದು ಬೀದಿಗೆ ಬಂದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅತಿಹೆಚ್ಚು ತೆರಿಗೆ ಕಟ್ಟುವವರು ಮದ್ಯ ಮಾರಾಟ ಮಾಡುವವರು. ಕುಡಿಯುವವರಿಗೆ ಸರ್ಕಾರ ಸವಲತ್ತುಕೊಡುತ್ತದೆ. ಮಾರಾಟ ಮಾಡುವವರಿಗೆ ಕಡೇಪಕ್ಷ ಯಾವ ಸೌಲಭ್ಯಗಳಿಲ್ಲ. ಸಾರಾಯಿ ಮಾರುವವರ ಕುಟುಂಬಗಳ ಪರಿಸ್ಥಿತಿ ಹೇಳತೀರದು. ನಾವು ಎಲ್ಲವನ್ನೂ ಮೌನದಿಂದಲೇ ನೋಡಿಕೊಂಡು ಹೋಗುತ್ತೇವೆ. ಬೇರೆಯವರಾಗಿದ್ದರೆ ರಕ್ತಪಾತವಾಗುತ್ತಿತ್ತು ಎಂದು ಆತಂಕ ವ್ಯಕ್ತಪಡಿಸಿದರು. +ತಮಿಳುನಾಡಿನಲ್ಲೂ ಸಾರಾಯಿ ನಿಷೇಧ ಮಾಡಲಾಯಿತು. ಆದರೆ ಅವರು ಒಂದು ವರ್ಷ ಅವಕಾಶ ಕಲ್ಪಿಸಿ ಈ ಉಪಕಸುಬು ಮಾಡುತ್ತಿದ್ದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿದ್ದರು. ನಮ್ಮಲ್ಲಿ ಇದೇ ವ್ಯವಸ್ಥೆ ಏಕಿಲ್ಲ ಎಂದು ಪ್ರಶ್ನಿಸಿದರು. ಪ್ರಸಕ್ತ ವರ್ಷ 36 ಸಾವಿರ ಕೋಟಿ ಆದಾಯವನ್ನು ರಾಜ್ಯ ಬೊಕ್ಕಸಕ್ಕೆ ನೀಡಿದ್ದಾರೆ. ಎಂದೂ ಕೂಡ ಇವರು ಬೀದಿಗೆ ಬಂದವರಲ್ಲ. ಪ್ರತಿಭಟನೆಯನ್ನೂ ಕೂಡ ನಡೆಸುವವರಲ್ಲ. ಕುಡಿಯುವವರಿಗೆ ಸವಲತ್ತು ಕೊಡುವ ಸರ್ಕಾರ ಕಡೇಪಕ್ಷ ಮಾರಾಟ ಮಾಡುವವರಿಗೂ ಪುನರ್ವಸತಿ ರೂಪಿಸಬೇಕು ಎಂದರು. +ಎಂಎಸ್‍ಐಎಲ್ ಮಳಿಗೆಗಳಲ್ಲಿ ಸಾರಾಯಿ ಮಾರಾಟ ನಿಷೇಧದಿಂದ ಸಂಕಷ್ಟಕ್ಕೊಳಗಾಗಿರುವ ಕುಟುಂಬದವರಿಗೆ ಸರ್ಕಾರ ಉದ್ಯೋಗವನ್ನಾದರೂ ನೀಡಲಿ ಎಂದು ಮನವಿ ಮಾಡಿದರು. 1946ರಿಂದ ಈವರೆಗೂ ತೆರಿಗೆ ಕಟ್ಟದವರಿಂದ ವಸೂಲಿ ಮಾಡಲು ಮುಂದಾಗಿದ್ದಾರೆ. ಅದರಲ್ಲಿ ಯಾರು ಬದುಕಿದ್ದಾರೋ, ಸತ್ತಿದ್ದಾರೋ ಎಂಬುದು ಗೊತ್ತಿಲ್ಲ. ಕನಿಷ್ಠಪಕ್ಷ ಅಸಲು ಮತ್ತು ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಲಿ ಎಂದು ಒತ್ತಾಯಿಸಿದರು. +ರೌಡಿಗಳ ಅಟ್ಟಹಾಸ ಅಡಗಿಸಲು ಇಲಾಖೆ ಸಮರ್ಥವಾಗಿದೆ: ಗೃಹ ಸಚಿವ ಪರಮೇಶ್ವರ್ +ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಸಾರಾಯಿ ಮಾರಾಟ ನಿಷೇಧದಿಂದ ಸಂಕಷ್ಟಕ್ಕೊಳಗಾದವರಿಗೆ ಸುವರ್ಣ ಕಾಯಕ ಯೋಜನೆಯನ್ನು ಜಾರಿ ಮಾಡಲಾಯಿತು. ಇದರಡಿ ಉದ್ಯೋಗ ತರಬೇತಿ ಸೇರಿದಂತೆ ವಿವಿಧ ರೀತಿಯ ತರಬೇತಿಗಳನ್ನು ನೀಡುತ್ತಿದ್ದರೂ ಅನೇಕರು ಇದರ ಲಾಭ ಪಡೆಯಲು ಮುಂದೆ ಬರಲಿಲ್ಲ. ಬಂದವರಲ್ಲಿ ಕೆಲವರಿಗೆ ವಯಸ್ಸೇ ಮುಗಿದು ಹೋಯಿತು ಎಂದರು. +ನಾವು ಇಲಾಖೆ ವತಿಯಿಂದ 4 ಮತ್ತು 5ನೇ ಕರ ಯೋಜನೆಯಡಿ ತೆರಿಗೆ ಕಟ್ಟಲು ನಾವು ವಿನಾಯ್ತಿ ಕೊಟ್ಟಿದ್ದೇವು. ಆದರಲ್ಲಿ ಕೆಲವರು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರೆ ಉಳಿದಕಡೆ ಕೆಲವು ಆಸ್ತಿಯನ್ನು ಹರಾಜು ಹಾಕಲಾಗಿದೆ. ಅಸಲು ಮತ್ತು ಬಡ್ಡಿ ಮನ್ನಾ ಮಾಡಬೇಕೆಂದರೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಬೇಕು ಎಂದರು. +ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಈ ಹಿಂದೆ ಮಾಜಿ ಮುಖ್ಯಮಂತ್ರಿ ವಿರೇಂದ್ರ ಪಾಟೀಲ್ ಅವರು ಕಳ್ಳಭಟ್ಟಿ ಪ್ರಕರಣ ತಡೆಯುವುದಕ್ಕಾಗಿ ಶೇಂದಿ ನಿಷೇಧ ಮಾಡಿದರು. ಯಡಿಯೂರಪ್ಪನವರು ಉಪಮುಖ್ಯಮಂತ್ರಿಯಾಗಿದ್ದಾಗ ಕೆಲವು ಸ್ತ್ರೀ ಸಂಘಟನೆಗಳು ಸಾರಾಯಿಯನ್ನು ಎಲ್ಲೆಂದರಲ್ಲಿ ಗಲ್ಲಿಗಲ್ಲಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಮಕ್ಕಳು ಸಹ ಕುಡಿಯುವ ದುಶ್ಚಟಕ್ಕೆ ಬಿದ್ದಿದ್ದಾರೆ. ಇದನ್ನು ನಿಷೇಧ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಾರಾಯಿ ನಿಷೇಧ ಮಾಡಲಾಗಿತ್ತು. ಸಾರಾಯಿ ಮಾರಾಟ ಕುಟುಂಬಗಳಿಗೆ ಈಗಿನ ಸರ್ಕಾರ ಎಂಎಸ್‍ಐಎಲ್‍ನಲ್ಲಿ ಉದ್ಯೋಗ ನೀಡಬೇಕೆಂದು ಮನವಿ ಮಾಡಿದರು. +ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ +ಕೆಲವು ಕಡೆ ನೀರಾ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಅವಕಾಶ ಯಾಕೆ ಕಲ್ಪಿಸಬಾರದು ಎಂದು ಪ್ರಶ್ನೆ ಮಾಡಿದರು. ನಿಮಗೆ ನೀರಾ ಕುಡಿದು ಅಭ್ಯಾಸವಿದೆಯೇ ಎಂದು ಪ್ರಶ್ನಿಸಿದರು. ನಾನು ನೀರಾ ಕುಡಿಯಬೇಕೆಂದು ಕೆಲವು ಸಂದರ್ಭದಲ್ಲಿ ಪ್ರಯತ್ನಪಟ್ಟೆ ಆದರೆ ಅದು ಕುಡಿದ ನಂತರ ಎಲ್ಲಿ ಕಿಕ್ ಹೊಡೆದು ಅಮಲು ತಂದುಬಿಡುತ್ತದೆಯೋ ಎಂದು ಕುಡಿಯಲಿಲ್ಲ. ನಿಮ್ಮಷ್ಟು ದಷ್ಟಪುಷ್ಟನಾಗಿದ್ದರೆ ಕುಡಿಯುತ್ತಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು. \ No newline at end of file diff --git a/eesanje/url_46_227_8.txt b/eesanje/url_46_227_8.txt new file mode 100644 index 0000000000000000000000000000000000000000..5a23b7f2b5db6af5464019159d3455dda10296f0 --- /dev/null +++ b/eesanje/url_46_227_8.txt @@ -0,0 +1,5 @@ +ಅಯೋಧ್ಯೆ ರೈಲಿಗೆ ಬೆಂಕಿ ಬೆದರಿಕೆ: ಪರಿಷತ್‍ನಲ್ಲಿ ಪ್ರತಿಧ್ವನಿ +ಬೆಂಗಳೂರು ಫೆ.23- ಮೈಸೂರು- ಅಯೋಧ್ಯೆಧಾಮ, ರೈಲು ಸುಟ್ಟು ಹಾಕುವುದಾಗಿ ಬೆದರಿಸಿದ್ದ ದಾಳಿ ಪ್ರಕರಣ ವಿಧಾನಪರಿಷತ್‍ನಲ್ಲಿ ಪ್ರತಿಧ್ವನಿಸಿತು. ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಲು ಮುಂದಾದರು. ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಅವರು ವಿಷಯ ಪ್ರಸ್ತಾಪಿಸಿದರು. +ಹೊಸಪೇಟೆ ಬಳಿ ಅಯೋಧ್ಯೆ ರೈಲಿಗೆ ನುಗ್ಗಿದ ದುಷ್ಕರ್ಮಿಗಳು ರಾಮ ಭಕ್ತರಿಗೆ ಧಮಕಿ ಹಾಕಿದ್ದಾರೆ. ರೈಲಿಗೆ ಬೆಂಕಿಹಾಕುವುದಾಗಿ ಬೆದರಿಸಿದ್ದಾರೆ. ಈ ಕುರಿತು ಸರ್ಕಾರದಿಂದ ಈವರೆಗೆ ಯಾವುದೇ ಉತ್ತರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಗೋದ್ರಾ ಹತ್ಯಾಕಾಂಡ ಬಗ್ಗೆ ಮಾತನಾಡಿದ್ದರು. ಈಗ ಈ ಘಟನೆ ನಡೆದಿದೆ, ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತೆ ಬಿಟ್ಟು ಕಳುಹಿಸಿದ್ದಾರೆ ಎಂದು ಕಿಡಿಕಾರಿದರು. +ರಸ್ತೆ ಅಪಘಾತದಲ್ಲಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಸಾವು +ಆಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಏನು ಇದಕ್ಕೊಂದು ರೀತಿ ನೀತಿ ಬೇಡವೆ. ಕಲಾಪದಲ್ಲಿ ನಿಯಮ ಇದೆ, ಯಾವ ನಿಯಮದಲ್ಲಿ ಪ್ರಶ್ನಿಸಬೇಕು ಎಂಬುದು ಗೊತ್ತಿಲ್ಲವೇ? ಎಂದು ಗರಂ ಆದರು. ಈ ವೇಳೆ ಆಡಳಿತ ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಶೂನ್ಯವೇಳೆಯಲ್ಲಿ ಚರ್ಚೆಗೆ ಅವಕಾಶ ಕೊಡುತ್ತೇನೆ,ಈಗ ಬೇಡ ಎಂದು ಸಭಾಪತಿ ಬಸವರಾಜ ಹೊರಟ್ಟಿ ಗದ್ದಲಕ್ಕೆ ತೆರೆ ಎಳೆದರು. \ No newline at end of file diff --git a/eesanje/url_46_227_9.txt b/eesanje/url_46_227_9.txt new file mode 100644 index 0000000000000000000000000000000000000000..ce325ec65cd1d12091cd656ed7728e5b29d4e766 --- /dev/null +++ b/eesanje/url_46_227_9.txt @@ -0,0 +1,11 @@ +ರೌಡಿಗಳ ಅಟ್ಟಹಾಸ ಅಡಗಿಸಲು ಇಲಾಖೆ ಸಮರ್ಥವಾಗಿದೆ: ಗೃಹ ಸಚಿವ ಪರಮೇಶ್ವರ್ +ಬೆಂಗಳೂರು ಫೆ.23- ಬೆಂಗಳೂರು ಮಹಾ ನಗರದಲ್ಲಿ ರೌಡಿಗಳ ಅಟ್ಟಹಾಸವನ್ನು ಹತ್ತಿಕ್ಕಲು ಪೊಲೀಸರು ಸಮರ್ಥವಾಗಿದ್ದು, ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಗೃಹ ಇಲಾಖೆ ಸಮರ್ಥವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್‍ನಲ್ಲಿ ಹೇಳಿದ್ದಾರೆ. ಸದಸ್ಯ ನಾಗರಾಜ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ನಗರದಲ್ಲಿ ರೌಡಿಗಳ ಚಲನವಲನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಅವರ ಮನೆಗಳ ಮೇಲೆ ದಾಳಿ ನಡೆಸುತ್ತಾರೆ. +ಕಾನೂನು ಮೀರಿ ವರ್ತನೆ ಮಾಡಿದರೆ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. ಇತ್ತೀಚೆಗೆ ನಮ್ಮ ನಗರ ಪೊಲೀಸ್ ಆಯುಕ್ತರೇ ಏಕಾಏಕಿ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಮನೆಗಳಲ್ಲಿದ್ದ ಬಂದೂಕು, ಲಾಂಗ್ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಆಯಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ರೌಡಿಶೀಟರ್‍ಗಳ ಚಲನವಲನಗಳ ಬಗ್ಗೆ ಕಣ್ಣಿಡುವಂತೆ ಸೂಚನೆ ಕೊಡಲಾಗಿದೆ ಎಂದರು. +ಬೆಂಗಳೂರು ನಗರದಲ್ಲಿ ನಿರ್ಭಯ ಯೋಜನೆಯಡಿ ನಾವು ಹಲವಾರು ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ. 655 ಕೋಟಿ ವೆಚ್ಚದಲ್ಲಿ ನಗರದಾದ್ಯಂತ 7500 ಸಿಸಿ ಕ್ಯಾಮೆರಾಗಳನ್ನು ಅಳವಿಡಿಸಿದ್ದೇವೆ. ಇತ್ತೀಚೆಗೆ ಸಿಟಿ ಕಮಾಂಡ್ ಕಂಟ್ರೋಲ್ ರೂಮ್ ತೆರೆದಿದ್ದೇವೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲೂ ಈ ಕ್ಯಾಮೆರಾಗಳು 24*7 ಕಾರ್ಯ ನಿರ್ವಹಿಸುತ್ತವೆ ಎಂದು ಹೇಳಿದರು. +ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ +ನಗರದ ಯಾವುದೇ ಪ್ರದೇಶಗಳಲ್ಲೂ ಸಿಸಿ ಕ್ಯಾಮೆರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಕಂಟ್ರೋಲ್ ರೂಮ್ ಮೂಲಕವೇ ನಿಯಂತ್ರಣ ಮಾಡುವ ವ್ಯವಸ್ಥೆಯೂ ಇದೆ. ಎಲ್ಲಾದರೂ ಸಿಸಿ ಕ್ಯಾಮೆರಾಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದಿದ್ದರೆ ಇಲ್ಲಿಂದಲೇ ನಿರ್ದೇಶನ ನೀಡಬಹುದು. ಇದರಿಂದ ಅಪರಾಧ ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದರು. +ಇತ್ತೀಚೆಗೆ ಸೇಫ್ಟಿ ಹೈಲ್ಯಾಂಡ್ ಎಂಬ ವಿನೂತನ ಯೋಜನೆಯನ್ನು ಜಾರಿ ಮಾಡಿದ್ದೇವೆ. ಇದರಡಿ ಯಾರದರೂ ಹಲ್ಲೆ ನಡೆಸುವುದು, ಬ್ಯಾಗ್ ಕಿತ್ತುಕೊಂಡು ಹೋಗುವುದು, ನಡುರಸ್ತೆಯಲ್ಲೇ ಆಭರಣ ದೋಚುವುದು ಕಂಡುಬಂದರೆ ತಕ್ಷಣವೇ ಟೆಲಿಫೋನ್‍ನಂತೆ ಒಂದು ಬಟನ್ ಒತ್ತಿದರೆ ಸಾಕು ಕೇವಲ 5 ನಿಮಿಷದೊಳಗೆ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಾರೆ. ಅಲ್ಲದೆ ಇದರಲ್ಲಿ ಪ್ರತಿಯೊಂದು ಮಾಹಿತಿಗಳು ದಾಖಲಾಗುವುದರಿಂದ ಅಪರಾಧ ಎಸಗಿದವರು ಅಷ್ಟು ಸುಲಭವಾಗಿ ತಲೆಮರೆಸಿಕೊಳ್ಳಲು ಸಾಧ್ಯವಿಲ್ಲ ಎಂದರು. +ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ವಿದೇಶಿಯೊಬ್ಬರು ತಮ್ಮ ಪರ್ಸ್ ಕಳೆದುಕೊಂಡಿದ್ದರು. ಕೂಡಲೇ ಅವರು ಬಟನ್ ಒತ್ತಿದ ಪರಿಣಾಮ ಪೊಲೀಸರು ಕ್ಷಣಾರ್ಧದಲ್ಲಿ ಅಪರಾಧಿಯನ್ನು ಹಿಡಿಯಲು ಸಾಧ್ಯವಾಯಿತು. ಹೀಗಾಗಿ ಸಾರ್ವಜನಿಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕೆಂದು ಪರಮೇಶ್ವರ್ ಮನವಿ ಮಾಡಿದರು. +ಇಡೀ ರಾಷ್ಟ್ರದಲ್ಲೇ ಸೈಬರ್ ಕ್ರೈಂ ಠಾಣೆಗಳನ್ನು ಆರಂಭಿಸಿದ ಮೊದಲ ನಗರ ಬೆಂಗಳೂರು. ಪ್ರಾರಂಭದಲ್ಲಿ ಸೈಬರ್ ಅಪರಾಧ ಎಸಗಿದವರ ವಿರುದ್ಧ ರ್ನಿಷ್ಟ ಠಾಣೆಗಳಲ್ಲಿ ಮಾತ್ರ ದೂರು ನೀಡಲು ಅವಕಾಶವಿತ್ತು. ಇದನ್ನು ಬದಲಾಯಿಸಿ ಎಲ್ಲಾ ಠಾಣೆಗಳಲ್ಲೂ ದೂರು ನೀಡುವ ಅವಕಾಶ ಕಲ್ಪಿಸಿದ್ದೇವೆ. ಇದಕ್ಕಾಗಿ ಹೊಯ್ಸಳದವರಿಗೆ ವಿಶೇಷ ತರಬೇತಿಯನ್ನು ನೀಡಲಾಗುತ್ತದೆ. +ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ +ಸಾರ್ವಜನಿಕರ ರಕ್ಷಣೆಗಾಗಿ ನಾವು 112 ಸಹಾಯವಾಣಿಯನ್ನು ಆರಂಭಿಸಿದ್ದೇವೆ. ಇದಕ್ಕೆ ಸರಿಯಾದ ಮಾಹಿತಿ ಕೊಟ್ಟರೆ ಅಪರಾಧ ಸ್ಥಳಕ್ಕೆ ತಕ್ಷಣವೇ ಪೊಲೀಸರು ಆಗಮಿಸಿ ಅಪರಾಧಿಗಳನ್ನು ಹಿಡಿಯಲು ಅನುಕೂಲವಾಗುತ್ತದೆ. ಒಟ್ಟಿನಲ್ಲಿ ಬೆಂಗಳೂರುಮಹಾನಗರದಲ್ಲಿ ಅಪರಾಧ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಎಲ್ಲರಿಗೂ ಸುರಕ್ಷತೆ ಒದಗಿಸುವುದೇ ನಮ್ಮ ಇಲಾಖೆಯ ಪ್ರಮುಖ ಉದ್ದೇಶವಾಗಿದೆ ಎಂದು ಪರಮೇಶ್ವರ್ ಹೇಳಿದರು. \ No newline at end of file diff --git a/eesanje/url_46_228_1.txt b/eesanje/url_46_228_1.txt new file mode 100644 index 0000000000000000000000000000000000000000..de21b43b6ef1574a81a119ee759f940192afd71a --- /dev/null +++ b/eesanje/url_46_228_1.txt @@ -0,0 +1,7 @@ +“ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ” +ಬೆಂಗಳೂರು,ಫೆ.22- ವಿದ್ಯುತ್ ಸರಬರಾಜು ಕಂಪನಿಗಳ ಪರ್ಯಾಯ ಮೂಲಗಳಿಂದ ಸಂಪನ್ಮೂಲ ಕ್ರೋಡೀಕರಿಸಿ ಅನಗತ್ಯ ಖರ್ಚು ಮಾಡುವುದನ್ನು ನಿಲ್ಲಿಸಿ ಎಂದು ಸಲಹೆ ನೀಡಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಪಿ.ರವಿಕುಮಾರ್ ನಷ್ಟ ಸರಿದೂಗಿಸಲು ವಿದ್ಯುತ್ ದರ ಏರಿಕೆ ಪರಿಹಾರವಲ್ಲ ಎಂದು ತಿಳಿಸಿದ್ದಾರೆ. +ಹುಬ್ಬಳ್ಳಿಯ ನವನಗರದಲ್ಲಿರುವ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಎಸ್ಕಾಂ) ಕಾಪೆರ್ರೇಟ್ ಕಚೇರಿಯಲ್ಲಿ ನಡೆದ ಕೆಇಆರ್‍ಸಿ ಸಾರ್ವಜನಿಕ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಕಾಂ ಪ್ರಸ್ತಾಪಿತ ಶೇ. 0.57 ದರ ಏರಿಕೆಯ ವಿಚಾರವಾಗಿ ಪ್ರತಿಕ್ರಿಯಿಸಿದರು. ನಷ್ಟವನ್ನು ಸರಿದೂಗಿಸಲು ವಿದ್ಯುತ್ ದರ ಏರಿಕೆಯೊಂದೇ ಪರಿಹಾರವಲ್ಲ. ದರ ಏರಿಸಿದರೆ ಗ್ರಾಹಕರಿಗೆ ದೊಡ್ಡ ಹೊರೆಯಾಗುತ್ತದೆ. ಎಸ್ಕಾಂ ವಿತರಣಾ ನಷ್ಟವನ್ನು ತಡೆಯಬೇಕು, ಅನಗತ್ಯ ವೆಚ್ಚಗಳನ್ನು ನಿರ್ಬಂಧಿಸಬೇಕು ಎಂದು ಅವರು ಸಲಹೆ ನೀಡಿದರು. +ಶೀಘ್ರದಲ್ಲಿ ಗ್ರಾಹಕರ ಕುಂದುಕೊರತೆಗಳನ್ನು ಪರಿಹರಿಸಲು ಗ್ರಾಹಕರ ಹಿತರಕ್ಷಣಾ ವೇದಿಕೆ ಪ್ರಾರಂಭಿಸುವ ಭರವಸೆ ನೀಡಿದರು. ವಿದ್ಯುತ್ ಉತ್ಪಾದಿಸಲು ಸೋಲಾರ್ ರೂಪ್ ಟಾಪ್ ಫೋಟೋ ವೋಲ್ಟಾಯಿಕ್ (ಎಸ್‍ಆರ್‍ಟಿಪಿವಿ) ಹೊಂದಿದ್ದು, ಅದನ್ನು ಎಸ್ಕಾಂಗೆ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ಗ್ರಾಹಕರು ಹೇಳಿದರು. ಬಳಕೆಯಾಗುವುದಕ್ಕಿಂತ ಹೆಚ್ಚಿನ ಯೂನಿಟ್‍ಗಳನ್ನು ಉತ್ಪಾದಿಸಿದರೂ ಎಸ್ಕಾಂ ನಿರಂತರವಾಗಿ ದರ ಮತ್ತು ಸ್ಥಿರ ಶುಲ್ಕವನ್ನು ಹೆಚ್ಚಿಸುತ್ತಿರುವುದರಿಂದ ಎಸ್‍ಆರ್‍ಟಿಪಿವಿಗಳಿಂದ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ. +ಅನಂತ್ ಅಂಬಾನಿ ಮದುವೆಗೆ, ಬಿಲ್‍ಗೇಟ್ಸ್, ಜುಕರ್ಬರ್ಗ್ ಸೇರಿದಂತೆ ಜಾಗತಿಕ ಉದ್ಯಮಿಗಳಿಗೆ ಆಹ್ವಾನ +ಈ ಮಧ್ಯೆ ಬಿಲ್ ಸಮಸ್ಯೆ ಬಗ್ಗೆ ಒಪ್ಪಿಕೊಂಡ ಅವರು, ಈ ಸಮಸ್ಯೆಯನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ವಿದ್ಯುತ್ ದರ ಹೆಚ್ಚಳ ಹಿನ್ನೆಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬಂಡವಾಳ ಹೂಡಲು ಅನೇಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಕೈಗಾರಿಕಾ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ನಾಗರಾಜು ಎಲಿಗಾರ್ ಹೇಳಿದರು. ಕೆಲವು ಕೈಗಾರಿಕೆಗಳು ಮಹಾರಾಷ್ಟ್ರ, ತಮಿಳುನಾಡಿಗೆ ಸ್ಥಳಾಂತರಗೊಳ್ಳುತ್ತಿವೆ. ಅಲ್ಲಿ ಕೈಗಾರಿಕೆಗಳಿಗೆ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತ್ತದೆ ಎಂದು ಹೇಳಿದ್ದಾರೆ. +ವಿದ್ಯುಚ್ಛಕ್ತಿಯು ಎಲ್ಲಾ ಕೈಗಾರಿಕೆಗಳಿಗೆ ಅಗತ್ಯವಾಗಿದೆ. ಕೈಗಾರಿಕೆಗಳಲ್ಲಿ ಒಟ್ಟು ವೆಚ್ಚದ ಶೇ.15 ರಿಂದ 20 ರಷ್ಟನ್ನು ವಿದ್ಯುತ್‍ಗಾಗಿ ಖರ್ಚು ಮಾಡುತ್ತಾರೆ. ಆದ್ದರಿಂದ ಎಸ್ಕಾಂಗಳು ವಿದ್ಯುತ್ ದರ ಕಡಿಮೆ ಮಾಡಬೇಕು. ಇಲ್ಲವಾದರೆ ಅಸ್ತಿತ್ವದಲ್ಲಿರುವ ಕೈಗಾರಿಕೆಗಳು ಸಹ ಇತರ ರಾಜ್ಯಗಳಿಗೆ ಸ್ಥಳಾಂತರಗೊಳ್ಳುತ್ತವೆ ಎಂದು ಎಚ್ಚರಿಕೆ ನೀಡಿದರು. \ No newline at end of file diff --git a/eesanje/url_46_228_10.txt b/eesanje/url_46_228_10.txt new file mode 100644 index 0000000000000000000000000000000000000000..1025628784107114f6e7f1c760e334e9c4693146 --- /dev/null +++ b/eesanje/url_46_228_10.txt @@ -0,0 +1,6 @@ +ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ +ದೆಹಲಿ,ಫೆ.22- ಮುಂಬರುವ ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಇಂದು ಮಾತುಕತೆ ನಡೆಸಿದ್ದಾರೆ. ನವದೆಹಲಿ ನಿವಾಸದಲ್ಲಿ ಅಮಿತ್ ಷಾ ಕುಮಾರಸ್ವಾಮಿ ಭೇಟಿಯಾಗಿ ಸುಮಾರು ಅರ್ಧಗಂಟೆ ಕಾಲ ರಾಜ್ಯಸಭೆ ಚುನಾವಣೆ ಕಾರ್ಯತಂತ್ರ, ಲೋಕಸಭೆ ಚುನಾವಣೆ ಸಿದ್ಧತೆ, ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ, ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ನಿನ್ನೆ ಸಂಜೆ ದೆಹಲಿಗೆ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ತೆರಳಿದ್ದ ಕುಮಾರಸ್ವಾಮಿಯವರು ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗೆ ಉಂಟಾಗಿರುವ ಸೋಲಿನ ಪರಾಮರ್ಶೆಯನ್ನು ಮಾಡಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ 2ನೇ ಅಭ್ಯರ್ಥಿ ಕುಪೇಂದ್ರರೆಡ್ಡಿಯವರ ಗೆಲುವಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. +ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ +ಲೋಕಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಹಾಗೂ ಎನ್‍ಡಿಎ ಅಭ್ಯರ್ಥಿಗಳ ಆಯ್ಕೆ ಕುರಿತಂತೆಯೂ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ ಪ್ರಚಲಿತ ರಾಜಕೀಯ ವಿದ್ಯಮಾನಗಳು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲಲು ಬೇಕಾದ ಕಾರ್ಯತಂತ್ರ, ಚುನಾವಣೆ ಸಿದ್ಧತೆ ಕಾರ್ಯತಂತ್ರದ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ. +ಜೆಡಿಎಸ್‍ಗೆ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಟ್ಟು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆಯೂ ಉಭಯ ನಾಯಕರು ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_228_11.txt b/eesanje/url_46_228_11.txt new file mode 100644 index 0000000000000000000000000000000000000000..0373cba1e7b4907fb63bafee837fbc399905133a --- /dev/null +++ b/eesanje/url_46_228_11.txt @@ -0,0 +1,10 @@ +ಮಲ್ಲಿಕಾರ್ಜುನ ಖರ್ಗೆಯವರೇ ಬಿಜೆಪಿಗೆ ಬರುವ ಸಾಧ್ಯತೆ ಇದೆ : ಯತ್ನಾಳ್ +ಬೆಂಗಳೂರು, ಫೆ.22- ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯ ನಡುವೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಮತ್ತೊಮ್ಮೆ ಗಮನ ಸೆಳೆಯುವ ಹೇಳಿಕೆ ನೀಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು. ಬಿಜೆಪಿ ಉಪನಾಯಕ ಅರವಿಂದ ಬೆಲ್ಲದ್ ಬಜೆಟ್ ಮೇಲೆ ಚರ್ಚೆ ಮಾಡುವಾಗ, ಸಿದ್ದರಾಮಯ್ಯ ಅವರ ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವಂತಹ ಬಜೆಟ್ ಮಂಡಿಸಿದೆ. +ರೈತರ ಮೇಲಷ್ಟೆ ಅಲ್ಲ ಮುಖ್ಯಮಂತ್ರಿಯವರು ಡಿ.ಕೆ.ಶಿವಕುಮಾರ್ ಮೇಲಿನ ಸಿಟ್ಟಿಗೆ ನೀರಾವರಿ ಇಲಾಖೆಗೆ ಕಡಿಮೆ ಅನುದಾನ ಕಡಿತ ಮಾಡಿದ್ದಾರೆ. ಸಚಿವ ಪ್ರಿಯಾಂಕ ಖರ್ಗೆಗೆ ರಾಜ್ಯದ ಉದಯೋನ್ಮುಖ ನಾಯಕ ಎನ್ನುತ್ತಿದ್ದಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಎಷ್ಟು ಬಾಕಿ ಉಳಿಸಿತ್ತು ಎಂದು ಹೇಳಿ ಎಂದು ಸವಾಲು ಹಾಕಿದರು. +ಸಚಿವ ಪ್ರಿಯಾಂಕ್ ಖರ್ಗೆ ಇದಕ್ಕೆ ಧ್ವನಿಗೂಡಿಸಿದರು. ಮಧ್ಯ ಪ್ರವೇಶಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶೇ.40ರಷ್ಟು ಕಮಿಷನ್ ತನಿಖೆ ಪೂರ್ಣಗೊಳಿಸಿ. ಈ ಸರ್ಕಾರ ಬಂದು ಒಂಬತ್ತು ತಿಂಗಳಾಯಿತು. ಪಿಎಸ್‍ಐ ಹಗರಣದ್ದು ತನಿಖೆ ಪೂರ್ಣಗೊಂಡಿಲ್ಲ ಎಂದಾಗ, ಪ್ರಿಯಾಂಕ್ ಖರ್ಗೆ, ಬಹಿರಂಗವಾಗಿ ಹೇಳಿಕೆ ನೀಡಿದ್ದ ಯತ್ನಾಳ್ ಅವರು ಪಿಎಸ್‍ಐ ಹಗರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ವೀರಪ್ಪ ಆಯೋಗದ ಮುಂದೆ ಹೇಳಿಕೆ ನೀಡಿಲ್ಲ. ನಾವು ನಿಮ್ಮ ಹೇಳಿಕೆ ಕಾಯುತ್ತಿದ್ದೇವೆ. ತನಿಖೆಗೆ ನಿಮ್ಮ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು. +ವಿದ್ಯುತ್ ಕಂಬದಿಂದ ಬಿದ್ದು ಲೈನ್‍ಮನ್ ಸಾವು +ಇನ್ನು ಶೇ.40ರಷ್ಟು ಹಗರಣದಲ್ಲಿ ಎಷ್ಟು ನುಂಗಿದ್ದಾರೆ ಎಂದರೆ, ಅದರ ಆಳ ಅಗಲವೇ ಗೊತ್ತಾಗುತ್ತಿಲ್ಲ. ಎಂದು ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತ ಪಡಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಈ ಸರ್ಕಾರ ಬಂದಾಗ ಶುರುವಾಗಿರುವ ಶೇ.40ರಷ್ಟು ಕಮಿಷನ್ ಬಗ್ಗೆಯೂ ತನಿಖೆಯಾಗಬೇಕು. ಸಿಬಿಐಗೆ ವಹಿಸಿ ಎಂದರು. ಆಗ ಕಾಂಗ್ರೆಸ್ ಶಾಸಕರು ಯತ್ನಾಳ್ ಅವರನ್ನು ಕೆಣಕಿದಾಗ, ಸರ್ವಪಕ್ಷದ ಅಧಿಕೃತ ವಿರೋಧ ಪಕ್ಷದ ನಾಯಕ ನಾನೇ ಎಂದು ಯತ್ನಾಳ್ ಸೆಟೆದು ನಿಂತರು. +ಮುಂದುವರೆದ ಚರ್ಚೆಯಲ್ಲಿ ಅರವಿಂದ್ ಬೆಲ್ಲದ್ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್‍ನಿಂದ ತಾವು ಮುಖ್ಯಮಂತ್ರಿಯಾಗುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯಾಗಬಹುದು ಎಂದಾಗ ಬಸನಗೌಡ ಪಾಟೀಲ್ ಯತ್ನಾಳ್, ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಕಾಂಗ್ರೆಸ್ ನ ಕಮಲ್ ನಾಥ್ ಬಿಜೆಪಿಗೆ ಬರುತ್ತಿದ್ದಾರೆ. ಮುಂದೆ ಮತ್ತಷ್ಟು ಮಂದಿ ಬರುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಕೂಡ ಬಿಜೆಪಿಗೆ ಬರುತ್ತಾರೆ ಎಂದರು. +ಆಗ ಪ್ರಿಯಾಂಕ್ ಖರ್ಗೆ, ನಮ್ಮ ಹೆಣ ಕೂಡ ಬಿಜೆಪಿಗೆ ಹೋಗಲ್ಲ. ಅದು ನಮ್ಮ ರಕ್ತದಲ್ಲೇ ಇಲ್ಲ. ಸಂವಿಧಾನ ಹೇಗೆ ನಿಮ್ಮ ರಕ್ತದಲ್ಲಿ ಇಲ್ಲವೋ ಹಾಗೇ, ಆರ್ ಎಸ್ ಎಸ್ ನಮ್ಮ ರಕ್ತದಲ್ಲಿ ಇಲ್ಲ ಎಂದರು. ಯತ್ನಾಳ್, ಸಂವಿಧಾನವನ್ನು ಸಮರ್ಪಕವಾಗಿ ಜಾರಿ ಮಾಡುತ್ತಿರುವುದು ನಾವೇ ಎಂದು ಸಮರ್ಥಿಸಿಕೊಂಡರು. ಪ್ರಿಯಾಂಕ್ ಖರ್ಗೆ, ನೀವು ಹೇಗೆ ಸಂವಿಧಾನ ಸರಿಯಾಗಿ ಜಾರಿ ಮಾಡಿದ್ದೀರಾ ಸರ್, ಒಂದು ಧರ್ಮಕ್ಕೆ ಮಾತ್ರ ಆದ್ಯತೆ ನೀಡುವುದು ಸಂವಿಧಾನ ಬದ್ಧವೇ ಎಂದು ಪ್ರಶ್ನಿಸಿದರು. +ಶಿಕ್ಷಕರ ಕ್ಷೇತ್ರದ ಗೆಲುವು ಲೋಕಸಭೆಗೆ ದಿಕ್ಸೂಚಿ : ಸಿಎಂ +ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಎದ್ದು ನಿಂತು, ಅರವಿಂದ್ ಬೆಲ್ಲದ್ ಅವರು ಸಾಲದ ಬಗ್ಗೆ ಹೇಳಿದ್ದಾರೆ, ಅದರ ಬಗ್ಗೆ ನಾನು ಸ್ಪಷ್ಟನೆ ನೀಡಬೇಕು ಎಂದು ಮಾತನಾಡಲು ಅವಕಾಶ ಕೇಳಿದರು. ಅದಕ್ಕೆ ಚರ್ಚೆಯಲ್ಲಿ ಭಾಗವಹಿಸಿದ್ದ ಅರವಿಂದ್ ಬೆಲ್ಲದ್ ಅವಕಾಶ ನೀಡಲಿಲ್ಲ. ನಾನು ಯೀಡ್ಲ್ ಆಗಿಲ್ಲ ಎಂದು ಪ್ರದೀಪ್ ಈಶ್ವರ್ ಹೇಳಿದರು. ಮಾತನಾಡುವ ಸರದಿಯಲ್ಲಿ ಇರುವವರು ಅರವಿಂದ್ ಬೆಲ್ಲದ್ ಅವರು ಯೀಲ್ಡ್ ಆಗಬೇಕಿರುವುದು ಅವರು ನೀವಲ್ಲ ಎಂದು ಹಿರಿಯ ಶಾಸಕರು ಪ್ರದೀಪ್ ಈಶ್ವರ್‍ಗೆ ತಿಳಿ ಹೇಳಿದರು. \ No newline at end of file diff --git a/eesanje/url_46_228_12.txt b/eesanje/url_46_228_12.txt new file mode 100644 index 0000000000000000000000000000000000000000..7efd5153b34327bb377ac59f418266ed5e9808ec --- /dev/null +++ b/eesanje/url_46_228_12.txt @@ -0,0 +1,6 @@ +ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ +ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು. +ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ ಆದ ಅಜೆಂಡಾ ಹಮ್ಮಿಕೊಂಡಿದ್ದಾರೆ. ನಮಗೆಲ್ಲಾ ಜ್ವರ, ನೆಗಡಿ, ತಲೆನೋವು, ಗಂಟಲುನೋವು, ಕಣ್ಣಿನ ಸೋಂಕು ಉಂಟಾಗಿದೆ. ಪ್ರತಿದಿನ 7 ಗಂಟೆ ಅಧಿವೇಶನದಲ್ಲಿ ಕೂರುತ್ತಿದ್ದೇವೆ. 8 ಗಂಟೆ ಅಧಿವೇಶನ ನಡೆಸಲು ನಮಗೇನು ತಕರಾರಿಲ್ಲ. ಸಮಯಕ್ಕೆ ಸರಿಯಾಗಿ ಸಚಿವರು ಬರಬೇಕಲ್ಲವೇ? ನಿರಂತರವಾಗಿ ಎಸಿಯಲ್ಲಿ ಕೂರುವುದರಿಂದರ ಆರೋಗ್ಯವೂ ಹದಗೆಡುತ್ತಿದೆ ಎಂದರು. ಆಗ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ನನಗೂ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು. +ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟ +ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಬಜೆಟ್ ಮೇಲಿನ ಚರ್ಚೆ ನಡೆಯುವಾಗ ಮಂತ್ರಿಗಳಿರಬೇಕಲ್ಲವೇ? ಸಾಲಿನಲ್ಲಿ ಮಂತ್ರಿಗಳ್ಯಾರು ಇಲ್ಲ ಎಂದರೆ ಹೇಗೆ. ಇಂದು ವಿಧಾನಸೌಧದಲ್ಲಿ ಸರ್ಕಾರದ ಕಾರ್ಯಕ್ರಮ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಲ್ಲಿದ್ದಾರೆ. ತದನಂತರ ಸದನಕ್ಕೆ ಆಗಮಿಸುತ್ತಾರೆ. ಕಲಾಪ ಆರಂಭಿಸೋಣ ಎಂದರು. ಆಗಲೂ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದಾಗ ಸಭಾಧ್ಯಕ್ಷರು ಸರಿಯಾದ ಸಮಯಕ್ಕೆ ಶಾಸಕರು, ಸಚಿವರು ಆಗಮಿಸಿ ಸದನದಲ್ಲಿರಬೇಕು, ಇದು ನಮಗೆ ಕೊಡುವ ಗೌರವವಲ್ಲ, ನಾಡಿನ ಜನತೆಗೆ ಕೊಡುವ ಗೌರವ ಎಂದರು. +ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಅಧಿವೇಶನದ ನಡೆಯುವಾಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದಲ್ಲವೇ? ಎಂದರು ಆಗ ಸಭಾಧ್ಯಕ್ಷರು ಸಂಪ್ರದಾಯ ತಪ್ಪಿಸಲಾಗದು, ಎಲ್ಲಾ ರೋಗಕ್ಕೂ ಮದ್ದಿದೆ. ಟೆನ್ಶನ್‍ಗೆ ಮದ್ದಿಲ್ಲ ಎಂದು ಹೇಳಿ ಮುಂದಿನ ಕಾರ್ಯಕಲಾಪಕ್ಕೆ ಅನುವು ಮಾಡಿಕೊಟ್ಟರು. \ No newline at end of file diff --git a/eesanje/url_46_228_2.txt b/eesanje/url_46_228_2.txt new file mode 100644 index 0000000000000000000000000000000000000000..5b6742650143bd3e94359681f6744f56ae0b5895 --- /dev/null +++ b/eesanje/url_46_228_2.txt @@ -0,0 +1,7 @@ +ಡಿಕೆಶಿ ಗಡ್ಡದ ಕುರಿತು ಮೇಲ್ಮನೆಯಲ್ಲಿ ಸ್ವಾರಸ್ಯಕರ ಚರ್ಚೆ +ಬೆಂಗಳೂರು,ಫೆ.22- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಡ್ಡ ಬಿಟ್ಟಿರುವ ವಿಷಯ ವಿಧಾನಪರಿಷತ್‍ನಲ್ಲಿ ಕೆಲ ಹೊತ್ತು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಬಜೆಟ್ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು ಮಾತನಾಡುತ್ತಿದ್ದಾಗ ತಮ್ಮ ಸರ್ಕಾರ ಕೈಗೊಂಡಿರುವ ಸಾಧನೆಗಳನ್ನು ವಿವರಿಸುತ್ತಿದ್ದರು. +ಅಂದು ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಹಗಲು ರಾತ್ರಿ ಎನ್ನದೆ ಗಲ್ಲಿ ಗಲ್ಲಿಗಳನ್ನು ಸುತ್ತಿ , ನಾವು ಅಧಿಕಾರಕ್ಕೆ ಬಂದರೆ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಿದ್ದೇವೆ ಎಂಬುದರ ಕುರಿತು ಜನತೆಗೆ ಆಶ್ವಾಸನೆ ಕೊಟ್ಟಿದ್ದರು. ಅದರಲ್ಲೂ ನಮ್ಮ ಉಪಮುಖ್ಯಮಂತ್ರಿಗಳಾದ ಶಿವಕುಮಾರ್ ಅವರ ಪಾತ್ರ ಬಹುದೊಡ್ಡದು ಎಂದು ಹೇಳುತ್ತಿದ್ದಂತೆ, ಪ್ರತಿಪಕ್ಷದ ನಾಯಕದ ಕೋಟಾ ಶ್ರೀನಿವಾಸ್ ಪೂಜಾರಿ ಎಲ್ಲಾ ಓಕೆ ನಿಮ್ಮ ಡಿಸಿಎಂ ಅವರು ಗಡ್ಡ ಬಿಟ್ಟಿರುವುದು ಏಕೆ ಎಂದು ಕಾಲೆಳೆದರು. +ಸಭಾಪತಿಗಳೇ, ರಾಜ್ಯದಲ್ಲಿಂದು ಡಿ.ಕೆ.ಶಿವಕುಮಾರ್ ಗಡ್ಡ ಬಿಟ್ಟಿರುವ ವಿಷಯ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಅವರು ಗಡ್ಡ ಬಿಟ್ಟಿರುವುದರ ಬಗ್ಗೆ ಒಂದೊಂದು ರೀತಿಯ ವ್ಯಾಖ್ಯಾನಗಳು ಕೇಳಿಬರುತ್ತಿವೆ. ತಮ್ಮ ಉದ್ದೇಶ ಈಡೇರುವವರೆಗೂ ಅವರು ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಆ ಉದ್ದೇಶವಾದರೂ ಏನು? ಅದು ಈಡೇರುತ್ತದೆಯೋ ಇಲ್ಲವೋ ಈಡೇರಲು ಕೆಲವರು ಅವಕಾಶ ಕೊಡುತ್ತಾರೆಯೇ? ಇಲ್ಲವೇ ಹೀಗೆ ಗಡ್ಡ ಬಿಟ್ಟುಕೊಂಡೇ ಇರುತ್ತಾರೆಯೇ? ಎಂಬುದು ರಾಜ್ಯದ ಜನತೆಯಲ್ಲೂ ಕುತೂಹಲ ಮೂಡಿಸಿದೆ ಎಂದು ಕಿಚಾಯಿಸಿದರು. +ಅನಂತ್ ಅಂಬಾನಿ ಮದುವೆಗೆ, ಬಿಲ್‍ಗೇಟ್ಸ್, ಜುಕರ್ಬರ್ಗ್ ಸೇರಿದಂತೆ ಜಾಗತಿಕ ಉದ್ಯಮಿಗಳಿಗೆ ಆಹ್ವಾನ +ಆಗ ಪರಿಷತ್‍ನ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಡಿ.ಕೆ.ಶಿವಕುಮಾರ್ ಏಕೆ ಗಡ್ಡ ಬಿಟ್ಟಿದ್ದಾರೆ ಎಂಬುದನ್ನು ನಾನು ಹೇಳುತ್ತೇನೆ. ಅವರು ಮುಖ್ಯಮಂತ್ರಿ ಆಗುವವರೆಗೂ ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಈಗ ತಮ್ಮ ಗುರಿ ತಲುಪುತ್ತೇನೆಯೋ ಇಲ್ಲವೋ ಎಂಬ ಆತಂಕ ಅವರಿಗೆ ಶುರುವಾಗಿದೆ. ಹೀಗಾಗಿಯೇ ಗಡ್ಡ ತೆಗೆಯಲು ಹಿಂದೆ-ಮುಂದೆ ನೋಡುತ್ತಿದ್ದಾರೆ ಎಂದರು. +ಇದಕ್ಕೆ ಆಕ್ಷೇಪಿಸಿದ ಸದಸ್ಯೆ ಉಮಾಶ್ರೀ, ನಿಮ್ಮ ಪ್ರಧಾನಿ ನರೇಂದ್ರಮೋದಿ ಅವರೂ ಗಡ್ಡ ಬಿಟ್ಟಿದ್ದಾರೆ. ಹಾಗಾದರೆ ಅವರು ಹಿಂದೆ ಪ್ರಧಾನಿಯಾಗುವವರೆಗೂ ಗಡ್ಡ ತೆಗೆಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆಯೇ? ಮೊದಲು ನಿಮ್ಮ ಮೋದಿಯವರಿಗೆ ಗಡ್ಡ ತೆಗೆಯಲು ಹೇಳಿ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_228_3.txt b/eesanje/url_46_228_3.txt new file mode 100644 index 0000000000000000000000000000000000000000..2eb20ed3ee021935e029c8ce5d06138dfe533fb2 --- /dev/null +++ b/eesanje/url_46_228_3.txt @@ -0,0 +1,7 @@ +ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರದಿಂದ ಶ್ರೀಮಂತ ದೇವಾಲಯಕ್ಕೆ ಕನ್ನ ; ವಿಜಯೇಂದ್ರ +ಬೆಂಗಳೂರು, ಫೆ.22- ಆರ್ಥಿಕ ಸಂಕಷ್ಟದಲ್ಲಿರುವ ಸರಕಾರ, ಶ್ರೀಮಂತ ದೇವಾಲಯಕ್ಕೂ ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಒಂದು ಹುಂಡಿ ಇಡಿ. ಸರಕಾರ ನಡೆಸಲು ನಮ್ಮ ಕೈಯಲ್ಲಿ ಆಗುತ್ತಿಲ್ಲ. ಹಣಕಾಸಿನ ತೊಂದರೆ ಇದೆ ಎಂದು ತಿಳಿಸಿ ಬಂದ ದಾನಿಗಳಿಂದ ಹಣ ಸಂಗ್ರಹಿಸಬಹುದು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡು ವುದಾಗಿ ತಿಳಿಸಿದರು. +ಅತ್ಯಂತ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಅತ್ಯಂತ ಹೆಚ್ಚು ತೆರಿಗೆಯನ್ನು ಸಂಗ್ರಹ ಮಾಡುತ್ತದೆ. ಇಂಥ ಕರ್ನಾಟಕ ರಾಜ್ಯದ ಪರಿಸ್ಥಿತಿ ಹೀಗಾಗಿದೆ ಎಂಬುದು ನಿಜಕ್ಕೂ ದುರದೃಷ್ಟ. ಸರಕಾರ ಈ ಮಟ್ಟಕ್ಕೆ ಇಳಿದಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು. +ಗ್ಯಾರಂಟಿಗೆ ನಮ್ಮ ಟೀಕೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಗ್ಯಾರಂಟಿಗಳನ್ನು ಘೋಷಿಸಿದ್ದು, ಅದನ್ನು ಅನುಷ್ಠಾನಕ್ಕೆ ತರುವುದು ಅವರ ಕರ್ತವ್ಯವಾಗಿದೆ. ಅವರು ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಿದೆ. ಆದರೆ, ಅದರ ಅರ್ಥ ರಾಜ್ಯದಲ್ಲಿ ಅಭಿವೃದ್ಧಿ ಮಾಡಬಾರದು ಎಂದಲ್ಲ ಎಂದು ತಿಳಿಸಿದರು. +ನಾವು ಶಾಸಕರು ಕ್ಷೇತ್ರಕ್ಕೆ ಹೋದಾಗ ರಸ್ತೆಗಳು, ಶಾಲಾ ಕೊಠಡಿ, ಆಸ್ಪತ್ರೆಗಳ ಬಗ್ಗೆ ಜನರು ನಮ್ಮನ್ನು ಕೇಳುತ್ತಾರೆ. ಆದರೆ, 224 ಕ್ಷೇತ್ರಗಳ ಯಾವುದೇ ಒಬ್ಬ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ವಿಚಾರದಲ್ಲಿ ಮಾತನಾಡಲು ಸಾಧ್ಯವೇ ಇಲ್ಲ. ಯಾಕೆಂದರೆ, ರಾಜ್ಯ ಸರಕಾರ ಒಂದು ರೂಪಾಯಿಯನ್ನೂ ಅನುದಾನವಾಗಿ ಕೊಡುತ್ತಿಲ್ಲ ಎಂದು ಟೀಕಿಸಿದರು. +ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ +ರಾಜ್ಯ ಸರಕಾರವು ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಒಂದು ರೂಪಾಯಿ ಅನುದಾನವನ್ನೂ ಕೊಡುತ್ತಿಲ್ಲ ಎಂದು ಟೀಕಿಸಿದರು. ಸರಕಾರಿ ನೌಕರರಿಗೆ ಸಂಬಳ ಕೊಡತಕ್ಕಂಥ ಸಾಧ್ಯತೆ ಕಡಿಮೆ ಆಗುತ್ತಿದೆ. ಅಂಥ ದಾರುಣ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. \ No newline at end of file diff --git a/eesanje/url_46_228_4.txt b/eesanje/url_46_228_4.txt new file mode 100644 index 0000000000000000000000000000000000000000..e041e09b4b7ea58e77dd6895035b9ce48732a490 --- /dev/null +++ b/eesanje/url_46_228_4.txt @@ -0,0 +1,7 @@ +55 ಲಕ್ಷ ವಿದ್ಯಾರ್ಥಿಗಳಿಗೆ ರಾಗಿಮಾಲ್ಟ್ ವಿತರಣೆ +ಬೆಂಗಳೂರು,ಫೆ.22- 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಟಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. +ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. ಕೆಎಂಎಫ್ ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. ಈ ಹಾಲಿನ ಹಣವನ್ನು ಸರ್ಕಾರ ಕೆಎಂಎಫ್ ಗೆ ನೀಡುತ್ತದೆ. ಆ ಮೂಲಕ ಕೆಎಂಎಫ್ ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್‍ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು ಎಂದು ವಿವರಿಸಿದರು. +ಈಗ ಅತ್ಯಂತ ಪೌಷ್ಟಿಕವಾದ ರಾಗಿ ಮಾಲ್ಟ ಕೊಡುವ ಕಾರ್ಯಕ್ರಮ ಶುರುವಾಗಿದೆ. ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಟಿಕಾಂಶ ಕೊರತೆ ಆಗಲೇ ಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಢವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆ. ಗುಣಮಟ್ಟದ ಶಿಕ್ಷಣ ಪಡೆದುಕೊಳ್ಳುತ್ತಾರೆ. ಶ್ರೀಮಂತರ ಮಕ್ಕಳ ರೀತಿ ಬಡವರು, ಶ್ರಮಿಕರು, ದಲಿತ, ಶೂದ್ರರ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಏಕೆಂದರೆ ಮಕ್ಕಳೇ ದೇಶದ, ಸಮಾಜದ ಭವಿಷ್ಯವನ್ನು ರೂಪಿಸುತ್ತಾರೆ ಎನ್ನುತ್ತಾ ಬುದ್ಧ, ಬಸವ, ಅಂಬೇಡ್ಕರ್ ಮಾತುಗಳನ್ನು ಉಲ್ಲೇಖಿಸಿದರು. +ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ +ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಹೆಚ್ಚಾಗಲು ಸಾಧ್ಯ. ಜ್ಞಾನದ ಬೆಳವಣಿಗೆ ಶಿಕ್ಷಣದಿಂದ ಸಾಧ್ಯ. ಶಿಕ್ಷಣ ಅಂದರೆ ಕೇವಲ ಓದು, ಬರಹ ಕಲಿಸುವುದಲ್ಲ. ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ವೈಚಾರಿಕತೆಯುಳ್ಳ ಶಿಕ್ಷಣ ಅಗತ್ಯ. ಉನ್ನತ ಶಿಕ್ಷಣ ಪಡೆದ ವೈದ್ಯರು, ಎಂಜಿನಿಯರ್‍ಗಳೂ ಈಗ ಮೌಢ್ಯಕ್ಕೆ ಜೋತು ಬಿದ್ದಿದ್ದಾರೆ. ಬಸವಾದಿ ಶರಣರು ಮೌಢ್ಯಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ವೈಚಾರಿಕ ಶಿಕ್ಷಣದಿಂದ ಮಾತ್ರ ಮೌಢ್ಯ ಮುಕ್ತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. +2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹು ಪೌಷ್ಟಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ ಹೆಲ್ತ ಮಿಕ್ಸ್ ವಿತರಿಸುವ ಕಾರ್ಯಕ್ರಮದಲ್ಲಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿ ಇಲಾಖಾ ಅಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_228_5.txt b/eesanje/url_46_228_5.txt new file mode 100644 index 0000000000000000000000000000000000000000..57766edcd4ba55484ba6e45d9639fd0b545e016d --- /dev/null +++ b/eesanje/url_46_228_5.txt @@ -0,0 +1,6 @@ +ಬೆಂಗಳೂರು : ನೇಣುಬಿಗಿದುಕೊಂಡು ವೃದ್ಧ ದಂಪತಿ ಆತ್ಮಹತ್ಯೆ +ಬೆಂಗಳೂರು,ಫೆ.22- ವೃದ್ಧ ದಂಪತಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬನಶಂಕರಿ 3ನೇ ಹಂತ, ಇಟ್ಟಮಡು ಮುಖ್ಯರಸ್ತೆ ಕೃಷ್ಣಯ್ಯ ಲೇಔಟ್‍ನ 19ನೇ ಕ್ರಾಸ್‍ನ ನಿವಾಸಿ ಕೃಷ್ಣ ನಾಯ್ಡು(84) ಮತ್ತು ಸರೋಜಮ್ಮ(74) ಮೃತಪಟ್ಟ ದಂಪತಿ. +ಈ ಮನೆಯ ಮೂರನೇ ಮಹಡಿಯಲ್ಲಿ ದಂಪತಿ ವಾಸವಾಗಿದ್ದರೆ, ನೆಲಮಹಡಿಯಲ್ಲಿ ಮಗ ಅಶೋಕ್‍ಕುಮಾರ್ ಹಾಗೂ ಸೊಸೆ ಕುಟುಂಬ ವಾಸವಿದೆ. ದಂಪತಿಯ ಮಗಳು ಮದುವೆಯಾಗಿದ್ದು, ಬೇರೆ ಕಡೆ ನೆಲೆಸಿದ್ದಾರೆ. ರಾತ್ರಿ ವಾಸವಿದ್ದ ಮನೆಯ ಒಂದು ಕಿಟಕಿಗೆ ಪಂಚೆಯಿಂದ ಕೃಷ್ಣ ನಾಯ್ಡು ನೇಣು ಬಿಗಿದುಕೊಂಡರೆ, ಮತ್ತೊಂದು ಕಿಟಕಿಗೆ ಸೀರೆಯಿಂದ ಸರೋಜಮ್ಮ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. +ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ +ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಈ ವೃದ್ಧ ದಂಪತಿ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಸೊಸೆ ಮೂರನೇ ಮಹಡಿಗೆ ಹೋದಾಗ ಇವರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ತಕ್ಷಣ ಪತಿ ಅಶೋಕ್ ಕುಮಾರ್‍ಗೆ ತಿಳಿಸಿದ್ದಾರೆ. +ಅಶೋಕ್‍ಕುಮಾರ್ ಪೊಲೀಸರಿಗೆ ವಿಷಯ ತಿಳಿಸಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ದಂಪತಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_228_6.txt b/eesanje/url_46_228_6.txt new file mode 100644 index 0000000000000000000000000000000000000000..c8b4052228ba404a03df47150698038107a2b6a2 --- /dev/null +++ b/eesanje/url_46_228_6.txt @@ -0,0 +1,4 @@ +ಮೇಲ್ಮನೆಯಲ್ಲಿ ಚಿನ್ನ ಲೇಪಿತ ಬ್ಯಾಡ್ಜ್ ಕುರಿತು ಚರ್ಚೆ +ಬೆಂಗಳೂರು,ಫೆ.22- ವಿಧಾನಪರಿಷತ್ ಸದಸ್ಯರಿಗೆ ಚಿನ್ನದ ಲೇಪವಿರುವ ಬ್ಯಾಡ್ಜ್ ನೀಡಿರುವುದರ ಕುರಿತು ಪರಿಷತ್‍ನಲ್ಲಿ ತುಸು ಕಾಲ ಸ್ವಾರಸ್ಯಕರ ಚರ್ಚೆ ನಡೆಯಿತು. ಕಲಾಪದ ಮಧ್ಯೆ ಜೆಡಿಎಸ್‍ನ ಟಿ.ಎ.ಶರವಣ, ಸಭಾಪತಿಯವರಿಗೆ ನಿಮಗೆ ನಾನು ವಿಶೇಷವಾದ ಅಭಿನಂದನೆ ಸಲ್ಲಿಸುತ್ತೇನೆ. ಏಕೆಂದರೆ ನಿವೃತ್ತಿಯಾಗಲಿರುವ ಪರಿಷತ್ ಸದಸ್ಯರಿಗೆ ಉಪಹಾರಕೂಟ, ಇಂದು ಫೋಟೋ ಸೆಷನ್ ಕಲ್ಪಿಸಿದ್ದಾರೆ. ಜೊತೆಗೆ ನಮ್ಮೆಲ್ಲರಿಗೂ ಗಂಡಭೇರುಂಡ ಇರುವ ಚಿನ್ನದ ಲೇಪವಿರುವ ಬ್ಯಾಡ್ಜ್ ಕೊಟ್ಟಿದ್ದೀರಿ. ಇದಕ್ಕಾಗಿ ನಾನು ನಿಮಗೆ ಧನ್ಯವಾದ ಹೇಳುತ್ತೇನೆ ಎಂದರು. +ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ +ಚಿನ್ನದ ಲೇಪನವಿರುವ ಬ್ಯಾಡ್ಜ್‍ನ್ನು ಎಲ್ಲ ಸದಸ್ಯರಿಗೂ ಕೊಟ್ಟಿರುವುದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದಾಗ, ಸಭಾಪತಿ ಹೊರಟ್ಟಿ ಅವರು, ನನಗೆ ಎಲ್ಲರೂ ಕೇಳುತ್ತಿದ್ದಾರೆ ನೀವೇ ಮಾಡಿಸಿಕೊಡಿ ಎಂದು ಕಾಲೆಳೆದರು. ಅದಕ್ಕೆ ಶರವಣ ಅವರು ನಾನು ಬೆಳ್ಳಿಯಲ್ಲಿ ಹಾಕಿ ಚಿನ್ನದ ಲೇಪ ಹಾಕಿಸಿಕೊಡುತ್ತೇನೆ ಎಂದರು. ಆಗ ಹೊರಟ್ಟಿ ಮಧ್ಯಾಹ್ನ ನನ್ನ ಕಚೇರಿಗೆ ಬಾ ನಿನಗೆ ಒಂದು ಕೆಲಸ ಕೊಡಬೇಕಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_228_7.txt b/eesanje/url_46_228_7.txt new file mode 100644 index 0000000000000000000000000000000000000000..801d47aaca974b7ab1ec527c71b86e145b137800 --- /dev/null +++ b/eesanje/url_46_228_7.txt @@ -0,0 +1,6 @@ +ವಿಧಾನಸಭೆ ಕಲಾಪ ವೀಕ್ಷಿಸಿದ ಬೀದಿಬದಿ ವ್ಯಾಪಾರಿಗಳು +ಬೆಂಗಳೂರು, ಫೆ.22- ಬೀದಿಬದಿ ವ್ಯಾಪಾರಿಗಳು ಇಂದು ವಿಧಾನಸಭೆ ಕಾರ್ಯಕಲಾಪವನ್ನು ವೀಕ್ಷಿಸಿದರು. ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಪತ್ರಿನಿಧಿಗಳು ಇಂದು ಸದನದ ಕಾರ್ಯ ಕಲಾಪ ವೀಕ್ಷಿಸುತ್ತಿದ್ದು, ಅವರನ್ನು ಸ್ವಾಗತಿಸುವುದಾಗಿ ಸಭಾಧ್ಯಾಕ್ಷ ಯು.ಟಿ.ಖಾದರ್ ತಿಳಿಸಿದರು. ನಿನ್ನೆ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪ ವೀಕ್ಷಿಸಿದ್ದರು. ಇಂದು ಬೀದಿಬದಿ ವ್ಯಾಪಾರಿಗಳು ಸದನದ ಗ್ಯಾಲರಿಗೆ ಆಗಮಿಸಿ ಕಾರ್ಯಕಲಾಪ ವೀಕ್ಷಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಣ್ಣ-ಪುಟ್ಟ ವ್ಯಾಪಾರದ ಮೂಲಕ ಕುಟುಂಬ ನಿರ್ವಣೆ ಮಾಡುತ್ತಿದ್ದಾರೆ. ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಹೇಳಿದರು. +ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಟ್ಟಣ ಪ್ರದೇಶಗಳಲ್ಲಿ ವಿಶೇಷವಾಗಿ ಮಹಾನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಬದಿ ವ್ಯಾಪಾರಿಗಳಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಕಾನೂನು ರೀತಿ ರಕ್ಷಣೆ ಮಾನವೀಯತೆಯ ನೆರವು ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುತ್ತಿವೆ ಎಂದರು. +ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ +ಶ್ರಮ ಜೀವಿಗಳಾಗಿದ್ದು, ಅವರಲ್ಲಿ ಆತ್ಮಸ್ಥೆ ೈರ್ಯ ತುಂಬುವ ನಿಟ್ಟಿನಲ್ಲಿ ತಾವು ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ಪ್ರಶಂಸನೀಯ ಎಂದರು ಹೇಳಿದರು. ಇದಕ್ಕೆ ದನಿಗೂಡಿಸಿದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ಅತ್ಯಂತ ದುರ್ಬಲ ವರ್ಗದವರಾದ ಬೀದಿ ಬದಿ ವ್ಯಾಪಾರಿಗಳಿಗೆ ಸದನ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿರುವುದು ನಿಜವಾದ ಪ್ರಜಾಪ್ರಭುತ್ವವನ್ನು ಎತ್ತಿ ತೋರಿಸುತ್ತಿದೆ. +ಇದಕ್ಕಾಗಿ ಸಭಾಧ್ಯಕ್ಷರನ್ನು ಅಭಿನಂದಿಸುವುದಾಗಿ ತಿಳಿಸಿದರು. ಉತ್ತರ ಕರ್ನಾಟಕ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬಂದು ಬೀದಿ ಬದಿ ತಿಂಡಿ-ತಿನಿಸು ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಅವರೊಂದು ರೀತಿ ಅನ್ನದಾತರು ಎಂದರು ಹೇಳಿದರು. \ No newline at end of file diff --git a/eesanje/url_46_228_8.txt b/eesanje/url_46_228_8.txt new file mode 100644 index 0000000000000000000000000000000000000000..34087032b640444f4c739b6eccb7484cfc5ced73 --- /dev/null +++ b/eesanje/url_46_228_8.txt @@ -0,0 +1,9 @@ +7ನೇ ವೇತನ ಆಯೋಗ ವರದಿ ಜಾರಿಗೆ ಒತ್ತಾಯ +ಬೆಂಗಳೂರು, ಫೆ.22- ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ 7ನೇ ವೇತನ ಆಯೋಗದ ವರದಿಯನ್ನು ಶೀಘ್ರವೇ ಜಾರಿಗೆ ತರಬೇಕು ಎಂದು ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ರೂಪಿಸುವ ಯೋಜನೆಗಳನ್ನು ಜಾರಿಗೆ ತರುವುದೇ ಸರ್ಕಾರಿ ನೌಕರರು ಅವರನ್ನು ಚೆನ್ನಾಗಿ ನೋಡಿಕೊಂಡರೆ ಸರ್ಕಾರಕ್ಕೂ ಅನುಕೂಲವಾಗಲಿದೆ ಎಂದರು. +ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚಿನ ವೇತನ ದೊರೆಯುತ್ತಿದೆ. ಇದಕ್ಕೆ ಹೋಲಿಸಿದರೆ, ರಾಜ್ಯ ಸರ್ಕಾರಿ ನೌಕರರಿಗೆ ವೇತನದಲ್ಲಿ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸಬೇಕು. ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ವೇತನ ಆಯೋಗದ ವರದಿ ಜಾರಿ ಕುರಿತು ಸ್ಪಷ್ಟವಾದ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು. +ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ತೆಂಗು ಬೆಳೆಗಾರರು ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬರಿ ಬೆಳೆಯುತ್ತಿದ್ದು, ಬೆಲೆ ಕುಸಿತದಿಂದ ಕಂಗಾಲಾಗುತ್ತಿದ್ದಾರೆ. ಸರ್ಕಾರ ಅವರ ನೆರವಿಗೆ ಧಾವಿಸಿ ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 15 ಸಾವಿರ ರೂ. ನಿಗದಿಪಡಿಸಿ ಖರೀದಿಸಬೇಕು ಎಂದರು. +ರಾಜ್ಯಸಭೆ ಚುನಾವಣೆ : ಅಮಿತ್ ಷಾ ಜೊತೆ ಕುಮಾರಸ್ವಾಮಿ ಮಾತುಕತೆ +ಖರೀದಿ ಕೇಂದ್ರಗಳಲ್ಲಿ ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮುಂದಾಗಿರುವುದು ಸ್ವಾಗತಾರ್ಹ. ಹೊಸದಾಗಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ಹೇಳಿರುವುದು ನಿಜವಾದ ಕೊಬ್ಬರಿ ಬೆಳೆಗಾರರಿಗೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ ಎಂದು ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಾರಿಗೆ ಬಜೆಟ್ ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುತ್ತೇನೆ. ಆದರೆ, ಗ್ಯಾರಂಟಿ ಯೋಜನೆಗಳಿಗೆ ನೀಡಿರುವಷ್ಟು ಒತ್ತನ್ನು ಅಭಿವೃದ್ಧಿಗೆ ಕೊಟ್ಟಿಲ್ಲ. ಇವೆರಡರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗಿತ್ತು. ಆ ಕೆಲಸವಾಗಿಲ್ಲ. ಇದರಿಂದಾಗಿ ನಾವು ಸೇರಿದಂತೆ ಕಾಂಗ್ರೆ, ಬಿಜೆಪಿ ಶಾಸಕರು ಹಳ್ಳಿಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಮತದಾರರ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. +ಒಂದು ರೂ.ನಲ್ಲಿ ಗ್ಯಾರಂಟಿಗೆ 75 ಪೈಸೆ ಕೊಟ್ಟರೆ, ಅಭಿವೃದ್ಧಿಗೆ 25 ಪೈಸೆ ನೀಡುವಂತಾಗಿದೆ. ಇದುವರೆಗೆ ಅಭಿವೃದ್ಧಿ ಶೂನ್ಯವಾಗಿದೆ ಎಂದು ಅವರು ಟೀಕಿಸಿದರು. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ನಾಯಕರು ನಡೆಸಿದ ಹೋರಾಟ ಕೇವಲ ಅಧಿಕಾರಕ್ಕೆ ಬರುವ ತಂತ್ರಗಾರಿಕೆಯಾಗಿದೆ. ಈ ಯೋಜನೆ ಶೀಘ್ರ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಬೇಕು. +ಬರಪರಿಸ್ಥಿತಿಯಿಂದ ಜನರು ಗುಳೆ ಹೋಗುವ ಪರಿಸ್ಥಿತಿ ಇದೆ. ಗುಳೆ ಹೊರಟವರ ಕುಟುಂಬದ ಮಕ್ಕಳಿಗೂ ಶಿಕ್ಷಣ ನೀಡುವಂತಾಗಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿಶಾಲೆಗೆ ಕರತರಬೇಕು. ಮನ್ರೇಗಾ ಕೂಲಿ ಹಣವನ್ನು 316 ರೂ.ಗಳಿಂದ 500 ರೂ.ಗಳಿಗೆ ಹೆಚ್ಚಿಸಬೇಕು. ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಹೇಳಿದರು. \ No newline at end of file diff --git a/eesanje/url_46_228_9.txt b/eesanje/url_46_228_9.txt new file mode 100644 index 0000000000000000000000000000000000000000..098e2fe346dae7f6d659ab1dc79a6b6f95d4bc5a --- /dev/null +++ b/eesanje/url_46_228_9.txt @@ -0,0 +1,9 @@ +ಕರ್ನಾಟಕ ಗ್ರಾಮ ಸ್ವರಾಜ್ ವಿಧೇಯಕ ಅಂಗೀಕಾರ +ಬೆಂಗಳೂರು,ಫೆ.22- ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣಕ್ಕೆ ಅನುಕೂಲ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‍ರಾಜ್ ತಿದ್ದುಪಡಿ ವಿಧೇಯಕ 2024ನ್ನು ವಿಧಾನಪರಿಷತ್‍ನಲ್ಲಿ ಅಂಗೀಕಾರ ನೀಡಲಾಯಿತು. ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರಿಷತ್‍ನಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡರು. +ವಿಧೇಯಕದ ಮೇಲೆ ಮಾತನಾಡಿದ ಅವರು, 2024ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ತಿದ್ದುಪಡಿಯಿಂದ ಗ್ರಾಮಪಂಚಾಯ್ತಿಗಳ ಬೌಗೋಳಿಕ ವಿಸ್ತೀರ್ಣಕ್ಕೆ ಇದು ಅನುಕೂಲವಾಗಲಿದೆ ಎಂದು ಹೇಳಿದರು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಧೇಯಕವನ್ನು ತಿದ್ದುಪಡಿ ಮಾಡಲಾಗಿದೆ. ಗ್ರಾಮಪಂಚಾಯ್ತಿಗಳ ಭೌಗೋಳಿಕ ವಿಸ್ತೀರ್ಣವನ್ನು ನಿಗದಿಪಡಿಸಲು ಅನುಕೂಲವಾಗುತ್ತದೆ ಎಂದರು. +ಕೊಡಗು ಜಿಲ್ಲೆಯು ಸಂಪೂರ್ಣವಾಗಿ ಮಲೆನಾಡಿನಂತೆ ಕಡಿಮೆ ಜನಸಾಂದ್ರತೆ ಹೊಂದಿರುವ ಜನಸಂಖ್ಯೆಯು ಚದುರಿದ ಗುಡ್ಡಗಾಡು ಪ್ರದೇಶವಾಗಿದ್ದು, ಕೆಲ ಸಂದರ್ಭಗಳಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರವು ಭೌಗೋಳಿಕವಾಗಿ 100ಕಿ.ಮೀ.ವರೆಗೆ ವ್ಯಾಪಿಸಿದೆ ಭೌಗೋಳಿಕವಾಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭೂ ವಿಸ್ತೀರ್ಣವು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಆಡಳಿತದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ. +ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ +ಕರ್ನಾಟಕ ಪಂಚಾಯತ್‍ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್-1993ನ್ನು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. +ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲಿ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವಿದೆ. ಉತ್ತರಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ 18,000ದಿಂದ 25,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶವಿದೆ. ಈ ತಿದ್ದುಪಡಿ ಮೂಲಕ ಕೊಡಗು ಜಿಲ್ಲೆಯಲ್ಲಿ 18,000 ಜನಸಂಖ್ಯೆಗೆ ಒಂದು ಕ್ಷೇತ್ರಕ್ಕೆ ಅವಕಾಶ ನೀಡಲಾಗುತ್ತಿದೆ. +ವಿದ್ಯುತ್ ಕಂಬದಿಂದ ಬಿದ್ದು ಲೈನ್‍ಮನ್ ಸಾವು +ಕರ್ನಾಟಕ ಪಂಚಾಯತ್ ರಾಜ್ ಗಡಿ ನಿರ್ಧರಣಾ ಆಯೋಗವು ಕೊಡಗಿನ ಸಾರ್ವಜನಿಕರ ಮನವಿಯ ಮೇರೆಗೆ ಅಗತ್ಯ ತಿದ್ದುಪಡಿಯನ್ನು ಶಿಫಾರಸ್ಸು ಮಾಡಿದೆ. ಆದ್ದರಿಂದ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅನಿಯಮ 1993 ಅನ್ನು ತಿದ್ದುಪಡಿ ಮಾಡುವುದು ಅವಶ್ಯ ಎಂದು ಈ ವಿಧೇಯಕ ತರಲಾಗಿದೆ. ಈ ವಿಧೇಯಕದ ಮೇಲೆ ಸದಸ್ಯರಾದ ಕೆ.ಎಸ್.ತಿಪ್ಪೇಸ್ವಾಮಿ, ತೇಜಸ್ವಿನಿ ರಮೇಶ್, ಬಿ.ಕೆ.ಹರಿಪ್ರಸಾದ್, ನಾಗರಾಜ್ ಯಾದವ್ ಹಾಗೂ ಪ್ರತಿಪಕ್ಷದ ನಾಯಕ ಕೋಟಾಶ್ರೀನಿವಾಸ್ ಪೂಜಾರಿ ಮಾತನಾಡಿ, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದರು. ಬಳಿಕ ಸಭಾಧ್ಯಕ್ಷರು ಧ್ವನಿಮತದ ಮೂಲಕ ವಿಧೇಯಕಕ್ಕೆ ಅಂಗೀಕಾರ ನೀಡಿದರು. \ No newline at end of file diff --git a/eesanje/url_46_229_1.txt b/eesanje/url_46_229_1.txt new file mode 100644 index 0000000000000000000000000000000000000000..e025ae5a9f401ac2338d5c037b90898462e9e8df --- /dev/null +++ b/eesanje/url_46_229_1.txt @@ -0,0 +1,9 @@ +ಶಿಕ್ಷಕರ ಕ್ಷೇತ್ರದ ಗೆಲುವು ಲೋಕಸಭೆಗೆ ದಿಕ್ಸೂಚಿ : ಸಿಎಂ +ಬೆಂಗಳೂರು,ಫೆ.21-ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಮುಂಬರುವ ಲೋಕಸಭೆ ಚುನಾವಣೆಗೂ ಇದು ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣಕ್ಕೆ ಉತ್ತರ ನೀಡಿದ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆದ್ದಿರುವುದು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಜನ ಸಾರಾಸಗಾಟಾಗಿ ತಿರಸ್ಕಾರ ಮಾಡಿದ್ದಾರೆ. ಇದು ಮುಂಬರುವ ಲೋಕಸಭೆ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಹೇಳಿದರು. +ನೀವು ಏನೇ ಮೈತ್ರಿ ಮಾಡಿಕೊಂಡರೂ ಕರ್ನಾಟಕದ ಜನ ನಿಮ್ಮನ್ನು ಒಪ್ಪುವುದಿಲ್ಲ ಎಂಬುದು ಫಲಿತಾಂಶದಿಂದಲೆ ಸಾಬೀತಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಾವು ನಿಮ್ಮ ಮೈತ್ರಿಯನ್ನು ಮಣಿಸಿ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದೇವೆ. ಕರ್ನಾಟಕ ಜನ ಎಂದಿಗೂ ಕೋಮುವಾದವನ್ನು ಒಪ್ಪುವುದಿಲ್ಲ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ಪುಟ್ಟಣ್ಣನವರ ಫಲಿತಾಂಶ ನಿಮಗೆ ಎಚ್ಚರಿಕೆಯ ಗಂಟೆ. ನೀವಿಬ್ಬರೂ ಮೈತ್ರಿಯಾದರೂ ಶಿಕ್ಷಕರ ಕ್ಷೇತ್ರದಲ್ಲಿ ಸೋಲು ಅನುಭವಿಸಲಿದ್ದೀರಿ. ಮುಂದಿನ ಚುನಾವಣೆಗಳಿಗೂ ಇದು ಮಾರ್ಗಸೂಚಿಯಾಗಲಿದೆ ಎಂದು ಎಚ್ಚರಿಸಿದರು. +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ಆಗ ಬಿಜೆಪಿಯ ರವಿಕುಮಾರ್ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡ ಸೇರಿದಂತೆ ಅನೇಕ ಕಡೆ ಕಾಂಗ್ರೆಸ್ ಸೋತಿದೆ. ಅಲ್ಲಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬಂದಿದೆ. ಹಾಗಾದರೆ ಇದು ಯಾವ ಮುನ್ಸೂಚನೆಯನ್ನು ನೀಡುತ್ತದೆ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ತಿರುಗೇಟು ನೀಡಿದ ಸಿಎಂ, ನೀವು ಕರ್ನಾಟಕದ ಬಗ್ಗೆ ಮಾತನಾಡಿ, ಅಲ್ಲಿನ ರಾಜ್ಯಗಳ ಫಲಿತಾಂಶದ ಬಗ್ಗೆ ಮಾತನಾಡುವುದು ಬೇಡ. ಮೊದಲು ಕರ್ನಾಟಕದ ಬಗ್ಗೆ ಮಾತನಾಡಿ. ಮುಂದಿನ ಲೋಕಸಭೆ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ಹೇಳಿದರು. +ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಗೆ ಸೋಲಾಗಿದೆ. ನಾವು ನಿಮ್ಮ ಹಾಗೆ ಸುಳ್ಳು ಹೇಳುವುದಿಲ್ಲ. 28ರ ಪೈಕಿ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು.ಆಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದು ವೈಯಕ್ತಿಕ ಗೆಲುವು. ಈ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದು ಸ್ಥಳೀಯ ವಿಷಯಗಳ ಮೇಲೆ ನಡೆದಿರುತ್ತದೆ. ನಾವು 28ರಲ್ಲಿ 28 ಕ್ಷೇತ್ರಗಳನ್ನೂ ಗೆಲ್ಲುತ್ತೇವೆ ಎಂದು ಆತ್ಮವಿಶ್ವಾಸದಿಂದ ನುಡಿದರು.ಇದಕ್ಕೆ ಸಿದ್ದರಾಮಯ್ಯನವರು, ಓಯ್ ಸುಮ್ಮನೆ ಕುತ್ಕೊಳಪ್ಪ, ನೀನು ದಕ್ಷಿಣಕನ್ನಡ ಕ್ಷೇತ್ರದಲ್ಲಿ ನಿಂತ್ಕೋ ಯಾರು ಗೆಲ್ಲುತ್ತಾರೆ ನೋಡೋಣ ಎಂದು ಸವಾಲು ಹಾಕಿದರು. +ನೀವು ನಿಂತುಕೊಳ್ಳಿ. ಗೆದ್ದು ಲೋಕಸಭೆಗೆ ಹೋಗಿ ಚರ್ಚೆ ಮಾಡಲು ಸಮರ್ಥರಿದ್ದೀರಾ ಎಂದು ಪ್ರಶ್ನಿಸಿದರು.ನಾನು ಇಲ್ಲಿದ್ದರೂ ಸಮರ್ಥನೆ, ಲೋಕಸಭೆಗೆ ಹೋದರೂ ಸಮರ್ಥನೆ. ಅಂತಾರಾಷ್ಟ್ರೀಯ ಸಂಸ್ಥೆಗೆ ಹೋದರೂ ಅಲ್ಲಿಯೂ ಸಮರ್ಥನಿದ್ದೇನೆ ಎಂದು ಸಿದ್ದರಾಮಯ್ಯ ತಿರುಗೇಟು ಕೊಟ್ಟರು. ಈ ವೇಳೆ ನೂತನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಬಿಜೆಪಿ ಬಿಡಲು ಕಾರಣ ಏನೆಂಬುದನ್ನು ಸದನದಲ್ಲಿ ಬಹಿರಂಗಪಡಿಸಿದರು.ನಾನು ಬಿಜೆಪಿ ಬಿಡಲು ಏನು ಕಾರಣ ಗೊತ್ತಾ.. ಹಿಂದಿನ ಬಿಜೆಪಿ ಸರ್ಕಾರದಲ್ಲಿ 140 ದಿನ ಅನುದಾನಿತ ಕಾಲೇಜಿನ ಶಿಕ್ಷಕರು ಧರಣಿ ಮಾಡಿದರು. ಮೂರು ಮಂದಿ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡ್ರು. ಈ ವೇಳೆ ನಾನು, ಸಂಕನ್ಹೂರ್ ಶಿಕ್ಷಕರ ಸಚಿವರ ಜೊತೆ ಸಭೆ ಮಾಡಿ ಎಂದು ಹೇಳಿದ್ದೆ. +ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ +3 ಮಂದಿ ಶಿಕ್ಷಕರು ಸಾವನ್ನಪ್ಪಿದ್ದಾರೆ, ಇನ್ನು ಕೆಲವರು ಸಾವನ್ನಪ್ಪುವ ಸಾಧ್ಯತೆ ಇದೆ. ಸಭೆ ಮಾಡಿ ಅವರಿಗೆ ಸಾಂತ್ವನ ಹೇಳಿ ಎಂದು ಮನವಿ ಮಾಡಿದ್ದೆ, ಆದರೆ ಸಭೆ ಮಾಡೊಲ್ಲ ಎಂದು ಸಚಿವರು ಹೇಳಿದ್ರು. ಆ ಕ್ಷಣದಲ್ಲೆ ನಿರ್ಧಾರ ಮಾಡ್ದೆ, ಈ ಪಕ್ಷದಲ್ಲಿ ನಾನು ಇರೊದಿಲ್ಲ ಎಂದು. ಈ ಬಾರಿ ಕಾಂಗ್ರೆಸ್‍ನಿಂದ ನಿಂತು ಗೆಲುವು ಸಾಧಿಸಿದ್ದೇನೆ. ಶಿಕ್ಷಕರು ನನ್ನ ಕೈ ಹಿಡಿದಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_229_10.txt b/eesanje/url_46_229_10.txt new file mode 100644 index 0000000000000000000000000000000000000000..21daf4aa53c63f6752b3e715cd9df2f0338a3077 --- /dev/null +++ b/eesanje/url_46_229_10.txt @@ -0,0 +1,5 @@ +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ಬೆಂಗಳೂರು,ಫೆ.21- ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಈ ಹಿಂದೆ ಸ್ವತಂತ್ರ ನಂತರದಿಂದ 2014 ರವರೆಗೂ ರಾಜ್ಯದಲ್ಲಿ 6,500 ಕಿ.ಮೀ. ಮಾತ್ರ ಹೆದ್ದಾರಿ ಇತ್ತು. ಅದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ 13 ಸಾವಿರ ಕಿ.ಮೀ.ಗಳಿಗೆ ಹೆಚ್ಚಿಸಿದೆ ಎಂದರು. +ಇದಕ್ಕೆ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಶಿವಮೊಗ್ಗ-ತುಮಕೂರು ರಸ್ತೆ, ಬೆಂಗಳೂರು-ಮಂಗಳೂರು ರಸ್ತೆ ಅಪೂರ್ಣವಾಗಿ ಹಲವಾರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ ಎಂದು ತಿರುಗೇಟು ನೀಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುಂಠಿತಗೊಳ್ಳಲು ರಾಜ್ಯಸರ್ಕಾರವೇ ಕಾರಣ. ಭೂಸ್ವಾೀಧಿನಾಕಾರಿಗಳನ್ನು ನೇಮಿಸಿ ಭೂಮಿಯನ್ನು ಹಸ್ತಾಂತರಿಸಿದರೆ ಹೆದ್ದಾರಿ ನಿರ್ಮಾಣ ಕಾಮಗಾರಿ ಚುರುಕಾಗಿ ನಡೆಯಲಿದೆ ಎಂದು ಬಸವರಾಜ ಬೊಮ್ಮಾಯಿ ವಿವರಿಸಿದರು. +ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು +1,017 ಸಾವಿರ ಕೋಟಿ ವೆಚ್ಚದ ಸಾಗರ್ ಮಾಲ ಯೋಜನೆಯನ್ನು ಶೇ.50/50 ವೆಚ್ಚದ ಅನುಪಾತದಡಿ ಕೈಗೆತ್ತಿಕೊಳ್ಳಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. \ No newline at end of file diff --git a/eesanje/url_46_229_11.txt b/eesanje/url_46_229_11.txt new file mode 100644 index 0000000000000000000000000000000000000000..efc9afba2793ecaed6cbcd445949d7a0db68ca40 --- /dev/null +++ b/eesanje/url_46_229_11.txt @@ -0,0 +1,11 @@ +ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ +ಬೆಂಗಳೂರು,ಫೆ.21- ಕರ್ನಾಟಕ ಸರ್ಕಾರ ಆದಾಯಕ್ಕಿಂತಲೂ ಶೇ.103 ರಷ್ಟು ಕಂದಾಯ ವೆಚ್ಚವನ್ನು ಬಳಕೆ ಮಾಡುವುದಾಗಿ ಹೇಳುವ ಮೂಲಕ ನಾಡಿನ ಆರ್ಥಿಕ ಶಿಸ್ತನ್ನು ಹಾಳುಗೆಡವಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಅಂಕಿ ಅಂಶಗಳ ಸಹಿತ ವಿಧಾನಸಭೆಯಲ್ಲಿಂದು ಬಜೆಟ್‍ನ ಲೋಪದೋಷಗಳ ವಿಶ್ಲೇಷಣೆ ನಡೆಸಿದ ಅವರು, ಕಲ್ಯಾಣ ಕಾರ್ಯಕ್ರಮಗಳಿಗೆ ಹಣ ನೀಡಬೇಕು. ಆದರೆ ಅದಕ್ಕೆ ಪೂರಕವಾದ ಆದಾಯವೂ ಅಗತ್ಯವಿದೆ. +ಈ ಬಜೆಟ್‍ನಲ್ಲಿ ಯೋಜನೆ ಆಧರಿತ ವೆಚ್ಚಗಳಡಿ ಶೇ.42 ರಷ್ಟು ಖರ್ಚು ಮಾಡಲಾಗುತ್ತಿದೆ. ಇದು ಪಂಚಖಾತ್ರಿಯಂತಹ ಯೋಜನೆಗಳಿಗೆ ಬಳಕೆಯಾಗುತ್ತಿದೆ ಮತ್ತು ನಿರಂತರವಾಗಿ ವೆಚ್ಚಗಳ ಬಾಬ್ತಾಗಿರುವ ವೇತನ, ಪಿಂಚಣಿ, ಸಾಲ ಮತ್ತು ಬಡ್ಡಿ ಪಾವತಿಗಳಿಗೆ ಶೇ.61 ರಷ್ಟು ಕಂದಾಯ ವೆಚ್ಚ ನಿಗದಿಯಾಗಿದೆ. +ಕಳೆದ ಬಜೆಟ್‍ಗಳಲ್ಲಿ ಇದು ಶೇ.56 ಮತ್ತು ಶೇ.48 ರಷ್ಟಿತ್ತು. ಪ್ರಸ್ತುತ ಯೋಜನೇತರ ಮತ್ತು ಯೋಜನೇತರ ಆಧರಿತ ವೆಚ್ಚಗಳಿಂದ ಶೇ.61ರಷ್ಟು ಬಳಕೆಯಾಗುತ್ತಿದೆ. ಬಂಡವಾಳ ವೆಚ್ಚವನ್ನು ಹಿಂದಿನ ವರ್ಷಕ್ಕಿಂತಲೂ 1 ಸಾವಿರ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಸೇರಿಸಿ ಒಟ್ಟು 55 ಸಾವಿರ ಕೋಟಿ ರೂ.ಗಳಿಗೆ ನಿಗದಿ ಮಾಡಿದ್ದಾರೆ ಎಂದು ವಿವರಿಸಿದರು. ಕಂದಾಯ ಇಲಾಖೆಯ ಮುದ್ರಾಂಕ ಶುಲ್ಕ, ಅಬಕಾರಿ ಹಾಗೂ ಮೋಟಾರು ವಾಹನ ತೆರಿಗೆ ಹೆಚ್ಚಳದಿಂದ 13 ಸಾವಿರ ಕೋಟಿ ರೂ.ಗಳು ಹೆಚ್ಚುವರಿ ಹಣ ಸಂದಾಯವಾಗುತ್ತಿದೆ. ಈ ಹಿಂದೆ ತಮ್ಮ ಸರ್ಕಾರ 8 ಸಾವಿರ ಕೋಟಿ ರೂ.ಗಳ ಹೆಚ್ಚುವರಿ ಆದಾಯ ಸಂಗ್ರಹಿಸಿತ್ತು. +ಒಟ್ಟಾರೆ ಹೆಚ್ಚುವರಿಯಾದ 26 ಸಾವಿರ ಕೋಟಿ ರೂ.ಗಳು ಕಂದಾಯ ವೆಚ್ಚಕ್ಕೆ ಬಳಕೆಯಾಗುತ್ತಿವೆ ಎಂದು ವಿವರಿಸಿದರು. 7ನೇ ವೇತನ ಆಯೋಗಕ್ಕೆ 20 ಸಾವಿರ ಕೋಟಿ ರೂ.ಗಳ ಅನುದಾನದ ಅಗತ್ಯವಿದೆ. ಅದನ್ನು ಈ ಬಜೆಟ್‍ನಲ್ಲಿ ಎಲ್ಲಿಯೂ ನಮೂದಿಸಿಲ್ಲ. ಕಂದಾಯ ವೆಚ್ಚವೇ ದುಬಾರಿಯಾಗಿರುವುದರಿಂದ ಅಭಿವೃದ್ಧಿಗೆ ಹಣವೇ ಇಲ್ಲದಂತಾಗಿದೆ ಎಂದು ಬಸವರಾಜ ಬೊಮ್ಮಾಯಿ ವಿಶ್ಲೇಷಿಸಿದರು. +ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್ +ಈ ಸರ್ಕಾರ 1.05 ಲಕ್ಷ ಕೋಟಿ ರೂ.ಗಳ ಸಾಲ ಮಾಡುತ್ತಿದೆ. ಸಾಲವನ್ನು ಬಂಡವಾಳ ವೆಚ್ಚದ ಬದಲಾಗಿ ಕಂದಾಯ ವೆಚ್ಚ ವಾಗಿ ಬಳಕೆ ಮಾಡುತ್ತಿರುವುದು ಸರಿಯಲ್ಲ. ಸಾಲದ ಬಾಬ್ತಿನಲ್ಲೂ ಶೇ.90 ರಷ್ಟನ್ನು ಮಾರುಕಟ್ಟೆ ಮೂಲಗಳಿಂದ ದುಬಾರಿ ಬಡ್ಡಿದರದಲ್ಲಿ ಸಂಗ್ರಹಿಸಲಾಗುತ್ತಿದೆ. ಇದು ರಾಜ್ಯದ ಆರ್ಥಿಕತೆಗೆ ಭಾರೀ ಹಾನಿಯನ್ನುಂಟು ಮಾಡಲಿದೆ ಎಂದು ಎಚ್ಚರಿಸಿದರು. +ಸಂಪನ್ಮೂಲ ಕ್ರೋಡೀಕರಣದಲ್ಲಿ 12 ಸಾವಿರ ಕೋಟಿ ರೂ. ಕೊರತೆಯಾಗಿದೆ. ತತ್ಸಮಾನವಾಗಿ ವೆಚ್ಚದಲ್ಲೂ ಕೂಡ 10 ಸಾವಿರ ಕೋಟಿ ರೂ. ಕಡಿಮೆಯಿದೆ. ಸಾಮಾಜಿಕ ಸೇವೆಗೆ 96 ಸಾವಿರ ಕೋಟಿ ರೂ. ನಿಗದಿ ಮಾಡಿದ್ದಾರೆ. ಆರ್ಥಿಕ ವೆಚ್ಚಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದರು. ವಿದೇಶಿ ಬಂಡವಾಳ ಹೂಡಿಕೆ ಶೇ. 40 ರಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ನೋಂದಣಿಯಾಗಿದ್ದ 30 ಕಂಪನಿಗಳು ಸಿಂಗಾಪುರ ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಹೋಗಿವೆ. ಈ ರೀತಿಯ ಕಂಪನಿಗಳಿಂದಲೇ ಸರ್ಕಾರಕ್ಕೆ ಹೆಚ್ಚಿನ ಆದಾಯ ಬರುತ್ತಿತ್ತು ಎಂದರು. +ಆರ್ಥಿಕತೆಯಲ್ಲಿ ಸಾಮಥ್ರ್ಯ ಮತ್ತು ಹಂಚಿಕೆ ಸರಿಸಮಾನವಾಗಿರಬೇಕು. ತೆರಿಗೆ ಸಂಗ್ರಹ ಸಾಮಥ್ರ್ಯ ದಕ್ಷವಾಗಿರುವುದರ ಜೊತೆಗೆ ಹಂಚಿಕೆಯಲ್ಲೂ ಅಷ್ಟೇ ನ್ಯಾಯಯುತವಾಗಿರಬೇಕು. ಹೀಗಿದ್ದಾಗ ಮಾತ್ರ ಆರ್ಥಿಕತೆ ಸಮಾನವಾಗಿರುತ್ತದೆ. ಆದರೆ ರಾಜ್ಯದಲ್ಲಿ ಅದು ಕಂಡುಬರುತ್ತಿಲ್ಲ ಎಂದು ಹೇಳಿದರು. +ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು +ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸುತ್ತಿರುವ ರಾಜ್ಯಸರ್ಕಾರ ನಾಡಿನ ಮೂಲ ಸೌಕರ್ಯಾಭಿವೃದ್ಧಿಯಲ್ಲಿ ಕೇಂದ್ರದ ಕೊಡುಗೆಗಳನ್ನು ಮರೆಮಾಚುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈಲ್ವೆ, ಸ್ಮಾರ್ಟ್ ಸಿಟಿಗೆ ತಲಾ 7 ಸಾವಿರ ಕೋಟಿ ರೂ., ಆಯುಷ್ಮಾನ್ ಭಾರತ್, ಜಲಜೀವನ್ ಮಿಷನ್ ಸೇರಿದಂತೆ ಹಲವು ಬಾಬ್ತುಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಆದಾಯ, ಕಸ್ಟಮ್ಸ್ ಮತ್ತು ವೃತ್ತಿ ತೆರಿಗೆಗಳಲ್ಲಿ ಸಂಗ್ರಹವಾಗುವ ಸಂಪನ್ಮೂಲವನ್ನು ಕೇಂದ್ರ, ರಕ್ಷಣೆ, ರೈಲ್ವೆಯಂತಹ ತನ್ನದೇ ವೆಚ್ಚಗಳಿಗೆ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_229_12.txt b/eesanje/url_46_229_12.txt new file mode 100644 index 0000000000000000000000000000000000000000..e6dea4e3592ce854e66d3fda01fd404ed240f5af --- /dev/null +++ b/eesanje/url_46_229_12.txt @@ -0,0 +1,7 @@ +ರಾಜ್ಯಸಭೆ ಸ್ಥಾನ ಗೆಲ್ಲಲು ಬಿಜೆಪಿ-ಜೆಡಿಎಸ್ ರಣತಂತ್ರ +ಬೆಂಗಳೂರು,ಫೆ.21- ಕರ್ನಾಟಕದಲ್ಲಿ ರಾಜ್ಯಸಭಾ ಚುನಾವಣೆ ರಂಗು ಪಡೆದು ಕೊಂಡಿದೆ. ನಾಲ್ಕನೇ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್ ಹಾಗೂ ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಭಾರೀ ರಣತಂತ್ರ ರೂಪಿಸುತ್ತಿವೆ. ಇದರ ನಡುವೆಯೇ ರಾಜ್ಯ ವಿಧಾನಸಭೆ ಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದಿರುವ ಚುನಾವಣಾ ಕಣದಲ್ಲಿರುವ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶಕ್ತಿ ಮೀರಿ ಪ್ರಯತ್ನ ನಡೆಸುವಂತೆ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಇದು ಈಗ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. +ಜೆಪಿಯಿಂದ ಸ್ರ್ಪಧಿಸಿರುವ ನಾರಾಯಣ ಸಾ ಭಾಂಡಗೆ ಹಾಗೂ ಜೆಡಿಎಸ್‍ನಿಂದ ಕಣದಲ್ಲಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಸಾಧ್ಯವಿರುವ ಎಲ್ಲ ಪ್ರಯತ್ನ ನಡೆಸಬೇಕು ಎಂದು ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ, ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಒಂದು ಸ್ಥಾನದಲ್ಲಿ ಮಾತ್ರ ಗೆಲ್ಲಲು ಸಾಧ್ಯವಾಗಿದ್ದು, ನಂಬರ್ ಲೆಕ್ಕಾಚಾರ ಗಮನಿಸಿದರೆ ಮೈತ್ರಿಯ ಎರಡನೇ ಅಭ್ಯರ್ಥಿ ಗೆಲುವಿಗೆ ನಾಲ್ಕು ಮತಗಳು ಕಡಿಮೆಯಾಗಲಿವೆ. ಆದರೂ ಕೂಡ ಬಿಜೆಪಿ ಹೈಕಮಾಂಡ್ ಕುಪೇಂದ್ರ ರೆಡ್ಡಿ ಗೆಲುವಿಗೆ ಎಲ್ಲ ಪ್ರಯತ್ನ ನಡೆಸಿ ಎಂದು ಸೂಚಿಸಿರುವುದು ಕುದುರೆ ವ್ಯಾಪಾರದ ಸಾಧ್ಯತೆಯನ್ನು ಹೆಚ್ಚಿಸಿದೆ. +ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‍ನಲ್ಲಿ 135 ಶಾಸಕರು, ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಇದ್ದು, 137 ಮತಗಳಾಗಲಿವೆ. ದರ್ಶನ್ ಪುಟ್ಟಣ್ಣಯ್ಯ ಅವರ ಮತ ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೀಳುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ 66 ಹಾಗೂ ಜೆಡಿಎಸ್ 19 ಹಾಗೂ ಜನಾರ್ದನ ರೆಡ್ಡಿ ಅವರ ಒಂದು ಮತ ಸೇರಿ 86 ಮತಗಳು ಆಗಲಿವೆ. ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲುವಿಗೆ ನಾಲ್ಕು ಮತಗಳು ಕಡಿಮೆಯಾಗಲಿವೆ. +ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ +ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಬಿಜೆಪಿ ನಾಯಕರು ಹಾಗೂ ಎಚ್.ಡಿ. ಕುಮಾರಸ್ವಾಮಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 6 ರಿಂದ 7 ಶಾಸಕರ ಜೊತೆ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಹೇಳಿದ್ದು, ನಮ್ಮ ಪಕ್ಷದ ಶಾಸಕರಿಗೆ ಕುಮಾರಸ್ವಾಮಿ ಆಫರ್ ನೀಡುವ, ಧಮಕಿ ಹಾಕುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಯಾರಿಗೆಲ್ಲಾ ಫೋನ್ ಮಾಡಿ, ಏನೇನು ಮಾತನಾಡುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. +ಸಂಬಂಧಪಟ್ಟ ಶಾಸಕರೇ ಮಾಹಿತಿ ತಲುಪಿಸುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಕುಮಾರಸ್ವಾಮಿ ಮಾತ್ರವಲ್ಲ, ಅವರ ಮಿತ್ರಪಕ್ಷ ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ ಎಂದು ಹೇಳಿದ್ದಾರೆ. ಇದರಿಂದ ರಾಜ್ಯಸಭೆಯಲ್ಲಿ ಕುದುರೆ ವ್ಯಾಪಾರ ನಡೆದು ಅಡ್ಡಮತದಾನ ನಡೆಯುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್‍ನ ಅಸಮಾಧಾನಿತ ಶಾಸಕರನ್ನು ತಮ್ಮತ್ತ ಸೆಳೆಯುವ ಪ್ರಯತ್ನವನ್ನು ಮೈತ್ರಿ ನಾಯಕರು ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡುತ್ತಾರಾ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಇದೆ. \ No newline at end of file diff --git a/eesanje/url_46_229_2.txt b/eesanje/url_46_229_2.txt new file mode 100644 index 0000000000000000000000000000000000000000..2fa22cfb2d6e96eb56b66bc9b6e0b4365ed73243 --- /dev/null +++ b/eesanje/url_46_229_2.txt @@ -0,0 +1,5 @@ +ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟ +ಬೆಂಗಳೂರು,ಫೆ.21- ದ್ವಿತೀಯ ಪಿಯುಸಿ ಪರೀಕ್ಷೆ ಮಾ.1 ರಿಂದ ಮಾ.22 ರವರೆಗೆ ಹಾಗು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾ.25ರಿಂದ ಏ.6ವರೆಗೆ ನಡೆಯಲಿದೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈಗಾಗಲೆ ಸಿದ್ದತೆ ಆರಂಭಗೊಂಡಿದ್ದು ಶಾಲಾ.ಕಾಲೇಜುಗಳಲ್ಲಿ ಪೋರಕ ಪರೀಕ್ಷೆ ಆರಂಭಗೊಂಡಿದೆ. +ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ 6,98,624 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ 8,96,271 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ದ್ವಿತೀಯ ಪಿಯುಸಿಗೆ ರಾಜ್ಯಾದ್ಯಂತ 1124 ಪರೀಕ್ಷಾ ಕೇಂದ್ರಗಳನ್ನು ಗುರುತ್ತಿಸಲಾಗಿದ್ದು ಎಸ್‍ಎಸ್‍ಎಲ್‍ಸಿ ಗೆ 2747 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಎಲ್ಲ ಪರೀಕ್ಷೇಗೆ ನೋಂದಣಿ ಮಾಡಿಕೊಳ್ಳಲೇಬೇಕು. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳು ಮೂರರಲ್ಲಿ ಯಾವುದಾದ್ರೂ ಒಂದು ಪರೀಕ್ಷೆಗೆ ಹಾಜರಾಗಬೇಕುಮೂರು ಎಕ್ಸಾಂನಲ್ಲಿ ಮೊದಲು ಅಥವಾ ಎರಡು ಯಾವ ಪರೀಕ್ಷೆಯನ್ನು ಬೇಕಿದ್ರೆ ಆಯ್ಕೆ ಮಾಡಬಹುದು. +ಮಾಡೆಲ್ ಆತ್ಮಹತ್ಯೆ ; ಕ್ರಿಕೆಟಿಗ ಅಭಿಷೇಕ್‍ ಶರ್ಮಾಗೆ ಸಮನ್ಸ್ +ಮೂರು ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಟಾಪ್ ಮಾಕ್ಸರ್ï ಪರಿಗಣನೆ ಮಾಡಲಾಗುತ್ತದೆ. ಹೆಚ್ಚು ಅಂಕ ಪಡೆದಿರುವ ಮಾಕ್ಸರ್ï ಮಾತ್ರ ತೆಗೆದುಕೊಳ್ಳಲಾಗುವುದು. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಲಿಖಿತ ಪರೀಕ್ಷೆ 20 ಅಂಕಗಳಿಗೆ ಅಂತರಿಕ ಪ್ರಯೋಗಿಕ ಪರೀಕ್ಷೆ ಒಳಗೊಂಡಿರುತ್ತದೆ ಒಟ್ಟಾರೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಆಯಾ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತುರ್ತಾಗಿ ಅಂಕಪಟ್ಟಿ ಅಗತ್ಯವಿದ್ದಲ್ಲಿ ಡಿಜಿ ಲಾಕರ್ ನಿಂದ ಪಡೆಯಬಹುದಾಗಿರುತ್ತದೆ ಎಂದು ತಿಳಿಸಿದರು. \ No newline at end of file diff --git a/eesanje/url_46_229_3.txt b/eesanje/url_46_229_3.txt new file mode 100644 index 0000000000000000000000000000000000000000..dade9ee64b6fa986de0b0948ae9dcc706f81bcce --- /dev/null +++ b/eesanje/url_46_229_3.txt @@ -0,0 +1,8 @@ +ರಾಜ್ಯಸಭೆ ಚುನಾವಣೆ : ಕೈ ಶಾಸಕರು ರೆಸಾರ್ಟ್‍ಗೆ +ಬೆಂಗಳೂರು,ಫೆ.21- ರಾಜ್ಯಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿದ್ದು ತಮ್ಮ ಪಕ್ಷದ ಶಾಸಕರನ್ನು ರೆಸಾರ್ಟ್‍ಗೆ ನಿಯೋಜನೆ ಮಾಡಲು ಸಿದ್ಧತೆ ನಡೆಸಿದೆ. ಫೆ.27 ರಂದು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಅಡ್ಡ ಮತದಾನ ತಡೆಗಟ್ಟುವ ನಿಟ್ಟಿ ನಲ್ಲಿ ಹಿಂದಿನ ದಿನ ಕಾಂಗ್ರೆಸ್ ಖಾಸಗಿ ರೆಸಾರ್ಟ್‍ನಲ್ಲಿ ಶಾಸಕರಿಗೆ ಸಭೆ ಆಯೋಜಿಸಿದೆ. ಅಲ್ಲಿ ವ್ಹಿಪ್ ಜಾರಿಗೊಳಿಸುವ ಸಾಧ್ಯತೆ ಇದೆ. +ಜೆಡಿಎಸ್ ಪಕ್ಷ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿಯವರನ್ನು ಕಣಕ್ಕಿಳಿಸಿರುವುದರಿಂದ ರಾಜ್ಯಸಭಾ ಚುನಾವಣೆ ಅಖಾಡ ತೀವ್ರ ಕುತೂಹಲ ಕೆರಳಿಸಿದ್ದು, ಅಡ್ಡ ಮತದಾನದ ಭೀತಿ ಎದುರಾಗಿದೆ. ಅಡ್ಡ ಮತದಾನವಾಗಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗೆ ಸೋಲಾದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಎದುರಾಗಿದೆ. ಹೀಗಾಗಿ ಎಲ್ಲಾ ಶಾಸಕರನ್ನು ಒಗ್ಗಟ್ಟಿನಲ್ಲಿಡಲು ರೆಸಾರ್ಟ್ ಸಭೆ ನಡೆಸಲು ಮುಂದಾಗಿದ್ದು, ಅಧಿವೇಶನ ಮುಗಿಯುತ್ತಿದ್ದಂತೆ ಎಲ್ಲಾ ಶಾಸಕರೂ ರೆಸಾರ್ಟ್‍ಗೆ ತೆರಳಲಿದ್ದಾರೆ. ರಾಜ್ಯಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಕೇನ್ ಇಂದು ವಿಧಾನಸಭೆಯ ಮೊಗಸಾಲೆಗೆ ಬಂದು ತಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಿದರು. +ಕಾಂಗ್ರೆಸ್‍ನಿಂದ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಅವರೂ ಕೂಡ ಮತ ಯಾಚಿಸುತ್ತಿದ್ದಾರೆ. ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ನಾಲ್ವರು ಅಭ್ಯರ್ಥಿಗಳಿದ್ದಿದ್ದರೆ ಅವಿರೋಧ ಆಯ್ಕೆ ನಡೆಯುತ್ತಿತ್ತು. ಆದರೆ ಐವರು ಅಭ್ಯರ್ಥಿಗಳಿರುವುದರಿಂದ ಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೈತ್ರಿ ಮಾಡಿಕೊಂಡಿರುವ ಜೆಡಿಎಸ್-ಬಿಜೆಪಿ ತಮ್ಮ ಅಭ್ಯರ್ಥಿಗಳ ಗೆಲುವಿಗೆ ರಣತಂತ್ರ ರೂಪಿಸಿದ್ದು, ತಮ್ಮ ಶಾಸಕರ ಮತಗಳು ಚದುರದಂತೆ ಎಚ್ಚರಿಕೆ ವಹಿಸಿವೆ. +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ಈ ನಡುವೆ ಕೆಲ ಶಾಸಕರು ಅನುದಾನ ಹಂಚಿಕೆ ವಿಷಯದಲ್ಲಿ ಅಸಮಾಧಾನಗೊಂಡಿದ್ದು, ಅವರನ್ನು ಗುರುತಿಸಿ ಯಾವುದೇ ಕಾರಣಕ್ಕೂ ಚುನಾವಣೆ ಸಂದರ್ಭದಲ್ಲಿ ಗೈರು ಹಾಜರಾಗದಂತೆ ಎಚ್ಚರಿಕೆ ವಹಿಸಲು ಕೆಲವು ಹಿರಿಯ ನಾಯಕರನ್ನು ಅವರ ಚಲನವಲನದ ಬಗ್ಗೆ ನಿಗಾ ಇಡಲು ವರಿಷ್ಠ ನಾಯಕರು ಸೂಚಿಸಿದ್ದಾರೆ. +“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..” +ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಂಗ ಪ್ರವೇಶಿಸಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಶಾಸಕರ ಮತಗಳು ವ್ಯರ್ಥವಾಗಬಾರದೆಂದು ರಾಜ್ಯ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಈಗಾಗಲೇ ಶಿಕ್ಷಕರ ಕ್ಷೇತ್ರವನ್ನು ಗೆದ್ದಿದ್ದು, ಈಗ ರಾಜ್ಯಸಭೆಯಲ್ಲೂ ಕೂಡ ನಮ್ಮ ಮೂವರು ಅಭ್ಯರ್ಥಿಗಳು ಗೆಲುವಿಗೆ ಏನೆಲ್ಲ ಕಾರ್ಯತಂತ್ರ ನಡೆಸಬೇಕೋ ಅದರ ಬಗ್ಗೆ ಮುತುವರ್ಜಿ ವಹಿಸುವಂತೆ ಸೂಚಿಸಿದ್ದಾರೆ. ಫೆ.27 ರಂದು ಮತದಾನ ನಡೆಯಲಿದ್ದು, ಪಕ್ಷೇತರರು ಯಾವ ಕಡೆ ವಾಲಲಿದ್ದಾರೆ, ಯಾವ ಪಕ್ಷದವರು ಅಡ್ಡ ಮತದಾನ ಮಾಡಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_229_4.txt b/eesanje/url_46_229_4.txt new file mode 100644 index 0000000000000000000000000000000000000000..7738b00cd9db32bbb364592aa76da3c45b74ca08 --- /dev/null +++ b/eesanje/url_46_229_4.txt @@ -0,0 +1,12 @@ +ನಾಡಗೀತೆ ವಿವಾದ ವಿಧಾನಸಭೆಯಲ್ಲಿ ಪ್ರತಿಧ್ವನಿ +ಬೆಂಗಳೂರು,ಫೆ.21- ಸರ್ಕಾರಿ ಶಾಲೆಗಳಲ್ಲಿ ನಾಡಗೀತೆ ಹಾಡುವುದಕ್ಕೆ ಸಂಬಂಧಪಟ್ಟಂತೆ ಸರ್ಕಾರದ ದೋಷಪೂರಿತ ಆದೇಶದ ವಿರುದ್ಧ ವಿರೋಧಪಕ್ಷಗಳು ವಿಧಾನಸಭೆಯಲ್ಲಿಂದು ಕಿಡಿಕಾರಿದ್ದು, ಸರ್ಕಾರ ತಿದ್ದುಪಡಿ ಆದೇಶ ಹೊರಡಿಸಲಾಗಿದೆ ಎಂದು ಸಮರ್ಥಿಸಿಕೊಂಡಿದೆ. +ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ಬಳಿಕ ಬೇರೆ ಬೇರೆ ಕಲಾಪಗಳು ನಡೆಯುತ್ತಿರುವ ನಡುವೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಷಯ ಪ್ರಸ್ತಾಪಿಸಿ, ಈ ಸರ್ಕಾರ ಕುವೆಂಪು ಅವರಿಗೆ ಪದೇಪದೇ ಅಪಮಾನ ಮಾಡುತ್ತಿದೆ. ಮೊನ್ನೆ ವಸತಿ ಶಾಲೆಗಳಲ್ಲಿ ಕುವೆಂಪು ಅವರ ಬರಹವನ್ನು ಬದಲಾವಣೆ ಮಾಡಿತ್ತು. ಗಲಾಟೆಯಾದ ಬಳಿಕ ತಪ್ಪನ್ನು ಸರಿಪಡಿಸುವುದಾಗಿ ಹೇಳಿದೆ. ಈಗ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಆದೇಶ ಹೊರಡಿಸಿದೆ. +ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡಲಾಗಿದೆ. ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಗಳಿಗೆ ನಿಯಂತ್ರಣ ಸಂಸ್ಥೆ, ಶಿಕ್ಷಣ ನೀತಿಯ ಪ್ರಕಾರವೇ ಎಲ್ಲಾ ಶಾಲೆಗಳು ಸರ್ಕಾರದಿಂದ ಬೇರೆ ಬೇರೆ ಅನುಕೂಲ ಪಡೆದುಕೊಳ್ಳುತ್ತವೆ. ಆದ್ದರಿಂದ ನಾಡಗೀತೆಯಿಂದ ಖಾಸಗಿ ಶಾಲೆಗಳಿಗೆ ವಿನಾಯಿತಿ ನೀಡುವ ಅಗತ್ಯವೇನಿದೆ? ಇದು ತುಘಲಕ್ ದರ್ಬಾರಾಗಿದೆ. ಅಧಿಕಾರಿಗಳು ಮತ್ತು ಸಚಿವರ ನಡುವೆ ಸಂಬಂಧ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸರ್ಕಾರಕ್ಕೆ ಅಧಿಕಾರಿಗಳ ಮೇಲೆ ಲಂಗೂ ಲಗಾಮು ಇಲ್ಲದಂತಾಗಿದೆ. ದೋಷಪೂರಿತ ಆದೇಶಕ್ಕಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ಶಾಸಕರಾದ ಸುರೇಶ್‍ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್ ಮತ್ತಿತರರು ಸರ್ಕಾರದ ವಿರುದ್ಧ ಕಿಡಿಕಾರಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉತ್ತರ ನೀಡಿ, ಈ ಹಿಂದಿನ ಸರ್ಕಾರ ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲಿ ನಾಡಗೀತೆ ಹಾಡಬೇಕು ಎಂದು ಸರ್ಕಾರಿ ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಸಿ.ಅಶ್ವತ್ಥ್ ಅವರ ಧಾಟಿಯಲ್ಲಿ ನಾಡಗೀತೆ ಹಾಡಲು ಆದೇಶಿಸಬೇಕು ಎಂದು ಮನವಿ ಮಾಡಿಕೊಂಡಿದ್ದರು. +ಈ ಪ್ರಕರಣದ ವಿಚಾರಣೆ ವೇಳೆ ಈ ಹಿಂದಿನ ಆದೇಶದಲ್ಲಿದ್ದಂತೆ ಎಲ್ಲಾ ಶಾಲೆಗಳು ಎಂದರೆ ಯಾವುವು ಎಂದು ವಕೀಲರು ಪ್ರಶ್ನೆಯೆತ್ತಿದರು. ಅದನ್ನು ಸರಿಪಡಿಸಲು ಇದೇ ವರ್ಷದ ಫೆ.16 ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ರಾಷ್ಟ್ರಕವಿ ಜ್ಞಾನಪೀಠ ಪುರಸ್ಕøತರಾದ ಡಾ.ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ 2024 ರ ಫೆ.1 ರ ಆದೇಶವನ್ನು ತಿದ್ದುಪಡಿ ಮಾಡಲಾಗಿದೆ. +ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ನಿಗಮ, ಮಂಡಳಿ, ಪ್ರಾಧಿಕಾರ, ಮುಂತಾದ ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡುವುದು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು, ಅನುದಾನಿತ ಶಾಲೆಗಳು ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ನಿಗಮ, ಮಂಡಳಿ, ಪ್ರಾಧಿಕಾರ, ಅರೆ ಸರ್ಕಾರಿ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮದ ಪ್ರಾರಂಭದಲ್ಲಿ ಹಾಡಬೇಕೆಂಬುದನ್ನು ಬದಲಾಯಿಸಲಾಗಿತ್ತು ಎಂದರು. +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ಈ ಆದೇಶ ಕುರಿತಂತೆ ತಯಾರಿಸಲಾದ ಟಿಪ್ಪಣಿಯಲ್ಲಿ ಖಾಸಗಿ ಶಾಲೆ ಎಂದು ಸೇರ್ಪಡೆ ಮಾಡಲಾಗಿದೆ. ಆದರೆ ಆದೇಶದಲ್ಲಿ ಈ ಪದ ಮುದ್ರಣ ದೋಷದಿಂದಾಗಿ ಕೈ ಬಿಟ್ಟು ಹೋಗಿದೆ, ಅದನ್ನು ಸರಿಪಡಿಸಿ ಮತ್ತೊಮ್ಮೆ ತಿದ್ದುಪಡಿ ಆದೇಶವನ್ನು ಹೊರಡಿಸಿದ್ದೇವೆ ಎಂದು ಹೇಳಿದರು. ಕನ್ನಡ ಕಾಳಜಿಯ ಬಗ್ಗೆ ವಿರೋಧ ಪಕ್ಷಗಳಿಂದ ನಾವು ಪಾಠ ಕಲಿಯಬೇಕಿಲ್ಲ. ಈ ಹಿಂದೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಬಿಜೆಪಿ ಸರ್ಕಾರ ಪ್ರಶಸ್ತಿಯನ್ನೇ ನೀಡಿರಲಿಲ್ಲ. ನಾವು ಬಂದು ಪ್ರಶಸ್ತಿ ನೀಡಿದ್ದೇವೆ ಎಂದು ತಿರುಗೇಟು ನೀಡಿದರು. +ಅಷ್ಟಕ್ಕೇ ತೃಪ್ತರಾಗದ ವಿರೋಧ ಪಕ್ಷದ ನಾಯಕರು ಸರ್ಕಾರ ಪದೇ ಪದೇ ಈ ರೀತಿಯ ಲೋಪಗಳನ್ನು ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸರ್ಕಾರ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು.ನ್ಯಾಯಾಲಯದ ವಿಚಾರ ಪ್ರಸ್ತಾಪವಾಗಿರುವುದರಿಂದ ಕಾನೂನು ಸಚಿವ ಉತ್ತರ ನೀಡಬೇಕೆಂದು ಆರ್.ಅಶೋಕ್ ಒತ್ತಾಯಿಸಿದರು. +ಫೆ.26, 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ +ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಧ್ಯಪ್ರವೇಶ ಮಾಡಿ, ವಿರೋಧ ಪಕ್ಷದ ನಾಯಕರು ವಿಷಯ ಪ್ರಸ್ತಾಪಿಸುವ ಮೊದಲೇ ನಮ್ಮ ಪಕ್ಷದವರು ಜಾಗೃತರಾಗಿ ತಪ್ಪನ್ನು ಸರಿಪಡಿಸಿ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶಾಲೆಗಳಲ್ಲಿ ಎಂಬುದನ್ನು ಸರಿಪಡಿಸಲಾಗಿದೆ. ಆದೇಶದಲ್ಲಿ ಮುದ್ರಣ ಲೋಪ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವಿಚಾರ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೂ ಕಾರಣವಾಗಿತ್ತು. \ No newline at end of file diff --git a/eesanje/url_46_229_5.txt b/eesanje/url_46_229_5.txt new file mode 100644 index 0000000000000000000000000000000000000000..f1abf8d44581d5458b57e8a673bf97b89d04c30e --- /dev/null +++ b/eesanje/url_46_229_5.txt @@ -0,0 +1,6 @@ +ಬಿಜೆಪಿ-ಜೆಡಿಎಸ್ ಸದಸ್ಯರ ಸಭಾತ್ಯಾಗ +ಬೆಂಗಳೂರು,ಫೆ.21- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರದಿಂದ ತೃಪ್ತರಾಗದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಪರಿಷತ್‍ನಲ್ಲಿ ಸಭಾತ್ಯಾಗ ಮಾಡಿದರು. ರಾಜ್ಯಪಾಲರ ಭಾಷಣಕ್ಕೆ ಸುದೀರ್ಘ ಉತ್ತರ ನೀಡಿದ ಸಿದ್ದರಾಮಯ್ಯನವರು, ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆ ಹೇಳಿದ್ದರು. ಈ ವೇಳೆ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಮಗೆ ಮಾತನಾಡಲು ಅವಕಾಶ ಕೊಡಬೇಕೆಂದು ಮನವಿ ಮಾಡಿದರು. +ಮುಖ್ಯಮಂತ್ರಿಗಳು ಮಾತನಾಡುವ ವೇಳೆ ಪದೇ ಪದೇ ಎದ್ದುನಿಂತು ಭಾಷಣಕ್ಕೆ ಅಡ್ಡಿಪಡಿಸಿದ್ದೀರಿ. ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೊರಟ್ಟಿ ಹೇಳುತ್ತಿದ್ದಂತೆ, ತೀವ್ರ ಆಕ್ಷೇಪ ವ್ಯಕ್ತವಾಯಿತು. ಮುಖ್ಯಮಂತ್ರಿಯವರು ಸತತ 3 ಗಂಟೆ ಉತ್ತರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆಯೂ ಮಾತನಾಡಿದ್ದಾರೆ. ಇದು ಸಂಪೂರ್ಣವಾಗಿ ಚುನಾವಣಾ ಪ್ರಚಾರ ಭಾಷಣವಾಗಿದೆ. ಕೇವಲ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿಯನ್ನುಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದಾರೆ. ನಾವು ಮಾತನಾಡಿದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದರು. +ಅವರು ರಾಜ್ಯಪಾಲರ ಭಾಷಣಕ್ಕೆ ಉತ್ತರ ಕೊಟ್ಟಿದ್ದರೆ ನಮ್ಮದೇನು ತಕರಾರು ಇರುತ್ತಿರಲಿಲ್ಲ. ಕೇವಲ ಕೇಂದ್ರವನ್ನು ಗುರಿಯಾಗಿಟ್ಟುಕೊಂಡು ಟೀಕೆ ಮಾಡಿದ್ದರ ನಾವು ಅದನ್ನು ಸಹಿಸಿಕೊಂಡು ಸುಮ್ಮನಿರಬೇಕಾ? ಮಾತನಾಡಲು ಅವಕಾಶ ಕೊಡಿ ಎಂದು ಆಗ್ರಹಿಸಿದರು. ಈ ಹಂತದಲ್ಲಿ ಆಡಳಿತ, ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಆರೋಪ, ಪ್ರತ್ಯಾರೋಪಗಳು ನಡೆದವು. ಮುಖ್ಯಮಂತ್ರಿಗಳ ಪರವಾಗಿ ಭೋಸರಾಜ್, ಸಚಿವರು ಹಾಗೂ ಕಾಂಗ್ರೆಸ್ ಸದಸ್ಯರು ಬೆಂಬಲವಾಗಿ ನಿಂತರು. +ಸರ್ಕಾರದಿಂದ ಕಂದಾಯ ವೆಚ್ಚ ದುರ್ಬಳಕೆ : ಬೊಮ್ಮಾಯಿ ಆರೋಪ +ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ನಾವು ಸುಮ್ಮನೆ ಕೂರಬೇಕೇ? ಮುಖ್ಯಮಂತ್ರಿಗಳು ಸತ್ಯವನ್ನೇ ಹೇಳಿದ್ದಾರೆ. ಪುನಃ ಪ್ರತಿಪಕ್ಷದವರು ಮಾತನಾಡುವುದರಲ್ಲಿ ಏನು ಅರ್ಥವಿದೆ. ಈಗಾಗಲೇ ಮುಖ್ಯಮಂತ್ರಿಗಳು ಉತ್ತರ ಕೊಟ್ಟಿರುವುದರಿಂದ ಪುನಃ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಪೀಠಕ್ಕೆ ಮನವಿ ಮಾಡಿದರು. ಈ ಹಂತದಲ್ಲಿ ಎರಡು ಕಡೆ ಗದ್ದಲ ಪ್ರಾರಂಭವಾಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಸಭಾ ತ್ಯಾಗ ಮಾಡಿದರೆ, ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು, ಕನ್ನಡಿಗರ ದ್ರೋಹಿಗಳು ಬಿಜೆಪಿಯವರು ಎಂದು ಘೋಷಣೆ ಕೂಗಿದರು. \ No newline at end of file diff --git a/eesanje/url_46_229_6.txt b/eesanje/url_46_229_6.txt new file mode 100644 index 0000000000000000000000000000000000000000..1e6080782fdc043e250d0ca41d11cb6209d6d97c --- /dev/null +++ b/eesanje/url_46_229_6.txt @@ -0,0 +1,11 @@ +ಹೋಟೆಲ್‍ಗಳಲ್ಲಿನ ಅನೈತಿಕ ಚಟುವಟಿಕೆಗಳ ವಿರುದ್ಧ ಪೊಲೀಸರು-ಓವೈಓ ಜಂಟಿ ಅಭಿಯಾನ +ಬೆಂಗಳೂರು, ಫೆ. 21- ಹೋಟೆಲ್‍ಗಳಲ್ಲಿನ ಅನೈತಿಕ ಚಟುವಟಿಕೆಗಳ ವಿರುದ್ಧ ನಗರ ಪೊಲೀಸರು ಮತ್ತು ಓವೈಓ ಜಂಟಿ ಅಭಿಯಾನ ಕೈಗೊಂಡಿದೆ. ಓವೈಓ ನಂತಹ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ, ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತಮವಾಗಿ ಗುರುತಿಸಬಹುದು ಮತ್ತು ಪರಿಹರಿಸಬಹುದು, ಅಂತಿಮವಾಗಿ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬಹುದು ಎಂದು ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ. ದೇವರಾಜ ಹೇಳಿದರು. +ಓವೈಓ ಸಹಭಾಗಿತ್ವದಲ್ಲಿ ಪೊಲೀಸ್ ಇಲಾಖೆ ನಗರದ ಹೋಟೆಲ್‍ಗಳಲ್ಲಿ ಮಾನವ ಕಳ್ಳಸಾಗಣೆ ಸೇರಿದಂತೆ ಅನೈತಿಕ ಚಟುವಟಿಕೆಗಳ ವಿರುದ್ಧದ ಹೋರಾಟದಲ್ಲಿ ವಿಶೇಷ ಅಭಿಯಾನವನ್ನು ಆಯೋಜಿಸಿದೆ. ಓವೈಓನ ಉನ್ನತ ಅಧಿಕಾರಿಗಳು ಹೋಟೆಲ್ ನಿರ್ವಾಹಕರೊಂದಿಗೆ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಡಿ. ದೇವರಾಜ ಅವರೊಂದಿಗೆ ಸಭೆ ನಡೆಸಿದರು. +ನಗರದ ಹೋಟೆಲ್‍ಗಳಲ್ಲಿ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಲು ಓವೈಓ ಪೊಲೀಸರಿಗೆ ತಮ್ಮ ಬೆಂಬಲವನ್ನು ನೀಡಿದರು. ಮಾನವ ಕಳ್ಳಸಾಗಣೆ, ಮಾದಕ ವ್ಯಸನ ಮತ್ತು ಹೋಟೆಲ್ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುವ ಕೆಲವು ನಿರ್ಲಜ್ಜ ಅಂಶಗಳೊಂದಿಗೆ ಸಂಬಂಧಿಸಿದ ಇತರ ಕಾನೂನುಬಾಹಿರ ಅಭ್ಯಾಸಗಳಂತಹ ಅನೈತಿಕ ಚಟುವಟಿಕೆಗಳನ್ನು ನಿಗ್ರಹಿಸುವ ಕಾರ್ಯತಂತ್ರಗಳ ಕುರಿತು ಅವರು ಈ ಸಭೆಯಲ್ಲಿ ಚರ್ಚಿಸಿದರು. +ಓವೈಓ ತನ್ನ ಎಲ್ಲಾ ಅತಿಥಿಗಳಿಗೆ ಸುರಕ್ಷಿತ ವಾತಾವರಣವನ್ನು ಒದಗಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು ಮತ್ತು ತನ್ನ ಆವರಣದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಅಥವಾ ಅನೈತಿಕ ಚಟುವಟಿಕೆಗಳ ಬಗ್ಗೆ ತನ್ನ ಶೂನ್ಯ-ಸಹಿಷ್ಣು ನೀತಿಯನ್ನು ಪುನರುಚ್ಚರಿಸಿತು. ಈ ಜಂಟಿ ಚಾಲನೆಯ ಭಾಗವಾಗಿ, ಓವೈಓ ಮತ್ತು ನಗರ ಪೊಲೀಸರು ಯಾವುದೇ ಅನುಮಾನಾಸ್ಪದ ಅಥವಾ ಕಾನೂನುಬಾಹಿರ ಚಟುವಟಿಕೆಗಳನ್ನು ತ್ವರಿತವಾಗಿ ಗುರುತಿಸಲು ಮತ್ತು ಪರಿಹರಿಸಲು ಸಹಯೋಗ ಮತ್ತು ಮಾಹಿತಿ ಹಂಚಿಕೆಯನ್ನು ಹೆಚ್ಚಿಸಲು ಒಪ್ಪಿಕೊಂಡಿದ್ದಾರೆ. +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ಈ ಪಾಲುದಾರಿಕೆಯು ಅದರ ಅತಿಥಿಗಳು ಮತ್ತು ಸಮುದಾಯದ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಓವೈಓ ನ ಪೂರ್ವಭಾವಿ ವಿಧಾನವನ್ನು ಒತ್ತಿಹೇಳುತ್ತದೆ. ಹೋಟೆಲ್‍ಗಳು ಎಲ್ಲಾ ಅತಿಥಿಗಳಿಗೆ ಸುರಕ್ಷಿತ ಮತ್ತು ಸ್ವಾಗತಾರ್ಹ ಸ್ಥಳಗಳಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಆತಿಥ್ಯ ಉದ್ಯಮದೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ. ಓವೈಓನಂತಹ ಸಂಸ್ಥೆಗಳೊಂದಿಗೆ ಸಹಕರಿಸುವ ಮೂಲಕ, ನಾವು ಕಾನೂನುಬಾಹಿರ ಚಟುವಟಿಕೆಗಳನ್ನು ಉತ್ತಮವಾಗಿ ಗುರುತಿಸಬಹುದು ಮತ್ತು ಪರಿಹರಿಸಬಹುದು, ಅಂತಿಮವಾಗಿ ಎಲ್ಲರಿಗೂ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಬಹುದು ಎಂದರು. +ಹೊಟೇಲ್‍ಗೆ ಬರುವ ಅತಿಥಿಗಳ ಸರಿಯಾದ ದಾಖಲೆ ಇಟ್ಟುಕೊಳ್ಳುವುದು ಮುಖ್ಯವಾದರೂ, ನೈತಿಕ ಪೊಲೀಸ್ ಗಿರಿಯನ್ನು ಪ್ರೋತ್ಸಾಹಿಸಬಾರದು ಎಂದು ಅವರು ಹೇಳಿದರು. ಇದರ ಜೊತೆಗೆ, ಹೋಟೆಲ್‍ಗಳು ಆಸ್ತಿ ಮತ್ತು ನೆರೆಹೊರೆಯಲ್ಲಿ ಸಿಸಿಟಿವಿ ಕ್ಯಾಮೆರಾ ಸಾರ್ವಕಾಲಿಕ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು. +ಓವೈಓನ ಸ್ಟ್ರಾಟೆಜಿಕ್ ಅಲೈಯನ್ಸ್ ಮತ್ತು ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿತಿನ್ ಠಾಕೂರ್ ಮಾತನಾಡುತ್ತಾ, ಈ ಸಭೆಯು ಪೊಲೀಸರೊಂದಿಗೆ ಸಹಕರಿಸಲು ಮತ್ತು ಹೊಟೇಲ್‍ಗಳಲ್ಲಿ ಅತಿಥಿಗಳಿಗೆ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ನಮ್ಮ ರಾಷ್ಟ್ರವ್ಯಾಪಿ ಕಾರ್ಯಕ್ರಮದ ಒಂದು ಭಾಗವಾಗಿದೆ. ಎಂದರು. ಓವೈಓ ತನ್ನ ಪ್ಲಾಟ್ ಫಾರ್ಮ್ ನಲ್ಲಿ ಪಟ್ಟಿ ಮಾಡಲಾದ ಹೋಟೆಲ್ ಗಳು ಸ್ಥಳೀಯ ಕಾನೂನು ಜಾರಿ ಏಜೆನ್ಸಿಗಳು ನೀಡಿದ ಸುರಕ್ಷತೆ ಸಂಬಂತ ಕಾನೂನುಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಖಚಿತಪಡಿಸಿಕೊಳ್ಳಲು ದೃಢವಾದ ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆಯನ್ನು ಹೊಂದಿದೆ. +ಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು +ಅತಿಥಿ ನಡವಳಿಕೆ ಮತ್ತು ಅಸಾಮಾನ್ಯ ಚೆಕ್-ಇನ್ ಮಾದರಿಗಳಂತಹ ಕೆಂಪು ಧ್ವಜಗಳನ್ನು ವೀಕ್ಷಿಸಲು ಮತ್ತು ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲು ಇದು ತನ್ನ ಹೋಟೆಲ್ ಪಾಲುದಾರರು ಮತ್ತು ಅವರ ಉದ್ಯೋಗಿಗಳಿಗೆ ನಿಯಮಿತ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಸಿದ ತರಬೇತಿಯನ್ನು ನೀಡುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_229_7.txt b/eesanje/url_46_229_7.txt new file mode 100644 index 0000000000000000000000000000000000000000..d6b29f9ce7bf7d7b3d0a1f4f262743b05b0923d4 --- /dev/null +++ b/eesanje/url_46_229_7.txt @@ -0,0 +1,10 @@ +ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಫೆ.21-ಕೇರಳದ ಮಾದರಿಯಲ್ಲಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಗೆ ಭರವಸೆ ನೀಡಿದರು. ವಿಧಾನಸಭೆಯ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಆರತಿ ಕೃಷ್ಣ ಅವರ ನೇತೃತ್ವದಲ್ಲಿ 15ಕ್ಕೂ ಹೆಚ್ಚು ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಾರ್ಯಕಲಾಪಗಳನ್ನು ವೀಕ್ಷಿಸುತ್ತಿರುವ ವಿಚಾರವನ್ನು ಸ್ವಾಗತಿಸಿ ಅವರು ಮಾತನಾಡಿದರು. +ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆ ಸಿದ್ದಪಡಿಸುವಾಗ ಪ್ರತ್ಯೇಕ ಸಚಿವಾಲಯವನ್ನು ಮಾಡುವ ಬೇಡಿಕೆಯನ್ನು ಅನಿವಾಸಿ ಭಾರತೀಯರು ಇಟ್ಟಿದ್ದರು. ಅದರಂತೆ ಪ್ರಣಾಳಿಕೆಯಲ್ಲೂ ಆ ವಿಚಾರವನ್ನು ಸೇರಿಸಿದ್ದೆವು. ಅವರದೇ ಆದ ಸಮಸ್ಯೆಗಳಿರುತ್ತವೆ. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರತ್ಯೇಕ ಸಚಿವಾಲಯ ಮಾಡುತ್ತೇವೆ ಎಂದರು. ಕಾನೂನಾತ್ಮಕವಾಗಿ ಅವರಿಗೆ ಅಗತ್ಯವಿರುವ ಸಹಾಯ ಮಾಡುತ್ತೇವೆ. ಕಲ್ಯಾಣ ಕೆಲಸಗಳನ್ನು ಮಾಡುತ್ತೇವೆ ಎಂದು ಹೇಳಿದರು. +ಕೆನಡಾ, ಯುಕೆ, ಆಸ್ಟ್ರೇಲಿಯಾ, ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳ ಅನಿವಾಸಿ ಭಾರತೀಯರು ಸದನದ ಕಲಾಪ ವೀಕ್ಷಿಸುತ್ತಿದ್ದಾರೆ. ಅವರನ್ನು ಸ್ವಾಗತಿಸುತ್ತೇನೆ ಎಂದರು. ಉದ್ಯೋಗಹರಿಸಿಕೊಂಡು ಬೇರೆ ಬೇರೆ ದೇಶಗಳಲ್ಲಿ ಉದ್ಯೋಗವನ್ನು ಕಟ್ಟಿಕೊಂಡಿದ್ದಾರೆ. ಅನೇಕರು ಉದ್ಯಮಿಗಳಾಗಿ ಯಶಸ್ವಿಯಾಗಿದ್ದಾರೆ. ಶೇ.60ರಿಂದ 80ರಷ್ಟು ಅನಿವಾಸಿ ಭಾರತೀಯರು ಹೊರ ರಾಷ್ಟ್ರದಲ್ಲಿ ಗಳಿಸಿದ ಆದಾಯವನ್ನು ಭಾರತಕ್ಕೆ ಮರಳಿ ತರುವ ಮನಸ್ಸು ಮಾಡಿದ್ದಾರೆ. ಹೊರ ದೇಶಕ್ಕೆ ಹೋದರೆ ಮರಳಿ ಬರುವುದಿಲ್ಲ ಎಂಬ ಪರಿಸ್ಥಿತಿ ಈಗಿಲ್ಲ. ಸಾಕಷ್ಟು ಬದಲಾಗಿದೆ. ಇಲ್ಲಿ ಸಿಎಸ್‍ಆರ್ ನಿ ಹಣವನ್ನು ಅಭಿವೃದ್ಧಿಗೆ ಕೊಡುತ್ತಿದ್ದಾರೆ. +ರಾಜ್ಯ ಸರ್ಕಾರ ಅನಿವಾಸಿ ಭಾರತೀಯರ ಸಮಿತಿಯನ್ನು ರಚಿಸಿದ್ದು, ಉಪಾಧ್ಯಕ್ಷರಾಗಿ ಆರತಿ ಕೃಷ್ಣ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು, ವಿಧಾನಸಭೆಯ ಕಾರ್ಯಕಲಾಪವನ್ನು ನಮ್ಮ ವಿಶೇಷ ಅತಿಥಿಗಳಾಗಿ ರೈತರು, ಪೌರಕಾರ್ಮಿಕರು, ವಿಶೇಷ ಚೇತನರು, ತೃತೀಯ ಲಿಂಗಿಗಳು ವೀಕ್ಷಣೆ ಮಾಡುತ್ತಿದ್ದಾರೆ. +ಇಂದು ಸಭಾಧ್ಯಕ್ಷರ ಗ್ಯಾಲರಿಯಲ್ಲಿ 15 ವಿವಿಧ ರಾಷ್ಟ್ರಗಳಲ್ಲಿರುವ ಅನಿವಾಸಿ ಕನ್ನಡಿಗರು ವೀಕ್ಷಣೆ ಮಾಡುತ್ತಿದ್ದಾರೆ. ಅವರನ್ನು ಎಲ್ಲ ಶಾಸಕರು ಸರ್ಕಾರದ ಪರವಾಗಿ ಸ್ವಾಗತಿಸುವುದಾಗಿ ಹೇಳಿದರು. ವ್ಯಾಪಾರ, ಉದ್ಯೋಗ ಸೇರಿದಂತೆ ವಿವಿಧ ಕಾರಣಗಳಿಗೆ ವಿದೇಶಕ್ಕೆ ತೆರಳಿ ಅಲ್ಲಿ ನೆಲೆಸಿರುವ ಕನ್ನಡಿಗರು, ನಮ್ಮ ಸಂಸ್ಕøತಿ, ಆಚಾರ, ವಿಚಾರವನ್ನು ಮರೆಯದೆ ಆಯಾ ರಾಷ್ಟ್ರಗಳಲ್ಲಿ ಗಳಿಸಿದ ಆದಾಯದ ಒಂದು ಪಾಲನ್ನು ನಮ್ಮ ಸಮಾಜದ ಅಭಿವೃದ್ಧಿಗೆ ಕೊಡುಗೆಯಾಗಿ ನೀಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ನೀಡುವಲ್ಲಿ ಹಾಗೂ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಯಲ್ಲಿ ಅವರು ಪರೋಕ್ಷವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದರು. +“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..” +ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅನಿವಾಸಿ ಭಾರತೀಯ ಕನ್ನಡಿಗರು ಅವೇಶನ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯವರು ಅತಿ ಹೆಚ್ಚು ವಿದೇಶದಲ್ಲಿ ನೆಲೆಸಿದ್ದು, ಅಲ್ಲಿ ತಮ್ಮದೇ ಆದ ಸಂಘಗಳನ್ನು ಕಟ್ಟಿಕೊಂಡಿದ್ದಾರೆ. ಆದರೂ ತಮ್ಮ ಊರಿನ ಸಂಪ್ರದಾಯ, ಸಂಬಂಧವನ್ನು ಮರೆತಿಲ್ಲ. ಎಲ್ಲ ಜಾತಿ ಧರ್ಮೀಯರು ಹೋಗಿದ್ದಾರೆ. ಅವರೊಂದಿಗೆ ಸಂಬಂಧವನ್ನು ಇನ್ನಷ್ಟು ಗಟ್ಟಿ ಮಾಡಬೇಕು. ನಮ್ಮಲ್ಲಿನ ಹೂಡಿಕೆಯಲ್ಲೂ ಸಹಕಾರಿಯಾಗಲಿದೆ. ರಾಜಕೀಯ, ಸಾಮಾಜಿಕ, ಕೈಗಾರಿಕಾ ವಲಯದಲ್ಲೂ ದೊಡ್ಡ ಮಟ್ಟದಲ್ಲಿ ಹೊರದೇಶದಲ್ಲಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು. +ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಬಹಳ ಹಿಂದಿನಿಂದಲೂ ವಿದೇಶಗಳಿಗೆ ಹೋಗುವ ಪರಿಪಾಠವಿದೆ. ಜಗತ್ತಿನ ಎಲ್ಲೆಡೆ ಭಾರತೀಯ ಸಂಸ್ಕøತಿಯ ಕುರುಹುಗಳಿವೆ. ಅನಿವಾಸಿ ಭಾರತೀಯರು ತವರಿಗೆ ಹೆಮ್ಮೆ ತರುವ ಕೆಲಸವನ್ನು ಮಾಡಿದ್ದಾರೆ. ಅವರೊಂದಿಗೆ ಹೆಚ್ಚು ಸಂಪರ್ಕ ಹೊಂದುವುದರಿಂದ ರಾಜ್ಯದ ಅಭಿವೃದ್ದಿಗೂ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರಮೋದಿ ಅವರು ದೇಶ ಮುನ್ನಡೆಸುವ ರೀತಿ ಭಾರತೀಯರು ವಿದೇಶಗಳಲ್ಲೂ ಹೆಮ್ಮೆ ಪಡುವಂತಾಗಿದೆ ಎಂದು ಹೇಳಿದರು. +ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ಶಾಸಕರಾದ ಎನ್.ಎ.ಹ್ಯಾರೀಸ್, ಡಾ.ರಂಗನಾಥ್ ಅವರುಗಳು, ಅನಿವಾಸಿ ಭಾರತೀಯರ ಸೇವೆಯನ್ನು ಗುಣಗಾನ ಮಾಡಿ ಸದನ ವೀಕ್ಷಿಸುತ್ತಿರುವುದನ್ನು ಪಕ್ಷಬೇಧ ಮರೆತು ಶ್ಲಾಘಿಸಿದರು. \ No newline at end of file diff --git a/eesanje/url_46_229_8.txt b/eesanje/url_46_229_8.txt new file mode 100644 index 0000000000000000000000000000000000000000..53e6d87d70e9dca223129601f29ce8f6ff22e4e2 --- /dev/null +++ b/eesanje/url_46_229_8.txt @@ -0,0 +1,5 @@ +ಶಾಸಕರ ಗುರುತಿಗೆ ಚಿನ್ನಮಿಶ್ರಿತ ಗಂಡಭೇರುಂಡ ಲಾಂಛನ +ಬೆಂಗಳೂರು,ಫೆ.21- ಶಾಸಕರನ್ನು ಗುರುತಿಸಲು ಅನುಕೂಲವಾಗುವಂತೆ ವಿಧಾನಸಭೆ ಸಚಿವಾಲಯ ಚಿನ್ನ ಮಿಶ್ರಿತ ಗಂಡಭೇರುಂಡ ಲಾಂಛನವನ್ನು ವಿಧಾನಸಭೆ ಸದಸ್ಯರಿಗೆ ವಿತರಿಸಿದೆ. ಕಳೆದ 9 ತಿಂಗಳ ಹಿಂದೆ ನಡೆದ ಚುನಾವಣೆಯಲ್ಲಿ ಹಲವಾರು ಮಂದಿ ಹೊಸ ಶಾಸಕರು ಆಯ್ಕೆಯಾಗಿದ್ದಾರೆ. ಹೊಸ ಮುಖಗಳನ್ನು ಗುರುತಿಸಲು ಕಷ್ಟವಾಗುತ್ತಿದೆ. ಈ ಹಿಂದೆ ಹಿರಿಯ ಅಪರಿಚಿತ ನಾಗರಿಕರೊಬ್ಬರು ವಿಧಾನಸಭೆ ಕಲಾಪ ನಡೆಯುತ್ತಿದ್ದಾಗ ಸಭಾಂಗಣದ ಒಳಗೆ ಬಂದು ಕುಳಿತುಕೊಂಡಿದ್ದರು. ಭದ್ರತಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಶಾಸಕರನ್ನು ಗುರುತಿಸುವಾಗ ಗೊಂದಲಗಳಾಗುತ್ತಿದ್ದವು. ಇದಕ್ಕೆ ಶಾಶ್ವತ ಪರಿಹಾರವೆಂಬಂತೆ ಗಂಡಭೇರುಂಡ ಲಾಂಛನದ ಫಲಕವನ್ನು ಜಾರಿಗೆ ತರಲಾಗಿದೆ. +ಭಾಗಶಃ ಪ್ರಮಾಣದ ಚಿನ್ನಮಿಶ್ರಿತ ಲೋಹದ ಗಂಡಭೇರುಂಡ ಲಾಂಛನದ ಮಧ್ಯೆ ಎಂಎಲ್‍ಎ ಎಂದು ಇಂಗ್ಲಿಷ್‍ನಲ್ಲಿ ಬರೆಯಲಾಗಿದೆ. ಹೈಡ್ರೀಮ್ಸ್ ಸಂಸ್ಥೆ ಈ ಲಾಂಛನವನ್ನು ವಿಧಾನಸಭೆಗೆ ಪೂರೈಸಿದೆ. ಲಾಂಛನ ಬಳಕೆ ಮಾಡುವ ಬಗ್ಗೆ ಶಾಸಕರಿಗೆ ಸೂಚನೆ ಕೂಡ ನೀಡಲಾಗಿದೆ. ಶಾಸಕರಿಗೆ ಮಾತ್ರ ಈ ರೀತಿಯ ಲಾಂಛನವನ್ನು ನೀಡಲಾಗಿದ್ದು, ಅದನ್ನು ಧರಿಸಿದವರನ್ನು ಗುರುತಿಸಲು ಸುಲಭವಾಗುತ್ತದೆ ಎಂದು ಹೇಳಲಾಗಿದೆ. +ಕಳೆದ 10 ವರ್ಷಗಳಲ್ಲಿ 13 ಸಾವಿರ ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ : ಬೊಮ್ಮಾಯಿ +ವಿಧಾನಸಭೆಯಲ್ಲಿ ಇಂದು ಶಾಸಕರಿಗೆ ಲಾಂಛನವನ್ನು ವಿತರಿಸಲಾರಂಭಿಸಲಾಯಿತು. ಕಲಾಪದ ಆರಂಭದಲ್ಲೇ ವಿಧಾನಸಭಾಧ್ಯಕ್ಷರು ಎಲ್ಲರೂ ಲಾಂಛನವನ್ನು ಧರಿಸಿಯೇ ಕಲಾಪಕ್ಕೆ ಬರಬೇಕು. ಕ್ಷೇತ್ರದಲ್ಲಿ ಪ್ರವಾಸ ಮಾಡುವಾಗ ದೆಹಲಿಗೆ ತೆರಳಿದಾಗ ದೇಶ, ವಿದೇಶಗಳ ಪ್ರಯಾಣದ ವೇಳೆ ಈ ಲಾಂಛನ ಬಳಕೆ ಮಾಡುವುದರಿಂದ ಶಾಸಕರನ್ನು ಗುರುತಿಸಲು ಸುಲಭವಾಗುತ್ತದೆ ಎಂದರು. ಹೀಗಾಗಿ ನಾಳೆಯಿಂದ ಎಲ್ಲಾ ಶಾಸಕರು ಸದನಕ್ಕೆ ಲಾಂಛನ ಬಳಸಿ ಬರುವುದು ಸೂಕ್ತ ಎಂದು ಸಭಾಧ್ಯಕ್ಷರು ಹೇಳಿದರು. diff --git a/eesanje/url_46_229_9.txt b/eesanje/url_46_229_9.txt new file mode 100644 index 0000000000000000000000000000000000000000..81589209ec921d5c837cd9411bfd979d26745a92 --- /dev/null +++ b/eesanje/url_46_229_9.txt @@ -0,0 +1,10 @@ +ಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು +ಬೆಂಗಳೂರು,ಫೆ.21-ನರೇಂದ್ರಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು. +ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು. ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. +ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ, ಕರ್ನಾಟಕ ರಾಜ್ಯಕ್ಕೆ ವಾಪಸ್ ಕೊಡುತ್ತಿರುವುದು ಶೇ.12-13ರಷ್ಟು ಮಾತ್ರ. ಮೋದಿ ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದರು. +ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ 24,44,213 ಕೋಟಿ ಇತ್ತು. +ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು +ಅಂದು ರಾಜ್ಯಕ್ಕೆ 51,000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ 30,42,243 ಕೋಟಿ ಇದ್ದರೆ ನಮಗೆ ಬಂದಿದ್ದು 31,734ಕೋಟಿ ರೂ., 2021-22 ರಲ್ಲಿ 34,83,236 ಕೋಟಿ ಗಾತ್ರದ ಬಜೆಟ್ ಗೆ , ರಾಜ್ಯಕ್ಕೆ 48,589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ 41,81,232 ಕೋಟಿ , ರಾಜ್ಯಕ್ಕೆ 53510 ಕೋಟಿ ಮಾತ್ರ ಬಂತು. 2023-24ರಲ್ಲಿ 45,03,007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು 50,257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ 59,785 ಕೋಟಿ ಬರುತ್ತದೆ ಎಂದು ರಾಜ್ಯಕ್ಕೆ ಆಗುತ್ಯಲೇ ಇರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು. +ಈ ರೀತಿ ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ದೇಶದ ಏಕತೆಗೆ ಅಪಾಯವೊಡ್ಡುತ್ತದೆ ಎಂದಿದ್ದರು. ಅದೇ ಪ್ರಧಾನಿಯವರು ಗುಜರಾತಿನ ಸಿಎಂ ಆಗಿದ್ದಾಗ 2012ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿಧಿರೋಸಿದ್ದರು. +ಐಜೂರು ಪಿಎಸ್‍ಐ ಅಮಾನತು, ತನಿಖೆಗೆ ಆದೇಶ : ಗೃಹ ಸಚಿವ ಪರಮೇಶ್ವರ +ಗುಜರಾತ್ ರಾಜ್ಯ ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೇ ಎಂದಿದ್ದರು. ಅಂದಿನ ಕೇಂದ್ರಕ್ಕೆ ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ ಎಂದು ಮೋದಿ ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. \ No newline at end of file diff --git a/eesanje/url_46_22_1.txt b/eesanje/url_46_22_1.txt new file mode 100644 index 0000000000000000000000000000000000000000..34185da589c3c884d7de6d5c9e70b126d3cc5865 --- /dev/null +++ b/eesanje/url_46_22_1.txt @@ -0,0 +1,10 @@ +ಬಿಜೆಪಿಯೊಳಗಿನ ಅಸಮಾಧಾನ ಸರಿದೂಗಿಸಲು ಆರ್‌ಎಸ್‌‍ಎಸ್‌‍ ಮಧ್ಯಪ್ರವೇಶ, ನಾಳೆ ಮಹತ್ವದ ಸಭೆ + +ಬೆಂಗಳೂರು, ಸೆ.11-ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಬಿಜೆಪಿಯಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿದೂಗಿಸಲು ಆರ್‌ಎಸ್‌‍ಎಸ್‌‍ ಮಧ್ಯಪ್ರವೇಶ ಮಾಡಿದ್ದು, ನಾಳೆ ಮಹತ್ವದ ಸಭೆ ನಡೆಸಲಿದೆ.ಸಭೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌, ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್‌ದಾಸ್‌‍ ಅಗರವಾಲ್‌, ಮಾಜಿ ಸಚಿವರಾದ ರಮೇಶ್‌ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 40 ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ. +ಮಾಗಡಿ ರಸ್ತೆ ಚೆನ್ನೇನಹಳ್ಳಿಯಲ್ಲಿರುವ ಆರ್‌ಎಸ್‌‍ಎಸ್‌‍ನ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ, ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ, ಸದಸ್ಯತ್ವ ನೋಂದಣಿ, ಹಲವು ಮಹತ್ವದ ವಿಷಯಗಳು ಚರ್ಚೆಗೆ ಒಳಪಡಲಿವೆ.ಸಾಮಾನ್ಯವಾಗಿ ಬಿಜೆಪಿಯ ಆಂತರಿಕ ವಿಷಯದಲ್ಲಿ ಮೂಗು ತೂರಿಸಲು ಹಿಂದೇಟು ಹಾಕುವ ಆರ್‌ಎಸ್‌‍ಎಸ್‌‍ ನಾಯಕರು ಕೇಂದ್ರ ಸಚಿವರ ಮನವಿ ಮೇರೆಗೆ ಬೈಟಕ್‌ ನಡೆಸಲು ಮುಂದಾಗಿದ್ದಾರೆಂದು ಮೂಲಗಳು ತಿಳಿಸಿವೆ. +ಬಿಜೆಪಿ ನಾಯಕರು ಬಯಸಿದರೆ ಮಾತ್ರ ಎಲ್ಲರನ್ನೂ ಒಟ್ಟುಗೂಡಿಸಿ ಅಸಮಾಧಾನಕ್ಕೆ ಆಸ್ಪದವಿಲ್ಲದಂತೆ ಪಕ್ಷ ಮುನ್ನಡೆಸಿಕೊಂಡು ಹೋಗಬೇಕೆಂದು ಆರ್‌ಎಸ್‌‍ಎಸ್‌‍ ನಾಯಕರು ಸೂಕ್ತ ಸಲಹೆ, ಮಾರ್ಗದರ್ಶನ ಮಾಡುತ್ತಾರೆ. ಅದನ್ನು ಹೊರತುಪಡಿಸಿದರೆ ಬಿಜೆಪಿಯ ಕೆಲವು ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದು ಇಲ್ಲವೇ ಮಧ್ಯಪ್ರವೇಶ ಮಾಡುವ ಅಭ್ಯಾಸವನ್ನು ಸಂಘ ಪರಿವಾರದ ನಾಯಕರು ಇಟ್ಟುಕೊಂಡಿಲ್ಲ. +ಪ್ರಧಾನಿ ನರೇಂದ್ರಮೋದಿ ಅವರ ಸಂಪುಟದಲ್ಲಿ ಪ್ರಭಾವಿ ಸಚಿವರಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಸಂಸದರೊಬ್ಬರು ನೀವು ಹೇಳಿದರೆ ಎಲ್ಲವೂ ಸರಿಹೋಗುತ್ತದೆ. ಪಕ್ಷವು ಕಷ್ಟ ಕಾಲದಲ್ಲಿರುವಾಗ ನೀವು ಮಧ್ಯಪ್ರವೇಶ ಮಾಡಲೇಬೇಕೆಂದು ಕೆಲ ದಿನಗಳ ಹಿಂದೆ ಕೋರಿಕೊಂಡಿದ್ದರು. ಅವರ ಮನವಿ ಮೇರೆಗೆ ಸಭೆ ನಡೆಯಲಿದೆ. +ರಾಜ್ಯ ಬಿಜೆಪಿಯಲ್ಲಿ ಒಡಕು:ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಬಿರುಕು ಮೂಡಿತು. ನಂತರ, ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಕೆಲ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಮುಲಾಮು ಹಚ್ಚಲಾಯ್ತು. ಆದರೂ, ಪೂರ್ಣ ಪ್ರಮಾಣದಲ್ಲಿ ಗಾಯ ವಾಸಿಯಾಗಲಿಲ್ಲ. +ನಂತರ, ಲೋಕಸಭೆ ಚುನಾವಣೆಗೆ ಟಿಕೆಟ್‌ ಕೈ ತಪ್ಪುತ್ತಿದ್ದಂತೆ ನಿರೀಕ್ಷೆಯಲ್ಲಿದ್ದ ಮಾಜಿ ಸಂಸದ ಪ್ರತಾಪ್‌ಸಿಂಹ ಸೇರಿದಂತೆ ಕೆಲ ನಾಯಕರು ಹತಾಶೆಯಿಂದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದರು. ಆಗಲೂ ಕೂಡ ತೇಪೆ ಹಚ್ಚಲಾಯಿತಾದರೂ ಬಿರುಕು ಮತ್ತೆ ಮೂಡಿತ್ತು. +ಇತ್ತೀಚಿಗೆ ಬಿಜೆಪಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಕಾಣಿಸಿಕೊಳ್ಳಲಿಲ್ಲ. ಬದಲಿಗೆ ನಾವು ಬಳ್ಳಾರಿವರೆಗೆ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇವೆ. ಹೈಕಮಾಂಡ್‌ ಒಪ್ಪಿಗೆಗಾಗಿ ಕಾಯುತ್ತಿದ್ದೇವೆ ಎಂದು ಘೋಷಿಸಿದ್ದರು. ಬಳಿಕ, ಬಸನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ಸಂಸದ ಪ್ರತಾಪ್‌ ಸಿಂಹ, ಕುಮಾರ್‌ಬಂಗಾರಪ್ಪ ಸೇರಿದಂತೆ ಇನ್ನಿತರೆ ಕೆಲ ನಾಯಕರು ನಡೆಸಿದ ಸಭೆ ಚರ್ಚೆಗೆ ಕಾರಣವಾಯಿತು. +ಇತ್ತೀಚಿಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಸಭಾ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದರು.ಇದರ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ದೆಹಲಿಗೆ ತೆರಳಿದ್ದು, ವರಿಷ್ಠರ ಜೊತೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಏನು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುವುದನ್ನು ಕಾದು ನೋಡಬೇಕು. \ No newline at end of file diff --git a/eesanje/url_46_22_10.txt b/eesanje/url_46_22_10.txt new file mode 100644 index 0000000000000000000000000000000000000000..c82ab2444e26b072ee356a3eccb99c34d204ba1a --- /dev/null +++ b/eesanje/url_46_22_10.txt @@ -0,0 +1,13 @@ +ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ + +ಬೆಂಗಳೂರು,ಸೆ.10– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ ಜಾರಿ ಮಾಡಿದೆ.ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ(ಚೀಫ್‌ ಸೂಪರಿಡೆೆಂಟ್‌), ಮುಖ್ಯ ಅಭಿಯಂತರ(ಚೀಫ್‌ ಇಂಜಿನಿಯರ್‌), ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ಅಧಿಕಾರಿಗಳು ನೋಟಿಸ್‌‍ ಜಾರಿ ಮಾಡಿದ್ದಾರೆ. +ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಆರೋಪ ಪ್ರಕರಣ ಕುರಿತಂತೆ ಕೇಳಿಬಂದಿರುವ ಆರೋಪಗಳಿಗೆ ದಾಖಲೆಗಳನ್ನು ಹಾಜರುಪಡಿಸುವಂತೆಯೂ ಸೂಚನೆ ನೀಡಲಾಗಿದೆ. +ಮೈಸೂರು ತಾಲೂಕಿನ ಹಿನಕಲ್‌ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಸೈಟ್‌ ಹಂಚಿಕೆ ಮಾಡಲಾಗಿತ್ತು. ಹಿನಕಲ್‌ ಸರ್ವೇ ನಂಬರ್‌ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪವಿದೆ. +ಆರೋಪಕ್ಕೆ ಸಂಬಂಧಿಸಿ ಆರ್‌ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. +ಮೈಸೂರು ತಾಲ್ಲೂಕು ಹಿನಕಲ್‌ ಗ್ರಾಮ ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಜಮೀನನ್ನು ಹಿನಕಲ್‌ ಮಂಡಲ ಪಂಚಾಯ್ತಿಯವರು ಆಶ್ರಯ ಯೋಜನೆಯಡಿ ಅನಧಿಕೃತ ಬಡಾವಣೆ ನಿರ್ಮಿಸಿ/ಉಳ್ಳವರಿಗೆ ರಾಜಕೀಯ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ವಂಚಿಸಿದ ಬಗ್ಗೆ 2017ರ ಏಪ್ರಿಲ 1ರಂದು ನಾನು ತಮ ಕಛೇರಿಗೆ ದೂರು ನೀಡಿದ್ದೆ. ಇದು ದೃಢಪಟ್ಟಿರುವುದರಿಂದ ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕಾಗಿ ಮನವಿ ಸಲ್ಲಿಸುತ್ತಿದ್ದೇನೆ ಎಂದು 2017ರಲ್ಲಿ ಗಂಗರಾಜು ಭ್ರಷ್ಟಾಚಾರ ನಿಗ್ರಹ ದಳದ ಮೈಸೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್‌‍ ವರಿಷ್ಠಾಧಿಕಾರಿಗಳಿಗೂ ಪತ್ರ ಬರೆದಿದ್ದರು. +ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಮುಡಾ ಪ್ರಾಧಿಕಾರದ ಸ್ವತ್ತಿನಲ್ಲಿ ಅಕ್ರಮವಾಗಿ ಮುಡಾ ಅನುಮತಿಯನ್ನು ಪಡೆಯದೇ ಬಡಾವಣೆಯನ್ನು ನಿರ್ಮಿಸಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಹಂಚಿಕೆ ಮಾಡುತ್ತೇವೆಂದು ಸದರಿ ಹಿನಕಲ್‌ ಮಂಡಲ ಪಂಚಾಯ್ತಿಯ ಅಧ್ಯಕ್ಷರು, ಕಾರ್ಯದರ್ಶಿಗಳು (ಪ್ರಧಾನರು) 1990-92ನೇ ಅವಧಿಯಲ್ಲಿ ಇದ್ದಂತಹ ಪಂಚಾಯ್ತಿಯ ಸರ್ವಸದಸ್ಯರು ಹಾಗೂ ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲಾ ಅಧಿಕಾರಿವರ್ಗದವರ ವಿರುದ್ದ ಕ್ರಮ ತೆಗೆದುಕೊಳ್ಳಲು ತಮ ಕಛೇರಿಗೆ ಮನವಿ ಸಲ್ಲಿಸಿದ್ದೆ. ಇದು ದೃಢವಾಗಿರುವುದರಿಂದ ಮುಡಾ ಪ್ರಾಧಿಕಾರವು ಈ ಮೇಲ್ಕಂಡ ಸ್ವತ್ತನ್ನು ಭೂ ಮಾಲೀಕರಿಂದ ಭೂಸ್ವಾಧೀನ ಮಾಡಿಕೊಳ್ಳುವ ಮುಂಚೆ ಯಾವ ಉದ್ದೇಶಕ್ಕೋಸ್ಕರ ಭೂಸ್ವಾಧೀನಕ್ಕೆ ಸರ್ಕಾರಕ್ಕೆ ನಿವೇದಿಸಿಕೊಂಡಿದ್ದರೊ ಆ ಉದ್ದೇಶವನ್ನು ಜನರಿಗೆ ಈಡೇರಿಸದೆ ವಂಚಿಸಿದೆ. +ಹೀಗೆ ವಂಚಿಸಿರುವ ಅಂದಿನ ಹಾಗೂ ಈ ವಿಷಯಕ್ಕೆ ಸಂಬಂಧಪಟ್ಟಂತೆ ಹಲವು ಬಾರಿ ಮುಡಾ ಪ್ರಾಧಿಕಾರಕ್ಕೂ ವಿನಂತಿಸಿಕೊಂಡಿದ್ದರೂ ಯಾವುದೇ ಕ್ರಮವಹಿಸದೆ ಕರ್ತವ್ಯ ಲೋಪ ಎಸಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದರು. +ಇದೇ ರೀತಿ ಮೈಸೂರು ನಗರದಲ್ಲಿ ಮೈಸೂರು ಜನರಿಗೋಸ್ಕರ ಬಡಾವಣೆ ನಿರ್ಮಿಸಿ ಹಾಗೂ ಉದ್ಯಾನವನ ಮತ್ತು ಇನ್ನಿತರ ಸಾರ್ವಜನಿಕರಿಗೋಸ್ಕರ ಸೌಲಭ್ಯ ನೀಡಲು ನೂರಾರು ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಂಡಿದ್ದು, ಆದರೆ ಯಾವ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದಾರೋ ಮಾಡದೆ ವಂಚಿಸಿರುವುದು ಸಾಬೀತಾಗಿರುತ್ತದೆ. ಆದ್ದರಿಂದ ಈ ಮುಡಾ ಕರ್ಮಕಾಂಡಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿ ಸರ್ವೆ ನಂಬರ್‌ 89ರಲ್ಲಿ ಒಟ್ಟು 11 ಎಕರೆ 18 ಗುಂಟೆಯನ್ನೂ ಸಹ ಅಕ್ರಮವಾಗಿ ಹಿನಕಲ್‌ ಮಂಡಲ ಪಂಚಾಯಿತಿಯ ಅಂದಿನ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ವಂಚಿಸಿರುತ್ತಾರೆ. +ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ಸ್ವಾಧೀನಪಡಿಸಿ ಕೊಂಡಿದ್ದಂತಹ ಸ್ವತ್ತಿನಲ್ಲಿ ಹಲವಾರು ಲ್ಯಾಂಡ್‌ ಮಾಫಿಯ ಹಾಗೂ ರಾಜಕೀಯ ಮುಖಂಡರು ಇಂತಹ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿ ಹಾಗೂ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡುತ್ತಿದ್ದರೂ ಸಹ ಸಂಬಂಧಪಟ್ಟ ಮುಡಾ ಅಧಿಕಾರಿಗಳು ಯಾವುದೇ ಕ್ರಮವಹಿಸುತ್ತಿಲ್ಲ ಹಾಗೂ ಈ ಅಕ್ರಮಕ್ಕೆ ಸದರಿ ಮುಡಾ ಅಧಿಕಾರಿಗಳೂ ಸಹ ಶಾಮಿಲಾಗಿರುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಈ ಮೇಲ್ಕಂಡ ಹೆಸರಿಸಿರುವ ಇರುವ ಸರ್ವೆ ನಂಬರ್‌ನಲ್ಲಿ 7 ಎಕರೆ 18 ಗುಂಟೆ ಸ್ವತ್ತೇ ಸಾಕ್ಷಿ ಎಂದು ಗಂಗರಾಜು ಪತ್ರದಲ್ಲಿ ಆರೋಪಿಸಿದ್ದರು.ಸಿಎಂ ವಿರುದ್ಧ ಪ್ರಾಸಿಕ್ಯೂಸನ್‌ಗೆ ಅನುಮತಿ +ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಮತ್ತು ಪ್ರದೀಪ್‌ ಮತ್ತು ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಮುಡಾ ನಿವೇಶನಗಳ ಅಕ್ರಮ ಮಂಜೂರಾತಿ ಪ್ರಕರಣ ಮೈಸೂರಿನಲ್ಲಿ ನಡೆದಿರುವ ಕಾರಣ, ಇದರ ವಿಚಾರಣೆಯ ದೂರು ಸಹ ಮೈಸೂರಿನಲ್ಲೇ ದಾಖಲಾಗಬೇಕು. +ಟಿ.ಜೆ.ಅಬ್ರಹಾಂ ಅವರ ಹಿಂದಿನ ಮನವಿಯ ನಂತರ ಜುಲೈ 26ರಂದು ಶೋಕಾಸ್‌‍ ನೋಟಿಸ್‌‍ ಜಾರಿಗೊಳಿಸಲು ರಾಜ್ಯಪಾಲರನ್ನು ಪ್ರೇರೇಪಿಸಿತ್ತು. ನೋಟಿಸ್‌‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಏಕೆ ಪ್ರಾಸಿಕ್ಯೂಷನ್‌ ಮಂಜೂರು ಮಾಡಬಾರದು ಎಂಬುದನ್ನು ವಿವರಿಸಿ ಆರೋಪಗಳಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿತ್ತು. \ No newline at end of file diff --git a/eesanje/url_46_22_11.txt b/eesanje/url_46_22_11.txt new file mode 100644 index 0000000000000000000000000000000000000000..c0e53828975890dc8ee426d11b5d28ce81a6d2d2 --- /dev/null +++ b/eesanje/url_46_22_11.txt @@ -0,0 +1,10 @@ +ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ವಿಜಯೇಂದ್ರ ದೆಹಲಿ ಭೇಟಿ +' +ಬೆಂಗಳೂರು,ಸೆ.10-ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನವದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಕೆರಳಿಸಿದೆ.ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಬಿ.ವೈ.ವಿಜಯೇಂದ್ರ ದೆಹಲಿಗೆ ವರಿಷ್ಠರ ಸೂಚನೆಯಂತೆ ಮಾತುಕತೆ ನಡೆಸಲು ಪ್ರಯಾಣ ಬೆಳೆಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. +ಮೇಲ್ನೋಟಕ್ಕೆ ದೆಹಲಿ ಪ್ರಯಾಣದಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಪಕ್ಷದ ಮೂಲಗಳು ಹೇಳಿವೆಯಾದರೂ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗೂ ವಿಜಯೇಂದ್ರ ದಿಢೀರ್‌ ದೆಹಲಿಗೆ ಪ್ರಯಾಣ ಬೆಳೆಸಿರುವುದಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತಿದೆ.ಒಂದು ಕಡೆ ಸಚಿವ ಎಂ.ಬಿ.ಪಾಟೀಲ್‌ ದೆಹಲಿಯಲ್ಲಿ ಬೀಡು ಬಿಟ್ಟಿರುವುದು, ಕಳೆದ ವಾರ ಸಚಿವರಾದ ಪರಮೇಶ್ವರ್‌, ಸತೀಶ್‌ ಜಾರಕಿಹೊಳಿ, ದೆಹಲಿಯಲ್ಲೇ ಎರಡು ದಿನ ವಾಸ್ತವ್ಯ ಹೂಡಿ ಎಐಸಿಸಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು. +ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ನಡೆಸುತ್ತಿದ್ದ ವಿಜಯೇಂದ್ರ ದಿಢೀರನೇ ಛಲವಾದಿ ನಾರಾಯಣಸ್ವಾಮಿ ಜೊತೆ ದೆಹಲಿಗೆ ತೆರಳಿರುವುದು ಬಿಜೆಪಿಯಲ್ಲಿ ಹಠಾತ್‌ ಬೆಳವಣಿಗೆ ಎಂದೇ ಹೇಳಲಾಗುತ್ತಿದೆ. +ಕಿತ್ತೂರು ಕರ್ನಾಟಕ ಭಾಗದ ಪ್ರಭಾವಿ ಸಚಿವರೊಬ್ಬರು ಕೆಲದಿನಗಳ ಹಿಂದೆ ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಜೊತೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.ಬೆಳಗಾವಿಯ ಮಾಜಿ ಸಚಿವರೊಬ್ಬರು ಮಹಾರಾಷ್ಟ್ರದ ಬಿಜೆಪಿ ಹಿರಿಯ ನಾಯಕರ ಜೊತೆ ಸತತ ಸಂಪರ್ಕದಲ್ಲಿದ್ದು ಅವರ ಸೂಚನೆ ಮೇರೆಗೆ ಪ್ರಮೋದ್‌ ಸಾವಂತ್‌ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದ ಎಂದು ತಿಳಿದುಬಂದಿದೆ. +ಕರ್ನಾಟಕ ರಾಜಕಾರಣದ ಬೆಳವಣಿಗೆಗಳ ಬಗ್ಗೆ ದೆಹಲಿ ಬಿಜೆಪಿ ನಾಯಕರು ನಿರಂತರವಾಗಿ ಕಣ್ಣಿಟ್ಟಿದ್ದಾರೆ. ಪ್ರತಿಯೊಂದು ಬೆಳವಣಿಗೆಗಳ ಬಗ್ಗೆ ಪ್ರತಿದಿನ ರಾಜ್ಯ ನಾಯಕರ ಜೊತೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.ಗುರುವಾರ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಯ ವಿಚಾರಣೆ ಅಂತಿಮ ಹಂತಕ್ಕೆ ತಲುಪಿದೆ. +ಸಿಎಂ ಪರ ವಾದ ಮಂಡಿಸಿರುತ್ತಿರುವ ಅಭಿಷೇಕ್‌ ಮನುಸಿಂಘ್ವಿ ಅವರ ವಾದ ಮುಗಿದ ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅಂದೇ ತೀರ್ಪನ್ನು ನೀಡಬಹುದು ಇಲ್ಲವೇ ಕಾಯ್ದಿರಿಸಬಹುದು. ಹೈಕೋರ್ಟ್‌ ನೀಡುವ ತೀರ್ಪು ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯವನ್ನು ತೀರ್ಮಾನಿಸಲಿದೆ ಎಂದು ಹೇಳಲಾಗುತ್ತಿದೆ. +ಒಂದು ವೇಳೆ ಹೈಕೋರ್ಟ್‌ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್‌ ಎತ್ತಿ ಹಿಡಿದರೆ ಸಿದ್ದರಾಮಯ್ಯನವರಿಗೆ ನೈತಿಕತೆ ಪ್ರಶ್ನೆ ಎದುರಾಗುತ್ತದೆ. ಆ ವೇಳೆ ರಾಜ್ಯ ರಾಜಕಾರಣದಲ್ಲಿ ಕೆಲವು ದಿಢೀರ್‌ ಬೆಳವಣಿಗೆಗಳು ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. +ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿಯೇ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ವಿಜಯೇಂದ್ರ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ದೆಹಲಿಗೆ ತೆರಳಿರಬಹುದೆಂದು ಬಿಜೆಪಿಯಲ್ಲಿ ಗುಸುಗುಸು ಹಬ್ಬಿದೆ. ಆದರೆ ಬಿಜೆಪಿ ನಾಯಕರು ಮಾತ್ರ ಇಂಥ ಸಾಧ್ಯಸಾಧ್ಯತೆಗಳನ್ನು ತಳ್ಳಿ ಹಾಕುತ್ತಿದ್ದು ಅಂತಹ ಯಾವುದೇ ಬೆಳವಣಿಗೆಗಳು ನಡೆಯುವುದಿಲ್ಲ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸುತ್ತಿದ್ದಾರೆ. \ No newline at end of file diff --git a/eesanje/url_46_22_12.txt b/eesanje/url_46_22_12.txt new file mode 100644 index 0000000000000000000000000000000000000000..8e29fed7ea4bc6da3c2f13b649998627841c3462 --- /dev/null +++ b/eesanje/url_46_22_12.txt @@ -0,0 +1,7 @@ +ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ + : +ಬೆಂಗಳೂರು,ಸೆ.9-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ. +ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್‌್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ. +ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ಡಿಸ್ಕ್, ಪೆನ್ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದರು. 2 ವಾರದಲ್ಲಿ ಡಿಜಿಟಲ್ ಸಾಕ್ಷ್ಯಗಳನ್ನು ಸಲ್ಲಿಸುವುದಾಗಿ ಕೋರ್ಟ್ಗೆ ಮಾಹಿತಿ ನೀಡಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗಳಿಗೆ ಮೂರು ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿತು. +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದರ್ಶನ್ ಸೇರಿದಂತೆ 17 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು. ಇಂದಿಗೆ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. +ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಈಗಾಗಲೇ 3 ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್, 12 ದಿನಗಳ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರನ್ನು ಬಳ್ಳಾರಿಜೈಲಿಗೆ ವರ್ಗಾವಣೆ ಮಾಡ \ No newline at end of file diff --git a/eesanje/url_46_22_2.txt b/eesanje/url_46_22_2.txt new file mode 100644 index 0000000000000000000000000000000000000000..b153c23cd7530508d9b61a70dbb51c6354e857fa --- /dev/null +++ b/eesanje/url_46_22_2.txt @@ -0,0 +1,7 @@ +ಸಿಎಂಗೆ ತಲೆನೋವಾಗಿ ಪರಿಣಮಿಸಿದ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ +ಬೆಂಗಳೂರು,ಸೆ.10-ಸರ್ಕಾರಿ ನೇಮಕಾತಿಗಳ ವಿಷಯದಲ್ಲಿ ಖಡಕ್‌ ಎಂದೇ ಹೆಸರುವಾಸಿಯಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇದೀಗ ರಾಜ್ಯ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ ವಿಷಯ ತಲೆನೋವಾಗಿ ಪರಿಣಮಿಸಿದೆ. +ರಾಜ್ಯದಲ್ಲಿ ಮುಖ್ಯ ಮಾಹಿತಿ ಹಕ್ಕು ಅಯುಕ್ತರು ಸೇರಿದಂತೆ ಹತ್ತು ಮಂದಿ ಮಾಹಿತಿ ಆಯುಕ್ತರ ಹುದ್ದೆಗಳಿದ್ದು,ಈ ಪೈಕಿ ಎಂಟು ಹುದ್ದೆಗಳು ಖಾಲಿಯಾಗಿವೆ. ಹೀಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲು ತಯಾರಿ ನಡೆಸಿದ ರಾಜ್ಯ ಸರ್ಕಾರ,ಈ ಸಂಬಂಧ ಅರ್ಜಿಗಳನ್ನು ಆಹ್ವಾನಿಸಿತ್ತು.ಹೀಗೆ ಸರ್ಕಾರ ಅರ್ಜಿ ಆಹ್ವಾನಿಸಿದ ಹಿನ್ನೆಲೆಯಲ್ಲಿ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ನಿವೃತ್ತ ಐಎಎಸ್,ಐಪಿಎಸ್ ಅಧಿಕಾರಿಗಳು,ಪತ್ರಕರ್ತರು ಸೇರಿದಂತೆ ಐನೂರಕ್ಕೂ ಹೆಚ್ಚು ಮಂದಿ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ. +ಮೂಲಗಳ ಪ್ರಕಾರ, ಇಂತಹ ಅರ್ಜಿಗಳನ್ನು ಪರಿಶೀಲಿಸಿ ಮಾಹಿತಿ ಹಕ್ಕು ಆಯಕ್ತರ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಹಲವು ದಿನಗಳ ಹಿಂದೆಯೇ ಪೂರ್ಣವಾಗಬೇಕಿತ್ತು. ಇಂತಹ ಅರ್ಜಿಗಳನ್ನು ಪರಿಶೀಲಿಸಿ ಅರ್ಹರನ್ನು ಈ ಹುದ್ದೆಗಳಿಗೆ ನೇಮಕ ಮಾಡುವ ಸಂಬಂಧ ಮುಖ್ಯಮಂತ್ರಿಗಳು ಸಂಬಂಧ ಪಟ್ಟ ಕಡತವನ್ನು ಪರಿಶೀಲಿಸಬೇಕಿತ್ತು. ಆದರೆ ಇದೀಗ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಪ್ರಭಾವ ಬೀರುತ್ತಿರುವವರನ್ನು ನೋಡಿ ಮುಖ್ಯಮಂತ್ರಿಗಳಿಗೆ ತಲೆನೋವು ಶುರುವಾಗಿದೆ. +ಮೂಲಗಳ ಪ್ರಕಾರ, ಈ ಹುದ್ದೆಗಳಿಗೆ ಇಂತವರನ್ನು ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್‌‍ ಉಸ್ತುವಾರಿ ವಹಿಸಿರುವ ರಣದೀಪ್‌ ಸಿಂಗ್‌ ಸುರ್ಜೇವಾಲ,ಹೈಕಮಾಂಡ್‌ ಮಟ್ಟದಲ್ಲಿ ಪ್ರಭಾವಿಯಾಗಿರುವ ನಾಯಕ ಟೈಟ್ಲರ್‌,ಸಾಹಿತ್ಯ ಲೋಕದ ಮೇರು ಪ್ರಶಸ್ತಿಯನ್ನು ಗಳಿಸಿದ ಸಾಹಿತಿಗಳು ಸೇರಿದಂತೆ ಹಲವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. +ಕುತೂಹಲದ ಸಂಗತಿ ಎಂದರೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿದ್ದಾಗ ಮಾತ್ರವಲ್ಲ,ಮೈಸೂರು ಸೇರಿದಂತೆ ವಿವಿಧ ಕಡೆ ಪ್ರವಾಸಗಳಿಗೆ ಹೋದರೂ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗೆ ಇಂತವರನ್ನು ನೇಮಕ ಮಾಡಿ ಎಂದು ಹೇಳಲು ಪ್ರಭಾವಿಗಳು ಮುಗಿಬೀಳುತ್ತಿದ್ದಾರೆ. +ಹೀಗೆ ಮಾಹಿತಿ ಹಕ್ಕು ಆಯುಕ್ತರ ಹುದ್ದೆಗಳಿಗೆ ಬರುತ್ತಿರುವ ಪ್ರಭಾವವನ್ನು ನೋಡಿ ತಲೆ ಬಿಸಿ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,ಸ್ವಲ್ಪ ದಿನ ಈ ಕಡತವನ್ನು ಕೊಡಲೇಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_22_3.txt b/eesanje/url_46_22_3.txt new file mode 100644 index 0000000000000000000000000000000000000000..ff9c38226fa6750237d7b6a37742a12d666be971 --- /dev/null +++ b/eesanje/url_46_22_3.txt @@ -0,0 +1,9 @@ +ಉಗ್ರ ಚಟುವಟಿಕೆ ನಿಯಂತ್ರಿಸಲು ಟಾಸ್ಕ್‌ಫೋರ್ಸ್‌ ರಚನೆಗೆ ಆರ್‌.ಅಶೋಕ್‌ ಆಗ್ರಹ +ಬೆಂಗಳೂರು,ಸೆ.10– ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌‍ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌‍ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ ಹಲವರು ಆಧಾರ್‌ ಕಾರ್ಡ್‌ ಪಡೆದು ಬೆಂಗಳೂರಿಗೆ ಬರುತ್ತಿದ್ದಾರೆ. +ಇದರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ. ರಾಜ್ಯ ಗೃಹ ಇಲಾಖೆ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಬೇಕು ಎಂದು ಆಗ್ರಹಿಸಿದರು.ರಾಜ್ಯಕ್ಕೆ ನುಸುಳುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಅವರನ್ನು ಹೊರಕ್ಕೆ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕಿದೆ. +ಇಲ್ಲವಾದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಸ್ಥಿತಿಯೇ ರಾಜ್ಯಕ್ಕೂ ಬರಲಿದೆ. ನಮ ರಾಜ್ಯದ ಜನರ ಬದುಕು ಭಯೋತ್ಪಾದಕರ ನಿಯಂತ್ರಣಕ್ಕೆ ಹೋಗಬಾರದು. ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಮಾಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು. +ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್‌‍ ಸಚಿವರು ನಿರಾಕರಿಸಿದ್ದರು. ಪದೇ ಪದೆ ಭಯೋತ್ಪಾದಕರಿಗೆ ಪ್ರೇರಣೆಯಾಗುವ ಹೇಳಿಕೆಗಳನ್ನು ಕಾಂಗ್ರೆಸ್‌‍ ನಾಯಕರು ನೀಡಿದ್ದಾರೆ. ಇದರಿಂದಾಗಿ ಭಯೋತ್ಪಾದನೆಗೆ ಕುಮಕ್ಕು ದೊರೆತಿದೆ. +ಕರ್ನಾಟಕದಲ್ಲೇ ಭಯೋತ್ಪಾದನೆ ಮಾಡಿದರೆ ಏನೂ ತೊಂದರೆ ಇಲ್ಲ ಎಂದು ಭಯೋತ್ಪಾದಕರಿಗೆ ಅನ್ನಿಸಿದೆ. ಇದಕ್ಕಾಗಿ ಇಲ್ಲಿ ಹೆಚ್ಚು ಉಗ್ರ ಚಟುವಟಿಕೆ ನಡೆಯುತ್ತಿದೆ ಎಂದು ದೂರಿದರು. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾದಾಗ, ಇದು ವ್ಯಾಪಾರ ವ್ಯಾಜ್ಯ ಎಂದು ಸಚಿವರು ಹೇಳಿದ್ದರು. +ಇದರಿಂದಾಗಿಯೇ ಭಯೋತ್ಪಾದನಾ ಚಟುವಟಿಕೆ ವ್ಯವಸ್ಥಿತವಾಗಿ ನಡೆಯುತ್ತಿದೆ. ರಾಮೇಶ್ವರಂ ಕೆಫೆ ಬದಲಾಗಿ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸಬೇಕೆಂದು ಯೋಜನೆ ರೂಪಿಸಲಾಗಿತ್ತು. ಈ ಪ್ರಕರಣದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಲು ಪ್ಲಾನ್‌ ಮಾಡಲಾಗಿತ್ತು ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್‌‍ ನಾಯಕರಿಗೆ ಹೆಚ್ಚಿನ ವಿಶ್ವಾಸವಿದೆ. ಅದಕ್ಕಾಗಿ ಸಿಎಂ ಕುರ್ಚಿಗೆ ಸ್ಪರ್ಧೆ ಹೆಚ್ಚಿದ್ದು, ಎಲ್ಲರೂ ಮುಖ್ಯಮಂತ್ರಿ ಆಗುತ್ತೇನೆಂದು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಅವರು ದೂರಿದರು. \ No newline at end of file diff --git a/eesanje/url_46_22_4.txt b/eesanje/url_46_22_4.txt new file mode 100644 index 0000000000000000000000000000000000000000..0a2adccdec760e5c838e0118d117aeb1b30f32cd --- /dev/null +++ b/eesanje/url_46_22_4.txt @@ -0,0 +1,6 @@ +ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದವರು ದಂಡ ಕಟ್ಟಲು ರೆಡಿಯಾಗಿ +ಬೆಂಗಳೂರು,ಸೆ.10-ನೀವು ಇನ್ನು ನಿಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿದ್ದರೆ ದಂಡ ಕಟ್ಟಲು ರೆಡಿಯಾಗಿ.ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಸೆ.15 ಕೊನೆ ದಿನವಾಗಿದ್ದು ಆ ನಂತರ ನಂಬರ್ ಪ್ಲೇಟ್ ಹಾಕಿಸಿಕೊಳ್ಳದವರಿಗೆ 500 ದಂಡ ವಿಧಿಸಲು ಆರ್ಟಿಒ ಹಾಗೂ ಟ್ರಾಫಿಕ್ ಪೊಲೀಸರು ತೀರ್ಮಾನಿಸಿದ್ದಾರೆ. +ಮುಂದಿನ ಸೋಮವಾರದಿಂದ ಆರ್ ಟಿಓ ಜೊತೆಗೆ ಟ್ರಾಫಿಕ್ ಪೊಲೀಸರು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳ ಪತ್ತೆಗೆ ವಿಶೇಷ ಕಾರ್ಯಚರಣೆ ಹಮಿಕೊಳ್ಳಲಿದ್ದಾರೆ.ಹೀಗಾಗಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳಲು ಇನ್ನು ಒಂದು ವಾರ ಸಮಯವಿದ್ದು ಅಷ್ಟರೊಳಗೆ ನಂಬರ್ ಪ್ಲೇಟ್ ಅಳವಡಿಸಿಕೊಂಡು ದಂಡ ಕಟ್ಟುವುದರಿಂದ ಪಾರಾಗಬಹುದಾಗಿದೆ. +ಈ ಹಿಂದೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಸರ್ಕಾರ ಮೂರು ಬಾರಿ ವಿಸ್ತರಣೆ ಮಾಡಿತ್ತು. ಇದರ ಜೊತೆಗೆ ನ್ಯಾಯಾಲಯ ಕೂಡ ಸೆ.15ರವರೆಗೆ ಸಮಯ ನೀಡಿತ್ತು.ಇದೀಗ ಅ ಗಡುವ ಮುಗಿಯಲು ಇನ್ನು ಒಂದು ವಾರ ಇರುವುದರಿಂದ ನಂಬರ್ ಪ್ಲೇಟ್ ಹಾಕಿಸಿಕೊಳ್ಳದಿರುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸರು ನಿರ್ಧರಿಸಿದ್ದಾರೆ. +ಅರ್ ಟಿ ಓ ಮಾಹಿತಿ ಪ್ರಕಾರ ನಗರದಲ್ಲಿ ಸದ್ಯ 51 ಲಕ್ಷ ವಾಹನ ವಾಹನ ಸವಾರರು ತಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಿಸಿಕೊಂಡಿದ್ದಾರೆ. ಉಳಿದ 1.49 ಕೋಟಿ ವಾಹನ ಮಾಲೀಕರು ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ವಂತೆ. +ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಮೊದಲ ಬಾರಿ 500 ರೂ ದಂಡ ನಂತರೂ ಎಚ್ಚೆತ್ತುಕೊಳ್ಳದಿದ್ದರೆ ಒಂದು ಸಾವಿರ ರೂ.ಗಳ ದಂಡ ವಿಧಿಸಲಾಗುವುದು ಎಂದು ಸಾರಿಗೆ ಆಯುಕ್ತ ಮಲ್ಲಿಕಾರ್ಜುನ ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_22_5.txt b/eesanje/url_46_22_5.txt new file mode 100644 index 0000000000000000000000000000000000000000..36c8db1338326e1add759a8e2412dcb84920135e --- /dev/null +++ b/eesanje/url_46_22_5.txt @@ -0,0 +1,6 @@ +ದರ್ಶನ್ ಚಾರ್ಜ್‌ಶೀಟ್ ಮಾಹಿತಿ ಪ್ರಸಾರಕ್ಕೆ ಹೈಕೋರ್ಟ್ ನಿರ್ಬಂಧ + +ಬೆಂಗಳೂರು,ಸೆ.10-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಕುರಿತಂತೆ ಆರೋಪ ಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶ ನೀಡಿದೆ. +ದೋಷಾರೋಪಣ ಪಟ್ಟಿಯಲ್ಲಿರುವ ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಬೇಕೆಂದು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ್ಗೌಡರ್ ರವರು ಇದ್ದ ಪೀಠ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಆದೇಶಿಸಿದ್ದಾರೆ. +ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು 3,992 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.ದೋಷಾರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡಬಾರದು, ಆರೋಪಪಟ್ಟಿಯಲ್ಲಿರುವ ಮಾಹಿತಿ ಸೋರಿಕೆ ಮಾಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ನಿನ್ನೆ ಹೈಕೋರ್ಟ್ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. +ಅರ್ಜಿಯನ್ನು ಸ್ವೀಕರಿಸಿದ್ದ ನ್ಯಾಯಾಲಯ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳು ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿ ಆದೇಶ ನೀಡಿದ್ದಾರೆ. \ No newline at end of file diff --git a/eesanje/url_46_22_6.txt b/eesanje/url_46_22_6.txt new file mode 100644 index 0000000000000000000000000000000000000000..465cb3035b0bdf98c545814bd2c7c26589595e8f --- /dev/null +++ b/eesanje/url_46_22_6.txt @@ -0,0 +1,12 @@ +ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು, ಚಾರ್ಜ್‌ಶೀಟ್‌ನಲ್ಲಿ ಬಹಿರಂಗ, ಭದ್ರತೆ ಹೆಚ್ಚಳ + : +ಬೆಂಗಳೂರು,ಸೆ.10-ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೊಂಡಿದ್ದು, ಚಾರ್ಜ್ಶೀಟ್ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. +ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿರುವ ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು.ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ವಕೀಲರಿಗೂ ಚಾರ್ಜ್ಶೀಟ್ ನೀಡಲಾಗುತ್ತದೆ. +ಚಾರ್ಜ್ಶೀಟ್ ಗೌಪ್ಯ ದಾಖಲಾತಿ ಏನೂ ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ಶೀಟ್ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡೋಣ ಎಂದು ಹೇಳಿದರು. +ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದರು. +ಮುಖ್ಯಮಂತ್ರಿ ಬದಲಾವಣೆ ಹೇಳಿಕೆಗೆ ಕಡಿವಾಣ ಹಾಕಲು ಹೈಕಮಾಂಡ್ಗೆ ಪತ್ರ ಬರೆದಿರುವ ಕುರಿತು ಮಾತನಾಡಿ, ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ ಎಂಬ ವಿಚಾರವನ್ನು ನಾನು ಸಹ ಹೇಳಿದ್ದೇನೆ. ಮಾಧ್ಯಮದವರು ಮುಖ್ಯಮಂತ್ರಿಯಾಗುತ್ತೀರ ಎಂದು ಕೇಳಿದಾಗ, ನಾವು ಬೇಡ ಎಂದು ಏಕೆ ಹೇಳಬೇಕು ಎಂದು ನನಗೆ ಆ ಸ್ನೇಹಿತರು ಹೇಳಿದ್ದಾರೆ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದು ಹೇಳಿದರು. +ಸಚಿವ ಎಂ.ಬಿ.ಪಾಟೀಲ್ ಅವರು ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಸಹ ಗೃಹ ಇಲಾಖೆಗೆ ಸಂಬಂಧಿಸಿದ ಕೆಲಸ ಇದ್ದರೆ ದೆಹಲಿಗೆ ಹೋಗುತ್ತೇನೆ. ಹೋದಾಕ್ಷಣ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಮಾಡಲು ಹೋಗಿದ್ದರು ಅಂತ ಹೇಳಿ ಬಿಟ್ಟರೆ ಹೇಗೆ? ಈ ಬಗ್ಗೆ ಚರ್ಚೆಯೇ ಅನಗತ್ಯ ಎಂದರು. +ಬಿಜೆಪಿ ಕಚೇರಿಗೆ ಭದ್ರತೆ ಹೆಚ್ಚಳ :ಸುರಕ್ಷತೆಯ ದೃಷ್ಟಿಯಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.ಮಲ್ಲೇಶ್ವರ ಬಿಜೆಪಿ ಕಚೇರಿ ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರವು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಚಾರ್ಜ್ಶೀಟ್ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬಿಜೆಪಿ ಕಚೇರಿ ಎದುರು ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ. +ಮೆಟಲ್ ಡಿಟೆಕ್ಟರ್ ಮೂಲಕವೇ ಬಿಜೆಪಿ ಕಚೇರಿಗೆ ಬರುವವರ ಒಳ ಪ್ರವೇಶ ಕಡ್ಡಾಯ ಮಾಡಲಾಗಿದೆ. ಇದರ ಜತೆಗೆ ಪ್ರವೇಶ ದ್ವಾರದ ಎದುರು 3-4 ಜನ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್‌್ಸಪೆಕ್ಟರ್ಗಳು ಬಿಜೆಪಿ ಕಚೇರಿಗೆ ನಿತ್ಯ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. +ಹೆಚ್ಚಿನ ಭದ್ರತೆಗೆ ಕಾರಣ:ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವ ಸಂಚನ್ನು ಐಸಿಸ್ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಎನ್ಐಎ ತನಿಖೆಯಲ್ಲಿ ಬಯಲಾಗಿತ್ತು. +ಬ್ರೂಕ್ಫೀಲ್ಡ್ ನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿದ್, ಅಬ್ದುಲ್ ಮತೀನ್ ತಾಹ, ಮಾಜ್ ಮುನೀರ್ ಅಹಮದ್, ಮುಜಾಮಿಲ್ ಷರೀಫ್ ವಿರುದ್ಧ ಎನ್ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_22_7.txt b/eesanje/url_46_22_7.txt new file mode 100644 index 0000000000000000000000000000000000000000..a91604d150fff8948875ff5db0c66c9fb0934542 --- /dev/null +++ b/eesanje/url_46_22_7.txt @@ -0,0 +1,9 @@ +ಕರ್ನಾಟಕದಲ್ಲಿ ವ್ಯಾಪಾರಕ್ಕೆ ಮುಕ್ತ ಅವಕಾಶ : ಸದುಪಯೋಗಪಡಿಸಿಕೊಳ್ಳುವಂತೆ ಉದ್ಯಮಿಗಳಿಗೆ ಸಿಎಂ ಕರೆ + +ಬೆಂಗಳೂರು,ಸೆ.10-ಕರ್ನಾಟಕ ರಾಜ್ಯ ವ್ಯಾಪಾರ ವ್ಯವಹಾರಗಳಿಗೆ ಮುಕ್ತವಾಗಿದ್ದು, ಇಲ್ಲಿನ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಿಗಳಿಗೆ ಕರೆ ನೀಡಿದ್ದಾರೆ.ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಅಮೆರಿಕ ಮತ್ತು ಭಾರತದ ವ್ಯವಹಾರಿಕ ಪರಿಷತ್ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನ, ವೈಮಾನಿಕ ಹಾಗೂ ಬಾಹ್ಯಾಕಾಶ ಸೇರಿಂದತೆ ಹಲವು ಕ್ಷೇತ್ರಗಳಲ್ಲಿನ ಜಾಗತಿಕ ಸವಾಲುಗಳನ್ನು ಎದುರಿಸಲು ಸಹಕಾರ ನೀಡುವಂತೆ ಸಲಹೆ ನೀಡಿದ್ದಾರೆ. +ಭಾರತ ಮತ್ತು ಅಮೆರಿಕ ಒಟ್ಟಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕಬೇಕು. ಅಮೆರಿಕದೊಂದಿಗೆ ಕರ್ನಾಟಕ ಸದೃಢ ಮತ್ತು ಕ್ರಿಯಾತಕ ಪಾಲುದಾರಿಕೆಯನ್ನು ಹೊಂದಿದೆ. ಇಂದಿನ ಸಭೆಯಲ್ಲಿ ವ್ಯವಹಾರಿಕ ಅವಕಾಶಗಳನ್ನಷ್ಟೇ ಚರ್ಚೆ ಮಾಡುತ್ತಿಲ್ಲ, ಹಿಂದಿಗಿಂತಲೂ ಹೆಚ್ಚಿನ ಸಂಪರ್ಕ ಹಾಗೂ ಭವಿಷ್ಯದಲ್ಲಿ ಸಮೃದ್ಧಿಯಾಗಿ ನೀಲನಕ್ಷೆಯನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ. +ದೃಢವಾದ ವ್ಯವಹಾರಗಳನ್ನು ಘೋಷಿಸುವ ಬದ್ಧತೆ ಅಚಲವಾಗಿದೆ. ಅಭಿವೃದ್ಧಿ ಮತ್ತು ಯಶಸ್ಸಿಗೆ ಪೂರಕ ವಾತಾವರಣ ನಿರ್ಮಿಸಲು ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.ಕರ್ನಾಟಕ ವೈವಿಧ್ಯ ಸಂಪನೂಲಗಳ ನಾಡು. ಕೌಶಲ್ಯಭರಿತ ಕಾರ್ಯಪಡೆಗಳಿಂದ ಹಿಡಿದು ನೈಸರ್ಗಿಕ ಸಂಪತ್ತಿನವರೆಗೂ ವೇಗವಾಗಿ ದೊರೆಯುತ್ತಿರುವ ನವೋದ್ಯಮಗಳಿಂದ ಹಿಡಿದು ಸದೃಢ ಉತ್ಪಾದನಾ ತಳಪಾಯದವರೆಗೂ ಎಲ್ಲಾ ಸಾಧ್ಯಗಳೂ ಇಲ್ಲಿವೆ. +ಜಗತ್ತಿನ ಐಟಿಬಿಟಿ, ಬಯೋಟೆಕ್ನಾಲಜಿ ಉದ್ಯಮಗಳಿಗೆ ಹಾಗೂ ನವೋದ್ಯಮಗಳಿಗೆ ಕರ್ನಾಟಕ ತವರೂರಾಗಿದೆ. ನಾವೀನ್ಯತೆ, ಸುಲಭ ವ್ಯವಹಾರಿಕ ಅವಕಾಶಗಳು, ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ನೀತಿಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. +ಕರ್ನಾಟಕ ಅಪಾರ ಅವಕಾಶಗಳನ್ನು ಒದಗಿಸುವ ರಾಜ್ಯಗಳಾಗಿದ್ದು, ನಮ ಜನ ಹಾಗೂ ಜಾಗತಿಕ ಸಮುದಾಯದ ಭವಿಷ್ಯಕ್ಕಾಗಿ ಇಲ್ಲಿನ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ವಾತಾವರಣವನ್ನು ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ. +ಸಮೃದ್ಧಿ, ಪಾಲುದಾರಿಕೆ ಮತ್ತು ಪ್ರಗತಿಯ ಭವಿಷ್ಯದತ್ತ ಒಟ್ಟಾಗಿ ಹೆಜ್ಜೆ ಇಡುವ ಜೊತೆಗೆ ಇಂದಿನ ಚರ್ಚೆ ಭವಿಷ್ಯದ ಪಾಲುದಾರಿಕೆಯನ್ನು ಮತ್ತಷ್ಟು ಸದೃಢಗೊಳಿಸಲಿದೆ. ಅಮೆರಿಕ ಮತ್ತು ಕರ್ನಾಟಕದ ನಡುವೆ ಪರಸ್ಪರ ಲಾಭದಾಯಕ ಫಲಿತಾಂಶಗಳು ಸಂಭವಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_22_8.txt b/eesanje/url_46_22_8.txt new file mode 100644 index 0000000000000000000000000000000000000000..20df20459bab2c7bfc6e88628709daaa51a400dd --- /dev/null +++ b/eesanje/url_46_22_8.txt @@ -0,0 +1,15 @@ +ವಾಲ್ಮೀಕಿ ಹಗರಣ ಚಾರ್ಜ್ ಶೀಟ್ ಸಲ್ಲಿಕೆ, ಮಾಜಿ ಸಚಿವ ನಾಗೇಂದ್ರ ಕಿಂಗ್ ಪಿನ್ + , +ಬೆಂಗಳೂರು,ಸೆ.10-ರಾಜ್ಯ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿದ ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಪ್ರಮುಖ ಕಿಂಗ್ಪಿನ್ ಮಾಜಿ ಸಚಿವ ಬಿ.ನಾಗೇಂದ್ರ ಎಂಬುದು ದೋಷಾರೋಪ ಪಟ್ಟಿ(ಜಾರ್ಜ್ಶೀಟ್)ಯಲ್ಲಿ ಉಲ್ಲೇಖವಾಗಿದೆ. +ಪ್ರಕರಣದ ತನಿಖೆ ನಡೆಸಿರು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ವಿಶೇಷವೆಂದರೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಶಿವಮೊಗ್ಗ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಜಾರ್ಜ್ಶೀಟ್ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಹೆಸರನ್ನು ಉಲ್ಲೇಖ ಮಾಡದೆ ಕೇವಲ ಅಧಿಕಾರಿಗಳ ಪಾತ್ರ ಕುರಿತು ಉಲ್ಲೇಖ ಮಾಡಿತ್ತು. +ಇದಕ್ಕೆ ತದ್ವಿರುದ್ಧವಾಗಿ ಇ.ಡಿ ಮಾಜಿ ಸಚಿವ ಬಿ.ನಾಗೇಂದ್ರ, ಸತ್ಯನಾರಾಯಣ ವರ್ಮ ಅವರುಗಳೇ ಈ ಪ್ರಕರಣದ ಪ್ರಮುಖ ರೂವಾರಿಗಳೆಂಬುದನ್ನು ಪತ್ತೆ ಮಾಡಿದೆ.ಹೈದರಾಬಾದ್ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ 187 ಕೋಟಿ ರೂ. ಹಗರಣ ನಡೆದಿದೆ. +21 ಕೋಟಿ ರೂ.ಗಳನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಹಣ ವರ್ಗಾವಣೆ ನಡೆದಿದೆ ಎಂದು ಚಾರ್ಜ್ಶೀಟ್ನಲ್ಲಿ ಜಾರಿನಿರ್ದೇಶನಾಲಯ ಉಲ್ಲೇಖಿಸಿದೆ. ನಾಗೇಂದ್ರ ಅವರ ಸೂಚನೆಯಂತೆಯೇ ಅಕೌಂಟ್ ಓಪನ್ ಮಾಡಲಾಗಿದೆ ಎಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ್ ಹೇಳಿಕೆ ಕೊಟ್ಟಿದ್ದಾರೆ. +ಶಾಂಗ್ರಿಲಾ ಹೋಟೆಲ್ನಲ್ಲಿನ ನಡೆದ ಸಭೆಯಲ್ಲಿ ನಾಗೇಂದ್ರ ಬಂದು-ಹೋಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಇದಿಷ್ಟೇ ಅಲ್ಲ, ಶಾಂಗ್ರಿಲಾ ಹೋಟೆಲ್ನಲ್ಲಿ ಮಹಜರು ಪ್ರಕ್ರಿಯೆ ವೇಳೆ ಅನೇಕ ಸಾಕ್ಷಿಗಳು ದೊರೆತಿವೆ. +ನಾಗೇಂದ್ರ, ಪಿಎ ದೇವೇಂದ್ರಪ್ಪ, ನೆಕ್ಕಂಟಿ ನಾಗರಾಜ್, ನಾಗೇಶ್ವರ್ ರಾವ್ ಸಭೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ನಾಗೇಂದ್ರ ಸೂಚನೆಯಂತೆಯೇ ಹಗರಣದಲ್ಲಿ ಭಾಗಿ ಎಂದು ಆರೋಪಿಗಳು ಹೇಳಿಕೆಕೊಟ್ಟಿದ್ದಾರೆ. ಹಾಗೇ ಮೃತ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ನಲ್ಲಿ ಸಚಿವ ಎಂಬುದು ಉಲ್ಲೇಖವಾಗಿದೆ. +ನಾಗೇಂದ್ರ ಆಪ್ತ ಹರೀಶ್ಗೆ ಪದನಾಭ್ 25 ಲಕ್ಷ ರೂ. ನೀಡಿರುವುದು ಕೂಡ ಬಯಲಾಗಿದೆ. ಹರೀಶ್ ವಿಚಾರಣೆಯಲ್ಲಿ ನಾಗೇಂದ್ರ ಸೂಚನೆಯಂತೆ ಹಣ ಪಡೆದಿರೋ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಇಡಿ ದಾಳಿಯಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಅನೇಕ ದಾಖಲೆಗಳು ಸಿಕ್ಕಿವೆ. +ನಾಗೇಂದ್ರ-ದದ್ದಲ್ ಹೆಸರು ಇರಲಿಲ್ಲ:ವಾಲೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಪೊಲೀಸರು 12 ಆರೋಪಿಗಳ ವಿರುದ್ಧ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಆಗಸ್ಟ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದರು. ಈ ದೋಷಾರೋಪಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ , ಬಸನಗೌಡ ದದ್ದಲ್ ಅವರ ಹೆಸರನ್ನು ಉಲ್ಲೇಖಿಸಿರಲಿಲ್ಲ. +ಸತ್ಯಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲೀಕಿ ನಿಗಮ ಎಂಡಿ ಪದನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. +ಏನಿದು ಹಗರಣ?:ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಎಂಜಿರಸ್ತೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. +ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಸೇರಿದಂತೆ ಅನೇಕರನ್ನು ಎಸ್ಐಟಿ ಬಂಧಿಸಿ ವಿಚಾರಣೆ ನಡೆಸಿತ್ತು.ನಿಗಮದ ಅಧಿಕಾರಿಗಳ ಪ್ರಕಾರ, ಈ ವಿಚಾರ ಅವರಿಗೆ ಗೊತ್ತಿಲ್ಲವಂತೆ. ಆದರೆ ಆರ್ಥಿಕ ವರ್ಷದ ಕೊನೆದ ದಿನವಾದ ಮಾರ್ಚ್ 31 ರಂದು ವಾಲೀಕಿ ನಿಗಮದ ಆಡಳಿತ ಮಂಡಳಿ ಸಭೆ (ಬೋರ್ಡ್ ಮೀಟಿಂಗ್) ನಡೆಸಿ187.33 ಕೋಟಿ ರೂ.ಗಳ ಪೈಕಿ 50 ಕೋಟಿ ರೂ.ಗಳನ್ನು 13 ತಿಂಗಳ ಅವಧಿಗೆ ಠೇವಣಿ ಇಡುವ ಠರಾವು ಮಾಡಲಾಯಿತು. +ಆ ಠೇವಣಿ ಮೊತ್ತದ ಗ್ಯಾರಂಟಿ ಆಧಾರದ ಮೇಲೆ 45 ಕೋಟಿ ರೂ.ಗಳನ್ನು ಅದೇ ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಅದೇ ದಿನ 9 ಫಲಾನುಭವಿಗಳು ಹೈದರಾಬಾದ್ನ ರತ್ನಾಕರ ಬ್ಯಾಂಕ್ನಲ್ಲಿ ಖಾತೆ ತೆರೆದರು. ಹೆಸರಿಗೆ 9 ಖಾತೆಗಳನ್ನು ತೆರೆದದ್ದು ದೇಶದ ಪ್ರತಿಷ್ಠಿತ ಕಂಪನಿಗಳೇ ಆದರೂ ವಾಸ್ತವವಾಗಿ ಆ ಕಂಪನಿಗಳ ಹೆಸರಲ್ಲಿ ನಕಲಿ ವ್ಯಕ್ತಿಗಳು ಖಾತೆ ತೆರೆದಿದ್ದರೆಂಬ ಆರೋಪವಿದೆ. +ಯಾರಿಗೆ ಎಷ್ಟು ವರ್ಗಾವಣೆ?:ಸಿಸ್ಟಮ್ ಸರ್ವಿಸ್ ಕಂಪನಿ: 4.55 ಕೋಟಿರಾಮ್ ಎಂಟರ್ಪ್ರೈಸಸ್: 5.05 ಕೋಟಿಸ್ಕಿಲ್ ಮ್ಯಾಪ್ ಟ್ರೈನಿಂಗ್ ಸರ್ವಿಸಸ್: 4.84 ಕೋಟಿಸ್ಯಾಪ್ ಡಿಸೈನ್ ಪ್ರೈ.ಲಿ: 5.15 ಕೋಟಿಜಿ ಎನ್ ಇಂಡಸ್ಟ್ರೀಸ್: 4.42 ಕೋಟಿನೋವೆಲ್ ಸೆಕ್ಯೂರಿಟಿ ಸರ್ವಿಸಸ್: 4.56 ಕೋಟಿಸುಜಲ್ ಎಂಟರ್ಪ್ರೈಸಸ್: 5.63 ಕೋಟಿಗ್ರ್ಯಾಬ್ ಎ ಗ್ರಬ್ ಕಂಪನಿ: 5.88 ಕೋಟಿಅಕಾರ್ಡ್ ಬ್ಯುಸಿನೆಸ್ ಸರ್ವಿಸಸ್: 5.46 ಕೋಟಿಹ್ಯಾಪಿಯೆಸ್ಟ್ ಮೈಂಡ್‌್ಸ ಟೆಕ್ನಾಲಜಿ: 4.53 ಕೋಟಿಮನ್ಹು ಎಂಟರ್ಪ್ರೈಸಸ್: 5.10 ಕೋಟಿ \ No newline at end of file diff --git a/eesanje/url_46_22_9.txt b/eesanje/url_46_22_9.txt new file mode 100644 index 0000000000000000000000000000000000000000..f14d4e4692e4c4e9724404a1e320bf299d991178 --- /dev/null +++ b/eesanje/url_46_22_9.txt @@ -0,0 +1,7 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇನ್ನಿಲ್ಲದ ಪ್ರಯತ್ನ ಮಾಡಿದ್ದ ದರ್ಶನ್‌ ಗ್ಯಾಂಗ್‌ + +ಬೆಂಗಳೂರು,ಸೆ.10-ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ದರ್ಶನ್‌ ಗ್ಯಾಂಗ್‌ ಇನ್ನಿಲ್ಲದ ಪ್ರಯತ್ನ ಮಾಡಿರುವುದು ಆರೋಪಿಗಳ ಹೇಳಿಕೆಗಳಿಂದ ತಿಳಿದುಬಂದಿದೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸುಮನಹಳ್ಳಿ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಪತ್ತೆಯಾದ ನಂತರ ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದರು. +ಈ ವಿಷಯ ಪವಿತ್ರಾ ಗೌಡಗೆ ದರ್ಶನ್‌ ಗ್ಯಾಂಗ್‌ನಿಂದ ಗೊತ್ತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತನ್ನ ಗೆಳತಿಯ ಪತಿ ಅಸಿಸ್ಟೆಂಟ್‌ ಪ್ರೊಫೆಸರ್‌ ಆಗಿರುವುದು ತಿಳಿದು ಗೆಳತಿಯನ್ನು ಕಾಫಿಗಾಗಿ ಹೋಟೆಲ್‌ಗೆ ಕರೆಸಿಕೊಂಡಿದ್ದಾಳೆ. ನಂತರ ಆಕೆಯ ಮನೆಗೆ ಹೋಗಿ ಗೆಳತಿಯ ಪತಿಯಿಂದ ರೇಣುಕಾಸ್ವಾಮಿ ಮೃತದೇಹದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾಳೆ. +ನಮ ಸಂಬಂಧಿಯೊಬ್ಬರು ನಾಪತ್ತೆಯಾಗಿದ್ದಾರೆ. ಅವರ ಮೃತದೇಹ ಸುಮನಹಳ್ಳಿ ರಾಜಕಾಲುವೆಯಲ್ಲಿ ಪತ್ತೆಯಾಗಿದೆ. ಆ ಬಗ್ಗೆ ನಿಮ ಪತಿಯಿಂದ ವಿಷಯ ತಿಳಿದುಕೊ ಎಂದು ಗೆಳತಿಗೆ ಪವಿತ್ರ ಹೇಳಿದ್ದಾಳೆ.ಆ ಬಳಿಕ ಗೆಳತಿ ತನ್ನ ಪತಿಯೊಂದಿಗೆ ಈ ಕುರಿತು ಮಾತನಾಡಿದ್ದು, ಈಕೆಯ ಕೋರಿಕೆಯಂತೆ ಅವರು ರೇಣುಕಾಸ್ವಾಮಿಯ ಫೋಟೋಗಳನ್ನು ಕಳುಹಿಸಿದಾಗ, ಆ ಫೋಟೋಗಳನ್ನು ಪವಿತ್ರಾಗೆ ತೋರಿಸಿದ್ದಾರೆ. +ತದನಂತರ ಈ ವಿಷಯವನ್ನು ಪವಿತ್ರಾ ಅಂದು ರಾತ್ರಿ ದರ್ಶನ್‌ಗೆ ಕರೆ ಮಾಡಿ ಇದರ ಬಗ್ಗೆ ತಿಳಿಸಿದ್ದಾಳೆ. ಮತ್ತೆ ದರ್ಶನ್‌ ಕರೆ ಮಾಡುತ್ತಿದ್ದಂತೆ ಪವಿತ್ರಾ ಗಾಬರಿಯಾಗಿ ಮನೆಗೆ ಹೋಗಿದ್ದಾಳೆ.ಕೆಲ ಸಮಯದ ಬಳಿಕ ಪವಿತ್ರಾಳ ಗೆಳತಿಗೆ ಸ್ಟೋಟಿಬ್ರೋಕ್‌ ಮಾಲೀಕ ವಿನಯ್‌ ಕರೆ ಮಾಡಿ, ಸುಮನಹಳ್ಳಿ ರಾಜಕಾಲುವೆಯಲ್ಲಿ ಪತ್ತೆಯಾದ ಶವದ ಮರಣೋತ್ತರ ಪರೀಕ್ಷೆ ವೇಳೆ ನಿಮ ಪತಿಗೆ ಹೇಳಿ ನಮಗೆ ಸಹಾಯ ಮಾಡುವಂತೆ ಕೇಳಿದಾಗ, ಅದು ಸಾಧ್ಯವಿಲ್ಲ ಎಂದು ಪವಿತ್ರಾ ಗೆಳತಿ ಗಾಬರಿಯಾಗಿ ತಕ್ಷಣ ಫೋನ್ ಸ್ಥಗಿತಗೊಳಿಸಿದ್ದಾರೆ. +ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬಂದು ಹಲ್ಲೆ ಮಾಡಿ ನಂತರ ರಾಜಕಾಲುವೆಗೆ ಬಿಸಾಡಿದ್ದರು. ಹಣಕಾಸು ವಿಚಾರವಾಗಿ ನಾವೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡು ನಾಲ್ಕು ಮಂದಿಗೆ ಶರಣಾಗುವಂತೆ ಹೇಳಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು. ಆದರೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈ ಪ್ರಕರಣವನ್ನು ಚಾಣಾಕ್ಷತನದಿಂದ ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. \ No newline at end of file diff --git a/eesanje/url_46_230_1.txt b/eesanje/url_46_230_1.txt new file mode 100644 index 0000000000000000000000000000000000000000..2b185cb52a23c2c889d91191f2bb7eaa71552d4f --- /dev/null +++ b/eesanje/url_46_230_1.txt @@ -0,0 +1,6 @@ +“ನಾನೂ ಶೂದ್ರ-ನೀವೂ ಶೂದ್ರರು ಯಾಕ್ರೀ ಇದೆಲ್ಲಾ..” +ಬೆಂಗಳೂರು,ಫೆ.21- ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು. ವಿಧಾನಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ , ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್‍ರವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು. +ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು. ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತು ಮುಂದುವರೆಸಿದರು. +ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್ +ಈ ವೇಳೆ ಮುಖ್ಯಮಂತ್ರಿಗಳು, ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು ಜೆಡಿಎಸ್ ಅಲ್ಲ ಈಗ ಜೆಡಿಸಿ ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಅ ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು. +ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರವಿಕುಮಾರ್ ಅವರೇ ಆರ್‍ಎಸ್‍ಎಸ್ ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ ಎಂದು ಹೇಳಿದರು. \ No newline at end of file diff --git a/eesanje/url_46_230_10.txt b/eesanje/url_46_230_10.txt new file mode 100644 index 0000000000000000000000000000000000000000..b4b70ab334578dc9239378f7f7de252b69765a55 --- /dev/null +++ b/eesanje/url_46_230_10.txt @@ -0,0 +1,7 @@ +ದುಬಾರಿ ಬೆಲೆಗೆ ನೀರು ಮಾರಿದರೆ ಟ್ಯಾಂಕರ್ ಪರವಾನಗಿ ರದ್ದು +ಬೆಂಗಳೂರು,ಫೆ.20- ಹೆಚ್ಚಿನ ಬೆಲೆಗೆ ನೀರು ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ನೀರಿನ ಟ್ಯಾಂಕರ್ ಪರವಾನಿಗಿ ರದ್ದುಗೊಳಿಸುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ. ನಗರದ ಕೆಲ ಪ್ರದೇಶಗಳಲ್ಲಿ ಉದ್ಬವಿಸಿರುವ ಕುಡಿಯುವ ನೀರಿನ ಅಭಾವವನ್ನು ಮನಗಂಡಿರುವ ಕೆಲ ನೀರಿನ ಟ್ಯಾಂಕರ್‍ಗಳ ಮಾಲೀಕರು ಬೆಲೆ ಹೆಚ್ಚಳ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‍ಗಿರಿನಾಥ್ ಅವರು ಈ ಆದೇಶ ಹೊರಡಿಸಿದ್ದಾರೆ. +ಇನ್ನು ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ ಬೆಂಗಳೂರು ಮಹಾನಗರಿಯಲ್ಲಿ ನೀರಿನ ಅಭಾವ ತಲೆದೋರಿದ್ದು, ಇಂದಿರಾನಗರ, ರಾಜಾಜಿನಗರ, ಸುಂಕದಕಟ್ಟೆ, ಸಿದ್ದಾರ್ಥ ನಗರ ಸೇರಿದಂತೆ ಹಲವು ಕಡೆ ನೀರು ಲಭ್ಯತೆ ಕಡಿಮೆಯಾಗಿದೆ. ಹೀಗಾಗಿ ಈ ಭಾಗಗಳಲ್ಲಿ ಟ್ಯಾಂಕರ್‍ನಲ್ಲಿ ನೀರು ಪೂರೈಕೆದಾರರು ನೀರಿನ ಟ್ಯಾಂಕ್ ಒಂದಕ್ಕೆ ಇದ್ದ ಬೆಲೆಯನ್ನು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದಾರೆ. 600 ರೂ. ಇದ್ದ ಟ್ಯಾಂಕರ್ ನೀರಿನ ದರ 1000-1200 ರುಪಾಯಿ ಗೆ ಮಾರಾಟ ಮಾಡಲಾಗುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. +ಈ ಅಕ್ರಮದ ವಿರುದ್ಧ ಕ್ರಮ ಜರುಗಿಸಲು ಹೆಚ್ಚಿನ ದರ ವಸೂಲಿ ಮಾಡುವ ಟ್ಯಾಂಕರ್ ಗಳ ಟ್ರೇಡ್ ಲೈಸೆನ್ಸನ್ನು ರದ್ದುಗೊಳಿಸಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಈಗಾಗಲೇ ಎಲ್ಲಾ ವಲಯಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದು, ಹೆಚ್ಚಿನ ದರ ಪಡೆಯುವ ನೀರಿನ ಟ್ಯಾಂಕರ್‍ಗಳ ಮೇಲೆ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ. ನಿಗದಿತ ದರವನ್ನು ಪಡೆಯುವಂತೆ ಎಲ್ಲಾ ನೀರು ಮಾರಾಟಗಾರರಿಗೆ ತಿಳುವಳಿಕೆ ನೀಡಬೇಕು ಎಂದು ಸುತ್ತೋಲೆಯಲ್ಲಿ ಸಂಬಂಧಪಟ್ಟ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ, ಈ ಬಗ್ಗೆ ಒಂದು ವಾರದೊಳಗಾಗಿ ಸೂಕ್ತ ಕ್ರಮ ಜರುಗಿಸಲು ಸಹ ಹೇಳಿದ್ದಾರೆ. +ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆಡಿಎಸ್ ಸಭಾತ್ಯಾಗ +ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ಹಾಹಾಕಾರ ಮುಗಿಲು ಮುಟ್ಟಿದ್ದು, ನಗರದ ಹಲವಾರು ಪ್ರದೇಶಗಳಲ್ಲಿ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ. ಕಾವೇರಿ ನೀರು ಕೊಡುತ್ತೇವೆ ಎಂದು ಜಲಮಂಡಳಿ ಅಳವಡಿಕೆ ಮಾಡಿರುವ ನಲ್ಲಿಗಳು ಕೇವಲ ನಾಮಕಾವಸ್ತೆಯಾಗಿದೆ. ನೀರಿನ ವಾಸನೆ ಕಂಡೆ ಈ ನಲ್ಲಿಗಳಿಗೆ ವರ್ಷಗಳನ್ನು ಸವೆಸಿವೆ. +ಇಲ್ಲಿನ ಸ್ಥಳೀಯ ಶಾಸಕರು ಹಾಕಿಸಿರುವ ನಲ್ಲಿ ಇದ್ದೂ ಇಲ್ಲದಂತಾಗಿದೆ. ನಗರದಲ್ಲಿರುವ ಬಹುತೇಕ ಎಲ್ಲಾ ಬೋರ್‍ವೆಲ್‍ಗಳು ನಿರ್ವಹಣೆಯಿಲ್ಲದೆ ಕೆಟ್ಟುನಿಂತಿ ರುವುದೂ ಸಾಮಾನ್ಯವಾಗಿಬಿಟ್ಟಿದೆ. ಒಟ್ಟಿನಲ್ಲಿ ಜಾಗತಿಕ ನಗರವಾಗಿ ಗುರುತಿಸಿಕೊಳ್ಳುತ್ತಿರುವ ಬೆಂಗಳೂರಿನ ಜನ ಈ ರೀತಿ ಮೂಲಭೂತ ಸೌಕರ್ಯಗಳಿಗೂ ದುಂಬಾಲು ಬೀಳಬೇಕಿರುವುದು ದುರಂತ ವಾಗಿದೆ. ಬೇಸಿಗೆ ತೀವ್ರತೆ ಪಡೆದುಕೊಂಡಿದ್ದರೂ ಜಲಮಂಡಳಿ ಹಾಗೂ ಬಿಬಿಎಂಪಿ ಯಾವುದೇ ಸಿದ್ಧತೆ ಮಾಡಿಕೊಳ್ಳದೇ ಕೈಚೆಲ್ಲಿರುವುದು ಆತಂಕಕ್ಕೆ ಕಾರಣವಾಗಿದೆ. \ No newline at end of file diff --git a/eesanje/url_46_230_11.txt b/eesanje/url_46_230_11.txt new file mode 100644 index 0000000000000000000000000000000000000000..9fd07ee5541221489ce6c106018472ac1ebdcaff --- /dev/null +++ b/eesanje/url_46_230_11.txt @@ -0,0 +1,5 @@ +ಶಿಕ್ಷಕಿಯಿಂದ ಶ್ರೀರಾಮನಿಗೆ ಅಪಮಾನ ಪ್ರಕರಣ : ವಿದೇಶಗಳಿಂದ ಪೋಷಕರಿಗೆ ಬೆದರಿಕೆ ಕರೆ +ಮಂಗಳೂರು, ಫೆ.20- ಮಕ್ಕಳಿಗೆ ಶ್ರೀರಾಮನ ವಿಚಾರದಲ್ಲಿ ಅಪಮಾನ ಮಾಡಿ ಭಾರೀ ವಿವಾದ ಸೃಷ್ಟಿಸಿದ್ದ ಇಲ್ಲಿನ ಸಂತ ಜಿರೋಸಾ ಶಾಲೆಯ ಶಿಕ್ಷಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೋಷಕರಿಗೆ ವಿದೇಶಗಳಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈಗಾಗಲೇ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಅಮಾನತು ಮಾಡಲಾಗಿದೆ. ಆದರೆ, ಇದನ್ನು ಖಂಡಿಸಿ ಕೆಲವರು ವಿದೇಶಗಳಿಂದ ಮಕ್ಕಳ ಪೋಷಕರ ಚಿತ್ರಗಳನ್ನು ಅಂತರ್ಜಾಲದಲ್ಲಿ ವಿರೂಪಗೊಳಿಸಿ ಬೆದರಿಕೆ ಹಾಕುತ್ತಿರುವುದು ಬೆಳಕಿಗೆ ಬಂದಿದೆ. +ಶಾಲೆಯ ಶಿಕ್ಷಕಿ ಹಿಂದೂ ಧರ್ಮ ಅವಹೇಳನ ಮಾಡಿದ್ದಾರೆ ಎಂದು ಶಾಲೆ ಬಳಿ ಹಲವು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಶಾಸಕರೂ ಭಾಗಿಯಾಗಿದ್ದಾರೆಂದು ಅವರ ಮೇಲೂ ಕೂಡ ಎಫ್‍ಐಆರ್ ದಾಖಲಾಗಿತ್ತು. ಇದು ದಕ್ಷಿಣ ಕನ್ನಡವಲ್ಲದೆ ಇಡೀ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ವಿಧಾನಸಭೆಯಲ್ಲೂ ಕೂಡ ಇದು ಪ್ರಸ್ತಾಪವಾಗಿತ್ತು. +ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚು ಬೀಸಿದ ಪತಿ +ಇದರ ನಡುವೆ ವಿದೇಶದಿಂದ ಮಕ್ಕಳ ಪೋಷಕರಿಗೆ ಬೆದರಿಕೆ ಕರೆ ಬರುತ್ತಿದ್ದು, ಈ ಸಂಬಂಧ ಕಂಕನಾಡಿ ಪೊಲೀಸರಿಗೆ ಕವಿತಾ ಎಂಬುವವರು ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದೇ ರೀತಿ ಹಲವು ವಿದ್ಯಾರ್ಥಿಗಳ ಪೋಷಕರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸುವ ಆಡಿಯೋಗಳು ಹಾಗೂ ಅಶ್ಲೀಲ ವಿಡಿಯೋಗಳನ್ನು ಕಳುಹಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಈಗ ಪೊಲೀಸರು ಅಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ. \ No newline at end of file diff --git a/eesanje/url_46_230_12.txt b/eesanje/url_46_230_12.txt new file mode 100644 index 0000000000000000000000000000000000000000..1bb9252558582fc7f9f74ad21347a3d218bcf950 --- /dev/null +++ b/eesanje/url_46_230_12.txt @@ -0,0 +1,7 @@ +ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಮಾರ್ಚ್ 10 ರಂದು ಜಾಗೃತಿ ಓಟ +ಬೆಂಗಳೂರು, ಫೆ.20- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ 10 ಕಿಲೋ ಮೀಟರ್‍ಗಳ ಜಾಗೃತಿ ಓಟವನ್ನು ಮಾರ್ಚ್ 10ರಂದು ಆಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ರಾಜ್ಯ ಪೊಲೀಸ್ ಇಲಾಖೆಗೆ 50 ವರ್ಷವಾಗಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ನಡೆಯುತ್ತಿದ್ದು, ಇದರ ಅಂಗವಾಗಿ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‍ಬಿಐ) ಸಹಯೋಗದೊಂದಿಗೆ ಫಿಟ್‍ನೆಸ್ ಫಾರ್ ಆಲ್ ಎಂಬ ಶೀರ್ಷಿಕೆಯಡಿ ಹಾಗೂ ಮಾದಕ ವಸ್ತು ಮುಕ್ತ ಕರ್ನಾಟಕವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು 10 ಕಿಲೋ ಮೀಟರ್ ಹಾಗೂ 5 ಕಿಲೋ ಮೀಟರ್‍ಗಳ ಓಟವನ್ನು ಆಯೋಜಿಸಲಾಗಿದೆ. +ಈ ಓಟದ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಸೇರಿದಂತೆ ಎಲ್ಲಾ ವಯೋಮಾನದ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು. ಮಾ. 10ರಂದು ವಿಧಾನಸೌಧದ ಮುಂಭಾಗದಿಂದ ಓಟ ಆರಂಭವಾಗಲಿದ್ದು, ಕಬ್ಬನ್ ಉದ್ಯಾನವನ ಮುಖಾಂತರ ಹಾದು ಹೋಗುವುದು. ಕರ್ನಾಟಕ ಪೊಲೀಸ್ ಬ್ಯಾಂಡ್ ತಂಡವು ಓಟದ ಪ್ರಾರಂಭದಿಂದ ಹಾದು ಹೋಗುವ ಆಯ್ದ ಸ್ಥಳಗಳಲ್ಲಿ ಬ್ಯಾಂಡ್ ಪ್ರದರ್ಶನ ನೀಡಲಿದೆ. +ಈ ಓಟವು ಹಸಿರು ಬೆಂಗಳೂರು ಮಾದಕ ವಸ್ತು ಮುಕ್ತ ಕರ್ನಾಟಕ ಮತ್ತು ಸೈಬರ್ ಕ್ರೈಂಗಳ ಬಗ್ಗೆ ಜಾಗೃತಿ ಮೂಡಿಸಲಿದೆ. 5 ಕಿಲೋ ಮೀಟರ್ ಮತ್ತು 10 ಕಿಲೋ ಮೀಟರ್‍ಗಳ ಪ್ರತ್ಯೇಕ ವಿಭಾಗಗಳಲ್ಲಿ ಮೂರು ಉಪವಿಭಾಗಗಳಾಗಿ ವಿಂಗಡಿಸಲಾಗಿದ್ದು, ಇದರಲ್ಲಿ ಪುರುಷರು, ಮಹಿಳೆಯರು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ವೃತ್ತಿಪರ ಓಟಗಾರರು ಭಾಗವಹಿಸಬಹುದಾಗಿದೆ. +ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ +ವಿಜೇತರಿಗೆ ಮೂರು ಹಂತದ ವಿವಿಧ ಬಹುಮಾನಗಳನ್ನು ಘೋಷಣೆ ಮಾಡಿದ್ದು, ಸುಮಾರು 18 ಲಕ್ಷ ನೀಡಲು ಉದ್ದೇಶಿಸಲಾಗಿದೆ. 10 ಕಿಲೋ ಮೀಟರ್ ವಿಭಾಗದ ವಿಜೇತರಿಗೆ ತಲಾ ಒಂದು ಲಕ್ಷ ಹಾಗೂ 5 ಕಿಲೋ ಮೀಟರ್ ವಿಭಾಗದ 40 ಸಾವಿರ ಬಹುಮಾನವನ್ನು ಮಹಿಳಾ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ನೀಡಲಾಗುವುದು.ರಾಜ್ಯದ ಎಲ್ಲಾ ಜಿಲ್ಲೆಗಳ ವಿವಿಧ ದರ್ಜೆಗಳ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಲಿದ್ದಾರೆ. ಜೊತೆಗೆ ಕೆಎಸ್‍ಆರ್‍ಪಿ ಮತ್ತು ಇತರೆ ವಿಶೇಷ ಘಟಕಗಳು ಭಾಗವಹಿಸಲಿದ್ದು, ಸುಮಾರು 3ರಿಂದ 4 ಸಾವಿರ ಪೊಲೀಸ್ ಸಿಬ್ಬಂದಿ ಭಾಗವಹಿಸಲಿದ್ದಾರೆ. +ಈಗಾಗಲೇ ನೋಂದಾಣಿ ಕಾರ್ಯ ಆರಂಭವಾಗಿದ್ದು, ಸಾರ್ವಜನಿಕರು ಸಹ ನೋಂದಾಣಿ ಮಾಡಿಕೊಂಡು ಈ ಓಟದಲ್ಲಿ ಭಾಗವಹಿಸಬಹುದಾಗಿದೆ. ಈ ಓಟದಲ್ಲಿ ಭಾಗವಹಿಸುವವರಿಗೆ ಒಂದು ಟೀ-ಶರ್ಟ್, ಪದಕ ಮತ್ತು ಉಪಹಾರದ ವ್ಯವಸ್ಥೆ ಇರುತ್ತದೆ. ಆಸಕ್ತರು .click2race. ವೆಬ್‍ಸೈಟ್ ಮೂಲಕ ನೋಂದಾಯಿಸಿಕೊ ಳ್ಳಬಹುದಾಗಿದೆ ಎಂದು ಆಯುಕ್ತರು ತಿಳಿಸಿದರು. \ No newline at end of file diff --git a/eesanje/url_46_230_2.txt b/eesanje/url_46_230_2.txt new file mode 100644 index 0000000000000000000000000000000000000000..dd7d0649e6836259fe5ac435687ac2c2c161b164 --- /dev/null +++ b/eesanje/url_46_230_2.txt @@ -0,0 +1,5 @@ +ಇದ್ದಕ್ಕಿದ್ದಂತೆ ಹೊತ್ತಿ ಉರಿದ ಹೊಸ ಕಾರು +ಮಹದೇವಪುರ,ಫೆ.21- ಮನೆ ಮುಂದೆ ಪಾರ್ಕಿಂಗ್ ಮಾಡಲಾಗಿದ್ದ ಹೊಸ ಕಾರು ಸುಟ್ಟು ಕರಕಲಾಗಿರುವ ಘಟನೆ ಕಾಡುಬಿಸನಹಳ್ಳಿಯಲ್ಲಿ ನಡೆದಿದೆ. ಸಂಪತ್ ಕುಮಾರ್ ಎಂಬುವವರು ಮಾರುತಿ ಕಂಪೆನಿಯ ಹೊಸ ಕಾರನ್ನು ಖರೀದಿಸಿ ಮೂರು ತಿಂಗಳಾಗಿತ್ತು. ಮನೆ ಮುಂದೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ನೋಡುವಷ್ಟರಲ್ಲಿ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಹೊತ್ತಿ ಉರಿದಿದೆ. +ಬೆಂಕಿಯನ್ನು ನಂದಿಸಲು ಎಷ್ಟೇ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಗ್ನಿ ಅವಘಡದಿಂದ ಕಾರಿನಲ್ಲಿದ್ದ ಕೆಲವು ದಾಖಲೆಗಳು ಸೇರಿದಂತೆ ಪಾರ್ಕಿಂಗ್‍ನಲ್ಲಿದ್ದ ವಾಷಿಂಗ್ ಮೆಷಿನ್, ಬಟ್ಟೆಗಳು, ಮನೆಯ ಕಿಟಕಿ, ಬಾಗಿಲು ಹಾಗೂ ಮೇಲ್ಛಾವಣಿ ಬೆಂಕಿಯಿಂದ ಸುಟ್ಟು ಹಾನಿಯಾಗಿದ್ದು, ಸುಮಾರು 17 ಲಕ್ಷ ರೂ.ಗಳಷ್ಟು ನಷ್ಟವಾಗಿದೆ. +ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ +ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕಾರು ಕಂಪೆನಿಯವರು ಸೂಕ್ತ ಪರಿಹಾರ ನೀಡಬೇಕೆಂದು ಕಾರಿನ ಮಾಲೀಕರು ಒತ್ತಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಅಗ್ನಿಯನ್ನು ನಂದಿಸಲಾಗಿದ್ದು, ಅನಾಹುತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈ ಸಂಬಂಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. \ No newline at end of file diff --git a/eesanje/url_46_230_3.txt b/eesanje/url_46_230_3.txt new file mode 100644 index 0000000000000000000000000000000000000000..c28591ccdc5859177456e2335f231325fbeec04b --- /dev/null +++ b/eesanje/url_46_230_3.txt @@ -0,0 +1,6 @@ +ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು +ಬೆಂಗಳೂರು, ಫೆ.21- ಸರ್ಕಾರ ಎಡವಟ್ಟುಗಳ ಮೇಲೆ ಎಡವಟ್ಟು ಮಾಡುತ್ತಲೇ ಇದೆ. `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬಾ’ ಎಂಬ ಶೀರ್ಷಿಕೆಯನ್ನು ಬದಲಾವಣೆ ಮಾಡಿ ಕೈ ಸುಟ್ಟುಕೊಂಡ ಬೆನ್ನಲ್ಲೇ ಈಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಆದೇಶ ನೀಡುವ ಮೂಲಕ ಮತ್ತೊಂದು ಎಡವಟ್ಟು ಮಾಡಿ ನಗೆಪಾಟಲಿಗೀಡಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬೇಕು. ಖಾಸಗಿ ಶಾಲೆಗಳಲ್ಲಿ ಕಡ್ಡಾಯವಿಲ್ಲ ಎಂಬ ಆದೇಶವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ನೀಡುವ ಮೂಲಕ ಮತ್ತೊಂದು ಮಹಾ ಎಡವಟ್ಟು ಮಾಡಿಕೊಂಡಿದೆ. +ಈ ಆದೇಶ ಹೊರ ಬೀಳುತ್ತಿದ್ದಂತೆ ಮಾಧ್ಯಮಗಳು ಸರ್ಕಾರದ ಮೇಲೆ ಮುಗಿ ಬಿದ್ದಿವೆ. ನಾಡಗೀತೆ ಹಾಡುವುದಕ್ಕೂ ಶಾಲೆಗಳನ್ನು ಸರ್ಕಾರಿ, ಖಾಸಗಿ ಎಂದು ವಿಂಗಡಿಸಬೇಕೇ? ಇದು ಯಾವ ನಿಯಮವೆಂದು ಪ್ರಶ್ನಿಸುತ್ತಿದ್ದಂತೆ ವಿಧಾನಸೌಧದಲ್ಲಿದ್ದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಡಬಡಾಯಿಸುತ್ತ ಸ್ಪಷ್ಟನೆ ನೀಡಿದ್ದಾರೆ. +ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು +ನಮಗೆ ಎಲ್ಲಾ ಶಾಲೆಗಳು ಒಂದೇ. ಪ್ರಿಂಟಿಂಗ್ ಮಿಸ್ಟೇಕ್ ಆಗಿದೆ. ಅದನ್ನು ಸರಿಪಡಿಸುತ್ತೇವೆ ಎಂದು ಸಮಜಾಯಿಷಿ ನೀಡಿದ್ದಾರೆ. ನಾವು ಆ ರೀತಿಯ ಯಾವುದೇ ಕಾನೂನು ಮಾಡಿಲ್ಲ. ಆ ರೀತಿಯ ಸುತ್ತೋಲೆ ಬಂದಿದ್ದರೆ ತಕ್ಷಣವೇ ಅದನ್ನು ಸರಿಪಡಿಸುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. +ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಮಾಡಿ, ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿರುವ ಈ ಆದೇಶ ವ್ಯಾಪಕ ಚರ್ಚೆಗೊಳಗಾಗುವುದರೊಳಗೆ ಎಚ್ಚೆತ್ತ ಸರ್ಕಾರ ಸರಿಪಡಿಸಿಕೊಳ್ಳಲು ಮುಂದಾಯಿತು. ಇದೇ ರೀತಿ ಹಲವು ಎಡವಟ್ಟುಗಳನ್ನು ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_230_4.txt b/eesanje/url_46_230_4.txt new file mode 100644 index 0000000000000000000000000000000000000000..58e55bb0e136afc77470f29715383a0fcb6fb443 --- /dev/null +++ b/eesanje/url_46_230_4.txt @@ -0,0 +1,8 @@ +ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಬಿಜೆಪಿ ಬ್ರೇಕ್ +ಬೆಂಗಳೂರು, ಫೆ.21- ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಉಳಿದಿದ್ದು, ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಇರಾದೆಯಲ್ಲಿ ಬಿಜೆಪಿ ಇದೆ. ಆದರೆ, ಹಲವು ಕ್ಷೇತ್ರಗಳಲ್ಲಿ ಕಮಲ ಪಡೆಗೆ ಅಭ್ಯರ್ಥಿಗಳ ಸಮಸ್ಯೆ ಎದುರಾಗಿದೆ. 10 ರಿಂದ 12 ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಕೊಕ್ ನೀಡಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿ ಸುವ ಚಿಂತನೆಯನ್ನು ಬಿಜೆಪಿ ಮಾಡಿತ್ತು. ಆದರೆ, ಆಂತರಿಕ ಭಿನ್ನಾಭಿಪ್ರಾಯ ಹಾಗೂ ಸಮರ್ಥ ಅಭ್ಯರ್ಥಿಗಳು ದೊರೆಯದಿರುವುದು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಶನಿವಾರ ಮತ್ತು ಭಾನುವಾರ ದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ.ವಿಜಯೇಂದ್ರ ನೇತೃತ್ವದ ಬಿಜೆಪಿ ರಾಜ್ಯ ಘಟಕವು ಸುಮಾರು 10 ರಿಂದ 12 ಕ್ಷೇತ್ರಗಳಲ್ಲಿ ಎದುರಾಗಿರುವ ಸವಾಲುಗಳ ಬಗ್ಗೆ ಪಕ್ಷದ ಹೈಕಮಾಂಡ್‍ಗೆ ವಿವರಿಸಿದ್ದು, ರಾಜ್ಯದ ವಾಸ್ತವ ಅಂಶಗಳನ್ನು ದಿಲ್ಲಿ ನಾಯಕರ ಮುಂದೆ ತೆರೆದಿಟ್ಟಿದ್ದಾರೆ. +ದಾವಣಗೆರೆ, ಬೀದರ್, ದಕ್ಷಿಣಕನ್ನಡ, ಬೆಂಗಳೂರು ಉತ್ತರದಂತಹ ಕ್ಷೇತ್ರಗಳ ಬಗ್ಗೆ ಕೇಂದ್ರದ ನಾಯಕರಿಗೆ ತಿಳಿಸಲಾಗಿದ್ದು, ಅವರ ನಿರ್ಧಾರಕ್ಕೆ ಎದುರು ನೋಡುತ್ತಿದ್ದೇವೆ ಎಂದು ಬಿಜೆಪಿಯ ನಾಯಕರೊಬ್ಬರು ತಿಳಿಸಿದ್ದಾರೆ. ಇನ್ನು, ಪಕ್ಷದ ಬೂತ್ ಮಟ್ಟದೊಂದಿಗೆ ಹಾಗೂ ಮತದಾರರೊಂದಿಗೆ ಸಂಪರ್ಕ ಕಳೆದುಕೊಂಡಿರುವ ಹಾಲಿ ಸಂಸದರನ್ನು ಬದಲಿಸಲು ಬಿಜೆಪಿ ಹೈಕಮಾಂಡ್ ಇಂಗಿತ ವ್ಯಕ್ತಪಡಿಸಿದೆ. ಆದರೆ, ಬಹಳಷ್ಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಲ್ಲ ಎನ್ನಲಾಗಿದೆ. ಕೆಲವೊಂದು ಕ್ಷೇತ್ರಗಳಲ್ಲಿ ಮಾತ್ರ ಬದಲಾವಣೆ ಆಗುವ ಸಾಧ್ಯತೆ ಇದೆ. ಹಲವು ಸವಾಲುಗಳು ಇರುವುದರಿಂದ ಚುನಾವಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಳೆದು ತೂಗಿ ಅಭ್ಯರ್ಥಿಗಳನ್ನು ಘೋಷಿಸಬಹುದು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. +ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ +ಲೋಕಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಚರ್ಚಿಸಲು ಫೆಬ್ರವರಿ ಅಂತ್ಯದಲ್ಲಿ ರಾಜ್ಯ ನಾಯಕರ ಸಭೆ ಕರೆಯಲಾಗಿದ್ದು, ಅಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ಚಿತ್ರಣ ಸಿಗುವ ಸಾಧ್ಯತೆಯಿದೆ. ಅಲ್ಲಿ ಸಿದ್ಧಗೊಂಡ ಪಟ್ಟಿಯನ್ನು ಅಂತಿಮ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ನಿರೀಕ್ಷೆಯೊಂದಿಗೆ ಹೈಕಮಾಂಡ್‍ಗೆ ರವಾನಿಸಲಾಗುತ್ತದೆ. ಹೈಕಮಾಂಡ್ ನಾಯಕರು ಕೊನೆ ಕ್ಷಣದ ಬದಲಾವಣೆ ಮಾಡದಿದ್ದರೆ, ರಾಜ್ಯದ ನಾಯಕರೇ ಕಳುಹಿಸಿದ ಪಟ್ಟಿ ಅಂತಿಮವಾಗಲಿದೆ. ಮಾರ್ಚ್ ಎರಡನೇ ವಾರದಲ್ಲಿ ಅಭ್ಯರ್ಥಿಗಳ ಘೋಷಣೆಯಾಗುವ ಸಾಧ್ಯತೆ ಇದೆ. +ಜೊತೆಗೆ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಗೆ ಆದ್ಯತೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್‍ಗೆ ಸಲ್ಲಿಸಲಿದ್ದಾರೆ. +ಯಾವ್ಯಾವ ಕ್ಷೇತ್ರಗಳಲ್ಲಿ ಸವಾಲು? :ಪ್ರಮುಖವಾಗಿ ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ವಿಜಯಪುರ, ತುಮಕೂರು, ಕೊಪ್ಪಳ, ದಾವಣಗೆರೆ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಮಸ್ಯೆ ಎದುರಾಗಿದೆ. ಹಲವು ಕ್ಷೇತ್ರಗಳಲ್ಲಿ ಹಾಲಿ ಸಂಸದರು ತಾವೇ ನಿವೃತ್ತಿ ಘೋಷಿಸಿದ್ದು, ಅವರ ಜಾಗಕ್ಕೆ ಸಮರ್ಥ ಅಭ್ಯರ್ಥಿ ಬಿಜೆಪಿಗೆ ಸಿಗುತ್ತಿಲ್ಲ. ಒಂದಿಷ್ಟು ಕಡೆ ಆಂತರಿಕ ಭಿನ್ನಾಭಿಪ್ರಾಯಗಳು ಕೂಡ ಕಂಡುಬಂದಿದ್ದು, ಅಭ್ಯರ್ಥಿಗಳ ಘೋಷಣೆಯಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. \ No newline at end of file diff --git a/eesanje/url_46_230_5.txt b/eesanje/url_46_230_5.txt new file mode 100644 index 0000000000000000000000000000000000000000..d9d865ee868102069ce4778df052aea36805a619 --- /dev/null +++ b/eesanje/url_46_230_5.txt @@ -0,0 +1,6 @@ +ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ : ಸಿದ್ದರಾಮಯ್ಯ +ಬೆಂಗಳೂರು,ಫೆ.21-ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದರು. ವಿಧಾನ ಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದರು. ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ¾ಕೋ ಆಪರೇಟಿವ್ ಫೆಡರಿಲಿಸಂ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು. +ರಾಜ್ಯದಿಂದ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದರು. +ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು +ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎಂದು ಹೇಳಿದರು. ಪ್ರಧಾನಿ ಅವರ ಮಾತನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು. +ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_230_6.txt b/eesanje/url_46_230_6.txt new file mode 100644 index 0000000000000000000000000000000000000000..971063abfa6bda00e72650ee1f10661aad415d62 --- /dev/null +++ b/eesanje/url_46_230_6.txt @@ -0,0 +1,6 @@ +ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು : ಸಿಎಂ +ಬೆಂಗಳೂರು,ಫೆ.21- ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು. +ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವ ವೇಳೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸದಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದರು. +ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ +ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್ ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್ ನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್ ನ ಸದಸ್ಯ ಭೋಜೇಗೌಡರು ಮಧ್ಯ ಪ್ರವೇಶಿಸಿ ಏನನ್ನೋ ಹೇಳಲು ಮುಂದಾದರು. ಈ ವೇಳೆ ಮುಖ್ಯಮಂತ್ರಿಗಳು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ ಭೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ ಎಂದರು.ಮುಖ್ಯಮಂತ್ರಿಗಳ ಮಾತನ್ನು ಗೌರವದಿಂದ ಸ್ವೀಕರಿಸಿದ ಭೋಜೇಗೌಡರು ಸಿಎಂ ಗೆ ಕೈ ಮುಗಿದು ಕುಳಿತರು. +ದಾಖಲೆ ಮುರಿಯಲು ಸಾಧ್ಯವಿಲ್ಲ:ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಭರ್ಜರಿಯಾಗಿ ಜಯಗಳಿಸಿದ ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಸಭಾಪತಿಗಳೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ, ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ ಎಂದು ಹೊರಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. \ No newline at end of file diff --git a/eesanje/url_46_230_7.txt b/eesanje/url_46_230_7.txt new file mode 100644 index 0000000000000000000000000000000000000000..2a03a531002cc2c11a318b4329f36ca68bc1d14b --- /dev/null +++ b/eesanje/url_46_230_7.txt @@ -0,0 +1,10 @@ +ಐಜೂರು ಪಿಎಸ್‍ಐ ಅಮಾನತು, ತನಿಖೆಗೆ ಆದೇಶ : ಗೃಹ ಸಚಿವ ಪರಮೇಶ್ವರ +ಬೆಂಗಳೂರು, ಫೆ. 21- ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್‍ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ವಿಧಾನಸಭೆಗೆ ತಿಳಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ ನಿನ್ನೆ ನಾವು ಪ್ರಸ್ತಾಪಿಸಿದ ವಕೀಲರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಆಗ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹಸಚಿವರಿಗೆ ಹೇಳಿಕೆ ನೀಡಲು ಅವಕಾಶ ಮಾಡಿಕೊಟ್ಟರು. +ರಾಮನಗರದಲ್ಲಿ ವಕೀಲರು ಪ್ರತಿಭಟನೆ ಮಾಡಿದ ವಿಚಾರವನ್ನು ನಿನ್ನೆ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಪ್ರಸ್ತಾಪಿಸಿದರು. ನಿನ್ನೆ ರಾಮನಗರದ ಘಟನೆಗೆ ಸಂಬಂಧಿಸಿದಂತೆ ನೀಡಿದ ಉತ್ತರ ಪ್ರತಿಪಕ್ಷಗಳಿಗೆ ಸಮಾಧಾನ ತಂದಿರಲಿಲ್ಲ. ರಾಮನಗರದ ಐಜೂರು ಪೊಲೀಸ್ ಠಾಣೆಯ ಪಿಎಸ್‍ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡುವ ಬೇಡಿಕೆ ಇಟ್ಟಿದ್ದರು ಪರಮೇಶ್ವರ್ ತಿಳಿಸಿದರು. +ಐಜೂರು ಪೊಲೀಸ್ ಠಾಣೆಯ ಪಿಎಸ್‍ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡುತ್ತಿದ್ದೇವೆ. ವಕೀಲರ ಪ್ರತಿಭಟನೆಗೆ ಕಾರಣರಾದ ಚಾಂದ್‍ಪಾಷ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಡಿವೈಎಸ್ಪಿ ನೇತೃತ್ವದಲ್ಲಿ ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದೆ. ಪಿಎಸ್‍ಐ ಅಮಾನತ್ತು ಮಾಡಿರುವುದರಿಂದ ತನಿಖೆಗೂ ಅನುಕೂಲವಾಗಲಿದೆ. ರಾಮಗನರದಲ್ಲಿ ಈ ಹಿಂದೆ ಕೂಡ ಇಂತಹ ಘಟನೆಗಳು ಆಗಿದ್ದವು ಎಂದು ಅವರು ತಿಳಿಸಿದರು. +ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ +ಈ ಘಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲು ವಕೀಲರು ನಿರ್ಧಾರ ಮಾಡಿದ್ದರು. ಈ ಎಲ್ಲಾ ಹಿನ್ನೆಲೆಯಲ್ಲಿ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದರು. ಆರ್.ಅಶೋಕ್ ಮಾತನಾಡಿ, ಈ ಅಧಿವೇಶನದಲ್ಲಿ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಸಂಧಾನಸಭೆ ನಡೆಸಿ ಯಶಸ್ವಿಯಾಗಿ ಸಂಧಾನ ಮಾಡಿರುವುದಕ್ಕೆ ಸಭಾಧ್ಯಕ್ಷರನ್ನು ಅಭಿನಂದಿಸುವುದಾಗಿ ಹೇಳಿದರು. +ರಾಮನಗರದ ಹಿಡಿತವನ್ನು ಮೀರಿ ತಪ್ಪು ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬ ನಮ್ಮ ಬೇಡಿಕೆಯಂತೆ ಗೃಹಸಚಿವರು ಕ್ರಮ ಕೈಗೊಂಡಿದ್ದಾರೆ. ಅದಕ್ಕಾಗಿ ಗೃಹ ಸಚಿವರನ್ನು ಅಭಿನಂದಿಸುವುದಾಗಿ ಹೇಳಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ ಎಂದರು. ವಕೀಲರು ಬೆಂಗಳೂರಿಗೆ ಬಂದು ಪ್ರತಿಭಟನೆ ಮಾಡುವುದರಿಂದ ಬೇರೆ ಬೇರೆ ರೀತಿಯ ಸಮಸ್ಯೆಗಳಾಗುತ್ತಿದ್ದವು. ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿದ್ದು, ಈ ಉತ್ತರ ಸಮಾಧಾನ ತಂದಿದೆ ಎಂದು ಹೇಳಿದರು. +ರಾಮನಗರದ ಜಿಲ್ಲಾ ವಕೀಲರ ಸಂಘದ 40 ವಕೀಲರ ಮೇಲೆ ಎಫ್‍ಐಆರ್ ದಾಖಲಿಸಿರುವ ಪೊಲೀಸರ ಕ್ರಮ ಖಂಡಿಸಿ ರಾಮನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವಿಷಯವನ್ನು ನಿನ್ನೆ ಸದನದಲ್ಲಿ ಪ್ರತಿಪಕ್ಷಗಳ ಶಾಸಕರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದರು. ವಕೀಲರ ಮೇಲೆ ಪ್ರಕರಣ ದಾಖಲಿಸಿದ ಐಜೂರು ಪೊಲೀಸ್ ಠಾಣೆಯ ಪಿಎಸ್‍ಐ ಅವರನ್ನು ಅಮಾನತು ಮಾಡಬೇಕು, ವಕೀಲ ಚಾಂದ್ ಪಾಷಾನನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಯಲ್ಲಿ ಧರಣಿ ನಡೆಸಿದರು. ಈ ವೇಳೆ ಆಡಳಿತ ಬಿಜೆಪಿ ಸದಸ್ಯರ ಮಧ್ಯೆ ವಾಗ್ವಾದವೂ ನಡೆದಿತ್ತು. +ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು +ಸದನ ಮುಂದೂಡಿದ ಸಭಾಧ್ಯಕ್ಷರು, ಆಡಳಿತ ವಿರೋಧ ಪಕ್ಷದ ಸದಸ್ಯರನ್ನು ತಮ್ಮ ಕೊಠಡಿಗೆ ಕರೆಸಿ ಸಂಧಾನ ನಡೆಸಿದರು. ಮತ್ತೆ ಕಲಾಪ ಆರಂಭವಾದಾಗ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮತ್ತೊಮ್ಮೆ ಉತ್ತರ ನೀಡುವುದಾಗಿ ಗೃಹಸಚಿವರು ಭರವಸೆ ನೀಡಿದ್ದರಿಂದ ಧರಣಿ ಕೈಬಿಡಲಾಗಿತ್ತು. \ No newline at end of file diff --git a/eesanje/url_46_230_8.txt b/eesanje/url_46_230_8.txt new file mode 100644 index 0000000000000000000000000000000000000000..05fa181b613e29a9477f35aec1731b8c4ea273a3 --- /dev/null +++ b/eesanje/url_46_230_8.txt @@ -0,0 +1,6 @@ +ಬೆಟ್ಟಿಂಗ್ ಹಣಕ್ಕಾಗಿ ಕಳ್ಳತನ ಮಾಡುತ್ತಿದ್ದವನ ಬಂಧನ +ಬೆಂಗಳೂರು,ಫೆ.20-ಮನೆಗಳ ಬೀಗ ಮುರಿದು ಕಳ್ಳತನ ಮಾಡಿದ ಚಿನ್ನದ ಒಡವೆಗಳನ್ನು ಮಾರಾಟ ಮಾಡಿ ಬಂದ ಹಣದಿಂದ ದುಶ್ಚಟಗಳಿಗೆ ಹಾಗೂ ಆನ್‍ಲೈನ್ ಬೆಟ್ಟಿಂಗ್‍ಗೆ ಉಪಯೋಗಿಸುತ್ತಿದ್ದ ಆರೋಪಿಯನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. +ಬಿಟಿಎಂ ಲೇಔಟ್ ನಿವಾಸಿ, ರಿಯಲ್ ಎಸ್ಟೇಟ್ ನಡೆಸುತ್ತಿದ್ದ ಸುನೀಲ (31) ಬಂಧಿತ ಆರೋಪಿ. ಈತ ಮೈಕೋ ಲೇಔಟ್ ಮತ್ತು ಬಿಟಿಎಂ ಲೇಔಟ್ ಪ್ರದೇಶಗಳಲ್ಲಿ ಸುತ್ತಾಡುತ್ತಾ ಯಾವ ಮನೆಯಲ್ಲಿ ದಂಪತಿ ಕೆಲಸಕ್ಕೆ ಹೋಗುತ್ತಾರೆಂದು ತಿಳಿದುಕೊಂಡು ಅಂತಹ ಮನೆಗಳಲ್ಲಿ ಹಗಲು ವೇಳೆಯೇ ಕಳ್ಳತನ ಮಾಡುತ್ತಿದ್ದುದು ವಿಚಾರಣೆಯಿಂದ ತಿಳಿದುಬಂದಿದೆ. +ಆರೋಪಿಯಿಂದ 30.15 ಲಕ್ಷ ಮೌಲ್ಯದ 525 ಗ್ರಾಂ ತೂಕದ ಚಿನ್ನದ ಒಡವೆಗಳು, 550 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ 2 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಿಂದ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 11 ಮನೆ ಕಳವು ಪ್ರಕರಣಗಳು ಪತ್ತೆಯಾಗಿವೆ. +ಅಡ್ಜೆಸ್ಟ್‍ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್ +ಈ ಕಾರ್ಯಾಚರಣೆಯನ್ನು ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿ.ಕೆ.ಬಾಬಾರವರ ಮಾರ್ಗ ದರ್ಶನದಲ್ಲಿ ಮತ್ತು ಮೈಕೋ ಲೇಔಟ್ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಮನೋಜ್‍ನೇತೃತ್ವದಲ್ಲಿ , ಇನ್ಸ್‍ಪೆಕ್ಟರ್ ಗಿರೀಶ್ ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ಕೈಗೊಂಡಿದ್ದರು. \ No newline at end of file diff --git a/eesanje/url_46_230_9.txt b/eesanje/url_46_230_9.txt new file mode 100644 index 0000000000000000000000000000000000000000..7280569151ae92801603d43f07a9d5720937237b --- /dev/null +++ b/eesanje/url_46_230_9.txt @@ -0,0 +1,10 @@ +ಗ್ಯಾರೆಂಟಿಗಳಿಂದ ರಾಜ್ಯದ ಜನತೆ ಖುಷಿಯಾಗಿದ್ದಾರೆ : ಸಿದ್ದರಾಮಯ್ಯ +ಬೆಂಗಳೂರು,ಫೆ.20- ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಅದಕ್ಕೆ ಬೇಕಾದ ಹಣವನ್ನು ಒದಗಿಸಿ ಸಂಪೂರ್ಣ ಜಾರಿ ಮಾಡಿದ್ದೇವೆ. ಇದರಿಂದ ರಾಜ್ಯದ ಜನರು ಖುಷಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಲವಾಗಿ ಸಮರ್ಥಿಸಿಕೊಂಡರು. ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ವಿರೋಧಪಕ್ಷಗಳನ್ನು ಸಮಾಧಾನಪಡಿಸುವುದು ಹೇಗೆ, ಕಾಮಾಲೆ ಕಣ್ಣಿನವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ ಎಂದರು. +ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಾರೆ. ಎಲ್ಲ ಜಾತಿ, ಎಲ್ಲ ಧರ್ಮದ ಬಡವರಿಗೆ ಪ್ರಯೋಜನ ದೊರೆಯುತ್ತಿದೆ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವೋದಯ ಸರ್ವರಲ್ಲೂ ಇರಬೇಕು. ಆದರೆ ಸಬ್ ಕ ಸಾಥ್, ಸಬ್ ಕ ವಿಕಾಸ್, ಸಬ್ ಕ ವಿಶ್ವಾಸ್ ಎಂದು ಹೇಳಿದರು. ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದರು. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ರಾಜ್ಯ ಸರ್ಕಾರವನ್ನು ಗಾಳಿಯಿಲ್ಲದೆ ಕೆಟ್ಟು ನಿಂತಿರುವ ಬಸ್‍ಗೆ ಹೋಲಿಸಿದ್ದಾರೆ. ಆದರೆ 2019 ರಿಂದ 2023 ರ ನಡುವಿನ ಅವರ ಸರ್ಕಾರ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸಾಗಿತ್ತು. ಮುಂದಕ್ಕೆ ಹೋಗಲಿಲ್ಲ. ಆ ಬಸ್ಸು ಮುಂದೆ ಹೋದರೆ ವಿಷದ ಹೊಗೆ ಉಗುಳುತ್ತದೆ ಎಂದು ಜನರ ಪಕ್ಕಕ್ಕೆ ತಳ್ಳಿದರು ಎಂದು ಲೇವಡಿ ಮಾಡಿದರು. +ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೀವು 158 ಭರವಸೆಗಳನ್ನು ಈಡೇರಿಸಿದ್ದರೆ ಜನರು ಏಕೆ 2018 ರಲ್ಲಿ ನಿಮ್ಮನ್ನು ಪಕ್ಕಕ್ಕೆ ತಳ್ಳಿದರು? ಭರವಸೆಗಳ ಈಡೇರಿಕೆ ಕೇವಲ ಕಾಗದದ ಮೇಲಿತ್ತು ಎಂದು ತಿರುಗೇಟು ನೀಡಿದರು. ಉತ್ತರ ಮುಂದುವರೆಸಿದ ಸಿದ್ದರಾಮಯ್ಯ, ರಾಜ್ಯಸರ್ಕಾರ ಜಾರಿಗೆ ತಂದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಡಿ 160 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಫೆ.13 ರವರೆಗೆ 2,208 ಕೋಟಿ ಖರ್ಚಾಗಿದೆ. ಇದು ಸುಳ್ಳೆ ಎಂದು ಪ್ರಶ್ನಿಸಿದರು. +ಆಗ ಆರ್.ಅಶೋಕ್‍ರವರು, ಜೆಸಿಬಿಯಲ್ಲಿ ವಿದ್ಯಾರ್ಥಿಗಳು ಪ್ರಯಾಣಿಸಿರುವುದು ಸುಳ್ಳೆ ಎಂದು ಮರುಪ್ರಶ್ನಿಸಿದರು.ಬಸ್ ಸಿಗದೆ ವಿದ್ಯಾರ್ಥಿಗಳು ಹೋಗಿರುವುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿರು ವುದನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ದರಿಲ್ಲವಲ್ಲ ಎಂದು ತಿರುಗೇಟು ನೀಡಿದರು. 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಫೆ. 13ರವರೆಗೆ 5,168 ಕೋಟಿಯನ್ನು ಇಂಧನ ಇಲಾಖೆಗೆ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯಲ್ಲಿ 1.60 ಕೋಟಿ ಕುಟುಂಬಗಳಿಗೆ ಇದರ ಪ್ರಯೋಜನ ದೊರೆತಿದೆ ಎಂದರು. +ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆಡಿಎಸ್ ಸಭಾತ್ಯಾಗ +ಅನ್ನಭಾಗ್ಯದಡಿ 5 ಕೆಜಿ ಅಕ್ಕಿಯನ್ನು ನೀಡಿ ಹಸಿವು ಮುಕ್ತ ರಾಜ್ಯ ಮಾಡುವುದು ಗುರಿಯಾಗಿತ್ತು. ಅಕ್ಕಿ ಸಿಗದ ಕಾರಣಕ್ಕೆ ಪ್ರತಿ ಫಲಾನುಭವಿಗೆ ಮಾಸಿಕ 170 ರೂ. ನೀಡುತ್ತಿದ್ದೇವೆ. 4 ಕೋಟಿ 38 ಲಕ್ಷ ಜನರಿಗೆ ಈ ಹಣ ನೀಡಿದ್ದೇವೆ ಎಂದು ಹೇಳಿದರು. ಫೆ.13 ರವರೆಗೆ 8,554 ಕೋಟಿ ರೂ. ಗಳನ್ನು ಇದಕ್ಕಾಗಿ ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ರೂ.ನಂತೆ ನೀಡಲಾಗುತ್ತಿದ್ದು, 1.18 ಕೋಟಿ ಮಹಿಳೆಯರಿಗೆ ಪ್ರಯೋಜನವಾಗಿದೆ. +ಫೆ.13 ರವರೆಗೆ 13,352 ಕೋಟಿ ರೂ. ನೀಡಲಾಗಿದೆ. 2022-23ನೇ ಸಾಲಿನಲ್ಲಿ ಪದವಿ ತೇರ್ಗಡೆಯಾದ ನಿರುದ್ಯೋಗಿಗೆ ಮಾಸಿಕ 3 ಸಾವಿರ ರೂ. , ಡಿಪೆÇ್ಲಮಾ ತೇರ್ಗಡೆಯಾದವರಿಗೆ 1,500 ರೂ. ನೀಡಲಾಗುತ್ತಿದ್ದು, 7 ಕೋಟಿ ರೂ. 34 ಲಕ್ಷ ಯುವಕರಿಗೆ ಹಣ ವರ್ಗಾವಣೆಯಾಗಿದೆ. ಯಾವುದೇ ಮಧ್ಯವರ್ತಿಗಳಿಲ್ಲ. ಈ ವರ್ಷ ಗ್ಯಾರಂಟಿ ಯೋಜನೆಗಾಗಿ 39,675 ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು. +ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಸರ್ಕಾರವಿದ್ದರೆ ಅದು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಎಂದು ಸಮರ್ಥಿಸಿಕೊಂಡರು. ಹಾಲು ಉತ್ಪಾದನೆ ಕಡಿಮೆಯಾಗಿದೆ ಎಂದು ಅಶೋಕ್‍ರವರು ಹೇಳಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಹಾಲಿನ ಪ್ರಮಾಣ ಹೆಚ್ಚಳವಾಗಿದೆ ಎಂದು ಅಂಕಿಅಂಶಗಳ ಸಹಿತ ವಿವರಿಸಿದ ಅವರು, ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‍ಗೆ 5 ರೂ. ಪ್ರೋತ್ಸಾಹ ಧನ ನೀಡಲು 9 ತಿಂಗಳ ಅವಗೆ 1,772 ಕೋಟಿ ರೂ. ಒದಗಿಸಲಾಗಿತ್ತು. 971 ಕೋಟಿ ರೂ. ಈತನಕ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. \ No newline at end of file diff --git a/eesanje/url_46_231_1.txt b/eesanje/url_46_231_1.txt new file mode 100644 index 0000000000000000000000000000000000000000..38662cda71eb66a3aef14df098e09471ba7c3833 --- /dev/null +++ b/eesanje/url_46_231_1.txt @@ -0,0 +1,5 @@ +ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚು ಬೀಸಿದ ಪತಿ +ಬೆಂಗಳೂರು,ಫೆ.20- ಪತಿಯನ್ನು ತೊರೆದು ಪಿಜಿಯಲ್ಲಿದ್ದ ಪತ್ನಿಯ ನಡೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜೆಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದಿದೆ. ಪತಿ ಯಿಂದ ಹಲ್ಲೆಗೊಳಗಾದ ನಿಗರ್ (28) ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ವಾಹನ ಚಾಲಕ ವೃತ್ತಿ ಮಾಡುತ್ತಿದ್ದ ಶೇಖ್ ಮುಜೀಬ್ (37) ಆರು ವರ್ಷದ ಹಿಂದೆ ನಿಗರ್ ಅವರನ್ನು ಮದುವೆಯಾಗಿದ್ದನು. ದಂಪತಿ ನಡುವೆ ಹೊಂದಾಣಿಕೆ ಇರಲಿಲ್ಲ. ಪತ್ನಿ ಮೇಲೆ ಪತಿ ಅಕ್ರಮ ಸಂಬಂಧ ಶಂಕೆ ವ್ಯಕ್ತಪಡಿಸಿ ಜಗಳವಾಡುತ್ತಿದ್ದನು. 6 ತಿಂಗಳ ಹಿಂದೆ ಪತಿಯಿಂದ ಬೇರೆಯಾಗಿ ಮುರುಗೇಶ್ ಪಾಳ್ಯದ ಪಿಜಿಯಲ್ಲಿ ನಿಗಾರ್ ವಾಸವಾಗಿದ್ದಳು. ನಿನ್ನೆ ಸಂಜೆ ವಾಯು ವಿಹಾರಕ್ಕೆ ಹೋಗಿದ್ದ ನಿಗರ್ ಬರುವುದನ್ನೇ ಕಾಯುತ್ತಾ ಪತಿ ಮುಜೀಬ್ ನಿಂತಿದ್ದನು. +ಅಡ್ಜೆಸ್ಟ್‍ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್ +ವಾಯುವಿಹಾರ ಮುಗಿಸಿ ಸಂಜೆ 6.45ರ ಸುಮಾರಿನಲ್ಲಿ ಪಿಜಿ ಬಳಿ ಬರುತ್ತಿದ್ದಂತೆ ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚಿನಿಂದ ಏಕಾಏಕಿ ದಾಳಿ ಮಾಡಿ ಕೈ, ತಲೆ ಹಾಗೂ ದೇಹದ 25ಕ್ಕೂ ಹೆಚ್ಚು ಕಡೆ ಹಲ್ಲೆ ನಡೆಸಿ ಪರಾರಿಯಾಗಿದ್ದನು. ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿಗರ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಜೆಬಿ ನಗರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ಆರೋಪಿ ಶೇಖ್ ಮುಜಾಬ್‍ನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_231_10.txt b/eesanje/url_46_231_10.txt new file mode 100644 index 0000000000000000000000000000000000000000..64cc0fb8e12724edd1f61092170f3db70fadc75b --- /dev/null +++ b/eesanje/url_46_231_10.txt @@ -0,0 +1,5 @@ +ನಕಲಿ ಡಾಕ್ಟರೇಟ್ ಪಡೆದವರ ವಿರುದ್ಧ ಕ್ರಮ +ಬೆಂಗಳೂರು,ಫೆ.19- ವಿಶ್ವವಿದ್ಯಾನಿಲಯಗಳಿಂದ ನೀಡುವ ನಕಲಿ ಗೌರವ ಡಾಕ್ಟರೇಟ್ ಪದವಿಗಳನ್ನು ಪಡೆಯುವುದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಪಕವಾಗಿ ನಕಲಿ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. +ಇದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು. ನಕಲಿ ಗೌರವ ಡಾಕ್ಟರೇಟ್ ಕೊಡುವ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರ ಎಂದು ಮಂಜುನಾಥ್ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಾಕ್ಟರೇಟ್ ಪದವಿ ಪಡೆದವರು ಡಾಕ್ಟರ್ ಎಂದು ಹಾಕೊಳ್ಳಬಹುದಾ ಎಂಬುದರ ಬಗ್ಗೆ ಸುಪ್ರಿಂಕೋರ್ಟ್ ತೀರ್ಪು ಬರಲಿದೆ. ಉನ್ನತ ಶಿಕ್ಷಣ ಪರಿಷತ್ ಸಭೆ ಕರೆದು, ನಕಲಿ ಗೌರವ ಡಾಕ್ಟರೇಟ್ ಪಡೆಯವ ಪ್ರಕರಣಗಳಿಗೆ ಕಡಿವಾಣ ಹಾಕುತ್ತೇವೆ ಎಂದು ಆಶ್ವಾಸನೆ ನೀಡಿದರು. +ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ +ಜೊತೆಗೆ ಖಾಸಗಿ ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರ ಕರೆದು ಚರ್ಚೆ ಮಾಡುತ್ತೇವೆ. ಇಂತಹ ಪ್ರಕರಣಗಳು ಮರುಕಳಿಸಂತೆ ಸರ್ಕಾರ ಸೂಕ್ತ ಕ್ರಮ ಜರುಗಿಸಲಿದೆ ಎಂದು ಆಶ್ವಾಸನೆ ನೀಡಿದರು. \ No newline at end of file diff --git a/eesanje/url_46_231_11.txt b/eesanje/url_46_231_11.txt new file mode 100644 index 0000000000000000000000000000000000000000..37ccd7965a10759b76d8d1620443acbd5b0f295f --- /dev/null +++ b/eesanje/url_46_231_11.txt @@ -0,0 +1,8 @@ +49 ಹೊಸ ತಾಲ್ಲೂಕುಗಳಿಗೆ 2-3 ವರ್ಷಗಳಲ್ಲಿ ಆಡಳಿತ ಕಚೇರಿ ನಿರ್ಮಾಣ +ಬೆಂಗಳೂರು,ಫೆ.19- ರಾಜ್ಯದ 49 ಹೊಸ ತಾಲೂಕುಗಳಿಗೆ 2-3 ವರ್ಷದಲ್ಲಿ ಆಡಳಿತ ಕಚೇರಿ ನಿರ್ಮಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಸಭೆಗೆ ಭರವಸೆ ನೀಡಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಯು.ಬಿ.ಬಣಕರ್ ಪರವಾಗಿ ಶಾಸಕ ಪ್ರಕಾಶ ಕೋಳೀವಾಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 63 ಹೊಸ ತಾಲೂಕುಗಳು ಮಂಜೂರಾಗಿವೆ. ಆದರೆ 14 ತಾಲೂಕುಗಳಿಗೆ ಮಾತ್ರ ಆಡಳಿತ ಕಚೇರಿ ಮಂಜೂರಾಗಿದೆ. ಉಳಿದ 49 ಹೊಸ ತಾಲೂಕುಗಳಿಗೆ ಹಿಂದಿನ ಸರ್ಕಾರದಲ್ಲಿ ಆಡಳಿತ ಕಚೇರಿ ಮಂಜೂರಾಗಿಲ್ಲ ಎಂದರು. +ರಾಜ್ಯದಲ್ಲಿ ಹಳೆಯ ಕೆಲವು ತಾಲೂಕುಗಳಲ್ಲಿ ಆಡಳಿತ ತಾಲೂಕು ಕಚೇರಿ ಬೇಡಿಕೆಯಿದೆ. ಒಟ್ಟಾರೆ 80 ರಿಂದ 100 ತಾಲೂಕು ಆಡಳಿತ ಕಚೇರಿಗೆ ಬೇಡಿಕೆಯಿದೆ. ಅನುದಾನದ ಲಭ್ಯತೆ ಆಧಾರದ ಮೇಲೆ ಆಡಳಿತ ಕಚೇರಿಗಳನ್ನು ನಿರ್ಮಾಣ ಮಾಡಲಾಗುವುದು. ಆಡಳಿತ ಕಚೇರಿಯ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಗಲುವ ವೆಚ್ಚವನ್ನು ತಯಾರು ಮಾಡಲಾಗುತ್ತಿದೆ. ಒಂದು ಕಟ್ಟಡ ನಿರ್ಮಾಣಕ್ಕೆ ಮಾದರಿ ಅಂದಾಜು ವೆಚ್ಚ ಸಿದ್ದಪಡಿಸಲಾಗುವುದು. ಇಲ್ಲದಿದ್ದರೆ ಅಂದಾಜು ವೆಚ್ಚ ಪರಿಷ್ಕರಣೆಯಾಗಬೇಕಾಗುತ್ತದೆ. ಸದ್ಯಕ್ಕೆ 10 ಕೋಟಿ ರೂ. ಇದ್ದು, ಅದನ್ನು ವಾಸ್ತವಿಕ ಅಂದಾಜು ವೆಚ್ಚದ ಆಧಾರದ ಮೇಲೆ ಪರಿಷ್ಕರಣೆ ಮಾಡಲಾಗುತ್ತದೆ. ಈ ಸಂಬಂಧ ಲೋಕೋಪಯೋಗಿ ಮತ್ತು ಗೃಹಮಂಡಳಿಯ ಎಂಜಿನಯರ್‍ಗಳ ಜೊತೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಹೇಳಿದರು. +ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ +ಒಂದು ಸಾವಿರ ಗ್ರಾಮ ಆಡಳಿತಾಕಾರಿ ನೇಮಕ:ಇನ್ನೊಂದು ತಿಂಗಳಿನಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಸಕ ಕಿರಣ್‍ಕುಮಾರ್ ಕೋಡ್ಗಿ ಅವರ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದರು.ಕಂದಾಯ ಇಲಾಖೆಯಿಂದ ನಿಯೋಜನೆ ಮೇಲೆ ಹೋಗಲು 2 ಸಾವಿರ ಹುದ್ದೆಗಳಿಗೆ ಬೇಡಿಕೆಯಿದೆ. ಆದರೆ ನಾನು ಅವಕಾಶ ಮಾಡಿಕೊಟ್ಟಿಲ್ಲ. ಕಣ್ತಪ್ಪಿಸಿ ಅಧಿಕಾರಿಗಳು ಕೆಲವೊಂದು ನಿಯೋಜನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು. +ಕುಂದಾಪುರ ತಾಲೂಕು ಕಚೇರಿಯಲ್ಲಿ 19 ಹುದ್ದೆಗಳ ಸಿಬ್ಬಂದಿ ನಿಯೋಜನೆ ಮೇಲೆ ಬೇರೆಡೆ ಕೆಲಸ ಮಾಡುತ್ತಿದ್ದಾರೆ. ಹಿಂದೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ತೀರಾ ಅನಿವಾರ್ಯ ಎನಿಸಿದ ಐವರನ್ನು ಹೊರತುಪಡಿಸಿ ಉಳಿದ 14 ಮಂದಿ ಸಿಬ್ಬಂದಿಯ ನಿಯೋಜನೆಯನ್ನು ರದ್ದುಪಡಿಸಿ ಮೂಲ ಸ್ಥಾನಕ್ಕೆ ಮರಳುವಂತೆ ಸೂಚಿಸಲಾಗುವುದು. ಇದು ಕೇವಲ ಕುಂದಾಪುರಕ್ಕೆ ಸೀಮಿತವಾಗುವುದಿಲ್ಲ. ವ್ಯಕ್ತಿ ಹಿತಕ್ಕಿಂತ ಸಾರ್ವಜನಿಕರ ಹಿತ ಮುಖ್ಯ ಎಂದರು. +ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ +ಕುಂದಾಪುರ ತಾಲೂಕು ಕಚೇರಿಯಲ್ಲಿ 110 ಹುದ್ದೆಗಳು ಮಂಜೂರಾಗಿದ್ದು, 70 ಹುದ್ದೆಗಳು ಭರ್ತಿಯಾಗಿವೆ. 36 ಹುದ್ದೆಗಳು ಖಾಲಿ ಇವೆ. ಭರ್ತಿಯಾದ ಹುದ್ದೆಗಳಲ್ಲಿ 19 ಜನರು ನಿಯೋಜನೆ ಮೇಲೆ ಬೇರೆಡೆ ಕೆಲಸ ಮಾಡುತ್ತಿರುವುದು ತಪ್ಪು. ಕಂದಾಯ ಇಲಾಖೆಯಲ್ಲಿ ಜನರ ಕೆಲಸಗಳು ಹೆಚ್ಚಾಗಿರುತ್ತವೆ. ಆದರೂ ಕಳೆದ ಸರ್ಕಾರದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ನಿಯೋಜನೆ ಮೇಲೆ ಬೇರೆಡೆಗೆ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು. ಕಂದಾಯ ಇಲಾಖೆಯ ಸಿಬ್ಬಂದಿಗೆ 2014 ರಿಂದ ಕಂದಾಯ ವಿಷಯಗಳಿಗೆ ಸಂಬಂಧಿಸಿದಂತೆ ತರಬೇತಿ ನೀಡಿಲ್ಲ. ಹೀಗಾಗಿ ಗ್ರಾಮ ಲೆಕ್ಕಿಗರಿಗೆ ನಿಯಮ ಗೊತ್ತಿಲ್ಲ. ಈ ಸಂಬಂಧ ಒಂದು ಯೋಜನೆ ರೂಪಿಸಿ ಸರ್ಕಾರದಿಂದ ತರಬೇತಿ ನೀಡಲಾಗುವುದು ಎಂದರು. \ No newline at end of file diff --git a/eesanje/url_46_231_12.txt b/eesanje/url_46_231_12.txt new file mode 100644 index 0000000000000000000000000000000000000000..2f6d6291c8ee528ed67a31ab7164564278de5f22 --- /dev/null +++ b/eesanje/url_46_231_12.txt @@ -0,0 +1,7 @@ +ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ +ಬೆಂಗಳೂರು,ಫೆ.19- ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ ಪೂರ್ವಭಾವಿ ಪ್ರಸ್ತಾಪ ಮಾಡುತ್ತಾ, ರಾಜ್ಯದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಬೋರ್‍ವೆಲ್‍ಗಳಲ್ಲಿ ಬತ್ತಿಹೋಗಿವೆ. ಅಂತರ್ಜಲ ಕುಸಿದಿದೆ. ರಾಜ್ಯದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿದ ಸಮಸ್ಯೆ ತೀವ್ರವಾಗಿದೆ. ಜಲಕ್ಷಾಮ ಉಂಟಾಗಿದೆ. ಬೇಸಿಗೆಗೂ ಮುನ್ನವೇ ಇಂಥ ಗಂಭೀರ ಪರಿಸ್ಥಿತಿಯನ್ನು ರಾಜ್ಯ ಅನುಭವಿಸುತ್ತಿದೆ. +ಕಳೆದ 30 ವರ್ಷಗಳಿಗೆ ಹೋಲಿಸಿದರೆ ಗರಿಷ್ಠ ತಾಪಮಾನ 2 ಡಿಗ್ರಿಯಷ್ಟು ಹೆಚ್ಚಾಗಿದೆ ಎಂಬುದನ್ನು ತಜ್ಞರು ಹೇಳಿದ್ದಾರೆ. ಕೆಆರ್‍ಎಸ್, ಆಲಮಟ್ಟಿ ಭದ್ರ ಸೇರಿದಂತೆ ಎಲ್ಲಾ ಜಲಾಶಯಗಳಲ್ಲೂ ನೀರಿನ ಸಂಗ್ರಹ ಕಡಿಮೆಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅರ್ಧದಷ್ಟಿದೆ. ಇದು ಎಲ್ಲ ಕ್ಷೇತ್ರಗಳ ಶಾಸಕರ ಸಮಸ್ಯೆಯಾಗಿದೆ. ಸರ್ಕಾರ ತಕ್ಷಣ ಈ ವಿಚಾರದಲ್ಲಿ ಗಮನಹರಿಸಬೇಕು ಎಂದು ಒತ್ತಾಯಿಸಿದರು. +ಲಿಂಗಾಪುರ ಎಂಬ ಗ್ರಾಮದಲ್ಲಿ 1100 ಜನಸಂಖ್ಯೆ ಇದ್ದು 800 ಮಂದಿ ನೀರಿಲ್ಲದೆ ಗ್ರಾಮ ತೊರೆದು ಗುಳೇ ಹೋಗಿದ್ದಾರೆ. ಗೋವಾ, ಮಂಗಳೂರು ಕಡೆ ಉದ್ಯೋಗ ಹರಸಿ ಗುಳೇ ಹೋಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಹಣವಿದ್ದರೆ ಹೊಸ ಬೋರ್‍ವೆಲ್ ಕೊರೆಯಲು ಸಾಧ್ಯವಿಲ್ಲ. ಇರುವ ಬೋರ್‍ವೆಲ್‍ಗಳನ್ನು ಡ್ರಿಲ್ ಮಾಡಬಹುದು ಅಷ್ಟೇ ಇನ್ನು ಮುಂದಿನ ನಾಲ್ಕು ತಿಂಗಳು ಕಷ್ಟಕರವಾಗಿದೆ. ಒಂದು 500 ರೂ.ಗಿದ್ದ ಟ್ಯಾಂಕರ್ ನೀರು 3ರಿಂದ ನಾಲ್ಕು ಸಾವಿರ ರೂ.ಗೆ ಹೆಚ್ಚಳವಾಗಿದೆ. ಹೀಗಾಗಿ ಪ್ರತಿ ಗ್ರಾಮಪಂಚಾಯ್ತಿಯಲ್ಲೂ ಹೊಸ ಬೋರ್‍ವೆಲ್ ಕೊರೆಯಲು ಅನುಕೂಲವಾಗುವಂತೆ ಆದೇಶ ಮಾಡಬೇಕು. ಪ್ರತಿ ಗ್ರಾಮಪಂಚಾಯ್ತಿಗೆ 10 ಲಕ್ಷ ರೂ. ನೀಡಬೇಕೆಂದು ಆಗ್ರಹಿಸಿ ಹೆಚ್ಚಿನ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. +ಸರ್ಕಾರ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ : ಬೊಮ್ಮಾಯಿ +ಇದನ್ನು ಬೆಂಬಲಿಸಿದ ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಇದೊಂದು ಗಂಭೀರವಾದ ವಿಚಾರ. ಜನಜಾನುವರುಗಳಿಗೆ ತೊಂದರೆಯಾಗಿದೆ. ಜೀವನದಿಗಳಾಗಿದ್ದ ತುಂಗಾ ಭದ್ರ ನದಿಗಳು ಭತ್ತಿ ಹೋಗಿದ್ದು, ಮಲೆನಾಡಿನಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಳೇ ಹೋಗುವ ಪರಿಸ್ಥಿತಿ ಇದೆ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. +ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಕುಡಿಯುವ ನೀರಿನ ವಿಚಾರದ ಚರ್ಚೆಗೆ ತಕರಾರಿಲ್ಲ. ಸಭಾಧ್ಯಕ್ಷರು ಯಾವ ರೂಪದಲ್ಲಿ ಚರ್ಚೆಗೂ ಕೊಟ್ಟರೂ ಸರ್ಕಾರ ಸಿದ್ದವಿದೆ ಎಂದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಈ ವಿಚಾರವನ್ನು ನಿಲುವಳಿ ಸೂಚನೆಗೆ ಬದಲಾಗಿ ನಿಯಮ 69ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು. \ No newline at end of file diff --git a/eesanje/url_46_231_2.txt b/eesanje/url_46_231_2.txt new file mode 100644 index 0000000000000000000000000000000000000000..11ad0f83bccf655956eba2959402e31ce85125f3 --- /dev/null +++ b/eesanje/url_46_231_2.txt @@ -0,0 +1,7 @@ +ಸಿಎಂ ಉತ್ತರಕ್ಕೆ ಅತೃಪ್ತಿ : ಬಿಜೆಪಿ – ಜೆಡಿಎಸ್ ಸಭಾತ್ಯಾಗ +ಬೆಂಗಳೂರು,ಫೆ.20- ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣಾ ಪ್ರಸ್ತಾವ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರ ತೃಪ್ತಿದಾಯಕವಾಗದೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿಂದು ಸಭಾತ್ಯಾಗ ಮಾಡಿದರು. ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳು ಸೇರಿದಂತೆ ರಾಜ್ಯಪಾಲರ ಭಾಷಣವನ್ನು ಬಲವಾಗಿ ಸಮರ್ಥಿಸಿಕೊಂಡು ಉತ್ತರ ನೀಡುತ್ತಿದ್ದರು. ಮುಖ್ಯಮಂತ್ರಿ ನೀಡುವ ಉತ್ತರ ಸಮಂಜಸವಾಗಿಲ್ಲ. ರಾಜ್ಯಪಾಲರ ಭಾಷಣಕ್ಕೆ ಪೂರಕವಾಗಿ ಉತ್ತರ ನೀಡುವ ಬದಲು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕರು ಆರೋಪಿಸಿದರು. +ಕೆಲವು ಸ್ಪಷ್ಟನೆಗಳನ್ನು ಬಿಜೆಪಿ ಶಾಸಕರು ಕೇಳಿದಾಗ ಅದಕ್ಕೆ ಮುಖ್ಯಮಂತ್ರಿಯವರು ನೀಡಿದ ಉತ್ತರ ಪ್ರತಿಪಕ್ಷ ಸದಸ್ಯರನ್ನು ಸಮಾಧಾನಪಡಿಸಲಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಬೆಳೆ ಪರಿಹಾರ ಧನ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆರೋಪಿಸಿದರು. +ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ +ಕೇವಲ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಾ ಪ್ರತಿಪಕ್ಷಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಉತ್ತರ ನೀಡುತ್ತಿರುವುದು ನಮಗೆ ತೃಪ್ತಿ ತಂದಿಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿ ಹೊರನಡೆದರು. ಆಗ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಎಲ್ಲಾ ಸುಳ್ಳು ಎಂದು ಹೇಳಿ ಹೊರನಡೆದರು. ಬಳಿಕ ಜೆಡಿಎಸ್ ಶಾಸಕರೂ ಕೂಡ ಅವರನ್ನು ಹಿಂಬಾಲಿಸಿದರು. +ನಂತರ ಪ್ರತಿಪಕ್ಷಗಳ ವಿರುದ್ಧ ಖಾರವಾಗಿ ಮಾತನಾಡಿದ ಮುಖ್ಯಮಂತ್ರಿ, ಇವರಿಗೆ ನಾಚಿಕೆಯಾಗಬೇಕು. ಕೇಂದ್ರಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ಕೇಂದ್ರದಿಂದ ಬರಪರಿಹಾರಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಂದು ರೂಪಾಯಿ ಹಣವನ್ನೂ ಬಿಡುಗಡೆ ಮಾಡಿಲ್ಲ. ನಾವು ಕೊಟ್ಟ ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ಒಂದು ಸಭೆಯನ್ನೂ ಕೂಡ ನಡೆಸಿಲ್ಲ ಎಂದು ವಾಗ್ದಾಳಿ ನಡೆಸಿದರು.ರೈತರು, ಬಡವರು, ದಲಿತರು, ಕಾರ್ಮಿಕರು, ಅಲ್ಪಸಂಖ್ಯಾತರು, ಸಂವಿಧಾನ ವಿರೋಧಿ ಎಂದು ಆರೋಪಿಸಿದ ಅವರು, ನಾವು ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿರುವುದಾಗಿ ತಿಳಿಸಿದರು. +ನಂತರ ರಾಜ್ಯಪಾಲರು ಉಭಯ ಸದನಗಳ ಸಭೆಯನ್ನುದ್ದೇಶಿಸಿ ಮಾಡಿದ ಭಾಷಣಕ್ಕೆ ಕೃತಜ್ಞತಾ ಪೂರಕ ವಂದನೆಗಳನ್ನು ಸಲ್ಲಿಸುವ ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದರು. ಆಗ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಮತಕ್ಕೆ ಹಾಕಿದಾಗ ಧ್ವನಿ ಮತದ ಅಂಗೀಕಾರ ದೊರೆಯಿತು. \ No newline at end of file diff --git a/eesanje/url_46_231_3.txt b/eesanje/url_46_231_3.txt new file mode 100644 index 0000000000000000000000000000000000000000..15a08cfb4397d0260994692dc8f5bb6936863917 --- /dev/null +++ b/eesanje/url_46_231_3.txt @@ -0,0 +1,5 @@ +ರಾಜ್ಯಪಾಲರನ್ನು ಹಾಡಿ ಹೊಗಳಿದ ಸಿಎಂ ಸಿದ್ದು +ಬೆಂಗಳೂರು,ಫೆ.20- ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಡಿ ಹೊಗಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುತ್ತಿದ್ದ ಮುಖ್ಯಮಂತ್ರಿಯವರು ಕೇರಳ ಮತ್ತು ತಮಿಳುನಾಡಿನಲ್ಲಿ ಅಲ್ಲಿನ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಓದದೇ ತಮ್ಮದೇ ಅಭಿಪ್ರಾಯವನ್ನು ಮಂಡಿಸಿದ್ದಾರೆ ಅಥವಾ ಭಾಷಣ ಮಾಡದೇ ಹೊರನಡೆದಿದ್ದಾರೆ. ನಮ್ಮ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಆ ರೀತಿ ಮಾಡಿಲ್ಲ. ಸರ್ಕಾರದ ನಿಲುವು, ನೀತಿ, ಮುನ್ನೋಟ ಕಾರ್ಯಕ್ರಮವನ್ನು ಸ್ಪಷ್ಟವಾಗಿ ಸದನದ ಮುಂದಿಟ್ಟಿದ್ದಾರೆ ಎಂದರು. +ಈ ಮೂಲಕ ರಾಜ್ಯಪಾಲರು ತಮ್ಮ ಸ್ಥಾನದ ಗೌರವವನ್ನು ಉಳಿಸಿಕೊಂಡಿರುವುದಲ್ಲದೆ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದರು. ಸರ್ಕಾರ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದೆ. ರಾಜ್ಯಪಾಲರ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಂದಾಗ ಬಸವರಾಜ ಬೊಮ್ಮಾಯಿ ಆರೋಪಿಸಿದರು. +ನೆಲದಡಿ ಕುಕ್ಕರ್‌ನಲ್ಲಿ ಅಡಗಿಸಿಟ್ಟಿದ 2 ಕೆಜಿ ಸ್ಪೋಟಕ ವಶ +ನಾವು ಯಾರ ಒಳ್ಳೆಯತನವನ್ನೂ ದುರುಪಯೋಗಪಡಿಸಿಕೊಳ್ಳುವುದಿಲ್ಲ. ನಿಮ್ಮ ಒಳ್ಳೆಯತನವನ್ನು ಈವರೆಗೂ ದುರುಪಯೋಗ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿಯವರು ಬಸವರಾಜ ಬೊಮ್ಮಾಯಿಯವರಿಗೆ ತಿರುಗೇಟು ನೀಡಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಪಾಲರನ್ನು ಹೊಗಳಿದರೂ ಬಿಜೆಪಿಯವರಿಗೆ ಸಹಿಸಲಾಗುತ್ತಿಲ್ಲ ಎಂದು ಲೇವಡಿ ಮಾಡಿದರು. \ No newline at end of file diff --git a/eesanje/url_46_231_4.txt b/eesanje/url_46_231_4.txt new file mode 100644 index 0000000000000000000000000000000000000000..e6148c9854fd52b30cb9a421338667eecf219494 --- /dev/null +++ b/eesanje/url_46_231_4.txt @@ -0,0 +1,6 @@ +ಅಡ್ಜೆಸ್ಟ್‍ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್ +ಬೆಂಗಳೂರು,ಫೆ.20- ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿರುವ ಅಡ್ಜೆಸ್ಟ್‍ಮೆಂಟ್ ಗಿರಾಕಿಗಳಿಂದಾಗಿ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸೋಲಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ನಡೆದ ಚರ್ಚೆಗೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಚುನಾವಣಾ ಫಲಿತಾಂಶಗಳ ಬಗ್ಗೆ ಚರ್ಚೆಯಾಯಿತು. ರಾಜ್ಯದ ಜನ ನಮಗೆ ಸ್ಪಷ್ಟ ಬಹುಮತ ಕೊಟ್ಟು ಆಯ್ಕೆ ಮಾಡಿದ್ದಾರೆ. +ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಬಿಜೆಪಿಯವರು ಪ್ರಧಾನಮಂತ್ರಿ ನರೇಂದ್ರಮೋದಿಯವರನ್ನು ರಾಜ್ಯಕ್ಕೆ ಕರೆತಂದು ಗೆಲ್ಲಿಸುತ್ತಿದ್ದರು. ಲೆಕ್ಕವಿಲ್ಲದಷ್ಟು ಸಭೆಗಳು, ರೋಡ್ ಶೋ ಮಾಡಿಸಿದರು. ಆದರೂ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದಾಗ, 2018 ರಲ್ಲಿ ನೀವು ಮುಖ್ಯಮಂತ್ರಿಯಾಗಿದ್ದಾಗಲೂ ಜನ ತಿರಸ್ಕಾರ ಮಾಡಿದರು. ಲೋಕಸಭೆಯಲ್ಲಿ ನಿಮಗೆ ವಿರೋಧಪಕ್ಷದ ಮಾನ್ಯತೆ ಗಳಿಸುವಷ್ಟು ಸ್ಥಾನಗಳು ಸಿಕ್ಕಿಲ್ಲ ಎಂದು ಆರ್.ಅಶೋಕ್ ಕಿಚಾಯಿಸಿದರು. +ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ +2018 ರ ಸೋಲನ್ನು ನಾವು ತಲೆಬಾಗಿ ಸ್ವೀಕರಿಸುತ್ತೇವೆ. ಈಗಿನ ಸೋಲನ್ನು ಒಪ್ಪಿಕೊಳ್ಳುವ ಉದಾರತೆಯನ್ನು ಬಿಜೆಪಿ ಪ್ರದರ್ಶಿಸಬೇಕು ಎಂದು ಸಿದ್ದರಾಮಯ್ಯ ತಿಳಿ ಹೇಳಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಸನಗೌಡ ಪಾಟೀಲ ಯತ್ನಾಳ್, ಬಸವರಾಜ ಬೊಮ್ಮಾಯಿ ಮಾಡಿದ ಕೆಲಸವನ್ನು ನಮ್ಮ ಪಕ್ಷದ ಬಿಜೆಪಿ ನಾಯಕರು ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಾಳು ಮಾಡಿದರು. ಚುನಾವಣೆ ಸೋಲಿಗೆ ಬೊಮ್ಮಾಯಿ ಆಗಲೀ, ಮೋದಿಯಾಗಲೀ ಕಾರಣ ಅಲ್ಲ ಅಡ್ಜೆಸ್ಟ್‍ಮೆಂಟ್ ಗಿರಾಕಿಗಳು ಕಾರಣ ಎಂದು ಕಿಡಿಕಾರಿದರು. +ಹೊಂದಾಣಿಕೆ ಯಾರು ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಹೆಸರು ಉಲ್ಲೇಖಿಸಬೇಕು. ಪ್ರತಿಬಾರಿಯೂ ಹೇಳಿದ್ದನ್ನೇ ಹೇಳಿ ಗೌಪ್ಯವಾಗಿಡಬಾರದು ಎಂದು ತರಾಟೆಗೆ ತೆಗೆದುಕೊಂಡಾಗ ಈಗಾಗಲೇ ನಾನು ಮಾಧ್ಯಮಗಳ ಮೂಲಕ ಘಂಟಾಘೋಷವಾಗಿ ಸತ್ಯ ಹೇಳಿದ್ದೇನೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರು ವಂಶ ವಾದ ಹಾಗೂ ಭ್ರಷ್ಟಾಚಾರದ ಆಡಳಿತವನ್ನು ಕಿತ್ತು ಹಾಕುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_231_5.txt b/eesanje/url_46_231_5.txt new file mode 100644 index 0000000000000000000000000000000000000000..a692d180cb1ff8e1638214a5e1c95dd0b5ba220c --- /dev/null +++ b/eesanje/url_46_231_5.txt @@ -0,0 +1,7 @@ +ತೆರಿಗೆ ತಾರತಮ್ಯದ ವಿರುದ್ಧ ಧ್ವನಿ ಎತ್ತದಿರುವುದು 7 ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ; ಸಿಎಂ +ಬೆಂಗಳೂರು,ಫೆ.20- ಕೇಂದ್ರದಿಂದಾಗುತ್ತಿರುವ ಆರ್ಥಿಕ ತಾರತಮ್ಯದ ವಿರುದ್ಧ ಧ್ವನಿ ಎತ್ತದೇ ಇರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡಿದ ಅನ್ಯಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿಂದು ಉತ್ತರ ನೀಡಿದ ಮುಖ್ಯಮಂತ್ರಿಯವರು, ತಮ್ಮ ಸರ್ಕಾರ ಆಡಳಿತಕ್ಕೆ ಬಂದು ಇಂದಿಗೆ 9 ತಿಂಗಳಾಗಿವೆ. ರಾಜ್ಯಪಾಲರು ಸರ್ಕಾರದ ನಿಲುವು, ಮುನ್ನೋಟ, ನೀತಿಯನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದರು. +ರಾಜ್ಯದಲ್ಲಿ ಬರಪರಿಸ್ಥಿತಿ ಇದೆ. ಪರಿಹಾರ ನೀಡಿ ಎಂದು ನಾನು ಖುದ್ದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‍ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ರಾಜ್ಯಸರ್ಕಾರದಿಂದ 17 ಬಾರಿ ಪತ್ರ ಬರೆದಿದ್ದೇವೆ. ಒಂದು ಬಾರಿ ಮಾತ್ರ ಅಮಿತ್ ಷಾ ನಿಮ್ಮ ಪತ್ರ ತಲುಪಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಉಳಿದ 16 ಪತ್ರಗಳನ್ನು ಕಡೆಗಣಿಸಿದ್ದಾರೆ. ಇದನ್ನು ಒಕ್ಕೂಟ ವ್ಯವಸ್ಥೆ ಎಂದು ಕರೆಯಬೇಕೆ ಎಂದು ಪ್ರಶ್ನಿಸಿದರು. +ರಾಹುಲ್ ಸಲಹೆ ಮೇರೆಗೆ ಕೇರಳದ ಕುಟುಂಬಕ್ಕೆ ಕರ್ನಾಟಕ ಪರಿಹಾರ; ವಿಜಯೇಂದ್ರ ಖಂಡನೆ +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಐದು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಪ್ರಮಾಣವನ್ನು 100 ರಿಂದ 150 ಕ್ಕೆ ಹೆಚ್ಚಿಸುವಂತೆ ಮನವಿ ಕೊಟ್ಟಿದ್ದಾರೆ. ಕಂದಾಯ ಸಚಿವರೂ ಹಲವು ಬಾರಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಯಾವುದಕ್ಕೂ ಕೇಂದ್ರ ಸ್ಪಂದಿಸಿಲ್ಲ. ಮೊದಲ ಬಾರಿಗೆ 2023 ರ ಅಕ್ಟೋಬರ್ 20 ರಂದು ಬರ ನಿರ್ವಹಣೆಗೆ ನೆರವು ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. +ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ +4 ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಬಳಿಕ ನವೆಂಬರ್ 16 ರಂದು ಎರಡನೇ ಬಾರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಈಗಲೂ ಕೇಂದ್ರದಿಂದ ಉತ್ತರ ಇಲ್ಲ. ಈ ಅನ್ಯಾಯವನ್ನು ಬಿಜೆಪಿಯವರಂತೂ ಕೇಳುತ್ತಿಲ್ಲ. ನಾವೂ ಕೇಳಬಾರದೆ ಎಂದು ಪ್ರಶ್ನಿಸಿದರು. ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದಿಂದ ಸಂಘರ್ಷ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ. ಇಡೀ ಸದನ ಒಟ್ಟಾಗಿ ನ್ಯಾಯ ಕೇಳಬೇಕಿದೆ. ನಾವು ಯಾರ ಜೊತೆಯೂ ಸಂಘರ್ಷ ಮಾಡುತ್ತಿಲ್ಲ. ನಮಗೆ ದೊರೆಯಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_231_6.txt b/eesanje/url_46_231_6.txt new file mode 100644 index 0000000000000000000000000000000000000000..6c0d897f3a01cdbcc1d99276a0fcb95d7a156ea6 --- /dev/null +++ b/eesanje/url_46_231_6.txt @@ -0,0 +1,8 @@ +ವಿಧಾನಸಭೆಯಲ್ಲಿ ಸುಳ್ಳು-ಸತ್ಯಗಳ ಸಂಘರ್ಷ +ಬೆಂಗಳೂರು,ಫೆ.20- ಆಡಳಿತ ಮತ್ತು ಪ್ರತಿಪಕ್ಷದ ನಡುವೆ ಸುಳ್ಳು ಮತ್ತು ಸತ್ಯದ ಜಂಜಾಟ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ರಾಜ್ಯಪಾಲರು ವಿಧಾಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಫೆ.12 ರಂದು ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಸುದೀರ್ಘ ಉತ್ತರ ನೀಡಿದರು. +ವಿಪಕ್ಷಗಳು ರಾಜ್ಯಪಾಲರ ಭಾಷಣ ಸುಳ್ಳು ಎಂದು ಆರೋಪಿಸಿವೆ. ಆದರೆ ಯಾವ ಹೇಳಿಕೆಗಳು ಸುಳ್ಳು ಎಂದು ಸ್ಪಷ್ಟವಾಗಿ ತಿಳಿಸಿಲ್ಲ. ಏನೋ ಹೇಳಿಕೆ ನೀಡಬೇಕು ಎಂದು ಟೀಕೆ ಮಾಡುತ್ತಿದ್ದಾರೆ. ವಿರೋಧಪಕ್ಷಗಳು ಸರ್ಕಾರವನ್ನು ಹೊಗಳಬೇಕು ಎಂದು ಬಯಸುವುದಿಲ್ಲ. ಆದರೆ ಆಧಾರರಹಿತವಾದ ಸುಳ್ಳು ಹೇಳುವುದು ಸರಿಯಲ್ಲ. ಬಿಜೆಪಿಯವರಿಗೆ ಸುಳ್ಳೇ ಮನೆದೇವರು. ಅವರಿಗೆ ಸತ್ಯ ಹೇಳುವುದು ಗೊತ್ತಿಲ್ಲ ಎಂದು ತಿರುಗೇಟು ನೀಡಿದರು. ಇದಕ್ಕೆ ವಿರೋಧಪಕ್ಷಗಳಿಂದ ಆರ್.ಅಶೋಕ್, ಬಸವರಾಜುಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್ ಮತ್ತಿತರರು ತಿರುಗೇಟು ನೀಡಿ ರಾಜ್ಯಪಾಲರ ಭಾಷಣದಲ್ಲಿ ಎಲ್ಲವೂ ಸುಳ್ಳೇ ಆಗಿದೆ. ಸತ್ಯ ಯಾವುದು ಎಂದು ಹುಡುಕಬೇಕಾಗಿದೆ ಎಂದು ತಿರುಗೇಟು ನೀಡಿದರು. +ಇದಕ್ಕೆ ಪ್ರತ್ಯುತ್ತರಿಸಿದ ಮುಖ್ಯಮಂತ್ರಿಯವರು, ವಿರೋಧಪಕ್ಷಗಳು ಅದರಲ್ಲೂ ವಿಪಕ್ಷದ ನಾಯಕರು ಅಂಕಿ ಅಂಶಗಳ ಸಮೇತ ಮಾತನಾಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ಬಸವರಾಜು ಬೊಮ್ಮಾಯಿಯವರು ಆ ರೀತಿ ಮಾತನಾಡಿಲ್ಲ. ಅವರು ಹೊರಗಡೆ ನಿಜ ಹೇಳುತ್ತಾರೆ. ಸದನದ ಒಳಗಡೆ ರಾಜಕೀಯಕ್ಕಾಗಿ ಟೀಕೆ ಮಾಡುತ್ತಾರೆ ಎಂದು ಕಿಚಾಯಿಸಿದರು. +ಅದಕ್ಕೆ ತಿರುಗೇಟು ನೀಡಿದ ಬಸವರಾಜು ಬೊಮ್ಮಾಯಿ, ನಾವು-ನೀವು ಜೊತೆಯಲ್ಲೇ ಇದ್ದವರು. ಹೀಗಾಗಿ ನೀವು ಏನು ಮಾಡುತ್ತೀರೋ ನಾವೂ ಅದನ್ನೇ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಅವರನ್ನು ಥಳಕು ಹಾಕಿಕೊಳ್ಳಲು ಯತ್ನಿಸಿದರು. ಆದರೆ ಇದಕ್ಕೆ ತಲೆಕೆಡಿಸಿಕೊಳ್ಳದ ಮುಖ್ಯಮಂತ್ರಿಯವರು, ಬಿಜೆಪಿಯವರು ಪ್ರತಿಬಾರಿಯೂ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಒಂದಂಶವನ್ನಾದರೂ ನೀವು ಸುಳ್ಳು ಎಂದು ತೋರಿಸಿ ಎಂದು ಸವಾಲು ಹಾಕಿದರು. +ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ +ಅದಕ್ಕೆ ಪ್ರತ್ಯುತ್ತರಿಸಿದ ಬೊಮ್ಮಾಯಿ, ಹಿಂದಿನ ಸರ್ಕಾರದ ಅವಯಲ್ಲಿ ಸಾರಿಗೆ ಸಂಸ್ಥೆಗಳಿಗೆ ಒಂದು ಬಸ್ಸನ್ನೂ ಖರೀದಿಸಲಿಲ್ಲ ಎಂದು ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇದು ಸುಳ್ಳು. ಬಿಎಂಟಿಸಿಗೆ 1311 ಬಸ್‍ಗಳನ್ನು ಕೆಎಸ್‍ಆರ್‍ಟಿಸಿಗೆ 70 ಕ್ಕೂ ಹೆಚ್ಚು ಬಸ್ಸುಗಳನ್ನು ಖರೀದಿಸಿ ನೀಡಲಾಗಿತ್ತು. ಪಂಚಖಾತ್ರಿಗಳ ಜೊತೆಗೆ ಶೇ.97 ರಷ್ಟು ಬಜೆಟ್ ಘೋಷಣೆಗೆ ಅಧಿಸೂಚನೆ ಹೊರಡಿಸಿದ್ದೇವೆ ಎಂದು ರಾಜ್ಯಪಾಲರ ಮೂಲಕ ತಿಳಿಸಿದ್ದಾರೆ.ಆದರೆ ಆರ್ಥಿಕ ಸಮೀಕ್ಷಾ ವರದಿಯಲ್ಲಿ ಶೇ.55 ರಷ್ಟು ಪ್ರಗತಿಯಾಗಿಲ್ಲ ಎಂದು ಉಲ್ಲೇಖಿಸಲಾಗಿದೆ. ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಿಲ್ಲ ಎಂದು ಉಲ್ಲೇಖಿಸಿದರು. +ನಿಮ್ಮ ಎಲ್ಲಾ ಪ್ರಶ್ನೆಗೂ ಹಂತಹಂತವಾಗಿ ಉತ್ತರ ಕೊಡುತ್ತೇನೆ ಎಂದ ಮುಖ್ಯಮಂತ್ರಿಯವರು, ಗಲಾಟೆ ಮಾಡುವುದೇ ವಿರೋಧಪಕ್ಷಗಳ ಕೆಲಸವಾಗಬಾರದು, ಉತ್ತರ ಕೇಳಲು ಇಷ್ಟವಿಲ್ಲ ಎಂದರೆ ಸುಮ್ಮನೆ ಕುಳಿತುಕೊಳ್ಳಿ ಎಂದು ತಿರುಗೇಟು ನೀಡಿದರು. ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿಯವರ ಪ್ರತಿಯೊಂದು ಮಾತಿಗೂ ಅಡ್ಡಿಪಡಿಸುವ ಪ್ರಯತ್ನ ಮಾಡಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು. \ No newline at end of file diff --git a/eesanje/url_46_231_7.txt b/eesanje/url_46_231_7.txt new file mode 100644 index 0000000000000000000000000000000000000000..57a04db87d2f001d053f8ca1e9c62e340856bd8b --- /dev/null +++ b/eesanje/url_46_231_7.txt @@ -0,0 +1,6 @@ +ಧಮ್ಕಿ, ಬೇಲಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ : ಕುಮಾರಸ್ವಾಮಿ +ಬೆಂಗಳೂರು,ಫೆ.20- ಧಮ್ಕಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕøತಿ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಮ್ಕಿ ಹಾಕಿ ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕುವುದು ನಮ್ಮ ಜಾಯಮಾನವಲ್ಲ. ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು. +ರಾಜ್ಯಸಭೆ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಕೇಳುವುದಾಗಿ ಹೇಳಿದ್ದೇವೆ. ಜೆಡಿಎಸ್‍ಗೆ 2 ಮತ ಬರಲಿದೆ ಎಂದು ಹೇಳಿರುವುದು ತಪ್ಪಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ಆನೆಯಿಂದ ಮೃತಪಟ್ಟ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡುತ್ತಾರೆ. ನಮ್ಮ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಕೊಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ನಾಯಕರು. ಅವರ ಸಲಹೆ ಮೇರೆಗೆ 15 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರವೇ ಬಂದಿಲ್ಲ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಸಾವಿರ ಸಾರಿ ಸುಳ್ಳು ಹೇಳಿ ನಿಜ ಮಾಡಲು ಹೊರಟಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. +ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಕೊಡುತ್ತಾರೆ. ಆದರೆ ರಾಜ್ಯದಲ್ಲಿ ಆನೆದಾಳಿಯಿಂದ ಮೃತಪಟ್ಟರೆ 5 ಲಕ್ಷ ರೂ. ಕೊಡುತ್ತಾರೆ. ಆ ಹಣಕ್ಕೂ ಕಚೇರಿಗಳಿಗೆ ಅಲೆದಾಡಬೇಕು. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆಯವರು ಅನ್ಯಾಯದ ವಿರುದ್ಧ ಆಕ್ಷೇಪ ಮಾಡಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಕೇಂದ್ರ ಸಮಿತಿ ನೀಡುವ ಶಿಫಾರಸ್ಸಿನಂತೆ ರಾಜ್ಯಗಳಿಗೆ ಹಣ ನೀಡಲಾಗುತ್ತದೆ. ರಾಷ್ಟ್ರದ ಹಲವು ಆರ್ಥಿಕ ತಜ್ಞರ ಜೊತೆ ಮುಕ್ತ ಚರ್ಚೆ ಮಾಡೋಣ ಎಂದು ಹೇಳಿದರು. +ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ +ರಾಮನಗರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳನ್ನು ಸರ್ಕಾರ ತನ್ನ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ರಾಮನಗರದಲ್ಲಿ ವಕೀಲರ ವಿರುದ್ಧ ಎಫ್‍ಐಆರ್ ಹಾಕಿದ್ದರು. ವಕೀಲರು ಒಂದು ವಾರದಿಂದ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಅವರಿಗೆ ಭರವಸೆ ನೀಡಬಹುದಿತ್ತು. ಆದರೆ ವಕೀಲರ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯ ವೈಫಲ್ಯದಿಂದ ಈ ಘಟನೆ ನಡೆದಿದೆ. ಕಾನೂನು ಹೋರಾಟ ಮಾಡುವುದಾಗಿ ಅವರಿಗೆ ಭರವಸೆ ನೀಡಿದ್ದೇನೆ ಎಂದರು. \ No newline at end of file diff --git a/eesanje/url_46_231_8.txt b/eesanje/url_46_231_8.txt new file mode 100644 index 0000000000000000000000000000000000000000..e274d9708503cb1758dc190fe1472bdcc8c19e7f --- /dev/null +++ b/eesanje/url_46_231_8.txt @@ -0,0 +1,6 @@ +ರಾಹುಲ್ ಸಲಹೆ ಮೇರೆಗೆ ಕೇರಳದ ಕುಟುಂಬಕ್ಕೆ ಕರ್ನಾಟಕ ಪರಿಹಾರ; ವಿಜಯೇಂದ್ರ ಖಂಡನೆ +ಬೆಂಗಳೂರು,ಫೆ.20- ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು, ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. +ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ಹೇಳಿದ್ದಾರೆ. +ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ +ರಾಜ್ಯ ಸರ್ಕಾರ ಪರಿಹಾರ ನೀಡಿದ್ದು ಎಷ್ಟು ಸರಿ? :ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೆ ಅರಣ್ಯ ಸಚಿವರು, ನಿಮ್ಮ (ರಾಹುಲ್ ಗಾಂಧಿ) ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಜೊತೆಗೆ ಈ ಬಗ್ಗೆ ಬೀದರ್‍ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ. +ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೆ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದ್ದು ಈ ಹಿನ್ನಲೆಯಲ್ಲಿ ವಿಜಯೇಂದ್ರ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. \ No newline at end of file diff --git a/eesanje/url_46_231_9.txt b/eesanje/url_46_231_9.txt new file mode 100644 index 0000000000000000000000000000000000000000..56f9af319f98d5ace3c7cfc6a672d9b19186cc42 --- /dev/null +++ b/eesanje/url_46_231_9.txt @@ -0,0 +1,8 @@ +ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ +ಬೆಂಗಳೂರು,ಫೆ.20- ಸಹಕಾರ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪವು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡರು ಸರ್ಕಾರದ ನಡೆಯನ್ನು ಖಂಡಿಸಿದರು. ಬಜೆಟ್ ಅಧಿವೇಶನದಲ್ಲಿ ಸಹಕಾರ ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಕಾಯಿದೆ ಅಡಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರವೇ ಶಾಸಕ ಲಕ್ಷ್ಮಣ ಸವದಿ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿರುವುದು ಸರಿಯಷ್ಟೆ. +ಈ ಸಮಿತಿಯಲ್ಲಿ ನಾನು ಸೇರಿದಂತೆ ಮಾಜಿ ಸಚಿವ ಎಸ್.ಆರ್. ಪಾಟೀಲ, ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಕೆ. ಷಡಾಕ್ಷರಿ, ವಿಧಾನ ಪರಿಷತ್ತಿನ ಸದಸ್ಯ ರಾಜೇಂದ್ರ ರಾಜಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಹೆಚ್.ಎಸ್. ರಮಣರೆಡ್ಡಿ, ಅಪರ ನಿಬಂಧಕರು (ನಿವೃತ್ತ), ಹೆಚ್.ಎಸ್. ನಾಗರಾಜಯ್ಯ, ಅಪರ ನಿಬಂಧಕರು (ನಿವೃತ್ತ) ಇವರುಗಳು ಸದಸ್ಯರಾಗಿರುತ್ತಾರೆ. +ಈ ಸಮಿತಿಯು ಈಗಾಗಲೇ ಹಲವಾರು ಬಾರಿ ಸಭೆಯನ್ನು ನಡೆಸಿ, ತಿದ್ದುಪಡಿಗಳ ಕುರಿತು ಚರ್ಚಿಸಲಾಗಿರುತ್ತದೆ. ಆದರೆ, ಸಮಿತಿಯು ತನ್ನ ವರದಿಯನ್ನು ನೀಡಿರುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಸಮಿತಿಯ ಮುಂದೆ ಬಂದಿಲ್ಲದ್ದಿದ್ದರೂ ಸಹಕಾರ ದಿಗ್ಗಜರು, ಸಚಿವರುಗಳಾದ ಹೆಚ್.ಕೆ.ಪಾಟೀಲ್, ರಾಜಣ್ಣ ಹಾಗೂ ಶಿವಾನಂದ ಪಾಟೀಲ್ ನೀವುಗಳು ಮುಖ್ಯಮಂತ್ರಿಗಳ ಮಾತಿಗೆ ಕಟ್ಟುಬಿದ್ದು ಈ ವಿಧೇಯಕವನ್ನು ತರಾತುರಿಯಲ್ಲಿ ತರಲು ಮುಂದಾಗಿರುವುದರ ಹಿಂದೆ ಯಾರ ಪ್ರೇರೇಪಣೆ ಇದೆ ಎಂದು ತಿಳಿದಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು. +ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ +ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 7,000 ಕೋಟಿ ರೂ. ಠೇವಣಿ, ಬೆಳಗಾವಿ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 5,000 ಕೋಟಿ ರೂ., ಬಾಗಲಕೋಟೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 3,000 ಕೋಟಿ ರೂ.ಗಳಷ್ಟು ಠೇವಣಿ ಇದೆ. ಇದೇ ರೀತಿ ಇತರೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕುಗಳಲ್ಲಿ ಕೋಟ್ಯಾಂತರ ರೂ.ಗಳು ಠೇವಣಿ ಇದೆ. ಇಂತಹ ಬ್ಯಾಂಕುಗಳಿಗೆ ಕೇವಲ 10.00 ಲಕ್ಷ ರೂ. ಷೇರು ಬಂಡವಾಳ ನೀಡಿ, ಮೂವರನ್ನು (03) ಸರ್ಕಾರದ ನಾಮನಿರ್ದೇಶನ ಮಾಡಿ, ಸರ್ಕಾರದ ಹಿಡಿತದಲ್ಲಿಟ್ಟುಕೊಂಡು ಸ್ವಾಯತ್ತ ಸಂಸ್ಥೆಗಳನ್ನು ಸರ್ಕಾರದ ಸಂಸ್ಥೆಗಳನ್ನಾಗಿ ಮಾಡಿಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದರು. +ಎಐಎಂಐಎಂ ಪಕ್ಷದ ವಾರಿಸ್ ಪಠಾಣ್ ಬಂಧನ +ಗ್ರಾಮ ಪಂಚಾಯಿತಿ ಸೇರಿದಂತೆ ಪೌರ ಸಂಸ್ಥೆಗಳು ಸರ್ಕಾರದ ಅನುದಾನದಿಂದ ಕಾರ್ಯನಿರ್ವಹಿಸುತ್ತಿವೆ. ಅಲ್ಲಿನ ನೌಕರರು ಸರ್ಕಾರಿ ನೌಕರರಾಗಿರುತ್ತಾರೆ. ಆದರೆ, ಸಹಕಾರ ಸಂಸ್ಥೆಗಳು ಸದಸ್ಯರ ಬಂಡವಾಳದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿನ ನೌಕರರು, ಸರ್ಕಾರಿ ನೌಕರರು ಆಗಿರುವುದಿಲ್ಲ ಎಂಬ ಅಂಶವನ್ನು ವ್ಯಕ್ತಪಡಿಸಿದ ಅವರು ಸಹಕಾರ ಸಂಸ್ಥೆಗಳನ್ನು ಪೌರ ಸಂಸ್ಥೆಗಳಿಗೆ ಹೋಲಿಕೆ ಮಾಡದೇ, ತಿದ್ದುಪಡಿ ವಿಧೇಯಕವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. \ No newline at end of file diff --git a/eesanje/url_46_232_1.txt b/eesanje/url_46_232_1.txt new file mode 100644 index 0000000000000000000000000000000000000000..6ff815fbe398b34b991754d95b5a500b3615c831 --- /dev/null +++ b/eesanje/url_46_232_1.txt @@ -0,0 +1,11 @@ +ವಸತಿ ಶಾಲೆ ಕುವೆಂಪು ಘೋಷ ವಾಕ್ಯ ಬದಲಾವಣೆ ಕುರಿತು ಸದನದಲ್ಲಿ ವಾಕ್ಸಮರ +ಬೆಂಗಳೂರು,ಫೆ.19- ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಹಾಕುವ ಘೋಷವಾಕ್ಯ ಬದಲಾವಣೆ ವಿಧಾನದ ಮಂಡಲದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿಗೆ ಎಡೆ ಮಾಡಿಕೊಟ್ಟಿತು. ಈ ಮೊದಲು ವಸತಿ ಶಾಲೆಗಳಲ್ಲಿ ಜ್ಞಾನದೇಗುಲವಿದು ಕೈ ಮುಗಿದು ಒಳಗೆ ಬಾ ಎಂಬ ರಾಷ್ಟ್ರೀಯ ಕವಿ ಕುವೆಂಪು ಅವರ ಘೋಷವಾಕ್ಯವನ್ನು ಬದಲಾಯಿಸಿ ಸಮಾಜ ಕಲ್ಯಾಣ ಇಲಾಖೆ ಹೊಸದಾಗಿ ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ನಾಮಫಲಕ ಹಾಕಲು ಹೊರಡಿಸಿದ ಸುತ್ತೋಲೆ ವಿವಾದವನ್ನು ಸೃಷ್ಟಿಸಿತು. +ವಿಧಾನಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಷಯ ಪ್ರಸ್ತಾಪಿಸಿ ರಾಷ್ಟ್ರಕವಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬ ಘೋಷವಾಖ್ಯವನ್ನು ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಬದಲಿಸಿ ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಹಾಕಲು ಉದ್ದೇಶಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಇತ್ತ ವಿಧಾನಪರಿಷತ್‍ನಲ್ಲೂ ಶೂನ್ಯವೇಳೆಯಲ್ಲೂ ಇದೇ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರ ಸೂಕ್ತ ಉತ್ತರ ಕೊಡಬೇಕೆಂದು ಪಟ್ಟು ಹಿಡಿದಿದ್ದರಿಂದ ಸದನವನ್ನು ಕೆಲ ಕಾಲ ಮುಂದೂಡಲಾಯಿತು. +ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಜಯೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಈ ಬಗ್ಗೆ ತೀರ್ಮಾನಿಸಿದ್ದಾರೆ ಎಂಬ ವಿಚಾರ ವಾಟ್ಸಪ್‍ಗಳಲ್ಲಿ ಹರಿದಾಡುತ್ತಿದೆ. ಇದು ಕುವೆಂಪು ಅವರಿಗೆ ಮಾಡಿದ ಅಪಮಾನ. ಈ ಹಿಂದೆ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ ಎಂಬ ಸುತ್ತೋಲೆ ಹೊರಡಿಸಿ ವಾಪಸ್ ಪಡೆದಿರುವ ಉಲ್ಲೇಖವಿದೆ. ಇದೊಂದು ಗಂಭೀರ ವಿಚಾರ. ಚರ್ಚೆಯಾಗಬೇಕು ಎಂದು ಆಗ್ರಹಿಸಿದರು. +ಆಗ ಬಿಜೆಪಿಯ ಹಿರಿಯ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ ಎದ್ದು ನಿಂತು ಮಾತನಾಡಲು ಮುಂದಾದರು. ಆ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ವಾಸ್ತವಾಂಶದ ಆಧಾರದ ಮೇಲೆ ಉತ್ತರ ಕೊಡುತ್ತೇವೆ.ಹೆಚ್ಚಿಗೆ ಮಾತನಾಡುವುದಾದರೆ ನಾವೂ ಮಾತನಾಡಬಹುದು ಎಂದಾಗ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಲು ಮುಂದಾದರು. ಆಗ ಏರಿದ ಧ್ವನಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಮಾತನಾಡಲು ಮುಂದಾದಾಗ ವಾಗ್ವಾದ ನಡೆದು ಗೊಂದಲ ಉಂಟಾಯಿತು. +ಒಂದು ಹಂತದಲ್ಲಿ ಕೃಷ್ಣಭೈರೇಗೌಡರು ಒಂದು ಹಂತದಲ್ಲಿ ಕುವೆಂಪು ಅವರ ವಿಚಾರವನ್ನು ಪಠ್ಯದಿಂದ ಕಿತ್ತು ಹಾಕಿದವರು ನೀವು ಎಂದು ತಿರುಗೇಟು ನೀಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರು ಕೂಡ ಕೃಷ್ಣಭೈರೇಗೌಡರ ಮಾತಿಗೆ ಬೆಂಬಲ ನೀಡಲು ಮುಂದಾದರು. ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಈ ವಿಚಾರದಲ್ಲಿ ಸರ್ಕಾರದ ನೀತಿ ಇರಬೇಕು. ಒಬ್ಬ ಪ್ರಧಾನ ಕಾರ್ಯದರ್ಶಿ ಈ ರೀತಿ ಮಾಡಿರುವುದು ಸರಿಯಲ್ಲ. ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರಿ ಕೆಲಸ ದೇವರ ಕೆಲಸ ಎಂಬ ವಾಕ್ಯವಿದೆ. ಇದನ್ನೂ ಬದಲು ಮಾಡುತ್ತೀರಾ? ಒಬ್ಬ ಅಧಿಕಾರಿ ಈ ರೀತಿ ಆದೇಶ ಹೊರಡಿಸಲು ಅಧಿಕಾರ ಕೊಟ್ಟವರು ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು. +ಬಿಜೆಪಿಯ ಹಿರಿಯ ಸದಸ್ಯ ಆರಗ ಜ್ಞಾನೇಂದ್ರ ಮಾತನಾಡಿ, ಈ ಸರ್ಕಾರದಲ್ಲಿ ಲಂಗುಲಗಾಮು ಯಾವುದೂ ಇಲ್ಲ ಎಂದು ಛೇಡಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಈ ವಿಚಾರದ ಬಗ್ಗೆ ನಾಳೆ ಸಮಾಜ ಕಲ್ಯಾಣ ಸಚಿವರು ಉತ್ತರ ಕೊಡುತ್ತಾರೆ ಎಂದು ಹೇಳಿ ಚರ್ಚೆಗೆ ತೆರೆ ಎಳೆದರು. ಪರಿಷತ್‍ನಲ್ಲೂ ಗದ್ದಲ: ಶೂನ್ಯವೇಳೆಯಲ್ಲಿ ಬಿಜೆಪಿ ಎನ್.ರವಿಕುಮಾರ್ ಅವರು ವಿಷಯ ಪ್ರಸ್ತಾಪಿಸಿ ಸರ್ಕಾರ ಏಕಾಏಕಿ ಈ ರೀತಿ ಬದಲಾವಣೆ ಮಾಡಿರುವ ಉದ್ದೇಶವಾದರೂ ಏನು? ಮೊನ್ನೆ ಹಿಂದು ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದೆಂದು ಸುತ್ತೋಲೆ ಹೊರಡಿಸಲಾಗಿತ್ತು. ಈಗ ಕುವೆಂಪು ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ಬದಲಾವಣೆ ಮಾಡಲಾಗಿದೆ.ಸರ್ಕಾರಕ್ಕೆ ಕೆಲಸವಿಲ್ಲವೇ ಎಂದು ಪ್ರಶ್ನಿಸಿದರು. +ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ +ಆಗ ಸಭಾ ನಾಯಕ ಭೋಸರಾಜ್ ಅವರು, ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಹೇಳಿದರು. ಇದನ್ನು ಒಪ್ಪದ ಬಿಜೆಪಿ ಸದಸ್ಯರು, ಈಗಲೇ ಉತ್ತರ ಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ತೇಜಸ್ವಿನಿ ರಮೇಶ್ ಅವರು, ಶೂನ್ಯವೇಳೆ ಆಗಿರುವುದರಿಂದ ಚರ್ಚೆಗೆ ಅವಕಾಶವಿಲ್ಲ. ನೀವು ಬೇರೊಂದು ರೂಪದಲ್ಲಿ ಚರ್ಚೆಗೆ ಅವಕಾಶ ಕೊಡುತ್ತೇನೆ. ಈಗಾಗಲೇ ಸಭಾನಾಯಕರು ಸರ್ಕಾರದಿಂದ ಉತ್ತರ ಕೊಡಿಸುವುದಾಗಿ ಹೇಳಿದ್ದಾರೆಂದರು. +ಇದಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದರು. ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದು ಆರೋಪ-ಪ್ರತ್ಯಾರೋಪಗಳ ಸುರಿಮಳೆ ಗೈದರು. ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರು, ಕ್ರಿಯಾಲೋಪ ಎತ್ತಿ ಶೂನ್ಯವೇಳೆಯಲ್ಲಿ ಕೇವಲ ವಿಷಯ ಪ್ರಸ್ತಾಪಕ್ಕೆ ಅವಕಾಶವಿದೆ. ಸದನದಲ್ಲಿ ಸಂಬಂಧಪಟ್ಟ ಸಚಿವರು ಇಲ್ಲದಿದ್ದಾಗ ಸಭಾ ನಾಯಕರು ಉತ್ತರಕೊಡಿಸುತ್ತೇನೆ ಎಂದಮೇಲೆ ಅಲ್ಲಿಗೆ ವಿಷಯವೇ ಮುಗಿಯುತ್ತದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಬಿಜೆಪಿ ಸದಸ್ಯರು ತರಾಟೆಗೆ ತೆಗೆದುಕೊಂಡರು. +ಈ ಹಂತದಲ್ಲೂ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಯಿತು. ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿದರೆ ಪ್ರತಿಯಾಗಿ ಕಾಂಗ್ರೆಸ್ ಸದಸ್ಯರು ಕೂಡ ತಿರುಗೇಟು ನೀಡಿದರು.ಸದನ ಸಹಜ ಸ್ಥಿತಿಗೆ ಬಾರದ ಕಾರಣ ಸದನವನ್ನು ಮುಂದೂಡಲಾಯಿತು. \ No newline at end of file diff --git a/eesanje/url_46_232_10.txt b/eesanje/url_46_232_10.txt new file mode 100644 index 0000000000000000000000000000000000000000..cfdd12bc5d8c35455af7fb4952ad42d8de608740 --- /dev/null +++ b/eesanje/url_46_232_10.txt @@ -0,0 +1,6 @@ +ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ +ಬೆಂಗಳೂರು,ಫೆ.19- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಪಕ್ಷದ ಎಲ್ಲ ಹಂತದ ನಾಯಕರ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿ ಬಿಜೆಪಿ ಚುನಾವಣಾ ಸಮಿತಿಗೆ ಪಟ್ಟಿಯನ್ನು ಕಳುಹಿಸಿಕೊಡುವಂತೆ ಕೇಂದ್ರ ವರಿಷ್ಠರು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಸೂಚಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆ ಮುಕ್ತಾಯವಾದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ ಮತ್ತಿತರ ಪಕ್ಷದ ಪ್ರಮುಖರ ಜೊತೆ ಮಾತುಕತೆ ನಡೆಸಿರುವ ವಿಜಯೇಂದ್ರ ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಕುರಿತಂತೆ ಮಾಹಿತಿ ನೀಡಿದ್ದಾರೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗ ಆಯ್ಕೆ , ಪ್ರದೇಶವಾರು, ಜಾತಿ, ಮತದಾರರ ನಾಡಿಮಿಡಿತ ಹೀಗೆ ಪ್ರತಿಯೊಂದು ಅಂಕಿಅಂಶಗಳ ವಿವರವುಳ್ಳ ಮಾಹಿತಿಯನ್ನು ವರಿಷ್ಠರಿಗೆ ನೀಡಿದ್ದಾರೆ. ಒಂದೊಂದು ಕ್ಷೇತ್ರಕ್ಕೂ ಮೂರಕ್ಕೂ ಹೆಚ್ಚು ಆಕಾಂಕ್ಷಿಗಳ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗಿದ್ದು ಅಂತಿಮವಾಗಿ ವರಿಷ್ಠರೇ ತೀರ್ಮಾನಿಸಬೇಕೆಂದು ವಿಜಯೇಂದ್ರ ಮನವಿ ಮಾಡಿದ್ದಾರೆ. +ಪಟ್ಟಿಯನ್ನು ವೀಕ್ಷಣೆ ಮಾಡಿರುವ ವರಿಷ್ಠರು ಇನ್ನೊಂದು ಸುತ್ತಿನ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿ ಅಂತಿಮ ಪಟ್ಟಿಯನ್ನು ಕಳುಹಿಸಿಕೊಡಿ ಇದರಲ್ಲಿ ಯಾರಿಗೆ ಟಿಕಟ್ ನೀಡಬೇಕು ಎಂಬುದನ್ನು ನಾವೇ ತೀರ್ಮಾನಿಸುತ್ತೇವೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ. +ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ +ಮೂಲಗಳ ಪ್ರಕಾರ ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಉತ್ತರ, ದಾವಣಗೆರೆ, ಕೊಪ್ಪಳ, ಬೆಳಗಾವಿ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 10ರಿಂದ 12 ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳ ಶಿಫಾರಸ್ಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ವರಿಷ್ಠರ ಸೂಚನೆಯಂತೆ ವಿಜಯೇಂದ್ರ ವಿಧಾನಮಂಡಲದ ಕಲಾಪ ಮುಗಿದ ನಂತರ ಕೋರ್ ಕಮಿಟಿ ಸಭೆ ನಡೆಸಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_232_11.txt b/eesanje/url_46_232_11.txt new file mode 100644 index 0000000000000000000000000000000000000000..f285802c9a29ccea956c2caa802d0069ce66c20b --- /dev/null +++ b/eesanje/url_46_232_11.txt @@ -0,0 +1,5 @@ +ಆಸ್ಪತ್ರೆಯಿಂದ ದೇವೇಗೌಡರು ಡಿಸ್ಚಾರ್ಜ್ +ಬೆಂಗಳೂರು, ಫೆ.18- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಲಿದ್ದಾರೆ.ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಇಂದು ಅಥವಾ ನಾಳೆ ಮನೆಗೆ ಮರಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಸ್ಪಷ್ಟಪಡಿಸಿವೆ. +ಜ್ವರ ಹಾಗೂ ಕಫದ ತೊಂದರೆಯಿಂದಾಗಿ ಫೆ.15ರಂದು ಗೌಡರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ತಂಡದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ರಾಜ್ಯಸಭೆ ಅವೇಶನದಲ್ಲಿ ಭಾಗವಹಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ತೀವ್ರ ಚಳಿ ಹಾಗೂ ಮಾಲಿನ್ಯದಿಂದ ಗೌಡರ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. +ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಶೀಘ್ರವಾಗಿ ಮನೆಗೆ ಮರಳುವುದಾಗಿ ಹಾಗೂ ಆರೋಗ್ಯದ ಬಗ್ಗೆ ಯಾರು ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಗೌಡರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದರು. +ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ವಯೋಸಹಜ ಸಣ್ಣಪುಟ್ಟ ಸಮಸ್ಯೆಗಳಿಂದಾಗಿ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿರುವ ಗೌಡರು ಶೀಘ್ರವಾಗಿ ಮನೆಗೆ ಮರಳಲಿದ್ದಾರೆ ಎಂದು ತಿಳಿಸಿದ್ದರು. \ No newline at end of file diff --git a/eesanje/url_46_232_12.txt b/eesanje/url_46_232_12.txt new file mode 100644 index 0000000000000000000000000000000000000000..24c6f21a99c15fe1a9f1cc20f7fcde0ad8c3d805 --- /dev/null +++ b/eesanje/url_46_232_12.txt @@ -0,0 +1,9 @@ +ಜನರ ಮನೆ ಬಾಗಿಲಿಗೆ ಇ -ಖಾತಾ +ಬೆಂಗಳೂರು,ಫೆ.18- ಸಾರ್ವ ಜನಿಕರ ಆಸ್ತಿಗಳ ದಾಖಲೆಗಳ ದುರುಪಯೋಗ ವಾಗುವುದನ್ನು ತಡೆಗಟ್ಟಿ, ಮನೆಬಾಗಿಲಿಗೆ ಇ-ಖಾತಾ ದಸ್ತಾವೇಜುಗಳನ್ನು ತಲುಪಿಸ ಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಜ್ಞಾನಭಾರತಿ ಆವರಣದಲ್ಲಿ ರಾಜರಾಜೇಶ್ವರಿ ನಗರ, ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕರ ಸಮಸ್ಯೆ ಆಲಿಸಲು ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾತೆಗಳ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಆಸ್ತಿಗಳ ಖಾತೆ ಸೇರಿದಂತೆ ಎಲ್ಲಾ ದಾಖಲಾತಿಗಳನ್ನು ದುರುಪಯೋಗ ವಾಗದಂತೆ ಸರಿಪಡಿಸಲಾಗುವುದು. +ಇ-ಖಾತೆ ಮಾಡಿಸುವ ಮೂಲಕ ಅದನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತೇವೆ ಎಂದರು.ಬೆಂಗಳೂರಿನಲ್ಲಿ ಸರಿಯಾಗಿ ತೆರಿಗೆ ಪಾವತಿಯಾಗಿಲ್ಲ. 2020 ರಲ್ಲಿ ಬಿಜೆಪಿ ಸರ್ಕಾರ ದುಬಾರಿ ದಂಡ ವಿಸುವ ನಿಯಮ ರೂಪಿಸಿತ್ತು. ಅದನ್ನು ಸರಿಪಡಿಸಲು ಒಂದು ಅವಗೆ ಸರಳೀಕರಣ ಮಾಡುವ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ. ಈಗಾಗಲೇ ಸಂಪುಟದಲ್ಲಿ ಚರ್ಚಿಸಲಾಗಿದ್ದು, ವಿಧಾನಮಂಡಲದಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು. +ನ್ಯಾಯಯುತವಾದ ಹಾಗೂ ವೈಜ್ಞಾನಿಕವಾದ ತೆರಿಗೆ ನಿರ್ಧರಣೆಗೆ ಜನಸಾಮಾನ್ಯರಿಗೆ ಅವಕಾಶ ಕಲ್ಪಿಸಲಾಗುವುದು. ಅಧಿಕಾರಿಗಳ ಬಳಿ ಬಂದು ಸಾರ್ವಜನಿಕರು ಸ್ವಯಂ ಘೋಷಣೆ ಮಾಡಿಕೊಂಡು ತಪ್ಪನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದ್ದೇವೆ ಎಂದರು.ಸಂಸದ ಡಿ.ಕೆ.ಸುರೇಶ್ ಜನರ ಮನೆಬಾಗಿಲಿಗೆ ಹೋಗಿ ಸೇವೆ ಮಾಡುತ್ತಿದ್ದಾರೆ. ಪಂಚಾಯಿತಿ ಸದಸ್ಯರಂತೆ ರಸ್ತೆರಸ್ತೆ ಸುತ್ತಿದ್ದಾರೆ. ಇಂತಹ ಸಂಸದರನ್ನು ಹಿಂದೆಂದೂ ಜನ ನೋಡಿಲ್ಲ. +ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ಜನ ಅವರನ್ನು ಬೆಂಬಲಿಸಿ ಋಣ ತೀರಿಸಬೇಕು. ಬಿಜೆಪಿಯವರು ಟಿವಿಯಲ್ಲಿ ಅಬ್ಬರಿಸುತ್ತಿದ್ದಾರೆ. ನಾವು ಜನರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಪಂಚಖಾತ್ರಿಗಳ ಮೂಲಕ ಜನರ ಜೀವನವನ್ನು ಸುಧಾರಿಸುವಂತೆ ಮಾಡಿದ್ದೇವೆ. ಹಿಂದೆ ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ರೂಪಿಸಿರಲಿಲ್ಲ ಎಂದು ಹೇಳಿದರು.ಮನೆಯ ಮೇಲೆ ಸೌರಶಕ್ತಿ ಫಲಕಗಳನ್ನು ಅಳವಡಿಸಿಕೊಳ್ಳಲು ಸಬ್ಸಿಡಿ ನೀಡಲಾಗುತ್ತಿದೆ. ಇದರಿಂದ ಮತ್ತಷ್ಟು ಉಳಿತಾಯ ಸಾಧ್ಯವಾಗಲಿದೆ ಎಂದರು. +ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಬೆಲೆ ಏರಿಕೆ ನಿಯಂತ್ರಿಸಿ ಜನರಿಗೆ ಅನುಕೂಲ ಮಾಡಿಕೊಡಲು ಯತ್ನಿಸುತ್ತಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಹಳೆಯ ಬೋರ್ವೆಲ್ಗಳನ್ನು ಮತ್ತೆ ರೀಡ್ರಿಲ್ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಮೇ ವೇಳೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾಗುವುದು. ಮೇಕೆದಾಟು ನಿರ್ಮಾಣವಾದರೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಹೇಳಿದರು. +ಆರಂಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮುನಿರತ್ನ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಭದ್ರ ಬುನಾದಿಯಾಗಿದ್ದರು ಎಂದು ಹೇಳಿದಾಗ ಮುನಿರತ್ನ ಹುಸಿನಗು ನಕ್ಕು ಸ್ಪಂದಿಸಿದರು. ವೇದಿಕೆಯ ಎಡಭಾಗದಲ್ಲಿ ಕೆಲವರು ಗಲಾಟೆ ಮಾಡುತ್ತಿದ್ದಾಗ ಡಿ.ಕೆ.ಶಿವಕುಮಾರ್ ಅವರನ್ನು ಗದರಿದರು. ಸಂಸದ ಡಿ.ಕೆ.ಸುರೇಶ್ ಎದ್ದು ಬಂದು ಅರ್ಜಿ ನೀಡುವ ನಿಗದಿತ ಸ್ಥಳಕ್ಕೆ ಹೋಗಿ ನಿಂತುಕೊಳ್ಳಿ, ಗಲಾಟೆ ಮಾಡಬೇಡಿ ಎಂದು ಸಮಾಧಾನ ಮಾಡಿದರು. +ನಂತರ ಮಾತು ಮುಂದುವರೆಸಿದ ಡಿ.ಕೆ.ಶಿವಕುಮಾರ್, ಕಾರ್ಯಕರ್ತರು, ಪೊಲೀಸ್ ಅಧಿಕಾರಿಗಳು ಇಲ್ಲಿ ನಿಲ್ಲುವ ಅಗತ್ಯವಿಲ್ಲ . ಹಿರಿಯ ನಾಗರಿಕರು ಹಾಗೂ ವಿಕಲ ಚೇತನರಿದ್ದಲ್ಲಿಯೇ ನಾನು ಮೊದಲು ಬಂದು ಸಮಸ್ಯೆ ಕೇಳುತ್ತೇನೆ. ಈಗಾಗಲೇ 12 ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದ್ದು, 20 ಸಾವಿರ ಅರ್ಜಿಗಳು ನೋಂದಣಿ ಮಾಡಿಸಲಾಗಿದೆ. ಮುಖ್ಯಮಂತ್ರಿಯವರು 2 ಜನಸ್ಪಂದನ ಮಾಡಿದ್ದು, ಅಲ್ಲಿಯೂ ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಇದಕ್ಕೆಲ್ಲಾ ಪರಿಹಾರ ದೊರಕಿಸಲು ಅಧಿಕಾರಿಗಳ ಪ್ರತ್ಯೇಕ ತಂಡ ರಚಿಸಲಾಗುತ್ತದೆ. ನಾನು ಖುದ್ದು ನಿಗಾ ವಹಿಸುತ್ತೇನೆ ಎಂದರು. +ಜನಸಾಮಾನ್ಯರು ಸಚಿವರ, ಶಾಸಕರ ಮನೆಬಾಗಿಲಿಗೆ ಅಲೆಯಬಾರದು ಎಂಬ ಕಾರಣಕ್ಕೆ ಸರ್ಕಾರವೇ ನಿಮ್ಮ ಬಾಗಿಲಿಗೆ ಬಂದಿದೆ ಎಂದು ಹೇಳಿದರು. ಸರ್ಕಾರ ಜನಸಾಮಾನ್ಯರ ಜೊತೆಗಿದೆ. ಎಲ್ಲರ ಸಮಸ್ಯೆಗಳನ್ನೂ ಒಮ್ಮೆಲೆ ಬಗೆಹರಿಸಲಾಗುವುದಿಲ್ಲ. ಆದರೆ ಅರ್ಜಿ ಕೊಟ್ಟವರಿಗೆ ಖಂಡಿತಾ ಸ್ಪಂದಿಸಲಾಗುವುದು. ಈಗಾಗಲೇ ಹಲವು ಬಾರಿ ಅರ್ಜಿ ಕೊಟ್ಟು ಪರಿಹಾರ ಸಿಗದೆ ತಿರಸ್ಕಾರಗೊಂಡಿರುವವರು ಮತ್ತೆ ಮತ್ತೆ ಅರ್ಜಿ ಕೊಡುತ್ತಿರುವುದು ಕಂಡುಬರುತ್ತಿದೆ. ಪ್ರತಿಯೊಂದು ಜನಸ್ಪಂದನದಲ್ಲೂ 3 ರಿಂದ 4 ಸಾವಿರ ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ನೋಂದಣಿಯಾಗಿ ರಶೀದಿ ಪಡೆದ ಅರ್ಜಿಗಳಿಗೆ ಪ್ರತಿಕ್ರಿಯೆ ಸಿಕ್ಕೇ ಸಿಗುತ್ತದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_232_2.txt b/eesanje/url_46_232_2.txt new file mode 100644 index 0000000000000000000000000000000000000000..12e017de1b41d568a6dee8514af105243bff87c5 --- /dev/null +++ b/eesanje/url_46_232_2.txt @@ -0,0 +1,7 @@ +ಅಕ್ರಮ-ಸಕ್ರಮ ಕಾಯ್ದೆಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸುವ ಸಾಧ್ಯತೆ +ಬೆಂಗಳೂರು,ಫೆ.19- ನಿಯಮ ಉಲ್ಲಂಘಿಸಿದ ಅನಧಿಕೃತ ನಿರ್ಮಾಣಗಳನ್ನು ಸಕ್ರಮೀಕರಣಗೊಳಿಸಲು ವಿಶೇಷವಾಗಿ ರೂಪಿಸಲಾಗಿದ್ದ ಅಕ್ರಮ-ಸಕ್ರಮ ಕಾಯ್ದೆಯನ್ನು ಸುಪ್ರೀಂಕೋರ್ಟ್ ತಿರಸ್ಕøತ ಮಾಡುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವ ಕೃಷ್ಣಾಭೈರೇಗೌಡ ತಿಳಿಸಿದ್ದಾರೆ. ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶ್‍ಪಾಲ್ ಸುವರ್ಣ ಪ್ರಶ್ನೆ ಕೇಳಿ, 94 ಸಿ ಮತ್ತು 94 ಸಿಸಿ ಕಾನೂನಿನಡಿ ನಿವೇಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. +ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, 2016, 2018, 2019, 2021, 2022 ರ ಮಾರ್ಚ್ 31 ರೊಳಗೆ 5 ಬಾರಿ ನಿವೇಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಮಾಹಿತಿ ಕೊರತೆ ಎಂದು ಹಲವು ಬಾರಿ ಕಾಲಾವಕಾಶ ನೀಡಿದ್ದೇವೆ. ನ್ಯಾಯಾಲಯಗಳು ಒಂದು ಬಾರಿ ಇನ್ನೊಂದು ಬಾರಿ ಎಂದು ಎಷ್ಟು ಬಾರಿ ಕಾಲಾವಕಾಶ ನೀಡುತ್ತೀರ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿವೆ. ಕಾಲಾವಕಾಶ ನೀಡುವ ಮೂಲಕ ಅಕ್ರಮಗಳನ್ನು ಸಕ್ರಮಗೊಳಿಸಲಾಗುತ್ತಿದೆ ಎಂಬ ಆಕ್ಷೇಪವು ನ್ಯಾಯಾಲಯದಿಂದ ಬಂದಿದೆ. ವಕೀಲರು ನನಗೆ ನೀಡಿರುವ ಮಾಹಿತಿ ಪ್ರಕಾರ, ಸುಪ್ರೀಂಕೋರ್ಟ್ ತಡೆ ನೀಡಿದ್ದ ಅಕ್ರಮ-ಸಕ್ರಮ ಕಾಯ್ದೆ ವಿಚಾರಣೆ ಮಹತ್ವದ ಘಟ್ಟ ತಲುಪಿದೆ. ಬಹುತೇಕ ಕಾಯ್ದೆಯ ಔಚಿತ್ಯ ತಿರಸ್ಕಾರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದರು. +94 ಸಿ ಅಡಿ ರಾಜ್ಯಾದ್ಯಂತ 6,26,058 ಜನ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 1.63 ಲಕ್ಷ ಅರ್ಜಿಗಳು ಮಂಜೂರಾಗಿವೆ. 4,12,056 ಅರ್ಜಿಗಳು ಅನರ್ಹ ಎಂದು ತಿರಸ್ಕರಿಸಲಾಗಿದೆ. 94 ಸಿಸಿ ಅಡಿ 2,12,720 ಅರ್ಜಿಗಳು ಸ್ವೀಕಾರವಾಗಿದ್ದು, 69,236 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. 1,28,531 ಅರ್ಜಿಗಳನ್ನು ಅನರ್ಹ ಎಂದು ತಿರಸ್ಕರಿಸಲಾಗಿದೆ. ಬಾಕಿ 50 ಸಾವಿರ ಉಳಿದಿದ್ದು, ಅವುಗಳನ್ನು ಶೀಘ್ರವೇ ಇತ್ಯರ್ಥಪಡಿಸಲಾಗುವುದು ಎಂದರು. +ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ +ತಿರಸ್ಕಾರಗೊಂಡಿರುವುದರಲ್ಲಿ ಪಕ್ಷಭೇದವಿಲ್ಲ. ಬಿಜೆಪಿ ಸರ್ಕಾರವೇ ಹೆಚ್ಚು ಅರ್ಜಿ ತಿರಸ್ಕರಿಸಿದೆ. ಅರ್ಜಿ ಸಲ್ಲಿಸಿದವರಲ್ಲಿ ಮತ್ತು ಮಂಜೂರು ಪಡೆದವರಲ್ಲಿ ಅನರ್ಹರೇ ಹೆಚ್ಚಿದ್ದಾರೆ. ಇತ್ತೀಚೆಗೆ ಪರಿಶೀಲನೆ ವೇಳೆ ನೆಲಮಂಗಲದಲ್ಲಿ ಒಂದು ನಿಯಮ ಬಾಹಿರ ಮಂಜೂರಾತಿ ಕಂಡುಬಂದಿತ್ತು. ಇದಕ್ಕೆ ಸಂಬಂಧಪಟ್ಟಂತೆ ತಹಸೀಲ್ದಾರರನ್ನು ಅಮಾನತುಪಡಿಸಿದ್ದಾಗಿ ಹೇಳಿದರು. +2015ರವರೆಗೆ ಮನೆ ನಿರ್ಮಿಸಿಕೊಂಡವರಿಗೆ ಮಂಜೂರಾತಿ ನೀಡಬೇಕು ಎಂಬ ನಿಯಮ ಇದೆ. ಈಗ ಶಾಸಕರು 2019 ರವರೆಗೂ ಮನೆ ನಿರ್ಮಿಸಿದವರಿಗೆ ಅವಕಾಶ ಮಾಡಿಕೊಡಿ ಎನ್ನುತ್ತಿದ್ದಾರೆ. ಇದರ ಅರ್ಥ 2015 ರ ನಂತರವೂ ಉದ್ದೇಶಪೂರಕವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ ಅಲ್ಲವೇ, ಈ ರೀತಿ ಎಷ್ಟು ಬಾರಿ ಅವಕಾಶ ನೀಡುವುದು ಎಂದು ಪ್ರಶ್ನಿಸಿದರು. ಈ ಬಾರಿ ಹಲವು ಶಾಸಕರು ಮತ್ತೊಂದು ಅವಗೆ ಅವಕಾಶ ನೀಡುವಂತೆ ಪುನರ್ ಉಚ್ಚರಿಸಿದರು. \ No newline at end of file diff --git a/eesanje/url_46_232_3.txt b/eesanje/url_46_232_3.txt new file mode 100644 index 0000000000000000000000000000000000000000..f16c73d3c19a7c2d92f85019ddd7794b0a791a2d --- /dev/null +++ b/eesanje/url_46_232_3.txt @@ -0,0 +1,6 @@ +ಸರ್ಕಾರ ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ : ಬೊಮ್ಮಾಯಿ +ಬೆಂಗಳೂರು,ಫೆ.19- ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಮಕ್ಕಳ ಮನಸಲ್ಲಿ ಸಂಘರ್ಷ ಮೂಡಿಸುವ ಕೆಲಸ ಮಾಡಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸಮಾಜದಲ್ಲಿ ಮಕ್ಕಳಿಂದ ಹಿಡಿದು ಎಲ್ಲರಲ್ಲಿಯೂ ಸಂಘರ್ಷ ಉಂಟು ಮಾಡಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ. +ಸರ್ಕಾರದ ವಸತಿ ಶಾಲೆಗಳಲ್ಲಿ ಅಕ್ಕಿ ಸಿಗುತ್ತಿಲ್ಲ. ಅದೇ ಕಾರಣಕ್ಕೆ ನಾವು ಖಜಾನೆ ಖಾಲಿ ಇದೆ ಎಂದು ಹೇಳುತ್ತಿದ್ದೇವೆ. ಅಭಿವೃದ್ಧಿಗೆ ಹಣ ಕೊಡುವುದಿಲ್ಲ. ಹಸಿವು ಮುಕ್ತ ಕರ್ನಾಟಕ ಎಂದು ಬೋರ್ಡ್ ಹಾಕಿಕೊಂಡಿದ್ದಾರೆ. ಮೊದಲು ನಿಮ್ಮ ಶಾಲಾ ಮಕ್ಕಳಿಗೆ ಅನ್ನ ಕೊಡಿ ವಿದ್ಯೆ ಕೊಡಿ ಎಂದು ಕಿಡಿಕಾರಿದ್ದಾರೆ. ಬಡವರಿಗೆ ಅಕ್ಕಿಯನ್ನು ನರೇಂದ್ರಮೋದಿ ಸರ್ಕಾರ ಕೊಡುತ್ತಿದೆ. ಅದನ್ನೂ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಅದೇ ರೀತಿ ವಿದ್ಯಾರ್ಥಿಗಳಿಗೆ ನೀಡುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. +ವಿಧಾನಸಭೆಯಲ್ಲಿ ಅಲ್ಪಸಂಖ್ಯಾತರರ ಅಭಿವೃದ್ಧಿ ಅನುದಾನ ಕುರಿತ ಬಿಸಿಬಿಸಿ ಚರ್ಚೆ +ಆಂಗ್ಲ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ರಾಮಮಂದಿರ ಕುರಿತ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ 500 ವರ್ಷಗಳ ಹಿಂದೆಯೇ ಇದೆ. ಸಂತೋಷ ಲಾಡ್ ಏನು ಹೇಳಿಕೆ ನೀಡಿದ್ದಾರೊ ಗೊತ್ತಿಲ್ಲ. ಅವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಎಂಪಿ ಸ್ಥಾನ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಮುಂದಿನ ಮೂರು ತಿಂಗಳಲ್ಲಿ ಚುನಾವಣೆ ಫಲಿತಾಂಶ ಬರಲಿದೆ. ಸತ್ಯ ಎಂಬುದು ಗೊತ್ತಾಗಲಿದೆ. ಅವರಿಗೂ ಸತ್ಯ ಗೊತ್ತಿದೆ. ಅದಕ್ಕಾಗಿ ಅವರು ಕೇಂದ್ರ ರಾಜ್ಯ ಸರ್ಕಾರದ ನಡುವೆ ಕಂದಕ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. +ಈಗಾಗಲೇ ಭಾರತದ ಜನರು ಬಿಜೆಪಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ನ ನಾಯಕರಾದ ಕಮಲ್ ನಾಥ್ ಸೇರಿದಂತೆ ಅನೇಕ ಹಿರಿಯ ನಾಯಕರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_232_4.txt b/eesanje/url_46_232_4.txt new file mode 100644 index 0000000000000000000000000000000000000000..cbe3d0f40b35ea1e21cd95e72276e801166815ae --- /dev/null +++ b/eesanje/url_46_232_4.txt @@ -0,0 +1,5 @@ +ಲೋಡ್ ಶೆಡ್ಡಿಂಗ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಕೆ.ಜೆ.ಜಾರ್ಜ್ +ಬೆಂಗಳೂರು,ಫೆ.19- ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‍ಪೂರೈಕೆ ಮಾಡಲಾಗುತ್ತಿದ್ದು, ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಪರಿಷತ್‍ನಲ್ಲಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆ ಕೊರತೆಯಾಗಿದ್ದರೂ ಅಣೆಕಟ್ಟೆಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗಿದ್ದರಿಂದ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿಲ್ಲ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತದೆ ಎಂದು ಹೇಳಿದರು. +ಇಲ್ಲಿಯವರೆಗೆ ವಿದ್ಯುತ್ ಅಭಾವ ಇಲ್ಲ. ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗಲಿದೆ. ಬೇರೆ ಬೇರೆ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಕ್ರಮ ವಹಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯ ಜನಪ್ರತಿನಿಧಿಗಳ ಜೊತೆ ಈಗಾಗಲೇ ಸಭೆ ಮಾಡಿದ್ದೇವೆ ಎಂದು ತಿಳಿಸಿದರು. ಆರು ಲಕ್ಷ ಕಿಮೀ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಆಗುತ್ತಿದೆ. ಒಟ್ಟು 10 ಲಕ್ಷ ಟ್ರಾನ್ಸ್‍ಫರ್ಮರ್‍ಗಳು ಇವೆ. ಬಹುತೇಕ ರೈತರು ಕೃಷಿ ಪಂಪ್‍ಸೆಟ್‍ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಆದರೆ ನಾವು ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಐಪಿ ಸೆಟ್ ಪಡೆದು ಸಕ್ರಮ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡುತ್ತಿದ್ದೇವೆ. +ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ +ಗ್ರಾಮೀಣ ಭಾಗದಲ್ಲಿ ಸಮಸ್ಯೆಯಾದ ಟ್ರಾನ್ಸ್‍ಫರ್ಮರ್‍ಗಳನ್ನು 48 ಘಂಟೆಯೊಳಗೆ ಕೊಡಿ. ನಗರ ವ್ಯಾಪ್ತಿಯಲ್ಲಿ 24 ಘಂಟೆಯೊಳಗೆ ಕೊಡಿ ಎಂದು ಸೂಚನೆ ನೀಡಿದ್ದೇನೆ ಎಂದರು. ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ರಾತ್ರಿ ಸಮಯದಲ್ಲಿ ರೈತರು ಹೊಲಗದ್ದೆಗಳಿಗೆ ಹೋಗಲು ಆಗುವುದಿಲ್ಲ. ಸಾರ್ವಜನಿಕವಾಗಿ ತ್ರಿ ಫೇಸ್ ಕರೆಂಟ್ ಅವ ಪ್ರಕಟ ಮಾಡಿ ಎಂದಾಗ, ಮಾದ್ಯಮಗಳಲ್ಲಿ ಸಮಯದ ಅವಧಿಯನ್ನು ಪ್ರಕಟ ಮಾಡಲು ಸೂಚನೆ ಕೊಡುತ್ತೇನೆ ಎಂದು ಜಾರ್ಜ್ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_232_5.txt b/eesanje/url_46_232_5.txt new file mode 100644 index 0000000000000000000000000000000000000000..e5416015adfc3134f79637eadfac68a407e1ee0b --- /dev/null +++ b/eesanje/url_46_232_5.txt @@ -0,0 +1,8 @@ +ಖಾಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ : ಮಧುಬಂಗಾರಪ್ಪ +ಬೆಂಗಳೂರು,ಫೆ.19- ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ಭರ್ತಿ ಮಾಡಲು ತ್ವರಿತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯರಾದ ಮರಿತಿಬ್ಬೇಗೌಡ ಹಾಗೂ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಶಾಲೆ ಜೊತೆಗೆ ಅನುದಾನಿತ ಶಾಲೆಯನ್ನೂ ಪರಿಗಣಿಸುತ್ತೇವೆ. ಹೈಕೋರ್ಟ್‍ನಲ್ಲಿ ತಡೆಯಾಜ್ಞೆ ಇರುವುದರಿಂದ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ ಎಂಬುದನ್ನು ಒಪ್ಪಿಕೊಂಡರು. +ಕಳೆದ ಎಂಟು ವರ್ಷಗಳಿಂದ ನೇಮಕಾತಿಯನ್ನು ಮಾಡಿಕೊಂಡಿಲ್ಲ. ತಡೆಯಾಜ್ಞೆ ತೆರವುಗೊಳಿಸುವ ಸಂಬಂಧ, ಅಡ್ವೋಕೇಟ್ ಜನರಲ್‍ಜೊತೆ ಚರ್ಚಿಸಲಾಗಿದೆ. ಕಳೆದ ಎಂಟು ತಿಂಗಳಿಂದ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಶೀಘ್ರವೇ ನೇಮಕಾತಿ ಮಾಡುತ್ತೇವೆ, ಕೋರ್ಟ್ ಕೇಸ್ ಬಗ್ಗೆ ಕೂಡ ಹೆಚ್ಚು ಗಮನ ಕೊಡುತ್ತೇವೆ ಎಂದು ಹೇಳೀದರು. +ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೊಡುವಂತೆ ವಿಜಯೇಂದ್ರಗೆ ವರಿಷ್ಠರ ಸೂಚನೆ +ಅನುದಾನಿತ ಶಾಲೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರಿಂದ ಅನುಮತಿ ಪಡೆಯುವುದಷ್ಟೇ ಬಾಕಿ ಇದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆ ಎರಡಕ್ಕೂ ಒಂದೇ ಮಾನದಂಡ ಎಂದು ಸ್ಪಷ್ಟಪಡಿಸಿದರು. ಇದಕ್ಕೂ ಮುನ್ನ ಸಂಕನೂರ ಪ್ರಶ್ನೆ ಕೇಳಿ, ಅನುದಾನಿತ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ ಹಾಗೂ ಇನ್ನಿತರೆ ಕಾರಣದಿಂದ 2016ರಿಂದ ಇಲ್ಲಿಯವರೆಗೂ ಎಷ್ಟು ಖಾಲಿ ಹುದ್ದೆ ಇದೆ. ಹುದ್ದೆ ಭರ್ತಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಇದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊರತೆಯಾಗಿದೆ ಎಂದು ಆಕ್ಷೇಪಿಸಿದರು. +ಅನುದಾನಿತ ಶಾಲೆಯಲ್ಲಿ ಸಂಪನ್ಮೂಲದ ಕೊರತೆ ಇರುವುದರಿಂದ ವೇತನದ ಬಗ್ಗೆಯೂ ಗಮನಹರಿಸುತ್ತೇವೆ. ಸಂಜೀವಿನಿ ಮೂಲಕ ವಿಮೆ ಮಾಡುವ ಬಗ್ಗೆಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಎಂಟು ವರ್ಷದಿಂದ ನಡೆಯುತ್ತಲೇ ಇದೆ. ಸಮರ್ಪಕ ಉತ್ತರ ಬರುತ್ತಿಲ್ಲ. ಟೀಚರ್ ಇಲ್ಲದೆ ವಿದ್ಯಾರ್ಥಿಗಳು ಕಲಿಕೆಗೆ ಹಿನ್ನಡೆಯಾಗಿದೆ. ಏಡೆಡ್ ಶಾಲೆಗಳ ಶಿಕ್ಷಕರಿಗೆ ವಿಮಾ ಯೋಜನೆ ನೀಡಬೇಕು. ಬೇಕಿದ್ದರೆ ವೇತನದಲ್ಲೇ ಶೇ.50ರಷ್ಟು ಹಿಡಿಯಿರಿ ಎಂದು ಸದಸ್ಯ ಸಂಕನೂರು ಸಲಹೆ ಮಾಡಿದರು. +ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್ +ಹಣಕಾಸು ಇಲಾಖೆಯಿಂದ ಮಂಜೂರಾದ ಹುದೆಗಳನ್ನೂ ಭರ್ತಿ ಮಾಡಿಲ್ಲ. ಇನ್ನು ಎಷ್ಟು ದಿನ ಕಾಯಬೇಕು? ಹೈಕೋರ್ಟ್ ಹೇಳಿದ ಮೇಲೂ ನೇಮಕಾತಿ ಮಾಡಿಲ್ಲ. ಹೈಕೋರ್ಟ್ ಆದೇಶಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ನಾನು ಬದ್ದನಿದ್ದೇನೆ. ಶೀಘ್ರವೇ ಭರ್ತಿ ಮಾಡುವ ಕೆಲಸ ಆಗಲಿದೆ. ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸಕ್ಕೆ ಬದ್ದ. ಕೋರ್ಟ್ ಆದೇಶದ ಮೂಲಕವೇ ನೇಮಕವಾಗಬೇಕು. ಅದಕ್ಕೆ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.ವೇತನದಲ್ಲಿ ಕಡಿತ ಮಾಡಿ ಶಿಕ್ಷಕರಿಗೆ ವಿಮೆ ಯೋಜನೆ ಜಾರಿಗೊಳಿಸುವ ಪ್ರಕ್ರಿಯೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. \ No newline at end of file diff --git a/eesanje/url_46_232_6.txt b/eesanje/url_46_232_6.txt new file mode 100644 index 0000000000000000000000000000000000000000..3c24e32400fd63096ebe6da7400fa86aab00a3cf --- /dev/null +++ b/eesanje/url_46_232_6.txt @@ -0,0 +1,9 @@ +ಜೈನಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ +ಬೆಂಗಳೂರು,ಫೆ.19-ಜೈನಮುನಿಗಳಾದ ಆಚಾರ್ಯ ವಿದ್ಯಾಸಾಗರ ಮಹಾರಾಜರ ನಿಧನಕ್ಕೆ ವಿಧಾನಸಭೆಯಲ್ಲಿಂದು ಸಂತಾಪ ಸೂಚಿಸಲಾಯಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ಸೂಚನಾ ನಿರ್ಣಯವನ್ನು ಕೈಗೆತ್ತಿಕೊಂಡು, ವಿದ್ಯಾಸಾಗರ ಮಹಾರಾಜರು ನಿಧನರಾಗಿರುವುದನ್ನು ಅತ್ಯಂತ ವಿಷಾದದಿಂದ ಸದನಕ್ಕೆ ತಿಳಿಸಿದರು. +ವಿದ್ಯಾಸಾಗರ ಮಹಾರಾಜರು 1946 ರ ಅಕ್ಟೋಬರ್ 10 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗದಲ್ಲಿ ಜನಿಸಿದರು. ದಿಗಂಬರ ಜೈನ ಪಂಥದವರಾಗಿದ್ದ ಮುನಿಗಳು ತಮ್ಮ 22ನೇ ವಯಸ್ಸಿನಲ್ಲಿ ಆಚಾರ್ಯ ಜ್ಞಾನಸಾಗರ ಮುನಿಮಹಾರಾಜರಿಂದ ಮುನಿದೀಕ್ಷೆ ಪಡೆದು ನಂತರ ಆಚಾರ್ಯ ಪದವಿ ಪಡೆದಿದ್ದ ವಿದ್ಯಾಸಾಗರ ಮಹಾರಾಜರು ಸಂಸ್ಕøತ, ಪ್ರಾಕೃತ ಭಾಷೆಗಳು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದು, ನಿರಂಜನ ಶತಕ, ಭಾವನ ಶತಕ, ಶ್ರಮನ ಶತಕ ಪ್ರಮುಖವಾಗಿವೆ. ಅಲ್ಲದೆ ಕನ್ನಡ, ಹಿಂದಿ, ಮರಾಠಿ ಸೇರಿದಂತೆ 8 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದ ಅವರು, ಹಿಂದಿಯಲ್ಲಿ ರಚಿಸಿದ ಮೂಖಮಾಠಿ ಎಂಬ ಮಹಾಕಾವ್ಯವು ಪ್ರಸಿದ್ಧಿಯಾಗಿದೆ ಎಂದು ಹೇಳಿದರು. +ಜೈನಮುನಿಗಳಾಗಿ ವಿದ್ಯಾಸಾಗರ ಮಹಾರಾಜರು 120 ಜನರಿಗೆ ಮುನಿದೀಕ್ಷೆಯನ್ನು ನೀಡಿದ್ದು, ಹಲವರಿಗೆ ಬ್ರಹ್ಮಚರ್ಯ ದೀಕ್ಷೆಗಳನ್ನು ನೀಡಿದ್ದಾರೆ. ದೇಶದಲ್ಲಿಯೇ ಅತೀ ದೊಡ್ಡ ಗೋಶಾಲೆಯನ್ನು ನಿರ್ಮಿಸಿದ್ದು, ಬಡ ನಿರ್ಗತಿಕ ಮಕ್ಕಳಿಗೆ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು. ತಮ್ಮ ಜೀವನದುದ್ದಕ್ಕೂ ಜೈನ ಧರ್ಮದ ತತ್ವಗಳನ್ನು ಪಾಲಿಸಿ, ಬೋಸುತ್ತಾ ಕವಿ, ಯೋಗಿ, ಸಾಧಕ-ಚಿಂತಕ ಹಾಗೂ ದಾರ್ಶನಿಕ ರೂಪದಲ್ಲಿ ಕಾಣಿಸಿಕೊಂಡಿದ್ದ ಮೇರು ಸಂತ ಆಚಾರ್ಯರು ಛತ್ತೀಸ್‍ಗಡ ರಾಜ್ಯದ ಡೋಂಗರಗಡದಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನ ವ್ರತ ಕೈಗೊಂಡು ನಿನ್ನೆ ನಸುಕಿನ ಜಾವ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ವಿಷಾದಿಸಿದರು. +ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ +ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ವಿದ್ಯಾಸಾಗರ ಮಹಾರಾಜರು ಸಲ್ಲೇಖನ ವ್ರತ ಆಚರಣೆ ಮೂಲಕ ದೇಹತ್ಯಾಗ ಮಾಡಿದ್ದಾರೆ. ಲೌಖಿಕ ಜೀವನವನ್ನು ತ್ಯಾಗ ಮಾಡಿ ಮೇಲ್ಮಟ್ಟದ ಜೀವನ ನಡೆಸಿ ನಮ್ಮೆಲ್ಲರಿಗೂ ದಾರಿ ತೋರಿಸಿದ್ದಾರೆ. ನಾವೆಲ್ಲಾ ಆಸೆ, ಆಕಾಂಕ್ಷೆಗಳ ಜಂಜಾಟದ ಬದುಕಿನಲ್ಲಿ ಸಿಲುಕುತ್ತೇವೆ. ಅವುಗಳ ಹೊರತಾಗಿಯೂ ಜೀವನ ನಡೆಸಬಹುದು ಎಂದು ಅವರು ತೋರಿಸಿದ್ದಾರೆ. ಅವರ ಆಲೋಚನೆಗಳು ಅಮರವಾಗಿ ನಮ್ಮೊಂದಿಗೆ ಉಳಿಯಲಿದೆ ಎಂದು ಸ್ಮರಿಸಿದರು. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಿದ್ಯಾಸಾಗರ ಮಹಾರಾಜರ ಇಡೀ ಕುಟುಂಬ ಜೈನ ಪರಂಪರೆಗೆ ಸೇರಿದವರು. ನಮ್ಮ ದೇಶದಲ್ಲಿ ಋಷಿಮುನಿಗಳ ಪರಂಪರೆ ಇದೆ. ಧರ್ಮ, ಸಂಸ್ಕøತಿ ಉಳಿಸಲು ಅವರು ಮಾಡಿರುವ ಕಾರ್ಯ ಸ್ಮರಣೀಯ ಎಂದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಜೈನ ಧರ್ಮೀಯರು ಸಣ್ಣ ವಯಸ್ಸಿನಲ್ಲಿಯೇ ದೀಕ್ಷೆ ಪಡೆಯುತ್ತಾರೆ. ಐಷಾರಾಮಿ ಜೀವನವನ್ನು ತ್ಯಜಿಸಿ ಧರ್ಮದ ಹಾದಿಯಲ್ಲಿ ನಡೆಯುತ್ತಾರೆ. ಗೋವಿನ ರಕ್ಷಣೆ ಪವಿತ್ರವೆಂದು ಭಾವಿಸಿದ್ದಾರೆ. ನಂದಗಾವ್‍ನಲ್ಲಿ 3 ಸಾವಿರ ಎಕರೆಯಲ್ಲಿ ಒಂದೂವರೆ ಲಕ್ಷ ಗೋವುಗಳನ್ನು ಸಂರಕ್ಷಣೆ ಮಾಡಲಾಗಿದೆ. ದೇಶ ಹಾಗೂ ಸಮಾಜಕ್ಕೆ ಅವರು ಮಾಡಿದ ಸೇವೆ ಉತ್ತಮವಾದುದು ಎಂದು ಗುಣಗಾನ ಮಾಡಿದರು. +ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್ +ಶಾಸಕ ಚನ್ನಬಸಪ್ಪ ಅವರು ಸಂತಾಪ ಸೂಚನಾ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದರು. ಬಳಿಕ ಸದನದ ಸದಸ್ಯರೆಲ್ಲರೂ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಿದರು. \ No newline at end of file diff --git a/eesanje/url_46_232_7.txt b/eesanje/url_46_232_7.txt new file mode 100644 index 0000000000000000000000000000000000000000..ddd28022faa0556b66fb4f144f4371a4d9c5e0b2 --- /dev/null +++ b/eesanje/url_46_232_7.txt @@ -0,0 +1,6 @@ + ನಂಬರ್​ ಪ್ಲೇಟ್ ಕುರಿತು​​ ಗುಡ್ ನ್ಯೂಸ್..! +ಬೆಂಗಳೂರು,ಫೆ.19- ಮಾರ್ಚ್ 3, 2019ರ ಬಳಿಕ ರಸ್ತೆಗೆ ಇಳಿಯುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಇನ್ನು ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ. +ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಮಾದೇಗೌಡ ಅವರು ಮಾತನಾಡಿ “ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚಿನ ವಾಹನಗಳಿವೆ. ಹಳ್ಳಿ ಜನರು ವಾಹನಗಳಿಗೆ ಇನ್ನೂ ಹೆಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಬೇಕು. ಆನ್​ಲೈನ್​ನಲ್ಲಿ ನೊಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ ಇದರ ಬಗ್ಗೆ ಸಾರಿಗೆ ಇಲಾಖೆ ಕ್ರಮ ಕೈಗೊಳ್ಳಬೇಕು. ಅಲ್ಲದೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಅವಧಿಯನ್ನು ಸರ್ಕಾರ ನೀಡಿರುವ ಗಡುವು ವಿಸ್ತರಿಸಬೇಕು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಇನ್ನು ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ಸದನಕ್ಕೆ ತಿಳಿಸಿದರು. +ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ +ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?ಈ ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ. +ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನhttps://... ಅಥವಾ .. ಭೇಟಿ ನೀಡಿ ಮತ್ತು ನ್ನು ಕ್ಲಿಕ್ ಮಾಡಿ.ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.ನಿಮ್ಮ ಅನುಕೂಲಕ್ಕೆ, ತಕ್ಕಂತೆ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು. \ No newline at end of file diff --git a/eesanje/url_46_232_8.txt b/eesanje/url_46_232_8.txt new file mode 100644 index 0000000000000000000000000000000000000000..69228b958e15a2d1627fd2a605b882c7a934a7b3 --- /dev/null +++ b/eesanje/url_46_232_8.txt @@ -0,0 +1,11 @@ +ವಿಧಾನಸಭೆಯಲ್ಲಿ ಅಲ್ಪಸಂಖ್ಯಾತರರ ಅಭಿವೃದ್ಧಿ ಅನುದಾನ ಕುರಿತ ಬಿಸಿಬಿಸಿ ಚರ್ಚೆ +ಬೆಂಗಳೂರು,ಫೆ.19- ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕರು ಕೇಳಿದ ಪ್ರಶ್ನೆ ವಿಧಾನಸಭೆಯಲ್ಲಿಂದು ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಗಿ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ, ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಮಂಜೂರು ಮಾಡಿ ಬಿಡುಗಡೆ ಮಾಡಿದೆ ಎಂದು ಪ್ರಶ್ನೆ ಕೇಳಿ, ರೈತರ ಹಿತವನ್ನು ಕಡೆಗಣಿಸಿ ಮುಖ್ಯಮಂತ್ರಿಯವರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದಿದ್ದರು. 1 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲೂ ಬಿಜೆಪಿ ಶಾಸಕರಿಗೆ ತಾರತಮ್ಯ ಮಾಡಲಾಗಿದೆ ಎಂದು ಆಕ್ಷೇಪಿಸಿದರು. +ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್‍ಖಾನ್ ಉತ್ತರ ನೀಡಿ, ಅಲ್ಪಸಂಖ್ಯಾತರಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ. 1 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರು. ಅದರಲ್ಲಿ 300 ಕೋಟಿ ರೂ.ಗಳ ಯೋಜನೆ ಸಿದ್ಧವಾಗಿದ್ದು, 165 ಕೋಟಿ ರೂ. ಮಾತ್ರ ಬಿಡುಗಡೆಯಾಗಿದೆ ಎಂದರು. +ವಿಜಯೇಂದ್ರರವರು ಆರೋಪಿಸುವಂತೆ ಅಲ್ಪಸಂಖ್ಯಾತರಿಗೆ ಸಾವಿರಾರು ಕೋಟಿ ರೂ.ಗಳನ್ನು ನೀಡಿಲ್ಲ. 3.71 ಲಕ್ಷ ಕೋಟಿ ಬಜೆಟ್‍ನಲ್ಲಿ 300 ಕೋಟಿ ರೂ. ಮಾತ್ರ ನೀಡಿದ್ದಾರೆ. ಅದು ಬಜೆಟ್ ಗಾತ್ರದ ಶೇ.1 ರಷ್ಟು ಪಾಲಿನಂಶವಾಗುವುದಿಲ್ಲ ಎಂದು ಹೇಳಿದರು. ಅಲ್ಪ ಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ ಪಕ್ಷಬೇಧ ಇಲ್ಲದೆ ಹಣ ನೀಡಿದ್ದೇವೆ. ಬಿಜೆಪಿಯ 29, ಜೆಡಿಎಸ್‍ನ 9 ಶಾಸಕರಿಗೂ ಹಣ ಒದಗಿಸಲಾಗಿದೆ. ಕಾಲೋನಿಗಳನ್ನು ಎ,ಬಿ,ಸಿ ಎಂದು ವರ್ಗೀಕರಿಸಿ ಅಲ್ಪಸಂಖ್ಯಾತರು ಹೆಚ್ಚಿರುವ ಕಾಲೋನಿಗಳಿಗೆ ಗರಿಷ್ಠ 5 ಕೋಟಿ ರೂ.ವರೆಗೂ ಹಣ ನೀಡಲಾಗುತ್ತಿದೆ. 94 ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಾಗಿದೆ ಎಂದು ವಿವರಿಸಿದರು. +ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ +ಈ ಸಂದರ್ಭದಲ್ಲಿ ಎದ್ದುನಿಂತ ಬಿಜಾಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನನ್ನ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ 1.20 ಲಕ್ಷ ಜನಸಂಖ್ಯೆ ಇದೆ. ಆದರೆ ನನಗೆ ಹಣವನ್ನೇ ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ತಿರುಗೇಟು ನೀಡಿದ ಜಮೀರ್ ಅಹಮ್ಮದ್ ಖಾನ್, ನೀವು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೆಲಸ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದೀರ. ಬುರ್ಖಾ, ಟೋಪಿ ಧರಿಸಿದವರು ನಮ್ಮ ಹತ್ತಿರ ಬರಬೇಡಿ ಎಂದು ಹೇಳಿಕೆ ನೀಡಿರುವುದನ್ನು ನೋಡಿದ್ದೇನೆ. ಕೆಲಸ ಮಾಡುವುದಾದರೆ ಪತ್ರ ಕೊಡಿ. 10 ಕೋಟಿ ರೂ. ಬೇಕಾದರೂ ಅನುದಾನ ಕೊಡುತ್ತೇನೆ ಎಂದರು. +ಇದು ಬಿಜೆಪಿ ಶಾಸಕರನ್ನು ಕೆಣಕಿತ್ತು. ಅಶೋಕ್, ನಾರಾಯಣ, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿ, ಸಚಿವರು ಸರ್ಕಾರವಾಗಿ ಕೆಲಸ ಮಾಡಬೇಕು. ವೈಯಕ್ತಿಕವಾಗಿ ಅಥವಾ ರಾಜಕೀಯವಾಗಿ ನಡೆದುಕೊಳ್ಳಬಹುದು. ಹೇಳಿಕೆಗಳು ಏನೇ ಇರಲಿ, ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಕಡೆಗಣಿಸುವುದು ಅವರಿಗೆ ಮಾಡಿದ ವಂಚನೆ ಎಂದು ಟೀಕಿಸಿದರು. +ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಮ್ಮ ಸರ್ಕಾರ ಬಿಜೆಪಿಯ 28 ಶಾಸಕರ ಕ್ಷೇತ್ರಗಳಿಗೂ ಹಣ ನೀಡಿದೆ. ಆದರೆ ಹಿಂದಿನ ಸರ್ಕಾರ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಿತ್ತು ಎಂದು ಪ್ರತ್ಯುತ್ತರಿಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಮಧ್ಯಪ್ರವೇಶಿಸಿ, ಬಿಜಾಪುರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಿದ್ದಾರೆ. ಸರ್ಕಾರ ಅವರ ಅಭಿವೃದ್ಧಿಯನ್ನು ಕಡೆಗಣಿಸುವುದು ಒಳ್ಳೆಯದಲ್ಲ ಎಂದು ಹೇಳಿದರು. ಈ ನಡುವೆ ಬಸನಗೌಡ ಯತ್ನಾಳ್ ಪದೇಪದೇ ಮಾತನಾಡುತ್ತಿದ್ದಾಗ, ನಾನು ನಿಮ್ಮ ಪರವಾಗಿ ಶುಲ್ಕ ಇಲ್ಲದೆ ವಕಾಲತ್ತು ಮಾಡುತ್ತಿದ್ದೇನೆ. ಸ್ವಲ್ಪ ಹೊತ್ತು ತಾಳ್ಮೆಯಿಂದ ಇರಿ ಎಂದು ತಮ್ಮ ಪಕ್ಷದ ಹಿರಿಯ ಶಾಸಕರಿಗೆ ಸಲಹೆ ನೀಡಿದರು. +ಚರ್ಚೆ ಮುಂದುವರೆಸಿದ ಬೊಮ್ಮಾಯಿಯವರು, ರಾಜಕೀಯವಾಗಿ ಮಾತನಾಡುವುದು ಬೇರೆ, ಅಭಿವೃದ್ಧಿ ಬೇರೆ ಬಿಜಾಪುರದಲ್ಲಿರುವ ಅಲ್ಪ ಸಂಖ್ಯಾತರ ಅಭಿವೃದ್ಧಿಯನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಇನ್ನು ನನ್ನ ಕ್ಷೇತ್ರಕ್ಕೆ 5 ಕೋಟಿ ಕೊಟ್ಟಿರುವುದಾಗಿ ಹೇಳಿದ್ದೀರ. ಬೇರೆಯವರ ಪತ್ರದ ಮೇಲೆ ಹಣ ಕೊಟ್ಟರೆ, ಅಲ್ಲಿ ಯಾವ ಕೆಲಸಗಳಾಗುತ್ತವೆ ಎಂದು ನಮಗೆ ಗೊತ್ತಿರುತ್ತದೆ ಎಂದು ಎಚ್ಚರಿಸಿದರು. +ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್ +ಯತ್ನಾಳ್‍ರವರ ಆಕ್ಷೇಪಾರ್ಹ ಟೀಕೆಗಳಿಗೆ ಮುಖ್ಯಮಂತ್ರಿಯಾಗಿದ್ದ ನೀವು ಆ ವೇಳೆಯೇ ತಿಳಿ ಹೇಳಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಜಮೀರ್ ಅಹಮ್ಮದ್ ಖಾನ್‍ರವರು ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದರು. ಯತ್ನಾಳ್‍ರವರು ಅಲ್ಪಸಂಖ್ಯಾತರೆಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ, ಜೈನರು, ಬೌದ್ಧರು ಸೇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಬಿ.ವೈ.ವಿಜಯೇಂದ್ರರವರು ಸರ್ಕಾರ ದಿವಾಳಿಯಾಗಿದೆ. ಅದಕ್ಕಾಗಿ ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_232_9.txt b/eesanje/url_46_232_9.txt new file mode 100644 index 0000000000000000000000000000000000000000..e34f3d47e405e47e4e9f8c503cc9a3b972810318 --- /dev/null +++ b/eesanje/url_46_232_9.txt @@ -0,0 +1,5 @@ +ಒಂದು ಲಕ್ಷ ವಸತಿ ಯೋಜನೆ ಯಶಸ್ವಿಗೊಳಿಸಲುವ ಭರವಸೆ +ಬೆಂಗಳೂರು,ಫೆ.19- ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆಯನ್ನು ಯಶಸ್ವಿಗೊಳಿಸಲು, ಅಗತ್ಯ ಸಹಕಾರ ಕೊಡಿಸಲು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ಸರ್ಕಾರವೇ ರೂಪಿಸಿದ್ದ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ವಿಳಂಬವಾಗುತ್ತಿದೆ. ಮನೆ ನಿರ್ಮಾಣದ ವೆಚ್ಚ ಐದಾರು ಲಕ್ಷದಿಂದ 12-13 ಲಕ್ಷಗಳಿಗೆ ಹೆಚ್ಚಾಗಿರುವುದು ಇದಕ್ಕೆ ಕಾರಣ ಎಂದು ಹೇಳಿದರು. +ಈ ಹಿಂದೆ ಬೆಂಗಳೂರಿನ ಶಾಸಕರು ಬಡವರಿಗೆ ಮನೆ ನಿರ್ಮಿಸಿಕೊಡಲು ಯೋಜನೆ ರೂಪಿಸುವಂತೆ 2015-16 ರಲ್ಲಿ ಆಗಲೂ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದೆವು. ಅದರ ಪರಿಣಾಮ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ಅನುಷ್ಠಾನಕ್ಕೆ ಬಂದಿತ್ತು. ಆ ವೇಳೆ ಮನೆ ನಿರ್ಮಾಣದ ವೆಚ್ಚ 5 ಲಕ್ಷ ರೂ. ಇತ್ತು. ಸ್ಟಾಂಪ್ ಡ್ಯೂಟಿ, ಜಿಎಸ್‍ಟಿ ಸೇರಿದಂತೆ ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆ ನಿರ್ಮಾಣವೂ ದುಬಾರಿಯಾಗಿದೆ. ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಿವರಿಸಿದರು. +ಅತ್ಯಾಚಾರ ಸಂತ್ರಸ್ಥೆಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾಜಿಸ್ಟ್ರೇಟ್ +ಮುಖ್ಯಮಂತ್ರಿಯವರ ಹೊಸ ಯೋಜನೆಗೆ ಅರ್ಜಿ ಸಲ್ಲಿಸಿರುವವರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿಕೊಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಯೋಜನೆಗೆ ಅಗತ್ಯ ಆರ್ಥಿಕ ನೆರವು ನೀಡುವಂತೆ ಬೆಂಗಳೂರಿನ ಶಾಸಕರು ಒಟ್ಟಾಗಿ ಮನವಿ ಮಾಡುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_233_1.txt b/eesanje/url_46_233_1.txt new file mode 100644 index 0000000000000000000000000000000000000000..4f94c0e9bf59784e976e4de956e932dc0b2c31b2 --- /dev/null +++ b/eesanje/url_46_233_1.txt @@ -0,0 +1,11 @@ +ನಾಳೆಯಿಂದ ವಿಧಾನಮಂಡಲದಲ್ಲಿ ಬಜೆಟ್ ಫೈಟ್ +ಬೆಂಗಳೂರು,ಫೆ.18- ಲೋಕಸಭಾ ಚುನಾವಣೆಯ ತಯಾರಿಯಲ್ಲಿರುವ ರಾಜಕೀಯ ಪಕ್ಷಗಳು ನಾಳೆಯಿಂದ ವಿಧಾನಮಂಡಲದಲ್ಲಿ ಆರಂಭವಾಗುವ ಬಜೆಟ್ ಮೇಲಿನ ಚರ್ಚೆಯಲ್ಲಿ ಹಣಾಹಣಿಯ ವಾಕ್ಸಮರಕ್ಕೆ ಸಜ್ಜುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ 3.71 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಬಜೆಟ್‍ನಲ್ಲಿ 55 ಸಾವಿರ ಕೋಟಿ ಬಂಡವಾಳ ವೆಚ್ಚ ಹಾಗೂ ಪಂಚಖಾತ್ರಿ ಯೋಜನೆಗೆ 52 ಸಾವಿರ ಕೋಟಿ ಹಣ ನಿಗದಿ ಮಾಡಿದ್ದಾರೆ. +ಜೊತೆಗೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ ಸಾಲದ ಪ್ರಮಾಣ 1 ಲಕ್ಷ ಕೋಟಿ ರೂ. ದಾಟಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ವಿರೋಧ ಪಕ್ಷಗಳು ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಯಾರಿ ನಡೆಸಿದರೆ, ಇದಕ್ಕೆ ಪ್ರತಿಯಾಗಿ ಹಿಂದಿನ ಸರ್ಕಾರಗಳು ಮಾಡಿದ್ದ ಸಾಲದ ಪ್ರಮಾಣವನ್ನು ಲೆಕ್ಕ ಹಾಕಿಟ್ಟುಕೊಂಡು ಸಿದ್ದರಾಮಯ್ಯ ತಿರುಗೇಟು ನೀಡಲು ಸಜ್ಜುಗೊಂಡಿದ್ದಾರೆ. +2024-25ನೇ ಸಾಲಿನಲ್ಲಿ 1.05 ಲಕ್ಷ ಕೋಟಿ ಸಾಲ ಪಡೆಯಲಾಗುತ್ತಿದೆ. ಆದರೆ ಇದನ್ನು ಸರಿಯಾದ ಮಾರ್ಗದಲ್ಲೇ ಉಪಯೋಗಿಸಲಾಗುತ್ತಿದೆ. ಬಂಡವಾಳ ವೆಚ್ಚ ಮತ್ತು ಪಂಚಖಾತ್ರಿಗಳಿಗೆ 1.07 ಲಕ್ಷ ಕೋಟಿ ವೆಚ್ಚವಾಗುತ್ತಿದೆ. ಈ ಎರಡೂ ಬಾಬ್ತುಗಳು ಒಂದು ಆಸ್ತಿ ಸೃಜನೆಯಾಗಿದ್ದರೆ, ಮತ್ತೊಂದು ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವ ಮಹತ್ವಾಕಾಂಕ್ಷೆಯುಳ್ಳದ್ದಾಗಿದೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಳ್ಳಲು ಮುಂದಾಗಿದೆ. +ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿಯವರು ಕೇಂದ್ರ ಸರ್ಕಾರದ ಆರ್ಥಿಕ ತಾರತಮ್ಯದ ಬಗ್ಗೆ ಹಾಗೂ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಸಹಕಾರದ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಬಜೆಟ್ ಮಂಡನೆಯಲ್ಲಿ ಹನ್ನೊಂದನೇ ಪುಟ ಓದುವ ವೇಳೆಗೆ ಜೆಡಿಎಸ್ ಮತ್ತು ಬಿಜೆಪಿ ಕಲಾಪವನ್ನು ಬಹಿಷ್ಕರಿಸಿ ಹೊರ ನಡೆದಿದ್ದವು. ಕೇಂದ್ರ ಸರ್ಕಾರವನ್ನು ಟೀಕಿಸಿದ್ದು ವಿರೋಧಪಕ್ಷಗಳಿಗೆ ಸಹಿಸಲಾಸಾಧ್ಯವಾಗಿತ್ತು. ಬಜೆಟ್‍ನಲ್ಲಿ ಏನೂ ಇಲ್ಲ ಎಂದು ಟ್ರೋಲಿಂಗ್ ಹಾಡು ಹಾಡಿ ಲೇವಡಿ ಮಾಡಿವೆ. ಇದಕ್ಕೆ ಮುಖ್ಯಮಂತ್ರಿಯವರು ವಿಪಕ್ಷಗಳ ತಲೆಯಲ್ಲಿ ಏನೂ ಇಲ್ಲ ಎಂದು ತಿರುಗೇಟು ನೀಡಿಯೂ ಆಗಿದೆ. +ನಂತರ ಬಜೆಟ್‍ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚಿನ ಹಣ ನೀಡಲಾಗಿದೆ. ಹಿಂದೂಗಳನ್ನು ಕಡೆಗಣಿಸಲಾಗಿದೆ ಎಂಬ ಪ್ರಚಾರವನ್ನು ವಿಪಕ್ಷಗಳು ವ್ಯಾಪಕವಾಗಿ ಬಿಂಬಿಸಿವೆ. ಇದಕ್ಕೆ ಕಾಂಗ್ರೆಸ್ ಎಷ್ಟೇ ಸಮರ್ಥನೆ ನೀಡಿದರೂ ಜನರ ಮನಸ್ಸಿನಲ್ಲಿರುವ ಅನುಮಾನ ನಿವಾರಣೆಯಾಗುವ ಸನ್ನಿವೇಶಗಳು ಕಂಡುಬರುತ್ತಿಲ್ಲ. ಮುಖ್ಯಮಂತ್ರಿಯವರು 15 ಬಜೆಟ್ ಮಂಡಿಸಿದ ಅನುಭವದ ಆಧಾರದ ಮೇಲೆ ವಿಪಕ್ಷಗಳ ಟೀಕೆ ಹಾಗೂ ಅಪಪ್ರಚಾರವನ್ನು ಹೇಗೆ ನಿಭಾಯಿಸುತ್ತಾರೆಂಬುದು ಕುತೂಹಲ ಕೆರಳಿಸಿದೆ. +ಲೋಕಸಭೆ ಚುನಾವಣೆ ಸಮೀಪ ಇರುವುದರಿಂದ ಕಾಂಗ್ರೆಸ್ ಪಕ್ಷವನ್ನು ಹಿಂದೂ ವಿರೋ ಎಂದು ಹಣೆಪಟ್ಟಿ ಕಟ್ಟಲು ಬಿಜೆಪಿ ಮತ್ತು ಜೆಡಿಎಸ್ ಹರಸಾಹಸ ನಡೆಸುತ್ತಿವೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಹಿಂದಿನ ಬಾರಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಯಾವುದೇ ಲಾಭವಾಗಿಲ್ಲ. ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ನಿರಂತರ ತಾರತಮ್ಯವಾಗುತ್ತಿದೆ ಎಂಬ ಭಾವನೆ ದೃಢೀಕರಿಸಲು ಯತ್ನಿಸುತ್ತಿದೆ. +ಈ ಜಿದ್ದಾಜಿದ್ದಿ ನಡುವೆ ಬಜೆಟ್‍ನ ಲೋಪದೋಷಗಳ ಬಗ್ಗೆಯೂ ಸಾಕಷ್ಟು ವಿಮರ್ಶೆ ನಡೆಯುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಯ ಪೂರ್ವ ತಾಲೀಮಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿನ್ನೆ ದೆಹಲಿಯಲ್ಲಿ ನಡೆದಿದೆ.ದೇಶಾದ್ಯಂತ 3 ಸಾವಿರಕ್ಕೂ ಹೆಚ್ಚು ಜನಪ್ರತಿನಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು. ಹೈಕಮಾಂಡ್ ನಾಯಕರು ವಿಪಕ್ಷಗಳನ್ನು ಮಣಿಸಲು ಅನುಸರಿಸಿದ ಕಾರ್ಯತಂತ್ರಗಳ ಬಗ್ಗೆ ಕೇಸರಿ ಕಲಿಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. +ವರಿಷ್ಠರು ನೀಡುವ ಪಾಶುಪತಾಸ್ತ್ರಗಳೊಂದಿಗೆ ಆಗಮಿಸಿರುವ ಬಿಜೆಪಿಯ ಶಾಸಕರು, ಪ್ರಮುಖ ನಾಯಕರು ನಾಳೆ ವಿಧಾನಮಂಡಲದಲ್ಲಿ ರಣೋತ್ಸಾಹ ಪ್ರದರ್ಶಿಸುವ ಸಾಧ್ಯತೆಯಿದೆ. ಇತ್ತ ಕಾಂಗ್ರೆಸ್ ಕೂಡ ನಿನ್ನೆ ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶ ನಡೆಸಿ, ಲೋಕಸಭೆಯ ಪೂರ್ವ ತಯಾರಿಗೆ ರಣಕಹಳೆ ಊದಿದೆ. ಅದೇ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್‍ನ ನಾಯಕರು ಬಿಜೆಪಿಗೆ ಠಕ್ಕರ್ ನೀಡಲು ಸಜ್ಜುಗೊಂಡಿದ್ದಾರೆ. ಈಗಾಗಲೇ ಶಾಸಕಾಂಗ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ಟೀಕೆ, ವಾಗ್ದಾಳಿಗೆ ಪ್ರತ್ಯುತ್ತರಿಸಲು ಒಂದು ಪಡೆಯನ್ನೇ ಸಜ್ಜುಗೊಳಿಸಿದ್ದಾರೆ. +ಬೆಳಗಾವಿ ಅಧಿವೇಶನದಲ್ಲಿ ಪ್ರತಿ ಹಂತದಲ್ಲೂ ಶಾಸಕರ ಅನಗತ್ಯ ಚರ್ಚೆಗಳಿಗೆ ಬ್ರೇಕ್ ಹಾಕುತ್ತಿದ್ದ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಬೆಂಗಳೂರಿನ ಕಲಾಪದಲ್ಲಿ ಉದಾರಿಯಾದಂತೆ ಕಂಡುಬಂದಿದೆ. ಗುರುವಾರ ಮಂಗಳೂರಿನ ಸೆಂಟ್ ಥೆರೇಸಾ ಶಾಲೆಯ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಗದ್ದಲ ಎಬ್ಬಿಸುವ ಪ್ರಯತ್ನ ನಡೆಸಿತ್ತು. ಅದಕ್ಕೆ ಕಾಂಗ್ರೆಸ್ ಕೂಡ ಸಿದ್ಧವಾಗಿಯೇ ಪ್ರತಿ ವಾಗ್ದಾಳಿ ನಡೆಸಿದ್ದು ಕಂಡುಬಂದಿತ್ತು. ಆ ವಿಚಾರವನ್ನು ಬಿಜೆಪಿ ಕೈ ಬಿಟ್ಟಿದೆಯೇ ಅಥವಾ ಇಲ್ಲವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. +ಮೊನ್ನೆ ಬಜೆಟ್ ಅಧಿವೇಶನ ಇದ್ದಿದ್ದರಿಂದಾಗಿ ಬಿಜೆಪಿ ಸಭಾತ್ಯಾಗ ಮಾಡಿ, ಮಂಗಳೂರಿನ ವಿಚಾರವನ್ನು ಅರ್ಧಕ್ಕೆ ನಿಲ್ಲಿಸಿದಂತೆ ಕಂಡುಬರುತ್ತಿದೆ. ರಾಜ್ಯದ ಬರ, ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ ಸೃಷ್ಟಿಯ ಲೋಪಗಳು, ಕೈಗಾರಿಕೆ ಹಿನ್ನಡೆ, ಶಿಕ್ಷಣ ವ್ಯವಸ್ಥೆಯಲ್ಲಿನ ಸುಧಾರಣೆ, ಬೆಲೆ ಏರಿಕೆ, ವಿದ್ಯುತ್ ಕೊರತೆ, ಕೃಷಿ ಉತ್ಪನ್ನಗಳ ಬೆಲೆ ಕುಸಿತ ಸೇರಿದಂತೆ ಹಲವಾರು ಮಹತ್ವದ ವಿಚಾರಗಳಿವೆ. ಆದರೆ ಚುನಾವಣೆಯ ಕಾರಣಕ್ಕಾಗಿ ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಆದ್ಯತೆ ದೊರೆಯುವ ಸಾಧ್ಯತೆಯಿದ್ದು, ಮುಂದಿನ 5 ದಿನಗಳ ಕಾಲ ಕಲಾಪ ರಂಗೇರುವ ನಿರೀಕ್ಷೆಗಳಿವೆ. \ No newline at end of file diff --git a/eesanje/url_46_233_10.txt b/eesanje/url_46_233_10.txt new file mode 100644 index 0000000000000000000000000000000000000000..d9b282da19ed60fdd37cdaeadd4e11d2a9b54b5f --- /dev/null +++ b/eesanje/url_46_233_10.txt @@ -0,0 +1,5 @@ +ಬೆಂಗಳೂರಿಗೆ ಬಂದ ಬ್ರೆಜಿಲ್ ಪ್ರಜೆ ದೇಹದೊಳಗಿತ್ತು 9.2 ಕೋಟಿ ರೂ. ಮೌಲ್ಯದ ಕೊಕೈನ್ +ಬೆಂಗಳೂರು,ಫೆ.17- ದೇಹದೊಳಗೆ ಕೊಕೈನ್ ಮರೆಮಾಚಿಕೊಂಡು ನಗರಕ್ಕೆ ಬಂದಿದ್ದ ಬ್ರೆಜಿಲ್ ಪ್ರಜೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಡಿಆರ್‍ಐ ಅಧಿಕಾರಿಗಳು ಬಂಧಿಸಿ 9.2 ಕೋಟಿ ಮೌಲ್ಯದ ಕ್ಯಾಪ್ಸುಲ್‍ನ್ನು ಹೊರತೆಗೆಸಿದ್ದಾರೆ. ಬ್ರೆಜಿಲ್ ದೇಶದ ಪ್ರಜೆ ವೆನೆಜುವೆಲಾದಿಂದ ದುಬೈಗೆ ಹೋಗಿ ಅಲ್ಲಿಂದ ವಿಮಾನದಲ್ಲಿ ನಗರಕ್ಕೆ ಬಂದಿದ್ದಾನೆ. +ವಿಮಾನ ನಿಲ್ದಾಣದಲ್ಲಿ ಡಿಆರ್‍ಐ ಅಧಿಕಾರಿಗಳು ಈ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಅನುಮಾನ ಬಂದಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್ ಮಾಡಿಸಿದಾಗ ಆತನ ದೇಹದೊಳಗೆ 920 ಗ್ರಾಂ ನಾರ್ಕೋಟಿಕ ಕ್ಯಾಪ್ಸುಲ್‍ಗಳು ಪತ್ತೆಯಾಗಿವೆ. ಆರೋಪಿಯು ದೇಹದೊಳಗೆ ಮರೆಮಾಚಿಕೊಂಡು ಅಕ್ರಮವಾಗಿ ನಿಕೋಟಿನ್ ಅಂಶವಿದ್ದ ಕ್ಯಾಪ್ಸುಲ್‍ಗಳನ್ನು ಸಾಗಾಟಕ್ಕೆ ಯತ್ನಿಸಿರುವುದು ಗೊತ್ತಾಗಿದೆ. +ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ +ವೈದ್ಯರು ಆತನ ದೇಹದಲ್ಲಿದ್ದ ಕ್ಯಾಪ್ಸುಲ್‍ಗಳನ್ನು ಹೊರತೆಗೆದಿದ್ದು, ಅವುಗಳ ಮೌಲ್ಯ 9.2 ಕೋಟಿ ರೂ.ಗಳೆಂದು ಅಂದಾಜಸಲಾಗಿದೆ. ಡಿಆರ್‍ಐ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_233_11.txt b/eesanje/url_46_233_11.txt new file mode 100644 index 0000000000000000000000000000000000000000..7cb1d22ec00f2bf9457a230033cd78d6a7d5c71a --- /dev/null +++ b/eesanje/url_46_233_11.txt @@ -0,0 +1,8 @@ +ಸುಂದರ, ಸ್ವಚ್ಛ ನಗರಕ್ಕಾಗಿ ಬ್ರ್ಯಾಂಡ್ ಬೆಂಗಳೂರು ಪ್ರಯಾಣ ಆರಂಭ ಆರಂಭಿಸಿದ್ದೇವೆ : ಸಿಎಂ +ಬೆಂಗಳೂರು,ಫೆ.17- ಸುಂದರ, ಹಸಿರು ಮತ್ತು ಸ್ವಚ್ಛ ನಗರಕ್ಕಾಗಿ ಬ್ರ್ಯಾಂಡ್ ಬೆಂಗಳೂರು ಪ್ರಯಾಣವನ್ನು ತಮ್ಮ ಸರ್ಕಾರ ಈಗಾಗಲೇ ಆರಂಭಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದಿ ಪ್ರಿಂಟರ್ಸ್ (ಮೈಸೂರು) ಆಯೋಜಿಸಿದ್ದ ಬೆಂಗಳೂರು 2040 ವಿಷನ್‍ನ 3ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ನಮ್ಮೆಲ್ಲರ ಹೆಮ್ಮೆಯ ನಗರ. ಜಾಗತಿಕವಾಗಿ ತಾಂತ್ರಿಕತೆಯಿಂದ ಉನ್ನತ ಸ್ಥಾನದಲ್ಲಿದೆ. +ಇಲ್ಲಿಗೆ ನಾವು ಬಹುಮುಖ್ಯವಾದ ಆದ್ಯತೆ ನೀಡಬೇಕಿದೆ. ಅಭಿವೃದ್ಧಿಗೆ ಒತ್ತು ನೀಡುವ ಜೊತೆಗೆ ಸಂಶೋಧನೆ, ವೈವಿಧ್ಯತೆ, ಪ್ರಗತಿಗೆ ಬೆಂಬಲವಾಗಿರಬೇಕು ಎಂದು ಹೇಳಿದರು. ಬೆಂಗಳೂರಿನ ಮೂಲಸೌಲಭ್ಯ, ಜೀವನ ಗುಣಮಟ್ಟ, ನಾಗರಿಕ ಸೌಲಭ್ಯಗಳಲ್ಲಿರುವ ಸವಾಲುಗಳನ್ನು ನಿಭಾಯಿಸಿ ಅಂತಾರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಆರ್ಥಿಕ ಮುಂಚೂಣಿಯಾಗಿರುವ ಮಹಾನಗರಿ ಈಗ ಜಾಗತಿಕವಾಗಿ ಆರ್ಥಿಕ ಶಕ್ತಿ ಮನೆಯಾಗಿದೆ. ಅದಕ್ಕಾಗಿ ಉತ್ಕøಷ್ಠ ದರ್ಜೆಯ ಮೂಲಸೌಲಭ್ಯ ಕಲ್ಪಿಸುವುದು ಅನಿವಾರ್ಯ ಎಂದು ಹೇಳಿದರು. +ಬೆಂಗಳೂರಿನ ಸಂಚಾರದ ಸಮಸ್ಯೆಯ ಬಗ್ಗೆ ಎಲ್ಲರಿಗೂ ಅರಿವಿದೆ. ಇದನ್ನು ಸರಿಪಡಿಸಲು ಬಹು ಆಯಾಮಗಳಡಿ ಶ್ರಮರಹಿತವಾಗಿ ಕೆಲಸ ಮಾಡುತ್ತಿದ್ದೇವೆ. ನಿನ್ನೆ ಮಂಡಿಸಲಾದ ರಾಜ್ಯಸರ್ಕಾರದ ಆಯವ್ಯಯದಲ್ಲಿ ಬೆಂಗಳೂರಿನ ಗಂಭೀರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಲಾಗಿದೆ. ಮೆಟ್ರೋ ಮಾರ್ಗಗಳು, ರಸ್ತೆಗಳು, ಸುಲಲಿತ ಸಂಚಾರ ವ್ಯವಸ್ಥೆ, ಕೈಗೆಟಕುವ ವೈದ್ಯಕೀಯ ಸೇವೆ, ಶಿಕ್ಷಣ, ವಸತಿ ಹಾಗೂ ನಗರ ಪ್ರದೇಶದ ಬಡಜನರ ಅಗತ್ಯತೆಗಳನ್ನು ಪರಿಹರಿಸಲು ಒತ್ತು ನೀಡಲಾಗಿದೆ ಎಂದರು. +ಕಾನೂನು ಸುವ್ಯವಸ್ಥೆಯನ್ನು ಸುಸ್ಥಿತಿಯಲ್ಲಿಟ್ಟು ಶಾಂತಿ ಪಾಲನೆ ಮಾಡಲಾಗುತ್ತಿದೆ. ಸುರಕ್ಷತೆಯ ಖಾತ್ರಿ ನಮ್ಮ ಆದ್ಯತೆ. ಪ್ರತಿಯೊಬ್ಬ ನಾಗರಿಕನಿಗೂ ಸಮಗ್ರ ಹಾಗೂ ಉತ್ತಮ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತೇವೆ ಎಂದಿದ್ದಾರೆ.ಬೆಂಗಳೂರಿನ ಹೊರವಲಯದ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ, ಬಿಡದಿ ಉಪನಗರಗಳನ್ನು ಅಭಿವೃದ್ಧಿಪಡಿಸಿ ಸಂಪರ್ಕ ವ್ಯವಸ್ಥೆಯನ್ನು ಉತ್ತಮಗೊಳಿಸಲಾಗುವುದು. ಸಾರ್ವಜನಿಕ ಆರೋಗ್ಯ ನಮ್ಮ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸಾಕಷ್ಟು ಅನುದಾನ ಒದಗಿಸಲಾಗಿದೆ. ಇಂದಿರಾ ಕ್ಯಾಂಟೀನ್‍ಗಳು ನಗರ ಪ್ರದೇಶದ ಬಡವರಿಗೆ ಅನುಕೂಲವಾಗಿದೆ ಎಂದು ಹೇಳಿದರು. +ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ +ವಸತಿ ಯೋಜನೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದೇವೆ. ಆಸ್ತಿಗಳ ಪರಭಾರೆಯ ಮೂಲಕ ಬಡವರ ಮನೆಗಳ ನಿರ್ಮಾಣಕ್ಕೆ ಆರ್ಥಿಕ ಸಂಪನ್ಮೂಲ ಕ್ರೂಢೀಕರಣದ ಅವಕಾಶಗಳ ಬಗ್ಗೆ ಚಿಂತನೆ ನಡೆಸಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಕಾರ್ಪರೇಟ್ ಸಂಸ್ಥೆಗಳು ಹಾಗೂ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು. +ಮಣಿಪಾಲ್ ಆಸ್ಪತ್ರೆಯ ಡಾ.ಸುದರ್ಶನ್ ಬಲ್ಲಾಳ್, ದಿ ಪ್ರಿಂಟರ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ತಿಲಕ್‍ಕುಮಾರ್, ನಿರ್ದೇಶಕರಾದ ಕೆ.ಎನ್.ಶಾಂತಕುಮಾರ್, ಡೆಕ್ಕನ್ ಹೆರಾಲ್ಡ್‍ನ ಸೀತಾರಾಮನ್ ಶಂಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_233_12.txt b/eesanje/url_46_233_12.txt new file mode 100644 index 0000000000000000000000000000000000000000..13222eca1eb3c653bbe4c6c3f15c868435bf51a7 --- /dev/null +++ b/eesanje/url_46_233_12.txt @@ -0,0 +1,12 @@ +ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಜನ ಬದಲಾವಣೆ ಮಾಡಲಿದ್ದಾರೆ : ಡಿಸಿಎಂ +ಮಂಗಳೂರು, ಫೆ.17- ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ ಮಾಡುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. +ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ, ಅಸಾಧ್ಯ ಎಂಬುದಿಲ್ಲ. ರಾಜಕಾರಣ ಎಂದರೆ ಸಾಧ್ಯತೆಗಳ ಕಲೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜನ ಇಲ್ಲಿ ಬದಲಾವಣೆ ಮಾಡಲಿದ್ದಾರೆ ಎಂಬ ನಂಬಿಕೆ ಇದೆ. ಈ ಭಾಗದಲ್ಲಿ ನಿರುದ್ಯೋಗದ ಸಮಸ್ಯೆ ಇದೆ. ಇಲ್ಲಿ ಪಾಸಾಗುವ ಯುವಕರು ಮತ್ತು ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಬೆಂಗಳೂರು, ಮುಂಬೈ, ಸೌದಿಗೆ ಹೋಗುತ್ತಿದ್ದು, ಈ ಭಾಗದಲ್ಲಿ ಶಾಂತಿ ಕದಡಲಾಗುತ್ತಿದೆ ಎಂದರು. +ಈ ಭಾಗದಲ್ಲಿ ಅನೇಕ ಮೆಡಿಕಲ, ಇಂಜಿನಿಯರ್ ಕಾಲೇಜುಗಳಿವೆ. ಅನೇಕ ಮಕ್ಕಳು ಇಲ್ಲಿ ಬಿಜೆಪಿಯ ಧರ್ಮದ ಬಲೆಗೆ ಬಿದ್ದು ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಬಿಜೆಪಿ ಅಭಿವೃದ್ಧಿ ವಿಚಾರ ಬಿಟ್ಟು ಭಾವನಾತ್ಮಕ ವಿಚಾರವನ್ನು ಮುಂದಿಡುತ್ತಿದೆ. ಅದಕ್ಕಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ಹೊಸ ಆಲೋಚನೆ ಮಾಡುವುದಾಗಿ ಹೇಳಿದ್ದೆವು. ನಿನ್ನೆಯ ಬಜೆಟ್‍ನಲ್ಲೂ ಮೀನುಗಾರರು ಹಾಗೂ ಕರಾವಳಿ ಭಾಗದಲ್ಲಿ ಹೊಸ ನೀತಿ ತರಲು ಘೋಷಣೆ ಮಾಡಿದ್ದೇವೆ. ಈ ವಿಚಾರವಾಗಿ ಸಲಹೆ ಕೇಳಲಾಗಿದೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಬೇಕಾಗಿದೆ. ಸಂಜೆ 7 ಗಂಟೆ ನಂತರ ಈ ಭಾಗದ ಪ್ರದೇಶದಲ್ಲಿ ಜನ ಓಡಾಟ ಕಡಿಮೆ ಮಾಡಿದ್ದಾರೆ. ವ್ಯಾಪಾರ ವಹಿವಾಟು ಕುಂಠಿತವಾಗಿದೆ. ವ್ಯಾಪಾರ ವಹಿವಾಟು ಆದಾಗಲೇ ಜನಕ್ಕೆ ಉದ್ಯೋಗ ಸಿಗುತ್ತದೆ ಎಂದು ಹೇಳಿದರು. +ನಾಯಕತ್ವದ ಬದಲಾವಣೆ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ : ಡಿ.ಕೆ.ಸುರೇಶ್ +ದೇವಾಲಯಗಳಲ್ಲಿ ಇರುವ ಭಕ್ತಿ ವ್ಯಾಪಾರ ವಹಿವಾಟಿನಲ್ಲೂ ಇರಬೇಕು. ಇನ್ನು ಈ ಭಾಗದ ಬ್ಯಾಂಕುಗಳನ್ನು ಉತ್ತರ ಭಾರತದ ಬ್ಯಾಂಕುಗಳ ಜತೆ ವಿಲೀನ ಮಾಡಲಾಗುತ್ತಿದೆ. ಇಲ್ಲದರ ಬಗ್ಗೆ ನಾವು ಗಂಭೀರವಾಗಿ ಗಮನ ಹರಿಸಬೇಕು ಎಂದರು. +ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡಲ್ಲ :ಜೊರೋಸಾ ಶಾಲೆ ವಿವಾದದಲ್ಲಿ ಶಾಸಕರ ವಿರುದ್ಧದ ಪ್ರಕರಣ ಹಿಂಪಡೆಯದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಮಾಡುತ್ತಿರಲಿ. ಕಾನೂನಿನ ಪ್ರಕಾರ ಕ್ರಮ ವಹಿಸಲಾಗುತ್ತದೆ. ಪೊಲೀಸರು ಅವರ ಕೆಲಸ ಮಾಡುತ್ತಾರೆ. ನಾನು ಅವರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದರು. +ಮುಸಲ್ಮಾನರಿಗೆ ಶೇ.1ರಷ್ಟು ಅನುದಾನ ನೀಡಬಾರದೇ? :ದಕ್ಷಿಣ ಕನ್ನಡ ಭಾಗದ ತೆರಿಗೆ ನಮಗೆ ಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಕೇಳಿದಾಗ ಅವರು ಧ್ವನಿ ಎತ್ತಲಿಲ್ಲ. ನಾವು ಮುಸಲ್ಮಾನರಿಗೆ ಕೊಟ್ಟಿದ್ದೇವೆ. 3.71 ಲಕ್ಷ ಕೋಟಿಯಲ್ಲಿ 3 ಸಾವಿರ ಕೋಟಿ ಶಾಲೆಗಳು ಹಾಗೂ ಇತರೆ ಅಭಿವೃದ್ಧಿಗೆ ನೀಡಿದ್ದೇವೆ. ಬಜೆಟ್ ನಲ್ಲಿ ಶೇ.1 ರಷ್ಟು ಅನುದಾನ ನೀಡಬಾರದೇ? ಬಿಜೆಪಿಯವರು ರಾಜಕಾರಣ ಮಾಡುವುದಕ್ಕೆ ಈ ರೀತಿ ಹೇಳುತ್ತಾರೆ ಎಂದರು. +ಸುರೇಶ್ ವಿರುದ್ಧ ಕುಮಾರಸ್ವಾಮಿ ನಿಂತರೂ ಸ್ವಾಗತ:ಡಿ.ಕೆ ಸುರೇಶ್ ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ. ಮಂಜುನಾಥ್ ಅವರನ್ನು ನಿಲ್ಲಿಸಲು ಚರ್ಚೆ ನಡೆಯುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದೆ. ಕುಮಾರಸ್ವಾಮಿ ಅವರ ವಿರುದ್ಧ ಸ್ರ್ಪಧಿಸಿದ್ದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕುಮಾರಸ್ವಾಮಿ ಅವರ ಧರ್ಮಪತ್ನಿ ಅವರನ್ನು ನಿಲ್ಲಿಸಿದಾಗ ಅವರ ವಿರುದ್ಧ ನನ್ನ ತಮ್ಮ ಸ್ಪರ್ಧೆ ಮಾಡಿದ್ದರು. ಆಗಲೂ 1.35 ಲಕ್ಷ ಮತಗಳಿಂದ ಗೆದ್ದಿದ್ದೆವು. ಅವರು ಯಾರನ್ನಾದರೂ ನಿಲ್ಲಿಸಲಿ. ನಮಗೆ ನಮ್ಮ ಮತದಾರರಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಸುರೇಶ್ ಅವರು ದೆಹಲಿಯಲ್ಲಿ ಕೂರುವ ಸಂಸದರಲ್ಲ. ಅವರು ಹಳ್ಳಿಯಲ್ಲಿ ಕೂರುವ ಸಂಸದರು. ಅವರು ಮತದಾರರ ಮನಸ್ಸಿನಲ್ಲಿ ಉತ್ತಮ ಕೆಲಸಗಾರ ಎಂಬ ಭಾವನೆ ಮೂಡಿಸಿದ್ದಾರೆ. ನಮ್ಮ ಕ್ಷೇತ್ರದಿಂದ ದೇವೇಗೌಡರು, ಕುಮಾರಸ್ವಾಮಿ ಅವರೂ ಸೇರಿದಂತೆ ಅನೇಕ ಬೇರೆ ಸಂಸದರೂ ಆಯ್ಕೆಯಾಗಿದ್ದರು. ಅವರಿಗೂ, ಸುರೇಶ್‍ಗೂ ಏನು ವ್ಯತ್ಯಾಸವಿದೆ ಎಂದು ಜನ ನೋಡಿದ್ದಾರೆ. ಪ್ರತಿ ಹಳ್ಳಿ, ಪ್ರತಿ ಪಂಚಾಯಿತ್ತಿ, ಪ್ರತಿ ರಸ್ತೆ, ಪ್ರತಿ ಮನೆ ಸುರೇಶ್ ಅವರ ಕೆಲಸ ನೋಡಿದೆ. ಇಂದು ಆ ಭಾಗದಲ್ಲಿ ಕೆರೆಗಳು ತುಂಬಿ ಅಂತರ್ಜಲ ಹೆಚ್ಚಳವಾಗಿದ್ದರೆ, ಬಡವರಿಗೆ ಮನೆ, ನಿವೇಶನ ನೀಡಿದ್ದರೆ, ನರೇಗಾದಲ್ಲಿ ಹಣ ಬಂದಿದ್ದರೆ ಅದು ಸುರೇಶ್ ಅವರ ಕೊಡುಗೆ ಇದೆ. ಮತದಾರರು ಪ್ರಜ್ಞಾವಂತರು. ಅವರು ಯಾರನ್ನೇ ನಿಲ್ಲಿಸಿದರೂ ಮತದಾರರು ಉತ್ತರ ಕೊಡುತ್ತಾರೆ ಎಂದರು. +ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ +ನನ್ನ ವಿರುದ್ಧ ಚಕ್ರವರ್ತಿ ಅಶೋಕ್ ಕೂಡ ಸ್ರ್ಪಧಿಸಿದ್ದರು. ರಾಜಕಾರಣ ಎಂದರೆ ಜನ ತೀರ್ಮಾನ ಮಾಡುತ್ತಾರೆ. ನಾವು ಯಾಕೆ ಚಿಂತಿಸಬೇಕು. ಕುಮಾರಸ್ವಾಮಿ ಅವರು ಬಂದು ನಿಂತರೂ ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು. ಲೋಕಸಭೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಕೇಳಿದಾಗ, ಈಗಾಗಲೇ ಮೂರ್ನಾಲ್ಕು ಬಾರಿ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಮೀಕ್ಷೆ ನಡೆಯುತ್ತಿದೆ. ಎಲ್ಲ ಮುಗಿದ ನಂತರ ಅಭ್ಯರ್ಥಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_233_2.txt b/eesanje/url_46_233_2.txt new file mode 100644 index 0000000000000000000000000000000000000000..c7d010ad27142de95b72763ce01869159dd89981 --- /dev/null +++ b/eesanje/url_46_233_2.txt @@ -0,0 +1,8 @@ +ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ ಕನಿಷ್ಠ ವೇತನ ಮತ್ತು ತುಟ್ಟಿ ಭತ್ಯೆ ಪಾವತಿಸಲು ಸರ್ಕಾರ ಆದೇಶ +ಬೆಂಗಳೂರು,ಫೆ.18- ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರಿಗೆ ಸೆಪ್ಟೆಂಬರ್ 4 ರಿಂದ ಅನ್ವಯಿಸುವಂತೆ ಮಾಸಿಕ ಕನಿಷ್ಠ ವೇತನ ಮತ್ತು ವ್ಯತ್ಯಾಸವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರಿಗೆ 15,196.72 ರೂ. ಮಾಸಿಕ ಕನಿಷ್ಠ ವೇತನದ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿ ಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ನು ಪಾವತಿಸಲು ಆದೇಶದಲ್ಲಿ ತಿಳಿಸಲಾಗಿದೆ. +14ನೇ ಮತ್ತು 15ನೇ ಹಣಕಾಸು ಆಯೋಗದ ಅನುದಾನ ಅಥವಾ ಗ್ರಾಮ ಪಂಚಾಯತಿಯ ಸಂಪನ್ಮೂಲ ಬಳಸಿಕೊಂಡು ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಡಿಜಿಟಲೀಕರಿಸಲು ಕ್ರಮ ವಹಿಸಿದ್ದು, ಇಲ್ಲಿಯವರೆಗೆ 5,494 ಡಿಜಿಟಲ್ ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಗ್ರಾಮ ಪಂಚಾಯತಿಯ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ನೀಡಲಾಗುವುದು ಎಂದು ಆಯವ್ಯಯದಲ್ಲಿ ಘೋಷಿಸಲಾಗಿತ್ತು. +ಘೋಷಣೆಯನ್ನು ಸಾಕಾರಗೊಳಿಸುವಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಪಾತ್ರವು ಹಿರಿದು ಹಾಗೂ ಮಹತ್ವ ಎಂದು ಪರಿಗಣಿಸಿ, ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಾದ ಅರಿವು ಕೇಂದ್ರಗಳ ಕೆಲಸದ ಸಮಯವನ್ನು 6 ರಿಂದ 8 ಗಂಟೆಗಳಿಗೆ ಏರಿಸಿ ಮಾಸಿಕ 16,382.52 ರೂ. ಮಾಸಿಕ ಕನಿಷ್ಠ ವೇತನ ಮತ್ತು 1542 ರೂ. ವ್ಯತ್ಯಯವಾಗುವ ತುಟ್ಟಿ ಭತ್ಯೆ ಸೇರಿಸಿ ಮಾಸಿಕ 17,924.52 ರೂ, ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ. +ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ ವರ್ಗಾವಣೆಗೊಂಡ ನಂತರ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಅಗಾಧವಾದ ಸಾಧನೆಯಾಗಿದೆ, 5,895 ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ 4,895 ಗ್ರಂಥಾಲಯ ಕಟ್ಟಡಗಳ ನವೀಕರಣ, ಪುಸ್ತಕ, ನಿಯತಕಾಲಿಕಗಳ ಸಂಗ್ರಹಣೆ ಇನ್ನಿತರ ಪರಿಕರಗಳನ್ನು ಒದಗಿಸಿ ಅಭಿವೃದ್ಧಿಪಡಿಸಲಾಗಿದೆ ಎಂದು ವಿವರಗಳನ್ನು ನೀಡಿದ್ದಾರೆ. +ಶಾಲೆಗಳು ಮುಚ್ಚಿದ್ದರೂ ಮಕ್ಕಳು ಓದುವ ಅಭ್ಯಾಸದಿಂದ ದೂರ ಉಳಿಯಬಾರದು ಎಂಬ ಉದ್ದೇಶದೊಂದಿಗೆ ಓದುವ ಬೆಳಕು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಶಿಕ್ಷಣ ಇಲಾಖೆಯ ಅಕಾರಿಗಳು, ಅಜೀಂ ಪ್ರೇಮ್ ಜೀ ಫೌಂಡೇಶನ್, ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಮತ್ತು ಶಿಕ್ಷಣ ಫೌಂಡೇಶನ್ ಸಂಸ್ಥೆಗಳು ನೆರವು ನೀಡಿವೆ, 6ರಿಂದ 18 ವರ್ಷದ ಮಕ್ಕಳಿಗೆ ಗ್ರಂಥಾಲಯದ ಸದಸ್ಯತ್ವವನ್ನು ನೀಡಿ ಅವರು ಮನೆಗೆ ಪುಸ್ತಕ ತೆಗೆದುಕೊಂಡು ಹೋಗಿ ಓದಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ, ಇದರ ಪರಿಣಾಮವಾಗಿ ಇಂದು ಗ್ರಂಥಾಲಯಗಳಲ್ಲಿ ಒಟ್ಟು 46,89,220 ಮಕ್ಕಳು ನೋಂದಣಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸಚಿವರು ಹಂಚಿಕೊಂಡಿದ್ದಾರೆ. +ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಮಕ್ಕಳ ಸ್ನೇಹಿಯಾಗಿಸಲು ಓದಿನ ಮನೆಗೆ ಹೋಗೋಣ, ಚದುರಂಗ ಆಟ ಆಡೋಣ ಅಭಿಯಾನ, ಗಟ್ಟಿ ಓದು ಅಭಿಯಾನ, ಅಮ್ಮನಿಗಾಗಿ ಒಂದು ಪುಸ್ತಕ, ಪತ್ರ ಬರೆಯುವ ಅಭಿಯಾನ, ಚಿಣ್ಣರ ಚಿತ್ತಾರ, ನಿಮ್ಮ ಗೆಳೆಯರನ್ನು ಗ್ರಂಥಾಲಯಕ್ಕೆ ಕರೆತನ್ನಿ, ಮಕ್ಕಳಿಗೆ ಬೇಸಿಗೆ ಶಿಬಿರ, ಸಣ್ಣ ಕಥೆ ಬರೆಯುವುದು, ನಾನು ಓದುವ ಪುಸ್ತಕಗಳು, ನನ್ನ ಪ್ರೀತಿಯ ಗ್ರಂಥಾಲಯ, ವಾರ್ತಾ ಪತ್ರಿಕೆ ಓದೋಣ ಅಭಿಯಾನಗಳನ್ನು ಕೈಗೊಳ್ಳಲಾಗಿದ್ದು ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳು ಗ್ರಾಮೀಣ ಮಕ್ಕಳಲ್ಲಿ ಹೊಸ ಉತ್ಸಾಹ ಹಾಗೂ ಭರವಸೆಯನ್ನು ತಂದುಕೊಟ್ಟಿದೆ ಎಂದು ಸಚಿವರು ಹೇಳಿದ್ದಾರೆ. \ No newline at end of file diff --git a/eesanje/url_46_233_3.txt b/eesanje/url_46_233_3.txt new file mode 100644 index 0000000000000000000000000000000000000000..f41464145711e40436f3c2fbd8a95ba3270906f9 --- /dev/null +++ b/eesanje/url_46_233_3.txt @@ -0,0 +1,5 @@ +ಚುನಾವಣೆಯಲ್ಲಿ ಡಾಲಿ ಧನಂಜಯ್ ಸ್ಪರ್ಧೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ +ಬೆಂಗಳೂರು,ಫೆ.18- ಮೈಸೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾಲಿ ಧನಂಜಯ್ ಸ್ಪರ್ಧಿಸುವ ಕುರಿತಂತೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ಡಾಲಿ ಧನಂಜಯ್ ಸ್ಪರ್ಧೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಪಕ್ಷದಲ್ಲಿ ಅಂತಹ ಚರ್ಚೆಯೇ ಆಗಿಲ್ಲ. ಆ ತರಹ ಯಾವುದೇ ಸಾಧ್ಯತೆಗಳಿಲ್ಲ ಎಂದು ಹೇಳಿದರು. +ಅತ್ತ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಸ್.ಎ.ರಾಮ್‍ದಾಸ್, ಡಾಲಿ ಧನಂಜಯ್ ಕಾಂಗ್ರೆಸ್ ಅಭ್ಯರ್ಥಿ ಮಾಡುವುದಾದರೆ ನಮ್ಮ ಅಭ್ಯಂತರವಿಲ್ಲ. ಅವರು ಯಾರನ್ನಾದರೂ ಅಭ್ಯರ್ಥಿ ಮಾಡಿಕೊಳ್ಳಲಿ. ಆದರೆ ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿಗೆ ಸೇರಿದ್ದಾಗಿದೆ ಎಂದರು. +ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ಭಾಗಕ್ಕೆ ಮತ್ತು ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಮುಂದಿಟ್ಟುಕೊಂಡು ನಾವು ಜನರ ಮುಂದೆ ಹೋಗುತ್ತೇವೆ, ಗೆಲ್ಲುತ್ತೇವೆ ಎಂದು ಹೇಳಿದರು. +ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಕಂಡುಬಂದಿದ್ದು, ಡಾಲಿ ಧನಂಜಯ್ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ಹರಿದಾಡುತ್ತಿವೆ. ಅಚ್ಚರಿ ಎಂಬಂತೆ ಡಾಲಿ ಧನಂಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವಾಗ ಹಿಡಿದಿದ್ದ ಆಕರ್ಷಕ ಬ್ಯಾಗ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. \ No newline at end of file diff --git a/eesanje/url_46_233_4.txt b/eesanje/url_46_233_4.txt new file mode 100644 index 0000000000000000000000000000000000000000..b1b6edd26aaa9193652b7032fa17645a2c75e666 --- /dev/null +++ b/eesanje/url_46_233_4.txt @@ -0,0 +1,4 @@ +ಮಂಗಳೂರು : ವಿಮಾನ ನಿಲ್ದಾಣದ ಡ್ರೈನೇಜ್ ಚೇಂಬರ್‌‌ನಲ್ಲಿ ಚಿನ್ನ ಪತ್ತೆ +ಮಂಗಳೂರು, ಫೆ.18: ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ವಾಶ್‍ರೂಮ್‍ನ ಡ್ರೈನೇಜ್ ಚೇಂಬರ್‍ನಲ್ಲಿ ಬಚ್ಚಿಟ್ಟಿದ್ದ 45 ಲಕ್ಷ ರೂ ಮೌಲ್ಯದ 733 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. +ವಿದೇಶದಿಂದ ಬರುವ ಪ್ರಯಾಣಿಕರು ಹೊರಬರುವ ಪ್ರದೇಶದಲ್ಲಿನ ವಾಶ್‍ರೂಮ್‍ನ ಡ್ರೈನೇಜ್ ಚೇಂಬರ್‍ನಲ್ಲಿ ಕಪ್ಪು ಬಣ್ಣದ ಚೀಲದಲ್ಲಿ ಬಚ್ಚಿಟ್ಟಿದ್ದ ಪೇಸ್ಟ್‍ರೂಪದ ಚಿನ್ನ ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ವಾಶ್‍ರೂಮ್‍ನಲ್ಲಿ ಚಿನ್ನವನ್ನು ಇರಿದಿದ್ದ ವ್ಯಕ್ತಿಯ ಗುರುತು ಇನ್ನೂ ತಿಳಿದಿಲ್ಲ.ಕಳ್ಳಸಾಗಣೆ ಮೂಲಕ ಚಿನ್ನದ ತರಲಾಗಿದೆ ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_233_5.txt b/eesanje/url_46_233_5.txt new file mode 100644 index 0000000000000000000000000000000000000000..6e8cebaab79de9503f6e1220efaf83c7cfdebd9b --- /dev/null +++ b/eesanje/url_46_233_5.txt @@ -0,0 +1,4 @@ +ಕೆಎಸ್‌ಆರ್‌ಟಿಸಿಗೆ 5 ಪ್ರಶಸ್ತಿಗಳ ಗರಿ +ಬೆಂಗಳೂರು,ಫೆ.18- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವಲ್ರ್ಡ್ ಮ್ಯಾನುಫ್ಯಾಕ್ಟರಿಂಗ್ ಕಾಂಗ್ರೆಸ್ ಮತ್ತು ವಲ್ರ್ಡ್ ಮಾರ್ಕೆಟಿಂಗ್ ಕಾಂಗ್ರೆಸ್‍ನ 5 ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ ನಿಗಮದ ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಕಾಧಿರಿ ಡಾ.ಟಿ.ಎಸ್.ಲತಾ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿದೆ. +ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ, ಇವಿ ಪವರ್ ಪ್ಲಸ್ ಜಾಗತಿಕ ಬ್ರಾಂಡ್ ಉತ್ಕøಷ್ಟತೆ ಪ್ರಶಸ್ತಿ, ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಂಟಿಂಗ್ ಉಪಕ್ರಮಕ್ಕಾಗಿ ವರ್ಷದ ವ್ಯವಹಾರಿಕ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ವಿನೂತನ ಉಪಕ್ರಮಕ್ಕಾಗಿ ಜಾಗತಿಕ ಮಾನವ ಸಂಪನ್ಮೂಲ ಉತ್ಕøಷ್ಟತೆ ಪ್ರಶಸ್ತಿ, ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದಕ್ಕೆ ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಯು ನಿಗಮಕ್ಕೆ ದೊರೆತಿದೆ. +ಮುಂಬೈ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಯುಎಸ್‍ನ ನಿನಾ ಇ ಉಡರ್ಡ ಅಸೋಸಿಯೇಟ್ಸ್ ಮುಖ್ಯಸ್ಥ ನಿನಾ ಇ ಉಡರ್ಡ, ದುಬೈನ ಓಜೋನ್ ಗ್ರೂಪ್ ಡಾ.ಓವಿಲಿಯಾ ಫೆರ್ನಾಂಡಿಸ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್.ಲತಾ, ವಿಭಾಗೀಯ ತಾಂತ್ರಿಕ ಎಂಜಿನಿಯರ್ ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸಿ.ಸೌಮ್ಯ, ಸಹಾಯಕ ಆಡಳಿತಾಧಿಕಾರಿ ಎಸ್.ಶಿಭಾ ಅವರುಗಳು ಪ್ರಶಸ್ತಿ ಸ್ವೀಕರಿಸಿದರು. \ No newline at end of file diff --git a/eesanje/url_46_233_6.txt b/eesanje/url_46_233_6.txt new file mode 100644 index 0000000000000000000000000000000000000000..d84f5bca8ffcdebe27c571c361fd713508975e34 --- /dev/null +++ b/eesanje/url_46_233_6.txt @@ -0,0 +1,5 @@ +ಸಂಚಾರಿ ನಿಯಮ ಉಲ್ಲಂಘನೆ : 50 ಸಾವಿರಕ್ಕಿಂತ ಹೆಚ್ಚು ಬಾಕಿ ದಂಡ ಉಳಿಸಿಕೊಂಡಿದ್ದ 84 ವಾಹನ ಜಪ್ತಿ +ಬೆಂಗಳೂರು,ಫೆ.17- ಸಂಚಾರಿ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿ ದಂಡ ಪಾವತಿಸದೇ 50 ಸಾವಿರಕ್ಕಿಂತ ಹೆಚ್ಚಿನ ಬಾಕಿ ಉಳಿಸಿಕೊಂಡಿದ್ದ ವಾಹನಗಳ ಪತ್ತೆ ಮಾಡು ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ದಕ್ಷಿಣ ವಿಭಾಗದ ಪೊಲೀಸರು 84 ದ್ವಿಚಕ್ರ ವಾಹನ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. +ಈ ವಾಹನಗಳ ಮೇಲೆ ಒಟ್ಟು ಸುಮಾರು 10, 210 ವಿವಿಧ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಈ ವಾಹನಗಳ ಮೇಲೆ ಒಟ್ಟು ಸುಮಾರು 1.74 ಕೋಟಿ ರೂ. ದಂಡದ ಮೊತ್ತ ಬಾಕಿ ಇದ್ದು, ಪೊಲೀಸರು ಮುಂದಿನ ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಂಚಾರ ನಿಯಮಗಳನ್ನು ಪದೇ ಪದೇ ಉಲ್ಲಂಘನೆ ಮಾಡಿ 50 ಸಾವಿರಕ್ಕಿಂತ ಹೆಚ್ಚಿನ ದಂಡದ ಮೊತ್ತ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದ ವಾಹನಗಳನ್ನು ಪತ್ತೆ ಮಾಡಲು ಸಂಚಾರ ದಕ್ಷಿಣ ವಿಭಾಗದ ಎಲ್ಲಾ ಸಹಾಯಕ ಪೊಲೀಸ್ ಆಯುಕ್ತರು ಮತ್ತು ಇನ್‍ಸ್ಪೆಕ್ಟರಿಗೆ ಸೂಚಿಸಲಾಗಿತ್ತು. ಅದರಂತೆ ವಿಶೇಷ ಕಾರ್ಯಾಚರಣೆನಡೆಸಲಾಗಿದೆ. +ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಜನ ಬದಲಾವಣೆ ಮಾಡಲಿದ್ದಾರೆ : ಡಿಸಿಎಂ +ದಕ್ಷಿಣ ಉಪವಿಭಾಗ: 48 ವಾಹನಜಯನಗರ -26 ವಾಹನ, ಬನಶಂಕರಿ 9, ಕೆ.ಎಸ್.ಲೇಔಟ್-5, ಬಸವನಗುಡಿ-4, ವಿವಿಪುರಂ -4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಆಗ್ನೇಯ ಉಪವಿಭಾಗ -29 ವಾಹನ.ಹುಳಿಮಾವು -11 ವಾಹನ, ಆಡುಗೋಡಿ -11, ಮೈಕೋಲೇಔಟ್-6, ಮಡಿವಾಳ-1 ವಾಹನ ಜಪ್ತಿ ಮಾಡಲಾಗಿದೆ.ಎಚ್‍ಎಸ್‍ಆರ್ ಲೇಔಟ್ ಉಪವಲಯ- 8 ವಾಹನ.ಎಚ್‍ಎಸ್‍ಆರ್ ಲೇಔಟ್- 3 ವಾಹನ, ಎಲೆಕ್ಟ್ರಾನಿಕ್ ಸಿಟಿ -3 ವಾಹನ, ಬೆಳ್ಳಂದೂರು – 2 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. \ No newline at end of file diff --git a/eesanje/url_46_233_7.txt b/eesanje/url_46_233_7.txt new file mode 100644 index 0000000000000000000000000000000000000000..2f1542b5014c48e5f493bba81a70fd4132be23d5 --- /dev/null +++ b/eesanje/url_46_233_7.txt @@ -0,0 +1,8 @@ +ಕರಾವಳಿಯಿಂದ ‘ಲೋಕ ಕಹಳೆ’ ಚಾಲನೆ ಕೊಟ್ಟ ಕಾಂಗ್ರೆಸ್ +ಬೆಂಗಳೂರು,ಫೆ.17- ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಮೂಲಕ ಕಾಂಗ್ರೆಸ್ ರಣಕಹಳೆ ಮೊಳಗಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಪುಟದ ಎಲ್ಲಾ ಸಚಿವರು, ಶಾಸಕರು, ಕೆಪಿಸಿಸಿ ಪದಾಕಾರಿಗಳು, ಎಐಸಿಸಿ ಕಾರ್ಯದರ್ಶಿಗಳು, ಪ್ರಮುಖ ನಾಯಕರು ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. +ಕೋಮು ಸೂಕ್ಷ್ಮ ಹಾಗೂ ಬಿಜೆಪಿಯ ಭದ್ರಕೋಟೆಯಾಗಿರುವ ಕರಾವಳಿ ಭಾಗದಿಂದಲೇ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದೆ. ಕಳೆದ ತಿಂಗಳೇ ನಡೆಯಬೇಕಿದ್ದ ಬೃಹತ್ ಕಾರ್ಯಕ್ರಮ ಕೆಲವು ಕಾರಣಗಳಿಂದ ಮುಂದೂಡಿಕೆಯಾಗಿತ್ತು. ಬಜೆಟ್ ಮಂಡನೆ ಬಳಿಕ ನಡೆಯುತ್ತಿರುವ ಈ ಸಮಾವೇಶ ಕಾಂಗ್ರೆಸ್‍ಗೆ ಆನೆ ಬಲ ತಂದುಕೊಟ್ಟಂತಾಗಿದೆ. ರಾಜ್ಯದ ಎಲ್ಲಾ ಭಾಗಗಳಿಂದಲೂ ಪಕ್ಷದ ಕಾರ್ಯಕರ್ತರು ಸಮಾವೇಶಕ್ಕಾಗಿ ಮಂಗಳೂರಿಗೆ ಆಗಮಿಸಿದ್ದರು. ಸ್ಥಳೀಯ ನಾಯಕರು ಸಮಾವೇಶಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಮಂಗಳೂರಿನಾದ್ಯಂತ ಫ್ಲಕ್ಸ್, ಬ್ಯಾನರ್‍ಗಳ ಅಬ್ಬರ ಜೋರಾಗಿತ್ತು. +ಕೇಜ್ರಿವಾಲ್ ಖುದ್ದು ಹಾಜರಿಗೆ ವಿನಾಯ್ತಿ ನೀಡಿದ ನ್ಯಾಯಾಲಯ +ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮಾವೇಶದ ಉಸ್ತುವಾರಿ ವಹಿಸಿಕೊಂಡಿದ್ದರು. ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಿ, ಚುನಾವಣೆಯ ರಣೋತ್ಸಾಹವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ತಾವು ಬಜೆಟ್ ಮಂಡಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ಹೊರತಾಗಿಯೂ ಆರ್ಥಿಕ ಶಿಸ್ತನ್ನು ಪಾಲಿಸಿದ್ದೇನೆ. ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿಯ 25 ಮಂದಿ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಆರ್ಥಿಕ ತಾರತಮ್ಯದ ವಿರುದ್ಧ ಬಾಯಿ ಬಿಡುತ್ತಿಲ್ಲ ಎಂದು ಕಿಡಿಕಾರಿದರು. +ಕಾಂಗ್ರೆಸ್ ಸರ್ಕಾರ ರಾಜ್ಯದ ಪ್ರತಿಯೊಂದು ಬಡ ಕುಟುಂಬಕ್ಕೂ ವರ್ಷಕ್ಕೆ 50 ರಿಂದ 55 ಸಾವಿರ ರೂ.ಗಳಷ್ಟು ಆರ್ಥಿಕ ನೆರವನ್ನು ನೀಡುತ್ತಿದೆ. ಇದಕ್ಕಾಗಿ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ದೇಶ ಮತ್ತು ರಾಜ್ಯ ದಿವಾಳಿಯಾಗಲಿದೆ ಎಂದು ಟೀಕಿಸಿದ್ದವರೇ ನಮ್ಮ ಗ್ಯಾರಂಟಿ ಪದವನ್ನು ಹೈಜಾಕ್ ಮಾಡಿದ್ದಾರೆ ಎಂದು ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು : ಚಂದ್ರಚೂಡ್ +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಕಾಂಗ್ರೆಸ್‍ನಿಂದ ಮಾತ್ರ ಸಾಧ್ಯ. ನಾವು ಜನರ ಬದುಕಿನ ಸುಧಾರಣೆಗಾಗಿ ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿಯವರು ಭಾವನಾತ್ಮಕ ರಾಜಕಾರಣದ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ ಎಂದು ಕಿಡಿ ಕಾರಿದರು. \ No newline at end of file diff --git a/eesanje/url_46_233_8.txt b/eesanje/url_46_233_8.txt new file mode 100644 index 0000000000000000000000000000000000000000..fa2d250558c7f543895dc0cb751576879931bec3 --- /dev/null +++ b/eesanje/url_46_233_8.txt @@ -0,0 +1,7 @@ +ಕುಪೇಂದ್ರರೆಡ್ಡಿ ಗೆಲುವಿಗೆ ಜೆಡಿಎಸ್ – ಬಿಜೆಪಿ ರಣತಂತ್ರ +ಬೆಂಗಳೂರು,ಫೆ.17- ವಿಧಾನಸಭೆಯಿಂದ ರಾಜ್ಯಸಭೆಗೆ ಫೆ.27ರಂದು ನಡೆಯುವ ಚುನಾವಣೆಯಲ್ಲಿ ಮಿತ್ರ ಪಕ್ಷಗಳ ಇಬ್ಬರು ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ. ನಿನ್ನೆ ಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿದ್ದ ಉಭಯ ಪಕ್ಷಗಳ ನಾಯಕರು ಇಬ್ಬರು ಅಭ್ಯರ್ಥಿಗಳ ಗೆಲುವಿನ ಸಾಧ್ಯಸಾಧ್ಯತೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. +ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಕೆ.ಬಾಂಡೆಗೆ ಅವರು ಗೆಲುವು ಸುಲಭವಾಗಲಿದೆ. ಅವರ ಗೆಲುವಿಗೆ ಅಗತ್ಯವಿರುವ 45 ಶಾಸಕರ ಮತಗಳನ್ನು ಚಲಾಯಿಸುವುದು, ಉಳಿದ ಬಿಜೆಪಿ ಶಾಸಕರ ಹೆಚ್ಚುವರಿ ಮತಗಳನ್ನು ಕುಪೇಂದ್ರ ರೆಡ್ಡಿ ಅವರಿಗೆ ಚಲಾಯಿಸಲು ನಿರ್ಧರಿಸಲಾಗಿದೆ. ಆದರೂ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಕೊರತೆಯಾಗುವ ಮತಗಳನ್ನು ಗಳಿಸುವುದು ಹೇಗೆ ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. +ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿದಂತೆ ಉಭಯ ಪಕ್ಷಗಳ ನಾಯಕರು ಖಾಸಗಿ ಹೋಟೆಲ್‍ನಲ್ಲಿ ಸಭೆ ಸೇರಿ ಚರ್ಚಿಸಿದ್ದಾರೆ. +ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ +ಕಾಂಗ್ರೆಸ್‍ನಲ್ಲಿರುವ ಅಸಮಾಧಾನಿತ ಶಾಸಕರ ಮತ ಪಡೆಯುವುದು ಹೇಗೆ? ಪಕ್ಷೇತರ ಶಾಸಕರ ಮತ ಪಡೆಯುವುದು ಸೇರಿದಂತೆ ಸಾಧ್ಯವಿರುವ ಎಲ್ಲ ಮಾರ್ಗಗಳ ಬಗ್ಗೆಯೂ ಚರ್ಚೆ ನಡೆಸಿದ್ದು, ಶತಾಯ ಗತಾಯ ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟದ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ರಾಜ್ಯಸಭೆ ಚುನಾವಣೆಯ 5ನೇ ಅಭ್ಯರ್ಥಿಯಾಗಿರುವ ಕುಪೇಂದ್ರ ರೆಡ್ಡಿ ಅವರ ಗೆಲುವಿನ ಸಾಧಕ-ಬಾಧಕಗಳು ಈ ಸಭೆಯಲ್ಲಿ ಚರ್ಚಿತವಾಗಿರುವ ವಿಚಾರಗಳನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತರಲು ನಿರ್ಧರಿಸಲಾಗಿದೆ. ಬಿಜೆಪಿ ವರಿಷ್ಠರು ನೀಡುವ ಮಾರ್ಗದರ್ಶನದಂತೆ ರಾಜ್ಯಸಭೆ ಚುನಾವಣೆಯನ್ನು ಎದುರಿಸಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ಹೇಳಿವೆ. \ No newline at end of file diff --git a/eesanje/url_46_233_9.txt b/eesanje/url_46_233_9.txt new file mode 100644 index 0000000000000000000000000000000000000000..b23fc7a127ed32a763434065fb304826eb31e789 --- /dev/null +++ b/eesanje/url_46_233_9.txt @@ -0,0 +1,8 @@ +ಹುಂಡಿ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಸೀಮಿತ : ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು,ಫೆ.17- ದೇವಸ್ಥಾನಗಳಿಂದ ಸಂಗ್ರಹಿಸಿದ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಖರ್ಚು ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಮುಖರೊಬ್ಬರಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದು, ಚುನಾವಣೆ ಕಾಲದಲ್ಲಿ ಈ ರೀತಿ ಜನರನ್ನು ದಾರಿ ತಪ್ಪಿಸುವುದು ಪ್ರಯೋಜನಕಾರಿಯಲ್ಲ ಎಂದು ಹೇಳಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಪ್ರಮುಖರೊಬ್ಬರು ಪೋಸ್ಟ್ ಮಾಡಿ, ಕರ್ನಾಟಕ ಸರ್ಕಾರ ತನ್ನ ಬಜೆಟ್‍ನಲ್ಲಿ 330 ಕೋಟಿ ರೂ.ಗಳನ್ನು ವಕ್ ಆಸ್ತಿಗಳ ಅಭಿವೃದ್ಧಿ, ಹಜ್ ಭವನಗಳ ನಿರ್ಮಾಣ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ನೀಡಿದೆ. ಕರ್ನಾಟಕ ರಾಜ್ಯಕ್ಕೆ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ 400 ಕೋಟಿ ಸೇರಿ 450 ಕೋಟಿ ರೂ.ಗೂ ಹೆಚ್ಚು ಆದಾಯ ಧಾರ್ಮಿಕ ದತ್ತಿ ಇಲಾಖೆಗೆ ಬರುತ್ತಿದೆ. ಇದಕ್ಕಾಗಿಯೇ ಹಿಂದೂ ದೇವಾಲಯಗಳನ್ನು ಸರ್ಕಾರದಿಂದ ಮುಕ್ತಗೊಳಿಸುವ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿದೆ. +ಇದು ಶೇ.101 ರಷ್ಟು ಜಾತ್ಯತೀತತೆ ಎಂದು ಲೇವಡಿ ಮಾಡಿದ್ದರು. ಜೊತೆಗೆ ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಉತ್ತರ ಕನ್ನಡ, ತುಮಕೂರಿನ ಜಿಲ್ಲೆಗಳ ದೇವಾಲಯಗಳ ಸಂಖ್ಯೆ ಮತ್ತು ಅದರಿಂದ ಬರುತ್ತಿರುವ ಆದಾಯದ ಪಟ್ಟಿಯನ್ನು ಲಗತ್ತಿಸಿದ್ದರು. +ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ +ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕನ್ನಡಿಗರು ಹಾಗೂ ದೇಶವನ್ನು ಈ ರೀತಿ ದಾರಿ ತಪ್ಪಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ನಾನು ಮತ್ತೊಮ್ಮೆ ಪುನರುಚ್ಛರಿಸುತ್ತಿದ್ದೇನೆ, ಧಾರ್ಮಿಕ ದತ್ತಿ ಇಲಾಖೆಯಿಂದ ಸ್ವೀಕರಿಸಲಾಗುತ್ತಿರುವ ಹಣವನ್ನು ಹಿಂದೂ ದೇವಾಲಯಗಳಿಗೆ ಮಾತ್ರವೇ ಬಳಕೆ ಮಾಡಲಾಗುತ್ತಿದೆ. ಒಂದು ಪೈಸೆಯನ್ನೂ ಅನ್ಯ ಧರ್ಮೀಯ ಧಾರ್ಮಿಕ ಕೇಂದ್ರಗಳಿಗೆ ಬಳಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ದೇವಸ್ಥಾನಗಳಿಂದ ಸಂಗ್ರಹವಾಗುವ ಆದಾಯವನ್ನು ಆಯಾ ದೇವಸ್ಥಾನಗಳ ಅಭಿವೃದ್ಧಿಗಾಗಿಯೇ ಬಳಸಲಾಗುತ್ತಿದೆ. ಅಪಪ್ರಚಾರಗಳು ರಾಜಕೀಯ ಷಡ್ಯಂತ್ರವಾಗಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯ ಮಿತ್ರರು ಈ ರೀತಿ ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಇಂತಹದ್ದೇ ಪ್ರಯತ್ನಗಳ ಮೂಲಕ ಹಿಂದುತ್ವದ ನಾಟಕವಾಡಲಾಗಿತ್ತು. ಆದರೆ ರಾಜ್ಯದ ಜನ ಸತ್ಯ ತಿಳಿದುಕೊಂಡಿದ್ದರು. ಅಪಪ್ರಚಾರಗಳಿಗೆ ಕಿವಿಗೊಡಲಿಲ್ಲ ಎಂದು ಹೇಳಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಜನಸ್ನೇಹಿಯಾಗಿದೆ. ಬಿಜೆಪಿ ಮತ್ತು ವಿಪಕ್ಷಗಳಿಗೆ ಬಜೆಟ್ ವಿರೋಧಿಸಲು ಸಕಾರಣಗಳು ಸಿಗುತ್ತಿಲ್ಲ. ಅದಕ್ಕಾಗಿ ಇಂತಹ ನಾಟಕೀಯ ನಡವಳಿಕೆಯನ್ನು ಅನುಸರಿಸುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಅಪಪ್ರಚಾರದ ನಡುವೆಯೂ ಬಿಜೆಪಿ ಪಕ್ಷದ 25 ಸಂಸದರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲನ್ನು ವಂಚಿಸಿದ್ದೇಕೆ ಎಂದು ಪ್ರಶ್ನೆ ಮಾಡಿ ಎಂದು ಸಚಿವರು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_234_1.txt b/eesanje/url_46_234_1.txt new file mode 100644 index 0000000000000000000000000000000000000000..472cdf628b30dfa9576eac22aff3b854f922122d --- /dev/null +++ b/eesanje/url_46_234_1.txt @@ -0,0 +1,5 @@ +ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ +ಹುಬ್ಬಳ್ಳಿ,ಫೆ.17- ಕಾಂಗ್ರೆಸ್‍ಗೆ ಮೊದಲಿನಿಂದಲೂ ಗಲಭೆ ಆರೋಪಿಗಳ ಪರ ಸಹಾನುಭೂತಿ ಇದ್ದುದ್ದರಿಂದ ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಸುದ್ದಿಗಾರರರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ. ಬಿಡುಗಡೆಗೆ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೆಟರ್ ಕೊಡುವುದು, ಒತ್ತಾಯ ಮಾಡುವುದು ನಡದೇ ಇತ್ತು ಎಂದು ಆರೋಪಿಸಿದ್ದಾರೆ. +ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು +ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಮೇಲೆ ದೇಶ ದ್ರೋಹದ ಆರೋಪಗಳಿದ್ದವು. ಕಾಂಗ್ರೆಸ್ ಸರ್ಕಾರ ಸರಿಯಾಗಿ ವಾದ ಮಂಡಿಸದೆ ಬಿಡುಗಡೆಗೊಳಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಸರ್ಕಾರ ಅನುಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿ ಪೊಲೀಸ್ ವಾಹನಗಳು ಜಖಂಗೊಳಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಗೊಳಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಇವರ ಬಿಡುಗಡೆಗೆ ಸಹಕರಿಸಿದೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_46_234_10.txt b/eesanje/url_46_234_10.txt new file mode 100644 index 0000000000000000000000000000000000000000..9dfcd1b3e57000a94fbda8481983a1cd26f2a564 --- /dev/null +++ b/eesanje/url_46_234_10.txt @@ -0,0 +1,5 @@ +ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್ +ಬೆಂಗಳೂರು,ಫೆ.16- ಆಸ್ತಿ ತೆರಿಗೆ ಮತ್ತು ಇನ್ನಿತರ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಮತ್ತು ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್ ತಂತ್ರಜ್ಞಾನ ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್ ಮತ್ತು ಮರು ಮೌಲ್ಯಮಾಪನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. +ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ತೆರಿಗೆ ವಸೂಲಿಗೆ ಸ್ವಸಹಾಯ ಗುಂಪುಗಳ ಸೇವೆ ಪಡೆಯುವುದು, ನೇರಪಾವತಿ ಯೋಜನೆಯಡಿ ಖಾಯಂ ಮಾಡಿರುವ 24 ಸಾವಿರ ಪೌರ ಕಾರ್ಮಿಕರ ಜೊತೆಗೆ ಉಳಿದವರನ್ನು ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. +3,000 ವರ್ಷಗಳ ಹಿಂದೆ ಮೃತ ಪತಿ ಜೊತೆ ಜೀವಂತ ಸಮಾಧಿಯಾಗಿದ್ದ ಪತ್ನಿಯ ಪ್ರೀತಿಯ ಅಪ್ಪುಗೆ +ಯೋಜಿತ ನಗರೀಕರಣದ ಉದ್ದೇಶದಿಂದ ಒಂದು ಲಕ್ಷಕ್ಕೂ ಅಕ ಜನಸಂಖ್ಯೆ ಇರುವ ಸ್ಥಳೀಯ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತಿಕರಿಸಲಾಗುವುದು. ಎಲ್ಲಾ ಸ್ಥಳೀಯ ಸಂಸ್ಥೆಗಳ ಕಾರ್ಯ ಕಲಾಪಗಳನ್ನು ನೇರ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಮೈಸೂರಿನ ಪ್ರಖ್ಯಾತ ಲ್ಯಾನ್ಸ್‍ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_234_11.txt b/eesanje/url_46_234_11.txt new file mode 100644 index 0000000000000000000000000000000000000000..55888bbbd68d6c2113aa5a2a94880ddbeceee68e --- /dev/null +++ b/eesanje/url_46_234_11.txt @@ -0,0 +1,6 @@ +ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸೆರೆ +ಬೆಂಗಳೂರು,ಫೆ.16-ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಯು.ಎ.ಪಿ.ಎ ಪ್ರಕರಣವೊಂದರಲ್ಲಿ ತಲೆ ಮರೆಸಿಕೊಂಡಿದ್ದಪಿ.ಎಫ್.ಐ ನ ದಾವಣಗೆರೆ ಜಿಲ್ಲಾ ಕಾರ್ಯದರ್ಶಿಯನ್ನು ಕೆ.ಜಿ.ಹಳ್ಳಿ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತಾಹೀರ್ ಹುಸೇನ್ ಅಲಿಯಾಸ್ ಆರ್ ಕೆ ಹುಸೇನ್ ಬಂಧಿತ ಆರೋಪಿ. ಸೆ.20, 2022 ರಂದು ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ) ಕಾರ್ಯಕರ್ತರು ದೇಶದಾದ್ಯಂತ ಧರ್ಮ ಧರ್ಮದ ಮಧ್ಯೆ ಕೋಮು ದ್ವೇಷವನ್ನು ಉಂಟು ಮಾಡಲು ಮುಸ್ಲಿಂ ಯುವಕರನ್ನು ರಾಜ್ಯಾದ್ಯಂತ ಸಂಘಟನೆಯನ್ನು ಮಾಡುತ್ತಿದ್ದರು. +ಈ ಸಂಬಂಧ ತರಬೇತಿಯನ್ನು ಸಹ ನೀಡುತ್ತಿದ್ದು, ಮಾರಕಾಸ್ತ್ರಗಳನ್ನು ಹೊಂದಿರಬಹುದಾಂತಹ ಸಾಧ್ಯತೆ ಇರುತ್ತದೆ ಎಂಬ ಖಚಿತ ಮಾಹಿತಿಯ ಮೇರೆಗೆ ಒಟ್ಟು 19 ವ್ಯಕ್ತಿಗಳ ವಿರುದ್ಧ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಯು.ಎ.ಪಿ.ಎ ಪ್ರಕರಣ ದಾಖಲಾಗಿರುತ್ತದೆ. ಸೆ.21, 2022ರಂದು ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು ರಾಜ್ಯಾದ್ಯಂತ ಏಕಾಕಾಲದಲ್ಲಿ ದಾಳಿಯನ್ನು ಕೈಗೊಂಡು 15 ಪಿಎಫ್‍ಐ. ಸಂಘಟನೆಯ ಪ್ರಮುಖ ಪದಾಕಾರಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಪ್ರಕರಣದಲ್ಲಿ ನಾಲ್ವರು ತಲೆಮರೆಸಿಕೊಂಡಿರುತ್ತಾರೆ.ಪ್ರಕರಣ ದಾಖಲಾದ ನಂತರ ಭಾರತ ಸರ್ಕಾರವು ಪಿಎಫ್‍ಐ. ಸಂಘಟನೆಯನ್ನು ನಿಷೇಧಿತ ಸಂಘಟನೆ ಎಂದು ಆದೇಶ ಮಾಡಿದೆ. +ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ +ಪ್ರಕರಣದ ತನಿಖೆಯನ್ನು ಯುಎಪಿಎ ಕಾಯ್ದೆಯ ಪ್ರಕಾರ ಕೈಗೊಂಡು, ಬಂಧಿತರಾಗಿದ್ದ 15 ವ್ಯಕ್ತಿಗಳ ವಿರುದ್ಧ ವಿಶೇಷ ಎನ್‍ಐಎ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಾಲ್ಕು ವ್ಯಕ್ತಿಗಳ ಪೈಕಿ ಒಬ್ಬನ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಕೆ.ಜಿ. ಹಳ್ಳಿ ಉಪ ವಿಭಾಗದ ದಾವಣಗೆರೆಯ ಹರಿಹರದ ಪ್ರಶಾಂತ್ ನಗರದ ಬಳಿ ವಶಕ್ಕೆ ಪಡೆದುಕೊಂಡಿರುತ್ತಾರೆ. +ಈ ಪ್ರಕರಣದಲ್ಲಿ ಹಾಲಿ ತನಿಖಾಧಿಕಾರಿಯಾದ ಕೆ.ಜಿ. ಹಳ್ಳಿ ಉಪ ವಿಭಾಗದ ಎಸಿಪಿ ಪ್ರಕಾಶ್ ರಾಠೋಡ್, ಅವರು ಆರೋಪಿಯನ್ನು ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ವಶಕ್ಕೆ ಪಡೆದು ತನಿಖೆ ಕೈಗೊಂಡಿರುತ್ತಾರೆ. \ No newline at end of file diff --git a/eesanje/url_46_234_12.txt b/eesanje/url_46_234_12.txt new file mode 100644 index 0000000000000000000000000000000000000000..3629ee5ac7cf7ede3f90cf048549386798aebe2f --- /dev/null +++ b/eesanje/url_46_234_12.txt @@ -0,0 +1,13 @@ +ಬಸ್‍ನಲ್ಲಿ ಮೊಬೈಲ್ ಎಗರಿಸುತ್ತಿದ್ದ ಮಹಿಳಾ ಗ್ಯಾಂಗ್ ಬಂಧನ +ಬೆಂಗಳೂರು,ಫೆ.16-ಮಹಿಳಾ ಪ್ರಯಾಣಿಕರನ್ನೇ ಗುರಿಯಾಗಿಸಿಕೊಂಡು ಜನನಿಬಿಡ ಬಸ್ ನಿಲ್ದಾಣಗಳು ಹಾಗೂ ಜನಜಂಗುಳಿ ಇರುವ ದಿನಗಳಂದು ಬಿಎಂಟಿಸಿ ಬಸ್‍ಗಳಲ್ಲಿ ನೂಕು ನುಗ್ಗಲು ಉಂಟು ಮಾಡಿ ಪ್ರಯಾಣಿಕರ ಮೊಬೈಲ್‍ಗಳನ್ನು ಕಳ್ಳತನ ಮಾಡಿ ಮನೆಯಲ್ಲಿ ಶೇಖರಿಸಿಟ್ಟಿದ್ದ ಆಂಧ್ರಪ್ರದೇಶದ ಮೂವರು ಮಹಿಳೆಯರು ಸೇರಿದಂತೆ 5 ಮಂದಿ ಮಹಿಳೆಯರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ಮೌಲ್ಯದ 120 ವಿವಿಧ ಕಂಪನಿಯ ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಫೆ.7 ರಂದು ಬಸ್‍ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರ ಒಬ್ಬರ ಮೊಬೈಲ್ ಫೋನ್ ಕಳವು ಆಗಿರುವ ಬಗ್ಗೆ ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಆಂಧ್ರ ಪ್ರದೇಶ ಮೂಲದ ಮೂವರು ಮಹಿಳೆಯರು ಸೇರಿದಂತೆ ಐದು ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಐದು ಮಂದಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ ಮೊಬೈಲ್ ಪೋನ್‍ಗಳನ್ನು ಬಸ್‍ಗಳಲ್ಲಿ ಕಳವು ಮಾಡಿರುವುದಾಗಿ ಮಾಹಿತಿ ಮೇರೆಗೆ 30 ಲಕ್ಷ ಮೌಲ್ಯದ 120 ಮೊಬೈಲ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ.ಯಾಗಿದ್ದಾರೆ. +ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ +ಈ ಐವರು ಮಹಿಳೆಯರು ಮುಖ್ಯವಾಗಿ ನಗರದ ಜನನಿಬಿಡ ಬಸ್ ನಿಲ್ದಾಣಗಳು ಹಾಗೂ ಜನಜಂಗುಳಿ ಇರುವ ದಿನಗಳಂದು ಹೆಚ್ಚು ಪ್ರಯಾಣಿಕರು ಇರುವ ಬಸ್‍ಗಳನ್ನು ಹತ್ತಿಕೊಂಡು ಬಸ್‍ಗಳಲ್ಲಿ ನೂಕು ನುಗ್ಗಲು ಉಂಟು ಮಾಡಿ, ಸಾರ್ವಜನಿಕರ ಬ್ಯಾಗ್ ಮತ್ತು ಜೇಬಿನಲ್ಲಿರುವ ಮೊಬೈಲ್‍ಗಳನ್ನು ಕಳ್ಳತನ ಮಾಡಿಕೊಂಡು, ಕದ್ದ ಮೊಬೈಲ್‍ಗಳನ್ನು ತಮ್ಮ ವಾಸದ ಮನೆಯಲ್ಲಿ ಶೇಖರಿಸಿಟ್ಟಿದ್ದರು. +ನಂತರ ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬನಿಗೆ ಈ ಮೊಬೈಲ್‍ಗಳನ್ನು ಮಾರಾಟ ಮಾಡುತ್ತಿದ್ದರು ಎಂಬುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಆಂದ್ರ ಪ್ರದೇಶದ ವ್ಯಕ್ತಿ ಆಗಾಗ್ಗೆ ಬೆಂಗಳೂರಿಗೆ ಬಂದು ಒಂದು ಮೊಬೈಲ್‍ಗೆ ಕೇವಲ 2ರಿಂದ 3 ಸಾವಿರ ಕೊಟ್ಟು ಮೊಬೈಲ್‍ಗಳನ್ನು ತೆಗೆದುಕೊಂಡು ಆಂಧ್ರಪ್ರದೇಶಕ್ಕೆ ಹೋಗಿ ಅಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದುದು ತನಿಖೆಯಿಂದ ಗೊತ್ತಾಗಿದೆ. +ಬಸ್‍ಗಳಲ್ಲಿ ಪ್ರಯಾಣಿಸುವಾಗ ಯಾರಾದರೂ ಮೊಬೈಲ್ ಕಳೆದುಕೊಂಡಿದ್ದರೆ ಹೆದರದೆ ಧೈರ್ಯವಾಗಿ ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಮೊಬೈಲ್ ನಂಬರ್ 9480801084, ಎಸಿಪಿ ವೈಟ್ ಫೀಲ್ಡ್ ಉಪ ವಿಭಾಗ ಮೊ.ನಂ. 9480801607 ಅಥವಾ ಪೊಲೀಸ್ ಇನ್ಸ್‍ಪೆಕ್ಟರ್ ಮೊ. 9480801230ರವರನ್ನು ನೇರವಾಗಿ ನಿರ್ಭಿತಿಯಿಂದ ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. +ವಿದೇಶಿ ಡ್ರಗ್ ಪೆಡ್ಲರ್ ಬಂಧನ : 83 ಲಕ್ಷ ಮೌಲ್ಯದ ಗಾಂಜಾ ಜಪ್ತಿಬೆಂಗಳೂರು,ಫೆ.16-ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದು ನಂತರದ ದಿನಗಳಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‍ನನ್ನು ಸಿಸಿಬಿ ಪೊಲೀಸರು ಬಂಧಿಸಿ 83.43 ಲಕ್ಷ ಮೌಲ್ಯದ ಮಾದಕ ವಸ್ತು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇರೆಗೆ ಫೆ.13ರಂದು ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದೇಶಿ ಡ್ರಗ್ ಪೆಡ್ಲರ್‍ನನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. +ಬಂಧಿತನಿಂದ ಸುಮಾರು 83.43 ಲಕ್ಷ ಮೌಲ್ಯದ 589 ಗ್ರಾಂ ಎಂಡಿಎಂಎ ಕ್ರಿಸ್ಟಲ್, 6 ಕೆಜಿ 385 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ವ್ಯಕ್ತಿಯು 2018 ನೇ ಸಾಲಿನಲ್ಲಿ ಸ್ಪೂಡೆಂಟ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ನಂತರದ ದಿನಗಳಲ್ಲಿ ಇತರೆ ಪೆಡ್ಲರ್‍ಗಳಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ, ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದದ್ದು ವಿಚಾರಣೆಯಿಂದ ಗೊತ್ತಾಗಿದೆ. +ಈ ಆರೋಪಿಯು 2019ರಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ವಿದೇಶಿ ಮಹಿಳೆ ಕೊಲೆ ಪ್ರಕರಣದ ಆರೋಪಿಯಾಗಿರುವುದಾಗಿ ತನಿಖೆಯಿಂದ ತಿಳಿದು ಬಂದಿದೆ. ಈತನ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.ಉಪ ಪೊಲೀಸ್ ಆಯುಕ್ತರು (ಅಪರಾಧ-2), ಶ್ರೀನಿವಾಸಗೌಡ ಮಾರ್ಗದರ್ಶನದಲ್ಲಿ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಸಹಾಯಕ ಪೊಲೀಸ್ ಆಯುಕ್ತರವರ ನೇತೃತ್ವದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿರುತ್ತಾರೆ. +ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ +ಇರಾನಿ ಗ್ಯಾಂಗ್‍ನ ಮೂವರ ಬಂಧನಬೆಂಗಳೂರು,ಫೆ.16- ದರೋಡೆ ಮತ್ತು ಮನೆ ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇರಾನಿ ಗ್ಯಾಂಗಿನ ಮೂವರು ಆರೋಪಿಗಳನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂವರು ಆರೋಪಿಗಳು ಮನೆಗಳ್ಳತನ ಮತ್ತು ದರೋಡೆ ಮಾಡಿದ್ದ ಚಿನ್ನದ ಒಡವೆಗಳನ್ನು ಕುರುಬರಹಳ್ಳಿಯ ಜ್ಯುವೆಲ್ಲರಿ ಅಂಗಡಿಯೊಂದರ ಬಳಿ ಹೋಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆಭರಣಗಳ ಬಗ್ಗೆ ವಿಚಾರಿಸಿದಾಗ ಸರಿಯಾದ ಮಾಹಿತಿ ನೀಡದ ಕಾರಣ ಮಾಲಿನ ಸಮೇತ ಬಂಧಿಸಿದ್ದಾರೆ. +ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಪ್ರಗತಿಯಲ್ಲಿದೆ.ಆರೋಪಿಗಳ ಬಂಧನದಿಂದ ಜಾಲಹಳ್ಳಿ ಹಾಗೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಕಳವು ಪ್ರಕರಣ ಹಾಗೂ ನಂದಿನಿ ಲೇಔಟ್ ಪೊಲೀಸ್ ಠಾಣೆಯ ಸರಗಳ್ಳತನ ಪ್ರಕರಣ ಸೇರಿ ಒಟ್ಟು 3 ಪ್ರಕರಣಗಳು ಪತ್ತೆಯಾಗಿವೆ. ಇನ್ಸ್‍ಪೆಕ್ಟರ್ ಮಂಜು ಅವರ ನೇತೃತ್ವದ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. \ No newline at end of file diff --git a/eesanje/url_46_234_2.txt b/eesanje/url_46_234_2.txt new file mode 100644 index 0000000000000000000000000000000000000000..984670836ea71bac758a843aededf3123a5bb8c5 --- /dev/null +++ b/eesanje/url_46_234_2.txt @@ -0,0 +1,10 @@ +ನಾಯಕತ್ವದ ಬದಲಾವಣೆ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ : ಡಿ.ಕೆ.ಸುರೇಶ್ +ಬೆಂಗಳೂರು,ಫೆ.17- ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಾಯಕತ್ವದ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೋಕಸಭೆ ಚುನಾವಣೆ ಬಳಿಕವೂ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿರಲಿದೆ. +ಮಹಾರಾಷ್ಟ್ರದಂತೆ ಇಲ್ಲಿ ಅಜಿತ್ ಪವಾರ್ ಆಗಲಿ, ಅಶೋಕ್ ಚೌವ್ಹಾಣ್ ಆಗಲಿ ಕಂಡುಬರುವುದಿಲ್ಲ, ಅಂತಹ ಸಾಧ್ಯತೆಯೂ ಇಲ್ಲ. ಕಾಂಗ್ರೆಸ್ ಸರ್ಕಾರ 5 ವರ್ಷ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮತ್ತೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.ರಾಜ್ಯದ ಜನ ಕಾಂಗ್ರೆಸ್‍ಗೆ 135 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಮುಖರಾದ ರಾಹುಲ್‍ಗಾಂಧಿ, ಸೋನಿಯಾಗಾಂಧಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. +ವಿರೋಧಪಕ್ಷಗಳ ನಾಯಕರಿಗೆ ಅಧಿಕಾರ ಕಳೆದುಕೊಂಡು ನಿದ್ರೆ ಬರುತ್ತಿಲ್ಲ. ಅದಕ್ಕಾಗಿ ದಿನ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ, ಸಿಡಿ ಬಿಡುಗಡೆ ಎಂದೆಲ್ಲಾ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆ, ಸರ್ಕಾರ ಪತನವಾಗಲಿದೆ ಎಂಬ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್-ಬಿಜೆಪಿಯಲ್ಲಿ ಚಲನಚಿತ್ರ ನಿರ್ಮಾಪಕರು ಹೆಚ್ಚಾಗಿದ್ದಾರೆ. ನಿರ್ದೇಶಕರು, ಕಥೆ ಬರೆಯುವವರ ಪ್ರಮಾಣವೂ ಹೆಚ್ಚಾಗಿದೆ. ಅದಕ್ಕಾಗಿ ರಾಜಕೀಯವಾಗಿ ದಿನಕ್ಕೊಂದು ಹೊಸಹೊಸ ಕಥೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು. +ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ +ಕೇಂದ್ರ ಸರ್ಕಾರ ದೆಹಲಿಯಲ್ಲಿ ರೈತರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದೆ ಎಂದು ಎಲ್ಲರೂ ನೋಡಿದ್ದಾರೆ. ಪಾಕಿಸ್ತಾನ-ಭಾರತದ ಗಡಿಗಿಂತಲೂ ತೀವ್ರವಾಗಿ ಮುಳ್ಳಿನ ಬೇಲಿ ಹಾಕಿ ಅಶ್ರವಾಯು ಸಿಡಿಸಿ ರೈತರ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ. ಇದನ್ನು ಪ್ರತಿಯೊಬ್ಬರೂ ಗಮನಿಸುತ್ತಿದ್ದಾರೆ. ರೈತರು ನ್ಯಾಯಯುತ ಬೇಡಿಕೆಗಳನ್ನಿಡುತ್ತಿದ್ದಾರೆ ಅದನ್ನು ಈಡೇರಿಸುವ ಬದಲು ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಜನರಿಗಿರುವ ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ದೂರಿದರು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸ್ರ್ಪಧಿಸುವುದಾದರೆ ಸ್ವಾಗತಿಸುತ್ತೇನೆ. ಈ ಹಿಂದೆ ಅವರು ಎರಡು ಬಾರಿ ಸಂಸದರಾಗಿದ್ದರು. ಅವರ ನಿರ್ಗಮನದ ಬಳಿಕ ನಾನು ಆಯ್ಕೆಯಾಗಿದ್ದೇನೆ. ನಮ್ಮ ಪಕ್ಷ ನನಗೆ ಮರಳಿ ಸ್ರ್ಪಸಲು ಸೂಚನೆ ನೀಡಿದರೆ ನಾನು ಚುನಾವಣೆಯನ್ನು ಎದುರಿಸಲು ಬೇಕಾದ ತಂತ್ರಗಾರಿಕೆಯನ್ನು ಸಿದ್ಧಮಾಡಿಕೊಳ್ಳುತ್ತೇನೆ. ಕುಮಾರಸ್ವಾಮಿಯವರ ಸ್ಪರ್ಧೆಯನ್ನು ನಾನು ಸವಾಲು ಎಂದು ಸ್ವೀಕರಿಸುತ್ತಿಲ್ಲ. ರಾಜಕೀಯ ಹೋರಾಟ ಎಂದು ಪರಿಗಣಿಸುವುದಾಗಿ ಹೇಳಿದರು. +ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ತೆರಿಗೆ ಅನ್ಯಾಯದ ಬಗ್ಗೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಹಾಗೆಂದು ನಾನು ದೇಶ ವಿಭಜನೆಯ ಮಾತುಗಳನ್ನಾಡಿಲ್ಲ. ತೆರಿಗೆ ಪಾಲಿನ ಅನ್ಯಾಯದ ಬಗ್ಗೆ ತಮಿಳುನಾಡಿನಲ್ಲಿ ಮೊದಲಿನಿಂದಲೂ ವಿರೋಧವಿದೆ. ಪ್ರಧಾನಿಯವರು ಪ್ರತಿನಿಧಿಸುತ್ತಾರೆ ಎಂಬ ಕಾರಣಕ್ಕೆ ಉತ್ತರ ಪ್ರದೇಶಕ್ಕೆ ಮತ್ತು ಪ್ರಧಾನಿಯವರ ತವರೂರು ಎಂಬ ಕಾರಣಕ್ಕೆ ಗುಜರಾತ್‍ಗೆ ಹೆಚ್ಚಿನ ಹಣ ಅನುದಾನ ಮತ್ತು ತೆರಿಗೆ ಪಾಲು ನೀಡಲಾಗುತ್ತಿದೆ. ಉತ್ತರಭಾರತದ ಮಧ್ಯಪ್ರದೇಶ, ಬಿಹಾರ ರಾಜ್ಯಗಳು ನಮಗಿಂತಲೂ ಹೆಚ್ಚಿನ ಹಣ ಪಡೆಯುತ್ತಿವೆ. ಇದರ ವಿರುದ್ಧ ಧ್ವನಿಯೆತ್ತುವುದು ಹೇಗೆ ದೇಶ ವಿರೋಧಿಯಾಗುತ್ತದೆ ಎಂದು ಪ್ರಶ್ನಿಸಿದರು. +ಬಿಬಿಎಂಪಿ ಕೇಳಿದ್ದು 8050 ಕೋಟಿ ರೂ. ಸಿಕ್ಕಿದ್ದು 3500 ಕೋಟಿ ರೂ +ಮಾಜಿ ಸಚಿವ ಈಶ್ವರಪ್ಪನವರು ಗುಂಡಿಕ್ಕಿ ಕೊಲ್ಲುವಂತೆ ನೀಡಿರುವ ಹೇಳಿಕೆ ಅವರ ಹಿಂಬಾಲಕರನ್ನು ಪ್ರಚೋದಿಸಿ ಅನಾಹುತವಾದರೆ ಬಡವರ ಮಕ್ಕಳು ತೊಂದರೆಗೆ ಸಿಲುಕುತ್ತಾರೆ, ಅದಕ್ಕಾಗಿ ನಾನೇ ನೇರವಾಗಿ ಈಶ್ವರಪ್ಪ ಅವರನ್ನು ಭೇಟಿ ಮಾಡುತ್ತೇನೆ. ನನಗೆ ಗುಂಡಿಕ್ಕುವುದರಿಂದ ಅಥವಾ ಎರಡೇಟು ಹೊಡೆಯುವುದರಿಂದ ಈಶ್ವರಪ್ಪ ಅವರಿಗೆ ಒಳ್ಳೆಯದಾಗುತ್ತದೆ. ರಾಜಕೀಯವಾಗಿ ನಿರುದ್ಯೋಗಿಯಾಗಿರುವ ಅವರಿಗೆ ರಾಜ್ಯಪಾಲರ ಹುದ್ದೆ ದೊರೆಯುತ್ತದೆ ಎಂದರೆ ನನಗೆ ಸಂತೋಷ ಎಂದು ಹೇಳಿದರು. \ No newline at end of file diff --git a/eesanje/url_46_234_3.txt b/eesanje/url_46_234_3.txt new file mode 100644 index 0000000000000000000000000000000000000000..822043c8f535eb0f96f94c9a3149e73be8e20a52 --- /dev/null +++ b/eesanje/url_46_234_3.txt @@ -0,0 +1,5 @@ +ರಾಜ್ಯಸಭೆ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು +ಬೆಂಗಳೂರು,ಫೆ.17- ವಿಧಾನಸಭೆಯಿಂದ ರಾಜ್ಯಸಭೆಗೆ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕøತಗೊಂಡಿದ್ದು, ಐವರು ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದವಾಗಿವೆ. ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಕೆ.ಬಾಂಡೆಗೆ, ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಕೇನ್, ಜಿ.ಸಿ.ಚಂದ್ರಶೇಖರ್, ಡಾ.ಸಯ್ಯದ್ ನಾಸೀರ್ ಹುಸೇನ್ ಹಾಗೂ ಜೆಡಿಎಸ್ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯವಾಗಿವೆ. +ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದ ಡಾ.ಕೆ.ಪದ್ಮರಾಜನ್ ಹಾಗೂ ಕೆಂಗನೂರು ಅವರ ನಾಮಪತ್ರಗಳು ತಿರಸ್ಕøತವಾಗಿವೆ. ನಿನ್ನೆ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಫೆ.20ರವರೆಗೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂದು ಸಂಜೆ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. +9 ಕಾರಿಡಾರ್‌ಗಳಲ್ಲಿ ಬಸ್ ಲೇನ್ ನಿರ್ಮಿಸಲು ಬಿಬಿಎಂಪಿ ನಿರ್ಧಾರ +ಮೂರು ರಾಜಕೀಯ ಪಕ್ಷಗಳಿಂದ ಐವರು ಅಭ್ಯರ್ಥಿಗಳು ಸ್ರ್ಪಧಿಸಿರುವುದರಿಂದ ಮತದಾನ ನಡೆಯುವುದು ಅನಿವಾರ್ಯವಾಗಿದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ. ಫೆ.29ರಂದು ರಾಜ್ಯಸಭೆ ಚುನಾವಣೆಯ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_234_4.txt b/eesanje/url_46_234_4.txt new file mode 100644 index 0000000000000000000000000000000000000000..08d8eb7b96a0a59adc7eac1db36ecf7fb7d3c11e --- /dev/null +++ b/eesanje/url_46_234_4.txt @@ -0,0 +1,5 @@ +ಮಹಿಳಾ ಕಾನ್‌ಸ್ಟೇಬಲ್ ನೇಣಿಗೆ ಶರಣು +ಕನಕಪುರ,ಫೆ.17- ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಕಾನ್ಸ್‍ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾರೊಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಹಾರೊಹಳ್ಳಿ ತಾಲೂಕಿನ ದ್ಯಾವಸಂದ್ರದ ನಿವಾಸಿ ಮಂಜುಶ್ರೀ(27) ಆತ್ಮಹತ್ಯೆ ಮಾಡಿ ಕೊಂಡಿರುವ ಕಾನ್ಸ್‍ಟೇಬಲ್. ಬೆಂಗಳೂರಿನ ಮೈಕೊ ಲೇಔಟ್ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಮಂಜುಶ್ರೀ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೆ ಶಿವಾಜಿನಗರ ಪೊಲೀಸ್ ಠಾಣೆಗೆ ಅವರನ್ನು ನಿಯೋಜಿಸಲಾಗಿತ್ತು. +ಪ್ರತಿದಿನ ದ್ಯಾವಸಂದ್ರದಿಂದ ಬೆಂಗಳೂರಿಗೆ ತೆರಳಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಅವರು ನಿನ್ನೆ ಎಂದಿನಂತೆ ಕರ್ತವ್ಯ ಮುಗಿಸಿಕೊಂಡು ರಾತ್ರಿ ಮನೆಗೆ ಬಂದಿದ್ದಾರೆ. ಇವರ ಪೋಷಕರು ಮನೆಯ ಹಿಂಭಾಗದಲ್ಲಿ ಕೆಲಸದಲ್ಲಿ ತೊಡಗಿದ್ದಾಗ ಮಂಜುಶ್ರೀ ರೂಂಗೆ ಹೋಗಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. +ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್ +ಕೆಲ ಸಮಯದ ಬಳಿಕ ಪೋಷಕರು ಮನೆಯೊಳಗೆ ಬಂದು ನೋಡಿದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸುದ್ದಿ ತಿಳಿದು ಹಾರೊಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಾರೊಹಳ್ಳಿ ಸರ್ಕಲ್ ಇನ್ಸ್‍ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ದಯಾನಂದ ಸಾಗರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_234_5.txt b/eesanje/url_46_234_5.txt new file mode 100644 index 0000000000000000000000000000000000000000..0b876b856ba671edd998a39c941d06956878b397 --- /dev/null +++ b/eesanje/url_46_234_5.txt @@ -0,0 +1,5 @@ +ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ +ಬೆಂಗಳೂರು,ಫೆ.17- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಶಾಂತಿಯುತ ಮತದಾನವಾಗಿದ್ದು, ಒಟ್ಟಾರೆ ಸುಮಾರು ಶೇ.86.38ರಷ್ಟು ಮತದಾನವಾಗಿದೆ. ಈ ಉಪಚುನಾವಣೆಯ ಮತ ಎಣಿಕೆಯು ಫೆ.20ರಂದು ನಡೆಯಲಿದೆ. ಅಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಈ ಚುನಾವಣೆಗೆ ಮತದಾನ ನಡೆದಿದ್ದು, ಈ ಬಾರಿ ದಾಖಲೆಯ ಪ್ರಮಾಣದ ಮತದಾನವಾಗಿದೆ. +ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇ.83.97, ಬಿಬಿಎಂಪಿ ಕೇಂದ್ರದಲ್ಲಿ ಶೇ.83.19, ಬಿಬಿಎಂಪಿ ಉತ್ತರದಲ್ಲಿ ಶೇ.82.43, ಬಿಬಿಎಂಪಿ ದಕ್ಷಿಣದಲ್ಲಿ 82.51ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿಹೆಚ್ಚು ಶೇ.96.02ರಷ್ಟು ಮತದಾನವಾಗಿದ್ದರೆ, ರಾಮನಗರ ಜಿಲ್ಲೆಯಲ್ಲಿ ಶೇ.95.77ರಷ್ಟು ಮತದಾನವಾದ ವರದಿಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ ಸೇರಿದಂತೆ ಚುನಾವಣೆಗೆ 9 ಅಭ್ಯರ್ಥಿಗಳು ಸ್ರ್ಪಧಿಸಿದ್ದರು. +ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್ +ಈ ಉಪಚುನಾವಣೆಯಲ್ಲಿ ಚುನಾಯಿತರಾಗುವ ಅಭ್ಯರ್ಥಿಯ ವಿಧಾನಪರಿಷತ್‍ನ ಸದಸ್ಯತ್ವದ ಅವಧಿ 2026ರ ನವೆಂಬರ್ 11ರವರೆಗೆ ಮಾತ್ರ ಇದೆ. ಕಳೆದ ಬಾರಿ ಚುನಾವಣೆಯಂತೆ ಈ ಬಾರಿಯೂ ರಂಗನಾಥ್ ಮತ್ತು ಪುಟ್ಟಣ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಮತದಾನ ಮುಗಿಯುತ್ತಿದ್ದಂತೆ ಈ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. \ No newline at end of file diff --git a/eesanje/url_46_234_6.txt b/eesanje/url_46_234_6.txt new file mode 100644 index 0000000000000000000000000000000000000000..021cde5c3e1788afcc115315448d60de6dea6051 --- /dev/null +++ b/eesanje/url_46_234_6.txt @@ -0,0 +1,5 @@ +ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು +ಚನ್ನಪಟ್ಟಣ,ಫೆ.17- ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ಕೋಲೂರುಗೇಟ್ ಬಳಿ ಟಿಟಿ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೈಸೂರಿನ ಮೂವರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಮೈಸೂರಿನ ನಿವಾಸಿಗಳಾದ ಸೋಮ ಲಿಂಗಪ್ಪ(70), ಸೋಮಣ್ಣ(68) ಮತ್ತು ರಾಜೇಶ್ವರಿ(50) ಮೃತ ದುರ್ದೈವಿಗಳು. +ಅಪಘಾ ತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಟಿಟಿ ವಾಹನದಲ್ಲಿ ಇವರೆಲ್ಲರೂ ಹಾವೇರಿಗೆ ಹೋಗಿ ಮದುವೆ ಮುಗಿಸಿಕೊಂಡು ಮೈಸೂರಿಗೆ ವಾಪಸಾಗುತ್ತಿದ್ದ ವೇಳೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಚನ್ನಪಟ್ಟಣ ತಾಲೂಕು ಕೋಲೂರು ಗೇಟ್ ಬಳಿ ಅತಿವೇಗವಾಗಿ ಬಂದ ಲಾರಿಯೊಂದು ಹಿಂದಿನಿಂದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. +ಮುಂದಿನ ಪೀಳಿಗೆಯ ಹೆಚ್-3 ರಾಕೆಟ್ ಉಡಾಯಿಸಿದ ಜಪಾನ್ +ಅಪಘಾತದಿಂದಾಗಿ ಈ ಮಾರ್ಗದ ಸಂಚಾರದಲ್ಲಿ ವಾಹನಗಳ ದಟ್ಟಣೆ ಉಂಟಾಗಿತ್ತು. ಸುದ್ದಿ ತಿಳಿದು ಸಿಪಿಐ ರವಿಕಿರಣ್ ಅವರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. \ No newline at end of file diff --git a/eesanje/url_46_234_7.txt b/eesanje/url_46_234_7.txt new file mode 100644 index 0000000000000000000000000000000000000000..ad3e5f40a9dea19c3ecf24b5586f8b1ac9c319c7 --- /dev/null +++ b/eesanje/url_46_234_7.txt @@ -0,0 +1,5 @@ +ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಗೆ ಜಿವಾವಧಿ ಶಿಕ್ಷೆ +ಮಹಾರಾಜ್‍ಗಂಜ್, ಫೆ.17 (ಪಿಟಿಐ) ಹನ್ನೆರಡು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದಲ್ಲಿ ಅಪರಾಗಳೆಂದು ತೀರ್ಪು ನೀಡಿದ ಇಲ್ಲಿನ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿನೋದ್ ಸಿಂಗ್ ಅವರು ಹೆಚ್ಚುವರಿ ಸೆಷನ್ಸ್ ನ್ಯಾಯಾೀಧಿಶ ವಿನಯ್ ಕುಮಾರ್ ಸಿಂಗ್ ಅವರ ನ್ಯಾಯಾಲಯವು ಐವರು ಪುರುಷರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ತಿಳಿಸಿದ್ದಾರೆ. +ಪಂಕಜ್ ಸಾಹ್ನಿ, ವಿವೇಕ್, ಗೋವಿಂದ್ ಚೌಹಾಣ್, ಸೋನು ಮತ್ತು ರಾಮ್ ನಾರಾಯಣ್ ರಾಜ್ಭರ್ ಅವರು ಜೀವಾವಧಿ ಶಿಕ್ಷೆಗೆ ಗುರಿಯಾದ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. 2021 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪ್ರತಿ ಅಪರಾಧಿಗಳಿಗೆ 90,000 ರೂ.ಗಳ ದಂಡ ವಿಧಿಸಿದೆ. +ಹೂಡಿಕೆದಾರರ ದಾರಿದೀಪವಾಗುತ್ತಿದೆ ಭಾರತ +2021 ರ ಜ.18ರಂದು ಉತ್ತರಪ್ರದೇಶದ ಮಹಾರಾಜ್‍ಗಂಜ್ ಜಿಲ್ಲೆಯ ಪುರೇಂದರ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಲಿಕ್‍ಗರ್ ಗ್ರಾಮದಲ್ಲಿ ಆರೋಪಿಗಳು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದರು. \ No newline at end of file diff --git a/eesanje/url_46_234_8.txt b/eesanje/url_46_234_8.txt new file mode 100644 index 0000000000000000000000000000000000000000..7f0e6c4ddb3e9538aa795c5f46760a2f5a09dd44 --- /dev/null +++ b/eesanje/url_46_234_8.txt @@ -0,0 +1,5 @@ +ಬಿಬಿಎಂಪಿ ಕೇಳಿದ್ದು 8050 ಕೋಟಿ ರೂ. ಸಿಕ್ಕಿದ್ದು 3500 ಕೋಟಿ ರೂ +ಬೆಂಗಳೂರು,ಫೆ.17- ಬಿಬಿಎಂಪಿ ಅಧಿಕಾರಿಗಳು ಕೇಳಿದ್ದು 8050 ಕೋಟಿ ರೂ.ಗಳ ಅನುದಾನ ಆದರೆ, ಸರ್ಕಾರ ನೀಡಿರೋದು ಕೇವಲ 3500 ಕೋಟಿ ರೂ.ಗಳು ಮಾತ್ರ. ಹೌದು ರಾಜ್ಯ ಸರ್ಕಾರ ನಿನ್ನೆ ಮಂಡಿಸಿದ ಬಜೆಟ್ ನಲ್ಲಿ ಬಿಬಿಎಂಪಿಗೆ ಕೇವಲ 3,500 ಕೋಟಿ ರೂ.ಗಳ ಅನುದಾನ ಮಾತ್ರ ನೀಡಿದೆ. +ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಬಿಎಂಪಿಗೆ 8050 ಕೋಟಿ ರೂ.ಗಳ ಅನುದಾನ ನೀಡುವಂತೆ ಅಧಿಕಾರಿಗಳು ಸರ್ಕಾರಕ್ಕೆ ಮಾಡಿಕೊಂಡಿರುವ ಮನವಿಗೆ ಸರ್ಕಾರ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದು ಅಂಕಿ ಅಂಶಗಳಿಂದ ಬಹಿರಂಗಗೊಂಡಿದೆ. 8050 ಕೋಟಿ ರೂ.ಗಳ ಅನುದಾನಕ್ಕೆ ಬೇಡಿಕೆ ಇಟ್ಟಿದ್ದರೂ ಸರ್ಕಾರ ಕಳೆದ ಬಾರಿಯಂತೆ ಈ ಬಾರಿಯೂ 3,500 ಕೋಟಿ ಅನುದಾನ ಮಾತ್ರ ಘೋಷಣೆ ಮಾಡಿದೆ. +ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಇಮ್ರಾನ್‍ ಖಾನ್ ಸಮ್ಮತಿ +ನಗರದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿರುವ 3 ಸಾವಿರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ 500 ಕೋಟಿ ಹೆಚ್ಚುವರಿ ಅನುದಾನ ನೀಡಲಾಗಿದೆ. 2024-2025 ರ ಸಾಲಿಗೆ ಒಟ್ಟು 3,500 ಕೋಟಿ ಅನುದಾನ ಹಾಗೂ 6 ಸಾವಿರ ಕೋಟಿ ಆದಾಯದ ಗುರಿ ನೀಡಲಾಗಿದೆ. \ No newline at end of file diff --git a/eesanje/url_46_234_9.txt b/eesanje/url_46_234_9.txt new file mode 100644 index 0000000000000000000000000000000000000000..61959e4b38179d99121b351796b22bdd70246d31 --- /dev/null +++ b/eesanje/url_46_234_9.txt @@ -0,0 +1,11 @@ +ಕೋಟಿ ಹಣಕ್ಕೆ ಅಪಹರಣ ನಾಟಕ : ಕಾರು ಚಾಲಕ, ರೌಡಿಗಳು ಸೇರಿ ಐವರ ಸೆರೆ +ಬೆಂಗಳೂರು,ಫೆ.16- ಕೆಲಸ ನೀಡಿದ್ದ ಮಹಿಳಾ ಉದ್ಯಮಿಯಿಂದಲೇ ಹಣ ದೋಚಲು ಅಪಹರಣ ನಾಟಕವಾಡಿದ್ದ ಕಾರು ಚಾಲಕ ಹಾಗೂ ಇಬ್ಬರು ರೌಡಿಗಳು ಸೇರಿ 5 ಮಂದಿಯನ್ನು 24 ಗಂಟೆಯೊಳಗೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕ ಹೇಮಂತ್ ಕುಮಾರ್ (34), ಶ್ರೀನಿವಾಸ (40), ಮೋಹನ್ (39), ತೇಜಸ್ (25) ಹಾಗೂ ಕುಲದೀಪು (22) ಬಂಧಿತರು. ಬಂಧಿತರ ಪೈಕಿ ಶ್ರೀನಿವಾಸ್ ಮತ್ತು ಮೋಹನ್ ಹೆಸರು ಮಲ್ಲೇಶ್ವರಂ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದೆ. +ಮಹಾಲಕ್ಷ್ಮೀಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈಕೋಲೇಔಟ್, 1ನೇ ಕ್ರಾಸ್ ನಿವಾಸಿ ಮಹಿಳಾ ಉದ್ಯಮಿ ಲಕ್ಷ್ಮೀ ಎಂಬುವವರು ಸೀರಿಯಲ್ ಪ್ರೊಡಕ್ಷನ್ ಹೌಸ್ ವ್ಯವಹಾರ ಮಾಡಿಕೊಂಡಿರುತ್ತಾರೆ. ಈ ವ್ಯವಹಾರಕ್ಕೆ ತಮಗೆ ಪರಿಚಯವಿರುವ ಹೇಮಂತ್ ಕುಮಾರ್ ಅವರನ್ನು ಕಾರು ಚಾಲಕನಾಗಿ ತಮ್ಮ ಬಳಿ ನೇಮಕ ಮಾಡಿಕೊಂಡಿದ್ದರು. +ಈ ಮಹಿಳಾ ಉದ್ಯಮಿ ಮನೆಕಟ್ಟಲು ಒಂದು ಕೋಟಿ ಸಾಲ ಬ್ಯಾಂಕ್‍ನಿಂದ ಮಂಜೂರು ಆಗಿತ್ತು. ಈ ವಿಚಾರ ಅವರ ಕಾರು ಚಾಲಕ ಹೇಮಂತ್ ಹಾಗೂ ಮತ್ತೊಬ್ಬನಿಗೆ ಗೊತ್ತಾಗಿದೆ. ಈ ಇಬ್ಬರು ಸಹಾಯಕರು ಫೆ.12ರಂದು ಬೆಳಿಗ್ಗೆ 8.30ರ ಸಮಯದಲ್ಲಿ ಮೈಸೂರಿಗೆ ಕಾರ್ಯನಿಮಿತ್ತ ಹೋಗುವುದಾಗಿ ಮನೆಯಿಂದ ಅವರ ಕಾರನ್ನು ತೆಗೆದುಕೊಂಡು ಹೋಗಿದ್ದು, ಅದೇ ದಿನ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಕಾರು ಚಾಲಕ ತನ್ನ ಮೊಬೈಲ್‍ನಿಂದ ಲಕ್ಷ್ಮೀ ಅವರ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದಾನೆ. +ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ +ಫೆ.13ರಂದು ಈ ಮಹಿಳಾ ಉದ್ಯಮಿ ಇಬ್ಬರು ಸಹಾಯಕರಿಗೆ ಕರೆ ಮಾಡಿದ್ದಾಗ ಅವರ ಮೊಬೈಲ್ ಸ್ವಿಚ್‍ಆಪ್ ಆಗಿರುವುದು ಕಂಡು ಬಂದಿದೆ. ಫೆ.14ರಂದು ಮಧ್ಯಾಹ್ನ ಸುಮಾರು 1.50ರ ಸಮಯದಲ್ಲಿ ಕಾರು ಚಾಲಕ ಅವರಿಗೆ ವಾಟ್ಸಾಪ್ ಕರೆ ಮಾಡಿ ಅಳುತ್ತಾ ನಮ್ಮಿಬ್ಬರನ್ನು ಯಾರೋ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಸುತ್ತಾಡಿಸುತ್ತಿದ್ದಾರೆಂದು ತಿಳಿಸಿರುತ್ತಾರೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಲಕ್ಷ್ಮೀಯವರಿಗೆ ಕರೆಮಾಡಿ, ನಿಮ್ಮ ಹುಡುಗರು ಬೇಕೆಂದರೆ 1 ಕೋಟಿ ಹಣವನ್ನು ಸಂಜೆಯೊಳಗೆ ನೀಡಬೇಕು, ಇಲ್ಲವಾದರೆ ಅವರಿಬ್ಬರನ್ನು ಮುಗಿಸುತ್ತೇವೆಂದು ತಿಳಿಸಿ ಕರೆ ಸ್ಥಗಿತಗೊಳಿಸಿದ್ದಾರೆ. +ಇದರಿಂದ ಗಾಬರಿಯಾದ ಲಕ್ಷ್ಮೀ ಅವರು ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ಹೋಗಿ ತಮ್ಮ ಬಳಿ ಸಹಾಯಕರಾಗಿದ್ದ ಇಬ್ಬರು ಯುವಕರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ದೂರು ನೀಡಿದ್ದರು. ಪೊಲೀಸರು ಹಣಕ್ಕಾಗಿ ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು ಇನ್ಸ್‍ಪೆಕ್ಟರ್ ಅವರ ನೇತೃತ್ವದಲ್ಲಿ ಒಂದು ತಂಡವನ್ನು ರಚಿಸಿದ್ದರು. +ಈ ತಂಡವು ತಾಂತ್ರಿಕ ಮತ್ತು ಟೋಲ್‍ಗಳಲ್ಲಿರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಇದರ ಆಧಾರದ ಮೇರೆಗೆ ತನಿಖೆ ಕೈಗೊಂಡು ಪ್ರಕರಣ ದಾಖಲಾದ 24 ಗಂಟೆಯೊಳಗೆ ದೊಡ್ಡಬಳ್ಳಾಪುರ ಸಮೀಪದ ಚಿಕ್ಕ ಮಧುರೆ ಪಾರಂ ಹೌಸ್‍ನಲ್ಲಿಟ್ಟಿದ್ದ ಇಬ್ಬರನ್ನು ರಕ್ಷಿಸಿ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿದಾಗ, ಚಾಲಕನೇ ತನ್ನ ಸ್ನೇಹಿತ ಹಾಗೂ ಇನ್ನಿತರರೊಂದಿಗೆ ಸೇರಿಕೊಂಡು 1 ಕೋಟಿ ಆಸೆಗೆ ಬಿದ್ದು ಅಪಹರಣದ ನಾಟಕವಾಡಿರುವುದು ಬೆಳಕಿಗೆ ಬಂದಿದೆ. +ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು +ಈ ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ವ್ಯಕ್ತಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಲಕ್ಷ್ಮೀ ಬಳಿ ಸಹಾಯಕರಾಗಿ ಕೆಲಸಕ್ಕಿದ್ದ ಕೆಲವು ವ್ಯಕ್ತಿಗಳು ಪೂರ್ವ ನಿಯೋಜಿತ ಯೋಜನೆಯನ್ನು ಮಾಡಿಕೊಂಡು, ಅಪಹರಣ ಎಸಗಿದ ಇಬ್ಬರು ರೌಡಿಗಳು ಹಾಗೂ ಇನ್ನಿತರರೊಂದಿಗೆ ಸೇರಿಕೊಂಡು ಈ ಕೃತ್ಯ ಮಾಡಿರುವುದುತನಿಖೆಯಿಂದ ಧೃಡಪಟ್ಟಿದ್ದು ತನಿಖೆ ಮುಂದುವರೆದಿದೆ. +ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸೈದುಲ್ಲು ಅಡಾವತ್ ಮಾರ್ಗದರ್ಶನದಲ್ಲಿ, ಎಸಿಪಿ ಕೃಷ್ಣಮೂರ್ತಿ, ಇನ್ಸ್ ಪೆಕ್ಟರ್ ಮಂಜು ಅವರ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು. \ No newline at end of file diff --git a/eesanje/url_46_235_1.txt b/eesanje/url_46_235_1.txt new file mode 100644 index 0000000000000000000000000000000000000000..11846024d90de733075a340a2f475c5caa526b05 --- /dev/null +++ b/eesanje/url_46_235_1.txt @@ -0,0 +1,4 @@ +ಶಿಕ್ಷಕರ ಉಪಚುನಾವಣೆಗೆ ಶಾಂತಿಯುತ ಮತದಾನ +ಬೆಂಗಳೂರು, ಫೆ.16- ವಿಧಾನ ಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಬಹುತೇಕ ಶಾಂತಿಯುತವಾಗಿ ನಡೆದಿದೆ. ಬೆಂಗಳೂರು ನಗರ, ಬಿಬಿಎಂಪಿ, ನಗರ ಮತ್ತು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ವ್ಯಾಪ್ತಿಗೆ ಇಂದು ಉಪಚುನಾವಣೆ ನಡೆಯಿತು. ಬೆಳಗ್ಗೆಯಿಂದಲೇ ಮತದಾರರಾಗಿರುವ ಶಿಕ್ಷಕರುಗಳು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. ಮಧ್ಯಾಹ್ನ ವೇಳೆಗೆ ಶೇ.50ರಷ್ಟು ಮತದಾನವಾಗಿತ್ತು. +ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ +ಉಪಚುನಾವಣೆಗೆ 19,172 ಶಿಕ್ಷಕರು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದು , ಪುಟ್ಟಣ್ಣ ಅವರು ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಉಪಚುನಾವಣೆ ನಡೆಸಲಾಯಿತು. 2026ರ ನವೆಂಬರ್ 11ರವರೆಗೆ ಈ ಉಪಚುನಾವಣೆಯಲ್ಲಿ ಚುನಾಯಿತರಾಗುವ ಸದಸ್ಯರಿಗೆ ಅಕಾರವಿರಲಿದೆ. 20ರಂದು ಮತ ಎಣಿಕೆ ಕಾರ್ಯ ನಡೆಲಿದ್ದು , ಪ್ರಾಶ್ಯಸ್ತ ಮತಗಳು ಆಗಿರುವುದರಿಂದ ಅಂದೇ ಫಲಿತಾಂಶ ಬರುವುದು ಅಥವಾ ಎಣಿಕೆ ಕಾರ್ಯ ವಿಳಂಬವಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_235_10.txt b/eesanje/url_46_235_10.txt new file mode 100644 index 0000000000000000000000000000000000000000..58bebf9b48c98e3cded1d880308a29823f4b93e9 --- /dev/null +++ b/eesanje/url_46_235_10.txt @@ -0,0 +1,6 @@ +36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ +ಬೆಂಗಳೂರು, ಫೆ.16- ಇಡೀ ದೇಶದಲ್ಲಿ ರಾಜ್ಯದ ಸಾರಿಗೆ ಸೇವೆಗೆ ಉತ್ತಮ ಹೆಸರಿದ್ದು, ಅದನ್ನು ಮತ್ತಷ್ಟು ಉನ್ನತೀಕರಿಸುವ ದೃಷ್ಟಿಯಿಂದ ಉಡುಪಿ, ಚಿಕ್ಕಬಳ್ಳಾಪುರ, ನೆಲಮಂಗಲ, ಮಡಿಕೇರಿ, ಮಧುಗಿರಿ ಮತ್ತು ಹುಣಸೂರಿನಲ್ಲಿ ಅಂದಾಜು 36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳು ಹಾಗೂ ದೇವನಹಳ್ಳಿ ತುಮಕೂರಿನಲ್ಲಿ 10 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್‍ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಯವರು ತಿಳಿಸಿದ್ದಾರೆ. +2024-25ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳೊಳಗೆ ಜಾರಿಗೊಳಿಸಿದ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಬಹಳಷ್ಟು ಅನುಕೂಲವಾಗಿದೆ. ಈವರೆಗೆ 165 ಕೋಟಿ ಹೆಚ್ಚು ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದು, ಅದಕ್ಕೆ ಮೂರು ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದರು. +ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ +ಅರ್ಹತಾ ಪತ್ರ ನವೀಕರಣಕ್ಕೆ ಬರುವಂತಹ ಎಲ್ಲಾ ಸಾರಿಗೆ ವಾಹನಗಳಿಗೆ ಅರ್ಹತಾ ಪರೀಕ್ಷೆ ಕೈಗೊಳ್ಳಲು 32 ಸ್ಥಳಗಳಲ್ಲಿ ಸಾರ್ವಜನಿಕ ಖಾಸಗೀ ಸಹಭಾಗಿತ್ವದಲ್ಲಿ ಸ್ವಯಂ ಚಾಲಿತ ಪರೀಕ್ಷಾ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಸಾರಿಗೆ ಇಲಾಖೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಾಹನಗಳ ದಾಖಲಾತಿಗಳ ಡಿಜಿಟಲೀಕರಣಕ್ಕಾಗಿ ಯೋಜನೆಯನ್ನು ಜಾರಿಗೊಳಿಸಲಾಗುವುದು. +ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಬೆಂಗಳೂರು ಕೇಂದ್ರ, ಬೆಳಗಾವಿ, ಮಂಗಳೂರು ಹಾಗೂ ಭಾಲ್ಕಿ ಕಚೇರಿಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು. \ No newline at end of file diff --git a/eesanje/url_46_235_11.txt b/eesanje/url_46_235_11.txt new file mode 100644 index 0000000000000000000000000000000000000000..8e6bd8799483e8dc0144b365d1387251873bdf36 --- /dev/null +++ b/eesanje/url_46_235_11.txt @@ -0,0 +1,6 @@ +ಪರಿಷ್ಕೃತ ಪ್ರವಾಸೋದ್ಯಮ ನೀತಿ ಜಾರಿ +ಬೆಂಗಳೂರು,ಫೆ.16- ರಾಜ್ಯದ ಆರ್ಥಿಕ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಗಳಿರುವ ಪ್ರವಾಸೋದ್ಯಮ ಇಲಾಖೆಗೆ ಮುಖ್ಯಮಂತ್ರಿಯವರು ತಮ್ಮ ಬಜೆಟ್‍ನಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಲು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ 2024-29 ರ ಸಾಲಿಗೆ ಪರಿಷ್ಕøತ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. +ಕೊಪ್ಪಳದ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲ ಪ್ರವಾಸಿ ಸೌಲಭ್ಯಗಳಿಗೆ 100 ಕೋಟಿ, ಜಲಾಶಯಗಳ ಹಿನ್ನೀರು, ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಸಾಹಸ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವುದು, ಸಾಹಸ ಪ್ರವಾಸೋದ್ಯಮ ವನ್ನು ಉತ್ತೇಜಿಸಲು 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಮತ್ತು ರೋಪ್ ವೇ ಸೌಲಭ್ಯ ಸೃಷ್ಟಿ ಮಾಡುವುದಾಗಿ ಘೋಷಿಸಿದ್ದಾರೆ. +ಗೋಕಾಕ್ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವ ಗುರಿಯನ್ನು ಪ್ರಕಟಿಸಿದ್ದು, ರಾಜ್ಯದ 530 ಸುರಕ್ಷಿತಾ ಸ್ಮಾರಕಗಳನ್ನು ತ್ರಿಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದ್ದು, ಡಿಜಿಟಲ್ ಮಾಹಿತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಲಾಗುವುದು. ರಾಷ್ಟ್ರಕೂಟರ ಕಾಲದಲ್ಲಿ ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯವನ್ನು ಕಲ್ಬುರ್ಗಿ ಜಿಲ್ಲೆಯ ಕಿತ್ತಾಪುರ ತಾಲೂಕಿನಲ್ಲಿ ನಾಗಾವಿಯಲ್ಲಿ ಸ್ಥಾಪಿಸಲಾಗಿತ್ತು ಎಂಬುದು ಸ್ಥಳೀಯರ ನಂಬಿಕೆ. ಅಲ್ಲಿನ ಪ್ರಾಚ್ಯಾವಶೇಷಗಳ ಸಂಶೋಧನೆ ಮತ್ತು ಸಂರಕ್ಷಣೆಗಾಗಿ ನೆರವು ನೀಡಲು ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದ್ದಾರೆ. +ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ +ಬೆಂಗಳೂರಿನ ಹೊರವಲಯದ ರೋರಿಚ್ ಮತ್ತು ದೇವಿಕರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿ, ಬಾಗಲಕೋಟೆಯ ಐಹೊಳೆಯಲ್ಲಿ ಕೆಎಸ್‍ಟಿಡಿಸಿಯಿಂದ ಸುಸಜ್ಜಿತ ಹೋಟೆಲ್ ನಿರ್ಮಾಣ, ಬೀದರ್, ವಿಜಯಪುರದಲ್ಲಿ ಕರೇಚ್ ಎಂದು ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ಪುನಶ್ಚೇತನಗೊಳಿಸಲು 15 ಕೋಟಿ ರೂ., ಬಂಡೀಪುರ, ದಾಂಡೇಲಿ, ಕಬಿನಿಯಲ್ಲಿ ಇಂಟರ್‍ಪ್ರಿಟೇಷನ್ ಸೆಂಟರ್‍ಗಳನ್ನು ನಿರ್ಮಾಣ ಮಾಡಲು 25 ಕೋಟಿ, ಗದಗ ಜಿಲ್ಲೆ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ, ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳನ್ನು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ. \ No newline at end of file diff --git a/eesanje/url_46_235_12.txt b/eesanje/url_46_235_12.txt new file mode 100644 index 0000000000000000000000000000000000000000..ea8e21d027b0991db9169b016c54469fe94f9ca1 --- /dev/null +++ b/eesanje/url_46_235_12.txt @@ -0,0 +1,10 @@ +ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..! +ಬೆಂಗಳೂರು,ಫೆ.16- ಇಂದಿನ ಬಜೆಟ್‍ನಲ್ಲಿ ಮದ್ಯದ ಬೆಲೆಯನ್ನು ಪರಿಷ್ಕರಣೆ ಮಾಡಿ ಪಾನಪ್ರಿಯರು ಹಾಗೂ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಈ ಬಾರಿ ಮತ್ತೆ ಬೆಲೆ ಏರಿಕೆಯ ಮುನ್ಸೂಚನೆಯನ್ನು ನೀಡಿದ್ದಾರೆ. ವಿಧಾನಸಭೆಯಲ್ಲಿಂದು 2024-25ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಯವರು ವಾಣಿಜ್ಯ ತೆರಿಗೆ, ನೋಂದಣಿ ಮುದ್ರಾಂಕ, ಅಬಕಾರಿ, ಸಾರಿಗೆ, ಗಣಿ ಮತ್ತು ಭೂ ವಿಜ್ಞಾನ ಸೇರಿ ಸಂಪನ್ಮೂಲ ಸಂಗ್ರಹ ಇಲಾಖೆಗಳಿಂದ ಒಟ್ಟು 1,96,525 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಿದ್ದಾರೆ. +ಮದ್ಯದ ಘೋಷಿತ ಸ್ಲಾಬ್‍ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆರಾಜ್ಯದ ಮದ್ಯದ ಬೆಳವಣಿಗೆಗನುಗುಣವಾಗಿ ದೇಶೀಯವಾಗಿ ತಯಾರಾಗುವ ಮದ್ಯ (ಐಎಂಎಲ್) ಮತ್ತು ಬಿಯರ್ಸ್ ಸ್ಲಾಬ್‍ಗಳನ್ನು ಪರಿಷ್ಕರಿಸುವುದಾಗಿ ತಿಳಿಸಿದ್ದಾರೆ. ನೆರೆರಾಜ್ಯಗಳಲ್ಲಿ ಕೆಲವು ಮದ್ಯ ಮಾರಾಟ ದರ ರಾಜ್ಯಕ್ಕಿಂತಲೂ ದುಬಾರಿಯಾಗಿದೆ. ಪರಿಷ್ಕರಣೆಗೊಂಡರೆ ಸಹಜವಾಗಿಯೇ ಅದು ಏರಿಕೆಯಾಗುವ ನಿರೀಕ್ಷೆಯಿದೆ. +ಪ್ರಸಕ್ತ ವರ್ಷ ನೋಂದಣಿ ಮತ್ತು ಮುದ್ರಾಂಕ ಹಾಗೂ ಮೋಟಾರು ವಾಹನಗಳ ತೆರಿಗೆಯನ್ನು ಪರಿಷ್ಕರಣೆ ಮಾಡಿರುವುದರಿಂದ ಈ ಬಜೆಟ್‍ನಲ್ಲಿ ಅಬಕಾರಿ ಹೊರತುಪಡಿಸಿ ಬೇರೆ ತೆರಿಗೆ ಹೊರೆ ಕಂಡುಬಂದಿಲ್ಲ. ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿಯವರು, ಇಲಾಖೆ ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿ ನಿಗದಿಪಡಿಸುವುದು, ಸ್ವಯಂಚಾಲಿತ ಅನುಮೋದನೆಗೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದ್ದಾರೆ. 2024 ರ ಜನವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 28,181 ಕೋಟಿ ರೂ.ಗಳು ಆದಾಯ ಸಂಗ್ರಹವಾಗಿದ್ದು, ಮುಂದಿನ ವರ್ಷ 38,225 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿದೆ. +ಏನಿಲ್ಲ, ಏನಿಲ್ಲ..ಎಲ್ಲಾ ಸುಳ್ಳು : ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು +ಆದಾಯದ ಪ್ರಮುಖ ಮೂಲವಾಗಿರುವ ಸರಕು ಮತ್ತು ಸೇವಾ ತೆರಿಗೆಯಲ್ಲಿ 2024-25 ನೇ ಸಾಲಿಗೆ 1.10 ಲಕ್ಷ ಕೋಟಿ ರೂ.ಗಳ ಸಂಗ್ರಹದ ಗುರಿಯನ್ನು ನಿಗದಿ ಮಾಡಲಾಗಿದೆ. ಜನವರಿ ಅಂತ್ಯದವರೆಗೂ 58,180 ಕೋಟಿ ರೂ.ಗಳ ಎಸ್‍ಜಿಎಸ್‍ಟಿ ಸ್ವೀಕೃತವಾಗಿದ್ದು, ಕಳೆದ ವರ್ಷಕ್ಕಿಂತಲೂ ಶೇ.14 ರಷ್ಟು ಬೆಳವಣಿಗೆಯಾಗಿದೆ. ಪ್ರಸಕ್ತ ವರ್ಷ ಜಿಎಸ್ಟಿ ಮೇಲ್ಮನವಿ ನ್ಯಾಯ ಮಂಡಳಿಯ 2 ರಾಜ್ಯಪೀಠಗಳನ್ನು ರಚಿಸಿ ಕಾರ್ಯಗತಗೊಳಿಸುವ ಮೂಲಕ ತೆರಿಗೆ ವಿವಾದಗಳನ್ನು ಸ್ಥಳೀಯವಾಗಿ ಬಗೆಹರಿಸಲು ಆದ್ಯತೆ ನೀಡಲಾಗಿದೆ. +ಗ್ರಾಹಕ ಸಂವೇದಿ ಜಿಎಸ್‍ಟಿ ಡೇಟಾ ಬೇಸ್ ಮ್ಯಾನೇಜ್‍ಮೆಂಟ್ ಮತ್ತು ಕೃತಕ ಬುದ್ದಿಮತ್ತ ಚಾಲಿತ ವಿಶ್ಲೇಷಣಾತ್ಮಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ ನಿಖರ ಮಾಹಿತಿ ಮುನ್ಸೂಚಕ ವಿಶ್ಲೇಷಣೆ ಮೂಲಕ ರಾಜಸ್ವ ಕೃಢೀಕರಣಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ಅಕಾರಿಗಳ ಪರಿಣಿತಿ ಹೆಚ್ಚಿಸಲು ಇ ತರಬೇತಿ ನೀಡಿ ಮೋಸದ ನೋಂದಣಿಗಳನ್ನು ಪತ್ತೆ ಹಚ್ಚುವುದು ಹಾಗೂ ರಾಜಸ್ವ ಸೃಜನೆಗೆ ಹೊಸ ಮಾರ್ಗಗಳನ್ನು ಅನ್ವೇಷಿಸಲು ಒತ್ತು ನೀಡುವುದಾಗಿ ತಿಳಿಸಿದ್ದಾರೆ. +ಕಂದಾಯ ಇಲಾಖೆ ಅೀನದ ನೋಂದಣಿ ಮತ್ತು ಮುದ್ರಾಂಕ ಶುಲ್ಕದಿಂದ 26 ಸಾವಿರ ಕೋಟಿ ರೂ.ಗಳ ಆದಾಯ ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗಿದ್ದು, ಜನವರಿ ಅಂತ್ಯದವರೆಗೆ 15,692 ಕೋಟಿ ರಾಜಸ್ವ ಸಂಗ್ರಹಣೆಯಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.10 ರಷ್ಟು ಬೆಳವಣಿಗೆಯಾಗಿದೆ. 2023-24 ನೇ ಸಾಲಿನಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆಯನ್ನು ಪರಿಷ್ಕರಣೆ ಮಾಡಿರುವುದರಿಂದ ಜನವರಿ ಅಂತ್ಯದವರೆಗೆ 9,333 ಕೋಟಿ ರೂ.ಗಳು ಸಂಗ್ರಹವಾಗಿದ್ದು, ಹಿಂದಿನ ಸಾಲಿಗಿಂತಲೂ ಶೇ.19 ರಷ್ಟು ಬೆಳವಣಿಗೆಯಾಗಿದೆ. ಮುಂದಿನ ವರ್ಷಕ್ಕೆ 13 ಸಾವಿರ ಕೋಟಿ ರೂ.ಗಳ ಆದಾಯದ ಗುರಿ ನಿಗದಿ ಮಾಡಲಾಗಿದೆ. +ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ +ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಶೇ.22 ರಷ್ಟು ಆದಾಯ ಹೆಚ್ಚಳವಾಗಿದೆ. ಜನವರಿ ಅಂತ್ಯಕ್ಕೆ 5,658 ಕೋಟಿ ರೂ.ಗಳು ಸಂಗ್ರಹವಾಗಿದ್ದು, ಮುಂದಿನ ವರ್ಷಕ್ಕೆ 9 ಸಾವಿರ ಕೋಟಿ ರೂ.ಗಳನ್ನು ನಿಗದಿ ಪಡಿಸಿದ್ದಾರೆ. \ No newline at end of file diff --git a/eesanje/url_46_235_2.txt b/eesanje/url_46_235_2.txt new file mode 100644 index 0000000000000000000000000000000000000000..c400cd50a9c0fd8b1429e96671cd1a255329f099 --- /dev/null +++ b/eesanje/url_46_235_2.txt @@ -0,0 +1,7 @@ +ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ +ಬೆಂಗಳೂರು,ಫೆ.16- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನಾಡಿನ ಅನ್ನದಾತರಿಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಂಘಗಳ ಮೂಲಕ ನೀಡುವ ಬಡ್ಡಿ ರಹಿತ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷದವರೆಗೆ ಏರಿಕೆ ಮಾಡಿದ್ದಾರೆ. ಜೊತೆಗೆ ಮಧ್ಯಮ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ವದ ತೀರ್ಮಾನವನ್ನು ಘೋಷಿಸಿದ್ದಾರೆ. +ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27 ಸಾವಿರ ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ. ಬೆಳೆ ಸಾಲ ಮನ್ನ ಮಾಡಲಾಗಿತ್ತು . ಡಿಸಿಸಿ ಬ್ಯಾಂಕ್‍ಗಳಿಗೆ ಸುಮಾರು 132 ಕೋಟಿ ಬಿಡುಗಡೆಯಾಗದ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ಡಿಸಿಸಿ ಬ್ಯಾಂಕ್‍ಗಳಿಗೆ ಬಾಕಿ ಇರುವ 132 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. +ಡಿಸಿಸಿ, ಮತ್ತು ಪಿಕಾರ್ಡ್ ಬ್ಯಾಂಕ್‍ಗಳ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಇದರಿಂದ ಒಟ್ಟು 57 ಸಾವಿರ ರೈತರು ಇದರ ಲಾಭವನ್ನು ಪಡೆಯಲಿದ್ದಾರೆ. ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕ್‍ಗಳಿಗೆ 496 ಕೋಟಿ ಸಾಲ ಮರುಪಾವತಿಯಾಗುವ ನಿರೀಕ್ಷೆಯಿದ್ದು, ಬ್ಯಾಂಕ್‍ಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ ಎಂಬ ಆಶಾಭಾವನೆಯನ್ನು ಅವರು ಇಟ್ಟುಕೊಂಡಿದ್ದಾರೆ. +ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ +ಮಾಧ್ಯಮಿಕ ಫೆಡರಲ್ ಮತ್ತು ಅಪೆಕ್ಸ್ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾತಿ ತರಲು ಹಾಲಿ ಇರುವ ನಿಯಮಗಳಿಗೆ ತಿದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಯಲಬುರ್ಗಾ, ಬಸವನಬಾಗೇವಾಡಿ, ರಾಣೆಬೆನ್ನೂರು, ಬಳ್ಳಾರಿ, ಎಪಿಎಂಸಿಗಳಲ್ಲಿ 50 ಕೋಟಿ ಹಾಗೂ ರಾಯಚೂರು ಮತ್ತು ಮೈಸೂರಿನಲ್ಲಿ 40 ಕೋಟಿ ವೆಚ್ಚದಲ್ಲಿ ಶೀತಲ ಗೃಹಗಳನ್ನು ನಿರ್ಮಿಸುವುದಾಗಿ ಹೇಳಿದ್ದಾರೆ. +ರಾಯಚೂರಿನಲ್ಲಿ ಸುಸಜ್ಜಿತ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗಾಗಿ 25 ಕೋಟಿ, ರಾಣಿಬೆನ್ನೂರಿನಲ್ಲಿ 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 272 ಎಕರೆ ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಆರ್ಥಿಕವಾಗಿ ದುರ್ಬಲವಾಗಿರುವ ಮಾರುಕಟ್ಟೆ ಸಮಿತಿಗಳಿಗೆ ಅನುದಾನ ಒದಗಿಸಲು ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಸಮಿತಿಗಳಿಂದ ವಂತಿಕೆಯನ್ನು ಪಡೆಯುವ ಮೂಲಕ ಮಾರಕಟ್ಟೆ ಅಭಿವೃದ್ಧಿ ಸಹಾಯನಿಧಿ ಸ್ಥಾಪಿಸಲು ಕಾನೂನು ರಚನೆ ಜೊತೆಗೆ ಬೆಂಬಲ ಯೋಜನೆ ಜಾರಿಗೆ ತರುವ ಶಾಸನಾತ್ಮಕ ಬೆಂಬಲ ನೀಡಲು ಕ್ರಮ ಜರುಗಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ. \ No newline at end of file diff --git a/eesanje/url_46_235_3.txt b/eesanje/url_46_235_3.txt new file mode 100644 index 0000000000000000000000000000000000000000..bbf082ee3f612a5f9c56e6fa0b5ce46d725b7381 --- /dev/null +++ b/eesanje/url_46_235_3.txt @@ -0,0 +1,6 @@ +ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ +ಬೆಂಗಳೂರು,ಫೆ.16- ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್‍ಗೇಮ್‍ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ. +ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಹೇಳಿದ್ದಾರೆ. +ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ +ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಮ ಸಮುಚ್ಛಯವ ಒಳಗೊಂಡ ಕ್ರೀಡಾ ನಗರವನ್ನು ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂ. ಅನುದಾನ, ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ. +ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು, ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. \ No newline at end of file diff --git a/eesanje/url_46_235_4.txt b/eesanje/url_46_235_4.txt new file mode 100644 index 0000000000000000000000000000000000000000..1a0ea4dece81e083d2e1a54d649652dbe36b37ab --- /dev/null +++ b/eesanje/url_46_235_4.txt @@ -0,0 +1,5 @@ +ಸರ್ಕಾರಿ ನೌಕರರಿಗೆ ನಿರಾಸೆ +ಬೆಂಗಳೂರು,ಫೆ.16-ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಸರ್ಕಾರಿ ನೌಕರರಿಗೆ ಮತ್ತೊಮ್ಮೆ ಮಧ್ಯಂತರ ಪರಿಹಾರದೊಂದಿಗೆ ವೇತನ ಪರಿಷ್ಕರಣೆಯಾಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯನವರು 7ನೇ ವೇತನ ಆಯೋಗದ ವರದಿ ಸ್ವೀಕರಿಸಿದ ಬಳಿಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. +ಆಡಳಿತ ಸುಧಾರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಆಡಳಿತ ಸುಧಾರಣಾ ಆಯೋಗ 2ರಡಿ ಸ್ವೀಕರಿಸಲಾದ ಶಿಫಾರಸ್ಸುಗಳನ್ನು ಪರಿಶೀಲಿಸಿ ಅನುಷ್ಠಾನಗೊಳಿಸುವುದಾಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯು ವಿವಿಧ ಕಾನೂನಿನಡಿ 7,214 ಸಂಸ್ಥೆಗಳ ಶಾಸನಬದ್ಧ ಸಂಸ್ಥೆಗಳ ಶಾಸನಬದ್ಧ ಲೆಕ್ಕ ಪರಿಶೋಧಕರಾಗಿರುತ್ತಾರೆ. ಇವುಗಳಲ್ಲಿ ಏಕರೂಪತೆ ತರಲು ಅಗತ್ಯ ತಿದ್ದುಪಡಿ ತರಲಾಗುವುದು ಎಂದಿದ್ದಾರೆ. +ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ +2 ಜನಸ್ಪಂದನ ಕಾರ್ಯಕ್ರಮದಿಂದ 18 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಾಲಮಿತಿಯಲ್ಲಿ ಅವುಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_235_5.txt b/eesanje/url_46_235_5.txt new file mode 100644 index 0000000000000000000000000000000000000000..a1ff4f907076b700e226947389770363709bdb7c --- /dev/null +++ b/eesanje/url_46_235_5.txt @@ -0,0 +1,6 @@ +ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ಸವಲತ್ತು +ಬೆಂಗಳೂರು,ಫೆ.16- ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಿಳಿಸಿದ್ದಾರೆ. ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ 1500ರೂ ಮಾಸಾಶನವನ್ನು 2000 ರೂ.ಗೆ ಹೆಚ್ಚಳ ಮಾಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಬದುಕು ಉತ್ತಮ ಪಡಿಸಲು ಮೈತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾಸಾಶನ 800ರೂನಿಂದ 1200ರೂಗೆ ಹೆಚ್ಚಳ ಮಾಡುವುದಗಾಗಿ ಘೋಷಿಸಿದ್ದಾರೆ. +ವಸತಿ ರಹಿತ ದೇವದಾಸಿಯರಿಗೆ ರಾಜೀವ್ ಗಾಂ ವಸತಿರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ.20 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತರಬೇತಿ ಆಯೋಜಿಸಲು 10 ಕೋಟಿ ಬಜೆಟ್?ನಲ್ಲಿ ಮೀಸಲಿಡಲಾಗಿದೆ. ಅಂಗನವಾಡಿ ಚಟವಟಿಕೆ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್ ಫೋನ್‍ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು. +ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ +ರಾಜ್ಯದಲ್ಲಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸಲು 200 ಕೋಟಿ ಅನುದಾನ ಘೋಷಿಸಲಾಗಿದೆ. ಸೆರೆಬ್ರಲಿ ಪಾಲ್ಸಿ, ಸ್ನಾಯುವಿನ ಸಂಕೋಚನ, ಪಾರ್ಕಿಸನ್, ಮಲ್ಟಿಪಲ್, ಸ್ಕೇಲೊರೊಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗೆ ಪ್ರತಿ ತಿಂಗಳು 1000ರ ಪ್ರೋತ್ಸಾಹ ಧನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು ಕ್ಯಾಟ್ರಕ್ಟ್ ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗೆ 86,423 ಕೋಟಿ ಮೀಸಲು ಇಡಲಾಗಿದೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ಮೀಸಲಿರಿಸಲಾಗಿದೆ. +ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮಥ್ರ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು. \ No newline at end of file diff --git a/eesanje/url_46_235_6.txt b/eesanje/url_46_235_6.txt new file mode 100644 index 0000000000000000000000000000000000000000..45889ffb8d18bc75f6692dd6f4df620146a0f971 --- /dev/null +++ b/eesanje/url_46_235_6.txt @@ -0,0 +1,7 @@ +ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ +ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ. +ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಥ್ರ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ. +ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ +ಶೀಘ್ರದಲ್ಲೆ ಶಿಕ್ಷಕರು, ಉಪನ್ಯಾಸಕರ ನೇಮಕ:ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು, ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಪ್ಪಳ, ಬೀದರ್, ಯಾದಗಿರಿ, ರಾಯಚೂರು ಮತ್ತು ಕಲಬುರಗಿಯಲ್ಲಿ ವಿಶ್ವವಿದ್ಯಾಲಯಗಳ ಘಟಕ ಕಾಲೇಜನ್ನು ಅವಶ್ಯವಿರುವ ಜಿಲ್ಲಾ ಅಥವಾ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಾಪಿಸಲಾಗುತ್ತದೆ. +ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು 500 ಕೋಟಿ ರೂ. ವೆಚ್ಚದಲ್ಲಿ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಇದಕ್ಕಾಗಿ ಸರ್ಕಾರದಿಂದ 100 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಜೊತೆಗೆ ಸಿ.ಎಸ್.ಆರ್. ನಿಧಿ ಮತ್ತು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ನೀಡುವ ದೇಣಿಗೆ ಮೂಲಕ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳನ್ನು ಸಂಗ್ರಹಿಸಲಾಗುತ್ತದೆ. +ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ.ಗಳ ಅನುದಾನವನ್ನು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. \ No newline at end of file diff --git a/eesanje/url_46_235_7.txt b/eesanje/url_46_235_7.txt new file mode 100644 index 0000000000000000000000000000000000000000..605fd5fef21229615298d3632d8f5159386d19d4 --- /dev/null +++ b/eesanje/url_46_235_7.txt @@ -0,0 +1,11 @@ +ಮಹಿಳೆಯರ ಸ್ವಾವಲಂಬನೆಗಾಗಿ ಕೆಫೆ ಸಂಜೀವಿನಿ +ಬೆಂಗಳೂರು,ಫೆ.16- ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್‍ಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದೆಂದು ಆಶ್ವಾಸನೆ ನೀಡಿದರು. +ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್‍ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು. ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. +ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಹಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮಪಂಚಾಯ್ತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿಪಿ-ಎಸ್‍ಎಚ್‍ಜಿ ಒಗ್ಗೂಡಿಸುವ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದಾರೆ. +ಮಾನವ ಸಂಪನ್ಮೂಲದ ಸಮರ್ಪಕ ಬಳಕೆ ಹಾಗೂ ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯೋಗ ಅವಕಾಶಗಳನ್ನು ಒದಗಿಸಲು ಅನುಕೂಲವಾಗುವಂತೆ ರಾಜ್ಯ ಕೌಶಲ್ಯ ನೀತಿಯನ್ನು ಸಿದ್ದಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ನೀಡುತ್ತಿರುವ ಕೋರ್ಸ್‍ಗಳಲ್ಲಿ ವಿಷಯಾಧಾರಿತ ಉದ್ಯಮಶೀಲತೆ ಅಭಿವೃದ್ಧಿ ತರಬೇತಿಯನ್ನು 25 ಸಾವಿರ ಯುವನಿಧಿ ಫಲಾನುಭವಿಗಳಿಗೆ ನೀಡಲಾಗುವುದು ಎಂದು ಹೇಳಿದರು. +36 ಕೋಟಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪಥ ನಿರ್ಮಾಣ +ಯುವಜನರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದರೊಂದಿಗೆ ಉದ್ಯೋಗ ಆಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಡಿ ತರಲು ಯುವ ಸಮೃದ್ಧಿ ಉದ್ಯೋಗ ಮೇಳವನ್ನು ರಾಜ್ಯದ ವಿವಿಧ ಭಾಗದಲ್ಲೂ ಆಯೋಜಿಸಲಾಗುತ್ತದೆ ಎಂದು ಪ್ರಕಟಿಸಿದ್ದಾರೆ. ಕೈಗಾರಿಕೆ ಮತ್ತು ಉದಯೋನ್ಮುಖ ವಲಯಗಳಲ್ಲಿ ನುರಿತ ಉದ್ಯೋಗಿಗಳ ಅಗತ್ಯವನ್ನು ಪೂರೈಸಲು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ, ಜಿಟಿಟಿಸಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಕಲಬುರಗಿ, ಕೊಪ್ಪಳದ ತಳಕಲ್ ಮತ್ತು ಮೈಸೂರಿನ ವರುಣಾದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡುವುದಾಗಿ ಹೇಳಿದ್ದಾರೆ. +ಮೊದಲ ಹಂತದ ಯೋಜನೆಯನ್ನು ಮೂರು ವರ್ಷಗಳ ಅವಯಲ್ಲಿ ಅಂದಾಜು 120 ಕೋಟಿ ರೂ. ಅನುಷ್ಠಾನ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ. ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಜಿಲ್ಲಾ ಖನಿಜ ನಿಯ ಮೂಲಕ ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ 150 ಕೋಟಿ ವೆಚ್ಚದಲ್ಲಿ ಜಿಟಿಟಿಸಿ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ. +ಮದ್ಯಪ್ರೀಯರಿಗೆ ಶಾಕ್ ಕೊಟ್ಟ ಸಿದ್ದರಾಮಯ್ಯ..! +ಎಲೆಕ್ಟ್ರಾನಿಕ್ಸ್ ಮತ್ತು ಕಮುನಿಕೇಷನ್, ಮೆಕ್ಯಾಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ , ಎಲೆಕ್ಟ್ರಾನಿಕ್ಸ್, ಎಂಜನಿಯರಿಂಗ್, ರೋಬೊಟೆಕ್ಸ್ ಇತ್ಯಾದಿ ಹೆಚ್ಚುವರಿ ಡಿಫ್ಲೋಮೊ ಕೋರ್ಸ್‍ಗಳನ್ನು ಜಿಟಿಟಿಸಿ ಮಾದರಿಯಲ್ಲಿ ಹಂತ ಹಂತವಾಗಿ ಪ್ರಾರಂಭಿಸಲಾಗುವುದು. ಇದರಿಂದ 15 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗುವುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕಲಬುರಗಿಯ ಕೆಜಿಟಿಟಿಐನಲ್ಲಿ ಸಿಎನ್‍ಸಿ ಯಂತ್ರವನ್ನು ಕೇಂದ್ರೀಕರಿಸುವ ಮೊದಲ ಜೇಷ್ಠತಾ ಕೇಂದ್ರವನ್ನು 16 ಕೋಟಿ ವೆಚ್ಚದಲ್ಲಿ ಸ್ಥಾಪನೆ, ಐಟಿಐ ಜಿಟಿಟಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆಂಗ್ಲ ಮತ್ತು ಸಂಹನ ತರಬೇತಿಗೆ 5 ಕೋಟಿ ನೀಡಲಾಗುವುದು, ಶ್ರೇಷ್ಠತೆ ಮತ್ತು ಉನ್ನತ ಸಾಧನೆಯನ್ನು ಗುರುತಿಸಲು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವ ಪ್ರತಿಕ್ಷಣಾರ್ಥಿಗಲನ್ನು ಕೌಶಲ್ಯ ಸ್ಪರ್ಧೆಗಳಿಗೆ ಸಿದ್ಧಪಡಿಸಲು ರಾಜ್ಯ ಕೌಶಲ್ಯ ಒಲಿಂಪಿಕ್ಸ್‍ನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ. +ಉದ್ಯೋಗ ಶೀಲತೆಯನ್ನು ಹೆಚ್ಚಿಸಲು ಡೂಯಲ್ ಸಿಸ್ಟಮ್ ಆಫ್ ಟ್ರೈನಿಂಗ್(ಡಿಎಸ್‍ಟಿ)ನ್ನು ರಾಜ್ಯದ ಎಲ್ಲಾ ಐಟಿಐಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಹಂತ ಹಂತವಾಗಿ ವಿಸ್ತರಿಸಲಾಗುವುದು ಎಂದಿದ್ದಾರೆ. ಒಂದು ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳನ್ನು ಮೀನುಗಾರಿಕೆ, ಕುಟುಕ, ಕುರಿ, ಮೇಕೆ ಸಾಗಾಣಿಕೆ, ಜೇನು ಸಾಕಾಣಿಕೆ ಮತ್ತು ಕಿರು ಉದ್ಯಮ ಸ್ಥಾಪಿಸಲು 100 ಕೋಟಿ ವೆಚ್ಚ ಮಾಡುವುದಾಗಿ ಹೇಳಿದ್ದಾರೆ. \ No newline at end of file diff --git a/eesanje/url_46_235_8.txt b/eesanje/url_46_235_8.txt new file mode 100644 index 0000000000000000000000000000000000000000..5a7c18fe3a3f591e1e4554e210d50c08fe12f88f --- /dev/null +++ b/eesanje/url_46_235_8.txt @@ -0,0 +1,3 @@ +ಯಾವ ಇಲಾಖೆಗೆ ಎಷ್ಟು ಅನುದಾನ..? : ಇಲ್ಲಿದೆ ಮಾಹಿತಿ +ಬೆಂಗಳೂರು,ಫೆ.16- 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ವಲಯವಾರು ವಿಂಗಡಣೆ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದು, ಯಾವ ವಲಯಕ್ಕೆ ಎಷ್ಟು ಅನುದಾನ ಸಿಕ್ಕಿದೆ ಎಂಬ ಮಾಹಿತಿ ಇಲ್ಲಿದೆ. +ಶಿಕ್ಷಣ – 44,422 ಕೋಟಿಮಹಿಳಾ ಮತ್ತು ಮಕ್ಕಳ ಇಲಾಖೆ -34,406 ಕೋಟಿಇಂಧನ – 23,159 ಕೋಟಿಗ್ರಾಮೀಣಾಭಿವೃದ್ಧಿ – 21,160 ಕೋಟಿಒಳಾಡಳಿತ/ಸಾರಿಗೆ – 19,777 ಕೋಟಿನೀರಾವರಿ – 19,179 ಕೋಟಿನಗರಾಭಿವೃದ್ಧಿ- 18,155 ಕೋಟಿಕಂದಾಯ- 16,170 ಕೋಟಿಆರೋಗ್ಯ – 15,145 ಕೋಟಿಸಮಾಜಕಲ್ಯಾಣ – 13,334 ಕೋಟಿಲೋಕೋಪಯೋಗಿ -10,424 ಕೋಟಿಆಹಾರ ಇಲಾಖೆ – 9963 ಕೋಟಿಕೃಷಿ , ತೋಟಗಾರಿಕೆ – 6,688 ಕೋಟಿಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿಇತರೆ- 1,24,593 ಕೋಟಿ. \ No newline at end of file diff --git a/eesanje/url_46_235_9.txt b/eesanje/url_46_235_9.txt new file mode 100644 index 0000000000000000000000000000000000000000..2b3c9cce2ccff0c58d8690b7e33e30e6ce0e9815 --- /dev/null +++ b/eesanje/url_46_235_9.txt @@ -0,0 +1,5 @@ +ಬೆಂಗಳೂರು ಒತ್ತಡ ತಗ್ಗಿಸಲು 10 ಮಹಾನಗರಗಳ ಅಭಿವೃದ್ಧಿಗೆ ನಿರ್ಧಾರ +ಬೆಂಗಳೂರು,ಫೆ.16- ಸಿಲಿಕಾನ್ ಸಿಟಿ ಬೆಂಗಳೂರಿನ ಮೇಲಿನ ಒತ್ತಡ ತಗ್ಗಿಸುವ ಉದ್ದೇಶದಿಂದ ರಾಜ್ಯದ ಇತರೆಡೆಗಳಲ್ಲಿ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಭಾಷಣದಲ್ಲಿ ಅವರು, 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಎರಡು ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. +ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆಜಿಎಫ್, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳಲ್ಲಿ ಇಂಟಿಗ್ರೇಟೆಡ್ ಟೌನ್‍ಶಿಪ್‍ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‍ಶಿಪ್‍ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. +ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ +ಬೆಂಗಳೂರಿನ ಬಿಐಇಸಿಯಿಂದ ತುಮಕೂರಿನವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆ ವಿಸ್ತರಿಸುವ ಬಗ್ಗೆ ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು. ಮೈಸೂರಿನಲ್ಲಿ ಹೆಚ್ಚುತ್ತಿರುವ ಜನದಟ್ಟಣೆ ತಪ್ಪಿಸಲು ಪೆರಿಫೆರಲ್ ರಿಂಗ್ ರಸ್ತೆಯನ್ನು ಪಿಪಿಪಿ ಅಥವಾ ಟೌನ್ ಪ್ಲಾನಿಂಗ್ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುವುದು ಎಂದು ಅವರು ವಿವರಣೆ ನೀಡಿದ್ದಾರೆ. \ No newline at end of file diff --git a/eesanje/url_46_236_1.txt b/eesanje/url_46_236_1.txt new file mode 100644 index 0000000000000000000000000000000000000000..4feeae09a1b20cc42ed202ed318c85e695efad02 --- /dev/null +++ b/eesanje/url_46_236_1.txt @@ -0,0 +1,18 @@ +ಬೆಂಗಳೂರನ್ನು ವಿಶ್ವದರ್ಜೆ ನಗರವನ್ನಾಗಿಸಲು ಸಿದ್ದು ಸಂಕಲ್ಪ +ಬೆಂಗಳೂರು, ಫೆ.9- ವಿಶ್ವದರ್ಜೆಯ ನಗರವನ್ನಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು, ಬೆಂಗಳೂರು ಬ್ಯುಜಿನೆಸ್ ಕಾರಿಡಾರ್ ಸ್ಥಾಪಿಸುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ. ನಗರದ ಜನರ ಜೀವನ ಗುಣಮಟ್ಟ ಸುಧಾರಣೆ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ದಿಟ್ಟ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. +ಸಂಪನ್ಮೂಲ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರಿಗೆ ಮತ್ತು ಸ್ವಚ್ಛ ಸುಂದರ ಬೆಂಗಳೂರು ನಿರ್ಮಾಣದ ಕಡೆ ಗಮನ ಹರಿಸುವುದಾಗಿ ಸಿದ್ದು ಭರವಸೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಲಾಗಿದ್ದು, 2023-24ನೆ ಸಾಲಿನಲ್ಲಿ 4300 ಕೋಟಿ ರೂ. ತೆರಿಗೆ ಸಂಗ್ರಹಕ್ಕೆ ಮುನ್ನುಡಿ ಬರೆಯಲಾಗಿದೆ. +2024-25ರಲ್ಲಿ ತೆರಿಗೆ ವ್ಯವಸ್ಥೆಯಲ್ಲಿನ ಸೋರಿಕೆ ತಡೆಗಟ್ಟುವ ಮೂಲಕ 6 ಸಾವಿರ ಕೋಟಿ ರೂ.ಗಳ ತೆರಿಗೆ ಸಂಗ್ರಹದ ನಿರೀಕ್ಷೆ ಹೊಂದಲಾಗಿದೆ ಎಂದು ಅವರು ವಿವರಿಸಿದರು. ಪ್ರಸಕ್ತ ಸಾಲಿನಿಂದ ಪರಿಷ್ಕøತ ಜಾಹೀರಾತು ನೀತಿ ಮತ್ತು ಪ್ರೀಮಿಯಂ ಎಫ್‍ಎಆರ್ ನೀತಿ ಜಾರಿಗೆ ತರುವ ಮೂಲಕ 2 ಸಾವಿರ ಕೋಟಿ ರೂ.ಗಳನ್ನು ತೆರಿಗೆಯೇತರ ಸಂಪನ್ಮೂಲ ಸಂಗ್ರಹದ ಗುರಿ ಹೊಂದಲಾಗಿದೆ. +ಬಿಬಿಎಂಪಿ ವ್ಯಾಪ್ತಿಯ ಎಲ್ಲ 20 ಲಕ್ಷ ಆಸ್ತಿಗಳ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೆ ಸಾಲಿನಲ್ಲಿ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಿಕೊಡಲಾಗುವುದು. ಇದರ ಜತೆಗೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ನಮ್ಮ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು. +ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 147ಕಿಮೀ ಉದ್ದದ ರಸ್ತೆಗಳನ್ನು 1700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಪರಿವರ್ತಿಸಲಾಗಿದೆ. ಈ ಎಲ್ಲ ಕಾಮಗಾರಿಗಳನ್ನು 2025ರ ವೇಳೆಗೆ ಪೂರ್ಣಗೊಳಿಸಲಾಗುವುದು. ರಸ್ತೆಗಳ ವಿಸ್ತರಣೆ ಕಷ್ಟಸಾಧ್ಯವಾಗಿರುವುದರಿಂದ ಸುರಂಗ ಮಾರ್ಗಗಳ ಮೂಲಕ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಲಾಗಿದ್ದು, ಈ ವರ್ಷ ಸಂಚಾರ ದಟ್ಟಣೆ ಹೆಚ್ಚಿರುವ ಹೆಬ್ಬಾಳ ಜಂಕ್ಷನ್‍ನಲ್ಲಿ ಪ್ರಾಯೋಗಿಕವಾಗಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು. +ನಗರದ ನಾಲ್ಕು ಬಫರ್ ಝೋನ್‍ಗಳನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನೂರು ಕಿಮೀ ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ ನೂರು ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. +ಸುಗಮ ಸಂಚಾರ-ಬ್ರಾಂಡ್ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಆ ಸಂಸ್ಥೆ ನೀಡುವ ವರದಿಯನ್ನಾಧರಿಸಿ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಯಾಗುವಂತೆ ನೋಡಿಕೊಳ್ಳಲು ಪೆರಿಫೆರಲ್ ರಿಂಗ್‍ರಸ್ತೆಗಳನ್ನು ಬೆಂಗಳೂರು ಬ್ಯುಜಿನೆಸ್ ಕಾರಿಡಾರ್ ಎಂಬ ಪರಿಕಲ್ಪನೆಯಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ.ಈ ಯೋಜನೆಯಡಿ 73ಕಿಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಆರ್‍ಎಫ್‍ಪಿ ಕರೆಯಲಾಗಿದೆ ಎಂದು ಅವರು ತಿಳಿಸಿದರು. +ನಗರದಲ್ಲಿ 250 ಮೀಟರ್ ಎತ್ತರದ ಸ್ಕೈ ಡೆಕ್ ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದ ವಾಸ್ತು ವಿನ್ಯಾಸಗಾರರನ್ನು ಆಹ್ವಾನಿಸಲಾಗಿದೆ. ಇದರಿಂದ ನಗರದ ಒಳಗೆ ಪ್ರವಾಸಿ ತಾಣಗಳನ್ನುಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು. +ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ +ಬಿಬಿಎಂಪಿ, ಬಿಎಂಆರ್‍ಸಿಎಲ್, ಜಲಮಂಡಳಿ ಮತ್ತು ಬಿಡಿಎ ವ್ಯಾಪ್ತಿಗಳಲ್ಲಿ ಪ್ರತಿ ತಿಂಗಳು ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್‍ಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.ಬಿಎಂಟಿಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬರ್‍ಬನ್ ರೈಲು ಯೋಜನೆಗಳು ಸುಗಮ ಸಂಚಾರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿವೆ. ಈ ಎಲ್ಲ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ ಸಮನ್ವಯದಿಂದ ಕಾರ್ಯಾಚರಣೆ ನಡೆಸುವಂತೆ ನೋಡಿಕೊಳ್ಳಲು ಆದ್ಯತೆ ನೀಡಲಾಗಿದೆ. ಈಗಿರುವ 74 ಕಿಮೀ ಉದ್ದದ ಮೆಟ್ರೋ ರೈಲು ಯೋಜನೆಯನ್ನು 2025ರ ವೇಳೆಗೆ ಹೆಚ್ಚುವರಿಯಾಗಿ 44ಕಿಮೀನಷ್ಟು ಸೇರ್ಪಡೆ ಮಾಡಲು ಆದ್ಯತೆ ನೀಡಲಾಗಿದೆ. ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣದ ಮಾರ್ಗ 2026 ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದರು. +ಮೆಟ್ರೋ ಹಂತ-3ರಡಿ 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುದಾನ ನಿರೀಕ್ಷೆ ಮಾಡಲಾಗಿದೆ. ಈ ಯೋಜನೆಯಡಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಕ್ರಿ ಸರ್ಕಲ್ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣದ ಕರಡು ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು. +ಮಂದಗತಿಯಲ್ಲಿ ಸಾಗುತ್ತಿದ್ದ ಉಪನಗರ ರೈಲು ಯೋಜನೆಯನ್ನು ಚುರುಕುಗೊಳಿಸಲಾಗಿದ್ದು, ಬಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್-2ರ ಕಾಮಗಾರಿಗಳನ್ನು ತ್ವರಿತಗೊಳಿಸಲಾಗಿದೆ. ಕಾರಿಡಾರ್-4ರಡಿ ಹೀಲಲಿಗೆಯಿಂದ ರಾಜಾನುಕುಂಟೆವರೆಗಿನ 46.2 ಕಿಮೀ ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. ಇದಕ್ಕಾಗಿ ಹಲವಾರು ವಿದೇಶಿ ಬ್ಯಾಂಕ್‍ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚುವರಿ ಅನುದಾನಕ್ಕಾಗಿ ಮನವಿ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ ಎಂದರು. +ಬಿಎಂಟಿಸಿಗೆ ಮುಂದಿನ ದಿನಗಳಲ್ಲಿ 1334 ಹೊಸ ಎಲೆಕ್ಟ್ರಿಕ್ ಬಸ್‍ಗಳು ಮತ್ತು 820 ಬಿಎಸ್-6 ಡೀಸೆಲ್ ಬಸ್‍ಗಳನ್ನು ಸೇರ್ಪಡೆಗೊಳಿಸಲಾಗುವುದು. ಪ್ರಯಾಣಿಕರ ಹಿತದೃಷ್ಟಿಯಿಂದ ಮಹಿಳೆಯರ ಸುರಕ್ಷತೆಗಾಗಿ ವೆಹಿಕಲ್ ಟ್ರಾಕಿಂಗ್ ಮೊಬೈಲ್ ಆ್ಯಪ್ ಅನುಷ್ಠಾನಗೊಳಿಸಲಾಗುತ್ತಿದೆ. ಜಪಾನ್ ನೆರವಿನೊಂದಿಗೆ ನಗರದ ಪ್ರಮುಖ 28 ಜಂಕ್ಷನ್‍ಗಳಲ್ಲಿ ಏರಿಯಾ ಟ್ರಾಫಿಕ್ ಸಿಗ್ನಲ್ ಕಂಟ್ರೋಲ್ ಸಿಸ್ಟಮ್‍ಗಳನ್ನು ಅಳವಡಿಸಲಾಗಿದೆ.ನಗರದ ಅಭಿವೃದ್ಧಿಜತೆಗೆ ನಾಗರಿಕರ ಜೀವನ ಗುಣಮಟ್ಟ ಸುಧಾರಣೆಗೆ ನಾವು ಆದ್ಯತೆ ನೀಡಿದ್ದು, ಉತ್ತಮ ಪರಿಸರ, ದಿನದ 24 ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ ನಿರ್ವಹಣೆಗೆ ಒತ್ತು ನೀಡಿದ್ದೇವೆ. +ಜಲಮಂಡಳಿಯಿಂದ 5550 ಕೋಟಿ ರೂ. ವೆಚ್ಚದಲ್ಲಿ 775 ಎಂಎಲ್‍ಡಿ ಸಾಮಥ್ರ್ಯದ ಕಾವೇರಿ 5ನೆ ಹಂತದ ಯೋಜನೆಯನ್ನು ಮೇ ತಿಂಗಳಿನಿಂದ ಆರಂಭಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಒಳಚರಂಡಿ ಮಾರ್ಗಗಳಲ್ಲಿ 228 ಕಿಮೀ ಉದ್ದದಲ್ಲಿ ಕೊಳವೆಯನ್ನು ಅಳವಡಿಸಿ 13 ಎಸ್‍ಟಿಪಿ ಘಟಕಗಳಿಂದ ನೂರು ಎಂಎಲ್‍ಡಿ ನೀರನ್ನು ಸಂಸ್ಕರಿಸಲು ಕ್ರಮ ಕೈಗೊಳ್ಳಲಾಗಿದೆ. 441 ಕೋಟಿ ರೂ. ವೆಚ್ಚದಲ್ಲಿ ಏಳು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲಾಗುವುದು. ಪ್ರತಿನಿತ್ಯ 268 ಎಂಎಲ್‍ಡಿ ತ್ಯಾಜ್ಯ ನೀರನ್ನು ಸಂಸ್ಕರಣೆ ಮಾಡಿ ಮರು ಬಳಕೆಗೆ ಅವಕಾಶ ಕಲ್ಪಿಸಿಕೊಡಲಾಗುವುದು. +ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು 200 ಕೋಟಿ ರೂ. ವೆಚ್ಚದಲ್ಲಿ ಎರಡನೆ ಹಂತದ ಕಾಮಗಾರಿ ಆರಂಭಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು. +ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ +ನಗರದಲ್ಲಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ, ಕೆರೆ ಮತ್ತು ಉದ್ಯಾನವನಗಳ ಅಭಿವೃದ್ಧಿಯನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿಗೊಳಿಸಲಾಗುವುದು. ಇದರ ಜತೆಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಸರ್ವಜ್ಞ ಉದ್ಯಾನವನ ಅಭಿವೃದ್ಧಿಪಡಿಸುತ್ತೇವೆ. ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿ ವೇಳೆಯ ವ್ಯಾಪಾರ-ವಹಿವಾಟು ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ 1 ಗಂಟೆವರೆಗೂ ವಿಸ್ತರಿಸಲು ಅನುಮತಿ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_236_10.txt b/eesanje/url_46_236_10.txt new file mode 100644 index 0000000000000000000000000000000000000000..c4deada304e0962d7b3a07fc8fec8f5e3b58d2ba --- /dev/null +++ b/eesanje/url_46_236_10.txt @@ -0,0 +1,7 @@ +ನಮ್ಮ ತಂತ್ರಗಾರಿಕೆ ಏನೆಂಬುದು ಫೆ.27ರಂದು ತಿಳಿಯಲಿದೆ : ಡಿಕೆಶಿ +ಬೆಂಗಳೂರು,ಫೆ.15- ರಾಜ್ಯಸಭೆ ಚುನಾವಣೆಯಲ್ಲಿ ನಾವು ಏನು ರಾಜಕಾರಣ ಮಾಡಬಹುದು ಎಂಬುದು ಫೆಬ್ರವರಿ 27ನೇ ತಾರೀಖು ಗೊತ್ತಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಒಗ್ಗಟ್ಟಿನ ಪ್ರದರ್ಶನವನ್ನು ನಾವು ಮಾಡುತ್ತೇವೆ. ರಾಜ್ಯಸಭೆ ಚುನಾವಣೆಗೆ ಫೆ.27ರಂದು ಮತದಾನ ನಡೆದು ಅಂದೇ ಮತದಾನ ಎಣಿಕೆಯಾಗಿ ಫಲಿತಾಂಶ ಹೊರಬರಲಿದೆ. ರಾಜಕಾರಣ ಏನು ಎಂಬುದನ್ನು ಅಲ್ಲಿಯವರೆಗೆ ನೋಡುತ್ತಾ ಇರಿ ಎಂದರು. +ವಿಧಾನಸಭೆ ಚುನಾವಣೆಯಲ್ಲಿ ವಿಫಲವಾಗಿರುವುದಕ್ಕೆ ಬಿಜೆಪಿ ಜೊತೆ ಹೋಗಿದ್ದು, ಎರಡು ಪಕ್ಷಗಳು ಒಟ್ಟಿಗೆ ಸೇರಿ ಹೊಸ ನಂಟಸ್ತಿಕೆ ಮಾಡುತ್ತಿವೆ. ಅಲ್ಲಿರುವಂತವರು ಅವರ ಆತ್ಮಸಾಕ್ಷಿ ಮತವನ್ನು ನಮಗೆ ಕೊಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು. ಮತದಾನದ ನಂತರ ಎಷ್ಟು ಮತಗಳು ಬರಲಿವೆ ಎಂಬುದನ್ನು ತಿಳಿಸುತ್ತೇವೆ ಎಂದರು. +ರಾಜ್ಯಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಜಯ್ ಮಕೇನ್ ಅವರ ಕುಟುಂಬ ತ್ಯಾಗ ಮಾಡಿದೆ. ದೇಶದ ಐಕ್ಯತೆ, ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದೆ. ವಿದ್ಯಾರ್ಥಿಯಿಂದಲೇ ಸಂಘಟನೆ ಮಾಡಿದ್ದಾರೆ. ನಮ್ಮ ಪಕ್ಷದ ಆಧಾರ ಸ್ತಂಭ ಅದಕ್ಕಾಗಿ ಬಹಳ ಸಂತೋಷದಿಂದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ ಎಂದರು.ಬಿಜೆಪಿ, ಜೆಡಿಎಸ್‍ನವರು ಈ ಹಿಂದೆ ಹೊರಗಿನವರನ್ನು ಕರೆತಂದು ಸ್ಪರ್ಧೆಗಿಳಿಸಿದ್ದರಲ್ಲ ಅದರ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದರು. +ಲೋಕಸಭಾ ಚುನಾವಣೆ : ಬೆಂಗಳೂರಿನಿಂದ ರಾಜೀವ್ ಚಂದ್ರಶೇಖರ್ ಸ್ಪರ್ಧೆ..? +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ರಾಜ್ಯಸಭೆ ಚುನಾವಣೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿ ರಾಜ್ಯಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಿದ್ದಾರೆ ಎಂದರು. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಅವರು ಸ್ಪರ್ಧೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಪ್ರಯತ್ನವನ್ನು ಅವರು ಮಾಡಲಿ ನಮ್ಮ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದು ಹೇಳಿದರು. +ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಲು ಎಷ್ಟು ಮತಗಳು ಬೇಕೋ ಅಷ್ಟು ಮತಗಳು ನಮ್ಮ ಬಳಿ ಇವೆ. ಬಿಜೆಪಿ-ಜೆಡಿಎಸ್‍ನಿಂದ 2ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು. \ No newline at end of file diff --git a/eesanje/url_46_236_11.txt b/eesanje/url_46_236_11.txt new file mode 100644 index 0000000000000000000000000000000000000000..a0e29e485dd5e1cbb96922aac1448c0a5096e01b --- /dev/null +++ b/eesanje/url_46_236_11.txt @@ -0,0 +1,10 @@ +ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನಸಭೆ ಅಂಗೀಕಾರ +ಬೆಂಗಳೂರು, ಫೆ.15- ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ಇಂದು ಕರ್ನಾಟಕ ವಿಧಾನ ಸಭೆಯಲ್ಲಿ ಅಂಗೀಕಾರಗೊಂಡಿತು. ವಿಧಾನಸಭೆಯಲ್ಲಿ ವಿಧೇಯಕ ಕುರಿತು ಮಾತನಾಡಿದ ಸಚಿವ ಶಿವರಾಜ ತಂಗಡಗಿ ಅವರು, ವಿಧೇಯಕದ 17ನೆ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. +ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ. ಈ ಹಿಂದೆ ಇದನ್ನು ಶೇ.50:50 ಎಂದು ಆದೇಶ ಹೊರಡಿಸಲಾಗಿತ್ತು ಎಂದು ವಿವರಿಸಿದರು. ಇದಲ್ಲದೆ, ವಿಧೇಯಕದ 07 (02) ರಲ್ಲಿ ಜಾರಿ ಸಮಿತಿಯಲ್ಲಿ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರನ್ನು ಸಂಚಾಲಕರೆಂದು ಯೋಜಿಸಲಾಗಿತ್ತು. ಆದರೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಿಗೆ ಸಾಕಷ್ಟು ಹೊಣೆಗಾರಿಕೆಗಳಿದ್ದು, ಸಂಚಾಲಕರಾಗಿ ಕಾರ್ಯನಿರ್ವಹಿ ಸುವುದು ಕಷ್ಟವಾಗುವುದರಿಂದ ಅವರನ್ನು ಸದಸ್ಯರನ್ನಾಗಿ ಮಾಡಿ ಕಾರ್ಯದರ್ಶಿ, ಕನ್ನಡ ಅಭಿವೃದ್ಧಿ ಪ್ರಾಕಾರ ಇವರನ್ನು ಸಂಚಾಲಕರನ್ನಾಗಿ ಪ್ರತಿಯೋಜಿಸ ಲಾಗುತ್ತಿದೆ ಎಂದು ತಿಳಿಸಿದರು. +ಯುವತಿಯ ಫೋಟೋ ಬಳಸಿಕೊಂಡು ಜೈಲಿನಿಂದಲೇ ರೌಡಿ ಬ್ಲಾಕ್‍ಮೇಲ್ +ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಈ ತಿದ್ದುಪಡಿ ವಿಧೇಯಕವನ್ನು ನಾನು ಸ್ವಾಗತಿಸುತ್ತೇನೆ. ಆದರೆ, ನನಗೆ ಇರುವ ಆತಂಕವೇನೆಂದರೆ, ಬಹುರಾಷ್ಟ್ರೀಯ ಕಂಪನಿಗಳು, ದೊಡ್ಡ ದೊಡ್ಡ ಮಾಲ್‍ಗಳು ಇವನ್ನು ಪಾಲಿಸುತ್ತವೆಯೇ? ದೊಡ್ಡ ಮೊತ್ತದ ದಂಡ ಹಾಕಿದಾಗ ಮಾತ್ರ ಅವು ಹೆದರುತ್ತವೆಯೇ ಹೊರತು ನೋಟಿಸ್‍ಗಳಿಗೆ ಹೆದರುವುದಿಲ್ಲ. ಆದ್ದರಿಂದ ನಿಯಮ ರೂಪಿಸುವಾಗ ಈ ಆದೇಶವನ್ನು ಪಾಲಿಸದ ಸಂಸ್ಥೆಗಳಿಗೆ ದೊಡ್ಡ ಮೊತ್ತದ ದಂಡ ಹಾಕಬೇಕು. ಸಾಧ್ಯವಾದರೆ ಪೊಲೀಸ್ ಅಧಿಕಾರಿಗಳು ಸಮಿತಿಯಲ್ಲಿರಲಿ ಎಂಬುದನ್ನು ಗಮನದಲ್ಲಿರಿಸಿಕೊಳ್ಳಿ ಎಂದರು. +ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಕನ್ನಡ ಭಾಷೆ ಬಳಕೆಗೆ ವಿಧೇಯಕವನ್ನು ಮಂಡನೆ ಸಂದರ್ಭ ಎದುರಾಗಿರುವುದು ಬೇಸರವುಂಟುಮಾಡಿದೆ. ನಮ್ಮ ಮನಸ್ಥಿತಿಗಳನ್ನು ಮೊದಲು ಬದಲಾಯಿಸಿಕೊಳ್ಳಬೇಕು. ಇತರ ಭಾಷಿಕರಿಗೆ ಬೆಂಗಳೂರಿನ ಬಗ್ಗೆ ಪ್ರೀತಿ ಇಲ್ಲ. ಆದರೆ, ವಾಸಿಸಲು ಮಾತ್ರ ಆಸೆ ಪಡುತ್ತಾರೆ. ಇಂತಹ ಮನಸ್ಥಿತಿ ಬದಲಾಗಬೇಕಿದೆ. ಇನ್ನು ಮುಂದಾದರೂ ಕನ್ನಡ ಭಾಷಾ ಅನುಷ್ಠಾನ ಸಮರ್ಪಕವಾಗಲಿ ಎಂದರು. +ಶಾಸಕ ಚಂದ್ರಕಾಂತ ಬೆಲ್ಲದ ಹಾಗೂ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಸಹ ತಿದ್ದುಪಡಿ ವಿಧೇಯಕ ಮಂಡನೆಯನ್ನು ಸ್ವಾಗತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿಯವರು ಸದನದಲ್ಲಿ ಶಾಸಕರು ವ್ಯಕ್ತಪಡಿಸಿದ ಎಲ್ಲಾ ಅಭಿಪ್ರಾಯಗಳನ್ನು ಗೌರವಿಸುತ್ತೇನೆ ಹಾಗೂ ಅವರ ಸಲಹೆಗಳನ್ನು ನಿಯಮ ರೂಪಿಸುವಾಗ ಅಳವಡಿಸಿಕೊಳ್ಳುತ್ತೇವೆ ಎಂದರು. +ನಾವು ಈಗಾಗಲೇ ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಜಾರಿ ಘಟಕ ಮಾಡಲಾಗುತ್ತದೆ. ಜಾರಿ ಅಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳು ಇದರಲ್ಲಿರುತ್ತಾರೆ. ಇವರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಜೊತೆಗೆ ದೊಡ್ಡ ಮಟ್ಟದ ದಂಡ ವಿಧಿಸಲು ನಿಯಮಗಳಲ್ಲಿ ಅವಕಾಶ ಮಾಡಲಾಗುತ್ತಿದೆ. ಒಂದು ವೇಳೆ ಆದೇಶಕ್ಕೆ ಗೌರವ ನೀಡದೇ ಹೋದರೆ ಅಂತಹ ಸಂಸ್ಥೆಗಳ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ತಿಳಿಸಿದರು. +ಪರಿಷತ್‍ನಲ್ಲಿ ತೆರಿಗೆ ಕೋಲಾಹಲ ; ಆಡಳಿತ ಪ್ರತಿಪಕ್ಷಗಳ ವಾಕ್ಸಮರ +ಬೆಂಗಳೂರೇ ದೊಡ್ಡ ಸಮಸ್ಯೆ – ಕನ್ನಡ ಅನುಷ್ಠಾನದಲ್ಲಿ ಬೆಂಗಳೂರೇ ಮೊದಲ ಸಮಸ್ಯೆ. ಬೆಂಗಳೂರಿನಲ್ಲಿ ಸಮರ್ಪಕವಾಗಿ ಕನ್ನಡ ಬಳಕೆಯಾದರೆ ರಾಜ್ಯದ ಇತರ ಭಾಗಗಳಲ್ಲಿ ಇದು ಸುಲಭವಾಗುತ್ತದೆ. ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಂಟೂ ವಲಯಗಳ ಆಯುಕ್ತರ ನೇತೃತ್ವದಲ್ಲಿ ಎಂಟು ಜಾರಿ ಸಮಿತಿಯನ್ನು ರಚಿಸಲಾಗುವುದು. ಅವರ ಮೂಲಕ ಕನ್ನಡ ಅನುಷ್ಠಾನದ ಬಗ್ಗೆ ಕಠಿಣ ಕ್ರಮವಹಿಸಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು. \ No newline at end of file diff --git a/eesanje/url_46_236_12.txt b/eesanje/url_46_236_12.txt new file mode 100644 index 0000000000000000000000000000000000000000..179963bb9b9398c530619dfd60efe4de6cc5aa52 --- /dev/null +++ b/eesanje/url_46_236_12.txt @@ -0,0 +1,8 @@ +ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ`ಶಾಸಕರ ವೈರಲ್ ಆಡಿಯೋ’ +ಬೆಂಗಳೂರು,ಫೆ.15- ಮಂಗಳೂರು ಭಾಗದಲ್ಲಿ ಶಾಸಕರ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪಗೊಂಡು ಕೋಲಾಹಲ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿಷಯ ಪ್ರಸ್ತಾಪಿಸಿ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನನ್ನ ಮತ್ತು ಶಾಸಕ ವೇದವ್ಯಾಸ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. +ಸೆಂಟ್ ಥೆರೇಸಾ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗೆ ಹಿಂದೂ ಧರ್ಮದ ಬಗ್ಗೆ ಅಪನಂಬಿಕೆ ಬರುವಂತೆ ಮಾತುಗಳನ್ನು ಹೇಳಲಾಗಿದ್ದು, ಇದರ ಬಗ್ಗೆ ಪೋಷಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಲು ಬಂದಿದ್ದರು. ಆ ವೇಳೆ ಶರಣ ಪಂಪವೇಲ್, ನಾನು, ಶಾಸಕ ವೇದವ್ಯಾಸ್ ಸ್ಥಳದಲ್ಲಿದ್ದೆವು. ಅಲ್ಲಿ ಡಿಡಿಪಿಐ ಕೂಡ ಇದ್ದರು. ಪೋಷಕರ ಬೇಡಿಕೆ ಆಧರಿಸಿ ಶಿಕ್ಷಕರ ವಿರುದ್ಧ ತನಿಖೆಗೆ ಆದೇಶಿಸಲಾಯಿತು. ನಾನು ಅಲ್ಲಿಂದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿಗೆ ಪ್ರಯಾಣ ಮಾಡಿದ್ದೇನೆ. ನಂತರದ ಘಟನೆಗೆ ಸಂಬಂಧಪಟ್ಟಂತೆ ದೂರು ನೀಡಲಾಗಿದೆ. ಸ್ಥಳದಲ್ಲಿ ಇಲ್ಲದ ನನ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದೇ ಕೋಮುವಾದಿ ಮಾತುಗಳನ್ನಾಡಿರುವ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಶಿಕ್ಷಕರ ಲೋಪವಿಲ್ಲ ಎಂದಾದರೆ, ಶಾಲಾ ಆಡಳಿತ ಮಂಡಳಿ ಶಿಕ್ಷಕರನ್ನು ಅಮಾನತುಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು. +ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್ +ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್, ಎಫ್‍ಐಆರ್ ಹಾಕಿದಾಕ್ಷಣ ಯಾರೂ ಅಪರಾಯಾಗುವುದಿಲ್ಲ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ಸೂಚನೆಗಳನ್ನು ನೀಡಲಾಗಿಲ್ಲ. ಮಂಗಳೂರಿನಲ್ಲಿ ಬಹಳ ಕೆಟ್ಟ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ. +ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದ ಕೆರಳಿಸುವುದಷ್ಟೆ ಇವರ ಉದ್ದೇಶ ಎಂದು ಆಕ್ಷೇಪಿಸಿದರು. ಈ ಹಂತದಲ್ಲಿ ಬಿಜೆಪಿ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದರು. ಸಚಿವ ಕೃಷ್ಣ ಭೈರೇಗೌಡ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ಗೃಹಸಚಿವರಿಂದ ಉತ್ತರ ಕೊಡಿಸುತ್ತೇವೆ. ಇಲ್ಲಿ ಚರ್ಚೆ ಬೇಡ ಎಂದು ಹೇಳಿದರು. ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ಬರೀ ಉತ್ತರ ಸಾಲುವುದಿಲ್ಲ. ಈ ವಿಚಾರ ಚರ್ಚೆಯಾಗಬೇಕು ಎಂದರು. +ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ +ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಸುನಿಲ್‍ಕುಮಾರ್ ಅವರು ದೂರು ಕೊಟ್ಟಾಕ್ಷಣಕ್ಕೆ ಯಾರು ಯಾರ ವಿರುದ್ಧವಾದರೂ ಎಫ್‍ಐಆರ್ ದಾಖಲಿಸಬಹುದೇ ಎಂದು ಆಕ್ಷೇಪಿಸಿದರು. ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಶಾಸಕರ ವಿರುದ್ಧ ಎಫ್‍ಐಆರ್ ದಾಖಲಿಸಿದೆ ಎಂದು ಆರೋಪಿಸಿದರು. ಗೃಹಸಚಿವರ ಉತ್ತರದ ಬಳಿಕ ಉಳಿದ ವಿಚಾರ ಪ್ರಸ್ತಾಪ ಮಾಡುವುದು ಸೂಕ್ತ ಎಂದು ಸಭಾಧ್ಯಕ್ಷರು ಚರ್ಚೆಗೆ ತೆರೆ ಎಳೆದರು. \ No newline at end of file diff --git a/eesanje/url_46_236_2.txt b/eesanje/url_46_236_2.txt new file mode 100644 index 0000000000000000000000000000000000000000..2597fea1b91372057305da2104adb654b7d2a846 --- /dev/null +++ b/eesanje/url_46_236_2.txt @@ -0,0 +1,7 @@ +ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ +ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ, ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ ಸಿದ್ದರಾಮಯ್ಯ, 2024ನೇ ಸಾಲಿನ ಪೂರ್ಣಾವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮಯದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ್ದಾರೆ. +ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ., ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ., ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂ., ಬೀದರ್ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರ ಅಭಿವೃದ್ಧಿಗೆ 1 ಕೋಟಿ ರೂ. ಘೋಷಿಸಿದ್ದಾರೆ. +ಅಲ್ಲದೇ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 100 ಸಂಖ್ಯಾಬಲವುಳ್ಳ 100 ಮೆಟ್ರಿಕ್, ಬಾಲಕ/ಬಾಲಕಿಯರ ಪ್ರಾರಂಭಿಸಲಾಗುವುದು. ನಂತರದ ವಿದ್ಯಾರ್ಥಿ ನಿಲಯಗಳನ್ನು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು. ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. +ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ +ಪ್ರಮುಖ ಘೋಷಣೆಗಳು:ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‍ಎಫ್‍ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆಎಂಡಿಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗಿದೆ. +ವಕ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗಿದೆ. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗಿದೆ. \ No newline at end of file diff --git a/eesanje/url_46_236_3.txt b/eesanje/url_46_236_3.txt new file mode 100644 index 0000000000000000000000000000000000000000..1585af3f87fce7bc066ffeb2bfaae0078ceb1c70 --- /dev/null +++ b/eesanje/url_46_236_3.txt @@ -0,0 +1,10 @@ +ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ +ಬೆಂಗಳೂರು,ಫೆ.16- ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ 2024-25ನೇ ಸಾಲಿನ ಬಜೆಟ್ ಮಂಡಿಸಿದ ಅವರು, ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುತ್ತದೆ ಎಂದು ತಿಳಿಸಿದರು. +ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ 350 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮಥ್ರ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು ಎಂದು ತಿಳಿಸಿದರು. +ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ, ಗದಗ , ಕೊಪ್ಪಳ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮಥ್ರ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿರುವುದಾಗಿ ಹೇಳಿದರು. +ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು +ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಒಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. +ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದರು. +ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ +ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ , ಸೋಂಕುಗಳನ್ನು ಪತ್ತೆಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. +ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡುವುದಾಗಿ ಅವರು ಹೇಳಿದ್ದಾರೆ. \ No newline at end of file diff --git a/eesanje/url_46_236_4.txt b/eesanje/url_46_236_4.txt new file mode 100644 index 0000000000000000000000000000000000000000..456c4993267cef8174b011ecee724491025e2faf --- /dev/null +++ b/eesanje/url_46_236_4.txt @@ -0,0 +1,6 @@ +ಏನಿಲ್ಲ, ಏನಿಲ್ಲ..ಎಲ್ಲಾ ಸುಳ್ಳು : ಸಭಾತ್ಯಾಗ ಮಾಡಿದ ಪ್ರತಿಪಕ್ಷಗಳು +ಬೆಂಗಳೂರು, ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ವಿಧಾನ ಸಭೆಯಲ್ಲಿ ಮಂಡಿಸುವಾಗ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಜೆಟ್‍ನಲ್ಲಿ ಏನಿಲ್ಲ…. ಎಲ್ಲಾ ಸುಳ್ಳು ಎಂದು ಘೋಷಣೆ ಕೂಗಿ ಕೆಲಕಾಲ ಭಿತ್ತಿ ಪತ್ರ ಪ್ರದರ್ಶಿಸಿ ನಂತರ ಸಭಾತ್ಯಾಗ ಮಾಡಿದರು. ಜೆಡಿಎಸ್ ಸದಸ್ಯರು ಕೂಡ ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಸಭಾತ್ಯಾಗ ಮಾಡಿ ಹೊರ ನಡೆದರು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿ ಶಾಸಕ ಸುನೀಲ್ ಕುಮಾರ್ ಏನಿಲ್ಲಾ… ಏನಿಲ್ಲಾ… ಎಂದು ಹೇಳಿದರು. +ಪ್ರತಿಯಾಗಿ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಆಕ್ಷೇಪವೆತ್ತಲು ಶುರುಮಾಡಿದರು. ಆಗ ಸಿಎಂ ಸಿದ್ದರಾಮಯ್ಯ ಅವರು ನಿಶಬ್ಧವಾಗಿರಲು ಹೇಳಿದರು. ನಂತರ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ಅನುಮತಿಯಂತೆ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾರಂಭಿಸಿ, 15ನೇ ಹಣಕಾಸು ಆಯೋಗವು ಮಧ್ಯಂತರ ವರದಿ ಶಿಫಾರಸ್ಸಿನಂತೆ ರಾಜ್ಯಕ್ಕಾದ ಅನ್ಯಯ ಸರಿಪಡಿಸುವಲ್ಲಿ ಹಿಂದಿನ ಸರ್ಕಾರ ವಿಫಲವಾಯಿತು ಎಂದು ಹೇಳಿದರು. +ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು +ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಹಂಚಿಕೆಯಲ್ಲಿ 62098 ಕೋಟಿ ರೂ. ನಷ್ಟವಾಗಿದೆ ಎಂದು ಹೇಳುತ್ತಿದ್ದಂತೆ ಬಿಜೆಪಿ ಸದಸ್ಯರೆಲ್ಲ ಎದ್ದು ನಿಂತು ಏನಿಲ್ಲಾ… ಏನಿಲ್ಲಾ.. ಬಜೆಟ್‍ನಲ್ಲಿ ಏನಿಲ್ಲಾ.. ರೈತ ವಿರೋಧಿ ಸಿದ್ದರಾಮಯ್ಯ, ಎಲ್ಲಾ ಸುಳ್ಳು ಎಂದು ಘೋಷಣೆ ಕೂಗಲು ಪ್ರಾರಂಭಿಸಿದರು. ಬಿಜೆಪಿ ಸದಸ್ಯರ ಘೋಷಣೆ ಗದ್ದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಿದರು. +ಬಿಜೆಪಿ ಸದಸ್ಯರು ಘೋಷಣೆ ಕೂಗುತ್ತಿದ್ದಾಗ ಜೆಡಿಎಸ್‍ನ ಸದಸ್ಯರು ಕೂಡ ಎದ್ದು ನಿಂತು ಬಿಜೆಪಿ ಸದಸ್ಯರನ್ನು ಬೆಂಬಲಿಸಿ ಸಭಾತ್ಯಾಗ ಮಾಡಿದರು. ಆದರೂ ವಿಚಲಿತರಾಗದ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣ ಮುಂದುವರೆಸಿದರು. ಮುಖ್ಯಮಂತ್ರಿ ಬಜೆಟ್ ಮಂಡಿಸುವಾಗ ಆಡಳಿತ ಪಕ್ಷದ ಶಾಸಕರು ಮೇಜು ಕುಟ್ಟಿ ಸ್ವಾಗತಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಆಡಳಿತ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷದ ಶಾಲನ್ನು ಹಾಕಿದ್ದು ವಿಶೇಷವಾಗಿತ್ತು. \ No newline at end of file diff --git a/eesanje/url_46_236_5.txt b/eesanje/url_46_236_5.txt new file mode 100644 index 0000000000000000000000000000000000000000..6117d4b63f872f67aa7655547d6fdfb53efd4b79 --- /dev/null +++ b/eesanje/url_46_236_5.txt @@ -0,0 +1,8 @@ +ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ ಸ್ಥಾಪನೆ +ಬೆಂಗಳೂರು, ಫೆ.16- ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಒತ್ತು ನೀಡಿದ್ದು, ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಪ್ರತಿ ಜಿಲ್ಲೆಯಲ್ಲೂ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ ಘೋಷಿಸಿದ್ದಾರೆ. +ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು. ಮುಂದಿನ ಸಾಲಿನಲ್ಲಿ ಒಳಿದ ಒಂಭತ್ತು ಜಿಲ್ಲೆಗಳಲ್ಲೂ ಸಹ ಕ್ರಿಟಿಕಲ್ ಕೇರ್ ಬ್ಲಾಕ್‍ಗಳನ್ನು ನಿರ್ಮಾಣ ಮಾಡಲಾಗುವುದು ಎಂದರು. +ಆನೇಕಲ್, ನೆಲಮಂಗಲ, ಹೊಸಕೋಟೆ, ಖಾನಪುರ, ಶಿರಹಟ್ಟಿ, ಎಳಂದೂರು ತಾಲೂಕುಗಳಲ್ಲಿ 100 ತಾಲೂಕು ಆಸ್ಪತ್ರೆಗಳನ್ನು 280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಶಿಥಿಲಾವ್ಯಸ್ಥೆಯಲ್ಲಿರುವ ಆರೋಗ್ಯ ಕೇಂದ್ರವನ್ನು ಉನ್ನತೀಕರಣಕ್ಕಾಗಿ 75 ಕೋಟಿ ರೂ. ಅನುದಾನ ನೀಡಲಾಗುವುದು. +ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು +ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಮತ್ತಿತರ ಸೌಲಭ್ಯ ಕಾಮಗಾರಿಗಳನ್ನು 150 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಗ್ರಾಮೀಣ ಜನರಿಗೆ 24 ಗಂಟೆಯೂ ತುರ್ತು ಆರೋಗ್ಯ ಸೇವೆ ನೀಡಲು ಮುಂದಿನ ಎರಡು ವರ್ಷದಲ್ಲಿ 25 ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು. ಕಲ್ಯಾಣ ಕರ್ನಾಟಕ ಭಾಗದ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 221 ಕೋಟಿ ರೂ. ವೆಚ್ಚದಲ್ಲಿ ಕೆಕೆಆರ್‍ಡಿಬಿ ಮೂಲಕ ಸ್ಥಳ ಸ್ಥಾಪಿಸಲಾಗುವುದು. +ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಲು 6493 ಆರೋಗ್ಯ ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳನ್ನು ಅಗ್ನಿ ಅವಘಡದಿಂದ ರಕ್ಷಿಸಲು 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿ ಶಾಮಕ ವ್ಯವಸ್ಥೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಲಾಗುವುದು. 2025ರೊಳಗೆ ಕ್ಷಯ ರೋಗ ನಿರ್ಮೂಲನೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 87 ಟ್ರೂ-ನಾಟ್ ಮಿಷನ್‍ಗಳನ್ನು ಖರೀದಿಸಲಾಗುವುದು ಎಂದರು. +ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸಿ ಬಡವರಿಗೆ ಕೈಗೆಟುಕುವ ದರದಲ್ಲಿ ಪ್ರಯೋಗಾಲಯ ಸೇವೆಯನ್ನು ನೀಡಲಾಗುವುದು ಎಂದರು. ಹೀಗೆ ಹಲವು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. \ No newline at end of file diff --git a/eesanje/url_46_236_6.txt b/eesanje/url_46_236_6.txt new file mode 100644 index 0000000000000000000000000000000000000000..945649edfb245267b8ceee987051fcb0bd5f756f --- /dev/null +++ b/eesanje/url_46_236_6.txt @@ -0,0 +1,11 @@ +3.71 ಲಕ್ಷ ಕೋಟಿ ರೂ. ಬೃಹತ್ ಬಜೆಟ್ ಮಂಡನೆ +ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು 3.71 ಲಕ್ಷ ಕೋಟಿ ರೂ.ಗಳ ಅಂದಾಜು ವೆಚ್ಚದ ಬೃಹತ್ ಬಜೆಟ್ ಅನ್ನು ಮಂಡಿಸಿದರು. 15ನೇ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯನವರು ಬಜೆಟ್‍ನ ಗಾತ್ರವನ್ನು ಹಿಂದಿನ ಸಾಲಿಗಿಂತಲೂ ಮತ್ತಷ್ಟು ಹಿಗ್ಗಿಸಿದ್ದಾರೆ. ಭಾರತೀಯ ತಯಾರಿಕಾ ಮದ್ಯ (ಐಎಂಎಲ್) ಮತ್ತು ಬಿಯರ್‍ನ ದರಗಳನ್ನು ನೆರೆರಾಜ್ಯಗಳ ಸ್ಲಾಬ್‍ಗನುಗುಣವಾಗಿ ಪರಿಷ್ಕರಿಸುವುದಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೊಮ್ಮೆ ಮದ್ಯಪ್ರಿಯರ ನಶೆಯ ಮೇಲೆ ಪೆಟ್ಟು ನೀಡಿದ್ದಾರೆ. +ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮದ ಮೂಲಕ ಸಿರಿಧಾನ್ಯಗಳ ಮೌಲ್ಯವರ್ಧನೆಗೆ ಆದ್ಯತೆ ನೀಡುವುದು, ಎಪಿಎಂಸಿ ಕಾಯ್ದೆ ಹಿಂಪಡೆಯುವುದು, ಎತ್ತಿನ ಹೊಳೆ ಯೋಜನೆಗೆ ಸಮತೋಲನ ಜಲಾಶಯ ನಿರ್ಮಾಣ ಕಾಮಗಾರಿ ಆರಂಭಿಸುವುದು, ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲಿ ಜಲಸಂಪನ್ಮೂಲ ಇಲಾಖೆಯ ಜಲಾಶಯಗಳ ಹಿನ್ನೀರಿನ ಪ್ರದೇಶಗಳಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ, ಶಾಲಾ-ಕಾಲೇಜುಗಳ ಸಾಮರಸ್ಯಕ್ಕಾಗಿ ನಾವು ಮನುಜರು ಎಂಬ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದಗಳನ್ನು ಆಯೋಜಿಸುವುದು, ರಾಜ್ಯ ಶಿಕ್ಷಣ ನೀತಿ ಅನುಷ್ಠಾನ, ಬೇರು ಚಿಗುರು ಎಂಬ ವಿನೂತನ ಕಾರ್ಯಕ್ರಮದ ಮೂಲಕ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಹಳೆ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸುವುದು, ಪ್ರೇರಣಾ ಯೋಜನೆಯ ಮೂಲಕ ತಾಂತ್ರಿಕ ಶಿಕ್ಷಣ ಉನ್ನತೀಕರಣ ಬಜೆಟ್‍ನ ಪ್ರಮುಖ ಅಂಶಗಳಾಗಿವೆ. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಹಲವು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು, ಕೋವಿಡ್‍ನಲ್ಲಿ ಅವ್ಯವಹಾರಗಳ ವಿರುದ್ಧ ಕಠಿಣ ಕ್ರಮ, ಅಬ್ ಅಂಡ್ ಸ್ಕೋಪ್ ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆ, 2024-25ನೇ ಸಾಲಿನಲ್ಲಿ 1,89,893 ಕೋಟಿ ರೂ.ಗಳ ರಾಜ್ಯ ಸ್ವಂತ ತೆರಿಗೆ ಸಂಗ್ರಹಣೆ ಅಂದಾಜಿಸಲಾಗಿದ್ದು, ತೆರಿಗೆಯೇತರ ಮೂಲಗಳಿಂದ 13,500 ಕೋಟಿ ರೂ.ಗಳನ್ನು ನಿರೀಕ್ಷಿಸಿದ್ದಾರೆ. +ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ +ಕೇಂದ್ರ ಸರ್ಕಾರದಿಂದ 44,885 ಕೋಟಿ ರೂ.ಗಳ ತೆರಿಗೆ ಪಾಲು 15,300 ಕೋಟಿ ರೂ.ಗಳ ಸಹಾಯಧನ ಬರುವ ನಿರೀಕ್ಷೆಯಿದೆ. ಜೊತೆಗೆ 1,05,245 ಕೋಟಿ ರೂ.ಗಳ ಸಾಲ ಮಾಡುವ ಮುನ್ಸೂಚನೆ ನೀಡಿದ್ದಾರೆ. 38 ಕೋಟಿ ರೂ.ಗಳ ಋಣೇತರ ಸ್ವೀಕೃತಿ ಮತ್ತು 213 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಿ ಒಟ್ಟು ಸಂಪನ್ಮೂಲವನ್ನು 3,68,674 ಕೋಟಿ ರೂ.ಗಳೆಂದು ಲೆಕ್ಕ ಹಾಕಿದ್ದಾರೆ. ಇದರ ಜೊತೆ ವೆಚ್ಚಗಳ ಬಾಬ್ತಿನಲ್ಲಿ 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚವನ್ನು ನಿಗದಿ ಮಾಡಿದ್ದಾರೆ. ಬಂಡವಾಳ ವೆಚ್ಚಕ್ಕೆ 55,877 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದರೆ ಸಾಲದ ಮರುಪಾವತಿಗೆ 24,974 ಕೋಟಿ ರೂ.ಗಳನ್ನು ಕಾಯ್ದಿರಿಸಿದ್ದಾರೆ. +ವಿತ್ತೀಯ ಕೊರತೆ :ಮುಂದಿನ ಆರ್ಥಿಕ ವರ್ಷದಲ್ಲಿ 27,354 ಕೋಟಿ ರೂ.ಗಳನ್ನು ರಾಜಸ್ವ ಕೊರತೆ ಎಂದು ಹಾಗೂ 82,595 ಕೋಟಿ ರೂ.ಗಳನ್ನು ವಿತ್ತೀಯ ಕೊರತೆ ಎಂದು ಅಂದಾಜಿಸಲಾಗಿದೆ. ವಿತ್ತೀಯ ಕೊರತೆಯು ರಾಜ್ಯದ ಜಿಎಸ್‍ಡಿಪಿಯ ಶೇ.2.95 ರಷ್ಟಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಮುಂದಿನ ಆರ್ಥಿಕ ವರ್ಷಕ್ಕೆ ರಾಜ್ಯದ ಒಟ್ಟು ಹೊಣೆಗಾರಿಕೆ 6,65,095 ಕೋಟಿ ರೂ.ಗಳೆಂದು ಅಂದಾಜಿಸಲಾಗಿದ್ದು, ಬೃಹತ್ ಮೊತ್ತದ ಸಾಲವನ್ನು ಬಿಂಬಿಸಲಾಗಿದೆ. ಆದರೂ ಆರ್ಥಿಕ ಶಿಸ್ತಿನ ಮಿತಿ ಶೇ.25 ರೊಳಗೆ ಸಾಲದ ಮೊತ್ತವಿದ್ದು, ಒಟ್ಟು ಜಿಎಸ್‍ಡಿಪಿಯ ಶೇ.23.68 ರಷ್ಟಿದೆ ಎಂದು ತಿಳಿಸಿದ್ದಾರೆ. +ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡಲಿದೆ ಎಂದು ವಿರೋಧಿಗಳ ಭವಿಷ್ಯವನ್ನು ನಾವು ಸುಳ್ಳು ಮಾಡಿದ್ದೇವೆ. 5 ಖಾತರಿ ಯೋಜನೆಗಳಷ್ಟೇ ಅಲ್ಲದೆ ಹಲವಾರು ಹೊಸ ಕಲ್ಯಾಣ ಯೋಜನೆಗಳಿಗೂ ಮತ್ತು ಮೂಲ ಸೌಕರ್ಯ ಕಾರ್ಯಕ್ರಮಗಳಿಗೂ ಅಗತ್ಯವಿರುವ ಆಯವ್ಯಯವನ್ನು ಒದಗಿಸಿದ್ದೇವೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. +ಪ್ರತಿಯೊಬ್ಬರ ಕಣ್ಣೀರನ್ನು ಒರೆಸುವುದು ಮಹಾತ್ಮ ಗಾಂಧೀಜಿಯವರ ಆಶಯವಾಗಿದೆ. ಇದು ನಮ್ಮ ಇತಿಮಿತಿಯನ್ನು ಮೀರಿದ್ದಾಗಿರಬಹುದು. ಆದರೆ ಕಣ್ಣೀರು ಮತ್ತು ಬವಣೆಗಳು ಇರುವವರೆಗೂ ನಮ್ಮ ಕಾರ್ಯ ಪೂರ್ಣವಾಗುವುದಿಲ್ಲ ಎಂದು ನೆಹರೂ ಅವರ ವಾಣಿಯನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ, ಹೆಚ್ಚುತ್ತಿರುವ ಅಸಮಾನತೆ ಮತ್ತು ನಿರುದ್ಯೋಗದಿಂದ ಜರ್ಜರಿತರಾಗಿರುವ ಜನಸಮಾನ್ಯರು, ರೈತರು, ಯುವಜನರು ಹಾಗೂ ಸಮಾಜಕ ಕಟ್ಟಕಡೆಯ ವರ್ಗದವರಿಗೆ ಅಗತ್ಯವಿರುವ ಬೆಂಬಲವನ್ನು ಒದಗಿಸಲು ಸಮಗ್ರ ಮತ್ತು ಸಮೃದ್ಧ ಕರ್ನಾಟಕವನ್ನು ಕಲ್ಪಿಸುವ ದೃಷ್ಟಿಕೋನದೊಂದಿಗೆ ಕಲ್ಯಾಣ ಆಧಾರಿತ ಬಜೆಟ್ ಅನ್ನು ಮಂಡಿಸುತ್ತಿದ್ದೇನೆ ಎಂದು ವಿವರಿಸಿದ್ದಾರೆ. +ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ +ವಿತ್ತೀಯ ಕೊರತೆಯನ್ನು ಶೇ.3 ರೊಳಗೆ, ಹೊಣೆಗಾರಿಕೆ ಶೇ.25 ರೊಳಗೆ ಕಾಯ್ದುಕೊಳ್ಳಲಾಗಿದೆ. ಮಧ್ಯಮಾವ ವಿತ್ತೀಯ ಯೋಜನೆಯಲ್ಲಿ ಅಂದಾಜಿಸಿರುವಂತೆ ಇನ್ನೆರೆಡು ವರ್ಷದೊಳಗೆ ರಾಜಸ್ವ ಹೆಚ್ಚುವರಿಯನ್ನು ಸಾಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಯವರು ಲೇಖಾನುದಾನದ ಬದಲಿಗೆ ಪೂರ್ಣ ಪ್ರಮಾಣದ ಬಜೆಟ್‍ಗೆ ಅಂಗೀಕಾರ ನೀಡುವಂತೆ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_236_7.txt b/eesanje/url_46_236_7.txt new file mode 100644 index 0000000000000000000000000000000000000000..cf5940ef8b5f2e89d89f128c6b9e7d4de9ef12fb --- /dev/null +++ b/eesanje/url_46_236_7.txt @@ -0,0 +1,6 @@ +ಗ್ಯಾರಂಟಿಗಳಿಗೆ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನ ಮೀಸಲು +ಬೆಂಗಳೂರು,ಫೆ.16- ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದ ಐದು ಗ್ಯಾರಂಟಿ ಯೋಜನೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ 52 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಹಾಗು ಅನ್ನ ಭಾಗ್ಯ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ ಒಟ್ಟು 52 ಸಾವಿರ ಕೋಟಿ ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. +ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈ ಹಂಚಿಕೆ ಮಾಡಲಾಗುತ್ತಿದ್ದು, ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ 50 ಸಾವಿರದಿಂದ 55 ಸಾವಿರದವರೆಗೆ ಒದಗಿಸಲಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ಇಡೀ ಜಗತ್ತು ಕರ್ನಾಟಕದತ್ತ ನೋಡುತ್ತಿದೆ. ಹಲವು ದೇಶಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಅಧ್ಯಯನ ನಡೆಸಿ ಇದನ್ನು ಶ್ಲಾಘಿಸಿವೆ. ಗ್ಯಾರಂಟಿ ಯೋಜನೆಗಳು ದೃಢವಾಗಲು ಕೇವಲ ಅಧ್ಯಯನ ಮಾತ್ರವಲ್ಲ ಬಸ್ ಹತ್ತುವ ಮುನ್ನ ತಲೆ ಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ,ಯುವನಿ ನೆರವು ನಿರುದ್ಯೋಗಿ ಯುವಕನ ಆನಂದಬಾಸ್ಪ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ. ಅಭಿವೃದ್ಧಿಯ ಫಲವನ್ನು ಜನಸಾಮಾನ್ಯರಿಗೆ ಹಿಂದುರುಗಿಸುವಲ್ಲಿ ಅನನ್ಯವಾದ ಸಂತೃಪ್ತಿಯಿದೆ ಎಂದು ಹೇಳಿದ್ದಾರೆ. +ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ +ನಮ್ಮ ವಿರೋಧಿಗಳು ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸಿ, ರಾಜ್ಯ ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳಿ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಸಂಕಷ್ಟಗಳಿಗೆ ಸ್ಪಂದಿಸಲಾಗದವರು ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇಂಥ ಟೀಕೆಗಳನ್ನು ಮಾಡುತ್ತಾರೆ. ಇನ್ನೊಂದೆಡೆ ನಮ್ಮ ಗ್ಯಾರಂಟಿಗಳನ್ನು ಕದ್ದು ಅವರ ಗ್ಯಾರಂಟಿಗಳೆಂದು ನಂಬಿಸಲು ಹೆಣಗಾಡುತ್ತಿದ್ದಾರೆ ಇಂತಹ ಟೀಕೆಗಳಿಗೆ ನಾನಲ್ಲ, ಶರಣರೇ ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. +ಮನ ಶುದ್ದವಿಲ್ಲದವಂಗೆ ದ್ರವ್ಯದ ಬಡತನವಲ್ಲದೆಚಿತ್ತಶುದ್ಧದಲ್ಲಿ ಕಾಯಕವ ಮಾಡುವಲ್ಲಿಸದ್ಭಕ್ತಂಗೆ ಎತ್ತ ನೋಡಿದಡತ್ತ ಲಕ್ಷಿ ತಾನಾಗಿಪ್ಪಳುಮಾರಯ್ಯ ಪ್ರಿಯ ಅಮರೇಶ್ವರ ಲಿಂಗದ ಸೇವೆಯುಳ್ಳನ್ನಕ್ಕರ ಎಂದು ಶರಣೆ ಆಯ್ದಕ್ಕಿ ಲಕ್ಕಮ್ಮ ಅವರ ವಚನವನ್ನು ಉಲ್ಲೇಖಿಸಿ ಪ್ರತಿಪಕ್ಷದವರಿಗೆ ಸಿದ್ದರಾಮಯ್ಯ ತಿರುಗೇಟು ಕೊಟಿದ್ದಾರೆ. \ No newline at end of file diff --git a/eesanje/url_46_236_8.txt b/eesanje/url_46_236_8.txt new file mode 100644 index 0000000000000000000000000000000000000000..a756c8600bd5c121fb51a6487fc6a899bc2c9400 --- /dev/null +++ b/eesanje/url_46_236_8.txt @@ -0,0 +1,7 @@ +ಬಜೆಟ್ ಹೈಲೈಟ್ಸ್ : ಕರ್ನಾಟಕ ರೈತ ಸಮೃದ್ಧಿ ಸಂಯೋಜನೆ +ಬೆಂಗಳೂರು,ಫೆ.16- ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಸಂಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿಂದು ಬಜೆಟ್ ಮಂಡನೆ ವೇಳೆ ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಮಣ್ಣಿನ ಗುಣ ಮತ್ತು ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನ ಕುರಿತು ಅರಿವು ಮೂಡಿಸುವುದು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಕಲ್ಪಿಸುವುದು ಈ ಹೊಸ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. +ಕೃಷಿ ಮತ್ತು ಪೂರಕ ಚಟುವಟಿಕೆ ನೀತಿ ಮತ್ತು ಯೋಜನೆಗಳ ಸಂಯೋಜನೆ ಮತ್ತು ಪರಿಣಾಮಕಾರಿ ಅನುಷ್ಠಾನವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶು ಸಂಗೋಪನಾ ಇಲಾಖೆಗಳ ನಡುವೆ ಸಮನ್ವಯ ಸಾಸಲು ಸಿಎಂ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. +ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದಲ್ಲದೆ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ರಕ್ಷಿಸಲು ಮತ್ತು ಸಂಗ್ರಹಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಸಿರಿಧಾನ್ಯ ಮತ್ತು ಮೌಲ್ಯವರ್ಧಕ ಉತ್ಪನ್ನಗಳನ್ನು ಅಗ್ರಿಟೆಕ್ ಕಂಪನಿಗಳು ಮತ್ತು ರಿಟೈಲ್ ಚೈನ್‍ಗಳ ಸಹಭಾಗಿತ್ವದೊಂದಿಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದಕ್ಕಾಗಿ ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಸಿಲಾಗುವುದು. +ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಹೆಸರು ಫೈನಲ್ +ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿವರ್ಷ 1 ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ-ಸ್ಯಾಪ್ ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲಾಗುವುದು. ಇದಲ್ಲದೆ ರೈತರ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆ ಅೀಧಿನದಲ್ಲಿ ಪ್ರತ್ಯೇಕ ಆಹಾರ ಸಂರಕ್ಷಣಾ ಆಯುಕ್ತಾಲಯ ರಚಿಸಲಾಗುವುದು. +ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪಿಎಂಎಫ್‍ಎಂಇ ಯೋಜನೆಯಡಿ 80 ಕೋಟಿ ರೂ.ಗಳನ್ನು ನೀಡಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿರುವ ವಿಮಾನನಿಲ್ದಾಣಗಳ ಹತ್ತಿರ ಆಹಾರ ಪಾರ್ಕ್ ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಇದನ್ನು ಸ್ಥಾಪಿಸಲಾಗುವುದು.ಕೃಷಿವಲಯದ ಸ್ಟಾರ್ಟ್‍ಅಪ್‍ಗಳನ್ನು ಉತ್ತೇಜಿಸಲಾಗುವುದು. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್‍ನಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಜ್ಞರ ಸಮಿತಿ ರಚಿಸಲಾಗುವುದು. \ No newline at end of file diff --git a/eesanje/url_46_236_9.txt b/eesanje/url_46_236_9.txt new file mode 100644 index 0000000000000000000000000000000000000000..1ac4bd329f3a8a6339431c4204c85fc0de6e79c4 --- /dev/null +++ b/eesanje/url_46_236_9.txt @@ -0,0 +1,14 @@ +ಕರ್ನಾಟಕ ಬಜೆಟ್ : 2024-25 ( ) +ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. + + + +₹: ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ನಿಟ್ಟಿನಲ್ಲಿ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಸಂಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ಹಲವು ಹೊಸ ಯೋಜನೆಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. +₹: ವಿಧಾನಸಭೆಯಲ್ಲಿಂದು ಬಜೆಟ್ ಮಂಡನೆ ವೇಳೆ ಕೃಷಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಮಣ್ಣಿನ ಗುಣ ಮತ್ತು ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನ ಕುರಿತು ಅರಿವು ಮೂಡಿಸುವುದು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಕಲ್ಪಿಸುವುದು ಈ ಹೊಸ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. +₹: ಕೃಷಿ ಮತ್ತು ಪೂರಕ ಚಟುವಟಿಕೆ ನೀತಿ ಮತ್ತು ಯೋಜನೆಗಳ ಸಂಯೋಜನೆ ಮತ್ತು ಪರಿಣಾಮಕಾರಿ ಅನುಷ್ಠಾನವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶು ಸಂಗೋಪನಾ ಇಲಾಖೆಗಳ ನಡುವೆ ಸಮನ್ವಯ ಸಾಸಲು ಸಿಎಂ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ. +₹: ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ. ಇದಲ್ಲದೆ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ರಕ್ಷಿಸಲು ಮತ್ತು ಸಂಗ್ರಹಿಸಲು ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಮಾಡಲಾಗುವುದು. +₹: ಸಿರಿಧಾನ್ಯ ಮತ್ತು ಮೌಲ್ಯವರ್ಧಕ ಉತ್ಪನ್ನಗಳನ್ನು ಅಗ್ರಿಟೆಕ್ ಕಂಪನಿಗಳು ಮತ್ತು ರಿಟೈಲ್ ಚೈನ್‍ಗಳ ಸಹಭಾಗಿತ್ವದೊಂದಿಗೆ ಕೈಗೆಟಕುವ ದರದಲ್ಲಿ ಗ್ರಾಹಕರಿಗೆ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದಕ್ಕಾಗಿ ನಮ್ಮ ಮಿಲೆಟ್ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಸಿಲಾಗುವುದು. +₹: ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿವರ್ಷ 1 ಸಾವಿರದಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು. ರಾಯಚೂರು ಕೃಷಿ ವಿಶ್ವವಿದ್ಯಾಲಯವು ಅಭಿವೃದ್ಧಿಪಡಿಸಿರುವ ಇ-ಸ್ಯಾಪ್ ತಂತ್ರಾಂಶದ ಸೌಲಭ್ಯವನ್ನು ಎಲ್ಲಾ ರೈತರಿಗೆ ಪರಿಚಯಿಸಲಾಗುವುದು. ಇದಲ್ಲದೆ ರೈತರ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆ ಅೀಧಿನದಲ್ಲಿ ಪ್ರತ್ಯೇಕ ಆಹಾರ ಸಂರಕ್ಷಣಾ ಆಯುಕ್ತಾಲಯ ರಚಿಸಲಾಗುವುದು. +₹: ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣಾ ಮತ್ತು ರಫ್ತು ನಿಗಮ ನಿಯಮಿತ(ಕೆಪೆಕ್) ಸಂಸ್ಥೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಪಿಎಂಎಫ್‍ಎಂಇ ಯೋಜನೆಯಡಿ 80 ಕೋಟಿ ರೂ.ಗಳನ್ನು ನೀಡಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿರುವ ವಿಮಾನನಿಲ್ದಾಣಗಳ ಹತ್ತಿರ ಆಹಾರ ಪಾರ್ಕ್ ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಇದನ್ನು ಸ್ಥಾಪಿಸಲಾಗುವುದು.ಕೃಷಿವಲಯದ ಸ್ಟಾರ್ಟ್‍ಅಪ್‍ಗಳನ್ನು ಉತ್ತೇಜಿಸಲಾಗುವುದು. ಮಂಡ್ಯ ಜಿಲ್ಲೆಯ ವಿಸಿ ಫಾರ್ಮ್‍ನಲ್ಲಿ ಹೊಸ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಜ್ಞರ ಸಮಿತಿ ರಚಿಸಲಾಗುವುದು. + +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-02-2024) \ No newline at end of file diff --git a/eesanje/url_46_237_1.txt b/eesanje/url_46_237_1.txt new file mode 100644 index 0000000000000000000000000000000000000000..eb8a47d1ad22c8b32528376181c06847586ff8f0 --- /dev/null +++ b/eesanje/url_46_237_1.txt @@ -0,0 +1,12 @@ +ಸಿದ್ದರಾಮಯ್ಯ ಕ್ಷಮೆಗೆ ಬಿಜೆಪಿ ಪಟ್ಟು +ಬೆಂಗಳೂರು,ಫೆ.15- ಪ್ರತಿಪಕ್ಷಗಳ ಸದಸ್ಯರನ್ನು ಗೂಂಡಾಗಳೆಂದು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದು ಸಭಾತ್ಯಾಗ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿ ಜರುಗಿತು. ಕೇಂದ್ರ ಸರ್ಕಾರ ನೀಡುವ ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. +ಈ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಕೇಂದ್ರವನ್ನು ಸಮರ್ಥನೆ ಮಾಡಿಕೊಳ್ಳಲು ಮುಂದಾದಾಗ ಮಾತಿನ ಭರದಲ್ಲಿ ಸಿದ್ದರಾಮಯ್ಯ ಗೂಂಡಾಗಳು ಕರ್ನಾಟಕದ ಜನ ಛೀ,ಥೂ ಎಂದು ಛೀಮಾರಿ ಹಾಕುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದ್ದರು. ಸದನ ಸೇರಿದಾಗ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಈ ಸದನಕ್ಕೆ ತನ್ನದೇ ಆದ ಸಂಪ್ರದಾಯವಿದೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಗೌರವವೂ ಇದೆ. +ಅವರು ನಾಡಿನ ಮುಖ್ಯಮಂತ್ರಿಗಳು. ಈ ಸದನಕ್ಕೆ ಬಂದು ಮಾತನಾಡುತ್ತಾರೆ ಎಂದರೆ ಎಲ್ಲರಿಗೂ ಕುತೂಹಲ ಇರುತ್ತದೆ. ಚರ್ಚೆಯ ಸಮಯದಲ್ಲಿ ವಾದ-ವಿವಾದಗಳು, ಟೀಕೆ- ಟಿಪ್ಪಣಿಗಳು, ಆರೋಪ-ಪ್ರತ್ಯಾರೋಪ ನಡೆಯುವುದು ಸಹಜ. ಅದರೆ ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳೆಂದು ಕರೆಯುವುದು ಸರಿಯಲ್ಲ. ಇದರಿಂದ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಅವರು ಸದನದ ಸದಸ್ಯರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. +ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್ +ಆಗ ಸಭಾಪತಿ ಬಸವರಾಜ ಹೊರಟ್ಟಿ ಅವರು ಈಗಾಗಲೇ ನಾನು ಮುಖ್ಯಮಂತ್ರಿಗಳು ಬಳಸಿದ ಪದವನ್ನು ಕಡತದಿಂದ ತೆಗೆದುಹಾಕಲು ಸೂಚಿಸಿದ್ದೇನೆ. ಪುನಃ ಅದೇ ವಿಷಯದ ಬಗ್ಗೆ ಚರ್ಚೆಮಾಡುವುದು ಬೇಡ. ಈಗಾಗಲೇ ಸಾಕಷ್ಟು ಸಮಯ ವ್ಯರ್ಥವಾಗಿದೆ ಎಂದರು. ಮಾತು ಮುಂದುವರೆಸಿದ ಕೋಟಾ ಶ್ರೀನಿವಾಸ್ ಪೂಜಾರಿ,ನಾಳೆ ಯಾರು ಏನು ಬೇಕಾದರೂ ಮಾತನಾಡಲಿ ಕಡತದಿಂದ ತೆಗೆದು ಹಾಕಿದ್ದೇನೆ ಎಂದರೆ.. ಆಡಿದ ಮಾತಿಗೆ ವಿಷಾದ ಬೇಡವೇ? ಕನಿಷ್ಠಪಕ್ಷ ಮುಖ್ಯಮಂತ್ರಿಗಳು ವಿಷಾದವನ್ನು ವ್ಯಕ್ತಪಡಿಸಲಿ ಎಂದು ಮನವಿ ಮಾಡಿಕೊಂಡರು. +ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಧ್ಯಪ್ರವೇಶಿಸಿ ವಿಧಾನಪರಿಷತ್‍ಗೆ ತನ್ನದೇ ಆದ ಇತಿಹಾಸವಿದೆ. ಕೆಲವು ಬಾರಿ ಮಾತಿನ ಭರದಲ್ಲಿ ಸಂಸದೀಯ ಅಥವಾ ಅಸಂಸದನೀಯ ಪದ ಬಳಕೆ ಮಾಡುತ್ತೇವೆ. ಸಭಾಪತಿಗಳು ಕಡತದಿಂದ ತೆಗೆದುಹಾಕಿದ್ದೇನೆ ಎಂದು ಹೇಳಿದರೆ ಅಲ್ಲಿಗೆ ಮುಗಿದಂತೆ ಪುನಃ ಅದೇ ವಿಷಯದ ಬಗ್ಗೆ ಮಾತನಾಡುವುದಾಗಲಿ, ಅದರ ಬಗ್ಗೆ ಚರ್ಚೆ ಮಾಡುವುದಾಗಲಿ ಸರಿಯಲ್ಲ ಎಂದರು. +ಪ್ರತಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಮಾತನಾಡಿ, ಆವೇಷದಲ್ಲಿ ಯಾರು ಏನು ಬೇಕಾದರೂ ಮಾತನಾಡುತ್ತೇನೆ ಎಂದರೆ ಹೇಗೆ? ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳೆಂದರೆ ಹೇಗೆ? ನಾವೇನು ಗೂಂಡಾಗಳ? ಕನಿಷ್ಠಪಕ್ಷ ಮುಖ್ಯಮಂತ್ರಿಗಳು ವಿಷಾದ ವ್ಯಕ್ತಪಡಿಸದಿದ್ದರೆ ಹೇಗೇ? ಸಭಾಪತಿಗಳು ನಿರ್ದೇಶನ ನೀಡಬೇಕೆಂದು ಮನವಿ ಮಾಡಿಕೊಂಡರು. +ಆಗ ಹೊರಟ್ಟಿಯವರು, ನಾನು ಯಾರಿಗೂ ನಿರ್ದೇಶನ ನೀಡಲು ಬರುವುದಿಲ್ಲ. ನಾನು ಯಾರಿಗೂ ಹೀಗೇ ಮಾತನಾಡಿ ಎಂದು ಹೇಳಲಾಗುವುದಿಲ್ಲ. ಸದಸ್ಯರು ಬಳಸಿದ ಸಂಸದೀಯ ಅಥವಾ ಅಸಂಸದೀಯ ಎಂಬುದನ್ನು ಪರಿಶೀಲನೆ ನಡೆಸಬೇಕು. ಸದನದಲ್ಲಿ ಪರಿಸ್ಥಿತಿ ತಿಳಿಯಾಗಲಿ ಎಂದು ನಾನೇ ಆ ಪದಗಳನ್ನು ಕಡತದಿಂದ ತೆಗೆದು ಹಾಕಲು ಸೂಚಿಸಿದ್ದೇನೆ. ಅದಕ್ಕಾಗಿ ಇನ್ನೇನು ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು. +ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ +ಆಗ ಸಿದ್ದರಾಮಯ್ಯ ನಾನು ಯಾವುದೇ ದುರದ್ದೇಶ ಇಟ್ಟುಕೊಂಡು ಆ ಪದ ಬಳಕೆ ಮಾಡಿಲ್ಲ. ಉತ್ತರಿಸುವ ವೇಳೆ ಸದಸ್ಯ ರುದ್ರೇಗೌಡ ಅವರು ಎದ್ದು ನಿಂತು ಮಾತನಾಡುತ್ತಿದ್ದ ವೇಳೆ ಹಾಗೆ ಹೇಳಿದೆ. ನೀವು ಪದೇ ಪದೇ ನಾನು ಉತ್ತರಿಸುವಾಗ ಎದ್ದು ನಿಂತು ನನ್ನ ಭಾಷಣಕ್ಕೆ ಅಡ್ಡಿಪಡಿಸಿದರೆ ಹೇಗೆ? ಈಗಾಗಲೇ ಸಭಾಪತಿಗಳು ಆ ಪದವನ್ನು ಕಡತದಿಂದ ತೆಗೆದಿದ್ದೇನೆ ಎಂದು ಹೇಳಿದ ಮೇಲೆಯೂ ನೀವು ಸದನಕ್ಕೆ ಅಡ್ಡಿಪಡಿಸಿದರೆ ಹೇಗೆ? ಪರೋಕ್ಷವಾಗಿ ಕ್ಷಮೆ ಇಲ್ಲವೇ ವಿಷಾದ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದರು. +ಈ ಹಂತದಲ್ಲೂ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಮುಂದುವರೆಯಿತು. ಸಭಾಪತಿಯವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಅವಕಾಶ ನೀಡುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಸದನವನ್ನು ಸಭಾತ್ಯಾಗ ಮಾಡಿದರು. \ No newline at end of file diff --git a/eesanje/url_46_237_10.txt b/eesanje/url_46_237_10.txt new file mode 100644 index 0000000000000000000000000000000000000000..a77ada375e9e0057fde5a98bb6b4a8dbdfb89f14 --- /dev/null +++ b/eesanje/url_46_237_10.txt @@ -0,0 +1,8 @@ +ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಬೋಧನೆಗೆ ಚಿಂತನೆ +ಬೆಂಗಳೂರು,ಫೆ.15- ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು ಕನ್ನಡ ಎರಡೂ ಭಾಷೆಯಲ್ಲೂ ಬೋಧನೆಯ ಸೌಲಭ್ಯವನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದ್ದು, ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ಪೋಷಕರಿಗೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ತೀರ್ಥಹಳ್ಳಿಯ ಶಾಸಕ ಅರಗ ಜ್ಞಾನೇಂದ್ರ ತಮ್ಮ ಕ್ಷೇತ್ರದಲ್ಲಿ ಹಲವು ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮಕ್ಕೆ ಪರಿವರ್ತಿಸಿಕೊಡಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಖ್ಯಾ ಕೊರತೆ ಕಾರಣಕ್ಕಾಗಿ ಅನುಮತಿ ನಿರಾಕರಿಸಲಾಗುತ್ತಿದೆ. ಪೋಷಕರಿಗೆ ತಮ್ಮ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಓದಿಸುವ ಹಪಾಹಪಿ ಹೆಚ್ಚಾಗಿದೆ. ಕಷ್ಟಪಟ್ಟಾದರೂ ಹಣ ಖರ್ಚು ಮಾಡಿ ದೂರದೂರುಗಳಿಗೆ ಖಾಸಗಿ ಇಂಗ್ಲೀಷ್ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ. +ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮಕ್ಕೆ ಅವಕಾಶ ನೀಡದೇ ಇದ್ದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುವುದಿಲ್ಲ. ಸಹಜವಾಗಿಯೇ ಹಲವು ಶಾಲೆಗಳನ್ನು ಮುಚ್ಚಬೇಕಾಗುತ್ತದೆ. ಕಡಿಮೆ ಅಂಕ ಪಡೆದ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧಿಸಬಹುದಾದರೆ ರ್ಯಾಂಕ್‍ನಲ್ಲಿ ನೇಮಕಾತಿಗೊಂಡಿರುವ ಸರ್ಕಾರಿ ಶಾಲಾ ಶಿಕ್ಷಕರಿಂದ ಇಂಗ್ಲೀಷ್ ಕಲಿಸಲು ಸಾಧ್ಯವಿಲ್ಲವೇ? ಹಿರಿಯ ಅಧಿಕಾರಿಗಳು ತಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸಿ ಐಎಎಸ್, ಐಪಿಎಸ್ ಮಾಡಬೇಕೆಂದು ಬಯಸುತ್ತಾರೆ. ಗ್ರಾಮೀಣ ಭಾಗದ ಮಕ್ಕಳನ್ನು ನಿಯಮದ ನೆಪವೊಡ್ಡಿ ಬದುಕನ್ನು ಹಾಳುಮಾಡುತ್ತಿದ್ದಾರೆ ಎಂದರು. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ಇದಕ್ಕೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಶಾಸಕರ ಮಾತು ಅಕ್ಷರಶಃ ನಿಜ. ಇಂಗ್ಲೀಷ್‍ಗೆ ಬೇಡಿಕೆ ಹೆಚ್ಚಾಗಿದೆ. ಅದರ ಜೊತೆಗೆ ಕನ್ನಡ ಮಾಧ್ಯಮವನ್ನೂ ಉಳಿಸಲು ಸರ್ಕಾರ ಬದ್ಧವಾಗಿದೆ. ಕಳೆದ 2 ವರ್ಷಗಳಿಂದಲೂ 59 ಇಂಗ್ಲೀಷ್ ಮಾಧ್ಯಮ ಶಾಲೆಗಳಿಗೆ ಆದ್ಯತೆ ನೀಡಲಾಗಿದೆ. ಕೆಲವೆಡೆ ವಿದ್ಯಾರ್ಥಿಗಳ ಕೊರತೆಯಿದೆ. ಮೂಲ ಸೌಲಭ್ಯದ ಸಮಸ್ಯೆ ಕೂಡ ಇದೆ. ನಮ್ಮ ಸರ್ಕಾರ ಸಾಮಾಜಿಕ ಹೊಣೆಗಾರಿಕೆ ನಿಯನ್ನು ಬಳಸಿಕೊಂಡು ಮೂಲಸೌಲಭ್ಯ ಹೆಚ್ಚಿಸಿ, ಇಂಗ್ಲೀಷ್ ಮಾಧ್ಯಮ ಸರ್ಕಾರಿ ಶಾಲೆಗೂ ಹಣ ಕೊಟ್ಟು ಸೇರಿಸಬೇಕಾದಂತಹ ಮಟ್ಟಕ್ಕೆ ಸುಧಾರಣೆ ತರಲಾಗುವುದು ಎಂದು ಹೇಳಿದರು. +2025 ರ ವೇಳೆಗೆ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಂತಹಂತವಾಗಿ ಈ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಶಿಕ್ಷಕರು ಮೂಲಸೌಲಭ್ಯಕ್ಕೆ ಒತ್ತು ನೀಡಲಾಗುವುದು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. +ಸಭಾಧ್ಯಕ್ಷರು ಸೇರಿದಂತೆ ಹಲವರು ಈ ವಿಚಾರ ಕುರಿತು ಚರ್ಚೆಗೆ ಆಸಕ್ತಿ ತೋರಿಸಿ, ಇದು ರಾಜ್ಯಮಟ್ಟದ ಸಮಸ್ಯೆಯಾಗಿರುವುದರಿಂದ ನಿಯಮ 69 ರ ಅಡಿ ಮತ್ತಷ್ಟು ಚರ್ಚೆಗೆ ಅವಕಾಶ ನೀಡುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_237_11.txt b/eesanje/url_46_237_11.txt new file mode 100644 index 0000000000000000000000000000000000000000..92ce044365f1aceb13a62a4728ba245bac2f6f22 --- /dev/null +++ b/eesanje/url_46_237_11.txt @@ -0,0 +1,6 @@ +ಶೀಘ್ರವೇ 108 ಆಂಬುಲೆನ್ಸ್ ಅನುಸರಿಸಬೇಕಾದ ಮಾರ್ಗಸೂಚಿ ರಚನೆ +ಬೆಂಗಳೂರು,ಫೆ.15- 108 ಆರೋಗ್ಯ ಕವಚ ಆಂಬುಲೆನ್ಸ್‍ಗಳ ಸೇವೆಯನ್ನು ಗಡಿ ದಾಟುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಶೀಘ್ರವೇ ಸ್ಪಷ್ಟ ನಿಯಮಾವಳಿ ರೂಪಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. +ವಿಧಾನಸಭೆ ಪ್ರಶ್ನೋತ್ತರದ ಅವಧಿಯಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಡಾ.ಭರತ್ ಶೆಟ್ಟಿ ಅವರು ಪ್ರಶ್ನೆ ಕೇಳಿ ಸೂರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು ಎಂದು ಮನವಿ ಮಾಡಿದರು. ಜೊತೆಗೆ 108 ಆಂಬುಲೆನ್ಸ್‍ಗಳು ಜಿಲ್ಲಾ ಗಡಿ ದಾಟಬಾರದು ಎಂದು ಹೇಳಲಾಗುತ್ತಿದೆ. ನನ್ನ ಕ್ಷೇತ್ರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಶವ ಸಾಗಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ಗಡಿ ಭಾಗದಲ್ಲಿ ಆಂಬುಲೆನ್ಸ್ ಅನ್ನು ಬದಲಾವಣೆ ಮಾಡಬೇಕಾಯಿತು ಎಂದು ವಿವರಿಸಿದರು. +ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಆಂಬುಲೆನ್ಸ್ ಪ್ರಯಾಣ ಮಿತಿಯನ್ನು 80 ಕಿ.ಮೀ.ಗೆ ಸೀಮಿತಗೊಳಿಸಲಾಗಿದೆ. ತುರ್ತು ಸಂದರ್ಭದಲ್ಲಿ ವಿನಾಯಿತಿ ನೀಡಲು ಮಾರ್ಗಸೂಚಿಗಳನ್ನು ರೂಪಿಸಿ ಎಂದು ಸಲಹೆ ನೀಡಿದರು. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ಉತ್ತರ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಂಬುಲೆನ್ಸ್ ಸೇವೆ ದುರುಪಯೋಗವಾಗಬಾರದು ಎಂಬ ಕಾರಣಕ್ಕಾಗಿ ಗಡಿಮಿತಿಯನ್ನು ನಿಗದಿ ಪಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ವಿನಾಯಿತಿ ನೀಡುವ ಕುರಿತು ಚರ್ಚೆ ಮಾಡುತ್ತೇವೆ. ಸದ್ಯಕ್ಕೆ 715 ಆಂಬುಲೆನ್ಸ್‍ಗಳು ಮಾತ್ರ 108 ಆರೋಗ್ಯ ಕವಚ ಸೇವೆಯಲ್ಲಿವೆ. ಈ ಪರಿಸ್ಥಿತಿಯಲ್ಲಿ ಸೂರತ್ಕಲ್‍ಗೆ ಹೆಚ್ಚುವರಿ ಆಂಬುಲೆನ್ಸ್ ನೀಡಲು ಸಾಧ್ಯವಿಲ್ಲ. ಆರೋಗ್ಯ ಕವಚಕ್ಕಾಗಿ ಹೊಸ ಟೆಂಡರ್ ಕರೆಯಲು ಸಿದ್ಧತೆ ನಡೆಸಲಾಗಿದೆ. ಆ ವೇಳೆ ಹೆಚ್ಚುವರಿ ಆಂಬುಲೆನ್ಸ್‍ಗಳ ಕಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_237_12.txt b/eesanje/url_46_237_12.txt new file mode 100644 index 0000000000000000000000000000000000000000..bccceb0f3c8915ee2eb28450c4734926b77bbdd9 --- /dev/null +++ b/eesanje/url_46_237_12.txt @@ -0,0 +1,9 @@ + & ಹೊಸ ಕಾರ್ಡ್‍ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ +ಬೆಂಗಳೂರು,ಫೆ.15- ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳಿಗೆ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಸ್ತಾವ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. +ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು (ಬಿಪಿಎಲ್) ಪಡೆಯಲು ಸಾಕಷ್ಟು ನಿಯಮಗಳನ್ನು ರೂಪಿಸಲಾಗಿದೆ. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಜಿಎಸ್‍ಟಿ, ಆದಾಯ ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರಪ್ರದೇಶಗಳಲ್ಲಿ ಸಾವಿರ ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತಕ್ಕಾಗಿ ಹೊಂದಿರುವ ಕುಟುಂಬಗಳು ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಹೊರತುಪಡಿಸಿ 4 ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳನ್ನೂ ಬಿಪಿಎಲ್ ವ್ಯಾಪ್ತಿಯಿಂದ ಹೊರಗಿಡಲಾಗಿದೆ. +ಕುಟುಂಬದ ಆದಾಯ 1.20 ಲಕ್ಷ ರೂ.ಗಿಂತ ಹೆಚ್ಚಿದ್ದರೆ ಅವರಿಗೂ ಬಿಪಿಎಲ್‍ಗೆ ಅವಕಾಶವಿಲ್ಲ ಎಂದರು.ಈ ಹಿಂದಿನ ಸರ್ಕಾರದ ಅವಧಿಯಲ್ಲಿ 2.95 ಲಕ್ಷ ಅರ್ಜಿಗಳನ್ನು ಎಪಿಎಲ್ ಹಾಗೂ ಬಿಪಿಎಲ್‍ಗಾಗಿ ಸ್ವೀಕರಿಸಲಾಗಿತ್ತು. ಚುನಾವಣಾ ಕಾರಣಕ್ಕೆ ಹೊಸಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಿದ್ದರಿಂದ ಅರ್ಜಿಗಳು ಬಾಕಿ ಉಳಿದಿದ್ದವು. ಈವರೆಗೂ ಅವುಗಳ ಪೈಕಿ 57 ಸಾವಿರ ಅರ್ಜಿಗಳಿಗೆ ಕಾರ್ಡ್ ನೀಡಲಾಗಿದೆ. ಬಾಕಿ ಇರುವ ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ಆಯುಕ್ತರು ಮತ್ತು ಉಪನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ ಮಾರ್ಚ್ 31ರೊಳಗೆ ಇತ್ಯರ್ಥಪಡಿಸಲು ಗಡುವು ನೀಡಲಾಗಿದೆ. +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ಬಳಿಕ ಹೊಸ ಕಾರ್ಡ್‍ಗಳಿಗೆ ಎಲ್ಲಾ ಶಾಸಕರ ಬೇಡಿಕೆಯಂತೆ ಏಪ್ರಿಲ್ 1 ರಿಂದಲೇ ಅರ್ಜಿ ಸ್ವೀಕರಿಸಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು 1 ತಿಂಗಳೊಳಗಾಗಿ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಅಗತ್ಯಕ್ಕನುಗುಣವಾಗಿ ಸ್ವೀಕರಿಸಲಾದ 744 ಅರ್ಜಿಗಳಿಗೂ ಪಡಿತರ ಚೀಟಿಗಳನ್ನು ನೀಡಲಾಗಿದೆ. ಇಂತಹ ಅರ್ಜಿಗಳನ್ನು ವಾರದೊಳಗಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು. +ಅನ್ನಭಾಗ್ಯ ಯೋಜನೆಯಡಿ ನಗದು ಜಮಾವಣೆಗೊಳ್ಳುತ್ತಿದ್ದು, ಶೇ.95 ರಷ್ಟು ಜನರಿಗೆ ಸೌಲಭ್ಯ ಸಿಕ್ಕಿದೆ. ತಾಂತ್ರಿಕ ಕಾರಣದಿಂದ ಶೇ.5 ರಷ್ಟು ಮಾತ್ರ ವ್ಯತ್ಯಾಸವಾಗಿದೆ. ಈ ಹಿಂದೆ ಮೂಡಿಗೆರೆ ಕ್ಷೇತ್ರದಲ್ಲಿ 599 ಜನ 4 ಚಕ್ರದ ವಾಹನ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಿಪಿಎಲ್‍ನಿಂದ ಕೈಬಿಡಲಾಗಿತ್ತು. ಅವರಿಗೆ ಮತ್ತೆ ಬಡತನ ರೇಖೆಯ ಒಳಗಿನ ಕಾರ್ಡ್ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಸರ್ಕಾರ ರಾಜ್ಯಪಾಲರ ಭಾಷಣದಲ್ಲಿ 1.20 ಕೋಟಿ ಕುಟುಂಬಗಳು ಬಿಪಿಎಲ್‍ನಿಂದ ಹೊರಗೆ ಬಂದಿದ್ದಾರೆ ಎಂದು ತಿಳಿಸಲಾಗಿದೆ. ಅದರ ಹೊರತಾಗಿಯೂ ನಾವಿಲ್ಲಿ ಬಿಪಿಎಲ್ ಕಾರ್ಡ್‍ಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಅದರ ಅರ್ಥ ಪಂಚಖಾತ್ರಿ ಯೋಜನೆಗಳು ವೈಫಲ್ಯವಾಗಿವೆ ಎಂದಲ್ಲವೇ ಎಂದು ಪ್ರಶ್ನಿಸಿದರು. ವಿರೋಧಪಕ್ಷದ ನಾಯಕ ಆರ್.ಅಶೋಕ್, ಅರಗ ಜ್ಞಾನೇಂದ್ರ, ಕೆ.ಎಸ್.ಬಸಂತಪ್ಪ ಸೇರಿದಂತೆ ಹಲವು ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಸಲಹೆ ನೀಡಿದರು. \ No newline at end of file diff --git a/eesanje/url_46_237_2.txt b/eesanje/url_46_237_2.txt new file mode 100644 index 0000000000000000000000000000000000000000..dbbc53a8c560f318b486144991a464436146f55e --- /dev/null +++ b/eesanje/url_46_237_2.txt @@ -0,0 +1,10 @@ +ಯುವತಿಯ ಫೋಟೋ ಬಳಸಿಕೊಂಡು ಜೈಲಿನಿಂದಲೇ ರೌಡಿ ಬ್ಲಾಕ್‍ಮೇಲ್ +ಬೆಂಗಳೂರು, ಫೆ.15- ಯುವತಿಯ ಫೋಟೋ ಬಳಸಿಕೊಂಡು ಬೇರೆ ಯಾರದ್ದೊ ನಗ್ನ ದೇಹಕ್ಕೆ ಅಳವಡಿಸಿ ವಿಡಿಯೋಗಳನ್ನು ಸೃಷ್ಟಿಸಿ ಅವುಗಳನ್ನು ಬಳಸಿಕೊಂಡು ಹಣಕ್ಕಾಗಿ ಪೀಡಿಸುತ್ತಿದ್ದ ರೌಡಿ ಹಾಗೂ ಆತನ ಸಹಚರನ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿಯ ತಾಯಿ ದೂರು ನೀಡಿದ್ದಾರೆ. +ಜೈಲಿನಲ್ಲಿರುವ ರೌಡಿ ಮನು ಅಲಿಯಾಸ್ ಕೆಂಚ ಎಂಬಾತ ಕಳೆದ ಆಗಸ್ಟ್‍ನಲ್ಲಿ ಯುವತಿ ತಾಯಿಗೆ ದೂರವಾಣಿ ಕರೆ ಮಾಡಿ ನಿಮ್ಮ ಮಗಳ ಬೆತ್ತಲೆ ಫೋಟೋಗಳು ನನ್ನ ಬಳಿ ಇವೆ. ನೀವು 40 ಸಾವಿರ ಹಣ ಕೊಡದಿದ್ದರೆ ಆ ಫೋಟೋಗಳನ್ನು ನಿನ್ನ ಅಳಿಯನಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಯುವತಿಯ ತಾಯಿ ರೌಡಿ ಕೆಂಚ ಹೇಳಿದ ಚೋಟು ಎಂಬಾತನ ಖಾತೆಗೆ ಆನ್‍ಲೈನ್ ಮೂಲಕ 20 ಸಾವಿರ ಹಣ ಹಾಗೂ ಮತ್ತೊಬ್ಬನಿಗೆ 20 ಸಾವಿರ ಹಣವನ್ನು ಹಾಕಿಸಿದ್ದಾರೆ. +ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ +ಫೆ. 9ರಂದು ಮತ್ತೆ ಯುವತಿ ತಾಯಿಯ ಮೊಬೈಲ್‍ಗೆ ಕಾರ್ತಿಕ್ ಎಂಬಾತ ವಾಟ್ಸಾಪ್ ಕಾಲ್ ಮಾಡಿ ನಾನು ಮನು ಸ್ನೇಹಿತ ನಿಮ್ಮ ಮಗಳ ಫೋಟೊಗಳು ಮತ್ತು ವಿಡಿಯೋ ನಮ್ಮ ಬಳಿ ಇವೆ. ಮನು ನಿಮ್ಮ ಬಳಿ 5 ಲಕ್ಷ ಹಣ ಕೇಳಿದ್ದು, ನೀವು ಹಣ ಕೊಡದಿದ್ದರೆ ನಿಮ್ಮ ಮಗಳ ಫೋಟೊ ಮತ್ತು ವಿಡಿಯೋಗಳನ್ನು ನಿಮ್ಮ ಅಳಿಯನಿಗೆ ಕಳುಹಿಸುವುದಾಗಿ ಬೇಡಿಕೆ ಇಟ್ಟಿದ್ದಾನೆ. +ಮತ್ತೆ ಕರೆ ಮಾಡಿ ನೀವು ನಾನು ಹೇಳುವ ನಂಬರ್‍ಗೆ ಕರೆ ಮಾಡಿ ಆತನ ಕೈಯಲ್ಲಿ ಹಣ ಕಳುಹಿಸುವಂತೆ ಬೆದರಿಕೆವೊಡ್ಡಿದ್ದಾನೆ. ಮತ್ತೆ ಫೆ.12ರಂದು ರೌಡಿ ಮನು, ಸ್ನೇಹಿತ ಕಾರ್ತಿಕ್ ಮತ್ತು ಆತನ ಕಡೆಯ ಹುಡುಗರು ಹಲವಾರು ಬಾರಿ ವಾಟ್ಸಪ್ ಕರೆಗಳನ್ನು ಮತ್ತು ಫೇಸ್‍ಬುಕ್ ಮೆಸೆಂಜರ್ ಕಾಲ್‍ಗಳನ್ನು ಮಾಡಿ ಅವಾಚ್ಯವಾಗಿ ಬೈಯ್ದು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. +ಪದೇ ಪದೇ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿರುವ ರೌಡಿ ಮನು ಅಲಿಯಾಸ್ ಕೆಂಚ, ಆತನ ಸ್ನೇಹಿತ ಕಾರ್ತಿಕ್ ಹಾಗೂ ಆತನ ಸಹಚರರು ನನ್ನ ಮಗಳ ಮುಖ ಇರುವ ಫೋಟೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿಕೊಂಡು ಅವುಗಳನ್ನು ತಮ್ಮ ಬಳಿ ಇಟ್ಟುಕೊಂಡು ನನಗೆ ಮತ್ತು ಮಗಳಿಗೆ ಕಳುಹಿಸಿ ನಮ್ಮಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಮಾನಸಿಕವಾಗಿ ಹಿಂಸೆ ನೀಡುತ್ತಿರುವ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿಯ ತಾಯಿ ಯಲಹಂಕ ನ್ಯೂಟೌನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. +ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್ +ಸಿಸಿಬಿಗೆ ವರ್ಗಾವಣೆ:ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಿದ್ದಾರೆ. +ಜೈಲಿನಲ್ಲಿ ಮೊಬೈಲ್ ಬಳಕೆ:ಕಾರಾಗೃಹಗಳಲ್ಲಿರುವ ಖೈದಿಗಳ ಬಳಿ ಮೊಬೈಲ್ ಹೇಗೆ ಬಂತು ಎಂಬುವುದು ನಿಗೂಢವಾಗಿದೆ. ಜೈಲಿನಲ್ಲಿದ್ದುಕೊಂಡು ಮೊಬೈಲ್ ಫೋನ್ ಉಪಯೋಗಿಸಿ ಹೊರಗಿನವರಿಗೆ ಬೆದರಿಕೆ ಹಾಕುವುದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಎಷ್ಟೇ ಕ್ರಮ ಕೈಗೊಂಡರು ಸಾಧ್ಯವಾಗದಿರುವುದು ಈ ಪ್ರಕರಣವೇ ಸಾಕ್ಷಿ. ಇನ್ನು ಮುಂದಾದರೂ ಕಾರಾಗೃಹಗಳಲ್ಲಿರುವ ಖೈದಿಗಳ ಬಗ್ಗೆ ಜೈಲು ಸಿಬ್ಬಂದಿ ಹದ್ದಿನ ಕಣ್ಣಿಟ್ಟು ಅವರ ಚಲನವಲನ ಗಮನಿಸಿದರೆ ಮುಂದೆ ನಡೆಯಬಹುದಾದ ದುಷ್ಕøತ್ಯಗಳನ್ನು ತಡೆಯಬಹುದಾಗಿದೆಂಬುವುದು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. \ No newline at end of file diff --git a/eesanje/url_46_237_3.txt b/eesanje/url_46_237_3.txt new file mode 100644 index 0000000000000000000000000000000000000000..cd67fec5158b2fe80a695d3adcad5e3c1f1cd7c2 --- /dev/null +++ b/eesanje/url_46_237_3.txt @@ -0,0 +1,10 @@ +ಲೋಕಸಭಾ ಚುನಾವಣೆ : ಬೆಂಗಳೂರಿನಿಂದ ರಾಜೀವ್ ಚಂದ್ರಶೇಖರ್ ಸ್ಪರ್ಧೆ..? +ನವದೆಹಲಿ,ಫೆ.15- ಕೇಂದ್ರ ಐಟಿ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಬೆಂಗಳೂರು ಉತ್ತರ ಇಲ್ಲವೇ ದಕ್ಷಿಣ ಲೋಕಸಭಾ ಕ್ಷೇತ್ರದ ಒಂದು ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. +ರಾಜೀವ್ ಚಂದ್ರಶೇಖರ್ ಅವರ ರಾಜ್ಯಸಭೆ ಅವಧಿ ಬರುವ ಏಪ್ರಿಲ್‍ನಲ್ಲಿ ಪೂರ್ಣಗೊಳ್ಳುತ್ತಿದ್ದರೂ ಅವರನ್ನು ಮತ್ತೊಂದು ಅವಧಿಗೆ ರಾಜ್ಯಸಭೆ ಅಭ್ಯರ್ಥಿಯನ್ನಾಗಿಸದಿರಲು ತೀರ್ಮಾನಿಸಿರುವುದು ಇದೇ ಕಾರಣಕ್ಕೆ ಎಂದು ವರದಿಯಾಗಿದೆ. ಬರುವ ಏಪ್ರಿಲ್‍ನಲ್ಲಿ ತಮ್ಮ ರಾಜ್ಯಸಭೆಯ ಅವ ಪೂರ್ಣಗೊಳ್ಳಲಿರುವ ಏಳು ಕೇಂದ್ರ ಸಚಿವರನ್ನು ಮರು ನಾಮಕರಣ ಮಾಡದಿರಲು ನಿರ್ಧರಿಸಿರಿವ ಭಾರತೀಯ ಜನತಾ ಪಕ್ಷದ ತೀರ್ಮಾನದ ಹಿಂದೆ ರಾಜಕೀಯ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ. +ರಾಜ್ಯಸಭೆಯ ಅವಧಿ ಏಪ್ರಿಲ್‍ನಲ್ಲಿ ಕೊನೆಗೊಳ್ಳುವ ಏಳು ಕೇಂದ್ರ ಸಚಿವರನ್ನು ಆಡಳಿತಾರೂಢ ಬಿಜೆಪಿಯಿಂದ ಮರು ನಾಮನಿರ್ದೇಶನ ಮಾಡದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸಲು ಪ್ರಧಾನಿ ನರೇಂದ್ರ ಮೋದಿ ತೀರ್ಮಾನಿಸಿದ್ದಾರೆ ಎಂಬ ಊಹಾಪೋಹಗಳು ಹುಟ್ಟಿಕೊಂಡಿವೆ. +ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ +ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (ಗುಜರಾತ್), ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (ಮಧ್ಯಪ್ರದೇಶ), ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್ (ಕರ್ನಾಟಕ) ಸೇರಿದ್ದಾರೆ. ಪರಿಸರ ಸಚಿವ ಭೂಪೇಂದರ್ ಯಾದವ್ (ರಾಜಸ್ಥಾನ), ಮತ್ತು ಮೀನುಗಾರಿಕಾ ಸಚಿವ ಪರ್ಷೋತ್ತಮ್ ರೂಪಾಲಾ (ಗುಜರಾತ್), ಹಾಗೆಯೇ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಮತ್ತು ಕಿರಿಯ ವಿದೇಶಾಂಗ ಸಚಿವರೂ ಮಹಾರಾಷ್ಟ್ರವನ್ನು ಪ್ರತಿನಿಸುತ್ತಿದ್ದಾರೆ.ಎಲ್ಲಾ ಏಳು ಮಂದಿಯನ್ನು ಈಗ ವಿವಿಧ ರಾಜ್ಯಗಳ ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ಮಾಹಿತಿ ನೀಡಿವೆ. +ಪ್ರಧಾನ್ ಅವರನ್ನು ಅವರ ತವರು ರಾಜ್ಯವಾದ ಒಡಿಶಾದ ಸಂಬಲ್‍ಪುರ ಅಥವಾ ಧೆಕ್ನಾಲ್‍ನಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ಸೂಚಿಸುತ್ತವೆ, ಆದರೆ ಯಾದವ್ ರಾಜಸ್ಥಾನದ ಅಲ್ವಾರ್ ಅಥವಾ ಮಹೇಂದ್ರಗಢದಿಂದ ಸ್ರ್ಪಸಬಹುದು ಮತ್ತು ಚಂದ್ರಶೇಖರ್ ಬೆಂಗಳೂರಿನ ಉತ್ತರ, ದಕ್ಷಿಣ, ಕೇಂದ್ರ ಇಲ್ಲಿವೇ ಗ್ರಾಮಾಂತರ ಕ್ಷೇತ್ರದ ನಾಲ್ಕು ಸ್ಥಾನಗಳಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸುಬಹುದು ಎಂದು ತಿಳಿದುಬಂದಿದೆ. +ಅದೇ ರೀತಿ, ಮಾಂಡವಿಯಾ ಗುಜರಾತ್‍ನ ಭಾವನಗರ ಅಥವಾ ಸೂರತ್‍ನಿಂದ ಸ್ರ್ಪಸಬಹದು ಆದರೆ ರೂಪಾಲಾ ರಾಜ್‍ಕೋಟ್ ಅನ್ನು ಪಡೆಯಬಹುದು. ಮುರಳೀಧರನ್ ಅವರು ತವರು ರಾಜ್ಯವಾದ ಕೇರಳದಿಂದ ಕಣಕ್ಕಿಳಿಯಬಹುದು; ಬಿಜೆಪಿಗೆ ಅಲ್ಲಿ ಯಾವುದೇ ಅಸ್ತಿತ್ವವಿಲ್ಲ ಮತ್ತು ಅದರ ಅದೃಷ್ಟವನ್ನು ಪುನರುಜ್ಜೀವನಗೊಳಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ. +ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ +ಬಿಜೆಪಿ ಕೆಲವು ದೊಡ್ಡ ಹೆಸರುಗಳನ್ನು ಮಾತ್ರ ಉಳಿಸಿಕೊಂಡಿದೆ, ವಾಸ್ತವವಾಗಿ, ರಾಜ್ಯಸಭೆಯಿಂದ ಕೇವಲ ಇಬ್ಬರು ಕೇಂದ್ರ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (ಒಡಿಶಾ) ಮತ್ತು ಕಿರಿಯ ಮೀನುಗಾರಿಕಾ ಸಚಿವ ಎಲ್ ಮುರುಗನ್ (ಮಧ್ಯಪ್ರದೇಶ). ಎರಡು ಅಥವಾ ಅದಕ್ಕಿಂತ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ನಿರ್ಗಮಿತ ಸಂಸದರು ಪುನರಾವರ್ತನೆಯಾಗಿಲ್ಲ.ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಮಾತ್ರ ಇದಕ್ಕೆ ಹೊರತಾಗಿದ್ದಾರೆ. ಆದರೆ, ಅವರನ್ನು 2022ರಲ್ಲಿ ಕಾಂಗ್ರೆಸ್ ಗೆದ್ದ ಹಿಮಾಚಲ ಪ್ರದೇಶದಿಂದ ಗುಜರಾತ್‍ಗೆ ಸ್ಥಳಾಂತರಿಸಲಾಗಿದೆ. ಈ ವಾರ ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಸೇರಿದಂತೆ ಹೊಸ ಸೇರ್ಪಡೆಗಳಿಗೆ ಆದ್ಯತೆ ನೀಡಲಾಗಿದೆ. \ No newline at end of file diff --git a/eesanje/url_46_237_4.txt b/eesanje/url_46_237_4.txt new file mode 100644 index 0000000000000000000000000000000000000000..a3e92c3973fa08c953d89377e8ffce2f1a28d894 --- /dev/null +++ b/eesanje/url_46_237_4.txt @@ -0,0 +1,12 @@ +ಪರಿಷತ್‍ನಲ್ಲಿ ತೆರಿಗೆ ಕೋಲಾಹಲ ; ಆಡಳಿತ ಪ್ರತಿಪಕ್ಷಗಳ ವಾಕ್ಸಮರ +ಬೆಂಗಳೂರು,ಫೆ.15- ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನಲ್ಲಿ ಭಾರೀ ಅನ್ಯಾಯವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಮಾತು ವಿಧಾನಪರಿಷತ್‍ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ, ಕೋಲಾಹಲ, ಮಾತಿನ ಚಕಮಕಿ, ಆರೋಪ-ಪ್ರತ್ಯಾ ರೋಪಗಳು ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಯು.ಬಿ.ವೆಂಕಟೇಶ್ ಅವರು ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ ಪಾಲಿನ ಮೊತ್ತದ ಬಗ್ಗೆ ಪ್ರಶ್ನೆ ಕೇಳಿದ್ದರು. +ಇದಕ್ಕೆ ಸದನದಲ್ಲಿ ಸುದೀರ್ಘ ಉತ್ತರ ನೀಡಿದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರದಿಂದ ನಮಗೆ ಒಟ್ಟು 11,495 ಕೋಟಿ ಹಣ ಬರಬೇಕು. ಆದರೆ ಒಂದೇ ಒಂದು ರೂಪಾಯಿಯೂ ಕೊಡದಿರುವ ಕಾರಣ ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಿದೆ ಎಂದು ಆರೋಪಿಸಿದರು. +ಈ ವೇಳೆ ಬಿಜೆಪಿ ಸದಸ್ಯ ರುದ್ರಗೌಡ ಅವರು ಎದ್ದುನಿಂತು ಮಾತನಾಡಲು ಮುಂದಾಗುತ್ತಿದ್ದಂತೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ನಾನಿನ್ನು ಉತ್ತರವನ್ನೇ ಮುಗಿಸಿಲ್ಲ. ಏಯ್ ಕುಳಿತುಕೊಳ್ಳಿ ಎಂದು ಏರಿದ ಧ್ವನಿಯಲ್ಲಿ ಗದರಿಸಲು ಮುಂದಾದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಈ ರೀತಿ ಮಾತನಾಡುವುದು ಸರಿಯಲ್ಲ. ಸದಸ್ಯರಿಗೆ ನಿರ್ದೇಶನ ನೀಡುವ ಅಧಿಕಾರ ಸಭಾಪತಿಗಳಿಗೆ ಮಾತ್ರ ಇರುತ್ತದೆ. ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಮುಖ್ಯಮಂತ್ರಿ ಬೆಂಬಲಕ್ಕೆ ಕಾಂಗ್ರೆಸ್ ಸದಸ್ಯರು ನಿಂತರೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಒಂದಾಗಿ ಕಾಂಗ್ರೆಸ್ ವಿರುದ್ಧ ಮುಗಿಬಿದ್ದರು. ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಮಾತನಾಡಿ, ಒಂದು ಪ್ರಶ್ನೆಗೆ 5ಕ್ಕಿಂತ ಹೆಚ್ಚು ನಿಮಿಷ ಸಮಯ ಉತ್ತರ ನೀಡುವಂತಿಲ್ಲ. ಇದು ಉತ್ತರವೋ ಇಲ್ಲ ಭಾಷಣವೋ, ಅವರ ಪ್ರತಿಯೊಂದು ಮಾತಿನಲ್ಲೂ ಕೇಂದ್ರ ಸರ್ಕಾರವನ್ನು ಗುರಿಯಾಗಿಟ್ಟುಕೊಂಡೇ ಮಾತನಾಡುತ್ತಿದ್ದಾರೆ. ನಮ್ಮ ಬಳಿಯೂ ದಾಖಲೆಗಳಿವೆ. ಮುಖ್ಯಮಂತ್ರಿಗಳು ಸುಳ್ಳು ಹೇಳಿ ಸದನದ ದಿಕ್ಕು ತಪ್ಪಿಸುವುದು ಬೇಡ ಎಂದು ಆಗ್ರಹಿಸಿದರು. +ಅಂತರ್ಧರ್ಮೀಯ ಸಾಮರಸ್ಯಕ್ಕೆ ಸಾಕ್ಷಿಯಾದ ಸ್ವಾಮಿ ನಾರಾಯಣ ದೇಗುಲ +ನಿಮ್ಮ ಬಳಿ ದಾಖಲೆಗಳಿದ್ದರೆ ಹಣಕಾಸು ಆಯೋಗಕ್ಕೆ ಕೊಡಿ. ನೀವು ಏಳು ಕೋಟಿ ಕನ್ನಡಿಗರ ಪರವಾಗಿ ಇದ್ದೀರೋ ಇಲ್ಲವೇ ಕನ್ನಡಿಗರ ವಿರೋಧಿಗಳೋ? ಮೊದಲು ಅದನ್ನು ಬಹಿರಂಗಪಡಿಸಿ. ಸತ್ಯ ಸತ್ಯವೇ. ಸುಳ್ಳು ಸುಳ್ಳೇ. ನೀವು ಎದ್ದು ನಿಂತು ಮಾತನಾಡಿದರೆ ನಾವು ಬಾಯಿಮುಚ್ಚಿಕೊಂಡು ಕೂರುವುದಿಲ್ಲ. ಇಂತಹ ಗೂಂಡಾಗಿರಿ ವರ್ತನೆಗೆ ನಾನು ಜಗ್ಗುವುದಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. +ನಾವು ತೆರಿಗೆ ಪಾಲನಷ್ಟೇ ಕೇಳುತ್ತಿದ್ದೇವೆ. ಕೇಂದ್ರ ಸರ್ಕಾರದ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿಲ್ಲ. ಇದರಲ್ಲಿ ಯಾವುದೇ ರಾಜಕೀಯವೂ ಇಲ್ಲ. ನಮ್ಮ ತೆರಿಗೆ ಪಾಲಿನ ಹಣವನ್ನು ನಮಗೆ ಕೊಡಿ ಎಂದು ಕೇಳುವುದು ತಪ್ಪೇ? ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಕೊಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ಕೊಟ್ಟಿದ್ದರು. ಸಾಲದಕ್ಕೆ ಮಾಜಿ ಸಿಎಂ ಬೊಮ್ಮಾಯಿ ಅವರು ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದರು. ಇದುವರೆಗೂ ಒಂದೇ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು. +ಕರ್ನಾಟಕದ ಜನತೆ ನಿಮಗೆ ಛೀ, ತೂ ಎಂದು ಉಗಿಯುತ್ತಿದ್ದಾರೆ. ನೀವು ಎಷ್ಟೇ ಸುಳ್ಳು ಹೇಳಿದರೂ ಜನ ನಂಬುವುದಿಲ್ಲ. ಸದನದಲ್ಲಿ ನೀವು ಜೋರು ಮಾಡಿದ ತಕ್ಷಣ ನಾನು ಬಾಯಿ ಮುಚ್ಚಿಕೊಂಡು ಕೂರುವುದಿಲ್ಲ. ಸತ್ಯವನ್ನು ಯಾರಿಂದಲೂ ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಇನ್ನು ಎಷ್ಟು ದಿನ ಇಂಥ ಸುಳ್ಳು ಹೇಳಿಕೊಂಡು ತಿರುಗುತ್ತೀರಿ. ನಿಮ್ಮ ಗೂಂಡಾ ವರ್ತನೆಗೆ ನಾನು ಸುಮ್ಮನಿರಬೇಕೇ? ಎಂದು ಪ್ರಶ್ನಿಸಿದರು. +ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ +ನಾವು ಯಾವುದೇ ವಿಷಯದಲ್ಲಿ ಚರ್ಚೆಗೆ ಸಿದ್ದರಿದ್ದೇವೆ. ಬಿಜೆಪಿಯವರಿಗೆ ಸತ್ಯ ಹೇಳಿದರೆ ಆಗುವುದಿಲ್ಲ. ಅವರದ್ದು ಸುಳ್ಳಿನ ಕಂತೆ ಎಂದು ಟೀಕಾ ಪ್ರಹಾರ ನಡೆಸಿದರು. ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ, ಗೂಂಡಾಗಿರಿ ಎಂಬ ಪದ ಬಳಸಿದ್ದು ಸರಿಯಲ್ಲ. ವಿಧಾನಸೌಧದಲ್ಲಿ ತೊಡೆ ತಟ್ಟಿದವರು ಯಾರು ಎಂಬುದು ಗೊತ್ತಿದೆ. ನಮ್ಮ ಬಳಿಯೂ ದಾಖಲೆಗಳಿವೆ. ನಾವು ಚರ್ಚೆಗೆ ಸಿದ್ದ ಎಂದು ತಿರುಗೇಟು ನೀಡಿದರು. +ಈ ವೇಳೆ ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಘೋಷಣೆ ಕೂಗಿದರು. ಆಗ ಸಭಾಪತಿಯವರು ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಮಾತನಾಡಲು ಅವಕಾಶ ಕೊಡುತ್ತಿದ್ದಂತೆ, ನಾನು ಇನ್ನು ಉತ್ತರ ಕೊಡಬೇಕು. ಪ್ರಶ್ನೆ ಕೇಳಿದವರು ಸುಮ್ಮನಿದ್ದಾರೆ. ನೀವು ಅದ್ಹೇಗೆ ಮಾತನಾಡಲು ಅವಕಾಶ ಕೊಡುತ್ತೀರಿ ಎಂದು ಸಭಾಪತಿಗಳನ್ನು ಪ್ರಶ್ನಿಸುತ್ತಿದ್ದಂತೆ ಸದನದಲ್ಲಿ ಮತ್ತೆ ಗದ್ದಲ ಉಂಟಾಯಿತು. ಬಳಿಕ ಸಭಾಪತಿ ಸದನವನ್ನು ಕೆಲಕಾಲ ಮುಂದೂಡಿದರು. \ No newline at end of file diff --git a/eesanje/url_46_237_5.txt b/eesanje/url_46_237_5.txt new file mode 100644 index 0000000000000000000000000000000000000000..fa99154eb559f95fbb88faa8ec2a78bbd08fc7f7 --- /dev/null +++ b/eesanje/url_46_237_5.txt @@ -0,0 +1,4 @@ +ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆ +ಬೀದರ್,ಫೆ.15-ನಿವೃತ್ತರಾದ ಶಿಕ್ಷಕಿಗೆ ನಿವೃತ್ತಿ ಸೌಲಭ್ಯ ಪಡೆಯುವ ಕಡತಕ್ಕೆ ಸಹಿ ಹಾಕಲು 3 ಲಕ್ಷ ಲಂಚ ಕೇಳಿದ್ದ ಇಲ್ಲಿನ ಶ್ರೀ ವಿವೇಕಾನಂದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಜ್ಞಾನ ವಿಷಯದ ಸಹಾಯಕ ಶಕ್ಷಕಿಯಾಗಿದ್ದ ಶಶಿಕಲಾ ಅವರು ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ್ದರು.ಈ ಸಂಬಂಧ ನಿವೃತ್ತಿ ಸೌಲಭ್ಯ ಪಡೆಯುವ ಕಡತಕ್ಕೆ ಸಹಿ ಹಾಕಲು ಶಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬ್ಳೆ (58) 3 ಲಕ್ಷ ಲಂಚ ಬೇಡಿಕೆ ಇಟ್ಟು ಒತ್ತಾಯಿಸಿದ್ದರು. +ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ +ಈ ಬಗ್ಗೆ ಶಶಿಕಲಾ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು ಅದರಂತೆ ಪ್ರಕರಣ ದಾಖಲಿಸಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್‍ಪೆಕ್ಟರ್ ಬಾಬ ಸಾಹೇಬ್ ಪಾಟೀಲ್ ಮತ್ತವರ ತಂಡ ಮುಖ್ಯ ಶಿಕ್ಷಕ ತುಕಾರಾಂ ಕಾಂಬ್ಳೆ 50 ಸಾವಿರ ನಗದು ಹಣ,1 ಲಕ್ಷರೂನ ಚೆಕ್ ಪಡೆಯುವಾಗ ರೆಡ್‍ಹ್ಯಾಂಡ್‍ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿ ಶಿಕ್ಷಕನನ್ನು ಬಂ„ಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ \ No newline at end of file diff --git a/eesanje/url_46_237_6.txt b/eesanje/url_46_237_6.txt new file mode 100644 index 0000000000000000000000000000000000000000..5eb8497273d352f3f862ed201bb01d2a79e54234 --- /dev/null +++ b/eesanje/url_46_237_6.txt @@ -0,0 +1,5 @@ +ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ +ಬೆಂಗಳೂರು,ಫೆ.15- ನಮ್ಮ ಪಕ್ಷದ ಮತಗಳು ನಷ್ಟವಾಗಬಾರದು ಎಂಬ ಕಾರಣಕ್ಕೆ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯನಾಯಕರ ಸಲಹೆ ಮೇರೆಗೆ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ನಮಗೆ ಗೆಲುವಿಗೆ ಅಗತ್ಯವಿರುವ ಮತಗಳ ಕೊರತೆಯಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ನಮಗೆ ಸಂಖ್ಯಾಬಲದ ಕೊರತೆ ಇರುವುದು ನಿಜ. ಚುನಾವಣೆಯಲ್ಲಿ ಯಾವ ನಿರ್ಧಾರ ಆಗಲಿದೆಯೋ ಕಾದು ನೋಡೋಣ. ಬಿಜೆಪಿಯ ಹೆಚ್ಚುವರಿ ಮತಗಳು ನಮಗೆ ದೊರೆಯಲಿವೆ. ಹೀಗಾಗಿ ಬಿಜೆಪಿ-ಜೆಡಿಎಸ್ ವತಿಯಿಂದ 2ನೇ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸಿದ್ದೇವೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_237_7.txt b/eesanje/url_46_237_7.txt new file mode 100644 index 0000000000000000000000000000000000000000..3746ade11d14afc8bd8f8ffab4e3521952673c01 --- /dev/null +++ b/eesanje/url_46_237_7.txt @@ -0,0 +1,5 @@ +ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ನಾಳೆ ಮತದಾನ +ಬೆಂಗಳೂರು,ಫೆ.15- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚುನಾವಣಾ ಸಿಬ್ಬಂದಿ ಇಂದು ಮಧ್ಯಾಹ್ನ ತಮ್ಮ ತಮ್ಮ ಮತಗಟ್ಟೆಗಳಿಗೆ ಮತಪೆಟ್ಟಿಗೆ, ಮತಪತ್ರ ಮೊದಲಾದ ಚುನಾವಣಾ ಸಾಮಗ್ರಿಗಳೊಂದಿಗೆ ತೆರಳಿದರು. ಮತದಾನವು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ಪೊಲೀಸ್ ಬಿಗಿಭದ್ರತೆಯನ್ನೂ ಸಹ ಒದಗಿಸಲಾಗಿದೆ. +ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಚುನಾವಣಾ ಕಣದಲ್ಲಿ ಕಾಂಗ್ರೆಸ್‍ನಿಂದ ಮಾಜಿ ಉಪ ಸಭಾಪತಿ ಪುಟ್ಟಣ್ಣ, ಎನ್‍ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ಸೇರಿದಂತೆ 9 ಅಭ್ಯರ್ಥಿಗಳಿದ್ದಾರೆ. ಪ್ರಾಶಸ್ತ್ಯದ ಮತವನ್ನು ಶಿಕ್ಷಕರು ಚಲಾಯಿಸಬೇಕಿದೆ. ಫೆ.20 ರಂದು ಮತ ಎಣಿಕೆ ಆರಂಭಗೊಳ್ಳಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಸೇರಿದ ನೋಂದಾಯಿತ ಶಿಕ್ಷಕರು ಮತದಾರರಾಗಿದ್ದಾರೆ. ಈ ಉಪ ಚುನಾವಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 43 ಮತಗಟ್ಟೆಗಳನ್ನು ತೆರೆಯಲಾಗಿದೆ. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ಈ ಉಪ ಚುನಾವಣೆ ನಡೆಯುವ 3 ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳು ಅನುದಾನಿತ ಹಾಗೂ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಅರ್ಹ ಶಿಕ್ಷಕ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನಾಳೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ರಾಜ್ಯಸರ್ಕಾರ ಆದೇಶಿಸಿದೆ. \ No newline at end of file diff --git a/eesanje/url_46_237_8.txt b/eesanje/url_46_237_8.txt new file mode 100644 index 0000000000000000000000000000000000000000..c2a7889a125ffd76c707e881e400554f07ddd985 --- /dev/null +++ b/eesanje/url_46_237_8.txt @@ -0,0 +1,16 @@ +ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ +ಬೆಂಗಳೂರು,ಫೆ.15- ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆ ಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಕಣಕ್ಕಿಳಿಸಿರುವ ಹಿನ್ನಲೆ ಪ್ರಮುಖ ಮೂರು ರಾಜಕೀಯ ಪಕ್ಷಗಳಿಗೆ ಅಡ್ಡ ಮತದಾನದ ಭೀತಿ ಎದುರಾಗಿದ್ದು, ಶಾಸಕರ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ದಟ್ಟವಾಗಿದೆ. ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಇಂದು ಕಾಂಗ್ರೆಸ್‍ನಿಂದ ನಾಸೀರ್ ಹುಸೇನ್, ಜಿ.ಸಿ.ಚಂದ್ರ ಶೇಖರ್, ಅಜಯ್ ಮಕಾನ್, ಬಿಜೆಪಿಯಿಂದ ನಾರಾಯಣ ಬಾಂಡೆಗೆ ಮತ್ತು ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಸಿದರು. +ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ಎಂ.ಕೆ.ವಿಶಾಲಾಕ್ಷಿಯವರಿಗೆ ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷದ ಪ್ರಮುಖರೊಂದಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಫೆ.20ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ನಾಮಪತ್ರ ಸಲ್ಲಿಸಿರುವ ನಾಲ್ಕು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆದು 5 ಗಂಟೆಯ ನಂತರ ಮತ ಎಣಿಕೆ ಪ್ರಾರಂಭವಾಗಿ ಫಲಿತಾಂಶ ಪ್ರಕಟಗೊಳ್ಳಲಿದೆ. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ಈಗಿನ ವಿಧಾನಸಭೆಯ ಚುನಾವಣೆಯ ಬಲಾಬಲದಲ್ಲಿ ಕಾಂಗ್ರೆಸ್ 3 ಹಾಗೂ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದಿತ್ತು. ಕೊನೆ ಕ್ಷಣದಲ್ಲಿ ಜೆಡಿಎಸ್ ತನ್ನ ನಿಲುವು ಬದಲಿಸಿ 5ನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಸಿರುವ ಕಾರಣ ಬಹುತೇಕ ಚುನಾವಣೆ ನಡೆಯುವುದು ಖಚಿತವಾಗಿದೆ. ರಾಜ್ಯಸಭೆಗೆ ಆಯ್ಕೆಯಾಗಬೇಕಾದರೆ ಓರ್ವ ಅಭ್ಯರ್ಥಿ ತಲಾ 45 ಮತಗಳನ್ನು ಪಡೆಯಬೇಕು. ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 135, ಬಿಜೆಪಿ 66, ಜೆಡಿಎಸ್ 19 ಹಾಗೂ ನಾಲ್ವರು ಪಕ್ಷೇತರ ಶಾಸಕರಿದ್ದಾರೆ. +ಈ ಹಿಂದೆ ಜೆಡಿಎಸ್‍ನ 7 ಮಂದಿ ಶಾಸಕರಿಂದ ಅಡ್ಡ ಮತದಾನ ನಡೆಸಿದ್ದ ಕಾಂಗ್ರೆಸ್‍ಗೆ ಪಾಠ ಕಲಿಸಲೇಬೇಕೆಂದೆ ಹಠಕ್ಕೆ ಬಿದ್ದಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ , ರಾಜ್ಯಸಭಾ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರಿಂದ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಾವು ರಂಗೇರುವಂತೆ ಮಾಡಿದ್ದಾರೆ. +ಅಡ್ಡಮತದಾನದ ಭೀತಿ:ಒಂದು ವೇಳೆ ಮತದಾನ ನಡೆದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಮೂರು ಪಕ್ಷಗಳಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಬಿಜೆಪಿ ವಿಧಾನಸಭೆಯಲ್ಲಿ 66 ಸದಸ್ಯರನ್ನು ಹೊಂದಿದ್ದು, ತನ್ನ ಅಧಿಕೃತ ಅಭ್ಯರ್ಥಿ ನಾರಾಯಣಸಾ ಬಾಂಡೆಗೆ ಮೊದಲ ಪ್ರಾಶಸ್ತ್ಯದಲ್ಲಿ 46 ಮತಗಳನ್ನು ಹಾಕಿಸಿದರೆ ಹೆಚ್ಚುವರಿಯಾಗಿ ಉಳಿಯುವ 20 ಮತಗಳನ್ನು ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಮತ ಹಾಕಲಿದೆ. +ಜೆಡಿಎಸ್ 19 ಸದಸ್ಯರನ್ನು ಹೊಂದಿದ್ದು, ಬಿಜೆಪಿಯ ಹೆಚ್ಚುವರಿ 20 ಮತಗಳು ಸೇರಿದರೆ 39 ಮತಗಳು ಕುಪೇಂದ್ರ ರೆಡ್ಡಿಗೆ ಬರಲಿದೆ. ಪಕ್ಷೇತರ ಶಾಸಕರಾದ ಜನಾರ್ಧನ ರೆಡ್ಡಿ(ಗಂಗಾವತಿ), ಲತಾ ಮಲ್ಲಿಕಾರ್ಜುನ (ಹರಪ್ಪನಹಳ್ಳಿ), ಪುಟ್ಟಸ್ವಾಮಿ ಗೌಡ(ಗೌರಿಬಿದನೂರು) ಹಾಗೂ ದರ್ಶನ್ ಪುಟ್ಟಣ್ಣಯ್ಯ(ಮೇಲುಕೋಟೆ) ಇವರಲ್ಲಿ ಎಷ್ಟು ಮಂದಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುತ್ತಾರೆ ಎಂಬುದರ ಮೇಲೆ ಕುಪೇಂದ್ರ ರೆಡ್ಡಿಯವರ ಸೋಲು ಗೆಲುವು ನಿಶ್ಚಿತವಾಗುತ್ತದೆ. +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ಒಂದು ವೇಳೆ ನಾಲ್ವರು ಪಕ್ಷೇತರ ಶಾಸಕರು ಜೆಡಿಎಸ್‍ಗೆ ಮತ ಚಲಾಯಿಸಿದರೆ ಕುಪೇಂದ್ರ ರೆಡ್ಡಿಯ ಗೆಲುವಿಗೆ ಮೂರು ಮತಗಳು ಬೇಕಾಗುತ್ತದೆ. ಕಾಂಗ್ರೆಸ್‍ನಲ್ಲಿ ಅಸಮಾಧಾನಗೊಂಡಿರುವ ಶಾಸಕರು ಏನಾದರೂ ಕೊನೆ ಕ್ಷಣದಲ್ಲಿ ಲಕ್ಷ್ಮಿಗೆ ತಲೆಬಾಗಿ ರೆಡ್ಡಿಗೆ ಜೈ ಎಂದರೆ ಕಾಂಗ್ರೆಸ್ ಅಕೃತ ಅಭ್ಯರ್ಥಿಗೆ ಸೋಲು ಕಟ್ಟಿಟ್ಟ ಬುತ್ತಿ.ರಾಜ್ಯಸಭೆ ಚುನಾವಣೆಯಲ್ಲೂ ಈ ಹಿಂದೆ ಅಡ್ಡ ಮತದಾನ ನಡೆದು ಹೈಡ್ರಾಮ ನಡೆದ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಮೂರು ಪಕ್ಷಗಳಿಗೆ ಕುದುರೆ ವ್ಯಾಪಾರ, ಅಡ್ಡ ಮತದಾನದ ಭಯ ಆರಂಭವಾಗಿದೆ.ಬಿಜೆಪಿಯ ಇಬ್ಬರು, ಜೆಡಿಎಸ್‍ನ ಓರ್ವ ಶಾಸಕರ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಏಕೆಂದರೆ ಈ ಮೂವರು ಶಾಸಕರು ಕಾಂಗ್ರೆಸ್ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. +224 ಶಾಸಕರು ಓಪನ್ ಬ್ಯಾಲೆಟ್ ಮೂಲಕ ಮತ ಚಲಾಯಿಸಬೇಕಾಗುತ್ತದೆ. ಓಪನ್ ಬ್ಯಾಲೆಟ್‍ನಲ್ಲಿ ನಡೆಯುವ ಮತದಾನವಾಗಿರುವುದರಿಂದ ಪಕ್ಷಗಳು ನೇಮಿಸುವ ಏಜೆಂಟರುಗಳಿಗೆ ಶಾಸಕರು ಮತದಾನಕ್ಕೂ ಮುನ್ನ ತಾವು ಯಾವ ಅಭ್ಯರ್ಥಿಗೆ ಮತ ಹಾಕುತ್ತಿದ್ದೇವೆ ಎಂಬುದನ್ನು ತೋರಿಸಿ ನಂತರವೇ ಮತ ಹಾಕಬೇಕು. ಒಂದು ವೇಳೆ ಏಜೆಂಟರಿಗೆ ತೋರಿಸದೆ ಹಾಕಿದ್ದಲ್ಲಿ ಅಸಿಂಧುಗೊಳ್ಳುವ ಸಾಧ್ಯತೆ ಇದೆ. +ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ವಿಪ್ ಅನ್ವಯವಾಗುವುದಿಲ್ಲ. ಒಂದು ವೇಳೆ ಅಡ್ಡ ಮತದಾನ ಮಾಡಿದರೆ ಅದು ಏಜೆಂಟರಿಗೆ ಗೊತ್ತಾಗಲಿದ್ದು, ಅಂಥ ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ವಿಧಾನಸಭೆಯ ಸಭಾಧ್ಯಕ್ಷರಿಗೆ ದೂರು ನೀಡಲು ಅವಕಾಶವಿರುತ್ತದೆ.ಈ ಹಿಂದೆಯೂ ಜೆಡಿಎಸ್‍ನಿಂದ ಗೆದ್ದಿದ್ದ ಏಳು ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಅಂದು ದೂರು ಕೊಟ್ಟಿತ್ತಾದರೂ ವಿಧಾನಸಭಾಧ್ಯಕ್ಷರು ಯಾವುದೇ ಕಾನೂನು ಕ್ರಮ ಜರುಗಿಸಿರಲಿಲ್ಲ. +ಅಮೆರಿಕದಲ್ಲಿ ಭಾರತೀಯ ಸೇನಾ ಮುಖ್ಯಸ್ಥ +ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಲತಾ ಮಲ್ಲಿಕಾರ್ಜುನ್, ದರ್ಶನ್ ಪುಟ್ಟಣ್ಣಯ್ಯ ಕೈ ಅಭ್ಯರ್ಥಿಗೆ ಮತ ಚಲಾಯಿಸಿದರೆ ಕುಪೇಂದ್ರ ರೆಡ್ಡಿ ಇನ್ನು ಹೆಚ್ಚುವರಿಯಾಗಿ ಆರು ಮತಗಳನ್ನು ಪಡೆಯಬೇಕಾಗುತ್ತದೆ. ಒಂದು ವೇಳೆ ಜಾತಿಯ ಕಾರಣಕ್ಕಾಗಿ ಜನಾರ್ಧನ ರೆಡ್ಡಿ ಹಾಗೂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿ ಲತಾ ಮಲ್ಲಿಕಾರ್ಜುನ್ ಜೆಡಿಎಸ್ ಕೈ ಹಿಡಿದರೆ ಕಾಂಗ್ರೆಸ್‍ನಲ್ಲೂ ಅಸಮಾಧಾನಗೊಂಡಿರುವ ಶಾಸಕರು ಅಡ್ಡ ಮತದಾನ ಮಾಡಿದರೂ ಅಚ್ಚರಿ ಇಲ್ಲ. +ಇದೀಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದೇ ಎಲ್ಲ ಪಕ್ಷದವರಿಗೂ ತಲೆನೋವಾಗಿ ಪರಿಣಮಿಸಿದೆ. ಮೂಲಗಳ ಪ್ರಕಾರ ಚುನಾವಣೆ ನಡೆದಿದ್ದೇ ಆದಲ್ಲಿ ಕುದುರೆ ವ್ಯಾಪಾರವನ್ನು ತಪ್ಪಿಸಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ರೆಸಾರ್ಟ್‍ನತ್ತ ಹೊರಡಬಹುದು. +ವಿಧಾನಸಭೆಯ ಬಲಾಬಲಒಟ್ಟು ಸಂಖ್ಯೆ – 224ಕಾಂಗ್ರೆಸ್ – 135ಬಿಜೆಪಿ – 66ಜೆಡಿಎಸ್ – 19ಪಕ್ಷೇತರ – 4 \ No newline at end of file diff --git a/eesanje/url_46_237_9.txt b/eesanje/url_46_237_9.txt new file mode 100644 index 0000000000000000000000000000000000000000..6440c9b5999cf72d3ca356260b07d0a30041314d --- /dev/null +++ b/eesanje/url_46_237_9.txt @@ -0,0 +1,8 @@ +ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಏನನ್ನು ನಿರೀಕ್ಷಿಸಬಹುದು..? +ಬೆಂಗಳೂರು, ಫೆ.15- ಮುಖ್ಯ ಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ 15ನೇ ಬಜೆಟ್ ಮಂಡಿಸುತ್ತಿದ್ದು, ಕೃಷಿ, ಕಂದಾಯ, ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ ಮತ್ತು ಮಹಿಳಾ- ಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಈ ಹಿಂದಿನ ಬಜೆಟ್‍ಗಿಂತಲೂ ಶೇ. 15ಕ್ಕಿಂತಲೂ ಹೆಚ್ಚಿನದಾಗಿ ಆಯವ್ಯಯ ಗಾತ್ರ ಹಿಗ್ಗುವ ಸಾಧ್ಯತೆಯಿದ್ದು, ಕೃಷಿಕರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಂಚಖಾತ್ರಿ ಯೋಜನೆಗಳಿಗೆ ವೆಚ್ಚವನ್ನು ಬಜೆಟ್‍ನಲ್ಲಿ ಕರಾರುವಕ್ಕಾಗಿ ಮೀಸಲಿರಿಸಲಾಗುತ್ತಿದೆ. +ಲೋಕ ಸಭಾ ಚುನಾವಣೆ ನಂತರ ಪಂಚಖಾತ್ರಿಗಳು ಸ್ಥಗಿತಗೊಳ್ಳಲಿವೆ ಎಂಬ ಬಿಜೆಪಿಯ ಅಪಪ್ರಚಾರಕ್ಕೆ ಬಜೆಟ್‍ನಲ್ಲಿ ಅನುದಾನ ಮೀಸಲಿಡುವ ಮೂಲಕ ಸಿಎಂ ಪ್ರತ್ಯುತ್ತರಿಸಲಿದ್ದಾರೆ. ಬರ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವುದು, ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು ನೀಡುವ ಸಾಧ್ಯತೆಯಿದೆ. +ಪ್ರಮುಖವಾಗಿ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಮಧ್ಯಂತರ ಶಿಫಾರಸ್ಸಿನ ಅನ್ವಯ ಶೇ. 7ರಿಂದ 8ರಷ್ಟು ವೇತನ ಪರಿಷ್ಕರಣೆ ಸಾಧ್ಯತೆಗಳಿವೆ. ಈ ಹಿಂದೆ ಮಧ್ಯಂತರ ವರದಿ ಆಧರಿಸಿ ಬಸವರಾಜ ಬೊಮ್ಮಾಯಿ ಸರ್ಕಾರಿ ಶೇ. 17ರಷ್ಟು ವೇತನ ಹೆಚ್ಚಳ ಮಾಡಿತ್ತು. ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರಿ ನೌಕರರು ಬೇಡಿಕೆ ಮಂಡಿಸಿದ್ದರು. ಈಗ ಶೇ. 10ರಷ್ಟು ಮಧ್ಯಂತರ ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ಶೇ. 7ರಿಂದ 8ರಷ್ಟು ಪರಿಗಣಿಸುವ ಸಾಧ್ಯತೆ ಇದೆ. + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ಒಟ್ಟು ಬೇಡಿಕೆಯನುಸಾರ ಶೇ. 37ರಷ್ಟು ವೇತನ ಹೆಚ್ಚಳ ಮಾಡುವುದು ಕಷ್ಟ ಸಾಧ್ಯವಾಗಿದ್ದು, ಹಂತ- ಹಂತವಾಗಿ ಪರಿಷ್ಕರಣೆ ಮಾಡುವ ಪ್ರಯತ್ನವನ್ನು ಮುಖ್ಯಮಂತ್ರಿ ನಡೆಸುತ್ತಿದ್ದಾರೆಂದು ಹೇಳಲಾಗಿದೆ. ಈ ನಡುವೆ ಜಲಸಂಪನ್ಮೂಲ ಇಲಾಖೆಗೂ ಆದ್ಯತೆ ನೀಡಬೇಕಿದ್ದು, ಕೆರೆಗಳನ್ನು ತುಂಬಿಸಲು 900 ಕೋಟಿ ರೂ.ಗಳ ಯೋಜನೆ ಸಿದ್ದಗೊಂಡಿದೆ. +ಮೇಕೆದಾಟು, ಭದ್ರಾಮೇಲ್ದಂಡೆ, ಕಳಸಬಂಡೂರಿ ಯೋಜನೆಗಳಿಗೆ ಕೇಂದ್ರದ ಪೂರ್ವಾನುಮತಿ ಪಡೆದುಕೊಳ್ಳುವ ಷರತ್ತಿನೊಂದಿಗೆ ಅನುದಾನ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಜೊತೆಯಲ್ಲಿ ಕೆಲವೊಂದು ಏತ ನೀರಾವರಿ ಯೋಜನೆಗಳಿಗೂ ಸಿಎಂ ಆದ್ಯತೆ ನೀಡುತ್ತಿದ್ದಾರೆ. +ಹಿಂದಿನ ಬಜೆಟ್‍ನಲ್ಲಿ ಬಂಡವಾಳ ವೆಚ್ಚವನ್ನು ಮೀಸಲಿಡಲಾಗಿತ್ತು. ಪ್ರಸ್ತುತ ಪಂಚಖಾತ್ರಿಗಳ ಸವಾಲಿನ ನಡುವೆಯೂ ಬಂಡವಾಳವನ್ನು ಶೇ. 10ರಿಂದ 12ರಷ್ಟು ಕ್ರೂಢೀಕರಿಸಲು ಮುಖ್ಯಮಂತ್ರಿ ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚಿನ ತೆರಿಗೆ ಇಲ್ಲದೆ ಸರ್ವಜನರನ್ನು ಸ್ಪರ್ಶಿಸುವ ಮತ್ತು ಸಮಾಧಾನಗೊಳಿಸುವ ಪ್ರಯತ್ನ ಮಾಡಿದ್ದು, ಇದಕ್ಕಾಗಿ ರಾಜ್ಯದ ಸಂಪನ್ಮೂಲ ಕ್ರೂಢೀಕರಣ ಕೇಂದ್ರದ ಅನುದಾನದ ಜೊತೆಗೆ ಸಾಲದ ಮೊರೆ ಹೋಗುವುದು ಅನಿವಾರ್ಯ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_238_1.txt b/eesanje/url_46_238_1.txt new file mode 100644 index 0000000000000000000000000000000000000000..576ad176537c5e50114369e8fd0d89ba76fa417d --- /dev/null +++ b/eesanje/url_46_238_1.txt @@ -0,0 +1,9 @@ +ಬೆಂಗಳೂರು : ಆತಂಕ ಸೃಷ್ಟಿಸಿದ್ದ ಸ್ಕ್ರಾಪ್ ಎಟಿಎಂ ಬಾಕ್ಸ್ +ಬೆಂಗಳೂರು, ಫೆ.14- ಮಿನರ್ವ ಸರ್ಕಲ್ ಬಳಿಯ ಕೋಟಕ್ ಮಹೀಂದ್ರ ಬ್ಯಾಂಕ್ ಎಟಿಎಂ ನ ಸಮೀಪದಲ್ಲಿ ಎರಡು ಸ್ಕ್ರಾಪ್ ಎಟಿಎಂ ಬಾಕ್ಸ್‍ಗಳನ್ನು ಕಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಕಲಾಸಿಪಾಳ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಮಿನರ್ವ ಸರ್ಕಲ್ ಬಳಿ ಕೋಟಕ್ ಮಹೀಂದ್ರ ಬ್ಯಾಂಕ್ ಎಟಿಎಂ ಇದೆ. ಇದರ 10 ಅಡಿ ದೂರದಲ್ಲಿ ಚಿಂದಿ ಆಯುವ ವ್ಯಕ್ತಿಯೊಬ್ಬ ಎರಡು ಸ್ಕ್ರಾಪ್ ಎಟಿಎಂ ಬಾಕ್ಸ್‍ಗಳನ್ನು ಇಟ್ಟು ಹೋಗಿದ್ದಾನೆ. +ಕೆಲ ಸಮಯದ ಬಳಿಕ ಎಟಿಎಂ ಸೆಕ್ಯೂರಿಟಿ ಗಾರ್ಡ್ ಗಮನಿಸಿ ಸರ್ಕಲ್ ಬಳಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸರಿಗೆ ತಿಳಿಸಿದ್ದಾರೆ. ಸಂಚಾರಿ ಪೊಲೀಸರು ಕಲಾಸಿಪಾಳ್ಯ ಠಾಣೆ ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅವು ಎಟಿಎಂಗೆ ಹಣ ತುಂಬುವ ಸ್ಕ್ರಾಪ್ ಬಾಕ್ಸ್‍ಗಳು ಎಂಬುವುದು ಗೊತ್ತಾಗಿದೆ. +ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯದ ವಿಶೇಷತೆಗಳೇನು ಗೊತ್ತೇ..? +ಯಾವ ಕಾರಣಕ್ಕೆ ಈ ಬಾಕ್ಸ್‍ಗಳನ್ನು ಈ ಜಾಗದಲ್ಲಿ ಚಿಂದಿ ಆಯುವ ವ್ಯಕ್ತಿ ತಂದಿಟ್ಟು ಹೋಗಿದ್ದಾನೆಂಬುವುದು ನಿಗೂಢವಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಖಾಸಗಿ ಬಸ್ ಡಿಕ್ಕಿ ಅಕೌಂಟೆಂಟ್ ಸಾವುಬೆಂಗಳೂರು,ಫೆ.14-ಸ್ನೇಹಿತರಿಬ್ಬರು ಬೈಕ್‍ನಲ್ಲಿ ಹೋಗುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅಕೌಂಟೆಂಟ್ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ಮೂಲತಃ ಕೇರಳದ ಆಶಿಸ್ ಜೀಜಾ (22)ಮೃತಪಟ್ಟವರು. ಈತ ಕನ್‍ಸ್ಟ್ರಕ್ಷನ್ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. +ನಾರಾಯಣಪುರದಲ್ಲಿ ವಾಸವಾಗಿದ್ದ ಆಶಿಸ್ ಜೀಜಾ ಅವರು ರಾತ್ರಿ 8.15ರ ಸುಮಾರಿನಲ್ಲಿ ಸ್ನೇಹಿತನ ಜೊತೆ ಪಲ್ಸರ್ ಬೈಕ್‍ನಲ್ಲಿ ಬೆಂಗಳೂರು-ಬಳ್ಳಾರಿ ರಸ್ತೆ, ವಿದ್ಯಾನಗರ ಕ್ರಾಸ್ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. +100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ +ಡಿಕ್ಕಿ ರಭಸಕ್ಕೆ ಇಬ್ಬರೂ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡಿದ್ದ ಹಿಂಬದಿ ಸವಾರ ಆಶಿಸ್‍ನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಪಲಿಸದೇ ಮೃತಪಟ್ಟಿದ್ದಾರೆ. ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸುದ್ದಿ ತಿಳಿದು ಚಿಕ್ಕಜಾಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_238_10.txt b/eesanje/url_46_238_10.txt new file mode 100644 index 0000000000000000000000000000000000000000..d1bc4f8c94973c175bb77b5ed315a09b2f06f46c --- /dev/null +++ b/eesanje/url_46_238_10.txt @@ -0,0 +1,7 @@ +ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ತೀರ್ಮಾನ +ಬೆಂಗಳೂರು,ಫೆ.14- ಇತಿಹಾಸ ಪ್ರಸಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಅಭಿವೃದ್ದಿ ಪ್ರಾಧಿಕಾರವನ್ನು ರಚನೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಿಧಾನಪರಿಷತ್‍ನಲ್ಲಿ ಪ್ರಕಟಿಸಿದರು. ಸದಸ್ಯ ಕಾಂಗ್ರೆಸ್‍ನ ಎಸ್.ರವಿ ಅವರ ಪರವಾಗಿ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಘಾಟಿ ಸುಬ್ರಮಣ್ಯ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಣೆ ಮಾಡುತ್ತೇವೆ. +ಈಗಾಗಲೇ ಸಚಿವ ಸಂಪುಟಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಸಂಪುಟದಲ್ಲಿ ಅನುಮೋದನೆ ನೀಡುವುದಷ್ಟೇ ಬಾಕಿ ಇದೆ ಎಂದು ತಿಳಿಸಿದರು. ಪ್ರಾಧಿಕಾರ ರಚನೆಯಾದರೆ ಇದರಲ್ಲಿ ಮುಖ್ಯಮಂತ್ರಿ, ಸಚಿವರು, ಸ್ಥಳೀಯ ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಐಎಎಸ್, ಕೆಎಎಸ್ ಅಧಿಕಾರಿಗಳು ಸೇರಿದಂತೆ ವಿವಿಧ ವೃಂದದ ಅಧಿಕಾರಿಗಳು ಬರುತ್ತಾರೆ. ಈ ವ್ಯಾಪ್ತಿಯಡಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು. +ಪಾಕ್ ಪ್ರಧಾನಿಯಾಗಲಿದ್ದಾರೆ ಶೆಹಬಾಜ್ ಷರೀಪ್ +ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಪ್ರತಿ ವರ್ಷ ಕರ್ನಾಟಕದ ವಿವಿಧ ಭಾಗಗಳಿಂದ 60-70 ಲಕ್ಷ ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ದೇವಸ್ಥಾನಕ್ಕೆ 8 ಕೋಟಿ ಆದಾಯ ಬರುತ್ತದೆ. ಇಲ್ಲಿ ರಸ್ತೆ ಅಗಲೀಕರಣ, ಶೌಚಾಲಯಗಳು, ವಸತಿ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಅಗತ್ಯವಿದೆ. ಪ್ರಾಧಿಕಾರ ರಚನೆಯಾದರೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ. ಘಾಟಿ ಸುಬ್ರಮಣ್ಯದಲ್ಲಿ ಭಕ್ತರಿಗೆ ಅನೇಕ ಸಮಸ್ಯೆಗಳು ಎದುರಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. +ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ +ಮೊದಲ ಆದ್ಯತೆಯಾಗಿ ಸರತಿ ಸಾಲಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ವಾಹನ ನಿಲ್ದಾಣ, ವಸತಿ ಗೃಹಗಳು, ಶೌಚಾಲಯ, ಮುಡಿ ಭವನ, ದಾಸೋಹ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುತ್ತದೆ. ಘಾಟಿ ಸುಬ್ರಹ್ಮಣ್ಯ ಮಾತ್ರವಲ್ಲದೆ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ವಿವಿಧ ಯಾತ್ರಾ ಸ್ಥಳಗಳಲ್ಲಿ ಮೂಲಸೌಕರ್ಯ ಕಲ್ಪಿಸಿಕೊಡಬೇಕೆಂಬ ಬೇಡಿಕೆ ಬರುತ್ತಲೇ ಇದೆ. ಸವದತ್ತಿ ಎಲ್ಲಮ್ಮ ಸೇರಿದಂತೆ ಅನೇಕ ಕಡೆ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇತಿಮಿತಿಯೊಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_238_11.txt b/eesanje/url_46_238_11.txt new file mode 100644 index 0000000000000000000000000000000000000000..3ee3035bb7ec0aa019a37e310f76849d184841dc --- /dev/null +++ b/eesanje/url_46_238_11.txt @@ -0,0 +1,8 @@ +ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ +ಬೆಂಗಳೂರು, ಫೆ.14- ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿತು. ಇಂದು ಬೆಳಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಆಗ ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ನಿಲುವಳಿ ಸೂಚನೆ ನೋಟಿಸ್ ನೀಡಿದ್ದು, ಅದರ ಬಗ್ಗೆ ಚರ್ಚೆಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. +ನಿನ್ನೆ ಕೂಡ ಇದೇ ವಿಚಾರದ ಬಗ್ಗೆ ನೋಟಿಸ್ ನೀಡಿದ್ದರೂ ಅವಕಾಶ ಸಿಗಲಿಲ್ಲ. ಹಾಗಾಗಿ ಇಂದು ನೋಟಿಸ್ ನೀಡಲಾಗಿದೆ ಎಂದರು. ಆಗ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರವನ್ನು ನಿಯಮಾನುಸಾರ ನಿಲುವಳಿ ಸೂಚನೆಯಲ್ಲಿ ಚರ್ಚಿಸಲು ಅವಕಾಶವಿಲ್ಲ ಎಂದು ಆಕ್ಷೇಪಿಸಿದರಲ್ಲದೆ ಬೇರೆ ರೂಪದಲ್ಲಿ ಚರ್ಚಿಸಲು ತಮ್ಮ ತಕರಾರು ಇಲ್ಲ ಎಂದು ಹೇಳಿದರು. +ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ +ಈ ಹಂತದಲ್ಲಿ ಅಶೋಕ್ ಅವರ ಬೆಂಬಲಕ್ಕೆ ನಿಂತ ಬಿಜೆಪಿಯ ಹಿರಿಯ ಸದಸ್ಯರಾದ ಸುರೇಶ್ ಕುಮಾರ್, ಸುನೀಲ್ ಕುಮಾರ್ ಹಾಗೂ ಸಿ.ಸಿ.ಪಾಟೀಲ್ ಅವರು ನಿಲುವಳಿ ಸೂಚನೆಯಡಿ ಹತ್ತಾರು ಬಾರಿ ಕಾನೂನು ಮತ್ತು ಸುವ್ಯವಸ್ಥೆ ವಿಚಾರ ಸದನದಲ್ಲಿ ಚರ್ಚೆಯಾಗಿದೆ. ನಮಗೂ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಎರಡೂ ಕಡೆಯ ಅಭಿಪ್ರಾಯವನ್ನು ಆಲಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ವಿಚಾರ ನಿಲುವಳಿ ಸೂಚನೆಯಡಿ ಬರುವುದಿಲ್ಲ ಎಂದು ಸಭಾಧ್ಯಕ್ಷರು ಪ್ರಕಟಿಸಿದರು. +ಈ ವಿಚಾರವನ್ನು ನಿಯಮ 69ರಡಿ ಚರ್ಚೆಗೆ ಅನುವು ಮಾಡಿಕೊಡಲಾಗುವುದು. ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ಮಾತನಾಡಬಹುದು. ಸಮಯ ಅಭಾವವಿರುವುದರಿಂದ ಸಹಕರಿಸಬೇಕು ಎಂದು ಹೇಳಿದರು. +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ಅದಕ್ಕೆ ಸಮ್ಮತಿಸಿದ ಅಶೋಕ್ ಅವರು ಕಾನೂನು ಮತ್ತು ಸುವ್ಯವಸ್ಥೆ ವಿಚಾರದ ಬಗ್ಗೆ ಗೃಹ ಸಚಿವರು ಪ್ರತ್ಯೇಕ ಉತ್ತರ ನೀಡಬೇಕು ಎಂದಾಗ ಪರಮೇಶ್ವರ್ ಅವರು ಸಮ್ಮತಿ ಸೂಚಿಸಿದರು. \ No newline at end of file diff --git a/eesanje/url_46_238_12.txt b/eesanje/url_46_238_12.txt new file mode 100644 index 0000000000000000000000000000000000000000..fafe242b2feb5e46a7dc92fbd87f5618dc8c40b7 --- /dev/null +++ b/eesanje/url_46_238_12.txt @@ -0,0 +1,8 @@ +ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ +ಬೆಂಗಳೂರು,ಫೆ.14- ಕೇಂದ್ರದಿಂದ ತೆರಿಗೆ ಪಾಲಿನಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಜನತಾ ನ್ಯಾಯಾಲಯದಲ್ಲಿ ಪ್ರಶ್ನಿಸಲು ಮುಂದಾಗಿರುವ ಕಾಂಗ್ರೆಸ್ ಇದಕ್ಕಾಗಿ ಸಾಮಾಜಿಕ ಜಾಲತಾಣಗಳ ಅಭಿಯಾನವನ್ನು ತೀವ್ರಗೊಳಿಸಲು ಮುಂದಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಘೋಷಣೆಗೆ ಬಿಜೆಪಿ ನಾನಾ ರೀತಿಯ ವ್ಯಾಖ್ಯಾನ ಮಾಡಿದೆ. ರಾಜ್ಯಸರ್ಕಾರದಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆದ ವೇಳೆ ಸಂಸತ್‍ನಲ್ಲಿ ಬಿಜೆಪಿಯ ಸಂಸದರು ಕೆಂಡಾಮಂಡಲದ ಟೀಕೆಗಳನ್ನು ಮಾಡಿ ತಮ್ಮ ಅಸಹನೆಯನ್ನು ಹೊರಹಾಕಿದ್ದಾರೆ. +ಇದೇ ವೇಳೆ ಕಾಂಗ್ರೆಸ್ ಸದಸ್ಯರಿಗೆ ಮಾತನಾಡಲು ಅವಕಾಶ ನಿರಾಕರಿಸಿ ಏಕಪಕ್ಷೀಯ ಅಭಿಪ್ರಾಯ ಗಟ್ಟಿಗೊಳ್ಳುವಂತೆ ಮಾಡುವ ಪ್ರಯತ್ನಗಳಾಗಿವೆ. ಅದಕ್ಕೆ ಎದುರೇಟು ನೀಡಲು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನನ್ನ ತೆರಿಗೆ ನನ್ನ ಹಕ್ಕು ಟ್ವೀಟರ್ ಸಂವಾದದಲ್ಲಿ ಭಾಗವಹಿಸಿ ನೆಟ್ಟಿಗರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ನನ್ನ ತೆರಿಗೆ ನನ್ನ ಹಕ್ಕು ಎಂಬುದು ದೇಶ ವಿಭಜನೆಯ ಪ್ರಯತ್ನ ಎಂದು ಬಿಜೆಪಿ ಟೀಕಿಸುತ್ತಿದೆ. +ಇದಕ್ಕೆ ಎದುರೇಟು ಎಂಬಂತೆ ಕಾಂಗ್ರೆಸ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಿಂದಾಗುತ್ತಿರುವ ತೆರಿಗೆ ಪಾಲಿನ ಅನ್ಯಾಯಗಳ ಬಗ್ಗೆ ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಮುಂದಿಟ್ಟು ತಿರುಗೇಟು ನೀಡಲು ತಯಾರಿ ನಡೆಸಿದೆ. ರಾಜ್ಯದಿಂದ ಬಿಜೆಪಿಯ 25, ಜೆಡಿಎಸ್‍ನ 1 ಪಕ್ಷೇತರ ಒಬ್ಬರು ಸೇರಿ 27 ಸಂಸದರು ಕೇಂದ್ರದ ಆಡಳಿತಾರೂಢ ಸರ್ಕಾರಕ್ಕೆ ಬೆಂಬಲವಾಗಿದ್ದರು. ರಾಜ್ಯಕ್ಕಾದ ತೆರಿಗೆ ಅನ್ಯಾಯದ ಬಗ್ಗೆ ಧ್ವನಿಯೆತ್ತಲಿಲ್ಲ ಎಂಬುದನ್ನು ಗಟ್ಟಿಯಾಗಿ ಹೇಳಲು ಕಾಂಗ್ರೆಸ್ ನಿರ್ಧರಿಸಿದೆ. +ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ +ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರ ಹೆಸರು ಹೇಳಿಕೊಂಡು ಮತ ಪಡೆದ ಸಂಸದರು ಪಕ್ಷ ನಿಷ್ಠರಾಗಿದ್ದಾರೇ ಹೊರತು ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಒಂದು ದಿನವೂ ಬಾಯಿ ಬಿಡಲಿಲ್ಲ. ಈಗ ಮತ್ತೊಮ್ಮೆ ಮೋದಿ ಹೆಸರಿನಲ್ಲೇ ಮತ ಕೇಳಲು ಮುಂದಾಗಿದ್ದಾರೆ. ರಾಜ್ಯಕ್ಕೆ ಮೋದಿ ಭಕ್ತರು ಮಾತ್ರ ಬೇಕೋ ಅಥವಾ ನ್ಯಾಯ ಕೊಡಿಸುವ ಜನಪ್ರತಿನಿಧಿಗಳು ಬೇಕೋ ಎಂಬುದನ್ನು ಜನರು ನಿರ್ಧರಿಸಬೇಕು ಎಂದು ಕಾಂಗ್ರೆಸ್ ವ್ಯಾಖ್ಯಾನಿಸುತ್ತಿದೆ. +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಪ್ರಸಾರಾಂಧೋಲನ ನಡೆಸಲು ಸಿದ್ಧತೆ ಕೈಗೊಂಡಿದೆ. ಸಾಮಾಜಿಕ ಜಾಲಾತಾಣದ ಅಭಿಯಾನ ಸಂವಾದಗಳು ಜನರ ಪ್ರಶ್ನೆಗಳಿಗೆ ಮತ್ತು ಗೊಂದಲಗಳಿಗೆ ಸ್ಪಷ್ಟ ಉತ್ತರ ನೀಡುವ ಮೂಲಕ ನನ್ನ ತೆರಿಗೆ ನನ್ನ ಹಕ್ಕು ಅಭಿಯಾನವನ್ನು ರ್ನಿಧಿಷ್ಟ ಗುರಿಯೆಡೆಗೆ ಕೊಂಡೊಯ್ಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಣೆಗಾರಿಕೆ ಹೊತ್ತಿದ್ದಾರೆ. ಇಂದಿನ ಸಂವಾದದಲ್ಲಿ ರಾಜ್ಯಕ್ಕಾದ ಅನ್ಯಾಯದ ಬಗ್ಗೆ ಸವಿಸ್ತಾರವಾದ ಮತ್ತಷ್ಟು ಮಾಹಿತಿಗಳನ್ನು ಮುಖ್ಯಮಂತ್ರಿ ನೀಡಲಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_238_2.txt b/eesanje/url_46_238_2.txt new file mode 100644 index 0000000000000000000000000000000000000000..bc29c632861bd6cc7eac1ed2a818ab0adaec43f2 --- /dev/null +++ b/eesanje/url_46_238_2.txt @@ -0,0 +1,6 @@ +ಸಬ್ಸಿಡಿ ಕಡಿತದಿಂದ ಬೀದಿಗೆ ಬೀಳುತ್ತಿರುವ ಕೈಮಗ್ಗಗಳು : ಪುನರ್ ಪರಿಶೀಲನೆಗೆ ಕಾಸಿಯಾ ಮನವಿ +ಬೆಂಗಳೂರು,ಫೆ.14- ವಿದ್ಯುತ್ ಮಗ್ಗಗಳಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಕಡಿತಗೊಳಿಸಿರುವುದನ್ನು ಪುನರ್ ಪರಿಶೀಲಿಸಬೇಕೆಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸರ್ಕಾರಕ್ಕೆ ಮನವಿ ಮಾಡಿದೆ. ಈ ಹಿಂದೆ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್‍ಗೆ 1.25 ರೂ.ಗಳಂತೆ ದರ ವಿಧಿಸಿ ವಿದ್ಯುತ್ ನೀಡಲಾಗುತ್ತಿತ್ತು ಆದರೆ ಇತ್ತೀಚೆಗೆ ಕಳೆದ ಅಕ್ಟೋಬರ್ 20, 2023ರಲ್ಲಿ ವಿದ್ಯುತ್ ಬಳಕೆಯ ಮಿತಿಯನ್ನು ಹೇರಿ 500 ಯುನಿಟ್‍ಗೆ ನಿಗದಿಪಡಿಸಿ ಆದೇಶಿಸಲಾಗಿದೆ. ಇದರಿಂದ ನೇಕಾರರಿಗೆ ಮತ್ತೆ ಆರ್ಥಿಕ ಹೊರೆ ಬೀಳುತ್ತಿದೆ. +ಹಿಂದೆ ಇದ್ದಂತೆ ಸಬ್ಸಿಡಿ ದರದಲ್ಲಿ ಯಾವುದೇ ಮಿತಿಯಿಲ್ಲದೆ ವಿದ್ಯುತ್ ಪೂರೈಕೆ ಮಾಡಬೇಕು. 10.1 ರಿಂದ 20 ಹೆಚ್‍ಪಿ ವರೆಗೆ ನೀಡುತ್ತಿದ್ದ ಸವಲತ್ತುಗಳನ್ನು ಮುಂದುವರಿಸಬೇಕೆಂದು ಮನವಿ ಮಾಡಲಾಗಿದೆ. ಈಗಾಗಲೇ ಸಂಕಷ್ಟದಲ್ಲಿರುವ ನೇಕಾರರು ಮತ್ತೆ ಸಮಸ್ಯೆಗೆ ಸಿಲುಕುವ ಸಾಧ್ಯತೆಯಿರುವುದರಿಂದ ಸರ್ಕಾರ ಮಾನವೀಯ ಆಧಾರದ ಮೇಲೆ ಯಾವುದೇ ಮಿತಿಯಿಲ್ಲದೆ ಪ್ರತಿ ಯುನಿಟ್‍ಗೆ 1.25 ರೂ.ಗಳಂತೆ ವಿದ್ಯುತ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ. +ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯದ ವಿಶೇಷತೆಗಳೇನು ಗೊತ್ತೇ..? +ಈಗಾಗಲೇ ಅನೇಕ ಕೈಮಗ್ಗಗಳು, ವಿದ್ಯುತ್ ಮಗ್ಗಗಳಾಗಿ ಪರಿವರ್ತನೆಗೊಂಡಿದೆ. ಇದರಲ್ಲಿ ಸಾವಿರಾರು ಮಂದಿ ಕೆಲಸ ಮಾಡುತ್ತಿದ್ದಾರೆ. ವಿದ್ಯುತ್ ಹೊರೆ ಹೆಚ್ಚಿದರೆ ಅವರು ಬೀದಿಗೆ ಬೀಳುವ ಪರಿಸ್ಥಿತಿ ಉದ್ಭವಾಗುತ್ತದೆ. ಗುಣಮಟ್ಟದ ನೇಯ್ದ ಬಟ್ಟೆಗಳನ್ನು ನೀಡಿ ಇಡೀ ದೇಶಕ್ಕೆ ಹಿರಿಮೆಯನ್ನು ತಂದಿರುವ ಕರ್ನಾಟಕದ ನೇಕಾರರನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಕೈ ಹಿಡಿಯುವ ಜವಾಬ್ದಾರಿ ಸರ್ಕಾರದ್ದಾಗಿದೆ. +ಆದರೆ ನಮ್ಮ ಮನವಿಯನ್ನು ಯಾರೂ ಕೇಳುತ್ತಿಲ್ಲ ಎಂದು ಕೆಲ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಹೊರೆಯಿಂದಲೇ ಅನೇಕ ಕೈಮಗ್ಗಗಳು ನಶಿಸಿಹೋಗುತ್ತಿದೆ. ತಲತಲಾಂತರಗಳಿಂದ ಈ ಉದ್ಯಮಿಗಳನ್ನು ನಂಬಿಕೊಂಡು ಬಂದಿದ್ದ ಸುಮಾರು 20 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಪರಿಸ್ಥಿತಿ ಹದಗೆಡುತ್ತಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯುತ್ ಮಗ್ಗಗಳು ಮುಚ್ಚುವ ಹಂತ ತಲುಪಿದೆ. ಸರ್ಕಾರ ಕೂಡಲೇ ಇವರ ನೆರವಿಗೆ ಬರಬೇಕು ಎಂದು ಉದ್ಯಮಿಗಳು ಕೂಡ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_238_3.txt b/eesanje/url_46_238_3.txt new file mode 100644 index 0000000000000000000000000000000000000000..c3b5171fcfc54ee2c85f5795cd9be62652c710fa --- /dev/null +++ b/eesanje/url_46_238_3.txt @@ -0,0 +1,8 @@ +ಕ್ರೈಂ ರಾಜಧಾನಿಯಾಗುತ್ತಿದೆ ಬೆಂಗಳೂರು : ಆರ್.ಅಶೋಕ್ +ಬೆಂಗಳೂರು,ಫೆ.14- ಶಾಂತಿ ಮತ್ತು ಸುವ್ಯವಸ್ಥೆಗೆ ಹೆಸರಾಗಿದ್ದ ಕರ್ನಾಟಕ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ನಿಯಮ 69 ರಡಿ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಎನ್ಸಿಆರ್‍ಬಿ ಪ್ರಕಾರ, ಅಪರಾಧಗಳ ಸಂಖ್ಯೆ ಶೇ.25 ರಿಂದ ಶೇ.30 ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ 1,80,742 ಪ್ರಕರಣಗಳು ವರದಿಯಾಗಿವೆ. ನಮ್ಮ ಸರ್ಕಾರದ ಅವಧಿಗಿಂತ ಇದು ಶೇ.40 ರಷ್ಟು ಹೆಚ್ಚಾಗಿದೆ. ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.56 ರಷ್ಟು ಹೆಚ್ಚಾಗಿವೆ ಎಂದು ಅವರು ತಿಳಿಸಿದರು. +ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯ 3ನೇ ಸ್ಥಾನದಲ್ಲಿದೆ. ಬೆಂಗಳೂರು ಕ್ರೈಂ ರಾಜಧಾನಿಯಾಗುತ್ತಿದೆ. ಸೈಬರ್ ಕ್ರೈಂನಲ್ಲಿ ಮೊದಲ ಸ್ಥಾನದಲ್ಲಿದೆ. ಒಂದೇ ವರ್ಷದಲ್ಲಿ 432 ಕೋಟಿ ರೂ. ಸೈಬರ್ ಕ್ರೈಂ ಮೂಲಕ ಲೂಟಿಯಾಗಿದೆ. ಬೆಂಗಳೂರು ಸುರಕ್ಷತಾ ನಗರ ಹೋಗಿ ಕ್ರೈಂ ಸಿಟಿಯಾಗಿ ಮಾರ್ಪಡುತ್ತಿದೆ. ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಕೆಎಫ್‍ಡಿ, ಪಿಎಫ್‍ಐ ಮೇಲಿನ 1600 ಕೇಸುಗಳನ್ನು ಸರ್ಕಾರ ವಾಪಸ್ಸು ಪಡೆದಿದೆ. ಇದರಿಂದ ಅಂತವರಿಗೆ ಧೈರ್ಯ ಬಂದಾಂತಾಗಿದೆ. ಕೋಲಾರದಲ್ಲಿ ಸ್ಟೀಲ್‍ನಿಂದ ನಿರ್ಮಿಸಿದ 30 ಅಡಿ ಅಗಲ, 40 ಅಡಿ ಎತ್ತರದ ಮಚ್ಚು, ಲಾಂಗಿನಿಂದ ಮಾಡಿದ ಕಟೌಟ್ ಹಾಕಲಾಗಿದೆ. ಕಾಂಗ್ರೆಸ್ ಸಕ್ರಾರ ಅಧಿಕಾರಕ್ಕೆ ಬಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. +ಬಳ್ಳಾರಿಯಲ್ಲಿ 8 ಮಂದಿ ಶಂಕಿತ ಉಗ್ರರನ್ನು ಎನ್‍ಐಎ ಬಂಧಿಸಿದೆ. ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಮಾಡಲಾಗುತ್ತಿತ್ತು. ಮಿನಾಜ್ ಅಲಿಯಾಸ್ ಮಹಮ್ಮದ್ ಸುಲೈಮಾನ್ ಎಂಬ ವ್ಯಕ್ತಿ ಕಿಂಗ್‍ಪಿನ್ ಆಗಿದ್ದು, ಅಮಾಯಕರಿಗೆ ಹಣ, ಉದ್ಯೋಗ, ಧರ್ಮದ ಆಮಿಷವೊಡ್ಡಿ ಅಪರಾಧ ಕೃತ್ಯಗಳ ಬಗ್ಗೆ ತರಬೇತಿ ನೀಡಲಾಗುತ್ತಿತ್ತು ಎಂಬ ವರದಿಯಾಗಿದೆ. ಶಿವಾಜಿನಗರ ಪುಲಕೇಶಿ ನಗರದಲ್ಲೂ ಕೂಡ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಇವರಿಗೆ ಹಣ ಎಲ್ಲಿಂದ ಬಂತು, ಯಾರು ಕಳುಹಿಸಿದರು ಎಂಬುದು ಗೊತ್ತಾಗುವುದಿಲ್ಲ. +ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ +ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸುವಾಗ ಹಲ್ಲೆ ನಡೆಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಸತ್ತಿದೆಯೋ? ಬದುಕಿದೆಯೋ ಅಥವಾ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆಯೋ ಗೊತ್ತಿಲ್ಲ. ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರತಿಭಟನೆ ಮಾಡುತ್ತಾರೆ. ಅದು ಪೊಲೀಸಿನವರಿಗೇ ಗೊತ್ತಾಗುವುದಿಲ್ಲ. ಪ್ರತಿಭಟನೆ ಮಾಡಿದವರ ಮೇಲೆ ಕ್ರಮವೂ ಆಗುವುದಿಲ್ಲ. ಪೊಲೀಸರು ನೈತಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದರು. +ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಘಟನೆ ಕೋಲಾರ ಮತ್ತು ಬೆಂಗಳೂರಿನ ಆಂದ್ರಹಳ್ಳಿಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಪ್ರಕರಣವನ್ನು ಎಳೆಎಳೆಯಾಗಿ ಬಿಡಿಸಿಟ್ಟ ಅಶೋಕ್, ಇದಕ್ಕೆ ಸರ್ಕಾರದ ಆಡಳಿತ ವೈಫಲ್ಯ ಕಾರಣ ಎಂದು ದೂರಿದರು. +ಚಿಂತಾಮಣಿಯಲ್ಲಿ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳು ಸರಿಯಾಗಿ ಊಟ ನೀಡಲಿಲ್ಲ ಎಂದು ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲಿನ ಕೋಪಕ್ಕ ಅಲ್ಲಿನ ವಾರ್ಡನ್ ಊಟದಲ್ಲಿ ಮಲ ಬೆರೆಸಿರುವುದು ಎಫ್‍ಎಸ್‍ಐಎಲ್ ವರದಿಯಲ್ಲಿ ಗೊತ್ತಾಗಿದೆ. ವರದಿ ಬಂದು ಮೂರು ತಿಂಗಳಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾವೇರಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಮೈಸೂರಿನಲ್ಲಿ ಶಾಸಕ ತನ್ವೀರ್ ಸೇಟ್ ಅವರ ಮೇಲೆ ಹಲ್ಲೆ ಆಗಿತ್ತು. ಬೆಂಗಳೂರಿನಲ್ಲಿ ಮಾಜಿ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಬೆಂಕಿ ಹಾಕಲಾಗಿತ್ತು ಎಂಬುದು ಸೇರಿದಂತೆ ಹಲವು ಘಟನೆಗಳನ್ನು ಉಲ್ಲೇಖಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. \ No newline at end of file diff --git a/eesanje/url_46_238_4.txt b/eesanje/url_46_238_4.txt new file mode 100644 index 0000000000000000000000000000000000000000..d4e7c36eb5b9ee52e49fa33eb603bafaa0a6bf57 --- /dev/null +++ b/eesanje/url_46_238_4.txt @@ -0,0 +1,10 @@ +ರೈತರ ನೊಂದಣಿಯಲ್ಲಿ ಅವ್ಯವಹಾರ : ಒಂದು ವಾರ ಕೊಬ್ಬರಿ ಖರೀದಿ ಸ್ಥಗಿತ +ಬೆಂಗಳೂರು,ಫೆ.14- ಕೊಬ್ಬರಿ ಖರೀದಿಗೆ ರೈತರ ನೊಂದಣಿಯಲ್ಲಿ ಅವ್ಯವಹಾರಗಳಾಗಿರುವುದರಿಂದ ತಾತ್ಕಾಲಿಕ ವಾಗಿ ಒಂದು ವಾರ ಕಾಲ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಜೆಡಿಎಸ್‍ನ ಎಚ್.ಡಿ.ರೇವಣ್ಣ ಸೇರಿದಂತೆ ಪಕ್ಷಾತೀತ ವಾಗಿ ಬಹುತೇಕ ಶಾಸಕರು ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಚಾರ ಕುರಿತು ಇಂದು ಉತ್ತರ ನೀಡಿದ ಸಚಿವರು, ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ. +ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರ ಗುತ್ತಿಗೆ ಸಿಬ್ಬಂದಿಗಳು ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದು ವ್ಯಾಪಕ ವಾಗಿ ಕಂಡುಬರುತ್ತಿದೆ. ಬೇರೆ ಜಿಲ್ಲೆಯಿಂದ 3500 ರೈತರನ್ನು ಹಾಸನದಲ್ಲಿ ನೋಂದಾವಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆಗೊಳ ಪಡಿಸ ಲಾಗುತ್ತಿದ್ದು, ಆವರೆಗೆ ತಾತ್ಕಾಲಿಕ ವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತ ಗೊಳಿಸಲಾಗುತ್ತಿದೆ ಎಂದು ಹೇಳಿದರು. +ಈ ಮೊದಲು ಕೇಂದ್ರ ಸರ್ಕಾರ 7 ತಿಂಗಳ ಅವಧಿವರೆಗೂ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿಗೆ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. +ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು. +ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ +ನೋಂದಣಿ ಪ್ರಕ್ರಿಯೆಯಲ್ಲಿನ ಲೋಪವನ್ನು ಸರಿಪಡಿಸುವವರೆಗೂ ಸಹಕರಿಸುವಂತೆ ಸಚಿವರು ಮನವಿ ಮಾಡಿದರು. ಮುಂದುವರೆದ ಚರ್ಚೆಯಲ್ಲಿ ಶಾಸಕರಾದ ಸುರೇಶ್ ಗೌಡ, ಜನವರಿಯಿಂದಲೇ ಖರೀದಿ ಆರಂಭವಾಗಬೇಕಿತ್ತು. ಫೆ.1ರಿಂದ ಖರೀದಿಸುವುದಾಗಿ ನಫೇಡ್ ತಿಳಿಸಿತ್ತು. ಅದನ್ನು ನಂಬಿ ರೈತರು ಕೊಬ್ಬರಿಯನ್ನು ಸುಲಿದು ಸಜ್ಜುಗೊಂಡಿಸಿಟ್ಟುಕೊಂಡಿದ್ದಾರೆ. ಈಗ ಮತ್ತೆ ಒಂದು ವಾರ ಮುಂದೂಡಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ರೈತರು ಬೆಳೆದ ಪೂರ್ತಿ ಕೊಬ್ಬರಿಯನ್ನು ಖರೀದಿಸುವುದಾಗಿ ಹೇಳಿದ್ದಾರೆ. ಅದರಂತೆ ಸರ್ಕಾರ ನಡೆದು ಕೊಳ್ಳಬೇಕೆಂದು ಒತ್ತಾಯಿಸಿದರು. ತಿಪಟೂರು ಕ್ಷೇತ್ರದ ಷಡಕ್ಷರಿ ಮಾತ ನಾಡಿ, 8 ದಿನದ ವಿಳಂಬದಿಂದ ಹೆಚ್ಚೇನು ಹಾನಿಯಾಗುವುದಿಲ್ಲ. ನೋಂದಣಿ ಪ್ರಕ್ರಿಯೆಯಲ್ಲಿ ವಿಳಬಂವಾಗಿದೆ. ಪರಿಷ್ಕರಣೆ ಬದಲಾಗಿ ರದ್ದು ಮಾಡಿ ಕೊಬ್ಬರಿ ಖರೀದಿ ಮತ್ತು ನೋಂದಣಿ ಯನ್ನು ಏಕಕಾಲಕ್ಕೆ ಆರಂಭಿಸಿ ಎಂದು ಒತ್ತಾಯಿಸಿದರು. +100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ +ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ, ಎಂಟು ದಿನ ವಿಳಂಬ ಮಾಡುವುದು ಅನಗತ್ಯ. ತಡವಾದರೆ ಕೊಬ್ಬರಿ ಗುಣಮಟ್ಟ ಕುಂದುತ್ತದೆ. ಸಚಿವರು ಕೊಬ್ಬರಿ ಬೆಳೆಯುವ ಜಿಲ್ಲೆಗಳ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಿದರೆ ಸಮಸ್ಯೆ ಬಗೆಹರಿಸಲು ವಿವರವಾದ ಚರ್ಚೆ ನಡೆಸಬಹುದು ಎಂದರು. ತುರುವೇಕೆರೆಯ ಎಂ.ಟಿ. ಕೃಷ್ಣಪ್ಪ ಮತ್ತು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_238_5.txt b/eesanje/url_46_238_5.txt new file mode 100644 index 0000000000000000000000000000000000000000..8014412b25ed966c56642bf90e650e26cf029d5b --- /dev/null +++ b/eesanje/url_46_238_5.txt @@ -0,0 +1,6 @@ +ಗೋಪಾಲಯ್ಯ ಅವರಿಗೆ ಪ್ರಾಣ ಬೆದರಿಕೆ ಹಾಕಿದ್ದ ಪದ್ಮರಾಜ್ ಅರೆಸ್ಟ್ +ಬೆಂಗಳೂರು, ಫೆ.14- ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರಿಗೆ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ಅವರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ಅವರ ಮನೆ ಬಳಿ ತೆರಳಿ ನಂತರ ಅವರನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆತಂದು ಬಂಧಿಸಿ ವಿಚಾರಣೆ ಗೊಳಪಡಿಸಿದ್ದಾರೆ. +ಜೀವ ಬೆದರಿಕೆ ದೂರು:ವಿನಾಃ ಕಾರಣ ನನಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ದಮಕಿ ಹಾಕಿ ಜೀವ ಬೆದರಿಕೆ ಹಾಕಿದ್ದಾರೆಂದು ಮಾಜಿ ಕಾಪೆರ್ರೇಟರ್ ಪದ್ಮರಾಜ್ ವಿರುದ್ಧ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಅವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. +ರಾತ್ರಿ 11 ಗಂಟೆ ಸುಮಾರಿನಲ್ಲಿ ಬಸವೇಶ್ವರ ನಗರ ವಾರ್ಡ್‍ನ ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರು ಮೊಬೈಲ್‍ನಿಂದ ನನಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಯಾವುದೇ ಕಾರಣವಿಲ್ಲದೆ ನನ್ನ ಕುಟುಂಬವನ್ನು ನಿರ್ನಾಮ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಪದ್ಮರಾಜು ಅವರ ಹಾಗೂ ನನ್ನ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲದಿದ್ದರೂ ಸಹ ನನಗೆ ಕರೆ ಮಾಡಿ ಹಣವನ್ನು ನೀಡಬೇಕು. ಖರ್ಚಿಗೆ ಹಣ ನೀಡದೇ ಹೋದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ. ನನ್ನ ಕಡೆಯ ಹುಡುಗರನ್ನು ಕಳುಹಿಸಿ ಇಡೀ ಕುಟುಂಬವನ್ನು ಕೊಲೆ ಮಾಡಿಸುತ್ತೇನೆಂದು ಜೀವ ಬೆದರಿಕೆ ಹಾಕಿರುವುದಾಗಿ ಶಾಸಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. +ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ +ನನ್ನನ್ನು ನಿಂದಿಸಿ ಬೆದರಿಕೆ ಹಾಕಿ ನನಗೆ ಭಯಪಡಿಸಿದ್ದಾರೆ. ಮುಂದೆ ನನಗೆ ಹಾಗೂ ನನ್ನ ಕುಟುಂಬಕ್ಕೆ ಯಾವುದೇ ರೀತಿಯ ಹಾನಿ ಅಥವಾ ತೊಂದರೆ ಉಂಟಾದರೆ ಪದ್ಮರಾಜ ಅವರೇ ಹೊಣೆಗಾರರಾಗಿರುತ್ತಾರೆ. ಹಾಗಾಗಿ ನನಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿ ಹಣವನ್ನು ಕೊಡುವಂತೆ ಹೆದರಿಸಿರುವ ಪದ್ಮರಾಜು ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಪದ್ಮರಾಜ್ ಅವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಈ ಸಂಜೆಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_238_6.txt b/eesanje/url_46_238_6.txt new file mode 100644 index 0000000000000000000000000000000000000000..3fd189a5b3390906b86e2076f1ab7b5349830b22 --- /dev/null +++ b/eesanje/url_46_238_6.txt @@ -0,0 +1,10 @@ +ಸದನದಲ್ಲಿ ಕಾವೇರಿದ ಹನುಮ ಧ್ವಜ ಕಿಚ್ಚು +ಬೆಂಗಳೂರು,ಫೆ.14- ಮಂಡ್ಯ ಜಿಲ್ಲೆ ಕೆರೆಗೋಡುವಿನ ಹನುಮ ಧ್ವಜದ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ನಿಯಮ 69 ರಡಿ ವಿರೋಧ ಪಕ್ಷದ ನಾಯಕ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡುವಾಗ ಕೆರೆಗೋಡುವಿನ ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾದರು. ಆಗ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು, ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. +ಹನುಮ ಧ್ವಜದ ವಿಚಾರವನ್ನು ಪ್ರಸ್ತಾಪಿಸಲು ಮುಂದಾಗುತ್ತಿದ್ದಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರೀಯ ಧ್ವಜವನ್ನು ತೆಗೆದುಹಾಕಿ ಎಂದು ಹೇಳುತ್ತೀರಾ ಎಂದು ಪ್ರಶ್ನಿಸಿದರು. ಶಾಸಕ ರವಿಕುಮಾರ್ ಮಾತನಾಡಿ, ನಿಮ್ಮ ಹೋರಾಟ ರಾಷ್ಟ್ರಧ್ವಜದ ವಿರುದ್ಧವೇ ಎಂದು ಪ್ರಶ್ನಿಸಿದರು. ನಯನಾ ಮೋಟಮ್ಮ ಮಾತನಾಡಿ, ನಿಮಗೆ ರಾಷ್ಟ್ರಧ್ವಜ ಬೇಕೇ, ಹನುಮ ಧ್ವಜ ಬೇಕೇ ಎಂದು ಕೇಳಿದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜೈಲಿಗೆ ಹಾಕಿ. ಸರ್ಕಾರ ನಿಮ್ಮದೇ ಅಲ್ಲವೇ ಎಂದು ಹೇಳಿದರು. +ಬಿಜೆಪಿಯ ಸುನಿಲ್‍ಕಮಾರ್ ಮಾತನಾಡಿ, ರಾಷ್ಟ್ರಧ್ವಜದ ಬಗ್ಗೆ ನೀವು (ಕಾಂಗ್ರೆಸ್) ತೋರುತ್ತಿರುವ ಕಳಕಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನವಾದಾಗ ಕಾಂಗ್ರೆಸ್‍ಗೆ ಈ ಕಳಕಳಿ ಇರಲಿಲ್ಲವೇ ಎಂದು ತಿರುಗೇಟು ನೀಡಿದರು. ಕೆಲಕಾಲ ಏರಿದ ಧ್ವನಿಯಲ್ಲಿ ಪರಸ್ಪರ ಆರೋಪ, ವಾಗ್ವಾದ ನಡೆದು ಸದನದಲ್ಲಿ ಗೊಂದಲ ಉಂಟಾಯಿತು. +ಸಭಾಧ್ಯಕ್ಷರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರನ್ನು ಸಮಾಧಾನಪಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮಾತನಾಡಲು ಅವಕಾಶ ಮಾಡಿಕೊಟ್ಟರು. ಮಾತು ಮುಂದುವರೆಸಿದ ಅಶೋಕ್, ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸಲಾಗಿದೆ. ಪಂಚಾಯಿತಿ ಸದಸ್ಯರು ಆಗಸ್ಟ್ 15 ರಂದು ರಾಷ್ಟ್ರಧ್ವಜ ಹಾಗೂ ರಾಜ್ಯೋತ್ಸವದಂದು ನಾಡಧ್ವಜವನ್ನು ಹಾರಿಸುತ್ತಾರೆ. 108 ಅಡಿ ಧ್ವಜ ಸ್ತಂಭವನ್ನು ಸುತ್ತಮುತ್ತಲ ಗ್ರಾಮದವರಿಂದ ಹಣ ಸಂಗ್ರಹಿಸಿ ನಿರ್ಮಿಸಿದ್ದಾರೆ. ಒಂದು ವೇಳೆ ಅಕ್ರಮವಾಗಿ ಧ್ವಜಸ್ತಂಭ ನಿಲ್ಲಿಸಿದ್ದರೆ ಏಕೆ ಅವರ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು. +ಕೆರೆಗೋಡಿಗೆ ನಾನು ಹೋಗುವಾಗ ಎಸ್ಕಾರ್ಟ್ ವಾಹನ ಕೆಟ್ಟುಹೋಯಿತು ಎಂದು ಹೇಳಿದರು ಎಂದಾಗ ಸಭಾಧ್ಯಕ್ಷರು ನನ್ನ ಎಸ್ಕಾರ್ಟ್ ಕೂಡ ನಿಂತುಹೋಗಿತ್ತು ಎಂದು ದನಿಗೂಡಿಸಿದರು. ಆಗ ಅಶೊಕ್‍ರವರು ಸಚಿವ ಚೆಲುವರಾಯಸ್ವಾಮಿಯವರ ಎಸ್ಕಾರ್ಟ್ ಕೂಡ ನಿಂತು ಹೋಗಿತ್ತು ಎಂದು ಅವರು ಹೇಳುತ್ತಿಲ್ಲ, ಸರ್ಕಾರವೇ ಕೆಟ್ಟು ಹೋಗಿದೆ ಎಂದು ಟೀಕಿಸಿದರು. +ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ +ರಾಷ್ಟ್ರಧ್ವಜವನ್ನು ಧ್ವಜಸ್ತಂಭದಲ್ಲಿ ಮಧ್ಯಾಹ್ನ ಹಾರಿಸಿದ್ದಾರೆ. ನಾವು ರಾಷ್ಟ್ರಧ್ವಜಕ್ಕೆ ಗೌರವ ಕೊಡುತ್ತೇವೆ. ರಾಷ್ಟ್ರಧ್ವಜವನ್ನು ಹಾರಿಸಿದಾಗ ಶಿಸ್ತುಪಾಲನೆ ಮಾಡಿಲ್ಲ. ಅದನ್ನು ಹಾರಿಸುವಾಗ ಹೂ ಬಳಸಿಲ್ಲ, ಗೌರವ ಸೂಚಿಸಿಲ್ಲ, ಹನುಮ ಧ್ವಜ ಹಾರಿಸಿದವರಿಗೆ ನೋಟಿಸ್ ಕೊಟ್ಟಿಲ್ಲ. ರಾತ್ರಿ 3 ಗಂಟೆ ಸಮಯದಲ್ಲಿ ಹನುಮ ಧ್ವಜವನ್ನು ಇಳಿಸಿದ್ದಾರೆ ಎಂದು ಆರೋಪಿಸಿದರು. +ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿರುವ ವೈಮನಸ್ಯದಿಂದ ಹೀಗೆ ಮಾಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದು ನಾವಲ್ಲಾ, ನೀವು. ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡಿಲ್ಲ. 35 ವರ್ಷದ ಹಿಂದೆ ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ಕಾಶ್ಮೀರದ ಲಾಲ್‍ಚೌಕ್‍ನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ಸ್ವಾತಂತ್ರ್ಯ ಬಂದ 75 ವರ್ಷದ ನಂತರ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಿದ್ದೇವೆ. ನಾವೆಲ್ಲೂ ರಾಷ್ಟ್ರಧ್ವಜ ಇಳಿಸಿ ಎಂದು ಹೇಳಿಲ್ಲ. ಹನುಮನ, ರಾಮನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು. +ಸಭಾಧ್ಯಕ್ಷರು ಅವಕಾಶ ಕೊಟ್ಟರೆ ವಾಸ್ತವ ಸ್ಥಿತಿ ಹೇಳುತ್ತೇನೆ ಎಂದು ಶಾಸಕ ರವಿಕುಮಾರ್ ಹೇಳಿದರು. ಆ ಸಂದರ್ಭದಲ್ಲಿ ಸಭಾಧ್ಯಕ್ಷರು ಅವಕಾಶ ನೀಡದೇ ಇದ್ದಾಗ ಈ ವಿಚಾರಕ್ಕೆ ತೆರೆ ಬಿದ್ದಿತು. \ No newline at end of file diff --git a/eesanje/url_46_238_7.txt b/eesanje/url_46_238_7.txt new file mode 100644 index 0000000000000000000000000000000000000000..78f6058e2a1339a863aba27632c330c37cd6f9e2 --- /dev/null +++ b/eesanje/url_46_238_7.txt @@ -0,0 +1,14 @@ +ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕೆ.ಗೋಪಾಲಯ್ಯಗೆ ಪ್ರಾಣ ಬೆದರಿಕೆ ಪ್ರಕರಣ +ಬೆಂಗಳೂರು,ಫೆ.14- ಬಿಬಿಎಂಪಿಯ ಮಾಜಿ ಸದಸ್ಯರೊಬ್ಬರು ಅವಾಚ್ಯ ಶಬ್ದಗಳಿಂದ ಬೆದರಿಸಿ ಪ್ರಾಣಬೆದರಿಕೆ ಹಾಕಿದ್ದು ತಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಮಾಜಿ ಸಚಿವರೂ ಆಗಿರುವ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ವಿಧಾನಸಭೆಯಲ್ಲಿಂದು ಪ್ರಸ್ತಾಪಿಸಿದ್ದು, ಅದಕ್ಕೆ ಬಿಜೆಪಿಯ ಶಾಸಕರು ಬೆಂಬಲ ವ್ಯಕ್ತಪಡಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬೆದರಿಕೆ ಹಾಕಿದ ಆರೋಪಿಯನ್ನು ಸಂಜೆಯ ಒಳಗೆ ಬಂಧಿಸಬೇಕು. ಇಲ್ಲ ಠಾಣೆಯ ಇನ್ಸ್‍ಪೆಕ್ಟರ್ ಅವರನ್ನು ಅಮಾನತುಪಡಿಸಬೇಕೆಂದು ಖಾರವಾಗಿ ಸೂಚನೆ ನೀಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರದ ಬಳಿಕ ಶೂನ್ಯ ವೇಳೆಯಲ್ಲಿ ಗೋಪಾಲಯ್ಯ ಅವರು ವಿಷಯ ಪ್ರಸ್ತಾಪಿಸಿ ನಿನ್ನೆ ರಾತ್ರಿ 11 ಗಂಟೆ 1 ನಿಮಿಷಕ್ಕೆ ಬಿಬಿಎಂಪಿಯ ಮಾಜಿ ಸದಸ್ಯ ಪದ್ಮರಾಜ್ ತಮಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಆ ಪದಗಳನ್ನು ಇಲ್ಲಿ ಹೇಳಲು ಸಾಧ್ಯವಿಲ್ಲ. ನನಗೆ ಮತ್ತು ನನ್ನ ಕುಟುಂಬಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾರೆ. +ಬಸವೇಶ್ವರ ನಗರದಲ್ಲಿ ಕ್ಲಬ್ ನಡೆಸುವ ಈ ವ್ಯಕ್ತಿ ರಾತ್ರಿಯಾಗುತ್ತಿದ್ದಂತೆ ಪಾನಮತ್ತನಾಗಿ ಮದವೇರಿ ನನ್ನನ್ನೂ ಸೇರಿದಂತೆ ಕುಟುಂಬದ ಅನೇಕರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ. ಸುರೇಶ್‍ಕುಮಾರ್ ಅವರಂತಹ ಶಾಸಕರು ಶಕ್ತಿಯಿಲ್ಲದೆ ದೂರು ನೀಡಿಲ್ಲ. ಸದರಿ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ರಾತ್ರಿಯಿಡೀ ಏಳೆಂಟು ಗಂಟೆ ಅವರ ಮನೆ ಎದುರು ಕಾವಲು ಕಾದಿದ್ದಾರೆ. ಬಾಗಿಲು ತೆರೆದು ಹೊರಬರದೇ ಒಳಗಿದ್ದ ವ್ಯಕ್ತಿ ಬೆಳಿಗ್ಗೆ 10 ಗಂಟೆಗೆ ನಿಶೆ ಇಳಿದ ಮೇಲೆ ಹೊರಹೋಗಿದ್ದಾನೆ. ಇಂತಹವರು ಸಮಾಜಕ್ಕೆ ಬೇಕೇ ಎಂದು ಪ್ರಶ್ನಿಸಿದರು. +ಸದರಿ ವ್ಯಕ್ತಿಯನ್ನು ಬಂಧಿಸಿ 6 ತಿಂಗಳ ಕಾಲ ಗಡಿಪಾರು ಮಾಡಬೇಕು. ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕು. ಬೆಂಗಳೂರಿನಲ್ಲಿ ಅನೈತಿಕವಾಗಿ ನಡೆಯುತ್ತಿರುವ ಕ್ಲಬ್‍ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಶಾಸಕ ಸುರೇಶ್‍ಕುಮಾರ್ ಮಾತನಾಡಿ, ಶಾಸಕರಿಗೆ ರಕ್ಷಣೆ ಇಲ್ಲ ಎಂದಾದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ರಾತ್ರಿ ದೂರು ಕೊಟ್ಟರೂ ಈವರೆಗೂ ಏಕೆ ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಸದರಿ ವ್ಯಕ್ತಿಯ ನಡವಳಿಕೆಗೆ ನಾನು ಮತ್ತು ಅಶೋಕ್‍ರವರು ಫಲಾನುಭವಿಗಳಾಗಿದ್ದೇವೆ. ಪೊಲೀಸರು ಆತನ ಮನೆಬಾಗಿಲಿಗೆ ಹೋದಾಗ ಒಳಗಿನಿಂದಲೇ ಆತ ಪ್ರಭಾವಿಗಳಿಗೆ ಕರೆ ಮಾಡಿ ಶಿಫಾರಸ್ಸು ಮಾಡುತ್ತಿದ್ದಾನೆ. ಗೋಪಾಲಯ್ಯ ಅವರಿಗೆ ಬೆದರಿಕೆ ಹಾಕಿದ್ದಾನೆ ಎಂದಾದರೆ ಆತನ ಉದ್ಧಟತನದ ಮಟ್ಟವನ್ನು ಅಂದಾಜಿಸಬಹುದು ಎಂದು ಆರೋಪಿಸಿದರು. +ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ +ಬಿಜೆಪಿಯ ಅರಗ ಜ್ಞಾನೇಂದ್ರ ನಮ್ಮ ಸರ್ಕಾರದಲ್ಲಿ ಕ್ಲಬ್ ಕ್ಯಾಸಿನೋಗಳು ಬಂದ್ ಆಗಿದ್ದವು. ಗೋಪಾಲಯ್ಯ ಅವರಂತಹ ಸಜ್ಜನ ಮನುಷ್ಯರಿಗೆ ಬೆದರಿಕೆ ಹಾಕಿರುವುದು ಖಂಡನೀಯ. ಶಾಸಕರೇ ಅಸಹಾಯಕ ಸ್ಥಿತಿಗೆ ತಲುಪಿದ್ದಾರೆಂದರೆ ಜನಸಾಮಾನ್ಯರ ಪಾಡೇನು? ಯಾವ ಶಕ್ತಿ ಅವನನ್ನು ರಕ್ಷಿಸುತ್ತಿದೆ? ದೂರು ಕೊಟ್ಟರೂ ಏಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಲ್ಲದೆ, ಅಕ್ರಮ ಕ್ಲಬ್‍ಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದರು. +ವಿರೋಧಪಕ್ಷದ ನಾಯಕ ಆರ್.ಅಶೋಕ್, ಬೆದರಿಕೆ ಹಾಕಿದ ವ್ಯಕ್ತಿ ಕುಡಿದಿದ್ದಾನೆ. ಆತನ ನಿಶೆ ಇಳಿಯಲಿ ಎಂದು ಪೊಲೀಸರು ಕಾದು ಕುಳಿತಿರುವುದು ಹಾಸ್ಯಾಸ್ಪದ. ಈ ರೀತಿ ಕಾನೂನಿನಲ್ಲಿ ವಿನಾಯಿತಿ ನೀಡಲು ಅವಕಾಶವಿದೆಯೇ? ಪೊಲೀಸ್ ಠಾಣೆಯಿಂದ ಸ್ವಲ್ಪವೇ ದೂರದಲ್ಲಿದ್ದರೂ ಏಕೆ ಬಂಧಿಸಿಲ್ಲ? ಆರೋಪಿಗಳಿಗೆ ಪೊಲೀಸರು ರಾಜಾತೀಥ್ಯ ನೀಡುವುದು ಅಗತ್ಯವೇ? ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಶಾಸಕರನ್ನು ಅವಹೇಳನ ಮಾಡಿರುವ ವ್ಯಕ್ತಿ ವಿರುದ್ಧ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. +ಸರ್ಕಾರದ ಪರವಾಗಿ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಸದಸ್ಯರ ಚರ್ಚೆಗಳನ್ನು ಗೃಹಸಚಿವರ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಾನೂನು ಪಾಲನೆಯ ವಿಷಯದಲ್ಲಿ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ. ಆ ವ್ಯಕ್ತಿ ಬಿಜೆಪಿಯಲ್ಲಿದ್ದರು, ಕಾಂಗ್ರೆಸ್‍ಗೆ ಬಂದಿದ್ದರು. ಈಗ ಯಾವ ಪಕ್ಷದಲ್ಲಿದ್ದಾರೋ ಗೊತ್ತಿಲ್ಲ. ರಾಜಕೀಯ ಹೊರತಾಗಿ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು. +ಈ ಹಂತದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಮಧ್ಯಪ್ರವೇಶಿಸಿ, ನಿನ್ನೆ ರಾತ್ರಿ ಘಟನೆ ನಡೆದರೂ ಇವರನ್ನು ಏಕೆ ಬಂಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರೋಪಿಯನ್ನು ಇಂದು ಮಧ್ಯಾಹ್ನ ಇಲ್ಲ ಸಂಜೆಯೊಳಗೆ ಬಂಧಿಸಬೇಕು. ಇಲ್ಲವಾದರೆ ಸದರಿ ಠಾಣೆಯ ಇನ್ಸ್‍ಪೆಕ್ಟರ್ ಅನ್ನು ಅಮಾನತು ಮಾಡಿ ಎಂದು ಸೂಚನೆ ನೀಡಿದರು. +ಈ ಹಂತದಲ್ಲಿ ಗೃಹಸಚಿವರು ವಿಧಾನಪರಿಷತ್‍ನಲ್ಲಿದ್ದದ್ದರಿಂದ ಸರ್ಕಾರದಿಂದ ತಕ್ಷಣವೇ ಸ್ಪಷ್ಟನೆ ಸಿಗಲಿಲ್ಲ. ಕೆಲ ಸಮಯದ ಬಳಿಕ ಆರ್.ಅಶೋಕ್‍ರವರು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಚರ್ಚೆ ಮಾಡುವಾಗ ಗೃಹಸಚಿವ ಪರಮೇಶ್ವರ್ ಆಗಮಿಸಿದರು. ಆ ಸಂದರ್ಭದಲ್ಲಿ ವಿಚಾರ ಮತ್ತೆ ಗ್ರಾಸವಾಯಿತು. ಉತ್ತರ ನೀಡಿದ ಸಚಿವ ಪರಮೇಶ್ವರ್, ಗೋಪಾಲಯ್ಯ ಅವರ ದೂರು ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. +ಅಕ್ರಮ ಗಣಿಗಾರಿಕೆ : ರಾಜಸ್ಥಾನದ ಹಲವು ಸ್ಥಳಗಳಲ್ಲಿ ಶೋಧ +ಆರೋಪಿಯನ್ನು ಬಂಧಿಸಲು ಈಗಲೂ ಅವರ ಮನೆ ಮುಂದೆ ಕಾಯುತ್ತಿದ್ದಾರೆ. ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯುತ್ತಿಲ್ಲ. ಅನಿವಾರ್ಯವಾದರೆ ಬಾಗಿಲು ಹೊಡೆದು ಒಳಹೋಗಿ ಬಂಧಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುರೇಶ್‍ಕುಮಾರ್, 1975 ರ ಜೂನ್ 25 ರಂದು ವಾಜಪೇಯಿ, ಮಧುದಂಡವತೆ ಸೇರಿದಂತೆ ಗಣ್ಯ ನಾಯಕರು ಶಾಸಕರ ಭವನದಲ್ಲಿ ತಂಗಿದ್ದರು. ಅವರನ್ನು ಯಾವುದೇ ಮುಲಾಜಿಲ್ಲದೇ ಪೊಲೀಸರು ಬಂಧಿಸಿದ್ದರು. ಈ ವ್ಯಕ್ತಿಗೆ ವಿವಿಐಪಿ ಉಪಚಾರವೇಕೆ. ಇಷ್ಟೊತ್ತಾದರೂ ಬಾಗಿಲು ಕಾಯುತ್ತಿದ್ದಾರೆಂದು ಇದು ಪೊಲೀಸರಿಗೆ ಶೋಭೆ ತರುವುದಿಲ್ಲ. ಅಸಮರ್ಥತೆ ಎಂದಾಗುತ್ತದೆ ಎಂದು ಕಿಡಿಕಾರಿದರು. ಆ ವೇಳೆಗೆ ಅಧಿಕಾರಿಗಳ ಗ್ಯಾಲರಿಯಿಂದ ಬಂದ ಸಂದೇಶ ಪಡೆದು ಸ್ಪಷ್ಟನೆ ನೀಡಿದ ಗೃಹಸಚಿವರು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_238_8.txt b/eesanje/url_46_238_8.txt new file mode 100644 index 0000000000000000000000000000000000000000..0373b203c131839275ff2de03adb870f84428e76 --- /dev/null +++ b/eesanje/url_46_238_8.txt @@ -0,0 +1,7 @@ +100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ : ಕ್ರೀಡಾ ಸಚಿವ ಬಿ.ನಾಗೇಂದ್ರ +ಬೆಂಗಳೂರು,ಫೆ.14- ಯಲಹಂಕ ತಾಲೂಕು ಹೆಸರುಘಟ್ಟ ಹೋಬಳಿಯ ಮಾವಳ್ಳಿಪುರ ಗ್ರಾಮದ ಸರ್ವೆ ನಂ.8 ರಲ್ಲಿ 100 ಎಕರೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಮತ್ತು ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಯಲಹಂಕ ಕ್ಷೇತ್ರದ ಎಸ್.ಆರ್.ವಿಶ್ವನಾಥ್ ವಿಷಯ ಪ್ರಸ್ತಾಪಿಸಿದಾಗ 60 ಎಕರೆ ಜಮೀನು ಕ್ರೀಡಾ ವಿಶ್ವವಿದ್ಯಾಲಯಕ್ಕಾಗಿ ಮಂಜೂರು ಮಾಡಲು ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿತ್ತು. ಹೆಚ್ಚುವರಿಯಾಗಿ 40 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ. ಒಟ್ಟು 100 ಎಕರೆಯಲ್ಲಿ ಎಲ್ಲಾ ಕ್ರೀಡೆಗಳನ್ನೂ ಒಂದೇ ಸೂರಿನಡಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. +ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ವಿಶ್ವನಾಥ್ ಅವರು, ಸಚಿವರು ಕ್ರೀಡಾಂಗಣ ಸ್ಥಾಪನೆ ಮಾಡಿದ ಬಳಿಕ ಉದ್ಘಾಟನೆಯ ದಿನ ಬೆಳ್ಳಿರಥದಲ್ಲಿ ಮೆರವಣಿಗೆ ಮಾಡುವುದಾಗಿ ಹೇಳಿದರು. ಆನೇಕಲ್ ಕ್ಷೇತ್ರದ ಶಿವಣ್ಣ ಅವರು ತಮ್ಮ ಕ್ಷೇತ್ರದಲ್ಲಿ 7 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಆನೇಕಲ್ ಮತ್ತು ಸರ್ಜಾಪುರ ಎರಡೂ ಕಡೆ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು. +ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ +ಇದಕ್ಕೆ ಉತ್ತರಿಸಿದ ಸಚಿವ ನಾಗೇಂದ್ರ ಮೊದಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಆನೇಕಲ್ ತಾಲೂಕಿನ ಕ್ರೀಡಾಂಗಣವನ್ನು ಸುಸಜ್ಜಿತವಾಗಿ ನಿರ್ಮಿಸಲಾಗುವುದು, ತಾವು ಸ್ಥಳಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದರು. +5 ಲಕ್ಷಕ್ಕಿಂತ ಮೇಲ್ಪಟ್ಟ ಜನಸಂಖ್ಯೆಯಿರುವ ಪ್ರದೇಶಗಳಲ್ಲಿ 2 ಕ್ರೀಡಾಂಗಣವನ್ನು ನಿರ್ಮಿಸಲು ಮಾರ್ಗಸೂಚಿಯನ್ನು ರೂಪಿಸಲಾಗಿದೆ. ಅದರ ಅನುಸಾರ ಅನುದಾನದ ಲಭ್ಯತೆ ಆಧರಿಸಿ ಕ್ರೀಡಾಂಗಣವನ್ನು ನಿರ್ಮಿಸುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_238_9.txt b/eesanje/url_46_238_9.txt new file mode 100644 index 0000000000000000000000000000000000000000..f95daf076b4b9bf7648356691cf719581396064a --- /dev/null +++ b/eesanje/url_46_238_9.txt @@ -0,0 +1,5 @@ +ಗ್ರಾಮ ವಿಕಾಸ್ ಯೋಜನೆಯಡಿ 991 ಗ್ರಾಮಗಳ ಅಭಿವೃದ್ಧಿ +ಬೆಂಗಳೂರು,ಫೆ.14- ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಯಾವುದೇ ಗ್ರಾಮಗಳನ್ನು ಐಕ್ಯ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯು 2017-18 ರಲ್ಲಿ ಪ್ರಾರಂಭವಾಗಿದ್ದು, ಈ ಯೋಜನೆಯಡಿ 991 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. +ಆಯ್ಕೆಯಾಗಿರುವ ಗ್ರಾಮಗಳಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೊಂದು ಕಾಮಗಾರಿಗಳು ಜಮೀನಿನ ವಿವಾದ, ಕಾಮಗಾರಿಗಳ ಬದಲಾವಣೆ, ಸಾರ್ವಜನಿಕ ವಿರೋಧದಿಂದ ವಿಳಂಬವಾಗಿದೆ ಎಂದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 26 ಗ್ರಾಮಗಳು ಆಯ್ಕೆಯಾಗಿದ್ದು, 330 ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದ್ದು, 294 ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನೂ 36 ಕಾಮಗಾರಿಗಳು ಬಾಕಿ ಇದ್ದು, ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. +ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ +ಆಯಾ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಆಯಾ ಇಲಾಖೆಯಲ್ಲೇ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಇದಕ್ಕೂ ಮುನ್ನ ಮಾತನಾಡಿದ ಸುಬ್ಬಾರೆಡ್ಡಿ, 6 ವರ್ಷವಾದರೂ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಹಣ ಹಾಗೂ ಸಿಬ್ಬಂದಿ ಸಮಸ್ಯೆ ಇದೆ ಎಂದು ಸದನದ ಗಮನ ಸೆಳೆದರು. \ No newline at end of file diff --git a/eesanje/url_46_239_1.txt b/eesanje/url_46_239_1.txt new file mode 100644 index 0000000000000000000000000000000000000000..6deeee4a6fc0146611e4e8b5d2a739919cf573d8 --- /dev/null +++ b/eesanje/url_46_239_1.txt @@ -0,0 +1,6 @@ +ಹಿಂದೆ ಪದ್ಮ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿದ್ದವು : ಉಪ ರಾಷ್ಟ್ರಪತಿ +ಗುವಾಹಟಿ,ಫೆ.14- ಪದ್ಮ ಪ್ರಶಸ್ತಿಗಳು ಒಂದು ಕಾಲದಲ್ಲಿ ಪೋಷಣೆ ಮತ್ತು ಈವೆಂಟ್ ಮ್ಯಾನೇಜ್‍ಮೆಂಟ ನಿಂದ ನಡೆಸಲ್ಪಡುತ್ತಿದ್ದವು, ಆದರೆ ಈ ಪ್ರಕ್ರಿಯೆಯು ಈಗ ಪರಿವರ್ತನೆಯ ಬದಲಾವಣೆಗಳನ್ನು ಕಂಡಿದೆ ಎಂದು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಹೇಳಿದ್ದಾರೆ. ಇಲ್ಲಿ ಅಸ್ಸಾಂನ ಉನ್ನತ ನಾಗರಿಕ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ವೈವಿಧ್ಯತೆಯನ್ನು ಪ್ರತಿನಿಧಿಸುವ 22 ವ್ಯಕ್ತಿಗಳಿಗೆ ರಾಜ್ಯ ಮಾನ್ಯತೆಗಳನ್ನು ಅತ್ಯಂತ ಪಾರದರ್ಶಕ ರೀತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದು ಹೇಳಿದರು. +ನಾವು ಇತ್ತೀಚಿನ ದಿನಗಳಲ್ಲಿ ಪದ್ಮ ಪ್ರಶಸ್ತಿಗಳಲ್ಲಿ ಪರಿವರ್ತನೆಯ ಬದಲಾವಣೆಗಳನ್ನು ಮಾಡಿದ್ದೇವೆ ಎಂದು ನಾವು ನೋಡಿದ್ದೇವೆ. ಒಂದು ಸಮಯದಲ್ಲಿ ಪದ್ಮಗಳನ್ನು ಸುರಕ್ಷಿತವಾಗಿರಿಸಲು ಪ್ರೋತ್ಸಾಹವು ಪ್ರೇರಕ ಶಕ್ತಿ ಮತ್ತು ಈವೆಂಟ್ ಮ್ಯಾನೇಜ್ಮೆಂಟ ಗಳು ನಡೆಸುತ್ತಿದ್ದವು ಎಂದಿದ್ದಾರೆ. +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ಪ್ರೋತ್ಸಾಹ, ಸ್ನೇಹ ಅಥವಾ ಈವೆಂಟ್ ಮ್ಯಾನೇಜ್‍ಮೆಂಟ್‍ನಿಂದ ಪಡೆದ ಪ್ರಶಸ್ತಿಯು ವಾಸ್ತವವಾಗಿ ಪ್ರಶಸ್ತಿಯಲ್ಲ ಏಕೆಂದರೆ ಯಾವುದೇ ವಿಶ್ವಾಸಾರ್ಹತೆ ಇರುವುದಿಲ್ಲ ಎಂದು ಧಂಖರ್ ಹೇಳಿದರು. ಅಸ್ಸಾಂ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರು ವಿವಿಧ ಕ್ಷೇತ್ರಗಳ 22 ಜನರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. +ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರಿಗೆ ಅತ್ಯುನ್ನತ ರಾಜ್ಯ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ ನೀಡಲಾಯಿತು. ಎರಡನೇ ಅತ್ಯುನ್ನತ ಪ್ರಶಸ್ತಿ ಅಸ್ಸಾಂ ಸೌರಭ್ ಅನ್ನು ನಾಲ್ವರಿಗೆ ನೀಡಲಾಯಿತು, ಮೂರನೇ ಅತ್ಯುನ್ನತ ಅಸ್ಸಾಂ ಗೌರವ್ ಅನ್ನು 17 ಜನರು ಸ್ವೀಕರಿಸಿದರು. \ No newline at end of file diff --git a/eesanje/url_46_239_10.txt b/eesanje/url_46_239_10.txt new file mode 100644 index 0000000000000000000000000000000000000000..964d33a3a61c37a5813e8eb347be3e7af8ff72ec --- /dev/null +++ b/eesanje/url_46_239_10.txt @@ -0,0 +1,4 @@ +ಕೇಂದ್ರದಿಂದ ಯಾವುದೇ ಬರ ಪರಿಹಾರ ಸಿಕ್ಕಿಲ್ಲ : ಚೆಲುವರಾಯಸ್ವಾಮಿ ಅಸಮಾಧಾನ +ಬೆಂಗಳೂರು,ಫೆ.13- ರಾಜ್ಯದಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯನ್ನು ಪರಿಷ್ಕರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ವಿಧಾನ ಪರಿಷತ್‍ನಲ್ಲಿ ಸದಸ್ಯ ಟಿ.ಎ.ಶರವಣ ಪ್ರಶ್ನೆಗೆ ತೋಟಗಾರಿಕೆ ಸಚಿವರ ಪರವಾಗಿ ಉತ್ತರಿಸಿದ ಅವರು,ಯಾವುದೇ ರಾಜ್ಯದಲ್ಲಿ ಪ್ರಕೃತಿ ವಿಕೋಪ ಉಂಟಾದ ವೇಳೆ ಮಾರ್ಗಸೂಚಿಯಡಿ ಪರಿಹಾರ ನಿಗದಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಬರಗಾಲ ಕಾಣಿಸಿಕೊಂಡಿರುವ ಕಾರಣ, ಮಾರ್ಗಸೂಚಿ ಪರಿಷ್ಕರಿಸುವಂತೆ ನಾವು ಮನವಿ ಮಾಡಿದ್ದೇವೆಎಂದು ತಿಳಿಸಿದರು. +ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ನಾನು ದೆಹಲಿಗೆ ಹೋಗಿ ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರದಿಂದ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಿಂದ ಬರ ನಿರ್ವಹಣೆಗೆ ನಾವು ಕ್ರಮ ಕೈಗೊಂಡಿದ್ದೇವೆ 33 ಲಕ್ಷ ರೈತರಿಗೆ 2000 ರೂ ರೈತರ ಖಾತೆಗೆ ಹಣ ಹಾಕಿದ್ದೇವೆ.ಕೇಂದ್ರ ಸರ್ಕಾರದಿಂದ ಹಣ ಬಂದರೆ ಉಳಿದ ರೈತರಿಗೂ ಹಣ ಹಾಕುತ್ತೇವೆ ಎಂದರು. +ಎನ್‍ಡಿಆರ್‍ಎಫ್ ಹಾಗೂ ಎಸ್‍ಡಿಆರ್‍ಎಫ್ ಈ ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳಗಳಿಗೆ 8500 ರೂ, ನೀರಾವರಿ ಬೆಳೆಗೆ 17000 ರೂ,ಹಾಗೂ ಬಹುವಾರ್ಷಿಕ ಬೆಳೆಗೆ25000ರೂ ಪರಿಹಾರ ನೀಡುತ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದರೆ,ರೈತರಿಗೆ ಹೆಚ್ಚಿನ ಪರಿಹಾರ ಸಿಗಲಿದೆ ಎಂದು ವಿವರಿಸಿದರು.ಕೃಷಿ, ರೇಷ್ಮೆ, ಮತ್ತು ತೋಟಗಾರಿಕೆ ಬೆಳೆ ಸೇರಿದಂತೆ ಬೆಳೆ ನಷ್ಟವಾಗಿರುವ ರೈತರಿಗೆ 2 ಸಾವರಿದಂತೆ ಇಲ್ಲಿಯವರೆಗೆ ಒಟ್ಟು 30,24,795 ರೈತರಿಗೆ573.28 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. \ No newline at end of file diff --git a/eesanje/url_46_239_11.txt b/eesanje/url_46_239_11.txt new file mode 100644 index 0000000000000000000000000000000000000000..ed7b2a60459ecd5ce71406c10b17ef27f82fda5a --- /dev/null +++ b/eesanje/url_46_239_11.txt @@ -0,0 +1,10 @@ +ಬಹುತೇಕ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಫಿಕ್ಸ್..? +ಬೆಂಗಳೂರು, ಫೆ.13- ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಕರ್ನಾಟಕದಲ್ಲಿ ಎಂಪಿ ಎಲೆಕ್ಷನ್ ಕಾವು ಜೋರಾಗುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳ ಮೂಲಕ ಜನತೆ ಮುಂದೆ ಹೋಗಲಿದೆ. ಈ ಹಿನ್ನೆಲೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯನ್ನು ಇಡುತ್ತಿದ್ದು, ತನ್ನ ಭದ್ರಕೋಟೆಗಳನ್ನು ಮತ್ತಷ್ಟು ಭದ್ರಗೊಳಿಸಲು ಮುಂದಾಗಿದೆ. ಹೀಗಾಗಿ ಬಹುತೇಕ ಹಾಲಿ ಸಂಸದರನ್ನೇ ಮತ್ತೊಮ್ಮೆ ಕಣಕ್ಕಿಳಿ ಸುವ ಸಾಧ್ಯತೆಯಿದೆ. +ಹಾಲಿ ಸಂಸದರು ಸ್ಪರ್ಧಿಸಲು ಸಾಧ್ಯವಾಗದ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳಲ್ಲಿ ಹಾಲಿ ಸಂಸದರನ್ನು ಕಣಕ್ಕಿಳಿಸುವ ಮೂಲಕ ನಿರಂತರತೆಯನ್ನು ಕಾಯ್ದುಕೊಳ್ಳಲು ಬಿಜೆಪಿ ಮುಂದಾಗಿದೆ. ಕಮಲ ಪಡೆಯ ಈ ಕಾರ್ಯತಂತ್ರವನ್ನು ಹೆಸರು ಹೇಳಲಿಚ್ಛಿಸದ ಬಿಜೆಪಿಯ ಮಾಜಿ ಸಚಿವರೊಬ್ಬರೇ ಖಚಿತಪಡಿಸಿದ್ದಾರೆ. ಹೊಸ ಮುಖಗಳಿಗೆ ಆದ್ಯತೆ ಕೊಡಬೇಕು ಎಂದು ಬದಲಾವಣೆ ಮಾಡಿದರೆ ಪಕ್ಷಕ್ಕೆ ಹೊಡೆತ ಬೀಳಬಹುದು ಎಂಬುದನ್ನು ಬಿಜೆಪಿ ನಾಯಕರು ಅರಿತಂತೆ ಕಾಣುತ್ತಿದೆ. +ಹಾವೇರಿ ಕ್ಷೇತ್ರದಲ್ಲಿ ಸಂಸದ ಶಿವಕುಮಾರ್ ಉದಾಸಿ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಮತ್ತೊಬ್ಬರನ್ನು ಹುಡುಕಬೇಕಾದ ಅನಿವಾರ್ಯತೆ ಬಿಜೆಪಿಯಲ್ಲಿದೆ. ಇನ್ನು, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯ ಬದಲಾಯಿಸುವ ಚಿಂತನೆಯನ್ನು ಬಿಜೆಪಿ ನಾಯಕರು ಮಾಡುತ್ತಿದ್ದು, ಹಾಲಿ ಸಂಸದೆ ಮಂಗಳಾ ಅಂಗಡಿ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಪಕ್ಷಕ್ಕೆ ವಾಪಸ್ ಆಗಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಆಗಬಹುದು ಎನ್ನಲಾಗಿದೆ. +ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್ +ಅದು ಬಿಟ್ಟರೇ ಬಿಜಾಪುರ, ಧಾರವಾಡ ಮತ್ತು ಉತ್ತರ ಕನ್ನಡದಂತಹ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಯ ಬಗ್ಗೆ ವದಂತಿಗಳು ಗಿರಕಿ ಹೊಡೆಯುತ್ತಲೇ ಇವೆ. ಆದರೆ, ಈ ಹಿಂದಿನ ಚುನಾವಣೆಗಳಲ್ಲಿ ಬದಲಾವಣೆಗೆ ಕೈ ಹಾಕಿ ಕೈ ಸುಟ್ಟುಕೊಂಡಿರುವುದನ್ನು ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ ಮುಂದೆ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆ ಅಭ್ಯರ್ಥಿ ಆಯ್ಕೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಬಿಜೆಪಿ ಮುಂದಾಗಲ್ಲ ಎಂದು ಹೇಳಲಾಗಿದೆ. +ಬದಲಾವಣೆಗಿಂತ ಗೆಲ್ಲುವ ಕುದುರೆಗಳಿಗೆ ಒತ್ತು!ಇನ್ನು, ಅಭ್ಯರ್ಥಿ ಆಯ್ಕೆಯಲ್ಲಿ ಗೆಲುವೇ ಪ್ರಮುಖ ಪಾತ್ರವಹಿಸುತ್ತದೆ. ಬದಲಾವಣೆಗಿಂತ ಗೆಲ್ಲುವ ಕುದುರೆಗಳಿಗೆ ಬಿಜೆಪಿ ಒತ್ತು ನೀಡಲಿದ್ದು, ಟಿಕೆಟ್ ಅನಿಶ್ಚಿತತೆ ಎದುರಿಸುತ್ತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಹಂಚಿಕೆ ಸಾಧ್ಯತೆಯ ಸುಳಿವನ್ನು ಬಿಜೆಪಿಯ ಕೋರ್ ಕಮಿಟಿ ಸದಸ್ಯರೊಬ್ಬರು ನೀಡಿದ್ದಾರೆ. +ವಿಭಿನ್ನ ಸಮುದಾಯಗಳನ್ನು ಪ್ರತಿನಿಸುವ ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಕಲಬುರಗಿ ಸಂಸದ ಉಮೇಶ್ ಜಾಧವ್ ಅವರ ವಿಚಾರದಲ್ಲಿ ಪಕ್ಷವು ಜಾಣ ನಡೆ ಅನುಸರಿಸಲಿದ್ದು, ಸಮತೋಲನ ಕಾಯ್ದುಕೊಳ್ಳುವ ದೃಷ್ಟಿಯಿಂದ ಅವರನ್ನು ಬದಲಾಯಿಸುವ ಕೆಲಸಕ್ಕೆ ಕೈ ಹಾಕಲ್ಲ ಎನ್ನಲಾಗಿದೆ. ಇನ್ನು, ಬಾಗಲಕೋಟೆಯಲ್ಲಿ ಹಾಲಿ ಸಂಸದ ಪಿಸಿ ಗದ್ದಿಗೌಡರ್ ಅವರಂತಹ ನಾಯಕರು ತಮ್ಮದೇ ಪ್ರಭಾವವನ್ನು ಹೊಂದಿದ್ದಾರೆ. ಅಂತವರಿಗೆ ಟಿಕೆಟ್ ನಿರಾಕರಿಸಿದರೆ ಬಿಜೆಪಿಯ ಚುನಾವಣಾ ಭವಿಷ್ಯಕ್ಕೆ ಹೊಡೆತ ಬೀಳಬಹುದು ಎನ್ನಲಾಗಿದೆ. + ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು +ಹಾವೇರಿಯಲ್ಲಿ ಶಿವಕುಮಾರ್ ಉದಾಸಿ ಬದಲಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಬಿಸಿ ಪಾಟೀಲ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್, ಡಾ.ಮಹೇಶ್ ನಾಲ್ವಾಡ ಅವರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದೆ. ಇನ್ನು, ಅನಂತಕುಮಾರ್ ಹೆಗಡೆಯವರು ಇತ್ತೀಚೆಗೆ ಮತ್ತೆ ಸಕ್ರಿಯರಾಗಿದ್ದು, ಉತ್ತರ ಕನ್ನಡದಲ್ಲಿ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಮುಂದುವರಿಯುವ ಸಾಧ್ಯತೆ ಇದೆ. \ No newline at end of file diff --git a/eesanje/url_46_239_12.txt b/eesanje/url_46_239_12.txt new file mode 100644 index 0000000000000000000000000000000000000000..89e4f75130cd5ba97e4baca85708990b14319014 --- /dev/null +++ b/eesanje/url_46_239_12.txt @@ -0,0 +1,4 @@ +ಭದ್ರಾ ಯೋಜನೆ ಭೂ ಸ್ವಾಧೀನಕ್ಕೆ 500 ಕೋಟಿ ಮೀಸಲಿಗೆ ಆಗ್ರಹ +ಬೆಂಗಳೂರು, ಫೆ.13- ತುಂಗಾನದಿಯಿಂದ ಭದ್ರಾ ಜಲಾಶಯಕ್ಕೆ 17 ಟಿಎಂಸಿ ನೀಡು ಹರಿಸುವ ಮಹತ್ವದ ಯೋಜನೆಗೆ ಭೂ ಸ್ವಾಧೀನಪಡಿಸಿಕೊಳ್ಳಲು ಮುಂದಿನ ಬಜೆಟ್‍ನಲ್ಲಿ 500 ಕೋಟಿ ರೂ. ಮೀಸಲಿರಿಸುವಂತೆ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಒತ್ತಾಯಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರ ಜೆಡಿಎಸ್ ಶಾಸಕ ಸಿ.ಬಿ.ಸುರೇಶ್ ಬಾಬು ಪ್ರಶ್ನೆ ಕೇಳಿ, ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳು ನೆನಗುದಿಗೆ ಬಿದ್ದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್ +ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ 856 ಕೋಟಿ ರೂ.ಗಳ ಮಂಜೂರಾತಿ ನೀಡಲಾಗಿದೆ. ಕೆಲವು ಕಡೆ ರೈತರು ವಿರೋಧ ಪಡಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇವೆ. ಭೂಸ್ವಾೀಧಿನ ವಿಳಂಬವಾಗುತ್ತಿದೆ. ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ 5300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಹಿರಿಯರಾದ ಟಿ.ಬಿ.ಜಯಚಂದ್ರ ಅವರು ತಮ್ಮ ಕ್ಷೇತ್ರಕ್ಕೆ ನೀರು ತೆಗೆದುಕೊಂಡು ಹೋಗಲು ಶ್ರಮಿಸಿದ್ದಾರೆ. ಅವರ ಬೇಡಿಕೆಯಂತೆ ಭೂ ಸ್ವಾೀಧಿನಕ್ಕೆ ವಿಶೇಷ ಹಣ ನೀಡಲು ಪರಿಶೀಲಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. \ No newline at end of file diff --git a/eesanje/url_46_239_2.txt b/eesanje/url_46_239_2.txt new file mode 100644 index 0000000000000000000000000000000000000000..3df8c129d7c9802927711a401f35d837f5a8e0c8 --- /dev/null +++ b/eesanje/url_46_239_2.txt @@ -0,0 +1,8 @@ + : ಪ್ಲೇಟ್ ಬದಲಾವಣೆಗೆ 3 ತಿಂಗಳು ಅವಧಿ ವಿಸ್ತರಣೆ +ಬೆಂಗಳೂರು,ಫೆ.14- ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಸಮಯ ಅವಕಾಶವನ್ನು ರಾಜ್ಯದಲ್ಲಿ ಇನ್ನು ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು. +ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. +ಶೇ.100ರಷ್ಟು ವಿವಿಪ್ಯಾಟ್ ಬಳಕೆಗೆ ಕಾಂಗ್ರೆಸ್ ಆಗ್ರಹ +ನೋಂದಣಿ ಫಲಕವು ಅಲ್ಯೂಮಿನಿಯಂನಿಂದ ನಿರ್ಮಿತವಾದ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಇದಾಗಿದೆ. ಮರುಬಳಕೆ ಮಾಡಲಾಗದ ಎರಡು ಲಾಕ್‍ಗಳನ್ನು ಬಳಸಿಕೊಂಡು ವಾಹನದ ಮೇಲೆ ಅಳವಡಿಸಲಾಗುತ್ತದೆ. 20 ಎಂ.ಎಂ* 20 ಎಂಎಂ ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೋಲೊಗ್ರಾಮ್‍ನ್ನು ಹಿಂಭಾಗ ಹಾಗೂ ಮುಂಭಾಗ ಎರಡು ಪ್ಲೇಟ್‍ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಟ್ಯಾಪಿಂಗ್ ಮೂಲಕ ಅಳವಡಿಸಲಾಗುತ್ತದೆ. +ಇದು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಇಲಾಖೆಯ ಅಧಿಕೃತ ವೆಬ್‍ಸೈಟ್ ಬಳಸಿಕೊಂಡು ಆನ್‍ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಯಾವುದೇ ಕಾರಣಕ್ಕೂ ವಾಹನ ಸವಾರರು, ಆರ್‍ಟಿಒ ಕಚೇರಿ ಇಲ್ಲವೇ ಬೇರೊಂದು ಕಡೆ ನಗದು ಕೊಟ್ಟು ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಗತ್ಯವಿಲ್ಲ. +‘ದೆಹಲಿ ಚಲೋ’ ಪ್ರತಿಭಟನೆ : ಮತ್ತೆ ರೈತರ ಮೇಲೆ ಆಶ್ರುವಾಯು ಪ್ರಯೋಗ +ಇದು ನಗದು ರಹಿತ ಮತ್ತು ಆನ್‍ಲೈನ್ ಮೂಲಕ ನಡೆಯುವ ಪ್ರಕ್ರಿಯೆ ಆಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್‍ಸೈಟ್ ಬಳಸಿಕೊಂಡು ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು. \ No newline at end of file diff --git a/eesanje/url_46_239_3.txt b/eesanje/url_46_239_3.txt new file mode 100644 index 0000000000000000000000000000000000000000..68862a16a22efe7b4632ec20788f9915738ef719 --- /dev/null +++ b/eesanje/url_46_239_3.txt @@ -0,0 +1,6 @@ +ಶೇ.100ರಷ್ಟು ವಿವಿಪ್ಯಾಟ್ ಬಳಕೆಗೆ ಕಾಂಗ್ರೆಸ್ ಆಗ್ರಹ +ನವದೆಹಲಿ, ಫೆ 14 – ಚುನಾವಣೆ ಸಂದರ್ಭದಲ್ಲಿ ಪ್ರತಿ ಇವಿಎಂಗಳಲ್ಲಿ ಶೇ.100 ರಷ್ಟು ವಿವಿಪ್ಯಾಟ್‍ಗಳಿಗೆ ಅವಕಾಶ ನೀಡದಿರುವುದು ಭಾರತೀಯ ಮತದಾರರಿಗೆ ಮಾಡಿರುವ ಭಯಾನಕ ಅನ್ಯಾಯ ಎಂದು ಕಾಂಗ್ರೆಸ್ ಆರೋಪಿಸಿದೆ. ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಪಕ್ಷಗಳು ಜೂನ್ 2023 ರಿಂದ ವಿವಿಪ್ಯಾಟ್‍ಗಳ (ಮತದಾರ ಪರಿಶೀಲಿಸಬಹುದಾದ ಪೇಪರ್ ಆಡಿಟ್) ಹೆಚ್ಚಿನ ಬಳಕೆಯ ವಿಷಯದ ಕುರಿತು ಚುನಾವಣಾ ಆಯೋಗವನ್ನು ಭೇಟಿ ಮಾಡಲು ಅಪಾಯಿಂಟ್‍ಮೆಂಟ್‍ಗಾಗಿ ವಿನಂತಿಸುತ್ತಿವೆ ಎಂದು ಹೇಳಿದರು. +ಆದರೂ ಚುನಾವಣಾ ಆಯೋಗ ಶೇ. 100 ರಷ್ಟು ವಿವಿಪ್ಯಾಟ್‍ಗಳಿಗೆ ಅವಕಾಶ ನೀಡದಿರುವುದು ದುರಂತ ಎಂದು ಬಣ್ಣಿಸಿದ್ದಾರೆ. ಏಪ್ರಿಲ್ 8, 2019 ರಂದು, ವಿವಿಪ್ಯಾಟ್ ಸ್ಲಿಪ್ ಹೊಂದಾಣಿಕೆಗೆ ಒಳಗಾಗುವ ಚುನಾವಣಾ ಬೂತ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಆಯೋಗಕ್ಕೆ ಮನವಿ ಮಾಡಿತ್ತು ಎಂದು ಅವರು ನೆನಪಿಸಿದ್ದಾರೆ. +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ಚಂದ್ರಬಾಬು ನಾಯ್ಡು ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಅದೇ ಚಂದ್ರಬಾಬು ನಾಯ್ಡು ಅವರು ಒಂದು ಕಾಲದಲ್ಲಿ ಹೈಟೆಕ್ ಮುಖ್ಯಮಂತ್ರಿ ಎಂದು ಕರೆಯಲ್ಪಡುತ್ತಿದ್ದರು. ನಾಯ್ಡು ಆಗ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು, ಎಂದು ರಮೇಶ್ ತಿಳಿಸಿದ್ದಾರೆ. ಭಾರತೀಯ ಪಕ್ಷಗಳ ಬೇಡಿಕೆಯೆಂದರೆ, ಸೂಚಿಸಲಾದ ವಿವಿ ಪ್ಯಾಟ್‍ಗಳ ಸಂಖ್ಯೆಯು ಸ್ಥಿರವಾಗಿರಬಾರದು ಆದರೆ 100 ಪ್ರತಿಶತದ ಕಡೆಗೆ ಸ್ಥಿರವಾಗಿ ಹೆಚ್ಚಾಗಬೇಕು ಎಂದು ಅವರು ಪ್ರತಿಪಾದಿಸಿದರು. +ಆದರೆ ಸಹಜವಾಗಿ, ನಾಯ್ಡು ಅವರು ಈ ಮಧ್ಯೆ ಎನ್‍ಡಿಎಗೆ ವಲಸೆ ಹೋಗಲಿದ್ದಾರೆ. ಬಹುಶಃ ಅವರು ತಮ್ಮ ಹಿಂದಿನ ಮಿತ್ರಪಕ್ಷಗಳಿಗೆ ಅಪಾಯಿಂಟ್‍ಮೆಂಟ್ ನೀಡಲು ಚುನಾವಣಾ ಆಯೋಗಕ್ಕೆ ಮನವರಿಕೆ ಮಾಡಬಹುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿಚಾಯಿಸಿದ್ದಾರೆ. \ No newline at end of file diff --git a/eesanje/url_46_239_4.txt b/eesanje/url_46_239_4.txt new file mode 100644 index 0000000000000000000000000000000000000000..e4843a2e8d51574dfb38017d99644f01d6a9c9e2 --- /dev/null +++ b/eesanje/url_46_239_4.txt @@ -0,0 +1,5 @@ +ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ +ಬೆಂಗಳೂರು,ಫೆ.14- ನಿನ್ನೆ ರಾತ್ರಿ ಬಸವೇಶ್ವರನಗರದ ಪದ್ಮರಾಜ್ ಎಂಬುವರು ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ ಗೂಂಡಾ ವರ್ತನೆ ತೋರಿದ್ದಾರೆ ಎಂದು ಮಾಜಿ ಸಚಿವ ಕೆ.ಗೋಪಾಲಯ್ಯ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೂ ದೂರು ನೀಡಿದ್ದೇನೆ. +ಪದ್ಮರಾಜ್ ಎಂಬುವರು ಅತ್ಯಂತ ಕೆಟ್ಟ ಪದಗಳಿಂದ ನನ್ನನ್ನು ನಿಂದಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರ ಬಳಿಯೂ ಮಾತನಾಡಿದ್ದೇನೆ. ಈ ವಿಚಾರವನ್ನು ಸದನದಲ್ಲಿ ಚರ್ಚಿಸಲು ಅವಕಾಶ ಕೋರಿರುವುದಾಗಿ ಹೇಳಿದರು. ಪದ್ಮರಾಜ್ ಎಂಬುವರು ಮಾಜಿ ಪಾಲಿಕೆ ಸದಸ್ಯರಾಗಿದ್ದು, ತಮಗೆ ಹಳೆ ಪರಿಚಯ. +ಪ್ರಧಾನಿ ಮೋದಿ ಇಲ್ಲದಿದ್ದರೆ ನಾನು ನನ್ನ ಕುಟುಂಬ ಸೇರುತ್ತಿರಲಿಲ್ಲ ; ವರ್ಮಾ +ಹಲವು ಬಾರಿ ನನ್ನಿಂದ ಅನುಕೂಲ ಮಾಡಿಕೊಂಡಿದ್ದಾರೆ. ನನಗೆ ಮಾತ್ರವಲ್ಲ, ಹಲವರಿಗೆ ಇದೇ ರೀತಿ ಬೆದರಿಕೆ ಹಾಕಿದ್ದಾರೆ. ಈ ವಿಚಾರವನ್ನು ಸಂಬಂಧಪಟ್ಟ ಎಸಿಪಿ, ಡಿಸಿಪಿಯವರಿಗೂ ತಿಳಿಸಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರಿಗೂ ಮಾಹಿತಿ ನೀಡಿರುವುದಾಗಿ ಅವರು ಹೇಳಿದರು. \ No newline at end of file diff --git a/eesanje/url_46_239_5.txt b/eesanje/url_46_239_5.txt new file mode 100644 index 0000000000000000000000000000000000000000..dd3d6e2f49c4b2d219bafebbbcaa2ca66f50f2b8 --- /dev/null +++ b/eesanje/url_46_239_5.txt @@ -0,0 +1,6 @@ +ಕರ್ನಾಟಕ, ಆಂಧ್ರದಲ್ಲಿ ಶೋಧದ ವೇಳೆ 31 ಲಕ್ಷ ನಗದು ವಶ : ಇಡಿ +ನವದೆಹಲಿ, ಫೆ.13:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ನಡೆಸಿದ ಶೋಧದ ವೇಳೆ 31 ಲಕ್ಷ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ), 2002 ರ ನಿಬಂಧನೆಗಳ ಅಡಿಯಲ್ಲಿ ಸೂರ್ಯ ನಾರಾಯಣ ರೆಡ್ಡಿ ಮತ್ತು ಶಾಸಕ ಭರತ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. +ಕರ್ನಾಟಕದ ಬಳ್ಳಾರಿಯಲ್ಲಿ ದಾಖಲಾಗಿದೆ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳುಗಳ ಹಿಂದೆ ಭರತ್ ರೆಡ್ಡಿ ಸುಮಾರು 42 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ ಮತ್ತು ಹಣವನ್ನು ಕಾನೂನುಬಾಹಿರ ವಹಿವಾಟು ಗಳಿಗೆ ಬಳಸಿದ್ದಾರೆ ಎಂಬ ದೋಷಪೂರಿತ ಪುರಾವೆಗಳನ್ನು ಸಂಸ್ಥೆಯು ಕಂಡುಕೊಂಡಿದೆ ಎಂದು ಅದು ಹೇಳಿದೆ. +ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ +ಇಡಿ ನಡೆಸಿದ ಶೋಧ ಪ್ರಕ್ರಿಯೆಯಲ್ಲಿ ಆರೋಪಿಸುವ ದಾಖಲೆಗಳ ಜಾಲ, ವ್ಯವಹಾರ ದಾಖಲೆಗಳು ಮತ್ತು ಸ್ಥಿರ ಮತ್ತು ಚಲಿಸಬಲ್ಲ ಆಸ್ತಿಗಳ ವಿವರಗಳು ಕಂಡುಬಂದಿವೆ. 31 ಲಕ್ಷ ರೂ.ಗಳ ಲೆಕ್ಕಕ್ಕೆ ಸಿಗದ ನಗದು ಸಹಿತ ಮಹತ್ವದ ಸಾಕ್ಷ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಶಾಸಕ ಭರತ್ ರೆಡ್ಡಿ, ಅವರ ಸಹಾಯಕ ರತ್ನ ಬಾಬು ಮತ್ತು ಇತರರು ಅಕ್ರಮ ಪಾವತಿಗಾಗಿ ಗಣನೀಯ ಪ್ರಮಾಣದ ನಗದು ಸಂಗ್ರಹಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಇಡಿ ತಿಳಿಸಿದೆ. +ಭರತ್ ರೆಡ್ಡಿಯ ಸಹೋದರನಾಗಿರುವ ಶರತ್ ರೆಡ್ಡಿ ವಿದೇಶಿ ಮೂಲದ ಕಂಪನಿಗಳಲ್ಲಿ ಅಘೋಷಿತ ಹೂಡಿಕೆ ಮಾಡಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ಆರೋಪಿಗಳು ಬೇನಾಮಿ ಹೆಸರಿನಲ್ಲಿ ಆಸ್ತಿಗಳಲ್ಲಿ ಹೂಡಿಕೆ ಮಾಡಿದ್ದಾರೆ ಮತ್ತು ಸಂಬಂಧಿಕರಿಂದ ಅನುಮಾನಾಸ್ಪದ ಸಾಲಗಳನ್ನು ಪಡೆದರು, ಅವರ ಬ್ಯಾಂಕ್ ಖಾತೆಗಳನ್ನು ಅವರಿಗೆ ತಿಳಿಯದೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಇಡಿ ತಿಳಿಸಿದೆ. \ No newline at end of file diff --git a/eesanje/url_46_239_6.txt b/eesanje/url_46_239_6.txt new file mode 100644 index 0000000000000000000000000000000000000000..9c912a0acd73f2c83cb90cdc27002be4be0b1527 --- /dev/null +++ b/eesanje/url_46_239_6.txt @@ -0,0 +1,15 @@ +ನಿರುದ್ಯೋಗದ ವಿರುದ್ಧ ಸಿಎಂ ವಾಗ್ದಾಳಿ +ಬೆಂಗಳೂರು, ಫೆ.13- ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯುತ್ತಿದ್ದು, ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಭೇದಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. +ದೇಶದ ನಿರುದ್ಯೋಗದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಕೇಂದ್ರ ಸರ್ಕಾರದ ಮುಂದೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿದ್ದಾರೆ. +ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ +ಕೇಂದ್ರ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು, 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ 2014-15 ಮತ್ತು 2021 -22ರ ಅವಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ ಎಂದು ಲೇವಡಿ ಮಾಡಿದ್ದಾರೆ. +ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿಯವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ, ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ ? ಕೇಂದ್ರ ಸರ್ಕಾರದ ಅಕೃತ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡುವುದಾದರೆ 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ 2.2 ಆಗಿತ್ತು ಎಂದು ವಿವರಿಸಿದ್ದಾರೆ. +ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ, 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ ಎಂದು ಕೆಣಕಿದ್ದಾರೆ. +ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ.11.3ರಷ್ಟಿದ್ದರೆ, ಬಾಂಗ್ಲಾದೇಶದಲ್ಲಿ 12.9ರಷ್ಟಿತ್ತು. ಭೂತಾನ್ ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ 13.2ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು.ಇತ್ತೀಚೆಗೆ ಅಂತಾರಾಷ್ಟ್ರೀಯ ಲೇಬರ್ ಆರ್ಗನೈಸೆಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ನಿರುದ್ಯೋಗದ ಪ್ರಮಾಣದಲ್ಲಿ ನಮ್ಮ ದೇಶ, ನೆರೆಯ ದೇಶಗಳಾದ ಮ್ಯಾನ್ಮರ್, ಬಾಂಗ್ಲಾ, ಮಾರಿಷಸ್ ಗಿಂತಲೂ ಕೆಳಗಿನ ಸ್ಥಾನದಲ್ಲಿದೆ. +ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕನಾಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ ಶೇ.5.44ರಷ್ಟಿದ್ದು, 2023ರ ಅಕ್ಟೋಬರ್‍ನಲ್ಲಿ ಶೇ.10.05ರಷ್ಟು ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡೋದಾದ್ರೆ 20 ರಿಂದ 24ರ ವಯೋಮಾನ ಶೇ. 43.65ರಷ್ಟು ನಿರುದ್ಯೋಗಿಗಳಿದ್ದಾರೆ, 25 ರಿಂದ 29 ವಯೋಮಾನದವರಲ್ಲಿ ಶೇ.14.33ರಷ್ಟು, 30 ರಿಂದ 34 ವಯೋಮಾನದವರಲ್ಲಿ ಶೇ.2.49 ನಿರುದ್ಯೋಗಿಗಳಿದ್ದಾರೆ ಎಂದು ವಿವರಿಸಿದ್ದಾರೆ. +ಕೇಂದ್ರ ಸರ್ಕಾರವೇ ಪ್ರತಿ ಮೂರು ತಿಂಗಳಿಗೊಮ್ಮೆ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (ಪಿಎಲïಎಫ್ ಎಸ್) ಪ್ರಕಾರ 2019ರಿಂದ 2022ರವರೆಗಿನ ಅವಯಲ್ಲಿ ದೇಶದ ನಿರುದ್ಯೋಗ ಪ್ರಮಾಣ ಶೇ.22.9ರಷ್ಟು ಏರಿಕೆಯಾಗಿದೆ. ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ ಅಷ್ಟೆ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ. 2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. +ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರ ಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿಧಿರೆ. ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆಲ್ಲಿಯ ರೋಜಗಾರ್ ಮೇಳ ಎಂದು ಪ್ರಶ್ನಿಸಿದ್ದಾರೆ. +ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ +ವಲಸೆ ಸಂಖ್ಯೆ ಹೆಚ್ಚಳ:ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಈ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಾಗೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್‍ಗಳಿಗೆ ತಲಾ 60 – 80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು. 2018 ರಿಂದ 2019ರವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ. +ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎಂಬುದು ಗಮನಿಸಬೇಕಾದ ಅಂಶ ಎಂದು ಕಾಲೆಳೆದಿದ್ದಾರೆ. ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ.ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉದ್ಯೋಗ ಭರ್ತಿಗಾಗಿ ಸರ್ಕಾರಗಳು ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಸುತ್ತವೆ. +ಇದಕ್ಕಾಗಿಯೇ ಯುಪಿಎಸ್ಸಿ, ಎಸ್‍ಎಸ್ಸಿ, ಲೋಕಸೇವಾ ಆಯೋಗಗಳಿವೆ. ಹೀಗಿರುವಾಗ ಸಾಕ್ಷಾತ್ ಪ್ರಧಾನಿ ಯವರೇ ವೀಡಿಯೋ ಕಾನರೆನ್ಸ್ ಮೂಲಕ ನೇಮಕಾತಿ ಪತ್ರಗಳ ವಿತರಿಸುತ್ತಿರುವುದು ಯಾವ ಉದ್ಯೋಗಗಳಿಗೆ? ರೋಜ್‍ಗಾರ್ ಮೇಳದಲ್ಲಿ ನೀಡಲಾಗುತ್ತಿರುವ ಉದ್ಯೋಗಗಳು ಯಾವುದು? ಇವುಗಳು ಖಾಯಂ ಉದ್ಯೋಗವೇ? ತಾತ್ಕಾಲಿಕವೇ? ಅರೆಕಾಲಿಕವೇ? ಪೂರ್ಣಕಾಲಿಕವೇ? ಈ ಉದ್ಯೋಗಗಳನ್ನು ನೀಡುವಾಗ ಮೀಸಲಾತಿಯನ್ನು ಅನುಸರಿಸಲಾಗಿ ದೆಯೇ? ಅರ್ಹತೆಗಷ್ಟೇ ಪ್ರಾಮುಖ್ಯ ನೀಡಲಾಗಿದೆಯೇ? ರಾಜಕೀಯ ಒಲವು -ನಿಲುವುಗಳನ್ನು ಪರಿಗಣಿಸ ಲಾಗಿತ್ತೆ ಎಂದು ಉತ್ತರಿಸುವಂತೆ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ. diff --git a/eesanje/url_46_239_7.txt b/eesanje/url_46_239_7.txt new file mode 100644 index 0000000000000000000000000000000000000000..52cc8fb15d1d85fd094c013c2361b70c7e568426 --- /dev/null +++ b/eesanje/url_46_239_7.txt @@ -0,0 +1,3 @@ +ಎನ್‍ಓಸಿ ಪತ್ರಕ್ಕೆ ಲಂಚ : ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ +ಬೆಂಗಳೂರು,ಫೆ.13:ಪೆಟ್ರೋಲ್ ಬಂಕ್‍ಗೆ ಎನ್‍ಓಸಿ ಪ್ರಮಾಣ ಪತ್ರ ನೀಡಲು 30 ಸಾವಿರ ರೂ ಲಂಚ ಪಡೆಯುತ್ತಿದ್ದ ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚಿಕ್ಖಬಳ್ಳಾಪುರ ಜಿಲ್ಲೆ ಚಿಂತಾಮಣಿಯ ದೊಡ್ಢಗಂಜೂರ್‍ನಲ್ಲಿ ಪೆಟ್ರೋಲ್ ಬಂಕ್ ಆರಂಭಿಸುತ್ತಿದ್ದ ಎನ್.ವಿ.ಶ್ರೀನಾಥ್ ಅವರು ಎನ್‍ಓಸಿ ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದ್ದರು. +ಈ ವೇಳೆ ಮಂಡಳಿಯ ದ್ಚಿತೀಯ ದರ್ಜೆ ಅಧಿಕಾರಿ ಖಚಾ ವಾಳಿ (53) ಅವರು 30 ಸಾವಿರ ಲಂಚದ ಬೇಡಿಕೆ ಇಟ್ಟಿದ್ದರು.ಇದನ್ನು ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಬೆಳಿಗ್ಗೆ ಲಂಚದ ಹಣ ಪಡೆಯುವಾಗ ಇನ್ಸ್‍ಪೆಕ್ಟರ್ ಮೋಹನ್ ಕುಮಾರ್ ನೇತೃತ್ವದಲ್ಲಿ ಸಿಬ್ಭಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅದಿಕಾರಿ ಖಚಾ ವಾಳಿ ಅವರು ಲಂಚದ ಹಣ ಸಮೇತ ರೆಡ್‍ಹಾಂಡ್‍ಆಗಿ ಸಿಕ್ಕಿಬಿದ್ದಿದ್ದಾರೆ \ No newline at end of file diff --git a/eesanje/url_46_239_8.txt b/eesanje/url_46_239_8.txt new file mode 100644 index 0000000000000000000000000000000000000000..9194c8f5bc4b737af9861d324f35916fd13b9a4d --- /dev/null +++ b/eesanje/url_46_239_8.txt @@ -0,0 +1,7 @@ +ಬೆಂಗಳೂರಿಗೆ ಕುಡಿಯುವ ನೀರು ಕಾಯ್ದಿರಿಸಲಾಗುವುದು : ಡಿಕೆಶಿ +ಬೆಂಗಳೂರು., ಫೆ.13- ಬೆಂಗಳೂರು ಮಹಾನಗರಕ್ಕೆ ಕಾವೇರಿಯಿಂದ ಬಳಕೆ ಮಾಡಿಕೊಳ್ಳಲು ಅಗತ್ಯ ನೀರು ಕಾಯ್ದಿರಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ತಮ್ಮ ಕ್ಷೇತ್ರದ ಜಯನಗರದಲ್ಲಿರುವ ಕೊಳಚೆ ಪ್ರದೇಶದಲ್ಲಿ ಎರಡುವರೆ ಸಾವಿರ ಮನೆಗಳಿವೆ. ಅಲ್ಲಿ ಮನೆ ನಿರ್ಮಿಸಿಕೊಡಲಾಗಿದೆ, ಆದರೆ ಕುಡಿಯುವ ನೀರು ಪೂರೈಕೆ ಸೌಲಭ್ಯ ಇಲ್ಲ. ಕಾವೇರಿಯಿಂದ ನೀರು ಪೂರೈಕೆ ಮಾಡಿ, ಆರಂಭಿಕ ಸಂಪರ್ಕಕ್ಕೆ ವೆಚ್ಚವಾಗುವ ನಾಲ್ಕು ಕೋಟಿ ರೂಪಾಯಿಗಳನ್ನು ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು. +ಉತ್ತರಿಸಿದ ಡಿ.ಕೆ.ಶಿವಕುಮಾರ್, 2017ರಿಂದ ಈ ಸ್ಲಂಗೆ ಉಚಿತವಾಗಿ ನೀರು ಪೂರೈಸಲಾಗುತ್ತಿದೆ. ಜಯನಗರದಲ್ಲಿ ನಿರ್ಮಾಣವಾಗಿರುವ ಫ್ಲಾಟ್‍ಗಳಿಗೆ ಬೋರ್ ವೆಲ್‍ನಿಂದ ನೀರು ಪೂರೈಸಲಾಗುತ್ತಿದೆ ಎಂದರು. ಕಾವೇರಿಯಿಂದ ಆರು ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಒಟ್ಟು ನೀರಿನ ಮೀಸಲು ಪ್ರಮಾಣದಿಂದ 1.5 ಟಿಎಂಸಿ ಹೆಚ್ಚುವರಿಯಾಗಿ ಉಳಿಯಲಿದೆ ಎಂದು ತಿಳಿಸಿದರು. +ಶಾಸಕರ ಪ್ರದೇಶಾಭಿವೃದ್ಧಿಗೆ ಐದು ಕೋಟಿ ರೂಪಾಯಿಗಳನ್ನು ನೀಡುತ್ತೇನೆ. ಅದನ್ನು ಖರ್ಚು ಮಾಡಿ ಜಯನಗರ ಸ್ಲಂಗೆ ಉಚಿತ ನೀರಿನ ಸಂಪರ್ಕ ಕಲ್ಪಿಸಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಶಾಸಕರು ಆಗಬಹುದು ಎಂದು ಒಪ್ಪಿಕೊಂಡರು. ಮಧ್ಯ ಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಜಾಣತನದಿಂದ ಉತ್ತರ ಹೇಳಬೇಡಿ, ರಾಮಮೂರ್ತಿ ಹೊಸದಾಗಿ ಶಾಸಕರಾಗಿದ್ದಾರೆ. ಶಾಸಕರ ಪ್ರದೇಶಾಭಿವೃದ್ದಿಗೆ ನೀಡುವ ಅನುದಾನ ಬೇರೆ, ಅದನ್ನು ನೀರಿನ ಸಂಪರ್ಕಕ್ಕೆ ಬಳಕೆ ಮಾಡಿಕೊಳ್ಳಲು ಹೇಗೆ ಸಾಧ್ಯ. ಶಾಸಕರನ್ನು ದಾರಿ ತಪ್ಪಿಸಬೇಡಿ. ನೀರಿನ ಸಂಪರ್ಕಕ್ಕೆ ತಗುಲುವ ವೆಚ್ಚವನ್ನು ಬಿಬಿಎಂಪಿಯಿಂದ ಪ್ರತ್ಯೇಕವಾಗಿ ಭರಿಸಲಿ ಎಂದು ಆಗ್ರಹಿಸಿದರು. ಅಶೋಕ್ ಅವರ ಮಧ್ಯ ಪ್ರವೇಶಕ್ಕೆ ಡಿ.ಕೆ.ಶಿವಕುಮಾರ್ ನಕ್ಕು ಸುಮ್ಮನಾದರು. + ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು +ಬಿಜೆಪಿ ಶಾಸಕ ಅರವಿಂದ ಬೆಲ್ಲದ್, ಬೆಂಗಳೂರಿನಲ್ಲಿ ಟ್ಯಾಂಕರ್‍ಗಳಲ್ಲಿ ಪೂರೈಸಲು ಸಾಕಷ್ಟು ನೀರು ಲಭ್ಯ ಇದೆ. ಆದರೆ ಜನರಿಗೆ ಪೂರೈಸಲು ನೀರು ಸಿಗುತ್ತಿಲ್ಲ. ಈ ವಿಚಾರವೇ ಅರ್ಥವಾಗುತ್ತಿಲ್ಲ. ಡಿ.ಕೆ.ಶಿವಕುಮಾರ್ ಪ್ರಭಾವಿಯಾಗಿದ್ದಾರೆ. ಟ್ಯಾಂಕರ್ ಲಾಬಿಯನ್ನು ಮಟ್ಟ ಹಾಕಲಿ ಎಂದು ಸಲಹೆ ನೀಡಿದರು. +ಬೆಂಗಳೂರಿನ ನೀರಿನ ವಿಚಾರದಲ್ಲಿ ಏನೇಲ್ಲೇ ನಡೆಯುತ್ತದೆ ಎಂದು ಅಕ್ಕಪಕ್ಕ ಕುಳಿತ ಆರ್.ಅಶೋಕ್ ಮತ್ತು ಸುರೇಶ್ ಕುಮಾರ್‍ರನ್ನು ಕೇಳಿ ತಿಳಿದುಕೊಳ್ಳಲಿ ಎಂದು ಸಲಹೆ ನೀಡಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನ ನೀರಿನ ಬೇಡಿಕೆಯನ್ನೂ ಈಡೇರಿಸಲು ನಾವು ಮೇಕೆದಾಟು ಯೋಜನೆ ರೂಪಿಸಿದ್ದೇವೆ. ಅದರ ಅಂಗೀಕಾರಕ್ಕೆ ಬಿಜೆಪಿ ಸದಸ್ಯರು ಸಹಕಾರ ನೀಡಲಿ ಎಂದು ಮನವಿ ಮಾಡಿದರು. ವಿಚಾರವನ್ನು ಎಲ್ಲಿಂದ ಎಲ್ಲಿಗೆ ಸಂಪರ್ಕ ಮಾಡುತ್ತೀರಾ ಎಂದು ಅರವಿಂದ ಬೆಲ್ಲದ್ ಚೇಡಿಸಿದರು. \ No newline at end of file diff --git a/eesanje/url_46_239_9.txt b/eesanje/url_46_239_9.txt new file mode 100644 index 0000000000000000000000000000000000000000..dd3ae5a2040fa16d3ae2482d2d570f88e75f060c --- /dev/null +++ b/eesanje/url_46_239_9.txt @@ -0,0 +1,6 @@ +ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಮಂಡನೆ +ಬೆಂಗಳೂರು, ಫೆ.13- ವಾಣಿಜ್ಯ ಹಾಗೂ ಇತರೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದರು. ಈ ಮೂಲಕ ರಾಜ್ಯಪಾಲರಿಂದ ತಿರಸ್ಕøತಗೊಂಡಿದ್ದ ಸುಗ್ರೀವಾಜ್ಞೆಗೆ ಕಾನೂನಿನ ರೂಪ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. +ಕನ್ನಡ ನಾಮಫಲಕಗಳ ಕುರಿತು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ ಸಂಘಟನೆ ಉಗ್ರ ಸ್ವರೂಪದ ಹೋರಾಟ ನಡೆಸಿತ್ತು. ಪರಿಸ್ಥಿತಿಯ ಗಂಭೀರತೆ ಅರಿತ ಸರ್ಕಾರ ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ಸಿಗುವಂತೆ ಮಾಡಲು ಮುಂದಾಗಿತ್ತು. ಆದರೆ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಅದರಂತೆ ಮಸೂದೆ ರೂಪಿಸಲಾಗಿದೆ. +ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್ +ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್‍ಗಳು ಮತ್ತು ಮುಂದಾದೆಡೆಗಳಲ್ಲಿ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ, ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ. +ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಟಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿ ನೇಮಿಸಲು ನಿರ್ಧರಿಸಲಾಗಿದೆ. \ No newline at end of file diff --git a/eesanje/url_46_23_1.txt b/eesanje/url_46_23_1.txt new file mode 100644 index 0000000000000000000000000000000000000000..1668af4da95ddda45a34120edffd91ea75ab4dba --- /dev/null +++ b/eesanje/url_46_23_1.txt @@ -0,0 +1,7 @@ +ಒಳ ಮೀಸಲಾತಿ ಜಾರಿಯಾಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ +ಬೆಂಗಳೂರು, ಸೆ.9; ಸುಪ್ರೀಂ ಕೋರ್ಟ್ ತೀರ್ಪಿನಂತೆ ಪರಿಷ್ಟರ ಮೀಸಲಾತಿಯಲ್ಲಿ, ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯಾಧ್ಯಂತ ಭಾರಿ ಪ್ರತಿಭಟನೆ ನಡೆಸಲಾಯಿತು ಇದಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ 5 ಲಕ್ಷಕ್ಕೂ ಹೆಚ್ಚು ಪ್ರತಿಭಟನಾಕಾರರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯದ್ಯಕ್ಷ ಎನ್ ಮೂರ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. +ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಒತ್ತಾಯಿಸಿ ರಾಜ್ಯಾಧ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ಬೃಹತ್ ಪ್ರತಿಭಟನಾ ಮೆಟವಣಿಗೆಗೆ ಮತ್ತು “ತಮಟೆ ಚಳುವಳಿ” ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. +ಮೀಸಲಾತಿಯ ಸೌಲಭ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ, ಪರಿಶಿಷ್ಟ ಜಾತಿಗಳಲ್ಲಿ ಅಸ್ಪೃಶ್ಯತೆ ಕೆಳ ಸಮುದಾಯಗಳಾದ ಇತರೇ ಉಪಜಾತಿಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಈ ಸಮುದಾಯಗಳು ಸಹಸ್ರಾರು ವರ್ಷಗಳಿಂದ ತೀರ ಹಿಂದುಳಿದಿದ್ದು, ಅಸ್ಪೃಶ್ಯತೆ, ನಿರುದ್ಯೋಗ, ಬಡತನದ ಬೇಗೆಯಲ್ಲಿ ಬೆಂದು ಬಸವಳಿದಿದ್ದಾರೆ. ಸಂವಿಧಾನದ ಆಶಯದ ಸಾಮಾಜಿಕ ನ್ಯಾಯದಿಂದ ವಂಚಿತವಾಗಿದೆ ಎಂದರು. +ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ರಾಜ್ಯಸರ್ಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರವಿದೆ ಎಂದು ತೀರ್ಪು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ತೀರ್ಪು ಬಂದು 40 ದಿನಗಳಾದರು ಸಹ ಕೋರ್ಟ್ ಆದೇಶಗಳನ್ನು ಜಾರಿ ಮಾಡಿಲ್ಲ. ರಾಜ್ಯ ಸರ್ಕಾರ “ತಟಸ್ಥ ನಿಲುವು” ತಾಳಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ದೂರಿದರು. +ಕೇಂದ್ರಸರ್ಕಾರ ಪರಿಶಿಷ್ಟ ಜಾತಿಗಳಿಗೆ ಕೆನೆಪದರ ಮೀಸಲಾತಿ ಅಳವಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದಕ್ಕೆ ನಾವು ಆಸ್ಪದ ಕೊಡುವುದಿಲ್ಲ. ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿದು ಮೀನಾಮೇಷ ಎಣಿಸದೆ ಯಾವುದೆ ವಿಳಂಬ ನೀತಿ ಅನುಸರಿಸದೆ, ಈ ಕೂಡಲೆ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ದ.ಸಂ.ಸ ಆಗ್ರಹಿಸಿದೆ. +ಮತ್ತಷ್ಟು ವಿಳಂಬ ಮಾಡಿದ್ದಲ್ಲಿ ಅಕ್ಟೋಬರ್ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ 5 ಲಕ್ಷ ಜನ ಸೇರಿಸಿ “ವಿಧಾನಸೌಧಕ್ಕೆ” ಮುತ್ತಿಗೆ ಹಾಕಲಾಗುವುದು. ಹಾಗೂ ರಾಜ್ಯಾಧ್ಯಂತ ಇಂದಿನಿಂದಲೇ ಜನಾಂದೋಲನ ಕಾರ್ಯಕ್ರಮ ನಡೆಸಲಾಗುವುದು ಎಂದರು \ No newline at end of file diff --git a/eesanje/url_46_23_10.txt b/eesanje/url_46_23_10.txt new file mode 100644 index 0000000000000000000000000000000000000000..7c9a665273969782eb7e94fec4fe9dab69b02a2f --- /dev/null +++ b/eesanje/url_46_23_10.txt @@ -0,0 +1,13 @@ +ಸಿಎಂ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ, ಈಗ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಅನಗತ್ಯ : ಪರಮೇಶ್ವರ್‌ + , : +ಬೆಂಗಳೂರು,ಸೆ.9-ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಹೀಗಾಗಿ ಮುಂದಿನ ಮುಖ್ಯಮಂತ್ರಿಯ ಕುರಿತು ಚರ್ಚೆ ಮಾಡುವ ಅಗತ್ಯವೂ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಹಂತದಲ್ಲಿರುವುದು ನಿಜ. ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ಎಲ್ಲದಕ್ಕೂ ಮೊದಲೇ ಮುಂದಿನ ಮುಖ್ಯಮಂತ್ರಿ ಕುರಿತು ಚರ್ಚೆ ಮಾಡುವ ಅಗತ್ಯ ಸದ್ಯಕ್ಕಂತೂ ನನಗೆ ಕಾಣಿಸುತ್ತಿಲ್ಲ ಎಂದು ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರು ನೀಡಿರುವ ಅಭಿಯೋಜನೆಗೆ ಪೂರ್ವಾನುಮತಿಗೆ ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಅದರ ವಾದ ಇಂದು ಮುಂದುವರೆಯಲಿದೆ. ಅಡ್ವೊಕೇಟ್‌ ಜನರಲ್‌ ಹಾಗೂ ಇತರ ವಕೀಲರು ತಮ ವಾದವನ್ನು ಮುಂದುವರೆಸಲಿದ್ದಾರೆ. ಇತ್ತೀಚಿನ ವಿಚಾರಣೆಯಲ್ಲಿ ನ್ಯಾಯಾಧೀಶರು 12ನೇ ತಾರೀಕಿನೊಳಗೆ ಪ್ರಕರಣವನ್ನು ಇತ್ಯರ್ಥಪಡಿಸುವುದಾಗಿ ತಿಳಿಸಿದ್ದಾರೆ ಎಂದರು. +ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಅವರ ಪಕ್ಷದಲ್ಲಿರುವ ಭಿನ್ನಮತಗಳನ್ನು ಮೊದಲು ನೋಡಿಕೊಳ್ಳಲಿ, ನಮ ಪಕ್ಷದ ವಿಚಾರವಾಗಿ ಅವರೇಕೆ ತಲೆ ಕೆಡಿಸಿಕೊಳ್ಳುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಇತ್ತೀಚೆಗೆ ಎತ್ತಿನಹೊಳೆ ಯೋಜನೆ ಉದ್ಘಾಟನೆಯ ದಿನ ನಾನು ಮತ್ತು ಸಚಿವ ಎಂ.ಬಿ.ಪಾಟೀಲ್‌ ಹಾಸನಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರೂ ಜೊತೆಯಲ್ಲಿ ತೆರಳುವ ಕುರಿತು ಮಾತನಾಡಿಕೊಂಡಿದ್ದೆವು. ನಮ ಮನೆಗೆ ಉಪಹಾರಕ್ಕೆ ಬನ್ನಿ ಎಂದು ಎಂ.ಬಿ.ಪಾಟೀಲ್‌ ಆಹ್ವಾನ ನೀಡಿದ್ದರು. ಹೀಗಾಗಿ ನಾನು, ಅವರು ತಿಂಡಿ ತಿಂದು ಮುಖ್ಯಮಂತ್ರಿಯವರು ಮನೆಬಿಟ್ಟ ತಕ್ಷಣವೇ ನಾವೂ ಜೊತೆಯಲ್ಲಿಯೇ ಹೋಗಿದ್ದೇವೆ. ಅದರಲ್ಲಿ ರಾಜಕೀಯ ವಿಚಾರಗಳೇನೂ ಇಲ್ಲ. ಅನಗತ್ಯವಾಗಿ ಇಂತಹುದನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದರು. +╰┈➤ +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕುಟುಂಬ ಸಮೇತರಾಗಿ ಅಮೆರಿಕಾಕ್ಕೆ ಖಾಸಗಿ ಪ್ರವಾಸ ತೆರಳಿದ್ದಾರೆ. ಅದು ಸರ್ಕಾರದಿಂದ ಪ್ರಾಯೋಜಿತವಾದ ಪ್ರವಾಸವಲ್ಲ. ಅವರ ಪ್ರವಾಸದ ಬಗ್ಗೆ ಕಾಂಗ್ರೆಸ್‌‍ ಸಭೆಯಲ್ಲೂ ಮಾಹಿತಿ ನೀಡಿದ್ದರು ಎಂದು ಹೇಳಿದರು. +ಮುಡಾ ಪ್ರಕರಣದಿಂದ ರಾಜ್ಯಸರ್ಕಾರದ ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಲ್ಲಾ ಸಚಿವರೂ ಆಯಾ ಇಲಾಖೆಗಳ ಕಾರ್ಯಕಲಾಪಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಯವರು ತಮ ಪಾಲಿನ ಜವಾಬ್ದಾರಿಯನ್ನ ನಿಭಾಯಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ಇರುವುದರಿಂದ ಮುಖ್ಯಮಂತ್ರಿಯವರು ತಮ ಕಲಾಪಗಳನ್ನು ನಿಲ್ಲಿಸಿರಬಹುದು. ಉಳಿದಂತೆ ಎಲ್ಲಾ ಆಡಳಿತ ವ್ಯವಸ್ಥೆ ಮುಂದುವರೆದಿದೆ ಎಂದರು. +ಕಲಬುರಗಿಯಲ್ಲಿ ಕೃಷಿ ಇಲಾಖೆಯ ಅಧಿಕಾರಿಯೊಬ್ಬರ ಆತಹತ್ಯೆ ಯತ್ನಕ್ಕೂ ಮುನ್ನ ಬರೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುವುದು. ವರ್ಗಾವಣೆಗೆ ಯಾರು ಹಣ ಕೇಳುತ್ತಿದ್ದಾರೆ ಎಂಬ ಕುರಿತು ವಿಚಾರಣೆಯಾಗಲಿದೆ ಎಂದು ಹೇಳಿದರು. +ಎತ್ತಿನಹೊಳೆ ಯೋಜನೆಯ ಕಾಮಗಾರಿ ಈಗಾಗಲೇ ಪ್ರಾರಂಭವಾಗಿದೆ. ಪರಿಸರದ ವಿಚಾರ ಬಂದಾಗ ಆ ಕುರಿತು ಕಾಳಜಿ ವಹಿಸಲಾಗುತ್ತದೆ. ರಾಜ್ಯಸರ್ಕಾರದ ಅಧಿಕಾರಿಗಳು ಸೂಕ್ತ ಉತ್ತರವನ್ನು ನೀಡಲಿದ್ದಾರೆ. ಪರಿಸರ ನಾಶ ಮಾಡದೇ ಈವರೆಗೂ ಕೆಲಸ ನಿರ್ವಹಿಸಲಾಗಿದೆ ಎಂದರು. +ನಟ ದರ್ಶನ್‌ ಮತ್ತು ಅವರ ಸಹ ಖೈದಿಗಳು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಎಂಬುದನ್ನು ಕಾದುನೋಡುತ್ತೇವೆ ಎಂದು ಹೇಳಿದರು. +ಯುವಕಾಂಗ್ರೆಸ್‌‍ನ ಚುನಾವಣೆಯಲ್ಲಿ ಸ್ಪರ್ಧಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ಸಚಿವರು, ಶಾಸಕರ ಮಕ್ಕಳು ಸಮರ್ಥವಾಗಿದ್ದರೆ ಆಯ್ಕೆಯಾಗುತ್ತಾರೆ. ಇಲ್ಲವಾದರೆ ಕಾರ್ಯಕರ್ತರು ಮನೆಗೆ ಕಳುಹಿಸುತ್ತಾರೆ. ಅರ್ಜಿ ಹಾಕಿದವರು ಸಚಿವರ ಮಕ್ಕಳು ಎಂಬ ಕಾರಣಕ್ಕೆ ಆಯ್ಕೆಯಾಗುವುದಿಲ್ಲ ಎಂದರು. \ No newline at end of file diff --git a/eesanje/url_46_23_11.txt b/eesanje/url_46_23_11.txt new file mode 100644 index 0000000000000000000000000000000000000000..eccc1bffb777df4717c59b475a30c51111879621 --- /dev/null +++ b/eesanje/url_46_23_11.txt @@ -0,0 +1,19 @@ +ಚನ್ನಪಟ್ಟಣ ಉಪಚುನಾವಣೆ : ಬಿಜೆಪಿ-ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರು + +ಬೆಂಗಳೂರು,ಸೆ.9– ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್‌ ವಿಚಾರದಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ನಲ್ಲಿ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ. +ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಇಡೀ ರಾಜ್ಯದಲ್ಲಿಯೇ ಮನೆಮಾತಾಗಿದ್ದು, ದಿನಕಳೆದಂತೆ ಕದನ ಕುತೂಹಲ ಹೆಚ್ಚಾಗುತ್ತಿದೆ. ಉಪ ಚುನಾವಣೆಯ ರಣಕಣವೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ನಿರ್ಧಾರದ ಮೇಲೆ ನಿಂತಿದೆ. +ಎನ್‌ಡಿಎ ಅಭ್ಯರ್ಥಿಯಾಗಿಯೇ ನಾನು ಕಣಕ್ಕಿಳಿಯುತ್ತೇನೆ ಎಂದಿರು ಬಿಜೆಪಿ ವಿಧಾನಪರಿಷತ್‌ ಸದಸ್ಯರೂ ಆಗಿರುವ ಸಿ.ಪಿ.ಯೋಗೇಶ್ವರ್‌ ಅವರು, ಒಂದು ವೇಳೆ ಪಕ್ಷದ ಟಿಕೆಟ್‌ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ನಂತರ ದಿನಗಳಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇದು ಸಹಜವಾಗಿ ಎನ್‌ಡಿಎ ಮೈತ್ರಿಕೂಟವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. +2023ರ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಜೆಡಿಎಸ್‌‍ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ 96,592 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ 80,677 ಮತಗಳನ್ನು ಪಡೆದು ಸೋಲು ಕಂಡಿದ್ದರು. ಕಾಂಗ್ರೆಸ್‌‍ ಅಭ್ಯರ್ಥಿ ಗಂಗಾಧರ್‌ ಎಸ್‌‍. ಕೇವಲ 15,374 ಮತ ಪಡೆದಿದ್ದರು. +╰┈➤ +ಚನ್ನಪಟ್ಟಣ ಉಪಚುನಾವಣೆಗೆ ಡಿಕೆ ಬ್ರದರ್ಸ್‌ ಅಚ್ಚರಿಯ ಅಭ್ಯರ್ಥಿ ಕಂಬಿ ಹಿಂದೆ ಇದ್ದಾರೆ, ಈ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಗೆಲ್ಲಬೇಕು ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ತಂತ್ರ ರೂಪಿಸುತ್ತಿದ್ದಾರೆ. ಕ್ಷೇತ್ರಕ್ಕೆ ಪದೇ-ಪದೇ ಭೇಟಿ ನೀಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಕಂಡ ಡಿ. ಕೆ. ಸುರೇಶ್‌ ಚನ್ನಪಟ್ಟಣದಿಂದ ಕಣಕ್ಕಿಳಿಯಬಹುದು ಎಂಬ ಸುದ್ದಿಗಳು ಹಬ್ಬಿವೆ. +ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮುಂದುವರೆಯಲಿದೆಯೇ? ಹಾಗಾದರೆ ಮೈತ್ರಿಕೂಟದ ಅಭ್ಯರ್ಥಿ ಯಾರು?, ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿಯುವುದಿಲ್ಲವೇ? ಎಂಬ ಹಲವಾರು ಪ್ರಶ್ನೆಗಳಿವೆ. +ಈ ನಡುವೆ ಸಿಪಿ ಯೋಗೇಶ್ವರ್‌ ಅವರು ಕಾಂಗ್ರೆಸ್‌‍ಗೆ ಸೇರ್ಪಡೆ ಆಗುತ್ತಾರೆ ಎಂಬ ಸುದ್ದಿಯೂ ಹರಿದಾಡತೊಡಗಿತು. ಚನ್ನಪಟ್ಟಣದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿಯಲು ಪ್ರಯತ್ನ ನಡೆಸುತ್ತಿದ್ದ ಯೋಗೇಶ್ವರ್‌ಗೆ ಎಚ್‌ಡಿಕೆ ಅಡ್ಡಿಯಾಗಿದ್ದಾರೆ. ಹೀಗಾಗಿ ಅವರು ಟಿಕೆಟ್‌ ಸಿಗದೇ ಇದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದರು. +ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆಶಿ ಚನ್ನಪಟ್ಟಣದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಆದರೆ ಈ ಹೇಳಿಕೆ ವಾಸ್ತವದಲ್ಲಿ ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆ ಎಂಬುವುದು ಕುತೂಹಲದ ಸಂಗತಿಯಾಗಿದೆ.ಈಗಾಗಲೇ ಕನಕಪುರ ಶಾಸಕರಾಗಿರುವ ಅವರು ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಗೆದ್ದರೆ ಎರಡು ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾದರಲ್ಲಿ ಅವರ ತಮ ಸ್ವಕ್ಷೇತ್ರಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಅಲ್ಲಿ ಮತ್ತೊಮೆ ಉಪ ಚುನಾವಣೆ ನಡೆಯಬೇಕು. ಹೀಗಾದಲ್ಲಿ ಇದು ತಪ್ಪು ಸಂದೇಶಗಳಿಗೆ ಆಸ್ಪದ ಕೊಡುತ್ತದೆ. +ಎಚ್‌ಡಿಕೆ ನಡೆ ಏನು? :ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿಗೆ ಮತದಾರರಿಂದ ಬೆಂಬಲ ವ್ಯಕ್ತವಾಗಿದೆ. ಫಲಿತಾಂಶದ ಮೂಲಕ ಬಿಜೆಪಿ ಹೈಕಮಾಂಡ್‌ ಖುಷಿಪಡಿಸಿರುವ ಎಚ್‌.ಡಿ.ಕುಮಾರಸ್ವಾಮಿಗೆ ಇದೀಗ ದಿಲ್ಲಿ ನಾಯಕರ ಮಧ್ಯದಲ್ಲಿ ಒಳ್ಳೆಯ ಸ್ಥಾನಮಾನ ಲಭಿಸಿದೆ. ತಾನು ರಾಜೀನಾಮೆ ನೀಡಿದ್ದ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದು ಎಚ್‌‍.ಡಿ.ಕುಮಾರಸ್ವಾಮಿಗೆ ಪ್ರತಿಷ್ಠೆಯ ಸಂಗತಿಯಾಗಿದೆ. +ತಮ ಸಾಂಪ್ರದಾಯಿಕ ಎದುರಾಳಿ ಯೋಗೇಶ್ವರ್‌ಗೆ ನಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಲಿ ಎಂದು ಕೆಲ ಜೆಡಿಎಸ್‌‍ ಕಾರ್ಯಕರ್ತರು ಸಹಮತ ವ್ಯಕ್ತಪಡಿಸುತ್ತಿದ್ದಾರಾದರೂ, ಯೋಗೇಶ್ವರ್‌ ವಿರುದ್ಧವಾಗಿ ರಾಜಕಾರಣ ಮಾಡಿಕೊಂಡು ಬಂದಿರುವ, ಅವರ ಜತೆಗಿನ ರಾಜಕೀಯ ಸಮಯದಲ್ಲಿ ಕೈಸುಟ್ಟುಕೊಂಡಿರುವ ಕೆಲ ಮುಖಂಡರಿಗೆ ಯೋಗೇಶ್ವರ್‌ಗೆ ಟಿಕೆಟ್‌ ನೀಡಲು ಇಷ್ಟವಿಲ್ಲ. ಹೀಗಾಗಿ ಅವರು ಕುಮಾರಸ್ವಾಮಿ ಮೇಲೆ ಒತ್ತಡ ಹಾಕುತ್ತಿದ್ದಾರೆ. +ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ವಿರೋಧವೇನೂ ಇಲ್ಲ. ಆದರೆ, ಅವಕಾಶ ಕೈತಪ್ಪಿದರೆ ಯೋಗೇಶ್ವರ್‌ ಯಾವ ಹೆಜ್ಜೆ ಇಡಬಹುದು ಎಂಬ ಬಗ್ಗೆ ಅಂದಾಜು ಮಾಡಿರುವ ಕುಮಾರಸ್ವಾಮಿ ಕಾರ್ಯಕರ್ತರಿಗೆ ಯೋಗೇಶ್ವರ್‌ ಒಪ್ಪಿಸಿಕೊಂಡು ಬನ್ನಿ ಎನ್ನುವ ಟಾಸ್ಕ್‌ ನೀಡುವ ಮೂಲಕ ಜಾಣ ನಡೆ ಇರಿಸಿದ್ದಾರೆ. +ತಂತ್ರಗಾರಿಕೆ :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಮತ್ತು ಬಿಜೆಪಿ ಮೈತ್ರಿಯಿಂದಾಗಿ 50 ಸಾವಿರಕ್ಕೂ ಹೆಚ್ಚು ಲೀಡ್‌ ಪಡೆಯಬೇಕಿದ್ದ ಎನ್‌ಡಿಎ ಅಭ್ಯರ್ಥಿಗೆ ದೊರೆತಿದ್ದು ಕೇವಲ 23 ಸಾವಿರ ಮತಗಳ ಮುನ್ನಡೆಯಷ್ಟೇ ಕಾಂಗ್ರೆಸ್‌‍ ಅಭ್ಯರ್ಥಿ 85 ಸಾವಿರ ಮತಗಳನ್ನು ಗಳಿಸಿದ್ದು ಮೈತ್ರಿ ನಾಯಕರನ್ನು ಚಿಂತೆಗೀಡು ಮಾಡಿದೆ. +ಕಳೆದ 20 ವರ್ಷಗಳಿಂದ ಜೆಡಿಎಸ್‌‍ ವಿರುದ್ಧವಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದ ಯೋಗೇಶ್ವರ್‌ ಇದೇ ಮೊದಲ ಬಾರಿಗೆ ಜೆಡಿಎಸ್‌‍ ಜತೆಗೆ ಕೈಜೋಡಿಸಿದ್ದಾರೆ. ಜೆಡಿಎಸ್‌‍ನ ಕಟ್ಟಾ ವಿರೋಧಿಯಾಗಿದ್ದ ಸೈನಿಕ ಮೈತ್ರಿ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆ ಉತ್ಸಾಹ ತೋರಿದ್ದರ ಹಿಂದೆ ಚನ್ನಪಟ್ಟಣವನ್ನು ಭದ್ರಮಾಡಿಕೊಳ್ಳುವ ತಂತ್ರಗಾರಿಕೆ ಇತ್ತು ಎಂಬುದನ್ನು ಯಾರೂ ಅಲ್ಲಗಳೆಯುವಂತಿಲ್ಲ. +ವಿರೋಧಿಗಳ ದಾರಿ ತಪ್ಪಿಸುವ ಪ್ರಯತ್ನವೇ? :ಡಿಕೆ ಶಿವಕುಮಾರ್‌ ಪದೇ ಪದೇ ಭಿನ್ನ ಹೇಳಿಕೆ ಕೊಡುವ ಮೂಲಕ ವಿರೋಧಿಗಳ ದಾರಿ ತಪ್ಪಿಸುತ್ತಿದ್ದಾರಾ? ಎಂಬ ಪ್ರಶ್ನೆಯೂ ಉದ್ಭವಿಸುತ್ತಿದೆ. ಆದರೆ ಅಸಲಿ ರಣತಂತ್ರ ಬೇರೆಯೇ ಇದೆ ಎಂಬ ಮಾತುಗಳು ಡಿಕೆಶಿ ಆಪ್ತ ವಲಯದಿಂದ ಕೇಳಿಬರುತ್ತಿದೆ. ಒಟ್ಟಿನಲ್ಲಿ ಡಿಕೆಶಿ ನಡೆಯಂತೂ ಕುತೂಹಲಕ್ಕೆ ಕಾರಣವಾಗಿದೆ. +ಕ್ಷೇತ್ರದಲ್ಲಿ ಈಗಾಗಲೇ ಅಂತೆ ಕಂತೆಗಳು ಸಾಕಷ್ಟು ಚರ್ಚೆಯಾಗುತ್ತಿದ್ದು, ಎಲ್ಲರ ಕೇಂದ್ರ ಬಿಂದುವಾಗಿ ಸಿಪಿವೈ ಕಾಣಿಸಿಕೊಳ್ಳುತ್ತಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಮತ್ತೊಂದು ಸುತ್ತಿನ ಚುನಾವಣಾ ಕಾವು ಏರಿಕೆಯಾಗುತ್ತಿದೆ. +ಇದರ ನಡುವೆ ಚನ್ನಪಟ್ಟಣ ಜನತೆ ಮನಗೆಲ್ಲುವ ಸಲುವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಈಗಾಗಲೇ ಕ್ಷೇತ್ರದಾದ್ಯಂತ ಸುತ್ತಿ ಮತದಾರರ ಮುಟ್ಟುವ ಒಂದು ಹಂತದ ಕಸರತ್ತು ಮುಗಿಸಿದ್ದಾರೆ. ಪ್ರತಿ ಜಿಲ್ಲಾಪಂಚಾಯಿತಿ ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಜನಾಭಿಪ್ರಾಯ ಸಂಗ್ರಹಣೆಗೆ ಸಾಕಷ್ಟು ಒತ್ತು ನೀಡಿದ್ದಾರೆ. ಇದರ ನಡುವೆ ಕಾಂಗ್ರೆಸ್‌‍ನಿಂದ ಅಚ್ಚರಿ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕ್ಷೇತ್ರದ ರಣಕಣ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. \ No newline at end of file diff --git a/eesanje/url_46_23_12.txt b/eesanje/url_46_23_12.txt new file mode 100644 index 0000000000000000000000000000000000000000..ca0eb8e9b01539069cf7f38a0c5073cc49838a64 --- /dev/null +++ b/eesanje/url_46_23_12.txt @@ -0,0 +1,6 @@ +ಚಾಲಕರ ಮಕ್ಕಳ ವಿದ್ಯಾನಿಧಿ ಯೋಜನೆಗೆ 2.65 ಕೋಟಿ ರೂ. +2.65 . +ಬೆಂಗಳೂರು,ಸೆ.9-ಹಳದಿ ಫಲಕ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳ ಮೆಟ್ರಿಕ್‌ ನಂತರದ ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸುವ ವಿದ್ಯಾನಿಧಿ ಯೋಜನೆಗೆ 2,65,65,000 ರೂ.ಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. +ಸಾರಿಗೆ ಇಲಾಖೆ ಆಯುಕ್ತರ ಪ್ರಸ್ತಾವನೆಯನ್ನು ಪರಿಶೀಲಿಸಿ 2024-25ನೇ ಸಾಲಿಗೆ ವಿದ್ಯಾನಿಧಿ ಯೋಜನೆಗೆ ಈ ಹಣವನ್ನು ಬಿಡುಗಡೆ ಮಾಡಲಾಗಿದೆ.ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹದಡಿ 531.30 ಲಕ್ಷ ಅನುದಾನದಡಿಯಲ್ಲಿ 1 ಮತ್ತು 2ನೇ ಕಂತಿನ ಅನುದಾನವನ್ನು ಕೆಲವು ಷರತ್ತು ವಿಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. +ಬಿಡುಗಡೆಯಾದ ಅನುದಾನದಿಂದ ವಿದ್ಯಾರ್ಥಿವೇತನ ಪಾವತಿಸಿರುವ ವಿವರವಾದ ಮಾಹಿತಿಯೊಂದಿಗೆ ಕಡ್ಡಾಯವಾಗಿ ಒದಗಿಸಬೇಕು.ಮುಂದಿನ ತ್ರೈಮಾಸಿಕ ಕಂತಿನ ಹಣ ಬಿಡುಗಡೆಗೂ ಮುನ್ನ ಈಗಾಗಲೇ ಬಿಡುಗಡೆಯಾಗಿರುವ ಅನುದಾನ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. +ಸಕ್ಷಮ ಪ್ರಾಧಿಕಾರದ ಅನುಮತಿಯಿಲ್ಲದೆ ಬಿಡುಗಡೆಯಾದ ಅನುದಾನವನ್ನು ಇತರೆ ಕಾರ್ಯಕ್ರಮ ಅಥವಾ ಯೋಜನೆಗಳಿಗೆ ಬಳಸುವಂತಿಲ್ಲ ಎಂಬ ಷರತ್ತು ವಿಧಿಸಿ ಆದೇಶಿಸಲಾಗಿದೆ. \ No newline at end of file diff --git a/eesanje/url_46_23_3.txt b/eesanje/url_46_23_3.txt new file mode 100644 index 0000000000000000000000000000000000000000..f6f5d02d87ff1e732508a0f375368f9d59b49ae5 --- /dev/null +++ b/eesanje/url_46_23_3.txt @@ -0,0 +1,11 @@ +2026ರ ಅಂತ್ಯದೊಳಗೆ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಪೂರ್ಣ : ವಿ.ಸೋಮಣ್ಣ + 2026: . +ಬೆಂಗಳೂರು,ಸೆ.9-ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಕಾಮಗಾರಿಯನ್ನು 2026ರ ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ವಿಧಾನಸೌಧದಲ್ಲಿಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರೊಂದಿಗೆ ನಡೆದ ಉಪನಗರ ರೈಲ್ವೆ ಯೋಜನೆ ಮತ್ತು ರಾಜ್ಯದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಮಾತನಾಡಿದರು. +ಉಪನಗರ ರೈಲು ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಣ ಮೀಸಲಿಟ್ಟಿದ್ದು, ಕೇಂದ್ರದ ಪಾಲಿನ ಹಣ ಬಿಡುಗಡೆಗೆ ಕ್ರಮ ವಹಿಸುವುದಾಗಿ ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಅವರು 148 ಕಿ.ಮೀ ಉಪನಗರ ರೈಲು ಯೋಜನೆಗೆ ಅಡಿಪಾಯ ಹಾಕಿದ್ದರು. ನಾವು ಈಗ 70 ಕಿ.ಮೀ ಉಪನಗರ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದೇವೆ ಎಂದರು. +ಬೈಯಪ್ಪನಹಳ್ಳಿ-ಚಿಕ್ಕಬಾಣವಾರದವರೆಗೆ 26 ಕಿ.ಮೀ ಹಾಗೂ ಈಲರಿ-ರಾಜಾನುಕುಂಟೆ ನಡುವೆ 48 ಕಿ.ಮೀ ಉದ್ದದ ಉಪನಗರ ರೈಲ್ವೆ ಮಾರ್ಗ ನಿರ್ಮಿಸಲು ಉದ್ದೇಶಿಸಲಾಗಿದೆ. ರೈಲ್ವೆ , ಮೆಟ್ರೋ, ಬಿಡಿಎ, ಕಂದಾಯ ಹಾಗೂ ಬಿಬಿಎಂಪಿ ನಡುವೆ ಸಮನ್ವಯದಿಂದ ಉಪನಗರ ರೈಲ್ವೆ ಮಾರ್ಗ ನಿರ್ಮಾಣದ ಕೆಲಸ ಸಾಗಲಿದೆ ಎಂದು ಸಚಿವರು ತಿಳಿಸಿದರು. +ಇನ್ನೆರಡು ವರ್ಷದಲ್ಲಿ ರೈಲ್ವೆ ಮಾರ್ಗಗಳ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ಪೂರ್ಣಗೊಳಿಸುವ ಗುರಿ ಹಾಕಿಕೊಂಡಿದ್ದೇವೆ. ತುಮಕೂರು-ಚಿತ್ರದುರ್ಗ ರೈಲ್ವೆ ಮಾರ್ಗವನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು. +ಚಿತ್ರದುರ್ಗ-ಕೊಪ್ಪಳ ಆಲಮಟ್ಟಿ ಮಾರ್ಗದ ಬಗ್ಗೆಯೂ ಚಿಂತನೆ ಇದೆ. ಚಾಮರಾಜನಗರಕ್ಕೂ ಹೊಸ ಯೋಜನೆ ತರುತ್ತಿದ್ದೇವೆ. ವಿಜಯಪುರ ಹಾಗೂ ಮಂಗಳೂರು ಬಂದರಿನ ಡಬ್ಲಿಂಗ್‌ ಲೈನ್‌ ಒಂದು ಹಂತಕ್ಕೆ ತರುತ್ತಿದ್ದೇವೆ ಎಂದು ಹೇಳಿದರು. +50 ವರ್ಷಗಳಲ್ಲಿ ಆಗದ ಸಾಧನೆಯನ್ನು ಪ್ರಧಾನಿಯವರು ಮಾಡಿದ್ದಾರೆ. ಧಾರವಾಡ-ಚಿತ್ತೂರು ರೈಲ್ವೆ ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಇದೆ. ಕೋಚ್‌ಗಳನ್ನು ಖರೀದಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಇನ್ನು ಮುಂದೆ ಭೂಸ್ವಾಧೀನ ಪ್ರಕ್ರಿಯೆಯು ರಾಜ್ಯ ಸರ್ಕಾರವೇ ಮಾಡಬೇಕಾಗುತ್ತದೆ ಎಂದು ಹೇಳಿದರು. +ತುಮಕೂರು-ರಾಯದುರ್ಗ ನಡುವಿನ 90 ಎಕರೆ ಭೂಸ್ವಾಧೀನ ಆಗಬೇಕಿದೆ. ನಮ ಕಾಲದಲ್ಲಿ ಪ್ರಾರಂಭವಾದ ಕೆಲಸಗಳನ್ನು ನಮ ಕಾಲದಲ್ಲೇ ಮುಗಿಸುತ್ತೇವೆ ಎಂದರು. ತ್ವರಿತವಾಗಿ ಪೂರ್ಣಗೊಳಿಸಿ: ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಸೋಮಣ್ಣ ಅವರು ಕಾಳಜಿ ವಹಿಸಿ ಉಪನಗರ ರೈಲು ಯೋಜನೆ ಸೇರಿದಂತೆ ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು. +ಮೆಟ್ರೋ, ಉಪನಗರ ರೈಲು ಒಂದಕ್ಕೊಂದು ಪೂರಕವಾಗಿರಬೇಕು. ಬೆಂಗಳೂರು-ತುಮಕೂರು ನಡುವೆ ಚತುಷ್ಪದವಾಗುತ್ತಿದೆ. ಚಿತ್ರದುರ್ಗ-ಹೊಸಪೇಟೆ ಆಲಮಟ್ಟಿ ಮಾರ್ಗದ ಬಗ್ಗೆ ಮಾಹಿತಿ ನೀಡಿದ್ದು, ಅದಕ್ಕೂ ಸ್ಪಂದನೆ ಕೊಟ್ಟಿದ್ದಾರೆ. +ವಿಜಯಪುರ-ಬೆಂಗಳೂರು ಪ್ರಯಾಣದ ಸಮಯ ಕಡಿಮೆ ಮಾಡಲು ಮನವಿ ಮಾಡಿದ್ದೇವೆ. ವಂದೇ ಭಾರತ್‌ ರೈಲನ್ನು ಹೆಚ್ಚಿಸಲು ಕೇಳಿದ್ದೇವೆ ಎಂದ ಅವರು, ತುಮಕೂರು-ರಾಯದುರ್ಗ ಮಾರ್ಗದ ವೇಗಕ್ಕೆ ಒತ್ತು ನೀಡಲಾಗುವುದು. ಮಂಗಳೂರು-ಕಾರವಾರದ ಮಾರ್ಗಕ್ಕೆ ಹುಬ್ಬಳ್ಳಿ- ಅಂಕೋಲದ ಮಾರ್ಗವನ್ನು ಸಂಪರ್ಕಿಸಬೇಕಿದೆ. ಈ ಎಲ್ಲ ಬೇಡಿಕೆಗಳಿಗೂ ಸಚಿವರು ಸಕಾರಾತಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_23_4.txt b/eesanje/url_46_23_4.txt new file mode 100644 index 0000000000000000000000000000000000000000..25ab8ac48dfa9963671e8b6eaf2411b3c93a325d --- /dev/null +++ b/eesanje/url_46_23_4.txt @@ -0,0 +1,10 @@ +ಮುಖ್ಯಮಂತ್ರಿ ಬದಲಾವಣೆ ಗ್ಯಾರಂಟಿ : ಆರ್.ಅಶೋಕ್ + : . +ಬೆಂಗಳೂರು,ಸೆ.9-ರಾಜ್ಯದಲ್ಲಿ ಮುಖ್ಯ ಮಂತ್ರಿ ಸ್ಥಾನ ಬದಲಾವಣೆಯಾಗುವುದು 100ಕ್ಕೆ ನೂರರಷ್ಟು ಬದಲಾವುದು ಖಚಿತ. ಹೀಗಾಗಿಯೇ ಅನೇಕ ಸಚಿವರು ಒಳಗೊಳಗೆ ಕುರ್ಚಿ ಮೇಲೆ ಟವಲ್ ಹಾಕಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂದು ನಾವು ಹೇಳುವುದಲ್ಲ. ಕಾಂಗ್ರೆಸ್ ಪಕ್ಷದಲ್ಲೇ ಹೇಳುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ನಿಶ್ಚಿತ ಎಂದು ಪುನರುಚ್ಚರಿಸಿದರು. +ಮುಖ್ಯಮಂತ್ರಿ ಕುರ್ಚಿ ಮೇಲೆ ಸಾಲು ಸಾಲು ನಾಯಕರು ಟವಲ್ ಹಾಕಿರುವುದನ್ನು ನೋಡುತ್ತಿದ್ದೇವೆ. ಎಂ.ಬಿ.ಪಾಟೀಲ್, ಜಾರಕಿಹೊಳಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಪ್ರಯತ್ನ ಮಾಡುತ್ತಿರುವ ವಿಚಾರ ಗೊತ್ತಿದೆ ಎಂದು ವ್ಯಂಗ್ಯವಾಡಿದರು.ಎಂ.ಬಿ.ಪಾಟೀಲ್, ನಾನು ಸೀನಿಯರ್ ಎಂದು ಹೇಳುತ್ತಾರೆ. ಜೊತೆಗೆ ಲಿಂಗಾಯತ ಪ್ರಭಾವಿ ನಾಯಕ ಎಂದು ಹೇಳಿಕೊಂಡಿದ್ದಾರೆ. +ಆರ್.ವಿ.ದೇಶಪಾಂಡೆ, ನಾನು ಅವಕಾಶ ಕೊಟ್ಟರೇ ಸಿಎಂ ಆಗುತ್ತೇನೆ ಎಂದರೆ, ಇತ್ತ ಜಾರಕಿಹೊಳಿ ಅಂತೂ ನೇರವಾಗಿ ಅಭಿಯಾನವನ್ನೇ ಪ್ರಾರಂಭಿಸಿದ್ದಾರೆ. ಶಾಸಕರು ನನ್ನ ಜೊತೆಗೆ ಎಷ್ಟು ಮಂದಿ ಇದ್ದಾರೆ? ಎಂಬುದನ್ನು ಪ್ರದರ್ಶನ ಮಾಡುತ್ತಿದ್ದಾರೆ. ದೆಹಲಿ ಮಟ್ಟದಲ್ಲೂ ಪ್ರಯತ್ನ ಮುಂದುವರೆಸಿದ್ದಾರೆ. +ಇತ್ತ ಡಾ.ಜಿ.ಪರಮೇಶ್ವರ್ ಅಂತೂ ಹೈಕಮಾಂಡ್ ನಾಯಕರ ಅಭ್ಯರ್ಥಿಯಾಗಿದ್ದಾರೆ. ಈ ಹಿಂದೆ ನಾನು ಮುಖ್ಯಮಂತ್ರಿ ಆಗಬೇಕಾಗಿದ್ದನ್ನು ತಪ್ಪಿಸಿದ್ದಾರೆ. ನಾನು ಉಪ-ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದವನು. ನನಗೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ.ಡಿ.ಕೆ.ಶಿವಕುಮಾರ್ ಅಂತೂ ಯಾವೆಲ್ಲಾ ಮಾರ್ಗಗಳು ಇದೆಯೋ, ಅದನ್ನೆಲ್ಲಾ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದರು. +ರಾಜ್ಯದಲ್ಲಿ ಹಾಗಾದರೆ ಮುಖ್ಯಮಂತ್ರಿಗಳ ಬದಲಾವಣೆ ಯಾವಾಗ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಶೋಕ್, ನಾವು ದಿನಾಂಕ ನಿಗದಿ ಮಾಡುವುದಲ್ಲ. ಈಗಾಗಲೇ ಕಾಂಗ್ರೆಸ್ನಲ್ಲೇ ಮುಖ್ಯಮಂತ್ರಿಗಳ ಬದಲಾವಣೆಗೆ ದಿನಾಂಕ ನಿಗದಿಯಾಗಿದೆ. ಅವರ ಪಕ್ಷದಲ್ಲೇ ಇದರ ಬಗ್ಗೆ ಚರ್ಚೆಗಳು ಜೋರಾಗಿದೆ ಎಂದು ವ್ಯಂಗ್ಯವಾಡಿದರು. +ಯಾರು, ಯಾವಾಗ ಮುಖ್ಯಮಂತ್ರಿ ಆಗಬೇಕು? ಎಂಬುದರ ಬಗ್ಗೆ ವಿಸ್ತತವಾದ ಚರ್ಚೆ ಆಗಿದೆ. ನಾವು ದಿನಾಂಕ ತಿಳಿಸಿದರೆ ಅದನ್ನು ಅವರು ಪ್ರಶ್ನೆ ಮಾಡುತ್ತಾರೆ. ನಾವು ದಿನಾಂಕ ಹೇಳುವುದಿಲ್ಲ. ಅವರಲ್ಲಿ ಈಗ ದಿನಾಂಕ ನಿಗದಿಯಾಗಿದೆ ಎಂದು ಅಶೋಕ್ ಕುಹಕವಾಡಿದರು.ಡಿ.ಕೆ.ಶಿವಕುಮಾರ್ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿಗಳ ಭೇಟಿ ಯಾರಿಗೂ ಅಷ್ಟು ಸುಲಭವಾಗಿ ಸಿಗುವುದಿಲ್ಲ. +ಅಂತಹುದರಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಕ್ಕಿದ್ದು ಹೇಗೆ? ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸುತ್ತದೆ ಎಂದರು. ಕಾಂಗ್ರೆಸ್ನ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾಗಿದ್ದು ಅವರದೇ ಪಕ್ಷದ ಹೈಕಮಾಂಡ್ ನಾಯಕರನ್ನು ಪ್ರಶ್ನಿಸುವಂತೆ ಮಾಡಿದೆ ಎಂದು ಹೇಳಿದರು. \ No newline at end of file diff --git a/eesanje/url_46_23_5.txt b/eesanje/url_46_23_5.txt new file mode 100644 index 0000000000000000000000000000000000000000..4f16908457c9f8cd3189d538df5654eb63d7ad19 --- /dev/null +++ b/eesanje/url_46_23_5.txt @@ -0,0 +1,7 @@ +ನಟ ದರ್ಶನ್‌‌ಗೆ ರಾಜಾತಿಥ್ಯ ಪ್ರಕರಣದಲ್ಲಿ ಖೈದಿಗಳ ವಿಚಾರಣೆ + +ಬೆಂಗಳೂರು,ಸೆ.9-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ನೀಡಿರುವ ಬಗ್ಗೆ ತನಿಖೆ ಕೈಗೊಂಡಿರುವ ಆಗ್ನೇಯ ವಿಭಾಗದ ಪೊಲೀಸರು ಕೆಲವು ಖೈದಿಗಳು ಹಾಗೂ ವಿಚಾರಣಾಧೀನ ಖೈದಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. +ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಬಗ್ಗೆ ಫೋಟೋಗಳು ವೈರಲ್ಲಾಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ದಾಖಲಾಗಿವೆ. ಈ ಹಿನ್ನಲೆಯಲ್ಲಿ ಇಂದು ತನಿಖಾಧಿಕಾರಿಗಳು ಜೈಲಿಗೆ ಭೇಟಿ ನೀಡಿ ಅವರುಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. +ಪರಪ್ಪನ ಅಗ್ರಹಾರದಲ್ಲಿ ದರ್ಶನ್ನನ್ನು ಯಾರ್ಯಾರು , ಯಾವ ವೇಳೆ ಭೇಟಿಯಾಗುತ್ತಿದ್ದರು? ಆತನಿಗೆ ಏನೇನು ತಂದು ಕೊಡಲಾಗುತ್ತಿತ್ತು? ಜೈಲು ಆವರಣದಲ್ಲಿ ಟೇಬಲ್, ಚೇರು ವ್ಯವಸ್ಥೆ ಮಾಡಿದವರ್ಯಾರು? ಈ ರೀತಿ ಎಷ್ಟು ದಿನಗಳಿಂದ ಆತಿಥ್ಯ ನಡೆಯುತ್ತಿತ್ತು ಇಲ್ಲವೇ ಅಂದು ಮಾತ್ರವೇ ನೀಡಲಾಗುತ್ತೇ ಎಂಬಿತ್ಯಾದಿ ವಿವರಗಳನ್ನು ಸಹ ಖೈದಿ ಹಾಗೂ ವಿಚಾರಣಾಧೀನ ಖೈದಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. +ಸಿಬ್ಬಂದಿಯೇ ಆತಿಥ್ಯ ನೀಡಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗಿದ್ದು, ಜೈಲು ಅಧಿಕಾರಿಗಳ ಸೂಚನೆ ಮೇರೆಗೆ ನೀಡಲಾಗಿತ್ತೇ ಅಥವಾ ಖುದ್ದು ಸಿಬ್ಬಂದಿಯೇ ನೀಡಿದ್ದಾರೆಯೇ ಎಂಬಿತ್ಯಾದಿ ಮಾಹಿತಿಗಳನ್ನು ಹಲವು ಆಯಾಮಗಳಲ್ಲಿ ತನಿಖಾಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. +ಜೈಲಿನ ಬ್ಯಾರಕ್ ಎದುರು ದರ್ಶನ್ ಮತ್ತು ಸಹಚರರು ಹರಟೆ ಹೊಡೆಯುತ್ತಿದ್ದ ಫೋಟೋ ಬಹಿರಂಗಗೊಳ್ಳುತ್ತಿದ್ದಂತೆ ಜೈಲಿನ 9 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ಅಮಾನತುಗೊಂಡಿದ್ದು, ಅವರನ್ನು ಸಹ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗುವುದು ಎಂದು ಗೊತ್ತಾಗಿದೆ. \ No newline at end of file diff --git a/eesanje/url_46_23_6.txt b/eesanje/url_46_23_6.txt new file mode 100644 index 0000000000000000000000000000000000000000..6e0092c2d5b340befbeb840c5ce80676ccfa006a --- /dev/null +++ b/eesanje/url_46_23_6.txt @@ -0,0 +1,9 @@ +ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಗೌಪ್ಯ ವಿಚಾರಣೆಗೆ ಹೈಕೋರ್ಟ್ ಇಂಗಿತ + +ಬೆಂಗಳೂರು,ಸೆ.9-ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟ ಪ್ರಕರಣಗಳನ್ನು ಇದೇ 12 ರಂದು ಗೌಪ್ಯ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಸ್ಪಷ್ಟಪಡಿಸಿದೆ.ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಸಿಐಡಿ ಪೊಲೀಸರು ತನಿಖೆ ನಡೆಸುವ ಕುರಿತಂತೆ ಇಂದು ಹೈಕೋರ್ಟ್ನ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಎದುರು ವಿಚಾರಣೆ ನಡೆಯಿತು. +ಆರೋಪಿ ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿದರೆ, ರಾಜ್ಯಸರ್ಕಾರದ ಸಿಐಡಿ ಪರವಾಗಿ ಪ್ರೊ.ರವಿವರ್ಮ ಕುಮಾರ್ ತಮ ವಾದ ಮಂಡಿಸಿದರು.ಪ್ರಕರಣದ ವಿಚಾರಣೆ ಮುಗಿದಿದ್ದು, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ ಎಂದು ಪ್ರೊ.ರವಿವರ್ಮ ಕುಮಾರ್ ನ್ಯಾಯಾಲಯಕ್ಕೆ ತಿಳಿಸಿದರು. +ದೋಷಾರೋಪಣ ಪಟ್ಟಿಯನ್ನು ತಮಗೆ ಕೊಟ್ಟರೆ ವಾದ ಮಂಡಿಸಲು ಅನುಕೂಲವಾಗುತ್ತದೆ ಎಂದು ಪ್ರಭುಲಿಂಗ ನಾವಡಗಿ ಹೇಳಿದಾಗ, ಈ ಪ್ರಕರಣವನ್ನು ಮುಕ್ತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದು ಸೂಕ್ತವಲ್ಲ, ಇನ್ಕ್ಯಾಮೆರಾ (ಗೌಪ್ಯ ವಿಚಾರಣೆ) ನಡೆಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. +ಆರೋಪಿ ಪರವಾಗಿ ವಾದಿಸಲು ದೋಷಾರೋಪಣ ಪಟ್ಟಿ ಹಾಗೂ ಅಗತ್ಯ ಮಾಹಿತಿ ಒದಗಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಭುಲಿಂಗ ನಾವಡಗಿ ಅವರು, ಪ್ರಥಮ ಮಾಹಿತಿ ದಾಖಲಾದಾಗ ಐಪಿಸಿ 376 ಪ್ರಕಾರ ಅತ್ಯಾಚಾರದ ಆರೋಪ ಇರಲಿಲ್ಲ. ಆದರೆ ಆನಂತರ ಈ ಕಲಂನಡಿ ವಿಚಾರಣೆ ನಡೆದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಪ್ರಕರಣದ ಸವಿಸ್ತಾರವಾದ ವಾದ ಮುಕ್ತ ನ್ಯಾಯಾಲಯದಲ್ಲಿ ಬೇಡ ಎಂದು ಪುನರುಚ್ಚರಿಸಿದ ನ್ಯಾಯಮೂರ್ತಿಗಳು, ತನಿಖೆಯ ಹಂತದಲ್ಲಿ ಮೇಲ್ನೋಟಕ್ಕೆ ಆರೋಪ ಕಂಡುಬಂದ ಹಿನ್ನೆಲೆಯಲ್ಲಿ 376 ಕಲಂ ಅನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ತಪ್ಪೇನೂ ಇಲ್ಲ. ನಿಯಮಾವಳಿಗಳಲ್ಲೂ ಇದಕ್ಕೆ ಅವಕಾಶವಿದೆ ಅಲ್ಲವೇ ಎಂದು ಪ್ರಶ್ನಿಸಿದರು. +ತನಿಖೆಯ ಬಳಿಕ ಸಲ್ಲಿಸಲಾಗಿರುವ ದೋಷಾರೋಪಣ ಪಟ್ಟಿ ನಾಲ್ಕು ಸಂಪುಟಗಳಲ್ಲಿದ್ದು, ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಂರಕ್ಷಿಸಲಾಗುವುದು, ಮುಂದಿನ ವಿಚಾರಣೆ ವೇಳೆ ಇದನ್ನು ಪರಿಶೀಲಿಸುವುದು ಸೂಕ್ತ ಎಂದರಲ್ಲದೆ, ಪ್ರತಿವಾದಿ ವಕೀಲರಿಗೆ ಅಗತ್ಯ ಮಾಹಿತಿ ನೀಡುವುದಾಗಿ ನ್ಯಾಯಾಧೀಶರು ಸ್ಪಷ್ಟಪಡಿಸಿದರು. +ಮುಂದಿನ ವಿಚಾರಣೆಯನ್ನು ಸೆ.12 ಕ್ಕೆ ನಿಗದಿಪಡಿಸಲಾಗುವುದು. ಒಂದು ವೇಳೆ ಅನನುಕೂಲತೆಗಳಿದ್ದರೆ 19ಕ್ಕೆ ನಿಗದಿಪಡಿಸಲಾಗುವುದು ಎಂದು ಹೇಳಿದರು. ಅಂತಿಮವಾಗಿ 12 ರಂದೇ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. \ No newline at end of file diff --git a/eesanje/url_46_23_7.txt b/eesanje/url_46_23_7.txt new file mode 100644 index 0000000000000000000000000000000000000000..245f7e553c22e0cbdc452a5e93eb83300f52bb1e --- /dev/null +++ b/eesanje/url_46_23_7.txt @@ -0,0 +1,8 @@ +ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿಚಾರಣೆಯತ್ತ ಎಲ್ಲರ ಚಿತ್ತ + +ಬೆಂಗಳೂರು,ಸೆ.9-ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯು ಹೈಕೋರ್ಟ್ನಲ್ಲಿ ನಡೆಯಲಿದೆ. +ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜ್ಯಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡುವ ಸಾಧ್ಯತೆ ಇದೆ. +ಸಿದ್ದರಾಮಯ್ಯ ಅವರ ಪರವಾಗಿ ವಕೀಲರಾದ ಶತಾಭೀಷ್ ಶಿವಣ್ಣ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ಕುರಿತಂತೆ ಈವರೆಗೂ ನಾಲ್ಕು ವಿಚಾರಣೆಗಳು ನಡೆದಿವೆ. +ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ರವಿವರ್ಮಕುಮಾರ್ ಅವರು ವಾದ ಮಂಡಿಸಲಿದ್ದಾರೆ.ರಾಜ್ಯಪಾಲರ ಪರವಾಗಿ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ಮೆಹ್ತಾ ಅವರು ವಾದ ಮಂಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ, ಜೆಡಿಎಸ್ನ ಪ್ರದೀಪ್ಕುಮಾರ್ ಎಸ್.ಬಿ. ಅವರು ಅಭಿಯೋಜನೆಗೆ ಪೂರ್ವಾನುಮತಿ ಕೇಳಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. +ಆ.16 ರಂದು ಆದೇಶ ಹೊರಡಿಸಿ ಪೂರ್ವಾನುಮತಿ ನೀಡಿದ್ದರು. ಇದು ನಿಯಮಬಾಹಿರವಾಗಿದ್ದು, ರಾಜ್ಯಪಾಲರು ಕೇಂದ್ರಸರ್ಕಾರದ ಪ್ರಮಾಣಿತ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಹಾಗೂ ಸ್ವವಿವೇಚನೆ ಬದಲಾಗಿ ಬಾಹ್ಯ ಪ್ರಭಾವಕ್ಕೆ ಒಳಗಾಗಿ ಪೂರ್ವಾನುಮತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಪರವಾಗಿ ಅವರು ವಾದಿಸಿದ್ದರು. +ಇದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದ್ದು, ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದರೆ ಹಾಗೂ ಸಿದ್ದರಾಮಯ್ಯ ಅವರಿಗೆ ತೊಂದರೆಯಾಗಲಿದ್ದು, ಈಗಾಗಲೇ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗೆ ಸಾಕಷ್ಟು ಇಂಬು ನೀಡಲಿದೆ. \ No newline at end of file diff --git a/eesanje/url_46_23_8.txt b/eesanje/url_46_23_8.txt new file mode 100644 index 0000000000000000000000000000000000000000..b72f6bfbd13cb1deddb3f5a210430a27644d4826 --- /dev/null +++ b/eesanje/url_46_23_8.txt @@ -0,0 +1,12 @@ +ಬಿಜೆಪಿ ಭಿನ್ನಮತೀಯರ ಬಾಯಿಗೆ ಹೈಕಮಾಂಡ್ ಬೀಗ + +ಬೆಂಗಳೂರು,ಸೆ.9– ಕೆಲವೇ ದಿನಗಳ ಹಿಂದೆ ಮನೆಯೊಂದು ಮೂರು ಬಾಗಿಲು ಎಂಬಂತಿದ್ದ ಬಿಜೆಪಿಯಲ್ಲಿ ಸದ್ಯ ಕೈ ಕಟ್! ಬಾಯ್ ಮುಚ್..! ಎಂಬ ಪರಿಸ್ಥಿತಿ ಇದೆ.ಪಕ್ಷದ ತೀರ್ಮಾನಗಳು, ನಿರ್ಣಯ ಹಾಗೂ ಸ್ವಪಕ್ಷೀಯರ ವಿರುದ್ಧ ಯಾರೊಬ್ಬರೂ ಬಾಯ್ಬಿಟ್ಟು ಮಾಧ್ಯಮಗಳ ಮುಂದೆ ಮಾತನಾಡದಂತೆ ಕಟ್ಟುನಿಟ್ಟಿನ ಕಟ್ಟಪ್ಪಣೆ ವಿಧಿಸಿರುವ ಬಿಜೆಪಿ ವರಿಷ್ಠರು ಬಾಯಿ ಬಿಟ್ಟರೆ ಜೋಕೆ! ಎಂಬ ಎಚ್ಚರಿಕೆ ಸಂದೇಶ ವನ್ನು ರವಾನಿಸಿದ್ದಾರೆ. +ಹೀಗಾಗಿಯೇ ಸ್ವಪಕ್ಷೀಯರ ವಿರುದ್ದವೇ ಆಗಾಗ್ಗೆ ಗುಡುಗುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ.ಹರೀಶ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕರ ಬಾಯಿಗೆ ಬೀಗ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಭಿನ್ನಮತೀಯ ನಾಯಕರು ಅಪ್ಪಿತಪ್ಪಿಯೂ ಬಾಯಿ ಬಿಡುತ್ತಿಲ್ಲ. ತುಟಿಗೆ ಬೀಗ ಬಿದ್ದವರಂತೆ ಎಲ್ಲದಕ್ಕೂ ಮೌನದಿಂದಲೇ ಉತ್ತರಿಸುತ್ತಾ ಪಕ್ಷದ ವಿರುದ್ಧವಾಗಲಿ ಇಲ್ಲವೇ ಅಧ್ಯಕ್ಷರ ವಿರುದ್ಧ ನಾವು ಹೇಳಿಕೆ ನೀಡುವುದಿಲ್ಲ ಎಂದು ಮೌನಕ್ಕೆ ಶರಣಾಗುತ್ತಿದ್ದಾರೆ. +ಹೀಗಾಗಿ ಬಿಜೆಪಿಯಲ್ಲಿ ಸದ್ಯ ಭಿನ್ನಮತೀಯ ಚಟುವಟಿಕೆಗಳಿಗೆ ಸಂಪೂರ್ಣವಾದ ಕಡಿವಾಣ ಬಿದ್ದಿದೆ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿದಾಗ ಯತ್ನಾಳ್ ಸೇರಿದಂತೆ ಹಲವರು ಆಟ ಕೆಡಿಸುವ ಕೆಲಸಕ್ಕೆ ಕೈ ಹಾಕಿದ್ದರು. +ಅದರಲ್ಲೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕ ಎಂದೇ ಗುರುತಿಸಿಕೊಂಡಿರುವ ಯತ್ನಾಳ್ ಪಾದಯಾತ್ರೆ ಉದ್ದೇಶವನ್ನೇ ಪ್ರಶ್ನೆ ಮಾಡಿದ್ದರು. ವಿಶೇಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರಿಯಾಗಿಟ್ಟುಕೊಂಡು ವಾಚಮಾಚಗೋಚರವಾಗಿ ಟೀಕೆ ಮಾಡಿದ್ದರು.ಜೊತೆಗೆ ಬಸವ ಕಲ್ಯಾಣದಿಂದ ಬೀದರ್ವರೆಗೆ ಪ್ರತ್ಯೇಕ ಪಾದಯಾತ್ರೆ ನಡೆಸುವುದಾಗಿ ಹೇಳಿದ್ದರು. ಇದು ಬಿಜೆಪಿಗೆ ಸಾಕಷ್ಟು ಮುಜುಗರ ಸೃಷ್ಟಿಸಿತ್ತು. +ಕಡಿವಾಣ ಹಾಕಿಸಿದ ವಿಜಯೇಂದ್ರ:ಯಾವಾಗ ಪಕ್ಷದ ವಿರುದ್ಧವೇ ಪ್ರತ್ಯೇಕವಾಗಿ ಸಭೆ ಮತ್ತು ಪಾದಯಾತ್ರೆ ನಡೆಸುತ್ತೇವೆ ಎಂದು ಭಿನ್ನಮತೀಯರು ಸಭೆ ನಡೆಸಿದರೂ ಎಚ್ಚೆತ್ತುಕೊಂಡ ವಿಜಯೇಂದ್ರ ತಕ್ಷಣವೇ ದೆಹಲಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ವಸ್ತುಸ್ಥಿತಿಯನ್ನು ವಿವರಿಸಿದರು. +ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಹಲವರನ್ನು ಭೇಟಿಯಾಗಿ ಕರ್ನಾಟಕದ ಬೆಳವಣಿಗೆಗಳ ಕುರಿತು ಮಾಹಿತಿಯನ್ನು ನೀಡಿದರು. +ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಯಶಸ್ವಿಯಾಗಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಇದನ್ನು ಸಹಿಸದ ಕೆಲವರು ಪಕ್ಷದ ವಿರುದ್ಧವೇ ಚಟುವಟಿಕೆ ನಡೆಸುತ್ತಿದ್ದಾರೆ. ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿಕೊಂಡರು. +ಇದನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ನಾಯಕರು ತಕ್ಷಣವೇ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮತ್ತಿತರರನ್ನು ದೆಹಲಿಗೆ ಕರೆಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸುವುದಾಗಲಿ ಇಲ್ಲವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ತಾಕೀತು ಮಾಡಿದರು. +ಏನೇ ಸಮಸ್ಯೆಗಳಿದ್ದರೂ ವೇದಿಕೆಯೊಳಗೆ ಚರ್ಚಿಸಬೇಕು. ನೀವು ಪಾದಯಾತ್ರೆ ನಡೆಸುವುದಾದರೆ ಪಕ್ಷದ ಚಿಹ್ನೆಯಡಿ ನಡೆಸಬೇಕು. ರಾಜ್ಯಾದ್ಯಕ್ಷರ ಜೊತೆ ಮಾತುಕತೆ ನಡೆಸಿ ಎಂದು ಸೂಚನೆ ಕೊಟ್ಟರು. +ಅಲ್ಲದೆ ಇನ್ನು ಮುಂದೆ ಪ್ರತ್ಯೇಕ ಸಭೆ ನಡೆಸುವುದು ಕೂಡ ಪಕ್ಷ ವಿರೋಧಿ ಚಟುವಟಿಕೆಯಾಗುತ್ತದೆ ಎಂದು ಸ್ಪಷ್ಟ ಮಾತುಗಳಲ್ಲಿ ಭಿನ್ನಮತೀಯರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದರು. ಈ ಎಲ್ಲ ಬೆಳವಣಿಗೆಗಳಿಂದ ಎಚ್ಚೆತ್ತುಕೊಂಡ ಭಿನ್ನಮತೀಯರು ಸದ್ಯಕ್ಕೆ ತಮ ಎಲ್ಲ ಆಟಾಟೋಪಗಳಿಗೆ ಕಡಿವಾಣ ಹಾಕಿಕೊಂಡಿದ್ದಾರೆ. \ No newline at end of file diff --git a/eesanje/url_46_23_9.txt b/eesanje/url_46_23_9.txt new file mode 100644 index 0000000000000000000000000000000000000000..1cd14eb0c5f8efcdbf9b04856e4bbefedb2e00fa --- /dev/null +++ b/eesanje/url_46_23_9.txt @@ -0,0 +1,10 @@ +ಸಿದ್ದರಾಮಯ್ಯನವರ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ : ಸಚಿವ ಬೋಸರಾಜ್ +' : +ಬೆಂಗಳೂರು,ಸೆ.9– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷವಿದ್ದು, ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯವರ ಹುನ್ನಾರ ಫಲಿಸುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಗಿಂದು ಆಗಮಿಸಿದ ಅವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸಲು ಬಿಜೆಪಿ-ಜೆಡಿಎಸ್ನಲ್ಲಿನ ನಾಯಕರು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಅದ್ಯಾವುದೂ ಯಶಸ್ವಿಯಾಗುವುದಿಲ್ಲ. ಇಲ್ಲಸಲ್ಲದ ವಿಚಾರಗಳನ್ನು ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಕಾಂಗ್ರೆಸ್ನಲ್ಲೇ ಸಚಿವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಹಲವು ರೀತಿಯ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಯಾರೂ ತಾವು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಿಲ್ಲ, ಅಪೇಕ್ಷೆಯನ್ನೂ ಪಟ್ಟಿಲ್ಲ. ಎಲ್ಲಾ ಸಚಿವರೂ ಪರಸ್ಪರ ಸಂಪರ್ಕದಲ್ಲಿದ್ದೇವೆ, ಎಲ್ಲದರದೂ ಒಂದೇ ಅಭಿಪ್ರಾಯವಾಗಿದೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಸರ್ಕಾರ ನಡೆಯುತ್ತಿದೆ. ಎಲ್ಲರೂ ಅವರ ಬೆನ್ನಿಗಿದ್ದೇವೆ ಎಂದು ಹೇಳಿದರು. +ಮಾಧ್ಯಮದವರ ಪ್ರಶ್ನೆ ಎದುರಾದಾಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಉದ್ಭವಿಸಿಲ್ಲ ಎಂದರು. ಇದನ್ನೆಲ್ಲಾ ಸೃಷ್ಟಿ ಮಾಡುತ್ತಿರುವುದು ಬಿಜೆಪಿಯವರು. ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ರವರು ದಿನಕ್ಕೊಂದು ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. 135 ಮಂದಿ ಶಾಸಕರು ಒಟ್ಟಾಗಿದ್ದಾರೆ. ಹೈಕಮಾಂಡ್ ಕೂಡ ಮುಖ್ಯಮಂತ್ರಿಯವರಿಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು. +ಸಚಿವರು ದೆಹಲಿಗೆ ಭೇಟಿ ನೀಡಿದ ಬಗ್ಗೆ ಅಪಾರ್ಥ ಕಲ್ಪಿಸಲಾಗುತ್ತಿದೆ. ಸತೀಶ್ ಜಾರಕಿಹೊಳಿಯವರು ದೆಹಲಿಗೆ ತೆರಳಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿಯವರನ್ನು ಭೇಟಿ ಮಾಡಿ ಬಂದಿದ್ದಾರೆ. ಎಂ.ಬಿ.ಪಾಟೀಲ್ರವರು ಮುಂದೆ ದೆಹಲಿಗೆ ಭೇಟಿ ನೀಡುತ್ತಾರೆ. ಮುಂದಿನ ವಾರ ನಾನು ದೆಹಲಿಗೆ ಹೋಗಿ ಜಲಶಕ್ತಿ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಸಚಿವ ಸೋಮಣ್ಣ ಅವರನ್ನು ಭೇಟಿ ಮಾಡಲಿದ್ದೇನೆ. ಸಚಿವರು ದೆಹಲಿಗೆ ಹೋದಾಗ ಪಕ್ಷದ ಕಚೇರಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಅಂದಾಕ್ಷಣ ಕಾಂಗ್ರೆಸ್ನಲ್ಲಿ ಗೊಂದಲಗಳಿವೆ ಎಂದು ಕಲ್ಪಿಸಿಕೊಳ್ಳಬಾರದು ಎಂದರು. +ಹೈಕೋರ್ಟ್ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಯಾವುದೇ ತೀರ್ಪು ನೀಡಿದರೂ ನ್ಯಾಯಾಂಗದಲ್ಲಿ ಸಾಕಷ್ಟು ಅವಕಾಶಗಳಿವೆ. ಹೀಗಾಗಿ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು.ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳಿದ್ದವು. ನಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳೂ ಕಾಣುತ್ತಿಲ್ಲ. ಹಿರಿಯ ಸಚಿವ ಸಂಪುಟ ಸಭೆ ಸಿದ್ದರಾಮಯ್ಯನವರ ಬೆನ್ನಿಗಿದೆ. ನಾನೂ ಸೇರಿದಂತೆ ಕಾಂಗ್ರೆಸ್ನಲ್ಲಿ ಯಾರೂ ಮುಖ್ಯಮಂತ್ರಿ ಹುದ್ದೆಗೆ ಸದ್ಯಕ್ಕೆ ಆಕಾಂಕ್ಷಿಗಳಿಲ್ಲ. ಏಕೆಂದರೆ ಕುರ್ಚಿ ಖಾಲಿ ಇಲ್ಲ ಎಂದರು. +ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿ ಉದ್ಘಾಟನೆ ಮಾಡಿದ್ದಾರೆ. 75 ಲಕ್ಷ ಜನರಿಗೆ ಈ ಯೋಜನೆಯಿಂದ ನೀರು ದೊರೆಯಲಿದೆ. 15 ಟಿಎಂಸಿಯನ್ನ ಕುಡಿಯುವ ನೀರಿಗೆ, 9 ಟಿಎಂಸಿಯನ್ನು ಕೆರೆಗಳನ್ನು ತುಂಬಿಸಲು ಬಳಕೆ ಮಾಡಲಾಗುತ್ತಿದೆ. ಪ್ರತಿ ಟಿಎಂಸಿಗೆ 1 ಸಾವಿರ ಕೋಟಿಯಂತೆ 24 ಟಿಎಂಸಿಗೆ 24 ಸಾವಿರ ಕೋಟಿ ರೂ. ಬಳಸಲಾಗುತ್ತಿದೆ. ಬಿಜೆಪಿಯವರು ಹೇಳುವಂತೆ ಹಣ ವೃಥಾ ವ್ಯಯವಾಗಿಲ್ಲ ಎಂದರು. +ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ನ ಸಂಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಎಲ್ಲರಿಗೂ ಆತಂಕವಾಗಿದೆ. ಅದಕ್ಕಾಗಿ ಸಿಬಿಐ, ಇಡಿ ಸೇರಿ ಎಲ್ಲಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_240_1.txt b/eesanje/url_46_240_1.txt new file mode 100644 index 0000000000000000000000000000000000000000..0b052868f06fc83e6613371fe1c75db3beb45709 --- /dev/null +++ b/eesanje/url_46_240_1.txt @@ -0,0 +1,13 @@ +ಹದಗೆಟ್ಟ ಕಾನೂನು ಸುವ್ಯವಸ್ಥೆ : ವಿಧಾನಸಭೆಯಲ್ಲಿ ಕೋಲಾಹಲ +ಬೆಂಗಳೂರು, ಫೆ.13- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳು ಮಾಡಿದ ಆರೋಪ ವಿಧಾನಸಭೆ ಕಲಾಪದ ಆರಂಭದಲ್ಲೇ ಕೋಲಾಹಲದ ವಾತಾವಣ ನಿರ್ಮಾಣ ಮಾಡಿತ್ತು. ಬೆಳಗ್ಗೆ 9.40ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳಲು ಮುಂದಾದರು. ಮಧ್ಯ ಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಹಾವೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ. +ಶಿವಮೊಗ್ಗದಲ್ಲಿ ಮಚ್ಚು-ಲಾಂಗ್‍ಗಳ ಬ್ಯಾನರ್ ಹಾಕುತ್ತಿದ್ದಾರೆ. ಭಗವಾಧ್ವಜ ಅಳವಡಿಸಲು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಸೈಬರ್ ಕ್ರೈಮ್‍ಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ವಿಚಾರವನ್ನು ನಿಲುವಳಿ ಸೂಚನೆಯಡಿ ಚರ್ಚೆಗೆ ಪ್ರಶ್ನೋತ್ತರವನ್ನು ಬದಿಗಿರಿಸಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. +ಈ ಹಿಂದೆ ಬೆಳಗಾವಿಯ ಅಧಿವೇಶನದಲ್ಲೂ ನಿಲುವಳಿ ಸೂಚನೆ ನೀಡಿದ್ದೇವು. ಆದರೆ ನೀವು ಆಡಳಿತ ಪಕ್ಷದ ಸದಸ್ಯರು ಇರುವ ಬಲಗಡೆ ಮಾತ್ರ ನೋಡುತ್ತಿದ್ದೀರಾ, ವಿರೋಧ ಪಕ್ಷಗಳ ಸದಸ್ಯರು ಇರುವ ಎಡಗಡೆಯೂ ಸ್ವಲ್ಪ ನೋಡಿ ಎಂದು ಸಲಹೆ ನೀಡಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಭಾಧ್ಯಕ್ಷರು ಎಡಗಡೆ ಅಥವಾ ಬಲಗಡೆ ನೋಡುವುದು ಬೇಡ, ನೇರವಾಗಿಯೇ ನೋಡಲಿ. ವಿರೋಧ ಪಕ್ಷಗಳ ಬೇಡಿಕೆಯಂತೆ ಚರ್ಚೆ ಮಾಡಲು ನಮ್ಮ ಅಭ್ಯಂತರ ಇಲ್ಲ. ಅವರ ಕಾಲದಲ್ಲಿ ಬೆಂಗಳೂರಿನಲ್ಲಿ ಹೇಗೆ ಕೊಲೆಗಳಾಗುತ್ತಿದ್ದವು ಎಂದು ನಾನು ಹೇಳುತ್ತೇನೆ. ಅವರು ಹೇಳಲಿ, ಆದರೆ ನಿಯಮಾವಳಿ ಪ್ರಕಾರ ಮೊದಲು ಪ್ರಶ್ನೋತ್ತರ ನಡೆಯಲಿ ಎಂದು ಸಲಹೆ ನೀಡಿದರು. +ಬಿಜೆಪಿ ಶಾಸಕರಾದ ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ ಮಧ್ಯ ಪ್ರವೇಶ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಚರ್ಚೆಗೆ ಮೊದಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಸಚಿವ ಪ್ರಿಯಾಂಕ ಖರ್ಗೆ, ಕಾನೂನು ಸುವ್ಯವಸ್ಥೆ ಹದಗೆಡಿಸುವವರು ನೀವೆ, ಇಲ್ಲಿ ಚರ್ಚೆ ಮಾಡುವವರು ನೀವೆ. ರಾಜ್ಯದ ರೈತರನ್ನು ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡೋಣ, ಪಿಎಸ್‍ಐ ನೇಮಕಾತಿ ಹಗರಣದ ಕುರಿತು ನ್ಯಾಯಮೂರ್ತಿ ವೀರಪ್ಪ ಅವರ ನೇತೃತ್ವದ ನ್ಯಾಯಾಂಗ ತನಿಖಾ ಆಯೋಗದ ಕುರಿತು ಚರ್ಚೆಯಾಗಲಿ, ರಾಷ್ಟ್ರಧ್ವಜವನ್ನು ಕೆಳಗೆ ಇಳಿಸಿ ಭಗವಾಧ್ವಜ ಏರಿಸುವುದು ಚರ್ಚೆಯಾಗಲಿ, ಪ್ರಸ್ತಾಪ ಮಾಡಿ ಎಂದು ಸವಾಲು ಹಾಕಿದರು. +ನಾವು ಏನು ಪ್ರಸ್ತಾಪ ಮಾಡಬೇಕು ಎಂದು ನೀವು ನಿರ್ದೇಶನ ನೀಡುವ ಅಗತ್ಯ ಇಲ್ಲ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದರು. ಈ ವೇಳೆ ಪ್ರಿಯಾಂಕ್ ಖರ್ಗೆ ಮತ್ತು ಸುನೀಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು. ನೀವು ನಮಗೆ ನಿರ್ದೇಶನ ನೀಡುವುದು ಬೇಡ. ನೀವು ಹೇಳಿದ್ದನ್ನು ನಾವು ಕೇಳಬೇಕು, ನಾವು ಹೇಳಕ್ಕೂ ನಿಮ್ಮ ವಿರೋಧ, ಹೇಗಿದೆ ನಿಮ್ಮ ಧೋರಣೆ ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.ಡಾ.ಜಿ.ಪರಮೇಶ್ವರ್ ಹಾಗೂ ಅರಗ ಜ್ಞಾನೇಂದ್ರ ಅವರ ನಡುವೆಯೇ ಕಾವೇರಿದ ಚರ್ಚೆಗಳಾದವು. ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ ಎಂದು ಅರಗ ಜ್ಞಾನೇಂದ್ರ ಆರೋಪಿಸಿದರು. +ಆರ್.ಅಶೋಕ್, ನಮಗೆ ಬುದ್ಧಿ ಹೇಳಲು ಬರಬೇಡಿ. ನಿಮ್ಮ ಇಂಡಿಯಾ ಮಿತ್ರಕೂಟಕ್ಕೆ ಹೇಳಿಕೊಳ್ಳಿ ಎಂದು ತಿರುಗೇಟು ನೀಡಿದರು. ಕೆಲಕಾಲ ಕಾವೇರಿದ ಚರ್ಚೆ ಬಳಿಕ ಸಭಾಧ್ಯಕ್ಷ ಯು.ಟಿ.ಖಾದರ್, ಸದಸ್ಯರು ಆರಂಭದ ಹುಮ್ಮಸ್ಸಿನಲ್ಲಿರುತ್ತಾರೆ. ಅದು ನಿಧಾನಕ್ಕೆ ಸಮಪ್ರಮಾಣಕ್ಕೆ ಬರಲಿ ಎಂದು ಸಲಹೆ ನೀಡಿದರು. +ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್ +ಕೊಬ್ಬರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕು ಎಂಬ ವಿಚಾರ ಚರ್ಚೆ ಮಾಡಲು ಜೆಡಿಎಸ್‍ನ ಹೆಚ್.ಡಿ.ರೇವಣ್ಣ, ಬಾಲಕೃಷ್ಣ ಅವರು ಮೊದಲು ನಿಲುವಳಿ ಸೂಚನೆ ನೀಡಿದ್ದಾರೆ. ಅನಂತರ ಬಿಜೆಪಿ ಸದಸ್ಯರು ಕಾನೂನು ಸುವ್ಯವಸ್ಥೆ ಕುರಿತು ಚರ್ಚೆಗೆ ಸೂಚನೆ ನೀಡಿದ್ದಾರೆ. ನಿಯಮದ ಪ್ರಕಾರ ಮೊದಲು ಸೂಚನಾ ಪತ್ರ ಕೊಟ್ಟವರಿಗೆ ಅವಕಾಶ ಮಾಡಿಕೊಡಲಾಗುವುದು. ಬಿಜೆಪಿ ಸದಸ್ಯರು ನಾಳೆ ಹೊಸದಾಗಿ ಸೂಚನಾ ಪತ್ರ ಕಳುಹಿಸಿ, ಪರಿಶೀಲಿಸುತ್ತೇನೆ ಎಂದು ಸಭಾಧ್ಯಕ್ಷರು ಹೇಳಿದರು. +ಜೆಡಿಎಸ್‍ನವರು ನಮ್ಮ ಪಾಲುದಾರರಿದ್ದಾರೆ. ಆದರೆ, ಅಧಿಕೃತ ವಿರೋಧ ಪಕ್ಷದ ನಿಲುವಳಿ ಸೂಚನೆಯನ್ನು ಮೊದಲು ಕೈಗೆತ್ತಿಕೊಳ್ಳಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು. ವಿಚಾರ ಗಂಭೀರವಾಗಿದೆ ಎಂದು ಅರಗ ಜ್ಞಾನೇಂದ್ರ ಹೇಳಿದಾಗ, ನಿಲುವಳಿ ಸೂಚನೆ ನೀಡುವಾಗ ಗಂಭೀರ ವಿಚಾರ ಎಂದು ಗೊತ್ತಿರಲಿಲ್ಲವೇ, ಮೊದಲು ಸಭಾಧ್ಯಕ್ಷರ ಕಚೇರಿಗೆ ಸೂಚನಾ ಪತ್ರ ನೀಡಬೇಕಲ್ಲವೇ ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು.ಸಚಿವ ಪರಮೇಶ್ವರ್, ಕಾನೂನು ಸುವ್ಯವಸ್ಥೆಯನ್ನು ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿದರು. + ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು +ವಿರೋಧ ಪಕ್ಷಗಳ ಸದಸ್ಯರು ಧ್ವನಿ ಏರಿಸಿದಾಗ ಆಡಳಿತ ಪಕ್ಷದ ಶಾಸಕರಿಂದಲೂ ಪ್ರತಿ ಗದ್ದಲವಾಯಿತು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಕೊಬ್ಬರಿ ಬೆಲೆ ಕುರಿತು ಇಂದು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ. ಕಾನೂನು ಸುವ್ಯವಸ್ಥೆ ಕುರಿತು ಹೊಸ ಸೂಚನೆ ಕೊಟ್ಟರೆ ನಾಳೆ ಪರಿಶೀಲಿಸುತ್ತೇನೆ ಎಂದು ಸಭಾಧ್ಯಕ್ಷರು ವಿರೋಧ ಪಕ್ಷದ ನಾಯಕರ ಒತ್ತಾಯಕ್ಕೆ ಸ್ಪಷ್ಟನೆ ನೀಡಿದರು. +ಬಿಜೆಪಿ ಶಾಸಕ ಸಿದ್ದು ಸವದಿ, ಪ್ರಿಯಾಕ್ ಖರ್ಗೆ ಸಮರ್ಥರಿದ್ದಾರೆ ಅವರನ್ನು ಮುಖ್ಯಮಂತ್ರಿ ಮಾಡಿ ಬಿಡಿ ಎಂದು ಛೇಡಿಸಿದರು. ನಿಮ್ಮನ್ನು ಕೇಳಿ ನಮ್ಮಲ್ಲಿ ಅವಕಾಶ ನೀಡುವುದಿಲ್ಲ. ಇಂತಹ ಅನಗತ್ಯ ಚರ್ಚೆ ಬೇಡ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದರು. \ No newline at end of file diff --git a/eesanje/url_46_240_10.txt b/eesanje/url_46_240_10.txt new file mode 100644 index 0000000000000000000000000000000000000000..3a0fa266aadb480f377b9eb532e40e32d07d5b39 --- /dev/null +++ b/eesanje/url_46_240_10.txt @@ -0,0 +1,8 @@ +ಗ್ಯಾರಂಟಿ ಯೋಜನೆಗಳಿಂದ ಬಡತನದಿಂದ ಹೊರಬಂದಿವೆ 1.2 ಕೋಟಿಗೂ ಅಧಿಕ ಕುಟುಂಬಗಳು : ರಾಜ್ಯಪಾಲರು +ಬೆಂಗಳೂರು,ಫೆ.12- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಯಿಂದ ಹೊರಬಂದು ಮಧ್ಯವರ್ಗದ ಸ್ಥಿತಿಗೆ ಏರುತ್ತಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಹೇಳಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಪಂಚಖಾತ್ರಿ ಯೋಜನೆಗಳನ್ನು ಕೊಂಡಾಡಿದರು. ಸರ್ಕಾರದ ಒಂದು ನಿರ್ಣಯದಿಂದ ಐದು ಕೋಟಿಗೂ ಹೆಚ್ಚು ಜನ ಮಧ್ಯಮ ವರ್ಗದ ಸ್ಥಿತಿಗೆ ಏರಲು ಸಾಧ್ಯವಾಗಿದೆ. ಜನರ ಜೀವನದ ಮೇಲೆ ಪರೋಕ್ಷ ಗಮನಾರ್ಹ ಬದಲಾವಣೆ ತಂದಿದೆ ಎಂದಿದ್ದಾರೆ. +ರಾಜ್ಯದಲ್ಲಿ ಬರಗಾಲವಿದ್ದರೂ ಕಳೆದ ವರ್ಷಕ್ಕಿಂತಲೂ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಯಾವುದೇ ಕಾರಣಕ್ಕೂ, ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬ ನಂಬಿಕೆಯೊಂದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಅಶಕ್ತರಾದವರಿಗೆ ಹೆಚ್ಚು ಅಗತ್ಯವಿತ್ತು. ಅದಕ್ಕಾಗಿ ಅರ್ಜಿಗಳ ಮಹಾಪೂರವೇ ಹರಿದುಬಂದಿತ್ತು. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳ ಅನುಷ್ಠಾನಕ್ಕೆ ಸುಸಜ್ಜಿತ ವ್ಯವಸ್ಥೆ ರೂಪಿಸಲಾಗಿದೆ. +ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನರಿಗೆ ಗ್ಯಾರಂಟಿ ಯೋಜನೆಗಳು ಸಾಲುವುದಿಲ್ಲ ಎಂಬ ಅರಿವು ಸರ್ಕಾರಕ್ಕಿದೆ. ಸಂಪತ್ತು ಕೆಲವೇ ವ್ಯಕ್ತಿಗಳಲ್ಲಿ ಕೇಂದ್ರಿಕೃತವಾಗಿದ್ದರೆ ಅದನ್ನು ಅಭಿವೃದ್ಧಿ ಎಂದು ಕರೆಯಲು ಸಾಧ್ಯವಿಲ್ಲ. ಎಲ್ಲ ಜನರನ್ನು ಅಭಿವೃದ್ದಿಯ ಭಾಗಿದಾರರನಾಗಿ ಮಾಡುವ ಅವಶ್ಯಕತೆ ಇದೆ ಮತ್ತು ಅಭಿವೃದ್ಧಿಯ ಫಲ ಎಲ್ಲರಿಗೂ ಲಭಿಸುವ ರೀತಿಯಲ್ಲಿ ಮಾಡಲು ನಮ್ಮ ಸರ್ಕಾರ ಮುಂದಾಗಿದೆ. ಗ್ಯಾರಂಟಿ ಯೋಜನೆಗಳು ಈ ನಿಟ್ಟಿನಲ್ಲಿ ಒಂದು ಆರಂಭವಷ್ಟೇ ಎಂದು ಹೇಳಿದ್ದಾರೆ. +ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್‌ಡಿಕೆ +ನಮ್ಮ ಸರ್ಕರ ದೂರದೃಷ್ಟಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಭವಿಷ್ಯದಲ್ಲಿ ಸಮಸ್ತ ಜನರ ಪಾಲಿಗೆ ಸಂತೃಪ್ತಿ ಮತ್ತು ನೆಮ್ಮದಿಯ ದಿನಗಳನ್ನು ತರುವ ಉದ್ದೇಶದಿಂದ ಹೊಸ ನೀತಿಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಕೃಷಿ, ಕೈಗಾರಿಕೆ ಮತ್ತು ಸೇವಾ ರಂಗಗಳಲ್ಲಿ ಹೊಸ ಭರವಸೆಗಳನ್ನು ಹುಟ್ಟು ಹಾಕಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಹಾಗೂ ಜೀವನ ಭದ್ರತೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. +ಶಕ್ತಿ ಯೋಜನೆಯಿಂದ ರಾಜ್ಯದಲ್ಲಿನ 3.5 ಕೋಟಿ ಮಹಿಳೆಯರು ಜಾತಿ, ಧರ್ಮಗಳ ಬೇಧವಿಲ್ಲದೆ ಉಚಿತ ಪ್ರಯಾಣದ ಲಾಭ ಪಡೆಯುತ್ತಿದ್ದಾರೆ. 150 ಕೋಟಿಗೂ ಹೆಚ್ಚು ಟ್ರಿಪ್‍ಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ವಿವರಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಆಹಾರ ಭದ್ರತಾ ಕಾಯ್ದೆ ಅನ್ವಯ ವಿತರಿಸಲಾಗುವ 5 ಕೆಜಿ ಆಹಾರಧಾನ್ಯಗಳೊಂದಿಗೆ ಹೆಚ್ಚುವರಿ 5 ಕೆಜಿ ಆಹಾರಧಾನ್ಯ ಸೇರಿಸಿ ಪ್ರತಿ ಫಲಾನುಭವಿಗೆ 10 ಕೆಜಿ ಆಹಾರ ಧಾನ್ಯ ವಿತರಿಸಲು ಸರ್ಕಾರ ಬದ್ದವಾಗಿದೆ. ಆಹಾರಧಾನ್ಯಗಳು ದೊರೆಯುವರೆಗೂ 5 ಕೆಜಿ ಪ್ರಮಾಣಕ್ಕೆ ಅನುಗುಣವಾಗಿ ಪಲಾನುಭವಿಗಳಿಗೆ ನಗದು ಪಾವತಿಸಲಾಗುತ್ತಿದೆ. 2023 ಜುಲೈನಿಂದ 2024 ಜನವರಿ ಅಂತ್ಯದವರೆಗೆ 4595 ಕೋಟಿ ರೂ.ಗಳನ್ನು ಫಲಾನುಭವಿಗಳಿಗೆ ಪಾವತಿಸಲಾಗಿದೆ. +ಗೃಹಜ್ಯೋತಿ ಯೊಜನೆಯಡಿ 1.6 ಕೋಟಿ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 1.75 ಕೋಟಿ ಫಲಾನುಭವಿಗಳಿಗೆ ಜನವರಿಗೂ 11,037 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಈ ಯೋಜನೆಗೆ 17,500 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. ಯುವನಿ ಯೋಜನೆಯಡಿ ನಿರುದ್ಯೋಗಿ ಭತ್ಯೆ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈ ಸೇರಿದ ಹಣ ಆರ್ಥಿಕತೆ ಉತ್ತೇಜನಕ್ಕೆ ಕಾರಣವಾಗಿದೆ ಎಂದಿದ್ದಾರೆ. \ No newline at end of file diff --git a/eesanje/url_46_240_11.txt b/eesanje/url_46_240_11.txt new file mode 100644 index 0000000000000000000000000000000000000000..8d54e0e8c390709babd0db295297a881fff20e00 --- /dev/null +++ b/eesanje/url_46_240_11.txt @@ -0,0 +1,6 @@ +ಕೇಸರಿ ಶಾಲು ಧರಿಸಿ ಅಧಿವೇಶನಕ್ಕೆ ಬಂದ ಬಿಜೆಪಿ ಶಾಸಕರು +ಬೆಂಗಳೂರು,ಫೆ.12- ಇಂದಿನಿಂದ ಆರಂಭವಾದ ವಿಧಾನಮಂಡಲದ ಜಂಟಿ ಅಧಿವೇಶನದ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಸದನಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದು ಎದ್ದು ಕಾಣುತ್ತಿತ್ತು. +ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ತೆರವು ಮಾಡಿದ್ದು ದೊಡ್ಡ ವಿವಾದವನ್ನು ಸೃಷ್ಟಿಸಿತ್ತು. ಅಲ್ಲಿ ಪ್ರತಿಭಟನೆ ನಡೆಸಿದ್ದ ಸಂಘ ಪರಿವಾರದ ಹಿನ್ನಲೆಯ ಭಜರಂಗದಳ ವಿಶ್ವ ಹಿಂದು ಪರಿಷತ್, ಬಿಜೆಪಿ ಸೇರಿದಂತೆ ಮತ್ತಿತರ ಸಂಘಟನೆಗಳು ಕೇಸರಿ ಶಾಲು ಹಾಕಿಕೊಂಡೇ ಪ್ರತಿಭಟನೆ ನಡೆಸಿದವು. +ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕೇಸರಿ ಶಾಲು ಹಾಕಿಕೊಂಡಿದ್ದಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅದರಲ್ಲೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕೇಸರಿ ಶಾಲು ಹಾಕುವ ಔಚಿತ್ಯವನ್ನು ಪ್ರಶ್ನೆ ಮಾಡಿದ್ದರು. +ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಮೇಲೆ ಸೇನೆಯಿಂದ ಗುಂಡಿನ ದಾಳಿ +ಇದಕ್ಕೆ ಟಾಂಗ್ ನೀಡುವಂತೆ ಬಿಜೆಪಿಯ ಎಲ್ಲ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಮಿರಮಿರ ಮಿಂಚುತ್ತಿದ್ದರು. \ No newline at end of file diff --git a/eesanje/url_46_240_12.txt b/eesanje/url_46_240_12.txt new file mode 100644 index 0000000000000000000000000000000000000000..2ebd6609c20f4c479f58b6787d8fc77cdf706b5d --- /dev/null +++ b/eesanje/url_46_240_12.txt @@ -0,0 +1,5 @@ +ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ +ಬೆಂಗಳೂರು,ಫೆ.12- ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಅವರನ್ನು ಸಂಪ್ರದಾಯದಂತೆ ಆತ್ಮೀಯವಾಗಿ ಸ್ವಾಗತ ಮಾಡಲಾಯಿತು. ರಾಜಭವನದಿಂದ ವಿಶೇಷ ವಾಹನದಲ್ಲಿ ಆಗಮಿಸಿದ ಅವರನ್ನು ಶಿಷ್ಟಾಚಾರದಂತೆ ಶಾಸಕರ ಭವನ ಪ್ರವೇಶಿಸುವ ಗೇಟ್ ಬಳಿ ಅಶ್ವದಳದ ಮೂಲಕ ಬರ ಮಾಡಿಕೊಳ್ಳಲಾಯಿತು. +ನಂತರ ವಿಧಾನಸೌಧ ಮುಂಭಾಗ ಆಗಮಿಸಿದ ರಾಜ್ಯಪಾಲರನ್ನು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೂಗುಚ್ಚ ನೀಡಿ ಬರಮಾಡಿಕೊಂಡರು. +ಕತಾರ್ ಜೈಲಿನಲ್ಲಿದ್ದ 8 ಮಾಜಿ ಭಾರತೀಯ ನೌಕಾ ಸಿಬ್ಬಂದಿ ಬಿಡುಗಡೆ : ಭಾರತಕ್ಕೆ ರಾಜತಾಂತ್ರಿಕ ಗೆಲುವು +ಬಳಿಕ ವಿಧಾನಸಭೆ ಪ್ರಾಂಗಣ ಪ್ರವೇಶಿಸುತ್ತಿದ್ದಂತೆ ಸಂಪ್ರದಾಯಂತೆ ಪೊಲೀಸ್ ಬ್ಯಾಂಡ್ ಮೂಲಕ ಸ್ವಾಗತ ಕೋರಲಾಯಿತು. ಬಳಿಕ ಸದನದ ಸದಸ್ಯರೆಲ್ಲರೂ ಎದ್ದು ನಿಂತು ರಾಜ್ಯಪಾಲರಿಗೆ ಸ್ವಾಗತ ಕೋರಿದರು. \ No newline at end of file diff --git a/eesanje/url_46_240_2.txt b/eesanje/url_46_240_2.txt new file mode 100644 index 0000000000000000000000000000000000000000..59672893584215353aafbde1d087fadc3001a3f4 --- /dev/null +++ b/eesanje/url_46_240_2.txt @@ -0,0 +1,6 @@ +ರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ +ಬೆಂಗಳೂರು, ಫೆ.12- ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದ ಮೂಲಕ ತಪ್ಪು ಮಾಹಿತಿಯನ್ನು ಜನರಿಗೆ ಕೊಟ್ಟಿದ್ದಾರೆಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ 30 ಸಾವಿರ ಕೋಟಿ ರೂ. ಕೊಟ್ಟಿರುವುದಾಗಿ ಸುಳ್ಳು ಹೇಳಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್, ನರೇಗಾ ಯೋಜನೆಗಳನ್ನು ತಮ್ಮ ಯೋಜನೆಗಳೆಂದು ಬಿಂಬಿಸಿಕೊಂಡಿದ್ದಾರೆ. +ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. 5 ಗ್ಯಾರಂಟಿಗಳ ಬಗ್ಗೆ ಭಾಷಣ ಮಾಡಿಸಿದ್ದಾರೆ ಹೊರತು ಹೊಸತೇನೂ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಅನುದಾನ ಖಾಲಿಯಾಗಿದ್ದು, ಕೇಂದ್ರದ ಕಡೆ ಬೆರಳು ಮಾಡುವುದನ್ನು ಪರಿಪಾಠ ಮಾಡಿಕೊಂಡಿದ್ದಾರೆ. ರೈತರಿಗೆ 2 ಸಾವಿರ ರೂ. ಬರಪರಿಹಾರ ಧನ ಇನ್ನೂ ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರ, ಸೀಟು ಹಂಚಿಕೆ ಬಗ್ಗೆ ಎರಡು ಪಕ್ಷಗಳ ವರಿಷ್ಠರು ತೀರ್ಮಾನಿಸುತ್ತಾರೆ. ಯಾರೂ ಅಪಸ್ವರ ಎತ್ತಬಾರದೆಂದು ಹೇಳಿದ್ದಾರೆ. ನಾವೆಲ್ಲರೂ ಪ್ರೀತಿಯಿಂದ ಒಗ್ಗಟ್ಟಾಗಿದ್ದೇವೆ. ಲೋಕಸಭಾ ಚುನಾವಣೆಗೆ ನಾವ್ಯಾರೂ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ +ಜೆಡಿಎಸ್‍ನಿಂದ ಯಾರೂ ಕೂಡ ಕಾಂಗ್ರೆಸ್‍ಗೆ ಹೋಗುವುದಿಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರದ ಮೇಲೂ ಕಮಿಷನ್ ಆರೋಪ ಮಾಡಿದ್ದಾರೆ. ಆದರೆ ಇದನ್ನು ಸರ್ಕಾರದವರು ಒಪ್ಪುತ್ತಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_240_3.txt b/eesanje/url_46_240_3.txt new file mode 100644 index 0000000000000000000000000000000000000000..4ff64591f8a6e9020275e9e5dd0a690a8371db79 --- /dev/null +++ b/eesanje/url_46_240_3.txt @@ -0,0 +1,6 @@ +ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಆರೋಪಿ ಬಂಧನ +ಕೊಪ್ಪಳ, ಫೆ.12- ಗಂಡನನ್ನು ಭೇಟಿಯಾಗಲು ಬೆಂಗಳೂರಿನಿಂದ ಬಂದಿದ್ದ ಮಹಿಳೆಯನ್ನು ಅಪಹರಿಸಿ ಬಸ್ ನಿಲ್ದಾಣ ಬಳಿಯ ಉದ್ಯಾನವನಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿರುವ ಘಟನೆ ಗಂಗಾವತಿಯಲ್ಲಿ ನೆಡೆದಿದೆ. ಘಟನೆಯ ಬಗ್ಗೆ ಸಂತ್ರಸ್ಥೆ ನೀಡಿದ ದೂರಿನ ಹಿನ್ನಲೆಯಲ್ಲಿ , ಅತ್ಯಾಚಾರವೆಸಗಿ ಪರಾರಿಯಾಗಿದ್ದ ಆರೋಪಿ ಲಿಂಗರಾಜನನ್ನು ಗಂಗಾವತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. +ಸಂತ್ರಸ್ತ ಮಹಿಳೆ ಪತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೌಲಾಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್, ಮಾದೇಶ್ ಎಂಬುವವರನ್ನು ಬಂಧಿಸಲಾಗಿದೆ. ಬೆಂಗಳೂರಿನ ನಿವಾಸಿ 21 ವರ್ಷದ ಸಂತ್ರಸ್ಥೆ ಮಹಿಳೆ ಗಂಗಾವತಿ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾರೆ. ಕಳೆದ ಫೆ.9ರಂದು ಗಾಂಗಾವತಿಗೆ ಬಂದಿದ್ದರು ಬಸ್ ನಿಲ್ದಾಣದಲ್ಲಿ ಪತಿಯನ್ನು ಭೇಟೆ ಭೇಟಿ ಮಾಡಿ ಸಂದರ್ಭದಲ್ಲಿ ಜಗಳವಾಗಿತ್ತು. ಇದನ್ನು ಗಮನಿಸಿದ 6 ಮಂದಿಯ ಗ್ಯಾಂಗ್ ಮಧ್ಯಪ್ರವೇಶಿಸಿ ಸಂತ್ರಸ್ತೆಯ ಪತಿಗೆ ಥಳಿಸಿದೆ. ಅಲ್ಲದೆ ಮಹಿಳೆಗೆ ಸಹಾಯ ಮಾಡಿದಂತೆ ವರ್ತಿಸಿದ್ದಾರೆ. ನಂತರ ಸಂತ್ರಸ್ತೆಯ ಗಂಡನನ್ನು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ಐದು ಮಂದಿ ಕರೆದೊಯ್ದಿದ್ದಾರೆ. +ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಿತೀಶ್ +ದುಷ್ಕರ್ಮಿಗಳು ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಸ್ ನಿಲ್ದಾಣದ ಬಳಿಯ ಉದ್ಯಾನವನಕ್ಕೆ ಎಳೆದೊಯ್ದಿದ್ದಾರೆ. ಆರು ಆರೋಪಿಗಳಲ್ಲಿ ಒಬ್ಬನಾದ ಲಿಂಗರಾಜ್ ಮಹಿಳೆಗೆ ಸಹಾಯದ ನೆಪದಲ್ಲಿ ಕೆರದೊಯ್ದು ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಪಾರ್ಕ್‍ನಲ್ಲಿ ಬಿಟ್ಟು ಪರಾರಿಯಾಗಿದ್ದನು. +ಸ್ಥಳೀಯರ ನೆರವಿನಿಂದ ಸಂತ್ರಸ್ತೆ ಗಂಗಾವತಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಗಿದೆ. \ No newline at end of file diff --git a/eesanje/url_46_240_4.txt b/eesanje/url_46_240_4.txt new file mode 100644 index 0000000000000000000000000000000000000000..485ecd9e6bbdd366df8b00b70eb3f411ff6377dd --- /dev/null +++ b/eesanje/url_46_240_4.txt @@ -0,0 +1,7 @@ +ಸ್ಕಿಲ್ ಕೌನ್ಸಿಲ್-ಫಾರ್ ಗ್ರೀನ್ ಜಾಬ್ಸ್ ಆಡಳಿತ ಮಂಡಳಿಯ ಸದಸ್ಯರಾಗಿ ರಮೇಶ್ ಶಿವಣ್ಣ ನೇಮಕ +ಬೆಂಗಳೂರು,ಫೆ.12- ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳ ತಯಾರಕರ ಸಂಘ ಸಂಸ್ಥಾಪಕ ಅಧ್ಯಕ್ಷರಾದ ರಮೇಶ್ ಶಿವಣ್ಣ ಅವರು ಭಾರತ ಸರ್ಕಾರದ ಸ್ಕಿಲ್ ಕೌನ್ಸಿಲ್-ಫಾರ್ ಗ್ರೀನ್ ಜಾಬ್ಸ್ ನ ಆಡಳಿತ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. +ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ರಮೇಶ್ ಅವರ ಪರಿಣತಿ ಮತ್ತು ಸಮರ್ಪಣೆಯನ್ನು ಮನಗಂಡು ಗ್ರೀನ್ ಸ್ಕಿಲ್ಸ್‍ಗಾಗಿ ಜರ್ಮನಿಯ ತಾಂತ್ರಿಕ ಮತ್ತು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ವಿಧಾನಗಳನ್ನು ಅನ್ವೇಷಿಸಲು ಜಿಐಜೆಡ್ ಆಯೋಜಿಸಿರುವ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುವ ಪ್ರತಿನಿ„ಗಳಲ್ಲಿ ಒಬ್ಬರಾಗಿ ಇವರನ್ನು ಆಯ್ಕೆ ಮಾಡಲಾಗಿದೆ. +ಸ್ಕಿಲ್ ಕೌನ್ಸಿಲ್ -ಫಾರ್ ಗ್ರೀನ್ ಜಾಬ್ಸ್ (ಎಸ್‍ಸಿಜಿಜೆ)ಭಾರತ ಸರ್ಕಾರದ ಪ್ರಮುಖ ಉಪಕ್ರಮವಾಗಿದ್ದು, ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಮಿಷನ್‍ನೊಂದಿಗೆ ಸಂಯೋಜಿಸಲ್ಪಟ್ಟಿದೆ. ನವೀಕರಿಸಬಹುದಾದ ಶಕ್ತಿ, ಹಸಿರು ಜಲಜನಕ, ಹಸಿರು ಸಾರಿಗೆ, ಘನತ್ಯಾಜ್ಯ ನಿರ್ವಹಣೆ, ನೀರಿನ ತ್ಯಾಜ್ಯ ನಿರ್ವಹಣೆ ಮತ್ತು ಇ-ತ್ಯಾಜ್ಯ ನಿರ್ವಹಣೆ ಸೇರಿದಂತೆ ಸ್ಥಿತಿ ಸ್ಥಾಪಕ ತಂತ್ರಜ್ಞಾನಗಳಿಗೆ ಕೌಶಲ್ಯ ಶಕ್ತಿಯ ಅಗತ್ಯತೆಗಳನ್ನು ಪರಿಹರಿಸುವ ಗುರಿಯನ್ನು ಇದು ಹೊಂದಿದೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಪ್ರಚಾರ ಮಾಡಲಾಗಿದೆ. ಹಸಿರು ಕೌಶಲ್ಯ ವಲಯದಲ್ಲಿ ಸುಸ್ಥಿರತೆಯ ಪ್ರಯತ್ನಗಳನ್ನು ಮುನ್ನಡೆಸುವಲ್ಲಿ ಎಸ್‍ಸಿಜಿಜೆ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. +ಗವನಿರ್ಂಗ್ ಕೌನ್ಸಿಲ್ ಸದಸ್ಯರಾಗಿ ರಮೇಶ್ ಅವರ ನೇಮಕಾತಿಯು ಕೌನ್ಸಿಲ್‍ನ ಉಪಕ್ರಮಗಳಿಗೆ ಕೊಡುಗೆ ನೀಡಲು ಮತ್ತು ಹಸಿರು ಕೌಶಲ್ಯ ವಲಯದಲ್ಲಿ ಸುಸ್ಥಿರತೆಯ ಪ್ರಯತ್ನಗಳನ್ನು ಮುನ್ನಡೆಸಲು ಅಸಾಧಾರಣ ಅವಕಾಶವನ್ನು ಒದಗಿಸುತ್ತದೆ. ತಮ್ಮ ಅನುಭವದ ಸಂಪತ್ತು ಮತ್ತು ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳ ಆಳವಾದ ತಿಳುವಳಿಕೆಯೊಂದಿಗೆ, . ಶಿವಣ್ಣ ಅವರು ಮಿಷನ್‍ಗೆ ಗಮನಾರ್ಹ ಕೊಡುಗೆಗಳನ್ನು ನೀಡಲು ಉತ್ತಮ ಸ್ಥಾನದಲ್ಲಿದ್ದಾರೆ. +ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ +ಇದರ ಬಗ್ಗೆ ಮಾತನಾಡಿದ ರಮೇಶ್ ಶಿವಣ್ಣ, ಹಸಿರು ಕೌಶಲ್ಯ ವಲಯದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಹೆಚ್ಚಿಸಲು ಈ ಅವಕಾಶವನ್ನು ಬಳಸಿಕೊಳ್ಳುತ್ತೇನೆ ನೇಮಕ ಮಾಡಿದ್ದಕ್ಕೆ ಕೃತಜ್ಞತೆ ಮತ್ತು ಬದ್ಧತೆಯನ್ನು ವ್ಯಕ್ತಪಡಿಸಿದರು. ಮುಂದಿನ ಪೀಳಿಗೆಗೆ ಸುಸ್ಥಿರ ಭವಿಷ್ಯವನ್ನು ನಿರ್ಮಿಸುವಲ್ಲಿ ಸಹಯೋಗ ಮತ್ತು ನಾವೀನ್ಯತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. \ No newline at end of file diff --git a/eesanje/url_46_240_5.txt b/eesanje/url_46_240_5.txt new file mode 100644 index 0000000000000000000000000000000000000000..80df959e98b1a8c1fd1d7eba92bfc8e63774ea1f --- /dev/null +++ b/eesanje/url_46_240_5.txt @@ -0,0 +1,5 @@ +ಹಳ್ಳಿ ಜನರ ಮನೆ ಬಾಗಿಲಿಗೆ ಗ್ರಾಮ ನ್ಯಾಯಾಲಯ +ಬೆಂಗಳೂರು,ಫೆ.12- ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿಂದು ಭಾಷಣ ಮಾಡಿದ ಅವರು, ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು. +ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದರು. +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ಕರ್ನಾಟಕವನ್ನು ಸಮೃದ್ದಿಯ ನಾಡನ್ನಾಗಿ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಶ್ರಮ ಪಡೋಣ, ಸಂವಿಧಾನದ ಆಶಯಗಳನ್ನು ಅಕ್ಷರಸಃ ಅನುಷ್ಠಾನಗೊಳಿಸಿ ಮಾನವ ಹಕ್ಕುಗಳ ರಕ್ಷಣೆಗೆ ನ್ಯಾಯ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_46_240_6.txt b/eesanje/url_46_240_6.txt new file mode 100644 index 0000000000000000000000000000000000000000..4808c89ebb4190c50c493dbd33a25d1454b4fe35 --- /dev/null +++ b/eesanje/url_46_240_6.txt @@ -0,0 +1,6 @@ +ಮಧ್ಯಪ್ರದೇಶದಲ್ಲಿ ಕರ್ನಾಟಕ ರೈತರ ಬಂಧನ : ಸಿಎಂ ಸಿದ್ದರಾಮಯ್ಯ ಆಕ್ರೋಶ +ಬೆಂಗಳೂರು,ಫೆ.12- ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಕೊಳ್ಳಲು ಕಳಿಸಿಕೊಡಬೇಕು ಎಂದು ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಎನ್ನುವುದು ಸ್ಪಷ್ಟ ಎಂದು ಆರೋಪಿಸಿದ್ದಾರೆ. ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಎಚ್ಚರಿಸಿದ್ದಾರೆ. +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಗೊಬ್ಬರ ಕೇಳಿದ್ದ ರೈತರನ್ನು ನಿರ್ಧಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. +ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು. ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_240_7.txt b/eesanje/url_46_240_7.txt new file mode 100644 index 0000000000000000000000000000000000000000..738a0bf654dd23d3325caa6872e3d6c1eb721c8b --- /dev/null +++ b/eesanje/url_46_240_7.txt @@ -0,0 +1,5 @@ +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ಬೆಂಗಳೂರು,ಫೆ.12-ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ. ಕಾಂಗ್ರೆಸ್ ಸರ್ಕಾರದ ಕಳಪೆ ಸಾಧನೆ ಇದರಿಂದ ಬಿಂಬಿತವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. +ಸಂಪ್ರದಾಯದಂತೆ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ರಾಜ್ಯ ಸರ್ಕಾರ ರಚನೆಯಾದ ದಿನದಿಂದ ಗ್ಯಾರಂಟಿ ವಿಷಯವನ್ನೇ ಪ್ರಸ್ತಾಪಿಸುತ್ತಿದ್ದಾರೆ. ರಾಜ್ಯಪಾಲರ ಭಾಷಣದಲ್ಲೂ ಅದೇ ವಿಚಾರ ಪ್ರಸ್ತಾಪವಾಗಿದೆ. ಮೇಕೆದಾಟು ಯೋಜನೆ ನಿಂತಲ್ಲೇ ನಿಂತಿದೆ. ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪವಿಲ್ಲ. ಅಭಿವೃದ್ದಿಗೆ ಪೂರಕ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ್ದಾರೆ ಎಂದು ಆರೋಪಿಸಿದರು. +ತಾಯಿ-ಮಗನಿಗೆ ವಿಷವುಣಿಸಿ ಕೊಂದು ಉದ್ಯಮಿ ಆತ್ಮಹತ್ಯೆ +ಐದು ಗ್ಯಾರಂಟಿಗಳ ಜೊತೆಗೆ ಇನ್ನು 5 ಗ್ಯಾರಂಟಿ ಕೊಡಲಿ ಅಭ್ಯಂತರವಿಲ್ಲ. ಅಭಿನಂದಿಸುತ್ತೇನೆ. ಕಾಂತರಾಜ್ ವರದಿ ಬಗ್ಗೆ ಪ್ರಸ್ತಾಪವಿಲ್ಲ . ಲೋಕಸಭೆ ಚುನಾವಣೆವರೆಗೂ ಈ ವಿಚಾರವನ್ನು ಜೀವಂತವಾಗಿಡಬೇಕು ಎಂಬುದಷ್ಟೇ ಅವರ ಉದ್ದೇಶ. ಮುಖ್ಯಮಂತ್ರಿ 8 ತಿಂಗಳಲ್ಲಿ ಎಷ್ಟು ಜಾತಿ ಧರ್ಮಗಳ ಸಮಾವೇಶ ನಡೆಸಿದ್ದಾರೆ ಎಂಬ ದಾಖಲೆಗಳನ್ನು ತೆಗೆದು ನೋಡೋಣ ಎಂದು ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_240_8.txt b/eesanje/url_46_240_8.txt new file mode 100644 index 0000000000000000000000000000000000000000..549a3254dd1620bfd1552a8d6800875c8c5ef598 --- /dev/null +++ b/eesanje/url_46_240_8.txt @@ -0,0 +1,10 @@ +ನ್ಯಾಯಯುತವಾಗಿ ರಾಜ್ಯಕ್ಕೆ ತೆರಿಗೆ ಪಾಲು ಸಿಗುತ್ತಿಲ್ಲ : ಭಾಷಣದಲ್ಲಿ ರಾಜ್ಯಪಾಲ ಅಸಮಾಧಾನ +ಬೆಂಗಳೂರು,ಫೆ.12- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯ ಮತ್ತು ಧರ್ಮದ ರೀತಿಯಲ್ಲಿ ತೆರಿಗೆ ಪಾಲು ಸಿಗುತ್ತಿಲ್ಲ ಎಂದು ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಲು ಸಿದ್ದವಿದೆ. ಆದರೆ ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. +ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ತೆರಿಗೆ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನಮಗೆ ಸಿಗಬೇಕಾದ ಪಾಲನ್ನು ಪಡೆಯಲು ಎಲ್ಲ ರೀತಿಯ ಪ್ರಯತ್ನಗಳನ್ನು ಮುಂದುವರೆಸಿದ್ದೇವೆ ಎಂದು ವಿವರಿಸಿದ್ದಾರೆ. +ಶೇ.97ರಷ್ಟು ಅನುಷ್ಠಾನ:ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿ ವಿಚಾರದಲ್ಲೂ ಅಪ್ರತಿಮ ಸಾಧನೆ ಮಾಡಲಾಗಿದೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ದಾಖಲಾರ್ಹ ಮಟ್ಟದ ಅಭಿವೃದ್ಧಿಯಾಗಿದೆ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್‍ನ ಶೇ.97ರಷ್ಟು ಘೋಷಣೆಗಳಿಗೆ ಅಸೂಚನೆ ಹೊರಡಿಸಿ ಕಾರ್ಯಗತಗೊಳಿಸಿರುವುದು ದಾಖಲೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ. +ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ +ಬರಕ್ಕೆ 224 ಕೋಟಿ ಬಿಡುಗಡೆ:ರಾಜ್ಯದಲ್ಲಿ 223 ತಾಲ್ಲೂಕುಗಳು ಬರಬಾತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ ಕುಡಿಯುವ ನೀರು, ಮೇವಿನ ಲಭ್ಯತೆ ಮುಂತಾದ ತಕ್ಷಣದ ಬರಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಎನ್‍ಡಿಆರ್‍ಎಫ್‍ನಿಂದ 18,171 ಕೋಟಿ ರೂ.ಗಳ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಬರ ಪರಿಹಾರ ತುರ್ತಾಗಿ ಪಡೆದುಕೊಳ್ಳಲು ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ. +ಬರದಿಂದಾಗಿ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಮೊದಲ ಕಂತಿನಲ್ಲಿ 2000 ರೂ. ಪರಿಹಾರ ಪಾವತಿಸಲು 617 ಕೋಟಿ ರೂ.ಗಳ ಇನ್‍ಪುಟ್ ಸಬ್ಸಿಡಿಯನ್ನು ಬಿಡುಗಡೆ ಮಾಡಲಾಗಿದ್ದು, 32.50 ಲಕ್ಷ ರೈತರ ಖಾತೆಗೆ ಜಮೆ ಮಾಡಲಾಗಿದೆ. ಪರಿಹಾರ ಪಾವತಿಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲಾಗಿದೆ. ಈ ಹಿಂದೆ ಇನ್‍ಪುಟ್ ಸಬ್ಸಿಡಿ ಪಾವತಿಯಲ್ಲಿ ಅವ್ಯವಹಾರ ನಡೆದಿದೆ. ಅನರ್ಹರಿಗೆ ಪರಿಹಾರ ಪಾವತಿಸಿರುವ ಅನೇಕ ಪ್ರಕರಣಗಳು ಗಮನಕ್ಕೆ ಬಂದಿವೆ ಎಂದು ಹೇಳಿದ್ದಾರೆ. +ಪ್ಯಾನ್ ಇಂಡಿಯಾ ‘ಮೈರಾ’ ಚಿತ್ರಕ್ಕೆ ಶ್ರೀನು ಆಕ್ಷನ್ ಕಟ್ +ತೊಗರಿ ಬೆಳೆಗೆ ತಗುಲಿದ್ದ ನೆಟ್ಟೆ ರೋಗದಿಂದ ಬಾತರಾದ 2,74,637 ರೈತರ ಬ್ಯಾಂಕ್ ಖಾತೆಗಳಿಗೆ 219 ಕೋಟಿ ರೂ.ಗಳನ್ನು ನೇರವಾಗಿ ಪಾವತಿಸಲಾಗಿದೆ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಬೆಂಬಲ ಬೆಲೆಯ ಜೊತೆಗೆ ಪ್ರತಿ ಕ್ವಿಂಟಾಲ್‍ಗೆ 1500 ರೂ.ಗಳನ್ನು ನೀಡಲಾಗುತ್ತಿದೆ. ಬಿತ್ತನೆ ವೈಫಲ್ಯದಿಂದ ಬಾತರಾದ 8.10 ಲಕ್ಷ ರೈತರಿಗೆ 591 ಕೋಟಿ ರೂ.ಗಳ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗಿದೆ ಎಂದು ವಿವರಿಸಿದ್ದಾರೆ. +ಬರ ನಿರ್ವಹಣೆಗೆ ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗಳು 394 ಸಭೆಗಳನ್ನು, ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಕಾರ 226 ಸಭೆಗಳನ್ನು ನಡೆಸಿ ಜನರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_240_9.txt b/eesanje/url_46_240_9.txt new file mode 100644 index 0000000000000000000000000000000000000000..1564bea04fa5b431cd168c98855a9a492e52730f --- /dev/null +++ b/eesanje/url_46_240_9.txt @@ -0,0 +1,11 @@ +ರಾಜ್ಯದಲ್ಲಿ 77 ಸಾವಿರ ಕೋಟಿ ಬಂಡವಾಳ ಹೂಡಿಕೆ +ಬೆಂಗಳೂರು,ಫೆ.12- ರಾಜ್ಯದಲ್ಲಿ ನ್ಯಾಯದಾನದ ವ್ಯವಸ್ಥೆಯನ್ನು ಉತ್ತಮಗೊಳಿಸಿ ಗ್ರಾಮೀಣ ಜನರ ಮನೆ ಬಾಗಿಲಿಗೆ ನ್ಯಾಯದಾನ ವ್ಯವಸ್ಥೆ ಕೊಂಡೊಯ್ಯುವ ಉಪಕ್ರಮವಾಗಿ ನೂರು ಹೊಸ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. +ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿಂದು ಭಾಷಣ ಮಾಡಿದ ಅವರು, ರಾಜ್ಯದ ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯ ದೊರಕಿಸುವ ಮಹತ್ವಾಕಾಂಕ್ಷೆಯ ಭಾಗವಾಗಿ ಭಾರತ ಸಂವಿಧಾನದ 39ಎ ಅನುಚ್ಛೇಧದ ಅಡಿಯಲ್ಲಿ ಸಮಾನ ನ್ಯಾಯ ಮತ್ತು ಉಚಿತ ಕಾನೂನು ನೆರವಿಗೆ ಸಂಬಂಧಿಸಿದಂತೆ ರಾಜ್ಯವು ಸಮಾನ ಅವಕಾಶದ ಆಧಾರದ ಮೇಲೆ ನ್ಯಾಯ ಲಭಿಸುವಂತೆ ಮಾಡಲಿದೆ ಎಂದರು. +ಕಾನೂನು ವ್ಯವಸ್ಥೆಯ ನಿರ್ವಹಣೆಯನ್ನು ಸುನಿಶ್ಚಿತಗೊಳಿಸಲು ಬಡವರ, ಗ್ರಾಮೀಣ ಜನರ ಮನೆಬಾಗಿಲಿಗೆ ನ್ಯಾಯದಾನ ತಲುಪಿಸಲು ಗ್ರಾಮ ನ್ಯಾಯಾಲಯಗಳು ಆಧಾರವಾಗಲಿವೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳು ದುರುಪಯೋಗವಾಗದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ. ನಮಗೆ ಸಂವಿಧಾನವೇ ರಾಷ್ಟ್ರೀಯ ಧರ್ಮ. ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂಬ ದೃಢವಾದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದರು. +ಜಂಟಿ ಅಧಿವೇಶನಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಆತ್ಮೀಯ ಸ್ವಾಗತ +ಕರ್ನಾಟಕವನ್ನು ಸಮೃದ್ದಿಯ ನಾಡನ್ನಾಗಿ ಹಾಗೂ ಸರ್ವ ಜನಾಂಗದ ಶಾಂತಿಯ ತೋಟವಾಗಿಸಲು ಶ್ರಮ ಪಡೋಣ, ಸಂವಿಧಾನದ ಆಶಯಗಳನ್ನು ಅಕ್ಷರಸಃ ಅನುಷ್ಠಾನಗೊಳಿಸಿ ಮಾನವ ಹಕ್ಕುಗಳ ರಕ್ಷಣೆಗೆ ನ್ಯಾಯ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು. +77 ಸಾವಿರ ಕೋಟಿ ಬಂಡವಾಳ ಹೂಡಿಕೆ:ಕಳೆದ ಎಂಟು ತಿಂಗಳಿನಿಂದಲೂ ರಾಜ್ಯಕ್ಕೆ 77 ಸಾವಿರ ಕೋಟಿ ರೂ. ಬಂಡವಾಳ ಹರಿದುಬಂದಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೊಳ್ಳುವಿಕೆ ಶಕ್ತಿ ಹೆಚ್ಚಾಗಿ ಆರ್ಥಿಕ ಚಟುವಟಿಕೆ ವೇಗ ಪಡೆದುಕೊಳ್ಳುತ್ತಿದೆ. ತೆರಿಗೆ ಸಂಗ್ರಹ ಹೆಚ್ಚುತ್ತಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‍ಟಿ ಸಂಗ್ರಹಣೆಯ ಬೆಳವಣಿಗೆ ದರ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು. ರಾಜ್ಯಮಟ್ಟದ ಏಕ ಗವಾಕ್ಷಿ ಅನುಮೋದನಾ ಸಮಿತಿಯಲ್ಲಿ 165 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 45,325 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. 42,292 ಜನರಿಗೆ ಉದ್ಯೋಗ ದೊರೆಯಲಿದೆ ಎಂದರು. +ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಭಿವೃದ್ದಿಯ ಹೊಸ ಶಖೆ ಆರಂಭವಾಗಿದೆ. ಇದನ್ನು ಇನ್ನಷ್ಟು ಎತ್ತರಕ್ಕೆ ಕೊಂಡಯ್ಯಲು ನಮ್ಮ ಸರ್ಕಾರ ಬದ್ದವಾಗಿದೆ. ರಾಜ್ಯದ ಆದಾಯ ಸಂಗ್ರಹಣೆ ಸದೃಢವಾಗಿದೆ. ಜಿಎಸ್‍ಟಿ ಸಂಗ್ರಹದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ದೇಶಿಯ ಹಾಗೂ ವಿದೇಶಿ ಬಂಡವಾಳ ಹರಿದುಬರುತ್ತಿದೆ ಎಂದು ವಿವರಿಸಿದರು. +ಕೊಟ್ಟ ಮಾತನ್ನು ಪಾಲಿಸಬೇಕೆಂಬುದು ನಮ್ಮ ಸರ್ಕಾರದ ನಿಲುವಾಗಿದ್ದು, ಭರವಸೆಗಳನ್ನು ಹಾಳು ಮಾಡುವ ವಾತಾವರಣವೇ ಎಲ್ಲೆಡೆ ತುಂಬಿರುವಾಗ ನಮ್ಮ ಸರ್ಕಾರ ಹೊಸ ಸಂಸ್ಕøತಿಗೆ ನಾಂದಿ ಹಾಡಿದೆ. ನುಡಿದಂತೆ ನಡೆದಿದೆ. ಕೊಟ್ಟ ವಚನಗಳನ್ನು ಪಾಲಿಸಿದೆ. ಜನರ ಪ್ರೀತಿ, ವಿಶ್ವಾಸ ಹಾಗೂ ಭರವಸೆಗಳಿಗೆ ಧಕ್ಕೆಯಾಗದಂತೆ ನಡೆದುಕೊಂಡಿದೆ. ಜನರ ಬದುಕಿನಲ್ಲಿ ಹೊಸ ಆಯಾಮ ಸೃಷ್ಟಿಸಿದೆ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದು ಹೇಳಿದರು. +ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್‌ಡಿಕೆ +ರಾಜ್ಯದ ಏಳು ಕೋಟಿ ಜನರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸುವಂತೆ ಮಾಡಿದೆ. ಸಂತಸ, ನೆಮ್ಮದಿಯ, ಸಂತೃಪ್ತಿಯ ಹೊಸ ಮನ್ವಂತರಕ್ಕೆ ಚಾಲನೆ ದೊರೆತಿದೆ. ಆರ್ಥಿಕ ಅಸಮಾನತೆಯನ್ನು ಸರಿದೂಗಿಸಲು ರಾಜ್ಯದ ಅಭಿವೃದ್ದಿ ಪಥವನ್ನು ಸುಸ್ಥಿರವಾಗಿ ಮುನ್ನಡೆಸಲಾಗುತ್ತಿದೆ. ಕರ್ನಾಟಕದ ಮಾದರಿಯನ್ನು ಸಾಮಾಜಿಕ ಸಾಮರಸ್ಯಗಳನ್ನು ಪಾಲಿಸಲಾಗುತ್ತಿದೆ.ಇದನ್ನು ಇನ್ನಷ್ಟು ಸಶಕ್ತಗೊಳಿಸಿ ರಾಜ್ಯವನ್ನು ವಿಶಿಷ್ಟವಾಗಿ ರೂಪಿಸುವುದು ನಮ್ಮ ಗುರಿ ಎಂದರು. \ No newline at end of file diff --git a/eesanje/url_46_241_1.txt b/eesanje/url_46_241_1.txt new file mode 100644 index 0000000000000000000000000000000000000000..6b0c34537b38fa7c0a937c516b8bb3958ebbd501 --- /dev/null +++ b/eesanje/url_46_241_1.txt @@ -0,0 +1,8 @@ +ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್‌ಡಿಕೆ +ಹಾಸನ,ಫೆ.12- ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಹಾಸನ ತಾಲ್ಲೂಕಿನ ಚನ್ನಂಗಿಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನ ದುರಾಡಳಿತವನ್ನು ತೆಗೆಯಬೇಕು ಎಂಬುದೇ ನಮ್ಮ ಉದ್ದೇಶ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು 28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬ ಗುರಿಯೊಂದಿಗೆ ಮುನ್ನಡೆಯುತ್ತಿದ್ದೇವೆ ಎಂದರು. +ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಸರ್ಕಾರದ ಮೇಲೂ ಆರೋಪ ಮಾಡಿದ್ದಾರೆ. ಆದರೆ ಈಗ ಸಾಕ್ಷಿ ಕೊಡಲಿ ಎನ್ನುತ್ತಾರೆ. ಅವರ ಪಕ್ಷದ ಮಾಜಿ ಸಚಿವರು ಡಂಗುರ ಹೊಡೆಯುತ್ತಾರೆ. ಹಿಂದಿನ ಸರ್ಕಾರದದ ವಿರುದ್ಧ ಕೆಂಪಣ್ಣ ಅವರ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಪೇಸಿಎಂ ಎಂದು ಪೋಸ್ಟ್ ಅಂಟಿಸಿರಲಿಲ್ಲವೇ? ಎಂದು ಪ್ರಶ್ನಿಸಿದರು. +ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಪಾಲು ಕೊಡುವ ಪದ್ದತಿ ಪ್ರಾರಂಭವಾಗಿದ್ದು ಯಾವಾಗ ಎಂದು ಪ್ರಶ್ನಿಸಿದ ಅವರು ದೊಡ್ಡ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಾಳಿ ನಡೆಯುತ್ತಿದೆ. 1952ರಲ್ಲಿ ಸಂವಿಧಾನಾತ್ಮಕವಾಗಿ ಸಂಸ್ಥೆಯನ್ನು ಪ್ರಾರಂಭ ಮಾಡಲಾಯಿತು. ಅಲ್ಲಿಂದ ಚರ್ಚೆ ಮಾಡಿದರೆ ದೊಡ್ಡ ಕಥೆಯೇ ಇದೆ. ಈ ಎಲ್ಲ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು. +ಫೆ.16ಕ್ಕೆ ಬಜೆಟ್ ಮಂಡನೆಯಾಗಲಿದೆ. ದಾಖಲೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಹೇಳುತ್ತಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಅಂಕಿ ಅಂಶಗಳನ್ನು ಇಟ್ಟುಕೊಂಡು ಚರ್ಚೆ ಮಾಡಲಾಗುವುದು. +ಎನ್‍ಡಿಆರ್‍ಎಫ್‍ನಿಂದ ಬಿಡುಗಾಸು ಕೊಟ್ಟಿಲ್ಲ ಎಂಬ ಆರೋಪವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇವರ ರಾಜಕೀಯ ನಮಗೆ ಗೊತ್ತಿಲ್ಲವೇ? ಕೆಲವು ಬಾರಿ ವಿಶೇಷ ಅನುದಾನವನ್ನು ಕೊಡಲಾಗಿದೆ ಎಂದು ಹೇಳಿದರು.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರನ್ನು ಮುಗಿಸಲು ಯಾವ ರೀತಿ ರಾಜಕೀಯ ಮಾಡಿದರು ಎಂಬುದು ಗೊತ್ತಿದೆ. ಮಂಡ್ಯ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರ ಪ್ರತಿದಿನ ಧಾರವಾಹಿ ರೀತಿ ಬರುತ್ತಿದೆ. ಹಾಸನ ಜಿಲ್ಲೆಯಲ್ಲೂ ಸಣ್ಣಪುಟ್ಟ ಸಮಸ್ಯೆಗಳಿದ್ದು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ. +ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ +ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು ನರೇಂದ್ರಮೋದಿ ಅವರು 3ನೇ ಬಾರಿ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಯುವಕರಾಗಿದ್ದು, ಬಿರುಸಿನಲ್ಲಿ ಮಾತನಾಡುತ್ತಾರೆ. ಕುಳಿತು ಮಾತುಕತೆ ನಡೆಸಿ ಸರಿಪಡಿಸೋಣ. ಒಂದು ವೇಳೆ ಪ್ರೀತಂ ಗೌಡ ಅವರನ್ನೇ ನಿಲ್ಲಿಸಬೇಕೆಂಬ ಆಸೆ ಇದ್ದರೆ ಆ ಬಗ್ಗೆಯೂ ಚರ್ಚೆ ಮಾಡೋಣ. ನಾವು ಅವರು ಅಣ್ಣತಮ್ಮಂದಿರ ತರ ಹೋಗಬೇಕಲ್ಲವೇ ಎಂದರು. \ No newline at end of file diff --git a/eesanje/url_46_241_10.txt b/eesanje/url_46_241_10.txt new file mode 100644 index 0000000000000000000000000000000000000000..284bf0a3367c330154999fbf56d280b4ca47499f --- /dev/null +++ b/eesanje/url_46_241_10.txt @@ -0,0 +1,6 @@ +ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ : ಆರ್.ಅಶೋಕ್ +ಬೆಂಗಳೂರು,ಫೆ.11- ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ ಎಂದು ರಾಜ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. +ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರದ ಮೇಲೆ ಶೇ.40ರಷ್ಟು ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. +ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು +ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯಈಗ ಮತ್ತೊಮ್ಮೆ ರಂಗೋಲಿ ಕೆಳಗೆ ತೂರಲು ಹೋಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. +ಸಿದ್ದರಾಮಯ್ಯನವರೇ ತಮಗೆ ಕಿಂಚಿತ್ತಾದರೂ ಮಾನ-ಮರ್ಯಾದೆ ಇದ್ದರೆ ತಮ್ಮ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಿ ರಾಜ್ಯದ ಜನತೆಯ ಕ್ಷಮೆ ಕೇಳಿ. ಸ್ವತಃ ರಾಜ್ಯದ ಉಚ್ಛ ನ್ಯಾಯಾಲಯವೇ ತಮ್ಮ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿರುವಾಗ ಸಿಎಂ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯಲು ತಮಗೆ ಅರ್ಹತೆ ಇಲ್ಲ ಎಂದು ಅವರು ಗುಡುಗಿದ್ದಾರೆ. \ No newline at end of file diff --git a/eesanje/url_46_241_11.txt b/eesanje/url_46_241_11.txt new file mode 100644 index 0000000000000000000000000000000000000000..f3212ea8a2edd51e2f88c46393a92a6a62b377fa --- /dev/null +++ b/eesanje/url_46_241_11.txt @@ -0,0 +1,6 @@ +ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್‍ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ +ನವದೆಹಲಿ,ಫೆ.11- ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಆಧ್ಯಾತ್ಮಿಕ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅಭಿಪ್ರಾಯಪಟ್ಟಿದ್ದಾರೆ. ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಕಾಂಗ್ರೆಸ್‍ನಿಂದ ಹೊರಹಾಕಲ್ಪಟ್ಟ ಒಂದು ದಿನದ ನಂತರ ಅವರು ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. +ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡಿದ ಎಕ್ಸ್ ಪೋಸ್ಟ್‍ನಲ್ಲಿ ಆಚಾರ್ಯ ಕೃಷ್ಣಂ ಅವರು ರಾಮ ಮತ್ತು ರಾಷ್ಟ್ರ (ರಾಷ್ಟ್ರ) ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಸಮಜೌತಾ ಇಲ್ಲ ಕಿಯಾ ಜಾ ಸಕತಾ ರಾಹುಲ್ ಗಾಂಧಿ ಎಂದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‍ನಲ್ಲಿ ಲಕ್ನೋದಿಂದ ಸ್ರ್ಪಧಿಸಿ ಸೋತಿದ್ದ ಆಚಾರ್ಯ ಕೃಷ್ಣಂ ಅವರು ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ್ದರು ಮತ್ತು ಕಾರ್ಯಕ್ರಮವನ್ನು ಬಿಟ್ಟುಬಿಡುವ ಕಾಂಗ್ರೆಸ್‍ನ ನಾಯಕತ್ವದ ನಿಲುವನ್ನು ಟೀಕಿಸಿದ್ದರು. +ಇವಿಎಂ ಬಳಸಿದ್ದರೆ ಪಾಕ್ ಚುನಾವಣಾ ಫಲಿತಾಂಶ ವಿಳಂಭವಾಗುತ್ತಿರಲಿಲ್ಲ : ಅಲ್ವಿ +ಅಶಿಸ್ತು ಮತ್ತು ಪಕ್ಷದ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ದೂರುಗಳನ್ನು ಗಮನದಲ್ಲಿಟ್ಟುಕೊಂಡು,ಪ್ರಮೋದ್ ಕೃಷ್ಣಂ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ. +ಅವರು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು ಮತ್ತು ಫೆಬ್ರವರಿ 19 ರಂದು ಉತ್ತರ ಪ್ರದೇಶದ ಸಂಭಾಲ್‍ನಲ್ಲಿ ಕಲ್ಕಿ ಧಾಮದ ಶಂಕುಸ್ಥಾಪನೆ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದರು.ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸದಿರುವುದು ಸೇರಿದಂತೆ ಕಾಂಗ್ರೆಸ್ ನಾಯಕತ್ವದ ಕೆಲವು ನಿರ್ಧಾರಗಳನ್ನು ಅವರು ಟೀಕಿಸುತ್ತಿದ್ದರು. \ No newline at end of file diff --git a/eesanje/url_46_241_12.txt b/eesanje/url_46_241_12.txt new file mode 100644 index 0000000000000000000000000000000000000000..ed9820c925ae580ae84cf307495d7d163cbbba4f --- /dev/null +++ b/eesanje/url_46_241_12.txt @@ -0,0 +1,7 @@ +100 ಎಫ್‍ಐಆರ್ ಹಾಕಿದರೂ ಹೆದರಲ್ಲ : ಈಶ್ವರಪ್ಪ +ಶಿವಮೊಗ್ಗ,ಫೆ.10- ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನೂರು ಎಫ್‍ಐಆರ್ ಹಾಕಿದರೂ ನಾನು ಹೆದರುವುದಿಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೆ ಗುಡುಗಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್ ಅವರಿಗೆ ಮೊದಲು ನೋಟಿಸ್ ಕೊಡಲಿ. ನನ್ನ ಹೇಳಿಕೆ ಇಟ್ಟುಕೊಂಡು ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ. ನಾನು ಎಲ್ಲೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಲ್ಲ. ನನಗೆ ನೋಟಿಸ್ ಬಂದಿದೆ, ನಾನು ಉತ್ತರ ಕೊಡುತ್ತೇನೆ. ಪ್ರಕರಣದಲ್ಲಿ ನನಗೆ ಕ್ಲೀನ್‍ಚಿಟ್ ಸಿಗುವ ವಿಶ್ವಾಸ ಇದೆ ಎಂದರು. +ನನಗೆ ಇನ್ನೂ ನೂರು ನೋಟಿಸ್ ಕೊಡಿ, ನನ್ನ ಅಭ್ಯಂತರ ಇಲ್ಲ. ಡಿ.ಕೆ.ಸುರೇಶ್‍ಗೆ ಯಾಕೆ ನೋಟಿಸ್ ನೀಡಿಲ್ಲ ಎಂದು ಪ್ರಶ್ನಿಸಿರುವ ಅವರು, ನಾನು ಡಿ.ಕೆ.ಸುರೇಶ್‍ರನ್ನು ಗುಂಡುಕ್ಕಿ ಕೊಲ್ಲಿ ಎಂದಿಲ್ಲ. ನಾನು ಹೇಳಿರುವುದು ದೇಶದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಸ್ಪಷ್ಟನೆ ನೀಡಿದರು. +ಈ ದೇಶಕ್ಕಾಗಿ ಬಲಿದಾನ ಆದವರ ಬಗ್ಗೆ ಡಿ.ಕೆ ಸುರೇಶ್ ಅವರಿಗೆ ಗೊತ್ತಿಲ್ಲ. ನನ್ನ ಮಾತನ್ನು ತಿರುಚುವ ಪ್ರಯತ್ನ ಮಾಡಲಾಗುತ್ತಿದೆ. ನನ್ನ ಹೇಳಿಕೆಯನ್ನು ದೇಶದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದವರು ಸ್ವಾಗತ ಮಾಡುತ್ತಾರೆ. ನೋಟೀಸ್‍ಗೆ ಕಾನೂನು ಬದ್ದವಾಗಿ ಏನು ಮಾಡಬೇಕು ಅದನ್ನು ಮಾಡುತ್ತೇನೆ. ಈ ಪ್ರಕರಣದಲ್ಲೂ ನನಗೆ ಕ್ಲೀನ್‍ಚಿಟ್ ಸಿಗುತ್ತದೆ ಎಂದರು. +ಶಾಸಕ ಭರತ್‍ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ದಾಳಿ +ಸಂಸದ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಸರ್ಕಾರ ಸಮರ್ಥಿಸಿಕೊಂಡಿದೆ. ರಾಷ್ಟ್ರದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವಿ ಮಾಡಿದ್ದೇನೆ ಎಂದು ಈಶ್ವರಪ್ಪ ಹೇಳಿದರು. \ No newline at end of file diff --git a/eesanje/url_46_241_2.txt b/eesanje/url_46_241_2.txt new file mode 100644 index 0000000000000000000000000000000000000000..f2e04096946ebc3fcd1f4983aa17aac6385b8eb9 --- /dev/null +++ b/eesanje/url_46_241_2.txt @@ -0,0 +1,5 @@ +ಮನೆಗೆ ಬೆಂಕಿ, ಮೂವರು ಸಹೋದರಿಯರು ಆಹುತಿ +ಬನಿಹಾಲ್/ಜಮ್ಮು, ಫೆ.12: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮನೆಗೆ ಬೆಂಕಿ ಬಿದ್ದು ಮೂವರು ಸಹೋದರಿಯರು ಸಜೀವ ದಹನಗೊಂಡಿದ್ದಾರೆ ಉಖ್ರಾಲ್ ಬ್ಲಾಕ್‍ನಲ್ಲಿರುವ ಧನ್ಮಸ್ತಾ-ತಾಜ್ನಿಹಾಲ್ ಗ್ರಾಮದ ಮೂರು ಅಂತಸ್ತಿನ ಮನೆಯಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತರನ್ನು ಬಿಸ್ಮಾ (18), ಸೈಕಾ (14) ಮತ್ತು ಸಾನಿಯಾ (11) ಎಂದು ಗುರುತ್ತಿಸಲಾಗಿದೆ. ಮನೆಯ ಮೇಲಿನ ಮಹಡಿಯಲ್ಲಿ ಮಲಗಿದ್ದರು ಇವರಿಗೆ ಬೆಂಕಿ ಹೊತ್ತಿಕೊಂಡಿರುವುದು ಗೊತ್ತಾಗಿಲ್ಲ ಎಚ್ಚರಗೊಳ್ಳುವ ವೇಳೆಗಾಗಲೆ ಬೆಂಕಿ ಜ್ವಾಲೆ ಮನೆ ಪೂರ್ಣ ಭಾಗ ಆವರಿಸಿತ್ತು ಅಲ್ಲಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಸಜೀವ ದಹನಗೊಂಡಿದ್ದಾರೆ. +ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ +ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸಿದ್ದಾರೆ ಬಾಲಕೀಯರ ಸುಟ್ಟ ಶವಗಳು ಪತ್ತೆಯಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಗೆ ಬೆಂಕಿ ಬೀಳಲು ಕಾರಣವನ್ನು ಇನ್ನೂ ಕಂಡುಹಿಡಿಯಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_241_3.txt b/eesanje/url_46_241_3.txt new file mode 100644 index 0000000000000000000000000000000000000000..2478a125fd2801d4bb6a3f5cdcbc86b7b8abdcfd --- /dev/null +++ b/eesanje/url_46_241_3.txt @@ -0,0 +1,5 @@ +ನಾನು ಮಂಡ್ಯ ಟಿಕೆಟ್ ಆಕಾಂಕ್ಷಿಯಲ್ಲ : ನಿಖಿಲ್ ಕುಮಾರಸ್ವಾಮಿ +ಬೆಂಗಳೂರು,ಫೆ.11- ಯು ಟರ್ನ್ ಹೊಡೆಯುವ ಗಿರಾಕಿ ನಾನಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ. ಈ ವಿಚಾರವನ್ನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದರು. ಪಕ್ಷದ ಕಾರ್ಯಕರ್ತರ ಬೇಡಿಕೆ ಹಾಗೂ ನಾಯಕರ ಸೂಚನೆಯಂತೆ ಪಕ್ಷ ಸಂಘಟಿಸುವ ಕಾರ್ಯ ಮಾಡುತ್ತಿದ್ದೇನೆ. ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳ ಪ್ರಚಾರದಲ್ಲೂ ಭಾಗವಹಿಸುತ್ತೇನೆ ಹೇಳಿದರು. +ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಕ್ಷೇತ್ರ ಹಂಚಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ವರಿಷ್ಠರು ಚರ್ಚಿಸಿ ನಿರ್ಧಾರ ಮಾಡಲಿದ್ದಾರೆ. ಆಗ ಎಲ್ಲ ಗೊಂದಲಗಳಿಗೂ ತೆರೆ ಬೀಳಲಿದೆ ಎಂದರು. ಹಿಂದುಳಿದ ರಾಜ್ಯಗಳಿಗೆ ಅನುದಾನ ಹಂಚಿಕೆ ಬಗ್ಗೆ ಹಣಕಾಸು ಆಯೋಗ ಮಾಡುವ ಶಿಫಾರಸ್ಸು ಅನ್ವಯ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ. ಆದರೂ ಕಾಂಗ್ರೆಸ್‍ನವರು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಈ ವಿಚಾರನ್ನು ರಾಜಕೀಯವಾಗಿ ಬಳಸಿಕೊಂಡು ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಾಡಿನ ಜನರು ಬಹಳ ಪ್ರಜ್ಞಾವಂತರು, ಬುದ್ದಿವಂತರು ಆಗಿದ್ದಾರೆ ಎಂದು ಹೇಳಿದರು. +26 ವರ್ಷಗಳ ನಂತರ ಚಿನ್ನದ ಸರ ಕದ್ದಿದ್ದ ಆರೋಪಿ ಅರೆಸ್ಟ್..! +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಲ್ಪ ಆರೋಗ್ಯದ ಸಮಸ್ಯೆ ಇದ್ದು ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಮೈಸೂರಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗುತ್ತಿಲ್ಲ. ಈ ವಿಚಾರವನ್ನು ದೂರವಾಣಿ ಮೂಲಕ ಅಮಿತ್ ಷಾ ಅವರಿಗೆ ಕುಮಾರಸ್ವಾಮಿ ತಿಳಿಸಿದ್ದಾರೆ. ನಾಳೆಯಿಂದ ಆರಂಭವಾಗು ವಿಧಾನಸಭೆ ಅಧಿವೇಶನದಲ್ಲಿ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. \ No newline at end of file diff --git a/eesanje/url_46_241_4.txt b/eesanje/url_46_241_4.txt new file mode 100644 index 0000000000000000000000000000000000000000..d45abc60b8bb7c357a63ba34e198fc9de025aa2a --- /dev/null +++ b/eesanje/url_46_241_4.txt @@ -0,0 +1,10 @@ +33 ಲಕ್ಷ ರೈತರಿಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೆಗೌಡ +ಬೆಂಗಳೂರು,ಫೆ.11- ತೊಂದರೆಯಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈತನಕ 33 ಲಕ್ಷ ರೈತರಿಗೆ 628 ಕೋಟಿ ಹಣ ನೀಡಿದ್ದೇವೆ. 66 ಸಾವಿರ ರೈತರಿಗೆ ಹಣ ಸಂದಾಯ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೆಗೌಡ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ರೈತರಿಗೆ ಕೊಡುವ ಬರಪರಿಹಾರದಲ್ಲಿ ದೊಡ್ಡ ಮಟ್ಟದ ಲೂಟಿಯಾಗಿದೆ. ಲೂಟಿ ಮಾಡುತ್ತಿರುವುದು ಕಂಡುಬಂದರೂ ಆಗಿನ ಸರ್ಕಾರ ತಡೆಗಟ್ಟುವ ಕೆಲಸ ಮಾಡಿಲ್ಲ. ತನಿಖಾ ವರದಿ ಬಂದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಹಣ ದುರುಪಯೋಗ ಆಗದಂತೆ ನೇರವಾಗಿ ರೈತರಿಗೆ ತಲುಪಲು ನಾವು ಕ್ರಮ ಕೈಗೊಂಡಿದ್ದೇವೆ. ಆದರೆ ಹಿಂದೆ ಗ್ರಾಮ ಲೆಕ್ಕಿಗರು ಯಾರದ್ದೋ ಜಮೀನಿಗೆ ಇನ್ನಾರಿಗೋ ಪರಿಹಾರ ಕೊಡುವಂತೆ ಮಾಡಿದ್ದಾರೆ. ವ್ಯಾಪಕವಾಗಿ ಬರ ಪರಿಹಾರ ಹಣ ದುರುಪಯೋಗ ಆಗಿದೆ. ಬೆಳೆ ಬೆಳೆಯದವರಿಗೇ ಪರಿಹಾರ ಸಿಕ್ಕಿದೆ. ಬೆಳೆ ಬೆಳದವರಿಗೆ ಪರಿಹಾರ ಸಿಕ್ಕಿಲ್ಲ. ಆದರೆ ನಮ್ಮ ಸರ್ಕಾರದಲ್ಲಿ ನಮಗೆ ಪರಿಹಾರ ಸಿಕ್ಕಿಲ್ಲ ಎಂಬ ಮಾತು ಕೇಳದಂತೆ ನಿಗಾ ವಹಿಸಿದ್ದೇವೆ ಎಂದು ಹೇಳಿದರು. +ನೇರವಾಗಿ ಬೆಳೆ ಸಮೀಕ್ಷೆ ಮಾಹಿತಿ ಪಡೆದು ರೈತರ ಖಾತೆಗೆ ಪರಿಹಾರದ ಹಣ ಜಮೆ ಮಾಡಲಾಗುತ್ತಿದೆ. ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆ ಆಗಿದೆ. 870 ಕೋಟಿ ರೂ.ಗಳನ್ನು ಜಿಲ್ಲಾಕಾರಿ, ತಹಶೀಲ್ದಾರ್‍ಗೆ ಒದಗಿಸಿದ್ದೇವೆ. ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಅಗತ್ಯ ಇವರೆಡೆ ಬಳಸಿಕೊಳ್ಳಲು ಹೇಳಿದ್ದೇವೆ ಎಂದು ಮಾಹಿತಿ ನೀಡಿದರು. +ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೆÇೀರ್ಸ್‍ಗಳನ್ನ ರಚನೆ ಮಾಡಿದ್ದೇವೆ. 431 ಟಾಸ್ಕ್ ಫೆÇೀರ್ಸ್ ಸಭೆಗಳನ್ನು ಶಾಸಕರು ನಡೆಸಿದ್ದಾರೆ. ಜಿಲ್ಲಾಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ಪ್ರಾಕಾರಗಳಿವೆ. ಮುಂಗಾರು ನಂತರ 236 ಸಭೆಗಳನ್ನು ಮಾಡಿದ್ದಾರೆ. 156 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು. ಖಾಸಗಿ ಬೋರ್ ವೆಲ್ ಬಾಡಿಗೆ ಪಡೆದು ನೀರು ಒದಗಿಸಿದ್ದೇವೆ 46 ಗ್ರಾಮಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲಾಗುತ್ತಿದೆ. 202 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ವಿವರಿಸಿದರು. +ತಾಕತ್ತಿದ್ದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ : ಸಿದ್ದರಾಮಯ್ಯ ಸವಾಲು +ನಗರಪ್ರದೇಶದ 46 ವಾರ್ಡ್‍ಗಳಲ್ಲಿ 12 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 7082 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬರಬಹುದೆಂದು ಅಂದಾಜು ಮಾಡಲಾಗಿದೆ. 1193 ವಾರ್ಡ್ ಗಳಲ್ಲೂ ಸಮಸ್ಯೆ ಬರಬಹುದು ಅಂತಾ ಪಟ್ಟಿ ಮಾಡಲಾಗಿದೆ. ಪರಿಹಾರ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಡಲಾಗಿದೆ. ಟ್ಯಾಂಕರ್ ಮೂಲಕ ನೀರು ಒಸಗಿಸಲು ಟೆಂಡರ್ ಕರೆದು ಬಾಡಿಗೆ ಮೂಲಕ ಒದಗಿಸಲು ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದರು. +2654 ಖಾಸಗಿ ಬೋರ್‍ವೆಲ್‍ಗಳನ್ನು ಒಪ್ಪಂದ ಮಾಡಿಕೊಳ್ಳಲು ಗುರುತಿಸಿದ್ದೇವೆ. ಕೆಲವು ರೈತರ ಜೊತೆ ಒಪ್ಪಂಧ ಮಾಡಿಕೊಳ್ಳಲಾಗಿದೆ. ತೀರಾ ಅನಿವಾರ್ಯ ಬಂದರೆ ಆರ್ ಡಿಪಿಆರ್ ಮೂಲಕ ಬೋರ್‍ವೆಲ್‍ಗಳನ್ನು ಕೊರೆಸಲು ಸೂಚನೆ ನೀಡಲಾಗಿದೆ. ಮೂರು ಕಡೆ ಗೋಶಾಲೆ ತೆರೆದಿದ್ದೇವೆ. ಫೆಬ್ರವರಿಯಿಂದ ಮೇವು ಸಮಸ್ಯೆ ಆಗಬಹುದೆಂದು ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಏಳು ಲಕ್ಷ ಮೇವಿನ ಬಿತ್ತನೆ ಬೀಜ ಕಿಟ್ ಕೊಟ್ಟಿದ್ದೇವೆ. ಏಪ್ರಿಲ್‍ವರೆಗೆ ಮೇವಿನ ಕೊರತೆ ನೀಗಿಸಲು ಎರಡು ಲಕ್ಷ ಮೇವಿನ ಕಿಟ್ ಕೊಡುತ್ತೇವೆ. ಮೇವು ಖರೀದಿಸಲು, ಶೇಖರಿಸಲು ಟಾಸ್ಕ್ ಫೆÇೀರ್ಸ್‍ಗೆ ಸಂಪೂರ್ಣ ಅಕಾರ ನೀಡಲಾಗಿದೆ ಎಂದರು. +ಸೆ.23ರಂದು ರಾಜ್ಯದ ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆವು. 18172 ಸಾವಿರ ಕೋಟಿ ರೂ. ಎನ್‍ಡಿಆರ್‍ಎಫ್‍ನಡಿ ಪರಿಹಾರ ಕೋರಿದ್ದು, ಅದರಲ್ಲಿ 4663 ಕೋಟಿ ರೂ. ರೈತರಿಗೆ ಕೊಡಬೇಕಾಗುತ್ತದೆ. ನಾಲ್ಕೂವರೆ ತಿಂಗಳು ಕಳೆದರೂ ಕೇಂದ್ರ ಸರ್ಕಾರ ಸಭೆ ನಡೆಸಿ ಪರಿಹಾರ ನೀಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಆರೋಪಿಸಿದರು. +ಎನ್ ಡಿಆರ್ ಎಫ್ ನಡಿ ಒಂದು ಪೈಸೆಯೂ ಬಂದಿಲ್ಲ. ಕೇಂದ್ರ ಗೃಹ ಸಚಿವರ ಹೈ ಲೆವೆಲ್ ಕಮಿಟಿ ಅಧ್ಯಕ್ಷರು ಎನ್‍ಡಿಆರ್ ಎಫ್ ಕೂಡ ಗೃಹ ಇಲಾಖೆಯಡಿ ಬರುತ್ತದೆ. ದೆಹಲಿಗೆ ಹೋಗೋವ ಮೊದಲು ಅವರು ಪರಿಹಾರ ಘೋಷಣೆ ಮಾಡಬೇಕು ಎಂದು ರಾಜ್ಯದ ಜನರ ಪರ ಕೇಳಿಕೊಳ್ಳುತ್ತೇವೆ ಎಂದರು. \ No newline at end of file diff --git a/eesanje/url_46_241_5.txt b/eesanje/url_46_241_5.txt new file mode 100644 index 0000000000000000000000000000000000000000..55d193837d4ae44c722a9049208177791658f468 --- /dev/null +++ b/eesanje/url_46_241_5.txt @@ -0,0 +1,6 @@ +ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರೇ ಹುಷಾರ್ ..! +ಬೆಂಗಳೂರು,ಫೆ.11- ಕೆಲವು ರಸ್ತೆ, ಸಿಗ್ನಲ್‍ಗಳಲ್ಲಿ ಸಂಚಾರಿ ಪೊಲೀಸರಿಲ್ಲ ಎಂದು ನಿಯಮ ಪಾಲಿಸದೆ ವಾಹನ ಚಾಲನೆ ಮಾಡುವ ಸವಾರರು/ಚಾಲಕರೇ ಹುಶಾರ್…!! ನೀವು ಜವಾಬ್ದಾರಿಯುತವಾಗಿ ವಾಹನ ಚಾಲನೆ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಪೊಲೀಸರು ಬರುತ್ತಾರೆ. ಈಗಾಗಲೇ ನಗರದಲ್ಲಿ ಅಲರ್ಟ್ ಆಗಿರುವ ಸಂಚಾರಿ ಪೊಲೀಸರು ಅಪಘಾತಗಳನ್ನು ಹಾಗೂ ಸಂಚಾರ ದಟ್ಟಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. +ವಾಹನ ಸವಾರರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದು, ಸಂಚಾರಕ್ಕೆ ಅಡಚಣೆ ಉಂಟುಮಾಡುವುದು, ಜೀಬ್ರಾ ಕ್ರಾಸಿಂಗ್‍ನಲ್ಲಿ ವಾಹನ ನಿಲ್ಲಿಸುವುದು, ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸುವುದು, ಹೆಲ್ಮೆಟ್ ಧರಿಸದಿರುವುದು, ವೇಗ ಹಾಗೂ ಅಜಾಗರೂಕತೆ ಚಾಲನೆಗೆ ನಿಮಗೆ ಖಂಡಿತವಾಗಿಯೂ ದಂಡ ಬೀಳುತ್ತದೆ. ಈಗಾಗಲೇ ಎಲ್ಲಾ ವೃತ್ತಗಳಲ್ಲೂ ಅತ್ಯಾಧುನಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನ ಸವಾರರು ಉಲ್ಲಂಘಿಸುವ ನಿಯಮಗಳನ್ನು ಚಿತ್ರಸಮೇತ ದಂಡವನ್ನು ವಿಧಿಸಿ ನೋಟಿಸ್‍ಗಳನ್ನು ವಾಹನ ಮಾಲಿಕರಿಗೆ ಕಳುಹಿಸಲಾಗುತ್ತಿದೆ. +ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ತೀರ್ಮಾನ : ಅನಗತ್ಯ ಗೊಂದಲಕ್ಕೆ ಕಡಿವಾಣ +ಈ ಸಂಬಂಧ ಈಗ ಅತೀ ಹೆಚ್ಚು ದಂಡ ಉಳಿಸಿಕೊಂಡಿರುವ ಪ್ರಕರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಪ್ರಸ್ತುತ 50 ಸಾವಿರ ಮೇಲ್ಪಟ್ಟು 3 ಲಕ್ಷದವರೆಗೆ ದಂಡ ಉಳಿಸಿಕೊಂಡಿರುವ 2,621 ವಾಹನ ಮಾಲಿಕರನ್ನು ಗುರುತಿಸಲಾಗಿದ್ದು, ಅವರಿಗೆ ದಂಡ ಕಟ್ಟಲು ತಿಳಿಹೇಳಿ ನೋಟಿಸ್ ಜಾರಿ ಮಾಡಲು ಅವರುಗಳ ಮನೆಗೆ ಸಂಚಾರಿ ಪೊಲೀಸರು ಭೇಟಿ ನೀಡುತ್ತಿದ್ದಾರೆ. +3 ಲಕ್ಷ ರೂ. ದಂಡವಿರುವ ಸ್ಕೂಟಿಪೆಪ್ ವಾಹನವನ್ನು ಪತ್ತೆ ಹಚ್ಚಿರುವ ಆರ್‍ಟಿ ನಗರ ಸಂಚಾರಿ ಠಾಣೆ ಪೊಲೀಸರು, ಮಾಲಿಕರು ದಂಡ ಕಟ್ಟದೇ ಇರುವುದರಿಂದ ವಾಹನವನ್ನು ಜಪ್ತಿ ಮಾಡಿ ಅವರಿಗೆ ನೋಟಿಸ್ ನೀಡಿದ್ದಾರೆ. ಬಹುತೇಕ ದಂಡ ಪ್ರಕರಣಗಳಲ್ಲಿ ವಾಹನ ಸವಾರರು ಅಸಡ್ಡೆಯಿಂದ ರಸ್ತೆಯಲ್ಲಿ ಸಂಚರಿಸುತ್ತಿರುವುದು ತಿಳಿದುಬರುತ್ತಿದೆ. ಸಿಗ್ನಲ್ ಜಂಪ್ ಮತ್ತು ವೀಲಿಂಗ್‍ನಂತಹ ಪ್ರಕರಣಗಳನ್ನು ನಗರ ಸಂಚಾರಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ಸಂಚಾರ ಉಲ್ಲಂಘನೆಗಳು ಕ್ಯಾಮರಾಗಳಲ್ಲಿ ಸೆರೆಯಾಗುತ್ತಿವೆ ಹುಶಾರ್. \ No newline at end of file diff --git a/eesanje/url_46_241_6.txt b/eesanje/url_46_241_6.txt new file mode 100644 index 0000000000000000000000000000000000000000..01594b78a0e490694105c630206a3c9074becc3f --- /dev/null +++ b/eesanje/url_46_241_6.txt @@ -0,0 +1,6 @@ +26 ವರ್ಷಗಳ ನಂತರ ಚಿನ್ನದ ಸರ ಕದ್ದಿದ್ದ ಆರೋಪಿ ಅರೆಸ್ಟ್..! +ಬೆಂಗಳೂರು,ಫೆ.11- ಮಹಿಳೆಯೊಬ್ಬರ ಚಿನ್ನದ ಸರ ಕದ್ದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದರೋಡೆಕೋರನೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುಲಾಬ್‍ಖಾನ್ ಅಲಿಯಾಸ್ ಗುಲ್ಲು(48) ಬಂಧಿತ ಆರೋಪಿ. ಕಳೆದ 1998 ಜನವರಿ 20 ರಂದು ಗುಲಾಬ್‍ಖಾನ್ ತನ್ನ 22 ನೇ ವಯಸ್ಸಿನಲ್ಲೇ ಜಯನಗರ 5 ನೇ ಬ್ಲಾಕ್‍ನಲ್ಲಿ ವಸಂತ ಎಂಬುವವರ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ. +ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿತ್ತು. ಆರೋಪಿಗಾಗಿ ಶೋಧ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಇತ್ತೀಚೆಗೆ ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಹಳೆಯ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವವರ ಆರೋಪಿಗಳ ಪತ್ತೆಗೆ ಸೂಚನೆ ನೀಡಿದ್ದರು. ಅದರಂತೆ ಜಯನಗರ ಪೊಲೀಸರು ಕೇಸ್ ಫೈಲ್ ತೆಗೆದು ನೋಡಿದಾಗ ದರೋಡೆ ಪ್ರಕರಣದಲ್ಲಿ ಆರೋಪಿಯೊಬ್ಬ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. +ಯುಎಇಯಲ್ಲಿ 33 ಕೋಟಿ ಲಾಟರಿ ಹಣ ಗೆದ್ದ ಭಾರತೀಯ +ತನಿಖೆ ಕೈಗೊಂಡ ಇನ್ಸ್‍ಪೆಕ್ಟರ್ ಮತ್ತು ಅವರ ಸಿಬ್ಬಂದಿ ಗುಲಾಬ್‍ಖಾನ್ ವಾಸವಾಗಿದ್ದ ಮನೆಯನ್ನು ಪತ್ತೆ ಹಚ್ಚಿ ಅವರ ಸಂಬಂಧಿಕರು ಹಾಗೂ ಸ್ನೇಹಿತರನ್ನು ವಿಚಾರಿಸಿದಾಗ ಆತ ಕನಕಪುರದಲ್ಲಿ ವಾಸ ಮಾಡುತ್ತಿರುವುದು ಗೊತ್ತಾಗಿತ್ತು. ಅಲ್ಲಿಗೆ ತೆರಳಿ ಪರಿಶೀಲಿಸಿದಾಗ ಆತ ಕನಕಪುರ ನಗರಸಭೆಯಲ್ಲಿ ಗುತ್ತಿಗೆ ಆಧಾರದ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿರುವುದು ತಿಳಿದುಬಂದಿತ್ತು. +ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿ ಆತ ನಗರಸಭೆಯ ಕೆಲಸದ ಜೊತೆಗೆ ರಾಮನಗರದಲ್ಲಿ ವೆಲ್ಡಿಂಗ್ ಕೆಲಸವನ್ನೂ ಕೂಡ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ. ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_241_7.txt b/eesanje/url_46_241_7.txt new file mode 100644 index 0000000000000000000000000000000000000000..c5a769b92f941815b15993087d20067e2dc3836d --- /dev/null +++ b/eesanje/url_46_241_7.txt @@ -0,0 +1,7 @@ +ಜಂಟಿ ಅಧಿವೇಶನಕ್ಕೆ ಶಕ್ತಿ ಸೌಧ ಸಜ್ಜು +ಬೆಂಗಳೂರು,ಫೆ.11- ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ನಾಳೆಯಿಂದ ಹತ್ತು ದಿನಗಳ ಕಾಲ ನಡೆಯಲಿದೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. +ಅಧಿವೇಶನಕ್ಕೂ ಮುನ್ನ ರಾಜ್ಯಪಾಲ ರನ್ನು ವಿಧಾನಸಭೆಯ ಸಭಾಧ್ಯಕ್ಷರು, ವಿಧಾನಪರಿಷತ್‍ನ ಸಭಾಪತಿ, ಮುಖ್ಯಮಂತ್ರಿ, ಕಾನೂನು ಸಚಿವರು ಸೇರಿದಂತೆ ಉಭಯ ಸದನಗಳ ಕಾರ್ಯದರ್ಶಿಗಳು ಸ್ವಾಗತಿಸಲಿದ್ದಾರೆ. ಮಂಗಳವಾದ್ಯದೊಂದಿಗೆ ವಿಧಾನಸಭೆ ಸಭಾಂಗಣಕ್ಕೆ ಗೌರವ ಪೂರ್ವಕವಾಗಿ ರಾಜ್ಯಪಾಲರನ್ನು ಬರಮಾಡಿಕೊಳ್ಳ ಲಾಗುತ್ತದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರನ್ನು ಬೀಳ್ಕೊಟ್ಟ ಬಳಿಕ ವಿಧಾನಸಭೆ ಕಾರ್ಯದರ್ಶಿಯವರು ವರದಿ ಮಂಡನೆ ಮಾಡಲಿದ್ದಾರೆ. ನಂತರ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಕಲಾಪ ನಡೆಯಲಿದೆ. +ಐದನೂರು ವರ್ಷಗಳ ಗುಲಾಮಗಿರಿ ಮುರಿದ ರಾಮ ಮಂದಿರ : ಆದಿತ್ಯನಾಥ್ +ಇತ್ತೀಚೆಗೆ ನಿಧನರಾದ ವಿಧಾನಸಭೆಯ ಸದಸ್ಯರಾಗಿದ್ದ ನಾಗನೂರ ಕಂದಕೂರ ಮತ್ತು ಹಿರಿಯ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ.ಮಂಗಳವಾರದಿಂದ ಸರ್ಕಾರಿ ಕಾರ್ಯಕಲಾಪಗಳು ನಡೆಯಲಿದ್ದು, ಅಂದಿನಿಂದ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷಗಳ ನಡುವೆ ಮಾತಿನ ಸಮರ ನಡೆಯಲಿದೆ. +ಬರ ಪರಿಹಾರ, ಜಾನುವಾರುಗಳ ಮೇವು, ಕುಡಿಯುವ ನೀರು, ವಿದ್ಯುತ್ ಅಭಾವ, ಗುಳೇ ಹೋಗದಂತೆ ಜನರಿಗೆ ಉದ್ಯೋಗ, ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ತಾರತಮ್ಯ ಆರೋಪ, ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮ ಪ್ರತಿಷ್ಠಾಪನೆ ಸೇರಿದಂತೆ ಹತ್ತು ಹಲವು ವಿಚಾರಗಳು ಉಭಯ ಸದನಗಳಲ್ಲಿ ಪ್ರಸ್ತಾಪಗೊಂಡು ವಾಗ್ವಾದಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಗಳಿವೆ. +ಬಜೆಟ್ ಅವೇಶನ ಕೂಡ ಆಗಿರುವುದರಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ನ್ಯೂನತೆಗಳ ಕುರಿತು ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. 10 ದಿನಗಳ ಕಾಲ ನಡೆಯಲಿರುವ ಅವೇಶನದಲ್ಲಿ ಗುತ್ತಿಗೆದಾರರ ಸಂಘದ ಪರ್ಸಂಟೇಜ್ ಆರೋಪ, ಸರ್ಕಾರಿ ನೌಕರರ ವರ್ಗಾವಣೆ ಸೇರಿದಂತೆ ಹತ್ತು ಹಲವು ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆ ಹೆಚ್ಚಾಗಿದೆ. \ No newline at end of file diff --git a/eesanje/url_46_241_8.txt b/eesanje/url_46_241_8.txt new file mode 100644 index 0000000000000000000000000000000000000000..7f1f6284960ff464a9f036a3960f72d5c02e73ae --- /dev/null +++ b/eesanje/url_46_241_8.txt @@ -0,0 +1,11 @@ +ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್ ತೀರ್ಮಾನ : ಅನಗತ್ಯ ಗೊಂದಲಕ್ಕೆ ಕಡಿವಾಣ +ಬೆಂಗಳೂರು,ಫೆ.11- ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಸಭೆಯಲ್ಲಿ ಯಾವ ಸಂದರ್ಭದಲ್ಲಿ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಗೆ ಹೆಚ್ಚು ಒತ್ತು ಕೊಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ. +ಹಾಲಿ ಸಂಸದರು ಸೇರಿದಂತೆ ಆಕಾಂಕ್ಷಿಗಳು ಕೂಡ ನಾನೇ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಹೇಳಿಕೊಂಡು ಪ್ರಚಾರ ನಡೆಸುವ ಅಗತ್ಯವಿಲ್ಲ. ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ನಾವು ಆಂತರಿಕ ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ರಾಜ್ಯಘಟಕ ಶಿಫಾರಸ್ಸು ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತೇವೆ. ಇದರ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. +ರಾಮ ಮತ್ತು ರಾಷ್ಟ್ರದ ವಿಚಾರದಲ್ಲಿ ರಾಜಿ ಇಲ್ಲ : ರಾಹುಲ್‍ಗೆ ಕಿಚಾಯಿಸಿದ ಪ್ರಮೋದ್ ಕೃಷ್ಣಂ +ಕರ್ನಾಟಕದ 28 ಸೇರಿದಂತೆ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆಯನ್ನು ಕೇಂದ್ರ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ನಂತರ ಚುನಾವಣಾ ಸಮಿತಿ ಪರಿಶೀಲಿಸಿದ ಬಳಿಕ ಅಂತಿಮಗೊಳ್ಳುತ್ತದೆ. ಯಾರೂ ಕೂಡ ಅಧಿಕೃತ ಘೋಷಣೆಗೂ ಮುನ್ನವೇ ನಾನೇ ಅಭ್ಯರ್ಥಿ ಎಂದು ಹೇಳಬಾರದು. ಒಂದು ವೇಳೆ ಯಾರಾದರೂ ಆ ರೀತಿ ಹೇಳಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸಬೇಕಾಗುತ್ತದೆ. ವರೀಷ್ಠರ ಸೂಚನೆಯಿಲ್ಲದೆ ಅಭ್ಯರ್ಥಿಗಳು ನಾನೇ ಎಂದು ನೀವೇ ಹೇಗೆ ಹೇಳುತ್ತೀರಿ ಎಂದು ಅಮಿತ್ ಶಾ ಸಭೆಯಲ್ಲಿ ಪ್ರಶ್ನೆ ಮಾಡಿದ್ದಾರೆ. +ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದ್ದಾರೆ. +ಜೆಡಿಎಸ್ ಬಗ್ಗೆ ಚಿಂತೆ ಬೇಡ :ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಗ್ಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳಬೇಡಿ. ಅವರಿಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದರ ಬಗ್ಗೆ ಖುದ್ದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ನಾನು ಮಾಜಿ ಪ್ರಧಾನಿಗಳಾದ ಎಚ್.ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚಿಸಿ ಅಂತಿಮಗೊಳಿಸುತ್ತೇವೆ. ಅದರ ಬಗ್ಗೆ ಹೆಚ್ಚಿನ ಗಮನ ನೀಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಸೋಲಿಸಬೇಕಾದರೆ ಕೆಲವು ಕಡೆ ಜೆಡಿಎಸ್ ಸಹಾಯ ಅಗತ್ಯವಿದೆ. ವಿಶೇಷವಾಗಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಒಂದಾದರೆ ಕಾಂಗ್ರೆಸ್ ಗೆಲುವು ಅಷ್ಟು ಸುಲಭವಲ್ಲ. ಅನಗತ್ಯವಾಗಿ ಆ ಪಕ್ಷದ ಬಗ್ಗೆ ಗೊಂದಲ ಸೃಷ್ಟಿಸುವ ಹೇಳಿಕೆಗಳನ್ನು ಕೊಡಬಾರದು ಎಂದು ತಾಕೀತು ಮಾಡಿದ್ದಾರೆ. +ಒಂದೇ ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ +ಈಗಾಗಲೇ ಹಲವು ಬಾರಿ ಔಪಚಾರಿಕವಾಗಿ ನಡೆಸಿರುವ ಮಾತುಕತೆಯಲ್ಲಿ ಜೆಡಿಎಸ್‍ಗೆ ಎಷ್ಟು ಸ್ಥಾನ ನೀಡಬೇಕೆಂಬುದರ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಸಿಕ್ಕಿದೆ. ಶೀಘ್ರದಲ್ಲಿ ನಾನೇ ಕುಮಾರಸ್ವಾಮಿಯವರ ಜೊತೆ ಚರ್ಚಿಸಿ ಅಂತಿಮ ಮಾಡುತ್ತೇವೆ. ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷದ ಹಿತದೃಷ್ಟಿಯಿಂದ ಇದನ್ನು ಸಹಿಸಿಕೊಳ್ಳಬೇಕೆಂದು ಅಮಿತ್ ಶಾ ಹೇಳಿದ್ದಾರೆ. +ಇನ್ನು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಸಿದಂತೆ ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್‍ಗೆ ಟಿಕೆಟ್ ನೀಡಬೇಕೇ ಇಲ್ಲವೇ ಆ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕೇ ಎಂಬುದನ್ನು ನಮಗೇ ಬಿಟ್ಟುಬಿಡಿ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ಮಾಡುತ್ತೇವೆ. ಮೈತ್ರಿ ಕುರಿತಂತೆ ಯಾರೊಬ್ಬರೂ ಅಪಸ್ವರ ತೆಗೆಯಬಾರದೆಂದು ತಾಕೀತು ಮಾಡಿದ್ದಾರೆ. \ No newline at end of file diff --git a/eesanje/url_46_241_9.txt b/eesanje/url_46_241_9.txt new file mode 100644 index 0000000000000000000000000000000000000000..14c9058c05b39fef673eb93e2d7b5a315ac56c1d --- /dev/null +++ b/eesanje/url_46_241_9.txt @@ -0,0 +1,6 @@ +ಒಂದೇ ಶಾಲೆಯಲ್ಲಿ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ +ರಾಯಚೂರು,ಫೆ.11- ರಾಯಚೂರಿನ ಲಿಂಗಸಗೂರು ತಾಲೂಕಿನ ನೀರಲಕೇರಿ ಸರ್ಕಾರಿ ಶಾಲೆಯೊಂದರಲ್ಲೇ 150 ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಕಾಯಿಲೆ ಕಾಣಿಸಿಕೊಂಡಿದೆ. ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ನರಳಾಡುತ್ತಿದ್ದಾರೆ. +ಲಿಂಗಸೂಗೂರು ತಾ. ಆನೆಹೊಸರು, ಲಿಂಗಸೂಗೂರು ಆಸ್ಪತ್ರೆಗೆ ಮಕ್ಕಳನ್ನು ದಾಖಲು ಮಾಡಲಾಗಿದೆ. ಈ ಹಿನ್ನೆಲೆ ನಿತ್ಯ ಶಾಲೆಗೆ ಗೈರು ಹಾಜರಿ ಆಗುತ್ತಿರುವ ವಿದ್ಯಾರ್ಥಿಗಳು ಕಲಿಕೆಯಿಂದ ಹಿಂದುಳಿಯುತ್ತಿದ್ದಾರೆ. ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗಿದೆ. +ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು +ನೀರಲಕೇರಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ ಆರೋಗ್ಯ ಇಲಾಖೆ ಪರೀಕ್ಷೆ ನಡೆಸುತ್ತಿದೆ. ಲಿಂಗಸೂಗೂರು ತಾಲೂಕಿನ ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿದೆ. ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಈ ಕಾಯಿಲೆ ಬರುತ್ತದೆ. ಒಬ್ಬರಿಂದ ಒಬ್ಬರಿಗೆ ಹರಡಿ,ಇಡೀ ಶಾಲೆಯನ್ನೆ ಆವರಿಸಿದೆ ಈ ಕಾಯಿಲೆ ಎಂದು ರಾಯಚೂರು ಡಿಎಚ್‍ಒ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ. +ಮಂಗನ ಬಾವು ರೋಗವೂ ವಾರದಲ್ಲಿ ಸಹಜವಾಗಿ ಕಡಿಮೆ ಆಗುತ್ತದೆ. ಇಡೀ ಜಿಲ್ಲೆಯಾದ್ಯಂತ ಮಕ್ಕಳಿಗೆ ಎಂಎಂಆರ್ ವ್ಯಾಕ್ಸಿನೇಷನ್ ಆಗಿದೆ. ಮಂಗನ ಬಾವು ಬಂದ ಮಕ್ಕಳು ಎರಡು- ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕು. ಮಕ್ಕಳಲ್ಲಿ ಜ್ವರ ಬಂದಾಗ ಫ್ಯಾರಾಸೀಟಮ್ ಮಾತ್ರೆ ನೀಡಿದರೆ ಸಾಕು. ಮಂಗನ ಬಾವು ಅಪಾಯಕಾರಿ ಕಾಯಿಲೆ ಅಲ್ಲ ಎಂದು ಪೋಷಕರಿಗೆ ಧೈರ್ಯ ತುಂಬಿದ್ದರೆ. \ No newline at end of file diff --git a/eesanje/url_46_242_1.txt b/eesanje/url_46_242_1.txt new file mode 100644 index 0000000000000000000000000000000000000000..905160c97fe53049497d91a785dc942b08227572 --- /dev/null +++ b/eesanje/url_46_242_1.txt @@ -0,0 +1,8 @@ +ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ +ಬೆಂಗಳೂರು,ಫೆ.10- ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿವರೆಗಿನ ಪಠ್ಯದಲ್ಲಿ ಸಂಚಾರ ನಿಯಮಗಳ ಕುರಿತ ಜಾಗೃತಿ ವಿಷಯ ಅಳವಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. ಸಂಚಾರ ಸಂಪರ್ಕ ದಿವಸ್ ಅಂಗವಾಗಿ ಪೀಣ್ಯ ಇಂಡಸ್ಟ್ರೀಯಲ್ ಅಸೋಸಿಯೇಷನ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲಾಮಕ್ಕಳಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ 1ರಿಂದ 10ನೇ ತರಗತಿಗಳ ಮಕ್ಕಳಿಗೆ ಸಂಚಾರಿ ನಿಯಮಗಳ ಬಗ್ಗೆ ವಿಶೇಷ ಪಠ್ಯಕ್ರಮ ರಚಿಸಿದ್ದು, ಅದನ್ನು ಅಳವಡಿಸಿಕೊಳ್ಳುವುದಾಗಿ ಡಿಎಸ್‍ಇಆರ್‍ಟಿ ಹೇಳಿದೆ ಎಂದರು. +ಕಳೆದ 30 ವರ್ಷಗಳಿಂದ ಸ್ಟೂಡೆಂಟ್ ಅಸೋಸಿಯೇಷನ್ ರೋಡ್ ಸೇಫ್ಟಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತಿ ವಾರ ಶಾಲೆಗಳಿಗೆ ಭೇಟಿ ನೀಡಿ 4ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ಗಂಟೆ ಕಾಲ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ಟ್ರಾಫಿಕ್ ಪಾರ್ಕ್ ನಲ್ಲಿ ದಿನಕ್ಕೆ ಒಂದು ಶಾಲೆಯ 60 ಮಕ್ಕಳನ್ನು ಕರೆತಂದು ಮೂರು ಗಂಟೆಗೂ ಹೆಚ್ಚು ಕಾಲ ಸಂಚಾರಿ ನಿಯಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು. +ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಸಂಚಾರ ದಟ್ಟಣೆ, ವೀಲ್ಹಿಂಗ್ ಹಾವಳಿ, ಪಾದಚಾರಿ ಮಾರ್ಗ ಒತ್ತುವರಿ, ಸರಕುಸಾಗಣೆ ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಆಯುಕ್ತರ ಬಳಿ ಹಂಚಿಕೊಂಡರು. ಪ್ರಶ್ನೆಗೆ ಉತ್ತರಿಸಿದ ಜಂಟಿ ಆಯುಕ್ತರು, ನಗರ ವ್ಯಾಪ್ತಿಯ ಸುಮಾರು 1484 ಕಿ.ಮೀ ಔಟರ್ ರಿಂಗ್ ರೋಡ್ ವ್ಯಾಪ್ತಿಯಲ್ಲಿ ಪಾದಚಾರಿ ಒತ್ತುವರಿ ತೆರವು ಕಾರ್ಯವನ್ನು ಬಿಬಿಎಂಪಿ ನಡೆಸುತ್ತಿದ್ದು, ಇದಕ್ಕೆ ನಾವು ಸಹಕರಿಸುತ್ತಿದ್ದೇವೆ. ಹಂತ ಹಂತವಾಗಿ ನಗರದ ಎಲ್ಲ ಪಾದಚಾರಿ ಮಾರ್ಗವನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು. +ಅಮಿತ್ ಶಾ ಆಗಮನದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಚಲನ +ಇತ್ತೀಚೆಗೆ ಪಶ್ಚಿಮ ಸಂಚಾರ ವಿಭಾಗದ ವ್ಯಾಪ್ತಿಯಲ್ಲಿ ವಿಲ್ಹೀಂಗ್ ಮಾಡುತ್ತಿದ್ದ 16 ಜನರ ಗ್ಯಾಂಗ್‍ನ್ನು ಪತ್ತೆಹಚ್ಚಿದ್ದು, ಅವರೆಲ್ಲರೂ ಅಪ್ರಾಪ್ತರಾಗಿದ್ದಾರೆ. ಅವರ ಪೋಷಕರ ಬಳಿ 5 ಲಕ್ಷವರೆಗಿನ ಬಾಂಡ್ ಓವರ್ ಮಾಡಿಸಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇದೇ ರೀತಿ ನಿಯಮ ಉಲ್ಲಂಘನೆಯಲ್ಲಿ ತೊಡಗಿಕೊಂಡರೆ ಅದನ್ನು ಜಪ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಬೈಕ್‍ಗಳಿಗೆ ಆಲ್ಟ್ರೇಷನ್ ಮಾಡುತ್ತಿದ್ದ ಗ್ಯಾರೇಜ್ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ ಎಂದು ಅವರು ಮಾಹಿತಿ ನೀಡಿದರು. +ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮಾತನಾಡಿ, ವೀಲ್ಹಿಂಗ್ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚಿನವರು ಅಪ್ರಾಪ್ತರಾಗಿರುವುದರಿಂದ ಅವರ ಪೋಷಕರಿಗೆ ದಂಡ ವಿಸಲಾಗುತ್ತಿದ್ದು, 10 ಸಾವಿರದಿಂದ 5 ಲಕ್ಷದವರಗೆ ದಂಡ ಹಾಕಿದ್ದೇವೆ ಎಂದರು. ಸಂಚಾರಿ ಸಮಸ್ಯೆಗಳು ಬದಲಾದಂತೆ ನಾವು ಸಹ ತಂತ್ರಜ್ಞಾನ ಬದಲಾಯಿಸಿಕೊಂಡು ಸಂಚಾರ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಆಯುಕ್ತರು ತಿಳಿಸಿದರು. +ಪೀಣ್ಯ ಇಂಡಸ್ಟ್ರೀಯಲ್ ಅಸೋಸಿಯೇಷನ್ ಅಧ್ಯಕ್ಷ ಎಚ್.ಎಂ.ಆರೀಫ್ ಮಾತನಾಡಿ, ಪೀಣ್ಯ ಇಂಡಸ್ಟ್ರಿಯಲ್ ವ್ಯಾಪ್ತಿಯಲ್ಲಿ ಮುಖ್ಯ ಸಮಸ್ಯೆ ಏನೆಂದರೆ ಜನದಟ್ಟಣೆ. ಇಲ್ಲಿ ಕೈಗಾರಿಕೆಗಳು ಪ್ರಾರಂಭವಾಗುವ ಬೆಳಿಗ್ಗೆ 8 ರಿಂದ 9, ಸಂಜೆ 5 ರಿಂದ 7.30ರವರೆಗೆ ಹೆಚ್ಚು ಇರುತ್ತದೆ. ಇದನ್ನು ನಿಯಂತ್ರಿಸಲು ಹೆಚ್ಚು ದಟ್ಟಣೆ ಉಂಟಾಗುವ ಬ್ಲಾಕ್ ಸ್ಪಾಟ್‍ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಪೀಣ್ಯ ಕೈಗಾರಿಕಾ ವಲಯಕ್ಕೆ ಸರಕುಗಳನ್ನು ಹೊತ್ತು ಬರುವ ಲಾರಿಗಳನ್ನು ನೆಲಮಂಗಲ ಬಳಿಯೇ ತಡೆಯಲಾಗುತ್ತಿದೆ. ಪೀಣ್ಯ ಕೈಗಾರಿಕೆಗಳ ಬಿಲ್ ಹೊಂದಿರುವ ಲಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಯುಕ್ತರ ಬಳಿ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಉತ್ತರ ಸಂಚಾರ ವಿಭಾಗದ ಡಿಸಿಪಿ ಸಿರಿಗೌರಿ ಮತ್ತು ಪೊಲೀಸ್ ಅಧಿಕಾರಿಗಳು ಹಾಜರಿದ್ದರು. \ No newline at end of file diff --git a/eesanje/url_46_242_10.txt b/eesanje/url_46_242_10.txt new file mode 100644 index 0000000000000000000000000000000000000000..e7a9efcb32cbca86c05307c4ce4cc7ff413c59fb --- /dev/null +++ b/eesanje/url_46_242_10.txt @@ -0,0 +1,8 @@ +ನಾಳೆ ರಾಜ್ಯಕ್ಕೆ ಅಮಿತ್ ಷಾ ಭೇಟಿ +ಬೆಂಗಳೂರು,ಫೆ.9- ಕೇಂದ್ರ ಗೃಹ ಸಚಿವ ಅಮಿತ್ ಶಾನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ. ವಿಧಾನಸಭೆ ಚುನಾವಣೆ ಬಳಿಕ ಅಮಿತ್ ಷಾ ಅವರ ಮೊದಲ ಭೇಟಿ ಇದಾಗಿದೆ. ಟಿಕೆಟ್ ವಿಚಾರವಾಗಿ ಸೃಷ್ಟಿಯಾಗಿರುವ ಗೊಂದಲದ ಹಿನ್ನೆಲೆಯಲ್ಲಿ ಚರ್ಚೆ ನಡೆ ಯುವ ಸಾಧ್ಯತೆ ಇದೆ. +ನಾಳೆ ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಷಾ ನೇರವಾಗಿ ಮೈಸೂರಿಗೆ ಹೋಗಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಫೆ.11ರಂದು ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. +ಬಳಿಕ ಅಲ್ಲಿಂದ 11.45ಕ್ಕೆ ಹೆಲಿಕಾಪ್ಟರ್‍ನಲ್ಲಿ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳಸಲಿದ್ದು, ಸುತ್ತೂರು ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದೇ ದಿನ ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಗಿಸಿಕೊಂಡು ಮಧ್ಯಾಹ್ನ 2.30ಕ್ಕೆ ರಾಡಿಸನ್ ಬ್ಲೂ ಹೋಟೆಲ್‍ಗೆ ಆಗಮಿಸಲಿದ್ದಾರೆ. ನಂತರ ಮಧ್ಯಾಹ್ನ 2.40ಕ್ಕೆ ಕೇಂದ್ರ ಸಚಿವವರು ಸಭೆ ನಿಗದಿಪಡಿಸಿದ್ದು, ಸುಮಾರು 2 ಗಂಟೆ ಕಾಲ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ ಹೇಳಲಾಗಿದೆ. +ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು +ಈ ಸಭೆ ಮೂಲಕ ಚುನಾವಣಾ ಸಿದ್ಧತೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರಾ?, ಸುತ್ತೂರು ಜಾತ್ರಾ ಮಹೋತ್ಸವದ ನೆಪದಲ್ಲಿ ಚುನಾವಣೆಗೆ ರಣತಂತ್ರ ಹೆಣೆಯಲು ಬಿಜೆಪಿ ಚಾಣಕ್ಯ ಆಗಮಿಸಿದರಾ? ಇಂತಹ ಹತ್ತು ಹಲವು ಪ್ರಶ್ನೆಗಳು ಇದೀಗ ರಾಜಕೀಯ ಪಡಸಾಲೆಯಲ್ಲಿ ಪ್ರಾರಂಭವಾಗಿದೆ. ಅಲ್ಲದೆ ಲೋಕಸಭೆ ಕ್ಲಸ್ಟರ್ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ. ನಾಲ್ಕು ಲೋಕಸಭೆ ಕ್ಷೇತ್ರಗಳನ್ನು ಒಳಗೊಂಡ ಕ್ಲಸ್ಟರ್‍ಗಳ ಸಭೆ ನಡೆಸಲಿದ್ದು, ಕೆಲವೊಂದು ಪ್ರಮುಖ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಿ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಬಳಿಕ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. +ಅಮಿತ್ ಶಾ ರಾಜ್ಯ ಪ್ರವಾಸದ ಸಂದರ್ಭದಲ್ಲಿ ಆಕಾಂಕ್ಷಿಗಳು ಅವರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ. ಈಗಾಗಲೇ ಹಲವು ಆಕಾಂಕ್ಷಿಗಳು ಟಿಕೆಟ್‍ಗಾಗಿ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ಹಾವೇರಿ ಸೇರಿದಂತೆ ಕೆಲವೊಂದು ಕ್ಷೇತ್ರಗಳ ಟಿಕೆಟ್ ಫೈಟ್ ತೀವ್ರಗೊಂಡಿದೆ. +ಇನ್ನು ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿಯಾದರೂ ರಾಜ್ಯದ ಕೆಲವು ನಾಯಕರಿಗೆ ಅಸಮಾಧಾನವಿದೆ. ಮೈತ್ರಿಯ ಲಾಭ-ನಷ್ಟದ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಎಷ್ಟು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಹಾಗೂ ಯಾವ್ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಅಮಿತ್ ಶಾ ಜೊತೆಗಿನ ಸಭೆಯಲ್ಲಿ ಈ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ. \ No newline at end of file diff --git a/eesanje/url_46_242_11.txt b/eesanje/url_46_242_11.txt new file mode 100644 index 0000000000000000000000000000000000000000..0aee4dd400da1de5c59092ea44ec8ab17525e775 --- /dev/null +++ b/eesanje/url_46_242_11.txt @@ -0,0 +1,7 @@ +ರಾಜ್ಯದಲ್ಲಿ 42.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ನಾಶ +ಬೆಂಗಳೂರು,ಫೆ.9- ರಾಜ್ಯದಾದ್ಯಂತ ಇಂದು ಡ್ರಗ್ಸ್ ವಿನಾಶ ಕಾರ್ಯಕ್ರಮವನ್ನು ದಾಬಸ್‍ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯದಲ್ಲಿ ಇಂದು ಮತ್ತು ನಿನ್ನೆ ಒಟ್ಟು 5835.51 ಕೆ.ಜಿ ಗಾಂಜಾ, 7.847 ಕೆಜಿ ಎಮ್‍ಡಿಎಂಎ ಸೇರಿ ಒಟ್ಟು ಮೌಲ್ಯ 42.15 ಕೋಟಿ ರೂ. ಮೌಲ್ಯದ ವಸ್ತುಗಳನ್ನು ನಾಶಪಡಿಸಲಾಗಿದೆ. ಅಲ್ಲದೆ, 17 ಕೋಟಿ ರೂ. ಮೌಲ್ಯದ 15 ಕೆಜಿ ಓಪಿಯಮ್ ಅನ್ನು ಎನ್‍ಡಿಪಿಎಸ್ ಕಾಯ್ದೆಯನ್ವಯ ನಾಶಮಾಡಲು ಘಾಜೀಪುರಕ್ಕೆ ಕಳುಹಿಸಲಾಗಿದೆ. +ನೆಲಮಂಗಲ ತಾಲೂಕು ದಾಬಸ್‍ಪೇಟೆಯ ದೊಡ್ಡ ಬಳ್ಳಾಪುರ ರಸ್ತೆಯಲ್ಲಿರುವ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 3885.5 ಕೆಜಿ ಗಾಂಜಾ, 52.5 ಕೆಜಿ ಎಂಡಿಎಂಎ, ಎಲ್‍ಎಸ್‍ಡಿ, ಹಶಿಸ್, ಗಾಂಜಾ ಆಯಿಲ್, ಹೆರಾಯಿನ್ ಮುಂತಾದ ಮಾದಕ ವಸ್ತುಗಳು ಸೇರಿ ಒಟ್ಟು 36.65 ಕೋಟಿ ಮೌಲ್ಯದ ವಸ್ತುಗಳನ್ನು ಗೃಹಸಚಿವರು ಹಾಗೂ ಡಿಜಿ ಅಂಡ್ ಐಜಿಪಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಯಿತು. +ವಶಪಡಿಸಿಕೊಂಡ ಡ್ರಗ್ಸ್ ದುರುಪಯೋಗವಾಗಬಾರದು ಎಂಬ ಕಾರಣಕ್ಕೆ ಪೊಲೀಸ್ ಆಯುಕ್ತರುಗಳು, ಡಿಸಿಪಿಗಳು ಮತ್ತು ಎಸ್.ಪಿ. ಗಳ ನೇತೃತ್ವದಲ್ಲಿ ಡ್ರಗ್ಸ್ ವಿಲೇವಾರಿ ಸಮಿತಿಗಳನ್ನು ರಚಿಸಿ ಅವರ ನೇತೃತ್ವದಲ್ಲಿ ಇಂದು ಡ್ರಗ್ಸ್ ವಿನಾಶ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಯುತ್ತಿದೆ. ಇಂದು ಕೇಂದ್ರ ವಲಯದ 6 ಜಿಲ್ಲೆಗಳ, ದಕ್ಷಿಣ ವಲಯದ 5 ಜಿಲ್ಲೆಗಳ, ಬೆಂಗಳೂರು ನಗರ ಹಾಗೂ ಮೈಸೂರು ನಗರದಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು. +ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು +ಮಾದಕವಸ್ತು ಮಾರಾಟ-ದುರ್ಬಳಕೆಗೆ ಕ್ರಮ :ಮಾದಕ ವಸ್ತುಗಳ ಮಾರಾಟ ಮತ್ತು ದುರ್ಬಳಕೆಯನ್ನು ಹತೋಟಿಯಲ್ಲಿಡಲು ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ 3 ವರ್ಷಗಳಿಗೆ ಹೋಲಿಸಿದರೆ 2023ರಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ಅತ್ಯಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. +2023 ರಲ್ಲಿ 6,764 ಪ್ರಕರಣಗಳನ್ನು ದಾಖಲಿಸಿ, 9,645 ಕೆಜಿ ಗಾಂಜಾ, 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಪಡಿಸಿಕೊಂಡು 106 ಮಂದಿ ವಿದೇಶಿಯರನ್ನು ಬಂಧಿಸಿ ಒಟ್ಟು ರೂ.128.98 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತು ಪ್ರಕರಣಗಳ ತನಿಖೆಗೆ ವಿಶೇಷ ತರಬೇತಿಯನ್ನು ಎಲ್ಲಾ ಹಂತದ ಅಧಿಕಾರಿಗಳಿಗೂ ಆಯೋಜಿಸಲಾಗಿದೆ. ವೈಜ್ಞಾನಿಕವಾಗಿ ಸಾಕ್ಷಿಗಳನ್ನು ಸಂಗ್ರಹಿಸಿ, ತನಿಖೆಯ ಗುಣಮಟ್ಟ ಹೆಚ್ಚಿಸಿ, ದೋಷಾರೋಪಣೆ ಸಲ್ಲಿಸುವುದಲ್ಲದೆ ನ್ಯಾಯಾಲಯದಲ್ಲಿ ಇಂತಹ ಪ್ರಕರಣಗಳ ವಿಚಾರಣೆಯನ್ನು ವಿಶೇಷವಾಗಿ ಮೇಲ್ವಿಚಾರಣೆ ಮಾಡಲು ಗಮನಹರಿಸಲಾಗಿದೆ. diff --git a/eesanje/url_46_242_12.txt b/eesanje/url_46_242_12.txt new file mode 100644 index 0000000000000000000000000000000000000000..e9a577bd9b0bffd9fd0e2ecaac089986eed85e95 --- /dev/null +++ b/eesanje/url_46_242_12.txt @@ -0,0 +1,6 @@ +ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ +ನವದೆಹಲಿ,ಫೆ.9- ಇಂಡಿಯಾ ಮೈತ್ರಿಕೂಟಕ್ಕೆ ಮತ್ತಷ್ಟು ಹೊಡೆತ ಬಿದ್ದಿದ್ದು, ಉತ್ತರಪ್ರದೇಶದ ಜಾಟ್ ಸಮುದಾಯದ ಪ್ರಭಾವಿ ನಾಯಕ ಹಾಗೂ ಆರ್‍ಎಲ್‍ಡಿ ಪಕ್ಷದ ಮುಖ್ಯಸ್ಥ ಜಯಂತ್ ಚೌಧರಿ ಬಿಜೆಪಿ ನೇತೃತ್ವದ ಎನ್‍ಡಿಎಗೆ ವಾಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆರ್‍ಎಲ್‍ಡಿ ಪಕ್ಷಕ್ಕೆ ಉತ್ತರಪ್ರದೇಶದಲ್ಲಿ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಒಂದು ರಾಜ್ಯಸಭಾ ಸ್ಥಾನವನ್ನು ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ ಸೂಚಿಸಿದೆ. +ಲೋಕಸಭೆ ಚುನಾವಣೆ ಕೆಲವೇ ದಿನಗಳು ಬಾಕಿ ಇರುವಾಗ ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ನಡೆದಿರುವ ಈ ಬೆಳವಣಿಗೆ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ಎನ್ನಲಾಗಿದೆ. ಉತ್ತರಪ್ರದೇಶದಲ್ಲಿ ಜಾಟ್ ಸಮುದಾಯ ಅತ್ಯಂತ ಬಲಿಷ್ಠವಾಗಿದ್ದು, ಆರ್‍ಎಲ್‍ಡಿ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದರು. ಇದೀಗ ಬಿಜೆಪಿ ನೇತೃತ್ವದ ಎನ್‍ಡಿಎ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಇನ್ನಷ್ಟು ಬಲ ಬಂದಂತಾಗಿದೆ. +ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು +ಈ ಮೊದಲು ಜಯಂತ್ ಚೌಧರಿ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಕಾರಾತ್ಮಕವಾದ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಅಂತಿಮವಾಗಿ ಎರಡು ಲೋಕಸಭಾ ಕ್ಷೇತ್ರಗಳು ಹಾಗೂ ಒಂದು ರಾಜ್ಯಸಭಾ ಸ್ಥಾನವನ್ನು ನೀಡಲು ಒಪ್ಪಿಗೆ ದೊರೆತ ನಂತರ ಆರ್‍ಎಲ್‍ಡಿ ಇಂಡಿಯಾ ಮೈತ್ರಿಕೂಟಕ್ಕೆ ಕೈ ಕೊಟ್ಟು ಎನ್‍ಡಿಎನತ್ತವಾಲಿದೆ. +ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಕಾಂಗ್ರೆಸ್ ಹಾಗೂ ಆರ್‍ಎಲ್‍ಡಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಇದೀಗ ಆರ್‍ಎಲ್‍ಡಿ ಎನ್‍ಡಿಎ ಜೊತೆ ಹೋಗಿದೆ. ಇದರ ಬೆನ್ನಲ್ಲೇ ಎಸ್‍ಪಿ ಈಗಾಗಲೇ 11 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್ ಜೊತೆ ಸೀಟು ಹೊಂದಾಣಿಕೆ ಕುರಿತು ಇನ್ನು ಗೊಂದಲದಲ್ಲೇ ಇದೆ. \ No newline at end of file diff --git a/eesanje/url_46_242_2.txt b/eesanje/url_46_242_2.txt new file mode 100644 index 0000000000000000000000000000000000000000..4589ad9c6650f1df5320124f3114df9150806423 --- /dev/null +++ b/eesanje/url_46_242_2.txt @@ -0,0 +1,10 @@ +ಲಾಠಿ ಏಟು ಸ್ಮರಿಸಿಕೊಂಡ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.10- ವಿದ್ಯಾರ್ಥಿ ದೆಸೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಹೋಗಿ ಪೊಲೀಸರಿಂದ ಮೊದಲ ಬಾರಿಗೆ ಲಾಠಿ ಏಟು ತಿಂದಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿಕೊಂಡರು. ರೈತ ನಾಯಕ ಪ್ರೊ.ನಂಜುಂಡಸ್ವಾಮಿಯವರ ನೆನಪು, ರಾಜ್ಯಮಟ್ಟದ ಬೃಹತ್ ರೈತ ಸಮಾವೇಶ ಹಾಗೂ ರೈತಪರ ಬಜೆಟ್ ಕುರಿತ ಹಕ್ಕೊತ್ತಾಯಗಳ ಕಾರ್ಯಗಾರದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು ರೈತ ಸಂಘ ಹೋರಾಟ ಕಾಲಘಟ್ಟದ ನೆನಪುಗಳನ್ನು ಸ್ಮರಿಸಿಕೊಂಡರು. +ತಾವು ಶಾರದಾ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗ ಪ್ರೊ.ನಂಜುಂಡಸ್ವಾಮಿ ಆ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದರು. ಏಳೆಂಟು ಜನ ವಿದ್ಯಾರ್ಥಿಗಳು ನಾವು ಅವರ ಕಟ್ಟಾ ಅನುಯಾಯಿಗಳಾಗಿದ್ದೆವು ಎಂದು ಹೇಳಿದರು. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಜಾಪ್ರಭುತ್ವದ ಅನುಸಾರ ನಡೆಯಬೇಕು ಎಂದು ಹೋರಾಟ ಮಾಡುವಂತೆ ಪ್ರೊ.ನಂಜುಂಡಸ್ವಾಮಿ ನಮ್ಮನ್ನು ಪ್ರೇರೇಪಿಸಿದ್ದರು. ಅದು ನನ್ನ ಜೀವನದ ಮೊದಲ ಹೋರಾಟ. ಆನಂತರ ಆಗಿನ ವೀರೇಂದ್ರ ಪಾಟೀಲ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಲಾಗಿತ್ತು. +ರಾಮಸ್ವಾಮಿ ವೃತ್ತದಿಂದ ಪುರಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಆಗ ನನಗೆ ಮೊದಲ ಬಾರಿ ಲಾಠಿ ಏಟು ಬಿದ್ದಿತ್ತು. ಎರಡನೇ ಬಾರಿ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದಾಗ ಪೊಲೀಸರು 2ನೇ ಬಾರಿ ಲಾಠಿ ರುಚಿ ತೋರಿಸಿದ್ದರು ಎಂದು ಸ್ಮರಿಸಿಕೊಂಡರು. +ರೈತ ಸಂಘ ಸ್ಥಾಪನೆಯಾದಾಗ ನಾನು ಮೈಸೂರು ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿದ್ದೆ. 1983 ರ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂದು ನಾನು, ಯಾವಗಲ್, ರೇವಣ ಸಿದ್ಧಯ್ಯ ಪಟ್ಟು ಹಿಡಿದಿದ್ದೆವು. ನಂಜುಂಡಸ್ವಾಮಿಯವರು ಚುನಾವಣೆ ಬೇಡ ಎಂದಿದ್ದೆವು. ನಾವು ಸಭಾತ್ಯಾಗ ಮಾಡಿದ್ದೆವು. ಅದಕ್ಕಾಗಿ ರೈತ ಸಂಘದಿಂದ ತಮ್ಮನ್ನು ಉಚ್ಚಾಟಿಸಲಾಯಿತು. ನಂತರ ರೈತ ಚಳುವಳಿಗೆ ಮರಳಲಿಲ್ಲ ಎಂದರು. ನಾನು ರಾಜಕೀಯಕ್ಕೆ ಬರಲು ನಂಜುಂಡಸ್ವಾಮಿಯವರೇ ಪ್ರೇರೇಪಣೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಬಂದಾಗ ನಾನು ನಿಲ್ಲಬೇಕೆ, ಬೇಡವೇ ಎಂಬ ಬಗ್ಗೆ ನಂಜುಂಡಸ್ವಾಮಿಯವರ ಸಲಹೆ ಕೇಳಿದ್ದೆ. ನೀನು ನಿಲ್ಲು, ನಾನೂ ನಿಲ್ಲುತ್ತೇನೆ ಎಂದಿದ್ದರು ಎಂದು ಸ್ಮರಿಸಿಕೊಂಡರು. +ರೈತ ಸಂಘ ಅತ್ಯಂತ ಪ್ರಬಲವಾಗಿತ್ತು. ಸರ್ಕಾರಿ ಅಧಿಕಾರಿಗಳು ಸಚಿವರಿಗೆ ಹೆದರುತ್ತಿರಲಿಲ್ಲ. ಹಸಿರು ಟೋಪಿ, ಹಸಿರು ಶಾಲು ಹಾಕಿಕೊಂಡು ಸರ್ಕಾರಿ ಕಚೇರಿಗಳಿಗೆ ಹೋದರೆ ಅಧಿಕಾರಿಗಳು ಎದ್ದುನಿಂತು ಬಿಡುತ್ತಿದ್ದರು. ನಂಜುಂಡಸ್ವಾಮಿ ನಿಷ್ಠುರ ಮತ್ತು ಕಠಿಣ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.ದೇಶದಲ್ಲಿ ಬಹಳಷ್ಟು ಜನ ಕೃಷಿಯನ್ನು ಅವಲಂಬಿಸಿದ್ದಾರೆ. ಆಹಾರ ಸ್ವಾವಲಂಬನೆಗೆ ರೈತರೇ ಕಾರಣ. ಇತ್ತೀಚೆಗೆ ಕೃಷಿ ನಷ್ಟವಾಗುತ್ತಿದೆ ಎಂಬ ಕಾರಣಕ್ಕಾಗಿ ಬಹಳಷ್ಟು ಮಂದಿ ನಗರದತ್ತ ವಲಸೆ ಬರುತ್ತಿದ್ದಾರೆ. ನಗರೀಕರಣದ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು. +ಬಜೆಟ್‍ನಲ್ಲಿ ಅಳವಡಿಸಿರುವಂತೆ 20 ಕ್ಕೂ ಹೆಚ್ಚು ಹಕ್ಕೊತ್ತಾಯಗಳನ್ನು ರೈತ ಸಂಘ ನೀಡಿದೆ. ಅವುಗಳಲ್ಲಿ ಸಾಧ್ಯ ಎನ್ನುವಷ್ಟನ್ನು ಜಾರಿ ಮಾಡುತ್ತೇನೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಅದು ಜಂಟಿ ಆಯ್ಕೆ ಸಮಿತಿ ಪರಿಶೀಲನೆಯಲ್ಲಿಯೇ ಇದೆ. ಮುಂದಿನ ದಿನಗಳಲ್ಲಿ ಅದನ್ನು ಕಾನೂನು ರೂಪದಲ್ಲಿ ಜಾರಿಗೊಳಿಸುತ್ತೇವೆ ಎಂದು ಹೇಳಿದರು. ಕೃಷಿಗೆ ಗರಿಷ್ಠ ಪ್ರಮಾಣದ ಆದ್ಯತೆ ನೀಡಬೇಕು. ದೇಶದಲ್ಲಿ ರೈತರು, ಸೈನಿಕರು, ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿ ಸುಧಾರಣೆಗೆ ರಾಷ್ಟ್ರಮಟ್ಟದಲ್ಲಿಯೂ ಯೋಜನೆ ರೂಪಿಸಲು ಕಾಂಗ್ರೆಸ್‍ನ ಪ್ರಣಾಳಿಕಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು. +ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ +ರೈತ ಸಂಘ ಕೋಮುವಾದಿಗಳ ವಿರುದ್ಧವಾಗಿರುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತಾರ್ಹ. ರೈತ ಪರವಾದ ಚಳುವಳಿಯನ್ನು ಎಂದಿನಂತೆ ಮುಂದುವರೆಸಲಿ ಎಂದು ಸಲಹೆ ನೀಡಿದರು.ಸಚಿವರಾದ ಎಚ್.ಸಿ.ಮಹದೇವಪ್ಪ, ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಶಾಸಕರಾದ ಬಿ.ಆರ್.ಪಾಟೀಲ್, ದರ್ಶನ್ ಪುಟ್ಟಣ್ಣಯ್ಯ, ರೈತ ಮುಖಂಡರಾದ ಮಾಲಿ ಪಾಟೀಲ್, ಕಾರ್ಮಿಕ ನಾಯಕ ಮೈಕಲ್ ಫರ್ನಾಂಡೀಸ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. +ರೈತ ಸಂಘ ಕೃಷಿಯನ್ನು ಸುಸ್ಥಿರಗೊಳಿಸಲು ಮೌಲ್ಯರ್ವತ ಚಟುವಟಿಕೆಗಳಿಗೆ ತಲಾ 20 ಲಕ್ಷ ರೂ.ಗಳ ಆರ್ಥಿಕ ನೆರವು, ರೈತ ಯುವಕರನ್ನು ಮದುವೆಯಾಗುವವರಿಗೆ 5 ಲಕ್ಷ ಆರ್ಥಿಕ ನೆರವು, ಬ್ಯಾಂಕ್ ಸಾಲ ವಸೂಲಾತಿಗೆ ಕಡಿವಾಣ, ಆಸ್ತಿ ಹರಾಜಿಗೆ ತಡೆ ನೀಡಬೇಕು. ಕೃಷಿ ಬೆಲೆ ಆಯೋಗಕ್ಕೆ ಶಾಸನದ್ಧ ಅಕಾರ ನೀಡಿ ಬಲಗೊಳಿಸಬೇಕು. ಬರ ಬಾತ ರೈತರಿಗೆ ವೈಜ್ಞಾನಿಕ ಪರಿಹಾರಗಳನ್ನು ನೀಡಬೇಕು. 2024 ರ ವಿದ್ಯುತ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಬೇಕು. ಕಬ್ಬಿಗೆ ಘೋಷಿತ ಬೆಂಬಲ ಬೆಲೆ ನೀಡಬೇಕು. ಕರ ನಿರಾಕರಣೆ ಚಳುವಳಿಯ ಹಿಂಬಾಕಿಯ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಯಿತು. \ No newline at end of file diff --git a/eesanje/url_46_242_3.txt b/eesanje/url_46_242_3.txt new file mode 100644 index 0000000000000000000000000000000000000000..7f296408d56041bc10060c7152e8d26259c3e2b3 --- /dev/null +++ b/eesanje/url_46_242_3.txt @@ -0,0 +1,5 @@ +ಮತೀಯ ವಾದಕ್ಕೆ ಪ್ರಚೋದನೆ : ಎಸ್‍ಡಿಪಿಐ ಮುಖಂಡರ ವಿರುದ್ಧ ಆಕ್ರೋಶ +ಬೆಂಗಳೂರು,ಫೆ.10- ಈವರೆಗೂ ಕೋಮುವಾದಿ ಪ್ರಚೋದನೆಗಳು ಹೆಚ್ಚಾಗಿ ಕಂಡುಬರುತ್ತಿತ್ತು. ಈಗ ಅದೇ ರೀತಿಯ ಮತೀಯವಾದದ ಪ್ರಚೋದನೆಗೆ ಎಸ್‍ಡಿಪಿಐನ ಅಧ್ಯಕ್ಷರು ಕರೆ ನೀಡುವ ಮೂಲಕ ಕಾನೂನು ಸುವ್ಯವಸ್ಥೆಯಲ್ಲಿ ಆತಂಕ ಮೂಡಿಸಿದ್ದಾರೆ. ಮಂಗಳೂರಿನ ಸಮಾವೇಶವೊಂದರಲ್ಲಿ ಮಾತನಾಡಿರುವ ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ನಜೀದ್ ತಮ್ಮ ಪಕ್ಷದ ಕಾರ್ಯಕರ್ತರಿಗೆ ಲಾಠಿ ಏಟು ತಿನ್ನಲು, ಜೈಲಿಗೆ ಹೋಗಲು, ಹುತಾತ್ಮರಾಗಲು ಸಿದ್ಧರಾಗಿ ಎಂದು ಕರೆ ನೀಡುವುದು ಆತಂಕ ಮೂಡಿಸಿದೆ. +ಇದೇ ರೀತಿ ಮತೀಯವಾದದ ಪ್ರಚೋದನೆ ನೀಡುತ್ತಿದ್ದ ಪಿಎಫ್‍ಐ ಅನ್ನು ಕಳೆದ 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ನಿಷೇಧಿಸಿತ್ತು. ಎಸ್‍ಡಿಪಿಐ ರಾಜಕೀಯ ಪಕ್ಷವಾಗಿರುವುದರಿಂದ ಕೇಂದ್ರ ಚುನಾವಣಾ ಆಯೋಗದಿಂದ ಮಾನ್ಯತೆ ಪಡೆದಿರುವುದರಿಂದ ಏಕಾಏಕಿ ನಿಷೇಧ ಸಾಧ್ಯವಾಗಿರಲಿಲ್ಲ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಪಿಎಫ್‍ಐ ಕಾರ್ಯಕರ್ತರಂತೆ ಎಸ್‍ಡಿಪಿಐನ ಕಾರ್ಯಕರ್ತರೂ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಶಿವಮೊಗ್ಗ ಸೇರಿದಂತೆ ಹಲವು ರೀತಿಯ ಗಲಭೆಗಳಲ್ಲಿ ಮತೀಯವಾದದ ಪ್ರಚೋದನೆ ಕಂಡುಬಂದಿತ್ತು. +ಇಪಿಎಫ್ ಗರಿಷ್ಠ ಬಡ್ಡಿದರ ಶೇ.8.25ಕ್ಕೆ ನಿಗದಿ +ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮತ್ತಷ್ಟು ವಿರೋಧಾಭಾಸಗಳನ್ನು ಆರಂಭಿಸಿರುವ ಎಸ್‍ಡಿಪಿಐ ಯಾವ ಪಕ್ಷಗಳಿಂದಲೂ ನಮಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ಹುತಾತ್ಮಕರಾಗುವ ಹೋರಾಟಕ್ಕೆ ಮುಂದಾಗಬೇಕೆಂದು ಕರೆ ನೀಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಸಂಘರ್ಷಮಯ ಪರಿಸ್ಥಿತಿ ನಿರ್ಮಿಸಬಹುದು. ಕಾನೂನು ಸುವ್ಯವಸ್ಥೆಗೆ ಸವಾಲಾಗಬಹುದೆಂಬ ಆತಂಕ ನಿರ್ಮಾಣವಾಗಿದೆ. \ No newline at end of file diff --git a/eesanje/url_46_242_4.txt b/eesanje/url_46_242_4.txt new file mode 100644 index 0000000000000000000000000000000000000000..b3338d308426c07d99420f09a0adc3fb82c59bc2 --- /dev/null +++ b/eesanje/url_46_242_4.txt @@ -0,0 +1,8 @@ +ಅಮಿತ್ ಶಾ ಆಗಮನದ ಬೆನ್ನಲ್ಲೇ ಬಿಜೆಪಿಯಲ್ಲಿ ಸಂಚಲನ +ಬೆಂಗಳೂರು,ಫೆ.10- ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದರ ಜೊತೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೂ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ. ಇಂದು ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಅವರು, ನಗರದ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. +ನಾಳೆ ಬೆಳಗ್ಗೆ 11 ಗಂಟೆಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ 11.45ಕ್ಕೆ ಹೆಲಿಕಾಪ್ಟರ್ ಮೂಲಕ ಸುತ್ತೂರು ಗ್ರಾಮಕ್ಕೆ ಪ್ರಯಾಣ ಬೆಳೆಸಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಸುತ್ತೂರು ಮಠದಲ್ಲಿ ಅವರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2.30ಕ್ಕೆ ಖಾಸಗಿ ಹೋಟೆಲ್‍ಗೆ ಆಗಮಿಸಲಿದ್ದಾರೆ. +ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ +ಸಂಜೆ 3.30ರಿಂದ 4.30ರ ತನಕ ಮೈಸೂರು ಕ್ಲಸ್ಟರ್‍ಗೆ ಬರುವ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳ ಸಿದ್ಧತೆ ಬಗ್ಗೆ ಮಹತ್ವದ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಮೈಸೂರಿನಿಂದ ಗುಜರಾತ್‍ಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ರಾಜ್ಯ ಪ್ರವಾಸ ಭಾರೀ ಕುತೂಹಲ ಮೂಡಿಸಿದೆ. ಅದರಲ್ಲೂ ವಿಧಾನಸಭಾ ಚುನಾವಣೆಯ ಬಳಿಕ ಮೌನವಾಗಿದ್ದ ಕಮಲ ಪಡೆ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿಯನ್ನು ನಡೆಸಿದೆ. +ಕ್ಲಸ್ಟರ್ ಮಟ್ಟದ ಸಭೆ, ಪ್ರಮುಖರ ಸಭೆ:ಮಧ್ಯಾಹ್ನ 2.30ರ ಅನಂತರ ಬಿಜೆಪಿ ಪ್ರಮುಖರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಲೋಕಸಭಾ ಕ್ಷೇತ್ರಗಳ ಸಭೆ ನಡೆಯಲಿವೆ. ಮುಂದಿನ ಯೋಜನೆಗಳ ಕುರಿತು ಶಾ ಮಾರ್ಗದರ್ಶನ ನೀಡಲಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. +ನಾಳಿನ ಸಭೆಯಲ್ಲಿ ಅಮಿತ್ ಶಾ ಎದುರು ಮಂಡ್ಯ ಲೋಕಸಭಾ ಕ್ಷೇತ್ರದ ಮಾಹಿತಿ ವಿನಿಮಯವೂ ಆಗಲಿದೆ. ಅಲ್ಲದೆ ಜೆಡಿಎಸ್ ಕಣ್ಣಿಟ್ಟಿರುವ ಹಾಸನ ಲೋಕಸಭಾ ಕ್ಷೇತ್ರ ಕುರಿತೂ ಚರ್ಚೆಗಳು ನಡೆಯಲಿವೆ. ಅನಂತರ ಪಕ್ಷದ ಪ್ರಮುಖರೊಂದಿಗೆ ಕೂಡ ಸಭೆ ನಡೆಸಲಿರುವ ಅವರು, ಸಂಜೆ 4.30ರ ನಂತರ ಗುಜರಾತ್‍ನತ್ತ ಪ್ರಯಾಣ ಬೆಳಸಲಿದ್ದಾರೆ. +ಮೈಸೂರು ಕ್ಲಸ್ಟರ್ ಅನಂತರ ಉಳಿದ 7 ಕ್ಲಸ್ಟರ್‍ಗಳಲ್ಲೂ ಅಮಿತ್ ಶಾ ಸಭೆಗಳನ್ನು ನಡೆಸಲಿದ್ದು, ಫೆ. 17 ಮತ್ತು 18ರಂದು ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಕರ್ನಾಟಕಕ್ಕೆ ಹೆಚ್ಚು ಸಮಯ ನೀಡುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_242_5.txt b/eesanje/url_46_242_5.txt new file mode 100644 index 0000000000000000000000000000000000000000..91d3604575358d132260e5879dbbac17fa34b39d --- /dev/null +++ b/eesanje/url_46_242_5.txt @@ -0,0 +1,7 @@ +ಆಯೋಗದ ಮುಂದೆ ದಾಖಲೆ ಸಲ್ಲಿಸಿ : ಕೆಂಪಣ್ಣಗೆ ಕಾಂಗ್ರೆಸ್ ಸವಾಲು +ಬೆಂಗಳೂರು,ಫೆ.9- ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಆರೋಪ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದು, ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ನ್ಯಾಯಾಂಗ ತನಿಖಾ ಆಯೋಗದ ಮುಂದೆ ದಾಖಲೆ ಸಲ್ಲಿಸುವಂತೆ ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಕೆಂಪಣ್ಣ ಶೇ.40 ರಷ್ಟು ಕಮಿಷನ್‍ನ ಆರೋಪ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿತ್ತು. +ಅದೇ ಕೆಂಪಣ್ಣ ನಿನ್ನೆ ಸುದ್ದಿಗೋಷ್ಟಿ ಮಾಡಿ ಕಾಂಗ್ರೆಸ್ ಸರ್ಕಾರದಲ್ಲೂ ಅಧಿಕಾರಿಗಳು ಶೇ.40 ರಷ್ಟು ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದರು. ಇದಕ್ಕೆ ಸರ್ಕಾರದ ಪ್ರತಿನಿಧಿಗಳು ಸರಣಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ.40 ರಷ್ಟು ಕಮಿಷನ್ ಆರೋಪದ ವಿಚಾರಣೆಗಾಗಿ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ನಾಗಮೋಹನ್‍ದಾಸ್ ನೇತೃತ್ವದಲ್ಲಿ ನ್ಯಾಯಾಂಗ ಆಯೋಗ ಮಾಡಿದ್ದೇವೆ. ಅದರ ಮುಂದೆ ದಾಖಲೆ ಸಲ್ಲಿಸುವಂತೆ ಕೆಂಪಣ್ಣ ಅವರಿಗೆ ಸಲಹೆ ನೀಡಿದರು. +ಕೆಂಪಣ್ಣ ಅವರು ಆರೋಪ ಮಾಡಿರುವುದು ಅಧಿಕಾರಿಗಳು ಕಮಿಷನ್ ಕೇಳುತ್ತಿದ್ದಾರೆ ಎಂದು. ಯಾವ ಅಧಿಕಾರಿ ಲಂಚ ಕೇಳುತ್ತಿದ್ದಾರೆ ಎಂಬ ಬಗ್ಗೆ ಆಯೋಗದ ಮುಂದೆ ದೂರು ನೀಡಲಿ ಎಂದರು. ಕಲ್ಬುರ್ಗಿಯಲ್ಲಿ ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಮ್ಮ ಸರ್ಕಾರದಲ್ಲಿ ಯಾವುದೇ ಅವ್ಯವಹಾರಗಳು ನಡೆಯುತ್ತಿಲ್ಲ. ಭ್ರಷ್ಟಾಚಾರವನ್ನು ನಿಯಂತ್ರಿಸಿದ್ದೇವೆ. ಶೇ. 40 ರಷ್ಟು ಕಮಿಷನ್ ವ್ಯವಹಾರ ನಡೆಸಿದ್ದ ಬಿಜೆಪಿಯ ಬಸವರಾಜ ಬೊಮ್ಮಾಯಿ ಸೇರಿದಂತೆ ಯಾವ ನಾಯಕರಿಗೂ ನಮ್ಮ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ. ನಮ್ಮ ಜೀವನದಲ್ಲೇ ಕಂಡರಿಯದಷ್ಟು ಭ್ರಷ್ಟಾಚಾರವನ್ನು ಬೊಮ್ಮಾಯಿ ಅವರ ಸರ್ಕಾರ ನಡೆಸಿತ್ತು. ಮೂರು ವರ್ಷದಲ್ಲಿ ಮೂರು ಲಕ್ಷ ಕೋಟಿ ಸಾಲ ಮಾಡಿ ರಾಜ್ಯವನ್ನು ಸಾಲದ ಗ್ಯಾರಂಟಿಗೆ ನೂಕಿದರು ಎಂದು ದೂರಿದರು. +ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಪರಮೇಶ್ವರ್ +ಇದೇ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಹಿಂದಿನ ಸರ್ಕಾರ ಗುತ್ತಿಗೆದಾರರ ಬಿಲ್‍ಗಳನ್ನು ಬಾಕಿ ಉಳಿಸಿತ್ತು. ಅದನ್ನು ಹಂತಹಂತವಾಗಿ ನಾವು ಬಿಡುಗಡೆ ಮಾಡುತ್ತಿದ್ದೇವೆ. ಕೆಂಪಣ್ಣ ನನ್ನ ಬಳಿಯೂ ಏಳೆಂಟು ಬಾರಿ ಚರ್ಚೆ ಮಾಡಿದ್ದಾರೆ. ಬಾಕಿ ಬಿಲ್ ಪಾವತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತಿದೆ. ಜೇಷ್ಠತೆ ಮತ್ತು ಸೂಕ್ತ ಮಾನದಂಡಗಳನ್ನ ಪಾಲನೆ ಮಾಡಲಾಗುತ್ತಿದೆ ಎಂದು ಹೇಳಿದರು. +ಭ್ರಷ್ಟಾಚಾರ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ನಾನು ಹೇಳುವುದಿಲ್ಲ. ಸಣ್ಣಪುಟ್ಟ ಲೋಪಗಳಿದ್ದರೆ ಅದನ್ನು ವಿಚಾರಣೆ ನಡೆಸಲು ಮತ್ತು ಸರಿಪಡಿಸಲು ಸಿದ್ಧರಿದ್ದೇವೆ ಎಂದರು. ಹಿಂದಿನ ಸರ್ಕಾರ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಹೇಳುತ್ತಿತ್ತು. ನಾವು ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಿದ್ದೇವೆ. ಅದು ಈಗಲೂ ಅಸ್ತಿತ್ವದಲ್ಲಿದೆ. ಕೆಂಪಣ್ಣ ಸೇರಿದಂತೆ ಯಾವುದೇ ಸಾರ್ವಜನಿಕರು ಆಯೋಗದ ಮುಂದೆ ದೂರು ನೀಡಬಹುದು, ದಾಖಲೆಗಳನ್ನು ಸಲ್ಲಿಸಬಹುದು. ಅದರ ತನಿಖೆ ನಡೆಸಲು ಸಿದ್ಧ. ಪಾರದರ್ಶಕತೆ ಪಾಲನೆ ಮಾಡುತ್ತಿರುವುದರಿಂದ ಯಾವುದೇ ಆತಂಕ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_242_6.txt b/eesanje/url_46_242_6.txt new file mode 100644 index 0000000000000000000000000000000000000000..4496684f39f38963afdb1605d0ca8e29586cc564 --- /dev/null +++ b/eesanje/url_46_242_6.txt @@ -0,0 +1,5 @@ +ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿ +ಬೆಂಗಳೂರು,ಫೆ.9- ಸೇವೆಯಿಂದ ನಿವೃತ್ತರಾಗಲು ಇನ್ನೆರಡು ತಿಂಗಳು ಬಾಕಿ ಇರುವಾಗಲೇ ಸ್ವಯಂ ನಿವೃತ್ತಿ ಕೋರಿ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಯಾಗಿ ಸೇವೆ ಸಲ್ಲಿಸುತ್ತಿರುವ ಪ್ರತಾಪ್ ರೆಡ್ಡಿ ಅವರು ಸ್ವಯಂ ನಿವೃತ್ತಿ ಬಯಸಿದ್ದಾರೆ. +ಜೂನ್ 30ಕ್ಕೆ ನಿವೃತ್ತಿಯಾಗಬೇಕಿದ್ದ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ತಮಗೆ ಏ.30ಕ್ಕೆ ಸೇವೆಯಿಂದ ಬಿಡುಗಡೆ ಮಾಡಬೇಕೆಂದು ಜ.22ರಂದು ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅವರ ಸ್ವಯಂ ನಿವೃತ್ತಿ ನಿರ್ಧಾರ ರಾಜ್ಯ ಪೊಲೀಸ್ ವಲಯದಲ್ಲಿ ಬಹಳಷ್ಟು ಕುತೂಹಲ ಮೂಡಿಸಿದೆ. +ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ +ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜೂನ್ 1, 1964ರಲ್ಲಿ ಜನಿಸಿದ ಪ್ರತಾಪ್ ರೆಡ್ಡಿ ಅವರು ಬಿ.ಟೆಕ್ ಪದವೀಧರರು. 1991ರಲ್ಲಿ ಕರ್ನಾಟಕ ಕೆಡರ್‍ನ ಐಪಿಎಸ್ ಅಧಿಕಾರಿಯಾಗಿ ಕಾರ್ಯವನ್ನು ಆರಂಭಿಸಿ ಉತ್ತಮ ಹೆಸರು ಪಡೆದಿದ್ದಾರೆ. ಇವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿ ನಗರದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು. ಬೆಂಗಳೂರು ನಗರವಲ್ಲದೆ ರಾಜ್ಯದ ವಿವಿಧ ಕಡೆ ಇವರು ಸೇವೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_242_7.txt b/eesanje/url_46_242_7.txt new file mode 100644 index 0000000000000000000000000000000000000000..5ab6f1e723435b88d26b0bdb8c51a0f7497ea7c8 --- /dev/null +++ b/eesanje/url_46_242_7.txt @@ -0,0 +1,8 @@ +ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಟಿಕೆಟ್ ನೀಡಲು ಆಗ್ರಹ +ಬೆಂಗಳೂರು, ಫೆ.9- ಮಲೆನಾಡು ಕರಾವಳಿ ಬಗ್ಗೆ ಕಾಳಜಿ ಇರುವ ರಾಜ್ಯ ಕಾಂಗ್ರೆಸ್ ವಕ್ತಾರರಾದಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಪಕ್ಷದಿಂದ ಈ ಬಾರಿ ಲೋಕಸಭಾ ಟಿಕೆಟ್ ನೀಡುವಂತೆ ಮಲೆನಾಡು- ಕರಾವಳಿ ಜನಪರ ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕರಾದ ಅನಿಲ್ ಹೊಸಕೊಪ್ಪ ಆಗ್ರಹಿಸಿದರು. +ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಮಲೆನಾಡು ಕರಾವಳಿ ಜನಪರ ಒಕ್ಕೂಟವು ಕಳೆದ 15 ವರ್ಷಗಳಿಂದ ಮಲೆನಾಡಿನ ಹಲವಾರು ಸಮಸ್ಯೆಗಳ ಕುರಿತು ಹೋರಾಟ ರೂಪಿಸಿ ಸರ್ಕಾರದ ಗಮನ ಸೆಳೆಯುತ್ತ ಬಂದಿದೆ. ಆದರೆ ನಮ್ಮ ಹೋರಾಟಗಳು ಸರಕಾರದ ಕಿವಿಗೆ ಬೀಳದೆ ಇನ್ನೂ ಕೂಡ ನಮ್ಮ ಸಮಸ್ಯೆಗಳು ಹಾಗೆಯೇ ಉಳಿದಿವೆ. ಸಂಸತ್ ನಲ್ಲಿ ಮಲೆನಾಡು ಕರಾವಳಿ ಜನರ ನರೆ ಧ್ವನಿಯನ್ನು ಕಳೆದುಕೊಂಡಿದ್ದೇವೆ. ಒಂದು ರೀತಿ ನಾವು ತಬ್ಬಲಿಗಳಾಗುತ್ತಿದ್ದೇವೆ. +ಈ ನಿಟ್ಟಿನಲ್ಲಿ ನಮ್ಮ ಮಲೆನಾಡು ಕರಾವಳಿಯ ಸಮಸ್ಸೆಗಳ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿರುವ ಹಾಗೂ ಇಲ್ಲಿಯ ಸ್ಥಳೀಯ ಸಮಸ್ಯೆಗಳಿಗೆ ಹೋರಾಟ ನಡೆಸುತ್ತಿರುವ ಸ್ವತಃ ಪ್ರಖ್ಯಾತ ವಕೀಲರು ಆಗಿರುವ ಹಾಗೂ ಸಾರ್ವಜನಿಕ ಆಡಳಿತದಲ್ಲಿ ತೇರ್ಗಡೆ ಹೊಂದಿರುವ ಹಾಗೂ ಪ್ರಸ್ತುತ ರಾಜ್ಯ ಕಾಂಗ್ರೆಸ್ ವಕ್ತಾರರೂ ಆಗಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿ ಅವರ ಪಕ್ಷದಿಂದ ಟಿಕೆಟ್ ನೀಡಬೇಕು. ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಬಹು ಪರಿಚಿತರು, ಬಹು ದೊಡ್ಡ ಯುವಕರ ಪಡೆಯನ್ನೇ ಹೊಂದಿದ್ದು, ಎದುರಾಳಿಗೆ ತಕ್ಕ ಉತ್ತರ ನೀಡಲು ಸಮರ್ಥರಿದ್ದಾರೆ. ಇವರನ್ನು ಗೆಲ್ಲಿಸಿ ಸಂಸತ್ ಗೆ ಕಳುಹಿಸುವುದರಿಂದ ನಮ್ಮ ಸಮಸ್ಯೆಗಳ ಪರವಾಗಿ ಸಂಸತ್ನಲ್ಲಿ ಧ್ವನಿ ಮೊಳಗಲಿದೆ ಎಂದರು. +ಕಳೆದ ಹಲವಾರು ವರ್ಷಗಳಿಂದ ಮಲೆನಾಡು ಕರಾವಳಿ ಭಾಗದಲ್ಲಿ ಅರಣ್ಯ ವಾಸಿಗಳು ತಮ್ಮ ಹಕ್ಕಿಗಾಗಿ ಹಲವಾರು ಹೋರಾಟಗಳನ್ನು ಹಾಗೂ ಸಭೆಗಳನ್ನು ಮಾಡಿಕೊಂಡು ಬರುತ್ತಿದ್ದರೂ ಸಹ ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವಯಲ್ಲಿ ತಂದಿರುವ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಅರಣ್ಯವಾಸಿಗಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗಲಿಲ್ಲ. ಇಲ್ಲಿ ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೂ ಇದೆ. ಹಾಗಾಗಿ ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ, ಅನಂತ್ ಕುಮಾರ್ ಹೆಗ್ಡೆ, ಪ್ರತಾಪ್ ಸಿಂಹ, ಬಿ.ವೈ.ರಾಘವೇಂದ್ರ ರವರಾಗಲಿ ಇಂದಿಗೂ ಕೂಡ ಸಂಸತ್ತಿನಲ್ಲಿ ಮಲೆನಾಡು ಕರಾವಳಿ ಜನರ ಬದುಕಿನ ಬಗ್ಗೆ ಒಂದೇ ಒಂದು ದಿನ ಚರ್ಚೆ ಮಾಡದೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ ಈ ಭಾಗದ ಜನರಿಗೆ ಮೋಸ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. +ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ +ಜನ ನಿಮ್ಮನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸಿರೋದು ಈ ಭಾಗದ ಜನರ ಬದುಕಿನ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು. ಆದರೆ ನಮ್ಮ ಸಂಸದರು ಇಷ್ಟು ವರ್ಷಗಳ ಕಾಲ ಕೋಮು ಹೇಳಿಕೆಗಳಿಗೆ ಪ್ರಸಿದ್ಧರಗಿದ್ದಾರೆಯೇ ಹೊರತು ಮಲೆನಾಡು ಕರಾವಳಿ ಭಾಗದ ಮುಖ್ಯ ಸಮಸ್ಯೆಯಾದ ಅರಣ್ಯವಾಸಿಗಳ ಬಗ್ಗೆ ಸಂಸತ್ತಿನಲ್ಲಿ ಚಕಾರವೇ ಎತ್ತದೆ ಪ್ರತಿ ದಿನ ಹೊಸ ಹೊಸ ನಾಟಕಗಳನ್ನು ಜನರ ಮುಂದೆ ತಂದು ಈ ಭಾಗದ ಜನರಿಗೆ ದ್ರೋಹ ಎಸಗಿದ್ದಾರೆ. ಈ ಭಾಗದ ಬಹು ಮುಖ್ಯವಾದ ಅರಣ್ಯ ಒತ್ತುವರಿ, ಅಡಿಕೆಗೆ ಹಳದಿ ರೋಗ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಇವುಗಳ ಬಗ್ಗೆ ಕಾಳಜಿ ಬದ್ಧತೆ ಇಲ್ಲದ ಇವರುಗಳನ್ನು ಮೂರೂ-ನಾಲ್ಕು ಬಾರಿ ಮತ ಹಾಕಿ ಕಳುಹಿಸಿದ್ದು ನಮ್ಮ ದುರದೃಷ್ಟಕರ. +ಶಿವಮೊಗ್ಗದಲ್ಲಿಯೂ ಶರಾವತಿ ಸಂತ್ರಸ್ತರ ಸಮಸ್ಯೆ ನೋಡಿ ಅಲ್ಲಿಯೂ ಯಾರು ಕೇಳುವವರಿಲ್ಲವಾಗಿದೆ. ರಾಜ್ಯಕ್ಕೆ ಬೆಳಕು ಕೊಟ್ಟ ಜನರ ಬದುಕು ಕತ್ತಲಾಗಿದೆ. ಇವೆಲ್ಲಾ ಕಾರಣಗಳಿಂದ ಕರಾವಳಿ ಮಲೆನಾಡು ಭಾಗದ ಸಮಗ್ರ ಅಧ್ಯಯನ ನಡೆಸಿರುವ ಸುೀರ್ ಕುಮಾರ್ ಮುರೊಳ್ಳಿ ಅವರಿಗೆ ಈ ಬಾರಿಯ ಉಡುಪಿ-ಚಿಕ್ಕಮಗಳೂರು ಲೋಕಸಭಾ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಸಂಚಾಲಕ ಪ್ರವೀಣ್ ತಗಡೂರು, ಲೋಕೇಶ್, ಅಭಿಷೇಕ್ ಸಂತೋಷ್, ಮನೋಜ್ ಶೆಟ್ಟಿ, ಮಂಜುನಾಥ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_242_8.txt b/eesanje/url_46_242_8.txt new file mode 100644 index 0000000000000000000000000000000000000000..be0d3c80bf6b0a52db2607d7330771aa28fd62da --- /dev/null +++ b/eesanje/url_46_242_8.txt @@ -0,0 +1,6 @@ +ಈಶ್ವರಪ್ಪ ಆಟಕ್ಕುಂಟು, ಲೆಕ್ಕಕ್ಕಿಲ್ಲ : ಪ್ರಿಯಾಂಕ್ ಖರ್ಗೆ ಲೇವಡಿ +ಕಲ್ಬುರ್ಗಿ,ಫೆ.9- ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಈಶ್ವರಪ್ಪ ಅವರು ನೀಡಿರುವ ಹೇಳಿಕೆಯಂತೆ ಕಾನೂನು ಜಾರಿಗೊಳಿಸಿದರೆ ಬಿಜೆಪಿಯ ಅರ್ಧದಷ್ಟು ಮಂದಿ ಖಾಲಿಯಾಗುತ್ತಾರೆ. ಆರ್‍ಎಸ್‍ಎಸ್ ಬಾಗಿಲು ಮುಚ್ಚಿಕೊಳ್ಳುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಬಿಜೆಪಿಯವರು ಕಡ್ಡಾಯ ನಿವೃತ್ತಿ ಕೊಟ್ಟಿದ್ದಾರೆ. ಅದಕ್ಕಾಗಿ ಅದು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಮಗನಿಗೆ ಟಿಕೆಟ್ ಕೊಡಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. +ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಎಂಎಲ್‍ಎ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಕೊನೆಗೆ ಎಂಎಲ್‍ಎಯಾಗಲು ಟಿಕೆಟ್ ನೀಡದೇ ಬಿಜೆಪಿ ಮೂಲೆಗುಂಪು ಮಾಡಿದೆ. ಈ ಹಿಂದೆ ರಾಜಕೀಯ ಅಸ್ತಿತ್ವಕ್ಕಾಗಿ ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಟ್ಟಿದರು. ಅದರ ಪರಿಣಾಮ ಮೂಲೆಗುಂಪಾಗಿದ್ದಾರೆ. ವಿಶ್ರಾಂತಿಯ ಬದುಕಿನಲ್ಲಾದರೂ ನೆಮ್ಮದಿಯಾಗಿರಿ. ಬೆಳಿಗ್ಗೆ ರಾಮಾಯಣ ಓದಿ. ಮಧ್ಯಾಹ್ನ ಕೀರ್ತನಾ ಭಜನೆ ಕೇಳಿ, ರಾತ್ರಿ ಹನುಮಾನ್ ಚಾಲೀಸ ಹೇಳಿಕೊಂಡು ವಿಶ್ರಾಂತಿ ಪಡೆಯಿರಿ. ರಾಜಕೀಯ ಅಸ್ತಿತ್ವಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬೇಡಿ ಎಂದು ಸಲಹೆ ನೀಡಿದರು. +ಬಿಜೆಪಿ ನಾಯಕರು ರಾಜ್ಯದ ಪರವಾಗಿ ಧ್ವನಿಯೆತ್ತುವುದಕ್ಕಿಂತಲೂ ಮೋದಿಯವರನ್ನು ಸಮರ್ಥಿಸಿಕೊಳ್ಳುವುದರಲ್ಲೇ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಹಣಕಾಸು ಆಯೋಗದಿಂದ ರಾಜ್ಯಕ್ಕಾಗಿರುವ ಅನ್ಯಾಯ, ತೆರಿಗೆ ಪಾಲಿನ ಅಸಮರ್ಪಕತೆ, 25 ಸಾವಿರ ಕೋಟಿ ರೂ. ಮಧ್ಯಂತರ ಪರಿಹಾರದ ನಿರಾಕರಣೆ… ಇದೆಲ್ಲವೂ ಸತ್ಯವಲ್ಲವೇ? ಉದ್ಯೋಗ ಸೃಷ್ಟಿಸಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುವುದರಿಂದ ದೇಶದ ಅಭಿವೃದ್ಧಿಗೆ ಧಕ್ಕೆಯಾಗುತ್ತದೆ. ಕೇಂದ್ರ ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ನಾಟಕಕ್ಕೆ ನ್ಯಾಯಯುತ ಪಾಲು ನೀಡಬೇಕು ಎಂದರು. +ರಾಷ್ಟ್ರೀಯ ಲೋಕದಳ ಹೊರಕ್ಕೆ, ಇಂಡಿಯಾ ಒಕ್ಕೂಟ ಛಿದ್ರ +ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡುವುದು ಅಥವಾ ಪ್ರಧಾನಿ ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ವಿಷಯ. ಈ ಬಗ್ಗೆ ದೇವೇಗೌಡರು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅವರ ಪಕ್ಷ ಸಂಪೂರ್ಣ ಕೇಸರಿಮಯವಾಗಿದೆ. ಪುತ್ರ ಕುಮಾರಸ್ವಾಮಿ ಜೆಡಿಎಸ್ ಶಲ್ಯ ಬಿಟ್ಟು ಕೇಸರಿ ಶಲ್ಯ ಹಾಕಿಕೊಂಡಿದ್ದಾರೆ. ಮೊದಲು ದೇವೇಗೌಡರು ಅವರ ಪುತ್ರರಿಗೆ ತಿಳಿ ಹೇಳಲಿ ಎಂದು ನುಡಿದರು. \ No newline at end of file diff --git a/eesanje/url_46_242_9.txt b/eesanje/url_46_242_9.txt new file mode 100644 index 0000000000000000000000000000000000000000..1f1a2c06da9df9c31d1aab606b477d208e9bac07 --- /dev/null +++ b/eesanje/url_46_242_9.txt @@ -0,0 +1,13 @@ +ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿ ಮುಟ್ಟುಗೋಲು : ಪರಮೇಶ್ವರ್ +ಬೆಂಗಳೂರು,ಫೆ.9- ಮಾದಕ ವಸ್ತುಗಳ ವಿರುದ್ಧ ನಮ್ಮ ಸರ್ಕಾರ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದು, ಇಡೀ ರಾಜ್ಯವನ್ನೇ ನಶೆಮುಕ್ತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮಾದಕ ವಸ್ತು ದಂಧೆಯಲ್ಲಿ ತೊಡಗಿದ್ದವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು ಗ್ರಾ. ಜಿಲ್ಲೆಯ ದಾಬಸ್‍ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ ನಡೆದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. +ಮಾದಕವಸ್ತುವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಸಂದರ್ಭದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಯಾವುದೇ ಮುಲಾಜಿಲ್ಲದೇ ಧೈರ್ಯವಾಗಿ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ. ಅದರಂತೆ ಕ್ರಮಗಳಾಗಿದ್ದು, ಮೈಸೂರು, ಮಂಡ್ಯ, ಗದಗ ಜಿಲ್ಲೆಗಳಲ್ಲಿ ಮಾದಕ ವಸ್ತುಗಳ ಹಾವಳಿ ನಿಯಂತ್ರಣಕ್ಕೆ ಬಂದಿದೆ ಎಂದರು. + : ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ +ಅದೇ ರೀತಿ ರಾಜ್ಯವನ್ನು ಮಾದಕದ್ರವ್ಯ ಮುಕ್ತಗೊಳಿಸಲು ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಆಸ್ತಿ ಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು. ಮೂರನೇ ಬಾರಿ ಗೃಹಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಪ್ರತಿಬಾರಿ ಜವಾಬ್ದಾರಿ ಹೊತ್ತಾಗ ವಿಧಾನಸಭೆ ಮತ್ತು ಪರಿಷತ್‍ನಲ್ಲಿ ನಮ್ಮ ಇಲಾಖೆಯ ಬಗ್ಗೆ ಹೆಚ್ವು ಪ್ರಶ್ನೆ ಬಂದಿದ್ದರೆ ಅದು ಡ್ರಗ್ಸ್ ಬಗ್ಗೆ. ಜನ ಸಮುದಾಯದಲ್ಲಿ ಆತಂಕ ಏಕೆ. ಮಾದಕ ವಸ್ತುಗಳು ಇಡೀ ಸಮಾಜವನ್ನು ನಾಶ ಮಾಡುವ ಕೆಲಸ ಮಾಡುತ್ತಿವೆ. ವಿಶೇಷವಾಗಿ ಯುವಕರ ಜೀವನ ಹಾಳು ಮಾಡುತ್ತಿವೆ. ಒಳ್ಳೆ ಸಮಾಜ ನಿರ್ಮಾಣ ಮಾಡುವ ಸಂದರ್ಭದಲ್ಲಿ ಬಹಳ ದೊಡ್ಡ ಸವಾಲಾಗಿ ನಿಂತಿದೆ. ವಿಶ್ವದಲ್ಲಿ ಸವಾಲಾಗಿದೆ ಎಂದರು. +ಕೆಲ ಸಣ್ಣ ರಾಷ್ಟ್ರಗಳು ಸೋತು ಕೈಚೆಲ್ಲಿ ನಿಂತಿದ್ದಾರೆ. ಹಾಲೆಂಡ್, ಸ್ವಿಟ್ಜರ್ಲೆಂಡ್ ಸೇರಿದಂತೆ ಇನ್ನು ಕೆಲ ದೇಶಗಳು ಏನಾದರು ಆಗಲಿ ಎಂಬಂತೆ ಡ್ರಗ್ಸ್ ಮಟ್ಟ ಹಾಕುವುದನ್ನು ನಿಲ್ಲಿಸಿ ಸೋಲನ್ನು ಒಪ್ಪಿಕೊಂಡಿದ್ದಾರೆ. ಕೆಲ ದೇಶಗಳು ಮಾದಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ಜನರ ಕೈಗೆ ಸಿಗಬಾರದು ಎಂಬ ನಿಟ್ಟಿನಲ್ಲಿ ಯುದ್ಧ ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಅದೇ ಮಾದರಿಯಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು. +ಇತಿಹಾಸ, ಪುರಾಣಗಳನ್ನು ತೆಗೆದುನೋಡಿದರೆ ಮಾದಕವಸ್ತುಗಳ ಬಗ್ಗೆ ಉಲ್ಲೇಖವಿದೆ. ಆದರೆ, ಪ್ರಸ್ತುತ ಸಮಾಜಕ್ಕೆ ಮಾರಕವಾಗಿದೆ. ನಾನು ಕ್ರೀಡಾಪಟು ಆಗಿರುವ ಹಿನ್ನೆಲೆಯಲ್ಲಿ ನನ್ನ ಜೀವನದಲ್ಲಿ ಈವರೆಗೂ ಸಿಗರೇಟ್ ಕೂಡ ಸೇವಿಸಿಲ್ಲ. ಅಂತಹ ಪ್ರಯತ್ನವನ್ನು ಸಹ ಮಾಡಿಲ್ಲ. ಮಾದಕವಸ್ತು ಗಂಭೀರವಾಗಿರುವ ವಿಚಾರ. ಮಾನಸಿಕ ತೊಂದರೆ ಜೊತೆಗೆ ಪ್ರಾಣವನ್ನೇ ಕಳೆದುಕೊಳ್ಳುವ ಮಟ್ಟಕ್ಕೆ ಹೋಗುತ್ತಾರೆ. ಹೀಗೆ ಬಿಟ್ಟರೆ ಬಹಳಷ್ಟು ತೊಂದರೆಯನ್ನು ಸಮಾಜ ಅನುಭವಿಸುತ್ತದೆ ಎಂದರು. +ಕೆಲವರು ಇದನ್ನು ಹಣ ಗಳಿಸುವ ಉದ್ದೇಶದಿಂದ ಮಾಡುತ್ತಿದ್ದಾರೆ. ಆದರೆ ಇದರಿಂದ ಯುವಸಮುದಾಯ ಹಾನಿಗೊಳಗಾಗುತ್ತಿರುವುದನ್ನು ಮರೆಯುತ್ತಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಮಾದಕವಸ್ತು ಚಟ ಅಂಟಿಸುವ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದರು. +ಮಾದಕವ್ಯಸನ ಮುಕ್ತ ಕರ್ನಾಟಕವನ್ನು ಸರ್ಕಾರ ಘೋಷಿಸಿದರೆ ಸಾಲುವುದಿಲ್ಲ. ಕೆಳಹಂತದಲ್ಲಿ ಅದನ್ನು ಅನುಷ್ಟಾನಗೊಳಿಸುವುದು ಮುಖ್ಯ. ಈ ಹಿಂದೆ ಉಡ್ತಾ ಬೆಂಗಳೂರು ಆಗಬಾರದು ಎಂದು ಮಾಧ್ಯಮಗಳು ಎಚ್ಚರಿಕೆ ನೀಡಿದ್ದವು. ಶಾಲಾ-ಕಾಲೇಜುಗಳಲ್ಲಿ ಚಾಕ್ಲೆಟ್‍ಗಳಲ್ಲಿ ಬೆರೆಸಿ ಮಾದಕವಸ್ತುಗಳ ಮಾರಾಟ ಕಂಡುಬರುತ್ತಿದೆ. ಇಂತಹ ಮಾಫಿಯಾಗಳ ವಿರುದ್ಧ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದರು. +ಡ್ರಗ್ಸ್ ಪರೀಕ್ಷೆ ಕಿಟ ಒದಗಿಸಲಾಗುತ್ತಿದೆ. ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಕಾನೂನನ್ನು ಮತ್ತಷ್ಟು ಬಲಗೊಳಿಸಲಾಗಿದ್ದು, ಮಾದಕ ವಸ್ತು ಸಾಗಾಣಿಕೆ, ಮಾರಾಟ, ಬಳಕೆಯಲ್ಲಿ ಸಿಲುಕಿ ಬಿದ್ದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಹೇಳಿದರು. +ರಾಜ್ಯದಲ್ಲಿ 42.15 ಕೋಟಿ ರೂ. ಮೌಲ್ಯದ ಮಾದಕ ವಸ್ತು ನಾಶ +2023ಕ್ಕೆ 6,664 ಪ್ರಕರಣಗಳಲ್ಲಿ 9,645 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 233 ಕೆಜಿ ಸಿಂಥೆಟಿಕ್ ಡ್ರಗ್ಸ್ ಹಾಗೂ 7400 ಕೆಜಿ ಕಚ್ಛಾ ಮಾದಕ ವಸ್ತು ಸೇರಿ 128 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಒಂದು ವರ್ಷದಲ್ಲಿ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. +ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಕೇಂದ್ರ ವಲಯ ಐಜಿಪಿ ಡಾ. ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, ಎಡಿಜಿಪಿ (ಕ್ರೈಮ) ಉಮೇಶ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಗುಪ್ತ, ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಹಾಗೂ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇದ್ದರು. \ No newline at end of file diff --git a/eesanje/url_46_243_1.txt b/eesanje/url_46_243_1.txt new file mode 100644 index 0000000000000000000000000000000000000000..7c4fa6e0c3f8c8b763cb8d13db9f3963bb59357c --- /dev/null +++ b/eesanje/url_46_243_1.txt @@ -0,0 +1,6 @@ +ಹನುಮ ಧ್ವಜ ಕಿಚ್ಚು : ಇಂದು ಮಂಡ್ಯ- ಕೆರೆಗೋಡು ಬಂದ್ +ಮಂಡ್ಯ,ಫೆ.9- ಹನುಮ ಧ್ವಜ ಕಿಚ್ಚು ಹೆಚ್ಚಿದ್ದು ಇಂದು ಮಂಡ್ಯ ನಗರ ಹಾಗೂ ಕೆರೆಗೋಡು ಗ್ರಾಮ ಬಂದ್ ಯಶಸ್ವಿಯಾಗಿದೆ. ಹಿಂದೂಪರ ಸಂಘಟನೆಗಳು ಹಾಗೂ ಕೆಲವು ಸಂಘಸಂಸ್ಥೆಗಳು ಬಂದ್‍ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕೆರೆಗೋಡು ಗ್ರಾಮ ಸಂಪೂರ್ಣ ಸ್ತಬ್ಧಗೊಂಡಿದ್ದರೆ, ಮಂಡ್ಯ ನಗರದ ಕೆಲವೆಡೆ ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ ಬಾಗಿಲುಗಳನ್ನು ಮುಚ್ಚಿದ್ದಾರೆ. +ಕೆರೆಗೋಡಿನ ಹನುಮ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ್ಯಾಲಿ ನಡೆಸಿರುವ ಸಂಘಟನೆಗಳ ಮುಖಂಡರು ಸರ್ಕಾರ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮ ಘೋಷಣೆಗಳನ್ನು ಕೂಗುತ್ತಾ ಸಾಗಿದರು. +ಶಿವಸೇನೆ ಮುಖಂಡನನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಸಾಮಾಜಿಕ ಕಾರ್ಯಕರ್ತ +ಇಡೀ ಮಂಡ್ಯ ನಗರದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದ್ದು, ಕೆರೆಗೋಡು ಗ್ರಾಮದ ಹೊರಭಾಗದ ನಾಖಾಬಂಧಿ ಮಾಡಿ ಒಬ್ಬೊಬ್ಬರನ್ನೇ ಪರಿಶೀಲಿಸಿ ಮಂಡ್ಯ ನಗರದ ಕಡೆ ಬಿಡುತ್ತಿದ್ದುದು ಕಂಡುಬಂದಿತು. ಯಾವುದೇ ಕಾರಣಕ್ಕೂ ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಸ್ಥಳೀಯ ಶಾಸಕರು ಹಾಗೂ ಕೆಲವರು ಬೇಕೆಂತಲೇ ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿಂದೂ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಸಂಘಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್ ಮತ್ತು ಜೆಡಿಎಸ್ ಬಂದ್‍ಗೆ ಬೆಂಬಲ ಇಲ್ಲ ಎಂದು ಹೇಳಿದ್ದರೂ ಸಹ ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯನ್ನು ಮಾಡಲಾಗಿದೆ. ಶಾಸಕರ ಮನೆಗಳಿಗೂ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. \ No newline at end of file diff --git a/eesanje/url_46_243_10.txt b/eesanje/url_46_243_10.txt new file mode 100644 index 0000000000000000000000000000000000000000..79557a3d1d26e36e99834511c462f4b4a807301c --- /dev/null +++ b/eesanje/url_46_243_10.txt @@ -0,0 +1,10 @@ +ವರಿಷ್ಠರ ಭೇಟಿಗೆ ದೆಹಲಿಗೆ ತೆರಳಿದ ವಿಜಯೇಂದ್ರ +ಬೆಂಗಳೂರು,ಫೆ.8- ಪ್ರಸ್ತುತ ಘೋಷಣೆಯಾಗಿರುವ ರಾಜ್ಯಸಭಾ ಚುನಾವಣೆ ಹಾಗೂ ಸದ್ಯದಲ್ಲೇ ಎದುರಾಗಲಿರುವ ವಿಧಾನಪರಿಷತ್ ಚುನಾವಣೆಯ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದೆಹಲಿಗೆ ತೆರಳಿದ್ದಾರೆ. +ಫೆ.27ರಂದು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಒಂದು ಸ್ಥಾನ ಖಚಿತವಾಗಿದೆ. ಆದರೆ ಅಭ್ಯರ್ಥಿ ಯಾರು ಎನ್ನುವ ವಿಚಾರ ನಿರ್ಧಾರವಾಗಿಲ್ಲ. ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತೊಂದು ಅವಗೆ ಮುಂದುವರೆಯುವ ಅಪೇಕ್ಷೆ ಹೊಂದಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ. +ಹಾಲಿ ಸದಸ್ಯರನ್ನೇ ಪುನರಾಯ್ಕೆ ಮಾಡಲು ಬಯಸಿದ್ದರೆ ಅಭ್ಯರ್ಥಿ ಹೆಸರು ಶಿಫಾರಸ್ಸು ಮಾಡುವುದು ಬೇಡ, ಹೊಸಬರಿಗೆ ಅವಕಾಶ ನೀಡುವ ನಿರ್ಧಾರ ಮಾಡಿದ್ದಲ್ಲಿ ಅಥವಾ ಎರಡನೇ ಅಭ್ಯರ್ಥಿ ಕಣಕ್ಕಿಳಿಸಲು ಸೂಚಿಸಿದಲ್ಲಿ ಮಾತ್ರ ಅಭ್ಯರ್ಥಿ ಹೆಸರು ಶಿಫಾರಸು ಮಾಡುವಂತೆ ಈಗಾಗಲೇ ರಾಜ್ಯ ಕೋರ್ ಕಮಿಟಿ ನಿರ್ಧರಿಸಿದೆ. +ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ +ಈ ವಿಷಯವನ್ನೂ ಪ್ರಸ್ತಾಪಿಸಿ ವಿಜಯೇಂದ್ರ ಚರ್ಚೆ ನಡೆಸಲಿದ್ದು, ಒಂದು ವೇಳೆ ಎರಡನೇ ಸ್ಥಾನ ಜೆಡಿಎಸ್‍ಗೆ ಕೊಡಬೇಕೆಂಬ ಚಿಂತನೆ ಇದ್ದರೆ, ಆ ಬಗ್ಗೆಯೂ ಚರ್ಚಿಸಿ ಹೈಕಮಾಂಡ್ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿಧಾನ ಪರಿಷತ್‍ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದಕ್ಕೂ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಲೇ ಚರ್ಚಿಸಿ ನಿರ್ಧಾರಕ್ಕೆ ಬರಲು ಹೈಕಮಾಂಡ್ ಜೊತೆ ಮಾತುಕತೆ ನಡೆಸಲಾಗುತ್ತದೆ. +ಬೆಂಗಳೂರು ಪದವೀಧರರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇದರಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೇ ಉಪಚುನಾವಣೆ ಘೋಷಣೆಯಾಗಿದ್ದು, ಆ ಸ್ಥಾನವನ್ನು ಮಿತ್ರಪಕ್ಷ ಜೆಡಿಎಸ್‍ಗೆ ನೀಡಲಾಗಿದೆ. ಹಾಗಾಗಿ ಉಳಿದ ನಾಲ್ಕು ಸ್ಥಾನಗಳ ಅಭ್ಯರ್ಥಿಗಳ ಆಯ್ಕೆ ವಿಚಾರ ಹಾಗೂ ಮೈತ್ರಿ ಧರ್ಮಪಾಲನೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. +ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಅವರ ಅವ 2024ರ ಜೂನ್ 21ಕ್ಕೆ ಕೊನೆ ಆಗಲಿದೆ. +ಜನತಾದರ್ಶನಕ್ಕೆ ಹರಿದುಬಂದ ಜನಸಾಗರ +ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದು, ಈ ಸ್ಥಾನದ ಅವ 2024ರ ಜೂನ್‍ರವರೆಗೆ ಇರುವ ಕಾರಣ ಉಪಚುನಾವಣೆ ಮಾಡುತ್ತಿಲ್ಲ. ಆದರೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಸದಸ್ಯರಾಗಿದ್ದ ಪುಟ್ಟಣ್ಣ ಮಾರ್ಚ್ 16ರಂದು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ಅವ 2026ರ ನವೆಂಬರ್ 11ರವರೆಗೆ ಇದೆ. ಹೀಗಾಗಿ ಉಪಚುನಾವಣೆ ನಡೆಸಲಾಗುತ್ತಿದೆ. \ No newline at end of file diff --git a/eesanje/url_46_243_11.txt b/eesanje/url_46_243_11.txt new file mode 100644 index 0000000000000000000000000000000000000000..cae7f27fa2cf0f997bc47f53089c8c1b82c90130 --- /dev/null +++ b/eesanje/url_46_243_11.txt @@ -0,0 +1,10 @@ +ಈಗಿನ ಸರ್ಕಾರದಲ್ಲೂ 40% ಕಮಿಷನ್ ದಂಧೆ ನಡೀತಿದೆ : ಕೆಂಪಣ್ಣ +ಬೆಂಗಳೂರು,ಫೆ.8- ಈ ಮೊದಲು ಗುತ್ತಿಗೆದಾರರಿಂದ ಶಾಸಕರೇ ನೇರವಾಗಿ ಹಣ ಕೇಳುತ್ತಿದ್ದರೂ ಇದೀಗ ಅಧಿಕಾರಿಗಳೆ ಹಣ ಕೆಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ ಇದ್ದಂತಹ ಶೇ.40ರಷ್ಟು ಕಮಿಷನ್ ದಂಧೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಕಂಟಿನ್ಯೂ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಅದೇ ಪರಿಸ್ಥಿತಿ 40 % ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿ ಕಂಟಿನ್ಯೂ ಆಗಿದೆ. ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ ವಿರುದ್ದವೂ ಗುಡುಗಿರುವ ಅವರು ಸರ್ಕಾರ ಈ ಕೂಡಲೇ ಪ್ಯಾಕೇಜ್ ಟೆಂಡರ್ ಗಳನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ಪ್ಯಾಕೇಜ್ ಟೆಂಡರ್ ಕುರಿತಂತೆ ನಾವು ಹಲವು ಭಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ ಜೊತೆಗೆ ಹತ್ತಾರು ಪತ್ರ ಬರೆದು ಒತ್ತಾಯಿಸಿದ್ದೇವೆ. ಆದರೆ, ಅವರು ನಮ್ಮ ಮಾತನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಿದರು. +ಪೊಲೀಸ್ ವಸತಿ ಗೃಹ, ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಮಾಡಲಾಗಿದೆ ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗುತ್ತದೆ ಅಲ್ಲದೆ, ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಆರೋಪಿಸಿದರು. +ಈ ಕುರಿತಂತೆ ಬಿಬಿಎಂಪಿ ಮುಖ್ಯ ಅಭಿಯಂತರರನ್ನು ಪ್ರಶ್ನಿಸಿದರೆ ಅವರು ಮೇಲಾಧಿಕಾರಿಗಳ ಕಡೆ ಬೊಟ್ಟು ಮಾಡುತ್ತಾರೆ ಸಚಿವರನ್ನು ಕೇಳಿದರೆ ಅವರು ಶಾಸಕರ ಕಡೆ ಬೆರಳು ತೋರಿಸುತ್ತಾರೆ.ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಟೆಂಡರ್ ಕೊಡಿಸಲು ಯತ್ನಿಸುತ್ತಿದ್ದಾರೆ ಇದರಿಂದ ಭಾರಿ ಭ್ರಷ್ಟಾಚಾರಕ್ಕೆ ಆಸ್ಪದ ಮಾಡಿಕೊಟ್ಟಂತಾಗುತ್ತದೆ ಎಂದು ಕೆಂಪಣ್ಣ ಗುಡುಗಿದರು. +ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!? +ಹೀಗಾಗಿ ಈ ಕೂಡಲೇ ಪ್ಯಾಕೇಜ್ ಟೆಂಡರ್ ರದ್ದುಪಡಿಸಿ ಎಲ್ಲಾ ರೀತಿಯ ಕಾಮಗಾರಿಗಳನ್ನು ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ಎಲ್ಲರಿಗೂ ನ್ಯಾಯ ಸಿಗುತ್ತೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ಒಂದು ವಾರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚು ಪ್ಯಾಕೇಜ್ ಟೆಂಡರ್ ಆಹ್ವಾನಿಸಲಾಗಿದೆ. ಈ ಟೆಂಡರ್ ಮೇಲೆ ನಮಗೆ ಹಲವಾರು ಅನುಮಾನ ಮೂಡಿದೆ. ಹೀಗಾಗಿ ಪ್ಯಾಕೇಜ್ ಟೆಂಡರ್ ರದ್ದು ಮಾಡಿ ಹೊಸದಾಗಿ ಟೆಂಡರ್ ಕರೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. +ಹೇಗಾದರೂ ಮಾಡಿ ನಮಗೆ ಗುತ್ತಿಗೆ ನೀಡಿ ಎಂದು ಅಧಿಕಾರಿಗಳನ್ನು ಕೇಳಿದರೆ ಅವರು ಹಣ ಕೇಳುತ್ತಿದ್ದಾರೆ. ಈ ಹಿಂದೆ ನಾವು ಪೂರ್ಣಗೊಳಿಸಿರುವ ಕಾಮಗಾರಿ ಮುಗಿದು ಎರಡು ವರ್ಷ ಕಳೆದರೂ ಬಾಕಿ ಬಿಲ್ ಬಿಡುಗಡೆಯಾಗಿಲ್ಲ. ಈಗಲೂ ಶೇ.40 ರಷ್ಟು ಕಮಿಷನ್ ದಂಧೆ ಮುಂದುವರೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಾವು ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಈ ಸರ್ಕಾರದಲ್ಲೂ ಶೇ.40ರಷ್ಟು ಕಮಿಷನ್ ದಂಧೆ ಮುಂದುವರೆದಿರುವ ಬಗ್ಗೆ ನಾವು ದೂರು ನೀಡುತ್ತೇವೆ ಎಂದು ಕೆಂಪಣ್ಣ ಗುಡುಗಿದ್ದಾರೆ. +ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ +ಬಿಬಿಎಂಪಿಯಲ್ಲಿ 15 ಚೀಪ್ ಇಂಜಿನಿಯರ್‍ಗಳು ಇದ್ದಾರೆ ಅವರು ಪ್ರತಿಯೊಂದು ಟೆಂಡರ್‍ನಲ್ಲೂ ಹಣ ಕೇಳುತ್ತಾರೆ. ಯಾರು ಕಮಿಷನ್ ಕೇಳಿದವರು ಎಂದು ಸದ್ಯಕ್ಕೆ ಹೇಳಲ್ಲ ಅವಶ್ಯಕತೆ ಬಿದ್ದರೆ ಮುಂದೆ ಹೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ. ಅಕ್ರಮಗಳ ತನಿಖೆ ನಡೆಸುತ್ತಿರುವ ನಾಗಮೋಹನ್‍ದಾಸ್ ಸಮಿತಿಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದೇವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_243_12.txt b/eesanje/url_46_243_12.txt new file mode 100644 index 0000000000000000000000000000000000000000..013ff2f89fb999792dbfd8fa917f7a2548d5fe4b --- /dev/null +++ b/eesanje/url_46_243_12.txt @@ -0,0 +1,6 @@ +ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ +ಚಿಕ್ಕಮಗಳೂರು,ಫೆ, 8- ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿದೆ. ಮಹಿಳೆಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಇರುವುದು ದೃಢಪಟ್ಟಿದೆ. ಆ ಮೂಲಕ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈಗಾಗಲೆ ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ನಾಲ್ವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ನಾಲ್ಕು ಸಕ್ರಿಯ ಪ್ರಕರಣಗಳಿಗೆ ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. +ಜಿಲ್ಲೆಯಲ್ಲಿ ಪತ್ತೆಯಾದ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಕೊಪ್ಪ ತಾಲೂಕಿನ ಒಎಲ್‍ವಿ ಎಸ್ಟೇಟ್ ಭಾಗದಲ್ಲಿ ಕಂಡು ಬಂದಿದೆ. ಹೀಗಾಗಿ ಆರೋಗ್ಯ ಇಲಾಖೆಯು ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆ ಯಲ್ಲಿ ಕೆಎಫ್‍ಡಿ ವಾರ್ಡ್ ತೆರೆದಿದೆ. +ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ +ಜಿಲ್ಲೆಯ ಮೂರು ತಾಲೂಕುಗಳಲ್ಲಿ ಆತಂಕ ಸೃಷ್ಟಿಯಾಗಿದ್ದು ಶಿವಮೊಗ್ಗ- ಉತ್ತರಕನ್ನಡಕ್ಕೆ ಹೊಂದಿಕೊಂಡಂತಿರುವ ಕಾಫಿನಾಡು ಮಲೆನಾಡು ಭಾಗದಲ್ಲಿ ಪ್ರತಿ ವರ್ಷ ಸೋಂಕಿನ ಆತಂಕವಿರುತ್ತದೆ. ಸೋಂಕಿಗೆ ವೃದ್ಧ ಬಲಿಯಾದ ಹಿನ್ನೆಲೆ ಜಿಲ್ಲಾದ್ಯಂತ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. +ಅರಣ್ಯದಲ್ಲಿ ಸೋಂಕು ಹರಡದಂತೆ ಔಷ„ ಸಿಂಪಡಣೆ ಮಾಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಔಷ„ ವಿತರಣೆ ಮಾಡುತ್ತಿದ್ದಾರೆ. ಜನರು ಎಚ್ಚರಿಕೆಯಿಂದ ಇರಬೇಕು ಜಮೀನಿನಲ್ಲಿ ಮಂಗಗಳು ಸಾವನ್ನಪ್ಪಿದ್ದರೆ ಆರೋಗ್ಯ ಇಲಾಖೆಗೆ ತಿಳಿಸಬೇಕೆಂದುಮನವಿ ಮಾಡಲಾಗಿದೆ. \ No newline at end of file diff --git a/eesanje/url_46_243_2.txt b/eesanje/url_46_243_2.txt new file mode 100644 index 0000000000000000000000000000000000000000..3bdbdddaf923815c5666ca82e9b0706b76a52fee --- /dev/null +++ b/eesanje/url_46_243_2.txt @@ -0,0 +1,7 @@ +ಚಾಮರಾಜನಗರ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಖಾಯಂ ನೌಕರಿಗೆ ಮನವಿ +ಬೆಂಗಳೂರು,ಫೆ.8- ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದ ಆಮ್ಲಜನಕ ಕೊರತೆ ದುರಂತದಲ್ಲಿ ಮೃತಪಟ್ಟ ಕುಟುಂಬದವರಿಗೆ ಖಾಯಂ ನೌಕರಿ ನೀಡಬೇಕು ಎಂದು ಸಂತ್ರಸ್ಥ ಕುಟುಂಬದ ಸದಸ್ಯರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಯವರಲ್ಲಿ ಮನವಿ ಮಾಡಿದರು. +ಜನತಾದರ್ಶನಕ್ಕಾಗಿ ಆಗಮಿಸಿದ್ದ ಸಂತ್ರಸ್ತ ಕುಟುಂಬದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಅದಕ್ಕೂ ಮೊದಲು ಜನತಾದರ್ಶನದ ಸಿದ್ಧತೆಗಳನ್ನು ವೀಕ್ಷಿಸುತ್ತಾ ಬಂದ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಕುಟುಂಬದ ಸದಸ್ಯರು ಆಕ್ಸಿಜನ್ ಕೊರತೆ ದುರಂತದಲ್ಲಿ 70 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು. +ಆ ವೇಳೆ ಸ್ಥಳಕ್ಕಾಗಮಿಸಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ರವರು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಗುತ್ತಿಗೆ ಆಧಾರದ ನೌಕರಿ ನೀಡಿದ್ದಾರೆ. ನಮಗೆ ಖಾಯಂ ನೌಕರಿ ಬೇಕು. ಗುತ್ತಿಗೆ ಆಧಾರಿತ ಕೆಲಸ ಬೇಡ ಎಂದು ಮನವಿ ಮಾಡಿದರು. +ಜನತಾದರ್ಶನಕ್ಕೆ ಬಂದು ಶಕ್ತಿಸೌಧ ಕಣ್ತುಂಬಿಕೊಂಡ ಜನರು +ಸರ್ಕಾರದ ಮೇಲೆ ತಮಗೆ ನಂಬಿಕೆಯಿದೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆಂಬ ವಿಶ್ವಾಸವಿದೆ. ಗುತ್ತಿಗೆ ನೌಕರಿಯನ್ನು ನಂಬಿಕೊಂಡು ಬದುಕು ನಡೆಸಲಾಗುವುದಿಲ್ಲ. ಮೃತಪಟ್ಟವರಲ್ಲಿ ಶೇ. ಅರ್ಧ ಭಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿದ್ದಾರೆ. ಹೀಗಾಗಿ ನೀವು ಈ ಕುರಿತು ಗಮನ ಹರಿಸಬೇಕು ಎಂದು ಮನವಿ ಮಾಡಿದರು. +ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏಕಾಏಕಿ ಖಾಯಂ ನೌಕರಿ ನೀಡಲು ಸಾಧ್ಯವಾಗುವುದಿಲ್ಲ. ವಿದ್ಯಾರ್ಹತೆ ಹಾಗೂ ಇತರ ಮಾನದಂಡಗಳನ್ನು ಪರಿಶೀಲಿಸಬೇಕಾಗುತ್ತದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತದೆ. ದುಡುಕಿ ಸಿಕ್ಕಿರುವ ಅವಕಾಶವನ್ನು ಕಳೆದುಕೊಳ್ಳಬೇಡಿ, ಗುತ್ತಿಗೆ ನೌಕರಿಯಲ್ಲೇ ಮುಂದುವರೆಯಿರಿ. ಮುಂದಿನ ದಿನಗಳಲ್ಲಿ ನಿಮಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_243_3.txt b/eesanje/url_46_243_3.txt new file mode 100644 index 0000000000000000000000000000000000000000..f9e6ac42d3c026dbe8145c851a15df9807275ef9 --- /dev/null +++ b/eesanje/url_46_243_3.txt @@ -0,0 +1,6 @@ +ಜನತಾದರ್ಶನಕ್ಕೆ ಬಂದು ಶಕ್ತಿಸೌಧ ಕಣ್ತುಂಬಿಕೊಂಡ ಜನರು +ಬೆಂಗಳೂರು,ಫೆ.8- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನಡೆಸಿದ ರಾಜ್ಯಮಟ್ಟದ ಜನತಾದರ್ಶನದ ವೇಳೆ ಜನಸಾಮಾನ್ಯರಿಂದ ಫೋಟೊಶೂಟ್ಗಳು ಯಥೇಚ್ಛವಾಗಿ ಕಂಡುಬಂದವು.ದೂರದೂರುಗಳಿಂದ ಆಗಮಿಸಿದ್ದ ಸಾವಿರಾರು ಜನ ವಿಧಾನಸೌಧದ ಆವರಣದಲ್ಲಿ ನಿಂತು ಸೆಲಿ ಹಾಗೂ ಮೊಬೈಲ್ಗಳಲ್ಲಿ ತೆಗೆಸಿಕೊಂಡರು. +ವಿಧಾನಸೌಧದ ಪೂರ್ವದ್ವಾರದಲ್ಲಿ ಜನತಾದರ್ಶನಕ್ಕಾಗಿ ತಾತ್ಕಾಲಿಕ ಟೆಂಟ್ಗಳು ಹಾಗೂ ಆಸನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬಸ್ ನಿಲ್ದಾಣದಿಂದ ವಿಧಾನಸೌಧವನ್ನು ಪ್ರವೇಶಿಸಲು ಅನುಕೂಲವಾಗುವಂತೆ ಪೂರ್ವದ್ವಾರದಲ್ಲೇ ವಿಧಾನಸೌಧದ ಗೇಟನ್ನು ತೆರೆಯಲಾಗಿತ್ತು. ಒಳಬಂದ ಸಾರ್ವಜನಿಕರು ಶಕ್ತಿಸೌಧವನ್ನು ಕಣ್ಣು ತುಂಬಿಕೊಂಡು ಖುಷಿ ಪಟ್ಟರು. ತಮ್ಮ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವುದಕ್ಕಿಂತಲೂ ಹೆಚ್ಚಿನ ಉತ್ಸಾಹ ವಿಧಾನಸೌಧದ ಮುಂದೆ ಫೋಟೊ ತೆಗೆಸಿಕೊಳ್ಳುವುದರಲ್ಲೇ ಕಂಡುಬಂದಿತು. +ಗಂಭೀರ ಸಮಸ್ಯೆ ಇರುವುದನ್ನು ಹೊರತುಪಡಿಸಿದರೆ ಉಳಿದ ಬಹಳಷ್ಟು ಮಂದಿ ಫೋಟೋಶೂಟ್ಗಳಲ್ಲಿ ಮಗ್ನರಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಕಟ್ಟಡದ ಒಳಗೆ ಜನರ ಪ್ರವೇಶಕ್ಕೆ ಅವಕಾಶವಾಗದಂತೆ ಬಂದೋಬಸ್ತ್ ಆಯೋಜಿಸಲಾಗಿತ್ತು.ಶಕ್ತಿಸೌಧದ ಆವರಣದಲ್ಲಿನ ತಾತ್ಕಾಲಿಕ ಟೆಂಟ್ಗಳಲ್ಲಿ ಜಾಗ ಸಾಲದೆ ನೂರಾರು ಜನ ಬಿಸಿಲಿನಲ್ಲಿ ನಿಂತು ಬಸವಳಿಯುತ್ತಿದ್ದರು. +ಕೋಟ್ಯಾಂತರ ಮೌಲ್ಯದ ಕಾಂಪ್ಲೆಕ್ಸ್ ವಿಚಾರಕ್ಕೆ ನಡೆದಿತ್ತೇ ಜೋಡಿ ಕೊಲೆ..? +ಮುಖ್ಯಮಂತ್ರಿಯವರಿಗೆ ಅರ್ಜಿ ಸಲ್ಲಿಸಲು ಆಗಮಿಸುವವರ ಜೊತೆಗೆ ಶಕ್ತಿಸೌಧದ ವೀಕ್ಷಣೆಗೆ ಬಂದವರ ಸಂಖ್ಯೆಯೂ ಹೆಚ್ಚಾಗಿತ್ತು. ಬೆಳಿಗ್ಗೆ 10 ಗಂಟೆಗೆ ಆರಂಭವಾಗಬೇಕಾಗಿದ್ದ ಜನತಾದರ್ಶನ 11 ಗಂಟೆಯಾದರೂ ಶುರುವಾಗಿರಲಿಲ್ಲ. \ No newline at end of file diff --git a/eesanje/url_46_243_4.txt b/eesanje/url_46_243_4.txt new file mode 100644 index 0000000000000000000000000000000000000000..1f5de3de2585f942bab68506a70c6e17cfa8ca82 --- /dev/null +++ b/eesanje/url_46_243_4.txt @@ -0,0 +1,5 @@ +ವಿಡಿಯೋ ಕಾಲ್‍ನಲ್ಲಿ ಜನತಾದರ್ಶನ ಮಾಹಿತಿ ಪಡೆದ ಡಿಸಿಎಂ ಡಿಕೆಶಿ +ಬೆಂಗಳೂರು,ಫೆ.8- ವಿಶ್ರಾಂತಿಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಡಿಯೋ ಕಾಲ್ ಮೂಲಕ ಜನತಾದರ್ಶನವನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ವಿಡಿಯೋ ಕಾಲ್ ಮಾಡಿದ ಡಿ.ಕೆ.ಶಿವಕುಮಾರ್ರವರು ಎಷ್ಟು ಜನ ಸೇರಿದ್ದಾರೆ, ಯಾವ ರೀತಿ ಸ್ಪಂದನೆ ದೊರೆಯುತ್ತಿದೆ ಎಂಬೆಲ್ಲಾ ಮಾಹಿತಿ ಪಡೆದುಕೊಂಡರು. +ವಿಡಿಯೋ ಕಾಲ್ ಮೂಲಕವೇ ಜನತಾಸ್ಪಂದನದಲ್ಲಿದ್ದ ಜನರನ್ನು ವೀಕ್ಷಿಸಿದರು. ರಾಕೇಶ್ ಸಿಂಗ್ರವರು ತಮ್ಮ ಮೊಬೈಲ್ ಅನ್ನು ಜನರತ್ತ ತಿರುಗಿಸಿ ನೇರ ಚಿತ್ರಣವನ್ನು ಉಪಮುಖ್ಯಮಂತ್ರಿಯವರಿಗೆ ವಿವರಿಸಲಾರಂಭಿಸಿದರು. +ಕೋಟ್ಯಾಂತರ ಮೌಲ್ಯದ ಕಾಂಪ್ಲೆಕ್ಸ್ ವಿಚಾರಕ್ಕೆ ನಡೆದಿತ್ತೇ ಜೋಡಿ ಕೊಲೆ..? +ವೇದಿಕೆಯ ವ್ಯವಸ್ಥೆ, ಅರ್ಜಿಗಳ ನೋಂದಾವಣಿ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ರಾಕೇಶ್ ಸಿಂಗ್ ಸುದೀರ್ಘವಾಗಿ ವಿವರಣೆ ನೀಡಿದರು. ಮುಖ್ಯಮಂತ್ರಿಯವರ ಜನತಾದರ್ಶನಕ್ಕೆ ಇಬ್ಬರು ಸಚಿವರನ್ನು ಹೊರತುಪಡಿಸಿದರೆ ಉಳಿದ ಯಾರೂ ಭಾಗವಹಿಸಿರಲಿಲ್ಲ. ಹಾಗೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಕೂಡ ಇಂದು ಮನೆಯಲ್ಲಿಯೇ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಅದರ ನಡುವೆ ಜನಸ್ಪಂದನದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. diff --git a/eesanje/url_46_243_5.txt b/eesanje/url_46_243_5.txt new file mode 100644 index 0000000000000000000000000000000000000000..3bc19de06eceb8014b19ac320441c7a90cc13885 --- /dev/null +++ b/eesanje/url_46_243_5.txt @@ -0,0 +1,10 @@ +ಬಿಜೆಪಿಯಿಂದ ಗ್ರಾಮ ಚಲೋ.. : 28 ಸಾವಿರ ಹಳ್ಳಿಗಳಲ್ಲಿ ಅಭಿಯಾನ +ಬೆಂಗಳೂರು,ಫೆ.8- ಬಿಜೆಪಿ ವತಿಯಿಂದ ನಾಳೆಯಿಂದ ಫೆ.11ರವರೆಗೆ ಗ್ರಾಮ ಚಲೋ ಅಭಿಯಾನ ನಡೆಯಲಿದೆ ಎಂದು ಬಿಜೆಪಿ ರಾಜಾ್ಯಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. ಹೆಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಯಂತೆ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ರಾಜ್ಯದಲ್ಲಿ 28 ಸಾವಿರಕ್ಕೂ ಹೆಚ್ಚು ಹಳ್ಳಿಗಳು, 19 ಸಾವಿರ ನಗರ ಬೂತ್ಗಳಲ್ಲಿ ಒಟ್ಟಾರೆ 42 ಸಾವಿರ ಕಾರ್ಯಕರ್ತರು ಮೂರು ದಿನಗಳ ಕಾಲ ನಿರಂತರವಾಗಿ ಅಭಿಯಾನದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು. +ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಂಖ್ಯೆ 454, 455ರಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ. 2047ನೇ ಇಸವಿಗೆ ಭಾರತವು ವಿಕಸಿತ ಭಾರತವಾಗಿ ಪರಿವರ್ತನೆ ಹೊಂದಬೇಕು, ಭಾರತ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ ಕಾಣಬೇಕೆಂಬ ಮೋದಿಜೀ ಕನಸು ನನಸಾಗಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸವಲತ್ತುಗಳು ಸಿಗಬೇಕು ಎಂದರು. +ಈ ನಿಟ್ಟಿನಲ್ಲಿ ಗ್ರಾಮ ಚಲೋ ಅಭಿಯಾನವು ಉತ್ತಮ ಅಭಿಯಾನ ಆಗಲಿದೆ. ಈ ಅಭಿಯಾನದ ಮೂಲಕ ಪ್ರತಿ ಗ್ರಾಮ, ಪ್ರತಿ ಮನೆಗೂ ಬಿಜೆಪಿ ಕಾರ್ಯಕರ್ತರು ತಲುಪಲಿದ್ದು, ಕೇಂದ್ರ ಸರಕಾರವು ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಕೊಟ್ಟ ಜನಪರ ಯೋಜನೆಗಳನ್ನು ತಲುಪಿಸಲಾಗುತ್ತದೆ ಎಂದು ತಿಳಿಸಿದರು. +ಈ ಅಭಿಯಾನವು ಬಿಜೆಪಿಗೆ ದೊಡ್ಡ ಶಕ್ತಿಯಾಗಲಿದೆ. ಮೋದಿ ಮತ್ತೊಮ್ಮೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು, ಮೋದಿಜೀ ಅವರು 3ನೇ ಬಾರಿಗೆ ಪ್ರಧಾನಿ ಆಗಬೇಕೆಂಬ ಆಶಯವನ್ನು ಹೊಂದಿ ಗೋಡೆ ಬರಹ ಬರೆಯಲಾಗುವುದು. ದೇಶದ ಪ್ರತಿಯೊಬ್ಬ ನಾಗರಿಕರೂ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸುತ್ತಿದ್ದಾರೆ ಎಂದರು. +ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆಯಾಗಿದೆ. ಫೆ.10ರಂದು ರಾತ್ರಿ ನೇರವಾಗಿ ದೆಹಲಿಯಿಂದ ಮೈಸೂರಿಗೆ ಬರುತ್ತಾರೆ. 11ರ ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆದ ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಸಂಜೆ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಬಿಜೆಪಿ ಕಾರ್ಯಕರ್ತರ ಸಭೆಯೂ ನಡೆಯಲಿದೆ ಎಂದು ವಿವರಿಸಿದರು. +ಲೋಕಸಭಾ ಚುನಾವಣೆ ಸಂಬಂಧ ಸರ್ವೇ ಫಲಿತಾಂಶವೊಂದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ದೇಶದಲ್ಲಿ ನರೇಂದ್ರ ಮೋದಿ ಪರ ಅಲೆ ಇದ್ದು, ಸಹಜವಾಗಿ ಬಿಜೆಪಿ ಪರವಾದ ವಾತಾವರಣ ನಿರ್ಮಾಣವಾಗಿದೆ. ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರಿಗೆ ಮನವರಿಕೆ ಆಗಿದೆ ಎಂದರು. +ಕರ್ನಾಟಕದ ಬೆನ್ನಲ್ಲೇ ದೆಹಲಿಯಲ್ಲಿ ಕೇರಳ, ತಮಿಳುನಾಡು ಪ್ರತಿಭಟನೆ +ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. 28 ಸೀಟುಗಳ ಮತ ಎಣಿಕೆ ಸಂದರ್ಭದಲ್ಲಿ ಒಂದೊಂದು ಸೀಟು ಗೆಲ್ಲಲು ಕೂಡ ಕಾಂಗ್ರೆಸ್ನವರು ಪರಿತಪಿಸುತ್ತಾರೆ. ಅಂಥ ವಾತಾವರಣ ಈಗಾಗಲೇ ನಿರ್ಮಾಣವಾಗಿದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿದ್ದಾರೆ. ಮೋದಿ ಮತ್ತೊಮ್ಮೆ ಎಂಬ ವಿಷಯದಲ್ಲಿ ಮತದಾರರೂ ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಎಲ್ಲ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು. +ರಾಜ್ಯದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದ್ರೆ, ಶರಣು ತಳ್ಳಿಕೆರೆ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್,ಬಿಜೆಪಿ ಮುಖಂಡರು ರುದ್ರೇಶ್ ಈ ಸಂದರ್ಭದಲ್ಲಿದ್ದರು. \ No newline at end of file diff --git a/eesanje/url_46_243_6.txt b/eesanje/url_46_243_6.txt new file mode 100644 index 0000000000000000000000000000000000000000..9c23f0a9457981f7c5624d99088e73a19fda7c68 --- /dev/null +++ b/eesanje/url_46_243_6.txt @@ -0,0 +1,9 @@ +ಜನತಾದರ್ಶನದ ಅರ್ಜಿಗಳನ್ನು 3 ತಿಂಗಳೊಳಗೆ ಇತ್ಯರ್ಥ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.8- ಜನತಾದರ್ಶನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು 3 ತಿಂಗಳೊಳಗಾಗಿಯೇ ಇತ್ಯರ್ಥಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ ರಾಜ್ಯಮಟ್ಟದ ಜನಸ್ಪಂದನದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಈ ಹಿಂದೆ ನಡೆದ ಮೊದಲ ಜನತಾದರ್ಶನದಲ್ಲಿ 5 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅದರಲ್ಲಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಶೇ.2 ರಷ್ಟು ಮಾತ್ರ ಬಾಕಿ ಉಳಿದಿವೆ ಎಂದು ಹೇಳಿದರು. +ಇಂದಿನ ಜನತಾದರ್ಶನಕ್ಕೆ 10 ಸಾವಿರಕ್ಕಿಂತಲೂ ಹೆಚ್ಚಿನ ಜನ ಆಗಮಿಸಿದ್ದಾರೆ. ಅವರಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಸಾಧ್ಯವಾಗದೇ ಇದ್ದರೆ ಮುಂದಿನ 3 ತಿಂಗಳೊಳಗಾಗಿ ಪರಿಹಾರ ದೊರಕಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾನೂನಾತ್ಮಕವಾಗಿ ಸಾಧ್ಯ ಇರುವ ಎಲ್ಲಾ ಪರಿಹಾರಗಳನ್ನೂ ಒದಗಿಸಲಾಗುವುದು. ಒಂದು ವೇಳೆ ಸಾಧ್ಯವಿಲ್ಲ ಎಂದಾದರೆ ಅದಕ್ಕೆ ಸಕಾರಣಗಳ ಹಿಂಬರಹವನ್ನು ಅರ್ಜಿದಾರರ ವಿಳಾಸಕ್ಕೆ ತಲುಪಿಸುವುದಾಗಿ ಹೇಳಿದರು. +ಇದು 2 ನೇ ರಾಜ್ಯಮಟ್ಟದ ಜನತಾದರ್ಶನವಾಗಿದೆ. ಇದಕ್ಕೂ ಮೊದಲು ಜಿಲ್ಲಾ ಕೇಂದ್ರಗಳಲ್ಲಿ 108 ಜನಸ್ಪಂದನಗಳನ್ನು ನಡೆಸಲಾಗಿದೆ. ಆಡಳಿತ ಬೆಂಗಳೂರಿಗೆ ಕೇಂದ್ರೀಕೃತವಾಗಬಾರದು. ಜನರ ಬಳಿಗೆ ಹೋಗಬೇಕು ಎಂಬುದು ನಮ್ಮ ಮೂಲ ಉದ್ದೇಶ. ಸಣ್ಣಪುಟ್ಟ ಸಮಸ್ಯೆಗಳಿಗೆ ಜನರು ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲೇ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ. ಅಲ್ಲಿ ಸಾಧ್ಯವಾಗದೇ ಹೋದರೆ ರಾಜ್ಯಮಟ್ಟದಲ್ಲಿ ಕಾನೂನುಬದ್ಧವಾದ ಪರಿಹಾರ ದೊರಕಿಸುವುದಾಗಿ ಸ್ಪಷ್ಟಪಡಿಸಿದರು. +ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!? +8 ತಿಂಗಳಲ್ಲಿಯೇ ನಮ್ಮ ಸರ್ಕಾರ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದು ಸಾಧ್ಯವಿಲ್ಲ ಎಂದು ಹೇಳಿದ್ದ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತುಹೋಗಲಿವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜನ ಅವರ ಮಾತುಗಳನ್ನು ನಂಬಬಾರದು. ಗ್ಯಾರಂಟಿ ಯೋಜನೆಗಳು ಬಡವರ ಅನುಕೂಲಕ್ಕಾಗಿ ಅಸಮಾನತೆಯನ್ನು ತೊಲಗಿಸಲು ರೂಪಿಸಿದ ಯೋಜನೆಗಳು. ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದರು. +ಗ್ಯಾರಂಟಿ ಯೋಜನೆಗಳಿಂದ ಉಳಿದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಮತ್ತು ವಿರೋಧಪಕ್ಷದವರಿಗೆ ಅಭಿವೃದ್ಧಿ ಎಂದರೆ ಗೊತ್ತಿಲ್ಲ. ಅಧಿಕಾರದಲ್ಲಿದ್ದಾಗ ಅವರು ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಈಗ ಆರೋಪ ಮಾಡುತ್ತಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ವಿಷಯದಲ್ಲಿ ನಂಬಿಕೆ ಇಲ್ಲದ ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು. +ಮಲೆನಾಡಿನಲ್ಲಿ ಮಂಗನ ಕಾಯಿಲೆ ಹೆಚ್ಚಳ : ಜನರಲ್ಲಿ ಆತಂಕ +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಬಂಡವಾಳ ಹರಿದುಬರಲಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡಿದೆ. ಭ್ರಾತೃತ್ವ, ಸಮಾನತೆಗಾಗಿ ನಿರಂತರ ಪ್ರಯತ್ನಗಳಾಗುತ್ತಿವೆ ಎಂದು ತಿಳಿಸಿದರು. ಸಚಿವರಿಗೂ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು. ಸಚಿವರಾದ ಭೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ ಹಾಗೂ ಅಕಾರಿಗಳು ಜನಸ್ಪಂದನದಲ್ಲಿ ಹಾಜರಿದ್ದರು. \ No newline at end of file diff --git a/eesanje/url_46_243_7.txt b/eesanje/url_46_243_7.txt new file mode 100644 index 0000000000000000000000000000000000000000..4fd68503d26549da7f7644964354dce680b24184 --- /dev/null +++ b/eesanje/url_46_243_7.txt @@ -0,0 +1,6 @@ +ಇಂದಿರಾ ಕ್ಯಾಂಟಿನ್‍ಗಳಲ್ಲಿ ಸದ್ಯಕ್ಕಿಲ್ಲ ಮುದ್ದೆ ಸಾರಿನ ಊಟ +ಬೆಂಗಳೂರು,ಫೆ.8- ನಗರದ ಇಂದಿರಾ ಕ್ಯಾಂಟೀನ್ ಗಳಲ್ಲಿ ಆಹಾರ ಪೂರೈಕೆ ಮಾಡುವ ಕುರಿತಂತೆ ಕರೆಯಲಾಗುವ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಇಂದಿರಾ ಕ್ಯಾಂಟೀನ್ ಗಳಲ್ಲಿ ಮುದ್ದೆ, ಸಾರು ದೊರೆಯುವ ಸಾಧ್ಯತೆಯಿದೆ. ಈ ಹಿಂದೆ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ ಕೇವಲ ರೈಸ್ ಬಾತ್, ಅನ್ನ ಸಾಂಬಾರ್, ಮೊಸರನ್ನವನ್ನು ನೀಡಲಾಗುತ್ತಿತ್ತು. +ಆದರೆ ಹಿರಿಯ ನಾಗರಿಕರು ಹಾಗೂ ಸಕ್ಕರೆ ಕಾಯಿಲೆಯಿರುವವರು ಸೇರಿದಂತೆ ಇತರರು ರೈಸ್ ಪದಾರ್ಥದ ಊಟ ಮಾತ್ರ ಬೇಡ ಮುದ್ದೆ ಚಪಾತಿ ನೀಡುವಂತೆ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಊಟದ ಮೆನುವನ್ನು ಬದಲಾವಣೆ ಮಾಡಿ ಮುದ್ದೆ, ಸಾರು, ಚಪಾತಿ ನೀಡಲು ರಾಜ್ಯ ಸರ್ಕಾರ ಹಾಗೂ ಪಾಲಿಕೆ ಮುಂದಾಗಿತ್ತು. ಆದರೆ ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಟೆಂಡರ್ ವಿಳಂಬವಾಗಿರುವುದರಿಂದ ಏಪ್ರಿಲ್ ಬಳಿಕ ಮುದ್ದೆ, ಸಾರು ದೊರೆಯಲಿದೆ ಎನ್ನಲಾಗುತ್ತಿದೆ. +ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!? +ಕಳೆದ ಆಗಸ್ಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆ ಗುತ್ತಿಗೆ ಅವ ಮುಕ್ತಾಯಗೊಂಡಿದ್ದು, ಹೊಸ ಟೆಂಡರ್ ಪ್ರಕ್ರಿಯೆ ನಡೆಯದ ಹಿನ್ನಲೆಯಲ್ಲಿ ಹಳೆ ಗುತ್ತಿಗೆದಾರರನ್ನು ಮುಂದುವರಿಸಲಾಗಿತ್ತು. ಡಿಸೆಂಬರ್‍ನಲ್ಲಿ ಟೆಂಡರ್ ಆಹ್ವಾನಿಸುವಂತೆ ಸರ್ಕಾರ ಆದೇಶ ನೀಡಿತ್ತು. ಸದ್ಯ ಎಂಟು ವಲಯಗಳಿಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸುವುದಕ್ಕೆ ನಿರ್ಧರಿಸಿ ನಾಲ್ಕು ಪ್ಯಾಕೇಜ್‍ಗಳಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. +ಇಂದಿರಾ ಕ್ಯಾಂಟೀನ್ ಆಹಾರ ಪೂರೈಕೆ ಗುತ್ತಿಗೆದಾರರಿಗೆ ಈ ಬಾರಿ ಮುದ್ದೆ, ಸಾರು ನೀಡುವುದನ್ನು ಕಡ್ಡಾಯಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ನಂತರ ಜನಸಾಮಾನ್ಯರಿಗೆ ಹೊಸ ಮೆನ್ಯು ಲಭ್ಯವಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_243_8.txt b/eesanje/url_46_243_8.txt new file mode 100644 index 0000000000000000000000000000000000000000..5f22fe7ef37d7f98e75942741496a675de0a60f6 --- /dev/null +++ b/eesanje/url_46_243_8.txt @@ -0,0 +1,6 @@ +ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಚಾಲನೆ +ಬೆಂಗಳೂರು,ಫೆ.8- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಇಂದು ರಾಜ್ಯಾದ್ಯಂತ ಚಾಲನೆ ನೀಡಿತು. ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹ ಅಭಿಯಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ರಾಜ್ಯದ ವಿವಿಧ ಕಡೆ ಚಾಲನೆ ಕೊಟ್ಟಿದ್ದಾರೆ. +ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!? +ವಿಜಯೇಂದ್ರ ಅವರು ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಹೋಬಳಿ ವ್ಯಾಪ್ತಿಗೆ ಬರುವ ಕೆ.ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಚಾಲನೆ ಕೊಟ್ಟರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಬಿಜೆಪಿ ಮುಖಂಡ ಮಾರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. +ಆದರೆ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅಭಿಯಾನಕ್ಕೆ ಗೈರು ಹಾಜರಾಗಿದದ್ದು ಎದ್ದು ಕಾಣುತ್ತಿತ್ತು. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರು ಜಿಲ್ಲೆ ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹಕ್ಕೆ ಬಣ್ಣ ಹಚ್ಚುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಮಾಜಿ ಶಾಸಕರಾದ ಎಲ್.ನಾಗೇಂದ್ರ, ಎನ್.ಮಹೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ಮುಖಂಡರಾದ ಕವಿತಾ ಗೌಡ ಮತ್ತಿತರರು ಉಪಸ್ಥಿತರಿದ್ದರು. +ಜಿಲ್ಲಾ ಹಂತದಲ್ಲಿ ಜಿಲ್ಲಾಧ್ಯಕ್ಷರು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಅಧ್ಯಕ್ಷರು ಕೂಡ ಈ ಅಭಿಯಾನದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ. ಇದು ಗ್ರಾಮಪಂಚಾಯ್ತಿಯಿಂದ ಹಿಡಿದು, ಜಿಲ್ಲಾ ಹಂತದವರೆಗೂ ಈ ಅಭಿಯಾನ ನಡೆಯಲಿದ್ದು, ಪ್ರಮುಖ ಸ್ಥಳಗಳಲ್ಲಿ ಈ ಗೋಡೆ ಬರಹ ಅಭಿಯಾನ ನಡೆಯಲಿದೆ. \ No newline at end of file diff --git a/eesanje/url_46_243_9.txt b/eesanje/url_46_243_9.txt new file mode 100644 index 0000000000000000000000000000000000000000..2325dba39a7a21e98f71a3595539b882be1364f8 --- /dev/null +++ b/eesanje/url_46_243_9.txt @@ -0,0 +1,5 @@ +ಎನ್‍ಡಿಎ ಮೈತ್ರಿಕೂಟಕ್ಕೆ 366 ಸ್ಥಾನ, ಮೋದಿಗೆ ಮತ್ತೆ ಪ್ರಧಾನಿ ಗದ್ದುಗೆ ಫಿಕ್ಸ್ : ಸಮೀಕ್ಷೆ +ನವದೆಹಲಿ,ಫೆ.8- ಈಗ ಲೋಕಸಭಾ ಚುನಾವಣೆ ನಡೆದು ಬಿಜೆಪಿ ನೇತೃತ್ವದ ಎನ್‍ಡಿಎ 366 ಸ್ಥಾನ ಗಳಿಸಿದರೆ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 23 ಸ್ಥಾನ ಗೆಲ್ಲಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ತಿಳಿಸಿದೆ. ಗುಜರಾತ್, ಛತ್ತೀಸ್‍ಗಢ, ದೆಹಲಿಯ ಎಲ್ಲ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದ್ದು ಒಟ್ಟು 366 ಸ್ಥಾನಗಳನ್ನು ಎನ್‍ಡಿಎ ಒಕ್ಕೂಟ ಗಳಿಸಲಿದೆ. ಇಂಡಿಯಾ ಒಕ್ಕೂಟ 104, ಇತರರು 73 ಸ್ಥಾನ ಗಳಿಸಲಿದೆ. ಶೇಕಡಾವಾರು ಮತ ಪ್ರಮಾಣದಲ್ಲಿ ಎನ್‍ಡಿಎ ಶೇ.41.8ರಷ್ಟು ಮತ ಪಡೆದರೆ ಇಂಡಿಯಾ ಒಕ್ಕೂಟ ಶೇ.28.6ರಷ್ಟು ಮತ ಪಡೆಯಲಿದೆ. ಇತರರು ಶೇ.29.6ರಷ್ಟು ಮತ ಗಳಿಸಲಿದ್ದಾರೆ ಎಂದು ಹೇಳಿದೆ. +ಉತ್ತರಪ್ರದೇಶದ 80 ಸ್ಥಾನಗಳ ಪೈಕಿ 77 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ನಿತೀಶ್‍ಕುಮಾರ್ ಸೇರ್ಪಡೆಯಿಂದ ಬಿಹಾರದಲ್ಲಿ ಎನ್‍ಡಿಎ 35 ಸೀಟುಗಳನ್ನು ಗೆಲ್ಲಲಿದ್ದು, ಇತರ ಪಕ್ಷಗಳು 5 ಸ್ಥಾನಗಳಿಗೆ ತೃಪ್ತಿಪಡಬೇಕಾಗುತ್ತದೆ. ಪಶ್ಚಿಮಬಂಗಾಳದ ಒಟ್ಟು 42 ಸ್ಥಾನಗಳಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 26 ಕ್ಷೇತ್ರಗಳನ್ನು ಗೆಲ್ಲಲಿದೆ. ತಮಿಳುನಾಡಿನಲ್ಲಿ ಎನ್‍ಡಿಎ ಒಂದು ಹಾಗೂ ಇಂಡಿಯಾ ಮೈತ್ರಿಕೂಟ 36 ಸ್ಥಾನ ಪಡೆಯಲಿದೆ. +ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ +ರಾಜ್ಯದಲ್ಲಿ ಬಿಜೆಪಿ 21, ದಳ 2 ಸ್ಥಾನ ಗೆದ್ದುಕೊಂಡರೆ ಕಾಂಗ್ರೆಸ್ 5 ಸ್ಥಾನಗಳನ್ನು ಗಳಿಸಲಿದೆ ಎಂದು ಈ ಸಮೀಕ್ಷೆ ಹೇಳಿದೆ. ಮತಗಳ ಶೇಕಡಾವಾರು ಪ್ರಮಾಣದಲ್ಲಿ ಬಿಜೆಪಿ ಶೇ.46.2 ಕಾಂಗ್ರೆಸ್ 42.3 ಜೆಡಿಎಸ್ 8.4 ಹಾಗೂ ಇತರ ಪಕ್ಷಗಳು ಶೇ.3.1ರಷ್ಟು ಮತ ಗಳಿಸಿಕೊಳ್ಳಲಿವೆ. ಸಿದ್ದರಾಮಯ್ಯ ಸಾಧನೆ ಕುರಿತು ಶೇ.18ರಷ್ಟು ತೃಪ್ತಿ ವ್ಯಕ್ತಪಡಿಸಿದ್ದು, ಶೇ.27ರಷ್ಟು ಮಂದಿ ಪರವಾಗಿಲ್ಲ ಎಂದಿದ್ದಾರೆ. ಶೇ.34ರಷ್ಟು ಮಂದಿ ಅತೃಪ್ತಿ ವ್ಯಕ್ತಪಡಿಸಿದ್ದು, ಶೇ.21ರಷ್ಟು ಮಂದಿ ಪ್ರತಿಕ್ರಿಯಿಸಿಲ್ಲ. \ No newline at end of file diff --git a/eesanje/url_46_244_1.txt b/eesanje/url_46_244_1.txt new file mode 100644 index 0000000000000000000000000000000000000000..4fcf54a9cd71a2f8eb7c296885e8ba64bb08c785 --- /dev/null +++ b/eesanje/url_46_244_1.txt @@ -0,0 +1,9 @@ +ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!? +ಬೆಂಗಳೂರು,ಫೆ.8- ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದತೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದು, ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರನ್ನು ಕರೆದುಕೊಳ್ಳಲು ತಯಾರಿ ನಡೆಸಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಸಿ.ನಾರಾಯಣಗೌಡ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ ಕೀಯವಾಗಿ ಭೇಟಿ ಮಾಡಿದ್ದು ಸಮಾಲೋಚನೆ ನಡೆಸಿರುವುದು ಕುತೂಹಲ ಕೆರಳಿಸಿದೆ. +ಕಾಂಗ್ರೆಸ್ ಸರ್ಕಾರ ರಚನೆಯಾದ ಆರಂಭದಲ್ಲಿ ಜೆಡಿಎಸ್ ಪಕ್ಷದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆದುಕೊಳ್ಳಲಾಗಿತ್ತು. ಆ ವೇಳೆ ಹತ್ತಾರು ನಾಯಕರು ಕಾಂಗ್ರೆಸ್ ಸೇರಿದ್ದರು. ಇದಕ್ಕೆ ಕಾಂಗ್ರೆಸ್‍ನಲ್ಲಿಯೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಒಂದಿಷ್ಟು ಕಾಲ ಆಪರೇಷನ್ ಹಸ್ತವನ್ನು ಸ್ಥಗಿತಗೊಳಿಸಲಾಗಿತ್ತು. ಬಿಜೆಪಿಯಿಂದ ವಲಸೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ಮರಳಿ ಮಾತೃಪಕ್ಷಕ್ಕೆ ಹೋಗಿದ್ದು ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು. +ಹೀಗಾಗಿ ರೊಚ್ಚಿಗೆದ್ದಿರುವ ಕಾಂಗ್ರೆಸ್ ನಾಯಕರು ಈ ಬಾರಿ ಬಿಜೆಪಿಯ ಬುಟ್ಟಿಗೆ ಕೈಹಾಕಲು ಮುಂದಾಗಿದ್ದಾರೆ. ಜೆಡಿಎಸ್-ಬಿಜೆಪಿಯ ಮೈತ್ರಿಯಿಂದಾಗಿ ಅಸಮಾಧಾನಗೊಂಡಿರುವ ಆಯಾ ಪಕ್ಷಗಳ ಹಲವು ನಾಯಕರು ಪರ್ಯಾಯ ರಾಜಕೀಯದತ್ತ ಗಮನ ಹರಿಸಿದ್ದು, ಅಂತವರಿಗೆ ಕಾಂಗ್ರೆಸ್ ಮುಕ್ತ ಆಹ್ವಾನ ನೀಡುತ್ತಿದೆ. ಕೆ.ಸಿ.ನಾರಾಯಣಗೌಡ ಸೇರಿದಂತೆ ಬಿಜೆಪಿಯ ಬಹಳಷ್ಟು ನಾಯಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ಎರಡನೇ ಸುತ್ತಿನ ಆಪರೇಷನ್ ಹಸ್ತ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. +ಭಾರತ ಅಮೆರಿಕವನ್ನು ದುರ್ಬಲವಾಗಿ ಪರಿಗಣಿಸಿದೆ : ಹ್ಯಾಲೆ +ಈ ಮೊದಲು ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಪಕ್ಷ ತೊರೆದವರ ವಿರುದ್ಧ ತನಿಖೆ ನಡೆಸುತ್ತದೆ ಎಂಬ ಆತಂಕ ಇತ್ತು. ಹೀಗಾಗಿ ಬಹಳಷ್ಟು ನಾಯಕರು ಉಸಿರುಗಟ್ಟುವ ವಾತಾವರಣವಿದ್ದರೂ, ರಾಜಕೀಯ ಪ್ರಾತಿನಿಧ್ಯ ದೊರೆಯದಿದ್ದರೂ ಕೂಡ ಅನಿವಾರ್ಯವಾಗಿ ಬಿಜೆಪಿಯಲ್ಲೇ ಮುಂದುವರೆದಿದ್ದರು. +ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಮಯ ಹತ್ತಿರ ಬರುತ್ತಿದ್ದು, ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ಬಿಜೆಪಿಯ ಹಿಡಿತ ತಗ್ಗಲಿದೆ. ಈ ಸಂದರ್ಭವನ್ನು ಬಳಸಿಕೊಂಡು ಪಕ್ಷಾಂತರ ಮಾಡಲು ಸಾಕಷ್ಟು ನಾಯಕರು ತಯಾರಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. +ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ +ಆದರೆ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ನಾಯಕರ ಹಿನ್ನೆಲೆ, ಸೈದ್ಧಾಂತಿಕ ನಿಲುವು ಮತ್ತು ಬದ್ಧತೆಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಹೀಗಾಗಿ ರಾಜ್ಯನಾಯಕರು ಪಕ್ಷ ಸೇರ್ಪಡೆಯನ್ನು ಕ್ರಮಬದ್ಧವಾಗಿ ಪರಿಶೀಲಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_244_10.txt b/eesanje/url_46_244_10.txt new file mode 100644 index 0000000000000000000000000000000000000000..81eb0dd92f5adcea2e88c29a4aa94b1cc764adb3 --- /dev/null +++ b/eesanje/url_46_244_10.txt @@ -0,0 +1,8 @@ +ಬಿಜೆಪಿಯ ಬೇಡಿಕೆಯಂತೆ ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುತ್ತೇವೆ : ಸಿಎಂ ಸಿದ್ದರಾಮಯ್ಯ +ನವದೆಹಲಿ,ಫೆ.7- ಬಿಜೆಪಿಯ ಬೇಡಿಕೆಯಂತೆ ಕೇಂದ್ರದಿಂದ ರಾಜ್ಯಕ್ಕಾಗಿರುವ ಆರ್ಥಿಕ ತಾರತಮ್ಯದ ಕುರಿತು ಬಜೆಟ್ ವೇಳೆ ಶ್ವೇತ ಪತ್ರ ಹೊರಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರದ ಆಯವ್ಯಯವೇ ಶ್ವೇತಪತ್ರವಿದ್ದಂತೆ. ಆದರೂ ಬಿಜೆಪಿಯವರು ಪ್ರತ್ಯೇಕವಾದ ಮಾಹಿತಿ ಕೇಳುತ್ತಿದ್ದಾರೆ. ಅವರ ಬೇಡಿಕೆಗನುಗುಣವಾಗಿ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಹೇಳಿದರು.’ +ರಾಜ್ಯಸರ್ಕಾರದ ಎಲ್ಲಾ ಶಾಸಕರು, ಸಚಿವರು ದೆಹಲಿಯಲ್ಲಿ ಐತಿಹಾಸಿಕವಾದ ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಗಮನ ಸೆಳೆಯುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು. 2017-18 ರಲ್ಲಿದ್ದ ಬಜೆಟ್ ಗಾತ್ರ 2024-25 ರ ವೇಳೆಗೆ ದ್ವಿಗುಣಗೊಂಡಿದೆ. ಹೀಗಾಗಿ ತೆರಿಗೆ ಹಾಗೂ ಅನುದಾನದ ಹಂಚಿಕೆಯೂ ಹೆಚ್ಚಾಗಬೇಕಿತ್ತು. 14 ನೇ ಹಣಕಾಸು ಆಯೋಗದಲ್ಲಿದ್ದಷ್ಟೇ ಪ್ರಮಾಣದ ತೆರಿಗೆ ಹಂಚಿಕೆಯಾಗಿದೆ. +ಇದರಿಂದ ರಾಜ್ಯಕ್ಕೆ 1.87 ಲಕ್ಷ ಕೋಟಿ ರೂ. ನಷ್ಟವಾಗಿದೆ. 14 ನೇ ಹಣಕಾಸು ಆಯೋಗದ ಮಾನದಂಡಗಳನ್ನೇ ಅನುಸರಿಸಿದರು. 14 ನೇ ಹಣಕಾಸು ಆಯೋಗದ ವೇಳೆಗೆ 62,098 ಕೋಟಿ ರೂ. ತೆರಿಗೆ ಪಾಲು ಹೆಚ್ಚಾಗಬೇಕಿತ್ತು. ಆದರೆ ಮಲತಾಯಿ ಧೋರಣೆಯಿಂದಾಗಿ ಭಾರಿ ಅನ್ಯಾಯವಾಗಿದೆ ಎಂದು ಟೀಕಿಸಿದರು. +ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಕ್ಸಲರ ಓಡಾಟ, ಹೈಅಲರ್ಟ್ ಘೋಷಣೆ +ರಾಜ್ಯಸರ್ಕಾರ ಕೇಂದ್ರದ ಎಲ್ಲಾ ಯೋಜನೆಗಳೊಂದಿಗೆ ಶೇ.50 ರಷ್ಟು ಪಾಲು ಹೊಂದಿದೆ. ಆ ಯೋಜನೆಗಳಿಗೂ ಸರಿಯಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ. 13 ಸಾವಿರ ಕೋಟಿ ರೂ. ಮಾತ್ರ ದೊರೆಯುತ್ತಿದೆ. ಎಲ್ಲಾ ವಿಷಯದಲ್ಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.ಇಂದು ಸೆಸ್ ಹಾಗೂ ಸರ್‍ಚಾರ್ಜ್‍ನಲ್ಲಿ ರಾಜ್ಯಕ್ಕೆ ಯಾವುದೇ ಪಾಲು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ನಮ್ಮ ಸಾಂಕೇತಿಕ ಪ್ರತಿಭಟನೆ ಹೊರತಾಗಿಯೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೇ ಇದ್ದರೆ ಹೋರಾಟವನ್ನು ಮುಂದುವರೆಸುತ್ತೇವೆ. ಜನತಾ ನ್ಯಾಯಾಲಯದಲ್ಲಿ ಕೇಂದ್ರದ ತಾರತಮ್ಯವನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದರು. +ರಾಜ್ಯಕ್ಕೆ ಏಕೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಕೇಂದ್ರ ಸರ್ಕಾರವೇ ಉತ್ತರ ನೀಡಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಬಡವರಿಗೆ ಅಕ್ಕಿ ನೀಡುತ್ತೇವೆ ಎಂದರೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದೇ ಬಡವರ ವಿರೋಯಾಗಿ ನಡೆದುಕೊಂಡಿದೆ ಎಂದು ಟೀಕಿಸಿದರು. \ No newline at end of file diff --git a/eesanje/url_46_244_11.txt b/eesanje/url_46_244_11.txt new file mode 100644 index 0000000000000000000000000000000000000000..feeea9d53f1299d334174147e6f520ab2495f9d6 --- /dev/null +++ b/eesanje/url_46_244_11.txt @@ -0,0 +1,8 @@ +ರಾಜ್ಯದ ಪರ ಧ್ವನಿ ಎತ್ತದೇ ಬಿಜೆಪಿ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ : ಡಿಕೆಶಿ +ನವದೆಹಲಿ,ಫೆ.7- ರಾಜ್ಯದ ಪರವಾಗಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತದೇ ಇರುವ ಬಿಜೆಪಿ ನಾಯಕರು ಹಾಗೂ ಸಂಸದರು ಗಾಂಧಿ ಪ್ರತಿಮೆಯೆದುರು ಧರಣಿ ಮಾಡುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಜಂತರ್ ಮಂತರ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರತಿಭಟನೆಯನ್ನು ಟೀಕಿಸುವವರು ರಾಜ್ಯಕ್ಕೆ ನೀಡಿದ ಕೊಡುಗೆಯೇನು ಎಂದು ಹೇಳಬೇಕಿದೆ. ನಾವು ಭಾವನಾತ್ಮಕ ವಿಚಾರದ ಮೇಲೆ ರಾಜಕಾರಣ ಮಾಡುತ್ತಿಲ್ಲ. ಜನರ ಬದುಕಿಗಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು. +ಬಿಜೆಪಿಯ ಯಾವ ನಾಯಕರು ಕೇಂದ್ರದ ತಾರತಮ್ಯದ ವಿರುದ್ಧ ಧ್ವನಿ ಎತ್ತುತ್ತಿಲ್ಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ 25 ಸಂಸದರನ್ನು ಬಿಜೆಪಿಗೆ ಗೆಲ್ಲಿಸಿಕೊಟ್ಟಿದ್ದರು. ಆದರೆ ಅವರ್ಯಾರು ರಾಜ್ಯದ ಧ್ವನಿಯಾಗಲಿಲ್ಲ. ಇಂದು ಕಾಂಗ್ರೆಸ್ ರಾಜ್ಯದ ಧ್ವನಿಯನ್ನು ದೆಹಲಿಯಲ್ಲಿ ಪ್ರತಿಧ್ವನಿಸುತ್ತಿದೆ ಎಂದು ಹೇಳಿದರು. +ಕಾಂಗ್ರೆಸ್‍ನ ಪ್ರತಿಭಟನೆಯನ್ನು ಟೀಕಿಸುವವರು ಮೊದಲು ಪ್ರಧಾನಿ ನರೇಂದ್ರ ಮೋದಿ ಎದುರು ನಿಂತು ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಉಸಿರು ಬಿಡಲಿ ಎಂದು ಸವಾಲು ಹಾಕಿದರು. ಹಣಕಾಸು ಆಯೋಗವೇ ಅನುದಾನ ಹಂಚಿಕೆ ಮಾಡುತ್ತದೆ ಎಂದು ಸಮರ್ಥನೆ ಮಾಡಿಕೊಳ್ಳುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರು ಕರ್ನಾಟಕವನ್ನು ಪ್ರತಿನಿಸುತ್ತೇವೆ ಎಂಬುದನ್ನು ಮರೆತಿದ್ದಾರೆ. ಎಲ್ಲವೂ ಆಯೋಗವೇ ಮಾಡುವುದಾದರೆ ಕೇಂದ್ರ ಸರ್ಕಾರದ ಅಸ್ತಿತ್ವವಾದರೂ ಏಕೆ? ಅನ್ಯಾಯವಾದಾಗ ಅದನ್ನು ಸರಿಪಡಿಸುವುದು ಕೇಂದ್ರದ ಜವಾಬ್ದಾರಿ ಅಲ್ಲವೇ ಎಂದು ತಿರುಗೇಟು ನೀಡಿದರು. +ತೆರೆದ ಬಾವಿಗೆ ಬಿದ್ದ 2 ವರ್ಷದ ಮಗು ಪ್ರಾಣಾಪಾಯದಿಂದ ಬಚಾವ್ +ಬರ ನಿರ್ವಹಣೆಗೆ ಒಂದು ರೂಪಾಯಿ ಹಣ ನೀಡಿಲ್ಲ. ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಸಚಿವರು ಕೇಂದ್ರದ ಸಚಿವರನ್ನು ಭೇಟಿ ಮಾಡಿ ಒತ್ತಡ ಹಾಕಿದ್ದಾರೆ. ಈವರೆಗೂ ಹಣ ಬಿಡುಗಡೆ ಮಾಡಿಲ್ಲ ಎಂಬುದು ಸತ್ಯವಲ್ಲವೇ ಎಂದರು. +ಹಿಂದೆ ನಿರ್ಮಲಾ ಸೀತಾರಾಮನ್‍ರವರೇ ಮಂಡಿಸಿದ ಬಜೆಟ್‍ನಲ್ಲಿ ಭದ್ರಾ ಮೇಲಂ್ದಡೆ ಯೋಜನೆಗೆ 5,300 ಕೋಟಿ ರೂ. ಘೋಷಿಸಿರಲಿಲ್ಲವೇ? ಅದರಲ್ಲಿ ಏಕೆ ಹಣ ಬಿಡುಗಡೆ ಮಾಡಲಿಲ್ಲ. ರೈಲ್ವೆ ಯೋಜನೆ, ಪೆರಿಫರಲ್ ಯೋಜನೆಗೆ ಘೋಷಿಸಿದ್ದ ಹಣವನ್ನು ಏಕೆ ತಡೆಹಿಡಿಯಲಾಯಿತು ಎಂದು ಪ್ರಶ್ನಿಸಿದರು. +ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲವಾಗಿದೆ. ಅದಕ್ಕಾಗಿ ದೆಹಲಿಗೆ ಬಂದು ಪ್ರತಿಭಟನೆ ಮಾಡಬೇಕಿದೆ. ಬೆಂಗಳೂರಿನಲ್ಲಿ ಪ್ರತಿಭಟಿಸಿದರೆ ಕಿವಿಗೆ ಹಾಕಿಕೊಳ್ಳುವುದಿಲ್ಲ ಎಂದು ಆಕ್ಷೇಪಿಸಿದರು.ಇದು ರಾಜಕೀಯ ಸ್ಟಂಟ್ ಅಲ್ಲ. ಆ ರೀತಿ ಸ್ಟಂಟ್ ಮಾಡಲು ನಮ್ಮಲ್ಲಿ ಯಾರೂ ಸಿನಿಮಾ ನಿರ್ದೇಶಕರಿಲ್ಲ. ಅವರೆಲ್ಲಾ ಅವರ ಪಕ್ಷದಲ್ಲೇ ಇದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_244_12.txt b/eesanje/url_46_244_12.txt new file mode 100644 index 0000000000000000000000000000000000000000..2fb787ea177c976b2b06617b817c589e896a6aba --- /dev/null +++ b/eesanje/url_46_244_12.txt @@ -0,0 +1,9 @@ +ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಗೌಡರ ಆಗ್ರಹ +ನವದೆಹಲಿ,ಫೆ.7- ಕೇಂದ್ರ ಸರಕಾರವು 30 ಟಿಎಂಸಿ ಅಡಿ ನೀರು ಸಂಗ್ರಹ ಸಾಮಥ್ರ್ಯದ ಕರ್ನಾಟಕದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂ ಕೋರ್ಟ್‍ನಲ್ಲಿ ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. +ಪ್ರಧಾನಿಗಳು ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಇದಷ್ಟೇ ಎಲ್ಲರಿಗೂ ನನ್ನ ಪ್ರಾರ್ಥನೆ ಎಂದು ಮಾಜಿ ಪ್ರಧಾನಿಗಳು ಕೈ ಜೋಡಿಸಿ ಮನವಿ ಮಾಡಿಕೊಂಡಿದ್ದಾರೆ.ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿದ ಗೌಡರು, ತಮಿಳುನಾಡು ಸ್ನೇಹಿತರು ಅನ್ಯತಾ ಭಾವಿಸಬಾರದು ಎನ್ನುತ್ತಲೇ ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ. +ಕಾಂಗ್ರೆಸ್ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‍ಮಂತರ್‍ನಲ್ಲಿ ಕಾಂಗ್ರೆಸ್‍ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು. +ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಮುಂಬೈಗೆ ಬಂದ ಮೂವರು ವಶಕ್ಕೆ +ಪ್ರಧಾನಿ ನರೇಂದ್ರಮೋದಿ ಗ್ಯಾರಂಟಿಗಳು ಬಹಳ ವಿಭಿನ್ನವಾಗಿವೆ. ಅವುಗಳ ಬಗ್ಗೆ ನನಗೆ ಗೊತ್ತಿದೆ. ಹಣ ಇಲ್ಲ, ಪ್ರತಿಭಟನೆ ಮಾಡುತ್ತೇವೆ ಎಂದು ನಮ್ಮನ್ನೆಲ್ಲ ಕರೆಯುತ್ತಾರೆ. ಆದರೆ, ಕೇರಳದಲ್ಲಿ ಇದೇ ಉದ್ದೇಶಕ್ಕೆ ಅಲ್ಲಿನ ಎಲ್ ಡಿಎಫ್ ಸರಕಾರ ಕರೆದರೆ ಕಾಂಗ್ರೆಸ್ ನವರು ಬಹಿಷ್ಕಾರ ಹಾಕುತ್ತಾರೆ. ಇದು ರಾಜಕೀಯ ಪರಿಸ್ಥಿತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. +ಹಾವೇರಿಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ವಿಚಾರವನ್ನು ಪ್ರಸ್ತಾಪಿಸಿದ ಗೌಡರು, ಟಿಕೆಟ್ ಇಲ್ಲದ ಕಾರಣಕ್ಕೆ ತಾಯಿ ಮಗನನ್ನು ಧಾರವಾಡದ ಬಳಿ ರೈಲಿನಿಂದ ಕೆಳಗಿಳಿಸಲಾಗುತ್ತದೆ. ಅಲ್ಲಿ ತಾಯಿ ಮತ್ತು ತನಗೆ ಊಟಕ್ಕಾಗಿ ಆ ಯುವಕ ಅಲೆಯುತ್ತಾನೆ. ಕೆಲಸ ಹುಡುಕುತ್ತಾನೆ. ಸಿಗುವುದಿಲ್ಲ. ಕೊನೆಗೆ ಆ ನತದೃಷ್ಟ ಯುವಕ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಇದು, ಕರ್ನಾಟಕದ ಗ್ಯಾರಂಟಿಗಳ ನೈಜಸ್ಥಿತಿ ಎಂದು ಮಾಜಿ ಪ್ರಧಾನಿಗಳು ತಿಳಿಸಿದ್ದಾರೆ. +ಕಾಡುಗೊಲ್ಲ ಸಮುದಾಯದ ಬಗ್ಗೆ ಪ್ರಸ್ತಾಪ:ಅನೇಕ ಮೀಸಲಾತಿ ವರದಿಗಳ ಬಗ್ಗೆ ನನಗೆ ಗೊತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂತರಾಜು ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯ ಮೀಸಲು ಸೌಲಭ್ಯದಿಂದ ವಂಚಿತರಾಗಿದ್ದಾರೆ. 2014ರಿಂದಲೂ ಇವರನ್ನು ಎಸ್ಟಿ ಪ್ರವರ್ಗಕ್ಕೆ ಸೇರಿಸಬೇಕೆಂದು ಮನವಿ ಮಾಡಿದರು. \ No newline at end of file diff --git a/eesanje/url_46_244_2.txt b/eesanje/url_46_244_2.txt new file mode 100644 index 0000000000000000000000000000000000000000..4e2077057dde3f894163249ab4aa61f617429223 --- /dev/null +++ b/eesanje/url_46_244_2.txt @@ -0,0 +1,9 @@ +ಜನತಾದರ್ಶನಕ್ಕೆ ಹರಿದುಬಂದ ಜನಸಾಗರ +ಬೆಂಗಳೂರು,ಫೆ.8- ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಜನತಾದರ್ಶನಕ್ಕೆ ಜನಸಾಗರವೇ ಹರಿದುಬಂದಿತ್ತು. ಇದೇ ಮೊದಲ ಬಾರಿಗೆ ವಿಧಾನಸೌಧದಲ್ಲಿ ಅತ್ಯಂತ ಅಚ್ಚುಕಟ್ಟು ಹಾಗೂ ವ್ಯವಸ್ಥಿತವಾಗಿ ಜನಸ್ಪಂದನವನ್ನು ಆಯೋಜಿಸಲಾಗಿತ್ತು. +ಈ ಮೊದಲೆಲ್ಲಾ ಮುಖ್ಯಮಂತ್ರಿಯವರು ಗೃಹಕಚೇರಿ ಕೃಷ್ಣಾದಲ್ಲಿ ಜನಸ್ಪಂದನ ಆಯೋಜಿಸುತ್ತಿದ್ದರು. ಅಲ್ಲಿ ಇಕ್ಕಟ್ಟಾದ ಜಾಗ, ವಾಹನ ನಿಲುಗಡೆ ಸಮಸ್ಯೆ, ಮೂಲಸೌಲಭ್ಯಗಳ ಕೊರತೆ ತೀವ್ರವಾಗಿರುತ್ತಿತ್ತುಮತ್ತು ದೂರದೂರಿನಿಂದ ಬರುವ ಜನಸಾಮಾನ್ಯರ ಸಂಚಾರಕ್ಕೂ ಸಮಸ್ಯೆಯಾಗುತ್ತಿತ್ತು. ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಎಂಬಂತೆ ವಿಧಾನಸೌಧದಲ್ಲಿ ನಡೆಯುತ್ತಿರುವ ಜನತಾದರ್ಶನಕ್ಕೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿದೆ. +ಮೆಜೆಸ್ಟಿಕ್ ಮತ್ತು ರೈಲ್ವೆ ನಿಲ್ದಾಣ, ಕೆ.ಆರ್.ಮಾರುಕಟ್ಟೆಯಿಂದ ವಿಧಾನಸೌಧದವರೆಗೂ ಜನತಾದರ್ಶನಕ್ಕೆ ಬರುವವರಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ವಿಧಾನಸೌಧದಲ್ಲಿ ಸುಮಾರು 40 ಕ್ಕೂ ಹೆಚ್ಚು ಇಲಾಖೆಗಳು ಪ್ರತ್ಯೇಕ ಕೌಂಟರ್‍ಗಳನ್ನು ಸ್ಥಾಪಿಸಿ ಜನರ ಅರ್ಜಿಗಳನ್ನು ನೋಂದಾವಣಿ ಮಾಡಿಕೊಂಡವು. ಸಾರ್ವಜನಿಕರ ಅರ್ಜಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖೆಗೆ ರವಾನಿಸಲು ಮತ್ತು ಸಣ್ಣಪುಟ್ಟ ಸಮಸ್ಯೆಗಳಿದ್ದರೆ ತಕ್ಷಣವೇ ಬಗೆಹರಿಸಲು ಅನುಕೂಲವಾಗುವಂತೆ ಸಲಹೆ ನೀಡಲು ನೋಡೆಲ್ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. +ಗಂಭೀರ ಸಮಸ್ಯೆಗಳು ಮತ್ತು ಅಧಿಕಾರಿಗಳ ಕೈಮೀರಿದ ಸಮಸ್ಯೆಗಳನ್ನು ಮುಖ್ಯಮಂತ್ರಿಯವರ ಬಳಿ ಹೇಳಿಕೊಳ್ಳಲು ಅವಕಾಶ ದೊರೆತಿದ್ದರಿಂದ ಸಾವಿರಾರು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ವೈದ್ಯಕೀಯ ಚಿಕಿತ್ಸೆ, ಪಿಂಚಣಿ, ಗೃಹಲಕ್ಷ್ಮಿ ಯೋಜನೆಯ ಅಲಭ್ಯತೆ, ಮನೆ, ಉದ್ಯೋಗ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಜನತಾದರ್ಶನದಲ್ಲಿ ಕಂಡುಬಂದವು. +ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪುಪತ್ರ ಬಿಡುಗಡೆ ಮಾಡಿದ ಖರ್ಗೆ +ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು. ವಿಧಾನಸೌಧದ ಗೇಟ್ ನಂ.4 ರ ಮೂಲಕ ಸಾರ್ವಜನಿಕರ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿತ್ತು. ಅಲ್ಲಿ ಸರದಿ ಸಾಲು ಕಂಡುಬಂದಿತು. ತಾತ್ಕಾಲಿಕ ಟೆಂಟ್‍ಗಳನ್ನು ಹಾಕಿ ಜನಸಾಮಾನ್ಯರಿಗೆ ನೆರಳಿನ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 7 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಹಿರಿಯ ನಾಗರಿಕರಿಗೆ ಖಾಲಿ ಖುರ್ಚಿ ವ್ಯವಸ್ಥೆಗಳಿದ್ದವು. ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿತ್ತು. +ವಿಕಲ ಚೇತನರು, ಹಿರಿಯ ನಾಗರಿಕರು, ಗರ್ಭಿಣಿಯರು ಮತ್ತು ಮಕ್ಕಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿಯವರು ಅವರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಆಲಿಸಿದರು. ಎಲ್ಲಾ ಇಲಾಖೆಗಳ ಆಯುಕ್ತರು, ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು ಸ್ಥಳದಲ್ಲೇ ಹಾಜರಿದ್ದು, ಜನರ ಸಮಸ್ಯೆ ಪರಿಹಾರಕ್ಕೆ ನೆರವಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಅವಯಲ್ಲಿ ನಡೆಸಿದ ಜನತಾದರ್ಶನವು ಅಪಾರ ಜನಪ್ರಿಯತೆ ಪಡೆದುಕೊಂಡಿದ್ದವು. 2013 ರಿಂದ 2018 ರವರೆಗೂ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ಮಾಸಿಕ ಜನತಾದರ್ಶನಗಳನ್ನು ನಡೆಸುತ್ತಿದ್ದರು. +ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದು 8 ತಿಂಗಳು ಕಳೆದಿದ್ದು, ಎರಡನೇ ಬಾರಿಗೆ ಜನತಾದರ್ಶನ ನಡೆಸುತ್ತಿದ್ದಾರೆ. ಇದಕ್ಕೂ ಮೊದಲು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಸಚಿವರು, ಕ್ಷೇತ್ರಮಟ್ಟದಲ್ಲಿ ಶಾಸಕರು ಜನತಾದರ್ಶನಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಪ್ರತಿ ತಿಂಗಳಿಗೊಮ್ಮೆ ವಿಶೇಷವಾಗಿ ಜನರ ಸಮಸ್ಯೆ ಆಲಿಸಲು ಸೂಚಿಸಲಾಗಿದೆ. ಅದರ ಹೊರತಾಗಿ ಇಂದು ನಡೆದ ರಾಜ್ಯಮಟ್ಟದ ಜನಸ್ಪಂದನಕ್ಕೆ ಸಾವಿರಾರು ಜನ ಬಂದಿದ್ದು ಅಚ್ಚರಿ ಮೂಡಿಸಿತ್ತು. \ No newline at end of file diff --git a/eesanje/url_46_244_3.txt b/eesanje/url_46_244_3.txt new file mode 100644 index 0000000000000000000000000000000000000000..1c521fde125a86c835f092145e65b97d3b96a549 --- /dev/null +++ b/eesanje/url_46_244_3.txt @@ -0,0 +1,8 @@ +ರಾಜ್ಯಾದ್ಯಂತ ಹುಕ್ಕಾ ಬಳಕೆ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ +ಬೆಂಗಳೂರು,ಫೆ.8- ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮತ್ತು ತಂಬಾಕು ರಹಿತ ಹುಕ್ಕಾ ಬಳಕೆಯನ್ನು ನಿಷೇಧಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತಂಬಾಕು ರಹಿತ ಎಂದು ಹೇಳಿಕೊಂಡು ನಡೆಯುತ್ತಿದ್ದ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ. +ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಯುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನು ನಿಷೇಸಿರುವುದಾಗಿ ಆರೋಗ್ಯ ಇಲಾಖೆ ಆದೇಶದಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೊ ಸರ್ವೇ 2016-17, ಅಧ್ಯ ಯನದ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ ಶೇ.23.9ರಷ್ಟು ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. +ಯುವ ಜನತೆಯು ಇತ್ತೀಚಿನ ವರ್ಷಗಳಲ್ಲಿ ತಂಬಾಕು ಉತ್ಪನ್ನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. 13 ರಿಂದ15 ವರ್ಷ ವಯಸ್ಸಿನ ಸುಮಾರು ಐದನೇ ಒಂದು ಭಾಗದಷ್ಟು ವಿದ್ಯಾರ್ಥಿಗಳು ಹಲವು ಬಗೆಯ ತಂಬಾಕು ಸೇವಿಸುತ್ತಿದ್ದಾರೆ. ತಂಬಾಕು ಒಳಗೊಂಡ ಶಿಶಾ ಮತ್ತು ಹರ್ಬಲ್ ಶಿಶಾ ಇವೆಲ್ಲವೂ ವಿಷಕಾರಿ ಹೊಗೆಯನ್ನು ಹೊರಸೂಸುವುದರಿಂದ ಕ್ಯಾನ್ಸರ್, ಹೃದ್ರೋಗ ಹಾಗೂ ಶ್ವಾಸಕೋಶದ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂಬ ಮಹತ್ವದ ಅಂಶ ಸಂಶೋಧನೆಯಿಂದ ತಿಳಿದುಬಂದಿದೆ. +ಇಂದು ಪಾಕ್ ಚುನಾವಣೆ : ನವಾಜ್ ಷರೀಷ್‍ಗೆ ಅಧಿಕಾರ ಸಾಧ್ಯತೆ +35 ರಿಂದ 69 ವರ್ಷ ವಯಸ್ಸಿನ ವ್ಯಕ್ತಿಗಳಲ್ಲಿನ ತಂಬಾಕು ಸಂಬಂಧಿತ ಕಾಯಿಲೆಗಳ ಚಿಕಿತ್ಸೆಗಾಗಿ ರಾಜ್ಯ ಸರ್ಕಾರವು 2011ರಲ್ಲಿ 983 ಕೋಟಿ ರೂ. ವ್ಯಯಿಸಿದೆ. ಹೋಟೆಲ್‍ಗಳು, ರೆಸ್ಟೋರೆಂಟ್‍ಗಳು, ಪಬ್‍ಗಳು, ಬಾರ್‍ಗಳು, ಲಾಂಜ್‍ಗಳು, ಕೆಫೆಗಳು, ಕ್ಲಬ್‍ಗಳು ಮತ್ತು ಇತರ ಸ್ಥಳಗಳಲ್ಲಿ ಹುಕ್ಕಾ ಬಳಕೆ, ಮಾರಾಟ ಮತ್ತು ಸೇವೆಯ ನಿಷೇಧವು ಯುವಜನರನ್ನು ಮಾದಕ ವ್ಯಸನದಿಂದ ಮತ್ತು ತಂಬಾಕಿನ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುವಲ್ಲಿ ನಿರ್ಣಾಯಕ ಕ್ರಮವಾಗಿದೆ. +ಮುಂದುವರೆದ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ಹುಕ್ಕಾ ಸೇವನೆಯ ಅಪಾಯಗಳು ಸಿಗರೇಟ್ ಸೇವನೆಗಿಂತ ಹಲವು ಪಟ್ಟು ಹೆಚ್ಚಾಗಿರುವುದು ಅಧ್ಯಯನಗಳಿಂದ ದೃಢಪಟ್ಟಿದೆ. ಹುಕ್ಕಾ ಹೊಗೆಯು ನಿಕೋಟಿನ್, ಟಾರ್ ಮತ್ತು ಭಾರವಾದ ಲೋಹ ಸೇರಿದಂತೆ ಅನೇಕ ಹಾನಿಕಾರಕ ಪದಾರ್ಥಗಳನ್ನು ಹೊಂದಿದೆ. ಹುಕ್ಕಾ ಸೇವಿಸುವವರು ವಿವಿಧ ರೀತಿಯ ಕ್ಯಾನ್ಸರ್ ಮತ್ತು ಹೃದ್ರೋಗ ಸೇರಿದಂತೆ ಹಲವು ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. \ No newline at end of file diff --git a/eesanje/url_46_244_4.txt b/eesanje/url_46_244_4.txt new file mode 100644 index 0000000000000000000000000000000000000000..8f2e89c171ce85fefd543879223ef01ab255423b --- /dev/null +++ b/eesanje/url_46_244_4.txt @@ -0,0 +1,5 @@ +ಚಿಕ್ಕಮಗಳೂರಲ್ಲಿ ಡೆಂಘೀಗೆ ವಿದ್ಯಾರ್ಥಿನಿ ಸಾವು +ಚಿಕ್ಕಮಗಳೂರು, ಫೆ.8- ನಗರದಲ್ಲಿ ಡೆಂಘೀ ಪ್ರಕರಣ ಪತ್ತೆಯಾಗಿದ್ದು, ವಿದ್ಯಾರ್ಥಿನಿಯೊಬ್ಬರು ಡೆಂಘೀಯಿಂದ ಮೃತಪಟ್ಟಿದ್ದಾರೆ. ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಡೆಂಘೀಯಿಂದ ಮೃತಪಟ್ಟ ವಿದ್ಯಾರ್ಥಿನಿ. ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಎರಡು ತಿಂಗಳಿನಿಂದ ಜ್ವರದಿಂದ ಬಳಲುತ್ತಿದ್ದು, ನಿನ್ನೆ ಸಂಜೆ ಮೃತಪಟ್ಟಿದ್ದಾರೆ. +ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದು ತಿಂಗಳುಗಟ್ಟಲೆಯಾದರೂ ರಸ್ತೆ ದುರಸ್ತಿ ಮಾಡದೆ ಇದ್ದುದರಿಂದ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ನೀರು ತುಂಬಿ ನಾರುತ್ತಿತ್ತು. ಈ ಬಗ್ಗೆ ಸ್ಥಳೀಯರು ನಗರಸಭೆ ಗಮನಕ್ಕೂ ತಂದಿದ್ದರು. ಇಂದಿಗೂ ಸಹ ಈ ರಸ್ತೆ ಸಂಪೂರ್ಣವಾಗಿ ದುರಸ್ತಿಯಾಗಿಲ್ಲ. ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ದೂರು ನೀಡಿದಾಗ ಬೇಕಾಬಿಟ್ಟಿಯಾಗಿ ಬಂದು ಅರ್ಧಂಬರ್ಧ ಕೆಲಸ ನಿರ್ವಹಿಸುತ್ತಾರೆ. +ಅಮಿತ್ ಶಾ, ನಡ್ಡಾ ಭೇಟಿಯಾದ ಚಂದ್ರಬಾಬು ನಾಯ್ಡು +ಇಲ್ಲಿನ ನಗರಸಭಾ ಸದಸ್ಯರು ಎಷ್ಟು ಬಾರಿ ಹೇಳಿದರೂ ನಿವಾಸಿಗಳು ಕಸವನ್ನು ಚರಂಡಿಗೆ ತಂದು ಸುರಿಯುತ್ತಾರೆ. ನಗರಸಭೆ ಕಟ್ಟುನಿಟ್ಟಿದ ಕ್ರಮ ಕೈಗೊಳ್ಳಬೇಕಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಆಗಮಿಸಿ ಮೃತರ ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದರು. \ No newline at end of file diff --git a/eesanje/url_46_244_5.txt b/eesanje/url_46_244_5.txt new file mode 100644 index 0000000000000000000000000000000000000000..7af75c2ae0eabd7e405733ce7e2f4d55216e4365 --- /dev/null +++ b/eesanje/url_46_244_5.txt @@ -0,0 +1,11 @@ +ಕಾಂಗ್ರೆಸ್ ಗ್ಯಾರಂಟಿಗಳನ್ನು ಈಡೇರಿಸಲಾಗದೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ : ವಿಜಯೇಂದ್ರ +ಬೆಂಗಳೂರು,ಫೆ.7- ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ಕೊಟ್ಟು, ನಾಟಕವಾಡಿ ಅಧಿಕಾರಕ್ಕೆ ಬಂದಿದೆ. ಈಗ ಈ ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಇಂದು ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ನಡೆಸಿದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲದ ಸ್ಥಿತಿ ಇದೆ. ಹೀಗಾಗಿ ದೆಹಲಿ ಚಲೋ ನಾಟಕ ಮಾಡುತ್ತಿದ್ದಾರೆ ಎಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. +ರೈತರ ಸಂಕಷ್ಟಕ್ಕೆ ಸ್ಪಂದಿಸದ ದುಷ್ಟ ಸರ್ಕಾರ ಇದು. ಸರಿಯಾಗಿ ಅಧಿಕಾರ ನಡೆಸಲಾಗದೇ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಕೃಷ್ಣ ಮೇಲ್ದಂಡೆಗೆ ಇವರು ಒಂದು ರೂಪಾಯಿ ಕೊಟ್ಟಿಲ್ಲ. ಮತದಾರರ ಕಣ್ಣಿಗೆ ಮಣ್ಣೆರಚಿ ಅಧಿಕಾರಕ್ಕೆ ಬಂದಿದ್ದಾರೆ. ಇವರ ಮೇಕೆದಾಟು ಹೋರಾಟ, ದೆಹಲಿ ಚಲೋ ಕೇವಲ ನಾಟಕ. ಮಹದಾಯಿಗೆ ಇವರ ಬಳಿ ದುಡ್ಡಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 7,800 ಕೋಟಿ ರೂ. ಬಿಡುಗಡೆ ಮಾಡಿದ ಹಣವನ್ನು ತಡೆದಿದ್ದಾರೆ. ಮುಂದಿನ ಲೋಕಸಭೆಯಲ್ಲಿ ಸೋಲಿಸಿ ಮನೆಗೆ ನಿಮ್ಮನ್ನು ಚಲೋ ಮಾಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು. +ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್ ಮಾತನಾಡಿ, ಬೋರ್ವೆಲ್, ಪಂಪ್ಸೆಟ್ ದರ ಏರಿಕೆ, ಹಾಲು ಉತ್ಪಾದÀಕರಿಗೆ 34 ರೂ, ಗ್ರಾಹಕರಿಗೆ 44 ರೂ ಉಳಿದ 10 ರೂ. ಯಾರ ಪಾಲಿಗೆ? ಹಾಲಿನ ಪೊ್ರೀತ್ಸಾಹಧನ 710 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ, ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಾಂಗ್ರೆಸ್ನ ಪ್ರತಿಭಟನೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ನಾವು 400 ಸೀಟು ಗೆದ್ದೆ ಗೆಲ್ಲುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ, ಕಾಂಗ್ರೆಸ್ನವರು ಸುಖಾಸುಮ್ಮನೆ ಕೇಂದ್ರದ ವಿರುದ್ಧ ಆರೋಪ ಮಾಡುತ್ತಾರೆ, ಸಂಸದರಿಗೆ ಪತ್ರ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಮಾಡುತ್ತಾರೆ. ಕೇವಲ ಪ್ರಚಾರಕ್ಕಾಗಿ ದೆಹಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಎಂದು ಟೀಕಿಸಿದರು. +ಡಿಕೆಶಿ ಆಪ್ತರಿಗೆ ಐಟಿ ಶಾಕ್ +ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಜಿನ್ನಾ ಸಂಸ್ಕೃತಿ ಅಂಟಿಕೊಂಡಿದೆ. ಮಾನ ಮರ್ಯಾದೆ ಇರುವ ಪಕ್ಷ ದೇಶ ವಿಭಜನೆಯ ಮಾತು ಯಾವತ್ತೂ ಆಡಿರಲಿಲ್ಲ. ಕಾಂಗ್ರೆಸ್ನವರಿಗೆ ನಾಚಿಕೆ ಆಗಲ್ವಾ, ಮಾನ ಮರ್ಯಾದೆ ಇದ್ಯಾ ನಮ್ಮ ಹಣ ಎಲ್ಲಾ ಉತ್ತರ ಪ್ರದೇಶಕ್ಕೆ ಹೋಗುತ್ತದೆ ಅಂತಾ ಹೇಳುತ್ತೀರಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಾಂಗ್ರೆಸ್ನ ಗುರಿ ಪ್ರಧಾನಿ ನರೇಂದ್ರ ಮೋದಿ. ಅವರು ಹತ್ತು ವರ್ಷ ಏನು ಬಿಡುಗಡೆ ಮಾಡಿದ್ದಾರೆ, ನೀವೇನು ಬಿಡುಗಡೆ ಮಾಡಿದ್ದೀರಿ ದಾಖಲೆ ಮುಂದಿಡಿ, ಬರಕ್ಕೆ ಹಣ ಬಿಡುಗಡೆ ಮಾಡಲು 9 ತಿಂಗಳು ತೆಗೆದುಕೊಂಡಿದ್ದಾರೆ. ಅದಕ್ಕೆ ದಾಖಲೆ ನನ್ನ ಹತ್ತಿರ ಇದೆ ಎಂದು ಹೇಳಿದರು.ಇವರ (ಕಾಂಗ್ರೆಸ್ನವರ) ಸ್ನೇಹಿತ ಸ್ಟಾಲಿನ್ಗೆ (ತಮಿಳುನಾಡಿಗೆ) ನೀರು ಬಿಡುವಾಗ ಬಾಯಿ ಮುಚ್ಚಿಕೊಂಡಿದ್ದರು. ದೇಶದ್ರೋಹ, ಬರ ಹಣ ಬಿಡುಗಡೆ ವಿಳಂಬ ಮುಚ್ಚಿಟ್ಟುಕೊಳ್ಳಲು ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಎಲ್ಲರೂ ದೆಹಲಿಗೆ ಹೋಗಿದ್ದಾರೆ ಎಂದು ಆರೋಪಿಸಿದರು. +ಕ್ಯಾಬಿನೆಟ್ ದರ್ಜೆ ಕೊಡಲು ನಿಮಗೆ ದುಡ್ಡು ಇದೆ. ಅದಕ್ಕೆ ನಿಮಗೆ ಮೋದಿ ದುಡ್ಡು ಕೊಡುತ್ತಾರಾ? ಕೇಂದ್ರ ಸರ್ಕಾರ ವಿರುದ್ಧ ಆರೋಪ ಮಾಡುವ ಸಿದ್ದರಾಮಯ್ಯ 15ನೇ ಹಣಕಾಸು ಆಯೋಗದಲ್ಲಿ ಹೋಗಿ ಕೂತಿದ್ರಲ್ಲಾ ಆಗ ಯಾಕೆ ಬಾಯಿ ಬಿಡಲಿಲ್ಲ? ಎಂದು ಪ್ರಶ್ನಿಸಿದರು. +ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಜನಸ್ವಂದನ ರಾಜ್ಯ ಸರ್ಕಾರದ ನಾಟಕವಾಗಿದೆ. ಗ್ರಾಮ, ತಾಲ್ಲೂಕು ಮಟ್ಟದಲ್ಲಿ ಆಡಳಿತ ವಿಫಲವಾದ ಕಾರಣ ರಾಜ್ಯಮಟ್ಟದಲ್ಲಿ ಜನಸ್ಪಂದನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿವಾರಿಸಲು ಹಣವಿಲ್ಲ. ಆದರೆ ಅಲ್ಪಸಂಖ್ಯಾತರಿಗೆ ಹತ್ತು ಸಾವಿರ ಕೋಟಿ ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣ ಇದೆ ಎಂದು ದೂರಿದರು. +ಜನರಿಗೆ ಮುಖ ತೋರಿಸಲು ಆಗದಂತಹ ಪರಿಸ್ಥಿತಿಯಲ್ಲಿ ಸರ್ಕಾರ ಇದೆ. ಜನರ ದಾರಿ ತಪ್ಪಿಸಲು, ವಿಷಯಾಂತರ ಮಾಡಲು ದೆಹಲಿಯಲ್ಲಿ ಧರಣಿ ಮಾಡಲಾಗುತ್ತಿದೆ. ದೆಹಲಿಗೆ ಹೋಗಿ ಪ್ರತಿಭಟನೆ ಮಾಡುವ ಮೂಲಕ ಹೊಸ ನಾಟಕ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_244_6.txt b/eesanje/url_46_244_6.txt new file mode 100644 index 0000000000000000000000000000000000000000..f9dd4acf451d872e3a704153414a1be4fb539654 --- /dev/null +++ b/eesanje/url_46_244_6.txt @@ -0,0 +1,6 @@ +ಡಿಕೆಶಿ ಆಪ್ತರಿಗೆ ಐಟಿ ಶಾಕ್ +ಬೆಂಗಳೂರು,ಫೆ.7- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರಮಾಪ್ತ ಹಾಗೂ ಗುತ್ತಿಗೆದಾರ ವಿ.ಆರ್.ಪಾಟೀಲ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಾ ಹಾಗೂ ಹುಬ್ಬಳ್ಳಿಯಿಂದ ನಾಲ್ಕು ವಾಹನಗಳಲ್ಲಿ ಬಂದ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಬೆಳಗ್ಗೆಯೇ ಕೊಪ್ಪಳ ಜಿಲ್ಲೆ ಹೊಸ ಲಿಂಗಾಪುರ ಗ್ರಾಮದಲ್ಲಿರುವ ವಿ.ಆರ್.ಪಾಟೀಲ್ ಒಡೆತನಕ್ಕೆ ಸೇರಿದ ನಿವಾಸ, ಕಚೇರಿ, ಖಾಸಗಿ ಶಾಲೆಗಳು, ನಿವಾಸ ಸೇರಿದಂತೆ ಹಲವು ಕಡೆ ದಾಳಿ ನಡೆಸಿದ್ದಾರೆ. +ಕೊಪ್ಪಳದಲ್ಲಿರುವ ಶಾರದಾ ಇಂಟನ್ರ್ಯಾಷನಲ್ ಸ್ಕೂಲ್ ಮಾಲೀಕರಾದ ವಿ.ಆರ್ ಪಾಟೀಲ್ ಅವರ ಮನೆ ಹಾಗೂ ಕಚೇರಿಗಳ ಮೇಲೂ ದಾಳಿ ನಡೆಸಲಾಗಿದೆ. ದಾಳಿ ಸಂದರ್ಭದಲ್ಲಿ ಸ್ಥಳೀಯ ಪೊಲೀಸರ ನೆರವನ್ನು ಪಡೆಯಲಾಗಿತ್ತು. ಮೂಲತಃ ಗುತ್ತಿಗೆದಾರರಾಗಿರುವ ವಿ.ಆರ್.ಪಾಟೀಲ್ ಬೃಹತ್ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ. +ಲೋಕೋಪಯೋಗಿ, ನೀರಾವರಿ ಸೇರಿದಂತೆ ವಿವಿಧ ಇಲಾಖೆಯಡಿ ಬರುವ ಕಾಮಗಾರಿಗಳನ್ನು ಹಲವಾರು ವರ್ಷಗಳಿಂದ ನಡೆಸುತ್ತಿದ್ದಾರೆ. ಕಳೆದ ವಾರ ಕೊಪ್ಪಳಕ್ಕೆ ಭೇಟಿ ಕೊಟ್ಟಿದ್ದ ಡಿ.ಕೆ.ಶಿವಕುಮಾರ್, ತಮ್ಮ ಆಪ್ತರಾಗಿರುವ ವಿ.ಆರ್.ಪಾಟೀಲ್ ಮನೆಗೂ ಭೇಟಿ ನೀಡಿದ್ದರು. ಇದರ ಜಾಡು ಹಿಡಿದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. +ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ +ಮತ್ತೊಂದೆಡೆ ಬೆಂಗಳೂರಿನ ಹಲವು ಕಡೆಯೂ ಕೆಲವು ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಪ್ರತಿಷ್ಠಿತ ನಾಲ್ಕಕ್ಕೂ ಹೆಚ್ಚು ಐಟಿ ಕಂಪನಿಗಳ ಮೇಲೆ ಜಂಟಿ ದಾಳಿ ನಡೆಸಲಾಗಿದೆ. ಸುಮಾರು ಎಂಟಕ್ಕೂ ಹೆಚ್ಚು ಸ್ಥಳಗಳಲ್ಲಿ ಗೋವಾ ಮತ್ತು ಬೆಂಗಳೂರಿನ ಐಟಿ ತಂಡ ಮುಂಜಾನೆಯೇ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_244_7.txt b/eesanje/url_46_244_7.txt new file mode 100644 index 0000000000000000000000000000000000000000..b2d8c47a68a11745ca6732022a7ef82e1206df6f --- /dev/null +++ b/eesanje/url_46_244_7.txt @@ -0,0 +1,6 @@ +ವಿಧಾನಸೌಧಕ್ಕೆ ಬೀಗ ಜಡಿಯಲು ಯತ್ನ +ಬೆಂಗಳೂರು,ಫೆ.7- ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕಲು ವಿಫಲ ಪ್ರಯತ್ನ ನಡೆಸಿದ ಪ್ರಸಂಗ ಜರುಗಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಉಪನಾಯಕ ಅರವಿಂದ್ ಬೆಲ್ಲದ್, ವಿಧಾನ ಪರಿಷತ್ನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಮುನಿರತ್ನ, ಚನ್ನಬಸಪ್ಪ, ರವಿಸುಬ್ರಹ್ಮಣ್ಯ, ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಅನೇಕರು ಗಾಂ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. +ಪ್ರತಿಭಟನೆ ನಡೆದ ಬಳಿಕ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಗೆ ಬೀಗ ಹಾಕುವ ಪ್ರಯತ್ನ ಮಾಡಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡದೆ ತಡೆ ಹಿಡಿದರು. ಒಂದು ಹಂತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಅಶೋಕ್ ಅವರು ಪೊಲೀಸರನ್ನು ತಳ್ಳಿ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಸಿಎಂ ಕಚೇರಿಗೆ ಬೀಗ ಹಾಕಲು ಮುಂದಾದರು. +ಸಕಾಲದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು. ನಂತರ ಬಿಜೆಪಿ ಕಾರ್ಯಕರ್ತರು ಶಾಸಕರ ಭವನದಿಂದ ಪ್ರವೇಶಿಸುವ ದಕ್ಷಿಣ ದ್ವಾರಕ್ಕೆ ಬೀಗ ಜಡಿಯಲು ಮುಂದಾದರು. ಈ ವೇಳೆ ಭದ್ರತೆಗೆ ನಿಂತಿದ್ದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. +ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ : ಬೊಮ್ಮಾಯಿ +ನಾವು ಪ್ರವೇಶ ದ್ವಾರಕ್ಕೆ ಬೀಗ ಹಾಕುತ್ತೇವೆ ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರೆ ಪೊಲೀಸರು ನಾವು ಅವಕಾಶ ಕೊಡುವುದಿಲ್ಲ. ಕೇವಲ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದೀರಿ. ಈಗ ಪ್ರತಿಭಟನೆ ನಡೆಸುತ್ತೇವೆ ಎಂದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದರು.ಪೊಲೀಸರ ಮಾತಿಗೂ ಜಗ್ಗದೆ ಬೀಗ ಜಡಿಯಲು ಮುಂದಾಗುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಪೊಲೀಸರು ಶಾಸಕರು ಮತ್ತು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. \ No newline at end of file diff --git a/eesanje/url_46_244_8.txt b/eesanje/url_46_244_8.txt new file mode 100644 index 0000000000000000000000000000000000000000..e17e24f15deb080290109d0a7f0ef004fd5a77d5 --- /dev/null +++ b/eesanje/url_46_244_8.txt @@ -0,0 +1,6 @@ +ರಾಜ್ಯಸಭೆ ಚುನಾವಣೆಗೆ ನಾಳೆ ಅಧಿಸೂಚನೆ +ಬೆಂಗಳೂರು,ಫೆ.7- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕ ಸ್ಥಾನಗಳಿಗೆ ನಡೆಯುವ ದ್ವೆವಾರ್ಷಿಕ ಚುನಾವಣೆಗೆ ನಾಳೆ ಅಧಿಸೂಚನೆ ಹೊರಬೀಳಲಿದೆ.ಏಪ್ರಿಲ್ 2 ರಂದು ರಾಜ್ಯಸಭಾ ಸ್ಥಾನದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್‍ರವರು ನಿವೃತ್ತಿಯಾಗಲಿದ್ದಾರೆ. +ರಾಜೀವ್ ಚಂದ್ರಶೇಖರ್ ಬಿಜೆಪಿಯಿಂದ ಚುನಾಯಿತರಾಗಿದ್ದರು. ಉಳಿದ ಮೂವರು ಕಾಂಗ್ರೆಸ್‍ನಿಂದ ಸ್ರ್ಪಸಿ ಚುನಾಯಿತರಾಗಿದ್ದರು. ಇವರ ನಿವೃತ್ತಿಯಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.ಏಪ್ರಿಲ್‍ನಲ್ಲಿ ನಿವೃತ್ತಿಯಿಂದ ತೆರವಾಗಲಿರುವ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಜನವರಿ 29 ರಂದು ಪ್ರಕಟಿಸಿತ್ತು. +ಪ್ರಕಟಿತ ವೇಳಾಪಟ್ಟಿಯಂತೆ ನಾಳೆ ಚುನಾವಣಾ ಅಸೂಚನೆ ಪ್ರಕಟಗೊಳ್ಳಲಿದ್ದು, ನಾಳೆಯಿಂದಲೇ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ.15 ನಾಮಪತ್ರಗಳ ಸಲ್ಲಿಕೆಗೆ ಕಡೆದಿನವಾಗಿದ್ದು, ಫೆ.16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. +ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ +ಫೆ.20 ರವರೆಗೂ ಉಮೇದುವಾರಿಕೆ ವಾಪಸ್ ಪಡೆಯಲು ಕಾಲಾವಕಾಶವಿದೆ. ನಾಲ್ಕಕ್ಕಿಂತ ಹೆಚ್ಚು ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರೆ ಫೆ.27 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_46_244_9.txt b/eesanje/url_46_244_9.txt new file mode 100644 index 0000000000000000000000000000000000000000..2ec58d56ff235d4410f4d540c1d46819a034dbf3 --- /dev/null +++ b/eesanje/url_46_244_9.txt @@ -0,0 +1,10 @@ +ರಾಜ್ಯಕ್ಕಾಗುತ್ತಿರುವ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ +ನವದೆಹಲಿ,ಫೆ.7- ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ನಿರಂತರ ಅನ್ಯಾಯವನ್ನು ಖಂಡಿಸಿ ರಾಜ್ಯಸರ್ಕಾರ ದೆಹಲಿಯ ಜಂತರ್ ಮಂತರ್‍ನಲ್ಲಿಂದು ನನ್ನ ತೆರಿಗೆ ನನ್ನ ಹಕ್ಕು ಧ್ಯೇಯದ ಹೋರಾಟ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಸರ್ಕಾರ ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಪ್ರಮುಖರು ಭಾಗವಹಿಸಿದ್ದರು. +ಐತಿಹಾಸಿಕವಾಗಿ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಅನುಸರಿಸುತ್ತಿರುವ ತಾರತಮ್ಯವನ್ನು ಎಳೆಎಳೆಯಾಗಿ ವಿವರಿಸಿದರು. ದಕ್ಷಿಣ ಭಾರತದ ರಾಜ್ಯಗಳ ಪೈಕಿ ಮೊದಲ ಬಾರಿಗೆ ಕರ್ನಾಟಕ ಕೇಂದ್ರದ ವಿರುದ್ಧ ಸಿಡಿದೆದ್ದಿದೆ. ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಣಕಹಳೆ ಊದಿರುವ ಕಾಂಗ್ರೆಸ್ ನಾಯಕರು ನಮ್ಮ ತೆರಿಗೆಯ ಹಕ್ಕನ್ನು ನಮಗೆ ಕೊಡಲೇಬೇಕೆಂದು ಬಲವಾಗಿ ಪ್ರತಿಪಾದಿಸಿದ್ದಾರೆ. +ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಿ, ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳ ಮೂಲಕ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ತಾರತಮ್ಯಖಂಡನೀಯ. ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರ ಸರ್ಕಾರ ವಿತಂಡವಾದಗಳ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನಾಯಕರು ವಾಗ್ದಾಳಿ ನಡೆಸಿದರು. +ಕರ್ನಾಟಕದಿಂದ 4.30 ಲಕ್ಷ ಕೋಟಿ ರೂ. ತೆರಿಗೆ ಹಾಗೂ ಸೆಸ್‍ಗಳನ್ನು ಸಂಗ್ರಹಿಸುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಮರಳಿ 50 ಸಾವಿರ ಕೋಟಿ ರೂ.ಗಳನ್ನು ಮಾತ್ರ ನೀಡುತ್ತಿದೆ. ನಮ್ಮ ಸಂಪನ್ಮೂಲವನ್ನೆಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದರು. +ಬಜೆಟ್ ಗಾತ್ರಕ್ಕನುಗುಣವಾಗಿ ತೆರಿಗೆ ಪಾಲು ಏರಿಕೆಯಾಗಿಲ್ಲ. 14, 15 ನೇ ಹಣಕಾಸು ಆಯೋಗದಿಂದ ಭಾರೀ ತಾರತಮ್ಯವಾಗಿದೆ. 11 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ರದ್ದುಪಡಿಸಲಾಗಿದೆ ಎಂದು ಟೀಕಿಸಿದರು.ಪ್ರತಿಭಟನೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು, ಗೃಹ ಸಚಿವರ ಭೇಟಿಗೆ ಸಮಯ ಕೇಳಲಾಗಿತ್ತು. ಪ್ರತಿಭಟನೆ ಪಕ್ಷಾತೀತವಾಗಿದ್ದು, ಜೆಡಿಎಸ್-ಬಿಜೆಪಿಯ ಸಂಸದರೂ ಭಾಗವಹಿಸಬೇಕೆಂದು ಮುಖ್ಯಮಂತ್ರಿ ಪತ್ರ ಬರೆದಿದ್ದರು. ಆದರೆ ವಿಪಕ್ಷಗಳ ಯಾವ ನಾಯಕರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ. +ರಾಜ್ಯದ ಪರ ಧ್ವನಿ ಎತ್ತದೇ ಬಿಜೆಪಿ ನಾಯಕರು ನೈತಿಕತೆ ಕಳೆದುಕೊಂಡಿದ್ದಾರೆ : ಡಿಕೆಶಿ +ಕೇಂದ್ರದ ತಾರತಮ್ಯದ ವಿರುದ್ಧ ಕರ್ನಾಟಕದ ಬಳಿಕ ಕೇರಳ ಹಾಗೂ ತಮಿಳುನಾಡು ಸರ್ಕಾರಗಳೂ ಕೂಡ ಪ್ರತಿಭಟನೆಗೆ ಮುಂದಾಗಿರುವುದು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತೆರಿಗೆ ಹಾಗೂ ಆರ್ಥಿಕ ಅನುದಾನ ಹಂಚಿಕೆ, ಹಣಕಾಸು ಆಯೋಗದ ಜವಾಬ್ದಾರಿ ಇದರಲ್ಲಿ ರಾಜ್ಯಸರ್ಕಾರದ ಪಾತ್ರ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಾದಿಸಿದ್ದಾರೆ. +ಈ ಹೇಳಿಕೆ ಮೂಲಕ ಆರ್ಥಿಕ ಇಲಾಖೆ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಪ್ರತಿ ತಿಂಗಳು ಅನುದಾನ ಹಂಚಿಕೆ ಹಾಗೂ ತೆರಿಗೆ ಸಂಗ್ರಹದ ಬಗ್ಗೆ ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ಬಹಿರಂಗಪಡಿಸುತ್ತದೆ. ಆದರೂ ಹಂಚಿಕೆಯಲ್ಲಿ ತಮ್ಮ ಪಾತ್ರ ಇಲ್ಲ ಎಂದು ಹೇಳುತ್ತಿರುವುದು ನಂಬಲರ್ಹವಲ್ಲ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾದಾಗ ಇದಕ್ಕೂ, ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ. +ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡುತ್ತವೆ ಎಂದು ನುಣುಚಿಕೊಳ್ಳುತ್ತದೆ. ಅದೇ 2 ರೂ. ದರ ಕಡಿಮೆ ಮಾಡಿದರೆ ಖುದ್ದು ಪ್ರಧಾನಿಯವರೇ ಹೇಳಿಕೆ ನೀಡಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಾರೆ. ಜನರಿಗೆ ಅನ್ಯಾಯವಾದಾಗ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುವುದು. ಅದೇ ಸಣ್ಣಪುಟ್ಟ ಲಾಭವಾಗುವುದಾದರೆ ಅದನ್ನು ದೊಡ್ಡದಾಗಿ ಬಿಂಬಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_245_1.txt b/eesanje/url_46_245_1.txt new file mode 100644 index 0000000000000000000000000000000000000000..5b15e19702c6c7dd3ed905c3c5a7453312bc76dd --- /dev/null +++ b/eesanje/url_46_245_1.txt @@ -0,0 +1,11 @@ +ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ +ಡೆಹ್ರಾಡೂನ್,ಫೆ.6- ಎಲ್ಲಾ ಜಾತಿ ಹಾಗೂ ಧರ್ಮದವರಿಗೆ ಸಮಾನ ನಾಗರಿಕ ಹಕ್ಕುಗಳನ್ನು ನೀಡುವ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಉತ್ತರಾಖಂಡ ರಾಜ್ಯದ ವಿಧಾನಸಭೆ ಯಲ್ಲಿ ಮಂಡಿಸಲಾಗಿದೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಈ ಮಸೂದೆಯನ್ನು ಸದನದಲ್ಲಿ ಮಂಡಿಸಿದ್ದು, ನಾಳೆ ಅಂಗೀಕರಿಸಬಹುದು. ಈ ಮೂಲಕ ಸ್ವಾತಂತ್ರ್ಯಾನಂತರ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೊಳಿಸಿದ ದೇಶದ ಮೊದಲ ರಾಜ್ಯ ಎಂಬ ಖ್ಯಾತಿಗೆ ಉತ್ತರಾಖಂಡ ಭಾಜನವಾಗಲಿದೆ. ಗೋವಾದಲ್ಲಿ ಮಾತ್ರವೇ ಈ ನಿಯಮ ಜಾರಿಯಲ್ಲಿದೆ. ಆದರೆ ಅದು ಪೋರ್ಚುಗೀಸರ ಕಾಲದಿಂದಲೂ ಇದೆ. ಸ್ವಾತಂತ್ರ್ಯಾನಂತರದ ಗೋವಾ ಸರ್ಕಾರ ಯಾವುದೇ ಹೊಸ ಕಾಯ್ದೆ ರೂಪಿಸಿರಲಿಲ್ಲ. +ಸಿಎಂ ಧಾಮಿ ಸಂವಿಧಾನದ ಮೂಲ ಪ್ರತಿಯೊಂದಿಗೆ ಸದನಕ್ಕೆ ಆಗಮಿಸಿದ್ದರು. ಅದೇ ಸಮಯದಲ್ಲಿ, 10 ರಷ್ಟು ಮೀಸಲಾತಿಗೆ ಸಂಬಂಧಿಸಿದ ಆಯ್ಕೆ ಸಮಿತಿಯ ವರದಿಯನ್ನು ರಾಜ್ಯ ಚಳವಳಿಗಾರರಿಗೆ ಮಂಡಿಸಲಾಯಿತು. ವಿಧಾನಸಭೆಯ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು,ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕ ಕ್ರಮವಾಗಿ ಇಡೀ ರಾಜ್ಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. +ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ +ಈ ಮಸೂದೆಗೆ ಪ್ರತಿಪಕ್ಷದ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಗದ್ದಲ ಎಬ್ಬಿಸಿದರೆ, ಇದಕ್ಕೆ ಪ್ರತಿಯಾಗಿ ಬಜೆಪಿ ಸದಸ್ಯರು ಜೈ ಶ್ರೀರಾಮ, ಭಾರತ್ ಮಾತಾಕಿ ಜೈ ಘೋಷಣೆಗಳನ್ನು ಕೂಗಿದರು. ಬಳಿಕ ವಿಧಾನಸಭೆಯ ಸಭಾಧ್ಯಕ್ಷರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಉತ್ತರಾಖಂಡ್ ವಿಧಾನಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಹೊಂದಿರುವ ಕಾರಣ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ. +ಮತ್ತೊಂದೆಡೆ, ಹಲ್ದ್ವಾನಿಯಲ್ಲಿ ಭಾರೀ ಪೊಲೀಸ್ ಮತ್ತು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಯುಸಿಸಿಗೆ ಸಂಬಂಧಿಸಿದಂತೆ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಬಂಭುಲ್ಪುರ, ಇಂದಿರಾ ನಗರ, ಗಾಂ ನಗರ, ಶನಿ ಬಜಾರ್ನಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಎಸ್ಪಿ ಸಿಟಿ, ಸಿಒ ಅವರೇ ಗಸ್ತು ತಿರುಗುತ್ತಿದ್ದಾರೆ. +ಇನ್ನು ಮುಂದೆ ರಾಜ್ಯದಲ್ಲಿ ಮದುವೆ, ವಿಚ್ಛೇದನ, ಆಸ್ತಿ ಹಕ್ಕು- ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಒಂದೇ ಕಾನೂನು ಅನ್ವಯವಾಗಲಿದೆ. ಈವರೆಗೂ ಆಯಾ ಧರ್ಮಗಳು ಬೇರೆ ಬೇರೆ ವೈಯಕ್ತಿಕ ಕಾನೂನು ಅನುಸರಿಸುತ್ತಿದ್ದವು. ಇದು ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತಿತ್ತು. +ಎಲ್ಲಾ ಧರ್ಮೀಯರಿಗೂ ವಿವಾಹ, ವಿಚ್ಛೇದನ, ಆಸ್ತಿ, ಭೂಮಿ ಮತ್ತು ಉತ್ತರಾಧಿಕಾರ ಕುರಿತು ವಿವಿಧ ಧರ್ಮಗಳಲ್ಲಿ ಪ್ರತ್ಯೇಕ ನಿಯಮಗಳಿವೆ. ಅದನ್ನೆಲ್ಲೆ ರದ್ದುಪಡಿಸಿ ಒಂದೇ ಕಾನೂನು ರೂಪಿಸುವುದೇ ಏಕರೂಪ ನಾಗರಿಕ ಸಂಹಿತೆ. +ಸಿದ್ದರಾಮಯ್ಯ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ +ಚಿಂತಿಸುವ ಅಗತ್ಯವಿಲ್ಲ :ಬೆಳಗ್ಗೆಯೇ ವಿಧೇಯಕ ಮಂಡಿಸುವ ಮುನ್ನ ಸಿಎಂ ಧಾಮಿ, ದೇವಭೂಮಿ ಉತ್ತರಾಖಂಡದ ನಾಗರಿಕರಿಗೆ ಸಮಾನ ಹಕ್ಕು ನೀಡುವ ಉದ್ದೇಶದಿಂದ ಇಂದು ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಲಾಗುವುದು. ಯುಸಿಸಿ ಜಾರಿಗೆ ಮುಂದಾಗಿರುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದು ರಾಜ್ಯದ ಸಮಸ್ತ ಜನತೆಗೆ ಹೆಮ್ಮೆಯ ಕ್ಷಣ. ಜೈ ಹಿಂದ್, ಜೈ ಉತ್ತರಾಖಂಡ ಎಂದಿದ್ದಾರೆ. +ವಾಸ್ತವವಾಗಿ, ಅಧಿವೇಶನದ ಆರಂಭದ ಮೊದಲು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಯುಸಿಸಿ ಎಲ್ಲಾ ವರ್ಗಗಳಿಗೆ ಒಳಿತಾಗುತ್ತದೆ ಮತ್ತು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ. ಸದನದಲ್ಲಿ ಮಸೂದೆಯನ್ನು ಸಕಾರಾತ್ಮಕ ರೀತಿಯಲ್ಲಿ ಚರ್ಚಿಸುವಂತೆ ಅವರು ಇತರ ರಾಜಕೀಯ ಪಕ್ಷಗಳ ಸದಸ್ಯರನ್ನು ವಿನಂತಿಸಿದರು. ಮಂಗಳವಾರ ಸದನದಲ್ಲಿ ಮಂಡನೆಯಾದ ನಂತರ ಮಸೂದೆಯ ಬಗ್ಗೆ ಚರ್ಚೆ ನಡೆಯಲಿದೆ. \ No newline at end of file diff --git a/eesanje/url_46_245_10.txt b/eesanje/url_46_245_10.txt new file mode 100644 index 0000000000000000000000000000000000000000..b84369b998427cf705ca0f8c24815461779c1f6f --- /dev/null +++ b/eesanje/url_46_245_10.txt @@ -0,0 +1,9 @@ +ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ +ಬೆಂಗಳೂರು, ಫೆ.6-ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಜೆಡಿಎಸ್ ಸೇರ್ಪಡೆಯಾದರು. ಜೆಪಿಭವನದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ, ಶಾಸಕ ನೇಮಿರಾಜ್ ನಾಯಕ್, ಮಾಜಿ ಸಂಸದ ಅನಿಲ್ ಲಾಡ್ ಮುಂತಾದ ಮುಖಂಡರು ಮಿರ್ಜಿ ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಪಕ್ಷ ಸೇರಿದ ಬೆನ್ನಲ್ಲೇ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೆ ಹಿರಿಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. +ರಾಜ್ಯ ಪದಾಧಿಕಾರಿಗಳ ನೇಮಕ: ಪಕ್ಷದ ಕೋರ್ ಕಮಿಟಿ ತೀರ್ಮಾನದಂತೆ ನೂತನ ಪದಾಧಿಕಾರಿಗಳನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರನ್ನು ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಶ್ಮಿ ರಾಮೇಗೌಡ ಅವರನ್ನು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ, ರಾಜು ನಾಯಕ ಅವರನ್ನು ಯುವ ಜನತಾದಳದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. +ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವರಾದ ಅಲ್ಕೊಡ್ ಹನುಮಂತಪ್ಪ, ಸಾ.ರಾ.ಮಹೇಶ್, ಶಾಸಕ ಸಿ.ಬಿ.ಸುರೇಶ್ ಬಾಬು, ಭೀಮಗೌಡ ಬಸನಗೌಡ ಪಾಟೀಲ್, ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ನರಿಬೋಳ ಅವರನ್ನು ನೇಮಿಸಿದ್ದಾರೆ. ಹಿರಿಯ ಉಪಾಧ್ಯಕ್ಷರಾಗಿ ಮಾಜಿ ಶಾಸಕರಾದ ಡಾ.ಶ್ರೀನಿವಾಸ ಮೂರ್ತಿ, ರವೀಂದ್ರ ಶ್ರೀಕಂಠಯ್ಯ, ಸೋಮಣ್ಣಗೌಡ ಪಾಟೀಲ್, ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ನೇಮಕ ಮಾಡಲಾಗಿದೆ. +1 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಪ್ರಕರಣ ದಾಖಲು +ಉಪಾಧ್ಯಕ್ಷರಾಗಿ ಶಾಸಕರಾದ ಕರೆಮ್ಮ ಜಿ.ನಾಯಕ, ಟಿ. ಎ.ಶರವಣ, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಚೌಡರೆಡ್ಡಿ ತೂಪಲ್ಲಿ , ರಾಜಾ ವೆಂಕಟಪ್ಪ ನಾಯಕ ದೊರೆ, ಕೆ.ಬಿ.ಪ್ರಸನ್ನ ಕುಮಾರ್, ಸುನೀತಾ ಚೌಹಾಣ್ ಅವರು ನೇಮಕಗೊಂಡಿದ್ದಾರೆ. +ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಸಚಿವ ವೆಂಕಟರಾವ್ ನಾಡಗೌಡರು, ಖಜಾoಚಿಯಾಗಿ ಬಿ.ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಎ. ಪಿ.ರಂಗನಾಥ್, ಅರ್ ಪ್ರಕಾಶ್, ಸಯ್ಯದ್ ರೋಷನ್ ಅಬ್ಬಾಸ್, ರೆಹಮತುಲ್ಲಾ ಖಾನ್, ಸುಧಾಕರ್ ಲಾಲ್, ಶಿವಕುಮಾರ ನಾಟೀಕಾರ್, ಶಾರದಾ ಅಪ್ಪಾಜಿಗೌಡ, ರೂತ್ ಮನೋರಮಾ, ಮಲ್ಲೇಶ್ ಬಾಬು, ವೀರಭದ್ರಪ್ಪ ಹಾಲರವಿ ಅವರನ್ನು ನೇಮಿಸಲಾಗಿದೆ. +ಕಾರ್ಯದರ್ಶಿಗಳಾಗಿ ಮಹಂತಯ್ಯಮಠ, ಶಂಸಿ ತಬ್ರಾಜ್, ಐಲಿನ್ ಜಾನ್ ಮಠಪತಿ, ಬಿ.ಕಾಂತರಾಜ್, ಡಾ.ವಿಜಯ ಕುಮಾರ್, ಡಾ.ಶೀಲಾ ನಾಯಕ್, ರೋಷನ್ ಬಾವಾಜಿ, ಚಂದ್ರಕಾಂತ್ ಶೇಕಾ, ಕನ್ಯಾಕುಮಾರಿ, ಸಿದ್ದಬಸಪ್ಪ ಯಾದವ್ ಅವರನ್ನು ನೇಮಿಸಲಾಗಿದೆ. +ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ: ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಕಣದಲ್ಲಿರುವ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರ ಗೆಲುವಿಗೆ ಶ್ರಮಿಸಲು ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಇ.ಕೃಷ್ಣಪ್ಪ, ಬೆಂಗಳೂರು ನಗರದ ಮಾಜಿ ಅಧ್ಯಕ್ಷ ಆರ್ ಪ್ರಕಾಶ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ. \ No newline at end of file diff --git a/eesanje/url_46_245_11.txt b/eesanje/url_46_245_11.txt new file mode 100644 index 0000000000000000000000000000000000000000..5f49e6def8aa64b20a23aa272ff6ba4db8f445b9 --- /dev/null +++ b/eesanje/url_46_245_11.txt @@ -0,0 +1,5 @@ +ಹಾಸನ-ಮೈಸೂರು ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ‘ಹುಚ್ಚಾಟ’ +ಹಾಸನ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರ ಹುಚ್ಚಾಟ ಹೆಚ್ಚಾಗಿದ್ದು, ನಡುರಸ್ತೆಯಲ್ಲಿ ವೀಲ಼ಿಂಗ್ ಮಾಡಿ ವಾಹನ ಸವಾರರಿಗೆ ಕಾಟ ಕೊಟ್ಟಿರುವ ಘಟನೆ ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಡೆದಿದೆ. ತ್ರಿಬಲ್ ರೈಡಿಂಗ್ ಮಾಡುತ್ತಾ ಇಡಿ ರಸ್ತೆ ಆವರಿಸಿಕೊಂಡ ಯುವಕರು ಮೂರ್ನಾಲ್ಕು ಬೈಕ್‌ನಲ್ಲಿ ಒಟ್ಟೊಟ್ಟಿಗೆ ರಸ್ತೆಯಲ್ಲಿ ಹುಚ್ಚಾಟ ಪ್ರದರ್ಶಿಸಿದ್ದಾರೆ. +ಮಹಿಳೆಯನ್ನು ಕೊಂದು, ಶವದ ಜೊತೆ ಸಂಭೋಗ ಮಾಡಿದ್ದ ವಿಕೃತ ಕಾಮಿಗಳ ಬಂಧನ +ಯುವಕರ ಹುಚ್ಚಾಟದ ವೀಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ನಿತ್ಯವೂ ಇಂತಹ ವ್ಹೀಲಿಂಗ್ ಪುಂಡರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿದೆ. ಸ್ವಲ್ಪ‌ ಯಡವಟ್ಟಾದರೂ ಪ್ರಾಣಕ್ಕೆ ಅಪಾಯವಾಗುತ್ತದೆ ಎಂದು ತಿಳಿದಿದ್ದರು, ಬೈಕ್‌ನಲ್ಲಿ ಮನಬಂದಂತೆ ಓಡಾಡುತ್ತಾ ರಸ್ತೆಯಲ್ಲಿ ಬರುವ ಇತರೆ ವಾಹನಗಳಿಗೆ ಸೈಡ್ ಕೂಡದೆ ಪುಂಡಾಟವಾಡುತ್ತಿದ್ದು, ವ್ಹೀಲಿಂಗ್ ಪುಂಡರಿಗೆ ಬ್ರೇಕ್ ಹಾಕುವಂತೆ ಪೋಲಿಸರಿಗೆ ಸ್ಥಳೀಯರ ಆಗ್ರಹಿಸಿದ್ದಾರೆ. +ಕಿಲೋಮೀಟರ್‌ಗಟ್ಟಲೆ ವ್ಹೀಲಿಂಗ್ ಮಾಡುತ್ತಾ ಜನರಿಗೆ ತೊಂದರೆ ಕೊಡ್ತಿರುವ ಪುಂಡರಿಗೆ ಖಾಕಿ ಬಿಸಿ ಮುಟ್ಟಿಸುವಂತೆ ಒತ್ತಾಯಿಸಿದ್ದಾರೆ \ No newline at end of file diff --git a/eesanje/url_46_245_12.txt b/eesanje/url_46_245_12.txt new file mode 100644 index 0000000000000000000000000000000000000000..d7facdb44944de96fa99a82bca8c9e83713c7ba7 --- /dev/null +++ b/eesanje/url_46_245_12.txt @@ -0,0 +1,10 @@ +10 ವರ್ಷಗಳಲ್ಲಿ ಏಕೆ ಮೋದಿ ಗ್ಯಾರಂಟಿ ನೀಡಿರಲಿಲ್ಲ..? : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.5- ರಾಜ್ಯಸ ರ್ಕಾರ ಜಾರಿಗೆ ತರುವಂತಹ ಜನಪರವಾದ ಪಂಚಖಾತ್ರಿ ಯೋಜನೆಗಳನ್ನು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಏಕೆ ಜಾರಿಗೊಳಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿಂದು ಸಾರಿಗೆ ಸಂಸ್ಥೆಗೆ 100 ಅಶ್ವಮೇಧ ಬಸ್‍ಗಳನ್ನು ಸಮರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ರೂಪಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಟೀಕಿಸುತ್ತಿದ್ದರು. +ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದರು. ಜಾರಿ ಮಾಡಿದ ಮೇಲೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಚಾರ ಮಾಡಿದರು. ಎಲ್ಲವೂ ಯಶಸ್ವಿಯಾದ ಬಳಿಕ ಲೋಕಸಭಾ ಚುನಾವಣೆ ನಂತರ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುತ್ತಾರೆ ಎಂದು ಹೇಳುತ್ತಿದ್ದಾರೆ. ದಿನಕ್ಕೊಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುವ ಬಿಜೆಪಿಯವರ ಮಾತನ್ನು ಜನ ನಂಬುವುದಿಲ್ಲ ಎಂದರು. +ಪ್ರಧಾನಿ ನರೇಂದ್ರಮೋದಿ ಕೂಡ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದರು. ಈಗ ಮೋದಿ ಗ್ಯಾರಂಟಿ ನನ್ನ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ. ಈ 10 ವರ್ಷಗಳಲ್ಲಿ ಏಕೆ ಮೋದಿ ಗ್ಯಾರಂಟಿ ನೀಡಿರಲಿಲ್ಲ? ಬಿಜೆಪಿ ಸರ್ಕಾರವಿರುವ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿಯಂತಹ ಯೋಜನೆಗಳು ಜಾರಿಯಾಗುತ್ತಿಲ್ಲ. ಕ್ಯೂ ನಹಿ ದಿಯಾ ಮೋದಿ ಜೀ.. ಎಂದು ವಾಗ್ದಾಳಿ ನಡೆಸಿದರು. +ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿಯವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಲಾಗಿತ್ತು. ಅಚ್ಚೇ ದಿನ್ ಬರುತ್ತದೆ ಎಂದು ಹೇಳಿದ್ದರು. ಯಾವುದನ್ನೂ ಈಡೇರಿಸಲಿಲ್ಲ. ಬದಲಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರದ ಬೆಲೆಗಳು ದುಬಾರಿಯಾಗಿದೆ. +ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ +ರಾಜ್ಯ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಬಿಜೆಪಿಯವರು ಕೀಳುಮಟ್ಟದಲ್ಲಿ ಟೀಕೆ ಮಾಡುತ್ತಾರೆ. ಮೋದಿಯವರಿಗೆ, ಬಿಜೆಪಿಯವರಿಗೆ ಕಣ್ಣು ಕಾಣುವುದಿಲ್ಲವೇ? ಕನಿಷ್ಠ ಜ್ಞಾನ ಇಲ್ಲವೇ? ಜನಪರ ಯೋಜನೆಗಳನ್ನು ಅರ್ಥ ಮಾಡಿಕೊಳ್ಳುವ ಸಾಮಥ್ರ್ಯ ಇಲ್ಲವೇ ಎಂದು ಪ್ರಶ್ನಿಸಿದರು. +ರಾಜ್ಯದಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಮಹಿಳೆಯರು, ಗೃಹಲಕ್ಷ್ಮಿ, ಶಕ್ತಿ ಯೋಜನೆಯಿಂದ ಆಗುತ್ತಿರುವ ಆರ್ಥಿಕ ಉಳಿತಾಯವನ್ನು ಬೇರೆ ಬಾಬ್ತುಗಳಿಗೆ ಖರ್ಚು ಮಾಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಆರ್ಥಿಕ ಅಭಿವೃದ್ಧಿಯಾಗಿದೆ. ಜಿಎಸ್‍ಟಿ ಸಂಗ್ರಹ ಹೆಚ್ಚಾಗಿದೆ ಎಂದರು. ಬಿಜೆಪಿ ಸರ್ಕಾರದವರು 3,800 ಬಸ್ ಸಂಚಾರ ಸೇವೆಯನ್ನು ಸ್ಥಗಿತಗೊಳಿಸಿದ್ದರು. ಇದರಿಂದ ಜನರಿಗೆ ತೊಂದರೆಯಾಗಿದೆ. ನಮ್ಮ ಸರ್ಕಾರ 5 ಸಾವಿರಕ್ಕೂ ಹೆಚ್ಚು ಬಸ್‍ಗಳನ್ನು ಸಾರಿಗೆ ಸಂಸ್ಥೆಗೆ ಒದಗಿಸುವ ಮೂಲಕ ಉತ್ಕøಷ್ಟ ಹಾಗೂ ಸುರಕ್ಷಿತ ಸೇವೆ ಒದಗಿಸಲು ಸಮರ್ಥವಾಗಿದೆ ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದು, ಬೇರೆ ಬೇರೆ ರಾಜ್ಯಗಳು ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದರು. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿತ್ತು. +ಇದರಿಂದ ಯಾರು ಎಷ್ಟು ಬಳಕೆ ಮಾಡಿದ್ದಾರೆ ಎಂಬ ಲೆಕ್ಕ ಸಿಗುತ್ತದೆ. ಸಾರಿಗೆ ಸಂಸ್ಥೆಗಳು ಈ ಯೋಜನೆಯಿಂದ ಆರ್ಥಿಕವಾಗಿ ಸದೃಢವಾಗಿವೆ. ಮಹಿಳೆಯರ ಸುರಕ್ಷಿತೆಗಾಗಿ ಪ್ರತ್ಯೇಕ ಪಿಂಕ್ ಬಸ್‍ಗಳನ್ನು ಬಿಡುವ ಆಲೋಚನಗಳಿವೆ ಎಂದು ಹೇಳಿದರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‍ಆರ್‍ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_245_2.txt b/eesanje/url_46_245_2.txt new file mode 100644 index 0000000000000000000000000000000000000000..cc983c7026612b0ef45e8462f5caded2afe5617f --- /dev/null +++ b/eesanje/url_46_245_2.txt @@ -0,0 +1,8 @@ +ಗೃಹಿಣಿ ಕೊಲೆ ಪ್ರಕರಣಕ್ಕೆ ಹೊಸ ತಿರುವು : ಅಪ್ಪ-ಮಗನಿಂದಲೇ ಹತ್ಯೆ +ಬೆಂಗಳೂರು, ಫೆ.6- ಕೆಆರ್‍ಪುರಂನಲ್ಲಿ ನಡೆದಿದ್ದ ಗೃಹಿಣಿ ಕೊಲೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಅಪ್ಪ- ಮಗ ಸೇರಿ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಜಸ್ಟೀಸ್ ಬೀಮಯ್ಯ ಲೇಔಟ್, ದರ್ಗಾ ಬಳಿಯ ಮನೆಯೊಂದರಲ್ಲಿ ನೇತ್ರಾವತಿ ಅವರು ಪತಿ ಚಂದ್ರಪ್ಪ ಹಾಗೂ 17 ವರ್ಷದ ಮಗನೊಂದಿಗೆ ವಾಸವಾಗಿದ್ದರು. +ಪತ್ನಿಯ ನಡತೆಯ ಬಗ್ಗೆ ಗಂಡ ಅನುಮಾನ ವ್ಯಕ್ತಪಡಿಸಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದನು. ಇದೇ ವಿಚಾರವಾಗಿ ಹಲವಾರು ಬಾರಿ ಮನೆಯಲ್ಲಿ ಗಲಾಟೆಯೂ ನಡೆದಿತ್ತು. ಹೆತ್ತ ತಾಯಿಯ ನಡತೆಯ ವಿಷಯವಾಗಿ ತಂದೆಯಿಂದ ಪ್ರಚೋದನೆಗೊಂಡ ಮಗ ಫೆ. 2ರಂದು ತಂದೆಯೊಂದಿಗೆ ಸೇರಿಕೊಂಡು ರಾಡಿನಿಂದ ನೇತ್ರಾವತಿ(40) ಅವರನ್ನು ಕೊಲೆ ಮಾಡಿರುತ್ತಾರೆ. +ನೇತ್ರಾವತಿ ಮೃತಪಟ್ಟಿ ರುವುದನ್ನು ತಿಳಿದು ತಂದೆಯನ್ನು ರಕ್ಷಿಸಲು ಮಗ ತಾನೆ ರಾಡಿನಿಂದ ಹೊಡೆದು ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದನು. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರಿಗೆ ಕೊಲೆಗೆ ಬಳಸಲಾಗಿದ್ದ ರಾಡಿನ ಮೇಲೆ ಎರಡು ರೀತಿಯ ಫಿಂಗರ್ ಪ್ರಿಂಟ್‍ಗಳು ಪತ್ತೆಯಾಗಿದ್ದು ಕಂಡು ಆಶ್ಚರ್ಯಗೊಂಡರು. ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು ನೇತ್ರಾವತಿ ಅವರ ಪತಿ ಚಂದ್ರಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕೊಲೆಯ ಸತ್ಯಂಶ ಬಯಲಾಗಿದೆ. +ಅಕ್ರಮ ಸಂಬಂಧಕ್ಕೆ ಕೊಲೆ…!ಚಂದ್ರಪ್ಪ ಅವರನ್ನು ತೀವ್ರ ವಿಚಾರಣೆ ನಡೆಸಿದಾಗ ಪತ್ನಿ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟವಿತ್ತು. ಕೆಲವೊಮ್ಮೆ ಮೂರ್ನಾಲ್ಕು ದಿನಗಳ ಕಾಲ ಮನೆಗೆ ಬರುತ್ತಿರಲಿಲ್ಲ. ಮನೆಯಲ್ಲಿ ಮಗ, ನಾನು ಊಟವಿಲ್ಲದೆ ಉಪವಾಸವಿರು ತ್ತಿದ್ದೆವು. ಈ ಬಗ್ಗೆ ಪ್ರಶ್ನಿಸಿದರೆ ನಮ್ಮ ಜೊತೆಯೇ ಬಾಯಿ ಜೋರು ಮಾಡಿ ಜಗಳ ಮಾಡುತ್ತಿದ್ದಳು. ಹಾಗಾಗಿ ಮಗನ ಜೊತೆ ಸೇರಿಕೊಂಡು ಕೊಲೆ ಮಾಡಲು ನಿರ್ಧಾರ ಮಾಡಿದ್ದಾಗಿ ಪೊಲೀಸರ ಮುಂದೆ ಚಂದ್ರಪ್ಪ ತಿಳಿಸಿದ್ದಾರೆ. +ಜೈಲಿಗೆ ಹೋದರೆ ವಿದ್ಯಾಭ್ಯಾಸ ಸಿಗುತ್ತೆ:ಕೊಲೆ ಬಳಿಕ ಅಪ್ಪ, ಮಗ ಇಬ್ಬರು ಮಾತನಾಡಿಕೊಂಡಿದ್ದು, ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆಯಾಗುತ್ತೆ. ಅಲ್ಲದೆ, ಅವರೇ ವಿದ್ಯಾಭ್ಯಾಸ ಕೊಡಿಸುತ್ತಾರೆ ಎಂದು ಅಪ್ಪನನ್ನು ಮಗ ಮನವೊಲಿಸಿದ್ದ.ನಾನು ಜೈಲಿನಿಂದ ಹೊರ ಬರುವಷ್ಟರಲ್ಲಿ ನೀನು ಹಣ ಸಂಪಾದಿಸು ಎಂದು ಹೇಳಿ ತಂದೆಯನ್ನು ಹೊರಗೆ ಕಳುಹಿಸಿ ಅಪ್ಪನನ್ನು ರಕ್ಷಿಸಿ ನಂತರ ಆತನೇ ಠಾಣೆಗೆ ಹೋಗಿ ಕೊಲೆ ಮಾಡಿದ್ದಾಗಿ ಶರಣಾಗಿ ದ್ದನು. ಇದೀಗ ಪೊಲೀಸರ ತನಿಖೆ ಯಿಂದಾಗಿ ಅಪ್ಪ ಸಿಕ್ಕಿಬಿದ್ದಿದ್ದಾರೆ. +ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ +ಈ ಕಾರ್ಯಾಚರಣೆಯನ್ನು ವೈಟ್‍ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರೀನಾ, ಸುವರ್ಣಾ ಹಾಗೂ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂದಿ ಯಶಸ್ವಿಯಾಗಿ ಭೇದಿಸಿದ್ದಾರೆ. \ No newline at end of file diff --git a/eesanje/url_46_245_3.txt b/eesanje/url_46_245_3.txt new file mode 100644 index 0000000000000000000000000000000000000000..d04be87b2167046c412be7df54c3cec64dd93198 --- /dev/null +++ b/eesanje/url_46_245_3.txt @@ -0,0 +1,7 @@ +ದೆಹಲಿ ಚಲೋಗೆ ಕಾಂಗ್ರೆಸ್ ಸಜ್ಜು +ಬೆಂಗಳೂರು,ಫೆ.6- ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ನಾಳೆ ದೆಹಲಿಯಲ್ಲಿ ನಡೆಯ ಲಿರುವ ಪಕ್ಷಾತೀತ ಪ್ರತಿಭಟನೆಗೆ ಸಾಕಷ್ಟು ಪೂರ್ವ ತಯಾರಿಗಳು ನಡೆಯುತ್ತಿವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಗೆ ಭೇಟಿ ನೀಡಿ ನಿನ್ನೆ ರಾತ್ರಿಯೇ ಎಲ್ಲಾ ಪೂರ್ವ ತಯಾರಿಗಳನ್ನು ಖುದ್ದು ಪರಿಶೀಲಿಸಿದ್ದಾರೆ. ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವರು ದೆಹಲಿಯಲ್ಲಿ ಬೀಡು ಬಿಟ್ಟು ಸಿದ್ಧತೆಗಳನ್ನು ಗಮನಿಸುತ್ತಿದ್ದಾರೆ. +ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆಗೆ ಗೈರು ಹಾಜರಾಗಬಾರದೆಂದು ಕಟ್ಟಪ್ಪಣೆ ಮಾಡಲಾಗಿದ್ದು, ಕೆಲವರಿಗೆ ಡಿ.ಕೆ.ಶಿವಕುಮಾರ್‍ರವರೇ ನೇರವಾಗಿ ಕರೆ ಮಾಡಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡುತ್ತಿದ್ದಾರೆ. ತುರ್ತು ಸಂದರ್ಭವಿಲ್ಲದೇ ಅನಗತ್ಯವಾಗಿ ಯಾರೂ ಗೈರು ಹಾಜರಾಗಬಾರದು. ದೆಹಲಿಯಲ್ಲಿ ನಡೆಯುತ್ತಿರುವ ಬಲಪ್ರದರ್ಶನದಲ್ಲಿ ತಪ್ಪದೇ ಪಾಲ್ಗೊಳ್ಳಬೇಕೆಂದು ಸಲಹೆ ಮಾಡುತ್ತಿದ್ದಾರೆಂದು ತಿಳಿದುಬಂದಿದೆ. +ಕಾಂಗ್ರೆಸ್‍ನ ಪ್ರತಿಭಟನೆಯಿಂದ ವಿಚಲಿತವಾಗಿರುವ ಬಿಜೆಪಿ ನಾಯಕರು ಜನರ ದಿಕ್ಕು ತಪ್ಪಿಸಲು ನಾನಾ ರೀತಿಯ ಸರ್ಕಸ್ ಮಾಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಆಸ್ಪದ ಕೊಡದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅನುವಾಗಬೇಕೆಂದು ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ದೆಹಲಿಯ ಜಂತರ್ ಮಂತರ್‍ನಲ್ಲಿ ವೇದಿಕೆ ಸೇರಿದಂತೆ ಎಲ್ಲಾ ಶಿಷ್ಟಾಚಾರಗಳ ಮೇಲೂ ನಿಗಾ ವಹಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿಯ ಸಂಸದರಿಗೆ, ಕೇಂದ್ರ ಸಚಿವರಿಗೆ ಪತ್ರ ಬರೆದು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿರುವುದು ಗಮನ ಸೆಳೆದಿದೆ. ಅನಿರೀಕ್ಷಿತವಾದ ಮುಖ್ಯಮಂತ್ರಿಯವರ ಆಹ್ವಾನ ಬಿಜೆಪಿ ಸಂಸದರಿಗೆ ಬಿಸಿ ತುಪ್ಪವಾಗಿದೆ. +ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ +ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂಬ ಸಮರ್ಥನೆ ಮಾಡಿಕೊಳ್ಳಲು ಸಾಕಷ್ಟು ಪ್ರಯತ್ನಗಳೂ ಕೂಡ ನಡೆದಿವೆ. ಖುದ್ದು ಪ್ರಧಾನಿ ನರೇಂದ್ರಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ರವರೇ ಸಂಸತ್‍ನಲ್ಲಿ ಹೇಳಿಕೆ ನೀಡಿ, ಅನ್ಯಾಯವಾಗಿಲ್ಲ ಎಂಬ ವಾದ ಮಂಡಿಸಿದ್ದಾರೆ. ಆದರೆ 2023-24 ನೇ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನ ಏಕೆ ಬಿಡುಗಡೆ ಮಾಡಿಲ್ಲ, ನೀರಾವರಿ, ಪೆರಿಫೆರಲ್ ರಿಂಗ್ ರಸ್ತೆ ಹಾಗೂ ಹಣಕಾಸು ಆಯೋಗದ ವಿಶೇಷ ಅನುದಾನವನ್ನು ರದ್ದುಗೊಳಿಸಿದ್ದೇಕೆ ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಅಂಕಿಅಂಶಗಳ ಸಮೇತ ಮುಂದಿಟ್ಟಿದೆ. +ಇದಕ್ಕೆ ರಾಜಕೀಯವಾಗಿ ಉತ್ತರಿಸುತ್ತಿರುವ ಬಿಜೆಪಿಯವರು ಅಂಕಿ ಅಂಶಗಳ ಸಹಿತವಾದ ಟೀಕೆಗಳಿಗೆ ಪ್ರತಿಕ್ರಿಯಿಸಲಾಗದೆ ಪರದಾಡುತ್ತಿದ್ದಾರೆ. ನಾಳೆ ದೆಹಲಿಯಲ್ಲಿ ಪ್ರತಿಭಟನೆ ಮೂಲಕ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದೆ. \ No newline at end of file diff --git a/eesanje/url_46_245_4.txt b/eesanje/url_46_245_4.txt new file mode 100644 index 0000000000000000000000000000000000000000..51be9ed48d3e8f4512381ce2dba56cf635dac013 --- /dev/null +++ b/eesanje/url_46_245_4.txt @@ -0,0 +1,8 @@ +ಕಮಿಷನರ್ ಪೋಲೀಸರ ಕ್ರಮಗಳಿಂದ ಸಂಚಾರ ದಟ್ಟಣೆ ಸುಧಾರಣೆ : ದಯಾನಂದ್ +ಬೆಂಗಳೂರು, ಫೆ.6- ಅತ್ಯಾಧುನಿಕ ತಂತ್ರಜ್ಞಾನವನ್ನು ಸಮಂಜಸವಾಗಿ ಬಳಸಿಕೊಳ್ಳುತ್ತಿರುವುದರಿಂದ ನಗರದ ಸಂಚಾರ ದಟ್ಟಣೆ ಗಣನೀಯವಾಗಿ ಸುಧಾರಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಿಂದ ನಗರದ ಸಂಚಾರ ದಟ್ಟಣೆ ನಿರ್ವಹಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಅದರ ಪ್ರತಿಫಲ ಎಂಬಂತೆ ವಿದೇಶಿ ಸಂಸ್ಥೆಯಾದ ಟಾಮ್ ವರದಿ ಸಾಕ್ಷಿಯಾಗಿದೆ. +ಇದು ಕಾಕತಾಳೀಯವಲ್ಲ, ನಾವು ಕೈಗೊಂಡ ಆನೇಕ ಕ್ರಮಗಳಿಂದ ವಿಶ್ವದಲ್ಲೇ ಅತೀ ಹೆಚ್ಚು ಸಂಚಾರ ದಟ್ಟಣೆಯಲ್ಲಿ ಎರಡನೇ ಸ್ಥಾನ ಹೊಂದಿದ್ದ ಬೆಂಗಳೂರು ಈಗ 6ನೇ ಸ್ಥಾನಕ್ಕೆ ಬಂದಿದೆ ಎಂದರು. 2022ನೇ ವರ್ಷದಲ್ಲಿ ನಗರದಲ್ಲಿ ಪ್ರತಿ ಗಂಟೆಗೆ ಸರಾಸರಿ 14 ಕಿ.ಮೀ. ಸಂಚರಿಸಲಾಗುತ್ತಿತ್ತು. 2023ರಲ್ಲಿ ಅದು 18 ಕಿ.ಮೀ.ಗೆ ಹೆಚ್ಚಳವಾಗಿದೆ. ಈ ಮೂಲಕ ಪ್ರಯಾಣದ ವೇಗವೂ ಪ್ರತಿ ಗಂಟೆಗೆ 4 ಕಿ.ಮೀ. ಹೆಚ್ಚಳವಾಗಿದೆ. +ಸಂಚಾರ ದಟ್ಟಣೆಯ ವಿಶ್ವದ ಟಾಪ್ 10 ನಗರಗಳಲ್ಲಿ ಸಂಚಾರದ ವೇಗವನ್ನು 2023ರಲ್ಲಿ ಒಂದು ನಿಮಿಷ ಕಡಿಮೆ ಮಾಡಿರುವುದರಲ್ಲಿ ಬೆಂಗಳೂರು ನಗರ ಏಕೈಕವಾಗಿದೆ ಎಂದು ಆಯುಕ್ತರು ವಿವರಿಸಿದರು. +ಈ ಸಾಧನೆಗೆ ನಾವು ಕೈಗೊಂಡ ಸುಧಾರಣೆಗಳು ಕಾರಣವಾಗಿದ್ದು, ಅವುಗಳಲ್ಲಿ ಪ್ರಮುಖವಾಗಿ ಅತಾಧುನಿಕ ತಂತ್ರಜ್ಞಾನ ಬಳಕೆ, ಪೀಕ್ ಅವರ್ ಗೂಡ್ಸ್ ವಾಹನಗಳ ನಿಷೇಧ, ಜಂಕ್ಷನ್‍ಗಳ ಸುಧಾರಣೆ , ಬಸ್ ನಿಲ್ದಾಣಗಳ ಸ್ಥಳಾಂತರ, ರಸ್ತೆ ತಿರುವುಗಳ ಮುಚ್ಚುವಿಕೆ, ಟ್ರಾಫಿಕ್ ಸಿಗ್ನಲ್‍ಗಳ ಬದಲಾವಣೆ ಮುಖ್ಯವಾಗಿದೆ ಎಂದು ಹೇಳಿದರು. +ನಿವೃತ್ತ ಐಪಿಎಸ್ ಅಧಿಕಾರಿ ಜ್ಯೋತಿ ಪ್ರಕಾಶ್ ಮಿರ್ಜಿಗೆ ಜೆಡಿಎಸ್ ಉಪಾಧ್ಯಕ್ಷ ಸ್ಥಾನ +ಹೆಬ್ಬಾಳ ಜಂಕ್ಷನ್, ಟಿನ್ ಪ್ಯಾಕ್ಟರಿ, ಗೊರಗುಟ್ಟೆ ಪಾಳ್ಯ, ಸಾರಕ್ಕಿ ಯಂತಹ ಜಂಕ್ಷನ್‍ಗಳಲ್ಲಿ ನಿರ್ದಿಷ್ಟ ದಟ್ಟಣೆ ನಿರ್ವಹಣೆ ಮತ್ತು ಸುಧಾರಿತ ಮೆಟ್ರೋ ಸಂಪರ್ಕ ಜಾಲದ ವಿಸ್ತರಣೆ ಬಿಬಿಎಂಪಿಯಿಂದ ರಸ್ತೆ ಸೌಕರ್ಯ ಸುಧಾರಣೆ, ಟ್ರಾಫಿಕ್ ಡೆನ್ಸಿಟಿ ಕಾರಿಡಾರ್‍ಗಳ ರಚನೆ ಸಹಕಾರಿಯಾಗಿದೆ ಎಂದು ತಿಳಿಸಿದರು. +ಮುಂದಿನ ದಿನಗಳಲ್ಲಿ ಮತ್ತಷ್ಟು ಸುಧಾರಣೆ ತರಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಆಧಾರಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆ, ಡಾಟಾ ಅನಲಿಟಿಕ್ಸ್ ಸೆಂಟರ್‍ನ ಸಹಾಯ ಮತ್ತು ಡ್ರೋಣ್ ಕ್ಯಾಮೆರಾಗಳ ಬಳಕೆ ಮಾಡಿಕೊಳ್ಳಲಾಗುವುದು. ಜೊತೆಗೆ ಪ್ರಮುಖ ಸಂಶೋಧನಾ ಸಂಸ್ಥೆಗಳು ಎನ್‍ಜಿಓಗಳ ಸಹಯೋಗವನ್ನು ಪಡೆಯಲಾಗುವುದೆಂದು ಆಯುಕ್ತರು ವಿವರಿಸಿದರು. \ No newline at end of file diff --git a/eesanje/url_46_245_5.txt b/eesanje/url_46_245_5.txt new file mode 100644 index 0000000000000000000000000000000000000000..b8090ddd8ddcfb09e592b829d2fe01ea3d5775c9 --- /dev/null +++ b/eesanje/url_46_245_5.txt @@ -0,0 +1,5 @@ +ಪಟಾಕಿ ಘಟಕ ಸ್ಫೋಟ, ಹಲವರ ಸಾವು 40ಕ್ಕೂ ಹೆಚ್ಚುಮಂದಿಗೆ ಗಾಯ +ಭೋಪಾಲ್, ಫೆ.6: ಜಿಲ್ಲೆಯ ಹರ್ದಾ ಪಟ್ಟಣದ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಹಲವರು ಮೃತಪಟ್ಟು 40 ಮಂದಿ ಗಾಯಗೊಂಡಿದ್ದಾರೆ. ಘಟಕದ ಸುತ್ತಮುತ್ತ ಹಲವಾರು ಜನರು ಸಿಲುಕಿರುವ ಆತಂಕವಿದೆ ಎಂದು ಅವರು ಸ್ತಳೀಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಪಟಾಕಿ ಸ್ಪೋಟಗೊಲ್ಳುತ್ತಿರುವ ಮತ್ತು ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಓಡುತ್ತಿರುವ ದೃಶ್ಯಗಳು ಕಂಡುಬಂದಿದೆ. +ಬೆಂಕಿಯನ್ನು ನಂದಿಸಲು ಇಂದೋರ್ ಮತ್ತು ಭೋಪಾಲ್‍ನಿಂದ ಅಗ್ನಿಶಾಮಕ ದಳಗಳನ್ನು ಕೂಡ ಧಾವಿಸಿದ್ದು , ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾಧಿಕಾರಿ ರಿಷಿ ಗಾರ್ಗ್ ತಿಳಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ದೂರವಾಣಿ ಮೂಲಕ ಅಧಿಕಾರಿಗಳೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸಚಿವ ಉದಯ್ ಪ್ರತಾಪ್ ಸಿಂಗ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಿತ್ ಕೇಸರಿ ಮತ್ತು ಗೃಹರಕ್ಷಕ ದಳ ಮಹಾನಿರ್ದೇಶಕ ಅರವಿಂದ್ ಕುಮಾರ್ ಅವರು ಹೆಲಿಕಾಪ್ಟರ್ ಮೂಲಕ ಹರ್ದಾಗೆ ಧಾವಿಸಿದ್ದಾರೆ. +ಹಾಸನ-ಮೈಸೂರು ಹೆದ್ದಾರಿಯಲ್ಲಿ ಪುಂಡರ ವೀಲಿಂಗ್ ‘ಹುಚ್ಚಾಟ’ +ಇಂದೋರ್, ಭೋಪಾಲ್ ಮತ್ತು ರಾಜ್ಯ ರಾಜಧಾನಿಯ ಏಮ್ಸ್‍ನಲ್ಲಿರುವ ಆಸ್ಪತ್ರೆಗಳಲ್ಲಿನ ಸುಟ್ಟಗಾಯಗಳ ಘಟಕಗಳಿಗೆ ತುರ್ತು ಪರಿಸ್ಥಿತಿಗೆ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಭೆಯನ್ನೂ ಕರೆದಿದ್ದಾರೆ. \ No newline at end of file diff --git a/eesanje/url_46_245_6.txt b/eesanje/url_46_245_6.txt new file mode 100644 index 0000000000000000000000000000000000000000..22d83be44bfd44a029c49eea0d8389135c1d2d9f --- /dev/null +++ b/eesanje/url_46_245_6.txt @@ -0,0 +1,6 @@ +ವಿಶ್ವಗುರು ಮಾಡುವುದೆಲ್ಲಾ ಬರಿ ಸ್ಟಂಟ್ ಅಷ್ಟೇ : ಬಿ.ಕೆ.ಹರಿಪ್ರಸಾದ್ ಲೇವಡಿ +ದೆಹಲಿ,ಫೆ.6- ಫ್ಯಾನ್ಸಿ ಡ್ರೆಸ್ ಹಾಕಿಕೊಂಡು ತಿರುಗುವವರಿಗೆ ವಿಪಕ್ಷಗಳು ಮಾಡುವುದೆಲ್ಲಾ ರಾಜಕೀಯ ಸ್ಟಂಟ್ ರೀತಿಯೇ ಕಾಣುತ್ತದೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಅವರ ಪಕ್ಷದ ವಿಶ್ವಗುರು ಮಾಡುವುದೆಲ್ಲಾ ಸ್ಟಂಟ್ ಆಗಿರುವುದರಿಂದ ಬೇರೆಯವರನ್ನೂ ಅದೇ ರೀತಿ ಕಾಣಬಯಸುತ್ತಾರೆ. ಆದರೆ ಕಾಂಗ್ರೆಸ್‍ನವರು ಯಾವುದೇ ಸ್ಟಂಟ್ ಮಾಡುವುದಿಲ್ಲ ಎಂದು ಹೇಳಿದರು. +ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ನಾಳೆ ದೆಹಲಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಈ ಪ್ರತಿಭಟನೆಯನ್ನು ಬೆಂಗಳೂರಿನಲ್ಲಿಯೂ ಮಾಡಬಹುದಿತ್ತು. ಆದರೆ ಪಕ್ಷ ಮತ್ತು ಸರ್ಕಾರ ದೆಹಲಿಯಲ್ಲೇ ಪ್ರತಿಭಟನೆ ಮಾಡುವ ನಿರ್ಧಾರ ತೆಗೆದುಕೊಂಡಿದೆ. ಅದರಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು. +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ಬಿಜೆಪಿಗರು ಪ್ರತಿಭಟನೆಯನ್ನು ವಿರೋಧಿಸುವ ಬದಲು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‍ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿ ಮಲತಾಯಿ ಧೋರಣೆಯನ್ನು ಅನುಸರಿಸಲಾಗಿದೆ. ಇದರ ಬಗ್ಗೆ ಬಿಜೆಪಿಯವರು ಏಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು. +ಹಣಕಾಸು ಆಯೋಗಗಳು ನಿಯಮಾನುಸಾರ ಅನುದಾನ ಹಂಚಿಕೆ ಮಾಡಬೇಕಿತ್ತು. ಆದರೆ ಕೇಂದ್ರದ ಹಸ್ತಕ್ಷೇಪದಿಂದ ರಾಜ್ಯಕ್ಕೆ ದೊರೆಯುವ ಪಾಲು ಕಡಿಮೆಯಾಗಿದೆ. ಕರ್ನಾಟಕಕ್ಕೆ ನೂರು ರೂಪಾಯಿ ಪೈಕಿ ಹದಿಮೂರು ರೂಪಾಯಿ ಮಾತ್ರ ವಾಪಸ್ ನೀಡಲಾಗುತ್ತಿದೆ. ಅದೇ ಬಿಹಾರಕ್ಕೆ 900 ರೂಪಾಯಿ ಕೊಡುತ್ತಿರುವುದೇಕೆ ಎಂಬುದಷ್ಟೇ ನಮ್ಮ ಪ್ರಶ್ನೆ. ತಾರತಮ್ಯವನ್ನು ಸರಿಪಡಿಸಿದರೆ ಚರ್ಚೆಯೇ ಇರುತ್ತಿರಲಿಲ್ಲವಲ್ಲಾ ಎಂದು ಹೇಳಿದರು. \ No newline at end of file diff --git a/eesanje/url_46_245_7.txt b/eesanje/url_46_245_7.txt new file mode 100644 index 0000000000000000000000000000000000000000..14997c0c84ab17b07e4f4d9f6d3e974ab7bcc0e0 --- /dev/null +++ b/eesanje/url_46_245_7.txt @@ -0,0 +1,9 @@ +ರಾಜ್ಯದ ಸಂಸದರಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಫೆ.6- ಕೇಂದ್ರಸರ್ಕಾರದಿಂದ ರಾಜ್ಯಕ್ಕಾಗುತ್ತಿರುವ ಆರ್ಥಿಕ ಅನುದಾನ ವಿರೋಧಿಸಿ ನಾಳೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರು, ಕೇಂದ್ರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಪ್ರಹ್ಲಾದ್ ಜೋಶಿ, ಭಗವಂತ್ ಖೂಬಾ, ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‍ನ ರಾಜ್ಯಸಭಾ ಸದಸ್ಯರು, ಸಂಸದರು, ಜೆಡಿಎಸ್‍ನ ಸದಸ್ಯ ಪ್ರಜ್ವಲ್ ರೇವಣ್ಣ, ಪಕ್ಷೇತರ ಸದಸ್ಯರಾದ ಸುಮಲತಾ ಹಾಗೂ ಬಿಜೆಪಿಯ ಎಲ್ಲಾ ಸಂಸದರಿಗೂ ಸಿದ್ದರಾಮಯ್ಯ ಖುದ್ದು ಸಹಿ ಮಾಡಿರುವ ಪತ್ರ ರವಾನಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ. +ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ@nsitharamanಅವರು, ರಾಜ್ಯಸಭೆಯ ವಿಪಕ್ಷ ನಾಯಕರಾದ@khargeಅವರು, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ@H_D_Devegowda, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ@,@Rajeev_GoI,@, ಎ.ನಾರಾಯಣಸ್ವಾಮಿ, ಮಾಜಿ…../7cVmaDzMHb +ಒಂದು ವಿಶೇಷ ಸಂದರ್ಭದಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರ ತೋರಿಸುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ ಎಂದಿದ್ದಾರೆ. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರು, ಶಾಸಕರು ಮತ್ತು ಸಂಸದರು ಸೇರಿ ಫೆ.7 ರಂದು ದೆಹಲಿಯ ಜಂತರ್ ಮಂತರ್‍ನಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದ್ದಾರೆ. +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರ ಪರಿಹಾರ ನೀಡದೇ ಇರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯ, ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನ ಜೀವನವನ್ನು ವಿಪರೀತವಾಗಿ ಬಾಸುತ್ತಿದೆ. ಈ ವಿಚಾರವನ್ನು ಜವಾಬ್ದಾರಿಯುತವಾದ ಚುನಾಯಿತ ಪ್ರತಿನಿಗಳಾದ ತಾವು ಅರಿತುಕೊಂಡಿದ್ದೀರಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. +ರಾಜ್ಯಕ್ಕಾಗಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅದರ ಯಶಸ್ಸಿಗೆ ಸಹಕರಿಸಬೇಕು ಎಂದು ಎಲ್ಲಾ ಸಂಸದರಿಗೂ, ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಿಗೂ ಪತ್ರಮುಖೇನ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_245_8.txt b/eesanje/url_46_245_8.txt new file mode 100644 index 0000000000000000000000000000000000000000..129418a514f48cde06750ed902070a94d0581b5c --- /dev/null +++ b/eesanje/url_46_245_8.txt @@ -0,0 +1,14 @@ +ಬಿಜೆಪಿಯಲ್ಲಿ ಹೆಚ್ಚಿದ ಆಕಾಂಕ್ಷಿಗಳು : ಅಭ್ಯರ್ಥಿ ಆಯ್ಕೆ ಕಗ್ಗಂಟು +ಬೆಂಗಳೂರು,ಫೆ.6-ಬರಲಿರುವ ಲೋಕಸಭೆ ಚುನಾವಣೆಯಲ್ಲಿ 25 ಕ್ಕೂ ಹೆಚ್ಚು ಸ್ಥಾನಗಳನ್ನುಗೆಲ್ಲುವ ಗುರಿ ಇಟ್ಟುಕೊಂಡಿರುವ ಬಿಜೆಪಿಗೆ ಪ್ರತಿ ಯೊಂದು ಕ್ಷೇತ್ರದಲ್ಲೂ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಅಭ್ಯರ್ಥಿಗಳ ಆಯ್ಕೆಗೆ ಕಗ್ಗಂಟಾಗಿ ಪರಿಣಮಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಒಂದರಿಂದ ಐದಕ್ಕೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬುದೇ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಹಾಲಿ ಸದಸ್ಯರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವುದರಿಂದ ಇಂತಹ ಕ್ಷೇತ್ರಗಳ ಮೇಲೆ ಒಂದು ಡಜನ್‍ಗೂ ಅಕ ಆಕಾಂಕ್ಷಿಗಳು ಸ್ರ್ಪಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. +ಪಕ್ಷದಿಂದ ಟಿಕೆಟ್ ಸಿಗಬಹುದೆಂಬ ಖಚಿತ ಭರವಸೆ ಹಿನ್ನೆಲೆಯಲ್ಲಿ ಕೆಲವು ಆಕಾಂಕ್ಷಿಗಳು ಕ್ಷೇತ್ರದಲ್ಲಿ ಒಂದು ಸುತ್ತಿನ ಮತದಾರರ ಭೇಟಿ ಮಾಡುವ ಕೆಲಸಕ್ಕೂ ಕೈ ಹಾಕಿದ್ದಾರೆ. ಪ್ರತಿಷ್ಠಿತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ತೇಜಸ್ವಿ ಸೂರ್ಯರಿಗೆ ಪುನಃ ಟಿಕೆಟ್ ಖಾತರಿ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರದಿಂದ 6 ಬಾರಿ ಗೆದ್ದಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತ್‍ಕುಮಾರ್, ಕೇಂದ್ರದ ವಿದೇಶಾಂಗ ವ್ಯವಹಾರಗಳ ಸಚಿವ ಜಯಶಂಕರ್‍ರ ಹೆಸರು ಕೇಳಿಬಂದಿದೆ. +ಬೆಂಗಳೂರು ಉತ್ತರದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಈ ಹಿಂದೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಈಗ ಡಿ.ವಿ.ಸದಾನಂಗೌಡ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರಕ್ಕೆ ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಕಣ್ಣಿಟ್ಟಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ಸ್ಪರ್ಧೆ ಕಂಡುಬರುತ್ತಿಲ್ಲ. +ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಮಾಜಿ ಸಚಿವ ಡಾ.ಕೆ.ಸುಧಾಕರ್ ಈಗಾಗಲೇ ನನಗೇ ಟಿಕೆಟ್ ಎಂದು ಹೇಳಿಕೊಂಡು ಪ್ರಚಾರ ಆರಂಭಿಸಿದ್ದಾರೆ.ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಪುತ್ರ ಅಲೋಕ್ ವಿಶ್ವನಾಥ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ. +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದರಿಂದ ಕೋಲಾರ ಕ್ಷೇತ್ರವನ್ನು ದಳಪತಿಗೆ ಬಿಟ್ಟುಕೊಟ್ಟರೆ, ಹಾಲಿ ಸಂಸದ ಮುನಿಸ್ವಾಮಿಗೆ ಟಿಕೆಟ್ ತಪ್ಪುವುದು ಗ್ಯಾರಂಟಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ಹೆಸರು ಕೇಳಿಬಂದಿವೆ. ಒಂದು ವೇಳೆ ಈ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭ್ಯರ್ಥಿಯಾದರೂ ಅಚ್ಚರಿಯಿಲ್ಲ. +ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಂಡರೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಬಹುದು. ಮೈಸೂರು-ಕೊಡಗು ಕ್ಷೇತ್ರಕ್ಕೆ ಬಹುತೇಕ ಹಾಲಿ ಸಂಸದ ಪ್ರತಾಪಸಿಂಹಗೆ ಟಿಕೆಟ್ ಖಚಿತ ಎನ್ನಲಾಗುತ್ತಿದೆ. ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಹಾಲಿ ಸಂಸದ ವಿ.ಶ್ರೀನಿವಾಸ್ ಅವರ ಅಳಿಯಂದಿರಲ್ಲಿ ಒಬ್ಬರು ಕಣಕ್ಕಿಳಿಯಬಹುದು. +ತುಮಕೂರು ಕ್ಷೇತ್ರಕ್ಕೆ ಮಾಜಿ ಸಚಿವರಾದ ವಿ.ಸೋಮಣ್ಣ ಹಾಗೂ ಜೆ.ಸಿ.ಮಾಧುಸ್ವಾಮಿ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. ಇಲ್ಲಿ ಯಾರಿಗೆ ಟಿಕೆಟ್ ಕೈತಪ್ಪಿದರೂ ಒಳಹೊಡೆತ ತಪ್ಪಿದ್ದಲ್ಲ ಎಂಬ ಭೀತಿಯಿದೆ. ಚಿತ್ರದುರ್ಗದಲ್ಲಿ ಹಾಲಿ ಸಚಿವ ನಾರಾಯಣಸ್ವಾಮಿ ಮುಂದುವರೆಯುವುದು ಖಚಿತ. +ಮಧ್ಯಕರ್ನಾಟಕದ ರಾಜಧಾನಿ ಎನಿಸಿರುವ ದಾವಣಗೆರೆಯಲ್ಲಿ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ್‍ಗೆ ಟಿಕೆಟ್ ಕೊಡಬಾರದು ಎಂದು ಜಿಲ್ಲಾ ಘಟಕ ಒತ್ತಾಯಿಸಿದೆ. ಉಳಿದಂತೆ ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ, ಚಿಕ್ಕಮಗಳೂರು-ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಮುಂದುವರೆಯಲಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್‍ಕುಮಾರ್ ಕಟೀಲ್‍ಗೆ ಟಿಕೆಟ್ ಕೈ ತಪ್ಪುವ ಲಕ್ಷಣಗಳು ಗೋಚರಿಸಿವೆ. +ಸಂಘ ಪರಿವಾರದ ಹಿನ್ನೆಲೆಯ ಬ್ರಿಜೇಶ್ ಚೌತಗೆ ಟಿಕೆಟ್ ಸಿಗಬಹುದು. ಪಕ್ಕದ ಉತ್ತರ ಕನ್ನಡದಲ್ಲಿ ಅನಂತಕುಮಾರ್ ಹೆಗ್ಡೆಗೆ ಮತ್ತೊಮ್ಮೆ ಮಣೆ ಹಾಕುವ ಸಾಧ್ಯತೆಯಿದೆ. ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಯೆಬ್ ಜೊಲ್ಲೆ ಮುಂದುವರೆದರೆ, ಬೆಳಗಾವಿಯಲ್ಲಿ ಮಂಗಳ ಸುರೇಶ್ ಬದಲಿಗೆ ಹೊಸ ಅಭ್ಯರ್ಥಿ ಕಣಕ್ಕಿಳಿಯಬಹುದು. +ಕೋವಿಡ್ ಲಸಿಕೆಗಳಿಂದ ಹೃದಯಘಾತವಾಗುತ್ತಿಲ್ಲ : ರುಶಿಕೇಶ್ +ಧಾರವಾಡ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ಕ್ಷೇತ್ರವನ್ನು ಹಾಲಿ ಸಚಿವ ಪ್ರಹ್ಲಾದ್ ಜೋಶಿ ಪ್ರತಿನಿಸುತ್ತಿದ್ದಾರೆ. ಹಾವೇರಿ ಕ್ಷೇತ್ರಕ್ಕೆ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್, ವಕೀಲ ಸಂದೀಪ್ ಪಾಟೀಲ್ ಹೆಸರು ಕೇಳಿಬಂದಿವೆ. +ಬಳ್ಳಾರಿಯಲ್ಲಿ ಶ್ರೀರಾಮಲು, ಕೊಪ್ಪಳದಲ್ಲಿ ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ, ರಾಯಚೂರಿನಲ್ಲಿ ಅಮರೇಶ್ ನಾಯಕ್, ಸ್ಪರ್ಧೆಗಿಳಿಯುವುದು ಖಚಿತ. ಬೀದರ್‍ನಲ್ಲಿ ಸಚಿವ ಭಗವಂತ್ ಖೂಬಾಗೆ ಟಿಕೆಟ್ ನೀಡಬಾರದೆಂಬ ಒತ್ತಡ ಕೇಳಿಬಂದಿದೆ. ಬಾಗಲಕೋಟೆಯಲ್ಲಿ ಹಾಲಿ ಸಂಸದ ಗದ್ದಿಗೌಡರ್ ಹಿಂದೇಟು ಹಾಕಿದ್ದರೆ, ಕಲಬುರ್ಗಿಯಲ್ಲಿ ಡಾ.ಉಮೇಶ್ ಜಾದವ್‍ಗೆ ಮಣೆ ಹಾಕುವ ಸಂಭವವಿದೆ. \ No newline at end of file diff --git a/eesanje/url_46_245_9.txt b/eesanje/url_46_245_9.txt new file mode 100644 index 0000000000000000000000000000000000000000..78737a75115a87a765f339fdeba8113190422f3d --- /dev/null +++ b/eesanje/url_46_245_9.txt @@ -0,0 +1,10 @@ +ಸಿದ್ದರಾಮಯ್ಯ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ +ಬೆಂಗಳೂರು,ಫೆ.6- ಸಾರ್ವಜನಿಕರಿಗೆ ತೊಂದರೆ ಕೊಟ್ಟು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಲ್ವರಿಗೆ 10 ಸಾವಿರ ದಂಡ ಹಾಗೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೈ ಕೋರ್ಟ್‍ನ ಜನಪ್ರತಿನಿಧಿ ನ್ಯಾಯಾಲಯ ಕಟ್ಟು ನಿಟ್ಟಿನ ಸೂಚನೆ ನೀಡಿದೆ. +ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಚಿವರಾದ ರಾಮಲಿಂಗ ರೆಡ್ಡಿ, ಎಂ.ಬಿ.ಪಾಟೀಲ್ ಅವರುಗಳಿಗೆ ದಂಡ ವಿಧಿಸಿದೆ. +ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.ತಮ್ಮ ವಿರುದ್ದ ದಾಖಲಾಗಿದ್ದ ಅರ್ಜಿಯ ವಿಚಾರಣೆಯನ್ನು ರದ್ದು ಪಡಿಸಬೇಕು ಎಂದು ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಹೈಕೋರ್ಟ್‍ನ ಜನಪ್ರತಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ. +ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.ಮಾ.6ರಂದು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಮಾ.7ರಂದು ರಾಮಲಿಂಗ ರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಿದೆ. +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನರು ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್‍ರಿದ್ದ ಹೈಕೋರ್ಟ್ ಪೀಠ ತುಸು ಖಾರವಾಗಿಯೇ ಪ್ರತಿಕ್ರಿಯಿಸಿತು. +ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರರಕಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಳೆದ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರತಿಭಟಿಸಿದ್ದರು.ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ದೂರು ದಾಖಲಿಸಲಾಗುತ್ತದೆ. +ಭಾರತದ ಸಮುದ್ರ ರಕ್ಷಣೆಗೆ ಬಂತು ಅಮೆರಿಕದ MQ9- ಡ್ರೋನ್ +ಪ್ರಕರಣವೇನು? :ಬೊಮ್ಮಾಯಿ ನೇತೃತ್ವದ ಬಿಜೆಪಿ ಅಧಿಕಾರದಲ್ಲಿದ್ದ ಸಮಯದಲ್ಲಿ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದ. ಇದರಲ್ಲಿ ಆಗಿನ ಸಚಿವ ಕೆ.ಎಸ್ ಈಶ್ವರಪ್ಪ ಹೆಸರು ಕೇಳಿಬಂದಿತ್ತು. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಇತ್ಯಾದಿ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು. \ No newline at end of file diff --git a/eesanje/url_46_246_1.txt b/eesanje/url_46_246_1.txt new file mode 100644 index 0000000000000000000000000000000000000000..a74c8619013b178b0de26d9abed30fe6c636c7fb --- /dev/null +++ b/eesanje/url_46_246_1.txt @@ -0,0 +1,13 @@ +ತಾಕತ್ತು, ದಮ್ಮು ಇದ್ದರೆ ಶ್ವೇತಪತ್ರ ಹೊರಡಿಸಿ : ಬಿಜೆಪಿ +ಬೆಂಗಳೂರು, ಫೆ.5- ಜಲ ಜೀವನ್ ಮಿಷನ್, ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ, ಪಿಎಂ ಆವಾಸ್ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರ ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ಬಿಜೆಪಿ ಬಹಿರಂಗ ಸವಾಲು ಹಾಕಿದೆ. +ಸಿದ್ದರಾಮಯ್ಯ ಅವರ ಅರೋಪಕ್ಕೆ ಅಂಕಿ-ಅಂಶಗಳ ಸಮೇತ ದಾಖಲೆಯ ಮೂಲಕವೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ಅಷ್ಟಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‍ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದೆ. +ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂ.ಗೂ ಅಕ ನೆರವು 2014ರ ನಂತರ ಹರಿದುಬಂದಿದೆ. ಕೊರೊನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ ಎಂದು ತಿರುಗೇಟು ನೀಡಿದೆ. +ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು 30,000 ಕೋಟಿ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್ ಸಮ್ಮಾನದ ಮೌಲ್ಯ 10,990 ಕೋಟಿ. ಕಾಂಗ್ರೆಸ್ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್ ಭಾರತ ಯೋಜನೆಯ ಲಾಭವನ್ನು ಪಡೆದ ಕನ್ನಡಿಗರು 62,00,000 ಕ್ಕೂ ಅಧಿಕ. ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಮೋದಿ ಸರ್ಕಾರ ಎಂಬುದು ನಿಮಗೆ ತಿಳಿದಿತ್ತೇ ಮುಖ್ಯಮಂತ್ರಿ ಸಾಹೇಬರೇ ಎಂದು ಬಿಜೆಪಿ ವ್ಯಂಗ್ಯವಾಡಿದೆ. +ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ +ರೈಲ್ವೆ ಇಲಾಖೆ ಸಾಧನೆಯೇ ಕಾಂಗ್ರೆಸ್ ಅವಧಿಯಲ್ಲಿ ಇಷ್ಟು ಅತ್ಯಲ್ಪವಾಗಿರುವಾಗ ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋ ಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ. ಅಂದರೆ ಇದು ನಿಮ್ಮ ಪಕ್ಷದವರು ನಿರ್ಮಿಸಿದ್ದಕ್ಕಿಂತ 10 ಪಟ್ಟಿಗೂ ಹೆಚ್ಚು ಅಧಿಕ. ಕಾಂಗ್ರೆಸ್‍ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಗಳು ಕೇವಲ 7. ಆದರೆ 2014ರಲ್ಲಿ ದೇಶದ ಜನ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದ ನಂತರ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವುದು ಮೋದಿ ಸರ್ಕಾರ ಎಂದು ಬಲವಾಗಿ ಸಮರ್ಥಿಸಿಕೊಂಡಿದೆ. +2009 ರಿಂದ 2014ರ ವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ 835 ಕೋಟಿಗಿಂತ ಮೋದಿ ಸರ್ಕಾರ ನೀಡಿರುವ 11,000 ಕೋಟಿ ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ಹೇಳಿಬಿಡಿ. ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್ ಅಕಾರ ಬಿಟ್ಟು ತೊಲಗುವವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೆ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಕಾಂಗ್ರೆಸ್ಸನ್ನು ಉಚ್ಛಾಟಿಸಿ ಬಂದ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ ಬರೋಬ್ಬರಿ 3265 ಕಿಮೀ ಎಂದು ಹೇಳಿದೆ. +2004-2014ರ ವರೆಗೆ ಯುಪಿಎ ಅಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‍ವೆಲ್ತ್ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ 81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ 2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ ಎಂಧು ಕಿಡಿಕಾರಿದೆ. +ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾದ ತಮಗೆ ಅಸಾಧ್ಯವಲ್ಲ. ಯುಪಿಎ ಅವಯಲ್ಲಿ ರಾಜ್ಯಕ್ಕೆ ಬಂದ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ 2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದು ಇಲ್ಲ, ಲೆಕ್ಕ ಗೊತ್ತಿದ್ದರೂ ಸಾಕು. ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋ ಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋ ಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ ಎಂದು ಕುಹಕವಾಡಿದೆ. +ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ +ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದೆ. +ಜೀವನ ಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯನವರೇ, ಈ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮಥ್ರ್ಯ ತೋರಿಸುತ್ತದಷ್ಟೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರು ಪಟ್ಟು ಅಧಿಕ ತೆರಿಗೆಪಾಲು ಮತ್ತು ಅನುದಾನಗಳನ್ನು ನೀಡಿದ್ದು ಹಾಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ದಾಖಲೆಗಳ ಮೂಲಕವೇ ಪ್ರತಿ ಸವಾಲು ಹಾಕಿದೆ. \ No newline at end of file diff --git a/eesanje/url_46_246_10.txt b/eesanje/url_46_246_10.txt new file mode 100644 index 0000000000000000000000000000000000000000..2ebb6d36414588bb65545da433122625113dce43 --- /dev/null +++ b/eesanje/url_46_246_10.txt @@ -0,0 +1,4 @@ +ಡಿಡಿಯಲ್ಲಿ ರಾಮಾಯಣ ಮರುಪ್ರಸಾರ +ಬೆಂಗಳೂರು,ಫೆ.4- ದೇಶದ ಜನರ ಮನ ಗೆದ್ದಿದ್ದ ರಮಾನಂದ್ ಸಾಗರ್ ಅವರ ನಿರ್ದೇಶನದ ರಾಮಾಯಣವನ್ನು ಮರುಪ್ರಸಾರ ಮಾಡುವುದಾಗಿ ರಾಷ್ಟ್ರೀಯ ವಾಹಿನಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದೆ. ಅದರಂತೆ ನಾಳೆಯಿಂದಲೇ ನೀವು ಪ್ರತಿದಿನ ಸಂಜೆ 6 ಗಂಟೆಗೆ ಹಾಗೂ ಮರುದಿನ ಮಧ್ಯಾಹ್ನ 12 ಗಂಟೆಗೆ ರಾಮಾಯಣವನ್ನು ಮತ್ತೆ ವೀಕ್ಷಿಸಬಹುದಾಗಿದೆ ಎಂದು ಡಿಡಿ ತಿಳಿಸಿದೆ. +ಈ ಮೆಗಾ ಸೀರಿಯಲ್‍ನಲ್ಲಿ ರಾಮನಾಗಿ ನಟಿಸಿದ್ದ ಅರುಣ್ ಗೋವಿಲ್, ಸೀತೆಯಾಗಿ ನಟಿಸಿದ್ದ ದೀಪಿಕಾ ಚಿಕಾಲಿಯಾ ಹಾಗೂ ಲಕ್ಷ್ಮಣ ಪಾತ್ರದಲ್ಲಿ ನಟಿಸಿದ್ದ ಸುನೀಲ್ ಲೆಕ್ರಿ ಅವರಿಗೆ ಜನವರಿ 22 ರಂದು ನಡೆದ ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಅಧಿಕೃತ ಆಹ್ವಾನ ನೀಡಲಾಗಿತ್ತು. +ಅಯೋಧ್ಯೆಗೆ ಹೋಗಿದ್ದ ಇವರನ್ನು ಸ್ಥಳೀಯ ಜನ ಖುಷಿಯಿಂದಲೇ ಸ್ವಾಗತಿಸಿದ್ದರು. ಇದೀಗ ಸೀರಿಯಲ್ ಅನ್ನು ಮರು ಪ್ರಸಾರ ಮಾಡುವುದಾಗಿ ಡಿಡಿ ನ್ಯಾಷನಲ್ ಘೋಷಣೆ ಮಾಡಿದೆ. \ No newline at end of file diff --git a/eesanje/url_46_246_11.txt b/eesanje/url_46_246_11.txt new file mode 100644 index 0000000000000000000000000000000000000000..97315a7ac824da065f42afe1f5b174ab80739c13 --- /dev/null +++ b/eesanje/url_46_246_11.txt @@ -0,0 +1,5 @@ +ಭಾನುವಾರವೂ ಬಜೆಟ್ ತಯಾರಿಯಲ್ಲಿ ಸಿಎಂ ಬ್ಯುಸಿ +ಬೆಂಗಳೂರು,ಫೆ.4- ಭಾನುವಾರದ ರಜಾ ದಿನವೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಇಂದ ಬೆಳಗ್ಗೆ ಎಲ್ಲಾ ಕಾರ್ಯಕ್ರಮಗಳನ್ನು ಬದಿಗಿರಿಸಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯಕ್ಕೆ ದೃಢವಾದ ಮತ್ತು ಪ್ರಗತಿ ಪರ ಬಜೆಟ್‍ನ್ನು ನೀಡುವುದು ನಮ್ಮ ಬದ್ದತೆ. ಈ ವಿಷಯವಾಗಿ ಆಳವಾದ ಅಧ್ಯಯನ ನಡೆಸಲಾಗುತ್ತಿದೆ. +ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ +ಹಿಂದಿನ ಅವಧಿಯಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನ ಮತ್ತು ಭವಿಷ್ಯದ ಬಜೆಟ್‍ನಲ್ಲಿ ಅಳವಡಿಸಬೇಕಾದ ಭರವಸೆಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. + . . .##KarnatakaBudget2425pic../ \ No newline at end of file diff --git a/eesanje/url_46_246_12.txt b/eesanje/url_46_246_12.txt new file mode 100644 index 0000000000000000000000000000000000000000..695d0b0cb124c8d08788981d981c9706ba28616c --- /dev/null +++ b/eesanje/url_46_246_12.txt @@ -0,0 +1,3 @@ +‘ಅಶ್ವಮೇಧ’ ಬಸ್‍ಗಳಿಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ +ಬೆಂಗಳೂರು,ಫೆ.4- ರಾಜ್ಯ ರಸ್ತೆ ಸಾರಿಗೆ ನಿಗಮದ ಅಶ್ವಮೇಧ ಕ್ಲಾಸಿಕ್ ಹೊಸ ವಿನ್ಯಾಸದ ಬಸ್‍ಗಳಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕೆಎಸ್‍ಆರ್‍ಟಿಸಿಯು ಅಶ್ವಮೇಧ ಹೊಸ ವಿನ್ಯಾಸದ 800 ಬಸ್‍ಗಳನ್ನು ಮೇ ಅಂತ್ಯದೊಳಗೆ ಸಾರ್ವಜನಿಕ ಸೇವೆಗೆ ಒದಗಿಸಲು ಉದ್ದೇಶಿಸಿದೆ. +ಮೊದಲ ಹಂತದಲ್ಲಿ ನಾಳೆ ನೂರು ಬಸ್‍ಗಳಿಗೆ ವಿಧಾನಸೌಧ ಮುಂಭಾಗ ಚಾಲನೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಎಸ್‍ಆರ್‍ಟಿಸಿಯ ಹಿರಿಯ ಅಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_246_2.txt b/eesanje/url_46_246_2.txt new file mode 100644 index 0000000000000000000000000000000000000000..976fd1cd9574b8e373a3a1c6ea9cc502dfad5d75 --- /dev/null +++ b/eesanje/url_46_246_2.txt @@ -0,0 +1,13 @@ +ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರದಿಂದ 1.87 ಲಕ್ಷ ಕೋಟಿ ಅನ್ಯಾಯ : ಸಿಎಂ +ಬೆಂಗಳೂರು,ಫೆ.5- ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ ವಾರ್ಷಿಕ 4.30 ಲಕ್ಷ ಕೋಟಿ ರೂ. ತೆರಿಗೆ, ಸರ್‍ ಚಾರ್ಜ್, ಸೆಸ್ ರೂಪದಲ್ಲಿ ಆದಾಯ ಕ್ರೂಢೀ ಕರಣ ವಾಗುತ್ತಿದೆ. ಅದರಲ್ಲಿ ಶೇ.12ರಷ್ಟನ್ನು ರಾಜ್ಯಕ್ಕೆ ಮರಳಿಸ ಲಾಗುತ್ತಿದ್ದು, ಸುಮಾರು 1,87,867 ಕೋಟಿ ರೂ. ಕಳೆದ ಐದು ವರ್ಷಗಳಿಂದ ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. +ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಆರ್ಥಿಕ ತಾರತಮ್ಯ ಕುರಿತಂತೆ ವಿಧಾನಸೌಧದಲ್ಲಿಂದು ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟರು. 2017ರಿಂದ 2023-24ರವರೆಗೆ ಜಿಎಸ್‍ಟಿ ನಷ್ಟದಿಂದ 59,274 ಕೋಟಿ 15ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ಸೆಸ್, ಸಬ್‍ಚಾರ್ಜ್‍ಗಳ ಮೂಲಕ 55,000 ಕೋಟಿ, ವಿಶೇಷ ಅನುದಾನ ಕೊಡದೆ ವಂಚನೆಯಾಗಿರುವುದು 11,495 ಕೋಟಿ ಸೇರಿ ಒಟ್ಟು 1.87 ಲಕ್ಷ ಕೋಟಿ ಆರ್ಥಿಕವಾಗಿ ರಾಜ್ಯಕ್ಕೆ ನಷ್ಟವಾಗಿದೆ ಎಂದು ವಿವರಿಸಿದರು. +2013-14ನೇ ಸಾಲಿನಲ್ಲಿ 1,41,270 ಕೋಟಿ ಸೆಸ್ ಮತ್ತು ಸರ್‍ಚಾರ್ಜ್‍ಗಳ ಮೊತ್ತ ವಸೂಲಿಯಾಗುತ್ತಿತ್ತು. 2023-24ನೇ ಸಾಲಿಗೆ ಅದು ಐದು ಪಟ್ಟು ಹೆಚ್ಚಾಗಿ, 5,52,789 ಕೋಟಿಯಷ್ಟಾಗಿದೆ. ಆದರೆ ಇದರಲ್ಲಿ ರಾಜ್ಯಕ್ಕೆ ಯಾವುದೇ ಪಾಲು ನೀಡುತ್ತಿಲ್ಲ ಎಂದು ಆಕ್ಷೇಪಿಸಿದರು. ಕೇಂದ್ರ ಸರ್ಕಾರದ ಬಜೆಟ್ 2017-18ನೇ ಸಾಲಿನಲ್ಲಿ 21.46 ಲಕ್ಷ ಕೋಟಿಯಷ್ಟು ಇತ್ತು. ಆಗ 47,990 ಕೋಟಿ ರೂ.ಗಳು ಕೇಂದ್ರದಿಂದ ತೆರಿಗೆ ಪಾಲು ಮತ್ತು ಕೇಂದ್ರದ ಪ್ರಾಯೋಜಿತ ಯೋಜನೆಗಳಡಿ ಬರುತ್ತಿತ್ತು. +2024-25ನೇ ಸಾಲಿಗೆ ಬಜೆಟ್‍ನ ಗಾತ್ರ 45.03 ಲಕ್ಷ ಕೋಟಿಯಷ್ಟಾಗಿದೆ. ಇದರ ಪ್ರಮಾಣಕ್ಕೆ ಅನುಗುಣವಾಗಿ ರಾಜ್ಯಕ್ಕೆ ಅನುದಾನ ಹೆಚ್ಚಾಗಿಲ್ಲ. ಕೇವಲ 50,257 ಕೋಟಿ ರೂ. ಮಾತ್ರ ದೊರೆತಿದೆ. ಬಜೆಟ್ ಪ್ರಮಾಣಕ್ಕೆ ಅನುಗುಣವಾಗಿ 5 ವರ್ಷಗಳ ಹಿಂದೆ 2.2ರಷ್ಟು ಅನುದಾನ ಹಂಚಿಕೆಯಾಗಿದ್ದು, ಈ ವರ್ಷಕ್ಕೆ 1.23ಕ್ಕೆ ಕುಸಿದಿದೆ. +ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ +ಅವೈಜ್ಞಾನಿಕ ಜಿಎಸ್‍ಟಿಯಿಂದ ರಾಜ್ಯಕ್ಕೆ ಆಗುತ್ತಿರುವ ನಷ್ಟದ ಪರಿಹಾರವನ್ನು ಕೇಂದ್ರ ಸರ್ಕಾರ ಭರ್ತಿ ಮಾಡಿಕೊಡುವುದನ್ನು ನಿಲ್ಲಿಸಿದೆ. ದೇಶದಲ್ಲೇ 2ನೇ ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಆದಾಯ ತೆರಿಗೆ, ಕಾಪೆರ್ರೇಟ್ ತೆರಿಗೆ, ಜಿಎಸ್‍ಟಿ, ಪೆಟ್ರೋಲ್, ಡೀಸೆಲ್, ಕಸ್ಟಮ್ ತೆರಿಗೆ, ಹೆದ್ದಾರಿ ಟೋಲ್‍ಗಳು, ಬಂದರು, ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಕೇಂದ್ರಕ್ಕೆ 4.37 ಲಕ್ಷ ಕೋಟಿ ರೂ. ಆದಾಯ ರವಾನೆಯಾಗುತ್ತಿದೆ. ಇದರಲ್ಲಿ ಕನಿಷ್ಟವೆಂದರೂ ರಾಜ್ಯಕ್ಕೆ ವರ್ಷಕ್ಕೆ ಒಂದು ಲಕ್ಷ ಕೋಟಿ ರೂ. ಮರುಪಾವತಿಯಾಗಬೇಕಿತ್ತು. 50 ಸಾವಿರ ಕೋಟಿ ರೂ. ನೀಡುವ ಭರವಸೆ ಮಾತ್ರ ದೊರೆತಿದೆ ಎಂದು ವಿಶ್ಲೇಷಿಸಿದರು. +ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಕಳೆದ ಬಜೆಟ್‍ನಲ್ಲಿ ಭದ್ರ ಮೇಲ್ದಂಡೆಗೆ 5,300 ಕೋಟಿ ಕೆರೆಗಳ ಪುನರ್ ಅಭಿವೃದ್ಧಿಗೆ 3000 ಕೋಟಿ, ಪೆರಿಪರಲ್ ರಿಂಗ್ ರಸ್ತೆ 3000 ಕೋಟಿ, 15ನೇ ಹಣಕಾಸು ಆಯೋಗದ ಮಧ್ಯಂತರ ವರದಿ ಪ್ರಕಾರ 5 ಸಾವಿರ ಕೋಟಿ ಸೇರಿದಂತೆ ಸಾಕಷ್ಟು ಅನುದಾನ ನಿರ್ಮಲಾ ಸೀತಾರಾಮನ್ ಅವರ ಮೂಲಕವೇ ರಾಜ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಅದೆಲ್ಲವನ್ನೂ ತಿರಸ್ಕಾರ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. +ಬಿಜೆಪಿಗೆ ಮನವಿ:ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಫೆ.7ರಂದು ಬೆಳಗ್ಗೆ 11 ಗಂಟೆಗೆ ಜಂತರ್‍ಮಂತರ್‍ನಲ್ಲಿ ಕರ್ನಾಟಕದ ಎಲ್ಲಾ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು, ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ರಾಜಕೀಯ ಪ್ರತಿಭಟನೆ ಅಲ್ಲ. ಬದಲಾಗಿ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ. ಹೀಗಾಗಿ ಬಿಜೆಪಿಯ ಶಾಸಕರು, ಸಂಸದರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. +ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ 112 ಮಂದಿ ಸಾವು +ರಾಜ್ಯದಿಂದ ಕೇಂದ್ರದಲ್ಲಿ ಸಚಿವರಾಗಿರುವವರು, 27 ಮಂದಿ ಸಂಸದರು, ಬಿಜೆಪಿಯ ರಾಜ್ಯ ನಾಯಕರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಸೇರಿದಂತೆ ಯಾರಿಗೂ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಮುಂದೆ ನಿಂತು ಮಾತನಾಡುವ ಧೈರ್ಯವಿಲ್ಲ. ಹೀಗಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಇದೆ. ಇಲ್ಲಿ ಸುಳ್ಳು ಆರೋಪ ಮಾಡುವ ಬದಲು ದೆಹಲಿಗೆ ಬಂದು ನಮ್ಮ ಜೊತೆ ಕೈಜೋಡಿಸಲಿ ಎಂದು ಸವಾಲು ಹಾಕಿದರು. +ಕೇಂದ್ರದಿಂದ ಸಾಲದ ಪ್ರಮಾಣ ಕೂಡ ಹೆಚ್ಚಾಗಿದೆ. ಇದು ಆರ್ಥಿಕ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಣದುಬ್ಬರವನ್ನು ತಪ್ಪಿಸುವ ಬದಲು ನಿಯಮಾವಳಿಗಳನ್ನು ಬದಲಾವಣೆ ಮಾಡಿ ಸರ್ವಾಕಾರ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಜ್ಯದ ಪಂಚಖಾತ್ರಿ ಯೋಜನೆಗಳಿಂದ ಜಿಎಸ್‍ಟಿ ಸಂಗ್ರಹ ಮತ್ತಷ್ಟು ಹೆಚ್ಚಾಗಿದೆ ಎಂದು ಸಿದ್ಧರಾಮಯ್ಯ ವಿವರಿಸಿದರು. +ಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_246_3.txt b/eesanje/url_46_246_3.txt new file mode 100644 index 0000000000000000000000000000000000000000..08e68dffabf13d4526803f2e8f72e48c52685309 --- /dev/null +++ b/eesanje/url_46_246_3.txt @@ -0,0 +1,9 @@ +ಅಶ್ಲೀಲ ಫೋಟೋ ಇದೆ ಎಂದು ಸ್ನೇಹಿತನಿಂದ 65 ಲಕ್ಷರೂ. ಪೀಕಿದ ಆರೋಪಿ ವಶಕ್ಕೆ +ಬೆಂಗಳೂರು, ಫೆ.5- ಸ್ನೇಹಿತನ ಮುಗ್ಧತೆಯನ್ನೇ ಬಂಡವಾಳ ಮಾಡಿಕೊಂಡು ಆತನಿಂದ ಹಂತ ಹಂತವಾಗಿ 65 ಲಕ್ಷ ಹಣ ಪಡೆದು ವಿಶ್ವಾಸದ್ರೋಹ ಬಗೆದಿದ್ದ ಇಬ್ಬರು ಸಹೋದರರ ಪೈಕಿ ಒಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಮೂಲತಃ ಶಿವಮೊಗ್ಗದ ಮಣಿಕಂಠ ಎಂಬುವವರು ವಿಧಾನಸೌಧ ರಸ್ತೆಯಲ್ಲಿರುವ ಸಾಫ್ಟ್‍ವೇರ್ ಕಂಪೆನಿಯೊಂದರಲ್ಲಿ ಸಾಫ್ಟ್‍ವೇರ್ ಉದ್ಯೋಗಿ. +ಅಕ್ಷಯ್ ಕುಮಾರ್ ಹಾಗೂ ಈತನ ಅಣ್ಣ ಭರತ್ 18 ವರ್ಷಗಳಿಂದ ಮಣಿಕಂಠ ಅವರಿಗೆ ಸ್ನೇಹಿತನಾಗಿದ್ದು, ಸಹೋದರರು ಹಾಗೂ ಮತ್ತಿತರರು ಸೇರಿಕೊಂಡು ವೈಯಕ್ತಿಕ ಫೋಟೋಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ನಿನ್ನ ಮೊಬೈಲ್‍ನಿಂದ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೇಳುತ್ತಿದ್ದು, ನೀನು ಆತನಿಗೆ 12 ಲಕ್ಷ ಕೊಟ್ಟರೆ ಫೋಟೋಗಳನ್ನು ವಾಪಸ್ ಪಡೆದುಕೊಳ್ಳಬಹುದೆಂದು ತಿಳಿಸಿದ್ದಾರೆ. +ಇದರಿಂದ ಹೆದರಿದ ಮಣಿಕಂಠ ಅವರು 11.20 ಲಕ್ಷ ರೂ.ಗಳನ್ನು ಸಾಲವಾಗಿ ಪಡೆದು ಅಕ್ಷಯ್‍ಕುಮಾರ್‍ಗೆ ಕೊಟ್ಟಿದ್ದಾನೆ. ಈತನ ಬಳಿ ಸಾಕಷ್ಟು ಹಣವಿದೆ ಎಂದು ಅರಿತು ಮತ್ತೆ ಸಹೋದರರು ಹಾಗೂ ಇನ್ನಿತರರ ಜತೆ ಸೇರಿ ಮತ್ತಷ್ಟು ಹಣ ಕೇಳುತ್ತಿದ್ದಾರೆ ಎಂದು ಒತ್ತಾಯಿಸಿದ್ದರಿಂದ ಮಣಿಕಂಠ ಅವರು ಕೋಟಕ್ ಮಹೀಂದ್ರ ಬ್ಯಾಂಕ್‍ನಿಂದ 10 ಲಕ್ಷ ಹಣವನ್ನು ಸಾಲವಾಗಿ ಪಡೆದು ಕಳೆದ ಏ.25ರಂದು ಕೊಟ್ಟಿದ್ದಾರೆ. +ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ +ತದನಂತರವೂ ಸಹ ಇವರು ಹಣ ಕೇಳುವುದನ್ನು ಮುಂದುವರೆಸಿದ್ದರಿಂದ ಮಾನಕ್ಕೆ ಹೆದರಿ ಸ್ನೇಹಿತರಿಂದ 4 ಲಕ್ಷ , ಅವರ ತಂದೆ ಹಾಗೂ ಅಕ್ಕನಿಂದ 8 ಲಕ್ಷ ಪಡೆದುಕೊಂಡು 12 ಲಕ್ಷ ಹಣವನ್ನು ಹೊಂದಿಸಿಕೊಟ್ಟಿದ್ದಾರೆ. ಈ ನಡುವೆ ಆರೋಪಿ ಅಕ್ಷಯ್‍ಕುಮಾರ್‍ನ ಗೆಳತಿಯೊಬ್ಬರು ಮಣಿಕಂಠ ಅವರಿಗೆ ಮೊಬೈಲ್‍ಗೆ ಕರೆ ಮಾಡಿ ಅಪರಿಚಿತ ವ್ಯಕ್ತಿ ಹಣ ಕೊಡುವಂತೆ ಕೇಳುತ್ತಿದ್ದರಿಂದ ಅಕ್ಷಯ್‍ಕುಮಾರ್ ನನ್ನಿಂದ 5 ಲಕ್ಷ ಲೋನ್ ತೆಗೆಸಿದ್ದು, ನಾವು ಅವರಿಗೆ ಹಣ ಕೊಟ್ಟಿದ್ದಾಗಿ ತಿಳಿಸಿದ್ದಾರೆ. +ಮಣಿಕಂಠ ಅವರು ತನ್ನ ಸ್ನೇಹಿತ ಅಖಿಲೇಶ್ ಅವರಿಂದ 5 ಲಕ್ಷ ಹಣವನ್ನು ಸಾಲವಾಗಿ ಪಡೆದು ಆಕೆಗೆ ಕೊಟ್ಟಿದ್ದಾರೆ. ಇದಲ್ಲದೆ, ಆರೋಪಿ ಅಕ್ಷಯ್‍ಕುಮಾರ್‍ನು ಮಣಿಕಂಠ ಅವರ ಅಕ್ಕನಿಗೆ ಮೆಸೇಜ್ ಮಾಡಿ ನಿಮ್ಮ ತಮ್ಮನಿಗೆ ತೊಂದರೆಯಾಗಿದೆ ಎಂದು ಸುಳ್ಳು ಹೇಳಿ 12.20 ಲಕ್ಷ ಹಣವನ್ನು ತನ್ನ ಸ್ನೇಹಿತ ಪ್ರವೀಣ್ ಖಾತೆಗೆ ಹಾಕಿಸಿಕೊಂಡಿದ್ದಾನೆ. +ಇಷ್ಟಕ್ಕೇ ಸುಮ್ಮನಾಗದ ಅಕ್ಷಯ್‍ಕುಮಾರ್ ಅಪರಿಚಿತ ವ್ಯಕ್ತಿಯು ನಿನ್ನ ಮೊಬೈಲ್ ಸ್ಕ್ಯಾನ್ ಮಾಡಿ ಟ್ರ್ಯಾಪ್ ಮಾಡುತ್ತಿದ್ದಾನೆ. ಅದಕ್ಕೆ 15 ಲಕ್ಷ ಹಣ ಕೊಡುವಂತೆ ಬಲವಂತಪಡಿಸಿದ್ದರಿಂದ ಮಣಿಕಂಠ ಅವರು ತನ್ನ ಅಕ್ಕ, ತಾಯಿ ಹಾಗೂ ಮತ್ತೊಬ್ಬರಿಂದ 15 ಲಕ್ಷ ಹಣವನ್ನು ಹೊಂದಿಸಿಕೊಂಡು ಅಕ್ಷಯ್‍ಕುಮಾರ್‍ಗೆ ಕೊಟ್ಟಿದ್ದಾರೆ. ಇದೇ ರೀತಿ ಹಂತ ಹಂತವಾಗಿ ಅಕ್ಷಯ್‍ಕುಮಾರ್ ಇನ್ನಿತರರೊಂದಿಗೆ ಸೇರಿಕೊಂಡು ಗೆಳೆಯ ಮಣಿಕಂಠ ಅವರಿಗೆ ಪೀಡಿಸಿ ಒಟ್ಟು 65 ಲಕ್ಷ ಹಣ ಪಡೆದುಕೊಂಡಿದ್ದಾನೆ. +ಆಗಾಗ್ಗೆ ಹಣ ಕೇಳುತ್ತಿದ್ದರಿಂದ ಅನುಮಾನಗೊಂಡು ಮಣಿಕಂಠ ಅವರು ತನ್ನ ಸ್ನೇಹಿತರಾದ ಅಕ್ಷಯ್‍ಕುಮಾರ್, ಭರತ್ ಹಾಗೂ ಇನ್ನಿತರರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸಹೋದರರ ಪೈಕಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_246_4.txt b/eesanje/url_46_246_4.txt new file mode 100644 index 0000000000000000000000000000000000000000..8f5bc4bd05648949e5e17f7cd64d856907035acb --- /dev/null +++ b/eesanje/url_46_246_4.txt @@ -0,0 +1,9 @@ +ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ : ಗೃಹ ಸಚಿವ ಪರಮೇಶ್ವರ್ +ಬೆಂಗಳೂರು, ಫೆ.5- ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ ಬ್ಯಾಲೆನ್ಸ್ ಮಾಡುತ್ತಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ರೂ. ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಆರೋಪ ಸಾಭೀತುಪಡಿಸಲಿ ಎಂದು ಸವಾಲು ಹಾಕಿದರು. +ಜಿಎಸ್‍ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ. ಎನ್‍ಡಿಆರ್‍ಎಫ್ ಫಂಡ್ ಸಹ ಬಂದಿಲ್ಲ. ಆದರೂ ನಾವು ಇದನ್ನೆಲ್ಲ ರಾಜಕೀಯ ಮಾಡೋದಿಕ್ಕೆ ಹೋಗಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ನಾವು ದೆಹಲಿಗೆ ಹೋಗಿ ಪ್ರತಿಭಟನೆ ನಡೆಸುತ್ತೇವೆ. ದೇಶದ ಜನತೆಗೆ ಗೊತ್ತಾಗಲಿ ಎಂದು ಅವರು ಹೇಳಿದರು. +716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು +ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಜನರಿಗೆ ಗೊತ್ತಾಗಿದೆ. ವಿಶೇಷ ಅನುದಾನವನ್ನು ನಾವು ಕೇಳಿಲ್ಲ. ಆದರೆ, ನಮಗೆ ಬರಬೇಕಾದ ಪಾಲು ಕೊಟ್ಟರೆ ಸಾಕು. ಯುಪಿಎ ಮತ್ತು ಎನ್‍ಡಿಎ ಅವಧಿಯ ಅನುದಾನ ಬಗ್ಗೆ ಕೇಂದ್ರ ಸರರ್ಕಾರ ಶ್ವೇತಪತ್ರ ಹೊರಡಿಸಲಿ. ರಾಜ್ಯದ್ದು ನಾವು ಹೊರಡಿಸುತ್ತೇವೆ ಎಂದು ಅವರು ಆಗ್ರಹಿಸಿದರು. +ರಾಜಸ್ವ ಸಂಗ್ರಹ ಕಡಿಮೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ಕರ್ನಾಟಕ ಎರಡನೇ ದೊಡ್ಡ ಟ್ಯಾ್ಸï ಪೇಯರ್ ಅಲ್ಲ ಎಂಬುದನ್ನು ಅವರು ಹೇಳಲಿ. ನಂತರ ರಾಜಸ್ವ ಸಂಗ್ರಹದ ಬಗ್ಗೆ ಚರ್ಚಿಸೋಣ. ನಮಗೆ ಬರಗಾಲ ಇದೆ. ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ ಅಷ್ಟೇ ಎಂದು ತಿರುಗೇಟು ನೀಡಿದರು. +ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿಲ್ಲ:ಪ್ರತಿಭಟನೆ ಮಾಡುವುದಿದ್ದರೆ ಫ್ರೀಡಂಪಾರ್ಕ್‍ನಲ್ಲಿ ಶಾಂತಿಯುತವಾಗಿ ಮಾಡಲಿ. ಮನೆಗೆ ಯಾರಾದರೂ ನುಗ್ಗುತ್ತಾರೆ ಅಂದಾಗ ಪೊಲೀಸರು ಸುಮ್ಮನೆ ಇರುವುದಿಲ್ಲ. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಆ ಕೆಲಸವನ್ನು ಪೊಲೀಸರು ಮಾಡಿದ್ದಾರೆ. ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕುತ್ತೇವೆ ಅಂತ ಬಂದಾಗ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಪೊಲೀಸರಿಂದ ಯಾರ ಮೇಲೂ ಹಲ್ಲೆಯಾಗಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. +ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ +ರಾಜ್ಯದ ದುಡ್ಡನ್ನು ಗ್ಯಾರಂಟಿಗೆ ದಾನ ಮಾಡಿರುವುದರಿಂದ ಹಣವಿಲ್ಲ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಮಾಜಿ ಸಚಿವ ಮುನಿರತ್ನ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮುನಿರತ್ನ ಯಾವಾಗ ಆರ್ಥಿಕ ತಜ್ಞರಾದರೋ ಗೊತ್ತಿಲ್ಲ. ನಾವ್ಯಾರೂ ಆರ್ಥಿಕ ತಜ್ಞರಲ್ಲ. ಮುನಿರತ್ನ ಹೇಳಿದ್ದಾರೆ ಎಂದ ಮೇಲೆ ಕೇಳೋಣ ಎಂದರು. \ No newline at end of file diff --git a/eesanje/url_46_246_5.txt b/eesanje/url_46_246_5.txt new file mode 100644 index 0000000000000000000000000000000000000000..d32630324029e442f8fd92d778d79f9038180f68 --- /dev/null +++ b/eesanje/url_46_246_5.txt @@ -0,0 +1,7 @@ +ಯಾವ ಕ್ಷೇತ್ರಕ್ಕೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ : ವಿಜಯೇಂದ್ರ ಸ್ಪಷ್ಟನೆ +ಬೆಂಗಳೂರು,ಫೆ.5- ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಯಾವುದೊಂದು ಕ್ಷೇತ್ರಕ್ಕೂ ಪಕ್ಷದ ವರಿಷ್ಠರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದು ನಿಜ. ಈವರೆಗೂ ಯಾವುದೇ ಕ್ಷೇತ್ರಕ್ಕೂ ಹೆಸರು ಅಂತಿಮಗೊಂಡಿಲ್ಲ. ಇದು ಹಾಲಿ ಸಂಸದರಿಗೂ ಅನ್ವಯವಾಗುತ್ತದೆ ಎಂದು ತಿಳಿಸಿದರು. +ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ಕಾರ್ಯಕರ್ತರ ಅಭಿಪ್ರಾಯ ಪಡೆದು, ರಾಜ್ಯ ಘಟಕ ಶಿಫಾರಸ್ಸು ಮಾಡಿದ ನಂತರ ವರಿಷ್ಠರು ಅಂತಿಮಗೊಳಿಸುತ್ತಾರೆ. ಈ ಕ್ಷಣದ ವರೆಗೂ ನಾವು 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಅಂತಿಮ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. +ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನನ್ನೇ ಅಭ್ಯರ್ಥಿ ಮಾಡಿದ್ದಾರೆಂಬ ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಕೂತು ಚರ್ಚೆ ಮಾಡುತ್ತೇವೆ. ಅಂತಿಮವಾಗಿ ಯಾರು ಅಭ್ಯರ್ಥಿ ಆಗಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು. +ಇದೇ ತಿಂಗಳ 9 ಮತ್ತು 10ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 10ರಂದು ಅವರು ಬೆಂಗಳೂರಿಗೆ ಬರುತ್ತಿದ್ದು, ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. +ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ +ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಷಾ ಅವರು ಕ್ಲಸ್ಟರ್ ಸಭೆ ನಡೆಸಲಿದ್ದಾರೆ. ನಾವು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡುತ್ತೇವೆ ಇದನ್ನು ವರಿಷ್ಠರ ಗಮನಕ್ಕೆ ತರಲಾಗುತ್ತದೆ. ಬಳಿಕವಷ್ಟೇ ಯಾರು ಎಲ್ಲಿಗೆ ಸ್ಪರ್ಧೆ ಎಂಬುದು ಅಂತಿಮವಾಗಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_246_6.txt b/eesanje/url_46_246_6.txt new file mode 100644 index 0000000000000000000000000000000000000000..2178e91884c9bdbb87ae63012f3d573fe6911dcc --- /dev/null +++ b/eesanje/url_46_246_6.txt @@ -0,0 +1,11 @@ +ಕಮಲ ತೊರೆದವರ ಚಿತ್ತ ಮತ್ತೆ ಬಿಜೆಪಿಯತ್ತ +ಬೆಂಗಳೂರು,ಫೆ.5- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒಂದೊಂದು ಕ್ಷೇತ್ರವು ಅತಿ ಮುಖ್ಯ ಎಂಬುದನ್ನು ಪರಿಗಣಿಸಿರುವ ಬಿಜೆಪಿ ಪಕ್ಷ ಬಿಟ್ಟು ಹೋಗಿದ್ದ ಹಲವರನ್ನು ಪುನಃ ಮಾತೃಪಕ್ಷದತ್ತ ಸೆಳೆಯಲು ಘರ್ ವಾಪ್ಸಿ ಕಾರ್ಯಾಚರಣೆಗೆ ಧುಮುಕಿದೆ. ಇದರ ಮೊದಲ ಪ್ರಯತ್ನವಾಗಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಗಾಣಿಗ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕ ಮಾಜಿ ಡಿಸಿಎಂ ಹಾಗೂ ಹಾಲಿ ಶಾಸಕ ಲಕ್ಷ್ಮಣ್ ಸವದಿಯನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. +ಇನ್ನೊಂದೆಡೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಬಿಜೆಪಿಯಿಂದ ದೂರ ಉಳಿದಿದ್ದ ಮಾಜಿ ಶಾಸಕ ಜನಾರ್ಧನ ರೆಡ್ಡಿ ಕೂಡ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದ ಬೆನ್ನಲ್ಲೇ ಇದೀಗ ಹಲವರನ್ನು ಸಂಪರ್ಕಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದತ್ತ ಸೆಳೆದುಕೊಳ್ಳಲು ಸದ್ದಿಲ್ಲದೆ ಕಾರ್ಯಾಚರಣೆ ನಡೆಸಿದ್ದಾರೆ. +ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಮಹದೇವಪ್ಪ ಯದವಾಡ, ಎಸ್.ಐ.ಚಿಕ್ಕನಗೌಡರ್, ದೊಡ್ಡನಗೌಡ ಪಾಟೀಲ್ ನರಿಬೋಳ ಸೇರಿದಂತೆ ಅನೇಕರನ್ನು ಸೆಳೆಯುವಲ್ಲಿ ವಿಜಯೇಂದ್ರ ಯಶಸ್ವಿಯಾಗಿದ್ದಾರೆಂದು ತಿಳಿದುಬಂದಿದೆ. ಸ್ವಕ್ಷೇತ್ರದಲ್ಲೇ ಸ್ವಪಕ್ಷೀಯರಿಂದಲೇ ತೀವ್ರ ಭಿನ್ನಮತ ಎದುರಿಸುತ್ತಿರುವ ಹಾಲಿ ಕೇಂದ್ರ ಸಚಿವ ಭಗವಂತ ಕೂಬಾಗೆ ಟಿಕೆಟ್ ನೀಡಬಾರದೆಂದು ಪಕ್ಷದೊಳಗಿನ ಒಂದು ಬಣ ಪಟ್ಟು ಹಿಡಿದಿದೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡಿರುವ ಭಗವಂತ ಕೂಬಾಗೆ ಟಿಕೆಟ್ ನೀಡದೆ ಬೇರೊಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ಜಿಲ್ಲಾ ಬಿಜೆಪಿ ಘಟಕ ಒತ್ತಾಯ ಮಾಡಿದೆ. ಹಾಗೊಂದು ವೇಳೆ ತೀವ್ರ ವಿರೋಧ ವ್ಯಕ್ತವಾದರೆ ಲಕ್ಷ್ಮಣ್ ಸವದಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ. +ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ +ಮೂಲಗಳ ಪ್ರಕಾರ ಸವದಿ ತಮ್ಮ ಪುತ್ರನಿಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಬಿಜೆಪಿಗೆ ಹಿಂತಿರುಗುವ ಬಗ್ಗೆ ಚಿಂತನೆ ನಡೆಸುವ ಆಶ್ವಾಸನೆಯನ್ನು ಕೊಟ್ಟಿದ್ದಾರೆ. ಆದರೆ ಹಾಲಿ ಸಂಸದ ಅಣ್ಣ ಸಾಹೇಬ್ ಜೊಲ್ಲೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಟಿಕೆಟ್ ಪಡೆಯುವುದು ತುಸು ಕಷ್ಟಕರ. ಹಾಗಾಗಿ ಸವದಿ ಬೀದರ್‍ನಿಂದ ಸ್ಪರ್ಧೆ ಮಾಡುವ ಸಂಭವವಿದೆ. +ಇನ್ನು ಗಾಲಿ ಜನಾರ್ಧನ ರೆಡ್ಡಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂಬ ಹಿನ್ನಲೆಯಲ್ಲಿ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಲಕ್ಷಣಗಳು ಗೋಚರಿಸಿವೆ. ಒಂದು ವೇಳೆ ಜನಾರ್ಧನ ರೆಡ್ಡಿ ಬಿಜೆಪಿಗೆ ಪುನಃ ವಾಪಸ್ ಆದರೆ ಬರುವ ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳದಿಂದ ಸ್ಪರ್ಧೆ ಮಾಡಬಹುದು. ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ವಯಸ್ಸಿನ ಕಾರಣ ಟಿಕೆಟ್ ಕೈ ತಪ್ಪಬಹುದು. +ಇನ್ನೂ ಬುದ್ದಿ ಕಲಿಯದ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು +ಚಾಮರಾಜನಗರ ಕ್ಷೇತ್ರದಿಂದ ಹಾಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಪುನಃ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿರುವುದರಿಂದ ಶೀಘ್ರದಲ್ಲೇ ಅವರ ಅಳಿಯ ಹಾಗೂ ಸರ್ಕಾರಿ ಸೇವೆಗೆ ಗುಡ್ ಬಾಯ್ ಹೇಳಿರುವ ಡಾ.ರವಿಕುಮಾರ್ ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ. ಇನ್ನು ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಆಯನೂರು ಮಂಜುನಾಥ್ ಹೆಸರುಗಳು ಕೂಡ ಕೇಳಿಬರುತ್ತಿದೆ. ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪರಮಾಪ್ತರಾಗಿದ್ದ ಅಯನೂರು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. +ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಭಾವಿ ನಾಯಕರಾಗಿರುವ ಸಂಘ ಪರಿವಾರ ಹಿನ್ನಲೆಯಲ್ಲಿ ಅರುಣ್ ಪುತ್ತೀಲ ಅವರು ಕೂಡ ಸದ್ಯದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಹೀಗೆ ಪಕ್ಷದಿಂದ ವಿಮುಖರಾಗಿದ್ದ ಒಬ್ಬೊಬ್ಬರನ್ನೇ ಬಿಜೆಪಿಗೆ ಸೆಳೆಯಲು ಖುದ್ದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಸದ್ದಿಲ್ಲದೆ ಅಖಾಡಕ್ಕೆ ಧುಮುಕಿದ್ದಾರೆ. \ No newline at end of file diff --git a/eesanje/url_46_246_7.txt b/eesanje/url_46_246_7.txt new file mode 100644 index 0000000000000000000000000000000000000000..24e39081712a6ffb727357d146d3ae6e53bc3013 --- /dev/null +++ b/eesanje/url_46_246_7.txt @@ -0,0 +1,7 @@ +716 ಕೋಟಿ ಹಾಲು ಪ್ರೋತ್ಸಾಹ ಧನ ಬಾಕಿ ಕೊಡಿ : ವಿಜಯೇಂದ್ರ ತಿರುಗೇಟು +ಬೆಂಗಳೂರು,ಫೆ.5- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಯಾರಿಗೆ ಲಾಟರಿ ಇಲ್ಲವೇ ಯಾರಿಗೆ ಬಂಪರ್ ಎಂಬುದನ್ನು ತೀರ್ಮಾನಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಕಸ್ಮಿಕವಾಗಿ ಅಧಿಕಾರಕ್ಕೆ ಬಂದಿದೆ. ಜನರ ಮೂಗಿಗೆ ಗ್ಯಾರಂಟಿ ಎಂಬ ತುಪ್ಪ ಸವರಿ ಗೆದ್ದು ಬಂದಿದ್ದೀರಿ. ಲೋಕಸಭೆ ಚುನಾವಣೆಯಲ್ಲಿ ಲಾಟರಿನೋ ಅಥವಾ ಬಂಪರೋ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದರು. +ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನ ಮಾತ್ರವಲ್ಲ ಜಾನುವಾರುಗಳು ಸರ್ಕಾರಕ್ಕೆ ಶಾಪ ಹಾಕುತ್ತಿದೆ. ಜನರ ಕೋಪ ಮಾತ್ರವಲ್ಲ, ಜಾನುವಾರುಗಳ ಕೋಪಕ್ಕೆ ರಾಜ್ಯ ಸರ್ಕಾರ ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಅದರ ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರ್ಕಾರ 716 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. +ಪಾಕಿಸ್ತಾನ : ಠಾಣೆ ಮೇಲೆ ದಾಳಿ ನಡೆಸಿ 10 ಪೊಲೀಸರನ್ನು ಕೊಂದ ಉಗ್ರರು +ಇದರ ಪರಿಣಾಮ 80-85 ಲಕ್ಷ ಲೀಟರ್ ಹಾಲು ಸಂಗ್ರಹಣೆ ಆಗುತ್ತಿತ್ತು. ಈಗ 10 ಲಕ್ಷ ಲೀಟರ್‍ಗೆ ಇಳಿದಿದೆ ಎಂದರು. ರೈತರ ಪ್ರೋತ್ಸಾಹ ಧನ ಉಳಿಸಿಕೊಂಡ ಪಾಪದ ಸರ್ಕಾರ ಇದು. ಮಾನ ಮಾರ್ಯಾದೆ ಇದ್ದರೇ ಬಾಕಿ ಉಳಿಸಿಕೊಂಡಿರುವ ಕೂಡಲೇ ಪ್ರೋತ್ಸಾಹ ಧನ ಬಿಡುಗಡೆ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. +ರಾಜಸ್ವ ಸ್ವೀಕೃತಿ ಟಾರ್ಗೆಟ್ 2,38,000 ಮಾಡುತ್ತೇವೆ ಎಂದಿದ್ದರು. ಶೇ.67ರಷ್ಟು ಮಾತ್ರ ಸಂಗ್ರಹ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಶೇ. 82ರಷ್ಟು ಸಂಗ್ರಹ ಮಾಡಿದ್ದೇವು. ನಿಮ್ಮದೇ ಸರ್ಕಾರ ಟಾರ್ಗೆಟ್ ರೀಚ್ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 10ರಂದು ಬೆಂಗಳೂರಿಗೆ ಬರುತ್ತಿದ್ದಾರೆ. ಕ್ಲಸ್ಟರ್‍ನ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಸಲಿದ್ದು, ಸಂಜೆ 5 ಗಂಟೆಗೆ ಮೈಸೂರಿನ ಸುತ್ತೂರು ಮಠಕ್ಕೂ ಭೇಟಿ ನೀಡಲಿದ್ದಾರೆ. ಇನ್ನು ಎಲ್ಲಾ ಕಾರ್ಯಕ್ರಮ ಅಂತಿಮಗೊಂಡಿಲ್ಲ. ಆದರೆ ಕೋರ್ ಕಮಿಟಿ ಸಭೆ ಮಾತ್ರ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದು ತಿಳಿಸಿದರು. +ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹಾಸನ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿಯೇ ಉಳಿಸಿಕೊಳ್ಳಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ನಾಲ್ಕು ಗೋಡೆಗಳ ಮಧ್ಯೆ ಮಾತನಾಡಬೇಕಾದ ವಿಚಾರ. ನಾಲ್ಕು ಗೋಡೆ ಮಧ್ಯೆ ಕುಳಿತು ಬಗೆಹರಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_246_8.txt b/eesanje/url_46_246_8.txt new file mode 100644 index 0000000000000000000000000000000000000000..453941f06f442d264e6b807c844c3bfe2b5054d6 --- /dev/null +++ b/eesanje/url_46_246_8.txt @@ -0,0 +1,8 @@ +ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ: ಕಾಂಗ್ರೆಸ್ +ಬೆಂಗಳೂರು, ಜ.4- ದೇವಾಲಯಗಳ ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಅಸಮಧಾನವನ್ನು ಹೊರ ಹಾಕುವ ಮೂಲಕ ಕಾಂಗ್ರೆಸ್ ಪಕ್ಷ ಬಹುಸಂಖ್ಯಾತರ ಒಲೈಕೆಗೆ ಮುಂದಾಗಿದೆ. +ಚಿತ್ರದುರ್ಗದ ಬಾಗೂರಿನ ದೇವಸ್ಥಾನದಲ್ಲಿ ಕನಕಗುರು ಪೀಠದ ಶ್ರೀಗಳ ಗರ್ಭಗುಡಿ ಪ್ರವೇಶಕ್ಕೆ ಅಡ್ಡಿ ಪಡಿಸಿದ ಪ್ರಕರಣವನ್ನು ಆಧಾರವನ್ನಾಗಿಟ್ಟು ಕೊಂಡು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದು, ದೇವಸ್ಥಾನಗಳು ಎಲ್ಲರಿಗೂ ಸೇರಿವೆ, ಎಲ್ಲರೂ ಅಲ್ಲಿ ಸಮಾನರು ಎಂದಿದೆ. +ನಾರಾಯಣಗುರುಗಳು, ಬಸವಣ್ಣ, ಕನಕದಾಸರಂತಹ ಮಹಾನ್ ಸಮಾಜ ಸುಧಾರಕರು, ದಾರ್ಶನಿಕರನ್ನು ಪಡೆದ ನಾಡು ಕರ್ನಾಟಕ. ಅಸ್ಪಶ್ಯತೆಯ ವಿರುದ್ಧ ಸಮಾನತೆಯ ತತ್ವವನ್ನು ಸ್ಥಾಪಿಸಲು ಕರ್ನಾಟಕ ಪ್ರಖರ ಚಳವಳಿ ಕಟ್ಟಿದೆ. ಬಸವಣ್ಣರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ನಮ್ಮ ಸರ್ಕಾರಕ್ಕೆ ಬಸವಣ್ಣನ ಆಶಯಗಳೇ ಆದರ್ಶ ಎಂದಿದ್ದಾರೆ. +ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ +ಕನಕ ಗುರು ಪೀಠದ ಈಶ್ವರಾನಂದಪುರಿ ಸ್ವಾಮಿಗಳಿಗೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ದೇವಾಲಯದ ಒಳಾವಾರಣಕ್ಕೆ ಪ್ರವೇಶಿಸದಂತೆ ತಡೆದಿರುವುದು ಹಾಗೂ ಸ್ವಾಮಿಗಳು ಬಂದಿದ್ದಾಕ್ಕಾಗಿ ದೇವಾಲಯವನ್ನು ಸ್ವಚ್ಛಗೊಳಿಸಿರುವ ಪ್ರಕರಣವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ನಾವು ಮನುಸ್ಮತಿಯ ಕಾಲದಲ್ಲಿಲ್ಲ, ಸಂವಿಧಾನದ ಕಾಲದಲ್ಲಿದ್ದೇವೆ. ಇದನ್ನು ಸಹಿಸಿದರೆ ಬಸವಣ್ಣ, ನಾರಾಯಣಗುರು, ಅಂಬೇಡ್ಕರ್ ರಂತಹ ಮಹನೀಯರಿಗೆ ಅವಮಾನಿಸಿದಂತೆಯೇ ಸರಿ ಎಂದು ಕಾಂಗ್ರೆಸ್ ಹೇಳಿದೆ. +ಕೇವಲ ಒಂದು ಸಮುದಾಯಕ್ಕೆ ಮಾತ್ರ ಗರ್ಭಗುಡಿಯ ಪ್ರವೇಶಕ್ಕೆ ಅವಕಾಶವಿದೆ ಎನ್ನುವ ಸಂಗತಿ ಶ್ರೀಗಳಿಂದಲೂ ತಿಳಿದುಬಂದಿದೆ, ಅ ದೇವಾಲಯದ ಅರ್ಚಕರೂ ತಿಳಿಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ,ದೇವರ ಮುಂದೆ ಸರ್ವರೂ ಸಮಾನರು. ಕೇವಲ ಒಂದು ಸಮುದಾಯಕ್ಕೆ ಮಾತ್ರ ದೇವರು ಮೀಸಲಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. +ಈ ಘಟನೆಯ ಕುರಿತು ಸಚಿವ ರಾಮಲಿಂಗಾರೆಡ್ಡಿಯವರು ವರದಿ ಕೇಳಿದ್ದಾರೆ, ವರದಿ ಬಂದನಂತರ ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದೆ. \ No newline at end of file diff --git a/eesanje/url_46_246_9.txt b/eesanje/url_46_246_9.txt new file mode 100644 index 0000000000000000000000000000000000000000..636f79484847e8e296af4f6c83c86f54f1d70d40 --- /dev/null +++ b/eesanje/url_46_246_9.txt @@ -0,0 +1,8 @@ +ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ +ಬೆಂಗಳೂರು, ಫೆ.4- ನಗರದ ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಇಡಲಾಗಿದೆ ಎಂದು ಹೇಳಿ ಆಗಂತಕನೊಬ್ಬ ಆತಂಕ ಸೃಷ್ಟಿಸಿ ಘಟನೆ ನಡೆದಿದೆ. ಇ-ಮೇಲ್ ಮೂಲಕ ಯಶವಂತಪುರದಲ್ಲಿರುವ ಕೇಂದ್ರಿಯ ವಿದ್ಯಾಲಯದ ಭಾರತೀಯ ವಿದ್ಯಾಸಂಸ್ಥೆಗೆ ಸಂದೇಶ ಬಂದಿದ್ದು, ಬೆಳಗ್ಗೆ 10.20ಕ್ಕೆ ಸ್ಪೋಟಗೊಳ್ಳಲಿದೆ ಎಂದು ಅದರಲ್ಲಿತ್ತು. +ಭಾನುವಾರ ರಜೆ ಕಾರಣ ಮಕ್ಕಳು ಶಾಲೆಗೆ ಬಂದಿರಲಿಲ್ಲ. ಆದರೆ ಶಾಲೆಯ ಇ-ಮೇಲ್ ಪ್ರಾಂಶುಪಾಲರಿಗೆ ಮತ್ತು ಅಧಿಕಾರಿಗಳಿಗೆ ತಿಳಿಯುತ್ತಿತ್ತು. ಅದರಂತೆ ಇಂದು ಮುಂಜಾನೆ ಇ-ಮೇಲ್ ಬಂದಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. +ಸ್ಥಳಕ್ಕೆ ದಾವಿಸಿದ ಯಶವಂತಪುರ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಂಪೂರ್ಣವಾಗಿ ಶಾಲೆ ಕೊಠಡಿ ಹಾಗೂ ಆವರಣವನ್ನು ಪರಿಶೀಲನೆ ನಡೆಸಿದಾಗ ಇದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ. ಕೇಂದ್ರಿಯ ವಿದ್ಯಾಲಯವಾಗಿರುವುದರಿಂದ ಬಹುತೇಕ ಇಲ್ಲಿ ಭಾರತೀಯ ಸೇನೆಯ ಯೋಧರ ಮಕ್ಕಳು, ಕೇಂದ್ರ ಸರ್ಕಾರಿ ನೌಕರರ ಮಕ್ಕಳು ಇಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುತ್ತಿದ್ದಾರೆ. +ಅವರಲ್ಲಿ ಆತಂಕ ಮೂಡಿಸಲು ಈ ಕುಚೋದ್ಯ ಕೃತ್ಯವನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರಿಯ ವಿದ್ಯಾಲಯ ಪ್ರಿನ್ಸಿಪಾಲ್ ಅಮೃತಬಾಲ ಅವರು ನೀಡಿರುವ ದೂರನ್ನು ದಾಖಲಿಸಿಕೊಂಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಾಲೆಯ ವೆಬ್‍ಸೈಟ್‍ಗೆ ಬಂದಿರುವ ಇ-ಮೇಲ್ ವಿಳಾಸದ ಬಗ್ಗೆ ಸೈಬರ್ ಕ್ರೈಂ ವಿಭಾಗದ ತಜ್ಞರ ಸಹಕಾರವನ್ನು ಕೂಡ ಕೊರಲಾಗಿದೆ. +ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಹೇಳಿ : ಪ್ರಿಯಾಂಕ್ ಖರ್ಗೆ +ಕಳೆದ 2023ರ ಡಿಸೆಂಬರ್ 1ರಂದು ಇದೇ ರೀತಿ ಬೆಂಗಳೂರಿನ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದರಿಂದಾಗಿ ಶಾಲೆ ಆಡಳಿತ ಮಂಡಳಿಗಳು ಬೆಚ್ಚಿ ಬಿದ್ದಿದ್ದವು. ನಗರದ 30ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಮಕ್ಕಳು, ಆಡಳಿತ ಮಂಡಳಿ ಮತ್ತು ಪೋಷಕರು ಆತಂಕಕ್ಕೀಡಾಗಿದ್ದರು.ಪೊಲೀಸರು ಶಾಲೆಗಳಿಗೆ ದೌಡಾಯಿಸಿದ್ದು, ಬಾಂಬ್ ತಪಾಸಣೆ ದಳಗಳೂ ಬಂದಿದ್ದವು. ಎಲ್ಲಾ ಶಾಲೆಗಳಿಂದ ಮಕ್ಕಳನ್ನು ಹೊರಗೆ ಕಳುಹಿಸಲಾಗಿದ್ದು, ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. +ಈ ಮೇಲ್ ಮೂಲಕ ಈ ಬಾಂಬ್ ಬೆದರಿಕೆ ಬಂದಿದೆ ಎಂದು ಹೇಳಲಾಗಿದ್ದು, ಬೆಳಗ್ಗೆ ಮೇಲ್ ಚೆಕ್ ಮಾಡುವಾಗ ಈ ವಿಷಯ ಗೊತ್ತಾಗಿದೆ. ಇದು ತಿಳಿಯುತ್ತಿದ್ದಂತೆಯೇ ಕೂಡಲೇ ಮಕ್ಕಳನ್ನು ಹೊರಗೆ ಕಳುಹಿಸಲಾಗಿತ್ತು. ಆಗಷ್ಟೇ ಒಳಗೆ ಬರುತ್ತಿದ್ದ ಮಕ್ಕಳನ್ನು ಒಳಗೆ ಬರದಂತೆ ಸೂಚಿಸಲಾಗಿತ್ತು. ಈ ವೇಳೆ ಹೆತ್ತವರು ಕೂಡಾ ಮಕ್ಕಳನ್ನು ಬಿಡಲು ಆಗಮಿಸಿದವರು ಅಲ್ಲೇ ಇದ್ದಿದ್ದರಿಂದ ಆತಂಕದ ವಾತಾವರಣ ಹೆಚ್ಚಾಯಿತು. ಕೆಲವರು ವಿಷಯ ತಿಳಿಯುತ್ತಿದ್ದಂತೆಯೇ ಓಡಿ ಬಂದಿದ್ದರು. \ No newline at end of file diff --git a/eesanje/url_46_247_1.txt b/eesanje/url_46_247_1.txt new file mode 100644 index 0000000000000000000000000000000000000000..0a0462393aa72581c2aaceb8c2974163c3c7c273 --- /dev/null +++ b/eesanje/url_46_247_1.txt @@ -0,0 +1,7 @@ +ನಕಲಿ ಸಿಮ್ ಕಾರ್ಡ್ ದಂಧೆ : ಐವರ ಬಂಧನ +ಧರ್ಮಸ್ಥಳ, ಫೆ.4- ಅಕ್ರಮವಾಗಿ ಮೊಬೈಲ್ ಸಿಮ್ ಕಾರ್ಡ್‍ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮೂಲದ ರಮೀಝ್(20), ಅಕ್ಬರ್ ಅಲಿ(24), ಮೊಹಮ್ಮದ್ ಮುಸ್ತಫಾ(22), ಮೊಹಮ್ಮದ್ ಸಾಕ್(27) ಹಾಗೂ ಮತ್ತೊಬ್ಬ ಅಪ್ರಾಪ್ತನನ್ನು ಬಂಧಿಸಲಾಗಿದೆ. +ಆರೋಪಿಯಲ್ಲಿ ಒಬ್ಬನಾದ ಅಕ್ಬರ್ ಅಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹೆಸರುಗಳಲ್ಲಿ ನಕಲಿ ದಾಖಲೆಗಳನ್ನು ಕೊಟ್ಟು ಸಿಮ್ ಕಾರ್ಡ್ ಪಡೆದಿದ್ದ. ಇದಕ್ಕೆ ಇತರ ಆರೋಪಿಗಳು ಸಹಕರಿಸಿದ್ದರು ಎಂದು ತಿಳಿದು ಬಂದಿದೆ. ಎರಡು ವರ್ಷ ದುಬೈನಲ್ಲಿದ್ದು, ಕಳೆದ ನಾಲ್ಕು ತಿಂಗಳ ಅಷ್ಟೇ ಆತ ತನ್ನೂರಿಗೆ ಬಂದಿದ್ದ ಪ್ರಾಥಮಿಕ ಮಾಹಿತಿಯ ಪ್ರಕಾರ ಅಕ್ಬರ್ ಅಲಿ ವಿದೇಶದಲ್ಲಿದ್ದುಕೊಂಡೆ ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾವನಿಂದ ಪಡೆದುಕೊಂಡಿದ್ದ. +ಆರೋಪಿ ರಮೀಝ್ ಮತ್ತು ಮೊಹಮ್ಮದ್ ಸಾಕ್ ಈ ಸಿಮ್ ಕಾರ್ಡ್‍ಗಳನ್ನು ನಕಲಿ ದಾಖಲೆಗಳನ್ನು ನೀಡಿ ಪಡೆಯಲು ಕಮಿಷನ್ ಕೂಡ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್‍ಗಳನ್ನು ಬೆಂಗಳೂರಿನ ವ್ಯಕ್ತಿಗಳಿಗೆ ಖಾಸಗಿ ಬಸ್‍ಗಳ ಮೂಲಕ ಕಳಿಸಿಕೊಡುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾರೆ. +ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ +ಪ್ರಸ್ತುತ ಈ ಸಿಮ್ ಕಾರ್ಡ್‍ಗಳನ್ನು ಯಾವ ಉದ್ದೇಶಕ್ಕೆ ಪಡೆಯಲಾಗುತ್ತಿತ್ತು ಮತ್ತು ಯಾರ ಕೈಗೆ ನೀಡಲಾಗುತ್ತಿತ್ತು ಎಂಬುದು ಬಾರಿ ಕುತೂಹಲ ಕೆರಳಿಸಿದೆ. ಬಂತ ಆರೋಪಿಗಳಿಂದ 42 ಅಕ್ರಮ ಸಿಮ್ ಕಾರ್ಡ್‍ಗಳನ್ನು ವಶಪಡಿಸಿಕೊಂಡಿದ್ದು, ಇದರ ಹಿಂದೆ ವ್ಯವಸ್ಥಿತ ಜಾಲವಿದೆ ಎಂದು ಮೂಲಗಳು ತಿಳಿಸಿವೆ. ಈ ಸಿಮ್ ಕಾರ್ಡ್‍ಗಳನ್ನು ಬಳಸಿಕೊಂಡು ದೇಶ-ದ್ರೋಹ ಕೃತಿಗಳನ್ನು ನಡೆಸಿ ಅದು ಪತ್ತೆಯಾಗದಂತೆ ಮಾಡುವುದು ಇದರ ಉದ್ದೇಶ ಎಂದು ಹೇಳಲಾಗುತ್ತಿದೆ. +ಒಟ್ಟಾರೆ ಮಂಗಳೂರಿನಲ್ಲಿ ಇಂತಹ ಜಾಲವಿರುವುದು ಗೊತ್ತಾಗುತ್ತಿದ್ದಂತೆ ಪೊಲೀಸರು ಅ¯ರ್ಟ್ ಆಗಿದ್ದಾರೆ.ಮೊಬೈಲ್ ಮಳಿಗೆಗಳು ಹಾಗೂ ದೂರಸಂಪರ್ಕ ಕಂಪೆನಿಗಳಿಗೆ ಸರಿಯಾದ ದಾಖಲೆಗಳನ್ನು ಪರಿಶೀಲಿಸದೇ ಸಿಮ್ ಕಾರ್ಡ್‍ಗಳನ್ನು ನೀಡದಿರುವಂತೆ ಎಚ್ಚರಿಕೆ ನೀಡಲಾಗಿದೆ. ಬಂತರ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಅಕ್ರಮ ಸಿಮ್ ಕಾರ್ಡ್‍ನ ಹಿಂದಿನ ರಹಸ್ಯ ಸದ್ಯದಲ್ಲಿಯೇ ಬಹಿರಂಗಗೊಳ್ಳಬೇಕಿದೆ. \ No newline at end of file diff --git a/eesanje/url_46_247_10.txt b/eesanje/url_46_247_10.txt new file mode 100644 index 0000000000000000000000000000000000000000..39f2acff90206b35c76c4251bd73e9a2ad787543 --- /dev/null +++ b/eesanje/url_46_247_10.txt @@ -0,0 +1,13 @@ +ರಾಜಕೀಯಕ್ಕೆ ಬರ್ತಾರಾ ಡಾ.ಮಂಜುನಾಥ್..? +ಬೆಂಗಳೂರು,ಫೆ.3- ರಾಜಕೀಯ ಪ್ರವೇಶ ಮಾಡುವ ಆಲೋಚನೆ ಮಾಡಿಲ್ಲ ಎಂದು ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕರಾದ ಡಾ.ಸಿ.ಎನ್. ಮಂಜುನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ವೃತ್ತಿಯಲ್ಲಿ ಮುಂದುವರೆಯುವುದಾಗಿ ಹೇಳಿದರು. +ರಾಜಕೀಯ ಪ್ರವೇಶ ಅಥವಾ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಊಹಾಪೋಹವನ್ನು ಅವರು ಅಲ್ಲೆಗೆಳೆದರು. ಕೆಂಪೇಗೌಡ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮಾಡುವ ಉದ್ದೇಶವನ್ನು ಒಕ್ಕಲಿಗರ ಸಂಘ ಹೊಂದಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಒಕ್ಕಲಿಗರ ಸಂಘದ ಕೋರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ ಹೃದಯ ಭಾಗದಲ್ಲಿ ಕೆಂಪೇಗೌಡ ಆಸ್ಪತ್ರೆ ಇದೆ. ಅದರ ಅಭಿವೃದ್ಧಿಗೆ ಉಪಯುಕ್ತ ಸಲಹೆ ಕೊಡಲು ಸಂತೋಷವಾಗುತ್ತದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಬೇಕು. ಸಲಹೆಗಳೇ ಅತ್ಯಂತ ಬದಲಾವಣೆ ತರುತ್ತವೆ ಎಂದು ಮಂಜುನಾಥ್ ತಿಳಿಸಿದರು. +ಜಯದೇವ ಆಸ್ಪತ್ರೆಯ ನಿರ್ದೇಶಕ ಸ್ಥಾನದಿಂದ ನಿವೃತ್ತಿಯಾದ ನಂತರ ಹಲವು ಸಂಘಸಂಸ್ಥೆಗಳು ಪ್ರೀತಿ, ಅಭಿಮಾನದಿಂದ ಸನ್ಮಾನಿಸುತ್ತಿವೆ. ರಾಜ್ಯ ಒಕ್ಕಲಿಗರ ಸಂಘವು ಇಂದು ದೊಡ್ಡ ಮಟ್ಟದಲ್ಲಿ ನನ್ನನ್ನು ಸನ್ಮಾನಿಸಿದೆ. ಈ ಸನ್ಮಾನದಿಂದ ಸಂತೋಷವಾಗಿದೆ ಎಂದರು. +ಕಿಮ್ಸ್ ಆಸ್ಪತ್ರೆ ಸಂಪೂರ್ಣ ಜವಾಬ್ದಾರಿಗೆ ಮನವಿ:ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಮಾತನಾಡಿ, ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ, ಕೆಂಪೇಗೌಡ ಆಸ್ಪತ್ರೆ, ಸಂಘದ ಅೀಧಿನದಲ್ಲಿರುವ ವೈದ್ಯಕೀಯ ವಿದ್ಯಾಲಯಗಳು ಆಸ್ಪತ್ರೆಗಳು ಸೇರಿದಂತೆ ಮುಂದಿನ ದಿನಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿ ಅಥವಾ ಮೇಲು ಉಸ್ತುವಾರಿಯನ್ನು ಡಾ.ಮಂಜುನಾಥ್ ಅವರಿಗೆ ನೀಡಲು ಜ.31ರಂದು ನಡೆದ ಸಮಿತಿ ಸಭೆಯಲ್ಲಿ ಒಮ್ಮತ ತೀರ್ಮಾನ ಮಾಡಲಾಗಿದೆ. +ವಿಶೇಷ ಅನುಭವವುಳ್ಳ ಮಂಜುನಾಥ್ ಅವರು ತುಂಬು ಮನಸ್ಸಿನಿಂದ ನಮ್ಮ ಮನವಿಯನ್ನು ಸ್ವೀಕರಿಸುತ್ತಾರೆ ಎಂಬ ವಿಶ್ವಾಸವಿದೆ. ನಮ್ಮ ಸಂಘದ ಸಂಸ್ಥೆಗಳನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಹಾಗೂ ಹೊಸ ವೈದ್ಯಕೀಯ ಸೌಲಭ್ಯಗಳನ್ನು ಪ್ರಾರಂಭಿಸಲು ಅವರ ಅನುಭವ ಮತ್ತು ಮಾರ್ಗದರ್ಶನದ ಅವಶ್ಯಕತೆ ಇದೆ. ಅವರ ಅನುಭವದ ಸದುಪಯೋಗವನ್ನು ಪಡೆದುಕೊಳ್ಳಲು ಸಂಘದ ಆಡಳಿತ ಮಂಡಳಿಯು ಉತ್ಸುಕವಾಗಿದ್ದು, ಈ ಸಂಬಂಧ ಅವರಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು. +ಈಗಷ್ಟೇ ಅವರು ನಿವೃತ್ತರಾಗಿದ್ದಾರೆ. ನಮ್ಮ ಮನವಿಗೂ ಸ್ಪಂಸಿದ್ದಾರೆ. ಜಯದೇವ ಆಸ್ಪತ್ರೆ ರೀತಿಯಂತೆ ನಮ್ಮ ಆಸ್ಪತ್ರೆಯನ್ನು ರಾಷ್ಟ್ರೀಯ , ಅಂತಾರಾಷ್ಟ್ರೀಯ ಮಟ್ಟಕ್ಕೆ ಹೆಸರು ಗಳಿಸಲು ಮಂಜುನಾಥ್ ಅವರ ಸೇವೆಯ ಅಗತ್ಯವಿದೆ ಎಂದರು. +ವೈದ್ಯಕೀಯ ಸೇವೆ ಆದರ್ಶವಾಗಿರಬೇಕುಬೆಂಗಳೂರು,ಫೆ.3- ಯಾವುದೇ ಫಲಾಪೇಕ್ಷೆ, ನಿರೀಕ್ಷೆ ಇಲ್ಲದೆ ಸೇವೆ ಮಾಡಬೇಕು. ಸೇವೆಯು ಪ್ರದರ್ಶನವಾಗದೆ ಆದರ್ಶವಾಗಿರಬೇಕು ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಪದ್ಮಭೂಷಣ, ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. ಕುವೆಂಪು ಕಲಾಕ್ಷೇತ್ರದಲ್ಲಿ ರಾಜ್ಯ ಒಕ್ಕಲಿಗರ ಸಂಘ ಹೂಮಳೆ ಸುರಿಸಿ ಮಾಡಿದ ಗೌರವಪೂರ್ವಕ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. +ಸೇವೆಯು ಯಾವಾಗಲೂ ಪ್ರದರ್ಶನವಾಗಿರಬಾರದು. ಕರುಣೆ, ಮಾನವೀಯತೆ, ಬದ್ದತೆಯಿಂದ ಕೂಡಿರಬೇಕು. ಆಗ ನಿವೃತ್ತಿಯ ನಂತರವು ಸಮಾಜ ಗೌರವಿಸುತ್ತದೆ ಎಂದರು. ಪ್ರತಿಯೊಬ್ಬರಿಗೂ ಯಾವುದೇ ಪದವಿಯಿಂದ ನಿವೃತ್ತಿ ಅನಿವಾರ್ಯ. ಆದರೆ ನೆನಪುಗಳು ಮಾತ್ರ ಅಮರವಾಗಿರುತ್ತದೆ. ಆಸ್ಪತ್ರೆ ದೇವಾಲಯವಿದ್ದಂತೆ. +ಆಸ್ಪತ್ರೆಯ ಗೋಡೆಗಳಿಗೆ ದೇವಾಲಯಕ್ಕಿಂತಲೂ ಹೆಚ್ಚಿನ ಪ್ರಾರ್ಥನೆ ಸಲ್ಲಿಸಿರುತ್ತಾರೆ. ಬಡ ರೋಗಿಗಳ ಕಣ್ಣೀರು ಶೇ.1ರಷ್ಟಿದ್ದರೆ ಅದರ ಹಿಂದಿನ ನೋವು 99ರಷ್ಟು ಇರುತ್ತದೆ. ಹೀಗಾಗಿ ಕರುಣೆ, ಹೃದಯವಂತಿಕೆ, ಮಾನವೀಯತೆ, ದೂರದೃಷ್ಟಿಯಿಂದ ಕೆಲಸ ಮಾಡಬೇಕು. ಕೆಲಸ ಮಾಡುವ ಸ್ಥಳದಲ್ಲಿ ಉತ್ತಮ ವಾತಾವರಣವಿದ್ದು, ಪರಸ್ಪರ ಉತ್ತಮ ಸಂಬಂಧವಿರಬೇಕು. ಅನುದಾನಕ್ಕಿಂತ ಅನುಷ್ಠಾನ ಮುಖ್ಯ. ಸಹಾಯ ಮಾಡುವುದೇ ಧರ್ಮ ಎಂದು ಹೇಳಿದರು. +ಇತ್ತೀಚೆಗೆ ಸಂಬಂಧಗಳು ಪೇಪರ್ ತಟ್ಟೆಯಂತೆ ಹರಿದು ಹೋಗುತ್ತಿವೆ. ಅಸೂಯೆ, ಅನುಮಾನ, ಅಹಂಕಾರ ಇರಬಾರದು. ಮಾಡುವ ಸಾಧನೆ ಸಾಮಾನ್ಯ ಜನರಿಗೆ ತಲುಪಿದಾಗ ಗೌರವ ಭಾವನೆ ತನ್ನಿಂದ ತಾನೆ ಬರುತ್ತದೆ ಎಂದು ಹೇಳಿದರು. +17-18 ವರ್ಷಗಳ ಕಾಲ ಜಯದೇವ ಆಸ್ಪತ್ರೆಯಲ್ಲಿ 75 ಲಕ್ಷ ಹೊರರೋಗಿಗಳಿಗೆ ಚಿಕಿತ್ಸೆ, 8 ಲಕ್ಷ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಎಷ್ಟು ಪಾರಿತೋಷಕ ಪಡೆದೆ ಎನ್ನುವುದಕ್ಕಿಂತ ಎಷ್ಟು ಜನರ ಮನೆಯಲ್ಲಿ ಬೆಳಕು, ರೋಗಿಗಳ ಮುಖದಲ್ಲಿ ನಗುವನ್ನು ತಂದಿದ್ದೇವೆ ಎಂಬುದು ಮುಖ್ಯ ಎಂದರು. ಜಯದೇವ ಆಸ್ಪತ್ರೆಯಲ್ಲಿ ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಶ್ರೀಮಂತರಿಗೆ ಸಿಗುವ ಚಿಕಿತ್ಸೆಯನ್ನು ಬಡವರಿಗೂ ನೀಡಲಾಗುತ್ತಿದೆ. ನಾವು ಸ್ವೀಕರಿಸುವ ಪ್ರಮಾಣ ವಚನದಂತೆ ನಡೆದುಕೊಂಡರೆ ದೇಶ ಮುಂದುವರೆಯಲಿದೆ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ನಾವು ಹುಟ್ಟುವಾಗಲು ವಿಶ್ವಮಾನವರು, ಹೋಗುವಾಗಲು ವಿಶ್ವಮಾನವರು. ನಡುವೆಯೂ ವಿಶ್ವಮಾನವರೆನಿಸಿಕೊಳ್ಳಬೇಕು ಎಂದು ಹೇಳಿದರು. ಒಕ್ಕಲಿಗರ ಸಂಘವು ಉತ್ತಮ ಕೆಲಸ ಮಾಡುತ್ತಿದೆ. ಬೆಂಗಳೂರಿನ ಹೃದಯ ಭಾಗದಲ್ಲಿದ್ದು, ಸಂಘ ಮತ್ತು ಸಂಸ್ಥೆಗಳು ನಮ್ಮದು ಎಂಬ ಮನೋಭಾವನೆ ಮೂಡಿಬಂದರೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿದೆ ಎಂದರು. +ಕೆಂಪೇಗೌಡ ಆಸ್ಪತ್ರೆಯ ಪ್ರಾಂಶುಪಾಲ ಡಾ.ಭಗವಾನ್ ಅವರು ಮಂಜುನಾಥ್ ಅವರ ಸಾಧನೆಯ ಕಿರುಪರಿಚಯ ಮಾಡಿಕೊಟ್ಟರು. ಇದೇ ಸಂದರ್ಭದಲ್ಲಿ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪದಾಕಾರಿಗಳು ಹಾಗೂ ನಿರ್ದೇಶಕರು, ಕೆಂಪೇಗೌಡ ವೈದ್ಯಕೀಯ ಕಾಲೇಜು, ಆಸ್ಪತ್ರೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮಂಜುನಾಥ್ ಅವರಲ್ಲಿ ಮನವಿ ಮಾಡಿದರು. ಸಂಘದ ಅಧ್ಯಕ್ಷರಾದ ಡಿ.ಹನುಮಂತಯ್ಯ, ಗೌರವಾಧ್ಯಕ್ಷರಾದ ಬಿ.ಕೆಂಚಪ್ಪಗೌಡರು, ಉಪಾಧ್ಯಕ್ಷರಾದ ಎಲ್.ಶ್ರೀನಿವಾಸ್, ಸಿ.ದೇವರಾಜು, ಪ್ರಧಾನಕಾರ್ಯದರ್ಶಿ ಹೆಚ್.ಸಿ.ಜಯಮುತ್ತು, ಸಹಾಯಕ ಕಾರ್ಯದರ್ಶಿ ವೆಂಕಟರಾಮೇಗೌಡರು, ಖಜಾಚಿ ಸಿ.ಎಂ.ಮಾರೇಗೌಡ, ಕಾರ್ಯಾಧ್ಯಕ್ಷ ಬಿ.ಪಿ.ಮಂಜೇಗೌಡರು, ನಿರ್ದೇಶಕರಾದ ಎನ್. ಬಾಲಕೃಷ್ಣ, ಟಿ.ಕೋನಪ್ಪರೆಡ್ಡಿ, ಅಶೋಕ್ ಹೆಚ್.ಎನ್. ಎಲುವಳ್ಳಿ ಎನ್. ರಮೇಶ್, ಡಾ.ಟಿ.ಹೆಚ್. ಆಂಜನಪ್ಪ, ಕೆ.ಎಸ್.ಸುರೇಶ್, ಎಂ.ಪುಟ್ಟಸ್ವಾಮಿ, ಡಾ. ವಿ.ನಾರಾಯಣಸ್ವಾಮಿ, ಗಂಗಾಧರ್ ಸಿ.ಜಿ., ರಘಗೌಡರು ಎಸ್.ಎಸ್., ಡಾ. ಡಿ.ಕೆ.ರಮೇಶ್, ಹನುಂತರಾಯಪ್ಪ ಆರ್, ಲೋಕೇಶ್ ಬಿ.ನಾಗರಾಜಯ್ಯ ಮತಿತ್ತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_247_11.txt b/eesanje/url_46_247_11.txt new file mode 100644 index 0000000000000000000000000000000000000000..5389cf9e7a5160f9ecb0ca550db589bc44f7e6f4 --- /dev/null +++ b/eesanje/url_46_247_11.txt @@ -0,0 +1,9 @@ +ಚರ್ಚೆಗೆ ಗ್ರಾಸವಾದ ಈಶ್ವರಾನಂದ ಪುರಿ ಸ್ವಾಮೀಜಿ ಹೇಳಿಕೆ +ಬೆಂಗಳೂರು,ಫೆ.3- ಮುಜರಾಯಿ ದೇವಸ್ಥಾನದಲ್ಲಿ ಗರ್ಭಗುಡಿ ಪ್ರವೇಶಕ್ಕೆ ಅವಕಾಶ ನೀಡದೆ ಅಸ್ಪೃಶ್ಯತೆ ಹಾಗೂ ತಾರತಮ್ಯ ಮಾಡಲಾಯಿತು ಎಂದು ಚಿತ್ರದುರ್ಗದ ಕನಕಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಶ್ರೀಗಳು ನಿನ್ನೆ ನೀಡಿದ ಹೇಳಿಕೆಗೆ ದೇವಸ್ಥಾನದ ಅರ್ಚಕರು ಸ್ಪಷ್ಟನೆ ನೀಡಿ ನಮ್ಮಲ್ಲಿ ಆ ರೀತಿ ಯಾವುದೇ ತಾರತಮ್ಯವಿಲ್ಲ. ಪ್ರತಿ ವರ್ಷ ವೈಕುಂಠ ಏಕಾದಶಿ ದರ್ಶನಕ್ಕೆ ನಾವೇ ಶ್ರೀಗಳನ್ನು ಆಹ್ವಾನ ಮಾಡುತ್ತೇವೆ. ದೇವಸ್ಥಾನದಿಂದ ಸಕಲ ಗೌರವ, ಸನ್ಮಾನಗಳನ್ನು ಮಾಡಿ ವಿನಯಪೂರಕವಾಗಿ ಕಳುಹಿಸಿಕೊಡುತ್ತೇವೆ. ಆದರೂ ಸ್ವಾಮೀಜಿ ಯಾವ ಕಾರಣಕ್ಕೆ ವಿವಾದಿತ ಹೇಳಿಕೆ ನೀಡಿದರು ಎಂದಿದ್ದಾರೆ. +ಅದರ ನಂತರ ಮತ್ತೆ ಇಂದು ಬೆಳಿಗ್ಗೆ ಈಶ್ವರಾನಂದ ಪುರಿ ಸ್ವಾಮೀಜಿಗಳು ತಮ್ಮ ಹೇಳಿಕೆಯನ್ನು ಪುನರ್ ಉಚ್ಛರಿಸಿದ್ದಾರೆ. ದೇವಸ್ಥಾನದಲ್ಲಿ ಅಸ್ಪೃಶ್ಯತೆ, ತಾರತಮ್ಯ ನಡೆದಿದ್ದು ನಿಜ. ಕೆಲ ವರ್ಷಗಳ ಹಿಂದೆ ಕುರುಬ ಸಮುದಾಯದ ಸ್ವಾಮೀಜಿಯೊಬ್ಬರು ದೇವಸ್ಥಾನಕ್ಕೆ ಭೇಟಿ ನೀಡಿ ಗರ್ಭಗುಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಇಡೀ ದೇವಸ್ಥಾನವನ್ನೇ ಸ್ವಚ್ಚಗೊಳಿಸಲಾಗಿತ್ತು ಎಂಬ ಮಾಹಿತಿ ತಿಳಿದು ತಮ್ಮ ಮನಸಿಗೆ ನೋವಾಯಿತು. ತಮಗೂ ಈ ಕಹಿ ಅನುಭವ ಆಗಿದೆ ಎಂದಿದ್ದಾರೆ. +ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ +ಅರ್ಚಕರ ಕುಟುಂಬದ ಮಹಿಳೆಯರನ್ನು ಗರ್ಭಗುಡಿಗೆ ಬಿಡಲಾಗಿದ್ದು, ಮಠಾೀಧಿಶರಾದ ನಮ್ಮನ್ನು ಗರ್ಭಗುಡಿಯ ಹೊರಗಿನ ಪ್ರಾಗಂಣ ದಲ್ಲಿ ನಿಲ್ಲಿಸಲಾಗಿತ್ತು. 21 ನೇ ಶತಮಾನದಲ್ಲಿ ಆಧುನಿಕ, ವೈಜ್ಞಾನಿಕ ಯುಗದಲ್ಲಿ ಇರುವ ನಮ್ಮ ನಡುವೆ ಇಂತಹ ಆಚರಣೆಗಳು ಮನಸ್ಸಿಗೆ ತುಂಬಾ ನೋವುಂಟು ಮಾಡುತ್ತವೆ ಎಂದಿದ್ದಾರೆ. ಇದು ನನ್ನೊಬ್ಬನ ಅನುಭವ ಮಾತ್ರವಲ್ಲ. ಬಹಳಷ್ಟು ಮಂದಿ ಮಠಾೀಧಿಶರಿಗೂ ಆಗಿದೆ. ಆದರೆ ಯಾರೂ ಬಾಯಿಬಿಟ್ಟು ಮಾತನಾಡುತ್ತಿಲ್ಲ. ಮಾಧ್ಯಮಗಳ ಮುಂದೆ ವಿಚಾರ ಪ್ರಸ್ತಾಪ ಮಾಡುವುದಿಲ್ಲ. ನಾನು ಒಂದು ಹೆಜ್ಜೆ ಮುಂದೆ ಹೋಗಿ ಹೇಳಿದ್ದೇನೆ ಎಂದಿದ್ದಾರೆ. +ಮುಜರಾಯಿ ಅಷ್ಟೇ ಅಲ್ಲ ಯಾವುದೇ ದೇವಸ್ಥಾನಗಳಲ್ಲಿ ಜಾತಿ, ಅಸ್ಪೃಶ್ಯತೆ, ಅಸಮಾನತೆ ಆಚರಣೆಯಾಗಬಾರದು. ಬಸವಣ್ಣ, ಕನಕದಾಸರ ಆಶಯದಂತೆ ಸಹಬಾಳ್ವೆಯ ಪರಿಪಾಠ ಇರಬೇಕು ಎಂದು ಹೇಳಿದರು. ಶ್ರೀಗಳ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. +ರಾಜ್ಯದಲ್ಲಿ 35 ಸಾವಿರಕ್ಕೂ ಹೆಚ್ಚು ಮುಜರಾಯಿ ದೇವಸ್ಥಾನಗಳಿವೆ. ಎಲ್ಲಿಯೂ ಅಸ್ಪೃಶ್ಯತೆ ಆಚರಣೆಯಾಗುತ್ತಿಲ್ಲ. ಇತ್ತೀಚೆಗೆ ಈ ಪ್ರಕರಣ ವರದಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಇಲಾಖೆಯ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. +ದೆಹಲಿ ಸಿಸಿಬಿ ಪೊಲೀಸರಿಂದ ಕೇಜ್ರಿಗೆ ನೋಟಿಸ್ +ಜೊತೆಗೆ ಅಸ್ಪೃಶ್ಯತೆ ಮತ್ತು ತಾರತಮ್ಯವನ್ನು ಆಚರಣೆ ಮಾಡಬಾರದು ಎಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ನಾಮಫಲಕಗಳನ್ನು ಮತ್ತಷ್ಟು ಗೋಚರ ಸ್ಥಿತಿಯಲ್ಲಿ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗುವುದು. ಧಾರ್ಮಿಕ ಕೇಂದ್ರಗಳಲ್ಲಿ ತಾರತಮ್ಯವನ್ನು ನಿವಾರಿಸುವುದಾಗಿ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_247_12.txt b/eesanje/url_46_247_12.txt new file mode 100644 index 0000000000000000000000000000000000000000..afe8e9f08ce647b5fa616cbf455a564b7f2c22d3 --- /dev/null +++ b/eesanje/url_46_247_12.txt @@ -0,0 +1,10 @@ +ಮೋದಿ ದೇಶದ ಜನರನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ: ರಾಮಲಿಂಗಾರೆಡ್ಡಿ +ಬೆಂಗಳೂರು,ಫೆ.3- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಾಲ ಮಾಡಿ ತುಪ್ಪ ತಿನ್ನು ಎನ್ನುವಂತೆ ದೇಶದ ಜನರನ್ನು ಸಾಲದ ಸುಳಿವಿಗೆ ಸಿಲುಕಿಸುವುದನ್ನು ಬಿಟ್ಟರೆ ಬೇರೆ ಯಾವ ಸಾಧನೆಯನ್ನೂ ಮಾಡಿಲ್ಲ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1947ರಿಂದ 2017 ರವರೆಗೆ 67 ವರ್ಷಗಳ ಕಾಲ ದೇಶದ ಒಟ್ಟು ಸಾಲ 52 ಲಕ್ಷ ಕೋಟಿ ರೂ. ಮಾತ್ರ. ಅಂದಿನಿಂದ ಈವರೆಗೆ ಕೇವಲ ಹತ್ತು ವರ್ಷದಲ್ಲಿ ನರೇಂದ್ರಮೋದಿಯವರು ಸಾಲದ ಪ್ರಮಾಣವನ್ನು 150 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ. 11 ಲಕ್ಷ ಕೋಟಿ ರೂ. ಬಡ್ಡಿಯನ್ನೇ ಪಾವತಿಸಬೇಕಾಗುತ್ತದೆ ಎಂದು ವಿವರಿಸಿದರು. ಪ್ರತಿಯೊಂದಕ್ಕೂ ಮೋದಿಯವರನ್ನು ವೈಭವೀಕರಿಸಿದವರಿಗೆ ಸಾಲ ಮಾಡಿ ತುಪ್ಪ ತಿನ್ನುತ್ತಿರುವುದು ಕಂಡುಬಂದಿಲ್ಲ. ದೇಶದ ಜನರನ್ನು ಸಾಲದ ಸುಳಿಗೆ ಸಿಲುಕಿಸಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. +ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು +ದೇವಸ್ಥಾನಗಳಲ್ಲಿ ತಾರತಮ್ಯ ಸಲ್ಲ:ಚಿತ್ರದುರ್ಗದ ಬಾಗೂರಿನ ದೇವಸ್ಥಾನದಲ್ಲಿ ಕನಕಪೀಠದ ಈಶ್ವರಾನಂದ ಪುರಿ ಸ್ವಾಮೀಜಿಯವರಿಗೆ ಗರ್ಭಗುಡಿಯೊಳಗೆ ಪ್ರವೇಶಕ್ಕೆ ಅವಕಾಶ ಕೊಡದೆ ತಾರತಮ್ಯ ಮಾಡಿರುವ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು. +ಕೆಲವು ದೇವಸ್ಥಾನಗಳಲ್ಲಿ ಭಕ್ತರನ್ನು ಗರ್ಭಗುಡಿಯೊಳಗೂ ಬಿಟ್ಟು ದೇವರ ಮೂರ್ತಿ ದರ್ಶನಕ್ಕೆ ಅವಕಾಶ ಮಾಡಿಕೊಡುತ್ತಾರೆ. ತಾವು ಇತ್ತೀಚೆಗೆ ಶ್ರೀಶೈಲಕ್ಕೆ ಭೇಟಿ ನೀಡಿದಾಗ ಗರ್ಭಗುಡಿಗೆ ಕರೆದುಕೊಂಡು ಹೋಗಿದ್ದರು. ದೇವರ ಲಿಂಗ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಆದರೆ ಬಹಳಷ್ಟು ದೇವಸ್ಥಾನಗಳಲ್ಲಿ ಗರ್ಭಗುಡಿಯೊಳಗೆ ಬಿಡುವುದಿಲ್ಲ ಎಂದು ನಮ್ಮ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ. ಬಾಗೂರು ದೇವಸ್ಥಾನದ ಪಟ್ಟಣದಲ್ಲಿ ಸ್ವಾಮೀಜಿ ಹೋದ ಬಳಿಕ ದೇವಾಲಯ ಸ್ವಚ್ಛಗೊಳಿಸಿರುವುದು ಸರಿಯಲ್ಲ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. +ದೇವಸ್ಥಾನಗಳಿಗಾಗಿ ಅನುದಾನ :ರಾಜ್ಯದಲ್ಲಿ ರಾಮಮಂದಿರ, ಹನುಮಮಂದಿರ, ದುರ್ಗಾ ದೇವಸ್ಥಾನಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಬಜೆಟ್ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಬಿಜೆಪಿಯ ರಾಜಕಾರಣಕ್ಕೆ ತಿರುಗೇಟು ಎಂದು ಭಾವಿಸುವ ಅಗತ್ಯವಿಲ್ಲ. ಆಯಾ ಇಲಾಖೆಗಳು ತಮ್ಮ ಪಾಲಿನ ಜವಾಬ್ದಾರಿಯನ್ನು ಪ್ರತಿ ವರ್ಷವೂ ನಿಭಾಯಿಸುತ್ತವೆ. +ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ +ನಾವು ಅದೇ ರೀತಿಯ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ತಾವು ಯಾವ್ಯಾವ ದೇವಸ್ಥಾನಗಳಿಗೆ ಎಷ್ಟು ಅನುದಾನ ನೀಡುತ್ತೇವೆ ಎಂಬ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಹೇಳಿದರು. ರಾಮಮಂದಿರ ಹಾಗೂ ರಾಮನ ಭಕ್ತಿ ಬಿಜೆಪಿಗೆ ಹೊಸದು ಎನ್ನಿಸುತ್ತದೆ. ಆದರೆ ದೇಶದ ಜನರಿಗೆ ಇದು ಹಳೆಯದು. ಅದರಲ್ಲೂ ಕಾಂಗ್ರೆಸ್ ಪಕ್ಷದಿಂದ ಪ್ರಧಾನಿಯಾಗಿದ್ದ ರಾಜೀವ್‍ಗಾಂಧಿಯವರು 1980 ರಲ್ಲಿ ರಾಮಮಂದಿರದ ಬಾಗಿಲು ತೆರೆದು ಪೂಜೆಗೆ ಅವಕಾಶ ಮಾಡಿಕೊಟ್ಟರು. +ಆದರೆ ಬಿಜೆಪಿಯವರು ಇದನ್ನು ರಾಜಕೀಯವಾಗಿ ಬಳಸಿಕೊಂಡು ಮತ ಪಡೆಯಲು ಹುನ್ನಾರ ನಡೆಸಿದರು. ಆದರೆ ನಾವು ಧರ್ಮವನ್ನು ರಾಜಕೀಯಕ್ಕೆ ಬಳಸುವುದಿಲ್ಲ. ರಾಮನವಮಿಯಲ್ಲಿ ಮಜ್ಜಿಗೆ, ಪಾನಕ ಹಂಚಿ ನಮ್ಮ ಆಚರಣೆಗಳನ್ನು ನಾವು ಮಾಡಿಕೊಳ್ಳುತ್ತೇವೆ ಎಂದರು. \ No newline at end of file diff --git a/eesanje/url_46_247_2.txt b/eesanje/url_46_247_2.txt new file mode 100644 index 0000000000000000000000000000000000000000..00adf497721ae56a42f9ab9d918b803a59c85037 --- /dev/null +++ b/eesanje/url_46_247_2.txt @@ -0,0 +1,9 @@ +ಕಿಯೋನಿಕ್ಸ್ ನಲ್ಲಿ 430 ಕೋಟಿ ರೂ ಅವ್ಯವಹಾರ : ಪ್ರಿಯಾಂಕ ಖರ್ಗೆ +ಬೆಂಗಳೂರು,ಫೆ.4- ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಕಿಯೋನಿಕ್ಸ್ ಮೂಲಕ ನಡೆದಿರುವ ಖರೀದಿಯಲ್ಲಿ 430 ಕೋಟಿ ರೂ.ಗಳಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ. ಇದನ್ನು ಹೆಚ್ಚಿನ ತನಿಖೆಗೊಳಪಡಿಸಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡುಮೂರು ತಿಂಗಳ ಹಿಂದೆ ಬಾಕಿ ಬಿಲ್ ಪಾವತಿಯಾಗುತ್ತಿಲ್ಲ ಎಂದು ಕೆಲವು ಗುತ್ತಿಗೆದಾರರು ಪ್ರತಿಭಟನೆ ನಡೆಸಿದ್ದರು. ಆಗ ಬಿಜೆಪಿಯ ಸಿ.ಎನ್.ಅಶ್ವಥ್ ನಾರಾಯಣ, ಆರ್.ಅಶೋಕ್ ಮತ್ತಿತರರು ನನ್ನ ರಾಜೀನಾಮೆ ಕೇಳಿದ್ದರು. ನಾನು ದಾಖಲೆಗಳ ಸಹಿತ ವಿಷಯ ಜನರ ಮುಂದಿಟ್ಟ ನಂತರ ಅವರ ಬಾಯಿ ಬಂದ್ ಆಗಿದೆ ಎಂದರು. +ಇದು ಕಳೆದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗಲೇ ನಡೆದ ಆಡಿಟ್ ವರದಿ. ಇದನ್ನು ಅಶ್ವಥ್ ನಾರಾಯಣ ಅವರೇ ಓದಿಲ್ಲ. ಬಾಯಿಗೆ ಬಂದಂತೆ ಆರೋಪ ಮಾಡಿದರು. ನಮ್ಮ ಸರ್ಕಾರ ಬಂದು 6 ತಿಂಗಳು ಕಳೆದಿರಲಿಲ್ಲ. ಯಾವುದೇ ಖರೀದಿಯೂ ಆಗಿರಲಿಲ್ಲ. ಆದರೂ ನಮ್ಮ ರಾಜೀನಾಮೆ ಕೇಳಿದ್ದರು. ಅವರು ಮಾಡಿದ ತಪ್ಪಿಗೆ ನಾನು ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿಯವರ ವಾದವಾಗಿತ್ತು ಎಂದು ಹೇಳಿದರು. +ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ +ಲೆಕ್ಕ ಪರಿಶೋಧಕರು 2018ರಿಂದ 2022ರ ಅವವರೆಗಿನ ಖರೀದಿ ವಹಿವಾಟುಗಳಲ್ಲಿನ ಲೋಪದೋಷಗಳ ಬಗ್ಗೆ 45 ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ್ದರು. ಅದನ್ನು ಆಧರಿಸಿ ನಾವು ಆಂತರಿಕ ಲೆಕ್ಕಪರಿಶೋಧನೆ ನಡೆಸಿದ್ದೇವೆ. ಶೇ.3ರಷ್ಟು ಮಾತ್ರ ಪರಿಶೀಲನೆಯಾಗಿದೆ. ಅದರಲ್ಲೇ 430 ಕೋಟಿ ರೂ.ಗೂ ಹೆಚ್ಚಿನ ಅವ್ಯವಹಾರ ಕಂಡುಬಂದಿದೆ. ಉಳಿದ ಶೇ.97ರಷ್ಟು ಪರಿಶೀಲನೆಯಾಗಬೇಕಿದೆ. ಅದಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ಸರ್ಕಾರ ರಚಿಸಿದೆ ಎಂದು ಹೇಳಿದರು. +ಕಿಯೋನಿಕ್ಸ್‍ನ ಅವ್ಯವಹಾರದಲ್ಲಿ ಫಲಾನುಭವಿಗಳ್ಯಾರು? ರಾಜಕಾರಣಿಗಳ ಮತ್ತು ಅಧಿಕಾರಿಗಳ ಪಾತ್ರವೆಷ್ಟು ಎಂಬುದನ್ನು ಪರಿಶೀಲಿಸಲಾಗುತ್ತದೆ. ಗುತ್ತಿಗೆದಾರರ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು ಈಗ ಉಸಿರೇ ಬಿಡುತ್ತಿಲ್ಲ. 430 ಕೋಟಿ ಯಾರ ಮನೆಯ ದುಡ್ಡು ಬಿಜೆಪಿಯವರು ಯಾರದೋ ದುಡ್ಡಿನಲ್ಲಿ ಯಲ್ಲಮ್ಮನ ಜಾತ್ರೆಯಲ್ಲ ಬಿಜೆಪಿ ಜಾತ್ರೆ ಮಾಡಿಕೊಂಡಿದ್ದಾರೆ. ಈ ಹಣದಲ್ಲಿಯೇ ಅವರು ಶಾಸಕರ ಖರೀದಿಯ ಆಪರೇಷನ್ ಕಮಲ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು. +ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು +ಕೆಲವರು ಮಾಧ್ಯಮದವರ ಹೆಸರಿನಲ್ಲಿಯೂ ಕಿಯೋನಿಕ್ಸ್‍ನಲ್ಲಿ ಹಣ ಲೂಟಿ ಹೊಡೆದಿದ್ದಾರೆ. ಎಲ್ಲವೂ ಪರಿಶೀಲನೆ ನಡೆಯುತ್ತಿದೆ ಎಂದರು. \ No newline at end of file diff --git a/eesanje/url_46_247_3.txt b/eesanje/url_46_247_3.txt new file mode 100644 index 0000000000000000000000000000000000000000..8926a615680a79782821852219bd1cbe68bd85b3 --- /dev/null +++ b/eesanje/url_46_247_3.txt @@ -0,0 +1,7 @@ +ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ +ಬೆಂಗಳೂರು,ಫೆ.4- ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ತನ್ನ ಸಾಮಾಜಿಕ ಜಾಲತಾಣದಲ್ಲಿ ಸಮರ ಸಾರಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿದೆ. +ಬಿಜೆಪಿಗರ ಮರ್ಯಾದೆ ಪ್ರಶ್ನಿಸಿರುವ ಮಾನ್ಯ ಸಿದ್ದರಾಮಯ್ಯ ಅವರೇ, ಮೊನ್ನೆ ನಿಮ್ಮ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಏಕವಚನ ಬಳಸುವ ಮೂಲಕ ರಾಜ್ಯದ ಮಾನ ಕಳೆದಿದ್ದಾರೆ, ಅದರ ಹಿಂದೆಯೇ ನಿಮ್ಮ ಸಹೋದರ ಡಿ.ಕೆ.ಸುರೇಶ್ ತಾವೊಬ್ಬ ಸಂಸದ ಎನ್ನುವುದನ್ನೂ ಮರೆತು ದೇಶ ವಿಭಜನೆ ಬಗ್ಗೆ ಮಾತನಾಡಿ, ಕರ್ನಾಟಕಕ್ಕೆ ಕಪ್ಪು ಮಸಿ ಬಳಿದಿದ್ದಾರೆ. +ಇದು ಸಾಲದು ಎಂಬಂತೆ ಹಾಸನದಲ್ಲಿ ಮಾಧ್ಯಮ ಗೋಷ್ಠಿ ಕರೆದು ನಿಮ್ಮ ಪಕ್ಷದ ಮಾಜಿ ಸಚಿವ ಬಿ.ಶಿವರಾಮ್ ಅವರು ಅಭಿವೃದ್ಧಿಯ ಬಾಗಿಲು ಮುಚ್ಚಿ ಪರ್ಸಂಟೇಜ್ ದಂಧೆಗಿಳಿದಿರುವ ನಿಮ್ಮ ಸರ್ಕಾರದ ಯೋಗ್ಯತೆಯನ್ನು ಜಗಜಹೀರು ಮಾಡಿದ್ದಾರೆ. ಈಗ ಹೇಳಿ ಮರ್ಯಾದೆ ಯಾರಿಗಿದೆ ಎಂದು ಬಿಜೆಪಿ ಪ್ರಶ್ನಿಸಿದೆ. +ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ +ಮಾನ್ಯ ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳ ಶೇ.10ರಷ್ಟು ಭಾಗವನ್ನೂ 60 ವರ್ಷಗಳ ಕಾಲ ಆಡಳಿತ ನಡೆಸಿದ ನಿಮ್ಮ ಕಾಂಗ್ರೆಸ್ ನೀಡಲಾಗಿಲ್ಲ ಎಂಬುದಕ್ಕೆ ನೂರಾರು ನಿದರ್ಶನಗಳಿವೆ ಎಂದು ವಾಗ್ದಾಳಿ ನಡೆಸಿದೆ. +ನಿಮ್ಮ ವೈಫಲ್ಯ, ಆಡಳಿತದ ಅರಾಜಕತೆಯ ಸ್ಥಿತಿಯನ್ನು ಮರೆಮಾಚಲು ಹೋಗಿ ಕೇಂದ್ರದ ಮೇಲೆ ಗೂಬೆ ಕೂರಿಸಲು ಹೋಗಬೇಡಿ, ಅದು ನಿಮಗೇ ತಿರುಗುಬಾಣವಾಗಲಿದೆ ಎಂದು ಎಚ್ಚರಿಕೆ ನೀಡಿದೆ. ವರ್ಗಾವಣೆ ದಂಧೆಯಲ್ಲಿ ಮೈಸೂರಿನಿಂದ ರಾಜ್ಯದ ತುಂಬಾ ತಮ್ಮ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿರುವ ಮಜಾವಾದಿ ಸಿದ್ದರಾಮಯ್ಯ ಅವರ ಪುತ್ರ ಗಳಿಸಿರುವ ಬಿರುದುಗಳು: ಹಲೋ ಅಪ್ಪ, ಡಾಕ್ಟರ್ ಚೀಟಿ, ವೈಎಸ್‍ಟಿ, ಟ್ರಾನ್ಸ್‍ಫರ್ ಕಿಂಗ್, ತಂದೆಗೆ ತಕ್ಕ ಮಗ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕೀರ್ತಿ ಪತಾಕೆಯ ಬಾವುಟವನ್ನು ಡಾ.ಯತೀಂದ್ರ ಹಾರಿಸುತ್ತಿದ್ದಾರೆ ಎಂದು ಬಿಜೆಪಿ ಅಪಹಾಸ್ಯ ಮಾಡಿದೆ. \ No newline at end of file diff --git a/eesanje/url_46_247_4.txt b/eesanje/url_46_247_4.txt new file mode 100644 index 0000000000000000000000000000000000000000..ce8cff76bc3297235a139435e7eb7a7681317a77 --- /dev/null +++ b/eesanje/url_46_247_4.txt @@ -0,0 +1,13 @@ +ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಹೇಳಿ : ಪ್ರಿಯಾಂಕ್ ಖರ್ಗೆ +ಬೆಂಗಳೂರು,ಫೆ.4- ಬಿಜೆಪಿಯವರು ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಎಂದು ಹೇಳಲಿ. ರಾಜ್ಯದಿಂದ ಆಯ್ಕೆಯಾಗಿರುವ 25 ಮಂದಿ ಸಂಸದರು ನಾಡಿನ ಪರವಾಗಿ ಸಂಸತ್‍ನ ಒಳಗೆ ದನಿ ಏರಿಸಿ ಮಾತನಾಡಲಿ. ರಾಜ್ಯ ಸರ್ಕಾರ ಅವರ ಬೆನ್ನಿಗಿದೆ ಭಯ ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೆ.7ರಂದು ದೆಹಲಿಯಲ್ಲಿ ನಾಡಿನ ಪರವಾಗಿ ಕಾಂಗ್ರೆಸ್ ನಡೆಸಲಿರುವ ಪ್ರತಿಭಟನೆಗೆ ಬಿಜೆಪಿಯವರು ಬೆಂಬಲ ನೀಡಬೇಕು. ನಿಜವಾಗಿಯೂ ಅವರಿಗೆ ಕನ್ನಡಿಗರು, ಕರ್ನಾಟಕದ ಬಗ್ಗೆ ಕಾಳಜಿ ಇದುದ್ದೇ ಆದರೆ ನಮ್ಮ ಜತೆ ಕೈ ಜೋಡಿಸಲಿ ಎಂದು ಸವಾಲು ಹಾಕಿದರು. +ನಾವು ಸಂಸತ್‍ನ ಹೊರಗೆ ಪ್ರತಿಭಟನೆ ಮಾಡುತ್ತೇವೆ. ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು, ಸಂಸತ್ ಒಳಗೆ ದನಿ ಎತ್ತಲಿ. ಅವರಿಗೆ ಯಾವುದೇ ಭಯ ಬೇಡ. ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ನಮ್ಮ ಸಂಸದರ ಬೆನ್ನಿಗೆ ನಿಲ್ಲಲಿದೆ. ಮೋದಿಯ ಭಯದಿಂದಾಗಿ ಮೌನವಾಗಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಬೇಡಿ ಎಂದು ಹೇಳಿದರು. +ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮಗೆ 44 ಸಾವಿರ ಕೋಟಿ ನೀಡಿದರೆ ಉತ್ತರಪ್ರದೇಶಕ್ಕೆ 2.18 ಲಕ್ಷ ಕೋಟಿ, ಮಧ್ಯಪ್ರದೇಶ, ಬಿಹಾರಕ್ಕೆ 2 ಲಕ್ಷ ಕೋಟಿ ರೂ. ನೀಡಲಾಗಿದೆ. ಇದು ಅನ್ಯಾಯವಲ್ಲವೇ? ಬರ ಬಾತ ಪ್ರದೇಶಗಳಿಗೆ ನಾವು ಕೇಳಿದ್ದು ಬರೀ 18 ಸಾವಿರ ಕೋಟಿ ರೂಪಾಯಿ. ಅದನ್ನೂ ನೀಡುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆ ಮಾನವ ದಿನಗಳ ಪ್ರಮಾಣವನ್ನು 100ರಿಂದ 150 ದಿನಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದೇವೆ. ನಾಲೈದು ಬಾರಿ ದೆಹಲಿಗೆ ಹೋಗಿ ಸಚಿವರ ಕಚೇರಿ ಬಾಗಿಲು ಕಾದಿದ್ದಾಗಿದೆ. ಯಾವುದೂ ಪ್ರಯೋಜನವಾಗಿಲ್ಲ ಎಂದರು. +ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ +ಬಿಜೆಪಿಯವರು ರಾಜ್ಯದಲ್ಲಿ ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್‍ವರೆಗೆ ಐಟಿ ರಫ್ತಿನಲ್ಲಿ ಬೆಂಗಳೂರಿನಿಂದ ಬಂದ ಆದಾಯ 3.29 ಲಕ್ಷ ಕೋಟಿ. ಇದರಲ್ಲಿ ಒಂದು ರೂಪಾಯಿ ಕೂಡ ರಾಜ್ಯಕ್ಕೆ ವಾಪಸ್ ಕೊಟ್ಟಿಲ್ಲ. ಹೋಗಲಿ ಈ ಹಣವನ್ನು ಉತ್ತರ ಭಾರತದ ರಾಜ್ಯಗಳಿಗೆ ಕೊಟ್ಟು ಶಾಲಾಕಾಲೇಜು, ಆಸ್ಪತ್ರೆಯಂತಹ ಜನಪರ ಕೆಲಸಗಳನ್ನಾದರೂ ಮಾಡುತ್ತಾರೆಯೇ ಎಂದರೆ ಅದು ಇಲ್ಲ. ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದರು. +ಮೋದಿ ಗ್ಯಾರಂಟಿ ಎಂಬ ಪ್ರಚಾರದ ವಿರುದ್ಧ ಕಡಿಕಾರಿದ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್ ಸೇರಿದಂತೆ ಕೇಂದ್ರದ ಎಲ್ಲ ಯೋಜನೆಗಳಲ್ಲೂ ರಾಜ್ಯದ್ದು ಶೇ.50ರಷ್ಟು ಪಾಲಿದೆ. ಆದರೂ ಮೋದಿ ಗ್ಯಾರಂಟಿ ಎಂದು ಬಿಂಬಿಸಿಕೊಳ್ಳುತ್ತಾರೆ ಇವರ ಪ್ರಚಾರ ಮಾತ್ರ ಶೇ.100ರಷ್ಟು. ಪ್ರತಿ ಯೋಜನೆಯಲ್ಲೂ ಕನ್ನಡಿಗರ ಬೆವರಿದೆ ಎಂದು ಹೇಳಿದರು. +ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಿರುವುದರಲ್ಲಿ ತಪ್ಪೇನಿದೆ? ಬಿಜೆಪಿಯವರು ಕದ್ದು ಮುಚ್ಚಿ ನಾಟಕ ಆಡುವುದರ ಬದಲಾಗಿ ಬಹಿರಂಗವಾಗಿ ನಮಗೆ ರಾಷ್ಟ್ರ ಧ್ವಜದ ಮೇಲೆ ಗೌರವವಿಲ್ಲ. ಭಗವಧ್ವಜವೇ ಬೇಕು ಎಂದು ಘೋಷಣೆ ಮಾಡಿಕೊಳ್ಳಲಿ. ಸ್ವತಂತ್ರ ಬಂದಾಗ 1947ರಲ್ಲಿ ಆರ್‍ಎಸ್‍ಎಸ್ ಮುಖವಾಣಿ ಆರ್ಗನೈಸರ್‍ನಲ್ಲಿ ತ್ರಿವರ್ಣ ಧ್ವಜ ಅಪಶಕುನ ಎಂದು ಸಂಪಾದಕೀಯ ಬರೆಯಲಾಗಿತ್ತು. +ಮಾಜಿ ಸಚಿವ ಈಶ್ವರಪ್ಪ ಅವರು ನಮಗೆ ರಾಷ್ಟ್ರ ಧ್ವಜಗಿಂತಲೂ ಭಗವಧ್ವಜವೇ ಮುಖ್ಯ ಎಂದು ಈ ಹಿಂದೆ ಹೇಳಿದ್ದರು. ಈಗಲೂ ಅದೇ ವಾದವನ್ನು ಬಹಿರಂಗವಾಗಿ ಹೇಳಿ ಕೆರಗೋಡಿನ ಧ್ವಜ ಪ್ರಕರಣದಲ್ಲಿ ಪ್ರತಿಭಟನೆ ಮಾಡಲಿ ಎಂದು ಸವಾಲು ಹಾಕಿದರು. +ನಾಳೆ ಜೆಡಿಎಸ್ ಕೋರಕಮಿಟಿ ಸಭೆ : ಲೋಕಸಭೆ-ರಾಜ್ಯಸಭೆ ಚುನಾವಣೆ ಕುರಿತ ಚರ್ಚೆ +ನಿರುದ್ಯೋಗದ ಬಗ್ಗೆ ಬಿಜೆಪಿ ಎಂದೂ ಪ್ರತಿಭಟನೆ ಮಾಡಿಲ್ಲ. ಭದ್ರ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳ ಅನ್ಯಾಯ ಪ್ರಶ್ನಿಸಿಲ್ಲ. ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿಗೆ ಸಮರ್ಪಕ ಅನುದಾನ ಇಲ್ಲ. ಇದರ ಬಗ್ಗೆ ಮಾತೇ ಆಡುವುದಿಲ್ಲ ಎಂದು ಕಿಡಿಕಾರಿದರು. +ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಮೋದಿಯವರ ಗಾರ್ಡನ್‍ನಲ್ಲಿ ಬೆಳೆಯುವುದಿಲ್ಲ. ಎಲ್ಲ ಭಾರತೀಯ ರೈತರು ಬೆಳೆಯುತ್ತಾರೆ. ಸಂಪನ್ಮೂಲಗಳು ಎಲ್ಲರಿಂದಲೂ ಕ್ರೂಢೀಕರಣವಾಗುತ್ತದೆ. ಅದೇ ರೀತಿ ಸಮಾನವಾಗಿ ಹಂಚಿಕೆಯೂ ಆಗಬೇಕು ಎಂದು ಕುಮಾರಸ್ವಾಮಿಯವರ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_247_5.txt b/eesanje/url_46_247_5.txt new file mode 100644 index 0000000000000000000000000000000000000000..198eea81eea20920dcbaacfff25d1f29fbb23e3f --- /dev/null +++ b/eesanje/url_46_247_5.txt @@ -0,0 +1,7 @@ +ಕ್ಯಾನ್ಸರ್ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಬೃಹತ್ ಜಾಗೃತಿ ಜಾಥ +ಬೆಂಗಳೂರು, ಫೆ.4- ಆರಂಭಿಕ ಹಂತದಲ್ಲಿ ಮಾರಕ ಕ್ಯಾನ್ಸರ್ ಪತ್ತೆ ಮಾಡುವುದರಿಂದ ರೋಗವನ್ನು ಗುಣಪಡಿಸಬಹುದಲ್ಲದೆ, ರೋಗಿಗಳ ಜೀವವನ್ನು ಉಳಿಸಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. +ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯಾ, ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್, ನವೋದಯ ಇನ್ ಬೆಂಗಳೂರು, ಆರೋಗ್ಯ ಇಲಾಖೆ ಸಹಯೋಗದಲ್ಲಿ 5ಕಿಲೋ ಮೀಟರ್ ವಾಕಥಾನ್‍ಗೆ ಚಾಲನೆ ನೀಡಿ ಮಾತನಾಡಿದ ಅವರು,ಬದಲಾದ ಆಹಾರ ಪದ್ದತಿ, ಒತ್ತಡದ ಜೀವನ ಮತ್ತು ಬೊಜ್ಜು, ಕಲುಷಿತ ಪರಿಸರ, ವ್ಯಾಯಾಮವಿಲ್ಲದಿರುವುದು. ಹೀಗೆ ಹಲವು ಕಾರಣದಿಂದ ಕ್ಯಾನ್ಸರ್ ರೋಗ ಬರುತ್ತದೆ ಪ್ರಪಂಚದಲ್ಲಿ ಅತ್ಯಂತ ಹಾನಿಕಾರಕವಾಗಿರುವ ಕಾಯಿಲೆಗಳಲ್ಲಿ ಕ್ಯಾನ್ಸರ್‍ರೋಗ ಒಂದಾಗಿದೆ ಎಂದರು. +ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ +ಪ್ರತಿಯೊಬ್ಬರು ಪ್ರತಿದಿನ ಒಂದು ಅವರ ಜೀವನಕ್ಕಾಗಿ ಸಮಯ ಮೀಸಲು ಇಡಬೇಕು. ಯೋಗ, ವಾಕಿಂಗ್, ವ್ಯಾಯಾಮ ಮಾಡುವುದರಿಂದ ಆರೋಗ್ಯವಂತರಾಗಿ ಇರಬಹುದು. ವಿಶ್ವ ಕ್ಯಾನ್ಸರ್ ದಿನದಂದು ಕ್ಯಾನ್ಸರ್ ಮುಕ್ತ ಸಮಾಜ, ರಾಜ್ಯ ನಮ್ಮದಾಗಲಿ ಎಂದು ಆರೋಗ್ಯ ಇಲಾಖೆ ಶ್ರಮಿಸುತ್ತಿದೆ ಎಂದು ಹೇಳಿದರು. ಸರ್ಜಿಕಲ್ ಸೊಸೈಟಿಯ ಬೆಂಗಳೂರು ಅದ್ಯಕ್ಷ ರಾಜಶೇಖರ್ ಸಿ.ಜಾಕ ಮಾತನಾಡಿ.ಆರೋಗ್ಯವಂತರಾಗಿರಲು ಪ್ರತಿಯೊಬ್ಬರು ಒಂದು ಗಂಟೆಯಾದರೂ ಗಂಟೆ ವಾಕಿಂಗ್ ಮಾಡಬೇಕು. +ಕ್ಯಾನ್ಸರ್ ಮೊದಲನೇಯ ಹಂತದಲ್ಲಿ ಪತ್ತೆ ಮಾಡಿದರೆ, ಬೇಗನೆ ಚಿಕಿತ್ಸೆ ನೀಡಿ ರೋಗಿಯ ಜೀವನ ಉಳಿಸಬಹುದು.ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚು ಕಂಡು ಬರುತ್ತಿರುವುದರಿಂದ ಸ್ತನ ಕ್ಯಾನ್ಸರ್ ಕುರಿತು ಅರಿವು ಮೂಡಿಸಲು ನಾನು ಪುಸ್ತಕ ಹೊರತಂದ್ದೀನೆ. ಕನ್ನಡ, ಮರಾಠಿ,ಗುಜರಾತ್, ಬೆಂಗಾಲಿ, ತಮಿಳು,ತೆಲುಗು 9ಭಾಷೆಯಲ್ಲಿ ಮುದ್ರಣಗೊಂಡಿದೆ. +ಆತಂಕಪಡದೆ ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಕೊಂಡು ವೈದ್ಯರ ಸಲಹೆಯಿಂದ ಕ್ಯಾನ್ಸರ್ ರೋಗ ಮುಕ್ತ ಮಾಡಬಹುದು ಎಂದು ಹೇಳಿದರು. \ No newline at end of file diff --git a/eesanje/url_46_247_6.txt b/eesanje/url_46_247_6.txt new file mode 100644 index 0000000000000000000000000000000000000000..037eecdbf9443afb8ea85a189f5b17740ff24805 --- /dev/null +++ b/eesanje/url_46_247_6.txt @@ -0,0 +1,8 @@ +ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು +ಬೆಂಗಳೂರು,ಫೆ.4- ದಕ್ಷಿಣ ಭಾರತದ ಪ್ರತ್ಯೇಕತೆಯ ಬಗ್ಗೆ ಹೇಳಿಕೆ ನೀಡಿದ್ದ ಸಂಸದ ಡಿ.ಕೆ.ಸುರೇಶ್ ಅವರ ಸದಾಶಿವನಗರದಲ್ಲಿರುವ ಮನೆಗೆ ಬಿಜೆಪಿ ಕಾರ್ಯಕರ್ತರು ನುಗ್ಗಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇಂದು ಬೆಳಗ್ಗೆ ಅರಮನೆ ಮೈದಾನದ ಕಡೆಯಿಂದ ಬಳ್ಳಾರಿ ರಸ್ತೆಯನ್ನು ಏಕಾಏಕಿ ದಾಟಿ 50ಕ್ಕೂ ಹೆಚ್ಚು ಯುವ ಕಾರ್ಯಕರ್ತರು ಡಿ.ಕೆ.ಸುರೇಶ್ ಅವರ ಮನೆಯತ್ತ ನುಗ್ಗಿದರು. +ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಪರದಾಡಬೇಕಾಯಿತು. ಡಿ.ಕೆ.ಸುರೇಶ್ ಅವರ ಮನೆಯ ಎದುರಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಇರುವುದರಿಂದ ಅಲ್ಲಿಗೆ ದಿನನಿತ್ಯ ಆಗಮಿಸುವ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸ್ ಭದ್ರತೆ ಇತ್ತು. ಹೀಗಾಗಿ ನುಗ್ಗಿ ಬರುತ್ತಿದ್ದ ಕಾರ್ಯಕರ್ತರನ್ನು ತಡೆಯಲು ಸಾಧ್ಯವಾಗಿದೆ. ಇಲ್ಲವಾಗಿದ್ದರೆ ದಿಢೀರ್ ನಡೆದ ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯೂ ಇತ್ತು. +ಬಳ್ಳಾರಿ ರಸ್ತೆ ದಾಟಿ ಬಂದ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಉಳಿದವರು ಓಡಲಾರಂಭಿಸಿದರು. ಪೊಲೀಸರು ಅವರ ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದುಕೊಂಡರು. ಆರಂಭದಲ್ಲೇ ಡಿ.ಕೆ.ಸುರೇಶ್ ಅವರ ಮನೆಯೊಳಗೆ ನುಗ್ಗಿದ ಕೆಲವರು ಧರಣಿ ನಡೆಸಿ ಜೈಶ್ರೀರಾಮ್ ಘೋಷಣೆ ಕೂಗಿದರು.ಈ ದಿಢೀರ್ ಪ್ರತಿಭಟನೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಿಸಿತು. ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಲು ಪರದಾಡಬೇಕಾಯಿತು. +ಫೆ.1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ ಬಳಿಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅದಕ್ಕೆ ಪ್ರತಿಕ್ರಿಯಿಸುವ ಸಂದರ್ಭದಲ್ಲಿ ಸಂಸದ ಡಿ.ಕೆ.ಸುರೇಶ್, ಕೇಂದ್ರದಿಂದ ನಿರಂತರವಾಗಿ ಅನ್ಯಾಯವಾಗುತ್ತಿದೆ. ಇದರಿಂದಾಗಿ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆ ಕುಸಿಯಲಿದೆ. ದಕ್ಷಿಣ ಭಾರತದ ರಾಜ್ಯಗಳು ಪ್ರತ್ಯೇಕತೆಯ ಒತ್ತಾಯ ಮಾಡುವ ಪರಿಸ್ಥಿತಿ ಬರಬಹುದೆಂದು ದೂರಿದ್ದರು. +ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ +ದಕ್ಷಿಣ ಭಾರತ ರಾಜ್ಯಗಳ ಆರ್ಥಿಕ ಸಂಪನ್ಮೂಲಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚು ಖರ್ಚು ಮಾಡಲಾಗುತ್ತಿದೆ ಎಂದು ಡಿ.ಕೆ.ಸುರೇಶ್ ಆರೋಪಿಸಿದ್ದರು. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ನಗಣ್ಯಗೊಳಿಸಿ ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿ ದೇಶಾದ್ಯಂತ ಗದ್ದಲ ಎಬ್ಬಿಸುತ್ತಿದೆ. +ಡಿ.ಕೆ.ಸುರೇಶ್ ಅವರ ನಿವಾಸದ ಎದುರು ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂಬ ಮುನ್ಸೂಚನೆ ಇದ್ದಾಗಿಯೂ ಸೂಕ್ತ ಬಂದೋಬಸ್ತ್ ಮಾಡದೆ ಇರುವ ಬಗ್ಗೆ ಆಕ್ರೋಶಗಳು ಕೇಳಿಬಂದಿವೆ. ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ರಾಜ್ಯ ಸರ್ಕಾರವು ಅದಕ್ಕೆ ಸಹಕಾರ ನೀಡುತ್ತಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_247_7.txt b/eesanje/url_46_247_7.txt new file mode 100644 index 0000000000000000000000000000000000000000..d4e0694c64c858fe2ba97e3718fc3705b230da7a --- /dev/null +++ b/eesanje/url_46_247_7.txt @@ -0,0 +1,10 @@ +ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ +ಬೆಂಗಳೂರು,ಫೆ.4-ಕರ್ನಾಟಕದ ಬೆನ್ನಲ್ಲೇ ದಕ್ಷಿಣ ಭಾರತದ ರಾಜ್ಯಗಳು ಕೂಡ ಹಂತ ಹಂತವಾಗಿ ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಪ್ರತಿಭಟನೆಗೆ ಮುಂದಾಗುತ್ತಿರುವುದರಿಂದ ಬಿಜೆಪಿಯವರಿಗೆ ಸಂಕಟ ತಡೆಯಲಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ಕರ್ನಾಟಕಕ್ಕೆ ಆಗಿರುವ ತಾರತಮ್ಯದ ವಿರುದ್ಧ ಇದೇ ಫೆ.7ರಂದು ದೆಹಲಿಯಲ್ಲಿ ರಾಜ್ಯದ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರು ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದರ ಬೆನ್ನಲ್ಲೇ ಕೇರಳ ರಾಜ್ಯದವರು ಕೂಡ ತಮ್ಮಗಾಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲಾಗದೆ ಇಕ್ಕಟ್ಟಿಗೆ ಸಿಲುಕಿದೆ ಎಂದರು. +ಕಾಂಗ್ರೆಸ್ ಸರ್ಕಾರದ ಪ್ರತಿಭಟನೆಗೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ವಿಚಾರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಬರಬಾತ ಪ್ರದೇಶಗಳ ರೈತರ ಖಾತೆಗಳಿಗೆ 2 ಸಾವಿರ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಿದೆ. +ರಾಜ್ಯದಿಂದ 27 ಸಂಸದರು ಆಯ್ಕೆಯಾಗಿದ್ದಾರೆ. ಇವರಿಗೆ ಕನಿಷ್ಟ ಕೇಂದ್ರ ಗೃಹಸಚಿವ ಅಮಿತ್ ಷಾ ನೇತೃತ್ವದ ಪ್ರಕೃತಿ ವಿಕೋಪ ಪರಿಹಾರ ನಿಧಿ ಹಂಚಿಕೆಯ ಉನ್ನತ ಅಧಿಕಾರಿ ಸಮಿತಿ ಸಭೆ ಮಾಡಿಸಿ ಹಣ ಬಿಡುಗಡೆ ಮಾಡಿಸಲು ಸಾಧ್ಯವಾಗಿಲ್ಲ. ಇಲ್ಲಿ ಯಾವ ನೈತಿಕತೆ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಬರ ಬಾತ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎಲ್ಲದಕ್ಕೂ ಅಗತ್ಯ ನೆರವನ್ನು ಒದಗಿಸಿದೆ. ಕೇಂದ್ರದ ಜವಾಬ್ದಾರಿ ಏನು ಎಂದು ಕಿಡಿಕಾರಿದರು. +ಹಿಮಪಾತದಿಂದಾಗಿ ಕಾಶ್ಮೀರದಿಂದ ವಿಮಾನ ಸಂಚಾರ ಸ್ಥಗಿತ +ಬಜೆಟ್ ಅನುದಾನ ಸೇರಿದಂತೆ ಹಲವಾರು ವಿಚಾರಗಳಲ್ಲಿ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಅನುದಾನ ಕೊಟ್ಟಿಲ್ಲ ಎಂದು ಬಿಜೆಪಿಯವರು ವಾದಿಸುತ್ತಿದ್ದಾರೆ. ಅದರ ಅರ್ಥ ಆಗಲೂ ಅನ್ಯಾಯವಾಗಿತ್ತು ಈಗಲೂ ಅನ್ಯಾಯ ಮಾಡುತ್ತಿದ್ದೇವೆ ಎಂದರ್ಥವಲ್ಲವೇ? +ಬಿಜೆಪಿಯವರು ಕೇಂದ್ರದಿಂದ ಅನ್ಯಾಯವಾಗುತ್ತಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಮನಮೋಹನ್ ಸಿಂಗ್ ಸರ್ಕಾರ ಅನ್ಯಾಯ ಮಾಡಿದ್ದೇ ಆಗಿದ್ದರೆ ಅದಕ್ಕೆ ಜನ ಪಾಠ ಕಲಿಸಿಯಾಗಿದೆ. 50 ಸಂಸದರ ಸಂಖ್ಯೆಗೆ ಸೋತಿದ್ದೇವೆ. 300 ಸ್ಥಾನ ಗೆದ್ದಿರುವ ಬಿಜೆಪಿಯವರು ರಾಜ್ಯಕ್ಕೆ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದರು.ಭದ್ರ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು ನಿಜವಲ್ಲವೇ? ಅದರಲ್ಲಿ ಈವರೆಗೂ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ? ತೆರಿಗೆ ಪಾಲಿನಲ್ಲಿ ಎಷ್ಟು ಹಣ ನೀಡಲಾಗಿದೆ ಎಂಬುದನ್ನು ಬಿಜೆಪಿಯವರೇ ಹೇಳಲಿ ಎಂದು ಸವಾಲು ಹಾಕಿದರು. +ಈ ಹಿಂದೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಯಾವ ಲಾಭವಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಿ. ಬೆಂಗಳೂರಿನ ಮೆಟ್ರೋಗೆ ಹಣ ನೀಡದಿರುವುದೇಕೆ ಎಂದು ಪ್ರಶ್ನಿಸಿದರು. ಪ್ರಧಾನಮಂತ್ರಿ ನರೇಂದ್ರಮೋದಿಯವರು ಈ ಹಿಂದೆ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರಲಿಲ್ಲವೇ? ಈಗ ಅವರಿಗೆ ಜ್ಞಾನೋದಯವಾಗಿದೆಯೇ? ಮೋದಿ ಗ್ಯಾರಂಟಿ ಎಂದು ಏಕೆ ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮ ಭರವಸೆಯ ನಕಲಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದರು. +ವಿಜಯೇಂದ್ರ ಏಳು ತಿಂಗಳಿನಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಲಾಟರಿ ಪಡೆದುಕೊಂಡಿದ್ದಾರೆ. ಅವರ ತಂದೆಯ ಪ್ರಭಾವದಿಂದಾಗಿ ಅವಕಾಶ ಗಿಟ್ಟಿಸಿರುವ ವಿಜಯೇಂದ್ರ ಹುಮ್ಮಸ್ಸಿನಲ್ಲಿ ಮಾತನಾಡುತ್ತಿದ್ದಾರೆ. ನಾನೇಕೆ ಅವರನ್ನು ಅಧೈರ್ಯಗೊಳಿಸಲಿ ಎಂದು ಹೇಳಿದರು. \ No newline at end of file diff --git a/eesanje/url_46_247_8.txt b/eesanje/url_46_247_8.txt new file mode 100644 index 0000000000000000000000000000000000000000..448e53257d13917f96305ed7aa7c9b219030732e --- /dev/null +++ b/eesanje/url_46_247_8.txt @@ -0,0 +1,7 @@ +ನಾಳೆ ಜೆಡಿಎಸ್ ಕೋರಕಮಿಟಿ ಸಭೆ : ಲೋಕಸಭೆ-ರಾಜ್ಯಸಭೆ ಚುನಾವಣೆ ಕುರಿತ ಚರ್ಚೆ +ಬೆಂಗಳೂರು, ಫೆ.4- ರಾಜ್ಯಸಭೆ, ಲೋಕಸಭೆ ಚುನಾವಣೆ ಸಿದ್ಧತೆ, ಪಕ್ಷದ ಪದಾಧಿಕಾರಿಗಳ ನೇಮಕ, ವಿಧಾನ ಮಂಡಲದ ಅಧಿವೇಶನ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಕುರಿತು ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದೆ. +ಜೆ.ಪಿ.ಭವನದಲ್ಲಿ ನಾಳೆ ಮಧ್ಯಾಹ್ನ ಕೋರ್ ಕಮಿಟಿ ಅಧ್ಯಕ್ಷರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿಈ ಸಭೆ ನಡೆಯಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಖಾಲಿ ಇರುವ ಜಿಲ್ಲಾಧ್ಯಕ್ಷರ ನೇಮಕ, ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದರೂ ಅಂತಿಮ ನಿರ್ಣಯ ಕೈಗೊಂಡಿರಲಿಲ್ಲ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದ ಎ.ಪಿ.ರಂಗನಾಥ್ ಅವರ ಗೆಲುವಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ. +ಅದೇ ರೀತಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಹಾಗೂ ಬೆಂಬಲಿಸುವ ಕುರಿತಂತೆ ಸಮಾಲೋಚನೆ ನಡೆಸಲಾಗುತ್ತದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದ್ದು, ಶಾಸಕರು ಹಾಗೂ ಮುಖಂಡರಿಗೆ ಕೆಲವು ಜವಾಬ್ದಾರಿಗಳನ್ನು ವಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. +ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ +ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿರುವುದರಿಂದ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಈಗಿನಿಂದಲೇ ಶ್ರಮ ವಹಿಸಿ ಕೆಲಸ ಮಾಡುವ ಬಗ್ಗೆ ಮಾರ್ಗದರ್ಶನ ಮಾಡಲಾಗುತ್ತದೆ. ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ಜನಪರ ಧ್ವನಿ ಎತ್ತಲು ಗಂಭೀರ ಚರ್ಚೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ. \ No newline at end of file diff --git a/eesanje/url_46_247_9.txt b/eesanje/url_46_247_9.txt new file mode 100644 index 0000000000000000000000000000000000000000..39de3627232fb7902a5ad969843cefa33b6674de --- /dev/null +++ b/eesanje/url_46_247_9.txt @@ -0,0 +1,5 @@ +ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ +ದಾವಣಗೆರೆ,ಫೆ.3- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡುವುದು ಸ್ವಾಗತಾರ್ಹ. ಆದರೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಪಾಪ, ಬೇಡ ಎಂದು ಹೇಳಿದವರ್ಯಾರು ಎಂದರು. +ತುಮಕೂರಿನ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವಂತೆ ತಾವು ಪತ್ರ ಬರೆದಿದ್ದೆವು ಎಂದು ಸ್ಮರಿಸಿಕೊಂಡರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳ ಬಿಲ್ ಪಾವತಿಸಲು ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ದೂರು ನೀಡಿದರೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು. +ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ +ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ ಅಂತಿಮವಾಗಿ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು. ಬಾಗೂರು ದೇವಸ್ಥಾನದ ಗರ್ಭಗುಡಿಗೆ ಈಶ್ವರಾನಂದ ಪುರಿ ಸ್ವಾಮೀಜಯವರ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು. \ No newline at end of file diff --git a/eesanje/url_46_248_1.txt b/eesanje/url_46_248_1.txt new file mode 100644 index 0000000000000000000000000000000000000000..87f276c9ec9c3ad19f2980ff982661b8050459a5 --- /dev/null +++ b/eesanje/url_46_248_1.txt @@ -0,0 +1,10 @@ +ಬಿಜೆಪಿಗೆ ತಿರುಗೇಟು ನೀಡಲು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು,ಫೆ.3- ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಸಂಸದ ಡಿ.ಕೆ.ಸುರೇಶ್‍ರವರ ಹೇಳಿಕೆಯನ್ನು ವಿವಾದ ಮಾಡಿ ರಾಷ್ಟ್ರಮಟ್ಟದಲ್ಲಿ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಮರ್ಮಾಘಾತ ನೀಡಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಜ್ಜುಗೊಂಡಿರುವ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಆಕ್ರೋಶಗಳನ್ನು ಹೊರಹಾಕಲಾಗಿದೆ. +ಕಾಂಗ್ರೆಸ್‍ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ವಿರುದ್ಧ ಕೆಂಡಾಮಂಡಲದ ಟೀಕೆಗಳನ್ನು ನಡೆಸಲಾಗಿದೆ. ಸಂಸ್ಥಾನಗಳನ್ನು ವಿಲೀನಗೊಳಿಸಿ, ರಾಜ್ಯಗಳನ್ನು ಸೇರಿಸಿ ಭಾರತ ಎಂಬ ಒಕ್ಕೂಟವನ್ನು ನಿರ್ಮಿಸಿದ್ದು ಕಾಂಗ್ರೆಸ್, ಪ್ರತ್ಯೇಕತೆಯನ್ನು ಕಾಪಾಡಿಕೊಂಡಿದ್ದ ಸಿಕ್ಕಿಂ ರಾಜ್ಯವನ್ನು ಭಾರತದೊಳಗೆ ಸೇರಿಸಿದ್ದು ಕಾಂಗ್ರೆಸ್, ದೇಶಕ್ಕೆ ರಾಷ್ಟ್ರ ಧ್ವಜ ಕೊಟ್ಟಿದ್ದು ಕಾಂಗ್ರೆಸ್, ಸಂವಿಧಾನವನ್ನು ಭಾರತಕ್ಕೆ ವಿಧಿಸಿಕೊಂಡಿದ್ದು ಕಾಂಗ್ರೆಸ್, ಭಾಷೆ, ಸಂಸ್ಕøತಿಗಳ ವೈವಿಧ್ಯತೆಯನ್ನು ಹೊಂದಿರುವ ರಾಜ್ಯಗಳ ಐಕ್ಯತೆಯನ್ನು ಕಾಪಾಡಿಕೊಂಡು ಬಂದಿದ್ದು ಕಾಂಗ್ರೆಸ್ ಎಂದು ತಿರುಗೇಟು ನೀಡಲಾಗಿದೆ. +ಭಾರತ ರೂಪುಗೊಳ್ಳುವಾಗ ಹುಟ್ಟಿಯೇ ಇರದ ಬಿಜೆಪಿಯಿಂದ ದೇಶ ಕಟ್ಟಿದ ಕಾಂಗ್ರೆಸ್ ಪಕ್ಷವು ದೇಶದ ಐಕ್ಯತೆಯ ಬಗ್ಗೆ ಪಾಠ ಕೇಳುವ ಅಗತ್ಯವಿಲ್ಲ ಎಂದು ವಾಗ್ದಾಳಿ ನಡೆಸಲಾಗಿದೆ. ಕಳೆದ ಹತ್ತು ವರ್ಷದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದ್ದರೂ ಕರ್ನಾಟಕದ ಯಾವೊಬ್ಬ ಬಿಜೆಪಿ ಸಂಸದರೂ ಬಾಯಿ ಬಿಡದೆ ಗುಲಾಮಗಿರಿ ಮಾಡಿಕೊಂಡಿರುವಾಗ, ಕಾಂಗ್ರೆಸ್ ಪಕ್ಷದ ಏಕೈಕ ಸಂಸದ ಡಿ.ಕೆ.ಸುರೇಶ್ ದನಿ ಎತ್ತಿದ್ದಾರೆ, ಬಿಜೆಪಿಗೆ ನಿಜಕ್ಕೂ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ಧೈರ್ಯದಿಂದ ನಿಂತು ನ್ಯಾಯ ಕೇಳಲಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ. +ಕೇಂದ್ರದ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ದೀದಿ +ಬಿಜೆಪಿಗೆ ಠಕ್ಕರ್ :ಕೇಂದ್ರದಿಂದಾಗುತ್ತಿರುವ ತಾರತಮ್ಯಗಳಿಗೆ ರಾಜ್ಯದ ಮಟ್ಟಿಗೆ ಚರ್ಚೆಗಳನ್ನು ಮಾಡುವ ಮೂಲಕ ಕಾಂಗ್ರೆಸ್ ಮೃದು ಧೋರಣೆ ಅನುಸರಿಸುತ್ತಿತ್ತು. ಸಂಸದ ಡಿ.ಕೆ.ಸುರೇಶ್ ಬಜೆಟ್‍ನಲ್ಲಿ ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ಹೊರಹಾಕುವಾಗ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಂಡು ದೇಶಾದ್ಯಂತ ಕಾಂಗ್ರೆಸ್‍ಗೆ ಮುಜುಗರ ಉಂಟುಮಾಡಲು ಮುಂದಾಗಿದೆ. ಇದಕ್ಕೆ ಅಷ್ಟೇ ನಿರ್ದಾಕ್ಷಿಣ್ಯವಾಗಿ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ರಣತಂತ್ರ ರೂಪಿಸಿದೆ. +ದೆಹಲಿಯಲ್ಲಿ ಫೆ.7 ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಮತ್ತು ರಾಜ್ಯಸಭೆಯ ಸದಸ್ಯರು ಒಟ್ಟಾಗಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಮುಜುಗರಕ್ಕೀಡು ಮಾಡಲು ಪ್ರತಿತಂತ್ರ ರೂಪಿಸಲಾಗಿದೆ. ಡಿ.ಕೆ.ಸುರೇಶ್‍ರ ಹೇಳಿಕೆಯನ್ನು ಬಿಜೆಪಿ ನಾಯಕರು ನಿನ್ನೆ ಸಂಸತ್‍ನಲ್ಲಿ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷ ದೇಶ ವಿಭಜಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. +ಈ ಮೂಲಕ ವಿವಿಧ ರಾಜ್ಯಗಳಿಗೆ ಬಜೆಟ್‍ನಲ್ಲಾಗಿರುವ ಅನ್ಯಾಯವನ್ನು ಮರೆಮಾಚುವ ಪ್ರಯತ್ನಗಳಾಗಿತ್ತು. ಹಲವಾರು ಬಾರಿ ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಹಾಗೂ ಇತರ ವಿಚಾರಗಳಲ್ಲಿ ಸಾಕಷ್ಟು ತಾರತಮ್ಯಗಳಾಗಿತ್ತು. ಕಳೆದ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನವನ್ನೇ ನೀಡದೇ ಮರೆಮಾಚಲಾಗಿದೆ. ಮೇಕೆದಾಟು, ಮಹಾದಾಯಿ ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮತಿ ನೀಡದೇ ಸತಾಯಿಸಲಾಗುತ್ತಿದೆ. +ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ +ಬರ ಪರಿಹಾರಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿ 4 ತಿಂಗಳು ಕಳೆದರೂ ರಾಷ್ಟ್ರಮಟ್ಟದಲ್ಲಿ ಉದ್ದೇಶಪೂರ್ವಕವಾಗಿ ಸಭೆಯನ್ನೇ ನಡೆಸದೆ ಜಾರಿಕೊಳ್ಳುವ ಪ್ರಯತ್ನವೂ ನಡೆದಿದೆ. ಈ ಎಲ್ಲಾ ಗಂಭೀರ ವಿಚಾರಗಳನ್ನೂ ಮರೆಮಾಚಿ ಡಿ.ಕೆ.ಸುರೇಶ್‍ರ ಹೇಳಿಕೆಯನ್ನೇ ವಿವಾದ ಮಾಡಲು ಯತ್ನಿಸಿದ ಬಿಜೆಪಿಗೆ ಕಾಂಗ್ರೆಸಿಗರು ದೆಹಲಿ ಪ್ರತಿಪ್ರಭನೆಯ ಮಾಸ್ಟರ್‍ಸ್ಟ್ರೋಕ್ ನೀಡಿದ್ದಾರೆ. ಇದು ಮುಂದಿನ ವಾರಪೂರ್ತಿ ರಾಜಕೀಯ ಆರೋಪ-ಪ್ರತ್ಯಾರೋಪಗಳು, ಹಗ್ಗ-ಜಗ್ಗಾಟಗಳಿಗೆ ಕಾರಣವಾಗಲಿದ್ದು, ಲೋಕಸಭೆ ಚುನಾವಣೆಗೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಕುತೂಹಲ ಹೆಚ್ಚಿಸಿದೆ. \ No newline at end of file diff --git a/eesanje/url_46_248_10.txt b/eesanje/url_46_248_10.txt new file mode 100644 index 0000000000000000000000000000000000000000..bd8a7f6692a873a3830f08868cba8719c3972220 --- /dev/null +++ b/eesanje/url_46_248_10.txt @@ -0,0 +1,11 @@ +ರಂಗೇರಿದ ರಾಜ್ಯಸಭೆ : ಜೆಡಿಎಸ್-ಬಿಜೆಪಿ ಮೈತ್ರಿಯ 5ನೇ ಅಭ್ಯರ್ಥಿ ಕಣಕ್ಕೆ +ಬೆಂಗಳೂರು,ಫೆ.2- ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‍ಗೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ.ಫೆ.27ರಂದು ನಡೆಯಲಿರುವ ರಾಜ್ಯಸಭೆಯ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಈಗಿನ ಬಲಾಬಲದ ಪ್ರಕಾರ ಆಡಳತಾರೂಢ ಕಾಂಗ್ರೆಸ್‍ನಿಂದ ಮೂವರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿ ಸುಲಭವಾಗಿ ಗೆಲ್ಲಲಿದ್ದಾರೆ. +ಕಾಂಗ್ರೆಸ್ ಶಾಸಕರ ಅಸಮಾಧಾನವನ್ನು ಬಂಡವಾಳ ಮಾಡಿಕೊಳ್ಳಲು ಮುಂದಾಗಿರುವ ದೋಸ್ತಿಗಳು 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಕಾವು ಹೆಚ್ಚಿಸಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ.ಈಗಾಗಲೇ ಬಿಜೆಪಿ ನಾಯಕರು ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಉಭಯ ಪಕ್ಷಗಳಿಂದ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರನ್ನೇ ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಬಗ್ಗೆ ಎರಡು ಪಕ್ಷಗಳಲ್ಲಿ ಚಿಂತನೆ ನಡೆದಿದೆ. +ಈ ಹಿಂದೆ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಮಾತುಕತೆ ನಡೆಸಲಾಗಿತ್ತು. ವೀರಶೈವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರನ್ನೇ ಅಭ್ಯರ್ಥಿ ಮಾಡಿದರೆ ಅದೇ ಸಮುದಾಯದ ಕೆಲವು ಶಾಸಕರಿಂದ ಅಡ್ಡ ಮತದಾನ ನಡೆಸಬಹುದೆಂಬ ಲೆಕ್ಕಚಾರ ಪಕ್ಷದ ವಲಯದಲ್ಲಿತ್ತು. ಆದರೆ ಕೊನೆಕ್ಷಣದಲ್ಲಿ ಸೋಮಣ್ಣ ನಾನು ಹರಕೆ ಕುರಿಯಾಗಲಾರೆ ಎಂದು ಹಿಂದೆ ಸರಿದ ಪರಿಣಾಮ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡಲು ತೀರ್ಮಾನಿಸಲಾಗಿದೆ ಎಂದು ಗೊತ್ತಾಗಿದೆ. + : ನಟಿ ಪೂನಂ ಪಾಂಡೆ ಇನ್ನಿಲ್ಲ..! +5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವಲಯದಲ್ಲೂ ಒಪ್ಪಿಗೆ ಸಿಕ್ಕಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಧಾಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಹುತೇಕರು ಕುಮಾರಸ್ವಾಮಿಯವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ. +ರಾಜ್ಯಸಭೆ ಚುನಾವಣೆ ಲೆಕ್ಕಾಚಾರ:ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯೆ 224. ಓರ್ವ ಆಂಗ್ಲೋ ಇಂಡಿಯನ್ ಅಭ್ಯರ್ಥಿ ನಾಮಕರಣಗೊಂಡರೂ ಅವರಿಗೆ ಮತದಾನದ ಹಕ್ಕು ಇರುವುದಿಲ್ಲ. ಪ್ರಸ್ತುತ ವಿಧಾನಸಭೆಯ ಬಲಾಬಲದಲ್ಲಿ ಆಡಳಿತಾರೂಢ ಕಾಂಗ್ರೆಸ್ 135 ಜೊತೆಗೆ ಇಬ್ಬರು ಪಕ್ಷೇತರ ಶಾಸಕರ ಬೆಂಬಲವೂ ಇದೆ. +ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಕೆ.ಪಿ.ಪುಟ್ಟಸ್ವಾಮಿ ಬಾಹ್ಯ ಬೆಂಬಲ ನೀಡಿದ್ದಾರೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಶಾಸಕರನ್ನು ಹೊಂದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿ ಗೆಲ್ಲಬೇಕಾದರೆ 45 ಮತಗಳನ್ನು ಪಡೆಯಬೇಕು. ಕಾಂಗ್ರೆಸ್ ಮೂರು ಸ್ಥಾನವನ್ನು ಸುಲಭವಾಗಿ ಗೆಲ್ಲಲಿದೆ. +ಬಿಜೆಪಿ ಅಭ್ಯರ್ಥಿ 45 ಮತಗಳನ್ನು ಪಡೆದರೆ ಹೆಚ್ಚುವರಿಯಾಗಿ ಉಳಿಯುವ 21 ಮತಗಳು ಹಾಗೂ ಜೆಡಿಎಸ್‍ನ 19 ಮತಗಳು ಸೇರಿದರೆ 40 ಮತಗಳಾಗುತ್ತವೆ. ಜೊತೆಗೆ ಲತಾ ಮಲ್ಲಿಕಾರ್ಜುನ್ ಮತ್ತು ಪುಟ್ಟಸ್ವಾಮಿ ಮನವೊಲಿಸಿದರೆ 42 ಮತಗಳನ್ನು ಮೈತ್ರಿ ಅಭ್ಯರ್ಥಿ ಪಡೆಯುತ್ತಾರೆ. ಇದೇ ಸಂದರ್ಭದಲ್ಲಿ ಕೆಲವು ಅಸಮಾಧಾನಿತ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದರೆ ಫಲಿತಾಂಶದಲ್ಲಿ ಏನು ಬೇಕಾದರೂ ಆಗಬಹುದು. +ಸಂಸತ್ತಿನಲ್ಲಿ ಸೊರೆನ್ ಬಂಧನ ವಿಷಯ ಪ್ರಸ್ತಾಪಿಸಲು ಇಂಡಿಯಾ ಒಕ್ಕೂಟ ನಿರ್ಧಾರ +ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ. ಆದರೆ ಮತದಾನದ ವೇಳೆ ಆಯಾ ಪಕ್ಷದ ಚುನಾವಣಾ ಏಜೆಂಟರಿಗೆ ಕಡ್ಡಾಯವಾಗಿ ತೋರಿಸಿ ಮತ ಚಲಾಯಿಸಬೇಕು. ಏಜೆಂಟರಿಗೆ ತೋರಿಸದೆ ಮತ ಹಾಕಿದರೆ ಅದನ್ನು ಅಸಿಂಧುಗೊಳಿಸುವಂತೆ ಏಜೆಂಟರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಬಹುದು. ಈ ಹಿಂದೆ ಜೆಡಿಎಸ್‍ನ ಏಳು ಶಾಸಕರು ಅಡ್ಡ ಮತದಾನ ನಡೆಸುವ ನಿದರ್ಶನವೂ ಇದೆ. ಈಗ ಇದು ಪುನರಾವರ್ತನೆಯಾಗಲಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_248_11.txt b/eesanje/url_46_248_11.txt new file mode 100644 index 0000000000000000000000000000000000000000..b558467839bd728aa976a0420dafedc8670ab16e --- /dev/null +++ b/eesanje/url_46_248_11.txt @@ -0,0 +1,5 @@ +ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ +ಬೆಂಗಳೂರು, ಫೆ.1- ಕೇಂದ್ರ ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆ ಯಾಗಿದ್ದಾರೆ. ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆಯೇನು? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಭರವಸೆ ಕೊಟ್ಟಂತೆ ಉದ್ಯೋಗ ಸೃಷ್ಟಿಯಾಗಿದೆಯೇ? ಹಾಗಾದರೆ, 10 ಸಾವಿರ ಜನ ಇಸ್ರೇಲ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ ಏಕೆ? ರೈತರ ಆದಾಯ ದುಪ್ಪಟ್ಟು ಮಾಡಿದ್ದಾರೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. +ವಿಶ್ವದ ಬಡತನ ರೇಖೆಯಲ್ಲಿ ರಾಷ್ಟ್ರ 111 ಸ್ಥಾನದಲ್ಲಿದ್ದರೆ, ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98 ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದು ಅವರು ಹೇಳಿದರು. ಕನ್ನಡಿಗರಿಗೆ ಅನ್ಯಾಯ ವಾಗುತ್ತಲೇ ಇದೆ. ಜಿಎಸ್‍ಟಿ ಮರುಪಾವತಿಯಲ್ಲಿ ಅನ್ಯಾಯ ವಾಗಿದೆ. ಕಲಬುರಗಿಯಲ್ಲಿ ಕೈಗಾರಿಕೆ ಸ್ಥಾಪಿಸುವುದಾಗಿ ನೀಡಿದ ಭರವಸೆ ಈಡೇರಿದೆಯೇ? ಪ್ರಧಾನಿ ನರೇಂದ್ರ ಮೋದಿ ಗ್ಯಾರೆಂಟಿಯಲ್ಲಿ ಶೇ.50ರಷ್ಟು ಕನ್ನಡಿಗರ ಶ್ರಮವಿದೆ. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಜಲಜೀವನ್ ಮಿಷನ್‍ನಲ್ಲಿ ಶೇ.50 ರಷ್ಟು ಬೆವರಿದೆ. ದೊಡ್ಡ ದೊಡ್ಡ ಮಾತು ಹೇಳುವುದಷ್ಟೇ ಹೊರತು ಬಡವರ ಅನುಕೂಲಕ್ಕಾಗಿ ಯಾವ ಯೋಜನೆ ತಂದಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. \ No newline at end of file diff --git a/eesanje/url_46_248_12.txt b/eesanje/url_46_248_12.txt new file mode 100644 index 0000000000000000000000000000000000000000..6cb60b158ffd201d7b6564481a5a0b59c5f9d350 --- /dev/null +++ b/eesanje/url_46_248_12.txt @@ -0,0 +1,8 @@ +ಗಿಮಿಕ್ ಇಲ್ಲದ ಕೇಂದ್ರ ಬಜೆಟ್ : ಅಶೋಕ್ +ಬೆಂಗಳೂರು, ಫೆ.1- ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಸರ್ಕಾರದ ಬಜೆಟ್ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಹಾಯವಾಗಲಿದ್ದು, ಯಾವುದೇ ಗಿಮಿಕ್ ಇಲ್ಲದ ಮುಂದಿನ ಜನಾಂಗಕ್ಕೆ ಉಪಯೋಗವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಮನೆ ಕೊಡುವುದು ಒಳ್ಳೆಯ ಕೆಲಸ. +ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಗೆ ಪೂರಕವಾದ ಬಜೆಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದರೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ. ಯಾವುದೇ ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿಲ್ಲ. ಬಡವರನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ. +7 ಲಕ್ಷ ರೂ.ವರೆಗೂ ಆದಾಯ ತೆರಿಗೆ ಪಾವತಿ ಇಲ್ಲ. ಆಶಾ ಕಾರ್ಯಕರ್ತೆಯರಿಗೆ ಉಚಿತ ಆಯುಷ್ಮಾನ್ ಯೋಜನೆ ಉಪಯೋಗವಾಗಲಿದೆ. ಮೈಕ್ರೋ ಫುಡ್ ಪ್ರೋಸೆಸಿಂಗ್‍ಗೆ ಸಹಾಯ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಹಾಗೂ ಎಲ್ಲಾ ಬೋಗಿಗಳು ವಂದೇ ಭಾರತ್ ಮಾದರಿಯ ರೈಲು ಬೋಗಿಗಳು, ಹೊಸ ವಿಮಾನ ನಿರ್ಮಾಣಕ್ಕೆ ಹಣಕಾಸಿನ ಸೌಲಭ್ಯ ಒದಗಿಸಲಾಗಿದ್ದು, ಪ್ರವಾಸೋದ್ಯಮಕ್ಕೆ ವಿಶೇಷ ಅವಕಾಶ ಹಾಗೂ 1000 ವಿಮಾನ ಖರೀದಿಗೂ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +2047ರ ವೇಳೆಗೆ ಭಾರತ ನಂಬರ್ ಒನ್ ಆಗಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿದ ಬ್ರಿಟಿಷರನ್ನು ಹಿಂದಿಕ್ಕಿದ್ದೇವೆ. ಮುಂದೆ ನಾವು ನಂಬರ್ ಒನ್ ಆಗುತ್ತೇವೆ. ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯಪಾಲರು ಕರ್ನಾಟಕ ಭಾಷಾ ತಿದ್ದುಪಡಿ ವಿಧೇಯಕ -2024 ಅನ್ನು ವಾಪಸ್ ಕಳುಹಿಸಿದ್ದಾರೆ. ಆದರೆ, ತಿರಸ್ಕರಿಸಿದ್ದಾರೆ ಎಂದು ಈ ವಿಚಾರದಲ್ಲಿ ರಾಜಭವನವನ್ನು ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ಸಂವಿಧಾನದಲ್ಲಿ ಇದಕ್ಕೆ ಅವಕಾಶವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. +ಮೇಕೆದಾಟು ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಮ್ಮ ಸರ್ಕಾರ ಇದ್ದಾಗ ಪಾದಯಾತ್ರೆ ಮಾಡಿದ್ದರು. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಬೇಡ. ಇಲ್ಲಿರುವ ಬ್ರದರ್, ಪಕ್ಕದ ತಮಿಳುನಾಡಿನ ಬ್ರದರ್ ಜತೆ ಮಾತುಕತೆ ಮಾಡಬೇಕು. ತಮಿಳುನಾಡು ಮೇಕೆದಾಟು ಯೋಜನೆಗೆ ಕಲ್ಲು ಹಾಕಿದ್ದಾರೆ. ಈಗ ತಮಿಳನುನಾಡಿನೊಂದಿಗೆ ಮಾತನಾಡಿ ಆಕ್ಷೇಪ ಮಾಡುವುದನ್ನು ನಿಲ್ಲಿಸಲಿ ಎಂದರು. +ಕೇಂದ್ರ ಸರ್ಕಾರದ ಮೇಲೆ ಈ ಯೋಜನೆಗೆ ನಾವು ಒತ್ತಡ ಹಾಕುತ್ತೇವೆ. ಮೊದಲು ಕೃಷ್ಣೆಯ ಕಣ್ಣೀರು ಒರೆಸಲು ನಿಮ್ಮ ಬಜೆಟ್‍ನಲ್ಲಿ ಹಣ ಮೀಸಲಿಡಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ ಅವರು, ಬಳಿಕ ನಾವು ನಿಮ್ಮ ಜೊತೆಗೆ ಕೇಂದ್ರ ಸರ್ಕಾರದ ಬಳಿ ಬರುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_248_2.txt b/eesanje/url_46_248_2.txt new file mode 100644 index 0000000000000000000000000000000000000000..1563de018cf1a264bebba91dc5fd0f6e8e7ead0d --- /dev/null +++ b/eesanje/url_46_248_2.txt @@ -0,0 +1,8 @@ +ಹೊಟ್ಟೆಪಾಡಿನ ವಿಚಾರಗಳನ್ನು ಚರ್ಚೆ ಮಾಡಲಿ : ಡಿಕೆಶಿ ತಿರುಗೇಟು +ಕಲ್ಬುರ್ಗಿ,ಫೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ ಕುಂಕುಮ ಇಡಲಿಲ್ಲ, ಮಂಗಳಾರತಿ ತೆಗೆದುಕೊಂಡರು… ಇಂತಹ ವಿಚಾರಗಳನ್ನು ಬಿಟ್ಟು ಹೊಟ್ಟೆಪಾಡಿನ ವಿಚಾರಗಳನ್ನು ಚರ್ಚೆ ಮಾಡಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. +ಕಲ್ಬುರ್ಗಿಯಲ್ಲಿಂದು ಜಿಲ್ಲಾ ಪ್ರವಾಸದಲ್ಲಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಿಕೊಳ್ಳುವುದಿಲ್ಲ ಎಂಬುದು ಅಸತ್ಯವಾದ ಮಾತು. ಹೆಂಗಸರಂತೆ ಹಣೆಗೆ ಅಗಲದ ಬೊಟ್ಟು ಇಟ್ಟುಕೊಳ್ಳುವುದಿಲ್ಲ. ಸರಳವಾಗಿ ಅಗತ್ಯವಾದ ಸಂದರ್ಭದಲ್ಲಿ ಕುಂಕುಮ ಹಚ್ಚಿಕೊಳ್ಳುತ್ತಾರೆ ಎಂದರು. +ಕೆಲವರಿಗೆ ನಾನಾ ರೀತಿಯ ಅಲರ್ಜಿಗಳಿರುತ್ತವೆ. ನನಗೆ ಸುಗಂಧರಾಜ ಹೂವಿನ ಅಲರ್ಜಿಯಿದೆ. ಹೀಗಾಗಿ ಆ ರೀತಿಯ ಹೂವಿನ ಹಾರವನ್ನು ಹಾಕಬೇಡಿ ಎಂದು ಎಲ್ಲರಿಗೂ ಪತ್ರವನ್ನೇ ಬರೆದಿದ್ದೇನೆ. ವೈಯಕ್ತಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಚರ್ಚಿಸುವ ಬದಲಾಗಿ ಜನರ ಹೊಟ್ಟೆಪಾಡಿನ ವಿಚಾರವಾಗಿ ಮಾತನಾಡಬೇಕು ಎಂದು ಹೇಳಿದರು. +ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು +ಚಿತ್ರದುರ್ಗದ ಮಠಾೀಧಿಶರೊಬ್ಬರು ತಮ್ಮ ವಿರುದ್ಧವಾಗಿ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಆ ರೀತಿಯ ಆಚರಣೆಗಳಿಲ್ಲ. ಎಲ್ಲಾ ಧರ್ಮೀಯರಿಗೂ ದೇವಸ್ಥಾನಗಳಿಗೆ ಪ್ರವೇಶವಿದೆ. ನಾವೆಲ್ಲಾ ಗೌರವ, ಮಾನವೀಯತೆಯಿಂದ ಬದುಕುತ್ತಿದ್ದೇವೆ. ಆದಾಗ್ಯೂ ಶ್ರೀಗಳ ಹೇಳಿಕೆಯ ಬಗ್ಗೆ ಮುಜರಾಯಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು. +ಕೇಂದ್ರದಿಂದ ರಾಜ್ಯಕ್ಕೆ ಬಜೆಟ್ ಹಾಗೂ ಇತರ ಆರ್ಥಿಕ ತಾರತಮ್ಯಗಳ ಕುರಿತಂತೆ ಇದೇ ಫೆ.7 ರಂದು ದೆಹಲಿಯಲ್ಲಿ ರಾಜ್ಯದ ಶಾಸಕರು, ಸಚಿವರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. +ಬಿಜೆಪಿಯವರು ರಾಜ್ಯದಲ್ಲಿ ಪ್ರತಿಭಟನೆ ಮಾಡುವ ಬದಲಾಗಿ ಕೇಂದ್ರದಿಂದ ಅನುದಾನ ತರುವ ವಿಚಾರದಲ್ಲಿ ಎಲ್ಲಿ ವಿಫಲವಾಗಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾನ, ಮರ್ಯಾದೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು. \ No newline at end of file diff --git a/eesanje/url_46_248_3.txt b/eesanje/url_46_248_3.txt new file mode 100644 index 0000000000000000000000000000000000000000..9ee8e30864f85cfa4080c9334fb8b24f30069c75 --- /dev/null +++ b/eesanje/url_46_248_3.txt @@ -0,0 +1,9 @@ +ಬಿಜೆಪಿ ನಾಯಕರ ಕುರಿತು ಪರಮೇಶ್ವರ್ ಲೇವಡಿ +ಬೆಂಗಳೂರು,ಫೆ.3- ಬರಬಾಧಿತ ತಾಲೂಕುಗಳಿಗೆ ಆರ್ಥಿಕ ನೆರವು ನೀಡದೇ ಇರುವ ಕೇಂದ್ರಸರ್ಕಾರದ ವಿರುದ್ಧ ಧ್ವನಿ ಎತ್ತದೇ ಇರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರೆ ಇದ್ಯಾವ ನೈತಿಕತೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಬಿಡುಗಡೆ ಮಾಡಿಸಬೇಕಾದವರೆ ಪ್ರತಿಭಟನೆ ನಡೆಸುತ್ತಾರೆ ಎಂದರೆ ಇದನ್ನು ಏನೆಂದು ಹೇಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಈಗಾಗಲೇ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಮುಖ್ಯಮಂತ್ರಿಯವರು ಪ್ರಧಾನಮಂತ್ರಿ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 14 ಕ್ಕೂ ಹೆಚ್ಚು ಬಾರಿ ಪತ್ರ ಬರೆದಿದ್ದಾರೆ. +ನಮ್ಮ ಸಂಪುಟದ ಹಲವು ಸಚಿವರು ಹಲವು ಬಾರಿ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಬಹಳಷ್ಟು ವೇಳೆ ಕೇಂದ್ರ ಸಚಿವರು ರಾಜ್ಯಸಚಿವರ ಭೇಟಿಗೆ ಸಮಯವನ್ನೇ ನೀಡದೇ ಸತಾಯಿಸಿರುವ ಉದಾಹರಣೆಗಳಿವೆ. ಪರಿಸ್ಥಿತಿ ಹೀಗಿರುವಾಗ ನಮಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡುವುದನ್ನು ಹೊರತುಪಡಿಸಿ ನಮಗೆ ಬೇರೆ ಯಾವ ಆಯ್ಕೆಗಳಿವೆ ಎಂದು ಪ್ರಶ್ನಿಸಿದ್ದಾರೆ. +ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಕೇಂದ್ರದ ನೆರವು ಕಾಯದೆ ಹಣ ಬಿಡುಗಡೆ ಮಾಡುತ್ತಿದ್ದುದಾಗಿ ಆರ್.ಅಶೋಕ್ ಸೇರಿದಂತೆ ಅನೇಕ ನಾಯಕರು ಹೇಳಿಕೊಂಡಿದ್ದಾರೆ. ನಾವೂ ಕೂಡ ಈಗಾಗಲೇ ಮೊದಲ ಕಂತಿನ 2 ಸಾವಿರ ರೂ.ಗಳನ್ನು ರೈತರಿಗೆ ಬಿಡುಗಡೆ ಮಾಡಿದ್ದೇವೆ. ಇದಕ್ಕಾಗಿ 650 ಕೋಟಿ ರೂ.ಗಳು ಖರ್ಚಾಗಿದೆ. ಜೊತೆಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗೆ 540 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಈಗಲಾದರೂ ಕೇಂದ್ರಸರ್ಕಾರ ಹಣ ನೀಡಬೇಕಲ್ಲವೇ ಎಂದು ಹೇಳಿದರು. +ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ +ರಾಜ್ಯದ 223 ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇದಕ್ಕಾಗಿ ವಿಶೇಷ ಅನುದಾನ ನೀಡಬೇಕಿತ್ತು. ಆದರೆ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ. ಇನ್ನು ಎನ್‍ಡಿಆರ್‍ಎಫ್ ಪ್ರತಿ ವರ್ಷ ಯಾಂತ್ರಿಕವಾಗಿ ಬಿಡುಗಡೆಯಾಗುವ ಅನುದಾನವೂ ಇಲ್ಲ. ತೆರಿಗೆ ಸಂಗ್ರಹದಲ್ಲಿ ಎರಡನೇ ಅತೀ ದೊಡ್ಡ ರಾಜ್ಯವಾಗಿರುವ ಕರ್ನಾಟಕಕ್ಕೆ ಕೇಂದ್ರದಿಂದ ದೊರೆಯುವ ಅನುದಾನದಲ್ಲೂ ಕಡಿತವಾಗಿದೆ. ಇವುಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿಯವರೇ ಪ್ರತಿಭಟನೆ ಮಾಡುತ್ತೇವೆ ಎಂದರೆ ಇದಕ್ಕೆ ಏನು ಹೇಳಬೇಕು ಎಂದರು. +ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದರೆ ರೈತರಿಗೆ 2 ಸಾವಿರ ರೂ. ನೀಡುತ್ತಿರಲಿಲ್ಲ, ಬರ ನಿರ್ವಹಣೆಗೆ ಹಣ ಒದಗಿಸುತ್ತಿರಲಿಲ್ಲ. ರಾಜಕೀಯವಾಗಿ ಹೇಳಿಕೆಗಳನ್ನು ನೀಡಿ ಬಿಜೆಪಿಯವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಶೀಘ್ರವೇ ಪ್ರಕಟಿಸಲಾಗುವುದು. ಈಗಾಗಲೇ ಹಲವು ಸುತ್ತಿನ ಸಮಾಲೋಚನೆಗಳಾಗಿವೆ. ಫೆ.7 ರಂದು ದೆಹಲಿಗೆ ತೆರಳಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಿದರು. +ಚಿತ್ರದುರ್ಗದ ಬಾಗೂರಿನ ಮುಜರಾಯಿ ದೇವಸ್ಥಾನದಲ್ಲಿ ಕನಕಗುರು ಪೀಠದ ಸ್ವಾಮೀಜಿಗಳಿಗೆ ತಾರತಮ್ಯ ಮಾಡಿದ ಬಗ್ಗೆ ಸಂಬಂಧಪಟ್ಟವರೇ ಕ್ರಮ ಕೈಗೊಳ್ಳುತ್ತಾರೆ. ಇದು ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವುದಿಲ್ಲ. ಒಂದು ವೇಳೆ ಪರಿಸ್ಥಿತಿ ಮುಂದುವರೆದು ಬೇರೆ ಹಂತಕ್ಕೆ ತಲುಪಿದರೆ ಸರ್ಕಾರ ಮಧ್ಯಪ್ರವೇಶ ಮಾಡಬೇಕಾಗುತ್ತದೆ. ಆಗ ಪೊಲೀಸರು ಸಾಮಾಜಿಕ ಸಮಸ್ಯೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳುತ್ತಾರೆ. ಸದ್ಯಕ್ಕೆ ಈ ವಿಷಯದಲ್ಲಿ ಪೊಲೀಸರ ಪಾತ್ರ ಇಲ್ಲ ಎಂದರು. \ No newline at end of file diff --git a/eesanje/url_46_248_4.txt b/eesanje/url_46_248_4.txt new file mode 100644 index 0000000000000000000000000000000000000000..45f1d9f71f87f2314ad0e841e1e875e247b69049 --- /dev/null +++ b/eesanje/url_46_248_4.txt @@ -0,0 +1,11 @@ +ರಾಜ್ಯಕ್ಕಾದ ಅನ್ಯಾಯ ಮರೆಮಾಚಲು ಅನಗತ್ಯ ವಿವಾದ : ಡಿ.ಕೆ.ಸುರೇಶ್ ಕಿಡಿ +ನವದೆಹಲಿ,ಫೆ.2- ಕರ್ನಾಟಕದ ಅಭಿವೃದ್ಧಿ ವೇಗವನ್ನು ತಡೆಯುವ ಹುನ್ನಾರದಿಂದ ರಾಜ್ಯದಿಂದ ಸಂಗ್ರಹವಾಗುವ ಸಂಪನ್ಮೂಲವನ್ನು ಉತ್ತರ ಭಾರತದ ಹಿಂದಿ ಭಾಷಿಗ ರಾಜ್ಯಗಳಿಗೆ ಹಂಚಿಕೆ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಬಿಜೆಪಿ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಇಡೀ ರಾಷ್ಟ್ರದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವಲ್ಲಿ ಎರಡನೇ ರಾಜ್ಯ. ಕೇಂದ್ರದ ಸಂಪನ್ಮೂಲದಲ್ಲಿ ಸಿಂಹಪಾಲು ಕರ್ನಾಟಕದ್ದಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಪದೇಪದೇ ಅನ್ಯಾಯವಾಗುತ್ತಲೇ ಇದೆ. ತೆರಿಗೆ ಪಾಲಿನಲ್ಲೂ ಸರಿಯಾದ ಹಂಚಿಕೆಯಾಗುತ್ತಿಲ್ಲ. ಉತ್ತರಭಾರತದ ಹಾಗೂ ಅವರಿಗೆ ಬೇಕಾದ ರಾಜ್ಯಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಜನ ಒಕ್ಕೂಟ ವ್ಯವಸ್ಥೆಯ ಬಗ್ಗೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಆ ಭಾವನೆಯನ್ನಷ್ಟೇ ನಾನು ಹೇಳಿದ್ದೇನೆ ಎಂದಿದ್ದಾರೆ. +ನಾನು ಭಾರತೀಯ. ಅದರಲ್ಲೂ ಅಪ್ಪಟ ಕನ್ನಡಿಗ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್‍ನಿಂದ ಬೆಳೆದು ಬಂದವನು. ದೇಶಭಕ್ತಿ ಅಥವಾ ದೇಶದ ಐಕ್ಯತೆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿತುಕೊಳ್ಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು. +ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ +ಬಿಜೆಪಿಯವರು ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಲಾಗಿದೆ ಎಂಬುದನ್ನು ಚರ್ಚಿಸಲು ಮುಖವಿಲ್ಲದೆ ನನ್ನ ಹೇಳಿಕೆಯನ್ನು ತಿರುಚಿ ವೈಭವೀಕರಿಸಲಾಗುತ್ತಿದೆ. ಇದರ ಹಿಂದೆ ರಾಜ್ಯಕ್ಕಾಗಿರುವ ಅನ್ಯಾಯದ ವಿರುದ್ಧ ಯಾರೂ ಧ್ವನಿಯೆತ್ತ ಬಾರದು ಎಂಬ ಷಡ್ಯಂತರವಿದೆ. +ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಇದೆ. ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸಿದ ಸಂಪನ್ಮೂಲವನ್ನು ಸಮರ್ಥವಾಗಿ ಮರುಹಂಚಿಕೆ ಮಾಡಬೇಕಿತ್ತು. ಅದರ ಬಗ್ಗೆ ಬಿಜೆಪಿ ನಾಯಕರು ಉಸಿರನ್ನೇ ಬಿಡುವುದಿಲ್ಲ ಎಂದು ಆಕ್ಷೇಪಿಸಿದರು. +ದಕ್ಷಿಣ ಭಾರತದ ಕೇರಳ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳು ಆರ್ಥಿಕತೆ ಹಾಗೂ ಜನಸಂಖ್ಯೆ ನಿಯಂತ್ರಣದಲ್ಲಿ ಶಿಸ್ತು ಪಾಲನೆ ಮಾಡಿಕೊಂಡು ಬರುತ್ತಿದೆ. ಉತ್ತರ ಭಾರತದಲ್ಲಿ ಬೇಕಾಬಿಟ್ಟಿಯಾಗಿ ದುರ್ಬಳಕೆಗಳಾಗುತ್ತಿವೆ. ಆದರೆ ದಕ್ಷಿಣ ಭಾರತದಿಂದ ಸಂಗ್ರಹಿಸಿದ ಸಂಪನ್ಮೂಲಗಳನ್ನು ಈ ರಾಜ್ಯಗಳಿಗೆ ಹಂಚಿಕೆ ಮಾಡುವ ಮೂಲಕ ನಿರಂತರವಾಗಿ ದ್ರೋಹವೆಸಗಲಾಗುತ್ತಿದೆ ಎಂದರು. +ಜನಸಂಖ್ಯೆ ಆಧಾರದ ಮೇಲೆ ಹಣ ಹಂಚಿಕೆ ಮಾಡುವ ವೇಳೆ 16 ನೇ ಹಣಕಾಸು ಆಯೋಗ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಬೇಕು. ಕರ್ನಾಟಕ ನ್ಯಾಯೋಚಿತವಾದ ಪಾಲು ಪಡೆಯಲು ಹೋರಾಟ ಮಾಡಲೇಬೇಕಿದೆ. ಈ ಹಿನ್ನೆಲೆಯಲ್ಲಿ ತಾವು ಹೇಳಿಕೆ ನೀಡಿದ್ದು, ಬಿಜೆಪಿಯವರು ಅದನ್ನು ವಿವಾದ ಮಾಡುವ ಮೂಲಕ ವಿಷಯಾಂತರಿಸುತ್ತಿದ್ದಾರೆ ಎಂದು ದೂರಿದರು. +ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ +ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ,ಹಣಕಾಸಿನ ಬಳಕೆ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಕೇಂದ್ರ ಸರ್ಕಾರ ಬಜೆಟ್ ಪೂರ್ವ ಸಮೀಕ್ಷಾ ವರದಿಯನ್ನು ಸಂಸತ್‍ನಲ್ಲಿ ಏಕೆ ಮಂಡಿಸಿಲ್ಲ ಎಂದು ಪ್ರಶ್ನೆ ಮಾಡಿದ ಅವರು, ಇಂತಹ ಲೋಪಗಳನ್ನು ಮರೆಮಾಚುವ ಸಲುವಾಗಿಯೇ ಬಿಜೆಪಿ ಅನಗತ್ಯ ವಿವಾದಗಳನ್ನು ಕೆಣಕುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_248_5.txt b/eesanje/url_46_248_5.txt new file mode 100644 index 0000000000000000000000000000000000000000..4f66ae70c10fd832cb3e3275c03732f18ab90aa0 --- /dev/null +++ b/eesanje/url_46_248_5.txt @@ -0,0 +1,9 @@ +ಮುಖ್ಯ ಚುನಾವಣಾಧಿಕಾರಿಗೆ ಜೆಡಿಎಸ್‍ನಿಂದ ದೂರು ಸಲ್ಲಿಕೆ +ಬೆಂಗಳೂರು,ಫೆ.2- ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು. +ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸು ವುದಾಗಿ ಬಾಲಕೃಷ್ಣ ಅವರು ಹೇಳಿಕೆ ನೀಡಿರುವುದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ಆರೋಪಿಸಿದೆ. +ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.ಅಲ್ಲದೆ, ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ. ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‍ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇವೆ ಎಂದರು. +ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಅವರು ಯಾವುದೇ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಅವರು ಆರೋಪ ಮಾಡಿದರು. +ಕಾಂಗ್ರೆಸ್ ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ. ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತ. ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. +ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ದೇಶದ ಸಾರ್ವಭೌಮತೆಗೆ ವಿರುದ್ಧವಾಗಿದೆ ಮತ್ತು ಅವರನ್ನು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ದೇಶದ ಕಾನೂನು ವ್ಯಾಪ್ತಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು. +ಜೆಡಿಎಸ್ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್.ಟಿ.ಮಂಜುನಾಥ, ಜಿ.ಡಿ.ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎ.ಪಿ.ರಂಗನಾಥ ,ಮುಖಂಡರು ನಿಯೋಗದಲ್ಲಿದ್ದರು. \ No newline at end of file diff --git a/eesanje/url_46_248_6.txt b/eesanje/url_46_248_6.txt new file mode 100644 index 0000000000000000000000000000000000000000..1669e923f6b31e10984770bbd7238c1c9aac0be5 --- /dev/null +++ b/eesanje/url_46_248_6.txt @@ -0,0 +1,8 @@ +ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸಾಧ್ಯತೆ ಇಲ್ಲ : ಸತೀಶ್ ಜಾರಕಿಹೊಳಿ +ಬೆಂಗಳೂರು,ಫೆ.2- ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆಗಳಿಲ್ಲ. ನಮ್ಮ ಮತ ನಮಗೆ, ಅವರ ಮತ ಅವರಿಗೆ ಬೀಳಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್‍ಗೆ 3, ಬಿಜೆಪಿ-ಜೆಡಿಎಸ್‍ಗೆ 1 ಸ್ಥಾನದ ಹಂಚಿಕೆಯಾಗಬಹುದು. ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರಿಂದ ಅಡ್ಡ ಮತದಾನವಾಗುವ ಆತಂಕ ಇಲ್ಲ. ಅಗತ್ಯವಾಗಿ ಲಕ್ಷ್ಮಣ ಸವದಿ ಹಾಗೂ ಇತರರ ಹೆಸರುಗಳನ್ನು ತೇಲಿಬಿಡಲಾಗುತ್ತಿದೆ ಎಂದರು. +ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಕರ್ನಾಟಕ ದಿಂದ ರಾಜ್ಯಸಭೆಗೆ ಆಯ್ಕೆ ಯಾಗುವುದಾದರೆ ಸ್ವಾಗತಾರ್ಹ. ಇದರಿಂದ ಪಕ್ಷದ ಬಲ ಹೆಚ್ಚಾಗಲಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ವಿಚಾರ ಹೈಕಮಾಂಡ್‍ಗೆ ಸೇರಿದ್ದಾಗಿದೆ. ನಿನ್ನೆ ರಾತ್ರಿ ನಡೆದ ಸಚಿವರ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು.ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕಾತಿಯ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಯಾವುದೇ ಸಂದರ್ಭದಲ್ಲಾದರೂ ಇದು ಪ್ರಕಟಗೊಳ್ಳಬಹುದು ಎಂದರು. +ಅಖಂಡ ಭಾರತವೇ ನಮ್ಮ ಪರಿಕಲ್ಪನೆ : ಗೃಹಸಚಿವ ಪರಮೇಶ್ವರ್ +ಶಾಸಕರನ್ನು ನಿಗಮ ಮಂಡಳಿ ಗಳಿಗೆ ನೇಮಿಸುವಾಗ ಹಿರಿತನವ ನ್ನಷ್ಟೇ ಮಾನದಂಡವನ್ನಾಗಿ ಪರಿಗಣಿಸಲಾಗಿದೆ. ಕಾರ್ಯಕರ್ತರ ನೇಮಕಾತಿಗಳ ಬಗ್ಗೆ ಸಹಜವಾದ ಅಸಮಾಧಾನಗಳಿರುತ್ತವೆ. ಎಲ್ಲರನ್ನೂ ತೃಪ್ತಿಗೊಳಿಸಲು ಸಾಧ್ಯವಿಲ್ಲ. ಜಿಲ್ಲಾಮಟ್ಟದಲ್ಲಿ ಕೆಲವರಿಗೆ ವಿರೋಧಗಳಿರುತ್ತವೆ, ಜಗಳಗಳಿರುತ್ತವೆ. ಆದರೆ ಅವರು ಹೈಕಮಾಂಡ್‍ಗೆ ಹತ್ತಿರದವರೂ ಹಾಗೂ ಬೇಕಾದವರು ಆಗಿರುತ್ತಾರೆ. ಹೀಗಾಗಿ ನೇಮಕಾತಿಯಲ್ಲಿ ವ್ಯತ್ಯಾಸಗಳಾಗುವುದು ಸಹಜ ಎಂದರು. +ನಿನ್ನೆ ನಡೆದ ಸಭೆಯಲ್ಲಿ ಲೋಕಸಭೆಯ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತಂತೆ ಅಂತಿಮ ಸುತ್ತಿನ ಚರ್ಚೆ ನಡೆದಿದೆ ಎಂದು ಹೇಳಿದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೇಮಿಸದೇ ಇರುವುದರಿಂದ ಲೋಕಸಭೆ ಚುನಾವಣೆ ಮೇಲೆ ಸ್ವಲ್ಪಮಟ್ಟಿನ ಪರಿಣಾಮವಾಗುವ ಸಾಧ್ಯತೆಯಿದೆ. ಆದರೆ ಈ ಹಿಂದೆ ಯಾವುದೇ ಸ್ಥಾನಮಾನವಿಲ್ಲದೇ ಇದ್ದಾಗಲೂ ನಾವು ಶಾಸಕರಾಗಿ ಗೆದ್ದಿದ್ದೇವೆ. ಪ್ರಸ್ತುತ ಯುದ್ಧ ಮಾಡುವ ಕಾಲ ಅಲ್ಲ ಎಂದು ಹೈಕಮಾಂಡ್ ಸೂಚಿಸಿರುವುದರಿಂದ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಚರ್ಚೆ ಮುಂದುವರೆಸುವುದಿಲ್ಲ ಎಂದರು. +ಪ್ರಕಾಶ್ ಹುಕ್ಕೇರಿ ಹಾಗೂ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್ ನಾಯಕರ ಬಗ್ಗೆಯೇ ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಯನ್ನು ಬದಲಾಯಿಸಿ ದ್ದಕ್ಕೆ ಕೆ.ಎನ್.ರಾಜಣ್ಣ ಅವರಿಗೆ ಕೋಪವಿದೆ. ಅದಕ್ಕಾಗಿ ಮಾತನಾಡುತ್ತಾರೆ. ಪ್ರಕಾಶ್ ಹುಕ್ಕೇರಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕರೆದು ಚರ್ಚೆ ಮಾಡಬೇಕು ಎಂದು ಸಲಹೆ ನೀಡಿದರು. +ಲೋಕಸಭೆ ಚುನಾವಣೆಯಲ್ಲಿ ಕೆಲವು ಕಡೆ ನಮ್ಮ ಪಕ್ಷ ದುರ್ಬಲವಾಗಿರುವುದು ನಿಜ. ಅಲ್ಲಿ ಗೆಲ್ಲುವ ಪ್ರಬಲ ಅಭ್ಯರ್ಥಿಗಳ ಹುಡುಕಾಟ ನಡೆದಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಕೊಡಬೇಕು ಎಂದರು. \ No newline at end of file diff --git a/eesanje/url_46_248_7.txt b/eesanje/url_46_248_7.txt new file mode 100644 index 0000000000000000000000000000000000000000..ef92c2aeafa1372463f9f163b98c7f18e87d8d49 --- /dev/null +++ b/eesanje/url_46_248_7.txt @@ -0,0 +1,10 @@ +ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ +ಮೈಸೂರು,ಫೆ.2- ಕೆರೆಗೋಡಿನ ಧ್ವಜ ವಿವಾದವನ್ನು ಕೆಣಕುತ್ತಿರುವ ಜೆಡಿಎಸ್-ಬಿಜೆಪಿ ನಾಯಕರು ರಾಷ್ಟ್ರಧ್ವಜ ಹಾಗೂ ಸಂವಿಧಾನದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಿಗೂ ಆಡಳಿತದ ಅನುಭವ, ಕಾನೂನಿನ ಅರಿವಿದೆ. ಅದರ ಹೊರತಾಗಿಯೂ ಕೆರಗೋಡಿನಲ್ಲಿ ರಾಷ್ಟ್ರಧ್ವಜ ತೆಗೆಯಬೇಕು ಎಂದು ಬಂದ್‍ಗೆ ಕರೆ ನೀಡುತ್ತಿದ್ದಾರೆ. ಅವರ ಅಜೆಂಡಾ ಏನು ಎಂದು ಪ್ರಶ್ನಿಸಿದರು. +ಇವರ ಪ್ರತಿಭಟನೆ ಮೂಲ ಉದ್ದೇಶಗಳೇನು? ಕಾವೇರಿ ನದಿಯ ನೀರಿನ ಹಂಚಿಕೆ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧವೇ? ಬರ ಪರಿಸ್ಥಿತಿಗೆ ಕೇಂದ್ರ ಅನುದಾನ ನೀಡಿಲ್ಲ ಎಂಬುದಕ್ಕಾಗಿ ಬಂದ್ ಮಾಡುತ್ತಿದ್ದಾರೆಯೇ? ಅಥವಾ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಯೇ? ಯಾವ ಪುರುಷಾರ್ಥಕ್ಕೆ ಹೋರಾಟ ಮಾಡುತ್ತಿದ್ದಾರೆ. ಇವರಿಂದಾಗಿ ರಾಜ್ಯಕ್ಕೆ ಯಾವ ರೀತಿಯ ಅನುಕೂಲವಾಗುತ್ತಿದೆ ಎಂದು ಪ್ರಶ್ನಿಸಿದರು. +ಎನ್‍ಡಿಆರ್‍ಎಫ್ ನಿಯಮಾವಳಿಗಳು ಜಾರಿಗೆ ಬಂದ ಬಳಿಕ ಬರ ಹಾಗೂ ನೆರೆ ಪರಿಸ್ಥಿತಿಯ ನಷ್ಟ ಪರಿಹಾರಕ್ಕೆ ಒಂದು ತಿಂಗಳ ಒಳಗಾಗಿ ಹಣ ಬಿಡುಗಡೆಯಾಗುತ್ತಿತ್ತು. ಪ್ರಸ್ತುತ ರಾಜ್ಯದ 223 ತಾಲೂಕುಗಳಲ್ಲಿ ಬರವಿದೆ. ಆರ್ಥಿಕ ನೆರವು ನೀಡಿ ಎಂದು ಸೆ.22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾಲ್ಕು ತಿಂಗಳು ಕಳೆದರೂ ಇಲ್ಲಿವರೆಗೂ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ. ರಾಜ್ಯದಲ್ಲಿ 50 ಲಕ್ಷ ಹೆಕ್ಟೇರ್‍ನಲ್ಲಿ ಬೆಳೆ ನಷ್ಟವಾಗಿದೆ. 37 ಲಕ್ಷ ರೈತರಿಗೆ ರಾಜ್ಯಸರ್ಕಾರವೇ ತನ್ನ ಬೊಕ್ಕಸದಿಂದ ಮೊದಲ ಕಂತಿನ ಪರಿಹಾರ ಪಾವತಿಸಿದೆ. ಕೇಂದ್ರಸರ್ಕಾರ ಹಣವನ್ನೇ ನೀಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಕಿಡಿಕಾರಿದರು. +ರಾಜ್ಯದ ಜನರ ಹಿತಾಸಕ್ತಿಗಾಗಿ ಹೋರಾಟ ಮಾಡಲಿ, ನಾವು ಅವರ ಜೊತೆ ಕೈ ಜೋಡಿಸುತ್ತೇವೆ, ಅಭಿನಂದನೆ ಸಲ್ಲಿಸುತ್ತೇವೆ. ಚುನಾವಣೆಯ ಕಾರಣಕ್ಕಾಗಿ ಹಿಂದುತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಸಹಿಸಲಾಗುವುದಿಲ್ಲ. ಬಿಜೆಪಿಯವರಿಗಿಂತಲೂ ನಾವು ಹೆಚ್ಚಿನ ಹಿಂದೂಗಳು. ನಿರಂತರವಾಗಿ ಪೂಜೆ ಮಾಡುತ್ತೇವೆ. ಧಾರ್ಮಿಕ ನಂಬಿಕೆಗಳಿವೆ. ಜನರ ನಡುವೆ ಅಶಾಂತಿ ಸೃಷ್ಟಿಸಲು, ಮತ ಗಳಿಸಲು ಹಿಂದುತ್ವ ಬಳಸಿಕೊಳ್ಳಲು ಹೊರಟರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. +ತಮ್ಮದು ಅತೀ ವಿನಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ತಿರುಗಿಸಿ ಮಾತನಾಡಲು ನನಗೆ ಅವರಿಗಿಂತಲೂ ಚೆನ್ನಾಗಿ ಬರುತ್ತದೆ. ಆದರೆ ನಾವು ದೇವೇಗೌಡರ ಮೇಲಿನ ಅಪಾರ ಗೌರವದಿಂದ ಸಹನೆಯಿಂದಿದ್ದೇವೆ. ನಾನೇನು ಕುಮಾರಸ್ವಾಮಿಯವರಿಂದ ಬೆಳೆದು ಬಂದವನಲ್ಲ. ಮಾತಿನ ಮೇಲೆ ನಿಗಾ ಇರಲಿ, ಮಾಜಿ ಮುಖ್ಯಮಂತ್ರಿ ಎಂದು ಗೌರವ ಕೊಡುತ್ತೇವೆ. ಅದೂ ಬೇಡ, ನನ್ನಂತೆಯೇ ಮಾತನಾಡಲಿ ಎಂದಾದರೆ ಅದಕ್ಕೂ ನಾನು ಸಿದ್ಧ ಎಂದು ಸವಾಲು ಹಾಕಿದರು. +ರಾಷ್ಟ್ರಧ್ವಜದ ವಿರುದ್ಧ ಕುಮಾರಸ್ವಾಮಿ, ಪುಟ್ಟರಾಜು, ಆರ್.ಅಶೋಕ್ ಸೇರಿದಂತೆ ಯಾರೇ ಹೋರಾಟ ಮಾಡುವುದನ್ನು ಮುಂದುವರೆಸಿದರೆ ಜನ ಸಹಿಸುವುದಿಲ್ಲ. ಈಗಾಗಲೇ ನಿಜವಾದ ದೇಶಪ್ರೇಮಿಗಳು, ಪ್ರಗತಿಪರರು, ಜಾತ್ಯತೀತ ತತ್ವದ ಮೇಲೆ ನಂಬಿಕೆಯಿಟ್ಟವರು ತಿರುಗಿ ಬಿದ್ದಿದ್ದಾರೆ. ಇವರು ರಾಜಕೀಯಕ್ಕಾಗಿ ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಬಳಕೆ ಮಾಡಿಕೊಂಡು ಶಾಂತಿ ಕದಡಲು ಯತ್ನಿಸಿದರೆ ಜನ ತಿರುಗಿ ಬೀಳಲಿದ್ದಾರೆ ಎಂದು ಹೇಳಿದರು. +ಮಂಡ್ಯದ ಅಭಿವೃದ್ಧಿಯಲ್ಲಿ ಕುಮಾರಸ್ವಾಮಿಯವರ ಪಾತ್ರ ಏನು ಎಂದು ಪ್ರಶ್ನಿಸಿದ ಚೆಲುವರಾಯಸ್ವಾಮಿ, 2 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯಲ್ಲಿ ಒಂದು ಅಂಗನವಾಡಿಯನ್ನೂ ಕಟ್ಟಲಿಲ್ಲ. ಅವರ ಜೊತೆಗೆ ಅಭಿವೃದ್ಧಿ ವಿಷಯವಾಗಿ ಏನು ಚರ್ಚೆ ಮಾಡಬೇಕು ಎಂದು ಪ್ರಶ್ನಿಸಿದರು. +ಇದೇ 12 ರಿಂದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಚರ್ಚೆಗೆ ಅವರೇ ಪ್ರತ್ಯೇಕ ಸೂಚನೆ ನೀಡಲಿ. ನಾನು ಬೆಂಬಲ ನೀಡುತ್ತೇನೆ. ಇವರು ಅಭಿವೃದ್ಧಿ ಮಾಡಿದ್ದೇ ಆಗಿದ್ದರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಏಕೆ ಸೋಲುತ್ತಿತ್ತು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_248_8.txt b/eesanje/url_46_248_8.txt new file mode 100644 index 0000000000000000000000000000000000000000..0e8ebff31943893142b4d667da966e1335d31b3c --- /dev/null +++ b/eesanje/url_46_248_8.txt @@ -0,0 +1,5 @@ +ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ +ಬೆಂಗಳೂರು,ಫೆ.2- ಜಾರ್ಖಾಂಡ್‍ನಲ್ಲಿನ ಮುಖ್ಯ ಮಂತ್ರಿ ಹೇಮಂತ್ ಸೊರೇನ್‍ರವರನ್ನು ಇಡಿ ಅಕಾರಿಗಳು ಬಂಸಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಕೆಂಡ ಕಾರಿದ್ದಾರೆ.ಕೇಂದ್ರ ತನಿಖಾ ದಳ, ಜಾರಿ ನಿರ್ದೇಶಾನಲಯ, ಆದಾಯ ತೆರಿಗೆ ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅದು ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಆರೋಪಿಸಿದ್ದಾರೆ. +2014 ರಿಂದ ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ವಿಪಕ್ಷ ನಾಯಕರ ವಿರುದ್ಧ 115 ಪ್ರಕರಣಗಳನ್ನು ದಾಖಲಿಸಿದೆ. ಆಡಳಿತ ಪಕ್ಷ ಬಿಜೆಪಿಯ ಆರು ಮಂದಿ ವಿರುದ್ಧ ಮಾತ್ರ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು ದಾಖಲಾದ ಪ್ರಕರಣಗಳಲ್ಲಿ ಶೇ. 95 ರಷ್ಟು ವಿಪಕ್ಷ ನಾಯಕರನ್ನೇ ಗುರಿ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ. +ಮತ್ತೊಂದು ಜೀವ ಬಲಿ ಪಡೆದ ಕಿಲ್ಲರ್ ಬಿಎಂಟಿಸಿ, ವಿದ್ಯಾರ್ಥಿನಿ ಸಾವು +ಬಿಜೆಪಿ ಸರ್ಕಾರದ ಸ್ವಾರ್ಥ ರಾಜಕೀಯ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣೆಸÀಬೇಕಿರುವುದು ಮಾತ್ರವಲ್ಲ. ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅವಸಾನದ ಹಾದಿಯತ್ತ ಸರಿಯುತ್ತಿದೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_248_9.txt b/eesanje/url_46_248_9.txt new file mode 100644 index 0000000000000000000000000000000000000000..bde5da0bb5040aba3c9d2e513afb8d2d0c8bdfa0 --- /dev/null +++ b/eesanje/url_46_248_9.txt @@ -0,0 +1,9 @@ +ಅಖಂಡ ಭಾರತವೇ ನಮ್ಮ ಪರಿಕಲ್ಪನೆ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಫೆ.2- ಕಾಂಗ್ರೆಸ್ ಅಖಂಡ ಭಾರತಕ್ಕಾಗಿ ಸಾಕಷ್ಟು ತ್ಯಾಗ, ಬಲಿದಾನ, ಹೋರಾಟ ಮಾಡಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಭವ್ಯ ಭಾರತ ಕಲ್ಪನೆಯೊಂದಿಗೆ ನಾವು ಬದುಕಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ವಿಷಯವಾಗಿ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ವರದಿ ತರಿಸಿಕೊಂಡಿದ್ದು, ಜಿಲ್ಲಾ ಉಸ್ತುವಾರಿಗಳ ಜೊತೆಗೂ ಚರ್ಚೆ ನಡೆಸಿ ಅದನ್ನೆಲ್ಲಾ ಕ್ರೂಢೀಕರಿಸಿ ಕೇಂದ್ರ ಪರಿಶೀಲನಾ ಸಮಿತಿ ಮುಂದೆ ಮಂಡಿಸಿ ಚರ್ಚಿಸಲಾಗುತ್ತದೆ ಎಂದರು. +ಸಂಸದ ಡಿ.ಕೆ.ಸುರೇಶ್‍ರವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ದೇಶದ ಐಕ್ಯತೆಗೆ ಮಹಾತ್ಮಗಾಂಯಿಂದ ಹಿಡಿದು ಸಾವಿರಾರು ಜನ ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ. ನಾವು ಒಗ್ಗೂಡಿಸುವ ಮಾತುಗಳನ್ನಾಡಬೇಕೇ ಹೊರತು, ಒಡೆದು ಆಳುವ ಮಾತುಗಳನ್ನಾಡಬಾರದು ಎಂದು ಹೇಳಿದರು. +ನಮ್ಮದು ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಚರಿತ್ರೆಯನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತದೆ. ಒಂದು ರಾಷ್ಟ್ರ, ಒಂದು ದೇಶ ಎಂದು ಬದುಕಬೇಕಾಗುತ್ತದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯ ಬಳಿಕ ಸಚಿವರನ್ನು ಊಟಕ್ಕೆ ಆಹ್ವಾನಿಸಿದ್ದರು. ಅಲ್ಲಿ ಲೋಕಸಭೆ ಚುನಾವಣೆ ತಯಾರಿ ವಿಚಾರವಾಗಿ ಚರ್ಚೆಯಾಗಿದೆ. +ಬೆಂಗಳೂರು : ಮಗನಿಂದಲೇ ತಾಯಿ ಕೊಲೆ +ಅಭ್ಯರ್ಥಿ ಆಯ್ಕೆ, ಮುಖ್ಯ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಆಯಾ ಕ್ಷೇತ್ರಗಳ ಜವಾಬ್ದಾರಿ ವಹಿಸಿಕೊಂಡು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. +ಶಾಸಕರಾದ ಬಾಲಕೃಷ್ಣ, ಮಾಜಿ ಶಾಸಕ ಬಿ.ಶಿವರಾಂ ಅವರ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ಎಲ್ಲರಿಗೂ ಅವರದೇ ಆದ ಅಭಿಪ್ರಾಯಗಳಿರುತ್ತವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಮಾತನಾಡುವಾಗ ಎಚ್ಚರಿಕೆ ವಹಿಸಬೇಕೆಂದು ಹೇಳಿದರು. +ಬಿಹಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜಕೀಯ ಬೆಳವಣಿಗೆಗಳಾಗುತ್ತವೆ. ಸರ್ಕಾರ ಪತನವಾಗುತ್ತದೆ ಎಂದು ಕುಮಾರಸ್ವಾಮಿ ಸೇರಿದಂತೆ ಇತರ ನಾಯಕರು ಕಾದು ಕುಳಿತುಕೊಳ್ಳಲಿ ಎಂದು ಲೇವಡಿ ಮಾಡಿದರು. ಬಿಜೆಪಿಯಲ್ಲಿರುವ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಪಕ್ಷದ ಅಧ್ಯಕ್ಷರ ಬಳಿ ನಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸಿದ್ದೇನೆ. ಹೈಕಮಾಂಡ್ ಟಿಕೆಟ್ ನೀಡುವಾಗ ಎಲ್ಲವನ್ನೂ ಪರಿಶೀಲಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_46_249_1.txt b/eesanje/url_46_249_1.txt new file mode 100644 index 0000000000000000000000000000000000000000..93a25de37f5040c99a82c55320c961ddd01b89cc --- /dev/null +++ b/eesanje/url_46_249_1.txt @@ -0,0 +1,7 @@ +ಪ್ರಗತಿಗೆ ಪೂರಕ ಆಯವ್ಯಯ ಮಂಡನೆ : ಶರವಣ +ಬೆಂಗಳೂರು, ಫೆ.1-ಆರ್ಥಿಕ ಸ್ಥಿರತೆ, ಸಮಗ್ರ ಅಭಿವೃದ್ದಿ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡುವ ಹಾಗೂ ಬಡವರು, ರೈತರು, ಮಾಧ್ಯಮ ವರ್ಗಕ್ಕೆ ಸ್ಪಂದಿಸುವ 2024-2 5ನೆ ಸಾಲಿನ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಪ್ರಗತಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. +ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಗಾರಿಕೆ, ಉದ್ಯೋಗ ಸೃಷ್ಟಿ, ಬಡತನ ನಿವಾರಣೆ, ರೈತರ ಪ್ರಗತಿ- ಹೀಗೆ ಸರ್ವತೋಮುಖಿ ಮತ್ತು ಸರ್ವಸ್ಪರ್ಶಿಯಾಗಿರುವ ಈ ಬಜೆಟ್ ಭಾರತದ ಭವಿಷ್ಯತ್ತಿನ ದೃಷ್ಟಿಯಿಂದ ಸುಸ್ಥಿರವಾಗಿದೆ ಎಂದಿದ್ದಾರೆ. +ವಿಶ್ವದ ಬಲಿಷ್ಠ ರಾಷ್ಟ್ರ ಮಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಆಗಿದ್ದು, ಆ ದಿಕ್ಕಿನಲ್ಲಿ ಇದೊಂದು ಚಾರಿತ್ರಿಕ ಬಜೆಟ್ ಆಗಿದೆ. ಬರುವ ಎರಡು ದಶಕಗಳಲ್ಲಿ ಭಾರತವನ್ನು ಜಗತ್ತಿನ ಶಕ್ತಿಯಾಗಿ ರೂಪಿಸುವಲ್ಲಿ ಈ ಬಜೆಟ್ ಮಾರ್ಗ ಸೂಚಿ ಆಗಿದೆ ಎಂದು ಶ್ಲಾಘಿಸಿದ್ದಾರೆ. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಮದ್ಯಮ ವರ್ಗಗಳಿಗೆ ಏಳು ಲಕ್ಷ ರೂ. ವರೆಗಿನ ಶೂನ್ಯ ತೆರಿಗೆ, ಕಾಪೆರ್ರೇಟ್ ತೆರಿಗೆ ಶೇ. 22ರವರೆಗೆ ಇಳಿಕೆ, ಯುವ ಉದ್ಯೋಗಿಗಳಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಉದ್ಯಮಕ್ಕಾಗಿ ಒಂದು ಲಕ್ಷ ಕೋಟಿ ರೂಪಾಯಿ ನಿಧಿ ಘೋಷಿಸಿರುವುದು ಸುಧಾರಣೆಯ ನಿಟ್ಟಿನಲ್ಲಿ ಅಭೂತ ಪೂರ್ವ ಯೋಜನೆಗಳಾಗಿವೆ. ರೈತ ಪರ ಕಿಸಾನ್ ಸಮ್ಮಾನ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಅಯುಷ್ಮನ್, ಪ್ರಧಾನಿ ಅವಾಸ್ ಯೋಜನೆಯಲ್ಲಿ ಎರಡು ಕೋಟಿ ಮನೆಗಳ ನಿರ್ಮಾಣ ಮಾಡುವುದನ್ನು ಪ್ರಕಟಿಸಿರುವುದು ದೇಶದ ಹಿರಿಮೆಯ ಘೋಷಣೆಗಳಾಗಿವೆ ಎಂದಿದ್ದಾರೆ. +ಕೆಲವು ವಿವಾದಿತ ತೆರಿಗೆ ಸ್ಲಾಬ್‍ಗಳನ್ನು ರದ್ದು ಮಾಡಿರುವುದು ಸುಧಾರಣಾ ಕ್ರಮಗಳಾಗಿವೆ. ವಿವಿಧ ರೀತಿಯ ಕಾರಿಡಾರ್ ಸ್ಥಾಪನೆ, ರೈಲು ಭೋಗಿಗಳ ಉನ್ನತೀಕರಣ, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಜೊತೆಗೆ ಜೈ ಅನುಸಂಧಾನ್ ಘೋಷಣೆಗಳು ಮೋದಿ ಸಾರಥ್ಯದಲ್ಲಿ ಹೊಸ ಭಾರತ ಕಟ್ಟುವ ನಿಟ್ಟಿನಲ್ಲಿ ಘೋಷ ವಾಕ್ಯಗಳಾಗಲಿವೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_249_10.txt b/eesanje/url_46_249_10.txt new file mode 100644 index 0000000000000000000000000000000000000000..25a780834add68201a285c5b7a9d87a45d4a98fd --- /dev/null +++ b/eesanje/url_46_249_10.txt @@ -0,0 +1,6 @@ +ರಾಜ್ಯಸಭಾ ಚುನಾವಣೆ : ರಾಜ್ಯದಿಂದ ಸೋನಿಯಾ ಆಯ್ಕೆ ಸಾಧ್ಯತೆ +ಬೆಂಗಳೂರು,ಜ.30- ರಾಜ್ಯದಲ್ಲಿ ತೆರವಾಗುತ್ತಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್‍ನಲ್ಲಿ ಪೈಪೋಟಿ ತೀವ್ರಗೊಂಡಿದ್ದು, ಎಐಸಿಸಿಯ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸೋನಿಯಾಗಾಂಧಿಯವರು ವಯೋ ಸಹಜತೆಯಿಂದಾಗಿ ಈ ಬಾರಿ ಉತ್ತರಪ್ರದೇಶದ ರಾಯ್‍ಭರೇಲಿಯಲ್ಲಿ ಸ್ಪರ್ಧೆ ಮಾಡುವುದರಿಂದ ಹಿಂದೇಟು ಹಾಕುತ್ತಿದ್ದು, ಅವರ ಪುತ್ರಿ ಪ್ರಿಯಾಂಕ ಗಾಂಧಿಯವರಿಗೆ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. +ಹೀಗಾಗಿ ಸೋನಿಯಾಗಾಂಧಿಯವರನ್ನು ರಾಜ್ಯಸಭೆ ಮೂಲಕ ಸಂಸತ್‍ಗೆ ಆಯ್ಕೆ ಮಾಡಲು ಕಾಂಗ್ರೆಸ್‍ನಲ್ಲಿ ಚಿಂತನೆ ನಡೆದಿದೆ. ಏಪ್ರಿಲ್ 2 ರ ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್‍ನ ಎಲ್.ಹನುಮಂತಯ್ಯ,ಜಿ.ಸಿ.ಚಂದಶೇಖರ್, ಸಯ್ಯದ್ ನಾಸಿರ್ ಹುಸೇನ್, ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರ ಸ್ಥಾನಗಳು ತೆರವಾಗಲಿದೆ. ಕಾಂಗ್ರೆಸ್ ಸಂಖ್ಯಾಬಲದ ಆಧಾರದ ಮೇಲೆ ಮೂರು ಕ್ಷೇತ್ರಗಳನ್ನು ಗೆಲ್ಲುವ ಅವಕಾಶವಿದೆ. +ಹೀಗಾಗಿ ರಾಜ್ಯಸಭಾ ಸ್ಥಾನಗಳಿಗೆ ತೀವ್ರ ಲಾಭಿಗಳು ನಡೆಯುತ್ತಿವೆ. ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಮೂರು ಮಂದಿ ಮರು ಆಯ್ಕೆ ಬಯಸಿದ್ದಾರೆ. ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಅನೇಕ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. +ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಕೆರಗೋಡು ಗ್ರಾಮಸ್ಥರ ಆಕ್ರೋಶದ ಜ್ವಾಲೆಗೆ ಕಾರಣ +ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಸಾಧ್ಯವಾಗದೇ ಇರುವ ಪ್ರಮುಖ ನಾಯಕರನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ರಾಜ್ಯದ ಇಬ್ಬರು ನಾಯಕರಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ. ಅದರಲ್ಲಿ ಒಂದು ಎಐಸಿಸಿಯ ಕಾರ್ಯಕಾರಿ ಸಮಿತಿಯಲ್ಲಿರುವ ನಾಸಿರ್ ಹುಸೇನ್‍ರನ್ನು ಮರು ಆಯ್ಕೆ ಮಾಡುವ ನಿರೀಕ್ಷೆಗಳಿವೆ. ಉಳಿದ ಒಂದು ಸ್ಥಾನಕ್ಕೆ ತೀವ್ರ ಲಾಭಿ ನಡೆಯುತ್ತಿದೆ. ಮತ್ತೊಂದು ಸ್ಥಾನಕ್ಕೆ ಸೋನಿಯಾಗಾಂಧಿಯವರನ್ನೇ ಆಯ್ಕೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_249_11.txt b/eesanje/url_46_249_11.txt new file mode 100644 index 0000000000000000000000000000000000000000..48357fefa9517e5285193d207beba97f0b6d8e31 --- /dev/null +++ b/eesanje/url_46_249_11.txt @@ -0,0 +1,14 @@ +ವರ್ಕ್ ಫ್ರಂ ಹೋಮ್ ಉದ್ಯೋಗದ ಆಮಿಷ : 158.94 ಕೋಟಿ ರೂ. ವಂಚನೆ +ಬೆಂಗಳೂರು,ಜ.30- ಸಾರ್ವಜನಿಕರಿಗೆ ವಾಟ್ಸಪ್ ಮತ್ತು ಟೆಲಿಗ್ರಾಮ್ ಆ್ಯಪ್‍ಗಳ ಮುಖಾಂತರ ವರ್ಕ್ ಫ್ರಂ ಹೋಮ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ 11 ಮಂದಿ ಅಂತರಾಜ್ಯ ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. +ಆಗಸ್ಟ್ 18ರಂದು ಬಿ.ಇ.ಎಲ್ ಲೇಔಟ್‍ನ ವಿದ್ಯಾರಣ್ಯಪುರದ ನಿವಾಸಿಯೊಬ್ಬರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿ, ಯಾರೋ ಅಪರಿಚಿತ ವ್ಯಕ್ತಿಗಳು ತಮ್ಮ ವಾಟ್ಸ್‍ಆಫ್ ನಂಬರ್‍ಗೆ ಚಾಟ್ ಮಾಡಿದ್ದು, ಚಾಟ್‍ನಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ನೀಡುತ್ತೇವೆಂದು ಮತ್ತು ದಿನಕ್ಕೆ 500 ರೂ.ಗಳಿಂದ 10,000 ರೂ. ಹಣವನ್ನು ಗಳಿಸಬಹುದು ಎಂದು ನಂಬಿಸಿ, ಅಮಿಷವೊಡ್ಡಿದ್ದಾರೆ +ಅವರ ಅಕೌಂಟ್‍ನಿಂದ ಹಂತ ಹಂತವಾಗಿ ಒಟ್ಟು 18.75 ಲಕ್ಷ ಹಣವನ್ನು ವಿವಿಧ 12 ಬ್ಯಾಂಕ್ ಖಾತೆಗಳಿಗೆ ಆನ್‍ಲೈನ್ ಮುಖಾಂತರ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸೈಬರ್ ಕ್ರೈಂ ಪೊಲೀಸರು, ವಿವಿಧ ಬ್ಯಾಂಕ್‍ಗಳ ಅಕೌಂಟ್‍ಗಳಿಗೆ ಹಣವು ವರ್ಗಾವಣೆಯಾಗಿರುವ ಖಾತೆಗಳ ಖಾತೆದಾರರ ವಿವರಗಳನ್ನು ಸಂಪೂರ್ಣವಾಗಿ ಪಡೆದುಕೊಂಡು, ನಂತರ ತನಿಖೆ ಮುಂದುವರೆಸಿದ್ದರು. +ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಕೆರಗೋಡು ಗ್ರಾಮಸ್ಥರ ಆಕ್ರೋಶದ ಜ್ವಾಲೆಗೆ ಕಾರಣ +ಈ ಜಾಲದಲ್ಲಿ ತೊಡಗಿಸಿಕೊಂಡಿದ್ದ ಒಟ್ಟು 11 ಮಂದಿ ಆರೋಪಿಗಳ ಪೈಕಿ ಬೆಂಗಳೂರು ನಗರದ ಇಬ್ಬರನ್ನು, ಹೈದ್ರಾಬಾದ್‍ನ ಮೂವರು ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿರುವ ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ. +ಭಾರತದಾದ್ಯಂತ ವಿವಿಧ 28 ರಾಜ್ಯಗಳಿಂದ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್‍ನಲ್ಲಿ ದಾಖಲಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಿಂದ ಒಟ್ಟು 265 ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿ ವಿವಿಧ 14 ಪೊಲೀಸ್ ಠಾಣೆಗಳಿಂದ ಒಟ್ಟು 135 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. +ಒಟ್ಟು 2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯ 158.94 ಕೋಟಿ ರೂ.ಗಳು ಎಂಬುದನ್ನು ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಸಾರ್ವಜನಿಕರಿಂದ ವಂಚಿಸಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗಳ ಪೈಕಿ ಈಗಾಗಲೇ 30 ಬ್ಯಾಂಕ್ ಖಾತೆಗಳನ್ನು 62.83 ಲಕ್ಷ ರೂ. ಫ್ರೀಜ್ ಮಾಡಲಾಗಿದೆ. ವಂಚಕರಿಂದ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್, 2 ಲ್ಯಾಪ್‍ಟಾಪ್‍ಗಳು, 15 ಸಿಮ್ ಕಾರ್ಡ್‍ಗಳು ಮತ್ತು 3 ಬ್ಯಾಂಕ್ ಚೆಕ್ ಬುಕ್‍ಗಳು ಹಾಗೂ ಇತರೇ ದಾಖಲಾತಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. +30 ಲಕ್ಷ ಮೌಲ್ಯದ ಚಿನ್ನಾಭರಣ ವಶಬೆಂಗಳೂರು,ಜ.30- ಜೀವನೋಪಾಯಕ್ಕಾಗಿ ಕೆಲಸ ನೀಡಿದ್ದ ಮನೆ ಮಾಲೀಕರ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯಿಂದ 30 ಲಕ್ಷ ರೂ. ಬೆಲೆಬಾಳುವ 523 ಗ್ರಾಂ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದುಕೊಂಡಿ ರುತ್ತಾರೆ. ಮಾಲೀಕರು ವಿದೇಶಕ್ಕೆ ತೆರಳಿದ್ದಾಗ ಮಾಲೀಕರ ಇಬ್ಬರು ಮಕ್ಕಳು ಹಾಗೂ ಕೆಲಸದಾಕೆ ಮನೆಯಲ್ಲಿದ್ದರು. ಆ ವೇಳೆ ಕಳ್ಳತನ ಮಾಡಲೆಂದೇ ಆಕೆ ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿ ಕೇಬಲ್‍ಗಳನ್ನು ಕಟ್ ಮಾಡಿರುತ್ತಾಳೆ. +ಜ.25ರ ಮಧ್ಯರಾತ್ರಿ ಕೆಲಸದಾಕೆ ನಾಟಕವಾಡಿ ಯಾರೋ ಅಪರಿಚಿತರು ಮನೆಯ ರೂಂನಿಂದ ಚಿನ್ನದ ಒಡವೆಗಳನ್ನು ಒಂದು ಬ್ಯಾಗ್‍ನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ತಾನು ಎಚ್ಚರಗೊಂಡು ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ನನಗೆ ಹೊಡೆದು ಹೋದರೆಂದು ಮಾಲೀಕರ ಮಕ್ಕಳಿಗೆ ತಿಳಿಸಿ ನಂಬಿಸಿದ್ದಳು.ಮಾರನೆಯ ದಿನ ಮನೆಯ ಮಾಲೀಕರ ಮಗನು ಮನೆಯ ಕೆಲಸದಾಕೆಯು ತಿಳಿಸಿದಂತೆ, ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕೆಲಸದಾಕೆಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಜ.25ರಂದು ರೂಮ್‍ನ ಬೀಗವನ್ನು ತೆರೆದು ಕಬೋರ್ಡ್‍ನ ಬೀಗವನ್ನು ಹೊಡೆದು, ಕಬೋರ್ಡ್ ಮತ್ತು ಲಾಕರ್‍ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ತಾನೇ ಕಳ್ಳತನ ಮಾಡಿರುವುದಾಗಿ ತನಿಖಾಧಿಕಾರಿಗಳ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿರುತ್ತಾಳೆ. ಆಕೆಯ ಹೇಳಕೆ ಮೇರೆಗೆ ಸುುಮಾರು 30 ಲಕ್ಷ ರೂ. ಬೆಲೆಬಾಳುವ 523 ಗ್ರಾಂ ಚಿನ್ನದ ವಿವಿಧ ಮಾದರಿಯ ವಡವೆಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. + : ನಿಷೇಧಿತ ಪಿಎಫ್‍ಐನ 15 ಮಂದಿಗೆ ಮರಣದಂಡನೆ +ಕಬೋರ್ಡ್‍ನಲ್ಲಿಟ್ಟಿದ್ದ ಚಿನ್ನ ಕದ್ದಿದ್ದ ಕಳ್ಳನ ಸೆರೆಬೆಂಗಳೂರು, ಜ.30- ಮನೆಗೆ ನುಗ್ಗಿ ಕಬೋರ್ಡ್‍ನಲ್ಲಿಟ್ಟಿದ್ದ 494 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯಕ್ತಿಯನ್ನು ವಿಜಯನಗರ ಠಾಣೆ ಪೊಲೀಸರು ಬಂಸಿದ್ದಾರೆ. ಠಾಣಾ ವ್ಯಾಪ್ತಿಯ ರೆಮ್ಕೋ ಲೇಔಟ್‍ನಲ್ಲಿ ಮನೆಯ ಮುಂಬಾಗಿಲು ತೆಗೆದಿದ್ದಾಗ ಅಪರಿಚಿತ ವ್ಯಕ್ತಿ ಏಕಾಏಕಿ ಮನೆಗೆ ನುಗ್ಗಿ ಕಬೋರ್ಡ್‍ನಲ್ಲಿಟ್ಟಿದ್ದ ಆಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ. +ಈ ಸಂಬಂಧ ಮನೆಯ ಮಾಲೀಕರು ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮನೆಯ ಸುತ್ತಮುತ್ತ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಕಳ್ಳನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 25.50 ಲಕ್ಷ ಮೌಲ್ಯದ 430.5 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ಹೇಮಂತ್‍ಕುಮಾರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_249_12.txt b/eesanje/url_46_249_12.txt new file mode 100644 index 0000000000000000000000000000000000000000..8dc2fb28552bd2ebab9681e944cb77865929a219 --- /dev/null +++ b/eesanje/url_46_249_12.txt @@ -0,0 +1,11 @@ +ಕಾಂಗ್ರೆಸಿಗರು ಈಸ್ಟ್ ಇಂಡಿಯ ಕಂಪನಿಯ ಮಾಲೀಕರಿದ್ದಂತೆ : ಕುಮಾರಸ್ವಾಮಿ +ಬೆಂಗಳೂರು,ಜ.30-ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜ ಘರ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಪ್ರಾಮಾಣಿಕವಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ನನ್ನನ್ನು ಬೆಳೆಸಿದ್ದಾರೆ. ಯಾರಿಗೆ ಅನ್ಯಾಯವಾದರೂ ಅವರ ರಕ್ಷಣೆಗೆ ಹೋಗುವೆ. ಬೆಂಕಿ ಹಚ್ಚಲು ಹೋಗಿರಲಿಲ್ಲ. ಸಂಘರ್ಷಕ್ಕೆ ಪ್ರಚೋದನೆ ನೀಡುವ ಭಾಷಣ ಮಾಡಲಿರಲಿಲ್ಲ. ಅಧಿಕಾರಿಗಳ ವೈಫಲ್ಯವನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದರು. ಧ್ವಜ ವಿವಾದದ ವಿಚಾರದಲ್ಲಿ ನಾನೇನಾದರೂ ತಪ್ಪು ಮಾಡಿದ್ದರೆ ನೇಣು ಹಾಕಲಿ. ನಿಮ್ಮ ತಪ್ಪಿದ್ದರೆ ಯಾವ ಪ್ರಾಯಶ್ಚಿತ ಮಾಡಿಕೊಳ್ಳುತ್ತೀರಿ, ಘಟನೆ ಹಿನ್ನಲೆಯ ವಾಸ್ತಾಂಶಗಳ ಮಾಹಿತಿಯ ದಾಖಲೆಗಳನ್ನು ಪ್ರದರ್ಶಿಸಿದ್ದೇನೆ ಎಂದರು. + : ನಿಷೇಧಿತ ಪಿಎಫ್‍ಐನ 15 ಮಂದಿಗೆ ಮರಣದಂಡನೆ +ಮಂಡ್ಯದಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದೇ ಮಹಾ ಅಪರಾಧವೇ ಎಂದು ಪ್ರಶ್ನಿಸಿದ ಅವರು, ದಲಿತ ಸಮುದಾಯದವರ ಕಾರ್ಯಕ್ರಮದಲ್ಲಿ ಜೈ ಭೀಮ್ ಎಂಬ ನೀಲಿ ಬಣ್ಣದ ಶಾಲು ಹಾಕಿದ್ದೇನೆ. ರೈತರ ಹಸಿರು ಶಾಲು ಹಾಕಿದ್ದೇನೆ. ಮಂಡ್ಯ ಶಾಸಕರು ಒಂದು ಲಕ್ಷ ತಿರಂಗ ಧ್ವಜವನ್ನು ಮಂಡ್ಯ ಜಿಲ್ಲೆಯ ಮನೆ ಮನೆ ಮೇಲೆ ಹಾರಿಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾವು ಬೆಂಬಲ ಕೊಡುತ್ತೇವೆ ಎಂದು ಹೇಳಿದರು. +ರಾಷ್ಟ್ರ ಧ್ವಜದಲ್ಲಿರುವುದು ಕೇಸರಿಯ ಬಣ್ಣ. ಸ್ವಾತಂತ್ರ್ಯ ಹೋರಾಟಗಾರರು ಹಿಂದಿನವರು ಕೇಸರಿ ಬಣ್ಣ ಧರಿಸಿದ್ದಾರೆ. ಈಗಿನ ಕಾಂಗ್ರೆಸಿಗರು ಈಸ್ಟ್ ಇಂಡಿಯ ಕಂಪನಿಯ ಮಾಲೀಕರಿದ್ದಂತೆ. ಶಾಂತಿ ವಾತಾವರಣದ ಬಗ್ಗೆ ನಮ್ಮ ಪಕ್ಷ ಉಳಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್‍ನವರಿಂದ ಪಾಠ ಕಲಿಯಬೇಕಿಲ್ಲ ಎಂದರು. +ನಮಗೆ ಮಂಡ್ಯ ಜಿಲ್ಲೆಯ ಜನರು ಪ್ರಮಾಣ ಪತ್ರ ಕೊಡುತ್ತಾರೆಯೇ ಹೊರತು ನಿಮ್ಮಿಂದ ಅದನ್ನು ಪಡೆಯುವ ಅಗತ್ಯವಿಲ್ಲ. ನಾವು ಗೆದ್ದಾಗಲೂ, ಸೋತಾಗಲೂ ಜನರ ಜೊತೆಯೇ ಇದ್ದೇವೆ. ನಾವು ಸೋತಾಗ ಅಂಜಿ ಕುಳಿತುಕೊಳ್ಳಲಿಲ್ಲ. ಯಾರಿಗೂ ಅಡಿಯಾಳಲ್ಲ. ಆದರೆ ನಾಡಿನ ಜನರಿಗೆ ನಾವು ಅಡಿಯಾಳು ಎಂದು ಹೇಳಿದರು.ಮಂಡ್ಯದಲ್ಲಿ ಹಿಂದುತ್ವದ ಬಗ್ಗೆಯಾಗಲಿ, ಹನುಮ ಧ್ವಜದ ಬಗ್ಗೆ ಮಾತನಾಡಿಲ್ಲ. ಸರ್ಕಾರದ ವೈಫಲ್ಯಗಳನ್ನಷ್ಟೇ ಪ್ರಸ್ತಾಪಿಸಿದ್ದೇನೆ ಎಂದರು. +ಬಿಜೆಪಿ-ಜೆಡಿಎಸ್ ಯುವಕರನ್ನು ಪ್ರಚೋದಿಸಿ ಗಲಭೆ ಸೃಷ್ಟಿಗೆ ಯತ್ನ : ಸಚಿವ ಚೆಲುವರಾಯಸ್ವಾಮಿ +ಗೌರಿ ಶಂಕರ ಟ್ರಸ್ಟ್‍ಗೆ ಧ್ವಜ ಸ್ತಂಭ ನಿರ್ಮಾಣಕ್ಕೆ ಗ್ರಾಮಪಂಚಾಯ್ತಿ ಅನುಮತಿ ನೀಡಿದೆ. ಅದರಲ್ಲಿ ಯಾವ ಧ್ವಜ ಎಂಬುದು ಉಲ್ಲೇಖವಿಲ್ಲ. ಕಳೆದ ನವೆಂಬರ್ 27ರಂದೇ ಟ್ರಸ್ಟ್ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಡಿ.29ರಂದು ಅರ್ಜಿ ಸ್ವೀಕರಿಸಿದಷ್ಟೇ ಮಾಡಿ ದಿನಾಂಕ ತಿದ್ದಿದ್ದಾರೆ. ದಾಖಲೆ ಸೃಷ್ಟಿಸಿದ್ದಾರೆ. ತ್ರಿವರ್ಣ ಧ್ವಜ ಅಥವಾ ಕನ್ನಡ ಧ್ವಜ ಮಾತ್ರ ಹಾರಿಸಬೇಕೆಂಬ ಉಲ್ಲೇಖವಿದೆ. ಜ.19ರಂದು ಅನುಮತಿ ಪತ್ರ ಕೊಟ್ಟು, ಐದು ಷರತ್ತುಗಳನ್ನು ಹಾಲಾಗಿದೆ. ಕೆಂಪೇಗೌಡರ, ಕುವೆಂಪು ಪ್ರತಿಮೆಗಳಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ಮಾಹಿತಿ ಇದೆ. ಇದೆಲ್ಲ ಸಂಗತಿಗಳನ್ನು ಸೃಷ್ಟಿ ಮಾಡಿಕೊಳ್ಳಲಾಗಿದೆ. ನಾನು ಬೆಂಕಿ ಹಚ್ಚಿ, ಫ್ಲೆಕ್ಸ್ ಹರಿಯಿರಿ ಎಂದು ಯಾರಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು. +ಡಿ.20ರಂದು ಕೆರಗೋಡು ಗ್ರಾಮಸ್ಥರು ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದಾರೆ. ಜ.26ರಂದು ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮಸ್ಥರೇ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಈ ಧ್ವಜ ಸ್ತಂಭವನ್ನು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉದ್ಘಾಟಿಸಿದ್ದರು. ಈಗ ಶಾಸಕರನ್ನು ಧ್ವಜಸ್ತಂಭ ಉದ್ಘಾಟನೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. +ರಾಜಕೀಯ ಲಾಭಕ್ಕಾಗಿ ನಾನು ಮಂಡ್ಯಕ್ಕೆ ಹೋಗಿದ್ದರೆ, ಗ್ರಾಮಪಂಚಾಯ್ತಿ ಪಿಡಿಒ ಅವರನ್ನು ಏಕೆ ಅಮಾನತು ಮಾಡಿದ್ದೀರಿ? ಅಮಾನತು ಆದೇಶ ಹೊರಬೀಳುವ ಮುನ್ನವೇ ಮಂಡ್ಯ ಶಾಸಕರು ಅಮಾನತು ಮಾಡುವುದಾಗಿ ಹೇಳಿಕೆ ನೀಡುತ್ತಾರೆ. ಪೊಲೀಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಳ್ಳಲಾಗಿದೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದರು. diff --git a/eesanje/url_46_249_2.txt b/eesanje/url_46_249_2.txt new file mode 100644 index 0000000000000000000000000000000000000000..5075ae6832c75d990615d6c65b2455657bad05e0 --- /dev/null +++ b/eesanje/url_46_249_2.txt @@ -0,0 +1,6 @@ +ನಾವು ಹಿಂದೂ ವಿರೋಧಿಗಳಲ್ಲ : ಸಚಿವ ಚಲುವರಾಯಸ್ವಾಮಿ +ಬೆಂಗಳೂರು, ಫೆ.1-ನಾವು ಹಿಂದೂ ವಿರೋಧಿಗಳಲ್ಲ ಎಂದು ಸ್ಪಷ್ಟಪಡಿಸಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಇತಿಹಾಸವನ್ನೂ ನೋಡಿ, ನಮ್ಮ ಇತಿಹಾಸವನ್ನೂ ನೀವು ನೋಡಿ. ಮಂಡ್ಯ ಜನರು ದೇವೇಗೌಡರಿಗೆ ಸಹಕಾರ ನೀಡಿದ್ದಾರೆ ಎಂದರು. +ರಾಷ್ಟ್ರಧ್ವಜ, ಕನ್ನಡ ಧ್ವಜ ಅಷ್ಟೇ ಇರುವುದು. ಈ ಎರಡು ಧ್ವಜ ಹಾರಿಸುವುದಾಗಿ ಒಪ್ಪಿಗೆ ಪಡೆದಿದ್ದರು. ಆದರೆ, ಅವರು ಮಾಡಿದ್ದು ಏನು? ಎಂದು ಪ್ರಶ್ನಿಸಿದರು. ಜ.26 ರಂದು ರಾಷ್ಟ್ರಧ್ವಜವನ್ನು ಅವರೇ ಹಾರಿಸಿದ್ದಾರೆ. ಅಂದು ಸಂಜೆ ಅವರೇ ಕೆಳಗಿಳಿಸಿದ್ದಾರೆ. ನಂತರ ಬೇರೆ ಧ್ವಜ ಹಾರಿಸುವ ಪ್ರಯತ್ನ ನಡೆಸಿದ್ದಾರೆ. ನಮ್ಮ ನೆಮ್ಮದಿ ಹಾಳು ಮಾಡಬೇಡಿ ಎಂದು ಮಂಡ್ಯದ ಜನ ಹೇಳುತ್ತಿದ್ದಾರೆ. ಪ್ರತಿಪಕ್ಷಗಳು ಜನರನ್ನು ಪ್ರೊಚೋದಿಸುತ್ತಿವೆ. ಮಂಡ್ಯದ ಜನ ಯಾರನ್ನೂ ಬೆಂಬಲಿಸಿಲ್ಲ. ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜಕೀಯ ಲಾಭಕ್ಕಾಗಿ ಈ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆರೋಪಿಸಿದರು. +ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ +ಗ್ರಾಮ ಪಂಚಾಯ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿ ಸಾಧ್ಯವೇ? ದಾಖಲೆ ಕಚೇರಿಯಲ್ಲಿರುತ್ತದೆ, ಮನೆಗೆ ಯಾಕೆ ಹೋಗುತ್ತದೆ ಎಂದು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿರೀಕ್ಷೆಯಂತೆ ಕೇಂದ್ರ ಸರ್ಕಾರ ಚುನಾವಣಾ ಬಜೆಟ್ ಮಂಡಿಸುತ್ತದೆ. ನಮ್ಮ ಗ್ಯಾರೆಂಟಿಯನ್ನು ಅವರು ಅನುಕರಣೆ ಮಾಡುತ್ತಾರೆ. ಕಳೆದ 10 ವರ್ಷಗಳಿಂದ ಹೇಳಿಕೊಳ್ಳುವ ಸಾಧನೆ ಏನೂ ಮಾಡಿಲ್ಲ ಎಂದರು. +ಆಗಸ್ಟ್ 27 ರಂದು ಕೇಂದ್ರ ಸರ್ಕಾರಕ್ಕೆ ಬರಪರಿಹಾರದ ಬಗ್ಗೆ ಮನವಿ ಸಲ್ಲಿಸಿ ಎನ್‍ಡಿಆರ್‍ಎಫ್ ನೆರವು ಕೋರಿದ್ದರೂ ಇಲ್ಲಿಯವರೆಗೆ ಅದರ ಅನುದಾನ ಬಂದಿಲ್ಲ. ನಾವು ಪ್ರಧಾನಿ, ಕೇಂದ್ರ ಸಚಿವರನ್ನು ಈ ಸಂಬಂಧ ಭೇಟಿ ಮಾಡಿ ಮನವಿ ಮಾಡಿದರೂ ರೈತರ ಬೆಳೆ ನಷ್ಟ ಪರಿಹಾರ ಕೊಟ್ಟಿಲ್ಲ. ಇಂತಹ ಕೆಟ್ಟ ತೀರ್ಮಾನವನ್ನು ಎಲ್ಲೂ ನೋಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_249_3.txt b/eesanje/url_46_249_3.txt new file mode 100644 index 0000000000000000000000000000000000000000..e37a89c4a5477cedc8b6cf0a931813db344f5121 --- /dev/null +++ b/eesanje/url_46_249_3.txt @@ -0,0 +1,13 @@ +ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ +ಬೆಂಗಳೂರು, ಜ.24- ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಟ್ಸ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಮನ್ನಣೆ ಪಡೆದಿದ್ದ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದು ಸೇವೆಯಿಂದ ನಿವೃತ್ತರಾದರು. +ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ವಿಶ್ವದ ಭೂಪಟದಲ್ಲಿ ಗುರುತಿಸುವ ಮಟ್ಟಕ್ಕೆ ಜಯದೇವ ಆಸ್ಪತ್ರೆ ಖ್ಯಾತಿ ಪಡೆದಿದೆ. ಸುಮಾರು 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಆಸ್ಪತ್ರೆ ದಾಖಲೆ ನಿರ್ಮಿಸಿದೆ. +ಪಕ್ಷಾತೀತವಾಗಿ ಮಂಜುನಾಥ್ ಅವರ ಸೇವೆಯನ್ನು ಪ್ರಶಂಸಿಸಲಾಗುತ್ತದೆ. ನಿರಂತರವಾಗಿ ಅಭಿವೃದ್ಧಿ ಹೊಂದಿದ ಆಸ್ಪತ್ರೆಯು ರೋಗಿಗಳ ಪಾಲಿನ ಸಂಜೀವಿನಿಯಾಗಿದೆ. ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ಸರ್ಕಾರಿ ಆಸ್ಪತ್ರೆ ಹೆಸರಾಗಿದೆ. +ಭಾರತದ ಯಾವುದೇ ಆಸ್ಪತ್ರೆಯಲ್ಲಿ ಇಲ್ಲದಷ್ಟು 125 ಹೃದ್ರೋಗ ತಜ್ಞರು ಜಯದೇವ ಆಸ್ಪತ್ರೆಯಲಿದ್ದಾರೆ. 2022ರ ಅಧ್ಯಯನದಲ್ಲಿ ಟಾಪ್ 5 ಸೆಂಟರ್ಗಳ ಪೈಕಿ ನಂಬರ್ 1 ಸ್ಥಾನದಲ್ಲಿ ಜಯದೇವ ಆಸ್ಪತ್ರೆ ಇದೆ. 300 ಹಾಸಿಗೆ ಸಾಮಥ್ರ್ಯವಿದ್ದ ಆಸ್ಪತ್ರೆಯು ಮಂಜುನಾಥ್ ಅವರ ಆಡಳಿತ ಅವಧಿಯಲ್ಲಿ 2 ಸಾವಿರ ಹಾಸಿಗೆ ಸಾಮಥ್ರ್ಯಕ್ಕೆ ಹೆಚ್ಚಳವಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿದೆ. +ಕಳೆದ ಮೇ ತಿಂಗಳಲ್ಲಿ ಕೇಂದ್ರೀಯ ಸಂಸದೀಯ ಸಂಸ್ಥೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಇಲ್ಲಿನ ಚಿಕಿತ್ಸೆ ಕಂಡು ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಜಯದೇವ ಆಸ್ಪತ್ರೆ ಮಾದರಿ ಅಂದಿತ್ತು. ಜಯದೇವ ಹೃದ್ರೋಗ ಸಂಸ್ಥೆ ಮೈಸೂರಲ್ಲಿ ನಿರ್ಮಾಣಗೊಂಡಿದೆ. ಬೆಂಗಳೂರು ಮಧ್ಯಭಾಗ ಮಲ್ಲೇಶ್ವರದಲ್ಲೂ ಸ್ಯಾಟಲೈಟ್ ಸೆಂಟರ್ ತೆರೆದಿದ್ದೇವೆ. ಇಎಸ್ಐ ಆಸ್ಪತ್ರೆಯಲ್ಲೂ ಶಾಖೆಯನ್ನು ತೆರೆದಿದೆ. +3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ +ಕಲ್ಯಾಣ ಕರ್ನಾಟಕದಲ್ಲಿ 135 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಕಾಮಗಾರಿ ಶೇ. 85ರಷ್ಟು ಪೂರ್ಣಗೊಂಡಿದ್ದು, ಏಪ್ರಿಲ್ನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಸೇವಾ ನಿವೃತ್ತಿಯಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ ನಿನ್ನೆ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದಿಸಿದರು. +ಈ ವೇಳೆ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಈ ಆಸ್ಪತ್ರೆ ಸೇವೆ ಸಲ್ಲಿಸುತ್ತಿದೆ. ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳೆಸಲಾಗಿದೆ. ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ ಎಂದು ಮನದಾಳದ ಮಾತನ್ನು ಹಂಚಿಕೊಂಡರು. +ಕರ್ನಾಟಕ ರತ್ನ ಪ್ರಶಸ್ತಿಗೆ ಅಶೋಕ್ ಆಗ್ರಹ :ಬೆಂಗಳೂರು,ಜ.31- ನಾಡಿನ ಖ್ಯಾತ ವೈದ್ಯ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸುದೀರ್ಘ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. +ಈ ಕುರಿತಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಡಾ. ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಎಂದರೆ ಅತಿಶಯೋಕ್ತಿಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ. +ಬಡರೋಗಿಗಳ ಪಾಲಿನ ಆಶಾಕಿರಣವಾಗಿ ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊ ರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ ಎಂದು ಬಣ್ಣಿಸಿದ್ದಾರೆ.ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಆರ್. ಅಶೋಕ್ ಮನವಿ ಮಾಡಿದ್ದಾರೆ. +ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾ ಅವ ಜನವರಿ 31 ಕ್ಕೆ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ.ಡಾ. ಸಿ.ಎನ್. ಮಂಜುನಾಥ್ 2007ರಿಂದ ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವ ಮುಕ್ತಾಯವಾಗಿತ್ತು. ಹಾಗಿದ್ದರೂ ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವು ಗಣ್ಯರು ಅವರ ಸೇವೆಯನ್ನು ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರಿಂದ ಸರ್ಕಾರ ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಿತ್ತು. \ No newline at end of file diff --git a/eesanje/url_46_249_4.txt b/eesanje/url_46_249_4.txt new file mode 100644 index 0000000000000000000000000000000000000000..654337ab2fc6a65193aaf439dcfb71b4ed11e170 --- /dev/null +++ b/eesanje/url_46_249_4.txt @@ -0,0 +1,11 @@ +3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ +ಹುಬ್ಬಳ್ಳಿ,ಜ.31- ಕಂದಾಯ ಇಲಾಖೆಯ ದಾಖಲಾತಿ ಕೊಠಡಿಯಲ್ಲಿರುವ ಎಲ್ಲಾ ದಾಖಲಾತಿಗಳನ್ನು ಮೂರು ತಿಂಗಳೊಳಗಾಗಿ ಡಿಜಿಟಲೀಕರಣಗೊಳಿಸಲು ರಾಜ್ಯದ 31 ತಾಲೂಕುಗಳಲ್ಲಿ ಭೂ ಸುರಕ್ಷಾ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳಲ್ಲಿ ತಲಾ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ಈ ವಾರಾಂತ್ಯದೊಳಗಾಗಿ ಭೂ ಸುರಕ್ಷಾ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಕಂಪ್ಯೂಟರ್, ಸ್ಕ್ಯಾನರ್, ಡೇಟಾ ಎಂಟ್ರಿ ಆಪರೇಟರ್ಗಳನ್ನು ಸರ್ಕಾರಿ ವೆಚ್ಚದಲ್ಲೇ ನೀಡಲಾಗಿದೆ ಎಂದು ಹೇಳಿದರು. +ನೂರಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ದಾಖಲೆಗಳನ್ನು ಸಂರಕ್ಷಿಸುವುದು, ಡಿಜಟಲೀಕರಣಗೊಳಿಸುವುದು ಮತ್ತು ಸಾರ್ವಜನಿಕರಿಗೆ ಮುಕ್ತವಾಗಿ ದೊರೆಯುವಂತೆ ಮಾಡುವುದು ಇದರ ಉದ್ದೇಶ. ಹಳೆಯ ದಾಖಲೆಗಳನ್ನು ತಿದ್ದುವುದು, ನಾಶಪಡಿಸುವುದು, ಕಳೆದು ಹಾಕುವುದು ಸೇರಿದಂತೆ ನಾನಾ ರೀತಿಯ ಚಟುವಟಿಕೆಗಳು ನಡೆಯುತ್ತಿವೆ. +ಬೆಳಗಾವಿಯಲ್ಲಿ ಡಬಲ್ ಮರ್ಡರ್ : ಪತ್ನಿ , ಪ್ರಿಯಕರನ ಕೊಂದು ಪತಿ ಪರಾರಿ +ಕಾಗದದ ಸ್ವರೂಪದಲ್ಲಿರುವ ಭೌತಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವುದರಿಂದ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಲಭ್ಯ ಮಾಡುವುದರಿಂದ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಮಧ್ಯವರ್ತಿಗಳ ಮತ್ತು ಅಕ್ರಮಗಳ ಹಾವಳಿ ತಪ್ಪಲಿದೆ ಎಂದರು. +ಉಪನೋಂದಾವಣಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇದನ್ನು ತಪ್ಪಿಸಲು ವ್ಯವಸ್ಥೆಯಲ್ಲೇ ಸುಧಾರಣಾ ಮಾರ್ಗಗಳನ್ನು ಕಂಡುಹಿಡಿಯಲಾಗುತ್ತಿದೆ. ಎಲ್ಲಾ ಕಚೇರಿಗಳಿಗೂ ಭೇಟಿ ನೀಡಿ ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು ಸುಲಭದ ವಿಷಯವಲ್ಲ. ಅದಕ್ಕಾಗಿ ಆಡಳಿತ ತಂತ್ರಜ್ಞಾನ ಹಾಗೂ ಸಮಗ್ರ ಬದಲಾವಣೆಗೆ ಚಿಂತನೆ ನಡೆದಿದೆ. +ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಚರ್ಚಿಸಿ ಒಂದು ವ್ಯವಸ್ಥೆಯನ್ನು ವಿನ್ಯಾಸಗೊಳಿಸಲಾಗಿದೆ. ಮುಂದಿನ ತಿಂಗಳಿನಿಂದಲೇ ಇದನ್ನು ಜಾರಿಗೊಳಿಸುವ ಸಾಧ್ಯತೆಯಿದೆ ಎಂದು ಹೇಳಿದರು. ರಾಜ್ಯದಲ್ಲಿ ಭೂ ಸರ್ವೆ ಪ್ರಕರಣಗಳು ಹಲವು ವರ್ಷಗಳಿಂದಲೂ ಬಾಕಿ ಉಳಿದಿವೆ. ವ್ಯಾಪಕ ದೂರುಗಳೂ ಈ ಬಗ್ಗೆ ಕೇಳಿಬರುತ್ತಿವೆ. ಅದನ್ನು ಸರಿಪಡಿಸಲು 20 ಕೋಟಿ ರೂ. ವೆಚ್ಚದಲ್ಲಿ ಸರ್ವೆ ಇಲಾಖೆಗೆ ಆಧುನಿಕ ಸಲಕರಣೆಗಳನ್ನು ಪೂರೈಸಲಾಗುತ್ತದೆ. 750 ಪರವಾನಗಿ ಪಡೆದ ಸರ್ವೆಯರ್ಗಳಿಗೆ ಅನುಮತಿ ನೀಡಲಾಗುತ್ತಿದೆ. + +350 ಸರ್ವೆಯರ್ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಕೆಪಿಎಸ್ಸಿಯಿಂದ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಬಾಕಿ ಇರುವ 592 ಹುದ್ದೆಗಳಿಗೂ ನೇಮಕಾತಿ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಸುಮಾರು 2 ಸಾವಿರ ಸಿಬ್ಬಂದಿಗಳನ್ನು ನಿಯೋಜಿಸುವುದಾಗಿ ಹೇಳಿದರು. +ಕಂದಾಯ ಉಪನೋಂದಣಿ ಇಲಾಖೆಯನ್ನು ಕಾಗದ ರಹಿತ ಇಲಾಖೆಯನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ. ಇದರಿಂದಾಗಿ ಅಧಿಕಾರಿಗಳು ಕಡತವನ್ನು ಅನಗತ್ಯವಾಗಿ ನೆನೆಗುದಿಯಲ್ಲಿಟ್ಟುಕೊಳ್ಳುವುದು, ಜನರಿಂದ ಪ್ರತಿಫಲ ಬಯಸುವುದು, ಪ್ರಭಾವಿಗಳಷ್ಟೇ ಚುರುಕಾಗಿ ನಡೆಯುವುದು ಸೇರಿದಂತೆ ಹಲವು ಸಮಸ್ಯೆಗಳು ನಿವಾರಣೆಗೊಳ್ಳುತ್ತವೆ ಎಂದರು. \ No newline at end of file diff --git a/eesanje/url_46_249_5.txt b/eesanje/url_46_249_5.txt new file mode 100644 index 0000000000000000000000000000000000000000..efc6218c1f6c8a6fd85fc51bc4257acb10ce9551 --- /dev/null +++ b/eesanje/url_46_249_5.txt @@ -0,0 +1,7 @@ +ಬಿ.ಎಲ್.ಶಂಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಿ । ಮಲೆನಾಡು-ಕರಾವಳಿ ಒಕ್ಕೂಟ ಆಗ್ರಹ +ಬೆಂಗಳೂರು, ಜ.31- ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ, ಕಾಂಗ್ರೆಸ್ ವಕ್ತಾರ, ಸುೀರ್ ಮುರೋಳಿ ಅವರು,ಬಿ.ಎಲï. ಶಂಕರ್ ಹಿರಿಯ ರಾಜಕಾರಣಿಯಾಗಿದ್ದು, ಅವರು ಉತ್ತಮ ವಾಗ್ಮಿಯಾಗಿದ್ದಾರೆ. +ಈ ಹಿಂದೆ ಜನಮೆಚ್ಚುವ ಸಭಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದ ಯಾವುದೇ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ಈಗಿರುವ ಮಲೆನಾಡು, ಕರಾವಳಿ ಭಾಗದ ಸಂಸದರಾದ ಶೋಭಾ ಕರಂದ್ಲಾಜೆ, ರಾಘವೇಂದ್ರ ಅವರು ಯಾವುದೇ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. +ಕಸ್ತೂರಿ ರಂಗನ್ ವರದಿ ಸಮಸ್ಯೆ ಕುರಿತಂತೆ ಸಮರ್ಥವಾಗಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ. ಹಾಗಾಗಿ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸಲು ಬಿ.ಎಲï.ಶಂಕರ್ ಸಮರ್ಥ ವ್ಯಕ್ತಿಯಾಗಿದ್ದಾರೆ. ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದರು. +ಸರ್ಕಾರದ ಅಧಿಕಾರಿಗಳು ಸಂವಿಧಾನ ಮತ್ತು ಜಾತ್ಯತೀತತೆಗೆ ಬದ್ಧರಾಗಿರಬೇಕು : ಡಿಕೆಶಿ ವಾರ್ನಿಂಗ್ +ಮಲೆನಾಡು ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅನೇಕ ಸಂದರ್ಭಗಳಲ್ಲಿ ಸರ್ಕಾರ ವಿಫಲಗೊಂಡಿವೆ. ಮಲೆನಾಡು ಕರಾವಳಿ ಭಾಗದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ತುಳುನಾಡು ಆಕಾಡೆಮಿ ಆಗುವ ಅವಶ್ಯಕತೆ ಇದೆ. ಜತೆಗೆ ಮಲೆನಾಡಿನಲ್ಲಿ ಆನೆಗಳ ಹಾವಳಿ ಸಮಸ್ಯೆಯಿಂದ ರೈತರು ನಲುಗಿ ಹೋಗಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೇಳಿದರು. +ಭಾರತದ ರಾಷ್ಟ್ರಧ್ವಜ ಹಾರಿಸಿದರೆ ಅದನ್ನು ಸಿ.ಟಿ.ರವಿ ಅವರು ತಾಲಿಬಾನ್ ಧ್ವಜವೆಂದು ಹೇಳುವುದು ಸರಿಯಲ್ಲ. ಧ್ವಜ ಹಾರಿಸುವ ವಿಚಾರ ಇಟ್ಟುಕೊಂಡು ಬಿಜೆಪಿಯವರು ಗಲಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅನಿಲ್ ಹೊಸಕೊಪ್ಪ, ಹಸಗೋಡು ನಾಗೇಶ್, ನವೀನ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_249_6.txt b/eesanje/url_46_249_6.txt new file mode 100644 index 0000000000000000000000000000000000000000..c9f05ef6d80978c2e4c2cc5a3958ffb011b774fd --- /dev/null +++ b/eesanje/url_46_249_6.txt @@ -0,0 +1,12 @@ +ಸರ್ಕಾರದ ಅಧಿಕಾರಿಗಳು ಸಂವಿಧಾನ ಮತ್ತು ಜಾತ್ಯತೀತತೆಗೆ ಬದ್ಧರಾಗಿರಬೇಕು : ಡಿಕೆಶಿ ವಾರ್ನಿಂಗ್ +ಬೆಂಗಳೂರು,ಜ.31- ಸರ್ಕಾರದ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಸಂಪೂರ್ಣ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು. +ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು. ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು. +ಸರ್ಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ನೀಡುವಂತೆ ಸೂಚಿಸಿದರು. +ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕಾರ್ಯದರ್ಶಿ ಹಂತದ ಅಧಿಕಾರಿಗಳ ಅನುಭವ ಎಷ್ಟು ನೆರವಾಗಿದೆ ಎಂದು ಕೇಳಿ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಂಪೂರ್ಣವಾಗಿ ತಲುಪಲು ಆಗದಿರುವ ತಾಂತ್ರಿಕ ಸಮಸ್ಯೆ ಗಳನ್ನು ಏಕೆ ಬಗೆಹರಿಸಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು. +ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಕೆಲವರು ಅದರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 5 ಮಹತ್ವಾಕಾಂಕ್ಷಿ ಯೋಜನೆಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳ ಅರ್ಜಿ ತಿರಸ್ಕರಿಸುವ ಮುನ್ನ ಸ್ಪಷ್ಟ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು. +ಸಾರ್ವಜನಿಕರು ಕಂದಾಯ ಇಲಾಖೆ, ತಹಶೀಲ್ದಾರ್ ಮತ್ತು, ಎಸಿ ಮತ್ತು ಡಿಸಿ ಕಚೇರಿಗಳಿಗೆ ಅಲೆದಾಡುವುದನ್ನು ಕಡಿಮೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಕಾರಿಗಳೇ ಖುದ್ದು ಸ್ಪಂದಿಸಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪದೇಪದೇ ಪ್ರಗತಿ ಪರಿಶೀಲನೆ ನಡೆಸಿ, ಎಷ್ಟು ಅರ್ಜಿಗಳು ಬಾಕಿ ಉಳಿದಿವೆ, ಎಷ್ಟು ಬಗೆಹರಿದಿವೆ ಎಂಬ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು. +ಕಾರ್ಯದರ್ಶಿ ಹಂತದ ಅಧಿಕಾರಿಗಳು ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಡಯಾಲಿಸಿಸ್ ಕೇಂದ್ರಗಳಲ್ಲಿ ಜನರಿಗೆ ಸಮರ್ಪಕ ಸೇವೆ ಸಿಗುತ್ತಿದೆಯೇ ಎಂದು ಪರಿಶೀಲಿಸಿದ್ದಾರೆಯೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳ ಇತ್ಯರ್ಥಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಸೂಚನೆ ನೀಡಲಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಅರ್ಜಿಗಳ ವಿಲೇವಾರಿ ಸಮಾಧಾನಕರವಾಗಿವೆ. ಇದನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಸಲಹೆ ನೀಡಿದರು. +ಸರ್ಕಾರಿ ಕಚೇರಿಗಳಿಗೆ, ಹಾಸ್ಟೆಲ್‍ಗಳಿಗೆ, ಪೊಲೀಸ್ ಠಾಣೆಗಳಿಗೆ, ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ. ಕೋಲಾರದ ಹಾಸ್ಟೆಲ್‍ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಏಕೆ ಸೃಷ್ಟಿ ಆಯಿತು? ಅಧಿಕಾರಿಗಳು ಈ ಬಗ್ಗೆ ಏಕೆ ನಿಗಾ ವಹಿಸಲಿಲ್ಲ. ಇಂತಹ ಘಟನೆಗಳು ಮರುಕಳಿಸಿದರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. +ಕುತೂಹಲ ಕೆರಳಿಸಿದ ಕುಮಾರಸ್ವಾಮಿ-ಸೋಮಣ್ಣ ಭೇಟಿ +ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯ ಅಕಾರಿಗಳು- ಫಲಾನುಭವಿಗಳ ಜತೆ ಸತತ ಸಂಪರ್ಕದಲ್ಲಿರಬೇಕು. ಜನ ಸಂಪರ್ಕದ ಇಲಾಖೆಗಳಾದ ಕೃಷಿ, ಕಂದಾಯ, ಪೊಲೀಸ್ ಇಲಾಖೆಗಳ ಮೇಲೆ ನಿಗಾ ವಹಿಸಬೇಕು. ನಿಮ್ಮ ಅವಯಲ್ಲಿ ಆಡಳಿತಾತ್ಮಕವಾಗಿ ಆದ ಬೆಳವಣಿಗೆಗಳ ಬಗ್ಗೆ ಹಾಗೂ ಉತ್ತಮ ಅಭ್ಯಾಸಗಳನ್ನು ಅನುಸರಿಸಿದ ಬಗ್ಗೆ ವರದಿ ನೀಡುವಂತೆ ಸೂಚಿಸಿದರು. +ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ಧತೆ ಹಾಗೂ ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಯಬೇಕು. ಮುಖ್ಯಕಾರ್ಯದರ್ಶಿಗಳವರೆಗೂ ದೂರುಗಳು ಬಂದರೆ ಸರ್ಕಾರ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_249_7.txt b/eesanje/url_46_249_7.txt new file mode 100644 index 0000000000000000000000000000000000000000..9541b852990541057caa2c9227731a7829889aaa --- /dev/null +++ b/eesanje/url_46_249_7.txt @@ -0,0 +1,10 @@ +ರಾಜ್ಯದ 40ಕ್ಕೂ ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ +ಬೆಂಗಳೂರು, ಜ.31- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಜ್ಯದ 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಇಂದು ಬೆಳಿಗ್ಗೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಸಂಬಂಧಿಗಳಿಗೂ ಶಾಕ್ ನೀಡಿದ್ದಾರೆ. +ಸಾಂಸ್ಕøತಿಕ ನಗರಿ ಮೈಸೂರಿನ ಜೆ.ಪಿ.ನಗರದಲ್ಲಿರುವ ಮುಡಾ ಎಂಜಿನಿಯರ್ ಯಜ್ನೇಂದ್ರ ಮನೆಗೆ ಲೋಕಾಯುಕ್ತ ಪೊಲೀಸರು ಬಂದು ಕದ ತಟ್ಟುತ್ತಿದ್ದಂತೆ ನಿದ್ದೆ ಕಣ್ಣಿನಲ್ಲಿದ್ದ ಮನೆಯವರಿಗೆ ಯಾರು ಬಂದಿದ್ದಾರೆ ಎಂದು ತಿಳಿಯಲಿಲ್ಲ. ನಂತರ ಗಾಬರಿಗೊಂಡಿದ್ದಾರೆ. ವಿಜಯನಗರದ ಅಪಾರ್ಟ್‍ಮೆಂಟ್ ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ನೇಂದ್ರ ಅವರ ಸಹೋದರನ ಮನೆ ಮೇಲೂ ದಾಳಿ ನಡೆದಿದ್ದು, ನಗದು ಹಣ, ಚಿನ್ನಾಭರಣ, ಹಲವೆಡೆ ನಿವೇಶನಗಳ ಖರೀದಿ ಪತ್ರಗಳು ಸೇರಿದಂತೆ ಹಲವು ಬೆಲೆಬಾಳುವ ವಾಚ್ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಲೋಕಾ ಎಸ್‍ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. +ಭ್ರಷ್ಟಾಚಾರ ಸೂಚ್ಯಂಕದಲ್ಲಿ ಭಾರತಕ್ಕೆ 93ನೇ ಸ್ಥಾನ +ಮಂಡ್ಯದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹರ್ಷ ಅವರ ಕಚೇರಿ, ಮಂಡ್ಯದಲ್ಲಿರುವ ಮನೆ ಹಾಗೂ ಕಲ್ಲಹಳ್ಳಿಯಲ್ಲಿರುವ ಮಾವನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಮನೆಯಿದ್ದು, ಅಲ್ಲೂ ಪರಿಶೀಲನೆ ನಡೆಸಲಾಗಿದೆ. ನಾಗಮಂಗಲದಲ್ಲಿರುವ ಫಾರ್ಮ್‍ಹೌಸ್ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. +ಹಾಸನದಲ್ಲಿ ಆಹಾರ ನೀರಿಕ್ಷಕ ಜಗನ್ನಾಥ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಇವರ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್‍ಪಿ ಮಲ್ಲಿಕ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಾಲ್ಕಕ್ಕೂ ಹೆಚ್ಚು ಕಡೆ ಪರಿಶೀಲನಾ ಕಾರ್ಯ ಕೈಗೊಂಡಿದ್ದು, ಹಲವೆಡೆ ಕೃಷಿ ಜಮೀನು, ಫೈನಾನ್ಸ್ , ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಿರುವುದು ಗೊತ್ತಾಗಿದ್ದು, ಹಲವು ಕಾಗದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. +ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಕಾರಿಯಾಗಿರುವ ನೇತ್ರಾವತಿ ಅವರಿಗೆ ಲೋಕಾ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಡೂರಿನಲ್ಲಿರುವ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು, 5 ಲಕ್ಷ ನಗದು ಹಣ, ವಿವಿಧೆಡೆ ಚರ-ಚಿರ ಆಸ್ತಿ, 900 ಗ್ರಾಂ. ಚಿನ್ನಾಭರಣ, ಒಂದು ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದು , ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. +ತುಮಕೂರಿನಲ್ಲೂ ಕೆಆರ್‍ಐಡಿಎಲ್‍ನಲ್ಲಿ ಸಹಾಯಕ ಎಂಜಿನಿಯರ್ ಹನುಮಂತರಾಯಪ್ಪ ಅವರ ಶಿರಾ ಗೇಟ್ ಬಳಿಯ 80 ಅಡಿ ರಸ್ತೆಯಲ್ಲಿರುವ ಮನೆ ಮೇಲೆ ಒಟ್ಟು 14 ಜನರ ಲೋಕಾಯುಕ್ತ ಅಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ.ಮಂಗಳೂರಿನಲ್ಲಿ ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಶಾಂತಕುಮಾರ್ ಅವರ ಅತ್ತಾವರದಲ್ಲಿರುವ ಕಚೇರಿ, ಮನೆ ಮೇಲೆ ಲೋಕಾ ದಾಳಿ ನಡೆದಿದ್ದು, ನಗದು, ಚಿನ್ನಾಭರಣ ಪತ್ತೆಯಾಗಿದೆ. ಬೆಂಗಳೂರಿನಲ್ಲೂ ಇವರ ಮನೆ ಇರುವುದು ಗೊತ್ತಾಗಿದೆ. ಹಲವೆಡೆ ನಿವೇಶನ ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಿರುವುದು ಕಂಡುಬಂದಿದೆ. ಹಲವು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ. +ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಜೆಸ್ಕಾಂನಲ್ಲಿ ಎಂಜಿನಿಯರ್ ಆಗಿರುವ ಸುರೇಶ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗದು ಹಣ, ಕೆಲವೆಡೆ ಖರೀದಿಸಿರುವ ಜಮೀನು ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. +ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಪೊಲೀಸರು ಸಂಡೂರಿನ ಸ್ನಾತಕೋತ್ತರ ಕೇಂದ್ರ (ಪಿಜಿ)ದ ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಅವರ ಕಚೇರಿ, ಮನೆ, ದಾವಣಗೆರೆಯಲ್ಲಿರುವ ಮತ್ತೊಂದು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಸ್‍ಪಿ ಸಿದ್ದರಾಜು ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ವೇಳೆ ಅಪಾರ ಪ್ರಮಾಣದ ನಗದು, ಕೆಲ ಆಸ್ತಿ ಪತ್ರಗಳು ಪತ್ತೆಯಾಗಿವೆ. \ No newline at end of file diff --git a/eesanje/url_46_249_8.txt b/eesanje/url_46_249_8.txt new file mode 100644 index 0000000000000000000000000000000000000000..899ccd6c3e53dada609d908b5a154ae761c24587 --- /dev/null +++ b/eesanje/url_46_249_8.txt @@ -0,0 +1,6 @@ +ರಾಜ್ಯ ಗುಪ್ತವಾರ್ತೆಯ ಮೂವರು ಅಧಿಕಾರಿಗಳು ಸೇರಿ 8 ಮಂದಿ ಅಧಿಕಾರಿಗಳ ವರ್ಗಾವಣೆ +ಬೆಂಗಳೂರು,ಜ.31- ರಾಜ್ಯ ಗುಪ್ತವಾರ್ತೆಯ ಮೂವರು ಅಧಿಕಾರಿಗಳು ಸೇರಿದಂತೆ 8 ಮಂದಿ ಎಸ್‍ಪಿ ವೃಂದದ(ನಾನ್-ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. +ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿದ್ದ ಶೃತಿ ಎಸ್.ಎಂ ಅವರಿಗೆ ಬೆಳಗಾವಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅೀಕ್ಷಕರ ಹುದ್ದೆ , ಕರಿಬಸವನಗೌಡ.ಎಸ್.ಪಿ ಅವರಿಗೆ ವಿಧಾನಸೌಧ ಭದ್ರತೆ ವಿಭಾಗದ ಪೊಲೀಸ್ ಅಧೀಕ್ಷಕರ ಹುದ್ದೆಗೆ ನಿಯೋಜಿಸಲಾಗಿದೆ. +ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ದಕ್ಷಿಣ ಕನ್ನಡ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗೆ, ರವಿಶಂಕರ್ ಸಿ.ಆರ್ ಅವರನ್ನು ಕೋಲಾರ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ಹಾಗೂ ಪ್ರವೀಣ್ ಹೆಚ್.ನಾಯಕ್ ಅವರನ್ನು ಕಲಬುರಗಿ ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. +ಹನುಮ ಧ್ವಜ ಇಳಿಸಿದಂತೆ ಹಿಂದೂಗಳು ನಿಮ್ಮನ್ನೂ ಕುರ್ಚಿಯಿಂದ ಇಳಿಸುತ್ತಾರೆ : ಆರ್.ಅಶೋಕ್ +ಎ.ಆರ್.ಕರ್ನೂಲ್ ಅವರನ್ನು ಕಲಬುರಗಿಯಲ್ಲಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರ ಹುದ್ದೆಗೆ, ಚನ್ನವೀರಪ್ಪ ಬಿ ಹಡಪದ್ ಅವರನ್ನು ಬೆಂಗಳೂರು ನಗರ ಸಿಎಆರ್(ದಕ್ಷಿಣ) ಉಪ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದೆ.ಎಂ.ಎ.ನಟರಾಜ ಅವರನ್ನು ಡಿಜಿ ಮತ್ತು ಐಜಿಪಿ ಅವರ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. \ No newline at end of file diff --git a/eesanje/url_46_249_9.txt b/eesanje/url_46_249_9.txt new file mode 100644 index 0000000000000000000000000000000000000000..c10dc6969a548e572c648a8f115585eb9410bb72 --- /dev/null +++ b/eesanje/url_46_249_9.txt @@ -0,0 +1,6 @@ +73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವುದು ಅಸಂವಿಧಾನಿಕ : ಆರ್.ಅಶೋಕ್ +ಬೆಂಗಳೂರು,ಜ.31- ಕಾನೂನನ್ನು ಗಾಳಿಗೆ ತೂರಿ 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವುದು ಅಸಂವಿಧಾನಿಕವಾಗಿದ್ದು, ಕೂಡಲೇ ಇದನ್ನು ರದ್ದು ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. +ಈ ಕುರಿತು ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಹೊಟ್ಟೆಗೆ ಹಿಟ್ಟಿಲ್ಲ. ಜುಟ್ಟಿಗೆ ಮಲ್ಲಿಗೆ ಎಂಬಂತೆ ರೈತರ ಬರ ಪರಿಹಾರಕ್ಕೆ, ಅಭಿವೃದ್ಧಿಗೆ ಹಣವಿಲ್ಲದಿರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. +135 ಶಾಸಕರಲ್ಲಿ 34 ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರು, ಸಲಹೆಗಾರರು, ದೆಹಲಿ ಪ್ರತಿನಿ ಸೇರಿದಂತೆ ಈಗ ಒಟ್ಟು 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗಿದ್ದು, ಗ್ಯಾರೆಂಟಿ ಜಾರಿ ಸಮಿತಿಯ 10 ಮಂದಿಗೂ ಸಂಪುಟ ದರ್ಜೆ ಸ್ಥಾನ ನೀಡಿದರೆ 80ಕ್ಕೂ ಹೆಚ್ಚು ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದ್ದಾರೆ. +2.8ಮಿಲಿಯನ್ ಅಮೆರಿಕನ್ ಡಾಲರ್ ವಂಚನೆ ಮಾಡಿದ್ದ ಭಾರತೀಯನಿಗೆ 9 ವರ್ಷ ಜೈಲು +ಅತೃಪ್ತ ಶಾಸಕರ ಬಂಡಾಯ ಶಮನ ಮಾಡಲಾಗದ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಬೇಕಾಬಿಟ್ಟಿ ಎಲ್ಲರಿಗೂ ಗೂಟದ ಕಾರು ನೀಡಿ ಸಮಾಧಾನ ಮಾಡುವ ಕಸರತ್ತು ಮಾಡುತ್ತಿದ್ದಾರೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. \ No newline at end of file diff --git a/eesanje/url_46_24_1.txt b/eesanje/url_46_24_1.txt new file mode 100644 index 0000000000000000000000000000000000000000..e1a33aa055a903d77a2e8f4ff4f8ff9663b764a4 --- /dev/null +++ b/eesanje/url_46_24_1.txt @@ -0,0 +1,8 @@ + : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ + .200 .500 +ಬೆಂಗಳೂರು,ಸೆ.9-ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. +ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆಗಸ್ಟ್‌ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. +5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್‌‍ಎಸ್‌‍) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಲಾಗಿದೆ. 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಿಸಲಾಗಿದೆ. +ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ಅದರಂತೆ, ಸರ್ಕಾರ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್‌‍ಎಸ್‌‍) ಸೌಲಭ್ಯ ಅನುಷ್ಠಾನ ಆಗುವವರೆಗೆ ಈ ವೈದ್ಯಕೀಯ ಸೌಲಭ್ಯ ಲಭ್ಯವಿರಲಿದೆ. +╰┈➤ +ನಗದು ರಹಿತ ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶ ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ. ಹಾಗೂ ನಗದುರಹಿತ (ಕೆಎಎಸ್‌‍ಎಸ್‌‍) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರ ಈ ಸೌಲಭ್ಯವನ್ನು ಪಡೆಯಲು ಅರ್ಹವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_24_10.txt b/eesanje/url_46_24_10.txt new file mode 100644 index 0000000000000000000000000000000000000000..22e35c41a51985c28e2d79560505e0f53ff7f83f --- /dev/null +++ b/eesanje/url_46_24_10.txt @@ -0,0 +1,6 @@ +ವಾಟ್ಸಾಪ್‌ ಸಂದೇಶ ನಂಬಿ ಖೆಡ್ಡಾಗೆ ಬಿದ್ದ ರೇಣುಕಾಸ್ವಾಮಿ + +ಬೆಂಗಳೂರು, ಸೆ.6– ಚಿತ್ರದುರ್ಗದ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ನಡುವೆ ನಡೆದ ವಾಟ್ಸಾಪ್‌ ಸಂದೇಶಗಳ ವಿವರಗಳನ್ನು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ. +ಇವರಿಬ್ಬರ ನಡುವೆ ಸುಮಾರು 65 ವಾಟ್ಸಾಪ್‌ ಸಂದೇಶಗಳು ರವಾನೆಯಾಗಿವೆ. ಆ ಪೈಕಿ ಅಶ್ಲೀಲ ಮೆಸೇಜ್‌ಗಳೂ ಇವೆ. ಈ ಎಲ್ಲ ಸಂದೇಶಗಳನ್ನೂ ಸಹ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್‌ಗಳಿಂದ ರಿಟ್ರೀವ್‌ ಮಾಡಿ ಎಫ್‌ಎಸ್‌‍ಎಲ್‌ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ. +ಮೊದಲು ಪವಿತ್ರಾಗೌಡ ಮತ್ತು ರೇಣುಕಾಸ್ವಾಮಿ ವಾಟ್ಸಾಪ್‌ ಚಾಟ್‌ ಮಾಡುತ್ತಿದ್ದರು. ತದನಂತರ ಪವಿತ್ರಾಗೌಡ ಈ ವಿಷಯವನ್ನು ದರ್ಶನ್‌ ಸ್ನೇಹಿತ ಪವನ್‌ಗೆ ಹೇಳಿದ್ದರು. ಪವನ್‌ ಪವಿತ್ರಾಗೌಡ ಹೆಸರಿನಲ್ಲಿ ವಾಟ್ಸಾಪ್‌ ಮಾಡಿ ಖೆಡ್ಡಾಗೆ ಬೀಳಿಸಿಕೊಂಡು ಆತನ ಊರು, ವಾಸಸ್ಥಳದ ವಿಳಾಸ ಪತ್ತೆಹಚ್ಚಿದನು. +ನಂತರ ಈ ವಿಷಯವನ್ನು ದರ್ಶನ್‌ಗೆ ತಿಳಿಸಿದ್ದಾನೆ. ದರ್ಶನ್‌ ಆತನನ್ನು ಅಪಹರಿಸಲು ಸಂಚು ರೂಪಿಸಿದ್ದರು. ಅದರಂತೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ನಗರದ ಪಟ್ಟಣಗೆರೆ ಶೆಡ್‌ಗೆ ಕರೆತಂದಿದ್ದರು. \ No newline at end of file diff --git a/eesanje/url_46_24_11.txt b/eesanje/url_46_24_11.txt new file mode 100644 index 0000000000000000000000000000000000000000..547aa9d77758ca2a8fa9bbb406d4d13bf56a321b --- /dev/null +++ b/eesanje/url_46_24_11.txt @@ -0,0 +1,6 @@ +ಸೆ.19 ರಂದು ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ + 19 +ಬೆಂಗಳೂರು, ಸೆ.6-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದ 19ನೇ ಸಚಿವ ಸಂಪುಟ ಸಭೆ ಕಲ್ಬುರ್ಗಿಯಲ್ಲಿ ನಡೆಯಲಿದೆ.ಸೆ.19ರಂದು ಸಂಜೆ 4 ಗಂಟೆಗೆ ಕಲ್ಬುರ್ಗಿಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸಚಿವ ಸಂಪುಟಸಭೆ ನಡೆಯಲಿದೆ ಎಂದು ಸರ್ಕಾರದ ಸಚಿವಾಲಯ ತಿಳಿಸಿದೆ. +ಈ ಮೊದಲು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲೇ ಹೆಚ್ಚಿನ ಸಚಿವ ಸಂಪುಟ ಸಭೆಗಳನ್ನು ನಡೆಸಿದರು.ಈ ಹಿಂದೆ ದೇವರಾಜು ಅರಸು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಸಂಪ್ರಾದಾಯಕ್ಕೆ ನಾಂದಿ ಹಾಡಿದ್ದರು. +ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಪ್ರಾದೇಶಿಕ ಅಸಮಾನತೆ ನಿವಾರಣೆ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಬೆಂಗಳೂರಿನಿಂದ ಬೇರೆಡೆಗೆ ವಿಕೇಂದ್ರಿಕರಣಗೊಳಿಸು ಕುರಿತು ಹಲವು ಚರ್ಚೆಗಳು ನಡೆದಿವೆ. ಅದರ ಭಾಗವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಲಾಗಿದ್ದು, ವರ್ಷಕ್ಕೊಮೆ ವಿಧಾನಮಂಡಳ ಅಧಿವೇಶನ ನಡೆಸಲಾಗುತ್ತಿದೆ. +ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಆ ಭಾಗದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ದೊರಕಿಸಬೇಕು ಎಂಬ ಬೇಡಿಕೆಗೆ ಬಹಳ ವರ್ಷಗಳ ಬಳಿಕ ಮನ್ನಣೆ ದೊರೆತ್ತಿದೆ. \ No newline at end of file diff --git a/eesanje/url_46_24_12.txt b/eesanje/url_46_24_12.txt new file mode 100644 index 0000000000000000000000000000000000000000..06c40a836cf8b48856a5bf871cb8e7aee19c385b --- /dev/null +++ b/eesanje/url_46_24_12.txt @@ -0,0 +1,10 @@ +ಕಳ್ಳತನ ಪ್ರಕರಣಗಳನ್ನು ಬೇಧಿಸುವ ಜೊತೆ, ನಿಯಂತ್ರಿಸಿ : ಅಧಿಕಾರಿಗಳಿಗೆ ಬಿ.ದಯಾನಂದ ಸೂಚನೆ + +ಬೆಂಗಳೂರು,ಸೆ.6-ಸರಗಳ್ಳತನ, ಮನೆಗಳ್ಳತನ, ವಾಹನಗಳ್ಳತನ ಸೇರಿದಂತೆ ಗಂಭೀರ ಕಳವು ಪ್ರಕರಣಗಳನ್ನು ಬೇಧಿಸುವ ಜೊತೆಗೆ ಕಳವು ನಿಯಂತ್ರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು. +ನಗರದ ಸಿಎಆರ್ ನಾರ್ಥ್ ಕವಾಯಿತು ಮೈದಾನದಲ್ಲಿ ಆಯೋಜಿಸಿದ್ದ ಮಾಸಿಕ ಕವಾಯತಿನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಸಿಪಿ ಮಟ್ಟದ ಅಧಿಕಾರಿಗಳಿಗೆ ತಮ ವ್ಯಾಪ್ತಿಯ ಅಪರಾಧಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕಾರಣೀಭೂತರಾದ ಅಂಶಗಳ ನಿಯಂತ್ರಣಕ್ಕೆ ಹಾಗೂ ಪರಿಹಾರೋಪಾಯಗಳು ಏನು ಎಂಬ ವರದಿ ನೀಡಬೇಕೆಂದು ಸೂಚಿಸಿದರು. +ಡಿಸಿಪಿ ನೇತೃತ್ವದಲ್ಲಿ ಅನುಷ್ಠಾನ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪರಾಧ ಪ್ರಕರಣಗಳನ್ನು ಬೇಧಿಸುವುದಷ್ಟೇ ಅಲ್ಲದೆ ನಿಯಂತ್ರಿಸಲು ಕ್ರಮ ವಹಿಸಬೇಕು, ಈಗಾಗಲೇ ನಾವು ಮಾಡಿರುವ ಕೆಲಸಗಳು ಸಾರ್ವಜನಿಕರ ಮನ್ನಣೆಗೆ ಪಾತ್ರವಾಗಿವೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. +ಮಳೆ ನೀರು ಇಂಗು ಗುಂಡಿ:ಇದೇ ವೇಳೆ ಸಿಎಆರ್ ನಾರ್ಥ್ ಕವಾಯತು ಮೈದಾನದಲ್ಲಿ ಮಳೆ ನೀರು ಕೊಯ್ಲು ಅಂಗವಾಗಿ ಇಂಗು ಗುಂಡಿ ತೋಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮುಂದಿನ ಕೆಲವು ತಿಂಗಳುಗಳಲ್ಲಿ 200ಕ್ಕೂ ಹೆಚ್ಚು ಇಂಗು ಗುಂಡಿಗಳನ್ನು ಇತರೆ ಪೊಲೀಸ್ ಕಚೇರಿಗಳ ಆವರಣದಲ್ಲಿ ಮಾಡಲಾಗುತ್ತದೆ ಎಂದರು. +ಪೊಲೀಸರು ಸಾರ್ವಜನಿಕರ ಸುರಕ್ಷತೆ, ರಕ್ಷಣೆ ಮತ್ತು ಶಾಂತಿ ಕಾಪಾಡುವುದರ ಜೊತೆಗೆ ಪರಿಸರದೊಂದಿಗೆ ಬದ್ದತೆ ತೋರಿಸುತ್ತಿರುವುದು ವಿಶೇಷ. ಸಾರ್ವಜನಿಕ ವಲಯದಲ್ಲೂ ಇದಕ್ಕೆ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು. +ಶೂನ್ಯ ತ್ಯಾಜ್ಯ:ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಈಗಾಗಲೇ ಶೂನ್ಯ ತ್ಯಾಜ್ಯ ಕಚೇರಿಯಾಗಿ ಘೋಷಿಸಲಾಗಿದೆ. ಯಾವ ರೀತಿ ಕಸವನ್ನು ವಿಂಗಡಿಸಬೇಕು, ವಿಲೇವಾರಿ ಮಾಡಬೇಕು ಎಂಬ ಬಗ್ಗೆ ಒಂದೂವರೆ ತಿಂಗಳಿನಿಂದ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.ಇದಕ್ಕೆ ಎನ್ಜಿಒ ಹಾಗೂ ವೇದಾಂತ್ ಟ್ರಸ್ಟ್ ಕೈ ಜೋಡಿಸಿರುವುದು ಶ್ಲಾಘನೀಯ. ಈ ಬಗ್ಗೆ ಅರಿವು ನೀಡಿ ಯೋಜನೆ ಸಫಲಗೊಳಿಸಲು ಸಹಕರಿಸಿರುವುದು ಪ್ರಶಂಸನೀಯ ಎಂದರು.ಮುಂದಿನ ದಿನಗಳಲ್ಲಿಯೂ ಇತರೆ ಪೊಲೀಸ್ ಕಚೇರಿಗಳಲ್ಲೂ ಇದೇ ರೀತಿ ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. +ಉತ್ತಮ ಪ್ರಶಂಸೆ:ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚಿನ ತನಿಖೆಗಳು, ಜನಪರ ಕಾರ್ಯಗಳಿಗೆ ಎಲ್ಲಾ ವೇದಿಕೆಗಳಲ್ಲೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಪೊಲೀಸರಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. +ಈ ಹಿಂದೆ ಪೊಲೀಸ್ ಠಾಣೆಗಳು ಕೇವಲ ಉಳ್ಳವರು, ಬಲಿಷ್ಠರಿಗೆ ಮಾತ್ರ ಎಂಬಂತಾಗಿತ್ತು. ಆದರೆ ಈಗ ಬಡವರ, ದುರ್ಬಲರ ರಕ್ಷಣೆಗಾಗಿ ಭದ್ರಕೋಟೆಯಾಗಿ ಪರಿವರ್ತನೆಯಾಗಿವೆ. ಠಾಣೆಗೆ ದೂರು ಕೊಡಲು ಬರುವವರ ಜೊತೆ ಸಂಯಮದಿಂದ ವರ್ತಿಸಿ ಸಮಸ್ಯೆ ಆಲಿಸಬೇಕು ಎಂದು ಅವರು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. ಇಂದಿನ ಮಾಸಿಕ ಕವಾಯತು ಬಹಳ ಅತ್ಯುತ್ತಮ ರೀತಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ ಡಿಸಿಪಿ ನಾಗರಾಜ್ ಅವರನ್ನು ನಗರ ಪೊಲೀಸ್ ಆಯುಕ್ತರು ಅಭಿನಂದಿಸಿದರು. \ No newline at end of file diff --git a/eesanje/url_46_24_2.txt b/eesanje/url_46_24_2.txt new file mode 100644 index 0000000000000000000000000000000000000000..1969d02097725963e0f2b92bbce0d78a330e8afc --- /dev/null +++ b/eesanje/url_46_24_2.txt @@ -0,0 +1,13 @@ +ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ + +ಬೆಂಗಳೂರು,ಸೆ.9-ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್‌ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. +ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್‌ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ. +ವಸಂತ್‌ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದರು. ಅವರು ಶೀರ್ಷಿಕೆಗಳ ಮೂಲಕವೇ ಮನೆಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. +╰┈➤ +ಅನಂತರ ಅವರು ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರಾದರೂ ಪುನಃ ತಮಗೆ ಕೆಲಸ ಕೊಟ್ಟಿದ್ದ ಮೊದಲ ಸಂಸ್ಥೆಯ ಮೇಲಿನ ಮಮಕಾರದಿಂದ ಮತ್ತೆ ಸಂಯುಕ್ತ ಕರ್ನಾಟಕಕ್ಕೆ ಹಿಂದಿರುಗಿದ್ದರು. ಸುದ್ದಿಯ ಮನೆಯಲ್ಲಿ ಸಾಮಾನ್ಯವಾಗಿ ಬರುವ ಒತ್ತಡದ ಸಮಯದಲ್ಲಿಯೂ ಸಮಾಧಾನದಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. +ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ, ಪತ್ರಿಕೋದ್ಯಮ ಕ್ಷೇತ್ರದತ್ತ ಒಲವು ಹೊಂದಿದ ವಸಂತ ನಾಡಿಗೇರ ಅವರು ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್‌ ಹಾಗೂ ನಾಡಿಗೇರ್‌ ಎನ್ನುವ ಹಾಸ್ಯ ಅಂಕಣ ಜನಪ್ರಿಯವಾಗಿತ್ತು. ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದ್ದವು. +ಗಣ್ಯರ ಸಂತಾಪ :ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಂತಾಪ ಸೂಚಿಸಿದ್ದಾರೆ. +ವಸಂತ ನಾಡಿಗೇರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮಾಯಿ ಅವರು, ಹಿರಿಯ ಪತ್ರಕರ್ತರು ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ಆಘಾತವಾಯಿತು. ಸದಾ ಹಸನುಖಿಯಾಗಿದ್ದ ಅವರು ನನಗೆ ಅತ್ಯಂತ ಆತೀಯರು ಸ್ನೇಹಪರ ವ್ಯಕ್ತಿಯಾಗಿದ್ದರು. +ಕನ್ನಡಪ್ರಭ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಉನ್ನತ ಹ್ದುೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ, ಅವರ ಆತಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ. +ಪತ್ರಕರ್ತ ವಸಂತ್‌ ನಾಡಿಗೇರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಪ್ರತಿಭಾನ್ವಿತರು, ಕ್ರಿಯಾಶೀಲರಾಗಿದ್ದ ಅವರು ಮಾಧ್ಯಮದ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಗುಣಗಾನ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. +ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು, ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ಅವರು ಸುಮಾರು 3 ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_24_3.txt b/eesanje/url_46_24_3.txt new file mode 100644 index 0000000000000000000000000000000000000000..832466620f417d16a933e7b6b5ca5900e668465a --- /dev/null +++ b/eesanje/url_46_24_3.txt @@ -0,0 +1,6 @@ +7 ದಿನಗಳ ಪ್ರವಾಸಕ್ಕೆ ಅಮೆರಿಕಾಗೆ ತೆರಳಿದ ಡಿಸಿಎಂ ಡಿಕೆಶಿ + , +ಬೆಂಗಳೂರು,ಸೆ.8-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದಿನಿಂದ 7 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್‌ ತಮ ವಿದೇಶಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ. +ಅಮೆರಿಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್‌‍ ಅವರ ಆಹ್ವಾನದ ಮೇರೆಗೆ ಡಿ.ಕೆ.ಶಿವಕುಮಾರ್‌ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ. +ಕಮಲಾ ಹ್ಯಾರಿಸ್‌‍ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೂ ಆಹ್ವಾನಿತರಾಗಿದ್ದಾರೆ. +ಈ ಸಮಾವೇಶದಲ್ಲಿ ಚುನಾವಣೆ ವ್ಯವಸ್ಥೆ ಮತ್ತು ರಾಜಕೀಯದ ಕುರಿತು ಚರ್ಚೆಗಳಾಗಲಿವೆ. ಈ ವೇಳೆ ಡಿ.ಕೆ.ಶಿವಕುಮಾರ್‌ ಬರಾಕ್‌ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಚಿಕಾಗೋ ಪ್ರವಾಸ ಕೈಗೊಂಡು ಡಿ.ಕೆ.ಶಿವಕುಮಾರ್‌ ಬಂಡವಾಳ ಆಕರ್ಷಣೆ ಬಗ್ಗೆ ಕೈಗಾರಿಕೋದ್ಯಮಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ. \ No newline at end of file diff --git a/eesanje/url_46_24_4.txt b/eesanje/url_46_24_4.txt new file mode 100644 index 0000000000000000000000000000000000000000..23206ffa8ce6f7129eb15e645b7f3d9b7c1d8cea --- /dev/null +++ b/eesanje/url_46_24_4.txt @@ -0,0 +1,24 @@ +ಸಿದ್ದರಾಮಯ್ಯ ಕೆಳಗಿಳಿಯುವುದನ್ನ ಕಾಯುತ್ತಿರುವ ಕಾಂಗ್ರೆಸ್ ನಾಯಕರು, ಸಿಎಂ ಕುರ್ಚಿಗೆ ಬಹಿರಂಗ ಕಚ್ಚಾಟ + +ಬೆಂಗಳೂರು,ಸೆ.8-ಕೂಸುಟ್ಟುವ ಮುನ್ನವೇ ಖುಲಾವಿ ಎನ್ನುವಂತೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ನಾನೇ ಮುಖ್ಯಮಂತ್ರಿ ಎಂದು ಪೈಪೋಟಿಗಿಳಿದು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದಾರೆ. +ತೆರೆಮರೆಯಲ್ಲಿ ಒಂದಷ್ಟು ಚಟುವಟಿಕೆಗಳು ಕಾಂಗ್ರೆಸ್ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ. +ಶಿವಾನಂದ ಪಾಟೀಲ್ ಕಾಂಗ್ರೆಸ್ನಲ್ಲಿ ಆರಂಭದಿಂದಲೂ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಆಗಾಗ್ಗೆ ಮುಜುಗರ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಸಚಿವ ಎಂ.ಬಿ.ಪಾಟೀಲ್ ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಎಂಬಹೋರಾಟ ರೂಪಿಸಿ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಗ್ಗರಿಸುವಂತೆ ಮಾಡಿದ್ದರು. +2023 ರ ವಿಧಾನಸಭಾ ಚುನಾವಣೆಗೆ ಮುನ್ನ ಶಿವಾನಂದ ಪಾಟೀಲ್ ನನಗೆ ಯಾವ ಹೈಕಮಾಂಡ್ ಇಲ್ಲ, ನನಗೆ ನಾನೇ ಹೈಕಮಾಂಡ್ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿದ್ದರು. +ಚುನಾವಣೆ ಬಳಿಕ ಸರ್ಕಾರ ರಚನೆಯಾದಾಗ ಅನಿವಾರ್ಯವಾಗಿ ಇವರಿಬ್ಬರನ್ನೂ ಸಂಪುಟಕ್ಕೆ ತೆಗೆದುಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯನವರಿಗೆ ಉದ್ಭವಿಸಿತ್ತು. ಎಂ.ಬಿ.ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರಿಂದಾಗಿ ಅವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಅನಿವಾರ್ಯತೆ ಸೃಷ್ಟಿಯಾಯಿತು. +ಶಿವಾನಂದ ಪಾಟೀಲ್ ಕಾಂಗ್ರೆಸ್ನಿಂದ ಹೊರಗಡೆ ಕಾಲಿಟ್ಟಿದ್ದಾರೆ ಎಂಬ ವ್ಯಾಖ್ಯಾನಗಳಿದ್ದವು. ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದ ಗಡಿಭಾಗಗಳಲ್ಲಿ ಶಿವಾನಂದ ಪಾಟೀಲ್ ಪ್ರಭಾವಿ ಲಿಂಗಾಯತ ಸಮುದಾಯದ ನಾಯಕರಾಗಿರುವುದರಿಂದಾಗಿ ಅವರನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಕಾಂಗ್ರೆಸ್ಗೆ ಎದುರಾಯಿತು. +ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನ ನಿಷ್ಠಾವಂತ ನಾಯಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕಡೆಗಣಿಸಿ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಅವರಿಗೆ ಬಾಗಲಕೋಟೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದರು. +ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸಂಕಷ್ಟ ಕಾಲದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ವೀಣಾ ಕಾಶಪ್ಪನವರ್ 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. +ಸಚಿವ ಶಿವನಾಂದ ಪಾಟೀಲ್ಗಾಗಿ ವೀಣಾ ಕಾಶಪ್ಪನವರ್ ಅವರನ್ನು ಪರಿಗಣಿಸಲಾಯಿತು. ಈಗ ಅದೇ ಶಿವಾನಂದ ಪಾಟೀಲ್ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಬಂದಾಗ ಎಂ.ಬಿ.ಪಾಟೀಲ್ಗೆ ಸೆಡ್ಡು ಹೊಡೆದಿದ್ದಾರೆ. ಇಬ್ಬರ ನಡುವೆ ವಾದ-ವಾಗ್ವಾದಗಳು ತಾರಕಕ್ಕೇರಿವೆ.ಎಂ.ಬಿ.ಪಾಟೀಲ್ ಪಕ್ಷದಲ್ಲಿ ನಾನು ಶಿವಾನಂದ ಪಾಟೀಲ್ಗಿಂತಲೂ ಹಿರಿಯನಿದ್ದು, ಒಂದಲ್ಲಾ ಒಂದು ದಿನ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಯಾಗುತ್ತೇನೆ ಎಂದಿದ್ದಾರೆ. +ಇತ್ತ ಶಿವಾನಂದ ಪಾಟೀಲ್ ತಮನ್ನು ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಮೂಲಕ ಎಂ.ಬಿ.ಪಾಟೀಲ್ಗೆ ಅಡ್ಡಗಾಲು ಹಾಕುವ ಮುನ್ಸೂಚನೆ ನೀಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನಡೆಸಿದ್ದು, ಸದ್ಯಕ್ಕೆ ಆ ಹುದ್ದೆ ಖಾಲಿ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ. ಅದರ ನಡುವೆ ಸಚಿವ ಸತೀಶ್ ಜಾರಕಿಹೊಳಿ 2-3 ಬಾರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ವಿಚಾರ ಬಂದರೆ ತಮನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಾದಿಸುವುದು ತಿಳಿದುಬಂದಿದೆ. +ಇತ್ತ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲರ ಮನೆಗೆ ತೆರಳಿ ಉಪಹಾರ ಕೂಟ, ಭೋಜನಾ ಕೂಟ ನಡೆಸುವ ಮೂಲಕ ಸದ್ದಿಲ್ಲದೆ ತೆರೆಮರೆಯ ತಯಾರಿ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದರೂ ಒಳಗೊಳಗೇ ಅಸಮಾಧಾನದ ಜ್ವಾಲಾಮುಖಿಗಳು ಕುದಿಯುತ್ತಿವೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರೆಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಸದ್ದಿಲ್ಲದೇ ತಮದೇ ಶೈಲಿಯಲ್ಲಿ ವೇದಿಕೆ ಸಜ್ಜುಗೊಳಿಸುವ ಯತ್ನ ನಡೆಸುತ್ತಿದ್ದಾರೆ. +ಶಿವಾನಂದ ಪಾಟೀಲ್ ಯೂ ಟರ್ನ್ :ಬೆಂಗಳೂರು,ಸೆ.8- ಕೆಪಿಸಿಸಿ ಅಧ್ಯಕ್ಷರಾಗಿ ಕಷ್ಟಪಟ್ಟು ದುಡಿದು ಪಕ್ಷವನ್ನು ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇತ್ತು. ಅದು ಈಡೇರಿಲ್ಲ. ಬೇರೆಯವರು ಅವಕಾಶ ಪಡೆದಿದ್ದಾರೆ ಎಂದು ಹೇಳುವ ಮೂಲಕ ಸಚಿವ ಶಿವಾನಂದ ಪಾಟೀಲ್ ತಮ ವಿವಾದಿತ ಹೇಳಿಕೆಯಿಂದ ಯೂಟರ್ನ್ ಪಡೆದಿದ್ದಾರೆ. +ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಮಂತ್ರಿಯಾಗಬಾರದು ಎಂದು ಕೆಲವರು ಪಣ ತೊಟ್ಟಿದ್ದರು. ಅದಕ್ಕಾಗಿ ನನಗೆ ಸಚಿವನಾಗಬೇಕು ಎಂಬ ಆಸೆ ಇತ್ತು. ಸಚಿವನಾಗಿದ್ದೇನೆ. ನನಗೆ ಇಷ್ಟು ಸಾಕು. ಉಳಿದಂತೆ ಮುಖ್ಯಮಂತ್ರಿಯಾಗುವ ಅಥವಾ ಬೇರೆ ಯಾವುದೇ ಆಕಾಂಕ್ಷೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ಭಗವಂತ ಈಗ ಕೊಟ್ಟಿರುವುದಕ್ಕೆ ನಾನು ಸಂತೃಪ್ತಿಯಲ್ಲಿದ್ದೇನೆ. ಪಕ್ಷದಲ್ಲಿ ಹಿರಿಯ, ಕಿರಿಯ ಎಂಬುದು ಮುಖ್ಯವಲ್ಲ. ನನಗಿಂತ ಹಿರಿಯರು ಬಹಳಷ್ಟು ಜನರಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಬಹಳಷ್ಟು ಜನ ಬಹಳಷ್ಟು ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ, ಪಕ್ಷ ಅಧಿಕಾರಕ್ಕೆ ಬಂದಿದೆ, ಅವರಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿತ್ತು. ಬೇರೆಯವರು ಮುಖ್ಯಮಂತ್ರಿಯಾದರು. ಅವಕಾಶ ಸಿಗದಿರುವ ಹಿರಿಯರ ಆಸೆಗಳು ಮೊದಲು ಈಡೇರಲಿ. ಅದನ್ನು ನೋಡಿ ನಾವು ಖುಷಿ ಪಡುತ್ತೇವೆ ಎಂದಿದ್ದಾರೆ. +ಈ ಮೊದಲು ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಕಟ್ಟಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರಂತಹ ಎಲ್ಲಾ ಹಿರಿಯರು ಮೊದಲು ಅವಕಾಶ ಪಡೆಯಲಿ. ಅನಂತರ ಎಂ.ಬಿ.ಪಾಟೀಲ್ರನ್ನು ಪರಿಗಣಿಸಬಹುದು ಎಂದು ಹೇಳಿದರು. +ಎಂ.ಬಿ.ಪಾಟೀಲ್ ಮತ್ತು ತಮ ನಡುವೆ 1991 ರಿಂದಲೂ ಶೀಥಲ ಸಮರವಿತ್ತು. 2004ರಲ್ಲಿ ಇದನ್ನು ಯಾರು ಬಗೆಹರಿಸಿಕೊಂಡರು ಎಂದು ತಿಳಿದುಕೊಳ್ಳಬೇಕು. ನಾವಿಬ್ಬರೂ ಒಂದೇ ಪಕ್ಷದಲ್ಲಿದ್ದೇವೆ. ನಮ ನಡುವೆ ಯಾವುದೇ ಶೀಥಲ ಸಮರವಿಲ್ಲ. ಯಾರಿಗಾದರೂ ವೈಯಕ್ತಿಕವಾಗಿ ಆ ರೀತಿಯ ಭಾವನೆ ಇದ್ದರೆ ಅದು ದುರ್ದೈವ ಎಂದರು. +ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಲಿ, ನನಗೂ ಅದಕ್ಕೂ ಸಂಬಂಧವಿಲ್ಲ. ದೇವರ ಕೃಪೆ ಇದ್ದರೆ ಏನು ಬೇಕಾದರೂ ಸಾಧ್ಯ ಎಂದು ಉರ್ದು ನಾಣ್ಣುಡಿಯನ್ನು ಪ್ರಸ್ತಾಪಿಸಿದರು. ಸಿದ್ದರಾಮಯ್ಯನವರು ತಪ್ಪೇ ಮಾಡಿಲ್ಲ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಈಗ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿದೆ. ಒಂದು ವೇಳೆ ಅಲ್ಲಿ ಸಿದ್ದರಾಮಯ್ಯನವರ ವಿರುದ್ಧವಾಗಿ ತೀರ್ಪು ಬಂದರೂ ಅರವಿಂದ್ ಕೇಜ್ರಿವಾಲ್ ಅವರ ರೀತಿ ಸಿದ್ದರಾಮಯ್ಯ ರಾಜಿನಾಮೆ ನೀಡದೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಇದಕ್ಕೆ ಪಕ್ಷದ ಬೆಂಬಲವಿರುತ್ತದೆ ಎಂದು ಹೇಳಿದರು. +ನಮಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಇಲ್ಲ. ಅಭಿವೃದ್ಧಿಯ ವಿಚಾರಗಳೇ ಚರ್ಚೆಯಾಗುತ್ತಿಲ್ಲ. ಕೇವಲ ರಾಜಕೀಯಕ್ಕಷ್ಟೇ ಆದ್ಯತೆ ನೀಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಸಿದ್ದರಾಮಯ್ಯ ಜನತಾದಳದಿಂದ ಬಂದಿದ್ದಾರೆ ಎಂಬುದನ್ನು ಬಹುತೇಕ ಎಂ.ಬಿ.ಪಾಟೀಲ್ ಮರೆತಿದ್ದಾರೆ. ಇದನ್ನು ಮಾಧ್ಯಮಗಳು ನೆನಪಿಸಿವೆ. ನಾನು ಕೂಡ ಜನತಾದಳದಲ್ಲಿದ್ದೆ. ನನ್ನನ್ನು ಕಾಂಗ್ರೆಸ್ಗೆ ಮತ್ತು ಬಿಜೆಪಿಗೆ ಯಾರು ಕರೆದರು ಎಂದು ಗೊತ್ತಿದೆ. ಈ ಬಗ್ಗೆ ಬಹಿರಂಗ ಚರ್ಚೆ ಮಾಡಿದರೆ ಅದು ಬೇರೆ ರಾಜಕಾರಣವಾಗುತ್ತದೆ. ನನಗೆ ಆಹ್ವಾನ ನೀಡಿದವರ ಆತಸಾಕ್ಷಿಗೆ ಗೊತ್ತಿದೆ. ಅಷ್ಟು ಸಾಕು ಎಂದರು. +ನನಗೆ ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರಕ್ಕೆ ಹೋದರೂ ಮರ್ಯಾದೆ ಕೊಟ್ಟಿದ್ದಾರೆ. ಅದಕ್ಕೆ ಚಿರ ಋಣಿ. ಹಾಗೆ ನೋಡಿದರೆ ಕ್ಷೇತ್ರದ ಜನರಿಗೆ ನನ್ನಿಂದ ಅನ್ಯಾಯವಾಗಿದೆ. ಕಾಂಗ್ರೆಸ್ನಲ್ಲಿ ಹಲವು ಮಂದಿ ಮುಖ್ಯಮಂತ್ರಿ ಆಕಾಂಕ್ಷಿಗಳಿರುವುದರಲ್ಲಿ ತಪ್ಪಿಲ್ಲ. ಎಲ್ಲಾ ಪಕ್ಷಗಳಲ್ಲೂ ಇದು ಸಹಜ. ಬಿಜೆಪಿಯಲ್ಲಿ ಒಂದೇ ಅವಧಿಯಲ್ಲಿ ಮೂವರು ಮುಖ್ಯಮಂತ್ರಿಗಳಾದರು. ಅದರ ಬಗ್ಗೆ ಯಾರೂ ಚರ್ಚೆ ಮಾಡುತ್ತಿಲ್ಲ ಎಂದು ಹೇಳಿದರು. +ನಾನು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪತ್ರಿಕಾಗೋಷ್ಠಿ ನಡೆಸಿದ್ದೆ. ಅಲ್ಲಿ ಹೇಳಿದ ವಿಚಾರಗಳನ್ನು ಬಿಟ್ಟು, ರಾಜಕೀಯವಾಗಿಯೇ ಹೆಚ್ಚು ಚರ್ಚೆ ಮಾಡಲಾಗುತ್ತದೆ. ನನಗೆ ಅಭಿವೃದ್ಧಿ ವಿಚಾರಗಳಷ್ಟೇ ಮುಖ್ಯ. ರಾಜಕೀಯ ಚರ್ಚೆಯ ವಿಷಯವಲ್ಲ ಎಂದರು. \ No newline at end of file diff --git a/eesanje/url_46_24_5.txt b/eesanje/url_46_24_5.txt new file mode 100644 index 0000000000000000000000000000000000000000..c1bf8417561e0471a6438e07a74b0d9502a6ec78 --- /dev/null +++ b/eesanje/url_46_24_5.txt @@ -0,0 +1,7 @@ +ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಎಂ.ಬಿ.ಪಾಟೀಲ್ +ವಿಜಯಪುರ,ಸೆ.8-ಶಿವಾನಂದ ಪಾಟೀಲರನ್ನು ಕಾಂಗ್ರೆಸ್ಗೆ ಕರೆತಂದಿದ್ದು ನಾನಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಎಂ.ಬಿ.ಪಾಟೀಲ್ ಪಕ್ಷದಲ್ಲಿ ಅನಗತ್ಯವಾದ ವಿವಾದಗಳಿಗೆ ಅವಕಾಶ ಮಾಡಿಕೊಡದೆ ಒಟ್ಟಾಗಿರುವುದು ಸೂಕ್ತ ಎಂದು ಶಿವಾನಂದ ಪಾಟೀಲ್ಗೆ ಸಲಹೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ. ರಾಜ್ಯಕ್ಕೆ ಒಳ್ಳೆಯ ಕೆಲಸ ಮಾಡಬೇಕು, ಜನಸೇವೆ ಮಾಡಬೇಕು ಎಂಬ ಬಯಕೆ ಇದೆ. ಆದರೆ ದುರಾಸೆ ಇಲ್ಲ ಎಂದಿದ್ದಾರೆ. +ಕಾಂಗ್ರೆಸ್ನಲ್ಲಿ ನಾನು ಸತೀಶ್ ಜಾರಕಿಹೊಳಿ ಅವರಿಗಿಂತಲೂ ಹಿರಿಯನಿದ್ದೇನೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್ ನಾವೆಲ್ಲಾ ಅಂದು ಸಮಕಾಲೀನರು. ನಮಗಿಂತ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಹಿರಿಯರಿದ್ದಾರೆ. ನಮಗೆಲ್ಲರಿಗಿಂತಲೂ ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಹಿರಿಯರಿದ್ದಾರೆ. ನಾನು ಮುಖ್ಯಮಂತ್ರಿಯಾಗುವುದಾದರೆ ಒಳ್ಳೆಯ ಕೆಲಸ ಮಾಡುತ್ತಾರೆ ಎಂದು ವಿಜಯಪುರ ಜಿಲ್ಲೆ ಮತ್ತು ರಾಜ್ಯದ ಜನ ಖುಷಿಪಡುತ್ತಾರೆ ಎಂದು ಹೇಳಿದರು. +ಮುಖ್ಯಮಂತ್ರಿಯಾಗುವುದು ಸ್ವಯಂ ಘೋಷಿತವಲ್ಲ. ಪಕ್ಷದ ಶಾಸಕರು, ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಸದ್ಯಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ. ನ್ಯಾಯಾಲಯದಲ್ಲಿ ಅವರ ವಿರುದ್ಧದ ಪ್ರಕರಣ ಬಿದ್ದುಹೋಗುತ್ತದೆ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಂದೊಂದು ದಿನ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದರು. +ಶಿವಾನಂದ ಪಾಟೀಲ್ ಅವರು ವಿವಾದಿತ ಹೇಳಿಕೆ ನೀಡಿದಾಗ ನಾನು ಪ್ರತಿಕ್ರಿಯಿಸಿದ್ದೇನೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲಾ ಒಟ್ಟಾಗಿದ್ದೇವೆ. ಶಿವನಂದ ಪಾಟೀಲ್ ಮತ್ತು ಸೊರಗಾವಿ ಅವರು 2004 ರಲ್ಲಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಯಾಗುವ ಆಸಕ್ತಿ ವ್ಯಕ್ತಪಡಿಸಿದ್ದರು. ಆಗ ಅವರಿಬ್ಬರ ಜೊತೆ ಮಾತುಕತೆ ನಡೆಸುವಂತೆ ಎಸ್.ಎಂ.ಕೃಷ್ಣ ಅವರು ನನಗೆ ಬಲವಂತ ಮಾಡಿದರು. ಅವರ ಒತ್ತಡಕ್ಕೆ ಮಣಿದು ನಾನು ಮಾತುಕತೆ ನಡೆಸಿದಾಗ ಶಿವಾನಂದ ಪಾಟೀಲ್, ತಾವು ಎಸ್.ಎಂ.ಕೃಷ್ಣ ಅವರೊಂದಿಗೇ ಚರ್ಚೆ ನಡೆಸುವುದಾಗಿ ಹೇಳಿದ್ದರು. ಅನಂತರ ಅವರಿಬ್ಬರ ನಡುವೆ ಯಾವ ರೀತಿಯ ಒಪ್ಪಂದಗಳಾದವೋ ನನಗೆ ಗೊತ್ತಿಲ್ಲ ಎಂದು ಹೇಳಿದರು. +2004 ರಲ್ಲಿ ನನ್ನ ವಿರುದ್ಧ ಎಂ.ಎಸ್. ರುದ್ರೇಗೌಡ ಅಭ್ಯರ್ಥಿಯಾಗಿದ್ದರು. 2008 ರಿಂದ ಈವರೆಗೂ ನಾಲ್ಕು ಬಾರಿ ಶಿವಾನಂದ ಪಾಟೀಲ್ರವರ ಸಹೋದರ ವಿಜುಗೌಡ ಪಾಟೀಲ್ ನನ್ನ ವಿರುದ್ಧ ಅಭ್ಯರ್ಥಿಯಾಗಿದ್ದಾರೆ. ಎರಡು ಬಾರಿ ಜೆಡಿಎಸ್, ಎರಡು ಬಾರಿ ಬಿಜೆಪಿಯಿಂದ ಅವರು ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ. +ಈಗ ತಮ ಸಹೋದರ ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್ಗೆ ಕ್ಷೇತ್ರ ಬಿಟ್ಟುಕೊಟ್ಟರು ಎಂದು ಪದೇಪದೇ ಹೇಳುತ್ತಿದ್ದಾರೆ. ಬಿಜೆಪಿಯಲ್ಲಿರುವ ವಿಜುಗೌಡ ಪಾಟೀಲ್, ಕಾಂಗ್ರೆಸ್ನ ಕುರಿತು ಏಕೆ ಹೇಳಿಕೆ ನೀಡುತ್ತಿದ್ದಾರೆ. ಶಿವಾನಂದ ಪಾಟೀಲ್ರಿಗೂ, ಅವರಿಗೂ ಯಾವ ರೀತಿಯ ಸಂಪರ್ಕ ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಉತ್ತರಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_24_6.txt b/eesanje/url_46_24_6.txt new file mode 100644 index 0000000000000000000000000000000000000000..67ea2dc582ad33c16fcfcddcb339a3d4798e3413 --- /dev/null +++ b/eesanje/url_46_24_6.txt @@ -0,0 +1,9 @@ +ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಬೆಳಗಾವಿ ಜಿಲ್ಲೆಯವರು ಸಿಎಂ ಎಂಬ ಪೋಸ್ಟರ್ ವೈರಲ್, ಭಾರಿ ಚರ್ಚೆ + +ಬೆಂಗಳೂರು,ಸೆ.8-ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟರೆ ಮುಂದಿನ ಮುಖ್ಯಮಂತ್ರಿ ಬೆಳಗಾವಿ ಜಿಲ್ಲೆಯವರು ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. +ಮುಡಾ ಪ್ರಕರಣದಲ್ಲಿ ಸೆ.9 ಮತ್ತು 12 ರಂದು ನ್ಯಾಯಾಲಯದ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಹೈಕೋರ್ಟ್‌ ಎತ್ತಿ ಹಿಡಿದರೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಅಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ವ್ಯಾಖ್ಯಾನಗಳಿವೆ. +ಸತೀಶ್‌ ಜಾರಕಿಹೊಳಿಯವರು ಮುಖ್ಯಮಂತ್ರಿಯಾಗಲು ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಗೆ ಪದೇಪದೇ ಭೇಟಿ ನೀಡುತ್ತಿದ್ದು, ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ತಮ ಅಭಿಲಾಷೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಮತ್ತಷ್ಟು ಭರವಸೆಗಳನ್ನು ಹುಟ್ಟುಹಾಕಿವೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂದೇಶಗಳು ಹರಿದಾಡಲಾರಂಭಿಸಿವೆ. +ಮುಂದಿನ ಮುಖ್ಯಮಂತ್ರಿ ಸತೀಶ್‌ ಜಾರಕಿಹೊಳಿ ಎಂಬ ಪ್ರತ್ಯೇಕ ಗ್ರೂಪ್‌ಗಳೇ ಸೃಷ್ಟಿಯಾಗಿವೆ. ಖಾಸಗಿ ಮಾಧ್ಯಮವೊಂದು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯನ್ನು ಮುಂದಿಟ್ಟಾಗ ಸತೀಶ್‌ ಜಾರಕಿಹೊಳಿ ಎಲ್ಲರಿಗಿಂತ ಹೆಚ್ಚಿನ ಜನಾಭಿಪ್ರಾಯ ಪಡೆದಿದ್ದಾರೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ ಶೇ.25 ರಷ್ಟು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪರವಾಗಿ ಶೇ.32 ರಷ್ಟು ಅಭಿಪ್ರಾಯಗಳು ಕ್ರೂಢೀಕೃತವಾದರೆ, ಸತೀಶ್‌ ಜಾರಕಿಹೊಳಿ ಪರವಾಗಿ ಶೇ.43ರಷ್ಟು ಮಂದಿ ಒಲವು ತೋರಿಸಿದ್ದಾರೆ. +ಇದರ ನಡುವೆ ವಿಚಿತ್ರ ಎಂಬಂತೆ ಬಿಜೆಪಿ ನಾಯಕರ ಫೋಟೊ ಬಳಸಿ ರಜನೀಶ್‌ ಆಚಾರ್ಯ ಎಂಬುವರು ಸತೀಶ್‌ ಜಾರಕಿಹಹೊಳಿಯವರು ಮುಖ್ಯಮಂತ್ರಿಯಾದರೆ ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಜಾಹೀರಾತು ನೀಡಿದ್ದಾರೆ. +ಗೌರಿ-ಗಣೇಶ ಹಬ್ಬದ ಶುಭಾಶಯ ತಿಳಿಸಿರುವ ಪೋಸ್ಟರ್‌ನಲ್ಲಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಸಿಎಂ ಸ್ಥಾನ, ಸತೀಶ್‌ ಜಾರಕಿಹೊಳಿಯವರಿಗೆ ಲಭಿಸುವುದಾದರೆ ಸ್ವಾಗತವಿದೆ ಎಂದು ಹೇಳಿರುವ ರಜನೀಶ್‌ ಆಚಾರ್ಯ ಅವರು ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿಯವರ ಭಾವಚಿತ್ರ ಪ್ರಕಟಿಸಿದರೆ ಮತ್ತೊಂದು ಕಡೆ ಸತೀಶ್‌ ಜಾರಕಿಹೊಳಿಯವರ ಭಾವಚಿತ್ರ ಹಾಕಿದ್ದಾರೆ. ಇದು ಸಾಕಷ್ಟು ವೈರಲ್‌ ಆಗುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್‌‍ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಸಾಕಷ್ಟು ವೈರಲ್‌ ಆಗುತ್ತಿವೆ. \ No newline at end of file diff --git a/eesanje/url_46_24_7.txt b/eesanje/url_46_24_7.txt new file mode 100644 index 0000000000000000000000000000000000000000..7ceef8821cbb4ae9c52809d56188f123d8da85e4 --- /dev/null +++ b/eesanje/url_46_24_7.txt @@ -0,0 +1,8 @@ +ಮುಡಾದಿಂದ ಒಂದೇ ದಿನ 848 ನಿವೇಶನ ಹಂಚಿಕೆಯಾಗಿರುವ ನನಗೆ ಗೊತ್ತಿಲ್ಲ : ಸಚಿವ ಭೈರತಿ ಸುರೇಶ್‌ + ' 848 : +ಮೈಸೂರು,ಸೆ.8-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿರುವ ಮಾಹಿತಿ ತಮಗೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು. +2022 ರಲ್ಲಿ ಆಗಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್‌ ಅವರು ಒಂದೇ ದಿನ 848 ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದರು.ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರ ಅಮಾನತಿಗೆ ಆಂತರಿಕ ವಿಚಾರಣಾ ವರದಿ ಕಾರಣ. ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಅವರು ಸುದೀರ್ಘ ವಿಚಾರಣೆ ನಡೆಸುತ್ತಿದ್ದರು. +ಮೂಲಗಳ ಪ್ರಕಾರ, ಲಕ್ಷಾಂತರ ಪುಟಗಳಿದ್ದು, ಆ ಎಲ್ಲಾ ಪುರಾವೆಗಳನ್ನೂ ಪರಿಶೀಲಿಸಲಾಗುತ್ತಿದೆ. ಮುಡಾ ಹಗರಣವನ್ನು ಇಂಚಿಂಚಾಗಿ ಪರಿಶೀಲಿಸಲಾಗುತ್ತಿದೆ. ವರದಿ ಬಂದ ಬಳಿಕ ಹಿಂದಿನ ಆಯುಕ್ತರಾಗಿದ್ದವರೂ ಸೇರಿದಂತೆ ಹಲವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ವಿರೋಧಪಕ್ಷಗಳ ಕನಸುಗಳು ನನಸಾಗುವುದಿಲ್ಲ ಎಂದು ಭೈರತಿ ಸುರೇಶ್‌ ಹೇಳಿದರು. +ಪಿ.ಎನ್‌.ದೇಸಾಯಿ ಅವರ ಸಮಿತಿ ಮುಡಾದ ಹಗರಣವನ್ನು ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ತಾವು ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ. ಯಾವುದೇ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ಅದು ಬೇರೆಯದೇ ಸ್ವರೂಪ ಪಡೆದುಕೊಳ್ಳುತ್ತದೆ. ವಿರೋಧಪಕ್ಷಗಳು ಅದನ್ನೇ ನೆಪ ಮಾಡಿಕೊಂಡು ಟೀಕೆ ಮಾಡುತ್ತವೆ. ಅದಕ್ಕಾಗಿ ನ್ಯಾಯಾಂಗದ ವರದಿ ಬರುವವರೆಗೂ ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. +ಫೆಬ್ರವರಿ 6 ಮತ್ತು 7 ರಂದು ನನ್ನ ಮಗನ ಮದುವೆಯಿದೆ. ಅದಕ್ಕಾಗಿ ಮೈಸೂರಿನ ಚಾಮುಂಡಿ ಹಾಗೂ ನಂಜನಗೂಡು ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_24_8.txt b/eesanje/url_46_24_8.txt new file mode 100644 index 0000000000000000000000000000000000000000..014080ece99b207c1f2a931b7a70a848bed1de36 --- /dev/null +++ b/eesanje/url_46_24_8.txt @@ -0,0 +1,8 @@ +ಸತೀಶ್‌ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುತ್ತೇನೆ : ಶಾಸಕ ಲಕ್ಷ್ಮಣ ಸವದಿ + : +ಬೆಳಗಾವಿ,ಸೆ.8-ಕಾಂಗ್ರೆಸ್‌‍ನಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ತಾವು ಸ್ವಾಗತಿಸುವುದಾಗಿ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಸತೀಶ್‌ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ. +ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್‌ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ವಲಸೆ ಬಂದರು. ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸಿಗರು ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದರು. ಅವರು ಗೆಲುವು ಕೂಡ ಕಂಡರು. ಈಗಾಗಲೇ ಕಾಂಗ್ರೆಸ್‌‍ನಲ್ಲಿ ಹಲವು ಹಿರಿಯ ನಾಯಕರಾಗಿರುವುದರಿಂದ ಲಕ್ಷ್ಮಣ್‌ ಸವದಿಗೆ ಸಚಿವ ಸ್ಥಾನ ದೊರೆಯಲಿಲ್ಲ. +ಬದಲಾಗಿ ಬೆಳಗಾವಿಯಿಂದ ಸತೀಶ್‌ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್‌ ಸಂಪುಟದ ಸದಸ್ಯರಾಗಿದ್ದಾರೆ. ಈ ಕುರಿತ ಅಸಮಾಧಾನ ಲಕ್ಷ್ಮಣ್‌ ಸವದಿ ಅವರಲ್ಲಿ ಮಡುಗಟ್ಟಿದೆ ಎಂದು ಹೇಳಿದರು. +ಕಳೆದ ಲೋಕಸಭೆ ಚುನಾವಣೆಯಲ್ಲಿ ಸತೀಶ್‌ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕ ಕಾಂಗ್ರೆಸ್‌‍ ಅಭ್ಯರ್ಥಿಯಾದಾಗ ಬೆಳಗಾವಿಯ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯ ಲೀಡ್‌ ಬಂದಿತ್ತು. ಆದರೆ ಅಥಣಿ ಕ್ಷೇತ್ರದಲ್ಲಿ ಹಿನ್ನಡೆಯಾಗಿತ್ತು. ಈ ಬಗ್ಗೆ ಸತೀಶ್‌ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿ ಲಕ್ಷ್ಮಣ್‌ ಸವದಿ ಅವರ ವಿರುದ್ಧ ಆಕ್ರೋಶ ಹೊರಹಾಕಿದರು. +ಚುನಾವಣೆಯ ಕಾಲದಲ್ಲಿ ಡಿ.ಕೆ.ಶಿವಕುಮಾರ್‌ ಆಪರೇಷನ್‌ ಹಸ್ತ ನಡೆಸಿ ಲಕ್ಷ್ಮಣ್‌ ಸವದಿಯನ್ನು ಕಾಂಗ್ರೆಸ್‌‍ಗೆ ಕರೆತಂದರು. ಇದು ಸತೀಶ್‌ ಜಾರಕಿಹೊಳಿ ಅವರಿಗೆ ಇಷ್ಟ ಇರಲಿಲ್ಲ ಎಂಬ ಚರ್ಚೆಗಳಿವೆ. ಆ ನಂತರವೂ ಇಬ್ಬರ ನಡುವೆ ರಾಜಕೀಯವಾಗಿ ಅಷ್ಟಕ್ಕಷ್ಟೇ ಎಂಬ ವಾತಾವರಣವಿದೆ. +ಇದರ ನಡುವೆ ಸತೀಶ್‌ ಜಾರಕಿಹೊಳಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಟವಲ್‌ ಹಾಕಿದ್ದಾರೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್‌ ಸವದಿ, ಜಿಲ್ಲೆಯಿಂದ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲ ಇದೆ ಎಂದಿದ್ದಾರೆ. \ No newline at end of file diff --git a/eesanje/url_46_24_9.txt b/eesanje/url_46_24_9.txt new file mode 100644 index 0000000000000000000000000000000000000000..cf9d0b900176b7aee97858469a2cd2b765b041b7 --- /dev/null +++ b/eesanje/url_46_24_9.txt @@ -0,0 +1,9 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ದರ್ಶನ್‌ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ..? + : . +ಬೆಂಗಳೂರು,ಸೆ.8-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ಮತ್ತು ಸಂಗಡಿಗರು ನಾಳೆ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.ಕೊಲೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಪೊಲೀಸರು ಈಗಾಗಲೇ ನಗರದ 24 ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. +ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿರುವ ದರ್ಶನ್‌, ಈವರೆಗೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ದೋಷಾರೋಪಣ ಪಟ್ಟಿ ಸಲ್ಲಿಕೆಯ ಬಳಿಕ ಜಾಮೀನು ಅರ್ಜಿಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ದರ್ಶನ್‌ ಪರ ವಕೀಲರು ಹೇಳಿಕೆ ನೀಡಿದ್ದರು. ಕಳೆದ ಗುರುವಾರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ. +ಹೀಗಾಗಿ ದರ್ಶನ್‌ ಹಾಗೂ ಇತರ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಮುನ್ನ ಜಾಮೀನು ಅರ್ಜಿ ಸಲ್ಲಿಕೆಯಾದರೆ ಆರೋಪಿಗಳು ಪ್ರಭಾವಿಗಳಾಗಿದ್ದು, ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಭಿಯೋಜಕರು ವಾದಿಸಿ ಜಾಮೀನಿಗೆ ಅಡ್ಡಿಪಡಿಸುವ ಸಾಧ್ಯತೆ ಇತ್ತು. +ಈಗ ತನಿಖೆ ಮುಗಿದಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ಜಾಮೀನು ಅರ್ಜಿ ಸಲ್ಲಿಸಿದರೆ ಬಹುತೇಕ ಮಾನ್ಯಗೊಳ್ಳುವ ನಿರೀಕ್ಷೆಗಳಿವೆ. ಆದರೆ ದರ್ಶನ್‌ರ ನಡೆ ಕುತೂಹಲ ಕೆರಳಿಸಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೋ, ಇಲ್ಲವೋ ಎಂಬ ಕುತೂಹಲ ಹೆಚ್ಚಾಗಿದೆ.ಪ್ರಕರಣದಲ್ಲಿ ಬಂಧಿತರಾಗಿದ್ದ 17 ಮಂದಿ ಆರೋಪಿಗಳ ಪೈಕಿ ಕೆಲವರು ತುಮಕೂರು ಜೈಲಿನಲ್ಲಿದ್ದರೆ, ಇನ್ನು ಉಳಿದವರು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿದ್ದರು. +ಜೈಲಿನಲ್ಲಿ ರೌಡಿಶೀಟರ್‌ಗಳು ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ತೀವ್ರ ವಿವಾದ ಸೃಷ್ಟಿಯಾಗಿ ದರ್ಶನ್‌ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. ಅದೇ ರೀತಿ ಕೆಲವು ಆರೋಪಿಗಳನ್ನು ಶಿವಮೊಗ್ಗ, ಧಾರವಾಡ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.ಆರೋಪಿಗಳ ಪೈಕಿ ಕೆಲವರ ಕುಟುಂಬದ ಹಿನ್ನೆಲೆ ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ವಕೀಲರಿಗೆ ಶುಲ್ಕ ಪಾವತಿಸುವ ಪರಿಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರಿಗೆಲ್ಲಾ ದರ್ಶನ್‌ರೇ ವಕೀಲರ ಶುಲ್ಕ ಪಾವತಿಸಬೇಕಿದೆ ಎಂದು ಹೇಳಲಾಗುತ್ತಿದೆ. +ದರ್ಶನ್‌ ಖ್ಯಾತ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸುವ ತಯಾರಿಯಲ್ಲಿದ್ದರು. ಆದರೆ ಶುಲ್ಕ ದುಬಾರಿಯಾಗಿದ್ದರಿಂದಾಗಿ ಖ್ಯಾತ ವಕೀಲರ ಕಾನೂನು ನೆರವು ಪಡೆಯುವ ಇರಾದೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.ನಾಳೆ ದರ್ಶನ್‌ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಳ್ಳುತ್ತದೆ. +ಹೀಗಾಗಿ ಬೇರೆ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ನಡುವೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೆಳ ಹಂತದ ನ್ಯಾಯಾಲಯ ಅದನ್ನು ತಿರಸ್ಕರಿಸಿದೆ. ಹಿರಿಯ ವಕೀಲ ಟಾಮಿ ಸಬಾಸ್ಟೀನ್‌ ಮೂಲಕ ಪವಿತ್ರಾಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ನಾಳೆ ಪವಿತ್ರಾಗೌಡ ಅವರ ಅರ್ಜಿ ವಿಚಾರಣೆಗೊಳಗಾಗುವ ಸಾಧ್ಯತೆ ಇದೆ. ದರ್ಶನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸುತ್ತಾರೊ ಅಥವಾ ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಯುತ್ತಾರೋ ಎಂಬ ಕುತೂಹಲಗಳು ಹೆಚ್ಚಾಗಿವೆ. \ No newline at end of file diff --git a/eesanje/url_46_250_1.txt b/eesanje/url_46_250_1.txt new file mode 100644 index 0000000000000000000000000000000000000000..1eaff33bf81ea0399541a55233fd4d28ef5fd2e0 --- /dev/null +++ b/eesanje/url_46_250_1.txt @@ -0,0 +1,6 @@ +ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಲಿ : ಹೆಚ್‌ಡಿಕೆ ಸವಾಲ್ +ಬೆಂಗಳೂರು,ಜ.30- ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ವರದಿಯನ್ನು ತಾಕತ್ತಿದ್ದರೆ ಸ್ವೀಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜ್ ವರದಿ ಅತ್ಯುತ್ತಮವಾಗಿದ್ದರೆ ಸ್ವೀಕರಿಸಿ. ಆಡಳಿತ ಪಕ್ಷದವರೇ ವರದಿ ವೈಜ್ಞಾನಿಕವಾಗಿಲ್ಲ ಎಂದಿದ್ದಾರೆ. +ಮಾತೆತ್ತಿದ್ದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಿಲ್ಲ ಎಂದು ಆರೋಪಿಸುವ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಇನ್ನು ಏಕೆ ತಾವು ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು. ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಹಾಕದ ವರದಿಯನ್ನು ಸ್ವೀಕರಿಸಬಹುದೇ ಎಂದು ಪ್ರಶ್ನಿಸಿದ ಅವರು, ಎಲ್ಲ ಸಮುದಾಯದ ಬಡ ಕುಟುಂಬಗಳಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೆರವಾಗುವುದಾದರೆ ನಮ್ಮ ಪಕ್ಷ ಎಲ್ಲ ರೀತಿಯ ಸಹಕಾರ ಕೊಡಲಿದೆ. ಪ್ರಾಮಾಣಿಕವಾಗಿ ಅನುಷ್ಠಾನ ಮಾಡುವುದಾದರೆ ಷರತ್ತು ರಹಿತ ಬೆಂಬಲ ಕೊಡುತ್ತೇವೆ. ನೀವು ಬರೆಸಿರುವ ವರದಿ( ಮುಖ್ಯಮಂತ್ರಿ) ಎಂದು ಆರೋಪಿಸಿದರು. +5 ಟ್ರಿಲಿಯನ್ ಡಾಲರ್ ಆರ್ಥಿಕತೆ ಅನ್ನೊದು ಜುಮ್ಲಾ : ಪ್ರಿಯಾಂಕಾ +ಶೋಷಿತ ವರ್ಗಗಳ ಅನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ರಾಜಕೀಯಕ್ಕೆ ಬಂದು 35 ವರ್ಷಕ್ಕೂ ಹೆಚ್ಚಾಗಿದೆ. ಅಂದಿನಿಂದ ಇಂದಿನವರೆಗೂ ಅವರಿಗೆ ಏಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿಲ್ಲ ಎಂದು ಪ್ರಶ್ನಿಸಿದರು. ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್‍ಕುಮಾರ್ ಅಧಿಕಾರ ಸ್ವೀಕಾರ ಮಾಡಿರುವುದು ದಾಖಲೆಯಾಗಿದೆ. +ಇಂಡಿ ಒಕ್ಕೂಟದಿಂದ ನಿತೀಶ್‍ಕುಮಾರ್ ಹಾಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕಾಂಗ್ರೆಸ್‍ನಿಂದ ಹೊರಬಂದು ಸಹವಾಸವೇ ಬೇಡ ಎಂದು ದೂರ ಸರಿದಿದ್ದಾರೆ ಎಂದರು. ರಾಮಮಂದಿರ ನಿರ್ಮಾಣಕ್ಕೆ ಜನರಿಂದ ಸಂಗ್ರಹಿಸಿದ ದೇಣಿಗೆಯ ವಿಚಾರವನ್ನು ಜನರ ಮುಂದಿಡಿ ಎಂದು ನಾನು ಹೇಳಿರುವುದು ನಿಜ ಎಂದ ಅವರು, ಸರ್ಕಾರದ 5 ಗ್ಯಾರಂಟಿಗಳಿಗೆ ಜನರ ತೆರಿಗೆ ಬಳಸಲಾಗುತ್ತಿದೆ ಹೊರತು ಕಾಂಗ್ರೆಸ್‍ನ ಹಣ ಬಳಸಲಾಗುತ್ತಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಒಂದು ವೇಳೆ ಅವರು ಕಾನೂನು ಬಾಹಿರ ಚಟುವಟಿಕೆ ಮಾಡಿದರೆ ಅದಕ್ಕೆ ನನ್ನ ಬೆಂಬಲ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. \ No newline at end of file diff --git a/eesanje/url_46_250_10.txt b/eesanje/url_46_250_10.txt new file mode 100644 index 0000000000000000000000000000000000000000..911851061c78c637a5c1eaf5a30c4da9482dd75b --- /dev/null +++ b/eesanje/url_46_250_10.txt @@ -0,0 +1,12 @@ +ರಾಜ್ಯಾದ್ಯಂತ ವ್ಯಾಪಿಸಿದ ಹನುಮ ಧ್ವಜದ ಕಿಚ್ಚು +ಬೆಂಗಳೂರು,ಜ.29- ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬೀದಿಗಿಳಿದು ಹೋರಾಟ ಮಾಡುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅತ್ತ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಕೂಡ ಹೋರಾಟಕ್ಕೆ ಧುಮುಕಿದ್ದಾರೆ. +ಕೇವಲ ಬೆಂಗಳೂರು ಮತ್ತು ಮಂಡ್ಯವಲ್ಲದೆ ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಾದ ಭಜರಂಗದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ಮತ್ತಿತರರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ. +ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆರ್.ಅಶೋಕ್, ವಿಧಾನಪರಿಷತ್ತಿನ ಸದಸ್ಯರಾದ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು. + : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್ +ಜೈ ಶ್ರೀರಾಮ್, ಜೈಜೈ ಶ್ರೀರಾಮ್, ಹನುಮಾನ್ ಕೀ ಜೈ, ಹಿಂದೂ ವಿರೋಧಿ ಸರಕಾರಕ್ಕೆ ಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರು. +ಇನ್ನೊಂದೆಡೆ ಮಂಡ್ಯದ ಕೆರಗೋಡಿನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿತ್ತು. ಮಾಜಿ ಸಚಿವ ಸಿ.ಟಿ.ರವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಇಂದಿನ ಪ್ರತಿಭಟನೆಗೆ ಜೆಡಿಎಸ್ ಕೂಡ ಕೈ ಜೋಡಿಸಿದ್ದು ವಿಶೇಷವಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ತಮ್ಮಣ್ಣ, ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು. +ಕೆರಗೋಡು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಂದ ಮಂಡ್ಯ ಜಿಲ್ಲಾಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ. + ಮತ್ತು ಜನರನ್ನು ಪ್ರಚೋದಿಸುತ್ತಿವೆ : ಸಿಎಂ ಸಿದ್ದರಾಮಯ್ಯ +ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣವಿತ್ತು. ಭಾರೀ ಪ್ರಮಾಣದಲ್ಲಿ ಜಮಾಯಿಸಿದ್ದ ಜೈಶ್ರೀರಾಮ್ ಘೋಷಣೆಗಳನ್ನು ಕೂಗಿ ನಮ್ಮನ್ನು ಬಂಧಿಸಿ ಎಂದು ಸರ್ಕಾರದ ವಿರುದ್ಧ ಕ್ಕಾರ ಕೂಗಿದರು. +400ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ:ಪಾದಯಾತ್ರೆ ವೇಳೆ ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ. ಕೆರಗೋಡು, ಪಾದಯಾತ್ರೆ ಮಾರ್ಗ, ಡಿಸಿ ಕಚೇರಿ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಮಂಡ್ಯ ಎಸ್‍ಪಿ ಎನ್.ಯತೀಶ್ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಎಸ್‍ಪಿ, ಎಎಸ್‍ಪಿ, ಇನ್‍ಸ್ಪೆಕ್ಟರ್ ಸೇರಿ 400ಕ್ಕೂ ಹೆಚ್ಚು ಪೊಲೀಸರ ವ್ಯವಸ್ಥೆ ಕಲ್ಪಿಸಲಾಗಿತ್ತು. +ಏನಿದು ಪ್ರಕರಣ:ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್‍ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಕಳೆದ 22ರಂದು ಹಾಕಲಾಗಿತ್ತು. ಈ ಮೊದಲು ಇಲ್ಲಿ ತ್ರಿವರ್ಣ ಧ್ವಜವನ್ನು ಹಾಕುವುದಾಗಿ ಗ್ರಾಮಪಂಚಾಯ್ತಿ ಷರತ್ತುಗಳಿಗೆ ಬದ್ದರಾಗುತ್ತೇವೆ ಎಂದು ಟ್ರಸ್ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ ಏಕಾಏಕಿ ಹನುಮಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಯಿತು. ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಜಿಲ್ಲಾಡಳಿತ ಹನುಮ ಧ್ವಜವನ್ನು ತೆರವುಗೊಳಿಸಿದ್ದು, ವಿವಾದದ ಕಿಡಿಗೆ ತುಪ್ಪ ಸುರಿವಂತೆ ಮಾಡಿತ್ತು. \ No newline at end of file diff --git a/eesanje/url_46_250_11.txt b/eesanje/url_46_250_11.txt new file mode 100644 index 0000000000000000000000000000000000000000..c7571301a8f73330925e71e9b63a1d402e05d99a --- /dev/null +++ b/eesanje/url_46_250_11.txt @@ -0,0 +1,6 @@ + ಮತ್ತು ಜನರನ್ನು ಪ್ರಚೋದಿಸುತ್ತಿವೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.29- ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಬಿಜೆಪಿ ಜನರನ್ನು ಪ್ರಚೋದನೆಗೊಳಿಸುತ್ತಿರುವುದು ಯಾವ ಕಾರಣಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್‍ಎಸ್‍ಎಸ್ ತಮ್ಮ ಅಜೆಂಡಾವನ್ನು ಜಾರಿಗೆ ತರಲು ಅನಗತ್ಯವಾಗಿ ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು. +ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ಜನರನ್ನು ಪ್ರಚೋದಿಸುತ್ತಿವೆ. ಕೆರಗೋಡಿನಲ್ಲಿ ರಾಷ್ಟ್ರ ಅಥವಾ ರಾಜ್ಯಧ್ವಜ ಹಾಕುತ್ತೇವೆಂದು ಅನುಮತಿ ಪಡೆದಿದ್ದರು. ಅದರ ನಿಯಮ ಉಲ್ಲಂಘನೆ ಮಾಡಿದ್ದರಿಂದಾಗಿ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕಾಯಿತು. ನಾಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧ್ವಜಾರೋಹಣ ಮಾಡುತ್ತೇವೆ ಎಂದರೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು. +ಯಾವ ಬಾವುಟ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದಾರೆಯೋ ಅದನ್ನು ಹಾರಿಸಲು ತಮ್ಮ ಆಕ್ಷೇಪ ಇಲ್ಲ. ಯಾವುದೇ ಧರ್ಮ, ಜಾತಿಯ ಬಾವುಟಗಳಿಗೂ ತಮ್ಮ ವಿರೋಧವಿಲ್ಲ ಎಂದು ತಿಳಿಸಿದರು. ಚುನಾವಣೆ ಹೊರತುಪಡಿಸಿದರೆ ಇದರ ಹಿಂದೆ ಬೇರೆ ಯಾವ ಕಾರಣಗಳಿಲ್ಲ. ನನ್ನ ವಿರುದ್ಧ ಆರೋಪ ಮಾಡಲು ವಿರೋಧಪಕ್ಷದವರಿಗೆ ಬೇರೆ ಕಾರಣಗಳು ಸಿಕ್ಕಿಲ್ಲ. ಹಾಗಾಗಿ ಹಿಂದೂ ವಿರೋ ಎಂದು ಟೀಕೆ ಮಾಡುತ್ತಾರೆ. +ಎಲೋನ್ ಮಸ್ಕ್ ಹಿಂದಿಕ್ಕಿ ವಿಶ್ವದ ಶ್ರೀಮಂತ ವ್ಯಕ್ತಿಯಾದ ಅರ್ನಾಲ್ಟ್ +ನಾನೊಬ್ಬ ಹಿಂದು. ನಾನು ಎಲ್ಲಾ ಜನರನ್ನೂ ಮತ್ತು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ ಎಂದರು.ಸಂವಿಧಾನದಲ್ಲಿ ಜಾತ್ಯತೀತ ಸಿದ್ಧಾಂತಗಳನ್ನು ಪ್ರತಿಪಾದಿಸಲಾಗಿದೆ. ಜಾತ್ಯತೀತತೆ ಎಂದರೆ ಸಹಬಾಳ್ವೆ, ಸಹಿಷ್ಣುತೆ. ಅದರಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_250_12.txt b/eesanje/url_46_250_12.txt new file mode 100644 index 0000000000000000000000000000000000000000..22c2a05e4f764172eb3ecf925c8faf3eba15c692 --- /dev/null +++ b/eesanje/url_46_250_12.txt @@ -0,0 +1,10 @@ +ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ +ಬೆಂಗಳೂರು,ಜ.29- ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. +ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ಹೊರಹಾಕಿರುವ ಅವರು, ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. +ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಗಮನಕ್ಕೆ ಕೆಲವು ವಿಚಾರಗಳನ್ನು ತರಬಯಸುವುದಾಗಿ ಹೇಳಿದ್ದಾರೆ. 2023 ರ ಡಿಸೆಂಬರ್ 23 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್‍ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ. +2024ರ ಜನವರಿ 17 ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ. 2024ರ ಜನವರಿ 18 ರಂದು ಕೆರೆಗೋಡು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಷರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ. ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ. +ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಸಲಾಗಿದೆ. ಧ್ವಜಾರೋಹಣ ಮಾಡುವ 6-7 ದಿನ ಮುಂಚಿತವಾಗಿ ಗ್ರಾಮ ಪಂಚಾಯಿತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ. ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು? ಎಂಬ ಪ್ರಶ್ನೆಗೆ ಬಿಜೆಪಿ ಉತ್ತರಿಸಲೇಬೇಕಿದೆ. +ಪೊಲೀಸರಿಗೆ ಶರಣಾದ ನಕ್ಸಲರು +ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ? ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್‍ಎಸ್‍ಎಸ್ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ್ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ ಎಂದು ಆರೋಪಿಸಿದ್ದಾರೆ. +ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ್‍ರವರು ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ ಎಂದು ಲೇವಡಿ ಮಾಡಿದ್ದಾರೆ. +ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_250_2.txt b/eesanje/url_46_250_2.txt new file mode 100644 index 0000000000000000000000000000000000000000..37d3bde20fcb87a64b79d43c94c82fcb21368397 --- /dev/null +++ b/eesanje/url_46_250_2.txt @@ -0,0 +1,9 @@ +ಗೋಡ್ಸೆ ವಂಶಸ್ಥರಿಂದ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.30- ಮಹಾತ್ಮ ಗಾಂಧಿ ಹಂತಕ ಗೋಡ್ಸೆ ವಂಶಸ್ಥರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿಧಾನಸೌಧದಲ್ಲಿ ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ನಾವು ದಿನನಿತ್ಯ ನೋಡುತ್ತಿದ್ದೇವೆ. ಮನುಷ್ಯ ಮನುಷ್ಯರ ನಡುವೆ, ಧರ್ಮ-ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ಸಮಾಜದಲ್ಲಿ ಶಾಂತಿ ನೆಲೆಸಬೇಕು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸ, ಭ್ರಾತೃತ್ವದಿಂದ ಒಂದೇ ತಾಯಿ ಮಕ್ಕಳಂತೆ ಬದುಕಬೇಕು. ಪರಸ್ಪರ ದ್ವೇಷಿಸಬಾರದು ಎಂಬುದು ಗಾಂಧೀಜಿಯವರ ಆಶಯವಾಗಿತ್ತು ಎಂದು ಹೇಳಿದರು.ಎಲ್ಲ ಜಾತಿ-ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದರು. +ದ್ವೇಷದ ಬಿರುಗಾಳಿಯಲ್ಲಿ ಸತ್ಯದ ಜ್ವಾಲೆ ನಂದಿಸಲು ಬಿಡಬಾರದು : ಕಾಂಗ್ರೆಸ್ +ಮಹಾತ್ಮಾ ಗಾಂಧೀಜಿಯವರು 1948ರ ಜನವರಿ 30 ರಂದು ಗೋಡ್ಸೆಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದು ಹೇಳಿದರು. +ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ:ಅವರು ತಮ್ಮ ಕೊನೆಯುಸಿರೆಳೆದಾಗಲೂ ಹೇ ರಾಮ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ರಘುಪತಿ ರಾಘವ ರಾಜಾರಾಮ್ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀ ರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು ಎಂದರು. +ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. +ಮಂಡ್ಯ ಘಟನೆ; ರಾಜಕೀಯ ದುರುದ್ದೇಶದಿಂದ ಕೂಡಿದೆ :ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ-ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಫೆ. 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು. \ No newline at end of file diff --git a/eesanje/url_46_250_3.txt b/eesanje/url_46_250_3.txt new file mode 100644 index 0000000000000000000000000000000000000000..9d454c8178f9e3e8de0432aead7a593f6ce4298e --- /dev/null +++ b/eesanje/url_46_250_3.txt @@ -0,0 +1,8 @@ +ಧ್ವಜ ಸ್ತಂಭಕ್ಕೆ ಅನುಮತಿ ಕೊಟ್ಟ ಕೆರೆಗೋಡು ಪಿಡಿಒ ಅಮಾನತು +ಮಂಡ್ಯ, ಜ.30- ಹನುಮಾನ್ ಧ್ವಜ ತೆರವು ವಿಚಾರವಾಗಿ ಮಂಡ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕೆರಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಕೆರಗೋಡು ಗ್ರಾಮದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಪಿಡಿಒ ಹನುಮಾನ್ ಧ್ವಜಾರೋಹಣಕ್ಕೆ ಜನರಿಗೆ ಅವಕಾಶ ನೀಡಿದ್ದಲ್ಲದೆ, ತೆರವಿಗೆ ಮುಂದಾಗಿಲ್ಲ ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ. +ಜ.28ರಂದೇ ಪಂಚಾಯಿತಿ ಉಪವಿಭಾಗಾಧಿಕಾರಿ ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ಜತೆಗೂಡಿ ಧ್ವಜ ತೆಗೆದಿದ್ದು, ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಯಾಗಿರುವುದಕ್ಕೆ ಪಿಡಿಒ ಅವರನ್ನು ಹೊಣೆಗಾರರನ್ನಾಗಿಸಲಾಗಿದೆ. ಹನುಮಾನ್ ಧ್ವಜ ತೆರವು ಮತ್ತು ಜೀರ್ಣೋದ್ಧಾರ ವಿರೋಧಿಸಿ ಮಂಡ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ (ಜೆಡಿಎಸ್) ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. +ಮತ್ತೆ ಕ್ರೂಸ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ +ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ವಿಚಾರದಲ್ಲಿ ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಜನರನ್ನು ಚದುರಿಸಲು ಪೊಲೀಸರು ಭಾನುವಾರ ಲಘು ಲಾಠಿ ಪ್ರಹಾರ ನಡೆಸಿದ್ದು, ಬಳಿಕ ಆಡಳಿತಾಕಾರಿಗಳ ಸಮ್ಮುಖದಲ್ಲಿ ಹನುಮಾನ್ ಧ್ವಜದ ಬದಲಿಗೆ ರಾಷ್ಟ್ರಧ್ವಜವನ್ನು ಹಾರಿಸಿದ್ದರು. +ನಿನ್ನೆ ಕೆರಗೋಡಿನಿಂದ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು 14 ಕಿ.ಮೀ ದೂರದವರೆಗೆ ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆಗಳ ಮಧ್ಯೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಘೋಷಣೆ ಕೂಗಲಾಯಿತು. ಬಿಜೆಪಿ ಮುಖಂಡರಾದ ಸಿ ಟಿ ರವಿ, ಪ್ರೀತಂ ಗೌಡ, ಜೆಡಿಎಸ್ ಮುಖಂಡರಾದ ಸುರೇಶ್ ಗೌಡ ಮತ್ತು ಕೆ ಅನ್ನದಾನಿ ಪ್ರತಿಭಟನಾಕಾರರ ಜೊತೆಗೂಡಿದರು. +ನೀರೊಳಗೆ ಸಂಚರಿಸುವ ಸಿ-ಬೋಟ್ ಲೋಕಾರ್ಪಣೆ +ಮೆರವಣಿಗೆ ಮಂಡ್ಯ ನಗರಕ್ಕೆ ತಲುಪುತ್ತಿದ್ದಂತೆ, ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ಚಿತ್ರವಿರುವ ಫ್ಲೆಕ್ಸ್ ಬೋರ್ಡ್ ಅನ್ನು ಉರುಳಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_250_4.txt b/eesanje/url_46_250_4.txt new file mode 100644 index 0000000000000000000000000000000000000000..bde514d80b4505d85a20f1c91438207e18b72e59 --- /dev/null +++ b/eesanje/url_46_250_4.txt @@ -0,0 +1,7 @@ +ಸದಾಶಿವ ಆಯೋಗ ವರದಿ ಜಾರಿ ಮಾಡುವ ತೀರ್ಮಾನ : ಸರ್ಕಾರಕ್ಕೆ ಏ.ಮುನಿಯಪ್ಪ ಕೃತಜ್ಞತೆ +ಬೆಂಗಳೂರು,ಜ.29- ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೇತೃತ್ವದಲ್ಲಿ ಸಚಿವ ಸಂಪುಟ 18-01-2024ರಂದು ನಡೆದ ಸಚಿವ ಸಂಪುಟದಲ್ಲಿ ಮಾದಿಗೆ ಸಮುದಾಯ ಹೋರಾಟದ ಬೇಡಿಕೆಯಂತೆ ಸದಾಶಿವ ಆಯೋಗ ವರದಿ ಜಾರಿ ಮಾಡುವ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ ಇದು ನಮ್ಮ ಹೋರಾಟಕ್ಕೆ ತಂದ ಜಯ ಮತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಏ. ಮುನಿಯಪ್ಪ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು. +ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, 2023ನೇ ಸಾಲಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಚುನಾವಣೆ ಪುಣಾಳಿಕೆಯಲ್ಲಿ ದಲಿತ ಸಮುದಾಯದ ಹಲವು ದಶಕಗಳ ಹೋರಾಟದ ಬೇಡಿಕೆಯಂತೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಸಮುದಾಯದ ಜನರಿಗೆ ಭರವಸೆ ನೀಡಲಾಗಿತ್ತು ಹಾಗೂ ಚಿತ್ರದುರ್ಗದ ದಲಿತರ ಏಕತಾ ಸಮಾವೇಶದಲ್ಲಿ ಒಳಮೀಸಲಾತಿಯನ್ನು ಕೇಂದ್ರ ಶಿಫಾರಸ್ಸು ಮಾಡುವುದಾಗಿ ಕಾಂಗ್ರೆಸ್ ಪಕ್ಷದ ದಲಿತ ಸಮುದಾಯಕ್ಕೆ ಸೇರಿದ ಎಲ್ಲಾ ಹಿರಿಯ ನಾಯಕರುಗಳ ನೇತೃತ್ವದಲ್ಲಿ ನಿರ್ಣಯ ಮಾಡಲಾಗಿತ್ತು. +ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷರಾದ ಜಿ. ಪರಮೇಶ್ವರ ರವರು, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪ ಹಿರಿಯ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಸಚಿವರಾದ ಆರ್.ಬಿ. ತಿಮ್ಮಾಪೂರ ರವರು ಮತ್ತು ದಲಿತ ಸಮುದಾದ ಸಚಿವರುಗಳು, ಶಾಸಕರುಗಳು ಪುನರಾವರ್ತನಾ ಸಭೆಗಳನ್ನು ನಡೆಸಿ, ಸಮುದಾಯ ಜನರಿಗೆ ಮಾತು ಕೊಟ್ಟಿದ್ದೇವೆ ಸಂಘ-ಸಂಸ್ಥೆಗಳು ನಿರಂತರವಾಗಿ ಹೋರಾಟಗಳನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಸರ್ಕಾರದ ಮೇಲೆ ಒತ್ತಡ ತರಲಾಯಿತು. ಇವರುಗಳ ಒತ್ತಡಕ್ಕೆ ಸ್ಪಂದಿಸಿದ ಈ ನಾಡಿನ ಸಾಮಾಜಿಕ ಕಳಕಳಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು, ಬಡವರ ಪರವಾಗಿ ಸ್ಪಂದನೆ ಮಾಡುವಂತಹ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಬಲದಿಂದ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೈಜೋಡಿಸಿ, ಒಳಮೀಸಲಾತಿಯನ್ನು ನೀಡಲು ಸಂವಿಧಾನ ಅನುಚ್ಛೇಧ 341ಕ್ಕೆ ತಿದ್ದುಪಡಿ ಮಾಡಿ, 341(3)ವಿಧಿಗೆ ಹೊಸ ಷರತ್ತನ್ನು ಸೇರಿಸಲು ಶಿಫಾರಸ್ಸು ಮಾಡಿರುವುದು 30 ವರ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು +ಜ್ಞಾನವ್ಯಾಪಿ ಸಮೀಕ್ಷೆ ವಿರೋಧಿಸುವವರು ತುಕ್ಡೆ ಗ್ಯಾಂಗ್‍ನ ಭಾಗವಾಗಿದ್ದಾರೆ : ಜಮಾಲ್ +ಮಾದಿಗ ಮತ್ತು ಶೋಷಿತ ಸಮುದಾಯಗಳ ಹೋರಾಟಗಳನ್ನು ಗಮನಿಸಿದ 7 ಬಾರಿ ಸಂಸದ ಸದಸ್ಯರಾಗಿ ಆಯ್ಕೆ, ಕೇಂದ್ರದ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಹಾಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರ ಒತ್ತಡ ಮೇರೆಗೆ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ರವರು ಮಾದಿಗೆ ಜನಾಂಗದ ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗವನ್ನು ರಚಿಸಿದರು. ಕೆ.ಹೆಚ್. ಮುನಿಯಪ್ಪ ರವರು ದಲಿತ ಸಮುದಾಯ ಸಚಿವರು ಹಾಗೂ ಎಲ್ಲಾ ಜನಪ್ರತಿನಿಧಿಗಳ ಸಂಘಟನೆಗಳ ಪ್ರಮುಖರು, ಹೋರಾಟಗಾರರು ಬೆಂಬಲ ಪಡೆದು, ಸರ್ಕಾರದ ಮೇಲೆ ಒತ್ತಡ ಹಾಕಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕಾರಣೀಭೂತರಾದ ಕೆ.ಹೆಚ್. ಮುನಿಯಪ್ಪ ರವರಿಗೆ ಮಾದಿಗ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುತೇವೆ ಎಂದರು +ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯದ ಬೆಳವಣಿಗೆಯ ಉದ್ದೇಶದಿಂದ ಕ್ಯಾಬಿನೆಟ್ ನಲ್ಲಿ ದಿಟ್ಟ ನಿರ್ಧಾರವನ್ನು ಕೈಗೊಂಡ ಒಳ ಮೀಸಲಾತಿಯ ವರ್ಗೀಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ ಇವರೆಲ್ಲರಿಗೂ ಧನ್ಯವಾದಗಳು ಎಂದರು ದಲಿತ ಮುಖಂಡರಾದ ಕೆ. ರಾಜಶೇಖರ್, ಎಂ.ಸಿ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_250_5.txt b/eesanje/url_46_250_5.txt new file mode 100644 index 0000000000000000000000000000000000000000..91c5918f523cd68d34defad75cd47d22dd9f8cfd --- /dev/null +++ b/eesanje/url_46_250_5.txt @@ -0,0 +1,9 @@ +ಸಿದ್ದರಾಮಯ್ಯನವರ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ : ಎಚ್‍ಡಿಕೆ ಕಿಡಿ +ಬೆಂಗಳೂರು, ಜ.29- ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅತ್ಯುತ್ತಮ ಉದಾಹರಣೆ. ಭಾವುಕರಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೊಸ್ಟ್ ಮಾಡಿರುವ ಅವರು, ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಆರೋಪಿಸಿದ್ದಾರೆ. +ಎರಡನೇ ಬಾರಿ ಮುಖ್ಯ ಮಂತ್ರಿಯಾಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ. ಆದರೆ, ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ. +ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದು ವಾಗ್ದಾಳಿ ನಡೆಸಿದ್ದಾರೆ. +ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್ +ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು. ವಕೀಲರೂ, ಸ್ವಯಂ ಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿ ದರೆ ಹೇಗೆ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜಜ್ವಾಲೆ. ಜಾತಿ ವ್ಯವಸ್ಥೆ ಇರುವವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ. ಅಂದರೆ ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ. +ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. +ನನ್ನಂತೆಯೇ ಶೋಷಿತ ಸಮಾಜ ದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕ ವಚನದಲ್ಲಿ ಸಂಬೋಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ, ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲೆ, ದೇಶವನ್ನೆಲ್ಲೆ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಎಂದು ಅವರು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_250_6.txt b/eesanje/url_46_250_6.txt new file mode 100644 index 0000000000000000000000000000000000000000..42d30b56546f69f859347d98ef96611de5c65cc6 --- /dev/null +++ b/eesanje/url_46_250_6.txt @@ -0,0 +1,9 @@ +ಗ್ಯಾರಂಟಿ ಸರ್ಕಾರವನ್ನು ಮತ್ತೊಂದು ಸಂಕಷ್ಟಕ್ಕೆ ಸಿಲುಕಿಸುತ್ತಾ ಜಾತಿ ಸಮೀಕ್ಷಾ ವರದಿ..? +ಬೆಂಗಳೂರು,ಜ.29- ಒಂದೆಡೆ ಹನುಮ ಧ್ವಜ ಹಾಗೂ ಕೋಮು ರಾಜಕಾರಣ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದರೆ, ಮತ್ತೊಂದೆಡೆ ನಾಳೆ ಅಥವಾ ನಾಡಿದ್ದು ಸಲ್ಲಿಕೆಯಾಗಬಹುದು ಎಂದು ಹೇಳಲಾದ ಹಿಂದುಳಿದ ವರ್ಗಗಳ ಸಮೀಕ್ಷಾ ವರದಿ ಮತ್ತೊಂದು ಸಂಕಷ್ಟ ಸೃಷ್ಟಿಸುವ ಸಾಧ್ಯತೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜಯಪ್ರಕಾಶ್ ಹೆಗಡೆ ಅವರ ಅಧಿಕಾರವಧಿ ಜ.31 ಕ್ಕೆ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವುದಾಗಿ ಜಯಪ್ರಕಾಶ್ ಹೆಗಡೆ ಪದೇಪದೇ ಸ್ಪಷ್ಟಪಡಿಸಿದ್ದಾರೆ. +ಮತ್ತೆ ಅಧ್ಯಕ್ಷ ಅಧಿಕಾರವಧಿಯನ್ನು ಮುಂದೂಡುವುದಿಲ್ಲ ಎಂದು ಸರ್ಕಾರದ ಮೂಲಗಳು ಹೇಳುತ್ತಿವೆ. ಹೀಗಾಗಿ ಇಂದು ಅಥವಾ ನಾಳೆಯೊಳಗಾಗಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ 6 ವರ್ಷಗಳ ಹಿಂದೆ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಸುದೀರ್ಘ ಕಾಲ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ವರದಿಯ ಅಂಶಗಳು ಸೋರಿಕೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲಗಳು ಮೂಡಿವೆ. +ಸಮೀಕ್ಷಾ ವರದಿಯಲ್ಲಿ ಕೆಲವು ಸಮುದಾಯಗಳ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇನ್ನೂ ಕೆಲವು ಸಮುದಾಯಗಳ ಜನಸಂಖ್ಯೆಯನ್ನು ಹೆಚ್ಚು ತೋರಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಪ್ರಯತ್ನಗಳಾಗಿವೆ ಎಂಬ ಆರೋಪಗಳಿವೆ. ಜೊತೆಗೆ ಮನೆಮನೆಗೂ ತೆರಳಿ ನಡೆಸಬೇಕಾದ ಸಮೀಕ್ಷೆ ಅಪೂರ್ಣವಾಗಿದೆ. ಮಾಹಿತಿ ಸಂಗ್ರಹದಲ್ಲೂ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ ಎಂಬ ಆರೋಪಗಳು ಪದೇಪದೇ ಕೇಳಿಬರುತ್ತಿವೆ.ಆದರೆ ಸರ್ಕಾರ ಈ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿದೆ. ಕರಾರುವಕ್ಕಾದ ಮತ್ತು ಸಮಗ್ರ ಮಾಹಿತಿ ಕಲೆ ಹಾಕಲಾಗಿದೆ. ವರದಿಯ ಅಂಶಗಳು ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸುತ್ತಲೇ ಬಂದಿದೆ. +ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನೇಮಕವಾಗಿದ್ದ ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿತ್ತಾದರೂ ನಿಗದಿತ ಅವಧಿಯಲ್ಲಿ ವರದಿ ಸಲ್ಲಿಕೆಯಾಗಿರಲಿಲ್ಲ. ಸಿದ್ದರಾಮಯ್ಯನವರ ಸರ್ಕಾರದ ಮುಕ್ತಾಯದ ಅವಧಿಯಲ್ಲಿ ವರದಿ ಸಿದ್ಧವಾಗಿದೆ ಎಂದು ಹೇಳಲಾಗಿತ್ತಾದರೂ ವರದಿ ಸ್ವೀಕಾರವಾಗಿರಲಿಲ್ಲ. ನಂತರ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅನಂತರ ಆಡಳಿತ ನಡೆಸಿದ ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ ಸೇರಿದಂತೆ ಯಾರೂ ವರದಿಯ ತಂಟೆಗೆ ಹೋಗಿರಲಿಲ್ಲ. ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿಯನ್ನು ಸ್ವೀಕರಿಸುವುದಾಗಿ ಭರವಸೆ ನೀಡಿತ್ತು. ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆಯಾದ ನಂತರ ವರದಿಯ ಕುರಿತು ಮತ್ತೆ ವಿವಾದಗಳು ತಲೆ ಎತ್ತಲಾರಂಭಿಸಿದವು. +ದರ್ಶನ್ ಮತ್ತು ನನ್ನ ನಡುವೆ ಸಮಸ್ಯೆ ಏನೆಂದು ಇಬ್ಬರೂ ಹುಡುಕುತ್ತಿದ್ದೇವೆ : ಸುದೀಪ್ +ಒಕ್ಕಲಿಗ ಸಮುದಾಯದ ಪ್ರಮುಖರು ವರದಿಯನ್ನು ವಿರೋಸಿ ಮುಖ್ಯಮಂತ್ರಿಯವರಿಗೆ ನೀಡಿದ್ದ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಆಡಳಿತ ಪಕ್ಷದ ಅನೇಕ ಶಾಸಕರು ಸಹಿ ಹಾಕಿದ್ದರು. ಅದರ ನಂತರ ಲಿಂಗಾಯತ ವೀರಶೈವ ಸಮುದಾಯ ಮುಖ್ಯಮಂತ್ರಿಯವರಿಗೆ ಮನವಿ ನೀಡುವಾಗ ಕಾಂಗ್ರೆಸ್ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪನವರು ಮುಖಂಡತ್ವ ವಹಿಸಿದ್ದರು. ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಹಿ ಹಾಕಿದ್ದರು. +ಇದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ವಿರೋಧಗಳ ನಡುವೆಯೂ ಕೂಡ ಆಯೋಗದ ವರದಿಯನ್ನು ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿ ನಡೆಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ. +ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ್ದರೆ ಅದನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ ಎಂದು ಸಮಾವೇಶ ನಡೆಸಿದವರಿಗೆ ಭರವಸೆ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ವರದಿ ಸಲ್ಲಿಕೆಯಾಗಬೇಕು ಎಂದರೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಇಂದು ತುಮಕೂರಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ಮರಳುವ ಸಾಧ್ಯತೆಯಿದೆ. ಹೀಗಾಗಿ ವರದಿ ಸಲ್ಲಿಕೆಗೆ ಯಾವಾಗ ಸಮಯ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. \ No newline at end of file diff --git a/eesanje/url_46_250_7.txt b/eesanje/url_46_250_7.txt new file mode 100644 index 0000000000000000000000000000000000000000..31b6c3be1c1a0d9588f0ce3022beb8e7ab9078c8 --- /dev/null +++ b/eesanje/url_46_250_7.txt @@ -0,0 +1,11 @@ +ಹಾಲ್‍ಮಾರ್ಕ್ ಪರಿಶೀಲನೆ ನೆಪದಲ್ಲಿ ಡಕಾಯಿತಿ : 85 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ +ಬೆಂಗಳೂರು,ಜ.29- ನಾವು ಚಿನ್ನಾಭರಣ ಗಳ ಆಲ್‍ಮಾರ್ಕ್ ಹಾಗೂ ಜಿಎಸ್‍ಟಿ ಪರಿಶೀಲನಾ ಅಧಿಕಾರಿಗಳೆಂದು ಜ್ಯುವೆಲರಿ ಅಂಗಡಿಗೆ ಹೋಗಿ ಕೆಲಸಗಾರರನ್ನು ಹೆದರಿಸಿ 85 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಡಕಾಯಿತಿ ಮಾಡಿಕೊಂಡು ಪರಾರಿಯಾಗಿದ್ದ ಅಂತರರಾಜ್ಯ ನಾಲ್ವರು ನಕಲಿ ಅಧಿಕಾರಿಗಳನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. +ಕೃತ್ಯ ನಡೆದ ಎರಡು ಗಂಟೆಯ ಅವಧಿಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಅಂತಾರಾಜ್ಯ ಡಕಾಯಿತರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಕೆ.ಆರ್.ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಸಂಬತ್‍ಕುಮಾರ್ ಅಲಿಯಾಸ್ ಸಂಪತ್(55), ಜೋಶಿ(54) ಮತ್ತು ಉತ್ತರಪ್ರದೇಶದ ಸಂದೀಪ್ ಶರ್ಮ(48) ಮತ್ತು ಅವಿನಾಶ್‍ಕುಮಾರ್(27) ಬಂಧಿತ ಆರೋಪಿಗಳು. +ಬಂಧಿತರಿಂದ 85 ಲಕ್ಷ ರೂ. ಬೆಲೆ ಬಾಳುವ 1 ಕೆಜಿ 248 ಗ್ರಾಂ ತೂಕದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಇನ್ನೋವಾ ಕ್ರಿಸ್ಟಾ ವಾಹನ ಹಾಗೂ ಜ್ಯುವೆಲರಿ ಅಂಗಡಿಯಿಂದ ತೆಗೆದುಕೊಂಡು ಹೋಗಿದ್ದ ಡಿವಿಆರ್‍ನ್ನು ವಶಪಡಿಸಿಕೊಳ್ಳುವಲ್ಲಿ ಕೆ.ಆರ್.ಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. +ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್ +ಜ.27ರಂದು ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಬಟ್ಟರಹಳ್ಳಿ ಆರ್‍ಎಂಎಸ್ ಕಾಲೋನಿಯಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರಿ ಅಂಗಡಿಗೆ ಈ ನಾಲ್ವರು ಹೋಗಿದ್ದಾರೆ. ತಾವುಗಳು ಚಿನ್ನಾಭರಣಗಳ ಆಲ್‍ಮಾರ್ಕ್ ಹಾಗೂ ಜಿಎಸ್‍ಟಿ ಪರಿಶೀಲನಾ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ನಾವು ನಗರದ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಿದ್ದೇವೆ. ಅದರಲ್ಲಿ ನಿಮ್ಮದೂ ಒಂದು. ನೀವು ಆಲ್‍ಮಾರ್ಕ್ ಇಲ್ಲದೆ ಅಕ್ರಮವಾಗಿ ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ಇದೆ. ಹಾಗಾಗಿ ನಾವು ಈ ದಾಳಿ ಮಾಡಿದ್ದೇವೆ ಎಂದು ಅಂಗಡಿಯಲ್ಲಿದ್ದ ಕೆಲಸಗಾರರನ್ನು ಹೆದರಿಸಿ 85 ಲಕ್ಷ ಬೆಲೆ ಬಾಳುವ ಆಭರಣಗಳನ್ನು ದರೋಡೆ ಮಾಡಿದ್ದಾರೆ. +ನಂತರ ಗುರುತು ಪತ್ತೆಯಾಗಬಾರದೆಂದು ಸಾಕ್ಷ್ಯಾಧಾರಗಳನ್ನು ನಾಶಪಡಿಸಲು ಜ್ಯುವೆಲರಿ ಅಂಗಡಿಯಲ್ಲಿ ಅಳವಡಿಸಿದ್ದ ಡಿವಿಆರ್ ಸಿಸ್ಟಮ್‍ನ್ನು ತೆಗೆದುಕೊಂಡು ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ ಇನೋವಾ ಕ್ರಿಸ್ಟಾ ಕಾರಿನಲ್ಲಿ ಪರಾರಿಯಾಗುತ್ತಿದ್ದರು. +ಆ ವೇಳೆ ಅಂಗಡಿ ಕೆಲಸಗಾರರು ಹಿಂಬಾಲಿಸಿಕೊಂಡು ಬರುತ್ತಿರುವುದನ್ನು ನಕಲಿ ಅಕಾರಿಗಳು ಗಮನಿಸಿದ್ದಾರೆ.ಅಂಗಡಿ ಕೆಲಸಗಾರ ಹೇಮರಾಜ್ ಎಂಬುವರ ಮೇಲೆಯೇ ಕಾರು ಹತ್ತಿಸಿ ಕೊಲೆ ಮಾಡಲು ಪ್ರಯತ್ನಿಸಿ ತಪ್ಪಿಸಿಕೊಳ್ಳುವ ಭರದಲ್ಲಿ ಟಿಸಿ ಪಾಳ್ಯದ ಬಳಿ ಬೈಕ್‍ಗಳಿಗೆ ಗುದ್ದಿದ್ದಾರೆ. +ಈ ಬಗ್ಗೆ ಜ್ಯುವೆಲರಿ ಮಾಲೀಕರಿಗೂ ಅನುಮಾನ ಬಂದು ಕೆ.ಆರ್.ಪುರಂ ಪೊಲೀಸರಿಗೆ ಐದು ಮಂದಿ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದಾರೆ. +ಪೊಲೀಸರನ್ನು ಗಮನಿಸಿದ ನಕಲಿ ಅಕಾರಿಗಳು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ಬೆನ್ನತ್ತಿ ಹಿಂಬಾಲಿಸಿಕೊಂಡು ಹೋಗಿ ಕೃತ್ಯ ನಡೆದ 2 ಗಂಟೆಯೊಳಗೆ ನಕಲಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ. ಡಕಾಯಿತರ ಪೈಕಿ ಮತ್ತೊಬ್ಬ ಆರೋಪಿ ರವಿ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ. +ವೈಟ್‍ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತರಾದ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಪ್ರಿಯದರ್ಶಿನಿ ಅವರ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. \ No newline at end of file diff --git a/eesanje/url_46_250_8.txt b/eesanje/url_46_250_8.txt new file mode 100644 index 0000000000000000000000000000000000000000..da05b1db5e5d89da558a6ea8ab6279033c136c77 --- /dev/null +++ b/eesanje/url_46_250_8.txt @@ -0,0 +1,7 @@ +ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್ +ಬೆಂಗಳೂರು,ಜ.29- ನನಗೆ ಸಿಎಂ ಆಗಬೇಕು ಎಂಬ ಆಸೆಯಿದೆ. ಆದರೆ ಸಚಿವ ಸ್ಥಾನ ಕೊಡಲಿಲ್ಲ ಎಂದು ಬೇಸರ ಮಾಡಿಕೊಳ್ಳುತ್ತಾ ಕುಳಿತುಕೊಳ್ಳಲಾಗುತ್ತಿಲ್ಲ. ಎಲ್ಲದಕ್ಕೂ ಸಹನೆ, ಸಮಯ ಅಗತ್ಯವಿದೆ ಎಂದು ಬಿಡಿಎ ನೂತನ ಅಧ್ಯಕ್ಷ ಎನ್.ಎ.ಹ್ಯಾರಿಸ್ ಹೇಳಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ತೃಪ್ತಿ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ, ಸಿಗಬೇಕಲ್ಲ. ಸಚಿವ ಸ್ಥಾನ ಕೊಟ್ಟಿಲ್ಲ ಎಂದು ಹೇಳುತ್ತಾ ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ರಾಜಕೀಯದಲ್ಲಿ ಸಹನೆ ಇರಬೇಕು, ಸಮಯ ಮತ್ತು ಅವಕಾಶಗಳು ಬರಬೇಕು. ನಾನು ಸಹನೆಯಿಂದ ಕಾಯುತ್ತೇನೆ ಎಂದು ತಿಳಿಸಿದರು. +ಶಾಂತಿನಗರವನ್ನೇ ಅಭಿವೃದ್ಧಿ ಮಾಡಿಲ್ಲ. ಬಿಡಿಎಯನ್ನು ಇನ್ನೇನು ಅಭಿವೃದ್ಧಿ ಮಾಡುತ್ತಾರೆ ಎಂದು ಕೆಲವರು ಟೀಕೆ ಮಾಡುವುದನ್ನು ಕಂಡಿದ್ದೇನೆ. ನಾನಿಲ್ಲಿ ರಾಜಕೀಯ ಭಾಷಣ ಮಾಡಲು ಬಂದಿಲ್ಲ. ಅಭಿವೃದ್ಧಿ ಎಂದರೆ ಏನು, ಬಿಡಿಎ ಎಂದರೆ ಏನು ಎಂದು ತಿಳಿದುಕೊಳ್ಳದೇ ಇರುವವರ ಟೀಕೆಗಳಿಗೆಲ್ಲಾ ಉತ್ತರ ನೀಡುವುದು ಅನಗತ್ಯ ಎಂದು ಹೇಳಿದರು. +ಬಿಜೆಪಿ ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ : ಡಿಕೆಶಿ +ಬೆಂಗಳೂರು ಅತ್ಯಂತ ಸುಂದರ ನಗರ. ಇದನ್ನು ಉಳಿಸಿಕೊಳ್ಳಬೇಕು ಮತ್ತು ಬೆಳೆಸಬೇಕು. ಮತ್ತಷ್ಟು ಬಡಾವಣೆಗಳ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು. ಬೆಂಗಳೂರಿನ ಸುಧಾರಣೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುವುದಾಗಿ ಹೇಳಿದರು. +ನಾನು ಬೆಂಗಳೂರಿನಲ್ಲಿ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅರಿವಿದೆ. ವಿರೋಧ ಪಕ್ಷಗಳು ಕೇವಲ ಟೀಕೆ ಮಾಡುತ್ತಾ ಕುಳಿತುಕೊಂಡರೆ ಅದರಿಂದ ನಷ್ಟವಾಗುವುದು ಜನರಿಗೆ. ಸಮಸ್ಯೆಗಳ ಜೊತೆಗೆ ಪರಿಹಾರದ ಸಲಹೆಯನ್ನು ನೀಡಿ ನಾನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದರು. +ಮಂಡ್ಯದ ಕೆರಗೋಡಿನಲ್ಲಿ ಧ್ವಜ ವಿವಾದಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷಗಳ ಗಲಾಟೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧಪಕ್ಷವಾಗಿ ಅವರಿಗೆ ಇರುವುದು ಅದೇ ಕೆಲಸ. ಅದನ್ನವರು ಮಾಡುತ್ತಾ ಇರಲಿ, ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_250_9.txt b/eesanje/url_46_250_9.txt new file mode 100644 index 0000000000000000000000000000000000000000..b7c88c8ff4a30efaa3ecebb5c964e0ca49805b52 --- /dev/null +++ b/eesanje/url_46_250_9.txt @@ -0,0 +1,6 @@ +ಬಿಜೆಪಿ ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ : ಡಿಕೆಶಿ +ಬೆಂಗಳೂರು,ಜ.29- ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ. ಮಂಡ್ಯದ ಕೆರೆಗೋಡು ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. +ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂದುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ. + : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್ +ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರುಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲಾ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು. +ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_251_1.txt b/eesanje/url_46_251_1.txt new file mode 100644 index 0000000000000000000000000000000000000000..b49c05ed996648961a56b09049bd7a72bbe76031 --- /dev/null +++ b/eesanje/url_46_251_1.txt @@ -0,0 +1,8 @@ +ಬಾಗಲಕೋಟೆ : ಶಾಲಾ ಬಸ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ, ನಾಲ್ವರು ವಿದ್ಯಾರ್ಥಿಗಳ ದುರ್ಮರಣ +ಬಾಗಲಕೋಟೆ,ಜ.29- ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಮಧ್ಯರಾತ್ರಿ ನಡೆದಿದೆ. ಕವಟಗಿ ಗ್ರಾಮದ ಶ್ವೇತಾ ಪಾಟೀಲ (16) , ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ಶಾಲಾ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. +ಘಟನೆಯಲ್ಲಿ ಎಂಟಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ವಿಜಯಪುರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. +ಕೆರಗೋಡಿನಲ್ಲಿ ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ +ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿಕೊಂಡು ಶಾಲಾ ಬಸ್‍ನಲ್ಲಿ ಕವಟಗಿ ಗ್ರಾಮಕ್ಕೆ 12 ಗಂಟೆ ಸುಮಾರಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟ್ರ್ಯಾಕ್ಟರ್ ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. +ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಸ್‍ನಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಶಾಲಾ ಬಸ್ ಅಪಘಾತಕ್ಕೀಡಾಗಿರುವುದು ದುರದೃಷ್ಟಕರ. ಶಾಲಾ ಬಸ್ ಚಾಲಕ ಹಾಗೂ ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. +ಸಂಚಾರಿ ನಿಯಮದ ಬಗ್ಗೆ ಟ್ರ್ಯಾಕ್ಟರ್ ಚಾಲಕರಿಗೂ ಅರಿವು ಮೂಡಿಸಲಾಗುತ್ತಿದೆ. ಆದರೂ ಇಂತಹ ದುರ್ಘಟನೆ ಸಂಭವಿಸುತ್ತಿರುವುದು ದುರದೃಷ್ಟಕರ. ಶಾಲಾ ಬಸ್‍ಗಳಲ್ಲಿ ಹೆಚ್ಚಿನ ಸಂಖ್ಯೆಯ ಬಸ್‍ಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಬೇಡಿ. ಬೈಕ್ ಸವಾರರು ಸಹ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ ಎಂದು ಅಮರನಾಥರೆಡ್ಡಿಯವರು ಮನವಿ ಮಾಡಿದರು. +ಆಸ್ಪತ್ರೆಗೆ ಶಾಸಕರ ಭೇಟಿ:ಅಪಘಾತದ ಸುದ್ದಿ ತಿಳಿದು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ್ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ, ಮೃತ ಮಕ್ಕಳ ಪೋಷಕರಿಗೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_251_10.txt b/eesanje/url_46_251_10.txt new file mode 100644 index 0000000000000000000000000000000000000000..72c044c4295ebfe9dbb8d584e3ad38bf85ae3f04 --- /dev/null +++ b/eesanje/url_46_251_10.txt @@ -0,0 +1,6 @@ +ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ : ಡಿಕೆಶಿ +ಬೆಂಗಳೂರು,ಜ.28- ಹಿಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 224ಕ್ಕೆ ಅಷ್ಟೂ ಸ್ಥಾನಗಳನ್ನೂ ಗೆಲ್ಲುವುದಾಗಿಯೇ ಹೇಳಿಕೊಳ್ಳುತ್ತಿತ್ತು. ಆದರೆ ಎಷ್ಟು ಗೆದ್ದಿದೆ ಎಂದು ಗೊತ್ತಿದೆ. ಈಗಲೋಕಸಭೆಯಲ್ಲಿ 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದಕ್ಕೆ ನಾವೇಕೆ ಅಡ್ಡಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದ 543 ಲೋಕಸಭಾ ಸ್ಥಾನಗಳನ್ನೂ ಗೆದ್ದುಕೊಳ್ಳಲಿ. ಬೇಡ ಎಂದು ಯಾರೂ ಹೇಳಿಲ್ಲ. ಆದರೆ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ನಾಯಕರುಗಳ ಹೇಳಿಕೆಗಳನ್ನು ಸ್ವಲ್ಪ ಗಮನಿಸಿದರೆ ಅರ್ಥವಾಗುತ್ತದೆ. ಕಾಂಗ್ರೆಸ್ ಎಂದಿಗೂ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡಿರಲಿಲ್ಲ. ನಾವು 136 ಸ್ಥಾನಗಳಿಂದ 140 ಸ್ಥಾನಗಳನ್ನು ಗುರಿಯಾಗಿಟ್ಟುಕೊಂಡಿದ್ದೆವು. ಅದನ್ನು ಸಾಧಿಸಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದರು. +ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ +ನಿಗಮ ಮಂಡಳಿಗೆ ನೇಮಕವಾಗಿರುವ ಎಲ್ಲಾ ಅಧ್ಯಕ್ಷರ ಅಕಾರವ 2 ವರ್ಷಗಳು ಮಾತ್ರ ಎಂದು ಅವರು ಸ್ಪಷ್ಟಪಡಿಸಿದರು. ನಿಗಮ ಮಂಡಳಿ ಅಧಿಕಾರವಯನ್ನು ಎರಡು ವರ್ಷ ಮೀಸಲಿಗೆ ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವ ಎಂದು ಹೇಳಿದ್ದೇವೆ. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ. +ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಬಿಹಾರದಲ್ಲಿ ಜೆಡಿಯು ಹೊರಬರುತ್ತಿದೆ ಎಂದಾಗ ನೀವೆ ಈ ವಿಚಾರವಾಗಿ ಹೇಳುತ್ತಿದ್ದೀರಿ. ಮುಂದೆ ಏನಾಗುತ್ತದೆ ನೋಡೋಣ ಎಂದು ಹೇಳಿದರು. \ No newline at end of file diff --git a/eesanje/url_46_251_11.txt b/eesanje/url_46_251_11.txt new file mode 100644 index 0000000000000000000000000000000000000000..f06e0a63e4acec4c25cae6e7a1bacc79e53ff022 --- /dev/null +++ b/eesanje/url_46_251_11.txt @@ -0,0 +1,9 @@ +ಚರ್ಚೆಗೆ ಗ್ರಾಸವಾದ ಸೂರಜ್-ಶಿವಕುಮಾರ್ ಭೇಟಿ +ಬೆಂಗಳೂರು, ಜ.28- ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿರುವುದಲ್ಲದೆ, ತೀವ್ರ ಚರ್ಚೆಗೆ ಗ್ರಾಸವಾಗಿದೆ. +ಉಪ ಮುಖ್ಯಮಂತ್ರಿಗಳ ನಿವಾಸದಲ್ಲಿ ನಿನ್ನೆ ಸೂರಜ್ ರೇವಣ್ಣ ಮತ್ತು ಡಿ.ಕೆ.ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಇಬ್ಬರೂ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಇದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿದೆ. ರಾಜಕೀಯವಾಗಿ ತೀವ್ರ ಚರ್ಚೆಗೆ ಎಡಮಾಡಿ ಕೊಟ್ಟಿದೆ. ಅಲ್ಲದೆ, ಇಬ್ಬರು ಭೇಟಿಯಾದ ಪೋಟೋ ಮಾತ್ರ ಬಹಿರಂಗ ಪಡಿಸಿದ್ದು, ಹೆಚ್ಚಿನ ಮಾಹಿತಿ ನೀಡಿಲ್ಲ. ಇದು ಇನ್ನಷ್ಟು ಊಹಾಪೋಹಗಳಿಗೆ ಅವಕಾಶ ಕಲ್ಪಿಸಿದೆ. +ಹಾಸನ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಹಿರಂಗವಾಗಿ ಈಗಾಗಲೇ ಘೋಷಿಸಿದ್ದು, ಗೊಂದಲಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಭೆಯನ್ನು ನಡೆಸುವ ಮೂಲಕ ಗೌಡರು ಚುನಾವಣೆ ಸಿದ್ಧತೆ ಆರಂಭಿಸಿದ್ದಾರೆ. +ಬಿಗ್‌ಬಾಸ್‌ ಕನ್ನಡ ಹತ್ತನೇ ಸೀಸನ್‌ ಫಿನಾಲೆ ಹಬ್ಬ ಶುರು +ಇದರ ನಡುವೆ ಶಿವಕುಮಾರ್ ಅವರನ್ನು ಸೂರಜ್ ಅವರು ಭೇಟಿಯಾಗಿರುವ ಉದ್ದೇಶವೇನು ಎಂಬ ಪ್ರಶ್ನೆ ಕೇಳಿಬರುತ್ತದೆ. ಇದೊಂದು ಸೌಹಾರ್ಧ ಭೇಟಿಯಾಗಿತ್ತು. ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿರಬಹುದು ಎಂದು ಜೆಡಿಎಸ್ ಮೂಲಗಳು ಸ್ಪಷ್ಟಪಡಿಸಿವೆ. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿದ್ದು, ಗೆಲ್ಲುವವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂಬ ಸಂದೇಶ ನೀಡಲಾಗಿದೆ. ಚುನಾವಣಾ ಪೂರ್ವ ಸಮೀಕ್ಷೆ ವರದಿ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ. +ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲಬೇಕು. ನಮಗೆ ಕ್ಷೇತ್ರ ಅಥವಾ ಅಭ್ಯರ್ಥಿ ಮುಖ್ಯವಲ್ಲ ಎಂದು ಹೇಳಿದ್ದಾರೆ. +ಇನ್ನೂ ಉಭಯ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಜೆಡಿಎಸ್‍ನಲ್ಲೂ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ಈ ಸಂದರ್ಭದಲ್ಲಿ ಸೂರಜ್ ಅವರು ಶಿವಕುಮಾರ್ ಭೇಟಿಯಾಗಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ ಮಾತ್ರವಲ್ಲ, ಹಲವು ರೀತಿಯ ಚರ್ಚೆಗೂ ಆಸ್ಪದ ನೀಡಿದಂತಾಗಿದೆ. \ No newline at end of file diff --git a/eesanje/url_46_251_12.txt b/eesanje/url_46_251_12.txt new file mode 100644 index 0000000000000000000000000000000000000000..389cf6536347cccc355ba3853b24f853f861e8b9 --- /dev/null +++ b/eesanje/url_46_251_12.txt @@ -0,0 +1,8 @@ +ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ ಜತೆ ಎಸ್.ಟಿ.ಸೋಮಶೇಖರ್ ಚರ್ಚೆ +ಬೆಂಗಳೂರು,ಜ.27- ವಿಧಾನಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿದ್ದಂತೆ ಬಿಜೆಪಿ ಶಾಸಕರೊಬ್ಬರು ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಿಂದ ಹೊರಗುಳಿದು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ತಮ್ಮ ಕ್ಷೇತ್ರದಿಂದ ಮುಖ್ಯಮಂತ್ರಿಯವರ ನಿವಾಸ ಕಾವೇರಿಯವರೆಗೂ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ. +ಬಳಿಕ ಮುಖ್ಯಮಂತ್ರಿಯವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ತಮ್ಮ ಕ್ಷೇತ್ರದಲ್ಲಿ ಮುಖ್ಯಮಂತ್ರಿಯವರ ಸ್ನೇಹಿತರಾಗಿರುವ ಕೆ.ಆರ್. ಪೇಟೆಯ ರಾಮೇಗೌಡರು ಚೌಟ್ರಿಯೊಂದನ್ನು ನಿರ್ಮಿಸಿದ್ದಾರೆ. ಮುಖ್ಯಮಂತ್ರಿಯವರು ಕಾರ್ಯದೊತ್ತಡದಲ್ಲಿರುತ್ತಾರೆ. ಅದರಲ್ಲಿ ಭಾಗವಹಿಸುವುದಿಲ್ಲ ಎಂದು ನಾನು ಲೆಕ್ಕಾಚಾರ ಹಾಕಿ ಕಾರ್ಯಕ್ರಮಕ್ಕೆ ಹೋಗಿದ್ದೆ. ಹತ್ತು ನಿಮಿಷದಲ್ಲೇ ಮುಖ್ಯಮಂತ್ರಿಯವರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಸಂದೇಶ ಬಂದಿತು. ಅಲ್ಲಿಂದ ಹೊರಟುಬರುವುದು ಸರಿಯಲ್ಲ ಎಂದು ಉಳಿದುಕೊಂಡಿದ್ದೆ. ಮುಖ್ಯಮಂತ್ರಿಯವರು ಕಾರ್ಯಕ್ರಮಕ್ಕೆ ಬಂದಿದ್ದರು. ಮಾತನಾಡಬೇಕು ಬಾ ಎಂದು ನನ್ನನ್ನು ಕಾರಿನಲ್ಲಿ ಕರೆದುಕೊಂಡು ಬಂದರು. +ನೈಸ್ ರಸ್ತೆಯಲ್ಲಿ ಪ್ರಯಾಣಿಸುವಾಗ, ನೈಸ್ ರಸ್ತೆ ಯೋಜನೆ ಆರಂಭಗೊಂಡು 30 ವರ್ಷ ಕಳೆದಿದೆ. ಯೋಜನೆಗೆ ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅಲ್ಲಿ ಪ್ರತಿಯೊಂದು ಎಕರೆಗೆ ಮೂರೂವರೆ ಕೋಟಿ ರೂ. ದರ ದೆ. ನೈಸ್ ಸಂಸ್ಥೆಯವರು 40 ಲಕ್ಷ ಕೊಡುತ್ತೇವೆ ಎನ್ನುತ್ತಿದ್ದಾರೆ. ವಿಶೇಷ ಸಭೆ ನಡೆಸಿ ಈ ಗೊಂದಲ ಬಗೆಹರಿಸಿ ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ನೈಸ್ ವಿಚಾರವಾಗಿ ಚರ್ಚೆ ಮಾಡಿದ್ದು ಬಿಟ್ಟರೆ ರಾಜಕೀಯವಾಗಿ ಮುಖ್ಯಮಂತ್ರಿಯವರ ಜೊತೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು. +ನಿಗಮ – ಮಂಡಳಿ ನೇಮಕಾತಿ ಬೆನ್ನಲ್ಲೇ `ಕೈ’ನಲ್ಲಿ ಭುಗಿಲೆದ್ದ ಭಿನ್ನಮತ +ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಗೆ ನನಗೆ ಆಹ್ವಾನವಿರಲಿಲ್ಲ. ನಾನಿನ್ನೂ ಬಿಜೆಪಿಯಲ್ಲಿಯೇ ಇದ್ದೇನೆ. ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಕೆಲವರು ನಮ್ಮವರನ್ನು ದುರ್ಬಲ ಎಂದುಕೊಂಡಿದ್ದರು. ಈಗ ನಮ್ಮ ಹೆಸರು ಮೈಸೂರು ಹಾಗೂ ಬೆಂಗಳೂರು ಲೋಕಸಭಾ ಕ್ಷೇತ್ರಗಳಿಗೆ ಕೇಳಿಬರುತ್ತಿದೆ. ನಾನು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವುದಿಲ್ಲ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೆ. ಅಲ್ಲೂ ಸ್ಪರ್ಧೆ ಮಾಡಿದರೆ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದೆ. ನಮ್ಮನ್ನು ಕಡಿಮೆ ಅಂದಾಜು ಮಾಡಿದವರಿಗೆ ಈ ಬೆಳವಣಿಗೆಗಳು ಉತ್ತರ ನೀಡುತ್ತವೆ ಎಂದರು. ಯಾವ ಪಕ್ಷಗಳು ಮೈತ್ರಿ ಮಾಡಿಕೊಂಡರೂ ತೀರ್ಮಾನ ಮಾಡಬೇಕಾದವರು ಜನ. +ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಫಲಿತಾಂಶ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಸದ್ಯಕ್ಕೆ ಲೋಕಸಭೆ ಚುನಾವಣೆ ಕಾವೇರಿಲ್ಲ. ವಿಧಾನಪರಿಷತ್ ಚುನಾವಣೆ ವೇಳೆ ಯಾರಿಗೆ ಮತ ಹಾಕಬೇಕೆಂಬುದನ್ನು ಚರ್ಚೆ ನಡೆಸಲಾಗುತ್ತಿದೆ. ನಾನು ಕಾಂಗ್ರೆಸ್ ಸೇರುವುದಾಗಿ ಹೇಳಿಲ್ಲ. ನಮ್ಮ ಸ್ನೇಹಿತರ ಬಳಿಯೂ ಕೂಡ ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದರು. ಜಗದೀಶ್ ಶೆಟ್ಟರ್ ಅವರ ವಿಚಾರ ಬೇರೆ. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಅಲ್ಲಿ ಅವರನ್ನು ಎಂಎನ್‍ಸಿ ಮಾಡಲಾಗಿತ್ತು. ಈಗ ಮತ್ತೆ ಬಿಜೆಪಿಗೆ ಬಂದಿದ್ದಾರೆ. +ನಾನು ಬಿಜೆಪಿಯಲ್ಲಿದ್ದೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಎಂದಿಗೂ ಪಕ್ಷಕ್ಕೆ ಕರೆದಿಲ್ಲ. ಯಶವಂತಪುರ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಸಿದ್ದರಾಮಯ್ಯನವರೇ ಕಾರಣ. ಅವತ್ತಿನಿಂದ ಈವರೆಗೂ ಅವರ ಬಗ್ಗೆ ನನಗೆ ಗೌರವವಿದೆ ಎಂದರು. \ No newline at end of file diff --git a/eesanje/url_46_251_2.txt b/eesanje/url_46_251_2.txt new file mode 100644 index 0000000000000000000000000000000000000000..cc5ababa0b71bfef34248f79c4005881895367b1 --- /dev/null +++ b/eesanje/url_46_251_2.txt @@ -0,0 +1,11 @@ +ಇಂದು ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಜನ್ಮದಿನ +ಭಾರತೀಯ ಸೇನೆಯ ಪರಮೋಚ್ಚ ಸ್ಥಾನ ಅಲಂಕಿಸಿದ್ದ ವೀರ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ನವರ ಜನ್ಮದಿನವಿಂದು,ಈ ಮಹಾನ್ ಸೇನಾನಿಯನ್ನು ಸ್ಮರಿಸೋಣ. ಕೊಡಂಡೇರ ಮಾದಪ್ಪ ಕಾರಿಯಪ್ಪ ಹಲವು ಪ್ರಥಮಗಳನ್ನು ಗುರುತಿಸಿದ್ದಾರೆ, ಬ್ರಿಟಿಷ್‍ಆಳ್ವಿಕೆ ಕಾಲದಲ್ಲಿ ಕಮಾಂಡರ್ ಇನ್ ಚೀಪ್ ಜನರಲ್ ಸರ್ ರಾಯ್ ಬುಚೆರ್ ಅವರಿಂದ ಭಾರತೀಯ ಸೇನೆಯ ಉಸ್ತುವಾರಿ ವಹಿಸಿಕೊಂಡ ಮೊದಲ ಭಾರತೀಯ ಅಧಿಕಾರಿಯಾಗಿ ಅವರ ನೇಮಕವು ಅತ್ಯಂತ ಗಮನಾರ್ಹ ಸಾಧನೆಯಾಗಿದೆ. 1949 ರ ಜನವರಿ 15 ರಂದು ಅವರನ್ನು ಈ ಸ್ಥಾನಕ್ಕೆ ನೇಮಿಸಲಾಯಿತು. +ಕೆ.ಎಂ.ಕಾರ್ಯಪ್ಪ ಅವರು ಮಡಿಕೇರಿಯಲ್ಲಿ ತಮ್ಮ ಪ್ರಾರಂಬಿಕ ಶಿಕ್ಷಣವನ್ನು ಪಡೆದು ನಂತರ ಅವರು ತಮ್ಮ ಕಾಲೇಜು ಶಿಕ್ಷಣವನ್ನು ಮದ್ರಾಸಿನ (ಚೆನ್ನೈ) ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪಡೆದರು. ಸ್ವಾತಂತ್ರ್ಯದ ಮೊದಲು ಸೇನಾ ಘಟಕಕ್ಕೆ ಕಮಾಂಡರ್ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಅಧಿಕಾರಿಯೂ ಗಿದ್ದ ಅವರು 1919 ಭಾರತೀಯ ಸೇನೆಗೆ ಸೇರಿದರು ಮತ್ತು ಬಾಂಬೆಯಲ್ಲಿ (ಮುಂಬೈ) ಕರ್ನಾಟಕ ಪದಾತಿ ದಳದಲ್ಲಿ ಎರಡನೇ ಲೆಫ್ಟಿನೆಂಟ್ ಆಗಿ ನೇಮಕಗೊಂಡರು. ಅವರು ಇರಾಕ್, ಸಿರಿಯಾ, ಇರಾನ್ ಮತ್ತು ಬರ್ಮಾದಲ್ಲಿಯೂ ಸೇವೆ ಸಲ್ಲಿಸಿದರು. +1918ರಲ್ಲಿ ನಡೆದ ವಿಶ್ವ ಸಮರದ ನಂತರ ಕಿಂಗ್ಸ್ ಕಮಿಷನ್‍ನ ಮೊದಲ ಬ್ಯಾಚ್‍ಗೆ ಕಾರಿಯಪ್ಪ ಆಯ್ಕೆಯಾದರು. ಅವರು ಎರಡನೇ ರಾಣಿ ವಿಕ್ಟೋರಿಯಾ ಅವರ ಸ್ವಂತ ರಜಪೂತ್ ಲೈಟ್ ಪದಾತಿ ದಳದಲ್ಲಿ ಸೇವೆ ಸಲ್ಲಿಸಿದರು. ಅವರು ಕಾಲೇಜಿನ ಕೋರ್ಸ್‍ಗೆ ಒಳಗಾದ ಮೊದಲ ಭಾರತೀಯ ಅಧಿಕಾರಿಯೂ ಹೌದು. ನಂತರ, ಅವರನ್ನು ಮೇಜರ್ ಜನರಲ್ ಶ್ರೇಣಿಯೊಂದಿಗೆ ಜನರಲ್ ಸ್ಟಾ-ïನ ಉಪ ಮುಖ್ಯಸ್ಥರಾಗಿ ನೇಮಿಸಲಾಯಿತು. +ಕ್ಯಾರಿಯಪ್ಪ ಪೂರ್ವ ಸೇನೆಯ ಕಮಾಂಡರ್ ಆದರು.ಭಾರತ ಸ್ವಾತಂತ್ರದ ವೇಳೆ 1947 ರಲ್ಲಿ, ಪಾಕಿಸ್ತಾನದೊಂದಿಗೆ ಯುದ್ಧ ಪ್ರಾರಂಭವಾಯಿತು ಮತ್ತು ಅವರನ್ನು ಪಶ್ಚಿಮ ಕಮಾಂಡ್‍ನ ಕಮಾಂಡ್-ಇನ್-ಚೀಪ್ ಮಾಡಲಾಯಿತು.ಪರಿಸ್ಥಿತಿ ನಿಭಾಯಿಸಲು ಯಶಸ್ವಿಯಾದರು. +ಅವೈಜ್ಞಾನಿಕ ಕಾಂತರಾಜ್ ವರದಿ ಒಪ್ಪಲು ಸಾಧ್ಯವಿಲ್ಲ : ಆರ್.ಅಶೋಕ್ +ಇವರ ಸೇವೆಯನ್ನು ಪರಿಗಣಿಸಿ ಸಾಮಾನ್ಯ ಸೇವಾ ಪದಕ, ಭಾರತೀಯ ಸ್ವಾತಂತ್ರ್ಯ ಪದಕ, ಆರ್ಡರ್ ಆಫ್ ಬ್ರಿಟಿಷ್ ಎಂಪೈರ್, ಬರ್ಮಾ ಸ್ಟಾರ್, ಭಾರತೀಯ ಸೇವೆ, ಲೀಜನ್ ಮೆರಿಟ್ ಇತ್ಯಾದಿಗಳನ್ನು ಕೆ.ಎಂ.ಕಾರ್ಯಪ್ಪ ಅವರಿಗೆ ನೀಡಲಾಯಿತು. ಅವರು ಭಾರತ ಸರ್ಕಾರದಿಂದ ಫೀಲ್ಡ್ ಮಾರ್ಷಲ್ ಗೌರವದಿಂದ ಪ್ರದಾನ ಮಾಡಿದ ಎರಡನೇ ಸೇನಾ ಜನರಲ್ ಆಗಿದ್ದರು. +ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್-ಇನ್-ಚೀ-ï ಅವರನ್ನು ಗೌರವಿಸಲು, ಇಂಡಿಯಾ ಪೋಸ್ಟ್ 1995 ರಲ್ಲಿ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದೆ. +ಕೆಲವು ಕುತೂಹಲಕಾರಿ ಸಂಗತಿಗಳು:ಇಂಡಿಯಾ ಎಕ್ಸ್-ಸರ್ವಿಸ್‍ಮೆನ್ ಲೀಗ್‍ನ ಸಂಸ್ಥಾಪಕ ಸದಸ್ಯರಲ್ಲಿ ಕೆಎಂ ಕಾರಿಯಪ್ಪ ಕೂಡ ಒಬ್ಬರು. ಅವರು ನಿವೃತ್ತಿಯ ನಂತರ ಆಸ್ಟ್ರೇಲಿಯಾದ ಹೈ ಕಮಿಷನರ್ ಆಗಿ ಸೇವೆ ಸಲ್ಲಿಸಿದರು.ಅವನ ಒಡನಾಡಿಗಳು ಅವನಿಗೆ ಕಿಪ್ಪರ್ ಎಂದು ಅಡ್ಡಹೆಸರು ನೀಡಿದರು. ಅಂಚೆಚೀಟಿಗಳನ್ನು ಸಂಗ್ರಹಿಸುವುದು ಅವರ ಅತ್ಯಂತ ಪ್ರೀತಿಯ ಹವ್ಯಾಸವಾಗಿತ್ತು. ಭಾರತೀಯ ಸೇನೆಯ ಮೊದಲ ಕಮಾಂಡರ್-ಇನ್-ಚೀಪ್ ಆಗಿ ಭಾರತೀಯ ಅಧಿಕಾರಿಯ ನೇಮಕವನ್ನು ಸಹ ಸೇನಾ ದಿನವಾಗಿ ಆಚರಿಸಲಾಗುತ್ತದೆ . ಬ್ರಿಟಿಷರ ಕೈಯಿಂದ ಭಾರತೀಯರಿಗೆ ಅಧಿಕಾರದ ಬದಲಾವಣೆಯ ಮಹತ್ವದ ಘಟನೆಯನ್ನು ಗುರುತಿಸಲು ಇದನ್ನು ಆಚರಿಸಲಾಯಿತು. +ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಫೀಲ್ಡ್ ಮಾರ್ಷಲ್‍ನ ಪಂಚತಾರಾ ಶ್ರೇಣಿಯನ್ನು ಹೊಂದಿರುವ ಇಬ್ಬರು ಭಾರತೀಯ ಸೇನೆಯ ಅ„ಕಾರಿಗಳಲ್ಲಿ ಒಬ್ಬರು. ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಇತರ ಅಧಿಕಾರಿಯಾಗಿದ್ದರು. ಕೆಎಂ ಕಾರಿಯಪ್ಪ ಅವರು ಕ್ವೆಟ್ಟಾದ ಸ್ಟಾಪ್ ಕಾಲೇಜಿಗೆ ಸೇರಿದ ಮೊದಲ ಭಾರತೀಯ ಮಿಲಿಟರಿ ಅಧಿಕಾರಿ. ಯುಕೆಯ ಕ್ಯಾಂಬರ್ಲಿಯಲ್ಲಿರುವ ಇಂಪೀರಿಯಲ್ ಡಿನ್ಸ್ ಕಾಲೇಜಿನಲ್ಲಿ ತರಬೇತಿ ಪಡೆಯಲು ಆಯ್ಕೆಯಾದ ಮೊದಲ ಇಬ್ಬರು ಭಾರತೀಯರಲ್ಲಿ ಇವರು ಕೂಡ ಒಬ್ಬರು. ಎರಡನೆಯ ಮಹಾಯುದ್ಧದ ಸಮಯದಲ್ಲಿ ಜಪಾನಿಯರ ವಿರುದ್ಧ ಬರ್ಮಾ ಅಭಿಯಾನದಲ್ಲಿ ಅವರ ಪಾತ್ರಕ್ಕಾಗಿ ಅವರು ಆರ್ಡರ್ ಆಪ್ ದಿ ಬ್ರಿಟಿಷ್ ಎಂಪೈರ್ ಅನ್ನು ಸಹ ಸ್ವೀಕರಿಸಿದ್ದಾರೆ. +ಕಾರಿಯಪ್ಪ ಅವರು ಅರಣ್ಯಾ„ಕಾರಿಯ ಮಗಳು ಮುತ್ತು ಮಾಚಿಯಾಳನ್ನು ವಿವಾಹವಾಗಿದ್ದರು. ನಂತರ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಮತ್ತು ಕರಿಯಪ್ಪ ಅವರ ವೃತ್ತಿಪರ ಬದ್ಧತೆಗಳಿಂದಾಗಿ ಅವರ ಮದುವೆಯು 1945 ರಲ್ಲಿ ಮುರಿದುಬಿತ್ತು. ಅವರು 1993 ರಲ್ಲಿ ತಮ್ಮ 94 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. \ No newline at end of file diff --git a/eesanje/url_46_251_3.txt b/eesanje/url_46_251_3.txt new file mode 100644 index 0000000000000000000000000000000000000000..f68bc40ae41f64387e1adfcd6cc571c0a16ea9ed --- /dev/null +++ b/eesanje/url_46_251_3.txt @@ -0,0 +1,3 @@ +ಬಿಗಿ ಭದ್ರತೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ +ಬೆಂಗಳೂರು, ಜ.28- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೆಬಲ್ (ಸಿಎಆರ್/ ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಇಂದು ಬಿಗಿ ಭದ್ರತೆಯಲ್ಲಿ ರಾಜ್ಯಾದ್ಯಂತ ಲಿಖಿತ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಗಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿತ್ತು. ಎಲ್ಲರನ್ನೂ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದ ದೃಶ್ಯಗಳು ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕಂಡುಬಂದವು. +ಬೆಂಗಳೂರು ನಗರದಲ್ಲಿ 78 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಯಾವುದೇ ಅಕ್ರಮಗಳಿಗೆ ಎಡೆಮಾಡಿಕೊಡದೆ ಸಿಸಿಟಿವಿಗಳು ಹಾಗೂ ಸ್ಕ್ರೀನಿಂಗ್ ಮೆಷಿನ್‍ಗಳನ್ನು ಪರೀಕ್ಷಾ ಕೇಂದ್ರದ ಬಳಿ ಅಳವಡಿಸಲಾಗಿತ್ತು. \ No newline at end of file diff --git a/eesanje/url_46_251_4.txt b/eesanje/url_46_251_4.txt new file mode 100644 index 0000000000000000000000000000000000000000..40a023784f32bd3300b73ab3d4556db0372940f1 --- /dev/null +++ b/eesanje/url_46_251_4.txt @@ -0,0 +1,13 @@ +ಅವೈಜ್ಞಾನಿಕ ಕಾಂತರಾಜ್ ವರದಿ ಒಪ್ಪಲು ಸಾಧ್ಯವಿಲ್ಲ : ಆರ್.ಅಶೋಕ್ +ಬೆಂಗಳೂರು, ಜ.28- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯಿತ ಮತ್ತು ಒಕ್ಕಲಿಗರನ್ನು ತುಳಿಯಲು ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿ ತಮಗೆ ಬೇಕಾದ ಜಾತಿಯವರನ್ನು ಹೆಚ್ಚು ಸೇರ್ಪಡೆ ಮಾಡಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ರಾಜಕಾರಣ ಮಾಡುವುದರಲ್ಲಿ ಸಿದ್ದರಾಮಯ್ಯ ಅತ್ಯಂತ ಅನುಭವಿ ರಾಜಕಾರಣಿ. ರಾಜ್ಯದ ಎರಡು ಪ್ರಬಲವಾದ ಲಿಂಗಾಯಿತ ಮತ್ತು ಒಕ್ಕಲಿಗರ ಸಮುದಾಯಗಳನ್ನು ಕಡಿಮೆ ಮಾಡಿದ್ದು, ತಮಗೆ ಬೇಕಾದ ಸಮುದಾಯಗಳ ಸಂಖ್ಯೆ ಹೆಚ್ಚು ಸೇರ್ಪಡೆ ಮಾಡಿಸಿದ್ಧಾರೆ. +ಯಾವುದೇ ಕಾರಣಕ್ಕೂ ಅವೈಜ್ಞಾನಿಕವಾದ ಕಾಂತರಾಜು ನೇತೃತ್ವದ ಆಯೋಗದ ವರದಿ ಒಪ್ಪಲು ಸಾಧ್ಯವಿಲ್ಲ ಎಂದರು. ಬಿಜೆಪಿ ಮತ್ತು ಜೆಡಿಎಸ್ ಮಾತ್ರವಲ್ಲದೆ, ಸ್ವತಃ ಕಾಂಗ್ರೆಸ್ ಪಕ್ಷದವರೇ ಆ ವರದಿ ಅವೈಜ್ಞಾನಿಕವೆಂದು ಹೇಳಿದ್ದಾರೆ. ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸಿ ವರದಿ ಪಡೆದ ಬಳಿಕವೇ ವರದಿ ಬಿಡುಗಡೆ ಮಾಡಲಿ ಇದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಅವರು ಹೇಳಿದರು. +ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ : ಸಚಿವ ಚಲುವರಾಯಸ್ವಾಮಿ +ಜನವರಿ ಅಂತ್ಯಕ್ಕೆ ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದೆ. ಅದಕ್ಕೆ ಸಹಿ ಇಲ್ಲ, ಮೂಲ ಪ್ರತಿ ಕಳೆದು ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿ ಬರೆಸಿರುವ ಸಮಿಕ್ಷೆ ಆಗಿದೆ ಎಂದು ಆರೋಪಿಸಿದರು. ವೀರಶೈವ ವಿರೋಧಿಯಾಗಿ ಎರಡು ಭಾಗ ಮಾಡಿದ್ದು ಸಿದ್ದರಾಮಯ್ಯ ಅವರೇ. ಲಿಂಗಾಯತರ ಸಮುದಾಯ ವಿಭಜಿಸಿದಂತೆ, ಈಗ ಒಕ್ಕಲಿಗರನ್ನು ವಿಭಜಿಸಲು ಹೋಗುತ್ತಿದ್ದಾರೆ. ಮಂಡ್ಯ ಲೋಕಸಭಾ ಟಿಕೆಟ್‍ಗೆ ಸಂಬಂಧಿಸಿದಂತೆ ರಾಜ್ಯ ನಾಯಕರು ಮತ್ತು ಕೇಂದ್ರದ ನಾಯಕರು ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ. ಯಾರಿಗೇ ಟಿಕೆಟ್ ಕೊಟ್ಟರೂ ಮಂಡ್ಯದಲ್ಲಿ ಎನ್‍ಡಿಎ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು. +ಹನುಮ ಧ್ವಜ ತೆಗೆಯಲು ಕಾಂಗ್ರೆಸ್ ಕಾರಣ:ರಾಮಮಂದಿರ ಈಗ ಯಾತ್ರಾ ಸ್ಥಳವಾಗಿ ಪರಿವರ್ತನೆಯಾಗುತ್ತಿದೆ. ತಿರುಪತಿಗಿಂತಲೂ ಹೆಚ್ಚು ಜನ ಬರುತ್ತಿದ್ದಾರೆ. ಮಂಡ್ಯದಲ್ಲಿ ಗ್ರಾಮ ಪಂಚಾಯಿತಿ ಅನುಮೋದನೆಯೊಂದಿಗೆ 108 ಅಡಿ ಸ್ಥಂಭದಲ್ಲಿ ಹನುಮ ಧ್ವಜ ಹಾಕಿದ್ದರು. ಕಾಂಗ್ರೆಸ್‍ನವರು ಆ ಧ್ವಜ ತೆಗೆಸಿದ್ದಾರೆ. ಸಿದ್ದರಾಮಯ್ಯ ಅವರು ಜೈ ಶ್ರೀ ರಾಮ್ ಎಂದರೂ, ಉಪ ಮುಖ್ಯಮಂತ್ರಿ ಶಿವಕುಮಾರ್ ಶಿವ ಎಂದರು. ಕೇವಲ ಬಾಯಲ್ಲಿ ಹೇಳೋದಲ್ಲ, ಹೃದಯಲ್ಲಿ ಇರಬೇಕು. ನಿಮ್ಮ ಹೃದಯದಲ್ಲಿ ಟಿಪ್ಪು ತುಂಬಿದ್ದಾನೆ. ಹೇಳೋದೊಂದು ಮಾಡೋದೊಂದು. ಹನುಮ ಧ್ವಜ ತೆಗೆಸಲು ನೇರವಾಗಿ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದರು. +ಕಾಂಗ್ರೆಸ್‍ನವರದು ಹಿಂದು ವಿರೋ ನೀತಿ, ರಾಮ ವಿರೋ ನೀತಿ ಅನುಸರಿಸುತ್ತಾರೆ. ಏಕಾಏಕಿ ಪೋಲಿಸರನ್ನು ಕರೆದುಕೊಂಡು ಹೋಗಿ ಧ್ವಜ ತೆಗೆಸುವಂತದ್ದು ಏನಿತ್ತು? ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಕಾಂಗ್ರೆಸ್‍ನ ಈ ನೀತಿಯನ್ನು ಖಂಡಿಸುತ್ತೇನೆ. ಕುಕ್ಕರ್ ಬಾಂಬ್ ಹಿಡಿದು ಬಂದವನಿಗೆ ಬ್ರದರ್ ಎಂದವರು ಹನುಮನ ಬಾವುಟ ಹಾರಿಸಿದವರಿಗೆ ಏನು ಹೇಳುತ್ತೀರಿ? ಘಟನಾ ಸ್ಥಳಕ್ಕೆ ಭೇಟಿ ನೀಡುತ್ತೇವೆ, ಪ್ರತಿಭಟನೆ ಮಾಡುತ್ತೇವೆ ಎಂದರು. +70 ವರ್ಷ ರಾಮದೇವರ ಬೆಟ್ಟ ಕಾಣಲಿಲ್ಲವೆ?ಕಳೆದ 70 ವರ್ಷದಿಂದ ಶ್ರೀರಾಮದೇವರಬೆಟ್ಟ ರಾಮನಗರದಲ್ಲೇ ಇತ್ತಲ್ಲವೇ? ಈಗ ರಾಮಮಂದಿರ ಕಟ್ಟುತ್ತಾರಂತೆ. ಇಷ್ಟು ದಿನ ರಾಮದೇವರ ಬೆಟ್ಟ ಕಾಣುತ್ತಿರಲಿಲ್ಲವೇ? ಎಂದು ಪ್ರಶ್ನಿಸಿದರು.ಶ್ರೀರಾಮನ ಜನ್ಮ ದಿನಾಂಕದ ಸರ್ಟಿಫಿಕೇಟ್ ಕೇಳಿದವರು ಕಾಂಗ್ರೆಸ್‍ನವರು, ವಿವಾದಿತ ಭೂಮಿ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಅವರ ಅಪ್ಪನ ರಾಮಮಂದಿರವೇ ಎಂದು ಕೇಳುತ್ತಾರೆ. ಹೌದು ನಾವೇ ಕರಸೇವಕರಾಗಿ ಹೋರಾಡಿದ್ದು, ನಿಮ್ಮ ಮನೆಯಿಂದ ಒಬ್ಬರಾದರೂ ಬಂದಿದ್ರಾ ಎಂದು ಅವರು ವಾಗ್ದಾಳಿ ನಡೆಸಿದರು. +ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಪತನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಶೋಕ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಬಿಟ್ಟಾಯಿತು. ಈಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಕಾಂಗ್ರೆಸ್ ಚೋಡೋ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಲಿಟ್ಟಲ್ಲೆಲ್ಲ ಹೀಗೇ ಆಗೋದು. ಬಿಹಾರಕ್ಕೆ ಕಾಲಿಟ್ಟರು ಅಲ್ಲಿನ ಸರ್ಕಾರವೇ ಪತನವಾಯಿತು. ರಾಹುಲ್ ಕಾಲಿಟ್ಟ ಕಡೆಯೆಲ್ಲ ಸರ್ಕಾರಗಳು ಪತನ ಆಗಲಿವೆ ಎಂದು ಟೀಕಿಸಿದರು. +ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ : ಡಿಕೆಶಿ +ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಸರ್ಕಾರದ ಬಳಿ ಹಣ ಇಲ್ಲ. 34 ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಕೊಟ್ಟಿದ್ದಾರೆ. ವಿಶೇಷ ಸಲಹೆಗಾರರು, ಮೆಡಿಕಲ್ ಅಡ್ವೈಸರ್ ಅಂತೆಲ್ಲ ನೇಮಿಸಿದ್ದಾರೆ. ಇದಕ್ಕೆಲ್ಲ ಎಲ್ಲಿಂದ ಹಣ ಬಂತು? ರೈತರಿಗೆ ಕೊಡಲು ಹಣವಿಲ್ಲ. ದುಂದು ವೆಚ್ಚಕ್ಕೆ ಹಣ ಇದೆ. 20 ವರ್ಷಗಳಲ್ಲಿ ವಿತ್ತೀಯ ಶಿಸ್ತು ದಾಟಿಲ್ಲ. ಈ ಬಾರಿ ಅದನ್ನೆಲ್ಲ ಮೀರಿ ಹೋಗುವ ಸ್ಥಿತಿ ಇದೆ. ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಸರ್ಕಾರ ದಿವಾಳಿ ಆಗಿದೆ. ರೈತರಿಗೆ ಪರಿಹಾರ ಕೊಡಿ ಇಲ್ಲವೆ ಕುರ್ಚಿ ಬಿಡಿ ಎಂದು ನಾಳೆ ಕೋಲಾರದಲ್ಲಿ ರಾಜ್ಯ ಸರ್ಕಾರದ ವಿರುದ್ದ ಹೋರಾಟವನ್ನು ಬಿಜೆಪಿ ಆರಂಭಿಸಲಿದೆ ಎಂದರು. +ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ ಪಕ್ಕಾ;ಕಾಂಗ್ರೆಸ್ ಗ್ಯಾರಂಟಿ ಸುಳ್ಳು. ಅದಕ್ಕೆ ಸಾಕ್ಷಿ ರಾಮನಗರ ಶಾಸಕರು ಎಂದು ಆರೋಪಿಸಿದ ಅವರು, ಲೋಕಸಭೆ ಚುನಾವಣೆವರೆಗೆ ಗ್ಯಾರಂಟಿ ಗಿಮಿಕ್ ಅಷ್ಟೆ. ಕಾಂಗ್ರೆಸ್ ಸರ್ಕಾರದ ಆರ್ಥಿಕ ಸಲಹೆಗಾರರೇ ಗ್ಯಾರಂಟಿಗೆ ಷರತ್ತು ಹಾಕಬೇಕು ಎಂದಿದ್ದಾರೆ ಎಂದು ಟೀಕಿಸಿದರು. \ No newline at end of file diff --git a/eesanje/url_46_251_5.txt b/eesanje/url_46_251_5.txt new file mode 100644 index 0000000000000000000000000000000000000000..9868e6b0893836c87525cb8caafb6571e7af5ffe --- /dev/null +++ b/eesanje/url_46_251_5.txt @@ -0,0 +1,5 @@ +ಕೆರಗೋಡಿನಲ್ಲಿ ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ +ಚಿತ್ರದುರ್ಗ,ಜ.28- ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಅದೇ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 15 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರಂತೆ ನಾವು 28 ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದರು. +ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಸಮೀಕ್ಷೆಗಳೂ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಹೇಳಿದರು. ರಾಷ್ಟ್ರಮಟ್ಟದಲ್ಲಿ ಇಂಡಿಯಾ ರಾಜಕೀಯ ಕೂಟದಲ್ಲಿನ ವಿವಿಧ ಪಕ್ಷಗಳ ಹೊಂದಾಣಿಕೆ ಕುರಿತಂತೆ ಪಕ್ಷದ ವರಿಷ್ಠ ನಾಯಕರು ಚರ್ಚೆ ಮಾಡುತ್ತಾರೆ. ನಾವು ಅದರ ಬಗ್ಗೆ ಹೇಳಿಕೆ ನೀಡುವುದಿಲ್ಲ ಎಂದರು. +ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ : ಸಚಿವ ಚಲುವರಾಯಸ್ವಾಮಿ +ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಜಾರಿಗೆ ಸಂಬಂಧಪಟ್ಟಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಹೇಳಿದರು. ಚಿತ್ರದುರ್ಗದಲ್ಲಿಂದು ಶೋಷಿತ ಮಹಾ ಒಕ್ಕೂಟ ಎಂಬ ಪ್ರಗತಿಪರರು, ಹಿಂದುಳಿದವರ ಸಮಾವೇಶ ನಡೆಸಲಾಗುತ್ತಿದೆ. ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯ ಮಾಡಲಾಗಿದೆ. ಸರ್ಕಾರ ಆಯೋಗದ ವರದಿಯನ್ನು ಸ್ವೀಕರಿಸಲು ಸಿದ್ಧವಿದೆ. ವರದಿ ಸಲ್ಲಿಕೆಯಾದ ಬಳಿಕ ಅದರ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. \ No newline at end of file diff --git a/eesanje/url_46_251_6.txt b/eesanje/url_46_251_6.txt new file mode 100644 index 0000000000000000000000000000000000000000..4df01ece07e0ac749762860b405c9e5386694d5d --- /dev/null +++ b/eesanje/url_46_251_6.txt @@ -0,0 +1,7 @@ +ಜಾತಿ ಜನಗಣತಿ ನಡೆಸಲು ಬದ್ಧ : ಡಿಸಿಎಂ ಡಿ.ಕೆ.ಶಿವಕುಮಾರ್ +ಬೆಂಗಳೂರು,ಜ.28- ಕಾಂಗ್ರೆಸ್ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ದೇಶಾದ್ಯಂತ ಜಾತಿ ಜನಗಣತಿ ನಡೆಸಲು ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.ಚಿತ್ರದುರ್ಗದಲ್ಲಿಂದು ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ದೇಶಾದ್ಯಂತ ಎಲ್ಲಾ ಸಮುದಾಯಗಳ ಶಕ್ತಿಯನ್ನು ಒಟ್ಟುಗೂಡಿಸಬೇಕು ಎಂಬ ಸಂಕಲ್ಪದೊಂದಿಗೆ ಜಾತಿ ಜನಗಣತಿ ನಡೆಸಬೇಕು ಎಂಬ ನಿಲುವನ್ನು ಕಾಂಗ್ರೆಸ್ ಹೊಂದಿದೆ. ಇದಕ್ಕೆ ನಾವು ಬದ್ಧರಾಗಿದ್ದೇವೆ. ಯಾರಿಗೂ ಆತಂಕ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. +ಯಶಸ್ಸು ಯಾರ ಆಸ್ತಿಯೂ ಅಲ್ಲ. ರಾಜ ರಾಜನಾಗಿ, ಶ್ರೀಮಂತ ಶ್ರೀಮಂತನಾಗಿಯೇ ಇರುವುದಿಲ್ಲ, ಪ್ರಜಾಪ್ರಭುತ್ವದಲ್ಲಿ ಬಡವನೂ ರಾಜನಾಗಬಹುದು, ಶ್ರೀಮಂತನಾಗಬಹುದು. ಆದರೆ ಅದಕ್ಕೆ ಕಠಿಣ ಪರಿಶ್ರಮ ಮತ್ತು ಧೈರ್ಯದ ಅಗತ್ಯವಿದೆ ಎಂದು ಹೇಳಿದರು. +ಮನೆಯೆಂದ ಮೇಲೆ ಕಷ್ಟ, ಕಸ ಎರಡೂ ಇರುತ್ತದೆ. ಕಷ್ಟ ಬಂದಾಗ ಜಗ್ಗಬಾರದು, ಹೋರಾಟ ನಡೆಸಬೇಕು. ಭಗವದ್ಗೀತೆ, ರಾಮಾಯಣ, ಕುರಾನ್‍ಗಳು ಧರ್ಮಗ್ರಂಥಗಳಾಗಿದ್ದರೆ ಅಂಬೇಡ್ಕರ್‍ರವರ ಸಂವಿಧಾನ ದೇಶದ ಪವಿತ್ರ ಗ್ರಂಥ ಎಲ್ಲರ ಬದುಕಿನ ಆಸರೆ. ಶ್ರೀರಕ್ಷೆ ಕೂಡ ಹೌದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶೋಷಿತ ಸಮುದಾಯದ ಮುಖಂಡರು, ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಸ್ವೀಕರಿಸಬೇಕು ಎಂಬ ಭಿನ್ನವತ್ತಳೆಯನ್ನು ಡಿ.ಕೆ.ಶಿವಕುಮಾರ್‍ರವರಿಗೆ ಸಲ್ಲಿಸಿದರು. +ನಿತೀಶ್‍ ಎನ್‍ಡಿಎ ಜೊತೆ ಹೋಗುವುದು 5 ದಿನ ಹಿಂದೆಯೇ ಮಾಹಿತಿ ಇತ್ತು : ಖರ್ಗೆ +ಡಿ.ಕೆ.ಶಿವಕುಮಾರ್‍ರವರು ಮಾತನಾಡುತ್ತಿದ್ದ ವೇಳೆ, ಮುಖ್ಯಮಂತ್ರಿಯವರು ವೇದಿಕೆಗೆ ಆಗಮಿಸಿದರು. ಇದನ್ನು ಕಂಡು ಜನ ಸಿಳ್ಳೆ, ಚಪ್ಪಾಳೆಯ ಹರ್ಷೋದ್ಘಾರ ಮಾಡಿದರು. ಇದರಿಂದ ಕೆಲಕಾಲ ಡಿ.ಕೆ.ಶಿವಕುಮಾರ್ ತಮ್ಮ ಭಾಷಣವನ್ನು ಸ್ಥಗಿತಗೊಳಿಸಬೇಕಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಾಗರಾಜು ಯಾದವ್, ಪಿ.ಆರ್.ರಮೇಶ್, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಅನೇಕರು ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಬೇಕು ಎಂದು ಒತ್ತಾಯಿಸಿದರು. +ಶಾಸಕ ಪ್ರದೀಪ್ ಈಶ್ವರ್ ವರ್ಣರಂಜಿತವಾಗಿ ಮಾತನಾಡಿ, ಚಪ್ಪಾಳೆ, ಸಿಳ್ಳೆ ಗಿಟ್ಟಿಸಿಕೊಂಡರು. ಸಚಿವರಾದ ದಿನೇಶ್ ಗುಂಡೂರಾವ್, ಬಿ.ನಾಗೇಂದ್ರ, ಎಚ್.ಸಿ.ಮಹದೇವಪ್ಪ, ಜಮೀರ್ ಅಹಮ್ಮದ್ ಖಾನ್, ಕೆ.ಎಚ್.ಮುನಿಯಪ್ಪ, ಮಧುಬಂಗಾರಪ್ಪ, ರಹೀಂಖಾನ್, ಭೈರತಿ ಸುರೇಶ್ ಸೇರಿದಂತೆ ಅನೇಕ ಶಾಸಕರು, ಹಿಂದುಳಿದ ಸಮುದಾಯದ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. diff --git a/eesanje/url_46_251_7.txt b/eesanje/url_46_251_7.txt new file mode 100644 index 0000000000000000000000000000000000000000..e0f39c3b1d41467598d0860173a9502692ddb6bd --- /dev/null +++ b/eesanje/url_46_251_7.txt @@ -0,0 +1,7 @@ +ಮನೆಮನೆಯಲ್ಲೂ ಹನುಮ ಧ್ವಜ ಹಾರಿಸಲು ವಿಜಯೇಂದ್ರ ಕೆರೆ +ಬೆಂಗಳೂರು,ಜ.28- ಮನೆಮನೆಯಲ್ಲೂ ಹನುಮ ಧ್ವಜ ಹಾರಿಸುವ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜನತಗೆ ಕರೆಕೊಟ್ಟಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯು ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ವಾಗ್ದಳಿ ನಡೆಸಿದ್ದಾರೆ. +ಸರಕು ಸಾಗಣೆ ಹಡಗಿನ ಮೇಲೆ ಹೌತಿ ಉಗ್ರರ ದಾಳಿ +ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರಕಾರ ಹನುಮ ಧ್ವಜವನ್ನು ನಿಷೇಧಿಸಿದೆಯೇ? ನಿಷೇಧ ಮಾಡದಿದ್ದರೆ, ಅನುಮತಿ ಪಡೆದು ಧ್ವಜ ಸ್ಥಂಭಕೆ ಕಟ್ಟಿದ ಹನುಮಧ್ವಜವನ್ನು ಕಿತ್ತು ಹಾಕಿದ್ದು ಯಾಕೆ? ಅಧಿಕಾರಿಗಳ ಉದ್ಧಟತನವಾದರೆ ಕೂಡಲೇ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಿ. ಆಳುವವರ ಮರ್ಜಿಗೆ ಅನುಗುಣವಾಗಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದರೆ ಎಂದು ಕಿಡಿಕಾರಿದ್ದಾರೆ. +ನೀವು ಮಾಡಿರುವುದು ಜನರ ಭಾವನೆಗಳನ್ನು ಕೆಣಕುವ ಕೆಲಸ. ಅಧಿಕಾರದ ಬಲದಿಂದ, ಅಧಿಕಾರದ ಮದದಿಂದ ಆಡಳಿತ ಯಂತ್ರದ ದುರುಪಯೋಗ ಮಾಡಿ ಧ್ವಜ ಇಳಿಸಿರಬಹುದು. ಇದೆ ಜನ ನಿಮ್ಮನ್ನು ಅಧಿಕಾರದಿಂದ ಇಳಿಸುತ್ತಾರೆ ಎಂಬುದನ್ನು ನೆನಪಿಟ್ಟುಕೊಳ್ಳಿ. ನಿಮ್ಮ ಈ ಹಿಂದೂ ವಿರೋಧಿ ನೀತಿಯನ್ನು ಕಟುವಾಗಿ ಖಂಡಿಸುತ್ತೇನೆ. +ಮಂಡ್ಯದ ಕೆರಗೋಡು ಗ್ರಾಮದಲ್ಲಿ ಅಯೋಧ್ಯೆಯ ಶ್ರೀ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಹಾರಿಸಲಾಗಿದ್ದ ಹನುಮ ಧ್ವಜ ಇಳಿಸಿದ ಕಾಂಗ್ರೆಸ್ ಸರ್ಕಾರ ಎಂದು ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ. \ No newline at end of file diff --git a/eesanje/url_46_251_8.txt b/eesanje/url_46_251_8.txt new file mode 100644 index 0000000000000000000000000000000000000000..bdfd7c38f05bfd13e6cf8df1512497b96b99486c --- /dev/null +++ b/eesanje/url_46_251_8.txt @@ -0,0 +1,6 @@ +ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ : ಸಚಿವ ಚಲುವರಾಯಸ್ವಾಮಿ +ಬೆಂಗಳೂರು,ಜ.28- ಸಂವಿಧಾನದಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ. ಇದರ ಹೊರತಾಗಿ ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. +ಅವರು ಇಂದು ಕೆರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹನುಮ ಧ್ವಜ ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತುಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು. +ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ಹಾರಿಸುತ್ತೇವೆ ಎನ್ನುತ್ತಾರೆ. ಆಗ ಅವಕಾಶ ಕೊಡಲು ಆಗುತ್ತದೆಯೇ? ಇದೊಂದು ಕಡೆ ಅವಕಾಶ ಕೊಟ್ಟರೆ ಎಲ್ಲಾ ಕಡೆ ಕೇಳುತ್ತಾರೆ. ಇದು ತಪ್ಪು ಎಂದರು. ಸ್ಥಳೀಯ ಯುವಕರು ಒಳ್ಳೆಯವರೇ. ಅವರನ್ನು ದಾರಿ ತಪ್ಪಿಸುತ್ತಿದ್ದಾರೆ. ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಬೇರೆ ಸ್ಥಳದಲ್ಲಿ ಹನುಮಾನ್ ಧ್ವಜ ಹಾರಿಸಲು ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹಾಕಲು ಅವಕಾಶ ಕೊಡೋಣ. ಆದರೆ ಸರ್ಕಾರಿ ಕಚೇರಿ ಮುಂದೆ ಬೇಡ ಎಂದರು.ನಾನು ರಾಮ ಭಕ್ತ, ನಮ್ಮ ಮನೆ ದೇವರು ವಿಷ್ಣು. ನಾವು ಯಾವುದೇ ಧ್ವಜದ ವಿರೋಗಳಲ್ಲ. +ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ : ಡಿಕೆಶಿ +ಪಂಚಾಯಿತಿಯಲ್ಲಿ ಸಭೆಯಲ್ಲಿ ಹನುಮ ಧ್ವಜ ಹಾರಿಸಲು ಅನುಮೋದನೆ ನೀಡಿದ್ದರೆ ತಪ್ಪು. ಅವರ ವಿರುದ್ಧವೂ ಕ್ರಮ ಆಗುತ್ತದೆ. ಇದರಲ್ಲಿ ನಾನಾಗಲೀ, ಸ್ಥಳೀಯ ಶಾಸಕರಾಗಲೀ ರಾಜಕೀಯ ಮಾಡುತ್ತಿಲ್ಲ. ಸರ್ಕಾರಿ ಕಚೆರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನ ವಿರುದ್ಧ ಆಗಿರುವುದರಿಂದ ಅದನ್ನ ತೆರವು ಮಾಡಲಾಗಿದೆ ಎಂದರು. \ No newline at end of file diff --git a/eesanje/url_46_251_9.txt b/eesanje/url_46_251_9.txt new file mode 100644 index 0000000000000000000000000000000000000000..7b19270c07bf021819ecb5093ca9c6f0694a28a2 --- /dev/null +++ b/eesanje/url_46_251_9.txt @@ -0,0 +1,8 @@ +ಹನುಮ ಧ್ವಜ ತೆರವಿಗೆ ವಿರೋಧ , ಮಂಡ್ಯದ ಕೆರೆಗೋಡು ಉದ್ವಿಗ್ನ +ಮಂಡ್ಯ, ಜ.28- ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆನಪಿಗಾಗಿ ತಾಲೂಕಿನ ಕೆರಗೋಡು ಗ್ರಾಮದ 108 ಅಡಿ ಎತ್ತರದ ಧ್ವಜಸ್ಥಂಭದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. +ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಹನುಮ ಧ್ವಜ ತೆರವುಗೊಳಿಸುವುದರ ವಿರುದ್ಧ ಗ್ರಾಮಸ್ಥರು ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೆರಗೋಡು ಗ್ರಾಮಸ್ಥರು ತಮ್ಮ ಗ್ರಾಮದ ಧ್ವಜಸ್ಥಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದರು. +ಈ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಲು ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ಹನುಮ ಧ್ವಜ ತೆರವುಗೊಳಿಸಲು ಆಗಮಿಸಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಗ್ರಾಮಸ್ಥರು ಮತ್ತು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದಾರೆ. +ಅಣುಬಾಂಬ್ ಸಾಮರ್ಥ್ಯದಿಂದ ಭಾರತಕ್ಕೆ ಜಾಗತಿಕ ಭೂಪಟದಲ್ಲಿ ಸ್ಥಾನ ಕಲ್ಪಿಸಿದ ಕನ್ನಡಿಗ ರಾಜಾರಾಮಣ್ಣ +ಹನುಮ ಧ್ವಜ ಹಾರಿಸಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಧ್ವಜ ಹಾರಾಟ ಕುರಿತು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ವಿವಾದ ಇತ್ಯರ್ಥ ಪಡಿಸಿದ್ದರು ಎನ್ನಲಾಗಿದೆ. ಆದರೂ, ಸರ್ಕಾರಿ ಜಾಗದಲ್ಲಿ ಧ್ವಜಸ್ಥಂಭವಿದೆ ಎಂಬ ಕಾರಣ ನೀಡಿ ಕೆಲ ದಿನಗಳ ನಂತರ ಮೇಲಾಧಿಕಾರಿಗಳು ಧ್ವಜ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. +ಚರ್ಚೆಗೆ ಗ್ರಾಸವಾದ ಸೂರಜ್-ಶಿವಕುಮಾರ್ ಭೇಟಿ +ಹಿರಿಯ ಅಧಿಕಾರಗಳ ಮೌಖಿಕ ಆದೇಶದಂತೆ ಧ್ವಜಸ್ಥಂಭ ತೆರವು ಮಾಡಲು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗ್ರಾಮಕ್ಕೆ ಆಗಮಿಸಿದ್ದಾಗ ವಿರೋಧ ವ್ಯಕ್ತವಾಗಿದೆ. ಗ್ರಾಮಸ್ಥರ ಪ್ರತಿಭಟನೆಯಿಂದ ವಾಪಸ್ಸಾಗಿದ್ದ ಅಧಿಕಾರಿಗಳು ಮತ್ತೆ ಬೆಳಗಿನ ಜಾವ ಗ್ರಾಮಕ್ಕೆ ಆಗಮಿಸಿ ಧ್ವಜ ತೆರವುಗೊಳಿಸಲು ಯತ್ನಿಸಿದ್ದಾರೆ. ಆಗಪೊಲೀಸರು ಆಗಮಿಸಿದ್ದಾರೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಘೋಷಣೆ ಕೂಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. \ No newline at end of file diff --git a/eesanje/url_46_252_1.txt b/eesanje/url_46_252_1.txt new file mode 100644 index 0000000000000000000000000000000000000000..8eafd1af829386c8af6c0c6368b9f8259a116d59 --- /dev/null +++ b/eesanje/url_46_252_1.txt @@ -0,0 +1,6 @@ +ಯತ್ನಾಳ್ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್ +ಬೆಂಗಳೂರು,ಜ.27- ಪರಿಸರ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ವಿಜಯ ಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಧ್ಯಕ್ಷತೆಯ ಸಿದ್ದಶ್ರೀ ಸೌಹಾರ್ಧ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡುವ ಮೂಲಕ ಯತ್ನಾಳ್, ಸರ್ಕಾರದ ನಡೆಯನ್ನು ವಿರೋಧಿಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ. +ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ಎದುರಿಸಲಾಗದೆ ನಮ್ಮ ಎಥನಾಲ್ ಕಾರ್ಖಾನೆಗೆ ನೋಟಿಸ್ ಕೊಡಿಸಿದೆ. ರೈತರಿಗೆ ನೆರವಾಗಲು ಹಾಗೂ ಹಿಂದುಳಿದ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಸ್ಥಾಪಿಸಲಾಗಿದೆ. ಕಾನೂನು ರೀತ್ಯಾ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲಾಗುತ್ತದೆ. ಈ ನೋಟಿಸ್, ಆದೇಶಗಳಿಗೆ ಹೆದರುವ ಜಾಯಮಾನ ನನ್ನದಲ್ಲ. ಕಾಂಗ್ರೆಸ್ ಆಡಳಿತದ ವಿರುದ್ಧ ಹೋರಾಟ ಮಾಡಲು ಶಕ್ತಿ ಇಮ್ಮಡಿಯಾಗಿದೆ ಎಂದಿದ್ದಾರೆ. +ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್ +ಕೈಲಾಗದವರ ಕೊನೆಯ ಅಸ್ತ್ರವೇ ಅಪಪ್ರಚಾರ ಎಂಬುದು ಗೊತ್ತಿರುವ ವಿಷಯವೇ. ಬಡವರಿಗೆ, ದೀನ-ದಲಿತರಿಗೆ, ಪಕ್ಷದ ಕಾರ್ಯಕರ್ತರಿಗೆ ಸಹಾನೂಭೂತಿಯಿಂದ ಕಾಣುತ್ತ ಬಂದಿರುವ ನಾನು, ನನ್ನ ಮಿತಿಯಲ್ಲಿ ನನ್ನದೇ ಕಾರ್ಖಾನೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ಸೃಷ್ಟಿಸಿದ್ದೇನೆ. ಜಿಲ್ಲೆಯ ಆರ್ಥಿಕತೆಯನ್ನು ಸುಧಾರಿಸಲು ನನ್ನ ಅಳಿಲು ಸೇವೆಯೂ ಇದೆ. ರಾಜಕೀಯ ಒತ್ತಡಕ್ಕೆ ಮಣಿದು ನನ್ನ ಕಾರ್ಖಾನೆಯನ್ನು ಮುಚ್ಚಿಸುವುದರಿಂದ ಇವರು ಏನನ್ನೂ ಕೂಡ ಸಾಸಲು ಸಾಧ್ಯವಿಲ್ಲ. ಕಾರ್ಖಾನೆ ಮತ್ತೆ ತೆರೆಯುವುದು ನಿಶ್ಚಿತ, ಈ ನಿಟ್ಟಿನಲ್ಲಿ ಕಾನೂನು ಹೋರಾಟ ಮಾಡುತ್ತೇನೆ ಎಂದು ಕಿಡಿಕಾರಿದ್ದಾರೆ. +ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಒಡೆತನದ ಶುಗರ್ ಫ್ಯಾಕ್ಟರಿ ಬಂದ್‍ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶುಗರ್ ಫ್ಯಾಕ್ಟರಿ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ \ No newline at end of file diff --git a/eesanje/url_46_252_10.txt b/eesanje/url_46_252_10.txt new file mode 100644 index 0000000000000000000000000000000000000000..4c90b930696ea74fb451936a5a8d7a40b323cc76 --- /dev/null +++ b/eesanje/url_46_252_10.txt @@ -0,0 +1,12 @@ +ಶೆಟ್ಟರ್ ಮರಳಿ ತರುವ ಮೂಲಕ ಬಿಜೆಪಿ ರಣಕಹಳೆ +ಬೆಂಗಳೂರು,ಜ.26- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಮರಳಿ ಪಕ್ಷಕ್ಕೆ ಕರೆತರುವ ಮೂಲಕ ಬಿಜೆಪಿ ಲೋಕಸಮರದ ರಣಕಹಳೆ ಮೊಳಗಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದ ಮಾಜಿ ಶೆಟ್ಟರ್ ಬಿಜೆಪಿಗೆ ಮರಳಿರು ವುದು ಬಿಜೆಪಿಯ ಮಹತ್ವದ ಬೆಳವಣಿಗೆಗಳಲ್ಲಿ ಒಂದು. +ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಮಾತೃ ಪಕ್ಷಕ್ಕೆ ಮರಳಲು ಬಲವಾದ ಕಾರಣವೊಂದನ್ನು ಕಂಡುಕೊಂಡಿದ್ದಾರೆ. ಬಿಜೆಪಿ ಈಗಾಗಲೇ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ಆರಂಭಿಸಿದ್ದು, ನಾಯಕರು ಗೆಲ್ಲುವ ಸಾಮಥ್ರ್ಯ ಇರುವವರಿಗೇ ಟಿಕೆಟ್ ನೀಡುವ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಈ ಬಾರಿ ರಾಜ್ಯದಲ್ಲಿಯೇ ಹೈವೋಲ್ಟೇಜ್ ಹಣಾಹಣಿಗೆ ಸಾಕ್ಷಿಯಾಗಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಮಲ ಪಾಳಯದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ತೀವ್ರವಾಗಿದೆ. +2004ರಿಂದ ನಿರಂತರ ನಾಲ್ಕು ಬಾರಿ ಸುರೇಶ್ ಅಂಗಡಿ ಅವರು ಸಂಸದರಾಗಿ ಆಯ್ಕೆಯಾಗಿದ್ದರು. ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಪ್ರಬಲ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿರುದ್ಧ ಸುರೇಶ್ ಅಂಗಡಿ ಪತ್ನಿ ಮಂಗಳಾ ಅಂಗಡಿ ಅವರು ಅನುಕಂಪದ ಆಧಾರದಲ್ಲಿ 5,240 ಮತಗಳ ಅಂತರದ ಗೆಲುವು ಸಾಸಿ ಸಂಸತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿ ದ್ದರು. +ಈ ಬಾರಿ ಮಂಗಳಾ ಅಂಗಡಿ ಅವರ ಬದಲಾಗಿ ಟಿಕೆಟ್ ಯುವ ಮುಖಕ್ಕೆ ನೀಡಲು ಬಿಜೆಪಿ ತೀರ್ಮಾನ ಮಾಡಿರುವ ಕುರಿತು ಚರ್ಚೆಗಳು ನಡೆದಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದ ಸುರೇಶ್ ಅಂಗಡಿ ಅವರ ಪುತ್ರಿ, ಜಗದೀಶ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಎಲ್ಲಾ ಸಾಧ್ಯತೆಗಳಿವೆ.ಸೊಸೆ ಬಿಜೆಪಿ ಅಭ್ಯರ್ಥಿಯಾಗಿ, ಮಾವ ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪ್ರಚಾರದ ವೇಳೆ ಮುಜುಗರ ಅನುಭವಿಸಬೇಕಾಗಬಹುದು ಎಂದು ಚುನಾವಣೆ ಘೋಷಣೆಗೆ ಮೊದಲು ಶೆಟ್ಟರ್ ಅವರು ಕಮಲ ಪಾಳಯಕ್ಕೆ ಮರಳಿ ಪುನರ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. +ದಿಢೀರ್ ದೆಹಲಿ ಮಟ್ಟದಲ್ಲಿ ಶೆಟ್ಟರ್ ಅವರು ಪಕ್ಷಕ್ಕೆ ಮರಳಲು ಇದು ಪ್ರಮುಖ ಕಾರಣ ಎಂದು ಹಲವು ಆಯಾಮಗಳಲ್ಲಿ ಅಂದಾಜಿಸಲಾಗಿದೆ. ಶೆಟ್ಟರ್ ಪುತ್ರ, ಶ್ರದ್ಧಾ ಪತಿ ಸಂಕಲ್ಪ್ ಅವರು ತಂದೆ ಪಕ್ಷಕ್ಕೆ ಮರಳಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬ ಜನಸಂಘದ ಕಾಲದಿಂದ ಸಂಘಟನೆ ಮಾಡಿಕೊಂಡು ಬಂದಿದೆ. ನಮ್ಮ ತಂದೆ ಮೋದಿ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದಿದ್ದಾರೆ. ಈ ವೇಳೆ ಸಂಸದೆ ಮಂಗಳಾ ಅಂಗಡಿ ಕೂಡ ಜತೆಯಲ್ಲಿದ್ದರು. +ಸುರೇಶ್ ಅಂಗಡಿ ನಿಧನದ ನಂತರ ಬೆಳಗಾವಿ ಲೋಕಸಭೆ ಉಪ ಚುನಾವಣೆ ವೇಳೆ ಸೊಸೆ ಶ್ರದ್ಧಾಗೆ ಟಿಕೆಟ್ ಕೊಡಿಸಲು ಜಗದೀಶ ಶೆಟ್ಟರ್ ದೆಹಲಿ ಸೇರಿದಂತೆ ರಾಜ್ಯಮಟ್ಟದಲ್ಲಿ ತೀವ್ರ ಲಾಬಿ ನಡೆಸಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದ ಶ್ರದ್ಧಾ ಸದ್ದಿಲ್ಲದೇ ಬಿಜೆಪಿ ಶಾಸಕರು, ಮುಖಂಡರನ್ನು ಭೇಟಿ ಮಾಡಿದ್ದರು. ತಾಯಿಗೆ ಟಿಕೆಟ್ ಸಿಕ್ಕಿದ ಬಳಿಕ ಕ್ಷೇತ್ರದೆಲ್ಲೆಡೆ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದರು. +ಶೆಟ್ಟರ್ ಬಿಟ್ಟು ಹೋಗಿದ್ದು ಒಳ್ಳೆಯದಾಯಿತು : ಡಿಕೆಶಿ +ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜಕಾರಣದ ತೆರೆಯ ಹಿಂದೆ ಸರಿದಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಗನಿಗೆ ರಾಜ್ಯಾಧ್ಯಕ್ಷ ಪಟ್ಟ ಸಿಗುತ್ತಿದ್ದಂತೆ ಸಕ್ರಿಯರಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರನ್ನು ಕರೆದುಕೊಂಡು ಬರುವ ಮೂಲಕ ಪುತ್ರ ವಿಜಯೇಂದ್ರಗೆ ಶಕ್ತಿ ತುಂಬುವಲ್ಲಿ ಬಿಎಸ್‍ವೈ ಯಶಸ್ವಿಯಾಗಿದ್ದಾರೆ.ಜಗದೀಶ್ ಶೆಟ್ಟರ್ ಬೆನ್ನಲ್ಲೇ ಪಕ್ಷ ತೊರೆದವ ರನ್ನು ವಾಪಸ್ ಕರೆತರಲು ಯಡಿಯೂರಪ್ಪ ಮುಂದಾಗಿದ್ದು, ಶೆಟ್ಟರ್ ಬೆನ್ನಲ್ಲೇ ಇಬ್ಬರು ಪ್ರಮುಖ ನಾಯಕರನ್ನು ಯಡಿಯೂರಪ್ಪ ಸಂಪರ್ಕಿಸಿದ್ದಾರೆ ಎನ್ನಲಾಗಿದೆ. +ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಅವರನ್ನು ಯಡಿಯೂರಪ್ಪ ಸಂಪರ್ಕಿಸಿದ್ದಾರಂತೆ. ಕಳೆದ ಟಿಕೆಟ್ ಸಿಗದ ಹಿನ್ನೆಲೆ ಸವದಿ ಕಾಂಗ್ರೆಸ್ ಸೇರಿದ್ದರೆ, ಜನಾರ್ಧನ ರೆಡ್ಡಿ ಹೊಸ ಪಕ್ಷವನ್ನೇ ಸ್ಥಾಪಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. +ಈ ಇಬ್ಬರ ಜೊತೆಯಲ್ಲಿ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಘರ್ ವಾಪಸಿ ಮೂಲಕ ಬಿಜೆಪಿಗೆ ಕರೆತರಲು ಯಡಿಯೂರಪ್ಪ ಪ್ಲಾನ್ ಮಾಡಿಕೊಂಡಿದ್ದಾರಂತೆ.ಲಕ್ಷ್ಮಣ ಸವದಿ ಜೊತೆಯಲ್ಲಿ ಶಶಿಕಲಾ ಜೊಲ್ಲೆ ಸೇರಿದಂತೆ ಬೆಳಗಾವಿ ಭಾಗದ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸವದಿ ಹಿಂದಿರುಗಿದರೆ ಬೆಳಗಾವಿ ಭಾಗದಲ್ಲಿ ಬಿಜೆಪಿಗೆ ಬಹುದೊಡ್ಡ ಶಕ್ತಿ ಬಂದಂತಾಗುತ್ತದೆ ಎಂಬುವುದು ಕಮಲ ವರಿಷ್ಠರ ಪ್ಲಾನ್ ಆಗಿದೆ. +ಜನಾಧರ್Àನ ರೆಡ್ಡಿ ಕರೆತರಲು ಆಪ್ತ ಗೆಳೆಯ, ಮಾಜಿ ಸಚಿವ ಶ್ರೀರಾಮುಲು ಪ್ರಯತ್ನಿಸುತ್ತಿದ್ದಾರೆ. ಶೀಘ್ರವೇ ರೆಡ್ಡಿ ಜೊತೆ ಹೈಕಮಾಂಡ್ ನಾಯಕರ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಜನಾಧರ್ನ ರೆಡ್ಡಿ ಮರಳಿಸಿದ್ರೆ ಬಳ್ಳಾರಿ, ಕೊಪ್ಪಳ, ಚಿತ್ರದುರ್ಗ ಗೆಲ್ಲುವ ತಂತ್ರವನ್ನು ಬಿಜೆಪಿ ಹಾಕಿಕೊಂಡಿದೆ. ಇನ್ನು ಪೂರ್ಣಿಮಾ ಶ್ರೀನಿವಾಸ್ ಜೊತೆ ನೇರವಾಗಿ ಯಡಿಯೂರಪ್ಪ ಅವರೇ ಮಾತನಾಡಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_252_11.txt b/eesanje/url_46_252_11.txt new file mode 100644 index 0000000000000000000000000000000000000000..33e7556ac292cab6d3c6455860a5f4685b60c27c --- /dev/null +++ b/eesanje/url_46_252_11.txt @@ -0,0 +1,11 @@ +ಆಕರ್ಷಕ ಪಥ ಸಂಚಲನ ; ವೈವಿಧ್ಯಮಯ ಸಾಹಸ ಪ್ರದರ್ಶನ +ಬೆಂಗಳೂರು,ಜ.26- ಆಕರ್ಷಕ ಪಥಸಂಚಲನ, ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ಇಂದು ನಗರದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮಗಳು ಮನಸೂರೆಗೊಂಡವು. +ಸೇನಾಪಡೆ, ಬಿಎಸ್‍ಎಫ್ ಪಡೆ, ಸಿಆರ್‍ಪಿಎಫ್ ಮಹಿಳಾ ಪಡೆ, ಕೇರಳ ರಾಜ್ಯ ಪೊಲೀಸ್ ಪಡೆ, ಕೆಎಸ್‍ಆರ್‍ಪಿ, ಶ್ವಾನದಳ, ಎನ್‍ಸಿಸಿ, ನಗರ ಸಂಚಾರಿ ಪೊಲೀಸ್ ದಳ, ಅಬಕಾರಿ ದಳ, ಗೃಹರಕ್ಷಕ ದಳ, ಅಗ್ನಿಶಾಮಕ ದಳ, ಎನ್‍ಎಸ್‍ಎಫ್ ಭಾರತ ಸ್ಕೌಡ್ಸ್ ಅಂಡ್ ಗೈಡ್ಸ್, ಸಮರ್ಪಣ ಟ್ರಸ್ಟ್‍ನ ವಿಶೇಷ ಚೇತನ ಮಕ್ಕಳು, ವಿವಿಧ ಶಾಲೆಯ ವಿದ್ಯಾರ್ಥಿಗಳು ಶಿಸ್ತುಬದ್ಧ ಪಥಸಂಚಲನ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. +ವಿವಿಧ ತಂಡಗಳಿಂದ ನುಡಿಸಿದ ವಾದ್ಯವೂ ಕೂಡ ಅಷ್ಟೇ ಇಂಪಾಗಿತ್ತು. ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್‍ರವರ ಸಂದೇಶದ ನಂತರ ಶಂಕರ್ ಭಾರತಿಪುರ ಮತ್ತು ಅವರ ತಂಡದಿಂದ ನಾಡಗೀತೆ ಮತ್ತು ರೈತಗೀತೆ ಸಾಂಸ್ಕøತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು. ಬಳಿಕ ಬೆಂಗಳೂರು ಉತ್ತರ ತಾಲೂಕಿನ ಎಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ 700 ಮಕ್ಕಳ ಈ ದೇಶವು ನಮಗಾಗಿಯೇ ಇದೆ ಎಂದೆಂದಿಗೂ ಎಂಬ ಸಾಂಸ್ಕøತಿಕ ಕಾರ್ಯಕ್ರಮ ಮನಮಿಡಿಯುವಂತಿತ್ತು. +ನಂತರ ಬೆಂಗಳೂರು ದಕ್ಷಿಣ ತಾಲೂಕಿನ ಪಿಲ್ಲಣ್ಣ ಗಾರ್ಡನ್‍ನ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಕ್ಷ್ಯಚಿತ್ರ ಸೇರಿದಂತೆ ಅಕ್ಷರದವ್ವ ಸಾವಿತ್ರಿ ಬಾಯಿಪುಲೆ ಸಾಂಸ್ಕøತಿಕ ಕಾರ್ಯಕ್ರಮವು ಜನರ ಮೆಚ್ಚುಗೆಗೆ ಪಾತ್ರವಾಗಿ ಸಭಿಕರಿಂದ ಕರತಾಡನದ ಪ್ರಶಂಸೆ ದೊರೆಯಿತು. ಸಾವಿತ್ರಿ ಬಾಯಿಪುಲೆ ಭಾವಚಿತ್ರದ ಫಲಕ ಹಾಗೂ ರಾಷ್ಟ್ರಧ್ವಜ ಹಿಡಿದು ವೈವಿಧ್ಯಮಯ ಉಡುಗೆ ತೊಡುಗೆ ತೊಟ್ಟಿದ್ದ ವಿದ್ಯಾರ್ಥಿಗಳು ನವಿಲಿನಂತೆ ನರ್ತಿಸಿದರು. +ಎನ್‍ಇಜಿ ಮತ್ತು ಕೇಂದ್ರ ತಂಡದ ಹವಲ್ದಾರ್ ಅನೀಷ್ ಕಾಮತ್ ನೇತೃತ್ವದ 11 ಮಂದಿ ಕಲಾವಿದರ ಕಲರಿಪಯಟ್ಟು ವಿಶೇಷ ಆಕರ್ಷಣೀಯವಾಗಿತ್ತು. ಇದೆಲ್ಲಕ್ಕೂ ಮಿಗಿಲಾಗಿ ಬೆಂಗಳೂರಿನ ಎಎಚ್‍ಇ ಸೆಂಟರ್ ಮತ್ತು ಕಾಲೇಜು ತಂಡವು ಬಾಸ್ಕೊ ರಾಜಸಿಂಗಂ ಕಾಮರಾಜ್ ನೇತೃತ್ವದಲ್ಲಿ ನಡೆಸಿಕೊಟ್ಟ ದ್ವಿಚಕ್ರ ವಾಹನ ಸಾಹಸ ಪ್ರದರ್ಶನವು ಮೈ ನವಿರೇಸುವಂತಿತ್ತು. ಪ್ರತಿಯೊಂದೂ ಕೂಡ ರೋಮಾಂಚಕಾರಿಯಾಗಿತ್ತು. ನೆರೆದಿದ್ದ ಮಕ್ಕಳು, ಮಹಿಳೆಯರು, ಹಿರಿಯರು ಎಲ್ಲರೂ ಕೂಡ ರೋಮಾಂಚನಕಾರಿ ವಾಹನ ಸಾಹಸಗಳನ್ನು ಪ್ರಶಂಸಿಸಿದರು. ಅಂತಿಮವಾಗಿ ಎಸ್‍ಎಫ್ ವಿಶೇಷ ತಂಡ ಹಡಗುತಾಣಗಳಲ್ಲಿ ಹೊಕ್ಕು ಧಾಳಿ ಮಾಡುವ ನಿರೂಪಣೆಯು ಜೇಮ್ಸ್ ಅವರ ನೇತೃತ್ವದಲ್ಲಿ ಅಭೂತಪೂರ್ವವಾಗಿ ಮೂಡಿಬಂದಿತು. +ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸುರಂಗ ಮಾರ್ಗ +ಒಟ್ಟಾರೆ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ಜನಮನದ ಪ್ರಶಂಸೆಗೆ ಪಾತ್ರವಾಗಿದ್ದವು. ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್‍ರವರು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ವಿಜೇತವಾದ ತಂಡಗಳಿಗೆ ಬಹುಮಾನ ವಿತರಿಸಿದರು. +ಪಿಲ್ಲಣ್ಣ ಗಾರ್ಡನ್‍ನ ಬಿಬಿಎಂಪಿ ಪದವಿ ಪೂರ್ವ ಕಾಲೇಜು ಮೊದಲ ಸ್ಥಾನ ಪಡೆದರೆ, ಎಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯು ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಎರಡನೇ ಸ್ಥಾನ ಪಡೆದುಕೊಂಡು ಬಹುಮಾನ ಗಳಿಸಿತು.ಪಥಸಂಚಲನದಲ್ಲಿ ಭಾಗವಹಿಸಿದ ಎನ್‍ಸಿಸಿಗೆ ಗ್ರೂಪ್ 2 ರಲ್ಲಿ ಮೊದಲ, ಎನ್‍ಎಸ್‍ಎಫ್‍ಗೆ ದ್ವಿತೀಯ ಹಾಗೂ ಪ್ರಿನ್ಸೆಸ್ ಮತ್ತು ಕರೆಕ್ಷನಲ್ ಸರ್ವಿಸ್‍ಗೆ ಪಥಸಂಚಲನದಲ್ಲಿ ತೃತೀಯ ಬಹುಮಾನ ನೀಡಲಾಯಿತು.ಗ್ರೂಪ್ 1 ರಲ್ಲಿ ಆರ್ಮಿಗೆ ಮೊದಲ, ಬಿಎಸ್‍ಎಫ್‍ಗೆ ದ್ವಿತೀಯ, ಸಿಆರ್‍ಪಿಎಫ್ ಮಹಿಳಾ ತುಕಡಿಗೆ ತೃತೀಯ ಸ್ಥಾನದ ಬಹುಮಾನ ನೀಡಲಾಯಿತು. +ಗ್ರೂಪ್ 3 ರಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲೆಗೆ ಮೊದಲ, ಆರ್ಮಿ ಪಬ್ಲಿಕ್ ಶಾಲೆಗೆ ದ್ವಿತೀಯ, ನಂದಿನಿ ಲೇ ಔಟ್‍ನ ಪ್ರೆಸಿಡೆನ್ಸಿ ಶಾಲೆಗೆ ತೃತೀಯ ಬಹುಮಾನ ದೊರೆಯಿತು. ಗ್ರೂಪ್ 4 ರಲ್ಲಿ ಆರ್ಮಿ ಬ್ಯಾಂಡ್ ತಂಡಕ್ಕೆ ಮೊದಲ ಹಾಗೂ ಗ್ರೂಪ್ 5 ರಲ್ಲಿ ಕ್ರಿಸ್ಟ್ ಜಯಂತಿ ಶಾಲೆಯ ಬ್ಯಾಂಡ್ ತಂಡಕ್ಕೆ ಮೊದಲ ಸ್ಥಾನ ಲಭಿಸಿತು. +ರಾಜ್ಯಪಾಲರು ಬಹುಮಾನ ವಿತರಿಸಿದ ಸಂದರ್ಭದಲ್ಲಿ ಬೆಂಗಳೂರು ನಗರದ ಜಿಲ್ಲಾಕಾರಿ ಕೆ.ಎ.ದಯಾನಂದ, ಬೃಹತ್ ಬೆಂಗಳೂರು ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಉಪಸ್ಥಿತರಿದ್ದರು. \ No newline at end of file diff --git a/eesanje/url_46_252_12.txt b/eesanje/url_46_252_12.txt new file mode 100644 index 0000000000000000000000000000000000000000..537c7507a6c4674cd386f79925f2ebf60a393adc --- /dev/null +++ b/eesanje/url_46_252_12.txt @@ -0,0 +1,6 @@ +ಮಂಡ್ಯದಲ್ಲಿ ಶುದ್ಧ ನಾಟಿ ಚುನಾವಣೆ ನಡೆಯಲಿದೆ, ಹೈಬ್ರೀಡ್‍ಗೆ ಅವಕಾಶವಿಲ್ಲ : ಸಚಿವ ಚೆಲುವರಾಯಸ್ವಾಮಿ +ಮಂಡ್ಯ,ಜ.26- ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಶುದ್ಧ ನಾಟಿ ಹಾಗೂ ದೇಶಿ ಸ್ಥಳೀಯ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಷೆಯಲ್ಲಿ ಹೇಳುವಂತೆ ಅಪ್ಪಟ ಸ್ಥಳಿಕರನ್ನೇ ಅಭ್ಯರ್ಥಿ ಮಾಡಲಾಗುವುದು. ಹೈಬ್ರೀಡ್‍ಗೆ ಅವಕಾಶವಿಲ್ಲ ಎಂದು ಹೇಳಿದರು. +ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಹುಲ್‍ಗಾಂಧಿ, ನರೇಂದ್ರ ಮೋದಿ ಸೇರಿದಂತೆ ಯಾರು, ಯಾವ ಜಿಲ್ಲೆಯಲ್ಲಾದರೂ ಚುನಾವಣೆಗೆ ಸ್ರ್ಪಧಿಸಬಹುದು. ಆದರೆ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಸ್ಥಳೀಕರಿಗೆ ಅವಕಾಶ. ಕಳೆದ 30-40 ವರ್ಷಗಳ ನಂತರ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದರು. +ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತವನ್ನಾಳಿದರು : ಸಿದ್ದರಾಮಯ್ಯ +ಹಾಲಿ ಸಂಸದೆ ಸುಮಲತಾ ಅವರು ನಾನು ಕಾಂಗ್ರೆಸ್‍ಗೆ ಹೋಗುವುದಿಲ್ಲ, ಬಿಜೆಪಿಯಿಂದಲೇ ಸ್ರ್ಪಧಿಸುತ್ತೇನೆ, ಜೆಡಿಎಸ್‍ನವರು ಇಲ್ಲಿಗೆ ಬರುವುದು ಬೇಡ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ನಾವು ಕೂಡ ಸುಮಲತಾ ಅವರನ್ನು ಕರೆದಿಲ್ಲ. ಅವರು ಕಾಂಗ್ರೆಸ್‍ನಿಂದ ಸ್ರ್ಪಧಿಸುವುದಾಗಿ ಕೇಳಿಲ್ಲ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿಯೇ ಪ್ರಚಾರ ಮಾಡಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ರ್ಪಧಿಸಿ ಗೆಲುವು ಸಾಧಿಸಿದ್ದರು. ಆ ವೇಳೆ ಅವರಿಗೆ ಯಾರೆಲ್ಲಾ ಬೆಂಬಲ ನೀಡಿದ್ದರು ಎಂಬುದು ಈಗ ಅಪ್ರಸ್ತುತ ಎಂದರು. +ಕಾಂಗ್ರೆಸ್‍ನವರು ನನ್ನನ್ನು ಪಕ್ಷ ಸೇರುವಂತೆ ಆಹ್ವಾನಿಸಿದ್ದರು ಎಂದು ಸುಮಲತಾ ಹೇಳಿದ್ದಾರೆ. ನಮಗಿರುವ ಮಾಹಿತಿ ಪ್ರಕಾರ, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಯಾರೂ ಸುಮಲತಾ ಅವರನ್ನು ಆಹ್ವಾನಿಸಿಲ್ಲ. ಒಂದು ವೇಳೆ ಅದು ನಿಜವೇ ಆಗಿದ್ದರೆ ಆಹ್ವಾನಿಸಿದವರ್ಯಾರು ಎಂದು ಸುಮಲತಾ ಅವರು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_252_2.txt b/eesanje/url_46_252_2.txt new file mode 100644 index 0000000000000000000000000000000000000000..e0caef3ee4e1c229c9a5faae6fd148709cc2cc97 --- /dev/null +++ b/eesanje/url_46_252_2.txt @@ -0,0 +1,5 @@ +ಜಗದೀಶ್ ಶೆಟ್ಟರ್‌ಗೆ ಕೋರ್ ಕಮಿಟಿಯಲ್ಲಿ ಸ್ಥಾನ +ಬೆಂಗಳೂರು,ಜ.27- ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ಗೆ ಪಕ್ಷದ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಕೋರ್ ಕಮಿಟಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಈ ಹಿಂದೆ ಕೋರ್ ಕಮಿಟಿಯಲ್ಲಿ ಮಾಜಿ ಸಚಿವ ಲಕ್ಷ್ಮಣ್ ಸವದಿಗೆ ಸ್ಥಾನವನ್ನು ನೀಡಲಾಗಿತ್ತು. ಅವರು ಕೂಡ ಬಿಜೆಪಿಯನ್ನು ತೊರೆದಿದ್ದರಿಂದ ಯಾರಿಗು ಕೂಡ ಈ ಸ್ಥಾನವನ್ನು ನೀಡಿರಲಿಲ್ಲ. +ನಿಗಮ – ಮಂಡಳಿ ನೇಮಕಾತಿ ಬೆನ್ನಲ್ಲೇ `ಕೈ’ನಲ್ಲಿ ಭುಗಿಲೆದ್ದ ಭಿನ್ನಮತ +ಮೂರು ದಿನಗಳ ಹಿಂದೆ ಕಾಂಗ್ರೆಸ್‍ಗೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದ ಜಗದೀಶ್ ಶೆಟ್ಟರ್ ಅವರಿಗೆ ಈಗ ಕೋರ್ ಕಮಿಟಿಯಲ್ಲಿ ಸ್ಥಾನವನ್ನು ನೀಡಲಾಗಿದೆ. ಈ ಹಿಂದೆಯೂ ಕೂಡ ಅವರು ಕೋರ್ ಕಮಿಟಿಯಲ್ಲಿ ಇದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದರು. +ಶನಿವಾರ ನಡೆದ ಬಿಜೆಪಿಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಆಹ್ವಾನಿತರ ಪಟ್ಟಿಯಲ್ಲಿ ಪ್ರತ್ಯೇಕ ಕೋರ್ ಕಮಿಟಿ ಸದಸ್ಯರ ಪಟ್ಟಿಯಲ್ಲಿ ಜಗದೀಶ್ ಶೆಟ್ಟರ್ ಹೆಸರು ಕಾಣಿಸಿಕೊಂಡಿತ್ತು. \ No newline at end of file diff --git a/eesanje/url_46_252_3.txt b/eesanje/url_46_252_3.txt new file mode 100644 index 0000000000000000000000000000000000000000..97fceee854947cc5947756566c0d430f03ad8e04 --- /dev/null +++ b/eesanje/url_46_252_3.txt @@ -0,0 +1,7 @@ +ರಾಜಣ್ಣಗೆ ಪ್ರಿಯಾಂಕ್ ಖರ್ಗೆ ತಿರುಗೇಟು +ಬೆಂಗಳೂರು,ಜ.27- ಪಕ್ಷದಿಂದ ನಾವೆಲ್ಲಾ ಇದ್ದೇವೆ ಹೊರತು ನಮ್ಮಿಂದಲೇ ಪಕ್ಷ ನಡೆಯುತ್ತಿದೆ ಎಂಬುದು ಮೂರ್ಖತನ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ವಿವಾದಿತ ಹೇಳಿಕೆ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಪಕ್ಷ ಚೌಕಟ್ಟಿನಲ್ಲಿ ಶಿಸ್ತನ್ನು ಪಾಲಿಸುವುದು ಅನಿವಾರ್ಯ ಎಂದರು. +ಇಲ್ಲಿ ಹೈ ಕಮಾಂಡ್, ಲೋ ಕಮಾಂಡ್ ಎಂಬುದಿಲ್ಲ. ಯಾರೂ ಯಾರ ಗುಲಾಮರೂ ಅಲ್ಲ. ಟಿಕೆಟ್ ಪಡೆದುಕೊಳ್ಳುವಾಗ ಹೈಕಮಾಂಡ್ ಮುಖ್ಯವಾಗುತ್ತದೆ. ಟಿಕೆಟ್ ದೊರೆತು ಚುನಾವಣೆಯಲ್ಲಿ ಗೆದ್ದ ಬಳಿಕ ಹೈಕಮಾಂಡ್ ಇಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ನನ್ನನ್ನೂ ಒಳಗೊಂಡಂತೆ ಎಲ್ಲರೂ ಪಕ್ಷದ ಚೌಕಟ್ಟಿನಲ್ಲೇ ಇರಬೇಕು. ನಮ್ಮಿಂದಲೇ ಪಕ್ಷ ನಡೆಯುತ್ತಿದೆ ಎಂಬುದು ಮೂರ್ಖತನವಾಗುತ್ತದೆ. ಹಿರಿಯರಾದ ರಾಜಣ್ಣ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಯಾರೂ ಯಾರ ಗುಲಾಮರೂ ಅಲ್ಲ. ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ನಡೆದುಕೊಳ್ಳುವುದು ಉತ್ತಮ ಎಂದು ಹೇಳಿದ್ದಾರೆ. +ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ, ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಹೇಳಿಕೆ ನೀಡುವುದು ನನ್ನ ಗಮನಕ್ಕೆ ಬಂದಿಲ್ಲ. ಬಹುಷಃ ಆತ್ಮೀಯತೆಯಿಂದ ಅವರು ಆ ರೀತಿ ಮಾತನಾಡಿರಬಹುದು. ಪಕ್ಷದ ಕಾರ್ಯಕ್ರಮವಂತೂ ಆಗಿರಲಿಕ್ಕಿಲ್ಲ ಎಂದರು. ನಿಗಮಮಂಡಳಿಯ ನೇಮಕಾತಿಯಲ್ಲಿ ಯಾವುದೇ ಅಸಮಾಧಾವಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ. ಅದನ್ನು ಬಹಿರಂಗವಾಗಿ ಚರ್ಚಿಸುವುದು ಸೂಕ್ತವಲ್ಲ. +ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್ +ಮೊದಲ ಹಂತದಲ್ಲಿ ಶಾಸಕರನ್ನು ನೇಮಿಸಲಾಗಿದೆ. ಅದರಲ್ಲಿ ಒಂದಿಷ್ಟು ಏರುಪೇರುಗಳಾಗಿದ್ದವು. ಮುಂದಿನ ದಿನಗಳಲ್ಲಿ ಕಾರ್ಯಕರ್ತರ ನೇಮಕಾತಿಗೂ ಚಾಲನೆ ನೀಡಲಾಗುವುದು ಎಂದು ಹೇಳಿದರು ಬಿಜೆಪಿಯವರು 6 ತಿಂಗಳುಗಳ ಕಾಲ ವಿಧಾನಮಂಡಲದ ವಿರೋಧಪಕ್ಷದ ನಾಯಕರನ್ನು ಮತ್ತು ಅವರ ಪಕ್ಷದ ಅಧ್ಯಕ್ಷರನ್ನು ನೇಮಿಸಿರಲಿಲ್ಲ. ಅದರ ಬಗ್ಗೆ ಯಾರೂ ಪ್ರಶಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರ ರಚನೆಯಾದ ಬಳಿಕ ನಿಗದಿತ ಭರವಸೆಯಂತೆ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡಲಾಗಿದೆ. ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ. ಆದರೆ ನಮ್ಮನ್ನು ಹೆಚ್ಚು ಚರ್ಚೆಗೊಳಪಡಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಜಲಜೀವನ್ ಮಿಷನ್ ಯೋಜನೆ ಅವೈಜ್ಞಾನಿಕವಾಗಿದೆ ಎಂದು ನಿಯೋಗ ತಮಗೆ ದೂರು ನೀಡಿದೆ. ಈ ಬಾರಿ ಅಕಾರಿಗಳ ಜೊತೆ ಚರ್ಚಿಸಿ ಲೋಪಗಳನ್ನು ಸರಿಪಡಿಸಲಾಗುವುದು. ಯೋಜನೆ ಇನ್ನೂ ಆರಂಭಗೊಂಡಿಲ್ಲ. ಆದರೆ ಭ್ರಷ್ಟಾಚಾರಗಳು ನಡೆದಿವೆ ಎಂಬುದು ಅಪ್ರಸ್ತುತ. ಜಲಜೀವನ್ ಮಿಷನ್ ಕೈಗಾರಿಕೆಗಳಿಗೆ ಅಥವಾ ಉದ್ಯಮಗಳಿಗೆ ನೀರು ಪೂರೈಸುವ ಸಲುವಾಗಿ ಇಲ್ಲ. ಮನೆ ಮನೆಗೆ ಕುಡಿಯುವ ನೀರು ಒದಗಿಸುವ ಉದ್ದೇಶ ಹೊಂದಿದೆ ಎಂದರು. \ No newline at end of file diff --git a/eesanje/url_46_252_4.txt b/eesanje/url_46_252_4.txt new file mode 100644 index 0000000000000000000000000000000000000000..a22258551b8ad7ab480c5f5076955fd59b197b18 --- /dev/null +++ b/eesanje/url_46_252_4.txt @@ -0,0 +1,6 @@ +ಗೂಂಡಾ ಕಾಯ್ದೆ ಮಾದರಿಯಲ್ಲೇ ಡ್ರಗ್ಸ್ ಪೆಡ್ಲರ್‌ಗಳ ಮೇಲೆ ಕ್ರಮ +ಬೆಂಗಳೂರು,ಜ.27- ಡ್ರಗ್ಸ್ ಪೆಡ್ಲರ್‍ಗಳ ಮೇಲೆ ಪ್ರಿವೆಂಟಿವ್ ಡಿಟೆನ್ಷನ್ ಆಕ್ಟ್ ಮೂಲಕ ಬಂಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು. ದೊಡ್ಡಕಲ್ಲಸಂದ್ರದ ಶಂಕರ್ ಫೌಂಡೇಷನ್‍ನಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ವಿದೇಶಿ ಸಂಸ್ಕøತಿಯ ಪ್ರಭಾವಕ್ಕೆ ಒಳಗಾಗಿ ಇತ್ತೀಚಿನ ಯುವಪೀಳಿಗೆ ವೇಗವಾಗಿ ಮಾದಕ ವಸ್ತುಗಳಿಗೆ ಆಕರ್ಷಣೆಯಾಗುತ್ತಿದೆ. ದುರದೃಷ್ಟಕರ ಎಂದರೆ ಕೆಲವು ವಿದೇಶಗಳಲ್ಲಿ ಕೆಲ ಮಾದಕ ವಸ್ತುಗಳ ಬಳಕೆಗೆ ಅನುವು ಮಾಡಿಕೊಡಲಾಗಿದೆ. ಇದರಿಂದ ಪ್ರಭಾವಿತರಾಗಿ ಯುವಕರು ಫ್ಯಾಶನ್ ರೀತಿ ಇದನ್ನು ಬಳಕೆ ಮಾಡುತ್ತಿದ್ದಾರೆ ಎಂದರು. +ಇದನ್ನು ತಡೆಯಲು ಗೂಂಡಾ ಕಾಯ್ದೆ ಮಾದರಿಯಲ್ಲೇ ಪೆಡ್ಲರ್‍ಗಳ ಮೇಲೆಯೂ ಪ್ರಿವೇಂಟಿವ್ ಡೆಟೆನ್ಷನ್ ಆಕ್ಟ್ ಹಾಕುವ ಅವಕಾಶ ಕಾನೂನಿನಲ್ಲಿದ್ದು, ಅದನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸುತ್ತೇವ ಎಂದು ಹೇಳಿದರು. ಪೆÇಲೀಸ್ ಇಲಾಖೆಯು ಇದರ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದು, ಡ್ರಗ್ಸ್ ಪೆಡ್ಲರ್‍ಗಳ ಮೇಲೆ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದ್ದು, ಸಾಕಷ್ಟು ಸಂಖ್ಯೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾ ಗುತ್ತಿದೆ. +ಕೇವಲ ಗಾಂಜಾ, ಡ್ರಗ್ಸ್ ಮಾತ್ರವಲ್ಲದೆ ಸಿಂಥೆಟಿಕ್ ಡ್ರಗ್ಸ್‍ಗಳಾದ ಕೊಕೇನ್, ಹೆರಾಯಿನ್, ಎಂಬಿಎಂಎನಂತಹ ಅತ್ಯಾಧುನಿಕ ಡ್ರಗ್ಸ್‍ಗಳನ್ನು ಸಹ ಅಪಾರ ಪ್ರಮಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ಬೇಡಿಕೆ ಹೆಚ್ಚಾಗಿರುವುದರಿಂದ ನಗರದಲ್ಲಿ ಹೆಚ್ಚು ಮಾರಾಟ ಜಾಲ ಹಬ್ಬಿದೆ. ಇದು ಕೇವಲ ಪೊಲೀಸ್ ಇಲಾಖೆಯಿಂದ ತಡೆಯಲು ಸಾಧ್ಯವಿಲ್ಲ. ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಮಾಜ ಮಾಡಬೇಕು ಎಂದರು. +ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್ +ಟ್ರಾಫಿಕ್ ಜಂಕ್ಷನ್‍ಗಳಲ್ಲಿ ಸಿಸಿ ಕ್ಯಾಮೆರಾಗಳ ಜೊತೆ ಲೋಡ್ ಸ್ಪೀಕರ್‍ನಂತಹ ಡಿವೈಸ್‍ಗಳನ್ನು ಅಳವಡಿಸಲಾಗಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮತ್ತು ದಟ್ಟಣೆ ನಿರ್ವಹಣೆಗೆ ಠಾಣೆಯಿಂದಲೇ ಮಾತನಾಡುವ ಮೂಲಕ ತಕ್ಷಣ ಸಮಸ್ಯೆ ಬಗೆಹರಿಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು. ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‍ಕುಮಾರ್ ಶಹಪುರವಾಡ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_252_5.txt b/eesanje/url_46_252_5.txt new file mode 100644 index 0000000000000000000000000000000000000000..6b1a466b5123b77e7c0aff154820a8d213490a6b --- /dev/null +++ b/eesanje/url_46_252_5.txt @@ -0,0 +1,9 @@ +ನಿಗಮ – ಮಂಡಳಿ ನೇಮಕಾತಿ ಬೆನ್ನಲ್ಲೇ `ಕೈ’ನಲ್ಲಿ ಭುಗಿಲೆದ್ದ ಭಿನ್ನಮತ +ಬೆಂಗಳೂರು,ಜ.27- ಅಳೆದು ತೂಗಿ 34 ಮಂದಿ ಶಾಸಕರನ್ನು ನಿಗಮಮಂಡಳಿಗಳಿಗೆ ನೇಮಕಾತಿ ಮಾಡಿದ ಬೆನ್ನಲ್ಲೇ, ಅವಕಾಶ ಸಿಗದೇ ಇದ್ದವರ ಅಸಮಾಧಾನ ಒಂದೆಡೆಯಾದರೆ, ಅವಕಾಶ ಸಿಕ್ಕವರಲ್ಲಿ ಬಹಳಷ್ಟು ಮಂದಿ ತಮಗೆ ಸಚಿವ ಸ್ಥಾನ ಬೇಕು, ನಿಗಮಮಂಡಳಿ ಬೇಡ ಎಂದು ತಿರಸ್ಕರಿಸಿದ್ದಾರೆ. +ಹಿರಿಯ ಶಾಸಕ ಹಂಪನಗೌಡ ಬಾದರ್ಲಿ, ಎಸ್.ಎನ್.ಸುಬ್ಬಾರೆಡ್ಡಿ, ವಿನಯ್ ಕುಲಕರ್ಣಿ, ಪುಟ್ಟರಂಗಶೆಟ್ಟಿ, ಎಚ್.ವೈ.ಮೇಟಿ, ಸಿ.ಎ.ಅಪ್ಪಾಜಿ ನಾಡಗೌಡ, ಬಿ.ಜಿ.ಗೋವಿಂದಪ್ಪ, ಬಿ.ಕೆ.ಸಂಗಮೇಶ್ವರ, ಬಸವನಗೌಡ ಗದ್ದಲ್, ವಿಜಯಾನಂದ ಕಾಶ್ಯಪ್‍ನವರು ಸೇರಿದಂತೆ ಅನೇಕ ಶಾಸಕರು ನಿಗಮ ಮಂಡಳಿಯ ಸ್ಥಾನಕ್ಕಾಗಿ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಲಾಗಿದೆ. +ಇವರ ಪೈಕಿ ಹಂಪನಗೌಡ ಬಾದರ್ಲಿ, ಎಸ್.ಎನ್. ಸುಬ್ಬಾರೆಡ್ಡಿಯವರು ನೇರವಾಗಿ ನೇಮಕಾತಿ ಆದೇಶ ವನ್ನು ತಿರಸ್ಕರಿಸಿದ್ದಾರೆ. ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಬೆಂಬಲಿಗರ ಸಭೆ ಕರೆದಿದ್ದು, ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಎಸ್.ಎನ್. ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡದೇ ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ರಾಜ್ಯ ಬಿಜೆಪಿ ಪಾಳಯದಲ್ಲಿ ಈಗಲೂ ಬಿಎಸ್‍ವೈ ಕಿಂಗ್ +ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿಯ ಸದಸ್ಯರು, ಅಧ್ಯಕ್ಷರು ಹಾಗೂ ಪಕ್ಷದ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಬಲಿಗರ ಒತ್ತಡಕ್ಕೆ ಅನುಗುಣವಾಗಿ ಎಸ್.ಎನ್.ಸುಬ್ಬಾರೆಡ್ಡಿ ನೇಮಕಾತಿಯ ಆದೇಶವನ್ನು ಸ್ಪೀಡ್ ಪೋಸ್ಟ್‍ನಲ್ಲಿ ಮುಖ್ಯಮಂತ್ರಿಗೆ ವಾಪಸ್ ಕಳುಹಿಸಿದ್ದಾರೆ. +ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಗಳಿವೆ. ಆಗ ಈಗಿರುವ ಸಚಿವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ನೀಡುವ ಭರವಸೆ ನೀಡಲಾಗಿತ್ತು. ಆದರೆ ನಿಗಮ ಮಂಡಳಿಗಳಲ್ಲಿ ನೇಮಕಾತಿಯಾದವರನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವುದಿಲ್ಲ ಎಂಬ ಷರತ್ತು ವಿಸಲಾಗಿದೆ. +ಹೀಗಾಗಿ 5 ಬಾರಿ ಗೆದ್ದಿರುವ ಹಂಪನಗೌಡ ಬಾದರ್ಲಿ, ತಾವು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ಬೇಡ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ. ಅವಕಾಶ ಸಿಕ್ಕವರು ಸಚಿವ ಸ್ಥಾನ ಬೇಕು ಎಂಬ ನಿರೀಕ್ಷೆಯಲ್ಲಿ ನಿಗಮ ಮಂಡಳಿಯನ್ನು ತಿರಸ್ಕರಿಸುತ್ತಿದ್ದರೆ ಮತ್ತೊಂದು ಕಡೆ ಅವಕಾಶ ಸಿಗದೇ ಇರುವ ಬಹಳಷ್ಟು ಶಾಸಕರು ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. +ನೇಮಕವಾಗಿರುವ 34 ನಿಗಮಗಳ ಅಧ್ಯಕ್ಷರ ಪಟ್ಟಿಯಲ್ಲಿ ವಿಧಾನಪರಿಷತ್‍ನ ಒಬ್ಬರನ್ನೂ ಪರಿಗಣಿಸದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಜನರಿಂದ ಆಯ್ಕೆಯಾಗಿರುವ ಶಾಸಕರನ್ನು ಕಡೆಗಣಿಸುತ್ತಿರುವುದು ಒಂದೆಡೆಯಾದರೆ ವಿಧಾನಪರಿಷತ್‍ನಲ್ಲಿರುವ ಹಿರಿಯ ಸದಸ್ಯರನ್ನು ನಿರ್ಲಕ್ಷಿಸಲಾಗಿದೆ ಎಂಬ ಆರೋಪಗಳಿವೆ. ನೇಮಕಾತಿಯಾಗಿರುವ ಪಟ್ಟಿಯಲ್ಲಿ ಉತ್ತಮವಾದ ನಿಗಮಗಳನ್ನು ಕೊಟ್ಟಿಲ್ಲ. ಇದರಲ್ಲಿ ಹೆಚ್ಚು ಕೆಲಸ ಮಾಡಲು ಅವಕಾಶ ಇಲ್ಲ ಎಂಬ ಗೊಣಗಾಟಗಳು ಬಹಳಷ್ಟು ಶಾಸಕರಲ್ಲಿ ಕಂಡುಬಂದಿದೆ. \ No newline at end of file diff --git a/eesanje/url_46_252_6.txt b/eesanje/url_46_252_6.txt new file mode 100644 index 0000000000000000000000000000000000000000..d8208114e41bf91474267c41bb06cd9dbe5de545 --- /dev/null +++ b/eesanje/url_46_252_6.txt @@ -0,0 +1,13 @@ +33ನೇ ವಾರ್ಷಿಕೋತ್ಸವ ಸಂಭ್ರಮದಲ್ಲಿ ಈ ಸಂಜೆ ಪತ್ರಿಕೆ +ಬೆಂಗಳೂರು,ಜ.27- ಈ ಸಂಜೆ ಪತ್ರಿಕೆ ಇಲ್ಲಿ ಸಂಜೆ ಪತ್ರಿಕೆಯಾಗಿರಬಹುದು. ಆದರೆ ಅಮೆರಿಕದಲ್ಲಿರುವ ನಮಗೆ ಮತ್ತು ನಮ್ಮೆಲ್ಲಾ ಕನ್ನಡಿಗರಿಗೆ ಅದು ಬೆಳಗಿನ ಪತ್ರಿಕೆಯಾಗಿದೆ. ಕನ್ನಡ ನಾಡಲ್ಲಿ ಮತ್ತು ದೇಶದಲ್ಲಿ ಏನು ಮುಖ್ಯವಾಗಿ ನಡೆದಿದೆ ಎಂಬುದು ಈ ಸಂಜೆಯಿಂದ ಗೊತ್ತಾಗುತ್ತದೆ ಎಂದು ಅಮೆರಿಕದಲ್ಲಿ ಕನ್ನಡಿಗರಿಗಾಗಿ, ಕನ್ನಡಕ್ಕಾಗಿ ಅಕ್ಕ ಸಂಘಟನೆಯನ್ನು ಹುಟ್ಟುಹಾಕಿ ಕನ್ನಡಪರ ಕೆಲಸ ಮಾಡುತ್ತಿರುವ ಅಕ್ಕ ಸಂಸ್ಥಾಪನಾ ಅಧ್ಯಕ್ಷರಾದ ಅಮರನಾಥ ಗೌಡರು ಹೇಳಿದರು. +ಈ ಸಂಜೆ ಪತ್ರಿಕೆಯ 33 ನೇ ವಾರ್ಷಿಕೋತ್ಸವ ಸರಳ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಅಮೆರಿಕದಿಂದ ಬೆಂಗಳೂರಿಗೆ ಬಂದರೆ ನನ್ನ ವಿಳಾಸ ಈ ಸಂಜೆ ಕಚೇರಿಯೇ ಆಗಿರುತ್ತದೆ. ನಾವು ಅಮೆರಿಕದಲ್ಲಿದ್ದಾಗ ನಮಗೆ ಬೆಳಗಿನ ಪತ್ರಿಕೆಯಾಗಿ ಈ ಸಂಜೆಯನ್ನು ನಾವು ಡಿಜಿಟಲ್ ಮಾಧ್ಯಮದಲ್ಲಿ ನೋಡುತ್ತೇವೆ. ಈ ಸಂಜೆಯಿಂದ ನಮಗೆ ಎಲ್ಲಾ ವಿದ್ಯಮಾನಗಳು ತಿಳಿಯುತ್ತವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. +ಮುದ್ರಣ ಮಾಧ್ಯಮದ ಪರಿಸ್ಥಿತಿ ಕಠಿಣವಾಗಿರುವ ಸಂದರ್ಭದಲ್ಲೂ ಡಿಜಿಟಲ್ ಆವೃತ್ತಿ ಜಗತ್ತಿನಾದ್ಯಂತ ವಾಸವಿರುವ ಕನ್ನಡಿಗರು ಓದುವಂತೆ ಸಂಸ್ಥೆ ಪರಿಶ್ರಮ ವಹಿಸಿದೆ. ಈ ಪರಿಶ್ರಮ ಹೀಗೇ ಸಾಗಲಿ ಎಂದು ಅಭಿಮಾನಿ ಸಂಸ್ಥೆಯ ಅವಿನಾಭಾವ ಒಡನಾಟವನ್ನು ಸ್ಮರಿಸಿಕೊಂಡರು. +ಈ ಸಂಜೆ ಪತ್ರಿಕೆಯ ಸಂಪಾದಕರು, ಅಭಿಮಾನಿ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಟಿ.ವೆಂಕಟೇಶ್‍ರವರು ಮಾತನಾಡಿ, ನಾನು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡು 38 ವರ್ಷಗಳು ಆಗಿವೆ. ಅದರಲ್ಲಿ ನಮ್ಮ ಈ ಸಂಜೆ ಪತ್ರಿಕೆ 33 ನೇ ವರ್ಷಕ್ಕೆ ದಾಪುಗಾಲಿಟ್ಟಿದೆ. ಈ ಪತ್ರಿಕೆಯು ಈ ನಾಡಿಗೆ ಸುಮಾರು 2 ರಿಂದ 3 ಸಾವಿರ ಪತ್ರಕರ್ತರನ್ನು ಮಾಧ್ಯಮ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದೆ. ಇಂದು ಕೈಯಲ್ಲಿ ಮೊಬೈಲ್ ಇರುವವರು ಯಾರೇ ಇದ್ದರೂ ಅವರು ಪತ್ರಿಕೋದ್ಯಮ ಮಾಡಬಹುದಾದ ಕಾಲ ಇದು. ಇಂತಹ ಸ್ಥಿತಿಯಲ್ಲಿ ಪತ್ರಕರ್ತರು ಹಾಗೂ ಪತ್ರಿಕೆಗಳು ಇದನ್ನು ಮೀರಿ ಏನನ್ನು ಮಾಡಲು ಸಾಧ್ಯ ಎಂದು ಅಗತ್ಯವಾಗಿ ಯೋಚಿಸಬೇಕಾಗಿದೆ. +ಡಿಜಿಟಲ್ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಹಾವಳಿ ಎಷ್ಟೇ ಆದರೂ ಮಾಧ್ಯಮದ ಸುದ್ದಿಗಳು ದಾಖಲೆಯಾಗಿ ಉಳಿಯುತ್ತವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಮತ್ತೆ ಮುದ್ರಣ ಮಾಧ್ಯಮಕ್ಕೆ ಆದ್ಯತೆ ಸಿಗಲಾರಂಭಿಸಿದೆ ಎಂದು ಹೇಳಿದರು. +ಈ ಹಿಂದೆ ಪತ್ರಿಕಾ ವಿತರಣೆ ಕೆಲಸ ಪತ್ರಿಕೋದ್ಯಮದಲ್ಲಿ ಸುಲಭವಾಗಿ ಸಿಗುವ ಕೆಲಸ. ಬಹಳಷ್ಟು ಐಎಎಸ್, ಐಪಿಎಸ್ ಮಟ್ಟದ ಅಕಾರಿಗಳು ಪತ್ರಿಕಾ ವಿತರಣೆ ಮಾಡಿ ಓದಿ ಸಾಧನೆ ಮಾಡಿರುವ ಉದಾಹರಣೆಗಳಿವೆ. ಯಾಕೆಂದರೆ ಶಾಲಾ-ಕಾಲೇಜುಗಳ ಸಮಯಕ್ಕಿಂತ ಮುಂಚೆ ಪತ್ರಿಕೆಗಳನ್ನು ಓದುಗರಿಗೆ ತಲುಪಿಸಿ ಶಾಲೆಗೆ ಹಾಜರಾಗಿದ್ದಾರೆ ಮತ್ತು ಅದರಿಂದ ಬಂದ ಹಣದಿಂದ ಶಾಲಾ-ಕಾಲೇಜುಗಳ ವೆಚ್ಚ ಭರಿಸಿ ಓದು ಸಾಗಿಸಿಕೊಂಡು ಬಂದ ಉದಾಹರಣೆಗಳನ್ನು ಸಂಪಾಕದರು ಸ್ಮರಿಸಿದರು. +ಪತ್ರಿಕೆ ಎನ್ನುವುದು ಒಬ್ಬರಿಂದಾಗುವ ಕೆಲಸವಲ್ಲ. ಅದರಲ್ಲಿ ಕೆಲಸ ಮಾಡುವವರು, ವಿತರಕರು ಈ ಇಬ್ಬರೂ ತುಂಬಾ ಮುಖ್ಯ. ಗ್ರಾಹಕರ ನಾಡಿಮಿಡಿತ ವಿತರಕನಿಗೆ ತಿಳಿದಿರುತ್ತದೆ. ಹಾಗಾಗಿ ಅವರೊಂದಿಗೆ ನಾವು ಸದಾ ಸಂಪರ್ಕದಲ್ಲಿದ್ದು, ಜನರಿಗೆ ಅಗತ್ಯವಾದ ವರದಿಗಳನ್ನು ಹಾಗೂ ತನಿಖಾ ವರದಿಗಳನ್ನು ನೀಡಬೇಕು ಎಂದು ಹೇಳಿದರು. +ಸಂಸ್ಥೆಯ ಆಡಳಿತಾಕಾರಿಗಳಾದ ಅನಿಲ್ ಹೊಸಕೊಪ್ಪ ಮಾತನಾಡಿ, ಕೃಷ್ಣ, ಕನಕನ ಬಾಂಧವ್ಯ ಸಮಾಜಕ್ಕೆ ಸಾರಿದ ಸಂದೇಶ, ಅವರ ಸೇವಾ ತತ್ಪರತೆಯನ್ನು ಕಾವ್ಯಾತ್ಮಕವಾಗಿ, ವಿಮರ್ಶಾತ್ಮಕವಾಗಿ ವಿವರಿಸಿದ ಅವರು, ಸಂಪಾದಕರ ಸೇವಾ ಕೈಂಕರ್ಯ, ಸಂಸ್ಥೆಯ ಬೆಳವಣಿಗೆ ತಮ್ಮ ಸಿಬ್ಬಂದಿಗಳೊಂದಿಗಿನ ಅವರ ಒಡನಾಟವನ್ನು ವಿವರಿಸಿದರು. ಆರ್ಥಿಕ ಸಲಹೆಗಾರರಾದ ಸುರೇಶ್‍ರವರು ಮಾತನಾಡಿ, ಈ ಸಂಜೆ ಪತ್ರಿಕೆಯ ಬೆಳವಣಿಗೆ, ಮುಂದೆ ಮಾಡಬೇಕಾದ ಕರ್ತವ್ಯಗಳ ಬಗ್ಗೆ ಸಿಬ್ಬಂದಿಗೆ ಸಲಹೆ ನೀಡಿದರು. +ಪ್ರಧಾನ ವರದಿಗಾರರಾದ ರಾಮಸ್ವಾಮಿ ಕಣ್ವ ಅವರು ಮಾತನಾಡಿ, ಮುದ್ರಣ ಮಾಧ್ಯಮದಲ್ಲಿ ಸುದ್ದಿಯನ್ನು ವಿಶ್ಲೇಷಣೆ ಮಾಡಿ ಆಗಿನ ಕಾಲಘಟ್ಟದಲ್ಲಿ ಪ್ರಕಟಿಸಲು ಕಾಲಾವಕಾಶವಿರುತ್ತಿತ್ತು. ಹಾಗಾಗಿ ಸುದ್ದಿಗಳು ಆಳವಾದ ಪರಿಣಾಮ ಬೀರುತ್ತಿದ್ದವು. ಆದರೆ ಇಂದು ಎಲ್ಲವೂ ತುರ್ತು ಪ್ರಕಟಣೆ (ಬ್ರೇಕಿಂಗ್ ನ್ಯೂಸ್) ಅಬ್ಬರದ ಪ್ರಸಾರ, ಪ್ರಚಾರ ನಡೆಯುತ್ತಿದೆ. ವಿಶ್ಲೇಷಣೆ ಮಾಡಲು ಸಮಯವೇ ಸಿಗುತ್ತಿಲ್ಲ ಎಂದು ಪ್ರಸ್ತುತ ಮುದ್ರಣ ಮಾಧ್ಯಮ ಸ್ಥಿತಿಯ ಕುರಿತು ಕಳವಳ ವ್ಯಕ್ತಪಡಿಸಿದರು. +ಪತ್ರಿಕೆಯ ಇಂದಿನ ಯಶಸ್ಸಿಗೆ ಸಂಪಾದಕರಾದ ವೆಂಕಟೇಶ್ ಅವರು ಕಾರಣ. ಅವರ ಬೆಂಬಲ ಮತ್ತು ಮಾರ್ಗದರ್ಶನ ನಮಗೆ ಇದೆ. ನಾವು ಇನ್ನಷ್ಟು ಹುರುಪಿನಿಂದ ಕೆಲಸ ಮಾಡುವುದಾಗಿ ಹೇಳಿದರು. ಪತ್ರಿಕಾ ವಿತರಕರಾದ ಸಂಗಮ್ ಸುರೇಶ್ ಮಾತನಾಡಿ, ಈ ಸಂಜೆ ಪತ್ರಿಕೆಯ ಪ್ರತಿಯೊಂದು ಕ್ಷಣವೂ ಕೂಡ ಕನ್ನಡ, ಕನ್ನಡಿಗರ ಪರವಾಗಿ ಕೆಲಸ ಮಾಡುತ್ತಾ ಬಂದಿದೆ. ಕಾವೇರಿ ವಿವಾದ ಮತ್ತು ರೈತರ ಹೋರಾಟ ಸಂದರ್ಭದಲ್ಲಿ ಅವರ ಪರವಾಗಿ ನಿಂತು ಹೆಚ್ಚು ಸುದ್ದಿಗಳನ್ನು ಪ್ರಕಟಿಸಿದೆ. ಡಾ.ರಾಜ್‍ಕುಮಾರ್ ರಸ್ತೆ ಎಂದು ಈ ರಸ್ತೆಗೆ ನಾಮಕರಣ ಮಾಡಿದಾಗ ಈ ಸಂಜೆ ಪತ್ರಿಕೆ 48 ಸಾವಿರ ಪ್ರತಿಗಳು ಮಾರಾಟವಾಗಿತ್ತು. ಅದು ಕನ್ನಡಿಗರು ಈ ಸಂಜೆಗೆ ನೀಡಿದ ಮಹತ್ವವಾಗಿತ್ತು. +ಕನ್ನಡಿಗರ ಮುಖವಾಣಿಯಂತೆ ಈ ಸಂಜೆ ಎಲ್ಲಾ ಸಂದರ್ಭದಲ್ಲಿಯೂ ಕೆಲಸ ಮಾಡಿದೆ. ಕಬ್ಬನ್ ಪಾರ್ಕ್‍ನಲ್ಲಿ ರೈತ ನಾಯಕ ಪೆÇ್ರ.ನಂಜುಂಡಸ್ವಾಮಿ ಸಮಾವೇಶ ಮಾಡಿದ ಸಂದರ್ಭದಲ್ಲಿ 35 ಸಾವಿರ ಪ್ರತಿಗಳನ್ನು ಸ್ವತಃ ನಾವೇ ಮಾರಾಟ ಮಾಡಿದ್ದೆವು. ಅದು ಈ ನಾಡಿನ ರೈತರು ಪತ್ರಿಕೆಗೆ ಕೊಟ್ಟ ಸ್ಥಾನಮಾನ. +ಆದರೆ ಇಂದು ವಿತರಕರು ಹಲವು ಸಮಸ್ಯೆಯಲ್ಲಿದ್ದಾರೆ. ಸೂಕ್ತ ರೀತಿಯಲ್ಲಿ ಪತ್ರಿಕೆಗಳು ಕಾರ್ಯ ನಿರ್ವಹಿಸಿದರೆ ನಾವು ನೆಮ್ಮದಿಯಿಂದ ಬದುಕಬಹುದು. ಕೊರೊನ ಕಾಲದ ಸಂದರ್ಭದಲ್ಲಿ ಪತ್ರಿಕಾ ವಿತರಕರು ಮತ್ತು ಮಾರಾಟಗಾರರು ಸೇರಿ ಸುಮಾರು 100 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು. ಅಭಿಮಾನಿ ಸಮೂಹ ಸಂಸ್ಥೆಯ ನಿರ್ದೇಶಕರಾದ ದಿವಾಕರ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_252_7.txt b/eesanje/url_46_252_7.txt new file mode 100644 index 0000000000000000000000000000000000000000..349eecb38934e2e58aa820eb9ce743f55f06b4c3 --- /dev/null +++ b/eesanje/url_46_252_7.txt @@ -0,0 +1,6 @@ +ಸುಫಾರಿ ಕೊಟ್ಟು ತಂದೆಯ ಕೊಲ್ಲಿಸಿದ ಮಗ +ಬಾಗಲಕೋಟೆ, ಜ.27-ಆಸ್ತಿ ಹಂಚಿಕೆ ವಿಚಾರಕ್ಕೆ ಉಂಟಾದ ಭಿನ್ನಾಭಿಪ್ರಾಯದಲ್ಲಿ ತಂದೆಯ ಮೇಲೆ ಸಿಟ್ಟಾದ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ (66) ಕೊಲೆಯಾದ ತಂದೆ. ಹತ್ಯೆ ಆರೋಪಿಗಳಾದ ಮಗ ಚನ್ನಬಸಪ್ಪ, ಪತ್ನಿ ಶಿವಬಸವ್ವ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. +ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ವಾಸಿಗಳಾದ ಚೆನ್ನಪ್ಪ ಅವರಿಗೆ 37 ಎಕರೆ ಜಮೀನು ಇದ್ದು, ಅದನ್ನು ಭಾಗ ಮಾಡಲು ಮಗ ಚನ್ನಬಸಪ್ಪ ಒತ್ತಾಯಿಸುತ್ತಿದ್ದ. ಇದೇ ವಿಚಾರಕ್ಕೆ ಇತ್ತೀಚೆಗೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಹೀಗಾಗಿ ಚನ್ನಬಸಪ್ಪ ಮತ್ತು ಪತ್ನಿ ಶಿವಬಸವ್ವ ಹೇಗಾದರು ಮಾಡಿ ಚೆನ್ನಪ್ಪನನ್ನು ಮುಗಿಸಲು ಸಂಚು ರೂಪಿಸಿದ್ದರು. +ಡಿಕೆಶಿ ಮನೆಗೆ ಗೃಹಸಚಿವ ಪರಮೇಶ್ವರ್ ದಿಢೀರ್ ಭೇಟಿ +ವಿಜಯಪುರ ಜಿಲ್ಲೆಯ ನಿಡಗುಂದಿ ಮೂಲದ ಮಾಂತೇಶ್ ಮರಡಿಮಠ ಎಂಬುವನಿಗೆ 3 ಲಕ್ಷ ರೂ. ನೀಡಿ ಚೆನ್ನ ಪ್ಪನನ್ನು ಕೊಲೆ ಮಾಡುವಂತೆ ಸುಫಾರಿ ನೀಡಿದ್ದರು. ಆದರಂತೆ ಆತ ಕಳೆದ ಜ.25ರ ರಾತ್ರಿ ರಾಂಪುರ ಗ್ರಾಮದ ಬಳಿ ಚೆನ್ನಪ್ಪನನ್ನು ಮಚ್ಚಿನಿಂದ ಕೊಚ್ಚಿ, ಕಲ್ಲಿನಿಂದ ತಲೆ ಜಜ್ಜಿ ಕೊಲೆ ಮಾಡಿದ್ದಾನೆ. +ಕೊಲೆ ಸುದ್ದಿ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಪಾಪಿ ಮಗನ ಕೃತ್ಯ ಬೆಳಕಿಗೆ ಬಂದಿದೆ. ಚನ್ನಬಸಪ್ಪನ ಆಪ್ತ ಗೆಳೆಯರಮೇಶ್ ಮನಗೂಳಿ ಕೂಡ ಈ ಕೊಲೆ ಯೋಚನೆಯಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_46_252_8.txt b/eesanje/url_46_252_8.txt new file mode 100644 index 0000000000000000000000000000000000000000..eb36cbcae00d2178704e16401429fed2ff106509 --- /dev/null +++ b/eesanje/url_46_252_8.txt @@ -0,0 +1,7 @@ +ಡಿಕೆಶಿ ಮನೆಗೆ ಗೃಹಸಚಿವ ಪರಮೇಶ್ವರ್ ದಿಢೀರ್ ಭೇಟಿ +ಬೆಂಗಳೂರು,ಜ.27- ನಿಗಮ ಮಂಡಗಳಿಗಳ ನೇಮಕಾತಿ ಪಟ್ಟಿ ಹೊರಬರುತ್ತಿದ್ದಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಇಂದು ಬೆಳಿಗ್ಗೆ ಉಪಮುಖ್ಯಮಂತ್ರಿಯವರ ಮನೆಗೆ ದಿಢೀರ್ ಭೇಟಿ ನೀಡಿದ ಪರಮೇಶ್ವರ್ ಸುದೀರ್ಘ ಚರ್ಚೆ ನಡೆಸಿದ್ದಾರೆ. +ಗೃಹಮಂಡಳಿ ನೇಮಕಾತಿ ಸಂದರ್ಭದಲ್ಲಿ ತಮ್ಮೊಂದಿಗೆ ಚರ್ಚೆ ನಡೆಸಿಲ್ಲ ಎಂದು ಪರಮೇಶ್ವರ್ ಬಹಿರಂಗ ಹೇಳಿಕೆ ನೀಡಿದ್ದರು. ಎಲ್ಲಾ ಸಚಿವರಿಂದಲೂ 2 ರಿಂದ 3 ಹೆಸರುಗಳನ್ನು ಪಡೆದುಕೊಳ್ಳಲಾಗಿದೆ ಎಂಬ ಸಮರ್ಥನೆಯನ್ನು ಕಾಂಗ್ರೆಸ್ ವರಿಷ್ಠರು ನೀಡುತ್ತಿದ್ದಾರೆ. ಆದರೆ ನಿನ್ನೆ ಆಯ್ಕೆಯಾಗಿರುವ ನಿಗಮ ಮಂಡಳಿಗಳ ಶಾಸಕರ ಪಟ್ಟಿಯಲ್ಲಿ ವಲಸಿಗರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೂಲ ಕಾಂಗ್ರೆಸಿಗರನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳಿವೆ. +ಈ ಹಿನ್ನೆಲೆಯಲ್ಲಿ ಪರಮೇಶ್ವರ್‍ರವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಕಾರ್ಯಕರ್ತರ ನೇಮಕಾತಿ ಪಟ್ಟಿ ಇನ್ನೂ ನೆನೆಗುದಿಯಲ್ಲಿದ್ದು, ಅದರಲ್ಲಿಯಾದರೂ ತಮ್ಮ ಬೆಂಬಲಿಗರಿಗೆ ಹಾಗೂ ನಿಷ್ಠರಿಗೆ ಅವಕಾಶ ಮಾಡಿಕೊಡುವಂತೆ ಪರಮೇಶ್ವರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ. +ಬಿಜೆಪಿಯಿಂದ ಎಎಪಿ ಶಾಸಕರಿಗೆ 25 ಕೋಟಿ ಆಫರ್ ; ಕೇಜ್ರಿವಾಲ್ +ಆರಂಭದಿಂದಲೂ ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ಆಪ್ತ ಸ್ನೇಹಿತರಾಗಿದ್ದರು. ಆದರೆ ಇತ್ತೀಚಿನ ದಿನಗಳಲ್ಲು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದ ಪರಮೇಶ್ವರ್ ಅವರು ಡಿ.ಕೆ.ಶಿವಕುಮಾರ್‍ರಿಂದ ಅಂತರ ಕಾಯ್ದುಕೊಂಡಿದ್ದರಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದಲ್ಲಿ ಕಾಣಿಸಿಕೊಂಡಿದ್ದರು. +ನಿಗಮ ಮಂಡಳಿಗಳ ನೇಮಕಾತಿ ಅಷ್ಟೇ ಅಲ್ಲದೆ ಲೋಕಸಭೆ ಚುನಾವಣೆಯ ಟಿಕೆಟ್ ಹಂಚಿಕೆ, ಎಸ್.ಪಿ.ಮುದ್ದಹನುಮೇಗೌಡರ ಕಾಂಗ್ರೆಸ್ ಸೇರ್ಪಡೆ, ಬಿಟ್‍ಕಾಯಿನ್ ಹಗರಣದಲ್ಲಿ ಎಸ್‍ಐಟಿ ತನಿಖೆಯಲ್ಲಾಗಿರುವ ಬೆಳವಣಿಗೆ, ಪಿಎಸ್‍ಐ ನೇಮಕಾತಿ ಹಗರಣದಲ್ಲಿ ವಿಚಾರಣೆ ನಡೆಸಿ ನ್ಯಾಯಮೂರ್ತಿ ವೀರಪ್ಪ ಅವರು ನೀಡಿರುವ ವರದಿಯಲ್ಲಿರುವ ಪ್ರಭಾವಿಗಳ ಹೆಸರುಗಳನ್ನೂ ಕೂಡ ಪ್ರಸ್ತಾಪಿಸಲಾಗಿದೆ ಎನ್ನಲಾಗಿದೆ. \ No newline at end of file diff --git a/eesanje/url_46_252_9.txt b/eesanje/url_46_252_9.txt new file mode 100644 index 0000000000000000000000000000000000000000..c3170b4b29a0ddee1974575cab4aa991609709bf --- /dev/null +++ b/eesanje/url_46_252_9.txt @@ -0,0 +1,4 @@ +ಬ್ರೇಕಿಂಗ್ : ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ, ಮೊದಲ ಪಟ್ಟಿ ಬಿಡುಗಡೆ +ಬೆಂಗಳೂರು : ಬಹುನಿರೀಕ್ಷಿತ ನಿಗಮ ಮಂಡಳಿ ನೇಮಕ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಮೊದಲ ಹಂತವಾಗಿ ಶಾಸಕರಿಗೆ ಅಧ್ಯಕ್ಷ ಪಟ್ಟ ಲಭಿಸಿದೆ. ಶಾಂತಿನಗರ ಕ್ಷೇತ್ರ ಶಾಸಕ ಹ್ಯಾರಿಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟ್ಟ ನೀಡಲಾಗಿದೆ. +ಸುಮಾರು 38 ಮಂದಿ ಶಾಸಕರಿಗೆ ಆಯಕಟ್ಟಿನ ಹುದ್ದೆಯನ್ನ ನೀಡಲಾಗಿದ್ದು, ಸಂಪುಟ ದರ್ಜೆಯ ಸ್ಥಾನಮಾನ ಸೌಲಭ್ಯಗಳು ದೊರೆಯಲಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಈ ನಿಗಮ ಮಂಡಳಿಗಳ ಅಧಿಕಾರಾವಧಿ ವರ್ಷ ಎಂದು ಮೀಸಲಾಗಿದೆ. +ಪಟ್ಟಿ ಈ ಕೆಳಕಂಡಂತಿದೆ ; \ No newline at end of file diff --git a/eesanje/url_46_253_1.txt b/eesanje/url_46_253_1.txt new file mode 100644 index 0000000000000000000000000000000000000000..71bf73b0704a14403cdb9d58f485bdc27e98ccdc --- /dev/null +++ b/eesanje/url_46_253_1.txt @@ -0,0 +1,12 @@ +ಶೆಟ್ಟರ್ ಬಿಟ್ಟು ಹೋಗಿದ್ದು ಒಳ್ಳೆಯದಾಯಿತು : ಡಿಕೆಶಿ +ಬೆಂಗಳೂರು,ಜ.26- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು ಹೋಗಿದ್ದು ಒಳ್ಳೆಯದಾಯಿತು. ಅವರನ್ನು ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಒಪ್ಪಿಕೊಂಡಿರಲಿಲ್ಲ. ಪಕ್ಷ ಸಂಘಟನೆಯ ಸಂದರ್ಭದಲ್ಲಿ ಮುಜುಗರವಾಗುತ್ತಿತ್ತು ಎಂದು ಸ್ಥಳೀಯ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಅವಮಾನವಾಗಿದೆ ಎಂದು ದೊಡ್ಡದೊಡ್ಡ ಆರೋಪಗಳನ್ನು ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬೇಷರತ್ತಾಗಿ ಬಂದಿದ್ದರು. ಸ್ಥಳೀಯ ಕಾರ್ಯಕರ್ತರನ್ನು ತ್ಯಾಗ ಮಾಡಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆಯಿದ್ದರೂ ಜಗದೀಶ್ ಶೆಟ್ಟರ್‍ರವರ ಹಿರಿತನವನ್ನು ಗಮನಿಸಿ ಟಿಕೆಟ್ ನೀಡಿದ್ದೆವು. ಚುನಾವಣೆಯಲ್ಲಿ ಶೆಟ್ಟರ್ 35 ಸಾವಿರ ಅಂತರಗಳಿಂದ ಸೋಲು ಕಂಡರು. ಆದರೂ ತಕ್ಷಣವೇ ಅವರನ್ನು ವಿಧಾನಪರಿಷತ್‍ಗೆ 5 ವರ್ಷಗಳ ಅವಧಿಗೆ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು ಎಂದರು. +ಕಳೆದ 2-3 ತಿಂಗಳಿನಿಂದಲೂ ಬಿಜೆಪಿಯವರು ಶೆಟ್ಟರ್‍ರನ್ನು ಸಂಪರ್ಕಿಸುತ್ತಿದ್ದರು. ಬಿಜೆಪಿಯಿಂದ ಕಾಂಗ್ರೆಸ್‍ಗೆ ಹಲವು ನಾಯಕರನ್ನು ಶೆಟ್ಟರ್ ಕರೆತಂದಿದ್ದರು. ಮತ್ತಷ್ಟು ಜನರ ಪಟ್ಟಿ ಕೊಟ್ಟಿದ್ದರು. ಈಗ ಏಕಾಏಕಿ ಕಾಂಗ್ರೆಸ್ ತೊರೆದು ಹೋಗಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಒಂದು ದಿನಕ್ಕೆ ಮುಗಿದು ಹೋದ ವಿಷಯ. ಸೂರ್ಯ ಹುಟ್ಟಿ ಮುಳುಗಿದಂತೆ ಮರೆತುಬಿಡಬೇಕು ಎಂದರು. +ಕಾಂಗ್ರೆಸ್ ಸಮುದ್ರವಿದ್ದಂತೆ ಯಾರೋ ಒಬ್ಬರು ಬಂದು ಹೋಗುವುದರಿಂದ ಏನೂ ನಷ್ಟವಾಗುವುದಿಲ್ಲ. ಪಕ್ಷ ತನ್ನ ಸಾಮಥ್ರ್ಯದಲ್ಲೇ ಮುಂದುವರೆಯಲಿದೆ. ಹುಬ್ಬಳ್ಳಿ-ಧಾರವಾಡ ಭಾಗದ ಕಾರ್ಯಕರ್ತರು ಶೆಟ್ಟರ್ ನಿರ್ಗಮನದಿಂದ ಸಂಭ್ರಮ ಪಡುತ್ತಿದ್ದಾರೆ. ಅವರಿದ್ದಾಗ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ಒಪ್ಪಿಕೊಳ್ಳುತ್ತಿರಲಿಲ್ಲ. ಮುಜುಗರವಾಗುತ್ತಿತ್ತು ಎಂದು ಹೇಳಿದ್ದಾರೆ. +ಮುಂದಿನ ದಿನಗಳಲ್ಲಿ ಖಾಲಿಯಾದ ವಿಧಾನಪರಿಷತ್ ಸ್ಥಾನವನ್ನು ಪಕ್ಷದ ನಿಷ್ಠಾವಂತರಿಗೆ ನೀಡಿ ಸಂಘಟನೆಯನ್ನು ಮುಂದುವರೆಸುತ್ತೇವೆ. ಕಾಂಗ್ರೆಸ್ ಸೇರಿದ ಬಳಿಕ ಶೆಟ್ಟರ್‍ರವರು ಬಿಜೆಪಿ ವಿರುದ್ಧ ಮಾಡಿದ ಟೀಕೆಗಳಿಗೆ ಅವರಾಗಿಯೇ ಸ್ಪಷ್ಟನೆ ನೀಡಬೇಕು ಎಂದರು. +, RSSನಿಂದ ಸಂವಿಧಾನ ನಾಶಕ್ಕೆ ಯತ್ನ : ಮಲ್ಲಿಕಾರ್ಜುನ ಖರ್ಗೆ +ಪಕ್ಷಕ್ಕೆ ಹೊಸಬರನ್ನು ಸೇರಿಸಿಕೊಳ್ಳುವಾಗ ತತ್ವ ಸಿದ್ಧಾಂತಗಳನ್ನು ಪರಿಶೀಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ರಾಜಕಾರಣದಲ್ಲಿ ಯಾವುದೂ ಅಸಾಧ್ಯವಲ್ಲ. ಬಿಜೆಪಿಯವರನ್ನು ಅಕಾರದಿಂದ ದೂರ ಇಡಬೇಕು ಎಂದು ಜೆಡಿಎಸ್‍ನ ಕುಮಾರಸ್ವಾಮಿಯವರನ್ನು ನಾವು ಮುಖ್ಯಮಂತ್ರಿ ಮಾಡಿದ್ದೆವು. ಬಿಜೆಪಿಯವರು ಕುಮಾರಸ್ವಾಮಿಯವರನ್ನು ಅಧಿಕಾರದಿಂದ ತೆಗೆದಿದ್ದರು. ಈಗ ಅದೇ ಕುಮಾರಸ್ವಾಮಿ ಬಿಜೆಪಿಯವರನ್ನು ಅಪ್ಪಿಕೊಂಡಿದ್ದಾರೆ. ಬಿಜೆಪಿಯ ವಕ್ತಾರರಂತೆ ನಡೆದುಕೊಳ್ಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದ ಸಂದರ್ಭದಲ್ಲಿ ಕುಮಾರಸ್ವಾಮಿ ಮಾಡಿದ ಟೀಕೆಗಳಿಗೆ ಯಾವ ರೀತಿಯ ಸಮರ್ಥನೆ ನೀಡುತ್ತಾರೆ ಎಂದು ಪ್ರಶ್ನಿಸಿದರು. +ಮುಂದಿನ ಲೋಕಸಭಾ ಚುನಾವಣೆಯನ್ನು ಇಂಡಿಯಾ ರಾಜಕೀಯ ಮೈತ್ರಿಕೂಟದ ಜೊತೆ ಕಾಂಗ್ರೆಸ್ ಒಗ್ಗಟ್ಟಿನಿಂದ ಎದುರಿಸುತ್ತದೆ. ಸ್ಥಾನಗಳ ಹಂಚಿಕೆ ಬಗ್ಗೆ ತೆರವಾದ ಕೆಲವರ ಹೇಳಿಕೆಗಳನ್ನು ಗಮನಿಸಿದ್ದೇವೆ. ಆದರೆ ಅವು ಇನ್ನೂ ಚರ್ಚೆಯ ಹಂತದಲ್ಲಿವೆ ಎಂದರು. +ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯನ್ನು ಹೈಕಮಾಂಡ್ ಕಳುಹಿಸಿದರೆ ಅದನ್ನು ಒಪ್ಪಿಕೊಳ್ಳಲು ನಾವು ಗುಲಾಮರಲ್ಲ ಎಂದು ಹೇಳಿಕೆ ನೀಡುವ ಮೂಲಕ ಪಕ್ಷದ ವರಿಷ್ಠರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಕುರಿತು ಮುಖ್ಯಮಂತ್ರಿಯವರು ನಿರ್ಧಾರ ತೆಗೆದುಕೊಳ್ಳುತ್ತಾರೆ. +ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತವನ್ನಾಳಿದರು : ಸಿದ್ದರಾಮಯ್ಯ +ರಾಜಣ್ಣ ಹೇಳಿಕೆ ಹೈಕಮಾಂಡ್‍ನ ಗಮನದಲ್ಲಿದೆ. ಶಾಸಕಾಂಗ ಪಕ್ಷದ ನಾಯಕರಾಗಿರುವ ಮುಖ್ಯಮಂತ್ರಿಯವರು ಈ ಬಗ್ಗೆ ಗಮನಿಸಬೇಕಿತ್ತು. ತಾವು ಅವರೊಂದಿಗೆ ಚರ್ಚೆ ನಡೆಸುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು. ನಿಗಮ ಮಂಡಳಿಗಳಿಗೆ ನೇಮಕಾತಿಯಾಗಿ ಇಂದಿನಿಂದಲೇ ಸರ್ಕಾರದ ಅಸೂಚನೆಗಳು ಪ್ರಕಟಗೊಳ್ಳಲಿವೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭವಾಗಲಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. \ No newline at end of file diff --git a/eesanje/url_46_253_10.txt b/eesanje/url_46_253_10.txt new file mode 100644 index 0000000000000000000000000000000000000000..871a210a451372a2f22078dbbf86c0b6624a507a --- /dev/null +++ b/eesanje/url_46_253_10.txt @@ -0,0 +1,7 @@ +ಶೆಟ್ಟರ್‌ಗೆ ಕಾಂಗ್ರೆಸ್‍ನಲ್ಲಿ ಅನ್ಯಾಯವಾಗಿಲ್ಲ : ಸಿದ್ದರಾಮಯ್ಯ +ಬೆಂಗಳೂರು,ಜ.25- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‍ರವರಿಗೆ ಕಾಂಗ್ರೆಸ್‍ನಲ್ಲಿ ಯಾವುದೇ ಅನ್ಯಾಯವಾಗಿರಲಿಲ್ಲ, ಗೌರವ ಯುತವಾಗಿ ನಡೆಸಿಕೊಳ್ಳಲಾಗಿತ್ತು. ಆದರೂ ಅವರು ಮರಳಿ ಬಿಜೆಪಿಗೆ ಹೋಗಿದ್ದೇಕೆ ಎಂದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ಮಡಿಕೇರಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗರು ಟಿಕೆಟ್ ನೀಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್‍ಗೆ ಬಂದಿದ್ದರು. ಪಕ್ಷ ಅವರಿಗೆ ಟಿಕೆಟ್ ನೀಡಿತ್ತು. ಸೋಲು ಕಂಡ ಬಳಿಕವೂ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು ಎಂದು ಹೇಳಿದರು. +ಮಾಜಿ ಮುಖ್ಯಮಂತ್ರಿಯಾಗಿದ್ದ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೆವು. ನಮ್ಮಲ್ಲಿ ಅವರಿಗೆ ಯಾವುದೇ ಅನ್ಯಾಯವಾಗಲೀ, ಅಪಮಾನವಾಗಲೀ ಆಗಿಲ್ಲ. ಬಿಜೆಪಿ ನನಗೆ ಅಪಮಾನ ಮಾಡಿದೆ. ಮತ್ತೆ ಆ ಪಕ್ಷಕ್ಕೆ ವಾಪಸ್ ಹೋಗುವುದಿಲ್ಲ ಎಂದು ತಮ್ಮ ಜೊತೆ ಜಗದೀಶ್ ಶೆಟ್ಟರ್ ಹೇಳಿದ್ದರು. ಅನಂತರ ಯಾವ ಬೆಳವಣಿಗೆಗಳಾಗಿವೆ ಎಂದು ನನಗೆ ಗೊತ್ತಿಲ್ಲ ಎಂದರು. +ಕ್ಷಿಪ್ರ ಬೆಳವಣಿಗೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ಸಾದ ಜಗದೀಶ್ ಶೆಟ್ಟರ್ +ಕೆಲ ದಿನಗಳ ಹಿಂದೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದ ಪಕ್ಷದ ಸಭೆಯಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿದ್ದರು. ಆ ವೇಳೆ ತಮ್ಮೊಂದಿಗೆ ಮಾತನಾಡಿದ್ದರು ಎಂದು ಹೇಳಿದರು. ಕೊಡಗಿನಲ್ಲಿ ಕಾಫಿ ಬೆಳೆಗಾರರಿಗೆ ವಿದ್ಯುತ್ ರಿಯಾಯಿತಿ ಸೇರಿದಂತೆ ಹಲವು ಸೌಲಭ್ಯಗಳ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. +ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಶಾಸಕರಾಗಿದ್ದವರು ಜನರ ಬೇಡಿಕೆಗಳಿಗೆ ಸ್ಪಂದಿಸಲಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದೆವು. ಅದಕ್ಕೆ ಜನ ಸ್ಪಂದಿಸಿದ್ದಾರೆ ಎಂದು ಹೇಳಿದರು. ನಿಗಮ ಮಂಡಳಿ ನೇಮಕಾತಿಯಲ್ಲಿ ಎಲ್ಲಾ ಸಚಿವರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆದರೆ ಅಂತಿಮವಾಗಿ ಹೈಕಮಾಂಡ್ ಮತ್ತು ಪಕ್ಷದ ಅಧ್ಯಕ್ಷರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಯತೀಂದ್ರ ಸ್ರ್ಪಧಿಸುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. \ No newline at end of file diff --git a/eesanje/url_46_253_11.txt b/eesanje/url_46_253_11.txt new file mode 100644 index 0000000000000000000000000000000000000000..5790be183736dfa654753f843a3fa3511fda0848 --- /dev/null +++ b/eesanje/url_46_253_11.txt @@ -0,0 +1,7 @@ +ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ +ನವದೆಹಲಿ,ಜ.25- ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ರಕ್ಷಣಾ ದಳಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 21 ಮಂದಿ ಪೊಲೀಸರು ಭಾಜನರಾಗಿದ್ದಾರೆ. +ವಿಶಿಷ್ಟ ಸೇವಾ ಪದಕಕ್ಕೆ ಇಬ್ಬರು ಹಾಗೂ ಶ್ಲಾಘನೀಯ ಸೇವಾ ಪದಕ 19 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಲಭಿಸಿದೆ. ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೌಮೇಂದು ಮುಖರ್ಜಿ ಹಾಗೂ ಡಿವೈಎಸ್ಪಿ ಸುದೀರ್ ಮಹಾದೇವ್ ಹೆಗ್ಡೆ ಭಾಜನರಾಗಿದ್ದಾರೆ. +ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಬೆಂಗಳೂರು ನಗರ ಪೂರ್ವವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರಾದ ರಮಣ್ ಗುಪ್ತ, ಎಎಸ್‍ಪಿ ಅನಿಲ್‍ಕುಮಾರ್ ಎಸ್.ಭೂಮಾರಡಿ, ಎಸಿಪಿ ಶಿವಗಂಗೆ ಪುಟ್ಟಗಣಪ ಧರಣೇಶ, ಡಿವೈಎಸ್ಪಿ ರಘುಕುಮಾರ್ ವೆಂಕಟೇಶಲು, ಎಸಿಪಿ ನಾರಾಯಣಸ್ವಾಮಿ ವೆಂಕಟಶ್ಯಾಮಪ್ಪ, ಎಎಸ್‍ಪಿ ಶ್ರೀನಿವಾಸರಾಜು ಬೆಟ್ಟೋಳಿ ಸಣ್ಣಯ್ಯ, ಇನ್ಸ್‍ಪೆಕ್ಟರ್‍ಗಳಾದ ಮಾಸ್ತೇನಹಳ್ಳಿ ರಾಮಪ್ಪ ಹರೀಶ್, ಸಣ್ಣರಂಗಪ್ಪ ವೀರೇಂದ್ರ ಪ್ರಸಾದ್, ಸಶಸ್ತ್ರ ಪಡೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್ ದಾದಾಪೀರ್ ಹೊನ್ನೂರ್‍ಸಾಬ್, +ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಬಿಜೆಪಿಯಿಂದ ಗ್ರಾಮ ಚಲೋ +ವೈರ್‍ಲೆಸ್ ವಿಭಾಗದ ಎಎಸ್‍ಐ ಸುರೇಶ್ ರಾಮಪ್ಪ ಪುದಕಲಟ್ಟಿ, ಎಎಸ್‍ಐ ರಾಮ, ಕೆಎಸ್‍ಆರ್‍ಪಿಯ ಎಸ್ಪಿ ಮತ್ತು ಕಮಾಂಡೆಡ್ ನಾಗರಾಜ ಅಂಜಪ್ಪ, ಹೆಡ್ ಕಾನ್ಸ್‍ಟೇಬಲ್ ಸಿ.ವಿ.ಗೋವಿಂದರಾಜು, ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಮಣಿಕಂಠ ಮಂದರಬಾಲಿ, ಎಎಸ್‍ಐ ಶಮಂತ ಯಶ್ ಜಿ., ಸಿವಿಲ್ ಹೆಡ್ ಕಾನ್ಸ್‍ಟೇಬಲ್ ಎಸ್.ಎನ್.ನರಸಿಂಹರಾಜು, ಗುಪ್ತಚರ ಇಲಾಖೆಯ ಸಹಾಯಕ ಅಧಿಕಾರಿ ಸಿ.ವೆಂಕಟೇಶ್, ವಿಶೇಷ ಸಶಸ್ತ್ರ ಪಡೆಯ ಸಬ್ ಇನ್ಸ್‍ಪೆಕ್ಟರ್ ಪುಂಡಲೀಕ ಜೆ.ವಿ.ರಾಮರಾವ್ ಅವರುಗಳು ಭಾಜನರಾಗಿದ್ದಾರೆ. +ಈ ಬಾರಿಯ ರಾಷ್ಟ್ರಪತಿಯ ಶೌರ್ಯ ಪದಕ ಯಾವ ರಾಜ್ಯದ ಅಧಿಕಾರಿಗೂ ದೊರೆತಿಲ್ಲ. ಬಿಎಸ್‍ಎಫ್‍ನ ಇಬ್ಬರಿಗೆ ಮಾತ್ರ ನೀಡಲಾಗಿದೆ. ಶೌರ್ಯ ಪದಕದಲ್ಲಿ ಬಿಹಾರದ 6, ಛತ್ತೀಸ್‍ಗಢದ 26, ದೆಹಲಿಯ 9, ಹರಿಯಾಣದ 1, ಜಾರ್ಖಂಡ್‍ನ 23, ಮಧ್ಯಪ್ರದೇಶದ 3, ಮಹಾರಾಷ್ಟ್ರದ 10, ಒಡಿಸ್ಸಾದ 15, ಪಂಜಾಬ್‍ನ 18, ತೆಲಂಗಾಣದ 6, ಉತ್ತರ ಪ್ರದೇಶದ 2, ಜಮ್ಮು-ಕಾಶ್ಮೀರದ 72, ಸಿಆರ್‍ಪಿಎಫ್‍ನ 65 ಸೇರಿ 275 ಮಂದಿಗೆ ಶೌರ್ಯ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. \ No newline at end of file diff --git a/eesanje/url_46_253_12.txt b/eesanje/url_46_253_12.txt new file mode 100644 index 0000000000000000000000000000000000000000..c10b762a5ce9ad53b8afbb1160e14d1451b5ada5 --- /dev/null +++ b/eesanje/url_46_253_12.txt @@ -0,0 +1,10 @@ +ಕೇಂದ್ರ ಸರ್ಕಾರದ ಸಾಧನೆ ತಿಳಿಸಲು ಬಿಜೆಪಿಯಿಂದ ಗ್ರಾಮ ಚಲೋ +ಬೆಂಗಳೂರು,ಜ.25- ಕೇಂದ್ರ ಸರ್ಕಾರದ ಸಾಧನೆಗಳನ್ನು ರಾಜ್ಯದ ಪ್ರತಿ ಮನೆಗೂ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಫೆ.8ರಿಂದ ಗ್ರಾಮ ಚಲೋ ಅಭಿಯಾನವನ್ನು ಆರಂಭಿಸಲಿದೆ. ರಾಜ್ಯದ 28 ಸಾವಿರ ಗ್ರಾಮಗಳಿಗೆ ಮತ್ತು 10 ಸಾವಿರ ನಗರ ಬೂತ್‍ಗಳ ಜೊತೆ ಕಾರ್ಯಕರ್ತರನ್ನು ನಿಯೋಜಿಸಿ 40 ಸಾವಿರ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಗಳನ್ನು ಗ್ರಾಮ ಚಲೋ ಅಭಿಯಾನದ ಮೂಲಕ ಮನೆ ಮನೆಗೆ ತಲುಪಿಸುವ ಅಭಿಯಾನವನ್ನು ಫೆ.8ರಿಂದ ಆರಂಭಿಸಲಿದ್ದಾರೆ ಎಂದು ಬಿಜೆಪಿ ಶಾಸಕ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. +ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ದೇಶ ಮತ್ತು ಕರ್ನಾಟಕದಲ್ಲಿ ಗ್ರಾಮ ಚಲೋ ಎಂಬ ಅಭಿಯಾನ ಆರಂಭ ಮಾಡುತ್ತಿದ್ದೇವೆ. ಕಾರ್ಯಕರ್ತರನ್ನು ನಿಯೋಜಿಸಿ ಅವರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಹೇಳಿದರು. +ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರ ಸಾವು +ಕೇಂದ್ರ ಸರ್ಕಾರ ಯೋಜನೆಗಳನ್ನು ಜನರಿಗೆ ತಿಳಿಸುವ ಕಾರ್ಯಕ್ರಮ ಇದಾಗಿದೆ. ಗ್ರಾಮ ಚಲೋ ಅಭಿಯಾನಕ್ಕೆ ರಾಜ್ಯಾಧ್ಯಕ್ಷ ವಿಜಯೇಂದ್ರ ಚಾಲನೆ ನೀಡಲಿದ್ದು, ರಾಜ್ಯ ಸರ್ಕಾರ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತೇವೆ. 28 ಕ್ಷೇತ್ರಗಳಲ್ಲಿ ಗೆಲ್ಲಲು ಇದೊಂದು ಅಡಿಪಾಯವಾಗುತ್ತದೆ ಎಂದರು. ಕರ್ನಾಟಕದ 28 ಸಾವಿರ ಕಂದಾಯ ಗ್ರಾಮಗಳು ಹಾಗೂ 19 ಸಾವಿರ ನಗರ ಬೂತ್‍ಗಳನ್ನು ಸಂಪರ್ಕಿಸಲಾಗುವುದು ಸುಮಾರು 40 ಸಾವಿರ ಕಾರ್ಯಕರ್ತರನ್ನು ಈ ಅಭಿಯಾನಕ್ಕೆ ಜೋಡಿಸಿಕೊಳ್ಳಲಾಗುವುದು ಎಂದು ತಿಳಿಸಿದರು. +ಫೆ. 9, 10 ಹಾಗೂ 11ರಂದು ಮೂರು ದಿನಗಳ ಕಾಲ ಮೊದಲ ಹಂತದಲ್ಲಿ ಅಭಿಯಾನ ನಡೆಯುತ್ತದೆ. ಕಾರ್ಯಕರ್ತರು ತಾವು ನಿಯೋಜನೆಗೊಂಡ ಗ್ರಾಮವನ್ನು ಬಿಟ್ಟು ಬೇರೆ ಗ್ರಾಮಕ್ಕೆ ಹೋಗಿ 24 ಗಂಟೆ ಕಾಲ ವಾಸ್ತವ್ಯವಿದ್ದು, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಆಶಯಗಳ ಬಗ್ಗೆ ಜಾಗೃತಿ ಮೂಡಿಸಬೇಕಾಗುತ್ತದೆ. ತಳಮಟ್ಟದಲ್ಲಿ ಪ್ರತಿಯೊಬ್ಬರನ್ನೂ ತಲುಪುವ ಜತೆಗೆ ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು. +ಗ್ರಾಮ ಚಲೋ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಅಭಿಯಾನ ಕಾಂಗ್ರೆಸ್ಸಿಗರು ರಾಮಮಂದಿರಕ್ಕೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಮನ ಪ್ರತಿಷ್ಠಾನ ಆದ ಬಳಿಕ ರಾಮ ರಾಜ್ಯದ ಪರಿಕಲ್ಪನೆ ಆರಂಭವಾಗಿದೆ. ಸಿದ್ದರಾಮಯ್ಯರಲ್ಲಿ ಕೂಡ ಬದಲಾವಣೆ ಆರಂಭವಾಗಿದೆ. +ರಾಮನನ್ನು, ಹಿಂದೂಗಳನ್ನು ಬಿಟ್ಟು ಯಾರು ರಾಜಕೀಯ ಮಾಡಲು ಸಾಧ್ಯವಿಲ್ಲ. ಮಂದಿರ ಮುಖಾಂತರ ಭಾರತ ವಿಶ್ವಗುರು ಆಗಬೇಕು. ಚಿತ್ರದುರ್ಗದ ಹಿಂದುಳಿದ ಸಮಾವೇಶಕ್ಕೆ ನನಗೆ ಆಹ್ವಾನ ಕೊಟ್ಟಿಲ್ಲ. ಆಹ್ವಾನ ಕೊಟ್ಟರೆ ನಾನು ಹೋಗುತ್ತೇನೆ ಎಂದು ಹೇಳಿದರು. ಮಂಗಳೂರಿನ ಸಮಾವೇಶದಲ್ಲಿ ಮುಸ್ಲಿಂ ಬೇಡಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೇಡಿಕೆಗಳನ್ನು ಎಲ್ಲರೂ ಕೇಳುತ್ತಾರೆ. ಸರ್ಕಾರ ಯಾವ ರೀತಿ ಬಜೆಟ್ ಮಂಡಿಸುತ್ತದೆ ನೋಡೋಣ. ಕೆಜಿಹಳ್ಳಿ, ಡಿಜೆ ಹಳ್ಳಿ ಪ್ರಕರಣವನ್ನು ಇಡೀ ದೇಶ ನೋಡಿದೆ ಎಂದರು. +ಕತ್ತು ಕೊಯ್ದು ಪತ್ನಿಕೊಲೆ +ಉದ್ರಿಕ್ತ ಗುಂಪು ಹೇಗೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದೆ. ಯಾವ ರೀತಿಯಲ್ಲಿ ಧ್ವಂಸ ಮಾಡಿದರು, ದಲಿತ ಶಾಸಕನ ಮನೆ ಮೇಲೆ ದಾಳಿ ಮಾಡಿದ್ದು ಜಗಜಾಹ್ಹೀರವಾಗಿದೆ. ಸರ್ಕಾರಕ್ಕೆ ದಲಿತ ಶಾಸಕನ ಮನೆಗೆ ಬೆಂಕಿ ಹಾಕಿದ ಕಿಡಿಗೇಡಿಗಳು, ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ಅಮಾಯಕರು ಎನಿಸಿದರೆ ಇದಕ್ಕಿಂತ ದುರಂತ ಯಾವುದು ಇಲ್ಲ ಎಂದು ಹೇಳಿದರು. ಬೆಂಕಿ ಹಾಕಿದವರ ಮೇಲೆ ಇನ್ನಷ್ಟು ಕ್ರಮ ಆಗಬೇಕು. ಕೋಮುವಾದದ ನೆಪ ಇಟ್ಟುಕೊಂಡು ಅಮಾಯಕರೆಂದು ಕರೆಯುವುದು ಸರಿಯಲ್ಲ ಎಂದರು. \ No newline at end of file diff --git a/eesanje/url_46_253_2.txt b/eesanje/url_46_253_2.txt new file mode 100644 index 0000000000000000000000000000000000000000..5210c604449598a1b3c40d97023fb57016650306 --- /dev/null +++ b/eesanje/url_46_253_2.txt @@ -0,0 +1,8 @@ +ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತವನ್ನಾಳಿದರು : ಸಿದ್ದರಾಮಯ್ಯ +ಬೆಂಗಳೂರು,ಜ.26- ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು. +ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು. +ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ಗಾಯಕಿ ಭವತಾರಿಣಿ ನಿಧನ +ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದು ತಿಳಿಸಿದರು. +ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು. +ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು ಎಂದು ಹೇಳಿದರು.ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು. +ಆದಿ ಚುಂಚನಗಿರಿ ಮಹಾ ಸಂಸ್ಥಾನದ ಧರ್ಮಗುರು ನಿರ್ಮಲಾನಂದ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_253_3.txt b/eesanje/url_46_253_3.txt new file mode 100644 index 0000000000000000000000000000000000000000..76b1ef3173752b6c5519f7009e3859b97e1c93d6 --- /dev/null +++ b/eesanje/url_46_253_3.txt @@ -0,0 +1,21 @@ +ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸುರಂಗ ಮಾರ್ಗ +ಬೆಂಗಳೂರು,ಜ.26- ನಗರದ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಿತದೃಷ್ಟಿಯಿಂದ ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ತಿಳಿಸಿದರು. ನಗರದ ಮಾಣಿಕ್‍ಷಾ ಪೆರೇಡ್ ಮೈದಾನನಲ್ಲಿಂದು ನಡೆದ ರಾಜ್ಯಮಟ್ಟದ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ರಾಜ್ಯಪಾಲರು ಪ್ರಾಯೋಗಿಕವಾಗಿ 2 ಕಿ.ಮೀ. ವಿಸ್ತೀರ್ಣದ ಸುರಂಗ ರಸ್ತೆಯ ನಿರ್ಮಾಣಕ್ಕಾಗಿ ಅಂತರರಾಷ್ಟ್ರೀಯ ಏಜೆನ್ಸಿಯ ನೆರವಿನಿಂದ ಡಿಪಿಆರ್ ತಯಾರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದರು. +ಬೆಂಗಳೂರಿನ ಮುಖ್ಯರಸ್ತೆಗಳ ಸುಸ್ಥಿರ ಅಭಿವೃದ್ಧಿಗಾಗಿ 2 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ರೂಪಿಸಿ ಪ್ರಮುಖ ರಸ್ತೆಗಳ ಬೈಪಾಸಿಂಗ್‍ಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕøತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ. ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿವೆ. ಇಡೀ ಜಗತ್ತಿಗೆ ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಹಾಗೂ ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು. ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ರಾಜ್ಯಪಾಲರು ಕರೆ ನೀಡಿದರು. +ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬದ್ಧ:ರಾಜ್ಯಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಬದ್ಧತೆಯನ್ನು ಹೊಂದಿದೆ. ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಶಕ್ತಿ ಯೋಜನೆಯಡಿ ಜೂನ್ 11 ರಿಂದ ಜಾರಿಗೊಳಿಸಿದ್ದು, 3.5 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಇಲ್ಲಿಯವರೆಗೂ 134.34 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. +ಅನ್ನಭಾಗ್ಯ ಯೋಜನೆಯಡಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆ.ಜಿ. ಆಹಾರ ಧಾನ್ಯದೊಂದಿಗೆ ಹೆಚ್ಚುವರಿ 5 ಕೆ.ಜಿ. ಆಹಾರಧಾನ್ಯವನ್ನು ವಿತರಿಸಲು ರಾಜ್ಯಸರ್ಕಾರ ಬದ್ಧವಾಗಿದೆ. ಆಹಾರಧಾನ್ಯ ಲಭ್ಯವಾಗುವವರೆಗೂ ರಾಜ್ಯಸರ್ಕಾರ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಆಹಾರಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂ. ನಂತೆ ಸದಸ್ಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತಿದೆ. ನವೆಂಬರ್ ಅಂತ್ಯಕ್ಕೆ 2,900.12 ಕೋಟಿ ಹಣವನ್ನು ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ. +ಕಳೆದ ಜುಲೈ 1 ರಿಂದ ಜಾರಿಗೆ ತಂದ ಗೃಹಜ್ಯೋತಿ ಯೋಜನೆಯ ಪ್ರಯೋಜನವನ್ನು 1.50 ಕೋಟಿ ಗ್ರಾಹಕರು ಪಡೆಯುತ್ತಿದ್ದು, ಸರ್ಕಾರ ಪ್ರತಿ ತಿಂಗಳು ಎಲ್ಲಾ ಎಸ್ಕಾಂಗಳಿಗೆ 700 ಕೋಟಿ ರೂ. ಮುಂಗಡ ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ ಎಂದು ಅವರು ತಿಳಿಸಿದರು. +ಗೃಹಜ್ಯೋತಿ ಯೋಜನೆಯಡಿ ಪ್ರತಿ ಕುಟುಂಬದ ಅರ್ಹ ಯಜಮಾನತಿಗೆ 2 ಸಾವಿರ ರೂ. ನೀಡುತ್ತಿದ್ದು, ಈ ಯೋಜನೆಯಡಿ ನೊಂದಾಯಿಸಿರುವ 1.17 ಕೋಟಿ ಫಲಾನುಭವಿಗಳಿಗೆ 8,181 ಕೋಟಿ ರೂ. ನೆರವು ವರ್ಗಾಯಿಸಲಾಗಿದೆ. ಯುವನಿಧಿ ಯೋಜನೆಯಡಿ ಡಿಫ್ಲೋಮಾದಾರರಿಗೆ 1,500 ರೂ. ಹಾಗೂ ಪದವೀಧರರಿಗೆ ನಿರುದ್ಯೋಗಿ ಭತ್ಯೆಯನ್ನು 2 ವರ್ಷದವರೆಗೆ ನೀಡಲಿದ್ದು, ಸ್ವಾಮಿ ವಿವೇಕಾನಂದ ಜಯಂತಿಯಂದು ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿ ರಾಜ್ಯಸರ್ಕಾರ ಬದ್ಧತೆ ಮೆರೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ರಾಜ್ಯದ 223 ತಾಲೂಕುಗಳು ಬರಪೀಡಿತವಾಗಿದ್ದು, ಪ್ರತಿ ರೈತರಿಗೆ 2 ಸಾವಿರ ರೂ.ವರೆಗಿನ ಮಧ್ಯಂತರ ಪರಿಹಾರವನ್ನು ಆಧಾರ್ ಲಿಂಕ್ ಮಾಡಿರುವ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ 580 ಕೋಟಿ ರೂ. ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.ಬರಪರಿಸ್ಥಿತಿಯ ಪರಿಣಾಮಗಳನ್ನು ತಗ್ಗಿಸಲು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. +ಕಿರುದಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ 10 ಸಾವಿರ ರೂ.ನಂತೆ ಗರಿಷ್ಠ 2 ಹೆಕ್ಟೇರ್‍ವರೆಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ ಎಂದರು. ಮುಂಗಾರು ಹಂಗಾಮಿನಲ್ಲಿ ಬಿತ್ತನೆ ವೈಫಲ್ಯದಡಿ ಮಧ್ಯಂತರ ಬೆಳೆ ವಿಮೆ ಪರಿಹಾರದಡಿ 6.77 ಲಕ್ಷ ರೈತ ಫಲಾನುಭವಿಗಳಿಗೆ 459.59 ಕೋಟಿ ಬೆಳೆವಿಮೆ ಪರಿಹಾರವನ್ನು ವಿಮಾ ಸಂಸ್ಥೆಗಳಿಂದ ಇತ್ಯರ್ಥಪಡಿಸಲಾಗಿರುತ್ತದೆ ಎಂದು ತಿಳಿಸಿದರು. +ಎಇಡಿ ಯೋಜನೆ :ಡಾ.ಪುನೀತ್ ರಾಜ್‍ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ ನಿಲ್ದಾಣ, ರೈಲು ನಿಲ್ದಾಣ, ಸರ್ಕಾರಿ ಕಚೇರಿಗಳಲ್ಲಿ ಎಇಡಿ ಸಾಧನಗಳನ್ನು ಅಳವಡಿಸಲು ಯೋಜನೆ ನಿರ್ಮಿಸಲಾಗುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು. +ಡಯಾಲಿಸಿಸ್ ಕೇಂದ್ರಗಳನ್ನು ರಾಜ್ಯದಲ್ಲಿ 168 ರಿಂದ 219 ಕ್ಕೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಆಂಬುಲೆನ್ಸ್ ಸೇವೆಗಳಿಗೆ ಹೊಸದಾಗಿ 262 ಆಂಬುಲೆನ್ಸ್‍ಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. +ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2023 ರಲ್ಲಿ 37.03 ಲಕ್ಷ ಕುಟುಂಬಗಳ 63.13 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದೆ. ರಾಜ್ಯದಲ್ಲಿ 72.38 ಲಕ್ಷ ಮನೆಗಳಿಗೆ ಗ್ರಾಮೀಣ ಕುಡಿಯುವ ನೀರಿನ ಯೋಜನೆಯಡಿ ನಳ ನೀರು ಸಂಪರ್ಕ ಒದಗಿಸಲಾಗಿದೆ. 2023-24 ನೇ ಸಾಲಿನಲ್ಲಿ 17.24 ಲಕ್ಷ ರೈತರಿಗೆ 13,672.74 ಕೋಟಿ ರೂ.ಗಳ ಬೆಳೆಸಾಲ ವಿತರಿಸಲಾಗಿದೆ. 185.74 ಕೋಟಿ ರೂ.ಗಳ ವೆಚ್ಚದಲ್ಲಿ ಅನಿಮೀಯಾ ಪೌಷ್ಠಿಕ ಕರ್ನಾಟಕ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದರು. +ಬ್ರಾಂಡ್ ಬೆಂಗಳೂರು ಅಡಿಯಲ್ಲಿ 70 ಸಾವಿರಕ್ಕೂ ಹೆಚ್ಚು ಸಲಹೆಗಳನ್ನು ಸಂಗ್ರಹಿಸಲಾಗಿದ್ದು, ತಜ್ಞರ ಸಮಿತಿಯು ಆ ಸಲಹೆಗಳನ್ನು ಪರಿಶೀಲಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಶಿಫಾರಸ್ಸು ಮಾಡಲಿದೆ ಎಂದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆಯನ್ನು ಜಾರಿಗೆ ತಂದಿದ್ದು, 4 ಚಕ್ರಗಳ ವಾಹನಗಳಿಗೆ 4 ಲಕ್ಷ ರೂ.ಗಳ ಸಹಾಯಧನ ನೀಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. +ಗಣರಾಜ್ಯೋತ್ಸವದಲ್ಲಿ ಸ್ತ್ರೀ ಶಕ್ತಿ ಪ್ರದರ್ಶನ ಅನಾವರಣ +ರಾಜ್ಯದಲ್ಲಿ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳು ಪಡೆಯುವ ಸಾಲಕ್ಕೆ ಶೇ.6 ರ ಬಡ್ಡಿದರದಲ್ಲಿ 10 ಕೋಟಿ ರೂ.ಗಳವರೆಗೆ ಸಹಾಯಧನ ನೀಡುವ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ವರ್ಷಪೂರ್ತಿ ಆಚರಿಸಲಾಗುತ್ತಿದೆ ಎಂದರು. +ಮಾಸಾಶನ ಹೆಚ್ಚಳ :ಸಂಕಷ್ಟದಲ್ಲಿರುವ ನಿವೃತ್ತ ಪತ್ರಕರ್ತರ ಮಾಸಾಶನ ಮೊತ್ತವನ್ನು 12 ಸಾವಿರ ರೂ.ಗಳಿಗೆ ಹಾಗೂ ಕುಟುಂಬ ಮಾಸಾಶನ ಮೊತ್ತವನ್ನು 6 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ರಾಜ್ಯದ ಶಾಲಾ-ಕಾಲೇಜುಗಳ ಆವರಣದಲ್ಲಿ 50 ಲಕ್ಷ ಸಸಿಗಳನ್ನು ನೆಡುವ ಸಸ್ಯಶ್ಯಾಮಲ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿರುವುದಾಗಿ ತಿಳಿಸಿದರು.ರಾಜ್ಯದ ಸಾರಿಗೆ ಸಂಸ್ಥೆಗಳಿಗೆ ವಿವಿಧ ಮಾದರಿಯ 1148 ಹೊಸ ಬಸ್‍ಗಳನ್ನು ಸೇರ್ಪಡೆ ಮಾಡಲಾಗಿದೆ. ತಳಮಟ್ಟದಲ್ಲಿ ಪೊಲೀಸಿಂಗ್ ವ್ಯವಸ್ಥೆ ಬಲಪಡಿಸಲು ಹಗಲು-ರಾತ್ರಿ ಗಸ್ತುಗಳನ್ನು ಈ ಬೀಟ್ ಮೂಲಕ ಕಾರ್ಯಗತಗೊಳಿಸಲಾಗಿದೆ. ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಗಳಲ್ಲಿ 165 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 45,345 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಿ 42,292 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದರು. +ದೇಶದ ಸಾಫ್ಟ್‍ವೇರ್ ರಫ್ತಿನಲ್ಲಿ ಶೇ.42 ರಷ್ಟು ಪಾಲಿತ್ತು. ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಐಟಿಬಿಟಿ ನೀತಿಗಳನ್ನು ಪರಿಷ್ಕರಿಸಲಾಗುತ್ತದೆ ಎಂದು ಹೇಳಿದರು. ಕಟ್ಟಡ ಮತ್ತು ಇತರ ನಿರ್ಮಾಣ ಕಲ್ಯಾಣ ಮಂಡಳಿಯಡಿ 3.33 ಲಕ್ಷ ಫಲಾನುಭವಿಗಳಿಗೆ 359.55 ಕೋಟಿ ರೂ. ಸಹಾಯ ಧನ ವಿತರಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಡಿಜಟಲೀಕರಣ, ಆಕಾರ್‍ಬಂದ್, ಯುಪಿಓಆರ್ ಯೋಜನೆ ಮರುಸಮೀಕ್ಷೆ ಮುಂತಾದ ಕಾರ್ಯಕ್ರಮಗಳಿಗೆ ವಿಶೇಷ ಒತ್ತು ನೀಡಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಸರ್ಕಾರದ 44 ಯೋಜನೆಗಳನ್ನು ಡಿಬಿಟಿ ವೇದಿಕೆಯಲ್ಲಿ ಸಂಯೋಜಿಸಿ 10,035 ಕೋಟಿ ರೂ.ಗಳ ಆರ್ಥಿಕ ನೆರವನ್ನು 2.54 ಕೋಟಿ ಜನರಿಗೆ ತಲುಪಿಸಿರುವುದಾಗಿ ರಾಜ್ಯಪಾಲರು ತಿಳಿಸಿದರು. +ಭಾರತಕ್ಕೆ ಗಣರಾಜ್ಯೋತ್ಸವದ ಶುಭಾಷಯ ಕೋರಿದ ಅಮೆರಿಕ +ನೋಂದಣಿ ಮತ್ತು ಮುಂದ್ರಾಂಕ ಇಲಾಖೆ 2.0 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, 10,483 ಕೋಟಿ ರೂ.ಗಳ ಹೆಚ್ಚುವರಿ ಆದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ 42 ಕಿ.ಮೀ.ವರೆಗೆ ಪ್ರಾಯೋಗಿಕವಾಗಿ ನೀರು ಹರಿಸಿ ಚಾಲನೆಗೊಳಿಸಲು ಯೋಜಿಸಲಾಗಿದೆ ಎಂದರು. +ಮೇಕೆದಾಟು ಯೋಜನೆಗೆ ಚುರುಕು :ಮೇಕೆದಾಟು ಸಮತೋಲನಾ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಪರಿಹಾರಕ ಅರಣ್ಯ ವೃದ್ಧಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಹಾಗೂ ಯೋಜನಾ ಕಾಮಗಾರಿಗಳನ್ನು ಮತ್ತು ಭೂಸ್ವಾೀಧಿನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. +ನಾಡಿನ ಸಮಸ್ತ ಜನತೆಗೆ 75 ನೇ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ ರಾಜ್ಯಪಾಲರು, ಈ ಐತಿಹಾಸಿಕ ದಿನದಂದು ಭಾರತ ಸಂವಿಧಾನವು ಜಾರಿಗೆ ಬಂದಿದ್ದು, ಸಂವಿಧಾನವು ದೇಶದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆಯ ಅವಕಾಶವನ್ನು ಕಲ್ಪಿಸಿದೆ. ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವುದರ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನು ಹೊಂದಿದೆ. ಆ ಮೂಲಕ ನಾಗರಿಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಲು ಸರ್ಕಾರ ಶ್ರಮಿಸುತ್ತಿದೆ ಎಂದರು. \ No newline at end of file diff --git a/eesanje/url_46_253_4.txt b/eesanje/url_46_253_4.txt new file mode 100644 index 0000000000000000000000000000000000000000..99b1b4ae78c7185afb4e6588bdcf96b5efc14239 --- /dev/null +++ b/eesanje/url_46_253_4.txt @@ -0,0 +1,6 @@ +ಕಾರಿನಲ್ಲಿ ಸರಸ-ಸಲ್ಲಾಪ : ಎಸ್ಐ ಹತ್ಯೆಗೆ ಯತ್ನಿಸಿದ ಯುವಕ-ಯುವತಿಗಾಗಿ ಶೋಧ +ಬೆಂಗಳೂರು, ಜ.26- ಕಾರಿನಲ್ಲಿ ಬೆತ್ತಲೆಯಾಗಿ ಸರಸ-ಸಲ್ಲಾಪದಲ್ಲಿ ತೊಡಗಿದ್ದನ್ನು ನೋಡಿ ತಿಳಿಹೇಳಲು ಹೋದ ಸಬ್‍ಇನ್ಸ್‍ಪೆಕ್ಟರ್ ಹತ್ಯೆಗೆ ಯತ್ನಿಸಿ ಪರಾರಿಯಾಗಿರುವ ಯುವಕ-ಯುವತಿಗಾಗಿ ಜ್ಞಾನಭಾರತಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. +ಬಿಳಿ ಬಣ್ಣದ ಕಿಯೋ ಸೆಲೊಟೊಸ್ ಕಾರು ಹಾಗೂ ಅದರಲ್ಲಿದ್ದ ಯುವಕ-ಯುವತಿಯ ಪತ್ತೆಗಾಗಿ ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸಿಎಆರ್‍ನ ಪಶ್ಚಿಮ ವಿಭಾಗದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ಅವರು ಉಪಕಾರ ಲೇಔಟ್‍ನಲ್ಲಿ ವಾಸವಾಗಿದ್ದು, ಜ.20ರಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಊಟ ಮಾಡಿ ವಾಯು ವಿಹಾರಕ್ಕೆ ಹೊರಗೆ ಬಂದಿದ್ದಾಗ ರಸ್ತೆ ಬದಿ ನಿಂತಿದ್ದ ಬಿಳಿ ಬಣ್ಣದ ಕಾರಿನ ಹಿಂಬದಿ ಸೀಟಿನಲ್ಲಿ ಯುವಕ-ಯುವತಿ ಬೆತ್ತಲೆಯಾಗಿ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಅಸಭ್ಯ ದೃಶ್ಯ ಕಂಡುಬಂದಿದೆ. +ಲೋಕಸಭೆ ಚುನಾವಣೆ : ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ..? +ಅವರಿಗೆ ಬುದ್ಧಿವಾದ ಹೇಳಿ ಸ್ಥಳದಿಂದ ಕಳುಹಿಸಲು ಮಹೇಶ್ ಅವರು ಕಾರಿನ ಬಳಿ ಹೋಗಿ ನೋಂದಣಿ ಸಂಖ್ಯೆ ನೋಡುತ್ತಿದ್ದಾಗ ಯುವಕ ಕಾರು ಚಲಾಯಿಸಿ ಅವರ ಮೇಲೆ ಹರಿಸಲು ಯತ್ನಿಸಿದ್ದಾನೆ. ತಕ್ಷಣ ಮಹೇಶ್ ಅವರು ರಕ್ಷಣೆಗಾಗಿ ಕಾರಿನ ಬ್ಯಾಲೆಟ್ ಮೇಲೆ ಜಿಗಿದಾಗ ಕಾರು ರಿವರ್ಸ್ ಗೇರ್ ಹಾಕಿ ವೇಗವಾಗಿ ಹಿಂದಕ್ಕೆ ಹೋಗಿ ನಿಲ್ಲಿಸಿದ್ದರಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿದೆ. ಆ ವೇಳೆ ಕಾರನ್ನು ಚಲಾಯಿಸಿಕೊಂಡು ಯುವಕ-ಯುವತಿ ಸ್ಥಳದಿಂದ ಪರಾರಿಯಾಗಿದ್ದಾರೆ. +ತಲೆಗೆ ಪೆಟ್ಟಾದ ಮಹೇಶ್ ಅವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಹೇಶ್ ಅವರು ನೀಡಿದ ದೂರನ್ನು ಜ್ಞಾನಭಾರತಿ ಠಾಣೆ ಪೊಲೀಸರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_253_5.txt b/eesanje/url_46_253_5.txt new file mode 100644 index 0000000000000000000000000000000000000000..641345b000969e8723efa9fb839d7bf4a93ada89 --- /dev/null +++ b/eesanje/url_46_253_5.txt @@ -0,0 +1,6 @@ +ಬಿಟ್‍ಕಾಯಿನ್ ಪ್ರಕರಣದಲ್ಲಿ ಇನ್‌ಸ್ಪೆಕ್ಟರ್ ಸೇರಿ ಇಬ್ಬರ ಬಂಧನ +ಬೆಂಗಳೂರು,ಜ.25- ಬಿಟ್‍ಕಾಯಿನ್ ಹಗರಣದ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದ್ದು, ತನಿಖೆ ನಡೆಸುತ್ತಿರುವ ಎಸ್‍ಐಟಿ ಇದೀಗ ಪೊಲೀಸ್ ಇನ್ಸ್‍ಪೆಕ್ಟರ್ ಸೇರಿದಂತೆ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ಕಳೆದ ಮೂರು ದಿನಗಳಿಂದ ಹಲವಾರು ಮಂದಿಯನ್ನು ವಿಚಾರಣೆಗೆ ಕರೆದಿತ್ತು. ಆ ಪೈಕಿ ಪೊಲೀಸ್ ಇನ್ಸ್‍ಪೆಕ್ಟರ್ ಹಾಗೂ ಸೈಬರ್ ಎಕ್ಸ್‍ಪರ್ಟ್ ಒಬ್ಬರನ್ನು ಬಂಧಿಸಿದೆ. +ಬಿಟ್‍ಕಾಯಿನ್ ತನಿಖೆಗೆ ಎಸ್‍ಐಟಿ ರಚನೆಯಾದ ನಂತರ ಪ್ರಮುಖ ಆರೋಪಿ ಶ್ರೀಕಿಯನ್ನು ವಶಕ್ಕೆ ಪಡೆದು ಬಿಟ್‍ಕಾಯಿನ್‍ಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದಾಗ ಸರಿಯಾಗಿ ಆತ ಸ್ಪಂದಿಸಿರಲಿಲ್ಲ. ಹೀಗಾಗಿ ಎಸ್‍ಐಟಿ ತನಿಖೆಯನ್ನು ತೀವ್ರಗೊಳಿಸಿ ಈ ಹಿಂದೆ ಈ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿಯ ಇನ್ಸ್‍ಪೆಕ್ಟರ್‍ಗಳು ಮತ್ತು ಸಿಬ್ಬಂದಿಗಳನ್ನು ಕರೆದು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿ ಪಡೆದುಕೊಂಡಿತ್ತು. +ಸಿಸಿಬಿ ತನಿಖೆಯಲ್ಲಿ ಲೋಪ ಹಾಗೂ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ತದನಂತರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್‍ಐಟಿ ರಚನೆ ಮಾಡಿತ್ತು. ಎಸ್‍ಐಟಿ ತನಿಖೆ ವೇಳೆ ಸದ್ಯಕ್ಕೆ ಈ ಹಗರಣದಲ್ಲಿ 3.50 ಲಕ್ಷ ರೂ. ಮೌಲ್ಯದ ಬಿಟ್‍ಕಾಯಿನ್ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸಮಗ್ರ ವಾಗಿ ತನಿಖೆ ನಡೆಯುತ್ತಿದೆ. +ಲೋಕಸಭೆ ಚುನಾವಣೆ : ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ..? +ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಬಿಟ್ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಈಗ ಎಸ್‍ಐಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. \ No newline at end of file diff --git a/eesanje/url_46_253_6.txt b/eesanje/url_46_253_6.txt new file mode 100644 index 0000000000000000000000000000000000000000..798ca8f1c7da27c21147582b348fe6396488e2a8 --- /dev/null +++ b/eesanje/url_46_253_6.txt @@ -0,0 +1,5 @@ +ದೆಹಲಿ ಕರ್ನಾಟಕ ಸಂಘಕ್ಕೆ ಅಧ್ಯಕ್ಷರಾಗಿ ಸಿಎಂ ನಾಗರಾಜ ಆಯ್ಕೆ +ಬೆಂಗಳೂರು, ಜ.25- ರಾಷ್ಟ್ರ ರಾಜಧಾನಿಯಲ್ಲಿ ದೆಹಲಿ ಕರ್ನಾಟಕ ಸಂಘಕ್ಕೆ ವಿಶ್ವದ ಮಟ್ಟದ ಎತ್ತರಕ್ಕೆ ಏರಿಸಿದ ಕೀರ್ತಿ ಸಿಎಂ ನಾಗರಾಜರು ಅವರಿಗೆ ಸಲ್ಲುತ್ತದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕರೆತರಿಸಿ ಕರ್ನಾಟಕ ಸಂಘದ ಅಮೃತ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಿ ಸುಮಾರು 3500 ಕಲಾವಿದರನ್ನು ಕರೆಸಿ ಕನ್ನಡ ಕಂಪನ್ನು ದೆಹಲಿಯಲ್ಲಿ ಪಸರಿಸಿದ ಸಿಎಂ ನಾಗರಾಜು ರವರು ಮತ್ತೆ ದೆಹಲಿ ಕರ್ನಾಟಕ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. +ಕನ್ನಡ ಸಂಘದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿ ರಾಷ್ಟ್ರ ರಾಜಧಾನಿಗೆ ಕರ್ನಾಟಕದಿಂದ ಬರುವ ವಿದ್ಯಾರ್ಥಿಗಳಿಗೆ ಯುಪಿಎಸ್ಸಿ, ಉನ್ನತ ಶಿಕ್ಷಣಕ್ಕೆ ಬರುವರಿಗೆ ಮಾರ್ಗದರ್ಶನ ಜೊತೆಗೆ ವಸತಿ ಕಲ್ಪಿಸಿ ನೆರೆವಾಗಿದ್ದರು. ಇವರ ಸೇವಾ ಗುಣವನ್ನು ಮೆಚ್ಚಿ ಮತ್ತೊಮ್ಮೆ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರನ್ನಾಗಿ ದೆಹಲಿ ಕನ್ನಡಿಗರು ಆಯ್ಕೆ ಮಾಡಿದ್ದಾರೆ. +ಇವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ಚವರಮಂಗಳದ ಗ್ರಾಮದವರು. ದೆಹಲಿಯಲ್ಲಿ ಇವರ ಸ್ನೇಹ ಕೂಟ, ಹಲವಾರು ಸೇವಾ ಕಾರ್ಯಗಳಲ್ಲಿ ತೊಡಗಿ ಮೆಚ್ಚುಗೆ ಪಡೆದಿದ್ದಾರೆ. +ಇವರು ಯಾವುದೇ ಜಾತಿ ಮತ ಪ್ರಾಂತ್ಯ ಎನ್ನದೆ ದೆಹಲಿಯಲ್ಲಿ ಎಲ್ಲಾ ಒಂದೇ ಜಾತಿ ಅದು ಕನ್ನಡ ಜಾತಿ ಎಂಬ ಒಂದು ದ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಇವರನ್ನ ಮತ್ತೊಮ್ಮೆ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಿ ಇನ್ನು ಹೆಚ್ಚಿನ ಜವಾಬ್ದಾರಿಗಳು ಸದಸ್ಯರು ನೀಡಿದ್ದಾರೆ. ಸಿ.ಎಂ. ನಾಗರಾಜ್ ಸತತವಾಗಿ ಎಂಟನೇ ಬಾರಿ ಚುನಾವಣೆಯಲ್ಲಿ ಗೆ ಜಯಶೀಲರಾಗಿದ್ದಾರೆ. \ No newline at end of file diff --git a/eesanje/url_46_253_7.txt b/eesanje/url_46_253_7.txt new file mode 100644 index 0000000000000000000000000000000000000000..764feb43595d8f53c15d5e404983b3e2770df6a0 --- /dev/null +++ b/eesanje/url_46_253_7.txt @@ -0,0 +1,6 @@ +ಲೋಕಸಭೆ ಚುನಾವಣೆ : ಬೆಳಗಾವಿ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ..? +ಬೆಂಗಳೂರು,ಜ.25- ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಸ್ರ್ಪಧಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಾಲಿ ಲೋಕಸಭಾ ಸದಸ್ಯೆ ಹಾಗೂ ಜಗದೀಶ್ ಶೆಟ್ಟರ್ ಅವರ ಸಂಬಂಧಿಕರು ಆಗಿರುವ ಮಂಗಳ ಸುರೇಶ್ ಅಂಗಡಿ ಬರುವ ಚುನಾವಣೆಯಲ್ಲಿ ಸ್ರ್ಪಧಿಸಲು ಹಿಂದೇಟು ಹಾಕಿದ್ದಾರೆ. +ಹೀಗಾಗಿ ಬಿಜೆಪಿಗೆ ಪ್ರಬಲ ಅಭ್ಯರ್ಥಿ ಅಗತ್ಯ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಅವರನ್ನೇ ಬೆಳಗಾವಿಯಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಶೆಟ್ಟರ್ ಸ್ರ್ಪಧಿಸಿದರೆ ಮಂಗಳ ಸುರೇಶ್ ಅಂಗಡಿಯವರ ವಿರೋಧವು ಇರುವುದಿಲ್ಲ. ಅಲ್ಲದೆ ತನ್ನ ಭದ್ರ ಕೋಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಶೆಟ್ಟರ್ ಅವರೇ ಸೂಕ್ತ ಅಭ್ಯರ್ಥಿ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. +ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಹಠಾತ್ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಂಗಳ ಸುರೇಶ್ ಅಂಗಡಿ ಕೆಲವೇ ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಅಲ್ಲದೆ ಕ್ಷೇತ್ರದಲ್ಲಿ ಅವರು ಸಕ್ರಿಯರಾಗಿಲ್ಲ ಎಂಬ ಆರೋಪವೂ ಇದೆ. ಇದೀಗ ಶೆಟ್ಟರ್ ಬಿಜೆಪಿ ಅಭ್ಯರ್ಥಿಯಾದರೆ ಜಿಲ್ಲೆಯಲ್ಲಿ ಯಾರ ವಿರೋಧವೂ ವ್ಯಕ್ತವಾಗುವುದಿಲ್ಲ. ಕಾಂಗ್ರೆಸ್‍ಗೆ ಪ್ರಬಲ ಪೈಪೋಟಿ ನೀಡಲು ಅವರೇ ಸೂಕ್ತವಾದ ಅಭ್ಯರ್ಥಿ ಎಂಬ ಕಾರಣಕ್ಕಾಗಿ ಶೆಟ್ಟರ್‍ಗೆ ಮಣೆ ಹಾಕಲು ಮುಂದಾಗಿದೆ. ಕೆಲ ದಿನಗಳ ಹಿಂದೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶೆಟ್ಟರ್, ನನಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾದರೆ ಪಕ್ಷ ಸೇರ್ಪಡೆ ಬಗ್ಗೆ ಮರುಚಿಂತನೆ ಮಾಡುತ್ತೇನೆ ಎಂದು ಹೇಳಿದ್ದರು. +ಶೆಟ್ಟರ್‌ಗೆ ಕಾಂಗ್ರೆಸ್‍ನಲ್ಲಿ ಅನ್ಯಾಯವಾಗಿಲ್ಲ : ಸಿದ್ದರಾಮಯ್ಯ +ಅದರಂತೆ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹಸಚಿವ ಅವರ ಜೊತೆ ಮಾತುಕತೆ ನಡೆಸಿ ಶೆಟ್ಟರ್ ಅವರನ್ನು ಕರೆತರುವುದಕ್ಕೆ ಮನವೊಲಿಸಿದ್ದರು. ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮುನ್ನ ಬೆಳಗಾವಿ ಅಭ್ಯರ್ಥಿಯನ್ನಾಗಿ ಮಾಡಬೇಕು. ಇದು ಅವರ ಬೇಡಿಕೆಯೂ ಹೌದು ಎಂದು ಹೇಳಿದ್ದರು. ಇದಕ್ಕೆ ವರಿಷ್ಠರು ಒಪ್ಪಿಗೆಯನ್ನು ಕೊಟ್ಟಿದ್ದರು. \ No newline at end of file diff --git a/eesanje/url_46_253_8.txt b/eesanje/url_46_253_8.txt new file mode 100644 index 0000000000000000000000000000000000000000..444e4653ecbaf404cc972c696029ad669bb7e9a1 --- /dev/null +++ b/eesanje/url_46_253_8.txt @@ -0,0 +1,10 @@ +ಜೆಡಿಎಸ್‍ಗೆ 3 ಲೋಕಸಭೆ ಕ್ಷೇತ್ರ ಫಿಕ್ಸ್ +ಬೆಂಗಳೂರು,ಜ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನಲೆ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳನ್ನು ಮಾತ್ರ ದಳಪತಿಗಳಿಗೆ ಬಿಟ್ಟು ಕೊಡಲು ಬಿಜೆಪಿ ತೀರ್ಮಾನಿಸಿದೆ. ಹಾಸನ, ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಇಲ್ಲವೇ ಚಿಕ್ಕಬಳ್ಳಾಪುರ ಕ್ಷೇತ್ರಗಳು ಜೆಡಿಎಸ್ ಪಾಲಾಗಲಿದ್ದು, ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಮಾಡಲಿದೆ. +ಮೂರು ಕ್ಷೇತ್ರಗಳನ್ನು ಬಿಟ್ಟು ಕೊಡುವ ವರಿಷ್ಠರ ನಿರ್ಧಾರವನ್ನು ಈಗಾಗಲೇ ಜೆಡಿಎಸ್‍ಗೂ ಮಾಹಿತಿ ನೀಡಲಾಗಿದೆ. ಆದರೆ ಹೆಚ್ಚುವರಿಯಾಗಿ ಒಂದು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ. +ಕಳೆದ ಭಾನುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಹಾಸನ, ಮಂಡ್ಯ, ಕೋಲಾರ ಇಲ್ಲವೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್‍ಗೆ ಬಿಟ್ಟು ಕೊಡಲು ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. +ಕೋಲಾರದಲ್ಲಿ ಹಾಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಇರುವುದರಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟು ಕೋಲಾರವನ್ನು ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಬಿಜೆಪಿ ಲೆಕ್ಕಾಚಾರ ಹಾಕಿದೆ. ಯಡಿಯೂರಪ್ಪ ನಿವಾಸದಲ್ಲಿ ನಡೆದ ಮಾತುಕತೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ನಮ್ಮ ಪಕ್ಷಕ್ಕೆ ಕನಿಷ್ಠ ಪಕ್ಷ ಐದು ಲೋಕಸಭಾ ಕ್ಷೇತ್ರಗಳನ್ನು ನೀಡಬೇಕೆಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು. +ಶೆಟ್ಟರ್‌ಗೆ ಕಾಂಗ್ರೆಸ್‍ನಲ್ಲಿ ಅನ್ಯಾಯವಾಗಿಲ್ಲ : ಸಿದ್ದರಾಮಯ್ಯ +ವರಿಷ್ಠರು ಈಗಾಗಲೇ ಮೂರು ಕ್ಷೇತ್ರಗಳನ್ನು ಜೆಡಿಎಸ್‍ಗೆ ಸೂಚನೆ ನೀಡಬೇಕೆಂದು ಸೂಚನೆ ಕೊಟ್ಟಿದ್ದಾರೆ. ಹೆಚ್ಚುವರಿ ಕ್ಷೇತ್ರಗಳು ಬೇಕೆಂದರೆ ದೆಹಲಿ ಮಟ್ಟದಲ್ಲೆ ತೀರ್ಮಾನವಾಗಬೇಕು. ಸದ್ಯಕ್ಕೆ ಮೂರು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ದತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿದುಬಂದಿದೆ. +ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನಡೆ ನಿಗೂಢವಾಗಿದ್ದು, ಅವರ ಮುಂದಿನ ತೀರ್ಮಾನದ ನಂತರವೇ ಮಾತುಕತೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. +ಇತ್ತೀಚೆಗೆ ಸುಮಲತಾ ನಡೆ ಸಾಕಷ್ಟು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಬಿಜೆಪಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟರೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿಯೇ ಕಾದು ನೋಡುವ ತಂತ್ರವನ್ನು ಕಮಲ ನಾಯಕರು ಅನುಸರಿಸುತ್ತಿದ್ದಾರೆ. +ಒಂದು ವೇಳೆ ಡಿ.ವಿ.ಸದಾನಂದಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಪುನಃ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದರೆ ಸುಮಲತಾ ಅಂಬರೀಶ್ ಅವರನ್ನು ಇದೇ ಕ್ಷೇತ್ರಕ್ಕೆ ಕಣಕ್ಕಿಳಿಸುವ ಚಿಂತನೆ ಬಿಜೆಪಿಯಲ್ಲಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪುನಃ ಇದೇ ಕ್ಷೇತ್ರದಿಂದ ಸದಾನಂದ ಗೌಡ ಪುನಃ ಕಣಕ್ಕಿಳಿಯುವ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಸುಮಲತಾ ಅಂಬರೀಶ್‍ಗೆ ಎಲ್ಲಿ ಸ್ಥಾನ ಕಲ್ಪಿಸಬೇಕು ಎಂಬ ಚಿಂತೆ ಬಿಜೆಪಿಗೆ ಎದುರಾಗಿದೆ. \ No newline at end of file diff --git a/eesanje/url_46_253_9.txt b/eesanje/url_46_253_9.txt new file mode 100644 index 0000000000000000000000000000000000000000..90b65d2a1d3de5399e7e5e0e10e985ea53197d03 --- /dev/null +++ b/eesanje/url_46_253_9.txt @@ -0,0 +1,8 @@ +ಶೆಟ್ಟರ್ ನಿರ್ಧಾರ ವಿಶ್ವಾಸಕ್ಕೆ ಧಕ್ಕೆಯುಂಟುಮಾಡಿದೆ : ಡಿಕೆಶಿ +ಬೆಂಗಳೂರು,ಜ.25- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರುವ ದಿಢೀರ್ ನಿರ್ಧಾರ ಕಾಂಗ್ರೆಸ್‍ಗೆ ಆಘಾತವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ಹಾಗೂ ಆತ್ಮಸಾಕ್ಷಿಗೆ ಧಕ್ಕೆಯಾಗಿದೆ ಎಂದು ದೂರಿದ್ದಾರೆ. +ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮಾತೃಪಕ್ಷಕ್ಕೆ ಮರಳುತ್ತಿದ್ದಂತೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇತ್ತೀಚೆಗೆ ಜಗದೀಶ್ ಶೆಟ್ಟರ್‍ರವರು ತಮ್ಮ ಬೆಂಬಲಿಗರನ್ನು ಬಿಜೆಪಿಗೆ ಕಳುಹಿಸುತ್ತಿದ್ದಾರೆಂಬ ಮಾಹಿತಿ ನನಗೆ ತಲುಪಿತ್ತು. ಈ ಬಗ್ಗೆ ನಿನ್ನೆ ಬೆಳಿಗ್ಗೆ ಕೂಡ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೆ. ನನಗೆ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಮರುಜೀವ ನೀಡಿದೆ. ಹೀಗಾಗಿ ಪಕ್ಷ ಬಿಡುವ ಮಾತೇ ಇಲ್ಲ ಎಂದಿದ್ದರು. ಅದರ ಆಧಾರದ ಮೇಲೆ ನಾನು ಮೈಸೂರಿನಲ್ಲಿ ಹೇಳಿಕೆ ನೀಡಿದ್ದೆ. ಈಗ ಅವರ ನಿರ್ಧಾರ ವಿಶ್ವಾಸಕ್ಕೆ ಧಕ್ಕೆಯುಂಟು ಮಾಡಿದೆ ಎಂದರು. +ಕ್ಷಿಪ್ರ ಬೆಳವಣಿಗೆಯಲ್ಲಿ ಮತ್ತೆ ಬಿಜೆಪಿಗೆ ವಾಪಸ್ಸಾದ ಜಗದೀಶ್ ಶೆಟ್ಟರ್ +ದೇಶದ ಹಿತದೃಷ್ಟಿಯಿಂದ ಮತ್ತೆ ಬಿಜೆಪಿ ಸೇರುತ್ತಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ಬಿಜೆಪಿಯವರು ಅಪಮಾನ ಮಾಡಿದಾಗ ದೇಶದ ಹಿತ ಗಮನದಲ್ಲಿರಲಿಲ್ಲವೇ ಎಂದು ಹೇಳಿದರು. ಇತ್ತೀಚಿನವರೆಗೂ ಜಗದೀಶ್ ಶೆಟ್ಟರ್‍ರವರು ಬಿಜೆಪಿಯವರ ನಿಲುವುಗಳನ್ನು ಟೀಕಿಸುತ್ತಿದ್ದರು. ರಾಮ ಮಂದಿರ ಹಾಗೂ ಇತರ ವಿಚಾರಗಳಲ್ಲಿ ಬಿಜೆಪಿಯವರು ಮಾಡುವ ರಾಜಕಾರಣದ ಬಗ್ಗೆ ತೀಕ್ಷ್ಣ ಮಾತುಗಳಲ್ಲೇ ಆರೋಪ ಮಾಡಿದ್ದರು. ಈಗ ಅವರ ಬಿಜೆಪಿ ಸೇರ್ಪಡೆಯಲ್ಲಿ ಸಂಘಪರಿವಾರದ ಹಸ್ತಕ್ಷೇಪವಿದೆ ಎಂದು ನಾನು ಹೇಳಲು ಬಯಸುವುದಿಲ್ಲ. ಸಂಘ ಪರಿವಾರದವರು ಅವರ ಕೆಲಸ ಮಾಡುತ್ತಾರೆ. ನಾವು ರಾಜಕೀಯದವರು, ರಾಜಕೀಯ ಮಾಡುತ್ತೇವೆ. ಜಗದೀಶ್ ಶೆಟ್ಟರ್ ರಾಜಕಾರಣಿ ಎಂದರು. +ರಾಜೀನಾಮೆ ನೀಡುವಾಗ ಎಲ್ಲರೂ ಸ್ವ ಇಚ್ಛೆ ಎಂದೇ ಹೇಳುತ್ತಾರೆ. ಬಲವಂತವಾಗಿ ಅಥವಾ ಚಾಕಲೇಟ್‍ನ ಆಸೆಗಾಗಿ ಯಾರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಯಾವ ಒತ್ತಡ ಹಾಗೂ ಆಮಿಷ ಹೇರಿ ಅವರನ್ನು ಕರೆದುಕೊಂಡು ಹೋಗಿದ್ದಾರೋ ಗೊತ್ತಿಲ್ಲ. ಈವರೆಗೂ ನನಗೆ ಜಗದೀಶ್ ಶೆಟ್ಟರ್‍ರವರ ರಾಜೀನಾಮೆ ಪತ್ರ ತಲುಪಿಲ್ಲ. ಅದು ತಲುಪಿದ ಬಳಿಕ ಮತ್ತು ಜಗದೀಶ್ ಶೆಟ್ಟರ್‍ರ ಹೇಳಿಕೆಯನ್ನು ಗಮನಿಸಿ ನಂತರ ನಾನು ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. +ಕಾರ್ಯಕರ್ತರ ಅಪೇಕ್ಷೆಯಂತೆ ಶೆಟ್ಟರ್ ಬಿಜೆಪಿ ಸೇರ್ಪಡೆ : ಯಡಿಯೂರಪ್ಪ +ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್‍ರನ್ನು ಜನ 35 ಸಾವಿರ ಮತಗಳ ಅಂತರದಿಂದ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನು ಗೌರವಿಸಿ 5 ವರ್ಷಗಳ ಅವಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು. ವಿಶ್ವಾಸ ಮತ್ತು ಆತ್ಮಸಾಕ್ಷಿ ಎಲ್ಲರಲ್ಲೂ ಇರುತ್ತದೆ. ಅದು ಜಗದೀಶ್ ಶೆಟ್ಟರ್‍ರಲ್ಲೂ ಇದೆ ಎಂದುಕೊಂಡಿದ್ದೇನೆ ಎಂದರು. ವಿಧಾನಪರಿಷತ್ ಸಭಾಪತಿಯವರಿಗೆ ಕರೆ ಮಾಡಿ ಇ-ಮೇಲ್‍ನಲ್ಲಿ ರಾಜೀನಾಮೆ ಪತ್ರ ಕಳುಹಿಸಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಆ ಪತ್ರ ಇನ್ನೂ ತಲುಪಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_254_1.txt b/eesanje/url_46_254_1.txt new file mode 100644 index 0000000000000000000000000000000000000000..b4ac98c375c95780da1d35b5fb07c5d78b69ba4e --- /dev/null +++ b/eesanje/url_46_254_1.txt @@ -0,0 +1,5 @@ +ಭೀಕರ ಅಪಘಾತ : ಮೂವರು ಮಕ್ಕಳು ಸೇರಿ ನಾಲ್ವರ ಸಾವು +ಚಿತ್ರದುರ್ಗ, ಜ.25- ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಸೇತುವೆಗೆ ಕಾರು ಡಿಕ್ಕಿಯಾದ ಪರಿಣಾಮ ಮೂರು ಕಂದಮ್ಮಗಳು ಸೇರಿ ನಾಲ್ವರು ಮೃತಪಟ್ಟಿರುವ ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನ ಹಳ್ಳಿಯ ನಿವಾಸಿಗಳಾದ ಲಿಂಗಪ್ಪ(25) ಮತ್ತು ಎರಡು ವರ್ಷದ ಸಿಂಧೂಶ್ರೀ, ಐದು ತಿಂಗಳ ಕೂಸು ಅಯ್ಯಾಳಪ್ಪ, ಮೂರು ತಿಂಗಳ ಮತ್ತೊಂದು ಕೂಸು ರಕ್ಷಾ ಮೃತಪಟ್ಟ ದುರ್ದೈವಿಗಳು. +ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದು, ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಕಂದಮ್ಮಗಳೂ ಸೇರಿದಂತೆ ಎಂಟು ಮಂದಿ ದೇವದುರ್ಗದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗೇಟಿನ ಸಮೀಪ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಲಿಂಗಪ್ಪ ಹಾಗೂ ಮೂವರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. +ಹಿಂಡೆನ್‍ಬರ್ಗ್ ಆರೋಪದಿಂದ ಅಮೂಲ್ಯ ಪಾಠ ಕಲಿತಿದ್ದೇವೆ ; ಅದಾನಿ +ದಾರಿ ಹೋಕರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಲು ನೆರವಾದರು. ಸುದ್ದಿತಿಳಿಯುತ್ತಿದ್ದಂತೆ ಚಳ್ಳಕೆರೆ ಡಿವೈಎಸ್‍ಪಿ ರಾಜಣ್ಣ, ಇನ್ಸ್‍ಪೆಕ್ಟರ್ ದೇಸಾಯಿ, ಪಿಎಸ್‍ಐ ಶಿವರಾಜು, ಎಎಸ್‍ಐ ನಾಗೇಂದ್ರ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_254_10.txt b/eesanje/url_46_254_10.txt new file mode 100644 index 0000000000000000000000000000000000000000..3e2a7f390d49d0314842f7a771e5d6dbe437c56c --- /dev/null +++ b/eesanje/url_46_254_10.txt @@ -0,0 +1,4 @@ +ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ರಾಯರೆಡ್ಡಿ ರಾಜೀನಾಮೆ +ಬೆಂಗಳೂರು, ಜ.24- ರಾಜ್ಯ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ಶಾಸಕ ಬಸವರಾಜ ರಾಯರೆಡ್ಡಿ ನೀಡಿರುವ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಂಗೀಕರಿಸಿದ್ದಾರೆ. +ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ರಾಯರೆಡ್ಡಿ ಅವರು ನೇಮಕವಾದ ಬಳಿಕ 2023-24ನೇ ಸಾಲಿನ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದ್ಯಸ್ಯತ್ವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಭಾಧ್ಯಕ್ಷರು ಅಂಗೀಕರಿಸಿದ್ದಾರೆ ಎಂದು ಅಕೃತ ಪ್ರಕಟಣೆ ತಿಳಿಸಿದೆ. +ಆತ್ಮಸಾಕ್ಷಿಯ ಕನ್ನಡಿಯಲ್ಲಿ ತಮ್ಮನ್ನು ತಾವೇ ಕಂಡುಕೊಂಡ ಬಿಗ್‌ಬಾಸ್‌ ಸ್ಪರ್ಧಿಗಳು! \ No newline at end of file diff --git a/eesanje/url_46_254_11.txt b/eesanje/url_46_254_11.txt new file mode 100644 index 0000000000000000000000000000000000000000..e2c84c8dd10c475d308bd3766fc31fc13afafac6 --- /dev/null +++ b/eesanje/url_46_254_11.txt @@ -0,0 +1,8 @@ +ಬರ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಅನ್ಯಾಯ : ಪ್ರಿಯಾಂಕ್ ಖರ್ಗೆ +ಬೆಂಗಳೂರು,ಜ.23- ರಾಜ್ಯದ ಬರ ನಿರ್ವಹಣೆಗೆ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಿ 5 ತಿಂಗಳು ಕಳೆದರೂ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಪದೇಪದೇ ಸಭೆಗಳನ್ನು ಮುಂದೂಡುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. +ನಗರದ ಫ್ರೀಡಂಪಾರ್ಕ್‍ನಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ ಕುರಿತು ಕಳೆದ ಸೆಪ್ಟೆಂಬರ್‍ನಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈವರೆಗೂ ಒಂದು ರೂಪಾಯಿ ಹಣ ಬಿಡುಗಡೆಯಾಗಿಲ್ಲ. ಕನಿಷ್ಟ ನಾವು ಕೊಟ್ಟಿರುವ ಪ್ರಸ್ತಾವನೆ ಕುರಿತಾಗಿಯಾದರೂ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದರು. +ಡಿಸೆಂಬರ್ 23, ಜನವರಿ 16, ಎಂದು ಎರಡು ಬಾರಿ ಸಭೆ ಕರೆದು, ಪದೇಪದೇ ಮುಂದೂಡುತ್ತಿದ್ದಾರೆ. ನಮ್ಮ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್‍ನ 23 ಎಂಪಿಗಳು ಧ್ವನಿಯೆತ್ತುವ ಧೈರ್ಯ ತೋರಿಸುತ್ತಿಲ್ಲ ಎಂದು ಆರೋಪಿಸಿದರು. +ಅಮೆರಿಕದಲ್ಲಿ ಬಂದೂಕುದಾರಿಯಿಂದ ಗುಂಡಿನ ದಾಳಿ, 8 ಮಂದಿ ಬಲಿ +27 ಮಂದಿ ಸಂಸದರು ರಾಜ್ಯಕ್ಕೆ ಗೋಳಾಗಿದ್ದಾರೆ. ಬರೀ ಹೋಳು ಬಿಡುತ್ತಾ ಕಾಲ ಕಳೆಯುತ್ತಿದ್ದಾರೆ. ಬರ ನಿರ್ವಹಣೆ ಅಷ್ಟೇ ಅಲ್ಲ ವಿವಿಧ ಯೋಜನೆಗಳ ವಿಷಯದಲ್ಲೂ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ.ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆ ಮಹದಾಯಿ ಜಾರಿಗೆ ನ್ಯಾಯಾಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಕೊಟ್ಟರೆ ಯೋಜನೆ ಕಾರ್ಯಾರಂಭವಾಗಲಿದೆ. ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. +ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುತ್ತಿದ್ದ ತಮಿಳುನಾಡಿಗೆ ಅನುಕೂಲವಾಗಲಿದೆ. ಅದಕ್ಕೂ ಕೇಂದ್ರಸರ್ಕಾರದಿಂದ ಸಹಾಯ ದೊರೆಯುತ್ತಿಲ್ಲ. ಕರ್ನಾಟಕ ಭಾಗದ ಭದ್ರಾ ಮೇಲ್ದಂಡೆ ಯೋಜನೆಗೆ ಕಳೆದ 2023 ರ ಫೆಬ್ರವರಿಯಲ್ಲಿ ಮಂಡಿಸಲಾದ ಬಜೆಟ್‍ನಲ್ಲಿ 5,600 ಕೋಟಿ ರೂ.ಗಳನ್ನು ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಈವರೆಗೂ ಒಂದೂ ರೂಪಾಯಿ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಣಕಾಸು ಯೋಜನೆಗಳಲ್ಲಿ ನೀಡಬೇಕಾದ ಹಣಕಾಸಿನ ಪಾಲಿನಲ್ಲೂ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಕರ್ನಾಟಕ ಸ್ವಾಭಿಮಾನಕ್ಕೆ ಹೆಸರಾದ ರಾಜ್ಯ. ನಾವು ಅವರ ಮುಂದೆ ಕೈಕಟ್ಟಿ ನಿಲ್ಲಬೇಕು ಎಂದು ಕೇಂದ್ರದ ಬಿಜೆಪಿಯವರು ಬಯಸುತ್ತಾರೆ. ನಾವು ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_254_12.txt b/eesanje/url_46_254_12.txt new file mode 100644 index 0000000000000000000000000000000000000000..4fb927c459587b9ed0a3d3e1cd2b7205564054eb --- /dev/null +++ b/eesanje/url_46_254_12.txt @@ -0,0 +1,10 @@ +ಭಾರತ್‍ ಜೋಡೋ ನ್ಯಾಯಯಾತ್ರೆಗೆ ಬಿಜೆಪಿ ಅಡ್ಡಿ ಖಂಡಿಸಿ ಪ್ರತಿಭಟನೆ +ಬೆಂಗಳೂರು,ಜ.23- ರಾಹುಲ್‍ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಅಡ್ಡಿಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಗರದ ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. ದೇಶಾದ್ಯಂತ ಪ್ರತಿ ಜಿಲ್ಲೆ ಹಾಗೂ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ. +ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ, ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. +ಡಿ.ಕೆ.ಶಿವಕುಮಾರ್ ಮಾತನಾಡಿ, ಬಿಜೆಪಿಯವರಿಗೆ ರಾಹುಲ್‍ಗಾಂಧಿ ಯಾತ್ರೆಯಿಂದ ಭಯ ಶುರುವಾಗಿದೆ. ಅದಕ್ಕಾಗಿ ಅದನ್ನು ನಿಲ್ಲಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸಿಗರು ಬಿಜೆಪಿಯವರ ತಂತ್ರಗಾರಿಕೆಗಳು, ಬೆದರಿಕೆ ಹಾಗೂ ಕೇಸುಗಳಿಗೆ ಹೆದರುವುದಿಲ್ಲ ಎಂದರು.ದೇಶಾದ್ಯಂತ ರಾಹುಲ್‍ಗಾಂಧಿ ಪರವಾಗಿ ಪ್ರತಿಭಟನೆ ನಡೆಸಿ ಯಾತ್ರೆಯನ್ನು ಮುಂದುವರೆಸಬೇಕು ಎಂಬ ಸಂದೇಶ ರವಾನಿಸಿದ್ದೇವೆ. ಬಿಜೆಪಿಯವರ ಹುನ್ನಾರಗಳಿಗೆ ದೇಶದ ಜನ ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು. +ಬಿಜೆಪಿಯವರಿಗೆ ಅಧಿಕಾರ ಕಳೆದುಕೊಂಡ ಬಳಿಕ ಹೊಟ್ಟೆಹುರಿ ಹೆಚ್ಚಾಗಿದೆ. ಅದಕ್ಕಾಗಿ ಕೈಕೈ ಹಿಸುಕಿಕೊಂಡು ರಾಜ್ಯದಲ್ಲಿ ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಹಿಂದೂಗಳೇ. ರಾಮನನ್ನು ಪೂಜಿಸುತ್ತೇವೆ. ಧಾರ್ಮಿಕ ಪಾಠಗಳನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ. ಮುಜರಾಯಿ ಇಲಾಖೆಯಿಂದ ಸರ್ಕಾರಿ ಆದೇಶ ಹೊರಡಿಸಿ ವಿಶೇಷ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದೆವು ಎಂದರು. +ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍ +ಮುಂದಿನ ಲೋಕಸಭೆ ಚುನಾವಣೆ ವೇಳೆ ಬಿಜೆಪಿ, ಜೆಡಿಎಸ್ ಒಂದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ತಲೆ ಕೆಡಿಸಿಕೊಳ್ಳಬೇಡಿ. ಕಾರ್ಯಕರ್ತರಿಗೆ ವಹಿಸಲಾದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿ. ವಿಧಾನಪರಿಷತ್ ಮತ್ತು ಲೋಕಸಭಾ ಚುನಾವಣೆಯನ್ನು ಸ್ವಂತ ಜವಾಬ್ದಾರಿ ಎಂದು ಭಾವಿಸಿ ಕೆಲಸ ಮಾಡಬೇಕು ಎಂದು ಹೇಳಿದರು. ಇನ್ನು ಮುಂದೆ ಕಾರ್ಯಕರ್ತರು, ಮುಖಂಡರು ನನ್ನ ಮನೆಗೆ ಬರುವುದನ್ನು ನಿಲ್ಲಿಸಬೇಕು. ಪ್ರತಿದಿನ ರಾತ್ರಿ 2.30 ರವರೆಗೂ ಕಾದು ಕುಳಿತುಕೊಳ್ಳುವುದನ್ನು ನಿಲ್ಲಿಸಬೇಕು. ಪಕ್ಷದ ಕೆಲಸಗಳಿದ್ದರೆ ಕಾಂಗ್ರೆಸ್ ಕಚೇರಿಯಲ್ಲಿ, ಸರ್ಕಾರದ ಕೆಲಸ ಇದ್ದರೆ ಉಪಮುಖ್ಯಮಂತ್ರಿಯವರ ಕ್ವಾರ್ಟಸ್‍ಗೆ ಬಂದು ಭೇಟಿ ಮಾಡಬೇಕು ಎಂದು ಹೇಳಿದರು. +ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಶ್ರೀರಾಮ ಕೇವಲ ಹಿಂದೂಗಳಿಗೆ ಸೇರಿದ ಆಸ್ತಿಯಲ್ಲ. ಪ್ರತಿಯೊಬ್ಬರೂ ರಾಮನನ್ನು ಗೌರವಿಸುತ್ತಾರೆ. ಅವರು ಹಾಕಿಕೊಟ್ಟ ಹಾದಿಯಲ್ಲೇ ನಡೆಯುತ್ತಾರೆ. ಆದರೆ ಬಿಜೆಪಿಯವರು ರಾಜಕೀಯಕ್ಕಾಗಿ ರಾಮನನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದರು. ಆಂಜನೇಯನನ್ನು ಗೌರವಿಸುತ್ತೇವೆ. ಆದರೆ ಬಜರಂಗಬಲಿಯ ಹೆಸರಿನಲ್ಲಿ ಬಜರಂಗದಳ ಕಟ್ಟಿಕೊಂಡು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವುದನ್ನು ಸಹಿಸಲಾಗುವುದಿಲ್ಲ. ಇವರು ಏನೆಲ್ಲಾ ಅಪಪ್ರಚಾರ ಮಾಡಿದರೂ ಜನ ತಕ್ಕ ಪಾಠ ಕಲಿಸಿದ್ದಾರೆ. ರಾಜಸ್ಥಾನದಲ್ಲಿ ವಾಮಮಾರ್ಗ ಹಿಡಿದು ಅಕಾರ ಹಿಡಿದಿದ್ದಾರೆ. ಉಪಚುನಾವಣೆಯಲ್ಲಿ ಸ್ರ್ಪಸಿದ್ದ ಬಿಜೆಪಿಯ ಸಚಿವನನ್ನೆ ಸೋಲಿಸಿದ್ದಾರೆ ಎಂದು ಹೇಳಿದರು. +ಕಾಂಗ್ರೆಸಿಗರು ಬ್ರಿಟಿಷರ ಗುಂಡಿಗೇ ಹೆದರಲಿಲ್ಲ. ಬಿಜೆಪಿಯವರ ಬೆದರಿಕೆಗೆ ಬಗ್ಗುತ್ತೇವಾ? ರಾಜಕೀಯದಲ್ಲಿ ಸೋಲು-ಗೆಲುವು ಸಾಮಾನ್ಯ. ಬಿಜೆಪಿಯವರು ಶಾಶ್ವತವಾಗಿ ಅಕಾರದಲ್ಲಿರುತ್ತಾರೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ಅದು ಶೀಘ್ರವೇ ಸುಳ್ಳಾಗಲಿದೆ. ಕಾಂಗ್ರೆಸ್‍ನಲ್ಲಿ ಬೆಳೆದು ಉಪಮುಖ್ಯಮಂತ್ರಿಯಾಗಿ ಬಿಜೆಪಿ ಸೇರಿ ಅಸ್ಸಾಂನ ಮುಖ್ಯಮಂತ್ರಿಯಾಗಿರುವ ಹೀಮಂತ್ ಭಿಶ್ವಾಸ್ ಕಾಂಗ್ರೆಸ್ ಯಾತ್ರೆಯನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ರಾಹುಲ್‍ಗಾಂಯವರನ್ನು ದೇವಸ್ಥಾನಕ್ಕೆ ಹೋಗದಂತೆ ನಿರ್ಬಂಸಲಾಗಿದೆ. +ಈ ಹಿಂದೆ ಸವರ್ಣೀಯರು ಸೇರಿದಂತೆ ಮೇಲ್ವರ್ಗದವರು ಮಾತ್ರ ದೇವಸ್ಥಾನಕ್ಕೆ ಹೋಗಬೇಕು ಎಂಬ ಪದ್ಧತಿ ಮಾಡಿದ್ದರು. ಈಗ ಬಿಜೆಪಿಯವರು ಅದನ್ನೇ ಮತ್ತೆ ಜಾರಿಗೊಳಿಸುತ್ತಿದ್ದಾರೆ ಎಂದು ದೂರಿದರು. ಬಿಜೆಪಿಯವರಿಗೆ ಅಭಿವೃದ್ಧಿ ಬೇಕಿಲ್ಲ. ಜಿಡಿಪಿ ಕುಸಿದರೂ ಚಿಂತೆಯಿಲ್ಲ, ಕೋವಿಡ್ ಸರಿಯಾಗಿ ನಿಯಂತ್ರಿಸಲಿಲ್ಲ. ಕಾರ್ಮಿಕರನ್ನು ಬೀದಿಪಾಲು ಮಾಡಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_254_2.txt b/eesanje/url_46_254_2.txt new file mode 100644 index 0000000000000000000000000000000000000000..7acc4a9a9a9fa106c3ca79cb044a96f756661a83 --- /dev/null +++ b/eesanje/url_46_254_2.txt @@ -0,0 +1,10 @@ +ತಿಂಗಳಾಂತ್ಯಕ್ಕೆ ಜಾತಿಗಣತಿ ವರದಿ ಸಲ್ಲಿಕೆ : ಜಯಪ್ರಕಾಶ್ ಹೆಗ್ಡೆ +ಬೆಂಗಳೂರು, ಜ.24- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಕಾಲಕ್ಕೆ ಪೂರ್ಣ ಪ್ರಮಾಣದ ವರದಿಯನ್ನು ಸಲ್ಲಿಸಲಾಗುತ್ತದೆ. ಇಲ್ಲಿ ಮಧ್ಯಂತರ ವರದಿ ಎಂಬ ಗೊಂದಲಗಳಿಗೆ ಅವಕಾಶ ಇಲ್ಲ. ಜನವರಿ 31ಕ್ಕೆ ತಮ್ಮ ಅಧ್ಯಕ್ಷೀಯ ಅವ ಮುಗಿಯಲಿದೆ. ಅದರೊಳಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. +ವರದಿಯಲ್ಲಿ ಅಂಶಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಸದ್ಯಕ್ಕೆ ವರದಿಯ ಪುಸ್ತಕ ಮುದ್ರಣಗೊಳ್ಳುತ್ತಿದೆ. ಅದು ಸಿದ್ಧವಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಯ ಕೇಳಲಾಗುವುದು. ಸಮಯ ಸಿಕ್ಕರೆ ಬಹುತೇಕ ಜನವರಿ 30ರ ಒಳಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. +ಇದನ್ನು ಜಾತಿ ಜನಗಣತಿ ಎಂದಾಗಲಿ, ಕಾಂತರಾಜು ಅಥವಾ ಜಯಪ್ರಕಾಶ್ ಹೆಗ್ಡೆ ವರದಿ ಎಂದಾಗಲಿ ಭಾವಿಸಬೇಕಿಲ್ಲ. ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿಯಾಗಿರಲಿದೆ ಎಂದು ಸ್ಪಷ್ಟಪಡಿಸಿದರು.ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಅದನ್ನು ಸಂಪುಟದಲ್ಲಿ ಚರ್ಚಿಸಿ, ನಂತರ ವಿಧಾನ ಮಂಡಲ ಅವೇಶದಲ್ಲಿ ಮಂಡಿಸಬೇಕಾಗುತ್ತದೆ ಎಂದು ವಿವರಿಸಿದರು. +ಇದೇ ಅಧಿವೇಶನದಲ್ಲಿ ಮಂಡನೆ:ಹಿಂದೆ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ನೇತೃತ್ವದಲ್ಲಿ ಸಮೀಕ್ಷೆ ನಡೆದಿದ್ದು, ಸರ್ಕಾರ ಇದಕ್ಕಾಗಿ ಸುಮಾರು 180 ಕೋಟಿ ರೂಪಾಯಿಗಳನ್ನು ಬಳಕೆ ಮಾಡಿದೆ. ಸಿದ್ದರಾಮಯ್ಯ ಅವರ ಮೊದಲ ಅವಧಿಯ ಅಧಿಕಾರವಯ ಕೊನೆಯ ದಿನಗಳಲ್ಲಿ ವರದಿಯಲ್ಲಿನ ಮಾಹಿತಿಗಳ ಸೋರಿಕೆಯಾಗಿದ್ದವು ಎಂಬ ಆರೋಪಗಳಿವೆ. ಆದರೆ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ ಎಂಬ ಸಮರ್ಥನೆಗಳಿವೆ. +ಸೋರಿಕೆಯಾಗಿದೆ ಎಂಬ ಮಾಹಿತಿಯ ಪ್ರಕಾರ ಕೆಲ ಜಾತಿಗಳ ಜನಸಂಖ್ಯೆಯ ಬಗ್ಗೆ ಗೊಂದಲಗಳಿವೆ. ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿಲ್ಲ. ಬಹಳಷ್ಟು ಮನೆಗಳಿಗೆ ಸಮೀಕ್ಷಾದಾರರು ಭೇಟಿ ನೀಡಿಲ್ಲ, ಎಲ್ಲಿಯೋ ಕುಳಿತು ದತ್ತಾಂಶಗಳನ್ನು ಸಂಗ್ರಹಿಸಿದ್ದಾರೆ ಎಂಬ ದೂರುಗಳಿವೆ. +ಅಯೋಧ್ಯೆಯಲ್ಲಿ 2 ತಿಂಗಳವರೆಗೂ ಭಕ್ತರಿಗೆ ನಿರಂತರ ಊಟದ ವ್ಯವಸ್ಥೆ +ಪ್ರಮುಖವಾಗಿ ಒಕ್ಕಲಿಗ, ಲಿಂಗಾಯಿತ-ವೀರಶೈವ ಸೇರಿದಂತೆ ಅನೇಕ ಸಮುದಾಯಗಳ ಉಪಜಾತಿಗಳನ್ನು ಏಕೀಕೃತಗೊಳಿಸಲಾಗಿಲ್ಲ. ಉಪಜಾತಿಗಳನ್ನು ಬೇರೆ ಬೇರೆಯಾಗಿ ಪರಿಗಣಿಸುವುದರಿಂದ ಪ್ರಮುಖ ಜಾತಿಗಳ ಜನಸಂಖ್ಯೆಯಲ್ಲಿ ಕಡಿಮೆ ಲೆಕ್ಕಾಚಾರಗಳಾಗಿವೆ ಎಂಬ ಆರೋಪವಿದೆ. ಇತ್ತೀಚೆಗೆ ಒಕ್ಕಲಿಗ ಸಮುದಾಯದಿಂದ ನೀಡಲಾದ ಭಿನ್ನವತ್ತಳೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಸೇರಿದಂತೆ ಅನೇಕ ಪ್ರಮುಖರು ಸಹಿ ಹಾಕಿದ್ದರು. +ಲಿಂಗಾಯಿತ ಸಮುದಾಯದಿಂದ ನೀಡಲಾದ ಮನವಿ ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಹಿ ಹಾಕಿದ್ದರು. ಉಪಜಾತಿಗಳನ್ನು ಏಕೀಕೃತವಾಗಿ ಪರಿಗಣಿಸಿ ವರದಿ ನೀಡಬೇಕು ಎಂದು ಮನವಿಗಳಲ್ಲಿ ಒತ್ತಾಯಿಸಲಾಗಿತ್ತು.ಕೆಲ ಸಮುದಾಯಗಳ ವಿರೋಧದ ನಡುವೆಯೂ ವರದಿಯ ಸಲ್ಲಿಕೆಗೆ ತಯಾರಿ ನಡೆದಿದೆ. ಆಯೋಗದ ಅಧ್ಯಕ್ಷರು ವರದಿ ಸಲ್ಲಿಸಿದರೆ ಅದನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೆಲ ಸಚಿವರು ಹೇಳಿದ್ದಾರೆ. +ಹೀಗಾಗಿ ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಸಮೀಕ್ಷಾ ವರದಿಗೆ ಇದೇ ತಿಂಗಳಲ್ಲಿ ತಾಕೀಕ ಅಂತ್ಯ ದೊರೆಯುವ ಸಾಧ್ಯತೆ ಇದೆ. ಒಂದು ವೇಳೆ ವರದಿ ಸ್ವೀಕಾರವಾದರೆ ಅದನ್ನು ಫೆಬ್ರವರಿ 12ರಿಂದ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_254_3.txt b/eesanje/url_46_254_3.txt new file mode 100644 index 0000000000000000000000000000000000000000..fbac637bb145e77945bacee3b750e489c378db24 --- /dev/null +++ b/eesanje/url_46_254_3.txt @@ -0,0 +1,11 @@ +ನಿರ್ದೇಶಕ ಸ್ಥಾನದಲ್ಲಿ ಮುಂದುವರಿಯಲು ಒತ್ತಡ ಹಾಕಿಲ್ಲ : ಡಾ.ಸಿ.ಎನ್.ಮಂಜುನಾಥ್ +ಬೆಂಗಳೂರು, ಜ.24- ಜಯದೇವ ಆಸ್ಪತ್ರೆಯ ನಿರ್ದೇಶಕ ಸ್ಥಾನದಲ್ಲಿ ಮುಂದುವರೆಯಲು ಯಾವುದೇ ರೀತಿಯ ಒತ್ತಡವೂ ಹಾಕಿಲ್ಲ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು. +ಜನವರಿ 31ಕ್ಕೆ ನಿರ್ದೇಶಕರ ಅವ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನ್ನ ಸೇವಾವ ಮುಕ್ತಾಯದ ನಿರ್ಧಾರ ಸರ್ಕಾರಕ್ಕೆ ಬಿಟ್ಟ ವಿಚಾರವಾಗಿದ್ದು, ಒತ್ತಡ ಹಾಕುವ ಜಾಯಮಾನ ನನಗಿಲ್ಲ. ಆಡಳಿತ ಮಂಡಳಿ ಸಭೆ ನಡೆಯುವಾಗ ನಾನು ಇರಲಿಲ್ಲ. ಸರ್ಕಾರ ನನ್ನ ಅಭಿಪ್ರಾಯ ಕೇಳಿಲ್ಲ ಎಂದು ಹೇಳಿದರು. +ಈಗಾಗಲೇ ಹೊಸ ನಿರ್ದೇಶಕರನ್ನು ಮಾಡುವ ಪ್ರಸ್ತಾವನೆ ಕಾರ್ಯ ನಡೆಯುತ್ತಿದೆ. ಸರ್ಕಾರ ಈಗಾಗಲೇ ಹೊಸ ನಿರ್ದೇಶಕರನ್ನು ನಿಯೋಜಿಸಲು ನಿರ್ಧಾರ ಮಾಡಿದೆ. ಈಗಾಗಲೇ ನಿರ್ದೇಶಕರ ನಿಯೋಜಿಸುವ ಕಾರ್ಯ ಮುಗಿದು ಹೋಗಿದೆ. ಇನ್ನೊಂದು ವಾರದಲ್ಲಿ ಹೊಸ ನಿರ್ದೇಶಕರು ಬರುತ್ತಾರೆ.ಯಾರು ಬರುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು. +ಸರ್ಕಾರ ಒಂದು ವೇಳೆ ನೀವೆ ಮುಂದುವರೆಯಿರಿ ಎಂದರೆ ಹೇಳಿದರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.ನಿರ್ದೇಶಕನಾಗಿದ್ದಾಗಲೇ ವಿದೇಶ ಪ್ರವಾಸಕ್ಕೆ ಹೋಗಿಲ್ಲ. ಈಗ ವೃತ್ತಿ ಮುಂದುವರೆಸಲು ವಿದೇಶಕ್ಕೆ ಹೋಗುತ್ತಾರೆ ಅನ್ನೋ ಮಾತು ಸತ್ಯಕ್ಕೆ ದೂರವಾಗಿದೆ. +ವಿಶ್ವಭೂಪಟದಲ್ಲಿ ಜಯದೇವ ಆಸ್ಪತ್ರೆಗೆ ಮಾನ್ಯತೆ: +ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದು, ಈ ಅವಧಿಯಲ್ಲಿ ಶೇ.500 ರಷ್ಟು ಅಭಿವೃದ್ಧಿಯಾಗಿದೆ. ವಿಶ್ವಭೂಪಟದಲ್ಲಿ ಜಯದೇವ ಆಸ್ಪತ್ರೆಗೆ ಮಾನ್ಯತೆ ಸಿಕ್ಕಿದೆ. 125 ಹೃದ್ರೋಗ ತಜ್ಞರು ಆಸ್ಪತ್ರೆಯಲಿದ್ದು, ಭಾರತದಲ್ಲಿ ಎಲ್ಲೂ ಇಷ್ಟು ಹೃದ್ರೋಗ ತಜ್ಞರು ಇಲ್ಲ. 2022 ಅಧ್ಯಯನದಲ್ಲಿ ಟಾಪ್ 5 ಸೆಂಟರ್ಗಳ ಪೈಕಿ ನಂಬರ್ 1 ಸ್ಥಾನದಲ್ಲಿದೆ. ಆಸ್ಪತ್ರೆಗೆ ನಿಜವಾದ ವಿಐಪಿ ಅಂದ್ರೆ ಅದು ಬಡ ರೋಗಿಗಳು ಎಂದರು. +ಲೋಕಸಭಾ ಚುನಾವಣೆ : ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಅಚ್ಚರಿ ಫಲಿತಾಂಶ ಬರಲಿದೆ – ಬೊಮ್ಮಾಯಿ ಭವಿಷ್ಯ +ಆಡಳಿತ ಮಂಡಳಿಯ ನಿರ್ಧಾರದಂತೆ ಜನವರಿ 31ಕ್ಕೆ ನನ್ನ ಜವಬ್ದಾರಿ ಮುಗಿಯುತ್ತದೆ. 300 ಹಾಸಿಗೆ ಇದ್ದ ಆಸ್ಪತ್ರೆಯು ನನ್ನ ಅವಧಿಯಲ್ಲಿ ಈಗ 2 ಸಾವಿರ ಹಾಸಿಗೆ ಹೆಚ್ಚಳವಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿದೆ. ಪಂಚತಾರಾ ಖಾಸಗಿ ಆಸ್ಪತ್ರೆ ರೀತಿ ಸರ್ಕಾರಿ ಆಸ್ಪತ್ರೆ ಆಗಬೇಕೆಂದು ಕನಸ್ಸು ಕಂಡಿದ್ದೆ, ಅದು ನನಸಾಗಿದೆ ಎಂದು ಅವರು ಹೇಳಿದರು. +ಬಡವರಿಗೆ ಮಾತ್ರವಲ್ಲ ಶ್ರೀಮಂತರಿಗೆ ಚಿಕಿತ್ಸೆ ಸಿಗಬೇಕೆಂದು ನನ್ನ ಕನಸ್ಸು ನನಸಾಗಿದೆ. 75 ಲಕ್ಷ ಓಪಿಡಿ ನಡೆಸಿದ್ದೇವೆ. 8 ಲಕ್ಷ ಶಸ್ತ್ರಚಿಕಿತ್ಸೆ ಮಾಡಿದ್ದೇವೆ. ಕಳೆದ ಮೇ ತಿಂಗಳಲ್ಲಿ ಕೇಂದ್ರೀಯ ಸಂಸದೀಯ ಸಂಸ್ಥೆ ಭೇಟಿ ಕೊಟ್ಟಿತ್ತು. ಆ ಸಂದರ್ಭದಲ್ಲಿ ಇಲ್ಲಿನ ಚಿಕಿತ್ಸೆ ಕಂಡು ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಜಯದೇವ ಆಸ್ಪತ್ರೆ ಮಾದರಿ ಅಂದಿತ್ತು. ಜಯದೇವ ಹೃದ್ರೋಗ ಸಂಸ್ಥೆ ಮೈಸೂರಲ್ಲಿ ನಿರ್ಮಾಣಗೊಂಡಿದೆ. ಬೆಂಗಳೂರು ಮಧ್ಯಭಾಗ ಮಲ್ಲೇಶ್ಚರದಲ್ಲೂ ಸ್ಯಾಟಲೈಟ್ ಸೆಂಟರ್ ತೆರೆದಿದ್ದೇವೆ. ಇಎಸ್ ಐ ಆಸ್ಪತ್ರೆಯಲ್ಲೂ ಶಾಖೆ ತೆರೆದಿದ್ದೇವೆ ಎಂದು ಅವರು ಮಾಹಿತಿ ನೀಡಿದರು. +ಕಲ್ಯಾಣ ಕರ್ನಾಟಕದಲ್ಲಿ 201 ರಲ್ಲಿ 135 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ತೆರೆದಿದ್ದೇವೆ. ಶೇ. 85% ಕಾಮಗಾರಿ ಪೂರ್ಣಗೊಂಡಿದ್ದು, ಏಪ್ರಿಲ್ನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ಕೊಡಲಾಗುತ್ತಿದೆ. ಚಿಕಿತ್ಸೆ ಅವಶ್ಯಕತೆ ಇದ್ದವರೂ ಹಣವಿಲ್ಲದೆ ವಂಚಿತರಾಗಬಾರದು ಎಂದು ನಾನು ಟ್ರೀಟ್ಮೆಂಟ್ ಫಸ್ಟ್ ಮಾಡಿದ್ದೆ ಎಂದರು. \ No newline at end of file diff --git a/eesanje/url_46_254_4.txt b/eesanje/url_46_254_4.txt new file mode 100644 index 0000000000000000000000000000000000000000..8f7963e3d3953b03fcc3b149b4265f7c7ce68cdd --- /dev/null +++ b/eesanje/url_46_254_4.txt @@ -0,0 +1,8 @@ +660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ +ಬೆಂಗಳೂರು, ಜ.24- ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಿನ್ನೆ ನಡೆದ ಲಿಖಿತ ಮರು ಪರೀಕ್ಷೆಗೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆದಿದೆ. ಮೂರನೇ ಹಂತದಲ್ಲಿ ಮತ್ತೆ 660 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾೀಕಾರ ದಿಂದಲೇ ಪರೀಕ್ಷೆ ನಡೆಸಲು ಶೀಘ್ರವೇ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವರ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಪರೀಕ್ಷೆಯಲ್ಲಿ ಯಾರೂ ಕೂಡ ಬ್ಲೂಟೂತ್ಗಳನ್ನು ಒಳಗಡೆ ತೆಗೆದುಕೊಂಡು ಹೋಗುವ ತರುವ ಪ್ರಯತ್ನ ಸಾಧ್ಯವಾಗಿಲ್ಲ. ಆ ರೀತಿ ಪ್ರಯತ್ನ ಕೂಡ ಆಗಿಲ್ಲ ಎಂದು ಭಾವಿಸುತ್ತೇನೆ ಎಂದರು.ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, ಅದರಲ್ಲಿ ಶೇ.65 ರಿಂದ 70 ಮಂದಿ ಪರೀಕ್ಷೆ ಬರೆದಿದ್ದಾರೆ . ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದರು. +ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ಬಿಗಿ ಪೊಲಿಸ್ ಬಂದೋಬಸ್ತ್ +ಇದರ ಬಳಿಕ 403 ಸಬ್ ಇನ್ಸ್ಪೆಕ್ಟರ್ಗಳ ಪರೀಕ್ಷೆ ಮಾಡಬೇಕಿದೆ. ಅದನ್ನು ಕೂಡ ಕರ್ನಾಟಕ ಪರೀಕ್ಷಾ ಪ್ರಾಕಾರಕ್ಕೆ ವಹಿಸಬೇಕು ಅಂತ ಯೋಚಿಸಿದ್ದೇವೆ. ಮೊದಲನೆದಾಗಿ ಕೆಇಎ ನಿರ್ದೇಶಕಿ ರಮ್ಯಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡಿಕೊಟ್ಟಿದ್ದಾರೆ. ಅದೇ ಪ್ರಕಾರ ಮುಂದೆ ಕೂಡ ಮಾಡಿದರೆ ಯಾವುದೇ ಗೊಂದಲಕ್ಕೆ ಆಸ್ಪದ ಇರುವುದಿಲ್ಲ ಎಂದರು. +403 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಈಗಾಗಲೇ ಅಸೂಚನೆ ಜಾರಿಯಾಗಿ, ದಾಖಲಾತಿಗಳ ಪರಿಶೀಲನೆ, ದೈಹಿಕ ಪರೀಕ್ಷೆ ನಡೆದಿದೆ. ಲಿಖಿತ ಪರೀಕ್ಷೆ ಮಾತ್ರ ಬಾಕಿಯಿದೆ. ಇದು ಪೂರ್ಣಗೊಂಡರೆ 948 ಪಿಎಸ್ಐಗಳ ನೇಮಕಾತಿಯಾದಂತಾಗುತ್ತದೆ ಎಂದರು.ಮೂರನೇ ಹಂತದಲ್ಲಿ 660 ಮಂದಿ ಪಿಎಸ್ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಅಸೂಚನೆ ಹೊರಡಿಸಲಾಗುವುದು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸಬೇಕಿದೆ. ಆಯ್ಕೆ ಪ್ರತಿಕ್ರಿಯೆ ಮುಗಿದರೆ ತರಬೇತಿ ಅವ ಒಂದು ವರ್ಷ ಇರುತ್ತದೆ ಎಂದು ಹೇಳಿದರು. +ನಿಗಮ ಮಂಡಳಿ ನೇಮಕಾತಿ ವಿಷಯದಲ್ಲಿ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಸ್ಪಷ್ಟನೆ ಕೊಟ್ಟ ಮೇಲೆ ಮುಗಿಯಿತು. ನಾನು ಏನು ಹೇಳಬೇಕೋ ಹೇಳಿ ಆಗಿದೆ ಎಂದರು.ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂದು ಸಹಕಾರ ಸಚಿವ ರಾಜಣ್ಣ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ನಾವು ಹೆಚ್ಚು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. 28ಕ್ಕೆ 28 ಸೀಟ್ ಗೆಲ್ಲಬೇಕೆಂದುಕೊಂಡಿದ್ದೇವೆ. ಹಿಂದೆ 27 ಸ್ಥಾನಗಳನ್ನು ಗೆದ್ದಿದ್ದನ್ನ ಸ್ಮರಿಸಿಕೊಳ್ಳಬೇಕಿದೆ ಎಂದರು. +ಈಗ ವಾತಾವರಣ ಚೆನ್ನಾಗಿದೆ, ಪಂಚಖಾತ್ರಿಗಳನ್ನು ನೀಡಿದ್ದೇವೆ. ಜನಪರ ಸರ್ಕಾರವಿದೆ ನಾವು ಹೆಚ್ಚು ಗೆಲ್ಲುತ್ತೇವೆ ಎನ್ನುವೆ ವಿಶ್ವಾಸವಿದೆ ಎಂದು ಹೇಳಿದರು. ಕಲ್ಬುರ್ಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಘಟನೆಗೆ ಸಂಬಂಧ ಪಟ್ಟಂತೆ ನಾಲ್ಕು ಜನರನ್ನು ಬಂಸಲಾಗಿದೆ. ಅವರ ವಿಚಾರಣೆ ನಡೆಯುತ್ತದೆ. ಬಂತರು ತಾವಾಗಿಯೇ ಕೃತ್ಯ ನಡೆಸಿದ್ದಾರೆಯೇ ಅಥವಾ ಅವರಿಗೆ ಯಾರಾದರೂ ಹೇಳಿಕೊಟ್ಟಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತದೆ. ಇಂತಹ ಘಟನೆಗಳ ಹಿಂದೆ ಕೆಲ ಉದ್ದೇಶಗಳು ಇರುತ್ತವೆ ಎಂದರು. \ No newline at end of file diff --git a/eesanje/url_46_254_5.txt b/eesanje/url_46_254_5.txt new file mode 100644 index 0000000000000000000000000000000000000000..9f80d418d5ffd8b6bb050c3565ac9889add7b4d0 --- /dev/null +++ b/eesanje/url_46_254_5.txt @@ -0,0 +1,12 @@ +ರಾಜ್ಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ, ಎಲ್ಲೆಡೆ ಬಿಗಿ ಪೊಲಿಸ್ ಬಂದೋಬಸ್ತ್ +ಬೆಂಗಳೂರು, ಜ.24- ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಿಗಿ ಪೊಲಿಸ್ ಬಂದೋಬಸ್ತ್ ಮಾಡಲಾಗಿದ್ದು , ಅಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲಿಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲಿಸ್ ಆಯುಕ್ತರಾದ ಬಿ.ದಯಾನಂದ ಅವರು ತಿಳಿಸಿದ್ದಾರೆ. +ಪತ್ರೀಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವು ಸುಲಲಿತವಾಗಿ ನಡೆಯಲು ಹಾಗೂ ಮೈದಾನದ ಭದ್ರತೆಯ ಸಲುವಾಗಿ ಮುಂಜಾಗರೂಕತಾ ಕ್ರಮಗಳಾಗಿ ಕಳೆದ 15 ದಿನಗಳಿಂದ ಮೈದಾನಕ್ಕೆ ಪೊಲೀಸರನ್ನು ಕಣ್ಗಾವಲು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಎಂದು ಹೇಳಿದರು. +ನಗರದ ಎಲ್ಲಾ ಹೋಟೆಲ್, ಲಾಡ್ಜ್ ಗಳು ತಂಗುದಾಣಗಳು, ಇನ್ನಿತರೆ ಸ್ಥಳಗಳಲ್ಲಿ ಅನುಮಾನಾಸ್ಪದವಾಗಿ ವಾಸ್ತವ್ಯ ಹೂಡುವವರ ಮೇಲೆ ಸೂಕ್ತ ನಿಗಾವಹಿಸಲಾಗಿರುತ್ತದೆ ಎಂದು ಅವರು ಹೇಳಿದರು.ಕಾರ್ಯಕ್ರಮದ ದಿನದಂದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನಗರದ ಎಲ್ಲಾ ವಿಭಾಗಗಳಿಂದ 9 ಡಿಸಿಪಿ,16 ಮಂದಿ ಎಸಿಪಿ, 45 ಮಂದಿ ಇನ್ಸ್ಪೆಕ್ಟರ್, 109 ಮಂದಿ ಪಿ ಎಸ್ ಐ – ಮಹಿಳಾ ಪಿ ಎಸ್ ಐ, 77 ಎ ಎಸ್ ಐ, 594 ಹೆಡ್ ಕಾನ್ಸಟೇಬಲ್, ಕಾನ್ಸಟೇಬಲ್, 87 ಮಹಿಳಾ ಸಿಬ್ಬಂದಿಗಳೊಂದಿಗೆ 184 ಸಾದಾ ಉಡುಪಿನ ಅಧಿಕಾರಿ, ಸಿಬ್ಬಂದಿಗಳು ಮತ್ತು 56 ಮಂದಿ ಕ್ಯಾಮೆರಾ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಎಂದು ಅವರು ತಿಳಿಸಿದರು. +ಸಂಚಾರ ನಿರ್ವಹಣೆಗಾಗಿ 4 ಮಂದಿ ಡಿಸಿಪಿ, 6 ಮಂದಿ ಎಸಿಪಿ, 21 ಮಂದಿ ಇನ್ಸ್ಪೆಕ್ಟರ್, 33 ಮಂದಿ ಪಿ ಎಸ್ ಐ, 97 ಎ ಎಸ್ ಐ, 41 ಹೆಚ್ಸಿ-ಪಿಸಿ ಸೇರಿದಂತೆ ಒಟ್ಟಾರೆ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದ ಪ್ರಯುಕ್ತ ಒಟ್ಟು 575 ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯದಲ್ಲಿರುತ್ತಾರೆ ಎಂದು ಅವರು ಹೇಳಿದರು. +ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ನಿಯಂತ್ರಣಕ್ಕೆಪೊಲೀಸರ ಹರಸಾಹಸ +ಅಲ್ಲದೆ ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10 ಮಂದಿ ಕೆ.ಎಸ್.ಆರ್.ಪಿ-ಸಿ.ಎ.ಆರ್. ತುಕಡಿಗಳನ್ನು,, 2 ಅಗ್ನಿಶಾಮಕ ವಾಹನಗಳು, 2 ಆಂಬುಲೆನ್ಸ್ ವಾಹನಗಳು, 4 ಖಾಲಿ ವಾಹನಗಳು, 1 ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ-ಸ್ಟಾಟ್, 1ಆರ್.ಐ.ವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ ಹಾಗೂ ಗರುಡ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲಾಗಿದೆ. +ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 100 ಸಿ.ಸಿ.ಟಿ.ವಿ ಕ್ಯಾಮರಾಗಳನ್ನು ಮತ್ತು ಮೈದಾನದಲ್ಲಿ ಆಗಮಿಸುವವರ ತಪಾಸಣೆಗೆ 3 ಬ್ಯಾಗೇಜ್ ಸ್ಕ್ಯಾನರ್, 20 ಡಿಎಫ್ಎಂಡಿ ಮತ್ತು ಹೆಚ್.ಹೆಚ್.ಎಂ.ಡಿ.ಗಳನ್ನು ಅಳವಡಿಸಲಾಗಿರುತ್ತದೆ.ಗಣರಾಜ್ಯೋತ್ಸವದ ಆಚರಣೆ ಸಂಬಂಧ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಗೇಟ್ ನಂ.2ರಲ್ಲಿ, ಬಿಳಿ ಬಣ್ಣದ ವಿ.ಐ.ಪಿ. ಪಾಸ್ ಹೊಂದಿರುವವರಿಗೆ, ಗೇಟ್ ನಂ-3 ರಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಗೇಟ್ ನಂ-4 ರಲ್ಲಿ ವಿ.ವಿ.ಐ.ಪಿ ಮತ್ತು ಪಿಂಕ್ ಕಲರ್ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ.ಗೇಟ್ ನಂ-5 ರಲ್ಲಿ ಹಸಿರು ಬಣ್ಣದ ಸಾರ್ವಜನಿಕ ಪಾಸ್ ಹೊಂದಿರುವವರಿಗೆ ಪ್ರವೇಶವಿರುತ್ತದೆ, ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್ಗಳ ಬಳಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಆಯುಕ್ತರು ತಿಳಿಸಿದರು. +ಮನವಿಸಮಾರಂಭಕ್ಕೆ ಆಗಮಿಸುವವರು ಬೆಳಿಗ್ಗೆ 8.30 ರ ಒಳಗಾಗಿ ತಮ್ಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದದೊಳಗೆ ಪ್ರವೇಶಿಸತಕ್ಕದ್ದಲ್ಲ. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್ ಕಡೆಯಿಂದ ಕಬ್ಬನ್ ರಸ್ತೆ ಮೂಲಕ ಗೇಟ್ ನಂ-5ಕ್ಕೆ ಆಗಮಿಸಲು ಸೂಚಿಸಲಾಗಿದೆ. +ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ತಮ್ಮೊಂದಿಗೆ ಅನಗತ್ಯವಾದ ಲಗೇಜು ಹಾಗೂ ಇತರೆ ವಸುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಭದ್ರತೆಯ ಅಂಗವಾಗಿ ಮೈದಾನಕ್ಕೆ ಆಗಮಿಸುವವರು ಗೇಟ್ಗಳ ಬಳಿ ತಪಾಸಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ. +ಸಿಗರೇಟ್, ಬೆಂಕಿ ಪೆಟ್ಟಿಗೆ, ಕರಪತ್ರಗಳು, ಬಣ್ಣದ ದ್ರಾವಣಗಳು, ನೀರಿನ ಬಾಟಲ್ಗಳು ಹಾಗೂ ಕ್ಯಾನ್ಗಳು, ಹರಿತವಾದ ವಸ್ತು ಹಾಗೂ ಚಾಕು, ಚೂರಿಗಳು, ಕಪ್ಪು ಕರವಸ್ತ್ರಗಳು, ತಿಂಡಿ, ತಿನಿಸುಗಳು, ಪಟಾಕಿ ಮತ್ತು ಸೋಟಕ ವಸ್ತುಗಳು ಹಾಗೂ ಶಸ್ತ್ರಾಸ್ತ್ರಗಳು ಮೈದಾನದೊಳಗೆ ನಿಷೇಸಲಾಗಿದೆ ಎಂದು ಆಯುಕ್ತರು ಹೇಳಿದರು. +ಭದ್ರತಾ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರುವ ಎಲ್ಲಾ ಆಹ್ವಾನಿತರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಕೋರಲಾಗಿದೆ. ನಿರ್ಬಂತ ವಸ್ತುಗಳು ತಂದಲ್ಲಿ ಒಳಗೆ ಪ್ರವೇಶವಿಲ್ಲ. ಬೆಳಗ್ಗೆ 8.00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಆಯುಕ್ತ ದಯಾನಂದ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_254_6.txt b/eesanje/url_46_254_6.txt new file mode 100644 index 0000000000000000000000000000000000000000..46d3411c9087331dc1b9bd0e4b5376353ab571b2 --- /dev/null +++ b/eesanje/url_46_254_6.txt @@ -0,0 +1,8 @@ +ಗೊಂದಲಗಳಿಲ್ಲದೆ ನಡೆದ ಪಿಎಸ್‍ಐ ಹುದ್ದೆಗಳ ನೇಮಕಾತಿ ಲಿಖಿತ ಮರು ಪರೀಕ್ಷೆ +ಬೆಂಗಳೂರು, ಜ.24- ಬಹಳ ದಿನಗಳಿಂದ ನಿರೀಕ್ಷೆಯಲ್ಲಿದ್ದ 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಿನ್ನೆ ನಡೆದ ಲಿಖಿತ ಮರು ಪರೀಕ್ಷೆಗೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ನಡೆದಿದೆ. ಮೂರನೇ ಹಂತದಲ್ಲಿ ಮತ್ತೆ 660 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ಪರೀಕ್ಷೆ ನಡೆಸಲು ಶೀಘ್ರವೇ ಅಧಿಸೂಚನೆ ಹೊರಡಿಸುವುದಾಗಿ ಗೃಹ ಸಚಿವರ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದ ಪರೀಕ್ಷೆಯಲ್ಲಿ ಯಾರೂ ಕೂಡ ಬ್ಲೂಟೂತ್‍ಗಳನ್ನು ಒಳಗಡೆ ತೆಗೆದುಕೊಂಡು ಹೋಗುವ ತರುವ ಪ್ರಯತ್ನ ಸಾಧ್ಯವಾಗಿಲ್ಲ. ಆ ರೀತಿ ಪ್ರಯತ್ನ ಕೂಡ ಆಗಿಲ್ಲ ಎಂದು ಭಾವಿಸುತ್ತೇನೆ ಎಂದರು.ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿತ್ತು, ಅದರಲ್ಲಿ ಶೇ.65 ರಿಂದ 70 ಮಂದಿ ಪರೀಕ್ಷೆ ಬರೆದಿದ್ದಾರೆ . ಲಿಖಿತ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಶೀಘ್ರವಾಗಿ ಮೌಲ್ಯಮಾಪನ ಮಾಡಿ ಆದಷ್ಟು ಬೇಗ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದರು. +ಇದರ ಬಳಿಕ 403 ಸಬ್ ಇನ್ಸ್‍ಪೆಕ್ಟರ್‍ಗಳ ಪರೀಕ್ಷೆ ಮಾಡಬೇಕಿದೆ. ಅದನ್ನು ಕೂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಬೇಕು ಅಂತ ಯೋಚಿಸಿದ್ದೇವೆ. ಮೊದಲನೆದಾಗಿ ಕೆಇಎ ನಿರ್ದೇಶಕಿ ರಮ್ಯಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹಳ ಎಚ್ಚರಿಕೆಯಿಂದ ಪರೀಕ್ಷೆ ಮಾಡಿಕೊಟ್ಟಿದ್ದಾರೆ. ಅದೇ ಪ್ರಕಾರ ಮುಂದೆ ಕೂಡ ಮಾಡಿದರೆ ಯಾವುದೇ ಗೊಂದಲಕ್ಕೆ ಆಸ್ಪದ ಇರುವುದಿಲ್ಲ ಎಂದರು. +403 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಈಗಾಗಲೇ ಅಸೂಚನೆ ಜಾರಿಯಾಗಿ, ದಾಖಲಾತಿಗಳ ಪರಿಶೀಲನೆ, ದೈಹಿಕ ಪರೀಕ್ಷೆ ನಡೆದಿದೆ. ಲಿಖಿತ ಪರೀಕ್ಷೆ ಮಾತ್ರ ಬಾಕಿಯಿದೆ. ಇದು ಪೂರ್ಣಗೊಂಡರೆ 948 ಪಿಎಸ್‍ಐಗಳ ನೇಮಕಾತಿಯಾದಂತಾಗುತ್ತದೆ ಎಂದರು.ಮೂರನೇ ಹಂತದಲ್ಲಿ 660 ಮಂದಿ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆ ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು. ಈ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸಬೇಕಿದೆ. ಆಯ್ಕೆ ಪ್ರತಿಕ್ರಿಯೆ ಮುಗಿದರೆ ತರಬೇತಿ ಅವ ಒಂದು ವರ್ಷ ಇರುತ್ತದೆ ಎಂದು ಹೇಳಿದರು. +ಬೆಂಗಳೂರಲ್ಲಿ ಜ.26ರಿಂದ ಅತೀ ಎತ್ತರದ ಸ್ಥಂಭದಲ್ಲಿ ಹಾರಾಡಲಿದೆ ರಾಷ್ಟ್ರಧ್ವಜ +ನಿಗಮ ಮಂಡಳಿ ನೇಮಕಾತಿ ವಿಷಯದಲ್ಲಿ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಸ್ಪಷ್ಟನೆ ಕೊಟ್ಟ ಮೇಲೆ ಮುಗಿಯಿತು. ನಾನು ಏನು ಹೇಳಬೇಕೋ ಹೇಳಿ ಆಗಿದೆ ಎಂದರು. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲದೇ ಇದ್ದರೆ ನಮಗೆ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇರುತ್ತಾ ಎಂದು ಸಹಕಾರ ಸಚಿವ ರಾಜಣ್ಣ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ನಾವು ಹೆಚ್ಚು ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. 28ಕ್ಕೆ 28 ಸೀಟ್ ಗೆಲ್ಲಬೇಕೆಂದುಕೊಂಡಿದ್ದೇವೆ. ಹಿಂದೆ 27 ಸ್ಥಾನಗಳನ್ನು ಗೆದ್ದಿದ್ದನ್ನ ಸ್ಮರಿಸಿಕೊಳ್ಳಬೇಕಿದೆ ಎಂದರು. +ಈಗ ವಾತಾವರಣ ಚೆನ್ನಾಗಿದೆ, ಪಂಚಖಾತ್ರಿಗಳನ್ನು ನೀಡಿದ್ದೇವೆ. ಜನಪರ ಸರ್ಕಾರವಿದೆ ನಾವು ಹೆಚ್ಚು ಗೆಲ್ಲುತ್ತೇವೆ ಎನ್ನುವೆ ವಿಶ್ವಾಸವಿದೆ ಎಂದು ಹೇಳಿದರು.ಕಲ್ಬುರ್ಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಘಟನೆಗೆ ಸಂಬಂಧ ಪಟ್ಟಂತೆ ನಾಲ್ಕು ಜನರನ್ನು ಬಂಸಲಾಗಿದೆ. ಅವರ ವಿಚಾರಣೆ ನಡೆಯುತ್ತದೆ. ಬಂತರು ತಾವಾಗಿಯೇ ಕೃತ್ಯ ನಡೆಸಿದ್ದಾರೆಯೇ ಅಥವಾ ಅವರಿಗೆ ಯಾರಾದರೂ ಹೇಳಿಕೊಟ್ಟಿದ್ದಾರೆ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತದೆ. ಇಂತಹ ಘಟನೆಗಳ ಹಿಂದೆ ಕೆಲ ಉದ್ದೇಶಗಳು ಇರುತ್ತವೆ ಎಂದರು. \ No newline at end of file diff --git a/eesanje/url_46_254_7.txt b/eesanje/url_46_254_7.txt new file mode 100644 index 0000000000000000000000000000000000000000..006252e059f7bf2f6770bbad3a738749ac14bfa5 --- /dev/null +++ b/eesanje/url_46_254_7.txt @@ -0,0 +1,11 @@ +ಬೆಂಗಳೂರಲ್ಲಿ ಜ.26ರಿಂದ ಹಾರಾಡಲಿದೆ ಅತೀ ಎತ್ತರದ ರಾಷ್ಟ್ರಧ್ವಜ +ಬೆಂಗಳೂರು, ಜ.24-ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ. +ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜÁರೋಹಣವನ್ನು ನೆರವೇರಿಸಲಿದ್ದಾರೆ. +ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. +ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ ವಿವಿಧ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ ಸಹಿತವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಯಲಿವೆ. +ಸಮಾರಂಭದ ನಂತರ ಬೆಳಿಗ್ಗೆ 10 ಗಂಟೆಗೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ನಾಡಫ್ರಭು ವಾಣಿಜ್ಯ ಸಂಕೀರ್ಣ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಅರ್ಬುದ ರೋಗ (ಕ್ಯಾನ್ಸರ್ ) ಉಚಿತ ತಪಾಸಣಾ ಶಿಬರವನ್ನೂ ಆಯೋಜಿಸಲಾಗಿದೆ. +ಭಾರತ್ ನ್ಯಾಯ ಯಾತ್ರೆಗೆ ಭದ್ರತೆ ನೀಡುವಂತೆ ಅಮಿತ್ ಷಾಗೆ ಖರ್ಗೆ ಪತ್ರ +ಸಂಜೆ 6-30 ಗಂಟೆಗೆ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ನೇತೃತ್ವದಲ್ಲಿ ಹೆಸರಾಂತ ಗಾಯಕಿ ಶಮಿತಾ ಮಲ್ನಾಡ್ ತಂಡದವರು ರಾಷ್ಟ್ರ ನಮನ ಸಂಗೀತ ಸಂಜೆ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಅಲ್ಲದೆ, ಇದೇ ಸಂದರ್ಭದಲ್ಲಿ, ಲೇಸರ್ ಷೋ ಪ್ರದರ್ಶನವನ್ನೂ ಆಯೋಜಿಸಲಾಗಿದೆ. +ಧ್ವಜಸ್ಥಂಭದ ವೈಶಿಷ್ಠ್ಯಗಳು: ಸ್ಥಳೀಯ ಶಾಸಕ ಎಂ.ಕೃಷ್ಣಪ್ಪ ಅವರ ಶಾಸಕರ ಪ್ರದೇಶಾಭಿವೃದ್ಧಿ ನಿಯಿಂದ ಒಂದು ಕೋಟಿ ರೂ.ವೆಚ್ಚದಲ್ಲಿ ಗಣರಾಜ್ಯೋತ್ಸವ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ನಿರ್ಮಿಸಿರುವ 215 ಅಡಿ ಎತ್ತರದ ಈ ರಾಷ್ಟ್ರಧ್ವಜಸ್ಥಂಭವು ಪ್ರಸ್ತುತ ರಾಜಭವನದ ಹಿಂಬದಿ ರಸ್ತೆಯ ರಾಷ್ಟ್ರೀಯ ಸೇನಾ ವಸ್ತು ಸಂಗ್ರಹಾಲಯ ಆವರಣದಲ್ಲಿರುವ 213 ಅಡಿ ಧ್ವಜಸ್ಥಂಭಕ್ಕಿತಲೂ ಎರಡು ಅಡಿ ಹೆಚ್ಚು ಎತ್ತರದ್ದಾಗಿದೆ. +ಹತ್ತೊಂಬತ್ತು ಟನ್ ತೂಕವಿರುವ ಕಂಬದ ಮೇಲ್ಭಾಗದಲ್ಲಿ ಐದು ಅಡಿಯ ಅಶೋಕ ಲಾಂಛನವಿದೆ. ಈ ಲಾಂಛನದಲ್ಲಿನ ನಾಲ್ಕು ಸಿಂಹಗಳು ಕೇವಲ ವಿಜಯನಗರ ವಿಧಾನಸಭಾ ಕ್ಷೇತ್ರದ ನಿವಾಸಿಗಳಿಗೆ ಮಾತ್ರವಲ್ಲ, ನೆರೆಯ ವಿಧಾನಸಭಾ ಕ್ಷೇತ್ರಗಳ ನಿವಾಸಿಗಳಿಗೂ ಕಾಣುವುದು ಈ ಧ್ವಜಸ್ಠಂಭದ ಮತ್ತೊಂದು ವಿಶೇಷ ಆಕರ್ಷಣೆಯಾಗಿದೆ. +ಈ ಧ್ವಜಸ್ಥಂಭದಲ್ಲಿ ರಾಷ್ಟ್ರಧ್ವಜವನ್ನು ಕೈಯಿಂದಲೂ ಹಾಗೂ ಯಾಂತ್ರಿಕವಾಗಿಯೂ ಏರಿಸಲು ಹಾಗೂ ಇಳಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಧ್ವಜಸ್ಥಂಭದ ಸುತ್ತ ನಿರ್ಮಿಸಿರುವ ಹುಲ್ಲು ಹಾಸು ಹಾಗೂ ವೈಭವೋಪೇತ ಕಲ್ಲು ಮೆಟ್ಟಿಲುಗಳು ಈ ಧ್ವಜಸ್ಥಂಭಕ್ಕೆ ವಿಶಿಷ್ಠ ಮೆರುಗು ನೀಡಲಿದೆ ಎಂದು ವಿಜಯನಗರದ ಯುವ ಮುಖಂಡ ಪ್ರದೀಪ್ ಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_254_8.txt b/eesanje/url_46_254_8.txt new file mode 100644 index 0000000000000000000000000000000000000000..50f477177fbad603bbed82c7d96f7818153b5731 --- /dev/null +++ b/eesanje/url_46_254_8.txt @@ -0,0 +1,13 @@ +ಜಾಗತಿಕ ಕಂಪನಿಗಳೊಂದಿಗೆ 23,000 ಕೋಟಿ.ಮೊತ್ತದ 8 ತಿಳಿವಳಿಕೆ ಒಪ್ಪಂದಗಳಿಗೆ ರಾಜ್ಯ ಸರ್ಕಾರ ಸಹಿ +ಬೆಂಗಳೂರು, ಜ.24- ಜಾಗತಿಕ ಕಂಪನಿಗಳ ಜೊತೆಗೆ 23,000 ಕೋಟಿ ರೂ.ಮೊತ್ತದ 8 ತಿಳಿವಳಿಕೆ ಒಪ್ಪಂದಗಳಿಗೆ (ಎಂಒಯು) ರಾಜ್ಯ ಸರ್ಕಾರವು ಸಹಿ ಹಾಕಿರುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು. ವಿಶ್ವ ಆರ್ಥಿಕ ವೇದಿಕೆಯ ಶೃಂಗಸಭೆಯಲ್ಲಿ ಭಾಗವಹಿಸಲು ದಾವೋಸ್‍ಗೆ ತೆರಳಿದ್ದ ಕರ್ನಾಟಕದ ಉನ್ನತ ಮಟ್ಟದ ನಿಯೋಗದ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 100 ಮೆಗಾವ್ಯಾಟ್ ಸಾಮಥ್ರ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವಕ್ರ್ಸ್ 20,000 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ. ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ ಎಂದರು. +ಡಿಜಿಟಲ್ ಕೌಶಲ್ಯ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರಿತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ಎಂಒಯುಗೆ ಸಹಿ ಹಾಕಿದೆ. ಬೆಂಗಳೂರಿನ ಆಚೆಗೂ ಕೈಗಾರಿಕೆಗಳ ಅಭಿವೃದ್ಧಿಗೆ ಸಮಾನ ಕೊಡುಗೆ ನೀಡಲು ಉತ್ತರ ಕರ್ನಾಟಕ ಭಾಗದಲ್ಲಿ ತಮ್ಮ ವಹಿವಾಟು ಆರಂಭಿಸಲು ಹಲವಾರು ಕಂಪನಿಗಳು ಆಸಕ್ತಿ ತೋರಿಸಿವೆ. ವಿಜಯಪುರ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಮತ್ತಿತರ ಸ್ಥಳಗಳಲ್ಲಿ ಕೈಗಾರಿಕೆಗಳ ಸಮಾನ ಅಭಿವೃದ್ಧಿ ಗುರಿಗೆ ಕೊಡುಗೆ ನೀಡುವ ಹಲವಾರು ಉಪಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. +ಲುಲು ಗ್ರೂಪ್:ವಿಜಯಪುರದಲ್ಲಿ 300 ಕೋಟಿ ರೂ.ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮಥ್ರ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ. ಬಿಎಲ್ ಅಗ್ರೊ: ವಿಜಯಪುರದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣಾ ಘಟಕವನ್ನು ಆರಂಭಿಸಲಿದೆ. ದೇಶಿ ಮತ್ತು ರಫ್ತು ಮಾರುಕಟ್ಟೆಗಳಿಗೆ ಪೂರೈಸಲು ಸ್ಥಳೀಯ ಆಹಾರ ಉತ್ಪನ್ನಗಳನ್ನು ಖರೀದಿಸಿ ಅವುಗಳ ಶ್ರೇಣೀಕರಣ, ವಿಂಗಡಣೆ ಮತ್ತು ಪ್ಯಾಕೇಜಿಂಗ್ ಉದ್ದೇಶಕ್ಕೆ ಈ ಘಟಕ ನೆರವಾಗಲಿದೆ +ಎಚ್‍ಪಿ:ಎಚ್‍ಪಿ ಎಂಟರ್‍ಪ್ರೈಸ್, ಬೆಂಗಳೂರಿನಲ್ಲಿರುವ ತನ್ನ ಕ್ಯಾಂಪಸ್‍ನ ಸಾಮಥ್ರ್ಯ ಹೆಚ್ಚಿಸಿ ಜಾಗತಿಕವಾಗಿ ಅತಿದೊಡ್ಡ ಎಚ್‍ಪಿ ಕ್ಯಾಂಪಸ್ ರೂಪಿಸಲು ಎರಡು ಹೊಸ ಕಟ್ಟಡಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.ಎಬಿ ಇನ್‍ಬೇವ್: ಎಬಿ ಇನ್‍ಬೇವ್ ಕಂಪನಿಯು 400 ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ, ಕರ್ನಾಟಕದಲ್ಲಿ ತನ್ನ ಅತ್ಯಾಧುನಿಕ ಮದ್ಯ ತಯಾರಿಕಾ ಘಟಕದ ಸಾಮಥ್ರ್ಯ ವಿಸ್ತರಿಸುವ ಗುರಿ ಹೊಂದಿದೆ. +ವೋಲ್ವೊ ಗ್ರೂಪ್:ಕರ್ನಾಟಕದಲ್ಲಿ ತನ್ನ ವಾಣಿಜ್ಯ ವಾಹನ ತಯಾರಿಕಾ ಘಟಕದ ವಿಸ್ತರಣೆ ಬಗ್ಗೆ ಆಸಕ್ತಿ ತಳೆದಿರುವ ವೋಲ್ವೊ ಗ್ರೂಪ್, ಸದ್ಯದಲ್ಲಿಯೇ ರೂಪುಗೊಳ್ಳಲಿರುವ ಶುದ್ಧ ಸಂಚಾರ ನೀತಿಯ ಬಗ್ಗೆ ಪೂರಕ ಮಾಹಿತಿ ನೀಡಲು ಮತ್ತು ವಾಹನ ತಯಾರಿಕೆ ವಿಸ್ತರಿಸಲು ಸೂಕ್ತ ಪ್ರದೇಶಗಳನ್ನು ಗುರುತಿಸಲು ಉತ್ಸುಕತೆ ತೋರಿಸಿದೆ ಎಂದು ಅವರು ವಿವರಿಸಿದರು. +ಎಚ್‍ಸಿಎಲ್, ಎಚ್‍ಪಿ. ಸಿಸ್ಕೊ ಮತ್ತು ಸೋನಿಯಂತಹ ಕಂಪನಿಗಳ ಜೊತೆಗಿನ ಪಾಲುದಾರಿಕೆಯ ಸಮಾಲೋಚನೆಗಳಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ವಿಷಯವಾಗಿ ಹೊರಹೊಮ್ಮಿದೆ. ಸುಸ್ಥಿರತೆ ಮತ್ತು ನಾಗರೀಕ ಸೇವೆಗಳು ಸಹ ಈ ಚರ್ಚೆಗಳಲ್ಲಿ ಮಹತ್ವದ ವಿಷಯಗಳಾಗಿದ್ದವು. ವಿವಿಧ ನವೋದ್ಯಮಗಳು ಮತ್ತು ಸ್ಥಾಪಿತ ಕಂಪನಿಗಳ ಜೊತೆಗೆ ಭವಿಷ್ಯದ ನಡೆಗಳ ಬಗ್ಗೆ ಮಾತುಕತೆಗಳು ನಡೆದಿವೆ ಎಂದರು. +ಭಾರತ್ ನ್ಯಾಯ ಯಾತ್ರೆಗೆ ಭದ್ರತೆ ನೀಡುವಂತೆ ಅಮಿತ್ ಷಾಗೆ ಖರ್ಗೆ ಪತ್ರ +ಎಚ್‍ಪಿ, ರಾಕ್‍ವೆಲ್, ಸೋನಿ ಮತ್ತು ವೋಲ್ವೊ ಮತ್ತಿತರ ಕಂಪನಿಗಳ ಜೊತೆಗಿನ ಮಾತುಕತೆಗಳಲ್ಲಿ ಬೆಂಗಳೂರಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆ ಉದ್ದೇಶಕ್ಕೆ ಸಾಮಥ್ರ್ಯ ಹೆಚ್ಚಳ ಮತ್ತು ಎಂಜಿನಿಯರಿಂಗ್ ಕೇಂದ್ರಗಳನ್ನು ವಿಸ್ತರಿಸುವ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು ಎಂದು ಅವರು ಹೇಳಿದರು. +ಜಾಗತಿಕ ಕೈಗಾರಿಕೆ ಹಾಗೂ ಉದ್ಯಮ ಜಗತ್ತು ತ್ವರಿತವಾಗಿ ಬದಲಾಗುತ್ತಿದೆ. ಈ ಬದಲಾವಣೆಗಳನ್ನು ತಿಳಿದುಕೊಳ್ಳಲು ಶೃಂಗಸಭೆಯಲ್ಲಿ ಭಾಗವಹಿಸುವುದು ಮಹತ್ವದ ಸಂಗತಿಯಾಗಿತ್ತು. ಜಾಗತಿಕ ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಬಹುರಾಷ್ಟ್ರೀಯ ಕಂಪನಿಗಳು ಬಂಡವಾಳ ಹೂಡಿಕೆ ಮಾಡಲು ಹಾಗೂ ತಮ್ಮ ವಹಿವಾಟು ವಿಸ್ತರಿಸಲು ಸುರಕ್ಷಿತ ಮತ್ತು ಭರವಸೆಯ ತಾಣವಾಗಿ ಭಾರತದತ್ತ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದಕ್ಕೆ ನಾವು ಸಾಕ್ಷಿಯಾಗಿರುವುದು ಉತ್ತೇಜಕರ ಸಂಗತಿಯಾಗಿದೆ ಎಂದು ಅವರು ತಿಳಿಸಿದರು. + +ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ತಯಾರಿಕೆ (ಇಎಸ್‍ಡಿಎಂ), ಡೇಟಾ ಸೆಂಟರ್, ಆಟೊಮೊಬೈಲ್, ವಿದ್ಯುತ್ ಚಾಲಿತ ವಾಹನ, ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನ (ಎಫ್‍ಎಂಸಿಜಿ) ಮತ್ತು ಜಾಗತಿಕ ಸಾಮಥ್ರ್ಯ ಕೇಂದ್ರಗಳು (ಜಿಸಿಸಿ) ಒಳಗೊಂಡ ಮಹತ್ವದ ವಲಯಗಳ ಬಗ್ಗೆ ನಾವು ಹೆಚ್ಚಿನ ಗಮನ ನೀಡಿದ್ದೆವು ಎಂದರು. +ವಿಶ್ವ ಆರ್ಥಿಕ ವೇದಿಕೆಯ ಮುಖಂಡರ ಜೊತೆಗಿನ ದ್ವಿಪಕ್ಷೀಯ ಸಭೆಗಳಲ್ಲೂ ನಮ್ಮ ನಿಯೋಗವು ಭಾಗವಹಿಸಿತ್ತು. ಸುಸ್ಥಿರ ಹೂಡಿಕೆ ಆಕರ್ಷಣೆ, ಪರಿಸರ ಸ್ನೇಹಿ ವಾಣಿಜ್ಯ ವಹಿವಾಟು, ಜೈವಿಕ ಸಂಪನ್ಮೂಲಗಳ ರಕ್ಷಣೆ ಉದ್ದೇಶದ ಹವಾಮಾನ ಕಾರ್ಯಸೂಚಿಯಲ್ಲಿ ಕರ್ನಾಟಕವು ನಿರ್ವಹಿಸಬೇಕಾಗಿರುವ ಪ್ರಮುಖ ಪಾತ್ರ ಮತ್ತು ಕೃತಕ ಬುದ್ಧಿಮತ್ತೆಯ (ಎಐ) ಶ್ರೇಷ್ಠತೆಯ ಕೇಂದ್ರ ಸ್ಥಾಪಿಸುವುದಕ್ಕೆ ಈ ಸಭೆಗಳಲ್ಲಿ ಆದ್ಯತೆ ನೀಡಲಾಗಿತ್ತು ಎಂದು ಅವರು ಹೇಳಿದರು. \ No newline at end of file diff --git a/eesanje/url_46_254_9.txt b/eesanje/url_46_254_9.txt new file mode 100644 index 0000000000000000000000000000000000000000..e4511a223837cc4b404df4a72c7bf398e4ffe89a --- /dev/null +++ b/eesanje/url_46_254_9.txt @@ -0,0 +1,5 @@ +ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾಗಿ ಉದಯ್ ಬಿ.ಗರುಡಾಚಾರ್ ನೇಮಕ +ಬೆಂಗಳೂರು, ಜ.24- ರಾಜ್ಯ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರಾಗಿ ಶಾಸಕ ಉದಯ್ ಬಿ.ಗರುಡಾಚಾರ್ ನೇಮಕಗೊಂಡಿದ್ದಾರೆ. +2023-24 ನೇ ಸಾಲಿನ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯತ್ವಕ್ಕೆ ಶಾಸಕ ಬಿ.ಸುರೇಶ್‍ಗೌಡ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆಯಿಂದ ತೆರವಾದ ಸಮಿತಿಯ ಸದಸ್ಯತ್ವ ಸ್ಥಾನಕ್ಕೆ ಉದಯ್ ಬಿ.ಗರುಡಾಚಾರ್ ಅವರನ್ನು ಸಭಾಧ್ಯಕ್ಷ ಯು.ಟಿ.ಖಾದರ್ ನೇಮಕ ಮಾಡಿದ್ದಾರೆ. +ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 209ರ ಮೇರೆಗೆ ಸಮಿತಿಯ ಸದಸ್ಯರನ್ನಾಗಿ ಗರುಡಾಚಾರ್ ಅವರನ್ನು ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡಿದ್ದಾರೆಂದು ಅಧಿಕೃತ ಪ್ರಕಟಣೆ ತಿಳಿಸಿದೆ. +ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸದಸ್ಯತ್ವಕ್ಕೆ ರಾಯರೆಡ್ಡಿ ರಾಜೀನಾಮೆ \ No newline at end of file diff --git a/eesanje/url_46_255_1.txt b/eesanje/url_46_255_1.txt new file mode 100644 index 0000000000000000000000000000000000000000..9298dbbd210b1bd1a5256735202038f1fec1bae0 --- /dev/null +++ b/eesanje/url_46_255_1.txt @@ -0,0 +1,7 @@ +ಆಡಿಯೋ ಸಂಭಾಷಣೆಗೂ ಪಿಎಸ್‍ಐ ಮರು ಪರೀಕ್ಷೆಗೂ ಸಂಬಂಧ ಇಲ್ಲ : ಪರಮೇಶ್ವರ್ +ಬೆಂಗಳೂರು,ಜ.23- ಪೊಲೀಸ್ ಇಲಾಖೆಯ 545 ಸಬ್‍ಇನ್ಸ್‍ಪೆಕ್ಟರ್‍ಗಳ ಹುದ್ದೆಗೆ ಇಂದು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆದಿದೆ. ಗುಪ್ತದಳದ ಪಿಎಸ್‍ಐ ಅವರ ಆಡಿಯೋ ಮತ್ತು ಸಂಭಾಷಣೆಗೂ, ಪರೀಕ್ಷೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಲೋಪಗಳಾಗಿದ್ದರಿಂದಾಗಿ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆ ನಡೆಸುವಂತೆ ಸೂಚಿಸಿತ್ತು. ಅದರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಂಸ್ಥೆಯಿಂದ ಪರೀಕ್ಷೆ ನಡೆಸಲಾಗಿದೆ. +54 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಬಾರಿ ಅತ್ಯಂತ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿದ್ದೇವೆ. ಕಳೆದ ಬಾರಿಯ ಅಕ್ರಮಗಳು ಮರುಕಳಿಸದಂತೆ ಮುಂಜಾಗ್ರತೆ ವಹಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಬೇಕು ಎಂದು ಈಗಾಗಲೇ ಕರೆ ನೀಡಿದ್ದಾಗಿ ಹೇಳಿದರು. +ಈ ಹಿಂದೆ ಪಿಎಸ್‍ಐ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ವಿಚಾರಣೆಗೆ ರಚಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ನ್ಯಾಯಾಂಗ ಆಯೋಗ ನಿನ್ನೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತು. ಅದರಲ್ಲಿ ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಇನ್ನೂ ನೋಡಿಲ್ಲ. ಸರ್ಕಾರ ವರದಿಯನ್ನು ಪರಿಶೀಲನೆ ನಡೆಸಲಿದೆ. ಬಳಿಕ ಅದರ ಅನುಷ್ಠಾನದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. +ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍ +ವೀರಪ್ಪ ಸಮಿತಿ ವಿಚಾರಣೆಗಾಗಿ ಕೆಲವು ನೋಟಿಸ್ ನೀಡಿತ್ತು. ಆದರೆ ಕೆಲವರು ವಿಚಾರಣೆಗೆ ಹಾಜರಾಗಿಲ್ಲ ಎಂಬ ಮಾಹಿತಿ ಇದೆ. ಹೀಗಾಗಿ ವರದಿ ಹೇಗೆ ಪರಿಪೂರ್ಣ ಎಂಬ ಬಗ್ಗೆಯೂ ವಿಶ್ಲೇಷಣೆ ನಡೆಸಬೇಕಿದೆ ಎಂದು ಹೇಳಿದರು.ಪಿಎಸ್‍ಐ ಪರೀಕ್ಷೆಯ ನೇಮಕಾತಿಗೆ ಸಂಬಂಧಪಟ್ಟಂತೆ ಸಬ್‍ಇನ್ಸ್‍ಪೆಕ್ಟರ್ ಲಿಂಗಯ್ಯ ಅವರ ಆಡಿಯೋ ಪ್ರಸ್ತುತ ನಡೆಯುತ್ತಿರುವ ಮರುಪರೀಕ್ಷೆಗೆ ಸಂಬಂಧಿಸಿಲ್ಲ. ಆದರೂ ಸಿಸಿಬಿ ಪೊಲೀಸರು ಪಿಎಸ್‍ಐ ಲಿಂಗಯ್ಯ ಅವರನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ತಾನು ಗುಪ್ತದಳದಲ್ಲಿರುವುದರಿಂದ ಯಾವುದಾದರೂ ರೀತಿಯ ಅಕ್ರಮಗಳು ನಡೆಯುತ್ತಿವೆಯೇ ಎಂಬ ಮಾಹಿತಿ ಕಲೆ ಹಾಕಲು ಕೆಲವರೊಂದಿಗೆ ಸಂಭಾಷಣೆ ನಡೆಸಿದ್ದಾಗಿ ಲಿಂಗಯ್ಯ ಹೇಳಿಕೆ ನೀಡಿದ್ದಾರೆ. ಅದರ ಸತ್ಯಾಸತ್ಯತೆ ಬಗ್ಗೆ ವಿಚಾರಣೆಗಳು ನಡೆಯುತ್ತಿವೆ ಎಂದರು. \ No newline at end of file diff --git a/eesanje/url_46_255_10.txt b/eesanje/url_46_255_10.txt new file mode 100644 index 0000000000000000000000000000000000000000..af1a9c5f37c828195fd8881e677fb0a262b63ca2 --- /dev/null +++ b/eesanje/url_46_255_10.txt @@ -0,0 +1,4 @@ +ನಾಳೆ ಎಸ್‍ಐ ಪರೀಕ್ಷೆ : ನಿಷೇಧಾಜ್ಞೆ +ಬೆಂಗಳೂರು,ಜ.22- ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ, ಪೊಲೀಸ್ ಸಬ್ ಇನ್‍ಸ್ಪೆಕ್ಟರ್(ಸಿವಿಲ್) ಹುದ್ದೆಗೆ ನೇರನೇಮಕಾತಿಯ ಮರುಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಾಳೆ ಈ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. +ರಾಮಲಲ್ಲಾ ಕಾರ್ಯಕ್ರಮ ನೇರ ಪ್ರಸಾರಕ್ಕೆ ತಮಿಳುನಾಡಿನಲ್ಲಿ ಕಿಡಿಗೇಡಿಗಳಿಂದ ಅಡ್ಡಿ +ನಾಳೆ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಕ್ತಾಯಗೊಳ್ಳು ವವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_255_11.txt b/eesanje/url_46_255_11.txt new file mode 100644 index 0000000000000000000000000000000000000000..2ec3ccdf40b815d4702db8292f6ecccb7edb95c9 --- /dev/null +++ b/eesanje/url_46_255_11.txt @@ -0,0 +1,6 @@ +ಕೇಸರಿಮಯವಾದ ಸಿಲಿಕಾನ್ ಸಿಟಿ +ಬೆಂಗಳೂರು,ಜ.22- ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಹೈಟೆಕ್ ಸಿಟಿ ಬೆಂಗಳೂರು ಕೇಸರಿಮಯವಾಗಿ ಪರಿವರ್ತನೆಗೊಂಡಿದೆ. ಹಲವು ಹಿಂದೂ ಸಂಘಟನೆಗಳು ನಗರದ ಹಲವಾರು ಪ್ರದೇಶಗಳಲ್ಲಿ ಕೇಸರಿ ಬಣ್ಣ ಬಳಿದಿವೆ. ಹಿಂದೂಗಳ ದೊಡ್ಡ ಹಬ್ಬ ದೀಪಾವಳಿಗೆ ಮಾತ್ರ ಹೊಂದಿಕೆಯಾಗುವ ಆಚರಣೆಗಳು, ಕೇಸರಿ ಪುಷ್ಪಗಳು, ಶ್ರೀರಾಮ, ಹನುಮಂತ, ಸೀತೆ ಮತ್ತು ಲಕ್ಷ್ಮಣನ ಚಿತ್ರಗಳಿರುವ ಕೇಸರಿ ಧ್ವಜಗಳು ಮತ್ತು 500 ವರ್ಷಗಳ ಅಂತರದ ನಂತರ ರಾಮ ತನ್ನ ಜನ್ಮಸ್ಥಳಕ್ಕೆ ಆಗಮನವನ್ನು ಸ್ವಾಗತಿಸುವ ಪೋಸ್ಟರ್‍ಗಳು ನಗರದ ಮೂಲೆ ಮೂಲೆಗಳಲ್ಲೂ ರಾರಾಜಿಸುತ್ತಿವೆ. +ಬೆಳಗ್ಗೆಯಿಂದಲೇ ಶ್ರೀ ವೆಂಕಟೇಶ್ವರ ದೇವಸ್ಥಾನದ ಜೊತೆಗೆ ಶ್ರೀರಾಮ, ಹನುಮಾನ್ ದೇಗುಲಗಳಿಗೆ ಭಕ್ತರ ದಂಡು ಹರಿದು ಬಂದಿತ್ತು. ವಿವಿಧೆಡೆ ಭಜನೆ ಮತ್ತು ಕೀರ್ತನೆಗಳನ್ನು ಏರ್ಪಡಿಸಲಾಗಿತ್ತು. ರಾಮಾಂಜನೇಯ ಗುಡ್ಡ ದೇವಸ್ಥಾನ, ಪಟ್ಟಾಭಿರಾಮ ಸ್ವಾಮಿ ದೇವಸ್ಥಾನ, ರಾಜಾಜಿನಗರದ ರಾಮ ದೇವಸ್ಥಾನ ಮತ್ತು ಮಲ್ಲೇಶ್ವರಂನ ರಾಮದೇವರ ದೇವಸ್ಥಾನ ಮತ್ತು ಬಸವನಗುಡಿಯ ರಾಮ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು.ಈ ದೇವಾಲಯಗಳು ಭಕ್ತರಿಗೆ ಭವ್ಯವಾದ ಪ್ರಸಾದ ವಿತರಣೆಯನ್ನು ಸಹ ಆಯೋಜಿಸಿದ್ದವು. +ಬೆಂಗಳೂರಿನ ಬಿಜೆಪಿ ರಾಜ್ಯ ಪ್ರಧಾನ ಕಛೇರಿ ಜಗನ್ನಾಥ ಭವನವು ಅಲಂಕಾರಿಕ ದೀಪಗಳು, ವಸ್ತ್ರಗಳು, ಬ್ಯಾನರ್‍ಗಳು ಮತ್ತು ಪೆಪೋಸ್ಟರ್‍ಗಳಿಂದ ಆಕರ್ಷಣೆಯ ಕೇಂದ್ರವಾಗಿತ್ತು. ಮಹಾಲಕ್ಷ್ಮಿ ಲೇಔಟ್‍ನ ರಾಣಿ ಅಬ್ಬಕ್ಕ ಮೈದಾನದಲ್ಲಿ ನಡೆದ ಶ್ರೀರಾಮತಾರಕ ಮಹಾಯಾಗ-ಕಲಶಾಭಿಷೇಕದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ, ಶಾಸಕರು, ಮಾಜಿ ಸಚಿವರು ಭಾಗವಹಿಸಿದ್ದರು. ಹಿಂದೂ ಜನಜಾಗೃತಿ ಸಮಿತಿ ನಗರದಲ್ಲಿ ಮೆರವಣಿಗೆ ಆಯೋಜಿಸಿತ್ತು. +ರಾಮಲಲ್ಲಾ ಕಾರ್ಯಕ್ರಮ ನೇರ ಪ್ರಸಾರಕ್ಕೆ ತಮಿಳುನಾಡಿನಲ್ಲಿ ಕಿಡಿಗೇಡಿಗಳಿಂದ ಅಡ್ಡಿ +ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬೀದರ್, ವಿಜಯಪುರದ ಪ್ರಮುಖ ಸ್ಥಳಗಳಲ್ಲಿ ಇದೇ ರೀತಿಯ ಹಬ್ಬಗಳು ಕಂಡುಬಂದವು. ಮಂಗಳೂರು, ಉಡುಪಿ, ಚಿಕ್ಕಮಗಳೂರು, ಮೈಸೂರು, ತುಮಕೂರು, ಕೋಲಾರ, ಬಳ್ಳಾರಿ, ಕೊಪ್ಪಳ, ಗದಗ, ದಾವಣಗೆರೆ ಮತ್ತು ಹಾವೇರಿ ಪಟ್ಟಣಗಳು ಕೇಸರಿ ನಗರಿಗಳಾಗಿ ಪರಿವರ್ತನೆಗೊಂಡಿದ್ದವು. \ No newline at end of file diff --git a/eesanje/url_46_255_12.txt b/eesanje/url_46_255_12.txt new file mode 100644 index 0000000000000000000000000000000000000000..38a4459bb1c0474a9b8788eb8b33a4a58f95f1bc --- /dev/null +++ b/eesanje/url_46_255_12.txt @@ -0,0 +1,12 @@ +ಪಿಎಸ್‍ಐ ನೇಮಕಾತಿ ಹಗರಣ ವರದಿ ಸರ್ಕಾರಕ್ಕೆ ಸಲ್ಲಿಸಿಕೆ +ಬೆಂಗಳೂರು,ಜ.22- ಹಿಂದಿನ ಸರ್ಕಾರದಲ್ಲಿ ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಚಿಸಲಾಗಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ಏಕಸದಸ್ಯ ನ್ಯಾಯಾಂಗ ಆಯೋಗ ಇಂದು ರಾಜ್ಯಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದ್ದು, ಅದರಲ್ಲಿ ಹಗರಣದಲ್ಲಿ ಭಾಗಿಯಾದ ಮತ್ತಷ್ಟು ಅಧಿಕಾರಿಗಳು ಹಾಗೂ ಪ್ರಭಾವಿಗಳ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. +545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಆಗ ವಿರೋಧಪಕ್ಷವಾಗಿದ್ದ ಕಾಂಗ್ರೆಸ್ ಹಗರಣದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿತ್ತು. ವಿಧಾನಸಭೆ ಚುನಾವಣೆ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಪಿಎಸ್‍ಐ ನೇಮಕಾತಿಯ ತನಿಖೆಗೆ ಕಳೆದ ಜುಲೈ 21 ರಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ಏಕಸದಸ್ಯ ನ್ಯಾಯಾಂಗ ಸಮಿತಿಯನ್ನು ರಚಿಸಿತ್ತು. ಆರಂಭದಲ್ಲಿ 3 ತಿಂಗಳ ಒಳಗಾಗಿ ವರದಿ ನೀಡಬೇಕು ಎಂಬ ಸೂಚನೆ ಇತ್ತಾದರೂ ಅದನ್ನು ಹಂತಹಂತವಾಗಿ ವಿಸ್ತರಣೆ ಮಾಡಲಾಗಿತ್ತು. +ಅಂತಿಮವಾಗಿ ಇಂದು ಸಮಿತಿ ಸರ್ಕಾರಕ್ಕೆ ಮುಚ್ಚಿದ ಲಕೋಟೆಯಲ್ಲಿ ತನ್ನ ವರದಿ ಸಲ್ಲಿಸಿದೆ. ವರದಿಯಲ್ಲಿ ಪಿಎಸ್‍ಐ ನೇಮಕಾತಿಯಲ್ಲಿ ಹಗರಣ ನಡೆಯಲು ಕಾರಣಗಳೇನು? ಹಾಗೂ ಯಾವ ರೀತಿ ಪರೀಕ್ಷಾ ಅಕ್ರಮಗಳನ್ನು ನಡೆಸಲಾಗಿದೆ ಎಂಬ ಕುರಿತು ಸವಿಸ್ತಾರವಾದ ವರದಿ ನೀಡಿರುವುದಾಗಿ ತಿಳಿದುಬಂದಿದೆ. ಜೊತೆಗೆ ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿನ ಭ್ರಷ್ಟಾಚಾರಗಳನ್ನು ತಡೆಯಲು ತೆಗೆದುಕೊಳ್ಳಬೇಕಾದ ಮಹತ್ವದ ಶಿಫಾರಸ್ಸುಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಮತ್ತಷ್ಟು ಮಂದಿಗೆ ಸಂಕಷ್ಟ :ಈವರೆಗೂ ಪಿಎಸ್‍ಐ ಹಗರಣದ ತನಿಖೆ ನಡೆಸಿದ ರಾಜ್ಯ ಸಿಐಡಿ ಪೊಲೀಸರು ಆಗಿನ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಪೊಲೀಸ್ ಇಲಾಖೆಯ ಹಿರಿಯ ಅಕಾರಿಗಳು, ಆಯ್ಕೆ ಪಟ್ಟಿಯಲ್ಲಿದ್ದ ಆಕ್ಷಾಂಕ್ಷಿಗಳು, ಅಕ್ರಮಕ್ಕೆ ಸಹಕಾರ ನೀಡಿದ ಪೋಷಕರು ಸೇರಿದಂತೆ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದರು. +ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೂ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಆದರೆ ಸಿಐಡಿ ತನಿಖೆ ಪೂರ್ಣ ಪ್ರಮಾಣದಲ್ಲಿ ನಡೆದಿಲ್ಲ. ಒತ್ತಡಕ್ಕೆ ಮಣಿದು ಕೆಲವರನ್ನು ಉದ್ದೇಶಪೂರಕವಾಗಿಯೇ ಕೈಬಿಡಲಾಗಿದೆ. ಪ್ರಭಾವಿಗಳನ್ನು ರಕ್ಷಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಹಗರಣದಲ್ಲಿ ನಡೆದಿರುವ ಆರ್ಥಿಕ ವಹಿವಾಟಿನ ಮೂಲ ಹಾಗೂ ಅದು ತಲುಪಿರಬಹುದಾದ ಜಾಗಗಳ ಬಗ್ಗೆಯೂ ವಿವರಣೆಗಳಿಲ್ಲ ಎಂಬ ಆಕ್ಷೇಪಗಳಿದ್ದವು. +ಹಗರಣದಲ್ಲಿ ಕೆಲವು ಅಕಾರಿಗಳನ್ನಷ್ಟೇ ಉಲ್ಲೇಖಿಸಲಾಗಿದೆ. ಪ್ರಭಾವಿಗಳ ಮಾಹಿತಿ ಕೈಬಿಟ್ಟು ಹೋಗಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗದ ವಿಚಾರಣೆ ಗಮನ ಸೆಳೆದಿದೆ.ವೀರಪ್ಪ ಅವರ ಸಮಿತಿ ಹಗರಣದಲ್ಲಿ ಭಾಗಿಯಾದ ಮತ್ತಷ್ಟು ಅಧಿಕಾರಿಗಳ ಹೆಸರನ್ನು ತನ್ನ ವರದಿಯಲ್ಲಿ ಉಲ್ಲೇಖಿಸಿದೆ ಎಂದು ಹೇಳಲಾಗಿದೆ. ಪ್ರಭಾವಿಗಳ ಪಾತ್ರ ಹಾಗೂ ಹೊಣೆಗಾರಿಕೆಯ ಬಗ್ಗೆಯೂ ನಮೂದಿಸುವುದಾಗಿಯೂ ಮೂಲಗಳು ತಿಳಿಸಿವೆ. +ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಜಂಟಿ ಅಧಿವೇಶನದಲ್ಲೇ ವಿಧಾನಮಂಡಲದ ಉಭಯ ಸದನಗಳಲ್ಲೂ ಮಂಡನೆ ಮಾಡುವ ಸಾಧ್ಯತೆಯಿದೆ. ವರದಿ ಮಂಡನೆಯಾಗಿ ಸದನದ ಆಸ್ತಿಯಾಗಿದ್ದೇ ಆದರೆ ಅದು ಮತ್ತಷ್ಟು ಜನರಿಗೆ ಉರುಳಾಗಲಿದೆ ಎಂಬ ವಿಶ್ಲೇಷಣೆ ಇದೆ. +ಕಾಶ್ಮೀರಿ ಹಿಂದೂಗಳ ಪ್ರತಿನಿಧಿಯಾಗಿ ಅಯೋಧ್ಯೆಗೆ ಬಂದಿದ್ದೇನೆ ; ಅನುಪಮ್ ಖೇರ್ +ಹಿನ್ನೆಲೆ:2021 ರ ಅಕ್ಟೋಬರ್‍ನಲ್ಲಿ 545 ಪಿಎಸ್‍ಐಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆಯಲ್ಲಿ 54 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಪರೀಕ್ಷಾ ಫಲಿತಾಂಶ 2022 ರ ಜನವರಿ ತಿಂಗಳಿನಲ್ಲಿ ಪ್ರಕಟಗೊಂಡಿತ್ತು.ಆದರೆ ಅದರ ನಂತರ ಒಂದೊಂದೇ ಹಗರಣಗಳು ಹೊರಲಾರಂಭಿಸಿದವು. ಆರಂಭದಲ್ಲಿ ನೇಮಕಾತಿಯಲ್ಲಿ ಯಾವುದೇ ಹಗರಣಗಳಾಗಿಲ್ಲ ಎಂದು ಆಗಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಮತ್ತು ಗೃಹಸಚಿವ ಅರಗ ಜ್ಞಾನೇಂದ್ರ ಸಮರ್ಥಿಸಿಕೊಂಡಿದ್ದರು. +ಆದರೆ ಆಡಳಿತ ಪಕ್ಷದ ಶಾಸಕರು ಹಾಗೂ ಸಚಿವರುಗಳೇ ಪತ್ರಗಳನ್ನು ಬರೆದು ಮಾಹಿತಿಗಳನ್ನು ಬಹಿರಂಗಪಡಿಸಿದ ಬಳಿಕ ಮತ್ತು ವಿರೋಧಪಕ್ಷಗಳ ಒತ್ತಡ ಹೆಚ್ಚಾಗಿದ್ದರಿಂದ ಅನಿವಾರ್ಯವಾಗಿ ಸಿಐಡಿ ತನಿಖೆಗೆ ಒಪ್ಪಿಸಲಾಯಿತು. ಸಿಐಡಿ ತನಿಖೆ ಆರಂಭಗೊಳ್ಳುತ್ತಿದ್ದಂತೆ ಮಹತ್ವದ ಮಾಹಿತಿಗಳು ಹೊರಬರಲಾರಂಭಿಸಿದವು. +ಎಡಿಜಿಪಿ ಅಧಿಕಾರಿಯೇ ಬಂಧನಕ್ಕೊಳಗಾಗಿ ಸೆರೆವಾಸ ಅನುಭವಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇದು ಪ್ರಮುಖ ವಿಚಾರವಾಗಿ ಚರ್ಚೆಯಾಗಿತ್ತು. ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದ್ದು ಸ್ಮರಣೀಯ. \ No newline at end of file diff --git a/eesanje/url_46_255_2.txt b/eesanje/url_46_255_2.txt new file mode 100644 index 0000000000000000000000000000000000000000..6b86c0947c16eb387daaff9ea851344f6d37b0f4 --- /dev/null +++ b/eesanje/url_46_255_2.txt @@ -0,0 +1,5 @@ +ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ಮೌಲ್ಯದ ಮದ್ಯ ವಶ +ಬೆಂಗಳೂರು, ಜ.23- ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಅಬಕಾರಿ ಪೊಲೀಸರು 3240 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ಆರೋಪಿಗಳಾದ ಪರಮೇಶ್ವರ್ ದೇವಪ್ಪ ನಾಯಕ ಹಾಗೂ ವಾಹನ ಚಾಲಕ ಅಮೀತ ಪಡತಾರೆ ಎಂಬುವವರನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ. +ಸಿದ್ದರಾಮಯ್ಯನವರು ರಾಮ ಭಕ್ತರಲ್ಲ, ಹೈಕಮಾಂಡ್ ಭಕ್ತರು : ಆಶೋಕ್ ವಾಗ್ದಾಳಿ +ಅಬಕಾರಿ ಜಂಟಿ ಆಯುಕ್ತ ಎ.ಎಲ್.ನಾಗೇಶ್ ಅವರ ಮಾರ್ಗದರ್ಶನದಲ್ಲಿ ಉಪ ಆಯುಕ್ತ ವೀರಣ್ಣ ಬಾಗೇವಾಡಿ ನೇತೃತ್ವದಲ್ಲಿ ವಲಯ-30ರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಮಹದೇವಪುರ ವಲಯ ನಿರೀಕ್ಷಕರಾದ ಅಬೂಬಕರ್ ಮುಜಾವರ್ ಅವರ ನೇತೃತ್ವದ ತಂಡ ಹಳೆ ಮದ್ರಾಸ್ ರಸ್ತೆ, ದೂರವಾಣಿ ನಗರದ ಬಿಎಂಟಿಸಿ ಡಿಪೋ-24ರ ಬಳಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮದ್ಯ ಸಾಗಾಟ ಕಂಡುಬಂದಿದೆ. +ಮೇಲ್ನೋಟಕ್ಕೆ ಇದು ನಕಲಿ ಮದ್ಯವೆಂದು ಕಾಣುತ್ತಿದ್ದು, ತನಿಖೆ ಕೈಗೊಳ್ಳಲಾಗಿದೆ. ವಶಪಡಿಸಿಕೊಂಡ ಮದ್ಯದ ಮಾಲು ಸುಮಾರು 50 ಲಕ್ಷ ರೂ. ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡು ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. \ No newline at end of file diff --git a/eesanje/url_46_255_3.txt b/eesanje/url_46_255_3.txt new file mode 100644 index 0000000000000000000000000000000000000000..39b835a97c5e56c1bd5e71f410d75b9eb00713e6 --- /dev/null +++ b/eesanje/url_46_255_3.txt @@ -0,0 +1,10 @@ +ಬಿಗಿ ಭದ್ರತೆ ನಡುವೆ ಪಿಎಸ್‍ಐ ಮರು ಪರೀಕ್ಷೆ +ಬೆಂಗಳೂರು,ಜ.23- ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಗರದ 117 ಕೇಂದ್ರಗಳಲ್ಲಿ ಮರುಪರೀಕ್ಷೆ ನಡೆದಿದೆ. ಈ ಹಿಂದೆ 2021 ರ ಅಕ್ಟೋಬರ್ 23 ರಂದು ನಡೆದಿದ್ದ ಪರೀಕ್ಷೆಗೆ ಹಾಜರಾಗಿದ್ದ 54 ಸಾವಿರ ಅಭ್ಯರ್ಥಿಗಳಿಗೆ ಮಾತ್ರ ಲಿಖಿತ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಿಂದಲೂ ಅಭ್ಯರ್ಥಿಗಳು ನಿನ್ನೆಯಿಂದ ಬೆಂಗಳೂರಿಗೆ ಆಗಮಿಸಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಲಿಖಿತ ಮರುಪರೀಕ್ಷೆಯ ಹೊಣೆಗಾರಿಕೆಯನ್ನು ಒಪ್ಪಿಸಿದೆ. +ಖಾಕಿ ಕಟ್ಟೆಚ್ಚರ :ಹಿಂದಿನಂತೆ ಯಾವುದೇ ಅಕ್ರಮ, ಅವ್ಯವಹಾರ ಚಟುವಟಿಕೆಗಳು ನಡೆಯದಂತೆ ಬಿಗಿಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲಾಗಿತ್ತು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಳತೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. 40 ಕ್ಕೂ ಹೆಚ್ಚು ಕೆಎಸ್‍ಆರ್‍ಪಿ ಮತ್ತು ಸಿಎಆರ್ ಬೆಟಾಲಿಯನ್‍ನಲ್ಲಿನ ಪೊಲೀಸ್ ಸಿಬ್ಬಂದಿಗಳು ಪರೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮಫ್ತಿಯಲ್ಲೂ ಪೊಲೀಸರು ಗಸ್ತಿನಲ್ಲಿದ್ದರು. +ಅನುಮಾನಸ್ಪದವಾಗಿ ಓಡಾಡುವರು, ಗಾಳಿಸುದ್ಧಿ ಹಬ್ಬಿಸುವ ಕಿಡಿಗೇಡಿಗಳು, ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳ ಮೇಲೆ ನಿಗಾ ಇರಿಸಲಾಗಿತ್ತು. ಲೋಹ ಶೋಧಕ ಯಂತ್ರದ ಮೂಲಕ ಪ್ರತಿ ಅಭ್ಯರ್ಥಿಯನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿತ್ತು. ಮೊಬೈಲ್, ಬ್ಲೂಟೂತ್, ಸ್ಮಾರ್ಟ್‍ವಾಚ್ ಸೇರಿದಂತೆ ಎಲೆಕ್ಟ್ರಾನಿಕ್ ಡಿವೈಜ್‍ಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತರದಂತೆ ನಿರ್ಬಂಧಿಸಲಾಗಿತ್ತು. +ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍ +ನಿರ್ದಿಷ್ಠವಾದ ವಸ್ತ್ರಸಂಹಿತೆಯನ್ನು ಜಾರಿ ಮಾಡಲಾಗಿತ್ತು. ಹೆಣ್ಣು ಮಕ್ಕಳಿಗೆ ತಾಳಿ ಮತ್ತು ಅದರೊಂದಿಗಿನ ಸರ ಹೊರತುಪಡಿಸಿ ಅನಗತ್ಯವಾದ ಆಭರಣಗಳಿಗೆ ಅವಕಾಶ ನಿರಾಕರಿಸಲಾಗಿತ್ತು. ಬೆಳಿಗ್ಗೆ 8.30 ಕ್ಕೆ ಪರೀಕ್ಷಾ ಕೇಂದ್ರದಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿ ತಪಾಸಣೆಗೆ 2 ಗಂಟೆ ಸಮಯ ಲಭ್ಯವಿದ್ದು, ಬಹುತೇಕ ಅಭ್ಯರ್ಥಿಗಳು ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದರು. +ಹಲವು ಹಂತಗಳ ತಪಾಸಣೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದ ಅಭ್ಯರ್ಥಿಗಳು ಸಿಸಿ ಟಿವಿ ಮತ್ತು ಪರೀಕ್ಷಾ ಮೇಲ್ವಿಚಾರಕರ ಕಣ್ಗಾವಲಿನಲ್ಲಿ ಮರುಪರೀಕ್ಷೆಯನ್ನು ಎದುರಿಸಿದರು. ಕಳೆದ ಮೂರು ವರ್ಷಗಳಿಂದಲೂ ಪೊಲೀಸ್ ಸಮವಸ್ತ್ರ ಧರಿಸುವ ಕನಸು ಕಾಣುತ್ತಿದ್ದವರಿಗೆ ಈ ಹಿಂದಿನ ಪರೀಕ್ಷಾ ಅಕ್ರಮಗಳು ದುಃಸ್ವಪ್ನವಾಗಿ ಕಾಡಿವೆ. ಹಾಗಾಗಿ ಬಹುತೇಕರಿಗೆ ಪರೀಕ್ಷೆ ಬರೆಯುವ ಹುಮ್ಮಸ್ಸೇ ತಗ್ಗಿದಂತೆ ಕಂಡುಬಂದಿತ್ತು. ಕೆಲವರು ಈಗಲೂ ತಮಗೆ ಉತ್ತಮ ಫಲಿತಾಂಶ ಪಡೆಯುವ ವಿಶ್ವಾಸವಿದೆ. ಪರೀಕ್ಷಾ ಪ್ರಾಧಿಕಾರ ಮತ್ತು ಸರ್ಕಾರ ಯಾವುದೇ ಅಕ್ರಮಗಳಾಗದಂತೆ ಪಾರದರ್ಶಕ ಹಾಗೂ ಮುಕ್ತ ಪರೀಕ್ಷೆ ನಡೆಸಬಹುದೆಂಬ ನಿರೀಕ್ಷೆಗಳಿವೆ ಎಂದು ಅಭ್ಯರ್ಥಿಗಳು ಹೇಳಿಕೊಂಡಿದ್ದಾರೆ. +ಇತ್ತೀಚೆಗೆ ಗುಪ್ತದಳದ ಪಿಎಸ್‍ಐ ಲಿಂಗಯ್ಯ ಅವರ ಆಡಿಯೋ ಸಂಭಾಷಣೆ ಪಿಎಸ್‍ಐ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಸಿಟಿಐ ಹುದ್ದೆಗಳ ಆಯ್ಕೆಯ ವಿಷಯದಲ್ಲೂ ಒಂದಿಷ್ಟು ಅನುಮಾನಗಳನ್ನು ಹುಟ್ಟುಹಾಕಿತ್ತು. ಆದರೆ ಅದಕ್ಕೆಲ್ಲಾ ತೆರೆ ಎಳೆದಿರುವ ಪರೀಕ್ಷಾ ಪ್ರಾಧಿಕಾರ ಮತ್ತು ಸರ್ಕಾರ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ. ಯಾವ ಅಕ್ರಮಗಳಿಗೂ ಅವಕಾಶವಿಲ್ಲ. ಅಭ್ಯರ್ಥಿಗಳು ಆತಂಕಗೊಳ್ಳದೆ ನಿರ್ಭೀತಿಯಿಂದ ಪರೀಕ್ಷೆ ಬರೆಯಬೇಕು ಎಂದು ಸಲಹೆ ನೀಡಿದ್ದವು. +ಬಿಗ್​ಬಾಸ್​ನಿಂದ ಹೊರಬಂದ ನಂತರ ನಮ್ರತಾ ಫಸ್ಟ್ ರಿಯಾಕ್ಷನ್ +ಗೃಹಸಚಿವ ಡಾ.ಜಿ.ಪರಮೇಶ್ವರ್ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ರವಾನಿಸಿ ಪರೀಕ್ಷಾ ಅಕ್ರಮಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ಹಿಂದಿನ ಪರೀಕ್ಷಾ ಅಕ್ರಮಗಳ ಬಗ್ಗೆ ವಿಚಾರಣೆ ನಡೆಸಲು ರಚಿಸಲಾಗಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ನಿನ್ನೆಯಷ್ಟೇ 400 ಕ್ಕೂ ಹೆಚ್ಚು ಪುಟಗಳ ಸುದೀರ್ಘ ವರದಿಯನ್ನು ರಾಜ್ಯಸರ್ಕಾರಕ್ಕೆ ಸಲ್ಲಿಸಿ ಈ ಹಿಂದೆ ಸಿಬಿಐ ತನಿಖೆಯಲ್ಲಿ ಉಲ್ಲೇಖಿಸಿದ ಆರೋಪಗಳನ್ನುದೃಢೀಕರಿಸಿದೆ. ಜೊತೆಗೆ ಪರೀಕ್ಷಾ ಅಕ್ರಮಗಳ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಶಿಫಾರಸ್ಸು ಮಾಡಿತ್ತು. \ No newline at end of file diff --git a/eesanje/url_46_255_4.txt b/eesanje/url_46_255_4.txt new file mode 100644 index 0000000000000000000000000000000000000000..a6e6f6c48acdf7dec7ec1a8e48cb6437d5733031 --- /dev/null +++ b/eesanje/url_46_255_4.txt @@ -0,0 +1,8 @@ +ಸಿದ್ದರಾಮಯ್ಯನವರು ರಾಮ ಭಕ್ತರಲ್ಲ, ಹೈಕಮಾಂಡ್ ಭಕ್ತರು : ಆಶೋಕ್ ವಾಗ್ದಾಳಿ +ಬೆಂಗಳೂರು, ಜ.23- ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಮನ ಭಕ್ತರೂ ಅಲ್ಲ, ಗಾಂಧೀಜಿ ಅವರ ಅನುಯಾಯಿಗಳೂ ಅಲ್ಲ. ತಾವೇನಿದ್ದೇರೂ ಅಧಿಕಾರದ ಅನುಯಾಯಿಗಳು, ಅಧಿಕಾರ ಕೊಡುವ ಹೈಕಮಾಂಡ್ ಭಕ್ತರು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕನ್ನಡಿಗರ ರಾಮಭಕ್ತಿ, ಹಿಂದೂಗಳ ಒಗ್ಗಟ್ಟು ನೋಡಿ ತಮಗೆ ನಡುಕ ಉಂಟಾಗಿದೆ ಎಂದು ಗೊತ್ತು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲದಿದ್ದರೆ ಪಾಪ ತಮ್ಮ ಕುರ್ಚಿಗೇ ಕಂಟಕ. ಸಿದ್ದರಾಮಯ್ಯನವರೇ ತಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ. ಇನ್ನಾದರೂ ರಾಮನಿಗೆ ಶರಣಾಗಿ ಎಂದು ಆಗ್ರಹಿಸಿದ್ದಾರೆ. +ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿ, ರಾಮ ಮಂದಿರದ ಆಹ್ವಾನ ತಿರಸ್ಕರಿಸಿದ ತಮ್ಮ ಪಕ್ಷಕ್ಕೆ ಶ್ರೀರಾಮನ ಬಗ್ಗೆ, ಕೊಟ್ಟ ಮಾತಿನಂತೆ ರಾಮನ ಮಂದಿರ ನಿರ್ಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಉಳಿದಿಲ್ಲ ತಿರುಗೇಟು ನೀಡಿದ್ದಾರೆ. ರಾಮ ಸತ್ಯವಂತ. ಕೊಟ್ಟ ಮಾತಿಗೆ ಎಂದೂ ತಪ್ಪದ ವ್ಯಕ್ತಿತ್ವ. ಆದರೆ ತಾವು ಮಾಡಿದ್ದೇನು? ಮಾಡುತ್ತಿರುವುದೇನು? ತಮ್ಮ ಮೊದಲ ಅವಧಿಯಲ್ಲಿ ಜನತೆಗೆ ಕೊಟ್ಟಿದ್ದ ಭರವಸೆಗಳಲ್ಲಿ ಅರ್ಧ ಭಾಗವೂ ಈಡೇರಿಸಲಿಲ್ಲ. ಅದರ ಮೇಲೆ ನುಡಿದಂತೆ ನಡೆದ ಸರ್ಕಾರ ಎಂಬ ಮತ್ತೊಂದು ಸುಳ್ಳು. +ಭಾರತದ ವಿಕ್ರಮ್ ಲ್ಯಾಂಡರ್ ಅನ್ನು ಸೆರೆ ಹಿಡಿದ ನಾಸಾ ನೌಕೆ +ಈಗ ಎರಡನೇ ಅವಧಿಯಲ್ಲಿ ತಾವು ಮಾಡುತ್ತಿರುವುದೇನು? ಎಲ್ಲರಿಗೂ 200 ಯೂನಿಟ್ ಕರೆಂಟ್ ಉಚಿತ ಅಂತ ಸುಳ್ಳು ಭರವಸೆ ನೀಡಿ ಕಡೆಗೆ ಸರಾಸರಿ ಎಂದು ವರಸೆ ಬದಲಿಸಿದ್ದೀರಿ. 10 ಕೆಜಿ ಅಕ್ಕಿ ನೀಡುತ್ತೇನೆ ಎಂದು ಹೇಳಿ ಈಗ ಮಾತು ತಪ್ಪಿದ್ದೀರಿ. ರಾಜ್ಯದ ಎಲ್ಲಾ ನಿರುದ್ಯೋಗಿ ಪದವೀಧರರು, ಡಿಫ್ಲೋಮಾ ಪದವೀಧರರಿಗೆ ಯುವನಿಧಿ ಗ್ಯಾರೆಂಟಿ ಅಂತ ಸುಳ್ಳು ಹೇಳಿ ಈಗ ಕಂಡೀಷನ್ ಮೇಲೆ ಕಂಡೀಷನ್ ಹಾಕಿ ಕಡೆಗೆ 3,000 ಯುವಕರು ಮಾತ್ರ ಅರ್ಹರು ಎಂದು ಯುವಕರಿಗೆ ಟೋಪಿ ಹಾಕಿದ್ದೀರಿ ಎಂದು ಕಿಡಿಕಾರಿದ್ದಾರೆ. +ಆದರೆ ನಿಮ್ಮ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಯನ್ನ ರಾಮನ ವಿಷಯದಲ್ಲೂ ವಿಸ್ತರಿಸುವ ಪಾಪದ ಕಟ್ಟಿಕೊಳ್ಳಬೇಡಿ. ನೀವು ಮಹಾತ್ಮ ಗಾಂಧಿಯವರು ಹೇಳಿದ ರಾಮನ ಭಕ್ತರು ಅಂತ ಹೇಳಿದ್ದೀರಿ. ಮಹಾತ್ಮ ಗಾಂಧಿಯವರು ಗೋಹತ್ಯೆ ನಿಷೇಧದ ಅತ್ಯಂತ ದೊಡ್ಡ ಪ್ರತಿಪಾದಕರಾಗಿದ್ದರು. ಆದರೆ ತಾವು ಗೋಹತ್ಯೆಯ ಪರ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನ ವಿಸರ್ಜನೆ ಮಾಡಿ ಅಂತ ಗಾಂಧೀಜಿ ಹೇಳಿದ್ದರು. ಆದರೆ ತಾವುಗಳು ಕಾಂಗ್ರೆಸ್ ಪಕ್ಷವನ್ನ ಒಂದು ಕುಟುಂಬದ ಜಹಗೀರು ಮಾಡಿಕೊಟ್ಟುಬಿಟ್ಟಿದ್ದೀರಿ. ಇದೇನಾ ತಮ್ಮ ಗಾಂಧೀವಾದ? ಎಂದು ಪ್ರಶ್ನೆಸಿದ್ದಾರೆ. +ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ ಎಂದು ಆಶೋಕ್ ವ್ಯಂಗ್ಯವಾಡಿದ್ದಾರೆ. \ No newline at end of file diff --git a/eesanje/url_46_255_5.txt b/eesanje/url_46_255_5.txt new file mode 100644 index 0000000000000000000000000000000000000000..eec7d7ebcd038525227db3766c1c56bd41aee0f4 --- /dev/null +++ b/eesanje/url_46_255_5.txt @@ -0,0 +1,10 @@ +ನಿಗಮ ಮಂಡಳಿಯ ನೇಮಕಾತಿ ವಿಳಂಬಕ್ಕೆ ಹೈಕಮಾಂಡ್ ಕಾರಣ : ಪರಮೇಶ್ವರ್ +ಬೆಂಗಳೂರು,ಜ.23- ನಿಗಮ ಮಂಡಳಿಯ ನೇಮಕಾತಿಯಲ್ಲಿ ರಾಜ್ಯನಾಯಕರುಗಳೊಂದಿಗೆ ಸಮಾಲೋಚನೆ ನಡೆಸಲು ಹೈಕಮಾಂಡ್ ನಾಯಕರೇ ಪಟ್ಟಿ ತಯಾರಿಸುವುದರಿಂದಾಗಿ ಗೊಂದಲಗಳಾಗಿವೆ. ಅದನ್ನು ಸರಿಪಡಿಸುತ್ತಿರುವುದರಿಂದಾಗಿ ವಿಳಂಬವಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ನಿಗಮಮಂಡಳಿಯ ನೇಮಕಾತಿಯಲ್ಲಿ ಹೈಕಮಾಂಡ್ ಹಸ್ತಕ್ಷೇಪದ ಬಗ್ಗೆ ಪರಮೇಶ್ವರ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ನೇಮಕಾತಿ ಪಟ್ಟಿಗೆ ಸಂಬಂಧಪಟ್ಟಂತೆ ತಮ್ಮೊಂದಿಗೆ ಯಾರೂ ಚರ್ಚಿಸಿಲ್ಲ, ಅಭಿಪ್ರಾಯವನ್ನೂ ಕೇಳಿಲ್ಲ. ನಿಮ್ಮ ಕಡೆಯ ಒಂದೆರೆಡು ಹೆಸರುಗಳನ್ನು ಕೊಡಿ ಎಂದಷ್ಟೇ ಕೇಳಿದ್ದರು ಎಂದು ಸ್ಪಷ್ಟಪಡಿಸಿದರು. ಹೈಕಮಾಂಡ್ ನಾಯಕರಿಗೆ ರಾಜ್ಯದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರ ಪೂರ್ಣ ಮಾಹಿತಿ ಇರುವುದಿಲ್ಲ. ಜಿಲ್ಲಾ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ನಮ್ಮಂತಹ ನಾಯಕರುಗಳಿಗೆ ಹೆಚ್ಚಿನ ವಿವರಗಳಿರುತ್ತವೆ. ನಮ್ಮಂತವರ ಜೊತೆ ಚರ್ಚೆ ಮಾಡಬೇಕಿತ್ತು. ಹೈಕಮಾಂಡ್‍ನವರಿಗೆ ಮಾಹಿತಿ ಇರುವುದಿಲ್ಲ ಎಂದರು. +ಜೊತೆಗೆ ರಾಜ್ಯವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತುಕೊಂಡಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ನೇಮಕಾತಿಯ ಹೊಣೆಗಾರಿಕೆಯನ್ನು ಬಿಡಬೇಕಿತ್ತು. ಆದರೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯವರೇ ನೇರವಾಗಿ ಪಟ್ಟಿ ನೀಡುತ್ತಿದ್ದಾರೆ. ಅದರಿಂದಾಗಿ ವಿಳಂಭವಾಗುತ್ತಿದೆ ಎಂದು ಹೇಳಿದರು. +ತಾವು 8 ವರ್ಷ ಕಾಂಗ್ರೆಸ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಕಳೆದ ಚುನಾವಣೆ ಹಾಗೂ ಸತತವಾಗಿ ಪಕ್ಷ ಸಂಘಟನೆಯಲ್ಲಿ ಕೆಲಸ ಮಾಡಿದವರು ಯಾರು ಎಂದು ತಮಗೆ ಮಾಹಿತಿ ಇರುತ್ತದೆ. ನಮ್ಮೊಂದಿಗೆ ಚರ್ಚೆ ನಡೆಸದೇ ಇರುವುದರಿಂದಲೇ ಗೊಂದಲವಾಗುತ್ತದೆ ಎಂದರು. +ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍ +ಪಕ್ಷದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಬೇಕು. ಕೆಲಸ ಮಾಡದೇ ಇದ್ದವರಿಗೆ ಅವಕಾಶ ಕೊಟ್ಟಾಗ ಪ್ರಾಮಾಣಿಕರ ಮನಸ್ಸಿಗೆ ನೋವಾಗುತ್ತದೆ. ಹೀಗಾಗಿ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಪ್ರಮುಖರ ಜೊತೆ ಚರ್ಚೆ ಮಾಡಬೇಕು. ಏಕಾಏಕಿ ಯಾರ್ಯಾರದ್ದೋ ಹೆಸರುಗಳು ಪಟ್ಟಿಯಲ್ಲಿ ಬಂದರೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೈ ಶ್ರೀರಾಮ್ ಎಂದು ಹೇಳುವುದರಲ್ಲಿ ತಪ್ಪೇನಿದೆ ಎಂದು ಮರುಪ್ರಶ್ನಿಸಿದ ಪರಮೇಶ್ವರ್, ನಾವೆಲ್ಲಾ ಜೈ ಶ್ರೀರಾಮ್ ಎಂದು ಹೇಳುತ್ತೇವೆ. ನಾವೆಲ್ಲರೂ ಶ್ರೀರಾಮನ ಭಕ್ತರು. ರಾಮನ ಆದರ್ಶಗಳನ್ನು ಪಾಲಿಸಬೇಕು ಎನ್ನುತ್ತೇವೆ. ಒಂದು ವೇಳೆ ಜೈ ಶ್ರೀರಾಮ್ ಎನ್ನದಿದ್ದರೆ ಕಾಂಗ್ರೆಸ್‍ನವರು ಶ್ರೀರಾಮನನ್ನು ಜಪಿಸುವುದಿಲ್ಲ ಎನ್ನುತ್ತಾರೆ. ಜೈ ಶ್ರೀರಾಮ್ ಎಂದರೆ ಕಾಂಗ್ರೆಸ್‍ನವರು ರಾಮನ ಹೆಸರು ಹೇಳುತ್ತಾರೆ ಎಂದು ಅದಕ್ಕೂ ಮಾತನಾಡುತ್ತಾರೆ. ಇದರಲ್ಲಿ ಯಾವ ನಿಲುವು ಸರಿ ಎಂದು ಪ್ರಶ್ನಿಸಿದ ಅವರು, ನಮಗೆ ದಶರಥ ರಾಮ ಬೇಕು. ಮೋದಿ ರಾಮ ಬೇಡ ಎಂದರು. +ಕಾಂಗ್ರೆಸ್‍ನ ನಾಯಕ ರಾಹುಲ್‍ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ. ಈ ಮೊದಲು ರಾಹುಲ್‍ಗಾಂಧಿ 3,600 ಕಿ.ಮೀ. ಶಾಂತಿಯುತ ಪಾದಯಾತ್ರೆ ಮಾಡಿದ್ದರು. ಅದರಲ್ಲೂ ವಿರೋಧ ಪಕ್ಷದ ಆಡಳಿತ ಇರುವ ರಾಜ್ಯದಲ್ಲೇ ಪಾದಯಾತ್ರೆ ನಡೆದಿದ್ದರೂ ಎಲ್ಲಿಯೂ ಅಡ್ಡಿಯಾಗಿರಲಿಲ್ಲ. ಈಗ 6,712 ಕಿ.ಮೀ. ಯಾತ್ರೆಗೆ ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಅಡ್ಡಿಪಡಿಸಲಾಗಿದೆ. +ಕಾಂಗ್ರೆಸ್‍ನಲ್ಲಿದ್ದು, ಬಿಜೆಪಿಗೆ ಹೋಗಿ ಮುಖ್ಯಮಂತ್ರಿಯಾಗಿರುವ ಹೀಮಂತ್ ಬಿಶ್ವಾಸ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದರೆ ಬಿಜೆಪಿಯವರಿಗೆ ರಾಹುಲ್‍ಗಾಂಧಿಯವರ ಯಾತ್ರೆ ನೋಡಿ ಭಯ ಶುರುವಾಗಿದೆ ಎನಿಸುತ್ತದೆ ಎಂದರು. \ No newline at end of file diff --git a/eesanje/url_46_255_6.txt b/eesanje/url_46_255_6.txt new file mode 100644 index 0000000000000000000000000000000000000000..671a128044a15458d20a21f21dbc2d345b2f6662 --- /dev/null +++ b/eesanje/url_46_255_6.txt @@ -0,0 +1,6 @@ +ನಾವು ದಶರಥ ರಾಮನನ್ನು ಪ್ರೀತಿಸುತ್ತೇವೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.23- ಅಯೋಧ್ಯೆಯ ಶ್ರೀರಾಮಮಂದಿರ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಾರೆ. ಅದಕ್ಕೆ ನಮ್ಮ ವಿರೋಧ ಇದ್ದೇ ಇರುತ್ತದೆ. ನಾವು ದಶರಥ ರಾಮನನ್ನು ಪ್ರೀತಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3 ತಿಂಗಳಿನಲ್ಲಿ 3 ಕೋಟಿ ಜನರನ್ನು ಅಯೋಧ್ಯೆಗೆ ಕರೆದುಕೊಂಡು ಹೋಗುವ ಬಿಜೆಪಿಯ ಯೋಜನೆ ಕುರಿತಂತೆ ಪ್ರತಿಕ್ರಿಯಿಸಿದರು. +ರಾಜ್ಯದ ಹಳ್ಳಿಹಳ್ಳಿಯಲ್ಲಿರುವ ದೇವಸ್ಥಾನಗಳು ರಾಮಮಂದಿರಗಳಲ್ಲವೇ? ಅಲ್ಲಿರುವ ಮೂರ್ತಿ ಶ್ರೀರಾಮನದಲ್ಲವೇ? ಸೀತೆ, ಲಕ್ಷ್ಮಣ, ಆಂಜನೇಯ ಅವರ ಮೂರ್ತಿಗಳು ಪೂಜ್ಯನೀಯವಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ನಾವು ಅದನ್ನು ವಿರೋಧಿಸುತ್ತೇವೆ. ನಾವು ಮಹಾತ್ಮಗಾಂಧೀಜಿ ಹೇಳಿದ ರಾಮನನ್ನು, ರಾಮಾಯಣದ ರಾಮನನ್ನು ದಶರಥ ಪುತ್ರ ಶ್ರೀರಾಮಚಂದ್ರನನ್ನು ಪೂಜಿಸುತ್ತೇವೆ, ಬಿಜೆಪಿಯ ರಾಮನನ್ನಲ್ಲ ಎಂದು ಹೇಳಿದರು. +ನಿಗಮಮಂಡಳಿಯ ನೇಮಕಾತಿ ಪಟ್ಟಿಗೆ ರಾಜ್ಯದ ಮಟ್ಟಿಗೆ ಅಂಗೀಕಾರ ನೀಡಲಾಗಿದೆ. ಈಗಾಗಲೇ ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಚರ್ಚೆ ಮಾಡಿ ಅನುಮೋದನೆ ನೀಡಿದ್ದೇವೆ. ನಮ್ಮ ಪಾತ್ರ ಮುಗಿದಿದೆ. ಶಾಸಕರ ಹೆಸರಿನ ಪಟ್ಟಿಗೆ ಅನುಮೋದನೆ ದೊರೆತಿದೆ. ಕಾರ್ಯಕರ್ತರ ಹೆಸರಿನ ಪಟ್ಟಿಯ ಕುರಿತಂತೆಯೂ ನಾವಿಬ್ಬರೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲರೊಂದಿಗೆ ಚರ್ಚಿಸಿ ಸಹಮತ ನೀಡಿದ್ದೇವೆ. ಆ ಪಟ್ಟಿಯನ್ನು ಸುರ್ಜೆವಾಲ ದೆಹಲಿಗೆ ತೆಗೆದುಕೊಂಡು ಹೋಗಿದ್ದಾರೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‍ರಿಂದ ಸಹಿಯಾಗಿ ಬರಬೇಕಿದೆ ಎಂದರು. +ನಿಗಮಮಂಡಳಿ ನೇಮಕಾತಿಯಲ್ಲಿ ತಮ್ಮ ಸಲಹೆ ಪಡೆದುಕೊಂಡಿಲ್ಲ ಎಂದು ಗೃಹಸಚಿವ ಪರಮೇಶ್ವರ್‍ರವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಯವರು, ಎಲ್ಲರ ಸಲಹೆ ಪಡೆಯುವುದು ಕಷ್ಟವಾಗುತ್ತದೆ. ನಾನು ಅವರೊಂದಿಗೆ ಈ ಬಗ್ಗೆಯ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು. ಕಾಂಗ್ರೆಸ್ ನಾಯಕ ರಾಹುಲ್‍ಗಾಂಯವರ ಯಾತ್ರೆಗೆ ಅಡ್ಡಿಪಡಿಸುವ ಮೂಲಕ ಬಿಜೆಪಿಯವರು ವ್ಯಕ್ತಿಸ್ವಾತಂತ್ರ್ಯವನ್ನು ಕಸಿಯುವ ಪ್ರಯತ್ನ ನಡೆಸಿದ್ದಾರೆ ಎಂದರು. +ಅಸ್ಸಾಂನಲ್ಲಿ ಪಾದಯಾತ್ರೆಗೆ ಅಡ್ಡ ಹಾಕಲಾಗಿದೆ. ರಾಹುಲ್‍ಗಾಂಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿಯ ಕೆಲ ಪುಂಡರು ಇದನ್ನು ತಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಿದೆ ಎಂದು ಹೇಳಿದರು. \ No newline at end of file diff --git a/eesanje/url_46_255_7.txt b/eesanje/url_46_255_7.txt new file mode 100644 index 0000000000000000000000000000000000000000..434a604fc4c7928f9e26a36d0a95872745dbaf32 --- /dev/null +++ b/eesanje/url_46_255_7.txt @@ -0,0 +1,9 @@ +ಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾದ ಕಾಂಗ್ರೆಸ್ +ಬೆಂಗಳೂರು,ಜ.23- ಸಮಾಜ ವಿಭಜನೆಯ ಸೈದ್ಧಾಂತಿಕ ಸಂಘರ್ಷಕ್ಕೆ ಗಾಂಧಿತತ್ವದ ಮೂಲಕ ತಿರುಗೇಟು ನೀಡಲು ಮುಂದಾಗಿರುವ ರಾಜ್ಯಸರ್ಕಾರ ಪ್ರತಿಯೊಂದು ಶಾಲಾ ಕಾಲೇಜಿನಲ್ಲಿ 21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳ ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆ ನಡೆಸಲು ಮುಂದಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ 6ನೇ ತರಗತಿ ನಂತರ ಪ್ರತಿ ಶಾಲೆ ಮತ್ತು ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೂ ಸೂಕ್ತ ಬಹುಮಾನ ನೀಡಬೇಕು. ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ. +ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳವರೆಗೂ ಪ್ರಬಂಧ ಸ್ಪರ್ಧೆ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವ ಮಕ್ಕಳನ್ನು ಹೊರತುಪಡಿಸಿ ಉಳಿದ ಎಲ್ಲರೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ. +ರಾಷ್ಟ್ರಪಿತ ಮಹಾತ್ಮಗಾಂಧಿಯವರ ಹತ್ಯೆಯಾಗಿ ಏಳೂವರೆ ದಶಕಗಳು ಮುಗಿದಿವೆ. ಗಾಂಧೀಜಿಯವರು ತಮ್ಮ ಜೀವಿತಾವಧಿಯವರೆಗೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ದೇಶದ ವೈವಿಧ್ಯತೆ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಸಾರಿದರು. ಇಂತಹ ಮಹಾನ್ ವ್ಯಕ್ತಿಯನ್ನು ಕೆಲವು ಧುರೀಣರು ಪಿತೂರಿ ಹತ್ಯೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್ +ಗಾಂಧೀಜಿಯವರ ಹತ್ಯೆಯ ನಂತರ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಇತ್ತೀಚೆಗೆ ದ್ವೇಷ, ಹಿಂಸೆಯನ್ನು ಪ್ರತಿಪಾದಿಸುವ ವಿಕೇಂದ್ರೀಕರಣವನ್ನು ಗಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ, ದೀನ ದಲಿತ ಮಹಿಳೆ, ಆದಿವಾಸಿ, ರೈತ, ಕಾರ್ಮಿಕ ಹಾಗೂ ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗಿವೆ ಎಂದು ಆರೋಪಿಸಿದ್ದಾರೆ. +ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜಿಯವರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲೂ ಭಾಗವಹಿಸಿದ ಶಕ್ತಿಗಳು ಪ್ರವರ್ಗಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ. ಜಾಗತಿಕ ಪರಿಸರದ ಬಿಕ್ಕಟ್ಟುಗಳು, ಕೃತಕ ಬುದ್ಧಿಮತ್ತೆ, ಹಿಂಸಾ ವಿನೋದ ಮುಂತಾದವುಗಳಿಂದಾಗಿ ಮನುಷ್ಯರು ಈ ಭೂಮಿಯ ಮೇಲಿಂದಲೇ ಅಳಿಸಿಹೋಗುವ ದುಸ್ಥಿತಿಗೆ ತಲುಪಿಯಾಗಿದೆ ಎಂದು ಸ್ಟೀಫನ್ ಹಾಕಿಂಗ್ ಸೇರಿದಂತೆ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. +ದೊಡ್ಡ ಭಾಷೆಗಳು ಸಣ್ಣ ಭಾಷೆಗಳನ್ನು ನುಂಗಿಹಾಕುತ್ತಿವೆ. ಯಾವುದೇ ಸಮಾಜ ಅಥವಾ ಸಮುದಾಯದಲ್ಲಿ ತಮ್ಮ ಭಾಷೆಗಳನ್ನು ಕಳೆದುಕೊಳ್ಳುವುದೆಂದರೆ ಅಸ್ತಿತ್ವವನ್ನೇ ಕಳೆದುಕೊಂಡಂತೆ ಎಂದು ಸಾಬೀತಾಗಿದೆ. ಪ್ರಸ್ತುತದ ಬಹುತೇಕ ಸಮಸ್ಯೆಗಳಿಗೆ ಗಾಂೀಜಿಯವರ ವಿಚಾರಗಳಲ್ಲಿ ಪರಿಹಾರ ಇರುವುದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆಗಳನ್ನು ಅಳವಡಿಕೆ ಮಾಡಿಕೊಳ್ಳಲು ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಸಲಹೆ ನೀಡಲಾಗಿದೆ. \ No newline at end of file diff --git a/eesanje/url_46_255_8.txt b/eesanje/url_46_255_8.txt new file mode 100644 index 0000000000000000000000000000000000000000..ecd0ecfde1d119aeb78df79f6358730d643ac649 --- /dev/null +++ b/eesanje/url_46_255_8.txt @@ -0,0 +1,10 @@ +ಕರ್ನಾಟಕದಿಂದ ಅಯೋಧ್ಯೆಗೆ ಆಸ್ತಾ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ಸಂಚಾರ +ಬೆಂಗಳೂರು,ಜ.23- ಕರ್ನಾಟಕದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ವಿಭಾಗವು ಕರ್ನಾಟಕ ಮತ್ತು ಗೋವಾವನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸಲು ಆಸ್ತಾ ಸ್ಪೆಷಲ್ ಎಕ್ಸ್‍ಪ್ರೆಸ್ ವಿಶೇಷ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿದೆ. ಅಯೋಧ್ಯೆಯ ನೂತನ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದ್ದು, ಮಂಗಳವಾರದಿಂದ ಸಾರ್ವಜನಿಕರೂ ಬಾಲ ರಾಮನ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ, ವಿವಿಧ ರಾಜ್ಯಗಳಿಂದ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. +ಎರಡು ರೈಲುಗಳು ಮೈಸೂರಿನಿಂದ (ಎಸ್‍ಎಂವಿಟಿ ಬೆಂಗಳೂರು ಮೂಲಕ), ಮತ್ತು ಎಸ್‍ಎಂವಿಟಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಬೆಳಗಾವಿ (ಧಾರವಾಡ ಮತ್ತು ಹುಬ್ಬಳ್ಳಿ ಮೂಲಕ) ಮತ್ತು ವಾಸ್ಕೋಡಗಾಮಾ (ರತ್ನಗಿರಿ ಮತ್ತು ಪನ್ವೇಲ್) ಮೂಲಕ ತಲಾ ಒಂದು ರೈಲು ಅಯೋಧ್ಯೆಗೆ ಸಂಚರಿಸಲಿದೆ. ಪ್ರಯಾಣಿಕರು ಇಂಡಿಯನ್ ರೈಲ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾಪೆರ್ರೇಷನ್ (ಐಆರ್‍ಸಿಟಿಸಿ ಅಪ್ಲಿಕೇಶನ್ ಅಥವಾ ವೆಬ್‍ಸೈಟ್) ಮೂಲಕ ಟಿಕೆಟ್‍ಗಳನ್ನು ಕಾಯ್ದಿರಿಸಬೇಕು. ಕೌಂಟರ್‍ನಲ್ಲಿ ಯಾವುದೇ ಟಿಕೆಟ್‍ಗಳನ್ನು ನೀಡಲಾಗುವುದಿಲ್ಲ ಎಂದು ನೈಋತ್ಯ ರೈಲ್ವೆ ಈಗಾಗಲೇ ತಿಳಿಸಿದೆ. +ಈ ರೈಲುಗಳು ಸೀಮಿತ ಟ್ರಿಪ್‍ಗಳನ್ನು ಹೊಂದಿದ್ದರೂ, ರೈಲ್ವೆ ಮಂಡಳಿಯು ಬೇಡಿಕೆಯ ಆಧಾರದ ಮೇಲೆ ಅವುಗಳನ್ನು ವಿಸ್ತರಿಸಲು ನಿರ್ಧರಿಸಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಕಿಂಗ್ ಮತ್ತು ದರ ವಿವರಗಳನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ರೈಲ್ವೆ ತಿಳಿಸಿದೆ. +ರೈಲು ಸಂಖ್ಯೆ 06203 :ಇದು ತುಮಕೂರನ್ನು ಅಯೋಧ್ಯಾ ಧಾಮದೊಂದಿಗೆ ಸಂಪರ್ಕಿಸುತ್ತದೆ. ಈ ರೈಲು ಬುಧವಾರ (ಫೆಬ್ರವರಿ 7 ಮತ್ತು 21) ತುಮಕೂರಿನಿಂದ ಮತ್ತು ಫೆಬ್ರವರಿ 10 ಮತ್ತು 24 ರಂದು ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್‍ಗಳನ್ನು ಹೊಂದಿದ್ದು, 2,726 ಕಿಮೀ ಏಕಮುಖ ಸಂಚಾರ ಇದರದ್ದಾಗಿರಲಿದೆ. +ರೈಲು ಸಂಖ್ಯೆ 06204: ಇದು ಭಾನುವಾರ (ಫೆಬ್ರವರಿ 11 ಮತ್ತು 25) ಚಿತ್ರದುರ್ಗದಿಂದ ಮತ್ತು ಬುಧವಾರದಂದು (ಫೆಬ್ರವರಿ 14 ಮತ್ತು 28) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು 22 ಕೋಚ್‍ಗಳನ್ನು ಹೊಂದಿದ್ದು, 2,483 ಕಿಮೀ ಏಕಮುಖ ಸಂಚಾರ ಒಳಗೊಂಡಿರಲಿದೆ. +ರೈಲು ಸಂಖ್ಯೆ 06205 :ಇದು ವಾಸ್ಕೋಡಗಾಮಾವನ್ನು ದರ್ಶನ್ ನಗರದೊಂದಿಗೆ (ಅಯೋಧ್ಯೆಯ ಸಮೀಪವಿರುವ ರೈಲು ನಿಲ್ದಾಣ) ಸಂಪರ್ಕಿಸುತ್ತದೆ. ರೈಲು ಸೋಮವಾರ (ಫೆಬ್ರವರಿ 12 ಮತ್ತು 26) ವಾಸ್ಕೋಡಗಾಮಾದಿಂದ ಮತ್ತು ಶುಕ್ರವಾರ (ಫೆಬ್ರವರಿ 16 ಮತ್ತು ಮಾರ್ಚ್ 1) ದರ್ಶನ್ ನಗರದಿಂದ ಹೊರಡಲಿದೆ. ಇದು ಮಜೋರ್ಡಾ, ಮಡಗಾಂವ್, ಕರ್ಮಾಲಿ, ರತ್ನಗಿರಿ, ಪನ್ವೇಲ್, ವಾಪಿ, ಕೋಟಾ, ತುಂಡ್ಲಾ, ಪ್ರಯಾಗ್‍ರಾಜ್ ಮತ್ತು ಮಿರ್ಜಾಪುರ ಮೂಲಕ ಹಾದುಹೋಗುತ್ತದೆ. ಇದು 22 ಕೋಚ್‍ಗಳನ್ನು ಹೊಂದಿದ್ದು, 2,791 ಕಿ.ಮೀ. ಏಕಮುಖ ಸಂಚಾರ ಒಳಗೊಂಡಿರಲಿದೆ. +ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್ +ರೈಲು ಸಂಖ್ಯೆ 06206: ಇದು ಮೈಸೂರನ್ನು ಅಯೋಧ್ಯೆಯೊಂದಿಗೆ ಸಂಪರ್ಕಿಸುತ್ತದೆ ಮತ್ತು ತಲಾ ಒಂದು ಪ್ರವಾಸವನ್ನು ಮಾಡಲಿದೆ. ಇದು ಶನಿವಾರ (ಫೆಬ್ರವರಿ 17) ಮೈಸೂರಿನಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಕೆಎಸ್‍ಆರ್ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಬೀರೂರು, ಚಿತ್ರದುರ್ಗ, ತೋರಣಗಲ್, ಹೊಸಪೇಟೆ, ಕೊಪ್ಪಳ, ಗದಗ, ಬಾದಾಮಿ, ಬಾಗಲಕೋಟೆ ಮತ್ತು ಬಿಜಾಪುರ, ಕಲಬುರಗಿ, ವಾಡಿ, ಬಲ್ಹರ್ಷಾ, ನಾಗಪುರ, ಜಬಲ್‍ಪುರ ಮತ್ತು ಪ್ರಯಾಗರಾಜ್ ಮೂಲಕ ಹಾದು ಹೋಗಲಿದೆ. ಇದು 22 ಕೋಚ್‍ಗಳನ್ನು ಹೊಂದಿದ್ದು, 3,004 ಕಿ.ಮೀ. ಏಕಮುಖ ಸಂಚಾರ ಒಳಗೊಂಡಿರಲಿದೆ. +ರೈಲು ಸಂಖ್ಯೆ 06207 :ಇದು ಶನಿವಾರ (ಫೆಬ್ರವರಿ 17) ಬೆಳಗಾವಿಯಿಂದ ಮತ್ತು ಮಂಗಳವಾರ (ಫೆಬ್ರವರಿ 20) ಅಯೋಧ್ಯಾಧಾಮದಿಂದ ಹೊರಡಲಿದೆ. ಇದು ಧಾರವಾಡ, ಹುಬ್ಬಳ್ಳಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ, ಸಿಕಂದರಾಬಾದ್, ಬಲ್ಹರ್ಷಾ ಮತ್ತು ಪ್ರಯಾಗರಾಜ್ ಮೂಲಕ ಚಲಿಸುತ್ತದೆ. ಇದು 22 ಕೋಚ್‍ಗಳನ್ನು ಹೊಂದಿದ್ದು, 2462 ಕಿ.ಮೀ ಏಕಮುಖ ಸಂಚಾರ ಒಳಗೊಂಡಿರಲಿದೆ. \ No newline at end of file diff --git a/eesanje/url_46_255_9.txt b/eesanje/url_46_255_9.txt new file mode 100644 index 0000000000000000000000000000000000000000..b9ff6f876b86b4055d43edc25fa75e792cae3ce0 --- /dev/null +++ b/eesanje/url_46_255_9.txt @@ -0,0 +1,11 @@ +ಲೋಕಸಭಾ ಚುನಾವಣೆ ಅಂತಿಮ ಮತದಾರರ ಪಟ್ಟಿ ಪ್ರಕಟ +ಬೆಂಗಳೂರು, ಜ.22-ಮುಂಬರುವ ಲೋಕಸಭಾ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಇಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಗಳ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟು 5,37,85,815 ಸಾಮಾನ್ಯ ಮತದಾರರಿದ್ದಾರೆ. ಈ ಪೈಕಿ 2,69,33,750 ಪುರುಷ 2,68,47,145 ಮಹಿಳಾ ಮತದಾರರು ಇದ್ದು, 4,920 ಇತರೆ ಮತದಾರರಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಕರಡು ಮತದಾರರ ಪಟ್ಟಿಗೆ ಹೋಲಿಸಿದ್ದಲ್ಲಿ 4,08,653 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿ ಹೆಚ್ಚಾಗಿದ್ದಾರೆ. ಇದರಲ್ಲಿ 2,77,717 ಮಹಿಳಾ ಮತದಾರರು ಗಮನಾರ್ಹ ಸಂಖ್ಯೆಯಲ್ಲಿ ಹೆಚ್ಚಾಗಿದ್ದಾರೆ. 13,912 ಪುರುಷ ಹಾಗೂ 24 ಇತರೆ ಮತದಾರರು ಹೆಚ್ಚಳವಾಗಿದ್ದಾರೆ ಎಂದರು. +ರಾಜ್ಯದ 224 ವಿಧಾನಸಭಾ ಕ್ಷೇತ್ರದ ಪೈಕಿ ಬೆಂ. ದಕ್ಷಿಣ ವಿಧಾನಸಭಾ ಕ್ಷೇತ್ರವೂ 7,17,201 ಮತದಾರರನ್ನು ಹೊಂದಿದ್ದು, ಅತಿ ಹೆಚ್ಚು ಮತದಾರರನ್ನು ಹೊಂದಿದ ಕ್ಷೇತ್ರವಾಗಿದೆ. ಶೃಂಗೇರಿ ಕ್ಷೇತ್ರವೂ 167556 ಮತದಾರರನ್ನು ಹೊಂದಿದ್ದು, ರಾಜ್ಯದಲ್ಲಿಯೇ ಅತಿ ಕಡಿಮೆ ಮತದಾರರನ್ನು ಹೊಂದಿದ ಕ್ಷೇತ್ರವಾಗಿದೆ ಎಂದು ಹೇಳಿದರು. +2024ರ ಜನವರಿ 1ಕ್ಕೆ ಅರ್ಹತೆ ಹೊಂದಿರುವ ಇದುವರೆಗೆ ನೋಂದಣಿಯಾಗದೆ ಇರುವವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಮತದಾರರ ಸೇವಾ ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹತಾ ದಿನಾಂಕ 2024ರ ಏಪ್ರಿಲ್ 1, ಜುಲೈ.1 ಹಾಗೂ ಅಕ್ಟೋಬರ್ 1ರಂತೆ ಅರ್ಹತೆ ಹೊಂದುವ ಹೊಸ ಮತದಾರರು ಮುಂಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದರು. +ತೀವ್ರ ಚಳಿ ಹಿನ್ನೆಲೆಯಲ್ಲಿ ರಾಮೋತ್ಸವಕ್ಕೆ ಲಾಲ್ ಕೃಷ್ಣ ಅಡ್ವಾಣಿ ಗೈರು +ಮತದಾರರ ಗುರುತಿನ ಚೀಟಿ ಹಂಚಿಕೆಯನ್ನು ಶೇ.100ರಷ್ಟು ಹಂಚಲಾಗಿದೆ ಹಾಗೂ ಭಾವಚಿತ್ರ ಅಳವಡಿಸಲಾಗಿದೆ . ಗುರುತಿನ ಚೀಟಿಗಳನ್ನು ತ್ವರಿತ ಅಂಚೆ ಸೇವೆ ಮೂಲಕ ಮತದಾರರ ವಿಳಾಸಕ್ಕೆ ತಲುಪಿಸಲಾಗುತ್ತ್ತಿದೆ. ಕಳೆದ ನವೆಂಬರ್ ಅಂತ್ಯಕ್ಕೆ 17,47,518 ಗುರುತಿನ ಚೀಟಿಗಳನ್ನು ಮತದಾರರಿಗೆ ತಲುಪಿಸಲಾಗಿದೆ. ಇನ್ನೂ 10,76,506 ಗುರುತಿನ ಚೀಟಿ ಮುದ್ರಿಸಿದ್ದು, ಮತದಾರರಿಗೆ ತಲುಪಿಸಲಾಗುವುದೆಂದು ತಿಳಿಸಿದರು. +ಅಂತಿಮ ಮತದಾರರ ಪಟ್ಟಿಯಲ್ಲಿ ಸೇವಾ ಮತದಾರರ ಸಂಖ್ಯೆ ಇಳಿಕೆಯಾಗಿದೆ. ಕರಡು ಪಟ್ಟಿಯಲ್ಲಿ 47,172 ಇದ್ದ ಸೇವಾ ಮತದಾರರ ಸಂಖ್ಯೆ ಅಂತಿಮ ಪಟ್ಟಿಯಲ್ಲಿ 46,501ಕ್ಕೆ ಇಳಿಕೆಯಾಗಿದೆ. 18ರಿಂದ 19 ವರ್ಷದ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಅಂತಿಮ ಪಟ್ಟಿಯಲ್ಲಿ 10,34,018ರಷ್ಟು ಯುವ ಮತದಾರರಿದ್ದಾರೆ. 3,88,527ರಷ್ಟು ಯುವ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಸಾಗರೋತ್ತರ ಮತದಾರರ ಸಂಖ್ಯೆ 3,164ರಷ್ಟಿದೆ ಎಂದು ವಿವರಿಸಿದರು. +80 ವರ್ಷ ಮೇಲ್ಪಟ್ಟ ಹಿರಿಯ ಮತದಾರರ ಸಂಖ್ಯೆ 12,71,862 ಆಗಿದ್ದು, 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 17,937ರಷ್ಟಿದ್ದಾರೆ. ವಿಕಲ ಚೇತನ ಮತದಾರ ಸಂಖ್ಯೆ 562890 ರಷ್ಟಿದೆ. 58834 ಮತಗಟ್ಟೆಗಳಿದ್ದು, 845 ಮತಗಟ್ಟೆಗಳನ್ನು ಸೇರ್ಪೆಡೆಗೊಳಿಸಿದ್ದು, 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ. +ಕಳೆದ 2019ಕ್ಕೆ ಹೋಲಿಸಿದರೆ ಈ ಬಾರಿ 552 ಮತಗಟ್ಟೆಗಳು ಹೆಚ್ಚಳವಾಗಿದೆ. ನಿಯಮಾನುಸಾರ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮಾರ್ಪಾಡು ಮಾಡಲು ನಿಗಧಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ. ಈ ರೀತಿ 35,02,328 ಮತದರರು ಸೇರ್ಪಡೆಯಾಗಿದ್ದಾರೆ. 11,14,257 ಹೆಸರುಗಳನ್ನು ತೆಗೆದು ಹಾಕಲಾಗಿದೆ ಮತ್ತು 13,43,123 ಮತದಾರರ ವಿವರಗಳನ್ನು ಮಾರ್ಪಾಡು ಮಾಡಲಾಗಿದೆಯೆಂದು ಮಾಹಿತಿ ನೀಡಿದರು. +ಅಂತಿಮ ಮತದಾರರ ಪಟ್ಟಿಯಲ್ಲಿ ಸಾಮಾನ್ಯ ಮತದಾರರ ಲಿಂಗಾನುಪಾತವು 991ರಿಂದ 997 ಹೆಚ್ಚಳವಾಗಿದೆ. ಯುವ ಮತದಾರರ ಲಿಂಗಾನುಪಾತವು 818 ರಿಂದ 856ಕ್ಕೆ ಹೆಚ್ಚಳವಾಗಿದೆ ಎಂದು ಅವರು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾ„ಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮರಾವ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_256_1.txt b/eesanje/url_46_256_1.txt new file mode 100644 index 0000000000000000000000000000000000000000..9a3f95a98503e5da33416725cfa7ea4d6e121f9c --- /dev/null +++ b/eesanje/url_46_256_1.txt @@ -0,0 +1,9 @@ +ನಿಗಮ ಮಂಡಳಿಗಳ ನೇಮಕಾತಿ : ಸುರ್ಜೆವಾಲ ಮಹತ್ವದ ಸಭೆ +ಬೆಂಗಳೂರು,ಜ.21- ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಿ ಶಾಸಕರ ಅಧ್ಯಕ್ಷತೆ ಪಟ್ಟಿಯನ್ನು ಅಖೈರುಗೊಳಿಸಿದ್ದಾರೆ. +ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯ ಅಂತಿಮ ಸ್ಪರ್ಶಕ್ಕಾಗಿ ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸೇರಿದಂತೆ ಕೆಲವು ನಾಯಕರು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಸಿದರು. ಸುಮಾರು 2 ತಿಂಗಳಿನಿಂದಲೂ ನಿಗಮ ಮಂಡಳಿಗಳ ನೇಮಕಾತಿ ಇಂದು, ನಾಳೆ ಎನ್ನುತ್ತಲೇ ಮುಂದೂಡಿಕೆಯಾಗುತ್ತಿದೆ. ಸಂಕ್ರಾಂತಿ ಹಬ್ಬದ ಬಳಿಕ ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಈ ಕ್ಷಣಕ್ಕೆ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಘೋಷಿಸಿದ್ದರು. +ಆದರೆ ಮೂರ್ನಾಲ್ಕು ದಿನ ಕಳೆದರೂ ನೇಮಕಾತಿ ಪಟ್ಟಿ ಹೊರಬಂದಿಲ್ಲ. ಇದು ಕಾರ್ಯಕರ್ತರಲ್ಲಿ ಅಸಮಾಧಾನವನ್ನು ಹೆಚ್ಚಿಸಿದೆ. 34 ಮಂದಿ ಶಾಸಕರು ಹಾಗೂ 39 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಕಲ್ಪಿಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಅದರ ಬಳಿಕವೂ ಮತ್ತಷ್ಟು ಹೆಸರುಗಳ ಸೇರ್ಪಡೆಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. +ರಾಮೋತ್ಸವ ಶುಭ ಸಂದರ್ಭದಲ್ಲಿ “ಜಾನಕಿ ರಾಮ” ಆಲ್ಬಂ ಸಾಂಗ್ ಬಿಡುಗಡೆ +ಇಂದಿನ ಸಭೆಯಲ್ಲಿ 37 ಶಾಸಕರ ಹಾಗೂ 39 ಕಾರ್ಯಕರ್ತರ ನಿಗಮ ಮಂಡಳಿಯ ಹಂಚಿಕೆ ಕುರಿತು ಚರ್ಚೆ ನಡೆಸಲಾಗಿದೆ. ಶಾಸಕರಿಗೆ ಯಾವ ಯಾವ ನಿಗಮಗಳನ್ನು ಹಂಚಿಕೆ ಮಾಡಬೇಕೆಂದು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ನಿಗಮಮಂಡಳಿಗಳಿಗೆ ಕಾರ್ಯಕರ್ತರು ಹಾಗೂ ಮುಖಂಡರನ್ನು ನೇಮಿಸುವ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಆದರೆ ಯಾರಿಗೆ, ಯಾವ ನಿಗಮ ಎಂದು ಇನ್ನೂ ಇತ್ಯರ್ಥಗೊಂಡಿಲ್ಲ. ಹೀಗಾಗಿ ಇಂದಿನ ಸಭೆಯಲ್ಲಿ ಮತ್ತಷ್ಟು ಚರ್ಚೆಗಳು ನಡೆದಿವೆ. +ಶಾಸಕರ ಆಯ್ಕೆ ಪಟ್ಟಿ ಮತ್ತು ನಿಗಮಗಳ ನಿಗ ಪೂರ್ಣಗೊಂಡಿದೆ. ಅದನ್ನು ಮೊದಲ ಹಂತದಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. 2ನೇ ಹಂತದಲ್ಲಿ ಕಾರ್ಯಕರ್ತರಿಗೆ ನಿಗಮಗಳನ್ನು ಹಂಚಿಕೆ ಮಾಡಿ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಿಗೆ ಅವಕಾಶ ನೀಡಬೇಕು ಎಂಬ ನಿಲುವು ಹೊಂದಿದ್ದಾರೆ. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕಾಗಿ ದುಡಿಯುವ ಶಾಸಕರಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬುದು ಡಿ.ಕೆ.ಶಿವಕುಮಾರ್ರ ಪ್ರತಿಪಾದನೆಯಾಗಿದೆ. ಹೀಗಾಗಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು. +ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇಂದು ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಸಲಾಗಿದೆ. 2 ಕ್ಕಿಂತ ಹೆಚ್ಚು ಬಾರಿ ಶಾಸಕರಾಗಿರುವ ಹಿರಿಯರಿಗೆ ನಿಗಮಮಂಡಳಿಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಲು ಚರ್ಚೆ ನಡೆಸಲಾಗುತ್ತಿದೆ. ನಿರೀಕ್ಷೆಯಂತೆ ಎಲ್ಲವೂ ಹೊಂದಾಣಿಕೆಯಾದರೆ ಇಂದು ಅಥವಾ ನಾಳೆಯೊಳಗೆ ನಿಗಮ ಮಂಡಳಿಗಳ ಪಟ್ಟಿ ಬಹಿರಂಗಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_256_10.txt b/eesanje/url_46_256_10.txt new file mode 100644 index 0000000000000000000000000000000000000000..ab62772a66d9a01f0f6694f082f480f0a1c82d9f --- /dev/null +++ b/eesanje/url_46_256_10.txt @@ -0,0 +1,5 @@ +ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು +ಬೆಂಗಳೂರು,ಜ.21- ಭಕ್ತಿ, ಗೌರವ, ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರುಗಳಿಗೆ ತಿರುಗೇಟು ನೀಡಿದ್ದಾರೆ. ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. +ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮನಿದ್ದಾನೆ. ನಾವು ಬಿಜೆಪಿಯವರಿಂದ ಹೇಳಿಸಿಕೊಳ್ಳಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಿ ಎಂದು ಯಾರೂ ನಮಗೆ ಕೇಳಿರಲಿಲ್ಲ. ನಾವಾಗಿಯೇ ಪೂಜೆಗೆ ಆದೇಶ ಮಾಡಿದ್ದೇವೆ. ಕೇಳುವ, ಹೇಳುವ ಅವಶ್ಯಕತೆ ಕೂಡ ಇಲ್ಲ. ಯಾವ ರೀತಿಯ ಪೂಜೆ, ಆಚರಣೆ, ಪುರಸ್ಕಾರಗಳನ್ನು ಮಾಡಬೇಕು ಎಂಬುದು ನಮಗೆ ಗೊತ್ತಿದೆ ಎಂದರು. +ನಾಳೆ ರಜೆ ಘೋಷಣೆ ಬಿಜೆಪಿ ನಾಯಕರು ಒತ್ತಾಯ +ನಮ್ಮ ನಂಬಿಕೆ ಆಧಾರದ ಮೇಲೆ ನಾವು ಕೆಲಸ ಮಾಡುತ್ತೇವೆ. ಪ್ರಾರ್ಥನೆಗಳಿಂದ ಫಲ ದೊರೆಯುತ್ತದೆ ಎಂಬ ವಿಶ್ವಾಸವಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಎಂದು ಹೇಳುತ್ತಿದ್ದೇವೆ. ಬಿಜೆಪಿಯವರು ನಮ್ಮ ಮೇಲೆ ಒತ್ತಡ ಹೇರುವ ಅಗತ್ಯವಿಲ್ಲ. ನಾವು ನಮ್ಮ ಕರ್ತವ್ಯ ಮಾಡುತ್ತೇವೆ ಎಂದು ಹೇಳಿದರು. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಇರಬಾರದು. ಭಕ್ತಿ, ಧರ್ಮ, ಗೌರವಗಳು ಪ್ರಚಾರದ ಸರಕುಗಳಾಗಬಾರದು ಎಂದರು. \ No newline at end of file diff --git a/eesanje/url_46_256_11.txt b/eesanje/url_46_256_11.txt new file mode 100644 index 0000000000000000000000000000000000000000..8ee2362d0c8edc499bbcd307ae472de6ef7c6045 --- /dev/null +++ b/eesanje/url_46_256_11.txt @@ -0,0 +1,8 @@ +ನಾಳೆ ರಜೆ ಘೋಷಣೆ ಬಿಜೆಪಿ ನಾಯಕರು ಒತ್ತಾಯ +ಬೆಂಗಳೂರು,ಜ.21- ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ಬಾಲ ರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯಲಿದ್ದು, ರಾಜ್ಯ ಸರ್ಕಾರ ಸ್ವಯಂ ಪ್ರೇರಣೆಯಿದ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಯಾವುದೇ ಪೂರ್ವಪರ ಯೋಚಿಸದೆ ಸ್ವಪಕ್ಷೀಯರ ಮಾತು ಕೇಳದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಆಗ್ರಹಿಸಿದರು. +ರಾಮ ಮಂದಿರ ನಿರ್ಮಾಣದಿಂದ ಸಿದ್ದರಾಮಯ್ಯ ಅವರು ವಿಚಲಿತರಾಗಿದ್ದಾರೆ. ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಯಿಂದ ಸಿದ್ದರಾಮಯ್ಯ ಅವರು ಭಯಗೊಂಡು ರಜೆ ನೀಡುತ್ತಿಲ್ಲವೇನೊ ಎಂದು ಅವರು ಪ್ರಶ್ನಿಸಿದರು. ರಾಜ್ಯಪಾಲರ ಒತ್ತಡದಿಂದ ಪೊಲೀಸರು ಹರಿಪ್ರಸಾದ್ ಅವರನ್ನು ವಿಚಾರಣೆ ಮಾಡಿದ್ದಾರೆಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸದಾನಂದಗೌಡ ಅವರು, ಸಂವಿಧಾನಬದ್ದ ಸ್ಥಾನಗಳ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ. ಅವರ ಪಕ್ಷದವರೇ ಹರಿಪ್ರಸಾದ್ ಹೇಳಿಕೆ ಸರಿಯಲ್ಲ ಎಂದಿದ್ದಾರೆ. ಒಂದು ವೇಳೆ ನಾಳೆ ಏನಾದರೂ ಗಲಾಟೆಯಾದರೆ ಸರ್ಕಾರ ಕಾರಣವೇ ಹೊರತು ಹರಿಪ್ರಸಾದ್ ಅಲ್ಲ. ಈ ಬಗ್ಗೆ ಮುಖ್ಯಮಂತ್ರಿ ಗಮನಹರಿಸಬೇಕಿದೆ ಎಂದರು. +ಆರ್. ಅಶೋಕ್ ಮಾತನಾಡಿ, ದೇಶದ 15ಕ್ಕೂ ಹೆಚ್ಚು ರಾಜ್ಯಗಳು ನಾಳೆ ರಜೆ ಘೋಷಿಸಿವೆ. ಬಿಜೆಪಿಯವರು ಮಾತ್ರ ರಜೆ ಕೇಳುತ್ತಿದ್ದಾರೆ ಎಂದುಕೊಳ್ಳುವುದು ಬೇಡ. ಏಳು ಕೋಟಿ ಜನರೂ ಕೂಡ ಕೇಳುತ್ತಿದ್ದಾರೆ. ರಜೆ ನೀಡುವಂತೆ ಮುಖ್ಯಮಂತ್ರಿಗೆ ನಾನೇ ಪತ್ರ ಕೊಡುತ್ತೇನೆ ಎಂದರು. ರಾಮನ ಮೇಲೆ ಸಾಸಿವೆ ಕಾಳಿನಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಕ್ತಿ, ಪ್ರೀತಿ ಇದ್ದರೆ ರಜೆ ಕೊಡಲಿ. ಅದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಿದರೆ ಯಾರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಹೇಳಿದರು. +‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿಯ ‘ಕೆಟಿಎಂ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್ +ಗುಪ್ತಚರ ಇಲಾಖೆ ವಿಫಲವಾಗಿದೆ. ದೆಹಲಿ ನಾಯಕರು ರಜೆ ನೀಡಲು ಸಹಮತ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಜೆ ಕೊಟ್ಟಿದೆ. ಆದರೂ ರಾಜ್ಯ ಸರ್ಕಾರ ರಜೆ ನೀಡದಿರುವುದು ಸರಿಯಲ್ಲ ಎಂದರು.ಗೋವಿಂದ ಕಾರಜೋಳ ಮಾತನಾಡಿ, ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ 140 ಕೋಟಿ ಜನರ ಅಪೇಕ್ಷೆಯಾಗಿತ್ತು. ಅದು ಈಗ ಸಾಕಾರಗೊಳ್ಳುತ್ತಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು, +ನಾಳಿನ ಕಾರ್ಯಕ್ರಮಕ್ಕೆ 150 ದೇಶಗಳಿಂದ ಗಣ್ಯರು ಬರುತ್ತಿದ್ದಾರೆ. ಇದು ದೇಶದ ಜನರಿಗೆ ಸಂತೋಷ ತಂದಿದೆ. ರಾಷ್ಟ್ರದ ಜನರು ದೀಪಾವಳಿ ರೀತಿಯಲ್ಲಿ ಹಬ್ಬ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು. \ No newline at end of file diff --git a/eesanje/url_46_256_12.txt b/eesanje/url_46_256_12.txt new file mode 100644 index 0000000000000000000000000000000000000000..df92a6628ffe67ba267f748ad2f10812535527a0 --- /dev/null +++ b/eesanje/url_46_256_12.txt @@ -0,0 +1,6 @@ +ಪಿಎಸ್‍ಐ ಹಾಗೂ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಸಿಸಿಬಿ ತನಿಖೆ +ಬೆಂಗಳೂರು,ಜ.20- ಪಿಎಸ್‍ಐ ಹಾಗೂ ಸಿಟಿಐ ಹುದ್ದೆಗಳ ನೇಮಕಾತಿಗಾಗಿ ನಡೆಸುತ್ತಿರುವ ಪರೀಕ್ಷೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಬಗ್ಗೆ ಖಚಿತ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿರುವ ಅವರು, ಈ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳ ಸೋರಿಕೆಯಾಗಿರಬಹುದೆಂಬ ಶಂಕೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು. +ಪರೀಕ್ಷೆಗೆ ಸಂಬಂಧಪಟ್ಟಂತೆ ಗುಪ್ತದಳದ ಸಬ್ ಇನ್ಸ್‍ಪೆಕ್ಟರ್‍ರೊಬ್ಬರು ಪ್ರಶ್ನೆಪತ್ರಿಕೆನೀಡುವುದಾಗಿ ಪರೀಕ್ಷಾರ್ಥಿಗಳಿಗೆ ಆಮಿಷವೊಡ್ಡುವ ಆಡಿಯೋ ವೈರಲ್ ಆಗಿತ್ತು. ಆಡಿಯೋ ಗಮನಿಸಿದ ಪರೀಕ್ಷಾರ್ಥಿಗಳು ಹಾಗೂ ಕೆಲವು ಪೋಷಕರು ನಿನ್ನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಎಸ್‍ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದರು. +ಆ ದೂರನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾಯಿಸಿದ್ದಾರೆ.ಆಡಿಯೋ ವೈರಲ್ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ಪಿಎಸ್‍ಐಯನ್ನು ವಶಕ್ಕೆ ಪಡೆದು ಆಡಿಯೋ ಬಗ್ಗೆ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆಯೇ ಅಥವಾ ಯಾವುದಾರೂ ಅಕ್ರಮ ನಡೆದಿದೆಯೇ ಎಂಬ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. +ವಿಮಾನದಲ್ಲಿ ಯುವತಿಯರ ಸ್ನಾನದ ದೃಶ್ಯ ಸೆರೆ ಹಿಡಿಯುತ್ತಿದ್ದವನ ಬಂಧನ +ವೈರಲ್ ಆಗಿರುವ ಆಡಿಯೋದಲ್ಲಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಅಲ್ಲದೆ ಪ್ರಶ್ನೆಪತ್ರಿಕೆ ಖುದ್ದಾಗಿ ಕೊಡುವುದಾಗಿ ಹೇಳಿರುವುದು, ಪೋಸ್ಟಿಂಗ್ ಕೊಡಿಸುವುದಾಗಿಯೂ ಪಿಎಸ್‍ಐ ಆಮಿಷವೊಡ್ಡಿರುವುದು ಅಭ್ಯರ್ಥಿಗಳಲ್ಲಿ ಆತಂಕವುಂಟು ಮಾಡಿದೆ. ಇಂದು ಮತ್ತು ನಾಳೆ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ ಪೆಕ್ಟರ್ (ಸಿಟಿಐ) ಹುದ್ದೆಗೆ ಹಾಗೂ ಜ.23 ರಂದು ಪಿಎಸ್‍ಐ ಪರೀಕ್ಷೆ ನಡೆಯಲಿದೆ. \ No newline at end of file diff --git a/eesanje/url_46_256_2.txt b/eesanje/url_46_256_2.txt new file mode 100644 index 0000000000000000000000000000000000000000..81cce372bbaae920862672e280c2427831c1e23f --- /dev/null +++ b/eesanje/url_46_256_2.txt @@ -0,0 +1,7 @@ +ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ : ಬಿಜೆಪಿ – ಜೆಡಿಎಸ್ ಸಮಾಲೋಚನೆ +ಬೆಂಗಳೂರು,ಜ.21- ವಿಧಾನಪರಿಷತ್‍ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಬಿಜೆಪಿ, ಜೆಡಿಎಸ್ ನಾಯಕರು ಇಂದು ಬೆಳಗ್ಗೆ ಮೊದಲ ಸುತ್ತಿನ ಸಭೆ ನಡೆಸಿ ಸಮಾಲೋಚನೆ ನಡೆಸಿದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಬೋಜೇಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಪಿ.ರಂಗನಾಥ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವಥ್ ನಾರಾಯಣ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಸಿದಂತೆ ಚರ್ಚೆ ನಡೆಸಿದರು. +ರಾಮೋತ್ಸವಕ್ಕೆ ರಜೆ ಘೋಷಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ +ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಮ್ಮುಖದಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪ್ರಥಮ ಹಂತದ ಸಭೆ ನಡೆಸಿದ್ದೇವೆ. ಶಿಕ್ಷಕರ ಕ್ಷೇತ್ರದ ಉಪಚುನಾವಣೆ, ಮುಂಬರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಮೊದಲ ಹಂತದ ಸಭೆ ನಡೆಸಲಾಗಿದೆ. ಈ ಸಭೆಯ ಮಾಹಿತಿಯನ್ನು ಬಿಜೆಪಿ ಹೈಕಮಾಂಡ್‍ಗೆ ಸಂದೇಶ ತಲುಪಿಸಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಿಂದಲೇ ಸಂದೇಶವನ್ನು ನೀಡಲಿದ್ದೇವೆ ಎಂದು ಹೇಳಿದರು. +ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸಲು ಉಭಯ ಪಕ್ಷಗಳು ಒಟ್ಟಾಗಿ ಹೋಗುತ್ತೇವೆ ಎಂದ ಅವರು, ರಾಜ್ಯದಲ್ಲಿ ಕೆಟ್ಟ ಸರ್ಕಾರವಿದೆ ಅದು ತೊಲಗಬೇಕು ಎಂದರು. +ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮಮೂರ್ತಿ ಪ್ರಾಣಪ್ರತಿಷ್ಠಾಪನೆ ನಾಳೆ ನಡೆಯುವ ಹಿನ್ನಲೆಯಲ್ಲಿ ರಜೆ ಘೋಷಣೆ ಮಾಡಬೇಕೆಂಬುದು ಜನರ ಭಾವನೆ. ಹೀಗಾಗಿ ರಾಜ್ಯ ಸರ್ಕಾರ ರಜೆ ಘೋಷಿಸಬೇಕು. ಅನೇಕ ರಾಜ್ಯಗಳು ಈಗಾಗಲೇ ರಜೆ ನೀಡಿವೆ ಎಂದರು. \ No newline at end of file diff --git a/eesanje/url_46_256_3.txt b/eesanje/url_46_256_3.txt new file mode 100644 index 0000000000000000000000000000000000000000..7be6762b1473c5370ce3df98c0aaf93e751d87bd --- /dev/null +++ b/eesanje/url_46_256_3.txt @@ -0,0 +1,9 @@ +ದೇಶದೆಲ್ಲೆಡೆ ಎಲ್ಲೆಲ್ಲೂ ರಾಮನಾಮ ಜಪ +ಬೆಂಗಳೂರು,ಜ.21- ನಾಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಕೇಸರಿಮಯವಾಗಿದೆ. ಪ್ರಧಾನಿ ನರೇಂದ್ರಮೋದಿ ಯವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಪ್ರಯುಕ್ತ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಜನೆ, ದೀಪೋತ್ಸವ, ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. +ಈಗಾಗಲೇ ನಗರದ ಬಹುತೇಕ ರಸ್ತೆ ಹಾಗೂ ವೃತ್ತಗಳಲ್ಲಿ ಫ್ಲೆಕ್ಸ್, ಬ್ಯಾನರ್‍ಗಳು, ತಳಿರು ತೋರಣ ಹಾಗೂ ಮನೆಗಳ ಮೇಲೆ ಶ್ರೀರಾಮನ ಭಾವಚಿತ್ರವುಳ್ಳ ಧ್ವಜವನ್ನು ಹಾರಿಸಲಾಗಿದೆ. ಮನೆ ಮನೆಗಳಲ್ಲೂ ಸಹ ದೀಪವನ್ನು ಬೆಳಗಿಸುವ ಮೂಲಕ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ನಗರದ ಜನತೆ ಸಜ್ಜಾಗಿದ್ದಾರೆ. ದೇವಾಲಯಗಳನ್ನು ಶುಚಿಗೊಳಿಸಿ ವಿವಿಧ ಬಗೆಯ ಹೂವುಗಳಿಂದ ಸಿಂಗರಿಸಿ ಪೂಜೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. +ನಾಳೆ ಬೆಳಗ್ಗೆಯಿಂದಲೇ ಶ್ರೀರಾಮ ನಾಮ ಜಪ, ಗೋಪೂಜೆ, ಶ್ರೀರಾಮ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಪ್ರಾಣಪ್ರತಿಷ್ಠಾಪನೆಯ ಸಮಾರಂಭದ ನೇರಪ್ರಸಾರವನ್ನು ವೀಕ್ಷಿಸಲು ರಾಜಾಜಿನಗರದ ಬ್ರಿಗೇಡ್ ಗೇಟ್ ಬಳಿಯ ಓರಾಯನ್ ಮಾಲ್‍ನಲ್ಲಿ ವ್ಯವಸ್ಥೆ ಮಾಡಲಾಗಿದೆ. +ಇಂದು ಬೆಳಗ್ಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಯಲಹಂಕ ಹೆಬ್ಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದ ಸುತ್ತಮುತ್ತ ಕನ್ನಡ ಕಣ್ಮಣಿ ಭಕ್ತ ಮಂಡಳಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಮುರುಳಿ ಭಟ್ಟರ್, ಶ್ರೀಧರ್ ಭಟ್ಟರ್ ಮಾರ್ಗದರ್ಶನದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.ಚಾಮರಾಜಪೇಟೆಯ ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದಲ್ಲಿ ಮಧ್ಯಾಹ್ನ 3 ಗಂಟೆಗೆ ಎಂ.ಇ.ಸತ್ಯನಾರಾಯಣ್ ಅವರು ಸಂಯೋಜಿಸಿ ನಿರ್ದೇಶಿಸಿರುವ ರಾಮಾಯಣ ನೃತ್ಯ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. +ರಾಮೋತ್ಸವ ಶುಭ ಸಂದರ್ಭದಲ್ಲಿ “ಜಾನಕಿ ರಾಮ” ಆಲ್ಬಂ ಸಾಂಗ್ ಬಿಡುಗಡೆ +ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ಮಹಾಲಕ್ಷ್ಮಿ ಎಜುಕೇಷನಲ್ ಸಹಯೋಗದಲ್ಲಿ ಮಹಾಲಕ್ಷ್ಮಿ ಬಡಾವಣೆಯ ರಾಣಿ ಅಬ್ಬಕ್ಕ ಮೈದಾನದಲ್ಲಿ ಸೀತಾ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದೆ.ನಗರದೆಲ್ಲೆಡೆ ಶ್ರೀರಾಮನಾಮ ಜಪ ಪ್ರಾರಂಭವಾಗಿದ್ದು, ಎಲ್ಲಿ ನೋಡಿದರೂ ಕೇಸರಿ ಬಾವುಟಗಳು, ಫ್ಲೆಕ್ಸ್‍ಗಳು, ಬ್ಯಾನರ್‍ಗಳು, ಎಲ್‍ಇಡಿ ಸ್ಕ್ರೀನ್‍ಗಳು ಹಾಗೂ ದೀಪಾಲಂಕಾರಗಳು ರಾರಾಜಿಸುತ್ತಿವೆ. +ಇನ್ನು ಈ ಸುಂದರ ಕ್ಷಣವನ್ನು ಸಂಭ್ರಮಿಸಲು ಭಕ್ತ ಗಣ ಸಂಭ್ರಮದಿಂದ ಕಾಯುತ್ತಿದ್ದು, ದೇವಾಲಯಗಳಲ್ಲಿ ಪ್ರಸಾದ ವಿತರಣೆಗೂ ಸಹ ಸಕಲ ಸಿದ್ದತೆಗಳನ್ನು ಮಾಡಿಕೊಂಡಿವೆ. ಲಾಡು ವಿತರಣೆ ಕೂಡ ಹಮ್ಮಿಕೊಳ್ಳಲಾಗಿದೆ.ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ಹನುಮನ ದೇವಸ್ಥಾನದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ. ಅದೇ ರೀತಿ ನಗರಾದ್ಯಂತ ಇರುವ ಎಲ್ಲಾ ಶ್ರೀರಾಮ, ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮಹವನ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. +ಮಕ್ಕಳು ರಾಮ,ಲಕ್ಷ್ಮಣ, ಸೀತಾ ವೇಷಭೂಷಣಗಳನ್ನು ತೊಟ್ಟು ಗಮನ ಸೆಳೆಯುತ್ತಿದ್ದಾರೆ. ಬೇಧಭಾವವಿಲ್ಲದೆ ಎಲ್ಲರೂ ಸಹ ಒಟ್ಟಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಿದ್ದಾರೆ. \ No newline at end of file diff --git a/eesanje/url_46_256_4.txt b/eesanje/url_46_256_4.txt new file mode 100644 index 0000000000000000000000000000000000000000..c3244dcba0b6f9bf4025682ec2b5ddb5d47715ed --- /dev/null +++ b/eesanje/url_46_256_4.txt @@ -0,0 +1,9 @@ +ಭಾವನಾತ್ಮಕ ರಾಜಕಾರಣ ಬದಲಿಸಲು ಕಾಂಗ್ರೆಸ್ ಕಾರ್ಯತಂತ್ರ +ಬೆಂಗಳೂರು,ಜ.21- ಭಾವನಾತ್ಮಕ ರಾಜಕಾರಣದ ಅಲೆಯಲ್ಲಿರುವ ಮತದಾರರನ್ನು ಮಾರ್ಗ ಬದಲಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕಾಂಗ್ರೆಸ್ ವಲಯದ ಚಿಂತಕರ ಛಾವಡಿ ಹರಸಾಹಸ ನಡೆಸುತ್ತಿದೆ. ಶ್ರೀರಾಮಮಂದಿರದ ಹೆಸರಿನಲ್ಲಿ ಬಿಜೆಪಿ ಪ್ರತಿದಿನ ಅಬ್ಬರದ ಪ್ರಚಾರ, ಬಿರುಸಿನ ಹೇಳಿಕೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕಾಂಗ್ರೆಸ್ ವಂಶಾವಳಿಯೇ ಹಿಂದೂ ವಿರೋಧಿ ಎಂಬಂತೆ ಬಿಂಬಿಸಿದೆ. +ಇದಕ್ಕೆ ಕಾಲಕಾಲಕ್ಕೆ ಸ್ಪಷ್ಟನೆ ನೀಡಿ ಜನಾಭಿಪ್ರಾಯವನ್ನು ಸಹಜ ಸ್ಥಿತಿಗೆ ತರಲು ಕಾಂಗ್ರೆಸ್‍ಗೆ ಸಾಧ್ಯವಾಗಿಲ್ಲ. ನಮ್ಮದು ಜಾತ್ಯತೀತ ರಾಷ್ಟ್ರ. ನಾವು ಎಲ್ಲಾ ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂಬ ಸಿದ್ಧ ಹೇಳಿಕೆಯನ್ನು ಪದೇಪದೇ ಗಿಣಿಪಾಠ ಮಾಡುವ ಕಾಂಗ್ರೆಸಿಗರು ಪ್ರಸ್ತುತ ಭಾವನಾತ್ಮಕ ರಾಜಕಾರಣದ ಸವಾಲನ್ನು ಸರಿದೂಗಿಸುವಲ್ಲಿ ಯಶಸ್ಸು ಸಾಧಿಸಲಾಗಿಲ್ಲ. +ರಾಮಜನ್ಮಭೂಮಿ ವಿಚಾರ ಆಧಾರಿತ ಭಾವನಾತ್ಮಕ ರಾಜಕಾರಣ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ನಂಬಿಕೆಯನ್ನು ಕಾಂಗ್ರೆಸ್ ಹೊಂದಿದೆ. ಆದರೆ ಜನಾಭಿಪ್ರಾಯಗಳು ದಿನೇದಿನೇ ಭಾವನಾತ್ಮಕ ರಾಜಕಾರಣದ ನಿಟ್ಟಿನಲ್ಲೇ ಗಟ್ಟಿಗೊಳ್ಳುತ್ತಿವೆ. ಈ ಸವಾಲನ್ನು ಎದುರಿಸಲು ಮತ್ತೊಮ್ಮೆ ಭಾವನಾತ್ಮಕ ವಿಚಾರಗಳ ಮೊರೆ ಹೋಗಬೇಕೆ ಅಥವಾ ಅಭಿವೃದ್ಧಿ ರಾಜಕಾರಣವನ್ನು ಮುಂದಿಟ್ಟುಕೊಂಡು ಜನರನ್ನು ಜಾಗೃತಗೊಳಿಸಬೇಕೇ ಎಂಬ ಗೊಂದಲದಲ್ಲಿ ಕಾಂಗ್ರೆಸಿಗರು ಇದ್ದಂತಿದೆ. +ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಅಭಿವೃದ್ಧಿ ವಿಚಾರವಾಗಿ ಹೆಚ್ಚಿನ ಚರ್ಚೆ ಮಾಡುತ್ತಿಲ್ಲ. ಚಾಲ್ತಿಯಲ್ಲಿರುವ 12 ಜನಪ್ರಿಯ ಕಾರ್ಯಕ್ರಮಗಳಲ್ಲಿ 10 ಹಿಂದಿನ ಸರ್ಕಾರದಲ್ಲಿ ಜಾರಿಯಲ್ಲಿದ್ದ ಯೋಜನೆಗಳು. ಅವುಗಳಲ್ಲಾಗಿರುವ ಪ್ರಗತಿಯನ್ನೇ ಬೃಹತ್ ಸಾಧನೆ ಎಂದು ವಿಕಸಿತ ಸಂಕಲ್ಪ ಯಾತ್ರೆಯಲ್ಲಿ ಬಿಂಬಿಸಲಾಗುತ್ತಿದೆ. ಕೃಷಿ ಸನ್ಮಾನ್ ಹೊರತುಪಡಿಸಿದರೆ ಉಳಿದೆಲ್ಲಾ ಯೋಜನೆಗಳಲ್ಲು ರಾಜ್ಯಸರ್ಕಾರದ ಸಹಭಾಗಿತ್ವ ಮತ್ತು ಪಾಲುದಾರಿಕೆಯಿದೆ. ಹೊಸದಾಗಿರುವ ಯೋಜನೆಯೂ ಅದೊಂದೇ ಆಗಿದೆ ಎಂದು ಕಾಂಗ್ರೆಸ್‍ನ ಚಿಂತಕರ ಛಾವಡಿಯ ಪ್ರಮುಖರು ವಾದ ಮಾಡುತ್ತಿದ್ದಾರೆ. +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ಈ ಹಿಂದೆ ಯುಪಿಎ ಸರ್ಕಾರ ರೂಪಿಸಿದ್ದ ಉದ್ಯೋಗ ಖಾತ್ರಿ, ಆಹಾರ ಭದ್ರತೆ, ಶಿಕ್ಷಣದ ಹಕ್ಕು, ಮಾಹಿತಿ ಹಕ್ಕಿನಂತಹ ಸರ್ವರನ್ನೂ ಒಳಗೊಳ್ಳುವ ಜನಪರವಾದ ಯಾವುದೇ ಯೋಜನೆಗಳು ಕಳೆದ 10 ವರ್ಷಗಳಲ್ಲಿ ಜಾರಿಗೊಂಡಿಲ್ಲ. ಇಡಬ್ಲ್ಯೂಎಸ್ 370, ಜಿಎಸ್‍ಟಿ, ನೋಟು ಅಮಾನೀಕರಣ, ತ್ರಿಬ್ಬಲ್ ತಲಾಕ್‍ನಂತಹ ಕಾಯಿದೆಗಳು ಕೆಲವು ವರ್ಗ ಹಾಗೂ ಸಮುದಾಯಗಳಿಗೆ ಸೀಮಿತವಾಗಿದ್ದವು. ಇದರಲ್ಲಿನ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಪ್ರಶ್ನಿಸಬೇಕು ಎಂದು ಕಾಂಗ್ರೆಸ್‍ನ ಸಲಹೆಗಾರರು ಪ್ರತಿಪಾದಿಸುತ್ತಿದ್ದಾರೆ. +ಜ.22 ರಂದು ರಾಮಜನ್ಮಭೂಮಿಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಬಳಿಕ ಅಯೋಧ್ಯೆಯ ಚರ್ಚೆಗಳು ತಣ್ಣಗಾಗುತ್ತವೆ. ಬಾಕಿ ಉಳಿದ ಅವಯಲ್ಲಿ ಅಭಿವೃದ್ಧಿ ವಿಚಾರಗಳನ್ನೇ ಪ್ರಸ್ತಾಪಿಸುವ ಮೂಲಕ ಬಿಜೆಪಿ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದ್ದಾರೆ. +ಈ ದಿನ ಭಾವನಾತ್ಮಕ ರಾಜಕಾರಣದ ಅಲೆಯ ವೈಭವೀಕರಣದ ಬಗ್ಗೆ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿದರೆ ಅದು ನಕಾರಾತ್ಮಕ ಪರಿಣಾಮ ಬೀರಬಹುದು. ಹೀಗಾಗಿ ಜ.22 ರ ನಂತರ ಹಂತಹಂತವಾಗಿ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡ ದತ್ತಾಂಶಗಳ ಸಂಗ್ರಹ ಹಾಗೂ ಮಾಹಿತಿ ಕ್ರೂಢೀಕರಣ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_256_5.txt b/eesanje/url_46_256_5.txt new file mode 100644 index 0000000000000000000000000000000000000000..ee5291a39f5ce194b7ea8d3c54b7c3f4eaafed5a --- /dev/null +++ b/eesanje/url_46_256_5.txt @@ -0,0 +1,5 @@ +ನಾಳೆ ಸರ್ಕಾರಿ ರಜೆ ಘೋಷಿಸುವಂತೆ ಸಿಎಂಗೆ ಆರ್.ಅಶೋಕ್ ಪತ್ರ +ಬೆಂಗಳೂರು,ಜ.21- ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಕಚೇರಿ, ಶಾಲಾಕಾಲೇಜು, ಸಾರ್ವಜನಿಕ ಉದ್ದಿಮೆ ಸೇರಿದಂತೆ ರಾಜ್ಯದಲ್ಲಿ ರಜೆ ಘೋಷಣೆ ಮಾಡಬೇಕು. ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ನಾಡಿನ ಜನರು ಸಡಗರ ಸಂಭ್ರಮದಿಂದ ಆಚರಣೆ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ. +500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ನಾಳೆ ಶ್ರೀರಾಮ ವಿಗ್ರಹ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತದೆ. ಹೀಗಾಗಿ ಇಡೀ ರಾಜ್ಯದಲ್ಲಿ ಸಡಗರ, ಸಂಭ್ರಮದ ಆಚರಣೆ ನಡೆಯುತ್ತದೆ. +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ಪ್ರಧಾನಿ ನರೇಂದ್ರಮೋದಿ ಅವರು ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಅರ್ಧದಿನ ರಜೆ ಘೋಷಣೆ ಮಾಡಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಆಚರಣೆ ನಡೆಯುತ್ತಿದೆ. ನಾಳೆ ರಜೆ ಇಲ್ಲದೆ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕುಂಟಾಗಬಹುದು ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_256_6.txt b/eesanje/url_46_256_6.txt new file mode 100644 index 0000000000000000000000000000000000000000..bf7bc72811e7efc203ca66f394344beb03380248 --- /dev/null +++ b/eesanje/url_46_256_6.txt @@ -0,0 +1,8 @@ +ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವವನಲ್ಲ : ಹರಿಪ್ರಸಾದ್ +ಚಿಕ್ಕಮಗಳೂರು,ಜ.21- ಅಧಿಕಾರಕ್ಕಾಗಿ ನಾನು ವಲಸೆ ಪ್ರಾಣಿ ಅಲ್ಲ. ವಿದ್ಯಾರ್ಥಿ ದೆಸೆಯಿಂದಲೂ ಕಾಂಗ್ರೆಸ್‍ನಲ್ಲೇ ಇದ್ದೇನೆ. ಅಧಿಕಾರಕ್ಕಾಗಿ ಪಕ್ಷ ಬದಲಾವಣೆ ಮಾಡುವವನಲ್ಲ ಎಂದು ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಧಾನ-ಅಸಮಾಧಾನದ ಬಗ್ಗೆ ಅರ್ಥ ಮಾಡಿಕೊಂಡವರಿಗೆ ಗೊತ್ತಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಅವರ ಮೇಲೆ ನಾನೇಕೆ ಸಿಟ್ಟಾಗಬೇಕು ಎಂದು ಮರುಪ್ರಶ್ನಿಸಿದ್ದಾರೆ. +ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ನನಗೆ ಯಾವುದೇ ಮಾಹಿತಿ ಇಲ್ಲ. ಯಾವ ಮಾನದಂಡದ ಆಧಾರದ ಮೇಲೆ ನೇಮಕಾತಿ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ನಾನು ಸರ್ಕಾರದಿಂದ ಹೊರಗಡೆ ಇದ್ದೇನೆ. ನಮ್ಮ ಪಕ್ಷದ ಸರ್ಕಾರ ಅಧಿಕಾರದಲ್ಲಿದೆ. ಆದರೆ ನಿಗಮ ಮಂಡಳಿ ನೇಮಕಾತಿಯಲ್ಲಿ ಪಕ್ಷವನ್ನು ಎಷ್ಟು ವಿಶ್ವಾಸಕ್ಕೆ ತೆಗೆದುಕೊಂಡು ಮಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದರು. +ನನಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಅಸಮಾಧಾನ ಇಲ್ಲ. ಪಕ್ಷ ನಮ್ಮದು. ಅಧಿಕಾರಕ್ಕಾಗಿ ವಲಸೆ ಪ್ರಾಣಿ ನಾನಲ್ಲ. ಇಂತಹ ವಿಚಾರಗಳ ಕುರಿತು ನನ್ನನ್ನು ಪ್ರಶ್ನೆ ಕೇಳುವುದೂ ಸರಿಯಲ್ಲ. ಕೆಲವರು ಕಾಂಗ್ರೆಸ್ ಪಕ್ಷ ತಮ್ಮದೇ ಎಂದು ಹೇಳುತ್ತಿರುವುದರ ಬಗ್ಗೆ ನನಗೆ ಆಕ್ಷೇಪವಿದೆ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ವಲಸೆ ಬಂದವರು ಎಂಬ ಅಭಿಪ್ರಾಯ ಇರಬಹುದು. ನಾನು ಆ ಬಗ್ಗೆ ವಿಶ್ಲೇಷಿಸುವುದಿಲ್ಲ ಎಂದು ಹೇಳಿದರು. +ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ +ನಾವು ಚಿಕ್ಕ ವಯಸ್ಸಿನಿಂದಲೂ ಹಿರಿಯರು ಹೇಳಿದ ಪ್ರಕಾರ ಹಿಂದೂ ಧರ್ಮದ ಮುಖ್ಯಸ್ಥರೆಂದರೆ ಅದು ಶಂಕರಾಚಾರ್ಯರು ಎಂಬ ನಂಬಿಕೆ ಇದೆ. ಈಗ ಅಯೋಧ್ಯೆಯಲ್ಲಿನ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಶಂಕರಾಚಾರ್ಯರು ಹೋಗುತ್ತಿಲ್ಲ, ವಿಶ್ವಗುರು ಹೋಗುತ್ತಿದ್ದಾರೆ. ವಿಶ್ವಗುರು ಜಗದ್ಗುರು ಅಲ್ಲ. ಕರಾಚಾರ್ಯರ 4 ಪೀಠಗಳ ಗುರುಗಳು ಹೇಳಿಕೆ ನೀಡಿದ್ದಾರೆ. ಇಬ್ಬರು ಪ್ರಾಣ ಪ್ರತಿಷ್ಠಾಪನೆಯ ವಿರುದ್ಧವಾಗಿ ಮಾತನಾಡಿದ್ದಾರೆ. ಉಳಿದಿಬ್ಬರು ತಟಸ್ಥವಾಗಿದ್ದಾರೆ ಎಂದರು. +ಅದು ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಯಾರೂ ನಮಗೆ ಆಹ್ವಾನ ನೀಡಬೇಕಿರಲಿಲ್ಲ. ನಾವಾಗಿಯೇ ಭಾಗವಹಿಸುತ್ತಿದ್ದೆವು. ಧಾರ್ಮಿಕತೆಯನ್ನು ಒಳಗೊಂಡ ಜಾತ್ರೆಗಳಿಗೆ ನಮ್ಮನ್ನು ಯಾರೂ ಕರೆಯುವುದಿಲ್ಲ. ನಾವೇ ಹೋಗುತ್ತೇವೆ. ಆದರೆ ಅಯೋಧ್ಯೆಯಲ್ಲಿ ನಡೆಯುತ್ತಿರುವುದು ರಾಜಕೀಯ ಕಾರ್ಯಕ್ರಮ ಎಂದು ಹೇಳಿದರು. ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಿಜೆಪಿಯವರು ಯಾರು? ರಾಮ ಏನು ಅವರಿಗೆ ಫೋನ್ ಮಾಡಿ ಎಲ್ಲರಿಗೂ ಆಹ್ವಾನಪತ್ರಿಕೆ ಕೊಡಿ ಎಂದು ಹೇಳಿದ್ದಾರಾ? ಎಂದು ಪ್ರಶ್ನಿಸಿದರು. +ದೇಶದಲ್ಲಿ 33 ಕೋಟಿ ದೇವರುಗಳಿವೆ. ಯಾವ ದೇವಸ್ಥಾನಕ್ಕೆ ಬೇಕಾದರೂ ಹೋಗುತ್ತೇವೆ. ಇಂತಹ ದೇವರ ಬಳಿಗೇ ಹೋಗಬೇಕು ಎಂದೇನು ಇಲ್ಲವಲ್ಲ. ನಾವು ಮಾರಮ್ಮ, ಅಣ್ಣಮ್ಮ, ಭೂತ ಪೂಜೆ ಮಾಡುವವರು. ದೆವ್ವ ಪೂಜೆ ಮಾಡುವವರು. ಭೂತದ ಬಳಿಗೆ ಹೋಗುತ್ತೇವೆ. ಬಿಜೆಪಿಯವರು ಅಯೋಧ್ಯೆಯ ವಿಚಾರದಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_256_7.txt b/eesanje/url_46_256_7.txt new file mode 100644 index 0000000000000000000000000000000000000000..566d167f3b3176cbe23ff8544450b450b15720b3 --- /dev/null +++ b/eesanje/url_46_256_7.txt @@ -0,0 +1,6 @@ +ಮತದಾರರ ಜಾಗೃತಿಯ ವ್ಯಂಗ್ಯ ಚಿತ್ರ ಪ್ರದರ್ಶನಕ್ಕೆ ಚಾಲನೆ +ಬೆಂಗಳೂರು, ಜ.21-ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತದಾರರ ಜಾಗೃತಿಗಾಗಿ ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಬಾಗ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ಅವರು ಚಾಲನೆ ನೀಡಿದರು. +ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು. +ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗೂ ಮತದಾನದ ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಇಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಚುನಾವಣಾ ಆಯೋಗದಿಂದ ಮತದಾನದಜಾಗೃತಿಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು. +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಕಾರಿಯಾದ ಸೂರ್ಯ ಸೇನ್ ಮೊದಲಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_256_8.txt b/eesanje/url_46_256_8.txt new file mode 100644 index 0000000000000000000000000000000000000000..c9da37fd36bba72593924bcfd47938c0d9a23b3e --- /dev/null +++ b/eesanje/url_46_256_8.txt @@ -0,0 +1,7 @@ +ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ +ತುಮಕೂರು,ಜ.21- ನಡೆದಾಡುವ ದೇವರು, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀಕ್ಷೇತ್ರ ಸಿದ್ದಗಂಗೆಯ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ 5ನೇ ವರ್ಷದ ಪುಣ್ಯಸಂಸ್ಮರಣೋತ್ಸವ ಅಂಗವಾಗಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಗಳ ಗದ್ದುಗೆಗೆ ಹರಗುರು ಚರಮೂರ್ತಿಗಳು ಪೂಜೆ ಸಲ್ಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. +ಇಂದು ಮುಂಜಾನೆ 5.30 ರಿಂದಲೇ ಲಿಂಗೈಕ್ಯ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ, ನೀಲಾಂಜನ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಶ್ರೀಗಳ ಗದ್ದುಗೆಗೆ ವಿವಿಧ ಬಗೆಯ ಫಲಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಶ್ರೀಗಳ ಕಂಚಿನ ಪುತ್ಥಳಿಯನ್ನು ರಥದಲ್ಲಿ ಇರಿಸಿ ಗದ್ದುಗೆಯ ಮಂದಿರದ ಮುಂಭಾಗದಿಂದ ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮಠದ ಆವರಣದಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಅಪಾರ ಭಕ್ತರು ಹಾಗೂ ಶ್ರೀಮಠದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. +ಮಸೀದಿ, ದರ್ಗಾಗಳಲ್ಲಿ ರಾಮನಾಮ ಜಪಿಸಿ ದೀಪ ಬೆಳಗಿಸಿ ಎಂದ ಮೌಲ್ವಿ ವಿಡಿಯೋ ವೈರಲ್ +ಸಂಸ್ಮರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಶ್ರೀಮಠದಲ್ಲಿ ಆಕರ್ಷಣೀಯವಾಗಿ ನಿರ್ಮಾಣ ಮಾಡಲಾಗಿರುವ ಸ್ಮೃತಿವನವನ್ನು ಸಚಿವ ಈಶ್ವರ್ ಖಂಡ್ರೆಯವರು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಡಾ.ಶಿವಕುಮಾರ್ ಮಹಾಸ್ವಾಮೀಜಿ ಆಸ್ಪತ್ರೆಯ ಎಸ್‍ಎಂಸಿಆರ್‍ಐ ಘಟಕವನ್ನು ಉದ್ಘಾಟಿಸಿದರು. +ಶ್ರೀಗಳ ಆಶಯದಂತೆ ದಾಸೋಹಕ್ಕೆ ಹೆಚ್ಚಿನ ವ್ಯವಸ್ಥೆ ಮಾಡಲಾಗಿದ್ದು, ಮಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಬೆಳಿಗ್ಗೆಯಿಂದಲೇ ಉಪ್ಪಿಟ್ಟು, ಕೇಸರಿಬಾತ್, ಕಾಫಿ, ಟೀಯನ್ನು ವಿತರಿಸಲಾಯಿತು. ಮಧ್ಯಾಹ್ನ 11 ಗಂಟೆಯಿಂದ ರಾತ್ರಿ 11 ಗಂಟೆಯವರೆಗೂ ನಿರಂತರವಾಗಿ ಚಿತ್ರಾನ್ನ, ಪಾಯಸ, ಬೂಂದಿ, ಅನ್ನ, ಸಾಂಬಾರ್, ಮಜ್ಜಿಗೆ ಸೇರಿದಂತೆ ವಿವಿಧ ಬಗೆಯ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. +ಮಠದ ಆವರಣದ ವಿವಿಧ ಕಡೆ ದಾಸೋಹ ಕೇಂದ್ರಗಳನ್ನು ತೆರೆದಿದ್ದು, ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸ್ಥಳೀಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಜನಪ್ರತಿನಿಗಳು, ಗಣ್ಯರು, ಸ್ಥಳೀಯ ಮುಖಂಡರು, ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಶ್ರೀಗಳ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_256_9.txt b/eesanje/url_46_256_9.txt new file mode 100644 index 0000000000000000000000000000000000000000..d40be50ec8ad89c17e83f0e0925e7f5c8bc890ab --- /dev/null +++ b/eesanje/url_46_256_9.txt @@ -0,0 +1,6 @@ +ವಿಧಾನಪರಿಷತ್ ಚುನಾವಣೆ ಬಗ್ಗೆ ಜೆಡಿಎಸ್ ನಾಯಕರ ಜೊತೆ ಚರ್ಚೆ : ವಿಜಯೇಂದ್ರ +ಬೆಂಗಳೂರು, ಜ.21- ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಿರಿಯರು ಸಭೆ ಸೇರಿ ವಿಧಾನಪರಿಷತ್‍ನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ, ಮುಂದಿನ ವಿಧಾನಪರಿಷತ್ತಿನ ಉಳಿದ 6 ಸ್ಥಾನಗಳ ಚುನಾವಣೆ ಕುರಿತು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾಗಿ ಚರ್ಚೆ ಆಗಿದೆ. ಚರ್ಚಿತ ಅಂಶಗಳ ಕುರಿತಂತೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದು ಅತಿ ಶೀಘ್ರವೇ ಅಭ್ಯರ್ಥಿಗಳ ಘೋಷಣೆಗೆ ತೀರ್ಮಾನಿಸಿದ್ದೇವೆ. ಅರ್ಥಪೂರ್ಣ ಚರ್ಚೆ ನಡೆದಿದೆ. ಕಾರ್ಯಕರ್ತರು ತಳಮಟ್ಟದಲ್ಲಿ ಹೊಂದಿಕೊಂಡು ಹೋಗಲು ಯಾವುದೇ ಸಮಸ್ಯೆ ಇಲ್ಲ ಎಂದು ನುಡಿದರು. +ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು +ಲೋಕಸಭೆ ಚುನಾವಣೆ ಸಂಬಂಧ ಮುಂದಿನ ದಿನಗಳಲ್ಲಿ ವರಿಷ್ಠರು ಚರ್ಚಿಸಲಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಜಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರು ಸೇರಿ ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ವಿಷಯದಲ್ಲಿ ಗೊಂದಲ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಎಲ್ಲ ಕ್ಷೇತ್ರಗಳ ಕುರಿತು ಸವಿಸ್ತಾರವಾದ ಚರ್ಚೆ ಆಗಿದೆ ಎಂದು ಅವರು ತಿಳಿಸಿದರು. +ರಜೆ ಪ್ರಕಟಿಸಲು ಆಗ್ರಹ:ನಾಳೆ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸಾರ್ವಜನಿಕ ರಜೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಲಾದರೂ ಈ ಕುರಿತು ನಿರ್ಧಾರ ಮಾಡಬೇಕಿದೆ ಎಂದು ಅವರು ಒತ್ತಾಯಿಸಿದರು. \ No newline at end of file diff --git a/eesanje/url_46_257_1.txt b/eesanje/url_46_257_1.txt new file mode 100644 index 0000000000000000000000000000000000000000..1d76248e8ca914f7c778e1620cc74d29d61915e3 --- /dev/null +++ b/eesanje/url_46_257_1.txt @@ -0,0 +1,7 @@ +ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಬಂದಾಗ ಶಿಷ್ಠಾಚಾರ ಪಾಲನೆ ಆಗಿಲ್ಲ : ಹರಿಪ್ರಸಾದ್ +ಬೆಂಗಳೂರು, ಜ.20- ಸಿಸಿಬಿ ಅಧಿಕಾರಿಗಳು ತಮ್ಮನ್ನು ವಿಚಾರಣೆಗೆ ಒಳಪಡಿಸಲು ಬಂದ ವೇಳೆ ಶಿಷ್ಠಾಚಾರ ಪಾಲನೆ ಆಗಿಲ್ಲ ಎಂದು ಗಂಭೀರ ಆರೋಪ ಮಾಡಿರುವ ವಿಧಾನ ಪರಿಷತ್ತಿನ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್, ಎಲ್ಲಾ ದೂರುಗಳಲ್ಲೂ ರಾಜ್ಯಪಾಲರು ಇಷ್ಟೇ ಕ್ಷಿಪ್ರವಾಗಿ ವಿಚಾರಣೆ ನಡೆಸಲು ಹೇಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುವ ಯಾತ್ರಿಕರ ವಿರುದ್ದ ಗೋದ್ರಾ ಹತ್ಯಾಕಾಂಡದಂತಹ ಸಂಚು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಅಗತ್ಯ ಎಚ್ಚರಿಕೆ ವಹಿಸಬೇಕು ಎಂದು ತಾವು ಹೇಳಿಕೆ ನೀಡಿದ್ದು, ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡಿದ್ದರು ಎಂದು ಹೇಳಿದ್ದಾರೆ. +ರಾಜ್ಯಪಾಲರ ಕಚೇರಿಗೆ ಬರುವ ಎಲ್ಲಾ ದೂರುಗಳ ಬಗ್ಗೆಯೂ ಇದೇ ರೀತಿ ಕ್ಷಿಪ್ರ ವಿಚಾರಣೆ ನಡೆಯುತ್ತವೆಯೇ? ತಮ್ಮ ಕುರಿತಾದ ದೂರಿಗೆ ಸಂಬಂಧಿಸಿದಂತೆ ಮಾತ್ರ ವಿಶೇಷ ವೇಗ ಇರುವುದಾದರೆ, ಅದನ್ನು ಬೇರೆ ರೀತಿ ಅರ್ಥೈಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. +ಸುಪ್ರೀಂ ಕೋರ್ಟ್‍ನಲ್ಲೀಗ ಮೂವರು ದಲಿತ ನ್ಯಾಯಮೂರ್ತಿಗಳು +ತಮ್ಮನ್ನು ವಿಚಾರಣೆ ನಡೆಸುವಬಗ್ಗೆ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿತ್ತು ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ?. ಸಿಸಿಬಿ ಅಧಿಕಾರಿಗಳು ತಮ್ಮ ಹೋದ ನಂತರ ಗೃಹ ಸಚಿವರಿಗೆ ಮಾಹಿತಿ ಸಿಕ್ಕಿದೆ ಎಂದರು. ಒಳ ಮೀಸಲಾತಿ ವಿಷಯವಾಗಿ ಸಂವಿಧಾನ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ಕ್ರಮ ಸಮರ್ಥನೀಯವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಸಂವಿಧಾನ?ದ?ವಾಗಿ ಕ್ರಮ ಕೈಗೊಂಡಿರಲಿಲ್ಲ?. +ಮೀಸಲಾತಿ ವರ್ಗೀಕರಣ ಆಗಲು ಸಂವಿಧಾನ ತಿದ್ದುಪಡಿ ಆಗಬೇಕು. ಹಿಂದುಳಿದ ವರ್ಗಗಳಲ್ಲಿನ ಜಾತಿಗಳಲ್ಲೂ ಒಳ ಮೀಸಲಾತಿಗಾಗಿ ದೆಹಲಿಯಲ್ಲಿ ರೋಹಿಣಿ ಆಯೋಗ ರಚಿಸಲಾಗಿದ್ದು?, ಅದು ವರದಿ ನೀಡಿರುವ ಸಾಧ್ಯತೆಗಳಿವೆ ಎಂದರು. ಕಾಂತರಾ? ವರದಿ ಸಲ್ಲಿಕೆಯಾಗುವ ಮುನ್ನವೇ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ?. ವರದಿ ಸಲ್ಲಿಕೆಯಾಗಲಿ. ಚರ್ಚೆಯ ?ಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳ?ಹುದು ಎಂದು ಹೇಳಿದರು. \ No newline at end of file diff --git a/eesanje/url_46_257_10.txt b/eesanje/url_46_257_10.txt new file mode 100644 index 0000000000000000000000000000000000000000..1b30f9dc855cb1306b3bdcabfc6f121ded173442 --- /dev/null +++ b/eesanje/url_46_257_10.txt @@ -0,0 +1,7 @@ +ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನ ಉಚ್ಛಾಟನೆ +ಬೆಂಗಳೂರು, ಜ.19- ಅಲ್ಪಸಂಖ್ಯಾತರ ಮಹಿಳೆಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನನ್ನು ಕಾಂಗ್ರೆಸ್ ಪಕ್ಷ ಉಚ್ಛಾಟನೆ ಮಾಡಿದೆ. +ಶ್ರೀರಂಗಪಟ್ಟಣದ ಕಾಂಗ್ರೆಸ್‍ನ ಕಾನೂನು ಘಟಕದ ಅಧ್ಯಕ್ಷರಾಗಿದ್ದ ಬಿ.ಚಂದ್ರೇಗೌಡರು ಕಲ್ಲಡ್ಕ ಪ್ರಭಾಕರ್ ಪರವಾಗಿ ವಕಾಲತ್ತು ವಹಿಸಿ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಾದಿಸಿದ್ದರು. ಜನವರಿ 17 ರಂದು ನ್ಯಾಯಾಲಯ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ. +ವಿವಾದಿತ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾಂಗ್ರೆಸ್ ಸರ್ಕಾರ ಮೃದು ಧೋರಣೆ ಅನುಸರಿಸುತ್ತಿದೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು.ಕಳೆದ ತಿಂಗಳು 24 ರಂದು ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ತ್ರಿವಳಿ ತಲಾಖ್ ಸಂಬಂಧಪಟ್ಟಂತೆ ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಹೇಳಿಕೆ ವಿವಾದಕ್ಕೀಡಾಗಿತ್ತು. +“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ +ಸಾಮಾಜಿಕ ಕಾರ್ಯಕರ್ತೆ ನಸ್ಮಾ ನಸೀರ್ ದೂರು ನೀಡಿದ್ದರು. ಅದನ್ನು ಆರಿಸಿ ವಿವಿಧ ಸೆಕ್ಷನ್‍ಗಳಡಿ ಪ್ರಕರಣವೂ ದಾಖಲಾಗಿತ್ತು. ಆದರೆ ನ್ಯಾಯಾಲಯದ ವಿಚಾರಣೆ ವೇಳೆ ಪ್ರಭಾಕರ್ ಭಟ್ ವಿರುದ್ಧ ಬಲವಂತದ ಕ್ರಮಗಳನ್ನು ಕೈಗೊಳ್ಳು ವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿತ್ತು. ಇದನ್ನು ಕಾಂಗ್ರೆಸ್‍ನಲ್ಲಿ ಹಲವು ಶಾಸಕರು, ಸಚಿವರು ವಿರೋಧಿಸಿದ್ದರು. ಹುಬ್ಬಳ್ಳಿಯ ಕರಸೇವಕನನ್ನು ಸುಲಭವಾಗಿ ಬಂಧಿಸುವುದಾದರೆ ಹಲವು ಪ್ರಕರಣಗಳು ದಾಖಲಾಗಿರುವ ಪ್ರಭಾಕರ್ ಭಟ್ ಅವರನ್ನು ಏಕೆ ಬಂಧಿಸುತ್ತಿಲ್ಲ ಎಂಬ ಚರ್ಚೆಗಳು ನಡೆದಿದ್ದವು. +ಕಾಂಗ್ರೆಸೇತರ ಕೆಲವು ಪಕ್ಷಗಳು ಸರ್ಕಾರದ ಧೋರಣೆಯನ್ನು ಟೀಕಿಸಿದ್ದಲ್ಲದೆ, ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಮತಬ್ಯಾಂಕನ್ನಾಗಿ ಮಾತ್ರ ಬಳಕೆ ಮಾಡಿಕೊಳ್ಳುತ್ತಿದೆ. ಉಳಿದಂತೆ ಮೃದು ಹಿಂದುತ್ವ ಅನುಸರಿಸುತ್ತಿದೆ ಎಂಬ ಟೀಕೆಗಳು ಕೇಳಿಬಂದಿದ್ದವು. ಅದಕ್ಕೆ ಪೂರಕ ಎಂಬಂತೆ ಕಲ್ಲಡ್ಕ ಪ್ರಭಾಕರ್ ಭಟ್ ಪರವಾಗಿ ಕಾಂಗ್ರೆಸ್‍ನ ನಾಯಕರೂ ಆಗಿದ್ದ ಬಿ.ಚಂದ್ರೇಗೌಡ ವಾದ ಮಾಡಿದ್ದು ಮತ್ತಷ್ಟು ಮುಜುಗರ ಉಂಟುಮಾಡಿತು. ಜಾಮೀನು ದೊರೆಯುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ ಚಂದ್ರೇಗೌಡರನ್ನು ಪಕ್ಷದ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿದೆ. \ No newline at end of file diff --git a/eesanje/url_46_257_11.txt b/eesanje/url_46_257_11.txt new file mode 100644 index 0000000000000000000000000000000000000000..bd3333abed2feebc9593443ef0001eeb70d21b4a --- /dev/null +++ b/eesanje/url_46_257_11.txt @@ -0,0 +1,7 @@ +ಮೊಣಕೈ, ಮೂಗಿಗೆ ತುಪ್ಪ ಸವರುವುದೇ ಕಾಂಗ್ರೆಸ್‍ನ ಸಾಮಾಜಿಕ ನ್ಯಾಯ : ಸಿ.ಟಿ.ರವಿ +ಬೆಂಗಳೂರು: ಮೊಣಕೈ, ಮೂಗಿಗೆ ತುಪ್ಪ ಸವರುವುದೇ ಕಾಂಗ್ರೆಸ್‍ನ ಸಾಮಾಜಿಕ ನ್ಯಾಯ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಇಂದು ನಡೆದ ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ತುಪ್ಪ ನಿನಗೆ ಕೊಟ್ಟಿದ್ದೇನೆ ನೋಡು ಎನ್ನುವುದು ಕಾಂಗ್ರೆಸ್‍ನ ಪದ್ಧತಿ. ಮೂಗಿಗೆ, ಮೊಣಕೈಗೆ ಸವರಿದ ತುಪ್ಪ ತಿನ್ನಲಾಗುತ್ತದೆಯೇ ಎಂದು ಪ್ರಶ್ನಿಸಿದರು. ಮೊಣಕೈ, ಮೂಗಿಗೆ ತುಪ್ಪ ಸವರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯನವರ ನ್ಯಾಯ ಎಂದು ಟೀಕಿಸಿದರು. +ಶೇ 3ರಷ್ಟಿದ್ದ ಎಸ್‍ಟಿ ಮೀಸಲಾತಿಯನ್ನು ಶೇ 7ಕ್ಕೆ ಹೆಚ್ಚಿಸಿದ್ದು ಬಿಜೆಪಿ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಈ ನಿರ್ಧಾರ ಮಾಡಲಾಗಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ವಾಲ್ಮೀಕಿ ಜಯಂತಿ ಆಚರಣೆ ಆರಂಭಿಸಿದ್ದಾಗಿ ವಿವರಿಸಿದರು. ಬಿಜೆಪಿ ಸರಕಾರವು ಎಸ್‍ಟಿಗಳಿಗಾಗಿ ಕೇಂದ್ರ ಮತ್ತು ರಾಜ್ಯದಲ್ಲಿ ಪ್ರತ್ಯೇಕ ಸಚಿವಾಲಯ ಆರಂಭಿಸಿದೆ ಎಂದು ತಿಳಿಸಿದರು. +“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ +ಕಾಂಗ್ರೆಸ್ ಪಕ್ಷ ಟಿಪ್ಪು ಹಿಂದಿದೆ. ಬಿಜೆಪಿ, ವಾಲ್ಮೀಕಿ ಮಹರ್ಷಿಯ ಆದರ್ಶಗಳನ್ನು ಬಯಸುತ್ತಿದೆ. ಟಿಪ್ಪು ಆಡಳಿತದಲ್ಲಿ ಕನ್ನಡದ ಬದಲಾಗಿ ಪರ್ಶಿಯನ್ ಭಾಷೆ, ಮಂಡ್ಯ ಅಯ್ಯಂಗಾರರ ಮಾರಣಹೋಮ, ಕಣ್ಣೂರು, ಮಂಗಳೂರಿನ ನೆತ್ತರ ಕೋಡಿ, ಕರಾಳ ದಿನಗಳ ನೆನಪಾಗುತ್ತದೆ. ಕಾಂಗ್ರೆಸ್ ಪಕ್ಷವು ಟಿಪ್ಪು ಹಿಂದೆ ಹೋಗಲು ಬಯಸಿದರೆ, ಬಿಜೆಪಿಯವರಾದ ನಾವು ಜಗತ್ತಿಗೇ ಆದರ್ಶ ಶ್ರೀರಾಮನ ವ್ಯಕ್ತಿತ್ವವನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿಯ ಹಿಂದೆ ಹೋಗಲು ಬಯಸುತ್ತೇವೆ ಎಂದು ನುಡಿದರು. +ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು. ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಅಧ್ಯಕ್ಷತೆ ವಹಿಸಿದ್ದರು. +ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯದ ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯದ ಮಾಜಿ ಸಚಿವ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ಮತ್ತು ರಾಜ್ಯ ವಕ್ತಾರೆ ಡಾ. ತೇಜಸ್ವಿನಿಗೌಡ, ಮಾಜಿ ಶಾಸಕ ಶಿವನಗೌಡ ನಾಯಕ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮತ್ತು ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_257_12.txt b/eesanje/url_46_257_12.txt new file mode 100644 index 0000000000000000000000000000000000000000..95151e5f608157ab51f400ee61b5b4bed9a25e67 --- /dev/null +++ b/eesanje/url_46_257_12.txt @@ -0,0 +1,7 @@ +ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ +ಬೆಂಗಳೂರು,ಜ.19- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಂದೇ ಕಂತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧಪಟ್ಟಂತೆ ಇಂದು ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರೆಹಮಾನ್ ಖಾನ್, ಕೆ.ಜೆ. ಜಾರ್ಜ್, ಶಿವಾನಂದ ಪಾಟೀಲ್, ಜಮೀರ್ ಅಹಮ್ಮದ್ ಖಾನ್, +ಎಚ್.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಎನ್.ಎಸ್.ಬೋಸ್‍ರಾಜ್, ಮಾಜಿ ಮುಖ್ಯಮಂತ್ರಿ ಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಸೇರಿದಂತೆ 48 ಮಂದಿ ಸದಸ್ಯರು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಯುವಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಘಟಕ, ಸೇವಾ ದಳ ಸೇರಿದಂತೆ ಮುಂಚೂಣಿ ಘಟಕಗಳ 10 ಮಂದಿ ವಿಶೇಷ ಆಹ್ವಾನಿತರನ್ನೊಳಗೊಂಡ 58 ಮಂದಿ ಸಭೆಯಲ್ಲಿ ಭಾಗವಹಿಸಲಿ ದ್ದಾರೆ. +ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಒಂದೇ ಕಂತಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಚುನಾವಣಾ ಸಂಯೋಜಕರಾಗಿ ರುವ ಸಚಿವರು ಹಾಗೂ ವೀಕ್ಷಕರು ಗಳ ವರದಿ ಆಧರಿಸಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನ ದಂಡಗಳನ್ನು ಚರ್ಚಿಸಲಾಗುತ್ತದೆ. ಬಳಿಕ ಪ್ರತೀ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡುವ ಸಾಧ್ಯತೆಯಿದೆ. +ಅದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದೇ ಅಭ್ಯರ್ಥಿ ಹೆಸರನ್ನು ಕಳುಹಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಬಹುತೇಕ ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್‍ನ ಅಭ್ಯರ್ಥಿ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಒತ್ತು ನೀಡು ವುದು ಮೊದಲ ಆದ್ಯತೆಯಾಗಿದ್ದರೆ, ಪಕ್ಷನಿಷ್ಠೆ, ಸಮುದಾಯ ವಾರು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ. +ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಹುವಾ ಮೊಯಿತ್ರಾ +ಕಳಂಕಿತರು ಹಾಗೂ ಅಪರಾಧದ ಹಿನ್ನೆಲೆ ಉಳ್ಳವರಿಗೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವಕಾಶ ನೀಡದಿರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದಷ್ಟು ವಿವಾದರಹಿತವಾದ ಮತ್ತು ಜನಪ್ರಿಯತೆಗೊಂಡಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಸುಮಾರು 5 ಕ್ಷೇತ್ರಗಳಲ್ಲಿ ಸಚಿವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿವೆ. ಕೆಲವು ಸ್ಪರ್ಧೆಗೆ ಹಿಂದೇಟು ಹಾಕಿದರೂ ಕೂಡ ಹೈಕಮಾಂಡ್ ಗೆಲ್ಲುವ ಸಾಧ್ಯತೆ ಆಧರಿಸಿ ಸಚಿವರ ಸ್ಪರ್ಧೆಗೆ ಸೂಚನೆ ನೀಡುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಲಿವೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_257_2.txt b/eesanje/url_46_257_2.txt new file mode 100644 index 0000000000000000000000000000000000000000..832c0fdabb6a3fa4e4c298a9ca0a41c09aee1ed7 --- /dev/null +++ b/eesanje/url_46_257_2.txt @@ -0,0 +1,7 @@ +ಶಿಲೆ ಸಿಕ್ಕ ಜಾಗದಲ್ಲಿ ಶ್ರೀರಾಮನ ಭವ್ಯ ದೇಗುಲ ನಿರ್ಮಾಣ : ಜಿ.ಟಿ.ದೇವೇಗೌಡ +ಮೈಸೂರು,ಜ.20- ನಗರದ ಚಾಮುಂಡೇಶ್ವರಿ ಕ್ಷೇತ್ರದ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಲ್ಲಿ ಅಯೋಧ್ಯೆಯ ಬಾಲರಾಮನನ್ನು ಕೆತ್ತಲಾಗಿರುವುದರಿಂದ ಇದೇ ಜಾಗದಲ್ಲಿ ಶ್ರೀರಾಮ ದೇವರ ದೇವಸ್ಥಾನ ಕಟ್ಟಲಾಗುವುದು ಎಂದು ಶಾಸಕ ಮತ್ತು ಮಾಜಿ ಸಚಿವ ಜಿ.ಟಿ.ದೇವೇಗೌಡರು ತಿಳಿಸಿದ್ದಾರೆ. +ಅಯೋಧ್ಯೆಯ ಬಾಲರಾಮನ ಕೆತ್ತನೆಗೆ ಬಳಕೆಯಾದ ಕಪ್ಪು ಶಿಲೆ ಸಿಕ್ಕ ಜಮೀನಿನಲ್ಲೇ ಶ್ರೀರಾಮ ಮಂದಿರ ಕಟ್ಟುವ ನಿರ್ಧಾರ ಮಾಡಲಾಗಿದ್ದು, ಜನವರಿ 22 ರಂದು ಬೆಳಗ್ಗೆ ಈ ದೇವಸ್ಥಾನದ ಭೂಮಿಪೂಜೆ ನಡೆಯಲಿದೆ ಎಂದು ಅವರು ಹೇಳಿದರು. ಜಾಗ ಸಿಕ್ಕ ಸ್ಥಳದ 4 ಗುಂಟೆ ಜಮೀನನ್ನು ಮಂದಿರ ನಿರ್ಮಾಣಕ್ಕೆ ಸಂತೋಷದಿಂದ ಕೊಡುವುದಾಗಿ ಜಮೀನು ಮಾಲೀಕ ರಾಮದಾಸ್ ಹೇಳಿದ್ದಾರೆ ಎಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಜಿ.ಟಿ.ದೇವೇಗೌಡರು ತಿಳಿಸಿದರು. +ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್‍ಪೋರ್ಟ್, ವೀಸಾ ತಯಾರಕ +ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಮ್ಮ ಕ್ಷೇತ್ರದ ಗ್ರಾಮದಲ್ಲೇ ಕೃಷ್ಣ ಶಿಲೆ ಸಿಕ್ಕಿದೆ. ಆ ಶಿಲೆಯಿಂದ ಮೂಡಿಬಂದ ಶ್ರೀರಾಮ ಮೂರ್ತಿ ದರ್ಶನಕ್ಕೆ ಇಡೀ ಜನತೆ ಕಾಯುತ್ತಿದೆ ಇಂತಹ ಅವಕಾಶ ನಮ್ಮ ಕ್ಷೇತ್ರಕ್ಕೆ ಲಭಿಸಿದ್ದರಿಂದ ನಾನೂ ಕೂಡ ಸೌಭಾಗ್ಯವಂತ ಎಂದು ಖುಷಿ ವ್ಯಕ್ತಪಡಿಸಿದರು. +ಜಮೀನನ ಮಾಲೀಕ ದಲಿತ ಸಮುದಾಯದವರು. ರಾಮಮಂದಿರಕ್ಕಾಗಿ ಜಮೀನನ್ನೇ ಬಿಟ್ಟುಕೊಡುತ್ತೇನೆ ಎಂದು ಒಪ್ಪಿಕೊಂಡಿದ್ದಾರೆ. ಇದೆಲ್ಲ ತಾಯಿ ಚಾಮುಂಡೇಶ್ವರಿ ಆಶೀರ್ವಾದ, ನಮ್ಮ ಸೌಭಾಗ್ಯ ಎಂದು ಹೇಳಿದರು. ಮೂರ್ತಿ ಕೆತ್ತನೆಗೆ ಅರುಣ್ ಯೋಗಿರಾಜ್ ಅವರನ್ನೇ ಸಂಪರ್ಕಿಸುತ್ತೇವೆ. ಅವರ ನಿರ್ದೇಶನದಂತೆಯೇ ನಡೆಯುತ್ತೇವೆ ಎಂದು ಅವರು ತಿಳಿಸಿದರು. +ರಾಮಲಲ್ಲಾ ವಿಗ್ರಹ ಕೆತ್ತನೆಗೆ ಬಳಸಿರುವ ಶಿಲೆ ಸಿಕ್ಕ ಜಮೀನಿನ ಮಾಲೀಕರು, ಕಷ್ಟ ಪಟ್ಟು ಶಿಲೆಯನ್ನು ತೆಗೆದ ಶ್ರೀನಿವಾಸ್ ಮತ್ತು ಅವರ ಜೊತೆ ಕೆಲಸ ಮಾಡಿದವರನ್ನು ಅಯೋಧ್ಯೆಗೆ ಕಳುಹಿಸುತ್ತೇವೆ ಎಂದು ಜಿ.ಟಿ.ದೇವೇಗೌಡರು ಹೇಳಿದರು. \ No newline at end of file diff --git a/eesanje/url_46_257_3.txt b/eesanje/url_46_257_3.txt new file mode 100644 index 0000000000000000000000000000000000000000..28878bff1dd1e4f102a476b7896c0c2886a9352b --- /dev/null +++ b/eesanje/url_46_257_3.txt @@ -0,0 +1,9 @@ +ಪಿಎಸ್‍ಐ-ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್‍ಪಿನ್‍ಗಳು ಸಂಪುಟದಲ್ಲಿದ್ದಾರೋ…? +ಬೆಂಗಳೂರು,ಜ.20- ಪಿಎಸ್‍ಐ ಮತ್ತು ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಕಿಂಗ್‍ಪಿನ್‍ಗಳು ಸಚಿವ ಸಂಪುಟದಲಿದ್ದಾರೋ ಅಥವಾ ಹೊರಗಡೆ ಇದ್ದಾರೋ ಎಂಬುದನ್ನು ರಾಜ್ಯ ಸರ್ಕಾರ ಬಹಿರಂಗ ಮಾಡಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ನಡೆಯುವ ಮೊದಲೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದೆ ಎಂದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಹೊರ ಜಗತ್ತಿಗೆ ಗೊತ್ತಾಗಬೇಕು. ಅವರಿಗೆ ರಕ್ಷಣೆ ಯಾರು ಕೊಡುತ್ತಾರೆ, ಇದರ ಹಿಂದಿನ ಪ್ರಭಾವಿ ಶಕ್ತಿಗಳು ಯಾವುವು. ಇದನ್ನು ಬುಡಸಮೇತ ಕಿತ್ತು ಹಾಕಬೇಕೆಂದು ಆಗ್ರಹಿಸಿದರು. +ಪ್ರಾಣ ಪ್ರತಿಷ್ಠೆವರೆಗೆ ರಾಮಲಲ್ಲಾನ ಕಣ್ಣು ಅಗೋಚರವಾಗಿರಲಿದೆ +ಈ ಹಿಂದೆ ಇಂಥದ್ದೇ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಲಾಗಿತ್ತು. ಆದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವುದು ಗಂಭೀರ ವಿಚಾರ. ಹೀಗಾಗಿ ಹೊರ ಜಗತ್ತಿಗೆ ಇದರ ಕಿಂಗ್‍ಪಿನ್‍ಗಳು ಯಾರೆಂಬುದು ಗೊತ್ತಾಗಬೇಕು. ರಾಜಾಶ್ರಯದ ಕೃಪಕಟಾಕ್ಷದ ಮೂಲಕ ಪ್ರಕರಣ ನಡೆಯುತ್ತಿದೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡುತ್ತದೆ ಎಂದು ಶಂಕೆ ವ್ಯಕ್ತಪಡಿಸಿದರು. +ಅಯೋಧ್ಯೆಯಲ್ಲಿ ಸೋಮವಾರ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ಹಾಜರಾಗುವ ತೀರ್ಮಾನದ ವಿರುದ್ಧ ಗುಜರಾತ್ ಕಾಂಗ್ರೆಸ್ ಶಾಸಕ ಚಾವ್ಡಾ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಇದನ್ನು ತಾನು ಸ್ವಾಗತಿಸುತ್ತೇನೆ ಎಂದರು. ರಾವಣನ ಸಹೋದರ ವಿಭಿಷಣ ರಾವಣನ ದುರ್ನಡತೆ ವಿರೋಧಿಸಿ ರಾಮನ ಪರ ಬಂದ. ಅದೇ ರೀತಿ ಕಾಂಗ್ರೆಸ್‍ನಲ್ಲಿ ರಾಮನ ಮಂದಿರ ವಿಚಾರವಾಗಿ ಬೇರೆ ಬೇರೆ ಹೇಳಿಕೆಯನ್ನ ನೀಡಿದ್ದಾರೆ. ಹೀಗಾಗಿ ವಿಭಿಷಣ ಮನಸ್ಥಿತಿಯ ಕಾಂಗ್ರೆಸ್‍ನವರು ಪಕ್ಷ ತೊರೆದು ಬರುವುದು ಒಳಿತು ಎಂದು ಸಲಹೆ ಮಾಡಿದರು. +ರಾಮಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಜ. 22 ರಂದು ಸರ್ಕಾರಿ ರಜೆ ವಿಷಯದ ಕುರಿತು ಇಷ್ಟು ದಿನ ಮೀನಾಮೇಷ ಎಣಿಸಿದ್ದೆ ತಪ್ಪು, ರಜೆಕೊಡಬೇಕೆಂದು ಹೇಳಿಸಿಕೊಂಡು ಮಾಡಬೇಕಾ? ಸ್ವಯಂ ಪ್ರೇರಿತವಾಗಿ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಗೋದ್ರಾ ರೀತಿಯ ಘಟನೆಯ ಬಗ್ಗೆ ಹರಿಪ್ರಸಾದ್ ಹೇಳಿದ್ದರ ಬಗ್ಗೆ ಪೋಲಿಸರ ಬಳಿ ಮಾಹಿತಿ ನೀಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಹೇಳಿಕೆಯ ಬಗ್ಗೆ ಮಾಹಿತಿ ನೀಡಬೇಕು. ನಾಳೆ ಈ ರೀತಿಯ ಘಟನೆ ನಡೆದರೆ, ಆಗ ನಾನು ಮುಂಚೆಯೇ ಹೇಳಿಕೆ ನೀಡಿದ್ದೆ, ನನ್ನ ಬಳಿ ಮಾಹಿತಿ ಕೇಳಲಿಲ್ಲ ಎಂದು ಹೇಳಬಹುದು. ಹೀಗಾಗಿ ಮಾಹಿತಿ ನೀಡಬೇಕು ಎಂದು ಒತ್ತಡ ಹಾಕಿದರು. +ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಮಾಡಲು ಕೇಂದ್ರ ಸರ್ಕಾರದ ಒತ್ತಡ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ್ಕೆ ಕಿಡಿಕಾರಿದ ಸಿ.ಟಿ.ರವಿ, ರಾಜ್ಯಪಾಲರು ಹರಿಪ್ರಸಾದ್‍ಗೆ ಹೇಳಿ ಹೇಳಿಕೆ ಕೊಡಿಸಿದ್ದರಾ? ಅಥವ ಎಐಸಿಸಿ ಪ್ರಚೋದನೇನಾ…? ಎಂದು ಪ್ರಶ್ನಿಸಿದರು. ಖರ್ಗೆ ಅವರು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಆಗಿದ್ದರು. +ಪಿಎಸ್‍ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್ +ಪರಿಷತ್ ವಿಪಕ್ಷ ನಾಯಕರಾಗಿದ್ದರು. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದವರು, ಹಾದಿಬೀದಿಯಲ್ಲಿ ಹೋಗುವವರಲ್ಲ. ಅಂಥವರು ಹೇಳಿಕೆ ನೀಡಿದ್ದಾರೆ, ಅವರು ಯಾರ ಸಂಪರ್ಕದಿಂದ ಹೇಳಿಕೆ ನೀಡಿದ್ದಾರೆ. ಜೈಷೇ ಮಹಮದ್ ಸಂಪರ್ಕನಾ..? ತಾಲಿಬಾನ್ ಸಂಪರ್ಕನಾ? ದಾವೂದ್ ಇಬ್ರಾಹಿಂ ಸಂಪರ್ಕನಾ..? ಯಾರ ಸಂಪರ್ಕದಿಂದ ಹೇಳಿದರು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_257_4.txt b/eesanje/url_46_257_4.txt new file mode 100644 index 0000000000000000000000000000000000000000..7c94c31535523ee5c816e48948d39eeaa97cacde --- /dev/null +++ b/eesanje/url_46_257_4.txt @@ -0,0 +1,9 @@ +ಆದಾಯ ಕ್ರೂಢೀಕರಣದ ಹೊರತಾಗಿಯೂ ಸಂಪನ್ಮೂಲ ಕೊರತೆ : ಸಿದ್ದರಾಮಯ್ಯ +ಬೆಂಗಳೂರು,ಜ.20- ಕರ್ನಾಟಕ ಸರ್ಕಾರದ ದಕ್ಷ ಆದಾಯ ಕ್ರೂಢೀಕರಣದ ಹೊರತಾಗಿಯೂ ದಿನನಿತ್ಯ ಎದುರಾಗುತ್ತಿರುವ ಸವಾಲುಗಳನ್ನು ನಿಭಾಯಿಸಲು ಸಂಪನ್ಮೂಲದ ಕೊರತೆ ಕಂಡುಬರುತ್ತಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹದಿನಾರನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಸಮರ್ಪಕ ಆದಾಯ ಹಂಚಿಕೆ ಮಾಡುಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ನಗರದ ಖಾಸಗಿ ಹೋಟೆಲ್‍ನಲ್ಲಿ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಆಯೋಜಿಸಲಾಗಿದ್ದ 16ನೇ ಹಣಕಾಸು ಆಯೋಗದ ಮುಂದಿರುವ ಆರ್ಥಿಕ ಒಕ್ಕೂಟದ ಸವಾಲುಗಳ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಈ ಹಿಂದೆ 14ನೇ ಹಣಕಾಸು ಆಯೋಗದಲ್ಲಿ 4.713, ಹದಿನೈದನೇ ಹಣಕಾಸು ಆಯೋಗದಲ್ಲಿ 3.647 ತೆರಿಗೆ ಪಾಲು ಕಡಿತಗೊಂಡಿತ್ತು. 1.066 ಕಡಿತದ ಪರಿಣಾಮ ರಾಜ್ಯ ಸರ್ಕಾರ ಆದಾಯದ ಅಂತರ ತೀವ್ರಗೊಂಡಿತ್ತು. ತಲಾ ಆದಾಯ ಹೆಚ್ಚಿರುವ ರಾಜ್ಯಗಳ ಪೈಕಿ ಕಡಿಮೆ ಅಂತರದ ಹಂಚಿಕೆ ಕರ್ನಾಟಕಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ ಎಂದು ಹೇಳಿದ್ದಾರೆ. +16ನೇ ಹಣಕಾಸು ಆಯೋಗ ಆರ್ಥಿಕ ಹೊಂದಾಣಿಕೆಯ ವೇಳೆ ತಲಾ ಆದಾಯ ಮತ್ತು ಸಂಪನ್ಮೂಲ ದಕ್ಷತೆಯನ್ನು ಗಮನಿಸಬೇಕಿದೆ. ದೇಶದಲ್ಲೇ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಮರು ಪಾವತಿಯ ಪ್ರಮಾಣ ತೀರ ದುರ್ಬಲವಾಗಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ. +ಕರ್ನಾಟಕದಲ್ಲಿ ನಗರೀಕರಣದ ಪ್ರಮಾಣ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಇತರೆ ಸೌಲಭ್ಯಗಳು ಕೂಡ ಹಣಕಾಸಿನ ನೆರವನ್ನು ಹೆಚ್ಚು ಬಯಸುತ್ತಿದೆ. ಸ್ವಂತ ಸಂಪನ್ಮೂಲ ದಕ್ಷತೆಯ ಹೊರತಾಗಿಯೂ ಸವಾಲುಗಳನ್ನು ನಿಭಾಯಿಸಲು ಲಭ್ಯವಿರುವ ಆರ್ಥಿಕ ಮಿತಿ ಸಾಲುತ್ತಿಲ್ಲ. ಮುಂದಿನ 2032ರ ವೇಳೆಗೆ ಕರ್ನಾಟಕ ಒಂದು ಶತಕೋಟಿ ಡಾಲರ್ ನಿವ್ವಳ್ಳ ಆಂತರಿಕ ಉತ್ಪನ್ನ ಪ್ರಮಾಣ (ಜಿಎಸ್‍ಡಿಪಿ) ಗುರಿಯತ್ತ ಹೆಜ್ಜೆ ಹಾಕಿದೆ ಎಂದು ಹೇಳಿದ್ದಾರೆ. +ಪಿಎಸ್‍ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್ +ಮಾನವ ಸಂಪನ್ಮೂಲ ಸೂಚ್ಯಂಕದಲ್ಲೂ ಸಾಕಷ್ಟು ಏರಿಳಿತಗಳಿವೆ. ಬೆಂಗಳೂರು ನಗರ 0.738 ಪ್ರಮಾಣದಲ್ಲಿದೆ. ಯಾದಗಿರಿ 0.538, ಕಲಬುರಗಿ 0.539, ರಾಯಚೂರು 0.562 ಸ್ಥಾನದಲ್ಲಿದೆ. ತಲಾ ಆದಾಯದಲ್ಲಿ ಬೆಂಗಳೂರು 6,21,131 ರೂ.ಗಳನ್ನು ಹೊಂದಿದ್ದರೆ ಕಲಬುರಗಿ 1,24,998 ರೂ. ಪ್ರಮಾಣದಲ್ಲಿದೆ. ಈ ಅಂಶಗಳನ್ನು ಆಧರಿಸಿ ಹಣಕಾಸು ಆಯೋಗದಲ್ಲಿ ಸಂಪನ್ಮೂಲ ಹಂಚಿಕೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. +16ನೇ ಹಣಕಾಸು ಆಯೋಗ ರಚನೆಯ ಸಂದರ್ಭದಲ್ಲಿ ಈ ವಿಚಾರ ಸಂಕಿರಣ ನಡೆಯುತ್ತಿರುವುದು ಶ್ಲಾಘನೀಯ. ರಾಜ್ಯ ಸರ್ಕಾರ ಹಣಕಾಸು ಆಯೋಗದ ಮುಂದೆ ತನ್ನ ಪ್ರಾತಿನಿಧ್ಯವನ್ನು ಪ್ರತಿಪಾದಿಸಲು ಅಗತ್ಯವಾದ ಸಲಹೆ ಮತ್ತು ಶಿಫಾರಸ್ಸುಗಳನ್ನು ತಜ್ಞರಿಂದ ನಿರೀಕ್ಷಿಸಲಾಗುತ್ತಿದೆ ಎಂದರು. +13ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಡಾ.ವಿಜಿ ಖೇಲ್ಕರ್, ರಾಷ್ಟ್ರೀಯ ಸಾರ್ವಜನಿಕ ಹಣಕಾಸು ಮತ್ತು ನೀತಿ ಸಂಸ್ಥೆಯ ಮಾಜಿ ನಿರ್ದೇಶಕ ಎಂ.ಗೋವಿಂದ ರಾವ್, ರಾಜ್ಯ ಸರ್ಕಾರದ 6ನೇ ವೇತನ ಆಯೋಗದ ಅಧ್ಯಕ್ಷ ಎಂ.ಆರ್.ಶ್ರೀನಿವಾಸಮೂರ್ತಿ, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_257_5.txt b/eesanje/url_46_257_5.txt new file mode 100644 index 0000000000000000000000000000000000000000..b88ac4e99da12c928a932c4def2aa0475619a3b8 --- /dev/null +++ b/eesanje/url_46_257_5.txt @@ -0,0 +1,11 @@ +ಪಿಎಸ್‍ಐ-ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ, ಅಭ್ಯರ್ಥಿಗಳ ಆತಂಕ +ಬೆಂಗಳೂರು,ಜ.20- ಪಿಎಸ್‍ಐ ಮತ್ತು ಸಿಟಿಐ ಪರೀಕ್ಷೆ ಹೊತ್ತಿನಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮದ ಸುಳಿವು ಅಭ್ಯರ್ಥಿಗಳನ್ನು ಆತಂಕಕ್ಕೀಡು ಮಾಡಿದ್ದು, ಸಚಿವರಿಬ್ಬರ ಭಿನ್ನ ಹೇಳಿಕೆಗಳು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. +ವಾಣಿಜ್ಯ ತೆರಿಗೆ ನಿರೀಕ್ಷಕರ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಇಂದು ಮತ್ತು ನಾಳೆ ಪರೀಕ್ಷೆ ನಡೆಸುತ್ತಿದೆ. ಗೃಹ ಇಲಾಖೆಯ 545 ಪಿಎಸ್‍ಐ ಹುದ್ದೆಗಳಿಗೆ ಜ.23 ರಂದು ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಲಿದೆ. ಈ ನಡುವೆ ಗುಪ್ತಚರ ಇಲಾಖೆಯ ಪಿಎಸ್‍ಐ ಲಿಂಗಯ್ಯ ಎಂಬುವರು ಪಿಎಸ್‍ಐ ಹುದ್ದೆಗಳ ಆಕಾಂಕ್ಷಿಯೊಂದಿಗೆ ನಡೆಸಿರುವ ವಾಟ್ಸ್‍ಆ್ಯಪ್ ಚರ್ಚೆ ಮತ್ತು ದೂರವಾಣಿ ಸಂಭಾಷಣೆ ಅನುಮಾನಗಳನ್ನು ಹುಟ್ಟುಹಾಕಿದೆ. +ವಾಟ್ಸ್‍ಆ್ಯಪ್ ಚರ್ಚೆಯಲ್ಲಿ ಅಭ್ಯರ್ಥಿಗಳಿಗೆ ಕೆಲಸ ಕೊಡಿಸುವುದು ಖಚಿತ ಎಂಬ ಭರವಸೆ ನೀಡಿರುವುದು ಕಂಡುಬರುತ್ತಿದ್ದು, ಹಣ ಹೊಂದಾಣಿಕೆ ಮಾಡಿಕೊಳ್ಳುವಂತೆ ಹಾಗೂ ಖುದ್ದು ಭೇಟಿ ಮಾಡುವಂತೆ ಸಲಹೆ ನೀಡಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತದೆ. ದೂರವಾಣಿ ಸಂಭಾಷಣೆಯಲ್ಲಿ ಪಿಎಸ್‍ಐ ಹುದ್ದೆಗಳ ದರ ನಿಗದಿ ಬಗ್ಗೆ ಚರ್ಚೆಯಾಗಿದೆ. ಹಣ ಕೊಟ್ಟವರಿಗೆ ವಿಶೇಷವಾಗಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡುವುದು ಮತ್ತು ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆಯನ್ನು ತಲುಪಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. +ಲಿಂಗಯ್ಯ ಅವರದು ಎಂದು ಹೇಳಲಾದ ವಾಟ್ಸ್‍ಆ್ಯಪ್ ಚರ್ಚೆ ಮತ್ತು ಆಡಿಯೋ ಹೊರಬರುತ್ತಿದ್ದಂತೆ ಪಿಎಸ್‍ಐ ಹುದ್ದೆಯ ಆಕಾಂಕ್ಷಿಗಳು ಚಂದ್ರ ಲೇ ಔಟ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ದೂರು ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆಗೆ ಸಿಸಿಬಿಗೆ ವಹಿಸಿದ್ದು, ಸಿಸಿಬಿ ಪೊಲೀಸರು ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. +ಇಂದು ಬೆಳಿಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‍ಐ ಹಗರಣ ನಡೆದಾಗ ಅದರ ಕುರಿತು ಸರಣಿ ಆರೋಪಗಳನ್ನು ಮಾಡಿ ದಾಖಲಾತಿ ಬಿಡುಗಡೆ ಮಾಡಿ ಪ್ರಿಯಾಂಕ್ ಖರ್ಗೆ ಗಮನ ಸೆಳೆದಿದ್ದರು. ಅದರಲ್ಲೂ ಗುಲ್ಬರ್ಗ ಜಿಲ್ಲೆಯಲ್ಲೇ ಪಿಎಸ್‍ಐ ಅಕ್ರಮ ನಡೆಸಿದವರ ಕೇಂದ್ರ ಸ್ಥಾನ ಪತ್ತೆಯಾಗಿದ್ದು, ಮಹತ್ವ ಪಡೆದುಕೊಂಡಿತ್ತು. +ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್‍ಪೋರ್ಟ್, ವೀಸಾ ತಯಾರಕ +ಇತ್ತೀಚೆಗೆ ಕೆಇಎ ನಡೆಸಿದ ಪರೀಕ್ಷೆಯೊಂದರಲ್ಲಿ ಗುಲ್ಬರ್ಗದಲ್ಲೇ ನಕಲು ಮಾಡಿದ್ದ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎಸ್‍ಐ ಮತ್ತು ಸಿಟಿಐ ಪರೀಕ್ಷೆಯ ಸಂದರ್ಭದಲ್ಲೇ ಮತ್ತೊಮ್ಮೆ ಹಗರಣದ ಆರೋಪಗಳು ಎದುರಾಗಿದ್ದರಿಂದ ಇಂದು ಬೆಳಿಗ್ಗೆ ಇಬ್ಬರು ಸಚಿವರು ಪರಸ್ಪರ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲಿಂಗಯ್ಯ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದು, ಪರೀಕ್ಷಾ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ಕಲೆ ಹಾಕುವ ಸಲುವಾಗಿ ಅಣಕು ಕರೆ ಮಾಡಿರುವುದಾಗಿ ಹೇಳುತ್ತಿದ್ದಾರೆ. ಆದರೂ ಸಿಸಿಬಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿಸಿದರು. +ಇದೇ ವೇಳೆ ಪ್ರತ್ಯೇಕವಾಗಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಈ ಹಿಂದೆ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಮುಂದೆ ಅಂತಹುದು ಮರುಕಳಿಸಬಾರದು ಎಂಬ ಕಾರಣಕ್ಕೆ ಸರ್ಕಾರ ಹಲವು ಕಠಿಣ ಕ್ರಮ ಕೈಗೊಂಡಿದೆ. ಆದರೂ ಕೆಲವು ಅಧಿಕಾರಿಗಳು ತಮ್ಮ ಛಾಳಿ ಬದಲಿಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸಚಿವರಿಬ್ಬರ ಭಿನ್ನ ಹೇಳಿಕೆಗಳು ಗೊಂದಲ ಮೂಡಿಸಿವೆ. ಪಿಎಸ್‍ಐ ನೇಮಕಾತಿಯ ಅಕ್ರಮದ ವಿಚಾರವಾಗಿ ಪ್ರಿಯಾಂಕ್‍ಖರ್ಗೆ ಮತ್ತು ಪರಮೇಶ್ವರ್ ಪರಸ್ಪರ ಚರ್ಚೆ ಮಾಡಿದ ಬಳಿಕ, ಒಬ್ಬರು ಅಣಕು ಕರೆ ಎಂದರೆ, ಮತ್ತೊಬ್ಬರು ಅಧಿಕಾರಿಗಳ ಹಳೇ ಛಾಳಿ ಬಿಡುತ್ತಿಲ್ಲ ಎಂದು ದೂರಿದ್ದಾರೆ. ಇದು ಪರೀಕ್ಷೆಯಲ್ಲಿ ಮತ್ತೆ ಎಡವಟ್ಟುಗಳಾಗುತ್ತಿರುವ ಸುಳಿವು ನೀಡಿದಂತಾಗಿದೆ. +ಈ ನಡುವೆ ಕೆಪಿಎಸ್‍ಸಿ ನಡೆಸುತ್ತಿರುವ ಪರೀಕ್ಷೆಯಲ್ಲಿ ಯಾವುದೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲ. ಅನಗತ್ಯವಾಗಿ ಗೊಂದಲ ಮೂಡಿಸುವವರು ಇಂತಹ ವದಂತಿಗಳನ್ನು ಹರಿಯಬಿಡುತ್ತಾರೆ ಎಂಬ ಸಮರ್ಥನೆಗಳು ಕೇಳಿಬಂದಿವೆ. ಆದರೂ ಪರೀಕ್ಷಾರ್ಥಿಗಳಲ್ಲಿ ಅನುಮಾನಗಳು ಸಂಪೂರ್ಣ ನಿವಾರಣೆಯಾಗುತ್ತಿಲ್ಲ. \ No newline at end of file diff --git a/eesanje/url_46_257_6.txt b/eesanje/url_46_257_6.txt new file mode 100644 index 0000000000000000000000000000000000000000..48fd2b92963bdc74c31451a38ff3b8ed5feff3e7 --- /dev/null +++ b/eesanje/url_46_257_6.txt @@ -0,0 +1,13 @@ +ಹರಿಪ್ರಸಾದ್ ವಿಚಾರಣೆ ಹಿಂದೆ ರಾಜ್ಯಪಾಲರ ಹಸ್ತಕ್ಷೇಪ : ಸಚಿವ ಪ್ರಿಯಾಂಕ್ ಖರ್ಗೆ +ಬೆಂಗಳೂರು,ಜ.20- ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸಲು ಯತ್ನಿಸಿರುವುದರ ಹಿಂದೆ ರಾಜ್ಯಪಾಲ ಕಚೇರಿಯ ಹಸ್ತಕ್ಷೇಪ ಇದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿಯಿಂದ ವಿಚಾರಣೆಯ ಬಗ್ಗೆ ಪದೇಪದೇ ಮಾಹಿತಿ ಕೇಳಲಾಗಿದೆ. ಯಾವ ರೀತಿ ತನಿಖೆ ನಡೆಯುತ್ತಿದೆ ಎಂದು ರಾಜ್ಯಪಾಲರು ಪ್ರಶ್ನಿಸಿದ್ದರಿಂದಾಗಿ ಅವರ ಮಾತಿಗೆ ಗೌರವ ಕೊಟ್ಟು ಗೃಹ ಇಲಾಖೆಯ ಅಕಾರಿಗಳು ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಪಡೆಯಲು ಪ್ರಯತ್ನಿಸಿದ್ದಾರೆ. ಇದು ಅಷ್ಟಕ್ಕೇ ಮಾತ್ರ ಸೀಮಿತ ಎಂದು ತಿಳಿಸಿದರು. +ಅದನ್ನು ತಿರುಚಿ ಸರ್ಕಾರ ಅಥವಾ ಗೃಹ ಇಲಾಖೆ ಪೊಲೀಸರನ್ನು ಕಳುಹಿಸಿ ಬಿ.ಕೆ.ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಿದೆ ಎಂಬುದು ಸರಿಯಲ್ಲ ಎಂದರು. ಈ ವಿಷಯವಾಗಿ ರಾಜ್ಯಪಾಲರು ಏಕೆ ಹೆಚ್ಚು ಆಸಕ್ತಿ ವಹಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ದೇಶನ ಇದೆಯೇ, ರಾಜ್ಯಸರ್ಕಾರಕ್ಕೆ ಮತ್ತು ಹರಿಪ್ರಸಾದ್ ಅವರಿಗೆ ಮುಜುಗರ ಉಂಟುಮಾಡಲು ಪ್ರಯತ್ನಿಸಲಾಗಿದೆಯೇ ಎಂಬ ಪ್ರಶ್ನೆಗಳಿವೆ ಎಂದರು. +ಕೇಂದ್ರ ಸರ್ಕಾರ ಪ್ರತ್ಯೇಕ ಮಾದರಿಯನ್ನು ಅನುಸರಿಸುತ್ತಿದೆ. ಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರಗಳಿವೆ, ರಾಜ್ಯಪಾಲರ ಮೂಲಕ ಆಡಳಿತ ನಡೆಸುವ ಪ್ರಯತ್ನ ಮಾಡುತ್ತದೆ, ಏನೇ ಇದ್ದರೂ ನಾವು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಕಾನೂನು ಸುವ್ಯವಸ್ಥೆ ಮತ್ತು ರಾಜ್ಯಪಾಲರ ಕಚೇರಿಗೆ ಏನು ಸಂಬಂಧ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಷ್ಟ್ರಪತಿಯವರ ಆಳ್ವಿಕೆಯಿರುವ ಪರಿಸ್ಥಿತಿ ಇದೆ ಅಥವಾ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದೆ ಎಂಬ ಪರಿಸ್ಥಿತಿ ಇದ್ದರೆ ಆಗ ರಾಜ್ಯಪಾಲರು ಪ್ರಶ್ನೆ ಮಾಡಬಹುದು. ಈಗ ಅಂತಹ ಯಾವ ಪರಿಸ್ಥಿತಿ ಇದೆ ಎಂದು ಪ್ರಶ್ನಿಸಿದರು. +ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡದೆ ರಾಜ್ಯಪಾಲರು ಎರಡು-ಮೂರು ತಿಂಗಳು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿದರು. ರಾಜ್ಯಸರ್ಕಾರ ಯಾರೇ ಹಗುರವಾಗಿ ಮಾತನಾಡಿದರೂ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತದೆ. ಪ್ರಭಾಕರ್ ಭಟ್ ಅಥವಾ ಬೇರೆ ಯಾರೇ ಇದ್ದರೂ ನಮ್ಮ ಸರ್ಕಾರ ಕಾನೂನು ಮೀರಿ ಕೆಲಸ ಮಾಡುವುದಿಲ್ಲ. ಇಂದಲ್ಲಾ ನಾಳೆ ಅವರು ಜೈಲಿಗೆ ಹೋಗುತ್ತಾರೆ. ನಮ್ಮ ಸರ್ಕಾರ ಸಂವಿಧಾನ ಮತ್ತು ಬಸವಣ್ಣ ಅವರ ತತ್ವಗಳ ಆಧಾರದ ಮೇಲೆ ನಡೆಯುತ್ತದೆ ಎಂದು ಹೇಳಿದರು. +ನಿಗಮಮಂಡಳಿಗಳ ನೇಮಕಾತಿಯ ವಿಳಂಬದಿಂದ ಯಾರೂ ಅಸಮಾಧಾನಗೊಂಡಿಲ್ಲ. ನಾಲ್ಕು ಜನ ಸಭೆ ನಡೆಸಿ ಮಾತನಾಡಿದಾಕ್ಷಣ ಅಸಮಾಧಾನ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಯಾರಿಗೆ ಅಸಮಾಧಾನ ಇದೆ ಹೇಳಿ, ನಾನೇ ಸಮಾಧಾನ ಮಾಡುತ್ತೇನೆ ಎಂದು ಪ್ರಶ್ನಿಸಿದ ಅವರು, ಪ್ರಕ್ರಿಯೆ ಚಾಲನೆಯಲ್ಲಿದೆ. ಒಂದೆರೆಡು ಹೆಸರು ಬಿಟ್ಟುಹೋಗಿರಬಹುದು, ಹೈಕಮಾಂಡ್ ಜೊತೆ ಚರ್ಚಿಸಿ ಸರಿಪಡಿಸಲಾಗುತ್ತದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟ ಹೇಳಿಕೆ ನೀಡಿದ್ದಾರೆ ಎಂದರು. +ರಶ್ಮಿಕಾ ಮಂದಣ್ಣ ಅವರನ್ನು ನಾನು ವಿಹಾಹವಾಗುತ್ತಿಲ್ಲ : ದೇವರಕೊಂಡ +ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ನಿನ್ನೆ ನಡೆದ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿನ ಮಾಹಿತಿಗಳನ್ನು ಮುಖ್ಯಮಂತ್ರಿ ಅಥವಾ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಹೇಳಲು ಸಾಧ್ಯ. ಸಭೆಯಲ್ಲಿ ಇಲ್ಲದೇ ಇದ್ದವರು ನೀಡುವ ಮಾಹಿತಿಗಳಿಗೆ ಮಾನ್ಯತೆ ಇಲ್ಲ. ಎಐಸಿಸಿ ಅಧ್ಯಕ್ಷರ ಸ್ಪರ್ಧೆಯ ಬಗ್ಗೆ ಖುದ್ದು ಅವರೇ ನಿರ್ಧಾರ ತೆಗೆದುಕೊಳ್ಳಬೇಕು. ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹಾಗೂ ಎಐಸಿಸಿ ಅಧ್ಯಕ್ಷರು ನೀಡುವ ನಿರ್ದೇಶನಗಳನ್ನು ಅನುಷ್ಠಾನಕ್ಕೆ ತರುವುದಷ್ಟೇ ನಮ್ಮ ಕರ್ತವ್ಯ ಎಂದು ಹೇಳಿದರು. +ಪಿಎಸ್‍ಐ ನೇಮಕಾತಿ ಸಂದರ್ಭದಲ್ಲಿ ಯಾವುದೇ ಅಕ್ರಮಗಳಾಗದಂತೆ ಎಚ್ಚರಿಕೆ ವಹಿಸಿದ್ದೇವೆ. ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ನಿನ್ನೆ ದೂರೊಂದು ಬಂದಿದೆ. ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದು ಯುವಕರ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ಏನೂ ನಡೆದೇ ಇಲ್ಲ ಎಂದು ನಾವು ನಿರ್ಲಕ್ಷ್ಯ ವಹಿಸುವುದಿಲ್ಲ. ಎಷ್ಟೆಲ್ಲಾ ಕ್ರಮ ಕೈಗೊಂಡಿದ್ದರೂ ಕೆಲವು ಅಕಾರಿಗಳು ಹಳೇ ಚಾಳಿ ಬಿಟ್ಟಂತಿಲ್ಲ. ಹೀಗಾಗಿ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು. +ಹಿಂದಿನ ಪಿಎಸ್‍ಐ ನೇಮಕಾತಿಯಲ್ಲಿನ ಹಗರಣಗಳ ತನಿಖೆಗೆ ರಚಿಸಲಾಗಿರುವ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದ ನ್ಯಾಯಾಂಗ ಆಯೋಗ ಮುಂದಿನ ವಾರದೊಳಗಾಗಿ ಸರ್ಕಾರಕ್ಕೆ ವರದಿ ನೀಡುವ ಸಾಧ್ಯತೆಯಿದೆ. ನೇಮಕಾತಿಯಲ್ಲಿನ ಅಕ್ರಮಗಳನ್ನು ತಡೆಯಲು ಕಠಿಣ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ತಪ್ಪಿತಸ್ಥರ ವಿರುದ್ಧ ಅದರ ಅಡಿಯಲ್ಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. +ಈ ಹಿಂದೆ ಎಂದೂ ಈ ರೀತಿಯಾಗಿರಲಿಲ್ಲ. ಒಳಮೀಸಲಾತಿ ವಿಚಾರವಾಗಿ ಈ ಹಿಂದೆ ಹಲವು ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭರವಸೆ ನೀಡಿತ್ತು. ಅದರ ಬಗ್ಗೆ ನಿಜವಾದ ಕಾಳಜಿಯಿದ್ದರೆ ಸಂವಿಧಾನಕ್ಕೆ ತಿದ್ದುಪಡಿ ತರಲಿ. ಈ ಹಿಂದೆ 370, ತ್ರಿವಳಿ ತಲಾಕ್ ಸೇರಿದಂತೆ ಹಲವಾರು ಕಾಯ್ದೆಗಳನ್ನು ತರುವಾಗ ಯಾರನ್ನೂ ಕೇಳಲಿಲ್ಲ. ಈಗ ಒಳಮೀಸಲಾತಿ ವಿಷಯದಲ್ಲಿ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_257_7.txt b/eesanje/url_46_257_7.txt new file mode 100644 index 0000000000000000000000000000000000000000..c524f61a08d052a3be9aa1d2a1db802a40810769 --- /dev/null +++ b/eesanje/url_46_257_7.txt @@ -0,0 +1,10 @@ +ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ತಿಂಗಳು ಫೆಬ್ರವರಿ 16 ರಂದು ಬಜೆಟ್ ಮಂಡಿಸಲಿದ್ದು, ಅದಕ್ಕೆ ಪೂರ್ವಭಾವಿ ಸಮಾಲೋಚನಾ ಸಭೆಗಳನ್ನು ಆರಂಭಿಸಿದ್ದಾರೆ. ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್‍ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ, ತಮ್ಮ 15ನೇ ಬಜೆಟ್‍ಗೆ ಪೂರ್ವ ತಯಾರಿ ಆರಂಭಿಸಿದ್ದಾರೆ. +ಲೋಕಸಭೆ ಚುನಾವಣೆಯ ವರ್ಷವಾಗಿರುವುದರಿಂದ ಈ ಬಾರಿಯ ಬಜೆಟ್ ವ್ಯಾಪಕ ಗಮನ ಸೆಳೆದಿದೆ. ಜೊತೆಗೆ ಪಂಚಖಾತ್ರಿ ಯೋಜನೆಗಳ ಆರ್ಥಿಕ ಹೊರೆ ಹಣಕಾಸಿನ ಲೆಕ್ಕಾಚಾರಕ್ಕೆ ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಪೂರ್ವತಯಾರಿಗಳು ಆರಂಭವಾಗಿವೆ. +ಇಂದಿನಿಂದ ಸತತವಾಗಿ ಬಜೆಟ್ ಪೂರ್ವ ಭಾವಿ ಸಭೆಗಳನ್ನು ಮುಖ್ಯಮಂತ್ರಿ ನಡೆಸಲಿದ್ದಾರೆ. ಮೊದಲ ದಿನವಾದ ಇಂದು ಆರೋಗ್ಯ, ಕುಟುಂಬ ಕಲ್ಯಾಣ, ತೋಟಗಾರಿಕೆ, ಗಣಿ ಭೂವಿಜ್ಞಾನ, ರೇಷ್ಮೆ ಪಶುಸಂಗೋಪನೆ, ಯೋಜನೆ, ಉನ್ನತ ಶಿಕ್ಷಣ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಪರಿಸರ ಜೀವಿಶಾಸ್ತ್ರ, ಆಹಾರ ನಾಗರಿಕ ಸರಬರಾಜು, ಸಹಕಾರ ಸೇರಿದಂತೆ 14ಕ್ಕೂ ಹೆಚ್ಚು ಇಲಾಖೆಗಳ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಮಾಲೋಚನೆ ನಡೆಸಿದ್ದಾರೆ. +ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ +ಕಳೆದ ಬಜೆಟ್‍ನಲ್ಲಿ ನೀಡಲಾಗಿದ್ದ ಅನುದಾನವನ್ನು ಎಷ್ಟು ಬಳಕೆ ಮಾಡಿಕೊಳ್ಳಲಾಗಿದೆ, ಅನುದಾನ ಬಾಕಿ ಉಳಿಯಲು ವೈಜ್ಞಾನಿಕ ಕಾರಣಗಳೇನು, ಮುಂದಿನ ಬಜೆಟ್‍ನಲ್ಲಿ ಯಾವೆಲ್ಲಾ ಯೋಜನೆಗಳನ್ನು ಪ್ರಸ್ತಾಪಿಸಬಹುದು ಎಂಬ ವಿಚಾರಗಳ ಕುರಿತು ವಿಚಾರ ವಿನಿಮಯ ನಡೆಸಿದ್ದಾರೆ. ಇತ್ತೀಚೆಗೆ ಸಂಪನ್ಮೂಲ ಸಂಗ್ರಹ ಇಲಾಖೆಗಳಾದ ವಾಣಿಜ್ಯ ತೆರಿಗೆ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಸೇರಿದಂತೆ ಪ್ರಮುಖ ಆದಾಯ ಮೂಲಗಳ ಬಗ್ಗೆ ಪರಾಮರ್ಶೆ ನಡೆಸಿದರು. +ಮುಂದಿನ ದಿನಗಳಲ್ಲಿ ರಾಜ್ಯದ ಮಟ್ಟಿಗೆ ಹೊಂದಿಸಬಹುದಾದ ಆರ್ಥಿಕ ಸಂಪನ್ಮೂಲ, ಕೇಂದ್ರದಿಂದ ನಿರೀಕ್ಷಿಸಬಹುದಾದ ಯೋಜನೆ ಹಾಗೂ ಯೋಜನೇತರ ನೆರವು, ತೆರಿಗೆ ಪಾಲು, ವಿಶೇಷ ಅನುದಾನಗಳನ್ನು ಅಂದಾಜಿಸಿ ಬಜೆಟ್ ಲೆಕ್ಕಾಚಾರಗಳನ್ನು ನಡೆಸಲಾಗುತ್ತಿದೆ. ಉಳಿದ ಇಲಾಖೆಗಳಲ್ಲಿ ಕೇಂದ್ರ ಸಹಭಾಗಿತ್ವದಲ್ಲಿ ನೂರಕ್ಕೂ ಹೆಚ್ಚು ಯೋಜನೆಗಳು ಪ್ರಗತಿಯಲ್ಲಿದ್ದು, ಬಹಳಷ್ಟು ಅನುದಾನದ ಕೊರತೆಯಿಂದ ನೆನೆಗುದಿಯಲ್ಲಿವೆ. ಜೊತೆಗೆ ರಾಜ್ಯಸರ್ಕಾರ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಎಂಬ ಜನಪ್ರಿಯ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ವರ್ಷ 39 ಸಾವಿರ ಕೋಟಿ ರೂ.ಗಳನ್ನು ಪಂಚಖಾತ್ರಿಗಳಿಗಾಗಿ ಖರ್ಚು ಮಾಡುವ ನಿರೀಕ್ಷೆಗಳಿವೆ. ಮುಂದಿನ ವರ್ಷ ಇದು 59 ಸಾವಿರ ಕೋಟಿಗೆ ಏರಿಕೆಯಾಗುವ ಸಾಧ್ಯತೆಯಿದೆ. +ಪಂಚಖಾತ್ರಿಗಳಿಂದಾಗಿ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ ಎಂಬ ಆರೋಪಗಳು ಆಡಳಿತ ಪಕ್ಷದ ಶಾಸಕರನ್ನೂ ಒಳಗೊಂಡಂತೆ ವ್ಯಾಪಕವಾಗಿ ಕೇಳಿಬಂದಿವೆ. ಪ್ರಸ್ತುತ ವಿಧಾನಸಭೆ ಚುನಾವಣೆ ನಡೆದು ಸರ್ಕಾರಕ್ಕೆ ಅಸ್ತಿತ್ವಕ್ಕೆ ಬರುವ ವೇಳೆಗೆ ಹಿಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಬಜೆಟ್ ಮಂಡಿಸಿದ್ದರು. +ಮೈಥಿಲಿ ಹಾಡಿದ ಶಬರಿ ಹಾಡಿಗೆ ಮೋದಿ ಫಿದಾ +ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮುಂದಿನ ಬಜೆಟ್‍ನ್ನು ಮುಂದುವರೆಸುವುದರ ಜೊತೆಗೆ ಹೆಚ್ಚುವರಿಯಾಗಿ ಅಲ್ಪಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಈ ಬಾರಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತಿರುವುದರಿಂದ ಅದರಲ್ಲೂ ಸಿದ್ದರಾಮಯ್ಯನವರ 15ನೇ ಬಜೆಟ್ ಆಗಿರುವುದರಿಂದ ಭಾರೀ ನಿರೀಕ್ಷೆಯಿದೆ. ಅದನ್ನು ತಲುಪಲು ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_257_8.txt b/eesanje/url_46_257_8.txt new file mode 100644 index 0000000000000000000000000000000000000000..f0a97b04c51c749f0aadfc96e57d00a099fa54c2 --- /dev/null +++ b/eesanje/url_46_257_8.txt @@ -0,0 +1,9 @@ +ಪಿಎಸ್‍ಐ ನೇಮಕಾತಿ ಪರೀಕ್ಷೆಗೆ ಕಟ್ಟೆಚ್ಚರ : ಪರಮೇಶ್ವರ್ +ಬೆಂಗಳೂರು,ಜ.20- ಪಿಎಸ್‍ಐಗಳ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳಾಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ಕಲೆ ಹಾಕುವ ವೇಳೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ಅದರ ಸತ್ಯಾಸತ್ಯತೆ ಬಗ್ಗೆಯೂ ಸಿಸಿಬಿ ತನಿಖೆ ನಡೆಸುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ಆಗಿರುವ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಳೆದ ಮೂರು ವರ್ಷಗಳಿಂದಲೂ ಪಿಎಸ್‍ಐ ಹುದ್ದೆಗಳ ನೇಮಕಾತಿ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ವ್ಯವಸ್ಥೆಯ ಮೇಲೆಯೇ ಜನರಿಗೆ ಅಪನಂಬಿಕೆ ಬರುವಂತಾಗಿದೆ. ಅದನ್ನು ಸುಳ್ಳು ಎಂದು ಸಾಬೀತುಪಡಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು. +ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಹಿಂದೆ ನಡೆದ ಯಾವುದೇ ಲೋಪಗಳೂ ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಗುಪ್ತಚರ ಇಲಾಖೆ ಎಚ್ಚರಿಕೆಯಿಂದ ಮಾಹಿತಿ ಕಲೆ ಹಾಕುತ್ತಿದೆ. ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರು ತಾವು ಮಾಹಿತಿ ಕಲೆ ಹಾಕುವ ಸಲುವಾಗಿ ನಕಲಿ ಕರೆ ಮಾಡಿದ್ದಾಗಿ ಹೇಳುತ್ತಿದ್ದಾರೆ. ಅದರ ಸತ್ಯಾಸತ್ಯತೆ ಬಗ್ಗೆ ಕೂಡ ಸಿಸಿಬಿಯವರು ವಿಚಾರಣೆ ನಡೆಸುತ್ತಿದ್ದಾರೆ. +ಅಣಕು ಕರೆ ಮಾಡಿರುವುದು ನಿಜವೇ ಅಥವಾ ಯಾವುದಾದರೂ ಹಗರಣಗಳು ನಡೆದಿವೆಯೇ ಎಂಬುದರ ಬಗ್ಗೆಯೂ ಕೂಡ ಸಿಸಿಬಿಯವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಎಲ್ಲರಿಗೂ ಒಂದೇ. ನನ್ನನ್ನೂ ಒಳಗೊಂಡಂತೆ ಯಾರೇ ಆದರೂ ಕಾನೂನಿನ ವ್ಯಾಪ್ತಿಯಲ್ಲೇ ನಡೆದುಕೊಳ್ಳಬೇಕಿದೆ. +ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಪ್ರಯತ್ನಿಸಿದ್ದರು. ಅದರ ಬಗ್ಗೆ ಹರಿಪ್ರಸಾದ್ ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ ಎಂದರು. ಹರಿಪ್ರಸಾದ್‍ರವರಿಗೆ ರಾಜಕೀಯವಾಗಿ ತೊಂದರೆ ಮಾಡುವ ಯಾವುದೇ ಹುನ್ನಾರಗಳಿಲ್ಲ. ಪೊಲೀಸರು ಕಾನೂನಿನ ಅನುಸಾರ ನಡೆದುಕೊಳ್ಳುತ್ತಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಎಫ್‍ಐಆರ್ ದಾಖಲಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸುವ ತಯಾರಿ ನಡೆದಿದೆ. ಸಂಸದ ಅನಂತಕುಮಾರ್ ಹೆಗ್ಡೆ ವಿರುದ್ಧವೂ ಎಫ್‍ಐಆರ್ ದಾಖಲಿಸಲಾಗಿದೆ. ಪೊಲೀಸರು ಎಲ್ಲರ ವಿಷಯದಲ್ಲೂ ಕಾನೂನಿನ ಪ್ರಕಾರದಲ್ಲೇ ನಡೆದುಕೊಳ್ಳುತ್ತಾರೆ ಎಂದು ಹೇಳಿದರು. +ಬೋರ್ಡಿಂಗ್ ಶಾಲೆಗೆ ಬೆಂ ಕಿ ಬಿದ್ದು 13 ವಿದ್ಯಾರ್ಥಿಗಳ ಸಾವು +ಒಳಮೀಸಲಾತಿ ವಿಚಾರವಾಗಿ ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರು ಒಳಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ನಮ್ಮ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರಮೋದಿಯವರು ಈ ಹಿಂದೆ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿಗೆ ಸಂಬಂಧಪಟ್ಟಂತೆ ಭರವಸೆ ನೀಡಿದ್ದರು. ಅದರ ಅನುಸಾರ ಕೇಂದ್ರ ಉನ್ನತ ಸಮಿತಿಯೊಂದನ್ನು ರಚಿಸಿದೆ. +ಈಗ ಆ ಸಮಿತಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದು ಕಾದುನೋಡುತ್ತೇವೆ. ಸಂವಿಧಾನ ತಿದ್ದುಪಡಿಗೆ ಒಪ್ಪುತ್ತಾರೋ ಅಥವಾ ಬೇಡ ಎನ್ನುವ ತೀರ್ಮಾನ ಮಾಡುತ್ತಾರಾ ಎಂಬುದನ್ನು ನಿರೀಕ್ಷಿಸುತ್ತಿದ್ದೇವೆ ಎಂದರು. \ No newline at end of file diff --git a/eesanje/url_46_257_9.txt b/eesanje/url_46_257_9.txt new file mode 100644 index 0000000000000000000000000000000000000000..62560fa81a23ab78564e30f1f2650e8a06e60119 --- /dev/null +++ b/eesanje/url_46_257_9.txt @@ -0,0 +1,8 @@ +ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್‍ಪೋರ್ಟ್, ವೀಸಾ ತಯಾರಕ +ನವದೆಹಲಿ, ಜ. 20 (ಪಿಟಿಐ)ನಕಲಿ ಪಾಸ್‍ಪೋರ್ಟ್ ಮತ್ತು ವೀಸಾ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದುಬೈನಿಂದ ಆಗಮಿಸಿದ ಸಾದಿಕುಲ್ಲಾ ಬೇಗ್ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. +ಬಂಧನದ ಬಗ್ಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ ಉಷಾ ರಂಗನಾನಿ ಅವರು, ಪಂಜಾಬ್‍ನ ಲೂಯಾನದಲ್ಲಿ ನಕಲಿ ವೀಸಾ ಪ್ರಕರಣದಲ್ಲಿ ಬೇಗ್ ಹೆಸರು ಕಾಣಿಸಿಕೊಂಡ ನಂತರ ಅವರ ವಿರುದ್ಧ ಲುಕ್ ಔಟ್ ಸುತ್ತೋಲೆ ಹೊರಡಿಸಲಾಗಿತ್ತು. +ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಅವರು ಭಾರತಕ್ಕೆ ಬಂದಿಳಿದ ತಕ್ಷಣ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು, ನಂತರ ಅವರನ್ನು ವಶಕ್ಕೆ ತೆಗೆದುಕೊಂಡು ದೆಹಲಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ರಂಗನಾನಿ ಹೇಳಿದ್ದಾರೆ. +ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ +ನಕಲಿ ವೀಸಾ ಪ್ರಕರಣವನ್ನು ಉಲ್ಲೇಖಿಸಿದ ರಂಗನಾನಿ, ಲೂಯಾನಾದ ಹರ್ವಿಂದರ್ ಸಿಂಗ್ ಧನೋವಾ ಎಂದು ಗುರುತಿಸಲಾದ ಪ್ರಯಾಣಿಕರೊಬ್ಬರು ಕೆಲವು ತಿಂಗಳ ಹಿಂದೆ ಏಜೆಂಟ್ ಮುಸ್ಕಾನ್ ಅಲಿಯಾಸ್ ಮನ್‍ಪ್ರೀತ್ ಕೌರ್ ಒದಗಿಸಿದ ನಕಲಿ ವೀಸಾದಲ್ಲಿ ಪ್ರಯಾಣಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ಪೊಲೀಸರು ಮನ್‍ಪ್ರೀತ್‍ನನ್ನು ಬಂಧಿಸಿದರು, ಅವರು ಬೆಂಗಳೂರು ಮೂಲದ ಮತ್ತೊಬ್ಬ ಏಜೆಂಟ್ ಸಾದಿಕುಲ್ಲಾ ಬೇಗ್‍ಗೆ 5 ಲಕ್ಷ ರೂಪಾಯಿಗಳನ್ನು ಪಾವತಿಸಿದ್ದಾರೆ ಎಂದು ಬಹಿರಂಗಪಡಿಸಿದರು ಎಂದು ಅಧಿಕಾರಿ ಹೇಳಿದರು. +ಹಲವಾರು ಪೊಲೀಸ್ ದಾಳಿಗಳು ಬೇಗ್ ಅನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಮತ್ತು ಆದ್ದರಿಂದ, ಲುಕ್-ಔಟ್ ಸುತ್ತೋಲೆಯನ್ನು ಹೊರಡಿಸಲಾಗಿತ್ತು ಎಂದು ಅವರು ಹೇಳಿದರು. ನಕಲಿ ವೀಸಾ ಸ್ಟಿಕ್ಕರ್ ಅನ್ನು ದುಬೈ ಮೂಲದ ಏಜೆಂಟ್ ತನಗೆ ಒದಗಿಸಿದ್ದಾನೆ ಎಂದು ಬೇಗ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ ಎಂದು ಮತ್ತೊಬ್ಬ ಪೊಲೀಸ್ ಅಕಾರಿ ತಿಳಿಸಿದ್ದಾರೆ.ತಾನು ಮತ್ತು ಆತನ ಸಹಚರರು ಸುಲಭದ ಹಣದ ಆಸೆಗಾಗಿ ಜನರನ್ನು ವಂಚಿಸಿದ್ದಾರೆ ಎಂದು ಬೇಗ್ ಪೊಲೀಸರಿಗೆ ತಿಳಿಸಿದ್ದಾರೆ. +ಹೆಚ್ಚಿನ ತನಿಖೆಯ ಸಮಯದಲ್ಲಿ, ವ್ಯಕ್ತಿಯ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲಾಗಿದೆ. ಅದರಲ್ಲಿ 1.5 ಲಕ್ಷ ರೂಪಾಯಿ ಇದ್ದು, ಉಳಿದ ಹಣವನ್ನು ತನ್ನ ಸಂಬಂಧಿಕರಿಗೆ ವರ್ಗಾಯಿಸಿರುವುದಾಗಿ ಬೇಗ್ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ರೀತಿಯ ಇತರ ಪ್ರಕರಣಗಳಲ್ಲಿ ಅವರ ಸಂಭವನೀಯ ಒಳಗೊಳ್ಳುವಿಕೆಯನ್ನು ಪತ್ತೆಹಚ್ಚಲು ಹೆಚ್ಚಿನ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_258_1.txt b/eesanje/url_46_258_1.txt new file mode 100644 index 0000000000000000000000000000000000000000..003da134d75f588dfaf4271a63750b963c95384a --- /dev/null +++ b/eesanje/url_46_258_1.txt @@ -0,0 +1,6 @@ +ಕಚೇರಿಯಲ್ಲಿ ಕುಳಿತುಕೊಳ್ಳದೆ ಜನರ ಬಳಿಗೆ ಹೋಗಿ : ಡಿಸಿಗಳಿಗೆ ಕೃಷ್ಣಬೈರೇಗೌಡ ತಾಕೀತು +ಬೆಂಗಳೂರು,ಜ.19- ಜಿಲ್ಲಾಧಿಕಾರಿಗಳು ಕಚೇರಿಯಲ್ಲಷ್ಟೇ ಕುಳಿತುಕೊಂಡರೆ ಸಾಲುವುದಿಲ್ಲ, ಕ್ಷೇತ್ರಗಳಿಗೂ ಭೇಟಿ ನೀಡಿ ಕೆಲಸ ಮಾಡಬೇಕೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಾಕೀತು ಮಾಡಿದ್ದಾರೆ. ವಿಕಾಸಸೌಧದಲ್ಲಿಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಆನ್‍ಲೈನ್‍ನಲ್ಲಿ ಸಭೆ ನಡೆಸಿದ ಸಚಿವರು, ಕಂದಾಯ ಇಲಾಖೆ ಬೇರೆಲ್ಲಾ ಇಲಾಖೆಗಳಿಗಿಂತಲೂ ಹೆಚ್ಚಿನ ಕೆಲಸ ಮಾಡಬೇಕೆಂದು ತಾಕೀತು ಮಾಡಿದ್ದಾರೆ. +ಡಿಜಿಟಲೀಕರಣಕ್ಕೆ ಕೇಂದ್ರ ಸರ್ಕಾರದಿಂದ 500 ಕೋಟಿ ರೂ. ಹಣ ಅನುದಾನ ದೊರೆತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ತಹಸೀಲ್ದಾರ್, ನೋಂದಣಾಧಿಕಾರಿಗಳು ಹಾಗೂ ನಾಡ ಕಚೇರಿಗಳಲ್ಲಿನ ದಾಖಲಾತಿಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ. +ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್ +ಸರ್ವೆ ಕೆಲಸಗಳಿಗೆ ವೇಗ ನೀಡಬೇಕಾಗಿದೆ. ಇದಕ್ಕೆ ಅಗತ್ಯವಿರುವ ಸರ್ವೆಯರ್‍ಗಳನ್ನು ನೇಮಕ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಯವರು ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿಗಳು ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ನಕಾಶೆ ರಸ್ತೆ ನೀಡಲು ವಿಳಂಬ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ತಾವು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಈ ರೀತಿಯ ಸಮಸ್ಯೆಗಳು ಹೆಚ್ಚು ಕೇಳಿಬರುತ್ತಿವೆ ಎಂದು ತಿಳಿಸಿದರು. +ಫೆಬ್ರವರಿ ಮೊದಲ ವಾರದೊಳಗೆ ಎಲ್ಲಾ ತಾಲೂಕುಗಳಲ್ಲೂ ತಹಸೀಲ್ದಾರರು ಬರನಿರ್ವಹಣೆ ಸೇರಿದಂತೆ ಇತರೆ ವಿಚಾರಗಳ ಕುರಿತು ಕಾರ್ಯಪಡೆಯ ಸಭೆಗಳನ್ನು ನಡೆಸಬೇಕು. ಅರ್ಹ ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಘೋಷಣೆ ಮಾಡಬೇಕೆಂದು ಸೂಚನೆ ನೀಡಿದರು. \ No newline at end of file diff --git a/eesanje/url_46_258_10.txt b/eesanje/url_46_258_10.txt new file mode 100644 index 0000000000000000000000000000000000000000..3e71b467d5dd8c10422dc9be97610e0f10065997 --- /dev/null +++ b/eesanje/url_46_258_10.txt @@ -0,0 +1,8 @@ +857 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್‌ಡಿ ಅಳವಡಿಕೆ +ಬೆಂಗಳೂರು,ಜ.18- ಮೆಟ್ರೋ ರೈಲು ಹಳಿಗಳಿಗೆ ಜಿಗಿಯುವವರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳಲ್ಲಿ ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪ್ಲಾಟ್ ಫಾರ್ಮ್ ಸ್ಟ್ರೀನ್ ಡೋರ್ (ಪಿಎಸ್‌ಡಿ ) ಅಳವಡಿಕೆಯ ಟೆಂಡರ್ ಫೈನಲ್ ಆಗಿದೆ. ಸಿಬಿಟಿಸಿ ಸಿಗ್ನಲಿಂಗ್ ಮತ್ತು ಪಿಎಸ್‌ಡಿ ಅಳವಡಿಕೆಗೆ 857 ಕೋಟಿ ರೂ.ಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಬಿಎಂಆರ್ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ಎ.ಎಸ್ ಶಂಕರ್ ತಿಳಿಸಿದ್ದಾರೆ. +ಮೆಟ್ರೋ ಹಳಿಯ ಮೇಲೆ ಜಿಗಿಯುವವರ ಸಂಖ್ಯೆ ನಗರದಲ್ಲಿ ಹೆಚ್ಚಾಗುತ್ತಿದೆ. ಜನವರಿ ಮೊದಲ ವಾರದಲ್ಲಿ ಎರಡು ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.ಇಂತಹ ಅವಘಡಗಳನ್ನು ತಡೆಯುವ ಉದ್ದೇಶದಿಂದ ಮೆಟ್ರೋ ನಿಲ್ದಾಣಗಳಲ್ಲಿ ಭದ್ರತಾ ಸಿಬ್ಬಂದಿ ಹೆಚ್ಚಳ ಮಾಡಲಾಗಿದೆ. ಒಟ್ಟು 9 ಪ್ಲಾಟ್ ಫಾರಂಗಳಲ್ಲಿ ಹೆಚ್ಚುವರಿಯಾಗಿ 326 ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು. +ರೈಲುಗಳು ಸಂಚರಿಸುವಾಗ ಪ್ರಯಾಣಿಕರ ಚಲನವಲನದ ಮೇಲೆ ನಿಗಾ ಇಡಲು 326 ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ರೈಲುಗಳ ಆಗಮನದ ಮೊದಲು ಪ್ರಯಾಣಿಕರನ್ನು ಸರದಿ ಪ್ರಕಾರ ನಿಲ್ಲಿಸುವುದು, ಹಳದಿ ಗೆರೆ ದಾಟದಂತೆ ನೋಡಿಕೊಳ್ಳುವುದು ಭದ್ರತಾ ಸಿಬ್ಬಂದಿ ಗಳ ಕೆಲಸವಾಗಿರುತ್ತದೆ. ಮುಂದುವರೆದು ಸುರಕ್ಷತೆ ದೃಷ್ಟಿಯಿಂದ ಪ್ಲಾಟ್ಫಾರಂ ಸ್ಟ್ರೀನ್ ಡೋರ್ (ಪಿಎಸ್‌ಡಿ ) ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದರು. +ನಮ್ಮ ಮೆಟ್ರೊದ ಗುಲಾಬಿ ಮತ್ತು ನೀಲಿ ಮಾರ್ಗದ ಹೊಸ ನಿಲ್ದಾಣಗಳು ಪ್ಲಾಟ್ ಫಾರ್ಮ್ ಪರದೆಯ ಬಾಗಿಲುಗಳಲ್ಲಿ ಪಿಎಸ್ಡಿ ಅಳವಡಿಸುವ ಕಾರ್ಯವನ್ನು ಅಲ್ಸ್ಟಾಮ್ ಟ್ರಾನ್ಸ್ ಪೋರ್ಟ್ ಇಂಡಿಯ ಸಂಸ್ಥೆ ಟೆಂಡರ್ ಪಡೆದುಕೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು +ಹಾಕಲು ಟೆಂಟರ್21 ಕಿ.ಮೀ ಉದ್ದದ ಗುಲಾಬಿ ಮಾರ್ಗದ ಕಾಳೇನ ಅಗ್ರಹಾರ ಟೂ ನಾಗವಾರ ಮತ್ತು 56 ಕಿ.ಮೀ. ನೀಲಿ ಮಾರ್ಗ (ಸೆಂಟ್ರಲ್ ಸಿಲ್ಕ ಬೋರ್ಡ್ – ಕೆಆರ್ಪುರ- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗ, ನಿಲ್ದಾಣಗಳಲ್ಲಿ ಪಿಎಸ್ಡಿ ಅಳವಡಿಕೆಗೆ ಟೆಂಡರ್ ಫೈನಲ್ ಆಗಿದೆ. +ಪೂರ್ಣ-ಎತ್ತರದ ಪ್ಲಾಟ್ಫಾರ್ಮ್ ಪರದೆಯ ಬಾಗಿಲುಗಳನ್ನು (ಪಿಎಸ್ಡಿ) 13 ಭೂಗತ ಹಾಗೂ 37 ಎಲಿವೇಟೆಡ್ ನಿಲ್ದಾಣಗಳಲ್ಲಿ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಹಳದಿ ಮಾರ್ಗದ ಇನೋಸಿಸ್ ನಿಲ್ದಾಣದಲ್ಲಿ ಇನೋಸಿಸ್ ಫೌಂಡೇಶನ್, ಪ್ಲಾಟ್ಫಾರಂ ಸ್ಟ್ರೀನ್ ಡೋನ್ (ಪಿಎಸ್‌ಡಿ) ಅಳವಡಿಸಲು ಮನವಿ ಮಾಡಿಕೊಂಡಿತ್ತು. ಸಿಎಸ್ ಡಿ ಸ್ಟ್ರೀನ್ ಡೋರ್ ಗಾಗಿ ಹೆಚ್ಚುವರಿ ವೆಚ್ಚ ಭರಿಸಲು ಇನೋಸಿಸ್ ಒಪ್ಪಿಗೆ ನೀಡಿದೆ. \ No newline at end of file diff --git a/eesanje/url_46_258_11.txt b/eesanje/url_46_258_11.txt new file mode 100644 index 0000000000000000000000000000000000000000..81c2d895e1260ae97fd131e46adef7d988a38f1f --- /dev/null +++ b/eesanje/url_46_258_11.txt @@ -0,0 +1,11 @@ +ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿ 2.3 ಲಕ್ಷ ಹಣ ಕಳೆದುಕೊಂಡ ವೃದ್ಧ +ಬೆಂಗಳೂರು, ಜ.18- ಮೊಬೈಲ್‌ನಲ್ಲಿ ಯೂ ಟ್ಯೂಬ್ ಗಮನಿಸುತ್ತಾ ಅದರಲ್ಲಿನ ಫೇಕ್ ವಿಡಿಯೋ ನೋಡಿದ ವೃದ್ಧರೊಬ್ಬರು ಹಣದಾಸೆಯಿಂದಾಗಿ 2.3 ಲಕ್ಷ ರೂ. ಕಳೆದುಕೊಂಡಿದ್ದು, ಇದೀಗ ಪೊಲೀಸರ ಮೊರೆ ಹೋಗಿದ್ದಾರೆ. ವೃದ್ಧರೊಬ್ಬರು ಯೂ ಟ್ಯೂಬ್ ಫಾಲೋ ಮಾಡುತ್ತಿದ್ದರು. ಸೈಬರ್ ವಂಚಕರು ಸೃಷ್ಟಿಸಿದ್ದ 2 ರೂ. ಹಾಗೂ 5 ರೂ. ನಾಣ್ಯಗಳಿದ್ದರೆ ಅದಕ್ಕೆ ಬದಲಾಗಿ ಲಕ್ಷಾಂತರ ಹಣ ಕೊಡುವುದಾಗಿ ಬಿತ್ತರವಾಗಿದ್ದ ನಕಲಿ ವಿಡಿಯೋವನ್ನು ಗಮನಿಸಿ ದುರಾಸೆ ಬಂದಿದೆ. +ನಂತರ ವಿಡಿಯೋದಲ್ಲಿದ್ದ ಫೋನ್ ನಂಬರ್ಗೆ ಕರೆ ಮಾಡಿದ ವೃದ್ಧ, ತನ್ನ ಬಳಿ 2 ರೂ. ಹಾಗೂ 5 ರೂ. ನಾಣ್ಯ ಇದೆ ಎಂದು ಹೇಳಿದಾಗ, ಸೈಬರ್ ಅಪರಾಧಿಗಳು ತಮ್ಮದು ಅಸಲಿ ವ್ಯವಹಾರವೆಂದು ನಂಬಿಸಿ ಹಳೆಯ ನಾಣ್ಯಗಳನ್ನು ಎಣಿಸುವ ದೃಶ್ಯ ತೋರಿಸಿದ್ದಾರೆ. +ತಮಗೆ ನಾಣ್ಯಗಳ ಫೋಟೋ ತೆಗೆದು ಕಳುಹಿಸಿ ಎಂದು ವಂಚಕರು ಹೇಳಿದಾಗ, ಅದರಂತೆ 2, 5 ಹಾಗೂ 1 ರೂ. ನಾಣ್ಯಗಳ ಫೋಟೋ ತೆಗೆದು ಕಳುಹಿಸಿದಾಗ ಇವು 31 ಲಕ್ಷ ರೂ. ಬೆಲೆಬಾಳುತ್ತೆ ಎಂದು ನಂಬಿಸಿದ್ದಾರೆ. ನಂತರ ಸೈಬರ್ ವಂಚಕರು ವೃದ್ಧನಿಗೆ ಕರೆ ಮಾಡಿ ತೆರಿಗೆ ನಿಯಮ ಉಲ್ಲೇಖಿಸಿ ನೀವು ಕಮಿಷನ್ ಕೊಡಬೇಕು ಎಂದು ಹೇಳಿದ್ದಾರೆ. +ಹಣ ವರ್ಗಾವಣೆಗಾಗಿ ವೃದ್ಧ ಆನ್ಲೈನ್ ನಂಬರ್ ಕೊಟ್ಟು, ಒಟಿಪಿ ಸಹ ಹೇಳಿದ್ದಾರೆ. ತಕ್ಷಣ ವಂಚಕರು ವೃದ್ಧನ ಖಾತೆಯಿಂದ 2.3 ಲಕ್ಷ ರೂ. ಎಗರಿಸಿದ್ದಾರೆ. ಅಲ್ಲದೆ, ಮತ್ತೆ ಕರೆ ಮಾಡಿ ಇನ್ನೂ ಹೆಚ್ಚಿನ ಹಣ ಕೇಳಿದಾಗ, ಅನುಮಾನ ಬಂದು, ಹಣ ಕಳುಹಿಸಲು ಆಗುವುದಿಲ್ಲವೆಂದಾಗ, ಆರೋಪಿಗಳು ಅಲರ್ಟ್ ಆಗಿದ್ದಾರೆ.ನಂತರದ ದಿನಗಳಲ್ಲಿ ಸೈಬರ್ ವಂಚಕರು ವೃದ್ಧನಿಗೆ ಕರೆ ಮಾಡಿ ನಾವು ಮುಂಬೈ ಪೊಲೀಸರೆಂದು ಕರೆ ಮಾಡಿ, ನಿಮ್ಮ ಮೇಲೆ ಮನಿ ಲಾಂಡ್ರಿಂಗ್ ಪ್ರಕರಣ ಇದೆಯೆಂದು ಹೇಳಿ; ನಿಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ ಎಂದು ಹೆದರಿಸಿದ್ದಾರೆ. +ಇದರಿಂದ ಗಾಬರಿಯಾದ ವೃದ್ಧ, ಹಲಸೂರು ಠಾಣೆ ಪೊಲೀಸರ ಮೊರೆ ಹೋಗಿ, ತಾನು ಯಾವುದೇ ತಪ್ಪು ಮಾಡಿಲ್ಲ, ಯೂ ಟ್ಯೂಬ್ನಲ್ಲಿನ ವಿಡಿಯೋ ನೋಡಿ ಹಣ ಕಳೆದುಕೊಂಡಿರುವುದಾಗಿ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಸೈಬರ್ ವಂಚಕರ ಮೊಬೈಲ್ ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ. +ಇಷ್ಟಕ್ಕೆ ಸುಮ್ಮನಾಗದ ಸೈಬರ್ ವಂಚಕರು ಮತ್ತೆ ವೃದ್ಧನಿಗೆ ಕರೆ ಮಾಡಿ ನಾವು ಕೇಂದ್ರ ತನಿಖಾ ಸಂಸ್ಥೆಯ ಅಕಾರಿಗಳು, ನಿಮ್ಮ ಪೊಲೀಸರಿಗೆ ಹೆದರುವುದಿಲ್ಲ. ನಿಮ್ಮನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. +ಅನುಚಿತ ವರ್ತನೆ ಯುವಕನಿಗಾಗಿ ಶೋಧ..ಬೆಂಗಳೂರು,ಜ.18- ನಗರದ ಹೋಟೆಲ್ವೊಂದರ ಬಳಿ ಕಾಮುಕನೊಬ್ಬ ಹಿಂದಿನಿಂದ ಯುವತಿಯನ್ನು ಸ್ಪರ್ಶಿಸಿ ವಿಕೃತಿ ಮೆರೆದಿದ್ದು, ಆತನಿಗಾಗಿ ವಿಜಯನಗರ ಠಾಣೆ ಪೊಲೀಸರು ಶೋಧ ಕೈಗೊಂಡಿದ್ದಾರೆ. ವಿಜಯನಗರ ಆರ್ಪಿಸಿ ಲೇಔಟ್ನಲ್ಲಿರುವ ಹೋಟೆಲ್ವೊಂದಕ್ಕೆ ಡಿ.31ರಂದು ಮೂವರು ಯುವಕರು ಬಂದು ದೋಸೆ ತಿನ್ನುತ್ತಾ ಹರಟೆ ಹೊಡೆಯುತ್ತಿದ್ದರು. +ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್ +ಆ ಸಂದರ್ಭದಲ್ಲಿ ಹೋಟೆಲ್ಗೆ ಬಂದ ಯುವತಿ ಕ್ಯಾಶ್ ಕೌಂಟರ್ ಬಳಿ ಹೋಗಿ ನಿಂತಿದ್ದಾಗ ಈ ಮೂವರು ಯುವಕರ ಪೈಕಿ ಒಬ್ಬಾತ ಹಣ ಕೊಡಲು ಕೌಂಟರ್ ಬಳಿ ಹೋಗುತ್ತಾ ಅಲ್ಲೇ ನಿಂತಿದ್ದ ಯುವತಿಗೆ ಹಿಂದಿನಿಂದ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದಾಗ, ಉಳಿದಿಬ್ಬರು ಸ್ನೇಹಿತನ ವರ್ತನೆ ನೋಡಿ ಖುಷಿಪಟ್ಟಿದ್ದಾರೆ.ತಕ್ಷಣ ಯುವತಿ ಈ ಬಗ್ಗೆ ಪ್ರಶ್ನಿಸಿದಾಗ ಯುವಕ-ಯುವತಿ ನಡುವೆ ಗಲಾಟೆ ನಡೆದು ಕೂಗಾಡಿದಾಗ ಸ್ಥಳೀಯರು ಜಮಾಯಿಸುತ್ತಿದ್ದಂತೆ ಮೂವರು ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. +ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಗೆ ಹೋಟೆಲ್ ಕ್ಯಾಶಿಯರ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅಸಭ್ಯ ತೋರಿದ ಯುವಕನಿಗಾಗಿ ಶೋಧ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_258_12.txt b/eesanje/url_46_258_12.txt new file mode 100644 index 0000000000000000000000000000000000000000..5266e8a967e8cf26d8fc702837879d3b0541ba63 --- /dev/null +++ b/eesanje/url_46_258_12.txt @@ -0,0 +1,9 @@ +ಒಳ ಮೀಸಲಾತಿ ಪರಿಷ್ಕರಣೆ : ಪರಮೇಶ್ವರ್ +ಬೆಂಗಳೂರು,ಜ.18- ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಪಟ್ಟಂತೆ ಹಿಂದಿನ ಸರ್ಕಾರ ರೂಪಿಸಿದ್ದ ನಿಯಮಗಳನ್ನು ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆಗೂ ಮೊದಲು ಪಕ್ಷದ ವತಿಯಿಂದ ಚಿತ್ರದುರ್ಗದಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಸಮಾವೇಶ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಒಂದು ನಿರ್ಣಯ ಮಾಡಲಾಗಿತ್ತು. ಅದರಂತೆಯೇ, ಒಳ ಮೀಸಲಾತಿ ವಿಚಾರದಲ್ಲಿ ಒಂದು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕೆಂದು ನಾವೆಲ್ಲ ಅಭಿಪ್ರಾಯ ಪಟ್ಟಿದ್ದೇವೆ. +ಸದಾಶಿವ ಆಯೋಗದ ವರದಿಯನ್ನು ಎರಡು ಸದನದಲ್ಲಿ ಮಂಡಿಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಹಿಂದಿನ ಸರ್ಕಾರವು ಒಂದು ಉಪಸಮಿತಿಯನ್ನು ರಚಿಸಿ, ವರದಿಯನ್ನು ರಿಜೆಕ್ಟ್ ಮಾಡಿದೆ. ನಂತರ ಬೇರೆ ವರದಿಯನ್ನು ತೆಗೆದುಕೊಂಡು ಮೀಸಲಾತಿ ಹೆಚ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶಿಫಾರಸ್ಸಿನಲ್ಲಿ ಒಳ ಮೀಸಲಾತಿಯಲ್ಲಿ ಇಂತಿಷ್ಟು ಮೀಸಲಾತಿ ನೀಡಬೇಕೆಂದು ಹೇಳಲಾಗಿತ್ತು. ಆದರೆ ಈ ಪ್ರಕ್ರಿಯೆಯು ಕಾನೂನಾತ್ಮಕವಾಗಿ ನಡೆದಿಲ್ಲ. ಈಗ ಅದನ್ನು ಪುನರ್ ಪರಿಶೀಲನೆ ನಡೆಸುತ್ತೇವೆ. ಸಂವಿಧಾನ 241 ತಿದ್ದುಪಡಿ ಆಗಬೇಕು. ಈ ಬಗ್ಗೆ ಸರ್ಕಾರದಲ್ಲಿ ಚರ್ಚಿಸಬೇಕಾಗುತ್ತದೆ. +ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು +ಇದನ್ನು ಸರ್ಕಾರ ಯಾವ ರೀತಿ ನಿರ್ಧಾರ ಮಾಡಬೇಕಾಗುತ್ತದೆ ಎಂಬುದನ್ನು ಕ್ಯಾಬಿನೇಟ್ಗೆ ತರಬೇಕಾಗುತ್ತದೆ. ಹಿಂದಿನ ಸರ್ಕಾರವು ವರದಿಯನ್ನು ಸದನದಲ್ಲಿ ರಿಜೆಕ್ಟ್ ಮಾಡಿಬಿಟ್ಟಿದ್ದಾರೆ. ಹೀಗಾಗಿ ಈ ವಿಷಯವನ್ನು ಮತ್ತೇ ಸದನಕ್ಕೆ ತೆಗೆದುಕೊಂಡು ಹೋಗಲು ಆಗುವುದಿಲ್ಲ. +ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ಹೊಣೆ ಹಾಕಲಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಿದ್ದುಪಡಿ (ಅಮೆಂಡ್ಮೆಂಟï) ಯನ್ನು ಕೇಂದ್ರ ಸರ್ಕಾರವೇ ಮಾಡಬೇಕಾಗುತ್ತದೆ. ನಮಗೆ ತಿದ್ದುಪಡಿ ಮಾಡುವ ಅಧಿಕಾರ ಇದ್ದಿದ್ದರೆ, ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತಿರಲಿಲ್ಲ. ಹೀಗಾಗಿ ಕೇಂದ್ರದ ಮೇಲೆ ಹೊಣೆ ಹಾಕುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ. ತಿದ್ದುಪಡಿ ಮಾಡಬೇಕು ಎಂಬುದನ್ನು ಕೇಂದ್ರಕ್ಕೆ ತಿಳಿಸುತ್ತಿದ್ದೇವೆ ಎಂದರು. +ಒಳ ಮೀಸಲಾತಿ ವಿಚಾರದಲ್ಲಿ ಬಲ ಸಮುದಾಯದವರು ವಿಶ್ವಾಸಕ್ಕೆ ಬಂದಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಮಾಡಿದ ಮೇಲೆ ಎಲ್ಲರೂ ವಿಶ್ವಾಸಕ್ಕೆ ಬರಲೇಬೇಕಾಗುತ್ತದೆ. ಇಡೀ ದೇಶದಲ್ಲಿ ಕಾನೂನಿಗೆ ಎಲ್ಲರೂ ಗೌರವಿಸಲೇಬೇಕು ಎಂದು ಹೇಳಿದರು. +ನಿಗಮ ಮಂಡಳಿಗಳ ನೇಮಕಾತಿ :ಕೆಲ ಶಾಸಕರು ಮೂರರಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಅಂಥವರಿಗೆ ಸಚಿವ ಸ್ಥಾನ ಲಭಿಸಿಲ್ಲ. ಇನ್ನೂ ಹೆಚ್ಚಿನ ಸೇವೆ, ಜವಾಬ್ದಾರಿಗಳನ್ನು ನಿಭಾಯಿಸಬೇಕೆಂಬ ಆಸೆ ಇರುತ್ತದೆ. ಹೀಗಾಗಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು. +ಸಂಸದರ ವಿರುದ್ಧ ಕ್ರಮ:ಸಂಸದ ಅನಂತಕುಮಾರ್ ಹೆಗಡೆ ಹಿಂದೆ ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರ ವಿಚಾರದಲ್ಲಿ ಏಕಾಏಕಿ ಕ್ರಮ ತೆಗೆದುಕೊಳ್ಳದೆ ಸಂಯಮದಿಂದ ಪೊಲೀಸರು ವರ್ತಿಸಿದ್ದಾರೆ. ಆದರೆ ಅವರು ಪದೇ ಪದೇ ತಮ್ಮ ಪ್ರವೃತ್ತಿಯನ್ನು ಮುಂದುವರೆಸಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. ಉನ್ನತ ಸ್ಥಾನಮಾನದಲ್ಲಿದ್ದವರು ಕನಿಷ್ಠ ಪ್ರಜ್ಞೆಯನ್ನು ಪಾಲಿಸಬೇಕು. ಆದರೆ ಅನಂತಕುಮಾರ್ ಹೆಗಡೆಯವರು ಹಲವಾರು ಬಾರಿ ಗಡಿ ಮೀರಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_258_2.txt b/eesanje/url_46_258_2.txt new file mode 100644 index 0000000000000000000000000000000000000000..ff6ea891bb221b8692da6b1e26a45e5c79b0e71b --- /dev/null +++ b/eesanje/url_46_258_2.txt @@ -0,0 +1,14 @@ +“ಒಕ್ಕಲಿಗರೇ ಉದ್ಯೋಗ ನೀಡುವ ಉದ್ಯಮಿಗಳಾಗಿ” : ನಿರ್ಮಲಾನಂದನಾಥ ಮಹಾಸ್ವಾಮೀಜಿ +ಬೆಂಗಳೂರು,ಜ.19- ಒಕ್ಕಲಿಗರು ಕೃಷಿಗೆ ಸೀಮಿತವಾಗದೆ ಬದಲಾಗುತ್ತಿರುವ ಸ್ಥಾನಮಾನಕ್ಕೆ ತಕ್ಕಂತೆ ಬದುಕನ್ನು ಕೂಡ ಬದಲಾಯಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು. ಅರಮನೆ ಮೈದಾನದಲ್ಲಿಂದು ಬೆಂಗಳೂರಿನ ಫಸ್ಟ್ ಸರ್ಕಲ್ ಸೊಸೈಟಿ ಇಂದಿನಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಉದ್ಯಮಿ ಒಕ್ಕಲಿಗ ಎಕ್ಸ್‍ಪೋ ಉದ್ಘಾಟನಾ ಕಾರ್ಯಕ್ರಮದ ದಿವ್ಯ ಸಾನೀಧ್ಯವಹಿಸಿ ಅವರು ಮಾತನಾಡಿದರು. +ಕೃತಕ ಬುದ್ದಿಮತ್ತೆ, ರೋಬೊಟಿಕ್ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ನಾವು ಎಚ್ಚೆತ್ತುಕೊಳ್ಳದಿದ್ದರೆ ಯಂತ್ರ ಮಾನವ ಜೊತೆ ಯುದ್ಧ ಮಾಡುವ ಇಲ್ಲವೇ ಸ್ಪರ್ಧೆ ಮಾಡುವ ಕಾಲ ದೂರವಿಲ್ಲ. ಬದಲಾವಣೆಗೆ ತಕ್ಕಂತೆ ನಾವು ಬದಲಾಗಿ ಸ್ಪರ್ಧೆ ಎದುರಿಸಲು ಸನ್ನದ್ದರಾಗಬೇಕು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮುಂತಾದ ಕ್ಷೇತ್ರದಲ್ಲಿ ನಾಲ್ಕಾರು ಜನರಿಗೆ ಉದ್ಯೋಗ ನೀಡುವ ಉದ್ಯಮಿಗಳಾಗಬೇಕು. ಇಲ್ಲದಿದ್ದರೆ ಡೈನೋಸರ್ ರೀತಿ ಅವನತಿ ಹೊಂದಬೇಕಾಗುತ್ತದೆ ಎಂದರು. +ಒಕ್ಕಲಿಗ ಉದ್ಯಮಿಯಾದರೆ ಹಲವು ಮಂದಿಗೆ ಉದ್ಯೋಗ ನೀಡಬಹುದು ಎಂದು ಹೇಳಿದರು.ಗಂಗರ ಅರಸರ ಕಾಲದಿಂದಲೂ ಒಕ್ಕಲಿಗರು ಒಕ್ಕಲುತನದ ಜೊತೆಗೆ ಸಾಮ್ರಾಜ್ಯವನ್ನು ಕಟ್ಟಿ ಆಳಿದ್ದಾರೆ. ಗಂಗ ಅರಸರ ಕಾಲದಲ್ಲಿ ಉಪಪಂಗಡಗಳು ಇರಲಿಲ್ಲ. ಉದ್ಯಮಿ ಒಕ್ಕಲಿಗ ಸಮಾವೇಶದಲ್ಲಿ ಎಲ್ಲರೂ ಒಂದಾಗಿರುವುದು ಸಂತೋಷ. ಬೇಸಾಯದ ಜೊತೆಗೆ ಉದ್ಯಮ ಕ್ಷೇತ್ರಕ್ಕೂ ವಿಸ್ತರಿಸಿಕೊಡಬೇಕು. ಆ ಮೂಲಕ ನಾಡಿಗೆ ಅನ್ನ ನೀಡುವ ಒಕ್ಕಲಿಗ ಉದ್ಯೋಗ ನೀಡುವ ಉದ್ಯಮಿಯಾಗಬೇಕು ಎಂದು ಸಲಹೆ ಮಾಡಿದರು. +ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ +ಬೇರೊಬ್ಬರ ಮರ್ಜಿಯಲ್ಲಿದ್ದರೆ ಜಾತಿ ಅಥವಾ ಗೌಡ ಎಂಬ ಹೆಸರನ್ನು ಹೇಳಿಕೊಳ್ಳಲು ಹಿಂಜರಿಕೆಯಾಗುತ್ತದೆ. ನಾವು ನಾಯಕನ ಸ್ಥಾನದಲ್ಲಿ ಇದ್ದಾಗ ನಾವೇ ಇನ್ನೊಬ್ಬರಿಗೆ ಉದ್ಯೋಗ ನೀಡುವಂತಾದರೆ ಗೌಡ ಎಂಬ ಹೆಗ್ಗಳಿಕೆ ಉಳಿಯುತ್ತದೆ ಎಂದರು. ಫಸ್ಟ್ ಸರ್ಕಲ್ ಸೊಸೈಟಿಯ ಮುಖ್ಯಸ್ಥ ಜಯರಾಂ ರಾಯಪುರೆ ಅವರು ಉದ್ಯಮಿಗಳನ್ನು ಬೆಸೆಯುವ ಕಾರ್ಯ ಮಾಡುತ್ತಿದ್ದು, ಶ್ರೀಮಠದಿಂದ ಎಲ್ಲ ಸಹಕಾರ ನೀಡುವುದಾಗಿ ಹೇಳಿದರು. +ನಿಷ್ಠೂರವಾಗಿ ಹೇಳಬಹುದು:ಇದಕ್ಕೂ ಮುನ್ನ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ದೀಪದಂತೆ ಸಮುದಾಯವನ್ನು ಉಜ್ವಲವಾಗಿ ಬೆಳೆಸುತ್ತಾರೆ. ಇಡೀ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕಾರ್ಯ ಮಾಡಿದ್ದಾರೆ. ಸಮುದಾಯದ ಮುಖಂಡರು, ನಮ್ಮಂಥ ನಾಯಕರು ತಪ್ಪು ಮಾಡಿದಾಗ ನಿಷ್ಠೂರವಾಗಿ ಹೇಳಬಹುದು ಎಂದರು. +ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಇನ್ನು ನಾಲ್ಕು ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಪರಸ್ಪರ ಒಟ್ಟಿಗೆ ಸಂಘದ ಏಳಿಗೆಗೆ ಶ್ರಮಿಸಬೇಕು. ಕಿತ್ತಾಡಿದರೆ ಆಡಳಿತಾಧಿಕಾರಿಯನ್ನು ಸಂಘಕ್ಕೆ ನೇಮಿಸಬೇಕಾಗುತ್ತದೆ ಎಂದು ಸಂಘಕ್ಕೆ ಎಚ್ಚರಿಸಿದರು. +ಉದ್ಯಮಿಗಳ ಜೊತೆ ಎರಡು ಗಂಟೆಗಳ ಕಾಲ ಬೆರೆತು ಸಮಾಲೋಚನೆ ನಡೆಸುವುದಾಗಿ ಹೇಳಿದವರು, ನಾಯಕರಾದವರು ನಾಯಕರನ್ನು ಸೃಷ್ಟಿ ಮಾಡಬೇಕು. ನಮ್ಮ ಸಮಾಜದ ಆಧಾರ ಸ್ತಂಭವಾಗಿ ನಾನು ಮುಂದಿರುವೆ. ಒಕ್ಕಲಿಗರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು. ವ್ಯವಹಾರ ಇತಿಮಿತಿಯಲ್ಲಿರಬೇಕು ಎಂದರು. +ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್ +ಕೃಷಿ ಮೂಲದ ಬೇರನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಾವು ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆ ನೀಡಿದರು. ಕನಕಪುರದ ಕಲ್ಲು ಭೂಮಿಯಿಂದ ಬರುವೆ. ಕಲ್ಲಿಗೆ ಹೆಚ್ಚು ಏಟು ಬಿದ್ದಷ್ಟು ಆಕೃತಿಯಾಗುತ್ತದೆ. ಸಾಕಷ್ಟು ಏಟು ತಿಂದು ನಾನು ನಿಮ್ಮ ಮುಂದೆ ನಿಂತಿರುವೆ. ಯುವ ಉದ್ಯಮಿಗಳನ್ನು ಬೆಳೆಸಿ ಎಂದು ಉದ್ಯಮಿಗಳಿಗೆ ಕರೆ ನೀಡಿದರು. +ಶಾಸಕ ಕೆ.ಗೋಪಾಲಯ್ಯ ಮಾತನಾಡಿ, ಸಾಮಥ್ರ್ಯ ಇರುವ ಯುವಕರನ್ನು ಉದ್ಯಮಿಗಳನ್ನಾಗಿ ಬೆಳೆಸಬೇಕು. ಉದ್ಯಮ ಕ್ಷೇತ್ರದಲ್ಲಿ ಒಕ್ಕಲಿಗರು ಮೊದಲ ಸ್ಥಾನಕ್ಕೆ ಬರಬೇಕು. ದೊಡ್ಡ ಶಿಕ್ಷಣ ಸಂಸ್ಥೆಗಳು ಸ್ಥಾಪಿಸಬೇಕು. ನಾನು ಉದ್ಯಮಕ್ಕೆ ಬರುತ್ತೇನೆ ಎಂದು ಹೇಳಿದರು. ಸಂಸದ ಬಿ.ಎನ್.ಬಚ್ಚೇಗೌಡ ಮಾತನಾಡಿ, ಒಕ್ಕಲಿಗ ಉದ್ಯಮಿಗಳ ನಡುವೆ ಸ್ಪರ್ಧೆ ಬೇಡ. ಒಬ್ಬರಿಗೊಬ್ಬರು ಅನ್ಯೂನ್ಯತೆಯಿಂದ ಇರಬೇಕು. ಪರಸ್ಪರ ಸಹಾಯ ಮನೋಭಾವ ರೂಢಿಸಿಕೊಳ್ಳಬೇಕು. ಕೃಷಿ ಜೊತೆಗೆ ಆದಾಯ ಬರುವ ಇತರೆ ಮೂಲಗಳನ್ನು ರೂಢಿಸಿಕೊಳ್ಳಬೇಕು ಎಂದರು. +ಮಾಜಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಬೆಂಗಳೂರಿನಲ್ಲಷ್ಟೇ ಅಲ್ಲ ಮೈಸೂರಿನಲ್ಲೂ ಜಮೀನಿಗೆ ದುಬಾರಿ ಬೆಲೆ ಬಂದಿದೆ. ಲಕ್ಷ ರೂ.ಗೆ ಮಾರಾಟವಾಗುತ್ತಿದ್ದ ಜಮೀನು ಕೋಟಿ ರೂ.ಗೆ ಏರಿಕೆಯಾಗಿದೆ. ಜಮೀನನ್ನು ಮಾರಬೇಡಿ. ಒಕ್ಕಲಿಗರು ಸಂಘಟಿತರಾದ ರಾಜಕಾರಣಿಗಳು ಓಡೋಡಿ ಬರುತ್ತಾರೆ. ಯುವ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ದೊರೆಯುವ ಯೋಜನೆಗಳ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ಮಾಡಿದರು. ಫಸ್ಟ್ ಸರ್ಕಲ್ ಸೊಸೈಟಿಯ ಮುಖ್ಯಸ್ಥ ಜಯರಾಮ್ ರಾಯಪುರೆ ಮಾತನಾಡಿ, ಗುಣಮಟ್ಟಕ್ಕೆ ಒತ್ತು ಕೊಟ್ಟರೆ ಬೆಂಗಳೂರಿನಲ್ಲಿ ಉದ್ಯಮ ಯಶಸ್ಸು ಕಾಣಲಿದೆ. ಉದ್ಯಮದಲ್ಲಿ ಒಕ್ಕಲಿಗರು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. +ಕಾರ್ಯಕ್ರಮದಲ್ಲಿ ಸಚಿವ ವೆಂಟೇಶ್, ನಿರ್ದೇಶಕ ನಾಗಾಭರಣ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಎ.ಟಿ.ರಾಮಸ್ವಾಮಿ,ರಾಜ್ಯ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷ ಬಿ.ಕೆಂಚಪ್ಪ ಗೌಡ, ಅಧ್ಯಕ್ಷ ಬಿ.ಹನುಮಂತಯ್ಯ, ಉಪಾಧ್ಯಕ್ಷ ಎಲ್.ಶ್ರೀನಿವಾಸ್, ಖಜಾಂಚಿ ಮಾರೇಗೌಡ, ಹೊಸೂರಿನ ಶಾಸಕ ವೈ.ಪ್ರಕಾಶ್, ನಿರ್ಮಾಪಕ ಪುಟ್ಟರಾಜು, ಉದ್ಯಮಿಗಳಾದ ಸುದರ್ಶನ್ ಕಾರ್ಲೆ, ಕುಸುಮಾ ಹನುಮಂತಯ್ಯ, ಭಾರತಿ ಶಂಕರ್, ಎಂ.ಎ.ಆನಂದ್, ಪ್ರಸನ್ನ, ಕನ್ನಡವೇ ಸತ್ಯ ರಂಗಣ್ಣಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_258_3.txt b/eesanje/url_46_258_3.txt new file mode 100644 index 0000000000000000000000000000000000000000..8928cdc0f4b322fc02b01ae2489e3fb1ffd9b2ff --- /dev/null +++ b/eesanje/url_46_258_3.txt @@ -0,0 +1,5 @@ +ಪೀಣ್ಯ ಫ್ಲೈಓವರ್ ಸಂಚಾರಕ್ಕೆ ಮುಕ್ತ +ಬೆಂಗಳೂರು, ಜ.19- ಪೀಣ್ಯ ಫ್ಲೈ ಓವರ್ ಲೋಡ್ ಪರೀಕ್ಷೆ ಪೂರ್ಣಗೊಂಡಿದ್ದು, ಇಂದಿನಿಂದ ಲಘು ಮೋಟಾರ್ ವಾಹನಗಳು ಮತ್ತು ಲಘು ಗೂಡ್ಸ್ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಲೋಡ್ ಟೆಸ್ಟಿಂಗ್ ವರದಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಕಳೆದ ಮೂರು ದಿನಗಳಿಂದ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿತ್ತು. ಅದರಲ್ಲೂ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್ ಆಗಿದ್ದರಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುತ್ತಮುತ್ತಲ ರಸ್ತೆಗಳಲ್ಲೂ ಸಹ ಇದೇ ಪರಿಸ್ಥಿತಿ ಕಂಡುಬಂದಿತ್ತು. +ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್ +ಬೆಳಗ್ಗೆ ಕಚೇರಿಗೆ ಹೋಗುವವರು ತಮ್ಮ ವಾಹನಗಳನ್ನು ಬಿಟ್ಟು ಮೆಟ್ರೋ ರೈಲುಗಳ ಮೊರೆ ಹೋಗಿದ್ದರು.ಇದೀಗ ಲೋಡ್ ಟೆಸ್ಟಿಂಗ್ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಲಘು ವಾಹನಗಳಿಗೆ ಅವಕಾಶ ಕಲ್ಪಿಸಿರುವುದರಿಂದ ವಾಹನ ಸವಾರರು ನಿರಾಳರಾಗಿದ್ದಾರೆ. \ No newline at end of file diff --git a/eesanje/url_46_258_4.txt b/eesanje/url_46_258_4.txt new file mode 100644 index 0000000000000000000000000000000000000000..502c2b3a85293972e2ad92ec1eab830ebcd19204 --- /dev/null +++ b/eesanje/url_46_258_4.txt @@ -0,0 +1,9 @@ +ವಿವಿಐಪಿ ಉಪಚಾರ ಬೇಡ., ಠಾಣೆಗೆ ಕರೆದುಕೊಂಡು ಹೋಗಿ : ಬಿ.ಕೆ.ಹರಿಪ್ರಸಾದ್ +ಬೆಂಗಳೂರು,ಜ.19- ಅಯೋಧ್ಯೆ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದಲ್ಲಿ ಗೋದ್ರಾ ಮಾದರಿಯ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ ಎಂದು ತಾವು ನೀಡಿರುವ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ತಿಳಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, ನನ್ನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿ, ಮಂಪರು ಪರೀಕ್ಷೆ ಮಾಡಿ ಎಂದು ಸವಾಲು ಹಾಕಿದರು. +ಬೆಂಗಳೂರಿನ ಸರ್ಕಾರಿ ಅತಿಥಿಗೃಹದಲ್ಲಿ ಹರಿಪ್ರಸಾದ್‍ರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಆಗಮಿಸಿದ್ದರು. ಅದಕ್ಕೆ ಉತ್ತರ ನೀಡದೇ ವಾಪಸ್ ಕಳುಹಿಸಿರುವ ಹರಿಪ್ರಸಾದ್, ನನಗೆ ವಿವಿಐಪಿ ಉಪಚಾರ ಬೇಡ. ಠಾಣೆಗೆ ಕರೆದುಕೊಂಡು ಹೋಗಿ, ವಿಚಾರಣೆ ಮಾಡಿ, ಬಹಿರಂಗವಾಗಿ ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಸವಾಲು ಹಾಕಿದ್ದಾರೆ. +ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ವೇಳೆ ರಾಜ್ಯದಿಂದ ತೆರಳುವವರ ಮೇಲೆ ಗೋದ್ರಾ ಮಾದರಿಯಲ್ಲಿ ಹಿಂಸಾಚಾರ ನಡೆಯುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ನಾನು ಹೇಳಿಕೆ ನೀಡಿದ್ದೆ. ಇದು ಸಾರ್ವಜನಿಕ ಹಿತದೃಷ್ಟಿಯಿಂದ ಮಾತನಾಡಿದ ವಿಷಯ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು. +ಹೇಳಿಕೆಯ ಆಧರಿಸಿ ವಿಚಾರಣೆ ಮಾಡಲು ಪೊಲೀಸರು ಬಂದಿದ್ದರು. ನನ್ನ ಹೇಳಿಕೆ ಸರಿಯಲ್ಲ ಎಂದಾದರೆ ಠಾಣೆಗೆ ಕರೆದುಕೊಂಡು ಹೋಗಿ, ಇಲ್ಲಿ ನಾನು ಹೇಳಿಕೆ ನೀಡುವುದಿಲ್ಲ. ಜೊತೆಗೆ ಬಿಜೆಪಿಯ ರಾಜ್ಯಾಧ್ಯಕ್ಷನನ್ನೂ ಕರೆತನ್ನಿ, ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಪೊಲೀಸರಿಗೆ ತಿಳಿಸಿರುವುದಾಗಿ ಹೇಳಿದರು. ಗೋದ್ರಾ, ಅಯೋಧ್ಯೆಯಂತಹ ಘಟನೆಗಳು ಗೃಹಸಚಿವರಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ಸಂಪೂರ್ಣ ಸರ್ಕಾರದ ಹೊಣೆಗಾರಿಕೆಯಿರುತ್ತದೆ. ಬಿಜೆಪಿಯಲ್ಲಿ ನಾಲ್ಕೂವರೆ ವರ್ಷ ಉಸ್ತುವಾರಿ ವಹಿಸಿದ್ದೆ. ಅವರು ಯಾವ ರೀತಿ ಕೆಲಸ ಮಾಡುತ್ತಾರೆ ಎಂದು ನನಗೆ ಗೊತ್ತಿದೆ. ಆ ನಿಟ್ಟಿನಲ್ಲಿ ಹೇಳಿದ್ದ ಮಾತುಗಳಿಗೆ ನನ್ನನ್ನು ವಿಚಾರಣೆ ಮಾಡುತ್ತಾರೆಂದರೆ ಅಚ್ಚರಿಯಾಗುತ್ತದೆ. +ನಿಯಮ ಉಲ್ಲಂಘನೆ : ನ್ಯಾಯ ಯಾತ್ರೆ ವಿರುದ್ಧ ದೂರು +ನಾನು ಯಾವ ಸರ್ಕಾರಲ್ಲಿದ್ದೇನೆ ಎಂಬ ಗೊಂದಲ ಕಾಡುತ್ತದೆ. ಪಕ್ಷದ ಹಿರಿಯ ನಾಯಕನಾಗಿರುವ ನನಗೇ ಇಂತಹ ಪರಿಸ್ಥಿತಿಯಾದರೆ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು. ಮಹಿಳಾ ಸಮುದಾಯವನ್ನೇ ಅಪಮಾನಿಸುವಂತಹ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್‍ರವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಮಸೀದಿಗಳನ್ನು ಹೊಡೆದು ಹಾಕಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. +ಕೋರ್ಟ್‍ನ ಆದೇಶದ ಪ್ರಕಾರ ಪ್ರಚೋದನಾಕಾರಿ ಹೇಳಿಕೆ ನೀಡಿದವರ ವಿರುದ್ಧ ತಕ್ಷಣ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು. ಆದರೆ ಅವರ ವಿರುದ್ಧ ಯಾವುದೇ ಕ್ರಮಗಳಾಗುವುದಿಲ್ಲ. ಕಲ್ಲಡ್ಕ ಪ್ರಭಾಕರ್ ಭಟ್‍ರವರು ಜಾಮೀನು ಪಡೆದುಕೊಳ್ಳುತ್ತಾರೆ, ಸಂಸದರು ಏನು ಮಾಡಿದ್ದಾರೆ ಗೊತ್ತಿಲ್ಲ ಎಂದರು. +ನಾನು ಪಕ್ಷದಲ್ಲಿ ಇಷ್ಟು ವರ್ಷ ಸೇವೆ ಸಲ್ಲಿಸಿದ್ದೇನೆ. ಇಂದು ನನ್ನನ್ನು ವಿಚಾರಣೆ ಮಾಡಲು ಪೊಲೀಸರನ್ನು ಕಳುಹಿಸುತ್ತಾರೆಂದರೆ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂದು ಕಾದು ನೋಡೋಣ ಎಂದು ನೋವಿನಿಂದ ಹೇಳಿದರು. ಪೊಲೀಸರಿಗೆಲ್ಲಾ ನಾನು ಬಗ್ಗುವುದಿಲ್ಲ. ರಾಜಕೀಯ ಕಾರ್ಯಕರ್ತನಾಗಿ ದೇಶದಲ್ಲಿ ಕೆಲಸ ಮಾಡಿದ್ದೇನೆ. ನಾನು ಕ್ರಿಮಿನಲ್ ಅಲ್ಲ. ಭ್ರಷ್ಟಾಚಾರಿಯೂ ಅಲ್ಲ. ಯಾವುದೇ ರಾಜಕೀಯ ಪಕ್ಷವಾದರೂ ಸರಿ. ಸಂಘ ಪರಿವಾರ, ಸಂಘಟನೆಗಳಿಗೂ ಹೆದರುವುದಿಲ್ಲ ಎಂದರು. \ No newline at end of file diff --git a/eesanje/url_46_258_5.txt b/eesanje/url_46_258_5.txt new file mode 100644 index 0000000000000000000000000000000000000000..00bbfb6239c5eeb6d908e024a21b0b2d2806debf --- /dev/null +++ b/eesanje/url_46_258_5.txt @@ -0,0 +1,11 @@ +ಜ.22ರಂದು ರಜೆ ಘೋಷಿಸುವಂತೆ ಸರ್ಕಾರಕ್ಕೆ ವಿಜಯೇಂದ್ರ ಒತ್ತಾಯಿ +ಬೆಂಗಳೂರು,ಜ.19- ಇದೇ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಅಂದು ರಜೆಯನ್ನು ಘೋಷಿಸುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಎಸ್‍ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ ಅನೇಕ ರಾಜ್ಯಗಳು ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಅನ್ವಯವಾಗುವಂತೆ ರಜೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರವು ಅರ್ಧದಿನವನ್ನು ರಜೆ ಎಂದು ಘೋಷಿಸಿದೆ. ಅದೇ ರೀತಿ ರಾಜ್ಯದಲ್ಲೂ ಘೋಷಣೆ ಮಾಡಲಿ ಎಂದು ಮನವಿ ಮಾಡಿದರು. +ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿರುವುದರಿಂದ ರಾಮ ಭಕ್ತರಿಗೆ ಪೂಜೆ, ಪುನಸ್ಕಾರ ಹಾಗು ಕಾರ್ಯಕ್ರಮವನ್ನು ಖುದ್ದು ವೀಕ್ಷಣೆ ಮಾಡಲು ಅನುಕೂಲ ಮಾಡಿಕೊಡುವುದು ಸರ್ಕಾರದ ಕರ್ತವ್ಯ ಎಂದರು. ರಾಮನ ಬಗ್ಗೆ ಇಂದು ಪುಂಖಾನುಪುಂಖವಾಗಿ ಮಾತನಾಡುತ್ತಿರುವ ಕಾಂಗ್ರೆಸ್‍ನವರು ಒಂದು ಕಾಲದಲ್ಲಿ ರಾಮನ ಅಸ್ತಿತ್ವವನ್ನೇ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದವರು , ರಾಮನಿಲ್ಲ ಎಂದವರು ಇಂದು ಶ್ರೀರಾಮನನ್ನು ನೆನಪಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ವ್ಯಂಗ್ಯವಾಡಿದರು. +ಪ್ರಭು ಶ್ರೀರಾಮಚಂದ್ರನ ಅಸ್ತಿತ್ವದ ಪ್ರಶ್ನೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರಿಗೆ ನನ್ನ ಮನವಿ ಏನೆಂದರೆ, ರಾಮನ ಬಗ್ಗೆ ಮಾತನಾಡುತ್ತೇವೆ ಎಂದರೆ ಮೊದಲು ಮಹರ್ಷಿ ವಾಲ್ಮೀಕಿಯವರನ್ನು ನೆನಪು ಮಾಡಿಕೊಳ್ಳಬೇಕು ಎಂದು ಹೇಳಿದರು. +ಅನೇಕ ವರ್ಷಗಳ ಹೋರಾಟದ ಬಳಿಕ ಎಸ್‍ಟಿ ಸಮುದಾಯದ ಮೀಸಲಾತಿಯನ್ನು ಹೆಚ್ಚಿಸಿದ್ದ ಕೀರ್ತಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲುತ್ತದೆ. ವಾಲ್ಮೀಕಿ ದಿನಾಚರಣೆ ಆಚರಣೆ ಮಾಡಲು ರಜೆ ಘೋಷಣೆ ಮಾಡಿದ್ದು ಬಿಜೆಪಿ ಸರ್ಕಾರ. ಬುಡಕಟ್ಟು ಜನಾಂಗದಿಂದ ಬಂದ ದ್ರೌಪದಿ ಮುರ್ಮು ಸಹ ಇಂದು ರಾಷ್ಟ್ರಪತಿ ಆಗಿದ್ದಾರೆ, ಅವರನ್ನು ಗುರುತಿಸುವ ಕೆಲಸ ಮಾಡಿದ್ದು ಬಿಜೆಪಿಯೇ. +ಮೋದಿ ಹಗಲು-ರಾತ್ರಿ ಕೆಲಸ ಮಾಡಿ ಅಗ್ರಗಣ್ಯ ದೇಶದ ಸಾಲಿಗೆ ಭಾರತವನ್ನು ಸೇರಿಸಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಗಿಮಿಕ್ ಮಾಡಿಕೊಂಡು ಗ್ಯಾರಂಟಿ ಕೊಡುತ್ತಿದೆ ಎಂದು ವ್ಯಂಗ್ಯವಾಡಿದರು.ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿ ಮಾಡಬೇಕೆಂದು ಕಾರ್ಯಕರ್ತರಿಗೆ ವಿಜಯೇಂದ್ರ ಕರೆ ಕೊಟ್ಟರು. +ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ರಾಮಾಯಣದ ಆದರ್ಶ ವ್ಯವಸ್ಥೆ ಅತ್ಯಂತ ಸಂದೇಶ ಸ್ಪಷ್ಟನೆ ಕೊಟ್ಟಿದೆ. ಜಾತಿಗಿಂತ ಗುಣಕ್ಕೆ ಪ್ರಧಾನ್ಯ ಇತ್ತು ಎಂದು ವಾಲ್ಮಿಕಿ ನಿರೂಪಿಸಿದ್ದರು ಎಂದು ಹೇಳಿದರು.ಪಕ್ಷದಲ್ಲಿ ಸಮುದಾಯದವರು ಯಾರು ಗೆದ್ದಿಲ್ವ. ಮುದ್ರಾ ಯೋಜನೆಯಲ್ಲಿ ಎಸ್‍ಟಿ-ಎಸ್‍ಸಿಗಳಿಗೆ 50% ಸಾಲ ಸಿಕ್ಕಿದೆ. ಏಕಲವ್ಯ ಶಾಲೆಯನ್ನು ನಿರ್ಲಕ್ಷ್ಯ ಮಾಡಲಾಗಿತ್ತು. 38 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು ನರೇಂದ್ರ ಮೋದಿ ಸರ್ಕಾರ ಎಂದರು. +ಪ್ರಧಾನಿ ಜನ್ ಮನ್ ಯೋಜನೆಯಲ್ಲಿ 24 ಸಾವಿರ ಕೊಟ್ಟು ಶಾಲೆಗಳಿಗೆ ನೀರು ಮುಂತಾದ ಮೂಲಭೂತ ಸೌಕರ್ಯ ಕೊಟ್ಟು ನ್ಯಾಯ ನೀಡಿದ್ದು ಪ್ರಧಾನಿ ಮೋದಿಯವರು. ಶ್ರೀರಾಮನ ಪ್ರತಿಷ್ಠಾಪನೆ ನಡೆಯುವ ಸಮಯದಲ್ಲಿ ಅಪಹಾಸ್ಯ ಮಾಡುವ ತಕ್ಕಪಾಠ ಕಲಿಸಬೇಕಿದೆ ಎಂದು ಹೇಳಿದರು. +ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ +ದೇಶದಲ್ಲಿ ಬಹುದೊಡ್ಡ ಬೆಳವಣಿಗೆ ನಡೆಯುತ್ತಿದೆ. ಆರ್ಥಿಕವಾಗಿ ಬಹುದೊಡ್ಡ ಹೆಜ್ಜೆ ಇಡಲಾಗುತ್ತಿದೆ. ನೂರು ಲಕ್ಷ ಕೋಟಿಯನ್ನು ಇನ್‍ಫ್ರಾಸ್ಟಕ್ಚರ್‍ಗೆ ಅನುದಾನ ಕೊಟ್ಟು ಕೆಲಸ ಮಾಡುತ್ತಿದ್ದಾರೆ. 10 ವರ್ಷದಲ್ಲಿ ಏನಾಗಿದೆ ಎಂದು ಪ್ರಶ್ನೆ ಕೇಳುವವರಿಗೆ ಸಾಕಷ್ಟು ಉದಾಹರಣೆಗಳಿವೆ ಎಂದರು. +5 ದುರ್ಬಲ ರಾಷ್ಟ್ರ ಅಂತ ಪರಿಗಣಿಸುತ್ತಿದ್ದರು. ಈಗ ಭಾರತ ಜಗತ್ತಿನ ಪ್ರಬಲ 5ನೇ ಆರ್ಥಿಕ ರಾಷ್ಟ್ರವಾಗಿದೆ. 21ನೇ ಶತಮಾನವು ಭಾರತದ ಶತಮಾನವಾಗಲಿದೆ. ವಿಕಸಿತ ಭಾರತ ಅಗುವುದಕ್ಕೆ ರೋಡ್ ಮ್ಯಾಪ್ ಪ್ರಧಾನಿ ಮೋದಿ ಬಳಿ ಇದೆ. ಜನರಲ್ಲಿ ಕಮ್ಯುನಿಕೇಷನ್ ಗ್ಯಾಪ್ ಆಗಿದೆ ಅದನ್ನು ಸರಿಪಡಿಸಿಕೊಳ್ಳಬೇಕಿದೆ ಎಂದು ಹೇಳಿದರು. \ No newline at end of file diff --git a/eesanje/url_46_258_6.txt b/eesanje/url_46_258_6.txt new file mode 100644 index 0000000000000000000000000000000000000000..ecd6f4ea4398e0e9c708c1a9587b5a6ffb63a05e --- /dev/null +++ b/eesanje/url_46_258_6.txt @@ -0,0 +1,6 @@ +ಸಿದ್ದರಾಮಯ್ಯ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ : ಸಚಿವ ರಾಜಣ್ಣ +ತುಮಕೂರು,ಜ.19- ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷ ಮುಂದುವರಿಯಬೇಕೆಂಬುದು ಜನರ ಆಶಯ. ಹೀಗಾಗಿ ಮಾಜಿ ಶಾಸಕ ಯತೀಂದ್ರ ಅವರ ಹೇಳಿಕೆ ತಪ್ಪಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದಾಕಾಲ ಸಿದ್ದರಾಮಯ್ಯ ಪರವಾಗಿಯೇ ಮಾತನಾಡುತ್ತೇನೆ. ಅದರಲ್ಲಿ ಯಾವುದೇ ಹಿಂಜರಿಕೆ ಇಲ್ಲ. ಸಿದ್ದರಾಮಯ್ಯ ಅವರ ಅಧಿಕಾರವಯನ್ನು ಮುಂದುವರೆಸುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಆದರೆ ಜನರ ಅಭಿಪ್ರಾಯವನ್ನು ಯತೀಂದ್ರ ಹೇಳಿದ್ದಾರೆ ಎಂದು ತಿಳಿಸಿದರು. +ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ; ಭವಿಷ್ಯ ನುಡಿದ ಅಮೆರಿಕನ್ ಗಾಯಕಿ +ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆಯಿದೆ. ಈ ವಿಷಯವಾಗಿ ಚರ್ಚೆಗಳೂ ಆಗಿವೆ. ಆದರೆ ಟಿಕೆಟ್ ನೀಡುವ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ. ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. +ತುಮಕೂರು ಜಿಲ್ಲೆಯ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇಂದು ಪಕ್ಷದ ಕಾರ್ಯದರ್ಶಿಯವರು ಜಿಲ್ಲಾ ನಾಯಕರ ಸಭೆ ನಡೆಸುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_258_7.txt b/eesanje/url_46_258_7.txt new file mode 100644 index 0000000000000000000000000000000000000000..f05be1485329da93f07bd6b33006e8d8ea7f0c15 --- /dev/null +++ b/eesanje/url_46_258_7.txt @@ -0,0 +1,8 @@ +ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ +ಬೆಂಗಳೂರು,ಜ.19- ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಬಿಜೆಪಿ ಪ್ರಧಾನಿ ನರೇಂದ್ರಮೋದಿ ಆಗಮನದ ಹಿನ್ನಲೆಯಲ್ಲಿ ಪುಟಿದೆದ್ದಿದೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಹಾರಾಷ್ಟ್ರ ಮತ್ತು ತಮಿಳುನಾಡಿಗೆ ಆಗಮಿಸಿದ್ದ ಮೋದಿ ಅವರು, ರಾಜ್ಯದ ಬಿಜೆಪಿ ನಾಯಕರ ಜೊತೆ ಲೋಕಸಭೆ ಚುನಾವಣೆ ಕುರಿತಾಗಿ ನಡೆಸಿರುವ ಚರ್ಚೆ ಬಿಜೆಪಿಗೆ ಬೂಸ್ಟ್ ಸಿಕ್ಕಂತಾಗಿದೆ. +ಮೊದಲು ಮಹಾರಾಷ್ಟ್ರದ ಸೊಲ್ಲಾಪುರ ಕಾರ್ಯಕ್ರಮ ಮುಗಿಸಿಕೊಂಡು ಕಲಬುರಗಿಗೆ ಆಗಮಿಸಿದ ಮೋದಿ ಅವರು 30 ಪ್ರಮುಖ ನಾಯಕರನ್ನು ಮಾತ್ರ ಭೇಟಿಯಾಗಿ ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ ಕುರಿತು ಮಾಹಿತಿ ಪಡೆದುಕೊಂಡರು. ಕೇಂದ್ರ ಸಚಿವ ಭಗವಂತ ಕೂಬಾ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲೆಯ ಕೆಲವೇ ಕೆಲವು ಆಯ್ದ 30 ನಾಯಕರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. +ಲೋಕಸಭೆ ಚುನಾವಣೆಯನ್ನು ಪ್ರತಿಯೊಬ್ಬರು ಗಂಭೀರವಾಗಿ ತೆಗೆದುಕೊಳ್ಳಬೇಕು. ಬಿಜೆಪಿ ಈ ಬಾರಿ 400 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದೆ. ನಮಗೆ ಒಂದೊಂದು ಕ್ಷೇತ್ರವು ಮುಖ್ಯ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಯಾವುದೇ ರೀತಿಯ ವಿವಾದವನ್ನು ಮೈಮೇಲೆ ಎಳೆದುಕೊಳ್ಳದೆ ಕೇಂದ್ರ ಸರ್ಕಾರ ಕಳೆದ 9 ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಗಳನ್ನುಮನೆ ಮನೆಗೆ ತಲುಪಿಸಿ ಒಂದೇ ಒಂದು ಹಗರಣವಿಲ್ಲದೆ ಪಾರದರ್ಶಕ ಆಡಳಿತ ಕೊಟ್ಟಿದ್ದೇವೆ. ಇದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. +ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ +ಇಂದಿನಿಂದ ಲೋಕಸಭೆ ಚುನಾವಣೆವರೆಗೂ ಕಾರ್ಯಕರ್ತರು ವಿಶ್ರಾಂತಿ ಇಲ್ಲದೆ ದುಡಿಯಬೇಕೆಂದು ಸೂಚನೆ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲು ಹಿಂದೆ ಮುಂದೆ ನೋಡಬೇಡಿ. ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಗೆಲುವು ಸಾಧ್ಯ ಎಂದು ಮುಖಂಡರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕಲಬುರಗಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರರು ಬರಮಾಡಿಕೊಂಡರು. +ದೇವನಹಳ್ಳಿಯ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ)ನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ವೈಮಾನಿಕ ಕ್ಷೇತ್ರಕ್ಕೆ ಸಂಬಂಸಿದ ಬೋಯಿಂಗ್ ಕೇಂದ್ರ ಮತ್ತು ಇದರ ಜೊತೆಗೆ ಬೋಯಿಂಗ್ ಸುಕನ್ಯಾ ಯೋಜನೆಗೂ ಚಾಲನೆ ನೀಡಿದ್ದಾರೆ. +ಏರೋಸ್ಪೇಸ್ ದೊಡ್ಡ ಕ್ಯಾಂಪಸ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 43 ಎಕರೆ ವಿಶಾಲ ಪ್ರದೇಶದಲ್ಲಿ ಅಂತರಿಕ್ಷಯಾನ ತಂತ್ರಜ್ಞಾನ ಸಂಶೋಧನೆ ಮತ್ತು ಅಭಿವೃದ್ಧಿ ಕ್ಯಾಂಪಸ್ ತಲೆ ಎತ್ತಿದೆ. ಬೋಯಿಂಗ್ ಸಹಭಾಗಿತ್ವದ ಏರೋಸ್ಪೇಸ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕೇಂದ್ರ 2018ರಲ್ಲಿ ಕಾರ್ಯಾರಂಭಿಸಿದೆ. ಭಾರತದಲ್ಲಿ ಅಂತರಿಕ್ಷಯಾನ ವಾಣಿಜ್ಯ ಮತ್ತು ರಕ್ಷಣಾ ಕ್ಷೇತ್ರವು ವಿಫುಲ ಅವಕಾಶಗಳನ್ನು ಸೃಷ್ಟಿಸಿದ್ದು, ಕಳೆದ ವರ್ಷವಷ್ಟೇ 1600 ಕೋಟಿ ರೂ ಬಂಡವಾಳವನ್ನು ಹೂಡಿಕೆ ಸಾಮಥ್ರ್ಯ ವಿಸ್ತರಿಸಿದ್ದು, ಅಂದಾಜು ಐದು ಸಾವಿರ ಉದ್ಯೋಗ ಅವಕಾಶಗಳು ಸೃಷ್ಟಿಯಾಗಿವೆ. \ No newline at end of file diff --git a/eesanje/url_46_258_8.txt b/eesanje/url_46_258_8.txt new file mode 100644 index 0000000000000000000000000000000000000000..ac0469b65ac792a669fc9ab3ac2bfe7a72f3e8fc --- /dev/null +++ b/eesanje/url_46_258_8.txt @@ -0,0 +1,9 @@ +ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸಲು ನಿಯಮಗಳನ್ನು ರೂಪಿಸುವುದು ಸೂಕ್ತವಲ್ಲ : ಶಾಸಕ ಪ್ರದೀಪ್ ಈಶ್ವರ್ +ಶಿವಮೊಗ್ಗ,ಜ.19- ಖಾಸಗಿ ಮನೆಪಾಠ ಸಂಸ್ಥೆಗಳು ಸರ್ಕಾರಕ್ಕೆ ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿದೆ. ಇವುಗಳ ವಿರುದ್ಧ ಕಠಿಣ ನಿಯಮಾವಳಿ ರೂಪಿಸುವುದು ಸೂಕ್ತವಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕೋಚಿಂಗ್ ಸೆಂಟರ್‍ಗಳು ವಾರ್ಷಿಕ 6 ಸಾವಿರ ಕೋಟಿ ರೂ.ಗಳ ವಹಿವಾಟು ನಡೆಸುತ್ತಿದೆ. ಶೇ.18 ರಂತೆ ವರ್ಷಕ್ಕೆ ಸರಿಸುಮಾರು 1,100 ಕೋಟಿ ರೂ.ಗಳ ಜಿಎಸ್‍ಟಿ ಪಾವತಿಸುತ್ತಿದೆ ಎಂದು ಹೇಳಿದರು. +ವಿದ್ಯಾರ್ಥಿಗಳಿಂದ 1 ಲಕ್ಷ ರೂ. ಶುಲ್ಕ ಪಡೆದರೆ ಅದರಲ್ಲಿ ತೆರಿಗೆ ಪಾವತಿಯ ನಂತರ 82 ಸಾವಿರ ರೂ. ಉಳಿಯಲಿದೆ. 70 ಸಾವಿರ ರೂ.ಗಳನ್ನು ವಿದ್ಯಾರ್ಥಿಗಳ ಕಲಿಕೆ ಮತ್ತು ಶ್ರೇಯೋಭಿವೃದ್ಧಿಗೆ ಬಳಸಲಾಗುತ್ತದೆ. ಉದಾಹರಣೆಗೆ 12 ಸಾವಿರ ರೂ. ಉಳಿದರೆ ಅದರ ಮೇಲೂ ಶೇ. 25ರಷ್ಟು ಆದಾಯ ತೆರಿಗೆ ಪಾವತಿಸಬೇಕು. ಹೀಗೆ ಲೆಕ್ಕ ಹಾಕಿದರೆ 100 ರೂ. ಲೆಕ್ಕಾಚಾರದಲ್ಲಿ 40 ರೂ.ಗಳನ್ನು ಕೋಚಿಂಗ್ ಸೆಂಟರ್‍ಗಳು ಸರ್ಕಾರಕ್ಕೆ ಮರುಪಾವತಿಸುತ್ತವೆ. ಆದರೆ ಶಾಲಾ-ಕಾಲೇಜುಗಳು ಟ್ರಸ್ಟ್‍ನಡಿ ನಡೆಯುವುದರಿಂದ ಸರ್ಕಾರಕ್ಕೆ ಯಾವುದೇ ತೆರಿಗೆ ಪಾವತಿಸುವುದಿಲ್ಲ ಎಂದರು. +ಹಿಂದೂಗಳ ಭಾವನೆಗಳಿಗೆ ಧಕ್ಕೆ : ಕ್ಷಮೆ ಯಾಚಿಸಿದ ನಟಿ ನಯನತಾರಾ +ಕೋಚಿಂಗ್ ಸೆಂಟರ್‍ಗಳನ್ನು ನಿಯಂತ್ರಿಸಲು ಕಠಿಣ ನಿಯಮಾವಳಿಗಳನ್ನು ರೂಪಿಸುವುದು ಸೂಕ್ತವಲ್ಲ. ಆದರೂ ಸರ್ಕಾರ ನಿಯಮ ರೂಪಿಸಿದ್ದೇ ಆದರೆ ಅದನ್ನು ಪಾಲಿಸುವುದು ಎಲ್ಲರ ಕರ್ತವ್ಯವಾಗಲಿದೆ ಎಂದು ಹೇಳಿದರು. ಹಿಂದಿನ ಸರ್ಕಾರ ಪಠ್ಯ ಪರಿಷ್ಕರಣೆಗೆ ಕೈ ಹಾಕುವುದು ತಪ್ಪು. ತಮ್ಮ ಸರ್ಕಾರ ಆ ಲೋಪವನ್ನು ಸರಿಪಡಿಸಿದೆ. +ಶಿಕ್ಷಣ ವ್ಯವಸ್ಥೆಯಡಿ ರಾಜಕೀಯ ಬೆರೆಸುವುದು ಎಂದಿಗೂ ಒಳ್ಳೆಯದಲ್ಲ. ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಓದುವವರನ್ನು ರ್ಯಾಂಕ್ ವಿದ್ಯಾರ್ಥಿಗಳನ್ನಾಗಿ ಮಾಡುವ ಸಾಧ್ಯತೆಯಿದೆ. ಆದರೆ ಅದಕ್ಕೂ ಮುನ್ನ ಮನೋಧೋರಣೆಯನ್ನು ಬದಲಾಯಿಸಬೇಕು. 1 ಲಕ್ಷ ರೂ. ಶುಲ್ಕ ಪಾವತಿಸಿ ಕೋಚಿಂಗ್ ಸೆಂಟರ್‍ಗೆ ಬರುವ ವಿದ್ಯಾರ್ಥಿಗಳನ್ನೇ ನಿಯಂತ್ರಿಸಲು ಅವಕಾಶವಿದ್ದಾಗ ಊಟ, ವಸತಿ ಎಲ್ಲವನ್ನೂ ಉಚಿತವಾಗಿ ನೀಡುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಏಕೆ ನಿಯಂತ್ರಿಸಲು ಸಾಧ್ಯವಿಲ್ಲ. ಹಾಸ್ಟೆಲ್ ವಾರ್ಡ್‍ನ್‍ಗಳು, ಶಿಕ್ಷಕರು ಈ ರೀತಿಯ ಧೋರಣೆಯಿಂದ ಹೊರಬರಬೇಕು ಎಂದು ಹೇಳಿದರು. +ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳಿಂದ ತಲಾ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಂಡು ಸಿಇಟಿಯಲ್ಲಿ ರ್ಯಾಂಕ್ ಗಳಿಸುವಂತೆ ಮಾಡುವ ಸೂಪರ್-60 ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ. ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ಮಕ್ಕಳು ಸರ್ಕಾರಿ ಶಾಲೆಗಳತ್ತ ಆಕರ್ಷಿತರಾಗಲಿದ್ದಾರೆ ಎಂದರು. ಮಕ್ಕಳು ಮನೆಯಲ್ಲಿ ಓದುವುದು ಕಡಿಮೆ. ಅದಕ್ಕಾಗಿ ಖಾಸಗಿ ಮಾದರಿಯಲ್ಲೇ ವಸತಿ ಸಹಿತ ತರಬೇತಿ ಹಾಗೂ ಕಲಿಕಾ ಕೇಂದ್ರಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು. +ಅಮೃತ ಕಾಲಕ್ಕಿಂತ ಶಿಕ್ಷಾ ಕಾಲ ಬೇಕಿದೆ : ಖರ್ಗೆ +ಐದಾರು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ನಾಲ್ಕೈದು ಶಾಲೆಗಳನ್ನು ಒಟ್ಟುಗೂಡಿಸಿ, ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಲಾಗುತ್ತಿದೆ. ವಿಲೀನಗೊಳ್ಳುವ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಭಾವಿಸಬಾರದು ಎಂದರು. \ No newline at end of file diff --git a/eesanje/url_46_258_9.txt b/eesanje/url_46_258_9.txt new file mode 100644 index 0000000000000000000000000000000000000000..7a0b5f5d3df791a6a8715d9ffebb4583af05f5e3 --- /dev/null +++ b/eesanje/url_46_258_9.txt @@ -0,0 +1,12 @@ +ಫೆ.12ರಿಂದ 23ರವರೆಗೆ ವಿಧಾನಮಂಡಲದ ಅಧಿವೇಶನ‌ : ಇಲ್ಲಿದೆ ರಾಜ್ಯ ಸಂಪುಟ ಸಭೆಯ ಇತರ ತೀರ್ಮಾನಗಳು + +ಬೆಂಗಳೂರು: ಫೆ.12ರಿಂದ ಫೆ.23ರವರೆಗೆ ರಾಜ್ಯ ವಿಧಾನಮಂಡಲದ ಅಧಿವೇಶನ‌ ನಡೆಸುವುದು, ರಾಜ್ಯದ ಸಾಂಸ್ಕೃತಿಕ ನಾಯಕರನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮಹತ್ವ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆ ಕೈಗೊಂಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ವಿವರಗಳನ್ನು ಕಾನೂನು ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. +ಫೆಬ್ರವರಿ 12 ರಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಅಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿ ಭಾಷಣ ಮಾಡಲಿದ್ದಾರೆ.ಫೆ. 16 ರಂದು ಬಜೆಟ್ ಮಂಡನೆ ಆಗಲಿದೆ ಫೆ. 23ರವರೆಗೆ ಉಭಯ ಸದನಗಳ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. +ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ ಜಾತಿ ರಹಿತ ಸಮಾಜದ ಕನಸು‌ ಕಂಡವರು ಬಸವಣ್ಣ. ಸಮಾಜದಲ್ಲಿ ಸಾಮರಸ್ಯ ತರುವ ನಿಟ್ಟಿನಲ್ಲಿ ಅವರ ತತ್ವಗಳು ಹೆಚ್ಚು ಪ್ರಸಾರ ಆಗಬೇಕು. ಅವರನ್ನು ಸಾಂಸ್ಕೃತಿಕ ನಾಯಕ ಎಂದು‌ ಘೋಷಣೆ ಮಾಡಬೇಕು ‌ಎಂಬ ಬೇಡಿಕೆ ಇತ್ತು. ಈ ನಿಟ್ಟಿನಲ್ಲಿ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದಿನ ಕಲುಷಿತ ವಾತಾವರಣದಲ್ಲಿ ಬಸವಣ್ಣ ತತ್ವ ಆದರ್ಶ ಎಲ್ಲಡೆ ಪಸರಿಸಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತದೆ ಎಂದರು. +ಅದಕ್ಕಾಗಿ ಮುಖ್ಯಮಂತ್ರಿ ಹಾಗೂ ಸಂಪುಟದ ಸಚಿವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, 2025 ರಲ್ಲಿ ಅನುಭವ ಮಂಟಪ ಪೂರ್ಣಗೊಳ್ಳಬೇಕು. ಮುಂದಿನ ವರ್ಷ ಅನುಭವ ಮಂಟಪದ ಲೋಕಾರ್ಪಣೆ ಆಗಲಿದೆ‌ ಎಂದು‌ ತಿಳಿಸಿದರು‌‌. +ಸಂಪುಟ ಸಭೆಯ ಇತರ ತೀರ್ಮಾನಗಳು :ಚಿಕ್ಕಮಗಳೂರಿನ ಬಾಬಾ ಬುಡನಗಿರಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಸಲ್ಲಿಸುವ ಆಕ್ಷೇಪಣಾ ಹೇಳಿಕೆ ತಯಾರಿಸಲು ಗೃಹ, ಕಾನೂನು, ಕಂದಾಯ ಸಚಿವರನ್ನು ಒಳಗೊಂಡ ಸಂಪುಟ ಉಪ ಸಮಿತಿ ರಚನೆ ಮಾಡಲು ಸಂಪುಟ ತೀರ್ಮಾನಿಸಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. +ಶಿವಮೊಗ್ಗದ ಹಳೇ ಜೈಲು ಆವರಣದ ಉದ್ಯಾನವನಕ್ಕೆ ಅಲ್ಲಮಪ್ರಭು ಹೆಸರು ಎಂದು ನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಹೆಸರನ್ನು ಚನ್ನಮ್ಮನ ಕಿತ್ತೂರು ಎಂದು ನಾಮಕರಣಕ್ಕೆ ನಿರ್ಣಯಿಸಿದೆ ಎಂದರು.ಕರ್ನಾಟಕ ವಿದ್ಯುತ್ ನಿಗಮದ 4,430 ಕೋಟಿ ರೂ. ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ನಿರ್ಣಯ ಕೈಗೊಂಡಿತು. +ಗೃಹ ಜ್ಯೋತಿ ಯೋಜನೆ ಅನುಷ್ಠಾನ ಆದೇಶ ಮಾರ್ಪಡಿಸಿ ಶೇ.10 ಬದಲು ಹೆಚ್ಚುವರಿ 10 ಯೂನಿಟ್ ಒದಗಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ. ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಲ್ಲಿ ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ತಂತ್ರಾಂಶ 15.13 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿ ಅನುಷ್ಠಾನಕ್ಕೆ ಸಂಪುಟ ಸಮತಿಸಲಾಯಿತು. 30 ಸೀಟರ್ ಕಾಲ್ ಸೆಂಟರ್ ಸ್ಥಾಪನೆಗೆ ನಿರ್ಧಾರ ಮಾಡಲಾಯಿತು ಎಂದು ಹೇಳಿದರು. +ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ವಿಧೇಯಕ 2024 ಕ್ಕೆ ಅನುಮೋದನೆ ದೊರೆತಿದೆ. ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ಅಂತರಸಂತೆಯ ಹಾಗೂ ಇತರ ಜನವಸತಿಗಳಿಗೆ ಜಲಜೀವನ ಮಿಷನ್‌ಗೆ 101.73 ಕೋಟಿ ರೂ‌ ಯೋಜನೆಗೆ, ಹಂಪಾಪುರಕ್ಕೆ ಹಾಗೂ 48 ಜನವಸತಿಗಳಿಗೆ 65.07 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಅನುಮೋದನೆ ದೊರೆತಿದೆ.ಟಿ.ನರಸೀಪುರ ತಾಲೂಕಿನ ದೊಡ್ಡ ಬಾಗಿಲು‌ ಮತ್ತು ಇತರೆ 24 ಜನವಸತಿಗಳಿಗೆ 34 ಕೋಟಿ ರೂ. ವೆಚ್ಚದ ಬಹು ಗ್ರಾಮದ ಕುಡಿಯುವ ನೀರು‌ ಯೋಜನೆಗೆ ಹಾವೇರಿ ತಾಲೂಕಿನ ನೆಗಲೂರು ಮತ್ತು ಇತರೆ ಮೂರು ಗ್ರಾಮಗಳಿಗೆ 18 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಪುನಶ್ಚೇತನ ಕಾಮಗಾರಿಗೆ ಅನುಮೋದನೆ ನೀಡಲಾಯಿತು ಎಂದರು. +ಹಾನಗಲ್ ತಾಲೂಕಿನ ಕುಡ್ಡ ಮತ್ತು ಇತರೆ ಗ್ರಾಮಗಳಿಗೆ 26 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್’ ತಾಲೂಕಿನ 24 ಗ್ರಾಮಗಳಿಗೆ 245 ಕೋಟಿ ರೂ. ವೆಚ್ಚದ ಪುನಶ್ಚೇತನ ಕಾಮಗಾರಿಗೆ ಒಪ್ಪಿಗೆ ನೀಡಲಾಯಿತು ಎಂದು ಹೇಳಿದರು. +ಆನೇಕಲ್‌ನ ಅಂಬೇಡ್ಕರ್ ಭವನಕ್ಕೆ ಪರಿಷ್ಕೃತ 17.40 ಕೋಟಿ ರೂ. ವೆಚ್ಚಕ್ಕೆ ಮತ್ತು ಹಲಸೂರು ಕೆರೆಯ ಬಳಿ ಪ್ರವಾಸಿಸೌಧ ನಿರ್ಮಾಣಕ್ಕೆ 18 ಕೋಟಿ ರೂಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.ರಾಜ್ಯದಲ್ಲಿ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ನೀತಿಯ ಕ್ರಮ ಸಂಖ್ಯೆ 9ನ್ನು ಪರಿಷ್ಕರಣೆಗೆ ಅನುಮೋದನೆ ದೊರೆತಿದ್ದು, ಕೊಡಗು ಜಿಲ್ಲೆಯ ಪೊನ್ನಂಪೇಟೆ ಗ್ರಾಪಂನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೇಗೇರಿಸುವುದಕ್ಕೆ ನಿರ್ಧಾರ ಮಾಡಲಾಯಿತು ಎಂದು ಅವರು ಹೇಳಿದರು \ No newline at end of file diff --git a/eesanje/url_46_259_1.txt b/eesanje/url_46_259_1.txt new file mode 100644 index 0000000000000000000000000000000000000000..3d7b6051dd19d3fbbd4d00aeba0a5a0f10b3f096 --- /dev/null +++ b/eesanje/url_46_259_1.txt @@ -0,0 +1,8 @@ +ಲೋಕಸಭಾ ಚುನಾವಣೆಗೆ ಕೈ ಸಜ್ಜು , ಅಭ್ಯರ್ಥಿಗಳ ಆಯ್ಕೆ ಕಸರತ್ತು +ಬೆಂಗಳೂರು,ಜ.18- ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಾಳೆ ನಡೆಯಲಿದ್ದು, ಕಾಂಗ್ರೆಸ್ ರಣೋತ್ಸಾಹದಿಂದ ಪೂರ್ವ ತಯಾರಿಗಳಿಗೆ ಚಾಲನೆ ನೀಡಲಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂಬ ಗುರಿಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ನಾನಾ ರೀತಿಯ ಕಸರತ್ತುಗಳನ್ನು ನಡೆಸಲಾಗುತ್ತಿದೆ. +ಈಗಾಗಲೇ ಸಚಿವರುಗಳ ನೇತೃತ್ವದಲ್ಲಿ ವೀಕ್ಷಕರ ಸಮಿತಿಗಳನ್ನು ರಚಿಸಿ ಜಿಲ್ಲಾಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಕೆಲವು ಕ್ಷೇತ್ರಗಳ ವರದಿ ಪಡೆದುಕೊಳ್ಳಲಾಗಿದೆ. ಆದರೆ ಬಹುತೇಕ ಸಚಿವರುಗಳು ಈವರೆಗೂ ಜಿಲ್ಲಾಮಟ್ಟದಲ್ಲಿ ವೀಕ್ಷಕರ ಸಭೆಗಳನ್ನು ನಡೆಸಿಲ್ಲ. ವಸತಿ ಸಚಿವ ಜಮೀರ್ ಅಹಮ್ಮದ್ಖಾನ್ ರಾಜ್ಯ ಚುನಾವಣೆಗೆ ಮುನ್ನಾದಿನವಾದ ಇಂದು ಕೇಂದ್ರ ಲೋಕಸಭಾ ಕ್ಷೇತ್ರದ ಮುಖಂಡರ ಜೊತೆ ಸಮಾಲೋಚನಾ ಸಭೆ ನಡೆಸಿದ್ದಾರೆ. +ಬೆಂಗಳೂರು ಉತ್ತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈವರೆಗೂ ಸಭೆಗಳು ನಡೆದಿಲ್ಲ. ವೀಕ್ಷಕರ ವರದಿಗಳು ಪಕ್ಷಕ್ಕೆ ಸಲ್ಲಿಕೆಯಾಗಿಲ್ಲ. ಸಚಿವರ ನಿರ್ಲಕ್ಷ್ಯ ಒಂದು ಕಡೆಯಾದರೆ, ಪರ್ಯಾಯವಾಗಿ ಹೈಕಮಾಂಡ್ ಬೇರೆ ಮಾರ್ಗಗಳ ಮೂಲಕ ಚುನಾವಣಾ ಸಿದ್ಧತೆಗಳಿಗೆ ಮುಂದಾಗಿದೆ. ಈಗಾಗಲೇ 2 ಬಾರಿ ಸಂಪುಟದ ಸಚಿವರನ್ನು ದೆಹಲಿಗೆ ಕರೆಸಿಕೊಂಡು ಸಮಾಲೋಚನೆ ನಡೆಸಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಚಿವರ ಸಭೆಯಲ್ಲಿ ವೀಕ್ಷಕರ ಸಮಿತಿಗಳು ವರದಿ ನೀಡದೇ ಇದ್ದರೂ ಅದರ ಬಗ್ಗೆ ಹೆಚ್ಚು ಆದ್ಯತೆ ನೀಡದೆ ಈಗಾಗಲೇ ಚುನಾವಣಾ ಸಂಯೋಜಕರಾಗಿ ನಿಯೋಜನೆಗೊಂಡಿರುವ ಸಚಿವರು ಕ್ಷೇತ್ರಗಳಲ್ಲಿ ಸಮಾಲೋಚನಾ ಸಭೆ ನಡೆಸಬೇಕು. ಬೂತ್ ಸಮಿತಿಗಳು, ಪ್ರಚಾರ ಸಮಿತಿಗಳ ರಚನೆ ಸೇರಿದಂತೆ ಹಲವು ಚಟುವಟಿಕೆಗಳಿಗೆ ಚಾಲನೆ ನೀಡಬೇಕು. +ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು +ಟಿಕೆಟ್ ಆಕಾಂಕ್ಷಿಗಳ ನಡುವೆ ಸಮನ್ವಯತೆ ಮತ್ತು ಒಮ್ಮತ ಮೂಡಿಸಬೇಕು. ಬಂಡಾಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಬೇರೆ ಪಕ್ಷಗಳಿಂದ ಆಗಮಿಸುವ ಮುಖಂಡರು, ಕಾರ್ಯಕರ್ತರನ್ನು ಪಕ್ಷದ ಹಿರಿಯ ನಾಯಕರೊಂದಿಗಿನ ಸಮಾಲೋಚನೆಯೊಂದಿಗೆ ಬರಮಾಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.ಈಗಾಗಲೇ ಸಚಿವರ ವೀಕ್ಷಕರ ಸಮಿತಿಯ ಆಯ್ದ ಕ್ಷೇತ್ರಗಳ ವರದಿಗಳ ಜೊತೆಗೆ ಎಲ್ಲಾ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದಲೂ ಆಕಾಂಕ್ಷಿ ಗಳ ಪಟ್ಟಿಯನ್ನು ಕೆಪಿಸಿಸಿ ಪಡೆದುಕೊಂಡಿದೆ. ಹೀಗಾಗಿ ಅದರ ಆಧಾರದ ಮೇಲೆ ನಾಳೆ ರಾಜ್ಯ ಚುನಾವಣಾ ಸಮಿತಿ ಚರ್ಚೆ ನಡೆಸಲಿದೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಸಭೆಗೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಚರ್ಚೆ ನಡೆಸಿದ ಬಳಿಕ ಸಂಭವನೀಯರ ಪಟ್ಟಿಯನ್ನು ಅಧಿಕೃತವಾಗಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗುತ್ತದೆ. ಅಲ್ಲಿ ಈ ತಿಂಗಳ ಅಂತ್ಯದಲ್ಲಿ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಅಖೈರುಗೊಳಿಸುವ ಸಾಧ್ಯತೆಯಿದೆ. +ಮಾರ್ಚ್ ಎರಡನೇ ವಾರದಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಆ ವೇಳೆಗೆ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲು ಕಾಂಗ್ರೆಸ್ ಎಲ್ಲಾ ರೀತಿಯ ತಯಾರಿಗಳನ್ನು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_259_10.txt b/eesanje/url_46_259_10.txt new file mode 100644 index 0000000000000000000000000000000000000000..64cccd7cf1c87b97da91c05b1a3378dd42dacd91 --- /dev/null +++ b/eesanje/url_46_259_10.txt @@ -0,0 +1,13 @@ +ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಪ್ರಧಾನಿ ಮೋದಿ +ಬೆಂಗಳೂರು,ಜ.18- ಪ್ರಧಾನಿ ನರೇಂದ್ರ ಮೋದಿಯ ವರು ನಾಳೆ ನಗರದ ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸ್ಪೇಸ್ ಪಾರ್ಕ್‍ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (ಬಿಐಇಟಿಸಿ) ಕ್ಯಾಂಪಸ್‍ನ್ನು ಉದ್ಘಾಟಿಸಲಿದ್ದಾರೆ. +ನಾಳೆ ಮಧ್ಯಾಹ್ನ 2:10ಕ್ಕೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಇದು ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ಭಾರತದಾದ್ಯಂತ ಹೆಚ್ಚಿನ ಹೆಣ್ಣು ಮಕ್ಕಳ ಪ್ರವೇಶವನ್ನು ಬೆಂಬಲಿಸುವ ಗುರಿ ಹೊಂದಿದೆ. +ಈ ಕಾರ್ಯಕ್ರಮವು ಭಾರತದಾದ್ಯಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರಗಳಲ್ಲಿ ನಿರ್ಣಾಯಕ ಕೌಶಲ್ಯಗಳನ್ನು ಕಲಿಯಲು ಮತ್ತು ವಾಯುಯಾನ ವಲಯದಲ್ಲಿ ಉದ್ಯೋಗಗಳಿಗೆ ತರಬೇತಿ ನೀಡಲು ಅವಕಾಶಗಳನ್ನು ಒದಗಿಸುತ್ತದೆ. +ಯುವತಿಯರಿಗಾಗಿ, ಪ್ರೋಗ್ರಾಂ 150 ಯೋಜಿತ ಸ್ಥಳಗಳಲ್ಲಿ ಎಸ್‍ಟಿಇಎಂ ಲ್ಯಾಬ್‍ಗಳನ್ನು ರಚಿಸುತ್ತದೆ, ಇದು ಎಸ್‍ಟಿಇಎಂ ವೃತ್ತಿಜೀವನದಲ್ಲಿ ಆಸಕ್ತಿಯನ್ನು ಹುಟ್ಟುಹಾಕಲು ಸಹಾಯ ಮಾಡುತ್ತದೆ. ಈ ಕಾರ್ಯಕ್ರಮವು ಪೈಲಟ್ ಆಗಲು ತರಬೇತಿ ಪಡೆಯುತ್ತಿರುವ ಮಹಿಳೆಯರಿಗೆ ವಿದ್ಯಾರ್ಥಿವೇತನ ಸಹ ನೀಡುತ್ತದೆ. +ಬಿಜೆಪಿ ಸೇರಲು ಆಫರ್ ಬಂದಿತ್ತು ; ಸುಶೀಲ್‍ಕುಮಾರ್ ಶಿಂಧೆ +1,600 ಕೋಟಿ ರೂ.ಗಳ ಹೂಡಿಕೆಯೊಂದಿಗೆ ನಿರ್ಮಿಸಲಾದ 43 ಎಕರೆ ಕ್ಯಾಂಪಸ್ ಅಮೆರಿಕ ಹೊರಗೆ ಬೋಯಿಂಗ್‍ನ ಅತಿದೊಡ್ಡ ಹೂಡಿಕೆಯಾಗಿದೆ. ಭಾರತದಲ್ಲಿ ಬೋಯಿಂಗ್‍ನ ಹೊಸ ಕ್ಯಾಂಪಸ್ ಭಾರತ ದೇಶದ ಅದ್ಭುತ ಆರಂಭಿಕ, ಖಾಸಗಿ ಮತ್ತು ಸರ್ಕಾರಿ ಪರಿಸರ ವ್ಯವಸ್ಥೆಯ ಪಾಲುದಾರಿಕೆಗೆ ಮೂಲಾಧಾರವಾಗಲಿದೆ ಮತ್ತು ಜಾಗತಿಕ ಏರೋಸ್ಪೇಸ್ ಮತ್ತು ರಕ್ಷಣಾ ಉದ್ಯಮಕ್ಕಾಗಿ ಮುಂದಿನ ಪೀಳಿಗೆಯ ಉತ್ಪನ್ನಗಳು ಮತ್ತು ಸೇವೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. +ಈ ವರ್ಷದ ಆರಂಭದಲ್ಲಿ, 20 787 ಡ್ರೀಮ್‍ಲೈನರ್‍ಗಳು, 10 777ಎಕ್ಸ್‍ಎಸ್, ಮತ್ತು 190 737 ಮ್ಯಾಕ್ಸ್ ನ್ಯಾರೋಬಾಡಿ ವಿಮಾನಗಳನ್ನು ಒಳಗೊಂಡಂತೆ 200ಕ್ಕೂ ಹೆಚ್ಚು ಜೆಟ್‍ಗಳಿಗೆ ಬೋಯಿಂಗ್‍ನಿಂದ ಏರ್ ಇಂಡಿಯಾ ಸಂಸ್ಥೆಯು ಸಹಿ ಹಾಕಿದ ನಂತರ, ಭಾರತದಲ್ಲಿ ಪೈಲಟ್‍ಗಳಿಗೆ ತರಬೇತಿ ನೀಡಲು ಮೂಲಸೌಕರ್ಯ ಮತ್ತು ಕಾರ್ಯಕ್ರಮಗಳಲ್ಲಿ 100 ಮಿಲಿಯನ್ ಹೂಡಿಕೆಯನ್ನು ಬೋಯಿಂಗ್ ಘೋಷಿಸಿತು. +ಬೆಂಗಳೂರು ಉತ್ತರಕ್ಕೆ ವಿಸ್ತರಿಸುವುದರೊಂದಿಗೆ, ದೇವನಹಳ್ಳಿಯು ಏರೋಸ್ಪೇಸ್ ಉದ್ಯಮದ ಕೇಂದ್ರವಾಗಿ ಹೊರಹೊಮ್ಮುತ್ತಿದೆ, ಮುಖ್ಯವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮೀಪ್ಯ ಮತ್ತು ಮುಂಬರುವ ಬ್ಲೂ ಮೆಟ್ರೋ ಮಾರ್ಗದ (ಕೆಆರ್ ಪುರ – ಯಲಹಂಕ – ಕೆಐಎ) ಅನುಕೂಲತೆಯಿಂದಾಗಿ. 2026ರ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. +ಇಡಿ ಮುಂದೆ ಕೇಜ್ರಿವಾಲ್ ಹಾಜರಾಗೋದು ಡೌಟು +ದೆಹಲಿಯಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಬೋಯಿಂಗ್‍ನ ಭಾರತದ ಕಾರ್ಯಾಚರಣೆಗಳಲ್ಲಿ ಮುಂಬೈ, ಹಿಂದಾನ್, ರಾಜಾಲಿ ಮತ್ತು ನವದೆಹಲಿಯಲ್ಲಿ ಕ್ಷೇತ್ರ ಸೇವಾ ಕಚೇರಿಗಳು ಮತ್ತು ಬೆಂಗಳೂರು ಮತ್ತು ಚೆನ್ನೈನಲ್ಲಿ ವೇಗವಾಗಿ ಬೆಳೆಯುತ್ತಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಸೇರಿವೆ. +ರಾಜ್ಯ ಬಿಜೆಪಿಯಿಂದ ಅದ್ದೂರಿ ಸ್ವಾಗತಕ್ಕೆ ಸಜ್ಜು: ಈ ವೇಳೆ ಪ್ರಧಾನಿ ಸ್ವಾಗತಕ್ಕೆ ಕಾರ್ಯಕರ್ತರಿಗೆ ಅವಕಾಶ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ದೇಶಿಸಿದ್ದು, ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ, ಮೋದಿ ರೋಡ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿತ್ತು. ಆದರೆ ಸಮಯದ ಅಭಾವದಿಂದ ಕೊನೆ ಕ್ಷಣದಲ್ಲಿ ರದ್ದಾಗಿದೆ. +ಕಾರ್ಯಕಾರಿಣಿ ಸಭೆ ಮುಂದೂಡಿಕೆ:ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ನಾಳೆ ನಿಗದಿಪಡಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ. ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸೋಮವಾರ ಸಂಜೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_259_11.txt b/eesanje/url_46_259_11.txt new file mode 100644 index 0000000000000000000000000000000000000000..3b67098bb7f924f02a15469210057a1a19228306 --- /dev/null +++ b/eesanje/url_46_259_11.txt @@ -0,0 +1,7 @@ +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಬೆಳಗಾವಿ,ಜ.18- ಅಪ್ಪ, ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದಾರೆ. ಜಿಲ್ಲೆಯ ಖಾನಾಪುರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿರುವ ಅವರು, ಅಪ್ಪ, ಅಮ್ಮನ ಹೆಸರೇ ಗೊತ್ತಿಲ್ಲದವರು ಸದಾ ಜಾತ್ಯಾತೀತತೆ ಪಠಿಸುತ್ತಾರೆ. ನಾವು ಹಿಂದೂಗಳು ಎಂದು ಹೇಳಲು ಹಿಂದೆಮುಂದೆ ನೋಡುತ್ತಿದ್ದವರೆಲ್ಲಾ ಈಗ ರಾಮನ ಸ್ಮರಣೆ ಮಾಡುತ್ತಾರೆಂದು ಪರೋಕ್ಷವಾಗ ಸಿಎಂ ಹೆಸರು ಹೇಳದೇ ವಾಗ್ದಾಳಿ ನಡೆಸಿದ್ದಾರೆ. +ತಮ್ಮ ಮಾತಿನುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೇ ಗುರಿಯಾಗಿಟ್ಟುಕೊಂಡು ಮಾತನಾಡಿದ ಅವರು, ಬಹಳಷ್ಟು ವರ್ಷಗಳ ಕಾಲ ಹಿಂದೂ ಎಂಬ ಹೆಸರೇ ಮರೆತುಹೋಗಿತ್ತು. ಈಗ ಯಾರಾದರೂ ನಿಮ್ಮ ಹೆಸರೇನೆಂದರೆ ಜಾತಿ ನೆನಪು ಮಾಡಿಕೊಂಡು ಹೇಳುವ ದುಃಸ್ಥಿತಿ ಬಂದಿತ್ತು. ಈಗ ಪ್ರತಿಯೊಬ್ಬರೂ ನಾನೊಬ್ಬ ಹಿಂದೂ ಎಂದು ಹೆಮ್ಮೆಯಿಂದ ಹೇಳುವ ಕಾಲ ಬಂದಿದೆ. +ಆರಾಧನಾ ಸ್ಥಳಗಳ ಕಾಯ್ದೆ ರಕ್ಷಣೆಗೆ ಓವೈಸಿ ಮನವಿ +ಈಗಾಗಲೇ ರಾಮ ಮಂದಿರ ಉದ್ಘಾಟನೆ ಅಕ್ಷತೆ ಮನೆ ಮನೆಗೆ ಹೋಗಿದೆ. ಐನೂರು ವರ್ಷದ ನಂತರ ನಮಗೆ ಜಯ ಸಿಕ್ಕಿದೆ. ರಾಮ ಮಂದಿರವನ್ನು ಯಾರೋ ಉದ್ಯಮಿ, ಕೈಗಾರಿಕೋದ್ಯಮಿಗಳು ಕಟ್ಟಿಲ್ಲ. ಹಳ್ಳಿ ಹಳ್ಳಿಯಿಂದ ಇಟ್ಟಿಗೆ ಕಳಿಸಿದ್ದೇವೆ, ಇಡೀ ದೇಶದ ಜನ ಜಾಗೃತರಾಗಿ ಕಟ್ಟಿದ್ದು. ಅಯೋಧ್ಯ ಹಿಂದೂಗಳ ಪ್ರತೀಕ, ಸೌರಾಷ್ಟ್ರದ ಸೋಮನಾಥ ದೇವಾಲಯ ಸರ್ಕಾರ ಕಟ್ಟಿದ್ದು. ರಾಮ ಮಂದಿರ ಸರ್ಕಾರ ಕಟ್ಟಿಲ್ಲ, ಹಿಂದೂಗಳು ಕಟ್ಟಿದ್ದಾರೆ. ಅಪಮಾನವನ್ನ ತೊಳೆದು ರಾಮ ಮಂದಿರ ಕಟ್ಟಲಾಗಿದೆ ಎಂದು ಹೇಳಿದರು. +ಜಾತಿ ಹೆಸರಲ್ಲಿ, ಭಾಷೆ ಹೆಸರಲ್ಲಿ ನಮ್ಮನ್ನು ಒಡೆದಾಡುವ ನೀತಿ ಅನುಸರಿಸಿದ್ದರಿಂದಲೇ ನಮ್ಮನಮ್ಮಲ್ಲಿ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ. ಮರಾಠಿ, ಕನ್ನಡ ಒಂದಾಗುತ್ತ್ತಾರೆ ಎಂದರೆ ಕತ್ತಿ ತೆಗೆದುಕೊಂಡು ಬರುತ್ತಾರೆ. ಈ ರೀತಿ ಒಡೆದಾಡಿದರೆ ಅವರ ರಾಜಕಾರಣ ನಡೆಯುವುದು. ಸ್ವಾತಂತ್ರ್ಯದ ನಂತರ ಮರಾಠಿ-ಕನ್ನಡ ಜಗಳ ಶುರುವಾಯಿತು. ಇದರ ಹೊರತಾಗಿ ಒಟ್ಟಾಗಿ ಹಿಂದೂ ಹೆಸರಲ್ಲಿ ಎದ್ದು ನಿಂತೆವು. ರಣ ಭೈರವ ರೀತಿಯಲ್ಲಿ ನಾವು ಈಗ ಏಳುತ್ತಿದ್ದೇವೆ. ನಾವು ಎದ್ದಿದ್ದೇವೆ ಎಂದ ತಕ್ಷಣ ಇಡೀ ಜಗತ್ತು ಅಲ್ಲಾಡಿದೆ ಎಂದರೆ ಹೇಗಿರಬಹುದು ಎಂದು ಪ್ರಶ್ನಿಸಿದರು. +ಐನೂರು ವರ್ಷದ ಪಾಪವನ್ನು ಇಂದು ತೊಳೆದುಕೊಂಡು ರಾಮ ಮಂದಿರ ಕಟ್ಟುತ್ತಿದ್ದೇವೆ. ಇನ್ನೂ ಕಾಶಿ ಇದೆ, ಮಥುರಾ ಇದೆ ಹಳ್ಳಿ ಹಳ್ಳಿಗಳಲ್ಲಿ ಅಪಮಾನ ಆದ ತುಂಬಾ ದೇವಸ್ಥಾನ ಇವೆ. ಹಳ್ಳಿ ಹಳ್ಳಿಯಲ್ಲಿ ಆಗಿರುವ ಅಪಮಾನ ಸೇಡು ತೀರಿಸಿಕೊಳ್ಳಬೇಕು ಎಂದರು. \ No newline at end of file diff --git a/eesanje/url_46_259_12.txt b/eesanje/url_46_259_12.txt new file mode 100644 index 0000000000000000000000000000000000000000..551d2661069affb6550f103f599d5f0889a6d89b --- /dev/null +++ b/eesanje/url_46_259_12.txt @@ -0,0 +1,5 @@ +ಯತೀಂದ್ರ ಹೇಳಿಕೆ ಪ್ರತಿಕ್ರಿಯಿಸುವುದಿಲ್ಲ ಎಂದು ಜಾರಿಕೊಂಡ ಜಾರಕಿಹೊಳಿ +ಬೆಂಗಳೂರು,ಜ.17- ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ ಮುಂದುವರೆ ಯುತ್ತಾರೆ ಎಂಬುದು ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ಅದರ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.ಅದರ ನಂತರವೂ ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ಹೇಳುತ್ತಲೇ ಇದ್ದಾರೆ ಎಂದರು.ಯಾವ ರೀತಿಯ ಚರ್ಚೆ ಮತ್ತು ನಿರ್ಣಯಗಳಾಗಿವೆ ಎಂಬುದು ನಮಗೆ ಗೊತ್ತಿಲ್ಲ. ಹೀಗಾಗಿ ಯಾರೋ, ಎಲ್ಲೋ ನೀಡಿದ ಹೇಳಿಕೆಗೆ ಸಚಿವರು, ಶಾಸಕರು ಪ್ರತಿಕ್ರಿಯಿಸಲಾಗುವುದಿಲ್ಲ. ಅಂತಹ ಹೇಳಿಕೆಗಳು ನಮಗೆ ಸಂಬಂಧಪಟ್ಟಿದ್ದೂ ಅಲ್ಲ ಎಂದು ತಿಳಿಸಿದರು. + : ಶಾಸಕರು-ಕಾರ್ಯಕರ್ತರೂ ಸೇರಿ 70 ಮಂದಿ ನಿಗಮ ಮಂಡಳಿ ಗ್ಯಾರಂಟಿ +ಇತ್ತೀಚೆಗೆ ಎಲ್ಲಾ ಸಚಿವರೊಂದಿಗೆ ದೆಹಲಿಗೆ ಭೇಟಿ ನೀಡಿದ ವೇಳೆ ಲೋಕಸಭೆ ಚುನಾವಣೆ ಕುರಿತಂತೆ ಮಾತ್ರ ಚರ್ಚೆಯಾಯಿತು. ಉಳಿದಂತೆ ಉಪಮುಖ್ಯಮಂತ್ರಿ ಅಥವಾ ಬೇರೆ ಯಾವುದೇ ವಿಷಯಗಳ ಕುರಿತು ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_259_2.txt b/eesanje/url_46_259_2.txt new file mode 100644 index 0000000000000000000000000000000000000000..b4aa13ac64a75f9d0f9da28d19a559e1699a73d8 --- /dev/null +++ b/eesanje/url_46_259_2.txt @@ -0,0 +1,12 @@ +ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಾಂವಿಧಾನಿಕ ತಿದ್ದುಪಡಿಗೆ ಕೇಂದ್ರಕ್ಕೆ ಶಿಫಾರಸ್ಸು..! +ಬೆಂಗಳೂರು,ಜ.18- ಪರಿಶಿಷ್ಟ ಜಾತಿಯ ಒಳಪಂಗಡಗಳ ಮೀಸಲಾತಿಗೆ ಸಂವಿಧಾನಾತ್ಮಕ ಮಾನ್ಯತೆ ದೊರೆಯುವಂತೆ ಪರಿಚ್ಛೇದ 341 ಕ್ಕೆ ಹೊಸದಾಗಿ ಉಪಖಂಡ 3 ನ್ನು ಸೇರ್ಪಡೆಗೊಳಿಸಲು ಸಂವಿಧಾನ ತಿದ್ದುಪಡಿ ತರುವಂತೆ ರಾಜ್ಯ ಸಚಿವ ಸಂಪುಟ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತಂತೆ ವಿಚಾರವನ್ನು ಪ್ರಮುಖವಾಗಿ ಚರ್ಚಿಸಲಾಗಿದೆ. ಇದಕ್ಕೂ ಮುನ್ನ ಬೆಳಿಗ್ಗೆಯಿಂದಲೂ ಪರಿಶಿಷ್ಟ ಸಮುದಾಯದ ಸಚಿವರು, ಪ್ರಮುಖ ನಾಯಕರು, ಸಂಸದರು ಸರಣಿ ಸಭೆಗಳನ್ನು ನಡೆಸಿದರು. ಬೆಳಿಗ್ಗೆ ಸಚಿವ ಎಚ್.ಸಿ.ಮಹದೇವಪ್ಪನವರ ಮನೆಯಲ್ಲಿ ಸಭೆ ನಡೆಯಿತು. ಬಳಿಕ ವಿಧಾನಸೌಧದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಸಚಿವರು ಸಭೆ ನಡೆಸಿ ಚರ್ಚಿಸಿದರು. +ಆಹಾರ ಮತ್ತು ಪೂರೈಕೆ ನಾಗರಿಕ ಸಚಿವರಾದ ಕೆ.ಎಚ್.ಮುನಿಯಪ್ಪ, ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ವಿಧಾನಪರಿಷತ್ ಸದಸ್ಯ ಸುಧಾಮ್ ದಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. +ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ +ಒಳಮೀಸಲಾತಿಯ ವಿಮರ್ಶೆ :ಪರಿಶಿಷ್ಟ ಜಾತಿಯಲ್ಲಿ ಇರುವ 101 ಜಾತಿಗಳಿಂದ 2011ರ ಜನಗಣತಿಯಂತೆ 1.05 ಕೋಟಿಯಷ್ಟು ಜನಸಂಖ್ಯೆ ಇದೆ. ಇದು ಒಟ್ಟು ಜನಸಂಖ್ಯೆಯಲ್ಲಿ ಶೇ.17.15 ರಷ್ಟು ಎಂದು ಅಂದಾಜಿಸಲಾಗಿದೆ. ಈ ಹಿಂದೆ ಬಸವರಾಜು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ 2022 ಡಿಸೆಂಬರ್ 13 ರಂದು ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕೆ ಕಾನೂನು ಸಚಿವರಾಗಿದ್ದ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿದ್ದರು. ಒಳಮೀಸಲಾತಿ ಅಧ್ಯಯನ ನಡೆಸಿದ್ದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಉಪಸಮಿತಿ ಅಪ್ರಸ್ತುತ ಎಂದು ತಿರಸ್ಕರಿಸಿತ್ತು. ಮುಂದುವರೆದು ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ 17 ಕ್ಕೆ ಹೆಚ್ಚಿಸಿತ್ತು. +ಸದಾಶಿವ ಆಯೋಗದ ಶಿಫಾರಸ್ಸಿನಲ್ಲಿನ ಮೀಸಲಾತಿ ವರ್ಗೀಕರಣದ ಪ್ರಮಾಣವನ್ನು ಪರಿಗಣಿಸಿ, ಪರಿಶಿಷ್ಟ ಜಾತಿಗಳನ್ನು 4 ಗುಂಪುಗಳಾಗಿ ವಿಂಗಡಿಸಿ ಒಳಮೀಸಲಾತಿಯನ್ನು ನಿಗದಿ ಮಾಡಲಾಗಿತ್ತು. ಅದಕ್ಕೆ 2023 ರ ಮಾರ್ಚ್ 24 ರ ಸಂಪುಟ ಸಭೆ ಅಂಗೀಕಾರ ನೀಡಿದೆ. ಸ್ಪರ್ಶ ಜಾತಿಗಳಾದ ಬೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಎಸ್ಸಿ ಮೀಸಲಾತಿ ಪಟ್ಟಿಯಲ್ಲಿ ಮುಂದುವರೆಸುವುದಾಗಿ ನಿರ್ಣಯಿಸಲಾಗಿತ್ತು. ಸಂಪುಟದ ನಿರ್ಣಯವನ್ನು ಅದೇ ವರ್ಷ ಮಾರ್ಚ್ 28 ಮತ್ತು 31 ರಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. +ಜೂನ್ 8 ರಂದು ರಾಜ್ಯಕ್ಕೆ ಪತ್ರ ಬರೆದಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ಪಂಜಾಬ್ ಸರ್ಕಾರ ಮತ್ತು ದೇವೇಂದ್ರ ಸಿಂಗ್ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ 2020 , ಆಗಸ್ಟ್ 27 ರ ತೀರ್ಪಿನಂತೆ ಒಳಮೀಸಲಾತಿ ವರ್ಗೀಕರಣ ನ್ಯಾಯಾಂಗ ನಿಂದನೆಯಾಗಲಿದೆ ಎಂದು ತಿಳಿಸಿದೆ. ಈ ಮೊದಲು ಆಂಧ್ರಪ್ರದೇಶ ಸರ್ಕಾರ, ಪಂಜಾಬ್ ಸರ್ಕಾರಗಳು ರೂಪಿಸಿದ್ದ ಒಳಮೀಸಲಾತಿಯನ್ನು ನ್ಯಾಯಾಲಯಗಳು ಅಸಿಂಧುಗೊಳಿಸಿವೆ ಎಂದು ತಿಳಿಸಲಾಗಿದೆ. +ಕೇಂದ್ರ ಸರ್ಕಾರ ಒಳಮೀಸಲಾತಿಯ ಕುರಿತು ಅಧ್ಯಯನ ನಡೆಸಿ ವರದಿ ನೀಡಲು 2011 ಜುಲೈ 20 ರಂದು ದೆಹಲಿ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾೀಶರಾದ ತುಷಾ ಮೆಹ್ರಾ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಆಯೋಗ ರಚಿಸಿತ್ತು. ಆಯೋಗವು ಸಂವಿಧಾನದ 341 ರ ಅನುಚ್ಛೇದಕ್ಕೆ ಉಪಬಂಧ 3 ನ್ನು ಸೇರ್ಪಡೆ ಮಾಡಿದರೆ ಒಳಮೀಸಲಾತಿ ನೀಡಲು ಅವಕಾಶವಾಗಲಿದೆ ಎಂದು ತಿಳಿಸಿದೆ. +ಸಂವಿಧಾನದ ತಿದ್ದುಪಡಿಯಾದರೆ ಆರ್ಥಿಕ ಪರಿಣಾಮಗಳು ಇಲಾಖೆಗಳ ಸಮಾಲೋಚನೆ, ಇತರ ಅಭಿಪ್ರಾಯಗಳು ಅಗತ್ಯವಿಲ್ಲದೆ ರಾಜ್ಯಸರ್ಕಾರವೇ ಒಳಮೀಸಲಾತಿಯನ್ನು ಜಾರಿಗೆ ತರಬಹುದಾಗಿದೆ ಎಂದು ತಿಳಿಸಲಾಗಿದೆ.ಈ ನಿಟ್ಟಿನಲ್ಲಿ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಸಂವಿಧಾನದ 341 ಪರಿಚ್ಛೇದ 3 ರ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಸಭೆ ನಿರ್ಣಯಿಸಿದೆ.ಈ ಮೂಲಕ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದತ್ತ ಹೊಣೆಗಾರಿಕೆಯನ್ನು ಹೊತ್ತು ಹಾಕಿ ಕಾಂಗ್ರೆಸ್ ಕೈ ತೊಳೆದುಕೊಳ್ಳುವ ತಯಾರಿ ನಡೆಸಿದೆ. +ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್‍ +ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಅಷ್ಟೇ ಅಲ್ಲದೆ, ಚಿತ್ರದುರ್ಗ ಸಮಾವೇಶದಲ್ಲೂ ಘೋಷಣೆ ಮಾಡಲಾಗಿತ್ತು.ಆದರೆ ಪ್ರಸ್ತುತ ಒಳಮೀಸಲಾತಿಯನ್ನು ಜಾರಿಗೊಳಿಸಿದರೆ ಅದು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಿಸಬಹುದು ಎಂಬ ಆತಂಕದಿಂದ ಕೇಂದ್ರದತ್ತ ಬೆರಳು ಮಾಡಲು ರಾಜ್ಯಸರ್ಕಾರ ಮುಂದಾಗಿದೆ ಎಂಬ ಆರೋಪಗಳಿವೆ. \ No newline at end of file diff --git a/eesanje/url_46_259_3.txt b/eesanje/url_46_259_3.txt new file mode 100644 index 0000000000000000000000000000000000000000..2f77a3acb47a0481ac7f67a5a9a942295ae4d5f2 --- /dev/null +++ b/eesanje/url_46_259_3.txt @@ -0,0 +1,5 @@ +ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಮನವಿ +ಬೆಂಗಳೂರು,ಜ.18- ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಘೋಷಿಸಬೇಕೆಂದು ತಮ್ಮಲ್ಲಿ ಕೋರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ. ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಭಾರತ ದೇಶದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಗುರು ಬಸವಣ್ಣನವರು ಅಸ್ಪಶ್ಯತೆ ವಿರುದ್ಧ ಚಳುವಳಿ ರೂಪಿಸಿ ದೀನ, ದಲಿತ, ಶೋಷಿತ ಸಮಾಜದ ಸಮಾನತೆಗೆ ಧ್ವನಿ ಎತ್ತಿದ ಇತಿಹಾಸದ ಮೊದಲ ನಾಯಕ. +ಕಲ್ಯಾಣದ ಅನುಭವ ಮಂಟಪದ 770 ಶರಣ-ಶರಣೇಯರನ್ನು ಹಾಗೂ ಸಾವಿರಾರು ಜಂಗಮರನ್ನು ಒಗ್ಗೂಡಿಸಿ ಕನ್ನಡದಲ್ಲಿ ವಚನ ಸಂಸ್ಕøತಿಯನ್ನು ಪಸರಿಸಿ, ಸಮಾನತೆಯ ಸಂದೇಶ ಸಾರಿದ್ದು ಗುರು ಬಸವಣ್ಣನವರು. 12ನೇ ಶತಮಾನದಲ್ಲಿಯೇ ಗುರು ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಜನರಿಗೂ ಅವಕಾಶ ಕಲ್ಪಿಸಿ ಸಮಾನತೆಯನ್ನು ಪ್ರತಿಪಾದಿಸಿದ್ದರು. ಮುಂದೆ ಸ್ವಾತಂತ್ರದ ನಂತರ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್‍ರವರು ಭಾರತ ಸಂವಿಧಾನವನ್ನು ರಚಿಸಿ ದೇಶದಲ್ಲಿ ಸರ್ವರಿಗೂ ಸಮಾನತೆಯನ್ನು ಕಲ್ಪಿಸಿದರು. +ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್‍ +ಕಾಯಕವೇ ಕೈಲಾಸ, ಅರಿವೇ ಗುರು ಎಂದು ಸಾಮಾಜಿಕ ಪ್ರಜ್ಞೆ ಮೂಡಿಸಲು ತಮ್ಮ ಜೀವನವಿಡಿ ಶ್ರಮಿಸಿದ ವಿಶ್ವಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕರೆಂದು ಅಕೃತವಾಗಿ ಘೋಷಿಸುವುದರಿಂದ ಇಡೀ ನಾಡಿಗೆ ಸಂತಸವನ್ನು ಉಂಟು ಮಾಡುವುದಲ್ಲದೇ ನಮ್ಮ ರಾಜ್ಯ ಸರ್ಕಾರದ ಗರಿಮೆಯನ್ನು ಹೆಚ್ಚಿಸಿದಂತಾಗುತ್ತದೆ. ಮಹಾರಾಷ್ಟ್ರ ಸರ್ಕಾರವು ಶಿವಾಜಿ ಮಹಾರಾಜರವರನ್ನು ಆ ರಾಜ್ಯದಲ್ಲಿ ಸಾಂಸ್ಕøತಿಕ ನಾಯಕ ಎಂದು ಘೋಷಿಸಿರುವ ಉದಾಹರಣೆ ಈಗಾಗಲೇ ಇರುತ್ತದೆ. \ No newline at end of file diff --git a/eesanje/url_46_259_4.txt b/eesanje/url_46_259_4.txt new file mode 100644 index 0000000000000000000000000000000000000000..b38abd3fa9d11933c15aa11f476fdd553895264d --- /dev/null +++ b/eesanje/url_46_259_4.txt @@ -0,0 +1,8 @@ +ನಿಗಮ-ಮಂಡಳಿಗಳಿಗೆ ನೇಮಕ ಇಂದೇ ಪ್ರಕಟ..! +ಬೆಂಗಳೂರು,ಜ.18- ರಾಜ್ಯದ 75 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಅಂಗೀಕೃತ ಪಟ್ಟಿ ಇದೇ ದಿನ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ರಾಜ್ಯದಲ್ಲಿ ಪಕ್ಷವನ್ನು ಅಕಾರಕ್ಕೆ ತಂದಿದ್ದಾರೆ. ನೇಮಕಾತಿ ಅವರ ಹಕ್ಕು ಎಂದು ಹೇಳಿದರು. 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಜನ ಶಾಸಕರಿಗೆ ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುವುದು ಎಂದರು. +ನೇಮಕಾತಿಯ ಬೆನ್ನಲ್ಲೇ ಕೆಪಿಸಿಸಿ ಪುನರ್ ರಚನೆಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ನಾಳೆ ಸಂಜೆ 4.30 ಕ್ಕೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದು ಎಂದು ತಿಳಿಸಿದರು. +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯ ಭೇಟಿಗಾಗಿ ಇಂದು ಆಗಮಿಸುತ್ತಿದ್ದಾರೆ. ಹೀಗಾಗಿ ಅವರನ್ನು ಆಹ್ವಾನಿಸಿ ಮುಖ್ಯಮಂತ್ರಿಯವರು, ಸಚಿವರು ಹೋಗಬೇಕಿದೆ. ಜನವರಿ 19 ರಂದು ನಿಗದಿಯಾಗಿದ್ದ ಸಭೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದರು. +ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ +ಸಮಿತಿಯಲ್ಲಿ ಈ ಹಿಂದೆ ಸದಸ್ಯರಾಗಿದ್ದವರೇ ಮುಂದುವರೆಯಲಿದ್ದಾರೆ. ಹೆಚ್ಚುವರಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರನ್ನು ವಿಶೇಷ ಆಹ್ವಾನಿತರನ್ನಾಗಿ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಎಲ್ಲಾ ಸದಸ್ಯರೂ ಮೊದಲಿನಂತೆಯೇ ಇರಲಿದ್ದಾರೆ ಎಂದರು. ಸಮಿತಿಯ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುವುದು. ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಹಿಂದೂ ವಿರೋ ಎಂದು ಅಪಪ್ರಚಾರ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾವೆಲ್ಲಾ ಹಿಂದೂಗಳು. ಧರ್ಮದಲ್ಲಿ ರಾಜಕೀಯ ಬೆರೆಸುವುದು ಒಳ್ಳೆಯದಲ್ಲ. ನಮಗೆ ಎಲ್ಲಾ ಸಮುದಾಯ ಮತ್ತು ಆಚರಣೆಯ ಮೇಲೆ ನಂಬಿಕೆ ಇದೆ. ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದರೆ, ನನ್ನ ಹೆಸರಿನಲ್ಲಿ ಶಿವ ಇದೆ. ಬಿಜೆಪಿಯವರ ಅಪಪ್ರಚಾರಗಳು ಲೋಕಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. +ಸಂಸದೆ ಸುಮಲತಾ ಅವರು ಕಾಂಗ್ರೆಸ್ನಿಂದ ಸ್ರ್ಪಸುತ್ತಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_259_5.txt b/eesanje/url_46_259_5.txt new file mode 100644 index 0000000000000000000000000000000000000000..7697337b203d268080127d488a62b3682857d2c5 --- /dev/null +++ b/eesanje/url_46_259_5.txt @@ -0,0 +1,6 @@ +ವಿಶ್ವನಾಥ್ ಆನಂದ್ ಜೊತೆ ಚೆಸ್ ಆಡಿದ ಸಿಎಂ +ಬೆಂಗಳೂರು,ಜ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರೊಂದಿಗೆ ಚೆಸ್ ಆಟವಾಡುವ ಮೂಲಕ ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ ಓಪನ್ ಚೆಸ್ ಪಂದ್ಯಾವಳಿಗೆ ಚಾಲನೆ ನೀಡಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಸ್ಟರ್ ಆನಂದ್ ಅವರೊಂದಿಗೆ ಚೆಸ್ ಆಡಲು ಕುಳಿತುಕೊಂಡರು. +ಮಾಸ್ಟರ್ ಆನಂದ್ ಒಂದು ದಾಳವನ್ನು ನಡೆಸಿದರು.ಮುಖ್ಯಮಂತ್ರಿಯವರು ಪ್ರತಿಯಾಗಿ ಒಂದು ದಾಳವನ್ನು ನಡೆಸಿದರು. ಆನಂದ್ ಅವರು ಎರಡನೇ ದಾಳ ನಡೆಸಿದಾಗ ಮುಖ್ಯಮಂತ್ರಿಯವರಿಗೆ ಮುಂದಿನ ಆಟದ ಬಗ್ಗೆ ಗೊಂದಲವಾಯಿತು. +ಆಗ ಪಕ್ಕದಲ್ಲೇ ಇದ್ದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದ್ ರಾಜು ಅವರು ನೆರವಿಗೆ ಬಂದರು. ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಸಲಹೆ ನೀಡಿದರು. ಒಟ್ಟು ಎರಡು ದಾಳಗಳನ್ನು ಮುನ್ನಡೆಸಿ, ಪಂದ್ಯಾವಳಿಯನ್ನು ಉದ್ಘಾಟಿಸಿದರು. +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಜನವರಿ 18 ರಿಂದ ಜನವರಿ 26ರವರೆಗೂ ಈ ಪಂದ್ಯಾವಳಿ ನಡೆಯಲಿದ್ದು, ಇದರಲ್ಲಿ 18 ದೇಶದಗಳ ಎ ಗ್ರೇಡ್, ಬಿ ಗ್ರೇಡ್ ಸೇರಿ, ಟೂರ್ನಿಯಲ್ಲಿ 50 ಗ್ರ್ಯಾಂಡ್ ಮಾಸ್ಟರ್ಸ್ ಹಾಗೂ 1500 ಸ್ರ್ಪಗಳು ಭಾಗವಹಿಸಲಿದ್ದಾರೆ. \ No newline at end of file diff --git a/eesanje/url_46_259_6.txt b/eesanje/url_46_259_6.txt new file mode 100644 index 0000000000000000000000000000000000000000..069d2a9fb31ee8f77a29b542d6188d77624ffa46 --- /dev/null +++ b/eesanje/url_46_259_6.txt @@ -0,0 +1,6 @@ +ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು +ಮಂಗಳೂರು, ಜ.18 (ಪಿಟಿಐ) – ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿ ಶ್ರೀಕೃಷ್ಣ ದೇವಸ್ಥಾನದಲ್ಲಿ ಇಂದು ಪರ್ಯಾಯ ಪೀಠಾರೋಹಣ ಮಾಡಿದರು. ಮುಂದಿನ ಎರಡು ವರ್ಷಗಳ ಕಾಲ, ಉಡುಪಿಯ ಎಂಟು ಮಠಗಳ ನಡುವೆ ಆಡಳಿತದ ಸಾಂಪ್ರದಾಯಿಕ ಸರದಿಯಂತೆ, ಸುಗುಣೇಂದ್ರ ತೀರ್ಥರು ಪರ್ಯಾಯವಾಗಿ ಕೃಷ್ಣ ದೇವಸ್ಥಾನದಲ್ಲಿ ಆಡಳಿತ ಮತ್ತು ಪೂಜೆಗಳನ್ನು ನೋಡಿಕೊಳ್ಳುತ್ತಾರೆ. +ಸುಗುಣೇಂದ್ರ ತೀರ್ಥ ಸ್ವಾಮಿಗಳು ಮಧ್ಯರಾತ್ರಿ 1.30 ಗಂಟೆಗೆ ಕಾಪುವಿನ ದಂಡತೀರ್ಥ ಸರೋವರದಲ್ಲಿ ಪುಣ್ಯಸ್ನಾನ ಮಾಡಿ ಜೋಡುಕಟ್ಟೆಗೆ ಆಗಮಿಸಿ ಧಾರ್ಮಿಕ ವಿಧಿ ವಿಧಾನಗಳು ಮತ್ತು ಭವ್ಯ ಪರ್ಯಾಯ ಮೆರವಣಿಗೆಯಲ್ಲಿ ಭಾಗವಹಿಸಿದರು. ಅವರ ಜೊತೆಯಲ್ಲಿ ಅವರ ಕಿರಿಯ ಮಠಾೀಧಿಶರಾದ ಸುಶೀಂದ್ರ ತೀರ್ಥರು ಇದ್ದರು. +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಶ್ರೀ ಕೃಷ್ಣನ ದರ್ಶನದ ನಂತರ ಪುತ್ತಿಗೆ ಶ್ರೀಗಳಿಗೆ ಉಡುಪಿ ಶ್ರೀ ಕೃಷ್ಣ ದೇವಸ್ಥಾನದ ಉಸ್ತುವಾರಿಯನ್ನು ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥರು ಸರ್ವಜ್ಞ ಪೀಠಕ್ಕೆ ಕರೆದೊಯ್ಯುವ ಮೂಲಕ ಹಸ್ತಾಂತರಿಸಿದರು.ಇದಕ್ಕೂ ಮುನ್ನ ವಿವಿಧ ಟ್ಯಾಬ್‍ಲೋಗಳು, ಪಿಲಿ ವೇಷ ತಂಡಗಳು ಮತ್ತು ಸಂಗೀತ ತಂಡಗಳು ವರ್ಣರಂಜಿತ ಪರ್ಯಾಯ ಮೆರವಣಿಗೆಯಲ್ಲಿ ಸೇರಿಕೊಂಡವು. ತೆರೆದ ವಾಹನಗಳ ಮೇಲೆ ಸುಂದರವಾಗಿ ಅಲಂಕರಿಸಿದ ಪಲ್ಲಕ್ಕಿಯಲ್ಲಿ ಪುತ್ತಿಗೆ ಶ್ರೀಗಳನ್ನು ಕರೆದೊಯ್ಯಲಾಯಿತು. +ಉಡುಪಿ ಜಿಲ್ಲಾಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಂಜೆ, ಶಾಸಕರಾದ ಯಶಪಾಲ್ ಸುವರ್ಣ, ವಿ ಸುನೀಲ್ ಕುಮಾರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_259_7.txt b/eesanje/url_46_259_7.txt new file mode 100644 index 0000000000000000000000000000000000000000..95ab410ee15ff19ec8d8297a3ceafbf58eac09e8 --- /dev/null +++ b/eesanje/url_46_259_7.txt @@ -0,0 +1,9 @@ +ಉಡುಪಿಯ ಸಾಂಸ್ಕೃತಿಕ ಶ್ರೀಮಂತಿಕೆ ವಿಶ್ವಕ್ಕೆ ಮಾದರಿ : ಲಕ್ಷ್ಮಿ ಹೆಬ್ಬಾಳ್ಕರ್ +ಉಡುಪಿ,ಜ.18- ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಉಡುಪಿಯ ಶ್ರೀಮಂತಿಕೆ ಇಡೀ ವಿಶ್ವಕ್ಕೇ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಬಣ್ಣಿಸಿದರು. ಉಡುಪಿಯ ಶ್ರೀಕೃಷ್ಣ ಮಠದ ರಾಜಾÁಂಗಣದಲ್ಲಿ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಡುಪಿ ಪರ್ಯಾಯ ಕಾರ್ಯಕ್ರಮ ನೋಡಿ ನಿಜಕ್ಕೂ ಬೆರಗಾದೆ. +ಸಾಂಸ್ಕೃತಿಕವಾಗಿ ಸಾಕಷ್ಟು ಶ್ರೀಮಂತಿಕೆ ಹೊಂದಿದೆ ಎಂದರು. ದೇಶದ ಪ್ರಸಿದ್ಧ ತೀರ್ಥಕ್ಷೇತ್ರವಾದ ಉಡುಪಿ ಅನೇಕ ವೈಶಿಷ್ಟ್ಯಗಳಿಂದ ಕೂಡಿದೆ. ಇಂತಹ ಜಿಲ್ಲೆಗೆ ಉಸ್ತುವಾರಿ ಸಚಿವೆಯಾಗಿ ಸೇವೆ ಸಲ್ಲಿಸುವ ಸೌಭಾಗ್ಯ ನನ್ನ ಪಾಲಿಗೆ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. +ಶ್ರೀ ಪುತ್ತಿಗೆ ಪರ್ಯಾಯೋತ್ಸವದ ಅಂಗವಾಗಿ ನಡೆದ ಮೆರವಣಿಗೆ ಹಾಗೂ ಕಾರ್ಯಕ್ರಮವು ಮೈಸೂರು ದಸರಾದ ವೈಭವ ನೆನಪಿಸುತ್ತದೆ. ಇದನೆಲ್ಲಾ ನೋಡಿದರೆ ಸಾಂಸ್ಕೃತಿಕವಾಗಿ ಭಾರತ ಸಾಕಷ್ಟು ಶ್ರೀಮಂತವಾಗಿದೆ. ಭಾರತ ಸಾಂಸ್ಕೃತಿಕವಾಗಿ ವಿಶ್ವಗುರು ಆಗುವ ಪಥದತ್ತ ಸಾಗಿದೆ ಎಂದು ಅಭಿಪ್ರಾಯಪಟ್ಟರು. +ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಕರ್ನಾಟಕ ಸರ್ಕಾರ ಹಾಗೂ ಉಡುಪಿ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಿದೆ. ಪರ್ಯಾಯ ಕಾರ್ಯಕ್ರಮ ಮುಗಿಯುವವರೆಗೂ ಜಿಲ್ಲಾಡಳಿತ ಸಂಪೂರ್ಣ ಸಹಕಾರವನ್ನು ನೀಡಲಿದೆ ಎಂದು ಭರವಸೆ ನೀಡಿದರು. ಉಡುಪಿಯ ಪುತ್ತಿಗೆ ಶ್ರೀಗಳು ವಿದೇಶಗಳಲ್ಲಿ ಶಾಖಾಮಠಗಳನ್ನು ಸ್ಥಾಪಿಸಿ, ಭಾರತೀಯ ಸಂಸ್ಕೃತಿ ಬಗ್ಗೆ ವಿದೇಶಿಗರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಸಚಿವರ ಸಹಕಾರಕ್ಕೆ ಪುತ್ತಿಗೆ ಶ್ರೀಗಳ ಶ್ಲಾಘನೆ:ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತಿಗೆ ಮಠಾೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿ ಬಂದಿರುವುದಕ್ಕಿಂತ ಹೆಚ್ಚಾಗಿ, ಕೃಷ್ಣ ಭಕ್ತೆಯಾಗಿ ಕುಟುಂಬ ಸಮೇತ ಪರ್ಯಾಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆರಂಭಿಕ ಹಂತದಿಂದಲೂ ಸಚಿವರು ಪರ್ಯಾಯದ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದು ಹೇಳಿದರು. +ಚಿನ್ನದ ರಥ ನೀಡುವ ಸಂಕಲ್ಪ :ತಾವು ನಾಲ್ಕನೇ ಬಾರಿಗೆ ಪರ್ಯಾಯ ಅಲಂಕರಿಸುತ್ತಿದ್ದು, ಸನ್ಯಾಸ ಆಶ್ರಮ ಪೂರೈಸಿ 50 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕೃಷ್ಣನಿಗೆ ಚಿನ್ನದ ರಥ ಸಮರ್ಪಿಸುವ ಸಂಕಲ್ಪ ಹೊಂದಿದ್ದೇನೆ ಎಂದರು. ವಿದೇಶ ಪ್ರವಾಸ ಕ್ಕಿಂತ ಕೃಷ್ಣ ಪೂಜೆಯೇ ಮುಖ್ಯವಾಗಿದ್ದು, ಈ ಎರಡು ವರ್ಷಗಳ ಪರ್ಯಾಯದ ಅವಯಲ್ಲಿ ಸಂಪೂರ್ಣ ಸಮಯವನ್ನು ಕೃಷ್ಣನ ಪೂಜೆಗೆ ಮೀಸಲಿಡುವೆ ಎಂದು ಹೇಳಿದರು. +ಈ ವೇಳೆ ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು, ಧರ್ಮಸ್ಥಳದ ಧರ್ಮಾಕಾರಿ ಡಾ.ವೀರೇಂದ್ರ ಹೆಗ್ಗಡೆ, ಇಸ್ಕಾನ್ ಮುಖ್ಯಸ್ಥ ಮಧುಪಂಡಿತ್ ದಾಸ್, ಮಾಜಿ ಸಿಎಂ .ಯಡಿಯೂರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_259_8.txt b/eesanje/url_46_259_8.txt new file mode 100644 index 0000000000000000000000000000000000000000..cbd21d00396845f40f4bc3677d1e0a47ca6c01ee --- /dev/null +++ b/eesanje/url_46_259_8.txt @@ -0,0 +1,8 @@ +ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ +ನವದೆಹಲಿ,ಜ.18- ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡಿರುವ ಕೊಡುಗೆ ಏನು? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ದಟತನ. ಇಂಥ ಹೇಳಿಕೆಗಳನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. +ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಕ್ಕೂಟ ವ್ಯವಸ್ಥೆಯಲ್ಲಿ ವಿಶ್ವಾಸದಿಂದ ಕೆಲಸ ಮಾಡಬೇಕು. ಬೀದಿಯಲ್ಲಿ ನಿಂತು ಇಂತಹ ಹೇಳಿಕೆಗಳನ್ನು ಕೊಡುವುದರಿಂದ ರಾಜ್ಯದ ಜನತೆಗೆ ಯಾವುದೇ ಉಪಯೋಗ ಆಗುವುದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೇ ಹಣಕಾಸು ಆಯೋಗ ರಚನೆಯಾಗಿದೆ. +ಇದೀಗ 14-15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬರಬೇಕಾಗಿದ್ದ ಆರ್ಥಿಕ ನೆರವು ಕಡಿಮೆಯಾಗಿದೆ ಎಂಬ ಆರೋಪ ಮಾಡುವ ಬದಲು ಅಂಕಿ-ಅಂಶಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮನವರಿಕೆ ಮಾಡಿ ಸರಿಪಡಿಸಿಕೊಳ್ಳಬೇಕು ಎಂದರು. +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಮುಂದಿನ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಕೇಂದ್ರ ನಾಯಕರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದು, ರಾಜ್ಯ ಬಿಜೆಪಿ ಘಟಕ ಮತ್ತು ಜೆಡಿಎಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಹಿನ್ನಡೆಯಾಗುತ್ತದೆ, ಯಾವ ಕ್ಷೇತ್ರದಲ್ಲಿ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಚರ್ಚಿಸಲಾಗಿದೆ ಎಂದು ಹೇಳಿದರು. +ಕೇಂದ್ರ ಬಿಜೆಪಿ ತಂಡವು ಎರಡು,ಮೂರು ಸರ್ವೆಗಳನ್ನು ನಡೆಸಿದ್ದು, ಕ್ಷೇತ್ರವಾರು ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅವನ್ನು ಅವಲೋಕಿಸಿ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವುದು ನಮ್ಮ ಮೈತ್ರಿಯ ಉದ್ದೇಶವಾಗಿದೆ ಎಂದರು. ಕೇಂದ್ರ ಮಂತ್ರಿಯಾಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕಸಭೆ ಚುನಾವಣೆ ಎರಡು, ಮೂರು ತಿಂಗಳು ಮಾತ್ರ ಬಾಕಿ ಉಳಿದಿದೆ. ಶೀಘ್ರದಲ್ಲೇ ನೀತಿ ಸಂಹಿತೆ ಜಾರಿಯಾಗುವುದರಿಂದ ಈ ಸಂದರ್ಭದಲ್ಲಿ ಮಂತ್ರಿಯಾಗಿ ರಾಜ್ಯಕ್ಕೆ ಮತ್ತು ಕೇಂದ್ರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ. ಇಂತಹ ವಿಷಯ ಏಕೆ ಚರ್ಚೆಗೆ ಬಂತು ಎಂಬುದೇ ನನಗೆ ಯಕ್ಷಪ್ರಶ್ನೆಯಾಗಿದೆ ಎಂದರು. +ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಮಂಡ್ಯ ಮಾತ್ರವಲ್ಲದೆ ನನಗೆ ರಾಜಕೀಯ ಜನ್ಮ ನೀಡಿದ ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲೂ ಸ್ಪರ್ಧಿಸುವಂತೆ ಕೇಳುತ್ತಿದ್ದಾರೆ. ತುಮಕೂರಿನಲ್ಲಿ ಕಳೆದ ಬಾರಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಸೋಲಿಸಿದ್ದರು. ಬಿಜೆಪಿ ನಾಯಕರು ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ನಾನು ಆ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ನಾನು ಸ್ಪರ್ಧೆ ಬಗ್ಗೆ ಯಾವುದನ್ನು ತೀರ್ಮಾನಿಸಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_259_9.txt b/eesanje/url_46_259_9.txt new file mode 100644 index 0000000000000000000000000000000000000000..aef8ab6928086ae39830fcd17329b82b785d0bd2 --- /dev/null +++ b/eesanje/url_46_259_9.txt @@ -0,0 +1,7 @@ +ಸೂಕ್ತ ಸರ್ಕಾರಿ ನಿವಾಸಕ್ಕಾಗಿ ಸರ್ಕಾರಕ್ಕೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ್‍ +ಬೆಂಗಳೂರು,ಜ.18- ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ್‍ರವರು ತಮಗೆ ಸೂಕ್ತವಾದ ಕಡೆ ಸರ್ಕಾರಿ ನಿವಾಸವನ್ನು ಮಂಜೂರು ಮಾಡಬೇಕೆಂದು ಮುಖ್ಯಕಾರ್ಯ ದರ್ಶಿಗೆ ಪತ್ರ ಬರೆದಿದ್ದಾರೆ. ಛಾಯಾ ಮುಖ್ಯಮಂತ್ರಿಯೆಂದೇ ಗುರುತಿಸಿಕೊಂಡಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕರಿಗೆ ಬೆಂಗಳೂರಿನಲ್ಲಿ ಸುಸಜ್ಜಿತ ಬಂಗಲೆ, ಸರ್ಕಾರಿ ವಾಹನ, ಅಂಗರಕ್ಷಕರು ಸೇರಿದಂತೆ ಹಲವು ಸವಲತ್ತುಗಳನ್ನು ನೀಡಬೇಕಾಗುತ್ತದೆ. +ಇದೀಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅಶೋಕ್, ತಮಗೆ ಕಾರ್ಯಕರ್ತರನ್ನು ಭೇಟಿಯಾಗಲು ಅನುಕೂಲವಾಗುವಂತಹ ಸುಸಜ್ಜಿತ ಬಂಗಲೆಯನ್ನು ಮಂಜೂರು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಘೋಯೆಲ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. +ಮೂಲಗಳ ಪ್ರಕಾರ, ಆರ್.ಅಶೋಕ್ ತಮಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಈಗಾಗಲೇ ನಿಗದಿಯಾಗಿರುವ ಬಂಗಲೆಯನ್ನು ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ನಗರದ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ್ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ ಶಿವಕುಮಾರ್‍ಗೆ ಹಂಚಿಕೆಯಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್‍ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್‍ನ ನಂಬರ್ 1 ನಿವಾಸ ಸಚಿವ ಎಂ.ಬಿ.ಪಾಟೀಲ್‍ಗೆ ಹಂಚಿಕೆಯಾಗಿದೆ. ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ. +ಅಪ್ಪ-ಅಮ್ಮನ ಹೆಸರು ಗೊತ್ತಿಲ್ಲದವರು ಜಾತ್ಯಾತೀತ ಹೆಸರು ಹೇಳುತ್ತಾರೆ ; ಹೆಗಡೆ +ಅಶೋಕ್‍ರವರು ಕೇಳಿಕೊಂಡಿರುವ ನಿವಾಸದಲ್ಲಿ ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಸ್ತವ್ಯ ಹೂಡಿದ್ದರು. ರಾಜಕಾರಣಿಗಳ ಪಾಲಿಗೆ ಇದನ್ನು ಅದೃಷ್ಟದ ನಿವಾಸವೆಂದೇ ಕರೆಯುತ್ತಾರೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‍ರ ನಿವಾಸವನ್ನು ತಮಗೆ ನೀಡುವಂತೆ ಅಶೋಕ್ ಬೇಡಿಕೆಯಿಟ್ಟಿದ್ದಾರೆ. +ಇದಕ್ಕೆ ಸರ್ಕಾರ ಒಪ್ಪುತ್ತದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಈ ಹಿಂದೆ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಅಂದಿನ ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ತಮ್ಮ ಪಾಲಿನ ಅದೃಷ್ಟದ ಮನೆಯೆಂದೇ ಹೇಳಲಾಗುವ ರೇಸ್ ವ್ಯೂ ಕಾಟೇಜ್‍ನ ನಂಬರ್ 1 ನಿವಾಸವನ್ನು ನೀಡಬೇಕೆಂದು ಕೇಳಿದ್ದರು. ಆದರೆ ಆ ವೇಳೆಗಾಗಲೇ ಅದು ಸಚಿವ ಸಾ.ರಾ.ಮಹೇಶ್‍ರವರಿಗೆ ನಿಗದಿಯಾಗಿದ್ದರಿಂದ ಬಿ.ಎಸ್.ವೈ ಬೇಡಿಕೆಯನ್ನು ಮನ್ನಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಯಡಿಯೂರಪ್ಪ ತಮ್ಮ ಡಾಲರ್ಸ್ ಕಾಲೋನಿ ನಿವಾಸದಿಂದಲೇ ಕಾರ್ಯ ನಿರ್ವಹಿಸಿದ್ದರು. \ No newline at end of file diff --git a/eesanje/url_46_25_1.txt b/eesanje/url_46_25_1.txt new file mode 100644 index 0000000000000000000000000000000000000000..b8e97cc88bdb8e41ce101e2d3eeb14e835d6b79e --- /dev/null +++ b/eesanje/url_46_25_1.txt @@ -0,0 +1,16 @@ +ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಚಾಲನೆ, ಮನೆಮಾಡಿದ ಸಂಭ್ರಮ +’ 23,000 +ಬೆಂಗಳೂರು,ಸೆ.6-ಬಯಲುಸೀಮೆ ಜನತೆಯ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಿರ್ಮಿಸಿರುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಗೌರಿ ಹಬ್ಬದ ದಿನವಾದ ಇಂದು ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ, ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಪರಮೇಶ್ವರ್, ಎಂ.ಬಿ.ಪಾಟೀಲ್, ಸಂಸದ ಶ್ರೇಯಸ್ ಪಟೇಲ್, ಶಾಸಕರು ಮತ್ತಿತರರು ಈ ಐತಿಹಾಸಿಕ ಘಳಿಗೆಗೆ ಸಾಕ್ಷಿಯಾದರು. +ವಿತರಣಾ ತೊಟ್ಟಿ 4ರ ದೊಡ್ಡನಾಗರ ಬಳಿ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಗುಂಡಿ ಒತ್ತುವ ಮೂಲಕ ಯೋಜನೆಗೆ ಚಾಲನೆ ಕೊಟ್ಟರು. ನಂತರ ವಿತರಣಾ ತೊಟ್ಟಿ 3ರ ಬಳಿಯ ಹೆಬ್ಬನಹಳ್ಳಿ ಬಳಿ ಬೃಹತ್ ಬಹಿರಂಗ ಸಭೆ ನಡೆಸಲಾಯಿತು. +ಈ ಯೋಜನೆಯಿಂದ ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನ ಹೊಳೆ, ಕಾಡುಮನೆ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು 7 ಜಿಲ್ಲೆಗಳಿಗೆ ನೀರು ಹರಿಸಲಾಗುತ್ತದೆ. +ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲೂಕುಗಳ 38 ಪಟ್ಟಣ ಪ್ರದೇಶಗಳ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ಕುಡಿಯುವ ನೀರನ್ನು ಒದಗಿಸುವುದು ಹಾಗೂ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ತುಮಕೂರು ವ್ಯಾಪ್ತಿಯಲ್ಲಿ 527 ಕೆರೆಗಳಿಗೆ 9.953 ಟಿಎಂಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಿ ಅಂರ್ತಜಲ ಮರುಪೂರಣ ಮಾಡುವ ಮಹತ್ವದ ಯೋಜನೆ ಇದಾಗಿದೆ. +ಈ ಯೋಜನೆಯ ಮೊದಲ ಹಂತದಲ್ಲಿ 8 ವಿಯರ್ಗಳ ಮೂಲಕ ನೀರನ್ನು ಮೇಲೆತ್ತಲು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಮೂರನೇ ಸಂಖ್ಯೆಯ ವಿಯರ್ ಇನ್ನೂ ಸಿದ್ದವಾಗದ ಕಾರಣ ಉಳಿದ 7 ವಿಯರ್ಗಳೂ ಸಿದ್ದವಾಗಿವೆ. ಮೊದಲ ಹಂತದಲ್ಲಿ 1500 ಕ್ಯೂಸೆಕ್ ನೀರನ್ನು ಲಿಫ್‌್ಟ ಮಾಡಲಾಗುತ್ತದೆ. ತದನಂತರ 48 ಕಿಲೋಮೀಟರ್ ತೆರೆದ ಕಾಲುವೆಯಿಂದ ವೇದ ವ್ಯಾಲಿಯಿಂದ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತದೆ. +ಏನಿದು ಈ ಯೋಜನೆ?:ಬರಪೀಡಿತ ಜಿಲ್ಲೆಗಳಿಗೆ ನೀರು ಹರಿಸುವ ಯೋಲಜನೆ ಇದಾಗಿದೆ. ಹಾಸನದ ಸಕಲೇಶಪುರ ತಾಲೂಕಿನ ಪಶ್ವಿಮ ಘಟ್ಟದ ಮೇಲ್ಭಾಗದಲ್ಲಿ ಹರಿಯುವ ಕಾಡುಮನೆ ಹೊಳೆ, ಎತ್ತಿನ ಹೊಳೆ, ಕೇರಿ ಹೊಳೆ ಮತ್ತು ಹೊಂಗದಹಳ್ಳದಿಂದ ನೀರು ತರುವ ಯೋಜನೆಯಾಗಿದೆ. ಮುಂಗಾರು ಮಳೆಯ ಸಂದರ್ಭದಲ್ಲಿ ಅಂದರೆ 139 ದಿನಗಳಲ್ಲಿ 24.01 ಟಿಎಂಸಿ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸಲಾಗುತ್ತದೆ. +ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ತರುವುದಾಗಿದೆ.ಹಾಸನ, ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಹರಿಯೋ ಎತ್ತಿನಹೊಳೆ ಪಶ್ಚಿಮಘಟ್ಟದಿಂದ ಪಶ್ಚಿಮ ದಿಕ್ಕಿನೆಡೆಗೆ ಅಂದರೆ ಸಮುದ್ರದ ಕಡೆಗೆ ಹರಿಯುತ್ತದೆ. ಹೀಗೆ ಸಮುದ್ರ ಸೇರಿ ಸುಮಾರು 24 ಟಿಎಂಸಿ ನೀರನ್ನು ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ ಹಾಗೂ ಹಾಸನ ಮತ್ತು ಚಿಕ್ಕಮಗಳೂರು ಸೇರಿ ಒಟ್ಟು ಏಳು ಜಿಲ್ಲೆಗಳತ್ತ ಅಂದ್ರೆ ಪೂರ್ವಾಭಿಮುಖವಾಗಿ ನದಿಯ ನೀರನ್ನೇ ತಿರುಗಿಸುವ ಮಹತ್ವದ ಯೋಜನೆ ಇದಾಗಿದೆ. +ಎತ್ತಿನಹೊಳೆ ರಾಜ್ಯದ ಬೃಹತ್ ಯೋಜನೆ:ಇತ್ತೀಚಿನ ವರ್ಷಗಳಲ್ಲಿ ನಮ ರಾಜ್ಯದಲ್ಲಿ ನಡೆಯುತ್ತಿರುವ ಅತಿದೊಡ್ಡ ನಿರಾವರಿ ಯೋಜನೆ ಈ ಎತ್ತಿನಹೊಳೆ ಯೋಜನೆ. ಒಟ್ಟು 24 ಟಿಎಂಸಿ ನೀರನ್ನು ಮೇಲೆತ್ತಿ ಹರಿಸುವ ಈ ಯೋಜನೆಯಲ್ಲಿ 14 ಟಿಎಂಸಿ ಕುಡಿಯೋ ನಿರಿಗಾಗಿಯೂ 10 ಟಿಎಂಸಿ ನೀರನ್ನ ಉದ್ದೇಶಿತ ಏಳು ಜಿಲ್ಲೆಗಳ ಸುಮಾರು 527 ಕರೆಗಳನ್ನ ತುಂಬಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಗಾಗಿ ಒಟ್ಟು ನಾಲ್ಕು ಭಾಗಗಳಾಗಿ ವಿಭಾಗ ಮಾಡಲಾಗಿದೆ. ನೀರೆತ್ತೋ ತೊಟ್ಟಿಗಳು, ಗುರುತ್ವ ಕಾಲುವೆ, ಸಮತೋಲನ ಜಲಾಶಯ ಮತ್ತು ಪೈಪ್ ಲೈನ್?ಗಳಾಗಿ ನಾಲ್ಕು ಭಾಗಮಾಡಿ ಯೋಜನೆ ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ಒಟ್ಟು ಎಂಟು ಜಲ ಮೂಲಗಳಿಂದ ನೀರು ಹರಿಸಲು ಎಂಟು ಪೈಪ್ ಲೈನ್ ಮಾಡಲಾಗಿದೆ. +9 ಪಂಪ್ ಹೌಸ್, 8 ಸಬ್ಸ್ಟೇಷನ್ ಮೂಲಕ ಈ ಯೋಜನೆಯ ನೀರು ಹರಿಯುತ್ತದೆ. ಒಟ್ಟು 261 ಕಿ.ಮೀ ಈ ಯೋಜನೆಯಲ್ಲಿ ನೀರು ಹರಿಯೋ ಕಾಲುವೆಯ ಉದ್ದವಾಗಿದ್ದು ಈಗಾಗಲೇ ಮೂಲದಿಂದ ಸುಮಾರು 42 ಕಿ.ಮೀ ಅಂದರೆ ಬೇಲೂರಿನ ಐದಳ್ಳ ಕಾವಲುವೆರೆಗೂ ನೀರು ಸರಾಗವಾಗಿ ಹರಿಯಲು ಬೇಕಾದ ಕಾಮಗಾರಿ ಮುಗಿದಿದೆ. ಆದರೆ ಐದಳ್ಳ ಕಾವಲು ಬಳಿ 5 ಕಿ.ಮೀ ಅರಣ್ಯ ಭೂಮಿಯಲ್ಲಿ ಕಾಲುವೆ ಹೋಗಬೇಕಿರುವುದರಿಂದ ಅಲ್ಲಿ ಕಾಮಗಾರಿ ಆಗದೇ 32ನೇ ಕಿ.ಮೀನಲ್ಲಿ ನೀರನ್ನು ಬೇರೆಡೆ ತಿರುಗಿಸಿ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರದತ್ತ ಹರಿಸಲಾಗುತ್ತಿದೆ. +ಎತ್ತಿನಹೊಳೆಯ ಈ ಯೋಜನೆಗಾಗಿ ಸಕಲೇಶಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಎಂಟು ಪೈಪ್ಲೈನ್ಗಳ ಮೂಲಕ ನೀರು ಹರಿಯಲಿದ್ದು ಮೊದಲ ಪೈಪ್ಲೈನ್ನಲ್ಲಿ 6.6 ಟಿಎಂಸಿ ನೀರು ಸಿಗಲಿದೆ, ಎರಡನೇ ಪೈಪ್ ನಲ್ಲಿ 1.0 ಟಿಎಂಸಿ, ಮೂರನೇ ಪೈಪ್ ಲೈನ್ ನಲ್ಲಿ 1.4 ಟಿಎಂಸಿ, ನಾಲ್ಕನೆಯದ್ದರಲ್ಲಿ 0.98 ಟಿಎಂಸಿ, 5ನೇ ಪೈಪ್ಲೈನ್ನಲ್ಲಿ 1.73 ಟಿಎಂಸಿ, ಆರನೇ ಪೈಪ್ ಲೈನ್ ನಲ್ಲಿ 2.01 ಟಿಎಂಸಿ, ಎಳನೇ ಪೈಪ್ಲೈನ್ನಲ್ಲಿ 7.76 ಟಿಎಂಸಿ, ಎಂಟನೇಯದರಲ್ಲಿ 2.51 ಟಿಎಂಸಿ ಸೇರಿ ಒಟ್ಟು 24 ಟಿಎಂಸಿ ನೀರು ಸಿಗಲಿದ್ದು, ಈ ನೀರನ್ನು ಬಯಲುಸೀಮೆಗೆ ಹರಿಸುವುದು ಈ ಯೋಜನೆಯ ಬಹುಮುಖ್ಯ ಉದ್ದೇಶವಾಗಿದೆ. +ಲೋಕಾರ್ಪಣೆ ಸಂಭ್ರಮ :ಎತ್ತಿನಹೊಳೆ ಯೋಜನೆಯ ಉದ್ಘಾಟನೆಯ ಸಂದರ್ಭದಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿತ್ತು. ಗೌರಿ ಹಬ್ಬದ ದಿನದಂದು ನಡೆದ ಉದ್ಘಾಟನ ಕಾರ್ಯಕ್ರಮಕ್ಕೂ ಮುನ್ನ ವಿಶೇಷ ಗಂಗಾಪೂಜೆ, ಯಜ್ಞ , ಹೋಮಗಳನ್ನು ನಡೆಸಲಾಯಿತು. ಬಹು ನಿರೀಕ್ಷಿತ ಸಮಗ್ರ ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆಯ ಮೊದಲ ಹಂತಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರ ಪಂಪ್ ಹೌಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. +ಜಲಸಂಪನೂಲ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರ ಜೊತೆ ಜಂಟಿಯಾಗಿ ಆರತಿ ಬೆಳಗುವ ಮೂಲಕ ಗಮನ ಸೆಳೆದರು. ಬಳಿಕ ದೊಡ್ಡ ಸಾಗರದ ಗ್ರಾಮದ ವಿತರಣಾ ತೊಟ್ಟಿಯ 3 ರಲ್ಲಿ ಟೇಪ್ ಕತ್ತರಿಸಿ ಉದ್ಘಾಟಿಸಿದರು. ಯೋಜನೆಯನ್ನು ಪರಿಶೀಲಿಸುವ ವೇಳೆ ನೀರಿನ ಹರಿವು ಹಾಗೂ ಇತರ ಮಾಹಿತಿಗಳ ಕುರಿತು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಸುದೀರ್ಘ ವಿವರಣೆ ನೀಡಿದರು. +ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್ ಕೆ.ಜೆ. ಜಾರ್ಜ್, ಕೆ.ಎನ್. ರಾಜಣ್ಣ , ಎನ್.ಎಸ್. ಬೋಸ್ರಾಜ, ಕೆ.ಎಚ್. ಮುನಿಯಪ್ಪ ಹಾಗೂ 5 ತಾಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ 7 ಕಡೆ ಏತ ನೀರಾವರಿ ಯೋಜನೆಗಳಿಗೆ ಸಚಿವರುಗಳು ಚಾಲನೆ ನೀಡಿದರು. +ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಂಗಳೂರು ಜಿಲ್ಲೆಗಳ 29 ತಾಲೂಕುಗಳಿಗೆ ಕುಡಿಯುವ ನೀರು ಹಾಗು ಅಂತರ್ಜಲ ಅಭಿವೃದ್ಧಿಗೆ ಎತ್ತಿನಹೊಳೆ ಯೋಜನೆಗೆ ನೀರನ್ನು ಬಳಕೆ ಮಾಡಲಾಗುತ್ತಿದೆ.ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_25_10.txt b/eesanje/url_46_25_10.txt new file mode 100644 index 0000000000000000000000000000000000000000..c3c516063a575402098968f71b785824e18e3d39 --- /dev/null +++ b/eesanje/url_46_25_10.txt @@ -0,0 +1,12 @@ +ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ + , +ಬೆಂಗಳೂರು,ಸೆ.5-ಗೌರಿ-ಗಣೇಶ ಹಬ್ಬಕ್ಕೆ ರಾಜ್ಯದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗುವ ಹೂ-ಹಣ್ಣು, ಪೂಜಾ ಸಾಮಗ್ರಿಗಳು, ಗೌರಿ-ಗಣೇಶ ಮೂರ್ತಿಗಳು ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. +ವರಮಹಾಲಕ್ಷ್ಮಿ ಹಬ್ಬದ ವೇಳೆ ಗಗನಕ್ಕೇರಿದ ಹೂ-ಹಣ್ಣಿನ ಬೆಲೆ ಇದೀಗ ಸ್ವಲ್ಪ ಇಳಿಕೆ ಕಂಡಿದೆ. ಆದರೆ ತರಕಾರಿ ಬೆಲೆ ಹೆಚ್ಚಾಗಿದ್ದು, ಗ್ರಾಹಕರಿಗೆ ಈ ಬಾರಿ ಬೆಲೆ ಏರಿಕೆಯ ಬಿಸಿ ಅಷ್ಟೇನೂ ತಟ್ಟಿಲ್ಲ. +ಬೆಂಗಳೂರಿನ ಕೆ.ಆರ್‌.ಮಾರುಕಟ್ಟೆ, ಯಶವಂತಪುರ, ದಾಸನಪುರ, ಸೀಗೆಹಳ್ಳಿ, ಮಲ್ಲೇಶ್ವರಂ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಮಾರುಕಟ್ಟೆಗಳಲ್ಲಿ ಮುಂಜಾನೆಯೇ ಜನರು ಜಮಾಯಿಸಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನು ಕೊಳ್ಳುತ್ತಿದ್ದ ದೃಶ್ಯಗಳು ಕಂಡುಬಂದವು. +ಕನಕಾಂಬರ ಈಗಲೂ ದುಬಾರಿ :ವರಮಹಾಲಕ್ಷ್ಮಿ ಹಬ್ಬದಲ್ಲಿ ಹೆಚ್ಚಾಗಿದ್ದ ಹೂವಿನ ಬೆಲೆ ಇದೀಗ ತುಸು ಕಡಿಮೆಯಾಗಿದೆ. ಆದರೆ ಕನಕಾಂಬರ ಮಾತ್ರ ಅದರ ಹೆಸರಿಗೆ ತಕ್ಕಂತೆ ಅಂಬರದಲ್ಲಿದೆ. ಕೆಜಿಗೆ 2,500 ರೂ.ಗೆ ಮಾರಾಟವಾಗುತ್ತಿದೆ. +ಮಲ್ಲಿಗೆ ಪ್ರತಿ ಕೆಜಿಗೆ 300 ರಿಂದ 600, ಗುಲಾಬಿ 150 ರಿಂದ 200, ಸೇವಂತಿಗೆ 150 ರಿಂದ 200, ಸುಗಂಧರಾಜ 100 ರಿಂದ 200, ಮಾರಿಗೋಲ್ಡ್ 200 ರೂ.ಗಳಿಗೆ ಮಾರಾಟವಾಗುತ್ತಿದೆ. +ಗರಿಕೆ, ಬೇಲದಹಣ್ಣು, ಎಕ್ಕದ ಹೂವಿನ ಹಾರಕ್ಕೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿದ್ದು, ಬಾಳೆಕಂದು, ಮಾವಿನಸೊಪ್ಪು ಮಾರಾಟ ಜೋರಾಗಿದೆ. ಜೋಡಿ ಬಾಳೆಕಂದಿಗೆ 60 ರೂ., ಮಾವಿನಸೊಪ್ಪಿನ ಕಟ್ಟಿಗೆ 20 ರೂ., ಗರಿಕೆ 30 ರೂ., ಬೆಲೆ ಇದೆ. +ಇನ್ನು ಥರೇವಾರಿ ಗೌರಿ-ಗಣೇಶ ಮೂರ್ತಿಗಳು ಮಾರುಕಟ್ಟೆಗೆ ಬಂದಿದ್ದು, ಗಾತ್ರಕ್ಕೆ ತಕ್ಕಂತೆ ಬೆಲೆ ನಿಗಧಿ ಮಾಡಿ ಮಾರಾಟ ಮಾಡಲಾಗುತ್ತಿದೆ. +ತರಕಾರಿ ಬೆಲೆಯಲ್ಲಿ ಏರಿಕೆ :ಅಡುಗೆ ಮನೆಯ ಕೆಂಪು ಸುಂದರಿ ಹಾಗೂ ಲಾಟರಿ ಬೆಳೆ ಎಂದೇ ಹೆಸರಾಗಿರುವ ಟೊಮ್ಯಾಟೊ ಹೊರತುಪಡಿಸಿದರೆ ಎಲ್ಲಾ ತರಕಾರಿಗಳ ಬೆಲೆ ಹೆಚ್ಚಾಗಿಯೇ ಇದೆ.ಕ್ಯಾರೆಟ್‌ ಕೆ.ಜಿ.ಗೆ 80 ರೂ., ಕ್ಯಾಪ್ಸಿಕಂ 60 ರೂ., ಈರುಳ್ಳಿ 60, ಬೀನ್ಸ್ 60 ರೂ., ಟೊಮ್ಯಾಟೊ 15 ರೂ., ಆಲೂಗಡ್ಡೆ 40 ರೂ., ಬೀಟರೂಟ್‌ 50 ರೂ., ಹಸಿಬಟಾಣಿ 250 ರೂ., ಬೆಳ್ಳುಳ್ಳಿ 500 ರೂ., ಶುಂಠಿ 200 ರೂ.ಗೆ ಮಾರಾಟ ಮಾಡಲಾಗುತ್ತಿದೆ. +ರಾಜ್ಯದ ವಿವಿಧೆಡೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಬೆಳೆಗಳು ನಾಶವಾಗಿದ್ದು, ತರಕಾರಿ ಬೆಲೆ ಏರಿಕೆಯಾಗಿದೆ. ಅದರಲ್ಲೂ ಸೊಪ್ಪಿಗೆ ಹಾನಿಯಾಗಿದ್ದು, ಕೆಲ ದಿನಗಳ ಹಿಂದೆ ಒಂದು ಕಟ್ಟಿಗೆ 20 ರೂ.ಗೆ ಮಾರಾಟವಾಗುತ್ತಿದ್ದ ಕೊತ್ತಂಬರಿ ಸೊಪ್ಪು ಏಕಾಏಕಿ 50 ರೂ.ಗೆ ಮಾಡಲಾಗುತ್ತಿದೆ. +ಅದೇನೇ ಬೆಲೆ ಹೆಚ್ಚಿರಲಿ, ಕಡಿಮೆಯಿರಲಿ, ನಮ ಸಂಪ್ರದಾಯವನ್ನು ಮುಂದುವರೆಸಿಕೊಂಡು ಹೋಗಬೇಕಲ್ಲ, ಹಬ್ಬಗಳನ್ನು ಮಾಡಲೇಬೇಕು ಎಂದು ನಗರದ ಜನತೆ ಖರೀದಿಯಲ್ಲಿ ತೊಡಗಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. \ No newline at end of file diff --git a/eesanje/url_46_25_11.txt b/eesanje/url_46_25_11.txt new file mode 100644 index 0000000000000000000000000000000000000000..7358a760e2c7066cb7dbcfbac13d595280bf8da8 --- /dev/null +++ b/eesanje/url_46_25_11.txt @@ -0,0 +1,5 @@ +ಬಿಎಂಟಿಸಿ ನಿರ್ವಾಹಕ ಹುದ್ದೆಗಳ ಪರೀಕ್ಷಾ ಕೀ ಉತ್ತರ ಪ್ರಕಟ + +ಬೆಂಗಳೂರು. ಸೆ.4-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ನಿರ್ವಾಹಕ(ಆರ್‌ಪಿಸಿ) ಹುದ್ದೆಗಳ ನೇಮಕಾತಿಗೆ ಸೆ.1ರಂದು ನಡೆದ ಸ್ಪರ್ಧಾತಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದು ಮತ್ತು ಎರಡರ ಕೀ-ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟಿನಲ್ಲಿ ಪ್ರಕಟಿಸಿದೆ. +ಪ್ರಕಟಿಸಿರುವ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ನಾಳೆ ಸಂಜೆ 5.30 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆಕ್ಷೇಪಣೆಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಸಲ್ಲಿಸಬೇಕು ಎಂದು ಕೆಇಎ ಪ್ರಕಟಣೆ ತಿಳಿಸಿದೆ. +ಪ್ರತಿ ಆಕ್ಷೇಪಣೆಗೆ 50 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಈ ಶುಲ್ಕವನ್ನು ಮರು ಪಾವತಿಸುವುದಿಲ್ಲ. ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್‌ ಕೋಡ್‌, ಪ್ರಶ್ನೆ ಸಂಖ್ಯೆಗಳ ವಿವರ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್‌ ರೂಪದಲ್ಲಿ ಸಲ್ಲಿಸಬೇಕು. ಆಕ್ಷೇಪಣೆಗೆ ಸಂಬಂಧಿಸಿದಂತೆ ವಿಷಯ ತಜ್ಞರ ಸಮಿತಿ ನಿರ್ಧರಿಸಿ ತೀರ್ಮಾನಿಸುವ ಕೀ-ಉತ್ತರವು ಅಂತಿಮವಾಗಿರುತ್ತದೆ ಎಂದು ಕೆಇಎ ಹೇಳಿದೆ. \ No newline at end of file diff --git a/eesanje/url_46_25_12.txt b/eesanje/url_46_25_12.txt new file mode 100644 index 0000000000000000000000000000000000000000..ff80ea6acbf994336b35d15e2ee318564000734f --- /dev/null +++ b/eesanje/url_46_25_12.txt @@ -0,0 +1,7 @@ +ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ : ಕಲ್ಯಾಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ + +ಬೆಂಗಳೂರು. ಸೆ.4-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದ ಬೆನ್ನಲ್ಲೇ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪರಿಣಾಮದಿಂದ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇನ್ನೂ ಎರಡು ದಿನ ಮುಂದುವರೆಯಲಿದೆ. ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. +ಕಲ್ಯಾಣ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಾಗ್ಗೆ ಕೆಲವೆಡೆ ತುಂತುರು ಇಲ್ಲವೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. +ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಆಂಧ್ರ ಪ್ರದೇಶದ ಕಡೆಗೆ ಸಾಗುತ್ತಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾವಿಲ್ಲ. ಆದರೂ ರಾಜ್ಯದ ಈಶಾನ್ಯ ಭಾಗದ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ತಜ್ಞರು ಹೇಳಿದ್ದಾರೆ. +ಈಗಾಗಲೇ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ. ಹೀಗಾಗಿ ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಬಹುದು ಎಂದು ಅವರು ತಿಳಿಸಿದ್ದಾರೆ. +ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಸೆ.7ರ ನಂತರ ಈ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ, ಭಾರಿ ಮಳೆಯಾಗುವ ಮುನ್ಸೂಚನೆಗಳಿಲ್ಲ. ಹೀಗಾಗಿ ಯಾವುದೇ ಎಚ್ಚರಿಕೆಯನ್ನು ಘೋಷಣೆ ಮಾಡಿಲ್ಲ. \ No newline at end of file diff --git a/eesanje/url_46_25_2.txt b/eesanje/url_46_25_2.txt new file mode 100644 index 0000000000000000000000000000000000000000..a5aa609393d3ec1a01f944c7c91a5f285f5cb639 --- /dev/null +++ b/eesanje/url_46_25_2.txt @@ -0,0 +1,6 @@ +ಹೆಚ್‌ಎಂಟಿ ಕೈಗಡಿಯಾರ ಕಟ್ಟಲು ಯವಜನರಿಗೆ ನಿಖಿಲ್‌ ಕುಮಾರಸ್ವಾಮಿ ಕರೆ + +ಬೆಂಗಳೂರು, ಸೆ.6-ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ ಹೆಚ್‌ಎಂಟಿ ಕೈಗಡಿಯಾರಗಳನ್ನೇ ಯುವಜನರು ಕಟ್ಟಬೇಕು ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿನಂತಿಸಿದ್ದಾರೆ. +ನಾನು ಹೆಚ್‌ಎಂಟಿ ಕೈಗಡಿಯಾರ ಕಟ್ಟಿದ್ದೇನೆ. ನೀವು ಕಟ್ಟಿ ಎಂದು ಅವರು ಎಕ್‌್ಸನಲ್ಲಿ ಪೊಸ್ಟ್‌ ಮಾಡಿದ್ದಾರೆ. ಹೆಚ್‌ಎಂಟಿ ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯ ನಾಡಿಯಾಗಿತ್ತು ಎಂದಿದ್ದಾರೆ. +ನಮ ತಲೆಮಾರಿನ ಯುವಜನರಿಗೆ ಎಚ್‌ಎಂಟಿ ವಾಚ್‌ ಎಂದರೆ ಅದೊಂದು ದಂತಕಥೆ. ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ನನ್ನ ತಂದೆಯವರು ಗೌರಿಹಬ್ಬದ ದಿನವಾದ ಇಂದು ಹೆಚ್‌ಎಂಟಿ ಕೈಗಡಿಯಾರವನ್ನು ಖರೀದಿಸಿ ನನ್ನ ಕೈಗೆ ಕಟ್ಟಿದರು ಎಂದು ಹೇಳಿದ್ದಾರೆ. +ಎಚ್‌ಎಂಟಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ ಕೋಹ್ಲಿ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_25_3.txt b/eesanje/url_46_25_3.txt new file mode 100644 index 0000000000000000000000000000000000000000..88d00671613a3fa33d33b5d3070dd570f514da76 --- /dev/null +++ b/eesanje/url_46_25_3.txt @@ -0,0 +1,9 @@ +ಅದ್ಧೂರಿ ದಸರಾಗೆ ಸಕಲ ಸಿದ್ಧತೆ + +ಮೈಸೂರು, ಸೆ.5– ಈ ಬಾರಿ ಅದ್ದೂರಿ ದಸರಾ ಆಚರಣೆಗೆ ತೀರ್ಮಾನಿಸಿದ್ದು, ಅದಕ್ಕಾಗಿ ರಚಿಸಿರುವ 19 ಉಪಸಮಿತಿಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌ಸಿ ಮಹದೇವಪ್ಪ ತಿಳಿಸಿದರು. +ಅರಮನೆ ಸಭಾಂಗಣದಲ್ಲಿ ಹಮಿ ಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿದಸರಾ ಆಚರಣೆ ಮಾಡಬೇಕು ಎಂದು ಸೂಚಿಸಿದರು. +ಸ್ತಬ್ಧ ಚಿತ್ರಗಳು ನಮ ಸಂಸ್ಕೃತಿಯನ್ನು ಬಿಂಬಿಸುವಂತೆ ಹಾಗೂ ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆ ಮಾಡಬೇಕು ಎಂದು ಸಲಹೆ ನೀಡಿದರು. +ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲ ವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆದುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು. +ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು ಎಂದರು. +ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ, ಕರಕುಶಲ ವಸ್ತುಗಳ ಸ್ಪರ್ಧೆ, ವಿಶಿಷ್ಟ ಕವಿಗೋಷ್ಠಿ ಆಯೋಜನೆ ಮಾಡಬೇಕು, ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿ ಕೊಳ್ಳಬೇಕು. +ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷೀಕಾಂತ ರೆಡ್ಡಿ, ಜಿಪಂ ಸಿಇಒ ಕೆ ಎಂ ಗಾಯತ್ರಿ, ನಗರ ಪೊಲೀಸ್‌‍ ಆಯುಕ್ತರಾದ ಸೀಮಾ ಲಾಟ್ಕರ್‌, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಹಾಗೂ ಉಪಸಮಿತಿಗಳ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_25_4.txt b/eesanje/url_46_25_4.txt new file mode 100644 index 0000000000000000000000000000000000000000..f28f558073d7aec7af1609ca6583cc1cf9a7aff9 --- /dev/null +++ b/eesanje/url_46_25_4.txt @@ -0,0 +1,10 @@ +ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಸಮಸ್ಯೆಗಳ ಅಧ್ಯಯನಕ್ಕೆ ಸಮಿತಿ ರಚನೆ : ಸಿಎಂ + +ಬೆಂಗಳೂರು,ಸೆ.5-ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸುವುದು ಹಾಗೂ ಇತರ ಸಮಸ್ಯೆಗಳ ಅಧ್ಯಯನಕ್ಕಾಗಿ ಸಮಿತಿ ರಚಿಸುವ ಕುರಿತಂತೆ ಸವಿಸ್ತಾರ ಚರ್ಚೆಯ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೈರ್ ತಂಡಕ್ಕೆ ಭರವಸೆ ನೀಡಿದ್ದಾರೆ. +ಚಿತ್ರರಂಗದಲ್ಲಾಗುತ್ತಿರುವ ತಾರತಮ್ಯ ಹಾಗೂ ಕಿರುಕುಳದ ತನಿಖೆಗಾಗಿ ಕೇರಳದ ಮಾದರಿಯಲ್ಲಿ ನ್ಯಾಯಾಂಗ ಆಯೋಗ ರಚಿಸಬೇಕು ಎಂದು ಚಿತ್ರರಂಗದಲ್ಲಿನ ಹಕ್ಕುಗಳು ಹಾಗೂ ಸಮಾನತೆಗಾಗಿ ಶ್ರಮಿಸುತ್ತಿರುವ ಫೈರ್ ಸಂಘ ಟನೆ ಮುಖಂಡರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ನೀಡಿದರು. +ಇದಕ್ಕೆ ಸಕಾರಾತಕವಾಗಿ ಸ್ಪಂದಿಸಿದ ಸಿದ್ದರಾಮಯ್ಯ ಅವರು, ಮನವಿಯನ್ನು ಸ್ವೀಕರಿಸಿ ಇದು ಗಂಭೀರವಾದ ವಿಚಾರ, ಮತ್ತೊಮೆ ನಿಮ ತಂಡದ ಜೊತೆ ಸವಿಸ್ತಾರವಾದ ಚರ್ಚೆ ನಡೆಸುತ್ತೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.ಹಿರಿಯ ಪತ್ರಕರ್ತೆ ಡಾ. ವಿಜಯಮ, ಫೈರ್ ಸಂಘಟನೆಯ ಕಾರ್ಯದರ್ಶಿಯಾದ ನಟ ಚೇತನ್, ನಟಿಯರಾದ ಶೃತಿ ಹರಿಹರನ್ ಹಾಗೂ ನೀತು ಶೆಟ್ಟಿ ಒಳಗೊಂಡ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. +ಕೇರಳದ ಮಲಯಾಳಂ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರ ಸಮಸ್ಯೆಗಳನ್ನು ನ್ಯಾಯಮೂರ್ತಿ ಹೇಮಾ ಅವರ ಸಮಿತಿ ಬಹಿರಂಗಪಡಿಸಿದೆ. ಕನ್ನಡ ಚಿತ್ರರಂಗದಲ್ಲೂ ಈ ರೀತಿಯ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ದೇಶದಲ್ಲೇ ಮೊದಲ ಬಾರಿಗೆ ಫೈರ್ ಸಂಸ್ಥೆ ಕನ್ನಡ ಚಿತ್ರೋದ್ಯಮದಲ್ಲಿ ಆತಂರಿಕ ದೂರುಗಳ ಸಮಿತಿಯನ್ನು ರಚಿಸಿದೆ. ಚಲನಚಿತ್ರೋದ್ಯಮದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತದೆ. +ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ತನಿಖೆ ಮಾಡಬೇಕು, ಎಲ್ಲಾ ಮಹಿಳೆಯರಿಗೂ ಸುರಕ್ಷಿತ ಹಾಗೂ ನ್ಯಾಯಯುತ ವಾತಾವರಣ ಸೃಷ್ಟಿಸಲು ಅಗತ್ಯ ನಿಯಮಾವಳಿಗಳನ್ನು ಮಾಡಿಕೊಡಬೇಕು ಎಂದು ಮನವಿ ಮಾಡಲಾಗಿತ್ತು. +ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಶೃತಿ ಹರಿಹರನ್, ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಬೇಕಿದೆ. ಲೈಂಗಿಕ ಕಿರುಕುಳ ಎಂಬುದು ಒಂದು ಭಾಗ ಮಾತ್ರ. ಅದಕ್ಕಿಂತಲೂ ಮುಖ್ಯವಾಗಿ ಕೆಲಸ ಮಾಡಲು ಪೂರಕವಾದ ವಾತಾವರಣ ಸೃಷ್ಟಿಸಬೇಕಿದೆ. ಉತ್ತಮ ಶಾಚಾಲಯ ವ್ಯವಸ್ಥೆ, ಸುರಕ್ಷಿತ ಸಾರಿಗೆ ಹಾಗೂ ಭದ್ರತೆಗಾಗಿ ಅಗತ್ಯ ನಿಯಮಾವಳಿಗಳನ್ನು ರೂಪಿಸಬೇಕಿದೆ ಎಂದು ಹೇಳಿದರು. +ನೀತು ಶೆಟ್ಟಿ ಮಾತನಾಡಿ, ಚಿತ್ರರಂಗ ಹೆಣ್ಣುಮಕ್ಕಳಿಗೆ ಕೆಲಸ ಮಾಡಲು ಸುಂದರ ತಾಣವಾಗಬೇಕು. ಲೈಂಗಿಕ ಕಿರುಕುಳ ಎಂಬುದು ಪ್ರತ್ಯೇಕ ವಿಚಾರ. ಚೆಕ್ಬೌನ್‌್ಸ ಆದರೆ ಅದರ ಹಣ ವಾಪಸ್ ಬರುತ್ತದೆಯೋ, ಇಲ್ಲವೋ ಎಂಬ ಆತಂಕ ಕಾಡುತ್ತದೆ. ನಮ ಚಿತ್ರರಂಗ ಎಂಬ ಕಾರಣಕ್ಕೆ ಎಷ್ಟು ದಿನ ಸಹಿಸಿಕೊಳ್ಳಬೇಕು. ಕಾರ್ಪೆಟ್ ವಲಯದಲ್ಲಿ ಈ ರೀತಿ ನಡೆಯುವುದಿಲ್ಲ. +ಸುರಕ್ಷಿತೆಯ ವಿಷಯ ಬಂದಾಗ ಕ್ಯಾರವಾನ್ನಲ್ಲಿ ಏನು ನಡೆಯಿತು?, ಯಾರು ಚಿತ್ರೀಕರಿಸಿದರು?, ಕೆಟ್ಟ ಕಾಮೆಂಟ್ ಮಾಡಿದರು? ಎಂಬೆೆಲ್ಲಾ ಪ್ರಕರಣಗಳೂ ವರದಿಯಾಗುತ್ತಿವೆ. ಹೀಗಾಗಿ ಹೆಣ್ಣು ಮಕ್ಕಳಿಗೆ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಿದೆ ಎಂದರು.ಕಡಿಮೆ ಅವಧಿಯಲ್ಲಿ ಸರ್ಕಾರಕ್ಕೆ ಮನವಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಯಿತು. 162 ಮಂದಿ ಮನವಿ ಪತ್ರಕ್ಕೆ ಸಹಿ ಹಾಕಿದರು. ಬಹಳಷ್ಟು ಜನ ಇದಕ್ಕೆ ಧ್ವನಿಯಾಗಲಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_25_5.txt b/eesanje/url_46_25_5.txt new file mode 100644 index 0000000000000000000000000000000000000000..c6b4d87549c46468fdcf59410534dd83e32e0e6b --- /dev/null +++ b/eesanje/url_46_25_5.txt @@ -0,0 +1,14 @@ +ಸನ್ನಡತೆ ಕೈದಿಗಳ ಬಿಡುಗಡೆ ಸಂಪುಟದಲ್ಲಿ ಚರ್ಚೆ + +ಬೆಂಗಳೂರು,ಸೆ.5-ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ ಶಿಕ್ಷಾಬಂಧಿ ಖೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಕೇಂದ್ರ ಕಾರಾಗೃಹದಲ್ಲಿರುವ 59 ಜೀವಾವಧಿ ಶಿಕ್ಷಾಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡುವ ಕುರಿತು ವಿಷಯ ಪ್ರಸ್ತಾಪಗೊಂಡಿದೆ. +ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಪಂಚಖಾತ್ರಿಗಳಲ್ಲೊಂದಾಗಿರುವ ಅನ್ನಭಾಗ್ಯ ಯೋಜನೆಯಡಿ ನೇರ ನಗದು ನೀಡುತ್ತಿದ್ದ ವ್ಯವಸ್ಥೆಯನ್ನು ಬದಲಾವಣೆ ಮಾಡಿ ಇನ್ನು ಮುಂದೆ ಆಹಾರದ ಕಿಟ್ ವಿತರಿಸುವ ಕುರಿತು ಸಮಾಲೋಚನೆ ನಡೆದಿದೆ. +ಅನ್ನಭಾಗ್ಯ ಯೋಜನೆ ಆರಂಭದಲ್ಲಿ ಅಕ್ಕಿ ಲಭ್ಯವಿಲ್ಲದ ಕಾರಣ ಪ್ರತಿ ಕೆಜಿಗೆ 34 ರೂ. ವಿನಂತೆ 5 ಕೆ.ಜಿ.ಗೆ 170 ರೂ.ಗಳನ್ನು ನೀಡಲಾಗುತ್ತಿತ್ತು. ಲೋಕಸಭೆ ಚುನಾವಣೆ ಬಳಿಕ ರಾಜ್ಯದವರೇ ಆದ ಪ್ರಹ್ಲಾದ್ ಜೋಷಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿದ್ದು, ರಾಜ್ಯಸರ್ಕಾರ ಬೇಡಿಕೆ ಸಲ್ಲಿಸಿದರೆ ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಪೂರೈಸುವುದಾಗಿ ಹೇಳಿದರು.ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ದೆಹಲಿಗೆ ತೆರಳಿ ಪ್ರಸ್ತಾವನೆ ಸಲ್ಲಿಸಿ ಬಂದಿದ್ದರು. ಈ ಹಿನ್ನೆಲೆಯಲ್ಲಿ ನಗದು ಬದಲಾಗಿ ಆಹಾರಧಾನ್ಯ ವಿತರಿಸಲು ರಾಜ್ಯಸರ್ಕಾರ ಮುಂದಾಗಿದೆ. +ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ 27.97 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಆಡಳಿತಾತಕ ಅನುಮೋದನೆ ನೀಡಲು ಚರ್ಚಿಸಲಾಗಿದೆ. +ಉದಯೋನುಖ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತಕತೆಗೆ ಅನುಗುಣವಾಗಿ ಸ್ಥಳೀಯ ಉದ್ಯೋಗಿಗಳನ್ನು ಕೌಶಲ್ಯಗೊಳಿಸಲು 100 ಕೋಟಿ ರೂ. ವೆಚ್ಚದಲ್ಲಿ ನಿಪುನ್ ಕರ್ನಾಟಕ ಯೋಜನೆ ರೂಪಿಸಲಾಗಿತ್ತು. 24, 25ನೇ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೊಳಿಸಲು ಹಾಗೂ 2024-29ರ ನಡವಿನ ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ 4.0 ಅನ್ನು ಸಂಪುಟದಲ್ಲಿ ಪರಾಮರ್ಶಿಸುವ ಸಾಧ್ಯತೆಯಿದೆ. +ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ವಸತಿ ಶಾಲಾ-ಕಾಲೇಜುಗಳಿಗೆ 18.54 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ವಿವಿಧ ಕಾರ್ಮಿಕ ಕಾಯಿದೆಗಳಡಿ ನೋಂದಣಿ ನವೀಕರಣ, ತಿದ್ದುಪಡಿ ಮತ್ತಿತರ ಸೇವೆಗಳಿಗಾಗಿ ಬಳಕೆದಾರರಿಂದ ಸಂಗ್ರಹಿಸಲಾಗುತ್ತಿರುವ ಶುಲ್ಕ, ದಂಡ ಹಾಗೂ ಮತ್ತಿತರ ದರಗಳನ್ನು ಹೆಚ್ಚಿಸುವ ಚಿಂತನೆಯನ್ನು ಸಂಪುಟ ಸಭೆ ನಡೆಸಿದೆ. +ಕರ್ನಾಟಕ ನ್ಯಾಯಾಂಗ ಸೇವಾ ನೇಮಕಾತಿ ತಿದ್ದುಪಡಿಗಳನ್ನು ಪರಾಮರ್ಶಿಸಲಾಗಿದೆ. 70 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಕಿದ್ವಾಯಿ ಸಾರಕ ಗಂಥಿ ಸಂಸ್ಥೆಗೆ ರೇಡಿಯೋ ಥೆರಪಿ ಚಿಕಿತ್ಸೆ ಹಾಗೂ ರೋಗನಿವಾರಕ ಉಪಕರಣಗಳನ್ನು ಖರೀದಿಸಲು, 117.11 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ 40 ಹಾಸಿಗೆಗಳ ಸಾಮರ್ಥ್ಯದ ನೆಪ್ರೊ-ನ್ಯೂರಾಲಜಿ ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯತೆ ಉನ್ನತೀಕರಿಸಲು, ಕಲಬುರಗಿಯಲ್ಲಿ 221.51 ಕೋಟಿ ರೂ. ವೆಚ್ಚದಲ್ಲಿ 150 ಹಾಸಿಗೆಗಳ ಸಾಮರ್ಥ್ಯದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ ಸ್ಥಾಪಿಸಲು ಹಾಗೂ 16.15 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ನೆಪ್ರೊ-ನ್ಯೂರೊಲಜಿ ಸಂಸ್ಥೆ ಹೊರರೋಗಿ ವಿಭಾಗಕ್ಕೆ ನೂತನ ಕಟ್ಟಡ ನಿರ್ಮಿಸಲು ಆಡಳಿತಾತಕ ಅನುಮೋದನೆ ನೀಡಲು ಚರ್ಚಿಸಲಾಗಿದೆ. +ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸೇವೆಗೆ ಸೇರಿದ ಕೇಂದ್ರ ಸೇವಾ ಸಹಾಯಕರು, ಹಿರಿಯ ಉಪನೋಂದಣಾಧಿಕಾರಿ, ಉಪನೋಂದಣಾಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯ ವರ್ಗಾವಣೆಗೆ ನಿಗಧಿಪಡಿಸಿದ್ದ ದಿನಾಂಕವನ್ನು ಆ.10 ರಿಂದ ಸೆ.30 ರವರೆಗೂ ವಿಸ್ತರಿಸುವ ಬಗ್ಗೆ ಸಚಿವರ ಅಭಿಪ್ರಾಯ ಸಂಗ್ರಹಿಸಲಾಗಿದೆ. +ಕಾಫಿ ಮಂಡಳಿಯ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ 1 ಲಕ್ಷ ಮಹಿಳೆಯರಿಗೆ 2,500 ಕಡೆ 25 ಕೋಟಿ ರೂ. ವೆಚ್ಚದಲ್ಲಿ ಕಾಫಿ ಕಿಯೋಸ್ಗಳನ್ನು ಅಳವಡಿಸಲು ಮತ್ತು ಅವುಗಳ ನಿರ್ವಹಣೆಗೆ ತರಬೇತಿ ನೀಡಲು ಚರ್ಚಿಸಲಾಗಿದೆ. +ಕೇಂದ್ರ ಸರ್ಕಾರ ರೂಪಿಸಿರುವ ಸ್ಕ್ರಾಪಿಂಗ್ ಪಾಲಿಸಿಗೆ ಈ ಮೊದಲು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಅದೇ ಪಾಲಿಸಿಯನ್ನು ಈಗ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 15 ವರ್ಷ ಅವಧಿ ಪೂರೈಸಿರುವ ವಾಹನಗಳನ್ನು ಸಾರ್ವಜನಿಕರು ಸ್ವಯಂಪ್ರೇರಿತವಾಗಿ ನಾಶಗೊಳಿಸಲು ಉದ್ದೇಶಿಸಿರುವ ವಾಹನಗಳ ಮೇಲೆ ಕೊನೆಯ ಒಂದು ವರ್ಷದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿನ ಬಾಕಿ ದಂಡಗಳ ವಸೂಲಿಯಿಂದ ವಿನಾಯಿತಿ ನೀಡುವ ಗಡುವನ್ನು 2026 ರ ಮಾ.31 ರವರೆಗೂ ವಿಸ್ತರಿಸಲು ಕೇಂದ್ರ ಪುರಸ್ಕೃತ ರಾಷ್ಟ್ರೀಯ ನಗರ ವಿದ್ಯುನಾನ ಕಾರ್ಯ ಯೋಜನೆಯನ್ನು ಕರ್ನಾಟಕ ಮುನ್ಸಿಪಾಲ್ ಡಾಟಾ ಸೊಸೈಟಿಯ ಮೂಲಕ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಷ್ಠಾನಗೊಳಿಸಲು 37.50 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. +ಮಹಾದಾಯಿ ಪ್ರವಾಹ್ ಪ್ರಾಧಿಕಾರದ ನಿಧಿಗೆ ಮೊದಲ ಹಂತದಲ್ಲಿ ರಾಜ್ಯದ ಪಾಲಿನ 1.67 ಕೋಟಿ ರೂ.ಗಳನ್ನು ಪಾವತಿಸಲು ಕರ್ನಾಟಕ ವಿಧಾನಮಂಡಲ ಅನರ್ಹತಾ ನಿವಾರಣೆ ವಿಧೇಯಕ 2027 ಅನ್ನು ಸಂಪುಟ ಪರಾಮರ್ಶಿಸಿದೆ. \ No newline at end of file diff --git a/eesanje/url_46_25_6.txt b/eesanje/url_46_25_6.txt new file mode 100644 index 0000000000000000000000000000000000000000..4b277db51b0afd2111f869d79f96924c5399e629 --- /dev/null +++ b/eesanje/url_46_25_6.txt @@ -0,0 +1,13 @@ +ಇವರೇನು ಮನುಷ್ಯರೋ.. ನರ ರಾಕ್ಷಸರೋ..? ರೇಣುಕಾಸ್ವಾಮಿ ತಂದೆ ಆಕ್ರೋಶ +- +ಚಿತ್ರದುರ್ಗ,ಸೆ.5-ರೇಣುಕಾ ಸ್ವಾಮಿ ಮಂಡಿಯೂರಿ ಅಂಗಲಾಚಿ ಬೇಡಿ ಕೊಂಡರೂ ಕರುಣೆ ತೋರಿಸದೆ ಕ್ರೂರವಾಗಿ ಕೊಲೆ ಮಾಡಿರುವುದನ್ನು ನೋಡಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರೇಣುಕಾಸ್ವಾಮಿಯವರ 2 ಫೋಟೊಗಳು ವೈರಲ್ ಆದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ನನ್ನ ಮಗ ಎಷ್ಟು ಹಿಂಸೆಯಿಂದ ಒದ್ದಾಡಿರಬಹುದು. ಕಿರುಚಿ ಅತ್ತಿರಬಹುದು ಎಂದು ನೆನೆಸಿಕೊಂಡರೆ ಎದೆನೋವು ಹೆಚ್ಚಾಗುತ್ತದೆ. ಅವರನ್ನು ಬರೀ ರಾಕ್ಷಸರು ಎಂದು ಕರೆದರೆ ಸಾಲುವುದಿಲ್ಲ. ಚಿತ್ರಗಳಲ್ಲಿ ಮಾತ್ರ ನಾವು ರಾಕ್ಷಸರನ್ನು ನೋಡಿ ಕಲ್ಪಿಸಿಕೊಳ್ಳುತ್ತಿದ್ದೆವು. ಇವರು ನಿಜಜೀವನದಲ್ಲಿ ರಾಕ್ಷಸರಿಗಿಂತಲೂ ಭಯಾನಕ ರಾಕ್ಷಸರು. +ಎಳ್ಳುಕಾಳಷ್ಟೂ ಮಾನವೀಯತೆ ಇಲ್ಲದ ಇವರಿಗೆ ಸರ್ಕಾರವು ನನ್ನ ಮಗನಿಗಾದಂತೆ ಕಠಿಣ ಶಿಕ್ಷೆ ನೀಡಬೇಕು ಎಂದು ಅಳಲು ತೋಡಿಕೊಂಡರು.ನನ್ನ ಮಗನ ಮೇಲೆ ಹಲ್ಲೆ ಮಾಡಿರುವುದನ್ನು ಫೋಟೊದಲ್ಲಿ ನೋಡಿದರೆ ದಿಗ್ಭ್ರಮೆಯಾಗುತ್ತಿದೆ. ತಲೆಸುತ್ತು, ಎದೆನೋವು ಬರುತ್ತಿದೆ. ಆತ ಸಾಯುವಾಗ ಎಷ್ಟು ಒದ್ದಾಡಿರಬಹುದು ಎಂದು ಕಲ್ಪಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ. +ಮಗನ ಕೊಲೆಯ ಬಳಿಕ ಆತನ ತಾಯಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನನ್ನ ತಾಯಿಯೂ ಹಾಸಿಗೆ ಹಿಡಿದಿದ್ದಾರೆ. ರೇಣುಕಾಸ್ವಾಮಿಯ ಪತ್ನಿ ಕುಗ್ಗಿ ಹೋಗಿದ್ದಾರೆ. ಆಕೆ ಗರ್ಭಿಣಿಯಾಗಿದ್ದು, ಮಗುವಿನ ತೂಕ ಕಡಿಮೆಯಾಗಿದೆ. ವೈದ್ಯರು ನಿರಂತರ ಉಪಚಾರ ಮಾಡುತ್ತಿದ್ದಾರೆ ಎಂದರು. +ಆರೋಪಿ ದರ್ಶನ್ ಸೇರಿದಂತೆ ಇತರರಿಗೆ ಜೈಲಿನಲ್ಲಿ ಸುಖಾಸೀನ ಸೌಲಭ್ಯ ನೀಡುತ್ತಿರುವುದು ಸರಿಯಲ್ಲ. ಹೀಗಾದರೆ ಶಿಕ್ಷೆಗೆ ಅರ್ಥವೇನಿದೆ. ಒಂದು ಮನೆಯಿಂದ ಮತ್ತೊಂದು ಮನೆ ಬದಲಾದಂತೆ ವಾತಾವರಣ ನಿರ್ಮಾಣವಾಗುತ್ತದೆಯೋ ಹೊರತು ಶಿಕ್ಷೆ ಎನಿಸುವುದಿಲ್ಲ. ಈ ವಿಚಾರವಾಗಿ ಸರ್ಕಾರ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು. +ಕೆಲವರು ಈಗಲೂ ದರ್ಶನ್ ಮೇಲೆ ಅಭಿಮಾನ ಪ್ರದರ್ಶಿಸುತ್ತಿರುವುದನ್ನು ನೋಡಿದರೆ ನನಗೆ ಆತಂಕವಾಗುತ್ತಿದೆ. ನಮ ಮನೆಯ ಮಗನಿಗಾದಂತ ಪರಿಸ್ಥಿತಿ ಅಭಿಮಾನ ತೋರಿಸುವವರ ಮನೆಯಲ್ಲಿ ನಡೆದಿದ್ದರೆ ಏನು ಮಾಡುತ್ತಿದ್ದರು. ರೇಣುಕಾಸ್ವಾಮಿ ತಪ್ಪು ಮಾಡಿದ್ದರೆ ಪೊಲೀಸರಿಗೆ ದೂರು ನೀಡಬಹುದಿತ್ತು. +ಇಲ್ಲವೇ ತಂದೆ-ತಾಯಿಗಳಾದ ನಮಗೆ ಹೇಳಬಹುದಿತ್ತು, ರೇಣುಕಾಸ್ವಾಮಿ ಬುದ್ಧಿ ಮಾತು ಹೇಳಿದ್ದರೆ ತಿದ್ದಿಕೊಳ್ಳುವ ಸ್ವಭಾವದವನು. ಒಂದು ವೇಳೆ ಹಲ್ಲೆ ಮಾಡಿದ ಬಳಿಕವಾದರೂ ಬಿಟ್ಟು ಕಳುಹಿಸಬಹುದಿತ್ತು. ಅಷ್ಟು ಕ್ರೂರವಾಗಿ ಅತ್ತು ಬೇಡಾಡಿದರೂ ಬಿಡದೇ ಕ್ರೂರವಾಗಿ ಕೊಂದಿರುವುದು ಮಾನವೀಯತೆಯೇ? ಎಂದು ಪ್ರಶ್ನಿಸಿದರು. +ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಜವಾಬ್ದಾರಿ ಸ್ಥಾನದಲ್ಲಿರುವ ನಟ ಈ ರೀತಿ ನಡೆದುಕೊಂಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಆತ ಚಿತ್ರರಂಗದಲ್ಲಿ ನಟಿಸುವುದಕ್ಕಿಂತಲೂ ನಿಜ ಜೀವನದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾನೆ ಎಂದು ಕೇಳರಿಯದ, ನೋಡದ ಕ್ರೂರತ್ವವನ್ನು ದರ್ಶನ್ ಮತ್ತು ಅವರ ಸಂಗಡಿಗರು ಪ್ರದರ್ಶಿಸಿದ್ದಾರೆ ಎಂದರು. +ಅಭಿಮಾನ ಇರಬೇಕು ನಿಜ, ಆದರೆ ದುರಭಿಮಾನ ಇರಬಾರದು. ಕ್ರೂರ ಮನಸ್ಥಿತಿಯಲ್ಲಿ ತಪ್ಪು ಮಾಡಿದವರನ್ನೂ ಅಭಿಮಾನದ ಕಾರಣಕ್ಕಾಗಿ ಬೆಂಬಲಿಸುವುದು ಸರಿಯಲ್ಲ. ಮನುಷ್ಯತ್ವ ಇಲ್ಲದ ರಾಕ್ಷಸರ ಮುಖವಾಡಗಳು ಜನರ ಮುಂದೆ ಬಯಲುಗೊಂಡಿವೆ ಎಂದು ಹೇಳಿದರು. ದರ್ಶನ್ ಮತ್ತು ಆತನ ಸಂಗಡಿಗರಲ್ಲಿ ಯಾರಿಗೂ ಮನುಷ್ಯತ್ವವೇ ಇಲ್ಲವೇ?, ಅಷ್ಟು ಅಂಗಲಾಚಿದರೂ ಕೊಂದು ಹಾಕಿದ್ದಾರೆ ಎಂದರೆ ಇವರನ್ನು ಮನುಷ್ಯರು ಎನ್ನಬೇಕೇ? ಎಂದು ತಮ ದುಃಖ ತೋಡಿಕೊಂಡರು. +ಇದೇ ವೇಳೆ ಮಾತನಾಡಿದ ರೇಣುಕಾಸ್ವಾಮಿಯವರ ಸಹೋದರಿ ಸುಚಿತ್ರಾ, ದರ್ಶನ್ ಅವರು ರೇಣುಕಾಸ್ವಾಮಿಯನ್ನು ಸಹೋದರ ಎಂದು ಭಾವಿಸಿ ಬುದ್ಧಿ ಹೇಳಿ ಬಿಟ್ಟುಕಳುಹಿಸಬಹುದಿತ್ತು. ಜೈಲಿಗೆ ಹೋದರೂ ದರ್ಶನ್ ಬದಲಾಗಿಲ್ಲ ಎಂದರೆ ದೇವರೇ ಬುದ್ಧಿ ಕೊಡಬೇಕು. ಕಾನೂನು ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು. +ನನ್ನ ಸಹೋದರ ನರಳಿ ಪ್ರಾಣ ಭಿಕ್ಷೆ ಬೇಡಿದ ರೀತಿ ದರ್ಶನ್ ಕೂಡ ಜೀವ ಹಾಗೂ ಜೀವನಕ್ಕಾಗಿ ಅಂಗಲಾಚುವ ಪರಿಸ್ಥಿತಿ ಬರಬೇಕು. ರೇಣುಕಾಸ್ವಾಮಿಯ ಕೊನೆಕ್ಷಣದ ಫೋಟೊಗಳನ್ನು ನೋಡಿ ನಮ ತಂದೆ ಕುಸಿದುಹೋದರು. ಮತ್ತೊಮೆ ನನಗೆ ಆ ಫೋಟೊವನ್ನು ತೋರಿಸಬೇಡಿ ಎಂದು ಅಳಲಾರಂಭಿಸಿದರು. ನಮ ಕುಟುಂಬ ಎಂದಿಗೂ, ಯಾರ ಬಳಿಯೂ ಬೇಡಿರಲಿಲ್ಲ. ಆದರೆ ರೇಣುಕಾಸ್ವಾಮಿ ಕೊನೆಕ್ಷಣದಲ್ಲಿ ಅಂಗಲಾಚಿದ್ದರೂ ಬಿಡದೇ ಇರುವುದು ಘೋರ ಅನ್ಯಾಯ ಎಂದು ಹೇಳಿದರು. \ No newline at end of file diff --git a/eesanje/url_46_25_7.txt b/eesanje/url_46_25_7.txt new file mode 100644 index 0000000000000000000000000000000000000000..c575213f6dcfd2c45453e564f0f1d4bfa26dcd4a --- /dev/null +++ b/eesanje/url_46_25_7.txt @@ -0,0 +1,11 @@ +ರೇಣುಕಾಸ್ವಾಮಿ ಪರಿ ಪರಿಯಾಗಿ ಬೇಡಿದರೂ ಬಿಡದೆ ಬಗೆಬಗೆಯಾಗಿ ಹಿಂಸಿಸಿ ಕೊಂದ ‘ಡಿ’ ಗ್ಯಾಂಗ್ + +ಬೆಂಗಳೂರು,ಸೆ.5-ಅಣ್ಣಾ….ನಾನು ನಿಮ್ಮ ಪಕ್ಕಾ ಅಭಿಮಾನಿ…. ಇನುಂದೆ ಅಂತಹ ಕೆಲಸ ಮಾಡಲ್ಲ ಪ್ಲೀಸ್ ನನ್ನ ಬಿಟ್ಟುಬಿಡಿ ಎಂದು ರೇಣುಕಾಸಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಕೈ ಮುಗಿದು ಪರಿ ಪರಿಯಾಗಿ ಬೇಡಿಕೊಂಡರೂ ದರ್ಶನ್ ಅಂಡ್ ಗ್ಯಾಂಗ್ನ ರಾಕ್ಷಸ ಮನಸು ಕರಗದೆ ಆತನನ್ನು ನಿರ್ದಯಿಯಾಗಿ ಕೊಲೆ ಮಾಡಿರುವುದಕ್ಕೆ ಪೊಲೀಸರಿಗೆ ಪಕ್ಕಾ ಸಾಕ್ಷ್ಯ ದೊರೆತಿದೆ. +ಎರಡು ಲಾರಿಗಳ ಮಧ್ಯೆ ಬಿಳಿ ಬನಿಯನ್ ಮತ್ತು ನೀಲಿ ಜೀನ್‌್ಸ ತೊಟ್ಟ ರೇಣುಕಾಸ್ವಾಮಿ ಕುಕ್ಕರ ಕಾಲಿನಲ್ಲಿ ಕುಳಿತು ಪ್ರಾಣ ಬಿಕ್ಷೆ ನೀಡುವಂತೆ ಪರಿ ಪರಿಯಾಗಿ ಬೇಡಿಕೊಳ್ಳುತ್ತಿರುವ ಪೋಟೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ನನ್ನ ಮಗನನ್ನು ಯಾವುದೆ ಕಾರಣಕ್ಕೂ ಜೀವ ಸಹಿತ ಉಳಿಸಬೇಡಿ ಎಂದು ಪವಿತ್ರಾಗೌಡ ಉಳಿದ ಆರೋಪಿಗಳನ್ನು ಪ್ರೋತ್ಸಾಹಿಸುತ್ತಿರುವುದನ್ನು ಆರೋಪಿಯೊಬ್ಬ ಸೆರೆ ಹಿಡಿದಿರುವುದರಿಂದ ದರ್ಶನ್ ಅಂಡ್ ಗ್ಯಾಂಗ್ನ ಪ್ರತಿಯೊಂದು ಕೃತ್ಯವೂ ರೆಕಾರ್ಡ್ ಅಗಿ ಹೋಗಿದೆ. +ಅಷ್ಟೆ ಆಗಿದ್ದರೆ ಪರ್ವಾಗಿಲ್ಲ.. ದರ್ಶನ್ ಅಂಡ್ ಟೀಮ್ನ ಪ್ರತಿಯೊಂದು ಕೃತ್ಯವನ್ನು ತನ್ನ ಫೋನಿನಲ್ಲಿ ಸೆರೆ ಹಿಡಿದ ಆರೋಪಿ ಅಷ್ಟು ದೃಶ್ಯಗಳನ್ನು ತನ್ನ ಮತ್ತೊಬ್ಬ ಸ್ನೇಹಿತನಿಗೆ ಕಳುಹಿಸಿರುವುದರಿಂದ ಎಲ್ಲಾ ಸಾಕ್ಷ್ಯಗಳು ಪೊಲೀಸರ ಕೈ ಸೇರಿವೆ. ಹೀಗಾಗಿಯೇ ಒಂದು ಜೀವ ತೆಗೆಯಲು ಪ್ರೋತ್ಸಾಹಿಸಿದ ಪವಿತ್ರಾಗೌಡ ಅವರನ್ನು ಎ-ಒನ್ ಆರೋಪಿಯನ್ನಾಗಿ ಮಾಡಲಾಗಿದೆ. +ಹೇಗೆ ನಡೆಯಿತು ಕೊಲೆ: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿದ ದಾಸನ ಗ್ಯಾಂಗ್ ಸೀದಾ ಆತನನ್ನು ಪಟ್ಟಣಗೆರೆಯಲ್ಲಿನ ಜಯಣ್ಣ ಶೆಡ್ಗೆ ಕರೆತಂದಿದೆ. ನಂತರ ದರ್ಶನ್ ಸೇರಿದಂತೆ ಆತನ 12 ಮಂದಿ ಚೇಲಾಗಳು ಮನಸ್ಸೋ ಇಚ್ಚೆ ಥಳಿಸಿದ್ದಾರೆ. +ಮೊದಲು ರೇಣುಕಾಸ್ವಾಮಿಯ ಬಟ್ಟೆ ಬಿಚ್ಚಿಸಿದ ಗ್ಯಾಂಗ್ ಬಿಳಿ ಬನಿಯನ್ ಮತ್ತು ನೀಲಿ ಜೀನ್ಸ್ ನಲ್ಲಿದ್ದ ಆತನ ಮೇಲೆ ಲಾಠಿ, ರಿಪೀಸ್ ಪಟ್ಟಿಯಿಂದ ಎಲ್ಲೆಂದರಲ್ಲಿ ಥಳಿಸಿದ್ದಾರೆ. ಈ ಸಂದರ್ಭದಲ್ಲಿ ಪವಿತ್ರಾಗೌಡ ತನ್ನ ಚಪ್ಪಲಿ ತೆಗೆದು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಆಗ ಆಕೆ ಹೊಡೆಯುತ್ತಿದ್ದ ಚಪ್ಪಲಿಯನ್ನು ಕಿತ್ತುಕೊಂಡು ದರ್ಶನ್ ಕೂಡ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. +ಮಾತ್ರವಲ್ಲ, ಮೆಗ್ಗಾನ್ ಯಂತ್ರದಿಂದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿದೆ. ಆರೋಪಿಗಳ ಹಲ್ಲೆಯಿಂದ ತಲೆಯಲ್ಲಿ ರಕ್ತ ಸೋರುತ್ತಿದ್ದರೂ ಆತ ಕುಕ್ಕರ ಕಾಲಿನಲ್ಲಿ ಕುಳಿತು ತನ್ನ ಆರಾಧ್ಯ ದೈವ ಎಂದು ಭಾವಿಸಿದ್ದ ದರ್ಶನ್ಗೆ ತನ್ನ ಎರಡು ಕೈಗಳನ್ನು ಮುಗಿದು ಅಣ್ಣಾ ನಾನು ನಿಮ ಕಟ್ಟಾ ಅಭಿಮಾನಿ, ಇನುಂದೆ ಇಂತಹ ಕೆಲಸ ಮಾಡಲ್ಲ ತಪ್ಪಾಯ್ತು… ದಯವಿಟ್ಟು ನನ್ನ ಬಿಟ್ಟುಬಿಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಪವಿತ್ರಾಗೌಡ ಈ ನನ್ನ ಮಗನನ್ನುಯಾವುದೇ ಕಾರಣಕ್ಕೂ ಜೀವ ಸಹಿತ ಉಳಿಸಬೇಡಿ ಎಂದು ಪ್ರೋತ್ಸಾಹಿಸಿದ್ದರಿಂದ ಪ್ರೇರೆಪಿತನಾದ ದರ್ಶನ್ ಆತನ ತಲೆಯನ್ನು ಹಿಂದಿದ್ದ ಲಾರಿಗೆ ಅಪ್ಪಳಿಸಿದ್ದಾರೆ. +ಅಷ್ಟಾದರೂ ಅವರ ರಾಕ್ಷಸ ಮನಸು ಕರಗದೆ ರೇಣುಕಾಸ್ವಾಮಿಯ ಪ್ಯಾಂಟ್ ಬಿಚ್ಚಿಸಿ ಆತನ ಮರ್ಮಾಂಗಕ್ಕೆ ಜಾಡಿಸಿ ಒದ್ದಾಗ ವಿಲ ವಿಲ ಒದ್ದಾಡಿ ಪ್ರಾಣ ಬಿಟ್ಟಿದ್ದಾನೆ.ರೇಣುಕಾಸ್ವಾಮಿಯ ಪ್ರಾಣ ಪಕ್ಷಿ ಹಾರಿಹೋಯಿತು ಎಂಬುದು ತಿಳಿದಾಗ ಈ ಶವವನ್ನು ಹೇಗಾದರೂ ವಿಲೇವಾರಿ ಮಾಡಿ ಎಂದು ತನ್ನ ಪಟಾಲಂಗೆ ಆದೇಶಿಸಿ ದರ್ಶನ್ ಸ್ಥಳದಿಂದ ಜಾಗ ಖಾಲಿ ಮಾಡುವ ಎಲ್ಲ ದೃಶ್ಯಗಳು ಮೊಬೈಲ್ ಫೋನಿನಲ್ಲಿ ಸೆರೆಯಾಗಿವೆ. +ಪ್ರಾಣ ಕಳೆದುಕೊಂಡಿದ್ದ ರೇಣುಕಾಸ್ವಾಮಿಯ ದೇಹದ ಮೇಲೆ 39 ಗಾಯದ ಗುರುತುಗಳು ಪತ್ತೆಯಾಗಿರುವುದು ದರ್ಶನ್ ಅಂಡ್ ಗ್ಯಾಂಗ್ನ ರಾಕ್ಷಸಿ ಕೃತ್ಯಕ್ಕೆ ಸಾಕ್ಷಿಯಾಗಿದೆ.12 ಆರೋಪಿಗಳ ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆದು ಎಫ್ಎಸ್ಎಲ್ಗೆ ಕಳುಹಿಸಿದಾಗ ಆರೋಪಿಗಳಲ್ಲೇ ಒಬ್ಬ ತನ್ನ ಫೋನಿನಲ್ಲಿ ಸೆರೆ ಹಿಡಿದಿದ್ದ ಎಲ್ಲಾ ದೃಶ್ಯಗಳು ಪೊಲೀಸರಿಗೆ ಸಿಕ್ಕಿವೆ. +ಅದರಲ್ಲೂ ರೇಣುಕಾಸ್ವಾಮಿ ಮೇಲೆ ದರ್ಶನ್ ಅಂಡ್ ಗ್ಯಾಂಗ್ ನಡೆಸಿದ್ದ ಭೀಕರ ಹಲ್ಲೇ ದೃಶ್ಯಗಳ ಪ್ರಮುಖ ನಾಲ್ಕು ಫೋಟೋಗಳು ಪೊಲೀಸರಿಗೆ ಪಕ್ಕಾ ಸಾಕ್ಷಿಯಾಗಿವೆ.ಈ ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_25_8.txt b/eesanje/url_46_25_8.txt new file mode 100644 index 0000000000000000000000000000000000000000..1238969f334f0fcde097383d983b8461a4db632e --- /dev/null +++ b/eesanje/url_46_25_8.txt @@ -0,0 +1,6 @@ +ದರ್ಶನ್‌ ಮದುವೆಯಾಗಲು ನಾನು ಸಿದ್ಧ ಎಂದು ಜೈಲಿನ ಬಳಿ ಮಹಿಳೆ ರಂಪಾಟ +ಬಳ್ಳಾರಿ,ಸೆ.5-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರನ್ನು ನೋಡಲೇಬೇಕು ಎಂದು ಮಹಿಳಾ ಅಭಿಮಾನಿಯೊಬ್ಬರು ಬಳ್ಳಾರಿ ಕೇಂದ್ರ ಕಾರಾಗೃಹದ ಮುಂದೆ ಪಟ್ಟು ಹಿಡಿದ ಘಟನೆ ನಡೆದಿದೆ. +ಬೆಂಗಳೂರಿನಿಂದ ಬಳ್ಳಾರಿಗೆ ತೆರಳಿದ ಲಕ್ಷ್ಮಿ ಎಂಬ ಅಭಿಮಾನಿ ದರ್ಶನ್‌ ಏನು ತಪ್ಪು ಮಾಡಿದ್ದಾರೆ ಎಂದು ಜೈಲಿನಲ್ಲಿಟ್ಟಿದ್ದಾರೆ?, ಬೆಂಗಳೂರು ಜೈಲಿನಲ್ಲಿ ಸಿಗರೇಟ್‌ ಸೇದಿದರು ಎಂಬ ಕಾರಣಕ್ಕಾಗಿ ಬಳ್ಳಾರಿಗೆ ತಂದು ಹಾಕಿದ್ದಾರೆ. ಯಾರೂ ಬೀಡಿ, ಸಿಗರೇಟು ಸೇದುವುದೇ ಇಲ್ಲವೇ?, ಅದೇನು ಮಹಾಪರಾಧವೇ? ಎಂದು ಪ್ರಶ್ನಿಸಿದರು. +ದರ್ಶನ್‌ರನ್ನು ನೋಡಬೇಕೆಂಬ ಆಸೆ ತುಂಬಾ ಜನಕ್ಕೆ ಇರುತ್ತದೆ. ಬರುವವರಿಗೆ ಅವಕಾಶ ಮಾಡಿಕೊಡಬೇಕು. ಈ ಹಿಂದೆ ನಾನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದೆ. ಅಲ್ಲಿಯೂ ಭೇಟಿಯಾಗಲಿಕ್ಕಾಗಲಿಲ್ಲ. ಹೀಗಾಗಿ ಬಳ್ಳಾರಿಗೆ ಬಂದಿದ್ದೇನೆ. ನಾನು ಅವರೊಂದಿಗೆ ಮಾತನಾಡದೇ ಇದ್ದರೂ ಪರವಾಗಿಲ್ಲ, ನೋಡಲು ಅವಕಾಶ ಕೊಡಿ. ನಾನು ಹಣ್ಣುಹಂಪಲುಗಳನ್ನು ಮಾತ್ರ ತಂದಿದ್ದೇನೆ. ದರ್ಶನ್‌ ಇಷ್ಟಪಟ್ಟರೆ ಚಿಕನ್‌, ಮಟನ್‌ ಕೂಡ ತಂದುಕೊಡುತ್ತೇನೆ ಎಂದು ಹೇಳಿದರು. +ದರ್ಶನ್‌ ಮೇಲೆ ನನಗೆ ಅತಿಯಾದ ಅಭಿಮಾನ. ಅವರಿಷ್ಟಪಟ್ಟರೆ ನಾನು ಮದುವೆಯಾಗಲೂ ಸಿದ್ಧ. ವಿಜಯಲಕ್ಷ್ಮಿ ಒಬ್ಬರೇ ಹೆಂಡತಿಯಲ್ಲ, ನಾನೂ ಕೂಡ ದರ್ಶನ್‌ ಪತ್ನಿ ಇದ್ದಂತೆ ಎಂದು ಹೇಳಿ ರಂಪಾಟ ಮಾಡಿದ ಅವರು, ರಕ್ತಸಂಬಂಧಿಗಳನ್ನು ಮಾತ್ರ ಭೇಟಿ ಮಾಡಲು ಅವಕಾಶ ಮಾಡಿಕೊಡುವುದಕ್ಕಿಂತ ನಮಂತವರೂ ಭೇಟಿ ಮಾಡಲು ಒಳಗೆ ಬಿಡಬೇಕು ಎಂದು ಹೇಳಿದರು. +ನಾನು ಗುಲ್ಬರ್ಗದ ಮೂಲದವಳು. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿದ್ದೆ. ದರ್ಶನ್‌ ಜೈಲಿಗೆ ಹೋದ ದಿನದಿಂದ ಅವರ ಭೇಟಿಗಾಗಿ ಸತತ ಪ್ರಯತ್ನ ಮಾಡುತ್ತಿದ್ದೇನೆ. ಪೊಲೀಸರು ಒಳಗೆ ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ದರ್ಶನ್‌ ನೋಡದ ಹೊರತು ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಮೊಂಡಾಟ ಮಾಡಿದರು. \ No newline at end of file diff --git a/eesanje/url_46_25_9.txt b/eesanje/url_46_25_9.txt new file mode 100644 index 0000000000000000000000000000000000000000..a6774c47e3048ac076375cc3e5d4806cd07f057c --- /dev/null +++ b/eesanje/url_46_25_9.txt @@ -0,0 +1,8 @@ +ಸೆ.18 ರಂದು ಪಿಜಿಸಿಇಟಿ ಪರೀಕ್ಷೆ + 2024 ; 18 +ಬೆಂಗಳೂರು,ಸೆ.5-ಎಂಇ, ಎಂಟೆಕ್‌, ಎಂ.ಆರ್ಕಿಟೆಕ್ಚರ್‌ ಕೋರ್ಸ್‌ಗಳ ಪ್ರವೇಶಕ್ಕೆ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ) – 2024 ರ ವೇಳಾಪಟ್ಟಿಯನ್ನು ಪರಷ್ಕರಿಸಿದ್ದು, ಸೆ.18 ರಂದು ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಂದು ಮಧ್ಯಾಹ್ನ 1.30 ರಿಂದ 4.30 ರವರೆಗೆ ಪಿಜಿ ಸಿಇಟಿ ಪರೀಕ್ಷೆ ನಡೆಯಲಿದೆ. +ಪಿಜಿಸಿಇಟಿ ಗೆ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಸೆ.11 ರಿಂದ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.ಪಿಜಿಸಿಇಟಿ ಪರೀಕ್ಷೆಯು ಓಎಂಆರ್‌ ಮಾದರಿಯಲ್ಲಿ ಆಫ್‌ಲೈನ್‌ ಮೂಲಕ ನಡೆಸಲಾಗುವುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ. +ದಾಖಲೆಗಳ ಪರಿಶೀಲನೆ :2024ನೇ ಸಾಲಿನ ಮೇಕ್‌ಅಪ್‌ (ಮರುಪರೀಕ್ಷೆ) ಅರ್ಹತೆ ಪಡೆದು ಡಿಸಿಇಟಿ 2024ರ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳಿಗೆ ರ್ಯಾಂಕ್‌ ಅನ್ನು ವೆಬ್‌ಸೈಟ್‌ನಲ್ಲೇ ಪ್ರಕಟಿಸಲಾಗಿದೆ. +ಅರ್ಹ ಅಭ್ಯರ್ಥಿಗಳು ಸೆ.10 ರಂದು ನಿಗಧಿಪಡಿಸಿರುವ ಡಿಪ್ಲೋಮಾ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಎಲ್ಲಾ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಕೆಇಎ ಸೂಚಿಸಿದೆ. +ದಾಖಲೆಯ ಪರಿಶೀಲನೆಗೆ ಹಾಜರಾಗಿರಬೇಕಿರುವ ಪಾಲಿಟೆಕ್ನಿಕ್‌ ಕಾಲೇಜುಗಳ ವಿವರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕೋರಿರುವ ಕ್ಲೈಮ್‌ಗಳಿಗೆ ಪೂರಕವಾದ ಎಲ್ಲಾ ಶೈಕ್ಷಣಿಕ ಮೂಲ ದಾಖಲೆಗಳನ್ನು ಮತ್ತು ದೃಢೀಕೃತ ಒಂದು ಜೆರಾಕ್‌್ಸ ಪ್ರತಿಗಳನ್ನು ಸಲ್ಲಿಸಲು ತಿಳಿಸಿದೆ. +ಪರಿಶೀಲನೆ ದಿನದಂದು ಯಾವುದೇ ದಾಖಲೆಯನ್ನು ಹಾಜರುಪಡಿಸಲು ವಿಫಲವಾದ ವಿದ್ಯಾರ್ಥಿಯ ದಾಖಲೆಗಳನ್ನು ಪರಿಶೀಲನೆ ಮಾಡುವುದಿಲ್ಲ ಹಾಗೂ ಅವರ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವುದಿಲ್ಲ. ಅಂತಹ ವಿದ್ಯಾರ್ಥಿಗಳು ತಮ ಇಚ್ಛೆಯನ್ನು ನೀಡುವುದಕ್ಕೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. \ No newline at end of file diff --git a/eesanje/url_46_260_1.txt b/eesanje/url_46_260_1.txt new file mode 100644 index 0000000000000000000000000000000000000000..ab8bc4990e5bf450d4a53a5d5582da7d11d04ed8 --- /dev/null +++ b/eesanje/url_46_260_1.txt @@ -0,0 +1,7 @@ +ಪೀಣ್ಯ ಮೇಲ್ಸೇತುವೆ ಬಂದ್, ವಾಹನ ಸವಾರರು-ಪ್ರಯಾಣಿಕರು ಹೈರಾಣು +ಬೆಂಗಳೂರು, ಜ.17- ರಾಜಧಾನಿಯಿಂದ ಪ್ರಮುಖ ಜಿಲ್ಲೆ ಹಾಗೂ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ತುಮಕೂರು ರಸ್ತೆ ಪೀಣ್ಯ ಎಲಿವೇಟೆಡ್ ಹೈವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವ ಹಿನ್ನಲೆಯಲ್ಲಿ ಇಂದು ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುವಂತಾಗಿತ್ತು. +ಮೇಲ್ಸೇತುವೆಯಲ್ಲಿ ವಯಾಡಕ್ಟ್ ದುರಸ್ಥಿ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗಿದ್ದು ಇದೀಗ ವಯಾಡಕ್ಟ್‍ನ ಗುಣಮಟ್ಟ ಮತ್ತು ಸಮಗ್ರತೆ ಪರಿಶೀಲನೆಗಾಗಿ ಲೋಡ್ ಟೆಸ್ಟಿಂಗ್ ಮಾಡುತ್ತಿರುವ ಹಿನ್ನಲೆಯಲ್ಲಿ ಕಳೆದ ರಾತ್ರಿ 11 ರಿಂದ ಜ.19ರ ಬೆಳಗ್ಗೆ 11 ಗಂಟೆವೆರಗೂ ಮೇಲ್ಸೇತುವೆ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು ಸರ್ವೀಸ್ ರಸ್ತೆಯಲ್ಲಿ ಸಂಚರಿಸುವಂತೆ ಸಂಚಾರಿ ಪೊಲೀಸರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ. +ತುಮಕೂರು ರಸ್ತೆಯಲ್ಲಿ ಸಾಮಾನ್ಯವಾಗಿ ವಾಹನಗಳ ದಟ್ಟಣೆ ಹೆಚ್ಚಾಗಿಯೇ ಇರುತ್ತದೆ ಹಗಲು ರಾತ್ರಿ ಒಂದೇ ರಿತಿ ಇರುತ್ತದೆ. ಲಕ್ಷಾಂತರ ವಾಹನಗಳು ಈ ರಸ್ತೆಯ ಮೂಲಕ ಸಂಚರಿಸುತ್ತವೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಬೆಳಗಾವಿ, ಹುಬ್ಬಳ್ಳಿ. ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುತ್ತದೆ ಜೊತೆಗೆ ಪುಣೆ, ಮುಂಬೈ, ಮಹಾರಾಷ್ಟ, ರಾಜ್ಯಗಳಿಗೂ ಸಹ ಇದೆ ರಸ್ತೆ ಬಳಸಲಾಗುತ್ತದೆ ಹಾಗಾಗಿ ಈ ರಸ್ತೆ ಸದಾ ಒತ್ತಡದಿಂದ ಕೂಡಿರುತ್ತೆ. +ಮೂರು ದಿನ ಮೇಲ್ಸೇತುವೆ ಬಂದ್ ಆದ ಹಿನ್ನೆಲೆಯಲ್ಲಿ ಏಕ ಕಾಲದಲ್ಲಿ ಭಾರಿ ಹಾಗೂ ಲಘು ವಾಹನಗಳು ಸರ್ವಿಸ್ ರಸ್ತೆಗೆ ಇಳಿದಿದ್ದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು ಗೊರಗುಂಟೆ ಪಾಳ್ಯದಿಂದ ಎಂಟನೇ ಮೈಲಿ ತಲುಪಲು ಗಂಟೆಗಳೇ ಬೇಕಾಗುತ್ತಿದೆ. ಜೊತೆಗೆ ಸಿಗ್ನಲ್‍ನಿಂದ ಪ್ರಯಾಣಿಕರು ಹಾಗೂ ವಾಹನ ಸವಾರರು ರಾತ್ರಿಯಿಂದ ಟ್ರಾಫಿಕ್‍ನಲ್ಲಿ ಸಿಲುಕಿ ಹೈರಾಣರಾಗಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ. +ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ +ಮೇಲ್ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಎರಡು ವರ್ಷಗಳೇ ಆಗಿದೆ. ಅಂದಿನಿಂದ ಬಸ್ ಲಾರಿಗಳು ಸರ್ವಿಸ್ ರಸ್ತೆಯಲ್ಲೇ ಸಂಚರಿಸುತ್ತಿವೆ. ಈಗ ಮೇಲ್ಸೇತುವೆ ಬಂದ್ ಆಗಿದ್ದರಿಂದ ಲಘುವಾಹನಗಳೂ ಕೂಡ ಸರ್ವಿಸ್ ರಸ್ತೆಯಲ್ಲಿ ಸಂಚಸರಿಸುತ್ತಿರುವುದರಿಂದ ದಟ್ಟಣೆ ಹೆಚ್ಚಾಗಿದೆ . ಈ ಮಾರ್ಗಕ್ಕೆ ಬರುವ ಸವಾರರು ಆದಷ್ಟು ಬದಲಿ ಮಾರ್ಗ ಬಳಸಿ ಇಲ್ಲವೆ ನಿಮ್ಮ ಪ್ರಯಾಣವನ್ನು ಮೂರು ದಿನ ಮೂಂದೂಡಿ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಮೊದಲ ದಿನವಾದ ಇಂದು ಬೆಳಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೇಲ್ಸೇತುವೆ ಮೇಲೆ ಲೋಡ್ ಮಾಡಲಾಗಿದ್ದ ಭಾರಿ ಲಾರಿಗಳನ್ನು ಪರೀಕ್ಷಾರ್ಥವಾಗಿ ವಯಾಡಕ್ಟ್ ನ ಸಮಗ್ರತೆ ಹಾಗೂ ಗುಣಮಟ್ಟವನ್ನು ಹಂತ ಹಂತವಾಗಿ ಪರಿಶೀಲಿಸುತ್ತಿದ್ದಾರೆ. diff --git a/eesanje/url_46_260_10.txt b/eesanje/url_46_260_10.txt new file mode 100644 index 0000000000000000000000000000000000000000..811f55b052936aa38e5955ab41f0a505e51f8046 --- /dev/null +++ b/eesanje/url_46_260_10.txt @@ -0,0 +1,7 @@ +ತೆರಿಗೆ ಪದ್ಧತಿ ಸರಳೀಕರಣ : ಶಿವಕುಮಾರ್ +ಬೆಂಗಳೂರು,ಜ.16- ಬೆಂಗಳೂರು ನಾಗರಿಕರಿಗೆ ಹೊರೆಯಾಗಿರುವ ಆಸ್ತಿ ತೆರಿಗೆ ಪದ್ಧತಿಯನ್ನು ಜನಸ್ನೇಹಿ ಹಾಗೂ ಸರಳವಾಗಿ ಪರಿಷ್ಕರಣೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಮಲ್ಲೇಶ್ವರಂನ ಶಿರೂರು ಪಾರ್ಕ್‍ನ ಗುಂಡೂರಾವ್ ಮೆಮೋರಿಯಲ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2020 ರಲ್ಲಿ ಬಿಜೆಪಿ ಸರ್ಕಾರ ರಚಿಸಿದ ಬಿಬಿಎಂಪಿ ಕಾಯ್ದೆಯಿಂದ ಆಸ್ತಿ ತೆರಿಗೆ ಮತ್ತು ದಂಡದ ಪ್ರಮಾಣ ದುಬಾರಿಯಾಗಿದೆ ಎಂಬ ಆರೋಪಗಳಿವೆ. ಹಲವು ಕ್ಷೇತ್ರಗಳಲ್ಲಿ ಜನಸ್ಪಂದನ ನಡೆಸಿದಾಗ ಈ ಸಮಸ್ಯೆ ಬಗ್ಗೆ ತಮ್ಮ ಗಮನಕ್ಕೆ ಬಂದಿದೆ. ಹಿರಿಯ ಶಾಸಕ ಅಶ್ವತ್ಥ ನಾರಾಯಣ ಅವರು ಇಂದು ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. +ಬೆಂಗಳೂರಿನ ಜನರು ಸಮರ್ಪಕವಾದ ಆಸ್ತಿ ತೆರಿಗೆ ಪಾವತಿಸಬೇಕು. ಇದರಿಂದ ಮಾತ್ರ ಅಭಿವೃದ್ಧಿಪಡಿಸಲು ಸಾಧ್ಯ. 3 ಅಂತಸ್ತಿನ ಮನೆ ಕಟ್ಟಿ, 1 ಅಂತಸ್ತಿಗೆ ಮಾತ್ರ ತೆರಿಗೆ ಕಟ್ಟಿದರೆ ಅದು ಸರಿಯಲ್ಲ. ಸ್ವಯಂ ಘೋಷಿತ ಆಸ್ತಿ ತೆರಿಗೆ ದುಬಾರಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದೇ ರೀತಿ ಬಿಬಿಎಂಪಿ ನೂತನ ಕಾಯ್ದೆಯಲ್ಲಿನ ದುಬಾರಿ ತೆರಿಗೆ ವ್ಯವಸ್ಥೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರು ಪತ್ರ ಬರೆದಿದ್ದಾರೆ. ಇದರ ಪರಿಷ್ಕರಣೆ ಮಾಡುವ ಅಗತ್ಯವಿದೆ. 30-40 ಚದರ ಅಡಿ ವಿಸ್ತೀರ್ಣದ ನಿವೇಶನದ ಮನೆಗಳಿಗೆ, ಶೆಡ್‍ಗಳಿಗೆ ಸೂಚನೆ ಮಾಡಲಾಗಿದೆ. ಕಂದಾಯ ಮನ್ನಾ ಮಾಡಿ ಬಡವರಿಗೆ ಸಹಾಯವಾಗುವ ತೆರಿಗೆ ಪದ್ಧತಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು. ಮೂರ್ನಾಲ್ಕು ದಿನದಲ್ಲೇ ತೆರಿಗೆ ಕಟ್ಟಿ ಎಂದು ಒತ್ತಡ ಹೇರುವುದನ್ನು ತಪ್ಪಿಸಲಾಗುವುದು ಎಂದರು. +ಎಲ್ಲರನ್ನೂ ತೆರಿಗೆ ವ್ಯಾಪ್ತಿಗೊಳಪಡಿಸಲಾಗುವುದು. ಮನೆಬಾಗಿಲಿಗೆ ಸಮರ್ಪಕ ಆಸ್ತಿ ದಾಖಲೆಗಳನ್ನು ತಲುಪಿಸಲಾಗುವುದು ಎಂದು ಹೇಳಿದರು. ಬೆಂಗಳೂರಿನಲ್ಲಿ ವಸತಿ ಸಮಸ್ಯೆ ಬಗೆಹರಿಸಿ ಆದ್ಯತೆ ನೀಡಲಾಗುವುದು. ಎಲ್ಲವನ್ನೂ ಉಚಿತವಾಗಿ ಕೊಡಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳ ವಂತಿಗೆಗೂ ಅವಕಾಶ ಕಲ್ಪಿಸಲಾಗಿದೆ. +ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ +ಈ ಹಿಂದೆ 1 ಲಕ್ಷ ಮನೆ ಘೋಷಣೆ ಮಾಡಲಾಗಿತ್ತು. ಆದರೆ ಒಂದು ಮನೆಯನ್ನೂ ಕೊಟ್ಟಿಲ್ಲ. ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಪರಿಶೀಲಿಸಿ ವಸತಿ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಫುಟ್‍ಪಾತ್ ವ್ಯಾಪಾರಿಗಳಿಗೆ ಸಹಾಯ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ರಸ್ತೆ ಮಧ್ಯೆ ಖಾಯಂ ಅಂಗಡಿ ತೆರೆಯುವುದರ ಬದಲಾಗಿ ತಳ್ಳುವ ಗಾಡಿಯಲ್ಲಿ ರಸ್ತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರೆ ಆಕ್ಷೇಪಣೆಗಳಿಲ್ಲ. ಫುಟ್‍ಪಾತ್ ತೆರವಿಗೆ ಸಂಬಂಧಪಟ್ಟಂತೆ ಹೈಕೋರ್ಟ್‍ನ ಆದೇಶವಿದೆ. ಒತ್ತುವರಿ ತೆರವುಗೊಳಿಸದೇ ಇದ್ದರೆ ಬಿಬಿಎಂಪಿ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು. +ಬೆಂಗಳೂರಿನಲ್ಲಿ ಶೀಘ್ರವೇ ನೂತನ ಜಾಹಿರಾತು ನೀತಿಯನ್ನು ಜಾರಿಗೆ ತರಲಾಗುವುದು. ಈಗಾಗಲೇ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಸಲಾಗಿದೆ. ನಿಯಮ ಉಲ್ಲಂಘಿಸಿ ಯಾರೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಿದರೂ, ಅದರಲ್ಲಿ ನನ್ನ ಫೋಟೋ ಹಾಕಿದ್ದರೂ ಕೂಡ ಕೇಸು ದಾಖಲಿಸಿ, ದಂಡ ವಿಸಿ ಎಂದು ಹೇಳಿದರು. ಸಂಚಾರ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇನ್ನು ಕಸ ವಿಲೇವಾರಿಯಲ್ಲಂತೂ ದೊಡ್ಡ ಗ್ಯಾಂಗೇ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_260_11.txt b/eesanje/url_46_260_11.txt new file mode 100644 index 0000000000000000000000000000000000000000..1601a2baea1be3521aab2abe6b5e231b273bbf98 --- /dev/null +++ b/eesanje/url_46_260_11.txt @@ -0,0 +1,9 @@ +ಅಯೋಧ್ಯೆ ಉಗ್ರರ ಟಾರ್ಗೆಟ್ , ಕರ್ನಾಟಕದಲ್ಲೂ ಕಟ್ಟೆಚ್ಚರಕ್ಕೆ ಕೇಂದ್ರ ಸೂಚನೆ +ನವದೆಹಲಿ,ಜ.16- ದೇಶಾದ್ಯಂತ ಹಬ್ಬದ ವಾತಾವರಣ ಉಂಟು ಮಾಡಿರುವ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆಯ ಧಾರ್ಮಿಕ ಕಾರ್ಯಕ್ಕೆ ಉಗ್ರರ ಕರಿನೆರಳು ಆವರಿಸಿದ್ದು, ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಸೂಚಿಸಿದೆ. +ವಿಮಾನ ನಿಲ್ದಾಣ, ಬಂದರುಗಳು, ಪ್ರಮುಖ ದೇವಾಲಯಗಳು, ಸೂಕ್ಷ್ಮ , ಅತಿಸೂಕ್ಷ್ಮ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಕೈಗೊಳ್ಳಬೇಕೆಂದು ಗುಪ್ತಚರ ವಿಭಾಗ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.ಗುಪ್ತಚರ ವಿಭಾಗ ಸೂಚನೆ ಕೊಟ್ಟ ಹಿನ್ನಲೆಯಲ್ಲಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧ , ಹೈಕೋರ್ಟ್, ರಾಜಭವನ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಜ್ಪೆ ವಿಮಾನ ನಿಲ್ದಾಣ,ಬಂದರುಗಳು, ಇಸ್ಕಾನ್ ದೇವಸ್ಥಾನ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಮತ್ತಿತರ ದೇಗುಲಗಳಲ್ಲಿ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿದೆ. +ಅತಿಸೂಕ್ಷ್ಮ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರಕನ್ನಡ, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ ಸೇರಿದಂತೆ ಹಲವು ಕಡೆ ಹದ್ದಿನ ಕಣ್ಣಿಡಲಾಗಿದೆ. ಅಯೋಧ್ಯೆಯಲ್ಲಿ ಇದೇ 22ರಂದು ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳು ಹಾಗೂ ಐಸಿಸ್ ಪರ ಒಲವು ಹೊಂದಿರುವ ಕೆಲವು ಶಂಕಿತ ಉಗ್ರರು ಅಹಿತಕರ ಘಟನೆ ನಡೆಸಬಹುದೆಂಬ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸುವಂತೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರದಲ್ಲಿ ವಿವರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಮಥುರಾದ ಶಾಹಿ ಈದ್ಗಾ ಮಸೀದಿ ಸರ್ವೆಗೆ ಸುಪ್ರೀಂ ತಡೆ +ವಿಶೇಷವಾಗಿ ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನ, ಭಟ್ಕಳ, ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ, ಶಿವಮೊಗ್ಗದ ಅಮೀರಮಾ ಸರ್ಕಲ್ ಮತ್ತಿತರ ಕಡೆ ತಕ್ಷಣವೇ ಭದ್ರತೆಯನ್ನು ಹೆಚ್ಚಳ ಮಾಡುವಂತೆ ಸೂಚನೆ ಕೊಡಲಾಗಿದೆ. ಕೇಂದ್ರ ಗುಪ್ತಚರ ವಿಭಾಗ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಜ.22ರವರೆಗೂ ಹೈ ಅಲರ್ಟ್ ಆಗಿರಬೇಕು ಎಂದು ಜಿಲ್ಲಾ ಎಸ್‍ಪಿಗಳಿಗೂ ಪ್ರತ್ಯೇಕವಾಗಿ ಗುಪ್ತಚರ ವಿಭಾಗ ಸೂಚಿಸಿದೆ. +ಕಮೀಷನರೇಟ್ ಹಾಗೂ ಎಲ್ಲಾ ಜಿಲ್ಲಾ ಎಸ್‍ಪಿಗಳ ಜೊತೆ ನಡೆದ ಸಭೆಯಲ್ಲಿ ಶ್ರೀರಾಮನ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಪೆÇಲೀಸರ ಕಣ್ಗಾವಲಿಗೆ ಸೂಚನೆ ನೀಡಲಾಗಿದೆ.ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿನ ದೇವಾಲಯಗಳ ಬಳಿ ಅಲರ್ಟ್ ಇರಬೇಕು. ಸೂಕ್ಷ್ಮ ಪ್ರದೇಶವೆನ್ನಿಸಿದರೆ ಕೆಎಸ್‍ಆರ್‍ಪಿ ನಿಯೋಜನೆ ಮಾಡುವಂತೆಯೂ ಹೇಳಲಾಗಿದೆ. +ಪೊಲೀಸರ ಕಣ್ಗಾವಲು:ದೇವಾಲಯಗಳಲ್ಲಿ ಪೂಜೆ ಪುನಸ್ಕಾರ ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಬಾರದು. ದೇವಸ್ಥಾನ ಬಳಿಯಲ್ಲಿ ರಾಜಕೀಯವಾಗಿ ಮಾತನಾಡುವುದು, ಪ್ರತಿಭಟನೆ ಮಾಡುವುದು, ಸಮಾಜದ ಶಾಂತಿಭಂಗ ತರುವ ಘೋಷಣೆ ಕೂಗುವುದು ಸೇರಿದಂತೆ ಇನ್ನಿತರ ಚಟುವಟಿಕೆಗಳ ಮೇಲೆ ಕಣ್ಗಾವಲು ಇರಿಸಬೇಕು ಎಂದು ನಿರ್ದೇಶನ ನೀಡಿದೆ. +ಇಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವವರ ಮೇಲೆ ಕಣ್ಣಿಡುವಂತೆ ಸೂಚಿಸಲಾಗಿದ್ದು, ಜನವರಿ 22ರವರೆಗೆ ಎಲ್ಲಾ ಅಧಿಕಾರಿಗಳು ತುರ್ತು ಪರಿಸ್ಥಿತಿ ಹೊರತುಪಡಿಸಿ ತಮ್ಮ ವ್ಯಾಪ್ತಿ ಬಿಟ್ಟು ಎಲ್ಲಿಯೂ ತೆರಳಬಾರದೆಂದು ಸೂಚನೆ ನೀಡಲಾಗಿದೆ. \ No newline at end of file diff --git a/eesanje/url_46_260_12.txt b/eesanje/url_46_260_12.txt new file mode 100644 index 0000000000000000000000000000000000000000..ea32e1c8fa48195f3988ea12c8c781d0607d0303 --- /dev/null +++ b/eesanje/url_46_260_12.txt @@ -0,0 +1,8 @@ +‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡ ಹಾಡಿಗೆ ಮನಸೋತ ಮೋದಿ +ಬೆಂಗಳೂರು,ಜ.16- ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರಮೋದಿ ಆ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟೂಬ್‍ಲ್ಲಿ ಹಾಡಿರುವ, ಪೂಜಿಸಲೆಂದೇ ಹೂಗಳ ತಂದೆ ಹಾಡಿನ ಲಿಂಕ್‍ನ್ನು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. +ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಬಣ್ಣಿಸಿದ್ದಾರೆ. + . .#://./9wYmjhC4p5 +ಪೂಜಿಸಲೆಂದೆ ಹೂಗಳ ತಂದೆ ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‍ಕುಮಾರ್ ನಟನೆಯ ಎರಡು ಕನಸು ಸಿನಿಮಾದ ಹಾಡು. ಕನ್ನಡದ ಶ್ರೇಷ್ಠ ಪ್ರಣಯ ಚಲನಚಿತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ಈ ಸಿನಿಮಾ 1974ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು. +ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ +ಪೂಜಿಸಲೆಂದೆ ಹೂಗಳ ತಂದೆ ಹಾಡಿನ ಸಾಹಿತ್ಯ ಬರೆದವರು ಚಿ. ಉದಯಶಂಕರ್ ಅವರು. ಹಿನ್ನೆಲೆ ಗಾಯನ ಖ್ಯಾತ ಗಾಯಕಿ ಎಸ್ ಜಾನಕಿಯವರು. ಎಂದೆಂದೂ ನಿನ್ನನು ಮರೆತು, ಬಾಡಿಹೋದ ಬಳ್ಳ್ಳಿಯಿಂದ, ಎಂದೂ ನಿನ್ನ ನೋಡುವೆ ಇವುಗಳು ಎರಡು ಕನಸು ಸಿನಿಮಾದ ಇತರ ಹಾಡುಗಳು. +ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್‍ನಲ್ಲಿ ಬಿತ್ತರಿಸಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಆಲಿಸಿ ತಲೆದೂಗಿದ್ದಾರೆ. \ No newline at end of file diff --git a/eesanje/url_46_260_2.txt b/eesanje/url_46_260_2.txt new file mode 100644 index 0000000000000000000000000000000000000000..29880f94a5b16d752b5c712c35d8e2752719bf9d --- /dev/null +++ b/eesanje/url_46_260_2.txt @@ -0,0 +1,7 @@ +ಸೀಟು ಹಂಚಿಕೆ ಚರ್ಚೆ, ದೆಹಲಿಗೆ ಹಾರಿದ ಎಚ್‍ಡಿಕೆ +ಬೆಂಗಳೂರು, ಜ.17- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. +ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯೊಂದಿಗೆ ಕ್ಷೇತ್ರಗಳ ಹಂಚಿಕೆ ಇಂದು ಬಹುತೇಕ ಅಂತಿಮಗೊಳ್ಳಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಬಗ್ಗೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ. +ಸಾಧ್ಯವಾದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಇಂದು ಬೆಳಿಗ್ಗೆ ತಮ್ಮ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ವರಿಷ್ಠರೊಂದಿಗಿನ ಮಾತುಕತೆ ಸಂಜೆಯಷ್ಟರಲ್ಲಿ ಪೂರ್ಣ ಗೊಂಡರೆ ರಾತ್ರಿಯೇ ನಗರಕ್ಕೆ ಅವರು ಮರಳಲಿದ್ದಾರೆ. ಮಾತು ಕತೆ ವಿಳಂಬವಾದರೆ ನಾಳೆ ವಾಪಸ್ಸಾಗಲಿದ್ದಾರೆ ಎಂದು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಉತ್ಸುಕವಾಗಿದೆ. ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟು ಚುನಾವಣೆಯಲ್ಲಿ ಬೆಂಬಲ ನೀಡಲಿದೆ. +ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ +ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯ ಮುಂದೆ ಬೇಡಿಕೆ ಇಡಲಾಗಿದೆ. ತುಮಕೂರು ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಚಾರವನ್ನು ಜೆಡಿಎಸ್ ಮುಂದಿಟ್ಟಿದೆ ಎನ್ನಲಾಗಿದೆ. +ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿಯನ್ನು ಸಹ ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_260_3.txt b/eesanje/url_46_260_3.txt new file mode 100644 index 0000000000000000000000000000000000000000..71eea774283cdb7cdd8e18be09029630bccf80c2 --- /dev/null +++ b/eesanje/url_46_260_3.txt @@ -0,0 +1,6 @@ +ಕಲಬುರ್ಗಿ ಜೈಲು ಬಿಜೆಪಿ ಮುಖಂಡರಿಂದ ತುಂಬಿದೆ : ಪ್ರಿಯಾಂಕ್ ಖರ್ಗೆ +ಬೆಂಗಳೂರು,ಜ.17-ಕಲಬುರ್ಗಿಯ ಜೈಲು ಬಿಜೆಪಿಯ ಮಾಜಿ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರಿಂದಲೇ ತುಂಬಿ ಹೋಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಲಬುರ್ಗಿಯನ್ನು ತೆಕ್ಕೆಯಲ್ಲಿ ಇಟ್ಟುಕೊಂಡಂತೆ ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ ಅವರ ಉಸ್ತುವಾರಿಯಲ್ಲಿ ಬರೀ ಅಕ್ರಮಗಳದೇ ಸದ್ದು. ಜೈಲಿನಲ್ಲಿರುವ ವಿಚಾರಣಾೀಧಿನ ಖೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಗಾಂಜಾಕ್ಕಾಗಿ ಹೊಡೆದಾಟ ನಡೆದಿದೆ. ಕಲಬುರ್ಗಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವುದು ಮಾತ್ರವಲ್ಲದೆ, ಜೈಲುಗಳು ಅಕ್ರಮದ ತಾಣಗಳಾಗಿವೆ ಎಂದು ಆರೋಪಿಸಿತ್ತು. +ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ +ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕಲಬುರ್ಗಿ ಜೈಲುಗಳು ಸದ್ಯ ಗೂಂಡಾಗಿರಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ನಿಮ್ಮದೇ ಪಕ್ಷದ ಮಾಜಿ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರಿಂದಲೇ ತುಂಬಿದ್ದು, ಅಲ್ಲಿಯೂ ಅವರ ಪುಂಡಾಟಿಕೆ ಮುಂದುವರೆದಿದೆ. ಆದರೆ ನಿಮಗೆ ಚಿಂತೆ ಬೇಡ. ಜೈಲಿನ ಒಳಗೂ ಅವರ ಪುಂಡಾಟಿಕೆಯನ್ನು ಮಟ್ಟ ಹಾಕುವುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ. +ಮುಂದಿನ ದಿನಗಳಲ್ಲಿ ನೀವು ಅವರ ಪೈಕಿ ಯಾರಿಗೆ ಪಕ್ಷದ ಉನ್ನತ ಹುದ್ದೆ ನೀಡಬಹುದು, ಯಾರಿಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡಬಹುದು ಎಂಬ ಬಗ್ಗೆ ಚಿಂತೆ ನಡೆಸಿ ಎಂದು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_260_4.txt b/eesanje/url_46_260_4.txt new file mode 100644 index 0000000000000000000000000000000000000000..12b3dd661c4199b720c1ac42f6449b40fa4f211e --- /dev/null +++ b/eesanje/url_46_260_4.txt @@ -0,0 +1,7 @@ + : ಶಾಸಕರು-ಕಾರ್ಯಕರ್ತರೂ ಸೇರಿ 70 ಮಂದಿ ನಿಗಮ ಮಂಡಳಿ ಗ್ಯಾರಂಟಿ +ಬೆಂಗಳೂರು,ಜ.17- ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿಗೆ ಕೊನೆಗೂ ಕಾಯಕಲ್ಪ ದೊರೆಯುವ ನಿರೀಕ್ಷೆಯಿದ್ದು, 36 ಮಂದಿ ಶಾಸಕರಿಗೆ, 24 ಕಾರ್ಯಕರ್ತರೂ ಸೇರಿದಂತೆ ಒಟ್ಟು 70 ಕ್ಕೂ ಹೆಚ್ಚು ಜನರಿಗೆ ಅಧ್ಯಕ್ಷ ಸ್ಥಾನ ಘೋಷಣೆಯಾಗುವ ಸಾಧ್ಯತೆಗಳಿವೆ. +ಸುಮಾರು ಕಳೆದೆರಡು ತಿಂಗಳಿನಿಂದಲೂ ನಿಗಮ ಮಂಡಳಿಯ ನೇಮಕಾತಿ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಲೇ ಇವೆ. ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಇನ್ನೂ ವಿಳಂಬ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ನಿಟ್ಟಿನಲ್ಲಿ ಅಂತಿಮ ತೀರ್ಮಾನಗಳಾಗಿವೆ. ಕಾಂಗ್ರೆಸ್ ನಾಯಕರು ಕಳುಹಿಸಿದ್ದ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಕಿತ ಹಾಕಿದ್ದಾರೆ. ಇಂದು ಸಂಜೆಯೊಳಗೆ ಪಟ್ಟಿ ಪ್ರಕಟವಾಗಲಿದೆ ಎಂಬ ಮಾಹಿತಿಗಳಿವೆ.2-3ಕ್ಕಿಂತಲೂ ಹೆಚ್ಚು ಬಾರಿ ಗೆಲುವು ಸಾಸಿದ ಶಾಸಕರನ್ನು ಅದರಲ್ಲೂ ಹಿರಿಯರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗಿದೆ. +ನಮ್ಮದು ರಾಜನೀತಿ ಅಲ್ಲ ಧರ್ಮನೀತಿ : ಆಚಾರ್ಯ ಸತ್ಯೇಂದ್ರ ದಾಸ್ +ವಿಧಾನಸಭೆಯ ಉಪಾಧ್ಯಕ್ಷ ಸ್ಥಾನವನ್ನು ನಿರಾಕರಿಸಿ ಎಡವಟ್ಟು ಮಾಡಿಕೊಂಡು ಚಾಮರಾಜನಗರದ ಪುಟ್ಟರಂಗಶೆಟ್ಟಿ, ಕಳೆದ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಕೆ.ಎಂ.ಶಿವಲಿಂಗೇಗೌಡ, ಕೃಷಿ ಸಚಿವ ಚೆಲುವರಾಯಸ್ವಾಮಿಯವರ ಆಪ್ತರಾಗಿರುವ ಬಂಡಿ ಸಿದ್ದನಗೌಡ, ಬಂಗಾರಪೇಟೆ ಕ್ಷೇತ್ರದ ಎಸ್.ಎನ್.ನಾರಾಯಣಸ್ವಾಮಿ, ಸಾಗರ ಕ್ಷೇತ್ರದ ಬೇಳೂರು ಗೋಪಾಲಕೃಷ್ಣ, ಭದ್ರಾವತಿಯ ಬಿ.ಕೆ.ಸಂಗಮೇಶ್, ಶೃಂಗೇರಿಯ ರಾಜೇಗೌಡ, +ಬಿಳಗಿ ಕ್ಷೇತ್ರದ ಜೆ.ಟಿ.ಪಾಟೀಲ್, ಹಾನಗಲ್‍ನ ಶ್ರೀನಿವಾಸ್ ಮಾನೆ, ರಾಯಚೂರು ಗ್ರಾಮೀಣ ಕ್ಷೇತ್ರದ ಬಸನಗೌಡ ದದ್ದಲ್, ಚಳ್ಳಕೆರೆಯ ಟಿ.ರಘುಮೂರ್ತಿ, ಧಾರವಾಡದ ವಿನಯ್ ಕುಲಕರ್ಣಿ, ಮಾನ್ವಿಯ ಹಂಪಯ್ಯ ನಾಯ್ಕ, ಬೆಂಗಳೂರಿನ ಶಾಂತಿನಗರದ ಎನ್.ಎ.ಹ್ಯಾರಿಸ್, ಗೋವಿಂದರಾಜನಗರ ಕ್ಷೇತ್ರದ ಪ್ರಿಯಾಕೃಷ್ಣ ಸೇರಿದಂತೆ 36 ಕ್ಕೂ ಹೆಚ್ಚು ಮಂದಿ ಶಾಸಕರಿಗೆ ಮತ್ತು ಕೆಲವು ಜಿಲ್ಲಾಧ್ಯಕ್ಷರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆಯಿದೆ. +ಹಿರಿಯ ಶಾಸಕರ ಪೈಕಿ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕರ್ನಾಟಕ ಗೃಹ ಮಂಡಳಿ, ನರೇಂದ್ರಸ್ವಾಮಿ ಅವರಿಗೆ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ, ಪುಟ್ಟರಂಗಶೆಟ್ಟಿ ಅವರಿಗೆ ಎಂಎಸ್‍ಐಎಲ್, ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎನ್.ಎ.ಹ್ಯಾರಿಸ್‍ಗೆ ಬಿಡಿಎ, ಬೇಳೂರು ಗೋಪಾಲಕೃಷ್ಣ ಅವರಿಗೆ ಅರಣ್ಯ ಅಭಿವೃದ್ಧಿ ನಿಗಮ, ಬಸನಗೌಡ ದದ್ದಲ್ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗಮಗಳನ್ನು ಹಂಚಿಕೆ ಮಾಡಲಾಗಿದೆ. ಇಂದು ಸಂಜೆಯೊಳಗಾಗಿ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_260_5.txt b/eesanje/url_46_260_5.txt new file mode 100644 index 0000000000000000000000000000000000000000..d9ffa421ea3c11dc3c52d3ab200352394ec74ecb --- /dev/null +++ b/eesanje/url_46_260_5.txt @@ -0,0 +1,7 @@ +ಖರ್ಗೆ ಎಚ್ಚರಿಕೆ ನಡುವೆಯೂ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾದ ಯತೀಂದ್ರ ಹೇಳಿಕೆ +ಬೆಂಗಳೂರು,ಜ.17- ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮಾಗಡಿ ಶಾಸಕ ಎಸ್.ಸಿ.ಬಾಲಕೃಷ್ಣ ಅವರ ಹೇಳಿಕೆಯ ಬೆನ್ನಲ್ಲೇ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ ಎಂದು ನೀಡಿರುವ ಹೇಳಿಕೆ ಮತ್ತೊಂದು ಸುತ್ತಿನ ಚರ್ಚೆಗೆ ಗ್ರಾಸವಾಗಿದೆ. +ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಚರ್ಚೆ ಮಾಡಬೇಡಿ. ಲೋಕಸಭೆ ಚುನಾವಣೆಯತ್ತ ಗಮನ ಕೊಡಿ. ಸರ್ಕಾರದ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕಟ್ಟೆಚ್ಚರದ ನಡುವೆಯೂ ಚರ್ಚೆಗಳು ಮತ್ತೆ ಚಾಲನೆಗೊಳ್ಳುತ್ತಿವೆ. ನಿನ್ನೆ ಯತೀಂದ್ರ ಅವರ ಹೇಳಿಕೆಗೆ ಪಕ್ಷದ ಸಚಿವರು, ಹಿರಿಯ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ. ಯತೀಂದ್ರ ಅವರ ವೈಯಕ್ತಿಕ ಹೇಳಿಕೆ. ಅದಕ್ಕೂ, ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಹಳಷ್ಟು ಮಂದಿ ಜಾರಿಕೊಂಡಿದ್ದಾರೆ. +ನಮ್ಮದು ರಾಜನೀತಿ ಅಲ್ಲ ಧರ್ಮನೀತಿ : ಆಚಾರ್ಯ ಸತ್ಯೇಂದ್ರ ದಾಸ್ +ಯತೀಂದ್ರ ಅವರ ಹೇಳಿಕೆ ಮುಖ್ಯಮಂತ್ರಿ ಹುದ್ದೆಯ ಅನಿಶ್ಚಿತತೆಯ ಸುಳಿವು ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸಲಾರಂಭಿಸಿವೆ. ಕಳೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ದೆಹಲಿಯಲ್ಲಿ ನಡೆದ ಮುಖ್ಯಮಂತ್ರಿ ಆಯ್ಕೆ ಕಸರತ್ತಿನಲ್ಲಿ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂಬ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಅದು ಕೆಲವೇ ಕೆಲವು ನಾಯಕರ ನಡುವೆ ನಡೆದ ಚರ್ಚೆಯಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಶಾಸಕರು ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿದ್ದರು. +ಇನ್ನೂ ಕೆಲವು ಹೆಜ್ಜೆ ಮುಂದೆ ಹೋಗಿ ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ಈ ವಿಚಾರಗಳು ವ್ಯಾಪಕ ಚರ್ಚೆಯಾಗುತ್ತಿವೆ. ಜೊತೆಯಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ನಾನಾ ರೀತಿಯ ವ್ಯಾಖ್ಯಾನಗಳು ನಡೆದಿದ್ದವು. +ಹೈಕಮಾಂಡ್ ಸೂಚನೆ ಬಳಿಕ ಎಲ್ಲವೂ ತಹಬದಿಗೆ ಬಂದಿದೆ ಎಂಬ ಸಂದರ್ಭದಲ್ಲೇ ಮಾಗಡಿಯ ಬಾಲಕೃಷ್ಣ ಮತ್ತು ಯತೀಂದ್ರ ಅವರ ಹೇಳಿಕೆಗಳು ತಿಳಿಗೊಳಕ್ಕೆ ಕಲ್ಲೆಸೆದಂತಾಗಿದೆ. ಲೋಕಸಭೆ ಚುನಾವಣೆಯಲ್ಲೇ ಮತ್ತೊಂದು ಸುತ್ತಿನ ಅಕಾರ ಹಂಚಿಕೆ ಹಾಗೂ ಇತರ ವಿಚಾರಗಳ ಕುರಿತು ಬಿರುಸಿನ ಚರ್ಚೆಗಳು ನಡೆಯುವ ನಿರೀಕ್ಷೆಗಳಿವೆ. ಮೇಲ್ನೋಟಕ್ಕೆ ಬಹಳಷ್ಟು ಮಂದಿ ಶಾಸಕರು ಯತೀಂದ್ರ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. \ No newline at end of file diff --git a/eesanje/url_46_260_6.txt b/eesanje/url_46_260_6.txt new file mode 100644 index 0000000000000000000000000000000000000000..75a16b857e8e67444c766dae08fb4b04d20308d1 --- /dev/null +++ b/eesanje/url_46_260_6.txt @@ -0,0 +1,18 @@ +ಕ್ರೈಮ್ ಕಂಟ್ರೋಲ್​ಗೆ ಎಐ ಮತ್ತು ಚಾಟ್‍ಬಾಟ್ ಮೊರೆಹೋದ ಕರ್ನಾಟಕ ಪೊಲೀಸರು +ಬೆಂಗಳೂರು,ಜ.16- ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನವಾದ ಆರ್ಟಿಫಿಶಿಯಲ್ ಇಂಟಿಲಿಜೆನ್ಸ್(ಎಐ) ಮಿಷನ್ ಲರ್ನಿಂಗ್(ಎಂಎಲ್) ಮತ್ತು ಚಾಟ್‍ಜಿಪಿಟಿ ತಂತ್ರಜ್ಞಾನ ಚಾಟ್‍ಬಾಟ್ ಸೇವೆಗಳನ್ನು ಬಳಸಿ ಅಪರಾಧ ಚಟುವಟಿಕೆಗಳ ನಿಯಂತ್ರಣ ಮತ್ತು ದತ್ತಾಂಶ ಸಂಗ್ರಹಿಸಲು ಮುಂದಾಗಿದೆ. +ರಾಜ್ಯ ಪೋಲೀಸ್ ಇಲಾಖೆಯು ಗಣಕೀಕರಣಗೊಳಿಸುವಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದ್ದು, ಈಗ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಪೊಲೀಸ್ ಐಟಿ ವಿ2 ತಂತ್ರಾಂಶ, ಐಟಿಪಿಎ ಸರಳ ಮೊಬೈಲ್ ಆಪ್, ಪೊಲೀಸ್ ಮಿತ್ರ ಚಾಟ್‍ಬಾಟ್, ಅನುಕಂಪದ ಆಧಾರದ ನೇಮಕಾತಿ ಪೋರ್ಟಲ್, ಕೆಎಸ್‍ಪಿಎಐ, ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ಡೇಟಾಥಾನ್-2024 ಮತ್ತು ರಾಜ್ಯಪೊಲೀಸ್ ಹ್ಯಾಕಥಾನ್-2024ನ್ನು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸಿದರು. +ಪೊಲೀಸ್ ಐಟಿ ವಿ2 ತಂತ್ರಾಂಶ: ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪೂರ್ಣ ಪ್ರಮಾಣದಲ್ಲಿ ತನಿಖಾ ಪ್ರಕ್ರಿಯೆಯನ್ನು ಸಮಗ್ರವಾಗಿ ಕೈಗೊಳ್ಳಲು ನೋಂದಣಿಯಿಂದ ಪ್ರಕರಣದ ವಿಲೇವಾರಿವರೆಗಿನ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ತಡೆರಹಿತವಾಗಿ ನಿರ್ವಹಿಸುತ್ತದೆ. +ಐಟಿಪಿಎ ಸರಳ ಮೊಬೈಲ್ ಆಪ್: ಮಾನವ ಕಳ್ಳಸಾಗಾಣಕೆಯು ಆಧುನಿಕ ಯುಗದ ಗುಲಾಮಗಿರಿ ರೂಪಕವಾಗಿದ್ದು, ಇದು ಜನರ ಘನತೆ ಮತ್ತು ಭದ್ರತೆಗೆ ಮಾರಕವಾಗಿದೆ. ಮಾನವ ಕಳ್ಳಸಾಗಾಣಿಕೆಯ ವಿರುದ್ಧದ ಕಾನೂನುಗಳು ನಿರ್ಣಾಯಕವಾಗುತ್ತದೆ. ಅದ್ದರಿಂದ ಅಧಿಕಾರಿಗಳಿಗೆ ಅಗತ್ಯವಿರುವ ದಾಖಲೆಗಳು, ಕಾರ್ಯ ವಿಧಾನಗಳು, ಅನ್ವಯವಾಗುವ ಕಾನೂನುಗಳು ಮತ್ತು ಸಂತ್ರಸ್ತರಿಗೆ ಆಶ್ರಯ ತಂಗುದಾಣಗಳ ಕುರಿತು ಸುಲಭವಾದ ಮಾರ್ಗದರ್ಶನ ನೀಡಲು ಸಹಕಾರಿಯಾಗಿರುತ್ತದೆ. +ಚಾಟ್‍ಬಾಟ್: ನಾಗರೀಕರ ಸಮಕಾಲಿನ ಸಮಸ್ಯೆಗಳಾದ ಸೈಬರ್ ಅಪರಾಧ ಸಂಚಾರ, ಮಹಿಳೆ ಮತ್ತು ಮಕ್ಕಳ ಮೇಲಿನ ಸಮಸ್ಯೆಗಳು ಮತ್ತು ಹಿರಿಯ ನಾಗರಿಕರ ಸಮಸ್ಯೆಗಳಿಗೆ ಸಂಬಂಸಿದಂತೆ ಕೇಳುವ ಪ್ರಶ್ನಾರ್ಥಕ ಅಂಶಗಳಿಗೆ ಉತ್ತರ ನೀಡಲು ಅನುಕೂಲಕರವಾಗುವಂತೆ ಪೊಲೀಸ್ ಮಿತ್ರ ಎಂಬ ಚಾಟ್‍ಬಾಟ್ ಸೇವೆಯನ್ನು ಚಾಟ್‍ಜಿಪಿಐ ತಂತ್ರಜ್ಞಾನದೊಂದಿಗ ಸಂಯೋಜನೆಗೊಳಿಸಿ ಅನುಷ್ಠಾನಪಡಿಸಲಾಗಿದೆ. +ಅನುಕಂಪ ಆಧಾರದ ನೇಮಕಾತಿ ಪೋರ್ಟಲ್:ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಅನುಕಂಪತ ನೇಮಕಾತಿಯನ್ನು ನೀಡಲು ಇಲಾಖೆಯು ಬದ್ದವಾಗಿರುತ್ತದೆ.ಕೆಎಸ್‍ಪಿ.ಎಐ:ಪೊಲೀಸ್ ಇಲಾಖೆಯ ಹೊಸದಾಗಿ ಅನುಷ್ಠಾನಗೊಳಿಸುತ್ತಿರುವ ಕೆಎಸ್‍ಪಿಎಐ ತಂತ್ರಾಂಶವು ಎ1 ಮತ್ತು ಎಂಎಲ್ ತಂತ್ರಜ್ಞಾನಗಳನ್ನು ಬಳಸಿ ಪ್ರಕರಣ ಸಂಕ್ಷಿಪ್ತ ಸಂಗತಿಗಳನ್ನು ಉಪಸಂಗತಿಗಳಾಗಿ ವಿಭಜಿಸುವ, ಪ್ರಕ್ರಿಯೆಯನ್ನು ಸ್ವಯಂಚಾಲಿತಗೊಳ ಸಿಕೊಳ್ಳುವ ಮೂಲಕ ಪ್ರಕರಣದ ವಿಶ್ಲೇಷಣೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುತ್ತದೆ. +ಆರ್ಥಿಕ ಅಪರಾಧಗಳ ತನಿಖಾ ತಂತ್ರಾಂಶ:ಆಧುನಿಕ ಪ್ರಪಂಚದಲ್ಲಿ ಆನ್‍ಲೈನ್ ಹಣಕಾಸು ವಹಿವಾಟುಗಳು ಹೆಚ್ಚುತ್ತಿರುವ ಆರ್ಥಿಕ ಅಪರಾಧಗಳು, ದತ್ತಾಂಶವನ್ನು ವಿಶ್ಲೇಷಿಸಲು ಈ ತಂತ್ರಾಂಶವು ಸಹಕಾರಿಯಾಗುತ್ತದೆ.ಡೇಟಾಥಾನ್ 2024:ಪೆÇಲೀಸ್ ಇಲಾಖೆಯಲ್ಲಿ ಸಂಗ್ರಹವಾಗಿರುವ ದತ್ತಾಂಶವನ್ನು ಬಳಸಿಕೊಂಡು ಪೊಲೀಸ್ ಡೇಟಾಥಾನ್ ಆಯೋಜಿಸಲಾಗುತ್ತಿದ್ದು, ನೋಂದಣಿ ಕಾರ್ಯ ಇಂದಿನಿಂದ ಪ್ರಾರಂಭ ಮಾಡಲಾಗಿದೆ.ಈ ದತ್ತಾಂಶವನ್ನು ಬಳಸಿಕೊಂಡು ಡಾಟಾ ಅನಾಲಿಟಿಕ್ಸ್ , ಡಾಟಾ ವಿಸುಲೇಷನ್ ಮತ್ತು ಪ್ರಿಡೆಕ್ಟಿವ್ ಕ್ರೈಂ ಅನಾಲಿಟಿಕ್ಸ್ ಮಾಡಲು ಅನುಕೂಲವಾಗುವಂತೆ ಡೇಟಾಥಾನ್ ಪ್ರಾರಂಭಿಸಲಾಗಿದೆ.ಪೊಲೀಸ್ ಹ್ಯಾಕಥಾನ್-2024:ಪೊಲೀಸ್ ಇಲಾಖೆಯು ಡಾರ್ಕ್ ವೆಬ್ ಮಾನಿಟರಿಂಗ್, ಕ್ರಿಫ್ಟೋ ಕರೆನ್ಸಿ ಅನಾಲಿಸಿಸ್ ಮತ್ತು ಓಸಿಂಟ್ ಟೂಲ್ ಡೆವೆಲಪ್‍ಮೆಂಟ್ ವಿಷಯಗಳ ಮೇಲೆ ಕರ್ನಾಟಕ ರಾಜ್ಯ ಪೊಲೀಸ್ ಹ್ಯಾಕಥಾನ್ ಆಯೋಜಿಸಲಾಗುತ್ತಿದ್ದು, ಹ್ಯಾಕಥಾನ್‍ನ ನೋಂದಣಿ ಕಾರ್ಯವನ್ನು ಇಂದಿನಿಂದ ಪ್ರಾರಂಭ ಮಾಡಲಾಗಿದೆ. +ಬಾಂಬ್ ಪತ್ತೆಮೊಬೈಲ್ ಲ್ಯಾಬ್‍ಪರಿಶೀಲಿಸಿದ ಸಿಎಂಬೆಂಗಳೂರು, ಜ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೆಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಬಳಿಕ ಪೊಲೀಸ್ ಐಟಿ-ಗಿ2, ಐಟಿಪಿಎ ಸರಳ ಆಪ್, ಪೊಲೀಸ್ ಮಿತ್ರ ಚಾಟ್ ಬಾಟ್, ಸಿಜಿ ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾಂಶ, ಆರ್ಥಿಕ ಇಂಟೆಲಿಜೆನ್ಸ್ ತಂತ್ರಾಂಶಗಳನ್ನು ಬಿಡುಗಡೆ ಮಾಡಿದರು.ಇದೇ ವೇಳೆ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು. +ಈ ಸಂದರ್ಭದಲ್ಲಿ ಗೃಹಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಉಪಸ್ಥಿತರಿದ್ದರು. + +206 ಎಸ್‍ಒಸಿಒಗಳ ನೇಮಕ..ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಧಿವಿಜ್ಞಾನ ವಿಷಯದಲ್ಲಿ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದ 206 ಸೀನ್ ಆಫ್ ಕ್ರೈಮ್ ಆಫೀಸರ್ (ಎಸ್‍ಒಸಿಒ)ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಅಪರಾಧ ನಡೆದ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸಂಗ್ರಹಿಸಿ ವೈಜ್ಞಾನಿಕವಾಗಿ ಪ್ಯಾಕ್ ಮಾಡಲು ಈ ಅಧಿಕಾರಿಗಳು ಸಹಾಯ ಮಾಡಲಿದ್ದಾರೆ. ಈಗಾಗಲೇ ಇವರಿಗೆ ಎಫ್‍ಎಸ್‍ಎಲ್, ಎನ್‍ಎಫ್‍ಎಸ್‍ಯು ಗುಜರಾತ್, ಕೆಪಿಎ, ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್, ಸಿಐಡಿ, ಫೋರೆನ್ಸಿಕ್ ಮೆಡಿಸನ್ ಸೇರಿದಂತೆ ಹಲವು ರೀತಿಯ ತರಬೇತಿಗಳನ್ನು ನೀಡಲಾಗಿದ್ದು , ಇವರು ಜಿಲ್ಲೆಗಳ ಡಿಪಿಒ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು , ಕೃತ್ಯ ನಡೆದ ಸ್ಥಳಕ್ಕೆ ತ್ವರಿತವಾಗಿ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಲು ಸ್ಥಳೀಯ ಪೆÇಲೀಸರಿಗೆ ಸಹಾಯ ನೀಡಲಿದ್ದಾರೆ. +ರಾಜ್ಯದಲ್ಲಿ 13 ಮೊಬೈಲ್ ಫೋರೆನ್ಸಿಕ್ ವಾಹನಗಳಿದ್ದು ವಿಶೇಷವಾಗಿ ಪ್ರಯೋಗಾಲಯದಿಂದ ಪರಿಸರವನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ 16 ಬಗೆಯ ಕಿಟ್‍ಗಳು ಕ್ರೈಮ್ ಸೀನ್‍ಗಳಾದ ಕೊಲೆ, ಅತ್ಯಾಚಾರ, ಸ್ಪೋಟ, ಬೆಂಕಿ ಅವಘಡ, ಮಾದಕ ವಸ್ತು ಸೇರಿದಂತೆ ಹಲವು ಪ್ರಕರಣಗಳನ್ನು ಬೇಸಲು ಬಳಸಿಕೊಳ್ಳಲಾಗುತ್ತದೆ. +ಸಿಎಂ ಅವರಿಂದ ಸೈಬರ್ ಹ್ಯಾಕಥಾನ್ ಘೋಷಣೆಬೆಂಗಳೂರು,ಜ.16- ನಗರದಲ್ಲಿಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಹ್ಯಾಕಥಾನ್‍ನ್ನು ಘೋಷಿಸಿದರು. ಸಿಐಡಿ-ಡಿಕೋಡ್ ಎಂಬ ಶೀರ್ಷಿಕೆಯಡಿ ಹ್ಯಾಕಥಾನ್ ತಂತ್ರಜ್ಞಾನ ಸಂಬಂಧಿತ ಸಮಸ್ಯೆಗಳನ್ನು ಎದುರಿಸುವಲ್ಲಿ ಸ್ವಯಂಪ್ರೇರಿತವಾಗಿ ತನಿಖಾ ಸಂಸ್ಥೆಗಳ ಸಾಮಥ್ರ್ಯಗಳನ್ನು ವೃದ್ಧಿಗೊಳಿಸುವ ಪ್ರಮುಖ ಉದ್ದೇಶದಿಂದ ಕೂಡಿದೆ. ರಾಜ್ಯದ ಸಿಐಡಿಯವರು ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆ-ï ಇಂಡಿಯಾ(ಡಿಎಸ್‍ಸಿಐ), ಇನೋಸಿಸ್ -ಫಂËಂಡೇಷನ್ ಅವರ ಸಹಯೋಗದೊಂದಿಗೆ ಸ್ಥಾಪಿಸಲಾದ ಸೆಂಟರ್ -Áರ್ ಸೈಬರ್ ಕ್ರೈಂ ಟ್ರೈನಿಂಗ್ ಅಂಡ್ ರಿಸರ್ಚ್(ಸಿಸಿಐಟಿಆರ್) ನಿಂದ ಯೋಜಿಸಿ ಕಾರ್ಯಗತಗೊಳಿಸಲಾಗಿದೆ. +ಈ ಕಾರ್ಯಕ್ರಮದ ಅತಿಥೇಯ ಸಂಸ್ಥೆಯಾಗಿ ಪಿಇಎಸ್ ವಿಶ್ವವಿದ್ಯಾಲಯ ಪಾಲುದಾರಿಕೆ ಹೊಂದಿದೆ. 24 ಗಂಟೆಯ ಅವಧಿಗೆ ನಿರ್ಧಿಷ್ಟಪಡಿಸಲಾದ ಹ್ಯಾಕಥಾನ್‍ನಲ್ಲಿ ಡಾರ್ಕ್‍ವೆಬ್ ಮೇಲ್ವಿಚಾರಣೆ ಮತ್ತು ಪತ್ತೆ, ಕ್ರಿಫ್ಟೋ ಕರೆನ್ಸಿಗಳು ಮತ್ತು ಓಪನ್ ಸೋರ್ಸ್ ಇಂಟೆಲೆಜಿನ್ಸ್ ವಿಷಯ ಆಧಾರಿತ ಏಕೀಕೃತ ವೇದಿಕೆಯನ್ನು ಒಳಗೊಂಡಿದೆ.ತಾಂತ್ರಿಕ ಹಿನ್ನಲೆ ಹೊಂದಿರುವ ವಿದ್ಯಾರ್ಥಿಗಳು ಹ್ಯಾಕಥಾನ್‍ನಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಹ್ಯಾಕಥಾನ್ ಕುರಿತಂತೆ ಹೆಚ್ಚಿನ ಮಾಹಿತಿಯನ್ನು..inನಲ್ಲಿ ಕಾಣಬಹುದಾಗಿದೆ. +27 ಕೋಟಿ ಮೌಲ್ಯದ ಗಾಂಜಾ-ಮಾದಕ ನಾಶಕ್ಕೆ ಸೂಚನೆಬೆಂಗಳೂರು,ಜ.16- ಸುಮಾರು 27 ಕೋಟಿ ಮೌಲ್ಯದ 4484 ಕೆಜಿ ಗಾಂಜಾ ಹಾಗೂ 23 ಕೆಜಿ ರಾಸಾಯನಿಕ ಮಾದಕ ವಸ್ತುಗಳನ್ನು ಫೆಬ್ರವರಿ ಮೊದಲ ವಾರದಂದು ರಾಜ್ಯಾದ್ಯಂತ ನಾಶಪಡಿಸಬೇಕಾಗಿ ಪೆÇಲೀಸ್ ಇಲಾಖೆಗೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. ಕಳೆದ ಆರು ತಿಂಗಳಿನಲ್ಲಿ ರಾಜ್ಯಾದ್ಯಂತ ವಿವಿಧ ಕಡೆ ದಾಳಿ ನಡೆಸಿದ್ದ ಪೆÇಲೀಸರು ಗಾಂಜಾ ಹಾಗೂ ರಾಸಾಯನಿಕ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಈ ಒಂದು ದಿಟ್ಟ ಹೆಜ್ಜೆ ಇಟ್ಟಿದೆ. + +ಅತ್ಯಾಧುನಿಕ ಬಾಂಬ್ ನಿಷ್ಕ್ರಿಯ ವಾಹನ ಹಸ್ತಾಂತರಬೆಂಗಳೂರು,ಜ.16-ಬಾಂಬ್ ಪತ್ತೆ ನಿಷ್ಕ್ರಿಯ ಕಾರ್ಯಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಹೊಸ ತಂತ್ರಜ್ಞಾನವುಳ್ಳ ಮೂರು ಹೊಸ ಬಸ್‍ಗಳನ್ನು ರಾಜ್ಯ ಗುಪ್ತವಾರ್ತೆ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸ್ತಾಂತರಿಸಿದರು. ಪ್ರಸ್ತುತ ರಾಜ್ಯದ್ಯಂತ 4 ಬಿಡಿಡಿಎಸ್ ಘಟಕಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅವುಗಳ ಜೊತೆಗೆ ಈ ಮೂರು ಹೊಸ ಬಸ್‍ಗಳು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ಉಪಕರಣಗಳನ್ನು ಹೊಂದಿದೆ. ಬಾಂಬ್ ಬೆದರಿಕೆ ಅಥವಾ ಸ್ಪೋಟದಂತಹ ಅವಘಡಗಳು ನಡೆದ ಘಟನಾ ಸ್ಥಳಕ್ಕೆ ತ್ವರಿತವಾಗಿ ಕೊಂಡಯ್ಯಲು ಇದರಿಂದ ಸಾಧ್ಯವಾಗುತ್ತದೆ. \ No newline at end of file diff --git a/eesanje/url_46_260_7.txt b/eesanje/url_46_260_7.txt new file mode 100644 index 0000000000000000000000000000000000000000..d6aaaead74127dc323c27a913856308b645dfedc --- /dev/null +++ b/eesanje/url_46_260_7.txt @@ -0,0 +1,10 @@ +ಅವರಿವರನ್ನು ಛೂ ಬಿಡುವ ಬದಲು ನನ್ನೆದುರು ಬಂದು ಮಾತಾಡಿ : ಸಿಎಂ ಸಿದ್ದುಗೆ ಹೆಗಡೆ ಸವಾಲ್ +ಶಿರಸಿ,ಜ.16- ಅವರಿವರನ್ನು ಛೂ ಬಿಟ್ಟು ನನ್ನ ವಿರುದ್ಧ ಮಾತನಾಡಿಸುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧೈರ್ಯವಿದ್ದರೆ ನನ್ನ ಎದುರಿಗೆ ಬಂದು ಚರ್ಚೆ ಮಾಡಲಿ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್ ಹೆಗಡೆ ಬಹಿರಂಗ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ತಮ್ಮ ಹಿಂಬಾಲಕರನ್ನು ಛೂ ಬಿಟ್ಟು ನನ್ನ ವಿರುದ್ಧ ಮಾತನಾಡಿಸುವುದು ಬೇಡ. ಅವರ ಹಿಂಬಾಲಕರು ಮಾತನಾಡಿದರೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚರ್ಚೆ ಮಾಡುವ ಧೈರ್ಯ ಇದ್ದರೆ ನನ್ನ ಎದುರಿಗೆ ಬನ್ನಿ ಎಂದು ಸವಾಲು ಎಸೆದರು. +ನೀವು ಯಾರಿಗೆ ಏನು ಬೇಕಾದರೂ ಮಾತನಾಡಬಹುದು. ನಾವು ನಿಮ್ಮ ಬಗ್ಗೆ ಮಾತನಾಡಿದರೆ ಅದಕ್ಕೆ ವಿವಾದ ಬೆಂಕಿ ಹಚ್ಚುತ್ತೀರಿ. ಇವರು ಯಾರ್ಯಾರ ಬಗ್ಗೆ ಕೀಳುಮಟ್ಟದ ಪದಪ್ರಯೋಗ ಮಾಡಿದ್ದಾರೆ ಎಂಬುದು ನನಗೆ ಗೊತ್ತು. ಬನ್ನಿ ಜನರ ಮುಂದೆಯೇ ಚರ್ಚೆ ಮಾಡೋಣ ಎಂದು ಪಂಥ ಆಹ್ವಾನ ನೀಡಿದರು. ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡ ಹೆಗಡೆ, ನಾನು ಏನು ಹೇಳಿದ್ದೇನೊ ಅದಕ್ಕೆ ಬದ್ದನಾಗಿದ್ದೇನೆ. ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ ನಾನು ಹೇಳುವುದರಲ್ಲಿ ತಪ್ಪೇನಿದೆ ಎಂದು ಅವರು ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು. +ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ +ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಏಕವಚನದಲ್ಲಿ ಮಾಸ್ ಮರ್ಡರ್ ಎಂದು ಕರೆದರು. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..? ಅದೆಲ್ಲ ನಮಗೆ ಗೊತ್ತಿಲ್ಲ ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು. ಇದರ ಎಲ್ಲದರ ಬಗ್ಗೆ ಜನರ ಮುಂದೆ ಚರ್ಚೆ ಮಾಡೋಣ. ಎಲ್ಲೊ ಕೂತುಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ ಎಂದರು. +ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತಾವು ಏಕವಚನ ಪ್ರಯೋಗ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ಖಂಡಿಸುವುದು ಸಹಜ. ಇದು ಪಕ್ಷದ ಹೇಳಿಕೆಯಲ್ಲ. ಇದು ನನ್ನ ವೈಯಕ್ತಿಕ ಹೇಳಿಕೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ ಎಂದು ಸ್ಪಷ್ಟಪಡಿಸಿದರು.ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ಮೋದಿಯವರ ಮತ್ತು ನಮ್ಮ ದೇವಸ್ಥಾನಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಭ್ಯವಾಗಿ ಮೊದಲು ಮಾತನಾಡಿದ್ದಾರೆ. ನಮ್ಮ ದೇವಸ್ಥಾನದ ಬಗ್ಗೆ ಅಷ್ಟು ಕೀಳಾಗಿ ಮಾತನಾಡುವುದು ಯಾಕೆ ಬೇಕಿತ್ತು? ನಮ್ಮ ಪ್ರಧಾನಿ ಮೋದಿ, ಅಮಿತ ಶಾ ಬಗ್ಗೆ ಯಾರೆಲ್ಲ ಏನು ಏನು ಮಾತನಾಡಿದ್ದಾರೆ ಹೇಳಬೇಕಾ? ಎಂದು ಪ್ರಶ್ನಿಸಿದರು. +ಸಲ್ಮಾನ ಖುರ್ಷದ ಕಪ್ಪೆ, ಮಂಗ, ನಪಸುಂಕ ಎಂದು ಕರೆದರು. ಶರದ್ ಪವಾರ ಮೋದಿಯರನ್ನು ಹಿಟ್ಲರ್ ಎಂದರು. ದಿಗ್ವಿಜಯ ಸಿಂಗ್ ಮೋದಿಯವರನ್ನು ರಾವಣ ಎಂದರೆ, ಜಯರಾಂ ರಮೇಶ್ ಭಸ್ಮಾಸೂರ ಎಂದಿದ್ದರು. ಮಣಿ ಅಯ್ಯರ್ ವಿಷಸರ್ಪ ಎಂದು ಕರೆದರು. ಇದಕ್ಕೆಲ್ಲ ಮಾಧ್ಯಮದ ದಾಖಲೆಗಳು ಇವೆ. ನನ್ನ ಪ್ರಧಾನಿ, ನನ್ನ ದೇಶ ಮತ್ತು ನನ್ನ ಧರ್ಮದ ಬಗ್ಗೆ ಹೇಳಿಕೆ ನೀಡುವಾಗ ಇವರಿಗೆ ಸಭ್ಯತೆ ನೆನಪಾಗುವುದಿಲ್ಲ. ಕಾಂಗ್ರೆಸ್‍ನವರಿಗೆ, ಸಿದ್ಧರಾಮಯ್ಯ ಅವರಿಗೆ ಇಲ್ಲದ ಸಭ್ಯತೆ ಬಿಜೆಪಿಯವರಿಗೆ ಏಕೆ? ಎಂದು ಪ್ರಶ್ನಿಸಿದರು. +ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ +ರಾಮ ಮಂದಿರ ಬಗ್ಗೆ ಎಷ್ಟ ಅವಹೇಳನಕಾರಿಯಾಗಿ ಮಾತಾಡಿದರು. ಹಿಂದೂ ಸಮಾಜದ ಬಗ್ಗೆ ಎಷ್ಟು ಕೀಳಾಗಿ ಮಾತನಾಡಿದರು. ಹಿಂದೂ ಸಮಾಜ ಅಂದರೇ ಬೇವರ್ಸಿ ಸಮಾಜಾನಾ..? ಶೇ.20ರಷ್ಟು ಇರುವ ಜನರ ಮತಕ್ಕಾಗಿ ಎಷ್ಟೊಂದು ಜ್ವಲ್ಲೂ ಸುರಿಸಿ ಮಾತನಾಡುತ್ತಾರೆ. ಶೇ.80 ರಿಂದ 85ರಷ್ಟು ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ? ಏಕವಚನದಲ್ಲಿ ನೀವೂ ಮಾತನಾಡಿದ್ದೂ ಸರಿ ಅನ್ನುವುದಾರೇ, ನಾನು ಮಾತನಾಡಿದ್ದೂ ಕೂಡ ಸರಿ. ಯಾರು ಒಪ್ಪಿಕೊಳ್ಳುತ್ತಾರೆ, ಬಿಡುತ್ತಾರೆ ಗೊತ್ತಿಲ್ಲ. ಆ ದೇವರು ಒಪ್ಪಿಕೊಳ್ಳುತ್ತಾನೆ. ಹಿಂದೂ ಸಮಾಜದ ಜನರು ಒಪ್ಪಿಕೊಳ್ಳುತ್ತಾರೆ ಎಂದರು. +ಆರೋಗ್ಯ ಸರಿ ನೋಡಿಕೊಳ್ಳಿ ಎಂಬ ಡಿಕೆ ಶಿವಕುಮಾರ ಹೇಳಿಕೆ ವಿಚಾರವಾಗಿ ಮಾತನಾಡಿದ ಅನಂತ್‍ಕುಮಾರ್, ನನ್ನ ಆರೋಗ್ಯ ಅತ್ಯಂತ ಚೆನ್ನಾಗಿದೆ. ಆರೋಗ್ಯದಲ್ಲಿ ಯಾವುದೇಸಂಶಯ ಇಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಗೆಲ್ಲಿಸುತ್ತೇನೆ. ನನ್ನ ಟಿಕೆಟ್ ಬಗ್ಗೆ ಬೇರೆಯವರಿಗೆ ಯಾಕೆ ಚಿಂತೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_260_8.txt b/eesanje/url_46_260_8.txt new file mode 100644 index 0000000000000000000000000000000000000000..825f341770115bb87f20de1ae0b60a58f1b37707 --- /dev/null +++ b/eesanje/url_46_260_8.txt @@ -0,0 +1,9 @@ +ಡಿಕೆಶಿಗೆ ಸಿಎಂ ಹುದ್ದೆ ಚರ್ಚೆ ಮತ್ತೆ ಮುನ್ನೆಲೆಗೆ +ಬೆಂಗಳೂರು,ಜ.16- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಈ ಕುರಿತು ಒಂದಿಷ್ಟು ಸದ್ದು ತಣ್ಣಗಾಗಿತ್ತು. ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಧ್ವನಿಯೆತ್ತಿದ್ದು, ತಮ್ಮ ಸಮುದಾಯಕ್ಕೆ ನಾಯಕರ ಶ್ರಮ ಗುರುತಿಸಿ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಿ ಗೆದ್ದಿದೆಯೆಂದರೆ ಅದರ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಶ್ರಮ ಇದೆ. ಮುಖ್ಯಮಂತ್ರಿ ಯಾಗುವ ಅರ್ಹತೆ ಮತ್ತು ಯೋಗ್ಯತೆ ಎರಡೂ ಡಿ.ಕೆ.ಶಿವಕುಮಾರ್‍ರಿಗಿದೆ ಎಂದು ಹೇಳಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಸಿಗಬೇಕು ಎಂಬುದು ಎಲ್ಲರ ಆಗ್ರಹ. ನಾವೇನು ಈಗಲೇ ಕೊಡಿ ಎಂದು ಕೇಳುತ್ತಿಲ್ಲ, ಅವಕಾಶ ಬಂದಾಗ ಅಧಿಕಾರ ನೀಡಬೇಕು ಎಂದು ಪ್ರತಿಪಾದಿಸಿದರು. +ಈ ಅವಧಿಯಲ್ಲೇ ಕೊಡಿ ಎಂದು ಕೇಳುವ ಅಥವಾ ಮಾತನಾಡುವಷ್ಟು ಪ್ರಭಾವಿ ವ್ಯಕ್ತಿ ನಾನಲ್ಲ. ಆದರೆ ಪಕ್ಷಕ್ಕಾಗಿ ದುಡಿದವರ ಶ್ರಮವನ್ನು ಗುರುತಿಸಬೇಕು. ಹೈಕಮಾಂಡ್ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ನನ್ನ ವೈಯಕ್ತಿಕ ಅಭಿಪ್ರಾಯ ಸಮುದಾಯದವರಿಗೆ ಮುಖ್ಯಮಂತ್ರಿ ಅವಕಾಶ ಸಿಗಬೇಕು ಎಂಬುದಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‍ರವರು ಇಬ್ಬರೂ ಒಟ್ಟಾಗಿ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದನ್ನು ಪಕ್ಷ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ಕಳೆದ ಮೂರು ತಿಂಗಳ ಹಿಂದೆ ಮುಖ್ಯಮಂತ್ರಿ ಹುದ್ದೆಯ ಕುರಿತು ವ್ಯಾಪಕ ಚರ್ಚೆಗಳಾಗಿದ್ದವು. ಡಿ.ಕೆ.ಶಿವಕುಮಾರ್‍ರವರ ಬೆಂಬಲಿಗರು ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಪ್ರತಿಪಾದಿಸಿದ್ದರು. +ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ +ಉಪಮುಖ್ಯಮಂತ್ರಿ ಹುದ್ದೆಗೆ ಕೆಲವರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಉಪಮುಖ್ಯಮಂತ್ರಿಗಳಾಗುವವರು 2 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ತೆಗೆದುಕೊಳ್ಳಬೇಕು. 5 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಬೇಕು ಎಂದು ಹೇಳುತ್ತಿದ್ದಾರೆ. ಅಷ್ಟೂ ಜನ ತಲಾ 2 ಕ್ಷೇತ್ರಗಳನ್ನು ನಿಗದಿ ಮಾಡಿಕೊಂಡು ಗೆಲ್ಲಿಸಿಕೊಂಡು ಬರಲಿ. ಆನಂತರ ಉಪಮುಖ್ಯಮಂತ್ರಿ ಹುದ್ದೆ ಪಡೆದುಕೊಳ್ಳಲಿ. ಇಲ್ಲವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದರು. +ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಾಗಬೇಕೆ ಎಂಬುದರ ಬಗ್ಗೆ ಪರಸ್ಪರ ಕಾಲೆಳೆಯುವ ರಾಜಕಾರಣ ಇದೆ ಎಂದು ನಾನು ಭಾವಿಸುವುದಿಲ್ಲ. ರಾಜಕೀಯದಲ್ಲಿ ಅವಕಾಶ ಕೇಳುವುದು ಸಹಜ. ಆದರೆ ಅದಕ್ಕೆ ತಕ್ಕಂತೆ ಪಕ್ಷಕ್ಕೂ ಕೊಡುಗೆ ನೀಡಬೇಕು. ಲೋಕಸಭೆ ಚುನಾವಣೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕೆಂದು ಹೇಳಿದರು. ಇದರ ಚರ್ಚೆಯ ನಡುವೆಯೇ ಸಿದ್ದರಾಮಯ್ಯ ಬೆಂಬಲಿಗರು ಜಾತಿ ಆಧಾರಿತವಾಗಿ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಧ್ವನಿಯೆತ್ತಿದರು. ಇದು ವ್ಯಾಪಕ ಚರ್ಚೆಗೊಳಗಾಯಿತು. +ಇತ್ತೀಚಿನ ದಿನದವರೆಗೂ ಈ ರೀತಿಯ ಚರ್ಚೆಗಳು ಚಾಲ್ತಿಯಲ್ಲಿದ್ದವು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಚರ್ಚೆಗಳು ಅನಗತ್ಯ. ಉತ್ತಮ ಆಡಳಿತ ನೀಡುವುದು ಮತ್ತು ಲೋಕಸಭೆ ಚುನಾವಣೆಯತ್ತ ಗಮನ ಹರಿಸಬೇಕು ಎಂದು ತಾಕೀತು ಮಾಡಿದರು. ಆ ಬಳಿಕ ಉಪಮುಖ್ಯಮಂತ್ರಿ ಹುದ್ದೆ ಕುರಿತು ಚರ್ಚೆಗಳು ತಣ್ಣಗಾಗಿದ್ದವು. ಅದರ ಬೆನ್ನಲ್ಲೇ ಎಚ್.ಸಿ.ಬಾಲಕೃಷ್ಣ ಮತ್ತೆ ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು ಹರಿಯಬಿಟ್ಟಿದ್ದಾರೆ. \ No newline at end of file diff --git a/eesanje/url_46_260_9.txt b/eesanje/url_46_260_9.txt new file mode 100644 index 0000000000000000000000000000000000000000..cb4f7ba991eb76131db9cc99e4a8daadc5e9b69a --- /dev/null +++ b/eesanje/url_46_260_9.txt @@ -0,0 +1,10 @@ +ಜ.19ಕ್ಕೆ ಮೋದಿ ಬೆಂಗಳೂರಿಗೆ +ಬೆಂಗಳೂರು, ಜ.16- ಪ್ರಧಾನಿ ನರೇಂದ್ರಮೋದಿ ಅವರು ಇದೇ ತಿಂಗಳ 19ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋ ನಡೆಸುವ ಬಗ್ಗೆ ಈವರೆಗೂ ಅಧಿಕೃತವಾಗಿ ದೃಢಪಟ್ಟಿಲ್ಲ. ಕೇರಳದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಬೆಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿಯವರು ನಗರದ ಏರೋಸ್ಪೇಸ್ ಇಂಜಿನಿಯರಿಂಗ್ ಸ್ಪೆಷಾಲಿಟಿ ಇಂಡಿಯಾ ಇಂಜಿನಿಯರಿಂಗ್ ಟೆಕ್ನಾಲಜಿ ಸೆಂಟರ್‍ಗೆ ಆಗಮಿಸುವರು. +ಈ ಹಿಂದೆ ಬೆಂಗಳೂರಿನ ಇಸ್ರೋ ಕಚೇರಿಗೆ ನರೇಂದ್ರಮೋದಿ ಅವರು ಆಗಮಿಸಿದ್ದರೂ ಆ ವೇಳೆ ಬಿಜೆಪಿಯ ಯಾವುದೇ ಕಾರ್ಯಕರ್ತರನ್ನು ಭೇಟಿಯಾಗಿರಲಿಲ್ಲ. ಅದು ಸರ್ಕಾರಿ ಕಾರ್ಯಕ್ರಮವಾಗಿದ್ದರಿಂದ ಸಂಪೂರ್ಣವಾಗಿ ಪಕ್ಷದ ಪ್ರಮುಖರಿಂದ ಅಂತರವನ್ನು ಕಾಪಾಡಿಕೊಂಡಿದ್ದರು. ಇದೀಗ 19ರಂದು ಬೆಂಗಳೂರಿಗೆ ಆಗಮಿಸುವ ಮೋದಿ ಅವರನ್ನು ಬಿಜೆಪಿ ಅದ್ಧೂರಿಯಾಗಿ ಸ್ವಾಗತಿಸಲು ತೀರ್ಮಾನಿಸಿದೆ. ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರಿಗೆ ಭವ್ಯ ಸ್ವಾಗತ ಕೋರಲು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗಿದೆ. +ಮೋದಿ ಅವರಿಂದ ಬೆಂಗಳೂರು ಇಲ್ಲವೇ ಚಾಮರಾಜನಗರದಲ್ಲಿ ಬೃಹತ್ ರೋಡ್ ಶೋ ನಡೆಸಬೇಕೆಂಬ ಚಿಂತನೆ ಇದೆಯಾದರೂ ಪ್ರಧಾನಿ ಕಾರ್ಯಾಲಯದಿಂದ ಈವರೆಗೂ ಅನುಮತಿ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಕಾರ್ಯಕ್ರಮ ನಡೆಯಲು ಇನ್ನು ಮೂರೇ ದಿನಗಳು ಇರುವುದರಿಂದ ಭದ್ರತಾ ದೃಷ್ಟಿಯಿಂದ ರೋಡ್ ಶೋಗೆ ಅನುಮತಿ ಸಿಗುತ್ತದೆಯೇ ಎಂಬ ಯಕ್ಷ ಪ್ರಶ್ನೆಯೂ ಇದೆ. +‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡ ಹಾಡಿಗೆ ಮನಸೋತ ಮೋದಿ +ಬೆಂಗಳೂರಿನಲ್ಲಿ ಶುಕ್ರವಾರ ರೋಡ್ ಶೋ ನಡೆಸಿದರೆ ಸಂಚಾರ ದಟ್ಟಣೆಯಾಗುವ ಸಂಭವವಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಬೇಕಾಗುತ್ತದೆ. ಚಾಮರಾಜನಗರದಲ್ಲಿ ರೋಡ್ ಶೋ ನಡೆಸಿ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸುವ ಲೆಕ್ಕಾಚಾರ ಬಿಜೆಪಿಯಲ್ಲಿದೆ. ಲೋಕಸಭೆ ಚುನಾವಣೆಗೆ ಭರ್ಜರಿ ಹುರುಪಿನಿಂದ ಮುನ್ನುಗ್ಗುತ್ತಿರುವ ಬಿಜೆಪಿ ಮೋದಿಯವರನ್ನೇ ಬಲವಾಗಿ ನಂಬಿಕೊಂಡಿದೆ. ಅವರು ರಾಜ್ಯದಲ್ಲಿ ಹೆಚ್ಚು ಹೆಚ್ಚು ಪ್ರಚಾರ ನಡೆಸಿದಷ್ಟು ಪಕ್ಷಕ್ಕೆ ಆನೆಬಲ ಬರಲಿದೆ ಎಂದು ಬಿಜೆಪಿಯೊಳಗಿನ ಚಿಂತಕರ ಛಾವಡಿ ಸಲಹೆ ಕೊಟ್ಟಿದೆ. +ಹೀಗಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಮೋದಿ ಅವರು ರೋಡ್ ಶೋ ನಡೆಸಲಿದ್ದಾರೆ ಎಂಬುದು ಈ ಕ್ಷಣದವರೆಗೂ ಖಚಿತವಾಗಿಲ್ಲ. ಪ್ರಧಾನಿ ಭೇಟಿಯ ಹಿನ್ನಲೆಯಲ್ಲಿ ಜ.19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. +ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದ್ದು, ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರಿದ್ದಾರೆ ಎನ್ನಲಾಗಿದೆ. +ಈ ಹಿಂದೆ ಚಂದ್ರಯಾನ ಯೋಜನೆಯ ಯಶಸ್ಸಿನ ಬಳಿಕ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವುದಕ್ಕೆಂದೇ ಪ್ರಧಾನಿ ಬೆಂಗಳೂರಿಗೆ ಬಂದಿದ್ದರು. ಆ ಸಂದರ್ಭ ಪ್ರಧಾನಿಯವರು ರೋಡ್ ಶೋ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳಿಕೆ ನೀಡಿ ನಂತರ ಮುಜುಗರಕ್ಕೀಡಾದ ಸನ್ನಿವೇಶ ಸೃಷ್ಟಿಯಾಗಿತ್ತು. ಯಾಕೆಂದರೆ, ಬಿಜೆಪಿ ನಾಯಕರ ಹೇಳಿಕೆಗಳ ಬೆನ್ನಲ್ಲೇ ರೋಡ್‍ಶೋ ಉದ್ದೇಶವಿಲ್ಲ ಎಂದು ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ಬಂದಿತ್ತು. +ನಂತರ ಪ್ರಧಾನಿ ಭೇಟಿ ವೇಳೆ ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆರಳದ ವಿಚಾರವೂ ರಾಜ್ಯ ರಾಜಕೀಯದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿತ್ತು. ಸಿಎಂ ಹಾಗೂ ಡಿಸಿಎಂ ಶಿಷ್ಟಾಚಾರ ಪಾಲಿಸಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ, ಪ್ರಧಾನಿ ಕಾರ್ಯಾಲಯದಿಂದಲೇ ಸೂಚನೆ ಬಂದ ಕಾರಣ ತಾವು ಅವರನ್ನು ಸ್ವಾಗತಿಸಲು ತೆರಳಲಿಲ್ಲ ಎಂದು ಸಿಎಂ, ಡಿಸಿಎಂ ಸ್ಪಷ್ಟನೆ ನೀಡಿದ್ದರು. ಇದು ಸಹ ರಾಜ್ಯ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿತ್ತು.ಹೀಗಾಗಿ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಡಲು ಬಿಜೆಪಿಯವರು ಯೋಜಿಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_261_1.txt b/eesanje/url_46_261_1.txt new file mode 100644 index 0000000000000000000000000000000000000000..f313a8e10c945b7b3851f57427cf3824645029e6 --- /dev/null +++ b/eesanje/url_46_261_1.txt @@ -0,0 +1,8 @@ +ಹೆಗಡೆ ವಿರುದ್ಧ ಎಫ್‍ಐಆರ್ ದಾಖಲಾಗಿದೆ : ಪರಮೇಶ್ವರ್ +ಬೆಂಗಳೂರು,ಜ.16- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉತ್ತರಕನ್ನಡ ಕ್ಷೇತ್ರದ ಅನಂತಕುಮಾರ್ ಹೆಗಡೆ ವಿರುದ್ಧ ಕುಮಟಾದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಾಕ್ಷ್ಯ ಸಂಗ್ರಹಿಸಿ ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯ ಪೊಲೀಸರು ನಿರ್ಧರಿಸಲಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ದಾಖಲಾಗಿರುವ ಪ್ರಕರಣದ ಆಧಾರದ ಮೇಲೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಬಂಧಿಸಬೇಕೋ, ಬೇಡವೋ ಎಂಬುದನ್ನು ಸ್ಥಳೀಯವಾಗಿ ನಿರ್ಧರಿಸುತ್ತಾರೆ. ನಾವು ಸ್ಥಳೀಯ ಪೊಲೀಸರಿಗೆ ಯಾವುದೇ ರೀತಿಯ ನಿರ್ದೇಶನಗಳನ್ನು ನೀಡುವುದಿಲ್ಲ. ಅವರನ್ನು ಬಂಧಿಸಿ ಅಥವಾ ಬಿಟ್ಟುಬಿಡಿ ಎಂದು ನಾವು ಯಾರಿಗೂ ಹೇಳುವುದಿಲ್ಲ ಎಂದರು.ಯಾವ ಸೆಕ್ಷನ್‍ನಡಿ ಪ್ರಕರಣ ದಾಖಲಿಸಿಕೊಳ್ಳಬೇಕು, ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂಬುದರ ಬಗ್ಗೆ ಸ್ಥಳೀಯ ಪೊಲೀಸರೇ ನಿರ್ಧರಿಸುತ್ತಾರೆ. +ಮಥುರಾದ ಶಾಹಿ ಈದ್ಗಾ ಮಸೀದಿ ಸರ್ವೆಗೆ ಸುಪ್ರೀಂ ತಡೆ +ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯಬೇಕು ಎಂದು ಈವರೆಗೂ ಯಾರೂ ಕೇಳಿಲ್ಲ. ಒಂದು ವೇಳೆ ಈ ನಿಟ್ಟಿನಲ್ಲಿ ಬೇಡಿಕೆಗಳು ಬಂದರೆ ಸರ್ಕಾರ ಸೂಕ್ತ ಉತ್ತರ ನೀಡಲಿದೆ. ಇಂದು ಪೊಲೀಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಈ ವಿಚಾರ ಚರ್ಚೆಯಾಗುವುದಿಲ್ಲ. ಸಭೆಯ ಅಜೆಂಡಾವೇ ಬೇರೆ ಇದೆ ಎಂದು ಹೇಳಿದರು. +ಜೆಟ್‍ಲ್ಯಾಕ್ ಪಬ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಕಾನೂನಾತ್ಮಕವಾಗಿ ಯಾವುದು ಸೂಕ್ತ, ಯಾವುದು ಕಾನೂನು ಬಾಹಿರ ಎಂಬುದನ್ನು ಸ್ಥಳೀಯ ಪೊಲೀಸರು ಮತ್ತು ಡಿಸಿಪಿ ನೋಡಿಕೊಳ್ಳುತ್ತಾರೆ. +ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕರ್ನಾಟಕದ ವೀಣಾವಾದನ +ಗೃಹಸಚಿವನಾಗಿ ನಾನು ಕಾನೂನುಬಾಹಿರವಾಗಿದ್ದರೂ ಪರವಾಗಿಲ್ಲ ಬಿಟ್ಟುಬಿಡಿ ಎಂದು ಹೇಳಲು ಬರುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ಕಾನೂನಾತ್ಮಕವಾಗಿ ತೆಗೆದುಕೊಂಡ ಕ್ರಮಗಳನ್ನು ಸರ್ಕಾರ ಒಪ್ಪಿಕೊಳ್ಳಲಿದೆ ಎಂದು ಹೇಳಿದರು. ವಿರೋಧಪಕ್ಷಗಳು ಪ್ರತಿಯೊಂದು ಪ್ರಕರಣಕ್ಕೂ ಎಸ್‍ಐಟಿ ರಚಿಸಿ ಸಿಬಿಐ, ಸಿಐಡಿ ತನಿಖೆ ಮಾಡಿ ಎಂದು ಹೇಳುತ್ತಿರುತ್ತಾರೆ. ಅವರು ಹೇಳಿದಂತೆಲ್ಲಾ ಕೇಳುತ್ತಾ ಕುಳಿತರೆ ನಾವು ಆಡಳಿತ ಮಾಡಲಾಗುವುದಿಲ್ಲ. ಹಿಂದೆ ನಾವು ವಿರೋಧಪಕ್ಷದಲ್ಲಿದ್ದಾಗ ಸಾಕಷ್ಟು ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಅದನ್ನೆಲ್ಲಾ ಅವರು ಕೇಳಿದರೆ, ವಿರೋಧ ಪಕ್ಷದವರು ಹೇಳಿದಂತೆಲ್ಲಾ ಕೇಳುತ್ತಾ ಕೂರಲಾಗುವುದಿಲ್ಲ. ಜನಪರವಾಗಿ ಆಡಳಿತ ನೀಡುವುದಷ್ಟೇ ನಮ್ಮ ಆದ್ಯತೆ ಎಂದು ಹೇಳಿದರು. \ No newline at end of file diff --git a/eesanje/url_46_261_10.txt b/eesanje/url_46_261_10.txt new file mode 100644 index 0000000000000000000000000000000000000000..fcee88a66606bd2fe00b35c0a9449e4ff539229c --- /dev/null +++ b/eesanje/url_46_261_10.txt @@ -0,0 +1,6 @@ +ಕಾರಿಗೆ ಪಂಚರ್ ಹಾಕುವಾಗ ಅಪರಿಚಿತ ವಾಹನ ಡಿಕ್ಕಿ : ವಕೀಲ ಸೇರಿ ಇಬ್ಬರ ಸಾವು +ಶಿರಾ ,ಜ.15- ಪಂಚರ್ ಆಗಿದ್ದ ಕಾರನ್ನು ರಿಪೇರಿ ಮಾಡುವಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ. +ಬೆಂಗಳೂರಿನ ಆವಲಹಳ್ಳಿ ನಿವಾಸಿ ವಕೀಲರಾದ ಮಹೇಶ್(40),ಮತ್ತು ವಕೀಲರ ಸಹಕಾರ ಬ್ಯಾಂಕ್ ನ ಉದ್ಯೋಗಿ ಉಮೇಶ್(40) ಮೃತ ದುರ್ದೈವಿಗಳು ಮಹೇಶ್‍ಮತ್ತು ಉಮೇಶ್ ಅವರು ಬೆಂಗಳೂರಿನಿಂದ ತಮ್ಮ ಹುಂಡೈ ಐ 10 ಕಾರಿನಲ್ಲಿ ಹರಿಹರಕ್ಕೆ ಹೋಗುತ್ತಿದ್ದಾಗ ಮಧ್ಯರಾತ್ರಿ 12.30ರ ಸಂದರ್ಭದಲ್ಲಿ ತುಮಕೂರು ದಾಟಿ ಶಿರಾ ಕಡೆಗೆ ಬರುವಾಗ ಕಾರಿನ ಟೈರ್ ಪಂಚರ್‍ಆಗಿದೆ. +ರಾಮನ ವಿರೋಧಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ : ಮೋಹನ್ ಯಾದವ್ +ನಂತರ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ ಪಂಚರ್ ಹಾಕುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅವರ ಮೇಲೆ ಹರಿದಿದೆ ಇಬ್ಬರು ಸ್ತಳದಲ್ಲೇ ಸಾವನ್ನಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತವೆಸಗಿ ಪರಾರಿಯಾಗಿರುವ ವಾಹನ ಚಾಲಕನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. \ No newline at end of file diff --git a/eesanje/url_46_261_11.txt b/eesanje/url_46_261_11.txt new file mode 100644 index 0000000000000000000000000000000000000000..c6e0b3072f27386904311bf7b00339ca34c20e81 --- /dev/null +++ b/eesanje/url_46_261_11.txt @@ -0,0 +1,9 @@ +ನಿಗಮ-ಮಂಡಳಿಗಳಿಗೆ ನೇಮಕ ವಿಳಂಬ, ಕಾರ್ಯಕರ್ತರು ಸಿಡಿಮಿಡಿ +ಬೆಂಗಳೂರು,ಜ.15- ವಿಧಾನಸಭೆ ಚುನಾವಣೆಯಲ್ಲಿ ಹಗಲು-ರಾತ್ರಿ ದುಡಿದು ಪಕ್ಷ ಅಧಿಕಾರಕ್ಕೆ ತಂದ ಕಾರ್ಯ ಕರ್ತರಿಗೆ ಆಡಳಿತದಲ್ಲಿ ಸಹಭಾಗಿತ್ವ ಸಿಗದೆ ದಿನೇದಿನೇ ಅಸಹನೆ ಹೆಚ್ಚುತ್ತಿರುವುದು ಕಂಡುಬಂದಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದರೂ ರಾಜ್ಯದಲ್ಲಿ ನಿಗಮಮಂಡಳಿಗಳ ನೇಮಕಾತಿ ಸೇರಿದಂತೆ ವಿವಿಧ ರಾಜಕೀಯ ಸ್ಥಾನಮಾನಗಳು ಸಿಗದೆ ಕಾರ್ಯಕರ್ತರು ಸಿಡಿಮಿಡಿಗೊಳ್ಳುತ್ತಿದ್ದಾರೆ. +ಸುಮಾರು 80 ಕ್ಕೂ ಹೆಚ್ಚು ನಿಗಮ ಮಂಡಳಿಗಳು 3 ಸಾವಿರಕ್ಕೂ ಹೆಚ್ಚು ಸ್ಥಳೀಯ ಸಮಿತಿಗಳ ಹುದ್ದೆಗಳು, ಪ್ರಾಧಿಕಾರ, ಅಕಾಡೆಮಿ ಸೇರಿದಂತೆ ನಾನಾ ರೀತಿಯ ರಾಜಕೀಯ ಅವಕಾಶಗಳಿದ್ದರೂ ಈವರೆಗೂ ಯಾವುದಕ್ಕೂ ನೇಮಕಾತಿಗಳಾಗಿಲ್ಲ. ಪ್ರತಿ ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುವಾಗ ನಿಗಮ ಮಂಡಳಿಗಳ ಕುರಿತು ಚರ್ಚೆ ನಡೆಸುವುದಾಗಿ ಕಾರ್ಯಕರ್ತರ ಮೂಗಿಗೆ ತುಪ್ಪ ಸವರಲಾಗುತ್ತದೆ.ಆದರೆ ಅಲ್ಲಿಗೆ ಹೋದ ಬಳಿಕ ಚರ್ಚೆಯಾಗುವುದೇ ಬೇರೆ ವಿಚಾರಗಳು. +ಹೀಗಾಗಿ ದಸರಾ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ ಎಂದು ಒಂದೊಂದು ಹಬ್ಬದ ಸಂದರ್ಭದಲ್ಲೂ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದವರಿಗೆ ನಿರಾಶೆಯ ಬುತ್ತಿ ಭಾರವಾಗಲಾರಂಭಿಸಿದೆ.ಹೀಗಾಗಿ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುತ್ತಿದ್ದಾರೆ. ಸಚಿವರುಗಳು ಕೂಡ ಪ್ರತಿದಿನ ಕಾರ್ಯಕರ್ತರು, ಮುಖಂಡರುಗಳ ಅರ್ಜಿಗಳನ್ನು ಪಡೆದು ಭರವಸೆ ನೀಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಒಂದಿಷ್ಟು ವರ್ಗಾವಣೆ ಹೊರತುಪಡಿಸಿ ಉಳಿದ ಯಾವ ಕೆಲಸಗಳೂ ಆಗುತ್ತಿಲ್ಲ ಎಂಬ ಅಸಹನೆಯನ್ನು ಹೊರಹಾಕುತ್ತಿದ್ದಾರೆ. +ಇತ್ತೀಚೆಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿಯೂ ನೇಮಕಾತಿಗಳ ಕುರಿತು ಪ್ರಸ್ತಾಪಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರುವ ಹುದ್ದೆಗಳಿಗೇ ನೇಮಕಾತಿ ಮಾಡಿಲ್ಲ. ಅದರ ಜೊತೆಗೆ ಪಂಚಖಾತ್ರಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸುವುದಾಗಿ ಘೋಷಿಸಿದ್ದರು. ಇದು ಅನಗತ್ಯವಾಗಿ ವಿವಾದ ಹುಟ್ಟಿಹಾಕಿದ್ದನ್ನು ಹೊರತುಪಡಿಸಿದರೆ ಬೇರೆ ಯಾವ ಲಾಭವಾದಂತೆಯೂ ಕಂಡುಬರುತ್ತಿಲ್ಲ. +56 ದೇಶಗಳ 10 ಕೋಟಿ ಮನೆಗಳಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ +ಇದೇ ತಿಂಗಳ 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಪಕ್ಷದ ನಾಯಕರು ಈಗ ಅದರತ್ತ ಗಮನ ಹರಿಸುತ್ತಿದ್ದಾರೆ. ಅಷ್ಟರಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದೆ. ಪೂರ್ವ ತಯಾರಿಗಳೂ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ 2-3 ತಿಂಗಳು ಕಾಲಾಹರಣವಾಗುವ ನಿರೀಕ್ಷೆಗಳಿವೆ.ಒಟ್ಟಾರೆ ಒಂದು ವರ್ಷಕ್ಕೂ ಹೆಚ್ಚು ಕಾಲ ಇದೇ ರೀತಿ ಸಮಯ ವ್ಯರ್ಥ ಮಾಡಿ ಕೊನೆಗೆ ನೇಮಕಾತಿ ಮಾಡಿದರೂ ಕೂಡ ಕಾಲಾವ ಕಡಿಮೆ ಸಿಗಲಿದೆ ಎಂಬ ಅತೃಪ್ತಿ ಕಾರ್ಯಕರ್ತರನ್ನು ಕಾಡುತ್ತಿದೆ. +ಚುನಾವಣೆ ಸಂದರ್ಭದಲ್ಲಿ ಕಾರ್ಯಕರ್ತರೇ ಆಸ್ತಿ ಎನ್ನುವ ನಾಯಕರು ಅಧಿಕಾರ ಸಿಗುತ್ತಿದ್ದಂತೆ ಅದರ ಮೋಜಿನಲ್ಲಿ ಮೈಮರೆಯುತ್ತಾರೆ ಎಂಬ ಟೀಕೆಗಳಿವೆ. ಸ್ಥಳೀಯವಾಗಿ ಆರಾಧನ, ಆಶಯ, ವಿವಿಧ ನಗರ ಪ್ರಾಧಿಕಾರಗಳು, ಸ್ಥಳೀಯ ಸಂಸ್ಥೆಗಳ ಸದಸ್ಯತ್ವ ಸೇರಿದಂತೆ ಕೆಳ ಹಂತದಲ್ಲಿ 3 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ. ಅವುಗಳಿಗೆ ಒಂದು ವಾರದಲ್ಲೇ ನೇಮಕಾತಿ ಮಾಡಬೇಕು ಎಂದು ಮುಖ್ಯಮಂತ್ರಿಯವರು ಎಲ್ಲಾ ಶಾಸಕರಿಗೂ ತಾಕೀತು ಮಾಡಿದರು. ಆದರೆ ಸ್ಥಳೀಯ ಮಟ್ಟದಲ್ಲಿ ಈವರೆಗೂ ನೇಮಕಾತಿಯ ಪಟ್ಟಿಗಳೇ ಸಿದ್ಧವಾಗಿಲ್ಲ.ನಿಗಮ ಮಂಡಳಿಗಳ ನೇಮಕಾತಿಯಂತೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವಿನ ಭಿನ್ನಮತದಿಂದಲೇ ನೆನೆಗುದಿಗೆ ಬಿದ್ದಿದೆ ಎಂಬ ಆರೋಪಗಳಿವೆ. +ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಉಮೇದಿನಲ್ಲಿರುವ ಕಾಂಗ್ರೆಸ್‍ಗೆ ಕಾರ್ಯಕರ್ತರ ನಿರುತ್ಸಾಹ ಸವಾಲಾಗುವ ಸಾಧ್ಯತೆಗಳಿವೆ. ಒಂದೆಡೆ ನಿಗಮ ಮಂಡಳಿಗಳ ನೇಮಕಾತಿ ಮಾಡಿದರೆ ಅತೃಪ್ತರ ಬಂಡಾಯಗಳು ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ನಾಯಕರನ್ನು ಕಾಡುತ್ತಿದೆ.ಒಟ್ಟಾರೆ ಕಾರ್ಯಕರ್ತರ ಮೂಗಿಗೆ ತುಪ್ಪ ಸವರುತ್ತಲೇ ಸಿದ್ದರಾಮಯ್ಯನವರ ಸರ್ಕಾರ ಒಂದು ವರ್ಷ ಕಾಲ ಕಳೆದಂತಾಗಿದೆ. \ No newline at end of file diff --git a/eesanje/url_46_261_12.txt b/eesanje/url_46_261_12.txt new file mode 100644 index 0000000000000000000000000000000000000000..371a83312090fef5293760592be01b563ea5eb2b --- /dev/null +++ b/eesanje/url_46_261_12.txt @@ -0,0 +1,7 @@ +ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮರೋಳಿ ರಾಜೀನಾಮೆ +ಚಿಕ್ಕಮಗಳೂರು,ಜ.15- ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಸುಧೀರ್ ಮುರೋಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಕಾರ್ಯಕರ್ತರ ಸಮ್ಮಿಲನ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವ ಅವರು, ಲೋಕಸಭೆ ಚುನಾವಣೆಗೆ ತಾವು ಆಕಾಂಕ್ಷಿಯಾಗಿದ್ದು, ಅದಕ್ಕೆ ಸಂಬಂಧಪಟ್ಟಂತೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕಾಗಿರುವುದರಿಂದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು. +ಕೆಪಿಸಿಸಿ ವಕ್ತಾರರ ಜವಾಬ್ದಾರಿಯಲ್ಲಿ ಮುಂದುವರೆಯುತ್ತೇನೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಹೊಸಬರಿಗೆ ಅವಕಾಶ ದೊರೆಯಬೇಕು ಎಂಬ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ಇದನ್ನು ಅನ್ಯತಾ ಭಾವಿಸಬೇಡಿ ಎಂದು ಹೇಳಿದ್ದಾರೆ. +ಉಡುಪಿ ಮತ್ತು ಚಿಕ್ಕಮಗಳೂರು ಎರಡೂ ಜಿಲ್ಲೆಗಳಲ್ಲಿ ಚುನಾವಣೆ ತಯಾರಿಗಳಾಗಬೇಕಿದೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಅವಕಾಶ ಹೆಚ್ಚಿವೆ. ಪ್ರತಿಯೊಬ್ಬ ಕಾರ್ಯಕರ್ತರಲ್ಲೂ ಉತ್ಸಾಹ ಕಂಡುಬರುತ್ತಿದೆ. ಕೇಂದ್ರ ಸರ್ಕಾರದ ವೈಫಲ್ಯಗಳು ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನ ತುಲನೆ ಮಾಡಿ ನೋಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರವೇ ಜನರ ಜೀವನ ಸುಧಾರಣೆಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಮನವರಿಕೆಯಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಧರ್ಮ ಮತ್ತು ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುವ ಬದ್ಧತೆ ಕಾಂಗ್ರೆಸ್‍ನಲ್ಲಿದೆ ಎಂದು ತಿಳಿಸಿದ್ದಾರೆ. +“ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಶ್ರೀರಾಮ ನನ್ನ ಕನಸಲ್ಲಿ ಬಂದು ಹೇಳಿದ್ದಾನೆ +ಪಕ್ಷದ ಸಂಘಟನೆ ವಿಷಯದಲ್ಲಿ ತಾವು ರಾಜ್ಯಾದ್ಯಂತ ಪ್ರವಾಸ ಮಾಡಿದ್ದು, ಮುಂದಿನ ದಿನಗಳಲ್ಲೂ ಇದೇ ಬದ್ಧತೆಯನ್ನು ಮುಂದುವರೆಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍¸ ಹೆಚ್ಚು ಸ್ಥಾನ ಗೆಲ್ಲಬೇಕು. ಕೇಂದ್ರದಲ್ಲಿ ಜನಪರ ಆಡಳಿತ ಅಸ್ತಿತ್ವಕ್ಕೆ ಬರಬೇಕೆಂಬುದು ತಮ್ಮ ಅಭಿಲಾಷೆ ಎಂದರು. +ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸುಧೀರ್ ಮುರೋಳಿ ರಾಜಿನಾಮೆ ಘೋಷಿಸುತ್ತಿದ್ದಂತೆ ಹಿರಿಯ ಮೂಖಂಡ ನಾಗೇಶ್ ಸೇರಿದಂತೆ ಹಲವರು ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದರು. ಲೋಕಸಭೆ ಚುನಾವಣೆವರೆಗೂ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಬೇಕು. ಇದರಿಂದಾಗಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_261_2.txt b/eesanje/url_46_261_2.txt new file mode 100644 index 0000000000000000000000000000000000000000..3fd8d566076fcd91b9a8a9305137f488c710ce83 --- /dev/null +++ b/eesanje/url_46_261_2.txt @@ -0,0 +1,9 @@ +ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ : ಸಚಿವ ಶಿವರಾಜ ತಂಗಡಗಿ +ಚಿತ್ರದುರ್ಗ,ಜ.16- ಮಂತ್ರಾಕ್ಷತೆಯಿಂದ ಹಸಿದ ಹೊಟ್ಟೆ ತುಂಬುವುದಿಲ್ಲ, ನಿರುದ್ಯೋಗಿಗಳ ಕಷ್ಟ ತಪ್ಪುವುದಿಲ್ಲ, ಬೀದಿಯಲ್ಲಿರುವವರಿಗೆ ಮನೆಯೂ ಸಿಗುವುದಿಲ್ಲ. ಪ್ರಧಾನಿಯವರು ದೇವಸ್ಥಾನ ತೊಳೆಯುವುದರ ಬದಲು ದೇಶದ ನಿರುದ್ಯೋಗ ಸಮಸ್ಯೆ ನಿವಾರಿಸಲಿ ಎಂದು ಕನ್ನಡ ಮತ್ತು ಸಂಸ್ಕøತ ಇಲಾಖೆ ಸಚಿವ ಶಿವರಾಜ ತಂಗಡಗಿ ಸವಾಲು ಹಾಕಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯವರಿಗೆ ಧರ್ಮ, ಪಾಕಿಸ್ತಾನ, ದೇವಸ್ಥಾನ, ಮಸೀದಿ ವಿಚಾರಗಳು ನೆನಪಾಗುತ್ತವೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ 10 ವರ್ಷಗಳಲ್ಲಿ ಎಂದಿಗೂ ಬಡವರು, ದೀನದಲಿತರು, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಒಂದೂ ಮಾತನಾಡಲಿಲ್ಲ. ಅವರಿಗಾಗಿ ರೂಪಿಸಿದ ಯೋಜನೆಗಳ ಮಟ್ಟಿಗೂ ಚರ್ಚೆಯಾಗಿಲ್ಲ ಎಂದು ಹೇಳಿದರು. +ರಾಮಮಂದಿರ ನಿರ್ಮಾಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಮಮಂದಿರದ ಬಾಗಿಲು ತೆರೆದಿದ್ದು ರಾಜೀವ್ ಗಾಂಧಿಯವರು. ಅದನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ. ಈಗ ಮಂತ್ರಾಕ್ಷತೆ ಹಿಡಿದುಕೊಂಡು ಮನೆಮನೆಗೆ ಓಡಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. +ಅನ್ನಭಾಗ್ಯ ಯೋಜನೆಗೆ ಹಣ ಕೊಡುತ್ತೇವೆ, ಅಕ್ಕಿ ಕೊಡಿ ಎಂದು ಕೇಳಿದರೂ ಅಕ್ಕಿ ಪೂರೈಸಲಿಲ್ಲ. ಈಗ ಮಂತ್ರಾಕ್ಷತೆಯನ್ನು ತೆಗೆದುಕೊಂಡು ಮನೆಮನೆಗೆ ತಲುಪಿಸುತ್ತಿದ್ದಾರೆ. ಮಂತ್ರಾಕ್ಷತೆಯಿಂದ ಹೊಟ್ಟೆ ತುಂಬುವುದಿಲ್ಲ, ಹಸಿವು ನೀಗುವುದಿಲ್ಲ, ಬಡತನವೂ ಹೋಗುವುದಿಲ್ಲ, ಮನೆಯೂ ಸಿಗುವುದಿಲ್ಲ. ಬೀದಿಬೀದಿ ಅಲೆಯುತ್ತಿರುವ ಯುವಕರಿಗೆ ಉದ್ಯೋಗವೂ ದೊರಕುವುದಿಲ್ಲ. ಅದು ಕೇವಲ ಇವರ ರಾಜಕೀಯ ಲಾಭಕ್ಕಷ್ಟೇ ಬಳಕೆಯಾಗುತ್ತಿದೆ. ಮಂತ್ರಾಕ್ಷತೆಗಾಗಿ ಮನೆಮನೆ ಸುತ್ತುವವರು ಪ್ರತಿ ಮನೆಯ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ಆ ಮೂಲಕ ಜನರಿಗಾಗಿ ಒಳ್ಳೆಯ ಯೋಜನೆ ಜಾರಿಗೊಳ್ಳುವಂತೆ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು. +ಮಾಜಿ ಸಚಿವ ಈಶ್ವರಪ್ಪ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಜೈಲು ಸೇರಬೇಕಿತ್ತು. ತಮ್ಮ ತಟ್ಟೆಯಲ್ಲಿ ಬಿದ್ದಿರುವ ಸತ್ತ ಕತ್ತೆಯನ್ನು ನೋಡಿಕೊಳ್ಳದೆ, ಇನ್ನೊಬ್ಬರ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. +ನೇಪಾಳ ನದಿಯಲ್ಲಿ ಭಾರತೀಯ ನಂಬರ್‌ ಪ್ಲೇಟ್‌ ವಾಹನ ಪತ್ತೆ +ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ 4 ವರ್ಷದಿಂದ ಎಲ್ಲಿ ಹೋಗಿದ್ದರು. ಚುನಾವಣೆ ಸಮೀಪಿಸುತ್ತಿರುವಂತೆ ಹೊರಗೆ ಬಂದು ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ. ಮಸೀದಿಗಳ ಜಾಗದಲ್ಲಿ ದೇವಸ್ಥಾನಗಳಿದ್ದವು ಎಂದು ಹೇಳಿ ಶಾಂತಿ ಕದಡುವುದನ್ನು ಬಿಟ್ಟರೆ ಅವರ ಸಾಧನೆಯೇನು? ಕ್ಷೇತ್ರದ ಎಷ್ಟು ಜನರ ಸಮಸ್ಯೆ ಬಗೆಹರಿಸಿದ್ದಾರೆ? ಯಾವ ಯೋಜನೆಗಳನ್ನು ಜನರಿಗಾಗಿ ಜಾರಿಗೆ ತಂದಿದ್ದಾರೆ ಎಂದು ಪ್ರಶ್ನಿಸಿದರು. +ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ನಮಗೂ ಅವರದೇ ಭಾಷೆಯಲ್ಲಿ ಮಾತನಾಡಲು ಗೊತ್ತಿದೆ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು. \ No newline at end of file diff --git a/eesanje/url_46_261_3.txt b/eesanje/url_46_261_3.txt new file mode 100644 index 0000000000000000000000000000000000000000..5d9081174224fc20ac96adf14e48638e536b60af --- /dev/null +++ b/eesanje/url_46_261_3.txt @@ -0,0 +1,8 @@ +ಮಗನ ಕೈಯಲ್ಲಿ ಮೂಡಿಬಂದ ರಾಮ ಲಲ್ಲಾ ವಿಗ್ರಹ, ತಾಯಿ ಸಂತಸ +ಅಯೋಧ್ಯೆ, ಜ.16- ರಾಮಮಂದಿರದಲ್ಲಿ ಇದೇ 22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲು ತನ್ನ ಮಗನ ರಾಮಲಲ್ಲಾ ವಿಗ್ರಹವನ್ನು ಆಯ್ಕೆ ಮಾಡಿದ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ ಸಂತಸ ವ್ಯಕ್ತಪಡಿಸಿದ್ದಾರೆ. +ನನಗೆ ತುಂಬಾ ಸಂತೋಷವಾಗಿದೆ, ಕಳೆದ ಆರು ತಿಂಗಳಿಂದ ಅವನು ಮಾಡಿದ್ದರ ಫಲ ಇದು. ಅವನ ಕಲೆಯನ್ನು ನೋಡಿ ಅವನ ತಂದೆ ಸಂತೋಷಪಡುತ್ತಿದ್ದರು ಎಂದು ಅರುಣ್ ಯೋಗಿರಾಜ್ ಅವರ ತಾಯಿ ಹೇಳಿದರು. ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯ ಐತಿಹಾಸಿಕ ದೇಗುಲದಲ್ಲಿ ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ತಿಳಿಸಿದೆ. ಜನವರಿ 22 ರಂದು ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. +ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೃಷ್ಣ ಶಿಲೆಯ ಮೇಲೆ ಕೆತ್ತಿದ ಮೂರ್ತಿಯನ್ನು ಭಗವಾನ್ ಶ್ರೀ ರಾಮಲಲ್ಲಾ ವಿಗ್ರಹವನ್ನು ಅಂತೀಮವಾಗಿ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ ಬರೆದಿದೆ. +ಅಮೆರಿಕ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ +ಇದಕ್ಕೂ ಮೊದಲು, ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಅರುಣ್ ಯೋಗಿರಾಜ್ ಅವರ ಕೆಲಸದ ಒಳನೋಟಗಳನ್ನು ಹಂಚಿಕೊಂಡರು, ಪ್ರತಿಮೆಯ ರಚನೆಯ ಸಮಯದಲ್ಲಿ ಶಿಲ್ಪಿಯ ಗಮನಾರ್ಹ ಏಕಾಗ್ರತೆ ಮತ್ತು ತ್ಯಾಗವನ್ನು ಶ್ಲಾಘಿಸಿದ್ದಾರೆ. ಮೂರ್ತಿ ತಯಾರಿಸುವಾಗ ಕೆಲಸದಲ್ಲಿ ಆಗುವ ಅನಾಹುತ ತಪ್ಪಿಸಲು ತಿಂಗಳಾನುಗಟ್ಟಲೆ ಕುಟುಂಬಸ್ಥರೊಂದಿಗೂ ಮಾತನಾಡಿರಲಿಲ್ಲ. ಅವರು ಮಕ್ಕಳ ಮುಖವನ್ನೂ ನೋಡಿಲ್ಲ.ಪ್ರತಿಮೆ ನಿರ್ಮಾಣ ಕಾರ್ಯದ ವೇಳೆ ಅರುಣ್ ಯೋಗಿರಾಜ್ ಅವರ ಜೀವನಶೈಲಿಯನ್ನು ನೀವು ಊಹಿಸಲೂ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಕೆಲಸದ ವೇಳೆ ತಿಂಗಳಾನುಗಟ್ಟಲೆ ಫೋನ್ ಮುಟ್ಟಲೇ ಇಲ್ಲ. ಅವನು ತನ್ನ ಮಕ್ಕಳು ಮತ್ತು ಕುಟುಂಬದವರೊಂದಿಗೆ ಮಾತನಾಡಲಿಲ್ಲ. +ಅರುಣ್ ಯೋಗಿರಾಜ್ ಅವರು ಹಲವು ತಲೆಮಾರುಗಳಿಂದ ವಿಗ್ರಹ ನಿರ್ಮಾಣದ ಕೆಲಸದಲ್ಲಿ ಸಂಬಂಧ ಹೊಂದಿದ್ದಾರೆ ಎಂದು ರೈ ಹೇಳಿದರು. ಅವರ ಪೂರ್ವಜರೂ ಇದೇ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಮಾಹಿತಿ ಪ್ರಕಾರ ಕೇದಾರನಾಥದಲ್ಲಿ ಶಂಕರಾಚಾರ್ಯರ ಪ್ರತಿಮೆಯನ್ನು ಅವರೇ ತಯಾರಿಸಿದ್ದಾರೆ. ಅವರು ದೆಹಲಿಯ ಇಂಡಿಯಾ ಗೇಟ್ ಕೆಳಗೆ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ರಚಿಸಿದ್ದಾರೆ ಎಂದು ತಿಳಿದುಬಂದಿದೆ. +ರಾಮ ಲಲ್ಲಾನ ವಿಗ್ರಹವನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ, ಅವರ ವಿಗ್ರಹವನ್ನು ಆಯ್ಕೆ ಮಾಡಲಾಯಿತು. ಅವರ ಕಾರ್ಯವನ್ನು ಎಲ್ಲಾ ಟ್ರಸ್ಟಿಗಳು ಶ್ಲಾಘಿಸಿದ್ದಾರೆ. ಜನವರಿ 18 ರಂದು ದೇವಾಲಯದ ಗರ್ಭ ಗೃಹದಲ್ಲಿ ರಾಮನ ವಿಗ್ರಹವನ್ನು ಅದರ ಸ್ಥಾನದಲ್ಲಿ ಇರಿಸಲಾಗುವುದು ಮತ್ತು ಜನವರಿ 22 ರಂದು ಮಧ್ಯಾಹ್ನ 12.20 ಕ್ಕೆ ಪ್ರಾಣ ಪ್ರತಿಷ್ಠೆ ನಡೆಯಲಿದೆ ಎಂದು ರೈ ಘೋಷಿಸಿದ್ದಾರೆ. \ No newline at end of file diff --git a/eesanje/url_46_261_4.txt b/eesanje/url_46_261_4.txt new file mode 100644 index 0000000000000000000000000000000000000000..6e5ea5046291fc914756d6d02bc49f5b513fd7a2 --- /dev/null +++ b/eesanje/url_46_261_4.txt @@ -0,0 +1,9 @@ +ಟರ್ಫ್‍ಕ್ಲಬ್‍ನ ಪದಾಧಿಕಾರಿ ವಜಾಗೊಳಿಸಿ ಆಡಳಿತಾಧಿಕಾರಿ ನೇಮಕಕ್ಕೆ ವೈ.ಎ.ನಾರಾಯಣಸ್ವಾಮಿ ಒತ್ತಾಯ +ಬೆಂಗಳೂರು,ಜ.16- ನಗರದ ಪ್ರತಿಷ್ಠಿತ ಬೆಂಗಳೂರು ಟರ್ಫ್‍ಕ್ಲಬ್‍ನ ಪದಾಕಾರಿಗಳನ್ನು ತಕ್ಷಣವೇ ವಜಾಗೊಳಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು ಟರ್ಫ್ ಕ್ಲಬ್ ಮೇಲೆ ಪೊಲೀಸರು ದಾಳಿ ನಡೆಸಿದಾಗ 3.45 ಕೋಟಿ ನಗದು ವಶಪಡಿಸಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎಂದು ಹೇಳಿದ್ದಾರೆ. +ಕ್ಲಬ್‍ನಲ್ಲಿ ಕಾನೂನು ಬಾಹಿರವಾಗಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವುದರ ಬಗ್ಗೆ ಸಿಸಿಬಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದಾರೆ. ತನಿಖಾ ವರದಿ ಬರುವವರೆಗೂ ಪದಾಧಿಕಾರಿಗಳನ್ನು ವಜಾ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. +ದಾಳಿಯ ವೇಳೆ ಟರ್ಫ್‍ಕ್ಲಬ್ ಲೆಕ್ಕಪತ್ರ ನಿರ್ವಹಣೆಯಲ್ಲಿ ಅನೇಕ ದೋಷಗಳು ಕಂಡುಬಂದಿವೆ. ನೂರಾರು ಕೋಟಿ ಜಿಎಸ್‍ಟಿ ವಂಚನೆ ಮತ್ತು ಅಕ್ರಮವಾಗಿ ನಡೆಯುತ್ತಿದ್ದ ಬೆಟ್ಟಿಂಗ್ ಅವ್ಯವಹಾರಗಳನ್ನು ದಾಳಿಯ ವೇಳೆ ಪತ್ತೆಯಾಗಿದೆ. ಈ ಸಂಬಂಧ 66 ಜನರನ್ನು ಕೂಡ ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಕಾನೂನು ಕ್ರಮದ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. +ಮನುಷ್ಯನ ದೇಹದಲ್ಲಿ ಮೈಕ್ರೋಚಿಪ್ ಆರೋಪ, ತನಿಖೆಗೆ ಕೋರ್ಟ್ ಸೂಚನೆ +ಟರ್ಫ್ ಕ್ಲಬ್ ಪದಾಧಿಕಾರಿಗಳು ಶಾಮೀಲಾಗದೇ ಈ ಪ್ರಮಾಣದಲ್ಲಿ ಬುಕ್ಕಿಗಳು ಅವ್ಯವಹಾರದಲ್ಲಿ ತೊಡಗಲು ಅಸಾಧ್ಯ ಮತ್ತು ಅನೇಕ ಸ್ಟುವಡ್ರ್ಸ್‍ಗಳೂ ಕೂಡ ಈ ವಂಚನೆಯಲ್ಲಿ ಪಾಲುದಾರರು ಹಾಗೂ ಫಲಾನುಭವಿಗಳಾಗಿದ್ದಾರೆಂದು ತಿಳಿದುಬಂದಿದೆ. ಸರ್ಕಾರ ಮೀನಾಮೇಷ ಎಣಿಸದೆ ಕಾನೂನು ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ. +ನಗರ ಮಧ್ಯಭಾಗದಲ್ಲಿ ರೇಸ್‍ಕೋರ್ಸ್ ಹೊಂದಿರುವ ಟರ್ಫ್ ಕ್ಲಬ್ ಶೇ.28ರಷ್ಟು ಜಿಎಸ್‍ಟಿ ನೀಡುವುದನ್ನು ತಪ್ಪಿಸಲು ಈ ವಂಚನೆಯಲ್ಲಿ ಪಾಲುದಾರರಾಗಿರುವುದರಲ್ಲಿ ಅನುಮಾನವಿಲ್ಲ. ಈ ದಂಧೆಯು ಅನೇಕ ವರ್ಷಗಳಿಂದ ನಡೆಯುತ್ತಿದೆ. ವಾಸ್ತವ ಹೀಗಿದ್ದರೂ ಕ್ಲಬ್ ಅಧಿಕಾರಿಗಳು ತಮಗೆ ತಿಳಿದಿರಲಿಲ್ಲ ಎಂದು ಹೇಳಿರುವುದನ್ನು ನಂಬಬಾರದು ಎಂದು ನಾರಾಯಣಸ್ವಾಮಿ ಹೇಳಿದ್ದಾರೆ. +ಮೆಲ್ನೋಟಕ್ಕೆ ಇದೊಂದು ಬಹುಕೋಟಿ ಹಗರಣ ಎಂಬುದು ಗೋಚರವಾಗುತ್ತದೆ. ಅನೇಕ ಪ್ರಭಾವಿ ಮತ್ತು ಪ್ರತಿಷ್ಠಿತ ವ್ಯಕ್ತಿಗಳು ಶಾಮೀಲಾಗಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ. ಆದ್ದರಿಂದ ಈ ವಂಚನೆಯ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಾೀಧಿಶರಿಂದ ತನಿಖೆಗೆ ಒಳಪಡಿಸಿದರೆ ಸತ್ಯವು ಹೊರಬರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಸ್ಥಳದಲ್ಲಿ ಟ್ರೀಪಾರ್ಕ್ ನಿರ್ಮಿಸಿ ನಗರದ ನಾಗರಿಕರ ಉಪಯೋಗಕ್ಕೆ ಬಳಕೆ ಮಾಡುವುದು ಅತ್ಯಂತ ಸೂಕ್ತ ಯೋಜನೆಯಾಗುವುದು. +ಈಗಾಗಲೇ ರಾಜ್ಯ ಸರ್ಕಾರಗಳು ಹಲವು ಬಾರಿ ಟರ್ಫ್ ಕ್ಲಬ್ ಸ್ಥಳಾಂತರಕ್ಕೆ ಪ್ರಯತ್ನಿಸಿವೆ. ನಗರ ಮಧ್ಯ ಭಾಗದಿಂದ ಇದನ್ನು ಸ್ಥಳಾಂತರಗೊಳಿಸುವಪದು ಅನಿವಾರ್ಯವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಇದನ್ನು ಆದ್ಯತೆಯ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. \ No newline at end of file diff --git a/eesanje/url_46_261_5.txt b/eesanje/url_46_261_5.txt new file mode 100644 index 0000000000000000000000000000000000000000..1681dce87d8463ab63ec545609bfd737e38ddb94 --- /dev/null +++ b/eesanje/url_46_261_5.txt @@ -0,0 +1,7 @@ +ಒಗ್ಗಟ್ಟು ಪ್ರದರ್ಶನಕ್ಕೆ ಕಾಂಗ್ರೆಸ್ ಹೈಕಮಾಂಡ್ ತಾಕೀತು +ಬೆಂಗಳೂರು,ಜ.15- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರತಿಪಕ್ಷಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಮತ್ತು ಕಾಂಗ್ರೆಸ್ ನಾಯಕತ್ವವನ್ನು ಸಮರ್ಥಿಸಿಕೊಳ್ಳಲು ಒಗ್ಗಟ್ಟು ಪ್ರದರ್ಶಿಸುವಂತೆ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ. ಕಾಂಗ್ರೆಸ್‍ನಲ್ಲಿ ಹಲವು ಬಣಗಳು ತೆರೆಮರೆಯಲ್ಲಿ ಸಕ್ರಿಯವಾಗಿವೆ. +ಹೀಗಾಗಿ ರಾಜಕೀಯ ವಿಚಾರಗಳು ಬಂದಾಗ ಒಂದೊಂದು ಬಣವೂ ಒಂದೊಂದು ರೀತಿಯ ನಿಲುವುಗಳನ್ನು ಪ್ರದರ್ಶಿಸುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿದರೆ ಉಳಿದ ಬಣಗಳ ನಾಯಕರು ತಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಮೌನಕ್ಕೆ ಶರಣಾಗಿದ್ದಾರೆ. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಟೀಕೆಗಳು ಕೇಳಿಬಂದಾಗ ಸಿದ್ದರಾಮಯ್ಯ ಅವರ ಬಣದ ನಾಯಕರು ಪ್ರತಿರೋಧ ವ್ಯಕ್ತಪಡಿಸುವುದಿಲ್ಲ. ಕೆಲವೊಮ್ಮೆ ಎಐಸಿಸಿ ನಾಯಕರ ಕುರಿತಂತೆಯೂ ಕಟು ಟೀಕೆಗಳು ಕಂಡುಬಂದಾಗ ಅದಕ್ಕೆ ವಿರೋಧ ವ್ಯಕ್ತಪಡಿಸುವ ರಾಜಕೀಯ ಏಕತೆ ಕಾಂಗ್ರೆಸ್‍ನಲ್ಲಿ ಕಂಡುಬರುವುದಿಲ್ಲ. ಇದು ಒಳಪಂಗಡಗಳ ಅಂತರವನ್ನು ಹೆಚ್ಚಿಸುತ್ತಲೇ ಬಂದಿದೆ. ಲೋಕಸಭಾ ಚುನಾವಣೆಯಲ್ಲೂ ಇದೇ ರೀತಿ ಮುಂದುವರೆದರೆ ರಾಜಕೀಯವಾಗಿ ಹಿನ್ನಡೆಯಾಗಬಹುದು ಎಂಬ ಆತಂಕ ಪಕ್ಷದ ನಾಯಕರನ್ನು ಕಾಡುತ್ತಿದೆ. ಹೀಗಾಗಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಹೈ ಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ. +ಟರ್ಕಿಯಲ್ಲಿ ಇಸ್ರೇಲ್ ಫುಟ್ಬಾಲ್ ಆಟಗಾರನ ಬಂಧನ +ಇತ್ತೀಚೆಗೆ ಸಂಸದ ಅನಂತಕುಮಾರ್ ಹೆಗಡೆ ಅವರು ಸಿದ್ದರಾಮಯ್ಯ ಅವರ ಬಗ್ಗೆ ಏಕವಚನ ಹಾಗೂ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದರು. ಇದಕ್ಕೆ ಕಾಂಗ್ರೆಸ್‍ನ ಬಹಳಷ್ಟು ಸಚಿವರು ಮೃದು ಧೋರಣೆಯಲ್ಲೇ ಪ್ರತಿಕ್ರಿಯಿಸಿ ಜಾರಿಕೊಂಡಿದ್ದಾರೆ. ಶಿವರಾಜ್ ತಂಗಡಗಿ ಮಾತ್ರ ಕಟು ಶಬ್ಧಗಳಲ್ಲಿ ಪ್ರತಿಕ್ರಿಯಿಸಿದ್ದಾರೆ. ಶಾಸಕರ ಪೈಕಿ ಪ್ರದೀಪ್ ಈಶ್ವರ್‍ರನ್ನು ಹೊರತುಪಡಿಸಿದರೆ ಉಳಿದವರ್ಯಾರೂ ಸಿದ್ದರಾಮಯ್ಯ ಪರವಾಗಿ ಧ್ವನಿಯೆತ್ತಿದ್ದು ಕಂಡುಬಂದಿಲ್ಲ. ಹೀಗಾಗಿ ಹೈಕಮಾಂಡ್ ನೇರ ಎಚ್ಚರಿಕೆ ಸಂದೇಶ ರವಾನಿಸಿದ್ದು, ಬಿಜೆಪಿಯ ಟೀಕೆಗಳು, ಆರೋಪಗಳಿಗೆ ಪ್ರತಿಕ್ರಿಯಿಸುವಾಗ ಕಾಂಗ್ರೆಸ್‍ನ ಒಳಜಗಳವನ್ನು ಬದಿಗಿರಿಸುವಂತೆ ಸೂಚನೆ ನೀಡಿದೆ. +ಚುನಾವಣೆ ಸಂದರ್ಭದಲ್ಲೂ ಜನರಲ್ಲಿ ಕಂಡುಬರುವ ಗೊಂದಲಗಳನ್ನು ನಿವಾರಿಸುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ತಕ್ಷಣ ಪ್ರತಿಕ್ರಿಯಿಸಬೇಕು. ಅದರಲ್ಲೂ ಅಪಪ್ರಚಾರಗಳನ್ನು ವ್ಯಾಪಕಗೊಳ್ಳಲು ಬಿಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_261_6.txt b/eesanje/url_46_261_6.txt new file mode 100644 index 0000000000000000000000000000000000000000..60083f3145d581437f59fa98789623641fde1569 --- /dev/null +++ b/eesanje/url_46_261_6.txt @@ -0,0 +1,9 @@ +ರಾಜ್ಯಸಭೆ ಸ್ಥಾನ ಕೇಳಿದ್ದೇನೆ : ಸೋಮಣ್ಣ +ಬೆಂಗಳೂರು,ಜ.15- ನನ್ನನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಪಕ್ಷವು ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ. +ಸುದ್ದಿಗಾರರ ಜೊತೆ ಮಾತನಾಡಿದ ಅವರು, ಒಳ್ಳೆಯತನಕ್ಕೆ, ಒಳ್ಳೆಯ ನಡವಳಿಕೆಗೆ ಸಹಾಯ ಆಗುತ್ತದೆ. ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ, ಅವರ ತೀರ್ಮಾನ, ಭಾವನೆ ಸಕಾರಾತ್ಮಕವಾಗಿಯೇ ಇತ್ತು. ಎಲ್ಲವೂ ಸುಖಾಂತ್ಯವಾಗಿದೆ.ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿರುವುದಾಗಿ ವಿವರಿಸಿದರು. +ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ. ಜತೆಗೆ ನನಗೆ 3 ಕಷ್ಟದ ಲೋಕಸಭಾ ಕ್ಷೇತ್ರ ಕೊಡಿ. ಯಾವುದೇ 3 ಕ್ಷೇತ್ರಗಳನ್ನು ಕೊಟ್ಟರೂ ಗಲ್ಲಿಸಿಕೊಂಡು ಬರುತ್ತೇನೆ. 28 ಕ್ಷೇತ್ರಗಳ ಪೈಕಿ 3 ಕ್ಷೇತ್ರ ವಹಿಸಿದರೆ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನ್ನ ಶ್ರಮ ಇದೆ ಎಂದರು. ನಾನು ಐದತ್ತು ನಿಮಿಷ ಚರ್ಚೆಗೆ ಅವಕಾಶ ಕೇಳಿದ್ದೆ. ಆದರೆ, ಅವರು ಅರ್ಧ ಗಂಟೆ ಸಮಯ ಕೊಟ್ಟರು. ಎಲ್ಲವನ್ನೂ ಅವರ ಗಮನಕ್ಕೆ ತಂದಿದ್ದೇನೆ. ಕೆಲಸ ಮಾಡಿ ಮುಂದೆ ತೀರ್ಮಾನ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. 28 ಲೋಕಸಭಾ ಕ್ಷೇತ್ರದಲ್ಲಿನ ಎಲ್ಲಾ ವಿವರ ನೀಡಿದ್ದೇನೆ ಎಂದು ತಿಳಿಸಿದರು. +ನಾನು ನನ್ನ ಮಗನಿಗಾಗಿ ಏನೂ ಕೇಳಿಲ್ಲ, ಈ ಕ್ಷೇತ್ರದಲ್ಲಿ ನನ್ನದೇ ಆದ ಕೊಡುಗೆ ಇದೆ. ಆದ್ದರಿಂದ ನನ್ನನ್ನು ಗಮನದಲ್ಲಿಟ್ಟು ಆಯ್ಕೆಗೆ ಪರಿಗಣಿಸಿ ಎಂದು ಹೇಳಿದ್ದೇನೆ. ಹೈಕಮಾಂಡ್ ಅವರ ಅಂತರಾಳದ ಮಾತು ಕೇಳಿದೆ. ರಾಷ್ಟ್ರೀಯ ನಾಯಕರ ಅಂತರಾಳದಲ್ಲಿ ಇಷ್ಟು ಒಳ್ಳೆಯ ಮನಸ್ಸಿದೆ ಎನ್ನುವುದು ತಿಳಿಯತು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ಅರುಣ್ ಸೋಮಣ್ಣಗೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸ್ಥಾನ ಕೈ ತಪ್ಪಿದ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ನಾನು ವರಿಷ್ಠರ ಬಳಿ ಏನನ್ನೂ ಕೇಳಿಲ್ಲ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷರಾಗಿ ರಾಮಮೂರ್ತಿ ಆಗಿದ್ದಾರೆ. ಅವರು ನಮ್ಮ ಹುಡುಗನೇ. ಎರಡು ಬಾರಿ ಕಾಪೆರ್ರೇಟರ್ ಆಗಿದ್ದಾನೆ. ಈಗ ಶಾಸಕ ಕೂಡ ಆಗಿದ್ದಾನೆ ಒಳ್ಳೆಯದಾಗಲಿ.ರಾಜ್ಯಾಧ್ಯಕ್ಷರು ಒಳ್ಳೆಯ ಕ್ರಮ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. +2024ರಲ್ಲಿ ಕುಸಿಯಲಿದೆಯಂತೆ ಜಾಗತೀಕ ಆರ್ಥಿಕತೆ +ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಂನತ್ ಕುಮಾರ್ ಹೆಗಡೆ ಅವರ ಹೇಳಿಕೆ ಗಮನಿಸಿದ್ದೇನೆ, ಅವರು ಹೇಳಿಕೆ ಕೊಡುವಾಗ ನನ್ನ ಹಾಗೇ ಏನೇನೋ ಹೇಳಿಬಿಡುತ್ತಾರೆ. ನಾವು ಮಾತನಾಡುವಾಗ ಅವರು ಏಳು ಕೋಟಿ ಜನರ ಸಿಎಂ ಎಂದು ನೋಡಿ ಮಾತನಾಡಬೇಕು, ಅವರು ಸಿಎಂ ಹೇಗಾದರೂ ಎನ್ನುವ ಚರ್ಚೆ ಬೇಡ. ಅವರ ಬಗ್ಗೆ ಮಾತನಾಡುವಾಗ ಹೇಳಿಕೆ ಹೇಗೆಂದರೆ, ಹಾಗೆ ಕೊಡಬಾರದು ಎಂದು ಸೋಮಣ್ಣ ಸಲಹೆ ಮಾಡಿದರು.ಸಂಸದ ಹೆಗಡೆ ಸುಸಂಸ್ಕøತ ಕುಟುಂಬದಿಂದ ಬಂದವರು. ನಮ್ಮ ನಡವಳಿಕೆಗಳು ವಿಭಿನ್ನವಾಗಿರಬೇಕು. ಸಿಎಂ ಸಿದ್ದರಾಮಯ್ಯ ಹೇಗಾದರೂ ಮಾತಾಡಲಿ, ನಮಗೆ ಬೇಡ. ಅನಂತಕುಮಾರ್‍ಹೆಗಡೆ ಸಂಸದರಾಗಿದ್ದಾರೆ ಎಂದಷ್ಟೇ ಹೇಳಿದರು. +ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ರ್ಪಸಲು ಅನಿವಾರ್ಯವಾಗಿ ಒಪ್ಪಿಕೊಂಡು ಸೋತ ನಂತರ ಸೋಮಣ್ಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಸಿಡಿದೆದ್ದಿದ್ದರು. ಹಲವು ನಾಯಕರ ವಿರುದ್ಧ ಬಹಿರಂಗ ಟೀಕೆಗಳನ್ನೂ ಮಾಡಿದ್ದರು. ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿರುವುದು ಕುತೂಹಲ ಮೂಡಿಸಿತ್ತು. ಇದೀಗ ಅವರು ಆ ಎಲ್ಲ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ. \ No newline at end of file diff --git a/eesanje/url_46_261_7.txt b/eesanje/url_46_261_7.txt new file mode 100644 index 0000000000000000000000000000000000000000..8484a5b513c8fb6967715f32ae4ee488898b8a16 --- /dev/null +++ b/eesanje/url_46_261_7.txt @@ -0,0 +1,7 @@ +ಹಾಸನ ಲೋಕಸಭೆ ಸಭೆ ಕ್ಷೇತ್ರದಿಂದ ಶಾಸಕ ಶಿವಲಿಂಗೇಗೌಡ ಕಣಕ್ಕೆ..? +ಹಾಸನ,ಜ.15- ಜೆಡಿಎಸ್‍ನ ಭದ್ರಕೋಟೆ ಹಾಸನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಯ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ. ಪ್ರತಿ ಅವಧಿಯ ಚುನಾವಣೆಯಲ್ಲೂ ಕಾಂಗ್ರೆಸ್‍ನಲ್ಲಿ ಲೋಕಸಭೆ ಅಭ್ಯರ್ಥಿಗೆ ಸಂಬಂಧಪಟ್ಟಂತೆ ಬೇರೆ ಬೇರೆ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿರುವುದು ಸಾಮಾನ್ಯವಾಗಿದೆ. +ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಸ್ತುತ ಬಿ.ಶಿವರಾಂ, ಜತ್ತೇನಹಳ್ಳಿ ರಾಮಚಂದ್ರ, ರಾಜ್‍ಶೇಖರ್, ಬಿಜೆಪಿಯಲ್ಲಿರುವ ಎ.ಟಿ.ರಾಮಸ್ವಾಮಿ ಸೇರಿದಂತೆ ಹಲವು ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಸಮರ್ಥ ಅಭ್ಯರ್ಥಿ ಎನ್ನುವುದಾದರೆ ಅವರ್ಯಾರೂ ಜೆಡಿಎಸ್ ನಾಯಕರೆದುರು ಪ್ರಭಲವಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ವಿಶ್ಲೇಷಣೆಗಳಿವೆ. ಹೀಗಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನೇ ಕಣಕ್ಕಿಳಿಸುವ ಪ್ರಯತ್ನಗಳಾಗುತ್ತಿವೆ. +ಶಿವಲಿಂಗೇಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪ್ರಬಲ ಪೈಪೋಟಿ ನಡುವೆಯೂ ಅರಸೀಕೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುರಿತು ಗೌರವಾಧಾರಗಳ ಜೊತೆಯಲ್ಲೇ ಮಾತನಾಡುವ ಶಿವಲಿಂಗೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪದೇಪದೇ ಸಂಘರ್ಷಕ್ಕಿಳಿಯುತ್ತಿದ್ದಾರೆ. +2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್ +2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಎ.ಮಂಜು ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯತ್ತ ಮುಖ ಮಾಡಿ ಅಲ್ಲಿಂದ ಮತ್ತೆ ಜೆಡಿಎಸ್ ಸೇರ್ಪಡೆಯಾಗಿ ಈಗ ಶಾಸಕರಾಗಿದ್ದಾರೆ. ಜೆಡಿಎಸ್‍ನಲ್ಲೇ ಇದ್ದ ಎ.ಟಿ.ರಾಮಸ್ವಾಮಿ, ಬಿಜೆಪಿಯಲ್ಲಿದ್ದು ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. +ಮಾಜಿ ಶಾಸಕ ಪ್ರೀತಂ ಗೌಡ ಕೂಡ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ನ ಭದ್ರಕೋಟೆಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಚಾಲ್ತಿಯಲ್ಲಿರುವ ನಾಯಕರು ಗೆಲ್ಲುವ ಸಾಧ್ಯತೆಗಳು ಕ್ಷೀಣವಾಗಿದೆ ಎಂಬ ವಿಶ್ಲೇಷಣೆಗಳಿವೆ. ಇದಕ್ಕೆ ಪುಷ್ಠಿ ಎನ್ನುವಂತೆ ಟಿಕೆಟ್ ಆಕಾಂಕ್ಷಿಯಾಗಿರುವ ಬಿ.ಶಿವರಾಂ ಅವರೇ ಹಾಸನ ಲೋಕಸಭಾ ಕ್ಷೇತ್ರಕ್ಕೆ ಕೆ.ಎಂ.ಶಿವಲಿಂಗೇಗೌಡ ಪ್ರಬಲ ಅಭ್ಯರ್ಥಿ ಎಂದು ಹೇಳಿದ್ದಾರೆ. ಇದು ಪಕ್ಷದಲ್ಲಿ ಸಂಚಲನ ಮೂಡಿಸಿದೆ. \ No newline at end of file diff --git a/eesanje/url_46_261_8.txt b/eesanje/url_46_261_8.txt new file mode 100644 index 0000000000000000000000000000000000000000..96f4639d6ef26cce3c5850d1de48071863ccf421 --- /dev/null +++ b/eesanje/url_46_261_8.txt @@ -0,0 +1,6 @@ +ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡನೆ : ಸಿದ್ದರಾಮಯ್ಯ +ಹಾವೇರಿ,ಜ.15- ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವುದರಿಂದ ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು, ನರಸೀಪುರ ಗ್ರಾಮ ಹ್ಯಾಲಿಪ್ಯಾಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. +ಬರ ನಿರ್ವಹಣೆಗೆ ರಾಜ್ಯಸರ್ಕಾರ ತಾತ್ಕಾಲಿಕವಾಗಿ 2 ಸಾವಿರ ರೂ.ಗಳ ಪರಿಹಾರವನ್ನು ಮಾತ್ರ ನೀಡಿದೆ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ದೊರೆತ ತಕ್ಷಣ ರೈತರಿಗೆ ನಿಯಮಾನುಸಾರ ಹೆಚ್ಚಿನ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯಸರ್ಕಾರ ನೀಡಿರುವ ಪರಿಹಾರ ಸಾಲುವುದಿಲ್ಲ ಎಂಬುದು ನಮಗೂ ಗೊತ್ತಿದೆ. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ನೆರವು ಬಂದಿಲ್ಲ. ರಾಜ್ಯದ ಬಿಜೆಪಿ ನಾಯಕರು ಇಲ್ಲಿ ಟೀಕೆ ಮಾಡುವ ಬದಲು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು. +2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್ +ತಮ್ಮ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಮರ್ಥಿಸಿಕೊಂಡಿದ್ದಾಗಿದ್ದರೆ ಅವರಿಗೂ ಸಂಸ್ಕøತಿ ಮತ್ತು ಮನುಷ್ಯತ್ವ ಇಲ್ಲ ಎಂದು ತಿಳಿದುಕೊಳ್ಳಬೇಕಾಗುತ್ತದೆ ಎಂದರು. ಅನಂತಕುಮಾರ್ ಹೆಗಡೆ ಈವರೆಗೂ ನಾಪತ್ತೆಯಾಗಿದ್ದರು. ಚುನಾವಣೆಯ ಕಾಲದಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಂಸದರಾಗಿ, ಮಾಜಿ ಸಚಿವರಾಗಿ ಯಾವುದಾದರೂ ಕೆಲಸ ಮಾಡಿದ್ದಾರೆಯೇ? ಜನರ ಕಷ್ಟ ಕೇಳಿದ್ದಾರೆಯೇ ಎಂದು ಪ್ರಶ್ನಿಸಿದರು. +ಸಂಸ್ಕøತಿ ಎಂದರೆ ಜನರ ಸಂಕಷ್ಟಗಳನ್ನು ಕೇಳುವುದು. ಅದನ್ನು ಅನಂತಕುಮಾರ್ ಹೆಗಡೆ ಮಾಡಿಲ್ಲ. ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಾರೆಂದು ಹೇಳಿದರು. \ No newline at end of file diff --git a/eesanje/url_46_261_9.txt b/eesanje/url_46_261_9.txt new file mode 100644 index 0000000000000000000000000000000000000000..4b5bcac283e7bac84fb64f30260e6fe3ff0c14e7 --- /dev/null +++ b/eesanje/url_46_261_9.txt @@ -0,0 +1,9 @@ +ಸಿದ್ದರಾಮಯ್ಯನವರ ಕಾರ್ಯಗಳು ‘ಕಾಲನೇಮಿ’ ನಂತಿವೆ +ಬೆಂಗಳೂರು,ಜ.15- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮನಿರಬಹುದು. ಆದರೆ ಅವರ ಕಾರ್ಯಗಳು ಕಾಲನೇಮಿ (ಅಸುರ)ನಂತಿವೆ ಎಂದು ಹನುಮಗಿರಿ ದೇವಸ್ಥಾನದ ಅರ್ಚಕ ಮಹಂತ್ ರಾಜು ದಾಸ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. +ಸಿದ್ದರಾಮಯ್ಯನವರು ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ಆದರೆ ಅವರ ಕಾರ್ಯವೈಖರಿ ಅಸುರನಂತಿದೆ. ಬಾಬರ್ ಬಗ್ಗೆ ಅವರಿಗೆ ಚಿಂತೆ, ದಾಳಿಕೋರರು ಹೆಚ್ಚಿನ ಜನರ ಭಾವನೆಗಳೊಂದಿಗೆ ಅವರು ಆಟವಾಡುತ್ತಿರುವ ರೀತಿ, ಬಿಜೆಪಿ ನಾಯಕ – ಸಿ.ಟಿ.ರವಿ ಹೇಳಿದ್ದು ತಪ್ಪಲ್ಲ ಎಂದು ಮಹಂತ್ ರಾಜು ದಾಸ್ ಸಮರ್ಥಿಸಿಕೊಂಡಿದ್ದಾರೆ. ಎಎನ್‍ಐಗೆ ಸುದ್ದಿ ಸಂಸ್ಥೆಗೆ ಮಾತನಾಡಿರುವ ಅವರು, ಗೈರು ಹಾಜರಾಗಲು ಮುಂದಾಗಿರುವುದು ದುರದೃಷ್ಟಕರ ಎಂದು ವಿಷಾದಿಸಿದ್ದಾರೆ. +ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಪುರೋಹಿತರ ತಂಡವು ಜನವರಿ 22 ರಂದು ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠೆಯ ಮುಖ್ಯ ವಿಧಿಗಳನ್ನು ನಡೆಸಲಿದೆ. ಮಾಜಿ ಸಚಿವ ಸಿ.ಟಿ.ರವಿ ಕೂಡಾ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕರು ಹಾಗೂ ಪಕ್ಷವು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗಿಯಾಗದಿರಲು ಕಾರಣ, ಬಾಬರ್‍ನನ್ನು ಬಿಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ಸಾರಿದ್ದಾರೆ ಎಂದು ಹೇಳಿದ್ದಾರೆ. +ಅವರ ಪಕ್ಷವು ಅವರು (ಪ್ರಾಣಪ್ರತಿಷ್ಠಾಪನೆಗೆ) ಹೋಗುವುದಿಲ್ಲ ಎನ್ನುವ ಮೂಲಕ ಕಾರ್ಯಕ್ರವನ್ನು ಬಹಿಷ್ಕಾರ ಹಾಕಿದ್ದಾರೆ. ಅವರು ಬಾಬರ್‍ನನ್ನು ಬಿಟ್ಟು ರಾಮನನ್ನು ಹಿಡಿಯಲು ಸಾಧ್ಯವಿಲ್ಲ. ಬಾಬರ್‍ನನ್ನು ಬಿಟ್ಟರೆ ರಾಮನನ್ನು ಹಿಡಿಯುವುದು ಸುಲಭ. ಆದರೆ, ಅದು ಅವರಿಗೆ ಸಿಗುವುದಿಲ್ಲ. ಬಾಬರ್ ಬಿಟ್ಟರೆ ಆ ಸಮುದಾಯದ ಓಲೈಕೆಗಾಗಿ ದೂರ ಸರಿದಿದ್ದಾರೆ. ರಾಮ ಎಲ್ಲರಿಗೂ ಸೇರಿದವನು. ಪ್ರಾಣ ಪ್ರತಿಷ್ಠಾಪನೆಯನ್ನು ಹಬ್ಬದಂತೆ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ. +2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್ +ಈ ತಿಂಗಳ ಆರಂಭದಲ್ಲಿ ಖರ್ಗೆ, ಸೋನಿಯಾ ಮತ್ತು ಅೀಧಿರ್‍ಜನವರಿ 22 ರಂದು ಭವ್ಯವಾದ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ್ದು, ಇದನ್ನು ಬಿಜೆಪಿ-ಆರ್‍ಎಸ್‍ಎಸ್ ಕಾರ್ಯಕ್ರಮ ಎಂದು ಟೀಕಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ರಾಮ ಮಂದಿರವನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಇಂಡಿಯಾ ಬ್ಲಾಕ್‍ನ ವಿರೋಧ ಪಕ್ಷಗಳು ಆರೋಪಿಸಿವೆ. +ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಜನವರಿ 22 ರಂದು ನಡೆಯಲಿದೆ. ಅಯೋಧ್ಯೆಯಲ್ಲಿ ರಾಮ್ ಲಲ್ಲಾನ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದ ವೈದಿಕ ವಿವಿಧಾನಗಳು ಮುಖ್ಯ ಸಮಾರಂಭದ ಒಂದು ವಾರದ ಮೊದಲು ಜನವರಿ 16 ರಂದು ಪ್ರಾರಂಭವಾಗುತ್ತವೆ. +ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾನೆಯ ಆಚರಣೆಗಳನ್ನು ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಪುರೋಹಿತರ ತಂಡವು ಜನವರಿ 22 ರಂದು ರಾಮ್ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ವಿಧಿಗಳನ್ನು ನಡೆಸಲಿದೆ. ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವ ನಡೆಯಲಿದೆ. \ No newline at end of file diff --git a/eesanje/url_46_262_1.txt b/eesanje/url_46_262_1.txt new file mode 100644 index 0000000000000000000000000000000000000000..88b35ba12585f7fac7da95cf568f088de5cdc1c8 --- /dev/null +++ b/eesanje/url_46_262_1.txt @@ -0,0 +1,6 @@ +ಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ +ಹುಬ್ಬಳ್ಳಿ,ಜ.14- ಹಾವೇರಿ ಜಿಲ್ಲೆಯ ಹಾನಗಲ್‍ನಲ್ಲಿ ನಡೆದ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡಿನ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯಾದರೂ ಎಸ್‍ಐಟಿ ತನಿಖೆಗೆ ಘೋಷಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ತನಿಖೆ ನೆಪದಲ್ಲಿ ಸಂತ್ರಸ್ತೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‍ನವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿಗಳು ಯೂಟರ್ನ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ನವರಿಗೆ ತಡವಾಗಿಯಾದರೂ ಬುದ್ಧಿ ಬಂದಿದೆ. ಅವರ ಹೆಸರಲ್ಲಿಯೇ ರಾಮ ಇದ್ದಾನೆ. ಅಕಾರದ ರಾಜಕಾರಣಕ್ಕಾಗಿ ತಮ್ಮ ಹೆಸರಿನಲ್ಲಿರುವ ರಾಮನನ್ನೇ ಅವರು ಕಡೆಗಣಿಸಿದರು ಎಂದು ವ್ಯಂಗ್ಯವಾಡಿದರು. +ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ಬಿಜೆಪಿ ನಾಯಕರು +ಕೊನೆಗೂ ಸಿದ್ದರಾಮಯ್ಯನವರಿಗೆ ಜ್ಞಾನೋದಯವಾಗಿದೆ. ಜನವರಿ 22ರ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿದ್ದರು. ಈಗ ಹೋಗುವುದಿಲ್ಲ ಎನ್ನುತ್ತಿದ್ದಾರೆ. ಅವರ ಆತ್ಮಸಾಕ್ಷಿ ಹೋಗಬೇಕಂತಿದೆ. ಆದರೆ ಹೈಕಮಾಂಡ್ ಬೇಡವೆನ್ನುತ್ತಿದೆ. ಸಿದ್ದರಾಮಯ್ಯ ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಗೊಂದಲಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು. \ No newline at end of file diff --git a/eesanje/url_46_262_10.txt b/eesanje/url_46_262_10.txt new file mode 100644 index 0000000000000000000000000000000000000000..6a2f8732f64fe3516859503cae4d3368d8fed088 --- /dev/null +++ b/eesanje/url_46_262_10.txt @@ -0,0 +1,8 @@ +ರಾಜ್ಯದಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧೆ ಬಗ್ಗೆ ಮಾಹಿತಿ ಇಲ್ಲ : ಡಿಕೆಶಿ +ಬೆಂಗಳೂರು, ಜ.13- ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರವೊಂದರಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದ್ಧಂತಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಲ್ಲಗಳೆದಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಂತೂ ಇದರ ಬಗ್ಗೆ ಈವರೆಗೂ ಮಾಹಿತಿ ಇಲ್ಲ. ಯಾರು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಬೆಂಗಳೂರಿನ ಜಯನಗದಲ್ಲಿ ಪುಟ್ ಪಾತ್ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವುದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕೋರ್ಟ್ ಆದೇಶದ ಅನುಸಾರ ನಡೆಸುಕೊಳ್ಳುತ್ತಿರುವುದಾಗಿ ಹೇಳಿದರು. +ಪುಟ್‍ಪಾತ್ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆ ಪಕ್ಕದಲ್ಲಿ ತಳ್ಳುವ ಗಾಡಿ ಇಟ್ಟುಕೊಂಡರೆ ಅನುಮತಿಯನ್ನೂ ನೀಡುತ್ತೇವೆ, ಹಣದ ಸಹಾಯವನ್ನು ಮಾಡುತ್ತೇವೆ. ಅದರ ಬದಲು ಶಾಶ್ವತ ಮಾದರಿಯಲ್ಲಿ ಟೆಂಟ್ ನಿರ್ಮಿಸಿಕೊಂಡರೆ ಜನ ಎಲ್ಲಿ ಓಡಾಡುತ್ತಾರೆ. ಅಕ್ಕಪಕ್ಕದವರು ನಮ್ಮ ಮನೆಯ ಮುಂದೆ ವಾಹನ ನಿಲ್ಲಿಸಬೇಡಿ ಎಂದು ಗಲಾಟೆ ಮಾಡುತ್ತಿದ್ದಾರೆ. ಇದು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ನ್ಯಾಯಾಲಯವೂ ಆದೇಶ ನೀಡಿದೆ ಎಂದರು. +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ಪುಟ್‍ಪಾತ್ ಇರುವುದು ಜನ ಸಂಚರಿಸಲು. ನಮಗೆ ಜನ ಮತ್ತು ಸಮಪರ್ಕ ಸಂಚಾರ ವ್ಯವಸ್ಥೆ ಮುಖ್ಯವಾಗಿದೆ. ಸಮಸ್ಯೆಯ ಬಗ್ಗೆ ನನಗೆ ಮಾಹಿತಿ ಇದೆ. ಎರಡು ಮೂರು ಬಾರಿ ನಾನು ಚರ್ಚೆ ನಡೆಸಿದ್ದೇನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ, ಕ್ರಮಬದ್ಧವಾದ ಶಾಶ್ವತ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಾಗಿ ಹೇಳಿದರು. +ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಎಂಬ ಆರೋಪದಲ್ಲಿ ಉರುಳಿಲ್ಲ. ನಮ್ಮ ಸರ್ಕಾರ ಎಲ್ಲರಿಗೂ ಸೂಕ್ತ ರಕ್ಷಣೆ ನೀಡಲಿದೆ. ಬಿಜೆಪಿಯವರು ಅವರ ಸರ್ಕಾರ ಅಕಾರದಲ್ಲಿದ್ದಾಗ ನಡೆದುಕೊಂಡಿದ್ದನ್ನು ಹೇಳುತ್ತಿದ್ದಾರೆ. ನಮ್ಮ ಕಾಲದಲ್ಲಿ ನೈತಿಕ ಪೊಲೀಸ್‍ಗಿರಿ ಸೇರಿದಂತೆ ಕಾನೂನು ಕೈಗೆತ್ತಿಕೊಳ್ಳುವ ಯಾವ ಚಟುವಟಿಕೆಗಳಿಗೆ ಬೆಂಬಲ ನೀಡುವುದಿಲ್ಲ ಎಂದರು. +ಬಿಜೆಪಿ ಸರ್ಕಾರ ಅನುಭವ ಮಂಡಪ ನಿರ್ಮಾಣಕ್ಕೆ ಹಣ ಬಿಡುಗಡೆ ಮಾಡಿರಲಿಲ್ಲ. ನಮ್ಮ ಸರ್ಕಾರವೇ ಅನುಭವ ಮಂಡಪ ನಿರ್ಮಾಣವನ್ನು ಆರಂಭಿತ್ತು. ನಮಗೆ ವಚನಕಾರರು ಹಾಗೂ ಆ ಕಾಲದ ಸಾಂಸ್ಕøತಿ ಚಟುವಟಿಕೆಗಳ ಬಗ್ಗೆ ಗೌರವ ಇದೆ. ಬಸವರ ಕಲ್ಯಾಣ ಕ್ಷೇತ್ರದ ಶಾಸಕರು ಅನುಭವ ಮಂಡಪಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಬಿಜೆಪಿ ಸರ್ಕಾರವಿದ್ದಾಗ ಇವರು ಏಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_262_11.txt b/eesanje/url_46_262_11.txt new file mode 100644 index 0000000000000000000000000000000000000000..5921e5701c01b91199f553f43537263833a7e785 --- /dev/null +++ b/eesanje/url_46_262_11.txt @@ -0,0 +1,11 @@ +ಕುಮಾರಸ್ವಾಮಿ ಕೇಂದ್ರ ಸಚಿವರಾಗುವುದು ಪ್ರಧಾನಿಗೆ ಬಿಟ್ಟ ವಿಚಾರ : ಎಚ್‍ಡಿಡಿ +ಬೆಂಗಳೂರು,ಜ.13- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ಬಗ್ಗೆ ತಮ್ಮೊಂದಿಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು, ಪ್ರಧಾನಿ ನರೇಂದ್ರಮೋದಿ ಅವರ ಮನಸಿನಲ್ಲಿ ಏನಿದೋ ಗೊತ್ತಿಲ್ಲ ಎಂದು ತಿಳಿಸಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಕ್ರಿಯಾಯೋಜ ನೆಯ ಬಗ್ಗೆ ಅವರ ಸಂಪುಟದ ಸಚಿವರಿಗೂ ಗೊತ್ತಾಗದ ರೀತಿಯಲ್ಲಿ ತೀರ್ಮಾನ ಮಾಡುತ್ತಾರೆ. ಹೊಸದಾಗಿ ವಿಧಾನಸಭೆ ಪ್ರವೇಶಿಸಿದವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಹೀಗಾಗಿ ಅವರು ಯಾವ ತೀರ್ಮಾನ ಮಾಡುತ್ತಾರೆ ಎಂಬ ಬಗ್ಗೆ ಹೇಳಲು ಆಗುವುದಿಲ್ಲ. ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು. +ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಸ್ರ್ಪಧಿಸುವ ಸನ್ನಿವೇಶ ಬಂದರೆ ನಾವೆಲ್ಲ ಕೂತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಪ್ರಧಾನಿ ನರೇಂದ್ರಮೋದಿ ಅವರ ಜೊತೆ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಪ್ರಧಾನಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧೆಯ ಬಗ್ಗೆ ಏನಾದರೂ ಹೇಳಿದ ಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ ಎಂದರು. +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ಸ್ಪರ್ಧೆ ಇಲ್ಲ:ನನಗೀಗ 91 ವರ್ಷವಾಗಿದೆ. ರಾಜ್ಯಸಭೆ ಸದಸ್ಯತ್ವದ ಅವ ರಾಜ್ಯಸಭೆ ಸದಸ್ಯತ್ವದ ಅವ ಎರಡೂವರೆ ವರ್ಷವಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅವರು ಕರೆದ ಕ್ಷೇತ್ರಗಳಲ್ಲಿ ಹೋಗಿ ಪ್ರಚಾರ ಮಾಡುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ರ್ಪಧಿಸಿದ್ದಾರೆ. ಅವರಿಗೆ ಮೋದಿಯವರ, ಕುಮಾರಸ್ವಾಮಿ, ನಾನು ಹಾಗೂ ಜನತೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಯುವನಿಧಿಗೆ ಸ್ವಾಗತ:ರಾಜ್ಯ ಸರ್ಕಾರ ನಿನ್ನೆ ಚಾಲನೆ ನೀಡಿದ ಯುವನಿಯನ್ನು ಸ್ವಾಗತಿಸುವುದಾಗಿ ಹೇಳಿದ ಗೌಡರು, ಪದವಿ ಹಾಗೂ ಡಿಫ್ಲೋಮೊ ಪಡೆದ ನಿರುದ್ಯೋಗಿಗಳಿಗೆ ನೀಡುವ ಯುವನಿಧಿಯ ಮೊದಲ ಕಂತಿನ ಹಣದಿಂದ ಶ್ರೀರಾಮನ ದರ್ಶನ ಪಡೆಯಲಿದೆ. ರಾಮನ ಆಶೀರ್ವಾದಿಂದ ಮುಂದೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲಿ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.22ರ ನಂತರ ಅಯೋಧ್ಯೆ ಶ್ರೀರಾಮಮಂದಿರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಅಲ್ಲದೆ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಅವಕಾಶ ಮಾಡಿದ್ದಾರೆ.ಗುಣಕ್ಕೆ ಮಾತ್ಸರ್ಯವಿಲ್ಲ ಮೃದು ಹಿಂದುತ್ವದ ಪ್ರಶ್ನೆಯಲ್ಲ.ಇದರ ಬಗ್ಗೆ ಪ್ರಸಂಶೆ ವ್ಯಕ್ತಪಡಿಸುತ್ತೇನೆ ಎಂದರು. +ಅಯೋಧ್ಯೆಯಲ್ಲಿನ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಿಯವರು 11 ದಿನ ಉಪವಾಸ ವ್ರತ ಕೈಗೊಂಡಿದ್ದಾರೆ. ಇದು ದೈವ ನಿಯಮ ಇರಬಹುದು. ಶಿಸ್ತು, ಶ್ರದ್ದೆ,ಭಕ್ತಿ, ನಿಷ್ಠೆಯಿಂದ ಮಾಡುತ್ತಿದ್ದಾರೆ. ಪ್ರತಿಯೊಂದು ಅವರು ನಿಯಮಬದ್ದವಾಗಿ ಮಾಡುತ್ತಾರೆ. ನಾನು ಒಂದು ದಿವಸ ಮಾತ್ರ ಉಪವಾಸ ಮಾಡಿದ್ದೆ ಅಷ್ಟೇ ಎಂದು ಹೇಳಿದರು. +ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಹೋಗುವುದಾಗಿ ಅವರು ತಿಳಿಸಿದರು. ತಮ್ಮ ಆರೋಗ್ಯ ಕೆಟ್ಟಾಗ ತಮ್ಮ ಪುತ್ರಿ ಅನುಸೂಯ ಅವರು ಪ್ರತಿ ಶನಿವಾರ ಕಾರಂಜಿ ಆಂಜನೇಯಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಿದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತು ಎಂದು ಹೇಳಿದರು. +ಪತ್ರಿಕಾಗೊಷ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಶರವಣ, ವಿಧಾನಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_262_12.txt b/eesanje/url_46_262_12.txt new file mode 100644 index 0000000000000000000000000000000000000000..0aa9f93e54467aa708896632e535dc239990e7ff --- /dev/null +++ b/eesanje/url_46_262_12.txt @@ -0,0 +1,11 @@ +ಜೀವನದಲ್ಲಿ ಧೈರ್ಯ ಇರಲಿ, ಆದರೆ ಭಂಡತನ ಬೇಡ : ಡಿಕೆಶಿ +ಬೆಂಗಳೂರು, ಜ.13- ಜೀವನದಲ್ಲಿ ಧೈರ್ಯ ಇರಲಿ, ಆದರೆ ಭಂಡತನ ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಮ್ಮೆ ಜೀವ ಕಳೆದು ಕೊಂಡರೆ ಮತ್ತೆ ಸಿಗಲ್ಲ. ಯುವಕರು ಹೆಚ್ಚು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಅವರಲ್ಲಿ ತಿಳಿವಳಿಗೆ ಮೂಡುವುದು ಅಗತ್ಯವಿದೆ ಎಂದರು. +ನಾವು ಹೊಸ ಯುಗದಲ್ಲಿ ಇದ್ದೇವೆ. ನಮ್ಮ ಕಾಲಕ್ಕಿಂತಲೂ ಪ್ರಸಕ್ತ ಕಾಲ ಹೆಚ್ಚು ಆಧುನಿಕವಾಗಿದೆ. ಇಂದು ಬೆಳಗ್ಗೆಯಿಂದಷ್ಟೆ ಕೃತಕ ಬುದ್ದಿಮತ್ತೆಯಿಂದ ಬೆಂಗಳೂರಿನ ಸಂಚಾರ ನಿಯಮ ಪಾಲನೆ ಮಾಡುವ ಕುರಿತು ಪ್ರಾತ್ಯಕ್ಷಿತೆಯನ್ನು ಪರಿಶೀಲನೆ ಮಾಡಿದ್ದೇವು. ದ್ವಿಚಕ್ರ ವಾಹನ ಓಡಿಸುವ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಲೇಬೇಕು. ಎನ್‍ಸಿಆರ್‍ಬಿ ಅಂಕಿ ಅಂಶಗಳ ಪೈಕಿ 2023ರಲ್ಲಿ ಹೆಚ್ಚು ಜೀವ ಕಳೆದುಕೊಂಡವರಲ್ಲಿ ಬೈಕ್ ಸವಾರರೇ ಹೆಚ್ಚು, ಅದರಲ್ಲೂ ಯುವಕರ ಸಂಖ್ಯೆ ಹೆಚ್ಚಿದೆ ಎಂದು ಹೇಳಿದರು. +ಕಳೆದ ವರ್ಷ 23 ಸಾವಿರ ಅಪಘಾತಗಳು ವರದಿಯಾಗಿವೆ. ನಿಯಮ ಉಲ್ಲಂಘಿಸಿದಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ಆರು ಸಾವಿರಕ್ಕೂ ಹೆಚ್ಚು ಲೈಸೆನ್ಸ್‍ಗಳನ್ನು ರದ್ದು ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ಕೋಟಿ 30 ಲಕ್ಷ ಜನ ಇದ್ದಾರೆ. 55 ಲಕ್ಷ ವಾಹನಗಳಿವೆ. ಸಂಚಾರದ ಸಮಸ್ಯೆ ಗಂಭಿರವಾಗಿದೆ. ಎನ ಸಂಚಾರದಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುಲು ಬೆಂಗಳೂರು ನಗರಾಭಿವೃದ್ಧಿ, ಪೊಲೀಸ್, ಸಾರಿಗೆ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ರೂಪಿಸುತ್ತಿದೆ ಎಂದು ಹೇಳಿದರು. +ಅಪಘಾತಕ್ಕೆ ಒಳಗಾದವರ ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತಹ ಹರೀಶ್ ಸಾಂತ್ವಾನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಅದರಿಂದ ಏನು ಪ್ರಯೋಜನವಾಗುವುದಿಲ್ಲ. ಅಪಘಾತವಾಗಿ ಜೀವ ಕಳೆದುಕೊಳ್ಳುವ ಮೊದಲು ಜೀವನ ಉಳಿಸುವ ನಿಟ್ಟಿನಲ್ಲಿ ನಿಯಮ ಪಾಲಿಸಿ ಮುನ್ನೆಚ್ಚರಿಕೆ ವಹಿಸುವ ಕುರಿತು ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರಿಗೂ ಧೈರ್ಯ ಇರಬೇಕು, ಆದರೆ ಭಂಡತನ ಇರಬಾರದು ಎಂದರು.ಇದೇ ವೇಳೆ ಡಿ.ಕೆ.ಶಿವಕುಮಾರ್, ಮಕ್ಕಳಲ್ಲಿ ರಸ್ತೆ ಸುರಕ್ಷತೆ ನಿಯಮ ಪಾಲನೆಗೆ ಪ್ರೋತ್ಸಾಹಿಸು ಮೊಳಕೆಯಲ್ಲೆ ತಿದ್ದಿರಿ ಎಂಬ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. +ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಆಯೋಜಿಸಲಾಗಿದ್ದ ವಿವಿಧ ಮಳಿಗೆಗಳನ್ನು ಮುಖ್ಯಮಂತ್ರಿ ಪರಿಶೀಲನೆ ನಡೆಸಿದರು. ರಸ್ತೆ ಸುರಕ್ಷಾ ನಾಯಕರಾಗುವ ಪ್ರತಿಜ್ಞೆ ತೊಡಲು ಬಳಕೆ ಮಾಡುವ ಇ-ಪ್ಲೆಡ್ಜ್ ಕ್ಯೂರ್ ಕೋಡ್ ಅನ್ನು ಅನಾವರಣ ಮಾಡಿದರು. ದೇಶದಲ್ಲೇ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಳಕೆ ಮೂಲಕ ಸಂಚಾರ ನಿಯಂತ್ರಿಸುವ ಬೆಂಗಳೂರು ಟ್ರಾಫಿಕ್ ಇಂಜಿನ್ ವ್ಯವಸ್ಥೆಗೆ ಚಾಲನೆ ನೀಡಿದರು. +ಇತರರ ಪ್ರಾಣ ರಕ್ಷಣೆ ಹೊಣೆ ನಿಭಾಯಿಸಿ:ಸಂಚಾರ ವಿಭಾಗದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದ್ದ ಪೊಲೀಸ್, ಗೃಹರಕ್ಷಕ ಹಾಗೂ ಇತರ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಗರದಲ್ಲಿ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಅಗತ್ಯ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು. ದೇಶದಲ್ಲಿನ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀರ ಕಡಿಮೆಯಾಗಿದೆ. ಕಮಾಂಡ್ ಸೆಂಟರ್‍ನಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲಾಗುತ್ತಿದೆ. +ಜನರು ಮತ್ತಷ್ಟು ಸುರಕ್ಷಿತವಾಗಿ ಸಂಚರಿಸುವ ದೃಷ್ಟಿಯಿಂದ ತಂತ್ರಜ್ಞಾನ ಬಳಸಲಾಗುವುದು ಎಂದರು.ವಾಹನ ಚಾಲನೆ ವೇಳೆ ನಮ್ಮ ಸುರಕ್ಷತೆಯ ಜೊತೆಗೆ ಬೇರೆಯವರ ಪ್ರಾಣ ರಕ್ಷಣೆಯ ಹೊಣೆ ನಮ್ಮ ಮೇಲಿದೆ. ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಅನಾಹುತಗಳನ್ನು ತಪ್ಪಿಸಬಹುದು ಎಂದು ತಿಳಿಸಿದರು. +ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ವಾಹನಗಳಿವೆ. 2023ರಲ್ಲಿ 900 ಜನ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಜನರಿಗೆ ಟ್ರಾಫಿಕ್ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. +ಸದಾಶಿವನಗರದ ಸಂಚಾರಿ ಪೊಲೀಸ್‍ಠಾಣೆಯ ಇನ್ಸ್‍ಪೆಕ್ಟ್ ಆರ್.ಪಿ.ಅಶೋಕ್ ಸೇರಿದಂತೆ ಅನೇಕ ಸಿಬ್ಬಂದಿಗಳು ಪ್ರಶಸ್ತಿ ಸ್ವೀಕರಿಸಿದರು. ರಸ್ತೆ ಸುರಕ್ಷತೆ ಜಾಗೃತಿಯಲ್ಲಿ ಮುಂಚೂಣಿ ಪಾತ್ರ ವಹಿಸಿದ್ದ ಸೆಂಟ್ ಮಾರ್ಕ್ ಇಂಗ್ಲಿಷ್ ಶಾಲೆ, ಎಸ್‍ಜೆಆರ್ ಸ್ಕೂಲ್, ಲಿಟ್ಲಫ್ಲವರ್, ಗ್ರಿನ್ ವ್ಯಾಲಿ ಸ್ಕೂಲ್ ಸೇರಿ ಮತ್ತಿತರ ಶಾಲೆಗಳಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು. +ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ರಿಜ್ವಾನ್ ಅರ್ಹದ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಸುಧಾಮ್‍ದಾಸ್, ನಗರ ಪೊಲೀಸ್ ಆಯುಕ್ತ ಬಿ ದಯಾನಂದ, ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_262_2.txt b/eesanje/url_46_262_2.txt new file mode 100644 index 0000000000000000000000000000000000000000..3b901e2df57decd2682d807c17e5bbbb53020360 --- /dev/null +++ b/eesanje/url_46_262_2.txt @@ -0,0 +1,7 @@ +ಕೆಪಿಎಸ್‍ಸಿ ಸಂಘರ್ಷದಲ್ಲಿ ಉದ್ಯೋಗವಿಲ್ಲದೆ ನಲುಗುತ್ತಿರುವ ಅಭ್ಯರ್ಥಿಗಳು +ಬೆಂಗಳೂರು, ಜ.14- ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯವೈಖರಿಯಿಂದ ಸಹಸ್ರಾರು ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಬಧಿಸತ್ತಿದ್ದಾರೆ. ಆಯೋಗದ ಒಟ್ಟು ನಡವಳಿಕೆಯಿಂದ ತಮಗೆ ಭವಿಷ್ಯವೇ ಇಲ್ಲವೇನೋ ಎಂಬ ಹತಾಶ ಭಾವನೆಗೆ ತಲುಪುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುರೇಶ್‍ಕುಮಾರ್ ತಿಳಿಸಿದ್ದಾರೆ. +ಇದೀಗ ಲೋಕಸೇವಾ ಆಯೋಗದ ಮತ್ತೋರ್ವ ಕಾರ್ಯದರ್ಶಿ ಮತ್ತು ಆಯೋಗದ ಸದಸ್ಯರ ನಡುವೆ ಯಥಾ ಪ್ರಕಾರ ಸಂಘರ್ಷ ಪ್ರಾರಂಭವಾಗಿದೆ. ಈ ಕುರಿತು ನಾನು ನಿರಂತರವಾಗಿ ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದೇನೆ. ಇವರಿಬ್ಬರ ನಡುವಿನ ಜಗಳದಲ್ಲಿ ಉದ್ಯೋಗಾಕಾಂಕ್ಷಿಗಳು ಬಡವಾಗುತ್ತಿದ್ದಾರೆ ಎಂದರು. ಒಟ್ಟು ಈ ಲೋಕ ಸೇವಾ ಆಯೋಗದ ವಿಳಂಬ ಪ್ರವೃತ್ತಿ ವಿರುದ್ಧ ಲೋಕಸೇವಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡ ಶಾಂತಕುಮಾರ್ ಅವರನ್ನು ಬಂಧಿಸಿ ಜೈಲಿಗೆ ಕಳಿಸಿರುವುದು ಅತ್ಯಂತ ನಿರ್ದಯಿ ಕ್ರಮ ಎಂದು ತಿಳಿಸಿದರು. +ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ +ಕರ್ನಾಟಕ ಲೋಕಾ ಸೇವಾ ಆಯೋಗ, ಕೇವಲ ತಕರಾರು ಮಾಡುವ ಜಾಯಮಾನ ತೊರೆದು, ಒಂದು ಕಾಲಮಿತಿಯಲ್ಲಿ ಕೆಲಸ ಮಾಡಿ ಯಶಸ್ವಿ ಅಭ್ಯರ್ಥಿಗಳ ಪಟ್ಟಿಗಳನ್ನು ಬಿಡುಗಡೆ ಮಾಡುವ ಕಾರ್ಯ ಮಾಡುತ್ತಿದ್ದರೆ ಈ ಯುವಕ ಪ್ರತಿಭಟನೆ ಮಾಡುವ ಅವಶ್ಯಕತೆಯೇ ಇರಲಿಲ್ಲ. ಆದರೆ ಈ ಯುವಕರ ಕೂಗು ಆಯೋಗದ ಕಚೇರಿಯಿಂದ ಅನತಿ ದೂರದಲ್ಲೆ ಇರುವ ವಿಧಾನಸೌಧಕ್ಕೆ ಮುಟ್ಟದಿರುವುದು ವಿಷಾದಕರ ಎಂದರು. + ಯಲ್ಲಿ ಅಧ್ಯಕ್ಷರೇ ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಯವರೆಗೂ ಲಕ್ಷ ಲಕ್ಷ ಕೋಟಿ ಕೋಟಿ ಗಳಿಗೆ ಹುದ್ದೆಗಳನ್ನು ಹರಾಜು ಹಾಕಿ ಭ್ರಷ್ಟರ ಕೊಂಪೆಯನ್ನಾಗಿ ಪರಿವರ್ತಿಸಿದ್ದಾರೆ ಈ ಅನ್ಯಾಯವನ್ನು ಪ್ರಶ್ನಿಸಲು ಹೋಗಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷರಾದ ಕಾಂತಕುಮಾರ್ ಅವರನ್ನು ಈ ರೀತಿ ಬಂಧಿಸಬಹುದೇ ?../ +ಇನ್ನಷ್ಟು ಪ್ರತಿಭಟನೆಗಳು ಆಗದಂತೆ ತಡೆಯಲು, ಈ ಯುವ ಆಕಾಂಕ್ಷಿಗಳು ಸಿನಿಕ ರಾಗದಂತೆ ಎಚ್ಚರ ವಹಿಸಲು ಕ್ರಮ ಅಗತ್ಯವಿದೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಆಯೋಗದ ಅಧ್ಯಕ್ಷರಿಗೆ ಮತ್ತು ಸದಸ್ಯರುಗಳಿಗೆ ಅಗತ್ಯ ತಿಳುವಳಿಕೆ ನೀಡಬೇಕೆಂದು, ಆಯೋಗವು ತನ್ನ ಮೂಲ ಉದ್ದೇಶಕ್ಕೆ ಅನುಗುಣವಾಗಿ ಕೆಲಸ ಮಾಡುವಂತೆ ಸೂಚನೆ ನೀಡಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಅವರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_262_3.txt b/eesanje/url_46_262_3.txt new file mode 100644 index 0000000000000000000000000000000000000000..0ad5f492f5d204f8488a3d323d904f0c42dd92ac --- /dev/null +++ b/eesanje/url_46_262_3.txt @@ -0,0 +1,5 @@ +ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಕಾರು ಅಪಘಾತ +ಕಲಬುರಗಿ,ಜ.14- ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಅವರು ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ನಗರದ ಹೊರವಲಯದ ಪಾಳಾ ಗ್ರಾಮದ ಬಳಿ ನಡೆದಿದೆ. ಶಾಸಕ ಹಾಗೂ ಅವರ ಜೊತೆಗಿದ್ದ ಗನ್ ಮ್ಯಾನ್ ಮತ್ತು ಆಪ್ತ ಸಹಾಯಕ ಕೂಡ ಗಾಯಗೊಂಡಿದ್ದು, ಚಾಲಕ ಗಂಭಿರವಾಗಿ ಗಾಯಗೊಂಡಿದ್ದಾನೆ. +ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ +ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಯುನಿವರ್ಸಿಟಿ ಠಾಣೆ ಪೊಲೀಸರು ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗಳು ಗಾಯಾಳುಗಳನ್ನ ಕಲಬುರಗಿ ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ತಮ್ಮ ಇನ್ನೋವಾ ಕಾರಿನಲ್ಲಿ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದುಶಾಸಕರ ಪತ್ನಿ ಜಯಶ್ರೀ ಅವರು ಆಸ್ಪತ್ರೆಗೆ ಧಾವಿಸಿದ್ದಾರೆ. +ಅಪಘಾತಕ್ಕೆ ನಿಖರ ಕಾರಣ ಗೊತ್ತಾಗುತ್ತಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. \ No newline at end of file diff --git a/eesanje/url_46_262_4.txt b/eesanje/url_46_262_4.txt new file mode 100644 index 0000000000000000000000000000000000000000..c4d6802f51cd2e25da771e829250465091407e94 --- /dev/null +++ b/eesanje/url_46_262_4.txt @@ -0,0 +1,9 @@ +ಕಾಂಗ್ರೆಸ್ ನಾಯಕರ ವಿರುದ್ಧವೂ ದೂರು ದಾಖಲಿಸಿ : ಅಶ್ವಥ್‍ನಾರಾಯಣ +ಬೆಂಗಳೂರು,ಜ.14-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಟೀಕೆ ಮಾಡಿರುವುದು ಕಾನೂನು ಬಾಹಿರವಾದರೆ ಅದಕ್ಕೂ ಮೊದಲು ಇದೇ ಮಾತುಗಳನ್ನು ಆಡಿರುವ ಕಾಂಗ್ರೆಸ್ ನಾಯಕರ ವಿರುದ್ಧವೂ ದೂರು ದಾಖಲಿಸಬೇಕಾಗುತ್ತದೆ ಎಂದು ಮಾಜಿ ಸಚಿವ, ಶಾಸಕ ಡಾ.ಸಿ.ಎನ್.ಅಶ್ವಥ್‍ನಾರಾಯಣ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅನಂತಕುಮಾರ್ ಹೆಗಡೆ ಹೇಳಿರುವುದನ್ನು ಸರಿ ಎಂದು ಹೇಳುವುದಿಲ್ಲ. ರಾಜಕಾರಣದಲ್ಲಿ ಈ ರೀತಿ ಪದಪ್ರಯೋಗ ಮಾಡುವುದು ಸರ್ವೇ ಸಾಮಾನ್ಯ. ಹೀಗೆ ಮಾತನಾಡಿದ್ದಕ್ಕೆ ದೂರು ದಾಖಲಿಸುವುದಾದರೆ ಕಾಂಗ್ರೆಸ್ ನಾಯಕರ ವಿರುದ್ದವೂ ಬಹಳಷ್ಟು ದೂರುಗಳು ದಾಖಲಾಗಬೇಕಾಗುತ್ತದೆ ಎಂದು ತಿರುಗೇಟು ನೀಡಿದರು. +ರಾಜಕಾರಣದಲ್ಲಿ ತೊಡೆತಟ್ಟಿದವರನ್ನು ನೋಡಿದ್ದೇವೆ. ಬಹಿರಂಗ ಚರ್ಚೆಗೆ ಪಂತಾಹ್ವಾನ ಕೊಟ್ಟಿರುವುದನ್ನು ನೋಡಿದ್ದೇವೆ .ಸದನದ ಹೊರಗೆ, ಒಳಗೆ ಉಗ್ರವಾಗಿ ಮಾಡಿದವರೂ ಇದ್ದಾರೆ. ಅನಂತಕುಮಾರ್ ಹೆಗೆಡೆ ಹೇಳಿಕೆಯನ್ನು ನಾನು ಸಮರ್ಥಿಸುವುದಿಲ್ಲ. ಪ್ರತಿಯೊಬ್ಬರಿಗೂ ನಾವು ಗೌರವ ಕೊಡಬೇಕು. ಇಂತಹ ತಪ್ಪುಗಳಾದಾಗ ಸರಿಪಡಿಸಬೇಕೆಂದು ಅಭಿಪ್ರಾಯಪಟ್ಟರು. +ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ನಾಯಕರಿಗೆ ಏಕವಚನದಲ್ಲಿ ಮಾತನಾಡಿರುವ ನೂರಾರು ನಿದರ್ಶನಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಯಾರ್ಯಾರಿಗೆ ಯಾವ ಭಾಷೆ ಬಳಸಿ ಮಾತನಾಡಿದ್ದಾರೆ ಎಂಬುದು ನಮಗೂ ಗೊತ್ತು. ಕಾಂಗ್ರೆಸ್ ನಾಯಕರು ಏಕವಚನ ಪದ ಪ್ರಯೋಗ ಮಾಡಿರುವುದಕ್ಕೆ ನಾನು ನೂರಾರು ಉದಾರಹಣೆಗಳನ್ನು ಕೊಡಬಲ್ಲೆ. ಅನಂತಕುಮಾರ್ ಹೆಗಡೆ ವಿರುದ್ಧ ದೂರು ದಾಖಲಿಸುವುದಾದರೆ ಮೊದಲು ನಿಮ್ಮ ವಿರುದ್ಧ ದೂರು ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. +ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಅಗತ್ಯ : ಲೆಟರ್ಮ್ +ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ನ್ಯಾಯ್ ಯಾತ್ರೆ ಆರಂಭವಾಗಿದೆ. ಪ್ರತಿಪಕ್ಷಗಳು ತಮ್ಮದೇ ಆದ ಕಾರ್ಯಕ್ರಮ ಹಮ್ಮಿಕೊಂಡಿವೆ. ಇದಕ್ಕೆ ನಮ್ಮದೇನು ಅಭ್ಯಂತರವಿಲ್ಲ. ಆದರೆ ನಿಮಗೆ ಯಾತ್ರೆಯ ಉದ್ದೇಶವಾದರೂ ಏನು? ಯಾವ ಕಾರಣಕ್ಕಾಗಿ ಇದನ್ನು ನಡೆಸುತ್ತೀದ್ದೀರಿ. ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಯಾತ್ರೆ ನಾಟಕ ಪ್ರಾರಂಭ ಮಾಡಿದೆ ಎಂದು ವ್ಯಂಗ್ಯವಾಡಿದರು. +500 ವರ್ಷಗಳಿಂದ ಉಂಟಾಗಿದ್ದ ಅನ್ಯಾಯವನ್ನು ಪ್ರಧಾನಿ ನರೇಂದ್ರಮೋದಿ ಸರ್ಕಾರ ಸರಿಪಡಿಸುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಭಾಗವಹಿಸಬೇಕಿತ್ತು. ಈ ಕಾರ್ಯಕ್ರಮವನ್ನು ಇಡೀ ದೇಶದ ಜನತೆಯೇ ಎದುರು ನೋಡುತ್ತಿದೆ. ಇದಕ್ಕೆ ಭಾರತಕ್ಕೆ ಗೌರವ ತರುವ ಕೆಲಸ ಎಂದು ಹೇಳಿದರು. +ಇಂಥ ಸಂದರ್ಭದಲ್ಲೇ ಭಾರತ್ ಯಾತ್ರೆ ನಡೆಸುವ ಅಗತ್ಯವಿರಲಿಲ್ಲ. ಜ.22ರ ನಂತರ ನೀವು ಯಾತ್ರೆಯನ್ನು ನಡೆಸಬಹುದಿತ್ತು. ಜನರು ಇದಕ್ಕೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಎಚ್ಚರಿಸಿದರು. \ No newline at end of file diff --git a/eesanje/url_46_262_5.txt b/eesanje/url_46_262_5.txt new file mode 100644 index 0000000000000000000000000000000000000000..1f17a218290d35b98680e0c1ad02220d4bc34030 --- /dev/null +++ b/eesanje/url_46_262_5.txt @@ -0,0 +1,10 @@ +ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ಬಿಜೆಪಿ ನಾಯಕರು +ಬೆಂಗಳೂರು, ಜ.14- ಅಯೋಧ್ಯಯೆಯಲ್ಲಿ ಶ್ರೀರಾಮಮಂದಿರಲ್ಲಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ದೇಶಾದ್ಯಂತ ದೇವಾಲಗಳ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆಗೆ ವ್ಯಾಪಕ ಬೆಂಬಲ ದೊರೆತಿದೆ. +'ರಾಮಮಂದಿರದ ಭವ್ಯ ಸ್ವಾಗತಕ್ಕಾಗಿಸ್ವಚ್ಛತೀರ್ಥ ಅಭಿಯಾನ'ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಶ್ರೀ@narendramodiಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು…../ +ರಾಜ್ಯದಲ್ಲಿ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಜಯನಗರದ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ, ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮಲ್ಲೆಶ್ವರಂನ ಕೋದಂಡರಾಮ ದೇವಸ್ಥಾನದಲ್ಲಿ, ಮೈಸೂರಿನ ಪ್ರತಾಪ್ ಸಿಂಹ ಕೋದಂಡರಾಮ ದೇವಸ್ಥಾನದಲ್ಲಿ, ಮಾಜಿ ಸಚಿವ ಗೋಪಾಲಯ್ಯ ದೊಡ್ಡಮ್ಮ ದೇವಿ ದೇವಾಲಯವನ್ನು ಸ್ವಚ್ಚ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. +"ಜೈ ಶ್ರೀ ರಾಮ್”🛕"ರಾಷ್ಟ್ರಮಂದಿರದ ಭವ್ಯ ಸ್ವಾಗತಕ್ಕಾಗಿಸ್ವಚ್ಛತೀರ್ಥ ಅಭಿಯಾನ". ಶಿಕಾರಿಪುರದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ರಾಜ್ಯದೆಲ್ಲೆಡೆ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ನೆರವೇರಲಿ. ಜನವರಿ 22 ರಂದು ಶ್ರೀರಾಮ ಜ್ಯೋತಿ ಬೆಳಗಲು ಸಿದ್ಧತೆಗಳು ಭಕ್ತಿಪೂರ್ವಕವಾಗಿ…../7vK0R0N6YP +ರಾಮ ಮಂದಿರದ ಭವ್ಯ ಸ್ವಾಗತಕ್ಕಾಗಿ ಜನವರಿ 14ರಿಂದ 22ರವರೆಗೆ ಸ್ವಚ್ಛ ತೀರ್ಥ ಅಭಿಯಾನದ ವೈಯಕ್ತಿಕ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಲ್ಲದೆ, ಮಹಾರಾಷ್ಟ್ರದ ನಾಸಿಕ್‍ನಲ್ಲಿರುವ ಕಲಾರಾಮ್ ಮಂದಿರದಲ್ಲಿ ಖುದ್ದು ಸ್ವಚ್ಚತಾ ಶ್ರಮದಾನದಲ್ಲಿ ಭಾಗಿಯಾಗಿದ್ದರು.ದೇಶದಾದ್ಯಂತ ಇರುವ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. +ಪಕ್ಷಬೇಧ ಮರೆತು ತೀರ್ಥ ಕ್ಷೇತ್ರಗಳ ಸ್ವಚ್ಚತಾ ಅಭಿಯಾನದ ಶ್ರಮದಾನದಲ್ಲಿ ಜನ ಭಾಗವಹಿಸುತ್ತಿದ್ದಾರೆ. ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನೆಯನ್ನು ರಾಷ್ಟ್ರೀಯ ಸಂಭ್ರಮವನ್ನಾಗಿ ಪರಿವರ್ತಿಸಲಾಗಿದೆ. ದೇಶದ ಪ್ರತಿಯೊಂದು ಮನೆಗೂ ಅಕ್ಷತೆಯೊಂದಿಗೆ ಶ್ರೀರಾಮ ಮಂದಿರದ ಕರಪತ್ರಗಳನ್ನು ತಲುಪಿಸಲಾಗಿದೆ. +ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲಾನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಪ್ರಯುಕ್ತ ಇಂದಿನಿಂದ ಜನವರಿ 22ರ ವರೆಗೆ ದೇಶಾದ್ಯಂತ ಇರುವ ಎಲ್ಲಾ ದೇಗುಲಗಳು ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಶ್ರೀ@narendramodiಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ನಮ್ಮ ಮಲ್ಲೇಶ್ವರದ ಕೋದಂಡರಾಮ ದೇವಸ್ಥಾನದ ಆವರಣವನ್ನು…../ +ಜನವರಿ 22ರಂದು ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವೇಳೆಗೆ ಎಲ್ಲಾ ಭಕ್ತರು ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ. ಅದೇ ದಿನ ಸಂಜೆ ತಮ್ಮ ಮನೆಯಲ್ಲಿ ಐದು ದೀಪಗಳನ್ನು ಉತ್ತರಾಭಿಮುಖವಾಗಿ ಹಚ್ಚಿ ಪ್ರಾರ್ಥಿಸುವಂತೆ ಮನವಿ ಮಾಡಲಾಗಿದೆ. +ಜೊತೆಯಲ್ಲಿ ದೇವಸ್ಥಾನಗಳ ಸ್ವಚ್ಚತೆಯಲ್ಲಿ ಶ್ರಮದಾನ ಮಾಡುವಂತೆ ನೀಡಿರುವ ಕರೆಗೆ ವ್ಯಾಪಕ ಸ್ಪಂದನೆ ದೊರೆಯುತ್ತಿದೆ. \ No newline at end of file diff --git a/eesanje/url_46_262_6.txt b/eesanje/url_46_262_6.txt new file mode 100644 index 0000000000000000000000000000000000000000..d048c4c1586dddbf6af1dbbfc61a52928f61baf4 --- /dev/null +++ b/eesanje/url_46_262_6.txt @@ -0,0 +1,8 @@ +ಪ್ರತ್ಯೇಕ ಅಪಘಾತ : ಸ್ವಿಗ್ಗಿ ಮ್ಯಾನೇಜರ್-ಜೊಮೊಟೋ ಡೆಲಿವರಿ ಬಾಯ್ ಸಾವು +ಬೆಂಗಳೂರು,ಜ.13- ನಗರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಸ್ವಿಗ್ಗಿ ಮ್ಯಾನೇಜರ್ ಹಾಗೂ ಜೊಮೊಟೊ ಫುಡ್ ಡೆಲಿವರಿ ಬಾಯ್ ಮೃತಪಟ್ಟಿದ್ದಾರೆ. +ಯಶವಂತಪುರ ಸಂಚಾರ:ಕೆಲಸ ಮುಗಿಸಿಕೊಂಡು ಸ್ವಿಗ್ಗಿ ಮ್ಯಾನೇಜರ್ ಮೋಟಾರ್ ಬೈಕ್‍ನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ಕಬ್ಬಿಣದ ಗ್ರಿಲ್ ಚುಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ. ಮತ್ತಿಕೆರೆ ನಿವಾಸಿ ಅನಿಲ್‍ಕುಮಾರ್(29) ಮೃತಪಟ್ಟ ಸ್ವಿಗ್ಗಿ ಮ್ಯಾನೇಜರ್. +ಕೆಲಸ ಮುಗಿಸಿಕೊಂಡು ಇಂದು ಬೆಳಗಿನ ಜಾವ 12.45ರ ಸಮಯದಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಜೆ.ಪಿ.ಪಾರ್ಕ್ ಟ್ಯಾಂಕ್ ಬಂಡ್ ರಸ್ತೆಯ ಅಕ್ಕಯಮ್ಮ ಬಾರ್ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಕಬ್ಬಿಣದ ಗ್ರಿಲ್ ಆತನ ಎದೆಗೆ ಹಾಗೂ ಕುತ್ತಿಗೆ ಬಳಿ ತಗುಲಿ ತೀವ್ರ ರಕ್ತಸ್ರಾವವಾಗಿ ಸ್ವಲ್ಪ ದೂರ ಉಜ್ಜಿಕೊಂಡು ಹೋಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಎಚ್‍ಎಎಲ್ ಏರ್‍ಪೋರ್ಟ್: ಜೊಮೊಟೊ ಫುಡ್ ಡೆಲಿವರಿ ಬಾಯ್ ಇಂದು ಬೆಳಗಿನ ಜಾವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಕ್ಯಾಬ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಏರ್‍ಪೋರ್ಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಉತ್ತರಪ್ರದೇಶದ ರಾಜೇಶ್‍ಕುಮಾರ್(32) ಮೃತಪಟ್ಟ ಫುಡ್ ಡೆಲಿವರಿ ಬಾಯ್. +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ಇಂದಿರಾನಗರದಲ್ಲಿ ವಾಸವಾಗಿದ್ದ ರಾಜೇಶ್‍ಕುಮಾರ್ ಅವರು ಕೆಲಸ ಮುಗಿಸಿಕೊಂಡು ಇಂದು ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ ದ್ವಿಚಕ್ರ ವಾಹನದಲ್ಲಿ ಸುರಂಜನ್‍ದಾಸ್ ರಸ್ತೆಯಲ್ಲಿ ಎಚ್‍ಎಎಲ್ ಮುಖ್ಯಗೇಟ್ ಕಡೆಯಿಂದ ಜೆಬಿನಗರ ಕ್ರಾಸ್ ಕಡೆಗೆ ಹೋಗುತ್ತಿದ್ದಾಗ ಅದೇ ಸಮಯಕ್ಕೆ ಹಿಂದಿನಿಂದ ಬರುತ್ತಿದ್ದ ಕ್ಯಾಬ್ ಅತಿವೇಗದಿಂದಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಕೆಳಗೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿದೆ. +ತಕ್ಷಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದರಾದರೂ ವೈದ್ಯರು ಪರೀಕ್ಷಿಸಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಈ ಬಗ್ಗೆ ಎಚ್‍ಎಎಲ್ ಏರ್‍ಪೊರ್ಟ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತವೆಸಗಿದ ಕ್ಯಾಬ್ ಹಾಗೂ ಚಾಲಕನ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_262_7.txt b/eesanje/url_46_262_7.txt new file mode 100644 index 0000000000000000000000000000000000000000..5a64fadee768166e23fa87cf89ba37b394bc71c2 --- /dev/null +++ b/eesanje/url_46_262_7.txt @@ -0,0 +1,10 @@ +ಸಂಕ್ರಾಂತಿ ಮೇಲೆ ಬರದ ಕರಿನೆರಳು, ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಸಜ್ಜು +ಬೆಂಗಳೂರು,ಜ.13- ಸುಗ್ಗಿ ಹಬ್ಬ ಸಂಕ್ರಾಂತಿ ಬಂತೆಂದರೆ ಹಳ್ಳಿಗಳಲ್ಲಿ ಎಲ್ಲಿಲ್ಲದ ಸಂಭ್ರಮ. ಕಷ್ಟಪಟ್ಟು ಬೆಳೆದ ಬೆಳೆಯನ್ನು ಒಂದೆಡೆ ರಾಶಿಹಾಕಿ ಪೂಜಿಸುವುದು. ವರ್ಷವಿಡಿ ರೈತನ ಬೆನ್ನೆಲುಬಾಗಿ ದುಡಿದ ಎತ್ತುಗಳನ್ನು ಸಿಂಗರಿಸಿ ಪೂಜೆ ಮಾಡಿ ಕಿಚ್ಚಾಯಿಸುವುದನ್ನು ನೊಡುವುದೆ ಒಂದು ಸಂಭ್ರಮ. +ಈ ಬಾರಿ ಸಂಂಕ್ರಾತಿಗೆ ನಗರದ ಜನತೆ ಸಜ್ಜಾಗುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಸಂಕ್ರಾಂತಿ ಸೊಗಡಿಲ್ಲದಂತಾಗಿದೆ. ರಾಜ್ಯಾದ್ಯಂತ ಬರ ಆವರಿಸಿದ್ದು ಈ ಬಾರಿ ಉತ್ತಮ ಮಳೆಯಾಗದೆ, ಬೆಳೆಯಾಗದೆ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಯೇ ಇಲ್ಲ ಅಂದಮೇಲೆ ಇನ್ನೆಲ್ಲಿ ರಾಶಿ ಪೂಜೆ ಎಂದು ರೈತರು ಈ ಬಾರಿಯ ಹಬ್ಬವನ್ನು ನಿರಾಸೆಯಿಂದ ಆಚರಿಸುವಂತಾಗಿದೆ. +ರಸಗೊಬ್ಬರದ ಬೆಲೆ ಏರಿಕೆ, ನೀರಿನ ಸಮಸ್ಯೆ ಹಾಗೂ ಕೂಲಿಯಾಳುಗಳ ಕೊರತೆಯಿಂದ ವ್ಯವಸಾಯ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದ್ದು, ಜಮೀನುಗಳು ಪಾಳು ಬೀಳುತ್ತಿವೆ. ಆದರೆ ಇನ್ನೂ ಕೆಲವರು ನಮ್ಮ ಸಂಪ್ರಾದಾಯ ಬಿಡಬಾರದೆಂದು ಕಷ್ಟವೋ ಸುಖಾವೋ ಎಂದು ಕೃಷಿ ಮಾಡುತ್ತಿದ್ದಾರೆ. ಆದರೆ ಸಾಂಪ್ರಾದಾಯಕ ಕೃಷಿಯಲ್ಲಿ ಯಂತ್ರದ ಕೃಷಿ ಮಾಡುವಂತಾಗಿದೆ. +ಇದು ಅನಿವಾರ್ಯವೂ ಹೌದು. ಮೊದಲೆಲ್ಲಾ ಎತ್ತುಗಳಿಂದ ಜಮೀನು ಉತ್ತಿ ಹದಗೊಳಿಸಿ, ಬಿತ್ತನೆ ಮಾಡಿ ಕಳೆ ಕಿತ್ತು, ಫಸಲು ಬಂದ ಮೇಲೆ ಒಕ್ಕಣೆ ಮಾಡಿ ರಾಶಿ ಮಾಡಿ ಪೂಜೆ ಸಲ್ಲಿಸಿ ಮನೆಗೆ ತರುವುದೆ ಒಂದು ಸಂಭ್ರಮ. ಆದರೆ ಇಂದು ಎಲ್ಲವೂ ಯಂತ್ರಮಯವಾಗಿಬಿಟ್ಟಿದೆ. ಜಮೀನು ಉಳುಮೆ ಮಾಡುವುದರಿಂದ ಹಿಡಿದು ಮನೆಗೆ ತರುವವರೆಗೂ ಎಲ್ಲಾ ಯಂತ್ರಗಳೇ. ರಾಶೀನು ಇಲ್ಲ ಪೂಜೆನೂ ಇಲ್ಲದಂತಾಗಿದೆ. +ರಾಮಮಂದಿರ ಉದ್ಘಾಟನೆ ದಿನದಂದು ಮಾರಿಷಸ್‍ನಲ್ಲಿ 2 ಗಂಟೆ ವಿಶೇಷ ರಜೆ +ಕಣ್ಮರೆಯಾದ ಎತ್ತುಗಳು:ಹಳ್ಳಿಗಳಲ್ಲಿ ಹಿಂದೆ ಪ್ರತಿಯೊಬ್ಬರ ಮನೆಯಲ್ಲೂ ಒಂದು ಜೊತೆ ಎತ್ತುಗಳನ್ನು ಕಟ್ಟಲಾಗುತ್ತಿತ್ತು. ಇಂದು ಊರೆಲ್ಲಾ ಉಡುಕಿದರೂ ಎತ್ತುಗಳು ಸಿಗೋದಿಲ್ಲ. ಕೆಲವರು ಪ್ರತಿಷ್ಠೆಗಾಗಿ ಮಾತ್ರ ಸಾಕುತ್ತಾರೆ ಅಷ್ಟೆ . ಎಲ್ಲವೂ ವ್ಯವಹಾರಮಯವಾಗಿಬಿಟ್ಟಿದ್ದು, ಸೀಮೆಹಸುಗಳ ಸಾಕಾಣಿಕೆಯಲ್ಲಿ ತೊಡಗಿದ್ದಾರೆ. ಹಾಗಾಗಿ ಹಳ್ಳಿಗಳಲ್ಲಿ ಸಂಕ್ರಾಂತಿ ಹಬ್ಬದಂದು ಕಿಚ್ಚು ಹಾಯಿಸುವವರು ಇಲ್ಲದಂತಾಗಿದೆ. +ಯುವಜನತೆ ಕೆಲಸ ಅಂತಾ ಪಟ್ಟಣ ಸೇರುತ್ತಿದ್ದಾರೆ. ಹಾಗಾಗಿ ಬೆಳೆಯುವವರಿಲ್ಲ, ತಿನ್ನುವವರೇ ಹೆಚ್ಚಾಗಿರುವಾಗ ಬೆಲೆ ಏರಿಕೆ ಅನಿವಾರ್ಯವಾಗಿದೆ. ಸುಗ್ಗಿಸಂಭ್ರಮ ಹಳ್ಳಿಗಳನ್ನು ಬಿಟ್ಟು ನಗರ ಸೇರಿದರೆ ನಗರದಲ್ಲಿ ಹಬ್ಬದ ದಿನ ದೇವಾಲಯಗಳಲ್ಲಿ ಪೂಜೆ ಮಾಡಿ ಒಂದಷ್ಟು ಗೆಣಸು, ಕಡಲೆಕಾಯಿ, ಕಬ್ಬು ತಂದು ಹಬ್ಬ ಮಾಡುತ್ತಾರೆ. ಜತೆಗೆ ಕೃತಕವಾಗಿ ಹಳ್ಳಿ ವಾತಾವರಣ ನಿರ್ಮಾಣ ಮಾಡಿ ಸಂಭ್ರಮಿಸುವ ಕಾಲ ಬಂದಿದೆ. +ಬೆಲೆ ಏರಿಕೆ ನಡುವೆಯೂ ನಗರದ ಜನರು ಸುಗ್ಗಿಹಬ್ಬಕ್ಕೆ ತಯಾರಾಗುತ್ತಿದ್ದಾರೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ಪಟ್ಟಣ ತಾಲೂಕು ಕೇಂದ್ರದ ಮಾರುಕಟ್ಟೆಗಳಲ್ಲಿ ಕಡಲೆಕಾಯಿ, ಆವರೆಕಾಯಿ, ಕಬ್ಬು, ಗೆಣಸು, ಮಿಶ್ರಿತ ಎಳ್ಳು-ಬೆಲ್ಲ ಮಾರಾಟ ಜೋರಾಗಿದೆ.ಈ ಬಾರಿ ಬರ ಆವರಿಸಿದ್ದು, ಬೆಳೆ ಬಾರದ ಹಿನ್ನೆಲೆಯಲ್ಲಿ ಆವರೆಕಾಯಿ, ಕಡಲೆಕಾಯಿ, ಕಬ್ಬು, ಗೆಣಸು ಮಾರುಕಟ್ಟೆಗೆ ಬಾರದೆ ಆಂಧ್ರ, ತಮಿಳುನಾಡಿನಿಂದ ಬಂದಿದ್ದು ಬೆಲೆ ಏರಿಕೆಯಾಗಿದೆ. +ಸೊಗಡಿಲ್ಲದೆ ಆವರೆ:ಆವರೆಕಾಯಿ ಸೇಗಡೇ ಒಂದು ರೀತಿಯಲ್ಲಿ ಚೆಂದ. ಅದರಲ್ಲೂ ಮಾಗಡಿ ಆವರೆ ಎಂದರೆ ಹೆಸರುವಾಸಿ. ಮಳೆ ಬಾರದೆ ದಿನ್ನೆ ಆವರೆ ಇಲ್ಲದೆ ನೀರಾವರಿಯಲ್ಲಿ ಬೆಳೆದ ಬೆಳೆ ಮಾರುಕಟ್ಟೆಗೆ ಬಂದಿದ್ದು, ಸೊಗಡೇ ಇಲ್ಲದಂತಾಗಿದೆ. ಜೊತೆಗೆ ನಾಟಿ ಆವರೆ ಸಿಗೋದೆ ಕಡಿಮೆ. ಎಲ್ಲವೂ ಫಾರಂ ಆವರೆ ಆಗಿ ಬಿಟ್ಟಿದೆ. ಹೇಗೂ ಹಬ್ಬ ಮಾಡಲೇಬೇಕಲ್ಲಾ ಎಂದು ಜನರು ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದು, ಮಾರುಕಟ್ಟೆಗಳಲ್ಲಿ ಇಂದಿನಿಂದಲೇ ಖರೀದಿ ಭರಾಟೆ ಜೋರಾಗಿದೆ. \ No newline at end of file diff --git a/eesanje/url_46_262_8.txt b/eesanje/url_46_262_8.txt new file mode 100644 index 0000000000000000000000000000000000000000..1ba3c1764197da567e97db7664c6d5a0fce566ca --- /dev/null +++ b/eesanje/url_46_262_8.txt @@ -0,0 +1,6 @@ +ಪತಿಯನ್ನು ಕೊಂದು ನಾಟಕವಾಡಿದ್ದ ಪತ್ನಿ, ಪ್ರಿಯಕರ ಖಾಕಿ ಬಲೆಗೆ +ಬೆಂಗಳೂರು, ಜ.13- ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಮಾಡಿ ಹೃದಯಘಾತವೆಂದು ಬಿಂಬಿಸಲು ಯತ್ನಿಸಿದ್ದ ಖತರ್ನಾಕ್ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಎಚ್‍ಎಸ್‍ಆರ್ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದ ಸತ್ಯಸಾಯಿ ತಾಲ್ಲೂಕಿನ ನಂದಿನಿ ಬಾಯಿ ಹಾಗೂ ತನ್ನ ಊರಿನವನೇ ಆದ ಪ್ರಿಯಕರ ಬಂಧಿತರು. +ಎಚ್‍ಎಸ್‍ಆರ್ ಲೇಔಟ್‍ನ ಮನೆಯಲ್ಲಿ ನಂದಿನಿ ಬಾಯಿ ಪತಿ ವೆಂಕಟ್‍ನಾಯಕ್ (30) ಜೊತೆ ವಾಸವಾಗಿದ್ದಳು. ವೆಂಕಟ್‍ನಾಯಕ್ ಅವರು ಸೇಲ್ಸ್ ಎಕ್ಸಿಕ್ಯೊಟಿವ್ ಕೆಲಸ ಮಾಡುತ್ತಿದ್ದರು. ಮದುವೆಯಾಗಿದ್ದರೂ ಸಹ ನಂದಿನಿ ಬಾಯಿ ತನ್ನ ಪ್ರಿಯಕರನನ್ನು ಮರೆತಿರಲಿಲ್ಲ, ಆತನೂ ಸಹ ಈಕೆಯನ್ನಿ ಭೇಟಿಯಾಗಲು ಆಗಾಗ್ಗೆ ಆಂದ್ರದಿಂದ ನಗರಕ್ಕೆ ಬರುತ್ತಿದ್ದನು. ಈ ನಡುವೆ ಜ.9ರಂದು ಪತಿ ವೆಂಕಟ್‍ನಾಯಕ್ ಕೆಲಸಕ್ಕೆ ಹೋಗಿದ್ದಾಗ ಪ್ರಿಯಕರನನ್ನು ನಂದಿನಿ ಮನೆಗೆ ಕರೆಸಿಕೊಂಡಿದ್ದಾಳೆ. ಆ ಸಂದರ್ಭದಲ್ಲಿ ದಿಡೀರ್ ಪತಿ ಮನೆಗೆ ಬಂದಿದ್ದಾರೆ. +ಪತ್ನಿ ಬೇರೆ ವ್ಯಕ್ತಿ ಜೊತೆ ಸಲುಗೆಯಿಂದ ಇರುವುದನ್ನು ನೋಡಿ ಕೋಪಗೊಂಡು ನಂದಿನಿ ಜೊತೆ ಜಗಳವಾಡಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೇರಿದೆ. ಆ ವೇಳೆ ನಂದಿನಿ ಪ್ರಿಯಕರನೊಂದಿಗೆ ಸೇರಿಕೊಂಡು ವೆಂಕಟ್‍ನಾಯಕ್ ಅವರ ತಲೆ ಮೇಲೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಮೃತದೇಹವನ್ನು ಮನೆ ಹೊರಗಿನ ಶೌಚಾಲಯದ ಬಳಿಯಿಟ್ಟು ಹೃದಯಘಾತವೆಂದು ಬಿಂಬಿಸಲು ಯತ್ನಿಸಿ ನಂತರ ಕಲ್ಲಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆಂದು ಪೊಲೀಸರಿಗೆ ನಂದಿನಿ ತಿಳಿಸಿದ್ದಾಳೆ. +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ಅಂದು ಪೊಲೀಸರು ಅಸಹಜ ಸಾವೆಂದು ದಾಖಲಿಸಿಕೊಂಡು, ನಂತರ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದಾಗ, ದೂರು ಕೊಟ್ಟ ನಂದಿನಿ ಮೇಲೆಯೇ ಅನುಮಾನ ಬಂದು ಆಕೆಯ ಚಲನವಲನ ಗಮನಿಸುತ್ತಿದ್ದರು. ಈ ನಡುವೆ ಮರಣೋತ್ತರ ವರದಿ ಬಂದಾಗ ವೆಂಕಟನಾಯಕ್ ಕೊಲೆಯಾಗಿರುವುದು ಗೊತ್ತಾಗಿದೆ. ಬಳಿಕ ನಂದಿನಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಕಣ್ಣೀರಿಡುತ್ತಾ ಮತ್ತೆ ನಾಟಕವಾಡಿದ್ದಾಳೆ. ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಿಸಿದಾಗ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಗಿ ಬಾಯಿಬಿಟ್ಟಿದ್ದಾಳೆ. ಸದ್ಯ ಇಬ್ಬರನ್ನೂ ಬಂಧಿಸಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. \ No newline at end of file diff --git a/eesanje/url_46_262_9.txt b/eesanje/url_46_262_9.txt new file mode 100644 index 0000000000000000000000000000000000000000..03a3909ba5b3c96c6dee3f22316c446604f56336 --- /dev/null +++ b/eesanje/url_46_262_9.txt @@ -0,0 +1,7 @@ +2 ಕೋಟಿ ಮೌಲ್ಯದ ನಕಲಿ ಮೈಸೂರು ಸ್ಯಾಂಡಲ್ ಸಾಬೂನು ವಶ +ಬೆಂಗಳೂರು, ಜ.13- ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದ್‍ನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಸಲಾಗಿದೆ. ಮಾಲಕಪೇಟೆ ಪೊಲೀಸರು ದೂರು ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. +ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆಎಸ್‍ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು ಎಂದು ವಿವರಿಸಲಾಗಿದೆ. +ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟವಾಗುತ್ತಿರುವುದು ಕಂಡುಬಂದಿತ್ತು. ಆದರೆ, ಅದನ್ನು ಯಾರು ಪೂರೈಸುತ್ತಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಕೆಎಸ್‍ಡಿಎಲ್ ಸಿಬ್ಬಂದಿ ಸ್ವತಃ ಒಂದು ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ, ಅದರ ಮೂಲ ಪತ್ತೆಗೆ ಕಾರ್ಯಪವೃತ್ತರಾದರು. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂಪಾಯಿ ಬೆಲೆಯ ಸೋಪು ಖರೀದಿಗೆ ಆರ್ಡರ್ ಕೊಟ್ಟಿದ್ದರು. ಅದನ್ನು ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿದ್ದರು. ಈ ರೀತಿ ನಡೆದ ಕಾರ್ಯಾಚರಣೆಯಲ್ಲಿ ನಕಲಿ ಉತ್ಪಾದನಾ ಘಟಕ ಪತ್ತೆಯಾಯಿತು ಎಂದು ಕೆ ಎಸ್ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ವಿವರಿಸಿದ್ದಾರೆ. +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ತಲಾ 150 ಗ್ರಾಂ ತೂಕದ 3 ಸಾಬೂನುಗಳಿರುವ 20 ಕಾರ್ಟನ್ ಬಾಕ್ಸ್ ಗಳು (ಪ್ರತಿಯೊಂದು ಬಾಕ್ಸ್ ನಲ್ಲಿ 90ರಂತೆ ಒಟ್ಟು 1800 ಪೀಸ್ ಗಳು), ತಲಾ 75 ಗ್ರಾಂ ನ 47 ಕಾರ್ಟನ್ ಬಾಕ್ಸ್ ಗಳು (9400 ಪೀಸ್ ಗಳು), 150 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಖಾಲಿ ಕಾರ್ಟನ್ ಬಾಕ್ಸ್ ಗಳು ಮತ್ತು 75 ಗ್ರಾಂ ಸಾಬೂನು ಪ್ಯಾಕ್ ಮಾಡುವ 400 ಕಾರ್ಟನ್ ಬಾಕ್ಸ್ ಗಳು ನಕಲಿ ಘಟಕದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. +ಕೆಎಸ್‍ಡಿಎಲ್ ಉತ್ಪನ್ನಗಳ ಮಾರುಕಟ್ಟೆಯನ್ನು ದೇಶ ಹಾಗೂ ವಿದೇಶಗಳಿಗೆ ವಿಸ್ತರಿಸಲು ಸ್ವತಃ ಆಸಕ್ತಿ ವಹಿಸಿ ಕ್ರಮ ತೆಗೆದುಕೊಂಡಿರುವ ಸಚಿವರು, ತಪ್ಪಿತಸ್ಥರಿಗೆ ಶಿಕ್ಷೆಯಾಗುವುದನ್ನು ಖಾತರಿಗೊಳಿಸಲು ಗಮನ ವಹಿಸಲಾಗುವುದು ಎಂದಿದ್ದಾರೆ. \ No newline at end of file diff --git a/eesanje/url_46_263_1.txt b/eesanje/url_46_263_1.txt new file mode 100644 index 0000000000000000000000000000000000000000..b7edc97799f418f6b00a9f96b7c4631d4e8938b1 --- /dev/null +++ b/eesanje/url_46_263_1.txt @@ -0,0 +1,14 @@ +ಹಾನಗಲ್‍ನ ಅತ್ಯಾಚಾರ ಪ್ರಕರಣ ಎಸ್‍ಐಟಿಗೆ ವಹಿಸಲು ಬೊಮ್ಮಾಯಿ ಒತ್ತಾಯ +ಬೆಂಗಳೂರು,ಜ.13- ಹಾವೇರಿ ಜಿಲ್ಲೆ ಹಾನಗಲ್‍ನ ಖಾಸಗಿ ಹೋಟೆಲ್‍ನಲ್ಲಿ ಯುವತಿಯೊಬ್ಬಳ ಮೇಲೆ ನಡೆಸಿರುವ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿ ವಿಶೇಷ ಪೊಲೀಸ್ ತಂಡ(ಎಸ್‍ಐಟಿ) ವಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಕರಣ ನಡೆದು ಮೂರು ದಿನಗಳಾದರೂ ಆರೋಪಿಗಳ ವಿರುದ್ಧ ಪೊಲೀಸರು ಏಕೆ ಎಫ್‍ಐಆರ್ ದಾಖಲಿಸಿಲ್ಲ. ಸ್ವತಃ ಯುವತಿಯೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದರೂ ಅವರ ವಿರುದ್ಧ ಕ್ರಮ ಏಕೆ ಜರುಗಿಸಿಲ್ಲ ಎಂದು ಪ್ರಶ್ನೆ ಮಾಡಿದರು. ಆರೋಪಿಗಳು ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಮೊದಲು ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಪ್ರಕರಣಕ್ಕೆ ತಿಪ್ಪೆ ಸಾರಿಸುವ ಕೆಲಸ ಮಾಡಲು ಮುಂದಾಗಿದ್ದರು. +ಈಗ ಸಂತ್ರಸ್ತೆ ಮಹಿಳೆಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವಿಡಿಯೋ ಕಾಲ್ ಮಾಡಿ ಹೇಳಲಾಗಿದೆ. ಪ್ರಕರಣವನ್ನು ಸರಿಯಾಗಿ ನಿರ್ವಹಿಸದ ಪೊಲೀಸರನ್ನು ಅಮಾನತುಪಡಿಸಬೇಕು. ನಿಷ್ಪಾಕ್ಷಪಾತ ತನಿಖೆಯಾಗಬೇಕೆಂದರೆ ಎಸ್‍ಐಟಿಗೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂನಲ್ಲಿ ಯುವಕರು ಈ ಕೃತ್ಯವನ್ನು ಎಸಗಿದ್ದಾರೆ. ಕೆಲವು ವರ್ಗಗಳು ನಮ್ಮನ್ನು ಯಾರು ಮುಟ್ಟುವ ಧೈರ್ಯ ಮಾಡುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ. ಪೊಲೀಸರ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು. +ಒಂದು ವೇಳೆ ಇದೇ ಕೃತ್ಯವನ್ನು ಬೇರೆ ಸಮುದಾಯದವರು ಮಾಡಿದ್ದರೆ ದೂರು ದಾಖಲಾಗುವ ಮುನ್ನವೇ ಅವರನ್ನು ಬಂಧಿಸಿ ಹೊರಗೆ ಹಾಕುತ್ತಿದ್ದೀರಿ. ಅಲ್ಪಸಂಖ್ಯಾತ ಸಮುದಾಯದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್‍ನವರು ಈಗ ಅದೇ ಸಮುದಾಯದ ಆರೋಪಿಗಳನ್ನು ರಕ್ಷಣೆ ಮಾಡಲು ಹೊರಟಿರುವುದು ದುರ್ದೈವವೇ ಸರಿ ಎಂದರು. +ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾರಿಗು ಕೂಡ ರಕ್ಷಣೆ ಇಲ್ಲದಂತಾಗಿದೆ. ಪೊಲೀಸ್ ಠಾಣೆಗಳು ಕಲೆಕ್ಷನ್ ಅಡ್ಡಗಳಾಗಿವೆ. ಕೆಲವರು ದುಡ್ಡು ಕೊಟ್ಟು ಪೋಸ್ಟಿಂಗ್ ಮಾಡಿಕೊಂಡಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ತಿಂಗಳಿಗೆ ಇಂತಿಷ್ಟು ಕೊಡಬೇಕೆಂದು ಇನ್‍ಸ್ಪೆಕ್ಟರ್ ಸೇರಿದಂತೆ ಹಿರಿಯ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾದರೆ ಪೊಲೀಸರು ಕರ್ತವ್ಯ ನಿರ್ವಹಿಸುವುದು ಹೇಗೆ ಪ್ರಶ್ನಿಸಿದರು. +ಶೀಘ್ರದಲ್ಲೇ ಇಂಡಿ ಮೈತ್ರಿಕೂಟ ಪತನವಾಗಲಿದೆ : ದಿಲೀಪ್ ಘೋಷ್ +ಹಾನಗಲ್ ಜೊತೆಗೆ ಕೋಲಾರದ ಮೇಲೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕರ್ನಾಟಕ ಜಂಗಲ್ ರಾಜ್ಯವಾಗಿದೆ ಎಂದು ವಾಗ್ದಾಳಿ ನಡೆಸಿದರು. ಒಂದು ವೇಳೆ ಸರ್ಕಾರ ಎಸ್‍ಐಟಿ ತನಿಖೆ ವಹಿಸದಿದ್ದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಸದ್ಯದಲ್ಲೇ ಸಂತ್ರಸ್ತ ಮಹಿಳೆಯನ್ನು ನಮ್ಮ ಪಕ್ಷದ ನಿಯೋಗ ಭೇಟಿ ಮಾಡಲಿದೆ ಎಂದು ತಿಳಿಸಿದರು. +ಈ ಪ್ರಕರಣವನ್ನು ಸರ್ಕಾರ ಮುಚ್ಚಿ ಹಾಕಲು ಮುಂದಾಗಿತ್ತು. ಯಾವಾಗ ಸಂತ್ರಸ್ತ ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ದಾಖಲಿಸಿದರೋ ಕೊನೆಗೆ ವಿಧಿ ಇಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇನ ನಿಮ್ಮ ಆಡಳಿತ ಎಂದು ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು. +ಕಾಂಗ್ರೆಸ್ ನಾಯಕರಿಗೆ ರಾಜ್ಯದ ಕಾನೂನಿನ ಮೇಲೆ ನಂಬಿಕೆ ಇಲ್ಲ. ಡಿಜೆಹಳ್ಳಿ ಕೆಜೆಹಳ್ಳಿ ಪ್ರಕರಣ ದಲ್ಲಿ ಆರೋಪಿಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ, ಡಿಸಿಎಂ ಅವರನ್ನು ಅಮಾಯಕರು ಎಂದು ಹೇಳುತ್ತಾರೆ. ಪೊಲೀಸರ ಕ್ರಮ ಸರಿ ಇದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಓಲೈಕೆ ರಾಜಕಾರಣ ಮಾಡುತ್ತಾರೆ. +ಜಾತ್ಯಾತೀತತೆ ಎಂದರೆ ಎಲ್ಲ ಧರ್ಮ, ಜಾತಿಯವರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು. ಈ ಪ್ರಕರಣದಲ್ಲಿ ಎಸ್ ಐಟಿ ಮಾಡಿ ಪೊಲಿಸರಿಗೆ ಮುಕ್ತ ಅವಕಾಶ ಕೊಡಬೇಕು. ಆಗ ನ್ಯಾಯ ದೊರೆಯುತ್ತದೆ.ಸರ್ಕಾರ ಎಸ್ ಐಟಿ ಮಾಡದಿದ್ದರೆ ನಾವು ಕಾನೂನು ಹೋರಾಟ ಮಾಡುತ್ತೇವೆ. ನಮ್ಮ ಪಕ್ಷದ ಮಹಿಳಾ ನಿಯೋಗ ಭೇಟಿ ನೀಡಲಿದೆ. ಎಸ್ ಐಟಿ ರಚನೆ ಮಾಡದಿದ್ದರೆ ನ್ಯಾಯಾಂಗ ಮಾರ್ಗದರ್ಶನದಲ್ಲಿ ಪ್ರಕರಣ ಮಾನಿಟರ್ ಮಾಡಲಿ ಎಂದು ಬಯಸುತ್ತೇವೆ. +ರಾಜ್ಯಕ್ಕೆ ಅನ್ಯಾಯವಾಗಲು ಸಿದ್ದರಾಮಯ್ಯ ಅವರ ಸರ್ಕಾರವೇ ಕಾರಣ. 14ನೇ ಹಣಕಾಸು ಆಯೋಗದ ಸಂದರ್ಭದಲ್ಲಿ ಸಿದ್ದರಾಮಯ್ಯ ಕೇಂದ್ರಕ್ಕೆ ರಾಜ್ಯದವಸ್ತು ಸ್ಥಿತಿ ಸರಿಯಾಗಿ ಮಾಹಿತಿ ನೀಡದ ಕಾರಣ ನಮಗೆ ಕಡಿಮೆ ಅನುದಾನ ಬಂದಿದೆ. 14 ನೇ ಹಣಕಾಸು ಆಯೋಗದಲ್ಲಿ ಸುಮಾರು 2300 ಕೋಟಿ ಬಾಕಿ ಇತ್ತು ಅದರಲ್ಲಿ 1100 ಕೋಟಿ ರೂ ಬಿಡುಗಡೆಯಾಗಿದೆ. ಉಳಿದ ಹಣವನ್ನು ಅಂತಿಮ ಕಂತಾಗಿ ಕೇಂದ್ರ ಸರ್ಕಾರ ಎಲ್ಲವನ್ನು ಪರಿಶೀಲನೆ ಮಾಡಿ ಬಿಡುಗಡೆ ಮಾಡಬಹುದು. +ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ +ಸಿದ್ದರಾಮಯ್ಯ ಅವರಿಗೆ ಸಲಹೆಗಾರರು ಬಹಳಜನ ಇದ್ದಾರೆ. ಹೀಗಾಗಿ ರಾಮ ಮಂದಿರ ವಿಚಾರದಲ್ಲಿ ಅವರು ದಿನಕ್ಕೊಂದು ಹೇಳಿಕೆ ನೀಡಿದ್ದಾರೆ. ಒಂದು ದಿನ ನಾನೇ ರಾಮ ಅಂತಾರೆ ಮತ್ತೊಂದು ರಾಮ ಮಂದಿರ ಉದ್ಘಾಟನೆಗೆ ಹೋಗುವುದಿಲ್ಲ ಎನ್ನುತ್ತಾರೆ. ಅದರಿಂದ ರಾಜಕೀಯವಾಗಿ ಕಷ್ಟವಾಗಲಿದೆ ಎಂದು ಇನ್ನೊಬ್ಬ ಸಲಹೆಗಾರರು ಹೇಳಿದಾಗ ಅಯೋದ್ಯೆಗೆ ಹೋಗುವುದಾಗಿ ಹೇಳುತ್ತಾರೆ ಎಂದು ಇದೇ ವೇಳೆ ಅವರು ಟೀಕಿಸಿದರು. \ No newline at end of file diff --git a/eesanje/url_46_263_10.txt b/eesanje/url_46_263_10.txt new file mode 100644 index 0000000000000000000000000000000000000000..c4dfbdd0b91f0267c439bfbac98ce63a359f94bc --- /dev/null +++ b/eesanje/url_46_263_10.txt @@ -0,0 +1,11 @@ +ಲೋಕಸಭೆ ಚುನಾವಣೆಯಲ್ಲಿ`ಕೈ’ ಅಭ್ಯರ್ಥಿಗಳು ಸೋತರೆ ಸಚಿವರ ತಲೆದಂಡ! +ಬೆಂಗಳೂರು,ಜ.12- ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳಿರುವ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಅದಕ್ಕೆ ಚುನಾವಣಾ ಸಂಯೋಜಕರಾಗಿರುವ ಸಚಿವರುಗಳ ತಲೆದಂಡ ಮಾಡುವುದಾಗಿ ಹೈಕಮಾಂಡ್ ಎಚ್ಚರಿಕೆ ನೀಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ನಿನ್ನೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಚುನಾವಣಾ ವೀಕ್ಷ ಕರ ಸಭೆ ನಡೆಯಿತು. +ಅದರಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಲಕ್ಷದ್ವೀಪ, ಪುದುಚೆರಿ, ಒಡಿಸ್ಸಾ, ಆಂಧ್ರಪ್ರದೇಶ, ಅಂಡಮಾನ್-ನಿಕೋಬಾರ್ ಸೇರಿದಂತೆ ವಿವಿಧ ಪ್ರದೇಶಗಳ ಚುನಾವಣಾ ವೀಕ್ಷಕರೊಂದಿಗೆ ಚರ್ಚೆ ನಡೆಸಲಾಯಿತು. ಪ್ರತಿಯೊಂದು ಲೋಕಸಭಾ ಕ್ಷೇತ್ರಕ್ಕೂ ನೇಮಿಸಲಾಗಿರುವ ಚುನಾವಣಾ ವೀಕ್ಷಕರನ್ನು ಚುನಾವಣಾ ಸಂಯೋಜಕರು ಮತ್ತು ವಾರ್ ರೂಂಗಳನ್ನು ಸಂಪರ್ಕ ಕೇಂದ್ರಗಳೆಂದು ಮರು ನಾಮಕರಣ ಮಾಡಲಾಗಿದೆ. ಜವಾಬ್ದಾರಿಗಳು ಈ ಮೊದಲೇ ನಿರ್ಧರಿಸಿದಂತೆ ಮುಂದುವರೆಯಲಿದ್ದು, ಹೆಸರು ಮಾತ್ರ ಬದಲಾವಣೆಯಾಗಲಿದೆ ಎಂದು ತಿಳಿಸಲಾಗಿದೆ. +ಸಂಪರ್ಕ ಕೇಂದ್ರಗಳು ಚುನಾವಣಾ ಸಂಯೋಜಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಸಂಯೋಜಕರಿಗೂ ಯಾವುದೇ ರೀತಿಯ ಗೊಂದಲಗಳಾದರೆ ಸಂಪರ್ಕ ಕೇಂದ್ರಗಳ ಮೂಲಕ ಪಕ್ಷದಿಂದ ಸ್ಪಷ್ಟನೆಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬೂತ್ ಕಮಿಟಿಗಳ ರಚನೆ, ಪಂಚಾಯಿತಿ ಸಮಿತಿಗಳ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ಯಾವ ರೀತಿಯ ಪ್ರಚಾರ ತಂತ್ರಗಳನ್ನು ಅನುಸರಿಸಬೇಕು, ಅಭ್ಯರ್ಥಿಗಳ ಘೋಷಣೆಯ ಬಳಿಕ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೈಕಮಾಂಡ್ ಸೂಚನೆ ನೀಡಿದೆ. +ರಾಷ್ಟ್ರೀಯ ಮಟ್ಟದಲ್ಲಿ ಚುನಾವಣಾ ಸಂಪರ್ಕ ಕೇಂದ್ರಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಶಿಕಾಂತ್ ಸೇಂಥಿಲ್ ಸಂಯೋಜಕರಾಗಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ಸಂಯೋಜಕರೊಂದಿಗಿನ ಸಮಾಲೋಚನೆ ಬಳಿಕ ರಾಜ್ಯಸರ್ಕಾರದ ದೂರುಗಳು ಆಗಿರುವ ಚುನಾವಣಾ ಸಮಿತಿ ಸಂಯೋಜಕರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. +ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..? +ರಾಜ್ಯ ಸಚಿವರಿಂದ ಹೈಕಮಾಂಡ್ ಏನನ್ನು ನಿರೀಕ್ಷಿಸುತ್ತದೆ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಕೇವಲ ಕರ್ನಾಟಕಕ್ಕಷ್ಟೇ ಅಲ್ಲ ದಕ್ಷಿಣ ಭಾರತದ ರಾಜ್ಯಗಳಲ್ಲಿನ ಲೋಕಸಭಾ ಕ್ಷೇತ್ರಗಳ ಹೊಣೆಗಾರಿಕೆಯನ್ನೂ ರಾಜ್ಯಸಭಾ ಸಚಿವರಿಗೆ ನೀಡಲಾಗಿದೆ. ಕಳೆದ ಬಾರಿ ಒಂದು ಲೋಕಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಗೆಲುವು ಕಂಡಿದೆ. ಈ ಬಾರಿ 28 ಕ್ಕೆ 28ನ್ನೂ ಗೆಲ್ಲಬೇಕು. ಇದಕ್ಕೂ ಮೊದಲು 22 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿರುವ ಉದಾಹರಣೆಗಳಿವೆ ಎಂದು ಹೈಕಮಾಂಡ್ ತಿಳಿಸಿದೆ. +ಪ್ರತಿಯೊಬ್ಬ ಸಚಿವರೂ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಗೆಲ್ಲುವ ಸಾಧ್ಯತೆಗಳಿರುವ ಕಡೆ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡರೆ ಅದಕ್ಕೆ ಚುನಾವಣಾ ಉಸ್ತುವಾರಿ ಯಾದ ಸಂಯೋಜಕರನ್ನೇ ನೇರ ಹೊಣೆ ಮಾಡಲಾಗುವುದು. ಸಚಿವ ಸಂಪುಟದಿಂದ ಕೈಬಿಡುವುದೂ ಸೇರಿದಂತೆ ತಲೆದಂಡದ ಕ್ರಮಗಳು ಅನಿವಾರ್ಯವಾಗಲಿದೆ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರು ನೀಡಿದ್ದಾರೆ. +ಹೀಗಾಗಿ ಲೋಕಸಭೆ ಚುನಾವಣೆ ರಾಜ್ಯದ ಸಚಿವರ ಪಾಲಿಗೆ ಅಧಿಕಾರದ ಅಳಿವು-ಉಳಿವಿನ ಪ್ರಶ್ನೆಯಾಗಲಿದೆ.ಚುನಾವಣಾ ಅಭ್ಯರ್ಥಿಗಳ ಕುರಿತಂತೆಯೂ ನಿನ್ನೆಯ ಸಭೆಯಲ್ಲಿ ಚರ್ಚೆ ನಡೆದಿದೆ. ಶೀಘ್ರವೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವಂತೆ ಸಚಿವರ ನಿಯೋಗ ಒತ್ತಾಯಿಸಿದೆ. ಇದಕ್ಕೆ ಸಹಮತಿಸಿರುವ ಹೈಕಮಾಂಡ್ ನಾಯಕರು ಮೂರ್ನಾಲ್ಕು ದಿನಗಳಲ್ಲೇ ರಾಜ್ಯ ಪ್ರದೇಶ ಕಾಂಗ್ರೆಸ್‍ನ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದಾಗಿ ಭರವಸೆ ನೀಡಿದ್ದಾರೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಕರ್ನಾಟಕ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು, ಚುನಾವಣಾ ಸಮಿತಿ ಸಭೆ ನಡೆಸಲಿದ್ದಾರೆ. ಅಲ್ಲಿ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಿ ಅಂತಿಮಗೊಳಿಸಲಾಗುವುದು. ಸಂಭವನೀಯರ ಪಟ್ಟಿಯನ್ನು ಎಐಸಿಸಿ ಚುನಾವಣಾ ಸಮಿತಿಗೆ ರವಾನಿಸಲಾಗುವುದು. ಅಲ್ಲಿ ಚರ್ಚೆಗಳು ನಡೆದು ಶೀಘ್ರವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಹೈಕಮಾಂಡ್ ಭರವಸೆ ನೀಡಿದೆ ಎಂದು ಮೂಲಗಳು ತಿಳಿಸಿವೆ. +ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಹೈಕಮಾಂಡ್‍ಗೆ ಬಿಡುವಂತೆ ರಾಜ್ಯನಾಯಕರಿಗೆ ಸೂಚನೆ ನೀಡಲಾಗಿದೆ. ಸಚಿವರ ಸ್ಪರ್ಧೆಯ ಬಗ್ಗೆ ನಿನ್ನೆಯ ಸಭೆಯಲ್ಲಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. \ No newline at end of file diff --git a/eesanje/url_46_263_11.txt b/eesanje/url_46_263_11.txt new file mode 100644 index 0000000000000000000000000000000000000000..15c73abc01448879c966186f00c17bce86e3cd87 --- /dev/null +++ b/eesanje/url_46_263_11.txt @@ -0,0 +1,8 @@ +ಜನರಿಗೆ ಹತ್ತಿರವಾಗುವ ಯೋಜನೆ ನೀಡುವ ಯೋಗ್ಯತೆ ಬಿಜೆಪಿಗಿಲ್ಲ : ಸಚಿವ ಮಧು ಬಂಗಾರಪ್ಪ +ಶಿವಮೊಗ್ಗ,ಜ.12- ಬಿಜೆಪಿಯವರಿಗೆ ಜನರಿಗೆ ಹತ್ತಿರವಾಗುವ ಒಂದೇ ಒಂದು ಕಾರ್ಯಕ್ರಮ ಮಾಡಲು ಯೋಗ್ಯತೆಯಿಲ್ಲ. ಕಾಂಗ್ರೆಸ್‍ನ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಂತೆ ನಾವು ಭರವಸೆ ಕೊಟ್ಟು ಮಾತು ತಪ್ಪುವುದಿಲ್ಲ. ಪಂಚಖಾತ್ರಿ ಯೋಜನೆಗಳನ್ನು ಅನುಷ್ಠಾನ ಮಾಡದೇ ಇದ್ದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಅದನ್ನೇ ದೊಡ್ಡದಾಗಿ ಬಿಂಬಿಸುತ್ತಿದ್ದರು. ಆದರೆ ಈಗ ಅವರಿಗೆ ಯಾವುದೇ ವಿಚಾರಗಳೂ ಸಿಗುತ್ತಿಲ್ಲ. ಅದಕ್ಕಾಗಿ ಆಧಾರರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. +ಪಂಚಖಾತ್ರಿ ಯೋಜನೆಯಿಂದ ಪ್ರತಿ ಗ್ರಾಮ ಪಂಚಾಯಿತಿಗೆ 8 ಕೋಟಿ ರೂ.ಗಳಷ್ಟು ಹಣ ಹೋಗುತ್ತಿದೆ. ಜನರ ಜೀವನಮಟ್ಟ ಸುಧಾರಣೆಯಾಗಿದೆ. ಇಂತಹ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿಯವರಿಂದ ತೋರಿಸಿ ಎಂದರು. ಯಾರದೋ ದುಡ್ಡಲ್ಲಿ ಎಲ್ಲಮ್ಮನ ಜಾತ್ರೆ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ನಾವು ಎಲ್ಲಮ್ಮನ ಜಾತ್ರೆ ಮಾಡುವುದಿಲ್ಲ, ಮಾರಮ್ಮನ ಹಬ್ಬ ಮಾಡುವುದು ಗೊತ್ತು ಎಂದು ಮಾರ್ಮಿಕವಾಗಿ ಹೇಳಿದರು. +ರಾಮಮಂದಿರ ಉದ್ಘಾಟನೆಗೆ ಯೋಗಿ ಬಿಟ್ಟರೆ ಬೇರೆ ಯಾವ ಸಿಎಂಗೂ ಇಲ್ಲ ಆಹ್ವಾನ +ಶಿವಮೊಗ್ಗದಲ್ಲಿ ಯುವನಿ ಯೋಜನೆ ಉದ್ಘಾಟನೆಯ ಕಾರ್ಯಕ್ರಮ ನಡೆಸುವುದು ಹೆಮ್ಮೆಯ ವಿಚಾರ. ಜಿಲ್ಲಾ ಉಸ್ತುವಾರಿ ಸಚಿವನಾಗಿರುವ ನಾನು ಪ್ರಣಾಳಿಕೆ ಸಮಿತಿಯ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ಪಂಚಖಾತ್ರಿ ಯೋಜನೆಗಳ ಬಗ್ಗೆ ಯಾವುದಾದರೂ ಒಂದು ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ನಡೆಸಬೇಕು ಎಂಬ ಅಭಿಲಾಷೆ ಇತ್ತು. ಕೊನೆಯ ಗ್ಯಾರಂಟಿ ಯುವನಿ ಉದ್ಘಾಟನೆ ಇಲ್ಲಿ ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. +ವ್ಯಾಪಕ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಯುವ ಸಮುದಾಯ ಬರುತ್ತಿದೆ. ಅವರ ಸುರಕ್ಷತೆಗಾಗಿ ಕಾಳಜಿ ವಹಿಸುತ್ತೇವೆ. ಹಬ್ಬದ ಮಾದರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ ಎಂದರು. ನಿನ್ನೆಯವರೆಗೂ ಯುವನಿ ಯೋಜನೆಯಡಿ 67 ಸಾವಿರ ಮಂದಿ ನೋಂದಣಿಯಾಗಿದ್ದಾರೆ. ಇದು ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ. ದಾಖಲಾತಿ ಪರಿಶೀಲನೆ ಎಲ್ಲವೂ ಸಹಜ ಪ್ರಕ್ರಿಯೆ ಎಂದು ಹೇಳಿದರು. +ಸಿಎಸ್‍ಕೆ ಸ್ಟಾರ್ ಆಲ್ರೌಂಡರ್‌‌ಗೆ ಕೊರೊನಾ ಸೋಂಕು +ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯಸರ್ಕಾರ ಕಷ್ಟಪಡುತ್ತಿದೆ ಎಂದು ಹೇಳುತ್ತಿರುವುದು ಆಧಾರರಹಿತ. ರಾಜ್ಯಸರ್ಕಾರ ಜನಪರವಾಗಿ ಐತಿಹಾಸಿಕ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಬಾಕಿ ಇರುವ ಅಭಿವೃದ್ಧಿ ಕಾಮಗಾರಿ ಕೂಡಾ ಎಂದಿನಂತೆ ಮುಂದುವರೆಯಲಿವೆ ಎಂದರು. \ No newline at end of file diff --git a/eesanje/url_46_263_12.txt b/eesanje/url_46_263_12.txt new file mode 100644 index 0000000000000000000000000000000000000000..dc3ce61d2c0eb7f881f5c6198f4e18935de89ab2 --- /dev/null +++ b/eesanje/url_46_263_12.txt @@ -0,0 +1,11 @@ +ಕೇಂದ್ರ ಸರ್ಕಾರದ ಸೇವೆಗೆ ಬಲವಂತದ ಶಿಫಾರಸ್ಸು : ಐಎಎಸ್-ಐಪಿಎಸ್ ಅಧಿಕಾರಿಗಳ ಅಸಮಾಧಾನ +ಬೆಂಗಳೂರು,ಜ.12- ರಾಜ್ಯದ ಕೆಲವು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನು ಕೇಂದ್ರ ಸರ್ಕಾರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಕೇಂದ್ರ ಸೇವೆಗೆ ತೆರಳಲು ರಾಜ್ಯದ ಕೆಲವು ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಕರ್ನಾಟಕದಿಂದ ನಾವೇಕೆ ಕೇಂದ್ರ ಸೇವೆಗೆ ಹೋಗಬೇಕು ಎಂಬ ಮೂಲಭೂತ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. +ನಿಯಮಗಳ ಪ್ರಕಾರ, ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳು ಒಂದು ಬಾರಿ ಆಯಾ ರಾಜ್ಯಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡರೆ ವಿಶೇಷ ಸಂದರ್ಭಗಳಲ್ಲಿ ಮಾತ್ರ ಅವರನ್ನು ಕೇಂದ್ರ ಸೇವೆಗೆ ನಿಯೋಜಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿರುತ್ತದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ಉದ್ದೇಶಪೂರಕವಾಗಿಯೇ ಕೇಂದ್ರ ಸೇವೆಗೆ ಶಿಫಾರಸ್ಸು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. +ಕೆಲವು ಅಧಿಕಾರಿಗಳು ಕೇಂದ್ರದ ನಿದೇಶನದಂತೆ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ಸರ್ಕಾರದ ಕೆಲವು ಗೌಪ್ಯ ಮಾಹಿತಿಗಳನ್ನು ಕೇಂದ್ರಕ್ಕೆ ರವಾನೆ ಮಾಡುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಒಂದು ಪಕ್ಷದ ಸಿದ್ಧಾಂತದ ಪರವಾಗಿ ಇರುವ ಅಧಿಕಾರಿಗಳನ್ನು ಕೇಂದ್ರಕ್ಕೆ ನಿಯೋಜನೆಗೊಳಿಸಲು ಸರ್ಕಾರ ಮುಂದಾಗಿತ್ತು. +ಈ ಹಿಂದೆಯೂ ರಾಜ್ಯದ ನೂರಾರು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳನ್ನು ಕೇಂದ್ರಸರ್ಕಾರದ ಸೇವೆಗೆ ನಿಯೋಜನೆ ಮಾಡಿರುವ ನಿದರ್ಶನಗಳಿವೆ. ದಕ್ಷ ಐಪಿಎಸ್ ಅಧಿಕಾರಿ ಎನಿಸಿದ್ದ ಸೋನಿಯಾ ನಾರಂಗ್ ಪ್ರಸ್ತುತ ಎನ್‍ಐ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ರೀತಿ ಐಎಎಸ್, ಐಪಿಎಸ್, ಐಎಫ್‍ಎಸ್ ಅಧಿಕಾರಿಗಳು ಕೆಲ ಸಂದರ್ಭಗಳಲ್ಲಿ ಕೇಂದ್ರ ಸೇವೆಗೆ ನಿಯೋಜನೆಗೊಳ್ಳುತ್ತಾರೆ. +ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್ +ಪ್ರಸ್ತುತ ರಾಜ್ಯಸರ್ಕಾರ ಕರ್ನಾಟಕದಲ್ಲಿರುವ ಎಸ್ಪಿ ದರ್ಜೆಯ ಅಕಾರಿಗಳನ್ನು ಕೇಂದ್ರ ಗೃಹ ಇಲಾಖೆ ಕೇಂದ್ರದ ಸೇವೆಗೆ ಬಲವಂತವಾಗಿ ಶಿಫಾರಸ್ಸು ಮಾಡಿರುವ ಆರೋಪ ಕೇಳಿಬಂದಿದ್ದು, ತಮ್ಮಲ್ಲಿ ಒಂದು ಮಾತೂ ಕೇಳದೆ ಶಿಫಾರಸ್ಸು ಮಾಡಲಾಗಿದೆ ಎಂದು ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ಹೊರಹಾಕಿದ್ದಾರೆ. ಇದರ ವಿರುದ್ಧ ಕೇಂದ್ರ ಸರ್ಕಾರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. +ಅಚ್ಚರಿಯ ವಿಷಯ ಎಂದರೆ ಕೇಂದ್ರ ಗೃಹ ಇಲಾಖೆಯು ಒಟ್ಟು 28 ಎಸ್ಪಿ ದರ್ಜೆಯ ಅಧಿಕಾರಿಗಳನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿದ್ದು, ಆ ಪೈಕಿ 26 ಐಪಿಎಸ್ ಅಧಿಕಾರಿಗಳು ಕರ್ನಾಟಕದವರೇ ಆಗಿದ್ದಾರೆ. ಹೀಗಾಗಿ ಒತ್ತಾಯ ಪೂರ್ವಕವಾಗಿ ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಿರುವ ಹಿನ್ನೆಲೆ ಡಿಪಿಆರ್ ವಿರುದ್ಧ ಕೆಲವು ಐಪಿಎಸ್ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಅಭಿಪ್ರಾಯ ಕೇಳದೆಯೇ ಡಿಪಿಎಆರ್ ಹೆಸರು ಕಳುಹಿಸಿದೆ ಎಂದು ಅತೃಪ್ತಿ ತೋರಿಸಿರುವ ಕೆಲವರು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದಾರೆ. +ಬೆಂಗಳೂರಿನ ಡಿಸಿಪಿಗಳಾದ ಸಿ.ಕೆ.ಬಾಬಾ, ಎಸ್.ಗಿರೀಶ್, ಡಿ.ದೇವರಾಜ್, ಡಿ.ಆರ್.ಸಿರಿಗೌರಿ, ಅಬ್ದುಲ್ ಅಹದ್, ಅಮೃತ್ ಪ್ರಕಾಶ್ ನಿಖಂ, ಎಸ್ಪಿಗಳಾದ ಇಲಕಿಯಾ ಕರುಣಾಕರನ್, ಡಾ.ಭೀಮಾಶಂಕರ್ ಗುಳೇದ್, ಧರ್ಮೇಂದ್ರ ಕುಮಾರ್ ಮೀನಾ, ಶ್ರೀನಾಥ್ ಮಹದೇವ ಜೋಶಿ ಸೇರಿದಂತೆ ಇತರರನ್ನು ಕೇಂದ್ರದ ಸೇವೆಗೆ ಶಿಫಾರಸ್ಸು ಮಾಡಲಾಗಿದೆ. +ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ +ಈ ಪೈಕಿ ಕೆಲವು ಅಧಿಕಾರಿಗಳು ಶಿಫಾರಸ್ಸನ್ನು ತಿರಸ್ಕರಿಸಲು ನಿರ್ಧಾರ ಮಾಡಿದ್ದು, ಈ ಸಂಬಂಧ ಕೇಂದ್ರಕ್ಕೆ ಲಿಖಿತವಾಗಿ ಅಭಿಪ್ರಾಯ ತಿಳಿಸಲು ಚಿಂತನೆ ನಡೆಸಿದ್ದಾರೆ. 2012 ರಲ್ಲಿ ಮುಂಬಡ್ತಿ ಪಡೆದಿದ್ದ ಕೆಲ ಕೆಎಸ್‍ಪಿಎಸ್ ಅಧಿಕಾರಿಗಳು ಎರವಲು ಸೇವೆಗೆ ಬಲವಂತವಾಗಿ ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_263_2.txt b/eesanje/url_46_263_2.txt new file mode 100644 index 0000000000000000000000000000000000000000..3dc6fc918bbb9f6d9276589b6f2a3ec581cbc6bf --- /dev/null +++ b/eesanje/url_46_263_2.txt @@ -0,0 +1,10 @@ +ಕೋಚಿಮೂಲ್ ನೇಮಕಾತಿ ಅಕ್ರಮ : 10 ಮಂದಿಗೆ ಇಡಿ ನೋಟಿಸ್ +ಬೆಂಗಳೂರು,ಜ.13- ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮಹಾಮಂಡಳಿಯ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ತಿಂಗಳ 16ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕುಲಸಚಿವರು ಸೇರಿದಂತೆ 10 ಮಂದಿಗೆ ನೋಟಿಸ್ ಜಾರಿ ಮಾಡಿದೆ. +ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಇದೇ ತಿಂಗಳ 16ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಕೂಚಿಮೂಲ್ ಕುಲಸಚಿವರು ಮತ್ತು ಹತ್ತು ಮಂದಿಗೆ ಶನಿವಾರ ನೋಟಿಸ್ ಜಾರಿ ಮಾಡಿದೆ. ವಿವಿಧ ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ತಲಾ 20ರಿಂದ 30 ಲಕ್ಷ ಹಣ ಪಡೆದುಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ಸೂಚನೆ ಕೊಟ್ಟಿದೆ. +ಕಳೆದ ಸೋಮವಾರ ಮತ್ತು ಮಂಗಳವಾರ ಕೋಲಾರ ಜಿಲ್ಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರ ಕಚೇರಿ, ಮನೆ ಸೇರಿದಂತೆ ಮತ್ತಿತರ ಕಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖಾ ತಂಡ ಸತತವಾಗಿ ಎರಡು ದಿನಗಳ ಕಾಲ ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. +ದಾಳಿ ನಡೆದ ಎರಡು ದಿನಗಳ ನಂತರ ಪತ್ರಿಕಾ ಪ್ರಕಟಣೆ ಹೊರಡಿಸಿದ ಇಡಿಯವರು , ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ, ಕಚೇರಿ ಮೇಲೆ ಇಡಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಕೇಸ್ ದಾಖಲಿಸಿ ಇಡಿ ತನಿಖೆ ಮಾಡುತ್ತಿದೆ. +150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಅಕ್ರಮವಾಗಿ ಹಂಚಿಕೆ ಪ್ರಕರಣ ಸಂಬಂಧ ಶೋಧ ವೇಳೆ 25 ಲಕ್ಷಕ್ಕೂ ಹೆಚ್ಚು ಹಣ, 50 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿ ಪತ್ರ ಪತ್ತೆಯಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ವೇಳೆ ಡಿಜಿಟಲ್ ಡೇಟಾವನ್ನು ವಶಪಡಿಸಿಕೊಳ್ಳಲಾಗಿತ್ತು. ಅಕ್ರಮ ಹಣ ವರ್ಗಾವಣೆ, ಹಣಕ್ಕಾಗಿ ಉದ್ಯೋಗ ಮಾರಾಟ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಮಾಲೂರು ಶಾಸಕ, ಹಿಂದಿನ ತಹಶೀಲ್ದಾರ್ ನಾಗರಾಜ್ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್‍ನ ಆಧಾರದಲ್ಲಿ ತನಿಖೆ ಮಾಡಲಾಗಿದೆ. +ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ +ಜನವರಿ 8, 9ರಂದು ದಾಳಿ ನಡೆಸಿ ತನಿಖೆ ನಡೆಸಿದ್ದ ಇಡಿ ಅಕಾರಿಗಳು, ಜಿಲ್ಲೆಯ ಮಾಲೂರು ತಾಲೂಕಿನಲ್ಲಿ 150 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಹಂಚಿಕೆ ಮಾಡಿದ ಆರೋಪ ಮಾಡಲಾಗಿತ್ತು. ಒಂದೇ ತಿಂಗಳಲ್ಲಿ 4 ಸಭೆ ನಡೆಸಿ, ನಕಲಿ ದಾಖಲೆ ಸೃಷ್ಟಿಸಿ 80 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಮಂಜೂರು ಮಾಡಿದ್ದ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಶಾಸಕ ಕೆ.ವೈ.ನಂಜೇಗೌಡರ ವಿರುದ್ದ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. +ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ +ಕೋಲಾರ ಹಾಲು ಒಕ್ಕೂಟದಲ್ಲಿ ಹೊಸ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಶಾಸಕ ಕೆ.ವೈ.ನಂಜೇಗೌಡ ವಿರುದ್ಧ ಮತ್ತೊಂದು ಪ್ರಕರಣದಲ್ಲಿಯೂ ಹಗರಣ ನಡೆಸಿರುವ ಆರೋಪ ಮಾಡಲಾಗಿದೆ. ಪ್ರತಿ ಉದ್ಯೋಗಕ್ಕೆ 20ರಿಂದ 30 ಲಕ್ಷ ರೂ. ಲಂಚ ಪಡೆದಿರುವ ಆರೋಪ ಮಾಡಲಾಗಿದ್ದು, ಸಂದರ್ಶನದ ಪ್ರಕ್ರಿಯೆ ದುರ್ಬಳಕೆ ಮಾಡಿಕೊಂಡಿರುವ ಮಾಹಿತಿ ಇಡಿಗೆ ಲಭ್ಯವಾಗಿತ್ತು. ಒಕ್ಕೂಟದ ಅಧ್ಯಕ್ಷ ಕೆ.ವೈ ನಂಜೇಗೌಡ ಸೇರಿದಂತೆ ನಾಲ್ಕು ಮಂದಿ ಸದಸ್ಯರ ವಿರುದ್ದ ಆರೋಪ ಕೇಳಿಬಂದಿದ್ದು, ಕೆಲವು ರಾಜಕಾರಣಿಗಳು ಶಿಫಾರಸು ಮಾಡಿದ್ದ 30 ಮಂದಿ ಅಭ್ಯರ್ಥಿಗಳ ಪಟ್ಟಿ ಪತ್ತೆಯಾಗಿತ್ತು. \ No newline at end of file diff --git a/eesanje/url_46_263_3.txt b/eesanje/url_46_263_3.txt new file mode 100644 index 0000000000000000000000000000000000000000..fcb24cb58d588bf622af4e33adf622b4c408edc9 --- /dev/null +++ b/eesanje/url_46_263_3.txt @@ -0,0 +1,6 @@ +ಜನಾರ್ಧನ ರೆಡ್ಡಿ ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ : ಶ್ರೀರಾಮುಲು +ಬಳ್ಳಾರಿ,ಜ.13- ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ಧನ ರೆಡ್ಡಿ ಪಕ್ಷಕ್ಕೆ ಬಂದರೆ ನಮ್ಮದೇನು ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾರ್ಧನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆ ಬೇಡವೇ ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. +ಒಂದು ವೇಳೆ ಅವರು ಬಂದರೆ ನನ್ನದೇನು ಅಭ್ಯಂತರವಿಲ್ಲ. ಹೃದಯದಿಂದ ಅವರನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ನಾನೇಕೆ ಅವರು ಪಕ್ಷಕ್ಕೆ ಬರುವುದನ್ನು ವಿರೋಧಿಸಲಿ, ಪಕ್ಷವನ್ನು ಕಟ್ಟಿ ಬೆಳೆಸಿದವರಲ್ಲಿ ಅವರು ಕೂಡ ಪ್ರಮುಖರು. ಬೇರೆ ಬೇರೆ ಕಾರಣಗಳಿಂದ ಪಕ್ಷ ಬಿಟ್ಟು ಹೋಗಿರಬಹುದು. ಬಿಜೆಪಿಗೆ ಬರಲು ಯಾರೊಬ್ಬರು ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು. +ಶ್ರೀರಾಮುಲು ಅವರನ್ನು ರಾಜಕೀಯವಾಗಿ ಬೆಳೆಸಿದ್ದೇ ನಾನು ಎಂಬ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಕೇವಲ ರಾಜಕೀಯವಾಗಿ ಮಾತ್ರ ಬೆಳೆಸಲಿಲ್ಲ. ನನಗೆ ಅನ್ನ ಕೊಟ್ಟವರು ಅವರೇ ಎಂದು ಭಾವುಕರಾಗಿ ನುಡಿದರು. +ಅಮೆರಿಕದಲ್ಲೂ ರಾಮಮಂದಿರ ಉದ್ಘಾಟನೆ ಸಡಗರ +ನನ್ನ ಮೇಲೆ ಜನಾರ್ಧನರೆಡ್ಡಿ ಅವರ ಋಣ ಸಾಕಷ್ಟಿದೆ. ರಾಜಕೀಯವಾಗಿ ನಾನು ಬೆಳೆಯಲು ಅವರೇ ಕಾರಣ. ಒಬ್ಬ ಸಾಮಾನ್ಯನಾಗಿದ್ದ ನನ್ನನ್ನು ಪಕ್ಷಕ್ಕೆ ಕರೆತಂದು ಎಲ್ಲವನ್ನು ಕೊಟ್ಟಿದ್ದಾರೆ. ಟೀಕೆ ಟಿಪ್ಪಣಿಗಳು ಏನೇ ಇದ್ದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ಜನಾರ್ಧನ ರೆಡ್ಡಿ ಅವರ ಬಗ್ಗೆ ಎಂದೂ ಕೂಡ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_263_4.txt b/eesanje/url_46_263_4.txt new file mode 100644 index 0000000000000000000000000000000000000000..d0247418e961e0a115705bc84f16cd024fe48e03 --- /dev/null +++ b/eesanje/url_46_263_4.txt @@ -0,0 +1,8 @@ +ಕಾಡುಗೊಲ್ಲ ನಿಗಮ ಸ್ಥಾಪನೆ 20 ಕೋಟಿ ಅನುದಾನ ಬಿಡುಗಡೆ +ಬೆಂಗಳೂರು. 12, ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಕಾಡುಗೊಲ್ಲ ನಿಗಮಕ್ಕೆ 20 ಕೋಟಿ ಹಣ ನೀಡಲಾಗಿದ್ದು ಆ ಹಣವನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲೇ ಉಪಯೋಗಪಡಿಸಿಕೊಳ್ಳುವಂತೆ ಕರೆನೀಡಿದ್ದಾರೆ . +ಕಾಡುಗೊಲ್ಲ ನಿಗಮದಡಿ ದೊರೆಯುವ ಸವಲತ್ತುಗಳನ್ನು ಬಳಸಿಕೊಳ್ಳುವ ಸಂಬಂಧ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರ ಜೊತೆ ಟಿ.ಬಿ.ಜಯಚಂದ್ರ ಅವರು ವಿಧಾನಸೌಧದಲ್ಲಿ ಮಾತುಕತೆ ನಡೆಸಿದರು. +ಈ ಸಂದರ್ಭದಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನಿ ಅವರು ಸದ್ಯಕ್ಕೆ ಕಾಡುಗೊಲ್ಲ ನಿಗಮದಲ್ಲಿ 20 ಕೋಟಿ ಹಣವಿದ್ದು ಮೇಕೆ ಕುರಿ ಸಾಕಾಣಿಕೆ ಸೇರಿದಂತೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವವರಿಗೆ ,ಕೊಳವೆ ಬಾವಿ ಹಾಕಿಸಲು ಹಾಗೂ ಶೈಕ್ಷಣಿಕ ಸಾಲ ನೀಡಲು ಹಣವನ್ನ ನೀಡಲಾಗುವುದು‌. +ಮುಂದಿನ ತಿಂಗಳಲ್ಲಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ರಾಜ್ಯದ ಎಲ್ಲಾ ಗ್ರಾಮ -ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು. ಕಾಡುಗೊಲ್ಲ ಸಮುದಾಯದ ಜನತೆ ಈ ಸೌಲಭ್ಯವನ್ನು ಬಳಸಿಕೊಳ್ಳಲು ಅಗತ್ಯ ಏರ್ಪಾಡುಗಳನ್ನು ಮಾಡಲಾಗಿದೆ ಎಂದು ಇದೆ ವೇಳೆ ತುಳಸಿ,ಮುದ್ದಿನೇನಿ ಅವರು ತಿಳಿಸಿದರು. ಕಾಡುಗೊಲ್ಲ ಜಾತಿ ಪ್ರಮಾಣ ಪತ್ರಗಳನ್ನು ಸಹ ವಿತರಿಸಲಾಗುತ್ತಿದೆ ಎಂದರು +ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಕಾಡುಗೊಲ್ಲ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ .ಈ ಮೂರು ಜಿಲ್ಲೆಗಳ ಎಲ್ಲಾ ಶಾಸಕರ ಸಭೆ ಕರೆದು ಕಾಡುಗೊಲ್ಲ ನಿಗಮದ ಅಡಿ ಸಿಗುವ ಎಲ್ಲಾ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಟಿವಿ ಜಯಚಂದ್ರ ಅವರು ತಿಳಿಸಿದರು. +ಇದೇ ವೇಳೆ ಜಯಚಂದ್ರ ಅವರು ಹಿಂದುಳಿದ ವರ್ಗಗಳ ಹಾಗೂ ಕನ್ನಡ ಸಂಸ್ಕೃತಿ ಸಚಿವ ಶಿವರಾಜ್ ತಂಗಡಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಆದಷ್ಟು ಬೇಗ ಈ ಮೂರು ಜಿಲ್ಲೆಗಳ ಶಾಸಕರ ಸಭೆ ಕರೆದು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದರು. ಜಯಚಂದ್ರ ಅವರ ಮನವಿಗೆ ಸ್ಪಂದಿಸಿದ ಸಚಿವ ಶಿವರಾಜ್ ತಂಗಡಿ ಅವರು ಆದಷ್ಟು ಬೇಗ ಸಭೆ ಕರೆದು ಕಾಡುಗೊಲ್ಲ ಸಮುದಾಯದ ಜನತೆ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಅರಿವು ಮೂಡಿಸುವುದಾಗಿ ತಿಳಿಸಿದರು. +ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಕುರಿತು ಸರ್ಕಾರದ ಹಂತದಲ್ಲಿ ಕೆಲಸಗಳು ಆಗುತ್ತಿದೆ ಎಂದು ಇದೇ ವೇಳೆ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ತುಳಸಿ ಮುದ್ದಿನೇನೆ ಅವರು ತಿಳಿಸಿದರು‌. \ No newline at end of file diff --git a/eesanje/url_46_263_5.txt b/eesanje/url_46_263_5.txt new file mode 100644 index 0000000000000000000000000000000000000000..b92d523da9ac8211a72d8fe3a599b8b7b619f7cf --- /dev/null +++ b/eesanje/url_46_263_5.txt @@ -0,0 +1,11 @@ +ಕೃಷಿ ಆವಿಷ್ಕಾರಗಳ ಫಲ ರೈತರಿಗೆ ತಲುಪಿಸಲು ಸಕಲ ವ್ಯವಸ್ಥೆ: ಚಲುವರಾಯಸ್ವಾಮಿ +ನಾಗಮಂಗಲ: ಕೃಷಿ ಕ್ಷೇತ್ರದಲ್ಲಿ ವ್ಯಕ್ತವಾಗುವ ಆವಿಷ್ಕಾರಗಳ ಫಲ ರೈತರಿಗೆ ತಲುಪಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಆವರಣದಲ್ಲಿ ಕರ್ನಾಟಕ ರಾಜ್ಯ ಕೃಷಿ ಇಲಾಖೆ, ಜಲಾನಯನ ಅಭಿವೃದ್ದಿ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ ಮತ್ತು ಜಿಲ್ಲಾ ಪಂಚಾಯಿತಿ ಮಂಡ್ಯ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ ಮತ್ತು ರೈತ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. +ಶೇ.70 ರಷ್ಟು ಜನರು ಕೃಷಿ ಅವಲಂಬಿತರ ದೇಶ ನಮ್ಮದಾಗಿದೆ, ಬಹುಸಂಖ್ಯೆಯಲ್ಲಿ ಕೃಷಿ ಅವಲಂಭಿಸಿರುವ ರೈತರು ಸಧೃಡರಾಗಬೇಕು, ಆಗ ಕುಟುಂಬ, ಜಿಲ್ಲೆ, ರಾಜ್ಯ ಮತ್ತು ದೇಶ ಸದೃಢವಾಗುತ್ತದೆ ಎಂದರು.  ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಕೃಷಿ ಕ್ಷೇತ್ರ ಹಾಗೂ ಪರಿಸರದ ಬಗ್ಗೆ ಅನನ್ಯ ಪ್ರೀತಿ ಹೊಂದಿದ್ದರು, ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿರ್ಮಲಾನಂದನಾಥ ಶ್ರೀಗಳು ಕೃಷಿ ಕ್ಷೇತ್ರ ಬಲವರ್ಧನೆಗೆ ಸಹಕಾರಿಯಾಗಲಿ ಎಂಬ ಸದುದ್ದೇಶದಿಂದ ಪ್ರತಿ ವರ್ಷ ಕೃಷಿಮೇಳ, ರೈತ ಸಂಗಮ ಮತ್ತತರ ಕೃಷಿ ಪೂರಕ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದರು. +ಬೆಂಗಳೂರಿನಲ್ಲಿ 3 ದಿನಗಳ ಕಾಲ ಅಂತರಾಷ್ಠೀಯ ಮಟ್ಟದ ಸಿರಿಧಾನ್ಯ ಮೇಳ ಆಯೋಜಿಸಲಾಗಿತ್ತು, ಆ ಮೂಲಕ 150 ಕೋಟಿಗೂ ಮಿಗಿಲಾದ ಸಿರಿಧಾನ್ಯ ರಫ್ತು ಒಪ್ಪಂದಕ್ಕೆ ಸಹಿ ಹಾಕಲಾಗಿದೆ. 50ಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು, 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಲಕ್ಷಾಂತರ ಜನತೆಯಲ್ಲಿ ಸಾವಯವ ಆಹಾರ ಧಾನ್ಯಗಳ ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು. +ಹೆಣ್ಣು ಮಕ್ಕಳು ಕುಟುಂಬದ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ಜಾಣ್ಮೆ ಹೊಂದಿದ್ದಾರೆ, ಅದಕ್ಕೆ ಪೂರಕವಾಗಿ ಸರ್ಕಾರಗಳು ಹೆಣ್ಣು ಮಕ್ಕಳನ್ನು ಪ್ರಬಲರಾಗಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿವೆ, ಹೈನುಗಾರಿಕೆ ಹಾಗೂ ಕೃಷಿ ಕಾಯಕದಲ್ಲಿ ಮಹಿಳೆಯರ ಪಾತ್ರ ಅಧಿಕವಾಗಿದೆ ಎಂದು ಗುಣಗಾನ ಮಾಡಿದರು. +ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯಿಂದ ಹೆಚ್ಚು ಲಾಭಗಳಿಸಬಹುದಾಗಿದೆ, ಈ ನಿಟ್ಟಿನಲ್ಲಿ ಕೃಷಿ ಇಲಾಖೆಯು ಸಹಾಯಧನ ಹಾಗೂ ಪ್ರೋತ್ಸಾಹಧನಕ್ಕೆ ಹೆಚ್ಚು ಅನುದಾನ ಬಳಕೆ ಮಾಡುತ್ತಿದೆ ಎಂದು ತಿಳಿಸಿದರು. ಕಳೆದ ಸಾಲಿನಲ್ಲಿ ಸುಮಾರು 475 ಕೋಟಿ ರೂ. ಬೆಳೆ ವಿಮೆ ರೈತರ ಖಾತೆಗೆ ಜಮೆ ಆಗಿದೆ. ಬರಗಾಲದ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ 1 ಸಾವಿರ ಕೋಟಿ ಬೆಳೆ ವಿಮೆ ಹಣ ರೈತರಿಗೆ ಸೇರುವ ನಿರೀಕ್ಷೆ ಇದೆ ಎಂದು ವಿವರಿಸಿದರು. +ಹಳೆ ಮೈಸೂರು ಭಾಗದ ರೈತರು ತಮ್ಮ ಜಮೀನುಗಳನ್ನು ಇಳುವರಿ ಭರಿತ ಜಮೀನುಗಳನ್ನಾಗಿ ಪರಿವರ್ತಿಸಿ ಅಧಿಕ ಇಳುವರಿಯ ಕಬ್ಬಿನ ಫಸಲು ಬೆಳೆಯುವ ಬೆಳೆ ತಾಂತ್ರಿಕತೆಯ ವಿನಿಮಯಕ್ಕಾಗಿ ಉತ್ತಕ ಕರ್ನಾಟಕ ಭಾಗಕ್ಕೆ ಅಧ್ಯಯನ ಪ್ರವಾಸ ಆಯೋಜಿಸಲಾಗುವುದು ಎಂದು ತಿಳಿಸಿದರು. ಪ್ರತಿಯೊಂದು ಕೃಷಿಕರ ಕುಟುಂಬವು ಸಮಗ್ರ ಕೃಷಿಗೆ ಒತ್ತು ನೀಡಬೇಕು, ಇತರೆ ವೃತ್ತಿಯೊಂದಿಗೆ ಕೃಷಿಯನ್ನು ಪೋಷಿಸುವ ಹೊಣೆಗಾರಿಕೆ ಹೊಂದಬೇಕೆಂದು ತಿಳಿಸಿದರು. +ರಾಜ್ಯ ಕೃಷಿ ಆಯುಕ್ತಾಲಯದ ಆಯಕ್ತ ವೈ.ಎಸ್.ಪಾಟೀಲ್ ಮಾತನಾಡಿ, ಶಿಕ್ಷಣ, ಆರೋಗ್ಯ, ಧಾರ್ಮಿಕ ಸೇವೆಯ ಜೊತೆಗೆ ರೈತ ಸಂಗಮ ಆಯೋಜಿಸುವ  ಮೂಲಕ ರಾಜ್ಯದ ಉತ್ತರ ಹಾಗೂ ದಕ್ಷಿಣ ಭಾಗದ ಸಮ್ಮಿಲನಕ್ಕೆ ವೇದಿಕೆ ಸೃಷ್ಠಿಸಿ, ಕೃಷಿ ಚಟುವಟಿಕೆಗಳ ವಿಲೀನಕ್ಕೆ ನಾಂದಿಯಾಡಿರುವ ಶ್ರೀಗಳ ದೂರದೃಷ್ಟಿಯನ್ನು ಬಣ್ಣಿಸಿದರು. +ಜನರಿಗೆ ಹತ್ತಿರವಾಗುವ ಯೋಜನೆ ನೀಡುವ ಯೋಗ್ಯತೆ ಬಿಜೆಪಿಗಿಲ್ಲ : ಸಚಿವ ಮಧು ಬಂಗಾರಪ್ಪ +ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಸ್ವಾಮೀಜಿ ವಹಿಸಿದ್ದರು. ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಜಿಕೆವಿಕೆ ಕುಲಪತಿ ಡಾ.ಎಸ್.ಬಿ.ಸುರೇಶ್, ಕೃಷಿ ಇಲಾಖೆಗೆ ನಿರ್ದೇಶಕ ಜಿ.ವಿ.ಪುತ್ರ, ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳಾದ ಎಂ.ಎಚ್.ಪದ್ಮನಾಭ್, ವೈಭವ್ ಉಪಸ್ಥಿತರಿದ್ದರು. +ಜಿಲ್ಲಾಧಿಕಾರಿ ಡಾ.ಕುಮಾರ ಸರ್ವರನ್ನು ಸ್ವಾಗತಿಸಿ, ರೈತರು ದೇಶದ ಆಧಾನ ಸ್ಥಂಭ ಹಾಗೂ ಶಕ್ತಿಯಾಗಿದ್ದು, ರೈತ ಮತ್ತು ಕೃಷಿ ಕ್ಷೇತ್ರವನ್ನು ಉತ್ತೇಜಿಸಬೇಕಾದ ಹೊಣೆಗಾರಿಕೆ ನಮ್ಮಲ್ಲರದ್ದಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಜಿ.ಪಂ. ಸಿಇಓ ಶೇಖ್ ತನ್ವೀರ್ ಆಸಿಫ್, ಎಸ್ಪಿ ಎನ್.ಯತೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್, ಉಪ ನಿರ್ದೇಶಕಿಯರಾದ ಡಾ.ಮಾಲತಿ,ಮಮತ ಇತರರರು ಉಪಸ್ಥಿತರಿದ್ದರು \ No newline at end of file diff --git a/eesanje/url_46_263_6.txt b/eesanje/url_46_263_6.txt new file mode 100644 index 0000000000000000000000000000000000000000..814b15926e603803845b90063bc9ffa6dec8a755 --- /dev/null +++ b/eesanje/url_46_263_6.txt @@ -0,0 +1,9 @@ +ರೂಪಾ-ಸಿಂಧೂರಿ ಪ್ರಕರಣ : ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಿ ಎಂದ ಸುಪ್ರೀಂ +ನವದೆಹಲಿ,ಜ.12- ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪ ಪ್ರಕರಣವನ್ನು ಒಂದು ತಿಂಗಳೊಳಗೆ ಸೌಹಾರ್ದಯುತವಾಗಿ ಇಬ್ಬರೂ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಸಲಹೆ ಮಾಡಿದೆ. ಇಬ್ಬರೂ ಅಧಿಕಾರಿಗಳು ಉನ್ನತ ಸ್ಥಾನಮಾನದಲ್ಲಿದ್ದೀರಿ. ನಿಮಗೆ ಉಜ್ವಲ ಭವಿಷ್ಯವಿದೆ. ಯೋಚಿಸಿ ಆಲೋಚನೆ ಮಾಡಿ. ಹಠದಿಂದ ಏನನ್ನೂ ಸಧಿಸಲು ಸಾಧ್ಯವಿಲ್ಲ. ನಿಮ್ಮಿಬ್ಬರಿಗೂ ಒಂದು ತಿಂಗಳು ಕಾಲಾವಕಾಶ ನೀಡಲಾಗುತ್ತದೆ. ಅಷ್ಟರೊಳಗೆ ವಿವಾದವನ್ನು ಸುಖಾಂತ್ಯಗೊಳಿಸಿ ಎಂದು ನ್ಯಾಯಾಲಯ ಸೂಚನೆ ನೀಡಿದೆ. +ಆದರೆ ನ್ಯಾಯಾಲಯದ ಮನವಿಯನ್ನು ಒಪ್ಪದ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಮಾನಹಾನಿ ಪೋಸ್ಟ್ ಮಾಡಿರುವ ಡಿ.ರೂಪಾ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದರಿಂದ ಅರ್ಜಿ ವಿಚಾರಣೆಯನ್ನು ಮಾ.15ಕ್ಕೆ ಮುಂದೂಡಲಾಯಿತು. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಓ.ಕಾ ಅವರಿದ್ದ ಏಕಸದಸ್ಯ ಪೀಠ, ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳೇ ಪರಸ್ಪರ ಹೀಗೆ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದರೆ ಸಾರ್ವಜನಿಕರಿಗೆ ನೀವು ಕೊಡುವ ಸಂದೇಶವಾದರೂ ಏನು ಎಂದು ಪ್ರಶ್ನೆ ಮಾಡಿತು. +ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಿ ಎಂದು ಸೂಚನೆ ನೀಡಿದರೂ ಪರಸ್ಪರ ಜಿದ್ದಿಗೆ ಬಿದ್ದವರಂತೆ ಪರಸ್ಪರ ಆರೋಪಗಳನ್ನು ಮಾಡಿಕೊಳ್ಳುತ್ತಿದ್ದೀರಿ ನಿಮ್ಮಿಬ್ಬರಿಗೂ ಒಳ್ಳೆಯ ಭವಿಷ್ಯವಿದೆ. ನ್ಯಾಯಾಲಯದ ಆಚೆಗೂ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಹಿತದೃಷ್ಟಿಯಿಂದ ಈ ಮಾತನ್ನು ಹೇಳುತ್ತಿದ್ದೇನೆ ಎಂದು ನ್ಯಾಯಾೀಧಿಶರು ಕಿವಿಮಾತು ಹೇಳಿದರು. +ಆಘಾತವಾಗಿದೆ:ಇದಕ್ಕೆ ರೋಹಿಣಿ ಸಿಂಧೂರಿ ಪರ ವಕೀಲರು, ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಪೋಸ್ಟ್‍ಗಳನ್ನು ತೆಗೆದು ಹಾಕಬಹುದು, ಇಲ್ಲವೇ ಡಿಲೀಟ್ ಮಾಡಬಹುದು. ಆದರೆ ಅವರ ಕುಟುಂಬಕ್ಕೆ ಆಗಿರುವ ಮಾನಹಾನಿಯನ್ನು ಯಾರು ಸರಿಪಡಿಸುತ್ತಾರೆ. ಡಿ.ರೂಪ ಪೋಸ್ಟ್ ಮಾಡಿದ ನಂತರ ಅವರ ಕುಟುಂಬ ಘಾಸಿಗೊಳಗಾಗಿದೆ. ಉನ್ನತ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಮೌನವನ್ನೇ ದೌರ್ಬಲ್ಯವೆಂದು ಭಾವಿಸಬಾರದು. ಇನ್ನು ಕೂಡ ನಾವು ಮೌನವಾಗಿರಲು ಸಾಧ್ಯವೇ? ನ್ಯಾಯಾಲಯ ನೀಡುವ ತೀರ್ಪಿಗೆ ನಾವು ತಲೆ ಬಾಗುತ್ತೇವೆ. ಅದಕ್ಕೂ ಮುನ್ನ ನನ್ನ ವಿರುದ್ಧ ಪೋಸ್ಟ್ ಮಾಡಿರುವುದಕ್ಕೆ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. +ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..? +ಅವರಿಂದಲೂ ಹಾನಿಯಾಗಿದೆ:ಇನ್ನು ಡಿ.ರೂಪ ಪರ ವಾದ ಮಂಡಿಸಿದ ವಕೀಲರು ರೋಹಿಣಿ ಸಿಂಧೂರಿ ಕೂಡ ನಮ್ಮ ಪಿರಿಯಾದುದಾರರಿಗೆ ಮಾನಹಾನಿಯಾಗುವಂತೆ ಟೀಕಿಸಿದ್ದಾರೆ. ಅವರಿಗೆ ಬುದ್ದಿ ಭ್ರಮಣೆಯಾಗಿದೆ ಎಂದು ಹೇಳಿರುವುದು ಮಾಧ್ಯಮದಲ್ಲಿ ಪ್ರಕಟಗೊಂಡಿದೆ. ಅವಹೇಳನಕಾರಿಯಾಗಿ ಮಾತನಾಡಿರುವಾಗ ಕ್ಷಮೆಯನ್ನು ಏಕೆ ಕೇಳಬೇಕು ಎಂದರು. ನ್ಯಾಯಾಲಯದ ನಿರ್ದೇಶನದಂತೆ ಸಾಮಾಜಿಕ ಜಾಲತಾಣದಿಂದ ಮಾಡಿದ್ದ ಪೋಸ್ಟ್‍ನ್ನು ಡಿಲೀಟ್ ಮಾಡಲಾಗಿತ್ತು. ಆದರೆ ಅರ್ಜಿದಾರರು ಪುನಃ ನಮ್ಮ ಮೇಲೆ ಆರೋಪಗಳನ್ನು ಮುಂದುವರೆಸಿದ್ದಾರೆ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.ಎರಡು ಕಡೆ ವಾದ-ವಿವಾದ ಆಲಿಸಿದ ನ್ಯಾಯಪೀಠ ಒಂದು ತಿಂಗಳ ಕಾಲಾವಕಾಶ ನೀಡಿ ಮಾ.15ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು. +ಏನಿದು ಆಕ್ಷೇಪಾರ್ಹ ಪೋಸ್ಟ್?:2023ರ ಫೆಬ್ರುವರಿಯಲ್ಲಿ ಡಿ. ರೂಪಾ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಹಲವು ಆರೋಪ ಮಾಡಿದ್ದರು. ಈ ಆರೋಪಗಳು ಕೀಳು ಅಭಿರುಚಿಯಿಂದ ಕೂಡಿದ್ದವು ಎಂದು ಆಕ್ರೋಶ ವ್ಯಕ್ತಪಡಿಸಿದ್ದ ರೋಹಿಣಿ ಸಿಂಧೂರಿ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಪ್ರಕಟಿಸಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ರದ್ದುಪಡಿಸಬೇಕೆಂದು ಕೋರಿ ಡಿ. ರೂಪಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. +2023ರ ಫೆಬ್ರುವರಿ 14 ಹಾಗೂ 16 ರಂದು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಪರಿಶೀಲಿಸಿದ ಫೇಸ್ಬುಕ್ ಖಾತೆಯಲ್ಲಿ ಐಎಎಸ್ ಅಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನ ಮಾಡಿದ್ದರು. ಈ ಆರೋಪಗಳು ಕೀಳು ಅಭಿರುಚಿಯಿಂದ ಕೂಡಿದ್ದವು ಎಂದು ಆಕ್ರೋಶ ವ್ಯಕ್ತಪಡಿಸಿದ್ದ ರೋಹಿಣಿ ಸಿಂಧೂರಿ ಈ ಕುರಿತಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು ಮಾಡಿದ್ದ ರೋಹಿಣಿ ಸಿಂಧೂರಿ, 1 ಕೋಟಿ ರೂಪಾಯಿ ಪರಿಹಾರವನ್ನು ಡಿ. ರೂಪಾ ಅವರಿಂದ ವಸೂಲಿ ಮಾಡಿಕೊಡಿಸಬೇಕು ಎಂದು ಮನವಿ ಮಾಡಿದ್ದರು. \ No newline at end of file diff --git a/eesanje/url_46_263_7.txt b/eesanje/url_46_263_7.txt new file mode 100644 index 0000000000000000000000000000000000000000..d760b6b0c1ce09e3f110336f094356043891ee54 --- /dev/null +++ b/eesanje/url_46_263_7.txt @@ -0,0 +1,6 @@ +ವಾಟ್ಸಾಪ್ ನಲ್ಲಿ ಹುಡುಗಿಯ ಭಾವಚಿತ್ರ ಬಳಸಿ ಲೈಂಗಿಕ ವಂಚನೆ : ಆರೋಪಿ ಸೆರೆ +ಬೆಂಗಳೂರು, ಜ.12- ಹುಡುಗಿಯ ಭಾವಚಿತ್ರವನ್ನು ಬಳಕೆ ಮಾಡಿಕೊಂಡು ವ್ಯಾಟ್ಸ್ ಆಫ್ ಮೂಲಕ ಲೈಂಗಿಕ ವಂಚನೆ ಕೃತ್ಯವೆಸಗುತ್ತಿದ್ದ ದಾವಣಗೆರೆ ಮೂಲದ ಯುವಕನನ್ನು ಉತ್ತರ ವಿಭಾಗದ ಸಿ.ಇ.ಎನ್. ಕ್ರೈಂ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಮೂಲದ ನರಹರಿ (27) ಬಂಧಿತ ವಂಚಕ. ಈತ ಬೊಮ್ಮನಹಳ್ಳಿಯ ಲಾಡ್ಜೊವೊಂದರಲ್ಲಿ ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದನು. +ವ್ಯಕ್ತಿಯೊಬ್ಬರು ಕೆನರಾ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಯಾರೋ ಅಪರಿಚಿತರು ಹುಡುಗಿ ಹೆಸರಿನಲ್ಲಿ ಒಂದು ಮೊಬೈಲ್ ನಂಬರಿನ ಮೂಲಕ ಅವರನ್ನು ಸಂಪರ್ಕಿಸಿರುತ್ತಾರೆ. ಈ ರೀತಿ ಒಂದು ತಿಂಗಳಿನಿಂದ ಆ ವ್ಯಕ್ತಿಗೆ ಕರೆ ಮಾಡಿ ಅನೈತಿಕ ಸಂಬಂಧದ ಸಂದೇಶವನ್ನು ಕಳುಹಿಸಿ ನಂತರ ಅನೈತಿಕ ಸಂಬಂಧದಲ್ಲಿರುವ ಸಂದೇಶಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ, ಅವರಿಂದ ಹಂತ ಹಂತವಾಗಿ 1.10 ಲಕ್ಷ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದು, ಈ ಬಗ್ಗೆ ಆ ವ್ಯಕ್ತಿ ದೂರು ನೀಡಿದ್ದರು. +ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಉತ್ತರ ವಿಭಾಗದ ಸೆನ್ ಠಾಣೆ ಪೊಲೀಸರು ವಂಚಕನ್ನೊಬ್ಬ ಹುಡುಗಿ ಹೆಸರಿನಲ್ಲಿ ನಕಲಿ ವ್ಯಾಟ್ಸ್‍ಆಪ್ ಖಾತೆಯನ್ನು ಕ್ರಿಯೇಟ್ ಮಾಡಿರುವುದನ್ನು ಖಚಿತ ಪಡಿಸಿಕೊಂಡಿರುತ್ತಾರೆ. ಆ ಖಾತೆಗೆ ಹುಡುಗಿಯ ಭಾವಚಿತ್ರವನ್ನು ಬಳಕೆ ಮಾಡಿಕೊಂಡು ದೂರುದಾರ ವ್ಯಕ್ತಿಗೆ ಹುಡುಗಿಯರು ಚಾಟ್ ಮಾಡುವ ರೀತಿಯಲ್ಲಿ ಚಾಟ್ ಮಾಡಿ, ಆತನ ಫೋಟೋಗಳನ್ನು ಸಂಗ್ರಹಣೆ ಮಾಡಿಕೊಂಡು ನಂತರ ಆತನ ಫೋಟೋವನ್ನು ಮಾರ್ಫ್ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹೆದರಿಸಿ, ಹಣ ವಸೂಲಿ ಮಾಡಿರುವುದು ಗೊತ್ತಾಗಿದೆ. +ವಸೂಲಿ ಮಾಡಿದ ಹಣವನ್ನು ಸ್ನೇಹಿತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ಆ ನಂತರ ಎಟಿಎಂ ಮೂಲಕ ಡ್ರಾ ಮಾಡಿಕೊಂಡು ವಿಲಾಸಿ ಜೀವನ ನಡೆಸುತ್ತಿರುತ್ತಾನೆ. ಈ ರೀತಿ ವಿವಿಧ ಬ್ಯಾಂಕ್ ಖಾತೆಗಳಲ್ಲಿ ನಡೆದ ಹಣಕಾಸಿನ ವಹಿವಾಟಿನಿಂದ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. \ No newline at end of file diff --git a/eesanje/url_46_263_8.txt b/eesanje/url_46_263_8.txt new file mode 100644 index 0000000000000000000000000000000000000000..77fbf4aaee2e91413b62a328f97a57b034a0b915 --- /dev/null +++ b/eesanje/url_46_263_8.txt @@ -0,0 +1,6 @@ +ದೇಶದಲ್ಲೇ ಪ್ರಪ್ರಥಮ ಬಾರಿಗೆ ಕಾಯ್ದೆ ಚಲಾಯಿಸಿದ ಸಿಸಿಬಿ ಅಧಿಕಾರಿಗಳು +ಬೆಂಗಳೂರು, ಜ.12- ರಾಷ್ಟ್ರದಲ್ಲೇ ಪ್ರಪ್ರಥಮ ಬಾರಿಗೆ ಎನ್.ಡಿ.ಪಿ.ಎಸ್ ಕಾಯ್ದೆಯ ಅಧಿಕಾರವನ್ನು ಚಲಾಯಿಸಿದ ಸಿಸಿಬಿ ಅಧಿಕಾರಿಗಳು ವಿದೇಶಿ ಡ್ರಗ್ ಪೆಡ್ಲರ್ ಅಕ್ರಮವಾಗಿ ಗಳಿಸಿದ್ದ 12 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಕಳೆದ ನವೆಂಬರ್‍ನಲ್ಲಿ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದ ಆರೋಪಿಯು ರೂಢಿಗತ ವಿದೇಶಿ ಡ್ರಗ್ ಪೆಡ್ಲರ್ ಆಗಿರುತ್ತಾನೆ. +ಆತನ ಬಳಿ ಹಣ ಮತ್ತು ವಿವಿಧ ಬ್ಯಾಂಕ್‍ಗಳ ಪಾಸ್‍ಬುಕ್, ಡೆಬಿಟ್ ಕಾರ್ಡ್‍ಗಳು ಇರುವ ಬಗ್ಗೆ ಮಾಹಿತಿಯನ್ನು ಸಿಸಿಬಿಯ ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಸಂಗ್ರಹಿಸಿದ್ದರು. ಈ ಕುರಿತು ಪ್ರಕರಣದ ತನಿಖೆಯನ್ನು ಮುಂದುವರಿಸಿ ತನಿಖಾ ಕಾಲದಲ್ಲಿ ವಿದೇಶಿ ಡ್ರಗ್ ಪೆಡ್ಲರ್‍ನ ಪತ್ನಿಯ ಎರಡು ಬ್ಯಾಂಕ್ ಖಾತೆಯಿಂದ 2.55 ಲಕ್ಷ ಹಣ ಹಾಗೂ ಇತರೆ ಹೆಸರಿನಲ್ಲಿದ್ದ 5 ಬ್ಯಾಂಕ್ ಖಾತೆಗಳಲ್ಲಿದ್ದ 4.90 ಲಕ್ಷ ರೂ. ಹಣದ ವಿವರಗಳನ್ನು ತನಿಖೆಯಿಂದ ಖಚಿತಪಡಿಸಿಕೊಂಡಿದ್ದಾರೆ. +ಎನ್.ಡಿ.ಪಿ.ಎಸ್ ಕಾಯ್ದೆಯಡಿ ತನಿಖಾಕಾಧಿರಿಗಳಿಗಿರುವ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಗದು ಹಣ ಮತ್ತು 7 ಬ್ಯಾಂಕ್ ಖಾತೆಗಳಲ್ಲಿ ಹೊಂದಿದ್ದ ಒಟ್ಟು 12,60,282 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಂಡು ಆದೇಶ ಹೊರಡಿಸಿರುತ್ತಾರೆ. ವಿದೇಶಿ ಡ್ರಗ್ ಪೆಡ್ಲರ್ 2018ರಲ್ಲಿ ಭಾರತಕ್ಕೆ ವೈದ್ಯಕೀಯ ವೀಸಾದಲ್ಲಿ ಬಂದಿದ್ದು, 2022ರಲ್ಲಿ ಮಣಿಪುರ ರಾಜ್ಯದ ಯುವತಿಯನ್ನು ಮದುವೆಯಾಗಿರುತ್ತಾನೆ. +ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ +ತದನಂತರದಲ್ಲಿ ಆಕೆಯ ಹೆಸರಿನಲ್ಲಿ ನಗರದಲ್ಲಿ ಎರಡು ಬ್ಯಾಂಕ್ ಖಾತೆಗಳನ್ನು ಹಾಗೂ ನಕಲಿ ದಾಖಲಾತಿಗಳನ್ನು ನೀಡಿ ಇತರರ ಹೆಸರಿನಲ್ಲಿ ಐದು ಬ್ಯಾಂಕ್ ಖಾತೆಗಳು ಸೇರಿದಂತೆ ಒಟ್ಟು ಏಳು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾನೆ. ಈ ಖಾತೆಗಳಿಂದ ಗೂಗಲ್ ಪೇ ಪೋನ್ ಪೇ ಮೂಲಕ ಡ್ರಗ್ ಪೆಡ್ಲಿಂಗ್ ಹಣದ ವಹಿವಾಟನ್ನು ನಿರ್ವಹಿಸುತ್ತಿದ್ದ ಅಂಶಗಳು ತನಿಖೆಯಿಂದ ತಿಳಿದು ಬಂದಿರುತ್ತದೆ. \ No newline at end of file diff --git a/eesanje/url_46_263_9.txt b/eesanje/url_46_263_9.txt new file mode 100644 index 0000000000000000000000000000000000000000..05dd63ce7028012c73369be0cb5e6a09643d1d88 --- /dev/null +++ b/eesanje/url_46_263_9.txt @@ -0,0 +1,10 @@ +ಶಿವಮೊಗ್ಗದಲ್ಲಿ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ +ಬೆಂಗಳೂರು,ಜ.12- ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚಖಾತ್ರಿ ಯೋಜನೆಗಳ ಪೈಕಿ ಕೊನೆಯದಾದ ಯುವನಿಧಿಗೆ ಇಂದಿನಿಂದ ಚಾಲನೆ ನೀಡಲಾಗಿದೆ. ಸ್ವಾಮಿ ವಿವೇಕಾನಂದರ 161 ನೇ ಜಯಂತಿ ಪ್ರಯುಕ್ತ ಶಿವಮೊಗ್ಗದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಈ ಮೂಲಕ ವಿಧಾನಸಭೆ ಚುನಾವಣೆಗೂ ಮೊದಲು ನೀಡಿದ್ದ ಪ್ರಮುಖ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಅನುಷ್ಠಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. +ಈ ಮೊದಲು ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿತ್ತು. ಪದವಿ ಅಥವಾ ಡಿಫ್ಲೋಮಾ ಪಡೆದ ಬಳಿಕ 6 ತಿಂಗಳವರೆಗೂ ಉದ್ಯೋಗ ದೊರೆಯದೇ ಇದ್ದವರಿಗೆ 2 ವರ್ಷಗಳ ಕಾಲ ನಿರುದ್ಯೋಗ ಭತ್ಯೆ ನೀಡುವುದು ಯುವನಿ ಯೋಜನೆಯ ಮುಖ್ಯ ಉದ್ದೇಶ.ಪದವಿಧರರಿಗೆ 3,000, ಡಿಫ್ಲೋಮಾದಾರರಿಗೆ 1,500 ರೂ. ಭತ್ಯೆ ನೀಡುವುದಾಗಿ ಚುನಾವಣೆಗೂ ಮೊದಲೇ ಘೋಷಣೆ ಮಾಡಲಾಗಿತ್ತು. +ಅದರ ಪ್ರಕಾರ ಸರ್ಕಾರ ರಚನೆಯಾದ 7 ತಿಂಗಳು ಕಳೆದ ಬಳಿಕ ಮತ್ತು ಪದವಿ, ಡಿಫ್ಲೋಮಾ ಪರೀಕ್ಷೆಗಳು ಮುಗಿದ 6 ತಿಂಗಳ ನಂತರ ಯೋಜನೆ ಜಾರಿಗೆ ಚಾಲನೆ ನೀಡಲಾಗಿದೆ. ಕಳೆದ ಡಿಸೆಂಬರ್ 26 ರಂದು ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಯಿತು. ರಾಜ್ಯದಲ್ಲಿ 2022-23 ನೇ ಸಾಲಿನಲ್ಲಿ 5.29 ಲಕ್ಷ ಮಂದಿ ಪದವಿ ಹಾಗೂ ಡಿಫ್ಲೋಮಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. +ಅವರಲ್ಲಿ ನಿರುದ್ಯೋಗಿಗಳಾಗಿರುವವರು ಯುವನಿಧಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರು.ನಿನ್ನೆಯವರೆಗೂ ಸುಮಾರು 66 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ ಒಟ್ಟು ಫಲಾನುಭವಿಗಳ ಪೈಕಿ ಶೇ.12 ರಷ್ಟು ಮಾತ್ರ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನುಳಿದಂತೆ ಪದವೀಧರರಲ್ಲಿ ಯುವನಿಧಿ ಯೋಜನೆ ಬಗ್ಗೆ ನಿರಾಸಕ್ತಿ ಅಥವಾ ಉದ್ಯೋಗ ದೊರೆತಿರುವ ಸಾಧ್ಯತೆಗಳಿವೆ. +ಯುವನಿಧಿ ಯೋಜನೆಯ ಚಾಲನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಬಹುತೇಕ ಸಚಿವರು ಶಿವಮೊಗ್ಗದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸುಮಾರು 1 ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಸಮಾವೇಶಗೊಳಿಸುವ ನಿಟ್ಟಿನಲ್ಲಿ ತಯಾರಿಗಳಾಗಿದ್ದವು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು. +ಸಂಚಾರದಟ್ಟಣೆ ಮತ್ತು ಅದರಿಂದ ವಿದ್ಯಾರ್ಥಿಗಳಿಗೆ ಆಗುವ ಕಿರಿಕಿರಿಯನ್ನು ತಪ್ಪಿಸಲು ಶಾಲಾ-ಕಾಲೇಜುಗಳ ಸಮಯವನ್ನು 9 ರಿಂದ 4 ಗಂಟೆಯವರೆಗೂ ಬದಲಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳಲು ಅಡ್ಡಿಯಿಲ್ಲದಂತೆ ಪಂಚಖಾತ್ರಿಗಳನ್ನು ಜಾರಿಗೊಳಿಸಿದೆ. +ವಿಧಾನಸಭೆ ಚುನಾವಣೆಯಲ್ಲಿ ಪಂಚಖಾತ್ರಿಗಳು ಪ್ರಮುಖ ಪಾತ್ರ ವಹಿಸಿದ್ದವು ಎಂಬ ವಿಶ್ಲೇಷಣೆಯಿದೆ. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್‍ನ ಭರವಸೆಗಳ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದಿದ್ದವು.ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ನೋಡಿದರೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವುದು ಅಸಾಧ್ಯ ಎಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ರಾಜಸ್ಥಾನ ಹಾಗೂ ಮಧ್ಯಪ್ರದೇಶದ ಚುನಾವಣಾ ಪ್ರಚಾರದಲ್ಲಿ ಕರ್ನಾಟಕ ಸರ್ಕಾರವನ್ನು ಟೀಕಿಸಿ ಪಂಚಖಾತ್ರಿ ಯೋಜನೆಗಳ ಜಾರಿಯಿಂದ ಆರ್ಥಿಕ ಆರೋಗ್ಯ ಹದಗೆಡಲಿದೆ ಎಂದು ಲೇವಡಿ ಮಾಡಿದರು. +ಬಿಜೆಪಿಯು ಕಾಂಗ್ರೆಸ್‍ನ ಗ್ಯಾರಂಟಿಗಳನ್ನು ಆರಂಭದಲ್ಲಿ ಟೀಕಿಸಿತ್ತು. ಅನಂತರ ಸಮರ್ಪಕ ಅನುಷ್ಠಾನ ಮಾಡಲಾಗುತ್ತಿಲ್ಲ ಎಂಬ ಆರೋಪ ಮಾಡಲಾರಂಭಿಸಿತ್ತು. ಪಂಚಖಾತ್ರಿ ಯೋಜನೆಗಳ ಬಗ್ಗೆ ಜನರ ಒಲವು ಹೆಚ್ಚಾಗುತ್ತಿದ್ದಂತೆ ಯೂಟರ್ನ್ ಪಡೆದ ಬಿಜೆಪಿ ರಾಷ್ಟ್ರಮಟ್ಟದಲ್ಲಿ ಮೋದಿ ಗ್ಯಾರಂಟಿ ಎಂಬ ಘೋಷಣೆಯೊಂದಿಗೆ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದೆ. +ಕೇಂದ್ರ ಸರ್ಕಾರದ ಯೋಜನೆಗಳನ್ನು ಮೋದಿ ಗ್ಯಾರಂಟಿ ಎಂದು ಬಿಂಬಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇನ್ನಿತರ ಕಾಂಗ್ರೆಸಿಗರು ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿ ವಿರುದ್ಧ ವಿಡಂಬನಾತ್ಮಕ ಟೀಕೆಗಳನ್ನು ಮಾಡಲಾರಂಭಿಸಿದ್ದಾರೆ. \ No newline at end of file diff --git a/eesanje/url_46_264_1.txt b/eesanje/url_46_264_1.txt new file mode 100644 index 0000000000000000000000000000000000000000..ca64de7b4d782aed5441d9f4ea137629ccb62826 --- /dev/null +++ b/eesanje/url_46_264_1.txt @@ -0,0 +1,7 @@ +ನಾಳೆ ಕೆ-ಸೆಟ್ ಪರೀಕ್ಷೆ, ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ +ಬೆಂಗಳೂರು, ಜ.12- ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನಾಳೆ ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿವಿಧ 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಬೆಂಗಳೂರು ನಗರ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮ ಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2.00ರವರೆಗೆ ಇರುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ಪ್ರವೇಶಿಸಿದ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ನಂತರವೇ ಹೊರಹೋಗಲು ಅವಕಾಶ ನೀಡಲಾಗುವುದು. ಕಟ್ಟುನಿಟ್ಟಿನ ತಪಾಸಣೆ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ ಮೊದಲೇ ಬರಬೇಕು ಎಂದು ಅವರು ಸೂಚಿಸಿದ್ದಾರೆ. +ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್ +ಪರೀಕ್ಷೆ ನಡೆಯುವ 41 ವಿಷಯಗಳಲ್ಲಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಮಂದಿ ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಅಭ್ಯರ್ಥಿಗಳು ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. +ಪರೀಕ್ಷೆ ಬರೆಯುವ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6ರಷ್ಟು ಮಂದಿ ಅಂತಿಮವಾಗಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಅವರು ಹೇಳಿದ್ಧಾರೆ. +800 ಇ- ಮೇಲ್:ನೋಂದಣಿ ಸಂಖ್ಯೆ ಕಳೆದುಕೊಂಡ 800ಕ್ಕೂ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳದ ಕಾರಣ ಅವರ ಇ-ಮೇಲ್‍ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದ್ದು ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_264_10.txt b/eesanje/url_46_264_10.txt new file mode 100644 index 0000000000000000000000000000000000000000..e5e583640c54b0821ecebde5f7e69259e2d6ceb3 --- /dev/null +++ b/eesanje/url_46_264_10.txt @@ -0,0 +1,6 @@ +ನೂತನ ಸಂಸತ್ ಭವನದಲ್ಲಿ ಬಜೆಟ್ ಮಂಡನೆಗೆ ಸಿದ್ಧತೆ +ನವದೆಹಲಿ, ಜ.11- ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ಬಹುನಿರೀಕ್ಷೀತ ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಫೆ.1ರಂದು ಮಂಡನೆಯಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು, ಫೆ .1ರಂದು ಹೊಸ ಸಂಸತ್ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಇದು ಚುನಾವಣಾ ವರ್ಷವಾಗಿರುವ ಕಾರಣ, ಪೂರ್ಣಾವಧಿ ಅಯವ್ಯಯ ಮಂಡನೆ ಮಾಡದೆ, ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಲಿದ್ದಾರೆ. ಏಪ್ರಿಲ್ ಹಾಗೂ ಮೇ ತಿಂಗಳ ಮಧ್ಯ ಭಾಗದಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿಯ ಬಜಟ್ ನಲ್ಲಿ ಹೊಸ ಯೋಜನೆಗಳ ಘೋಷಣೆ ಮಾಡುವ ಸಾಧ್ಯತೆ ಇಲ್ಲ. +ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು +ಮಧ್ಯಂತರ ಬಜೆಟ್‍ನಲ್ಲಿ ಮಹಿಳಾ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಯನ್ನು ದ್ವಿಗುಣಗೊಳಿಸುವ ಪ್ರಸ್ತಾಪವಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸಂಸತ್ತಿನ ಬಜೆಟ್ ಅಧಿವೇಶನವು ಜ.31 ರಿಂದ ಫೆ.9ರ ವರೆಗೆ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜ.31ರಂದು ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. +ಈ ಬಾರಿಯ ಅಧಿವೇಶನದಲ್ಲಿ ಕೇಂದ್ರದ ಎನ್‍ಡಿಎ ಸರ್ಕಾರ ಯಾವುದೇ ಪ್ರಮುಖ ಬದಲಾವಣೆಗಳನ್ನು ಮಾಡುವ ಕಾರ್ಯಸೂಚಿಯನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_46_264_11.txt b/eesanje/url_46_264_11.txt new file mode 100644 index 0000000000000000000000000000000000000000..9838509271e21bc7758fe720602293d885914732 --- /dev/null +++ b/eesanje/url_46_264_11.txt @@ -0,0 +1,7 @@ +ಜ.17ರಿಂದ ಅರ್ನಿಷ್ಟಾವಧಿ ಲಾರಿ ಮುಷ್ಕರ +ಬೆಂಗಳೂರು,ಜ.11- ರಾಜ್ಯದ ಎಲ್ಲಾ ಲಾರಿ ಮಾಲೀಕರ ಸಂಘದವರು ಸಭೆ ಸೇರಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಚರ್ಚಿಸಿ ಜ.17 ರಿಂದ ನಮ್ಮ ಬೇಡಿಕೆ ಈಡೇರುವ ವರೆಗೂ ವಾಹನಗಳನ್ನು ಓಡಿಸದಿರಲು ನಿರ್ಧರಿಸಿದ್ದೇವೆ ಎಂದು ದಕ್ಷಿಣ ಭಾರತ ಲಾರಿ ಮಾಲೀಕರ ಸಂಘಟನೆ ಹೇಳಿದೆ. ನಗರದಲ್ಲಿಂದು ಕರ್ನಾಟಕ , ಕೇರಳ, ಆಂಧ್ರ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಲಾರಿ ಮಾಲೀಕರ ಸಂಘಟ ನೆಗಳ ಮುಖಂಡರು ಸಭೆ ನಡೆಸಿ ಜ.17ರಿಂದ ಅರ್ನಿಷ್ಟಾವಧಿ ಲಾರಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. +ಈಗಾಗಲೆ ದೇಶದ ಉತ್ತರ ಭಾಗದಲ್ಲಿ ಯಶಸ್ವಿಯಾಗಿ ಮುಷ್ಕರ ನಡೆದಿದೆ. ಆದರೆ ನಮ್ಮ ರಾಜ್ಯದಲ್ಲಿನ ಸರ್ಕಾರದ ಕಣ್ಣು ತೆರೆಸಲು ಈ ಮುಷ್ಕರ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರವು ತಂದಿದ್ದ ಭಾರತೀಯ ನ್ಯಾಯ ಸಂಹಿತೆಯ ಕಲಂ 106ರ ಉಪವಿ 1 ಮತ್ತು 2ಅನ್ನು ಸದ್ಯ ನಿಲ್ಲಿಸಿದೆ. ಆದರೆ ಇದನ್ನು ತಟಸ್ಥಗೊಳಿಸಬೇಕು. ಇನ್ನು ರಾಜ್ಯಸರ್ಕಾರದ ಬೇಡಿಕೆಯಲ್ಲಿ ಸಾರಿಗೆ ಇಲಾಖೆಯು ರಾಜ್ಯದ ಗಡಿ ಭಾಗಗಳಲ್ಲಿರುವ ಎಲ್ಲಾ ಸಾರಿಗೆ ಇಲಾಖೆ ತಪಾಸಣೆ ಠಾಣೆಗಳನ್ನು ತೆಗೆದುಹಾಕಬೇಕು. +ನೈತಿಕ ಪೊಲೀಸ್‍ಗಿರಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ +ಓವರ್ ಪ್ರೊಜೆಕ್ಷನ್‍ಗೆ ವಿಧಿಸುತ್ತಿರುವ 20,000ರೂ. ದಂಡವನ್ನು ಕಡಿಮೆ ಮಾಡಬೇಕು. ಡಿಎಸ್‍ಎ ಕೇಸುಗಳು ಎಲ್ಲೇ ಇದ್ದರೂ ಸಹ ಅದನ್ನು ವಾಹನ ಮಾಲೀಕರು ತಮ್ಮ ಮೂಲ ಕಚೇರಿಯಲ್ಲಿ ಮುಗಿಸಿಕೊಳ್ಳಲು ಅವಕಾಶ ನೀಡಬೇಕು. ಬೆಂಗಳೂರು ನಗರದಲ್ಲಿ ಸರಕು ಸಾಗಾಣಿಕೆ ವಾಹನಗಳ ನಗರ ಪ್ರವೇಶಕ್ಕೆ ದಿನದ ಕೆಲವು ಸಮಯದಲ್ಲಿ ಮಾಡಿರುವ ನಿಬರ್ಂಧವನ್ನು ಸಂಪೂರ್ಣವಾಗಿ ಕೈಬಿಡಬೇಕು. ಅಪಘಾತ ನಡೆದಾಗ ವಾಹನದ ಚಾಲಕನ ಚಾಲನಾ ಪತ್ರವನ್ನು ವಶಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಹಾಗೂ ಅಪಘಾತ ನಡೆದ ನಂತರ ವಶಪಡಿಸಿಕೊಂಡ ವಾಹನ ಮತ್ತು ಚಾಲಕನನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಮತ್ತು ಚಾಲಕನ ಚಾಲನಾ ಪರವಾನಗಿಯನ್ನು ಅಮಾನತಿನಲ್ಲಿಡುವಂತೆ ಪ್ರಾದೇಶಿಕ ಸಾರಿಗೆ ಅಕಾರಿಗಳಿಗೆ ಪತ್ರ ಬರೆಯುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. +ಹೊರ ರಾಜ್ಯಗಳ ವಾಹನಗಳು ನಮ್ಮ ರಾಜ್ಯದಲ್ಲಿ ಅಪಘಾತಕ್ಕೆ ಈಡಾದಾಗ, ವಾಹನ ಮತ್ತು ಚಾಲಕನ ಬಿಡುಗಡೆಗೆ ಸ್ಥಳೀಯ ಭದ್ರತೆ ಮತ್ತು ಜಾಮೀನು ಕೇಳುವುದನ್ನು ನಿಲ್ಲಿಸಬೇಕು. ವಾಹನಗಳು ಬ್ರೇಕ್‍ಡೌನ್ ಆಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ನಿಂತಿದ್ದರೂ ವಾಹನಗಳನ್ನು ವಶಪಡಿಸಿಕೊಂಡು ಕಲಂ 283ರಡಿಯಲ್ಲಿ ಕೇಸು ದಾಖಲಿಸುವುದನ್ನು ನಿಲ್ಲಿಸಬೇಕು. +ಹೆದ್ದಾರಿಯಲ್ಲಿ ವಾಹನಗಳ ನಿಲುಗಡೆ ಮಾಡಿದಾಗ ಸರಕುಗಳ ಕಳ್ಳತನ ಮತ್ತು ವಾಹನದ ಡೀಸೆಲ್ ಮತ್ತು ಬಿಡಿ ಭಾಗಗಳು ಕಳ್ಳತನವಾದಾಗ ಮಾಲೀಕರು ಠಾಣೆಗೆ ತೆರಳಿ ದೂರು ನೀಡಿದಾಗ ಅದಕ್ಕೆ ಎಫ್‍ಐಆರ್ ದಾಖಲಿಸಬೇಕು ಎಂಬ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_46_264_12.txt b/eesanje/url_46_264_12.txt new file mode 100644 index 0000000000000000000000000000000000000000..97475bc54adf4ea5d95d2471c0ff52d071e72c42 --- /dev/null +++ b/eesanje/url_46_264_12.txt @@ -0,0 +1,7 @@ +ರಾಜಕಾರಣದಲ್ಲಿ ಧರ್ಮವನ್ನು ಬೆರೆಸುವುದು ಸಂವಿಧಾನಕ್ಕೆ ವಿರುದ್ಧ : ಬಿ.ಕೆ.ಹರಿಪ್ರಸಾದ್ +ಬೆಂಗಳೂರು,ಜ.11-ಧರ್ಮದಲ್ಲಿ ರಾಜಕಾರಣ ಮಾಡುವುದು, ರಾಜಕಾರಣದಲ್ಲಿ ಧರ್ಮವನ್ನು ಬೆರೆಸುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಸಂವಿಧಾನವನ್ನು ಉಲ್ಲಂಘಿಸುವ ಬಿಜೆಪಿಯವರು ದೇಶದ್ರೋಹಿಗಳು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ದೂರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಇದಕ್ಕೆ ನನ್ನ ಸಹಮತ ಇದೆ ಎಂದರು. +ಈ ಹಿಂದೆ ತಾವು ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಜ.22 ರಂದು ನಡೆಯಲಿರುವ ಕಾರ್ಯಕ್ರಮ ರಾಜಕೀಯ ಪ್ರಮುಕ್ತವಾಗಿದೆ. ಅದು ಧಾರ್ಮಿಕ ಕಾರ್ಯಕ್ರಮ ಅಲ್ಲ. ಹಾಗಾಗಿ ಅದರಿಂದ ದೂರ ಉಳಿಯುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾಗಿ ತಿಳಿಸಿದರು. ತಮಗೆ ತಿಳಿದಿರುವ ಅಲ್ಪಸ್ವಲ್ಪ ಧಾರ್ಮಿಕ ವಿಚಾರಗಳ ಪ್ರಕಾರ, ಹಿಂದೂ ಧರ್ಮದ ಮೂಲಗುರು ಎಂದರೆ ಆದಿ ಶಂಕರಾಚಾರ್ಯರು. ಅವರು ಸ್ಥಾಪಿಸಿದ ಮಠದ ಜಗದ್ಗುರುಗಳು ಅಯೋಧ್ಯೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ. +ರಾಮ, ಶಿವ ಎಲ್ಲರ ದೇವರು, ಇದರಲ್ಲಿ ಅನಗತ್ಯ ರಾಜಕೀಯ ಬೇಡ : ಸಚಿವ ಎಂ.ಬಿ.ಪಾಟೀಲ್ +ಒಂದು ವೇಳೆ ಆದಿ ಶಂಕರಾಚಾರ್ಯ ಮಠದ ಜಗದ್ಗುರುಗಳು ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದರೆ ಅದರಲ್ಲಿ ನಾವು ಭಾಗವಹಿಸುತ್ತಿದ್ದೆವು. ಯಾರ ಆಹ್ವಾನವೂ ಬೇಕಿರಲಿಲ್ಲ. ಮಂತ್ರಾಕ್ಷತೆ ನೀಡುವಂತಹ ನಾಟಕವೂ ಬೇಕಾಗುತ್ತಿರಲಿಲ್ಲ ಎಂದು ತಿಳಿಸಿದರು. +ದೇವರು ಎಂದರೆ ನಂಬಿಕೆ. ಬಿಜೆಪಿಯವರು ಧರ್ಮದಲ್ಲಿ ರಾಜಕೀಯ ಬೆರೆಸಿ ಧರ್ಮ ವಿರೋಧಿಗಳಾಗಿದ್ದಾರೆ. ರಾಜಕೀಯದಲ್ಲಿ ಧರ್ಮ ತಂದು ಸಂವಿಧಾನ ವಿರೋಗಳೂ ಆಗಿ ದೇಶದ್ರೋಹಿಗಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಹಿಂದೂ ಉದಯ ಸಾಮ್ರಾಟ ಎಂದು ಬಿಂಬಿಸಿಕೊಳ್ಳುತ್ತಿರುವವರು 2014 ಮತ್ತು 2019 ರ ಚುನಾವಣೆಯಲ್ಲಿ ಹಿಂದೂಗಳ ಎಷ್ಟು ಮತ ಪಡೆದಿದ್ದಾರೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ವಾಸ್ತವಾಂಶ ದೊರೆಯುತ್ತದೆ. ಒಟ್ಟು ಮತದಾರರ ಪೈಕಿ ಬಿಜೆಪಿಯವರಿಗೆ ಕಾಲು ಭಾಗವೂ ಮತ ಬಂದಿಲ್ಲ. ಹೀಗಿರುವಾಗ ಬಿಜೆಪಿಗೆ ಹಿಂದೂ ಧರ್ಮದ ಬೆಂಬಲ ಇದೆ ಎಂದು ಹೇಗೆ ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು. +ಬಿಜೆಪಿಯವರು ಎಂದಿಗೂ ಜನರ ಪರವಾದ ವಿಚಾರಗಳ ಕುರಿತು ಚರ್ಚೆ ಮಾಡುವುದಿಲ್ಲ. ಪಕ್ಷ ಉದಯವಾದಾಗಲೇ 370 ರದ್ದುಪಡಿಸುವುದು, ಏಕರೂಪ ನಾಗರಿಕ ಸಂಹಿತೆ ಜಾರಿ ಮತ್ತು ಅಯೋಧ್ಯೆ ಅವರ ಅಜೆಂಡಾವಾಗಿತ್ತು. ಅದರ ಹೊರತಾಗಿ ಜನರ ಬದುಕಿನ ಸುಧಾರಣೆಗಳ ಬಗ್ಗೆ ಅವರು ಚಿಂತಿಸುವುದಿಲ್ಲ. ಯುವಕರು, ವಿದ್ಯಾರ್ಥಿಗಳು, ಕಾರ್ಮಿಕರು, ಮಹಿಳೆಯರು, ರೈತರು, ಕೈಗಾರಿಕೆಗಳ ಬಗ್ಗೆ ಬಿಜೆಪಿಯವರು ಯಾವತ್ತೂ ಪ್ರಸ್ತಾಪಿಸುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_264_2.txt b/eesanje/url_46_264_2.txt new file mode 100644 index 0000000000000000000000000000000000000000..45990a26d4a8cc4d056ffc4ae47e9c2b6be7c787 --- /dev/null +++ b/eesanje/url_46_264_2.txt @@ -0,0 +1,6 @@ +ಕಾಂಗ್ರೆಸ್‍ನ ಕಣಕಣದಲ್ಲೂ ಹಿಂದೂ ದ್ವೇಷ ಇದೆ : ಆರ್.ಅಶೋಕ್ +ಬೆಂಗಳೂರು,ಜ.12- ಆಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ಬಿಜೆಪಿ, ಆರ್‍ಎಸ್‍ಎಸ್ ಕಾರ್ಯಕ್ರಮವಾಗಿದೆ, ಆದ್ದರಿಂದ ನಾವು ಹೋಗುವುದಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷ 1951ರಲ್ಲಿ ಸೋಮನಾಥ ದೇವಾಲಯಕ್ಕೆ ಏಕೆ ಹೋಗಲಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದೂ ದ್ವೇಷ ಕಾಂಗ್ರೆಸ್‍ನ ಕಣಕಣದಲ್ಲೂ ಇದೆ. 1951ರಲ್ಲಿ ದ್ವಾದಶ ಜ್ಯೋತಿರ್ಲಿಂಗಗಳಲ್ಲಿ ಒಂದಾದ ಸೋಮನಾಥ ದೇವಾಲಯದ ಉದ್ಘಾಟನೆ ಆದಾಗ ಅಂದಿನ ಪ್ರಧಾನಿ ನೆಹರೂ ಅವರು ಅದರಲ್ಲಿ ಭಾಗವಹಿಸಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. +ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ +ಅಷ್ಟೇ ಅಲ್ಲದೆ, ಸೋಮನಾಥ ದೇವಾಲಯದ ಜೀರ್ಣೋದ್ಧಾರವನ್ನೇ ವಿರೋಧಿಸಿದ್ದ ನೆಹರೂ ಅವರು ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರನ್ನು ಸಹ ಹೋಗದಂತೆ ತಡೆಯಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ. +1951ರಲ್ಲಿ ಬಿಜೆಪಿ ಇನ್ನೂ ಸ್ಥಾಪನೆಯೇ ಆಗಿರಲಿಲ್ಲ. ಮೇಲಾಗಿ ಅಂದು ಕಾಂಗ್ರೆಸ್ ಸರ್ಕಾರವೇ ಇತ್ತು, ಸ್ವತಃ ನೆಹರೂ ಅವರೇ ಪ್ರಧಾನಿ ಆಗಿದ್ದರು. ಕಾಂಗ್ರೆಸ್ ಪಕ್ಷದ ಹಿಂದೂ ದ್ವೇಷ ಅದರ ಕಣ ಕಣದಲ್ಲೂ ಇದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ. \ No newline at end of file diff --git a/eesanje/url_46_264_3.txt b/eesanje/url_46_264_3.txt new file mode 100644 index 0000000000000000000000000000000000000000..a32ed88b07987195ad309dc84eccca15ffaccc92 --- /dev/null +++ b/eesanje/url_46_264_3.txt @@ -0,0 +1,6 @@ +ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ +ಬೆಂಗಳೂರು,ಜ.11- ಕ್ರೀಡೆಗಳು ನಮ್ಮ ಜೀವನವನ್ನು ಹೇಗೆ ನಡೆಸಬೇಕೆಂಬುದನ್ನು ಕಲಿಸುತ್ತವೆ. ಏಕೆಂದರೆ ಅಲ್ಲಿ ಸ್ಪರ್ಧೆಯಿದೆ. ಸೋಲು-ಗೆಲುವು, ಮತ್ತು ಅವುಗಳನ್ನು ಸ್ವೀಕರಿಸುವ ವಿಧಾನವನ್ನು ಹೇಳಿಕೊಡುತ್ತದೆ ಎಂದು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಸ್.ಮರಿಸ್ವಾಮಿ ತಿಳಿಸಿದ್ದಾರೆ. +ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾ ವಾರ್ಷಿಕೋತ್ಸವ-2023 ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ಕ್ರೀಡೆಯಲ್ಲಿನ ಸೋಲು-ಗೆಲುವುಗಳು ನಮಗೆ ತಿಳಿಸುತ್ತವೆ. ಯಾವ ಹಂತದಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ತಿಳಿದು ಸಾಧನೆ, ಪ್ರತಿಭೆ, ಉತ್ಸಾಹದ ಮೂಲಕ ಆ ಸ್ಥಾನ ಮತ್ತೆ ಪಡೆದುಕೊಳ್ಳಬಹುದು ಎಂಬುದನ್ನು ಕ್ರೀಡೆ ಕಲಿಸುತ್ತದೆ ಎಂದರು. +ಕರ್ನಾಟಕ ಪೊಲೀಸ್ ಅನೇಕ ಕ್ರೀಡಾ ಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆಯನ್ನು ತೋರಿಸಿದ್ದಾರೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಕ್ರೀಡಾಪಟುಗಳು ಪದಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವುಗಳಲ್ಲಿ ರಾಜ್ಯಗಳು ಮತ್ತು ರಾಜ್ಯ ಪೊಲೀಸ್ ಇಲಾಖೆಗಳು ನೀಡಿರುವ ಕೊಡುಗೆ ಕಡಿಮೆಯೇನೂ ಇಲ್ಲ ಎಂದು ಹೇಳಿದರು. +ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್ +ನಮ್ಮಲ್ಲಿ ಪ್ರತಿಭೆಗಳಿವೆ. ಸಾಧನೆ ಮಾಡುವ ಶಕ್ತಿಯಿದೆ. ಅವರಿಗೆ ಉತ್ತೇಜನ ಕೊಡುವ ಕೆಲಸ ನಾವು ಮಾಡಬೇಕು. ಕರ್ನಾಟಕ ಪೊಲೀಸ್ ಕ್ರೀಡಾ ಮಂಡಳಿಯು 15 ತಂಡಗಳನ್ನು ಬೇರೆಬೇರೆ ಕಡೆಗಳಲ್ಲಿ ತರಬೇತಿ ನೀಡುತ್ತಿದೆ. ಅವರು ಮುಂದಿನ ದಿನಗಳಲ್ಲಿ ಬಹಳಷ್ಟು ಸಾಧನೆ ಮಾಡುವ ಸಾಧ್ಯತೆಯಿದೆ ಎಂದರು. ಇಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಯಶಸ್ವಿಯಾಗುವಂತೆ ಹಾರೈಸುತ್ತೇನೆ ಎಂದು ಎಸ್.ಮರಿಸ್ವಾಮಿ ಯವರು ಹೇಳಿದರು. \ No newline at end of file diff --git a/eesanje/url_46_264_4.txt b/eesanje/url_46_264_4.txt new file mode 100644 index 0000000000000000000000000000000000000000..944948453f6232ff900920c3b6b194bd28d32f66 --- /dev/null +++ b/eesanje/url_46_264_4.txt @@ -0,0 +1,11 @@ +ವರ್ಷದ ಮೊದಲ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ +ಬೆಂಗಳೂರು, ಜ.11- ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದ್ದು, ಹಬ್ಬಕ್ಕೆ ಬೇಕಾದ ಅಗತ್ಯವಸ್ತುಗಳ ಖರೀದಿಗೆ ಜನರು ಇಂದಿನಿಂದಲೇ ಮಾರುಕಟ್ಟೆಗಳತ್ತ ಮುಖ ಮಾಡಿದ್ದು, ಬೆಲೆ ಏರಿಕೆ ಬಿಸಿ ತಟ್ಟಿದೆ. ಹಬ್ಬಕ್ಕೆ ಬೇಕಾದ ಕಬ್ಬು, ಕಡಲೆಕಾಯಿ, ಅವರೆಕಾಯಿ, ಗೆಣಸುಗಳ ರಾಶಿ ಬಂದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿವೆ. ಮತ್ತೊಂದೆಡೆ ಸಿದ್ಧ ಎಳ್ಳು- ಬೆಲ್ಲ, ಸಕ್ಕರೆ ಅಚ್ಚು ಆಕರ್ಷಿಸುತ್ತಿವೆ. ಆದರೆ, ಬೆಲೆ ಏರಿಕೆ ಗ್ರಾಹಕರ ಜೇಬು ಸುಡುತ್ತಿದೆ. +ಸಾಮಾನ್ಯವಾಗಿ ಹಬ್ಬಗಳ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಸರ್ವೆಸಾಮಾನ್ಯ. ಆದರೆ, ಈ ಬಾರಿ ರಾಜ್ಯದಲ್ಲಿ ಬರ ಆವರಿಸಿದ್ದು, ಬೆಳೆ ಬಾರದೆ ಮತ್ತಷ್ಟು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಮುಖ್ಯವಾಗಿ ಕಡಲೆಕಾಯಿ, ಆವರೆಕಾಯಿ ಪ್ರಮುಖವಾಗಿದ್ದು ಇವನ್ನು ಮಳೆ ಆಶ್ರಿತ ಪ್ರದೆಶಗಳಲ್ಲಿ ಬೆಳೆಯಲಾಗುತ್ತದೆ. ಈ ಬಾರಿ ಮಳೆ ಬಾರದೆ, ಬೆಳೆ ಬಾರದೆ ಇರುವುದರಿಂದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. +ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್ +ತುಮಕೂರು ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಕೊರಟಗೆರೆ, ರಾಮನಗರ ತಾಲೂಕಿನ ಮಾಗಡಿ, ತಾಲೂಕುಗಳಲ್ಲಿ ಹೆಚ್ಚು ಕಡಲೆಕಾಯಿ ಬೆಳೆಯುವ ಕಾಲವೊಂದಿತ್ತು. ಆದರೆ ದಿನ ಕಳೆದಂತೆ ಕಡಲೆ ಬೆಳೆಯುವವರೇ ಇಲ್ಲದಂತಾಗಿದೆ. ನೀರಿನ ಅಭಾವ, ಕಾಡುಪ್ರಾಣಿಗಳ ಹಾವಳಿ, ಕೂಲಿಕಾರ್ಮಿಕರ ಕೊರತೆ, ರಸಗೊಬ್ಬರಗಳ ಬೆಲೆ ಏರಿಕೆಯಿಂದ ರೈತರು ಕಡಲೆಕಾಯಿ ಬೆಳೆಯಲು ಒಲವು ತೊರದೆ ಜಮೀನುಗಳೆಲ್ಲ ಪಾಳು ಬಿದ್ದಿವೆ. ಇದರಿಂದ ಉತ್ಪಾದನೆ ಕುಂಠಿತವಾಗಿ ಬೆಲೆ ಹೆಚ್ಚಳವಾಗಿದೆ . ಆಂಧ್ರ ತಮಿಳುನಾಡಿನಿಂದ ಅಪಾರ ಪ್ರಮಾಣದಲ್ಲಿ ಕಡಲೆಕಾಯಿ ಬಂದಿದ್ದು, ಕೆಜಿಗೆ 100 ರಿಂದ 150 ರೂ. ವರೆಗೂ ಮರಾಟವಾಗುತ್ತಿದೆ. +ಇನ್ನು ದಿನ್ನೆ ಜಮೀನುಗಳಲ್ಲಿ ಬೆಳೆದ ಆವರೆ ಕಾಯಿಯ ಸೊಗಡೇ ಬೇರೆ. ಅದರಲ್ಲೂ ಮಾಗಡಿ ಅವರೆ ಎಂದರೆ ಹೆಸರುವಾಸಿ. ಆದರೆ ಈ ಬಾರಿ ಮಳೆ ಕೈ ಕೊಟ್ಟಿದ್ದು, ಮಳೆಯಾಶ್ರಿತ ಪ್ರದೇಶಗಳಲ್ಲಿ ಅವರೆ ಬೆಳೆ ಬಂದಿಲ್ಲ. ನೀರಾವರಿ ಪ್ರದೇಶದಲ್ಲಿ ಬೆಳೆದ ಬೆಳೆ ಬಂದಿದ್ದು, ಇದರಲ್ಲಿ ಸೊಗಡೆ ಇಲ್ಲದಂತಾಗಿದ್ದು, ಕೆಜಿಗೆ 60 ರಿಂದ 70 ರೂ.ಗೆ ಮಾರಾಟ ಮಾಡಲಾಗುತ್ತಿದೆ. +ಮೊದಲೆಲ್ಲಾ ಹಬ್ಬಕ್ಕೆ ಇನ್ನೂ ಕೆಲ ದಿನ ಬಾಕಿ ಇರುವಾಗಲೆ ಹಿರಿಯರು ಮನೆಯಲ್ಲೆ ಕಡಲೆಬೀಜ, ಎಳ್ಳು, ಹುರಿದು, ಕೊಬ್ಬರಿ ಹಾಗೂ ಬೆಲ್ಲ ಹೆಚ್ಚಿಟ್ಟುಕೊಂಡು ಸಾಂಪ್ರದಾಯಿಕವಾಗಿ ಮಿಶ್ರಣ ಮಾಡಿ ಹಬ್ಬದ ದಿನ ಎಳ್ಳು-ಬೆಲ್ಲ ಬೀರುತ್ತಿದ್ದರು. ಆದರೆ ಇತ್ತಿಚೀನ ದಿನಗಳಲ್ಲಿ ಎಲ್ಲವೂ ರೆಡಿಮೆಡ್ ಆಗಿದೆ. ಯಾರೂ ಕೂಡ ಮನೆಯಲ್ಲಿ ಎಳ್ಳು-ಬೆಲ್ಲ ಮಾಡುವ ಗೋಜಿಗೆ ಹೊಗುವುದಿಲ್ಲ. ಅಂಗಡಿಯಲ್ಲಿ ಬಗೆಬಗೆಯ ಮಿಶ್ರಣ ದೊರೆಯುತ್ತಿದ್ದು, ಅದನ್ನು ತಂದು ಹಬ್ಬ ಮಾಡುತ್ತಾರೆ. +ಟೆಕ್ಕಿಗಳಿಂದ ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ +ಇದು ನಗರ ಪ್ರದೇಶದ ಕಥೆಯಲ್ಲ ಗ್ರಾಮೀಣ ಭಾಗದ ಕೆಲವರು ರೆಡಿಮೆಡ್‍ಗೆ ಆಕರ್ಷಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಗಳಲ್ಲಿ ಸಿದ್ಧ ಪಡಿಸಿದ ಎಳ್ಳು-ಬೆಲ್ಲ ಕೆಜಿಗೆ 250 ರಿಂದ 300 ರೂ.ಗೆ ಮರಾಟ ಮಾಡಲಾಗುತ್ತಿದೆ. ಚಳಿಗಾಲದಲ್ಲಿ ಎಳ್ಳು-ಬೆಲ್ಲ, ಕೊಬ್ಬರಿ ಸೇವಿಸಿದರೆ ಚರ್ಮ ಒಡೆಯುವುದಿಲ್ಲ ಎಂಬ ವೈಜ್ಞಾನಿಕ ಕಾರಣದಿಂದ ಹಬ್ಬದ ಹೆಸರಿನಲ್ಲಾದರೂ ಜನರು ಎಳ್ಳು-ಬೆಲ್ಲ ಸವಿಯಲಿ ಎಂದು ಹಿರಿಯರು ಸಂಪ್ರದಾಯ ಮಾಡಿದ್ದರು. ಆದರೆ ನಮ್ಮ ಜನ ಆಧುನೀಕರಣಕ್ಕೆ ಜೋತು ಬಿದ್ದು ನೆಪಮಾತ್ರಕ್ಕೆ ಹಬ್ಬ ಮಾಡಿ ರೆಡಿಮೇಡ್ ತಿನ್ನುತ್ತಾರೆ. ಇದರಲ್ಲಿ ಯಾವ ಪದಾರ್ಥವೂ ಸಮ ಪ್ರಮಾಣದಲ್ಲಿ ಇರುವುದಿಲ್ಲ. +ಬೆಂಗಳೂರಿನ ಕೆಆರ್ ಮಾರುಕಟ್ಟೆ, ಯಶವಂತಪುರ, ಬಸವನಗುಡಿ, ವಿಜಯನಗರ, ಜಯನಗರ, ದಾಸರಹಳ್ಳಿ, ಕೆಆರ್‍ಪುರ, ಮಲ್ಲೇಶ್ವರಂ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಗೆಣಸು, ಕಬ್ಬು, ಅವರೆಕಾಯಿ, ಕಡಲೆಕಾಯಿ ರಾಶಿ ರಾಶಿ ಬಂದಿದ್ದು, ಖರೀದಿ ಭರಾಟೆ ಜೋರಾಗಿದೆ. ಇನ್ನು ಹೂ-ಹಣ್ಣುಗಳ ಬೆಲೆಯೂ ಸಹ ತುಸು ಹೆಚ್ಚಾಗಿದೆ. ಏಲಕ್ಕಿ ಬಾಳೆ ಕೆಜಿ 100ರೂ.ಗೆ ಮರಾಟವಾಗುತ್ತಿದೆ. +ಯಾವ ಯಾವ ಬೆಲೆ ಎಷ್ಟಿದೆ ಅನ್ನೋದು ನೊಡುವುದಾದರೆ ಸಿದ್ಧ ಎಳ್ಳು-ಬೆಲ್ಲ ಮಿಶ್ರಣ ಕೆಜಿಗೆ 250- 300 ರೂ., ಕಬ್ಬು ಜೋಡಿ 80-100ರೂ., ಹಸಿಕಡಲೆಕಾಯಿ ಕೆಜಿ 100-150ರೂ., ಅವರೆಕಾಯಿ 60-80ರೂ., ಏಕಕ್ಕಿಬಾಳೆ 100-120ರೂ., ಸಕ್ಕರೆ ಅಚ್ಚು 200 ರೂ.ಗೆ ಮರಾಟವಾಗುತ್ತಿದೆ. ಇನ್ನೂ ಹಬ್ಬಕ್ಕೆ ಮೂರು ದಿನ ಬಾಕಿ ಉಳಿದಿದ್ದು ಇಂದಿನಿಂದಲೇ ಜನರು ಮಾರುಕಟ್ಟೆಗಳಿಗೆ ತೆರಳಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. \ No newline at end of file diff --git a/eesanje/url_46_264_5.txt b/eesanje/url_46_264_5.txt new file mode 100644 index 0000000000000000000000000000000000000000..7406913283c7c9005fda55b553d974224aada96f --- /dev/null +++ b/eesanje/url_46_264_5.txt @@ -0,0 +1,13 @@ +ಮಗುವನ್ನು ಕೊಲ್ಲುವ ಮುನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ಜಗಳವಾಡಿದ್ಧ ಸುಚನಾ ಸೇಠ್ +ಬೆಂಗಳೂರು,ಜ.11- ತನ್ನ ನಾಲ್ಕು ವರ್ಷದ ಮಗುವನ್ನು ತಾಯಿಯೇ ಹತ್ಯೆ ಮಾಡಿರುವ ಪ್ರಕರಣ ಇನ್ನಷ್ಟು ರೋಚಕ ತಿರುವುಗಳನ್ನು ಪಡೆದುಕೊಳ್ಳತೊಡಗಿದೆ. ಕೆಲವೇ ದಿನಗಳ ಮೊದಲು ಮಗನನ್ನು ಭೇಟಿಯಾಗುವಂತೆ ಪತಿಗೆ ಸುಚನಾ ಕೇಳಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಸುಚನಾ ಸೇಠ್ ಅವರು ಗೋವಾದ ಹೊಟೇಲ್ ಕೊಠಡಿಯೊಂದರಲ್ಲಿ ತನ್ನ ಪತಿಯೊಂದಿಗೆ ಮೊಬೈಲ್‍ನಲ್ಲಿ ನಡೆದ ಜಗಳದ ನಂತರ ತನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತನ್ನ ಮಗುವಿನ ಸಾವಿನ ಬಗ್ಗೆಯಾಗಲಿ ಅಥವಾ ಅದರಲ್ಲಿ ತನ್ನ ಪಾತ್ರದ ಬಗ್ಗೆಯಾಗಲಿ ಮಹಿಳೆ ಇದುವರೆಗೆ ಯಾವುದೇ ಪಶ್ಚಾತ್ತಾಪವನ್ನೂ ವ್ಯಕ್ತಪಡಿಸಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. +39 ವರ್ಷ ವಯಸ್ಸಿನ ಸುಚನಾ ಜ. 8 ರಂದು ತನ್ನ ಮಗನನ್ನು ಕೊಂದು ಶವವನ್ನು ಸೂಟ್‍ಕೇಸ್‍ನಲ್ಲಿ ತುಂಬಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಬಟ್ಟೆ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ. ಸೇಠ್ ಅವರನ್ನು ಪೊಲೀಸರು ಅದೇ ದಿನ ಕರ್ನಾಟಕದ ಚಿತ್ರದುರ್ಗದಿಂದ ಬಂಧಿಸಿ ಗೋವಾಕ್ಕೆ ಕರೆದೊಯ್ದಿದ್ದಾರೆ. +ತನಿಖೆ ವೇಳೆ, ಜ.6ರಂದು ತನ್ನ ಪತಿ ವೆಂಕಟ್ ರಾಮನ್‍ಗೆ ಸುಚನಾ, ಸಂದೇಶ ಕಳುಹಿಸಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಮರುದಿನ ಮಗುವನ್ನು ಭೇಟಿಯಾಗಬಹುದು ಎಂದು ಆಕೆ ತಿಳಿಸಿದ್ದಳು. ಹಾಗಾಗಿ ರಾಮನ್ ಅವರು ಬೆಂಗಳೂರಿಗೆ ಬಂದಿದ್ದರು. ಆದರೆ ಆ ದಿನ ಪತ್ನಿ ಮತ್ತು ಮಗು ಬೆಂಗಳೂರಿನಲ್ಲಿಲ್ಲದೆ ಗೋವಾಗೆ ಹೋಗಿರುವ ಕಾರಣ ಮಗನನ್ನು ಭೇಟಿಯಾಗಲು ತಂದೆಗೆ ಸಾಧ್ಯವಾಗದೆ ಅದೇ ದಿನ ಅವರು ಇಂಡೋನೇಷ್ಯಾಕ್ಕೆ ತೆರಳಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ದಂಪತಿಯ ವಿಚ್ಛೇದನದ ದಾಖಲೆಗಳ ಪ್ರಕಾರ, ಸೇಠ್ ಅವರು ಆಗಸ್ಟ್ 2022 ರಲ್ಲಿ ತನ್ನ ಪತಿ ವೆಂಕಟ್ ರಾಮನ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ತನಗೆ ಮತ್ತು ತನ್ನ ಮಗನಿಗೆ ದೈಹಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆಕೆ ಆರೋಪಿಸಿದ್ದರು. ಆದರೆ ವೆಂಕಟ್ ರಾಮನ್ ನ್ಯಾಯಾಲಯದಲ್ಲಿ ಆರೋಪವನ್ನು ನಿರಾಕರಿಸಿದ್ದರು. ಪತ್ನಿಯ ಮನೆಯಿಂದ ಅಥವಾ ಆಕೆ ಅಥವಾ ಮಗುವಿನೊಂದಿಗೆ ಸಂವಹನ ನಡೆಸುವುದನ್ನು ರಾಮನ್‍ಗೆ ನಿರ್ಬಂಧಿಸಿದ ವಿರುದ್ಧ ನ್ಯಾಯಾಲಯವು ತಡೆಯಾಜ್ಞೆ ನೀಡಿತ್ತು. ಇದು ಪತ್ನಿಯ ಅಸಮಾಧಾನಕ್ಕೆ ಕಾರಣ ಎನ್ನಲಾ ಗಿದ್ದು, ತನಿಖೆ ಮುಂದುವರೆದಿದೆ. +ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ +ಅಮ್ಮಾ ನನ್ನನ್ನು ಏಕೆ ಕೊಂದೆ..?ಬೆಂಗಳೂರು, ಜ.11- ಅಪ್ಪ-ಅಮ್ಮನ ನಡುವಿನ ಮನಸ್ತಾಪಕ್ಕೆ ಪ್ರಾಣತೆತ್ತ ಮಗು ಕೇಳುತ್ತಿದೆ ಅಮ್ಮಾ…. ನನ್ನನ್ನು ಯಾಕೆ ಕೊಂದೆ ಎಂದು…..!!!!! ಪ್ರೀತಿಯಿಂದ ಮಾತನಾಡಿಸುತ್ತಿದ್ದ ಅಪ್ಪನ ಕೈಯಲ್ಲಿದ್ದ ನಾಲ್ಕು ವರ್ಷದ ಮಗುವಿನ ಮೃತದೇಹವನ್ನು ನೋಡಿದಾಗ ಆ ಮಗು ಅಮ್ಮನನ್ನು ಹೀಗೆ ಪ್ರಶ್ನೆ ಮಾಡುತ್ತಿರುವಂತೆ ಭಾಸವಾಗುತ್ತಿತ್ತು. +ಅಪ್ಪ-ಅಮ್ಮನನ್ನೆ ನಂಬಿದ್ದ ಈ ಮುಗ್ದ ಮಗುವನ್ನು ಯಾರೆ ನೋಡಿದರೂ ಹೃದಯ ಕರಗುತ್ತದೆ. ಅಂತಹದ್ದರಲ್ಲಿ ತನ್ನ ಕರುಳ ಕುಡಿಯನ್ನೇ ಕೊಂದಿರುವ ನಿರ್ಧಯಿ ತಾಯಿಗೆ ತಪ್ಪಿನ ಅರಿವೇ ಆಗಲಿಲ್ಲವೆ…. ಹೆತ್ತ ತಾಯಿಯ ಇಂತಹ ಕ್ರೌರ್ಯ ನೋಡಿದರೆ ಮಾನವೀಯ ಮೌಲ್ಯಗಳು ಎತ್ತ ಸಾಗುತ್ತಿದೆ ಎಂಬ ಭಾಸವಾಗುತ್ತದೆ. +ಇದು ಪಾಶ್ಚಿಮಾತ್ಯ ಸಂಸ್ಕøತಿಯ ಪ್ರಭಾವವಿರಬಹುದೇ… ಈ ಪ್ರಕರಣದಲ್ಲಿ ಅತ್ಯಂತ ಪ್ರತಿಭಾನ್ವಿತೆಯಾಗಿರುವ ಸುಚನಾ ಸೇಠ್ ಅವರು ತಾನೂ ಒಬ್ಬ ತಾಯಿ ಎಂಬುದನ್ನು ಮರೆತಿದ್ದಾರೆ. ದಾಂಪತ್ಯದಲ್ಲಿ ಏನೇ ಮನಸ್ತಾಪವಿದ್ದರೂ, ಎಷ್ಟೇ ವೈಷಮ್ಯವಿದ್ದರೂ ಮಕ್ಕಳನ್ನು ಸಾಯಿಸುವ ಹಂತಕ್ಕೆ ಹೋಗುವುದು ಅಕ್ಷಮ್ಯ ಅಪರಾಧ. +ಒಂದು ವೇಳೆ ಮಕ್ಕಳು ಕೆಟ್ಟವರಾಗುತ್ತಾರೆ. ಆದರೆ ತಾಯಿ ಎಂದೂ ಕೆಟ್ಟವರಾಗಲ್ಲ ಎಂದು ಕೇಳಿದ್ದೇವೆ. ಆದರೆ ಈ ಪ್ರಕರಣದಲ್ಲಿ ಮಗು ಯಾವುದೇ ತಪ್ಪು ಮಾಡಿಲ್ಲ. ಅಪ್ಪನ ಜೊತೆ ಮಾತನಾಡಿದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ. ಇಂತಹ ಕ್ರೂರಿ ತಾಯಿಗೆ ಆ ದೇವರೇ ಶಿಕ್ಷೆ ಕೊಡಬೇಕು. ತಾಯಿ ಎಂಬ ಪದಕ್ಕೆ ಈ ಮಹಿಳೆ ಅವಮಾನ ಮಾಡಿದ್ದಾರೆ. +ತಂದೆ ರಾಮನ್ ಅವರು ಮಗುವಿನ ಮೃತದೇಹವನ್ನು ಕೈಯಲ್ಲಿ ಹಿಡಿದುಕೊಂಡು ಅಂತ್ಯಸಂಸ್ಕಾರಕ್ಕೆ ನಿಂತಿದ್ದನ್ನು ನೋಡಿದಾಗ ಕರುಳು ಚುರುಕ್ ಎನ್ನುತ್ತದೆ. ಆ ದೃಶ್ಯ ನೋಡಿದವರ ಕಣ್ಗಾಲೆಗಳು ಒದ್ದೆಯಾಗಿದೆ. ಎಷ್ಟೇ ಪ್ರತಿಭಾವಂತರಾದರೇನು, ಕೋಟ್ಯಾೀಶ್ವರರಾದರೇನು, ಮಾನವೀಯತೆ, ಮನುಷ್ಯತ್ವ ಎಂಬುದು ಬಹಳ ಮುಖ್ಯ ಹಾಗೂ ಮಹಿಳೆಯರು ಉದ್ಯೋಗ ಮಾಡಿ, ಸ್ವಂತ ದುಡಿಮೆಯಿಂದ ಹಣವನ್ನೆನೋ ಸಂಪಾದಿಸುತ್ತಿದ್ದಾರೆ, ಆದರೆ ಮಾನವೀಯತೆಯನ್ನು ಮರೆಯುತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. +ಮಾನವನಾಗುವೆಯಾ, ಇಲ್ಲ ದಾನವನಾಗುವೆಯಾ, ಮಾನವ ಕುಲಕೇ ಮಣ್ಣಾಗುವೆಯಾ….. ಎಂಬ ಹಾಡಿನ ಸಾಲು ನೆನಪಾಗುತ್ತಿದೆ. ದಾಪಂತ್ಯದಲ್ಲಿ ಏನೇ ವಿರಸವಿದ್ದರೂ ಮಕ್ಕಳನ್ನು ಬಲಿಕೊಡುವ ಹಂತಕ್ಕೆ ಹೋಗಬಾರದು. \ No newline at end of file diff --git a/eesanje/url_46_264_6.txt b/eesanje/url_46_264_6.txt new file mode 100644 index 0000000000000000000000000000000000000000..b03eaad8be4af03a11413e1a9f127fa95cda9a66 --- /dev/null +++ b/eesanje/url_46_264_6.txt @@ -0,0 +1,8 @@ +ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ವೈಯಕ್ತಿಕ ಭೇಟಿ ನೀಡುತ್ತೇವೆ : ಸಚಿವ ರಾಜಣ್ಣ +ಬೆಂಗಳೂರು,ಜ.11- ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುತ್ತೇವೆ. ಆದರೆ ಸದ್ಯಕ್ಕೆ ರಾಜಕೀಯದ ವಿಚಾರವಾಗಿ ಜ.22 ರಂದು ಅಯೋಧ್ಯೆಗೆ ಭೇಟಿ ಹೋಗುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಅಯೋಧ್ಯೆ ರಾಮನ ಜನ್ಮಭೂಮಿ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಪಾವಿತ್ರ್ಯತೆ ಹೆಚ್ಚಿದೆ. ಈ ಮೊದಲು ತಾವು ಅಯೋಧ್ಯೆಗೆ ಭೇಟಿ ನೀಡಿ ಶೆಡ್‍ನಲ್ಲಿದ್ದ ರಾಮಲಲ್ಲಾನ ಮೂರ್ತಿಯ ದರ್ಶನ ಮಾಡಿ ಬಂದಿದ್ದೆ. ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದರು. +ರಾಮ ಮಂದಿರದ ವಿಚಾರಕ್ಕೆ ಹೇಳುವುದಾದರೆ ಪ್ರತಿಯೊಂದೂ ಊರಿನಲ್ಲೂ ದೇವಸ್ಥಾನಗಳಿವೆ. ಅದರಲ್ಲೂ ನೂರಾರು ವರ್ಷಗಳ ಇತಿಹಾಸವಿರುವ ಮಂದಿರಗಳನ್ನೂ ನೋಡಿದ್ದೇವೆ. ಜ.22 ರಂದು ರಾಜಕೀಯಗೊಂಡಿರುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ತಾವು ಬದ್ಧ ಎಂದರು. +ಲೋಕಸಭೆ ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಹೈಕಮಾಂಡ್ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತು ಚರ್ಚಿಸುವುದಿಲ್ಲ ಎಂದರು. ಈಗಾಗಲೇ ನಾವು ನಮ್ಮ ಅಭಿಪ್ರಾಯ ವನ್ನು ಹೇಳಿದ್ದೇವೆ. ಅದಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ಸೂಕ್ತ ನಿಲುವು ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು. +ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್.ರಾಜಣ್ಣ, ನಿನ್ನೆ ತಾವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದೇನೆ. ರಾಜಕೀಯವಾಗಿ ನಮ್ಮಿಬ್ಬರ ನಡುವೆ ವಿಚಾರಬೇಧಗಳಿರಬಹುದು. ಆದರೆ ಉಪಮುಖ್ಯಮಂತ್ರಿಯಾಗುವುದಕ್ಕಿಂತಲೂ ಮೊದಲೇ ಡಿ.ಕೆ.ಶಿವಕುಮಾರ್ ಮತ್ತು ತಾವು ಸ್ನೇಹಿತರು. ಯುವ ಕಾಂಗ್ರೆಸ್‍ನಲ್ಲಿ ಒಟ್ಟಿಗೇ ಕೆಲಸ ಮಾಡಿದ್ದೇವೆ. ರಾಜಕಾರಣಕ್ಕಾಗಿ ವ್ಯಕ್ತಿಗತ ವಿಶ್ವಾಸವನ್ನು ಕಳೆದುಕೊಳ್ಳಲಾಗುವುದಿಲ್ಲ ಎಂದರು. +ಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ +ನಿನ್ನೆ ಅವರೊಂದಿಗಿನ ಭೇಟಿಯ ವೇಳೆ ಉಪಮುಖ್ಯಮಂತ್ರಿಯವರ ಜೊತೆ ತುಮಕೂರು, ಹಾಸನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಕೆಲ ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ರಾಮಮಂದಿರ ಕಾರ್ಯಕ್ರಮದಿಂದ ದೂರ ಉಳಿದು ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುತ್ತಿದೆ ಎಂದು ಬಿಜೆಪಿಯವರ ಟೀಕೆ ಹಾಸ್ಯಾಸ್ಪದ. ಬಿಜೆಪಿಯವರು ಅಲ್ಪಸಂಖ್ಯಾತ ಸಮುದಾಯದ ಹೆಣ್ಣುಮಕ್ಕಳನ್ನು ಸೇರಿಸಿ ¿ಶುಕ್ರಿಯಾ ಮೋದಿ ಬಾಯ್‍ಜಾನ್¿ ಸಮಾವೇಶ ಮಾಡುತ್ತಿದ್ದಾರೆ. ಇದು ರಾಜಕೀಯ ತುಷ್ಠೀಕರಣ ಅಲ್ಲವೇ ಎಂದು ಪ್ರಶ್ನಿಸಿದರು. +ಅಯೋಧ್ಯೆ ಕಾರ್ಯಕ್ರಮಕ್ಕೆ ಶಂಕರಾಚಾರ್ಯ ಪೀಠದ ಗುರುಗಳೇ ಭಾಗವಹಿಸುತ್ತಿಲ್ಲ. ಅವರೇನೂ ಕಾಂಗ್ರೆಸ್‍ನ ಸ್ವಾಮೀಜಿಗಳಲ್ಲ. ಸ್ವಾಮೀಜಿಗಳ ಅಭಿಪ್ರಾಯವನ್ನು ಗೌರವಿಸದೇ ರಾಜಕೀಯಕ್ಕೆ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಟೀಕಿಸಿದರು. \ No newline at end of file diff --git a/eesanje/url_46_264_7.txt b/eesanje/url_46_264_7.txt new file mode 100644 index 0000000000000000000000000000000000000000..8b7cd368f8845c2dfc064b3db928fb7f57559d7a --- /dev/null +++ b/eesanje/url_46_264_7.txt @@ -0,0 +1,6 @@ +ಟೆಕ್ಕಿಗಳಿಂದ ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ +ಬೆಂಗಳೂರು, ಜ.11- ಇಬ್ಬರು ಸಾಫ್ಟ್‍ವೇರ್ ಎಂಜಿನಿಯರ್‍ಗಳು ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ಆ್ಯಪ್ ತೆರೆದು ವೇಶ್ಯಾವಾಟಿಕೆ ನಡೆಸಿ ಪೊಲೀಸರಿಗೆ ಸಿಕ್ಕಿಬಿದ್ದು ಕಂಬಿ ಎಣಿಸುವಂತಾಗಿದೆ. ಒಬ್ಬ ಬೆಂಗಳೂರು, ಮತ್ತೊಬ್ಬ ತಮಿಳುನಾಡು ಮೂಲದ ಸಾಫ್ಟ್‍ವೇರ್ ಎಂಜಿನಿಯರ್‍ಗಳು ಈಗ ಜೈಲುಕಂಬಿ ಹಿಂದೆ ಇದ್ದಾರೆ. +ತಮಿಳುನಾಡು ಮೂಲದ ಟೆಕ್ಕಿ ಬಿಟೆಕ್ ಪದವೀಧರನಾಗಿದ್ದು, ಈತನ ಪರಿಚಯವಾಗಿ ಆತನ ಮಾತು ಕೇಳಿದ್ದಕ್ಕೆ ನಗರದ ಟೆಕ್ಕಿಯೂ ಜೈಲುಶಿಕ್ಷೆ ಅನುಭವಿಸುವಂತಾಗಿದೆ. ಸ್ಟಾಕ್ ಮಾರ್ಕೆಟ್‍ನಲ್ಲಿ ಹಣ ಹೂಡಿಕೆ ಮಾಡಿ ಕಳೆದುಕೊಂಡಿದ್ದ ಬೆಂಗಳೂರಿನ ಟೆಕ್ಕಿ ಲಕ್ಷಾಂತರ ಸಾಲ ಮಾಡಿಕೊಂಡಿದ್ದನು. ಹಾಗಾಗಿ ಸಾಫ್ಟ್‍ವೇರ್ ಕಂಪೆನಿಯ ಕೆಲಸಕ್ಕೆ ಗುಡ್‍ಬೈ ಹೇಳಿ ತಂತ್ರಜ್ಞಾನದಲ್ಲಿ ಆಸಕ್ತಿ ಹೊಂದಿದ್ದರಿಂದ ಮ್ಯಾಟ್ರೋಮೋನಿ ಆ್ಯಪ್ ತೆರೆದು ಯುವಕ-ಯುವತಿಯರಿಗೆ ಮದುವೆ ಮಾಡಿಸುತ್ತಿದ್ದರು. +ಲೋಕಸಭೆ ಚುನಾವಣೆಯಲ್ಲಿ ಎಚ್‍ಡಿಕೆ ಸ್ಪರ್ಧೆಗೆ ಹೆಚ್ಚಿದ ಒತ್ತಡ +ಆ ಸಂದರ್ಭದಲ್ಲಿ ಮತ್ತೊಬ್ಬ ತಮಿಳುನಾಡು ಮೂಲದ ಸಾಫ್ಟ್‍ವೇರ್ ಎಂಜಿನಿಯರ್ ಈ ಆ್ಯಪ್‍ಗೆ ಭೇಟಿ ಮಾಡಿ ನಂತರ ಇಬ್ಬರೂ ಸಂಪರ್ಕಿಸಿದ್ದಾರೆ. ಮ್ಯಾಟ್ರೋಮೋನಿಯಿಂದ ಹೆಚ್ಚಿನ ಹಣ ಸಂಪಾದಿಸಲು ಆಗಲ್ಲ, ಹಾಗಾಗಿ ವೇಶ್ಯಾವಾಟಿಕೆ ನಡೆಸಿದರೆ ಹಣ ಗಳಿಸಬಹುದು. ಅದಕ್ಕಾಗಿ ವಿದೇಶಿ ಮಹಿಳೆಯರನ್ನು ಬಳಸಿಕೊಳ್ಳಬಹುದೆಂದು ಬಿಟೆಕ್ ಪದವೀಧರ ಹೇಳಿದ್ದಾನೆ. +ಆತನ ಮಾತನ್ನು ನಂಬಿ ಇಬ್ಬರೂ ಸೇರಿಕೊಂಡು ಹೈಟೆಕ್ ವೇಶ್ಯಾವಾಟಿಕೆ ಆರಂಭಿಸಿದ್ದಾರೆ. ಇತ್ತೀಚೆಗೆ ಹೊಟೇಲ್‍ವೊಂದರ ಮೇಲೆ ಹಲಸೂರು ಠಾಣೆ ಪೊಲೀಸರು ದಾಳಿ ಮಾಡಿದಾಗ ವಿದೇಶಿ ಮಹಿಳೇ ಹಾಗೂ ಇಬ್ಬರು ಟೆಕ್ಕಿಗಳು ಸೇರಿದಂತೆ 9 ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಹಣದಾಸೆಗೆ ಈ ರೀತಿ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ. \ No newline at end of file diff --git a/eesanje/url_46_264_8.txt b/eesanje/url_46_264_8.txt new file mode 100644 index 0000000000000000000000000000000000000000..a08429e27a7e8f2b54aeffe7d10b5edf33d4eb5a --- /dev/null +++ b/eesanje/url_46_264_8.txt @@ -0,0 +1,5 @@ +ಹಾನಗಲ್‍ನಲ್ಲಿ ನೈತಿಕ ಪೊಲೀಸ್‍ಗಿರಿ : 7 ಮಂದಿ ಆರೋಪಿಗಳ ವಶ +ಹಾವೇರಿ,ಜ.11-ಅನ್ಯಕೋಮಿನ ಮಹಿಳೆಯೊಬ್ಬಳು ಪುರುಷನೊಂದಿಗೆ ಇದ್ದಾಗ ಹೋಟೆಲ್‍ಗೆ ನುಗ್ಗಿದ್ದ ಆರು ಮಂದಿ ಅವರ ಮೇಲೆ ಹಲ್ಲೆ ನಡೆಸಿ ಅಪಹರಿಸಿದ ಘಟನೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಜ.8 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಾನಗಲ್‍ನ ಹತ್ತಿರವಿರುವ ಲಾರ್ಜ್‍ಯೊಂದಕ್ಕೆ ಬಂದಿದ್ದ ಸ್ನೇಹಿತ ಸೋಮಶೇಖರನನ್ನು ಭೇಟಿ ಮಾಡಲು ಸಂತ್ರಸ್ತ ಮಹಿಳೆ ಹೋಗಿದ್ದಾಗ ಸುಮಾರು ನಾಲ್ಕೈದು ಜನ ರೂಮ್ ಒಳಗೆ ಏಕಾಏಕಿ ನುಗ್ಗಿ ಹಲ್ಲೆ ನಡೆಸಿದ್ದಾರೆ. +ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ +ನಂತರ ನನ್ನ ಮೇಲೂ ಹಲ್ಲೆ ನಡೆಸಿ ಯಾವುದೋ ಬೈಕ್‍ನಲ್ಲಿ ಕೂರಿಸಿಕೊಂಡು ಸ್ವಲ್ಪದೂರ ಹೋಗಿ ಅಲ್ಲಿ ಕೋಲು ಬಡಿಗೆಯಿಂದ ನನಗೆ ಹೊಡೆದು ನಿನಗೆ ಹಿಂದು ಹುಡುಗ ಬೇಕಾ ಎಂದು ನಿಂದಿಸಿ, ನಿನ್ನನ್ನು ಸುಮ್ನೆ ಬಿಡುವುದಿಲ್ಲ ಎಂದು ಧಮ್ಕಿ ಹಾಕಿ ಸುಮಾರು 4 ಗಂಟೆಗೆ ನನಗೆ 500 ರೂ. ನೀಡಿ ಅಲ್ಲಿಂದ ಬಿಟ್ಟು ಹೋಗಿದ್ದಾರೆಂದು ಸಂತ್ರಸ್ತ ಮಹಿಳೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೆಂದು ಹೇಳಲಾಗುತ್ತಿದೆ. +ಈ ಘಟನೆಗೆ ಸಂಬಂಧಿಸಿದಂತೆ ಹಾನಗಲ್‍ನ ಅಪ್ತಾಬ್ ಮಹಬೂಲ ಅಹಮದ್ (24) ಮದ್ರಾಸಾಬ್ ಮಹಮ್ಮದ್‍ಸಿಕ್, ಮಂದಾಕಿ (23) ಸಮಿಉಲ್ಲಾ ಲಾಲಾವುರ್, ಮಹಮ್ಮದ್ ಸೈಪ್, ಇಸ್ಮಾಯಿಲ್ ಮತ್ತು ಮುಲ್‍ಪಿಡ್ ಮುಲಾಲ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_46_264_9.txt b/eesanje/url_46_264_9.txt new file mode 100644 index 0000000000000000000000000000000000000000..69f531ceeeb7e73242bfc5a95598b3cf44088dc3 --- /dev/null +++ b/eesanje/url_46_264_9.txt @@ -0,0 +1,12 @@ +ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್, ಕೆರಳಿದ ಕೇಸರಿ +ಬೆಂಗಳೂರು,ಜ.11- ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮನ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಲು ತೀರ್ಮಾನಿಸಿರುವ ಕಾಂಗ್ರೆಸ್ ನಿರ್ಧಾರವನ್ನೇ ಹಿಂದೂ ವಿರೋಧಿ ಎಂಬುದನ್ನು ಬಿಂಬಿಸಲು ಬಿಜೆಪಿ ಮುಂದಾಗಿದೆ. +ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ನಮ್ಮ ಭಾವನೆಗಳಿಗೆ ಧಕ್ಕೆ ತಂದಿರುವ ಕಾಂಗ್ರೆಸ್‍ಗೆ ಪಾಠ ಕಲಿಸುವಂತೆ ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯತಂತ್ರವನ್ನು ರೂಪಿಸಲಾಗಿದೆ. +ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಷಿ, ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅನೇಕ ನಾಯಕರು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ. ರಾಮಲಲ್ಲಾ ಟ್ರಸ್ಟ್ ಆಹ್ವಾನ ನೀಡಿದರೂ ಗೌರವಯುತವಾಗಿ ತಿರಸ್ಕರಿಸಿರುವ ಕಾಂಗ್ರೆಸ್‍ಗೆ ಬರಲಿರುವ ಚುನಾವಣೆಯಲ್ಲಿ ರಾಜ್ಯದ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. +ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ರಾಮನೇ ಕಾಲ್ಪನಿಕ ಎಂದವರು, ರಾಮನ ಅಸ್ತಿತ್ವವನ್ನು ಪ್ರಶ್ನಿಸಿದವರು, ರಾಮನ ಜನ್ಮಭೂಮಿ ಅಯೋಧ್ಯೆಯೇ ಎಂಬುದಕ್ಕೆ ಸಾಕ್ಷಿ ಕೇಳಿದವರು, ನ್ಯಾಯಾಲಯದ ಮೆಟ್ಟಿಲು ಹತ್ತಿದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಶ್ರದ್ಧಾ ಕೇಂದ್ರದ ವಿರುದ್ಧ ನಿಲ್ಲುತ್ತಾರೆಂದರೆ ಕಾಂಗ್ರೆಸಿಗರ ತುಷ್ಠೀಕರಣದ ನೀತಿ ಗಮನಿಸಿ ರಾಮನನ್ನು ನಿಂದಿಸಿದವರಿಗೆ ಕಾಲವೇ ಉತ್ತರ ನೀಡುತ್ತದೆ ಎಂದು ಆಕ್ರೋಶ ಹೊರಹಾಕಿದರು. +ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ +ಬಹುತೇಕ ಬಿಜೆಪಿ ನಾಯಕರು ಕಾಂಗ್ರೆಸ್‍ನ ನಿರ್ಧಾರದ ವಿರುದ್ಧ ಕೆಂಡ ಕಾರಿದ್ದು, ಬರಲಿರುವ ಚುನಾವಣೆಯಲ್ಲಿ ಇದು ಚುನಾವಣಾ ಅಸ್ತ್ರವಾಗುವ ಸಾಧ್ಯತೆ ಕಂಡುಬಂದಿದೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ, ರಾಮನ ಅಸ್ತ್ರವನ್ನು ಕಾಂಗ್ರೆಸ್‍ನ ವಿರುದ್ಧ ವ್ಯವಸ್ಥಿತ ಕಾರ್ಯತಂತ್ರವನ್ನು ರೂಪಿಸುವತ್ತ ಮಗ್ನವಾಗಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಟ್ರಸ್ಟ್ ವತಿಯಿಂದ ನಡೆಯುವ ಶ್ರೀ ರಾಮನ ಪ್ರಾಣಪ್ರತಿಷ್ಠಾನ ಕಾರ್ಯಕ್ರಮಕ್ಕೆ ನೀಡಿರುವ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿತ್ತು. +ಲೋಕಸಭೆ ಚುನಾವಣೆಯಲ್ಲಿ ಶ್ರೀ ರಾಮನ ಜಪದ ಮೂಲಕವೇ ಹೆಚ್ಚಿನ ಸ್ಥಾನ ಗಳಿಸಲು ಭಾವನಾತ್ಮಕ ಅಸ್ತ್ರ ಬಳಸಲಿದ್ದಾರೆ ಎಂದು ಗೊತ್ತಾಗಿದೆ. ಮೇಲ್ನೋಟಕ್ಕೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದರೂ ಇದರ ಸಂಪೂರ್ಣ ಲಾಭವನ್ನು ಬಿಜೆಪಿ ಬಳಸಿಕೊಳ್ಳಲು ಮುಂದಾಗಿದೆ.ಈಗಾಗಲೇ ಮನೆಮನೆಗೆ ಅಕ್ಷತೆಯನ್ನು ನೀಡುವ ಮೂಲಕ ಹಿಂದೂ ಮತಗಳ ಕ್ರೂಢೀಕರಣಕ್ಕೆ ಸಜ್ಜಾಗಿರುವ ಬಿಜೆಪಿ, ತನ್ನ ಚುನಾವಣಾ ಪ್ರಚಾರದಲ್ಲೂ ಕಾಂಗ್ರೆಸ್ ನಿರ್ಧಾರವನ್ನು ಪ್ರಸ್ತಾಪಿಸಲಿದೆ. +ವೈದ್ಯ ಹೇಳಿದ್ದೂ ಹಾಲು ಅನ್ನ, ರೋಗಿ ಬಯಸಿದ್ದೂ ಅದನ್ನೇ ಎನ್ನುವಂತೆ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಂದರೆ ಅದರ ಶ್ರೇಯಸ್ಸು ಆ ಪಕ್ಷಕ್ಕೇ ಸಲ್ಲುತ್ತದೆ ಎಂಬ ಆತಂಕ ಇತ್ತು. ಹೀಗಾಗಿ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬರಲೇಬಾರದೆಂಬ ಆಲೋಚನೆಯಲ್ಲಿತ್ತು. ಯಾವಾಗ ಕಾಂಗ್ರೆಸ್‍ನಿಂದ ಅಧಿಕೃತ ಆದೇಶ ಹೊರಬಿತ್ತೋ, ಆಗ ಬಿಜೆಪಿ ಒಳಗೊಳಗೇ ಖುಷಿ ಪಡುತ್ತಿದೆ. +ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು +ಚುನಾವಣಾ ಸಂದರ್ಭದಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದರೆ ಒಂದು ಸಮುದಾಯದ ಮತಗಳು ದೂರ ಸರಿಯಬಹುದು ಎಂಬ ಕಾರಣಕ್ಕಾಗಿ ಈ ತೀರ್ಮಾನಕ್ಕೆ ಬಂದಿದೆ. ಇದು ಹಿಂದೂಗಳಿಗೆ ಮಾಡಿದ ಅಪಮಾನ ಎಂದು ಬಿಂಬಿಸಲು ಬಿಜೆಪಿ ಸಜ್ಜಾಗಿದೆ. ಪ್ರಚಾರದ ಸಂದರ್ಭದಲ್ಲಿ ಈ ಅಸ್ತ್ರವನ್ನೇ ಬಳಸಬೇಕೆಂದು ಹೈಕಮಾಂಡ್ ಕೂಡ ಸೂಚಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ರಾಮನ ಜಪ ಮುನ್ನಲೆಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. +ರಾಜ್ಯ ಬಿಜೆಪಿ ಘಟಕದ ನಾಯಕರು ಇದನ್ನೇ ಚುನಾವಣಾ ಸಂದರ್ಭದಲ್ಲಿ ಪ್ರಚಾರ ನಡೆಸಬೇಕು. ಗ್ರಾಮ ಮಟ್ಟದಿಂದ ಹಿಡಿದು ಹೋಬಳಿ ಹಂತದವರೆಗೂ ಬಿಜೆಪಿ ಹಿಂದೂಪರ ಎಂಬುದನ್ನು ಕಾರ್ಯಕರ್ತರಿಗೆ ಮನವರಿಕೆ ಮಾಡಬೇಕು ಎಂದು ವರಿಷ್ಠರು ಸೂಚನೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_265_1.txt b/eesanje/url_46_265_1.txt new file mode 100644 index 0000000000000000000000000000000000000000..bcb3f3e6ad6901fd8b9c9627cf05fbc70eff480c --- /dev/null +++ b/eesanje/url_46_265_1.txt @@ -0,0 +1,9 @@ +ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ +ಕೋಲಾರ,ಜ.11- ಅಕ್ರಮ ಸಂಬಂದಕ್ಕೆ ಅಡ್ಡಿಯಾದ ಗಂಡನನ್ನೇ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಬೇತಮಂಗಲ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಜಿಎಫ್ ತಾಲ್ಲೂಕು ಕೋಗಿಲಹಳ್ಳಿ ಗ್ರಾಮದ ಶಂಕರ ರೆಡ್ಡಿ ಕೊಲೆಯಾದ ವ್ಯಕ್ತಿ. ಇವರನ್ನು ಕೊಂದಿದ್ದ ಪತ್ನಿ ಸುನಂದ ಹಾಗೂ ಆಕೆಯ ಪ್ರಿಯಕರ ವೆಂಕಟೇಶ್ ಬಂಧಿತ ಆರೋಪಿಗಳಾಗಿದ್ದಾರೆ. +ಘಟನೆ ವಿವರ:ಕಳೆದ ಹದಿನೈದು ವರ್ಷಗಳ ಹಿಂದೆ ಶಂಕರ ರೆಡ್ಡಿ -ಸುನಂದ ವಿವಾಹವಾಗಿತ್ತು ಆರಂಭದಲ್ಲಿ ಇಬ್ಬರು ಸುಖವಾಗಿದ್ದರು ಅವರಿಗಿದ್ದ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದರು ಆದರೆ ಕಳೆದ ವರ್ಷ ಮಳೆ ಬಾರದೆ ನೀರಿನ ಅಭಾವ ಉಂಟಾಗಿ ವವಸಾಯ ಮಾಡಲಾಗದೆ ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ನಲ್ಲೂರಹಳ್ಳಿ ಬಳಿ ಟೀ ಅಂಗಡಿಯೊಂದನ್ನು ಇಟ್ಟುಕೊಂಡು ಅಲ್ಲೇ ಪುಟ್ಟದೊಂದು ಬಾಡಿಗೆ ಮನೆ ಮಾಡಿಕೊಂಡು ,ನೆಮ್ಮದಿಯ ಜೀವನ ನೆಡೆಸುತ್ತಿದ್ದರು. +ಜೀವನ ತಕ್ಕಮಟ್ಟಿಗೆ ನಡೆದುಕೊಂಡು ಹೋಗುತ್ತಿತ್ತು, ಆದರೆ ಕೆಲವು ವರ್ಷಗಳ ಹಿಂದೆ ಅಲ್ಲೇ ಡ್ರೈವರ್ ಕೆಲಸ ಮಾಡಿಕೊಂಡಿದ್ದ ವೆಂಕಟೇಶ್ ಎಂಬಾತ ಶಂಕರ್‍ರೆಡ್ಡಿ ವಾಸವಿದ್ದ ಮನೆಯ ಬಳಿ ಬಾಡಿಗೆಗೆ ಬಂದಿದ್ದ, ವೆಂಕಟೇಶ್‍ಗೆ ಶಂಕರ್‍ರೆಡ್ಡಿ ಕುಟುಂಬದೊಂದಿಗೆ ಪರಿಚಯವಾಗಿತ್ತು ಅದೇ ಪರಿಚಯ ಸಲುಗೆಯಾಗಿ ಬೆಳೆದಿತ್ತು, ಸುನಂದಾ ಜೊತೆಗೆ ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದ ಎನ್ನಲಾಗಿದೆ. +ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ +ಆ ವಿಷಯ ಶಂಕರ್‍ರೆಡ್ಡಿಗೆ ತಿಳಿದು ಬೇಸರಗೊಂಡು ಅಂಗಡಿ ಮುಚ್ಚಿ ಮನೆ ಖಾಲಿ ಮಾಡಿ ಬೆಂಗಳೂರು ಬಿಟ್ಟು ಮತ್ತೆ ಕೋಗಿಲಹಳ್ಳಿ ಗ್ರಾಮಕ್ಕೆ ಇತ್ತೀಚೆಗೆ ವಾಪಸ್ಸಾಗಿದ್ದರು. ಆದರೆ ಇದು ಸುನಂದಾಗೆ ಇಷ್ಟವಿರಲಿಲ್ಲ. ಕಳೆದ ಡಿ.27 ರಂದು ಶಂಕರ್‍ರೆಡ್ಡಿಯನ್ನು ಕರೆಸಿಕೊಂಡು ಕಾರಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಬಳಿ ಜಾಕ್ ರಾಡ್‍ನಿಂದ ಹೊಡೆದು ಕೊಲೆ ಮಾಡಿ ನಂತರ ಶವವನ್ನು ಬೆಂಗಳೂರಿನ ಹೆಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂಹಳ್ಳಿ ಬಳಿಯ ದೊಡ್ಡ ಚರಂಡಿಯೊಂದಕ್ಕೆ ಬಿಸಾಡಿ ನಂತರ ತಲೆ ಮರೆಸಿಕೊಂಡಿದ್ದ. +2 ದಿನದ ನಂತರ ಬೇತಮಂಗಲ ಪೊಲೀಸ್ ಠಾಣೆಗೆ ಬಂದ ಸುನಂದ ತನ್ನ ಪತಿ ಶಂಕರ್‍ರೆಡ್ಡಿ ಕಾಣೆಯಾಗಿದ್ದಾರೆಂದು ದೂರು ನೀಡಿದ್ದರು. ದೂರಿನ ಹಿನ್ನೆಲೆ ಬೇತಮಂಗಲ ಪೊಲೀಸರು ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡಿದ್ದರು ಇದಾದ ಕೆಲವೇ ಗಂಟೆಯಲ್ಲಿ ಶಂಕರ್ ರೆಡ್ಡಿಯ ಸಂಬಂಧಿಕ ಬಾಬು ರೆಡ್ಡಿ ಎಂಬಾತ ಮತ್ತೊಂದು ದೂರು ನೀಡಿ ಸುನಂದ ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿದ್ದರು. +ಪ್ರಕರಣದ ಗಂಭೀರತೆ ಅರಿತ ಪೊಲೀಸರು ಈ ಎರಡು ದೂರನ್ನು ಸ್ವೀಕರಿಸಿದ್ದ ಕಳೆದ ಹತ್ತು ದಿನಗಳಿಂದ ಕಾಣೆಯಾದವನು ಜೀವಂತವಾಗಿದ್ದಾನಾ, ಇಲ್ವಾ? ಒಂದು ವೇಳೆ ಅವನು ಕೊಲೆಯಾಗಿದ್ದರೆ ಆತನ ಶವ ಎಲ್ಲಿದೆ ಅನ್ನೋದನ್ನು ಪೊಲೀಸರು ಹುಡುಕಾಡಿದರು.ಆದರೆ ಯಾವುದೇ ಮಾಹಿತಿ ಸಿಗಲಿಲ್ಲ. ಅಷ್ಟೇ ಅಲ್ಲದೆ ಸುನಂದ ಪ್ರಿಯಕರ ವೆಂಕಟೇಶ್ ಕೂಡಾ ನಾಪತ್ತೆಯಾಗಿದ್ದ. ಹಾಗಾಗಿ ಪೊಲೀಸರಿಗೆ ಇದೊಂದು ಪ್ರಕರಣ ಗೊಂದಲದ ಗೂಡಾಗಿತ್ತು. +ಈ ವೇಳೆ ಇದ್ದಕ್ಕಿದಂತೆ ವೆಂಕಟೇಶ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆತನ ವಿಚಾರಣೆ ಮಾಡಿದ ಪೊಲೀಸರಿಗೆ ಅಸಲಿಯತ್ತು ಒಂದೊಂದಾಗಿ ಗೊತ್ತಾಗಿ ಕೊಲೆ ರಹಸ್ಯ ಬಯಲಿಗೆ ಬಂದಿದೆ. ನಾಪತ್ತೆಯಾಗಿದ್ದ ಸುನಂದಾ ಕೂಡ ಬಲೆಗೆ ಬಿದ್ದಿದ್ದು ಇಬ್ಬರನ್ನು ಬಂಧಿಸಲಾಗಿದೆ ಒಟ್ಟಾರೆ ಚಪಲಕ್ಕೆ ಬಿದ್ದ ಹೆಣ್ಣು ಸುಂದರವಾಗಿದ್ದ ಸಂಸಾರವನ್ನು ಹೇಗೆ ಹಾಳು ಮಾಡಬಹುದು ಅನ್ನೋದಕ್ಕೆ ಇದೊಂದು ಜೀವಂತ ಸಾಕ್ಷಿ, \ No newline at end of file diff --git a/eesanje/url_46_265_10.txt b/eesanje/url_46_265_10.txt new file mode 100644 index 0000000000000000000000000000000000000000..ba18247f4e868c14db67762c845eb79463da5c96 --- /dev/null +++ b/eesanje/url_46_265_10.txt @@ -0,0 +1,10 @@ +ಸ್ಲೀವ್‌ಲೆಸ್ ಡ್ರೆಸ್, ಸ್ಕರ್ಟ್, ಮಿಡಿ, ಪ್ಯಾಂಟ್ ಧರಿಸಿ ದೇವಸ್ಥಾನ ಪ್ರವೇಶಿಸುವಂತಿಲ್ಲ +ಬೆಂಗಳೂರು : ಇಂದು ದೇಶದಲ್ಲಿನ ಅನೇಕ ದೇವಸ್ಥಾನಗಳು, ಗುರುದ್ವಾರ, ಚರ್ಚ್, ಮಸೀದಿ ಮತ್ತು ಇತರ ಪ್ರಾರ್ಥನಾ ಸ್ಥಳಗಳು, ಖಾಸಗಿ ಕಂಪನಿ, ಶಾಲಾ-ಕಾಲೇಜು, ನ್ಯಾಯಾಲಯ, ಪೋಲೀಸ್ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜೈನ್ ನ ಶ್ರೀ ಮಹಾಕಾಲೇಶ್ವರ ದೇವಸ್ಥಾನ, ವಾರಾಣಸಿಯ ಶ್ರೀಕಾಶಿ ವಿಶ್ವೇಶ್ವರ ದೇವಸ್ಥಾನ, ತಿರುಪತಿ ಬಾಲಾಜಿ ದೇವಸ್ಥಾನ, ಕೇರಳದ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ, ಹೀಗೆ ಕೆಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಅನೇಕ ವರ್ಷಗಳಿಂದ ಭಕ್ತರಿಗಾಗಿ ಸಾತ್ತ್ವಿಕ ವಸ್ತ್ರ ಸಂಹಿತೆ ಜಾರಿಯಿದೆ. +ಈ ಹಿಂದೆ ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್ ಸಹ ರಾಜ್ಯದ 211 ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿತ್ತು. ಈಗಾಗಲೇ ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ದ ದೇವಿರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ವಸ್ತ್ರಸಂಹಿತೆ ಜಾರಿ ಮಾಡಿದೆ. +ದೇವಿರಮ್ಮನ ದೇವಾಲಯದಲ್ಲಿ ಸ್ಕರ್ಟ್, ಮಿಡಿ, ಸ್ಲೀವ್‌ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಅದರ ಆಧಾರದಲ್ಲಿ ದೇವಸ್ಥಾನದ ಪಾವಿತ್ರ್ಯತೆ, ಶಿಷ್ಟಾಚಾರ, ಸಂಸ್ಕೃತಿ ಕಾಪಾಡುವುದಕ್ಕಾಗಿ, ಕರ್ನಾಟಕ ದೇವಸ್ಥಾನ – ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಅಧಿವೇಶನದಲ್ಲಿ ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮತ್ತು ಬೆಂಗಳೂರಿನ 50 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರ ಸಂಹಿತೆ ಜಾರಿಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಶ್ರೀ. ಮೋಹನ್ ಗೌಡ ಹೇಳಿದರು. ಅವರು ಬೆಂಗಳೂರಿನ ವಸಂತ ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಅಯೋಜಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಅವರು ಮುಂದೆ ಮಾತನಾಡಿ, ಬೆಂಗಳೂರಿನ ನಂತರ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡುವುದಕ್ಕಾಗಿ ವ್ಯಾಪಕ ಅಭಿಯಾನ ನಡೆಸಿ ಭಕ್ತರಲ್ಲಿ ವಸ್ತ್ರ ಸಂಹಿತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. +ವಿಜಯ್-ರಶ್ಮಿಕಾ ಮದ್ವೆ ಫಿಕ್ಸ್, ಫೆಬ್ರವರಿಯಲ್ಲಿ ನಿಶ್ಚಿತಾರ್ಥ..? +ಪ್ರತೀ ದೇವಸ್ಥಾನಗಳ ಮುಂಭಾಗದಲ್ಲಿ ವಸ್ತ್ರ ಸಂಹೀತೆಯ ಫಲಕಗಳನ್ನು ಹಾಕಿ ಜನಪ್ರಭೋಧನೆ ಮಾಡುವುದು, ದೇವಸ್ಥಾನದ ಪಾವಿತ್ರ್ಯತೆಯ ರಕ್ಷಣೆ ಮತ್ತು ಭಾರತೀಯ ಸಂಸ್ಕೃತಿಯ ಪಾಲನೆಯಾಗುವ ಉದ್ದೇಶದಿಂದ ದೇವಸ್ಥಾನಕ್ಕೆ ಬರುವ ಭಕ್ತರು ತುಂಡು ಬಟ್ಟೆ ಧರಿಸುವ ಬದಲು, ಭಾರತೀಯ ಸಂಸ್ಕೃತಿಯ ಪಾಲನೆ ಮಾಡಿ ದೇವಸ್ಥಾನ ವ್ಯವಸ್ಥಾಪನೆಗೆ ಸಹಕರಿಸಲು ಜನಜಾಗೃತಿ ಮೂಡಿಸಲಾಗುವುದು. +ಭಾರತೀಯ ಸಾತ್ವಿಕ ಉಡುಪುಗಳು :ಮಹಿಳೆಯರು ಚುಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ, ಓಡಾಣಿ ಮುಂತಾದ ಪಾರಂಪರಿಕ ಸಾತ್ವಿಕ ವೇಷಭೂಷಣಗಳನ್ನು ಧರಿಸಬೇಕು ಮತ್ತು ಪುರುಷರು ಕುರ್ತಾ, ಧೋತಿ, ಲುಂಗಿ ಅಥವಾ ಪೈಜಾಮ ಅಥವಾ ಸಾಮಾನ್ಯ ಶರ್ಟ್-ಪ್ಯಾಂಟ್‌ಗಳನ್ನು ಹಾಕಬೇಕು. +ಆಧುನಿಕ ಅಸಾತ್ವಿಕ ಉಡುಪುಗಳು :ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಕರ್ಟ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪುಗಳನ್ನು ಹಾಕಬಾರದೆಂದು ವಿನಂತಿಸುತ್ತೇವೆ. +ದೇವಸ್ಥಾನಗಳನ್ನು ಧರ್ಮ ಪ್ರಚಾರ ಕೇಂದ್ರವನ್ನಾಗಿ ಮಾಡುವುದು. :ದೇವಸ್ಥಾನಗಳ ಸಂವರಕ್ಷಣೆ, ಸಂಘಟನೆಯ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲ ಸ್ಥರದ ಅಧಿವೇಶನಗಳನ್ನು ಮಾಡಿ, ದೇವಸ್ಥಾನಗಳ ಸಂಘಟನೆ ಮಾಡಲಾಗುವುದು. ಅದಲ್ಲದೇ ಹಿಂದೂ ಸಮಾಜಕ್ಕೆ ಹಿಂದೂ ಧರ್ಮದ ಬಗ್ಗೆ ಶಿಕ್ಷಣ ನೀಡಲು ಮುಂದಿನ ದಿನಗಳಲ್ಲಿ ರಾಜ್ಯದ 50 ದೇವಸ್ಥಾನಗಲ್ಲಿ ಮಕ್ಕಳು, ಸ್ತ್ರೀ-ಪುರುಷರಿಗೆ ನಿಯಮಿತಿವಾಗಿ ಹಿಂದೂ ಧರ್ಮದ ಶಿಕ್ಷಣ ನೀಡುವ ವರ್ಗಗಳ್ನು ಸಹ ಪ್ರಾರಂಭ ಮಾಡಲಾಗುವುದು. ಇದಕ್ಕೆ ಸಂಬಂದಿಸಿ ಒಂದು ಪಠ್ಯಕೃಮವನ್ನು ಸಹ ರಚಿಸಲಾಗಿದೆ. ಈಗಾಗಲೇ ರಾಜ್ಯದ 300 ಸ್ಥಳಗಳಲ್ಲಿ ಈ ವರ್ಗ ಪ್ರಾರಂಭಿಸಲಾಗಿದೆ. ಮುಂದೆ ಪ್ರತಿ ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು. +ಇದಲ್ಲದೇ ಕರ್ನಾಟಕದಲ್ಲಿ ಮಾನ್ಯ ಧಾರ್ಮಿಕ ದತ್ತಿ ಇಲಾಖೆಯ ಸಚಿವರನ್ನು ಭೇಟಿ ಮಾಡಿ ಸರಕಾರಿ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ, ಧರ್ಮ ಶಿಕ್ಷಣ ಪಲಕಗಳನ್ನು ಅಳವಡಿಸಲು ಮನವಿ ನೀಡಲಾಗುವುದು. ಎಂದು ಮೋಹನ್ ಗೌಡ ಹೇಳಿದರು. \ No newline at end of file diff --git a/eesanje/url_46_265_11.txt b/eesanje/url_46_265_11.txt new file mode 100644 index 0000000000000000000000000000000000000000..ed4d8570c4cdb3dd4d1674ea1e6e5ab3db0cfece --- /dev/null +++ b/eesanje/url_46_265_11.txt @@ -0,0 +1,8 @@ +ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಭೆಯಲ್ಲಿ ರೊಚ್ಚಿಗೆದ್ದ ಭಗವಂತ ಕೂಬಾ +ಬೆಂಗಳೂರು,ಜ.10- ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕರೆದಿದ್ದ ಸಭೆಯಲ್ಲಿ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ ಕೂಬಾಗೆ ಟಿಕೆಟ್ ನೀಡಿರುವುದಕ್ಕೆ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದೆ. ಶಾಸಕರಾದ ಪ್ರಭು ಚವ್ಹಾಣ್ ಮತ್ತು ಶರಣು ಸಲಗಾರ ಸೇರಿದಂತೆ ಜಿಲ್ಲೆಯ ಮುಖಂಡರು ಮುಂಬರುವ ಚುನಾವಣೆಯಲ್ಲಿ ಭಗವಂತ ಕೂಬಾಗೆ ಟಿಕೆಟ್ ನೀಡಬಾರದೆಂದು ಪಕ್ಷದ ವರಿಷ್ಠರಿಗೆ ಒತ್ತಾಯ ಮಾಡಿದರು. +ಇದರಿಂದ ಕೆರಳಿ ಕೆಂಡವಾದ ಕೂಬಾ, ನನಗೆ ಟಿಕೆಟ್ ಕೊಡಬಾರದೆಂದು ಹೇಳಲು ನೀವ್ಯಾರು? ನಾನು ಸ್ಪರ್ಧೆ ಮಾಡಬೇಕೋ ಬೇಡ ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನೀವು ನಿಮ್ಮ ಅಭಿಪ್ರಾಯಗಳನ್ನು ಮಾತ್ರ ಹೇಳಬೇಕೆ ಹೊರತು ಟಿಕೆಟ್ ನೀಡಬಾರದೆಂದು ಹೇಳಿದರೆ ಅದನ್ನು ಕೇಳಿಸಿಕೊಂಡು ನಾನು ಸುಮ್ಮನಿರಬೇಕೆ ಎಂದು ಪ್ರಶ್ನೆ ಮಾಡಿದರು. +ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..? +ಈ ವೇಳೆ ಸಭೆಯ ಮಧ್ಯ ಭಾಗದಲ್ಲಿ ಕುಳಿತಿದ್ದ ಪ್ರಭು ಚವ್ಹಾಣ್ ಹಾಗೂ ಶರಣು ಸಲಗಾರ ವೇದಿಕೆಯತ್ತ ದೌಡಾಯಿಸಿ ಭಗವಂತ ಕೂಬಾ ವಿರುದ್ಧ ಏರಿದ ಧ್ವನಿಯಲ್ಲೇ ತಿರುಗಿಬಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀವು ನಮ್ಮ ವಿರುದ್ಧ ಪ್ರಚಾರ ಮಾಡಿದ್ದೀರಿ. ನಮ್ಮನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಶಾಮೀಲಾಗಿ ಅಪಪ್ರಚಾರ ನಡೆಸಿದ್ದೀರಿ. ಆದರೆ ಕಾರ್ಯಕರ್ತರು ನಮ್ಮನ್ನು ಕೈಬಿಡದಿದ್ದರಿಂದ ನಾವು ಗೆದ್ದುಬಂದೆವು. +ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ನಿಮ್ಮ ಪರವಾಗಿ ನಾವು ಹೇಗೆ ಪ್ರಚಾರ ನಡೆಸಬೇಕು. ಸಂಸದರಾದ ಮೇಲೆ ಒಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮನೆಗೆ ಬಂದವರನ್ನು ಹತ್ತಿರಕ್ಕೂ ಬಿಟ್ಟುಕೊಳ್ಳುವುದಿಲ್ಲ. ಪ್ರತಿಯೊಬ್ಬರನ್ನು ಸೊಕ್ಕು, ಮಾಕು ಮತ್ತು ಅಹಂನಿಂದಲೇ ಮಾತನಾಡಿಸುತ್ತಿದ್ದೀರಿ, ನೀವು ಕೂಡ ಮೊದಲು ಕಾರ್ಯಕರ್ತರಾಗಿದ್ದೀರಿ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು. +ಇದರಿಂದ ಕುಪಿತರಾದ ಭಗವಂತ ಕೂಬಾ ಲೋಕಸಭೆ ಚುನಾವಣೆಯಲ್ಲಿ ನೀವು ಏನೇನು ಮಾಡಿದ್ದೀರಿ ಎಂಬುದು ನನಗೂ ಗೊತ್ತು. ಪಕ್ಷ ಹೇಳಿದಂತೆ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದೇನೆ. ನಿಮ್ಮಿಬ್ಬರ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ನನಗೆ ಪಕ್ಷ ವಿರೋ ಹಣೆಪಟ್ಟಿ ಕಟ್ಟಿದರೆ ಮೌನ ವಹಿಸಬೇಕೇ? ಎಂದು ಮರುಪ್ರಶ್ನಿಸಿದರು. +ಅಂತಿಮವಾಗಿ ಮಧ್ಯಪ್ರವೇಶ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇಲ್ಲಿ ಕೇವಲ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತದೆ. ನಾವು ಯಾರೊಬ್ಬರೂ ಅಭ್ಯರ್ಥಿಗಳ ಆಯ್ಕೆ ನಡೆಸುವುದಿಲ್ಲ. ಏನಿದ್ದರೂ ಪಕ್ಷದ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ತೀರ್ಮಾನಿಸುತ್ತದೆ. ಅಭ್ಯರ್ಥಿ ಯಾರು ಎನ್ನುವುದಕ್ಕಿಂತ ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡಬೇಕೆಂದು ಸೂಚಿಸಿದರು. \ No newline at end of file diff --git a/eesanje/url_46_265_12.txt b/eesanje/url_46_265_12.txt new file mode 100644 index 0000000000000000000000000000000000000000..d39ee08876b6b565f34867276d31063f771988d3 --- /dev/null +++ b/eesanje/url_46_265_12.txt @@ -0,0 +1,5 @@ +ಜ.28ರಂದು ಸಿಎಆರ್-ಡಿಎಎಆರ್ ಹುದ್ದೆಗೆ ಲಿಖಿತ ಪರೀಕ್ಷೆ +ಬೆಂಗಳೂರು,ಜ.10- ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‍ಸ್ಟೆಬಲ್ (ಸಿಎಆರ್-ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜ.28ರಂದು ಲಿಖಿತ ಪರೀಕ್ಷೆ ರಾಜ್ಯಾದ್ಯಂತ ನಡೆಯಲಿದೆ. +ಅಂದು ಬೆಳಗ್ಗೆ 11ರಿಂದ 12.30ರವರೆಗೆ ಪರೀಕ್ಷೆ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಗೆ ಎಸ್‍ಎಂಎಸ್ ಮೂಲಕ ಮುಂಬರುವ ದಿನಗಳಲ್ಲಿ ಕರೆಪತ್ರದ ಮಾಹಿತಿ ನೀಡಲಾಗುವುದು. +ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..? +ಕರಪತ್ರದಲ್ಲಿ ಲಿಂಕ್ ಸಹ ಕಳುಹಿಸಲಾಗುವುದು. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ನೇಮಕಾತಿ ಸಮಿತಿಯ ಸಮನ್ವಯ ಅಧಿಕಾರಿ ಯಡಾ ಮಾರ್ಟನ್ ಮಾರ್ಬನ್ಯಾಂಗ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_265_2.txt b/eesanje/url_46_265_2.txt new file mode 100644 index 0000000000000000000000000000000000000000..596c3bc228abf941853dace992ed0bf50611407d --- /dev/null +++ b/eesanje/url_46_265_2.txt @@ -0,0 +1,8 @@ +ಲೋಕಸಭೆ ಚುನಾವಣೆ ಕಸರತ್ತು, ದೆಹಲಿಗೆ ದೌಡಾಯಿಸಿದ ಸಚಿವರು +ಬೆಂಗಳೂರು,ಜ.11-ಲೋಕಸಭೆ ಚುನಾವಣೆಯ ತಯಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಂದು ದೇಶಾದ್ಯಂತ ನೇಮಕವಾಗಿರುವ ಕ್ಷೇತ್ರವಾರು ವೀಕ್ಷಕರ ಜೊತೆ ಸಮಾಲೋಚನೆ ನಡೆಸಿದೆ. ರಾಜ್ಯ ಕಾಂಗ್ರೆಸ್‍ನ 28 ಸಚಿವರು ಈ ಸಭೆಯಲ್ಲಿ ಭಾಗವಹಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕಳೆದ ಮೂರು ದಿನಗಳಿಂದಲೂ ಬೆಂಗಳೂರಿನಲ್ಲಿ ಸಭೆ ನಡೆಸಿ ವಿವಿಧ ಹಂತಗಳಲ್ಲಿ ಚರ್ಚೆ ನಡೆಸಿದರು. +ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಪ್ರಮುಖ ಶಾಸಕರು, ಜಿಲ್ಲಾಧ್ಯಕ್ಷರು, ಕೆಪಿಸಿಸಿ ಪ್ರಧಾಧಿಕಾರಿಗಳು ಸೇರಿದಂತೆ ಹಲವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ದೆಹಲಿಗೆ ತೆರಳಿದ್ದಾರೆ. ಅದರ ಬೆನ್ನಲ್ಲೇ ಚುನಾವಣೆ ವೀಕ್ಷಕರಾಗಿರುವ ಎಲ್ಲರೂ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚಿಸಿತ್ತು. ಅದರ ಪ್ರಕಾರ 28 ಲೋಕಸಭಾ ಕ್ಷೇತ್ರಗಳ ವೀಕ್ಷಕರಾಗಿ ನಿಯೋಜನೆಗೊಂಡಿರುವ ಸಚಿವರು ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. +28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ : ಸಚಿವ ಮುನಿಯಪ್ಪ +ದೇಶಾದ್ಯಂತ ವಿವಿಧ ರಾಜ್ಯಗಳ ವೀಕ್ಷಕರೊಂದಿಗೆ ಸಭೆ ಆಯೋಜನೆಗೊಂಡಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್‍ಗಾಂಧಿ ಸೇರಿದಂತೆ ಹಲವಾರು ಮಂದಿ ಸಭೆಯಲ್ಲಿ ವೀಕ್ಷಕರೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರತಿಯೊಂದೂ ರಾಜ್ಯಗಳಿಗೂ ಸಂಬಂಧಪಟ್ಟಂತೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲಾಗಿದೆ. ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಈ ಬಾರಿ ಲೋಕಸಭೆ ಚುನಾವಣೆಯನ್ನು ಎದುರಿಸಲು ಮುಂದಾಗಿದ್ದು, ಇದಕ್ಕೆ ಪ್ರತಿತಂತ್ರವಾಗಿ ಕಾಂಗ್ರೆಸ್ ಅಭಿವೃದ್ಧಿಯ ಅಜೆಂಡಾವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. +ಈ ಬಗ್ಗೆ ಹೈಕಮಾಂಡ್ ನಾಯಕರು ಚುನಾವಣಾ ವೀಕ್ಷಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ಹೇಳಲಾಗಿದೆ. ಚುನಾವಣಾ ಫಲಿತಾಂಶ ಸೋಲು, ಗೆಲುವಿಗೆ ವೀಕ್ಷಕರೇ ಹೊಣೆಗಾರರು ಎಂಬ ಸ್ಪಷ್ಟ ಸಂದೇಶ ಕಳುಹಿಸಲಾಗಿದೆ. ಕ್ಷೇತ್ರಗಳ ಮಟ್ಟದಲ್ಲಿ ಆಂತರಿಕ ಭಿನ್ನಮತಗಳನ್ನು ಸರಿದೂಗಿಸಲು ಮೊದಲ ಆದ್ಯತೆ ನೀಡಬೇಕು. ಅನಂತರ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು, ತತ್ವ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸಬೇಕು. +ಕೇಂದ್ರ ಸರ್ಕಾರದ ವೈಫಲ್ಯವನ್ನು ವಿಭಜನೆಯ ರಾಜಕಾರಣ, ವಿವಿಧ ಕ್ಷೇತ್ರಗಳಲ್ಲಿ ಹಣಕಾಸು ಹಾಗೂ ಅಧಿಕಾರ ದುರುಪಯೋಗ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ವೀಕ್ಷಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಇದನ್ನು ಜನರಿಗೆ ತಲುಪಿಸಲು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ಹೈಕಮಾಂಡ್ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನುಪಸ್ಥಿತಿಯಲ್ಲಿ ಹೈಕಮಾಂಡ್ ಸಂಪುಟದ 28 ಸಚಿವರ ಜೊತೆಗೂ ಚುನಾವಣಾ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದೆ. \ No newline at end of file diff --git a/eesanje/url_46_265_3.txt b/eesanje/url_46_265_3.txt new file mode 100644 index 0000000000000000000000000000000000000000..fd934685d5faee3877e8cc9442ea7bbe299f8300 --- /dev/null +++ b/eesanje/url_46_265_3.txt @@ -0,0 +1,7 @@ +ನೈತಿಕ ಪೊಲೀಸ್‍ಗಿರಿ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪರಮೇಶ್ವರ್ ಸೂಚನೆ +ಬೆಂಗಳೂರು,ಜ.11- ನೈತಿಕ ಪೊಲೀಸ್‍ಗಿರಿ ವಿಷಯವಾಗಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಪದೇ ಪದೇ ವರದಿಯಾಗುತ್ತಿರುವ ಪ್ರಕರಣಗಳ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಈಗಾಗಲೇ ಪೊಲೀಸ್‍ಗಿರಿಗೆ ಉನ್ನತಮಟ್ಟದ ಸೂಚನೆಯನ್ನು ನೀಡಿದ್ದೇವೆ. ಎಲ್ಲೇ ಆಗಲೀ, ಯಾರೇ ಆಗಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇರಬಾರದು. ಇಂತಹುದ್ದೆನ್ನೆಲ್ಲಾ ಮಟ್ಟ ಹಾಕಬೇಕೆನ್ನುವುದು ಸರ್ಕಾರದ ನಿಲುವಾಗಿದೆ. +ಈ ನಿಟ್ಟಿನಲ್ಲಿ ಈಗಾಗಲೇ ಸೂಚನೆ ನೀಡಲಾಗಿದೆ. ಪೊಲೀಸರು ಅದನ್ನು ಪಾಲನೆ ಮಾಡುತ್ತಾರೆ. ಸಂಬಂಧಪಟ್ಟ ಪ್ರಕರಣಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು. ಅಯೋಧ್ಯೆಯಲ್ಲಿನ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನೀಡಲಾದ ಆಹ್ವಾನವನ್ನು ಕಾಂಗ್ರೆಸ್ ಹೈಕಮಾಂಡ್ ಗೌರವಯುತವಾಗಿ ತಿರಸ್ಕರಿಸಿದೆ. +ಈ ನಿಲುವಿಗೆ ನಾವೆಲ್ಲಾ ಬದ್ಧರಾಗಿದ್ದೇವೆ. ಪಕ್ಷ ಹೇಳಿದಂತೆ ಕೇಳುವುದು ನಮ್ಮ ಕರ್ತವ್ಯ. ಸಂದರ್ಭ ಬಂದರೆ ವೈಯಕ್ತಿಕವಾಗಿ ನನ್ನ ಅಭಿಪ್ರಾಯವನ್ನು ಹೈಕಮಾಂಡ್‍ಗೆ ತಿಳಿಸುತ್ತೇನೆ. ಸದ್ಯಕ್ಕೆ ಪಕ್ಷ ಹೇಳಿದಂತೆ ಪಾಲನೆ ಮಾಡುತ್ತೇವೆ. ನಾವ್ಯಾರೂ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಹೇಳಿದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಸಂಬಂಧಪಟ್ಟಂತೆ ಇಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚೆಯಾಗುವುದಿಲ್ಲ. +ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ +ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಅನೇಕ ಸ್ನೇಹಿತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ವಿವಿಧ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆತಾಗ ನಾವೂ ಸರ್ಕಾರದಲ್ಲಿ ಭಾಗಿ ಎಂಬ ಅಭಿಪ್ರಾಯ ಅವರಲ್ಲಿ ಬರುತ್ತದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಮತ ಹಾಕುತ್ತಾರೆ ಎಂಬ ನಿಲುವು ಅವರದಾಗಿತ್ತು. ಆದರೆ ಎಐಸಿಸಿ ಅಧ್ಯಕ್ಷರು ಈ ವಿಷಯವಾಗಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಅದನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು. +ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸಚಿವರು ತಮ್ಮ ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕೆಂದು ಆರಂಭದಲ್ಲೇ ಸೂಚಿಸಲಾಗಿತ್ತು. ಇಂದಿನ ಸಭೆಯಲ್ಲಿ ಮತ್ತಷ್ಟು ಸೂಚನೆಗಳು ದೊರೆಯುವ ಸಾಧ್ಯತೆಯಿದ್ದು, ಯಾವ ಚರ್ಚೆಗಳು ನಡೆಯುತ್ತವೆ. ಸಚಿವರ ಸ್ಪರ್ಧೆಗೆ ಸೂಚನೆ ನೀಡುತ್ತಾರೆಯೇ ಎಂಬೆಲ್ಲಾ ವಿಷಯಗಳ ಬಗ್ಗೆ ಸದ್ಯಕ್ಕೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_265_4.txt b/eesanje/url_46_265_4.txt new file mode 100644 index 0000000000000000000000000000000000000000..73d2e6b9c431891c94f07aa51609cf9c00d6d5b2 --- /dev/null +++ b/eesanje/url_46_265_4.txt @@ -0,0 +1,7 @@ +ರಾಮ, ಶಿವ ಎಲ್ಲರ ದೇವರು, ಇದರಲ್ಲಿ ಅನಗತ್ಯ ರಾಜಕೀಯ ಬೇಡ : ಸಚಿವ ಎಂ.ಬಿ.ಪಾಟೀಲ್ +ಬೆಂಗಳೂರು,ಜ.11- ಅಯೋಧ್ಯೆಯಲ್ಲಿ ನಡೆಯುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ಅಳೆದೂ ತೂಗಿ ತೆಗೆದುಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. +ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಿರ್ಧಾರದಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಲಾಭವಾಗಲಿದೆಯೇ, ನಷ್ಟವಾಗಲಿದೆಯೇ ಎಂಬುದನ್ನು ನಾವು ಲೆಕ್ಕಾಚಾರ ಹಾಕುವುದಿಲ್ಲ. ರಾಮ, ಶಿವ ಎಲ್ಲರ ದೇವರು. ಇದರಲ್ಲಿ ರಾಜಕೀಯ ಅನಗತ್ಯ ಎಂದರು. +ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರಿಗೆ ನೀಡಿದ ಆಹ್ವಾನದಲ್ಲಿ ನಾಟಕೀಯತೆ ಇತ್ತು. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಹಿರಿಯ ನಾಯಕರು. 50 ವರ್ಷಗಳ ಅನುಭವ ಇರುವವರು. ಅವರಿಗೆ ಕಾಟಾಚಾರಕ್ಕೆ ಆಹ್ವಾನ ನೀಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾಗಾಂಧಿಯವರಿಗೆ ಆಹ್ವಾನ ನೀಡುವ ವಿಷಯದಲ್ಲೂ ನೆಪಮಾತ್ರ ಎಂಬಂತೆ ನಡೆದುಕೊಳ್ಳಲಾಗಿದೆ. ಎಲ್ಲರಿಗೂ ಗೌರವ ಕೊಟ್ಟು, ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮ ಮಾಡಿದ್ದರೆ ಅದರ ಘನತೆ ಹೆಚ್ಚಾಗುತ್ತಿತ್ತು ಎಂದು ಹೇಳಿದರು. +ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ +ಬಿಜೆಪಿ ರಾಮಮಂದಿರ ವಿಷಯದಲ್ಲಿ ರಾಜಕೀಯ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆ ಗೆಲ್ಲುವ ಹುನ್ನಾರ ನಡೆಸಿದೆ. ಕಳೆದ ಚುನಾವಣೆಯಲ್ಲಿ ಪುಲ್ವಾಮ ಮತ್ತು ಬಾಲಕೋಟ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಗಳನ್ನು ಚುನಾವಣೆಗೆ ಬಳಸಿಕೊಂಡಿತ್ತು. ಈ ಬಾರಿ ರಾಮನನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿಯೊಂದೂ ಚುನಾವಣೆಯಲ್ಲೂ ಒಂದೊಂದು ವಿಷಯವನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತದೆ ಎಂದರು. +ಲೋಕಸಭೆ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಹೈಕಮಾಂಡ್ ದೆಹಲಿಯಲ್ಲಿಂದು ಸಭೆ ನಡೆಯಲಿದೆ. ಅದರಲ್ಲಿ ವೀಕ್ಷಕರಾಗಿರುವ ಎಲ್ಲಾ ಸಚಿವರೂ ಭಾಗವಹಿಸುತ್ತಿದ್ದೇವೆ. 20 ಸ್ಥಾನಗಳನ್ನು ಗೆಲ್ಲುವುದು ನಮ್ಮ ಗುರಿ ಎಂದು ಹೇಳಿದರು. \ No newline at end of file diff --git a/eesanje/url_46_265_5.txt b/eesanje/url_46_265_5.txt new file mode 100644 index 0000000000000000000000000000000000000000..c5eb2ff4d6a179cdb9aebbc7fa5ebceed4061da6 --- /dev/null +++ b/eesanje/url_46_265_5.txt @@ -0,0 +1,6 @@ +ನಾವು ಶ್ರೀರಾಮನ ವಿರುದ್ಧವಾಗಿಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.11- ನಾವು ಶ್ರೀರಾಮನ ವಿರುದ್ಧವಾಗಿಲ್ಲ. ಆದರೆ ಅದರಲ್ಲಿ ರಾಜಕೀಯ ಮಾಡುವುದನ್ನು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದಲ್ಲಿನ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. +ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಕಾಂಗ್ರೆಸ್‍ನ ನಿಲುವೇ ನಮ್ಮ ನಿಲುವಾಗಿದೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇವೆ ಎಂದರು. ನಾವೂ ಕೂಡ ಶ್ರೀ ರಾಮಚಂದ್ರನ ಭಕ್ತರು. ಪೂಜೆ ಮಾಡುತ್ತೇವೆ, ಭಜನೆ ಮಾಡುತ್ತೇವೆ, ರಾಮಮಂದಿರ ಕಟ್ಟುತ್ತೇವೆ, ರಾಮನಿಗೆ ವಿರೋಧವಿಲ್ಲ. ಅದೇ ರೀತಿ ರಾಜಕೀಯವಾಗಿ ಮಾತನಾಡುವವರಿಗೆ ಮದ್ದಿಲ್ಲ ಎಂದು ಹೇಳಿದರು. +ಇಂದು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ 58ನೇ ಪುಣ್ಯಸ್ಮರಣೆ +ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗುತ್ತಿದ್ದಾರೆ. ಇಲ್ಲಿ ಶ್ರೀ ರಾಮಮಂದಿರವಿದೆ. ಇಲ್ಲೇ ಪೂಜೆ ಮಾಡಿದರೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು. ಜನವರಿ 22 ರಂದು ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಸಂದರ್ಭದಲ್ಲಿ ಪೂಜೆ ಮಾಡಲು ಮುಜರಾಯಿ ಇಲಾಖೆ ನಿರ್ಧಾರ ತೆಗೆದುಕೊಂಡಿದೆ. ಅದು ನನ್ನ ಹೇಳಿಕೆಯಲ್ಲ ಎಂದು ಸ್ಪಷ್ಟಪಡಿಸಿದರು. +ಲಾಲ್ ಬಹದ್ದೂರ್ ಶಾಸ್ತ್ರಿ ದೇಶ ಕಂಡ ಪ್ರಾಮಾಣಿಕ ಪ್ರಧಾನಿ. ಆಹಾರದ ಕೊರತೆಯಾದಾಗ ಒಂದು ದಿನ ಉಪವಾಸ ಮಾಡುವಂತೆ ಕರೆ ನೀಡಿದರು. ಜೈ ಜವಾನ್, ಜೈ ಕಿಸಾನ್ ಘೋಷಣೆ ಬಳಸಿದರು. ರೈಲ್ವೆ ಅಪಘಾತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮಾದರಿಯಾಗಿದ್ದ ಅವರು, ಸ್ವಲ್ಪ ಕಾಲ ಪ್ರಧಾನಿಯಾಗಿದ್ದರೂ ಕೂಡ ಆಹಾರ ಸ್ವಾವಲಂಬನೆಗೆ ಮುನ್ನುಡಿ ಬರೆದರು. ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದರು ಎಂದು ಹೇಳಿದರು. \ No newline at end of file diff --git a/eesanje/url_46_265_6.txt b/eesanje/url_46_265_6.txt new file mode 100644 index 0000000000000000000000000000000000000000..53d904e650cde2d068384f4bdb5483503d35e51b --- /dev/null +++ b/eesanje/url_46_265_6.txt @@ -0,0 +1,6 @@ +28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ : ಸಚಿವ ಮುನಿಯಪ್ಪ +ಬೆಂಗಳೂರು,ಜ.11- ರಾಜ್ಯಸರ್ಕಾರ ಉತ್ತಮ ಯೋಜನೆಗಳ ಆಧಾರವಾಗಿ ಲೋಕಸಭೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. +ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಖಾತ್ರಿಗಳೂ ಸೇರಿದಂತೆ ಜನರ ಜೀವನ ಮಟ್ಟ ಸುಧಾರಣೆಗೆ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದು ಜನರ ಒಲವು ಗಳಿಸಲು ಯಶಸ್ವಿಯಾಗಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ನಾವು ಚುನಾವಣೆ ನಡೆಸುತ್ತೇವೆ ಎಂದರು. +ನಿರುದ್ಯೋಗ ನಿವಾರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ : ಜೈರಾಮ್ +ಪಕ್ಷ ಸಂಘಟನೆಗೆ ನೆರವಾಗುವ ನಿಟ್ಟಿನಲ್ಲಿ ಪಂಚಖಾತ್ರಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಮೂಲಕ ಸುಮಾರು 3 ಸಾವಿರ ಕಾರ್ಯಕರ್ತರನ್ನು ಒಳಗೊಳ್ಳಲಾಗುವುದು. ಶಾಸಕರ ಮಾದರಿಯಲ್ಲೇ ಕಾರ್ಯಕರ್ತರಿಗೂ ಅವಕಾಶಗಳು ದೊರೆಯಲಿವೆ ಎಂದು ಹೇಳಿದರು. +ಎಲ್ಲರಿಗೂ ಸಮಾನ ಅವಕಾಶಗಳು ದೊರೆಯುವಂತೆ ಒಟ್ಟಾಗಿ ಕೆಲಸ ಮಾಡಲು, ಚುನಾವಣೆ ಗೆಲ್ಲಲು ಸಹಾಯವಾಗಲಿದೆ ಎಂದರು. ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಸಂಬಂಧಪಟ್ಟಂತೆ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ತಾವು ಭಾಗವಹಿಸುತ್ತಿರುವುದಾಗಿ ತಿಳಿಸಿದರು. \ No newline at end of file diff --git a/eesanje/url_46_265_7.txt b/eesanje/url_46_265_7.txt new file mode 100644 index 0000000000000000000000000000000000000000..49ff0814806a5394941135d639efffe4bcfe1191 --- /dev/null +++ b/eesanje/url_46_265_7.txt @@ -0,0 +1,6 @@ +ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ : ಬಿಎಸ್‌ವೈ +ಬೆಂಗಳೂರು,ಜ.11- ರಾಮಲಲ್ಲಾ ಟ್ರಸ್ಟ್ ಆಹ್ವಾನ ಕೊಟ್ಟಿದ್ದರೂ ಅದನ್ನು ತಿರಸ್ಕರಿಸುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು. +ಆದರೆ ಕುಂಟು ನೆಪ ಹೇಳಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವುದು ಹಿಂದೂಗಳಿಗೆ ಮಾಡಿದ ಅಪಮಾನ. ಲೋಕಸಭೆ ಚುನಾವಣೆಯಲ್ಲಿ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಸಿದರು. +ಆಯೋಧ್ಯೆ ಪ್ರವಾಸಕ್ಕೆ ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆ +ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಕಾಂಗ್ರೆಸ್ಸಿಗರು ಯಾವ ಕಾರಣಕ್ಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ನುಡಿದರು. \ No newline at end of file diff --git a/eesanje/url_46_265_8.txt b/eesanje/url_46_265_8.txt new file mode 100644 index 0000000000000000000000000000000000000000..f80fb9450faa50a914d75000f7c5bc32eed237e8 --- /dev/null +++ b/eesanje/url_46_265_8.txt @@ -0,0 +1,9 @@ +ತಾಯಿಯಿಂದಲೇ ಹತ್ಯೆಯಾಗಿದ್ದ ಬಾಲಕನ ಅಂತ್ಯಕ್ರಿಯೆ +ಬೆಂಗಳೂರು, ಜ. 10- ಗೋವಾ ಹೋಟೆಲ್ನಲ್ಲಿ ತಾಯಿಯಿಂದಲೇ ಹತ್ಯೆಯಾಗಿದ್ದ 4 ವರ್ಷದ ಮಗುವಿನ ಮೃತದೇಹವನ್ನು ಚಿತ್ರದುರ್ಗದಿಂದ ನಗರಕ್ಕೆ ತರಲಾಗಿದ್ದು, ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಇಂಡೋನೇಷ್ಯಾದಲ್ಲಿ ನೆಲೆಸಿರುವ ಕೇರಳ ಮೂಲದ ವೆಂಕಟರಾಮನ್ ಅವರು ತಡರಾತ್ರಿ ಚಿತ್ರದುರ್ಗದ ಹಿರಿಯೂರಿಗೆ ಆಗಮಿಸಿ ಮರಣೋತ್ತರ ಪರೀಕ್ಷೆಯ ನಂತರ ಮಗನ ಮೃತದೇಹವನ್ನು ಪಡೆದುಕೊಂಡು ನಗರಕ್ಕೆ ವಾಪಸ್ಸಾಗಿದ್ದರು. +ಮಹಿಳಾ ಉದ್ಯಮಿ ಸುಚನಾ ಸೇಠ್ ವಾಸವಾಗಿದ್ದ ಸುಬ್ರಹ್ಮಣ್ಯನಗರದ ಬ್ರಿಗೇಡ್ಗೇಟ್ ಅಪಾರ್ಟ್ಮೆಂಟ್ಗೆ ತಂದಿದ್ದು, ಅಲ್ಲಿ ಪ್ರಾಥಮಿಕ ವಿವಿಧಾನಗಳು ನಡೆದ ನಂತರ ಹರಿಶ್ಚಂದ್ರಘಾಟ್ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ಅಪ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಚನಾ ಸೇಠ್ ಅವರು ಸೋಮವಾರ ರಾತ್ರಿ ಗೋವಾದ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಮೃತದೇಹವನ್ನು ಸೂಟ್ಕೇಸ್ನಲ್ಲಿ ಹಾಕಿಕೊಂಡು ಟ್ಯಾಕ್ಸಿಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು. +ಮಾರ್ಗಮಧ್ಯೆ ಚಿತ್ರದುರ್ಗದ ಐಮಂಗಲ ಠಾಣೆ ಪೊಲೀಸರು ಮಹಿಳಾ ಉದ್ಯಮಿಯನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಸೂಟ್ಕೇಸ್ನಲ್ಲಿ ಅವರ ಮಗನ ಮೃತದೇಹ ಪತ್ತೆಯಾಗಿತ್ತು. ನಂತರ ಗೋವಾ ಪೊಲೀಸರಿಗೆ ಮಹಿಳೆಯನ್ನು ಹಸ್ತಾಂತರಿಸಿದ್ದಾರೆ. ಮಗುವಿನ ದೇಹದ ಮೇಲೆ ಯಾವುದೇ ರಕ್ತ ಸೋರಿಕೆಯಾಗಲೀ ಅಥವಾ ಹೋರಾಟ ನಡೆಸಿರುವ ಗುರುತುಗಳಿರಲಿಲ್ಲ ಎಂದು ಚಿತ್ರದುರ್ಗದ ವೈದ್ಯ ಡಾ. ನಾಯಕ್ ಮಾಹಿತಿ ನೀಡಿದ್ದಾರೆ. +ವಿಧಾನಸೌಧದ ಮುಂದೆ ದಂಪತಿ ಹೈಡ್ರಾಮ +ಸೇಠ್ ಅವರು ದಿ ಮೈಂಡ್ಫುಲ್ ಎಐ ಲ್ಯಾಬïನ ಸಿಇಒ ಆಗಿದ್ದಾರೆ ಮತ್ತು ಅವರ ಲಿಂಕ್ಡ್ಇನ್ ಪೊ್ರಫೈಲ್ನ ಪ್ರಕಾರ, ಅವರು ಎಐ ನೀತಿಶಾಸ್ತ್ರ ತಜ್ಞ ಮತ್ತು ಡೇಟಾ ವಿಜ್ಞಾನಿಯಾಗಿದ್ದು, ಡೇಟಾ ಸೈನ್ಸ್ ತಂಡಗಳಿಗೆ ಮಾರ್ಗದರ್ಶನ ನೀಡುವಲ್ಲಿ ಮತ್ತು ಸ್ಟಾರ್ಟ್ಅಪ್ಗಳು ಮತ್ತು ಉದ್ಯಮ ಸಂಶೋಧನೆಗಳಲ್ಲಿ ಯಂತ್ರ ಕಲಿಕೆಯ ಪರಿಹಾರಗಳನ್ನು ಸ್ಕೇಲಿಂಗ್ ಮಾಡುವಲ್ಲಿ 12 ವರ್ಷಗಳ ಅನುಭವವನ್ನು ಹೊಂದಿದ್ದಾರೆ. +ಅವರು ಕೃತಕ ಬುದ್ಧಿಮತ್ತೆ ಎಥಿಕ್ಸ್ ಪಟ್ಟಿಯಲ್ಲಿ 100 ಬ್ರಿಲಿಯಂಟ್ ಮಹಿಳೆಯರಲ್ಲಿ ಒಬ್ಬರಾಗಿದ್ದಾರೆ. ಅವರು ಡೇಟಾ ಸೊಸೈಟಿಯಲ್ಲಿ ಮೊಜಿಲ್ಲಾ ಫೆಲೋ ಆಗಿದ್ದಾರೆ, ಹಾರ್ವರ್ಡ್ ವಿಶ್ವವಿದ್ಯಾಲಯದ ಬರ್ಕ್ಮನ್ ಕ್ಲೈನ್ ಸೆಂಟರ್ನಲ್ಲಿ ಫೆಲೋ ಆಗಿದ್ದಾರೆ ಮತ್ತು ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ನಲ್ಲಿ ಸಂಶೋಧನಾ ಸಹವರ್ತಿಯಾಗಿದ್ದಾರೆ. ಅವರು ಸಹಜ ಭಾಷಾ ಸಂಸ್ಕರಣೆಯಲ್ಲಿ ಪೇಟೆಂಟ್ಗಳನ್ನು ಹೊಂದಿದ್ದಾರೆ ಎಂದು ಅವರ ಪೊ್ರಫೈಲ್ ತಿಳಿಸಿದೆ. ಸೇಠ್ ಅವರು ಎಐ ಎಥಿಕ್ಸ್ ಅಡ್ವೈಸರಿ ಆಡಿಟ್ಸ್ ಮತ್ತು ಜವಾಬ್ದಾರಿಯುತ ಎಐ ಸ್ಟ್ರಾಟಜಿಯಲ್ಲಿ ಪರಿಣತರಾಗಿದ್ದಾರೆ. + +ಕೋಲ್ಕತ್ತಾ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವೀಧರರು ಮತ್ತು ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ನಿಂದ ಸಂಶೋಧನಾ ಸಹೋದ್ಯೋಗಿ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಇಂಟರ್ನೆಟ್ ಮತ್ತು ಸೊಸೈಟಿಗಾಗಿ ಬರ್ಕ್ಮನ್ ಕ್ಲೈನ್ ಸೆಂಟರ್ನಲ್ಲಿ ಎರಡು ವರ್ಷಗಳನ್ನು ಕಳೆದಿದ್ದರು ಎಂದು ತಿಳಿದುಬಂದಿದೆ. ಒಟ್ಟಾರೆ ಈ ಪ್ರಕರಣದಲ್ಲಿ ಪತಿ ಮೇಲಿನ ಕೋಪಕ್ಕೆ ತನ್ನ ಮುದ್ದಾದ ಮಗುವನ್ನು ಕೊಲೆ ಮಾಡಿರುವುದು ಎಷ್ಟು ಸರಿ ಎಂಬುವುದು ನಾಗರಿಕರ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_265_9.txt b/eesanje/url_46_265_9.txt new file mode 100644 index 0000000000000000000000000000000000000000..d7243c7dd942305fdd181e510ceb9645bb150b62 --- /dev/null +++ b/eesanje/url_46_265_9.txt @@ -0,0 +1,5 @@ +ವಿಧಾನಸೌಧದ ಮುಂದೆ ದಂಪತಿ ಹೈಡ್ರಾಮ +ಬೆಂಗಳೂರು,ಜ.10- ಇಂದು ಬೆಳಿಗ್ಗೆ ವಿಧಾನಸೌಧ ಮುಂದೆ ಬಂದ ದಂಪತಿ ಸೀಮೆ ಎಣ್ಣೆ ಸುರಿದುಕೊಂಡು ಹೈಡ್ರಾಮಾ ಮಾಡಿದ್ದಾರೆ. ಜೆಜೆ ನಗರದ ಪಾದರಾಯನಪುರ ನಿವಾಸಿಗಳಾದ ಶಾಯಿಸ್ತಾಬಾಬು ಹಾಗೂ ಮೊಹಮದ್ ಮುನಾಯಿತ್ ದಂಪತಿಯನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. +ಈ ದಂಪತಿ ಚನ್ನಪಟ್ಟಣದಲ್ಲಿರುವ ತಮ್ಮ ಜಮೀನಿನಲ್ಲಿ ಶುಂಠಿ ಬೆಳೆಯಲು ಬ್ಯಾಂಕ್ನಿಂದ ಲೋನ್ ಪಡೆದಿದ್ದು, ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ನವರು ಇವರ ಮನೆ ಹರಾಜು ಮಾಡಿದ್ದಾರೆ. ಅಲ್ಲದೆ ಸ್ಥಳೀಯರು ಸಹ ತಮಗೆ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಲು ವಿಧಾನಸೌಧ ಬಳಿ ಬಂದಿದ್ದರು. +ಕರ್ನಾಟಕ ಪೊಲೀಸ್ ಇಲಾಖೆಗೆ ಸರ್ಜರಿ ಅಗತ್ಯವಿದೆ : ಶಿವರಾಜ್‍ಕುಮಾರ್ +ಸಿಎಂ ಭೇಟಿಗೂ ಮುನ್ನ ಸೀಮೆ ಎಣ್ಣೆ ಕ್ಯಾನ್ ಸಮೇತ ವಿಧಾನಸೌಧ ಮುಂದೆ ಬಂದ ದಂಪತಿ ಏಕಾಏಕಿ ಸೀಮೆಎಣ್ಣೆ ಸುರಿದುಕೊಂಡಿದ್ದಾರೆ.ತಕ್ಷಣ ಗಮನಿಸಿದ ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರು ಸೀಮೆ ಎಣ್ಣೆ ಕ್ಯಾನ್ ಕಿತ್ತುಕೊಂಡು, ದಂಪತಿಯನ್ನು ವಶಕ್ಕೆ ಪಡೆದಿದ್ದಾರೆ.ದಂಪತಿಯನ್ನು ರಕ್ಷಿಸುವ ವೇಳೆ ಇನ್ಸ್ಪೆಕ್ಟರ್ ಅವರ ಮೈಮೇಲೂ ಸೀಮೆಎಣ್ಣೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. \ No newline at end of file diff --git a/eesanje/url_46_266_1.txt b/eesanje/url_46_266_1.txt new file mode 100644 index 0000000000000000000000000000000000000000..db9e291d3787a3050aa8938156e8abe4ad26fd7b --- /dev/null +++ b/eesanje/url_46_266_1.txt @@ -0,0 +1,8 @@ +ಕನ್ನಡ ಹೋರಾಟಗಾರರನ್ನು ಜೈಲಿಗಟ್ಟುವ ಕಾಂಗ್ರೆಸ್ ಟ್ಯಾಬ್ಲೊ ವಿಷಯದಲ್ಲಿ ಮೊಸಳೆ ಕಣ್ಣೀರಿಡುತ್ತಿದೆ : ವಿಜಯೇಂದ್ರ +ಬೆಂಗಳೂರು,ಜ.10- ಕನ್ನಡ ನಾಮಫಲಕ ಅಳವಡಿಸುವಂತೆ ಹೋರಾಟ ನಡೆಸುವ ಕನ್ನಡಿಗರನ್ನು ಜೈಲಿಗೆ ಅಟ್ಟುವ ಕಾಂಗ್ರೆಸ್ ಸರ್ಕಾರ ಟ್ಯಾಬ್ಲೊ ವಿಷಯದಲ್ಲಿ ಮೊಸಳೆ ಕಣ್ಣೀರು ಸುರಿಸುವ ನಾಟಕವಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸ್ವತಃ ಸಚಿವರೇ ಹೇಳಿದರೂ ಅವರ ಮೇಲೆ ಏಕೆ ಕ್ರಮ ಜರುಗಿಸಿಲ್ಲ. ನಿಜವಾದ ಕನ್ನಡದ ಬದ್ಧತೆಯಿದ್ದರೆ ಅದನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. +ಕನ್ನಡ ಹೋರಾಟಗಾರರು ನಾಮಫಲಕ ಅಳವಡಿಸಲು ಹೋರಾಟ ನಡೆಸಿದರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಿ ಜೈಲಿಗೆ ಹಾಕುತ್ತೀರಿ. ಜಾಮೀನು ನೀಡಿದ ಮರುಕ್ಷಣವೇ ಮತ್ತೆ ಬಂಸುತ್ತೀರಿ ಅಂದರೆ ಕನ್ನಡ ಭಾಷೆ ಹಾಗೂ ಹೋರಾಟಗಾರರ ಬಗ್ಗೆ ನಿಮಿಗಿರುವ ಕಾಳಜಿ ಇದೇನಾ ಎಂದು ಪ್ರಶ್ನೆ ಮಾಡಿದರು. +ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಹಲವಾರು ಬಾರಿ ಹೇಳಿದ್ದರೂ ಸಚಿವರು ಮತ್ತೆ ಗಡಿ ವಿವಾದವನ್ನು ಕೆದಕಿದ್ದಾರೆ. ಇದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ. ತಕ್ಷಣವೇ ಅವರನ್ನು ಸಂಪುಟದಿಂದ ವಜಾಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದರು. +ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ +ದೆಹಲಿಯ ಕರ್ತವ್ಯಪಥದಲ್ಲಿ ಇದೇ 26ರಂದು ಗಣರಾಜ್ಯೋತ್ಸವದ ವೇಳೆ ಕರ್ನಾಟಕದ ಸ್ತಬ್ಧಚಿತ್ರ ಪಾಲ್ಗೊಳ್ಳುವಿಕೆಗೆ ಅವಕಾಶ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಜಯೇಂದ್ರ ಬಲವಾಗಿ ಸಮರ್ಥಿಸಿಕೊಂಡರು. ಕರ್ನಾಟಕ ಸತತವಾಗಿ 14 ವರ್ಷಗಳಿಂದ ಸ್ತಬ್ದ ಚಿತ್ರಗಳ ಪ್ರದರ್ಶನದಲ್ಲಿ ಪಾಲ್ಗೊಂಡಿದೆ. ಬೇರೆ ರಾಜ್ಯಗಳಿಗೂ ಅವಕಾಶ ಕಲ್ಪಿಸಬೇಕೆಂಬ ಕಾರಣಕ್ಕಾಗಿ ಅವಕಾಶ ನೀಡಿಲ್ಲ. ಇದರಲ್ಲಿ ರಾಜಕಾರಣ ಬೆರೆಸುವ ಅಗತ್ಯವಿಲ್ಲ ಎಂದು ಮನವಿ ಮಾಡಿದರು. +ಕಳೆದ ಬಾರಿ ಭಾಗಿಯಾಗಿದ್ದ ಗೋವಾ, ತಮಿಳುನಾಡು, ಉತ್ತರಖಂಡ್ ಸೇರಿದಂತೆ ಹಲವು ರಾಜ್ಯಗಳಿಗೆ ಅವಕಾಶ ಕಲ್ಪಿಸಿಲ್ಲ. ಹೋದ ವರ್ಷವು ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಕೊನೆಗೆ ಹಿರಿಯರ ಮಧ್ಯಪ್ರವೇಶದಿಂದ ಅವಕಾಶ ನೀಡಲಾಗಿತ್ತು. ಈಗ ಸಮಯ ಮುಗಿದಿರುವುದರಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಹೇಳಿದರು. \ No newline at end of file diff --git a/eesanje/url_46_266_10.txt b/eesanje/url_46_266_10.txt new file mode 100644 index 0000000000000000000000000000000000000000..56a88fbb8fbbc21da05522df42fc39ede1e6dea2 --- /dev/null +++ b/eesanje/url_46_266_10.txt @@ -0,0 +1,7 @@ +ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ +ಬೆಂಗಳೂರು,ಜ.9- ಕಡ್ಡಾಯ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕೆಲವು ಮಾಲ್‍ಗಳು, ಅಂಗಡಿಗಳ ನಾಮಫಲಕ ಧ್ವಂಸಗೊಳಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂಬ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಾಣಗೌಡ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. +2017 ರ ಹಳೆ ಪ್ರಕರಣ ಸಂಬಂಧ ಮತ್ತೆ ವಶಕ್ಕೆ ಪಡೆದಿರುವ ಪೊಲೀಸರು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. 2017 ರಲ್ಲಿ ಕರವೇ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮೆಟ್ರೋ ನಾಮಫಲಕಕ್ಕೆ ಮಸಿ ಬಳಿದ ಹಿನ್ನೆಲೆಯಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ವಿರುದ್ಧ ದೂರು ದಾಖಲಾಗಿತ್ತು. +ಈ ಸಂಬಂಧ ಜಾಮೀನುರಹಿತ ವಾರೆಂಟ್ ಸಹ ಜಾರಿ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ನಾರಾಯಣಗೌಡ ಅವರನ್ನು ಕುಮಾರಸ್ವಾಮಿ ಲೇ ಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಕನ್ನಡ ಭಾಷೆಯಲ್ಲಿ ಕಡ್ಡಾಯ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಇತ್ತೀಚೆಗೆ ಕರವೇ ಕಾರ್ಯಕರ್ತರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾದರಹಳ್ಳಿ ಗೇಟ್ ಬಳಿ ಪ್ರತಿಭಟನೆ ನಡೆಸಿದ ಕರವೇ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಮಾಲ್‍ಗಳು ಹಾಗೂ ಅಂಗಡಿಗಳ ನಾಮಫಲಕಗಳನ್ನು ಧ್ವಂಸಗೊಳಿಸಿ ಸಾರ್ವಜನಿಕರ ಆಸ್ತಿಪಾಸ್ತಿ ಹಾಳು ಮಾಡಿದ್ದರು. +ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ +ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಕರವೇ ಅಧ್ಯಕ್ಷ ನಾರಾಯಣಗೌಡರು ಹಾಗೂ 30ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಶನಿವಾರವೇ ಇವರ ಬಿಡುಗಡೆಯಾಗಬೇಕಿತ್ತು. ಆದರೆ ಪ್ರಕ್ರಿಯೆ ತಡವಾದ ಕಾರಣ ಇಂದು ಬೆಳಗ್ಗೆ ನಾರಾಯಣಗೌಡರು ಹಾಗೂ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಯಿತು. +ಕಾರ್ಯಕರ್ತರನ್ನು ಬಿಎಂಟಿಸಿ ಬಸ್‍ನಲ್ಲಿ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಕರಣವೊಂದರ ಸಂಬಂಧ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಮತ್ತೆ ನಾರಾಯಣಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. \ No newline at end of file diff --git a/eesanje/url_46_266_11.txt b/eesanje/url_46_266_11.txt new file mode 100644 index 0000000000000000000000000000000000000000..cd5d0152a01bd3dac5b4515dcf9f749396543fa1 --- /dev/null +++ b/eesanje/url_46_266_11.txt @@ -0,0 +1,11 @@ +ಡಿಸಿಎಂ ಚರ್ಚೆ : ಹೈಕಮಾಂಡ್‌ಗೆ ಖಡಕ್ ಸಂದೇಶ ರವಾನಿಸಿದ ಡಿಕೆಶಿ +ಬೆಂಗಳೂರು,ಜ.9- ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದ್ದೇ ಆದರೆ ತಾವು ಸಂಪುಟದಿಂದ ಹೊರಗಿರುವುದಾಗಿ ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. +ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಒತ್ತಡ ತೀವ್ರವಾದ ಬೆನ್ನಲ್ಲೇ 7 ಮಂದಿ ಸಚಿವರುಗಳು ರಹಸ್ಯ ಸಭೆ ನಡೆಸಿದ್ದರು. ಪ್ರತ್ಯೇಕ ಭೋಜನಾಕೂಟಗಳು ನಡೆದಿದ್ದವು. ಅಭಿಪ್ರಾಯ ಸಂಗ್ರಹಕ್ಕಾಗಿ ದೆಹಲಿಯಿಂದ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಬಳಿಯೂ ಆಕಾಂಕ್ಷಿಗಳು ತಮ್ಮ ಬೇಡಿಕೆಯನ್ನು ಮಂಡಿಸಿದ್ದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸದೇ ಇದ್ದರೆ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬ ಸಂದೇಶವನ್ನು ರವಾನಿಸಿದ್ದರು. +ಅದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಹೈಕಮಾಂಡ್‍ಗೆ ತಮ್ಮ ನಿಲುವನ್ನು ತಿಳಿಸಿದ್ದು, ಪಕ್ಷಕ್ಕೆ ಅನುಕೂಲವಾಗುವುದಾದರೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಸಿದ್ದೇ ಆದರೆ ತಾವು ಪ್ರಸ್ತುತ ಹುದ್ದೆಯಲ್ಲಿ ಮುಂದುವರೆಯುವುದಿಲ್ಲ. ಹೈಕಮಾಂಡ್ ಬಯಸುವುದಾದರೆ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತೇನೆ. ಬೇಡ ಎಂದರೆ ಅದನ್ನೂ ತ್ಯಜಿಸಲು ಸಿದ್ಧ ಎಂದು ಖಡಕ್ ಸಂದೇಶ ನೀಡಿದ್ದಾರೆ. ಇದು ಹೈಕಮಾಂಡ್‍ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. +ಒಂದೆಡೆ ಜಾತಿವಾರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಸೂಕ್ಷ್ಮ ವಿಚಾರವನ್ನು ತೇಲಿಬಿಟ್ಟು ಹಿರಿಯ ಕಾಂಗ್ರೆಸಿಗರು ಮುಜುಗರ ಉಂಟುಮಾಡಿದ್ದಾರೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣದ ಸಚಿವರೇ ಈ ತಂತ್ರಗಾರಿಕೆಯ ಹಿಂದೆ ಇರುವುದು ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ. ಡಿ.ಕೆ.ಶಿವಕುಮಾರ್‍ರ ಪ್ರಭಾವವನ್ನು ತಗ್ಗಿಸುವುದು ಮತ್ತು ಲೋಕಸಭೆ ಚುನಾವಣೆಯ ಬಳಿಕ ಅಧಿಕಾರ ಹಂಚಿಕೆಯ ಬೇಡಿಕೆಗಳು ಮುನ್ನೆಲೆಗೆ ಬರದಂತೆ ನೋಡಿಕೊಳ್ಳಲು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬೇಡಿಕೆಯನ್ನು ಪ್ರಸ್ತಾಪಿಸಲಾಗಿದೆ ಎಂಬ ಚರ್ಚೆಗಳಿವೆ. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಅದಕ್ಕೆ ಪೂರಕವೆಂಬಂತೆ ಹೆಚ್ಚುವರಿ ಉಪಮುಖ್ಯಮಂತ್ರಿಗಳ ವಿಚಾರವಾಗಿ ಪರ-ವಿರೋಧ ವಾಕ್ಸಮರಗಳು ಪಕ್ಷದಲ್ಲಿ ಸಣ್ಣ ಧ್ವನಿಯಾಗಿ ಕೇಳಿ ಬರುತ್ತಲೇ ಇವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಗೊಂದಲಗಳನ್ನು ತಡೆಹಿಡಿಯಲು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಬೆಂಗಳೂರಿಗೆ ಕಳುಹಿಸಿದೆ. ಅವರು ನಿನ್ನೆ ಸಂಪುಟದ ಪ್ರಮುಖರ ಜೊತೆ ಚರ್ಚೆ ನಡೆಸಿದ್ದಾರೆ. ಅದರಲ್ಲಿ ಹೆಚ್ಚುವರಿ ಹುದ್ದೆಯ ಆಕಾಂಕ್ಷಿಗಳೊಂದಿಗೂ ಸಮಾಲೋಚನೆ ನಡೆಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಸೂಕ್ಷ್ಮ ವಿಚಾರಗಳು ಗೊಂದಲ ಸೃಷ್ಟಿಸಿದ್ದು ಹೈಕಮಾಂಡ್‍ಗೆ ಇಕ್ಕಟ್ಟಿಗೆ ಸಿಲುಕಿಸಿದಂತೆ ಮಾಡಿದೆ. +ಜಾತಿವಾರು ಅವಕಾಶ ನೀಡದೇ ಇದ್ದರೆ ಪಕ್ಷದ ಸಾಂಪ್ರದಾಯಿಕ ಮತ ಬ್ಯಾಂಕ್‍ಗಳು ಛಿದ್ರಗೊಳ್ಳುವ ಆತಂಕ ಒಂದು ಕಡೆಯಾಗಿದೆ. ಮತ್ತೊಂದು ಕಡೆ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆಯನ್ನು ಸೃಷ್ಟಿಸಿದರೆ ಡಿ.ಕೆ.ಶಿವಕುಮಾರ್ ಅವರ ಪ್ರಭಾವ ತಗ್ಗಲಿದೆ. ಸಹಜವಾಗಿ ಅವರ ಬೆಂಬಲಕ್ಕಿರುವ ದೊಡ್ಡ ಸಂಘಟನಾ ಪಡೆ ತಟಸ್ಥವಾಗಿ ಉಳಿಯುವ ಅಪಾಯವಿದೆ. ಲೋಕಸಭೆ ಚುನಾವಣೆಯ ಗೆಲುವಿನ ಶ್ರೇಯಸ್ಸು ಯಾರಿಗೆ ಎಂಬ ಚರ್ಚೆಗಳು ಮತ್ತು ಆಂತರಿಕ ಪೈಪೋಟಿ ಈಗಾಗಲೇ ಶುರುವಾಗಿದೆ. +ಸಾತ್ವಿಕ್-ಚಿರಾಗ್ ಜೋಡಿಗೆ ಲಭಿಸಿದ ಖೇಲ್‍ರತ್ನ ಪ್ರಶಸ್ತಿ +ವಿಧಾನಸಭೆ ಚುನಾವಣೆ ಗೆಲುವನ್ನು ಹೈಕಮಾಂಡ್ ಸಿದ್ದರಾಮಯ್ಯ ಅವರ ಹೆಗಲಿಗೆ ಕಟ್ಟಿ ಮುಖ್ಯಮಂತ್ರಿ ಹುದೆ ನೀಡಿದೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಹಜವಾಗಿ ಅದರ ಕ್ರೆಡಿಟ್ ಅನ್ನು ಸಿದ್ದರಾಮಯ್ಯ ಅವರಿಗೇ ದೊರಕಿಸಲು ಪಕ್ಷದಲ್ಲಿ ಒಂದು ಬಣ ಹವಣಿಸುತ್ತಿದೆ. ಆದರೆ ಸಹಜವಾಗಿ ಪಕ್ಷದ ಆಧ್ಯಕ್ಷರ ಸಂಘಟನೆಯ ಚತುರತೆಗೆ ಗೆಲುವಿಗೆ ಕಾರಣ ಎಂಬ ವಾದಗಳಿವೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಈ ವಾದಕ್ಕೆ ಹೆಚ್ಚು ಮನ್ನಣೆ ಸಿಗಲಿಲ್ಲ. ಹೀಗಾಗಿ ನಾನಾ, ನೀನಾ ಎಂಬ ಜಿದ್ದಾಜಿದ್ದಿನ ಪೈ ಪೋಟಿ ಒಳಗೊಳಗೇ ತೀವ್ರವಾಗಿದೆ. +ಈ ರೀತಿಯ ಅನಾರೋಗ್ಯಕರ ಪೈಪೋಟಿ ಹೆಚ್ಚಾಗಿ ಚುನಾವಣೆ ಮೇಲೆ ಪರಿಣಾಮ ಬೀಳಬಾರದು ಎಂಬ ಕಾರಣಕ್ಕಾಗಿ ಸಮನ್ವಯತೆಯನ್ನು ಸಾಸಲು ಹೈಕಮಾಂಡ್ ಹಲವು ಬಾರಿ ಪ್ರಯತ್ನಿಸಿದೆ. ಸುರ್ಜೆವಾಲ ಅವರ ನಿಯೋಗ ಈ ನಿಟ್ಟಿನಲ್ಲೇ ಗಂಭೀರ ಪ್ರಯತ್ನ ನಡೆಸಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_266_12.txt b/eesanje/url_46_266_12.txt new file mode 100644 index 0000000000000000000000000000000000000000..6f748a34648b730a7e257012beee838b220b5ad9 --- /dev/null +++ b/eesanje/url_46_266_12.txt @@ -0,0 +1,9 @@ +ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ +ಬೆಂಗಳೂರು, ಡಿ.30- ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಬೇಡಿಕೆ ಹೆಚ್ಚಾದ ಬೆನ್ನಲ್ಲೇ, ಇದೀಗ ವೀರಶೈವ ಲಿಂಗಾಯತ ಕೋಟಾದಲ್ಲಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಹೆಸರು ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಹಾಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ , ಜೀವನೋಪಾಯ ಹಾಗೂ ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಶರಣ ಪ್ರಕಾಶ್ ಪಾಟೀಲ್ ವಿವಾದರಹಿತ ರಾಜಕಾರಣಿ ಎಂದೇ ಗುರುತಿಸಿಕೊಂಡವರು. +ಪಕ್ಷದ ಶಿಸ್ತಿನ ಸಿಪಾಯಿ, ನಿಷ್ಕಳಂಕ ರಾಜಕಾರಣಿ ಎಂದು ಕರೆಯಲ್ಪಡುವ ಡಾ.ಶರಣ್ ಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿರುವ ಶರಣ ಪ್ರಕಾಶ್ ಪಾಟೀಲ್, ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ. +ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ +ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಹಂತದಲ್ಲಿ ಶರಣ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೂಗೆದ್ದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಿದರೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಚರ್ಚೆಯೂ ಆರಂಭವಾಗಿದೆ. ಈ ಭಾಗದಲ್ಲಿ ವೀರಶೈವ ಲಿಂಗಾಯತ ಮತಗಳು ಅಭ್ಯರ್ಥಿಗಳ ಸೋಲು – ಗೆಲುವಿನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದರಿಂದ ಇದೇ ಸಮುದಾಯಕ್ಕೆ ಸೇರಿದ ಪ್ರಭಾವಿ ಸಚಿವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. +ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡಲಿವೆ. ಒಟ್ಟು 5 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಭಾಗದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಇತ್ತೀಚೆಗೆ ಕಳೆದ ಮೇ ತಿಂಗಳಿನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಅಭೂತಪೂರ್ವ ಯಶಸ್ಸು ಕಂಡಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ ಪಕ್ಷ 25 ಕ್ಷೇತ್ರಗಳನ್ನು ಗೆದ್ದು ಎಐಸಿಸಿಗೆ ಭರ್ಜರಿ ಉಡುಗೊರೆ ನೀಡುವ ಲೆಕ್ಕಾಚಾರದಲ್ಲಿ ಕೆಪಿಸಿಸಿಗೆ ಇದೆ. ಇದು ಸಾಧ್ಯವಾಗಬೇಕಾದರೆ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಸಮುದಾಯ ಎನಿಸಿದ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲೂ ಕೇಳಿ ಬರುತ್ತಿದೆ. +ಜ.17ರಂದು ರಾಮ್‍ಲಲ್ಲಾ ವಿಗ್ರಹ ವೀಕ್ಷಣೆಗೆ ಅವಕಾಶ +ಹಾಗೊಂದು ವೇಳೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡುವುದಾದರೆ ಅದಕ್ಕೆ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂಬ ಹಕ್ಕೊತ್ತಾಯಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆಗೂ ಅವಿನಾಭಾವ ಸಂಬಂಧ ಹೊಂದಿರುವ ಶರಣ ಪ್ರಕಾಶ್ ಪಾಟೀಲ್ ವಿಷಯವಾಗಿ ರಾಜಕೀಯ ವಿರೋಧಿಗಳು ಕಡಿಮೆ. +ಈ ಹಿಂದೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕಾರಣಕ್ಕಾಗಿ ಈ ಬಾರಿ ಅತ್ಯಂತ ಮಹತ್ವದ್ದಾದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಜವಾಬ್ದಾರಿಗಳನ್ನು ಸಿದ್ದರಾಮಯ್ಯನವರು ಶರಣ ಪ್ರಕಾಶ್ ಪಾಟೀಲ್ ಅವರಿಗೆ ವಹಿಸಿದ್ದರು. ಇದೀಗ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಅನುಷ್ಠಾನವಾಗಲಿದೆ. \ No newline at end of file diff --git a/eesanje/url_46_266_2.txt b/eesanje/url_46_266_2.txt new file mode 100644 index 0000000000000000000000000000000000000000..b1376d14823453e9ab0f99a22607fe3facffbb35 --- /dev/null +++ b/eesanje/url_46_266_2.txt @@ -0,0 +1,9 @@ +ಇಂದಿನಿಂದ ಕೆಸಿಇಟಿ ಪರೀಕ್ಷೆಗೆ ಆನ್‍ಲೈನ್ ಸಲ್ಲಿಕೆಗೆ ಅವಕಾಶ +ಬೆಂಗಳೂರು,ಜ.10- ವೃತ್ತಿಪರ ಕೋರ್ಸುಗಳಿಗೆ ಸೇರುವ ಅರ್ಹತೆ ಪಡೆಯಲು ಅಭ್ಯರ್ಥಿಗಳು ಕೆಸಿಇಟಿ-24 ಪರೀಕ್ಷೆಗೆ ಇಂದಿನಿಂದಲೇ ಫೆಬ್ರುವರಿ 10 ರವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಪರೀಕ್ಷಾ ಪ್ರಾಕಾಧಿರವು (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ-24) ನಡೆಸುವ ದಿನಾಂಕವನ್ನು ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19 ರಂದು ಪರೀಕ್ಷೆಗಳು ನಡೆಯಲಿವೆ. ಈ ಮುಂಚೆ ಏಪ್ರಿಲ್ 20 ಮತ್ತು 21 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. +ಈ ಸಂಬಂಧ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪತ್ರಿಕಾ ಪ್ರಕಟಣೆ ನೀಡಿದ್ದು, ಏಪ್ರಿಲ್ 21ರಂದು ಎನ್‍ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಅದರಂತೆ, ಕೆಸಿಇಟಿ ಕನ್ನಡ ಪರೀಕ್ಷೆ ಏಪ್ರಿಲ್ 20 ರಂದು ನಡೆಯಲಿದೆ. +ಮೆಡಿಕಲ್ / ಡೆಂಟಲ್ / ಆಯುಷ್ / ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತï ಸೈನ್ಸ್ ಕೋರ್ಸುಗಳಿಗೆ ಸೇರಲು ಆಸಕ್ತಿ ಇರುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಯುಜಿನೀಟ್-2024 ಫಲಿತಾಂಶಗಳ ಪ್ರಕಟಣೆಯ ನಂತರ ಕೆಇಎ ನಲ್ಲಿ ನೋಂದಾಯಿಸಲಾಗಿರುವ ಅಭ್ಯರ್ಥಿಗಳಿಗೆ ನೀಟ್ ಸ್ಕೋರ್ ಮತ್ತು ರೋಲ್ ನಂಬರ್ ದಾಖಲಿಸಲು ಇಂಟರ್‍ಫೇಸ್ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ. +ಸಿಇಟಿ ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ಭಾಗವಾಗಿ ಈ ಬಾರಿ ಅರ್ಜಿಯನ್ನು ಅರ್ಜಿ ಹಾಗೂ ಪರಿಶೀಲನೆ ನಮೂನೆಯಲ್ಲಿ ಹೊರತರಲಾಗಿದೆ. ಇದರಿಂದಾಗಿ, ಅಭ್ಯರ್ಥಿಗಳ ದಾಖಲಾತಿಗಳನ್ನು ಭೌತಿಕವಾಗಿ ಪರಿಶೀಲಿಸಲು ಈ ಮುಂಚೆ ಹಿಡಿಯುತ್ತಿದ್ದ ಹೆಚ್ಚಿನ ಸಮಯ ಉಳಿತಾಯವಾಗುತ್ತದೆ ಎಂದು ವಿವರಿಸಲಾಗಿದೆ. +ಟಿವಿ ನೇರ ಸಂದರ್ಶನದಲ್ಲಿ ಪ್ರತ್ಯಕ್ಷರಾದ ಬಂದೂಕುದಾರಿಗಳ ಬಂಧನ +ಹೊಸ ಮಾದರಿಯಲ್ಲಿ, ಅಭ್ಯರ್ಥಿಗಳ ವಿವರಗಳನ್ನು ಅಂದರೆ, ಶಾಲೆಗಳ ವ್ಯಾಸಂಗ, ಕನ್ನಡ ಮಾಧ್ಯಮ, ಜಾತಿ, ಆದಾಯ ಮುಂತಾದ ವಿವರಗಳನ್ನು ಸ್ಯಾಟ್ಸ್ ಹಾಗೂ ಕಂದಾಯ ಇಲಾಖೆಯ ವೆಬ್ ಸರ್ವೀಸ್ ಮುಖಾಂತರ ಆನ್ಲೈನ್ ಮೂಲಕವೇ ಪರಿಶೀಲಿಸಲಾಗುವುದು, ಅಭ್ಯರ್ಥಿಗಳು ಪ್ರತ್ಯೇಕವಾಗಿ ದಾಖಲೆಗಳ ಪರಿಶೀಲನೆಗೆ ಭೌತಿಕವಾಗಿ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಪ್ರತಿ ವರ್ಷವೂ ಸುಮಾರು ಒಂದೂವರೆ ತಿಂಗಳ ಕಾಲ ನಡೆಯುತ್ತಿದ್ದ ಪರಿಶೀಲನೆಗಳ ಕಾರ್ಯಗಳು ಈಗ ಅರ್ಜಿ ಸಲ್ಲಿಸುವ ಸಮಯದಲ್ಲಿಯೇ ನಡೆಯಲಿವೆ ಎಂದು ತಿಳಿಸಲಾಗಿದೆ. +ಹೀಗಾಗಿ, ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಕಡ್ಡಾಯವಾಗಿ ಎಚ್ಚರಿಕೆಯಿಂದ ಭರ್ತಿ ಮಾಡಲು ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಲು ಸೂಚಿಸಲಾಗಿದೆ. ಪ್ರಾಕಾರವು ಸುಮಾರು 250 ಕ್ಕೂ ಹೆಚ್ಚು ನುರಿತ ಉಪನ್ಯಾಸಕರುಗಳನ್ನು ಮಾಸ್ಟರ್ ಟ್ರೈನರ್ ಎಂದು ಗುರುತಿಸಿ ಅವರುಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ತರಬೇತಿಯನ್ನು ಈಗಾಗಲೇ ನೀಡಿದೆ. ಈ ಮಾಸ್ಟರ್ ಟ್ರೈನರ್‍ಗಳು, ಪ್ರತಿ ವಿಜ್ಞಾನ ಕಾಲೇಜಿನಲ್ಲಿ ಒಂದಿಬ್ಬರು ಉಪನ್ಯಾಸಕರನ್ನು ಗುರುತಿಸಿ ಅವರಿಗೆ ಕಾಲೇಜು ಟ್ರೈನರ್‍ತರಬೇತಿ ನೀಡಿ ಸಜ್ಜುಗೊಳಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಸಂದೇಹಗಳಿದ್ದಲ್ಲಿ ತಾವು ವ್ಯಾಸಂಗ ಮಾಡುತ್ತಿರುವ ಕಾಲೇಜಿನಲ್ಲಿನ ಕಾಲೇಜು ಟ್ರೈನರ್ ಗಳನ್ನು ಸಂಪರ್ಕಿಸಿ ಮಾರ್ಗದರ್ಶನ ಪಡೆಯಬೇಕು ಎಂದೂ ಸೂಚಿಸಲಾಗಿದೆ. +ಮೊಬೈಲ್ ಆ್ಯಪ್ ಅಭಿವೃದ್ಧಿ:ಇದರ ಜೊತೆಗೆ, ಸುಧಾರಣೆಯ ಮತ್ತೊಂದು ಕ್ರಮವಾಗಿ ಕೆಇಎ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಿದ್ದು ಇದನ್ನು ಕೆಇಎ ವೆಬ್‍ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಇದರಿಂದಾಗಿ, ಪರೀಕ್ಷಾ ವೇಳಾಪಟ್ಟಿ, ಸೂಚನೆ, ಅರ್ಜಿ ಪ್ರಕ್ರಿಯೆಯ ಯಾವ ಹಂತದಲ್ಲಿದೆ ಇತ್ಯಾದಿ ಮಾಹಿತಿಯನ್ನು ವಾಟ್ಸಾಪ್ ಮೆಸೇಜ್ ಮೂಲಕವೇ ಪಡೆಯಬಹುದು. ಇದು, ಅಭ್ಯರ್ಥಿಗಳು ಪದೇಪದೇ ವೆಬ್‍ಸೈಟ್ ಗೆ ಹೋಗಿ ಪರಿಶೀಲಿಸಬೇಕಾದ ಅಗತ್ಯವನ್ನು ತಪ್ಪಿಸುತ್ತದೆ. ಶುಲ್ಕ ಪಾವತಿ ಹಾಗೂ ಅರ್ಜಿಗೆ ಸಂಬಂಸಿದ ವಿವರಗಳು ಅಭ್ಯರ್ಥಿಗಳ ಪೋರ್ಟಲ್ ನಲ್ಲಿ ಲಭ್ಯವಿರುತ್ತದೆ. \ No newline at end of file diff --git a/eesanje/url_46_266_3.txt b/eesanje/url_46_266_3.txt new file mode 100644 index 0000000000000000000000000000000000000000..9226f234558acd52fa1ae79140a5f2cddddef80b --- /dev/null +++ b/eesanje/url_46_266_3.txt @@ -0,0 +1,9 @@ +ಭೀಕರ ಬರಗಾಲವಿದ್ದರೂ ರೈತರಿಗೆ ಸ್ಪಂದಿಸದ ಸರ್ಕಾರ : ಬೊಮ್ಮಾಯಿ ಆಕ್ರೋಶ +ಬೆಂಗಳೂರು,ಜ.9-ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಜನರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ನಿಯಲ್ಲಿ ಎಷ್ಟು ಹಣವಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು. +ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಪೀಡಿತ ಪ್ರದೇಶಗಳಿಗೆ ತಕ್ಷಣವೇ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ ಎಂದು ಟೀಕಿಸಿದರು. +18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಮಾತ್ರ ಅಂದರೆ ಶೇ.1ರಷ್ಟೂ ಬಿಡುಗಡೆ ಮಾಡಿಲ್ಲ. ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ ವರ್ಗಾವಣೆ ಮಾಡಿದ್ದೆವು ಎಂದರು. +ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಅಭಿವೃದ್ದಿ ಕಾಮಗಾರಿಗಳು ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ 3 ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಿದೆ ಎಂದು ಹೇಳಿದರು. +ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ +ಸರ್ಕಾರ ಉಳಿಯುವುದಿಲ್ಲ:ರೈತರು ಶಾಪ ಹಾಕಿದರೆ ಸರ್ಕಾರ ಒಂದು ಕ್ಷಣವೂ ಉಳಿದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಕಳೆದ 70 ವರ್ಷಗಳಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ನೋಡಿಲ್ಲ. ಬೇಜವಾಬ್ದಾರಿ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ರಾಜ್ಯದಲ್ಲಿ ಸುಮಾರು 600ರಿಂದ 700 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ಆ ಕಡೆ ಸರ್ಕಾರ ತಿರುಗಿಯೂ ನೋಡಿಲ್ಲ. ತೀವ್ರ ಬರವಿದ್ದರೂ ರೈತರಿಗೆ ಪರಿಹಾರ ಧನ ತಲುಪಿಸಿಲ್ಲ. ರೈತರಿಗೆ ದಿಕ್ಕು ತೋಚದಂತೆ ಮಾಡಿದ್ದಾರೆ. +ಅನಗತ್ಯವಾಗಿ ಡಿಸಿಎಂ ಹುದ್ದೆಯ ಚರ್ಚೆಗೆ ಖರ್ಗೆ ಆಕ್ರೋಶ +ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಕಿಂಚಿತ್ತೂ ಮಾನವೀಯತೆ ತೋರಿಲ್ಲ ಎಂದು ಅವರು ವಾಗ್ದಾಳಿ ಮಾಡಿದರು. ನಮ್ಮ ಸರ್ಕಾರ ಅಧಿಕಾರಿದಲ್ಲಿದ್ದಾಗ ಕೇಂದ್ರದ ನೆರವಿಗೆ ಕಾಯದೆ ಡಿಬಿಟಿ ಮೂಲಕ ರೈತರಿಗೆ 3 ಸಾವಿರ ಕೋಟಿ ರೂ. ನೀಡಿದ್ದೆವು. ಆದರೆ ಈ ಸರ್ಕಾರ 100 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ. ರೈತರಿಗೆ ಬರೀ 3 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು. \ No newline at end of file diff --git a/eesanje/url_46_266_4.txt b/eesanje/url_46_266_4.txt new file mode 100644 index 0000000000000000000000000000000000000000..e5dfa90041a6e144b6196cb1ecd7118e11077262 --- /dev/null +++ b/eesanje/url_46_266_4.txt @@ -0,0 +1,6 @@ +ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ತಿರಸ್ಕಾರ : ಕನ್ನಡಿಗರ ಆಕ್ರೋಶ +ಬೆಂಗಳೂರು,ಜ.9- ಗಣರಾಜ್ಯೋತ್ಸವದ ಹೆಮ್ಮೆಯ ಪರೇಡ್‍ನಲ್ಲಿ ಭಾಗವಹಿಸಲು ರಾಜ್ಯಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಐತಿಹಾಸಿಕವಾದ ಜಾಥಾ ನಡೆಯಲಿದೆ. ಅದರಲ್ಲಿ ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳು ಪಾಲ್ಗೊಳ್ಳುತ್ತವೆ. ಗಣರಾಜ್ಯೋತ್ಸವದ ಪೆರೇಡ್‍ನಲ್ಲಿ ಪಾಲ್ಗೊಳ್ಳುವುದು ಹೆಮ್ಮೆಯ ವಿಚಾರ. ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ದೇವತೆ ಅಣ್ಣಮ್ಮ ದೇವಿಯ ಪ್ರತಿಕೃತಿಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. +ಆದರೆ ಕೇಂದ್ರ ಸರ್ಕಾರ ರಾಜ್ಯದ ಮನವಿಯನ್ನು ತಳ್ಳಿ ಹಾಕಿದೆ. ಸ್ತಬ್ಧ ಚಿತ್ರದಲ್ಲಿ ಭಾಗವಹಿಸಲು ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಬದಲಾಗಿ ವಸ್ತು ಪ್ರದರ್ಶನ ಮಳಿಗೆಯಲ್ಲಿ ರಾಜ್ಯದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಿಕೊಳ್ಳಬಹುದು ಎಂದು ತಿಳಿಸಿದೆ. ಕಳೆದ ವರ್ಷ ಇದೇ ರೀತಿ ಸ್ತಬ್ಧ ಚಿತ್ರ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಚುನಾವಣಾ ವರ್ಷವಾಗಿದ್ದರಿಂದಾಗಿ ಅದು ರಾಜಕೀಯ ಸ್ವರೂಪವನ್ನು ಪಡೆದುಕೊಂಡಿತ್ತು. ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರಕ್ಕೆ ಮುಜುಗರ ಎದುರಾದಾಗ ಪ್ರಮುಖ ನಾಯಕರು ಕೇಂದ್ರದ ಮೇಲೆ ಒತ್ತಡ ತಂದು ವಿಶೇಷ ಅನುಮತಿ ಪಡೆಯುವ ಮೂಲಕ ಸ್ತಬ್ಧ ಚಿತ್ರ ಮೆರವಣಿಗೆಯಲ್ಲಿ ರಾಜ್ಯದ ಪ್ರತಿಕೃತಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದರು. +ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ +ಕಳೆದ ಬಾರಿ ಅನುಮತಿ ನಿರಾಕರಿಸಿದಾಗಲೇ ನಾನಾ ರೀತಿಯ ಸಮರ್ಥನೆಗಳು ಕೇಳಿಬಂದಿದ್ದವು. ಪ್ರತಿ ವರ್ಷವೂ ಸೀಮಿತ ಸಂಖ್ಯೆಯ ರಾಜ್ಯಗಳಿಗೆ ಮಾತ್ರ ಪೆರೇಡ್‍ನಲ್ಲಿ ಸ್ತಬ್ಧಚಿತ್ರ ಮೆರವಣಿಗೆ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ. ಅದು ರೊಟೇಷನ್ ಆಧಾರದ ಮೇಲೆ ಬದಲಾಗುವುದರಿಂದ ಸಹಜವಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಲಾಗಿತ್ತು. +ಚುನಾವಣೆಯ ಕಾರಣಕ್ಕೆ ವಿಶೇಷ ಅನುಮತಿ ನೀಡಿದ್ದ ಕೇಂದ್ರ ಸರ್ಕಾರ ಈ ಬಾರಿ ಮತ್ತೆ ರೊಟೇಷನ್ ನೆಪ ಹೇಳಿ ಅನುಮತಿಯನ್ನು ತಳ್ಳಿ ಹಾಕಿದೆ. ವಾಸ್ತವಾಂಶ ಏನೇ ಇದ್ದರೂ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ ನೀಡದೇ ಇರುವುದು ಕನ್ನಡ ವಿರೋ ಧೋರಣೆ ಎಂದು ಬಿಂಬಿಸಲಾಗುತ್ತಿದೆ. ಹಲವಾರು ಸಚಿವರು ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದ್ದಾರೆ. ಅನುದಾನ, ತೆರಿಗೆ ಪಾಲು ಮತ್ತು ಕೇಂದ್ರ ಪುರಸ್ಕøತ ಯೋಜನೆಗಳ ಆರ್ಥಿಕ ನೆರವಿನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ನಿರಪೇಕ್ಷಣಾ ಪತ್ರ ನೀಡುವಲ್ಲಿಯೂ ತಾರತಮ್ಯ ಮಾಡಿ ಕರ್ನಾಟಕದ ವಿಷಯದಲ್ಲಿ ಮಲತಾಯಿ ಧೋರಣೆ ನಡೆಸಲಾಗುತ್ತಿದೆ ಎಂಬ ಟೀಕೆಯನ್ನು ಕಾಂಗ್ರೆಸ್ ಮಾಡುತ್ತಿದೆ. \ No newline at end of file diff --git a/eesanje/url_46_266_5.txt b/eesanje/url_46_266_5.txt new file mode 100644 index 0000000000000000000000000000000000000000..bc5782c87e8e672b33ea548e9911ffc1a9046a3b --- /dev/null +++ b/eesanje/url_46_266_5.txt @@ -0,0 +1,8 @@ +ಲೋಕಸಭೆ ಚುನಾವಣೆ ಕಾರ್ಯತಂತ್ರದ ಬಗ್ಗೆ ಸುರ್ಜೆವಾಲರೊಂದಿಗೆ ಪರಮೇಶ್ವರ್ ಚರ್ಚೆ +ಬೆಂಗಳೂರು,ಜ.9- ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಯಾಗಿ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ಬಳಿ ಕಾಂಗ್ರೆಸ್‍ನ ಹಿರಿಯ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಹಕ್ಕು ಪ್ರತಿಪಾದಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಲೋಕಸಭೆ ಚುನಾವಣೆ ತಯಾರಿಯ ಕುರಿತಂತೆ ಚರ್ಚೆ ನಡೆಸಲು ರಣದೀಪ್ ಸಿಂಗ್ ಸುರ್ಜೆವಾಲ ನಮ್ಮನ್ನು ಆಹ್ವಾನಿಸಿದ್ದು, ಹಿರಿಯ ಸಚಿವರಾಗಿರುವುದರಿಂದ ಸಹಜವಾಗಿ ನಮ್ಮ ಜೊತೆ ಹೈಕಮಾಂಡ್ ಚರ್ಚೆ ನಡೆಸಿದೆ ಎಂದರು. +ಈ ವೇಳೆ ಲೋಕಸಭೆ ಚುನಾವಣೆಗೂ ಮುನ್ನವೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯಾದರೆ ಪಕ್ಷಕ್ಕೆ ಅನುಕೂಲ ವಾಗಲಿದೆ ಎಂದು ಹಕ್ಕು ಪ್ರತಿಪಾದಿಸಲಾಗಿದೆ. ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದರು. ಆದರೆ ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಚಿವರೊಂದಿಗೆ ಪ್ರಮುಖವಾಗಿ ಲೋಕಸಭೆಯ ಚುನಾವಣೆಯ ತಯಾರಿಯ ಬಗ್ಗೆಯೇ ಹೆಚ್ಚು ಚರ್ಚೆಯಾಯಿತು. ವಿಶೇಷವಾಗಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಾಗಿಯೇ ಹೆಚ್ಚು ಚರ್ಚೆ ನಡೆಯಲಿಲ್ಲ. ಸಮಾಲೋಚನೆಯ ನಡುವೆ ಕೆಲವರು ವಿಚಾರವನ್ನು ಪ್ರಸ್ತಾಪಿಸಿದರು ಎಂದು ಹೇಳಿದರು. +ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ +ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂಬು ದರ ಬಗ್ಗೆ ಪ್ರಸ್ತಾಪಿಸಲಾಗಿದೆ. ನನಗೆ ಕೆಪಿಸಿಸಿ ಅಧ್ಯಕ್ಷನಾಗಿ 2 ಬಾರಿ ಲೋಕಸಭೆ ಚುನಾವಣೆ ನಡೆಸಿದ ಅನುಭವ ಇದೆ. ಅದರ ಆಧಾರದ ಮೇಲೆ ಕೆಲ ಸಲಹೆ ನೀಡಿದ್ದೇನೆ ಎಂದರು. ಅನಿವಾರ್ಯ ಸಂದರ್ಭ ಎದುರಾಗಿದ್ದೇ ಆದರೆ ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಬೇಕಾಗುತ್ತದೆ ಎಂದು ಹೈಕಮಾಂಡ್ ಸಂದೇಶ ರವಾನಿಸಿದೆ. ಕಳೆದ ಬಾರಿ ಕೃಷ್ಣಭೈರೇಗೌಡ ಅವರನ್ನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿತ್ತು. ಅದನ್ನು ಉದಾಹರಣೆಯಾಗಿ ಚರ್ಚಿಸಲಾಗಿದ್ದು, ಸಂದರ್ಭ ಬಂದರೆ ಸಚಿವರು ಸ್ರ್ಪಧಿಗಳಾಗಲು ಸಿದ್ಧವಾಗಿರಬೇಕಾಗುತ್ತದೆ ಎಂದು ಹೈಕಮಾಂಡ್ ತಿಳಿಸಿದೆ ಎಂದರು. +ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಈಗಾಗಲೇ ಚರ್ಚೆಗಳಾಗಿವೆ. ಯಾರೆಲ್ಲಾ ಆಕಾಂಕ್ಷಿಗಳಿದ್ದಾರೆ, ಸಮರ್ಥರ್ಯಾರು, ಜಾತಿವಾರು ಲೆಕ್ಕಾಚಾರವೇನು, ಯಾರನ್ನು ಕಣಕ್ಕಿಳಿಸಬೇಕು ಎಂಬ ಮಾಹಿತಿಗಳು ಈಗಾಗಲೇ ಲಭ್ಯವಿದೆ. ಅದರ ಆಧಾರದ ಮೇಲೆ ಮುಂದಿನ ಚರ್ಚೆಗಳು ನಡೆಯಲಿವೆ. ಎರಡು ದಿನ ಬಿಟ್ಟು ಎಲ್ಲಾ ಸಚಿವರೂ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು. +ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತೆ ಪೊಲೀಸ್ ವಶಕ್ಕೆ +ಗಣರಾಜ್ಯೋತ್ಸವ ಸಂದರ್ಭದಲ್ಲಿ ಯಾವ ರೀತಿಯ ಸಂದೇಶ ಸಾರುವ ಸ್ತಬ್ಧ ಚಿತ್ರವನ್ನು ನಿರ್ಮಿಸಬೇಕೆಂಬ ಬಗ್ಗೆ ರಾಜ್ಯಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರ ಯಾಂತ್ರಿಕವಾಗಿ ರವಾನೆ ಮಾಡಿರುವ ಮಾರ್ಗಸೂಚಿಗಳನ್ನು ಪರಿಗಣಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_266_6.txt b/eesanje/url_46_266_6.txt new file mode 100644 index 0000000000000000000000000000000000000000..467c446bb79a7b15568ff00362232ba7afb38374 --- /dev/null +++ b/eesanje/url_46_266_6.txt @@ -0,0 +1,9 @@ +ಅನಗತ್ಯವಾಗಿ ಡಿಸಿಎಂ ಹುದ್ದೆಯ ಚರ್ಚೆಗೆ ಖರ್ಗೆ ಆಕ್ರೋಶ +ಕಲ್ಬುರ್ಗಿ,ಜ.9- ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪದೇಪದೇ ಹೆಚ್ಚುವರಿ ಉಪಮುಖ್ಯಮಂತ್ರಿ ಸೃಷ್ಟಿ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟ್ಟೆಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಸೃಷ್ಟಿಯ ಬಗ್ಗೆ ಈವರೆಗೂ ತಮ್ಮವರೆಗೂ ಯಾವುದೇ ವಿಚಾರಗಳು ಬಂದಿಲ್ಲ. ಇಂತಹ ಯಾವುದೇ ಪ್ರಶ್ನೆಗಳಿಗೆ ಉತ್ತರ ಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರನ್ನು ಕೇಳಿ ಎಂದು ಸಲಹೆ ನೀಡಿದರು. +ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಇಂತಹ ಸಂದರ್ಭದಲ್ಲಿ ಊಹಾಪೂಹಗಳ ಚರ್ಚೆಗೆ ಅವಕಾಶ ನೀಡಬಾರದು. ತಮ್ಮ ಆದ್ಯತೆ ಉತ್ತಮ ಸರ್ಕಾರ ನೀಡುವತ್ತ ಇರಬೇಕು. ಜನರಿಗೆ ಕೊಟ್ಟ ಭರವಸೆಗಳು ಮತ್ತು ಪಂಚಖಾತ್ರಿಗಳನ್ನು ಸಮರ್ಪಕವಾಗಿ ಅನುಷ್ಠಾನ ತರುವುದು ನಮ್ಮ ಗುರಿಯಾಗಿರಬೇಕು. ಜನರ ಸಮಸ್ಯೆಗೆ ಗಮನ ನೀಡಬೇಕು. ಗುರಿ ಮುಟ್ಟುವುದಕ್ಕೆ ಆದ್ಯತೆ ನೀಡಬೇಕು. ಈ ವಿಷಯವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್‍ರವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. +ಮೋದಿ ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಾರೆ :ಮಾಲ್ಡೀವ್ಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಖರ್ಗೆ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲವನ್ನೂ ವೈಯಕ್ತಿವಾಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಲವು ವಿಷಯಗಳಲ್ಲಿ ನೆರೆಹೊರೆಯವರೊಂದಿಗೆ ಸೌಹಾರ್ದಯುತವಾದ ಸಂಬಂಧ ಇಟ್ಟುಕೊಳ್ಳಬೇಕಾಗುತ್ತದೆ. ಒಂದು ವೇಳೆ ಕೆಟ್ಟ ಸಂದರ್ಭ ಬಂದರೆ ನಾವು ಹೋರಾಟ ನಡೆಸಬೇಕು. ಈ ಹಿಂದೆ ಇಂದಿರಾಗಾಂಧಿಯವರು ಪಾಕಿಸ್ತಾನದ ವಿರುದ್ಧ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಪ್ರತ್ಯೇಕಗೊಳಿಸಿದರು. ಆ ರೀತಿ ಸಂದರ್ಭಾನುಸಾರ ನಡೆದುಕೊಳ್ಳಬೇಕಿದೆ ಎಂದರು. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಪ್ರಧಾನ ನರೇಂದ್ರ ಮೋದಿ ಇದ್ದಕ್ಕಿದ್ದಂತೆ ಯಾರನ್ನೋ ಅಪ್ಪಿಕೊಳ್ಳುತ್ತಾರೆ, ಇದ್ದಕ್ಕಿದ್ದಂತೆ ಇನ್ನ್ಯಾರನ್ನೋ ಕೆಟ್ಟವರು ಎಂದು ಬಿಂಬಿಸುತ್ತಾರೆ. ಹಿಂದಿನ ನೀತಿಗಳನ್ನು ಟೀಕೆ ಮಾಡುವುದು, ಜೀವನಪರ್ಯಂತ ನೆಹರೂ ಅವರನ್ನೇ ನಿಂದಿಸುತ್ತಾರೆ ಎಂದು ಹೇಳಿದರು. +ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದತೆ ಅಗತ್ಯ :ನೆರೆಹೊರೆಯ ಸಂಬಂಧ ಉತ್ತಮವಾಗಿರಬೇಕು. ಸಣ್ಣಪುಟ್ಟ ಊರಿನಲ್ಲಾದರೆ ನೆರೆಹೊರೆಯ ಸಂಬಂಧ ಕೆಟ್ಟರೆ ಮನೆ ಖಾಲಿ ಮಾಡಬಹುದು, ಆದರೆ ದೇಶಗಳ ವಿಷಯದಲ್ಲಿ ಈ ರೀತಿ ಸಾಧ್ಯವಿಲ್ಲ. ಗಡಿಯಲ್ಲಿ ನೆರೆಯ ರಾಷ್ಟ್ರಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಉತ್ತಮ ಸಂಬಂಧ ಇಟ್ಟುಕೊಳ್ಳುವುದು ಅನಿವಾರ್ಯ ಎಂದರು. ಅದರ ಮೇಲೆ ನಮ್ಮ ರಾಷ್ಟ್ರಕ್ಕೆ ತೊಂದರೆಯಾದರೆ ಅಥವಾ ಮೈಮೇಲೆ ಬಂದರೆ ನಮ್ಮ ದೇಶದ ಐಕ್ಯತೆ ಹಾಗೂ ಸುರಕ್ಷತೆಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋರಾಟ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಣಯ ಕೈಗೊಂಡಿದೆ. ಅದರ ಬಗ್ಗೆ ಚರ್ಚೆಯನ್ನು ನಡೆಸಿದ್ದೇವೆ. ಸಂಯೋಜಕರನ್ನು ನೇಮಿಸಲಾಗಿದೆ. ಇಂದು ತಾವು ದೆಹಲಿಗೆ ತೆರಳುತ್ತಿದ್ದು, ನಾಳೆ ವಿವಿಧ ರಾಜ್ಯಗಳ ಕಾಂಗ್ರೆಸ್ ಘಟಕಗಳ ಜೊತೆ ಚರ್ಚೆ ನಡೆಸಲಾಗುವುದು. ಈಗಾಗಲೇ ಲೋಕಸಭಾ ಕ್ಷೇತ್ರವಾರು, ಜಿಲ್ಲಾವಾರು ವೀಕ್ಷಕರನ್ನು ಕಾಂಗ್ರೆಸ್‍ನಿಂದ ನೇಮಿಸಲಾಗಿದೆ. ರಾಜ್ಯದಲ್ಲೂ ನಾಳೆ ಚುನಾವಣಾ ತಯಾರಿ ಸಂಬಂಧಪಟ್ಟಂತೆ ಸಭೆ ನಡೆಯಲಿದೆ ಎಂದರು. \ No newline at end of file diff --git a/eesanje/url_46_266_7.txt b/eesanje/url_46_266_7.txt new file mode 100644 index 0000000000000000000000000000000000000000..a08b1c05121029cc2c693287313b5dab34c4e795 --- /dev/null +++ b/eesanje/url_46_266_7.txt @@ -0,0 +1,10 @@ +ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ +ಬೆಂಗಳೂರು,ಜ.9- ರಾಜ್ಯದಲ್ಲಿ ಸಂಭವಿಸಿರುವ ಭೀಕರ ಬರ ನಿರ್ವಹಣೆಗೆ ರಾಜ್ಯಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಬಿಜೆಪಿ ರಾಜ್ಯಪಾಲರಿಗೆ ಮನವಿ ಮಾಡಿದೆ. ಬರ ಪರಿಹಾರಕ್ಕೆ ರಾಜ್ಯಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಬಿಜೆಪಿ ಶಾಸಕರ ನಿಯೋಗ ಆಗ್ರಹಿಸಿದೆ. +ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಕೆ.ಗೋಪಾಲಯ್ಯ ಮುನಿರತ್ನ, ಶಾಸಕ ಮುನಿರಾಜು ಹಾಗೂ ರಘು ಅವರನ್ನೊಳಗೊಂಡ ನಿಯೋಗವು ರಾಜಭವನದಲ್ಲಿಂದು ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಈ ಮನವಿ ಮಾಡಿದೆ. +ತಾವು ಮಧ್ಯಪ್ರವೇಶಿಸಿ, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಬಿಡುಗಡೆ ಮಾಡಲು ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರನ್ನು ಕೋರಿದ್ದಾರೆ. ಹಿಂದಿನ ಸರ್ಕಾರದಲ್ಲಿ ಎಸ್‍ಡಿಆರ್‍ಎಫ್ ಅನುದಾನಕ್ಕಿಂತ 2 ಪಟ್ಟು ಪರಿಹಾರವನ್ನು ನೀಡಲಾಗಿತ್ತು. ಕೇಂದ್ರ ಸರ್ಕಾರದ ಎನ್‍ಡಿಆರ್‍ಎಫ್ ಹಣ ಬಿಡುಗಡೆಗೆ ಕಾಯದೆ ರಾಜ್ಯಸರ್ಕಾರದಿಂದ ರೈತರಿಗೆ ತುರ್ತಾಗಿ ಹಣ ಬಿಡುಗಡೆ ಮಾಡಲಾಗಿತ್ತು. ಅದೇ ರೀತಿ ಈಗಲೂ ಹಣ ಬಿಡುಗಡೆ ಮಾಡಬೇಕು. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರತಿ ರೈತರಿಗೆ 2 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದ ರಾಜ್ಯಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ. ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲದ ಅಸಲು ತೀರಿಸಿದ ರೈತರ ಬಡ್ಡಿ ಮನ್ನಾ ಮಾಡುವುದಾಗಿ ಸರ್ಕಾರ ಘೋಷಿಸಿದೆ. ಇದರ ಬದಲಿಗೆ ರೈತರು ಪಡೆದಿರುವ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲು ಅನುದಾನ ನೀಡಬೇಕು. ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಮನವಿ ಪತ್ರದಲ್ಲಿ ನಿಯೋಗ ಒತ್ತಾಯಿಸಿದೆ. +ಶಾಸಕರ ಅಧ್ಯಕ್ಷತೆಯಲ್ಲಿರುವ ಟಾಸ್ಕ್‍ಫೋರ್ಸ್‍ಗೆ ಪರಮಾಧಿಕಾರ ನೀಡಿ, ಪ್ರತಿ ತಾಲೂಕಿಗೆ ಕನಿಷ್ಠ 5 ಕೋಟಿ ರೂ. ಪರಿಹಾರ ನೀಡಬೇಕು. ಗರ್ಭಿಣಿಯರು, ಬಾಣಂತಿಯರು,ನವಜಾತ ಶಿಶುಗಳ ಪೌಷ್ಠಿಕತೆಗಾಗಿ ಉತ್ತಮ ಪೌಷ್ಠಿಕ ಆಹಾರವನ್ನು ಒದಗಿಸಬೇಕು. ಎನ್‍ಡಿಆರ್‍ಎಫ್ ಮಾರ್ಗಸೂಚಿ ಪ್ರಕಾರ ಬರಗಾಲ ಸಂದರ್ಭದಲ್ಲಿ ಕುಟುಂಬದ ತಲಾ ಇಬ್ಬರಿಗೆ 30 ದಿನದವರೆಗೆ ಆರ್ಥಿಕ ನೆರವು ನೀಡಬೇಕು. ಇದರಿಂದ ಗುಳೆ ಹೋಗುವುದನ್ನು ತಪ್ಪಿಸಬಹುದು. +ಜಾನುವಾರುಗಳಿಗೆ ಬರುವ ಮಾರಣಾಂತಿಕ ಖಾಯಿಲೆಗಳಿಗೆ ಅಗತ್ಯವಿರುವ ಲಸಿಕೆ ನೀಡಬೇಕು ಹಾಗೂ ಮೇವು ಒದಗಿಸಬೇಕು. ಅಗತ್ಯವಿರುವ ಕಡೆಗಳಲ್ಲಿ 2022 ರಲ್ಲಿ ನೀಡಿದ ಮಾದರಿಯಲ್ಲೇ ಬರದಿಂದ ಬರಲಿರುವ ಕುಟುಂಬಗಳಿಗೆ ಆಹಾರ ಕಿಟ್ ನೀಡಬೇಕು. ಅತಿವೃಷ್ಠಿಯಾದ ಸಮಯದಲ್ಲಿ ಹಿಂದಿನ ಸರ್ಕಾರ ರಾಜ್ಯದ ಖಜಾನೆಯಿಂದಲೇ ನೇರವಾಗಿ ನೆರೆಯನ್ನು ನೀಡಿದ ಮಾದರಿಯಲ್ಲೇ ಬರ ಪರಿಹಾರಕ್ಕೆ ವಿಶೇಷ ಅನುದಾನ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ. +ಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 324 ಕೋಟಿ ರೂ. ಹಣವಿದ್ದು, ಇದು ಬರಪೀಡಿತ 224 ತಾಲೂಕುಗಳ ನಿರ್ವಹಣೆಗೆ ಸಾಕಾಗುವುದಿಲ್ಲ. 48.15 ಲಕ್ಷ ಹೆಕ್ಟೇರ್‍ನಲ್ಲಿ ಬೆಳೆ ನಾಶವಾಗಿದ್ದು, ರೈತರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. +ಕಲ್ಬುರ್ಗಿ, ಬೀದರ್, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ವತಿಯಿಂದ ಬರ ಅಧ್ಯಯನ ನಡೆಸಲಾಗಿದ್ದು, ರೈತರ ಪರಿಸ್ಥಿತಿ ಸಂಕಷ್ಟಮಯವಾಗಿದೆ ಎಂದು ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_46_266_8.txt b/eesanje/url_46_266_8.txt new file mode 100644 index 0000000000000000000000000000000000000000..1acd1afb97a1fc975d31ae8fea64055a9c703741 --- /dev/null +++ b/eesanje/url_46_266_8.txt @@ -0,0 +1,7 @@ +ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ +ಬೆಂಗಳೂರು, ಜ.9- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಅಕ್ರಮ ಸಂಪತ್ತು ಪತ್ತೆ ಮಾಡಿದ್ದಾರೆ. ಭ್ರಷ್ಟಾಚಾರ ದೂರು ಪರಿಶೀಲಿಸಿ ಈ ದಾಳಿ ನಡೆಸಲಾಗಿದ್ದು, ಅಪಾರ ಪ್ರಮಾಣದ ಅಕ್ರಮವಾಗಿ ಸಂಪಾದಿಸಿದ ಚರಾ ಮತ್ತು ಸ್ಥಿರಾಸ್ತಿಗಳನ್ನು ಬಹಿರಂಗ ಪಡಿಸಿದ್ದಾರೆ. +ಬೆಂಗಳೂರು, ರಾಮನಗರ, ಬಳ್ಳಾರಿ, ವಿಜಯನಗರ, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳ್ಳಾರಿಯ ಜಿಲ್ಲೆಯ ಕುಂದೋಣ ಗ್ರಾಮ ಪಂಚಾಯಿತಿಯ ಪಿಡಿಒ ಪದ್ಮನಾಭ ಅವರಿಗೆ ಸೇರಿದ ತುಮಕೂರು, ದಾಬಾಸ್‍ಪೇಟೆಗಳಲ್ಲಿರುವ ಮನೆ ಹಾಗೂ ಕೆಲಸ ಮಾಡುವ ಕಚೇರಿಯಲ್ಲಿ ಶೋಧ ಕಾರ್ಯ ನಡೆದಿದೆ. ಈ ವೇಳೆ ನಿವಾಸದಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣಗಳು, ಕಂತೆ ಕಂತೆ ನೋಟು ಪತ್ತೆಯಾಗಿದೆ. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಅವರ ಕೂಡ್ಲಿಗಿ ಪಟ್ಟಣದ ಮನೆ, ಗುಡೇಕೋಟೆ ಗ್ರಾಮದಲ್ಲಿರುವ ತೋಟದ ಮನೆ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ. ಇವರು ಪೆಟ್ರೋಲ್ ಬಂಕ್ ಹಾಗೂ ಹಲವೆಡೆ ನಿವೇಶನ, ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ. ಈ ಅಧಿಕಾರಿ ಇತ್ತೀಚೆಗೆ ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದರು. +ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ವಿಭಾಗದ ಜಂಟಿ ನಿರ್ದೇಶಕ ಡಿ.ಮಂಜೇಶ್ ಅವರ ನಿವಾಸ, ಅವರ ಸ್ವಂತ ಊರಾದ ಮಂಡ್ಯ ಸೇರಿದಂತೆ ವಿವಿದೆಡೆ ದಾಳಿ ನಡೆಸಲಾಗಿದೆ. ಮದ್ದೂರಿನ ಎಸ್‍ಐ ಕೋಡಿಹಳ್ಳಿಯಲ್ಲಿರುವ ಅಜ್ಜಿ ಮನೆ ಹಾಗೂ ಸಂಬಂ„ಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. +ಇದಲ್ಲದೆ, ಹಲಗೂರು ಗ್ರಾಮ ಪಂಚಾಯಿತಿ ಸದಸ್ಯ ಸುರೇಂದ್ರ ಅವರ ಮನೆಯಲ್ಲೂ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸಯ್ಯದ್ ಮುನೀರ್ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ಇದಲ್ಲದೆ, ಪಿಡಬ್ಲ್ಯೂಡಿ ಸೂಪರಿಂಡೆಂಟ್ ಎಂಜಿನಿಯರ್ ಸತೀಶ್‍ಬಾಬು ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಎಸ್‍ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಇಲ್ಲಿ ಬೆಲೆಬಾಳುವ ವಾಚ್‍ಗಳು, ಐಷಾರಾಮಿ ವಸ್ತುಗಳು, ಚಿನ್ನಾಭರಣ ಪತ್ತೆಯಾಗಿದೆ. \ No newline at end of file diff --git a/eesanje/url_46_266_9.txt b/eesanje/url_46_266_9.txt new file mode 100644 index 0000000000000000000000000000000000000000..00fd4a17a6c7522cf0233584ad237eb40af0c95a --- /dev/null +++ b/eesanje/url_46_266_9.txt @@ -0,0 +1,8 @@ +ಫೆಡೆಕ್ಸ್ ಹೆಸರಿನಲ್ಲಿ ಕೊರಿಯರ್ ಎಂದು ಹೇಳಿ ವಂಚಿಸಿದ್ದ 14 ಮಂದಿ ವಂಚಕರ ಬಂಧನ +ಬೆಂಗಳೂರು,ಜ.9- ಫೆಡೆಕ್ಸ್ ಹೆಸರಿನಿಂದ ಕೊರಿಯರ್ ಬಂದಿದೆ ಎಂದು ಸಾರ್ವಜನಿಕರಿಗೆ ಕರೆ ಮಾಡಿ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ಹೆದರಿಸಿ ತಮ್ಮ ಖಾತೆಗಳಿಗೆ ಲಕ್ಷಾಂತರ ಹಣವನ್ನು ಆನ್‍ಲೈನ್ ಮುಖಾಂತರ ಹಾಕಿಸಿಕೊಳ್ಳುತ್ತಿದ್ದ 14 ಮಂದಿ ವಂಚಕರನ್ನು ವಿಶೇಷ ತಂಡದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಂಚಕರಿಂದ 25.47 ಲಕ್ಷ ಹಣವನ್ನು ಬ್ಯಾಂಕ್ ಖಾತೆಗಳನ್ನು ಫೀಜ್ ಮಾಡಿಸಿ ಮೊಬೈಲ್ ಹಾಗೂ ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಂಡಿದ್ದು, ಈ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. +ಈ ವಂಚಕರು ಸಾರ್ವಜನಿಕರಿಗೆ ಫೆಡೆಕ್ಸ್ ಹೆಸರಿನ ಮೂಲಕ ತಮಗೆ ಕೊರಿಯರ್ ಬಂದಿದೆ ಎಂದು ನಂಬಿಸಿ ಐವಿಆರ್‍ನಿಂದ ಕರೆ ಮಾಡಿ ನಿಮ್ಮ ಕೊರಿಯರ್ ಮುಂಬೈನಿಂದ ತೈವಾನ್‍ಗೆ ವರ್ಗಾವಣೆಯಾಗುತ್ತಿದೆ. ಅದರಲ್ಲಿ ನಿಮ್ಮ ಹೆಸರು ಮತ್ತು ಆಧಾರ್ ಕಾರ್ಡ್‍ನ್ನು ಉಪಯೋಗಿಸಿ ಅಕ್ರಮವಾಗಿ ಮಾದಕ ವಸ್ತು ಹಾಗೂ ಮನಿ ಲಾಂಡ್ರಿಂಗ್ ಪ್ರಕರಣಗಳಲ್ಲಿ ಬಳಕೆಯಾಗುತ್ತಿದೆ ಎಂದು ಬೆದರಿಸಿದ್ದಾರೆ. +ನಂತರ ನಿಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿ ನೀವು ಈ ಕೂಡಲೇ ಮುಂಬೈ ಕ್ರೈಂಬ್ರಾಂಚ್‍ಗೆ ತನಿಖೆಗೆ ಖುದ್ದು ಬರಬೇಕಾಗುತ್ತದೆ ಅಥವಾ ವಿಡಿಯೋ ಕಾಲ್ ಮುಖಾಂತರ ತನಿಖೆಗೆ ಸಹಕರಿಸಬೇಕು ಇಲ್ಲವಾದಲ್ಲಿ ನಿಮ್ಮನ್ನು ತಕ್ಷಣ ಬಂಧಿಸಲಾಗುವುದು ಎಂದು ವಂಚಕರು ತಿಳಿಸಿದ್ದಾರೆ. +ಕರೆ ಮಾಡುವ ವ್ಯಕ್ತಿಯು ತಾನು ಪೊಲೀಸ್ ಇಲಾಖೆ, ಎನ್‍ಸಿಬಿ, ಸಿಬಿಐ, ಇಡಿ ಹಾಗೂ ಆರ್‍ಬಿಐ ಸಂಸ್ಥೆಗಳ ಹೆಸರುಗಳನ್ನು ತಿಳಿಸಿ ಸಾರ್ವಜನಿಕರನ್ನು ಭಯಭೀತರನ್ನಾಗಿಸುತ್ತಿದ್ದರು. ನಂತರ ಇದೇ ವಿಚಾರವಾಗಿ ಸಾರ್ವಜನಿಕರ ಬ್ಯಾಂಕ್ ಖಾತೆಗಳಿಂದ ಲಕ್ಷಾಂತರ ಹಣವನ್ನು ಆನ್‍ಲೈನ್ ಮುಖಾಂತರ ಅವರುಗಳ ಬ್ಯಾಂಕ್ ಖಾತೆಗಳಿಗೆ ಹಣವನ್ನು ಹಾಕಿಸಿಕೊಳ್ಳುತ್ತಿದ್ದರು. +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಈ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದವು. ಈ ರೀತಿ ಮೋಸ ಮಾಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲು ಬೆಂಗಳೂರು ನಗರದ ಪೊಲೀಸ್ ಆಯುಕ್ತರ ಮಾರ್ಗದರ್ಶನದ ಮೇರೆಗೆ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡದ ಉಸ್ತುವಾರಿಯನ್ನು ಸಂಚಾರ ಪೂರ್ವ ವಿಭಾಗ(ಸಂಚಾರ)ದ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಅವರನ್ನೊಳಗೊಂಡ ಅಕಾರಿಗಳು ಮತ್ತು ಸಿಬ್ಬಂದಿ ತನಿಖೆ ಕೈಗೊಂಡು ವಂಚಕರ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ಕೇರಳ ರಾಜ್ಯದ ಮಲ್ಲಪುರಂ ಮತ್ತು ಕೋಜಿಕೋಡ್, ಗುಜರಾತ್ ರಾಜ್ಯದ ರಾಜ್‍ಕೋಟ್ ಮತ್ತು ಅಹಮದಾಬಾದ್ ಹಾಗೂ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ 14 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. +ಈ ತಂಡವು ಭಾರತ ಸರ್ಕಾರದ ಎನ್‍ಸಿಆರ್‍ಪಿ ತುರ್ತು ಸೇವೆಯ ನಂಬರ್ 1930 ಪೋರ್ಟಲ್ ರಿಜಿಸ್ಟರ್‍ನಲ್ಲಿ ದೇಶಾದ್ಯಂತ ದಾಖಲಾಗಿರುವ ಒಟ್ಟು 546 ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ. ವಶಕ್ಕೆ ಪಡೆದ 14 ಮಂದಿ ವಂಚಕರಿಂದ ನಗರದ ಆರು ಪ್ರಕರಣಗಳು ಪತ್ತೆಯಾಗಿರುತ್ತವೆ. \ No newline at end of file diff --git a/eesanje/url_46_267_1.txt b/eesanje/url_46_267_1.txt new file mode 100644 index 0000000000000000000000000000000000000000..99048942e29ea0e87f84f8616b0c42316a902196 --- /dev/null +++ b/eesanje/url_46_267_1.txt @@ -0,0 +1,11 @@ +ಲೋಕಸಭೆ ಚುನಾವಣೆ : 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ +ಬೆಂಗಳೂರು,ಜ.9- ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಎಚ್ಚೆತ್ತುಕೊಂಡಿರುವ ಬಿಜೆಪಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಿಂಗಳ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಮುಂದಾಗಿದೆ. +ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೆ ಹಾಲಿ ಸದಸ್ಯರೂ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯನ್ನು ಕಳುಹಿಸಿಕೊಡುವಂತೆ ಬಿಜೆಪಿ ಕೇಂದ್ರಚುನಾವಣಾ ಸಮಿತಿ ರಾಜ್ಯ ಘಟಕಕ್ಕೆ ಸೂಚನೆ ಕೊಟ್ಟಿದೆ. ಹೀಗಾಗಿ ಈ ತಿಂಗಳ ಅಂತ್ಯಕ್ಕೆ ದೆಹಲಿಗೆ ಸಂಭವನೀಯ ಪಟ್ಟಿ ರವಾನೆಯಾಗಲಿದೆ ಎಂದು ತಿಳಿದುಬಂದಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳನ್ನು ಗೆದ್ದಿದ್ದ ಬಿಜೆಪಿ, ಈ ಬಾರಿಯ ಚುನಾವಣೆಯಲ್ಲಿ ಕೆಲವು ಸದಸ್ಯರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯಿದೆ. +ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ವಯಸ್ಸಿನ ಕಾರಣದಿಂದ ಕೆಲವು ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕಾಗಿರುವುದರಿಂದ ಒಂದೊಂದು ಕ್ಷೇತ್ರಕ್ಕೆ 5 ಕ್ಕೂ ಹೆಚ್ಚು ಸಂಭವನೀಯರ ಪಟ್ಟಿಯನ್ನು ಕಳುಹಿಸುವ ನಿರೀಕ್ಷೆಯಿದೆ. +ಚಿಕ್ಕಬಳ್ಳಾಪುರದಲ್ಲಿ ಹಾಲಿ ಸಂಸದ ಬಿ.ಎನ್.ಬಚ್ಚೇಗೌಡ ಈ ಬಾರಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಈ ಕ್ಷೇತ್ರಕ್ಕೆ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಹುಡುಕಬೇಕಾಗಿದೆ. ಮಾಜಿ ಸಚಿವ ಡಾ.ಕೆ.ಸುಧಾಕರ್, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟರೂ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದಲೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. +ತುಮಕೂರಿನಲ್ಲಿ ಹಾಲಿ ಸಂಸದ ಬಸವರಾಜು ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಮಾಜಿ ಸಚಿವ ವಿ.ಸೋಮಣ್ಣ, ಮಾಜಿ ಸಂಸದ ಮುದ್ದಹನುಮೇಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಕ್ಷೇತ್ರದಿಂದಲೂ ಬಿಜೆಪಿ ಹೊಸಬರನ್ನೇ ಕಣಕ್ಕಿಳಿಸುವ ಅನಿವಾರ್ಯತೆಯಿದೆ. ಬಳ್ಳಾರಿಯಲ್ಲೂ ಹಾಲಿ ಸಂಸದ ದೇವೇಂದ್ರಪ್ಪ, ದಾವಣಗೆರೆಯ ಜಿ.ಎಂ.ಸಿದ್ದೇಶ್ವರ್, ಹಾವೇರಿಯ ಶಿವಕುಮಾರ್ ಉದಾಸಿ, ಬೆಳಗಾವಿಯ ಮಂಗಳ ಅಂಗಡಿ, ಚಾಮರಾಜನಗರದಿಂದ ವಿ.ಶ್ರೀನಿವಾಸ ಪ್ರಸಾದ್ ಸ್ರ್ಪಧಿಸುವುದಿಲ್ಲ ಎಂದು ಹೇಳಿರುವುದರಿಂದ ಸುಮಾರು 8 ರಿಂದ 10 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ. +ಉತ್ತರಾಖಂಡ್‍ನಲ್ಲಿ ಕ್ಲೋರಿನ್ ಸೋರಿಕೆ, ಸ್ಥಳಕ್ಕೆ ದೌಡಾಯಿಸಿದ ಎನ್‌ಡಿಆರ್‌ಎಫ್ +ಬೆಂಗಳೂರು ಉತ್ತರದಿಂದ ಡಿ.ವಿ.ಸದಾನಂದಗೌಡ ಈ ಮೊದಲು ಸ್ರ್ಪಸುವುದಿಲ್ಲ ಎಂದು ಹೇಳಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕೊನೆ ಕ್ಷಣದವರೆಗೂ ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಬೆಂಗಳೂರು ಸೆಂಟ್ರಲ್‍ನಿಂದ ಹಾಲಿ ಸಂಸದ ಪಿ.ಸಿ.ಮೋಹನ್‍ಗೆ ಟಿಕೆಟ್ ಕೊಡುವ ಬಗ್ಗೆ ಪಕ್ಷದಲ್ಲೇ ವಿರೋಧವಿದೆ. ಆದರೆ ಈಗ ಬಿಜೆಪಿ ಸಂಪೂರ್ಣವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿಯಂತ್ರಣಕ್ಕೆ ಬಂದಿರುವುದರಿಂದ ಮತ್ತೊಮ್ಮೆ ಅವರಿಗೆ ಟಿಕೆಟ್ ಸಿಕ್ಕರೂ ಅಚ್ಚರಿಯಿಲ್ಲ. +ಮಂಗಳೂರು ಕ್ಷೇತ್ರದಿಂದ ನಳಿನ್‍ಕುಮಾರ್ ಕಟೀಲ್‍ಗೂ ಟಿಕೆಟ್ ಕೈತಪ್ಪುವ ಸಾಧ್ಯತೆಗಳೇ ಹೆಚ್ಚಾಗಿವೆ. ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಸಂಘ ಪರಿವಾರದ ಅರುಣ್ ಕುಮಾರ್ ಪುತ್ತಿಲ ಹೆಸರುಗಳು ಚಾಲ್ತಿಯಲ್ಲಿವೆ. ಹಾಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ, ಚಿಕ್ಕಮಗಳೂರು ಕ್ಷೇತ್ರವನ್ನು ಬದಲಾಯಿಸಲಿದ್ದಾರೆ ಎಂಬ ವದಂತಿ ಹಬ್ಬಿದೆ. +ಉತ್ತರ ಕನ್ನಡದಿಂದ ಅನಂತಕುಮಾರ್ ಹೆಗ್ಡೆಗೆ ಟಿಕೆಟ್ ಕೊಡುವ ಬಗ್ಗೆಯೂ ಭಾರೀ ವಿರೋಧವಿದೆ. ಹಿಂದೂ ಫೈಯರ್ ಬ್ರಾಂಡ್ ಎಂದೇ ಗುರುತಿಸಿಕೊಂಡಿರುವ ಅವರಿಗೆ ಟಿಕೆಟ್ ನಿರಾಕರಿಸಿದರೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕವೂ ಇದೆ. ಬಾಗಲಕೋಟೆಯಿಂದ ಗದ್ದಿಗೌಡರ್, ನನಗೆ ಟಿಕೆಟ್ ಬೇಡ ಎಂದು ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ. ಹೀಗೆ ಹಲವು ಕ್ಷೇತ್ರಗಳಲ್ಲಿ ಒಂದಿಲ್ಲೊಂದು ಕಾರಣಗಳಿಂದ ಸ್ಪರ್ಧೆಗೆ ಹಿಂದೇಟು ಹಾಕಿದ್ದಾರೆ. ಹೀಗಾಗಿ ಹೊಸ ಮುಖಗಳನ್ನು ಕಣಕ್ಕಿಳಿಸುವ ಅನಿವಾರ್ಯತೆ ಬಿಜೆಪಿಗಿದೆ. +ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಎದುರಿಸುತ್ತಿರುವ ಮೊದಲ ಮಹಾ ಚುನಾವಣೆ ಇದಾಗಿರುವುದರಿಂದ 18 ರಿಂದ 20 ಕ್ಷೇತ್ರಗಳನ್ನು ಗೆದ್ದು ಅದರ ಶ್ರೇಯಸ್ಸನ್ನು ಬಿ.ವೈ.ವಿ ತಲೆಗೆ ಕಟ್ಟಲು ಪಕ್ಷದೊಳಗಿನ ಒಂದು ಬಣ ಸಜ್ಜಾಗಿದೆ. \ No newline at end of file diff --git a/eesanje/url_46_267_10.txt b/eesanje/url_46_267_10.txt new file mode 100644 index 0000000000000000000000000000000000000000..6db4fd36dd832e1791550e18f9e7c30a9a46aaff --- /dev/null +++ b/eesanje/url_46_267_10.txt @@ -0,0 +1,8 @@ +ಬೆಂಗಳೂರಿನಿಂದ ಅಯೋಧ್ಯೆಗೆ ವಿಶೇಷ ರೈಲುಗಳ ವ್ಯವಸ್ಥೆ +ಬೆಂಗಳೂರು,ಜ.8- ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೇಶದ ವಿವಿಧೆಡೆಯಿಂದ ವಿಶೇಷ ರೈಲುಗಳನ್ನು ಬಿಡಲಾಗಿದೆ. ಅದೇ ರೀತಿ ಕರ್ನಾಟಕ ರಾಜಧಾನಿ ಬೆಂಗಳೂರಿನಿಂದಲೂ ಸಹ ವಿಶೇಷ ರೈಲುಗಳನ್ನು ಬಿಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. +ಜನವರಿ 22ರಂದು ಉದ್ಘಾಟನೆ ಆಗುತ್ತಿರುವ ಅಯೋಧ್ಯೆ ಶ್ರೀರಾಮ ಮಂದಿರದ ಕಾರ್ಯಕ್ರಮದಲ್ಲಿ ಜನರು ಭಾಗವಹಿಸಲು ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿ ನಿಂದಲೂ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಬೆಂಗಳೂರು ಮತ್ತು ಅಯೋಧ್ಯೆ ಜಂಕ್ಷನ್ ನಡುವೆ ಹಲವಾರು ರೈಲುಗಳು ಸಂಚರಿಸುತ್ತವೆ. ಇದರಲ್ಲಿ ಹೆಚ್ಚಿನ ರೈಲು ಯಶವಂತಪುರ ಜಂಕ್ಷನ್‍ನಿಂದ ಅಯೋಧ್ಯೆಗೆ ಹೊರಡುತ್ತದೆ. +ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ +ಇದು ಭಾರತೀಯ ರೈಲ್ವೇ ಜಾಲದಲ್ಲಿ ಅತ್ಯಂತ ಜನನಿಬಿಡ ರೈಲು ಮಾರ್ಗಗಳಲ್ಲಿ ಒಂದಾಗಿದೆ. ಬೆಂಗಳೂರಿನಿಂದ ಅಯೋಧ್ಯೆಗೆ ತಡೆರಹಿತ ಪ್ರಯಾಣ ನಡೆಸಲು ಮುಂಚಿತವಾಗಿ ರೈಲ್ವೇ ಟಿಕೆಟ್ ಬುಕ್ ಮಾಡಬಹುದಾಗಿದೆ. ಪ್ರಯಾಣಿಕರು ಆಫ್‍ಲೈನ್ ಮತ್ತು ಆನ್‍ಲೈನ್ ಮೂಲಕ ಬೆಂಗಳೂರಿನಿಂದ ಅಯೋಧ್ಯೆಗೆ ರೈಲು ಟಿಕೆಟ್‍ಗಳನ್ನು ಬುಕ್ ಮಾಡಬಹುದಾಗಿದೆ. +ಭಾರತೀಯ ರೈಲ್ವೇಯ ಐಆರ್‍ಸಿಟಿಸಿ ವೆಬ್‍ಸೈಟ್ ಮೂಲಕ ಆನ್‍ಲೈನ್ ಬುಕಿಂಗ್ ಮಾಡಬಹುದು, ಅಲ್ಲಿ ಪ್ರಯಾಣಿಕರು ಆಸನ ಲಭ್ಯತೆಯನ್ನು ಪರಿಶೀಲಿಸಿ ಅನುಕೂಲಕರವಾದ ಟಿಕೆಟ್‍ಗಳನ್ನು ಬುಕ್ ಮಾಡಬಹುದು. ಐಆರ್‍ಸಿಟಿಸಿ ಅಧಿಕೃತ ರೈಲ್‍ಮಿತ್ರದ ಸಹಯೋಗದೊಂದಿಗೆ 450ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ಇ-ಕೇಟರಿಂಗ್ ಸೇವೆಗಳನ್ನು ಒದಗಿಸಲಾಗಿದೆ. +ಇದರಲ್ಲಿ ಪ್ರಯಾಣಿಕರು ತಮ್ಮ ರೈಲು ಪ್ರಯಾಣದ ಸಮಯದಲ್ಲಿ ರೆಸ್ಟೋರೆಂಟ್‍ನ ಬಿಸಿ ಬಿಸಿ ಆಹಾರವನ್ನು ಸವಿಯಬಹುದಾಗಿದೆ. ರೈಲು ಸಂಖ್ಯೆ 15024 ಯಶವಂತಪುರ-ಗೋರಖ್‍ಪುರ ನಡುವೆ ಸಂಚರಿಸುವ ಎಕ್ಸ್‍ಪ್ರೆಸ್ ರೈಲು ಬೆಂಗಳೂರಿನ ಯಶವಂತಪುರದಿಂದ ರಾತ್ರಿ 11:40ಕ್ಕೆ ಹೊರಟು ಮರುದಿನ ಸಂಜೆ 04:26ಕ್ಕೆ ಅಯೋಧ್ಯೆ ತಲುಪಲಿದೆ. ರೈಲು ಸಂಖ್ಯೆ 22534 ಯಶವಂತಪುರ ಗೋರಖ್‍ಪುರ ನಡುವೆ ಎಕ್ಸ್‍ಪ್ರೆಸ್ ಈ ರೈಲು ಬೆಂಗಳೂರಿನ ಯಶವಂತಪುರದಿಂದ ರಾತ್ರಿ 11:40ಕ್ಕೆ ಹೊರಟು ಮರುದಿನ ಸಂಜೆ 03:50ಕ್ಕೆ ನಿಗೋರಖ್‍ಪುರವನ್ನು ತಲುಪುತ್ತದೆ. +ರೈಲು ಸಂಖ್ಯೆ 12592 ಯಶವಂತಪುರ ಗೋರಖ್‍ಪುರ ನಡುವೆ ಎಕ್ಸ್‍ಪ್ರೆಸ್ ರೈಲು ಬೆಂಗಳೂರಿನ ಯಶವಂತಪುರದಿಂದ ಸಂಜೆ 05:20ಕ್ಕೆ ಹೊರಟು ಮರುದಿನ ಸಂಜೆ 01:17ಕ್ಕೆ ನಿಗದಿತ ಸ್ಥಳವನ್ನು ತಲುಪುತ್ತದೆ. ಅಯೋಧ್ಯೆಗೆ ಸಾಮಾನ್ಯ ಟಿಕೆಟ್ ದರ ಬೆಲೆ 840.99 ರೂ. ಆಗಿದೆ. ಪ್ರಥಮ ದರ್ಜೆ ಟಿಕೆಟ್ ದರ 2,183.79 ರೂ. ಆಗಿದ್ದು, ಅಯೋಧ್ಯೆಗೆ ಮೊದಲ ರೈಲು ಬೆಳಗ್ಗೆ 3:10 ಆಗಿದ್ದು, ಕೊನೆಯ ರೈಲು ರಾತ್ರಿ 11:40ಕ್ಕೆ ಹೊರಡಲಿದೆ. \ No newline at end of file diff --git a/eesanje/url_46_267_11.txt b/eesanje/url_46_267_11.txt new file mode 100644 index 0000000000000000000000000000000000000000..b2ed3a76a3f88a27a22982d9f6b625ea7462b071 --- /dev/null +++ b/eesanje/url_46_267_11.txt @@ -0,0 +1,12 @@ +ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳ ಸಾವು +ಗದಗ,ಜ.8- ರಾಕಿಂಗ್ ಸ್ಟಾರ್ ಯಶ್ ಕಟೌಟ್ ಕಟ್ಟುತ್ತಿದ್ದಾಗ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಮೂವರು ಅಭಿಮಾನಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಯಶ್ ಹುಟ್ಟಹಬ್ಬದ ನಿಮಿತ್ತ ಅವರ ಅಭಿಮಾನಿಗಳು ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿಯಲ್ಲಿ 25 ಅಡಿ ಕಟೌಟ್ ಕಟ್ಟಲು ಮುಂದಾಗುತ್ತಿದ್ದಾಗ ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಸೂರಣಗಿಯ ನಿವಾಸಿಗಳಾದ ಹನುಮಂತ(21), ಮುರುಳಿ(20) ಮತ್ತು ನವೀನ್(21) ಮೃತ ದುರ್ದೈವಿಗಳು. ಘಟನೆಯಲ್ಲಿ ಇತರ ಮೂವರು ಅಭಿಮಾನಿಗಳಿಗೂ ತೀವ್ರವಾಗಿ ಗಾಯಗಳಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. +ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ +ಘಟನೆ ವಿವರ:ಯಶ್ ಅವರ ಹುಟ್ಟುಹಬ್ಬದ ಅಂಗವಾಗಿ ಈ ಗ್ರಾಮದಲ್ಲಿ ಪ್ರತಿ ವರ್ಷದಂತೆ ಬೃಹತ್ ಕಟೌಟ್ ನಿರ್ಮಿಸಿ ಸೂರಣಗಿಯ ಯುವಕರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿ ಮನೆ ಮನೆಗೆ ಕೇಕ್ ಹಂಚುತ್ತಿದ್ದರಂತೆ. ಜ.8ರಂದು ಯಶ್ ಹುಟ್ಟುಹಬ್ಬ ಇದುದ್ದರಿಂದ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಸೂರಣಗಿ ಗ್ರಾಮದ 8 ಅಭಿಮಾನಿಗಳು ನೀಲಗಿರಿ ತೋಪಿನ ಬಳಿ ಹೋಗಿ ಕಬ್ಬಿಣದ ರಾಡು, ಹಸಿಮರ ಬಳಸಿ 25 ಅಡಿ ಎತ್ತರದ ಕಟೌಟ್ ನಿರ್ಮಿಸಿದ್ದರು. ನಂತರ ಅದನ್ನು ಕಟ್ಟಲು ಮೇಲೆತ್ತುತ್ತಿದ್ದಂತೆ ಸ್ಥಳದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. +ಇವರ ಜೊತೆಯಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸುದ್ದಿ ತಿಳಿದು ಲಕ್ಷ್ಮೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್‍ಪಿ ನ್ಯಾಮೇಗೌಡ ಅವರು, ರಾತ್ರಿ ವೇಳೆಯಾದ್ದರಿಂದ ವಿದ್ಯುತ್ ತಂತಿ ಇರುವುದು ಯುವಕರ ಗಮನಕ್ಕೆ ಬಾರದಿರುವುದೇ ಈ ಘೋರ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. +ಮುಗಿಲು ಮುಟ್ಟಿದ ಆಕ್ರಂದನ:ಯಶ್ ಹುಟ್ಟುಹಬ್ಬಕ್ಕೆ ಕಟೌಟ್ ಕಟ್ಟಲು ಹೋಗಿದ್ದ ಯುವಕರ ಪೈಕಿ ಮೂವರು ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿದು ಸೂರಣಗಿ ಗ್ರಾಮಸ್ಥರೆಲ್ಲರೂ ಆಸ್ಪತ್ರೆ ಮುಂದೆ ಜಮಾಯಿಸಿ ರೋಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಯುವಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಯಿತು. +ದೀದಿ ಟೀಕಿಸಿದ್ದ ಮಾಳವಿಯಾ ವಿರುದ್ಧ ದೂರು ದಾಖಲು +ಕಣ್ಣೀರಕೋಡಿಯಲ್ಲಿ ಮುಳುಗಿದ ಗ್ರಾಮ:ಈ ಘನಘೋರ ದುರಂತಕ್ಕೆ ಊರಿಗೆ ಊರೇ ಮೌನವಾಗಿದೆ. ಇಡೀ ಸೂರಣಗಿ ಗ್ರಾಮ ಕಣ್ಣೀರಕೋಡಿಯಲ್ಲಿ ಮುಳುಗಿದೆ. +ಸಾಮೂಹಿಕ ಅಂತ್ಯ ಸಂಸ್ಕಾರ:ಇಂದು ಬೆಳಗ್ಗೆ ಸಾಮೂಹಿಕವಾಗಿ ಮೂವರು ಯುವಕರ ಅಂತ್ಯ ಸಂಸ್ಕಾರವನ್ನು ಗ್ರಾಮದಲ್ಲಿ ನೆರವೇರಿಸಲಾಯಿತು. +ಪರಿಹಾರಕ್ಕೆ ಸಿಎಂ ಜೊತೆ ಚರ್ಚೆ:ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ವಿದ್ಯುತ್ ಶಾಕ್‍ನಿಂದ ಮೂವರು ಯುವಕರು ಮೃತಪಟ್ಟಿರುವ ಬಗ್ಗೆ ಜಿಲ್ಲಾಕಾರಿ ಹಾಗೂ ಎಸ್.ಪಿ ಅವರಿಂದ ಮಾಹಿತಿ ಪಡೆದುಕೊಂಡಿದ್ದು, ಆ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. +ಗದಗಕ್ಕೆ ಭೇಟಿ ನೀಡಿದಾಗ ಮೃತ ಯುವಕರ ಮನೆಗಳಿಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳುವುದಾಗಿ ಸಚಿವರು ತಿಳಿಸಿದ್ದಾರೆ. \ No newline at end of file diff --git a/eesanje/url_46_267_12.txt b/eesanje/url_46_267_12.txt new file mode 100644 index 0000000000000000000000000000000000000000..a2cd37b14cadecd438b60f764e39b39d3c6cf5b7 --- /dev/null +++ b/eesanje/url_46_267_12.txt @@ -0,0 +1,12 @@ +ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ ಸೇರಿ 10 ಕಡೆ ಇಡಿ ದಾಳಿ +ಬೆಂಗಳೂರು,ಜ.8- ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ನಡೆದ ನೇಮಕಾತಿ ಆಕ್ರಮ ಪ್ರಕರಣ ಸಂಬಂಧ ಮಾಲೂರು ಶಾಸಕ ಹಾಗೂ ಕೊಚಿಮಲ್ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರ ನಿವಾಸದ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. +ಮಾಲೂರಿನ ಕೊಮ್ಮನಹಳ್ಳಿಯಲ್ಲಿರುವ ಇವರ ಮನೆ, ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್ ಕಚೇರಿ ಮತ್ತು ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್ ಕಚೇರಿಯಲ್ಲಿ ಪರಿಶೀಲನೆ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. +ಕೆ.ವೈ.ನಂಜೇಗೌಡ ಅವರ ಬೆಂಗಳೂರು ನಿವಾಸ, ಮಾಲೂರು ಕೋಚಿಮುಲ್ ಕಚೇರಿ ಸೇರಿದಂತೆ ಒಟ್ಟು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಲಾಗಿದ್ದು, ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. +ನಂಜೇಗೌಡ ಅವರ ಆಪ್ತ ಸಹಾಯಕ ಹರೀಶ್, ಕೋಚಿಮುಲ್ ಹಾಲು ಒಕ್ಕೂಟದ ಎಂ.ಡಿ.ಗೋಪಾಲಮೂರ್ತಿ, ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಸೇರಿ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. +ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ +ನೇಮಕಾತಿ ಅವ್ಯವಹಾರದ ಸದ್ದು:ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಸದ್ದು ಮಾಡಿತ್ತು. ನೇಮಕಾತಿ ವೇಳೆ ಲಕ್ಷಾಂತರ ರೂ. ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಮತ್ತೊಂದು ಶಿಫಾರಸ್ಸು ಆಧಾರದ ಮೇಲೆ ನೇಮಕಾತಿ ಹಗರಣ ನಡೆದಿರುವ ವಾಸನೆ ಬರುತ್ತಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪಟ್ಟಿಯೊಂದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. +ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಖಾಲಿಯಿರುವ 81 ಹುದ್ದೆಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು, ಇದಾದ ನಂತರ ಲಿಖಿತ ಪರೀಕ್ಷೆ ಸಹ ನಡೆದಿದ್ದು, ಇನ್ನೇನು ಸಂದರ್ಶನ ಮುಗಿದಿದ್ದು ಅಂತಿಮ ಪಟ್ಟಿ ಇನ್ನೆರೆಡು ದಿನಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. +ಇಲ್ಲಿ ಕೆಲಸ ಬೇಕೆಂದರೆ ಖಡ್ಡಾಯವಾಗಿ ಒಕ್ಕೂಟದ ನಿರ್ದೇಶಕರು ಹಾಗೂ ಶಾಸಕರು ಕೆಲವು ಶಿಫಾರಸ್ಸು ಇರಬೇಕು ಎನ್ನುವ ಅಭ್ಯರ್ಥಿಗಳ ಹೆಸರ ಮುಂದೆ ಶಿಫಾರಸ್ಸು ಮಾಡಿರುವ ಮುಖಂಡರ ಹೆಸರಿರುವ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದ ಹಿನ್ನೆಲೆಯಲ್ಲಿ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಶಂಕೆ ಕೇಳಿ ಬಂದಿತ್ತು. +ಇನ್ನು ಶಿಫಾರಸ್ಸುಗಳ ಪಟ್ಟಿಯಲ್ಲಿ ಒಕ್ಕೂಟದ ನಿರ್ದೇಶಕರು ಸೇರಿ ಡಿಸಿಎಂ ಡಿಕೆ ಶಿವಕುಮಾರ್, ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಕೆಲ ನಿರ್ದೇಶಕರ ಹೆಸರು ಬರೆಯಲಾಗಿದೆ. +ಮೋದಿ ಟೀಕಿಸಿದ ಮಾಲ್ಡೀವ್ಸ್‌ಗೆ ತಿಳಿ ಹೇಳಿದ ಭಾರತ +ಒಂದೊಂದು ಹುದ್ದೆಗೆ ಸುಮಾರು 40ರಿಂದ 60 ಲಕ್ಷ ರೂ. ಪಡೆಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಒಟ್ಟು 81 ಹುದ್ದೆಗಳಿಗೆ ಸುಮಾರು 44 ಕೋಟಿಯಷ್ಟು ಸಂಗ್ರಹ ಮಾಡಲಾಗಿದೆ ಎನ್ನುವ ಆರೋಪವಿದೆ. ಸಾಮಾಜಿಕ ಜಾಲತಾಣದಲ್ಲಿ ಆಯ್ಕೆಯಾದ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸಚಿವ ಡಾ.ಕೆ.ಸುಧಾಕರ್ ಈ ಕುರಿತು ಭಾರೀ ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು. \ No newline at end of file diff --git a/eesanje/url_46_267_2.txt b/eesanje/url_46_267_2.txt new file mode 100644 index 0000000000000000000000000000000000000000..8023e13960c4ecaf0defb1e005fb6571f547f06b --- /dev/null +++ b/eesanje/url_46_267_2.txt @@ -0,0 +1,8 @@ +ಇನ್ನೂ 3 ದಿನ ರಾಜ್ಯದಲ್ಲಿ ಮೋಡ ಕವಿದ ವಾತಾವರಣ +ಬೆಂಗಳೂರು, ಜ.9-ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಕರಾವಾಳಿ ಹಾಗೂ ಮಲೆನಾಡು ಭಾಗದಲ್ಲಿ ಅರೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಆದರೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. +ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಹಗಲು ವೇಳೆಯೂ ಚಳಿಯ ಪ್ರಮಾಣ ಹೆಚ್ಚಾಗಿದೆ. ನಿನ್ನೆಯಿಂದ ರಾಜ್ಯದ ಒಳನಾಡಿನಲ್ಲಿ ಮೋಡ ಕವಿದ ವಾತಾವಾರಣವಿದ್ದು, ಆಗಾಗ್ಗೆ ಹಲವು ಕಡೆ ತುಂತುರು ಮಳೆಯಾಗಿದೆ. +ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚು ಮಳೆಯಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇಲ್ಲ. ಕೆಲವೆಡೆ ಚದುರಿದಂತೆ ಹಗುರ ಇಲ್ಲವೆ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ +ತಮಿಳುನಾಡು ಕರಾವಳಿ ಸಮೀಪ ಉಂಟಾಗಿದ್ದ ವಾಯುಭಾರ ಕುಸಿತ ಕೇರಳದ ಕರಾವಳಿ ಕಡೆಗೆ ಚಲಿಸುತ್ತಿದೆ. ಇದರಿಂದ ಆ ಎರಡು ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಮೇಲೆ ವಾಯುಭಾರ ಕುಸಿತದ ನೇರ ಪರಿಣಾಮವಿಲ್ಲ. ರಾಜ್ಯದ ಕರಾವಳಿಯಲ್ಲೂ ಸ್ವಲ್ಪ ಹೆಚ್ಚು ಮಳೆಯಾಗಲಿದೆ. ಹಾಗೆಯೇ ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದೂ, ಚಳಿಯ ಪ್ರಮಾಣವೂ ಹೆಚ್ಚಾಗಿರಲಿದೆ ಎಂದು ಹೇಳಿದರು. +ಶೇ.24ರಷ್ಟು ಮಳೆ ಕೊರತೆ:ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 2023ನೇ ವರ್ಷದಲ್ಲಿ ವಾಡಿಕೆಗಿಂತ ಶೇ.24ರಷ್ಟು ಕಡಿಮೆ ಮಳೆ ರಾಜ್ಯದಲ್ಲಾಗಿದೆ. 2023ರ ಏಪ್ರಿಲ್‍ನಿಂದ ಡಿಸೆಂಬರ್ ನಡುವಿನ ಅವಯಲ್ಲಿ 1140 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದರೆ, 862 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ಶೇ.24ರಷ್ಟು ಕೊರತೆ ಉಂಟಾಗಿತ್ತು. +ಅದೇ ರೀತಿ ಜನವರಿ ಒಂದರಿಂದ ಡಿಸೆಂಬರ್ ಅಂತ್ಯದವರೆಗೆ ವಾಡಿಕೆ ಮಳೆ ಪ್ರಮಾಣ 1153 ಮಿ.ಮೀ. ಆಗಿದ್ದು, ಕೇವಲ 872 ಮಿ.ಮೀ.ನಷ್ಟು ಮಳೆಯಾಗಿದೆ. ಈ ಅವಯಲ್ಲೂ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. ಅಲ್ಲದೆ, ಹಿಂಗಾರು ಹಂಗಾಮಿನ ಅಕ್ಟೋಬರ್ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 182 ಮಿ.ಮೀ. ಆಗಿದ್ದು, 114 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ.38ರಷ್ಟು ಕೊರತೆ ಉಂಟಾಗಿದೆ. ಡಿಸೆಂಬರ್‍ನಲ್ಲೀ ಶೇ.30 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. 2024ರ ಮೊದಲ ಮಳೆ ನಿನ್ನೆ ಆರಂಭಗೊಂಡಿದೆ. \ No newline at end of file diff --git a/eesanje/url_46_267_3.txt b/eesanje/url_46_267_3.txt new file mode 100644 index 0000000000000000000000000000000000000000..3504a0dea4bb8b4690ecf68293b16f8e6a4b8485 --- /dev/null +++ b/eesanje/url_46_267_3.txt @@ -0,0 +1,8 @@ +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-01-2024) +ನಿತ್ಯ ನೀತಿ :ಸಮಸ್ಯೆ ಬಿಟ್ಟು ಬದುಕು ಅಥವಾ ಸಮಸ್ಯೆ ಪರಿಹರಿಸಿಕೊಂಡು ಬದುಕು. ಆದರೆ ಸಮಸ್ಯೆಯೊಂದಿಗೆ ಯಾವತ್ತೂ ಬದುಕಬೇಡ. +ಪಂಚಾಂಗ ಮಂಗಳವಾರ 09-01-2024ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ವೃದ್ಧಿ / ಕರಣ: ಗರಜೆ +ಸೂರ್ಯೋದಯ : ಬೆ.06.44ಸೂರ್ಯಾಸ್ತ : 06.09ರಾಹುಕಾಲ : 3.00-4.30ಯಮಗಂಡ ಕಾಲ : 9.00-10.30ಗುಳಿಕ ಕಾಲ : 12.00-1.30 +ರಾಶಿ ಭವಿಷ್ಯಮೇಷ: ಒತ್ತಡದ ಜೀವನದಿಂದ ಹೊರಬರುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.ವೃಷಭ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತ ಗಳಿಂದ ಕೂಡಿರುತ್ತವೆ. +ಕಟಕ: ರಕ್ತ ಸಂಬಂಧಿಗಳ ವಿರೋಧ ಎದುರಿಸ ಬೇಕಾಗುತ್ತದೆ.ಸಿಂಹ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.ಕನ್ಯಾ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ. +ತುಲಾ: ಹಿರಿಯ ಸಹೋದರ ಮತ್ತು ಸಹೋದರಿಯ ರೊಂದಿಗಿನ ಸಂಬಂಧವು ಬಲವಾಗಿರುತ್ತದೆ.ವೃಶ್ಚಿಕ: ಕೆಲವು ದಿನಗಳಿಂದ ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಮುಕ್ತಿ ದೊರೆಯಲಿದೆ.ಧನುಸ್ಸು: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ. +ಮಕರ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.ಕುಂಭ: ದಿನವಿಡೀ ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ.ಮೀನ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ. \ No newline at end of file diff --git a/eesanje/url_46_267_4.txt b/eesanje/url_46_267_4.txt new file mode 100644 index 0000000000000000000000000000000000000000..dd41cbc8c8a72d03f00bf9334b68ee52344d85e2 --- /dev/null +++ b/eesanje/url_46_267_4.txt @@ -0,0 +1,6 @@ +ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಜೆಡಿಎಸ್ ನಾಯಕರ ಸಮಾಲೆಯೋಚನೆ +ಬೆಂಗಳೂರು,ಜ.8- ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಜೊತೆ ಸಭೆ ನಡೆಸಲಾಯಿತು. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸಮನ್ವಯತೆ ಕಾಪಾಡುವುದು, ಚುನಾವಣೆ ಸಿದ್ದತೆ, ಕ್ಷೇತ್ರ ಹಂಚಿಕೆ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು. +ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರ ಅಭಿಪ್ರಾಯವನ್ನು ಕುರಿತು ಚುನಾವಣೆ ಕುರಿತಂತೆ ಸಮಾಲೋಚನೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಎಲ್ಲೆಲ್ಲಿ ಜೆಡಿಎಸ್ ಪ್ರಾಬಲ್ಯವಿದೆಯೋ ಅಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ, ಈಗಲೇ ಚುನಾವಣಾ ತಯಾರಿ ನಡೆಸುವುದು, ಚುನಾವಣೆಯಲ್ಲಿ ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ಸೂಚಿಸುವುದು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಯಿತು. +ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ +ಸಭೆಯಲ್ಲಿ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಲೀಲಾದೇವಿ ಆರ್.ಪ್ರಸಾದ್, ಬಂಡೆಪ್ಪ ಕಾಶಂಪೂರ್, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಕರೆಮ್ಮ, ಶಾರದಾ ಪೂರ್ಯಾ ನಾಯಕ್, ತಿಪ್ಪೇಸ್ವಾಮಿ, ನೇಮಿರಾಜ ನಾಯಕ್, ಎ.ಮಂಜು, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ರಮೇಶ್ ಗೌಡ, ತಿಮ್ಮರಾಯಪ್ಪ ಹಾಗೂ ವಿವಿಧ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು. +ಸಭೆಗೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಚುನಾವಣೆ ಪೂರ್ವ ತಯಾರಿ ಕುರಿತಂತೆ ಶಾಸಕರು ಹಾಗೂ ಪಕ್ಷದ ಮುಖಂಡರ ಸಭೆ ಕರೆದು ಚರ್ಚಿಸಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_267_5.txt b/eesanje/url_46_267_5.txt new file mode 100644 index 0000000000000000000000000000000000000000..2a4a62648e098b7a04bda113fe10663a69bc7596 --- /dev/null +++ b/eesanje/url_46_267_5.txt @@ -0,0 +1,10 @@ +ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆ ದಂಡ +ಬೆಂಗಳೂರು,ಜ.8- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲ್ಲದೇ ಇರುವ ಕ್ಷೇತ್ರಗಳ ಉಸ್ತುವಾರಿ ಸಚಿವರ ತಲೆದಂಡದ ಎಚ್ಚರಿಕೆ ರವಾನಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಆಯಾ ಉಸ್ತುವಾರಿಗಳೇ ಸಚಿವರಾಗಿದ್ದಾರೆ. ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ್, ಬಳ್ಳಾರಿ ಕ್ಷೇತ್ರಕ್ಕೆ ಬಿ.ನಾಗೇಂದ್ರ, ಬೀದರ್ ಕ್ಷೇತ್ರಕ್ಕೆ ಈಶ್ವರ್ ಖಂಡ್ರೆ, ಚಿಕ್ಕಮಗಳೂರು, ಉಡುಪಿ ಕ್ಷೇತ್ರಕ್ಕೆ ಕೆ.ಜೆ.ಜಾರ್ಜ್, ಚಿತ್ರದುರ್ಗ ಕ್ಷೇತ್ರಕ್ಕೆ ಸಚಿವ ಡಾ.ಸುಧಾಕರ್, ದಕ್ಷಿಣ ಕನ್ನಡ ಕ್ಷೇತ್ರಕ್ಕೆ ದಿನೇಶ್ ಗುಂಡೂರಾವ್, ದಾವಣಗೆರೆ ಕ್ಷೇತ್ರಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್, ಧಾರವಾಡ ಕ್ಷೇತ್ರಕ್ಕೆ ಸಂತೋಷ್ ಲಾಡ್, ಕಲ್ಬುರ್ಗಿ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ, ಹಾಸನ ಕ್ಷೇತ್ರಕ್ಕೆ ಕೆ.ಎನ್.ರಾಜಣ್ಣ, ಹಾವೇರಿ ಕ್ಷೇತ್ರಕ್ಕೆ ಶಿವಾನಂದ ಪಾಟೀಲ್, ಕೊಪ್ಪಳಕ್ಕೆ ಶಿವರಾಜ ತಂಗಡಗಿ, ಮಂಡ್ಯಕ್ಕೆ ಎನ್.ಚೆಲುವರಾಯಸ್ವಾಮಿ, ಶಿವಮೊಗ್ಗದ ಸಚಿವ ಮಧುಬಂಗಾರಪ್ಪ, ತುಮಕೂರಿನ ಡಾ.ಜಿ.ಪರಮೇಶ್ವರ್, ಉತ್ತರ ಕನ್ನಡದ ಮಂಕಾಳ್ ವೈದ್ಯ ಅವರಿಗೆ ಅದೇ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. +ಬೆಂಗಳೂರು ಗ್ರಾಮಾಂತರಕ್ಕೆ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಬದಲಾಗಿ ಭೈರತಿ ಸುರೇಶ್, ಬೆಂಗಳೂರು ನಗರಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಸ್ತುವಾರಿ ಸಚಿವರಾಗಿದ್ದರು. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕೃಷ್ಣಭೈರೇಗೌಡ, ಬೆಂಗಳೂರು ಕೇಂದ್ರಕ್ಕೆ ಜಮೀರ್ ಅಹಮ್ಮದ್ ಖಾನ್, ಬೆಂಗಳೂರು ದಕ್ಷಿಣಕ್ಕೆ ರಾಮಲಿಂಗಾರೆಡ್ಡಿ ಅವರುಗಳನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. +ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರ ಬದಲಾಗಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. +ಮೈಸೂರು, ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಆಕಾಂಕ್ಷಿಯಾಗುವ ಸಾಧ್ಯತೆ ಇದೆ. ಇಲ್ಲಿಗೆ ಸಿದ್ದರಾಮಯ್ಯ ಅವರ ಆಪ್ತ ಕೆ.ವೆಂಕಟೇಶ್ ವೀಕ್ಷಕರಾಗಿದ್ದಾರೆ. ಮೈಸೂರು ಜಿಲ್ಲೆಯ ಉಸ್ತುವಾರಿಯಾಗಿ ಎಚ್.ಸಿ.ಮಹದೇವಪ್ಪರ ಜವಾಬ್ದಾರಿ ಚಾಮರಾಜನಗರ ಕ್ಷೇತ್ರಕ್ಕೆ ಮೀಸಲಾಗಿದೆ. ಕೊಡಗು ಜಿಲ್ಲೆಯ ಉಸ್ತುವಾರಿಯಾಗಿರುವ ಎನ್.ಎಸ್.ಬೋಸರಾಜು ಅವರಿಗೆ ಸ್ವಂತ ಜಿಲ್ಲೆ ರಾಯಚೂರಿನ ಜವಾಬ್ದಾರಿ ವಹಿಸಲಾಗಿದೆ. +ಸಂಸದೆ ಸುಮಲತಾರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ..? : ಹೆಚ್‌ಡಿಕೆ +ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಡಾ.ಎಂ.ಸಿ.ಸುಧಾಕರ್ ಸಚಿವರಾಗಿದ್ದರೆ ಅವರ ಬದಲಾಗಿ ಕೋಲಾರದ ಮೂಲದವರಾದ ಕೆ.ಎಚ್.ಮುನಿಯಪ್ಪ ಅವರನ್ನು, ಕೋಲಾರಕ್ಕೆ ಡಾ.ಎಂ.ಸಿ.ಸುಧಾಕರ್ ಅವರುಗಳನ್ನು ಉಸ್ತುವಾರಿಗಳಾಗಿ ಅದಲು ಬದಲು ಮಾಡಲಾಗಿದೆ. ಬೆಳಗಾವಿ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಚಿಕ್ಕೋಡಿ ಕ್ಷೇತ್ರಕ್ಕೆ ಹಿರಿಯ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. +ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಯಾದಗಿರಿ ಜಿಲ್ಲೆಯ ಉಸ್ತುವಾರಿ ಶರಣ ಬಸಪ್ಪ ದರ್ಶನಾಪೂರ್ ಅವರಿಗೆ ಲೋಕಸಭೆ ಕ್ಷೇತ್ರಗಳ ವೀಕ್ಷಕರ ಜವಾಬ್ದಾರಿ ನೀಡಲಾಗಿಲ್ಲ. 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಪಕ್ಷ ಕ್ಷೇತ್ರವಾರು ವೀಕ್ಷಕರ ನೇಮಕಾತಿ ಜೊತೆಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲೇಬೇಕು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೀಕ್ಷಕರಾಗಿರುವ ಸಚಿವರ ಮೇಲೆ ನಿಗಾ ವಹಿಸಲಿದ್ದು, ಕಾಲಕಾಲಕ್ಕೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಲಾಗಿದೆ. +ಜುಲೈನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಚರ್ಚೆಗಳಿದ್ದು, ಲೋಕಸಭೆ ಚುನಾವಣೆಯಲ್ಲಿ ಉದ್ದೇಶಪೂರ್ವಕವಾದ ಸೋಲಿಗೆ ಸಚಿವರ ತಲೆದಂಡ ಮಾಡಿ ಹೊಸಬರಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_267_6.txt b/eesanje/url_46_267_6.txt new file mode 100644 index 0000000000000000000000000000000000000000..d326dd7f15ac96e80915a94e43b3312108b42435 --- /dev/null +++ b/eesanje/url_46_267_6.txt @@ -0,0 +1,10 @@ +ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಪ್ರತಿಯಾಗಿ ಸಂವಿಧಾನ ಯಾತ್ರೆಗೆ ರಾಜ್ಯ ಸರ್ಕಾರ ಸಿದ್ಧತೆ +ಬೆಂಗಳೂರು,ಜ.8- ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಸೆಡ್ಡು ಹೊಡೆಯುವಂತೆ ರಾಜ್ಯಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ಸಂಘಟನಾ ಸಮಿತಿ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಿವೆ. +ಜನವರಿ 26 ರಿಂದ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಆಯೋಜಿಸಲು ನಿರ್ಧರಿಸಲಾಗಿದೆ. ಈ ಜಾಥಾ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸುತ್ತಿದ್ದು, ಸಂವಿಧಾನದ ಮಹತ್ವ, ರಾಷ್ಟ್ರದ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧ ಚಿತ್ರಗಳನ್ನೊಳಗೊಂಡಿರಲಿದೆ. ಒಂದು ತಿಂಗಳ ಕಾಲ ನಡೆಯುವ ಯಾತ್ರೆಯ ಸಮಾರೋಪ ಸಮಾವೇಶ ಫೆಬ್ರವರಿ 24 ಹಾಗೂ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. +ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ +ಜೊತೆಗೆ ಅಲ್ಲಲ್ಲಿ ವಿಚಾರ ಸಂಕಿರಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ವಿಷಯಗಳ ಕುರಿತು ಪರಿಣಿತರ ಚರ್ಚೆಯನ್ನು ಆಧರಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಗೆ ತಿಳಿಸಿದೆ. +ಸಮಾವೇಶಕ್ಕಾಗಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಮಾಹಿತಿಪೂರ್ಣ ಚರ್ಚಾಗೋಷ್ಠಿಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇಂದಿನ ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಸಂವಿಧಾನದಲ್ಲಿ ಉತ್ತರವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಸಭೆಯಲ್ಲಿ ತಿಳಿಸಿದ್ದಾರೆ. +ಕೇಂದ್ರ ಸರ್ಕಾರ ತನ್ನ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಡಿಸೆಂಬರ್‍ನಿಂದ ಜನವರಿ 26 ರವರೆಗೆ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯಾದ್ಯಂತ ಸಾವಿರಾರು ಗ್ರಾಮಗಳಿಗೆ, ನಗರ ಪ್ರದೇಶಗಳಿಗೆ ತಲುಪಿವೆ. ಅದರಲ್ಲಿ ರಾಜ್ಯದ ಅಧಿಕಾರಿಗಳು ಭಾಗವಹಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು.ಪರಿಣಾಮ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳನ್ನು ಬಳಸಿಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸಲಿದೆ. ಜನವರಿ 26 ಕ್ಕೆ ವಿಕಸಿತ ಯಾತ್ರೆ ಸಮಾರೋಪಗೊಳ್ಳಲಿದೆ. +ಅದರ ಬೆನ್ನಲ್ಲೇ ರಾಜ್ಯಸರ್ಕಾರ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಅರಿವು ಮೂಡಿಸಲು ರಾಷ್ಟ್ರದ ಐಕ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಸಂವಿಧಾನ ಆ ಯಾತ್ರೆಯನ್ನು ಆಯೋಜನೆಗೊಳಿಸಿದೆ. +ಯಶ್ ಕಟೌಟ್‍ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ +ಇಂದಿನ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಸಚಿವರಾದ ಹೆಚ್.ಕೆ.ಪಾಟೀಲ, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಪಿ.ಮಣಿವಣ್ಣನ್ ಹಾಗೂ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_267_7.txt b/eesanje/url_46_267_7.txt new file mode 100644 index 0000000000000000000000000000000000000000..cb163c80f78d7e2a5bd2bcfc8a1d26b70ce35387 --- /dev/null +++ b/eesanje/url_46_267_7.txt @@ -0,0 +1,5 @@ +ಕಲುಷಿತ ನೀರು ಸೇವಿಸಿ ಮಹಿಳೆ ಸಾವು, ನಗರಸಭೆ ಆಯುಕ್ತ ಸೇರಿ ಮೂವರ ಅಮಾನತು +ಬೆಂಗಳೂರು : ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್ ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರಾದ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. +ಬಿಲ್ಕಿಸ್‍ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಂನಲ್ಲಿ ಮುಖಭಂಗ +ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕ ದಲ್ಲಿದ್ದು ಮಾಹಿತಿ ಪಡೆದು ಪ್ರಕರಣ ಮರು ಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. +ಕುಡಿಯುವ ನೀರು ಪೊರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ನಿರ್ದೇಶನ ನೀಡಿದ್ದಾರೆ \ No newline at end of file diff --git a/eesanje/url_46_267_8.txt b/eesanje/url_46_267_8.txt new file mode 100644 index 0000000000000000000000000000000000000000..ce9e012f5e4ba76645816c1a05e4aa7da4886585 --- /dev/null +++ b/eesanje/url_46_267_8.txt @@ -0,0 +1,11 @@ +ಬಿಜೆಪಿಗೆ ಎನ್.ಆರ್.ರಮೇಶ್ ಗುಡ್‍ಬೈ..!? +ಬೆಂಗಳೂರು,ಜ.8- ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ಬಿಜೆಪಿಗೆ ಗುಡ್‍ಬೈ ಹೇಳಲು ಮುಂದಾಗಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಸರ್ಕಾರಿ ನೆಲಗಳ್ಳರು ಮತ್ತು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರಗಳ ವಿರುದ್ಧ ನೂರಾರು ಪತ್ರಿಕಾಗೋಷ್ಠಿಗಳನ್ನು ಮಾಡಿದ್ದಷ್ಟೇ ಅಲ್ಲದೇ, ನೂರಾರು ಪ್ರಕರಣಗಳನ್ನು ದಾಖಲೆಗಳ ಸಹಿತ ವಿವಿಧ ತನಿಖಾ ಸಂಸ್ಥೆಗಳಲ್ಲಿ ಮತ್ತು ನ್ಯಾಯಾಲಯಗಳಲ್ಲಿ ದಾಖಲಿಸಿರುವ ಮತ್ತು ಸರ್ಕಾರಿ ನೆಲಗಳ್ಳರು ಕಬಳಿಸಿದ್ದ ಸಾವಿರಾರು ಕೋಟಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ವಾಪಸ್ಸು ಸರ್ಕಾರದ ವಶಕ್ಕೆ ಬರುವಂತೆ ಮಾಡಿರುವ ರಮೇಶ್ ಅವರು ಬಿಜೆಪಿಯ ರಾಜ್ಯ ನಾಯಕರಿಂದ ನಿರಂತರವಾಗಿ ತಮಗೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಸಿಡಿದೆದ್ದಿದ್ದಾರೆ ಎಂದು ತಿಳಿದುಬಂದಿದೆ. +ಕನಿಷ್ಠ ತಿಂಗಳಿಗೆ ಎರಡು ಹಗರಣಗಳನ್ನಾದರೂ ಬಯಲಿಗೆಳೆಯುತ್ತಿದ್ದ ರಮೇಶ್ ಅವರು ಕಳೆದ ಏಳೆಂಟು ತಿಂಗಳಿನಿಂದ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಯಾವುದೇ ಧ್ವನಿಯನ್ನೂ ಎತ್ತದೆ ಮತ್ತು ದೂರುಗಳನ್ನು ದಾಖಲಿಸದೆ ಮಮೌನಿಯಾಗಿರುವುದರ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿವೆ. +2018 ಮತ್ತು 2023 ರ ವಿಧಾನಸಭೆ ಚುನಾವಣೆಗಳ ಸಂದರ್ಭಗಳಲ್ಲಿ ಅವರು ಬಯಲಿಗೆಳೆದಿದ್ದ ಹಗರಣಗಳನ್ನೇ ಪುಸ್ತಕಗಳ ರೂಪದಲ್ಲಿ ಹೊರತಂದು ಕಾಂಗ್ರೆಸ್ ವಿರುದ್ಧದ ಪ್ರಚಾರದಲ್ಲಿ ಪ್ರಬಲ ಅಸ್ತ್ರವನ್ನಾಗಿಸಿಕೊಂಡಿದ್ದ ಬಿಜೆಪಿಯು ಎರಡೂ ಚುನಾವಣೆಗಳಲ್ಲಿ ಚಿಕ್ಕಪೇಟೆ ಮತ್ತು ಜಯನಗರ ಕ್ಷೇತ್ರಗಳ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. +ಆದರೆ ಪಕ್ಷದ ವರಿಷ್ಠರು ಅವರಿಗೆ ಟಿಕೆಟ್ ನೀಡದಿರುವುದು ರಮೇಶ್ ಅವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅವರ ಸಾವಿರಾರು ಅಭಿಮಾನಿಗಳು ಮತ್ತು ಕುಟುಂಬಸ್ಥರು ಇಷ್ಟೊಂದು ಅನ್ಯಾಯ ಮಾಡಿರುವ ಬಿಜೆಪಿಯಲ್ಲಿ ಇರುವುದು ಸರಿಯಲ್ಲ ಎಂದು ಒತ್ತಾಯಿಸುತ್ತಿದ್ದು, ನಿಮ್ಮ ರಾಜಕೀಯ ಜೀವನವನ್ನು ಹಾಳುಗೆಡವಿರುವ ಬೆಂಗಳೂರಿನ ಬಿಜೆಪಿ ನಾಯಕರಿಗೆ ಸರಿಯಾದ ಪಾಠ ಕಲಿಸಬೇಕು ನೀವು ಈ ಕೂಡಲೇ ಬಿಜೆಪಿಯಿಂದ ಹೊರಬಂದು ಬಿಜೆಪಿ ನಾಯಕರ ಹಗರಣಗಳನ್ನು ಬಯಲಿಗೆಳೆದು ದೂರುಗಳನ್ನು ದಾಖಲಿಸುವ ಮೂಲಕ ಸರಿಯಾದ ಪಾಠ ಕಲಿಸಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿದುಬಂದಿದೆ. +ಅಭಿಮಾನಿಗಳು ಹಾಗೂ ಹಿತೈಷಿಗಳ ಒತ್ತಡಕ್ಕೆ ಮಣಿದಿರುವ ರಮೇಶ್ ಅವರು ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ತಯಾರಿ ಆರಂಭಿಸಿದ್ದಾರೆ ಎಂದು ಮೂಲಗಳು ಈ ಸಂಜೆಗೆ ಖಚಿತಪಡಿಸಿವೆ. ಟಿಕೆಟ್ ವಂಚಿತರಾಗಿದ್ದ ರಮೇಶ್ ಅವರನ್ನು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿಯಿಂದ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ರ್ಪಧಿಸುವಂತೆ ಆ ಪಕ್ಷಗಳ ನಾಯಕರು ಆಹ್ವಾನ ನೀಡಿದ್ದರು. ಡಿ.ಕೆ ಶಿವಕುಮಾರ್ ಅವರಂತೂ ರಮೇಶ್ ಅವರನ್ನು ಕಾಂಗ್ರೆಸ್ಸಿನಿಂದ ಪದ್ಮನಾಭನಗರ ಕ್ಷೇತ್ರದಲ್ಲಿ ಅಶೋಕ್ ಅವರ ವಿರುದ್ಧ ಸ್ಪರ್ಧೆಗೆ ಇಳಿಸಬೇಕೆಂದು ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಕಾದಿದ್ದರು. +ಬಿಲ್ಕಿಸ್‍ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಂನಲ್ಲಿ ಮುಖಭಂಗ +ಹಾಗೆಯೇ, ಕಳೆದ ಏಳೆಂಟು ತಿಂಗಳಿನಿಂದ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ನಿರಂತರವಾಗಿ ರಮೇಶ್ ಜೊತೆ ಸಂಪರ್ಕದಲ್ಲಿದ್ದು, ಲೋಕಸಭೆ ಚುನಾವಣೆಯ ಮುಂಚಿತವಾಗಿಯೇ ಕಾಂಗ್ರೆಸ್ ಸೇರುವಂತೆ ಅವರ ಮನವೊಲಿಸುವ ಯತ್ನ ಮಾಡುತ್ತಿದ್ದಾರೆ ಎಂದು ಖಚಿತ ಮೂಲಗಳು ತಿಳಿಸಿವೆ. +ಒಂದು ವೇಳೆ ರಮೇಶ್ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದೇ ಆದರೆ, ಭಾರತೀಯ ಜನತಾ ಪಾರ್ಟಿಗೆ ಬಹಳಷ್ಟು ನಷ್ಟ ಉಂಟಾಗುವುದಲ್ಲದೇ, ಆ ಪಕ್ಷದ ನಾಯಕರು ಅದರಲ್ಲೂ ವಿಶೇಷವಾಗಿ ಬೆಂಗಳೂರಿನ ಬಿಜೆಪಿ ನಾಯಕರುಗಳಿಗೆ ನಿರಂತರವಾದ ಸಂಕಷ್ಟಗಳು ಬಂದೊದಗುತ್ತವೆ ಎಂಬುದರಲ್ಲಿ ಎರಡು ಮಾತಿಲ್ಲ.ಇದೇ ರೀತಿ ಅನ್ಯಾಯ ಮುಂದುವರೆದರೆ ಮುಂದೆ ತಮಗೆ ಉಪಯೋಗಕ್ಕೆ ಬರಬಹುದೆಂಬ ದೂರ ದೃಷ್ಟಿಯಿಂದ ರಮೇಶ್ ಅವರು ತಮ್ಮದೇ ಪಕ್ಷದ ನಾಯಕರ ಹಗರಣಗಳು ಮತ್ತು ಸರ್ಕಾರಿ ಭೂಕಬಳಿಕೆ ಪ್ರಕರಣಗಳಿಗೆ ಸಂಬಂಧಿಸಿದ ನೂರಾರು ದಾಖಲೆಗಳನ್ನು ಈಗಾಗಲೇ ಸಂಗ್ರಹಿಸಿಕೊಂಡಿದ್ದಾರೆ ಎನ್ನಲಾಗಿದೆ. +ರಮೇಶ್ ಅವರ ಆಪ್ತರಾಗಿರುವ ಗಣೇಶ್, ನವೀನ್ ಮತ್ತು ರಾಜೇಶ್ ರವರನ್ನು ಸಂಪರ್ಕಿಸಿದಾಗ ಹೌದು ನಾವುಗಳೆಲ್ಲೆ ನಮ್ಮ ನಾಯಕರು ಬಿಜೆಪಿಯಲ್ಲಿ ಮುಂದುವರೆಯುವುದು ಬೇಡ. ನಿಮಗೆ ಇಷ್ಟೊಂದು ಅನ್ಯಾಯ ಮಾಡಿರುವ ಪಕ್ಷದ ನಾಯಕರಿಗೆ ಸರಿಯಾದ ಪಾಠ ಕಲಿಸಲೇಬೇಕು. ಹಾಗಾಗಿ ನೀವು ಭಾರತೀಯ ಜನತಾ ಪಾರ್ಟಿಯಿಂದ ಹೊರಬಂದು ನಿಮಗಿಷ್ಟವಾದ ರಾಜಕೀಯ ಪಕ್ಷವನ್ನು ಆಯ್ಕೆ ಮಾಡಿಕೊಳ್ಳಿ ಅಥವಾ ಹೋರಾಟಗಾರರಾಗಿಯೇ ಮುಂದುವರೆದು ಬಿಜೆಪಿ ಪಕ್ಷದ ನಾಯಕರಿಗೆ ಸರಿಯಾದ ಬುದ್ಧಿ ಕಲಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಈ ಕುರಿತಂತೆ ಪ್ರತಿಕ್ರಿಯೆ ನೀಡಲು ರಮೇಶ್ ನಿರಾಕರಿಸಿದ್ದಾರೆ. +ರಮೇಶ್ ಅವರ ಮೇಲೆ ಹಲವಾರು ಬಾರಿ ಹತ್ಯಾ ಯತ್ನಗಳು ನಡೆದರೂ ಸಹ ಎದೆಗುಂದದೆ ನಿರಂತರವಾಗಿ ಭ್ರಷ್ಟರ ವಿರುದ್ಧ ಸಮರ ಸಾರಿ ಹಲವಾರು ಪ್ರಕರಣಗಳಲ್ಲಿ ಕಾನೂನು ಹೋರಾಟಗಳ ಮೂಲಕ ಜಯವನ್ನೂ ಗಳಿಸಿರುವ ವಿಷಯವನ್ನು ಅವರ ವಿರೋಧಿಗಳೂ ಸಹ ಒಪ್ಪಿಕೊಳ್ಳುತ್ತಾರೆ. ಇಂತಹ ನಿರ್ಭೀತ ವ್ಯಕ್ತಿತ್ವದ ಹೋರಾಟಗಾರರನ್ನು ಕಳೆದುಕೊಂಡರೆ ಬಿಜೆಪಿ ಪಕ್ಷಕ್ಕೆ ಅನ್ಯಾಯವಾಗೊದಂತೂ ಖಚಿತ ಎನ್ನುತ್ತಿದ್ದಾರೆ ಅವರ ಅಭಿಮಾನಿಗಳು. \ No newline at end of file diff --git a/eesanje/url_46_267_9.txt b/eesanje/url_46_267_9.txt new file mode 100644 index 0000000000000000000000000000000000000000..9c6b9e2a67e7d1faa7e053b317d2b0cdb4f1b5e2 --- /dev/null +++ b/eesanje/url_46_267_9.txt @@ -0,0 +1,9 @@ +ಯಶ್ ಕಟೌಟ್‍ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ +ಬೆಂಗಳೂರು,ಜ.8- ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಸೂರಣಗಿ ಗ್ರಾಮದಲ್ಲಿ ನಟ ಯಶ್ ಕಟೌಟ್ ಕಟ್ಟುವ ಸಂದರ್ಭದಲ್ಲಿ ವಿದ್ಯುತ್‍ಸ್ಪರ್ಶದಿಂದಾಗಿ ಮೂವರು ಅಭಿಮಾನಿಗಳು ಮೃತಪಟ್ಟ ಬಳಿಕ ಫ್ಲೆಕ್ಸ್, ಬ್ಯಾನರ್, ಕಟೌಟ್‍ಗಳ ಎತ್ತರ, ಆಕಾರ, ಅಳತೆಗಳ ಬಗ್ಗೆ ಮಾರ್ಗಸೂಚಿ ನಿಗದಿ ಮಾಡುವ ಕುರಿತಂತೆ ಚರ್ಚೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತಪಟ್ಟವರ ಕುಟುಂಬದ ಸದಸ್ಯರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲು ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲು ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ ಎಂದು ಹೇಳಿದರು. +ಈ ನಡುವೆ ನಟ ಯಶ್ ಅವರು ತಮ್ಮೊಂದಿಗೆ ದೂರವಾಣಿಯಲ್ಲಿ ಚರ್ಚಿಸಿದ್ದು, ಸ್ಥಳಕ್ಕೆ ತೆರಳುತ್ತಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಯಶ್ ಕೂಡಾ ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ನಿರೀಕ್ಷೆಗಳಿವೆ ಎಂದು ಸಚಿವರು ತಿಳಿಸಿದರು. ನಿನ್ನೆ ತಡರಾತ್ರಿ ಘಟನೆ ನಡೆದಿದೆ. ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಎತ್ತರದ ಫ್ಲೆಕ್ಸ್ ಮಾಡಿಸಿ ಅದರಲ್ಲಿ ರಾಡ್ ಅಳವಡಿಸಲಾಗಿದ್ದು, ಅದು ವಿದ್ಯುತ್ ತಂತಿಗೆ ತಗುಲಿದ್ದರಿಂದ ಮೂವರು ವಿದ್ಯುತ್ ಶಾಕ್‍ನಿಂದ ಮೃತಪಟ್ಟಿದ್ದು, ಉಳಿದ ಮೂವರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. +ಅವರಲ್ಲಿ ಒಬ್ಬ ಗುಣಮುಖನಾಗುತ್ತಿದ್ದಾನೆ. ಉಳಿದಿಬ್ಬರನ್ನು ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ನೆರವು ನೀಡಿದ್ದಾರೆ. ಘಟನೆ ದುರ್ದೈವಕರ. ಮೃತಪಟ್ಟವರೆಲ್ಲಾ 15 ರಿಂದ 20 ವರ್ಷದೊಳಗಿನವರು. ಬಡ ಕುಟುಂಬದ ಪರಿಶಿಷ್ಟ ಜಾತಿಯ ಯುವಕರು ಮೃತಪಟ್ಟಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. +ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳ ಸಾವು +ಆಸ್ಪತ್ರೆಯಲ್ಲಿರುವವರಿಗೆ ಅಗತ್ಯ ಚಿಕಿತ್ಸೆ ಕೊಡಿಸಲಾಗುವುದು. ಕಟೌಟ್, ಫ್ಲೆಕ್ಸ್, ಬ್ಯಾನರ್‍ಗಳ ಬಗ್ಗೆ ಈವರೆಗೂ ಯಾವುದೇ ನಿಯಮಾವಳಿಗಳಿಲ್ಲ. ಎತ್ತರದ ಕಟೌಟ್‍ನಿಂದಾಗಿಯೇ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಕುರಿತು ಚರ್ಚೆ ನಡೆಸಲು ಇದು ಸೂಕ್ತ ಸಂದರ್ಭವಾಗಿದೆ. ಹೀಗಾಗಿ ರಾಜ್ಯಸರ್ಕಾರ ಸ್ಪಷ್ಟ ಮಾರ್ಗಸೂಚಿಗಳ ಬಗ್ಗೆ ಚಿಂತನೆ ನಡೆಸಲಿದೆ ಎಂದು ತಿಳಿಸಿದರು. +ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರಿರಲಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಹೇಳಿಕೆ ತಪ್ಪು ಮಾಹಿತಿಯಿಂದ ಕೂಡಿರಬಹುದು ಎಂದು ಎಚ್.ಕೆ.ಪಾಟೀಲ್ ಸ್ಪಷ್ಟಪಡಿಸಿದರು. ಭಾಷಾವಾರು ಪ್ರಾಂತ್ಯ ವಿಂಗಡಣೆಗೂ ಮೊದಲು ಮುಂಬೈ ಪ್ರಾಂತ್ಯ ಅಸ್ತಿತ್ವದಲ್ಲಿತ್ತು. ಆಗ ಬೆಳಗಾವಿ ಸೇರಿದಂತೆ ರಾಜ್ಯದ ಹೈದ್ರಾಬಾದ್ ಕರ್ನಾಟಕವೂ ಸೇರಿದಂತೆ ಹಲವು ಪ್ರದೇಶಗಳು ಮುಂಬೈ ಪ್ರಾಂತ್ಯದ ಭಾಗವಾಗಿದ್ದವು. ಏಕೀಕರಣದ ಬಳಿಕ ರಾಜ್ಯ ವಿಂಗಡಣೆಯಾದಾಗ ಬೆಳಗಾವಿ ಕರ್ನಾಟಕದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. +ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಈ ರೀತಿ ಹೇಳಿಕೆ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿರುವ ಸಾಧ್ಯತೆಗಳಿವೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. \ No newline at end of file diff --git a/eesanje/url_46_268_1.txt b/eesanje/url_46_268_1.txt new file mode 100644 index 0000000000000000000000000000000000000000..f552a1a925d6f081ed43fc67b75108e347b1d474 --- /dev/null +++ b/eesanje/url_46_268_1.txt @@ -0,0 +1,9 @@ +ಸರ್ಕಾರಕ್ಕೆ ಅಧಿಕಾರದ ಮದವೇರಿದೆ : ಬೊಮ್ಮಾಯಿ +ಹುಬ್ಬಳ್ಳಿ,ಜ.7- ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಸರ್ಕಾರ ದಬ್ಬಾಳಿಕೆಯ ಸರ್ಕಾರ. ಮುಖ್ಯಮಂತ್ರಿಗಳು, ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಅವರ ವಿರುದ್ಧ ಕೇಸ್ ಹಾಕುತ್ತಿದ್ದಾರೆ. +ಈ ಸರ್ಕಾರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ವಾತಾವರಣ ಇದೆ. ಕರ್ನಾಟಕದಲ್ಲಿ ಜನರಲ್ಲಿ ಭಯ ಹುಟ್ಟಿಸುವ ಪ್ರಯತ್ನ ನಡೆಯುತ್ತಿದೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಕೇಸ್ ಒಂದು. ಅವರ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಒಳಗಡೆ ಹಾಕಿದರು. ಇದು ಎಮರ್ಜೆನ್ಸಿಯಲ್ಲಿ ಮಾತ್ರ ಸಾಧ್ಯ ಎಂದರು. +ಶ್ರೀಕಾಂತ್ ಪೂಜಾರಿ ಅವರನ್ನು ಒಳಗಡೆ ಹಾಕಿದ ಅಧಿಕಾರಿ, ಮಂತ್ರಿಗಳು ಕ್ಷಮೆ ಕೇಳಲಿಲ್ಲ. ಇದನ್ನು ಜನರು ಗಮನಿಸುತ್ತಿದ್ದಾರೆ. ಏಳೇ ತಿಂಗಳಲ್ಲಿ ಈ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ. ಸರ್ಕಾರದ ದಾಷ್ಟ್ಯ ಹೆಚ್ಚಾಗಿದೆ. ಈ ಸರ್ಕಾರದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು. +ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ +ನಾಳೆ (ಸೋಮವಾರ) ಪಕ್ಷದ ಚಿಂತನ ಮಂಥನ ಇದೆ, ಅಲ್ಲಿ ಪಕ್ಷದ ಎಲ್ಲ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಹೋರಾಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಕಾಂಗ್ರೆಸ್‍ನವರಿಗೆ ರಾಮ ಮಂದಿರ ಆಗಬಾರದು ಅನ್ನುವ ಆಸೆ ಇತ್ತು. ಆದರೆ, ಭವ್ಯವಾದ ರಾಮಮಂದಿರ ನಿರ್ಮಾಣವಾಗಿದೆ. ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋಧ್ರಾ ಮಾದರಿಯ ಗಲಾಟೆ ನಡೆಯುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಅದೇ ರೀತಿ ಇಂಡಿಯಾ ಒಕ್ಕೂಟದ ನಾಯಕರೂ ರೈಲಿನಲ್ಲಿ ಪ್ರಯಾಣ ಮಾಡಬೇಡಿ ಎಂದು ಜನರಿಗೆ ಹೇಳುತ್ತಿದ್ದಾರೆ. ದೇಶದಲ್ಲಿ ಮೋದಿಯವರು ಪ್ರಧಾನಿಯಾಗಿದ್ದಾರೆ. +ಯಾವುದೇ ರೀತಿಯ ಸಣ್ಣ ಗಲಭೆಗೂ ಅವಕಾಶ ಕೊಡುವುದಿಲ್ಲ. ಸುರಕ್ಷಿತವಾಗಿ, ವೈಭವಯುತವಾಗಿ ರಾಮಮಂದಿರ ಉದ್ಘಾಟನೆಯಾಗಲಿದೆ ಎಂದರು. ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಂದರ್ಭ ಬಂದರೆ ಹರಿಪ್ರಸಾದ್ ಅವರಿಂದ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಗಲಭೆಯಾದ ಮೇಲೆ ಇವರು ಮಾಹಿತಿ ಪಡೆದುಕೊಳ್ಳುತ್ತಾರಾ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಕಸ್ಮಾತ್ ಏನಾದರೂ ಆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದರು. +ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್ +ಪುನೀತ್ ಕೆರೆಹಳ್ಳಿ ಬಳಸಿ ಕೋಮು ಗಲಭೆಗೆ ಬಿಜೆಪಿ ಪತ್ವಾ ಹೊರಡಿಸಿದೆ ಎಂದು ಆರೋಪಿಸಿರುವ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಪುನಿತ್ ಕೆರೆಹಳ್ಳಿ ಸೇರಿದಂತೆ ಯಾವುದೇ ಪ್ರಕರಣದಲ್ಲಿ ಕಾಂಗ್ರೆಸ್ ಜನರಲ್ಲಿ ಕೋಮು ಭಾವನೆ ಹುಟ್ಟು ಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿಯನ್ನು ಕೋಮುವಾದಿ ಎಂದು ಆರೋಪಿಸುವ ಕಾಂಗ್ರೆಸ್ ನಿಜವಾದಿ ಕೋಮುವಾದಿ ಎಂದು ಆರೋಪಿಸಿದರು. \ No newline at end of file diff --git a/eesanje/url_46_268_10.txt b/eesanje/url_46_268_10.txt new file mode 100644 index 0000000000000000000000000000000000000000..461aaed2a3c0b503643a5cdd6a75a6f13b88920a --- /dev/null +++ b/eesanje/url_46_268_10.txt @@ -0,0 +1,8 @@ +ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ : ಡಿಕೆಶಿ +ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ಶ್ರೀರಾಮ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಇಲ್ಲ. ಹೀಗಾಗಿ ಇಲ್ಲಿಂದಲೇ ಪ್ರಾರ್ಥನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.22 ರಂದು ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನಗಾಗಲೀ, ನಮ್ಮ ಮುಖ್ಯಮಂತ್ರಿಗಾಗಲೀ ಆಹ್ವಾನ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಆಹ್ವಾನ ಇದೆಯೇ ಎಂದು ಕೇಳಿದ್ದೇನೆ. ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆ, ಬೇಡವೇ ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. +ನಾವು ಹಿಂದೂಗಳು. ನಮ್ಮ ಮನೆಯ ಗೋಡೆಯ ಮೇಲೆ ದೇವರ ಫೋಟೋಗಳು ಇದ್ದೇ ಇರುತ್ತವೆ. ರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದರು. ಆರ್‍ಎಸ್‍ಎಸ್‍ನವರು ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ನೀಡಿದ ಅಕ್ಕಿಗೆ ಅರಿಶಿನ ಸೇರಿಸಿದರೆ ಮಂತ್ರಾಕ್ಷತೆಯಾಗುತ್ತದೆ. ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ವಾದಿಸುವ ಬಿಜೆಪಿಯವರು ಕೇಂದ್ರದಲ್ಲಿ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂಬುದನ್ನ ಮರೆತಿದ್ದಾರೆ. +ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ +ಕಾಯ್ದೆ ಜಾರಿಗೆ ಬರುವ ಮುನ್ನವೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅನ್ನಭಾಗ್ಯವನ್ನು ಜಾರಿಗೊಳಿಸಿದರು. 10 ಕೆ.ಜಿ. ನೀಡುತ್ತಿದ್ದ ಅಕ್ಕಿಯನ್ನು ಬಿಜೆಪಿಯವರು ಕಡಿತ ಮಾಡಿದ್ದನ್ನು ಮರೆಯಬಾರದು ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಪಕ್ಷದ ಅಂತ್ಯವಾಗುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ಸದ್ಯಕ್ಕೆ ಅದಕ್ಕೆ ಉತ್ತರ ನೀಡುವುದಿಲ್ಲ. ಕಾಂಗ್ರೆಸ್ ಪಕ್ಷದ 138 ವರ್ಷಗಳಾಗಿವೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ 135 ಮಂದಿ, ಕಾಂಗ್ರೆಸ್ ಬೆಂಬಲಿತ ಮೇಲ್ಕೋಟೆಯ ಶಾಸಕರು ಸೇರಿ 136 ಮಂದಿ ಗೆದ್ದಿದ್ದೇವೆ. ಹರಪ್ಪನಹಳ್ಳಿ ಮತ್ತು ಗೌರಿಬಿದನೂರಿನ ಪಕ್ಷೇತರ ಶಾಸಕರು ಕಾಂಗ್ರೆಸ್‍ಗೆ ಬೆಂಬಲ ನೀಡಿರುವುದರಿಂದ 138 ಮಂದಿ ಶಾಸಕರಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು. +ಬಿಜೆಪಿ, ಜೆಡಿಎಸ್‍ನವರು ಪದೇಪದೇ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರ ಟೀಕೆಗಳು ನಮಗೆ ಆಶೀರ್ವಾದ ಎಂದು ತಿಳಿಸಿದರು. ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಬಂತ ಅಮಾಯಕರನ್ನು ಬಿಡುಗಡೆ ಮಾಡುವಂತೆ ಕುಟುಂಬ ಸದಸ್ಯರು ನಿನ್ನೆ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದಾರೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. +ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ +ನೈಸ್ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಟಿ.ಬಿ.ಜಯಚಂದ್ರ ಅವರ ಬಾಯಿ ಕಟ್ಟಿ ಹಾಕಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ಸದ್ಯಕ್ಕೆ ಮಾತನಾಡುವುದಿಲ್ಲ. ವಿಧಾನಸಭೆಯಲ್ಲಿ ಚರ್ಚೆಗೆ ಬನ್ನಿ ಎಂದರೆ ಏಕೆ ಹಿಂದೇಟು ಹಾಕಿದರು. ಬೇರೆ ದಿನ ಈ ವಿಚಾರವಾಗಿ ಚರ್ಚೆ ಮಾಡೋಣ. ಸದ್ಯಕ್ಕೆ ಕೃಷ್ಣ ಮೇಲ್ದಂಡೆ ವಿಚಾರಕ್ಕಷ್ಟೇ ತಾವು ಸೀಮಿತವಾಗುವುದಾಗಿ ತಿಳಿಸಿದರು. \ No newline at end of file diff --git a/eesanje/url_46_268_11.txt b/eesanje/url_46_268_11.txt new file mode 100644 index 0000000000000000000000000000000000000000..58adca0b8dfa9283e04cdbb3af9bda16ed8f9413 --- /dev/null +++ b/eesanje/url_46_268_11.txt @@ -0,0 +1,5 @@ +ಜ.22ರಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ +ಬೆಂಗಳೂರು, ಜ.7-ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಜರುಗಲಿದೆ. ಈ ನಿಟ್ಟಿನಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ. +ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ನಿರ್ದೇಶನ ನೀಡಿದ್ದಾರೆ. ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಲಾಗಿದೆ. +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹವು ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈಗಾಗಲೇ ತಿಳಿಸಿದೆ. \ No newline at end of file diff --git a/eesanje/url_46_268_12.txt b/eesanje/url_46_268_12.txt new file mode 100644 index 0000000000000000000000000000000000000000..3feda5ce0ad4c4de6b4ea41edc71eb8b101d7d91 --- /dev/null +++ b/eesanje/url_46_268_12.txt @@ -0,0 +1,10 @@ +ನೈಸ್ ಯೋಜನೆ ವಾಪಸ್ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ..? : ಜೆಡಿಎಸ್ +ಬೆಂಗಳೂರು, ಜ.7- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಎಂದು ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ಬಿಎಂಐಸಿ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನಿಸಿದೆ. +ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ. ದೇಶವನ್ನುಜಾತಿ, ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ. +ಗೌಡರ ಕೈ ಅನುಗ್ರಹದ ದ್ಯೋತಕ:ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್ ಪ್ರಶ್ನಿಸಿದೆ. +ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಕಾರ ಧೋರಣೆ, ತುಘಲಕ್ ಮನಃಸ್ಥಿತಿ. ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ. ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ಅಪರ ಬ್ರೂಟಸ್ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ತೀವ್ರ ಟೀಕಾ ಪ್ರಹಾರ ನಡೆಸಿದೆ. +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ, ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋಗುವ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ. +ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ:ನಿಮ್ಮಂಥ ಆತ್ಮಸಾಕ್ಷಿ ಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ಸಿದ್ದಾರಮೆ ಆಟ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ಸೊಕ್ಕಿನ ಮನುಷ್ಯ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. +ಜನಾದೇಶವನ್ನು ದೇವೇಗೌಡರು ಎಂದೂ ಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲೆ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ಧಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲೆ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್. ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ ಎಂದು ಆರೋಪಿಸಿದೆ. +ನೈಸ್ ಗೆಅತೀಂದ್ರ ಶಕ್ತಿ ಅಡ್ಡವಾಗಿ ಕೂತಿದೆಯಾ?ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ವಿಷಯಕ್ಕೆ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲೆಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ಅತೀಂದ್ರ ಶಕ್ತಿ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಜೆಡಿಎಸ್ ಒತ್ತಾಯ ಮಾಡಿದೆ. \ No newline at end of file diff --git a/eesanje/url_46_268_2.txt b/eesanje/url_46_268_2.txt new file mode 100644 index 0000000000000000000000000000000000000000..9d3c9d8a51aa822d27db8bbc8f1e9ad03911aa35 --- /dev/null +++ b/eesanje/url_46_268_2.txt @@ -0,0 +1,9 @@ +ಬೆಳಗಾವಿ : ಅನ್ಯಕೋಮಿನ ಯುವಕರಿಂದ ಅಕ್ಕ-ತಮ್ಮನಿಗೆ ಚಿತ್ರಹಿಂಸೆ +ಬೆಳಗಾವಿ,ಜ.7- ಪ್ರೇಮಿಗಳೆಂದು ಭಾವಿಸಿ ಅಕ್ಕ-ತಮ್ಮನ ಮೇಲೆ ಅನ್ಯಕೋಮಿಯ ಯುವಕರು ರಾಡ್‍ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿರುವ ಘಟನೆ ಇಲ್ಲಿನ ಕೋಟೆಕೆರೆ ಬಳಿ ನಡೆದಿದೆ. ಬೆಳಗಾವಿ ತಾಲೂಕಿನ ನಿವಾಸಿಗಳಾದ 24 ವರ್ಷದ ಯುವತಿ, 21 ವರ್ಷದ ಯುವಕ ಯುವನಿ ಅರ್ಜಿ ಸಲ್ಲಿಸಲು ಬಂದಿದ್ದರು. +ಈ ವೇಳೆ ಯುವತಿ ಮುಖಕ್ಕೆ ಬಟ್ಟೆ ಕಟ್ಟಿದ್ದಳು. ಯುವಕ ಹಣೆಗೆ ತಿಲಕ ಇಟ್ಟುಕೊಂಡಿದ್ದನು. ಇವರನ್ನು ಕಂಡ ಅನ್ಯಕೋಮಿನ 16 ಜನ ಯುವಕರ ಗ್ಯಾಂಗ್ ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮಿಗಳೆಂದು ಥಳಿಸಿದ್ದಾರೆ. ನಂತರ ಅವರನ್ನು ಎಳೆದೊಯ್ದು ಹತ್ತಿರವೊಂದರ ಕೊಠಡಿಯಲ್ಲಿ ಕೂಡಿ ಹಾಕಿ ರಾಡ್‍ನಿಂದ ಹಲ್ಲೆ ನಡೆಸಿದ್ದಾರೆ. +ಈ ವೇಳೆ ಯುವತಿಯನ್ನು ಎಳೆದಾಡಿ ಮಾನಭಂಗಕ್ಕೂ ಪ್ರಯತ್ನಿಸಲಾಗಿದೆ. ಸುಮಾರು 3 ಗಂಟೆಗಳ ಕಾಲ ಈ ದುರುಳರು ಅವರಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ನಂತರ ಯುವತಿ ಬಳಿ ಇದ್ದ ಯುವತಿ ಮೊಬೈಲ್‍ನಿಂದ ಕುಟುಂಬಸ್ಥರಿಗೆ ಕರೆ ಮಾಡಿದ್ದಾರೆ. ಆಗ ಕುಟುಂಬಸ್ಥರು ಅವರಿಬ್ಬರು ಸಹೋದರಿ, ಸಹೋದರರು ಅಂತ ಹೇಳಿದರೂ ನಂಬದೆ, ಮೊಬೈಲ್ ಸ್ವೀಚ್ ಆಫ್ ಮಾಡಿ ಮತ್ತೆ ಸುಳ್ಳು ಹೇಳುತ್ತಿದ್ದೀರಿ ಎಂದು ಮನಬಂದಂತೆ ಥಳಿಸಿದ್ದಾರೆ. +ಆತಂಕಗೊಂಡ ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೊಬೈಲ್ ಲೊಕೇಶನ್ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಇಬ್ಬರನ್ನೂ ರಕ್ಷಿಸಿದ್ದಾರೆ. ಒಟ್ಟು 16 ಮಂದಿಯ ಗ್ಯಾಂಗ್‍ನಲ್ಲಿ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಗಂಭೀರ ಗಾಯಗೊಂಡ ಯುವಕ ಮತ್ತು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. +ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್ +ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಮಾನಭಂಗಕ್ಕೆ ಪ್ರಯತ್ನ, ಜಾತಿನಿಂದನೆ, ಪ್ರಾಣ ಬೆದರಿಕೆ ಹಲವು ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ದೊಡ್ಡಮನ ಮಗನ ಜೊತೆ ಯುವತಿ ಯುವನಿಧಿ ಅರ್ಜಿ ಸಲ್ಲಿಸಲು ಅವರು ಕಚೇರಿಗೆ ಬಂದಿದ್ದರು. ಈ ವೇಳೆ ಒಂದು ಗಂಟೆ ಬಿಟ್ಟು ಬರುವಂತೆ ಅವರಿಗೆ ಸಿಬ್ಬಂದಿಗಳು ಹೇಳಿದರು. ಆದ್ದರಿಂದಾಗಿ ಅವರು ಹತ್ತಿರದಲ್ಲಿದ್ದ ಕೋಟೆಕೆರೆ ಬಳಿಯ ಕಟ್ಟೆಯ ಮೇಲೆ ಕುಳಿತು ಮಾತನಾಡುವಾಗ ಈ ಅನ್ಯಕೋಮಿನ ಯುವಕರು ದಾಳಿ ನಡೆಸಿ ಅಮಾನುಷವಾಗಿ ನಡೆದುಕೊಂಡಿದ್ದಾರೆ. +ನಗರ ಪ್ರಕ್ಷುಬ್ಧ:ಘಟನೆ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ. ನೈತಿಕ ಪೊಲೀಸ್‍ಗಿರಿ ಎಂದು ಹೇಳಿ ಹಿಂದೂ ಯುವಕರನ್ನು ಟಾರ್ಗೆಟ್ ಮಾಡಲಾಗುತ್ತದೆ. ಈಗ ನಗರದಲ್ಲಿ ಅಕ್ಕ-ತಮ್ಮನ ಮೇಲೆ ಮೃಗದ ರೀತಿ ವರ್ತಿಸಿರುವ ಅನ್ಯಕೋಮಿನ ಗ್ಯಾಂಗ್‍ನ ಬಗ್ಗೆ ಯಾರೂ ಚಕಾರ ಎತ್ತುತ್ತಿಲ್ಲ. ಇಲ್ಲಿನ ಕಾಂಗ್ರೆಸ್ ಶಾಸಕರು ಮೌನವಾಗಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ. +ರಾಜ್ಯಾದ್ಯಂತ ಈ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದ್ದು, ಬೆಳಗಾವಿ ನಗರ ಈ ಘಟನೆಯಿಂದ ಪ್ರಕ್ಷುಬ್ದವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ. \ No newline at end of file diff --git a/eesanje/url_46_268_3.txt b/eesanje/url_46_268_3.txt new file mode 100644 index 0000000000000000000000000000000000000000..a0f70f9621684b7ef980267f757e20ff52f8fabb --- /dev/null +++ b/eesanje/url_46_268_3.txt @@ -0,0 +1,8 @@ +ರಾಜ್ಯದಲ್ಲಿ ಕೋಮು-ಗಲಭೆ ಸಂಚು ನಡೆಯುತ್ತಿದೆ : ಕಾಂಗ್ರೆಸ್ ದೂರು +ಬೆಂಗಳೂರು,ಜ.7- ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಿಸಲು ಸಂಚು ನಡೆಸಿರುವ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರು ನೀಡಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ದಲ್ಲಿ ಬಿಜೆಪಿ ನಾಯಕರ ಆಕ್ಷೇಪಾರ್ಹ ಫೋಟೋಗಳನ್ನ ಪ್ರಕಟಿಸಿರುವುದರ ವಿರುದ್ಧ ದೂರು ನೀಡುತ್ತಿದ್ದಂತೆ ಕಾಂಗ್ರೆಸ್ ಕೂಡ ಚುರುಕಾಗಿದ್ದು ಬಿಜೆಪಿ ಮತ್ತು ಅದರ ಪಕ್ಷದ ಬೆಂಬಲಿಗರ ವಿರುದ್ಧ ದೂರು ನೀಡಲಾರಂಭಿಸಿದೆ. +ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗದ ಅಧ್ಯಕ್ಷರಾದ ಬಿ.ಎಲ್.ಚೇತನ್ ಹಲಸೂರು ಗೇಟ್ ಸೈಬರ್ ಕ್ರೈಂ ವಿಭಾಗಕ್ಕೆ ನಿನ್ನೆ ದೂರು ನೀಡಿದ್ದು, ಕೋಮುಗಲಭೆ ಸೃಷ್ಟಿಸುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜೈ ರಾಷ್ಟ್ರ ರಕ್ಷಣಾ ಪಡೆ ಎಂಬ ಹೆಸರಿನಡಿ ಸಕ್ರಿಯವಾಗಿರುವ ವಾಟ್ಸಪ್ ಗ್ರೂಪ್‍ನಲ್ಲಿ ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋಕೆ ಬಿಜೆಪಿ ನಮಗೆ ಬೆಂಬಲ ಕೊಟ್ಟಿದೆ. ಆದ್ದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿರಿ, ಎಲ್ಲಿ, ಏನು ಮಾಡಬೇಕೆಂಬುದನ್ನು ನಾವು ಈ ವಾಟ್ಸಪ್ ಗ್ರೂಪ್‍ನಲ್ಲಿ ಮಾಹಿತಿ ಕೊಡುತ್ತಿರುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ-2024 ಕ್ಕೆ ಮತ್ತೊಮ್ಮೆ ಮೋದಿ ಎಂಬ ಮೆಸೇಜ್ ಹಾಕಿದ್ದಾರೆ. ಸಂದೇಶ ರವಾನೆಯಾದ ಮೊಬೈಲ್ ಸಂಖ್ಯೆಯನ್ನು ಪರಿಶೀಲಿಸಿದಾಗ ಅದು ಪುನೀತ್ ಕೆರೆಹಳ್ಳಿ ಎಂಬುವವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ವ್ಯಕ್ತಿ ಈಗಾಗಲೇ ಕೋಮುವಾದಿ ಕುಖ್ಯಾತಿಗೆ ಒಳಗಾಗಿದ್ದಾನೆ. +ಕರ್ನಾಟಕದಾದ್ಯಂತ ಇಂತಹ ವಿಕೃತಗಳ ಹಾಗೂ ಕುಕೃತ್ಯಗಳ ರೂವಾರಿಯಾಗಿದ್ದಾನೆ. ಮತ್ತೊಮ್ಮೆ ರಾಜ್ಯದಲ್ಲಿ ಶಾಂತಿ ಕದಡುವ ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವ ಕೆಲಸಕ್ಕೆ ಮುಂದಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪುನೀತ್ ಕೆರೆಹಳ್ಳಿ ಮತ್ತು ಆತನ ಸಂಗಡಿಗರು ಎಲ್ಲೆಲ್ಲಿ ಕೋಮುಗಲಭೆ ಸೃಷ್ಟಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಪಡೆದು ದುಷ್ಕøತ್ಯ ತಡೆಯಬೇಕು, ಕೋಮುಗಲಭೆ ಎಬ್ಬಿಸಲು ಸುಪಾರಿ ಕೊಟ್ಟಿರುವ ಬಿಜೆಪಿ ಹಾಗೂ ಇತರೆ ಸಂಘಟನೆಗಳ ಮುಖಂಡರ ವಿರುದ್ಧವೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿತ್ತು. +ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್ +ಸೈಬರ್ ಕ್ರೈಂ ಪೊಲೀಸರು ದೂರು ಸ್ವೀಕರಿಸಿ ಕಾನೂನಾತ್ಮಕ ಪರಿಶೀಲನೆಗೆ ಮುಂದಾಗಿದ್ದಾರೆ. ದೂರಿನೊಂದಿಗೆ ವಾಟ್ಸಪ್ ಗ್ರೂಪ್‍ನಲ್ಲಿ ಸಂದೇಶ ಇರುವ ಸ್ಕ್ರೀನ್‍ಶಾಟ್ ಚಿತ್ರವನ್ನು ಕಾಂಗ್ರೆಸ್ ನಾಯಕರು ಲಗತ್ತಿಸಿದ್ದಾರೆ. ಕೆಪಿಸಿಸಿಯ ವಕ್ತಾರರೂ ಆಗಿರುವ ವಿಧಾನಪರಿಷತ್‍ನ ಮಾಜಿ ಸದಸ್ಯ ರಮೇಶ್‍ಬಾಬು ನೇತೃತ್ವದಲ್ಲಿ ಹಲಸೂರು ಗೇಟ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಮತ್ತೊಂದು ದೂರು ನೀಡಲಾಗಿದ್ದು, ಸನಾತನಿ ಹುಡುಗಿ ಹೆಸರಿನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಭಾವನೆ ಸೃಷ್ಟಿಸುವ ಪ್ರಚೋದನಾಕಾರಿ ಅಂಶಗಳಿವೆ ಎಂದು ಆಕ್ಷೇಪಿಸಲಾಗಿದೆ. +ಅನಾಮಧೇಯ ಹೆಣ್ಣು ಮಗಳೊಬ್ಬಳು ವಿಡಿಯೋ ಮಾಡಿ, ಸನಾತನ ಹುಡುಗಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಅದರಲ್ಲಿ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಅೀಧಿನದಲ್ಲಿರುವ ದೇವಾಲಯಗಳಿಗೆ ಭೇಟಿ ನೀಡಿದಾಗ ದೇಣಿಗೆ ನೀಡಬೇಡಿ, ಅದು ಸರ್ಕಾರಕ್ಕೆ ಹೋಗುತ್ತದೆ, ಅನ್ಯ ಧರ್ಮಗಳಿಗೆ ಬಳಕೆಯಾಗುತ್ತದೆ, ಕೇವಲ ಒಂದು ರೂಪಾಯಿ ಮಾತ್ರ ನೀಡಿ. ಖಾಸಗಿ ದೇವಾಲಯಗಳಿಗೆ ದೇಣಿಗೆ ಹೆಚ್ಚು ನೀಡಿ ಎಂದು ಸಂದೇಶ ನೀಡಲಾಗಿದೆ. +ಧರ್ಮದ ನಡುವೆ ಒಡಕು ಉಂಟು ಮಾಡುವ ಧಾರ್ಮಿಕ ದತ್ತಿ ಇಲಾಖೆಗಳಿಗೆ ಮಸಿ ಬಳಿಯುವ ಹುನ್ನಾರ ಮತ್ತು ಕುತಂತ್ರಗಳು ನಡೆದಿವೆ. ಸಮಾಜದ ಶಾಂತಿ ಕದಡುವ ರಾಜ್ಯವಿರೋ ಹಾಗೂ ಹಿಂದೂ ಧರ್ಮ ವಿರೋಧಿಗಳನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಪುಟ್ಟರಾಜು ಅವರ ಹೆಸರಿನಲ್ಲಿ ದೂರು ಸ್ವೀಕರಿಸಿರುವ ಪೊಲೀಸರು ಕಾನೂನಾತ್ಮಕ ಅಂಶಗಳನ್ನು ಪರಿಶೀಲಿಸುತ್ತಿದ್ದಾರೆ. \ No newline at end of file diff --git a/eesanje/url_46_268_4.txt b/eesanje/url_46_268_4.txt new file mode 100644 index 0000000000000000000000000000000000000000..f863b7f70caee8467bde156c4cee0afdc00265d8 --- /dev/null +++ b/eesanje/url_46_268_4.txt @@ -0,0 +1,11 @@ +ಮುಸಲ್ಮಾನ ಗೂಂಡಾಗಳಿಂದ ನೈತಿಕ ಪೋಲೀಸ್‍ಗಿರಿ : ಈಶ್ವರಪ್ಪ ಆಕ್ರೋಶ +ಬೆಳಗಾವಿ,ಜ.7- ಬೆಳಗಾವಿಯಲ್ಲಿ ನಡೆದಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಮುಸ್ಲಿಂ ಗೂಂಡಾಗಳನ್ನುಮಟ್ಟ ಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿನ್ ಲಂಬಾಣಿ ಎಂಬ ಯುವಕನ ಮೇಲೆ ಹಲ್ಲೆಯಾಗಿದೆ. ಅವರ ಸಂಬಂಧಿಕರು ಮುಸಲ್ಮಾನರಾಗಿ ಮತಾಂತರ ಆಗಿದ್ದಾರೆ. ಆತನ ಜೊತೆ ಕುಳಿತಿದ್ದ ಹೆಣ್ಣುಮಗಳು ಸಚಿನ್‍ಗೆ ತಂಗಿಯಾಗಬೇಕು. ಇಬ್ಬರೂ ಯುವನಿಗೆ ಅರ್ಜಿ ಸಲ್ಲಿಸಲು ಆಗಮಿಸಿದ್ದರು. ಕಚೇರಿಯಲ್ಲಿ ಒಂದು ಗಂಟೆಯ ಬಳಿಕ ಬರುವಂತೆ ಹೇಳಿದ್ದರಿಂದಾಗಿ ಹೊರಗಡೆ ಕುಳಿತಿದ್ದರು. ಆ ಸಂದರ್ಭದಲ್ಲಿ ಕೆಲವು ಮುಸಲ್ಮಾನ ಗೂಂಡಾಗಳು ಬಂದು, ನೈತಿಕ ಪೊಲೀಸ್‍ಗಿರಿ ನಡೆಸಿದ್ದಾರೆ ಎಂದು ಹೇಳಿದರು. +ಮುಸ್ಲಿಂ ಹುಡುಗಿಯ ಜೊತೆ ಕುಳಿತಿದ್ದೀಯ ಎಂದು ಹೇಳಿ ಸಚಿನ್ ಲಂಬಾಣಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಕೂಡಿ ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆತ ಕಷ್ಟಪಟ್ಟು ತಪ್ಪಿಸಿಕೊಂಡು ಬಂದಿದ್ದಾನೆ. ಹಲ್ಲೆಯ ವಿಡಿಯೋಗಳನ್ನು ನಾನು ನೋಡಿದ್ದೇನೆ. ಅವುಗಳನ್ನು ಮಾದ್ಯಮದಲ್ಲಿ ಪ್ರಸಾರ ಮಾಡುವ ಮೂಲಕ ಮುಸ್ಲಿಂ ಗೂಂಡಾಗಳ ದೌರ್ಜನ್ಯದ ಕುರಿತು ಜನಜಾಗೃತಿ ಮೂಡಿಸಬೇಕು. ಯುವತಿಯ ಮೇಲೂ ದೌರ್ಜನ್ಯವಾಗಿದೆ ಎಂಬ ಆರೋಪಗಳಿವೆ. ಆದರೆ ನನಗೆ ಖಚಿತವಾದ ಮಾಹಿತಿಗಳಿಲ್ಲ. ಆಕೆ ಮುಸಲ್ಮಾನರಾಗಿದ್ದರೂ ಕೂಡ ನ್ಯಾಯ ದೊರಕಿಸಬೇಕು ಎಂದು ಹೇಳಿದರು. +ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್ +ಬೆಳಗಾವಿಯಲ್ಲಿ ಪೊಲೀಸ್ ವ್ಯವಸ್ಥೆ ವೈಫಲ್ಯ ಕಂಡಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ್ದೂ ಸೇರಿದಂತೆ ಇತ್ತೀಚೆಗೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು. +ಕಾಂಗ್ರೆಸಿಗರು ಹಿಂದೂ, ಮುಸ್ಲಿಂ ನಡುವೆ ಗಲಾಟೆ ಸೃಷ್ಟಿಸಿ, ಅದರಿಂದಾಗಿಯೇ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸಂಚು ರೂಪಿಸಿದ್ದಾರೆ. ಹೀಗಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯ ಕರಸೇವಕ ಪ್ರಕರಣದಲ್ಲಿ 14 ಕೇಸುಗಳಿವೆ ಎಂದು ಸುಳ್ಳು ಹೇಳಿದರು. ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಯಿತು. ಇದಕ್ಕೆ ಜನರೂ ಬೆಂಬಲ ನೀಡಿದರು. ಕೋರ್ಟಿಗೂ ಮನವರಿಕೆಯಾಗಿ ಬಂಧಿತನಿಗೆ ಜಾಮೀನು ಸಿಕ್ಕಿದೆ ಎಂದು ಹೇಳಿದರು. +ಮುಖ್ಯಮಂತ್ರಿಯವರು ಹುಬ್ಬಳ್ಳಿಯಷ್ಟೇ ಅಲ್ಲ, ಹಿಜಾಬ್ ವಿಷಯದಲ್ಲೂ ನ್ಯಾಯಾಲಯವನ್ನು ಮೀರಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಅಲ್ಪಸಂಖ್ಯಾತರನ್ನು ಓಲೈಸುವುದೇ ದೊಡ್ಡ ಕೆಲಸವಾಗಿದೆ ಎಂದರು. ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ಮೃದು ಧೋರಣೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಎಲ್ಲರೂ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಈಶ್ವರಪ್ಪ ಆಗಲು ಸಾಧ್ಯವಿಲ್ಲ ಎಂದು ಹೇಳಿದರು. +ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತು ಹೋಗಿದೆಯೇ ಎಂಬ ಅನುಮಾನಗಳು ಬರುತ್ತಿವೆ. ರಾಜ್ಯಸರ್ಕಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಕೃತ್ಯಗಳು ನಡೆಯದಂತೆ ಪಾಠ ಕಲಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಬಿಜೆಪಿಯವರ ವಿರುದ್ಧ ಎಷ್ಟೇ ಪ್ರಕರಣಗಳನ್ನು ದಾಖಲಿಸಿದರೂ ನಾವು ಹೆದರುವುದಿಲ್ಲ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಲಕ್ಷಾಂತರ ಪ್ರಕರಣವನ್ನು ದಾಖಲಿಸಲಾಗಿತ್ತು. ಈಗ ಬೇಕಿದ್ದರೆ ಅವುಗಳಿಗೂ ಮರುಜೀವ ನೀಡಲಿ. ನಮಗೆ ಯಾವುದೇ ಅಂಜಿಕೆಯಿಲ್ಲ ಎಂದು ಹೇಳಿದರು. +ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ : ಡಿಕೆಶಿ +ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆ ಚುನಾವಣೆಯಿಂದ ಸ್ರ್ಪಧಿಸಲು ಅವಕಾಶ ನೀಡಿದರೆ ಗೆಲುವು ಸಾಧ್ಯವಾಗುತ್ತದೆ. ಯಾರಿಗೇ ಕೊಟ್ಟರೂ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ. ಅಲ್ಲಿನ ಹಾಲಿ ಸಂಸದ ಶಿವಕುಮಾರ್ ಉದಾಸಿ ಜೊತೆ ತಾವು ಚರ್ಚೆ ಮಾಡಿದ್ದು, ಅವರು ಮತ್ತೆ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಹೇಳಿದ್ದಾರೆ. ಪಕ್ಷದ ಹಿರಿಯರ ಜೊತೆ ಸಮಾಲೋಚನೆ ನಡೆಸಿದಾಗ, ನೀವು ಕೆಲಸ ಮಾಡಿ ಎಂದು ಸಲಹೆ ನೀಡಿದರು. ಅದರಂತೆ ನಾವು ಓಡಾಡುತ್ತಿದ್ದೇವೆ ಎಂದರು. +ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಸಂಸದರಾಗಿದ್ದಾರೆ. ಅವರಿಗೆ ತೊಂದರೆ ಕೊಟ್ಟು ನಾವು ಟಿಕೆಟ್ ಕೇಳುವುದಿಲ್ಲ. ಹೀಗಾಗಿ ಖಾಲಿ ಇರುವ ಹಾವೇರಿ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_268_5.txt b/eesanje/url_46_268_5.txt new file mode 100644 index 0000000000000000000000000000000000000000..b6378f1bd88798c5a1667eb2bea8ff5354d4183d --- /dev/null +++ b/eesanje/url_46_268_5.txt @@ -0,0 +1,5 @@ +ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ : ಬಿಎಸ್‌ವೈ +ಬೆಂಗಳೂರು,ಜ.7- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಾಯಕತ್ವದಲ್ಲಿ ಭಾರತ ರಾಮರಾಜ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. +ಡಾಲರ್ಸ್ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ನಿವೃತ್ತ ನ್ಯಾಯಮೂರ್ತಿ ಪತ್ರೆ ಬಸವನಗೌಡ ಅವರ ಮನೆಯೂ ಸೇರಿದಂತೆ ಹಲವು ಮನೆಗಳಿಗೆ ಭೇಟಿ ನೀಡಿ, ಮಂತ್ರಾಕ್ಷತೆಯನ್ನು ವಿತರಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ಹಿಂದೂಗಳು ಶತಮಾನಗಳಿಂದ ಕಂಡಿರುವ ಕನಸು ಕೆಲವೇ ದಿನಗಳಲ್ಲಿ ನನಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆಯನ್ನು ಮನೆಮನೆಗೆ ತಲುಪಿಸುವ ಕೆಲಸವನ್ನು ಕರಸೇವಕರು ಮಾಡುತ್ತಿದ್ದಾರೆ ಎಂದು ಹೇಳಿದರು. +ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ +ಕರಸೇವಕನಾಗಿ ರಾಮಮಂದಿರ ಚಳುವಳಿಯಲ್ಲಿ ಭಾಗವಹಿಸಿದ್ದು ನನ್ನ ಬಾಳಿನ ಸುದಿನ. ಈಗ ಮತ್ತೊಮ್ಮೆ ಕರಸೇವಕನಾಗಿ ರಾಮನ ಸೇವೆ ಮಾಡುವ ಅವಕಾಶ ಸಿಕ್ಕಿದೆ ಎಂದರು. ರಾಮಮಂದಿರದ ಜೊತೆಗೆ ದೇಶ ರಾಮರಾಜ್ಯವಾಗುತ್ತಿದೆ ಎಂದು ಹೇಳುವುದಕ್ಕೆ ನನಗೆ ಯಾವುದೇ ಮುಜುಗರ ಇಲ್ಲ. ಟೀಕೆ, ಟಿಪ್ಪಣಿಗಳಿಗೆ ಉತ್ತರ ನೀಡುವುದಿಲ್ಲ. ನಾವು ನಮ್ಮ ಪಾಲಿನ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_268_6.txt b/eesanje/url_46_268_6.txt new file mode 100644 index 0000000000000000000000000000000000000000..199e05a65b7c9f44547b0a8659a8393590ebfe1e --- /dev/null +++ b/eesanje/url_46_268_6.txt @@ -0,0 +1,6 @@ +ಮಂತ್ರಿ ಮಾಡ್ತೀನಿ ಎಂದು ಸಿಎಂ ಭರವಸೆ ನೀಡಿದ್ದಾರೆ : ಶಾಸಕ ಬಸವರಾಜ ರಾಯರೆಡ್ಡಿ +ಕೊಪ್ಪಳ,ಜ.7-ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗುವುದಾದರೆ ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ, ನಾನು ಅದೇ ವಿಶ್ವಾಸದಲ್ಲಿದ್ದೇನೆ ಎಂದು ಹಿರಿಯ ಶಾಸಕ ಬಸವರಾಜರಾಯರೆಡ್ಡಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ನೀಡಿದ ತಮ್ಮ ಹೇಳಿಕೆಗೆ ಬದ್ಧ ಎಂದು ತಿಳಿಸಿದ್ದಾರೆ. ಸರ್ಕಾರ ರಚನೆಯಾಗುವ ವೇಳೆ ನನ್ನನ್ನು ಮಂತ್ರಿ ಮಾಡುವುದಾಗಿ ಸಿದ್ದರಾಮಯ್ಯ ಸಂದೇಶ ಕಳುಹಿಸಿದ್ದರು. ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಯೋಜನಾ ಇಲಾಖೆಗಳ ಖಾತೆ ನೀಡುವುದಾಗಿಯೂ ಹೇಳಿದ್ದರು. ಆದರೆ ರಾಜಕೀಯ ಕಾರಣಕ್ಕಾಗಿ ಕೊನೆ ಕ್ಷಣದ ಬದಲಾವಣೆಗಾಗಿ ಅವಕಾಶ ತಪ್ಪಿ ಹೋಗಿದೆ ಎಂದರು. +ಸಚಿವ ಸ್ಥಾನ ಸೇರಿದಂತೆ ರಾಜಕೀಯ ಹುದ್ದೆಗಳು ಸರ್ಕಾರ ನೇಮಕಾತಿಗಳಂತಲ್ಲ. ಇಲ್ಲಿ ನಾನಾ ರೀತಿಯ ಹೊಂದಾಣಿಕೆಗಳಿರುತ್ತವೆ. ಸಚಿವರಾಗಲು ಅನುಭವ, ಹಿರಿತನ, ಕಿರಿತನ ಎಂಬ ಮಾನದಂಡಗಳು ಲೆಕ್ಕಕ್ಕಿರುವುದಿಲ್ಲ. 25 ವರ್ಷ ದಾಟಿದವರು, ಒಳ್ಳೆಯ ನಡತೆ ಹೊಂದಿದವರು ಪ್ರಧಾನಿ ಬೇಕಾದರೂ ಆಗಬಹುದು ಎಂದು ಹೇಳಿದರು. +ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ +ರಾಜಕೀಯದಲ್ಲಿ 5 ನಿಮಿಷಗಳಲ್ಲೇ ಏನು ಬೇಕಾದರೂ ಬದಲಾವಣೆಗಳಾಗುವ ಸಾಧ್ಯತೆಗಳಿವೆ. ಹಿಂದೆ ನನಗೆ ಸಚಿವ ಸ್ಥಾನ ತಪ್ಪಿ ಹೋಗಿತ್ತು. ಲೋಕಸಭೆ ಚುನಾವಣೆಯಾದ ಬಳಿಕ ಅವಕಾಶ ಸಿಗುವ ನಿರೀಕ್ಷೆಗಳಿವೆ. ಮುಖ್ಯಮಂತ್ರಿಯವರೇ ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದನ್ನು ನಂಬಿಕೊಂಡಿದ್ದೇನೆ. ಆದರೆ ಅವಕಾಶ ಸಿಕ್ಕರೂ ಸಿಗಬಹುದು, ಸಿಗದೆಯೂ ಇರಬಹುದು. ಇದೇನು ಬಾಂಡ್ ಮೇಲೆ ಬರೆದುಕೊಡುವ ವಿಚಾರವಲ್ಲ ಎಂದರು. +ಲೋಕಸಭೆ ಚುನಾವಣೆಯ ಬಳಿಕ ಎಂದರೆ ಸಾಮಾನ್ಯವಾಗಿ ಜೂನ್-ಜುಲೈನಲ್ಲಿ ಸಂಪುಟ ವಿಸ್ತರಣೆಯಾಗಬಹುದು ಎಂಬುದು ನಮ್ಮ ಲೆಕ್ಕಾಚಾರ. ಆ ಹಿನ್ನೆಲೆಯಲ್ಲಿ ತಾವು ನಿನ್ನೆ ಹೇಳಿಕೆ ನೀಡಿದ್ದಾಗಿ ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_268_7.txt b/eesanje/url_46_268_7.txt new file mode 100644 index 0000000000000000000000000000000000000000..9bdfff0114492a97ee806cd32a8a92bb46d9afab --- /dev/null +++ b/eesanje/url_46_268_7.txt @@ -0,0 +1,8 @@ +ರಾಜ್ಯದಲ್ಲಿ ನದಿಗಳ ಜೋಡಣೆ ಅಧ್ಯಯನಕ್ಕೆ ಕೇಂದ್ರ ನಿಯೋಗ +ಬೆಂಗಳೂರು,ಜ.7- ದೇಶದಲ್ಲಿ ನದಿ ಜೋಡಣೆ ವಿಷಯ ಕುರಿತು ಅಧ್ಯಯನ ನಡೆ ಸುತ್ತಿರುವ ಕೇಂದ್ರ ಸಂಸದರ ನಿಯೋಗ ಇದೇ 17 ಮತ್ತು 18 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡು ನಮ್ಮ ನದಿಗಳನ್ನು ವೀಕ್ಷಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. +ನದಿ ಜೋಡಣೆ ದೇಶಾದ್ಯಂತ ದೊಡ್ಡ ವಿಷಯವಾಗಿ ಚರ್ಚೆಯಾಗುತ್ತಿದೆ. ಇದರ ಬಗ್ಗೆ ಸದ್ಯಕ್ಕೆ ವಿಸ್ತೃತವಾದ ಸಮಾಲೋಚನೆಗಳು ನಡೆಯುತ್ತಿವೆ. 31 ಜನ ಸಂಸದರ ನಿಯೋಗ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನೀರಾವರಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಲಿದೆ ಎಂದು ಹೇಳಿದರು. ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ, ಕೃಷ್ಣ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳನ್ನು ಸಂರಕ್ಷಿಸಲು ತಕ್ಷಣದಿಂದಲೇ 2.75 ಟಿಎಂಸಿ ನೀರನ್ನು ಕಾಲುವೆಗಳಿಗೆ ಹರಿಸಲಾಗುತ್ತಿದೆ ಎಂದು ತಿಳಿಸಿದರು. +ಕೃಷ್ಣ ಮೇಲ್ದಂಡೆ ಯೋಜನೆ ವ್ಯಾಪ್ತಿಯ ರಾಯಚೂರು, ಬಾಗಲಕೋಟೆ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳ ರೈತರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಚಿವರು, ಜಿಲ್ಲಾಧಿಕಾರಿಗಳು, ನೀರಾವರಿ ಅಧಿಕಾರಿಗಳು ಸೇರಿದಂತೆ ಎಲ್ಲರೊಂದಿಗೆ ನಿನ್ನೆ ರಾತ್ರಿ ವಿಡಿಯೋ ಕಾನರೆನ್ಸ್ ಸಭೆ ನಡೆಸಲಾಗಿದೆ. ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗೆ ನೀರು ಒದಗಿಸುವಂತೆ ಒತ್ತಾಯಿಸಿ ರೈತರು ಕಚೇರಿಯ ಮುಂದೆ ಗುಂಡಿ ತೋಡಿಕೊಂಡು ಅದರಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರವನ್ನು ಈ ರೀತಿಯ ಬ್ಲಾಕ್‍ಮೇಲ್ ಮಾಡುವುದು ಒಳ್ಳೆಯದಲ್ಲ ಎಂದು ನಾನು ಅವರಿಗೆ ತಿಳಿಸಿದ್ದೇನೆ ಎಂದರು. +ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳೆರಡರಿಂದಲೂ ಒಟ್ಟು 154 ಟಿಎಂಸಿ ನೀರು ಸಂಗ್ರಹ ಸಾಮಥ್ರ್ಯವಿದೆ. ಆದರೆ ಪ್ರಸ್ತುತ 2 ಜಲಾಶಯಗಳಿಂದಲೂ 47.01 ಟಿಎಂಸಿ ಮಾತ್ರ ಲಭ್ಯವಿದೆ. ಇದರಲ್ಲಿ ಕುಡಿಯುವ ನೀರು ಹಾಗೂ ಇತರ ಅಗತ್ಯಗಳಿಗಾಗಿ ಮುಂದಿನ ಜೂನ್ 30 ರವರೆಗೂ 38.788 ಟಿಂಎಂಸಿ ನೀರಿನ ಅಗತ್ಯವಿದೆ. ಬಾಷ್ಪೀಕರಣ ಹಿನ್ನೀರಿನ ಬಳಕೆಗೆ 3.90 ಟಿಎಂಸಿ ನೀರನ್ನು ರಕ್ಷಿಸಬೇಕು. ಆಲಮಟ್ಟಿಯಿಂದ ನಾರಾಯಣಪುರ ಜಲಾಶಯಕ್ಕೆ ನೀರು ಹರಿಯುವಾಗ 1.50 ಟಿಎಂಸಿ ಸರಬರಾಜು ನಷ್ಟವಾಗಲಿದೆ. ಇದನ್ನೆಲ್ಲಾ ಪರಿಗಣಿಸಿದರೆ ಒಟ್ಟು 44.188 ಟಿಎಂಸಿಯನ್ನು ಕಾಯ್ದಿರಿಸಬೇಕು. ಬಳಕೆಗೆ ಲಭ್ಯವಿರುವುದು 2.8 ಟಿಎಂಸಿ ಮಾತ್ರ. ಇದರಲ್ಲಿ 2.75 ಟಿಎಂಸಿಯನ್ನು ತಕ್ಷಣದಿಂದಲೇ ಹರಿಸಲಾಗುವುದು ಎಂದು ತಿಳಿಸಿದರು. +ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ +ಬಿಡುಗಡೆ ಮಾಡುವ ನೀರನ್ನು ಅಚ್ಚುಕಟ್ಟು ಭಾಗದ ಕೊನೆಯವರೆಗೂ ತಲುಪಿಸುವ ಜವಾಬ್ದಾರಿಯನ್ನು ಖುದ್ದು ರೈತ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಪೊಲೀಸ್ ಇಲಾಖೆಯವರು ನಿರ್ವಹಿಸಬೇಕಿದೆ ಎಂದು ಹೇಳಿದರು. +ರಾಜ್ಯದಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಭಾಗದಲ್ಲಿ 92 ತಾಲೂಕುಗಳು ಬರಪೀಡಿತವಾಗಿದೆ. ಸದ್ಯಕ್ಕೆ ಮಳೆ ಬರುವ ನಿರೀಕ್ಷೆ ಕಡಿಮೆ ಇದೆ. ಹೀಗಾಗಿ ಜಲಾಶಯದಲ್ಲಿನ ನೀರನ್ನು ಕಾಯ್ದುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದರು. \ No newline at end of file diff --git a/eesanje/url_46_268_8.txt b/eesanje/url_46_268_8.txt new file mode 100644 index 0000000000000000000000000000000000000000..125784de96081d0281d567f3edb19c1337db782f --- /dev/null +++ b/eesanje/url_46_268_8.txt @@ -0,0 +1,6 @@ +ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್ +ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ. +ಈ ಕುರಿತು ತಮ್ಮ ಆಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದ್ದಾರೆ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂದಿರುವ ಅವರು, ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ. +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಟೀಕಿಸಿದ್ದಾರೆ. +ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿದ್ದ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿದ್ದ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_268_9.txt b/eesanje/url_46_268_9.txt new file mode 100644 index 0000000000000000000000000000000000000000..6cf7343240cb0904f1150af359e247f03b8f6906 --- /dev/null +++ b/eesanje/url_46_268_9.txt @@ -0,0 +1,9 @@ +ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ಕಾಂಗ್ರೆಸ್ ವರ್ತಿಸುತ್ತಿದ್ದೆ : ವಿಜಯೇಂದ್ರ +ಬೆಂಗಳೂರು,ಜ.7-ಕಾಂಗ್ರೆಸ್ ನಾಯಕರು ವಿನಾಶಕಾಲೇ ವಿಪರೀತ ಬುದ್ಧಿ ಎಂಬಂತೆ ವರ್ತಿಸುತ್ತಿದ್ದಾರೆ. ಧರ್ಮ-ಧರ್ಮಗಳ ಹಾಗೂ ಸಮಾಜಗಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. +ಅಯೋಧ್ಯೆ ರಾಮಮಂದಿರದಲ್ಲಿ ರಾಮಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಯುಕ್ತ ಮಂತ್ರಾಕ್ಷತೆ ವಿತರಿಸಿ ಜನಜಾಗೃತಿ ಮೂಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ದೇಶದಲ್ಲಿ ಎಲ್ಲರೂ ಒಂದು ಎಂಬ ಭಾವನೆ ಮೂಡುತ್ತಿದೆ. ಇಂತಹ ಶುಭ ವೇಳೆ ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಠೀಕರಣದ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಯತ್ನ ನಡೆಸುತ್ತಿದೆ ಎಂದು ಕಿಡಿಕಾರಿದರು. +ಕಾಂಗ್ರೆಸ್‍ಗೆ ತಾವು ಅಲ್ಪಸಂಖ್ಯಾತರ ಮತಗಳಿಂದಲೇ ಅಧಿಕಾರಕ್ಕೆ ಬಂದಿದ್ದೇವೆ ಎಂಬ ಭಾವನೆ ಇದೆ. ಇದಕ್ಕಾಗಿ ರೈತರೂ ಸೇರಿದಂತೆ ಎಲ್ಲಾ ವರ್ಗಗಳನ್ನೂ ಕಡೆಗಣಿಸುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ನೀಡುತ್ತೇವೆ ಎನ್ನುವುದರೊಂದಿಗೆ ಡಿಜೆ ಹಳ್ಳಿ/ಕೆಜೆ ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ದೇಶದ್ರೋಹಿಗಳನ್ನು ಅಮಾಯಕರು ಎಂದು ಬಿಂಬಿಸುವ ಪ್ರಯತ್ನಗಳಾಗುತ್ತಿವೆ ಎಂದು ಅವರು ದೂರಿದರು. +ಬಾಂಗ್ಲಾ ಸಾರ್ವತ್ರಿಕ ಚುನಾವಣೆ, ಬಿಗಿ ಭದ್ರತೆ ನಡುವೆ ಮತದಾನ +ಒಂದು ವೇಳೆ ಕೆಜೆ ಹಳ್ಳಿ/ಡಿಜೆ ಹಳ್ಳಿ ಪ್ರಕರಣದಲ್ಲಿನ ಆರೋಪಿಗಳನ್ನು ಬಿಡುಗಡೆ ಮಾಡಿದರೆ ಅದು ಇನ್ನಿತರ ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತದೆ. ಪೊಲೀಸ್ ಠಾಣೆಗಳಿಗೆ ಬೆಂಕಿ ಇಟ್ಟವರನ್ನು ಬಿಡುಗಡೆ ಮಾಡಿದ್ದಾರೆ ಎಂಬ ಧೋರಣೆಯಿಂದ ಇತರರು ಅದೇ ರೀತಿಯ ಕೃತ್ಯಗಳಲ್ಲಿ ತೊಡಗುವ ಆತಂಕವಿದೆ ಎಂದು ಹೇಳಿದರು. +ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಅವರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರು ತ್ರಿಬ್ಬಲ್ ತಲಾಕ್ ನಿಷೇಧ ಜಾರಿಗೆ ತಂದಿದ್ದಾರೆ. ಆದರೆ ದುಷ್ಕøತ್ಯಗಳಲ್ಲಿ ಭಾಗಿಯಾದವರನ್ನು ರಕ್ಷಿಸುವುದು ಅಕ್ಷಮ್ಯ ಅಪರಾಧ ಎಂದರು. +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಕಾಂಗ್ರೆಸ್‍ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗು ಬಡಿಯಬೇಕು, ಸೊಕ್ಕು ಮುರಿಯಬೇಕು ಎಂದು ಅವರದೇ ಪಕ್ಷದ ಮಹಾನ್ ನಾಯಕರು ಯೋಜನೆ ರೂಪಿಸಿದ್ದಾರೆ. ಅದಕ್ಕಾಗಿ 3 ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಕುರಿತು ಚರ್ಚೆಗಳಾಗುತ್ತಿವೆ. ಅವರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು. \ No newline at end of file diff --git a/eesanje/url_46_269_1.txt b/eesanje/url_46_269_1.txt new file mode 100644 index 0000000000000000000000000000000000000000..8057259b792bae493d050a3ec5dce24158a04319 --- /dev/null +++ b/eesanje/url_46_269_1.txt @@ -0,0 +1,9 @@ +ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜ.7- ಪ್ರತಿ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಸ್ಥಾಪನೆ ಸೇರಿದಂತೆ ಚಿತ್ರಕಲಾ ಪರಿಷತ್ತಿನ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಕುಮಾರಕೃಪದಲ್ಲಿರುವ ಚಿತ್ರಕಲಾ ಪರಿಷತ್ತಿನಲ್ಲಿ 21 ನೇ ಚಿತ್ರಸಂತೆಯನ್ನು ಕ್ಯಾನ್‍ವಾಸ್ ಮೇಲೆ ಸಹಿ ಹಾಕುವ ಮೂಲಕ ಉದ್ಘಾಟಿಸಿದ ಮುಖ್ಯಮಂತ್ರಿಯವರು ಮಾತನಾಡಿದರು. +ಈ ಬಾರಿಯ ಚಿತ್ರಸಂತೆಯನ್ನು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಅಭೂತಪೂರ್ವ ಸಾಧನೆಗಳನ್ನು ಮಾಡಿದ ವಿಜ್ಞಾನಿಗಳಿಗೆ ಸಮರ್ಪಿಸಿರುವುದು ಸ್ವಾಗತಾರ್ಹ ಎಂದರು. ಈ ಮೊದಲು 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ವರ್ಷವೂ ಚಿತ್ರಸಂತೆಯನ್ನು ಉದ್ಘಾಟನೆ ಮಾಡಿದ್ದೆ. ಇದು ನನಗೆ ಮುಖ್ಯಮಂತ್ರಿಯಾಗಿ 6ನೇ ಕಾರ್ಯಕ್ರಮ ಎಂದರು. +ಚಿತ್ರಕಲಾ ಪರಿಷತ್ತಿನ ಬೆಳವಣಿಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿಯವರು, ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಲಾವಿದರಿಗೆ ಸ್ವಾಗತ ಕೋರಿದರು. ಈ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಚಿತ್ರಕಲಾ ಪರಿಷತ್‍ಗೆ 1 ಕೋಟಿ ರೂ.ಗಳ ಅನುದಾನ ನೀಡಿದ್ದೆ, ಈ ಬಾರಿ 10 ಲಕ್ಷ ರೂ.ಗಳನ್ನು ಕೊಡುವುದಾಗಿ ಭರವಸೆ ನೀಡಿದ್ದೆ. ಅದನ್ನು 50 ಲಕ್ಷ ರೂ.ಗಳಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಇದೇ ವೇಳೆ ಮತ್ತಷ್ಟು ಹೆಚ್ಚು ಅನುದಾನ ನೀಡುವಂತೆ ಚಿತ್ರಕಲಾ ಪರಿಷತ್‍ನ ಪ್ರಭಾಕರ್ ಮನವಿ ಮಾಡಿದಾಗ, ‘ಏಯ್ ಸುಮ್ನಿರಪ್ಪ, ಎಲ್ಲವನ್ನೂ ಒಳಗೊಂಡು 50 ಲಕ್ಷ ರೂ. ಕೊಡುತ್ತೇನೆ, ಮುಂದಿನ ವರ್ಷ ಹೆಚ್ಚು ಮಾಡುತ್ತೇನೆ ಎಂದು ಭರವಸೆ ನೀಡಿದರು. +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಒಂದೇ ರಸ್ತೆಯಲ್ಲಿ ಸಾವಿರಾರು ಕಲಾವಿದರು ಭಾಗವಹಿಸುವಂತಹ ಕಾರ್ಯಕ್ರಮ ವಿಶ್ವದಲ್ಲಿ ಎಲ್ಲಿಯೂ ನಡೆಯುವುದಿಲ್ಲ. ಅದು ಬೆಂಗಳೂರಿನಲ್ಲಿ 2003 ರಿಂದಲೂ ನಿರಂತರವಾಗಿ ನಡೆದುಕೊಂಡು ಬಂದಿದೆ. ಮುಖ್ಯಮಂತ್ರಿಗಳ ನಿವಾಸವಿರುವ ಕುಮಾರಕೃಪ ರಸ್ತೆಯಲ್ಲಿ ಒಂದು ದಿನ ಸಂಚಾರವನ್ನು ಸ್ಥಗಿತಗೊಳಿಸಿ ಚಿತ್ರಸಂತೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ. ಕುಮಾರಕೃಪ, ಗಾಂಧಿ ಭವನ, ಸೇವಾದಳ ರಸ್ತೆಗಳಷ್ಟೇ ಅಲ್ಲದೆ ಈ ಬಾರಿ ಶಿವಾನಂದ ವೃತ್ತವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕೆಳಭಾಗದಲ್ಲೂ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದರು. +22 ರಾಜ್ಯಗಳಿಂದ ಸುಮಾರು 2,900 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಲು ಆಸಕ್ತಿ ವಹಿಸಿದ್ದರು. ಆದರೆ 1,684 ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ. ಅರ್ಜಿ ಸಲ್ಲಿಸಿದ 280 ವಿಶೇಷ ಚೇತನರು ಹಾಗೂ ಹಿರಿಯ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು. ಸಚಿವರಾದ ಎಚ್.ಕೆ.ಪಾಟೀಲ್, ಡಾ.ಎಂ.ಸಿ.ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್, ಚಿತ್ರಕಲಾ ಪರಿಷತ್‍ನ ಉಪಾಧ್ಯಕ್ಷ ಪ್ರಭಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. +ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ +ತಮಿಳುನಾಡಿನ ಕಲಾವಿದ ಮೇಯಪ್ಪನ್ ನೇತೃತ್ವದಲ್ಲಿ ಅದ್ಭುತವಾದ ಚಿತ್ರಕಲೆಯನ್ನು ಮುಖ್ಯಮಂತ್ರಿಯವರ ಖಾಸಗಿ ಸಂಗ್ರಹಕ್ಕೆ ಕೊಡುಗೆಯಾಗಿ ನೀಡಲಾಯಿತು. \ No newline at end of file diff --git a/eesanje/url_46_269_10.txt b/eesanje/url_46_269_10.txt new file mode 100644 index 0000000000000000000000000000000000000000..6467727ceaca3a3cb8e564794afd2e27d0fa4d24 --- /dev/null +++ b/eesanje/url_46_269_10.txt @@ -0,0 +1,6 @@ +ಸೋಮಣ್ಣರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ : ಸಿ.ಟಿ.ರವಿ +ಬೆಂಗಳೂರು,ಜ.6- ಯಾವುದೇ ಕಾರಣಕ್ಕೂ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಪಕ್ಷದಿಂದ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ಪಕ್ಷದ ಹಿರಿಯರು ಹಾಗೂ ಪ್ರಭಾವಿ ನಾಯಕರೂ ಹೌದು. ಅವರಿಗೆ ಕಳೆದ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಅದೊಂದೇ ಕಾರಣಕ್ಕಾಗಿ ಅವರನ್ನು ಬಿಟ್ಟುಕೊಡುವುದಿಲ್ಲ ಎಂದರು. +ಸೋಮಣ್ಣನವರ ಶಕ್ತಿ ಮತ್ತು ಸಾಮಥ್ರ್ಯವನ್ನು ನಾವು ಬಳಸಿಕೊಳ್ಳುತ್ತೇವೆ. ಅವರ ಹಿರಿತನಕ್ಕೆ ತಕ್ಕಂತೆ ಜವಾಬ್ದಾರಿಯನ್ನು ಪಕ್ಷ ನೀಡಲಿದೆ. ಎಂಥದ್ದೇ ಸಂದರ್ಭದಲ್ಲೂ ಅವರಿಗೆ ಮುಜುಗರವಾಗುವ ರೀತಿ ನಡೆದುಕೊಳ್ಳುವುದಿಲ್ಲ. ಅವರಿಗೆ ಖಂಡಿತವಾಗಿಯೂ ಸೂಕ್ತವಾದ ಸ್ಥಾನಮಾನ ಸಿಗಲಿದೆ. ರಾಜಕಾರಣದಲ್ಲಿ ಕೆಲವು ಸಂದರ್ಭದಲ್ಲಿ ಏರಿಳಿತಗಳು ಉಂಟಾಗುವುದು ಸಹಜ ಎಂದರು. +ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ +ಅವರಿಗೆ ಯಾವ ಸ್ಥಾನಮಾನ ಕೊಡುತ್ತಾರೆ ಎಂಬುದರ ಬಗ್ಗೆ ನಮಗೆ ಖಂಡಿತವಾಗಿಯೂ ಮಾಹಿತಿ ಇಲ್ಲ. ಅವರ ಸಾಮಥ್ರ್ಯಕ್ಕೆ ತಕ್ಕಂತೆ ಸ್ಥಾನಮಾನ ಸಿಗಲಿದೆ. ಸೋಮಣ್ಣನವರು ಹಿರಿಯರು. ಎಂಥದ್ದೇ ಸಂದರ್ಭದಲ್ಲೂ ಅವರು ದುಡುಕಿನ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವನ್ನು ಸಿ.ಟಿ.ರವಿ ವ್ಯಕ್ತಪಡಿಸಿದರು.ಅವರಿಗೆ ಜವಾಬ್ದಾರಿಯುತವಾದ ಸ್ಥಾನ ಕೊಡುವ ಕೆಲಸವಾಗಿದೆ. ಸೋಮಣ್ಣನವರನ್ನು ನಾನೇ ಭೇಟಿಯಾಗಿ ಮಾತನಾಡುತ್ತೇನೆ. ಎಲ್ಲ ಹಿರಿಯರ ಜೊತೆ ಸಮಾಲೋಚನೆ ನಡೆಸುತ್ತೇವೆ. ಒಗ್ಗಟ್ಟಾಗಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು. +ಇದೇ ವೇಳೆ ಕರ ಸೇವಕ ಶ್ರೀ ಕಾಂತ್ ಪೂಜಾರಿ ಜಾಮೀನು ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ರಾಮ ಮಂದಿರದ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್ 31 ವರ್ಷಗಳ ಹಿಂದಿನ ಪ್ರಕರಣ ಕೆದಕಿರುವುದು ಶೋಭೆಯಲ್ಲ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಕಾಂಗ್ರೆಸ್ ರಾಮ ಭಕ್ತರ ಮೇಲೆ ದ್ವೇಷ ತೋರಿಸುತ್ತಿದೆ ಎಂದು ದೂರಿದರು. \ No newline at end of file diff --git a/eesanje/url_46_269_11.txt b/eesanje/url_46_269_11.txt new file mode 100644 index 0000000000000000000000000000000000000000..9b6d51726ba01d6aac2037777ec948cf0e8c5e1c --- /dev/null +++ b/eesanje/url_46_269_11.txt @@ -0,0 +1,7 @@ +ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ರಸ್ತೆ ಬದಿ ನಿಂತಿದ್ದ ನಾಲ್ವರ ಮೇಲೆ ಹರಿದ ಲಾರಿ +ಹುಬ್ಬಳ್ಳಿ,ಜ.6- ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿಂದು ಮುಂಜಾನೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದಾಗ ಲಾರಿಯೊಂದು ವೇಗವಾಗಿ ಬಂದು ಮತ್ತೆ ಡಿಕ್ಕಿ ಹೊಡೆದ ಪರಿಣಾಮ ಹಾಸನದ ಮೂಲದ ಮೂವರು ಯುವಕರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. +ಹಾಸನ ಜಿಲ್ಲೆಯ ಅರಕಲಗೂಡಿನ ಮಣಿಕಂಠ (26), ಪವನ್(23), ಚಂದನ್(31) ಮತ್ತು ಬೆಂಗಳೂರಿನ ಹರೀಶ್ (34) ಸಾವನ್ನಪ್ಪಿರುವ ದುರ್ದೈವಿಗಳು. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಹಾಸನದಿಂದ ಗೋವಾಗೆ ತೆರಳುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿಗೆ ತೆರಳುತಿದ್ದ ಕಾರುಗಳ ನಡುವೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿ ಮುಂಜಾನೆ 4.30ರ ಸುಮಾರಿನಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಎರಡು ಕಾರುಗಳಲ್ಲಿದ್ದ ಏಳು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಅವರನ್ನು ಆ್ಯಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. +ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ +ಇನ್ನುಳಿದ ನಾಲ್ವರು ರಸ್ತೆ ಪಕ್ಕದಲ್ಲಿ ನಿಂತುಕೊಂಡು ಮಾತನಾಡುತ್ತಿದ್ದಾಗ ಅದೇ ಸಂದರ್ಭದಲ್ಲಿ ಹಾವೇರಿ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕುಂದಗೋಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಡಾ.ಗೋಪಾಲ ಬ್ಯಾಕೋಡ್ ಭೇಟಿ ನೀಡಿದ್ದಾರೆ. ಮುಂಜಾನೆ ಮಂಜು ಆವರಿಸಿದ್ದ ಕಾರಣ ಈ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. +ಸಚಿವರ ಭೇಟಿ:ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ನಾಲ್ವರ ಮೃತದೇಹಗಳನ್ನು ಕಂಡು ಭಾವುಕರಾದರು. ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಈ ಅಪಘಾತ ಸಂಭವಿಸಿದೆ. ಕಾರು ಅಪಘಾತದ ನಂತರ ರಸ್ತೆ ಬದಿ ನಿಂತವರವುಗಳ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಯಾವ ರೀತಿ ಅಪಘಾತ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ದುರಾದೃಷ್ಟಕರ ಎಂದರು. \ No newline at end of file diff --git a/eesanje/url_46_269_12.txt b/eesanje/url_46_269_12.txt new file mode 100644 index 0000000000000000000000000000000000000000..636600008053ec2c849925b2dc2a067dd0aa6900 --- /dev/null +++ b/eesanje/url_46_269_12.txt @@ -0,0 +1,13 @@ +ಬಿಜೆಪಿ ನಾಯಕರ ವಿರುದ್ಧ ದಿನೇಶ್‍ ಗುಂಡೂರಾವ್ ಅಸಮಾಧಾನ +ಹುಬ್ಬಳ್ಳಿ,ಜ.6- ಬಿಜೆಪಿಯವರಿಗೆ ನೈಜ ಸಮಸ್ಯೆಗಳು ಬೇಕಿಲ್ಲ. ಅದಕ್ಕಾಗಿ ಒಬ್ಬ ವ್ಯಕ್ತಿಯ ಬಂಧನವನ್ನೇ ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ. ಜನರಿಗೆ ಇದರ ಹಿಂದಿನ ಕುತಂತ್ರಗಳು ಅರ್ಥವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಇದೇ ರೀತಿಯ ವೈಯಕ್ತಿಕ ಹಾಗೂ ಭಾವನಾತ್ಮಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯವರು ವಿಧಾನಸಭೆ ಚುನಾವಣೆಯನ್ನು ಎದುರಿಸಿದರು. ಅದಕ್ಕೆ ಜನ ತಕ್ಕ ಪಾಠ ಕಲಿಸಿದರು. ಆದರೂ ಬದಲಾಗದ ಬಿಜೆಪಿಯವರು ಮತ್ತೆ ಭಾವನಾತ್ಮಕ ವಿಚಾರಗಳಿಗೆ ಜೋತು ಬಿದ್ದಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಇದಕ್ಕಾಗಿ ಬೆಲೆ ತೆರುತ್ತಾರೆ ಎಂದು ಹೇಳಿದರು. +ಹುಬ್ಬಳ್ಳಿಯಲ್ಲಿನ ಶ್ರೀಕಾಂತ್ ಪೂಜಾರ್ ಮೇಲಿದ್ದ ರೌಡಿಪಟ್ಟಿಯನ್ನು ಕೈಬಿಟ್ಟಿದ್ದೇ ಕಾಂಗ್ರೆಸ್ ಸರ್ಕಾರ. ಬಾಕಿ ಇದ್ದ ಪ್ರಕರಣಗಳ ಕಾರಣಕ್ಕೆ ಆತನನ್ನು ಬಂಧಿಸಲಾಗಿದೆ. ಬಿಜೆಪಿಯವರು ಗಂಭೀರ ಸಮಸ್ಯೆಗಳನ್ನು ದಾರಿ ತಪ್ಪಿಸಲು ಕರಸೇವಕರ ಬಂಧನ ಎಂಬ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದರು. +ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ : ಇಸ್ರೋ ಮುಖ್ಯಸ್ಥ ಸೋಮನಾಥ್ +ಜಿಎಸ್‍ಟಿ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬರಪರಿಹಾರಕ್ಕೆ ಆರ್ಥಿಕ ನೆರವು ಸಿಕ್ಕಿಲ್ಲ. ವಿವಿಧ ಯೋಜನೆಗಳಡಿ ರಾಜ್ಯಕ್ಕೆ ಸಿಗಬೇಕಾದ ಪಾಲು ದೊರೆಯುತ್ತಿಲ್ಲ. ಇಂತಹ ಗಂಭೀರ ವಿಚಾರಗಳನ್ನು ಮರೆಮಾಚಲು ಧರ್ಮ, ದೇವರು ಎಂಬ ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸಿ ಮತ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜನರಿಗೆ ಇದು ಅರ್ಥವಾಗುತ್ತದೆ ಎಂದು ಹೇಳಿದರು. +ಒಬ್ಬ ರೌಡಿಶೀಟರ್‍ನನ್ನು ಸಮರ್ಥಿಸಿಕೊಂಡು, ಭಾವನೆ ಕೆರಳಿಸಿ ಜನರ ಬದುಕಿನ ಸಮಸ್ಯೆಗಳನ್ನು ಕಡೆಗಣಿಸುತ್ತಿರುವ ಬಿಜೆಪಿಯನ್ನು ಜನ ಕ್ಷಮಿಸುವುದಿಲ್ಲ. ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೈಗೆತ್ತಿಕೊಳ್ಳಿ. 5 ಸಾವಿರ ಕೋಟಿ ರೂ.ಗಳ ಅನುದಾನ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಬಜೆಟ್‍ನಲ್ಲಿ ಭರವಸೆ ನೀಡಿದರು. ಆದರೆ ಈಗ ಹಣ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ದೂರಿದರು. +ಗುಜರಾತ್‍ಗೆ ಹೆಚ್ಚು ಹಣ ನೀಡುತ್ತಿದ್ದಾರೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಿ. ಅದರ ಬದಲು ಭಾವನಾತ್ಮಕ ವಿಚಾರಗಳ ಪ್ರಸ್ತಾಪ ಅನಗತ್ಯ. ಹಿಂದೂ ಧರ್ಮ ಯಾರೊಬ್ಬರ ಸ್ವತ್ತೂ ಅಲ್ಲ. ಪ್ರತಿಯೊಂದೂ ಗ್ರಾಮದಲ್ಲೂ ಶ್ರೀ ರಾಮನ ದೇವಸ್ಥಾನವಿದೆ. ಬಿಜೆಪಿ ಇಲ್ಲದೇ ಇದ್ದಾಗಲೂ ದೇವಸ್ಥಾನದ ನಿರ್ಮಾಣವಾಗಿದೆ. ಪೂಜೆ ನಡೆಯುತ್ತಿದೆ. ಅಯೋಧ್ಯೆಯ ರಾಮಮಂದಿರವೊಂದೇ ದೇಶದ ವಿಚಾರವಲ್ಲ ಎಂದು ಹೇಳಿದರು. +ಧರ್ಮ ಮತ್ತು ದೇವರನ್ನು ಒಂದು ಪಕ್ಷಕ್ಕೆ ದತ್ತು ಕೊಡಲು ಸಾಧ್ಯವಿಲ್ಲ. ಬಿಜೆಪಿಯವರು ಇದ್ದರೆ ಮಾತ್ರ ಹಿಂದು, ಇಲ್ಲವಾದರೆ ಹಿಂದೂವಿರೋಧಿಗಳು ಎಂಬುದು ಹಾಸ್ಯಾಸ್ಪದ. ಧರ್ಮ ಸಂಪೂರ್ಣ ವೈಯಕ್ತಿಕ. ನಮ್ಮಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಗೆ ಮೊದಲಿನಿಂದಲೂ ಉತ್ತಮ ಉದಾಹರಣೆಗಳಿವೆ ಎಂದರು. +ನಾವು ಯಾವ ಧರ್ಮ ಪಾಲಿಸಬೇಕು. ದೇಶ ಹೇಗೆ ನಡೆಯಬೇಕು ಎಂಬ ಎಲ್ಲಾ ವಿಚಾರಗಳ ಬಗ್ಗೆಯೂ ಸಂವಿಧಾನದಲ್ಲಿ ಸ್ಪಷ್ಟತೆ ಇದೆ. ಬಿಜೆಪಿಯವರು ಹೇಳಿದ್ದನ್ನೆಲ್ಲಾ ಕೇಳಲಾಗುವುದಿಲ್ಲ ಎಂದು ಹೇಳಿದರು.ಕೇರಳ, ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಇಲ್ಲಿ ನಾವು ಹೆಚ್ಚು ಪರೀಕ್ಷೆಗಳನ್ನು ಮಾಡುತ್ತಿದ್ದಾರೆ. ಯಾರಿಗೂ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಮುಂಜಾಗ್ರತೆ ವಹಿಸಿದ್ದೇವೆ. +ಕೋವಿಡ್ ಮತ್ತು ಅದರ ರೂಪಾಂತರಿಗಳು ವಿಶ್ವಾದ್ಯಂತ ಹರಡುತ್ತಿವೆ. ಆತಂಕಪಡುವ ಅಗತ್ಯವಿಲ್ಲ. ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯರು ಮತ್ತು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಎಚ್ಚರಿಕೆ ವಹಿಸುವ ಅಗತ್ಯವಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು. +ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ +ಧಾರವಾಡ ಜಿಲ್ಲೆಯಲ್ಲಿ 9 ತಾಲೂಕು, ಒಂದು ಜಿಲ್ಲಾಸ್ಪತ್ರೆ ಸೇರಿ ಒಟ್ಟು 10 ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಐಸಿಯು ಸೌಲಭ್ಯವನ್ನು ಉದ್ಘಾಟಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಾಲೂಕು ಆಸ್ಪತ್ರೆಗಳಲ್ಲೂ ಟೆಲಿ ಸೌಲಭ್ಯದ ಮೂಲಕ ತಜ್ಞ ವೈದ್ಯರ ಸಲಹೆ, ಸೂಚನೆ ಮತ್ತು ಚಿಕಿತ್ಸೆ ದೊರಕಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲಾ ಆಸ್ಪತ್ರೆಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_269_2.txt b/eesanje/url_46_269_2.txt new file mode 100644 index 0000000000000000000000000000000000000000..8f4efa83292543c4b344be4fee6fb21304318f4d --- /dev/null +++ b/eesanje/url_46_269_2.txt @@ -0,0 +1,6 @@ +ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ +ಬೀಜಿಂಗ್, ಜ.7: ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕದ ಐದು ರಕ್ಷಣಾ ಸಂಬಂಧಿತ ಕಂಪನಿಗಳ ಮೇಲೆ ಚೀನಾ ನಿರ್ಬಂಧ ಘೋಷಿಸಿದೆ. ಚೀನಾದ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅವರೊಂದಿಗೆ ವ್ಯಾಪಾರ ಮಾಡುವುದನ್ನು ನಿಷೇಧಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ಆನ್‍ಲೈನ್‍ನಲ್ಲಿ ಹೇಳಿಕೆಯಲ್ಲಿ ನೀಡಿದೆ. +ಅಮೆರಿಕದ ಕಂಪನಿಗಳಾದ ಬಿಎಇ ಸಿಸ್ಟಮ್ಸ್ ಲ್ಯಾಂಡ್ ಮತ್ತು ಆರ್ಮಮೆಂಟ್, ಅಲೈಂಟ್ ಟೆಕ್ಸಿಸ್ಟಮ್ಸ್ ಆಪರೇಷನ್, ಏರೋವೈರಾನ್ಮೆಂಟ್, ವಯಾಸ್ಯಾಟ್ ಮತ್ತು ಡೇಟಾ ಲಿಂಕ್ ಸೊಲ್ಯೂಷನ್ಸ್ ದೇಶದಲ್ಲಿ ತಟಸ್ಥಗೊಳ್ಳಲಿದೆ. ಅಮೆರಿಕದ ನಡೆಗಳು ಚೀನಾದ ಸಾರ್ವಭೌಮತ್ವ ಮತ್ತು ಭದ್ರತಾ ಹಿತಾಸಕ್ತಿಗಳಿಗೆ ಹಾನಿಯುಂಟುಮಾಡಿದೆ, ತೈವಾನ್ ಜಲಸಂಧಿಯಾದ್ಯಂತ ಶಾಂತಿ ಮತ್ತು ಸ್ಥಿರತೆಯನ್ನು ಹಾಳುಮಾಡಿದೆ ಮತ್ತು ಚೀನಾದ ಕಂಪನಿಗಳು ಮತ್ತು ವ್ಯಕ್ತಿಗಳ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ಉಲ್ಲಂಸಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. +ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ +ರಾಷ್ಟ್ರೀಯ ಸಾರ್ವಭೌಮತೆ, ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡುವ ಮತ್ತು ಚೀನೀ ಕಂಪನಿಗಳು ಮತ್ತು ನಾಗರಿಕರ ಕಾನೂನುಬದ್ಧ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸುವ ನಮ್ಮ ಸಂಕಲ್ಪದಲ್ಲಿ ಚೀನಾ ಸರ್ಕಾರವು ಅಚಲವಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ. +ಚೀನಾ ತನ್ನ ಪೂರ್ವ ಕರಾವಳಿಯ ದ್ವೀಪ ದೇಶ ತೈವಾನ್ ಅನ್ನು ಒಂದು ದಂಗೆಕೋರ ಪ್ರಾಂತ್ಯವೆಂದು ಪರಿಗಣಿಸುತ್ತದೆ, ಅದು ಭವಿಷ್ಯದಲ್ಲಿ ಕೆಲವು ಹಂತದಲ್ಲಿ ಚೀನಾಗೆ ನಿಯಂತ್ರಣಕ್ಕೆ ಬರಬೇಕು ಎಂದು ಪಣತೊಟ್ಟಿದೆ. \ No newline at end of file diff --git a/eesanje/url_46_269_3.txt b/eesanje/url_46_269_3.txt new file mode 100644 index 0000000000000000000000000000000000000000..c6f762bacab08f3e182fbda4a8dab87b93b6e4da --- /dev/null +++ b/eesanje/url_46_269_3.txt @@ -0,0 +1,7 @@ +ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯ : ಸಚಿವ ಎಂ.ಬಿ.ಪಾಟೀಲ +ಬೆಂಗಳೂರು: ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಸರ್ಕಾರಿ ಉದ್ದಿಮೆಗಳ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು “ಕಲಾಲೋಕ” ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ವೇಳೆಗೆ ಆರಂಭವಾಗಲಿವೆ. ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ವಿಮಾನ ನಿಲ್ದಾಣದ ಅಧಿಕಾರಿಗಳ (ಬಿಐಎಎಲ್) ಉಪಸ್ಥಿತಿಯಲ್ಲಿ ಶನಿವಾರ ನಡೆಸಿದ ಸಭೆಯಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. +ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ ಎಸ್ ಡಿ ಎಲ್), ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕೆಎಸ್ಐಸಿ (ಕರ್ನಾಟಕ ರೇಷ್ಮೆ ಉದ್ಯಮ ನಿಗಮ), ಕಾಫಿ ಬೋರ್ಡ್ ಮತ್ತು ಲಿಡ್ಕರ್ ಸಂಸ್ಥೆಗಳು ತಯಾರಿಸುವ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳೊಟ್ಟಿಗೆ ನಾಡಿನಲ್ಲಿ ತಯಾರಾಗುವ ಪಾರಂಪರಿಕ ಆಟಿಕೆಗಳಾದ ಚನ್ನಪಟ್ಟಣ ಆಟಿಕೆ, ಇಳಕಲ್ ಸೀರೆ, ಲಂಬಾಣಿ ಕುಸೂತಿ ಇತ್ಯಾದಿ ಉತ್ಪನ್ನಗಳನ್ನು ಕೂಡ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಾಗಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು. +ಇದಕ್ಕಾಗಿ, ಹೊಸದಾಗಿ ನಿರ್ಮಿಸಿರುವ ಟರ್ಮಿನಲ್-2ರ ದೇಶೀಯ ಮತ್ತು ಅಂತರರಾಷ್ಟ್ರೀಯ ನಿರ್ಗಮನ ವಲಯದಲ್ಲಿ ತಲಾ 180 ಚದುರ ಮೀಟರ್ ಗಳ ಜಾಗ ಗುರುತಿಸಲಾಗಿದೆ. ಅಲ್ಲಿ ವಿಭಿನ್ನ‌ ಶೈಲಿಯಲ್ಲಿ ವಿನ್ಯಾಸಗೊಳಿಸಿದ ಆಕರ್ಷಕ ಮಳಿಗೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು ಎಂದರು. +ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್ +ನಮ್ಮ ನಾಡಿನ ಅಸ್ಮಿತೆ ಬಿಂಬಿಸುವ ಈ ಸಂಸ್ಥೆಗಳ ಉತ್ಪನ್ನಗಳನ್ನು ವಿಮಾನ ನಿಲ್ದಾಣದಲ್ಲಿನ ಗ್ರಾಹಕರಿಗೆ ಒಂದೇ ಸೂರಿನಡಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದ್ದು, ಕೈಗಾರಿಕಾ ಇಲಾಖೆಯು ಇದರ ಉಸ್ತುವಾರಿ ವಹಿಸಲಿದೆ ಎಂದು ತಿಳಿಸಿದರು. +ವಿಮಾನ ನಿಲ್ದಾಣದ ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಅದಕ್ಕೆ ತಕ್ಕಂತೆ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡಲು ಗಮನಹರಿಸಲಾಗುವುದು ಎಂದೂ ಪಾಟೀಲ ತಿಳಿಸಿದರು. ಕಾಫಿ ಬೋರ್ಡ್, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದಾದರೂ ಸ್ಥಾಪನೆಯಾಗಲಿರುವ ಮಳಿಗೆಗಳಲ್ಲಿ ಕರ್ನಾಟಕ ಮೂಲದ ಕಾಫಿ ಸ್ವಾದಗಳು ಸೇವನೆಗೆ ಲಭ್ಯವಿರುತ್ತವೆ. ಜೊತೆಗೆ, ಇಲ್ಲಿನ ವಿವಿಧ ನಮೂನೆಯ ಕಾಫಿ ಪುಡಿಯನ್ನು ಗ್ರಾಹಕರು ಕೊಳ್ಳಬಹುದಾಗಿರುತ್ತದೆ ಎಂದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ವಿಮಾನ ನಿಲ್ದಾಣದ ಉಪಾಧ್ಯಕ್ಷ ವೆಂಕಟರಾಮನ್, ಕೆಎಸ್ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಪೂಜಾರ್ ಮತ್ತಿತರರು ಸಭೆಯಲ್ಲಿದ್ದರು. \ No newline at end of file diff --git a/eesanje/url_46_269_4.txt b/eesanje/url_46_269_4.txt new file mode 100644 index 0000000000000000000000000000000000000000..c1c0c1153247a83c5451d77fa8240ee5f8f3c308 --- /dev/null +++ b/eesanje/url_46_269_4.txt @@ -0,0 +1,6 @@ +ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ಕೈದಿಗಳ ಬಿಡುಗಡೆಗೆ ಡಿಸಿಎಂ ಬಳಿ ಮನವಿ +ಬೆಂಗಳೂರು,ಜ.6- ಡಿ.ಜೆ.ಹಳ್ಳಿ/ಕೆ.ಜೆ.ಹಳ್ಳಿ ಗುಂಪು ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 37 ಮಂದಿಯನ್ನು ಬಿಡುಗಡೆ ಮಾಡಿಸಬೇಕು ಎಂದು ಕುಟುಂಬದ ಸದಸ್ಯರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ ರವರಲ್ಲಿ ಮನವಿ ಮಾಡಿದ್ದಾರೆ. ಶಿವಾಜಿನಗರದ ಆರ್‍ಬಿಎಎನ್‍ಎಂಎನ್‍ಎಂಎಸ್ ಹೈಸ್ಕೂಲ್ ಮೈದಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಜನತಾದರ್ಶನದಲ್ಲಿ ಭಾಗವಹಿಸಿದ್ದ ಕುಟುಂಬದ ಸದಸ್ಯರು ಲಿಖಿತ ಮನವಿ ಸಲ್ಲಿಸಿದ್ದಾರೆ. +37 ಮಂದಿ ಆರೋಪಿಗಳ ಕುಟುಂಬ ಸದಸ್ಯರ ಮಹಿಳೆಯರು ಈ ಸಂದರ್ಭದಲ್ಲಿ ಮಾತನಾಡಿ, ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು. ನಮ್ಮ ಮನೆಯವರು ಯಾವುದೇ ಗಲಾಟೆಯಲ್ಲಿ ಭಾಗವಹಿಸಿಲ್ಲ. ಗಲಭೆ ನಡೆಯುತ್ತಿದ್ದುದನ್ನು ನೋಡುತ್ತಾ ನಿಂತಿದ್ದರು. ಪೊಲೀಸರು ಅವರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಯುಎಪಿಎಯಂತಹ ಪ್ರಬಲ ಕಾನೂನು ಹಾಕಲಾಗಿದೆ ಎಂದು ಅಳಲು ತೋಡಿಕೊಂಡರು. +ಕಳೆದ ಮೂರೂವರೆ ವರ್ಷಗಳಿಂದಲೂ ದುಡಿಯುವ ಗಂಡಸರನ್ನು ಜೈಲಿನಲ್ಲಿಟ್ಟಿದ್ದಾರೆ. ಇದರಿಂದ ಕುಟುಂಬಗಳು ಅನಾಥವಾಗಿವೆ. ಕಾಂಗ್ರೆಸ್ ವಿಧಾನಸಭೆ ಚುನಾವಣೆಗೂ ಮುನ್ನ ಕೆ.ಜೆ.ಹಳ್ಳಿ/ಡಿ.ಜೆ.ಹಳ್ಳಿ ಗಲಭೆಯಲ್ಲಿ ಭಾಗಿಯಾದವರನ್ನು ಬಿಡುಗಡೆ ಮಾಡುವಂತೆ ಭರವಸೆ ನೀಡಿತ್ತು. ಸರ್ಕಾರ ಬಂದು 7 ತಿಂಗಳಾಗಿವೆ. +ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್ +ಈವರೆಗೂ ಕ್ರಮ ಕೈಗೊಂಡಿಲ್ಲ. ಶಾಸಕರು ಸೇರಿದಂತೆ ಹಲವರಿಗೆ ಮನವಿ ನೀಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು. ಇದಕ್ಕೂ ಮುನ್ನ ಮಹಿಳೆಯರು ಮನವಿಗಳನ್ನು ನೋಂದಣಿ ಮಾಡಿಸಿ ನಂತರ ಡಿಸಿಎಂಗೆ ಅರ್ಜಿ ಸಲ್ಲಿಸಿದರು. \ No newline at end of file diff --git a/eesanje/url_46_269_5.txt b/eesanje/url_46_269_5.txt new file mode 100644 index 0000000000000000000000000000000000000000..f2655c8c75e27b3cfce6b4312ec4146d033f8392 --- /dev/null +++ b/eesanje/url_46_269_5.txt @@ -0,0 +1,6 @@ +ಅನಾರೋಗ್ಯದ ನಡುವೆಯೂ ಜನಸ್ಪಂದನದಲ್ಲಿ ಭಾಗವಹಿಸಿ ಗಮನ ಸೆಳೆದ ಡಿಸಿಎಂ +ಬೆಂಗಳೂರು,ಜ.6- ಅನಾರೋಗ್ಯದ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದರು. ಕೈಗೆ ಇಂಜೆಕ್ಷನ್ ಹಾಕಿಕೊಳ್ಳುವ ಬ್ಯಾಂಡೇಜ್‍ನೊಂದಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‍ರವರು ಅನಾರೋಗ್ಯವನ್ನು ಮರೆತು ಜನರ ಸಮಸ್ಯೆ ಕೇಳಲು ಮುಂದಾದರು. +ಸಂಪೂರ್ಣ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದರೂ ಅದನ್ನು ಕಡೆಗಣಿಸಿ ಉಪಮುಖ್ಯಮಂತ್ರಿಯವರು ನಿಮ್ಮ ಕಷ್ಟ ಕೇಳಲು ಆಗಮಿಸಿದ್ದಾರೆ. ಅವರ ಬದ್ಧತೆ ಅನುಕರಣನೀಯ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಕೊಂಡಾಡಿದರು. ವೇದಿಕೆಯ ಕಾರ್ಯಕ್ರಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಿನ್ನೆಯಿಂದಲೂ ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚನೆ ನೀಡಿದ್ದಾರೆ. ಆದರೆ ನಾನೇ ಸಮಯ ನೀಡಿ ಈ ಕಾರ್ಯಕ್ರಮ ನಿಗದಿ ಮಾಡಿದ್ದೇನೆ. ಗೈರುಹಾಜರಾದರೆ ಅದು ಸರಿಯಲ್ಲ ಎಂಬ ಕಾರಣಕ್ಕಾಗಿ ಬಂದಿದ್ದೇನೆ ಎಂದರು. +ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್ +ಈವರೆಗೂ ಬೆಂಗಳೂರಿನಲ್ಲಿ 6 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 7 ಸಾವಿರ ಜನ ಜನಸ್ಪಂದನ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿದ್ದಾರೆ. ಸಂಜೆ 6 ಗಂಟೆಯವರೆಗೂ ಕುಳಿತು ಜನರ ಸಮಸ್ಯೆ ಆಲಿಸಿದ್ದೇನೆ. ಇಂದು ಅನಾರೋಗ್ಯ ಇರುವುದರಿಂದ ಹೆಚ್ಚು ಸಮಯ ಇಲ್ಲಿರಲು ಸಾಧ್ಯವಿಲ್ಲ. ನಾನೇ ನಿಮ್ಮ ಬಳಿ ಬಂದು ಅರ್ಜಿ ಪಡೆದುಕೊಳ್ಳುತ್ತೇನೆ. ಒಂದು ವೇಳೆ ನನ್ನನ್ನು ಖುದ್ದು ಭೇಟಿ ಮಾಡಿ ದೂರು ಹೇಳಿಕೊಳ್ಳಬೇಕು ಎನ್ನುವವರು ಇಂದು ಸಾಧ್ಯವಾಗದೇ ಇದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ಇತರ ಕ್ಷೇತ್ರಗಳಲ್ಲಿ ನಡೆಯುವ ಜನಸ್ಪಂದನದಲ್ಲೂ ಭಾಗವಹಿಸಿ ಭೇಟಿ ಮಾಡಬಹುದು ಎಂದರು. +ಆದರೆ ಇಲ್ಲಿ ಅರ್ಜಿಗಳನ್ನು ನೋಂದಣಿ ಮಾಡಿಸಿಕೊಂಡರೆ ನನಗೆ ಅರ್ಜಿ ನೀಡಿದಂತೆಯೇ ಲೆಕ್ಕ. ನಿಮ್ಮ ಸಮಸ್ಯೆಗೆ ಸ್ಪಂದನೆ ದೊರೆಯುತ್ತದೆ. ಯಾವುದೇ ಆತಂಕ ಬೇಡ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_269_6.txt b/eesanje/url_46_269_6.txt new file mode 100644 index 0000000000000000000000000000000000000000..b484ab6fcb82bf2a62c6e1fd5640bd371c974fbf --- /dev/null +++ b/eesanje/url_46_269_6.txt @@ -0,0 +1,7 @@ +ಸಿರಿಧಾನ್ಯ ಸಾವಯವ ಮೇಳ ಯಶಸ್ವಿ +ಬೆಂಗಳೂರು,ಜ.6- ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಅರ್ಥಗರ್ಭಿತವಾಗಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಳ ಉದ್ಘಾಟನೆ ಮಾಡಿದ ನಂತರ ನಿನ್ನೆ ಮೊದಲ ದಿನವೇ 60 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದಾರೆ ಎಂದರು. +61 ಸಭೆಗಳಲ್ಲಿ 23.14 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಪೈಕಿ 1,361 ಮೆಟ್ರಿಕ್ ಟನ್ ಪ್ರಮಾಣದ 5.10 ಕೋಟಿ ಮೌಲ್ಯದ 6 ಒಪ್ಪಂದಗಳಾಗಿವೆ. ಕೀನ್ಯಾ, ಕುವೈತ್, ಆಸ್ಟ್ರೇಲಿಯಾ, ಯೂರೋಪ್, ಯುಎಇ ದೇಶಗಳ ಮಾರುಕಟ್ಟೆದಾರರು ಮೇಳದಲ್ಲಿ ಭಾಗವಹಿಸಿದ್ದಾರೆ. ಏಳು ಅಂತಾರಾಷ್ಟ್ರೀಯ, 40 ಹೊರರಾಜ್ಯಗಳ ಹಾಗೂ 50 ರಾಜ್ಯದ ಮಾರುಕಟ್ಟೆದಾರರು ಸಭೆಗಳಲ್ಲಿ ಭಾಗವಹಿಸಿದ್ದಾರೆ. 97 ಮಾರುಕಟ್ಟೆ ದಾರರು, 154 ಉತ್ಪಾದಕರು ಬಿ2ಬಿ ಸಭೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು. +310 ಮಳಿಗೆಗಳು ಮೇಳದಲ್ಲಿದ್ದು, 190 ಮಳಿಗೆಗಳು ಸಾವಯವ ಮತ್ತು ಸಿರಿಧಾನ್ಯ ಸಂಸ್ಥೆಗಳು, ರಫ್ತುದಾರರು, ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಂಸ್ಥೆಗಳು ಪಾಲ್ಗೊಂಡಿವೆ ಎಂದರು. +ಈ ಮೇಳ ಅಸಾಧರಣ ಅನುಭವ ನೀಡಿದ್ದು, ಕೃಷಿ ಮಂತ್ರಿಯಾಗಿರುವುದಕ್ಕೆ ಖುಷಿಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ರೈತರು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯಬೇಕು. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಸಬಹುದು. ಪ್ರಸ್ತುತ ಹೆಕ್ಟೇರ್‍ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. +ಸಿರಿಧಾನ್ಯದ ಆಹಾರದ ಉತ್ಪನ್ನಗಳು ಹೆಚ್ಚು ರುಚಿಕರವಾಗಿವೆ. ನವಣೆ ಮಸಾಲೆ ಬ್ರೆಡ್, ರಾಗಿ ಬ್ರೆಡ್, ಫಿಜ್ಜಾ, ಬರ್ಗರ್, ನೂಡಲ್ಸ್, ವಿವಿಧ ರೀತಿಯ ಬಿಸ್ಕತ್ತು, ಚಕ್ಕುಲಿ, ಚಿಕ್ಕಿ ಅಲ್ಲದೆ ವಿಶೇಷ ವಾಗಿ ಯುವ ಪೀಳಿಗೆ ಇಷ್ಟ ಪಡುವ ಆಧುನಿಕ ಸಿರಿಧಾನ್ಯ ಬ್ರೌನಿ, ಬಫ್ತಿನ್ಸ್, ರಾಗಿ ಚಾಕಲೇಟ್, ಜಾಮುನು ಆಕರ್ಷಕವಾಗಿವೆ ಎಂದರು. +ಈ ವರ್ಷ 16 ರಾಜ್ಯಗಳು ಭಾಗವಹಿಸಿದ್ದು, ಹೆಚ್ಚು ಅರ್ಥಪೂರ್ಣವಾಗಿದೆ. 50 ಪರಿಣಿತರು ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದ್ದಾರೆ ಎಂದರು. ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ರೈತ ಸಿರಿ ಯೋಜನೆಯಡಿ ಹೆಕ್ಟೇರ್‍ಗೆ 10 ಸಾವಿರದಂತೆ ಒಂದು ಲಕ್ಷ ರೈತರಿಗೆ ಪೆÇ್ರೀತ್ಸಾಹ ಧನ ನೀಡಲಾಗಿದೆ ಎಂದರು.ಗೋಷ್ಠಿಯಲ್ಲಿ ಕೃಷಿ ಆಯುಕ್ತ ಪಾಟೀಲ್, ನಿರ್ದೇಶಕ ಡಾ.ಪುತ್ರ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು. diff --git a/eesanje/url_46_269_7.txt b/eesanje/url_46_269_7.txt new file mode 100644 index 0000000000000000000000000000000000000000..a04b55f2f4c89bc14c2680aa496bf2ddda21a102 --- /dev/null +++ b/eesanje/url_46_269_7.txt @@ -0,0 +1,6 @@ +ರಾಮಮಂದಿರ ಉದ್ಘಾಟನೆ ಸಂಭ್ರಮ ಹಾಳುಮಾಡಲು ಕಾಂಗ್ರೆಸ್ ಕುತಂತ್ರ : ಬಿಜೆಪಿ ಆರೋಪ +ಬೆಂಗಳೂರು,ಜ.6- ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನೆರವೇರಲಿದೆ. ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ಇಡೀ ದೇಶವೇ ಇರುವಾಗ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆರೋಪಗಳ ಮಳೆ ಸುರಿಸಿದೆ. +ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯ ಕಾಂಗ್ರೆಸ್, ಅಯೋಧ್ಯೆಗೆ ಹೋಗುವವರಿಗೆ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಲಾಗಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಆರೋಪಿಸಿದೆ. +ರಾಜಕೀಯದ ಲಾಭಕ್ಕಾಗಿ ಬಿಜೆಪಿ ಹಿಂದುತ್ವದ ಚರ್ಚೆ ಮಾಡುತ್ತಿದೆ : ಸಚಿವ ಸಂತೋಷ್ ಲಾಡ್ +ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್ ಜಾರಿಗೆ ಸಿದ್ಧತೆ ನಡೆದಿದೆ. ರಾಮ ಮಂದಿರ ಉದ್ಘಾಟನೆಯ ದಿನ ರಾಜ್ಯಾದ್ಯಂತ ವಿದ್ಯುತ್ ಸ್ಥಗಿತಗೊಳಿಸಲು ತಂತ್ರ ಹೆಣೆಯಲಾಗಿದೆ. ಮನೆ ಮನೆಯ ಟಿವಿ ಕೇಬಲ್ ಸಂಪರ್ಕ ತಪ್ಪಿಸುವ ದುರುದ್ದೇಶ ಕಾಂಗ್ರೆಸಿನದ್ದಾಗಿದೆ ಎಂದು ಬಿಜೆಪಿ ಆರೋಪಿಸಿದೆ. +ರಾಮ ಬಂಟ ಹನುಮನ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಎಕ್ಸ್‍ನಲ್ಲಿ ಬರೆದುಕೊಂಡಿದೆ. \ No newline at end of file diff --git a/eesanje/url_46_269_8.txt b/eesanje/url_46_269_8.txt new file mode 100644 index 0000000000000000000000000000000000000000..86f30a6402908ef44cb1a87ae963d45e34c3dc47 --- /dev/null +++ b/eesanje/url_46_269_8.txt @@ -0,0 +1,8 @@ +ದಲಿತರ ಮತ ಸೆಳೆಯಲು ಬಿಜೆಪಿಯಿಂದ ಭೀಮಾ ಸಮಾವೇಶ +ಬೆಂಗಳೂರು,ಜ.6-ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿ ದಲಿತ ಮತಗಳ ಓಲೈಕೆಗೆ ಮುಂದಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಭೀಮಾ ಸಮಾವೇಶ ನಡೆಸಲು ಮುಂದಾಗಿದೆ. ಒಂದು ಕಡೆ ಕಾಂಗ್ರೆಸ್ ಚಿತ್ರ ದುರ್ಗದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿರುವ ಬೆನ್ನಲ್ಲೇ ಬಿಜೆಪಿ ಭೀಮ ಸಮಾವೇಶವನ್ನು ನಡೆಸಲು ಮುಂದಾಗಿರುವುದು ಮಹತ್ವ ಪಡೆದುಕೊಂಡಿದೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ದೂರವಾಗಿದ್ದ ದಲಿತ ಮತಗಳನ್ನು ಪುನಃ ತನ್ನತ್ತ ಸೆಳೆಯಲು ಕಾರ್ಯ ತಂತ್ರ ರೂಪಿಸುತ್ತಿರುವ ಬಿಜೆಪಿ, ಜಿಲ್ಲಾ ಕೇಂದ್ರಗಳಲ್ಲಿ ಭೀಮಾ ಸಮಾವೇಶವನ್ನು ನಡೆಸಿ ಬಳಿಕ ಮಧ್ಯ ಕರ್ನಾಟಕದಲ್ಲಿ ಬೃಹತ್ ರಾಜ್ಯ ಮಟ್ಟದ ಸಮಾವೇಶ ನಡೆಸಲು ತೀರ್ಮಾನಿಸಿದೆ. ಪ್ರತಿ ಜಿಲ್ಲೆಯಲ್ಲೂ ಒಂದೊಂದು ಸಮಾವೇಶಕ್ಕೆ 50ರಿಂದ ಒಂದು ಲಕ್ಷದವರೆಗೂ ಜನರನ್ನು ಸೇರಿಸಬೇಕೆಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಜಿಲ್ಲಾ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. +ಫೆಬ್ರವರಿ ತಿಂಗಳ ಅಂತ್ಯಕ್ಕೆ ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಸಮಾವೇಶವನ್ನು ನಡೆಸಲು ಉದ್ದೇಶಿಸಿದ್ದು, ಸಾಧ್ಯವಾದರೆ ಪ್ರಧಾನಿ ನರೇಂದ್ರಮೋದಿ ಇಲ್ಲವೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರನ್ನು ಆಹ್ವಾನಿಸುವ ಲೆಕ್ಕಾಚಾರದಲ್ಲಿ ಬಿಜೆಪಿಯಿದೆ. ಈಗಾಗಲೇ ಸಮಾವೇಶಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಸಮಾವೇಶ ಆರಂಭಗೊಳ್ಳಲಿದೆ. +ಮೂವರು ಡಿಸಿಎಂಗಳ ನೇಮಕ ಗಾಳಿಸುದ್ದಿ ಅಷ್ಟೇ : ಗೃಹ ಸಚಿವ ಪರಮೇಶ್ವರ +ಬಳಿಕ ವಾರಕ್ಕೆ ಎರಡೆರಡು ಸಮಾವೇಶಗಳು ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ. ಮಧ್ಯ ಕರ್ನಾಟಕದಲ್ಲೇ ಫೆಬ್ರವರಿಯಲ್ಲಿ ರಾಜ್ಯ ಮಟ್ಟದ ಭೀಮ ಸಮಾವೇಶ ಆಯೋಜನೆ ಮಾಡಲು ಬಿಜೆಪಿ ಚಿಂತಿಸುತ್ತಿದೆ. ಲೋಕಸಭಾ ಚುನಾವಣೆಗೆ ದಲಿತ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಸಮಾವೇಶ ನಡೆಸಲು ಮುಂದಾಗಿದೆ. +ಮತ್ತೊಂದೆಡೆ ನಿನ್ನೆ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಬಲವರ್ಧನೆಗಾಗಿ ನಡೆದ ಭೀಮ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವುದಾಗಿ ತಿಳಿಸಿದ್ದಾರೆ. ಪಕ್ಷ ಬಲಪಡಿಸಲು ಶೀಘ್ರವೇ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಯವರ ಕೈ ಬಲಪಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಚುನಾವಣೆ ದೃಷ್ಟಿಯಿಂದ ರಾಜ್ಯ ಪ್ರವಾಸದ ವೇಳೆ ಪ್ರಮುಖರ ಜೊತೆಗೆ ಮಾತನಾಡುವೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಬೇಕು ಎಂದು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_269_9.txt b/eesanje/url_46_269_9.txt new file mode 100644 index 0000000000000000000000000000000000000000..ced2a762b2816536011e8cd492f459e2eddad38f --- /dev/null +++ b/eesanje/url_46_269_9.txt @@ -0,0 +1,17 @@ +ನನ್ನ ಸೋಲಿಗೆ ಕಾರಣರಾದವರ ಮೇಲೆ ಕ್ರಮ ಜರುಗಿಸಿ ; ಸೋಮಣ್ಣ +ಬೆಂಗಳೂರು,ಜ.6- ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣರಾದವರ ಮೇಲೆ ಕೂಡಲೇ ಶಿಸ್ತು ಕ್ರಮ ಜರುಗಿಸದಿದ್ದರೆ ಇದೇ ತಿಂಗಳ 16ರಂದು ಎಲ್ಲವನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಅವರು ಸ್ವಪಕ್ಷದ ವಿರುದ್ಧವೇ ಗುಡುಗಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಯಾರು? ಹೇಗೆ ಕೆಲಸ ಮಾಡಿದ್ದಾರೆ, ಏನೇನು ಮಾಡಿದ್ದಾರೆ ಎಂಬುದು ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಗೊತ್ತಿದೆ. ಕೂಡಲೇ ಅವರು ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ನಾನೇ ಬಹಿರಂಗಪಡಿಸುತ್ತೇನೆ ಎನ್ನುವ ಮೂಲಕ ವಿಜಯೇಂದ್ರ ಆಪ್ತ ರುದ್ರೇಶ್‍ಗೆ ಎಚ್ಚರಿಕೆ ಕೊಟ್ಟರು. +ನಮ್ಮಂತಹವರ ಮೇಲೆ ಗದಾಪ್ರಹಾರ ಮಾಡಿದರೆ ಪರಿಣಾಮ ಏನಾಗುತ್ತದೆ ಎಂಬುದನ್ನು ಚಿಂತನೆ ಮಾಡಬೇಕು. ವಿಜಯೇಂದ್ರ ಅವರಿಗೆ ಒಳ್ಳೆಯದಾಗಲಿ. ಹಿಂದಿನದ್ದೇ ನಡೆಸಿಕೊಂಡು ಹೋಗುತ್ತೇನೆ ಎಂಬುದನ್ನು ಬಿಡಬೇಕು ಎಂದರು. +ಚಾಮರಾಜನಗರ ಜಿಲ್ಲೆಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರು, ಎಲ್ಲಿಗೆ ಬೇಕಾದರೂ ಹೋಗಲಿ ಎಂದು ಸಿಡಿಮಿಡಿಗೊಂಡರು. ನಾನು ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಆದರೆ ನಮ್ಮವರೇ ನನಗೆ ಏನು ಮಾಡಿದ್ದಾರೆ ಎಂಬುದು ವಿಜಯೇಂದ್ರ ಅವರಿಗೆ ಗೊತ್ತಿಲ್ಲವೇನೆಂದಲ್ಲ. ಬೇರೆ ಪಕ್ಷದವರ ಜೊತೆ ಕೈ ಜೋಡಿಸಿದವರು ಯಾರು ಎಂಬುದು ನಮ್ಮ ಅಧ್ಯಕ್ಷರಿಗೆ ಗೊತ್ತಿದೆ. ತಕ್ಷಣವೇ ಅಂಥವರ ಮೇಲೆ ಕ್ರಮ ಆಗಲೇಬೇಕು. ಪಕ್ಷಕ್ಕೆ ಮುಜುಗರವಾಗಬಾರದೆಂದು ನಾನು ಕೆಲವು ಕಹಿ ಸತ್ಯಗಳನ್ನು ನುಂಗಿಕೊಂಡಿದ್ದೇನೆ. ಎಲ್ಲಿಯವರೆಗೂ ನಾನು ಸಹಿಸಿಕೊಳ್ಳಲಿ ಎಂದು ಪ್ರಶ್ನೆ ಮಾಡಿದರು. +ಸೋಮಣ್ಣ ಎಂದಿಗೂ ನಂಬಿದವರಿಗೆ ಮೋಸ ಮಾಡಿದ ವ್ಯಕ್ತಿಯಲ್ಲ. ನಾನು ಕಳೆದ ನಾಲ್ಕು ದಶಕಗಳಿಂದ ರಾಜಕಾರಣದಲ್ಲಿ ಇದ್ದೇನೆ. ಪಕ್ಷ ಬದಲಾಯಿಸಿದರೂ ಅನಿವಾರ್ಯ ಕಾರಣಗಳಿಂದ ಪಕ್ಷ ಬದಲಾಯಿಸಿರಬಹುದು. ಆದರೆ ಸೋಮಣ್ಣ ಎಂದಿಗೂ ವಿಶ್ವಾಸ ದ್ರೋಹ ಮಾಡಿದ ವ್ಯಕ್ತಿಯಲ್ಲ. ನಮಗೆ ನಮ್ಮವರಿಂದಲೇ ಮೋಸವಾಗಿದೆ. ಅಂಥವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಕೆ?ಇದನ್ನು ವರಿಷ್ಠರು ತೀರ್ಮಾನಮಾಡಬೇಕೆಂದು ಒತ್ತಾಯಿಸಿದರು. +ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ +ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ನಾನು ಪಕ್ಷಕ್ಕೆ ಮುಜುಗರವಾಗಬಾರದೆಂದು ಯಾವುದೇ ಹೇಳಿಕೆಗಳನ್ನು ಕೊಟ್ಟಿಲ್ಲ. ನನಗಾಗಿರುವ ನೋವು ಯಾರಿಗೂ ಬರಬಾರದು. ಭವಿಷ್ಯದಲ್ಲಿ ಇದು ಮರುಕಳಿಸಬಾರದೆಂದರೆ ಕೆಲವರ ವಿರುದ್ಧ ಕ್ರಮ ಆಗಲೇಬೇಕು. ಪಕ್ಷದಲ್ಲಿದ್ದುಕೊಂಡೇ ನನಗೆ ಮೋಸ ಮಾಡುತ್ತಾರೆ ಎಂದರೆ ಯಾರನ್ನು ನಂಬಬೇಕೆಂದು ವಿಷಾದ ವ್ಯಕ್ತಪಡಿಸಿದರು. +ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕೆಂಬುದೇ ನಮ್ಮೆಲ್ಲರ ದೃಢಸಂಕಲ್ಪ, ಹಾಗಾಗಿ ನಾನು ಕೆಲವು ಕಹಿ ಸತ್ಯಗಳ ಅನುಭವವಾಗಿದ್ದರೂ ನುಂಗಿಕೊಂಡು ಹೋಗಿದ್ದೇನೆ. ಇದೇ ತಿಂಗಳ 16ರ ನಂತರ ಕೆಲವು ಬೆಳವಣಿಗೆಗಳ ಬಗ್ಗೆ ನಾನೇ ಮಾಹಿತಿ ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದರು. +ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ವೇಳೆ ಬಿಜೆಪಿಗೆ ಪೂರಕವಾದ ವಾತಾವರಣವಿದೆ. ಎಷ್ಟು ಸಾಧ್ಯವೋ ಅಷ್ಟು ಸ್ಥಾನಗಳನ್ನು ಗೆಲ್ಲಲು ನಾವು ಶ್ರಮ ಹಾಕುತ್ತೇವೆ. ಪಕ್ಷವು ನನ್ನನ್ನು ಯಾವ ರೀತಿ ಬಳಸಿಕೊಳ್ಳುತ್ತದೆಯೋ ಗೊತ್ತಿಲ್ಲ. ಇದುವರೆಗೂ ಕೊಟ್ಟ ಜವಾಬ್ದಾರಿಯನ್ನು ಶ್ರದ್ದೆಯಿಂದ ಮಾಡಿದ್ದೇನೆ. ಮುಂದೆಯೂ ಸೋಮಣ್ಣನ ಅಗತ್ಯತೆ ಬೇಕೆಂದರೆ ಯಾವುದೇ ಕೆಲಸವನ್ನು ಶಿರಸಾ ವಹಿಸಿ ಮಾಡುತ್ತೇನೆ ಎಂದರು. +ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಬೇಕೆ ಬೇಡವೇ ಎಂಬುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ನನಗೆ ಇಂಥದ್ದೇ ಕ್ಷೇತ್ರ ಬೇಕೆಂದು ಕೇಳುವ ವ್ಯಕ್ತಿಯಲ್ಲ. ವರಿಷ್ಠರು ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಬೇಡ ಎಂಬುದನ್ನು ಅಳೆದು ತೂಗಿ ತೀರ್ಮಾನಿಸುತ್ತಾರೆ. ವರಿಷ್ಠರು ಒಪ್ಪಿದರೆ ನಾನು ಅದಕ್ಕೂ ಸಿದ್ಧ ಕಾದು ನೋಡೋಣ ಏನಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು. +ಇದೇ ತಿಂಗಳ 8ರಂದು ನಾನು ದೆಹಲಿಗೆ ತೆರಳುತ್ತಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ಕೊಟ್ಟಿದ್ದಾರೆ. ನಾನು ಯಾರ ವಿರುದ್ಧವೂ ದೂರು ನೀಡುವುದಿಲ್ಲ. ನನಗೆ ಯಾರಿಂದ ಅನ್ಯಾಯವಾಗಿದೆ ಎಂಬುದನ್ನು ಅವರ ಗಮನಕ್ಕೆ ತರುತ್ತೇನೆ. ನನ್ನ ನೋವನ್ನು ಪಕ್ಷದ ನಾಯಕರ ಜೊತೆ ಹಂಚಿಕೊಳ್ಳುವುದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದರು. +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿ ಕುರಿತಾಗಿ ಮಾತನಾಡಿದ ಸೋಮಣ್ಣ, ನನಗೆ ಅವರ ಭೇಟಿಯಿಂದ ಹೆಚ್ಚು ಶಕ್ತಿ ಬಂದಿದೆ. ರಾಜಕಾರಣದಲ್ಲಿ ಮುಂದುವರೆಯಬೇಕೆಂಬ ಇಚ್ಛೆ ಹೊಂದಿದ್ದೇನೆ. ಅವರಿಂದ ಮಾರ್ಗದರ್ಶನ ಪಡೆದಿರುವುದರಲ್ಲಿ ತಪ್ಪೇನಿಲ್ಲ ಎಂದು ಸಮರ್ಥಿಸಿಕೊಂಡರು. +ನನಗೆ ದೇವೇಗೌಡರು ರಾಜಕೀಯ ಗುರುಗಳು. 1983ರಿಂದಲೂ ನಾನು ಅವರನ್ನು ಬಲ್ಲೆ. ರಾಜಕಾರಣದಲ್ಲಿ ಏರೇಳಿತಗಳು ಉಂಟಾಗುವುದು ಸಹಜ. ಅದಕ್ಕೆ ಹೆಚ್ಚು ತಲೆಕೆಡಿಸಿಕೊಳ್ಳಬಾರದೆಂದು ಸಲಹೆ ಕೊಟ್ಟಿದ್ದಾರೆ. ನನಗೆ ಅವರ ಭೇಟಿ ಹೆಚ್ಚು ಬಲ ತಂದಿದೆ. ಅವರ ಮಾರ್ಗದರ್ಶನದಂತೆಯೇ ಮುಂದುವರೆಯುತ್ತೇನೆ ಎಂದು ಸೋಮಣ್ಣ ಹೇಳಿದರು. +ಪಡಿತರ ವಿತರಣೆ ಹಗರಣದಲ್ಲಿ ಟಿಎಂಸಿ ನಾಯಕ ಶಂಕರ್ ಅಧ್ಯಾ ಅರೆಸ್ಟ್ +ಲೋಕಸಭೆ ಚುನಾವಣೆ ಇರುವುದರಿಂದ ಕೆಲ ವಿಚಾರ ಮಾತನಾಡಲ್ಲ. ನಮ್ಮಂಥವರಿಗೆ ಏನು ಅನಾನುಕೂಲ ಎಂಬ ಮಾಹಿತಿ ಅವರಿಗೆ ಇದೆ. ಅವರಿಗೇ ಅಂಟಿಕೊಂಡು ಹೋಗುತ್ತೇನೆ ಅಂದರೇ ಬೇರೆ ಮಾತಾಡಬೇಕಾಗುತ್ತೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನೂ ಯುವಕ. ನೀನು ಬೆಳೆಯಬೇಕು, ರಾಜ್ಯದಲ್ಲಿ ದೊಡ್ಡ ನಾಯಕರು ಅಂತ ಇದ್ದಾರೆ. ಸೋಲಿಗೆ ಕಾರಣರಾದ ಮನೆಹಾಳರನ್ನು ಜೊತೆಯಲ್ಲಿ ಇಟ್ಟುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು. +ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಧ್ಯೆ ಯಾವ ಭಿನ್ನಾಭಿಪ್ರಾಯಗಳು ಇಲ್ಲ. ನಾನು ಮತ್ತು ಅಶೋಕ್ ಸ್ನೇಹಿತರು. ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು. \ No newline at end of file diff --git a/eesanje/url_46_26_1.txt b/eesanje/url_46_26_1.txt new file mode 100644 index 0000000000000000000000000000000000000000..73f0ce31df00030ce245f22e3af2e836bc4ad1a7 --- /dev/null +++ b/eesanje/url_46_26_1.txt @@ -0,0 +1,7 @@ +ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ಶೀಘ್ರದಲ್ಲೇ ತೀರ್ಮಾನ : ಸಿಎಂ + +ಬೆಂಗಳೂರು,ಸೆ.4-ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು. +ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. +ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು, 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. +ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹ್ದುೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಯಲ್ಲಿ, ಮುಂಬಡ್ತಿ ಹ್ದುೆಗಳನ್ನು ಶೇ.50ರಷ್ಟು ನಿಗದಿಪಡಿಸಬೇಕು. ಮುಂಬಡ್ತಿ ಸಂದರ್ಭದಲ್ಲಿ ಸೇವಾ ಜೇಷ್ಠತೆಯನ್ನು ಪರಿಗಣಿಸಬೇಕು ಎಂದು ಶಿಕ್ಷಕರ ಸಂಘದ ನಿಯೋಗ ಮನವಿ ಸಲ್ಲಿಸಿತು. +ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ನಸೀರ್‌ ಅಹದ್‌, ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ನಿರಂಜನಾರಾಧ್ಯ, ಇಲಾಖಾ ಪ್ರದಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_26_10.txt b/eesanje/url_46_26_10.txt new file mode 100644 index 0000000000000000000000000000000000000000..e2e8c7cccf52c8d0d4fd02eb2de2bcfbe67048de --- /dev/null +++ b/eesanje/url_46_26_10.txt @@ -0,0 +1,7 @@ +ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ : ಆರ್.ಅಶೋಕ್ ವ್ಯಂಗ್ಯ + +ಬೆಂಗಳೂರು,ಸೆ.3– ಕಾಂಗ್ರೆಸ್ ನೇತೃತ್ವದ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸರ್ಕಾರದ ಪೋಸ್ಟ್ ಮಾಡಿರುವ ಅಶೋಕ್ ಅವರು, ಅಪನಂಬಿಕೆ ಸರ್ಕಾರದಿಂದ ನಂಬಿಕೆ ಯೋಜನೆ ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯವಷ್ಟೇ ಎಂಬುದು ಬೆಂಗಳೂರಿನ ಜನತೆಯ ಬಲವಾದ ನಂಬಿಕೆ ಎಂದು ಕುಹಕವಾಡಿದ್ದಾರೆ. +ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆಯೇ ಇಲ್ಲದಂತಾಗಿದೆ ಎಂದು ಅನುಮಾನ ಹೊರಹಾಕಿದ್ದಾರೆ. +ಬೆಂಗಳೂರಿನ ಜನತೆಗೆ ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ. ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ. ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ. +ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ.ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. \ No newline at end of file diff --git a/eesanje/url_46_26_11.txt b/eesanje/url_46_26_11.txt new file mode 100644 index 0000000000000000000000000000000000000000..12e7e5a0bad6784e09322cb44ce30ade8060a63c --- /dev/null +++ b/eesanje/url_46_26_11.txt @@ -0,0 +1,10 @@ +ಚಾಮುಂಡಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ : ಸಿಎಂ ಎಚ್ಚರಿಕೆ + +ಮೈಸೂರು,ಸೆ.3-ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. +ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. +ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು. +ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗಿಂದಾಗ್ಗೆತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. +ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸುವುದಿಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು. +ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. +ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.ಕೊಪ್ಪಳ ಹುಲಿಗಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು. +ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_26_12.txt b/eesanje/url_46_26_12.txt new file mode 100644 index 0000000000000000000000000000000000000000..5ffbfa3f4bab1684dfe569c2226a7cd9bb6a263c --- /dev/null +++ b/eesanje/url_46_26_12.txt @@ -0,0 +1,5 @@ +402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ + 402 22nd +ಬೆಂಗಳೂರು,ಸೆ.3-ಒಟ್ಟು 402 ಪೊಲೀಸ್‌‍ ಸಬ್‌ ಇನ್ಸ್‌ಪೆಕ್ಟರ್​ ಹುದ್ದೆಗಳಿಗೆ ಇದೇ ತಿಂಗಳ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ. +ಒಟ್ಟು 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ನಿನ್ನೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಇದಲ್ಲದೆ ಗ್ರಾಮ ಆಡಳಿತಾಧಿಕಾರಿ ಹ್ದುೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್‌ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_46_26_2.txt b/eesanje/url_46_26_2.txt new file mode 100644 index 0000000000000000000000000000000000000000..c3049a3bd182022b46315457d2705df0b275deb2 --- /dev/null +++ b/eesanje/url_46_26_2.txt @@ -0,0 +1,12 @@ +ಸಿಎಂ ರಾಜೀನಾಮೆ ದಿನ ಬಂದೇ ಬರುತ್ತೆ : ವಿಜಯೇಂದ್ರ ಭವಿಷ್ಯ + ' : ' +ಬೆಂಗಳೂರು,ಸೆ.4-ಮುಡಾ ಪ್ರಕರಣದಲ್ಲಿ ಹಿಂದಿನ ಆಯುಕ್ತ ದಿನೇಶ್ಕುಮಾರ್ ಅಮಾನತಾಗಿರುವುದರಿಂದ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರನ್ನು ಯಾವ ಕಾರಣಕ್ಕಾಗಿ ಅಮಾನತು ಮಾಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಒಬ್ಬ ಆಯುಕ್ತರೇ ಅಮಾನತುಗೊಂಡಿರುವುದರಿಂದ ಅಲ್ಲಿಗೆ ಹಗರಣ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿದೆ ಎಂದು ಹೇಳಿದರು. ಈ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲವೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದರು. +ದಿನೇಶ್ಕುಮಾರ ಯಾವ ಕಾರಣಕ್ಕಾಗಿ ಅಮಾನತುಪಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಹೇಳಲಾಗಿದೆ. ಬರುವ ದಿನಗಳಲ್ಲಿ ಸಿಎಂ ರಾಜೀನಾಮೆ ನೀಡುವುದು ಶತ ಸಿದ್ಧ, ಕಾದು ನೋಡಿ ಎಂದು ಸೂಚ್ಯವಾಗಿ ಹೇಳಿದರು. +ಮೇಲನೆ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ದೂರು ನೀಡಿರುವ ವಿಚಾರ ಕುರಿತು ಸಿಡಿಮಿಡಿಗೊಂಡ ವಿಜಯೇಂದ್ರ, ನಾನು ಸಚಿವ ಪ್ರಿಯಾಂಕ ಖರ್ಗೆಯವರಿಗೆ ಒಂದು ಪ್ರಶ್ನೆ ಕೇಳುತ್ತೇನೆ. +ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ದೂರು ಕೊಡಲು ಹೋದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಉಳಿದ ಸಚಿವರು ಏಕೆ ಇರಲಿಲ್ಲ?, ರಾಜಭವನದಲ್ಲಿ ಯಾರಾದರೂ ಹಿರಿಯ ನಾಯಕರು ಇದ್ದಾರಾ? ಎಂದು ಪ್ರಶ್ನಿಸಿದರು. +ಕಾಂಗ್ರೆಸ್ನವರು ಬಿಜೆಪಿ ಮೇಲೆ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಬಿಜೆಪಿ ಮನೆಯೊಂದು, ಮೂರು ಬಾಗಿಲು ಎನ್ನುವವರು ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಬಂದ ಮೇಲೆ ಎಷ್ಟು ಬಾಗಿಲುಗಳು ಇರುತ್ತವೆ ಎಂದು ಕಾದು ನೋಡಿ ಎಂದು ತಿರುಗೇಟು ನೀಡಿದರು. +ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರವಾಗಿ ನಮ ಪಕ್ಷದ ಮುಖಂಡರು ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಯೋಗೀಶ್ವರ್ ಅಭ್ಯರ್ಥಿಯಾಗಬೇಕೆಂಬುದು ಬಹುತೇಕರ ಒತ್ತಾಸೆಯಾಗಿದೆ. ಅಂತಿಮವಾಗಿ ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆಯೋ ಕಾದು ನೋಡೋಣ ಎಂದರು. +ನಾವು ಈ ಹಿಂದೆಯೇ ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಹಲವಾರು ಬಾರಿ ಮನವಿ ಮಾಡಿಕೊಂಡರೂ ಸರ್ಕಾರ ನಮ ಮಾತು ಕೇಳಲಿಲ್ಲ. ಯಾರೋ ಒಬ್ಬ ಅಯೋಗ್ಯ ಮಾಡಿದ ತಪ್ಪಿಗೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ. ಇದಕ್ಕೆ ಕಾರಣರಾದವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದರು. +ಕೋವಿಡ್ ಮಧ್ಯಂತರದ ವರದಿ ಕುರಿತು ನಾವು ವಾಲೀಕಿ, ಮುಡಾ ಹಗರಣ ಹೊರತರುತ್ತಿದ್ದಂತೆ ಕಾಂಗ್ರೆಸ್ನವರು ಬೆಚ್ಚಿ ಬಿದ್ದಿದ್ದಾರೆ. ಅಂತಿಮವಾಗಿ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಏನು ತೀರ್ಮಾನ ಮಾಡುತ್ತಾರೋ ಮಾಡಲಿ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅಂದಿನ ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಮ ಸರ್ಕಾರದ ಅವಧಿಯಲ್ಲಿ ಯಾವುದೇ ತಪ್ಪುಗಳು ಅಥವಾ ಹಗರಣಗಳು ನಡೆದಿಲ್ಲ. ವರದಿಯಲ್ಲಿ ಏನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಊಹಾಪೋಹದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು. +ಯುಪಿಎಸ್ಸಿ ಮತ್ತು ಪಿಎಸ್ಐ ಪರೀಕ್ಷೆ ಒಂದೇ ದಿನ ನಡೆಯುತ್ತಿರುವುದರ ಬಗ್ಗೆ ನಾವು ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇವೆ. ಸರ್ಕಾರ ಒಂದು ಕಡೆ ಪರೀಕ್ಷೆ ಮುಂದೂಡುತ್ತದೆ, ಮತ್ತೊಂದು ಕಡೆ ನಡೆದಿರುವ ಪರೀಕ್ಷೆಯಲ್ಲಿ ಅದ್ವಾನಗಳನ್ನು ಸೃಷ್ಟಿಸುತ್ತದೆ. ಒಂದು ವರ್ಷದ ಹಿಂದೆಯೇ ಪಿಎಸ್ಐ ಪರೀಕ್ಷೆ ನಿಗಧಿಯಾಗಿದೆ. ಅದೇ ದಿನಾಂಕದಂದು ಯುಪಿಎಸ್ಸಿ ಪರೀಕ್ಷೆ ನಡೆಯುತ್ತಿದೆ. ಸರ್ಕಾರ ಏಕೆ ಇಂತಹ ಮೂರ್ಖ ನಿರ್ಧಾರ ಮಾಡುತ್ತಿದೆ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_26_3.txt b/eesanje/url_46_26_3.txt new file mode 100644 index 0000000000000000000000000000000000000000..937c57ea65f121d22cf413bc8be30965b9e313c2 --- /dev/null +++ b/eesanje/url_46_26_3.txt @@ -0,0 +1,9 @@ +ಒಟ್ಟು 231 ಸಾಕ್ಷಿದಾರರನ್ನೊಳಗೊಂಡ ವಾಟರ್ ಟೈಟ್ ಚಾರ್ಜ್ ಶೀಟ್ : ದಯಾನಂದ + 231 : +ಬೆಂಗಳೂರು, ಸೆ.4– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಸಂಪೂರ್ಣ ಮುಗಿದಿದ್ದು, ಇಂದು ನ್ಯಾಯಾಲಯಕ್ಕೆ ವಾಟರ್ ಟೈಟ್ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆದಿದೆ. ಸಾಕಷ್ಟು ತಾಂತ್ರಿಕ ಸಾಕ್ಷ್ಯಗಳು ದೊರೆತಿದ್ದು, ಅದನ್ನು ತನಿಖೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ವೈದ್ಯರು, ಎಂಜಿನಿಯರ್, ಆರ್ಟಿಓಗಳು, ತಹಸೀಲ್ದಾರರು ಹಾಗೂ 56 ಪೊಲೀಸರನ್ನು ಸಾಕ್ಷಿಯನ್ನಾಗಿ ಮಾಡಲಾಗಿದೆ. ಒಟ್ಟು 231 ಒಟ್ಟು ಸಾಕ್ಷಿದಾರರನ್ನು ದೋಷಾರೋಪಣಾ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದರು. +ಪ್ರಕರಣ ಸಂಬಂಧ ಈಗಾಗಲೇ 17 ಮಂದಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ ಎಫ್ಎಸ್ಎಲ್ನಿಂದ ಎಲ್ಲಾ ವರದಿಗಳು ಬಂದಿವೆ. ತಾಂತ್ರಿಕ ವಿಶ್ಲೇಷಣೆಗಾಗಿ ಕೆಲವು ಎಲೆಕ್ಟ್ರಾನಿಕ್ ಸಲಕರಣೆಗಳನ್ನು ಹೈದರಾಬಾದ್ನ ಸಿಎಫ್ಎಸ್ಎಲ್ ಕಳುಹಿಸಲಾಗಿತ್ತು. ಅಲ್ಲಿನ ವರದಿ ಭಾಗಶಃ ಬಂದಿದ್ದು, ಸಂಪೂರ್ಣ ಬಂದಿರಲಿಲ್ಲ, ಲಭ್ಯ ಇರುವ ಮಾಹಿತಿ ಆಧರಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. +ನ್ಯಾಯಾಲಯದಲ್ಲಿ ಈ ಪ್ರಕರಣದ ಬಗ್ಗೆ ಸರ್ಕಾರದ ಪರವಾಗಿ ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಲಾಗಿದೆ. ಅವರ ಅಣತಿಯಂತೆ ದೋಷಾರೋಪಣ ಪಟ್ಟಿ ಸಿದ್ಧಪಡಿಸಲಾಗಿದೆ. ಸಾಮಾಜಿಕ ಜಾಲತಾಣದಿಂದಲೂ ಸಾಕಷ್ಟು ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದ್ದು, ಅವನ್ನು ತನಿಖೆಯಲ್ಲಿ ಬಳಸಿಕೊಳ್ಳಲಾಗಿದೆ. +ತನಿಖೆ ಉತ್ತಮವಾಗಿ ನಡೆದಿದೆ, ಎಲ್ಲ ರೀತಿಯ ಸಾಕ್ಷ್ಯ ಆಧಾರಗಳನ್ನು ಬಳಸಿಕೊಂಡು ಆರೋಪಿಗಳು ನುಣಚಿಕೊಳ್ಳಲು ಅವಕಾಶವೇ ಇಲ್ಲದಂತೆ ವಾಟರ್ಟೈಟ್ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಇದಾದ ಬಳಿಕ ತ್ವರಿತ ವಿಲೇವಾರಿ ಅಥವಾ ವಿಶೇಷ ನ್ಯಾಯಾಲಯದ ವಿಚಾರಣೆಗೆ ಮನವಿ ಸಲ್ಲಿಸುವ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು ಎಂದು ಹೇಳಿದರು. +ರೇಣುಕಾಸ್ವಾಮಿಯ ಅಪಹರಣ, ಹಲ್ಲೆ, ಕೊಲೆ ಹಾಗೂ ಈ ಕೇಸ್ ಮುಚ್ಚಿ ಹಾಕಲು ಹಣ ನೀಡಿದ್ದು, ಈ ಪ್ರಕರಣದಲ್ಲಿ ದರ್ಶನ್ ಪಾತ್ರದ ಇಂಚಿಂಚೂ ಮಾಹಿತಿಯನ್ನು ಸಂಗ್ರಹಿಸಿ ಚಾರ್ಜ್ಶೀಟ್ನಲ್ಲಿ ದಾಖಲಿಸಲಾಗಿದೆ ಎಂದರು. +ಪಟ್ಟಣಗೆರೆ ಶೆಡ್ನಲ್ಲಿ ದರ್ಶನ್ ಓಡಾಟದ ದೃಶ್ಯಗಳು, ತಹಸೀಲ್ದಾರ್ ಸ್ಥಳ ಮಹಜರು ಮಾಡಿರುವ ಮಾಹಿತಿಗಳು, ಶವ ಸಾಗಿಸಿರುವ ವಾಹನ, ಪಂಚನಾಮೆ ವೇಳೆಯಲ್ಲಿ ಲಭ್ಯವಾಗಿರುವ ಸಾಕ್ಷ್ಯಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_26_4.txt b/eesanje/url_46_26_4.txt new file mode 100644 index 0000000000000000000000000000000000000000..ea73b97bcb894163af2d7e579d72314017915cc7 --- /dev/null +++ b/eesanje/url_46_26_4.txt @@ -0,0 +1,9 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ : 3991 ಪುಟಗಳ ಚಾರ್ಜ್‌ಶೀಟ್‌ ನ್ಯಾಯಾಲಯಕ್ಕೆ ಸಲ್ಲಿಕೆ + : 3991 +ಬೆಂಗಳೂರು, ಸೆ.4-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಚಂದನ್‌ ನೇತೃತ್ವದಲ್ಲಿ ಇಂದು 24ನೆ ಎಸಿಎಂಎಂ ನ್ಯಾಯಾಲಯಕ್ಕೆ 3991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. +ಈ ದೋಷಾರೋಪಣ ಪಟ್ಟಿ ಒಟ್ಟು 231 ಸಾಕ್ಷ್ಯಾಧಾರಗಳ ನ್ನೊಳಗೊಂಡಂತೆ ಒಟ್ಟು 291 ಪುಟಗಳ 3991 ಪುಟಗಳುಳ್ಳ ಏಳು ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ.ಪವಿತ್ರಾಗೌಡ ಎ1 ಮತ್ತು ದರ್ಶನ್‌ ಎ2 ಆರೋಪಿಗಳಾಗಿದ್ದು, ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. +ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸಿ ಈವರೆಗೆ ಒಟ್ಟು 17 ಜನರನ್ನು ಬಂಧಿಸಿ ಅವರ ವಿಚಾರಣೆ ನಡೆಸಿ ಮತ್ತು ತನಿಖೆ ವೇಳೆ ಸಂಗ್ರಹಿಸಿದ್ದ ಪ್ರತ್ಯಕ್ಷ, ಸಾಂದರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.ಈ ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಅಪಹರಣ, ಒಳಸಂಚು, ಸಾಕ್ಷ್ಯನಾಶ ಸೇರಿದಂತೆ ಹಲವು ಗಂಭೀರ ಅಪರಾಧಗಳನ್ನು ಉಲ್ಲೇಖಿಸಲಾಗಿದೆ. +ಈ ಪ್ರಕರಣದಲ್ಲಿ ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಂಟು ಎಫ್‌ಎಸ್‌‍ಎಲ್‌/ಸಿಎಫ್‌ಎಸ್‌‍ಎಲ್‌ನಿಂದ 8, 161 ಮತ್ತು 164ರ ಸಿಆರ್‌ಪಿ ಅಡಿಯಲ್ಲಿ ಒಟ್ಟು 97 ಸಾಕ್ಷಿಗಳು, 59 ಪಂಚರು, 8 ಮಂದಿ ಸರ್ಕಾರಿ ಅಧಿಕಾರಿಗಳಾದ ತಹಸೀಲ್ದಾರ್‌, ವೈದ್ಯರು, ಆರ್‌ಟಿಒ, ಎಂಜಿನಿಯರ್‌ಗಳು, 56 ಮಂದಿ ಪೊಲೀಸರು ಸೇರಿದಂತೆ ಒಟ್ಟು 231 ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ. +ಇದರಲ್ಲಿ ಪ್ರಮುಖವಾಗಿ 164 ಸಿಆರ್‌ಪಿಸಿ ಅಡಿಯಲ್ಲಿ ಹೇಳಿಕೆಗಳನ್ನು ಪಡೆಯಲಾಗಿದ್ದು, ಹಲವು ಛಾಯಾಚಿತ್ರಗಳು, ದರ್ಶನ್‌ ತೊಟ್ಟಿದ್ದ ಬಟ್ಟೆಗಳು, ಪವಿತ್ರಾ ಅವರ ಚಪ್ಪಲಿ ಸೇರಿದಂತೆ ಹಲವು ವಸ್ತುಗಳನ್ನು ಕೂಡ ಸಂಗ್ರಹಿಸಲಾಗಿದೆ. +ಪ್ರಮುಖವಾಗಿ ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡುವಾಗ ದರ್ಶನ್‌ ಅವರು ಅಲ್ಲಿದ್ದರು ಎಂಬ ಬಗ್ಗೆ ಕೆಲವೊಂದು ವಿಡಿಯೋ ಸಾಕ್ಷ್ಯಗಳನ್ನು ಕೂಡ ಸಂಗ್ರಹಿಸಿ ಚಾರ್ಜ್‌ಶೀಟ್‌ನಲ್ಲಿ ಈ ಎಲ್ಲ ಅಂಶಗಳನ್ನು ಸಲ್ಲಿಸಲಾಗಿದೆ. +ಈ ಪ್ರಕರಣದ ತನಿಖೆಯನ್ನು ಪೊಲೀಸ್‌‍ ಕಮಿಷನರ್‌ ದಯಾನಂದ, ಹೆಚ್ಚುವರಿ ಪೊಲೀಸ್‌‍ ಕಮಿಷನರ್‌ ಸತೀಶ್‌ಕುಮಾರ್‌, ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಅವರ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ಕುಮಾರ್‌ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_26_5.txt b/eesanje/url_46_26_5.txt new file mode 100644 index 0000000000000000000000000000000000000000..07d1cc7233ceb7d2b7820c9f3069cdab18bb4d8a --- /dev/null +++ b/eesanje/url_46_26_5.txt @@ -0,0 +1,6 @@ +ದರ್ಶನ್‌ ತಪ್ಪು ಮಾಡಿ ಜೈಲಿಗೆ ಹೋಗಿದ್ದಾರೆ : ಜಮೀರ್ + ' +ಹಾವೇರಿ,ಸೆ.3-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತಪ್ಪು ಮಾಡಿದ ಕಾರಣಕ್ಕಾಗಿ ಜೈಲಿಗೆ ಹೋಗಿದ್ದಾರೆ. ಇದರಲ್ಲಿ ನನ್ನ ಹೆಸರನ್ನು ಏಕೆ ಥಳಕು ಹಾಕಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ಖಾನ್‌ ಆಕ್ಷೇಪ ವ್ಯಕ್ತಪಡಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್‌ ನನ್ನ ಆತೀಯ ಸ್ನೇಹಿತರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಕಾನೂನು ಪ್ರಕಾರ, ಏನು ನಡೆಯಬೇಕೋ ಅದೇ ನಡೆಯುತ್ತದೆ. ಮಾಧ್ಯಮಗಳು ಉದ್ದೇಶಪೂರಕವಾಗಿ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಿದೆ. ಇದಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದರು. +ಜಮೀರ್‌ ಅಹಮದ್‌ ಖಾನ್‌ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವುದರಿಂದ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂಬ ವ್ಯಾಖ್ಯಾನಗಳಿವೆ. ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ ರೌಡಿಶೀಟರ್‌ಗಳ ಜೊತೆ ಸೇರಿ ರಾಜಾತಿಥ್ಯ ಪಡೆದುಕೊಂಡು ಫೋಟೊಗಳು ವೈರಲ್‌ ಆಗಿದ್ದವು. +ಈ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಬೆಳಗಾವಿ ಅಥವಾ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಚರ್ಚೆಗಳು ನಡೆದಾಗ ಅಂತಿಮವಾಗಿ ಬಳ್ಳಾರಿಗೆ ಸ್ಥಳಾಂತರಿಸಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್‌, ನನಗೂ, ಇದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುವ ಜೊತೆಗೆ ತಪ್ಪು ಮಾಡಿರುವುದಕ್ಕೆ ಜೈಲಿಗೆ ಹೋಗಿದ್ದಾರೆ, ಸುಮನೇ ಯಾರೂ ಬಂಧನಕ್ಕೊಳಗಾಗುವುದಿಲ್ಲ ಎಂದು ಪುನರುಚ್ಚರಿಸಿದರು. \ No newline at end of file diff --git a/eesanje/url_46_26_6.txt b/eesanje/url_46_26_6.txt new file mode 100644 index 0000000000000000000000000000000000000000..7feb72b2e48a58bfd54dfe9b9f9be12932a0082d --- /dev/null +++ b/eesanje/url_46_26_6.txt @@ -0,0 +1,7 @@ +ಕಸ್ತೂರಿ ರಂಗನ್‌ ವರದಿಗೆ ತೀವ್ರ ಆಕ್ಷೇಪ : ಮಲೆನಾಡು ಭಾಗದಲ್ಲಿ ಜನಜಾಗೃತಿ + ' +ಚಿಕ್ಕಮಗಳೂರು, ಸೆ.3-ಕಸ್ತೂರಿ ರಂಗನ್‌ ವರದಿ ಆಧರಿಸಿ ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಸಂಬಂಧ 6ನೇ ಕರಡು ಅಧಿಸೂಚನೆಗೆ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗಿವೆ. +13 ಆಕ್ಷೇಪಣೆಗಳಿಗೆ ಸಂಬಂಧಿಸಿ ದಂತೆ ಮಲೆನಾಡು ಜಿಲ್ಲಾ ವ್ಯಾಪ್ತಿಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಈವರೆಗಿನ ಸಂಬಂಧ ಮನೆಮನೆಗಳಿಗೆ ಅಧಿಸೂಚನೆಯ ಆಕ್ಷೇಪಣೆಗಳನ್ನು ತಲುಪಿಸಿ ಜಾಗೃತಿ ಮೂಡಿಸಲಾಗುತ್ತಿದೆ. +ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರಧಾನ ಸಂಚಾಲಕರಾದ ಅನಿಲ್‌ ಹೊಸಕೊಪ್ಪ, ಪ್ರಧಾನ ಕಾರ್ಯದರ್ಶಿಯಾದ ಸುಧೀರ್‌ ಕುಮಾರ್‌ ಮುರೋಳ್ಳಿ ಅವರು ಅವೈಜ್ಞಾನಿಕ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಿ ಸ್ಥಳೀಯ ಜನಪ್ರತಿನಿಧಿಗಳನ್ನು ಒಳಗೊಂಡ ಹೊಸ ಪರಿಣಿತಿ ತಂಡವನ್ನು ನೇಮಿಸಿ ವರದಿಯನ್ನು ಅಮೂಲಾಗ್ರವಾಗಿ ಪರಿಶೀಲಿಸಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರಾದ ಭೂಪೇಂದ್ರ ಯಾದವ್‌ ಮತ್ತು ಅರಣ್ಯ ಇಲಾಖೆ ಕಾರ್ಯದರ್ಶಿಯವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. +ವರದಿಗೆ ಸಂಬಂಧಿಸಿದಂತೆ ಕೆಳಕಂಡ ಆಕ್ಷೇಪಣೆಗಳನ್ನು ಉಲ್ಲೇಖಿಸಿದ್ದಾರೆ.*ಕಸ್ತೂರಿ ರಂಗನ್‌ ವರದಿಯು ತೀವ್ರ ಅವೈಜ್ಞಾನಿಕವಾಗಿದ್ದು, ಸೆಟಲೈಟ್‌ ಚಿತ್ರಣದ ಆಧಾರದ ಮೇಲೆ ವಾಸ್ತವಿಕ ಮತ್ತು ನೈಜತೆಯ ಚಿತ್ರಣಕ್ಕೆ ವ್ಯತಿರಿಕ್ತವಾಗಿದೆ. ಸದರಿ ಸಮಿತಿಯು ಈ ಭಾಗಕ್ಕೆ ಭೇಟಿ ಕೊಡದೇ ವಾಸ್ತವ ಚಿತ್ರಣವನ್ನು ಅರಿಯದೇ ನೀಡಿದ ವರದಿಯಾಗಿರುತ್ತದೆ.*ಈ ಭಾಗದ ಗ್ರಾಮಗಳ ಶೇ.20 ಕ್ಕಿಂತ ಹೆಚ್ಚು ಭೌಗೋಳಿಕ ಪ್ರದೇಶವನ್ನು ಜೀವವೈವಿಧ್ಯ ಪರಿಸರ ಸೂಕ್ಷ್ಮ ಪ್ರದೇಶವನ್ನಾಗಿ ಸೇರಿಸಲ್ಪಟ್ಟಿದೆ. ಇದು ಅವೈಜ್ಞಾನಿಕವಾಗಿರುತ್ತದೆ.*ಘೋಷಿಸಿದ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಗ್ರಾಮ ಮಟ್ಟದ ಜನಾಭಿಪ್ರಾಯ ಅಥವಾ ಭೌತಿಕ ಸರ್ವೇ ಮಾಡಿ ವಿಷಯ ಸಂಗ್ರಹ ಮಾಡಿರುವುದಿಲ್ಲ.*ಪಶ್ಚಿಮ ಘಟ್ಟ ಪ್ರದೇಶವನ್ನು ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ-ನಿಯಮ ಇರುವುದರಿಂದ ಹೊಸಮಾನದಂಡದ ಅವಶ್ಯಕತೆ ಇರುವುದಿಲ್ಲ. +*ಸೂಕ್ಷ್ಮ ಪ್ರದೇಶ ಘೋಷಿಸಿರುವುದರಿಂದ ಗ್ರಾಮಸ್ಥರ ಮತ್ತು ಅರಣ್ಯವಾಸಿಗಳ ಜೀವನ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಆಗುವುದನ್ನು ಅವಲೋಕನ ತೆಗೆದುಕೊಂಡದ್ದು ಇರುವುದಿಲ್ಲ.*ಈ ಭಾಗದ ಅಭಿವೃದ್ಧಿ ದಿಶೆಯಲ್ಲಿ ಪರಿಸರ ಸೂಕ್ಷ್ಮ ಘೋಷಣೆಯಿಂದ ಅಭಿವೃದ್ಧಿಗೆ ಮಾರಕವಾಗುವುದು. ಅಲ್ಲದೇ, ನೈಸರ್ಗಿಕ ಮತ್ತು ಮೂಲಭೂತ ಸೌಕರ್ಯದಿಂದ ವಂಚಿತವಾಗುತ್ತದೆ.*ಉಪಗ್ರಹ ಆಧಾರಿತ ಸರ್ವೇ ಆಗಿರುವುದರಿಂದ ಅಡಿಕೆ, ತೆಂಗಿನ ತೋಟ, ಕಾಫಿ, ರಬ್ಬರ್‌ ಹಾಗೂ ಇನ್ನಿತರ ಕೃಷಿ ತೋಟಗಾರಿಕೆ ಬೆಳೆಗಳಿಂದ ಹಸಿರು ಪ್ರದೇಶವನ್ನು ಸಹಿತ ಅರಣ್ಯ ಪ್ರದೇಶವೆಂದು ಪರಿಗಣಿಸಿರುವುದು ನೈಸರ್ಗಿಕ ವಿರೋಧವಾದ ಕ್ರಮ.*ಘೋಷಿಸಲ್ಪಟ್ಟ ಸೂಕ್ಷ್ಮ ಪ್ರದೇಶದಲ್ಲಿ ಹಸಿರುಕರಣದ ಪ್ರದೇಶದಿಂದ ಖಾಸಗಿ ಮತ್ತು ಅರಣ್ಯವಾಸಿಗಳ ತೋಟಗಾರಿಕೆ ಕೃಷಿ ಚಟುವಟಿಕೆಯ ಹಸಿರುಕರಣ ಪ್ರದೇಶವನ್ನು ಭೌತಿಕ ಸರ್ವೇ ಮೂಲಕ ನೈಸರ್ಗಿಕ ಅರಣ್ಯ ಗಡಿ ಗುರುತಿಸಿರುವುದಿಲ್ಲ.*ಘೋಷಿಸಿದ ಹಳ್ಳಿ(ಗ್ರಾಮದ) ನಿರ್ದಿಷ್ಠ ಸರ್ವೇ ನಂಬರ್‌ ಪ್ರದೇಶ ವ್ಯಾಖ್ಯಾನಿಸದೇ ಇರುವುದು ಅವೈಜ್ಞಾನಿಕ.*ಘೋಷಿಸಿದ ಪ್ರದೇಶದಲ್ಲಿ ನೈಸರ್ಗಿಕ ಮತ್ತು ಮಾನವ ಮೂಲ ಸೌಕರ್ಯದ ಮೂಲಭೂತ ಹಕ್ಕುಗಳಾದ ನೀರು, ರಸ್ತೆ ಅಭಿವೃದ್ಧಿ ಮುಂತಾದ ಹಲವಾರು ಪಾರಂಪರಿಕ ನಾಗರಿಕತೆಯ ಸೌಕರ್ಯ ಅವನತಿಗೆ ಕಾರ್ಯ ನಿರ್ಬಂಧನದಿಂದ ಮಾನವ ಹಕ್ಕುಗಳ ಜೀವನ ಹಕ್ಕು ಉಲ್ಲಂಘನೆ ಆಗುವುದು.*ವರದಿಯು ಕೃಷಿ ಹಾಗೂ ತೋಟಗಾರಿಕೆ ಆಧಾರಿತ ಉದ್ಯಮಗಳ ಅಸ್ತಿತ್ವನ್ನು ನಿರ್ಲಕ್ಷಿಸಿದೆ.*ಈ ಹಿಂದಿನ ಕರಡು ಅಧಿಸೂಚನೆಗೆ ರಾಜ್ಯಗಳು ಸಲ್ಲಿಸಿದ ತಕರಾರು ಮತ್ತು ಸಲಹೆಗಳ ಬಗ್ಗೆ ಪುನರ್‌ ಪರಿಶೀಲಿಸಲು ನಿವೃತ್ತ ಐ.ಎ.ಎಸ್‌‍. ಅಧಿಕಾರಿ ಸಂಜಯ್‌ ಕುಮಾರ್‌ ನೇತೃತ್ವದ ಸಮಿತಿಯು ಈ ಭಾಗದ ಯಾವುದೇ ಹಳ್ಳಿ ಪ್ರದೇಶಗಳಿಗೆ ಭೇಟಿ ಕೊಟ್ಟು ವಾಸ್ತವಿಕತೆಯನ್ನು ಅರಿತಿರುವುದಿಲ್ಲ ಎಂದು ತಮ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_26_7.txt b/eesanje/url_46_26_7.txt new file mode 100644 index 0000000000000000000000000000000000000000..56714c10927332d37561465a3ff8baf17dd8bda1 --- /dev/null +++ b/eesanje/url_46_26_7.txt @@ -0,0 +1,8 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್ ಶೀಟ್ ನಾಳೆ ನ್ಯಾಯಾಲಯಕ್ಕೆ ಸಲ್ಲಿಕೆ + +ಬೆಂಗಳೂರು, ಸೆ.3-ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಬಹುತೇಕ ಪೂರ್ಣವಾಗಿದ್ದು, ಇಂದು ಅಥವಾ ನಾಳೆಯೊಳಗೆ ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸಾಕ್ಷ್ಯಾಧಾರಗಳನ್ನು ಆಧರಿಸಿ ದೋಷಾರೋಪಣಾ ಪಟ್ಟಿ ಸಿದ್ಧಪಡಿಸಿದ್ದು, ಅದನ್ನು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ಎಸ್ಪಿ) ಪರಿಶೀಲನೆ ನಡೆಸಿದ್ದು,ಕೆಲವೊಂದು ವಿಷಯಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಅದಕ್ಕೂ ನಾವು ಉತ್ತರ ಸಿದ್ಧಪಡಿಸಿದ್ದೇವೆ. +ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಸಾಕ್ಷ್ಯಾಧಾರಗಳುಚಸಿಕ್ಕಿದ್ದು, ಅದರ ಪೂರ್ಣ ವಿವರ ಒಳಗೊಂಡಿರುವ ಚಾರ್ಜ್ಶೀಟ್ಅನ್ನು ಇನ್ನೆರಡು ದಿನಗಳೊಳಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು. ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯದಿಂದ ಎಲ್ಲಾ ವರದಿಗಳು ಬಂದಿದ್ದು, ಜೊತೆಗೆ ಅದಕ್ಕೆ ಸೇರಿದ ಪೂರಕ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸಲಾಗಿದೆ. +ಹೈದರಾಬಾದ್ನ ಎಫ್ಎಸ್ಎಲ್ನಿಂದ ಕೆಲ ವರದಿಗಳು ಬರುವುದು ಬಾಕಿ ಇದೆ. ಆದರೂ ಸಹ ಅದರ ತನಿಖೆ ಬಾಕಿ ಇಟ್ಟು ನಾವು ಮುಂದುವರೆಯುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದರು.ಆರೋಪಿಗಳಿಗೆ ಯಾವ ಸೆಕ್ಷನ್ನಡಿ ಶಿಕ್ಷೆಯಾಗಬಹುದು ಎಂಬುದನ್ನು ಸಾಕ್ಷಿ ಆಧಾರಗಳ ಮೇಲೆ ನಿರ್ಧಾರವಾಗುತ್ತದೆ ಎಂದು ಆಯುಕ್ತರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ವೈರಲ್ ಆದ ೇಟೋದೊಳಗೆ ನಟ ದರ್ಶನ್ ಜೊತೆ ಇದ್ದ ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರ ಬಗ್ಗೆ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರ ಸ್ಥಳಾಂತರ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ. +ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪ್ರಕರಣ ದಾಖಲಿಸಿದ ಮಹಿಳೆಯ ಸಾವು ಕುರಿತಂತೆ ಮಹಿಳೆ ಆಯೋಗವು ಬರೆದಿರುವ ಪತ್ರ ನಮಗೆ ಇನ್ನು ತಲುಪಿಲ್ಲ ಪತ್ರ ಬಂದ ನಂತರ ಅದನ್ನು ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ದಯಾನಂದ ಅವರು ತಿಳಿಸಿದರು. \ No newline at end of file diff --git a/eesanje/url_46_26_8.txt b/eesanje/url_46_26_8.txt new file mode 100644 index 0000000000000000000000000000000000000000..aed926eb65e98dde034c0cf6c986de5fbcd0d901 --- /dev/null +++ b/eesanje/url_46_26_8.txt @@ -0,0 +1,6 @@ +ದೂರು ಕೊಡಲು ಬಂದವರೊಂದಿಗೆ ಸಂಯಮದಿಂದ ವರ್ತಿಸಿಸುವಂತೆ ಪೊಲೀಸರಿಗೆ ಗೃಹಸಚಿವರ ತಾಕೀತು + +ಬೆಂಗಳೂರು,ಸೆ.3-ಅರ್ಜಿ ಕೊಡಲು ಅಥವಾ ದೂರು ದುಮಾನ ಹೇಳಿಕೊಳ್ಳಲು ಬರುವವರೊಂದಿಗೆ ಒರಟಾಗಿ ನಡೆದುಕೊಳ್ಳದಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿ ಗಳಿಗೆ ತಾಕೀತು ಮಾಡಿದರು. +ಇಂದು ಬೆಳಿಗ್ಗೆ ಪರಮೇಶ್ವರ್ ಅವರ ನಿವಾಸದೆದುರು ಆಗಮಿಸಿದ ಪಿಎಎಸ್ಐ ಹುದ್ದೆಯ ಆಕಾಂಕ್ಷಿಗಳು ಹಾಗೂ ಪೊಲೀಸ್ ಪೇದೆ ಹುದ್ದೆ ನೇಮಕಾತಿಗೆ ವಯೋಮಿತಿ ಸಡಿಲಿಕೆಗೆ ಮನವಿ ಸಲ್ಲಿಸಲು ಆಗಮಿಸಿದವರನ್ನು ಕೆಲವು ಪೊಲೀಸ್ ಅಧಿಕಾರಿಗಳು ಬಲವಂತವಾಗಿ ವಶಕ್ಕೆ ಪಡೆದು ಕರೆದೊಯ್ದರು. ಈ ವೇಳೆ ಕೆಲವರ ಮೇಲೆ ಹಲ್ಲೆ ನಡೆಸಿದ್ದೂ ಕಂಡುಬಂದಿತು. +ಈ ಕುರಿತು ಮಾಧ್ಯಮದವರು ಖಾರವಾಗ ಪ್ರಶ್ನಿಸಿದಾಗ ಗೃಹಸಚಿವರು ತಬ್ಬಿಬ್ಬಾದರು. ಯಾವುದೇ ಅರ್ಜಿಗಳನ್ನು ನೀಡಲು ಬಂದವರೊಂದಿಗೆ ನಾನೇ ಮಾತನಾಡುತ್ತೇನೆ, ಅರ್ಜಿಗಳನ್ನು ಪಡೆದುಕೊಂಡು ಸಮಯವಿದ್ದರೆ ಅದರ ಮೇಲೆ ಸೂಕ್ತ ನಿರ್ದೇಶನಗಳನ್ನು ಬರೆದು ರವಾನೆ ಮಾಡುತ್ತೇನೆ. ಸಮಯ ಇಲ್ಲದೇ ಇದ್ದರೆ ಅರ್ಜಿ ಪಡೆದು ನಂತರ ಪರಿಶೀಲಿಸಲಾಗುವುದು ಎಂದು ಹೇಳಿದರು. +ಇಂದು ಬೆಳಗಿನ ಪ್ರಕರಣ ನನ್ನ ಗಮನಕ್ಕೆ ಬಂದಿಲ್ಲ. ಇನ್ನು ಮುಂದೆ ಅರ್ಜಿಗಳನ್ನು ನೀಡಲು ಬಂದವರೊಂದಿಗೆ ಯಾರೂ ಅನುಚಿತವಾಗಿ ವರ್ತಿಸಬಾರದು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. \ No newline at end of file diff --git a/eesanje/url_46_26_9.txt b/eesanje/url_46_26_9.txt new file mode 100644 index 0000000000000000000000000000000000000000..adf7790a16ece9fdd29366dea6ee6af45fdd5c7f --- /dev/null +++ b/eesanje/url_46_26_9.txt @@ -0,0 +1,12 @@ +ಕೋವಿಡ್ ಹಗರಣ : ಗುರುವಾರ ಸಂಪುಟ ಸಭೆಯಲ್ಲಿ ವರದಿ ಮಂಡನೆ, ನುಂಗಣ್ಣರಿಗೆ ನಡುಕ ಶುರು + +ಮೈಸೂರು,ಸೆ.3-ಕೋವಿಡ್ ಕುರಿತಂತೆ ವಿಚಾರಣೆ ನಡೆಸಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ನೀಡಿರುವ ಮಧ್ಯಂತರ ವರದಿಯನ್ನು ಇದೇ ಗುರುವಾರ ನಡೆ ಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ತಮ ನಿವಾಸದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನಿನ್ನೂ ವರದಿಯನ್ನು ನೋಡಿಲ್ಲ. ಗುರುವಾರದ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚಿಸುತ್ತೇವೆ. ಏನು ಶಿಫಾರಸ್ಸು ಮಾಡಿದ್ದಾರೆ ಎಂದು ನೋಡಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. +ವರದಿಯ ಬಗ್ಗೆ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿರುವುದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು. ನಾನೇ ಇನ್ನೂ ವರದಿ ನೋಡಿಲ್ಲ ಎಂದು ತಿಳಿಸಿದರು. +ಸುಧಾಕರ್ ಚಡಪಡಿಸುತ್ತಿರುವುದೇಕೆ?, ಸುಧಾಕರ್ ವರದಿ ನೋಡಿದ್ದಾರೆಯೇ?, ತಪ್ಪು ಮಾಡಿರುವ ಮನೋಭಾವದಿಂದಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಸುಳ್ಳು ವರದಿ ಪಡೆದಿದ್ದೇವೆ ಎಂದು ಅವರಿಗೆ ಹೇಗೆ ಗೊತ್ತಾಗಲು ಸಾಧ್ಯ?, ಸುಧಾಕರ್ ಮನಸ್ಥಿತಿ ಅರ್ಥವಾಗುತ್ತಿದೆ. ತಪ್ಪು ಮಾಡಿರುವ ಪಾಪಪ್ರಜ್ಞೆ ಕಾಡುತ್ತಿರಬಹುದು. ವರದಿ ಬಹಿರಂಗಗೊಂಡು ಅದರಲ್ಲಿನ ಮಾಹಿತಿಗಳು ತಿಳಿಯದ ಹೊರತು ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು. +ಈ ಹಿಂದೆ ನಾವು ಸಾಕಷ್ಟು ಆರೋಪಗಳನ್ನು ಮಾಡಿದ್ದೇವೆ. ಆದರೆ ವಿಚಾರಣಾ ಆಯೋಗದ ವರದಿ ಬಂದಿರುವುದರಿಂದ ಖಚಿತ ಮಾಹಿತಿ ಇಲ್ಲದೆ ಪ್ರತಿಕ್ರಿಯಿಸುವುದಿಲ್ಲ. ಗುರುವಾರ ಸಚಿವ ಸಂಪುಟದ ಬಳಿಕ ಸೂಕ್ತ ಮಾಹಿತಿ ನೀಡಲಾಗುತ್ತದೆ ಎಂದರು. +ಮುಡಾ ಪ್ರಕರಣದಲ್ಲಿ ನಿವೇಶನ ಹಂಚಿಕೆಯ ಅವ್ಯವಹಾರಗಳ ಕುರಿತು ವಿಚಾರಣೆಗೆ ನ್ಯಾಯಮೂರ್ತಿಯವರ ಆಯೋಗ ರಚನೆ ಮಾಡಲಾಗಿದೆ. ಅದರ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಈ ಹಿಂದೆ ಮುಡಾ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ನಾನು ಅಮಾನತು ಮಾಡಿಲ್ಲ. ನಗರಾಭಿವೃದ್ಧಿ ಇಲಾಖೆ ಕ್ರಮ ಕೈಗೊಂಡಿರಬಹುದು. ಮತ್ತೊಬ್ಬ ಆಯುಕ್ತರಾಗಿದ್ದ ನಟೇಶ್ ಅವರ ಮೇಲೆ ಯಾವ ಆರೋಪ ಇದೆ ಗೊತ್ತಿಲ್ಲ. ವಿಚಾರಣಾ ಆಯೋಗ ವರದಿ ನೀಡಿದ ಬಳಿಕ ಯಾರೇ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ದಿನೇಶ್ ಅವರ ಅಮಾನತಿನ ಬಗ್ಗೆ ಪದೇಪದೇ ಪ್ರಶ್ನೆಗಳು ಎದುರಾದಾಗ ನಾನು ಅಮಾನತು ಆದೇಶವನ್ನು ನೋಡಿಲ್ಲ ಎಂದು ಸಿಟ್ಟಿನಿಂದ ಪ್ರತಿಕ್ರಿಯಿಸಿದರು.ಚಾಮುಂಡಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗಿತ್ತು. ಅದಕ್ಕೆ ರಾಜ ಮನೆತನದ ಪ್ರಮೋದಾದೇವಿಯವರು ತಡೆಯಾಜ್ಞೆ ತೆಗೆದುಕೊಂಡಿದ್ದರು. ಅದು ತೆರವಾಗಿದೆ. ಹೀಗಾಗಿ ಪ್ರಾಧಿಕಾರ ರಚನೆ ಬಳಿಕ ಮೊದಲ ಸಭೆಯನ್ನು ಬೆಟ್ಟದ ಮೇಲೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. +ಹಿಂದೆಯೂ ದೇವಸ್ಥಾನದ ಆಡಳಿತ ಮಂಡಳಿ ಅಸ್ತಿತ್ವದಲ್ಲಿತ್ತು. ಅದಕ್ಕೆ ಸರ್ಕಾರವೇ ಸದಸ್ಯರು ಮತ್ತು ಅಧ್ಯಕ್ಷರನ್ನು ನೇಮಿಸುತ್ತಿತ್ತು. ದೇವಸ್ಥಾನ ಸರ್ಕಾರದ ಅಧೀನದಲ್ಲೇ ಇತ್ತು ಎಂದು ಹೇಳಿದರು. +ನ್ಯಾಯಾಲಯದ ತೀರ್ಮಾನದ ಪ್ರಕಾರ ನಾವು ನಡೆದುಕೊಳ್ಳುತ್ತಿದ್ದೇವೆ. ಸಂಸದರು ಹೇಳಿದಂತೆ ಕೇಳಲಾಗುವುದಿಲ್ಲ. ನಾನು ನ್ಯಾಯಾಲಯದ ನಿರ್ದೇಶನದ ಪ್ರಕಾರ ನಡೆದುಕೊಳ್ಳುತ್ತಿದ್ದೇನೆ ಎಂದರು.ಅಂಗನವಾಡಿ ಕಾರ್ಯಕರ್ತರಿಗೆ ಸಕಾಲಕ್ಕೆ ವೇತನ ಪಾವತಿಸಲಾಗಿದೆ. ಎಲ್ಲಿಯಾದರೂ ಹಣ ಬಿಡುಗಡೆಯಾಗದೇ ಬಾಕಿ ಉಳಿದಿದ್ದರೆ ಅದನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರು. +ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮೇಲೆ ದೇವರ ದರ್ಶನ ಪಡೆಯುತ್ತೇನೆ. ನಾನು ಯಾವುದೇ ಆತಂಕದಲ್ಲಿಲ್ಲ. ವಿರೋಧಪಕ್ಷದಲ್ಲಿದ್ದವರು ಸುಳ್ಳು ಹೇಳಿದ್ದಾರೆ. ಅದು ರುಜುವಾತಾಗದೇ ಇದ್ದರೆ ಕಷ್ಟ ಎಂಬ ಆತಂಕ ಅವರಿಗಿದೆ. ನಾನು ಯಾವತ್ತೂ ಸುಳ್ಳು ಹೇಳಿಲ್ಲ, ತಪ್ಪು ಮಾಡಿಲ್ಲ. ನಾನೇಕೆ ಆತಂಕ ಪಡಲಿ ಎಂದರು. +ಸಿದ್ದರಾಮಯ್ಯನವರು ಒಪ್ಪಿಗೆ ಕೊಟ್ಟರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಹಿರಿಯ ಕಾಂಗ್ರೆಸಿಗ ಆರ್.ವಿ.ದೇಶಪಾಂಡೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಅವಕಾಶ ನೀಡುವುದು ಶಾಸಕರು ಹಾಗೂ ಹೈಕಮಾಂಡ್. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ತಾವು ಬದ್ಧ ಎಂದು ಹೇಳಿದರು. \ No newline at end of file diff --git a/eesanje/url_46_270_1.txt b/eesanje/url_46_270_1.txt new file mode 100644 index 0000000000000000000000000000000000000000..893c30eb882919bf401a21bc7374383fe4c198ec --- /dev/null +++ b/eesanje/url_46_270_1.txt @@ -0,0 +1,6 @@ +ಮೂವರು ಡಿಸಿಎಂಗಳ ನೇಮಕ ಗಾಳಿಸುದ್ದಿ ಅಷ್ಟೇ : ಗೃಹ ಸಚಿವ ಪರಮೇಶ್ವರ +ಬೆಂಗಳೂರು,ಜ.6- ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯವನ್ನು ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದು ಇರಬಹುದು. ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು. +ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ ಜತೆ ಚರ್ಚಿಸುತ್ತಾರೆ. ಆಡಳಿತದಲ್ಲಿರುವಾಗ ಪಕ್ಷದ ಹೈಕಮಾಂಡ್ ಸಲಹೆಗಳನ್ನು ಸ್ವೀಕರಿಸಬೇಕು. ಇದೆಲ್ಲ ಸಾಮಾನ್ಯವಾಗಿ ನಡೆಯುವ ಬೆಳವಣಿಗೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದರು. +ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ : ಇಸ್ರೋ ಮುಖ್ಯಸ್ಥ ಸೋಮನಾಥ್ +ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸುವಂತೆ ನನಗೆ ಯಾರೂ ಹೇಳಿಲ್ಲ. ಕೋಲಾರ ಕ್ಷೇತ್ರದಿಂದ ಸ್ರ್ಪಧಿಸುತ್ತೇನೆ ಎಂಬುದು ಮಾಧ್ಯಮದಲ್ಲಿ ಬಂದಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಹೈಕಮಾಂಡ್ ಸೂಚಿಸಿದರೆ ಮುಂದಿನ ತೀರ್ಮಾನದ ಬಗ್ಗೆ ತಿಳಿಸುತ್ತೇನೆ ಎಂದರು. +ಬಾಂಬ್ ಬೆದರಿಕೆ ಕರೆಗಳನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಾಗುತ್ತಿದೆ. ಕಸ್ತೂರು ಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೂ ಇಮೇಲ್ ಮೂಲಕ ಬೆದರಿಕೆ ಬಂದಿದೆ. ಐಪಿ ಅಡ್ರೆಸ್ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_270_10.txt b/eesanje/url_46_270_10.txt new file mode 100644 index 0000000000000000000000000000000000000000..f5ab7456d34a01a9bdc3925bfb1c7c50eb6c429b --- /dev/null +++ b/eesanje/url_46_270_10.txt @@ -0,0 +1,15 @@ +ಸಿರಿಧಾನ್ಯ ಬೆಳೆಯಲು ಪ್ರತ್ಯೇಕ ಕೋಶ ರಚನೆ : ಸಿಎಂ +ಬೆಂಗಳೂರು,ಜ.5- ವಿದೇಶಗಳಿಗೆ ರಫ್ತು ಮಾಡುವ ಗುಣಮಟ್ಟದ ರಾಗಿ ಸೇರಿದಂತೆ ಇತರ ಸಿರಿಧಾನ್ಯಗಳನ್ನ ಬೆಳೆಯಲು ಪ್ರತ್ಯೇಕವಾದ ಕೋಶ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024 ಮತ್ತು ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 8 ಲಕ್ಷ ಹೆಕ್ಟೇರ್‍ನಲ್ಲಿ ರಾಗಿ, 5 ಲಕ್ಷ ಹೆಕ್ಟೇರ್‍ನಲ್ಲಿ ಜೋಳ, 1.31 ಲಕ್ಷ ಹೆಕ್ಟೇರ್‍ನಲ್ಲಿ ಸಜ್ಜೆ ಬೆಳೆಯಲಾಗುತ್ತಿದೆ. 20 ಲಕ್ಷ ಟನ್ ಸಿರಿಧಾನ್ಯಗಳು ರಾಜ್ಯದಲ್ಲಿ ಉತ್ಪಾದನೆಯಾಗುತ್ತದೆ ಎಂದರು. +ವಿದೇಶಗಳಿಗೆ ರಫ್ತು ಮಾಡುವ ಗುಣಮಟ್ಟದ ರಾಗಿ ಲಭ್ಯವಿಲ್ಲ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರತ್ಯೇಕ ಕೋಶ ರಚನೆ ಮಾಡಿ ರಫ್ತು ಗುಣಮಟ್ಟದ ಸಿರಿಧಾನ್ಯ ಬೆಳೆಯಲು ಮುಂದಿನ ವರ್ಷದಿಂದಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಪಡಿತರ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ, ಇಂದಿರಾ ಕ್ಯಾಂಟಿನ್‍ನಲ್ಲಿ ಸಿರಿಧಾನ್ಯದ ಬಳಕೆಗೆ ಪ್ರೋತ್ಸಾಹ ನೀಡಲಾಗುವುದು. ಇದಕ್ಕಾಗಿ ಆಹಾರ, ಶಿಕ್ಷಣ, ನಗರಾಭಿವೃದ್ಧಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ವಿಶೇಷ ಸಭೆ ನಡೆಸು ವುದಾಗಿ ಹೇಳಿದರು. +ಸಿರಿಧಾನ್ಯಗಳ ಇಳುವರಿ ಕಡಿಮೆ ಎಂಬ ಆಕ್ಷೇಪಣೆಯಿದೆ. ಹೊಸ ತಳಿ ಅಭಿವೃದ್ಧಿಪಡಿಸಲು ವಿಜ್ಞಾನಿಗಳು ಕ್ರಮ ಕೈಗೊಳ್ಳಬೇಕು. ಬರಗಾಲದ ಸಂದರ್ಭದಲ್ಲಿ ಸಿರಿಧಾನ್ಯಗಳ ಬೆಳೆ ಲಾಭದಾಯಕವಾಗಲಿವೆ. ವಿಶ್ವವಿದ್ಯಾಲಯಗಳಲ್ಲಿನ ಪ್ರಯೋಗಗಳು ಕೃಷಿ ಭೂಮಿಗೆ ತಲುಪಬೇಕು. ಕೃಷಿ ಭೂಮಿಯ ಸಮಸ್ಯೆಗಳು ಪ್ರಯೋಗಾಲಯದಲ್ಲಿ ಸಮೀಕ್ಷೆಗೊಳಗಾಗಬೇಕು. ಕೃಷಿ ಭೂಮಿ ಕಡಿಮೆಯಾಗುತ್ತಿದೆ. ಅದಕ್ಕನುಗುಣವಾಗಿ ಕಡಿಮೆ ಮಳೆ ಹಾಗೂ ಭೂಮಿಯಲ್ಲಿ ಬಹು ಮಾದರಿಯ ಕೃಷಿ ಪ್ರಯೋಗಗಳಾಗಬೇಕು. ವಿಶ್ವವಿದ್ಯಾಲಯಗಳು ಸಂಶೋಧನೆಗೆ ಒತ್ತು ನೀಡಬೇಕು ಎಂದರು. +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಮನಷ್ಯ ಕೃಷಿ ಆರಂಭಿಸಿದ ದಿನ ದಿಂದಲೂ ಸಿರಿಧಾನ್ಯ ಬೆಳೆಯುತ್ತಿದ್ದಾನೆ. ಕಡಿಮೆ ಮಳೆ ಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯ ವರದಾನದ ಬೆಳೆಯಾಗಿದೆ ಎಂದು ತಿಳಿಸಿದರು. ಸಿರಿಧಾನ್ಯದ ಬಳಕೆ ದೇಶಿಯವಾಗಿಯೂ ಹೆಚ್ಚುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ರಫ್ತುಗೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ಸಿರಿಧಾನ್ಯ ಮತ್ತು ಸಾವಯವ ಕೃಷಿ ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಜನಸಂಖ್ಯೆ ಹೆಚ್ಚಿರುವ ಭಾರತದಲ್ಲಿ ಆಹಾರದ ಸ್ವಾವಲಂಬನೆಗಾಗಿ ಹಾಗೂ ಆಗಿನ ಪ್ರಧಾನಿ ಇಂದಿರಾಗಾಂಧಿ, ದಿ.ಮಾಜಿ ಕೃಷಿ ಸಚಿವ ಬಾಬು ಜಗಜೀವನರಾಂ ಹಸಿರು ಕ್ರಾಂತಿಗೆ ಮುನ್ನುಡಿ ಬರೆದರು. +ವಿಶ್ವದಲ್ಲಿ ಚೀನಾವನ್ನು ಹಿಂದಿಟ್ಟು ಜನಸಂಖ್ಯೆಯಲ್ಲಿ ನಾವು ನಂ.1 ಸ್ಥಾನಕ್ಕೇರಿದ್ದೇವೆ. ಎಲ್ಲರಿಗೂ ಆಹಾರ ಒದಗಿಸುವ ಸಲುವಾಗಿ ರಾಸಾಯನಿಕ ಬಳಸಿ ಹೆಚ್ಚು ಆಹಾರ ಉತ್ಪಾದನೆ ಮಾಡಲಾಗುತ್ತಿದೆ. ಆದರೆ ರಾಸಾಯನಿಕ ಬಳಕೆ ಸುರಕ್ಷತೆಯಲ್ಲ ಎಂಬ ಕಾರಣಕ್ಕಾಗಿ ಮತ್ತೆ ಸಾವಯವ ಕೃಷಿಗೆ ಮೊರೆ ಹೋಗಲಾಗುತ್ತಿದೆ. ರಾಜ್ಯದಲ್ಲಿ 2004 ರಲ್ಲಿ ಮೊದಲ ಬಾರಿಗೆ ಸಾವಯವ ಕೃಷಿ ನೀತಿ ಜಾರಿಗೆ ತರಲಾಯಿತು. 2017 ರಲ್ಲಿ ಅದನ್ನು ಪರಿಷ್ಕರಣೆ ಮಾಡಿ ಬೆಂಬಲ ನೀಡುತ್ತಿದೆ ಎಂದು ಹೇಳಿದರು. +ಸಿರಿಧಾನ್ಯಗಳಲ್ಲಿ ಸಾರಜನಕ, ಲವಣಾಂಶ, ವಿಟಮಿನ್ ಮತ್ತು ನಾರಿನಂಶಗಳು ಹೇರಳವಾಗಿವೆ. ರಾಸಾಯನಿಕ ಬಳಕೆಯಿಂದ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಹೃದ್ರೋಗದಂತಹ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತವೆ. ಸಿರಿಧಾನ್ಯಗಳು ಆರೋಗ್ಯಕರವಾಗಿವೆ. ಇವುಗಳ ಸುಸ್ಥಿರ ಕೃಷಿ ಹಾಗೂ ವಾಯುಗುಣ ಯೋಗ್ಯ ತಳಿಗಳ ಅಭಿವೃದ್ಧಿ ಅಗತ್ಯ ಎಂದು ಅವರು ಹೇಳಿದರು. +ಅಧ್ಯಕ್ಷತೆ ವಹಿಸಿದ್ದ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಮಾತನಾಡಿ, ರಾಜ್ಯದಲ್ಲಿ 35 ಸಾವಿರ ಎಕರೆಯಲ್ಲಿ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಪ್ಯಾಕೇಜಿಂಗ್ ಬ್ರಾಂಡಿಂಗ್‍ಗೆ 10 ಕೋಟಿ ರೂ. ಅನುದಾನ ನೀಡಲಾಗಿದೆ. 5 ಲಕ್ಷ ರೂ.ವರೆಗೂ ಬೆಳೆಗಾರರಿಗೆ ಸಾಲ ನೀಡಲಾಗುತ್ತಿದೆ ಎಂದು ತಿಳಿಸಿದರು. +ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಿ ಸೆಪ್ಟೆಂಬರ್ 22 ರಂದು ದೇಶದಲ್ಲೇ ಮೊದಲ ಬಾರಿಗೆ ವರದಿ ನೀಡಿದ್ದು ಕರ್ನಾಟಕ ಸರ್ಕಾರ. ಕೇಂದ್ರ ಸರ್ಕಾರದ ಎಲ್ಲರಿಗೂ ಪತ್ರ ಬರೆದಿದ್ದೇವೆ, ಪರಿಹಾರದ ನಿರೀಕ್ಷೆಯಲ್ಲಿದ್ದೇವೆ ಎಂದರು. +ಇಂದಿನ ಕೃಷಿ ಮೇಳದಲ್ಲಿ 14 ರಾಜ್ಯಗಳು ಭಾಗವಹಿಸಿವೆ. ಸಿರಿಧಾನ್ಯ ಬೆಳೆಯ ಉತ್ಪಾದನೆ ಹೆಚ್ಚಾಗಬೇಕು. ಬಳಕೆ ಹೆಚ್ಚಾಗಬೇಕು. ರೈತರು ಸಮೃದ್ಧಿಯಾಗಬೇಕು. ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಪಡೆಯಬೇಕು ಎಂಬುದಾಗಿದೆ. ಅತೀ ಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯದಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ರಫ್ತಿನಲ್ಲಿ ಶೇ.9 ರಷ್ಟು ಪಾಲು ಹೊಂದಿದ್ದೇವೆ ಎಂದು ವಿವರಿಸಿದರು. +ಮೇಳದಲ್ಲಿ ಸಾರ್ವಜನಿಕರೇ ಸಿರಿಧಾನ್ಯ ಪದಾರ್ಥಗಳ ಅಡುಗೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಯಶಸ್ವಿ ಮೇಳವನ್ನು ಆಯೋಜಿಸಲಾಗಿದೆ ಎಂದರು. ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ ಮಾತನಾಡಿ, ಜನವರಿ 22 ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮಮಂದಿರದಲ್ಲಿನ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ದೇಶದ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಆಹ್ವಾನ ನೀಡಿದರು. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ಕರ್ನಾಟಕ ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಸಿರಿಧಾನ್ಯಗಳ ಬೆಳೆ ಹಾಗೂ ಬಳಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ಪ್ರೋತ್ಸಾಹಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಸಾವಯವ ಕೃಷಿ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. +ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲï, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_270_11.txt b/eesanje/url_46_270_11.txt new file mode 100644 index 0000000000000000000000000000000000000000..3df55abcb167582dd96cb9b263d49f78b92691bd --- /dev/null +++ b/eesanje/url_46_270_11.txt @@ -0,0 +1,9 @@ +ಗೌರವಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸಿ : ಪೊಲೀಸ್ ಆಯುಕ್ತ +ಬೆಂಗಳೂರು,ಜ.5- ಪೊಲೀಸ್ ಠಾಣೆಗಳು ನ್ಯಾಯದೇಗುಲವಿದ್ದಂತೆ ಅವುಗಳ ಗೌರವಕ್ಕೆ ಚ್ಯುತಿ ಬರದಂತೆ ನಾವು ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು, ಜನಪರ ಕಾಳಜಿ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಮೂಲಕ ಆದರ್ಶಪ್ರಾಯ ರಾಗಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. +ಥಣಿಸಂದ್ರದ ಸಿಎಆರ್ ಕವಾತು ಮೈದಾನದಲ್ಲಿ ಇಂದು ಮಾಸಿಕ ಕವಾಯತು ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತ್ತಾ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ 2024ರ ಶುಭಾಷಯ ಸಂದೇಶ ನೀಡಿ, ನಾನು ಆಯುಕ್ತನಾಗಿ ಕಳೆದ 7 ತಿಂಗಳಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಅಧಿಕಾರಿಗಳ ಕರ್ತವ್ಯ, ಸಮಯಪ್ರಜ್ಞೆ ಮತ್ತು ಜವಾಬ್ದಾರಿಗಳನ್ನು ಗಮನಿಸಿ ಸ್ವತಃ ನನ್ನ ಅನುಭವವನ್ನು ಸಂದೇಶ ಪತ್ರದಲ್ಲಿ ಹಂಚಿಕೊಂಡಿದ್ದೇನೆ ಎಂದರು. +ನಗರ ಪೊಲೀಸ್ ಘಟಕ 61ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ 2023ರ ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಿ ಶ್ಲಾಘನೆಗೆ ಪಾತ್ರರಾಗಿದ್ದೀರಿ, ಈ ವರ್ಷ ಲೋಕಸಭಾ ಚುನಾವಣೆ ಬರಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಹೇಳಿದರು. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ಮಾದಕವಸ್ತು ಸಾಗಾಣೆ ವಿರುದ್ಧ ನಮ್ಮ ಹೋರಾಟ ನಿರಂತರವಾಗಿದೆ. ಸೈಬರ್ ಅಪರಾಧಗಳು, ಮಹಿಳೆಯರು, ದೀನದಲಿತರ ರಕ್ಷಣೆ ಇತ್ಯಾದಿ ವಿಷಯಗಳಾದ ಠಾಣೆಗಳ ಭೌತಿಕ ಹಾಗೂ ಕಡತ ನಿರ್ವಹಣೆ, ಗಣಕೀಕೃತ ವ್ಯವಸ್ಥೆ ,ಸಮಯಪ್ರಜ್ಞೆ, ವಿವೇಚನೆಯುಕ್ತ ವರ್ತನೆಗಳಿಂದ ಬೆಂಗಳೂರು ನಗರ ಪೊಲೀಸರು ಬೇರೆ ಜಿಲ್ಲೆಗಳಿಗೆ ಮಾದರಿಯಾಗಿದ್ದಾರೆ. +ನಮ್ಮಲ್ಲಿ ಅನೇಕ ದೋಷಗಳಿವೆ. ಮುಖ್ಯವಾಗಿ ಪೊಲೀಸ್ ಠಾಣೆಗಳಲ್ಲಿ ದೀನ ದಲಿತರ, ಅಮಾಯಕರಿಗೆ ರಕ್ಷಣೆ ಒದಗಿಸದೆ ಕೇವಲ ಬಲಾಢ್ಯರು, ಹಣವಂತರಿಗೆ ಮಣೆ ಹಾಕುತ್ತಾರೆ ಎಂಬ ಆರೋಪಗಳು ಇವೆ. ಭ್ರಷ್ಟಾಚಾರ, ಆರೋಪಿಗಳೊಂದಿಗೆ ಪೊಲೀಸರ ಶಾಮೀಲು, ಸಿವಿಲ್ ವ್ಯಾಜ್ಯಗಳಲ್ಲಿ ಹಸ್ತಕ್ಷೇಪ ಮಾಡುವ ಪ್ರವೃತ್ತಿ ಪೊಲೀಸ್ ಇಲಾಖೆಯ ಘನತೆಗೆ ಧಕ್ಕೆ ತರುವಂತಾಗಿದೆ ಎಂದು ಇದೇ ಸಂದರ್ಭದಲ್ಲಿ ಆಯುಕ್ತರು ವಿಷಾದ ವ್ಯಕ್ತಪಡಿಸಿದರು. +2024ರಲ್ಲಿ ನಾವು ಈ ಎಲ್ಲ ದೋಷ ಮತ್ತು ಆರೋಪಗಳನ್ನು ಹಿಮ್ಮೆಟ್ಟಿಸಿ ನ್ಯಾಯಸಮ್ಮತ ಕರ್ತವ್ಯ, ಜನಪರ ಕಾಳಜಿ ಮತ್ತು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದು ಬೆಂಗಳೂರಿನ ಪ್ರಜ್ಞಾವಂತ ನಾಗರಿಕರಿಗೆ ಉತ್ತಮ ಸೇವೆ ಮತ್ತು ರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕೆಂದು ತಿಳಿಸಿದರು. ಕಳೆದ ವರ್ಷ ಉತ್ತಮವಾಗಿ ಕೆಲಸ ಮಾಡಿದ್ದೀರಿ. ಈ ವರ್ಷವು ಸಹ ಜವಾಬ್ದಾರಿಯುತವಾಗಿ ಕೆಲಸ ಮಾಡಿ ನಗರದ ಜನರ ಮನ್ನಣೆ ಗಳಿಸಬೇಕೆಂದು ದಯಾನಂದ್ ಅವರು ಹೇಳಿದರು. +ಇದೇ ಸಂದರ್ಭದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ವಿವಿಧ ಶ್ರೇಣಿಯ 112 ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿಗಳಿಗೆ ಪ್ರಸಶನಾ ಪತ್ರ ನೀಡಿ ಅಭಿನಂದಿಸಿದರು. \ No newline at end of file diff --git a/eesanje/url_46_270_12.txt b/eesanje/url_46_270_12.txt new file mode 100644 index 0000000000000000000000000000000000000000..148a300ac96fc1b085057769b420d36d7229bc86 --- /dev/null +++ b/eesanje/url_46_270_12.txt @@ -0,0 +1,14 @@ +ಉಪ ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದು ಆಪ್ತರ ಪಟ್ಟು +ಬೆಂಗಳೂರು,ಜ.5- ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ, ಜಾತಿ ಜನಗಣತಿ ವರದಿ ಬಿಡುಗಡೆ, ಒಳಮೀಸಲಾತಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ನಿನ್ನೆ ನಡೆದ ಸಿದ್ದರಾಮಯ್ಯನವರ ಆಪ್ತ ಸಚಿವರ ಬಣದ ರಹಸ್ಯ ಸಭೆಯಲ್ಲಿ ಗಂಭೀರ ಚರ್ಚೆಗಳಾಗಿವೆ. +ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಮನೆಯಲ್ಲಿ ನಡೆದ ರಹಸ್ಯ ಭೋಜನಾ ಕೂಟದಲ್ಲಿ ರಾಜಕೀಯ ಕುರಿತು ಚರ್ಚೆಗಳಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸ್ಪೋಟಕ ಬೆಳವಣಿಗೆಗೆ ಕಾರಣವಾಗಿದೆ. ನಿನ್ನೆ ರಾತ್ರಿ 9 ಗಂಟೆಯಿಂದ 11 ಗಂಟೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಪರಮೇಶ್ವರ್, ಕೆ.ಎನ್.ರಾಜಣ್ಣ, ಕೆ.ಎಚ್.ಮುನಿಯಪ್ಪ, ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. +ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದರಿಂದ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರ ಪ್ರಭಾವ ತಗ್ಗಲಿದೆ ಎಂಬ ಲೆಕ್ಕಾಚಾರವಿದೆ. ಇದಕ್ಕಾಗಿಯೇ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ಆರಂಭದಲ್ಲಿ ಒಂದಿಷ್ಟು ರಾಜಿ ಮಾಡಿಕೊಂಡರಾದರೂ ಸರ್ಕಾರದಲ್ಲಿ ಒಂದೇ ಉಪಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತು ವಿಧಿಸಿದ್ದರು. ಅದು ಈವರೆಗೂ ಜಾರಿಯಲ್ಲಿದೆ. +ಈ ತಂತ್ರಗಾರಿಕೆಗೆ ಪ್ರತಿತಂತ್ರ ರೂಪಿಸಲು ಸಿದ್ದರಾಮಯ್ಯ ಅವರ ಅಗೋಚರವಾದ ಬಣ ಸದಾ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಲೇ ಇದೆ. ಸಿದ್ದರಾಮಯ್ಯ ಅವರ ಪರಮಾತ್ಮ ಎಂದೇ ಗುರುತಿಸಿಕೊಂಡಿರುವ ಕೆ.ಎನ್.ರಾಜಣ್ಣ ಮೊಟ್ಟ ಮೊದಲ ಬಾರಿಗೆ ಜಾತಿವಾರು 3 ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯಾಗಬೇಕು ಎಂಬ ಹೇಳಿಕೆ ನೀಡಿದ್ದರು. ಅದು ಸುದೀರ್ಘ ಕಾಲದ ಚರ್ಚೆಗೆ ಗ್ರಾಸವಾಗಿತ್ತು. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ, ಎಂ.ಬಿ.ಪಾಟೀಲ್ ಸೇರಿದಂತೆ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಅನೇಕ ಸಚಿವರು ರಾಜಣ್ಣ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದರು. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ಹೈಕಮಾಂಡ್ ಮಟ್ಟದಲ್ಲೂ ಇದು ಚರ್ಚೆಗೊಳಗಾಯಿತು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೆಚ್ಚುವರಿಯಾದ ತ್ರಾಸ ತೆಗೆದುಕೊಳ್ಳಲು ಇಷ್ಟವಿಲ್ಲದೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯನ್ನು ಅಲ್ಲಿಗೇ ಬಿಟ್ಟು ನಿಗಮ ಮಂಡಳಿಗಳ ನೇಮಕಾತಿಯತ್ತ ಗಮನ ಹರಿಸಿತ್ತು. ಆದರೆ ಅದೂ ಕೂಡ ಕಾರ್ಯಗತವಾಗಿಲ್ಲ. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ಭೇಟಿ ನೀಡುತ್ತಿದ್ದ ಬೆನ್ನಲ್ಲೇ ತುಮಕೂರಿನಲ್ಲಿ ಮಾತನಾಡಿದ್ದ ಕೆ.ಎನ್.ರಾಜಣ್ಣ, ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಪರಮೇಶ್ವರ್, ಸತೀಶ್ ಜಾರಕಿಹೊಳಿಯವರು ಮತ್ತೆ ಉಪಮುಖ್ಯಮಂತ್ರಿ ಹುದ್ದೆಯ ಕುರಿತು ಕೆಣಕಿದ್ದರು. ಅಷ್ಟಕ್ಕೇ ಸುಮ್ಮನಾಗದೆ ನಿನ್ನೆ ರಹಸ್ಯ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಲಾ ಒಂದೊಂದು ರೀತಿ ಭಿನ್ನ ಹೇಳಿಕೆ ನೀಡಿದ್ದಾರೆ. +ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಸಮುದಾಯಗಳು ನೀಡಿರುವ ಪತ್ರಕ್ಕೆ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್‍ರಂತಹ ಸರ್ಕಾರದ ಪ್ರತಿನಿಧಿಗಳು ಸಹಿ ಹಾಕಿದ್ದಾರೆ. +ಸಿದ್ದರಾಮಯ್ಯನವರ ಬಣ ವರದಿಯನ್ನು ಸ್ವೀಕರಿಸಿ ಬಹಿರಂಗಪಡಿಸಲೇಬೇಕು ಎಂಬ ಹಠಕ್ಕೆ ಬಿದ್ದಿದೆ. ಆದರೆ ಕೆಲವು ಸಮುದಾಯಗಳು ವರದಿ ಅವೈಜ್ಞಾನಿಕವಾಗಿದೆ. ಬಿಡುಗಡೆ ಮಾಡಬಾರದು ಎಂಬ ಪಟ್ಟು ಹಿಡಿದಿದ್ದು, ಇದಕ್ಕಾಗಿ ರಾಜಕೀಯ ಬಣ ಕ್ರೂಢೀಕರಣಕ್ಕೆ ಮುಂದಾಗಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಂತೆ ನಡೆದುಕೊಳ್ಳಬೇಕು ಎಂಬುದು ಪಕ್ಷದ ಕೆಲವರ ವಾದ. ಕೆಪಿಸಿಸಿ ಅಧ್ಯಕ್ಷರೇ ಇದಕ್ಕೆ ವಿರೋಧ ವ್ಯಕ್ತಪಡಿಸುವುದಾದರೆ ಸಮಾಜದಲ್ಲಿ ತಪ್ಪು ಸಂದೇಶ ಹೋಗುತ್ತದೆ. ಲೋಕಸಭೆ ಚುನಾವಣೆಯಲ್ಲಿ ಅಡ್ಡಪರಿಣಾಮಗಳಾಗುತ್ತವೆ ಎಂದು ನಿನ್ನೆ ನಡೆದ ಸಭೆಯಲ್ಲಿ ವಿಶ್ಲೇಷಿಸಲಾಗಿದೆ. +ವಿಧಾನಸಭೆ ಚುನಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ಸಮುದಾಯಗಳು ಕಾಂಗ್ರೆಸ್ ಕೈ ಹಿಡಿದಿದ್ದರಿಂದಾಗಿಯೇ ಸ್ಪಷ್ಟ ಬಹುಮತ ಬಂದಿದೆ. ಆದರೆ ಅಧಿಕಾರ ಹಂಚಿಕೆ ವಿಷಯ ಬಂದಾಗ ಸಮುದಾಯವನ್ನು ಕಡೆಗಣಿಸಿರುವುದು ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಸಭೆಯಲ್ಲಿ ನಾಯಕರು ತಮ್ಮ ಅಸಮಾಧಾನವನ್ನು ಹೊರಹಾಕಿದರು ಎಂದು ಹೇಳಲಾಗಿದೆ. +ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ +ನಿಗಮ ಮಂಡಳಿಗಳಲ್ಲಿ ಆದ್ಯತೆ ನೀಡುವುದಷ್ಟೇ ಅಲ್ಲ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಲೇಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಲು ನಾಯಕರು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರ ಮುಂದೆ ತಮ್ಮ ಹಕ್ಕು ಪ್ರತಿಪಾದನೆ ಮಾಡಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ. +ಇದರ ಜೊತೆಯಲ್ಲಿ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಇನ್ನೂ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_270_2.txt b/eesanje/url_46_270_2.txt new file mode 100644 index 0000000000000000000000000000000000000000..0542a1dfb98c8550dc93608a25483fc7470f25af --- /dev/null +++ b/eesanje/url_46_270_2.txt @@ -0,0 +1,12 @@ +ನೈಸ್ ಯೋಜನೆಗೆ ಸ್ವಾದೀನಪಡಿಸಿಕೊಂಡ ಹೆಚ್ಚುವರಿ ಜಮೀನನ್ನು ರೈತರಿಗೆ ಹಿಂದಿರುಗಿಸಿ : ದೇವೇಗೌಡರು +ಬೆಂಗಳೂರು,ಜ.5- ಬೆಂಗಳೂರು-ಮೈಸೂರು ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಗೆ ಸ್ವಾೀಧಿನಪಡಿಸಿಕೊಂಡಿದ್ದ ಹೆಚ್ಚುವರಿ ಜಮೀನನ್ನು ಮರಳಿ ರೈತರಿಗೆ ನೀಡಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒತ್ತಾಯಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಂಬಂಧ ಅಕ್ಟೋಬರ್ 19ರಂದು ಮುಖ್ಯಮಂತ್ರಿಗೆ ಪತ್ರ ಬರೆದು, ಈ ಯೋಜನೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರ ಜಮೀನನ್ನು ಉಳಿಸಿಕೊಡುವಂತೆ ಕೋರಿದ್ದೇನೆ ಎಂದರು. +ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯ ಸದನ ಸಮಿತಿಯು ಬಿಎಂಐಸಿ ಯೋಜನೆಯ ಅಕ್ರಮ ವಿಚಾರ ಪ್ರಸ್ತಾಪಿಸಿ ಸರ್ಕಾರ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದೆ. ಆದರೂ ಈ ತನಕ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ಯೋಜನೆಗೆ ಒಳಪಡದ ಸುಮಾರು 7 ಸಾವಿರ ಕೋಟಿ ಮೌಲ್ಯದ 13 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ವಾಪಸ್ ರೈತರಿಗೆ ನೀಡಬೇಕು. ಸದನ ಸಮಿತಿ ಶಿಫಾರಸ್ಸಿನ ಅನ್ವಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಏನು ಕಷ್ಟವಿದೆಯೋ ಗೊತ್ತಿಲ್ಲ. ಯಾವಾಗಲೂ ಬಡವರ ಪರ ಮಾತನಾಡುವ ಸಿದ್ದರಾಮಯ್ಯನವರು ಬಿಎಂಐಸಿ ವಿಚಾರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಅವರು ಎಷ್ಟೇ ಉತ್ತಮ ಆಡಳಿತ ನಡೆಸಿದರೂ ಕಪ್ಪುಚುಕ್ಕೆಯಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದರು. +ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಅನಾಯಕಿ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಮಾತುಕತೆ ಆಗಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಧರ್ಮಸಿಂಗ್ , ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ಇದ್ದೆವು. ಆ ಸಂದರ್ಭದಲ್ಲಿ ಸೋನಿಯಾ ಗಾಂಧಿಯವರು ಬಿಎಂಐಸಿ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು ಧರ್ಮಸಿಂಗ್‍ಗೆ ಸೂಚಿಸಿದ್ದರು. ಈತನಕ ಯಾವುದೇ ಕ್ರಮ ಆಗಿಲ್ಲ ಎಂದು ಹೇಳಿದರು. +ಬಿಎಂಐಸಿ ವಿರುದ್ಧದ ಹೋರಾಟದಲ್ಲಿ ನಮ್ಮ ಪಕ್ಷ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದೆ ಸರಿಯುವುದಿಲ್ಲ, ಬಡವರ , ರೈತರಪರ ಹೋರಾಟ ಮುಂದುವರೆಸುತ್ತೇವೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ಹೆಚ್ಚುವರಿ ಭೂಮಿ ಕೊಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಲಾಗಿದೆ ಎಂದರು. ಇಡೀ ರಾಜ್ಯದಲ್ಲಿ ರೈತರ ಪರ ನಮ್ಮ ಪಕ್ಷ ಹೋರಾಟವನ್ನು ಮುಂದುವರೆಸಲಿದೆ ಎಂದು ಗೌಡರು ಹೇಳಿದರು. +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಸೇಡಿನ ರಾಜಕಾರಣ:30 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ಕೊಟ್ಟು ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಎನ್‍ಡಿಎ ಮಿತ್ರಪಕ್ಷವಾಗಿರುವ ನಾವು ಎಲ್ಲಿಯವರೆಗೂ ಮೈತ್ರಿ ಮುಂದುವರೆಸುತ್ತೇವೋ ಅಲ್ಲಿಯವರೆಗೂ ಸೇಡಿನ ರಾಜಕಾರಣದ ವಿರುದ್ಧ ದನಿ ಎತ್ತುತ್ತೇವೆ. ನಾಲ್ಕು ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನರ ಸಂಪತ್ತು,ಹಣವನ್ನು ಎಷ್ಟು ಸಾಗಿಸಿದರೂ, ಚುನಾವಣಾ ಆಯೋಗ ಎಷ್ಟನ್ನು ಸೀಜ್ ಮಾಡಿದೆ ಎಂಬ ಮಾಹಿತಿ ಇದೆ. +ಉಪಮುಖ್ಯಮಂತ್ರಿ ಅವರೇ ನೀರಾವರಿ ಖಾತೆಯ ಹೊಣೆ ಹೊತ್ತಿದ್ದರು. ಏನಾಗುತ್ತದೆ ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂಥದ್ದನೆಲ್ಲ ತಡೆಯುವ ಶಕ್ತಿ ಇದೆಯೋ ಇಲ್ಲವೊ ಗೊತ್ತಿಲ್ಲ. ಅಹಿಂದ ಮತ್ತು ಬಡವರ ಬಗ್ಗೆ ಸಿದ್ದರಾಮಯ್ಯ ಪಣ ತೊಟ್ಟು ನಿಂತಿದ್ದಾರೆ. ಟಿಪ್ಪು ಬಿಟ್ಟರೆ ಬೇರೆ ಕೆಲಸವೇ ಇಲ್ಲವೇ ಎಂದು ಪ್ರಶ್ನಿಸಿದರು. +ಶ್ರೀರಾಮನ ಪೂಜೆ ಮಾಡುವೆ:ಶ್ರೀರಾಮನ ಪೂಜೆ ಮಾಡುವ ವಿಚಾರದಲ್ಲಿ ಯಾವುದೇ ಅಪನಂಬಿಕೆ, ಮನಸ್ಸಿನಲ್ಲಿ ಸಂಕೋಚವೂ ಇಲ್ಲ. ಮುಸ್ಲಿಂ ಸಮುದಾಯದವರು ಕೊಟ್ಟಿದ್ದ ಚಿನ್ನದ ಕತ್ತಿಯನ್ನು ಶ್ರೀರಾಮನ ದೇವಾಲಯಕ್ಕೆ ನೀಡಿದ್ದೇನೆ. ಆಗ ಕತ್ತಿಗೆ 65 ಸಾವಿರ ರೂ. ಹಣವನ್ನೂ ಕಟ್ಟಲಾಗಿದೆ. ಬೇರೆ ಸಮುದಾಯದವರಿಗೆ ಅಪಾಯವಾದರೆ ರಕ್ಷಣೆ ಕೊಡಬೇಕಾಗಿದ್ದು ಅಧಿಕಾರದಲ್ಲಿರುವವರ ಜವಾಬ್ದಾರಿ. ಪ್ರಧಾನಿಯಾಗಿದ್ದಾಗ ದರ್ಗಾಕ್ಕೂ ಹೋಗಿದ್ದೆ. ದೇವಾಲಯಕ್ಕೂ ಹೋಗಿದ್ದೆ. ಆದರೆ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದೆ ಎಂದು ಹೇಳಿದರು. +ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ರಾಜಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ಮಾಜಿ ಸದಸ್ಯ ರಮೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_270_3.txt b/eesanje/url_46_270_3.txt new file mode 100644 index 0000000000000000000000000000000000000000..c727d2ae501c692f3d900d5ebd913b7656298a5a --- /dev/null +++ b/eesanje/url_46_270_3.txt @@ -0,0 +1,10 @@ +ಸಂಸದ ಪ್ರತಾಪ್ ಸಿಂಹ ಸೋದರನ ಪ್ರಕರಣಕ್ಕೆ ಬಿಗ್‍ಟ್ವಿಸ್ಟ್ ಕೊಟ್ಟ ಎಚ್‍ಡಿಕೆ +ಬೆಂಗಳೂರು,ಜ.5-ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಎತ್ತುವ ಧ್ವನಿಯನ್ನು ಅಡಗಿಸಲು ರಾಜ್ಯ ಸರ್ಕಾರದಿಂದ ದಬ್ಬಾಳಿಕೆ ನಡೆಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ ಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ದೊಡ್ಡ ಮಟ್ಟದಲ್ಲಿ ಕಾನೂನು ದುರುಪಯೋಗವಾಗುತ್ತಿದೆ ಎಂದು ದೂರಿದರು. +ಹಾಸನದ ಬೇಲೂರು ಬಳಿ ಮರ ಕಡಿದ ವಿಚಾರಕ್ಕೆ ಬಿಎಸ್‍ಎಫ್, ಎಸಿಎಫ್, ಆರ್‍ಎಫ್‍ಒ ಸೇರಿದಂತೆ ಐವರನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಿಸಿಸಿಎಫ್ ಅವರಿಗೆ ಕರೆ ಮಾಡಿ ಗೆಂಡೆಕೆರೆ ಅರಣ್ಯದಲ್ಲಿ ಬೀಟೆ ಮರ ಕಡಿದು, ಮರ ಕಡಿದಿರುವ ಪ್ರದೇಶಕ್ಕೆ ತಂದು ಹಾಕಿ ಎಂಬ ಸೂಚನೆ ನೀಡಿದ್ದರು ಎಂದು ಗಂಭೀರ ಆರೋಪ ಮಾಡಿದರು. +ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇದಕ್ಕೆ ಅರಣ್ಯ ಸಚಿವ ಅಧ್ಯಕ್ಷತೆಯಲ್ಲಿ ನಡೆದ ಅರಣ್ಯಾಧಿಕಾರಿಗಳ ಸಭೆಯಲ್ಲಿ ವಿರೋಧವೂ ವ್ಯಕ್ತವಾಗಿದೆ ಎಂದು ಹೇಳಿದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಮರದ ಕಡಿದ ಆರೋಪದಲ್ಲಿ ಬಂಧಿಸಿದ್ದಾರೆ. ಆದರೆ ಅವರು ಶುಂಠಿ ಬೆಳೆಯಲು ಲೀಸ್ ಪಡೆದಿದ್ದ ಅವಧಿ ಜನವರಿಯಿಂದ ಪ್ರಾರಂಭವಾಗುತ್ತಿತ್ತು. 4 ಎಕರೆ ಜಮೀನು ರಾಕೇಶ್ ಎಂಬುವರಿಗೆ ಮಂಜೂರಾಗಿದ್ದು, ಅವರ ಮಗಳ ವಿಕ್ರಮ್ ಸಿಂಹ ಅವರಿಗೆ ಶುಂಠಿ ಬೆಳೆಯಲು ಲೀಸ್ ನೀಡಿದ್ದರು. +ಉತ್ತರ ಪ್ರದೇಶದ ಸರ್ಕಾರಿ ಬಸ್‍ಗಳಲ್ಲಿ ರಾಮ ಭಜನೆ +ಮರ ಕಡಿದ ಪ್ರಕರಣದಲ್ಲಿ ಮೊದಲ ಮತ್ತು 2ನೇ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಾರೆ. ಆದರೆ ಮೂರನೇ ವಿಕ್ರಮ್ ಸಿಂಹ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ರೀತಿ ಸೇಡಿನ ಹಾಗೂ ಕುತಂತ್ರದ ರಾಜಕಾರಣ ಮಾಡಲಾಗುತ್ತಿದೆ. +ಅಮಾನತು ಮಾಡಿರುವ ಮೋಹನ್‍ಕುಮಾರ್ ಎಂಬ ಡಿಎಫ್‍ಒ ದಲಿತ ಸಮುದಾಯಕ್ಕೆ ಸೇರಿದವರು. ಅವರು ಯಾವ ತಪ್ಪು ಮಾಡದಿದ್ದರೂ ಅಮಾನತು ಮಾಡಲಾಗಿದೆ. ಹಾಸನಕ್ಕೆ ಈ ಅಕಾರಿ ವರ್ಗಾವಣೆಯಾದಾಗ, ವರ್ಗಾವಣೆ ಆದೇಶ ಪತ್ರವನ್ನು ಹಿಡಿದು ಶಾಸಕರೊಬ್ಬರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪ್ರಶ್ನಿಸಿದರು. +ಈ ವಿಚಾರಕ್ಕೆ ಒಂದು ಆಯೋಗ ರಚನೆ ಮಾಡಿ ತನಿಖೆ ಮಾಡಿಸುತ್ತಿದ್ದೀರಾ, ಮುಖ್ಯಮಂತ್ರಿ ಸೂಚನೆ ನೀಡಿರುವ ಬಗ್ಗೆ ಕಾಲ್ ಲಿಸ್ಟ್ ತನಿಖೆಯಾಗಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಹೇಳಿದರು. ಮಂಡ್ಯ ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯರ ಸಮ್ಮುಖದಲ್ಲೇ ಸರ್ಕಾರಿ ಜಮೀನಿನಲ್ಲಿ ಮರ ಕಡಿದ ಆರೋಪವಿದೆ. ಅದರ ಬಗ್ಗೆ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. +ಬಿಜೆಪಿ ನಾಯಕರು ಕರಸೇವಕನ ಬಂಧನವನ್ನು ವಿರೋಸಿ ನಮ್ಮನ್ನೂ ಬಂಸಿ ಎಂದು ಹೋರಾಟ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯ ವಿಚಾರ ದೇಶದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಬರ, ರೈತರ ಆತ್ಮಹತ್ಯೆಯಂತಹ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಸೇಡಿನ ರಾಜಕೀಯ ಮಾಡುತ್ತಿದೆ. ಸರ್ಕಾರದ ನಿಷ್ಕ್ರಿಯತೆಯನ್ನು ಮರೆಮಾಚಲು ಕರಸೇವಕರ ಹಳೆಯ ಪ್ರಕರಣ ಮುಂದಿಟ್ಟುಕೊಂಡು ದಬ್ಬಾಳಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. +ನೈಸ್ ಸಂಸ್ಥೆ ವಿಚಾರದಲ್ಲಿ ನಮ್ಮ ಪಕ್ಷ ರಾಜೀ ಇಲ್ಲ. ಬಡವರು ಮತ್ತು ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದರು. \ No newline at end of file diff --git a/eesanje/url_46_270_4.txt b/eesanje/url_46_270_4.txt new file mode 100644 index 0000000000000000000000000000000000000000..a8210d136055763e36b9d1960c94e4c4179b27e8 --- /dev/null +++ b/eesanje/url_46_270_4.txt @@ -0,0 +1,9 @@ +ಸಾಬೂನು ಕಾರ್ಖಾನೆ ಸಿಬ್ಬಂದಿಗೆ 5 ಲಕ್ಷ ವಿಮೆ ಸೌಲಭ್ಯ : ಎಂ.ಬಿ.ಪಾಟೀಲ +ಬೆಂಗಳೂರು: ಯಶವಂತಪುರದಲ್ಲಿ ಇರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‍ಡಿಎಲ್) ಆವರಣದಲ್ಲಿ ಸರಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. +100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್‍ಡಿಎಲ್) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. +ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂಕೆಎಸ್‍ಡಿಎಲ್ನಲ್ಲೂ ಅಳವಡಿಸಿಕೊಳ್ಳಲಾಗುವುದು.ಕೆಎಸ್‍ಡಿಎಲ್ವತಿಯಿಂದಲೇ ಹಂತಹಂತವಾಗಿ ಇದನ್ನು ನಿರ್ಮಿಸಲಾಗುವುದು. ಇದರಿಂದ ಸಂಸ್ಥೆಯು ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಸುಲಭವಾಗಲಿದೆ ಎಂದು ಅವರು ನುಡಿದರು. +₹5,000 ಕೋಟಿ ವಹಿವಾಟಿನ ಗುರಿ:ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದಕೆಎಸ್‍ಡಿಎಲ್ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2025ರ ವೇಳೆಗೆ ₹2,500 ಕೋಟಿ ಹಾಗೂ 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು. ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ಬೀಡಲಾಗುತ್ತಿದ್ದು, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆಕೆಎಸ್‍ಡಿಎಲ್ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಮಾಡಲಿದ್ದೇವೆ ಎಂದು ಅವರು ತಿಳಿಸಿದರು.ಕೆಎಸ್‍ಡಿಎಲ್ಆವರಣದಲ್ಲಿ ದಿನನಿತ್ಯದ ದಿನಸಿ ಪದಾರ್ಥಗಳು, ಡೆಟಾಲ್, ಹ್ಯಾಂಡ್ ಸೋಪ್ ಮುಂತಾದವೆಲ್ಲ ಲಭ್ಯವಾಗಬೇಕು. ಸದ್ಯಕ್ಕೆ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆ ವಿತರಣೆ ಚೆನ್ನಾಗಿ ನಡೆಯುತ್ತಿದೆ. ಸಂಸ್ಥೆಯು ಕಾರ್ಮಿಕರ ಯೋಗಕ್ಷೇಮಕ್ಕೂ ಆದ್ಯತೆ ನೀಡುವ ಉತ್ತರದಾಯಿತ್ವವನ್ನು ಪ್ರದರ್ಶಿಸಿದೆ ಎಂದು ಅವರು ಹೇಳಿದರು. +ಎಂಎಸ್ಐಎಲ್ ಗೆ ಮತ್ತಷ್ಟು ಬಲ:ಸರಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಡೆಸುವ ವಹಿವಾಟನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, ಕೇರಳ ಮಾದರಿಯಲ್ಲಿ ಚಿಟ್ ಫಂಡ್ ನಡೆಸಲಾಗುವುದು. ಇದರ ಮೂಲಕ ವಾರ್ಷಿಕ 10 ಸಾವಿರ ಕೋಟಿ ರೂ. ವ್ಯವಹಾರ ಬೆಳೆಸಲಾಗುವುದು. ಇದರಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಂಡು, ಖಾಸಗಿಯವರಿಗೆ ಆರೋಗ್ಯಕರ ಸ್ಪರ್ಧೆ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.ಎಂಎಸ್ಐಎಲ್ ನ‌ 200 ಮದ್ಯ ಮಾರಾಟ ಪ್ರೀಮಿಯಂ ಬೋಟಿಕ್ ಗಳನ್ನು ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಬಸವೇಶ್ವರ ನಗರದಲ್ಲಿ ಹೊಸ ವರ್ಷ ದಿನ ಆರಂಭಿಸಿದ್ದು ಅಲ್ಲಿ‌ 30-40ರಷ್ಟು ವಹಿವಾಟು ಹೆಚ್ಚಾಗಿದೆ. ಯಾವ ಖಾಸಗಿ ಬೋಟಿಕ್ ಗಳಿಗೂ ಕಡಿಮೆ‌ ಇಲ್ಲದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಲೇಖಕ್ ನೋಟ್ ಪುಸ್ತಕಗಳ ಗುಣಮಟ್ಟವನ್ನೂ ಹೆಚ್ಚಿಸಲಾಗುವುದು. ಒಟ್ಟಿನಲ್ಲಿ ಸರ್ಕಾರಿ ಉದ್ದಿಮೆಗಳಿಗೆ ಕಾರ್ಪೊರೇಟ್ ಸ್ಪರ್ಶ ನೀಡಿ, ಲಾಭದ ಹಳಿಗೆ ತರಲಾಗುವುದು ಎಂದು ಪಾಟೀಲ ಪ್ರತಿಪಾದಿಸಿದರು. +ಕಾರ್ಯಕ್ರಮದಲ್ಲಿಕೆಎಸ್‍ಡಿಎಲ್ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಪ್ರಧಾನ ವ್ಯವಸ್ಥಾಪಕ (ಆಡಳಿತ) ಗಂಗಪ್ಪ, ಮಲ್ಲಿಗೆ ಆಸ್ಪತ್ರೆ ಸಿಇಒ ಡಾ.ಶ್ರೀನಿವಾಸ, ಕೈಗಾರಿಕಾ ಇಲಾಖೆಯ ಮಹಾಂತೇಶ ಬಿರಾದರ ಇದ್ದರು. +ಆರೋಗ್ಯ ಶಿಬಿರ, ಹೆಲ್ತ್ ಕಾರ್ಡ್ ವಿತರಣೆ:ಕೆಎಸ್‍ಡಿಎಲ್ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಐದು ಲಕ್ಷ ರೂಪಾಯಿ ಮೊತ್ತದ ಚಿಕ್ಸಿತೆ ಪಡೆಯಬಹುದಾದ ಹೆಲ್ತ್ ಕಾರ್ಡ್ ಅನ್ನು ಸಚಿವ ಎಂ.ಬಿ.ಪಾಟೀಲ ವಿತರಿಸಿದರು.169 ಕಾಯಂ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರದ ಮೇಲೆ ಕೆಲಸ‌‌ ಮಾಡುತ್ತಿರುವ 464 ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಮಲ್ಲಿಗೆ ಆಸ್ಪತ್ರೆ ಜತೆಗೂಕೆಎಸ್‍ಡಿಎಲ್ಒಪ್ಪಂದ ಮಾಡಿಕೊಂಡಿದ್ದು ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ವಿವರಿಸಿದರು. +ಪ್ರತಿಷ್ಠಿತಕೆಎಸ್‍ಡಿಎಲ್ಕಾರ್ಖಾನೆಗೆ ಶುಕ್ರವಾರ ಭೇಟಿ ನೀಡಿ ಅಲ್ಲಿ ಸಾಬೂನು ಉತ್ಪಾದನೆಯನ್ನು ಪರಿಶೀಲಿಸಿದ ಕಾರ್ಖಾನೆ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಸೇರಿದಂತೆ ಇತರ ಸಿಬ್ಬಂದಿ ವರ್ಗ ಇದ್ದರು. \ No newline at end of file diff --git a/eesanje/url_46_270_5.txt b/eesanje/url_46_270_5.txt new file mode 100644 index 0000000000000000000000000000000000000000..842b367015c3b1681ab5de8e43ddeed2b2e3ddfc --- /dev/null +++ b/eesanje/url_46_270_5.txt @@ -0,0 +1,9 @@ +ಡಿಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿ +ಬೆಂಗಳೂರು,ಜ.5- ಬೆಂಗಳೂರಿನ ನಾಗರಿಕರ ಅಹವಾಲುಗಳನ್ನು ಇತ್ಯರ್ಥಪಡಿಸಲು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ಜನಪ್ರತಿನಿಧಿಗಳು ಭಾಗವಹಿಸಿದ್ದರು. ಬಿಜೆಪಿಯ ಶಾಸಕರಾದ ಯಲಹಂಕದ ಎಸ್.ಆರ್.ವಿಶ್ವನಾಥ್, ದಾಸರಹಳ್ಳಿ ಮುನಿರಾಜು ಅವರು ಡಿ.ಕೆ.ಶಿವಕುಮಾರ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಿದರು. +ಎಸ್.ಆರ್.ವಿಶ್ವನಾಥ್ ಮಾತನಾಡಿ, ವ್ಯವಸ್ಥಿತವಾಗಿ ಜನಸ್ಪಂದನ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‍ರವರು ವಾರದಿಂದ 10 ದಿನಗಳೊಳಗಾಗಿ ಜನರ ಸಮಸ್ಯೆಗೆ ಪರಿಹಾರ ದೊರಕಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಮುನಿರಾಜು ಅಕಾರ ಸಿಕ್ಕಾಗ ಜನ ನೆನಪಿಸಿಕೊಳ್ಳುವಂತಹ ಶಾಶ್ವತ ಕೆಲಸ ಮಾಡಬೇಕು. ಬೆಂಗಳೂರಿಗೆ ಕಾವೇರಿ ನೀರು ಪೂರೈಸಲು ಚಿಂತನೆ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ದೇವರಾಜು ಅರಸುರವರನ್ನು ಮಂಡ್ಯದಲ್ಲಿ ರೈತರು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ತೆಗೆದುಕೊಂಡು ಹೋದರೆ ರೈತರಿಗೆ ಅನ್ಯಾಯವಾಗಲಿದೆ ಎಂದು ಒತ್ತಡ ಹೇರಿದರು. +ಕಾರಿನಿಂದ ಇಳಿದ ದೇವರಾಜು ಅರಸು, ಅರ್ಧಗಂಟೆ ಕಾಲ ನಡೆದುಕೊಂಡು ಹೋಗಿ ಬೇರೆ ವಾಹನದಲ್ಲಿ ಪ್ರಯಾಣ ಮುಂದುವರೆಸಿದರು. ಏನೇ ಆದರೂ ಬೆಂಗಳೂರಿಗೆ ನೀರು ಕೊಡುತ್ತೇನೆ ಎಂದು ಪ್ರಕಟಿಸಿದರು. ಅದರ ಪರಿಣಾಮ ನಾವು ಇಂದು ಕಾವೇರಿ ನೀರು ಕುಡಿಯುತ್ತಿದ್ದೇವೆ. ಡಿ.ಕೆ.ಶಿವಕುಮಾರ್ ಅವರಿಗೆ ಅದೇ ರೀತಿಯ ಶಾಶ್ವತ ಕೆಲಸ ಮಾಡುವ ಧೈರ್ಯ, ತಾಕತ್ತು, ಇಚ್ಛಾ ಶಕ್ತಿ ಇದೆ. ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರಕಿಸಿ ಎಂದು ಸಲಹೆ ನೀಡಿದರು. +ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಜನರ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸುವುದು ಬಹಳ ಮುಖ್ಯವಾಗಿದೆ. ಅಭಿವೃದ್ಧಿಯ ಜೊತೆಗೆ ಜನರ ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ನೀಡಿದಾಗ ಮಾತ್ರ ಸರ್ಕಾರ ಜನಪರವಾಗಿರಲು ಸಾಧ್ಯಎಂದರು. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ಜನಸ್ಪಂದನದಲ್ಲಿ ನಾನಾರೀತಿಯ ಸಮಸ್ಯೆಗಳು ಕೇಳಿಬಂದವು. ವ್ಯಕ್ತಿಯೊಬ್ಬರು ನನ್ನ ನಿವೇಶನ ಬಿಡಿಎಗೆ ಸ್ವಾೀಧಿನವಾಗಿದೆ. 30 ವರ್ಷದಿಂದ ನಾನು ವಾಸವಿದ್ದೇನೆ. ನನ್ನ ಜಾಗ ನನಗೆ ಉಳಿಸಿಕೊಡಿ ಎಂದು ಮನವಿ ಮಾಡಿದರು. ಈ ವೇಳೆ ನೀನು ಇರುವಲ್ಲಿಯೇ ಬಿಗಿಯಾಗಿರು, ಜಾಗ ಬಿಡಬೇಡ ಎಂದು ಉಪಮುಖ್ಯಮಂತ್ರಿ ಸಲಹೆಯೊಂದಿಗಿನ ಭರವಸೆ ನೀಡಿದರು. +ಈ ಹಿಂದೆ ಸಂಪಿಗೆಹಳ್ಳಿಯಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ನನ್ನ ಹೆಸರಿನಲ್ಲಿ ಸಾಲ ಪಡೆದು ವಂಚನೆ ಮಾಡುತ್ತಿದ್ದಾರೆ. ಕೇಳಿದರೆ ಏನು ಬೇಕಾದರೂ ಮಾಡಿಕೊ ಎನ್ನುತ್ತಾರೆ ಎಂದು ಮತ್ತೊಬ್ಬರು ದೂರು ಹೇಳಿದರು.ನಾಗರತ್ನ ಎಂಬ ಮಹಿಳೆ ನಾನು ಬಡವಿ. ಬಿಪಿಎಲ್ ಕಾರ್ಡ್‍ಗಾಗಿ ಹಲವು ಬಾರಿ ಮನವಿ ಮಾಡಿದ್ದೇನೆ. ಶಾಸಕರ ಕಚೇರಿಗೂ ಹೋಗಿದ್ದೆ. ಆದರೂ ಪ್ರಯೋಜನವಾಗಿಲ್ಲ ಎಂದು ದುಃಖಿಸಿದರು. ಅಳಬೇಡಮ್ಮಾ, ನಾನಿದ್ದೇನೆ, ಬಿಪಿಎಲ್ ಕಾರ್ಡ್ ಮಾಡಿಸಿಕೊಡುತ್ತೇನೆಂದು ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. +ಮಹಿಳೆಯೊಬ್ಬರು ತಮ್ಮ ಮನೆಗೆ ವಿದ್ಯುತ್ ಸಂಪರ್ಕ ಇಲ್ಲ ಎಂದು ಹೇಳಿದರು. ಅಕಾರಿಗಳನ್ನು ಮನೆಬಾಗಿಲಿಗೆ ಕಳುಹಿಸುತ್ತೇನೆಂದು ಡಿ.ಕೆ.ಶಿವಕುಮಾರ್ ಆಶ್ವಾಸನೆ ನೀಡಿದರು. ಕೆಂಪೇಗೌಡ ಪ್ರಶಸ್ತಿ ನೀಡಿ ಎಂದು ಕಲಾವಿದರೊಬ್ಬರು ಮನವಿ ಸಲ್ಲಿಸಿದರು. ಬಹಳಷ್ಟು ಮಂದಿ ಮೌಖಿಕವಾಗಿ ದೂರು ನೀಡಿದಾಗ ಏನೇ ಹೇಳುವುದಿದ್ದರೂ ಅದನ್ನು ಲಿಖಿತವಾಗಿ ದೂರು ನೀಡಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. \ No newline at end of file diff --git a/eesanje/url_46_270_6.txt b/eesanje/url_46_270_6.txt new file mode 100644 index 0000000000000000000000000000000000000000..54fc016d372466a6d36925a92758ecdce12169b7 --- /dev/null +++ b/eesanje/url_46_270_6.txt @@ -0,0 +1,10 @@ +ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ +ಬೆಂಗಳೂರು,ಜ.5- ರಾಜ್ಯದ ಜನರಿಗೆ ಸರ್ಕಾರದಿಂದ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಗಳಿದ್ದು, ದರ ಪರಿಷ್ಕರಣೆಗೆ ವಿದ್ಯಚ್ಛಕ್ತಿ ಸರಬರಾಜು ಕಂಪನಿಗಳು ಮುಂದಾಗಿವೆ. ಪ್ರತಿ ವರ್ಷ ಏಪ್ರಿಲ್ ತಿಂಗಳಿನಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ( ಕೆಇಆರ್‍ಸಿ) ದರ ಪರಿಷ್ಕರಣೆ ಮಾಡುತ್ತಿತ್ತು. ಆದರೆ ಈ ಬಾರಿ ಲೋಕಸಭಾ ಚುನಾವಣೆ ಮಾರ್ಚ್-ಏಪ್ರಿಲ್ ಅಥವಾ ಮೇ ತಿಂಗಳ ಅವಧಿಯಲ್ಲಿ ನಡೆಯಲಿದೆ ಒಂದು ವೇಳೆ ದಿನಾಂಕ ಘೋಷಣೆಯಾದರೆ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಹೊಸ ದರ ಪರಿಷ್ಕರಣೆಯಾಗುವ ಸಂಭವವಿದೆ. +ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಒತ್ತಾಯಿಸಲಾಗಿದೆ. ಕಂಪನಿಗಳ ನಿರ್ವಹಣೆ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಕೋರಲಾಗಿದೆ ಎಂದು ಅಧಿಕಾರಿಗಳೂ ತಿಳಿಸಿದ್ದಾರೆ. ಎಸ್ಕಾಂಗಳು ಹಾಗೂ ಸಾರ್ವಜನಿಕರಿಂದ ಕೆಇಆರ್‍ಸಿ ಅಭಿಪ್ರಾಯವನ್ನು ಸಂಗ್ರಹಿಸಲು ಮುಂದಾಗಿದೆ. ಬಳಿಕ ಎಲ್ಲಾ ಸಾಧಕ ಬಾಧಕಗಳನ್ನು ಪರಿಗಣಿಸಿ ಶೀಘ್ರದಲ್ಲೇ ಹೊಸ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಲಿದೆ ಎಂದು ತಿಳಿದು ಬಂದಿದೆ. +ಈ ವರ್ಷ ಪ್ರತಿ ಯೂನಿಟ್‍ಗೆ 35ರಿಂದ 45 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದಲ್ಲಿ ಹೊಸ ವಿದ್ಯುತ್ ದರ ಪರಿಷ್ಕರಣೆ ಪಟ್ಟಿ ಬಿಡುಗಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ. 2024ನೇ ಸಾಲಿಗೆ ಅನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಣೆ ಕಾರ್ಯ ಅಂತಿಮ ಹಂತ ತಲುಪಿದ್ದು, ಲೋಕಸಭೆ ಚುನಾವಣೆಗೂ ಮುನ್ನವೇ ಅಧಿಕೃತವಾಗಿ ಪ್ರಕಟಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‍ಸಿ) ನಿರ್ಧರಿಸಿದೆ. +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಚಾಮುಂಡೇಶ್ವರಿ ಸಹಿತ ಐದು ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆಗಳ ಬಗ್ಗೆ ಕೆಇಆರ್ ಸಿ ಈಗಾಗಲೇ ಪರಿಶೀಲನೆ ನಡೆಸಿದೆ. ಇದಕ್ಕೆ ಆಕ್ಷೇಪಣೆಗಳನ್ನು ಆಲಿಸಲು ಮುಂದಾಗಿದೆ. ಇನ್ನಷ್ಟೇ ಆದೇಶ ಹೊರಬೀಳ ಬೇಕಿದೆ. ಎಸ್ಕಾಂಗಳಲ್ಲದೆ ಕೆಪಿಟಿಸಿಲ್, ಮಂಗಳೂರು ಎಸ್‍ಇಝೆಡ್ ಹಾಗೂ ಸಹಕಾರಿ/ಖಾಸಗಿ ಕ್ಷೇತ್ರದ ವಿದ್ಯುತ್ ಕಂಪನಿಗಳ ದರ ಪರಿಷ್ಕರಣೆ ಕೂಡ ಆಗಲಿದೆ. +40-50 ಪೈಸೆ ಏರಿಕೆ ಸಾಧ್ಯತೆ:ಆಯೋಗವು ಪ್ರತಿ ಯೂನಿಟ್‍ಗೆ 40-50 ಪೈಸೆಯಷ್ಟು ಏರಿಕೆ ಮಾಡುವ ನಿರೀಕ್ಷೆ ಇದೆ. ಆದರೆ, ಎಸ್ಕಾಂಗಳು 1 ರೂ.ನಿಂದ 1.65 ಪೈಸೆ ಏರಿಕೆ ಮಾಡಿ ಸಂಸ್ಥೆಗಳ ನಷ್ಟ ಭರಿಸಿಕೊಳ್ಳಲು ಅವಕಾಶ ಮಾಡಿಕೊಡುವಂತೆ ವಿಚಾರಣೆ ಸಂದರ್ಭದಲ್ಲಿ ಮನವಿ ಮಾಡಿಕೊಂಡಿವೆ. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಕೆಇಆರ್‍ಸಿ ಮುಂದಾಗಿದೆ. ಸದ್ಯ ಪ್ರಸ್ತಾವನೆ ಪರಿಶೀಲಿಸಲಿರುವ ಆಯೋಗ, ಗ್ರಾಹಕ ಮತ್ತು ವಿದ್ಯುತ್ ಪೂರೈಕೆ ಕಂಪನಿಗಳು ಇಬ್ಬರಿಗೂ ಹೊರೆಯಾಗದಂತೆ ಏಪ್ರಿಲ್ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ. +ಎಸ್ಕಾಂಗಳು ಸಲ್ಲಿಸಿರುವ ಬೇಡಿಕೆಗಳ ಮುಂದಿಟ್ಟು, ಕೆಇಆರ್‍ಸಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಅದಾಲತ್‍ಗಳನ್ನು ಎಲ್ಲಾ ಎಸ್ಕಾಂಗಳಲ್ಲಿಯೂ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಕೆಇಆರ್‍ಸಿ ಮೂಲಗಳು ತಿಳಿಸಿವೆ. ವಿದ್ಯುತ್ ದರ ಪರಿಷ್ಕರಣೆಗೆ ಲೋಕಸಭೆ ಚುನಾವಣೆ ಅಡ್ಡಿಯಾಗಬಹುದು ಎಂದು ಹೇಳಲಾಗುತ್ತಿದೆ. +ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ +ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ಅಂದಾಜಿದೆ. ಒಂದು ವೇಳೆ ಚುನಾವಣೆಗೆ ದಿನಾಂಕ ನಿಗ ಮಾಡಿ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದರೆ, ವಿದ್ಯುತ್ ದರ ಪರಿಷ್ಕರಣೆ ಮಾಡಿದ್ದನ್ನು ಜಾರಿಗೆ ತರಲು ಸಮಸ್ಯೆ ಎದುರಾಗಬಹುದು. ಹೀಗಾಗಿ ಎಲ್ಲಾ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ದರ ಪರಿಷ್ಕರಣೆಗೆ ಕೆಇಆರ್‍ಸಿ ಮುಂದಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರವೇ ತೀರ್ಮಾನಿಸುವುದರಿಂದ ಒಪ್ಪಿಗೆ ಸಿಗುತ್ತದೆ ಎಂಬುದನ್ನು ಕಾದು ನೋಡಬೇಕು. \ No newline at end of file diff --git a/eesanje/url_46_270_7.txt b/eesanje/url_46_270_7.txt new file mode 100644 index 0000000000000000000000000000000000000000..3314ad0bed6fb449c8d283a68d42fecf87e5b439 --- /dev/null +++ b/eesanje/url_46_270_7.txt @@ -0,0 +1,8 @@ +ನಾವು ಹಿಂದೂ ವಿರೋಧಿಗಳಲ್ಲ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಜ.5- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಹೆಚ್ಚಿನಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿಗಳಾಗಲು ಸಾಧ್ಯ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕೆಗೂ ಇತಿಮಿತಿಗಳಿರಬೇಕು. ನಮ್ಮ ಸರ್ಕಾರ ನ್ಯಾಯ ರೀತಿ ನಡೆದುಕೊಳ್ಳುತ್ತಿದೆ ಎಂದು ಹೇಳಿದರು. +ಬಿಜೆಪಿಯವರ ನಾನು ಕರಸೇವಕ ಎಂಬ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಅವರು, ಕಾನೂನು ಸುವ್ಯವಸ್ಥೆ ವಿಷಯದಲ್ಲಿ ರಾಜಕೀಯ ಮಾಡುವುದು ಅನಗತ್ಯ. ನ್ಯಾಯಾಲಯಗಳಿಂದ ಸಮನ್ಸ್ ಹೋಗಿದೆ. ಅದರ ಆಧಾರದ ಮೇಲೆ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ. ಎಲ್ಲವೂ ಕಾನೂನಿನ ಪ್ರಕಾರವೇ ನಡೆಯುತ್ತಿದೆ. +ಇದರಲ್ಲಿ ಯಾವುದೇ ಲೋಪಗಳಾಗಿಲ್ಲ. ರಾಜಕೀಯ ಕಾರಣಕ್ಕಾಗಿ ಬಳಕೆ ಮಾಡುವುದು ಒಳ್ಳೆಯದಲ್ಲ ಎಂದರು. ಬಾಬಾ ಬುಡನ್‍ಗಿರಿ ಪ್ರಕರಣದಲ್ಲಿ ನಾವು ಯಾವುದೇ ಮುತುವರ್ಜಿ ವಹಿಸಿಲ್ಲ. ನ್ಯಾಯಾಲಯ ಸೂಚನೆ ನೀಡಿದೆ. ಅದನ್ನು ಠಾಣೆಯ ಅಧಿಕಾರಿಗಳು ಪಾಲನೆ ಮಾಡುತ್ತಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬಾರದೆ? ಬಿಜೆಪಿಯವರಿಗೆ ಕೋರ್ಟ್ ಅಥವಾ ಕಾನೂನಿನ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು. +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಹುಬ್ಬಳ್ಳಿ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿ ವಿರುದ್ಧ 16 ಪ್ರಕರಣಗಳಿವೆ. ಅದರಲ್ಲಿ 9 ಪ್ರಕರಣಗಳು ಅಕ್ರಮ ಮದ್ಯಕ್ಕೆ ಸಂಬಂಧಪಟ್ಟಿದ್ದಾಗಿದೆ. ಅಂತಹ ಅಪರಾಧಿಗೆ ಬಿಜೆಪಿಯವರು ಬೆಂಬಲ ನೀಡುತ್ತಾ ಇದನ್ನು ರಾಷ್ಟ್ರೀಯ ವಿವಾದವಾಗಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಪೊಲೀಸ್ ಇಲಾಖೆಯಲ್ಲಿನ ಪತಿ, ಪತ್ನಿ ಪ್ರಕರಣದಲ್ಲಿ ವರ್ಗಾವಣೆ ಮಾಡಿಕೊಡಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಲಾಗುವುದು. ಕೆಸಿಎಸ್‍ಆರ್ ನಿಯಮಾವಳಿಗಳಂತೆಯೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. +ರಾಜಕೀಯ ಚರ್ಚೆ :ನಿನ್ನೆ ರಾತ್ರಿ ನಡೆದ ಭೋಜನಾ ಕೂಟ ಸಭೆಯಲ್ಲಿ ಭಾಗವಹಿಸಿ ಊಟ ಮಾಡಿ ಬಂದಿದ್ದೇನೆ. ರಾಜಕಾರಣಿಗಳು ಒಂದೆಡೆ ಸೇರಿದ ಮೇಲೆ ರಾಜಕೀಯವೇ ಚರ್ಚೆಯಾಗುತ್ತದೆ. ಅಲ್ಲಿ ಏನೆಲ್ಲಾ ಮಾತುಕತೆ ನಡೆದಿದೆ ಎಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ. ಅದು ರಹಸ್ಯ ಸಭೆ ಎಂದ ಮೇಲೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಹೇಗೆ ಸಾಧ್ಯ ಎಂದರು. +ವಿಧಾನಸಭೆ ಚುನಾವಣೆಗೂ ಮೊದಲು ಚಿತ್ರದುರ್ಗದಲ್ಲಿ ಕಾಂಗ್ರೆಸ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಮಾವೇಶ ನಡೆಸಿ 10 ಘೋಷಣೆಗಳನ್ನು ಮಾಡಿದ್ದೆವು. ಅವುಗಳನ್ನು ಅನುಷ್ಠಾನಕ್ಕೆ ತರುವ ಸಂಬಂಧಪಟ್ಟಂತೆ ಒಂದಿಷ್ಟು ಚರ್ಚೆಯಾಗಿದೆ. ಮುಖ್ಯವಾಗಿ ಊಟಕ್ಕೆ ಸೇರುವ ಉದ್ದೇಶವಿತ್ತು ಎಂದು ಹೇಳಿದರು. \ No newline at end of file diff --git a/eesanje/url_46_270_8.txt b/eesanje/url_46_270_8.txt new file mode 100644 index 0000000000000000000000000000000000000000..041d5262809951b87f7341f6979b09262c638de2 --- /dev/null +++ b/eesanje/url_46_270_8.txt @@ -0,0 +1,6 @@ +ಲೋಕಸಭೆ ಚುನಾವಣೆಗೂ ಮೊದಲೇ ಡಿಸಿಎಂ ಹುದ್ದೆ ಕೊಡಿ : ಜಾರಕಿಹೊಳಿ +ಬೆಂಗಳೂರು,ಜ.5- ಲೋಕಸಭೆ ಚುನಾವಣೆಗೂ ಮೊದಲೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವುದು ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ತಮ್ಮ ಮನೆಯಲ್ಲಿ ನಡೆದ ಭೋಜನಾಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಪಕ್ಷದ ಸಚಿವರುಗಳು ಸಹಜವಾಗಿ ಕೂಟಕ್ಕೆ ಸೇರಿದ್ದೇವೆ. ಅದರಲ್ಲಿ ವಿಶೇಷವೇನಿಲ್ಲ. ರಾಜಕಾರಣಿಗಳು ಸೇರಿದರೆ ರಾಜಕಾರಣ ಚರ್ಚೆಯಾಗಿಯೇ ಆಗುತ್ತದೆ ಎಂದರು. +ನಮ್ಮ ಮುಂದೆ ಲೋಕಸಭೆ ಚುನಾವಣೆಯ ಸವಾಲಿದೆ. ಅದನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸಿದ್ದೇವೆ. ಚುನಾವಣೆಗೂ ಮೊದಲೇ ಉಪಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಿದರೆ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಅದರ ಹೊರತಾಗಿ ದಲಿತ ಮುಖ್ಯಮಂತ್ರಿ ಕುರಿತು ಚರ್ಚೆಯಾಗಿಲ್ಲ ಎಂದು ಹೇಳಿದರು. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ಇದೇ ಜನವರಿ 28 ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ, ಫೆಬ್ರವರಿಯಲ್ಲಿ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್ಟಿ ಸಮಾವೇಶ ಆಯೋಜನೆ ಮಾಡುವ ಚರ್ಚೆಗಳಾಗಿವೆ ಎಂದು ತಿಳಿಸಿದರು. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಅದು ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕವಷ್ಟೇ ಅದರ ಬಗ್ಗೆ ಮಾತನಾಡುತ್ತೇವೆ. ಸದ್ಯಕ್ಕೆ ಅದರ ಬಗ್ಗೆ ಒತ್ತಡ ಹೇರುವ ಸಂದರ್ಭವೂ ಇಲ್ಲ ಎಂದರು. +ಕರಸೇವಕರ ಬಂಧನದ ಪ್ರಕರಣ ರಾಜಕೀಯ ಅನಗತ್ಯ. ಇದೀಗ ಪಕ್ಷಗಳ ವ್ಯಾಪ್ತಿಗಳು ಮೀರಿ ಹೋಗಿವೆ. ಏನೇ ಆಗಬೇಕಿದ್ದರೂ ಅದು ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳಬೇಕು ಎಂದು ಹೇಳಿದರು. \ No newline at end of file diff --git a/eesanje/url_46_270_9.txt b/eesanje/url_46_270_9.txt new file mode 100644 index 0000000000000000000000000000000000000000..0f83a8ab83b90962ebe539c2a13d4ab701538c16 --- /dev/null +++ b/eesanje/url_46_270_9.txt @@ -0,0 +1,12 @@ +ತೆರಿಗೆ ಸಂಗ್ರಹಕ್ಕೆ ಕಠಿಣ ಕ್ರಮ : ಡಿಕೆಶಿ +ಬೆಂಗಳೂರು,ಜ.5- ಜನತಾದರ್ಶನದಲ್ಲಿ ಸ್ವೀಕಾರವಾಗುವ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳ ತಂಡ ರಚನೆ ಮಾಡುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳ 300 ಕ್ಕೂ ಹೆಚ್ಚು ಅಧಿಕಾರಿಗಳು ಇಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. +ಎಲ್ಲರ ಅರ್ಜಿಗಳನ್ನು ನೋಂದಣಿ ಮಾಡಿಸಿಕೊಂಡು ಉತ್ತರದಾಯಿತ್ವದ ಮೂಲಕ ಇತ್ಯರ್ಥಪಡಿಸಲಾಗುವುದು, ಪರಿಹಾರ ಸಾಧ್ಯವಿಲ್ಲ ಎಂದಾದರೆ ಅದಕ್ಕೆ ಸ್ಪಷ್ಟ ಕಾರಣಗಳನ್ನು ಅರ್ಜಿದಾರರಿಗೆ ನೀಡಲಾಗುವುದು. ಜನರ ಬಳಿಗೆ ಸರ್ಕಾರ ಬರಬೇಕೆಂಬುದು ನಮ್ಮ ಆಶಯ. ಆ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದೇವೆ ಎಂದರು. +ಅಧಿಕಾರಿಗಳು ಗೌರವ ಕೊಡುವುದಿಲ್ಲ ಎಂದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಯಾರೇ ಲಂಚ ಕೇಳಿದ್ದರೆ ಅಥವಾ ಮಧ್ಯವರ್ತಿಗಳು ಹಸ್ತಕ್ಷೇಪವಿದ್ದರೆ ಮುಲಾಜಿಲ್ಲದೆ ನನ್ನ ಬಳಿ ಹೇಳಿ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ. ಆದರೆ ಸುಳ್ಳು ಮಾಹಿತಿ ನೀಡಿದರೆ ನಿಮ್ಮ ವಿರುದ್ಧವೇ ಪ್ರಕ ರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಸಿದರು. +ರಾಜಕಾರಣದಲ್ಲಿ ಜನರೇ ದೇವರು. ಅವರು ವಿಶ್ವಾಸವಿಟ್ಟು ನೀಡಿರುವ ಅಧಿಕಾರವನ್ನು ಸದುಪ ಯೋಗಪಡಿಸಿಕೊಂಡು ನಿಮ್ಮ ಸೇವೆ ಮಾಡಲು ಪ್ರಯತ್ನಿಸುತ್ತೇವೆ. ಪ್ರತಿದಿನ ತಮ್ಮ ಮನೆ ಬಳಿ ಬರುವ ಜನರ ಸಮಸ್ಯೆ ಕೇಳಲು ರಾತ್ರಿ 2 ಗಂಟೆಯಾದರೂ ಸಮಯ ಸಾಲುವುದಿಲ್ಲ. ಹೀಗಾಗಿ ಜನರ ಬಳಿಯೇ ಹೋಗಿ ಸಮಸ್ಯೆ ಬಗೆಹರಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಬೆಂಗಳೂರಿಗೆ ಅಂತಾರಾಷ್ಟ್ರೀಯ ಗುಣದರ್ಜೆಯ ಸೌಲಭ್ಯ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಶಾಸಕರ ಬೇಡಿಕೆಗನುಗುಣವಾಗಿ ಅನುದಾನ ನೀಡಲಾಗುವುದು. ಈ ಬಾರಿ ಪಂಚಖಾತ್ರಿ ಯೋಜನೆಗಳನ್ನು 35 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಜಾರಿಗೆ ತಂದಿದ್ದೇವೆ. ಮುಂದಿನ ಬಾರಿ 55 ಸಾವಿರ ಕೋಟಿ ರೂ.ಗಳಷ್ಟು ವೆಚ್ಚವಾಗಲಿದೆ. ಅದರ ಹೊರತಾಗಿಯೂ ಬೆಂಗಳೂರಿಗೆ ಅಗತ್ಯ ಅನುದಾನ ನೀಡುತ್ತೇವೆ. ತೆರಿಗೆ ಸಂಗ್ರಹಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಮೊದಲು ಒಂದು ಕಟ್ಟಡದ ಲೆಕ್ಕ ತೋರಿಸಿ, 4 ಮನೆಗಳನ್ನು ನಿರ್ಮಿಸಿ ದ್ದಾರೆ. +ಇಂತಹ ತಪ್ಪು ಮಾಹಿತಿಗಳನ್ನು ಸರಿಪಡಿಸಿ, ಕ್ರಮಬದ್ಧಗೊಳಿಸಲಾಗುವುದು ಎಂದರು. ಪಂಚಖಾತ್ರಿಗಳ ಪೈಕಿ ಎಲ್ಲರಿಗೂ ಗೃಹಜ್ಯೋತಿ ದೊರೆಯುತ್ತಿದೆ. 5 ಕೆ.ಜಿ. ಅಕ್ಕಿ, 5 ಕೆ.ಜಿ.ಗೆ ಹಣ ನೀಡುತ್ತಿದ್ದೇವೆ. ಉಳಿದ 5 ಕೆ.ಜಿ. ಅಕ್ಕಿಯನ್ನು ಪೂರೈಸಲು ಟೆಂಡರ್ ಕರೆಯಲಾಗುವುದು. 5 ಲಕ್ಷ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಹಣ ತಲುಪಿಲ್ಲ. ಇದಕ್ಕೆ ಕಾರಣ ದೂರವಾಣಿ ಸಂಖ್ಯೆ ನೀಡುವಾಗ ತಾಂತ್ರಿಕ ಸಮಸ್ಯೆಯಾಗಿದೆ. ಮಹಿಳೆಯರ ಹೆಸರಿನಲ್ಲಿ ಫೋನ್ ನಂಬರುಗಳಿಲ್ಲ. ಪತಿಯ ಫೋನ್ ನಂಬರ್‍ಗಳನ್ನೇ ನೀಡಿದ್ದಾರೆ. +ಇನ್ನೂ ಕೆಲವು ಪ್ರಕರಣಗಳಲ್ಲಿ ಮಹಿಳೆಯರ ಫೋನ್ ನಂಬರ್ ಇಲ್ಲದೇ ಇದ್ದಾಗ ನೋಂದಣಿ ಮಾಡಿಸುವವರು ಕಮಿಷನ್ ಆಸೆಗಾಗಿ ತಮ್ಮ ಫೋನ್ ನಂಬರನ್ನೇ ನಮೂದಿಸಿದ್ದಾರೆ. ಇದರಿಂದಾಗಿ ಹಣ ಸಿಕ್ಕಿಲ್ಲ. ಬೆಂಗಳೂರು ನಗರದ ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ, ರಸ್ತೆ ಸೇರಿದಂತೆ ಗಂಭೀರ ಸಮಸ್ಯೆ ಬಗೆಹರಿಸಲಾಗುವುದು ಎಂದರು. +ಶಿವರಾಂ ಕಾರಂತರ ಬಡಾವಣೆ ಸೇರಿದಂತೆ ವಿವಿಧ ಲೇಔಟ್‍ಗಳ ಸಮಸ್ಯೆಗಳ ಬಗ್ಗೆ ಅರ್ಜಿಗಳು ಸಲ್ಲಿಕೆಯಾದವು. ಮಹಿಳೆಯೊಬ್ಬರು ತಮ್ಮ ಮಗನ ಮೆದುಳಿನ ಸಮಸ್ಯೆಗೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದಾಗ ಸ್ಥಳದಲ್ಲೇ 50 ಸಾವಿರ ರೂ. ನೀಡುವುದಾಗಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ರೈತ ಸಂಘದ ಮುಖಂಡರು ಆಗಮಿಸಿ ಹಸಿರು ಶಾಲು ಹೊದಿಸಿ ಯಲಹಂಕ ಕ್ಷೇತ್ರದ ಹಲವು ಸಮಸ್ಯೆಗಳನ್ನು ವಿವರಿಸಿದರು. ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಹಲವಾರು ವರ್ಷಗಳಿಂದ ಇಲ್ಲೇ ಠಿಕಾಣಿ ಹೂಡಿದ್ದಾರೆ. ವರ್ಗಾವಣೆಯಾದರೂ ಇಲ್ಲೇ ಉಳಿದುಕೊಂಡಿದ್ದಾರೆ. 30 ಲಕ್ಷ ಲಂಚ ಕೇಳುತ್ತಾರೆ ಎಂದು ದೂರಿದರು. ಲಂಚ ಕೇಳಿದವರ ಹೆಸರನ್ನು ಬರೆದುಕೊಡುವಂತೆ ಸೂಚಿಸಿದರು. +ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ +ನಿವೇಶನ, ಹಕ್ಕುಪತ್ರಗಳಿಗಾಗಿ ಸಾಕಷ್ಟು ಅರ್ಜಿಗಳು ಸಲ್ಲಿಕೆಯಾದವು. ಬ್ಯಾಟರಾಯನಪುರ ಕ್ಷೇತ್ರದ ಶಾಸಕರೂ ಆದ ಕಂದಾಯ ಸಚಿವ ಕೃಷ್ಣಭೈರೇಗೌಡ, ಯಲಹಂಕ ಶಾಸಕರಾದ ಎಸ್. ಆರ್.ಶ್ರೀನಿವಾಸ್, ದಾಸರಹಳ್ಳಿಯ ಮುನಿರಾಜು, ವಿಧಾನಸಭೆ ಸದಸ್ಯ ಎಂ.ಆರ್.ಸೀತಾರಾಮು, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್‍ಗೌಡ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಕಾರಿ ರಾಕೇಶ್‍ಸಿಂಗ್, ಬಿಡಿಎ ಆಯುಕ್ತ ಜಯರಾಂ ಸೇರಿದಂತೆ ಹಲವು ಅಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_271_1.txt b/eesanje/url_46_271_1.txt new file mode 100644 index 0000000000000000000000000000000000000000..eb61a5ab12aca48e7e529cb34e144be807478e7c --- /dev/null +++ b/eesanje/url_46_271_1.txt @@ -0,0 +1,5 @@ +ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ +ಬೆಳಗಾವಿ,ಜ.4- ಅಯೋಧ್ಯೆಯ ಶ್ರೀ ರಾಮಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಶ್ವ ಹಿಂದೂ ಪರಿಷತ್‍ನ ಪ್ರಮುಖರು ಆಮಂತ್ರಣ ನೀಡಿದ್ದಾರೆ. +ಬೆಳಗಾವಿಯಲ್ಲಿಂದು ವಿಶ್ವ ಹಿಂದೂ ಪರಿಷತ್‍ನ ಪ್ರಮುಖರಾದ ಪರಮೇಶ್ವರ್ ಹೆಗ್ಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ ಕುಲಕರ್ಣಿ, ಸಚಿವೆ ಲಕ್ಮೀ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯ ಚನ್ನರಾಜ ಅಟ್ಟಿಹೊಳಿ, ಲಕ್ಮೀ ಹೆಬ್ಬಾಳ್ಕರ್‍ರ ಪುತ್ರ ಮೃನಾಲ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ್ದಾರೆ. +ಕ್ರಿಮಿನಲ್‍ಗಳನ್ನು ಬೆಂಬಲಿಸುವುದು ಕಾಂಗ್ರೆಸ್ ಸಂಸ್ಕøತಿ: ಆರ್.ಅಶೋಕ್ +ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೇ, ಬೇಡವೇ ಎಂಬ ಕುರಿತಂತೆ ಕಾಂಗ್ರೆಸ್‍ನಲ್ಲಿ ಇನ್ನೂ ಚರ್ಚೆಗಳು ನಡೆಯುತ್ತಿವೆ. ಸಂಘ ಪರಿವಾರದ ಮುಖಂಡರು ಆಯ್ದ ಮುಖಂಡರಿಗೆ ಆಹ್ವಾನ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿಲ್ಲ ಎಂಬ ಆಕ್ಷೇಪಗಳು ಇವೆ. ಇದರ ನಡುವೆ ಸಚಿವೆ ಲಕ್ಮೀ ಹೆಬ್ಬಾಳ್ಕರ್ ಅವರಿಗೆ ಆಹ್ವಾನ ನೀಡಿರುವುದು ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_271_10.txt b/eesanje/url_46_271_10.txt new file mode 100644 index 0000000000000000000000000000000000000000..3eab0044426a2cdc6500da5d97ce1c2e5e3eca6c --- /dev/null +++ b/eesanje/url_46_271_10.txt @@ -0,0 +1,6 @@ +ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..! +ಬೆಂಗಳೂರು,ಜ.4- ಕಳೆದ ವರ್ಷ ನಗರದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದ್ದು, ಉತ್ತರ ವಿಭಾಗದಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಗರದ 8 ವಿಭಾಗಗಳು ಹಾಗೂ ಒಂದು ಸೈಬರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ನೇ ಸಾಲಿನಲ್ಲಿ 6422 ಪ್ರಕರಣ ದಾಖಲಾದರೆ 2022ರಲ್ಲಿ 9940 ಹಾಗೂ 2023ಲ್ಲಿ 17623 ಪ್ರಕರಣಗಳು ದಾಖಲಾಗಿವೆ. 2022ಕ್ಕೆ ಹೋಲಿಸಿದರೆ ಸೈಬರ್ ಅಪರಾಧ ಪ್ರಕರಣಗಳು ಗಣನೀಯ ವಾಗಿ ಹೆಚ್ಚಳವಾಗಿವೆ. +ಉತ್ತರ ಭಾಗ ಮೊದಲನೇ ಸ್ಥಾನದಲ್ಲಿದ್ದು, ಅತಿ ಹೆಚ್ಚು ಅಂದರೆ 3260 ಪ್ರಕರಣಗಳು ಪೈಕಿ 238 ಪತ್ತೆಹಚ್ಚಿದರೆ, 2809 ಪ್ರಕರಣಗಳು ಬಾಕಿಯಿವೆ. ಆಗ್ನೇಯ ವಿಭಾಗ 2ನೇ ಸ್ಥಾನದಲ್ಲಿದ್ದು , 2674 ಪ್ರಕರಣಗಳ ಪೈಕಿ 298 ಪ್ರಕರಣವನ್ನ ಪತ್ತೆ ಹಚ್ಚಿದರೆ, 2319 ಪ್ರಕರಣಗಳು ಪತ್ತೆ ಕಾರ್ಯ ಬಾಕಿಯಿವೆ. ವೈಟ್‍ಫೀಲ್ಡ್ ವಿಭಾಗದ 3ನೇ ಸ್ಥಾನದಲ್ಲಿದ್ದು, 2562 ಪ್ರಕರಣಗಳ ಪೈಕಿ 55 ಪತ್ತೆಯಾದರೆ, 2394 ಪ್ರಕರಣಗಳು ಬಾಕಿಯಿವೆ. +75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ +2023 ನೇ ಸಾಲಿನಲ್ಲಿ ಕೇಂದ್ರ ವಿಭಾಗ 1126 ಪ್ರಕರಣ, ಪಶ್ಚಿಮ ವಿಭಾಗ 1941,ದಕ್ಷಿಣ 2094, ಪೂರ್ವ 1994, ಈಶಾನ್ಯ 1917 ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 55 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ ಈ 9 ಪೊಲೀಸ್ ಠಾಣೆಗಳಲ್ಲಿ ಒಟ್ಟು 17,623 ಪ್ರಕರಣಗಳ ಪೈಕಿ 14,285 ಪ್ರಕರಣಗಳ ಪತ್ತೆ ಕಾರ್ಯ ಕ್ಷೀಣವಾಗಿದೆ.ಪ್ರಕರಣಗಳು ದಾಖಲಾಗಲು ಪ್ರಮುಖ ಕಾರಣವಂದರೆ ಸೈಬರ್ ಟಿಪ್‍ಲೈನ್, ಎನ್‍ಸಿಆರ್‍ಪಿ ಪೋರ್ಟಲ್, 112 ಮುಖಾಂತರ ದಾಖಲಾದ ದೂರುಗಳನ್ನು ಎಫ್‍ಐಆರ್ ದೂರುಗಳನ್ನು ಎಫ್‍ಐಆರ್ ಗಳನ್ನಾಗಿ ಪರಿವರ್ತಿಸಿರುವುದು. +ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮಾಡಲಾಗಿರುವ ಕಾರಣ, ಅಲ್ಲದೆ ಸಿನ್ ಪೊಲೀಸ್ ಠಾಣೆ ಹೊರತುಪಡಿಸಿ ನಗರದ ಎಲ್ಲಾ ಪೊಲೀಸ್ ಠಾಣೆಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿರುವುದೇ ದೂರುಗಳು ಹೆಚ್ಚಾಗಿ ದಾಖಲಾಗಲು ಕಾರಣವಾಗಿದೆ. \ No newline at end of file diff --git a/eesanje/url_46_271_11.txt b/eesanje/url_46_271_11.txt new file mode 100644 index 0000000000000000000000000000000000000000..88795a134fe8e15d5c3ba943cc7530cd43cf4c76 --- /dev/null +++ b/eesanje/url_46_271_11.txt @@ -0,0 +1,8 @@ +‘ನನ್ನನ್ನೂ ಬಂಧಿಸಿ’ ಅಭಿಯಾನ ಆರಂಭಿಸಿದ ಬಿಜೆಪಿ +ಬೆಂಗಳೂರು, ಜ.4- ರಾಮಜನ್ಮ ಭೂಮಿಗಾಗಿ ಹೋರಾಟ ನಡೆಸಿದ ಕರಸೇವಕ ಶ್ರೀಕಾಂತ್ ಕುಲಕರ್ಣಿ ಬಂಧನದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಿದ್ದ ಪ್ರತಿಪಕ್ಷ ಬಿಜೆಪಿ ಇದೀಗ ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ ಎಂಬ ಅಭಿಯಾನವನ್ನು ನಡೆಸುವ ಮೂಲಕ ಸರ್ಕಾರದ ವಿರುದ್ದ ಮತ್ತೊಂದು ಸುತ್ತಿನ ಸಮರಕ್ಕೆ ಸಜ್ಜಾಗಿದೆ. +ಬಿಜೆಪಿಯ ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜ್ಯದ ನಾನಾ ಕಡೆ ರಾಮಜನ್ಮ ಭೂಮಿಗಾಗಿ ಅಂದು ಹೋರಾಟ ನಡೆಸಿದ ಕರಸೇವಕರು ಕೈಯಲ್ಲಿ ಬ್ಯಾನರ್ ಹಿಡಿದುಕೊಂಡು ನನ್ನನ್ನು ಬಂಸಿ ಸಿದ್ದರಾಮಯ್ಯ ಎಂಬ ಅಭಿಯಾನವನ್ನು ನಡೆಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶಾಸಕ ವಿ.ಸುನಿಲ್ ಕುಮಾರ್ ಸದಾಶಿವನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ನನ್ನನ್ನು ಬಂಧಿಸಿ ಎಂದು ಪ್ರತಿಭಟನೆ ನಡೆಸಿದರೆ, ಅತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಅವರು ನಗರದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. +ಈ ಮೂಲಕ ರಾಜ್ಯದ್ಯಾಂತ ಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದು, ಹಂತ ಹಂತವಾಗಿ ಒಬ್ಬೊಬ್ಬರೇ ಪೊಲೀಸ್ ಠಾಣೆಗಳ ಮುಂದೆ ನಾನು ಕರಸೇವಕ, ನನ್ನನ್ನು ಬಂಧಿಸಬೇಕು ಎಂದು ಒತ್ತಾಯ ಮಾಡಲಿದೆ. +ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ +ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನಕ್ಕೆ ಚಾಲನೆ ದೊರಕಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ನಡೆಸಲಿದೆ. ರಾಮ ಮಂದಿರದ ಕರಸೇವಕ ನಾನು. ನನ್ನನ್ನು ಬಂಧಿಸಿ ಎಂದು ಧರಣಿ ನಡೆಸಿದರು. ಠಾಣೆಯ ಮುಂದೆ ಪ್ರತಿಭಟನೆಗೆ ಅವಕಾಶ ಇಲ್ಲದ ಕಾರಣ ಸುನಿಲ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.ಪ್ರತಿಭಟನೆ ವೇಳೆ ಸುನೀಲ್ ಕುಮಾರ್ ಅವರು ನನ್ನನ್ನೂ ಬಂಧಿಸಿ ಎಂಬ ಬರಹವುಳ್ಳ ಕರಪತ್ರವನ್ನು ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. +31 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಎಂಬುವವರನ್ನು ಬಂಧನ ಮಾಡಲಾಗಿದೆ. ಇವರ ವಿರುದ್ಧ ಗಲಭೆ ದೊಂಬಿ, ಅಬಕಾರಿ ಕೇಸ, ಜೂಜಾಟ ಪ್ರಕರಣಗಳು ಇವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಇವರ ಬಂಧನ ಏಕೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ. +ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನ ಮಾಡಿರುವ ವಿಚಾರವಾಗಿ ಬಿಜೆಪಿ ತೀವ್ರ ಪ್ರತಿಭಟನೆ ನಡೆಸಲು ಮುಂದಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 48 ಗಂಟೆಗಳ ಗಡುವನ್ನು ಸರ್ಕಾರಕ್ಕೆ ನೀಡಿದ್ದಾರೆ. \ No newline at end of file diff --git a/eesanje/url_46_271_12.txt b/eesanje/url_46_271_12.txt new file mode 100644 index 0000000000000000000000000000000000000000..fb2b285d99435c74a9e762fbd1ec33264e38389f --- /dev/null +++ b/eesanje/url_46_271_12.txt @@ -0,0 +1,7 @@ +ಧಾರ್ಮಿಕ ಸಂಸ್ಥೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ನಿಗದಿ +ಬೆಂಗಳೂರು,ಜ.4- ರಾಜ್ಯದ ಎಲ್ಲಾ ಧಾರ್ಮಿಕ ಸಂಸ್ಥೆಗಳು ಸರ್ಕಾರಿ ಸ್ವಾಮ್ಯದ ಆಯ್ದ ವಾಣಿಜ್ಯ ಸೇವೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ದರವನ್ನು ನಿಗದಿಪಡಿಸಲಾಗಿದೆ. ಯಾವುದೇ ತಾರತಮ್ಯ ಇಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲ ಸಂದೇಶಗಳು ಹರಿದಾಡುತ್ತಿದ್ದು, ಸಾಮಾನ್ಯ ನಾಗರಿಕರಿಗೆ 7.85 ಪೈಸೆ, ಮಸೀದಿ ಮತ್ತು ಚರ್ಚ್‍ಗೆ 1.85 ಪೈಸೆ ಶುಲ್ಕ ವಿಧಿಸಲಾಗುತ್ತಿದೆ. ಇದು ಜಾತ್ಯತೀತ ಭಾರತ ಎಂಬ ಸಂದೇಶ ಹರಿದಾಡುತ್ತಿದೆ. +ಇದಕ್ಕೆ ಸ್ಪಷ್ಟನೆ ನೀಡಲಾಗಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಸಮಿತಿ 2023 ರ ಏಪ್ರಿಲ್ 21 ರಂದು ನಿಗದಿಪಡಿಸಿರುವ ವಿದ್ಯುತ್ ದರದ ಪ್ರಕಾರ ಯಾವುದೇ ವ್ಯತ್ಯಾಸಗಳಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಾಗೂ ಸ್ಥಳೀಯ ಸಂಸ್ಥೆಗಳಿಂದ ನಡೆಸಲಾಗುವ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು, ವಿಕಲಚೇತನರು, ವಯೋವೃದ್ಧರು, ಅಂಗಾಂಗ ಊನರಿಗಾಗಿ ನಡೆಸಲಾಗುವ ಪುನರ್‍ವಸತಿ ಕೇಂದ್ರಗಳು, ಆಶ್ರಮಗಳು, ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಏಡ್ಸ್ ಸೋಂಕಿತ ಚಿಕಿತ್ಸಾ ಕೇಂದ್ರಗಳು, ರೈಲ್ವೆ ಸಿಬ್ಬಂದಿಗಳ ಕ್ವಾರ್ಟಸ್‍ಗಳಿಗೆ ಏಕರೂಪದ ಶುಲ್ಕ ವಿಧಿಸಲಾಗಿದೆ. +ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ +ಅದೇ ರೀತಿ ದೇವಸ್ಥಾನ, ಚರ್ಚ್, ಗುರುದ್ವಾರ, ಆಶ್ರಮ, ಮಠ, ಧಾರ್ಮಿಕ ಕೇಂದ್ರಗಳು, ದತ್ತಿ ಸಂಸ್ಥೆಗಳು, ಟ್ರಸ್ಟ್ ವತಿಯಿಂದ ನಡೆಯುವ ಆಸ್ಪತ್ರೆಗಳು, ಎಕ್ಸ್‍ರೇ ಘಟಕಗಳು, ಬಂೀಖಾನೆಗಳು, ಸರ್ಕಾರಿ ಸ್ವಾಮ್ಯದ ಶಾಲಾ-ಕಾಲೇಜುಗಳು, ಧಾರ್ಮಿಕ ದತ್ತಿ ಸಂಸ್ಥೆಯ ಸಾಂಸ್ಕøತಿಕ, ವೈಜ್ಞಾನಿಕ ಕೇಂದ್ರಗಳು, ಗ್ರಂಥಾಲಯಗಳು, ಪ್ರವಾಸಿ ಮಂದಿರಗಳು, ವಸ್ತು ಸಂಗ್ರಹಲಾಯಗಳು, ಐತಿಹಾಸಿಕ ಸ್ಮಾರಕಗಳು, ಸುಲಭ್ ಶೌಚಾಲಯಗಳು ಸೇರಿದಂತೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಏಕರೂಪ ವಿದ್ಯುತ್ ಶುಲ್ಕ ದರ ಇದೆ. ಯಾವುದರಲ್ಲೂ ವ್ಯತ್ಯಾಸವಿಲ್ಲ ಎಂದು ತಿಳಿಸಲಾಗಿದೆ. +ಪ್ರತಿ ತಿಂಗಳು ನಿಗದಿತ ವಿದ್ಯುತ್ ಶುಲ್ಕ, 50 ಕಿಲೋವ್ಯಾಟ್‍ವರೆಗೂ 1.10 ರೂ.ಗಳಿವೆ. 50 ಕಿಲೊವ್ಯಾಟ್ ಮೇಲ್ಪಟ್ಟ ಪ್ರತಿ ಯುನಿಟ್‍ಗೆ 2.10 ರೂ. ಮಾಸಿಕ ನಿಗದಿತ ಶುಲ್ಕವಿದೆ. 0 ಯಿಂದ 100 ಯುನಿಟ್‍ವರೆಗಿನ ವಿದ್ಯುತ್ ಶುಲ್ಕ ಪ್ರತಿ ಕಿಲೋ ವ್ಯಾಟ್‍ಗೆ 4.75 ಪೈಸೆ, 100 ಯುನಿಟ್‍ಗಿಂತ ಮೇಲ್ಪಟ್ಟ ವಿದ್ಯುತ್ ಬಳಕೆದಾರರಾಗಿದ್ದರೆ ಅವರು ಶೂನ್ಯದಿಂದಲೂ ಪ್ರತಿ ಯುನಿಟ್‍ಗೆ 7 ರೂ.ನಂತೆ ಶುಲ್ಕ ಪಾವತಿಸಬೇಕಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಪ್ರಸ್ತುತ ಗೃಹಜ್ಯೋತಿ ಯೋಜನೆ ಜಾರಿಯಲ್ಲಿದ್ದು, 200 ಯುನಿಟ್‍ವರೆಗೆ ವಿದ್ಯುತ್ ಬಳಕೆಗೆ ಅವಕಾಶ ಇರುವುದರಿಂದ 7 ರೂ. ನ ವಿದ್ಯುತ್‍ನ ಬರೆ ಜನಸಾಮಾನ್ಯರಿಗೆ ತಗುಲಿಲ್ಲ. \ No newline at end of file diff --git a/eesanje/url_46_271_2.txt b/eesanje/url_46_271_2.txt new file mode 100644 index 0000000000000000000000000000000000000000..c9ff1587a0f5c2e8e0cc2e6348b93625c7eaffeb --- /dev/null +++ b/eesanje/url_46_271_2.txt @@ -0,0 +1,5 @@ +ನಂಬರ್‌ಪ್ಲೇಟ್‌ ಮರೆಮಾಚಿ ಸಂಚಾರ, ವಾಹನ ಜಪ್ತಿ +ಬೆಂಗಳೂರು, ಜ.4- ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆಯನ್ನು ಮರೆಮಾಚಿಕೊಂಡು ವಾಹನ ಚಲಾಯಿಸುತ್ತಿದ್ದ ಸವಾರನನ್ನು ವೈಟ್‍ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಜುನಾಥ್ ರಾವತ್ (24) ಬಂಧಿತ ಸವಾರ. ಈತ ಚಲಾಯಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ. +ಡಿ.19ರಂದು ರಾತ್ರಿ 10.48ರ ಸುಮಾರಿನಲ್ಲಿ ವೈಟ್‍ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಮರೆಮಾಚಿಕೊಂಡು ಸವಾರ ಚಾಲನೆಮಾಡಿಕೊಂಡು ಹೋಗುತ್ತಿದ್ದ ಬಗ್ಗೆ ಸಾರ್ವಜನಿಕರೊಬ್ಬರು ಫೋಟೋ ತೆಗೆದು ನಗರ ಸಂಚಾರ ವಿಭಾಗದ ಸಾಮಾಜಿಕ ಜಾಲತಾಣದ ಟ್ವಿಟ್ಟರ್ ಅಕೌಂಟಿನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ಅದರನ್ವಯ ಕಾರ್ಯಚರಣೆ ಕೈಗೊಂಡು ಪೊಲೀಸರು ವಾಹನ ಹಾಗೂ ಸವಾರನನ್ನು ವಶಕ್ಕೆ ಪಡೆದು ವರ್ತೂರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಠಾಣೆಗೆ ನೀಡಿದ್ದು, ಸವಾರನ ವಿರುದ್ಧ ಎಫ್‍ಐಆರ್‍ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್.ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_271_3.txt b/eesanje/url_46_271_3.txt new file mode 100644 index 0000000000000000000000000000000000000000..7fac2e7783c2bf755734e87dc5cc96ec1f9b0258 --- /dev/null +++ b/eesanje/url_46_271_3.txt @@ -0,0 +1,9 @@ +ಕ್ರಿಮಿನಲ್‍ಗಳನ್ನು ಬೆಂಬಲಿಸುವುದು ಕಾಂಗ್ರೆಸ್ ಸಂಸ್ಕøತಿ: ಆರ್.ಅಶೋಕ್ +ಬೆಂಗಳೂರು, ಜ.4- ಕ್ರಿಮಿನಲ್‍ಗಳಿಗೆ ಬೆಂಬಲ ಮಾಡೋದು, ಜೈಲಿಂದ ಬಂದವರಿಗೆ ಸನ್ಮಾನ ಮಾಡೋದು ಕಾಂಗ್ರೆಸ್ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಎಂಬ ಬಡ ಆಟೋ ಚಾಲಕನನ್ನು ಬಂಧಿಸಿದ್ದಾರೆ. ಅವರ ಮೇಲೆ ಬಹಳಷ್ಟು ಪ್ರಕರಣ ಇವೆ. 1992ರಲ್ಲಿಯೇ ಅವರ ಮೇಲೆ ಕೇಸ್ ಹಾಕಲಾಗಿದೆ. +ಪದೇ ಪದೇ ಕೇಸ್ ಹಾಕಿದ್ದಾರೆ. ಜೈಲಿಗೆ ಕಳುಹಿಸುವ ಕೃತ್ಯ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.ಅಯೋಧ್ಯೆಯಲ್ಲಿ ರಾಮಮಂದಿರ ಕಾರ್ಯಕ್ಕೆ ಕಲ್ಲು ಹಾಕಬೇಕು, ಅಡಚಣೆ ಮಾಡ್ಬೇಕು ಎಂದು ಈ ರೀತಿ ಮಾಡುತ್ತಿದ್ದಾರೆ. 50 ಸಾವಿರ ಜನರ ಮೇಲೆ ಕೇಸ್‍ಗಳಿವೆ. ಬೆಂಗಳೂರಿನಲ್ಲೇ 10 ಸಾವಿರ ಕೇಸ್‍ಗಳಿವೆ. ಅವರನ್ನು ಯಾವ ಜೈಲಿಗೆ ಹಾಕುತ್ತೀರಾ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ಆಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಯೇ ಶ್ರೀಕಾಂತ್ ಪೂಜಾರಿ ಬಂಧನ ಮಾಡಿದ್ದೇಕೆ? ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಶಶಿತರೂರ್ ಅವರ ಮೇಲೆ ಯಾವ ಕೇಸ್ ಇವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ಯಾವ ಕೇಸ್ ಇದೆ. ಸಚಿವ ನಾಗೇಂದ್ರ ಅವರ ಮೇಲೆ 23 ಕೇಸ್‍ಗಳಿವೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು. +ಕ್ರಿಮಿನಲ್‍ಗೆ ರಾಮಭಕ್ತನ ಸೋಗು: ದಿನೇಶ್ ಗುಂಡೂರಾವ್ +ಶಿವಕುಮಾರ್ ಕೇಸ್ ವೇಳೆ 5000 ಜನ ಧರಣಿ ಮಾಡಿದರು. ಅವರು ಜೈಲಿನಿಂದ ಬಂದಾಗ ಸಂಭ್ರಮಾಚರಣೆ ಮಾಡಿದಿರಿ. ಹಾಗಾದರೆ ನೀವು ಯಾರ ಪರವಾಗಿದ್ದೀರಾ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ನಿಮ್ಮ ಕಾರ್ಯಕರ್ತರನ್ನು ಈ ರೀತಿ ಜೈಲಿಗೆ ಹಾಕಿದ್ವಾ? ಆಯೋಧ್ಯೆಗೆ ಅಡೆತಡೆ ಮಾಡಲು ನೀವು ಹೊರಟಿದ್ದೀರಾ ಎಂದು ಆರೋಪಿಸಿದರು. +ಒಂದೆಡೆ ಸಿದ್ದರಾಮಯ್ಯ ಇನ್ನೊಂದೆಡೆ ಹರಿಪ್ರಸಾದ್ ಅವರು ರೈಲಿನಲ್ಲಿ ಹೋದರೆ ಗೋದ್ರಾ ರೀತಿ ಆಗುತ್ತದೆ ಅಂತಾರೆ. ಮಾಜಿ ಶಾಸಕ ಯತೀಂದ್ರ ಪಾಕ್, ಅಫ್‍ಘಾನಿಸ್ತಾನ ಅಂತಾರೆ, ನಿಮ್ಮ ಉದ್ದೇಶವೇನು ಎಂದು ಅವರು ಹರಿಹಾಯ್ದರು. ಹಿಂದೂ ಅನ್ನುವುದು ಒಂದು ಪರಂಪರೆ. ಹಿಂದೂ ರಾಷ್ಟ್ರ ಅನ್ನದೆ ಇನ್ನೇನು ಅನ್ನಬೇಕು. ರಾಜ್ಯದ ಜನ ಭಯಬೀತರಾಗಬೇಕು. ಯಾರೂ ಅಲ್ಲಿಗೆ ಹೋಗಬಾರದು ಎಂದು ಕುತಂತ್ರವನ್ನು ಮಾಡುತ್ತೀದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ರಾಮಮಂದಿರ ಹೋರಾಟ 500 ವರ್ಷದಿಂದ ನಡೆದಿದೆ. ಸಾವಿರಾರು ರಾಜರು ಹೋರಾಟ ಮಾಡಿದ್ದಾರೆ. ಲಕ್ಷಾಂತರ ಸೈನಿಕರು ಸಾವನ್ನಪ್ಪಿದ್ದಾರೆ. ಅವರೇನು ಬಿಜೆಪಿ ಕಾರ್ಯಕರ್ತರೇ ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ದೇವಸ್ಥಾನ ಉದ್ಘಾಟನೆ ಮಾಡಿದ್ದಾರೆ. ಉದ್ಘಾಟಿಸಿದ ಮೇಲೆ ದೇಗುಲದ ಒಳಗೆ ಹೋಗಲ್ಲ. ಹೆಸರಲ್ಲೇ ರಾಮ ಇದ್ದಾನೆ ಅಂತಾರೆ. ದೇಗುಲದ ಒಳಗೆ ಹೋಗಿ ಪೂಜೆ ಮಾಡೋಕೆ ಹಿಂಜರಿಕೆ ಮಾಡುತ್ತಾರೆ ಎಂದು ಟೀಕಿಸಿದರು. \ No newline at end of file diff --git a/eesanje/url_46_271_4.txt b/eesanje/url_46_271_4.txt new file mode 100644 index 0000000000000000000000000000000000000000..4ecaa674e8350d88e8e7b414b9b95199932f23ad --- /dev/null +++ b/eesanje/url_46_271_4.txt @@ -0,0 +1,5 @@ +ಕ್ರಿಮಿನಲ್‍ಗೆ ರಾಮಭಕ್ತನ ಸೋಗು: ದಿನೇಶ್ ಗುಂಡೂರಾವ್ +ಬೆಂಗಳೂರು,ಜ.4- ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿ ರಾಮಭಕ್ತನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ಕೈಗೊಳ್ಳಬಾರದಾ ಎಂದು ಪ್ರಶ್ನಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕ್ರಿಮಿನಲ್ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಂಸ್ಕಾರ ಇಲ್ಲವೇ ಎಂದು ಪ್ರಶ್ನಿಸಿದಾರೆ. +ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀ ರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀ ಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ. ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ ಎಂದು ಕೇಳಿದ್ದಾರೆ. +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯ ಬಿಜೆಪಿ ನಾಯಕರಿಗೆ ಮಾನ,ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ರಾಜ್ಯ ಬಿಜೆಪಿ ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. \ No newline at end of file diff --git a/eesanje/url_46_271_5.txt b/eesanje/url_46_271_5.txt new file mode 100644 index 0000000000000000000000000000000000000000..6521c9c27129b341e1fedac89b196352d6534321 --- /dev/null +++ b/eesanje/url_46_271_5.txt @@ -0,0 +1,9 @@ +ಮಕರ ಸಂಕ್ರಾಂತಿವರೆಗೆ ಜೆಡಿಎಸ್ ತಟಸ್ಥ +ಬೆಂಗಳೂರು,ಜ.4- ಮಕರ ಸಂಕ್ರಾಂತಿ ಹಬ್ಬದವರೆಗೂ ಜೆಡಿಎಸ್ ತಟಸ್ಥ ನಿಲುವನ್ನು ತಳೆಯಲಿದೆ.ಸಂಕ್ರಾಂತಿ ಹಬ್ಬದವರೆಗೂ ಯಾವುದೇ ಸಭೆ, ಸಮಾರಂಭ, ಕಾರ್ಯಕ್ರಮಗಳು ಪಕ್ಷದ ವತಿಯಿಂದ ನಿಗದಿಯಾಗಿಲ್ಲ. ಧನುರ್ಮಾಸ ಆಚರಣೆ ಸಂದರ್ಭದಲ್ಲಿ ಪಕ್ಷದಿಂದ ಯಾವುದೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿಲ್ಲ. +ಕೇಂದ್ರಸರ್ಕಾರ ಕೊಬ್ಬರಿಯ ಬೆಂಬಲ ಬೆಲೆಯನ್ನು ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಅರಸೀಕೆರೆಯಿಂದ ತುಮಕೂರಿನವರೆಗೆ ನಡೆಸಲು ಉದ್ದೇಶಿಸಿದ ಪಾದಯಾತ್ರೆಯನ್ನು ಸದ್ಯಕ್ಕೆ ಕೈಬಿಟ್ಟಂತಾಗಿದೆ. ಈಗಾಗಲೇ ಲೋಕಸಭೆ ಚುನಾವಣೆ ಸಿದ್ಧತೆ ಆರಂಭಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸ್ರ್ಪಧಿಸಲಿರುವ ಕ್ಷೇತ್ರಗಳ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆ, ಬಿಜೆಪಿಯೊಂದಿಗಿನ ಮೈತ್ರಿ, ಚುನಾವಣಾ ಕಾರ್ಯತಂತ್ರ, ಪ್ರಚಾರದ ರೂಪುರೇಷದ ಬಗ್ಗೆ ಮಾತುಕತೆ ನಡೆಸಿ ಸಲಹೆ ಸೂಚನೆಯನ್ನು ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ಲೋಕಸಭಾ ಕ್ಷೇತ್ರಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ನಾಯಕರೊಂದಿಗೆ ಕುಮಾರಸ್ವಾಮಿ ಮಾತುಕತೆ ನಡೆಸಿದ ನಂತರ ಅಂತಿಮಗೊಳಿಸಲಿದ್ದಾರೆ. ಇತ್ತೀಚೆಗೆ ದೆಹಲಿ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಆದರೆ, ಕಾರ್ಯದೊತ್ತಡದಿಂದ ಕೇಂದ್ರ ಗೃಹಸಚಿವ ಅಮಿತ್‍ಶಾ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯದಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದಾರೆ. ಹೀಗಾಗಿ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಚರ್ಚೆ ಮಾಡಲು ಸಮಯಾವಕಾಶ ಸಿಗುತ್ತಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಲಿ ದ್ದಾರೆ. ಅದೇ ಸಂದರ್ಭದಲ್ಲಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಾಧ್ಯತೆಗಳಿವೆ.ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ರಿಂದ 5 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ಜೆಡಿಎಸ್ ಆಸಕ್ತಿ ವಹಿಸಿದೆ. ಉಳಿದ ಕ್ಷೇತ್ರಗಳನ್ನು ಮಿತ್ರ ಪಕ್ಷ ಬಿಜೆಪಿಗೆ ಬಿಟ್ಟುಕೊಡಲಿದೆ. +ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ +ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳು ಜಂಟಿಯಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿ, ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿದೆ. ಜೆಡಿಎಸ್ ಪ್ರಾಬಲ್ಯ ಹೆಚ್ಚಾಗಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿ ವರಿಷ್ಠರನ್ನು ಕೋರಿದ್ದಾರೆ. +ಈ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಆಯಾ ಕ್ಷೇತ್ರದ ಸ್ಥಳೀಯ ಮುಖಂಡರ ಅಭಿಪ್ರಾಯವನ್ನು ಕುಮಾರಸ್ವಾಮಿ ಪಡೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_271_6.txt b/eesanje/url_46_271_6.txt new file mode 100644 index 0000000000000000000000000000000000000000..e4e1053491d22020f83efb66872713846fc4461c --- /dev/null +++ b/eesanje/url_46_271_6.txt @@ -0,0 +1,5 @@ +ರಾಜ್ಯದಲ್ಲಿ 3 ದಿನ ಮೋಡ ಕವಿದ ವಾತಾವರಣ +ಬೆಂಗಳೂರು, ಜ.4- ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಮುಂದಿನ 3 ದಿನಗಳ ಕಾಲ ಕೆಲವೆಡೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಅರಬ್ಬಿಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಜಿಲ್ಲೆಗಳು ಮಲೆನಾಡಿನಲ್ಲಿ ಚದುರಿದಂತೆ ಮಳೆಯಾಗಲಿದೆ. ಅದೇ ರೀತಿ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಹಗುರ ಮಳೆ ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. +ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ ಕಿಡಿ +ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಆದರೆ ಭಾರಿ ಮಳೆಯಾಗುವ ಮುನ್ಸೂಚನೆ ಇಲ್ಲ. ಆದರೆ ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ಹೀಗಾಗಿ ಚಳಿಯ ಪ್ರಮಾಣವು ಹೆಚ್ಚಾಗಿ ಕಂಡುಬರಲಿದೆ ಎಂದು ಅವರು ಮಾರ್ಗಸೂಚಿ ನೀಡಿದ್ದಾರೆ. \ No newline at end of file diff --git a/eesanje/url_46_271_7.txt b/eesanje/url_46_271_7.txt new file mode 100644 index 0000000000000000000000000000000000000000..cb8a662953e500bbb4893d5d6abc5aefadce932e --- /dev/null +++ b/eesanje/url_46_271_7.txt @@ -0,0 +1,9 @@ +ಲೋಕಸಭಾ ಚುನಾವಣೆಗೆ `ಕೈ’ ತಯಾರಿ +ಬೆಂಗಳೂರು,ಜ.4-ಲೋಕಸಭೆ ಚುನಾವಣೆ ತಯಾರಿ, ನಿಗಮ ಮಂಡಳಿ ನೇಮಕಾತಿ, ಭಾರತ್ ನ್ಯಾಯ ಯಾತ್ರೆ ಸೇರಿದಂತೆ ರಾಜ ಕೀಯದ ನಾನಾ ರೀತಿಯ ವಿದ್ಯಮಾನಗಳ ಕುರಿತು ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್‍ನ ಮಹ ತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಾರೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಲವಾರು ಮಹತ್ವದ ವಿಚಾರಗಳು ಚರ್ಚೆಯಾಗಿವೆ. ಇದರಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಇಂಡಿಯಾ ರಾಜಕೀಯ ಕೂಟದ ಇತರ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. +ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ವೀಕ್ಷಕರಾಗಿದ್ದ ಆಯಾ ಸಚಿವರು ಸಭೆ ನಡೆಸಿ ಅಭಿಪ್ರಾಯ ಕ್ರೂಢೀಕರಿಸಿ ಮುಚ್ಚಿದ ಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವರದಿ ಸಲ್ಲಿಸಿದ್ದಾರೆ. ಆ ವರದಿಯೊಂದಿಗೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಸಚಿವರು ನೀಡಿರುವ ಸಂಭವನೀಯ ಪಟ್ಟಿಯಲ್ಲಿ ಪ್ರತಿ ಕ್ಷೇತ್ರಕ್ಕೂ ತಲಾ ಮೂರು ಮಂದಿ ಆಕಾಂಕ್ಷಿಗಳ ಹೆಸರುಗಳಿವೆ. ಕೆಲವು ಕ್ಷೇತ್ರಗಳಿಗೆ ಒಂದೇ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ. ಅದನ್ನು ರಾಜ್ಯ ನಾಯಕರು ಹೈಕಮಾಂಡ್‍ಗೆ ಸಲ್ಲಿಸಲಿದ್ದಾರೆ. +ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ +ಈ ಸಂಭವನೀಯ ಪಟ್ಟಿ ಆಧರಿಸಿ ಹೈಕಮಾಂಡ್ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಲಿದೆ. ರಾಜ್ಯ ಕಾಂಗ್ರೆಸ್ ವತಿಯಿಂದಲೂ 2-3 ಸಮಾಲೋಚನಾ ಸಭೆ ನಡೆಯುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಕನಿಷ್ಟ 22 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ರಾಜ್ಯ ನಾಯಕರು ಅದಕ್ಕೆ ಪೂರ್ವ ತಯಾರಿಗಳನ್ನು ಕೈಗೊಳ್ಳುತ್ತಿದ್ದಾರೆ. +ಭಾರತ್ ನ್ಯಾಯ ಯಾತ್ರೆ ಪೂರ್ವ ತಯಾರಿ:ಕಾಂಗ್ರೆಸ್ ನಾಯಕ ರಾಹುಲ್‍ಗಾಂ ಜ.14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈವರೆಗೆ 6,200 ಕಿ.ಮೀ. ದೂರ ಕೈಗೊಳ್ಳಲಿರುವ ಭಾರತ್ ನ್ಯಾಯ ಯಾತ್ರೆ ಪೂರ್ವ ತಯಾರಿ ಬಗ್ಗೆಯೂ ಮಹತ್ವದ ಚರ್ಚೆಗಳಾಗಿವೆ. ರಾಹುಲ್‍ಗಾಂಧಿಯವರ ಯಾತ್ರೆ 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಹಾದು ಹೋಗಲಿದೆ. +75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ +ಕರ್ನಾಟಕದ ನೆರೆಯ ಮಹಾರಾಷ್ಟ್ರದವರೆಗೂ ಯಾತೆ ತಲುಪಲಿದೆ. ಭಾರತ್ ಜೋಡೊ ಯಾತ್ರೆ ಬಳಿಕ ನಡೆಯುತ್ತಿರುವ 2ನೇ ಬೃಹತ್ ಯಾತ್ರೆಯನ್ನು ಯಶಸ್ಸುಗೊಳಿಸಲು ಹೈಕಮಾಂಡ್ ವಿವಿಧ ರಾಜ್ಯಗಳ ಸಹಕಾರ ಕೋರಿದೆ.ಅದರ ಅನುಸಾರ ರಾಜ್ಯನಾಯಕರು ಇಂದು ಚರ್ಚೆ ನಡೆಸಿದ್ದಾರೆ. \ No newline at end of file diff --git a/eesanje/url_46_271_8.txt b/eesanje/url_46_271_8.txt new file mode 100644 index 0000000000000000000000000000000000000000..63b639f3a7facebd4100232899d3495d090476d3 --- /dev/null +++ b/eesanje/url_46_271_8.txt @@ -0,0 +1,7 @@ +ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ ಕಿಡಿ +ಬೆಂಗಳೂರು,ಜ.4- ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಭಾರೀ ಅನ್ಯಾಯವಾಗುತ್ತಿದೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್‍ಗಳ ಮೂಲಕ ಕೇಂದ್ರದ ಅನ್ಯಾಯವನ್ನು ವಿವರಿಸಿರುವ ಅವರು, ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಭಾರೀ ಅನ್ಯಾಯ, ಗುಜರಾತಿಗೆ ವಿಪರೀತ ಏರಿಕೆ ನೀಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಕನ್ನಡಿಗರ ಪಾಲು ಕಡಿತಗೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. +ಜಿಎಸ್‍ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ 2 ನೇ ಸ್ಥಾನದಲ್ಲಿದೆ. ಆದರೆ ಅನುದಾನ ಪಡೆಯುವುದರಲ್ಲಿ ಕೊನೆಯ ಸಾಲಿನಲ್ಲಿದೆ. ಒಂದು ರೂಪಾಯಿ ತೆರಿಗೆ ಪಾವತಿಸಿದರೆ ಕೇಂದ್ರದಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು 15 ಪೈಸೆ ಮಾತ್ರ. ಅದೇ ಬಿಹಾರಕ್ಕೆ 7.06 ಪೈಸೆ, ಉತ್ತರ ಪ್ರದೇಶಕ್ಕೆ 2.73 ಪೈಸೆ ದೊರೆಯುತ್ತಿದೆ. ತೆರಿಗೆ ಪಾಲಿನಲ್ಲಿ ಒಟ್ಟು ಲೆಕ್ಕಾಚಾರದ ಪ್ರಕಾರ ಬಿಹಾರಕ್ಕೆ 1,02,737 ಕೋಟಿ ರೂ.ಗಳಾಗಿದ್ದು, ಶೇ.10.06 ರಷ್ಟು ಪಾಲು ಹೊಂದಿದೆ. +ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..! +ಉತ್ತರ ಪ್ರದೇಶ 1,83,237 ಕೋಟಿ ರೂ.ಗಳ ಜೊತೆ ಶೇ.17.94 ರಷ್ಟು ಪಾಲು ಪಡೆದರೆ, ಕರ್ನಾಟಕ 37,257 ಕೋಟಿ ರೂ. ಮಾತ್ರ ಪಡೆದುಕೊಂಡು ಶೇ.3.64 ರಷ್ಟು ಪಾಲು ಹೊಂದಿದೆ.15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಪ್ರಕಾರ 5,495 ಕೋಟಿ ರೂ. ವಿಶೇಷ ಅನುದಾನಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಲ್ಲು ಹಾಕಿದ್ದಾರೆ. +14 ನೇ ಹಣಕಾಸು ಆಯೋಗದಲ್ಲಿ ಶೇ. 4.71 ರಷ್ಟು ಪಾಲು ದೊರೆತಿತ್ತು. 15 ನೇ ಹಣಕಾಸು ಆಯೋಗದ ವೇಳೆಗೆ ಅದು ಶೇ.3.64 ರಷ್ಟಾಗಿದ್ದು, ಶೇ.1.07 ರಷ್ಟು ಕಡಿಮೆಯಾಗಿದೆ. ಇದರಿಂದ 3 ವರ್ಷಗಳಲ್ಲಿ ರಾಜ್ಯಕ್ಕೆ 26,140 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. +ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬಂದಿವೆ. ರಾಜ್ಯದಲ್ಲಿ ಮಂದಿರ, ಮಸೀದಿ ಎಂದು ಗದ್ದಲ ಮಾಡಲಾಗುತ್ತಿದೆ. ಆದರೆ ಕೇಂದ್ರದಿಂದಾಗುತ್ತಿರುವ ತೆರಿಗೆ ಅನ್ಯಾಯ ಹಾಗೂ ಸಂಪನ್ಮೂಲ ಕೊರತೆಯ ಬಗ್ಗೆ ಚರ್ಚೆಗಳಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬಂದಿವೆ. \ No newline at end of file diff --git a/eesanje/url_46_271_9.txt b/eesanje/url_46_271_9.txt new file mode 100644 index 0000000000000000000000000000000000000000..28c71a826920de6e306d3f61b35553aa5d7b00b0 --- /dev/null +++ b/eesanje/url_46_271_9.txt @@ -0,0 +1,13 @@ +ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ: ಸತೀಶ್ ಜಾರಕಿಹೊಳಿ +ಬೆಂಗಳೂರು,ಜ.4- ರಾಜ್ಯದ ಗುತ್ತಿಗೆದಾರರ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಕೇಳಿದರೆ ಅದನ್ನು ಒದಗಿಸಲು ಯಾವುದೇ ಅಡಚಣೆ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು ಸರ್ಕಾರದ ದಾಖಲೆ. ಮುಚ್ಚಿಡುವ ಅಗತ್ಯವಿಲ್ಲ. 10 ರೂ. ಪಾವತಿಸಿ ಆರ್‍ಟಿಐ ಅರ್ಜಿ ಹಾಕಿದರೆ ದಾಖಲೆ ಕೊಡುತ್ತೇವೆ. ಇನ್ನು ಆದಾಯ ತೆರಿಗೆ ಸರ್ಕಾರಿ ಸಂಸ್ಥೆ ಕೇಳಿದರೆ ಕೊಡಲ್ಲ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು. +ಆದಾಯ ತೆರಿಗೆ ಇಲಾಖೆ 6 ಬಾರಿ ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇದು ಸಚಿವರ ಅಥವಾ ಸರ್ಕಾರದವರೆಗೂ ಬರುವ ವಿಚಾರವಲ್ಲ. ಅಧಿಕಾರಿಗಳು ನಿರ್ಧಾರ ತೆಗೆದುಕೊಂಡು ಮಾಹಿತಿ ಒದಗಿಸುತ್ತಾರೆ ಎಂದರು. +ಇತ್ತೀಚೆಗೆ ತಾವು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 20 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಪಟ್ಟಂತೆ ಚರ್ಚೆ ನಡೆಸಿದ್ದೇವೆ. ಭೂ ಸ್ವಾೀಧಿನ, ಅರಣ್ಯ ಪ್ರದೇಶದ ಪೂರ್ವಾನುಮತಿ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ರೀತಿಯ ತೊಡಕುಗಳು ಬಾಕಿ ಉಳಿದಿವೆ. ಅವುಗಳನ್ನು 3 ತಿಂಗಳಲ್ಲಿ ಬಗೆಹರಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದರು. +ಬೆಂಗಳೂರು ನಗರದಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಆಸಕ್ತಿ ಹೊಂದಿದೆ. ರಾಜ್ಯಸರ್ಕಾರ ನಿರಪೇಕ್ಷಣಾ ಪತ್ರ ನೀಡಿದ್ದೇ ಆದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಸುರಂಗ ನಿರ್ಮಾಣಕ್ಕೆ ಮುಂದಾಗಲಿದೆ. ಆದರೆ ಯಾರಿಂದ ಕಾಮಗಾರಿ ನಡೆಸಬೇಕೆಂಬುದು ನಿರ್ಣಯವಾಗಿಲ್ಲ. ಸದ್ಯಕ್ಕೆ ಬಿಬಿಎಂಪಿ ಅದರ ಮೇಲುಸ್ತುವಾರಿಯನ್ನು ವಹಿಸುತ್ತಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. +75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ +ಹುಬ್ಬಳ್ಳಿಯಲ್ಲಿನ ಕರಸೇವಕನ ಬಂಧನ ಪ್ರಕರಣದಲ್ಲಿ ರಾಜಕೀಯ ಅನಗತ್ಯ. ಬಾಕಿ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ಬಿಡುಗಡೆ ಮಾಡಲು ಬಿಜೆಪಿ ಗಡುವು ನೀಡಿದರೆ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಏಕೆಂದರೆ ಅದು ಇನ್ನೇನ್ನಿದ್ದರೂ ಕಾನೂನಾತ್ಮಕ ಹೋರಾಟ ನಡೆಯಬೇಕೇ ಹೊರತು, ರಾಜಕೀಯ ಸಂಘರ್ಷದಿಂದ ಪ್ರಯೋಜನವಾಗುವುದಿಲ್ಲ ಎಂದರು. +ತಾನು ರಾಮಸೇವಕ. ತನ್ನನ್ನು ಬಂಧಿಸಿ ಎಂದು ಬಿಜೆಪಿಯವರು ಹೇಳುತ್ತಿರುವುದು ಅಪ್ರಸ್ತುತ ವಿಚಾರ. ಕ್ರಿಮಿನಲ್‍ಗಳಾಗಿದ್ದರೆ, ತಪ್ಪು ಮಾಡಿದರೆ ಮಾತ್ರ ಬಂಧಿಸಲಾಗುತ್ತದೆ. ಅನಗತ್ಯವಾಗಿ ಯಾರನ್ನೂ ಬಂಧಿಸುವ ಅಗತ್ಯವಿಲ್ಲ. ಬಿಜೆಪಿಯವರ ಹೋರಾಟಗಳೇ ಹಾಸ್ಯಾಸ್ಪದ ಎಂದರು. +ಅಯೋಧ್ಯೆಯಲ್ಲಿ ರಾಮಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ತೆರಳುವವರಿಗೆ ಸೂಕ್ತ ರಕ್ಷಣ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿರುವುದರಲ್ಲಿ ತಪ್ಪಿಲ್ಲ. ಜ.22 ರವರೆಗೂ ಅಯೋಧ್ಯೆಗೆ ಹೋಗಿಬರುವವರ ಸಂಖ್ಯೆ ಹೆಚ್ಚಿರುತ್ತದೆ. ಧ್ವಜ ಹಾಕಿಕೊಂಡು ಮೆರವಣಿಗೆ ನಡೆಸಿ ಅಯೋಧ್ಯೆಯತ್ತ ಪ್ರಯಾಣ ಮಾಡುತ್ತಾರೆ. ಈ ಸಂದರ್ಭದಲ್ಲಿ ಸಂಘರ್ಷಗಳಾಗಬಹುದು. ಹೀಗಾಗಿ ಹೆಚ್ಚಿನ ಸಮಸ್ಯೆಗಳಾಗದಂತೆ ಪೊಲೀಸರು ಮುಂಜಾಗ್ರತೆ ವಹಿಸಬೇಕಿದೆ ಎಂದು ಹೇಳಿದರು. +ರಾಮಮಂದಿರ ಒಂದು ಪಕ್ಷಕ್ಕೆ ಸೇರಿದ್ದಲ್ಲ. ಆದರೆ ಒಂದೇ ಪಕ್ಷ ಮುಂದಾಳತ್ವ ವಹಿಸುವುದ ರಿಂದ ಸಹಜವಾಗಿಯೇ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತವೆ. ಅದರ ಬದಲು ರಾಮ ಸಮಿತಿಯವರು ಎಲ್ಲಾ ಪಕ್ಷದವರ ವಿಶ್ವಾಸ ತೆಗೆದುಕೊಂಡು ಮುನ್ನಡೆದರೆ ಪಕ್ಷಾತೀತವಾಗಿರಲಿದೆ ಎಂದರು. ರಾಮಮೂರ್ತಿ ಉದ್ಘಾಟನೆಗೆ ಆಯ್ದ ವ್ಯಕ್ತಿಗಳಿಗೆ ಆಹ್ವಾನ ನೀಡಿದ್ದಾರೆ. ಅಲ್ಲಿಗೆ ಹೋಗುವವರಿಗೆ ಆಹ್ವಾನದ ಅಗತ್ಯವೂ ಇಲ್ಲ, ಆಸಕ್ತಿ ಇರುವವರು ಹೋಗಬಹುದು. ತಾವು ತಮ್ಮ ಊರಿನ ರಾಮ ಮಂದಿರದಲ್ಲಿ ಪೂಜೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. +ಸೈಬರ್ ಕ್ರೈಂ ಭೇದಿಸುವಲ್ಲಿ ಹಿಂದೆ ಬಿದ್ದ ಬೆಂಗಳೂರು ಪೊಲೀಸರು..! +ರಾಮ ಮಂದಿರ ಪೂರ್ತಿಯಾಗದೇ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿರುವುದರ ಬಗ್ಗೆ ಪ್ರಶ್ನೆ ಮಾಡಿದರೆ ಹಿಂದೂ ವಿರೋಧಿ ಎಂದ ಆರೋಪ ಪಟ್ಟಿ ಕಟ್ಟುತ್ತಾರೆ. ಹೀಗಾಗಿ ತಾವು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು. +ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಕಾರ್ಯಕರ್ತರ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗುವುದು. ತಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ಇಂದು ದೆಹಲಿಯಲ್ಲಿ ನಡೆಯುವ ಸಭೆಯ ಬಳಿಕ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದುನೋಡುತ್ತಿದ್ದೇವೆ. ಸಚಿವರು ಸ್ಪರ್ಧೆ ಮಾಡಬೇಕು ಎಂದಾದರೆ ಪಕ್ಷದ ಆದೇಶವನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_272_1.txt b/eesanje/url_46_272_1.txt new file mode 100644 index 0000000000000000000000000000000000000000..58b3e5e53eb0d5fc774ed20d60e98163ede1d1e4 --- /dev/null +++ b/eesanje/url_46_272_1.txt @@ -0,0 +1,12 @@ +ಬಿಜೆಪಿ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ : ಸಚಿವ ರಾಜಣ್ಣ +ತುಮಕೂರು,ಜ.4- ಹಿಂದುತ್ವವನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಬಂಧಿತ ಕರಸೇವಕನ ವಿರುದ್ಧ ಮಟ್ಕಾ, ದೊಂಬಿ, ನಕಲಿ ಮದ್ಯಮಾರಾಟ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಆತನ ವಿರುದ್ಧ ಹಲವಾರು ವರ್ಷಗಳಿಂದಲೂ ಕಾಲಕಾಲಕ್ಕೆ ಪ್ರಕರಣಗಳು ದಾಖಲಾಗಿವೆ. ಸುದೀರ್ಘ ಕಾಲದಿಂದ ನೆನೆಗುದಿಯಲ್ಲಿದ್ದ ಪ್ರಕರಣವನ್ನು ಇತ್ಯರ್ಥಪಡಿಸುವ ಸಲುವಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. +ಇಂತಹ ಆರೋಪಿಯನ್ನು ರಕ್ಷಣೆ ಮಾಡಲು ಹಿಂದುತ್ವವವನ್ನು ಬಳಕೆ ಮಾಡುತ್ತಿರುವುದು ಶೋಭೆಯಲ್ಲ ಎಂದರು. ಬಿಜೆಪಿಯವರು ಕ್ಷುಲ್ಲಕ ವಿಚಾರವನ್ನು ರಾಷ್ಟ್ರದ ಸಮಸ್ಯೆ ಎಂಬಂತೆ ಚರ್ಚೆ ಮಾಡುತ್ತಿದ್ದಾರೆ. ತಪ್ಪು ಮಾಡಿದವರನ್ನ ಶಿಕ್ಷಿಸಲು ಅಡ್ಡಿಪಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. +ಬ್ಲಾಕ್‍ಮೇಲೆ ಮಾಡಿದ ಮಾಜಿ ಮಾಡೆಲ್ ಹತ್ಯೆ +ಹಿಂದುತ್ವ ಮತ್ತು ಶ್ರೀರಾಮನನ್ನ ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿಲ್ಲ. ಪದೆಪದೆ ರಾಜ್ಯಸರ್ಕಾರವನ್ನು ಹಿಂದುತ್ವದ ವಿರೋಧಿ ಎಂದು ಬಿಂಬಿಸುವುದು ಖಂಡನೀಯ. ರಾಜಕಾರಣಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಹಿಂದುತ್ವದ ದುರುಪಯೋಗವನ್ನು ಕಂಡು ಬೇಸರಗೊಂಡೇ ಅಂಬೇಡ್ಕರ್‍ರವರು ಬೌದ್ಧಧರ್ಮಕ್ಕೆ ಮತಾಂತರಗೊಂಡರು ಎಂದರು. +ಯಾವುದೋ ಒಂದು ಧರ್ಮದಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಎಲ್ಲರ ಸಹಕಾರವೂ ಅಗತ್ಯ. ರಾಕೆಟ್ ತಂತ್ರಜ್ಞಾನ, ಟಿಪ್ಪು ಸುಲ್ತಾನರಿಂದ ಆರಂಭಗೊಂಡು ಇಂದು ಅಭಿವೃದ್ಧಿಗೊಂಡಿದೆ. ಅಬ್ದುಲ್ ಕಲಾಂರ ಕೊಡುಗೆಯನ್ನು ಮರೆಯಲು ಸಾಧ್ಯವೇ ಎಂದರು. +ಹಿಂದುತ್ವದಲ್ಲಿ ಗೋಡ್ಸೆ ಮತ್ತು ಮಹಾತ್ಮಗಾಂಧಿಯವರ ಭಿನ್ನ ಸಿದ್ಧಾಂತಗಳಿವೆ. ನಾವು ಮಹಾತ್ಮಗಾಂಧಿಯವರ ಹಿಂದುತ್ವವನ್ನು ಪಾಲನೆ ಮಾಡುತ್ತೇವೆ. ನಮ್ಮಲ್ಲೂ ರಾಮನ ದೇವಸ್ಥಾನಗಳಿವೆ. ಅದಕ್ಕೆ ಭಕ್ತಿ ಪೂರ್ವಕವಾಗಿ ನಡೆದುಕೊಳ್ಳುತ್ತೇವೆ. ಅಯೋಧ್ಯೆಗೆ ಹೋಗಿಯೇ ರಾಮನ ಪೂಜೆ ಮಾಡಬೇಕೆಂದೇನಿಲ್ಲ. ಅಲ್ಲಿ ಇನ್ನೂ ಕಟ್ಟಡ ನಿರ್ಮಾಣ ಪೂರ್ಣಗೊಂಡಿಲ್ಲ. ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯೂ ಆಗಿಲ್ಲ. ಆದರೆ ನಮ್ಮಲ್ಲಿ ಶತಮಾನಗಳಷ್ಟು ಹಳೆಯದಾದ ರಾಮನ ದೇವಸ್ಥಾನಗಳಿವೆ ಎಂದರು. +ಅಯೋದ್ಯೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುತ್ತಾರೆಂದಾಕ್ಷಣ ನಮ್ಮ ರಾಮನನ್ನು ಬಿಟ್ಟು ಹೋಗಲು ಸಾಧ್ಯವೇ. ರಾಮಜನ್ಮ ಭೂಮಿ ಅಯೋಧ್ಯೆ ಎಂಬ ಹಿನ್ನೆಲೆಯಿಂದ ದೇವಸ್ಥಾನ ಕಟ್ಟುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದರು. ಶ್ರೀರಾಮನನ್ನು ವಿಶ್ವಕ್ಕೆ ಪರಿಚಯಿಸಿದವರು ವಾಲ್ಮೀಕಿ. ಇಲ್ಲದೇ ಹೋದರೆ ರಾಮನೇ ತಿಳಿಯುತ್ತಿರಲಿಲ್ಲ. ಅಯೋಧ್ಯೆಯಲ್ಲಿ ರಾಮನ ದೇವಸ್ಥಾನವೆಂದೇ ವಾಲ್ಮೀಕಿಯ ದೇವಸಸ್ಥಾನವನ್ನು ಕಟ್ಟಬೇಕು. ಇಲ್ಲವಾದರೆ ನಾವು ದೇಶಾದ್ಯಂತ ಹೋರಾಟ ನಡೆಸುತ್ತೇವೆ ಎಂದು ರಾಜಣ್ಣ ಹೇಳಿದರು. +ದೇವರು ಎಂಬುದು ನಮ್ಮ ನಂಬಿಕೆ. ಬೇಸಾಯ ಮಾಡುವಾಗ ಮಳೆ ಬಂದ ತಕ್ಷಣ ನಾವು ಹೊಲಕ್ಕೆ ಹೋಗಿ ಸಗಣಿ, ಬೆಣಚಿನಕಲ್ಲು, ಗರಿಕೆ ಬಳಸಿ ಶ್ರದ್ಧಾಪೂರ್ವಕವಾಗಿ ಪೂಜೆ ಮಾಡುತ್ತಿದ್ದೆವು. ಅದು ಹಿಂದೂ ಆಚರಣೆಯಲ್ಲವೆ ಎಂದು ಪ್ರಶ್ನಿಸಿದರು. +ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರ ಬಂಧನ +ಕಾಂಗ್ರೆಸ್ ನಾಯಕ ಹರಿಪ್ರಸಾದ್‍ರವರು ಮುನ್ನೆಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಲಿದೆ. ನಮ್ಮ ಸರ್ಕಾರ ಹಿಂಸೆಯನ್ನು ಬೆಂಬಲಿಸುವುದಿಲ್ಲ ಎಂದರು.ರಾಜ್ಯದಲ್ಲಿ 3 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಹೇಳಿಕೆಗೆ ತಾವು ಈಗಲೂ ಬದ್ಧ. +ಪಂಚರಾಜ್ಯಗಳ ಚುನಾವಣೆ ಬಳಿಕ ಬಿಜೆಪಿಯವರು 3 ರಾಜ್ಯಗಳಲ್ಲಿ ಪರಿಶಿಷ್ಟರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಉಪಮುಖ್ಯಮಂತ್ರಿಗಳನ್ನು ಮಾಡಬೇಕು. ಅಧಿಕಾರ ಮತ್ತು ಸಂಪತ್ತು ಕೆಲವರ ಬಳಿಯೇ ಉಳಿದುಕೊಂಡರೆ ಅದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದರು. \ No newline at end of file diff --git a/eesanje/url_46_272_10.txt b/eesanje/url_46_272_10.txt new file mode 100644 index 0000000000000000000000000000000000000000..64e758a5f492e4c092fd2bfdc6ece3ad865269fa --- /dev/null +++ b/eesanje/url_46_272_10.txt @@ -0,0 +1,12 @@ +ಮತ್ತೊಂದು ಗೋದ್ರಾ ಹತ್ಯಾಕಾಂಡಕ್ಕೆ ಸಂಚು- ಬಿ.ಕೆ.ಹರಿಪ್ರಸಾದ್ +ಬೆಂಗಳೂರು,ಜ.3- ಅಯೋಧ್ಯೆಯಲ್ಲಿ ನಡೆಯುತ್ತಿರುವುದು ಧಾರ್ಮಿಕ ಕಾರ್ಯಕ್ರಮವಲ್ಲ. ರಾಜಕೀಯಪ್ರೇರಿತ ಕಾರ್ಯಕ್ರಮ. ಧಾರ್ಮಿಕ ಗುರುಗಳಿಂದ ರಾಮನ ಪ್ರತಿಷ್ಠಾಪನೆಯಾಗುತ್ತಿದ್ದರೆ ನಾವು ಸ್ವಯಂಪ್ರೇರಿತವಾಗಿ ಭಾಗವಹಿಸುತ್ತಿದ್ದೆವು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುತ್ತಿರುವುದು ಸಂಪೂರ್ಣ ವೈಯಕ್ತಿಕ ಅಭಿಪ್ರಾಯ. ಇದಕ್ಕೂ , ಪಕ್ಷಕ್ಕೂ ಸಂಬಂಧವಿಲ್ಲ ಎಂದು ಆರಂಭದಲ್ಲೇ ಸ್ಪಷ್ಟಪಡಿಸಿದರು. ನಮಗೆ ತಿಳಿದ ಮಟ್ಟಿಗೆ ರಾಮನ ಪೂಜೆ ಎಂದರೆ ಕೋಸಂಬರಿ ಮತ್ತು ಪಾನಕದ ನೆನಪುಗಳಿವೆ. ಆದರೆ ಈಗ ನಡೆಯುತ್ತಿರುವ ಆಡಂಬರ ಏಕೆ ಎಂದು ಪ್ರಶ್ನಿಸಿದರು. +ಹಿಂದೂ ಧರ್ಮದ ಧಾರ್ಮಿಕ ಗುರು ಶಂಕರಾಚಾರ್ಯರು. ಅಂತಹ ಯಾವುದೇ ಧಾರ್ಮಿಕ ಗುರುಗಳಿಂದ ರಾಮನ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದ್ದರೆ ಆಹ್ವಾನ ಇಲ್ಲದೆ ನಾವು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಿತ್ತು. ಆದರೆ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಂದ ಮೂರ್ತಿ ಪ್ರತಿಷ್ಠಾಪನೆಯಾಗುತ್ತಿದೆ. ಅವರು ಧಾರ್ಮಿಕ ಗುರುಗಳಲ್ಲ. ರಾಜಕೀಯ ನಾಯಕರು. ಮೊದಲಾಗಿ ವಿಶ್ವಗುರು ಮತ್ತು ಅಮಿತ್ ಷಾ ಅವರ ಧರ್ಮ ಯಾವುದು ಎಂಬುದೇ ಸ್ಪಷ್ಟವಾಗಿಲ್ಲ ಎಂದರು. +ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ +ಅಯೋಧ್ಯೆಯ ಕಾರ್ಯಕ್ರಮದ ನಿಮಿತ್ತ ಉನ್ಮಾದ ಅಗತ್ಯವಿಲ್ಲ. ಸಂಘಟನೆಯ ಪ್ರಮುಖರು ಈಗಾಗಲೇ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿ ಯಾವೆಲ್ಲ ರೀತಿ ಪ್ರಚೋದನೆ ನೀಡಿದ್ದಾರೆ ಎಂಬುದು ತಮಗೆ ದಾಖಲಾತಿ ಸಹಿತ ಮಾಹಿತಿ ಇದೆ. ಒಡಿಶಾದಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ನಡೆದ ಸಭೆಯಲ್ಲಿ ಚರ್ಚೆಗಳಾಗಿರುವ ವಿಷಯವನ್ನು ನಾನು ಗಮನಿಸಿದ್ದೇನೆ ಎಂದರು. +ಅಯೋಧ್ಯೆಗೆ ತೆರಳುವವರಿಗೆ ಸೂಕ್ತ ವ್ಯವಸ್ಥೆ ಮತ್ತು ರಕ್ಷಣೆಯನ್ನು ಸರ್ಕಾರ ಮಾಡಿಕೊಡಬೇಕು. ಈ ಹಿಂದೆ ಇಂಥದ್ದೇ ಸಂದರ್ಭದಲ್ಲಿ ಗುಜರಾತಿನ ಗೋದ್ರಾದಲ್ಲಿ ಕರಸೇವಕರ ಸಜೀವ ದಹನವಾಗಿತ್ತು. ಅನಂತರ ಹತ್ಯಾಕಾಂಡಗಳೇ ನಡೆದವು. ಈಗ ಕಟ್ಟೆಚ್ಚರ ವಹಿಸದೆ ಇದ್ದರೆ ಗೋದ್ರಾದಂತಹ ಹತ್ಯಾಕಾಂಡಗಳು ನಡೆಯುವ ಆತಂಕವಿದೆ ಎಂದು ಎಚ್ಚರಿಸಿದರು. +ಹೋರಾಟ ಮಾಡುವುದಾದರೆ ರಾಮ ಮಂದಿರ, ಬಾಬ್ರಿ ಮಸೀದಿಯ ಫಲಾನುಭವಿಗಳು ಮತ್ತು ಅವರ ಮಕ್ಕಳು ಪ್ರತಿಭಟನೆ ನಡೆಸಲಿ. ಪಕ್ಕದ ಮನೆಯ ಮಕ್ಕಳನ್ನು ಬಾವಿಗೆ ತಳ್ಳಿ ಆಳ ನೋಡುವುದು ಬೇಡ. ಅಮಾಯಕರ ಮಕ್ಕಳು ಹೋರಾಟಕ್ಕೆ ಹೋಗಿ ಜೈಲು, ಕೇಸು ಎಂದೆಲ್ಲ ಸಂಕಷ್ಟಕ್ಕೆ ಸಿಲುಕುವುದು ಒಳ್ಳೆಯದಲ್ಲ. ಬೇಕಿದ್ದರೆ ಪ್ರಹ್ಲಾದ್ ಜೋಷಿ, ಯಡಿಯೂರಪ್ಪ, ಈಶ್ವರಪ್ಪ ಅವರಂತಹ ನಾಯಕರು ಮತ್ತು ಅವರ ಮಕ್ಕಳು ಹೋರಾಟ ಮಾಡಿಕೊಳ್ಳಲಿ ಎಂದು ಹೇಳಿದರು. +ಬಾಬ್ರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನಲ್ಲಿ ನಡೆದ ವಾದವನ್ನು ಗಮನಿಸುವುದಾದರೆ ಇದು ಸಂಪೂರ್ಣ ರಾಜಕೀಯ ಪ್ರೇರಿತ ಎಂಬುದು ಗೊತ್ತಾಗುತ್ತದೆ. ಒಂದು ಧಾರ್ಮಿಕ ಸ್ಥಳವನ್ನು ಧ್ವಂಸಗೊಳಿಸಿ ಮತ್ತೊಂದು ಮಂದಿರ ಕಟ್ಟಿದ ಉದಾಹರಣೆ ಇಲ್ಲ.ಸುಪ್ರೀಂಕೋರ್ಟ್ ತೀರ್ಪು ನೀಡುವಾಗ ಬಹುಸಂಖ್ಯಾತರ ಭಾವನೆಗಳನ್ನು ಪರಿಗಣಿಸುವುದಾಗಿ ಹೇಳಿದೆ. +ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ +ಮಸೀದಿ ಧ್ವಂಸಗೊಳಿಸುವುದಕ್ಕೆ ಸಂಬಂಧಪಟ್ಟಂತೆ ಎಲ್.ಕೆ.ಅಡ್ವಾಣಿ ಸೇರಿದಂತೆ ಬಹಳಷ್ಟು ಮಂದಿ ಈಗಲೂ ಆರೋಪಿಗಳಾಗಿದ್ದರೆ. ನ್ಯಾಯಾಲಯ ಆರೋಪದಿಂದ ಖುಲಾಸೆ ಮಾಡಿಲ್ಲ. ಮಸೀದಿ ಧ್ವಂಸ ಸರಿ ಎಂದು ಕೂಡ ಹೇಳಿಲ್ಲ. ಅಯೋಧ್ಯೆಯಲ್ಲಿ ದೇವಸ್ಥಾನವಿತ್ತೋ, ಮಸೀದಿ ಇತ್ತೋ ಎಂಬ ಬಗ್ಗೆ ಇನ್ನು ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. +ಸಿದ್ದರಾಮಯ್ಯ ರಾಮನಿದ್ದಂತೆ ಎಂದು ಮಾಜಿ ಸಚಿವ ಎಚ್.ಆಂಜನೇಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಕೈಲಾಸ್ ಆಶ್ರಮಕ್ಕೂ ಭಕ್ತರಿದ್ದಾರೆ. ಅದೇ ರೀತಿ ಸಿದ್ದರಾಮಯ್ಯನವರಿಗೂ ಕೆಲ ಭಕ್ತರಿದ್ದಾರೆ. ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು. \ No newline at end of file diff --git a/eesanje/url_46_272_11.txt b/eesanje/url_46_272_11.txt new file mode 100644 index 0000000000000000000000000000000000000000..7dee701edeb4d81b29d70b9ae2ab84208b5daeb5 --- /dev/null +++ b/eesanje/url_46_272_11.txt @@ -0,0 +1,9 @@ +ಕ್ರಿಮಿನಲ್‍ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿಯಲ್ಲಿ ಬಿಜೆಪಿ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜ.3- ಕರಸೇವಕರ ಬಂಧನವಾಗಿದೆ ಎಂದು ಬೀದಿಗಿಳಿದಿರುವ ಬಿಜೆಪಿ ನಾಯಕರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕ್ರಿಮಿನಲ್‍ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು ಎಂದು ಲೇವಡಿ ಮಾಡಿದ್ದಾರೆ. +ಪತ್ರಿಕಾ ಹೇಳಿಕೆ ನೀಡಿರುವ ಅವರು, ನಾಲ್ಕು ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನೆÀ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು. +ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ಎಂದು ಪ್ರಶ್ನಿಸಿದ್ದಾರೆ. +ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ ಎಂದು ಕಟುಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. +ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ +ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ. +ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ ಎಂದು ಒತ್ತಾಯಿಸಿದ್ದಾರೆ. +ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದ್ದಾರೆ. \ No newline at end of file diff --git a/eesanje/url_46_272_12.txt b/eesanje/url_46_272_12.txt new file mode 100644 index 0000000000000000000000000000000000000000..6b47e9c666516e921b74e1bee3ef66905a3094ae --- /dev/null +++ b/eesanje/url_46_272_12.txt @@ -0,0 +1,6 @@ +ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ +ಬೆಳಗಾವಿ, ಜ.3- ಕುಂದಾನಗರಿ ಬೆಳಗಾವಿಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಅಂಗನವಾಡಿ ಮಕ್ಕಳು ಹೂವು ಕಿತ್ತರು ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಧೂರ್ತನೊಬ್ಬ ಕತ್ತರಿಸಿರುವ ಘಟನೆ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. +ಅಂಗನವಾಡಿ ಪಕ್ಕದಲ್ಲೇ ಇದ್ದ ಮನೆಯೊಂದರ ಬಳಿ ಮಕ್ಕಳು ಆಟವಾಡುತ್ತ ಮಲ್ಲಿಗೆ ಹೂವು ಕಿತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಮನೆಯಿಂದ ಹೊರಬಂದ ವ್ಯಕ್ತಿಯೊಬ್ಬ ಕುಡುಗೋಲು ತೆಗೆದುಕೊಂಡು ಬಂದು ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಿ ಆಕೆಯ ಮೂಗನ್ನು ಕತ್ತರಿಸಿದ್ದಾನೆ. ಇದರಿಂದ ಕುಸಿದುಬಿದ್ದ ಸುಗಂಧಾ ಮೋರೆ (50) ಎಂಬ ಅಂಗನವಾಡಿ ಕಾರ್ಯಕರ್ತೆಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. +ಹಲ್ಲೆ ಮತ್ತು ಮೂಗನ್ನು ಕತ್ತರಿಸಿರುವುದರಿಂದ ನರಳಾಡುತ್ತಿರುವ ಆಕೆಯ ವೇದನೆ ನೋಡಿ ವೈದ್ಯರೇ ಮರುಗಿದ್ದಾರೆ. ಘಟನೆ ನಡೆದು ಒಂದು ದಿನ ಕಳೆದರೂ ಪೊಲೀಸರು ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. +ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ +ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ನಂತರ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹಾಗೂ ಗ್ರಾಮೀಣ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_272_2.txt b/eesanje/url_46_272_2.txt new file mode 100644 index 0000000000000000000000000000000000000000..c0a0a2ef28c60ee16d697d6378dfbe3f6c5e873b --- /dev/null +++ b/eesanje/url_46_272_2.txt @@ -0,0 +1,6 @@ +ಅಸ್ತಿಪಂಜರ ಪತ್ತೆ ಪ್ರಕರಣ ದಿನಕ್ಕೊಂದು ತಿರುವು: ಗೋಡೆಯ ಮೇಲೆ ಹಸ್ತ ಗುರುತು +ಚಿತ್ರದುರ್ಗ,ಜ.3- ನಿವೃತ್ತ ಎಂಜಿನಿಯರ್ ಜಗನ್ನಾಥ್ ರೆಡ್ಡಿ ಅವರ ಮನೆಯಲ್ಲಿ ಪತ್ತೆಯಾದ ಐದು ಅಸ್ತಿಪಂಜರಗಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮನೆಯ ಗೋಡೆಯ ಮೇಲೆ ರಕ್ತದ ಕಲೆ ಮಾದರಿಯ ಐದು ಹಸ್ತದ ಗುರುತುಗಳು ಕುತೂಹಲ ಕೆರಳಿಸಿವೆ. +ಚಿತ್ರದುರ್ಗದ ಕಾರಾಗೃಹ ರಸ್ತೆಯ ಜಗನ್ನಾಥ್ ರೆಡ್ಡಿ ಅವರ ಮನೆಯಲ್ಲಿ 5 ಅಸ್ತಿಪಂಜರಗಳು ಡಿ.29ರಂದು ಪತ್ತೆಯಾಗಿದ್ದವು. ಅವುಗಳನ್ನು ಜಗನ್ನಾಥ್ ರೆಡ್ಡಿ ಮತ್ತು ಅವರ ಕುಟುಂಬದ ಐದು ಸದಸ್ಯರಿಗೆ ಸೇರಿದವು ಎಂದು ಹೇಳಲಾಗಿದೆ. +ಮನೆಯಲ್ಲಿ 2019ರ ಜುಲೈನಲ್ಲಿ ಕ್ಯಾಲೆಂಡರ್ ಬದಲಾವಣೆ ಯಾಗಿರುವುದು ಕಂಡುಬಂದಿತ್ತು. ಆ ವೇಳೆಯಲ್ಲೇ ಸಾವುಗಳು ಆಗಿರಬಹುದೆಂದು ಶಂಕಿಸಲಾಗಿದೆ. ಆರಂಭದಲ್ಲಿ ಇದನ್ನು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ 5 ಅಸ್ತಿಪಂಜರಗಳ ಪೈಕಿ ಎರಡಕ್ಕೆ ಕೈಕಾಲು ಕಟ್ಟಿ ಹಾಕಿರುವ ಕುರುಹುಗಳು ಮತ್ತು ಹಗ್ಗ ಕಂಡುಬಂದಿದೆ. +ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ +ಹೀಗಾಗಿ ಆತ್ಮಹತ್ಯೆಯೋ, ಕೊಲೆಯೋ ಎಂಬ ಶಂಕೆಗಳು ಹರಿದಾಡುತ್ತಿವೆ. ಸೂಕ್ಷ್ಮವಾಗಿ ತನಿಖೆ ಮುಂದುವರೆಸಿರುವ ಪೆÇಲೀಸರಿಗೆ ಮನೆಯ ಗೋಡೆಯ ಮೇಲೆ ಐದು ಹಸ್ತದ ಗುರುತುಗಳು ಪತ್ತೆಯಾಗಿವೆ. ಅವನ್ನು ರಕ್ತಸಿಕ್ತ ಹಸ್ತದ ಗುರುತುಗಳೆಂದು ಪರಿಭಾವಿಸ ಲಾಗಿದೆ. ತನಿಖಾಕಾರಿಗಳು ಪ್ರತಿಯೊಂದು ವಿಚಾರವನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದ್ದಾರೆ. ಹಸ್ತದ ಗುರುತುಗಳು ಪತ್ತೆಯಾದ ಬಳಿಕ ಪ್ರಕರಣಕ್ಕೆ ಮತ್ತೊಂದು ರೀತಿಯ ತಿರುವು ಸಿಕ್ಕಂತಾಗಿದೆ. \ No newline at end of file diff --git a/eesanje/url_46_272_3.txt b/eesanje/url_46_272_3.txt new file mode 100644 index 0000000000000000000000000000000000000000..40d1d7418ac0dd74c3325b367ed728c492bb68a3 --- /dev/null +++ b/eesanje/url_46_272_3.txt @@ -0,0 +1,6 @@ +ಓದಿದ್ದು ಎಸ್‍ಎಸ್‍ಎಲ್‍ಸಿ, ವಂಚಿಸಿದ್ದು 1 ಕೋಟಿ 10 ಲಕ್ಷ +ಆನೇಕಲ್, ಜ.3- ತಾವು ಕೆಲಸಕ್ಕಿದ್ದ ಕಂಪೆನಿಗೆ ವಂಚಿಸಿ ನೈಕಿ ಕಂಪನಿಯ ಶೂಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಅಸ್ಸಾಂ ಮೂಲದ ಮೂವರು ಆರೋಪಿಗಳನ್ನು ಅತ್ತಿಬೆಲೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮೌಲ್ಯದ ನೈಕಿ ಕಂಪನಿಯ ಶೂಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಈಚರ್ ಕಂಟೈನರ್ ಕ್ಯಾಂಟರ್‍ನ್ನು ಮೌಲೀಸರು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಾದ ಸುಭಾನ್ ಪಾಷ, ಮನ್‍ಸೂರ್ ಅಲಿ, ಶಾಹಿದುಲ್ ರೆಹಮಾನ್‍ನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗಿದೆ. +ಅಸ್ಸಾಂ ಮೂಲದವರಾದ ಈ ಮೂವರು ಆರೋಪಿಗಳು ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡಿದ್ದು, ಕೆಲಸಕ್ಕಿದ್ದ ಕಂಪೆನಿಯಲ್ಲೇ ಮಾಲೀಕರನ್ನು ನಂಬಿಸಿ, ವಂಚಿಸಿ ಇದೀಗ ಖಾಕಿ ಬಲೆಗೆ ಬಿದ್ದಿದ್ದಾನೆ. ಅತ್ತಿಬೆಲೆ ಪೋಲಿಸ್ ಠಾಣೆ ವ್ಯಾಪ್ತಿಯ ಶೆಟ್ಟಹಳ್ಳಿ ಗ್ರಾಮದ ಬಳಿಯಿರುವ ನೈಕಿ ಗೋಡೌನ್‍ನಿಂದ ಅನುಗೊಂಡನಹಳ್ಳಿ ಗ್ರಾಮದ ಸಮೀಪದಲ್ಲಿರುವ ಮಿಂತ್ರ ಗೋಡೋನ್‍ಗೆ ಈಚರ್ ಕಂಟೈನರ್ ಕ್ಯಾಂಟರ್‍ನಲ್ಲಿ ನೈಕಿ ಕಂಪನಿಗೆ ಸೇರಿದ ಶೂಗಳನ್ನು ಸಾಗಿಸುತ್ತಿದ್ದರು. +ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ +ಆ ಸಂದರ್ಭದಲ್ಲಿ ಕ್ಯಾಂಟರ್‍ನ ಚಾಲಕ ಮಿಂತ್ರ ಗೋಡೌನ್‍ನಲ್ಲಿ ಅನ್‍ಲೋಡ್ ಮಾಡದೆ ವಾಹನ ಸಮೇತ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಪ್ರಕರಣವನ್ನು ಕೈಗೆತ್ತಿಕೊಂಡ ಅತ್ತಿಬೆಲೆ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ಮತ್ತು ಅವರ ತಂಡ ವೈಜ್ಞಾನಿಕವಾಗಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ಒಂದು ಕೋಟಿ ಹತ್ತು ಲಕ್ಷ ರೂಪಾಯಿ ಮೌಲ್ಯದ ನೈಕಿ ಕಂಪನಿಯ ಶೂಗಳು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಈಚರ್ ಕಂಟೈನರ್ ಕ್ಯಾಂಟರ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. +ಪತ್ರಿಕಾ ಗೋಷ್ಠಿಯಲ್ಲಿ ಅಡಿಶಿನಲ್ ಎಸ್ಪಿ ಪುರುಷೋತ್ತಮ್, ಡಿವೈಎಸ್ಪಿ ಮೋಹನ್ ಕುಮಾರ್, ಅತ್ತಿಬೆಲೆ ಪೋಲಿಸ್ ಠಾಣೆಯ ಇನ್ಸ್‍ಪೆಕ್ಟರ್ ರಾಘವೇಂದ್ರ, ಸೂರ್ಯ ಸಿಟಿ ಇನ್ಸ್ ಪೆಕ್ಟರ್ ಮಹಾಜನ್, ಸಬ್ ಇನ್ಸ್ ಪೆಕ್ಟರ್ ಮುರಳಿ, ಪೋಲಿಸರಾದ ಅರುಣ್ ಕುಮಾರ್, ಅಪ್ರೋಜ್ ಖಾನ್, ಮಹೇಶ್, ಇಪ್ರಾನ್, ಮತ್ತಿತರು ಹಾಜರಿದ್ದರು. \ No newline at end of file diff --git a/eesanje/url_46_272_4.txt b/eesanje/url_46_272_4.txt new file mode 100644 index 0000000000000000000000000000000000000000..84bc789497845852807e12feb0232b9f799b7d75 --- /dev/null +++ b/eesanje/url_46_272_4.txt @@ -0,0 +1,8 @@ +ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಬಿಜೆಪಿ ಪ್ರತಿಭಟನೆ: ಡಿಕೆಶಿ +ಬೆಂಗಳೂರು, ಜ.3- ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ನಾವಿನ್ನೂ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ನಡೆಯುತ್ತಿರುವ ರಾಜಕೀಯ ನಾಟಕ ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಈಗಾಗಲೇ ಗೃಹ ಸಚಿವರು ಸ್ಪಷ್ಟ ಪಡಿಸಿದ್ದಾರೆ. ನಾವು ಯಾರಿಗೂ ತೊಂದರೆ ಕೊಡುವುದಿಲ್ಲ. ಬಾಕಿ ಇದ್ದ ಪ್ರಕರಣಗಳಲ್ಲಿ ದೇಶಕ್ಕೆ, ರಾಜ್ಯಕ್ಕೆ ಅಗೌರವ ತರುವವರು ಮತ್ತು ಅಶಾಂತಿ ಸೃಷ್ಟಿಸುವವರ ವಿರುದ್ಧ ಮೊದಲಿನಿಂದಲೂ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಈಗಲೂ ಕ್ರಮ ಕೈಗೊಂಡಿದ್ದಾರ ಎಂದರು. +ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶಾಂತಿ-ಸೌಹಾರ್ದತೆಯ ಸಂದೇಶಕ್ಕೆ ಒತ್ತು: ಸಿದ್ದರಾಮಯ್ಯ +ಬಿಜೆಪಿಯವರಿಗೆ ಏಳು ತಿಂಗಳು ವಿರೋಧ ಪಕ್ಷದ ನಾಯಕನನ್ನು ಮಾಡಲಾಗಲಿಲ್ಲ. ಈಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ. ನಾವೇನೋ ಬಹಳ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಪ್ರಜಾಪ್ರಭುತ್ವದಲ್ಲಿ ಜನರೂ ಉತ್ತರ ನೀಡುತ್ತಾರೆ, ನಾವು ಉತ್ತರಿಸುತ್ತೇವೆ ಎಂದರು. +ನಾವು ಬಿಜೆಪಿಯವರಂತೆ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಅವರು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಷ್ಟು ಕೇಸು ಹಾಕಿದ್ದಾರೆ ಎಂದು ಗೋತ್ತಿದೆ. ಹುಬ್ಬಳ್ಳಿಯಲ್ಲಿ, ಬೆಂಗಳೂರಿನಲ್ಲೇ ಬಹಳಷ್ಟು ಕೇಸುಗಳನ್ನು ದಾಖಲಿಸಿದ್ದಾರೆ. ಅಮಾಯಕರ ಮೇಲೂ ಕೇಸುಗಳನ್ನು ಹಾಕಲಾಗಿದೆ. ನಾವು ಆ ರೀತಿ ಮಾಡಿಲ್ಲ ಎಂದರು. +ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಹೋಗಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಹೋಗಿ ಕಟ್ಟಿ ಹಾಕಿಕೊಳ್ಳಲಿ. ಆರ್.ಅಶೋಕ್ ಅವರು ಗೃಹ ಸಚಿವರಾಗಿದ್ದಾಗ ಏನು ಮಾಡಿದ್ದರು. ಪೊಲೀಸರು ಮತ್ತು ಅಧಿಕಾರಿಗಳಿಗೆ ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿ ನಿಲ್ಲಿಸಿದ್ದರು. ನಾವು ಆ ಕೆಲಸ ಮಾಡಿಲ್ಲ ಎಂದರು. +ತಮ್ಮ ಮೇಲಿರುವ ಅಕ್ರಮ ಆಸ್ತಿ ಪ್ರಕರಣದ ಲೋಕಾಯುಕ್ತ ತನಿಖೆಗೆ ಸಂಬಂಧ ಪಟ್ಟಂತೆ ನನಗಿನ್ನೂ ನೋಟಿಸ್ ಬಂದಿಲ್ಲ. ನೋಟಿಸ್ ಬಂದರೆ ಉತ್ತರ ನೀಡುತ್ತೇನೆ ಎಂದರು. \ No newline at end of file diff --git a/eesanje/url_46_272_5.txt b/eesanje/url_46_272_5.txt new file mode 100644 index 0000000000000000000000000000000000000000..d8ef5262818dd4674db24e70570bea986ba765a5 --- /dev/null +++ b/eesanje/url_46_272_5.txt @@ -0,0 +1,9 @@ +ಸರ್ಕಾರದ ದಮ್ಮು-ತಾಕತ್ತು ಗೊತ್ತಾಗಲಿದೆ: ಪರಮೇಶ್ವರ್ +ಬೆಂಗಳೂರು,ಜ.3- ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ವಿರುದ್ಧ 16 ಕ್ರಿಮಿನಲ್ ಮೊಕದ್ದಮೆಗಳಿವೆ. ಹುಬ್ಬಳ್ಳಿಯಲ್ಲಿ 26 ಪ್ರಕರಣಗಳಲ್ಲಿ 36 ಆರೋಪಿ ಗಳಿದ್ದು, ಅವರಲ್ಲಿ ಇರುವ ಬೇರೆ ಹಿಂದೂಗಳ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.ಬಿಜೆಪಿಯವರು ಧಮ್ಮು, ತಾಕತ್ತು ಎಂದೆಲ್ಲ ಹೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ರಾಜ್ಯದ ಜನ ಯಾರಿಗೆ ಧಮ್ಮು , ತಾಕತ್ತು ಇದೆ ಎಂಬುದನ್ನು ತೋರಿಸಿದ್ದಾರೆ. ಸರ್ಕಾರಕ್ಕೆ ತಾಕತ್ತು ಇದೆಯೋ ಇಲ್ಲವೋ ಎಂಬುದು ಗೊತ್ತಾಗಲಿದೆ ಎಂದು ಹೇಳಿದರು. +ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವವರ ಪರವಾಗಿ ಬಿಜೆಪಿಯವರು ವಕಾಲತ್ತು ವಹಿಸಿ ಹೋರಾಟ ನಡೆಸುತ್ತಿರುವುದನ್ನು ನೋಡಿದರೆ ಅವರಿಗೆ ಏನಾಗಿದೆ ಎಂಬುದೇ ಅರ್ಥವಾಗುತ್ತಿಲ್ಲ. ಶ್ರೀಕಾಂತ್ ಪೂಜಾರಿ ಕರಸೇವಕನಲ್ಲ. ಆತನ ವಿರುದ್ಧ 16 ಕ್ರಿಮಿನಲ್ ಕೇಸ್‍ಗಳಿವೆ ಎಂದರು. +ಈಗ ಪ್ರತಿಭಟನೆ ಮಾಡುವ ಬಿಜೆಪಿಯವರು ಹಿಂದೆ ಐದು ವರ್ಷ ಮತ್ತು ಇತ್ತೀಚೆಗೆ 4 ವರ್ಷ ಆಡಳಿತ ನಡೆಸಿದ್ದರು. ಒಂದು ವೇಳೆ ಶ್ರೀಕಾಂತ್ ಬಿಜೆಪಿ ಆರೋಪಿಯಾಗಿದ್ದಾಗಲೇ ಅವರ ಸರ್ಕಾರ ಇದ್ದಾಗಲೇ ಪ್ರಕರಣವನ್ನು ಇತ್ಯರ್ಥ ಮಾಡಬಹುದಿತ್ತು ಅಥವಾ ಖುಲಾಸೆಗೊಳಿಸ ಬಹುದಾಗಿತ್ತು, ಏಕೆ ಮಾಡಲಿಲ್ಲ. ಈಗ ಯಾರು, ಯಾರನ್ನು ದೂಷಣೆ ಮಾಡಬೇಕು ಎಂದು ಪ್ರಶ್ನಿಸಿದರು. +31 ವರ್ಷಗಳ ಹಳೆಯ ಪ್ರಕರಣ ಎಂಬುದು ನಿಜ. ಆದರೆ ಅವುಗಳನ್ನು ಎಷ್ಟು ವರ್ಷ ನನೆಗುದಿಯಲ್ಲಿಡಬೇಕು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಸೂಚನೆ ನೀಡಿದಾಗ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ಶ್ರೀಕಾಂತ್ ಪೂಜಾರಿ ಪ್ರಕರಣವು ಮುನ್ನೆಲೆಗೆ ಬಂದಿದೆ. ಇದೊಂದೇ ಅಲ್ಲ 26 ಪ್ರಕರಣಗಳಲ್ಲಿ 36 ಮಂದಿ ಆರೋಪಿಗಳಿದ್ದಾರೆ. ಅವರಲ್ಲಿಯೂ ಹಿಂದೂಗಳಿದ್ದಾರೆ. ಅವರ ಬಗ್ಗೆ ಬಿಜೆಪಿಯವರು ಏಕೆ ಮಾತನಾಡುವುದಿಲ್ಲ ಎಂದರು. ಚುನಾವಣೆಯಲ್ಲಿ ರಾಜಕೀಯ ಮಾಡಬೇಕು, ಕಾನೂನು ಸುವ್ಯವಸ್ಥೆಯಂತಹ ವಿಚಾರದಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಜನ ಈಗಾಗಲೇ ಪಾಠ ಕಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸುತ್ತಾರೆ ಎಂದು ಹೇಳಿದರು. +1 ವರ್ಷದಲ್ಲಿ ಮನೆ ಬಾಗಿಲಿಗೆ ಖಾತೆ: ಡಿ.ಕೆ.ಶಿವಕುಮಾರ್ +ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರೆ ಪೊಲೀಸ್ ಅಧಿಕಾರಿಗಳು ವಿಪಕ್ಷ ನಾಯಕ ಆರ್. ಅಶೋಕ ಸೇರಿದಂತೆ ಬಿಜೆಪಿ ನಾಯಕರಿಗೆ ವಾಸ್ತವಾಂಶಗಳನ್ನು ತಿಳಿಸಿ ಹೇಳುವ ಪ್ರಯತ್ನ ಮಾಡುತ್ತಾರೆ. ಒಂದು ವೇಳೆ ಕೇಳದೆ ಇದ್ದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುತ್ತಾರೆ. ಪೊಲೀಸರಿಗೆ ಕಾನೂನಿನ ಪುಸ್ತಕ ಇದೆ, ಸಮವಸ್ತ್ರ ಧರಿಸಿದ ಅಧಿಕಾರಿಗಳು ಕಾನೂನನ್ನು ಪಾಲನೆ ಮಾಡಲು ಏನೆಲ್ಲ ಬೇಕೋ ಅದನ್ನು ಖಂಡಿತ ಮಾಡುತ್ತಾರೆ ಎಂದು ಹೇಳಿದರು. +ಬೆಳಗಾವಿಯ ಬೈಲಹೊಂಗಲದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಳಿಕ ಇಂತಹ ಘಟನೆಗಳಲ್ಲಿ ಸೂಕ್ಷ್ಮವಾಗಿ ನಡೆದುಕೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಪ್ರಕರಣಗಳು ವರದಿಯಾದರೆ ತಕ್ಷಣ ಕ್ರಮ ಕೈಗೊಳ್ಳಬೇಕು. ಬೈಲುಹೊಂಗಲ ಪ್ರಕರಣದಲ್ಲಿ ಕೇಸು ದಾಖಲಿಸಲು ವಿಳಂಬವಾಗಿದ್ದರೆ ಪರಿಶೀಲಿಸಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು. +ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸೈಬರ್ ಕ್ರೈಂ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕಡ್ಡಾಯವಾಗಿ ದಾಖಲಿಸುವಂತೆ ಸೂಚಿಸಿದ್ದೇವೆ. ಅದರಿಂದಾಗಿ 46ರಿಂದ 60 ಸಾವಿರಗಳಿಗೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಈ ಹಿಂದೆ ಪ್ರಕರಣಗಳೇ ದಾಖಲಾಗುತ್ತಿರಲಿಲ್ಲ. ನಮ್ಮ ಅವಧಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಸಮರ್ಪಕ ತನಿಖೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಖ್ಯೆ ಹೆಚ್ಚಾಗಿದೆ ಎಂದಾಕ್ಷಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಅರ್ಥವಲ್ಲ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಶೀಘ್ರವೇ ತನಿಖೆ ಆರಂಭಗೊಳ್ಳಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_272_6.txt b/eesanje/url_46_272_6.txt new file mode 100644 index 0000000000000000000000000000000000000000..c0119b63e204d2558d97dbcae4135b0be3efb525 --- /dev/null +++ b/eesanje/url_46_272_6.txt @@ -0,0 +1,8 @@ +ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶಾಂತಿ-ಸೌಹಾರ್ದತೆಯ ಸಂದೇಶಕ್ಕೆ ಒತ್ತು: ಸಿದ್ದರಾಮಯ್ಯ +ಬೆಂಗಳೂರು,ಜ.3-ಶಾಂತಿ, ಸೌಹಾರ್ದತೆ, ಸಮಾನತೆಯನ್ನು ಪ್ರತಿಪಾದಿಸುವ ಸಂದೇಶಗಳಿರುವ ಚಲನಚಿತ್ರಗಳನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶಿಸಲು ಆದ್ಯತೆ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 15ನೇ ಆವೃತ್ತಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಫೆಬ್ರವರಿ 29ರಿಂದ ಮಾ.7ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭವನ್ನು ಆಯೋಜಿಸಲಾಗುವುದು ಎಂದು ಹೇಳಿದರು. +ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಸಭೆ ನಡೆಸಲಾಗಿದೆ. ದೇಶ, ವಿದೇಶಗಳ ಮತ್ತು ಕನ್ನಡ ಭಾಷೆಯ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು ಎಂದರು.ಮಾರ್ಚ್ 1ರಿಂದ 7ರವರೆಗೆ ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ನಡೆಯಲಿದೆ. ಮಾರ್ಚ್ 7ರಂದು ಗುರುವಾರ ಸಂಜೆ ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. +ಚಲನಚಿತ್ರೋತ್ಸವ ಆಯೋಜನೆಗೆ 1.61 ಕೋಟಿ ರೂ. ಲಭ್ಯವಿದ್ದು, ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನ ಒದಗಿಸಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು. ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು. ಲಿಂಗ ಸಮಾನತೆ, ಸಮಾನತೆಗೂ ಆದ್ಯತೆ ನೀಡಲಾಗುತ್ತಿದೆ ಎಂದರು. +2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು +ಚಲನಚಿತ್ರೋತ್ಸವದ ಆಯೋಜನೆಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಕೋರ್ ಸಮಿತಿಯನು ರಚಿಸಲಾಗಿದೆ. ಸಮಿತಿ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮೊದಲ ಹಂತದಲ್ಲಿ ದೇಶ-ವಿದೇಶಗಳ ಉತ್ತಮ ಸಿನಿಮಾಗಳನ್ನು ಚಿತ್ರೋತ್ಸವದಲ್ಲಿನ ಪ್ರದರ್ಶನಕ್ಕಾಗಿ ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. +ಚಿತ್ರೋತ್ಸವದ ಕೆಲಸಗಳಲ್ಲಿ ಪರಿಣಿತಿ ಹೊಂದಿರುವ ವಿದ್ಯಾಶಂಕರ್ ಅವರನ್ನು ಕಲಾತ್ಮಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಸಂಘಟಕರು, ತಾಂತ್ರಿಕ ಸಲಹೆಗಾರರು, ಸ್ವಯಂ ಸೇವಕರುಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಂಡು ಸಂಭಾವನೆ ಆಧಾರದಲ್ಲಿ ಇವರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದರು. +ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಚಲನಚಿತ್ರೋತ್ಸವ ಯಶಸ್ವಿಗೊಳಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಪ್ರತಿ ವರ್ಷದಂತೆ ಒರಿಯಾನ್ ಮಾಲ್‍ನಲ್ಲಿರುವ ಪಿವಿಆರ್‍ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ ಮಾಡಲಾಗುವುದು ಎಂದು ಮಾಹಿತಿ ನೀಡಿದರು. \ No newline at end of file diff --git a/eesanje/url_46_272_7.txt b/eesanje/url_46_272_7.txt new file mode 100644 index 0000000000000000000000000000000000000000..d0864a74ffaf4371eeb42e8100a6ac8174b2bfb3 --- /dev/null +++ b/eesanje/url_46_272_7.txt @@ -0,0 +1,14 @@ +1 ವರ್ಷದಲ್ಲಿ ಮನೆ ಬಾಗಿಲಿಗೆ ಖಾತೆ: ಡಿ.ಕೆ.ಶಿವಕುಮಾರ್ +ಕೆಆರ್‌ಪುರ, ಜ.3- ಸಿಎಂ ಸಿದ್ದರಾಮಯ್ಯನವರ ಜನತಾ ದರ್ಶನ ಮಾದರಿಯಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರದಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು. +ಮೊದಲ ಹಂತದಲ್ಲಿ ಕೆ.ಆರ್.ಪುರಂನಲ್ಲಿ ಬಾಗಿಲಿಗೆ ಬಂತು ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ, ಅಹವಾಲು ನಿಮ್ಮದು ಪರಿಹಾರ ನಮ್ಮದು ಎಂಬ ಧ್ಯೇಯ ವಾಕ್ಯದೊಂದಿಗೆ ಜನತಾ ದರ್ಶನ ಆಯೋಜಿಸಲಾಗಿತ್ತು.ಶಾಸಕ ಭೈರತಿ ಬಸವರಾಜ್, ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. +ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಜನರ ಕಷ್ಟಗಳನ್ನು ನಿವಾರಿಸಲು ಮನೆ ಬಾಗಿಲಿಗೆ ಸರ್ಕಾರ ಬಂದಿದ್ದು ಸಮಸ್ಯೆ ಹೇಳಿ ಪರಿಹಾರ ಪಡೆಯಿರಿ ಎಂದು ಕರೆ ನೀಡಿದರು. ಬೆಂಗಳೂರು ನಗರದಲ್ಲಿ ನೀರು, ಕಸ, ಟ್ರಾಫಿಕ್ ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದ್ದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು. ಶಾಸಕರಾದ ಬೈರತಿ ಬಸವರಾಜ ಹಾಗೂ ಮಂಜುಳಾ ಅರವಿಂದ ಲಿಂಬಾವಳಿ ಅವರು ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಫ್ಲೈಓವರ್ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದಿದ್ದಾರೆ. ಆದಷ್ಟು ಬೇಗ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದರು. +ಬೆಂಗಳೂರು ನಗರದಲ್ಲಿ ತ್ಯಾಜ್ಯ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಇದನ್ನು ಬಗೆಹರಿಸಲು ಕಸ ಸುಡುವುದು, ಗ್ಯಾಸ್ ತಯಾರಿಕೆ ಮಾಡುವುದು, ಮಾಡಲಾಗುವುದು ಈಗಾಗಲೇ ನಾಲ್ಕು ಟೆಂಡರ್ ಕರೆದಿದ್ದು ಇನ್ನು ನಾಲ್ಕು ಟೆಂಡರ್‍ಗಳನ್ನು ಕರೆಯಲಾಗುವುದು ಎಂದು ತಿಳಿಸಿದರು. ರಾಜಕಾಲುವೆ ಪಕ್ಕದಲ್ಲಿ 150 ಮೀಟರ್ ಯಾವ ಕಟ್ಟಡವನ್ನು ನಿರ್ಮಾಣ ಮಾಡುವಂತಿಲ್ಲ. ಸಾರ್ವಜನಿಕರು ಓಡಾಡೋಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸಾಕಷ್ಟು ತೆರಿಗೆ ಸೋರಿಕೆಯಾಗುತ್ತಿದೆ, ತೆರಿಗೆ ಕಟ್ಟಿದರೆ ಅಭಿವೃದ್ದಿ ಸಾಧ್ಯ, ಎಲ್ಲರೂ ತೆರಿಗೆ ಪಾವತಿಸಿ ಎಂದು ಸಲಹೆ ನೀಡಿದರು. +ಮನೆ ಬಾಗಿಲಿಗೆ ಖಾತೆ ನೀಡುವ ಕೆಲಸ ಒಂದು ವರ್ಷದಲ್ಲಿ ಮಾಡುತ್ತೇವೆ. ಯಾರಿಗೂ ಒಂದು ರೂಪಾಯಿ ಕೊಡಬೇಡಿ ಎಂದು ಹೇಳಿದರು. ನಮ್ಮ ಸರ್ಕಾರ ನೀಡಿರುವ ಅನ್ನಭಾಗ್ಯ ಅಕ್ಕಿಯನ್ನು ಮಂತ್ರಾಕ್ಷತೆಯಾಗಿ ಪರಿವರ್ತನೆ ಮಾಡಿ ಎಲ್ಲಾ ಕಡೆ ಹಂಚಾಲಾಗುತ್ತಿದೆ ಎಂದು ಅಯೋಧ್ಯೆಯ ಮಂತ್ರಾಕ್ಷತೆ ಬಗ್ಗೆ ಕಿಚಾಯಿಸಿದರು. +ಶಾಸಕ ಬೈರತಿ ಬಸವರಾಜ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅನುದಾನ ನೀಡಬೇಕು ಎಂದು ಮನವಿ ಮಾಡಿದರು. ಕಳೆದ ಸರ್ಕಾರದಲ್ಲಿ ಹಳೆ ಮದ್ರಾಸ್ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕೆ 350 ಕೋಟಿ ರೂ. ಮೀಸಲಿರಿಸಿ ಎಲ್ಲಾ ರೀತಿಯ ಪ್ಲಾನ್‍ಗಳನ್ನು ತಯಾರಿಸಿ ರೆಡಿ ಮಾಡಿದ್ದೆವು. ಆದರೆ ಇದೀಗ ಅದನ್ನು ಸ್ಥಗಿತಗೊಳಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಎಲ್ಲೂ ಪ್ರಸ್ತಾಪ ಮಾಡಿಲ್ಲ, ಲಕ್ಷಾಂತರ ವಾಹನ ಸಂಚರಿಸುವ ರಸ್ತೆ ಇದಾಗಿದೆ. ವಾಹನ ದಟ್ಟಣೆ ಹೆಚ್ಚಾಗಿದೆ. ಆದಷ್ಟು ಬೇಗ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಬೇಕಿದೆ ಎಂದು ಹೇಳಿದರು. +ಕೆಆರ್‍ಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವು ಕೆರೆಗಳು ಅಭಿವೃದ್ಧಿಯಾಗಬೇಕಿದೆ. ಬೃಹತ್ ನೀರುಗಾಲುವೆಗಳಿಂದ ಸಾಕಷ್ಟು ಜನರಿಗೆ ತೊಂದರೆಯಾಗುತ್ತಿದೆ. 60 ಕಿ.ಮೀನಷ್ಟು ಬೃಹತ್ ನೀರುಗಾಲುವೆಯಲ್ಲಿ ನೀರು ಹರಿದು ಹೋಗುತ್ತದೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಮಾಡಬೇಕು ಎಂದು ಹೇಳಿದರು. +2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು +ಕಳೆದ ಸರ್ಕಾರದಲ್ಲಿ ನೀಡಿದ್ದ ಅನುದಾನದಲ್ಲಿ ನಡೆಯುತ್ತಿದ್ದ ಕಾಮಗಾರಿ ಪೇಮೆಂಟ್ ನೀಡದೆ ಸ್ಥಗಿತಗೊಳಿಸಿದ್ದೀರಿ ರಿಲೀಸ್ ಮಾಡಿಸಬೇಕು ಎಂದರು. ಉದಯನಗರ ಬಳಿ ಬೆನ್ನಗಾನಹಳ್ಳಿ ಮೆಟ್ರೋ ಎಂದು ಸ್ಟೇಷನ್ ಎಂದು ಹಾಕಿದ್ದಾರೆ ಅದನ್ನು ತೆಗೆಸಿ ಉದಯನಗರ ಸ್ಟೇಷನ್ ಎಂದು ಹೆಸರಿಡಲು ಅನುಮೋದನೆ ನೀಡಬೇಕು ಎಂದು ಹೇಳಿದರು. +ವಿದ್ಯುತ್ ದೀಪಗಳ ಅಳವಡಿಕೆಗೆ ಅನುದಾನ ನೀಡಬೇಕು, ಹೆಚ್ಚಿನ ಪೌರಕಾರ್ಮಿಕರ ನೇಮಕ ಆಗಬೇಕು, ಕಗ್ಗದಾಸಪುರ ರೈಲ್ವೆ ಸೇತುವೆ ಸ್ಥಗಿತಗೊಳಿಸಲಾಗಿದೆ ಅದಕ್ಕೆ ಅನುಮೋದನೆ ನೀಡಬೇಕು. ಮೆಟ್ರೋ ಕಾಮಗಾರಿಯಿಂದ ರಸ್ತೆ ಹಾಳಾಗಿದೆ, ಸರಿಪಡಿಸಿಕೊಡಬೇಕು ಎಂದು ಹೇಳಿದರು. +ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ +ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಮಾತನಾಡಿ, ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಸಮಸ್ಯೆ ಬಗೆಹರಿಸಿಕೊಡಬೇಕು ಎಂದು ಹೇಳಿದರು. ಕಸ ಡಂಪಿಂಗ್ ಮಾಡಿದ್ದ ಜಾಗದ ಸುತ್ತಮುತ್ತಲ ಹಳ್ಳಿಗಳಲ್ಲಿ ಸ್ಪ್ರೇ ಮಾಡಬೇಕು, ರಾಜಕಾಲುವೆಗಳಲ್ಲಿ ಹೂಳೆತ್ತಬೇಕಿದೆ, ನಿಧಾನಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ ಅದನ್ನು ಚುರುಕುಗೊಳಿಸಬೇಕು ಎಂದರು. ಮಹದೇವಪುರ ಕ್ಷೇತ್ರದಲ್ಲಿ ಬಡವರು ಹೆಚ್ಚಾಗಿ ವಾಸಿಸುತ್ತಿದ್ದು ಅವರಿಗೊಂದು ಸುಸರ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕಿದೆ ಎಂದರು. +ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್‍ಬಾಬು, ಎಂ.ಎಲ್.ಸಿ ನಾರಾಯಣಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_272_8.txt b/eesanje/url_46_272_8.txt new file mode 100644 index 0000000000000000000000000000000000000000..a0ca8a0d24ad6cf47a0d74fa708fb41c0864f318 --- /dev/null +++ b/eesanje/url_46_272_8.txt @@ -0,0 +1,9 @@ +ಪಾಳುಕೊಂಪೆಯಾದ ಬಿಎಸ್‍ಎನ್‍ಎಲ್‍ ಶಾಖಾ ಕಚೇರಿ +ಬೆಂಗಳೂರು,ಜ.3- ಒಂದು ಕಾಲದಲ್ಲಿ ಗತವೈಭವ ಮೆರೆದಿದ್ದ ಬಿಎಸ್‍ಎನ್‍ಎಲ್‍ನ ನಗರ ಕೇಂದ್ರ ಭಾಗದಲ್ಲಿರುವ ಶಾಖಾ ಕಚೇರಿಯು ಈಗ ಪಾಳುಕೊಂಪೆಯಾಗಿದೆ. ಮೊಬೈಲ್ ಸೇವೆಯ ಆರಂಭದ ದಿನಗಳಲ್ಲಿ ಬಿಎಸ್‍ಎನ್‍ಎಲ್ ಸಿಮ್ ಪಡೆದುಕೊಳ್ಳಲು ಮುಂಜಾನೆ 4 ಗಂಟೆಗೆ ಎದ್ದು ಸರತಿಸಾಲಿನಲ್ಲಿ ನಿಲ್ಲಬೇಕಾಗಿತ್ತು. ಕೆಲವು ಕಡೆ ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಉದಹಾರಣೆಗಳೂ ಇವೆ. +ಅಂಥ ಗತವೈಭವ ಮರೆಯಾಗಿ ಇಂದು ಬಿಎಸ್‍ಎನ್‍ಎಲ್ ಸೊರಗಿ ಹೋಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಬೆಂಗಳೂರಿನ ಹೃದಯ ಭಾಗದಲ್ಲಿರುವ ಬಿಎಸ್‍ಎನ್‍ಎಲ್‍ನ ಪ್ರಾದೇಶಿಕ ಪ್ರಧಾನ ವ್ಯವಸ್ಥಾಪಕರ ಪ್ರಧಾನ ಕಚೇರಿ ಸಾಕ್ಷಿಯಾಗಿದೆ. ಬಿಎಸ್‍ಎನ್‍ಎಲ್‍ನ ಕಚೇರಿಗೆ ಭೇಟಿ ನೀಡುವುದಾದರೆ ಮೂಗು ಮುಚ್ಚಿಕೊಂಡೇ ಒಳಹೋಗಬೇಕು. ಎಲ್ಲೆಂದರಲ್ಲಿ ಕಸದ ರಾಶಿ, ತಿಪ್ಪೆಗುಂಡಿ, ಅಡ್ಡಾದಿಡ್ಡಿಯಾಗಿ ಬಿದ್ದಿರುವ ತ್ಯಾಜ್ಯ ವಸ್ತುಗಳು ಅಸಹನೀಯ ವಾತಾವರಣ ಸೃಷ್ಟಿಸಿವೆ. +ಎಲ್ಲೆಂದರಲ್ಲಿ ಅಗೆದು ಗುಂಡಿಗಳನ್ನು ನಿರ್ಮಿಸಲಾಗಿದೆ. ಪಾರ್ಕಿಂಗ್ ಸ್ಥಳವಂತೂ ಹಾಳು ಕೊಂಪೆಯಾಗಿದೆ. ಬಿಎಸ್‍ಎನ್‍ಎಲ್‍ನ ಕ್ಯಾಂಟೀನ್‍ನಲ್ಲಿ ತಿಂಡಿ, ಊಟಕ್ಕಾಗಿ ಜನ ಕಿಕ್ಕಿರಿದು ತುಂಬಿರುತ್ತಿದ್ದರು. ಈಗ ಇಡೀ ಕ್ಯಾಂಟೀನ್ ಬಣಗುಡುತ್ತಿದೆ. ವಾಣಿಜ್ಯ ನ್ಯಾಯಾಲಯಗಳ ಸಂಕೀರ್ಣ, ಟೆಲಿಕಾಂ ರೆಗ್ಯುಲಾರಿಟಿ ಅಥಾರಿಟಿ ಆಫ್ ಇಂಡಿಯಾ(ಟ್ರಾಯ್) ಪ್ರಾದೇಶಿಕ ಕಚೇರಿಗಳು ಬಿಎಸ್‍ಎನ್‍ಎಲ್‍ನ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿವೆ. ವಾಣಿಜ್ಯ ನ್ಯಾಯಾಲಯಗಳ ಪ್ರಕರಣಗಳಿಗಾಗಿ ಆಗಮಿಸುವವರು ಬಿಎಸ್‍ಎನ್‍ಎಲ್‍ನ ದುಸ್ಥಿತಿ ಕಂಡು ಮರುಗುವಂತಾಗಿದೆ. +ಕ್ರಿಮಿನಲ್‍ಗಳಿಗೆ ಜಾತಿ, ಧರ್ಮದ ಬಣ್ಣಕಟ್ಟಿ ಪ್ರತಿಭಟಿಸುವ ದುಸ್ಥಿತಿಯಲ್ಲಿ ಬಿಜೆಪಿ : ಸಿಎಂ ಸಿದ್ದರಾಮಯ್ಯ +ಖಾಸಗಿ ದೂರ ಸಂಪರ್ಕ ಸೇವೆಗಳು ಹವಾನಿಯಂತ್ರಿತ ಐಷಾರಾಮಿ ಕಚೇರಿಗಳನ್ನು ನಿರ್ವಹಣೆ ಮಾಡುತ್ತಿವೆ. ಖಾಸಗಿ ಸಂಸ್ಥೆಗಳ ದೂರ ಸಂಪರ್ಕ ಸೇವೆಯೂ ಕೂಡ ಜನಸ್ನೇಹಿ ಹಾಗೂ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡಿದೆ. ಬಿಎಸ್‍ಎನ್‍ಎಲ್ ಇನ್ನೂ 3ಜಿ ಬಿಟ್ಟು ಮೇಲೆ ಬಂದಿಲ್ಲ. ಮೊಬೈಲ್ ಸಿಮ್ ಪಡೆದುಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಖಾಸಗಿ ಸೇವೆಯಿಂದ ಬಿಎಸ್‍ಎನ್‍ಎಲ್‍ಗೆ ಪೋರ್ಟ್ ಆಗಲು ಬಯಸುವವರು ಸರ್ಕಾರಿ ವ್ಯವಸ್ಥೆಯ ಕಿರಿಕಿರಿಯನ್ನು ಅನುಭವಿಸಲಾಗದೆ ಇರುವ ಸಂಪರ್ಕದಲ್ಲೇ ಮುಂದುವರೆಯುತ್ತಿರುವುದು ಕಂಡುಬಂದಿದೆ. +ಅದೇ ಬೇರೆ ಯಾವುದೇ ಸೇವೆಯಿಂದ ಖಾಸಗಿಗೆ ಪೋರ್ಟ್ ಆಗಲು ಎಸ್‍ಎಂಎಸ್ ಆಧಾರಿತ ಸೂಚನೆ ಕಳುಹಿಸಿದ ತಕ್ಷಣವೇ ನಿಮಗೆ ಕರೆ ಬರುತ್ತದೆ. ನೀವು ಪೋರ್ಟ್ ಆಗಲು ಬಯಸುವ ಸಂಸ್ಥೆಯ ಪ್ರತಿನಿಧಿ ನಿಮ್ಮ ಅನುಕೂಲಕರ ಸಮಯಕ್ಕೆ ಅನುಗುಣವಾಗಿ ಮನೆ ಅಥವಾ ಕಚೇರಿ ಬಾಗಿಲಿಗೆ ಬರಲು ಸಿದ್ದರಿರುತ್ತಾರೆ. ಬಿಎಸ್‍ಎನ್‍ಎಲ್‍ಗೆ ಪರಿವರ್ತನೆಯಾಗಬೇಕಾದರೆ ಕೇಂದ್ರ ಕಚೇರಿಗೆ ಭೇಟಿ ನೀಡಬೇಕು. ಅಲ್ಲಿನ ಸಿಬ್ಬಂದಿಗಳ ಸಮಯಕ್ಕೆ ಅನುಗುಣವಾಗಿ ಕಾದುಕುಳಿತುಕೊಳ್ಳಬೇಕು. ಅವರು ಕೇಳಿದ ಅಷ್ಟು ದಾಖಲಾತಿಗಳನ್ನು ಒದಗಿಸಿ ಸೇವೆ ಪಡೆದುಕೊಳ್ಳುವಷ್ಟರಲ್ಲಿ ಹೈರಾಣಾಗುವ ಸ್ಥಿತಿ ಇದೆ. +ಮತ್ತೊಂದು ಗೋದ್ರಾ ಹತ್ಯಾಕಾಂಡಕ್ಕೆ ಸಂಚು- ಬಿ.ಕೆ.ಹರಿಪ್ರಸಾದ್ +ದೂರ ಸಂಪರ್ಕ ಸೇವೆಯಷ್ಟೇ ಅಧ್ವಾನವಾಗಿಲ್ಲ. ಕಚೇರಿಯ ನೈರ್ಮಲೀಕರಣವೂ ಕೂಡ ಗಬ್ಬೆದ್ದು ಹೋಗಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. \ No newline at end of file diff --git a/eesanje/url_46_272_9.txt b/eesanje/url_46_272_9.txt new file mode 100644 index 0000000000000000000000000000000000000000..3afe189fc6382f4d1fd3cd32120386d393b099ad --- /dev/null +++ b/eesanje/url_46_272_9.txt @@ -0,0 +1,18 @@ +2023ರಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 68518 ಅಪರಾಧ ಪ್ರಕರಣಗಳು ದಾಖಲು +ಬೆಂಗಳೂರು, ಜ.03- ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 2022ರಲ್ಲಿ ಒಟ್ಟಾರೆ 46187 ಪ್ರಕರಣಗಳು ದಾಖಲಾದರೆ 2023ನೇ ಸಾಲಿನಲ್ಲಿ 68518 ಅಪರಾಧ ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳು ಹೆಚ್ಚಾಗಿವೆ. +ಸಾರ್ವಜನಿಕ ನಿರ್ಭೀತಿ ಮತ್ತು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸುವ ಬಗ್ಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಲಾಗಿದೆ. ಅಲ್ಲದೆ, ಕಂಟ್ರೋಲ್ ರೂಂ 112ಕ್ಕೆ ಬರುವ ಕರೆಗಳನ್ನು ಸಹ ದೂರುಗಳನ್ನಾಗಿ ಪರಿವರ್ತಿಸಿ ಪ್ರಕರಣ ದಾಖಲು ಮಾಡಿಕೊಂಡರೆ, ಇ-ಎಫ್‍ಐಆರ್ ವ್ಯವಸ್ಥೆಯನ್ನು ಸಾರ್ವಜನಿಕರಿಗೆ ರೂಪಿಸಲಾಗಿರುವುದರಿಂದ ಅಪರಾಧ ಪ್ರಕರಣಗಳು ಹೆಚ್ಚಾಗಿ ದಾಖಲಾಗಲು ಕಾರಣವಾಗಿವೆ. +ಮಾದಕ ವಸ್ತುಗಳ ವಿರುದ್ಧ ಕ್ರಮ:ನಗರಾದ್ಯಂತ ನಿಷೇಧಿತ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ 3433 ಪ್ರಕರಣಗಳನ್ನು ದಾಖಲಿಸಿ 103.21 ಕೋಟಿ ರೂ. ಮೌಲ್ಯದ 5387 ಕೆಜಿ ನಿಷೇತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು 4399 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ 99 ವಿದೇಶಿ ಪ್ರಜೆಗಳು ಒಳಗೊಂಡಿರುತ್ತಾರೆ. +ಆಸ್ತಿ ಜಪ್ತಿ:ಸಿಸಿಬಿ ಪೊಲೀಸರು ಪಿಟ್ ಎನ್‍ಡಿಪಿಎಸ್ ಕಾಯ್ದೆಯಡಿಯಲ್ಲಿ ಆರೋಪಿಯೊಬ್ಬನ ವಿರುದ್ಧ ಕ್ರಮ ಜರುಗಿಸಲಾಗಿದ್ದು, ಮಾದಕ ವಸ್ತುಗಳ ಮಾರಾಟ ಜಾಲದಲ್ಲಿ ತೊಡಗಿದ್ದ ಮತ್ತೊಬ್ಬ ಆರೋಪಿಯ ಆಸ್ತಿ ಜಪ್ತಿಗೆ ಕ್ರಮ ವಹಿಸಲಾಗಿದೆ. ಕಳೆದ ಸಾಲಿನಲ್ಲಿ ಒಟ್ಟು 111 ಕೋಟಿ ರೂ. ಮೌಲ್ಯದ 6425 ಕೆಜಿ ಮಾದಕ ವಸ್ತುಗಳನ್ನು ನಾಶಪಡಿಸಲಾಗಿದೆ. +ವಿದೇಶಿಯರ ಗಡಿಪಾರು:ನಗರದಲ್ಲಿ ವಾಸವಾಗಿದ್ದುಕೊಂಡು ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದ ವಿದೇಶಿಯರ ವಿರುದ್ಧ 92 ಪ್ರಕರಣಗಳನ್ನು ದಾಖಲಿಸಿ 126 ಮಂದಿಯನ್ನು ಬಂಧಿಸಿ, 247 ವಿದೇಶಿಯರನ್ನು ಗಡಿಪಾರು ಮಾಡಲಾಗಿರುತ್ತದೆ. +ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ +ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ:ಮಟ್ಕ-83 ಪ್ರಕರಣ 149 ಮಂದಿ ಬಂಧನ, ಜೂಜು- 231 ಪ್ರಕರಣ 2593 ಮಂದಿ ಬಂಧನ. ಕ್ರಿಕೆಟ್ ಬೆಟ್ಟಿಂಗ್- 147 ಪ್ರಕರಣದಲ್ಲಿ 229 ಬಂಧನ. ಆನ್‍ಲೈನ್ ಬೆಟ್ಟಿಂಗ್-1 ಪ್ರಕರಣ ಒಬ್ಬನ ಬಂಧನ, ಇತರೆ ಬೆಟ್ಟಿಂಗ್-19 ಪ್ರಕರಣ 44 ಮಂದಿ ಬಂಧನ, ಲಿಕ್ಕರ್-193 ಪ್ರಕರಣ 197 ಮಂದಿ ಬಂಧನ ಸೇರಿದಂತೆ ಅನಧಿಕೃತ ಕ್ಲಬ್‍ಗಳು, ಕಾಪಿರೇಟ್ ಕಾಯ್ದೆ, ಕೋಪ್ಟ ಕಾಯ್ದೆ, ಎನ್‍ಡಿಪಿಎಸ್ ಪ್ರಕರಣಗಳು ಸೇರಿದಂತೆ ಒಟ್ಟಾರೆ 5994 ಪ್ರಕರಣಗಳಲ್ಲಿ 9414 ಮಂದಿಯನ್ನು ಬಂಧಿಸಲಾಗಿದೆ. +45 ಆರೋಪಿಗಳ ಗಡಿಪಾರು:ಮುಂಜಾಗ್ರತ ಕ್ರಮದ ಅಡಿಯಲ್ಲಿ ಒಟ್ಟು 4799 ಪಿಎಆರ್ ಪ್ರಕರಣಗಳನ್ನು ದಾಖಲಿಸಲಾಗಿದೆ. ಮುಚ್ಚಳಿಕೆ ಉಲ್ಲಂಘನೆ ಮಾಡಿದ 30 ವ್ಯಕ್ತಿಗಳ ವಿರುದ್ಧ ಬಾಂಡ್ ಮೌಲ್ಯದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 10 ಮಂದಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದು, 45 ಆರೋಪಿಗಳನ್ನು ಗಡಿಪಾರು ಮಾಡಲಾಗಿರುತ್ತದೆ. +ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ:ನ್ಯಾಯಾಲಯದಲ್ಲಿ ಎಲ್‍ಪಿಆರ್ ಪ್ರಕರಣಗಳಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪೈಕಿ 99 ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈ ಸಾಲಿನಲ್ಲಿ 77 ಆರೋಪಿಗಳನ್ನು ಪತ್ತೆ ಮಾಡಿ 174ಎ ಐಪಿಸಿ ಅಡಿಯಲ್ಲಿ ಹಾಗೂ 212 ಆರೋಪಿಗಳನ್ನು ಪತ್ತೆ ಮಾಡಿ 229ಎ ಐಪಿಸಿ ಪ್ರಕರಣದಲ್ಲಿ ಬಂಧಿಸಿ ಕಾನೂನು ಕ್ರಮ ಜರುಗಿಸ ಲಾಗಿದೆ. +ರೌಡಿಗಳ ವಿರುದ್ಧ ಕ್ರಮ:ಮುಂಜಾಗ್ರತ ಕ್ರಮದ ಅಡಿಯಲ್ಲಿ ರೌಡಿಗಳ ವಿರುದ್ಧ ಒಟ್ಟು 4020 ಪಿಎಆರ್ ಪ್ರಕರಣಗಳನ್ನು ದಾಖಲಿಸಿ 229ಎ ಐಪಿಸಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, 14 ಮಂದಿ ರೌಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗುತ್ತದೆ. ತಲೆಮರೆಸಿಕೊಂಡಿರುವ ರೌಡಿಗಳ ಪೈಕಿ 324 ರೌಡಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಲಾಗಿದೆ. +ಶಿಕ್ಷೆಗಳ ವಿವರ:ಒಟ್ಟಾರೆ 21428 ಪ್ರಕರಣಗಳು ವಿಚಾರಣೆ ಪೂರೈಸಿ 15229 ಪ್ರಕರಣಗಳು ಶಿಕ್ಷೆಗೆ ನ್ಯಾಯಾಲಯವು ಆದೇಶಿಸಿರುತ್ತದೆ. 48 ಪ್ರಕರಣಗಳಲ್ಲಿ 65 ಜನ ಆರೋಪಿಗಳಿಗೆ 14 ವರ್ಷ ಜೀವಾವ ಶಿಕ್ಷೆ ವಿಧಿಸಲಾಗಿದೆ.11 ಪ್ರಕರಣಗಳಲ್ಲಿ 21 ಆರೋಪಿಗಳಿಗೆ 10ರಿಂದ 14 ವರ್ಷ ಶಿಕ್ಷೆ, 18 ಪ್ರಕರಣಗಳಲ್ಲಿ 19 ಮಂದಿಗೆ 7ರಿಂದ 10 ವರ್ಷ ಶಿಕ್ಷೆ, 28 ಪ್ರಕರಣಗಳಲ್ಲಿ 30 ಮಂದಿಗೆ 3ರಿಂದ 7 ವರ್ಷ ಶಿಕ್ಷೆ, 56 ಪ್ರಕರಣಗಳಲ್ಲಿ 68 ಮಂದಿಗೆ 1ರಿಂದ 3 ವರ್ಷ ಶಿಕ್ಷೆ, 41 ಪ್ರಕರಣಗಳಲ್ಲಿ 46 ಮಂದಿಗೆ ಒಂದು ವರ್ಷಕ್ಕಿಂತ ಕೆಳಪಟ್ಟು ಶಿಕ್ಷೆ ವಿಧಿಸಲಾಗಿದೆ.15026 ಪ್ರಕರಣಗಳಲ್ಲಿ 16817 ಆರೋಪಿಗಳಿಗೆ ದಂಡ ಶುಲ್ಕ ವಿಧಿಸಲಾಗಿದೆ. ಕಳೆದ ಸಾಲಿನಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಚುನಾವಣಾ ಬಂದೋಬಸ್ತ್, ಎಲ್ಲಾ ಧರ್ಮಗಳ ಹಬ್ಬಗಳು, ರಾಷ್ಟ್ರೀಯ ಹಬ್ಬಗಳು, ಜಾತ್ರೆ ಮತ್ತು ಮೆರವಣಿಗೆ, ಪಂಜಾಗಳನ್ನು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ. +ಎನ್‍ಡಿಪಿಎಸ್ ಪ್ರಕರಣಗಳು:ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಏ. 09ರಂದು ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ ಸುಮಾರು 7 ಕೋಟಿ ಮೊತ್ತದ 2 ಕೆಜಿ 997 ಗ್ರಾಂ ತೂಕದ ಕೊಕೈನ್, ಎಂಡಿಎಂಎ ಮತ್ತು ಎಕ್ಸ್‍ಟಸಿ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. +ಸಿಸಿಬಿ ಪೊಲೀಸರು ಜೂನ್ 22ರಂದು ಮೂವರು ಅಂತರ್ ರಾಜ್ಯ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ ಸುಮಾರು 11.44 ಕೋಟಿ ರೂ. ಮೌಲ್ಯದ 1438 ಕೆಜಿ ತೂಕದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.ನ. 5ರಂದು ಸಿಸಿಬಿ ಪೊಲೀಸರು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೈಜೀರಿಯಾ ದೇಶದ ಪ್ರಜೆಯನ್ನು ಬಂಧಿಸಿ ಸುಮಾರು 10 ಕೋಟಿ ರೂ. ಬೆಲೆ ಬಾಳುವ ಎಂಡಿಎಂಎ, ಸೋಡಿಯಂ ಹೈಡ್ರಾಕ್ಸೈಡ್, ಹೈಡ್ರೋಕ್ಲೋರಿಕ್ ಆಸಿಡ್ ಮತ್ತು ಅಸೆಟಾಲ್‍ನ್ನು ವಶಪಡಿಸಿಕೊಂಡಿದ್ದಾರೆ. +ಇತರೆ ಪ್ರಕರಣಗಳು:ಸಾಹಿತಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ, ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡುತ್ತಿದ್ದ ಜಾಲವನ್ನು ಭೇದಿಸಿ ವೈದ್ಯರು, ಸಹಚರರು, ಏಜೆಂಟ್‍ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್ ರನ್ನು ಬಂಸುವಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.ಸಿಸಿಬಿ ಪೊಲೀಸರು ಮಕ್ಕಳ ಮಾರಾಟ ಜಾಲವನ್ನು ಪತ್ತೆ ಮಾಡಿ ಮಕ್ಕಳ ಕಳ್ಳ ಸಾಗಣೆ ಮಾಡುತ್ತಿದ್ದ ಅಂತರ್ ರಾಜ್ಯ ಜಾಲವನ್ನು ಭೇದಿಸಿ ತಮಿಳು ನಾಡು ಮೂಲದ ಮಹಿಳೆ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. +ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ ದುಷ್ಕರ್ಮಿ +ಬ್ಯಾಂಕ್ ಖಾತೆ ತೆರೆದು ಸಾಮಾಜಿಕ ಜಾಲತಾಣಗಳಾದ ವಾಟ್ಸ್‍ಪ್ ಮತ್ತು ಟೆಲಿಗ್ರಾಂ ಆಪ್‍ಗಳ ಮೂಲಕ ಹಣವನ್ನು ಹೂಡಿಕೆ ಮಾಡಿಸಿ ಜನರಿಗೆ ಕೋಟ್ಯಾಂತರ ರೂ. ವಂಚಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳು ದೇಶಾದ್ಯಂತ 5013 ಮಂದಿಯಿಂದ ಸುಮಾರು 854 ಕೋಟಿ ರೂ. ಹಣವನ್ನು ವಂಚನೆ ಮಾಡಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. +ಲೋಕಸ್ಪಂದನ/ ಕ್ಯೂಆರ್ ಕೋಡ್:ಠಾಣಾ ಮಟ್ಟದಲ್ಲಿ ಪೊಲೀಸ್ ಸೇವೆಯಲ್ಲಿ ಲೋಪದೋಷವನ್ನು ಗುರುತಿಸಲು, ಭ್ರಷ್ಟಾಚಾರ ತಡೆಗಟ್ಟಲು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಲೋಕಸ್ಪಂದನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.ಸೈಬರ್ ಅಪರಾಧ ಪ್ರಕರಣಗಳ ಜಾಗೃತಿ:ಸೈಬರ್ ಅಪರಾಧ ಪ್ರಕರಣಗಳ ಜಾಗೃತಿ ಕುರಿತಂತೆ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸೈಬರ್ ಟಿಪ್ ಆಫ್ ದಿ ಡೇ ಹಾಗೂ ಪಾತಾಳ ಗರಡಿ ಮುಂತಾದ ಕಾರ್ಯಕ್ರಮವನ್ನು ನಡೆಸಲಾಗಿದೆ. \ No newline at end of file diff --git a/eesanje/url_46_273_1.txt b/eesanje/url_46_273_1.txt new file mode 100644 index 0000000000000000000000000000000000000000..dd8aad6000734127a26267c9a782e17639a2a75e --- /dev/null +++ b/eesanje/url_46_273_1.txt @@ -0,0 +1,7 @@ +ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ +ಬೆಂಗಳೂರು,ಜ.3- ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿದೆ.ರಾಜಧಾನಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರು, ಚಾಮರಾಜನಗರ, ದಾವಣಗೆರೆ, ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. +ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಮಾಜಿ ಸಚಿವರು, ಶಾಸಕರು, ಸಂಸದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ನಗರದ ಫ್ರೀಡಂಪಾರ್ಕ್‍ನಲ್ಲಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. +ಹೊಸ ಕಾನೂನು ಮಸೂದೆ ಆಧ್ಯಯನಕ್ಕೆ ಮುಂದಾದ ದೆಹಲಿ ಪೊಲೀಸರು +ಅತ್ತ ಹುಬ್ಬಳ್ಳಿಯಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.ಈ ವೇಳೆ ಪ್ರತಿಭಟನಾನಿರತರು ಹಾಗೂ ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಾರೀ ಬಿಗಿಭದ್ರತೆಯನ್ನು ಕೈಗೊಳ್ಳಲಾಗಿತ್ತು. +ಇದೇ ರೀತಿ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಲ್ಪಸಂಖ್ಯಾತರನ್ನು ತುಷ್ಟೀಕರಣ ಮಾಡಲು 31 ವರ್ಷಗಳ ಹಿಂದಿನ ಪ್ರಕರಣವನ್ನು ಕೆದಕಿ ರಾಮ ಜನ್ಮಭೂಮಿಗಾಗಿ ಹೋರಾಟ ನಡೆಸಿದ ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದೆ. ಬರುವ ದಿನಗಳಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. +ಹಿಂದೂ ಕಾರ್ಯಕರ್ತರನ್ನು ಇದೇ ರೀತಿ ಬಂಧಿಸಿದರೆ ರಾಷ್ಟ್ರ ಮಟ್ಟದಲ್ಲೂ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ. ತಕ್ಷಣವೇ ಬಂಧಿಸಿರುವ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಕುಲಕರ್ಣಿಯನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಇಡೀ ದೇಶವೇ ರಾಮಮಂದಿರ ನಿರ್ಮಿಸಿದ್ದಕ್ಕಾಗಿ ಸಂಭ್ರಮದಲ್ಲಿದೆ. ಆದರೆ ಒಂದು ಸಮುದಾಯವನ್ನು ತೃಪ್ತಿಪಡಿಸಲು ಸರ್ಕಾರ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಬಂಧಿಸುವ ಕೆಲಸಕ್ಕೆ ಕೈ ಹಾಕಿದೆ. ರಾಮಭಕ್ತರು ಸಿಡಿದೆದ್ದರೆ ಯಾವ ಸರ್ಕಾರವೂ ಉಳಿಯುವುದಿಲ್ಲ. ಇದೇ ರೀತಿ ಹಿಂದೂ ವಿರೋಧಿ ಧೋರಣೆ ಅನುಸರಿಸಿದರೆ ದೇಶದ ಜನತೆಯೇ ಮುಗಿಬೀಳಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು. \ No newline at end of file diff --git a/eesanje/url_46_273_10.txt b/eesanje/url_46_273_10.txt new file mode 100644 index 0000000000000000000000000000000000000000..59594915521db7a01214e37d4e844d1fd8ad10dc --- /dev/null +++ b/eesanje/url_46_273_10.txt @@ -0,0 +1,10 @@ +ಆಧಾರ್ ಲಿಂಕ್ ನಂತರ ರೈತರಿಗೆ ಬರ ಪರಿಹಾರ : ಸಿಎಂ ಸಿದ್ದರಾಮಯ್ಯ +ಕೊಪ್ಪಳ/ವಿಜಯಪುರ,ಜ.2- ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕಿರುವು ದರಿಂದ ಬರ ಪರಿಹಾರ ಪಾವತಿ ವಿಳಂಬವಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸಕ್ಕಾಗಿ ಕೊಪ್ಪಳದ ಗಿಣಿ ಗೇರ ಏರ್‌ಸ್ಟ್ರಿಪ್‌ಗೆ ಬಂದಿಳಿದ ಮುಖ್ಯಮಂತ್ರಿಗಳು ಸುದ್ದಿಗಾರ ರೊಂದಿಗೆ ಮಾತನಾಡಿದರು.ಬೆಳೆನಷ್ಟಕ್ಕೆ ತಾತ್ಕಾಲಿಕವಾಗಿ 2 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ. ಅದನ್ನು ಶೀಘ್ರವೇ ಪಾವತಿ ಮಾಡಲಾಗುವುದು. ಸದ್ಯಕ್ಕೆ ಖಾತೆಗಳಿಗೆ ಆಧಾರ್ ಲಿಂಕ್ ಜೋಡಣೆಯಾಗಬೇಕಿರುವುದರಿಂದ ತಡವಾಗುತ್ತಿದೆ ಎಂದು ಹೇಳಿ ನಿರ್ಗಮಿಸಿದರು. +ಇದಕ್ಕೂ ಮುನ್ನ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವೆ ಖಾಯಂಗೊಳಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. ನಾನು ಅವರೊಂದಿಗೆ ಈಗಾಗಲೇ ಚರ್ಚೆ ನಡೆಸಿದ್ದೇನೆ. ಅದರ ಬಳಿಕವೂ ಪ್ರತಿಭಟನೆ ಮುಂದುವರೆಸಿದ್ದಾರೆ. ಸೇವೆ ಖಾಯಂಗೊಳಿಸುವುದು ಕಷ್ಟದ ಕೆಲಸ ಎಂದರು. +ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಇಲ್ಲ: ಚೆಲುವರಾಯಸ್ವಾಮಿ +ರಾಮಮಂದಿರ ಉದ್ಘಾಟನೆಯ ದಿನ ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಘೋಷಣೆಯನ್ನು ಮುಖ್ಯಮಂತ್ರಿ ತಳ್ಳಿಹಾಕಿದರು. ಕಾರ್ಯಕ್ರಮ ಮಾಡುತ್ತಿರುವುದು ಕೇಂದ್ರ ಸರ್ಕಾರ. ಅವರೇ ಸರ್ಕಾರದ ರಜೆ ಘೋಷಣೆ ಮಾಡಲಿ ಎಂದು ತಿರುಗೇಟು ನೀಡಿದರು. ರಾಮಮಂದಿರ ಉದ್ಘಾಟನೆಗೆ ಯಾರನ್ನು ಕರೆಯಬೇಕು, ಕರೆಯಬಾರದು ಎಂಬುದು ಅವರಿಗೆ ಸಂಬಂಧಪಟ್ಟ ವಿಚಾರ. ಯಾರಿಗೆಲ್ಲಾ ಆಹ್ವಾನ ಹೋಗಿದೆ, ಹೋಗಿಲ್ಲ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ. ಆಹ್ವಾನ ಇದ್ದವರು ಹೋಗಬಹುದು, ಇಲ್ಲದೇ ಇದ್ದವರು ಗೈರುಹಾಜರಾಗುತ್ತಾರೆ ಎಂದು ತಿಳಿಸಿದರು. +ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ತಪ್ಪು ಮಾಡಿದ್ದರೆ ಅವರನ್ನು ಹಾಗೆಯೇ ಬಿಟ್ಟು ಬಿಡೆಬೇಕೆ? ಎಂದು ಮರು ಪ್ರಶ್ನಿಸಿದರು. ಹಳೆಯ ಬಾಕಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಸೂಚನೆ ನೀಡಲಾಗಿದೆ. ಅದರ ಪ್ರಕಾರ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಇದರಲ್ಲಿ ದ್ವೇಷದ ರಾಜಕಾರಣವಾಗಲಿ, ನಿರಪರಾಧಿಗಳನ್ನು ಬಂಧಿಸುವುದಾಗಲೀ ನಡೆದಿಲ್ಲ ಎಂದು ಸಮರ್ಥಿಸಿಕೊಂಡರು. +ನ್ಯಾಯಾಲಯದ ನಿರ್ದೇಶನಗಳಿದ್ದರೆ ಸರ್ಕಾರ ಅದರ ಅನುಸಾರವೂ ನಡೆದುಕೊಳ್ಳಲಿದೆ ಎಂದು ಹೇಳಿದರು.ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಕಾಂಗ್ರೆಸ್ ಸರ್ಕಾರ ಐಸಿಸ್ ಸರ್ಕಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‍ಜೋಷಿ ನೀಡಿದ ಹೇಳಿಕೆಗೆ ತಿರುಗೇಟು ನೀಡಿ, ಅಪರಾಧಿ ಎಂದಿಗೂ ಅಪರಾಧಿಯೇ. ಸಮಯ ಆಗಿದೆ ಎಂದಾಕ್ಷಣ ಅಪರಾಧ ಕಳೆದು ಹೋಗಿದೆ ಎಂದರ್ಥವಲ್ಲ. +ನ್ಯಾಯಾಲಯ ನಿರಪರಾಧಿ ಎಂದು ಘೋಷಿಸುವವರೆಗೂ ಅಪರಾಧ ಚಾಲ್ತಿಯಲ್ಲಿರುತ್ತದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಕಾನೂನು ಗೊತ್ತಿಲ್ಲವೇ ಎಂದು ಹುಬ್ಬಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಿರುಗೇಟು ನೀಡಿದರು. +ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ +ಗೃಹಸಚಿವರು ಹಳೆ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕೆಂದು ಹೇಳಿದ್ದಾರೆ. ಇದರ ಪ್ರಕಾರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ವಿಳಂಬವಾದಾಕ್ಷಣ ಕ್ರಮ ಕೈಗೊಳ್ಳಬಾರದು ಎಂದಿದೆಯೇ, ಸರ್ಕಾರ ಕಾನೂನಿನ ಪ್ರಕಾರ ನಡೆದುಕೊಂಡಿದೆ. ಪ್ರಹ್ಲಾದ್ ಜೋಷಿಯೇನು ಕಾನೂನು ತಜ್ಞರಲ್ಲ ಅಥವಾ ಅವರು ನ್ಯಾಯಾಲಯವೂ ಅಲ್ಲ, ಅವರು ಹೇಳಿದ್ದೆಲ್ಲವೂ ವೇದವಾಕ್ಯವೂ ಅಲ್ಲ. ಕಾನೂನು ಪ್ರಕಾರ ಮಾತನಾಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಅಪರಾಧಿಗಳಿಗೆ ಕುಮ್ಮಕ್ಕು ನೀಡುವ ಮೂಲಕ ಬಿಜೆಪಿಯವರು ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_273_11.txt b/eesanje/url_46_273_11.txt new file mode 100644 index 0000000000000000000000000000000000000000..868c50ade560a533f2091c11a17d252c536c5208 --- /dev/null +++ b/eesanje/url_46_273_11.txt @@ -0,0 +1,10 @@ +ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಇಲ್ಲ: ಚೆಲುವರಾಯಸ್ವಾಮಿ +ಬೆಂಗಳೂರು,ಜ.2- ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಯಾರೂ ಇಲ್ಲ. ಆದರೆ ವಿರೋಧ ಪಕ್ಷಗಳಿಂದ 10ರಿಂದ 15 ಮಂದಿ ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ ಎಂದು ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಅಥವಾ ನಂತರ 10-15 ಮಂದಿ ಕಾಂಗ್ರೆಸ್‍ಗೆ ಬರಲು ತಯಾರಾಗಿದ್ದಾರೆ. 136 ಶಾಸಕರನ್ನು ಹೊಂದಿರುವ ಪ್ರಬಲ ಬಹುಮತ ಇರುವ ಸರ್ಕಾರ ಅಸ್ಥಿರವಾಗಲಿದೆ ಎಂದು ವಿರೋಧ ಪಕ್ಷದವರು ಹೇಳಿದರೆ ನಂಬುತ್ತೀರಾ ಎಂದು ಪ್ರಶ್ನಿಸಿದರು. +ನಾವು ಕಿವಿಯಲ್ಲಿ ಹೂ ಮುಡಿದಿಲ್ಲ. ನಮಗೂ ರಾಜಕೀಯ ಮಾಡಲು ಬರುತ್ತದೆ. ಐದು ವರ್ಷ ನಮ್ಮ ಸರ್ಕಾರ ಸುಭದ್ರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಬಿಜೆಪಿ ಮೈತ್ರಿ ಬಹಳಷ್ಟು ಮಂದಿಗೆ ಇಷ್ಟವಿಲ್ಲ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಉಂಟಾಗಿರುವ ಅಸಮಾಧಾನವನ್ನು ತಣಿಸಲು ಈ ರೀತಿ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದರು. +ಅಭ್ಯರ್ಥಿ ಅಲ್ಲ:ಮುಂಬರುವ ಲೋಕಸಭೆ ಚುನಾವಣೆಗೆ ನಾನು ಸ್ರ್ಪಧಿಸುವುದಿಲ್ಲ. ನಮ್ಮ ಕುಟುಂಬದಿಂದಲೂ ಯಾರೂ ಸ್ರ್ಪಧಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಪಕ್ಷದ ಹೈಕಮಾಂಡ್ ಕೂಡ ಹೇಳಿಲ್ಲ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಣಕ್ಕಿಳಿಸುತ್ತೇವೆ ಎಂದರು. +ಜ. 5ರಿಂದ ಮೂರು ದಿನ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪರ್ಧೆ ಮಾಡುವುದು ಅವರಿಗೆ ಬಿಟ್ಟಿದ್ದು, ಎದುರಾಳಿ ಸ್ಪರ್ಧೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಲಿ ನಮ್ಮ ಅಭ್ಯರ್ಥಿ ಗೆಲುವಷ್ಟೇ ಮುಖ್ಯವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇನೆ ಎಂದರು.ಹಿಂದಿನ ಸರ್ಕಾರದಲ್ಲಿ ಮೂರು ಮಂದಿ ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದರು. +ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಭರವಸೆ ನೀಡಿ ಜನರು ಬಹುಮತ ನೀಡಿದ್ದಾರೆ. ಬಿಜೆಪಿ ಜೆಡಿಎಸ್‍ನ್ನು ಜನರು ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಗೆ ಅವರ ಆಡಳಿತ, ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಹೋಗಲು ಸಾಧ್ಯವಾಗದೆ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. +ರಾಜಕಾರಣ:ಅಯೋಧ್ಯೆಯ ಶ್ರೀರಾಮ ಮಂದಿರದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಶ್ರೀರಾಮ, ರಾಮಮಂದಿರ ಎಲ್ಲರಿಗೂ ಸೇರಬೇಕು. ನಾವು ದೇವರು, ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತೇವೆ. ಅಭಿವೃದ್ಧಿ ವಿಚಾರಗಳನ್ನು ಚರ್ಚೆ ಮಾಡಲು ಬಯಸುತ್ತೇವೆ ಎಂದರು. ಹಳೆಯ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ಸೂಚಿಸಿದೆಯೇ ಹೊರತು ಯಾವುದೇ ಕೇಸನ್ನು ಹಾಕಿ ಜನರಿಗೆ ತೊಂದರೆ ಕೊಡಿ ಎಂದು ಹೇಳಿಲ್ಲ ಎಂದು ಬಿಜೆಪಿ ಆರೋಪವನ್ನು ನಿರಾಕರಿಸಿದರು. +ಮಾಹಿತಿ ಬಂದಿಲ್ಲ:ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಮುಖ್ಯಮಂತ್ರಿ ಹಾಗೂ ಸಚಿವರು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. +ರಾಷ್ಟ್ರದಲ್ಲೇ ಮೊದಲ ಬಾರಿಗೆ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆವು. ತ್ವರಿತವಾಗಿ ಸ್ಪಂದಿಸಿದ ಕೇಂದ್ರ ಅಧ್ಯಯನ ತಂಡ ಕಳುಹಿಸಿತು. ಆ ತಂಡ ರಾಜ್ಯದಲ್ಲಿ ಪರಿಶೀಲನೆ ನಡೆಸಿ ವರದಿಯನ್ನೂ ಕೊಟ್ಟಿದೆ. ಆದರೆ ರೀತಿಯ ಸ್ಪಂದನೆಯ ಕೆಲಸ ಆಗಿಲ್ಲ. ಮತ್ತೊಮ್ಮೆ ಮನವಿ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು. \ No newline at end of file diff --git a/eesanje/url_46_273_12.txt b/eesanje/url_46_273_12.txt new file mode 100644 index 0000000000000000000000000000000000000000..138f7de441aaffc30dc56b344a3f6441ba61549d --- /dev/null +++ b/eesanje/url_46_273_12.txt @@ -0,0 +1,4 @@ +ಅನಕ್ಷರಸ್ಥ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಅಮೋಘ ಸಾಧನೆಗಳು +ಬೆಂಗಳೂರು,ಜ.2- ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು ಎಂದು ಟ್ವೀಟ್ ಮೂಲಕ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ. ಅಪ್ರಯೋಜಕ ಅಸಮರ್ಥರ ಕೈಗೆ ಶಿಕ್ಷಣ ಇಲಾಖೆಯನ್ನು ಕೊಟ್ಟರೆ ಏನಾಗುತ್ತದೆ ಅನ್ನುವುದಕ್ಕೆ ಈ ಪ್ರಕರಣಗಳೇ ಸಾಕ್ಷಿ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. +ಅಧಿಕಾರಕ್ಕೆ ಬಂದ ದಿನದಿಂದ ಅನಕ್ಷರಸ್ಥ ಶಿಕ್ಷಣ ಸಚಿವ@Madhu_Bangarappಅವರ ಅಮೋಘ ಸಾಧನೆಗಳು:▪ ಶಾಲಾ ಮಕ್ಕಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್▪ ಚೆಕ್ ಬೌನ್ಸ್ ಮಾಡಿಸಿ ವಂಚನೆ▪ ಪಠ್ಯ‌ ಪರಿಷ್ಕರಣೆ ಮೂಲಕ ಎಡಬಿಡಂಗಿ ಸಿದ್ಧಾಂತ ಹೇರಿಕೆ▪ ಮೊಟ್ಟೆ ವಿತರಣೆ ಶಿಕ್ಷಕರ ಜೇಬಿಗೆ ಕತ್ತರಿ▪ ಅಪಾಯದ ಸ್ಥಿತಿಯಲ್ಲಿ ಶಾಲಾ‌ ಕಟ್ಟಡಗಳು… +ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಮೋಘ ಸಾಧನೆಗಳು \ No newline at end of file diff --git a/eesanje/url_46_273_2.txt b/eesanje/url_46_273_2.txt new file mode 100644 index 0000000000000000000000000000000000000000..82efa15c7c1937cfc56a8de0ce72e90c1ec8b25c --- /dev/null +++ b/eesanje/url_46_273_2.txt @@ -0,0 +1,9 @@ +ಬರ ಪರಿಹಾರ ಅನುದಾನ ಬಿಡುಗಡೆಗೆ ಕಾಂಗ್ರೆಸ್ ಒತ್ತಾಯ +ಬೆಂಗಳೂರು, ಜ.3- ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಕರ್ನಾಟಕದಿಂದ 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. +ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ. ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ. +ಜಪಾನ್ ಭೂಕಂಪಕ್ಕೆ 62 ಬಲಿ, ಮುಂದುವರೆದ ರಕ್ಷಣಾ ಕಾರ್ಯಚರಣೆ +ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎನ್.ಡಿ.ಆರ್.ಎಫ್. ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟೊ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. +ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ? ಎಂದು ಸುರ್ಜೆವಾಲಾ ಕಟುವಾಗಿ ಪ್ರಶ್ನಿಸಿದ್ದಾರೆ. +ಕೇವಲ ಬರ ಪರಿಹಾರ ಮಾತ್ರವಲ್ಲ ಜಿಎಸ್ ಟಿಯ ರಾಜ್ಯದ ಪಾಲು, ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುವುದು ಬಾಕಿ ಇದೆ. 14 ನೇ ಹಣಕಾಸು, 15 ನೇ ಹಣಕಾಸು ಸೇರಿ ಕೇಂದ್ರ ಪುರಸ್ಕೃತ ಯೋಜನೆಗೆ ಬರಬೇಕಾದ ಸುಮಾರು 42 ಸಾವಿರ ಕೋಟಿ ರೂ. ಅನುದಾನ ಬಾಕಿ ಇದೆ. ಆ ಅನುದಾನವನ್ನೂ ಶೀಘ್ರ ಬಿಡುಗಡೆ ಮಾಡಬೇಕು ಎಂದು ಸುರ್ಜೆವಾಲಾ ಒತ್ತಾಯಿಸಿದ್ದಾರೆ. +ಸಂಸದರು ಏನು ಮಾಡುತ್ತಿದ್ದಾರೆ ?ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಸರ್ಕಾರದಿಂದ ಪರಿಹಾರದ, ನೆರವಿನ ನಿರೀಕ್ಷೆಯಲ್ಲಿದ್ದಾರೆ. ರಾಜ್ಯದಿಂದ 26 ಬಿಜೆಪಿಯಿಂದ ಆಯ್ಕೆಯಾದ ಹಾಗೂ ಒಬ್ಬರು ಬಿಜೆಪಿ ಬೆಂಬಲಿತ ಸಂಸದರಿದ್ದಾರೆ. ಈಗ ಅವರು ಏನು ಮಾಡುತ್ತಿದ್ದಾರೆ ಎಂಬುದೇ ಅರ್ಥವಾಗದು. ಜನರ ಮುಂದೆ ಹೇಗೆ ಮುಖ ಹೊತ್ತು ಹೋಗುತ್ತಾರೆ ? ಎಂದು ಸುರ್ಜೆವಾಲಾ ಪ್ರಶ್ನಿಸಿದ್ದಾರೆ.ಈ ಎಲ್ಲ ಸಂಸದರು ರಾಜಕೀಯ ಮಾಡದೇ ರೈತರ ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬೇಕು. ಪ್ರಧಾನಿ ಅವರನ್ನು ಭೇಟಿಯಾಗಿ ಅನುದಾನ ಬಿಡುಗಡೆಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_273_3.txt b/eesanje/url_46_273_3.txt new file mode 100644 index 0000000000000000000000000000000000000000..2911058a307ec061d923733ad48b7a8d64ab0ee3 --- /dev/null +++ b/eesanje/url_46_273_3.txt @@ -0,0 +1,6 @@ +ದರೋಡೆಗೆ ಹೊಂಚು ಹಾಕಿದ್ದ 6 ಮಂದಿ ಬಂಧನ +ಬೆಂಗಳೂರು,ಜ.2- ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ, ಬೆಲೆ ಬಾಳುವ ವಸ್ತು ಗಳನ್ನು ದೋಚಲು ಹೊಂಚು ಹಾಕುತ್ತಿದ್ದ ಆರು ಮಂದಿ ದರೋಡೆ ಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಂದನ್, ಮನು, ಪವನ್, ಲೋಕೇಶ್, ದರ್ಶನ್ ಮತ್ತು ವಸಂತ್ ಬಂಧಿತ ಆರೋಪಿಗಳು. +ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ವೀರಣ್ಣಪಾಳ್ಯ ಹಿಂದು ರುದ್ರಭೂಮಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕ ರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಹಣ ಮತ್ತು ಬೆಲೆ ಬಾಳುವ ವಸ್ತುಗಳನ್ನು ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರು ಮಂದಿಯನ್ನು ಬಂಧಿಸಿ ಮಾರಕಾಸ್ತ್ರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಮೂರು ಬೈಕ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. +ರೈತರು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್! +ಆರೋಪಿಗಳ ಪೈಕಿ ಮನು ವಿರುದ್ಧ 2018ನೇ ಇಸವಿಯಲ್ಲಿ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಕಾಯಿತಿ ಪ್ರಕರಣ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ದಾಳಿಯನ್ನು ಸಿಸಿಬಿಯ ಸಂಘಟಿತ ಅಪರಾಧ ದಳ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿರುತ್ತಾರೆ. +ಆರೋಪಿಗಳ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿರುತ್ತದೆ. \ No newline at end of file diff --git a/eesanje/url_46_273_4.txt b/eesanje/url_46_273_4.txt new file mode 100644 index 0000000000000000000000000000000000000000..9dc2c157f9761e46a7b522734f70e8003c57bb38 --- /dev/null +++ b/eesanje/url_46_273_4.txt @@ -0,0 +1,7 @@ +ರೈತರು, ಕನ್ನಡಪರ ಹೋರಾಟಗಾರರ ಕೇಸ್ ವಾಪಸ್! +ಬೆಂಗಳೂರು,ಜ.2- ರೈತರು, ಕನ್ನಡಪರ ಹೋರಾಟ ಗಾರರು ಸೇರಿದಂತೆ ಅಮಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ಪೈಕಿ 300 ರಿಂದ 400 ರಷ್ಟನ್ನು ಹಿಂಪಡೆಯಬೇಕು ಎಂದು ಅರ್ಜಿಗಳು ಬಂದಿದ್ದು, ಅವುಗಳನ್ನು ಪರಿಶೀಲಿಸಲಾ ಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಏಕಾಏಕಿ ಪ್ರಕರಣಗಳನ್ನು ಹಿಂಪಡೆಯು ವುದಿಲ್ಲ. ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗು ವುದು. +ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು. +ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ ಎಂದು ಹೇಳಿದರು. ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ ಎಂದರು. +ಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ +ಬಿಜೆಪಿಯವರು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುವುದು ಅನಗತ್ಯ. ಹಳೆಯ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾದರೂ ಆಗಬೇಕು, ಶಿಕ್ಷೆಗಾದರೂ ಒಳಗಾಗಬೇಕು. ಎಷ್ಟು ದಿನ ಎಂದು ಅವು ಬಾಕಿ ಪ್ರಕರಣಗಳಲ್ಲಿ ನನೆಗುದಿಯಲ್ಲಿರಲು ಸಾಧ್ಯ. ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಮುಖಂಡರೂ ಕೂಡ ಅಧಿಕಾರ ನಡೆಸಿದ್ದಾರೆ. ಅವರಿಗೆ ಈ ವಿಚಾರ ಗೊತ್ತಿಲ್ಲವೇ ಎಂದು ತಿರುಗೇಟು ನೀಡಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ವಹಿಸುವಾಗ ನಿಯಮ ಪಾಲನೆಯಾಗಿಲ್ಲ ಎಂಬ ಲೋಪ ಕಂಡುಬಂದಿದೆ. ಅದನ್ನು ಸರಿಪಡಿಸಲು ನಾವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದೇವೆ. ಮುಂದಿನ ತನಿಖೆಗೆ ಪ್ರಕರಣವನ್ನು ಲೋಕಾಯುಕ್ತಕ್ಕೆ ಒಪ್ಪಿಸಲಾಗಿದೆ. ಇದು ಸರ್ಕಾರದ ಆದೇಶ. ನಂತರದ ಬೆಳವಣಿಗೆಯಲ್ಲಿ ಲೊಕಾಯುಕ್ತರು ಸಿಬಿಐ ಅಧಿಕಾರಿಗಳು ಸಂಪರ್ಕಿಸಿ ದಾಖಲಾತಿಗಳನ್ನು ಪಡೆದುಕೊಳ್ಳಬೇಕು. ಒಂದು ವೇಳೆ ಸಿಬಿಐನವರು ನಾವೇ ತನಿಖೆ ಮುಂದುವರೆಸುತ್ತೇವೆ ಎಂದರೆ ಅದರಿಂದಾಗುವ ಕಾನೂನು ವಿಚಾರಗಳ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_273_5.txt b/eesanje/url_46_273_5.txt new file mode 100644 index 0000000000000000000000000000000000000000..0fe55bbac2c000f924156b0622302e87d86c7414 --- /dev/null +++ b/eesanje/url_46_273_5.txt @@ -0,0 +1,6 @@ +ಕೆಎಸ್ ಡಿಎಲ್: ಮಾರ್ಜಕಗಳ ಮಾರಾಟದಲ್ಲಿ 40 ವರ್ಷಗಳಲ್ಲೇ ದಾಖಲೆ ವಹಿವಾಟು! +ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. +ಈ ಬಗ್ಗೆ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಳೆದ ತಿಂಗಳು ಕೆಎಸ್ಡಿಎಲ್ 852 ಟನ್ ಮಾರ್ಜಕಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ 775 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು ಇದುವರೆಗಿನ ದಾಖಲೆಯಾಗಿತ್ತು’ ಎಂದಿದ್ದಾರೆ. +ಕೆಎಸ್ಡಿಎಲ್ ನಲ್ಲಿ ಇದುವರೆಗೆ ಮಾರ್ಜಕಗಳ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ, ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರವಿತ್ತು. ಸರಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈಗ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಸಂಸ್ಥೆಯು ಮೊದಲಿನಿಂದಲೂ ಸಾಬೂನು ತಯಾರಿಕೆಗೆ ಹೆಸರುವಾಸಿಯಾಗಿದ್ದು, ಮಾರುಕಟ್ಟೆ ಕೂಡ ಅದರ ಸುತ್ತಲೇ ಕೇಂದ್ರೀಕೃತವಾಗಿತ್ತು. ಇತ್ತೀಚೆಗೆ ಮಾರ್ಜಕಗಳ ಉತ್ಪಾದನೆಯತ್ತಲೂ ಹೆಚ್ಚಿನ ಗಮನ ಹರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಅದು ಈಗ ಫಲ ನೀಡಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಂಪನಿಗಳ ಮಾರ್ಜಕಗಳಿಗೆ ಸಡ್ಡು ಹೊಡೆಯುವ ರೀತಿಯಲ್ಲಿ ಮಾರುಕಟ್ಟೆ ಜಾಲವನ್ನು ಕೂಡ ಅಖಿಲ ಭಾರತ ಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. +ಹೋದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ 2023-24ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಹೋದ ಸಾಲಿನಲ್ಲಿ 118 ಕೋಟಿ ರೂ. ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ ಮೊದಲ ಒಂಬತ್ತು ತಿಂಗಳಲ್ಲಿ ಸಂಸ್ಥೆಯು 1171.07 ಕೋಟಿ ರೂ. ಮೊತ್ದದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು 1,404 ಕೋಟಿ ರೂ. ವಹಿವಾಟು ನಿಗದಿ ಪಡಿಸಲಾಗಿದ್ದು, ಇದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಎಂ ಬಿ ಪಾಟೀಲ ಹೇಳಿದ್ದಾರೆ. \ No newline at end of file diff --git a/eesanje/url_46_273_6.txt b/eesanje/url_46_273_6.txt new file mode 100644 index 0000000000000000000000000000000000000000..cde9f033960d8cefe1d6a691ea75d5f5a3149961 --- /dev/null +++ b/eesanje/url_46_273_6.txt @@ -0,0 +1,8 @@ +ಕೋವಿಡ್ ಮೇಲೆ ನಿಗಾ: ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ +ಬೆಂಗಳೂರು,ಜ.2- ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಲಾಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತ ರಾಥೋಡ್, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. +ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರಣಪ್ರಕಾಶ್ ಪಾಟೀಲ್, ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಅದನ್ನು ನಿಯಂತ್ರಿಸುವುದು ಮತ್ತು ಚಿಕಿತ್ಸೆಗೆ ಪೂರ್ವ ತಯಾರಿ ಮಾಡಿಕೊಳ್ಳುವುದಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಆಮ್ಲಜನಕದ ಬೆಡ್‍ಗಳು, ತುರ್ತು ಚಿಕಿತ್ಸಾ ಘಟಕಗಳು, ವೆಂಟಿಲೇಟರ್ ಸೇರಿದಂತೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆಗಳನ್ನು ಸಜ್ಜುಗೊಳಿಸಿಕೊಳ್ಳಲು ಸೂಚಿಸಲಾಗಿದೆ. ಕಳೆದ ಬಾರಿಯಾದಂತೆ ಆಕ್ಸಿಜನ್ ಅಥವಾ ಔಷಧಿಗಳ ಕೊರತೆಯಿಂದ ಜನರಿಗೆ ತೊಂದರೆಯಾಗಬಾರದು. ಅದಕ್ಕೆ ಅಗತ್ಯವಾದ ಪೂರ್ವ ಸಿದ್ಧತೆಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಿರುವುದಾಗಿ ಹೇಳಿದರು. +ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಎಂದಾಕ್ಷಣ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ರೂಪಾಂತರಿ ಉಪತಳಿಗಳು ಪ್ರಸರಣಾ ಸಾಮಥ್ರ್ಯವನ್ನು ಹೆಚ್ಚು ಹೊಂದಿದೆ. ಆದರೆ ಪ್ರಾಣಾಂತಿಕವಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿಯಾಗಿದೆ. ಹೀಗಾಗಿ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತೆ ಅಗತ್ಯವಿದೆ ಎಂದರು.60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು. ಜನಸಂದಣಿ ಪ್ರದೇಶಗಳಲ್ಲಿ ಕೋವಿಡ್ ಪ್ರಮಾಣಿತ ಕ್ರಮಗಳನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. +ಗ್ಯಾರಂಟಿಗಳ ಬೇಡ ಎನ್ನುವ ಧೈರ್ಯ ಬಿಜೆಪಿಗಿದೆಯೇ?: ಸಚಿವ ಮಧು ಬಂಗಾರಪ್ಪ +ಇಲ್ಲಿವರೆಗೂ ರಾಜ್ಯದಲ್ಲಿ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದ 10 ಜನ ಸಾವನ್ನಪ್ಪಿದ್ದಾರೆ. ಅವರಿಗೆ ಸೋಂಕಿನ ಜೊತೆಗೆ ಇತರ ಬೇರೆ ಬೇರೆ ಆರೋಗ್ಯದ ಸಮಸ್ಯೆಗಳಿದ್ದವು ಎಂದರು. ಮೃತಪಟ್ಟವರಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡಿರಲಿಲ್ಲ. ಮದ್ಯಪಾನದ ವ್ಯಸನಕ್ಕೆ ತುತ್ತಾಗಿದ್ದರು ಎಂದು ಹೇಳಿದರು. +ಇಂದಿನ ಸಭೆಯಲ್ಲಿ 99 ಮೆಡಿಕಲ್ ಕಾಲೇಜುಗಳು, 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರುಗಳ ಜೊತೆ ಚರ್ಚೆ ನಡೆಸಲಾಗಿದೆ. ಎಲ್ಲಾ ಸರ್ಕಾರಿ ಕಾಲೇಜುಗಳಲ್ಲೂ ಪ್ರತ್ಯೇಕವಾದ ಆಕ್ಸಿಜನ್ ಬೆಡ್ ಮತ್ತು ಐಸಿಯು ವ್ಯವಸ್ಥೆ ಮಾಡಲಾಗಿದೆ. ಅಗತ್ಯ ಮಾನವ ಸಂಪನ್ಮೂಲಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. 30 ಸಾವಿರ ಲಸಿಕೆಗಳು ಲಭ್ಯವಿದ್ದು, ಈವರೆಗೂ ಲಸಿಕೆ ಪಡೆಯದೇ ಇದ್ದವರೂ ಮತ್ತು ಮುಂಜಾಗ್ರತಾ ಲಸಿಕೆಯನ್ನಾಗಿ ತೆಗೆದುಕೊಳ್ಳುವವರು ಈ ಸೌಲಭ್ಯ ಪಡೆದುಕೊಳ್ಳಬಹುದು ಎಂದರು. +ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪರೀಕ್ಷಾ ಸಾಮಥ್ರ್ಯವನ್ನೂ ಹೆಚ್ಚಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯಗಳ ಕಾರ್ಯ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_273_7.txt b/eesanje/url_46_273_7.txt new file mode 100644 index 0000000000000000000000000000000000000000..ef8c34dc49956107d15a92b4f9cc3fb8020d9817 --- /dev/null +++ b/eesanje/url_46_273_7.txt @@ -0,0 +1,16 @@ +ಗ್ಯಾರಂಟಿಗಳ ಬೇಡ ಎನ್ನುವ ಧೈರ್ಯ ಬಿಜೆಪಿಗಿದೆಯೇ?: ಸಚಿವ ಮಧು ಬಂಗಾರಪ್ಪ +ಶಿವಮೊಗ್ಗ,ಜ.2- ಬಿಜೆಪಿಯವರು ಪಂಚಖಾತ್ರಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯಯೋಜನೆಯ ಸೌಲಭ್ಯವನ್ನು ಬಿಜೆಪಿ ಕಾರ್ಯಕರ್ತರು ಪಡೆಯಬಾರದು ಎಂದು ಆ ಪಕ್ಷದ ನಾಯಕರು ಕರೆ ನೀಡಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಖಾತ್ರಿಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಂಬಿಸುತ್ತಿದ್ದಾರೆ. ಈ ಸೌಲಭ್ಯಗಳಿಂದ ಜನರ ಆರ್ಥಿಕ ಸ್ಥಿತಿ ಉತ್ತಮಗೊಂಡಿದೆ. ಬಿಜೆಪಿಯವರೂ ಸೇರಿದಂತೆ ಎಲ್ಲರೂ ಯೋಜನೆಯ ಲಾಭ ಪಡೆಯಬೇಕೆಂಬುದು ನಮ್ಮ ಆಶಯ. ಆದರೆ ಟೀಕೆ ಮಾಡು ವವರು ತಮ್ಮ ಕಾರ್ಯಕರ್ತರಿಗೆ ಯೋಜನೆ ಲಾಭ ಪಡೆಯಬೇಡಿ ಎಂದು ಹೇಳುವ ಧೈರ್ಯವಿದೆಯೇ ಎಂದರು. +ಶಿವಮೊಗ್ಗ-ಶಿಕಾರಿಪುರದಲ್ಲಿ ಯಾವುದಾದರೂ ವರ್ಗಾವಣೆಗಳಾ ದರೆ ಅದನ್ನು ತಡೆಹಿಡಿಯುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಿಕಾರಿಪುರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಒತ್ತಡ ಹಾಕುತ್ತಿದ್ದಾರೆ. ಈಗಲೂ ಇನ್ನೂ ತಮ್ಮದೇ ಸರ್ಕಾರ ಇದೆ ಎಂಬ ಭ್ರಮೆಯಲ್ಲಿ ಅವರು ಇದ್ದಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದರು. +ಕಳೆದ 14, 15 ವರ್ಷಗಳಿಂದ ಇಲ್ಲೇ ಟಿಕಾಣಿ ಹೂಡಿದವರನ್ನು ನಾನೇ ಪತ್ರ ಬರೆದು ಎತ್ತಂಗಡಿ ಮಾಡಿಸಿದ್ದೇನೆ. ಅದು ಯಾರೆಂದು ಎಲ್ಲರಿಗೂ ಗೊತ್ತು. ಹೆಸರು ಹೇಳಿ ಅವರನ್ನು ನಾನು ದೊಡ್ಡವರನ್ನಾಗಿ ಮಾಡುವುದಿಲ್ಲ. ಇಲ್ಲಿಂದಲೇ ಸರ್ಕಾರವನ್ನು ನಿಯಂತ್ರಣ ಮಾಡುತ್ತೇವೆ ಎಂಬ ಉದ್ಧಟತನಕ್ಕೆ ನಾವು ಸೊಪ್ಪು ಹಾಕುವುದಿಲ್ಲ ಎಂದರು. +ನನ್ನ ಕಾರಿನ ಅಪಘಾತ ಪ್ರಕರಣವನ್ನು ಅನಗತ್ಯವಾಗಿ ವೈಭವೀಕರಿಸಲಾಯಿತು. ನನ್ನ ಕಾರು 2 ಕಿ.ಮೀ. ವೇಗದಲ್ಲಿತ್ತು. ಉತ್ತರ ಪ್ರದೇಶದ ಲಾರಿ ಚಾಲಕ ಬಂದು ಡಿಕ್ಕಿ ಹೊಡೆದ. ಅದೊಂದು ಸಣ್ಣ ಮತ್ತು ಮೂರ್ಖತನದ ಅಪಘಾತ. ನನಗಾಗಲೀ, ಸಿಬ್ಬಂದಿಗಾಗಲೀ ಯಾರಿಗೂ ತೊಂದರೆಯಾಗಲಿಲ್ಲ. ತಕ್ಷಣವೇ ನಾನು ಪೊಲೀಸರ ಜೀಪಿನಲ್ಲಿ ಸದರಿ ಲಾರಿ ಚಾಲಕನನ್ನು ಕೂರಿಸಿಕೊಂಡು ಪ್ರಯಾಣವನ್ನು ಮುಂದುವರೆಸಿದೆ. ಕೊನೆಗೆ ಲಾರಿ ಚಾಲಕನನ್ನು ಹೊಡೆಯಬೇಡಿ. ಊಟ ಕೊಡಿಸಿ ಎಂದು ಪೊಲೀಸರಿಗೆ ಹಣ ಕೊಟ್ಟು ಹೋದೆ ಎಂದು ಹೇಳಿದರು. +6 ಕೋಟಿ ಆರ್ಥಿಕ ವಹಿವಾಟಿನ ಪ್ರಕರಣ ಸಂಪೂರ್ಣ ಖಾಸಗಿಯಾದ ವಿಚಾರ. ಅದನ್ನು ಬೇರೆ ರೀತಿ ಬಿಂಬಿಸಲಾಗಿದೆ. ಹೀಗಾಗಿ ನಾನು ಅದರ ಕುರಿತು ಯಾವುದೇ ಮಾಹಿತಿ ನೀಡುವುದಿಲ್ಲ. ಯಾರು ವರದಿ ಮಾಡಿದರೋ ಅವರೇ ಸತ್ಯಾಂಶವನ್ನು ಹುಡುಕಿ ಹೇಳಲಿ ಎಂದು ಸವಾಲು ಹಾಕಿದರು. +ಈ ಪ್ರಕರಣವನ್ನು ಮುಚ್ಚಿ ಹಾಕಲು ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಬಂಧಿಸಲಾಯಿತು ಎಂದು ಹೇಳುವುದು ಹಾಸ್ಯಾಸ್ಪದ. ಅವನೇನು ದೊಡ್ಡ ಭೂಕ್ಲಾಂಡ ಎಂದು ಪ್ರಶ್ನಿಸಿದರು. ಮರ ಕಡಿದ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅವನ ತಮ್ಮನನ್ನು ಕಾಪಾಡಿಕೊಳ್ಳಲು ನನ್ನ ಹೆಸರು ದುರ್ಬಳಕೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. +ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಹೋಗದೇ ಇದ್ದರೆ ನಮಗೆ ಇಲ್ಲೇ ಇರುವ ರಾಮನನ್ನು ಪೂಜಿಸಿಕೊಳ್ಳುತ್ತೇವೆ. ರಾಮ ಹೃದಯ ದಲ್ಲಿದ್ದಾನೆ. ಆತ ಎಲ್ಲರಿಗೂ ಸೇರಿದ್ದು, ಬಿಜೆಪಿ ಯವರಿಗೆ ಮಾತ್ರ ಸೀಮಿತವಲ್ಲ ಎಂದರು. +ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಆರ್ಥಿಕ ಅವ್ಯವಹಾರ ಅಗಿದೆ ಎಂಬ ದೂರುಗಳನ್ನು ಕೇಳಿದ್ದೆವು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ತನಿಖೆ ಮಾಡಿಸಬೇಕು. ರಾಮ ಪವಿತ್ರವಾದ ದೇವರು. ಅದಕ್ಕೆ ಅವ್ಯವಹಾರದ ಮಂದಿರ ಎಂಬ ಕಳಂಕ ಅಂಟಬಾರದು ಎಂದು ಹೇಳಿದರು. +ರಾಮಮಂದಿರದ ನಿರ್ಮಾಣದ ಹಿಂದೆ ಸಂಪೂರ್ಣ ರಾಜಕೀಯ ಇದೆ. 2008 ರಿಂದಲೂ ಇದರ ಪ್ರಕ್ರಿಯೆಗಳು ನಡೆಯುತ್ತಿದ್ದವು. ಆದರೆ ಚುನಾವಣೆ ಕಾಲಕ್ಕೆ ಇದನ್ನು ದೊಡ್ಡದಾಗಿ ಬಿಂಬಿಸಿಕೊಂಡು ರಾಜಕೀಯ ಲಾಭ ಪಡೆಯುವ ಪ್ರಯತ್ನ ನಡೆಯುತ್ತಿದೆ. ರಾಜ್ಯದ ಜನ ಭಾವನಾತ್ಮಕ ವಿಚಾರಗಳಿಗೆ ಸೊಪ್ಪು ಹಾಕುವುದಿಲ್ಲ. ಪಂಚಖಾತ್ರಿ ಯೋಜನೆಗಳು ಜನರ ಜೀವನವನ್ನು ಸುಧಾರಿಸಿವೆ. ಹೀಗಾಗಿ ಜನ ಭಾವನಾತ್ಮಕ ರಾಜಕಾರಣಕ್ಕಿಂತಲೂ ಬದುಕಿನ ರಾಜಕಾರಣದ ಬಗ್ಗೆ ಯೋಚಿಸುತ್ತಾರೆ ಎಂದರು. +ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ +ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳಲ್ಲಿ ಮಕ್ಕಳ ಕೈಲಿ ಶೌಚಾಲಯ ಸ್ವಚ್ಛಗೊಳಿಸುವುದು ಸಹನೀಯವಲ್ಲ. ಇದು ಬಿಜೆಪಿಯವರ ಪಾಪಕೃತ್ಯ. ನಾನು ಸರಿಪಡಿಸುತ್ತೇನೆ. ಮುಂದಿನ ದಿನಗಳಲ್ಲಿ ಇಂತಹದ್ದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ಹೇಳಿದರು. +ಯುವನಿಧಿ ಯೋಜನೆಯಡಿ ಹಣ ಸಂದಾಯ ಮಾಡುವ ಕಾರ್ಯಕ್ರಮ ಜನವರಿ 12 ರಂದು ಶಿವಮೊಗ್ಗದಲ್ಲಿ ನಡೆಯಲಿದೆ. ಅದರ ಪೂರ್ವ ತಯಾರಿ ಕುರಿತು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲರೊಂದಿಗೆ ನಾಳೆ ಸಭೆ ನಡೆಸಲಾಗುತ್ತಿದೆ. ಯುವನಿಧಿಗೆ ಈವರೆಗೂ 20 ಸಾವಿರ ಮಂದಿ ನೊಂದಣಿಯಾಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ನೊಂದಣಿಯಾಗುವ ಮೂಲಕ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. +ಖಾಸಗಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಸಂಸದ ಬಿ.ವೈ.ರಾಘವೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರವಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಮೊದಲು ಉತ್ತರ ಕೊಡಿ ಎಂದರು. +ವಿಜಯೇಂದ್ರ ಅವರು ನನ್ನ 6 ಸಾಲ ಕೋಟಿ ರೂ. ಪ್ರಕರಣವನ್ನು ಟ್ವೀಟ್ ಮಾಡುವ ಮೂಲಕ ಒಂದೇ ದಿನ ನನ್ನ ಮೌಲ್ಯವನ್ನು ಹೆಚ್ಚಿಸಿದ್ದಾರೆ. ಹಲವಾರು ಸ್ನೇಹಿತರು ಕರೆ ಮಾಡಿ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು. ಅದರ ಮೊತ್ತ ಸರಿಸುಮಾರು 100 ಕೋಟಿ ರೂ.ಗಳಿಗೂ ಅಧಿಕ. ಸದ್ಯಕ್ಕೆ ನನ್ನ ಬಳಿ ನಾನೇ ದುಡಿದ ಹಣ ಇದೆ. ಅದರಿಂದ ಸಾಲ ಪಾವತಿಸುವ ಶಕ್ತಿಯೂ ಇದೆ. ಅಧಿಕಾರದಲ್ಲಿದ್ದೇನೆ ಎಂಬ ಕಾರಣಕ್ಕಾಗಿ 4 ರೂ. ಹೆಚ್ಚಾಗಿ ಬರಬಹುದು ಎಂದು ಕೆಲವರು ಪ್ರಕರಣವನ್ನು ವೈಭವೀಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_273_8.txt b/eesanje/url_46_273_8.txt new file mode 100644 index 0000000000000000000000000000000000000000..6035d5a046c7bfdb0ad9d13079fe4f5f8f4e1570 --- /dev/null +++ b/eesanje/url_46_273_8.txt @@ -0,0 +1,6 @@ +ಹೊಸ ವರ್ಷಾಚರಣೆ ನಂತರ ಉಲ್ಬಣಿಸುತ್ತಿದೆ ಕೊರೊನಾ.. +ಬೆಂಗಳೂರು,ಜ.2- ಹೊಸ ವರ್ಷಾಚರಣೆ ನಂತರ ನಗರದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದಲ್ಲಿ ಸರಿಸುಮಾರು 1245ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. +ಕಳೆದ 24 ಗಂಟೆಗಳಲ್ಲಿ ನಗರದಲ್ಲಿ 131 ಕೊರೊನಾ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟಾರೆ 634 ಕೊರೊನಾ ಸೋಂಕಿನ ಪ್ರಕರಣಗಳಿವೆ ಎಂದು ಅಂದಾಜಿಸಲಾಗಿದೆ. ಬಾಗಲಕೋಟೆ- 7, ಬಳ್ಳಾರಿಯಲ್ಲಿ 33,ಬೆಳಗಾವಿ- 8, ಬೆಂಗಳೂರು ಗ್ರಾಮಾಂತರ-33,ಬೀದರ್- 4, ಚಾಮರಾಜನಗರ -30,ಚಿಕ್ಕಬಳ್ಳಾಪುರ-35, ಚಿಕ್ಕಮಗಳೂರಿನಲ್ಲಿ 15, ಚಿತ್ರದುರ್ಗ-15, ದಕ್ಷಿಣ ಕನ್ನಡದಲ್ಲಿ 45, ದಾವಣಗೆರೆ 13, ಧಾರವಾಡ-13, ಗದಗ- 16, ಹಾಸನ 43, ಹಾವೇರಿ-1, ಕಲಬುರಗಿ 12, ಕೊಡಗು 3, ಕೋಲಾರ 15, ಕೊಪ್ಪಳ 10, ಮೈಸೂರಿನಲ್ಲಿ 109, ಮಂಡ್ಯ 46, ರಾಯಚೂರು 5, ರಾಮನಗರದಲ್ಲಿ 12, ಶಿವಮೊಗ್ಗ 23, ತುಮಕೂರು 23, ಉಡುಪಿ 2, ಉತ್ತರಕರ್ನಾಟಕ-7 , ವಿಜಯನಗರ-32, ಹಾಗೂ ಯಾದಗಿರಿ ಒಂದು ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ. +ಅನಕ್ಷರಸ್ಥ ಶಿಕ್ಷಣ ಸಚಿವ ಮಧುಬಂಗಾರಪ್ಪನವರ ಅಮೋಘ ಸಾಧನೆಗಳು +ಕರುನಾಡಲ್ಲಿ ಆರ್ಭಟ ಶುರು ಮಾಡಿರುವ ಜೆಎನ್.1 ಉಪತಳಿ:ರಾಜ್ಯದಲ್ಲಿ ಬರೋಬ್ಬರಿ 199 ಜೆಎನ್ . 1 ಪ್ರಕರಣಗಳು ವರದಿಯಾಗಿವೆ. ಜಿನೋಮಿಕ್ ಸಿಕ್ವೇನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1ಸೋಂಕು ತಗುಲಿರೋದು ಕನ್ ಫರ್ಮ್ ಆಗಿದೆ. ಇದುವರೆಗೆ ಜಿನೋಮ್ ಸೀಕ್ವೆನ್ಸ್ ಟೆಸ್ಟ್‍ಗೆ 601 ಸ್ಯಾಂಪಲ್ಸ್‍ಗಳ್ ರವಾನೆ ಮಾಡಲಾಗಿದ್ದು, ಈ ಪೈಕಿ 262 ಮಂದಿಯ ವರದಿ ಕೈ ಸೇರಿದೆ. +ಡಿಸೆಂಬರ್ 25 ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್. 1 ತಗುಲಿರೋದು ಕನ್ ಫರ್ಮ್ ಆಗಿತ್ತು ನಿನ್ನೆ ಮತ್ತೆ 202 ಮಾದರಿಗಳ ವರದಿಯಲ್ಲಿ 165 ಮಂದಿಯಲ್ಲಿ ಜೆಎನ್.1 ಸೋಂಕು ಇರುವುದು ದೃಢವಾಗಿದೆ. ಇಲ್ಲಿಯವರೆಗೆ 199 ಜನರಿಗೆ ಜೆ.ಎನ್ 1 ವೈರಸ್ ಸೋಂಕು ತಗುಲಿದೆ, 28 ಜನರಿಗೆ ಎಕ್ಸ್‍ಬಿಬಿ ಉಪ ತಳಿ ಸೋಂಕು ಪತ್ತೆಯಾಗಿರುವುದು ಕಂಡುಬಂದಿದೆ. \ No newline at end of file diff --git a/eesanje/url_46_273_9.txt b/eesanje/url_46_273_9.txt new file mode 100644 index 0000000000000000000000000000000000000000..4fead09adac3003a59bd80986eb536567db4b4a1 --- /dev/null +++ b/eesanje/url_46_273_9.txt @@ -0,0 +1,9 @@ +ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ +ಬೆಂಗಳೂರು,ಜ.2- ಸಿನಿಮಾ ನೋಡಿ ಪ್ರೇರಣೆಗೊಂಡು ಲೋಕಾಯುಕ್ತ ಅಧಿಕಾರಿ ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. +ಆಂಧ್ರಪ್ರದೇಶ ಮೂಲದ ಶ್ರೀನಾಥ ರೆಡ್ಡಿ(34) ಬಂಧಿತ ವಂಚಕ. ಈತ 10ನೇ ತರಗತಿ ವ್ಯಾಸಂಗ ಮಾಡಿದ್ದು, ಆಂಧ್ರಪ್ರದೇಶದಲ್ಲೂ ಸರ್ಕಾರಿ ನೌಕರರಿಗೆ ಇದೇ ರೀತಿ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. ಅನಾ ಮಧೇಯ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಯೊಬ್ಬರಿಗೆಮೊಬೈಲ್‍ನಿಂದ ಕರೆ ಮಾಡಿ ತಾನು ಲೋಕಾಯುಕ್ತ ಇನ್‍ಸ್ಪೆಕ್ಟರ್ ಚಂದ್ರಶೇಖರ್ ಮಾತನಾಡುತ್ತಿರುವುದಾಗಿ ಪರಿಚಯಿಸಿಕೊಂಡು, ನಮ್ಮ ಎಡಿಜಿಪಿ ಸಾಹೇಬರು ಮಾತನಾಡುತ್ತಾರೆಂದು ಹೇಳಿ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪಿಟಿಶನ್ ಇರುತ್ತದೆ. ಅದನ್ನು ವಿಚಾರಣೆ ಮಾಡದೆ ಮುಕ್ತಾಯಗೊಳಿಸಬೇಕಾದರೆ ಹಣ ನೀಡಬೇಕಾಗುತ್ತದೆ ಎಂದು ಹೆದರಿಸಿದ್ದಾನೆ. +ನೀವು ಹಣ ಕೊಟ್ಟರೆ ಪಿಟಿಶನ್‍ನ್ನು ನಮ್ಮ ಟೆಕ್ನಿಕಲ್ ಟೀಮ್‍ನಿಂದ ವಿಚಾರಣೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಲಾಗುವುದು ಎಂದು ಹೇಳಿ ಹಣಕ್ಕಾಗಿ ಬೇಡಿಕೆ ಇಟ್ಟು ಸರ್ಕಾರಿ ಅಧಿಕಾರಿಗಳು ಕೆಲಸ ಮಾಡದಂತೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದನು. +ಈ ಅನಾಮಧೇಯ ವ್ಯಕ್ತಿಯ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಪೊಲೀಸರು ತನಿಖೆಯನ್ನು ಮುಂದುವರೆಸಿ ಅನಾಮಧೇಯ ವ್ಯಕ್ತಿಯ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ತಾನು ಸಿನಿಮಾದಿಂದ ಪ್ರೇರಣೆಗೊಂಡು ಈ ರೀತಿಯ ಅಪರಾಧ ಕೃತ್ಯಗಳನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. +ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಕಾಂಗ್ರೆಸ್‍ನಲ್ಲಿ ಇಲ್ಲ: ಚೆಲುವರಾಯಸ್ವಾಮಿ +ಅಲ್ಲದೆ ಎಡಿಜಿಪಿ ಕೇಶವರಾವ್ ಅವರ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಪ್ರಯತ್ನಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಆರೋಪಿಯು ನಗರದ ಸಿದ್ದಾಪುರ, ಹೈಗ್ರೌಂಡ್ಸ್ ಮತ್ತು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಟೂ ಟೌನ್ ಹಾಗೂ ರಾಜ್ ಮಂಡ್ರಿಯಾದ ತ್ರಿ ಟೌನ್ ಪೊಲೀಸ್ ಠಾಣೆಗಳಲ್ಲಿ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಹಣ ವಸೂಲಿ ಮಾಡಿದ ಪ್ರಕರಣಗಳು ದಾಖಲಾಗಿರುತ್ತವೆ. +ಈತನ ವಿರುದ್ಧ ನಗರದಲ್ಲಿನ ಬೇಗೂರು, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಹೆಬ್ಬಗೋಡಿ, ಜಿಗಣಿ, ಸೂರ್ಯಸಿಟಿ, ಕೋಲಾರ ಟೌನ್‍ಗಳಲ್ಲಿ ಮನೆ ಕಳವು ಪ್ರಕರಣಗಳು ದಾಖಲಾಗಿರುತ್ತವೆ. ಈ ಕಾರ್ಯಾಚರಣೆಯನ್ನು ಬೆಂಗಳೂರುನಗರ ಉಪಪೊಲೀಸ್ ಆಯುಕ್ತರು ಅಪರಾಧ-2 ಅವರ ಮಾರ್ಗದರ್ಶನದಲ್ಲಿ ಸಂಘಟಿತ ಅಪರಾಧ ದಳ(ಪೂರ್ವ) ಅಧಿಕಾರಿ ಮತ್ತು ಸಿಬ್ಬಂದಿಗಳು ಬೇಸುವಲ್ಲಿ ಯಶಸ್ವಿಯಾಗಿರುತ್ತಾರೆ. +ಮೊಸ ಹೋಗಿದ್ದಲ್ಲಿ ದೂರು ನೀಡಿ:ಈ ವ್ಯಕ್ತಿಯು 35 ರಿಂದ 40 ಮಂದಿಗೆ ಮೋಸ ಮಾಡಿದ್ದು, ಯಾರಾದರೂ ಈ ಆರೋಪಿಯಿಂದ ವಂಚನೆಗೊಳಗಾಗಿದ್ದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ವ್ಯಕ್ತಿಯಿಂದ ವಂಚನೆಗೊಳಗಾದವರ ಪೈಕಿ ಕೆಲವರು ದೂರು ನೀಡಿಲ್ಲ. ಹಾಗಾಗಿ ಮೋಸಕ್ಕೊಳಗಾದವರು ಯಾರಿಗೂ ಹೆದರದೆ ದೂರು ನೀಡುವಂತೆ ಆಯುಕ್ತರು ಅಭಯ ನೀಡಿದ್ದಾರೆ. \ No newline at end of file diff --git a/eesanje/url_46_274_1.txt b/eesanje/url_46_274_1.txt new file mode 100644 index 0000000000000000000000000000000000000000..a73523e7cce2768a47fe644ca568007448d34c68 --- /dev/null +++ b/eesanje/url_46_274_1.txt @@ -0,0 +1,11 @@ +ಜ. 5ರಿಂದ ಮೂರು ದಿನ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ +ಬೆಂಗಳೂರು,ಜ.2-ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಜನವರಿ 5ರಿಂದ 7ರವರೆಗೆ ಮೂರು ದಿನಗಳ ಕಾಲ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.5ರಂದು ಬೆಳಗ್ಗೆ 11 ಗಂಟೆಗೆ ಮೇಳ ಉದ್ಘಾಟನೆಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕೇಂದ್ರ, ರಾಜ್ಯ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು. +ಸಿರಿಧಾನ್ಯಗಳಿಂದ ಮೇಳದಲ್ಲಿ ಆಹಾರವನ್ನು ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಗ್ರಾಹಕರು, ಸಾರ್ವಜನಿಕರು ಭಾಗವಹಿಸಬಹುದು ಎಂದು ತಿಳಿಸಿದರು. ಮೂರು ದಿನಗಳ ಕಾಲ ರಾಜ್ಯ, ಅಂತಾರಾಷ್ಟ್ರೀಯ ಮಟ್ಟದ ಚರ್ಚಾ ಗೋಷ್ಟಿಗಳು ನಡೆಯಲಿವೆ. ಸಿರಿಧಾನ್ಯಗಳ ಬಗ್ಗೆ ವಿಸ್ತೃತವಾಗಿ ತಿಳಿದುಕೊಳ್ಳುವ ಅವಕಾಶ ದೊರೆಯಲಿದೆ. ಸಾವಯವ ಸಿರಿಧಾನ್ಯಗಳು ಬೆಳೆಯುವುದರ ಜೊತೆಗೆ ಅವುಗಳ ಮೌಲ್ಯ ವರ್ಧನೆ ಮಾಡುವುದು, ಆಹಾರವಾಗಿ ಬಳಕೆ ಮಾಡುವುದು ಮೊದಲಾದ ವಿಚಾರಗಳ ಬಗ್ಗೆ ಮೇಳದಲ್ಲಿ ಬೆಳಕು ಚೆಲ್ಲಲಾಗುತ್ತದೆ ಎಂದರು. +ಸಿರಿಧಾನ್ಯವನ್ನು ಬೆಳೆಯುವುದಷ್ಟೇ ಅಲ್ಲ. ಮೌಲ್ಯವರ್ಧನೆ ಮಾಡಿ ರಫ್ತು ಮಾಡಬೇಕು. ಸಿರಿಧಾನ್ಯ ಉತ್ಪಾದನೆಯಲ್ಲಿ ರಾಜ್ಯ 4ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನಕ್ಕೆ ಬರಬೇಕೆಂಬುದು ನಮ್ಮ ಉದ್ದೇಶ ಎಂದು ಹೇಳಿದರು. ಕಳೆದ 2017ರಿಂದಲೂ ಸಿರಿಧಾನ್ಯ ಮತ್ತು ಸಾವಯವ ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಬಾರಿಯ ಮೇಳಕ್ಕೆ 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. 300 ಮಳಿಗೆಗಳನ್ನು ತೆರೆಯಲಾಗುತ್ತದೆ. +ಸಿರಿಧಾನ್ಯಗಳಿಗೆ ಉತ್ತೇಜನ ಸಿಗುವುದರಿಂದ ರೈತರಿಗೆ ಅನುಕೂಲ ಸಿಗಲಿದೆ. ರೋಗನಿರೋಧಕ ಗುಣವನ್ನು ಹೊಂದಿರುವುದರಿಂದ ಸಿರಿಧಾನ್ಯಗಳು ಆರೋಗ್ಯ ಸುಧಾರಣೆಗೂ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.ಜರ್ಮನ್, ಸೌದಿ ಅರೇಬಿಯಾ, ಒಮನ್, ಆಸ್ಟ್ರೇಲಿಯಾ ಸೇರಿದಂತೆ ಏಳೆಂಟು ರಾಷ್ಟ್ರಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಅಲ್ಲದೆ ಆಂಧ್ರಪ್ರದೇಶ, ಕೇರಳ, ಒಡಿಶಾ, ಮೇಘಾಲಯ, ಉತ್ತರಪ್ರದೇಶ ಮೊದಲಾದ ರಾಜ್ಯಗಳು ಭಾಗವಹಿಸಲಿವೆ ಎಂದರು. +ಮೇಳದಲ್ಲಿ ಹತ್ತು ವಿವಿಧ ಸಿರಿಧಾನ್ಯ ಹೋಟೆಲ್‍ಗಳು ಇರಲಿದ್ದು, ವೈವಿಧ್ಯ ಮತ್ತು ರುಚಿಕರವಾದ ಸಿರಿಧಾನ್ಯ ಊಟ ಮತ್ತು ಉಪಹಾರ ಸವಿಯುವ ಅವಕಾಶವಿದೆ ಎಂದರು. 35ಕ್ಕೂ ಹೆಚ್ಚು ಪ್ರಖ್ಯಾತ ಉಪನ್ಯಾಸಕರು ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾಹಿತಿ ನೀಡಲಿದ್ದಾರೆ. ರೈತರಿಗೂ ಕೃಷಿ ವಿವಿಯಿಂದ ಕಾರ್ಯಗಾರ ಆಯೋಜಿಸಲಾಗುತ್ತಿದೆ. ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡಲು ಮೇಳದಲ್ಲಿ ಉತ್ಪಾದಕರ, ಮಾರುಕಟ್ಟೆದಾರರ ಸಮಾಲೋಚನೆ ಸಭೆಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು. +ಮೇಳದಲ್ಲಿ ಚಿಲ್ಲರೆ ಮಾರಾಟಗಾರರು, ರಫ್ತುದಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು ಭಾಗವಹಿಸಲಿವೆ. ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನೋಡಲ್ ಏಜೆನ್ಸಿಯಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಸಂಸ್ಥೆಗಳಾದ ಜಿಐಜೆಡ್, ಐಐಎಂಆರ್ ಮೊದಲಾದ ಸಂಸ್ಥೆಗಳು ಭಾಗವಹಿಸಲಿವೆ ಎಂದರು. +ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ +ಇದಕ್ಕೂ ಮುನ್ನ ರಫ್ತುದಾರರ ಸಮಾವೇಶದಲ್ಲಿ ಪಾಲ್ಗೊಂಡು ಮಾತ ನಾಡಿದ ಸಚಿವ ಚಲುವರಾಯಸ್ವಾಮಿ ಅವರು ಸಿರಿಧಾನ್ಯಗಳ ಬಗ್ಗೆ ಯುವ ಸಮುದಾಯಕ್ಕೆ ಸಾಕಷ್ಟು ಅರಿವಿದೆ. ತಾರಾ ಹೋಟೆಲ್‍ಗಳಲ್ಲೂ ಸಿರಿಧಾನ್ಯದ ಆಹಾರ ಲಭ್ಯವಾಗುತ್ತಿದೆ. ಸಿರಿಧಾನ್ಯದ ರಫ್ತಿನ ನಿರ್ಬಂಧ ಸಡಿಲ ಮಾಡಿ ಉತ್ತೇಜನ ನೀಡಬೇಕು. +ಮುಂದಿನ ವರ್ಷದಲ್ಲಿ ರಫ್ತು ಎರಡುಮೂರು ಪಟ್ಟು ಹೆಚ್ಚಾಗಬೇಕು, ಸಿರಿಧಾನ್ಯ ಬೆಳೆಯುವುದು ಮತ್ತು ರಫ್ತಿನಲ್ಲಿ ರಾಜ್ಯ ಮೊದಲ ಸ್ಥಾನಕ್ಕೆ ಬರಬೇಕು, ಹೆಕ್ಟೇರ್‍ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು ಮುಂದಿನ ವರ್ಷ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ವಿವರಿಸಿದರು. +ಇದೇ ಸಂದರ್ಭದಲ್ಲಿ ಸಿರಿಧಾನ್ಯಗಳ ಮೌಲ್ಯ ರ್ವತ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.ಕೆಫೆಕ್‍ನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಕೃಷಿ ಇಲಾಖೆ ನಿರ್ದೇಶಕ ಡಾ.ಪುತ್ರ.ಜಿ.ಟಿ, ಅಪರ ಕೃಷಿ ನಿರ್ದೇಶಕ ವೆಂಕಟರಾಮ ರೆಡ್ಡಿ, ಜೆ.ಪಾಟೀಲ್, ಕೆಫೆಕ್ ವ್ಯವಸ್ಥಾಪಕ ನಿರ್ದೇಶಕ ಎನ್.ಎಚ್.ಭಂತನಾಳ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_274_10.txt b/eesanje/url_46_274_10.txt new file mode 100644 index 0000000000000000000000000000000000000000..652a99f379698bff445ffa043230fd2eb5e16da9 --- /dev/null +++ b/eesanje/url_46_274_10.txt @@ -0,0 +1,6 @@ +ನಿಗಮ ಮಂಡಳಿ ನೇಮಕಾತಿ ಚರ್ಚೆಗೆ ಸಿಎಂ,ಡಿಸಿಎಂ ದೆಹಲಿಗೆ +ಬೆಂಗಳೂರು,ಜ.1- ಲೋಕಸಭೆ ಚುನಾವಣೆ ತಯಾರಿ ನಿಗಮ ಮಂಡಳಿ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜ.4 ರಂದು ದೆಹಲಿಗೆ ತೆರಳಲಿದ್ದಾರೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕದಲ್ಲಷ್ಟೇ ಅಲ್ಲ, ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಪಕ್ಷದ ಸರ್ಕಾರಗಳು ಅಧಿಕಾರದಲ್ಲಿರುವ ರಾಜ್ಯದ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ತಯಾರಿ ನಡೆಸುವ ಸಂಬಂಧಪಟ್ಟಂತೆ ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. +ಅಭ್ಯರ್ಥಿಗಳ ಆಯ್ಕೆ, ಇಂಡಿಯಾ ರಾಜಕೀಯ ಮೈತ್ರಿಕೂಟದ ನಡುವಿನ ಸೀಟು ಹಂಚಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಯಿದೆ. ಇದೇ ರೀತಿ ಕರ್ನಾಟಕದಲ್ಲಿನ ನಿಗಮ ಮಂಡಳಿಗಳ ನೇಮಕಾತಿ ವಿಷಯವಾಗಿಯೂ ಚರ್ಚೆಯಾಗುವ ನಿರೀಕ್ಷೆಗಳಿವೆ. ಕಾಂಗ್ರೆಸ್‍ನ ಕಾರ್ಯಕರ್ತರು, ಮುಖಂಡರು, ಶಾಸಕರು, ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ, ತಮಗೆ ಅವಕಾಶ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಆದರೆ ಕಳೆದ 7 ತಿಂಗಳಿನಿಂದಲೂ ನಿಗಮ ಮಂಡಳಿಗಳಿಗೆ ನೇಮಕಾತಿಯಲ್ಲೇ ಕಾಲಾಹರಣ ಮಾಡುತ್ತಿರುವುದು ವ್ಯಾಪಕ ಅಸಮಾಧಾನಕ್ಕೂ ಕಾರಣವಾಗಿದೆ. +ಈ ಮೊದಲು ನಾಲ್ಕು ಬಾರಿ ಸಭೆಗಳಾಗಿ ಚರ್ಚೆಗಳಾಗಿವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯ ಮಂತ್ರಿ ಎರಡು-ಮೂರು ಬಾರಿ ದೆಹಲಿಗೆ ಭೇಟಿ ನೀಡಿ ಬರಿಗೈಲಿ ಮರಳಿದ್ದಾರೆ. ಮೂಲಗಳ ಪ್ರಕಾರ ರಾಜ್ಯದ ನಾಯಕರು ಸಂಭವನೀಯ ಅಧ್ಯಕ್ಷರ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‍ಗೆ ಸಲ್ಲಿಸಿದ್ದಾರೆ. ಅದರಲ್ಲಿ ಕೆಲವು ಭಿನ್ನಮತಗಳಿದ್ದು, ಅದನ್ನು ಬಗೆಹರಿಸಿಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪ್ರತಿಷ್ಠೆಗೆ ಬಿದ್ದಿರುವುದರಿಂದ ಪಟ್ಟಿ ಅಂತಿಮಗೊಂಡಿಲ್ಲ ಎಂಬ ಮಾಹಿತಿ ಇದೆ. ಪ್ರತಿ ಬಾರಿ ದೆಹಲಿಗೆ ಹೋದಾಗಲೂ ಬೇರೆಬೇರೆ ವಿಚಾರಗಳು ಚರ್ಚೆಯಾಗುತ್ತಿದ್ದು, ನಿಗಮ ಮಂಡಳಿ ಕಾರ್ಯಕರ್ತರಿಗೆ ಮರೀಚಿಕೆಯಾಗಿಯೇ ಉಳಿದಿದೆ. +ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ, ಶೀಘ್ರವೇ ನೇಮಕಾತಿ ಪಟ್ಟಿಗೆ ಅಂಗೀಕಾರ ನೀಡುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಬ್ಬರೂ ದೆಹಲಿಗೆ ಹೋಗುವ ಮುನ್ನ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಯನ್ನು ಅಂತಿಮಗೊಳಿಸಿಕೊಂಡೇ ಬರುವುದಾಗಿ ಹೇಳಿದ್ದರು. ಆದರೆ ವಾಪಸ್ ಬಂದ ನಂತರ ಅದರ ಬಗ್ಗೆ ಚಕಾರ ಎತ್ತುತ್ತಿಲ್ಲ. ಮೊದಲ ಹಂತದಲ್ಲಿ ಶಾಸಕರಿಗೆ, ಎರಡನೇ ಹಂತದಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ನೇಮಕಾತಿ ಮಾಡುವುದಾಗಿ ತಿಳಿಸಿದರು. ಆದರೆ ಆ ಕಾಲ ಇನ್ನೂ ಕೂಡದೇ ಇರುವುದು ನಾನಾ ರೀತಿಯ ಚರ್ಚೆಗಳನ್ನು ಹುಟ್ಟುಹಾಕಿದೆ. \ No newline at end of file diff --git a/eesanje/url_46_274_11.txt b/eesanje/url_46_274_11.txt new file mode 100644 index 0000000000000000000000000000000000000000..d28aa808ff2d349295b85a531da2975a5b2db13a --- /dev/null +++ b/eesanje/url_46_274_11.txt @@ -0,0 +1,5 @@ +ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ +ಬೆಂಗಳೂರು,ಜ.1- ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಲು ಬರುವ ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹೂವಿನ ಗುಚ್ಛ ಹಾಗೂ ಸಿಹಿ ತಿನಿಸುಗಳು ಹಾಗೂ ಉಡುಗೊರೆಗಳನ್ನು ತಂದು ಹಣ ವ್ಯರ್ಥ ಮಾಡುವ ಬದಲು ಸಂಕಷ್ಟದಲ್ಲಿರುವ ಬಡವರು, ವೃದ್ಧಾಶ್ರಮಗಳು ಹಾಗೂ ಅನಾಥಶ್ರಮಗಳಿಗೆ ಆ ಹಣ ವಿನಿಯೋಗಿಸಿದರೆ ಅವರಿಗೆ ನೆರವಾಗಲಿದೆ ಎಂಬ ಸಂದೇಶವನ್ನು ನೀಡುವ ಮೂಲಕ ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಮಾದರಿ ಯಾಗಿದ್ದಾರೆ. +ಅನಾಥಾಶ್ರಮಗಳಿಗೆ ಮಾಡಿರುವ ಸಹಾಯದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಇತರರಿಗೂ ಮಾದರಿ ಯಾಗುವಂತೆ ಎಸಿಪಿಗಳು, ಇನ್ಸ್‍ಪೆಕ್ಟರ್‍ಗಳಿಗೆ ಆಯುಕ್ತರು ವರ್ಚುಲ್ ಸಭೆ ಮೂಲಕ ಸಲಹೆ ನೀಡಿದ್ದಾರೆ. ಪೊಲೀಸ್ ಆಯುಕ್ತರ ಈ ನಡೆಗೆ ನಗರ ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಸ ವ್ಯಕ್ತಪಡಿಸಿದ್ದಾರೆ. +ವಾಹಿನಿಯಲ್ಲಿ ಹೂಡಿಕೆ: ಡಿ.ಕೆ.ಶಿವಕುಮಾರ್ ದಂಪತಿಗೆ ಸಿಬಿಐ ನೋಟಿಸ್ +ಆಯುಕ್ತರ ಸಲಹೆಯಂತೆ ಸಿಬ್ಬಂದಿ ವರ್ಗ ತಮ್ಮ ಕೈಲಾದ ಹಣದಿಂದ ಅನಾಥಾಶ್ರಮದ ಮಕ್ಕಳಿಗೆ ಹಾಲು, ಹಣ್ಣು, ಬ್ರೆಡ್, ಸಿಹಿ ತಿನಿಸುಗಳನ್ನು ನೀಡಿ ಅವರೊಂದಿಗೆ ಬೆರೆತು ಸಂತಸ ಹಂಚಿಕೊಂಡಿದ್ದಾರೆ. \ No newline at end of file diff --git a/eesanje/url_46_274_12.txt b/eesanje/url_46_274_12.txt new file mode 100644 index 0000000000000000000000000000000000000000..9a8e4b132397043fa403b199d012b562b43020f7 --- /dev/null +++ b/eesanje/url_46_274_12.txt @@ -0,0 +1,9 @@ +ಹೊಸ ವರ್ಷಾಚರಣೆ ವೇಳೆ ಹಲವು ಅವಾಂತರ: ಸ್ನೇಹಿತರಿಂದಲೇ ಗೆಳೆಯನ ಕೊಲೆ +ಬೆಂಗಳೂರು, ಜ.1- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನಾಹುತ ಗಳು ಸಂಭವಿಸುವುದು ಹೊಸದೇನಲ್ಲ. ಈ ಬಾರಿಯೂ ನಗರದಲ್ಲಿ ಸಣ್ಣಪುಟ್ಟ ಅವಾಂತರಗಳು ನಡೆದಿವೆ. ಅದರಲ್ಲೂ ಕುಡಿದ ಮತ್ತಿನಲ್ಲಿ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿರುವುದು ಸೇರಿದಂತೆ ಹಲವಾರು ಅವಘಡಗಳು ನಡೆದಿವೆ. ಯುವಕನ ಕೊಲೆ, ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಯುವಕನಿಗೆ ಪೊಲೀಸರು ಕೆನ್ನೆಗೆ ಬಾರಿಸಿರುವುದು, ಪಬ ನಲ್ಲಿ ಕನ್ನಡ ಹಾಡು ಹಾಕಿಲ್ಲವೆಂದು ಗಲಾಟೆ, ಪೊಲೀಸರ ಜೊತೆ ಯುವಕ, ಯುವತಿಯರ ವಾಗ್ವಾದ ಸೇರಿದಂತೆ ಅನೇಕ ಘಟನೆಗಳು ನಡೆದಿವೆ. +ಹೊಸ ವರ್ಷಾಚರಣೆಗಾಗಿ ಸ್ನೇಹಿತರೆಲ್ಲರೂ ಸೇರಿ ಪಾರ್ಟಿ ಮಾಡಿ ವಾಪಸ್ ಆಟೋದಲ್ಲಿ ಹಿಂದಿರುಗುತ್ತಿದ್ದಾಗ ಅವರುಗಳ ನಡುವೆ ಜಗಳವಾಗಿ ಗೆಳೆಯನನ್ನೇ ಇರಿದು ಕೊಲೆ ಮಾಡಿ ರಸ್ತೆ ಬದಿ ತಳ್ಳಿ ಪರಾರಿಯಾಗಿರುವ ಘಟನೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. +ಶ್ರೀನಿವಾಸನಗರ ನಿವಾಸಿ ವಿಜಯ (21) ಕೊಲೆಯಾದ ದುರ್ದೈವಿ. ಈತ ವೃತ್ತಿಯಲ್ಲಿ ವೆಲ್ಡರ್.ರಾತ್ರಿ ಹೊಸ ವರ್ಷಾಚರಣೆ ನಿಮಿತ್ತ ವಿಜಯ್ ತನ್ನ ಸ್ನೇಹಿತರೊಡನೆ ಸೇರಿ ಶ್ರೀನಿವಾಸನಗರ 80 ಅಡಿ ರಸ್ತೆ ಸಮೀಪ ಪಾರ್ಟಿ ಮಾಡಿದ್ದಾನೆ. ಪಾರ್ಟಿ ಮುಗಿಸಿಕೊಂಡು ಬೆಳಗಿನಜಾವ 2 ಗಂಟೆ ಸುಮಾರಿನಲ್ಲಿ ಆಟೋದಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ಸ್ನೇಹಿತರ ನಡುವೆಯೇ ಜಗಳವಾಗಿದೆ. ಮಾರ್ಗಮಧ್ಯೆ ಆಟೋದಲ್ಲೇ ವಿಜಯ್‍ಗೆ ಚಾಕುವಿನಿಂದ ಇರಿದು ಆಟೋದಿಂದ ರಸ್ತೆಬದಿ ಆತನನ್ನು ತಳ್ಳಿ ಪರಾರಿಯಾಗಿದ್ದಾರೆ. ಇರಿತದಿಂದಾಗಿ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ವಿಜಯ್ ಕೊನೆಯುಸಿರೆಳೆದಿದ್ದಾನೆ. ಸುದ್ದಿ ತಿಳಿದ ಹನುಮಂತನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. +ನಾನೂ ಹಿಂದೂ ಆದರೆ, ಬಿಜೆಪಿಯವರಂತೆ ಪ್ರದರ್ಶಿಸುವುದಿಲ್ಲ; ರಂಜನ್ ಸಿಂಗ್ +ಹೊಸ ವರ್ಷ ಆಚರಿಸಲು ಚರ್ಚ್‍ಸ್ಟ್ರೀಟ್‍ನಲ್ಲಿ ಜಮಾಯಿಸಿದ್ದ ಜನಸಮೂಹದ ನಡುವೆ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಯುವಕನೊಬ್ಬನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕೋರಮಂಗಲ ಪಬ್‍ನಲ್ಲಿ ಯುವಕನೊಬ್ಬ ಕನ್ನಡ ಸಾಂಗ್ಸ್ ಹಾಕಿಲ್ಲ ಅಂತಾ ಕುಡಿದ ಮತ್ತಿನಲಿ ಗಲಾಟೆ ಮಾಡಿದ್ದಾನೆ. ಪೊಲೀಸರು ಆತನನ್ನು ಹರಸಾಹಸಪಟ್ಟು ಸಮಾಧಾನಪಡಿಸುವಂತಾಗಿತ್ತು. ಇನ್ನೊಂದೆಡೆ ಚರ್ಚ್‍ಸ್ಟ್ರೀಟ್‍ನಲ್ಲಿ ಫೇಸ್‍ಮಾಸ್ಕ್ ಧರಿಸಿ ಹಾವಳಿ ಮಾಡ್ತಿದ್ದ ಪುಂಡರಿಗೆ ಪೊಲೀಸರು ತರಾಟೆಗೆ ತೆಗೆದುಕೊಂಡ್ರು. +ಚರ್ಚ್‍ಸ್ಟ್ರೀಟ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರಿಂದ ಒಮ್ಮೆಲೆ ನೂಕು ನುಗ್ಗಲು ಉಂಟಾಯಿತು. ತಳ್ಳಾಟ ನೂಕಾಟದ ಪರಿಸ್ಥಿತಿ ತಲೆದೋರಿತು. ಬ್ಯಾರಿಕೇಡ್‍ಗಳನ್ನು ತಳ್ಳಿ ಸಾರ್ವಜನಿಕರು ನುಗ್ಗಲು ಪ್ರಯತ್ನಿಸಿದ್ರು. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಹಬದಿಗೆ ತಂದರು. +ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಬಂದಿದ್ದ ಯುವತಿಯೊಬ್ಬಳು ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ. ಕೂಡಲೇ ಆಕೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆ್ಯಂಬುಲೆನ್ಸ್‍ನಲ್ಲಿ ಪೊಲೀಸರು ಆಸ್ಪತ್ರೆಗೆ ರವಾನಿಸಿದರು.ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೋರಮಂಗಲ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ ಸೇರಿದಂತೆ ಎಲ್ಲೇಡೆ ಪಾರ್ಟಿ ಮುಗಿದ ಬಳಿಕ ಯುವಕ, ಯುವತಿಯರು ಕುಡಿದು ತೂರಾಡಿದ್ದಾರೆ. ಎಂಜಿ ರೋಡ್, ಬ್ರಿಗೇಡ್ ರೋಡ್‍ನಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನ ಜಮಾಯಿಸಿದ್ದರು. +ಸಂಚಾರ ದಟ್ಟಣೆ:ಹೊಸವರ್ಷ ಸ್ವಾಗತಿಸಿದ ನಂತರ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಸಾವಿರಾರು ಜನರು ಏಕಕಾಲದಲ್ಲಿ ತಮ್ಮ ವಾಹನಗಳಲ್ಲಿ ಮನೆಗೆ ಹಿಂದಿರುಗುತ್ತಿದ್ದರಿಂದ ಎಂ.ಜಿ.ರಸ್ತೆ ಸುತ್ತಮುತ್ತಲಿನ ರಿಚ್‍ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು.ಸಂಚಾರ ಪೊಲೀಸರು ಸ್ಥಳದಲ್ಲಿದ್ದು ಯಾವುದೇ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಹೊಸ ವರ್ಷಾಚರಣೆಯ ಭದ್ರತೆಗಾಗಿ ಅಕಾರಿಗಳು ಸೇರಿದಂತೆ 8500 ಮಂದಿ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು. \ No newline at end of file diff --git a/eesanje/url_46_274_2.txt b/eesanje/url_46_274_2.txt new file mode 100644 index 0000000000000000000000000000000000000000..4dea2d29eedf334e706d4ae590cc5c1b62de4223 --- /dev/null +++ b/eesanje/url_46_274_2.txt @@ -0,0 +1,7 @@ +ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಶಾಸಕ ಯಶಪಾಲ್ ಮನವಿ +ಬೆಂಗಳೂರು,ಜ.2- ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಘೋಷಿಸುವಂತೆ ಉಡುಪಿ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. +ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ವಿಶೇಷ ದಿನವಾಗಿದೆ. +ಜ.22ರಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನ ಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದ್ದು, ರಾಜ್ಯ ಸರಕಾರ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಕೆಎಸ್ಆರ್‌ಟಿಸಿ ಬಸ್ – ಜೀಪ್ ಮುಖಾಮುಖಿ ಡಿಕ್ಕಿ : ನಾಲ್ವರು ಸಾವು.. +ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಟ್ರಸ್ಟಿಯೂ ಆಗಿರುವ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಯ ಜನತೆಗೆ ಸಂದೇಶ ಸಾರಿದ್ದಾರೆ. ತಮ್ಮ ಮನೆ, ಅಂಗಡಿ, ಕಟ್ಟಡಗಳಿಗೆ ದೀಪಗಳನ್ನು ಹಚ್ಚುವ ಮೂಲಕ ಈ ದಿನವನ್ನು ಭಾವಪೂರ್ಣವಾಗಿ ಆಚರಿಸುವಂತೆ ತಿಳಿಸಿದ್ದಾರೆಂದು ಶಾಸಕ ಸುವರ್ಣ ತಿಳಿಸಿದರು. +ಜನವರಿ 14ರಂದು ಮಕರ ಸಂಕ್ರಾಂತಿಯೊಂದಿಗೆ ಹಬ್ಬಗಳು ಪ್ರಾರಂಭವಾಗಲಿವೆ. ಜನವರಿ 18ರಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪರ್ಯಾಯ ಪೀಠಾರೋಹಣ ಮಾಡಲಿದ್ದಾರೆ. ಇದೇ ವೇಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಜ.22ರಂದು ಶಾಸಕ ಯಶಪಾಲ್ ಸುವರ್ಣ ಅವರು ಭಕ್ತರಿಗಾಗಿ ವಿಶೇಷ ಹಾಲು ಪಾಯಸ ಸೇವೆ ಆಯೋಜಿಸಿದ್ದಾರೆ. \ No newline at end of file diff --git a/eesanje/url_46_274_3.txt b/eesanje/url_46_274_3.txt new file mode 100644 index 0000000000000000000000000000000000000000..e5f8853f3e5e6c9635529ca46c2b94581a9e4d47 --- /dev/null +++ b/eesanje/url_46_274_3.txt @@ -0,0 +1,6 @@ +ಕೆಎಸ್ಆರ್‌ಟಿಸಿ ಬಸ್ – ಜೀಪ್ ಮುಖಾಮುಖಿ ಡಿಕ್ಕಿ : ನಾಲ್ವರು ಸಾವು.. +ಹುಣಸೂರು, ಜ.2- ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ನಗರದ ಬೈಪಾಸ್ ರಸ್ತೆಯ ಅಯ್ಯಪ್ಪಸ್ವಾಮಿ ಬೆಟ್ಟದ ತಪ್ಪಲಿನ ಬಳಿ ಇಂದು ಮುಂಜಾನೆ ನಡೆದಿದೆ. +ಹೆಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಜಿಹಾರÀಹಳ್ಳಿ ಹಾಗೂ ದಮ್ಮನಕಟ್ಟೆ ನಿವಾಸಿಗಳಾದ ರಾಜೇಶ್(35) ಲೋಕೇಶ್(40), ಸೋಮೇಶ್(42), ಮನು(26) ಮೃತಪಟ್ಟ ದುರ್ದೈವಿಗಳು. ಶುಂಠಿ ಬೆಳೆ ಕೊಯ್ಲಿಗಾಗಿ ಹೆಚ್‍ಡಿ ಕೋಟೆಯಿಂದ ಪಿರಿಯಾಪಟ್ಟಣ ಮಾರ್ಗವಾಗಿ ಕೊಡಗಿಗೆ ಜೀಪಿನಲ್ಲಿ 10 ಮಂದಿ ಕೂಲಿ ಕಾರ್ಮಿಕರು ತೆರಳುತ್ತಿದ್ದಾಗ ವಿರಾಜಪೇಟೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಎಲೆಕ್ಟ್ರಿಕ್ ಬಸ್ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. +ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..! +ಐವರಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಫಘಾತದ ರಭಸಕ್ಕೆ ಜೀಪು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದರಲ್ಲೆ ಶವಗಳು ಸಿಲುಕಿಕೊಂಡಿದ್ದರೆ, ಕೆಳಗೆ ಬಿದ್ದ ಇಬ್ಬರ ವ್ಯಕ್ತಿಗಳ ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಸುದ್ದಿ ತಿಳಿದ ಕೂಡಲೇ ಹುಣಸೂರು ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೀಪಿನಿಂದ ಮೃತಪಟ್ಟ ಶವಗಳನ್ನು ಹೊರತೆಗೆದು ಶವಗಾರಕ್ಕೆ ಸಾಗಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. +ಆಕ್ರಂದನ: ಹೊಟ್ಟೆಪಾಡಿಗಾಗಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದವರ ಮೇಲೆ ಜವರಾಯ ಅಟ್ಟಹಾಸ ಮೆರೆದು ಬಲಿ ಪಡೆದು ಕೊಂಡಿದೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕುಂಟುಂಬ ಸದಸ್ಯರ ಆಂಕ್ರದನ ಮುಗಿಲು ಮುಟ್ಟಿತ್ತು. ಇನ್ನು ನಮ್ಮ ಕುಟುಂಬಕ್ಕೆ ಯಾರು ದಿಕ್ಕು ಎಂದು ಕಣ್ಣೀರು ಹಾಕುತ್ತ ಶವಗಾರದ ಮುಂದೆ ರೋಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. \ No newline at end of file diff --git a/eesanje/url_46_274_4.txt b/eesanje/url_46_274_4.txt new file mode 100644 index 0000000000000000000000000000000000000000..6ba459e9fdb636b54937f6e8e6c9212ae135ee62 --- /dev/null +++ b/eesanje/url_46_274_4.txt @@ -0,0 +1,9 @@ +ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ : ಯತ್ನಾಳ್ +ಬೆಂಗಳೂರು,ಜ.2- ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. +ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಹಿಂದೆ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ಪೂಜಾ ಕೈಂಯರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತು ಹೆಚ್.ಆಂಜನೇಯನವರು, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿ ಬಸನಗೌಡ ಪಾಟೀಲ್ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿರುಗೇಟು ಕೊಟ್ಟಿದ್ದಾರೆ. +1992ರಲ್ಲಿ ಕರಸೇವಕರಾಗಿ ಶ್ರೀ ರಾಮ ದೇವರ ಸೇವೆ ಮಾಡಿದ ಭಕ್ತರಿಗೆ, ಕಾರ್ಯಕರ್ತರಿಗೆ ಈಗ ನೋಟೀಸ್ ನೀಡಿ ಹುಬ್ಬಳ್ಳಿ ಪೊಲೀಸರು ಬಂಧನ ಮಾಡುವುದಾಗಿ ಬೆದರಿಸುತ್ತಿರುವುದು ಕಾಂಗ್ರೆಸ್ ಪಕ್ಷದ ಸೇಡಿನ ರಾಜಕಾರಣ ತೋರಿಸುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರನ್ನು ವಿ.ಐ.ಪಿ ಪ್ರಕರಣಗಳ ಹುಡುಕಾಟಕ್ಕೆ ನಿಯೋಜಿಸಿರುವ ಗೃಹ ಇಲಾಖೆಯ ಕ್ರಮ ಖಂಡನೀಯ ಎಂದು ಆಕ್ಷೇಪಿಸಿದ್ದಾರೆ. +ಇಡೀ ವಿಶ್ವವೇ ಅಯೋಧ್ಯೆಯತ್ತ ತಿರುಗಿ ನೋಡುತ್ತಿರುವ ಸಂದರ್ಭದಲ್ಲಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರ 31 ವರ್ಷಗಳ ಹಳೆಯ ಪ್ರಕರಣಕ್ಕೆ ಜೀವ ನೀಡುವ ಮೂಲಕ ತಾನು ಹಿಂದೂ ವಿರೋಧಿ ಎಂದು ಸಾಬೀತುಪಡಿಸಿದೆ. ಅಸಲಿಗೆ, ಮೂರು ದಶಕಗಳ ಕಾಲ ಸುಮ್ಮನಿದ್ದು, ಈಗ ರಾಮ ಜನ್ಮಭೂಮಿ ಪ್ರಾಣಪ್ರತಿಷ್ಠಾಪನೆಯ ದಿನಾಂಕ ನಿಗದಿಯಾದ ಮೇಲೆ ಈ ಕ್ರಮ ಕೈಗೊಂಡಿರುವುದು ಹಾಗೂ ವಿಶೇಷ ತಂಡ ರಚಿಸಿ ಬಂಧಿಸಲು ಹೊರಟಿರುವುದು ಹೇಯ ಹಾಗೂ ಖಂಡನೀಯ ಎಂದು ಕುಟುಕಿದ್ದಾರೆ. +ಜಗನ್‍ಮೋಹನ್‍ರೆಡ್ಡಿ ಸಹೋದರಿ ಶರ್ಮಿಳಾಗೆ ಕಾಂಗ್ರೆಸ್ ಗಾಳ +ಆದ್ಯತಾ ಪಟ್ಟಿಯನ್ನಿಟ್ಟುಕೊಂಡು ಕೆಲಸ ಮಾಡಬೇಕಾದ ಪೊಲೀಸರು, ನಿರ್ಜೀವ ಪ್ರಕರಣಕ್ಕೆ ವಿಶೇಷ ತಂಡ ರಚಿಸಿರುವುದು ಹಾಸ್ಯಾಸ್ಪದವಾಗಿದೆ. ಬಾಹ್ಯ ಹಾಗೂ ಆಂತರಿಕ ಶತ್ರುಗಳನ್ನು ಮಟ್ಟ ಹಾಕಬೇಕಾದವರು ಲಾಠಿ ಪ್ರಹಾರ ಮಾಡುವುದು ರಾಮ ಭಕ್ತರಿಗೆ ಮಾಡುವ ಅವಮಾನ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. +ಬಿಜೆಪಿ ಕೂಡ ಈ ಕುರಿತು ಟ್ವೀಟ್ ಮಾಡಿದ್ದು, ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಲೇ ಬಂದಿರುವ ಕಾಂಗ್ರೆಸ್, ಈಗ ಶ್ರೀರಾಮಚಂದ್ರರನ್ನು ಇತರರಿಗೆ ಹೋಲಿಸಿ ಮತ್ತೊಮ್ಮೆ ಹಿಂದೂ ಸಮಾಜಕ್ಕೆ ಅವಮಾನಿಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. \ No newline at end of file diff --git a/eesanje/url_46_274_5.txt b/eesanje/url_46_274_5.txt new file mode 100644 index 0000000000000000000000000000000000000000..02cd48667538fecc1320a64d28a9125ed23253cd --- /dev/null +++ b/eesanje/url_46_274_5.txt @@ -0,0 +1,4 @@ +ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..! +ಬೆಂಗಳೂರು,ಜ.2- ಮೆಟ್ರೋ ಟ್ರ್ಯಾಕ್‍ಗೆ ಜಿಗಿದ ಮಹಿಳೆ ಸಿಬ್ಬಂದಿಗಳ ಚಾಕಚಕ್ಯತೆಯಿಂದಾಗಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದಿರಾನಗರ ಮೆಟ್ರೋ ಸ್ಟೇಷನ್‍ನಲ್ಲಿ ನಡೆದಿದೆ. ಕೆಳಗೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಮೆಟ್ರೋ ಟ್ರ್ಯಾಕ್ ಗೆ ಮಹಿಳೆ ಜಿಗಿಯುತ್ತಿರುವುದನ್ನು ಕಂಡ ಕೂಡಲೇ ಮೆಟ್ರೋ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದರಿಂದ ಸಂಭವಿಸಬಹುದಾದ ಅನಾಹುತ ತಪ್ಪಿದೆ. +ಸಾಮೂಹಿಕ ಅತ್ಯಾಚಾರ, ಮೂವರು ಕಾಮುಕರ ಬಂಧನ +ಮಹಿಳೆ ಮಾಡಿದ ಈ ಎಡವಟ್ಟಿನಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಳಿಸಬೇಕಾಯಿತು ಎಂದು ಬಿಎಂಆರ್‌ಸಿಎಲ್‌ ಸ್ಪಷ್ಟನೆ ನೀಡಿದೆ. ವಿದ್ಯುತ್ ತೆಗೆದ ನಂತರ ಎಲ್ಲವನ್ನೂ ರೀ ಸೆಟ್ ಮಾಡಲು 15 ನಿಮಿಷ ಬೇಕು ನಿನ್ನೆ ಪೀಕ್ ಅವರ್ ನಲ್ಲೇ ಈ ರೀತಿ ಸಮಸ್ಯೆ ಅಗಿದೆ ಇದಕ್ಕೆ ವಿಷಾಧಿಸುತ್ತೇವೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_274_6.txt b/eesanje/url_46_274_6.txt new file mode 100644 index 0000000000000000000000000000000000000000..a56de0f048249aeee863fe8eaf27f5243e53fa25 --- /dev/null +++ b/eesanje/url_46_274_6.txt @@ -0,0 +1,8 @@ +ಲೋಕ ಚುನಾವಣೆಗೆ ಸ್ಪರ್ಧೆ : ಅಡ್ಡಗೋಡೆ ಮೇಲೆ ದೀಪವಿಟ್ಟ ಡಿವಿಎಸ್ +ಬೆಂಗಳೂರು,ಜ.1- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಕುರಿತು ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದು ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಇಡೀ ಲೋಕಸಭಾ ಕ್ಷೇತ್ರದಲ್ಲಿ ಒಂದೇ ಒಂದು ಮತದಾರರು ನನ್ನನ್ನು ಬೇಡ ಎಂದಿಲ್ಲ. ವಿರೋಧಿಸಿಲ್ಲ. ನನಗೆ ಖುಷಿ ಇದೆ. ನೋಡೋಣ ಮುಂದೆ ಏನಾಗುತ್ತದೆ ಎಂದು ಸೂಚ್ಯವಾಗಿ ಹೇಳಿದರು. ನಾನು ಎಲ್ಲರ ಜೊತೆಯೂ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿದ್ದೇನೆ. ನಾನು ಹಿಂದೆ ಮಾಧ್ಯಮಗಳೊಂದಿಗೆ ಮಾತನ್ನಾಡಿದ್ದೇನೆ. ನನ್ನ ಮನೆಯವರಿಗೆ ಸೀರೆ ತಂದುಕೊಟ್ಟಿದ್ದೇನೆ ಎಂದು ಹೇಳುವ ವ್ಯಕ್ತಿ ನಾನಲ್ಲ ಎಂದರು. ಅವರು ಉಟ್ಟ ಸೀರೆ ನಾನು ತಂದುಕೊಟ್ಟಿದ್ದು ಎಂದು ಹೇಳುವುದಲ್ಲ. ಈಗ ಸದ್ಯದ ಪರಿಸ್ಥಿತಿಯಲ್ಲಿ ಏನು ಹೇಳುವುದಿಲ್ಲ. ಅಡ್ಡ ಗೋಡೆಯ ಮೇಲೆ ದೀಪ ಇಟ್ಟಿದ್ದೇನೆ ಅಂದುಕೊಳ್ಳಬೇಡಿ. ಈಗ ನಾನು ಏನು ಹೇಳುವುದಿಲ್ಲ. ಮುಂದೆ ನೋಡೋಣ ಎಂದು ಪುನರುಚ್ಚರಿಸಿದರು. +ರಾಜಕಾರಣ ನಿಶ್ಚಯಗಳು, ನಿಲುವುಗಳು ಇರುತ್ತದೆ. ನಾನು 30 ವರ್ಷದ ರಾಜಕಾರಣ ನೋಡಿದ್ದೇನೆ. ಹೊಸಬರು ಬರಬೇಕೆಂದು ನಾನು ಬಯಸಿದ್ದು ನಿಜ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜಕಾರಣದಲ್ಲಿ ಕೆಲ ಬದಲಾವಣೆ ಆಗಿದೆ. ಈಗ ನನ್ನ ಮೇಲೆ ಒತ್ತಡ ಬರುತ್ತಿದೆ. ಬಸವರಾಜ ಬೊಮ್ಮಾಯಿ, ದಾಸರಹಳ್ಳಿ ಶಾಸಕರು, ಕೆ.ಆರ್. ಪುರಂ ಶಾಸಕರು, ಬ್ಯಾಟರಾಯನಪುರದ ಸ್ಥಳೀಯರು ಹಾಗೂ ಸೋಮಶೇಖರ್ ಕೂಡ ನನ್ನ ಪರ ಇದ್ದಾರೆ ಎಂದು ಹೇಳಿದರು. +ರಾಮ ಒಬ್ಬರಿಗೆ ಸೇರಿದವನಲ್ಲ ಎಂಬ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿದ ಗೌಡರು, ಪರಮೇಶ್ವರ್ ಅವರಿಗೆ ಈಗ ಒಳ್ಳೆಯ ಬುದ್ಧಿ ಬಂದಿದೆ. ಅವರಿಗೆ ರಾಮ ಒಳ್ಳೆಯದು ಮಾಡಲಿ. ಅವರು ಕೂಡ ಬರಲೀ ಎಂದು ವ್ಯಂಗ್ಯವಾಡಿದರು. +ರಾಮ ಜನ್ಮಭೂಮಿ ಕರ ಸೇವಕರ ಮೇಲೆ ಸರ್ಕಾರ ಸೇಡು: ಅಶೋಕ್ +ಪಕ್ಷದಲ್ಲಿ ವಿ.ಸೋಮಣ್ಣ ಅಸಮಾಧಾನಕ್ಕೆ ಸಂಬಂಧಿಸಿದಂತೆ ಇದು ಸಹಜ. ಈಗ ಹೊಸ ತಂಡ ಬಂದಿದೆ. ಸದ್ಯ ಹೊಸ ವರ್ಷದ ಸಂಭ್ರಮಾಚರಣೆಗೆ ಮಗನಿಗೆ ಅಪ್ಪ ಹೊಗಬೇಡ ಎನ್ನುತ್ತಾರೆ. 500 ಕೇಳಿದರೆ 150 ರೂ. ಕೊಡುತ್ತೇನೆ ಎಂದಾಗ, ಸ್ವಲ್ಪ ಅಸಮಾಧಾನ ಆಗುತ್ತದೆ. ಸೋಮಣ್ಣರ ವಿಚಾರದಲ್ಲಿ ಆಗಿರುವುದು ಅದೇ. ಸೋಮಣ್ಣ ಅವರು ಗೋವಿಂದರಾಜನಗರ ಬಿಟ್ಟು ಬೇರೆ ಕಡೆ ಹೋಗಿ, ಹಿನ್ನಡೆ ಅನುಭವಿಸಿದ್ದಾರೆ. ಹೀಗಾಗಿ, ಸ್ವಲ್ಪ ಬೇಸರ ಆಗಿದೆ. ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. +ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವಿ.ಸೋಮಣ್ಣ ಸರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ಸೋಮಣ್ಣನವರೇ ನನಗೆ ಕರೆ ಮಾಡಿ ಮಾತನ್ನಾಡಿದ್ದಾರೆ. ನೀವೇ ಬೆಂಗಳೂರು ಉತ್ತರಕ್ಕೆ ನಿಲ್ಲಬೇಕೆಂದರು. ಹಲವು ಮಂದಿ ನಿಮ್ಮ ನಿರ್ಧಾರ ಸರಿಯಲ್ಲ ಎಂದಿದ್ದಾರೆ. ಬೇರೆ ಯಾರಾದರೂ ಹೇಳಿದ್ದರೆ ಒಪ್ಪಬಹುದು. ನೀವು ಹೀಗೆ ಹೇಳಬಾರದಿತ್ತು ಎನ್ನುತ್ತಿದ್ದಾರೆ. ಖುದ್ದು ಸೋಮಣ್ಣನವರೇ ನೀವೇ ನಿಲ್ಲಬೇಕು ಎಂದಾಗ, ಅವರು ಬಂದು ಸರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_274_7.txt b/eesanje/url_46_274_7.txt new file mode 100644 index 0000000000000000000000000000000000000000..8ab8ac9dc7dc46e3df722953c4fc0a47c17066fc --- /dev/null +++ b/eesanje/url_46_274_7.txt @@ -0,0 +1,6 @@ +ವಿಮಾನಗಳಲ್ಲಿ ಚಿನ್ನ ಕಳ್ಳಸಾಗಣೆ: 2 ಕೋಟಿ ಮೌಲ್ಯದ ಚಿನ್ನ ಜಪ್ತಿ +ಬೆಂಗಳೂರು,ಜ.1- ವಿಮಾನಗಳಲ್ಲಿ ವಿವಿಧ ದೇಶಗಳಿಂದ ಚಿನ್ನವನ್ನು ಕಳ್ಳಸಾಗಣೆ ಮಾಡಿಕೊಂಡು ಬಂದಿದ್ದ ಹನ್ನೊಂದು ಮಹಿಳೆಯರು ಸೇರಿದಂತೆ 16 ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 2 ಕೋಟಿಗೂ ಅಧಿಕ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. +ವಿವಿಧ ದೇಶಗಳ ಪ್ರಮುಖ ನಗರಗಳಾದ ಕೌಲಾಲಂಪುರ, ಜೆಡ್ಡಾ, ಶಾರ್ಜಾ ಮತ್ತು ಬ್ಯಾಂಕಾಕ್‍ಗಳಿಂದ ಪ್ರತ್ಯೇಕ ವಿಮಾನಗಳಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹಲವು ಪ್ರಯಾಣಿಕರನ್ನು ತಡೆದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದರು. +ನಿಗಮ ಮಂಡಳಿ ನೇಮಕಾತಿ ಚರ್ಚೆಗೆ ಸಿಎಂ,ಡಿಸಿಎಂ ದೆಹಲಿಗೆ +ಆ ವೇಳೆ ಶೂ, ಸಾಕ್ಸ್, ಉಡುಪುಗಳು, ಕರವಸ್ತ್ರ ಹಾಗೂ ಒಳ ಉಡುಪುಗಳಲ್ಲಿ ಅಡಗಿಸಿಟ್ಟುಕೊಂಡು ಚಿನ್ನ ಕಳ್ಳಸಾಗಣೆ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ. ತಕ್ಷಣ 11 ಮಂದಿ ಮಹಿಳೆಯರು ಹಾಗೂ ಐದು ಮಂದಿ ಪುರುಷರನ್ನು ವಶಕ್ಕೆ ಪಡೆದು 3311 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರೆಸಿದ್ದಾರೆ. +ಈ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_274_8.txt b/eesanje/url_46_274_8.txt new file mode 100644 index 0000000000000000000000000000000000000000..e053a37ca8c15e3e895e0914a5573c634607e828 --- /dev/null +++ b/eesanje/url_46_274_8.txt @@ -0,0 +1,7 @@ +ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಜೆಡಿಎಸ್ ಸಿದ್ಧತೆ +ಬೆಂಗಳೂರು, ಜ.1- ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಮುಖಂಡರ ಅಭಿಪ್ರಾಯವನ್ನು ಜೆಡಿಎಸ್ ಸಂಗ್ರಹಿಸುತ್ತಿದೆ. ಕಳೆದ ಒಂದು ವಾರದಿಂದಲೂ ಪಕ್ಷದ ಮುಖಂಡರೊಂದಿಗೆ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ. +ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಗೆಲ್ಲಲು ಸಾಧ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಲು ತೀರ್ಮಾನಿಸಿದೆ. ಹೀಗಾಗಿ ಸ್ಪರ್ಧೆ ಮಾಡಲಿರುವ ಕ್ಷೇತ್ರಗಳ ಪ್ರಮುಖ ಮುಖಂಡರು, ಕಾರ್ಯಕರ್ತರೊಂದಿಗೆ ಅಭ್ಯರ್ಥಿ ಗಳ ಆಯ್ಕೆ ಚುನಾವಣೆ ಕಾರ್ಯ ತಂತ್ರದ ಬಗ್ಗೆ ನಿರಂತರ ಸಮಾಲೋಚನೆಯನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ. +ಮಕರ ಸಂಕ್ರಾಂತಿ ಹಬ್ಬದ ನಂತರ ಸ್ರ್ಪಧಿಸಲಿರುವ ಕ್ಷೇತ್ರಗಳ ಪ್ರಕಟ ಹಾಗೂ ಸಂಭವನೀಯ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಸ್ಪರ್ಧೆಗಿಳಿಯಲು ನಿರ್ಧರಿಸಿದೆ. ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿಯುವ ಇಚ್ಛೆಯನ್ನು ಬಿಜೆಪಿಯ ವರಿಷ್ಠರ ಗಮನಕ್ಕೆ ತರಲಾಗಿದೆ. +ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ +ಈ ನಾಲ್ಕು ಕ್ಷೇತ್ರಗಳಲ್ಲದೆ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಬಗ್ಗೆಯೂ ಮಿತ್ರ ಪಕ್ಷಗಳು ಸಮಾಲೋಚನೆ ನಡೆಸಿ ಗೆಲ್ಲುವ ಪಕ್ಷದ ಅಭ್ಯರ್ಥಿಗೆ ಅವಕಾಶ ಮಾಡಿಕೊಡಲಿವೆ. ಕೆಲವೊಂದು ಕ್ಷೇತ್ರಗಳನ್ನು ಬದಲು ಮಾಡಿಕೊಳ್ಳಲು ಕೂಡಾ ಬಿಜೆಪಿ-ಜೆಡಿಎಸ್ ನಾಯಕರು ಮುಕ್ತವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಹೀಗಾಗಿ ಸಂಕ್ರಾಂತಿಯವರೆಗೂ ಕಳೆದ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷಕ್ಕಾದ ಹಿನ್ನಡೆ, ಪಕ್ಷ ದಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ಕೊಳ್ಳುವುದು ಹಾಗೂ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಆಯಾ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ, ಸಲಹೆಗಳನ್ನು ಪಡೆಯಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_274_9.txt b/eesanje/url_46_274_9.txt new file mode 100644 index 0000000000000000000000000000000000000000..97fe16f90001b2e38ae6e7818eaf2e80f8696db9 --- /dev/null +++ b/eesanje/url_46_274_9.txt @@ -0,0 +1,7 @@ +ರಾಮ ಜನ್ಮಭೂಮಿ ಕರ ಸೇವಕರ ಮೇಲೆ ಸರ್ಕಾರ ಸೇಡು: ಅಶೋಕ್ +ಬೆಂಗಳೂರು,ಜ.1-ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ದಾಖಲಾಗಿದ್ದ ಹಳೆಯ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೆದಕಿ ಬಂಧಿಸಿ ಜೈಲಿಗಟ್ಟುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಭಕ್ತರನ್ನು ಬಂಧಿಸುವ ಮೂಲಕ ಟಿಪ್ಪು ಸಂಸ್ಕøತಿ ಹೇರುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿದರು. +ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ದ್ವೇಷದ ರಾಜಕಾರಣ ಮಾಡುತ್ತಿತ್ತು. ಆಗಲೂ ಹಿಂದೂ ಕಾರ್ಯಕರ್ತರ ಹತ್ಯೆಗಳಾಗಿದ್ದವು ಎಂದು ಹೇಳಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ರಾಮನ ಮೂರ್ತಿ ಪ್ರತಿಷ್ಠಾಪನೆಯ ಐತಿಹಾಸಿಕ ಕ್ಷಣವನ್ನು ಜನರು ಎದುರು ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿಗಾಗಿ ಹೋರಾಟಕ್ಕೆ ಹೋಗಿದ್ದ ಕರ ಸೇವಕರನ್ನು ಬಂಧಿಸುವ ಕೆಲಸವಾಗಿದೆ.ಹುಬ್ಬಳ್ಳಿಯಲ್ಲಿ 25-30 ವರ್ಷದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರ್ಯಕರ್ತರನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು. +ಹೂಗುಚ್ಛ ಬೇಡ, ಅನಾಥ ಮಕ್ಕಳಿಗೆ ಸಹಾಯ ಮಾಡಿ : ದಯಾನಂದ +ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ನಾನು ಕೂಡ ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದೆವು. ನಮ್ಮನ್ನು ಬಂಧಿಸುತ್ತೀರಾ? ಬಂಧಿಸುವ ಧೈರ್ಯವಿದೆಯೇ? ಹಳೆಯ ಪ್ರಕರಣಗಳನ್ನು ಹುಡುಕಿ ಕೆದಕುವ ಕೆಲಸ ಮಾಡಲಾಗುತ್ತಿದೆ. ರಾಮ ರಥಯಾತ್ರೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. +ಇದೇ ರೀತಿ ಹಳೆಯ ಪ್ರಕರಣಗಳಿಗೆ ರಾಜ್ಯಾದ್ಯಂತ ಮರುಜೀವ ನೀಡಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂಬ ಮಾಹಿತಿ ಇದೆ ಎಂದು ದೂರಿದರು. ಪ್ರಧಾನಿ ನರೇಂದ್ರಮೋದಿ ಅವರು ರಾಮಮಂದಿರ ಉದ್ಘಾಟನೆಯಾಗುವ ಸಂದರ್ಭದಲ್ಲಿ ಮನೆ ಮುಂದೆ ದೀಪ ಬೆಳಗಿ ಎಂದು ಕರೆ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ರಾಮ ಭಕ್ತರ ಮೇಲೆ ಕೇಸು ಹಾಕುವ ಮೂಲಕ ಭಯವನ್ನುಂಟು ಮಾಡುತ್ತಿದೆ ಎಂದು ಆರೋಪಿಸಿದರು.ಟಿಪ್ಪು ಜಯಂತಿ ಆಚರಿಸುವ ಕಾಂಗ್ರೆಸಿಗರು ಶ್ರೀರಾಮನವಮಿ ಮಾಡಿದ್ದಾರೆಯೇ? ನಾಮ ಧರಿಸುತ್ತಾರೆಯೇ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದರು. +ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರಿಗೆ 11 ಸಾವಿರ ಕೋಟಿ ಅನುದಾನ ಕೊಡುವುದಾಗಿ ಹೇಳಿದ್ದಾರೆ. ಆದರೆ ಬರಗಾಲದಿಂದ ತತ್ತರಿಸಿ ಸಂಕಷ್ಟದಲ್ಲಿರುವ ರೈತರ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಗೋಪಾಲಯ್ಯ ಉಪಸ್ಥಿತರಿದ್ದರು. \ No newline at end of file diff --git a/eesanje/url_46_275_1.txt b/eesanje/url_46_275_1.txt new file mode 100644 index 0000000000000000000000000000000000000000..9a8054d9f17e788b4efaeaacdb271789b9bb407f --- /dev/null +++ b/eesanje/url_46_275_1.txt @@ -0,0 +1,11 @@ +ವಾಹಿನಿಯಲ್ಲಿ ಹೂಡಿಕೆ: ಡಿ.ಕೆ.ಶಿವಕುಮಾರ್ ದಂಪತಿಗೆ ಸಿಬಿಐ ನೋಟಿಸ್ +ನವದೆಹಲಿ,ಜ.1- ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.ನಿನ್ನೆಯಷ್ಟೇ ಜೈಹಿಂದ್ ಚಾನಲ್‍ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿಜು ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಇದೀಗ, ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಒಟ್ಟು 30 ಮಂದಿಗೆ ಜನವರಿ 11ರಂದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ. +ಸಿಆರ್‍ಪಿಸಿ ಸೆಕ್ಷನ್ 91ರಡಿ ಹೊರಡಿಸಲಾದ ನೋಟಿಸ್‍ನಲ್ಲಿ, ಡಿ.ಕೆ.ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ಅವರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಣಕಾಸಿನ ವಹಿವಾಟುಗಳ ಜೊತೆಗೆ ಅವರ ಬ್ಯಾಂಕ್ ವಿವರಗಳನ್ನು ಒದಗಿಸುವಂತೆ ಸಿಬಿಐ ಚಾನಲ್‍ಗೆ ಕೇಳಿದೆ. ಹಿಡುವಳಿಗಳ ಹೇಳಿಕೆ, ಅವರ ಲೆಡ್ಜರ್ ಖಾತೆಗಳು, ಒಪ್ಪಂದದ ಟಿಪ್ಪಣಿಗಳು ಮತ್ತು ಇತರ ವಿವರಗಳ ಜೊತೆಗೆ ಎಲ್ಲಾ ಷೇರು ವಹಿವಾಟುಗಳ ವಿವರಗಳನ್ನು ಕೇಳಿದೆ. +ಸಿಆರ್ ಪಿಸಿ ಸೆಕ್ಷನ್ 91 ಅವರು ತನಿಖೆ ನಡೆಸಿದ ಪ್ರಕರಣದ ಬಗ್ಗೆ ದಾಖಲೆಗಳನ್ನು ಸಮನ್ಸ್ ಮಾಡಲು ಪೊಲೀಸ್ ತನಿಖಾ ಅಧಿಕಾರಿಗೆ ಅಧಿಕಾರ ನೀಡುತ್ತದೆ. ಶಿವಕುಮಾರ್ ಅವರ ಪುತ್ರ ಮತ್ತು ಇತರ ಕುಟುಂಬ ಸದಸ್ಯರು ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ಪ್ರಸ್ತುತಪಡಿಸುವಂತೆ ಸಿಬಿಐ ಕೇಳಿದೆ. +ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ +ಜೈಹಿಂದ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರು ಸಿಬಿಐ ನೋಟಿಸ್ ಸ್ವೀಕರಿಸಿದ್ದು, ಸಂಸ್ಥೆ ಕೋರಿರುವ ಎಲ್ಲಾ ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ, ಎಲ್ಲಾ ದಾಖಲೆಗಳು ತಮ್ಮ ಬಳಿ ಇವೆ ಮತ್ತು ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ 2020ರಲ್ಲಿ ಪ್ರಕರಣ ದಾಖಲಿಸಿದ್ದು, 2013 ಮತ್ತು 2018ರ ನಡುವೆ ಅವರು 74 ಕೋಟಿ ರೂ.ಗೂ ಹೆಚ್ಚು ಆಸ್ತಿಗಳಿಸಿದ್ದು, ಅದು ಅವರ ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಿತ್ತು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಈ ಹಿಂದೆ ರಾಜ್ಯ ಸಲ್ಲಿಸಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಿಂದಿನ ಸರ್ಕಾರ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. ಹಾಗಾಗಿ, ಅದು ಕಾನೂನು ರೀತಿಯಾಗಿ ಸರಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅನುಮತಿಯನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು.ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿವಿಚಾರಣೆಯನ್ನು ಹೈಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ. +ಆದಾಯ ತೆರಿಗೆ ಇಲಾಖೆ ದಾಳಿಗಳು ಮತ್ತು ಜಾರಿ ನಿರ್ದೇಶನಾಲಯದ ತನಿಖೆಯ ಆಧಾರದ ಮೇಲೆ, ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು ಮತ್ತು ಅದಕ್ಕೆ ಅಂದಿನ ಬಿಜೆಪಿ ಸರ್ಕಾರ ಸೆಪ್ಟೆಂಬರ್ 25, 2019ರಂದು ಅನುಮತಿ ನೀಡಿತ್ತು. ಸರ್ಕಾರ ಬದಲಾದ ನಂತರ, ಸಿಬಿಐ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂತೆಗೆದುಕೊಳ್ಳಲಾಗಿದೆ. +ಅಯೋಧ್ಯೆಯಲ್ಲಿ ಜೈಶ್ರೀರಾಮ್ ಘೋಷಣೆಯೊಂದಿಗೆ ಹೊಸ ವರ್ಚಾಚರಣೆ +ಡಿಕೆಶಿ ಮೇಲಿನ ಆರೋಪಗಳೇನು?2017ರಲ್ಲಿ ಡಿಕೆಶಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್‍ಟನ್ ರೆಸಾರ್ಟ್ ಮತ್ತು ಅವರ ಆಪ್ತರ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿದ್ದರು. ಇದೇ ಪ್ರಕರಣದಲ್ಲಿ ಇಡಿ ಅಧಿಕಾರಿಗಳೂ ದಾಳಿ ಮಾಡಿದ್ದರು. ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿತ್ತು. +ಜಾರಿ ನಿರ್ದೇಶನಾಲಯದ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ, ಅಂದಿನ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಆಗಿನ ಬಿಜೆಪಿ ಸರ್ಕಾರ 2019ರ ಸೆ.25ರಂದು ಸಿಬಿಐ ತನಿಖೆಗೆ ಅನುಮತಿ ನೀಡಿತ್ತು. 2020ರ ಅಕ್ಟೋಬರ್ 3ರಂದು ಸಿಬಿಐ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಿಸಿ ತನಿಖೆ ನಡೆಸುತ್ತಿತ್ತು. \ No newline at end of file diff --git a/eesanje/url_46_275_10.txt b/eesanje/url_46_275_10.txt new file mode 100644 index 0000000000000000000000000000000000000000..cae6644edeabd2fe225dc763ab14b4ad835e8a53 --- /dev/null +++ b/eesanje/url_46_275_10.txt @@ -0,0 +1,10 @@ +46 ಐಎಎಸ್ ಅಧಿಕಾರಿಗಳಿಗೆ ಬಡ್ತಿ +ಬೆಂಗಳೂರು,ಡಿ.31- ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸೇವೆಯಲ್ಲಿರುವ 46 ಮಂದಿ ಹಿರಿಯ ಹಾಗೂ ಕಿರಿಯ ಐಎಎಸ್ ಅಧಿಕಾರಿಗಳಿಗೆ ವಿವಿಧ ವೇತನ ಶ್ರೇಣಿಯ ಬಡ್ತಿ ನೀಡಲಾಗಿದ್ದು, ಬಹುತೇಕರನ್ನು ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ. ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಲಾಗಿದೆ. +ಪ್ರಧಾನಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದ ಅರವಿಂದ್ ಶ್ರೀವಾಸ್ತವ್ ಅವರಿಗೆ ಬಡ್ತಿ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಫರ್ವೇಜ್ ಅವರಿಗೆ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರಿಗೆ ಅಪರ ಮುಖ್ಯಕಾರ್ಯದರ್ಶಿ ಹುದ್ದೆಗೆ, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಎಂ.ಎಸ್.ಶೇಖರ್ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜಲಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಸುಭೋಷ್ ಯಾದವ್ ಅವರಿಗೆ ಬಡ್ತಿ ನೀಡಿ ಅದೇ ಹುದ್ದೆಯಲ್ಲಿ ಮುಂದುವರೆಸಲಾಗಿದೆ. +ಅಧ್ಯಯನದ ಪ್ರವಾಸದಲ್ಲಿರುವ ಖುಷ್ಟು ಜಿ.ಚೌದಿ, ರಣದೀಪ್ ಚೌದ್ರಿ ಅವರಿಗೆ, ಕೇಂದ್ರ ಸರ್ಕಾರದ ಬಾಹ್ಯಾಕಾಶ ಇಲಾಖೆಯ ನಿರ್ದೇಶಕರಾಗಿರುವ ದೀಪ್ತಿ ಆದಿತ್ಯ ಕಾನಡೆ ಅವರಿಗೆ 14ನೇ ವೇತನ ಬಡ್ತಿ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಚೋಳನ್ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಉಜ್ವಲ್‍ಕುಮಾರ್ ಘೋಷ್, ರಾಜ್ಯ ನಗರ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಎಂ.ದೀಪ ಅವರಿಗೂ ಬಡ್ತಿ ಭಾಗ್ಯ ದೊರೆತಿದೆ. +ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ +ಶಾಲಾ ಶಿಕ್ಷಣ ಇಲಾಖಾ ಆಯುಕ್ತರಾದ ಬಿ.ಬಿ.ಕಾವೇರಿ, ಕರ್ನಾಟಕ ಒತ್ತುವರಿ ತೆರವು ಪ್ರಾಕಾರದ ಮುಖ್ಯ ಅಧಿಕಾರಿ ಸುಷ್ಮಾ ಗೋಡ್ಬೋಲೆ, ಸಣ್ಣ ಕೈಗಾರಿಕೆಗಳ ವ್ಯವಸ್ಥಾಪಕ ನಿರ್ದೇಶಕ ಟಿ.ಎಚ್.ಎಂ.ಕುಮಾರ್, ಮಸೂರಿಯ ಎಲ್‍ಬಿಎಸ್‍ಎನ್‍ಎ ಗೆ ಉಪ ನಿರ್ದೇಶಕರಾಗಿರುವ ಅಭಿರಾಂ ಜಿ.ಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿಂಧು ಬಿ.ರೂಪೇಶ್, ಡಿಪಿಎಆರ್ ನ ಚುನಾವಣಾ ವಿಭಾಗದ ಹೆಚ್ಚುವರಿ ಚುನಾವಣಾಧಿಕಾರಿ ಕುಮಾರ್ ರಾವ್ ಎಂ., ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾದ ಡಾ.ರಾಗಪ್ರಿಯ ಆರ್. ಅವರಿಗೆ ಬಡ್ತಿ ನೀಡಿ ಅದೇ ಹುದ್ದೆಗಳಲ್ಲಿ ಮುಂದುವರೆಸಲಾಗಿದೆ. +ಕೇಂದ್ರ ಹಣಕಾಸು ಮತ್ತು ಕಾರ್ಪರೇಟ್ ಅಫೇರ್ಸ್ ಸಚಿವರ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶರವಣ, ಕಂದಾಯ ಇಲಾಖೆಯ ಭೂಸ್ವಾೀಧಿನ, ಸಾಮಾಜಿಕ ಬದ್ಧತೆ ವಿಭಾಗದ ಆಯುಕ್ತರಾದ ಪೊಮ್ಮುಲ ಸುನಿಲ್‍ಕುಮಾರ್, ಮೂಲ ಸೌಕರ್ಯ ಅಭಿವೃದ್ಧಿ ಜಂಟಿ ಕಾರ್ಯದರ್ಶಿ ಎಪೀಸ್ಬಾ ರಾಣಿ ಕೋರ್ಲಾಪತಿ, ಕರ್ನಾಟಕ ನೀರು ಸರಬರಾಜು ಅಥವಾ ಒಳಚರಂಡಿ ವ್ಯವಸ್ಥೆಯ ನಿರ್ದೇಶಕರಾದ ಶರತ್ ಬಿ., ಜವಳಿ ಇಲಾಖೆಯ ಆಯುಕ್ತರಾದ ಸಿ.ಎನ್.ಶ್ರೀಧರ ಅವರುಗಳಿಗೂ ಬಡ್ತಿ ನೀಡಲಾಗಿದೆ. +ಧಾರವಾಡ ಜಿಲ್ಲಾ ಪಂಚಾಯತ್‍ನ ಸಿಇಒ ಟಿ.ಕೆ.ಸ್ವರೂಪ, ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಕಲ್ಬುರ್ಗಿ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಫೌಜಿಯಾ ತರುನ್ಮಾ, ವಿಜಯಪುರ ಜಿಲ್ಲಾಧಿಕಾರಿ ಬೋಬಾಬಲ್ ಟಿ. ಅವರಿಗೆ 12 ನೇ ವೇತನ ಶ್ರೇಣಿಯ ಬಡ್ತಿ ನೀಡಿ ಹಾಲಿ ಹುದ್ದೆಯಲ್ಲೇ ಮುಂದುವರೆಸಲಾಗಿದೆ. +ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ +ನಗರ ಮೂಲ ಸೌಕರ್ಯ ಅಭಿವೃದ್ಧಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಲಕ್ಷ್ಮೀಪತಿ ರೆಡ್ಡಿ, ಹಟ್ಟಿ ಚಿನ್ನದ ಗಣಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ.ಶೆಟ್ಟಣ್ಣನವರಿಗೆ ಬಡ್ತಿ ನೀಡುವ ಜೊತೆಗೆ ಯೋಜನಾ ನಿಗಾವಣೆ, ಸಾಂಕಿಕ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಇದೇ ರೀತಿ 46 ಮಂದಿ ಅಧಿಕಾರಿಗಳಿಗೆ ರಾಜ್ಯಸರ್ಕಾರ 17 ವೇತನ ಶ್ರೇಣಿಯಿಂದ 11 ವೇತನ ಶ್ರೇಣಿಯವರೆಗೂ ವಿವಿಧ ಹಂತದ ಬಡ್ತಿಗಳನ್ನು ನೀಡಿದೆ. ಆಯುಷ್ ಇಲಾಖೆಯ ಆಯುಕ್ತರಾಗಿದ್ದ ಕೆ.ಲೀಲಾವತಿ ಅವರನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಕರಣದ ಸದಸ್ಯರನ್ನಾಗಿಯೂ ವರ್ಗಾವಣೆ ಮಾಡಲಾಗಿದೆ. \ No newline at end of file diff --git a/eesanje/url_46_275_11.txt b/eesanje/url_46_275_11.txt new file mode 100644 index 0000000000000000000000000000000000000000..78ced193c2cce52395cecbe678dee62b70d684f6 --- /dev/null +++ b/eesanje/url_46_275_11.txt @@ -0,0 +1,6 @@ +ರಾಜಕೀಯ ಲಾಭಕ್ಕಾಗಿ ರಾಮನ ಹೆಸರು ದುರ್ಬಳಕೆ : ಸಚಿವ ಡಿ.ಸುಧಾಕರ್ +ಚಿತ್ರದುರ್ಗ,ಡಿ.31- ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರವು ರಾಜಕೀಯ ಲಾಭಕ್ಕಾಗಿ ಪುಲ್ವಾಮಾ ಘಟನೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿರುವ ಸಚಿವ ಡಿ.ಸುಧಾಕರ್ ಅವರು, ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನ ಮಂದಿರದ ಉದ್ಘಾಟನೆಯೊಂದಿಗೆ ಇದೇ ತಂತ್ರವನ್ನು ಬಳಸುತ್ತಿದೆ ಎಂದು ದೂರಿದ್ದಾರೆ. +ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಗಳಿಸಲು ಬಿಜೆಪಿ ಸರ್ಕಾರ ಪುಲ್ವಾಮಾ ದಾಳಿಯನ್ನು ಬಳಸಿಕೊಂಡಿದ್ದು, ಈ ಬಾರಿ ರಾಮನ ಫೋಟೋ ಹಿಡಿದಿದೆ ಎಂದು ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ಒಂದು ಸ್ಟಂಟ್, ಜನರು ಮೂರ್ಖರಲ್ಲ, ನಾವು ಎರಡು ಬಾರಿ ಮೂರ್ಖರಾಗಿದ್ದೇವೆ, ಮೂರನೇ ಬಾರಿಗೆ ಮೋಸ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದಿದ್ದಾರೆ. +ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ +ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿರುವುದು ನಿಜ, ನಾನು ಮತ್ತು ಶಾಸಕ ರಘುಮೂರ್ತಿ ರಾಮಮಂದಿರಕ್ಕೆ ಹಣ ನೀಡಿದ್ದೆವು, ಈ ಹಿಂದೆಯೂ ಇಟ್ಟಿಗೆ ನೀಡಿದ್ದೇವೆ. ಶ್ರೀರಾಮ ಎಲ್ಲರಿಗೂ ದೇವರು ಎಂದು ಒತ್ತಿ ಹೇಳಿದ ಸುಧಾಕರ್, ಚುನಾವಣಾ ಸಮಯದಲ್ಲಿ ದೇವಸ್ಥಾನದ ಉದ್ಘಾಟನೆಯನ್ನು ಗಿಮಿಕ್ ಎಂದು ಜರಿದಿದ್ದಾರೆ. +ಭಾರತದ ಧಾರ್ಮಿಕ ನಂಬಿಕೆಗಳನ್ನು ಬಿಜೆಪಿ ಮತ ಸೆಳೆಯಲು ಬಳಸುತ್ತಿದೆ. ಕಳೆದ ಚುನಾವಣೆಯಲ್ಲಿ ರಾಮಮಂದಿರ ಎಲ್ಲಿತ್ತು? ಎಂದು ಸುಧಾಕರ್ ಪ್ರಶ್ನಿಸಿದರು. \ No newline at end of file diff --git a/eesanje/url_46_275_12.txt b/eesanje/url_46_275_12.txt new file mode 100644 index 0000000000000000000000000000000000000000..7cb8ac49a9c97c5aec0b503e35f6a1db47a0630f --- /dev/null +++ b/eesanje/url_46_275_12.txt @@ -0,0 +1,6 @@ +ಮಾರ್ಗ ಮಧ್ಯೆ ಆಂಬ್ಯುಲೆನ್ಸ್‌ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ +ಮೂಡಿಗೆರೆ,ಡಿ.31- ಹೆರಿಗೆಗೆಂದು ತುಂಬುಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಆಕೆ ಆಂಬ್ಯುಲೆನ್ಸ್‍ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. +ಬೆಳಗೋಡು ಗ್ರಾಮದ ನಿವಾಸಿ ತುಂಬು ಗರ್ಭಿಣಿಗೆ ಕಳೆದ ರಾತ್ರಿಹೆರಿಗೆ ನೋವು ಕಾಣಿಸಿಕೊಂಡಿದೆ ನಂತರ ಮನೆಯವರು ಆಂಬ್ಯುಲೆನ್ಸ್‍ಗೆ ಕರೆ ಮಾಡಿದ್ದಾರೆ ಕೆಲವೇ ನಿಮಿಷದಲ್ಲಿ 108 ಆಂಬ್ಯುಲೆನ್ಸ್ ಬಂದು ಆಕೆಯನ್ನು ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಗುತ್ತಿತ್ತು ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದಾರೆ. +ರೈತರ ಹಿತ ರಾಜ್ಯ ಸರ್ಕಾರದ ಆದ್ಯತೆ : ಸಚಿವ ಚಲುವರಾಯಸ್ವಾಮಿ +ಆದರೆ, ಗರ್ಭೀಣಿ ಮಹಿಳೆಯನ್ನ ನೋವು ತಡೆಯಲಾಗದೆ ಮಹಿಳೆ ಕಿರುಚಿಕೊಂಡಿದ್ದಾಳೆ ಆಗ ಚಾಲಕ ವಾಹನವನ್ನು ನಿಲ್ಲಿಸಿದ್ದು ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್‍ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ,ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಹೇಳಿದ್ದಾರೆ. ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ. \ No newline at end of file diff --git a/eesanje/url_46_275_2.txt b/eesanje/url_46_275_2.txt new file mode 100644 index 0000000000000000000000000000000000000000..439c3b3ffe8aeda768b8cf7ec74b78898da3f235 --- /dev/null +++ b/eesanje/url_46_275_2.txt @@ -0,0 +1,10 @@ +ಹೊಸ ವರ್ಷಾಚರಣೆ : ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ +ಬೆಂಗಳೂರು, ಡಿ.31- ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ 16 ಐಲ್ಯಾಂಡ್ ಮತ್ತು 18 ವಾಚ್ ಟವರ್‍ಗಳನ್ನು ನಿರ್ಮಿಸಲಾಗಿದೆ. ಸಂಭ್ರಮಾಚರಣೆ ವೇಳೆ ಮಹಿಳೆಯರು ಮತ್ತು ವೃದ್ಧರ ಆರೋಗ್ಯದಲ್ಲಿ ಏರುಪೇರಾದರೆ ಅವರುಗಳಿಗೆ ಚಿಕಿತ್ಸೆ ಮತ್ತು ವಿಶ್ರಾಂತಿ ನೀಡಲು ಐಲ್ಯಾಂಡ್‍ಗಳನ್ನು ನಿರ್ಮಿಸಲಾಗಿದೆ. +ಇದರಲ್ಲಿ ಮಹಿಳಾ ಪೊಲೀಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಇರುತ್ತಾರೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತದೆ. ಈ ರಸ್ತೆಗಳಲ್ಲಿ 18 ವಾಚ್ ಟವರ್‍ಗಳನ್ನು ನಿರ್ಮಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಅಲ್ಲಿ ಬೆಳಗಿನ ಜಾವದ ತನಕ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಪ್ರದೇಶಗಳಲ್ಲಿ ಹೆಚ್ಚು ಸಿಸಿಟಿವಿಗಳನ್ನು ಸಹ ಅಳವಡಿಸಲಾಗಿದೆ. ವರ್ಷಾಚರಣೆಯ ಪ್ರಮುಖ ಕೇಂದ್ರವಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ ನಾಲ್ವರು ಡಿಸಿಪಿಗಳು ಸೇರಿದಂತೆ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ. ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಕಾರಿಗಳು ಸೇರಿದಂತೆ 8500 ಪೊಲೀಸರನ್ನು ನಗರದಾದ್ಯಂತ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ. +ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ +ಇಂದು ರಾತ್ರಿ ಎಂಟು ಗಂಟೆಯಿಂದಲೇ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಂಚಾರಿ ಪೆÇಲೀಸರು ತೀರ್ಮಾನಿಸಿದ್ದಾರೆ. ರಾತ್ರಿ 8 ಗಂಟೆ ನಂತರ ಏರ ಪೋರ್ಟ್ ಪ್ಲೈಓವರ್ ಬಿಟ್ಟು ಉಳಿದ ಎಲ್ಲ ಪ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. +ಹೊಸ ವರ್ಷದ ಸಂಭ್ರಮಾಚರಣೆಗೆ ಬರುವವರು ಪೊಲೀಸರು ಗುರುತಿಸಿರುವ ಜಾಗದಲ್ಲಿ ಮಾತ್ರ ಪಾರ್ಕಿಂಗ್ ಮಾಡಬೇಕು. ಬೇಕಾಬಿಟ್ಟಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಟೋಯಿಂಗ್ ಮಾಡಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ. +ವರ್ಷಾಚರಣೆ ಸಂಭ್ರಮದಲ್ಲಿ ತೇಲಾಡುವವರ ವಿರುದ್ಧ ಹದ್ದಿನ ಕಣ್ಣಿಡುವ ಉದ್ದೇಶದಿಂದ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ 800 ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಅದರಲ್ಲೂ ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ನಲ್ಲಿ ಹೆಚ್ಚು ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗಿದೆ. ಬ್ರಿಗೇಡ್ ರೋಡ್‍ನ ಎರಡು ಬದಿಯ ವಿದ್ಯುತ್ ಕಂಬಗಳಿಗೆ ನಾಲ್ಕು ನಾಲ್ಕು ಸಿಸಿಟಿವಿಗಳನ್ನು ಅಳವಡಿಸಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವವರ ಮೇಲೆ ನಿಗಾ ಇಡಲಾಗಿದೆ ಮಾತ್ರವಲ್ಲ, ಎಲ್ಲರ ಚಲ-ವಲನಗಳು ಡಿಸ್‍ಪ್ಲೇ ಬೋರ್ಡ್‍ನಲ್ಲಿ ಕಾಣಿಸುವಂತೆ ನೋಡಿಕೊಳ್ಳಲಾಗಿದೆ.ಇದರ ಜತೆಗೆ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‍ನ ಗಲ್ಲಿ ಗಲ್ಲಿಯನ್ನು ಒಂದೇ ಕಡೆ ಕುಳಿತು ನೋಡುವಂತೆ ವಾರ್ ರೂಂ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಗಮನಿಸಲೆಂದೇ ಎರಡು ಸ್ಪೆಷಲ್ ಟೀಂ ನಿಯೋಜನೆ ಮಾಡಲಾಗಿದೆ. +ಹೊಸ ವರ್ಷದಲ್ಲಿ ಭಾರಿ ಏರಿಕೆಯಾಗಲಿದೆಯಂತೆ ಚಿನ್ನದ ಬೆಲೆ..! +ವಾಟ್ಸಾಫ್ ಗ್ರೂಪ್:ಕುಡಿದ ಅಮಲಿನಲ್ಲಿ ಪುಂಡಾಟ ನಡೆಸಿದರೆ ತಕ್ಷಣ ಪೊಲೀಸರಿಗೆ ಮಾಹಿತಿ ರವಾನಿಸಲು ಅನುಕೂಲವಾಗುವಂತೆ ಪಬ್, ರೆಸ್ಟೋರೆಂಟ್ ಮಾಲಿಕರ ವಾಟ್ಸಾಫ್ ಗ್ರೂಪ್ ರಚಿಸಲಾಗಿದೆ. ವಾಟ್ಸಾಪ್ ಗ್ರೂಪ್ ನಲ್ಲಿರುವ ಪ್ರತಿಯೊಬ್ಬರೂ ಪ್ರತಿಕ್ಷಣದ ಮಾಹಿತಿಗಳನ್ನು ಅಪ್‍ಡೇಟ್ ಮಾಡುತ್ತಿರಬೇಕು ಎಂದು ಸೂಚಿಸಲಾಗಿದೆ. ಈ ಗ್ರೂಪ್‍ನಲ್ಲಿ ಸ್ಥಳೀಯ ಪೊಲೀಸರು, ಅಯುಕ್ತರು, ಡಿಸಿಪಿಗಳು, ಎಸಿಪಿಗಳು ಸೇರಿದಂತೆ ಗುಪ್ತಚರ ಇಲಾಖೆ ಹಿರಿಯ ಅಧಿಕಾರಿಗಳು ಇರುವುದು ವಿಶೇಷವಾಗಿದೆ. +ಪಬ್ ಮತ್ತು ಬಾರ್‍ಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಕೂಡಲೇ ಗ್ರೂಪ್ ಮೂಲಕ ಮಾಹಿತಿ ನೀಡಬೇಕು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲಿದ್ದಾರೆ. \ No newline at end of file diff --git a/eesanje/url_46_275_3.txt b/eesanje/url_46_275_3.txt new file mode 100644 index 0000000000000000000000000000000000000000..4e3e0b15bc072676feb8bb85a089344b88439cd6 --- /dev/null +++ b/eesanje/url_46_275_3.txt @@ -0,0 +1,8 @@ +ವರಿಷ್ಠರು ತೀರ್ಮಾನಿಸಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ : ಸೋಮಣ್ಣ +ಬೆಂಗಳೂರು, ಡಿ.31- ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್ ಸೇರಲ್ಲ ಎಂದು ಮಾಜಿ ಸಚಿವ ವಿ.ಸೋಮಣ್ಣ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಗೋವಿಂದರಾಜನಗರದಲ್ಲಿ ಇಂದು ನಡೆದ ರಾಷ್ಟ್ರಕವಿ ಕುವೆಂಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮಣ್ಣ ಬರುತ್ತಾರೆ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಆದರೆ, ಇದು ಸುಳ್ಳು. ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. +ಈಗಾಗಲೇ ಕೇಂದ್ರ ವರಿಷ್ಠರಿಗೆ ನನಗಾದ ಅನ್ಯಾಯದ ಬಗ್ಗೆ ತಿಳಿಸಿದ್ದೇನೆ. ಅವರು ಕೂಡ ಎರಡು ಬಾರಿ ನನ್ನನ್ನು ದೆಹಲಿಗೆ ಕರೆದಿದ್ದಾರೆ. ಕಾರಣಾಂತರಗಳಿಂದ ಹೋಗಿಲ್ಲ. ಇನ್ನು ಮುಂದೆ ನನ್ನ ಮೇಲೆ ಗದಾಪ್ರಹಾರ ನಡೆಯದಂತೆ ನೋಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟ ವಿಷಯ. ಮುಂದಿನ ಜ.10ರೊಳಗೆ ಎಲ್ಲ ಗೊಂದಲಗಳು ಬಗೆಹರಿಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. +ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ +ಒಂದು ವೇಳೆ ನಾನು ಲೋಕಸಭೆ ಚುನಾವಣೆಗೆ ಸ್ರ್ಪಧಿಸಬೇಕು ಎಂದು ವರಿಷ್ಠರು ತೀರ್ಮಾನಿಸಿದರೆ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳುವ ಮೂಲಕ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾದಂತಾಗಿದೆ. ರಾಜಕೀಯ ನಿಂತ ನೀರಲ್ಲ. ದೊಡ್ಡವರ ಮಾತು ಕೇಳಿದೆ. ನೋವು ಮಾಡಿಕೊಂಡೆ. ನನ್ನ ಈ ಪರಿಸ್ಥಿತಿಗೆ ಕಾರಣರಾದವರ ಜತೆ ವರಿಷ್ಠರು ಚರ್ಚೆ ಮಾಡಿ ಎಲ್ಲವನ್ನೂ ಬಗೆಹರಿಸಬೇಕು ಎಂದು ಹೇಳಿದರು. ನಾನು ಯಾವುದೇ ಕಾಂಗ್ರೆಸ್ ನಾಯಕ ರನ್ನು ಭೇಟಿ ಮಾಡಿಲ್ಲ ಮತ್ತು ಲೋಕಸಭಾ ಟಿಕೆಟ್ ಕೇಳಿಲ್ಲ ಎಂದು ಅವರು ತಿಳಿಸಿದ್ದಾರೆ. +ಬಡವರಿಗೆ, ಜನಸಾಮಾನ್ಯರಿಗೆ ಸ್ಪಂದಿಸಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪರಾಭವಗೊಂಡ ಹಿನ್ನೆಲೆಯಲ್ಲಿ ಈಗ ನಮ್ಮ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ. ಇದು ಬೇಗ ಬಗೆಹರಿಯಲಿದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ಭವ್ಯ ಭಾರತ ನಿರ್ಮಾಣವಾಗಲಿದೆ. ಈಗಾಗಲೇ ಕೋಟ್ಯಂತರ ಜನರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ. ದೇಶ ಪ್ರಗತಿ ಸಾಧಿಸುತ್ತಿದೆ. ಇದರಿಂದಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲೂ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ರೇವ್‍ಪಾರ್ಟಿ ಮೇಲೆ ದಾಳಿ, ಡ್ರಗ್ಸ್ ಸೇವಿಸಿದ್ದ 80 ಮಂದಿ ಬಂಧನ +ಸೂರ್ಯ-ಚಂದ್ರ ಇರುವವರೆಗೂ ಕುವೆಂಪು ಹೆಸರು ಚಿರಸ್ಥಾಯಿಯಾಗಿರಲಿದೆ. ಕುವೆಂಪು ಅವರ ದೂರದೃಷ್ಟಿಯನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ಮನುಜಮತ, ವಿಶ್ವಪಥ ಸಂದೇಶ ಸಾರಿ ಕುವೆಂಪು ಅವರು ವಿಶ್ವಮಾನವರಾದರು ಎಂದು ಅವರು ಹೇಳಿದರು. \ No newline at end of file diff --git a/eesanje/url_46_275_4.txt b/eesanje/url_46_275_4.txt new file mode 100644 index 0000000000000000000000000000000000000000..a3dbc0f2dfa4e633f2241da7388535bf6fc1be3b --- /dev/null +++ b/eesanje/url_46_275_4.txt @@ -0,0 +1,6 @@ +ಹೊಸ ವರ್ಷಾಚರಣೆ ನಂತರ ಕೊರೊನಾ ಹೆಚ್ಚಳದ ಭೀತಿ +ಬೆಂಗಳೂರು,ಡಿ.31- ಹೊಸ ವರ್ಷಾಚರಣೆಯ ಸಂಭ್ರಮದ ಬೆನ್ನಲ್ಲೇ ಹೊಸ ವರ್ಷದಲ್ಲಿ ಕೊರೊನಾ ಸೋಂಕು ಹೆಚ್ಚಳದ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿರುವುದರಿಂದ ಆತಂಕ ಹೆಚ್ಚಾಗಿದ್ದು, ಹೊಸ ವರ್ಷಾಚರಣೆ ನಂತರ ಮಹಾಮಾರಿ ಕಾಟ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. +ರಾಜ್ಯದಲ್ಲಿ ಕೇವಲ ಒಂದೇ ದಿನದಲ್ಲಿ 201 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಟೆಸ್ಟಿಂಗ್ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಪತ್ತೆಯಾಗಿದೆ. +ರಾಜ್ಯದಲ್ಲಿ ಸದ್ಯ ಪ್ರತಿದಿನ 7,000 ಕ್ಕೂ ಹೆಚ್ಚು ಕೊವಿಡ್ ಟೆಸ್ಟ್‍ಗಳನ್ನ ಮಾಡಲಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಕೊರೊನಾ ಸೋಂಕಿನ ಹಾಟ್‍ಸ್ಪಾಟ್ ಆಗಿ ಬದಲಾಗುತ್ತಿದೆಯ ಎಂಬ ಅನುಮಾನ ಮೂಡಿಸುತ್ತಿದೆ. ಬೆಂಗಳೂರಿನಲ್ಲಿ ಈಗಾಗಲೇ 495 ಕೊವಿಡ್ ಪ್ರಕರಣಗಳಿದ್ದು, ಕೇವಲ 24 ಗಂಟೆಯಲ್ಲಿ 69 ಪ್ರಕರಣಗಳು ಬೆಳಕಿಗೆ ಬಂದಿವೆ. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ಬಳ್ಳಾರಿಯಲ್ಲಿ 18,ಬೆಂಗಳೂರು ಗ್ರಾಮಾಂತರ-19, ಬೆಳಗಾವಿ -5, ಬೀದರ್- 3, ಚಾಮರಾಜನಗರ 21,ಚಿಕ್ಕಬಳ್ಳಾಪುರ-18, ಚಿಕ್ಕಮಗಳೂರಿನಲ್ಲಿ 8, ಚಿತ್ರದುರ್ಗ-9, ದಕ್ಷಿಣ ಕನ್ನಡ 32, ದಾವಣಗೆರೆ 4, ಧಾರವಾಡ-7, ಗದಗ-8, ಹಾಸನ 21, ಹಾವೇರಿ-1, ಕಲಬುರಗಿ 3, ಕೊಡಗು 3, ಕೋಲಾರ 5, ಕೊಪ್ಪಳ 1, ಮೈಸೂರಿನಲ್ಲಿ 60, ಮಂಡ್ಯ 26,ರಾಯಚೂರು- 1, ರಾಮನಗರದಲ್ಲಿ 11, ಶಿವಮೊಗ್ಗ 14, ತುಮಕೂರು 9, ಉಡುಪಿ- 1, ಉತ್ತರ ಕನ್ನಡ 2, ವಿಜಯನಗರದಲ್ಲಿ 22 ಪ್ರಕರಣಗಳು ವರದಿಯಾಗಿವೆ. \ No newline at end of file diff --git a/eesanje/url_46_275_5.txt b/eesanje/url_46_275_5.txt new file mode 100644 index 0000000000000000000000000000000000000000..09e0a522a0edf1f661fdcb5ae0e8e4649cbfe817 --- /dev/null +++ b/eesanje/url_46_275_5.txt @@ -0,0 +1,8 @@ +ದ್ವೇಷ, ಅಸೂಯೆ, ಅಸಹನೆಯ ಗೋಡೆ ನಿರ್ಮಿಸಲಾಗುತ್ತದೆ : ಶಿವರಾಜ್ ಪಾಟೀಲ್ +ಬೆಂಗಳೂರು,ಡಿ.31- ಸಮಾಜದಲ್ಲಿ ದ್ವೇಷ, ಅಸೂಯೆ, ಅಸಹನೆಯ ಗೋಡೆ ನಿರ್ಮಿಸಲಾಗುತ್ತದೆ. ಅದರ ಬದಲಾಗಿ ಪ್ರೀತಿಯ ಸೇತುವೆ ಕಟ್ಟಬೇಕಿದೆ ಎಂದು ಸುಪ್ರೀಂಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಕರೆ ನೀಡಿದರು. +ನಗರದ ಪ್ರೆಸ್‍ಕ್ಲಬ್‍ನ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ದೇಶದ ಸಂವಿಧಾನ ಜಗತ್ತಿನಲ್ಲೇ ಅತ್ಯಂತ ಶ್ರೇಷ್ಠವಾಗಿದೆ. 2 ವರ್ಷ, 11 ತಿಂಗಳು, 17 ದಿನ ಅಧ್ಯಯನ ಮಾಡಿ ಸಂವಿಧಾನ ರಚಿಸಲಾಗಿದೆ. ಆ ವೇಳೆ ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹಿಂದಿನ ಹೋರಾಟ ಮತ್ತು ಐತಿಹಾಸಿಕ ಪರಂಪರೆಯನ್ನು ಗುರುತಿಸಲಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗಗಳ ಆಡಳಿತ ವ್ಯವಸ್ಥೆಯನ್ನು ರೂಪಿಸಲಾಗಿದೆ. ನಾಲ್ಕನೇ ಅಂಗವಾಗಿ ಪತ್ರಿಕಾ ರಂಗವನ್ನು ಉಲ್ಲೇಖಿಸಿದೇ ಇದ್ದರೂ ಸಮಾಜದ ಕಾವಲಿಗೆ ಮಾದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದರು. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ರಾಷ್ಟ್ರಪಿತ ಮಹಾತ್ಮಗಾಂಧಿಯವರು ಸಮಾಜದ ಕಟ್ಟಕಡೆಯ ವ್ಯಕ್ತಿಯ ಶ್ರೇಯಸ್ಸನ್ನು ಸಂವಿಧಾನ ಬಯಸಬೇಕು ಎಂದು ಹೇಳಿದರು. ಸಂವಿಧಾನ ಶ್ರೇಷ್ಠವಾಗಿದೆ. ಅದೇ ರೀತಿ ಅದನ್ನು ಜಾರಿಗೆ ತರುವವರಲ್ಲೂ ಬದ್ಧತೆ ಮತ್ತು ಸಾಮಾಜಿಕ ಕಳಕಳಿ ಇದ್ದರೆ ಮಾತ್ರ ಜನರಿಗೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಸಂವಿಧಾನದ ಆಶಯಗಳನ್ನು ಬೋಧಿಸುವ ಮೂಲಕ ಉತ್ತಮ ಕೆಲಸ ಮಾಡುತ್ತಿದೆ ಎಂದರು. +ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು, ಆಡಳಿತ ವ್ಯವಸ್ಥೆ, ಸಮರ್ಪಕ ಅನುಷ್ಠಾನಗೊಳ್ಳಬೇಕಾದರೆ ಜವಾಬ್ದಾರಿಯುತ ನಾಗರಿಕ ಸಮಾಜ, ಪ್ರಾಮಾಣಿಕ ಅಧಿಕಾರದ ವ್ಯವಸ್ಥೆ, ಜನಪರವಾದ ಸ್ವಯಂ ಸೇವಾ ಸಂಸ್ಥೆ, ಕ್ರಿಯಾಶೀಲ ನ್ಯಾಯಾಂಗ ಮತ್ತು ಅರ್ಥಪೂರ್ಣ ಮಾದ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು. +ವಿಕ್ರಂ ಸಿಂಹ ಬಂಧನದ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ +ಯಾವುದೇ ವಿಚಾರಗಳಾದರೂ ಅದರ ವಿಮರ್ಶೆ ಅಗತ್ಯ. ಜನರು ದ್ವನಿಯೆತ್ತಬೇಕು. ಸರ್ಕಾರವೂ ಅದಕ್ಕೆ ಕಿವಿಗೊಡಬೇಕು. ಜನ ಮೂಕರಾದರೆ, ಸರ್ಕಾರ ಕಿವುಡಾದರೆ ಪ್ರಜಾಪ್ರಭುತ್ವಕ್ಕೆ ಅಪಾಯವಾಗಲಿದೆ ಎಂದರು. ಸಮಾಜಕ್ಕೆ ನಮ್ಮ ಕೊಡುಗೆಯೇನು ಎಂಬ ಆತ್ಮವಿಮರ್ಶೆ ಅಗತ್ಯವಿದೆ. ಮಾದ್ಯಮ ಜವಾಬ್ದಾರಿ ಅತ್ಯಂತ ಮಹತ್ವದ್ದು. ಎಲ್ಲಾ ಕ್ಷೇತ್ರಗಳ ಮೇಲೂ ಮಾದ್ಯಮದ ನಿಗಾವಣೆ ಇರುತ್ತದೆ. ವರದಿಗಳಲ್ಲಿ ವಸ್ತುನಿಷ್ಠತೆ ಅಗತ್ಯವಿದೆ. ಪಕ್ಷಪಾತವಿರಬಾರದು ಎಂದು ಸಲಹೆ ನೀಡಿದರು. \ No newline at end of file diff --git a/eesanje/url_46_275_6.txt b/eesanje/url_46_275_6.txt new file mode 100644 index 0000000000000000000000000000000000000000..545cfb4ba9e50a6c3765f5e02dcdb33dc6e5c6ec --- /dev/null +++ b/eesanje/url_46_275_6.txt @@ -0,0 +1,6 @@ +ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ +ಬೆಂಗಳೂರು,ಡಿ.31- ಸಿಹಿ-ಕಹಿ ನೆನಪುಗಳೊಂದಿಗೆ 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಬಿಎಂಟಿಸಿ ಇಂದು ಮಧ್ಯರಾತ್ರಿ 2 ಗಂಟೆವರೆಗೂ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿದೆ. +ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮಾಚರಣೆಯಲ್ಲಿ ಜನರು ಪಾಲ್ಗೊಂಡು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುವಾಗುವಂತೆ ಬಿಎಂಟಿಸಿ ಬಸ್‍ಗಳು ಸಂಚಾರ ಅವಧಿಯನ್ನು ವಿಸ್ತರಣೆ ಮಾಡಿದೆ. ಜೊತೆಗೆ ಹೆಚ್ಚುವರಿ ಬಸ್‍ಗಳನ್ನು ಸಹ ನಿಯೋಜನೆ ಮಾಡಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಸಂಚಾರಕ್ಕೆ ನಿಗಮದಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ಎಂಜಿರಸ್ತೆ, ಬ್ರಿಗೇಡ್ ರಸ್ತೆ, ಕಾಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಬನ್ನೇರುಘಟ್ಟ, ಕೆಂಗೇರಿ, ಮಾಗಡಿ ರಸ್ತೆ, ಹೆಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ಇರಲಿದೆ. ಜನ ದಟ್ಟಣೆ ಅಕವಾಗಿರುವ ಯಲಹಂಕ, ಇಂದಿರಾನಗರ, ಕೋರಮಂಗಲ, ಬನಶಂಕರಿ, ಗೊರಗುಂಟೆಪಾಳ್ಯ ಸೇರಿದಂತೆ ಮತ್ತಿತರ ಕಡೆಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ಪ್ರತಿನಿತ್ಯ ರಾತ್ರಿ 11 ಗಂಟೆವರೆಗೂ ಮಾತ್ರ ಬಿಎಂಟಿಸಿ ಬಸ್ ಸಂಚಾರ ಇರುತ್ತಿತ್ತು. ವರ್ಷಾಚರಣೆ ಹಿನ್ನಲೆಯಲ್ಲಿ ಸೇವೆಯನ್ನು 2 ಗಂಟೆವರೆಗೂ ವಿಸ್ತರಿಸಲಾಗಿದೆ. \ No newline at end of file diff --git a/eesanje/url_46_275_7.txt b/eesanje/url_46_275_7.txt new file mode 100644 index 0000000000000000000000000000000000000000..a58918b9eb2e18fd7031dd907725448740c37c8a --- /dev/null +++ b/eesanje/url_46_275_7.txt @@ -0,0 +1,5 @@ +ಹೊಸ ವರ್ಷಾರಣೆಗೆ 2 ಗಂಟೆವರೆಗೂ ಮೆಟ್ರೊ ಸೇವೆ +ಬೆಂಗಳೂರು,ಡಿ.31-ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ಜನತೆಯ ಸುರಕ್ಷತೆ ದೃಷ್ಟಿಯಿಂದ ತಡರಾತ್ರಿ 2 ಗಂಟೆವರೆಗೂ ಮೆಟ್ರೊ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ವರ್ಷಾಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜನರು ಸಹ ಪ್ಲಾನ್‍ಗಳನ್ನು ಮಾಡಿಕೊಂಡಿದ್ದಾರೆ. +ನಗರದ ವಿವಿಧೆಡೆ ಹೊಸ ವರ್ಷದ ಸಂಭ್ರಮದಲ್ಲಿ ಪಾಲ್ಗೊಂಡು ಸುರಕ್ಷಿತವಾಗಿ ತಮ್ಮ ತಮ್ಮ ಮನೆಗಳಿಗೆ ತಲುಪಲು ಅನುವಾಗುವಂತೆ ಇಂದು ರಾತ್ರಿಯಿಂದ ಬೆಳಗಿನ ಜಾವ 2 ಗಂಟೆವರೆಗೂ ಮೆಟ್ರೊ ಸೇವೆ ಇರಲಿದೆ.ಎಂಜಿರಸ್ತೆಯಲ್ಲಿ ಹೆಚ್ಚು ಜನ ದಟ್ಟಣೆ ಇರುವುದರಿಂದ ಮೆಟ್ರೊ ನಿಲ್ದಾಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ಪೊಲೀಸ್ ಇಲಾಖೆಯ ಸೂಚನೆ ಮೇರೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಹೀಗಾಗಿ ವಿಸ್ತೃತ ರೈಲ್ವೆ ಸೇವೆಯನ್ನು ಬಳಸಿಕೊಳ್ಳಲು ಟ್ರಿನಿಟಿ ಅಥವಾ ಕಬ್ಬನ್‍ಪಾರ್ಕ್ ಮೆಟ್ರೊ ನಿಲ್ದಾಣಗಳಿಗೆ ತೆರಳಲು ಸೂಚಿಸಲಾಗಿದೆ. \ No newline at end of file diff --git a/eesanje/url_46_275_8.txt b/eesanje/url_46_275_8.txt new file mode 100644 index 0000000000000000000000000000000000000000..d558d0e42ca84e8f3c35dec6b4da0021da0e39d7 --- /dev/null +++ b/eesanje/url_46_275_8.txt @@ -0,0 +1,5 @@ +ತಮ್ಮನ ಬಂಧನದ ಕುರಿತು ಪ್ರತಾಪ್ ಸಿಂಹ ಪ್ರತಿಕ್ರಿಯೆ ಏನು..? +ಬೆಂಗಳೂರು,ಡಿ.31- ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹನನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಮೌನ ಮುರಿದಿದ್ದಾರೆ. ಬೇಲೂರು ತಾಲೂಕಿನ ನಂದಗೊಂಡನಹಳ್ಳಿಯ 10 ಎಕರೆಯಲ್ಲಿ ಬೆಳೆದಿದ್ದ 126 ಮರಗಳನ್ನು ಅರಣ್ಯ ಇಲಾಖೆಯ ಗಮನಕ್ಕೂ ತರದೇ ಕಡಿಯಲಾಗಿದೆ ಎಂಬ ದೂರಿನ ಆಧಾರದ ಮೇಲೆ ಸಂಸದ ಪ್ರತಾಪ್ ಸಿಂಹ ಸಹೋದರನ ಮೇಲೆ ಎಫ್‍ಐಆರ್ ದಾಖಲಾಗಿತ್ತು. ಅಲ್ಲದೇ ಜಮೀನಿನ ಮಾಲೀಕರಾದ ಜಯಮ್ಮ ರಾಕೇಶ್ ಶೆಟ್ಟಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. +ಅಪ್ರಾಪ್ತೆ ಅಪಹರಿಸಿ ನಿರಂತರ ಅತ್ಯಾಚಾರ ಮಾಡಿದ್ದ ಆರೋಪಿ ಅರೆಸ್ಟ್ +ಪ್ರಕರಣ ತನಿಖೆಗೆ ಇಳಿದ ವೇಳೆ ವಿಕ್ರಂ ಸಿಂಹ ಹಾಸನದಿಂದ ಬೆಂಗಳೂರಿಗೆ ಶಿಫ್ಟ ಆದ ಬಗ್ಗೆ ಮಾಹಿತಿ ಪಡೆದ ಬೇಲೂರು ಪೊಲೀಸರ ತಂಡ, ನಿನ್ನೆ ಅಷ್ಟೇ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹನನ್ನು ವಶಕ್ಕೆ ಪಡೆಯಿತು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ರಾಜ್ಯ ಸರ್ಕಾರಕ್ಕೆ ಪ್ರತಾಪ್ ಸಿಂಹ ಕುಟುಕಿದ್ದಾರೆ. +ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಎಫ್‍ಐಆರ್ ಎಂಬ ಟ್ಯಾಗ್ ಲೈನ್ ನೀಡಿದ ಸಂಸದರು, ಪ್ರಮುಖ ಆರೋಪಿಗಳ ಹೆಸರನ್ನು ಅಂಡರ್ ಲೈನ್ ಮಾಡಿದ್ದಾರೆ. ಎಫ್‍ಐಆರ್ ಪ್ರತಿಯಲ್ಲಿ ಪ್ರಕರಣದ ಮೊದಲ ಆರೋಪಿ ರಾಕೇಶ್ ಶೆಟ್ಟಿ ಎಂದಿದ್ದು, 2ನೇ ಆರೋಪಿ ಜಯಮ್ಮ ಎಂದು ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿ ಅಲ್ಲದೇ ಇದ್ದರೂ ವಿಕ್ರಂ ಬಂಧನ ಎಂದು ಮಾರ್ಮಿಕವಾಗಿ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_275_9.txt b/eesanje/url_46_275_9.txt new file mode 100644 index 0000000000000000000000000000000000000000..7bdb16688e8f8659251f74864580f44b4285eaab --- /dev/null +++ b/eesanje/url_46_275_9.txt @@ -0,0 +1,6 @@ +ವಿಕ್ರಂ ಸಿಂಹ ಬಂಧನದ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಪ್ರತಿಕ್ರಿಯೆ +ಬೀದರ್,ಡಿ.31- ಸರ್ಕಾರಿ ಅಥವಾ ಪಟ್ಟಾ ಜಮೀನಿನಲ್ಲಿ ಅನುಮತಿ ಇಲ್ಲದೆ ಮರ ಕಡಿಯುವುದು ಅಪರಾಧವಾಗಿದೆ. ಅದರಲ್ಲೂ ಹಳೆಯದಾದ ಮರಗಳನ್ನು ಕಡಿಯುವುದು ಗಂಭೀರ ಸ್ವರೂಪದ್ದಾಗಿದೆ. ಈ ವಿಷಯದಲ್ಲಿ ಎಷ್ಟೇ ದೊಡ್ಡವರಾಗಿದ್ದರೂ ಕಾನೂನು ತನ್ನ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. +ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126 ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ. ಈ ರೀತಿ ಸ್ವಾರ್ಥಕ್ಕಾಗಿ ಯಾರೇ ಮರ ಕಡಿದರೂ ಅದು ಅಪರಾಧ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ ಎಂದರು. +ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ +ವೃಕ್ಷ ಸಂರಕ್ಷಣಾ ಕಾಯಿದೆಯಡಿ ಸರ್ಕಾರಿ ಜಾಗದಲ್ಲಿಯೇ ಆಗಲೀ, ಪಟ್ಟಾ ಜಮೀನಿನಲ್ಲೇ ಆಗಲಿ ಅನುಮತಿ ಪಡೆಯದೆ ಅಕ್ರಮವಾಗಿ ಮರ ಕಡಿಯುವುದು ಅಪರಾಧ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ನಾನು ಯಾರ ಹೆಸರೂ ಹೇಳಲು ಇಚ್ಛಿಸುವುದಿಲ್ಲ. ಆದರೆ, ವಿಕ್ರಂ ಸಿಂಹ ಎಂಬುವವರು ಶುಂಠಿ ಬೆಳೆಯಲು ಸದರಿ ಪ್ರಶ್ನಿತ ಜಮೀನಿನ ಕರಾರು ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪ್ರಶ್ನಿಸುವುದು ಅಗತ್ಯವೆಂದು ಮನಗಂಡು ತನಿಖಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ. +ಈ ಪ್ರಕರಣದಲ್ಲಿ ತಹಶೀಲ್ದಾರ್ ಅವರು ಪ್ರಕರಣ ಬೆಳಕಿಗೆ ತಂದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡು ಬಂದಿದೆ. ಕ್ಷಿಪ್ರವಾಗಿ ಕ್ರಮವಹಿಸದ ಮತ್ತು ನಿಯಮಾನುಸಾರ ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ 5 ಅಧಿಕಾರಿ ಸಿಬ್ಬಂದಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_276_1.txt b/eesanje/url_46_276_1.txt new file mode 100644 index 0000000000000000000000000000000000000000..1a6e7a7514cc9365d746b2365489a573b7788f54 --- /dev/null +++ b/eesanje/url_46_276_1.txt @@ -0,0 +1,6 @@ +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಬೆಂಗಳೂರು,ಡಿ.30- ನಡೆದು ಹೋಗುತ್ತಿದ್ದ ಪಾದಚಾರಿಗಳಿಗೆ ವಾಟರ್ ಟ್ಯಾಂಕ್ ಡಿಕ್ಕಿ ಹೊಡೆದು ಬಾಲಕ ಸೇರಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನಿಗೆ ಒಂದು ವರ್ಷ ಕಾರಾಗೃಹ ವಾಸ ಹಾಗೂ 5 ಸಾವಿರ ರೂ. ದಂಡ ವಿಧಿಸಿ 2ನೇ ಸಂಚಾರ ನ್ಯಾಯಾಲಯ ತೀರ್ಪು ನೀಡಿದೆ. ನವೀನ್‍ಕುಮಾರ್(33) ಶಿಕ್ಷೆಗೊಳಗಾದ ವಾಟರ್‍ಟ್ಯಾಂಕ್ ಚಾಲಕ. +ಗಾಂಧಿನಗರ 5ನೇ ಮುಖ್ಯರಸ್ತೆ, 4ನೇ ಅಡ್ಡರಸ್ತೆಯಲ್ಲಿ 2010 ಜುಲೈ 19 ರಂದು ಬೆಳಿಗ್ಗೆ 9 ಗಂಟೆ ಸುಮಾರಿನಲ್ಲಿ ವಾಟರ್‍ ಟ್ಯಾಂಕ್ ಚಾಲನೆ ಮಾಡಿಕೊಂಡು ಬಂದ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಏಕಾಏಕಿ ಎಡಭಾಗಕ್ಕೆ ವಾಹನ ತಿರುಗಿಸಿದಾಗ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ, ನಂತರ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಂಜಯ್‍ಕುಮಾರ್(11) ಸ್ಥಳದಲ್ಲೇ ಮೃತಪಟ್ಟರೆ, ಶಿವಲೀಲಾ(47) ಎಂಬ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಸರಸ್ವತಮ್ಮ(45) ಮತ್ತು ಪಾರ್ಥಬ(12), ಅಭಿಲಾಷ್(12) ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಈ ಪ್ರಕರಣವನ್ನು ತನಿಖೆ ಕೈಗೊಂಡ ಉಪ್ಪಾರಪೇಟೆ ಸಂಚಾರಿ ಠಾಣೆ ಪೊಲೀಸರು ಆರೋಪಿ ಚಾಲಕನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಆತನ ಬಳಿ ಚಾಲನ ಅರ್ಹತಾ ಪತ್ರ ಇಲ್ಲದಿರುವುದು ತನಿಖೆಯಿಂದ ದೃಢಪಟ್ಟಿದೆ. ತನಿಖೆ ಪೂರೈಸಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗಿತ್ತು. +ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ +ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿ ದೋಷಿ ಎಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ 1 ವರ್ಷ ಕಾರಾಗೃಹ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಈ ಬಗ್ಗೆ ಆರೋಪಿಯು ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಅೀಧಿನ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿಹಿಡಿದಿದ್ದು, ಆರೋಪಿಗೆ ಸೆರೆಮನೆಯ ವಾರಂಟ್ ಅನ್ನು ಹೊರಡಿಸಿದೆ. \ No newline at end of file diff --git a/eesanje/url_46_276_10.txt b/eesanje/url_46_276_10.txt new file mode 100644 index 0000000000000000000000000000000000000000..311176a4dd2f0e3429cde600c6a49de23de3e688 --- /dev/null +++ b/eesanje/url_46_276_10.txt @@ -0,0 +1,7 @@ +ಹೈವೆ ರಸ್ತೆಗಳಲ್ಲಿ ಸುಲಿಗೆ, ನಾಲ್ವರು ಖಾಕಿ ಬಲೆಗೆ +ಬೆಂಗಳೂರು,ಡಿ.29- ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದ ಮತ್ತು ರಾತ್ರಿವೇಳೆ ಮೊಬೈಲ್ ಪೋನ್‍ಗಳು, ಹಣ ದೋಚುತ್ತಿದ್ದ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನಾಲ್ಕು ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ಆರೋಪಿಗಳಿಂದ ವಿವಿಧ ಕಂಪನಿಯ 17 ಆಂಡ್ರಾಯ್ಡ್ ಮೊಬೈಲ್ ಫೋನ್‍ಗಳು 1 ಕೆಜಿ 200 ಗ್ರಾಂ ತೂಕದ ಗಾಂಜಾ ಹಾಗೂ ಆರೋಪಿಗಳು ವಿಲಿಂಗ್ ಮಾಡಲು ಹಾಗೂ ಸುಲಿಗೆ ಮಾಡಲು ಉಪಯೋಗಿಸಿದ್ದ ಡಿಯೋ ಸ್ಕೂಟರ್‍ಗಳು ಹಾಗೂ ಒಂದು ಚಾಕು, ಒಂದು ಡ್ರ್ಯಾಗನ್ ಸೇರಿ ಒಟ್ಟು ಸುಮಾರು 4 ಲಕ್ಷ ಮೌಲ್ಯದ ವಸು ್ತಗಳನ್ನು ವಶ ಪಡಿಸಿಕೊಳ್ಳಲಾಗಿದೆ. +ನೆಲಮಂಗಲ ತಾಲ್ಲೂಕ್, ಹುಚ್ಚೇಗೌಡನಪಾಳ್ಯದ ಖಾಲ್ಸಾ ಪಂಜಾಬಿ ಡಾಬಾ ಹಿಂಭಾಗದಲ್ಲಿರುವ ಲಾರಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ 3-4 ಜನರು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೇಟ್‍ಗಳಲ್ಲಿ ತುಂಬಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುತ್ತಾರೆಂದು ಬಂದ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿ ಗಾಂಜಾ, ಸ್ಕೂಟರ್ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ಆರೋಪಿಗಳು ಡಿಯೋ ಸ್ಕೂಟರ್‍ಗಳಲ್ಲಿ ಹೈವೆ ರಸ್ತೆಗಳಲ್ಲಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಮ್ಮ ದ್ವಿ-ಚಕ್ರ ವಾಹನಗಳನ್ನು ಅತಿವೇಗವಾಗಿ ಮಾನವನ ಪ್ರಾಣಕ್ಕೆ ಅಪಾಯವಾಗುವಂತೆ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗವಾಗುವಂತೆ ಮತ್ತು ಸಾರ್ವಜನಿಕರಿಗೆ ಭಯವುಂಟಾ ಗುವಂತೆ ವಾಹನಗಳನ್ನು ವಿಲಿಂಗ್ ಮಾಡಿರುವುದು ತಿಳಿದುಬಂದಿರುತ್ತದೆ. +ಪ್ರಕರಣದ ಆರೋಪಿಗಳ ಪತ್ತೆಯ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅೀಧಿಕ್ಷಕರಾದ ಮಲ್ಲಿಕಾರ್ಜುನ್ ಬಾಲದಂಡಿ., ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_276_11.txt b/eesanje/url_46_276_11.txt new file mode 100644 index 0000000000000000000000000000000000000000..45b43107918c1252ba82ec58309ee51359e8db0b --- /dev/null +++ b/eesanje/url_46_276_11.txt @@ -0,0 +1,9 @@ +ಕರವೇ ಕಾರ್ಯಕರ್ತರ ಬಂಧನ ಸರ್ಕಾರದ ಆತುರದ ನಿರ್ಧಾರ : ದೊಡ್ಡರಂಗೇಗೌಡ +ಬೆಂಗಳೂರು,ಡಿ.29- ಕನ್ನಡ ರಕ್ಷಣಾ ವೇದಿಕೆಯ ಹೋರಾಟಗಾರರನ್ನು ಬಂಧಿಸಿರುವುದನ್ನು ವಿರೋಧಿಸಿ ನಗರದಲ್ಲಿಂದು ನಡೆದ ಸಭೆಯಲ್ಲಿ ಖಂಡನಾ ನಿರ್ಣಯವನ್ನು ತೆಗೆದುಕೊಳ್ಳಲಾಯಿತು. ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಹಾಗೂ ಇತರರನ್ನು ಬಂಧಿಸಿರುವುದನ್ನು ಖಂಡಿಸಿ ಕರವೇಯ ಮತ್ತೊಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಖಂಡನಾ ಸಭೆ ನಡೆಯಿತು.ಸಹಜ ಭಿನ್ನಾಭಿಪ್ರಾಯಗಳ ನಡುವೆಯೂ ಸಹಜ ನಾಡು-ನುಡಿಯ ವಿಷಯವಾಗಿ ಹೋರಾಟ ಮಾಡುವವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ನಾಯಕರು ಘೋಷಿಸಿದರು. +ಸಾಹಿತಿ ದೊಡ್ಡರಂಗೇಗೌಡ ಅವರು ಸಿದ್ದರಾಮಯ್ಯ ಅವರ ಸರ್ಕಾರ ನಾರಾಯಣಗೌಡ ಅವರನ್ನು ಬಂಧಿಸಿರುವುದು ಸಮರ್ಥನೀಯವಲ್ಲ. ಇದು ಆತುರದ ಕ್ರಮ ಎಂದು ಖಂಡಿಸಿದರು. ನಾಡು-ನುಡಿಗೆ ಧಕ್ಕೆಯಾಗುವಾಗ ಕನ್ನಡಪರ ಸಂಘಟನೆಯ ಎಲ್ಲಾ ಬಣಗಳೂ ಹೋರಾಟ ನಡೆಸಬೇಕಾಗಿದೆ. ಹೋರಾಟ ನಡೆಸುವವರನ್ನು ಜೈಲಿಗೆ ಕಳುಹಿಸಿದರೆ ಕನ್ನಡಿಗರ ಸಿಟ್ಟು ಸ್ಪೋಟಗೊಳ್ಳುತ್ತದೆ. ಇಲ್ಲಿ ಕನ್ನಡಿಗರು ಜಗಳಕ್ಕೆ ಹೋಗಿಲ್ಲ, ಸರ್ಕಾರವೇ ಜಗಳ ಆರಂಭಿಸಿದೆ. +ಎಲ್ಲಾ ಕಾಲದಲ್ಲೂ ಲಾಠಿ ಪ್ರಯೋಗ ಸಹಿಸಲು ಸಾಧ್ಯವಿಲ್ಲ. ಪ್ರತಿಭಟನೆ ನಮ್ಮ ಹಕ್ಕು, ಅನ್ಯಾಯವಾದಾಗ ನಾವು ವಿರೋಧಿಸುತ್ತೇವೆ, ಎಲ್ಲವೂ ಸುಸೂತ್ರವಾಗಿದ್ದರೆ ನಾವು ಪ್ರತಿಭಟನೆ ಮಾಡುವ ಪ್ರಮೇಯವೇ ಇರುತ್ತಿರಲಿಲ್ಲ. ಮುಗ್ಧ ಕನ್ನಡಿಗರ ಮೇಲೆ ದೌರ್ಜನ್ಯವಾಗಿದೆ. ಇದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದರು. +ಪ್ರವೀಣ್ ಶೆಟ್ಟಿ ಮಾತನಾಡಿ, ಅಮಾಯಕ ಹೋರಾಟಗಾರರನ್ನು ಜೈಲಿಗೆ ಕಳುಹಿಸಲಾಗಿದೆ. ಖಂಡನಾ ನಿರ್ಣಯ ಸಭೆ ನಡೆಸಲು ನಮಗೆ ಜಾಗವನ್ನೇ ಕೊಡದೆ ತೊಂದರೆ ಮಾಡುವ ಪ್ರಯತ್ನಗಳಾದವು. ಕೊನೆಗೆ ಬ್ಯಾಡ್ಮಿಂಟನ್ ಸಭಾಂಗಣದಲ್ಲಿ ಸಭೆ ನಡೆಸಲು ಅವಕಾಶ ಸಿಕ್ಕಿದೆ ಎಂದರು. +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ನಮ್ಮಲ್ಲಿ ಸಾವಿರಾರು ಭಿನ್ನಾಭಿಪ್ರಾಯಗಳಿರಬಹುದು, ಆದರೆ ಕನ್ನಡ ವಿಷಯ ಬಂದಾಗ ನಾವೆಲ್ಲ ಒಂದೇ. ಹೋರಾಟಗಾರರಿಗೂ ವೈಯಕ್ತಿಕ ಬದುಕುಗಳಿವೆ, ಆರೋಗ್ಯದ ಸಮಸ್ಯೆಗಳಿವೆ. ಹೋರಾಟ ಮಾಡುವುದು ನಮ್ಮ ವೈಯಕ್ತಿಕ ಸಮಸ್ಯೆಗಾಗಿ ಅಲ್ಲ, ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು. +ಕನ್ನಡವನ್ನು ಮೊದಲಿನಿಂದಲೂ ನಿರ್ಲಕ್ಷ್ಯ ಮಾಡಲಾಗಿದೆ. ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಹೋರಾಟ ಮಾಡಿದವರ ಮೇಲೆ ವಿವಿಧ ಸೆಕ್ಷನ್‍ಗಳಡಿ ಕೇಸು ದಾಖಲಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರು ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಮಾಡಿದ ತಪ್ಪನ್ನು ಸರ್ಕಾರ ಸಮರ್ಥಿಸಿಕೊಳ್ಳಬಾರದು. ಹೋರಾಟಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. +ಸಾ.ರಾ.ಗೋವಿಂದು ಮಾತನಾಡಿ, ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿದರು. ಕನ್ನಡಕ್ಕೆ ಗೋಕಾಕ್ ಚಳುವಳಿಯಿಂದ ಆರಂಭಿಸಿ ಹೋರಾಟದ ದೊಡ್ಡ ಪರಂಪರೆಯೇ ಇದೆ. ಹೆದರಿಕೆ, ಬೆದರಿಕೆಗಳಿಗೆ ಜಗ್ಗುವುದಿಲ್ಲ ಎಂದರು. ಸಾಹಿತಿ ಹಂ.ಪ.ನಾಗರಾಜಯ್ಯ ಸೇರಿದಂತೆ ಅನೇಕರು ಖಂಡನಾ ನಿರ್ಣಯದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_276_12.txt b/eesanje/url_46_276_12.txt new file mode 100644 index 0000000000000000000000000000000000000000..d54e8bb425f5c72cc2f78e09031ade8571c94ee6 --- /dev/null +++ b/eesanje/url_46_276_12.txt @@ -0,0 +1,9 @@ +ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ನಿರ್ಧಾರ +ಬೆಂಗಳೂರು, ಡಿ.29- ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನವನ್ನು ಐದು ಸಾವಿರ ರೂ. ಹೆಚ್ಚಳ ಮಾಡಲು 60 ವರ್ಷ ತುಂಬಿದವರಿಗೆ ಇಡುಗಂಟ್ಟು ನೀಡಲು ಹಾಗೂ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಗೌರವಧನವನ್ನು ಗರಿಷ್ಠ 32 ಸಾವಿರ ರೂ.ಗೆ ಗರಿಷ್ಠ 5 ಸಾವಿರ ರೂ. ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದಾರೆ. ಇದಕ್ಕೆ 55 ಕೋಟಿ ರೂ. ವರ್ಷಕ್ಕೆ ಹೊರೆಯಾಗಲಿದೆ ಎಂದರು. +ವರ್ಷಕ್ಕೆ 50 ಸಾವಿರ ರೂ.ನಂತೆ 10 ವರ್ಷಕ್ಕೆ ಗರಿಷ್ಠ 5 ಲಕ್ಷ ರೂ. ಕೊಡೋಕೆ ತೀರ್ಮಾನ ಮಾಡಿದ್ದೇವೆ. 60 ವರ್ಷ ಪೂರೈಸಿದವರಿಗೆ ಮಾತ್ರ ನಾವು ಇಡುಗಂಟು ಕೊಡೋದು, ಮಧ್ಯದಲ್ಲಿ ಬಿಟ್ಟವರಿಗೆ ಸಿಗುವುದಿಲ್ಲ.ಆರೋಗ್ಯ ವಿಮೆ ಮಾಡಿದ್ದೇವೆ. ಸೇವಾ ಭದ್ರತೆ ಬಗ್ಗೆಯು ಚಿಂತನೆ ಮಾಡಿದ್ದೇವೆ ಎಂದು ಅವರು ತಿಳಿಸಿದರು. +ವಾರಕ್ಕೆ 15 ಗಂಟೆ ಕೆಲಸ ಮಾಡುವವರಿಗೆ ತಿಂಗಳಿಗೆ ಒಂದು ರಜೆ ಕೊಡಲು ತೀರ್ಮಾನ ಮಾಡಲಾಗಿದೆ. 2,800 ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಉಪನ್ಯಾಸಕರಿಗೂ ಇದು ಅನ್ವಯಿಸುತ್ತದೆ. ಅತಿಥಿ ಉಪನ್ಯಾಸಕರಿಗೆ ಗೌರವ ಕೊಡುತ್ತಿಲ್ಲ ಎಂಬುದನ್ನು ಗಂಭೀರವಾಗಿ ತೆಗೆದುಕೊಂಡು ಪ್ರಾಂಶುಪಾಲರಿಗೆ ಹೇಳಿದ್ದೇವೆ. ಅವರಿಗೆ ಗೌರವ ಕೊಡಬೇಕು, ನ್ಯಾಯಯುತವಾಗಿ ನೋಡಿಕೊಳ್ಳಬೇಕುಎಂಬ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ಕೆಲವರಿಗೆ ಬ್ಲ್ಯಾಕ್ ಮೇಲ್ ಮಾಡೋ ಆಪಾದನೆ ಕೇಳಿ ಬಂದಿತ್ತು, ಅದಕ್ಕೂ ಬ್ರೇಕ ಹಾಕಿದ್ದೇವೆ. ಪ್ರತಿ ವರ್ಷ ಕೌನ್ಸಿಲಿಂಗ್ ಮೂಲಕ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಲಾಗುವುದು. ಸೇವೆಯ ಮತ್ತು ಅಂಕಗಳ ಆಧಾರದಲ್ಲಿ 16 ವರ್ಷ ಸೇವೆ ಮಾಡಿದವರಿಗೆ ಡಾಕ್ಯುಮೆಂಟ್ ಡೇಟಾ ಮಾಡಿಕೊಂಡು ದಾಖಲಾತಿ ಮಾಡಿಕೊಳ್ಳಲು ಸರಳ ಪ್ರಕ್ರಿಯೆ ಮಾಡುತ್ತೇವೆ. ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳುತ್ತೇವೆ. 6 ಸಾವಿರಕ್ಕೂ ಹೆಚ್ಚು ಹುದ್ದೆ ಸೃಷ್ಟಿಸುವ ಉದ್ದೇಶವಿದೆ. +ಹೊಸ ನೇಮಕಾತಿ ಸಂದರ್ಭದಲ್ಲಿ ಕೃಪಾಂಕದ ಆಧಾರದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಮಾಡಿರುವವರಿಗೆ ವರ್ಷಕ್ಕೆ ಒಂದು ಪರ್ಸೆಂಟ್‍ನಂತೆ ಕೃಪಾಂಕ ಕೊಡುತ್ತೇವೆ. ಒಟ್ಟು 15 ಅಂಕಗಳು ಸಿಗುತ್ತವೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಮಾತ್ರ ಕೃಪಾಂಕ ಸಿಗಲಿದೆ ಎಂದು ಅವರು ವಿವರಿಸಿದರು. +ವಿಮೆಗೆ 5 ಕೋಟಿ ರೂ. ಹೊರೆಯಾಗಲಿದೆ. ಇಡುಗಂಟಿಗೆ 72 ಕೋಟಿ ಹೊರೆ ಆಗುವುದು. ಅವರ ಸೇವೆ ಪರಿಗಣಿಸಿ ನಮ್ಮ ಎಲ್ಲಾ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ನಾವು ಕ್ರಮ ವಹಿಸಿದ್ದೇವೆ. ಒಂದು ತಿಂಗಳು ಸಮಯ ಹಾಳಾಗಿದೆ ಜನವರಿ ಒಂದರಿಂದ ಕೆಲಸಕ್ಕೆ ಹಾಜರಾಗಲು ಹೇಳಿದ್ದೇವೆ. ಅವರು ಸಹಕರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದೇವೆ ಎಂದರು. +ಅವರ ಸಂಘಟನೆಯಲ್ಲೂ ಕೆಲವೊಂದಷ್ಟು ಗೊಂದಲಗಳಿವೆ. ಮೂರು ನಾಲ್ಕು ಗುಂಪುಗಳಿವೆ. ಕೆಲವರು ಅವರಲ್ಲಿ ಬಂದಿಲ್ಲ, ಗಲಾಟೆ ಕೂಡ ಮಾಡಿದ್ದಾರೆ.ನಮ್ಮ ಸರ್ಕಾರದ ನಿರ್ಧಾರವನ್ನು ತಿಳಿಸಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_276_2.txt b/eesanje/url_46_276_2.txt new file mode 100644 index 0000000000000000000000000000000000000000..34b7226ee67e08a325b882c50847ed1d2a9b34ae --- /dev/null +++ b/eesanje/url_46_276_2.txt @@ -0,0 +1,10 @@ +ರೈತರ ಹಿತ ರಾಜ್ಯ ಸರ್ಕಾರದ ಆದ್ಯತೆ : ಸಚಿವ ಚಲುವರಾಯಸ್ವಾಮಿ +ಬೆಂಗಳೂರು,ಡಿ.30- ರೈತರ ಹಿತ ಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ 7,500 ಕೋಟಿ ರೂ.ಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದರು. +ಹೆಬ್ಬಾಳದ ಪಶು ವೈದ್ಯಕೀಯ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮದ 311ನೇ ನಿರ್ದೇಶಕ ಮಂಡಳಿ ಸಭೆ ನಡೆಸಿ ಅವರು ಮಾತನಾಡಿದರು. ರಾಜ್ಯದ 223 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದಾರೆ. ರೈತರ ಸಂಕಷ್ಟ ನಿವಾರಣೆ ಸರ್ಕಾರದ ಜವಾಬ್ದಾರಿಯಾಗಿದ್ದು ಅದನ್ನು ನಿಭಾಯಿಸಲಿದೆ ಎಂದರು. +ತಾವು ಕೃಷಿಕನಾಗಿದ್ದ ರೈತರ ಬದುಕು ಬವಣೆಗಳ ಬಗ್ಗೆ ಸ್ವಂತ ಅನುಭವ ಇದೆ. ಅವರ ಸಮಸ್ಯೆಗಳನ್ನು ಸರಿಪಡಿಸಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಸಚಿವರು ಹೇಳಿದರು. ರಾಜ್ಯದಲ್ಲಿ ವಿಚಕ್ಷಣ ದಳವನ್ನು ಚುರುಕುಗೊಳಿಸಿದ್ದು, ನಕಲಿ ಹಾಗೂ ಕಳಪೆ ಬಿತ್ತನೆ ಬೀಜ, ರಸಗೊಬ್ಬರ, ಔಷಧಿಗಳ ಮಾರಾಟ ಸಾಗಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ ಎಂದರು. +2022-23 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮವು ವಿವಿಧ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಮಾರಾಟದಿಂದ ಒಟ್ಟು ರೂ.494.50ಕೋಟಿಗಳ ವಹಿವಾಟು ಮಾಡಿ ರೂ.7.65ಕೋಟಿಗಳ ತೆರಿಗೆ ನಂತರದ ಲಾಭ ಗಳಿಸಿರುತ್ತದೆ. ಇದು ಕಳೆದ 49 ವರ್ಷಗಳಲ್ಲಿ ನಿಗಮವು ವ್ಯಾಪಾರ ವಹಿವಾಟಿನಲ್ಲಿ ಗಳಿಸಿರುವ ಅತಿ ಹೆಚ್ಚಿನ ಲಾಭವಾಗಿರುತ್ತದೆ ಎಂದು ಚಲುವರಾಯಸ್ವಾಮಿ ಮಾಹಿತಿ ನೀಡಿದರು. +ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ +ಪ್ರಸಕ್ತ ಸಾಲಿನಲ್ಲಿ 2.73 ಲಕ್ಷ ಕ್ವಿಂಟಾಲ್‍ಗಳ ವಿವಿಧ ಬೆಳೆ / ತಳಿಗಳ ಬಿತ್ತನೆ ಬೀಜಗಳ ಮಾರಾಟದಿಂದ ರೂ.189.61 ಕೋಟಿಗಳಷ್ಟು ವಹಿವಾಟನ್ನು ಸಾಧಿಸಿರುತ್ತದೆ. ಇದಲ್ಲದೆ, ಕಂಪನಿಯು ಪ್ರಸಕ್ತ ಸಾಲಿನಲ್ಲಿ 1.43 ಲಕ್ಷ ಮೆಟ್ರಿಕ್ ಟನ್ ಡಿ.ಎ.ಪಿ, ಯೂರಿಯಾ, ಕಾಂಪ್ಲೆಕ್ಸ್, ಎಂ.ಒ.ಪಿ., ಅಮೋನಿಯಂ ಸಲೇಟ್ ಮತ್ತು ಎಸ್.ಓ.ಪಿ ರಸಗೊಬ್ಬರಗಳನ್ನು ಕಾಪು ದಾಸ್ತಾನು ಯೋಜನೆಯಡಿ ಹಾಗೂ ತಂಬಾಕು ಮಂಡಳಿಗೆ ವಿತರಿಸಿ 301.65 ಕೋಟಿ ರೂ.ಗಳ ವಹಿವಾಟು ಸಾಧಿಸಿದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ವೆಚ್ಚದಲ್ಲಿ 2 ಲಕ್ಷ ಮೆಟ್ರಿಕ್ ಟನ್ ವಿವಿಧ ಶ್ರೇಣಿ ರಸಗೊಬ್ಬರಗಳ ವಹಿವಾಟನ್ನು ಮಾಡಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದರು. +ಸಂಸ್ಥೆಯ ಎಲ್ಲಾ ವಹಿವಾಟು ಪಾರದರ್ಶಕವಾಗಿರಬೇಕು ಹಾಗೂ ಸಕಾಲದಲ್ಲಿ ಸದಸ್ಯರಿಗೆ ಮಾಹಿತಿ ನೀಡಬೇಕು. ಲೋಪದೋಷಗಳಾದರೇ ಅಧಿಕಾರಿಗಳೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. ನಿಗಮದ ಚಟುವಟಿಕೆಗಳಲ್ಲಿ ಹಲವು ರಚನಾತ್ಮಕ ಬದಲಾವಣೆಗಳಿಗೆ ಸಲಹೆ ಸೂಚನೆ ನೀಡಿದ ಕೃಷಿ ಸಚಿವರು. +ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ +ರೈತರಿಗೆ ಅನುಕೂಲವಾಗುವಂತೆ ಹಾಗೂ ಉತ್ಪಾದನೆ ಹೆಚ್ಚಳಕ್ಕೆ ಪೂರಕವಾಗಿ ಬಿತ್ತನೆ ಬೀಜ ಪೂರೈಸಲು ಸಚಿವರು ನಿರ್ದೇಶನ ನೀಡಿದರು. ಕರ್ನಾಟಕ ಬೀಜ ನಿಗಮದ ನಿರ್ದೇಶಕ ಮಂಡಳಿ ಸದಸ್ಯರಾದ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ, ರೈತ ಪ್ರತಿನಿಧಿಗಳಾದ ಡಿ.ಎಲ್.ನಾಗರಾಜ್, ರಾಜೇಂದ್ರ ಪ್ರಸಾದ್, ನಿಂಗಪ್ಪ ಸಂಕಪ್ಪ ಹಾವೇರಿ, ಶಿವಬಸಪ್ಪ ಶರಣ ಬಸಪ್ಪ ಬೆಲ್ಲದ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹೆಚ್.ಎಸ್ ದೇವರಾಜ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು \ No newline at end of file diff --git a/eesanje/url_46_276_3.txt b/eesanje/url_46_276_3.txt new file mode 100644 index 0000000000000000000000000000000000000000..00ce0e8e7c5d143f24235f490de5e7f04ab16850 --- /dev/null +++ b/eesanje/url_46_276_3.txt @@ -0,0 +1,10 @@ +ಮಕ್ಕಳಿಂದ ಶೌಚಾಲಯ ಸ್ವಚ್ಛತಾ ಕಾರ್ಯ ನಿಷೇಧಿಸಿ ಆದೇಶ +ಬೆಂಗಳೂರು,ಡಿ.30- ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಸಂದರ್ಭದಲ್ಲೂ, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಮಾಡಿಸುವುದನ್ನು ಕಡ್ಡಾಯವಾಗಿ ಸರ್ಕಾರ ನಿಷೇಧಿಸಿದೆ. +ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಪ್ರಸಕ್ತ ಸಾಲಿಗೆ ಬಿಡುಗಡೆಯಾಗುವ ಶಾಲಾ ನಿರ್ವಹಣಾ ಅನುದಾನವನ್ನು ಪ್ರಥಮ ಆದ್ಯತೆಯಾಗಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಲ್ಲಿಕೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳುವುದು ಎಂದು ಆಯುಕ್ತರಾದ ಬಿ.ಬಿ.ಕಾವೇರಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. +ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಯಲ್ಲಿ ಬಳಸಿಕೊಂಡಲ್ಲಿ, ಅಂತವರ ವಿರುದ್ಧ ಇಲಾಖೆಯ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಲ್ಲದೆ, ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. +ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ, ಕ್ರೀಡೆ, ಸಹಪಠ್ಯ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕು. ಶೌಚಾಲಯಗಳ ಸ್ವಚ್ಛತೆಯಿಂದ ವಿದ್ಯಾರ್ಥಿಗಳನ್ನು ದೂರ ಇರಿಸುವುದು ಅಧಿಕಾರಿಗಳು, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿದೆ. ಇತ್ತೀಚೆಗೆ ಶೌಚಾಲಯಗಳ ಸ್ವಚ್ಛತೆಯಿಂದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿರುವುದು ಖಂಡನೀಯವಾಗಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. +ಭಾರತದ ಆಟಗಾರರ ಬರುವಿಕೆಯನ್ನು ಕಾಯುತ್ತದೆಯಂತೆ ಪಾಕ್ +ಎಸ್‍ಡಿಎಂಸಿ ಸಮಿತಿಯು ವಿದ್ಯಾರ್ಥಿಗಳು ಶೌಚಾಲಯದ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಾಲಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಹೆಣ್ಣು ಮಕ್ಕಳ ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದರೆ ತಕ್ಷಣ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪ ನಿರ್ದೇಶಕರಿಗೆ ವರದಿ ಮಾಡಬೇಕು. +ಶಾಲಾ ಮೇಲುಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದನ್ನು ಚಾಚೂ ತಪ್ಪದೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ಸಂಬಂಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿದೇರ್ಶಕರು ಜರೂರಾಗಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಬೇಕು. ನಿರ್ಲಕ್ಷ್ಯತನ ತೋರಿ ಇಂತಹ ಪ್ರಕರಣಗಳು ಮರುಕಳಿಸಿದರೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪ ನಿರ್ದೇಶಕರನ್ನೇ ನೇರ ಹೊಣೆಗಾರರನ್ನಾಗಿಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. +ಜರ್ಮನ್ ಆರೈಕೆಯಲ್ಲಿರುವ ಅರಿಹಾ ಶಾ ಜತೆ ದೀಪಾವಳಿ ಆಚರಿಸಿದ ಭಾರತೀಯ ಅಧಿಕಾರಿಗಳು +ಇದೇ ರೀತಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿ ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ವಹಿಸಲು ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ, ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_276_4.txt b/eesanje/url_46_276_4.txt new file mode 100644 index 0000000000000000000000000000000000000000..f4f08a8f17ef92d0796b6739f0cde807415f74c7 --- /dev/null +++ b/eesanje/url_46_276_4.txt @@ -0,0 +1,7 @@ +ಸಿದ್ದರಾಮಯ್ಯ ಮನಸ್ಥಿತಿಯನ್ನು ದಲಿತ ಸಮುದಾಯ ಅರ್ಥ ಮಾಡಿಕೊಳ್ಳಬೇಕು : ಹೆಚ್‌ಡಿಕೆ +ಬೆಂಗಳೂರು,ಡಿ.30-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಪ್ರಧಾನಿಯಾಗಬೇಕೆಂದು ಬೇರೆ ರಾಜ್ಯದ ಮುಖ್ಯಮಂತ್ರಿಗಳು ಬಯಸುತ್ತಾರೆ. ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯಾಗಲಿ ಎಂದು ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮತ್ತೊಬ್ಬ ಕನ್ನಡಿಗರೊಬ್ಬರು ಪ್ರಧಾನಿಯಾಗಲಿ ಎಂದು ಸಿದ್ದರಾಮಯ್ಯ ಹೇಳಲಿಲ್ಲ. ಒಂದು ವೇಳೆ ಆ ವಿಚಾರ ಪ್ರಸ್ತಾಪ ಮಾಡದೆ ತಟಸ್ಥವಾಗಿದ್ದರೆ ಆಗುತ್ತಿತ್ತು. ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ಅವರ ಮನಸ್ಥಿತಿ ಎಂಥದ್ದು ಎಂಬುದನ್ನು ತಿಳಿಸುತ್ತದೆ. ದಲಿತ ಸಮುದಾಯಗಳು ಇದರ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. +ಈ ಹಿಂದೆ ಮೈತ್ರಿ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದರು. ಆದರೂ ಕಾಂಗ್ರೆಸ್ ಪಕ್ಷದ ನಾಯಕರು ಅವಕಾಶ ಮಾಡಿಕೊಡಲಿಲ್ಲ. ನಾವು ಎನ್‍ಡಿಎ ಮೈತ್ರಿಕೂಟದಲ್ಲಿದ್ದರೂ ಖರ್ಗೆಯವರು ಪ್ರಧಾನಿಯಾದರೆ ಒಳ್ಳೆಯದು ಎಂಬ ಮನೋಭಾವನೆ ಇದೆ. ಆದರೆ ಪ್ರಧಾನಿಯಾಗುವುದು ಬಿಡುವುದು ಬೇರೆ ವಿಚಾರ. ಖರ್ಗೆಯವರು ಪ್ರಧಾನಿಯಾಗುವ ಸನ್ನಿವೇಶವೂ ಇಲ್ಲ. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ದಲಿತ ಸಮುದಾಯಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾದವು. ಅಧಿಕಾರಕ್ಕೆ ಬಂದ ಮೇಲೆ ಅಹಿಂದ ನಾಯಕರಾದ ಸಿದ್ದರಾಮಯ್ಯನವರ ಹಿಂದೆ ಅಹಿಂದ ಎಂಬಂತಾಗಿದೆ ಎಂದು ಟೀಕಿಸಿದರು. ಅಧಿಕಾರಕ್ಕೆ ಬಂದ ನಂತರ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಅಬಕಾರಿ ಸುಂಕ, ವಿದ್ಯುತ್ ದರ ಹೆಚ್ಚಳ ಮಾಡಿ ಜನರಿಗೆ ಹೊರೆ ಹೊರಿಸಿದ್ದಾರೆ. ಅಲ್ಲದೆ ಮತ್ತೆ ಪ್ರತಿ ಯೂನಿಟ್‍ಗೆ 48 ಪೈಸೆ ವಿದ್ಯುತ್ ಹೆಚ್ಚಳ ಮಾಡಲು ಹೊರಟ್ಟಿದ್ದಾರೆ ಎಂದು ಆರೋಪಿಸಿದರು. +ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಎನ್‍ಡಿಎ ಗೆಲುವು ಸಾಧಿಸಬೇಕೆಂಬುದು ನಮ್ಮ ಗುರಿಯಾಗಿದೆ ಎಂದ ಅವರು, ಪಠ್ಯ ಪುಸ್ತಕ ಮುದ್ರಣಕ್ಕೆ ಸಂಬಂಧಿಸಿದಂತೆಯೂ ಆರೋಪಗಳು ಕೇಳಿಬಂದಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್‍ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_276_5.txt b/eesanje/url_46_276_5.txt new file mode 100644 index 0000000000000000000000000000000000000000..a5e8449207ba637412aa36d9ef13510d54b36b4c --- /dev/null +++ b/eesanje/url_46_276_5.txt @@ -0,0 +1,11 @@ +14 ಬಜೆಟ್ ಮಂಡಿಸಿದ ಸಿಎಂಗೆ ಶಾಸಕ ಆರ್ಥಿಕ ಸಲಹೆಗಾರನಂತೆ : ಕುಮಾರಸ್ವಾಮಿ ವ್ಯಂಗ್ಯ +ಬೆಂಗಳೂರು,ಡಿ.30- ಹದಿನಾಲ್ಕು ಬಾರಿ ದಾಖಲೆಯ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಶಾಸಕರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನುಭವಿ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದರೆ ಅಭಿನಂದಿಸಬಹುದಿತ್ತು. ಆದರೆ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಅಲ್ಲದೆ ಆಡಳಿತ ಸುಧಾರಣಾ ಆಯೋಗಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ನೇಮಕ ಮಾಡಿಕೊಂಡಿದ್ದಾರೆ. ಇವು ಗಂಜಿ ಕೇಂದ್ರಗಳೇ ಎಂದು ವಾಗ್ದಾಳಿ ನಡೆಸಿದರು. +ಈ ಹಿಂದೆ ಹಾರ್ನಹಳ್ಳಿ ರಾಮಸ್ವಾಮಿ ಅವರು ಇತ್ತೀಚೆಗೆ ನಿವೃತ್ತ ಐಎಎಸ್ ಅಧಿಕಾರಿ ವಿಜಯಭಾಸ್ಕರ್ ಅವರು ಆಡಳಿತ ಸುಧಾರಣಾ ಆಯೋಗದ ವರದಿಯನ್ನು ನೀಡಿದ್ದಾರೆ. ಅವುಗಳ ಅನುಷ್ಠಾನ ಎಷ್ಟರಮಟ್ಟಿಗೆ ಆಗಿದೆ ಎಂದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನದ ಸಮಿತಿ ಬಿಎಂಐಸಿ ಯೋಜನೆಗೆ ಸಂಬಂಧಿಸಿದಂತೆ ನೀಡಿದ ವರದಿ ಅನುಷ್ಠಾನ ಏಕೆ ಆಗಲಿಲ್ಲ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕರಿಸಲಿಲ್ಲ ಎಂದು ಆರೋಪಿಸಿರುವ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ಏಳು ತಿಂಗಳು ಕಳೆದಿದೆ. ಇನ್ನೂ ಏಕೆ ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಖಾಲಿ ಇರುವ ಹುದ್ದೆ ಭರ್ತಿ ಮಾಡಿ:ಖಾಸಗಿ ಸಂಸ್ಥೆಗಳ ಮುಖ್ಯಸ್ಥರನ್ನು ಕರೆದು ರಾಜ್ಯ ಮಟ್ಟದ ಉದ್ಯೋಗ ಮಾಡುವ ಬದಲು ಖಾಲಿ ಇರುವ ಎರಡೂವರೆ ಸಾವಿರ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಿ. ಕೌಶಲ್ಯ ಅಭಿವೃದ್ಧಿ ಹೆಸರಿನಲ್ಲಿ ಹಣ ತಿನ್ನುವ ಬದಲು ಯುವ ಸಮುದಾಯಕ್ಕೆ ಸೂಕ್ತ ಉದ್ಯೋಗ ತರಬೇತಿ ನೀಡಿ ಎಂದು ಆಗ್ರಹಿಸಿದರು. ವಿದೇಶಿ ಬಂಡವಾಳ ಹೂಡಿಕೆ ಶೇ.44ರಷ್ಟು ಕಡಿಮೆಯಾಗಿದೆ. 2022ರಲ್ಲಿ 5,20,000 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದವಾಗಿತ್ತು ಎಂದು ಹೇಳಿದರು. ಅದರಲ್ಲಿ ಎಷ್ಟು ಹೂಡಿಕೆಯಾಗಿದೆ. ದಾವೋಸ್‍ಗೆ ಹೋಗಲು 9 ಕೋಟಿ ರೂ.ಗೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಕಳೆದ ಏಳು ತಿಂಗಳಲ್ಲಿ 5 ಗ್ಯಾರಂಟಿ ಯೋಜನೆಗಳ ಭಜತೆ ಬಿಟ್ಟರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಬೆಂಗಳೂರಿನಲ್ಲಿ 196 ಕಿ.ಮೀ ಸುರಂಗ ರಸ್ತೆ ನಿರ್ಮಾಣ ಮಾಡಲು ಎರಡು ಇಲಾಖೆಗಳ ನಡುವೆ ಜಟಾಪಟಿ ನಡೆಯುತ್ತಿದೆ. ರಾಜ್ಯದಲ್ಲಿ ತೀವ್ರ ಸ್ವರೂಪದ ಬರವಿದ್ದರೂ ರೈತರಿಗೆ ನೀಡಿದ್ದ 2000 ಪರಿಹಾರ ಧನವನ್ನು ಇನ್ನು ನೀಡಿಲ್ಲ. ನೀಡಲು ಶಕ್ತಿಯೂ ಇಲ್ಲ. ಆದರೂ ನುಡಿದಂತೆ ನಡೆದಿದ್ದೇವೆ ಎಂದು ನಿತ್ಯ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು. ಸರ್ಕಾರದ ವೈಫಲ್ಯಗಳನ್ನು ಮುಂದಿನ ಜಂಟಿ ಹಾಗೂ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡುವುದಾಗಿ ಹೇಳಿದರು. +ತನಿಖೆಗೆ ಆಗ್ರಹ:ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಹಿಂದಿನ ಸರ್ಕಾರದ ಕೋವಿಡ್ ಅವಧಿಯಲ್ಲಿ 40 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿರುವುದು ನಂಬಲಾಗುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಈ ವಿಚಾರದ ಸತ್ಯಾಸತ್ಯತೆಯನ್ನು ಹೊರಗೆ ತರಲು ಸರ್ಕಾರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. +ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ +ಸರ್ಕಾರದ ಬಳಿ ಅಂಕಿಅಂಶಗಳಿವೆ, ಕೋವಿಡ್ ಅವಧಿಯಲ್ಲಿ ಎಷ್ಟು ಹಣ ಬಿಡುಗಡೆಯಾಯ್ತು ಎಂಬುದನ್ನು ಹೇಳಬೇಕಲ್ಲವೇ? ಅದನ್ನು ಬಿಟ್ಟು ರಾಜಕೀಯಕ್ಕಾಗಿ ಬಳಕೆ ಮಾಡಿಕೊಳ್ಳುವುದಾದರೆ ಮಾಜಿ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರು ಮೂರು ತಲೆಮಾರಿಗೆ ಆಗುವಷ್ಟು ಆಸ್ತಿ ಮಾಡಿದ್ದೇವೆ ಎಂದು ಹೇಳಿದ್ದರಲ್ಲವೇ, ಆ ವಿಚಾರವನ್ನು ನಾವು ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು. +ಹಿಂದಿನ ಸರ್ಕಾರದಲ್ಲಿ ಲೋಪದೋಷಗಳು ನಡೆದಿಲ್ಲ ಎಂದಲ್ಲ. ಆದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದು ಆ ಪಕ್ಷಕ್ಕೆ ಸೇರಿದ ವಿಚಾರವಾಗಿದ್ದು, ನಾವು ಮೂಗು ತೂರಿಸುವುದಿಲ್ಲ ಎಂದರು. ಪಾರದರ್ಶಕವಾಗಿರುವ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಾಳ್ ಅವರ ಹೇಳಿಕೆಯನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. \ No newline at end of file diff --git a/eesanje/url_46_276_6.txt b/eesanje/url_46_276_6.txt new file mode 100644 index 0000000000000000000000000000000000000000..10903c981c8d729826d376db0e200743f9d87e68 --- /dev/null +++ b/eesanje/url_46_276_6.txt @@ -0,0 +1,7 @@ +ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ ಸರ್ಕಾರದ ಜವಾಬ್ದಾರಿ : ಸಿಎಂ +ಬೆಂಗಳೂರು,ಡಿ.30- ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸಿ, ಸಂವಿಧಾನದ ಆಶಯಗಳನ್ನು ಈಡೇರಿಸಿ, ದುರ್ಬಲ ವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ ಪೀಠಾರೋಹಣ 33 ಸಮಾರಂಭ ಮತ್ತು ಹೋರಾಟಕ್ಕೆ ಸಾವಿಲ್ಲ ಮತ್ತು ಓಲೆ ಒಳಧ್ವನಿ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು. +ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು. ಆಗ ಮಾತ್ರ ಸಮಾಜ ಪರಿವರ್ತನೆಯಾಗಲು ಸಾಧ್ಯ. ಸಮಸಮಾಜ ನಿರ್ಮಾಣವಾಗಲು ಅಸಮಾನತೆ ತೊಲಗಲೇಬೇಕು ಎಂದರು. ಮನುಷ್ಯನ ಸ್ವಾರ್ಥದಿಂದ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಅಂಬೇಡ್ಕರ್ ಅವರು ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ನೀಗಿಸದೇ ಹೋದರೆ ದೇಶಕ್ಕೆ ಸ್ವಾತಂತ್ರ್ಯ ದೊರೆತರೂ ಪ್ರಯೋಜನವಿಲ್ಲ ಎಂದಿದ್ದರು. +ಸಾಮಾಜಿಕ ನ್ಯಾಯದ ತಳಹದಿಯ ಪ್ರಜಾಪ್ರಭುತ್ವ ನಿಲ್ಲಬೇಕು ಎಂದು ಪ್ರತಿಪಾದಿಸಿದ್ದರು. ಹಿಂದುಳಿದವರಿಗೆ ಆರ್ಥಿಕ , ಸಾಮಾಜಿಕ ಸಮಾನತೆ ದೊರೆತಾಗ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ಕಾರ್ಯನಿರ್ವಹಿಸುವುದು ಎಲ್ಲರ ಜವಾಬ್ದಾರಿ ಎಂದರು. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಹೋರಾಟಗಳು ಅಹಿಂಸಾತ್ಮಕವಾಗಿರಬೇಕು:ಮನುಷ್ಯತ್ವ ಅಂತಿಮ ಗುರಿಯಾಗಬೇಕು. ಅಲ್ಪಮಾನವರಾಗದೇ, ವಿಶ್ವಮಾನವರಾಗುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ಸಾಮಾಜಿಕ ಹಾಗೂ ಆರ್ಥಿಕ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಚಲನೆ ಉಂಟಾಗುತ್ತದೆ. ಸಮಾಜದಲ್ಲಿ ಬದಲಾವಣೆ ಆಗುವವರೆಗೂ ಹೋರಾಟ ನಡೆಸುವ ಗುರಿಯಿಂದಲೇ ಹೋರಾಟಕ್ಕೆ ಸಾವಿಲ್ಲ ಎಂಬ ಕೃತಿಯನ್ನು ಹೊರತರಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟವನ್ನು ಹತ್ತಿಕ್ಕಬಾರದು. ಆದರೆ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು ಎಂದು ಹೇಳಿದರು. +ಮಾನವೀಯ ಸಮಾಜ ನಿರ್ಮಾಣ ಗುರಿ ಹೊಂದಿರುವ ಮಠ:ಚಿಕ್ಕಬಳ್ಳಾಪುರ ಶ್ರೀ ನಿಡುಮಾಮಿಡಿ ಮಠದ ವತಿಯಿಂದ ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ ಸಂಸ್ಥೆಗಳು ನಡೆಯುತ್ತವೆ. ಶ್ರೀ ಮಠವು ಯಾವುದೇ ಜಾತಿ, ಧರ್ಮ, ಸಂಸ್ಕøತಿಗಳಿಗೆ ಮೀಸಲಾಗದ ಜಾತ್ಯಾತೀತವಾದ ಮಾನವ ಧರ್ಮ ಪೀಠ ಎನಿಸಿದೆ. ಸ್ವಾಮೀಜಿಗಳು ನಿರ್ಭೀತಿಯಿಂದ ನಿಷ್ಕಲ್ಮಶವಾಗಿ ಜಾತ್ಯಾತೀತ ಮಾನವೀಯ ಸಮಾಜ ಸ್ಥಾಪನೆಯಾಗಬೇಕೆಂಬ ಆಶಯವನ್ನು ಹೊಂದಿದ್ದು, ತಮ್ಮ ಜೀವನದುದ್ದಕ್ಜೂ ಆ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಮಾನವ ಧರ್ಮ ಸ್ಥಾಪಿಸುವ ಶ್ರೀಮಠದ ಗುರಿ ಈಡೇರಿಕೆಗೆ ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು. \ No newline at end of file diff --git a/eesanje/url_46_276_7.txt b/eesanje/url_46_276_7.txt new file mode 100644 index 0000000000000000000000000000000000000000..fb3ec9572bb719b1ec1da10ffdb96f9af83b27c4 --- /dev/null +++ b/eesanje/url_46_276_7.txt @@ -0,0 +1,6 @@ +ಜ.17 ರಿಂದ ಬೆಂಗಳೂರಿನಿಂದ ಅಯೋಧ್ಯೆಗೆ ವಿಮಾನ ಸೇವೆ +ಬೆಂಗಳೂರು,ಡಿ.30- ಮುಂದಿನ ಜನವರಿ 17 ರಿಂದ ಏರ್‍ಇಂಡಿಯಾ ಎಕ್ಸ್‍ಪ್ರೆಸ್ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ಅಯ್ಯೋಧ್ಯೆಗೆ ನೇರ ವಿಮಾನ ಸೇವೆ ನೀಡಲಿದೆ. ಜನವರಿ 17ರಂದು ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನಯಾನ ಆರಂಭವಾಗಲಿದೆ. ಈ ವಿಮಾನವು ಜನವರಿ 17ರ ಬೆಳಗ್ಗೆ 8.05 ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು 10.35 ಕ್ಕೆ ಅಯೋಧ್ಯೆ ತಲುಪಲಿದೆ. ಬಳಿಕ ಅಯೋಧ್ಯೆಯಿಂದ 3.40 ಕ್ಕೆ ಹೊರಟು ಸಂಜೆ 6.10 ಕ್ಕೆ ಬೆಂಗಳೂರು ತಲುಪಲಿದೆ. +ಅಯೋಧ್ಯೆ ಶ್ರೀ ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಹಾಗೂ ಉದ್ಘಾಟನೆಯ ಬಳಿಕ ಅಯೋಧ್ಯೆಯತ್ತ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಪ್ರಯಾಣಿಕರ ಹಿತದೃಷ್ಟಿಯಿಂದ ಏರ್ ಇಂಡಿಯಾ ಜನವರಿ 17ರಿಂದ ಪ್ರತಿದಿನ ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ. +ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನದ ಬಗ್ಗೆ ಏರ್‍ಇಂಡಿಯಾ ವೆಬ್‍ಸೈಟ್ ಮತ್ತು ಆಪ್‍ಗಳಲ್ಲಿ ಮಾಹಿತಿ ನೀಡಲಾಗಿದ್ದು, ವಿಮಾನಯಾನದ ವೇಳಾಪಟ್ಟಿ ಮತ್ತು ಟಿಕೆಟ್ ಬುಕಿಂಗ್ ವ್ಯವಸ್ಥೆ ಕೂಡ ಇದೆ. ಈ ಬಗ್ಗೆ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಮುಖ್ಯ ವಾಣಿಜ್ಯ ಅಧಿಕಾರಿ ಅಂಕುರ್ ಗಾರ್ಗ್ ಮಾತನಾಡಿ, ಭಾರತದಾದ್ಯಂತ ಸಂಪರ್ಕಿಸುವ ವಾಯು ಮಾರ್ಗ ಕಾರ್ಯಾಚರಣೆಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಮ್ಮ ಬದ್ಧತೆಯು ಅಚಲವಾಗಿದೆ. ಅಯೋಧ್ಯೆಯನ್ನು ನವದೆಹಲಿ, ಬೆಂಗಳೂರು, ಕೋಲ್ಕತ್ತಾ ಜೊತೆಗೆ ಜೋಡಿಸುವ ಕೆಲಸವು ಈ ಬದ್ಧತೆಯನ್ನು ದೃಢಪಡಿಸುತ್ತದೆ. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಇನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇನ್ನು ಉದ್ಘಾಟನೆಗೆ ಸಕಲ ಸಿದ್ಧತೆಗಳು ಅಂತಿಮಗೊಂಡಿದ್ದು, ಗೋಡೆಗಳ ಮೇಲೆ ವರ್ಣ ಚಿತ್ರಗಳ ಜೊತೆ ಹೂವಿನ ಅಲಂಕಾರ ಪ್ರಯಾಣಿಕರನ್ನು ಅಯೋಧ್ಯೆ ವಿಮಾನ ನಿಲ್ದಾಣದತ್ತ ಸೆಳೆಯುತ್ತಿದೆ. \ No newline at end of file diff --git a/eesanje/url_46_276_8.txt b/eesanje/url_46_276_8.txt new file mode 100644 index 0000000000000000000000000000000000000000..284710627f0a2da72f088ad8a863ac4315a75260 --- /dev/null +++ b/eesanje/url_46_276_8.txt @@ -0,0 +1,7 @@ +ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ +ಬೆಂಗಳೂರು,ಡಿ.30- ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನ್ನಡಪರ ಸಂಘಟನೆಗಳು ಶಕ್ತಿ ಪ್ರದರ್ಶನ ಮಾಡಲಿವೆ ಎಂದು ಕರವೇ ಕನ್ನಡಿಗರ ಧ್ವನಿ ರಾಜ್ಯಾಧ್ಯಕ್ಷರಾದ ಅನಿಲ್ ಕುಮಾರ್ ಎಚ್ಚರಿಸಿದ್ದಾರೆ. +ಸರ್ಕಾರ ತಾನು ಹೊರಡಿಸಿರುವ ಆದೇಶವನ್ನು ಪಾಲಿಸಲು ಸಾಧ್ಯವಾಗದ ಹಾಗೂ ದಪ್ಪ ಚರ್ಮದ ಸರ್ಕಾರಿ(ತನ್ನ) ಅಧಿಕಾರಿಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಆಗದ ಕಾರಣ, ಕೊನೆಯ ಅಸ್ತ್ರ ಯಾರು ಪ್ರಶ್ನಿಸುತ್ತಾರೋ ಅವರನ್ನು ಬಂಧಿಸುವುದು, ಜೈಲಿಗೆ ಹಟ್ಟುವುದು ಇತರ ಹೋರಾಟಗಾರರನ್ನು, ಪೊಲೀಸರನ್ನು ಬಳಸಿಕೊಂಡು ನಿಯಂತ್ರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಯೋಚಿಸಬೇಕಾದ ವಿಚಾರವೆಂದರೆ ತಾವುಗಳು ಅಧಿಕಾರಕ್ಕೆ ಬರುವುದಕ್ಕೆ ಕನ್ನಡಪರ ಸಂಘಟನೆಗಳು ಯಾವ ರೀತಿ ತಮಗೆ ಬೆಂಬಲಿಸಿವೆ ತಾವು ಮನವರಿಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. +ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟ, ಅಪರಿಚಿತ ವ್ಯಕ್ತಿಗಳ ವಿರುದ್ದ ಎಫ್‍ಐಆರ್ +ಇದನ್ನು ಬಿಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಾವು ಕನ್ನಡದ ಪರ ಇದ್ದೇವೆ ಎಂದು ಘರ್ಜಿಸುತ್ತಿದ್ದೀರಿ. ಇದೆಲ್ಲಾದಕ್ಕೂ ಉತ್ತರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನ್ನಡಪರ ಸಂಘಟನೆಗಳು ತಮಗೆ ಪಾಠ ಕಲಿಸುತ್ತವೆ ಎಂದು ಎಚ್ಚರಿಸಿದ್ದಾರೆ. +ಕನ್ನಡಪರ ಹೋರಾಟಗಾರರಿಗೆ ಪೊಲೀಸ್ ಏಟು ,ಬಂಧನ , ಧಮ್ಕಿಗಳು ಇವೆಲ್ಲವೂ ಸಹಜ ನ್ಯಾಯಾಂಗ ಬಂಧನದಲ್ಲಿರುವ ಕನ್ನಡಪರ ಹೋರಾಟಗಾರರಿಗೆ ಶಕ್ತಿ ತುಂಬುವ ಕೆಲಸ ನಾವು ಮಾಡಬೇಕಿದೆ. ಕರವೇ ಕನ್ನಡಿಗರ ಧ್ವನಿ ಸಂಘಟನೆ ಮುಂದಿನ ಎಲ್ಲಾ ಹೋರಾಟಕ್ಕೂ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_276_9.txt b/eesanje/url_46_276_9.txt new file mode 100644 index 0000000000000000000000000000000000000000..fa504f52fe35b6892665f55b0bedad155ad22402 --- /dev/null +++ b/eesanje/url_46_276_9.txt @@ -0,0 +1,7 @@ +ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ +ಬೆಂಗಳೂರು, ಡಿ.29- ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು, ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. +ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರುಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು. +ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಿಗರು ಜಾಗೃತರಾಗಿರಬೇಕು ಎಂದರು. +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ಕುವೆಂಪು ವಿಶ್ವಮಾನವ:ಕುವೆಂಪು ಅವರು ಅಪರೂಪದ ವ್ಯಕ್ತಿತ್ವ. ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ ಎಂದು ಗುಣಗಾನ ಮಾಡಿದರು. +ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು. \ No newline at end of file diff --git a/eesanje/url_46_277_1.txt b/eesanje/url_46_277_1.txt new file mode 100644 index 0000000000000000000000000000000000000000..19a9116ff70637f310adcffff17b0eb829f7cbca --- /dev/null +++ b/eesanje/url_46_277_1.txt @@ -0,0 +1,9 @@ +ಹೋರಾಟಗಾರರ ಬಿಡುಗಡೆಗಾಗಿ ಕೆರಳಿದ ಕನ್ನಡಿಗರು +ಬೆಂಗಳೂರು,ಡಿ.29- ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಸೇರಿದಂತೆ 50 ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರನ್ನು ಬಂಧಿಸಿದ ಬೆನ್ನಲ್ಲೇ ಹೋರಾಟದ ಕಿಚ್ಚು ತೀವ್ರ ಸ್ವರೂಪ ಪಡೆದುಕೊಂಡು ಸಂಘಟನೆಗಳಲ್ಲಿ ಹಿಂದೆಂದೂ ಕಾಣದಂತಹ ಒಗ್ಗಟ್ಟು ಕಂಡುಬಂದಿದೆ. ವಾಣಿಜ್ಯ ಮಳಿಗೆಗಳು, ಉದ್ಯಮಗಳು ಹಾಗೂ ಇತರ ಸಂಸ್ಥೆಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂಬ ಒತ್ತಾಯಕ್ಕಾಗಿ ಕರವೇ ಕಾರ್ಯಕರ್ತರು ಕಳೆದ ಒಂದು ವಾರದಿಂದಲೂ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದವು. +ನಿನ್ನೆ ಏಕಕಾಲಕ್ಕೆ ಬೆಂಗಳೂರಿನಾದ್ಯಂತ ನಡೆದ ಪ್ರತಿಭಟನೆಯಲ್ಲಿ ಹಲವು ಕಡೆ ಖಾಸಗಿ ಸಂಸ್ಥೆಗಳ ನಾಮಫಲಕಗಳನ್ನು ಫ್ಲೆಕ್ಸ್, ಹೋರ್ಡಿಂಗ್ ಮತ್ತು ಫಲಕಗಳನ್ನು ಕರವೇ ಕಾರ್ಯಕರ್ತರು ಧ್ವಂಸಗೊಳಿಸಿದ್ದರು. ಪೊಲೀಸರೊಂದಿಗೂ ಸಂಘರ್ಷದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಟಿ.ಎ.ನಾರಾಯಣಗೌಡ ಅವರ ನೇತೃತ್ವದ ತಂಡವನ್ನು ಪೊಲೀಸರು ಬಂಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. +ಕೆಲವು ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆಯಾದರೂ, ಪ್ರಮುಖರಿಗೆ ನ್ಯಾಯಾಂಗ ಬಂಧನ ಮುಂದುವರೆದಿದೆ. ಇದು ಕನ್ನಡ ಸಂಘಟನೆಗಳ ಕಿಚ್ಚಿಗೆ ಕಾರಣವಾಗಿದೆ. ಕರವೇ ಬೆಂಬಲಕ್ಕೆ ಇತರ ಕನ್ನಡ ಪರ ರೈತ ಸಂಘಟನೆಗಳು ನಿಂತಿವೆ. ನಾರಾಯಣಗೌಡ ಅವರ ಬಂಧನವನ್ನು ಖಂಡಿಸಿ ಬೆಂಗಳೂರಿನಾದ್ಯಂತ ಸರಣಿ ಪ್ರತಿಭಟನೆಗಳು ಆಯೋಜನೆಗೊಂಡಿವೆ. +ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ಪ್ರವೀಣ್ ಶೆಟ್ಟಿ, ಎನ್.ಕುಮಾರ್ ಸೇರಿದಂತೆ ಹಲವು ನಾಯಕರು ಬೀದಿಗಿಳಿದಿದ್ದಾರೆ. ಜಲ ಸಂರಕ್ಷಣಾ ಸಮಿತಿಯ ರೈತ ಮುಖಂಡರು, ಅಮ್ ಆದ್ಮಿ ಪಕ್ಷವು ನಾರಾಯಣಗೌಡರಿಗೆ ಬೆಂಬಲ ವ್ಯಕ್ತಪಡಿಸಿ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದೆ. +ನಿನ್ನೆ ವಾಟಾಳ್ ನಾಗರಾಜ್ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಂತ ಹೋರಾಟಗಾರರ ಬಿಡುಗಡೆಗೆ 24 ಗಂಟೆಗಳ ಗಡುವು ನೀಡಿದ್ದರು. ಶುಕ್ರವಾರ ಸಂಜೆಯೊಳಗಾಗಿ ಹೋರಾಟಗಾರರನ್ನು ಬಿಡುಗಡೆಗೊಳಿಸದೇ ಇದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದರು. ಈ ಮೊದಲು ಕಾವೇರಿ ವಿಷಯವಾಗಿ ಕರ್ನಾಟಕ ಬಂದ್ ಸಂದರ್ಭದಲ್ಲಿ ನಾರಾಯಣಗೌಡ ಮತ್ತು ವಾಟಾಳ್ ನಾಗರಾಜ್ ಅವರ ನಡುವೆ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್‍ಗೆ ಕರೆ ನೀಡಿದರೆ, ನಾರಾಯಣಗೌಡರು ನೈತಿಕ ಬೆಂಬಲ ನೀಡುವುದಾಗಿ ತಿಳಿಸಿದರು. +ಹೂಡಿಕೆಯ ನೆಪದಲ್ಲಿ ನಾಡು-ನುಡಿ ಕಡೆಗಣನೆ : ಮುಖ್ಯಮಂತ್ರಿ ಚಂದ್ರು ಆಕ್ರೋಶ +ಆದರೆ ನಿನ್ನೆ ನಾರಾಯಣಗೌಡರ ಬಂಧನದ ಬಳಿಕ ಎಲ್ಲಾ ಸಂಘಟನೆಗಳಲ್ಲೂ ಒಗ್ಗಟ್ಟು ಕಂಡುಬಂದಿದೆ. ಕನ್ನಡ ಹೋರಾಟಗಾರರ ವಿರುದ್ಧ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.ನಾರಾಯಣಗೌಡ ಹಾಗೂ ಅವರ ತಂಡ ಭಾಷೆ ಹಾಗೂ ಅದರ ಅಸ್ಮಿತೆಗಾಗಿ ಹೋರಾಟ ನಡೆಸಿದೆ. ಇಂತಹ ಸಂದರ್ಭದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದು ಸಹಿಸಲಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ತುರ್ತು ಸಭೆ ನಡೆಸಿ ಕನ್ನಡ ಭಾಷೆಯ ನಾಮಫಲಕಗಳನ್ನು ಕಡ್ಡಾಯಗೊಳಿಸುವುದಾಗಿ ಪ್ರಕಟಿಸಿದ್ದಾರೆ. ಒಂದೆಡೆ ಸರ್ಕಾರ ಕನ್ನಡಾನುಷ್ಠಾನಕ್ಕೆ ಬದ್ಧವಾಗಿರುವುದಾಗಿ ಹೇಳುತ್ತಲೇ, ಮತ್ತೊಂದೆಡೆ ಕನ್ನಡಪರ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿವೆ. \ No newline at end of file diff --git a/eesanje/url_46_277_10.txt b/eesanje/url_46_277_10.txt new file mode 100644 index 0000000000000000000000000000000000000000..1b5a7205890601ccf4f2a4408532f3f3c218918c --- /dev/null +++ b/eesanje/url_46_277_10.txt @@ -0,0 +1,14 @@ +‘ಕನ್ನಡದ ಕಟ್ಟಾಳು’ ಸಿದ್ದರಾಮಯ್ಯ ಕಾಲದಲ್ಲೇ ಜೈಲು ಸೇರಿದ ಕನ್ನಡ ಹೋರಾಟಗಾರರು +ಬೆಂಗಳೂರು,ಡಿ.28- ಕನ್ನಡ ಭಾಷೆಯ ಅಸ್ಮಿತೆಯ ವಿಷಯ ಬಂದಾಗ ಇಡೀ ಸರ್ಕಾರವೇ ಬಂಡವಾಳಶಾಹಿಯ ಪಾದದ ಬುಡದಲ್ಲಿ ತಲೆಯಿಟ್ಟು ಮಲಗಿದಂತಹ ಅಸಹನೀಯ ಸ್ಥಿತಿ ಕಂಡುಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಅವರ ರಾಜಕೀಯ ಜೀವನದ ಪ್ರಬುದ್ಧಮಾನ ಆರಂಭಗೊಂಡಿದ್ದೇ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನದಿಂದ. ಈಗಲೂ ಸಿದ್ದರಾಮಯ್ಯ ಅವರ ಭಾಷಾಭಿಮಾನ ಬದ್ಧತೆ ಪ್ರಶ್ನಾತೀತ. ಆದರೆ ಕನ್ನಡ ಅನುಷ್ಠಾನದ ವಿಷಯ ಬಂದಾಗ ನೀನು ಒಡೆದಂತೆ ಮಾಡು, ನಾನು ಅತ್ತಂತೆ ಮಾಡುತ್ತೇನೆ ಎಂಬ ಬೂಟಾಟಿಕೆ ಧೋರಣೆ ಸರ್ಕಾರದಲ್ಲಿ ಕಂಡುಬರುತ್ತಿದೆ. +ಬೆಂಗಳೂರನ್ನು ಅಘೋಷಿತವಾಗಿ ಸಿಲಿಕಾನ್ ಸಿಟಿ ಎಂದು ಬೆನ್ನು ತಟ್ಟಿಕೊಳ್ಳುವ ಸರ್ಕಾರದ ಪ್ರತಿನಿಗಳು ಕನ್ನಡದ ವಿಷಯ ಬಂದಾಗ ದೊಡ್ಡ ದೊಡ್ಡ ಮಾತುಗಳು ಹೇಳುತ್ತಾರೆಯೇ ಹೊರತು, ಅಕ್ಷರಶಃ ಪಾಲನೆಯಾಗುವುದಿಲ್ಲ. ಬೆಂಗಳೂರಷ್ಟೇ ಅಲ್ಲ, ರಾಜ್ಯದಲ್ಲಿ ಕನ್ನಡಿಗರು ಅನಾಥರು ಎಂಬ ವಾತಾವರಣ ನಿರ್ಮಾಣವಾಗಿದೆ. ಶಿವಾಜಿನಗರದ ಭಾಗದಲ್ಲಿ ಒಂದು ಭಾಷೆಯಾದರೆ, ಸಿಟಿ ಮಾರುಕಟ್ಟೆಯಲ್ಲಿ ಮತ್ತೊಂದು ಭಾಷೆ. ಚಿಕ್ಕಪೇಟೆಯಲ್ಲಿ ಇನ್ನೊಂದು ಭಾಷಾ ಹಾವಳಿ. ಪೂರ್ವ ಭಾಗದಲ್ಲಿ ನೆರೆ ರಾಜ್ಯದವರ ಅಪತ್ಯಗಳು ಮಿತಿಮೀರಿವೆ. +ಕನ್ನಡಿಗರು ಭಾಷಾ ಅಲ್ಪಸಂಖ್ಯಾತರಷ್ಟೇ ಅಲ್ಲ. ಆರ್ಥಿಕ ಮತ್ತು ಔದ್ಯೋಗಿಕ ಅವಕಾಶಗಳಲ್ಲೂ ವಂಚನೆಗೊಳಗಾಗುತ್ತಿದ್ದಾರೆ. ಸರ್ಕಾರದ ಗುತ್ತಿಗೆಯಲ್ಲಂತೂ ನೆರೆಯ ಆಂಧ್ರ ಪ್ರದೇಶದವರ ಪ್ರಾಬಲ್ಯವನ್ನು ಮೆಟ್ಟಿ ನಿಲ್ಲಲು ಸಾಧ್ಯವೇ ಆಗಿಲ್ಲ. ಅದರಲ್ಲೂ ಅನ್ಯ ಭಾಷಿಗ ಐಎಎಸ್ ಅಕಾರಿಗಳು ಸರ್ಕಾರದ ಸೇವೆ, ಗುತ್ತಿಗೆ ವಿಷಯ ಬಂದಾಗ ಕನ್ನಡಿಗರನ್ನು ನಿರ್ಲಕ್ಷ್ಯ ಧೋರಣೆಯಿಂದ ಕಾಣುತ್ತಿರುವುದು ಸ್ಪಷ್ಟವಾಗುತ್ತಿದೆ. +ಐಟಿ-ಬಿಟಿ ಹೆಚ್ಚಾದ ಕಾಲಘಟ್ಟದಲ್ಲೇ ಕನ್ನಡ ಎರಡನೇ ದರ್ಜೆ ಭಾಷೆಯಾಗಿ ಪರಿಗಣಿಸಲ್ಪಡುತ್ತಿತ್ತು. ರಿಯಲ್ ಎಸ್ಟೇಟ್ ವ್ಯವಹಾರ ಹೆಚ್ಚಾಗುತ್ತಿದ್ದಂತೆ ಕನ್ನಡ ಎನ್ನಡ ಎಂಬಂತಾಗಿದೆ. ಅದರಲ್ಲೂ ಮಾಲ್‍ಗಳಲ್ಲಂತೂ ಕನ್ನಡ ಸಂಪೂರ್ಣ ಕಾಣೆಯಾಗಿ ಹೋಗಿದೆ. +ರೆಸ್ಟೊರೆಂಟ್, ಹೋಟೆಲ್‍ಗಳು, ಮಾಲ್‍ಗಳಲ್ಲಿ ಉತ್ತರ ಭಾರತೀಯರೇ ಹೆಚ್ಚು ಕಾಣಸಿಗುತ್ತಿದ್ದಾರೆ. ಕನ್ನಡಿಗರು ಮೈಬಗ್ಗಿಸಿ ಕೆಲಸ ಮಾಡುವುದಿಲ್ಲ. ಸ್ಥಳೀಯವಾಗಿ ರಾಜಕೀಯ ಮಾಡುತ್ತಾರೆಂಬ ಅಪವಾದವನ್ನು ಕನ್ನಡ ಉದ್ಯಮಿಗಳೇ ಮುಂದಿಡುವ ಮೂಲಕ ಕಡಿಮೆ ವೇತನಕ್ಕೆ ದೊರೆಯುವ ಅನ್ಯಭಾಷಿಗರನ್ನು ಕರೆತಂದು ಉದ್ಯೋಗವಕಾಶಗಳನ್ನು ಕಲ್ಪಿಸುತ್ತಿದ್ದಾರೆ. ಕಳೆದ ಆಗಸ್ಟ್‍ನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡರು ಕನ್ನಡಕ್ಕೆ ಅಪಾಯವಿದೆ. ಇದನ್ನು ಸರಿಪಡಿಸಲು ಡಿಸೆಂಬರ್‍ವರೆಗೂ ಕಾಲಾವಕಾಶ ನೀಡುತ್ತೇವೆ. ಅನಂತರವೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದರು. +4 ತಿಂಗಳು ಕಳೆದರೂ ಸರ್ಕಾರ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಲೇ ಇಲ್ಲ. ಸೂಕ್ಷ್ಮಮತಿಯಾಗಿ ವರ್ತಿಸಲಿಲ್ಲ. ಕಳೆದ ವಾರದಿಂದ ಕರವೇಯ ಬಣ ಬೀದಿಗಿಳಿದು ಪ್ರತಿಭಟಿಸಲಾರಂಭಿಸಿತು. ಅಲ್ಲಲ್ಲಿ ಬಲಪ್ರಯೋಗಗಳಾಗಿರುವ ಘಟನೆಗಳೂ ವರದಿಯಾಗಿವೆ. +ಆಗಲೂ ಸರ್ಕಾರ ಕುಂಭಕರ್ಣ ನಿದ್ದೆಯಿಂದ ಬಿಟ್ಟೇಳಲಿಲ್ಲ. ಪ್ರತಿಭಟನೆ ವಿಪರೀತಗೊಳ್ಳುತ್ತಿದ್ದಂತೆ ಬಿಬಿಎಂಪಿ ಆಯುಕ್ತರು ಒಂದು ಸುತ್ತೋಲೆ ಹೊರಡಿಸಿ ಫೆ.28 ರೊಳಗೆ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆಯನ್ನು ಅನುಷ್ಠಾನಕ್ಕೆ ತರಬೇಕು. ಇಲ್ಲವಾದರೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು. ಕಳೆದ ನಾಲ್ಕು ತಿಂಗಳಿನಿಂದಲೂ ಮೈಮರೆತಿದ್ದ ಸರ್ಕಾರ ಪ್ರತಿಭಟನೆ ಬೇರೆ ಸ್ವರೂಪಕ್ಕೆ ತಿರುಗುವವರೆಗೂ ಸುಮ್ಮನಿದ್ದಿದ್ದು ಏಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. +ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ +ನಾರಾಯಣಗೌಡರು ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸಿದ್ಧಾಂತಗಳನ್ನು ಬೆಂಬಲಿಸಿದ್ದರು. ಕೋಮುವಾದ ನಾಡಿಗೆ ಅಪಾಯಕಾರಿ ಎಂಬರ್ಥದಲ್ಲಿ ಹಲವು ಬಾರಿ ಮಾತನಾಡಿದ್ದರು. ಈಗ ಅದೇ ಕಾಂಗ್ರೆಸ್ ಸರ್ಕಾರ ನಾರಾಯಣಗೌಡರನ್ನು ಬಂಧಿಸಿ ಜೈಲಿಗಟ್ಟಿದೆ. +ಕನ್ನಡ ಹೋರಾಟಕ್ಕಾಗಿ ಕರವೇಯ ಕಾರ್ಯಕರ್ತರು ರಾಜ್ಯಾದ್ಯಂತ 1,500 ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕನ್ನಡ ಸಂಘಟನೆಗಳೇ ಇಲ್ಲದಿದ್ದರೆ, ನಾಡು-ನುಡಿ, ನೆಲ-ಜಲ, ಭಾಷೆ ಕೇಳುವವರೇ ಇಲ್ಲ ಹಾಗೂ ರಕ್ಷಿಸುವವರಿಲ್ಲ ಎಂಬಂತಾಗುವುದಂತೂ ಅಕ್ಷರಶಃ ಸತ್ಯ. ಕರವೇಯ ಪ್ರತಿಭಟನೆಗಳನ್ನು ಹಿಂಸಾತ್ಮಕ ಎಂದು ವಾದಿಸುತ್ತಾ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಇದರಿಂದ ಬಂಡವಾಳ ಹೂಡಿಕೆಗೆ ತೊಂದರೆಯಾಗುತ್ತದೆ ಎಂದು ಹೇಳುತ್ತಿರುವ ಸರ್ಕಾರ, ಕನ್ನಡದ ಅಸ್ಮಿತೆಯ ಬಗ್ಗೆ ಬೂಟಾಟಿಕೆಯ ಮಾತು ಗಳನ್ನಾಡುವುದನ್ನು ನಿಲ್ಲಿಸಬೇಕು. +ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಕೋಟ್ಯಂತರ ರೂ. ಖರ್ಚು ಮಾಡಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆಯೇ ಹೊರತು ಬೇರೆ ಪ್ರಯೋಜನಗಳಾಗುತ್ತಿರುವುದು ಕಂಡುಬರುತ್ತಿಲ್ಲ. ಕರವೇಯ ಪ್ರತಿಭಟನೆಗಳ ಬಗ್ಗೆ ಮುನ್ಸೂಚನೆ ನೀಡುವಲ್ಲಿ ರಾಜ್ಯದ ಗುಪ್ತಚರ ಇಲಾಖೆ ಸಂಪೂರ್ಣ ವೈಫಲ್ಯ ಅನುಭವಿಸಿದೆ. ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಯಲ್ಲಿ ಎಡವಿದ್ದಲ್ಲದೆ, ಅಧಿಕಾರದ ದರ್ಪ ಮೆರೆದು ಹೋರಾಟಗಾರರನ್ನೇ ಜೈಲಿಗಟ್ಟಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. +ಪದೇ ಪದೇ ಪಕ್ಷಕ್ಕೆಮುಜುಗರ, ಯತ್ನಾಳ್ ಅಮಾನತಿಗೆ ಸಿದ್ಧತೆ +ಪೊಲೀಸರಿಗೆ ತಿಳಿ ಹೇಳಬೇಕಾದ ಸರ್ಕಾರದ ಪ್ರತಿನಿಧಿಗಳು ನಾರಾಯಣಗೌಡರ ಬಂಧನವನ್ನು ಸಮರ್ಥಿಸಿಕೊಳ್ಳುತ್ತಿರುವುದು ಮತ್ತೊಂದು ಕನ್ನಡ ವಿರೋಧಿ ಧೋರಣೆಯಾಗಿದೆ. \ No newline at end of file diff --git a/eesanje/url_46_277_11.txt b/eesanje/url_46_277_11.txt new file mode 100644 index 0000000000000000000000000000000000000000..6f4610e95bddd645901f5a247d19a0590764da17 --- /dev/null +++ b/eesanje/url_46_277_11.txt @@ -0,0 +1,10 @@ +ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ +ಬೆಂಗಳೂರು,ಡಿ.28- ಕನ್ನಡ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಸಂಘಟನೆಗಳಿಗೆ ಅಧಿಕಾರ ಇದೆ. ಹಾಗೆಂದ ಮಾತ್ರಕ್ಕೆ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸರ್ಕಾರ ಕನ್ನಡದ ಪರವಾಗಿದೆ, ಕನ್ನಡದಲ್ಲೇ ಆಡಳಿತ ನಡೆಸಬೇಕು ಎಂದು ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಅನುಷ್ಠಾನಕ್ಕೆ ತರುತ್ತಿದ್ದೇವೆ. ಕನ್ನಡ ನಾಮಫಲಕಗಳ ಬಗ್ಗೆ ಪರವಾನಗಿ ನೀಡುವ ವೇಳೆ ಷರತ್ತು ವಿಧಿಸಲಾಗುತ್ತದೆ ಎಂದರು. +ಇದರ ನಡುವೆ ಕರ್ನಾಟಕ ರಕ್ಷಣಾ ವೇದಿಕೆಯವರು ಬಲವಂತವಾಗಿ ದಾಳಿ ಮಾಡುತ್ತಿರುವುದು ಸರಿಯಲ್ಲ. ಬಿಬಿಎಂಪಿ ಮತ್ತು ಸರ್ಕಾರದ ಗಮನಕ್ಕೆ ವಿಷಯ ತರಬಹುದಿತ್ತು. ನಮ್ಮಿಂದಲೂ ಸರಿಯಾದ ಕ್ರಮಗಳಾಗದೇ ಇದ್ದರೆ ಆಗ ಅವರು ಹೋರಾಟ ನಡೆಸಬಹುದಿತ್ತು. ಆದರೆ ಕಾನೂನನ್ನು ಕೈಗೆತ್ತಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದರು. +ಕಾನೂನು ಸುವ್ಯವಸ್ಥೆ ಪಾಲನೆ ಸರ್ಕಾರ ಪೊಲೀಸರಿಗೆ ನೀಡಿರುವ ಜವಾಬ್ದಾರಿ. ಅದನ್ನು ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಆಸ್ತಿಪಾಸ್ತಿಗಳ ಹಾನಿಯಾಗುತ್ತಿದ್ದರೂ ಪೊಲೀಸರು ಸುಮ್ಮನಿರಬೇಕೆಂದು ಬಯಸುವುದು ತಪ್ಪು ಎಂದು ಹೇಳಿದರು. +ಯಾರೇ ಆದರೂ ಹಿಂಸಾತ್ಮಕ ಹೋರಾಟ ನಡೆಸಬಾರದು. ಬೆಂಗಳೂರು ವಿಶ್ವದಲ್ಲೇ ಪ್ರಖ್ಯಾತ ನಗರ. ಇದರ ಬಗ್ಗೆ ನಮಗೆ ಹೆಮ್ಮೆಯಿರಬೇಕು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಿಂದಲೂ ಇಲ್ಲಿಗೆ ಜನ ಬರುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಬೆಂಗಳೂರಿನ ವರ್ಚಸ್ಸಿಗೆ ಧಕ್ಕೆಯಾಗುತ್ತದೆ ಎಂದರು. +ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ +ಪ್ರತಿಭಟನೆ ವೇಳೆ ಪೊಲೀಸರು ಸರಿಯಾಗಿ ನಡೆದುಕೊಳ್ಳಲಿಲ್ಲ ಎಂದರೆ ಏನರ್ಥ? ಯಾವುದೇ ಸಂಘಟನೆಯಾದರೂ ಪ್ರತಿಭಟನೆ ನಡೆಸಲು ಒಂದಿಷ್ಟು ಕಾಲಾವಕಾಶ ನೀಡಲಾಗುತ್ತದೆ. ಅದರ ನಂತರ ಶಾಪಿಂಗ್ ಮಾಲ್‍ಗಳಿಗೆ ಹೋಗಿ ನಾಮಫಲಕಗಳನ್ನು ಕಿತ್ತು ಹಾಕುವುದು ಹೇಗೆ ನೋಡಿಕೊಂಡಿರಲು ಸಾಧ್ಯ. ಭದ್ರತೆ ನೀಡುವಂತೆ ಅಂಗಡಿ ಹಾಗೂ ಮಾಲ್‍ಗಳ ಮಾಲಿಕರು ಮನವಿ ಸಲ್ಲಿಸಿದ್ದಾರೆ. ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯವಲ್ಲವೇ ಎಂದರು. +ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ : 12 ಮಂದಿ ಸಜೀವ ದಹನ +ಕನ್ನಡ ಕಡ್ಡಾಯವನ್ನು ಜಾರಿಗೆ ತರುವಂತೆ ನಮ್ಮ ಮೇಲೆ ಒತ್ತಡ ಹಾಕುವುದು, ಪ್ರತಿಭಟನೆ ಮಾಡುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕಾನೂನನ್ನು ಕೈಗೆತ್ತಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಕ್ಕ ಪಾಠ ಕಲಿಸುತ್ತಿದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಸಾಕಷ್ಟು ಪಾಠ ಕಲಿತಿದ್ದೇವೆ, ಇನ್ನು ಕಲಿಯಲು ಏನೂ ಇಲ್ಲ, ಕಾನೂನು ಕುರಿತು ಪಕ್ಷ ಎಷ್ಟು ಪಾಠ ಕಲಿತಿದೆ ಎಂದರೆ ಕಲಿತು, ಕಲಿತು ದೇಶದಲ್ಲಿ ಬೇರೆಯವರಿಗೆ ಪಾಠ ಮಾಡುವಷ್ಟು ತಜ್ಞತೆ ಬೆಳೆಸಿಕೊಂಡಿದ್ದೇವೆ ಎಂದರು. ಸರ್ಕಾರ ಯಾವುದೇ ಮಾಲ್‍ಗಳ ಪರವಾಗಿಲ್ಲ. ಕಾನೂನು ರಕ್ಷಣೆಯಷ್ಟೇ ನಮ್ಮ ಆದ್ಯತೆ ಎಂದು ಹೇಳಿದರು. \ No newline at end of file diff --git a/eesanje/url_46_277_12.txt b/eesanje/url_46_277_12.txt new file mode 100644 index 0000000000000000000000000000000000000000..73902ab4bc73e20531ddc0224b40e0f03367c1f5 --- /dev/null +++ b/eesanje/url_46_277_12.txt @@ -0,0 +1,8 @@ +ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ +ಬೆಂಗಳೂರು,ಡಿ.28- ಕರವೇ ಅಧ್ಯಕ್ಷ ನಾರಾಯಣಗೌಡ ಮತ್ತು ಅವರ ತಂಡದ ಬಂಧನವನ್ನು ಸಮರ್ಥಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಕೈಗೆತ್ತಿಕೊಂಡು ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನೋಡಿಕೊಂಡು ಕಣ್ಣುಮುಚ್ಚಿಕೊಂಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಪರ ಹೋರಾಟಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಬೆಂಗಳೂರು ನಗರದ ಆಸ್ತಿಪಾಸ್ತಿಗಳನ್ನು ಹಾನಿ ಮಾಡುವುದನ್ನು ಒಪ್ಪಲು ನಾವು ಸಿದ್ಧರಿಲ್ಲ. ಹೋರಾಟಕ್ಕೂ ಒಂದು ಇತಿಮಿತಿಯಿದೆ. ಆಸ್ತಿಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು. +ಹೋರಾಟ ಮಾಡುವುದಕ್ಕೆ ನಮ್ಮ ಬೆಂಬಲವಿದೆ. ಕನ್ನಡಕ್ಕೆ ಆದ್ಯತೆ ಸಿಗಬೇಕು. ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆಯಾಗಬೇಕು. ಇದಕ್ಕೆ ನಮ್ಮ ಒತ್ತಾಸೆಯೂ ಇದೆ. ಕನ್ನಡ ನಾಮಫಲಕ ಹಾಕಬೇಕು ಎಂದು ಹೇಳಿದ್ದ ಕರವೇ ಅಧ್ಯಕ್ಷ ನಾರಾಯಣಗೌಡರ ಬಣದ ವಿರುದ್ಧ ದೂರು ಕೊಟ್ಟಿದ್ದು, ಪ್ರಕರಣ ದಾಖಲಾಗಿದ್ದು ತಮ್ಮ ಗಮನಕ್ಕೆ ಬಂದಾಗ ನಾನೇ ಖುದ್ದು ಮಾತನಾಡಿ, ಅದೆಲ್ಲಾ ಸರಿಯಲ್ಲ ಎಂದು ಆಕ್ಷೇಪಿಸಿದ್ದೇನೆ ಎಂದು ಹೇಳಿದರು. +ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ +ನಾರಾಯಣಗೌಡರಿಗೆ ತಾವು ಹೇಳುವುದಿಷ್ಟೇ, ಯಾರ ಆಸ್ತಿಯನ್ನು ಹಾನಿ ಮಾಡಬಾರದು. ಪ್ರತಿಭಟನೆ ಮಾಡಲಿ, ಕ್ಕಾರ ಕೂಗಲಿ, ನಮ್ಮ ಮನೆಯ ಮುಂದೆಯೂ ಪ್ರತಿಭಟನೆ ಮಾಡಲಿ, ತಪ್ಪು ಮಾಡಿದಾಗ ಹೇಳಲಿ, ನಾವೆಲ್ಲಾ ಸೇರಿ ಕನ್ನಡ ಉಳಿಸೋಣ. ಆದರೆ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಸರಿಯಲ್ಲ ಎಂದರು. +ಖುದ್ದು ಮುಖ್ಯಮಂತ್ರಿಯವರು ಎಲ್ಲಾ ಸಚಿವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಎಲ್ಲಾ ಟಿಪ್ಪಣಿಗಳು, ಪತ್ರ ವ್ಯವಹಾರಗಳು ಕನ್ನಡದಲ್ಲೇ ಇರಬೇಕು ಎಂದು ಸಂಪುಟದಲ್ಲೇ ಸೂಚನೆ ನೀಡಿದ್ದಾರೆ. ಸರ್ಕಾರ ಕನ್ನಡಕ್ಕೆ ಬದ್ಧವಾಗಿದೆ. ಹಾಗೆಂದು ಕಾನೂನು ಕೈಗೆತ್ತಿಕೊಳ್ಳುವುದನ್ನು ಒಪ್ಪಲಾಗುವುದಿಲ್ಲ ಎಂದು ಹೇಳಿದರು. +ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಬಂಡವಾಳ ಹೂಡಿಕೆಯ ಮೇಲೆ ಪರಿಣಾಮ ಬೀರುತ್ತದೆ. ಹೊರಗಿನಿಂದ ಬಂದವರು ಕನ್ನಡ ಕಲಿಯಬೇಕು. ಆದರೆ ಈ ರೀತಿಯ ಸಂಘರ್ಷಗಳಿಂದ ಅನ್ಯ ಭಾಷಿಗರಲ್ಲಿ ಆತಂಕ ಮೂಡಿಸಿದಂತಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟಿಸುವ ಹಕ್ಕುಗಳಿವೆ. ಆದರೆ ನಾರಾಯಣಗೌಡರ ತಂಡ ಆಸ್ತಿಪಾಸ್ತಿ ಹಾನಿ ಮಾಡುವ ಹೋರಾಟವನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ ಎಂದರು. \ No newline at end of file diff --git a/eesanje/url_46_277_2.txt b/eesanje/url_46_277_2.txt new file mode 100644 index 0000000000000000000000000000000000000000..0b8f59144cfb55b8c0af9efc5c10ee74110aa6b7 --- /dev/null +++ b/eesanje/url_46_277_2.txt @@ -0,0 +1,6 @@ +ಸಿಎಂ ಮನೆ ಮುಂದೆ ಆಮರಣಾಂತ ಉಪವಾಸ : ನಾರಾಯಣಗೌಡರ ತಾಯಿ ಎಚ್ಚರಿಕೆ +ಬೆಂಗಳೂರು,ಡಿ.29- ನನ್ನ ಮಗ ಕನ್ನಡ ನಾಡು-ನುಡಿಗಾಗಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರನ್ನು ತಕ್ಷಣ ಬಿಡುಗಡೆ ಮಾಡದೇ ಇದ್ದರೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆ ಮುಂದೆ ಅನ್ನ, ನೀರು ತ್ಯಜಿಸಿ ಆಮರಣಾಂತ ಸತ್ಯಾಗ್ರಹ ನಡೆಸುವುದಾಗಿ ನಾರಾಯಣಗೌಡ ಅವರ ತಾಯಿ ಗೌರಮ್ಮ ಎಚ್ಚರಿಕೆ ನೀಡಿದ್ದಾರೆ. +ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಹೋರಾಟ ನಡೆಸಿದ್ದ ನಾರಾಯಣಗೌಡರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಹಿನ್ನೆಲೆಯಲ್ಲಿ ಗೌರಮ್ಮ ಅವರು ತಮ್ಮ ಅಳಲು ತೋಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನನ್ನ ಮಗ ಏನು ತಪ್ಪು ಮಾಡಿದ್ದ ಎಂದು ಜೈಲಿಗೆ ಹಾಕಿದ್ದೀರ ಎಂದು ಸರ್ಕಾರವನ್ನು ಗೌರಮ್ಮ ಪ್ರಶ್ನಿಸಿದ್ದಾರೆ. ನನ್ನ ಮಗನ ಆರೋಗ್ಯ ಸರಿಯಿಲ್ಲ. ಮಾತನಾಡಲೂ ತ್ರಾಣವಿಲ್ಲದಷ್ಟು ಸುಸ್ತಾಗಿದ್ದರು. ಆದರೂ ಕನ್ನಡಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅದೇ ತಪ್ಪೇ? ದರೋಡೆ, ಕಳ್ಳತನ ಮಾಡಿದ್ದಾರೆಯೇ, ಯಾವ ಕಾರಣಕ್ಕೆ ಜೈಲಿನಟ್ಟಿದ್ದೀರ ಎಂದು ಕಿಡಿಕಾರಿದ್ದಾರೆ. +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ನಿನ್ನೆ ಕುಟುಂಬದ ಸದಸ್ಯರು ನಾರಾಯಣಗೌಡರಿಗೆ ಕೊಡಲು ಊಟ ಮತ್ತು ಮಾತ್ರೆಯನ್ನು ತೆಗೆದುಕೊಂಡು ಹೋಗಿದ್ದರು. ಆದರೆ ಜೈಲಿನ ಅಧಿಕಾರಿಗಳು ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮಗ ಊಟ ಇಲ್ಲದೆ, ಜೈಲಿನಲ್ಲಿರಬೇಕಾದರೆ ಹೆತ್ತ ಕರಳು ಎಷ್ಟು ಸಂಕಟ ಪಡುತ್ತದೆ ಎಂದು ನಿಮಗೆ ಗೊತ್ತಾಗುತ್ತದೆಯೇ ಎಂದು ಅಳಲು ತೋಡಿಕೊಂಡಿದ್ದಾರೆ. +ನನ್ನ ಮಗ ಕನ್ನಡಕ್ಕಾಗಿ ಹೋರಾಟ ನಡೆಸಿದ್ದಾನೆ. ಮಾಡಬಾರದ ತಪ್ಪೇನೂ ಮಾಡಿಲ್ಲ, ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಮನೆ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_277_3.txt b/eesanje/url_46_277_3.txt new file mode 100644 index 0000000000000000000000000000000000000000..98a1fa48d5a9cd503455ab12df9e4a3d34e748e1 --- /dev/null +++ b/eesanje/url_46_277_3.txt @@ -0,0 +1,6 @@ +ಹೂಡಿಕೆಯ ನೆಪದಲ್ಲಿ ನಾಡು-ನುಡಿ ಕಡೆಗಣನೆ : ಮುಖ್ಯಮಂತ್ರಿ ಚಂದ್ರು ಆಕ್ರೋಶ +ಬೆಂಗಳೂರು,ಡಿ.29- ಬಂಡವಾಳ ಹೂಡಿಕೆಯ ನೆಪದಲ್ಲಿ ರಾಜ್ಯಸರ್ಕಾರ ಕನ್ನಡ ನಾಡು-ನುಡಿ, ಸಂಸ್ಕøತಿಯನ್ನು ಕಡೆಗಣಿಸುತ್ತಿದೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಹಾಸ್ಯಾಸ್ಪದ. ರಾಜ್ಯದಲ್ಲಿ ಕನ್ನಡ ಬಳಕೆ ಸಂಪೂರ್ಣ ಕಡೆಗಣನೆಗೆ ಒಳಗಾಗಿದೆ. ಸಚಿವರು ಆಂಗ್ಲಭಾಷೆಯಲ್ಲೇ ವ್ಯವಹಾರ ನಡೆಸುತ್ತಿದ್ದಾರೆ. ನಾರಾಯಣಗೌಡ ಮತ್ತು ಅವರ ಬಣದ ಕಾರ್ಯಕರ್ತರ ಹೋರಾಟ ಜೈಲಿಗೆ ಕಳುಹಿಸುವಂತಹ ಹೋರಾಟವಾಗಿರಲಿಲ್ಲ. ಕನ್ನಡ ದ್ರೋಹಿಯಾಗಿರುವ ಸರ್ಕಾರ ಉದ್ದೇಶಪೂರ್ವಕವಾಗಿ ಕ್ರಮ ಕೈಗೊಂಡಿದೆ ಎಂದು ಆರೋಪಿಸಿದರು. +ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ +ಬಲಿತ ಅವರು ಬಂಡವಾಳಶಾಹಿಗಳಿಗೆ ಬೆಂಬಲ ನೀಡುತ್ತಾರೆ. ಹೊರಗಿನಿಂದ ಬಂದವರಿಗೆ ಅವರು ಕೊಡುವ ಹಣವನ್ನು ತೆಗೆದುಕೊಂಡು ವಿವಿಧ ವಿನಾಯಿತಿಗಳನ್ನು ನೀಡಿ, ಇಲ್ಲಿ ಬದುಕಲು ಅವಕಾಶ ಮಾಡಿಕೊಡಲಾಗುತ್ತದೆ. ಈ ಮೊದಲು ಶೇ. 40 ರಷ್ಟು ಕಮಿಷನ್ ಪಡೆಯಲಾಗಿದ್ದು, ಈಗ ಅದಕ್ಕಿಂತಲೂ ಹೆಚ್ಚಿನ ಹಣ ಲೂಟಿ ಹೊಡೆಯುವ ಸಲುವಾಗಿ ಬಂಡವಾಳಶಾಹಿಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ದೂರಿದರು. +ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆಯಾಗಬೇಕು ಎಂಬ ಸುಗ್ರೀವಾಜ್ಞೆಯನ್ನು ಸಿದ್ದರಾಮಯ್ಯನವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_277_4.txt b/eesanje/url_46_277_4.txt new file mode 100644 index 0000000000000000000000000000000000000000..960f4ecc7940c8c976828c18d5413ce11d913c1e --- /dev/null +++ b/eesanje/url_46_277_4.txt @@ -0,0 +1,10 @@ +‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ +ನವದೆಹಲಿ,ಡಿ.29-ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಬಿಜೆಪಿ ಫಿರ್ ಆಯೇಗಾ ಮೋದಿ (ಮೋದಿ ಮತ್ತೆ ಬರಲಿದ್ದಾರೆ) ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಲಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಚಾಯಿ ಪೆ ಚರ್ಚಾ, 2019 ರಲ್ಲಿ ಆಪ್ ಕಿ ಬಾರ್ ಮೋದಿ ಸರ್ಕಾರ್ ಎಂಬ ಘೋಷವಾಕ್ಯದೊಂದಿಗೆ ಚುನಾವಣೆಯಲ್ಲಿ ಗೆದ್ದು ಬಂದಿದ್ದ ಬಿಜೆಪಿ ಈ ಬಾರಿ ಫಿರ್ ಆಯೇಗಾ ಮೋದಿ ಎಂಬ ಘೋಷ ವಾಕ್ಯವನ್ನು ಸಿದ್ಧಪಡಿಸಿದೆ. +ಸದ್ಯದಲ್ಲೇ ಸಾಮಾಜಿಕ ಜಾಲತಾಣದಲ್ಲಿ ಇದು ಬಿತ್ತರವಾಗಲಿದ್ದು, ದೇಶಕ್ಕೆ ಮೋದಿಯೇ ಪರಿಹಾರ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದಲ್ಲೇ ಅತೀ ಹೆಚ್ಚು ಪ್ರಮಾಣದ ಬೆಂಬಲಿಗರನ್ನು ಹೊಂದಿದ್ದಾರೆ. ಇದನ್ನು ಮತಗಳನ್ನಾಗಿ ಪರಿವರ್ತಿಸುವ ಲೆಕ್ಕಾಚಾರದಲ್ಲಿ ಕಮಲ ಪಡೆ ನಾಯಕರಿದ್ದಾರೆ. +2014 ರಿಂದ 2024 ರವರೆಗೆ ಮೋದಿ ಪ್ರಧಾನಿಯಾದ ಮೇಲೆ ಕೇಂದ್ರದಲ್ಲಿ ಜಾರಿ ಮಾಡಿರುವ ಯೋಜನೆಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಯಥೇಚ್ಛವಾಗಿ ಬಳಸಿಕೊಂಡು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ರಣತಂತ್ರವನ್ನು ರೂಪಿಸಲಾಗಿದೆ. ವಿಶೇಷವಾಗಿ ಈ ಬಾರಿಯ ಚುನಾವಣೆಯಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370 ನೇ ವಿಯನ್ನು ರದ್ದುಪಡಿಸಿರುವುದು ಹಾಗೂ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದಿರುವುದು ಚುನಾವಣೆಯ ಪ್ರಮುಖ ಅಸ್ತ್ರವಾಗಲಿದೆ. +ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ +ಜೊತೆಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಶ್ರೀರಾಮಮಂದಿರ ನಿರ್ಮಾಣವು ಬಿಜೆಪಿಯ ಪ್ರಚಾರದ ಸರಕಾಗಲಿದೆ. ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದರಿಂದ 370 ನೇ ವಿಧಿ ರದ್ದು ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯವಾಯಿತು. ಮತ್ತೊಂದು ಬಾರಿ ಅಧಿಕಾರ ನೀಡಿದರೆ ದೇಶಾದ್ಯಂತ ಎಲ್ಲರಿಗೂ ಸಮಾನ ನಾಗರಿಕ ನೀತಿ ಸಂಹಿತೆಗಳನ್ನು ಜಾರಿ ಮಾಡುವ ಕಾಯ್ದೆಯನ್ನು ಅನುಷ್ಠಾನ ಮಾಡುತ್ತೇವೆ ಎಂಬ ಭರವಸೆಯನ್ನು ಪ್ರಣಾಳಿಕೆಯಲ್ಲಿ ಬಿಜೆಪಿ ಸೇರ್ಪಡೆ ಮಾಡಲಿದೆ. +ಮೂಲಗಳ ಪ್ರಕಾರ ಜನವರಿ ತಿಂಗಳ ಅಂತ್ಯಕ್ಕೆ ಸುಮಾರು 300 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಸಿದ್ಧತೆ ನಡೆಸಲಾಗಿದೆ. ಗೆದ್ದೇ ಗೆಲ್ಲುವ ಕ್ಷೇತ್ರಗಳಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿ ದೇಶಾದ್ಯಂತ ಸುಮಾರು 300 ಕ್ಕೂ ಹೆಚ್ಚು ಮೆಗಾರ್ಯಾಲಿಗಳನ್ನು ಮೋದಿ ನಡೆಸಲು ಉದ್ದೇಶಿಸಿದ್ದಾರೆ. +ದಾಖಲೆ ನಿರ್ಮಾಣ :ಒಂದು ವೇಳೆ 2024 ರಲ್ಲಿ ಮೋದಿಯವರು ಈಗಿರುವ ಸಮೀಕ್ಷೆಯಂತೆ ಮೂರನೇ ಬಾರಿ ಅಧಿಕಾರ ಹಿಡಿದರೆ ಭಾರತದ ಮಟ್ಟಿಗೆ ಅದೊಂದು ದಾಖಲೆಯಾಗಲಿದೆ. ಕೇಂದ್ರದಲ್ಲಿ ಸತತವಾಗಿ ಮೂರನೇ ಬಾರಿಗೆ ಒಂದೇ ಪಕ್ಷ ಅಧಿಕಾರ ಹಿಡಿದು 15 ವರ್ಷಗಳ ಕಾಲ ಪ್ರಧಾನಿಯಾದ ದಾಖಲೆ ದೇಶದ ಮೊದಲ ಪ್ರಧಾನಿ ಜವಹರಲಾಲ್ ನೆಹರೂ ಹೆಸರಿನಲ್ಲಿದೆ. +ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು +ಇದೀಗ ಮೋದಿ 2024 ರಲ್ಲಿ ಗೆದ್ದು ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿದರೆ ನೆಹರೂ ದಾಖಲೆಯನ್ನು ಸರಿಗಟ್ಟಲಿದ್ದಾರೆ. 400 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಲೋಕಸಭಾ ಸಮರಕ್ಕೆ ಧುಮುಕಲು ಸಜ್ಜಾಗುತ್ತಿದೆ. \ No newline at end of file diff --git a/eesanje/url_46_277_5.txt b/eesanje/url_46_277_5.txt new file mode 100644 index 0000000000000000000000000000000000000000..bb54ce938991bd6cce2a36ce33aaddac52e0b3b2 --- /dev/null +++ b/eesanje/url_46_277_5.txt @@ -0,0 +1,6 @@ +ವಾರ್ತಾ ಇಲಾಖೆಯ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಜಿ.ಎನ್.ದೇಸಾಯಿ ವಿಧಿವಶ +ಬೆಂಗಳೂರು,ಡಿ.29- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾಣಿಜ್ಯ ಪ್ರಚಾರ ಶಾಖೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಜಿ.ಎನ್. ದೇಸಾಯಿ (67) ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿನಲ್ಲಿ ಜ್ಞಾನಭಾರತಿ ಲೇಔಟ್, ಕೆಂಚನಪುರ ಕ್ರಾಸ್‍ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. +ದಶಕಗಳ ಕಾಲ ದೇಸಾಯಿ ಅವರು ವಾಣಿಜ್ಯ ಪ್ರಚಾರ ಶಾಖೆಯ ಹಲವು ಕಾರ್ಯಚಟುವಟಿಕೆಗಳ ಭಾಗವಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದ ದೇಸಾಯಿ ಅವರು ಪತ್ನಿ ಹಾಗೂ ಏಕೈಕ ಪುತ್ರಿಯನ್ನು ಅಗಲಿದ್ದಾರೆ. +ದೇಸಾಯಿ ಅವರ ಪುತ್ರಿ ವಿದೇಶದಲ್ಲಿದ್ದು, ಅವರು ನಾಳೆ ನಗರಕ್ಕೆ ಬರುವ ಹಿನ್ನೆಲೆಯಲ್ಲಿ ದೇಸಾಯಿಯವರ ಮೃತದೇಹವನ್ನು ಬಿಜಿಎಸ್ ಆಸ್ಪತ್ರೆಯಲ್ಲಿರಿಸಲಾಗಿದೆ. ನಾಳೆ ಮಧ್ಯಾಹ್ನ 12.30ರಿಂದ 3 ಗಂಟೆವರೆಗೆ ದೇಸಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಸ್ವಗೃಹದಲ್ಲಿ ವ್ಯವಸ್ಥೆ ಮಾಡಲಾಗಿದೆ. +ಐಫೋನ್ ಹ್ಯಾಕ್ ಆರೋಪ ನಿರಾಕರಿಸಿದ ರಾಜೀವ್ ಚಂದ್ರಶೇಖರ್ +ಭಾನುವಾರ ಅವರ ಸ್ವಗ್ರಾಮ ವಾದ ಗುಲ್ಬರ್ಗ ಜಿಲ್ಲೆ, ಯಡ್ರಾಮಿ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ದೇಸಾಯಿಯವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಸ್ನೇಹಿತರು, ಮಾಧ್ಯಮ ರಂಗದ ಹಿತೈಷಿಗಳು ಹಾಗೂ ಬಂಧು-ಬಳಗದವರು ಸಂತಾಪ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_277_6.txt b/eesanje/url_46_277_6.txt new file mode 100644 index 0000000000000000000000000000000000000000..e195c52497150b162fe1b839555db0a86f43e57d --- /dev/null +++ b/eesanje/url_46_277_6.txt @@ -0,0 +1,7 @@ +ಎಚ್ಚೆತ್ತ ಸರ್ಕಾರ : ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕ್ರಮ +ಬೆಂಗಳೂರು,ಡಿ.28- ಕನ್ನಡಪರ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೃಹಕಚೇರಿ ಕೃಷ್ಣದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, ಅಂಗಡಿ ಮುಗ್ಗಟ್ಟುಗಳ ಮುಂಭಾಗ ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ. +ಗೃಹ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಾಣಿಜ್ಯ ಮಳಿಗೆಗಳು ಹಾಗೂ ವ್ಯಾಪಾರೋದ್ಯಮಗಳಲ್ಲಿ ಕನ್ನಡ ಭಾಷಾ ನಾಮಫಲಕವನ್ನು ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಬೆಂಗಳೂರಿನಾದ್ಯಂತ ಬೃಹತ್ ಪ್ರತಿಭಟನೆಗಳಾಗಿವೆ. ಈ ವೇಳೆ ಹಲವಾರು ಆಸ್ತಿಪಾಸ್ತಿಗೂ ಧಕ್ಕೆಯಾಗಿದೆ. +ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ನಾರಾಯಣಗೌಡ ಹಾಗೂ ಅವರ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಇದು ಮತ್ತಷ್ಟು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡ ಸಂಘಟನೆಗಳನ್ನು ಕೆಣಕಿದಂತಾಗಿದೆ. ಹೋರಾಟ ತೀವ್ರ ಸ್ವರೂಪಕ್ಕೆ ತಿರುಗುವುದರ ಮುನ್ಸೂಚನೆ ಪಡೆದ ಮುಖ್ಯಮಂತ್ರಿಯವರು ಇಂದು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. +ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್ +ಕನ್ನಡ ಸಂಘಟನೆಗಳ ಹೋರಾಟದ ವಿಷಯದಲ್ಲಿ ಸಹನೆಯಿಂದ ವರ್ತಿಸುವಂತೆ ಸಭೆಯಲ್ಲಿ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪೊಲೀಸರೊಂದಿಗೆ ಸಂಘರ್ಷಗಳಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿತ್ತು. ಈ ಹಿನ್ನೆಲೆಯಲ್ಲಿ ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ಅನಗತ್ಯವಾದ ಬಲಪ್ರಯೋಗಕ್ಕೆ ಅವಕಾಶ ನೀಡಬಾರದು. ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜೊತೆ ಸಹನೆಯಿಂದ ವರ್ತಿಸಬೇಕು ಎಂದು ಪೊಲೀಸರು ಸೂಚಿಸಿರುವುದಾಗಿ ತಿಳಿದುಬಂದಿದೆ. +ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಆದೇಶವನ್ನು ಜಾರಿಗೊಳಿಸಲು ಬಿಬಿಎಂಪಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಕಾರಿಗಳು ಕೆಲಸ ಮಾಡಬೇಕು. ವಾಣಿಜ್ಯ ಮತ್ತು ಉದ್ಯಮಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನಾಮಫಲಕ ಬದಲಾವಣೆಗೆ ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_277_7.txt b/eesanje/url_46_277_7.txt new file mode 100644 index 0000000000000000000000000000000000000000..5b21f1ffac19f64243c1969f64f841222c8fd563 --- /dev/null +++ b/eesanje/url_46_277_7.txt @@ -0,0 +1,6 @@ +ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ +ಬೆಂಗಳೂರು,ಡಿ.28- ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ಹೋರಾಟ ಮಾಡಿ ಬಂಧನವಾಗಿರುವ ಕನ್ನಡ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ. ನಾಮಫಲಕಗಳು ಕನ್ನಡದಲ್ಲಿರ ಬೇಕೆಂದು ಆಗ್ರಹಿಸಿ ಹೋರಾಟ ಮಾಡಿದ ಹಲವಾರು ಕನ್ನಡ ಕಾರ್ಯಕರ್ತರ ಬಂಧನಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಬಂಧಿತ ಕಾರ್ಯ ಕರ್ತರನ್ನು ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. +ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹಾಗೂ ಹಲವು ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿರುವ ಪ್ರವೀಣ್‍ಶೆಟ್ಟಿಯವರು ಕೂಡಲೇ ನಾರಾಯಣಗೌಡ ಹಾಗೂ ಮತ್ತಿತರ ರನ್ನು ಬಿಡುಗಡೆ ಮಾಡದಿದ್ದರೆ ಸರ್ಕಾರ ಕ್ರಾಂತಿಕಾರ ಹೋರಾಟ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ. +ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ +ಕನ್ನಡ ಹೋರಾಟಗಾರರೇನು ಲೂಟಿ, ದರೋಡೆ, ಕೊಲೆ ಮಾಡಿಲ್ಲ . ಕನ್ನಡಕ್ಕೋಸ್ಕರ ಹೋರಾಟ ಮಾಡಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯಗೊಳಿಸುವ ಕೆಲಸ ಸರ್ಕಾರದಿಂದ ಆಗಬೇಕು. ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಇರಬೇಕೆಂಬ ಕಾನೂನಿದೆ. ಅಂಗಡಿಗಳಿಗೆ ಪರವಾನಗಿ ನೀಡುವಾಗ ಸರ್ಕಾರ ಇದನ್ನು ಪಾಲಿಸಬೇಕು. ಆದರೆ ಯಾವುದೇ ಹೋಟೆಲ್, ಮಾಲ್, ಐಟಿ-ಬಿಟಿ ಕಂಪೆನಿಗಳು ಪಾಲನೆ ಮಾಡುತ್ತಿಲ್ಲ. +ಸರ್ಕಾರದ ನಿರ್ಲಕ್ಷ್ಯ ಮತ್ತು ಹೊಣೆಗೇಡಿತನದ ವಿರುದ್ಧ ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮಾಡಿದರೆ ಅಂತಹವರನ್ನು ಜೈಲಿಗಟ್ಟಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಇದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ. ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳದಿದ್ದರೆ ಶನಿವಾರ ಬೆಂಗಳೂರಿನಲ್ಲಿ ಕನ್ನಡಪರ ಹೋರಟಗಾರರ ಮಹತ್ವದ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_277_8.txt b/eesanje/url_46_277_8.txt new file mode 100644 index 0000000000000000000000000000000000000000..3f89918de94b9d9dfb0b7215b3aa253b307c6759 --- /dev/null +++ b/eesanje/url_46_277_8.txt @@ -0,0 +1,9 @@ +ಅನಧಿಕೃತ ಬಡಾವಣೆ ಕಟ್ಟಡಕ್ಕೆ ಮೊದಲ ವರ್ಷ ದುಪ್ಪಟ್ಟು ತೆರಿಗೆ +ಬೆಂಗಳೂರು, ಡಿ. 28: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯದ್ಯಂತ ಏಕರೂಪವಾಗಿ ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. +ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು. +ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ : ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. +ಕಾನೂನು ಕೈಗೆತ್ತಿಕೊಂಡರೆ ಕಣ್ಣು ಮುಚ್ಚಿಕೊಂಡಿರಲು ಸಾಧ್ಯವಿಲ್ಲ : ಡಿಸಿಎಂ +ನಿಯಮ ಸರಳೀಕರಣ: ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು. +ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದರೆ ಆಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಸಲಹೆದರು. ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. +ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದರು. +ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಬಿ ವಹಿಯಡಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು. ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್ ಮತ್ತು ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು \ No newline at end of file diff --git a/eesanje/url_46_277_9.txt b/eesanje/url_46_277_9.txt new file mode 100644 index 0000000000000000000000000000000000000000..2dd0d70b554284f3dfcf73c6cca93b605dfc21cc --- /dev/null +++ b/eesanje/url_46_277_9.txt @@ -0,0 +1,12 @@ +ರಾಹುಲ್ ಗಾಂಧಿ ಕೈಗೆ ಈ ದೇಶದ ಅಧಿಕಾರ ಸಿಗಬೇಕು : ಸಿಎಂ ಸಿದ್ದು +ಬೆಂಗಳೂರು,ಡಿ.28- ನಮ್ಮಲ್ಲಿರುವ ಭಿನ್ನಮತಗಳನ್ನು ಬದಿಗಿಟ್ಟು ರಾಹುಲ್‍ಗಾಂಧಿಯವರನ್ನು ಮುಂದಿನ ಪ್ರಧಾನಿ ಮಾಡಲು ನಾವೆಲ್ಲಾ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ 139 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜನಪರವಾಗಿ ಯೋಚಿಸುವ ರಾಹುಲ್‍ಗಾಂಧಿ ಪ್ರಧಾನಿಯಾಗಬೇಕೆ ಅಥವಾ ಸುಳ್ಳು ಹೇಳಿ ಭಾವನಾತ್ಮಕವಾಗಿ ಜನರನ್ನು ದಾರಿ ತಪ್ಪಿಸುವ ನರೇಂದ್ರ ಮೋದಿ ಪ್ರಧಾನಿಯಾಗಬೇಕೆ ಎಂದು ಪ್ರಶ್ನಿಸಿದರು. +ದೇಶದಲ್ಲಿ ಭಾರತ್ ಜೋಡೊದಂತಹ ಯಾತ್ರೆಯನ್ನು ಬೇರೆ ಯಾವ ನಾಯಕರೂ ನಡೆಸಿರಲಿಲ್ಲ. ಈಗ ಎರಡನೇ ಹಂತದಲ್ಲಿ ಭಾರತ ನ್ಯಾಯ ಯಾತ್ರೆಯನ್ನು ರಾಹುಲ್‍ಗಾಂಧಿ ಕೈಗೊಂಡಿದ್ದಾರೆ. ದೇಶದ ಎಲ್ಲಾ ಸಮಸ್ಯೆಗಳಿಗೂ ಕಾಂಗ್ರೆಸ್ ಪಕ್ಷದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ. ಅದಕ್ಕಾಗಿ ರಾಹುಲ್‍ಗಾಂಧಿ ಈ ದೇಶದ ಪ್ರಧಾನಿಯಾಗಬೇಕೆಂದು ಪ್ರತಿಪಾದಿಸಿದರು. +ಇತ್ತೀಚೆಗೆ ದೆಹಲಿಯಲ್ಲಿ ನಡೆದ ಇಂಡಿಯಾ ರಾಜಕೀಯ ಮೈತ್ರಿಕೂಟದಲ್ಲಿ ಪ್ರಧಾನಿ ಹುದ್ದೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದರು. ಅದರ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್‍ನ ಪ್ರಧಾನಿ ಅಭ್ಯರ್ಥಿ ಬಗ್ಗೆ ಸ್ಪಷ್ಟ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಹುಲ್‍ಗಾಂಧಿ ದೇಶದ ಪ್ರಧಾನಿಯಾಗಬೇಕೆಂದು ಹೇಳಿದ್ದಾರೆ. +ಜನಪರ ಕಾಳಜಿಯಿರುವ ರಾಹುಲ್‍ಗಾಂಧಿಯವರ ಕೈಗೆ ಅಧಿಕಾರ ಹೋಗಬೇಕು. ದೇಶದ ಸಂವಿಧಾನ ರಕ್ಷಣೆ, ಸಾರ್ವಭೌಮತ್ವ ಎತ್ತಿಹಿಡಿಯಲು ಸಂವಿಧಾನವನ್ನು ರಕ್ಷಿಸಲು ನಾವೆಲ್ಲ ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.ಪ್ರಧಾನಮಂತ್ರಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಸಬ್ ಕಾ ಸಾಥ್ ಎಂದರೆ ಏನು, ಅದರಂತೆ ನಡೆದುಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಸುಳ್ಳುಗಳನ್ನು ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುತ್ತಾರೆ. ಬಿಜೆಪಿಯವರ ಡೋಂಗಿತನವನ್ನು ಜನರ ಮುಂದೆ ಬಯಲು ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಕರ್ತವ್ಯ ಎಂದರು. +ಪಂಚಖಾತ್ರಿಗಳನ್ನು ಜಾರಿಗೆ ತಂದರೆ ಸರ್ಕಾರ ದಿವಾಳಿಯಾಗುತ್ತದೆ ಎಂದು 12 ವರ್ಷ ಮುಖ್ಯಮಂತ್ರಿಯಾಗಿ, 10 ವರ್ಷ ಪ್ರಧಾನಿಯಾಗಿದ್ದ ನರೇಂದ್ರ ಮೋದಿ ಹೇಳುತ್ತಿದ್ದರು. ನಾವು 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ. ಅದರ ಬಳಿಕವೂ ನಮ್ಮ ಆರ್ಥಿಕ ಸ್ಥಿತಿ ಸದೃಢವಾಗಿದೆ ಎಂದರು. ಮೃದು ಹಿಂದುತ್ವದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸಿದ್ಧಾಂತದ ಬಗ್ಗೆ ಸ್ಪಷ್ಟತೆ ಇರಬೇಕು. ಜಾತ್ಯಾತೀತತೆ, ಸಂವಿಧಾನದ ಬಗ್ಗೆ ನಂಬಿಕೆ ಇರಬೇಕು. ಹಿಂದುತ್ವ ಎಂದರೆ ಹಿಂದುತ್ವವೇ. ಮೃದು ಹಿಂದುತ್ವ, ಕಠಿಣ ಹಿಂದುತ್ವ ಎಂಬುದಿಲ್ಲ. ಹಿಂದುತ್ವ ಬೇರೆ, ಹಿಂದು ಎಂಬುದೇ ಬೇರೆ. ನಾನು ಹಿಂದೂ ಎಂದು ಹೇಳಿದರು. +ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಹೆಬ್ಬಾರ್ ಮತ್ತು ಸೋಮಶೇಖರ್ +ನಾವು ಶ್ರೀರಾಮನ ಪೂಜೆ ಮಾಡುತ್ತೇವೆ. ಅವರೊಬ್ಬರೇ ಪೂಜೆ ಮಾಡುವುದಿಲ್ಲ. ನಮ್ಮೂರಲ್ಲೆಲ್ಲಾ ರಾಮಮಂದಿರ ಕಟ್ಟಿಕೊಂಡಿದ್ದೇವೆ. ರಾಮನ ಭಜನೆ ಮಾಡುತ್ತೇವೆ. ಡಿಸೆಂಬರ್ ಕೊನೆ ವಾರದ ಧನುರ್ ಮಾಸದಲ್ಲಿ ಊರಿನಲ್ಲೆಲ್ಲಾ ರಾಮನ ಭಜನೆ ಮಾಡಿಕೊಂಡು ನಾವು ಓಡಾಡುತ್ತಿದ್ದೆವು ಎಂದು ಹೇಳಿದರು.ಆದರೆ ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬಾಳಬೇಕು. ಇದು ಕಾಂಗ್ರೆಸ್‍ನ ಸಿದ್ಧಾಂತ. ಇದಕ್ಕೆ ಬದ್ಧರಾಗಿದ್ದೇವೆ. ಇದರ ಆಧಾರದ ಮೇಲೆ ಮುನ್ನುಗ್ಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಕಾರಕ್ಕೆ ತಂದು ರಾಹುಲ್‍ಗಾಂಯವರನ್ನು ಪ್ರಧಾನಿಯನ್ನಾಗಿ ಮಾಡಲು ಪ್ರಯತ್ನಿಸೋಣ ಎಂದರು. +ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಸಂಘ ಪರಿವಾರ ಅಥವಾ ಬಿಜೆಪಿಯ ಯಾರೊಬ್ಬರೂ ಬಲಿದಾನ ಮಾಡಿಲ್ಲ. 1925 ರಲ್ಲಿ ಆರ್‍ಎಸ್‍ಎಸ್ ರಚನೆಯಾಯಿತು. 1950 ರಲ್ಲಿ ಜನಸಂಘ ಸ್ಥಾಪನೆಗೊಂಡಿತು. 1980 ರಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಿದೆ. ಸ್ವತಂತ್ರ್ಯ ಪೂರ್ವದಲ್ಲೇ ರಚನೆಯಾಗಿದ್ದ ಆರ್‍ಎಸ್‍ಎಸ್‍ನ ಒಬ್ಬನೇ ಒಬ್ಬ ವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಬಲಿದಾನವಾಗಿದ್ದನ್ನು ತೋರಿಸಲಿ ಎಂದು ಸವಾಲು ಹಾಕಿದರು. +ಕನ್ನಡ ಸಂಘಟನೆಗಳಿಗೆ ಗೃಹಸಚಿವ ಪರಮೇಶ್ವರ್ ಎಚ್ಚರಿಕೆ +ಕಾಂಗ್ರೆಸ್ ಅಕಾರಕ್ಕಾಗಿ ರಚನೆಯಾಗಿದ್ದಲ್ಲ. ಜನರ ಜೀವನ ಮಟ್ಟ ಸುಧಾರಣೆಯಾಗಿ ಅಸ್ತಿತ್ವಕ್ಕೆ ಬಂದಿತು. ಅದು ರಾಜಕೀಯ ಪಕ್ಷ ಅಲ್ಲ , ಒಂದು ಚಳವಳಿ ಮತ್ತು ಸಿದ್ಧಾಂತ. ಅದರಲ್ಲಿರುವುದೇ ನಮಗೆ ಹೆಮ್ಮೆ ಎಂದರು. ಇಂದಿನ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದವರು ರಾಜೀವ್‍ಗಾಂ. ಮೊದಲ ಪ್ರಧಾನಿ ನೆಹರು. ಆಧುನಿಕ ಭಾರತದ ಶಿಲ್ಪಿ. ಇಂದಿರಾಗಾಂ ಬಡವರ ಪರ ಕಾರ್ಯಕ್ರಮಗಳನ್ನು ರೂಪಿಸಿದರು. ವಾಜಪೇಯಿ ಅವಯಲ್ಲಿ 5 ವರ್ಷ, ಮೋದಿಯವರ ಕಾಲದಲ್ಲಿ 10 ವರ್ಷ ಆಡಳಿತ ನಡೆಸಿದ ಬಿಜೆಪಿಯವರ ಕೊಡುಗೆ ಏನು? ದೇಶದಲ್ಲಿ ಒಂದಾದರೂ ಅಣೆಕಟ್ಟೆ ನಿರ್ಮಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ಬಹುಸಂಸ್ಕøತಿಯಲ್ಲಿ ಏಕತೆಯನ್ನು ನಂಬಿಕೊಂಡಿರುವುದು ಕಾಂಗ್ರೆಸ್ ಎಂದು ಹೇಳಿದರು. +ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಆರೋಗ್ಯ ಸಚಿವರಾದ ದಿನೇಶ್‍ಗುಂಡೂರಾವ್, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಣಿ ಸತೀಶ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_278_1.txt b/eesanje/url_46_278_1.txt new file mode 100644 index 0000000000000000000000000000000000000000..573543f653b737d59b9e84b2b43fc422d77bad18 --- /dev/null +++ b/eesanje/url_46_278_1.txt @@ -0,0 +1,5 @@ +ಸಚಿವ ಮಧುಬಂಗಾರಪ್ಪ ಕಾರು ಅಪಘಾತ, ತಪ್ಪಿದ ದುರಂತ +ತುಮಕೂರು,ಡಿ.28- ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ತಾಲ್ಲೂಕಿನ ನಂದಿಹಳ್ಳಿ ಬಳಿಯ ಮೇಲ್ಸೇತುವೆಯ ಬಳಿ ತಡರಾತ್ರಿ 11 ಗಂಟೆ ಸಮಯದಲ್ಲಿ ನಡೆದಿದೆ. ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿದಂತೆ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು ಯಾರಿಗೂ ಯಾವುದೇ ಅಪಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬದಲಿಕಾರಿನ ವ್ಯವಸ್ಥೆ ಮಾಡಿಕೊಂಡು ಮಧು ಬಂಗಾರಪ್ಪ ಅವರು ಬೆಂಗಳೂರಿಗೆ ತೆರಳಿದರು. ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಸಚಿವರಿಗೆ ಭದ್ರತೆ ನೀಡಿ ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ. +ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ +ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿ ಕೆಲ ಕಾಲ ಉಂಟಾಗಿದ್ದ ಸಂಚಾರ ವ್ಯತ್ಯಯ ಸರಿಪಡಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಲಾರಿ ಗುಜರಾತ್‍ನಿಂದ ಬೆಂಗಳೂರಿಗೆ ಟೈಲ್ಸ್ ತೊಂಬಿಕೊಂಡು ಹೋಗುತ್ತಿತ್ತು.ಪ್ರಸ್ತುತ ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. \ No newline at end of file diff --git a/eesanje/url_46_278_10.txt b/eesanje/url_46_278_10.txt new file mode 100644 index 0000000000000000000000000000000000000000..8eff46db1713bc678852c0e8e18a29936345aa5a --- /dev/null +++ b/eesanje/url_46_278_10.txt @@ -0,0 +1,8 @@ +1,608 ಪಿಎಸ್‍ಐ ಹುದ್ದೆಗಳಿಗೆ ನೇಮಕಾತಿ : ಪರಮೇಶ್ವರ್ +ಕಲ್ಬುರ್ಗಿ, ಡಿ.27- ರಾಜ್ಯದಲ್ಲಿ ವಿವಿಧ ಹಂತಗಳಲ್ಲಿ ಒಟ್ಟು 1,608 ಪಿಎಸ್‍ಐ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ನೆನೆಗುದಿಗೆ ಬಿದ್ದಿರುವ 545 ಪಿಎಸ್‍ಐಗಳ ನೇಮಕಾತಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರಿನಲ್ಲೇ ಪರೀಕ್ಷೆ ನಡೆಸಲು ಸಾಧ್ಯವಿದೆ ಎಂದು ವರದಿ ನೀಡಿದೆ. ಹೀಗಾಗಿ ಈ ಬಾರಿ ರಾಜ್ಯದ ಯಾವ ಭಾಗದಲ್ಲೂ ಪರೀಕ್ಷೆಗಳಾಗುವುದಿಲ್ಲ. ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ ಎಂದರು. +545 ಹುದ್ದೆಗಳ ಪರೀಕ್ಷೆಯ ಗೊಂದಲ ಮರುಕಳಿಸಬಾರದು. ಈಗಾಗಲೇ ಸಾಕಷ್ಟು ವಿಳಂಬವಾಗಿದೆ. ಕಲ್ಬುರ್ಗಿ ಅಥವಾ ಬೇರೆ ಕಡೆ ಪರೀಕ್ಷೆ ನಡೆದು ಸಣ್ಣಪುಟ್ಟ ಗೊಂದಲಗಳಾದರೆ ಇನ್ನಷ್ಟು ವಿಳಂಬವಾಗುತ್ತದೆ. ಅದಕ್ಕಾಗಿ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ನಿಷಕ್ಷಪಾತವಾಗಿ ಪರೀಕ್ಷೆ ನಡೆಸಲು ಬೆಂಗಳೂರಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಣ್ಣಪುಟ್ಟ ತೊಂದರೆಗಳಾದರೂ ಕೂಡ ಭವಿಷ್ಯದ ದೃಷ್ಟಿಯಿಂದ ಸಹಕರಿಸುವಂತೆ ಮನವಿ ಮಾಡಿದರು. +ಎರಡನೇ ಹಂತದಲ್ಲಿ 403, ಆ ನಂತರ 660 ಪಿಎಸ್‍ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ಈ ಎರಡು ಹಂತಗಳ ನೇಮಕಾತಿಗೆ ಕಲ್ಬುರ್ಗಿ ಸೇರಿದಂತೆ ರಾಜ್ಯಾದ್ಯಂತ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಹೇಳಿದರು. ಕೋವಿಡ್ ಸಂದರ್ಭದಲ್ಲಿ 4 ಸಾವಿರ ಕೋಟಿ ರೂ.ಗಳ ಹಗರಣವಾಗಿರಬಹುದು ಎಂದು ನಾವು ತಿಳಿದುಕೊಂಡಿದ್ದೇವೆ. ಈಗ ನಮ್ಮ ಮಾಹಿತಿ ತಪ್ಪು ಎಂದು ಸ್ಪಷ್ಟವಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು 4 ಸಾವಿರ ಕೋಟಿ ಅಲ್ಲ, 40 ಸಾವಿರ ಕೋಟಿ ಎಂದು ಹೇಳಿದ್ದಾರೆ ಎಂದರು. +ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯ ಮನೆಯಲ್ಲಿ ವಾದ್ರಾ ವಾಸ್ತವ್ಯ +ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖಾ ಸಮಿತಿ ಕಾನೂನು ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ. ಯಾರಿಗೆ ನೋಟಿಸ್ ನೀಡಬೇಕು, ಯಾವ ರೀತಿ ವಿಚಾರಣೆ ನಡೆಸಬೇಕೆಂಬುದನ್ನು ಸಮಿತಿ ತೀರ್ಮಾನಿಸುತ್ತದೆ ಎಂದು ಹೇಳಿದರು. +ಕರ್ನಾಟಕದಲ್ಲಿ ಕನ್ನಡ ಭಾಷೆಗಾಗಿ ಹೋರಾಟ ನಡೆಸುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ನಗರ ಪ್ರದೇಶಗಳಲ್ಲಿ ಬಹಳಷ್ಟು ಮಂದಿ ಇರುತ್ತಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಿಂದ ಬರುವವರ ಸಂಖ್ಯೆ ಹೆಚ್ಚಿರುತ್ತದೆ. ಅವರಿಗೆ ಮಾಹಿತಿ ನೀಡುವ ದೃಷ್ಟಿಯಿಂದ ಇಂಗ್ಲಿಷ್ ಭಾಷೆಯಲ್ಲೂ ನಾಮಫಲಕ ಇರಬೇಕೆಂದು ಹೇಳಲಾಗುತ್ತದೆ. ಕನ್ನಡ ಭಾಷೆಗೆ ಆದ್ಯತೆ ನೀಡುವುದು ಒಳ್ಳೆಯದು ಎಂದರು. +ಕನ್ನಡಪರ ಸಂಘಟನೆಗಳ ಹೋರಾಟ ನ್ಯಾಯಯುತವಾಗಿದೆ. ಅನ್ಯರಾಜ್ಯಕ್ಕೆ ಹೋದಾಗ ಸ್ಥಳೀಯ ಭಾಷೆಗಳಲ್ಲಿ ಫಲಕಗಳಿದ್ದರೆ ಹೊರಗಿನವರಿಗೆ ಗೊತ್ತಾಗುವುದಿಲ್ಲ. ಆಗ ಮಾಹಿತಿ ತಿಳಿದುಕೊಳ್ಳಲು ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಇಂಗ್ಲಿಷ್ ಬಳಕೆಯೂ ನಿಯಮಾನುಸಾರ ಇರಬೇಕಾಗುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_46_278_11.txt b/eesanje/url_46_278_11.txt new file mode 100644 index 0000000000000000000000000000000000000000..74e97870fdb478ce74b20ac922c322c48f78eaab --- /dev/null +++ b/eesanje/url_46_278_11.txt @@ -0,0 +1,15 @@ +ರಾಜ್ಯದಲ್ಲಿ ತೀವ್ರ ಬರ, ಮೇವು ಮತ್ತು ನೀರಿಗೆ ಸಂಕಷ್ಟ +ಬೆಂಗಳೂರು, ಡಿ.27- ಹಿಂದೆಂದೂ ಕಾಣದ ಭೀಕರ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳಲ್ಲಿ ನೀರಿನ ಒಳಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಪಟ್ಟಣಗಳು ಮತ್ತು ನಗರಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದು. +ಎದುರಾಗಲಿರುವ ಬಿಕ್ಕಟ್ಟಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಜ್ಞರು, ನೀರನ್ನು ವಿವೇಚನಾಯುಕ್ತವಾಗಿ ಬಳಸಲು ಜನರಿಗೆ ಸಲಹೆ ಮಾಡಿದ್ದಾರೆ. ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಜಲಾಶಯಗಳ ನೀರನ್ನು ಕುಡಿಯಲು ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ ಬಳಸಲು ನಿರ್ಧರಿಸಿದೆ. ಇದರಿಂದಾಗಿ ಈಗಾಗಲೇ ಮುಂಗಾರು ವೈಫಲ್ಯದಿಂದ ಸಂಕಷ್ಟದಲ್ಲಿರುವ ರೈತರಿಗೆ ನೀರಾವರಿಗೆ ಹೆಚ್ಚಿನ ನೀರು ಸಿಗದಂತಾಗುತ್ತಿದೆ. +ಕೆಎಸ್‍ಎನ್‍ಡಿಎಂಸಿ ಪ್ರಕಾರ, 895 ಟಿಎಂಸಿ ಅಡಿ ನೀರನ್ನು ಹಿಡಿದಿಟ್ಟುಕೊಳ್ಳಬಲ್ಲ ಪ್ರಮುಖ ಜಲಾಶಯಗಳಲ್ಲಿ ಈಗ ಕೇವಲ 394 ಟಿಎಂಸಿ ಅಡಿ ನೀರು ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯಗಳಲ್ಲಿ 668 ಟಿಎಂಸಿ ಅಡಿ ನೀರಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ಒಟ್ಟು ಸಾಮಥ್ರ್ಯ 114 ಟಿಎಂಸಿ ಅಡಿಯಷ್ಟಿದ್ದರೆ, ಇಲ್ಲಿಯವರೆಗೆ ಕೇವಲ 52 ಟಿಎಂಸಿ ಅಡಿ ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ 83 ಟಿಎಂಸಿ ಅಡಿ ನೀರು ಇತ್ತು. +ಬೇಸಿಗೆಯಲ್ಲಿ ಕುಡಿಯುವ ನೀರಿನ ಬಿಕ್ಕಟ್ಟನ್ನು ನಿವಾರಿಸುವುದು ತನ್ನ ಆದ್ಯತೆಯಾಗಿದೆ ಎಂದು ಸರ್ಕಾರವು ಹೇಳುತ್ತಿದ್ದರೂ, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ರಾಜ್ಯವು ನೀರಿನ ಕೊರತೆಯನ್ನು ಎದುರಿಸಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ. +ದೀದಿ ಸರ್ಕಾರಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು : ಅಮಿತ್ ಶಾ +ಕುಡಿಯುವ ಮತ್ತು ನೀರಾವರಿ ಉದ್ದೇಶಗಳಿಗಾಗಿ ಅಂತರ್ಜಲವನ್ನು ಅವಲಂಬಿಸಿರುವ ಸ್ಥಳಗಳ ಮೇಲೂ ಪರಿಣಾಮ ಬೀರಿದೆ. ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿಗಳ ಪ್ರಕಾರ, ಮಳೆ ಕೊರತೆಯಿಂದಾಗಿ ರೈತರು ಬೋರ್ವೆಲ್‍ಗಳನ್ನು ಕೊರೆಯುವ ಮೂಲಕ ಅಂತರ್ಜಲವನ್ನು ಅತಿಯಾಗಿ ಬಳಸಿಕೊಳ್ಳುತ್ತಿರುವುದರ ಜೊತೆಗೆ ಹಲವು ಸ್ಥಳಗಳಲ್ಲಿ, ಬೋರ್ವೆಲ್‍ಗಳು ಸಹ ಬತ್ತಿರುವುದು ಪರಿಸ್ಥಿತಿಯನ್ನು ಆತಂಕಕ್ಕೆ ನೂಕಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲದ ಮಟ್ಟ ಭಾರಿ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 1112 ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ಎಲ್ಲಾ ಗ್ರಾಮಗಳಿಗೂ ಟ್ಯಾಂಕರ್ ನೀರು ಪೂರೈಸುವ ವ್ಯವಸ್ಥೆಯನ್ನು ಮಾಡಲಾಗಿದ್ದರೂ, ಪರಿಸ್ಥಿತಿ ಮಾತ್ರ ಸುಧಾರಿಸಿಲ್ಲ. +ರಾಜ್ಯದ 31 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ಎದುರಾಗಿದೆ. ಮೇ ಆರಂಭದ ಹೊತ್ತಿಗೆ ಇದು ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದ್ದು, ಜೂನ್ ಮೊದಲ ವಾರದಲ್ಲಿ ಸುರಿಯುವ ಮುಂಗಾರು ಮಳೆವರೆಗೆ ಪರಿಸ್ಥಿತಿಯನ್ನು ಜಿಲ್ಲಾಡಳಿತಗಳು ನಿರ್ವಹಿಸಬೇಕಿದೆ. +ಕಳೆದ ವರ್ಷಕ್ಕಿಂತಲೂ ಈ ಬಾರಿ ಕುಡಿಯುವ ನೀರಿನ ಬೇಡಿಕೆ ಬಿಗಡಾಯಿಸಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಿಂದ ಪ್ರತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ 4ರಿಂದ 5 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಖಾಸಗಿ ಟ್ಯಾಂಕರ್‍ಗಳ ಮೂಲಕ ನೀರು ಪೂರೈಕೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಳೆದ ಎರಡು ದಿನಗಳಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಈ ಬಗ್ಗೆ ಸತತ ಸಭೆ ನಡೆಸಿ ಪರಿಹಾರ ಮಾರ್ಗಸೂಚಿಗಳನ್ನು ಜಿಲ್ಲೆಗಳಿಗೆ ರವಾನಿಸಿದೆ. +ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಗೊಳಿಸಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಖಾಸಗಿ ಟ್ಯಾಂಕರ್ ಮೂಲಕ ಎಷ್ಟು ಸಾಧ್ಯವೋ ಅಷ್ಟು ನೀರಿನ ಪೂರೈಕೆ ಮಾಡಬೇಕು. ನೀರಿನ ಲಭ್ಯತೆ ಆಧರಿಸಿ ಖಾಸಗಿ ಬೋರ್‍ವೆಲ್‍ಗಳನ್ನು ಬಳಕೆ ಮಾಡಬೇಕು. ಕೊನೆಯ ಹಂತದಲ್ಲಿ ಮಾತ್ರ ಹೊಸ ಬೋರ್ ವೆಲ್ ಕೊರೆಯುವುದಕ್ಕೆ ಆದ್ಯತೆ ನೀಡಬೇಕೆಂದು ಸೂಚಿಸಲಾಗಿದೆ. ಇದುವರೆಗೆ 1112 ಹಳ್ಳಿಗಳಲ್ಲಿ ಕುಡಿಯುವುದಕ್ಕೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. +ಹೊಸ ಬೋರ್‍ವೆಲ್‍ಗಳಿಗೆ ಒತ್ತಡ:ಗ್ರಾಮೀಣ ಪ್ರದೇಶದಲ್ಲಿ ಹೊಸ ಬೋರ್‍ವೆಲ್ ಕೊರೆಯುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜನಪ್ರತಿನಿಗಳು ಸರ್ಕಾರದ ಮೇಲೆ ವ್ಯಾಪಕ ಒತ್ತಡ ಹೇರುತ್ತಿದ್ದು, ಅಧಿಕಾರಿಗಳು ಇಕ್ಕಟ್ಟಿಗೆ ಸಿಲುಕಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಬೋರ್‍ವೆಲ್ ಶಾಶ್ವತ ಪರಿಹಾರವಲ್ಲ. ಇದರಿಂದ ಅಂತರ್ಜಲದ ತೀವ್ರ ಕುಸಿತವಾಗುತ್ತದೆ ಎಂಬ ಕಾರಣಕ್ಕಾಗಿ ಹೊಸ ಕೊಳವೆ ಬಾವಿಗಳನ್ನು ಕೊರೆಯುವುದಕ್ಕೆ ರಾಜ್ಯ ಸರ್ಕಾರ ಕೆಲ ನಿರ್ಬಂಧ ವಿಧಿಸಿದೆ. ದಿನೇ ದಿನೆ ಅಂತರ್ಜಲದ ಮಟ್ಟ ಕುಸಿಯುತ್ತಿದೆ. 1,200ರಿಂದ 1,500 ಅಡಿಗಳ ವರೆಗೆ ಬೋರ್‍ವೆಲ್ ಕೊರೆಸಿದರೂ ನೀರು ಸಿಗದ ಸ್ಥಿತಿ ನಿರ್ಮಾಣವಾಗಿದೆ. +ಮಂಜಿನ ನಗರಿಯಾದ ದೆಹಲಿ, ಆರೆಂಜ್ ಅಲರ್ಟ್ ಘೋಷಣೆ +ಮೇವು, ನೀರಿನ ಸಮಸ್ಯೆ: ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯ ಜೊತೆ ಮೇವಿನ ಸಮಸ್ಯೆಯೂ ಕಾಡುತ್ತಿದೆ. ದಿನನಿತ್ಯ ರೈತರು ಸಾಕಿರುವ ಪ್ರಾಣಿಗಳಿಗೆ ಮೇವು ಎಷ್ಟು ಮುಖ್ಯವೋ ಅಷ್ಟೇ ನೀರು ಸಹ ಮುಖ್ಯವಾಗಿರುತ್ತದೆ. ಮೇವು ತಿಂದ ನಂತರ ಕೂಡಲೇ ಜಾನುವಾರುಗಳಿಗೆ ನೀರುಣಿಸಬೇಕು. ಎಲ್ಲಿಯೂ ನೀರು ಸಿಗದ ಕಾರಣ ದನಕರುಗಳನ್ನು ಬಯಲಿಗೆ ಕರೆದುಕೊಂಡು ಬರುತ್ತಿಲ್ಲ. ಬೇಸಿಗೆಯಲ್ಲಿ ಮೇವಿನ ಕೊರತೆ ಹೆಚ್ಚಾಗಿದೆ. ದಿನೇ ದಿನೆ ಬಿಸಿಲಿನ ತಾಪ ಹೆಚ್ಚಳದಿಂದ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. +ಮೇವಿಗಾಗಿ ಹರಸಾಹಸ:ಈ ಬಾರಿ ಭೀಕರ ಬಲಗಾಲದಿಂದ ತಮ್ಮ ಜಾನುವಾರುಗಳಿಗೆ ಮೇವು ಇಲ್ಲದ ಕಾರಣ ರೈತರು ಕಂಗಾಲಾ ಗಿದ್ದಾರೆ. ಗ್ರಾಮೀಣ ಭಾಗದಲ್ಲಿ ನೀರು ಇರುವ ರೈತರ ತೋಟಗಳಲ್ಲಿ ಹಸಿ ಮೇವು ಬೆಳೆದುಕೊಳ್ಳುತ್ತಾರೆ. +ಇಲ್ಲದಿದ್ದರೆ ರೈತರು ಒಣ ಮೇವಿನ ಮೊರೆ ಹೋಗುತ್ತಾರೆ. ಬರಗಾಲದಲ್ಲೂ ಒಣ ರಾಗಿ ಹುಲ್ಲು ಒಂದು ಹೊರೆಗೆ ಸರಾಸರಿ 110 ರಿಂದ 150 ರೂ. ವರೆಗೆ ನಿಗದಿಯಾಗಿದೆ. ಒಂದು ಕಟ್ಟು ಒಣ ಹುಲ್ಲು ಒಂದು ದಿನಕ್ಕೆ ಸಕಾಗುವುದಿಲ್ಲ. ರೈತರು ಪ್ರತಿನಿತ್ಯ ಸುಮಾರು 5-6 ಕಿ.ಮೀ. ದೂರದ ಬೇರೆ ಬೇರೆ ಗ್ರಾಮಗಳಲ್ಲಿ ಬೆಳೆದಿರುವ ಜೋಳದ ಕಡ್ಡಿ, ಒಣ ರಾಗಿ ಹುಲ್ಲು ಮತ್ತಿತರ ಮೇವು ತರಲು ಹರಸಾಹಸ ಪಡುತ್ತಿದ್ದಾರೆ. \ No newline at end of file diff --git a/eesanje/url_46_278_12.txt b/eesanje/url_46_278_12.txt new file mode 100644 index 0000000000000000000000000000000000000000..c8de393f9bedab4251e8965740be04e7c259895e --- /dev/null +++ b/eesanje/url_46_278_12.txt @@ -0,0 +1,8 @@ +ಕರ್ನಾಟಕವನ್ನು ಬಿಜೆಪಿ ಭದ್ರಕೋಟೆಯನ್ನಾಗಿಸಲು ವಿಜಯೇಂದ್ರ ಪಣ +ಬೆಂಗಳೂರು, ಡಿ.27- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕ ಬಿಜೆಪಿಗೆ ಭದ್ರಕೋಟೆ ಮಾತ್ರವಲ್ಲದೆ ಸುಭದ್ರ ಕೋಟೆ ಎಂಬುದನ್ನು ಸಾಬೀತು ಮಾಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಪಕ್ಷದ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಯಾವಾಗಲೂ ಭದ್ರಕೋಟೆ, ಇದನ್ನು ಈ ಬಾರಿ ಸುಭದ್ರ ಕೋಟೆಯನ್ನಾಗಿ ಪರಿವರ್ತನೆ ಮಾಡುತ್ತೇವೆ ಎನ್ನುವ ಮೂಲಕ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. +ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದೇವೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದರೆ ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. +ನಮ್ಮ ಸೌಭಾಗ್ಯ ಎಂದರೆ ಮೂರನೇ ಬಾರಿಗೆ ಮೋದಿಯವರು ಪ್ರಧಾನಿಯಾಗುವ ಸಂದರ್ಭದಲ್ಲಿ ನಮಗೆ ಜವಾಬ್ದಾರಿ ಸಿಕ್ಕಿದೆ. ಅಂತಹ ಕಾಲಘಟ್ಟದಲ್ಲಿ ನಾವು ಅಧಿಕಾರ ತೆಗೆದುಕೊಂಡಿದ್ದೇವೆ. ಪಕ್ಷ ಯಾವ ಸೂಚನೆಯನ್ನು ನೀಡುತ್ತದೆಯೋ ಅದರಂತೆ ಕಾರ್ಯತಂತ್ರ ರೂಪಿಸುತ್ತೇವೆ ಎಂದರು. +ದೀದಿ ಸರ್ಕಾರಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು : ಅಮಿತ್ ಶಾ +ಪಕ್ಷದ ವರಿಷ್ಠರು ನಮ್ಮ ಮೇಲೆ ಹೆಚ್ಚಿನ ವಿಶ್ವಾಸವಿಟ್ಟುಕೊಂಡು ಜವಾಬ್ದಾರಿಯನ್ನು ನೀಡಿದ್ದೇವೆ. ಯಾವ ಕಾಲಘಟ್ಟದಲ್ಲಿ ಹೊಣೆಗಾರಿಕೆ ಸಿಕ್ಕಿದೆ ಎಂಬುದು ಬಹಳ ಮುಖ್ಯ. ಅದನ್ನು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಕನಸನ್ನು ನನಸು ಮಾಡುವ ಗುರಿ ತಮ್ಮ ಮುಂದೆ ಇದೆ ಎಂದು ಹೇಳಿದರು.ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕೆಂಬುದು ಶತಕೋಟಿ ಭಾರತೀಯರ ಕನಸಾಗಿತ್ತು. +ಅದು ಇಂದು ನನಸಾಗುವ ಹಂತಕ್ಕೆ ಬಂದಿದೆ. ಮೋದಿಯವರ ಕಾಲಘಟ್ಟದಲ್ಲಿ ರಾಮಮಂದಿರ ಲೋಕಾರ್ಪಣೆಯಾಗುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಇಂತಹ ಕಾಲಘಟ್ಟದಲ್ಲಿ ನಾನು ಪಕ್ಷದ ಸಾರಥ್ಯ ವಹಿಸಿಕೊಂಡಿರುವುದು ಪೂರ್ವಜನ್ಮದ ಪುಣ್ಯ. ಕಾರ್ಯಕರ್ತರ ಪರಿಶ್ರಮದಿಂದ ಈ ಬಾರಿ ನಾವು ಹೆಚ್ಚಿನ ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎಂದು ವಿಜಯೇಂದ್ರ ದೃಢ ವಿಶ್ವಾಸ ವ್ಯಕ್ತಪಡಿಸಿದರು. +ಇದಕ್ಕೂ ಮುನ್ನ ಪಕ್ಷದ ಕಚೇರಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ನೂತನ ಪದಾಧಿಕಾರಿಗಳ ಕಚೇರಿಯಲ್ಲಿ ಆರತಿ ಎತ್ತಿ ಬರಮಾಡಿಕೊಳ್ಳಲಾಯಿತು. \ No newline at end of file diff --git a/eesanje/url_46_278_2.txt b/eesanje/url_46_278_2.txt new file mode 100644 index 0000000000000000000000000000000000000000..35fb1f2f9a83b38bc47de32dbf9b197ec7413fd7 --- /dev/null +++ b/eesanje/url_46_278_2.txt @@ -0,0 +1,14 @@ +ಪದೇ ಪದೇ ಪಕ್ಷಕ್ಕೆಮುಜುಗರ, ಯತ್ನಾಳ್ ಅಮಾನತಿಗೆ ಸಿದ್ಧತೆ +ಬೆಂಗಳೂರು,ಡಿ.28- ಸ್ವಪಕ್ಷೀಯರ ವಿರುದ್ಧವೇ ಪದೇಪದೇ ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಮುಜುಗರ ಸೃಷ್ಟಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಅಮಾನತುಪಡಿಸುವ ಸಾಧ್ಯತೆಯಿದೆ. ನಿರಂತರವಾಗಿ ಪಕ್ಷದ ವಿರುದ್ಧ ಟೀಕೆ ಮಾಡುತ್ತಾ ವಿರೋಧ ಪಕ್ಷದವರಿಗೆ ಅಸ್ತ್ರ ನೀಡುತ್ತಿರುವ ಯತ್ನಾಳ್ ಹೇಳಿಕೆಯನ್ನು ರಾಜ್ಯ ಬಿಜೆಪಿ ಘಟಕ ಗಂಭೀರವಾಗಿ ಪರಿಗಣಿಸಿ ಅವರನ್ನು ಪಕ್ಷದಿಂದ ಅಮಾನತು ಮಾಡಲು ಕೇಂದ್ರ ಬಿಜೆಪಿ ನಾಯಕರಿಗೆ ಶಿಫಾರಸ್ಸು ಮಾಡಲು ಮುಂದಾಗಿದೆ. +ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬರುವ ದಿನಗಳಲ್ಲಿ ಬೇರೆಯವರು ಕೂಡ ಇದೇ ಹಾದಿ ಹಿಡಿಯುವ ಸಾಧ್ಯತೆಯಿದೆ ಎಂಬುದನ್ನು ಮನಗಂಡು ಪಕ್ಷದ ಶಿಸ್ತು ಉಲ್ಲಂಘಿಸಿದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ಯತ್ನಾಳ್ ಮೂಲಕವೇ ನೀಡಲಾಗುತ್ತದೆ. +ಅಮಾನತು ಮಾಡುವ ಮುನ್ನ ಕಾರಣ ಕೇಳಿ ನೋಟಿಸ್ ನೀಡಲಾಗುತ್ತದೆ. ಒಂದು ವೇಳೆ ನೋಟಿಸ್‍ಗೆ ಸಮರ್ಪಕ ಉತ್ತರ ಬಾರದಿದ್ದರೆ ಪಕ್ಷದಿಂದ ಅಮಾನತು ಮಾಡಲು ನಿರ್ಣಯವನ್ನು ರಾಜ್ಯಘಟಕ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. ಯತ್ನಾಳ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ, ನಾಳೆ ಇತರರು ಕೂಡ ಇದೇ ಹಾದಿಯನ್ನು ತುಳಿಯುವ ಸಾಧ್ಯತೆ ಇರುವುದರಿಂದ ಭಿನ್ನಮತ ಉಲ್ಬಣಗೊಳ್ಳುವ ಮೊದಲೇ ಕಡಿವಾಣ ಹಾಕಲು ಮುಂದಾಗಿದೆ. +ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯತ್ ಚುನಾವಣೆ, ತಾಲೂಕು ಪಂಚಾಯತ್ ಚುನಾವಣೆಯನ್ನು ಎದುರಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಪಕ್ಷವನ್ನು ಸದೃಢಗೊಳಿಸುವತ್ತ ಬಿಜೆಪಿ ಹೆಜ್ಜೆ ಹಾಕುತ್ತಿದ್ದು, ಯತ್ನಾಳ್ ಹೇಳಿಕೆ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟುಮಾಡಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಡಗಳು ಹೆಚ್ಚಾಗುತ್ತಿವೆ. +ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ : 12 ಮಂದಿ ಸಜೀವ ದಹನ +ಆಕಾಂಕ್ಷಿಯಾಗಿದ್ದ ಯತ್ನಾಳ್ :ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಕೇಂದ್ರ ಸಚಿವರು ಹಾಗೂ ಹಾಲಿ ಶಾಸಕರು. ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇರ ಹಾಗೂ ತೀಕ್ಷ್ಣ ನಡೆ ನುಡಿಗಳು ಇದೀಗ ಬಿಜೆಪಿ ನಾಯಕರಿಗೇ ತಲೆನೋವಾಗಿ ಪರಿಣಮಿಸಿದ್ದಾರೆ. ಬಿಜೆಪಿಯ ಶಿಸ್ತು ಚೌಕಟ್ಟನ್ನು ಮೀರಿ ಪದೇ ಪದೇ ನೀಡುತ್ತಿರುವ ಹೇಳಿಕೆಗಳು, ಕಠಿಣ ಪದಗಳ ಟೀಕೆ ಹಾಗೂ ಆರೋಪಗಳು ಕಮಲ ನಾಯಕರಿಗೆ ಇರುಸು ಮುರುಸು ತಂದೊಡ್ಡುತ್ತಿದೆ. ಕ್ರಿಟಿಕಲ್ ಇನ್‍ಸೈಡರ್ ಯತ್ನಾಳ್ ನಿಭಾಯಿಸುವುದು ಕೂಡ ಕಮಲ ನಾಯಕರಿಗೆ ಸವಾಲಿನ ಸಂಗತಿಯಾಗಿದೆ. +ಹಿಂದುತ್ವವಾದಿಯಾಗಿರುವ ಯತ್ನಾಳ್ ತಮ್ಮ ತೀಕ್ಷ್ಣ ಪದಗಳ ಬಳಕೆ ಹಾಗೂ ನೇರ ಮಾತುಗಳಿಂದಲೇ ಪ್ರಸಿದ್ಧಿ ಗಳಿಸಿದವರು. ವಿರೋಧ ಪಕ್ಷಗಳ ನಾಯಕರ ವಿರುದ್ಧ ಮಾತ್ರವಲ್ಲ ಸಮಯ ಸಂದರ್ಭ ಬಂದಾಗ ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿಡಿದು ನಿಂತವರು. ಬಿಜೆಪಿ ಪಕ್ಷದ ಶಿಸ್ತು ಚೌಕಟ್ಟನನ್ನು ಮೀರಲು ಇತರ ನಾಯಕರು ಹಿಂದು ಮುಂದು ನೋಡಿದರೆ, ಯತ್ನಾಳ್ ಮಾತ್ರ ಅದ್ಯಾವುದಕ್ಕೂ ಕ್ಯಾರೇ ಅನ್ನದೆ ತಮಗೆ ಹೇಳಬೇಕಾಗಿರುವುದನ್ನು ಹೇಳುವ ವ್ಯಕ್ತಿತ್ವ ಹೊಂದಿರುವವರು. ಆದರೆ ಇವರ ಈ ನಡವಳಿಕೆ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿದೆ. +ಒಂದು ಕಾಲದಲ್ಲಿ ಬಿಎಸ್‍ವೈ ಪರವಾಗಿ ಸದಾ ಧ್ವನಿ ಎತ್ತುತ್ತಿದ್ದ ಯತ್ನಾಳ್ ಹೈಕಮಾಂಡನ್ನು ಎದುರು ಹಾಕಿಕೊಂಡಿದ್ದರು. ಮಳೆ ಹಾನಿ ಪರಿಹಾರ ವಿಳಂಬ ವಿಚಾರವಾಗಿ ಬಿಎಸ್‍ವೈ ಪರವಾಗಿ ಕೇಂದ್ರದ ವಿರುದ್ಧವೇ ಮಾತನಾಡಿದ್ದರು. ಆದರೆ ಇದ್ದಕ್ಕಿದ್ದಂತೆ ತಮ್ಮ ವರಸೆಯನ್ನು ಬದಲಾವಣೆ ಮಾಡಿಕೊಂಡ ಯತ್ನಾಳ್ ಮಾಜಿ ಸಿಎಂ ಬಿಎಸ್‍ವೈ ವಿರುದ್ಧ ಮಾತನಾಡಲು ಆರಂಭಿಸಿದರು. +ಬಿಎಸ್‍ವೈ ಸಂಪುಟದಲ್ಲಿ ಯತ್ನಾಳ್‍ಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿತ್ತು. ಇದೇ ಸಂದರ್ಭದಲ್ಲಿ ಯತ್ನಾಳ್ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದರು. ಅದರಲ್ಲೂ ಬಿಎಸ್‍ವೈ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು. +ಆನ್‍ಲೈನ್ ವಂಚನೆ ಸಂಸ್ಥೆಗಳ 278 ಕೋಟಿ ರೂ. ಆಸ್ತಿ ಜಪ್ತಿ +ಯಾರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು. ಅತಿ ಶೀಘ್ರದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸ ಇದೆ ಎಂಬ ಹೇಳಿಕೆ ನೀಡುವ ಮೂಲಕ ಅಂದಿನ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದರು. +ಬಿಎಸ್‍ವೈ ವಿರುದ್ಧ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಸರಣಿ ಭ್ರಷ್ಟಾಚಾರದ ಆರೋಪ ಮಾಡಿದ್ದ ಯತ್ನಾಳ್‍ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ನೋಟಿಸ್‍ಗೆ ಯತ್ನಾಳ್ ಉತ್ತರವನ್ನೂ ನೀಡಿದ್ದರು. ಆದರೆ ನೋಟಿಸ್ ನೀಡಿದ ಬಳಿಕವೂ ಅವರ ವಾಗ್ದಾಳಿ ಮುಂದುವರಿದಿತ್ತು. ಅಷ್ಟೇ ಯಾಕೆ ಬಿಎಸ್‍ವೈ ರಾಜೀನಾಮೆಯ ಬಳಿಕಯೂ ಅವರ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಯತ್ನಾಳ್ ನಿರಂತರ ಆರೋಪ ಮುಂದುವರಿಸಿದ್ದರು. +ಪಕ್ಷಕ್ಕೆ ಪದೇ ಪದೇ ಮುಜುಗರ :ಶಾಸಕ ಯತ್ನಾಳ್ ನಡೆ ಬಿಜೆಪಿ ಪಕ್ಷಕ್ಕೆ ಪದೇ ಪದೇ ಮುಜುಗರ ಸೃಷ್ಟಿ ಮಾಡುತ್ತಿದೆ. ಚುನಾವಣಾ ಸಂದರ್ಭದಲ್ಲಿ ಯತ್ನಾಳ್ ಸ್ವಪಕ್ಷದ ವಿರುದ್ಧವೇ ಗುಡುಗುತ್ತಿರುವುದು ಸಹಜವಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತಿದೆ. ರಾಜ್ಯ ಮುಖಂಡರ ಮಾತಿಗೆ ಬಗ್ಗದ ಯತ್ನಾಳ್ ಅವರಿಗೆ ಕೇಂದ್ರದ ಮೂಲಕ ಬಿಸಿ ಮುಟ್ಟಿಸುವ ಪ್ರಯತ್ನವನ್ನು ರಾಜ್ಯ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಆದರೆ ಇದರಲ್ಲಿ ಯಶಸ್ಸು ಕಾಣುತ್ತಾರಾ ಎಂಬುದು ಸದ್ಯದ ಕುತೂಹಲ. \ No newline at end of file diff --git a/eesanje/url_46_278_3.txt b/eesanje/url_46_278_3.txt new file mode 100644 index 0000000000000000000000000000000000000000..50eb473d8878650df5d3373f3d6a27c3bd3d9431 --- /dev/null +++ b/eesanje/url_46_278_3.txt @@ -0,0 +1,8 @@ +ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ +ನವದೆಹಲಿ,ಡಿ.28- ಉತ್ತರ ಭಾರತದಾದ್ಯಂತ ದಟ್ಟವಾದ ಮಂಜು ಕವಿದಿರುವುದರಿಂದ ಇದುವರೆಗೂ 134 ವಿಮಾನ ಮತ್ತು 22 ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ. ದೆಹಲಿ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್‍ನಲ್ಲಿ ಡಿಸೆಂಬರ್ 31 ರವರೆಗೆ ದಟ್ಟವಾದ ಮಂಜು ಕವಿದಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿತ್ತು. +ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್‍ನಲ್ಲಿ ತೀವ್ರವಾದ ಮಂಜಿನ ನಡುವೆ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿರುವುದು ಕಂಡುಬಂದಿತು. ಸುಮಾರು 134 ವಿಮಾನಗಳು, ಆಗಮನ ಮತ್ತು ನಿರ್ಗಮನಗಳೆರಡೂ (ದೇಶೀಯ ಮತ್ತು ಅಂತರರಾಷ್ಟ್ರೀಯ) ವಿಳಂಬವಾಗಿತ್ತು. +ಮೂವತ್ತೈದು 35 ಅಂತರಾಷ್ಟ್ರೀಯ ವಿಮಾನಗಳ ನಿರ್ಗಮನ ಮತ್ತು 28 ಅಂತರಾಷ್ಟ್ರೀಯ ಆಗಮನಗಳು ವಿಮಾನ ನಿಲ್ದಾಣದಲ್ಲಿ ವಿಳಂಬವಾಯಿತು. ಮತ್ತೊಂದೆಡೆ, 43 ದೇಶೀಯ ನಿರ್ಗಮನಗಳು ಮತ್ತು 28 ದೇಶೀಯ ಆಗಮನಗಳು ತಡವಾಗಿವೆ. ಕಡಿಮೆ ಗೋಚರತೆಯ ನಡುವೆ ಹೊಸ ದೆಹಲಿ ರೈಲು ನಿಲ್ದಾಣದಲ್ಲಿ 22 ರೈಲುಗಳು ಹಲವಾರು ಗಂಟೆಗಳ ಕಾಲ ವಿಳಂಬಗೊಂಡವು. +ಮುಂಬರುವ ಚುನಾವಣೆಯಲ್ಲಿ ಮೋದಿ ಯಶಸ್ಸಿಗೆ ಹಾರೈಸಿದ ಪುಟಿನ್ +ಬೆಳಗ್ಗೆ 5.30ಕ್ಕೆ ದೆಹಲಿಯ ಸಫ್ದರ್‍ಜಂಗ್ ವೀಕ್ಷಣಾಲಯದಲ್ಲಿ ಗೋಚರತೆ 50 ಮೀಟರ್‍ಗೆ ಇಳಿದರೆ, ದೆಹಲಿ ವಿಮಾನ ನಿಲ್ದಾಣದ ಬಳಿಯಿರುವ ಪಾಲಂ 25 ಮೀಟರ್‍ಗಳಷ್ಟು ಗೋಚರತೆಯನ್ನು ವರದಿ ಮಾಡಿದೆ. ಪಂಜಾಬ್, ಹರಿಯಾಣ, ಮಧ್ಯಪ್ರದೇಶ ಮತ್ತು ಯುಪಿಯಲ್ಲಿ ಗೋಚರತೆ 50 ರಿಂದ 25 ಮೀಟರ್‍ಗಳಷ್ಟಿತ್ತು.ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದ ಕೆಲವು ಪಾಕೆಟ್‍ಗಳಲ್ಲಿ ಮತ್ತು ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಪಾಕೆಟ್‍ಗಳಲ್ಲಿ ದಟ್ಟವಾದ ಮಂಜು ವರದಿಯಾಗಿದೆ. +ದೆಹಲಿಯು ಇಂದು ಬೆಳಿಗ್ಗೆ ಕೆಲವು ಪ್ರದೇಶಗಳಲ್ಲಿ ಸುಧಾರಿತ ಗೋಚರತೆಯನ್ನು ಕಂಡರೂ, ಎನ್‍ಸಿಆರ್ ಪ್ರದೇಶದಲ್ಲಿ ಮಂಜಿನ ವಾತಾವರಣವು ಚಾಲ್ತಿಯಲ್ಲಿದೆ. ಉತ್ತರ ಭಾರತದಾದ್ಯಂತ ಕೊರೆಯುವ ಚಳಿ ಮುಂದುವರಿದಿರುವ ಕಾರಣ ಯುಪಿಯ ಹಲವು ನಗರಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರದ ರಾಜ್ಯಗಳಲ್ಲಿ ಹೊಸ ವರ್ಷದ ಮುನ್ನಾದಿನದವರೆಗೆ ತಡರಾತ್ರಿ ಮತ್ತು ಬೆಳಗಿನ ಗಂಟೆಗಳವರೆಗೆ ಅತ್ಯಂತ ದಟ್ಟವಾದ ಮಂಜು ಎಂದು ಮೆಟ್ ಮುನ್ಸೂಚನೆ ನೀಡಿದೆ. +ಮಂಜು ಹೆಚ್ಚು ದಟ್ಟವಾಗಿರುತ್ತದೆ ಮತ್ತು ಉತ್ತರ ಪ್ರದೇಶ ಮತ್ತು ಉತ್ತರ ರಾಜಸ್ಥಾನದ ಹೆಚ್ಚಿನ ಭಾಗಗಳಿಗೆ ಮತ್ತು ತೀವ್ರ ಉತ್ತರ ಮಧ್ಯಪ್ರದೇಶದ ಕೆಲವು ಭಾಗಗಳಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. \ No newline at end of file diff --git a/eesanje/url_46_278_4.txt b/eesanje/url_46_278_4.txt new file mode 100644 index 0000000000000000000000000000000000000000..aa265fc37d38f57b2bdb265289818929c137661b --- /dev/null +++ b/eesanje/url_46_278_4.txt @@ -0,0 +1,6 @@ +ತ್ರಿಪುರಾದ ಬಿಜೆಪಿ ಶಾಸಕ ನಿಧನ +ಅಗರ್ತಲಾ, ಡಿ 28 (ಪಿಟಿಐ) ತ್ರಿಪುರಾದ ಬಿಜೆಪಿ ಶಾಸಕ ಸೂರಜಿತ್ ದತ್ತಾ ದೀರ್ಘಕಾಲದ ಅನಾರೋಗ್ಯದ ನಂತರ ತಡರಾತ್ರಿ ಕೋಲ್ಕತ್ತಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎಪ್ಪತ್ತು ವರ್ಷದ ದತ್ತಾ ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. +ಬಹು ಕಾಯಿಲೆಗಳಿಂದ ಬಳಲುತ್ತಿದ್ದ ರಾಮನಗರ ಶಾಸಕರು ಉಸಿರಾಟದ ತೊಂದರೆಯಿಂದ ಅಗರ್ತಲಾ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರನ್ನು ಉತ್ತಮ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ವರ್ಗಾಯಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. +ಕೋವಿಡ್ ಹಗರಣದ ಪಾಲು ಕೇಂದ್ರಕ್ಕೆ ಹೋಗಿದೆಯೇ..? : ಸಚಿವ ಪ್ರಿಯಾಂಕ್ ಖರ್ಗೆ +ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ತಮ್ಮ ಫೇಸ್‍ಬುಕ್ ಪೋಸ್ಟ್‍ನಲ್ಲಿ ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ, ಹಿರಿಯ ರಾಜಕಾರಣಿ ಮತ್ತು ಹಾಲಿ ಬಿಜೆಪಿ ಶಾಸಕ ಸೂರಜಿತ್ ದತ್ತಾ ರಾಜ್ಯದ ಹೊರಗಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ನಿಧನದಿಂದ ನನಗೆ ದುಃಖ ಮತ್ತು ನೋವಾಗಿದೆ ಎಂದು ಹೇಳಿದ್ದಾರೆ. ತ್ರಿಪುರಾ ಸರ್ಕಾರ ಇಂದು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿತು. +ದತ್ತಾ ಮೊದಲು 1988 ರಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಸ್ರ್ಪಧಿಸಿ ಗೆದ್ದರು, ಸುೀಧಿರ್ ರಂಜನ್ ಮಜುಂದಾರ್ ನೇತೃತ್ವದ ಕಾಂಗ್ರೆಸ್-ಟಿಯುಜೆಎಸ್ ಸರ್ಕಾರದಲ್ಲಿ ಸಚಿವರಾಗಿದ್ದರು. \ No newline at end of file diff --git a/eesanje/url_46_278_5.txt b/eesanje/url_46_278_5.txt new file mode 100644 index 0000000000000000000000000000000000000000..208df760b709abb4a93c9392d7fc9d4c4ad51861 --- /dev/null +++ b/eesanje/url_46_278_5.txt @@ -0,0 +1,16 @@ +ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಗೆ ವಿಜಯೇಂದ್ರ ಕರೆ +ಬೆಂಗಳೂರು, ಡಿ.27- ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಸುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪದಾಧಿಕಾರಿಗಳ ಸಭೆ ನಡೆಸಿದರು. +ಮೂರು ದಿನಗಳ ಹಿಂದೆಯಷ್ಟೇ ಪಕ್ಷಕ್ಕೆ ನೂತನವಾಗಿ ಪದಾಕಾರಿಗಳ ಸಭೆ ನಡೆಸಿದ ಬೆನ್ನಲ್ಲೇ ಮೊದಲ ಬಾರಿಗೆ ವಿಜಯೇಂದ್ರರವರು ನಡೆಸಿದ ಈ ಸಭೆಯಲ್ಲಿ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪಕ್ಷದ ಉಪಾಧ್ಯಕ್ಷರಾದ ಮುರುಗೇಶ್ ನಿರಾಣಿ, ಹರತಾಳ್ ಹಾಲಪ್ಪ, ಭೈರತಿ ಬಸವರಾಜು, ರಾಜುಗೌಡ ನಾಯಕ್, ಎನ್.ಮಹೇಶ್, ಮಾಳವಿಕ ಅವಿನಾಶ್, ಎಂ.ರಾಜೇಂದ್ರ, ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನಿಲ್‍ಕುಮಾರ್, ಪ್ರೀತಂಗೌಡ, ನಂದೀಶ್‍ರೆಡ್ಡಿ ಸೇರಿದಂತೆ ಹೊಸ ಪದಾಕಾರಿಗಳು ಭಾಗವಹಿಸಿದ್ದರು. +ಈ ಹಿಂದೆ ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವಧಿಯಲ್ಲಿ ನೇಮಕಗೊಂಡಿದ್ದ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಸಂಘಟನೆ ಹಾಗೂ ಕಾರ್ಯಕರ್ತರ ಜೊತೆ ಹೆಚ್ಚು ಒಡನಾಟ ಹೊಂದಿರುವವರನ್ನೇ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ನೂತನ ಪದಾಧಿಕಾರಿಗಳು ಸಲಹೆ ಮಾಡಿದ್ದಾರೆ. +ಆ ಬಣ, ಈ ಬಣ ಎನ್ನದೇ ಪಕ್ಷನಿಷ್ಠರು ಮತ್ತು ಕಾರ್ಯಕರ್ತರ ಜೊತೆ ಹೊಂದಿಕೊಂಡು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವವರನ್ನೇ ನೇಮಿಸಬೇಕೆಂದು ಮನವಿ ಮಾಡಲಾಗಿದೆ. ಇನ್ನು ಪದಾಧಿಕಾರಿಗಳ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಚರ್ಚೆ ನಡೆಸಲಾಯಿತು. +ಆಡಳಿತಾರೂಢ ಕಾಂಗ್ರೆಸ್ ತನ್ನ ಪಂಚಗ್ಯಾರಂಟಿ ಯೋಜನೆಗಳನ್ನೇ ಚುನಾವಣೆ ಅಸ್ತ್ರ ಮಾಡಿಕೊಳ್ಳಲಿದೆ. ಇದಕ್ಕೆ ಪರ್ಯಾಯವಾಗಿ ನಾವು ರಾಜ್ಯದ ಜನತೆಗೆ ಮೋದಿ ಗ್ಯಾರಂಟಿಯನ್ನೇ ಹೆಚ್ಚು ಬಿಂಬಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. +ದಟ್ಟ ಮಂಜು ತಂದ ಆಪತ್ತು, 25ಕ್ಕೂ ಹೆಚ್ಚು ಮಂದಿಗೆ ಗಾಯ +ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 3 ರಾಜ್ಯಗಳನ್ನು ಗೆದ್ದಿರುವುದು ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತಂದಿದೆ. ಕಾಂಗ್ರೆಸ್ ಈ ರಾಜ್ಯಗಳಲ್ಲೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರೂ ಮತದಾರ ಕೈಹಿಡಿಯಲಿಲ್ಲ. ಬದಲಿಗೆ ಮೋದಿ ಗ್ಯಾರಂಟಿಗೆ ಜೈ ಅಂದಿದ್ದಾರೆ. ಕರ್ನಾಟಕದಲ್ಲೂ ಮೋದಿ ಗ್ಯಾರಂಟಿಯನ್ನೇ ನಾವು ಮುಂಚೂಣಿಗೆ ತರೋಣ. ಇದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ಕೇಳಿಬಂದಿದೆ. +ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಸೋಲು ಕಾರ್ಯಕರ್ತರಿಗೆ ತೀವ್ರ ನಿರಾಸೆ ತಂದಿತ್ತು. ಈಗ ನಿಧಾನವಾಗಿ ಚೇತರಿಕೆ ಕಾಣುತ್ತಿದ್ದು, ಸಂಘಟನೆಯನ್ನು ಗ್ರಾಪಂನಿಂದ ಜಿಲ್ಲಾಮಟ್ಟದವರೆಗೂ ಸಂಘಟಿಸಬೇಕೆಂದು ಕೆಲ ಹಿರಿಯರು ಬಿ.ವೈ.ವಿಜಯೇಂದ್ರರವರಿಗೆ ಸಲಹೆ ಮಾಡಿದ್ದಾರೆ. +ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಉಂಟಾಗದಂತೆ ವಿಶ್ವಾಸದ ಮೂಲಕವೇ ಮೈತ್ರಿ ಮುನ್ನಡೆಸಬೇಕೆಂದು ಪದಾಕಾರಿಗಳು ಸಲಹೆ ಕೊಟ್ಟಿದ್ದಾರೆ. +ಯಶಸ್ವಿ ಯಾತ್ರೆ :ಪ್ರಧಾನಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನವನ್ನು ರಾಜ್ಯದಲ್ಲಿ ಯಶಸ್ವಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ದೇಶದ ಬಡಜನರು, ಸಾಮಾನ್ಯ ಜನರು, ರೈತರು ಸೇರಿದಂತೆ ಅನೇಕ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಪಿಎಂ ಕೃಷಿ ಸಮ್ಮನ್ ಯೋಜನೆ, ಪಿಎಂ ಜೀವನ್ ಜ್ಯೋತಿ, ಪ್ರಧಾನ ಮಂತ್ರಿ ಸುರಕ್ಷ ಭೀಮ ಯೋಜನೆ, ಆಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, +ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಸ್ವಸಹಾಯ ಗುಂಪುಗಳಿಗೆ ಸಾಲ ಯೋಜನೆ, ಪಿಎಂ ವಿದ್ಯಾರ್ಥಿ ವೇತನ, ಆಯುಷ್ ಮಾನ್ ಕಾರ್ಡ್ ವಿತರಣೆ, ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ, ಈ ಯೋಜನೆಗಳ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಅದೇಷ್ಟೋ ಜನಸಾಮಾನ್ಯರಿಗೆ ಮಾಹಿತಿ ಇಲ್ಲ. ಯೋಜನೆಗಳನ್ನ ಸದುಪಯೋಗ ಕೂಡ ಪಡಿಸಿಕೊಳ್ಳುತ್ತಿಲ್ಲ. ಇದರ ಬಗ್ಗೆ ಜನತೆಗೆ ಕಾರ್ಯಕರ್ತರು ಮನವರಿಕೆ ಮಾಡಿಕೊಡಬೇಕು ಎಂದು ವಿಜಯೇಂದ್ರ ಸೂಚಿಸಿದ್ದಾರೆ. +ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳ ಬಳಿ ಎರಡು ವಾಹನಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಹೇಗೆ ಯೋಜನೆಗಳನ್ನು ಪಡೆಯಬಹುದು ಎನ್ನುವುದನ್ನು ತಿಳಿಸಿಕೊಡಲಾಗುತ್ತಿದೆ. +ದರ್ಶನ್‍ಗಾಗಿ ಮತ್ತೆ ಸ್ಯಾಂಡಲ್‍ವುಡ್‍ಗೆ ಮೆಗಾಸ್ಟಾರ್ ರೀಎಂಟ್ರಿ..? +ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶ, ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸುವುದಾಗಿದೆ. ಸರ್ಕಾರ ಬಡವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮ ಪ್ರಚಾರ ಮಾಡಲಾಗಿದೆ. ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಾಗುತ್ತಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಗಾಡಿ ಓಡುತ್ತಿದೆ. ಜನವರಿ 25 ರವರೆಗೆ ಪ್ರತಿ ಗ್ರಾಮ, ಪಟ್ಟಣದಲ್ಲಿ ಸಂಚರಿಸಿ ಯೋಜನೆಗಳ ಪ್ರಚಾರ ಕೈಗೊಳ್ಳಲಿದೆ. +ರಾಜ್ಯದಲ್ಲಿ ಇದನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೋದಿಯವರನ್ನೇ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಮತದಾರರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಕಾರ್ಯಕರ್ತರು ಮಾಡಿಕೊಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. \ No newline at end of file diff --git a/eesanje/url_46_278_6.txt b/eesanje/url_46_278_6.txt new file mode 100644 index 0000000000000000000000000000000000000000..71130e33d62c6eb7b6902c415405efdb93db100d --- /dev/null +++ b/eesanje/url_46_278_6.txt @@ -0,0 +1,7 @@ +ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ಸಮಸ್ಯೆ ನಿವಾರಣೆಗೆ ವಿಶೇಷ ಅಭಿಯಾನ +ಬೆಂಗಳೂರು, ಡಿ.27- ಗೃಹಲಕ್ಷ್ಮಿ ಯೋಜನೆಯಲ್ಲಿ ಕಂಡುಬರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಹೆಚ್ಚು ಜನರಿಗೆ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಅಭಿಯಾನ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೂ ಚಾಲ್ತಿಯಲ್ಲಿರಲಿದೆ. ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು, ಬಾಪೂಜಿ ಸೇವಾಕೇಂದ್ರದ ಗಣಕಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಎಲಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವೀಸ್ ತಂಡಗಳು ಅಭಿಯಾನದಲ್ಲಿ ಭಾಗವಹಿಸಲಿವೆ. +ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡ ಬಹಳಷ್ಟು ಮಂದಿ ಬ್ಯಾಂಕ್ ಖಾತೆ ನೀಡುವಾಗ ಪತಿ ಅಥವಾ ಸಂಬಂಧಿಕರ ಖಾತೆಗಳ ಮಾಹಿತಿಯನ್ನು ಒದಗಿಸಿದ್ದಾರೆ. ಇದು ನೊಂದಾಯಿತ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್‍ಗೆ ಹೊಂದಾಣಿಕೆ ಆಗುತ್ತಿಲ್ಲ. ಹೀಗಾಗಿ ಶೇ.30ರಷ್ಟು ಮಂದಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂ.ಗಳು ತಲುಪುತ್ತಿಲ್ಲ. ಈ ತಾಂತ್ರಿಕ ಸಮಸ್ಯೆಯನ್ನು ಒಂದೇ ಕಂತಿನಲ್ಲಿ ಬಗೆಹರಿಸಲು ಅಭಿಯಾನ ಆಯೋಜಿಸಲಾಗಿದೆ. +ರೊಚ್ಚಿಗೆದ್ದ ರಕ್ಷಣಾ ವೇದಿಕೆ, ಇಂಗ್ಲೀಷ್ ನಾಮಫಲಕಗಳ ಧ್ವಂಸ +ಆಧಾರ್ ಜೋಡಣೆ ಮಾಡುವುದು, ಗ್ರಾಹಕರ ವ್ಯಕ್ತಿಗತ ಮಾಹಿತಿ ಸಲ್ಲಿಕೆ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿಗತಿ ಪರಿಶೀಲನೆ, ಬ್ಯಾಂಕ್ ಖಾತೆಗಳಲ್ಲಿ ತಾಂತ್ರಿಕ ಸಮಸ್ಯೆಯಿದ್ದರೆ ಹೊಸ ಖಾತೆ ಸ್ಥಾಪನೆ ಸೇರಿದಂತೆ ಎಲ್ಲಾ ಸೇವೆಗಳನ್ನೂ ಒದಗಿಸಲಾಗುತ್ತಿದೆ. +ಬ್ಯಾಂಕ್ ಅಧಿಕಾರಿಗಳು ಸ್ಥಳದಲ್ಲೇ ಇರುವುದರಿಂದ ಗೊಂದಲಗಳ ನಿವಾರಣೆಗೆ ಸಹಕಾರಿಯಾಗಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಿಕೊಂಡು ಸೌಲಭ್ಯ ಪಡೆಯದೇ ಇರುವವವರು ಗ್ರಾಮ ಪಂಚಾಯಿತಿ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_278_7.txt b/eesanje/url_46_278_7.txt new file mode 100644 index 0000000000000000000000000000000000000000..c7a33a90f15e8cdf95804b7cd61339214275433b --- /dev/null +++ b/eesanje/url_46_278_7.txt @@ -0,0 +1,6 @@ +ಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಬಿ.ಕೆ.ಹರಿಪ್ರಸಾದ್ ಆಗ್ರಹ +ಬೆಂಗಳೂರು, ಡಿ.27- ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕøತಿ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತುಗಳಲ್ಲಿ ಭಾಷಣ ಬಿಗಿಯುತ್ತಾರೆ. ಆದರೆ ಕಲ್ಲಡ್ಕ ಪ್ರಭಾಕರ್ ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಸರ್ಕಾರ ತಕ್ಷಣವೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು ಎಂದು ಹೇಳಿದರು. +ಸಮುದಾಯದವರು ಒಟ್ಟಾಗಿ ದೂರು ನೀಡುವ ಮೂಲಕ ಎಫ್‍ಐಆರ್ ದಾಖಲಿಸಲಾಗಿದೆ. ಇದರ ಆಧಾರದ ಮೇಲೆ ಕೂಡಲೇ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸರ್ವಜನಾಂಗದ ಶಾಂತಿಯ ತೋಟ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಜನರ ಮುಂದಿಟ್ಟು, ಮತ ಪಡೆದು ಅಧಿಕಾರಕ್ಕೆ ಬಂದಿದೆ. ಅದರಂತೆ ಕೋಮು ದ್ವೇಷ ಹರಡುವ, ಶಾಂತಿ ಕದಡುವ ವಿಚ್ಛಿದ್ರಾಕಾರಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು. +ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ +ಕರ್ನಾಟಕ ರಾಜ್ಯದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕೆಂಬುದು ಸ್ವಾಗತಾರ್ಹ. ಆದರೆ ಈ ಹಂತದಲ್ಲಿ ಹೋರಾಟ ಮಾಡುವಾಗ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು. ಕನ್ನಡ ಹೋರಾಟಗಾರರ ಮೇಲೆ ಬಹಳಷ್ಟು ಪ್ರಕರಣಗಳು ಬಾಕಿ ಇವೆ. ನೆಲ, ಜಲ, ಭಾಷೆ ವಿಷಯವಾಗಿ ಪ್ರತಿಭಟನೆ ನಡೆಸಿ ಕಾನೂನಿನ ಇಕ್ಕಟ್ಟಿಗೆ ಸಿಲುಕಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದರು. \ No newline at end of file diff --git a/eesanje/url_46_278_8.txt b/eesanje/url_46_278_8.txt new file mode 100644 index 0000000000000000000000000000000000000000..456edb259a11a52a1e25d1d4f93c290889882cd1 --- /dev/null +++ b/eesanje/url_46_278_8.txt @@ -0,0 +1,6 @@ +ದಟ್ಟ ಮಂಜು ತಂದ ಆಪತ್ತು, 25ಕ್ಕೂ ಹೆಚ್ಚು ಮಂದಿಗೆ ಗಾಯ +ಬೆಂಗಳೂರು, ಡಿ.27- ದಟ್ಟ ಮಂಜಿನಿಂದ ಕೂಡಿದ ವಾತಾವರಣದಿಂದಾಗಿ ಇಂದು ಮುಂಜಾನೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಾಗ, ಇದರ ಹಿಂದೆ ಬರುತ್ತಿದ್ದ ಮತ್ತೆರಡು ಖಾಸಗಿ ಬಸ್‍ಗಳು ಅಪ್ಪಳಿಸಿ ಸಂಭವಿಸಿದ ಸರಣಿ ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ತುಮಕೂರು- ಬೆಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ ತೊಣಚಿ ಗುಪ್ಪೆ ಬಳಿ ಇಂದು ಮುಂಜಾನೆ 6.15ರ ಸುಮಾರಿನಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಖಾಸಗಿ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಈ ಬಸ್ ಹಿಂಬಾಗ ಬರುತ್ತಿದ್ದ ಮತ್ತೆರಡು ಖಾಸಗಿ ಬಸ್‍ಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. +ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ +ಘಟನೆಯಿಂದಾಗಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರೆಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ಮುಂಜಾನೆ ಅಪಘಾತ ಸಂಭವಿಸಿದ್ದರಿಂದ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸುದ್ದಿ ತಿಳಿದು ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಜೆಸಿಬಿಯಿಂದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. +ಮುಂಜಾನೆ ಮಂಜು ಕವಿದ ವಾತಾವರಣದಿಂದಾಗಿ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ಸರಿಯಾಗಿ ಕಾಣಿಸದೆ ಅಪಘಾತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಈ ಬಗ್ಗೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_278_9.txt b/eesanje/url_46_278_9.txt new file mode 100644 index 0000000000000000000000000000000000000000..d46bd970637dc10cd023cf6139033443a3fa299c --- /dev/null +++ b/eesanje/url_46_278_9.txt @@ -0,0 +1,11 @@ +ರೊಚ್ಚಿಗೆದ್ದ ರಕ್ಷಣಾ ವೇದಿಕೆ, ಇಂಗ್ಲೀಷ್ ನಾಮಫಲಕಗಳ ಧ್ವಂಸ +ಬೆಂಗಳೂರು, ಡಿ.27- ಆಂಗ್ಲಭಾಷೆಯ ನಾಮಫಲಕಗಳ ವಿರುದ್ಧ ಸಮರ ಸಾರಿರುವ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಹಲವು ವಾಣಿಜ್ಯ ಸಂಸ್ಥೆಗಳ ಎದುರು ಪ್ರತಿಭಟನೆ ನಡೆಸಿದ್ದಾರೆ. ಬೃಹತ್ ವಾಣಿಜ್ಯ ಸಂಸ್ಥೆಗಳಿಗೆ ತೆರಳಿ ಅಲ್ಲಿ ವಿಜೃಂಭಿಸುತ್ತಿದ್ದ ಆಂಗ್ಲ ಭಾಷೆಯ ನಾಮಫಲಕಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಸಂಘರ್ಷವೂ ನಡೆದಿದೆ. +ಕೆಲವು ಸಂಸ್ಥೆಗಳು ಕರವೇಯ ಪ್ರತಿಭಟನೆಗೆ ಮಣಿದು ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆಗೆ ಆದ್ಯತೆ ನೀಡಿವೆ. ಮಾಲ್ ಏಷ್ಯಾ ಸೇರಿದಂತೆ ಅನೇಕ ಬೃಹತ್ ವಾಣಿಜ್ಯ ಮಳಿಗೆಗಳು ಕನ್ನಡ ಭಾಷೆಯ ನಾಮಫಲಕ ಹಾಕಲು ತಿರಸ್ಕಾರ ಧೋರಣೆ ಅನುಸರಿಸಿದ್ದವು. ಕಳೆದ ವಾರದಿಂದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುತ್ತಿದ್ದಂತೆ ಮಾಲ್ ಏಷ್ಯಾ ನಾಮಫಲಕವನ್ನು ಬದಲಿಸಿದೆ. +ಈ ಹಿಂದೆ ಕಾವೇರಿ ನದಿವಿವಾದ ತೀವ್ರವಾಗಿದ್ದ ಸಂದರ್ಭದಲ್ಲೇ ನಾರಾಯಣಗೌಡರು ಮುಂದಿನ ಡಿಸೆಂಬರ್‍ನಲ್ಲಿ ಆಂಗ್ಲಭಾಷೆಗಳ ನಾಮಫಲಕಗಳ ವಿರುದ್ಧ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.ಕನ್ನಡವನ್ನು ಕಡೆಗಣಿಸುವ ವಾಣಿಜ್ಯ ಮಳಿಗೆಗಳು ಹಾಗೂ ಉದ್ಯಮಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದರು. ಅದರ ಹೊರತಾಗಿಯೂ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಮಾಲ್ ಏಷ್ಯಾದಲ್ಲಿ ಕನ್ನಡ ನಾಮಫಲಕವನ್ನು ಹಾಕುವಂತೆ ನಾರಾಯಣಗೌಡರು ಲಿಖಿತ ರೂಪದಲ್ಲಿ ಮನವಿ ನೀಡಿದ್ದರು. ಅದರ ವಿರುದ್ಧ ದೂರು ನೀಡಿದ್ದ ಮಾಲ್ ಏಷ್ಯಾದವರು ನಾರಾಯಣಗೌಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಅದರ ಬಳಿಕ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. +ಕರವೇ ಕಾರ್ಯಕರ್ತರು ನಗರಾದ್ಯಂತ ಪ್ರತಿಭಟನೆ ಗಳನ್ನು ನಡೆಸುತ್ತಿದ್ದಾರೆ. ಶಾಂತಿಯುತ ಪ್ರತಿಭಟನೆಗೆ ಜಗ್ಗದೇ ಇದ್ದ ವಾಣಿಜ್ಯಸಂಸ್ಥೆಗಳ ಮುಂಭಾಗದಲ್ಲಿರುವ ಫಲಕಗಳನ್ನು ಸ್ವಯಂ ಕಿತ್ತುಹಾಕುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಇಂದು ವಿಮಾನನಿಲ್ದಾಣ ರಸ್ತೆಯ ಸಾದಹಳ್ಳಿ ಗೇಟ್ ಬಳಿ ಕರವೇ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಜಮಾಯಿಸಿದರು. ಸಾದಹಳ್ಳಿಯ ಟೋಲ್‍ನಲ್ಲಿರುವ ಇಂಗ್ಲಿಷ್ ನಾಮಫಲಕವನ್ನು ಧ್ವಂಸಗೊಳಿಸಿದ್ದರು. ಅಲ್ಲಿಂದ ನಗರದತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. +ರಸ್ತೆಯುದ್ದಕ್ಕೂ ಕನ್ನಡ ಸಂಘಟನೆಯ ಕಾರ್ಯಕರ್ತರ ಕಲರವ ಕಂಡುಬಂದಿತು. ಅಲ್ಲಲ್ಲಿ ರಸ್ತೆತಡೆಗಳು ನಡೆದವು. ವಿಮಾನನಿಲ್ದಾಣದ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿತ್ತು. ಜೊತೆಗೆ ಇತರ ಪ್ರಮುಖ ರಸ್ತೆಗಳಲ್ಲೂ ಇದೇ ರೀತಿಯ ಪ್ರತಿಭಟನೆಗಳು ನಡೆದಿವೆ. ದಾರಿ ಮಧ್ಯೆ ಅಳವಡಿಸಲಾಗಿದ್ದ ಇಂಗ್ಲಿಷ್ ಭಾಷೆಯ ಬೃಹತ್ ಫ್ಲೆಕ್ಸ್ ಬ್ಯಾನರ್‍ಗಳನ್ನು ಕರವೇ ಕಾರ್ಯಕರ್ತರು ಹರಿದು ಹಾಕಿದ್ದಾರೆ. +ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ +ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಮೇಕ್ರಿ ವೃತ್ತದ ಬಳಿಕ ಕರವೇ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದುಕೊಂಡರು. ಆದರೆ ಬೇರೆ ಬೇರೆ ಪ್ರದೇಶಗಳಲ್ಲಿ ಸಂಘಟಿತರಾಗಿದ್ದ ಕಾರ್ಯಕರ್ತರು ಇಂಗ್ಲಿಷ್ ನಾಮಫಲಕಗಳ ವಿರುದ್ಧ ಸಮರ ಮುಂದುವರೆಸಿದ್ದಾರೆ. ರಾಜ್ಯಸರ್ಕಾರ ಫೆಬ್ರವರಿ 28 ರೊಳಗೆ ನಿಯಮಾನುಸಾರ ನಾಮಫಲಕದಲ್ಲಿ ಕನ್ನಡಕ್ಕೆ ಶೇ. 60 ರಷ್ಟು ಮಾನ್ಯತೆ ನೀಡಬೇಕು. ಇಲ್ಲವಾದರೆ ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಅದರ ನಡುವೆ ಕರವೇಯ ಪ್ರತಿಭಟನೆ ಇಂಗ್ಲಿಷ್ ವ್ಯಾಮೋಹಿಗಳಿಗೆ ಬಿಸಿ ಮುಟ್ಟಿಸಿದೆ. +ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣಗೌಡ, ಬೆಂಗಳೂರು ಕನ್ನಡಮಯವಾಗಬೇಕು. ಇಲ್ಲವಾದರೆ ಭವಿಷ್ಯದಲ್ಲಿ ಕನ್ನಡಿಗರಿಗೆ ಉಳಿಗಾಲ ಇಲ್ಲದಂತಾಗುತ್ತದೆ. ವಾಣಿಜ್ಯ ಸಂಸ್ಥೆಗಳು, ಮಾಲ್‍ಗಳು ಕೇವಲ ಹೊರಗಿನ ನಾಮಫಲಕಗಳಲ್ಲಿ ಕನ್ನಡ ಬಳಸಿದರೆ ಸಾಲದು, ಒಳಗೂ ಕನ್ನಡ ಇರಬೇಕು ಎಂದು ಆಗ್ರಹಿಸಿದ್ದಾರೆ. +ಲೋಕಸಭೆ ಚುನಾವಣೆ ಘೋಷಣೆ ಮುನ್ನವೇ ಅಭ್ಯರ್ಥಿಗಳ ಲಿಸ್ಟ್ ಪ್ರಕಟಿಸಲು ಮುಂದಾದ ಬಿಜೆಪಿ +ಇಂದು ಕರವೇಯ ಪ್ರತಿಭಟನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದೇವೆ. ಒಂದು ವೇಳೆ ಬಲವಂತವಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದರೆ ಕಾರ್ಯಕರ್ತರು ಹೋರಾಟವನ್ನು ಮುಂದುವರೆಸಲಿದ್ದಾರೆ ಎಂದು ಎಚ್ಚರಿಸಿದರು. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ 28 ರವರೆಗೆ ಗಡುವು ನಿಗದಿ ಮಾಡಿದೆ. ಆನಂತರವೂ ಕನ್ನಡೀಕರಣವಾಗದೇ ಇದ್ದರೆ, ಮುಂದಿನ ದಿನಗಳಲ್ಲಿನ ಅನಾಹುತಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ಈ ಹೋರಾಟ ಬೆಂಗಳೂರಿಗಷ್ಟೇ ಅಲ್ಲ ರಾಜ್ಯಾದ್ಯಂತ ನಡೆಯುತ್ತದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_279_1.txt b/eesanje/url_46_279_1.txt new file mode 100644 index 0000000000000000000000000000000000000000..4679810dd0c7a21e7671d838dd69b94fa6945048 --- /dev/null +++ b/eesanje/url_46_279_1.txt @@ -0,0 +1,14 @@ +ಭತ್ಯೆಯ ಜೊತೆಗೆ ನಿರುದ್ಯೋಗ ನಿವಾರಣೆಗೆ ಕೌಶಲ್ಯ ತರಬೇತಿ: ಸಿಎಂ +ಬೆಂಗಳೂರು,ಡಿ.26-ಯುವ ನಿಧಿ ಯೋಜನೆಯಡಿ ನೋಂದಾಯಿತ ಪದವಿ ಹಾಗೂ ಡಿಫ್ಲೋಮೊದಾರರಿಗೆ ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯ ತರಬೇತಿಯನ್ನೂ ಕೊಟ್ಟು ಉದ್ಯೋಗ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. +ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು. ರಾಜ್ಯದಲ್ಲಿ 5.29 ಲಕ್ಷ ಪದವಿಧರರು ಇದ್ದಾರೆ. ಅವರಲ್ಲಿ 4.20 ಲಕ್ಷ ಪದವೀಧರರು ಇದ್ದರೆ, 48 ಸಾವಿರ ಡಿಫ್ಲೋಮೊ ಪದವಿ ಪಡೆದವರಿದ್ದಾರೆ. ಅಷ್ಟೂ ಮಂದಿಗೆ ನಿರುದ್ಯೋಗ ಭತ್ಯೆ ನೀಡಲು ಮಾರ್ಚ್‍ವರೆಗೂ 250 ಕೋಟಿ ರೂ.ಗಳ ಹಣ ಅಗತ್ಯವಿದ್ದು, ಅಷ್ಟನ್ನು ಒದಗಿಸಲಾಗಿದೆ ಎಂದರು. +ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದಕ್ಕಾಗಿ ಈ ವರ್ಷಕ್ಕೆ 39000 ಕೋಟಿ ರೂ.ಗಳನ್ನ ತಾವು ಮಂಡಿಸಿದ ಬಜೆಟ್‍ನಲ್ಲಿ ಕಾಯ್ದಿರಿಸಿದ್ದಾಗಿ ತಿಳಿಸಿದರು. +ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆಯಾಗಲಿದೆ : ಸಿದ್ದರಾಮಯ್ಯ +ಮೋದಿ ಆರ್ಥಿಕ ತಜ್ಞರೇ?:ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಸಿದ್ದರಾಮಯ್ಯನವರು, ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ಜಾರಿಯಾದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಮೋದಿಯವರು ರಾಜಸ್ಥಾನದ ಚುನಾವಣಾ ಪ್ರಚಾರದ ವೇಳೆ ಟೀಕೆ ಮಾಡಿದ್ದರು. ಅವರೇನು ಆರ್ಥಿಕ ತಜ್ಞರೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ನಾವು 5 ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಅದರ ನಂತರವು ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ ಎಂದು ಹೇಳಿದರು. +ನಮ್ಮ ಪಕ್ಷದ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದ ಪ್ರಧಾನಿಯವರು, ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯಪ್ರದೇಶ, ಛತ್ತೀಸ್‍ಘಡ, ತೆಲಂಗಾಣ ಸೇರಿದಂತೆ ಎಲ್ಲ ಕಡೆಯೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ನಾವು ಜನರಿಗೆ ಭರವಸೆಗಳನ್ನು ನೀಡಿದರೆ ಟೀಕೆ ಮಾಡುತ್ತಾರೆ. ಆದರೆ ಅವರು ನೀಡಿದಾಗ ಆರ್ಥಿಕ ದಿವಾಳಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು. +ಪಂಚಖಾತ್ರಿಗಳ ಯೋಜನೆ ಜಾರಿಯಲ್ಲಿ ವಿಳಂಬವಾಗಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತವೆ. ಮೊದಲ ಸಂಪುಟದಲ್ಲೇ 5 ಖಾತ್ರಿಗಳನ್ನು ಜಾರಿಗೊಳಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. +ಯುವ ನಿಧಿ ಯೋಜನೆ 2022-23ನೇ ಸಾಲಿನಲ್ಲಿ ಉತ್ತೀರ್ಣರಾಗಿ ಆರು ತಿಂಗಳು ಉದ್ಯೋಗ ದೊರೆಯದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆಯಾಗಿದ್ದು, ಈಗ ಆರು ತಿಂಗಳ ಕಾಲಾವಧಿ ಮುಗಿದಿದ್ದು, ಸಕಾಲದಲ್ಲಿ ಯುವನಿಧಿ ಯೋಜನೆ ಜಾರಿಯಾಗುತ್ತಿದೆ. ಯಾವುದೇ ವಿಳಂಬವಾಗಿಲ್ಲ. ಎರಡು ವರ್ಷಗಳವರೆಗೂ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಿ ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು ಎಂದು ಹೇಳಿದರು.ಮೋದಿಯವರು ಚುನಾವಣೆಗೂ ಮುನ್ನ ಸಾಕಷ್ಟು ಭರವಸೆಗಳನ್ನು ನೀಡಿದ್ದರು. ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ತಿಳಿಸಿದರು. ಅದರ ಪ್ರಕಾರ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿವೆ ಆ ಉದ್ಯೋಗಗಳು ಎಂದು ಸಿಎಂ ಪ್ರಶ್ನಿಸಿದರು. +ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೆ ಮಾತು ತಪ್ಪಿದ್ದಾರೆ. ಸ್ವತಂತ್ರ ನಂತರ ದೇಶ ಕಂಡ ಹೆಚ್ಚು ಸುಳ್ಳು ಹೇಳುವ ಪ್ರಧಾನಿ ನರೇಂದ್ರ ಮೋದಿ ಎಂದು ವಾಗ್ದಾಳಿ ನಡೆಸಿದರು. +ವೈದ್ಯಕೀಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ಹೆಚ್ಚು ಷರತ್ತುಗಳನ್ನು ವಿಸದೆ ಯುವ ನಿ ಯೋಜನೆಯನ್ನು ಜಾರಿಗೊಳಿಸುತ್ತಿದೆ. ನಮಗೆ ಯುವಕರ ಮೇಲೆ ನಂಬಿಕೆ ಇದೆ. ಉದ್ಯೋಗ ಇಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಂಡರೆ ಸಾಕು ನಿರುದ್ಯೋಗ ಭತ್ಯೆ ದೊರೆಯುತ್ತದೆ.ನಿಗದಿತ ಕಾಲಾವಧಿಯಲ್ಲಿ ಯೋಜನೆ ಜಾರಿಗೆ ತಂದಿದ್ದೇವೆ. ಯುವಕರ ಭವಿಷ್ಯದ ಬಗ್ಗೆ ನಮಗೆ ಹೆಚ್ಚು ಕಾಳಜಿ ಇದೆ. ನಿರುದ್ಯೋಗ ಭತ್ಯೆ ಜೊತೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಖಾಸಗಿ ಸಂಸ್ಥೆಗಳಿಗೆ ಅಗತ್ಯವಿರುವ ಕೌಶಲ್ಯಗಳನ್ನು ವಿದ್ಯಾರ್ಥಿಗಳಿಗೆ ಕಲಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. +ಹೊಸ ವರ್ಷಾಚರಣೆಗೆ : ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಡ್ರೋಣ್ ಕಣ್ಗಾವಲು +ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಯುವಕ-ಯುವತಿಯರಿಂದಲೇ ಉದ್ಘಾಟನೆ ಮಾಡಿಸಲಾಯಿತು. ಮೊದಲು ನೋಂದಣಿ ಮಾಡಿಕೊಂಡ ಮೇನಕ ಎಂಬ ಪದವೀಧದರರಿಗೆ ಮುಖ್ಯಮಂತ್ರಿ ನೋಂದಣಿ ಪತ್ರವನ್ನು ವಿತರಿಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದ ಪೋಸ್ಟರ್ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. +ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_279_10.txt b/eesanje/url_46_279_10.txt new file mode 100644 index 0000000000000000000000000000000000000000..4cec49d41591a4687057ee27c557a0a89ee611e6 --- /dev/null +++ b/eesanje/url_46_279_10.txt @@ -0,0 +1,6 @@ +ಲೋಕಸಭೆ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ : ಜೋಶಿ +ಹುಬ್ಬಳ್ಳಿ,ಡಿ.25-ಮುಂದಿನ 2024 ಲೋಕಸಭೆ ಚುನಾವಣೆಯಲ್ಲಿ ನಾನು ಧಾರವಾಡ ಲೋಕಸಭೆ ಕ್ಷೇತ್ರದಿಂದಲ್ಲೇ ಸ್ಪರ್ದಿಸುತ್ತೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಗು ಗಣಿ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ನನ್ನ ಜನರಿ ಹಿಂದೆ ಆಶೀರ್ವಾದ ಮಾಡಿದ್ದಾರೆ. ಮುಂದೆಯೂ ಆಶೀರ್ವಾದ ಮಾಡ್ತಾರೆ. ನಾನು ಈ ಬಗ್ಗೆ ಪದೇ ಪದೇ ಹೇಳಲ್ಲ ಎಂದರು. +ಧಾರವಾಡ ಕ್ಷೇತ್ರದಿಂದ ಲಿಂಗಾಯತರಿಗೆ ಕೊಡಬೇಕೆಂಬ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಜೋಶಿ ಅವರು ಇಲ್ಲಿನ ಸಂಸದನಾಗಿ ಜನಕಲ್ಯಾಣಕ್ಕೆ ದುಡಿದಿದ್ದೇನೆ ದೇಶಮಟ್ಟದಲ್ಲಿ ನಿಸ್ವಾರ್ಥ ಕಾಯಕ ಮಾಡುತ್ತಿದ್ದೇನೆ ಜನರ ನಂಬಿಕೆ ಉಳಿಸಿಕೊಂಡಿದ್ದಾನೆ ಎಂದರು. +ಬಿಜೆಪಿ ರಾಜ್ಯ ಪದಾ„ಕಾರಿಗಳ ವಿಚಾರದಲ್ಲಿ ಅಪಸ್ವರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರನ್ನು ನೇಮಕ ಮಾಡಿದ್ದಾರೆ ನನಗೆ ಮಾಹಿತಿ ಇಲ್ಲ. ರಾಜ್ಯಾದ್ಯಕ್ಷರು ಮತ್ತು ಇತರ ನಾಯಕರು ಸೇರಿ ಪಟ್ಟಿ ರೆಡಿ ಮಾಡಿದ್ದಾರೆ. ಎಲ್ಲ ಜಿಲ್ಲೆಗಳಿಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪದಾ„ಕಾರಿಗಳ ಆಯ್ಕೆಯಾಗಿದೆ. ಬೇರೆ ಬೇರೆ ಕಾರಣದಿಂದಾಗಿ ಧಾರವಾಡಕ್ಕೆ ಪ್ರಾತಿನಿಧ್ಯತೆ ಸಿಕ್ಕಿರಲಿಕ್ಕಿಲ್ಲ ಎಂದರು. +ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್ +ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿ ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ರನ್ನ ಬೂಟ್ ಕ್ಕಿಂತ ಕಡೆ ಮಾಡಿದ್ದಾರೆಂದು ಲೇವಡಿ ಐ.ಎನ್.ಡಿ.ಯ ಮೈತ್ರಿಯಲ್ಲಿ ಗೊಂದಲವಿದೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮಂತ್ರಿ ಅಭ್ಯರ್ಥಿಯಾಗಲು ಇನ್ನು ಒಪ್ಪಿಲ್ಲ. ರಾಹುಲ್ ಗಾಂ„ ಅವರೇ ಒಪ್ಪಿಲ್ಲ ಎಂದರು.ನಿತೀಶ್,ಲಾಲು,ಅಕಿಲೇಶ್ ಮತ್ತಿತರರು ವಿಬಿನ್ನ ಹೇಳಿಕೆ ನೀಡುತ್ತಿದ್ದರೆ ಇನ್ನು ಮುಂದೆಯೂ ಹೊಸ ನಾಟಕ ನೋಡಬಹುದು ಎಂದು ಟೀಕಿಸಿದರು. diff --git a/eesanje/url_46_279_11.txt b/eesanje/url_46_279_11.txt new file mode 100644 index 0000000000000000000000000000000000000000..1e4f39cb101998241790967c0d3e1959c23767b7 --- /dev/null +++ b/eesanje/url_46_279_11.txt @@ -0,0 +1,5 @@ +ಏಕಾಏಕಿ ಏರ್ ಇಂಡಿಯಾ ವಿಮಾನ ರದ್ದು, ಪ್ರಯಾಣಿಕರ ಆಕ್ರೋಶ +ಮಂಗಳೂರು, ಡಿ.24- ಬೆಂಗಳೂರಿಗೆ ಹೊರಡಬೇಕಾಗಿದ್ದ ವಿಮಾನ ಏಕಾಏಕಿ ರದ್ದಾದ ಹಿನ್ನೆಲೆಯಲ್ಲಿ ಏರ್‍ಇಂಡಿಯಾ ಸಿಬ್ಬಂದಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರ ಹಾಕಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. +ಕಳೆದ ರಾತ್ರಿ 8.30ಕ್ಕೆ ಇಲ್ಲಿಂದ ಬೆಂಗಳೂರಿಗೆ ಹೊರಡಬೇಕಾಗಿದ್ದ ವಿಮಾನವನ್ನು ತಾಂತ್ರಿಕ ಕಾರಣವೊಡ್ಡಿ ರದ್ದು ಮಾಡಲಾಗಿತ್ತು. ಇದರಿಂದ ಪ್ರಯಾಣಿಕರು ಏರ್ ಇಂಡಿಯಾ ಸಿಬ್ಬಂದಿಗಳನ್ನು ಕೇಳಿದಾಗ ಪರಿಶೀಲಿಸುವುದಾಗಿ ತಿಳಿಸಿದರು. ಆದರೆ ಸ್ಪಂದಿಸದ ಕಾರಣ ಸ್ವಲ್ಪ ಹೊತ್ತು ಕಾದು ನಂತರ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. +ಕುಮಾರಸ್ವಾಮಿಯವರನ್ನು ನಿಂದಿಸುವುದು ಕಾಂಗ್ರೆಸ್‍ಗೆ ಅಂಟಿದ ಬೇನೆ : ಜೆಡಿಎಸ್ +ಈ ವೇಳೆ ವಾಗ್ವಾದಗಳು ನಡೆದು ಮುಂಜಾನೆ 2.15ಕ್ಕೆ ಬೇರೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ಬೆಂಗಳೂರಿಗೆ ಕಳಿಸಿಕೊಡಲಾಯಿತು. ದಟ್ಟ ಮಂಜು ಹಾಗೂ ವಿಪರೀತ ಚಳಿಯಿಂದಾಗಿ ವಿಮಾನ ಹಾರಾಟಕ್ಕೆ ಸ್ವಲ್ಪ ಅಡಚಣೆಯಾಗಿದೆಯೆಂದು ವಿಮಾನಯಾನದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_279_12.txt b/eesanje/url_46_279_12.txt new file mode 100644 index 0000000000000000000000000000000000000000..4453409545de3fb50fb6fbf9ac7bdc86f1ce534a --- /dev/null +++ b/eesanje/url_46_279_12.txt @@ -0,0 +1,6 @@ +ತವರಿಗೆ ಕಳಿಸಲು ಒಪ್ಪದ ಪತಿ, ನೊಂದ ಪತ್ನಿ ಆತ್ಮಹತ್ಯೆ +ನೆಲಮಂಗಲ ಡಿ.24- ತವರು ಮನೆಗೆ ಹೋಗಲು ಪತಿ ಅವಕಾಶ ನೀಡದಿದ್ದ ಹಿನ್ನೆಲೆಯಲ್ಲಿ ನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪವಿತ್ರ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾಳೆ. ಮೂಲತಃ ತುಮಕೂರಿನ ಹುಳಿಯಾರು ಪಟ್ಟಣದ ಪವಿತ್ರ ಅವರು ಕಳೆದ ಎರಡೂವರೆ ವರ್ಷಗಳ ಹಿಂದೆ ಹಿರಿಯೂರು ಮೂಲದ ಚೇತನ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೀಗ 11 ತಿಂಗಳ ಗಂಡು ಮಗು ಇದೆ. +ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚೇತನ್‍ಗೆ ಕೆಲಸದ ಒತ್ತಡದ ಹಿನ್ನೆಲೆಯಲ್ಲಿ ರಜೆ ಸಿಕ್ಕಿರಲಿಲ್ಲ. ಈ ನಡುವೆ ತನ್ನ ಸಂಬಂಧಿಕರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಪವಿತ್ರ ತವರು ಮನೆಗೆ ಹೋಗೋಣ ಎಂದು ಹೇಳಿದ್ದಳು. +ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಸಿದ ನೂತನ ಪದಾಧಿಕಾರಿಗಳ ಪಟ್ಟಿ +ವಾರಾಂತ್ಯದಲ್ಲಿ ರಜೆ ಇರುವ ಕಾರಣ ತವರಿಗೆ ಹೋಗೋಣ ವೆಂದು ಪಟ್ಟು ಹಿಡಿದಾಗ ಜಗಳ ನಡೆದು, ಇದು ತಾರಕ್ಕಕ್ಕೇರಿತ್ತು. ಇದರಿಂದ ಚೇತನ್ ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಪವಿತ್ರ ತನ್ನ ಕೋಣೆಗೆ ತೆರಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿ ಮನೆಗೆ ಬಂದಾಗ ಪತ್ನಿ ನೇಣು ಹಾಕಿಕೊಂಡಿದ್ದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. +ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ವಿಚಾರಣೆ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_279_2.txt b/eesanje/url_46_279_2.txt new file mode 100644 index 0000000000000000000000000000000000000000..c1ab4e6b45b4fc4ce8e464e7bf0a2e1cc8ac31f1 --- /dev/null +++ b/eesanje/url_46_279_2.txt @@ -0,0 +1,11 @@ +ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆಯಾಗಲಿದೆ : ಸಿದ್ದರಾಮಯ್ಯ +ಬೆಂಗಳೂರು, ಡಿ.26- ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಹಣ ಉಳಿತಾಯವಾಗಿದೆ. ಆರ್ಥಿಕ ಚಟುವಟಿಕೆಗಳು ಸುಧಾರಿಸಿವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ವಿಧಾನಸೌಧ ಮುಂಭಾಗ ಇಂದು ಬಿಎಂಟಿಸಿ ವತಿಯಿಂದ 100 ಎಲೆಕ್ಟ್ರಿಕ್ ಬಸ್‍ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. +ಬೆಂಗಳೂರು ನಗರದಲ್ಲಿ ಜನರ ಪ್ರಯಾಣಕ್ಕೆ ಅನೂಕೂಲ ಮಾಡಿಕೊಳ್ಳಲು ಹೊಸದಾಗಿ ನೂರು ಎಲೆಕ್ಟ್ರಾನಿಕ್ ಬಸ್ ಗಳ ಸಂಚಾರ ಆರಂಭಿಸಲಾಗುತ್ತಿದೆ. ಮುಂದಿನ ವರ್ಷದ ಏಪ್ರಿಲ್ ವೇಳೆಗೆ 1600 ಬಸ್ ಗಳು ಸಂಚರಿಸಲಿವೆ, ಈ ಎಲ್ಲ ಬಸ್‍ಗಳು ಹುಬ್ಬಳಿಯ ಕೈಗಾರಿಕಾ ಘಟಕದಲ್ಲಿ ತಯಾರುಗೊಳ್ಳುತ್ತವೆ ಎಂದರು. +ಪ್ರತಿದಿನ ಬೆಂಗಳೂರಿನಲ್ಲಿ ನಲವತ್ತು ಲಕ್ಷಕ್ಕೂ ಹೆಚ್ಚು ಮಂದಿ ಬಿಎಂಟಿಸಿ ಬಸ್‍ಗಳಲ್ಲಿ ಸಂಚರಿಸುತ್ತಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಯಾವ ಜಾತಿ, ಧರ್ಮ ಬೇಧವಿಲ್ಲದೆ ಜನರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಶಕ್ತಿ ಯೋಜನೆಯನ್ನು ವಿರೋಧ ಪಕ್ಷಗಳು ಟೀಕೆ ಮಾಡುತ್ತಾರೆ, ಟೀಕೆ ಮಾಡುವುದು ಸುಲಭ, ಅದಕ್ಕೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರ ನೀಡಬೇಕು ಎಂದು ಜನತೆಗೆ ಕರೆ ನೀಡಿದರು. +ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಲಾಭವಾಗಿದೆ, ಈ ಸಂಸ್ಥೆಗಳ ಉದ್ದೇಶ ಲಾಭ ಮಾಡುವುದಲ್ಲ, ಹಾಗೆಂದು ನಷ್ಟವಾಗಬಾರದು ಎಂದರು. ಶಕ್ತಿ ಯೋಜನೆಯಿಂದ ಪ್ರತಿ ತಿಂಗಳು ನಾಲ್ಕರಿಂದ ಐದು ಸಾವಿರ ರೂಪಾಯಿ ಉಳಿತಾಯವಾಗುತ್ತಿದೆ. ರಾಜ್ಯದ ಏಳುಕೋಟಿ ಜನರಲ್ಲಿ ನಾಲ್ಕು ಕೋಟಿ, ಮೂವತ್ತು ಲಕ್ಷ ಜನ ಪಂಚಖಾತ್ರಿ ಸೌಲಭ್ಯ ಪಡೆಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದವರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ. ಸಮಾಜದಲ್ಲಿ ಶಕ್ತಿಯಾಗಿ ಬೆಳೆಯಲು ಸಾಧ್ಯವಾಗಿದೆ ಎಂದರು. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 148 ಬಸ್ ಗಳು ಸಂಚರಿಸುತ್ತಿವೆ. ಬೆಂಗಳೂರಿನ ಎಲ್ಲಾ ಭಾಗಕ್ಕೂ ಬಸ್ ಗಳನ್ನು ಸಂಚರಿಸುವುದು ನಮ್ಮ ಆದ್ಯತೆ ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಎಲೆಕ್ಟ್ರಿಕ್ ನೀತಿ ರೂಪಿಸಿದ ಮೊದಲ ರಾಜ್ಯ ನಮ್ಮದಾಗಿದೆ, ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ದೇಶದಲ್ಲೆ ಜಾರಿಯಾಗಬೇಕು ಎಂದರು. ದುಡ್ಡು ಬ್ಲಡ್ ಸಂಚರಿಸಬೇಕು, ಹಣ ಒಂದು ಕಡೆ ಇದ್ದರೆ ಐಟಿ, ಇಡಿ, ಕಳ್ಳರು ಕಣ್ಣು ಹಾಕುತ್ತಾರೆ, ರಕ್ತವೂ ಹರಿಯದಿದ್ದರೆ ಆರೋಗ್ಯ ಕೆಡುತ್ತದೆ ಎಂದರು. ಕಾಂಗ್ರೆಸ್ ಗ್ಯಾರಂಟಿ ದೇಶಕ್ಕೆ ಮಾದರಿಯಾಗಿವೆ. ನಮ್ಮ ಗ್ಯಾರಂಟಿ ಟೀಕೆ ಮಾಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಕೂಡ ಈಗ ಮೋದಿ ಗ್ಯಾರಂಟಿ ಆರಂಭಿಸಿದ್ದಾರೆ. ನಮ್ಮನ್ನು ಅನುಸರಿಸಿದ್ದಕ್ಕೆ ಪ್ರಧಾನಿಯವರಿಗೆ ಅಭಿನಂದನೆ ಎಂದರು. +ರಾಜ್ಯ ಬಿಜೆಪಿಯಲ್ಲಿ ಮತ್ತೆ ಪಾರುಪತ್ಯ ಸಾಧಿಸಿದ ಬಿಎಸ್‍ವೈ +ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಜಿಜಿಸಿ ಮಾದರಿಯಲ್ಲಿ ಪ್ರತಿ ಕಿಲೋಮಿಟರ್ ಗೆ 41 ದರದಲ್ಲಿ ದಿನಕ್ಕೆ ಗರಿಷ್ಠ 200 ಕಿಲೋ ಮೀಟರ್ ದೂರ ಸಂಚಾರಕ್ಕೆ ಬಸ್ ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಮಾರ್ಚ್ ಕೊನೆಗೆ 925 ಬಸ್‍ಗಳು ಬರಲಿವೆ. ಈಗಾಗಲೇ ಹನ್ನೆರಡು ಮೀಟರ್ ನ ಮೂನ್ನೂರು ಬಸ್ ಓಡುತ್ತಿವೆ. ಮಾರ್ಚ್, ಏಪ್ರಿಲ್ ವೇಳೆಗೆ ವಿವಿಧ ಮಾದರಿಯ ಒಟ್ಟು 1751 ಬಸ್ ಗಳು ಸಾರಿಗೆ ಸಂಸ್ಥೆಗೆ ಸೇರ್ಪಡೆಯಾಗಲಿವೆ. ಎಲೆಕ್ಟ್ರಿಕಲ್ ಬಸ್‍ಗಳು ನವಯುಗದ ಸಾರಿಗೆ ಮಾಧ್ಯಮಗಳಾಗಲಿವೆ, ಹೈಡ್ರೋ ಬಸ್‍ಗಳ ಇಂಜಿನ್ ತಯಾರಾಗುತ್ತಿದೆ. ಮುಂದಿನ ಇಪ್ಪತ್ತು ಮೂವತ್ತು ವರ್ಷಗಳಲ್ಲಿ ಡಿಸೇಲ್ ಬಸ್‍ಗಳು ಇರುವುದಿಲ್ಲ. ಸದ್ಯಕ್ಕೆ 800 ಡಿಸೇಲ್ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದರು. +ಜನಸಂಖ್ಯೆಗೆ ಅನುಗುಣವಾಗಿ ಹತ್ತು ಸಾವಿರ ಬಸ್‍ಗಳ ಅಗತ್ಯವಿದೆ. ಪ್ರತಿ ದಿನ ಬಿಎಂಟಿಸಿಯಲ್ಲಿ ನಲವತ್ತು ಲಕ್ಷ ಜನ ಸಂಚರಿಸುತ್ತಾರೆ, ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿರುವ ಮೆಟ್ರೋದಲ್ಲಿ ಆರು ಲಕ್ಷ ಜನ ಮಾತ್ರ ಸಂಚರಿಸುತ್ತಾರೆ ಎಂದರು. ಈವರೆಗೆ ಶಕ್ತಿ ಯೋಜನೆಯಡಿ 120.80 ಕೋಟಿ ಜನ ಪ್ರಯಾಣಿಸಿದ್ದು, 2860 ಕೋಟಿ ರೂಪಾಯಿ ಆಗಿದೆ. ಜೊತೆಗೆ ಒಂಬತ್ತು ಸಾವಿರ ಹುದ್ದೆಗಳ ನೇಮಕಾತಿಗೆ ಮುಖ್ಯಮಂತ್ರಿ ಅನುಮತಿ ನೀಡಿದ್ದಾರೆ, ಫೆಬ್ರವರಿ ಮಾರ್ಚ್ ವೇಳೆಗೆ ಸಾರಿಗೆ ಸೇವೆ ಉತ್ತಮಗೊಳ್ಳಲಿದೆ. ಕೋವಿಡ್ ಗೂ ಮೊದಲೆ ರದ್ದಾಗಿದ್ದ 3900 ಷ್ಯಡ್ಯೂಲ್ ಗಳನ್ನು ಪುನರ್ ಆರಂಭಿಸಲಾಗುವುದು ಎಂದರು. +ಯುಪಿಯಲ್ಲಿ ಹಸಿರು ಹೈಡ್ರೋಜನ್ ನೀತಿ ಜಾರಿಗೆ ಯೋಗಿ ಸೂಚನೆ +ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ, ಯುವಜನಸೇವೆ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ, ಉನ್ನತಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ವಿನಯ್ ಕುಲಕರ್ಣಿ, ಮಧುಮಾದೆಗೌಡ, ಯು.ಬಿ.ವೆಂಕಟೇಶ್, ಟಿ.ಎ.ಶರವಣ, ಗೋವಿಂದರಾಜು, ನಸೀರ್ ಅಹಮದ್, ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ, ಟಾಟಾ ಸಂಸ್ಥೆ ಸಿಇಒ ಆಖೀಲ್ ಮುಖ್ಯೋಪಾದ್ಯಾಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_279_3.txt b/eesanje/url_46_279_3.txt new file mode 100644 index 0000000000000000000000000000000000000000..df20be7ad43298592adb6422239f5b749a2729c6 --- /dev/null +++ b/eesanje/url_46_279_3.txt @@ -0,0 +1,13 @@ +ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ಚಪ್ಪಡಿ ಕಲ್ಲು ಹಾಕಿದೆ : ಸಿಎಂಗೆ ಅಶೋಕ್ ತಿರುಗೇಟು +ಬೆಂಗಳೂರು, ಡಿ.26- ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ತಲೆ ಮೇಲೆ ಬರೀ ಕಲ್ಲಲ್ಲ, ಚಪ್ಪಡಿ ಕಲ್ಲು ಹಾಕುತ್ತಿರುವುದು ಕಟು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. +ಅಶೋಕ್ ಆರೋಪಕ್ಕೆ ಅಂಕಿಅಂಶಗಳ ಮೂಲಕ ನಿನ್ನೆ ಸಿದ್ದರಾಮಯ್ಯನವರು ಮಾರುತ್ತರ ನೀಡಿದ್ದರು. ಇದಕ್ಕೆ ಅಷ್ಟೇ ತೀಕ್ಷ್ಣವಾಗಿಯೇ ತಮ್ಮ ಅಕೃತ ಸಾಮಾಜಿಕ ಜಾಣತಾಣ ದಲ್ಲಿ ಸಾಲು ಸಾಲು ಪೋಸ್ಟ್ ಮಾಡಿರುವ ಅಶೋಕ್ ,ಒಂದು ಸುಳ್ಳನ್ನು ನೂರು ಬಾರಿ ಹೇಳಿ ಅದನ್ನು ಸತ್ಯ ಮಾಡುವ ಕಲೆ ತಮಗೆ ಚೆನ್ನಾಗಿ ಕರಗತವಾಗಿದೆ. ಎಷ್ಟಾದರೂ ಸುಳ್ಳೇ ಕಾಂಗ್ರೆಸ್ ಪಕ್ಷದ ಮನೆ ದೇವರಲ್ಲವೇ? ಎಂದು ಕುಹಕವಾಡಿದ್ದಾರೆ. +15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ. ಶಿಫಾರಸು ಮಾಡಿದ್ದುದು ನಿಜ. ಆದರೆ 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು. ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. +ಕೋವಿಡ್-19 ಸಾಂಕ್ರಾಮಿಕದ ನಂತರದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನಕ್ಕಾಗಿ 2020-21ನೇ ಹಣಕಾಸು ವರ್ಷದಿಂದ ಈವರೆಗೆ ಕರ್ನಾಟಕಕ್ಕೆ 6561.91 ಕೋಟಿ ರೂ. ಮೊತ್ತವನ್ನು 50 ವರ್ಷಗಳ ಬಡ್ಡಿ ರಹಿತ ಸಾಲವಾಗಿ ನೀಡಲಾಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ಬಡ್ಡಿ ಭರಿಸುತ್ತದೆ. ಇದು ಸತ್ಯವಲ್ಲವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ +ಇನ್ನು ತೆರಿಗೆ ಹಂಚಿಕೆ ವಿಷಯಕ್ಕೆ ಬಂದರೆ, 2004-14ರ ನಡುವಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕಕ್ಕೆ 81,795 ಕೋಟಿ ರೂ. ತೆರಿಗೆ ಹಂಚಿಕೆಯಾಗಿತ್ತು. ಎನ್‍ಡಿಎ ಸರ್ಕಾರದ ಅವಧಿಯಲ್ಲಿ 2014-24 (2023, ನವೆಂಬರ್ 17 ರವರೆಗೆ) 2.77 ಲಕ್ಷ ಕೋಟಿ ರೂ.ಗೂ ಹೆಚ್ಚು ಬಿಡುಗಡೆಯಾಗಿದೆ. ಅಂದರೆ ಯುಪಿಎ ಅವಗೆ ಹೋಲಿಸಿದರೆ 239% ಅಥವಾ 3.4 ಪಟ್ಟು ಹೆಚ್ಚಳವಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. +ಅನುದಾನದ ವಿಷಯಕ್ಕೆ ಬಂದರೆ, 2004-14ರ ನಡುವಿನ ಯುಪಿಎ ಸರ್ಕಾರದ ಅವಧಿಯಲ್ಲಿ ಕರ್ನಾಟಕವು 60,779 ಕೋಟಿ ರೂ. ಅನುದಾನವನ್ನು ಪಡೆದಿದ್ದರೆ, ಎನ್‍ಡಿಎ ಸರ್ಕಾರದ ಅವಧಿಯಲ್ಲಿ 2014-24ರ ನಡುವೆ (ಆರ್ಥಿಕ ವರ್ಷ 2022-23 ರವರೆಗೆ) 2.08 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ಪಡೆದಿದೆ. ಅಂದರೆ … ಅವಧಿಗೆ ಹೋಲಿಸಿದರೆ ಕರ್ನಾಟಕಕ್ಕೆ ಸಿಕ್ಕ ಕೇಂದ್ರ ಅನುದಾನ 243% ಅಥವಾ 3.4 ಪಟ್ಟು ಹೆಚ್ಚಳವಾಗಿದೆ ಎಂದು ಅಶೋಕ್ ಹೇಳಿದ್ದಾರೆ. +2009ರಿಂದ 2014ರ ಅವಯಲ್ಲಿ ಕರ್ನಾಟಕದವರೇ ಇಬ್ಬರು ರೈಲ್ವೆ ಖಾತೆ ಸಚಿವರಾಗಿದ್ದರೂ ಸಹ ಕರ್ನಾಟಕಕ್ಕೆ ಕೇವಲ 835 ಕೋಟಿ ದೊರೆತಿತ್ತು. ಅದೇ .. ಸರ್ಕಾರ ಬಂದ ಮೇಲೆ 2014-22ರ ಅವಧಿಯಲ್ಲಿ ಒಟ್ಟು 3,424 ಕೋಟಿ ಹಾಗೂ 2023-24 ಒಂದೇ ವರ್ಷದಲ್ಲಿ 7,561 ಕೋಟಿ ಅನುದಾನ ದೊರೆತಿದೆ ಎಂದು ಮಾಹಿತಿ ನೀಡಿದ್ದಾರೆ. +ಸಾಲ ಮನ್ನಾ ಆಸೆಗಾಗಿ ಬರ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ. ಕೇಂದ್ರ ಸರ್ಕಾರದ ಪ್ರಕ್ರಿಯೆ ಮುಗಿದ ಕೂಡಲೇ ರಾಜ್ಯ ಪಾಲಿನ ಪರಿಹಾರ ತಾನಾಗಿಯೇ ಬಂದೇ ಬರುತ್ತದೆ. ಆದರೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ 2000 ರೂಪಾಯಿ ಇನ್ನು ಯಾಕೆ ರೈತರನ್ನು ತಲುಪಿಲ್ಲ? ಉತ್ತರ ಕೊಡಿ ಸಿದ್ದರಾಮಯ್ಯನವರೇ ಎಂದು ತಪರಾಕಿ ಕೊಟ್ಟಿದ್ದಾರೆ. +ಬಂದೂಕು ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ +ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿಗಳಾಗಿ 12 ವರ್ಷಗಳ ಕಾಲ ಒಂದು ರಾಜ್ಯವನ್ನ ಯಶಸ್ವಿಯಾಗಿ ಮುನ್ನಡೆಸಿರುವ ಅನುಭವ ಇದೆ. ರಾಜ್ಯ ಸರ್ಕಾರಗಳ ಹಣಕಾಸಿನ ಇತಿಮಿತಿ, ಅಗತ್ಯತೆಗಳ ಬಗ್ಗೆ ಸಂಪೂರ್ಣ ಅರಿವಿದೆ, ಸಂವೇದನೆಯೂ ಇದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಪ್ರಧಾನಿ ಮೋದಿ ಅವರಿಂದ ಕರ್ನಾಟಕ ಸೇರಿದಂತೆ ಯಾವ ರಾಜ್ಯಕ್ಕೂ ಎಂದಿಗೂ ಅನ್ಯಾಯವಾಗುವುದಿಲ್ಲ ಎಂದು ಅಶೋಕ್ ತಿಳಿಸಿದ್ದಾರೆ. +ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು, 14 ಬಾರಿ ಬಜೆಟ್ ಮಂಡಿಸಿರುವ ಅನುಭವ ಇರುವ ತಾವು ಆಂಕಿ-ಅಂಶಗಳನ್ನು ಅಧ್ಯಯನ ಮಾಡಿ, ವಾಸ್ತವಾಂಶ ಅರಿತು ಮಾತನಾಡಬೇಕು ಸಿದ್ದರಾಮಯ್ಯನವರೇ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡಿ ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನ ತಮಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_279_4.txt b/eesanje/url_46_279_4.txt new file mode 100644 index 0000000000000000000000000000000000000000..f87b80b18d99f66996e37b7db978de7a72022104 --- /dev/null +++ b/eesanje/url_46_279_4.txt @@ -0,0 +1,6 @@ +ರಾಜ್ಯದಲ್ಲಿ ಪ್ರತಿ ದಿನ 5 ಸಾವಿರ ಕೊರೊನಾ ಟೆಸ್ಟ್ +ಬೆಂಗಳೂರು, ಡಿ.26- ರಾಜ್ಯದಲ್ಲಿ ಕೊರೋನಾ ಟೆಸ್ಟಿಂಗ್ ಸಂಖ್ಯೆಯನ್ನು 5 ಸಾವಿರಕ್ಕೆ ನಾಳೆಯಿಂದ ಹೆಚ್ಚಳ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಹೊಸತಳಿ ಜೆಎನ್-1 ಪತ್ತೆಯಾಗಿದ್ದು, ಅದನ್ನು ನಿಯಂತ್ರಿಸುವ ಬಗ್ಗೆ ತಜ್ಞರ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳ ಲಾವುದು ಎಂದು ತಿಳಿಸಿದರು. +ರಾಜ್ಯದಲ್ಲಿ 34 ಪಾಸಿಟೀವ್ ಕೇಸ್ ಬಂದಿರುವ ಬಗ್ಗೆ ಮಾಹಿತಿ ಇದೆ. ತಜ್ಞರ ಸಭೆಯಲ್ಲಿ ಸಲಹೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ನಾವು ಕೊರೊನಾ ಟೆಸ್ಟ್ ಹೆಚ್ಚಳ ಮಾಡುತ್ತಿದ್ದೇವೆ. ನಿನ್ನೆ 3500 ಪರೀಕ್ಷೆ ಮಾಡಿದ್ದೇವೆ ಎಂದರು. ಕೊರೊನಾ ಲಸಿಕೆ ನೀಡುವ ಬಗ್ಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು. ಮಾಸ್ಕ ಧರಿಸಿದ್ದರೆ ಒಳ್ಳೆಯದು ಎಂದು ಹೇಳಿದ್ದೇವೆ. ಆದರೆ, ಮಾಸ್ಕ ಕಡ್ಡಾಯ ಮಾಡಿಲ್ಲ. ಕೊರೋನಾ ಮಾರ್ಗಸೂಚಿಯಲ್ಲಿ ಮಾರ್ಪಡು ಮಾಡುವ ಸಾಧ್ಯತೆ ಇದ್ದರೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. +3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ +ಬೆಂಗಳೂರಿನಲ್ಲಿ ಮೂರು ಕಡೆ ಜೆನೋಮಿಕ್ ಸಿಕ್ವೇನ್ಸ್ ಲ್ಯಾಬ್‍ಗಳು ಇವೆ. ಒಂದು ಬಾರಿಗೆ 99 ಟೆಸ್ಟ್ ಮಾಡಬೇಕಾಗುತ್ತದೆ. ಇದಕ್ಕೆ ಒಮ್ಮೆಗೆ 15 ಲಕ್ಷ ರೂ. ಖರ್ಚು ಆಗಲಿದೆ. ಕೊರೊನಾ ಟೆಸ್ಟ್ïಗೆ ಅಗತ್ಯವಿರುವ ಕಿಟ್‍ಗಳು ಲಭ್ಯ ಇವೆ. ಸದ್ಯಕ್ಕೆ ಟೆಸ್ಟ್ ಪ್ರಮಾಣ ಹೆಚ್ಚಳ ಮಾಡಲಾಗುವುದು ಎಂದರು. +ರಾಜ್ಯದ ಜನರು ಕೋವಿಡ್ ಸಂಬಂಧ ಆತಂಕ ಪಡುವ ಅಗತ್ಯವಿಲ್ಲ. ಈ ಉಪತಳಿ ಅಪಾಯಕಾರಿ ಅಲ್ಲ ಎಂಬುದನ್ನು ತಜ್ಞರು ಈಗಾಗಲೇ ಹೇಳಿದ್ದಾರೆ. ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ಹರಡದಂತೆ ನಾವು ಎಚ್ಚರಿಕೆ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸ್ವಲ್ಪ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆಯಿಂದ ಕೂಡ ಈಗಾಗಲೇ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಎದುರಿಸಲು ಸನ್ನದ್ದರಾಗುವಂತೆ ಎರಡು ಮೂರು ಬಾರಿ ಸಭೆ ನಡೆಸಿ ಆಸ್ಪತ್ರೆಗಳಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು. \ No newline at end of file diff --git a/eesanje/url_46_279_5.txt b/eesanje/url_46_279_5.txt new file mode 100644 index 0000000000000000000000000000000000000000..8e720009a499a26a9add949619c8a81a01cdfbba --- /dev/null +++ b/eesanje/url_46_279_5.txt @@ -0,0 +1,7 @@ +ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ +ಬೆಂಗಳೂರು, ಡಿ.25- ಇನ್ನೂ ಮುಂದೆ ಹಿಜಾಬ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿದ್ದು, ಆ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ. ಆ ಕುರಿತಂತೆ ನಾವಿನ್ನೂ ಯೋಜನೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಯವರು ಅದಿನ್ನೂ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಿದ್ದಾರೆ ಎಂದಿದ್ದಾರೆ. ಅದು ಇನ್ನೂ ಎಲ್ಲಿದೆ ಎಂದು ಗೋತ್ತಿಲ್ಲ ಎಂದು ತೊಡವರಿಸಿದರು. +ಕೃಷಿ ಸಚಿವ ಶಿವಾನಂದ ಪಾಟೀಲ್ ಅವರ ವಿವಾದಿತ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಅವರನ್ನೇ ಕೇಳಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.ಬೆಂಗಳೂರು ನಗರಕ್ಕೆ ಸಂಬಂಧ ಪಟ್ಟಂತೆ ಗುತ್ತಿಗೆ ಆಧಾರಿತ ಶಿಕ್ಷಕರು ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿ, ಸೇವೆಯಲ್ಲಿ ಮುಂದುವರೆಸುವಂತೆ ಮನವಿ ಮಾಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಅದನ್ನು ಸುಧಾರಿಸಲು ಶಿಕ್ಷಣ ಇಲಾಖೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದೇನೆ. +ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು. ಚೆನ್ನಾಗಿ ಪಾಠ ಮಾಡುವವರನ್ನು ಪರಿಶೀಲಿಸಿ ಅವಕಾಶ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದು, ಬಡವರ ಮಕ್ಕಳು ಓದುವ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗಬೇಕಿದೆ, ಗುಣಮಟ್ಟ ಕಾಯ್ದುಕೊಳ್ಳಬೇಕು. ಅದಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೊರಗುತ್ತಿಗೆ ಆಧಾರದಲ್ಲಿ ಶಿಕ್ಷಕರನ್ನು ನಿಯೋಜಿಸುವ ಜವಾಬ್ದಾರಿಯನ್ನು ಸೆಕ್ಯೂರಿಟಿ ಏಜೆನ್ಸಿಗೆ ಹೊರ ಗುತ್ತಿಗೆ ನೀಡಬಾರದು ಎಂದು ಹೇಳಿರುವುದಾಗಿ ತಿಳಿಸಿದರು. +ಕನ್ನಡೇತರ ಭಾಷಾ ನಾಮಫಲಕಗಳನ್ನು ತೆರವು ಮಾಡುವ ಸಂಬಂಧ ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುವುದು ತಪ್ಪಲ್ಲ. ಆದರೆ ಈ ಸಂದರ್ಭದಲ್ಲಿ ಕಾನೂನು ಪಾಲನೆ ಮಾಡಬೇಕು. ದಾಳಿ ಮಾಡಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.ರಾಜ್ಯದಲ್ಲಿ ಉದ್ಯಮ ನಡೆಸುವವರಾಗಲಿ, ವ್ಯಾಪಾರ ಮಾಡುವವರಾಗಲಿ ಶೇ.60ರಷ್ಟು ಆದ್ಯತೆಯನ್ನು ಕನ್ನಡ ನಾಮಫಲಕಗಳಿಗೆ ನೀಡಬೇಕು ಎಂಬ ನಿಯಮ ಇದೆ. ಎಷ್ಟೇ ದೊಡ್ಡವರಾದರೂ ಅದನ್ನು ಪಾಲನೆ ಮಾಡಲೇಬೇಕು. ಮಾಧ್ಯಮದವರು ಕೂಡ ಕನ್ನಡ ಬಳಕೆಗೆ ಒತ್ತು ನೀಡಬೇಕು ಎಂದು ತಿಳಿಸಿದರು. +ಕಿರಿಕ್ ಪಾರ್ಟಿ : ಕಲ್ಲಿನಿಂದ ಜಜ್ಜಿ ಸ್ನೇಹಿತನ ಕೊಲೆ +ರಾಷ್ಟ್ರ ರಾಜಕಾರಣದಲ್ಲಿ ಇಂಡಿಯಾ ಮೈತ್ರಿ ಕೂಟದಲ್ಲಿ ಒಡಕು ಮೂಡುತ್ತಿದೆ ಎಂದು ಬಿಜೆಪಿಯವರು ಹೇಳುತ್ತಿರುವುದು ಆಧಾರ ರಹಿತ, ಎನ್ಡಿಎ ಮೈತ್ರಿಕೂಟದಲ್ಲೇ ಒಡಕು ಮೂಡಲಿದೆ, ಕಾದು ನೋಡಿ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಯವರು ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಎಲ್ಲರಿಗೂ ಕಾಲಮಿತಿ ನಿಗದಿ ಮಾಡಿದ್ದೇವೆ. ಕೆಲವರು ಈಗಾಗಲೇ ವರದಿ ನೀಡಿದ್ದಾರೆ, ಇನ್ನೂ ಕೆಲವರು ವರದಿ ನೀಡಬೇಕಿದೆ. ಸಚಿವರ ವರದಿ ಆಧರಿಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದರು. \ No newline at end of file diff --git a/eesanje/url_46_279_6.txt b/eesanje/url_46_279_6.txt new file mode 100644 index 0000000000000000000000000000000000000000..7c954ec016684f76bb50a5fc7c0d572f62aed927 --- /dev/null +++ b/eesanje/url_46_279_6.txt @@ -0,0 +1,14 @@ +ಆಳವಾಗಿ ಪರಿಶೀಲಿಸಿದ ನಂತರ ಹಿಜಾಬ್ ನಿಷೇಧ ವಾಪಸ್ ಕುರಿತು ನಿರ್ಧಾರ : ಜಿ.ಪರಮೇಶ್ವರ್ +ಬೆಂಗಳೂರು,ಡಿ.25- ರಾಜ್ಯದ್ಯಾಂತ ಭಾರೀ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ನಾವು ಆಳವಾಗಿ ಪರಿಶೀಲಿಸಿದ ನಂತರ ನಿರ್ಬಂಧಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ನಿಷೇಧವನ್ನು ಹಿಂಪಡೆಯುವುದಾಗಿ ಹೇಳಿದ್ದು, ಭಾರೀ ವಿವಾದವನ್ನೇ ಸೃಷ್ಟಿಸಿದೆ. +ಇದೀಗ ಹಿಜಾಬ್ ನಿಷೇಧದ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ನಾವು ಹಿಜಾಬ್ ಬಗ್ಗೆ ಯಾವುದೇ ಆದೇಶ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದರು. ನಾವು ಎಲ್ಲಾ ಆಯಮಗಳಲ್ಲಿ ಪರಿಶೀಲಿಸುತ್ತೇವೆ. ಇದನ್ನು ಆಳವಾಗಿ ಪರಿಶೀಲಿಸಿದ ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. +ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಯತ್ನಿಸುತ್ತಿದೆ. ಆದರೆ ಅದು ಕೆಲಸ ಮಾಡುವುದಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಸುವ ಆದೇಶವನ್ನು ತಮ್ಮ ಸರ್ಕಾರ ಹಿಂಪಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದ ನಂತರ ಕರ್ನಾಟಕದಲ್ಲಿ ರಾಜಕೀಯ ಸಂಘರ್ಷವೇ ಎದ್ದಿದೆ. +ಬಟ್ಟೆಯ ಆಯ್ಕೆ ಒಬ್ಬರ ಸ್ವಂತ ಹಕ್ಕು. ಹಿಜಾಬ್ ನಿಷೇಧವನ್ನು ಹಿಂತೆಗೆದುಕೊಳ್ಳಲು ನಾನು ನಿರ್ದೇಶನ ನೀಡಿದ್ದೇನೆ. ಪ್ರಧಾನಿ ಮೋದಿಯವರ ¿ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಿಜೆಪಿಯು ಬಟ್ಟೆ, ಉಡುಗೆ ಮತ್ತು ಜಾತಿಯ ಆಧಾರದ ಮೇಲೆ ಜನರು ಮತ್ತು ಸಮಾಜವನ್ನು ವಿಭಜಿಸುತ್ತಿದೆ ಎಂದು ಮೈಸೂರು ಜಿಲ್ಲೆ ನಂಜನಗೂಡಿನ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ್ದರು. +ಸಿದ್ದರಾಮಯ್ಯನವರ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮರೆಮಾಚುವ ಜತೆಗೆ ಕೇವಲ ರಾಜಕೀಯ ಲಾಭಕ್ಕಾಗಿ ಈ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದರು. +ವಿಧಾನಪರಿಷತ್‍ ವಿಪಕ್ಷ ನಾಯಕ-ಉಪನಾಯಕರನ್ನು ನೇಮಿಸಿದ ಬಿಜೆಪಿ, ಯತ್ನಾಳ್‌ಗೆ ಮತ್ತೆ ಹಿನ್ನಡೆ +ರಾಜ್ಯದಾದ್ಯಂತ ಹಿಜಾಬ್ ಅನ್ನು ನಿಷೇಸಲಾಗಿಲ್ಲ ಆದರೆ ಡ್ರೆಸ್ ಕೋಡ್ ಇರುವಲ್ಲಿ ಅನುಮತಿಸುವುದಿಲ್ಲ. ಮುಸ್ಲಿಂ ಮಹಿಳೆಯರಿಗೆ ಎಲ್ಲೆಡೆ ಹಿಜಾಬ್ ಧರಿಸಲು ಅನುಮತಿ ಇದೆ.ಹಿಜಾಬ್ ಅನ್ನು ನಿಷೇಸದಿರುವಾಗ ನಿಷೇಧವನ್ನು ತೆಗೆದುಹಾಕುವ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನಿಸಿದ್ದರು. +ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಹೊಸ ಧರ್ಮ ದಂಗಲ್ ಶುರುವಾಗುವ ಆತಂಕ ಎದುರಾಗಿದೆ. ಈ ಬೆಳವಣಿಗೆಯಿಂದ ಸದ್ಯಕ್ಕೆ ವಿವಾದವನ್ನು ತಣ್ಣಗಾಗಿಸಲು ಸಿದ್ದರಾಮಯ್ಯನವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂಬ ಮಾಹಿತಿಯೊಂದು ಲಭಿಸಿದೆ. +ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸದ್ಯಕ್ಕೆ ಯಾವುದೇ ಅಕೃತ ಆದೇಶ ಬೇಡ ಎಂದು ಸಚಿವರು ಮನವಿ ಮಾಡಿದ್ದಾರೆ. ಹಿಜಾಬ್ ನಿಷೇಧದ ಆದೇಶ ಹೊರಡಿಸಿದರೆ ಶಾಲೆಗಳಲ್ಲಿ ಕೇಸರಿ ಶಾಲ್ ಅಭಿಯಾನ ಜೋರಾಗಬಹುದು ಎಂದು ಸಿದ್ದರಾಮಯ್ಯ ಸಂಪುಟ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. +ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದರೂ ಏನೇ ಆದರೂ ನಮಗಾಗುವ ರಾಜಕೀಯ ಲಾಭ ಇಷ್ಟೆ. ಅದಕ್ಕೆ ಪರ್ಯಾಯವಾಗಿ ಆದೇಶ ಹೊರಡಿಸಿದರೆ ಬಿಜೆಪಿಗೆ ಆಗುವ ಲಾಭವೇ ಹೆಚ್ಚಾಗುತ್ತದೆ. ಹೀಗಾಗಿ ಸದ್ಯಕ್ಕೆ ಯಾವ ಆದೇಶವೂ ಬೇಡ, ಯಾವುದೇ ಘೋಷಣೆ ಬೇಡ ಎಂದು ಸಚಿವರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. +ಹಿಜಬ್ ನಿಷೇಧ ಆದೇಶ ವಾಪಸ್ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಮಾಡಿದ್ದರು. ಹೀಗಾಗಿ ಅಕೃತ ಆದೇಶ ಇದುವರೆಗೂ ಮಾಡಿಲ್ಲ, ಆದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಈ ರಿಸ್ಕ್ ಬೇಡ ಎಂಬ ಒತ್ತಡ ತರತೊಡಗಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಘೋಷಣೆ ನಂತರವೂ ಅಧಿಕೃತ ಆದೇಶಕ್ಕೆ ಸ್ವತ: ಸಂಪುಟ ಸಹುದ್ಯೋಗಿಗಳಿಂದಲೇ ವಿರೋಧ ವ್ಯಕ್ತವಾಗತೊಡಗಿದೆ ಎನ್ನಲಾಗಿದೆ. +ಫೆಬ್ರವರಿ 2022ರಲ್ಲಿ, ರಾಜ್ಯದ ಉಡುಪಿ ಜಿಲ್ಲೆಯ ಸರ್ಕಾರಿ ಕಾಲೇಜು ತರಗತಿಯೊಳಗೆ ಹಿಜಾಬ್ ಅನ್ನು ನಿಷೇಸಿತು ಮತ್ತು ಅನೇಕ ಇತರ ಸಂಸ್ಥೆಗಳು ಇದನ್ನು ಅನುಸರಿಸಿದವು. ನಂತರ ಆಗಿನ ಬಸವರಾಜ ಬೊಮ್ಮಾಯಿ ಸರ್ಕಾರವು ಕ್ಯಾಂಪಸ್ಗಳಲ್ಲಿ ಹಿಜಾಬ್ ಅನ್ನು ನಿಷೇಸುವ ಆದೇಶವನ್ನು ಹೊರಡಿಸಿತು, ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಉಡುಪುಗಳನ್ನು ಅನುಮತಿಸಲಾಗುವುದಿಲ್ಲ ಎಂದು ಹೇಳಿದೆ. +ಈ ಆದೇಶವು ಅನೇಕ ಪ್ರತಿಭಟನೆಗಳು ಮತ್ತು ಅಶಾಂತಿಗೆ ಕಾರಣವಾಯಿತು, ಇದು ರಾಜ್ಯದಲ್ಲಿ ಸಂಸ್ಥೆಗಳನ್ನು ಮುಚ್ಚಲು ಕಾರಣವಾಯಿತು. ವಿಷಯವು ಸುಪ್ರೀಂ ಕೋರ್ಟ್ಗೆ ತಲುಪಿತು, ಅದು ಕಳೆದ ವರ್ಷ ಅಕ್ಟೋಬರ್ 13ರಂದು ವಿಭಜನೆಯ ತೀರ್ಪು ಪ್ರಕಟಿಸಿತು. ವಿಭಾಗೀಯ ಪೀಠವು ಈ ವಿಷಯವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸಲು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿತು ಮತ್ತು ಅದು ಉನ್ನತ ನ್ಯಾಯಾಲಯದ ಮುಂದೆ ಹಿಜಾಬ್ ಕೇಸು ಇನ್ನೂ ಬಾಕಿ ಉಳಿದಿದೆ. \ No newline at end of file diff --git a/eesanje/url_46_279_7.txt b/eesanje/url_46_279_7.txt new file mode 100644 index 0000000000000000000000000000000000000000..6c0ca43437fb0989c312dcacbf6621f3d12026f3 --- /dev/null +++ b/eesanje/url_46_279_7.txt @@ -0,0 +1,9 @@ +ವಿಧಾನಪರಿಷತ್‍ ವಿಪಕ್ಷ ನಾಯಕ-ಉಪನಾಯಕರನ್ನು ನೇಮಿಸಿದ ಬಿಜೆಪಿ, ಯತ್ನಾಳ್‌ಗೆ ಮತ್ತೆ ಹಿನ್ನಡೆ +ಬೆಂಗಳೂರು: ಕಳೆದ ಹತ್ತು ತಿಂಗಳಿನಿಂದ ಖಾಲಿ ಇದ್ದ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕರಾಗಿ ಮಾಜಿ ಸಚಿವ ಹಿರಿಯ ಮುಖಂಡ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಪರಿಷತ್‍ನ ಉಪನಾಯಕರಾಗಿ ಅಚ್ಚರಿ ಎಂಬಂತೆ ಕಲ್ಬುರ್ಗಿಯ ಲಂಬಾಣಿ ಸಮುದಾಯದ ಸುನೀಲ್ ವಲ್ಲಾಪುರೆ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸೋಮವಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. +ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದರು. ಸದಸ್ಯರಾದ ಶಶಿಲ್ ನಮೋಶಿ, ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿ ರಮೇಶ್, ನಾರಾಯಣಸ್ವಾಮಿ , ರಘುನಾಥ್ ಮಲ್ಕಾಪುರೆ ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿದ್ದವು. ಅಂತಿಮವಾಗಿ ಸಂಘ ಪರಿವಾರದ ಹಿನ್ನಲೆ, ಕರಾವಳಿಯ ಹಿರಿಯ ನಾಯಕರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ಅವರು ಪ್ರತಿಪಕ್ಷದ ನಾಯಕರಾಗಿ ಕೆಲಸ ಮಾಡಿದ ಅನುಭವವಿದೆ. +ವಾಹನ ಸವಾರರಿಗೆ ಗುಡ್ ನ್ಯೂಸ್, ಫಾಸ್ಟ್ ಟ್ಯಾಗ್ ಕಿರಿಕಿರಿಗೆ ಮುಕ್ತಿ +ವಿಶೇಷವೆಂದರೆ ಇದರ ಆಯ್ಕೆಯಲ್ಲೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರಭಾವ ಕೆಲಸ ಮಾಡಿರುವುದು ಗೋಚರಿಸಿದೆ. ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಎನ್.ರವಿಕುಮಾರ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಈ ಮೂವರು ಕೂಡ ಯಡಿಯೂರಪ್ಪನವರ ಆಪ್ತರು. +ಯತ್ನಾಳ್‍ಗೆ ಹಿನ್ನಡೆ:ಸ್ವಪಕ್ಷದವರ ವಿರುದ್ದವೇ ಗುಡುಗುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಮತ್ತೆ ಭಾರೀ ಹಿನ್ನಡೆಯಾಗಿದೆ. ಈ ಹಿಂದೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟು ನಿರಾಶೆಯಾಗಿದ್ದ ಅವರಿಗೆ ಮತ್ತೆ ಮುಖಭಂಗವಾಗಿದೆ. +ಏಕೆಂದರೆ ಯತ್ನಾಳ್ ಆಪ್ತವಲಯದಲ್ಲ ಗುರುತಿಸಿಕೊಂಡಿದ್ದ ಪಂಚಮಸಾಲಿ ಸಮುದಾಯದ ಯುವಕ ಅರವಿಂದ್ ಬೆಲ್ಲದ್ ಅವರನ್ನು ವಿಧಾನಸಭೆಯ ಉಪನಾಯಕರನ್ನಾಗಿ ಪಕ್ಷ ನೇಮಿಸಿದೆ.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಹೋರಾಟ ನಡೆಸುತ್ತಿರುವಾಗ ಯತ್ನಾಳ್ ಜೊತೆಗೆ ಬೆಲ್ಲದ್ ಕೂಡ ಕೈ ಜೋಡಿಸಿದ್ದರು. ಇದೀಗ ಪಕ್ಷವು ಯತ್ನಾಳ್‍ಗೆ ಠಕ್ಕರ್ ಕೊಡಲೆಂದೇ ಕಿತ್ತೂರು ಕರ್ನಾಟಕಕ್ಕೆ ಸೇರಿದ ಬೆಲ್ಲದ್ ಅವರನ್ನು ಉಪನಾಯಕರನ್ನಾಗಿ ನೇಮಿಸಿದೆ. +ಇನ್ನು ಮುಖ್ಯ ಸಚೇತಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶಾಸಕರಾದ ಸತೀಶ್ ರೆಡ್ಡಿ, ಎಸ್.ಆರ್.ವಿಶ್ವನಾಥ್ ಮತ್ತಿತರರಿಗೆ ತೀವ್ರ ನಿರಾಸೆಯಾಗಿದೆ. ಇಲ್ಲಿಯೂ ಕೂಡ ಅಚ್ಚರಿ ಎಂಬಂತೆ ಶಾಸಕ ದೊಡ್ಡನಗೌಡರ್ ಪಾಟಿಲ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. +ಎರಡು ದಿನಗಳ ಹಿಂದಷ್ಟೇ ಪಕ್ಷದ ಪದಾಕಾರಿಗಳ ಆಯ್ಕೆಯಲ್ಲಿ ಮೇಲುಗೈ ಸಾಸಿದ್ದ ಯಡಿಯೂರಪ್ಪ ಇದೀಗ ಪ್ರತಿಪಕ್ಷದ ನಾಯಕ, ಉಪನಾಯಕರ ಆಯ್ಕೆಯಲ್ಲಿ ತಮ್ಮ ಹಿಡಿತವನ್ನು ಕಾಯ್ದುಕೊಂಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಯ್ಕೆಯಲ್ಲೂ ಯಡಿಯೂರಪ್ಪ ಪ್ರಭಾವ ಸ್ಪಷ್ಟವಾಗಿತ್ತು. \ No newline at end of file diff --git a/eesanje/url_46_279_8.txt b/eesanje/url_46_279_8.txt new file mode 100644 index 0000000000000000000000000000000000000000..70806fd181b35f240b17fe631985fc9768e5d467 --- /dev/null +++ b/eesanje/url_46_279_8.txt @@ -0,0 +1,7 @@ +ಕಾಂಗ್ರೆಸ್‍ಗೆ ತೀವ್ರ ಮುಜುಗರವನ್ನುಂಟುಮಾಡಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ +ಬೆಂಗಳೂರು,ಡಿ.25- ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಕಾಂಗ್ರೆಸ್‍ಗೆ ತೀವ್ರ ಮುಜುಗರ ಉಂಟು ಮಾಡಿದೆ. ಪ್ರತಿ ವರ್ಷ ಬರಗಾಲ ಬರಲಿ, ಸರ್ಕಾರ ಸಾಲಮನ್ನಾ ಮಾಡಲಿ ಎಂಬುದು ರೈತರ ಬಯಕೆಯಾಗಿದೆ ಎಂದು ಹೇಳಿರುವುದು ವಿರೋಧ ಪಕ್ಷದವರಷ್ಟೇ ಅಲ್ಲ ರೈತರ ಕೆಂಗಣ್ಣಿಗೂ ಗುರಿಯಾಗಿದೆ. +ಸರ್ಕಾರದ ಸೌಲಭ್ಯಗಳ ಬಗ್ಗೆ ಮಾತನಾಡುವ ಬದಲು ಉದ್ದಟತನದಿಂದ ಮಾತನಾಡುವ ಮೂಲಕ ಶಿವಾನಂದ ಪಾಟೀಲ್ ದುಡಿಯುವ ವರ್ಗವನ್ನು ಅಪಮಾನಿಸಿದ್ದಾರೆ ಎಂಬ ಆಕ್ರೋಶ ಕೇಳಿಬಂದಿದೆ. ಸ್ವಪಕ್ಷೀಯರಲ್ಲಿ ಸಚಿವರ ಹೇಳಿಕೆ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ನಾನೇ ಹೈಕಮಾಂಡ್. ಚುನಾವಣೆ ಗೆಲ್ಲಲು ನನಗೆ ಯಾರ ನೆರವು ಬೇಕಿಲ್ಲ ಎಂದು ವಿಧಾನಸಭೆ ಚುನಾವಣೆಯ ಮೊದಲೇ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದರು. +ಪ್ರತಿ ಬಾರಿಯೂ ಶಿವಾನಂದ ಪಾಟೀಲ್ ತಮ್ಮದೇ ಆದ ಶೈಲಿಯಲ್ಲಿ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಕಂಡುಬರುತ್ತಲೇ ಇದೆ. ಈ ಬಾರಿ ರೈತ ಸಮುದಾಯವನ್ನು ಕೆಣಕುವಂತಹ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮ ಆಪ್ತನಾಗಿರುವ ಶಿವಾನಂದ ಪಾಟೀಲ್, ಪಕ್ಷದ ಸಂಘಟನೆ, ಸಭೆಸಮಾರಂಭಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. +ಸಾಲುಸಾಲು ರಜೆ ಹಿನ್ನೆಲೆಯಲ್ಲಿ ತುಂಬಿತುಳುಕುತ್ತಿವೆ ರಾಜ್ಯದ ಪ್ರವಾಸಿ ತಾಣಗಳು +ಈ ಮೊದಲು ಸಚಿವ ಸ್ಥಾನ ಸಿಗದೆ ಇದ್ದಾಗ ಭಿನ್ನಮತೀಯ ಹೇಳಿಕೆಗಳನ್ನು ನೀಡುತ್ತಲೇ ಮುಜುಗರ ಉಂಟು ಮಾಡಿದರು. ಸಚಿವ ಸ್ಥಾನ ಸಿಕ್ಕ ಬಳಿಕವೂ ಇಲಾಖೆಯ ಕೆಲಸ ಮಾಡಿದ್ದಕ್ಕಿಂತ ಹೆಚ್ಚಾಗಿ ಮುಜುಗರದ ಸನ್ನಿವೇಶ ಸೃಷ್ಟಿಸುವುದರಲ್ಲೇ ಶಿವಾನಂದ ಪಾಟೀಲ್ ಹೆಚ್ಚು ಸುದ್ದಿಯಲ್ಲಿದ್ದಾರೆ. +ಕಾಂಗ್ರೆಸ್‍ನ ಯಾವ ನಾಯಕರ ಮಾತಿಗೂ ಕಿಮ್ಮತ್ತಿನ ಬೆಲೆ ನೀಡದೆ ತಾವು ನಡೆದಿದ್ದೇ ದಾರಿ ಎಂಬ ಧೋರಣೆಯನ್ನು ರಾಜಕೀಯ ಮಾಡಿಕೊಂಡು ಬಂದಿರುವ ಪಾಟೀಲ್‍ರನ್ನು ಸಂಪುಟದಿಂದ ಕೈಬಿಟ್ಟು ಸಕ್ರಿಯವಾಗಿ ಕೆಲಸ ಮಾಡುವವರನ್ನು ಸೇರಿಸಿಕೊಳ್ಳಬೇಕೆಂಬ ಬೇಡಿಕೆ ಹಲವು ದಿನಗಳಿಂದಲೂ ಕೇಳಿ ಬರುತ್ತಲೇ ಇದೆ. ಆದರೆ ಅವರನ್ನು ಕೈಬಿಡುವುದರಿಂದ ಲಿಂಗಾಯಿತ ಸಮುದಾಯದ ಕೆಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರು ಅನಿವಾರ್ಯವಾಗಿ ಸಹಿಸಿಕೊಳ್ಳುವಂತಾಗಿದೆ. \ No newline at end of file diff --git a/eesanje/url_46_279_9.txt b/eesanje/url_46_279_9.txt new file mode 100644 index 0000000000000000000000000000000000000000..679a69f36fe8980719c8247de69cd82b068d0b10 --- /dev/null +++ b/eesanje/url_46_279_9.txt @@ -0,0 +1,8 @@ +ಸಾಲುಸಾಲು ರಜೆ ಹಿನ್ನೆಲೆಯಲ್ಲಿ ತುಂಬಿತುಳುಕುತ್ತಿವೆ ರಾಜ್ಯದ ಪ್ರವಾಸಿ ತಾಣಗಳು +ಬೆಂಗಳೂರು,ಡಿ.25- ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿವೆ. ಮೂರು ದಿನಗಳ ಸರಣಿ ರಜೆ ಪ್ರವಾಸಕ್ಕೆ ಪ್ರೇರೇಪಣೆ ನೀಡಿದರೆ ಸಂಭವನೀಯ ಕೋವಿಡ್ ಸೋಂಕಿನ ಆತಂಕವು ಮತ್ತೊಂದು ಕಾರಣವಾಗಿದೆ. +ಇತ್ತೀಚೆಗೆ ಜೆಎನ್1 ಉಪತಳಿ ಆಧಾರಿತ ಕೋವಿಡ್ ಸೋಂಕು ನಿಧನವಾಗಿ ಏರಿಕೆ ಕಾಣುತ್ತಿದೆ. ಸದ್ಯಕ್ಕೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಸಿಲ್ಲವಾದರೂ ಪರಿಸ್ಥಿತಿ ಹೀಗೆ ಮುಂದುವರೆದರೆ ನಿರ್ಬಂಧಗಳು ಜಾರಿಯಾಗುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ಕಡಿವಾಣ ಬೀಳಲಿದೆ ಎಂಬ ಆತಂಕ ಮನೆ ಮಾಡಿದೆ. ಹೀಗಾಗಿ ಕ್ರಿಸ್‍ಮಸ್ ಹಾಗೂ ರಜೆಯ ಅವಕಾಶಗಳನ್ನು ಬಳಸಿಕೊಂಡು ಪ್ರವಾಸಿಗರು ಪ್ರಮುಖ ತಾಣಗಳಿಗೆ ದಾಂಗುಡಿ ಇಡುತ್ತಿದ್ದಾರೆ. +ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿಯಂತಹ ಹಸಿರು ತಾಣಗಳು ಮತ್ತು ಆಕರ್ಷಣೀಯ ಪ್ರವಾಸಿ ಕೇಂದ್ರಗಳು ಹೆಚ್ಚು ಜನ ಆಕರ್ಷಣೀಯ ಬಿಂದುಗಳಾಗಿವೆ. ಮೈಸೂರು ಮೃಗಾಲಯಕ್ಕೆ ನಿನ್ನೆ ಒಂದೇ ದಿನ 40 ಸಾವಿರ ಪ್ರವಾಸಿಗರು ಭೇಟಿ ನೀಡುವ ಮೂಲಕ ದಾಖಲೆ ನಿರ್ಮಾಣವಾಗಿದೆ. +ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್ +ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆ ಹೋಟೆಲ್, ರೆಸ್ಟೋರೆಂಟ್‍ಗಳು ತುಂಬಿ ತುಳುಕುತ್ತಿವೆ. ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ಏರಿಕೆ ಮಾಡಿದರೂ ಕೂಡ ತಲೆ ಕೆಡಿಸಿಕೊಳ್ಳದೆ ಪ್ರವಾಸಿಗರು ಗುಳೇ ಹೋದಂತೆ ಸಾಲು ಸಾಲು ಪ್ರಯಾಣ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗದ ಬಿಜಾಪುರ, ಉತ್ತರಕನ್ನಡ, ಬೆಳಗಾವಿ, ಕಲಬುರ್ಗಿ, ಚಿತ್ರದುರ್ಗದಂತಹ ಐತಿಹಾಸಿಕ ಪ್ರವಾಸಿ ಕೇಂದ್ರಗಳಿಗೂ ಕೂಡ ಇದರ ಭೇಟಿ ನೀಡುವ ಪ್ರಮಾಣ ಹೆಚ್ಚಾಗಿದೆ. +ಈ ಹಿಂದೆ 2019ರಿಂದ ಸುಮಾರು ಎರಡುಮೂರು ವರ್ಷಗಳ ಕಾಲ ಕೋವಿಡ್‍ನಿಂದಾಗಿ ನಿರ್ಬಂಧಗಳು ಜಾರಿಯಾಗಿ ಪ್ರವಾಸೋದ್ಯಮ ಪೆಟ್ಟು ತಿಂದಿತ್ತು. 2022ರಲ್ಲಿ ನಿರ್ಬಂಧಗಳು ಸಡಿಲವಾಗಿದ್ದವು. ಕೋವಿಡ್ ಯುಗಾಂತ್ಯವಾಯಿತು ನಿರ್ಬಂಧಗಳು ಇರುವುದಿಲ್ಲ ಎಂಬ ನಿರೀಕ್ಷೆ ಇದ್ದಾಗಲೇ ಮತ್ತೊಮ್ಮೆ ಕೊರೋನ ಸೋಂಕು ಒಕ್ಕರಿಸಿದೆ. +ರಾಜ್ಯ ಸರ್ಕಾರ ಸದ್ಯಕ್ಕೆ ಯಾವುದೇ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿದೆ. ಆದರೆ ಪರಿಸ್ಥಿತಿ ಹೀಗೆ ಮುಂದುವರೆದು ವೈದ್ಯಕೀಯ ವ್ಯವಸ್ಥೆ ಮೇಲೆ ಒತ್ತಡ ಹೆಚ್ಚಾದರೆ ಸೋಂಕು ನಿಯಂತ್ರಣಕ್ಕೆ ನಿರ್ಬಂಧ ವಿಸುವುದು ಅನಿವಾರ್ಯ ಎಂದು ಹೇಳಲಾಗುತ್ತಿದೆ. ಸಾಧ್ಯ-ಸಾಧ್ಯತೆಗಳ ಹಿನ್ನಲೆಯಲ್ಲಿ ಜನ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ಹಾತೊರೆದಂತೆ ಕಂಡುಬರುತ್ತಿದೆ. \ No newline at end of file diff --git a/eesanje/url_46_27_1.txt b/eesanje/url_46_27_1.txt new file mode 100644 index 0000000000000000000000000000000000000000..fe43611b679db6416aaf26c2be4ddd7133d6bd4f --- /dev/null +++ b/eesanje/url_46_27_1.txt @@ -0,0 +1,8 @@ +ಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ನೀಡಿ : ಬಿ.ವೈವಿಜಯೇಂದ್ರ + : +ಬೆಂಗಳೂರು,ಸೆ.3-ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಸರ್ಕಾರವೇ ನಿಮ್ಮ ಧರ್ಮಪತ್ನಿ (ಪಾರ್ವತಿ) ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ, ಗೌರವ ಉಳಿಸಿಕೊಳ್ಳಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈವಿಜಯೇಂದ್ರ ಒತ್ತಾಯಿಸಿದ್ದಾರೆ. +ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ವಿರುದ್ದ ಪೋಸ್ಟ್‌ ಮಾಡಿರುವ ಅವರು, ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ. +ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್‌‍ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. +ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು…../XSArP1TxXt +ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ. ಟಿ.ದಿನೇಶ್‌ ಕುಮಾರ್‌ರನ್ನು ಅಮಾನತುಗೊಳಿಸಲಾಗಿದೆ. +ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಇದು ಏನು ಹೇಳುತ್ತದೆ ಎಂದರೆ ಶೇ 50:50 ರ ಅನುಪಾತದಲ್ಲಿ ಪೂರ್ವನ್ವಯವಾಗಿ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯ ಮಾಡಲಾಗಿದೆ ಎಂದು ವಿಜಯೇಂದ್ರ ಸಂಶಯ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_27_10.txt b/eesanje/url_46_27_10.txt new file mode 100644 index 0000000000000000000000000000000000000000..cb672db0cc9b6aca493c16c0353ccaedc058fbd2 --- /dev/null +++ b/eesanje/url_46_27_10.txt @@ -0,0 +1,8 @@ +ಸಚಿವರಾದ ಎಂ.ಬಿ.ಪಾಟೀಲ್‌ ಮತ್ತು ಪ್ರಿಯಾಂಕ ಖರ್ಗೆಗೆ ಕಾನೂನಿನ ಸಂಕಷ್ಟ + +ಬೆಂಗಳೂರು,ಸೆ.2-ಮುಡಾ ಅಕ್ರಮ ನಿವೇಶನ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಡೋಲಾಯಮಾನವಾಗಿರುವಾಗಲೇ ಇದೀಗ ಇಬ್ಬರು ಸಚಿವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. +ಕಾನೂನು ಬಾಹಿರವಾಗಿ ಕೆಐಡಿಬಿಯಿಂದ ಜಮೀನು ಪಡೆದ ಹಾಗೂ ಕಾನೂನು ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಎಂ.ಬಿ.ಪಾಟೀಲ್‌ ಅವರುಗಳ ಪ್ರಕರಣಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. +ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಈ ಇಬ್ಬರು ಸಚಿವರ ಮೇಲೆ ಕೇಳಿಬಂದಿರುವ ಆರೋಪಗಳ ಕುರಿತು ಸ್ಪಷ್ಟನೆ ನೀಡಬೇಕೆಂದು ಸೂಚಿಸಿದ್ದಾರೆ. +ವಿಶೇಷವೆಂದರೆ ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೊದಲು ಸರ್ಕಾರದಿಂದ ರಾಜ್ಯಪಾಲರು ಉತ್ತರ ಬಯಸಿದ್ದರು. +ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಳ್ಳಿ ಎಂಬುವರು ಸಚಿವರಾದ ಪ್ರಿಯಾಂಕ ಖರ್ಗೆ ಮತ್ತು ಎಂ.ಬಿ.ಪಾಟೀಲ್‌ ವಿರುದ್ಧ ನಿಯಮ ಉಲ್ಲಂಘಿಸಿ ಕಾನೂನು ಉಲ್ಲಂಘನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ. +ಈ ಇಬ್ಬರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ರ ಸೆಕ್ಷನ್‌ 17ಎ ಅಡಿ ದೂರು ದಾಖಲಿಸಲು ಮನವಿ ಮಾಡಿದ್ದಾರೆ. ಹೀಗಾಗಿ ಸರ್ಕಾರ ವಿರುದ್ಧ ಉತ್ತರ ಬಯಸುತ್ತೇನೆ ಎಂದು ರಾಜ್ಯಪಾಲರು ಪತ್ರದಲ್ಲಿ ಕೋರಿದ್ದಾರೆ. \ No newline at end of file diff --git a/eesanje/url_46_27_11.txt b/eesanje/url_46_27_11.txt new file mode 100644 index 0000000000000000000000000000000000000000..7726ee90989353d2f387cbb4a48260f376c654f4 --- /dev/null +++ b/eesanje/url_46_27_11.txt @@ -0,0 +1,9 @@ +ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ ವಿಶೇಷ ಬಸ್‌‍ ವ್ಯವಸ್ಥೆ + - , +ಹುಬ್ಬಳ್ಳಿ,ಸೆ.2- ಗೌರಿ– ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಸೆ.5 ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. +ಈ ಬಾರಿ ಗೌರಿ-ಗಣೇಶ ಹಬ್ಬ ವಾರಾಂತ್ಯದಲ್ಲಿ ಬಂದಿದ್ದು ಸಾರ್ವಜನಿಕರು ಅದರಲ್ಲೂ ಪ್ರಮುಖವಾಗಿ ನೌಕರರಿಗೆ ಸಂಭ್ರಮ ಹೆಚ್ಚಿಸಿದೆ. ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ.7ರಂದು ಶನಿವಾರ ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. +ಹಬ್ಬದ ಆಚರಣೆಗಾಗಿ ಬೆಂಗಳೂರು, ಮಂಗಳೂರು, ಪುಣೆ, ಮುಂಬೈ, ಗೋವಾ ಮತ್ತಿತರ ಪ್ರಮುಖ ಊರುಗಳಲ್ಲಿ ನೆಲೆಸಿರುವ ಹಲವರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಸೆಪ್ಟೆಂಬರ್‌ 5ರಿಂದ 10ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. +ಅದಕ್ಕಾಗಿ ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್‌, ನಾನ್‌ ಎಸಿ ಸ್ಲೀಪರ್‌, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್‌‍ಗಳನ್ನು ನಿಯೋಜಿಸಲಾಗಿದೆ. +ಹಬ್ಬದ ಆಚರಣೆಗಾಗಿ ಆಗಮಿಸುವವರ ಅನುಕೂಲಕ್ಕಾಗಿ ಸೆ.5 ಮತ್ತು 6ರಂದು ಬೆಂಗಳೂರು, ಮಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್‌‍ ವ್ಯವಸ್ಥೆ ಮಾಡಲಾಗಿದೆ. +ಅದೇ ರೀತಿ ಹಬ್ಬದ ರಜೆ ಮುಗಿಸಿಕೊಂಡು ತಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಸೆ.8ರಂದು ರವಿವಾರ ಹಾಗೂ 9ರಂದು ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ. +ಸೆ.5ರಿಂದ 10ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಅಕ್ಕಪಕ್ಕದ ಜಿಲ್ಲೆಗಳ ಪ್ರಮುಖ ಸ್ಥಳಗಳ ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಜನರ ಓಡಾಟ ನಿರೀಕ್ಷಿಸಲಾಗಿದೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ರಾಮನಗೌಡರ ತಿಳಿಸಿದ್ದಾರೆ. \ No newline at end of file diff --git a/eesanje/url_46_27_12.txt b/eesanje/url_46_27_12.txt new file mode 100644 index 0000000000000000000000000000000000000000..88692b54ee29bdd56f79aa8dcb1e88a427c27ca6 --- /dev/null +++ b/eesanje/url_46_27_12.txt @@ -0,0 +1,10 @@ +ಪೋಕ್ಸೋ ಪ್ರಕರಣಕ್ಕೆ ಮರುಜೀವ : ಮಾಜಿ ಸಿಎಂ ಬಿಎಸ್ವೈಗೆ ಸಂಕಷ್ಟ +' +ಬೆಂಗಳೂರು,ಆ.2-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರಿಗೆ ಮತ್ತೊಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಇವರ ವಿರುದ್ಧ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಮತ್ತೊಮೆ ಮರುಜೀವ ಪಡೆದಿದೆ. +ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ. +ರಾಜ್ಯ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್‌‍ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ. +ಏನಿದು ಪ್ರಕರಣ?:17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್‌ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದರು. +ಆದರೆ ಅಚ್ಚರಿಯ ಸಂಗತಿ ಎಂದರೆ ಬಿಎಸ್‌‍ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್‌ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್‌ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು. +ತಪಾಸಣೆ ವೇಳೆ ಸ್ಯಾಚುರೇಷನ್‌ ಲೇವೆಲ್‌ ಲೋ ಆಗಿತ್ತು. ಕೂಡಲೇ ವೈದ್ಯರಿಂದ ಚಿಕಿತ್ಸೆ ಆರಂಭಿಸಲಾಗಿತ್ತು. ಅಲ್ಲದೆ ವೆಂಟಿಲೇಟರ್‌ಗೆ ಶಿಫ್‌್ಟ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅಷ್ಟೊತ್ತಿಗೆ ಮೋಷನ್‌ ಹೋಗಬೇಕು ಎಂದು ದೂರುದಾರೆ ಮಮತ ಹೇಳಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ ಎಂದು ನ್ಯಾನೋ ಆಸ್ಪತ್ರೆ ಮೂಲಗಳು ತಿಳಿಸಿದ್ದವು. +ಪೋಕ್ಸೋ ಎಫ್‌ಐಆರ್‌ನಲ್ಲಿ ಏನಿದೆ?:ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಕಳೆದ ಫೆಬ್ರವರಿ 2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ. ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಿದ್ದರು. +ಈ ವೇಳೆ ಯಡಿಯೂರಪ್ಪ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು. ಬಳಿಕ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_27_2.txt b/eesanje/url_46_27_2.txt new file mode 100644 index 0000000000000000000000000000000000000000..9fc479faac1ebf5877f48b3b9d2243cafde14055 --- /dev/null +++ b/eesanje/url_46_27_2.txt @@ -0,0 +1,8 @@ +ಇನ್ನೆರಡು ದಿನದಲ್ಲಿ ರೇಣುಕಾಸ್ವಾಮಿ ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಕೆ + +ಬೆಂಗಳೂರು, ಸೆ.2-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಈ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಗೌಡ ಸೇರಿದಂತೆ 17ಮಂದಿಯನ್ನು ಈಗಾಗಲೇ ಬಂಧಿಸಿದ್ದು, ಅವರೆಲ್ಲರೂ ಜೈಲಿನಲ್ಲಿದ್ದಾರೆ. +ಕೊಲೆ ಪ್ರಕರಣದ ತನಿಖೆ ಮುಕ್ತಾಯದ ಹಂತದಲ್ಲಿದ್ದು, ತನಿಖಾಧಿಕಾರಿಗಳು 4,500ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟನ್ನು ಸಿದ್ಧ ಮಾಡಿಕೊಂಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿಜಯನಗರ ಉಪವಿಭಾಗದ ಎಸಿಪಿ ಚಂದನ್‌ ಅವರಿಗೆ ತನಿಖೆಗೆ ವಹಿಸಲಾಗಿತ್ತು. ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್‌ ಅವರ ನೇತೃತ್ವದಲ್ಲಿ ತನಿಖೆ ಮುಂದುವರೆದಿತ್ತು. +ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಎರಡು ಬಾರಿ ಭೇಟಿ ನೀಡಿ, ಯಾವ ರೀತಿ ತನಿಖೆ ಮಾಡಬೇಕು, ಯಾವ ರೀತಿ ದಾಖಲೆಗಳನ್ನು ಸಂಗ್ರಹಿಸಬೇಕು ಎಂಬ ಇತ್ಯಾದಿ ಸಲಹೆ ಸೂಚನೆಗಳನ್ನು ನೀಡಿದ್ದರು. +ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ಸ್ಥಳ, ಕೊಲೆಯಾದ ಸ್ಥಳ, ಅವರನ್ನು ಕರೆತಂದ ಮಾರ್ಗಗಳಲ್ಲಿನ ರಸ್ತೆಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳ ಮಾಹಿತಿ, ಕೊಲೆಗೆ ಬಳಸಿದ ವಸ್ತುಗಳು, ಆರೋಪಿಗಳ ಮೊಬೈಲ್‌ಗಳಲ್ಲಿರುವ ಮಾಹಿತಿ, ಬೆಂಗಳೂರು, ಹೈದರಾಬಾದ್‌ನ ಎಫ್‌ಎಸ್‌‍ಎಲ್‌ನಿಂದ ತರಿಸಿಕೊಂಡಿರುವ ವರದಿಗಳು, ಆರ್‌ಟಿಓ ಅಧಿಕಾರಿಗಳಿಂದ ಸಂಗ್ರಹಿಸಿರುವ ಮಾಹಿತಿಗಳನ್ನು ಹಾಗೂ ಇನ್ನಿತರ ಸಾಕ್ಷ್ಯಗಳನ್ನು ಸಹ ಚಾರ್ಜ್‌ಶೀಟ್‌ನಲ್ಲಿ ದಾಖಲಿಸಲಾಗಿದೆ. +ಈ ಪ್ರಕರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿಗಳು ಸೇರಿದಂತೆ 240ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಪಡೆದು ಚಾರ್ಜ್‌ ಶೀಟ್‌ನಲ್ಲಿ ದಾಖಲಿಸಲಾಗಿದೆ.ಕೊಲೆ ಸಂದರ್ಭದಲ್ಲಿ ಪೊಲೀಸರಿಗೆ ದೊರೆತ ನಾಲ್ಕು ಪ್ರಮುಖ ಸಾಕ್ಷ್ಯಗಳಿಂದ ದರ್ಶನ್‌ ಅಂಡ್‌ ಗ್ಯಾಂಗ್‌ಗೆ ಸಂಕಷ್ಟ ಎದುರಾಗಿದೆ. +ಈ ನಡುವೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ ರೌಡಿ ವಿಲ್ಸನ್‌ಗಾರ್ಡನ್‌ ನಾಗನ ಜೊತೆ ಕುಳಿತು ಕಾಫಿ, ಸಿಗರೇಟ್‌ ಕೈಯಲ್ಲಿ ಹಿಡಿದುಕೊಂಡಿರುವ ಫೋಟೊ ವೈರಲ್‌ ಆಗಿ ಸಾರ್ವಜನಿಕ ವಲಯದಲ್ಲಿ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆ ದರ್ಶನ್‌ನನ್ನುಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. \ No newline at end of file diff --git a/eesanje/url_46_27_3.txt b/eesanje/url_46_27_3.txt new file mode 100644 index 0000000000000000000000000000000000000000..81f4b5096faf8aae112098110dcc9834ee2964d2 --- /dev/null +++ b/eesanje/url_46_27_3.txt @@ -0,0 +1,10 @@ +ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ..? : ಪ್ರಿಯಾಂಕ್‌ ಖರ್ಗೆ + +ಬೆಂಗಳೂರು,ಸೆ.2-ಕೋವಿಡ್‌ ಕಾಲದಲ್ಲಿ ನಡೆದ ಹಗರಣಗಳ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಮಧ್ಯಂತರ ವರದಿ ನೀಡುತ್ತಿದ್ದಂತೆ ಬಿಜೆಪಿಯವರು ನ್ಯಾಯಾಂಗ ಹೋರಾಟ ನಡೆಸುತ್ತೇವೆ ಎಂದು ಹೇಳಿಕೆ ನೀಡಿರುವುದು ಹಗರಣ ನಡೆದಿರುವುದನ್ನು ದೃಢಪಡಿಸಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ? ಕೋವಿಡ್‌ ಹಗರಣದ ತನಿಖಾ ವರದಿ ಏನಿದೆ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ. ತಪ್ಪೇ ಮಾಡದಿದ್ದ ಮೇಲೆ ಕಾನೂನು ಹೋರಾಟ ಏಕೆ?, ಇದರರ್ಥ ಏನು?, ಒಂದು ಜೈಲಿಗೆ ಹೋಗಬೇಕು, ಇಲ್ಲವೇ ಜಾಮೀನು ಪಡೆಯಬೇಕು ಎಂದಲ್ಲವೇ! ಎಂದರು. +ಕೈಗಾರಿಕಾ ನಿವೇಶನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ. ಅದಕ್ಕೆ ಸಚಿವ ಎಂ.ಬಿ.ಪಾಟೀಲ್‌ರವರು ಇಂಚಿಂಚೂ ಸ್ಪಷ್ಟನೆ ನೀಡಿದ್ದಾರೆ. ನಾವು ಎಲ್ಲಿಯೂ ಓಡಿ ಹೋಗಿಲ್ಲ. ಈ ವಿಚಾರ ಚರ್ಚೆ ಮಾಡಬಾರದು ಎಂಬ ತಡೆಯಾಜ್ಞೆಯನ್ನು ತಂದಿಲ್ಲ ಎಂದರು. +ಬಿಜೆಪಿಯವರು ಸಿಡಿ ಇದೆ ಎಂದರೆ ಒಂದಷ್ಟು ಮಂದಿ ತಡೆಯಾಜ್ಞೆ ತರುತ್ತಾರೆ. ಕೋವಿಡ್‌ ಹಗರಣದ ಮಧ್ಯಂತರ ವರದಿ ಬಂದಾಕ್ಷಣ ಒಂದಷ್ಟು ಜನ ಕಾನೂನು ಹೋರಾಟದ ಮಾತನಾಡುತ್ತಾರೆ. ವರದಿಯಲ್ಲಿ ಏನಿದೆ ಎಂಬುದು ತಿಳಿಯದೆ ಇವರು ಹೆಗಲು ಮುಟ್ಟಿ ನೋಡಿಕೊಳ್ಳುತ್ತಿರುವುದು ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಸ್ಪಷ್ಟೀಕರಿಸುತ್ತಿದೆ ಎಂದು ಹೇಳಿದರು. +ವರದಿಯನ್ನು ತರಾತುರಿಯಲ್ಲಿ ಪಡೆಯಲಾಯಿತು ಎಂಬುದು ಹಾಸ್ಯಾಸ್ಪದ. ಸರ್ಕಾರ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ. ಈವರೆಗೂ ಒಂದು ಹಗರಣದ ವರದಿ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ ಎಂದು ಕೆಲವರು ಟೀಕೆ ಮಾಡಿದರು. ಈಗ ವರದಿ ಪಡೆದುಕೊಂಡರೆ ತರಾತುರಿಯಲ್ಲಿ ವರದಿ ಪಡೆಯಲಾಗಿದೆ ಎಂಬ ಆರೋಪಗಳಿವೆ. ನಾವು ಏನು ಮಾಡಿದರೂ ತಪ್ಪು ಎಂದು ಭಾವಿಸುವವರಿಗೆ ಸಮರ್ಥನೆ ನೀಡಲು ಸಾಧ್ಯವಿಲ್ಲ ಎಂದರು. +ಬಿಜೆಪಿ ಅವಧಿಯಲ್ಲಿ ನಡೆದ 21 ಹಗರಣಗಳನ್ನು ವಿಧಾನಮಂಡಲದಲ್ಲಿ ಪ್ರಸ್ತಾಪಿಸಲಾಗಿದೆ. ಅವುಗಳಿಗೆ ತಾರ್ಕಿಕ ಅಂತ್ಯ ಕಾಣಿಸುವುದು ನಮ ಜವಾಬ್ದಾರಿ. ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರದ ಆಮ್ಲಜನಕ ಕೊರತೆಯಿಂದಾದ ದುರಂತ, ಪಿಪಿ ಕಿಟ್‌ ಖರೀದಿ, ಕೆಎಸ್‌‍ಆರ್‌ಟಿಸಿ ಪ್ರಯಾಣ ದರ ದ್ವಿಗುಣಗೊಳಿಸುವುದು ಸೇರಿದಂತೆ ಹಲವು ವಿಚಾರಗಳು ಆಳ ಅಗಲದ ತನಿಖೆ ನಡೆಯಲಿವೆ ಎಂದರು. +ಪಿಎಸ್‌‍ಐ ನೇಮಕಾತಿ ಹಗರಣದ ವಿಚಾರಣಾ ವರದಿ ಬಂದಿದೆ. ಅದರ ಕ್ರಿಮಿನಲ್‌ ತನಿಖೆಗಾಗಿ ಎಸ್‌‍ಐಟಿ ರಚನೆ ಮಾಡಲಾಗಿದೆ. ಬಿಟ್‌ ಕಾಯಿನ್‌ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂದು ತಮಗೆ ಗೊತ್ತಿಲ್ಲ. ಸಂಬಂಧಪಟ್ಟ ಸಚಿವರು ಆದರ ಬಗ್ಗೆ ಪ್ರತಿಕ್ರಿಯಿಸಬೇಕು. ಈ ಹಿಂದೆ ಬಿಟ್‌ ಕಾಯಿನ್‌ ಬಗ್ಗೆ ತಾಂತ್ರಿಕ ಅಂಶಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ತಾವು ವಿವರಣೆ ನೀಡಿದ್ದರಿಂದಾಗಿ ಆ ಹಗರಣದಲ್ಲಿ ನನ್ನ ಹೇಳಿಕೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಗುತ್ತಿದೆ ಎಂದು ಹೇಳಿದರು. +ಕೈಗಾರಿಕಾ ಸಿಎ ನಿವೇಶನ ಪಡೆದ ಬಗ್ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ತಮಗೂ ನೋಟಿಸ್‌‍ ಕೊಟ್ಟು ವಿವರಣೆ ಕೇಳಿದ್ದಾರೆ. ಕಾಂಗ್ರೆಸಿಗರ ವಿರುದ್ಧ ಆರೋಪಗಳು ಬಂದಾಗ ಬೆಳಕಿನ ವೇಗದಲ್ಲಿ ರಾಜಭವನ ಕ್ರಮ ಕೈಗೊಳ್ಳುತ್ತದೆ. ಅದೇ ಬಿಜೆಪಿ-ಜೆಡಿಎಸ್‌‍ ವಿರುದ್ಧ ದೂರುಗಳು ಬಂದರೆ ಕಂಡೂ ಕಾಣದಂತೆ ಇರಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_27_4.txt b/eesanje/url_46_27_4.txt new file mode 100644 index 0000000000000000000000000000000000000000..194486b7bae8710b66ebb4d07ee20b2f3512fac5 --- /dev/null +++ b/eesanje/url_46_27_4.txt @@ -0,0 +1,14 @@ +ಮಲೆನಾಡಲ್ಲಿ ಒತ್ತುವರಿ ತೆರವು ವಿರೋಧಿಸಿ ರೈತರ ಹೋರಾಟಕ್ಕೆ ಶ್ರೀಗಳ ಬೆಂಬಲ +' +ಬಾಳೆಹೊನ್ನೂರು,ಸೆ.2– ಮಲೆನಾಡು ಭಾಗದಲ್ಲಿ ಅರಣ್ಯ ಒತ್ತುವರಿ ತೆರವು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಳೆಹೊನ್ನೂರಿನ ರಂಭಾಪುರ ಶ್ರೀಗಳಾದ ಶ್ರೀ ಡಾ.ವೀರಾಸೋಮೇಶ್ವರ ಜಗದ್ಗುರು ಹಾಗೂ ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಅವರು ಬೆಂಬಲ ಘೋಷಿಸಿದರು. +ರಂಭಾಪುರಿ ಪೀಠದಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ರಂಭಾಪುರಿ ಸ್ವಾಮೀಜಿ, ಬಹಳಷ್ಟು ಸಣ್ಣ ಕುಟುಂಬಗಳು ಜೀವನೋಪಾಯಕ್ಕಾಗಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿಕೊಂಡು ಜೀವನ ಕಟ್ಟಿಕೊಂಡಿವೆ. ಸರ್ಕಾರ ಅದನ್ನು ಕಾನೂನಿನ ಅಡಿಯಲ್ಲಿ ಸಕ್ರಮಗೊಳಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದರು. +ಕಸ್ತೂರಿರಂಗನ್‌ ವರದಿ ಜಾರಿಯಿಂದ ಆಗುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು. ಅರಣ್ಯ ಸಚಿವರಿಗೆ ಮಲೆನಾಡಿನ ಸಮಸ್ಯೆಗಳ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದ್ದೇನೆ. ಜನರ ಹಿತಕ್ಕಾಗಿ ರಂಭಾಪುರಿ ಪೀಠವೂ +ಜನಪರ ಹೋರಾಟದಲ್ಲಿ ಭಾಗವಹಿಸಲು ಸಿದ್ಧವಿದೆ ಹಾಗೂ ಹೋರಾಟಕ್ಕೆ ನಮ ಬೆಂಬಲವಿದೆ ಎಂದರು.ರೈತರ ಹಿತಕ್ಕಾಗಿ ನಾವು ದೆಹಲಿಯವರೆಗೆ ಬಂದು ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಹೇಳಿದರು. +ಸಭೆಯಲ್ಲಿ ಮಾತನಾಡಿದ ಶ್ರೀ ಗುಣನಾಥ ಸ್ವಾಮೀಜಿ, ಶತಮಾನಗಳಿಂದ ಪ್ರಕೃತಿ ವಿಕೋಪ ಆಗುತ್ತಿದೆ. ವಯನಾಡಿನಲ್ಲಿ ನಡೆದಿದ್ದು ಮೊದಲೇನೂ ಅಲ್ಲ. ನಗರೀಕರಣದಿಂದ ಕಾಡು ನಾಶವಾಗಿದೆಯೇ ಹೊರತು ರೈತರಿಂದ ಅಲ್ಲ. ಕಾಫಿ ಗಿಡ ಪರಿಸರಕ್ಕೆ ಪೂರಕವಾಗಿದೆ ಎಂದರು. +ತೋಟ ಮಾಡುವುದರಿಂದ ಗುಡ್ಡ ಕುಸಿಯುವುದಿಲ್ಲ. ರೈತರು ಎಲ್ಲೂ ಹಸಿರನ್ನು ನಾಶ ಮಾಡಿಲ್ಲ. ಎಲ್ಲೋ ಆದ ಘಟನೆಯನ್ನು ರೈತರ ತಲೆಗೆ ಕಟ್ಟುವುದು ಸರಿಯಲ್ಲ. ಎಲ್ಲರ ಬದುಕೂ ಹಸನಾಗಲಿ ಎಂದು ದುಡಿದು ಅನ್ನ ನೀಡುವ ರೈತನ ಬದುಕು ಈಗ ಬೀದಿಗೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. +ಕೇರಳದಲ್ಲಿ ಮೇಘಸ್ಫೋಟ ನಡೆದಿರುವುದು ಗುಡ್ಡದಲ್ಲೇ ಹೊರತು ಊರಿನಲ್ಲಿ ಅಲ್ಲ. ಮಠಗಳು ನಡೆಯುತ್ತಿರುವುದು ಅನ್ನದಾತರು ನೀಡುವ ಭಿಕ್ಷೆಯಿಂದಲೇ. ಒತ್ತುವರಿ ತೆರವು ವಿರುದ್ಧದ ಹೋರಾಟಕ್ಕೆ ಮಠದ ಸಂಪೂರ್ಣ ಬೆಂಬಲವಿದೆ ಎಂದರು. +ಮಲೆನಾಡು ರೈತರ, ಕಾರ್ಮಿಕರ ಹಿತಾಸಕ್ತಿಗಾಗಿ ನಾವು ಹೋರಾಟಕ್ಕೆ ಸದಾ ಸಿದ್ಧ ಎಂದು ಶ್ರೀಗಳು ನುಡಿದರು.ಪರಿಸರವಾದಿ ಕಲ್ಕುಳಿ ವಿಠಲ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿನ ಕಂದಾಯ ಭೂಮಿಯನ್ನು 4(1) ನೋಟಿಫಿಕೇಷನ್‌ನಡಿ ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುವ ಮೂಲಕ ಮಲೆನಾಡನ್ನು ಜನರಹಿತ ಪ್ರದೇಶವನ್ನಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. +ಶಿರಸಿಯ ವಕೀಲ ಎ.ರವೀಂದ್ರ ನಾರಾಯಣ ನಾಯ್ಕ್ ಮಾತನಾಡಿ, ಜನಾಂದೋಲನದ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು. ವಕೀಲ ಸುಧೀರ್‌ಕುಮಾರ್‌ ಮುರೊಳ್ಳಿ ಮಾತನಾಡಿ ಒತ್ತುವರಿ ವಿರೊಧಿಸಿ ಶೀಘ್ರದಲ್ಲೇ ಶಿವಮೊಗ್ಗವನ್ನು ಕೇಂದ್ರವನ್ನಾಗಿಸಿ ಕೊಂಡು ನ್ಯಾಯವಾದಿಗಳ ಸಭೆ ನಡೆಸ ಲಾಗುವುದು ಎಂದು ತಿಳಿಸಿದರು. +ಶೀಘ್ರದಲ್ಲೇ ವಿವಿಧ ಸಂಘಟನೆಯ ಮುಖಂಡರು, ಶಾಸಕರು, ಅರಣ್ಯ ಸಚಿವರ ಸಭೆಯನ್ನು ಆಯೋಜಿಸಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಆಶ್ವಾಸನೆ ನೀಡಿದರು. +ಒತ್ತುವರಿ ಪ್ರಕರಣ ಈ ಸ್ವರೂಪ ತಾಳಲು ಕೇಂದ್ರ ಸರ್ಕಾರದ ಕರಾಳ ಕಾನೂನು ಕಾರಣ ಎಂದು ನರಸಿಂಹರಾಜಪುರದ ಮನೋಹರ್‌ ಅಭಿಪ್ರಾಯಪಟ್ಟರು. ಸಭೆಯಲ್ಲಿ ಸಂಘಟನೆ ಅಧ್ಯಕ್ಷ ಅನಿಲ್‌ ಹೊಸಕೊಪ್ಪ, ಪರಿಸರವಾದಿ ಕಲ್ಕುಳಿ ವಿಠಲಹೆಗ್ಡೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು. +ಪ್ರಮುಖ ನಿರ್ಣಯಗಳು*ಸೆಕ್ಷನ್‌ 4 ಉದ್ಘೋಷಣೆ ವಾಪಸ್‌‍ ಪಡೆಯಬೇಕು. \ No newline at end of file diff --git a/eesanje/url_46_27_5.txt b/eesanje/url_46_27_5.txt new file mode 100644 index 0000000000000000000000000000000000000000..36be2ce975ec0bc28453c2a057339411a9de036c --- /dev/null +++ b/eesanje/url_46_27_5.txt @@ -0,0 +1,14 @@ +ಭ್ರಷ್ಟಾಚಾರ ನಡೆಸಿಲ್ಲವೆಂದರೆ ತಂದೆ-ತಾಯಿ ಮೇಲೆ ಆಣೆ ಮಾಡಿ : ನಿರಾಣಿ ಚಾಲೆಂಜ್ + +ಬೆಂಗಳೂರು,ಸೆ.2– ನೀರಾವರಿ ಹಾಗೂ ಕೈಗಾರಿಕಾ ಸಚಿವರಾದ ಮೇಲೆ ನೀವು ಒಂದೇ ಒಂದೂ ಭ್ರಷ್ಟಾಚಾರವನ್ನು ಅಥವಾ ಯಾರದೋ ಆಸ್ತಿಯನ್ನು ಕಬಳಿಸಿಲ್ಲ ಎಂದು ನಿಮ ತಂದೆತಾಯಿ ಮೇಲೆ ಆಣೆ ಮಾಡುವ ತಾಕತ್ತು ನಿಮಗಿದೆಯೇ ಎಂದು ಸಚಿವ ಎಂ.ಬಿ.ಪಾಟೀಲ್‌ಗೆ ಮಾಜಿ ಸಚಿವ ಮುರುಗೇಶ್‌ ಆರ್‌.ನಿರಾಣಿ ಮತ್ತೆ ಬಹಿರಂಗ ಸವಾಲು ಎಸೆದಿದ್ದಾರೆ. +ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್‌ ವಿರುದ್ಧ ಮತ್ತೆ ಬೆಂಕಿ ಉಗುಳಿದರು. ನೀವು ಈ ಹಿಂದೆ ನೀರಾವರಿ ಸಚಿವರಾಗಿದ್ದಾಗ ಹಾಗೂ ಈಗ ಕೈಗಾರಿಕಾ ಸಚಿವರಾಗಿ ಎಷ್ಟೆಷ್ಟು ಆಸ್ತಿ ಕಬಳಿಸಿದ್ದೀರಿ ಎಂಬುದನ್ನು ದಾಖಲೆಯ ಸಮೇತ ಬಿಚ್ಚಿಡುತ್ತೇನೆ. ಕಡಿಮೆ ದರದಲ್ಲಿ ಕೆಐಎಡಿಬಿ ಮೂಲಕ ಜಮೀನು ಖರೀದಿಸಿ ಅದನ್ನು ತಮಿಳುನಾಡಿಗೆ ಮಾರಾಟ ಮಾಡಿದ್ದು ಗೊತ್ತಿದೆ. ಸುಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಬಂಡವಾಳ ಬಿಚ್ಚುತ್ತೇನೆ ಎಂದು ಎಚ್ಚರಿಕೆ ಕೊಟ್ಟರು. +ನಾನು ಕೈಗಾರಿಕಾ ಸಚಿವನಾದ ಮೇಲೆ ಜಿಮ್‌ ನಡೆಸಿ ಲಕ್ಷಾಂತರ ಯುವಕರಿಗೆ ಉದ್ಯೋಗ ಕೊಡಿಸಿದ್ದೇನೆ. ರಾಜ್ಯಕ್ಕೆ ಬಂಡವಾಳ ಹರಿದುಬರುವಂತೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಕೈಗಾರಿಕೆಗಳಿಗೆ ಎಷ್ಟು ಉತ್ತೇಜನ ನೀಡಲಾಗಿತ್ತು ಎಂಬುದಕ್ಕೆ ದಾಖಲೆಗಳಿವೆ. +ಸಚಿವರಾದ ಮೇಲೆ ನೀವು ಇಲಾಖೆಗೆ ಎಷ್ಟು ಬಂಡವಾಳ ತಂದಿದ್ದೀರಿ? ಎಷ್ಟು ಉದ್ಯೋಗ ಕೊಟ್ಟಿದ್ದೀರಿ ಶ್ವೇತಪತ್ರ ಹೊರಡಿಸಿ ಎಂದು ಒತ್ತಾಯಿಸಿದರು. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿದರೆ ನಿಮಗೂ ಒಳ್ಳೆಯದು, ನಿಮ ಹಿರಿತನಕ್ಕೂ ಒಳ್ಳೆಯದು.ನಿಮತರ ನಾನು ಯಾರೋ ಕಟ್ಟಿದ ಕಾಲೇಜನ್ನು ಸ್ವಂತ ಲಾಭಕ್ಕಾಗಿ ಮಾಡಿಕೊಂಡಿಲ್ಲ. ಬಂಡವಾಳ ಬಿಚ್ಚಿದರೆ ನೀವು ತಲೆ ಎತ್ತಿ ತಿರಗಬಾರದು. ನನಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ ಎಂಬುದನ್ನು ಎಂ.ಬಿ.ಪಾಟೀಲ್‌ ಮರೆಯಬಾರದು ಎಂದು ಎಚ್ಚರಿಸಿದರು. +2022ರಲ್ಲಿ ಇನ್ವೆಸ್ಟ್‌ ಕರ್ನಾಟಕ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮಿಕೊಳ್ಳಲಾಗಿತ್ತು. ಆಗ ಕೈಗಾರಿಕೆ ಇಲಾಖೆ ಅಧಿಕಾರಿಗಳು ಐದು ನಿಮಿಷದ ತ್ರಿಡಿ ಪೊಮೊ ವಿಡಿಯೋ ಮಾಡುವುದಕ್ಕೆ ಒಂದು ಕಂಪನಿಗೆ ಗುತ್ತಿಗೆ ನೀಡಿದ್ದರು. ಅದರ ಬಜೆಟ್‌ ನಾಲ್ಕುವರೆ ಕೋಟಿ ರೂ. ಆಗಿತ್ತು. ಇದು ನನ್ನ ಗಮನಕ್ಕೆ ಬಂದಿದ್ದೇ ತಡ ನಾನೆ ಅದನ್ನು ತಡೆದೆ. +ಐದು ನಿಮಿಷದ ವಿಡಿಯೋ ಮಾಡಿದ್ದಕ್ಕಾಗಿ ನಾಲ್ಕುವರೆ ಕೋಟಿ ರೂ. ಇದು ಬಹಳ ಹೆಚ್ಚಾಯಿತು. ಕೂಡಲೇ ರದ್ದು ಮಾಡಿ ಎಂದು ಕೈಗಾರಿಕೆ ಇಲಾಖೆ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದೆ ಎಂದು ತಮ ಮೇಲಿನ ಆರೋಪವನ್ನು ಅಲ್ಲಗೆಳೆದಿದ್ದಾರೆ. +ಕಾಂಗ್ರೆಸ್‌‍ನವರು ತಮ ಮೇಲಿನ ಪ್ರಕರಣವನ್ನು ವಿಷಯಾಂತರ ಮಾಡುವುದಕ್ಕೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನನ್ನ ತೇಜೋವಧೆ ಮಾಡುತ್ತಿದ್ದಾರೆ. ಇವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೊಡಿ ಅಂತಿದ್ದಾರೆ ಹೊರತು, ಇವರು ಯಾವ ಆರೋಪ ಮಾಡಿರುವ ತಪ್ಪು ಏನು ಅಂತಾನೆ ಹೇಳುತ್ತಿಲ್ಲ. ಇವರ ಆರೋಪದಲ್ಲಿ ಹುರುಳಿಲ್ಲ ಎಂದಿದ್ದಾರೆ. +ಅಂದು ನಾನು ಟೆಂಡರ್‌ ರದ್ದು ಮಾಡಿದ್ದಕ್ಕೆ ಜಾಹೀರಾತು ಕಂಪನಿಯವರು ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್‌ ಏಕ ಸದಸ್ಯ ಪೀಠ ಅವರು ಈಗಾಗಲೇ ನಿಮ ಆದೇಶದ ಪ್ರಕಾರ ವಿಡಿಯೋ ತಯಾರಿಸಿದ್ದಾರೆ. ಅದಕ್ಕಾಗಿ ಹಣ ಪಾವಿತಿಸಿ ಅಂತ ಹೇಳಿತ್ತು. +ನಾವು ಮತ್ತೆ ಕೋರ್ಟ್‌ ದ್ವಿಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಿದೆವು. ಆಗ ದ್ವಿಸದಸ್ಯ ಪೀಠ ಸಚಿವರು ಹೇಳಿದ್ದು ಸರಿ ಇದೆ. ಐದು ನಿಮಿಷದ ವಿಡಿಯೋ ಚಿತ್ರೀಕರಣಕ್ಕೆ ನಾಲ್ಕುವರೆ ಕೋಟಿ ರೂ. ತೀರಾ ಹೆಚ್ಚಾಯಿತು ಎಂದು ನನ್ನ ಪತ್ರ ಉಲ್ಲೇಖ ಮಾಡಿ ಆದೇಶ ನೀಡಿದೆ ಎಂದು ತಿಳಿಸಿದರು. +ಹೀಗಿರುವಾಗ ಸಿಎಂ, ಡಿಸಿಎಂ, ಸಚಿವರು ನನ್ನ ಮೇಲೆ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಸುಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ನನಗೆ ಇದುವರೆಗೂ ರಾಜಭವನದಿಂದ ಆಗಲಿ, ಯಾವುದೇ ತನಿಖಾ ಸಂಸ್ಥೆಗಳಿಂದಾಗಲಿ ಒಂದೇ ಒಂದು ನೊಟೀಸ್‌‍ ಬಂದಿಲ್ಲ. ಯಾರು ವಿಚಾರಣೆಗೆ ಕರೆದಿಲ್ಲ. +ನಾನು ಎಲ್ಲ ತನಿಖೆಗೂ ಸಿದ್ದನಿದ್ದೇನೆ. ಸಿಬಿಐ ತನಿಖೆಗೂ ಬೇಕಿದ್ದರೆ ಕೊಡಲಿ. ಯಾಕೆಂದರೆ ನಾನು ನಿರಪರಾಧಿ. ಸಿಎಂ, ಡಿಸಿಎಂ ಕೂಡ ಧೈರ್ಯದಿಂದ ತನಿಖೆ ಎದುರಿಸಲಿ ಎಂದು ಟಾಂಗ್‌ ನೀಡಿದರು. +ಅನೇಕರು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಆಚೆ ಇದ್ದಾರೆ. ನಾನು ಈಗಲೂ ಯಾವುದೇ ನ್ಯಾಯಾಲಯದಿಂದ ಜಾಮೀನು ತಂದಿಲ್ಲ. ಏಕೆಂದರೆ ನಾನು ತಪ್ಪು ಮಾಡಿಲ್ಲ ಎಂಬ ಅಚಲವಾದ ನಂಬಿಕೆ ಇದೆ. ಹೀಗಾಗಿ ದೇಶದ ಕಾನೂನಿನಲ್ಲಿ ನಂಬಿಕೆ ಇಟ್ಟಿರುವುದರಿಂದ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_27_6.txt b/eesanje/url_46_27_6.txt new file mode 100644 index 0000000000000000000000000000000000000000..67c98ab7f1071869a75fe6e692a75c69f5005d80 --- /dev/null +++ b/eesanje/url_46_27_6.txt @@ -0,0 +1,10 @@ +ಪೋಕ್ಸೋ ಪ್ರಕರಣದ ಸಂತ್ರಸ್ತೆಯ ತಾಯಿ ಸಾವಿನ ಪ್ರಕರಣಕ್ಕೆ ಮರುಜೀವ + ' +ಬೆಂಗಳೂರು,ಆ.2– ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರ ಮೇಲ್ದಿ ಪೋಕ್ಸೋ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಸಂತ್ರಸ್ತೆಯ ತಾಯಿಯ ಸಾವಿನ ಪ್ರಕರಣ ಮರುಜೀವ ಪಡೆದುಕೊಂಡಿದೆ. +ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ. +ರಾಜ್ಯ ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷೀ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿಕೊಂಡಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್‌‍ ಠಾಣೆಯಲ್ಲಿ ಮಮತಾ ಸಾವು ಪ್ರಕರಣ ದಾಖಲಾಗಿದೆ. +ಏನಿದು ಪ್ರಕರಣ?: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್‌ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದರು. +ಆದರೆ ಅಚ್ಚರಿಯ ಸಂಗತಿ ಎಂದರೆ ಬಿಎಸ್‌‍ವೈ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್‌ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್‌ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು. +ತಪಾಸಣೆ ವೇಳೆ ಸ್ಯಾಚುರೇಷನ್‌ ಲೇವೆಲ್‌ ಲೋ ಆಗಿತ್ತು. ಕೂಡಲೇ ವೈದ್ಯರಿಂದ ಚಿಕಿತ್ಸೆ ಆರಂಭಿಸಲಾಗಿತ್ತು. ಅಲ್ಲದೆ ವೆಂಟಿಲೇಟರ್‌ಗೆ ಶಿಫ್‌್ಟ ಮಾಡಲು ಸಿದ್ಧತೆ ನಡೆಸಲಾಗಿತ್ತು. ಅಷ್ಟೊತ್ತಿಗೆ ಮೋಷನ್‌ ಹೋಗಬೇಕು ಎಂದು ದೂರುದಾರೆ ಮಮತ ಹೇಳಿದ್ದರು. ಆದರೆ ಕೆಲವೇ ಹೊತ್ತಿನಲ್ಲಿ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ ಎಂದು ನ್ಯಾನೋ ಆಸ್ಪತ್ರೆ ಮೂಲಗಳು ತಿಳಿಸಿದ್ದವು. +ಪೋಕ್ಸೋ ಎಫ್‌ಐಆರ್‌ನಲ್ಲಿ ಏನಿದೆ?:ದೂರುದಾರರು ತಿಳಿಸಿರುವಂತೆ ತಾಯಿ ಮತ್ತು ಮಗಳು ಕಳೆದ ಫೆಬ್ರವರಿ 2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದರು. ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ. ವಿಶೇಷ ತನಿಖಾ ತಂಡ ರಚಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಸಂತ್ರಸ್ತೆ ಹಾಗೂ ಸಂತ್ರಸ್ತೆಯ ತಾಯಿ ಮನವಿ ಮಾಡಿದ್ದರು. +ಈ ವೇಳೆ ಯಡಿಯೂರಪ್ಪ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿತ್ತು. ಬಳಿಕ ಯಡಿಯೂರಪ್ಪನವರು ಕ್ಷಮೆಯಾಚಿಸಿ, ಪ್ರಕರಣದಲ್ಲಿ ನಿಮಗೆ ಸಹಾಯ ಮಾಡುತ್ತೇನೆ, ಈ ಘಟನೆ ಬಗ್ಗೆ ಹೊರಗಡೆ ಎಲ್ಲೂ ಮಾತನಾಡಬಾರದು ಎಂದು ಹೇಳಿದ್ದಾರೆಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_27_7.txt b/eesanje/url_46_27_7.txt new file mode 100644 index 0000000000000000000000000000000000000000..fa89e3dc525d86836354bd2e8572d3ddccb2397c --- /dev/null +++ b/eesanje/url_46_27_7.txt @@ -0,0 +1,17 @@ +ಬಿಜೆಪಿ ಆಡಳಿತದ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಎಂ.ಬಿ.ಪಾಟೀಲ್‌ + : +ಬೆಂಗಳೂರು,ಸೆ.2– ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ಸಾವಿನ ನಡುವೆಯೂ ಹಣ ಲೂಟಿ ಹೊಡೆದಿದ್ದಾರೆ. ಪಿಎಸ್‌‍ಐ, ಬಿಟ್‌ ಕಾಯಿನ್‌ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೊಳಪಡಿಸಲಾಗಿದೆ. ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. +ಕೋವಿಡ್‌ ಸಂದರ್ಭದಲ್ಲಿನ ಹಗರಣಗಳಿಗೆ ಆಗಿನ ಸಚಿವರೇ ಹೊಣೆಗಾರರು ಎಂದ ಎಂ.ಬಿ.ಪಾಟೀಲ್‌, ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ ಏಕಾಏಕಿ ಹಲವಾರು ಪಟ್ಟು ಯೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ. +ಸುಮಾರು 15-20 ಸಚಿವ ಸಂಪುಟ ಸಭೆಗಳಲ್ಲಿ ಈ ಬಗ್ಗೆ ನಿರಂತರ ಚರ್ಚೆಯಾಗಿದೆ. 300-400 ಕೋಟಿ ರೂ. ಏಕಾಏಕಿ ಹೆಚ್ಚಿಸುವ ಬಗ್ಗೆ ಸಚಿವ ಪರಮೇಶ್ವರ್‌ ಸೇರಿದಂತೆ ಹಲವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. +ನಮ ಅನಿವಾರ್ಯತೆಗಳು ಹೇಗಿದ್ದವು ಎಂದರೆ, ಅವರ ಕಾಲದಲ್ಲಿ ಮಾಡಿದ್ದ ಭ್ರಷ್ಟಾಚಾರ ಕಣ್ಣೆದುರಿಗೇ ಇದ್ದರೂ ಬಾಕಿ ಉಳಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಪರಿಸ್ಥಿತಿ ಎದುರಾಗಿತ್ತು. ಇಲ್ಲವಾದರೆ ಕಾಮಗಾರಿ ಅರ್ಧಕ್ಕೇ ನಿಲ್ಲುತ್ತಿತ್ತು. ಯೋಜನೆ ವ್ಯರ್ಥವಾಗುತ್ತಿತ್ತು. ಜನರಿಗೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಾಕಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ ಎಂದರು. +ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಾಗ ಸ್ವಂತ ವಿವೇಚನೆಯಿಂದ ಕೆಲಸ ಮಾಡಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಅಣತಿಯಂತೆ ವರ್ತಿಸುತ್ತಿದ್ದಾರೆ. +ರಾಜಭವನ ಚಲೋ ನಡೆಸಿ ನಾವು ರಾಜ್ಯಪಾಲರನ್ನು ಭೇಟಿ ಮಾಡಿದಾಗ ಶಶಿಕಲಾ ಜೊಲ್ಲೆ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಮೂರು ಪ್ರಕರಣಗಳ ಅಭಿಯೋಜನೆಗೆ ಪೂರ್ವಾನುಮತಿ ಕೇಳಿದ್ದ ಕಡತಕ್ಕೆ ಸ್ಪಷ್ಟನೆ ಕೇಳಿ ವಾಪಸ್‌‍ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಕಡತಗಳಿನ್ನೂ ರಾಜ್ಯಪಾಲರ ಬಳಿಯೇ ಉಳಿದುಕೊಂಡಿವೆ ಎಂದರು. +ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ. ಮತ್ತಷ್ಟು ಶಕ್ತಿಶಾಲಿಯಾಗಿ ಸಿದ್ದರಾಮಯ್ಯ ಹೊರಹೊಮುತ್ತಾರೆ. +ಆರ್‌.ವಿ.ದೇಶಪಾಂಡೆ ಸೇರಿದಂತೆ ಹಲವು ಮಂದಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದು ಸಾಂದರ್ಭಿಕ ಅಷ್ಟೇ. ನಾನು ಕೂಡ ಈ ಮೊದಲು ಇಂತಹ ಹೇಳಿಕೆ ನೀಡಿದ್ದೇನೆ. ಆದರೆ ನಮಲ್ಲಿ ಯಾವುದೇ ಗೊಂದಲಗಳಿಲ್ಲ. ಪರಸ್ಪರ ಭೇಟಿಯಾಗುತ್ತಿರುತ್ತೇವೆ. +ಪಕ್ಷದ ವಿಚಾರ, ಇಲಾಖೆ ಮತ್ತು ಕ್ಷೇತ್ರಕ್ಕೆ ಸಂಬಂಧಪಟ್ಟ ಚರ್ಚೆಗಳಾಗುತ್ತವೆ. ರಾಜಕೀಯದ ಬಗ್ಗೆಯೂ ಮಾತನಾಡುತ್ತೇವೆ. ಅದರಲ್ಲಿ ತಪ್ಪೇನೂ ಇಲ್ಲ ಎಂದು ಸಮರ್ಥಿಸಿಕೊಂಡರು.ಮುಖ್ಯಮಂತ್ರಿ ಬದಲಾವಣೆ ಎಂಬುದು ಹಗಲು ಕನಸು. ಅದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದು, ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬುದು ಆಧಾರರಹಿತ ಎಂದರು. +ಎತ್ತಿನಹೊಳೆ ಯೋಜನೆ ರೂಪಿಸಿದಾಗ 22 ರಿಂದ 24 ಟಿಎಂಸಿ ನಿರೀಕ್ಷಿಸಲಾಗಿತ್ತು. ಈಗ 16 ಟಿಎಂಸಿ ಬರಲಿದೆ. ಮತ್ತಷ್ಟು ಸಣ್ಣಪುಟ್ಟ ತೊಂದರೆಗಳನ್ನು ಸರಿಪಡಿಸಿದರೆ ಮೂರ್ನಾಲ್ಕು ಟಿಎಂಸಿ ಹೆಚ್ಚುವರಿಯಾಗಿ ದೊರೆಯಲಿದೆ. +ಹಿಂದೆ ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ಹಲವು ಕಡೆಯಿಂದ ಈ ಯೋಜನೆಗಳಿಗೆ ಟೀಕೆಗಳು ಕೇಳಿಬಂದಿದ್ದವು. ಆದರೆ ಈಗ ಯೋಜನೆ ಯಶಸ್ವಿಯಾಗಿದೆ. ನೀರು ಲಭ್ಯವಾಗುತ್ತಿದೆ. ಇದೇ 6 ರಂದು ಯೋಜನೆ ಉದ್ಘಾಟನೆಯಾಗಲಿದೆ ಎಂದು ಹೇಳಿದರು. +ಕೃಷ್ಣಾ ಮೇಲ್ದಂಡೆ ಯೋಜನೆ ನ್ಯಾಯಾಧಿಕರಣದ ತೀರ್ಪು ಅಧಿಸೂಚನೆ ಜಾರಿಯಾಗಬೇಕು. ಆಲಮಟ್ಟಿ ಅಣೆಕಟ್ಟೆಯನ್ನು 519.06 ಅಡಿಯಿಂದ 524.25 ಅಡಿ ಎತ್ತರಿಸಲು 1 ಲಕ್ಷ ಭೂಮಿ ಮುಳುಗಡೆಯಾಗಲಿದೆ. ಅಷ್ಟು ಜಮೀನಿಗೂ ಪರಿಹಾರ ನೀಡಬೇಕು. ಭಾರಿ ಪ್ರಮಾಣದ ಹಣ ಬೇಕಿದೆ. ಈವರೆಗೂ 30 ಸಾವಿರ ಎಕರೆ ಸ್ವಾಧೀನ ಪ್ರಕ್ರಿಯೆಗಳು ಚಾಲನೆಯಲ್ಲಿವೆ. +ನ್ಯಾಯಾಲಯದ ತೀರ್ಪು ಅಧಿಸೂಚನೆಯಾದ ಬಳಿಕ ಹಣಕಾಸು ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಎಲ್ಲಾ ಅರ್ಹತೆಗಳೂ ಇವೆ. ಆದರೆ ಅಂತರಾಜ್ಯ ನದಿ ವಿವಾದ ಇರುವುದರಿಂದಾಗಿ ಅದನ್ನು ಅಧಿಸೂಚನೆ ಹೊರಡಿಸಿ ಇತ್ಯರ್ಥಪಡಿಸಲು ಸಾಧ್ಯವಿದೆ ಎಂದರು. \ No newline at end of file diff --git a/eesanje/url_46_27_8.txt b/eesanje/url_46_27_8.txt new file mode 100644 index 0000000000000000000000000000000000000000..dc6cae6a79a0ec9dd3b1727aedae5ec02be9b66c --- /dev/null +++ b/eesanje/url_46_27_8.txt @@ -0,0 +1,6 @@ +ಸಿಎಂ ಹುದ್ದೆ ಖಾಲಿ ಇಲ್ಲ : ಡಿಸಿಎಂ ಡಿಕೆಶಿ + : +ಬೆಂಗಳೂರು,ಸೆ.2-ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಲಿದೆ ಎಂಬ ಊಹಾತ್ಮಕ ಅಂದಾಜುಗಳು ಸರಿಯಲ್ಲ ಎಂದರು. +ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ನಡೆಯುತ್ತದೆ ಹಾಗೂ ಮುಂದುವರೆಯುತ್ತದೆ. ಮುಖ್ಯಮಂತ್ರಿ ಸ್ಥಾನ ಖಾಲಿ ಇದ್ದರೆ ಈ ಬಗ್ಗೆ ಮಾತನಾಡಲು ಅವಕಾಶವಿತ್ತು, ಆದರೆ ಸದ್ಯಕ್ಕಿಲ್ಲ. ಯಾರಿಗೇ ಆಸೆ ಆಕಾಂಕ್ಷೆಗಳಿದ್ದರೂ ಮಾಧ್ಯಮಗಳ ಮುಂದೆ ಚರ್ಚೆ ಮಾಡಬಾರದು ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು. +ಕೋವಿಡ್ ಹಗರಣದ ಕುರಿತು ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸುಧಾಕರ್ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದರು. +ರಕ್ತದ ನರನಾಡಿಗಳಲ್ಲೂ ಅವರಿಗೆ ಕಾಂಗ್ರೆಸ್ ತುಂಬಿತ್ತು. ಹೀಗಾಗಿ ನಮ ಪಕ್ಷದ ಬಗ್ಗೆ ಪ್ರಮಾಣಪತ್ರ ನೀಡುವ ಮುನ್ನ ಅವರು ಆತವಿಮರ್ಶೆ ಮಾಡಿಕೊಳ್ಳಲಿ. ಐದಾರು ವರ್ಷಗಳಿಂದಷ್ಟೇ ಅವರು ಪಕ್ಷ ಬಿಟ್ಟು ಹೋಗಿದ್ದಾರೆ ಎಂದರು. \ No newline at end of file diff --git a/eesanje/url_46_27_9.txt b/eesanje/url_46_27_9.txt new file mode 100644 index 0000000000000000000000000000000000000000..208f6dd6732570dc55a987f0a2157b239b1b09e6 --- /dev/null +++ b/eesanje/url_46_27_9.txt @@ -0,0 +1,8 @@ +2 ತಿಂಗಳೊಳಗಾಗಿ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ + - 2 +ಬೆಂಗಳೂರು,ಸೆ.2-ಕೆಪಿಎಸ್ಸಿ ಪರೀಕ್ಷೆ ಕುರಿತಂತೆ ಸೃಷ್ಟಿಯಾಗಿದ್ದ ತೀವ್ರ ವಿವಾದಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ತಿಂಗಳೊಳಗಾಗಿ ಕೆಎಎಸ್ನ ಪೂರ್ವಭಾವಿ ಮರುಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಗೆಜೆಟೆಡ್ ಪ್ರೊಬೆಷನರ್ರಸ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ನಡೆಸಿದ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆಗಳಲ್ಲಿ ಕನ್ನಡಕ್ಕೆ ಸಂಬಂಧಪಟ್ಟಂತೆ ಅಸಮರ್ಪಕ ಭಾಷಾಂತರ ಕಂಡುಬಂದಿದೆ ಎಂದಿದ್ದಾರೆ. +ಈ ಹಿನ್ನೆಲೆಯಲ್ಲಿ ನಾನು ಕೆಪಿಎಸ್ಸಿಗೆ ಸೂಚನೆ ನೀಡಿದ್ದು, ಎರಡು ತಿಂಗಳೊಳಗಾಗಿ ಮರುಪರೀಕ್ಷೆ ನಡೆಸುವಂತೆ ಸೂಚಿಸಿದ್ದೇನೆ. ಪರೀಕ್ಷಾ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. +ಮುಂದಿನ ಪರೀಕ್ಷೆಯನ್ನು ಜವಾಬ್ದಾರಿಯುತವಾಗಿ ಹಾಗೂ ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನ್ಯಾಯಸಮತ ಹಾಗೂ ಶ್ರದ್ಧಾ ಕ್ರಮಗಳನ್ನ ಅನುಸರಿಸುವಂತೆ ಸೂಚಿಸಲಾಗಿದೆ. ನೇಮಕಾತಿಯ ಸಮಗ್ರತೆಯನ್ನು ಎತ್ತಿ ಹಿಡಿಯುವ ಬದ್ಧತೆ ನಮದಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. +ಕಳೆದ ತಿಂಗಳ 27 ರಂದು ನಡೆದ ಕೆಎಎಸ್ ಪರೀಕ್ಷೆಯಲ್ಲಿನ ಪ್ರಶ್ನೆಪತ್ರಿಕೆಯಲ್ಲಿ 50ಕ್ಕೂ ಹೆಚ್ಚು ಪ್ರಶ್ನೆಗಳು ಅಸಮರ್ಪಕವಾಗಿದ್ದವು. ಅದರಲ್ಲೂ ಇಂಗ್ಲಿಷ್ನಿಂದ ಕನ್ನಡಕ್ಕೆ ಪ್ರಶ್ನೆಯನ್ನು ಭಾಷಾಂತರಿಸುವಾಗ ಸಾಕಷ್ಟು ಲೋಪಗಳಾಗಿದ್ದವು ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಮರುಪರೀಕ್ಷೆಗಾಗಿ ತೀವ್ರ ಸ್ವರೂಪದ ಹೋರಾಟಗಳು ಆಯೋಜನೆಗೊಳ್ಳುತ್ತಿದ್ದವು. +ಕಾಂಗ್ರೆಸ್ ಪಕ್ಷದಲ್ಲೇ ಗುರುತಿಸಿಕೊಂಡಿದ್ದ ಅನೇಕರು ಮರುಪರೀಕ್ಷೆಗೆ ಪಟ್ಟು ಹಿಡಿದಿದ್ದರು. ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಈ ನಿಟ್ಟಿನಲ್ಲಿ ಹೇಳಿಕೆ ನೀಡಿ ಕೆಎಎಸ್ ಪರೀಕ್ಷೆಯಲ್ಲಿನ ಲೋಪದೋಷಗಳ ಕುರಿತು ಕಿಡಿಕಾರಿ ಮರುಪರೀಕ್ಷೆಗೆ ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಸರ್ಕಾರ ಕೊನೆಗೂ ಮರುಪರೀಕ್ಷೆ ನಡೆಸಲು ಮುಂದಾಗಿದೆ. \ No newline at end of file diff --git a/eesanje/url_46_280_1.txt b/eesanje/url_46_280_1.txt new file mode 100644 index 0000000000000000000000000000000000000000..dd960ac365e751ca2072a9ff458e080bbd9a7208 --- /dev/null +++ b/eesanje/url_46_280_1.txt @@ -0,0 +1,5 @@ +ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ +ಬೆಂಗಳೂರು, ಡಿ.24- ಗದಗದಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಲು ನಗಾರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷ ಕಂಡು ಬಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಾರನಕಟ್ಟೆ ಗ್ರಾಮದ ಜಮೀನೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. +ಇಂದು ಬೆಳಿಗ್ಗೆ 10.15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಮ್‍ನಿಂದ ಮೇಲಾರಿದ ಹೆಲಿಕ್ಯಾಪ್ಟರ್ ಮಾರ್ಗಮಧ್ಯೆ ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಪೈಲೆಟ್ 11.15ರ ಸಮಯದಲ್ಲಿ ಸಮಯೋಚಿತ ನಿರ್ಧಾರ ಕೈಗೊಂಡು ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. +ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ +ನಂತರ ಸಚಿವರು ರಸ್ತೆ ಮಾರ್ಗವಾಗಿ ಕಾರಿನಲ್ಲಿ ಗದಗಕ್ಕೆ ತೆರಳಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಹಿರಿಯೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಭದ್ರತೆ ನೀಡಿದ್ದಾರೆ. ಒಟ್ಟಾರೆ ಸಚಿವರ ಕಾಪ್ಟರ್ ತಾಂತ್ರಿಕ ಸಮಸ್ಯೆ ಉಂಟಾಗಿ ಸುರಕ್ಷಿತವಾಗಿ ಇಳಿದಿರುವುದರಿಂದ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. \ No newline at end of file diff --git a/eesanje/url_46_280_10.txt b/eesanje/url_46_280_10.txt new file mode 100644 index 0000000000000000000000000000000000000000..24d6fa78353e23e461a013c08d3b5e96927004bb --- /dev/null +++ b/eesanje/url_46_280_10.txt @@ -0,0 +1,7 @@ +ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ : 52.78 ಲಕ್ಷ ಮೌಲ್ಯದ ಮಾದಕ ವಶ +ಬೆಂಗಳೂರು,ಡಿ.23- ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಮಾರಾಟ ಮಾಡಲು ಮುಂದಾಗಿದ್ದ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳ ಸಿಸಿಬಿ ಪೊಲೀಸರು ಬಂಧಿಸಿ 52.78 ಲಕ್ಷ ಮೌಲ್ಯದ ನಿಷೇಧಿತ ಮಾದಕ ವಸ್ತುಗಳು ಮತ್ತು ವಾಹನ ವಶಪಡಿಸಿಕೊಂಡಿದ್ದಾರೆ. +ನಗರದ ಬೇಗೂರು ಮತ್ತು ಕೋರಮಂಗಲ ಪೊಲೀಸ್ ತಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದರೆಂಬ ಬಗ್ಗೆ ನಿಖರ ಮಾಹಿತಿ ಪಡೆದ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಒಬ್ಬ ವಿದೇಶಿ ಮತ್ತು ಇಬ್ಬರು ಕೇರಳ ಮೂಲದ ಡ್ರಗ್ ಪೆಡ್ಲರ್‍ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. +ಆರೋಪಿಗಳಿಂದ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಡಿ ಕ್ರಿಸ್ಟಲ್ 8639 ಗ್ರಾಂ,ಎಲ್‍ಎಸ್‍ಡಿ ಸ್ಟ್ರಿಪ್ 100 , ಎಸ್‍ಟೇಸ್‍ಟಿ ಪಿಲ್ಟ್ 253,ಕೊಕೇನ್ 2.5 ಗ್ರಾಂ, 3 ಮೊಬೈಲ್‍ಫೋನ್, ತೂಕದ ಯಂತ್ರ 1, ಹೋಂಡಾ ಆಕ್ಟೀವಾ ದ್ವಿಚಕ್ರ ವಾಹನ ಹಾಗೂ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ52,78,000ರೂ.ಗಳೆಂದು ಅಂದಾಜಿಸಲಾಗಿದೆ. +ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ +ಆರೋಪಿಗಳ ವಿರುದ್ಧ ಬೇಗೂರು ಮತ್ತು ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ. ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ವಿದೇಶಿ ಪ್ರಜೆಯು ಸುಮಾರು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು, ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು, ನಗರದಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪ್ರಜೆಗಳಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿ ಮಾಡಿ ಅವುಗಳನ್ನು ಪರಿಚಯಸ್ಥ ಗಿರಾಕಿಗಳಿಗೆ ಖುದ್ದಾಗಿ ಸರಬರಾಜು ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದನೆಂದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದಿರುವ ಕೇರಳ ಮೂಲದ ಇಬ್ಬರು ಡ್ರಗ್ ಪೆಡ್ಲರ್‍ಗಳು ಸ್ಥಳೀಯ ಡ್ರಗ್ ಪೆಡ್ಲರ್‍ನಿಂದ ಕಡಿಮೆ ಬೆಲೆಗೆ ನಿಷೇತ ಮಾದಕ ವಸ್ತುಗಳನ್ನು ಖರೀದಿಸಿ, ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಬಗ್ಗೆ ಮಾಹಿತಿಯು ವಿಚಾರಣೆಯಿಂದ ತಿಳಿದುಬಂದಿದೆ. \ No newline at end of file diff --git a/eesanje/url_46_280_11.txt b/eesanje/url_46_280_11.txt new file mode 100644 index 0000000000000000000000000000000000000000..2ddbae037a7fe7ac5a29232016512ce6080e25b6 --- /dev/null +++ b/eesanje/url_46_280_11.txt @@ -0,0 +1,6 @@ +ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ್ದ ಮುಖ್ಯ ಶಿಕ್ಷಕಿ ಬಂಧನ +ಬೆಂಗಳೂರು,ಸೆ.23- ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಂದ್ರಹಳ್ಳಿ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಬಂತರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಲಕ್ಷಿ ದೇವಮ್ಮ ಅವರನ್ನು ಅಮಾನತುಗೊಳಿಸಿದೆ. +ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದಲೇ ಶಿಕ್ಷಕರು ಶಾಲೆಯ ಶೌಚಾಲಯವನ್ನು ಬ್ಲೀಚಿಂಗ್ ಪೌಡರ್ ಹಾಗೂ ಆ್ಯಸಿಡ್ ಹಾಕಿಸಿ ಸ್ವಚ್ಛಗೊಳಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ವಿಷಯ ತಿಳಿದ ಮಕ್ಕಳ ಪೋಷಕರು ಶಾಲೆ ಮುಂದೆ ಜಮಾಯಿಸಿ ಶಿಕ್ಷಕರ ವರ್ತನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗಿಳಿದರು. +“ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ” +ಸುದ್ದಿ ತಿಳಿಯುತ್ತಿದ್ದಂತೆ ಬಿಇಒ ಆಂಜನಪ್ಪ ಅವರು ಸ್ಥಳಕ್ಕಾಗಮಿಸಿ ಪ್ರತಿಭಟನಾಕರರ ಮನವೊಲಿಸಿ ನಂತರ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಎಫ್‍ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಶಾಲಾ ಮುಖ್ಯ ಶಿಕ್ಷಕಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. +ಇತ್ತೀಚೆಗೆ ಕೋಲಾರದ ಮಾಲೂರಿನ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಚಗೊಳಿಸಲಾಗಿದ್ದ ಪ್ರಕರಣ ಮಾಸುವ ಮುನ್ನವೇ ಸಿಲಿಕಾನ್ ಸಿಟಿಯಲ್ಲಿ ಶಾಲಾ ಮಕ್ಕಳಿಂದಲೇ ಶೌಚಾಲಯ ಸ್ವಚ್ಚಗೊಳಿಸಿರುವುದು ಬೇಸರದ ಸಂಗತಿ. \ No newline at end of file diff --git a/eesanje/url_46_280_12.txt b/eesanje/url_46_280_12.txt new file mode 100644 index 0000000000000000000000000000000000000000..46246f81785a678513dd324a50949ae1273baeb0 --- /dev/null +++ b/eesanje/url_46_280_12.txt @@ -0,0 +1,11 @@ +ಐಷಾರಾಮಿ ವಿಮಾನ ಯಾನ ವಿವಾದ ಮರೆಮಾಚಲು ‘ಹಿಜಾಬ್ ಅಸ್ತ್ರ’ ಪ್ರಯೋಗ +ಬೆಂಗಳೂರು,ಡಿ.23- ಹಿಜಾಬ್‍ಗೆ ಸಂಬಂಧಿಸಿದ ಶಿಕ್ಷಣ ಇಲಾಖೆ ಆದೇಶವನ್ನು ಹಿಂಪಡೆಯುವುದಾಗಿ ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಅದರ ಬೆಂಬಲಿಗ ಸಂಘಟನೆಗಳನ್ನು ಕೆಣಕಿದ್ದು, ಕಾಂಗ್ರೆಸ್‍ನ ಮತಬ್ಯಾಂಕ್ ಕ್ರೂಢೀಕರಣಕ್ಕೆ ಕಾರ್ಯತಂತ್ರ ರೂಪಿಸಿದ್ದಾರೆ. +ದೆಹಲಿಯ ಭೇಟಿ ಬಳಿಕ ಬೆಂಗಳೂರಿಗೆ ಮರಳುವಾಗ ಐಷಾರಾಮಿ ವಿಮಾನದಲ್ಲಿ ಸಿದ್ದರಾಮಯ್ಯ ಮತ್ತು ಸಂಪುಟದ ಕೆಲ ಸಚಿವರು ಹಾಗೂ ಬೆಂಬಲಿಗರು ಪ್ರಯಾಣ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಿಜೆಪಿ ರಾಜ್ಯ ನಾಯಕರಷ್ಟೇ ಅಲ್ಲ, ರಾಷ್ಟ್ರೀಯ ನಾಯಕರೂ ಕೂಡ. ಈ ಕುರಿತಂತೆ ವಾಗ್ದಾಳಿಯನ್ನು ನಡೆಸಲಾರಂಭಿಸಿದರು. ಜನಸಾಮಾನ್ಯರಲ್ಲೂ ಕಾಂಗ್ರೆಸಿಗರ ಐಷಾರಾಮಿ ಬದುಕಿನ ಬಗ್ಗೆ ಆಕ್ಷೇಪಗಳು ಕೇಳಿಬರಲಾರಂಭಿಸಿದವು. +ವಿವಾದ ಭುಗಿಲೇಳುತ್ತಿದ್ದಂತೆ ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ವಿಷಯಾಂತರ ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ನಲ್ಲಿರುವ ಚುನಾವಣಾ ರಣತಂತ್ರಗಾರರು ಪ್ರತೀ ಹಂತದಲ್ಲೂ ರಾಜಕೀಯ ಬೆಳವಣಿಗೆಗಳ ಮೇಲೆ ನಿಗಾ ವಹಿಸಿದ್ದು, ಕಾಲಕಾಲಕ್ಕೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದನ್ನು ಆಧರಿಸಿ ಕಾಂಗ್ರೆಸ್ ನಾಯಕರು ಹಲವಾರು ವಿವಾದಗಳ ವಿಷಯಾಂತರ ಮಾಡುವ ಮೂಲಕ ಬಿಜೆಪಿಗೆ ಎದುರೇಟು ನೀಡುತ್ತಿದ್ದಾರೆ. +ಐಷಾರಾಮಿ ವಿಮಾನದ ಪ್ರಯಾಣವನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವಾರು ಮಂದಿ ಪ್ರಸ್ತಾಪಿಸಿ ಸಿದ್ದರಾಮಯ್ಯ ಮತ್ತು ಅವರ ಬಣವನ್ನು ಅಪರಾ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಕೂಡ ಐಷಾರಾಮಿ ವಿಮಾನದಲ್ಲಿ ಓಡಾಡುತ್ತಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರಾದರೂ ಅದು ಅಷ್ಟು ಪರಿಣಾಮಕಾರಿಯಾಗಿರಲಿಲ್ಲ. +“ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ” +ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಬೆಂಗಳೂರಿನ ಹೊರವಲಯದಲ್ಲಿರುವ ಮಾದಾವರದ ಬಳಿಯಿರುವ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ನಗರದ ಜಕ್ಕೂರಿನಿಂದ ಹೆಲಿಕಾಫ್ಟರ್‍ನಲ್ಲಿ ಪ್ರಯಾಣಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೆಂಗೇರಿಯಿಂದ ವಿಮಾನನಿಲ್ದಾಣಕ್ಕೆ ಹೆಲಿಕಾಫ್ಟರ್ ಬಳಕೆ ಮಾಡಿದ್ದರು ಎಂಬೆಲ್ಲಾ ಮಾಹಿತಿಗಳನ್ನು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ವರ್ಚಸ್ಸು ಹಾನಿಯನ್ನು ತಡೆಯುವ ಪ್ರಯತ್ನ ನಡೆಸಿತ್ತು. ಆದರೆ ಅದ್ಯಾವುದೂ ನಿರೀಕ್ಷಿತ ಫಲ ನೀಡಿರಲಿಲ್ಲ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ಅಸ್ತ್ರವನ್ನು ಬಳಕೆ ಮಾಡುವ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆದಿದ್ದಾರೆ. +ಬಿಜೆಪಿ ನಾಯಕರು ಐಷಾರಾಮಿ ವಿಮಾನ ಪ್ರಯಾಣದ ವಿವಾದವನ್ನು ಬದಿಗಿರಿಸಿ ಹಿಜಾಬ್ ಅಸ್ತ್ರವನ್ನು ಕೈಗೆತ್ತಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿಗೆ ಇಳಿದಿದ್ದಾರೆ. ಮತ್ತೊಂದೆಡೆ ಬಿಜೆಪಿ ನಾಯಕರ ಟೀಕೆಗಳು ಕಾಂಗ್ರೆಸ್‍ನ ಮತ ಬ್ಯಾಂಕ್ ಅನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿವೆ. ಅಲ್ಪಸಂಖ್ಯಾತರ ಮತ ಬ್ಯಾಂಕ್ ಕಾಂಗ್ರೆಸ್ ಜೊತೆ ಗಟ್ಟಿಯಾಗಿ ನಿಲ್ಲುವಂತಹ ಓಲೈಕೆಗಳು ವ್ಯಾಪಕವಾಗಿ ನಡೆಯುತ್ತಿವೆ. ಸಿದ್ದರಾಮಯ್ಯ ಅವರ ಹೇಳಿಕೆ ಮುಸ್ಲಿಂ ಸಮುದಾಯದಲ್ಲಿ ಸೃಷ್ಟಿಸಿದ್ದ ಅಸಹನೆಗೆ ಕೊಂಚ ತಂಪೆರೆದಂತಾಗಿದೆ. +ಮುಂಬೈ ವಿವಿಯಲ್ಲಿ ದೇವಸ್ಥಾನ ನಿರ್ವಹಣೆ ಕೋರ್ಸ್ ಆರಂಭ +ಬಿಜೆಪಿ ಕೋಮು ರಾಜಕಾರಣಕ್ಕೆ ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಕರ್ನಾಟಕ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಲಾಭ ಮಾಡಿಕೊಟ್ಟಿದೆ.ಪಂಚರಾಜ್ಯ ಚುನಾವಣೆಗಳ ಪೈಕಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಷಯದಲ್ಲಿ ಹೆಚ್ಚೇನು ಆಸಕ್ತಿ ವಹಿಸಲಿಲ್ಲ. ಜೊತೆಗೆ ಅಲ್ಲಿನ ಸ್ಥಳೀಯ ಪಕ್ಷಗಳು ವೋಟ್ ಬ್ಯಾಂಕ್ ಅನ್ನು ಸಿದ್ಧಗೊಳಿಸಿ ಹಂಚಿಕೊಂಡಿದ್ದವು. ಎಲ್ಲೆಲ್ಲಿ ಅಲ್ಪಸಂಖ್ಯಾತರ, ದಲಿತರ ಮತಗಳು ವಿಭಜನೆಯಾಗದಂತಹ ರಣತಂತ್ರ ರೂಪಿಸಲಾಗಿದೆಯೋ ಅಲ್ಲೆಲ್ಲಾ ಕಾಂಗ್ರೆಸ್ ಗೆದ್ದಿರುವುದು ಸಮೀಕ್ಷೆಗಳಿಂದ ಸ್ಪಷ್ಟವಾಗಿದೆ. +ಈ ಕಾರಣಕ್ಕಾಗಿಯೇ ಸಿದ್ದರಾಮಯ್ಯ ಹಿಜಾಬ್ ಅಸ್ತ್ರವನ್ನು ಉಪಯೋಗಿಸಿ ಒಂದೆಡೆ ಬಿಜೆಪಿಯನ್ನು ಕೆಣಕಿದೆಯಲ್ಲದೆ, ಮತ್ತೊಂದೆಡೆ ಅಲ್ಪಸಂಖ್ಯಾತರ ಮತಗಳನ್ನು ಕ್ರೂಢೀಕರಿಸಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇದು ಎಷ್ಟರ ಮಟ್ಟಿಗೆ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿಸಿದೆ. \ No newline at end of file diff --git a/eesanje/url_46_280_2.txt b/eesanje/url_46_280_2.txt new file mode 100644 index 0000000000000000000000000000000000000000..39b95fcd7c51938832182870a114d2432a3ae39f --- /dev/null +++ b/eesanje/url_46_280_2.txt @@ -0,0 +1,16 @@ +ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಸಿದ ನೂತನ ಪದಾಧಿಕಾರಿಗಳ ಪಟ್ಟಿ +ಬೆಂಗಳೂರು, ಡಿ.24- ಬಹುನಿರಿಕ್ಷೀತ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದಿರುವವರು ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದು, ಮೊದಲೇ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದ್ದ ಕಮಲ ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. +ಅದರಲ್ಲೂ ಪದಾಧಿಕಾರಿಗಳ ಪಟ್ಟಿಗೆ ಕೇಂದ್ರದ ಮಾಜಿ ಸಚಿವರಾದ ಡಿ,ವಿ,ಸದಾನಂದಾಗೌಡ ಹಾಗೂ ಬಸನಗೌಡ ಪಾಟೀಲ್ ಯಾತ್ನಾಳ್ ಅವರು ಪಕ್ಷದ ವರಿಷ್ಠರ ನಡೆಗೆ ಕೆಂಡಕಾರಿದ್ದಾರೆ. ವಿಶೇಷವೆಂದರೆ ಇಬ್ಬರೂ ನೇರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೇ ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ್ದಾರೆ. ಆದರೆ ಎಲ್ಲಿಯೂ ಕೂಡಾ ಅವರ ಹೆಸರನ್ನು ನೇರವಾಗಿ ಪ್ರಸ್ತಾಪ ಮಾಡಿಲ್ಲ. ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ 6 ಆಪ್ತರಿಗೆ ಸ್ಥಾನ ನೀಡಲಾಗಿದ್ದು, ಇದು ಇತರೆ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. +ಇನ್ನು ಬಿಜೆಪಿಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಪದಾಧಿಕಾರಿಗಳ ಪಟ್ಟಿಯಲ್ಲಿ ಪಕ್ಷದ ನಿಷ್ಟಾವಂತರನ್ನು ಕಡೆಗಣಿಸಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತರಿಗೆ ಮಣೆ ಹಾಕಲಾಗಿದ್ದು ಇದರಿಂದ ಸಂಘಟನೆಗೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. +ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ +ಅದರಲ್ಲೂ ಯಡಿಯೂರಪ್ಪ ಅವರ ರಾಜಕೀಯ ಎದುರಾಳಿ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧದ ನಡುವೆಯೂ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಕ್ಷದ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ರಾಜ್ಯಾಧ್ಯಕ್ಷ ಬಿ,ವೈ ವಿಜೆಯೇಂದ್ರ ನಡೆಗೆ ಹಿಂದೂ ಪೈರ್ ಬ್ರಾಂಡ್ ಖ್ಯಾತಿಯ ಯತ್ನಾಳ್ ಬೆಂಕಿಯುಗಿಳಿದ್ದಾರೆ. +ಇದು ಕೆಜೆಪಿ ಪಟ್ಟಿ:ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯ ಪದಾಧಿಕಾರಿಗಳ ಆಯ್ಕೆ ನನ್ನ ಗಮನಕ್ಕೆ ಬಂದಿಲ್ಲ. ಅದು ಹೇಗೆ ನನ್ನ ಗಮನಕ್ಕೆ ಬರುತ್ತದೆ. ನಾವೇನು ಬಿಜೆಪಿ ಕಾರ್ಯಕರ್ತನೇನು? ನಾವು ದೇಶದ ಕಾರ್ಯಕರ್ತರು ಅಷ್ಟೆ. ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ. +ಸುದ್ದಿಗಾರರ ಜೊತೆ ಮತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಎಂದು ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್‍ನಲ್ಲಿ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಕುಸಿದು ಬಿದ್ದು ಹೋಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.ಈಗ ಕೆಜೆಪಿ 2 ಆಗಿದೆ, ಮುಂದೆ ಅವರ ಮೊಮ್ಮಗ ಬಂದರೆ ಕೆಜೆಪಿ 3 ಆಗುತ್ತದೆ.ಈಗಲೇ ನಿವೃತ್ತಿ ಅಲ್ಲ, ಇನ್ನೊಂದು ಎಲೆಕ್ಷನ್ ಇದೆ. 2028ರ ಚುನಾವಣೆ ಬಳಿಕ ನಿರ್ಧಾರ ಮಾಡುವೆ. ಆದರೆ ಯೂ ಟರ್ನ್ ಹೊಡೆದ ಯತ್ನಾಳ್ ಎನ್ನಬೇಡಿ, ಡೈರೆಕ್ಟ್ ಟರ್ನ್ ಎಂದು ಹೇಳಿದರು. +ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ ಎಂದು ಅವರು ಅತೃಪ್ತಿಯಿಂದ ಹೇಳಿದರು. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್ಮೇಲ್ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು. +ದೆಹಲಿಯಲ್ಲಿ ಕುಳಿತು ತೀರ್ಮಾನ ಮಾಡುವುದು ಸರಿಯಲ್ಲ:ಈ ಬಗ್ಗೆ ಬಿಜೆಪಿ ಸಂಸದ ಸದಾನಂದಗೌಡ ಪ್ರತಿಕ್ರಿಯಿಸಿ, ಈ ತಂಡವನ್ನು ಅಸಮರ್ಥ ತಂಡ ಎಂದು ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ. +ಈ ತಂಡ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋದರೆ ಖಂಡಿತ ಯಶಸ್ವಿಯಾಗುತ್ತದೆ. ಮತ್ತೆ ಏನಾದರೂ ಹಳೆಯ ಚಾಳಿ ಮುಂದುವರಿಸಿದರೆ ಅದು ಪಕ್ಷದ ಮೇಲೆ ಸಮಸ್ಯೆ ಆಗುತ್ತದೆ. ದಕ್ಷಿಣ ಭಾಗಕ್ಕೆ ಹೆಚ್ಚು ಆದ್ಯತೆ ಸಿಕ್ಕಿದೆ, ಉತ್ತರ ಭಾಗಕ್ಕೆ ಸರಿಯಾಗಿ ಸಿಕ್ಕಿಲ್ಲ ಎಂಬ ಮಾತುಗಳು ಇವೆ. ಈ ತಂಡವನ್ನು ಅಸಮರ್ಥ ತಂಡ ಅಂತಾ ಹೇಳಲ್ಲ. ಆದರೆ ಅಲ್ಲೋ ಇಲ್ಲೋ ಸ್ವಲ್ಪ ವ್ಯತ್ಯಾಸಗಳು ಇವೆ. ಇದನ್ನೆಲ್ಲ ಮಾಡುವ ಮುನ್ನ ಕೇಂದ್ರದ ನಾಯಕರು ಬಂದು ರಾಜ್ಯದ ಹಿರಿಯರ ಜೊತೆ ಕುಳಿತು ತಿಳಿದುಕೊಳ್ಳಬೇಕಿತ್ತು. ಅವರಿಂದ ಹೊಸ ವಿಷಯ ತೆಗೆದುಕೊಂಡು ತಂಡವನ್ನು ಮಾಡಬೇಕಿತ್ತು ಎಂದಿದ್ದಾರೆ. +ಇವತ್ತು ಅವರನ್ನು ಕರೆದು ಮಾತಾಡಿದ್ದರೆ ಈ ಅತೃಪ್ತರ ಸಮಸ್ಯೆ ಇರುತ್ತಿರಲಿಲ್ಲ. ಇವತ್ತಿನ ತಂಡದಲ್ಲಿ ಅಧ್ಯಕ್ಷರನ್ನು ಕ್ರಿಯಾಶೀಲರನ್ನು ನೇಮಕ ಮಾಡಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ನೇಮಕ ಆಗುವಾಗ ಸಮಾನವಾಗಿ ನೇಮಕ ಆಗಬೇಕು. ಒಂದು ತಂಡ ಅಂದರೆ ಅದು ಒಂದು ಗುಂಪಿಗೆ ಸೀಮಿತ ಆಗಬಾರದು. ಈಗಲಾದರೂ ಕರ್ನಾಟಕಕ್ಕೆ ವರಿಷ್ಠರು ಬರಬೇಕು ಎಂದು ಆಗ್ರಹಿಸಿದ್ದಾರೆ. +ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ +ದೆಹಲಿಯಲ್ಲಿ ಕುಳಿತು ತೀರ್ಮಾನ ಮಾಡುವುದು ಸರಿಯಲ್ಲ. ಕೋರ್ ಕಮಿಟಿ ಎನ್ನುವುದು ಒಂದು ಹಿರಿಯರ ತಂಡ, ಆ ಕೋರ್ ಕಮಿಟಿ ಜೊತೆ ಚರ್ಚಿಸಿ ತೀರ್ಮಾನ ಆಗಿದ್ದರೆ, ಇನ್ನೂ ಸದೃಢವಾದ ಟೀಮ್ ಕಟ್ಟಲು ಸಾಧ್ಯವಾಗಬಹುದಿತ್ತು. ಉತ್ತರ ಕರ್ನಾಟಕ ಭಾಗಕ್ಕೆ ಮತ್ತಷ್ಟು ಒತ್ತು ಕೊಡಬೇಕಿತ್ತು. ಯಾಕೋ ಏನೋ ಗೊತ್ತಿಲ್ಲ, ಹಿರಿಯರ ವೈಫಲ್ಯದಿಂದ ಸೋಲಾಗಿದೆ ಎಂಬ ಭಾವನೆ ವರಿಷ್ಠರಲ್ಲಿದೆ. ದಯವಿಟ್ಟು ಅದನ್ನು ಅಲ್ಲಿಗೆ ಬಿಟ್ಟು ಬಿಡಿ ಎಂದು ಹೇಳಿದ್ದಾರೆ. +ಎಲ್ಲವೂ ಸರಿ ಹೋಗಲಿದೆ:ಇನ್ನು ಈ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಪಟ್ಟಿ ಈಗಾಗಲೇ ಬಿಡುಗಡೆ ಆಗಿದೆ. ಅಳೆದು, ತೂಗಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎರಡು ಮಾತಿಲ್ಲ. ಒಳ್ಳೆಯ ಪದಾಧಿಕಾರಿಗಳ ಆಯ್ಕೆ ಆಗಿದೆ. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಬಗ್ಗೆ ಏನೂ ಹೇಳಲ್ಲ ಅವರ ವಿರುದ್ಧ ಹೈಕಮಾಂಡ್‍ಗೆ ದೂರು ನೀಡುವ ಪ್ರಯತ್ನ ಸಹ ಮಾಡಲ್ಲ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದರು.. +ಹಿಜಾಬ್ ವಿಚಾರದಲ್ಲಿ ನಮ್ಮೆಲ್ಲರ ಆಕ್ರೋಶದ ಹಿನ್ನೆಲೆ ಸಿದ್ದರಾಮಯ್ಯನವರು ಹೇಳಿಕೆ ಹಿಂದೆ ಪಡೆದಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಗಳಲ್ಲ. ಜಾತಿಯ ವಿಷ ಬೀಜ ಬಿತ್ತುವ ಕೆಲಸ ಸಿದ್ದರಾಮಯ್ಯ ಬಿಡಬೇಕು. ವಿಷ ಬೀಜ ಬಿತ್ತುವುದರಿಂದ ಅವರಿಗೆ ಯಾವುದೇ ಲಾಭ ಆಗಲ್ಲ ಎಂದರು. ಜಾತಿ ಗಣತಿ ವರದಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ಬೇಡ ಎಂಬ ಭಾವನೆ ಬಹುತೇಕರಲ್ಲಿ ಬಂದಿದೆ. ಗಣತಿಯು ವೈಜ್ಞಾನಿಕವಾಗಿ ಆಗಬೇಕು ಎಂಬ ಭಾವನೆ ಇದೆ, ನಾವು ಕೂಡ ಅದನ್ನೇ ಹೇಳುತ್ತೇವೆ. ಇನ್ನೊಮ್ಮೆ ಸಮೀಕ್ಷೆ ಆಗಲಿ ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. \ No newline at end of file diff --git a/eesanje/url_46_280_3.txt b/eesanje/url_46_280_3.txt new file mode 100644 index 0000000000000000000000000000000000000000..779be5b05c8f31f8203136fe02cc745de866655a --- /dev/null +++ b/eesanje/url_46_280_3.txt @@ -0,0 +1,5 @@ +ಕುಮಾರಸ್ವಾಮಿಯವರನ್ನು ನಿಂದಿಸುವುದು ಕಾಂಗ್ರೆಸ್‍ಗೆ ಅಂಟಿದ ಬೇನೆ : ಜೆಡಿಎಸ್ +ಬೆಂಗಳೂರು, ಡಿ.24- ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನಿಂದನೆ ಮಾಡುವುದೇ ಕಾಂಗ್ರೆಸ್‍ಗೆ ಅಂಟಿದ ಬೇನೆ ಎಂದು ಜೆಡಿಎಸ್ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ ಎಂದು ಆರೋಪಿಸಿದೆ. +ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ, ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ. ಅದರ , ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಟೀಕಾಪ್ರಹಾರ ನಡೆಸಿದೆ. ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ. +ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ +ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಯಿಂದ ಬಳಲುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ ಎಂದು ಟೀಕಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಜೆಡಿಎಸ್ ಆರೋಪಿಸಿದೆ. \ No newline at end of file diff --git a/eesanje/url_46_280_4.txt b/eesanje/url_46_280_4.txt new file mode 100644 index 0000000000000000000000000000000000000000..adbf07f31f757105f637052b43aa6f0c31afff8e --- /dev/null +++ b/eesanje/url_46_280_4.txt @@ -0,0 +1,13 @@ +ಭಾರತೀಯ ಕುಸ್ತಿ ಫೆಡರೇಶನ್ ಸಂಸ್ಥೆ ಅಮಾನತು +ನವದೆಹಲಿ, ಡಿ.24- ಭಾರತೀಯ ಕುಸ್ತಿ ಫೆಡರೇಶನ್‍ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೇತೃತ್ವದ ನೂತನ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಸ್ಥೆಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ.ಕಳೆದ ಗುರುವಾರ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ನೂತನ ಅಧ್ಯಕ್ಷನಾಗಿ ಆಯ್ಕೆಯಾದ ಕೆಲವೇ ಗಂಟೆಗಳಲ್ಲಿ ದೇಶದ್ಯಾಂತ ಭಾರೀ ವಿವಾದ ಸೃಷ್ಟಿಯಾಗಿತ್ತು. +ಈ ಬೆಳಗಣಿಗೆಯಿಂದ ಮನನೊಂದ ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ತಾವು ಕುಸ್ತಿಯನ್ನೇ ತ್ಯಜಿಸುವ ನಿರ್ಧಾರ ಪ್ರಕಟಿಸಿದ್ದರೆ, ಮತ್ತೊರ್ವ ಕ್ರೀಡಾಪಟು ವೀರೇಂದರ್ ಸಿಂಗ್ ಕೂಡಾ ತಮಗೆ ಲಭಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಶನಿವಾರ ಹಿಂತಿರುಗಿಸಿದ್ದರು. +ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕೇಂದ್ರ ಕ್ರೀಡಾ ಇಲಾಖೆ ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಅಧಿಕೃತ ಪ್ರಕಟಣೆಯಲ್ಲಿ, ಕ್ರೀಡಾ ಸಚಿವಾಲಯವು ರಾಷ್ಟ್ರೀಯ ಸ್ಪರ್ಧೆಗಳ ಪ್ರಕಟಣೆಯು ತರಾತುರಿಯಲ್ಲಿತ್ತು ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ. ಪಾರದರ್ಶಕತೆ ಹಾಗೂ ಇತರ ಸಮಸ್ಯೆಗಳ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. +ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ. +ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ +ಲೈಂಗಿಕ ಕಿರುಕುಳ ಆರೋಪಗಳಿಗೆ ಒಳಗಾಗಿರುವ ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಸಂಸ್ಥೆಯ (ಡಬ್ಲ್ಯೂಎಫ್‍ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತನನ್ನೇ ಕುಸ್ತಿ ಸಂಸ್ಥೆಯ ನೂತನ ಮುಖ್ಯಸ್ಥರನ್ನಾಗಿ ಗುರುವಾರ ಆಯ್ಕೆ ಮಾಡಲಾಗಿತ್ತು. ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದ ಕುಸ್ತಿಪಟು ಅನಿತಾ ಶೆಯೊರಾನ್ ವಿರುದ್ಧ ಸಂಜಯ್ ಸಿಂಗ್ ಅವರು 47 ಮತಗಳ ಪೈಕಿ 40 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ, ಬೀದಿಗಿಳಿದು ಬೃಹತ್ ಪ್ರತಿಭಟನೆಗಳನ್ನು ನಡೆಸಿದ್ದ ಕ್ರೀಡಾಪಟುಗಳು ಅನಿತಾ ಶೆಯೊರಾನ್ ಅವರಿಗೆ ಬೆಂಬಲ ನೀಡಿದ್ದರು. +ಸಂಜಯ್ ಸಿಂಗ್ ಅವರು ಈ ಹಿಂದೆ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. 2019ರಿಂದ ಡಬ್ಲ್ಯೂಎಫ್‍ಐನ ಹಿಂದಿನ ಕಾರ್ಯಕಾರಿ ಮಂಡಳಿಯ ಜಂಟಿ ಕಾರ್ಯದರ್ಶಿಯಾಗಿದ್ದರು. ಉತ್ತರ ಪ್ರದೇಶದ ಕೈಸರ್‍ಗಂಜ್‍ನಿಂದ ಆರು ಬಾರಿ ಸಂಸದರಾಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಕಳೆದ 12 ವರ್ಷಗಳಿಂದ ಕುಸ್ತಿ ಸಂಸ್ಥೆ ಮುಖ್ಯಸ್ಥರಾಗಿದ್ದರು. +ಏನಾಗಿತ್ತು?:ಈ ಹಿಂದೆ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಬಂದಿದ್ದರಿಂದ ದೂರು ದಾಖಲಾಗಿತ್ತು. ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ನಡೆದಿದ್ದವು. ಕುಸ್ತಿ ಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್, ಬಜರಂಗ್ ಪುನಿಯಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದವು. +ಕೊನೆಗೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮಧ್ಯಪ್ರವೇಶಿಸಿ ಸಾಂಧಾನ ನಡೆಸಿದ ಬಳಿಕ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದರು. ಈ ವರ್ಷಾರಂಭದಲ್ಲಿ ಬ್ರಿಜ್ ಭೂಷಣ್ ಅಧ್ಯಕ್ಷಗಿರಿಯಿಂದ ಕೆಳಗಿಳಿದಿದ್ದರು. ನಂತರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಕುಸ್ತಿಪಟುಗಳ ಅಸಮಾಧಾನಕ್ಕೆ ಕಾರಣವಾಗಿತ್ತು. +ವಾರಣಾಸಿ ಮೂಲದ ಸಂಜಯ್ ಸಿಂಗ್, ಬ್ರಿಜ್ ಭೂಷಣ್ ಅವರ ನಿಕಟ ಸಹವರ್ತಿಯಾಗಿದ್ದಾರೆ. ಸಂಜಯ್ ಸಿಂಗ್ ಅವರು ಕಾಮನ್‍ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಅವರ ವಿರುದ್ಧ ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ಗೆದ್ದಿದ್ದಾರೆ. +ವಿರೋಧ:ನಾನು ಕುಸ್ತಿ ಬಿಟ್ಟಿದ್ದರೂ ಚಿಂತಿತಳಾಗಿದ್ದೇನೆ. ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗುತ್ತಿಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಬೇಸರ ವ್ಯಕ್ತಪಡಿಸಿದ್ದರು.2024ರ ಜೂನಿಯರ್ ನಾಷನಲ್ ಗೇಮ್ಸ್ ಕುರಿತು ಸೋಶಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಾಕ್ಷಿ, ನಾನು ಕುಸ್ತಿಯನ್ನು ಬಿಟ್ಟಿದ್ದೇನೆ, ಆದರೂ ನಾನು ಚಿಂತಿತಳಾಗಿದ್ದೇನೆ. ಏಕೆಂದರೆ, ಏಪ್ರಿಲ್ 28 ರಿಂದ ಜೂನಿಯರ್ ನ್ಯಾಷನಲ್ ಲೆವೆಲ್ ಪಂದ್ಯಗಳು ನಡೆಯಲಿವೆ. ಉತ್ತರ ಪ್ರದೇಶದ ನಂದನಿನಗರ ಗೊಂಡಾದಲ್ಲಿ ಕುಸ್ತಿ ನಡೆಸಲು ನೂತನ ಕುಸ್ತಿ ಒಕ್ಕೂಟ ನಿರ್ಧರಿಸಿದೆ. +ಈ ಬಗ್ಗೆ ನನ್ನ ಕಿರಿಯ ಮಹಿಳಾ ಕುಸ್ತಿಪಟುಗಳು ಕರೆ ಮಾಡಿ ತಿಳಿಸಿದ್ದಾರೆ. ಅವರಿಗೆ ಏನು ಹೇಳಬೇಕು ಎನ್ನುವದೇ ತಿಳಿಯುತ್ತಿಲ್ಲ ಎಂದು ಬೇಸರ ಹೊರಹಾಕಿದ್ದರು. ಗೊಂಡಾ ಬ್ರಿಜ್‍ಭೂಷಣ್‍ನ ಭದ್ರಕೋಟೆ. ಈಗ ಜೂನಿಯರ್ ಮಹಿಳಾ ಕುಸ್ತಿಪಟುಗಳು ಯಾವ ಪರಿಸರದಲ್ಲಿ ಕುಸ್ತಿ ಮಾಡಲು ಹೋಗುತ್ತಾರೆ? ಅನ್ನೋದನ್ನ ಊಹಿಸಿ. ನಂದನಿನಗರ ಬಿಟ್ಟು ಬೇರೆಲ್ಲೂ ಆಯೋಜನೆ ಮಾಡಲು ಈ ದೇಶದಲ್ಲಿ ಜಾಗವಿಲ್ಲವೇ? ಏನು ಮಾಡಬೇಕೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದರು. \ No newline at end of file diff --git a/eesanje/url_46_280_5.txt b/eesanje/url_46_280_5.txt new file mode 100644 index 0000000000000000000000000000000000000000..eef97a87b3cd95c39040dcb09e7b1a8c441506d0 --- /dev/null +++ b/eesanje/url_46_280_5.txt @@ -0,0 +1,9 @@ +ಕಾಫಿ ನಾಡಿನಲ್ಲಿ ದತ್ತ ಜಯಂತಿಗೆ ಚಾಲನೆ +ಚಿಕ್ಕಮಗಳೂರು, ಡಿ.24- ಅನುಸೂಯ ಜಯಂತಿ ಆಚರಣೆಯೊಂದಿಗೆ ಇಂದಿನಿಂದ ನಡೆಯುವ ಮೂರು ದಿನಗಳ ದತ್ತ ಜಯಂತಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಚಿಕ್ಕಮಗಳೂರು ನಗರದಲ್ಲಿ ಸಂಕೀರ್ತನ ಯಾತ್ರೆ ನಡೆಯಿತು. +ನಗರದ ಬೋಳ ರಾಮೇಶ್ವರ ದೇವಾಲಯದ ಆವರಣದಿಂದ ಆರಂಭವಾದ ಸಂಕೀರ್ತನ ಯಾತ್ರೆ ಐಜಿ ರಸ್ತೆಯಲ್ಲಿ ಸಾಗಿ ರತ್ನಗಿರಿ ರಸ್ತೆಯ ಮೂಲಕ ಪಾಲಿಟೆಕ್ನಿಕ್ ತಲುಪಿ ಅಲ್ಲಿಂದ ಮಹಿಳೆಯರು ವಿವಿಧ ವಾಹನಗಳಲ್ಲಿ ದತ್ತ ಪೀಠಕ್ಕೆ ತೆರಳಿದರು. ಸಂಕೀರ್ತನಾ ಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ದಕ್ಷಿಣ ಭಾರತದ ಮಾತೃ ಶಕ್ತಿ ಸಂಯೋಜಿಕೆ ಶುಭ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ, ಮಾಜಿ ಸಚಿವ ಸಿ ಟಿ ರವಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. +ಮಹಿಳೆಯರು ಕೊರಳಿಗೆ ಕೇಸರಿ ಶಲ್ಯ ಧರಿಸಿಕೊಂಡು ಅನುಸೂಯ ದೇವಿಯ ಚಿತ್ರಪಟ ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದರು. ವಿವಿಧ ಮಹಿಳಾ ಭಜನಾ ಮಂಡಳಿಗಳಿಂದ ಭಜನೆ ಆಡುತ್ತಾ ದತ್ತಾತ್ರೇಯ ನಾಮಸ್ಮರಣೆಯೊಂದಿಗೆ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಶ್ರಿ ದತ್ತಾತ್ರೇಯರ ಅಡ್ಡಯನ್ನ ಒತ್ತು ದತ್ತಪೀಠಕ್ಕೆ ತೆರಳಲಾಯಿತು. ಸಂಕೀರ್ತನ ಯಾತ್ರೆ ತೆರಳುವ ಎಲ್ಲ ಮಾರ್ಗಗಳಲ್ಲಿಯೂ ಬಿಗಿ ಪೊಲೀಸ್ ಬಂದೂಬಸ್ತ್ ಏರ್ಪಡಿಸಲಾಗಿತ್ತು. +ವಿವಿಧ ವಾಹನಗಳಲ್ಲಿ ತೆರಳಿದ ಮಹಿಳೆಯರು ದತ್ತ ಪೀಠದಲ್ಲಿ ಜಿಲ್ಲಾಡಳಿತ ನಿರ್ಮಿಸಿರುವ ಬ್ಯಾರಿಕೆಟ್ ಮುಖಾಂತರ ಸರತಿ ಸಾಲಿನಲ್ಲಿ ನಿಂತು ಗುಹೆ ಪ್ರವೇಶಿಸಿ ದತ್ತಪಾದಿಕೆಗಳ ದರ್ಶನ ಪಡೆದರು. ಬಂದಂತಹ ಮಹಿಳೆಯರಿಗೆ ಮಹಿಳಾ ಮೂರ್ತಿದಾವತಿಯಿಂದ ಹಸಿರು ಬಳೆ ಹಾಗೂ ಅರಿಶಿಣ ಕುಂಕುಮಗಳನ್ನು ನೀಡಲಾಯಿತು ಹಾಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. +ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ +ದತ್ತ ಗುಹೆಯ ಹೊರಬಾಗದ ಆವರಣದಲ್ಲಿ ಜಿಲ್ಲಾಡಳಿತ ನಿರ್ಮಿಸಿರುವ ತಾತ್ಕಾಲಿಕ ಶೆಡ್‍ನಲ್ಲಿ ಶ್ರೀ ದತ್ತಾತ್ರೇಯ ಚಿತ್ರಪಟವನ್ನು ಇಟ್ಟು ಪೂಜೆ ಹಾಗೂ ಗಣ ಹೋಮ, ಅನುಸೂಯ ಹೋಮ ಇತ್ಯಾದಿ ಧಾರ್ಮಿಕ ಕಾರ್ಯಗಳು ನಡೆದವು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅವರ ನೇತೃತ್ವದಲ್ಲಿ ಬಿಗಿ ಪೆಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. +ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷ ಶ್ರೀಕಾಂತ್ ಪೈ ಮಾತನಾಡಿ, ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ನ್ಯಾಯಾಲಯದ ಆದೇಶದಂತೆ ಅರ್ಚಕರ ನೇಮಕಗೊಳಿಸಲಾಗಿದೆ. ನಮ್ಮ ಬೇಡಿಕೆ ಸಂಪೂರ್ಣ ದತ್ತ ಗುಹೆ ಹಿಂದುಗಳದ್ದೇ ಆಗಬೇಕು ಎಂಬುದಾಗಿದೆ. ಗುಹೆಯಲ್ಲಿರುವ ಹಸಿರು ಹೊದಿಕೆಗಳನ್ನ ತೆರುವು ಮಾಡಬೇಕು. ಪೀಠದಲ್ಲಿ ಹಿಂದೂ ಧಾರ್ಮಿಕ ಆಚರಣೆಗೆ ಮುಕ್ತ ಅವಕಾಶವನ್ನು ಸರ್ಕಾರ ಕೊಡಬೇಕು ಮತ್ತು ಸಂಪೂರ್ಣ ಪೀಠ ಹಿಂದುಗಳದ್ದಾಗಿರಬೇಕು ಶಾಶ್ವತ ಹಿಂದೂ ಅರ್ಚಕರ ನೇಮಕ ಹಾಗೂ ಗೋರಿಗಳ ಸ್ಥಳಾಂತರ ಬೇಡಿಕೆಗಳು ಈಡೇರಬೇಕಿದೆ ಎಂದರು. +ನಾಳೆ ಚಿಕ್ಕಮಗಳೂರು ನಗರದಲ್ಲಿ ಶೋಭಾ ಯಾತ್ರೆ ನಡೆಯಲಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮತ್ತು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಟಿ. ರಾಜಶೇಖರ್ ತಿಳಿಸಿದ್ದಾರೆ. ನಾಡಿದ್ದು ಮಂಗಳವಾರ ದತ್ತಪೀಠದಲ್ಲಿ ಮೂರನೇ ದಿನದ ದತ್ತ ಜಯಂತಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಈ ವರ್ಷದ ದತ್ತ ಜಯಂತಿ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_46_280_6.txt b/eesanje/url_46_280_6.txt new file mode 100644 index 0000000000000000000000000000000000000000..61b050b064a1d2c878471b33a75c4f35df1b7abe --- /dev/null +++ b/eesanje/url_46_280_6.txt @@ -0,0 +1,11 @@ +ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ +ಮೈಸೂರು, ಡಿ.24- ನಾನು ಪ್ರತಾಪಸಿಂಹ ದೇಶದ್ರೋಹಿನೋ,? ದೇಶಪ್ರೇಮಿನೋ ? ಬೆಟ್ಟದಲ್ಲಿ ಕುಳಿತ ಚಾಮುಂಡಿ ತಾಯಿ, ಬ್ರಹ್ಮಗಿರಿಯಲ್ಲಿ ಕುಳಿತ ಕಾವೇರಮ್ಮ ತೀರ್ಮಾನ ಮಾಡುತ್ತಾಳೆ. ಕರ್ನಾಟಕದಲ್ಲಿ ನನ್ನ ಓದುಗರು ತೀರ್ಮಾನಿಸುತ್ತಾರೆ. ಕಳೆದ ಒಂಬತ್ತು ವರ್ಷದಿಂದ ನನ್ನ ಕೆಲಸ ನೋಡಿರುವ ಮೈಸೂರು, ಕೊಡಗು ಜನ ಉತ್ತರ ಕೊಡುತ್ತಾರೆ. 2024 ರ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ತೀರ್ಪು ನೀಡುತ್ತಾರೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದರು. +ಸಂಸತ್ತಿನ ಭದ್ರತಾ ಲೋಪ ಪ್ರಕರಣದ ಬಳಿಕ ಮೈಸೂರುಅವರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಅದನ್ನು ಬಿಟ್ಟು ಬೇರೆ ಏನಾದರೂ ಕೇಳಿ ಎಂದಿದ್ದಾರೆ. +ಪ್ರತಾಪ ಸಿಂಹ ದೇಶದ್ರೋಹಿಯೇ ಅಥವಾ ದೇಶಪ್ರೇಮಿಯೇ ಎನ್ನುವುದು ಬೆಟ್ಟದ ಚಾಮುಂಡಿ ತಾಯಿ ಹಾಗೂ ಕೊಡಗಿನ ಕಾವೇರಿ ತಾಯಿಗೆ ಗೊತ್ತು. ನನ್ನ ಲೇಖನಗಳನ್ನು ಓದಿದ ಓದುಗರಿಗೆ ಗೊತ್ತು. ಇದಕ್ಕೆಲ್ಲಾ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಜನರು ಮುಂಬರುವ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಈ ವಿಚಾರದಲ್ಲಿ ಇಷ್ಟು ಮಾತ್ರವೇ ಹೇಳುತ್ತೇನೆ. ಆ ಬಗ್ಗೆ ಇನ್ನೇನೂ ಕೇಳಬೇಡಿ ಎಂದು ಮನವಿ ಮಾಡಿದರು. +ಸಿದ್ದರಾಮಯ್ಯ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಕೇಳಿದ ಪ್ರಶ್ನೆಗೆ, ತಮ್ಮನ್ನು ಸಮರ್ಥಿಸಿಕೊಳ್ಳಲು ಸಿಎಂ ಈ ವಿಚಾರದಲ್ಲಿ ಪ್ರಧಾನಿಯನ್ನು ಎಳೆದು ತಂದಿದ್ದಾರೆ. ಪ್ರಧಾನಿಯವರು ಸರ್ಕಾರದ ವಿಮಾನದಲ್ಲೇ ಓಡಾಡುತ್ತಾರೆ. ಖಾಸಗಿ ಜೆಟ್‍ನಲ್ಲಿ ತಮ್ಮ ಪಟಾಲಂ, ಛೇಲಾ, ದುಡ್ಡು ಕೊಡುವವರ ಜೊತೆ ಪ್ರಧಾನಿ ಓಡಾಡುವುದಿಲ್ಲ ಎಂದು ತಿರುಗೇಟು ನೀಡಿದರು. +ದೇಶಕ್ಕೆ ಒಬ್ಬರೇ ಪ್ರಧಾನಿ ಇರುವುದು. ದೇಶದಲ್ಲಿ 29 ಜನ ಮುಖ್ಯಮಂತ್ರಿಗಳಿದ್ದಾರೆ. ನೀವು ಸುಖಾ ಸುಮ್ಮನೆ ಪ್ರಧಾನಿಗೆ ನಿಮ್ಮನ್ನು ನೀವು ಹೋಲಿಕೆ ಮಾಡಿಕೊಳ್ಳಬೇಡಿ. ಈ ರೀತಿ ಹೋಲಿಕೆ ಮಾಡಿಕೊಳ್ಳುವುದನ್ನು ಮೊದಲು ಬಿಡಿ ಎಂದು ಕಿಡಿಕಾರಿದರು. ನಾನು 2000 ಕೊಟ್ಟೆ, ಕರೆಂಟ್ ಕೊಟ್ಟೆ ಅಂತೀರಿ ಬಿಲ್ ಇವರ ಮನೆಯಿಂದ ಕೊಟ್ರಾ? ನಾನ್ ಮಾಡಿದೆ ಮಾಡಿದೆ ಅಂತೀರಲ್ಲಾ ನಿಮ್ ಮನೆಯಿಂದ ದುಡ್ ತಂದ್ರಾ? ಅವರ ಮಾತಿಗೆ ಅರ್ಥವೇ ಇಲ್ಲ. ಅವರು ವಿವೇಚನಾರಹಿತವಾಗಿ ಮಾತನಾಡುತ್ತಾರೆ. ಪ್ರಧಾನಿ ಅವರು, ಏರ್ ಫೋರ್ಸ್ ಒಂದರಲ್ಲಿ ಅವರು ಓಡಾಡುತ್ತಾರೆ. ಸರ್ಕಾರದ ವಿಮಾನದಲ್ಲಿ ಅವರು ಓಡಾಡುತ್ತಾರೆ. ಪ್ರೈವೇಟ್ ಜೆಟ್ ಅಲ್ಲಿ ಚೇಲಾಗಳನ್ನ ಕೂರಿಸಿಕೊಂಡು ಓಡಾಡಲ್ಲ. ಅವರು ಸರ್ಕಾರದ ವಿಮಾನದಲ್ಲೇ ಓಡಾಡುವುದು. +ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು +ಸಮವಸ್ತ್ರ ಸಂಹಿತೆ ತಂದಿದ್ದ ಉದ್ದೇಶ ಸಮಾನ ಮನಸ್ಥಿತಿಯಲ್ಲಿ ನಡೆಯಬೇಕು ಎನ್ನುವುದು ಬಡವ ಬಲ್ಲಿದ, ಮೇಲು ಕೀಳು, ಮುಸ್ಲಿಂ ಹಿಂದೂ ಬರಬಾರದು. ನಾವೆಲ್ಲ ಒಂದೇ ಎಂಬ ಭಾವ ಮೂಡಬೇಕು ಎಂಬ ಉದ್ದೇಶ. ಆದರೆ, ಅದನ್ನ ರಾಜಕಾರಣಕ್ಕೆ ಬಳಸುವುದು ಸರಿಯಲ್ಲ. ವಸ್ತ್ರ ಸಂಹಿತೆ ಎಲ್ಲರಲ್ಲೂ ಒಂದೇ ಎಂಬ ಭಾವ ಮೂಡಿಸುತ್ತದೆ ಎಂದು ಹಿಂಜಾಬ್ ನಿಷೇಧ ವಾಪಸ್ ಪಡೆಯುವುದರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು. +ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಚರ್ಚೆಗೆ ಬಗ್ಗೆ ಪ್ರತಿಕ್ರಿಯಿಸಿ, 2014ರಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತವಿತ್ತು. ಈ ವೇಳೆ ಅಲ್ಪ ಸಂಖ್ಯಾತರಿಗೆ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಯೂನಿವರ್ಸಿಟಿ ನಿರ್ಮಾಣ ಮಾಡಲು ಮುಂದಾಗಿದ್ದರು. ದೇವರಾಜ ಮಾರ್ಕೆಟ್ ವಿಚಾರ ಬಂದಾಗ ಸಿದ್ದರಾಮಯ್ಯ ಮಹರಾಜ ಏನ್ ಅವನ ದೊಡ್ಡು ಕೊಟ್ಟು ತಂದಿದ್ನಾ ಅಂದಿದ್ದರು. ಸಿದ್ದರಾಮಯ್ಯ ಅವರಿಗೆ ಅಭಿಮಾನ ಇರುವುದು ಟಿಪ್ಪುಗೆ ಹೊರೆತು, ರಾಜ ಮನೆತನಕ್ಕಲ್ಲ ಎಂಬುದು ಗೊತ್ತು ಎಂದು ಕಿಡಿಕಾರಿದರು. +ನಮಗೂ ಕೂಡ ಆ ಮನವರಿಕೆ ಬಂದಿದೆ. ವಿಮಾನ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಪ್ರಸ್ತಾಪ ಮಾಡಲಾಗಿದೆ. ಕ್ಯಾಬಿನೇಟ್ ಅಲ್ಲಿ ಚರ್ಚಿಸಿ ಕೇಂದ್ರಕ್ಕೆ ಕಳುಹಿಸಲಾಗಿದೆ. ಆ ಹೆಸರನ್ನ ಎಂದಿಗೂ ಬದಲಿಸಲು ಸಾಧ್ಯವಿಲ್ಲ ಎಂದರು. +ಡಿಸೆಂಬರ್ 13 ರಂದು ಸಂದರ್ಶಕರ ಸೋಗಿನಲ್ಲಿ ಸಂಸತ್ತಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳು ಏಕಾಏಕಿ ಲೋಕಸಭೆಯ ಹಾಲ್ಗೆ ಜಿಗಿದು ಸ್ಮೋಕ್ ಬಾಂಬ್ ಸಿಡಿಸಿದ್ದರು. ಈ ಆರೋಪಿಗಳಿಗೆ ಸಂಸದ ಪ್ರತಾಪ್ ಸಂದರ್ಶಕರ ಪಾಸ್ ನೀಡಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಾಪ್ ಸಿಂಹ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕೆಂದು ಪ್ರತಿಪಕ್ಷಗಳು ಆಗ್ರಹಿಸಿವೆ. ಆದರೂ ಸಹ ಪ್ರತಾಪ್ ಸಿಂಹ ಇದುವರೆಗೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರಲಿಲ್ಲ. \ No newline at end of file diff --git a/eesanje/url_46_280_7.txt b/eesanje/url_46_280_7.txt new file mode 100644 index 0000000000000000000000000000000000000000..6167b744db194ff4c3ed0cdefb253bd3ccf484c8 --- /dev/null +++ b/eesanje/url_46_280_7.txt @@ -0,0 +1,6 @@ +ಅಂಜನಾದ್ರಿಯಲ್ಲಿ ಹನುಮ ಜಯಂತಿ ಸಂಭ್ರಮ +ಕೊಪ್ಪಳ, ಡಿ.24-ಹನುಮಂತನ ಜನ್ಮಸ್ಥಳ ಎಂದು ಪ್ರಸಿದ್ದಿ ಪಡೆದಿರುವ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಸಂಭ್ರಮ ಮನೆ ಮಾಡಿದೆ. ಹನುಮ ಜಯಂತಿ ಅಂಗವಾಗಿ ಹನುಮಮಾಲೆದಾರಿಗಳು ಇಂದು ವಿಸರ್ಜನೆ ಕಾರ್ಯ ವೇಳೆ ಶ್ರೀರಾಮ-ಆಂಜನೇಯನ ನಾಮ ಘೋಷ ಮೊಳಗಿದೆ ನೆರೆಯ ಆಂಧ್ರ, ತೆಲಂಗಾಣ ಸೇರಿದಂತೆ ದೇಶದ ವಿವಿಧೆಡೆಯಿಂದ ಲಕ್ಷಾಂತರ ಹನುಮ ಭಕ್ತರು ಆಗಮಿಸಿದ್ದಾರೆ. +ಜಿಲ್ಲಾಡಳಿತ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು ರಾತ್ರಿ ಅಂಜನಾದ್ರಿಬೆಟ್ಟಕ್ಕೆ ಅಳವಡಿಸಿದ್ದ ವಿದ್ಯುತ್ ದೀಪಗಳಿಂದ ಕಂಗೊಳಿಸಿತ್ತು. ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದಿದ್ದ ಭಕ್ತರು ಪ್ರಧಾನಿ ನರೇಂದ್ರ ಮೋದಿ, ಪುನೀತ್ ರಾಜ್‍ಕುಮಾರ್ ಭಾವಚಿತ್ರ ಹಿಡಿದು ಆಗಮಿಸಿ ಜೈ ಕಾರ ಕೂಗಿದರು. +ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ +ಚಾತುರ್ಮಾಸದಲ್ಲಿ ರಾವಣನ ವಿರುದ್ಧ ಯುದ್ದಕ್ಕೆ ಹೋಗಲು ಹನುಮ ಸಂಕಲ್ಪವನ್ನು ಮಾಡಿ ತಪಸ್ಸು ಮಾಡುತ್ತಾನೆ. ಇದೇ ಕಾರಣಕ್ಕೆ ಹನುಮನ ಭಕ್ತರು ಚಾತುರ್ಮಾಸದ ಸಮಯದಲ್ಲಿ ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಸಂಕಲ್ಪ ಮಾಡಿ ಹನುಮ ಮಾಲೆಯನ್ನು ಧರಿಸುತ್ತಾರೆ. +ಇಂದು ವಿಸರ್ಜನೆಗಾಗಿ ಆಗಮಿಸಿ ಪೋಜೆ ಸಲ್ಲಿಸುತ್ತಿದ್ದಾರೆ.ಕೊಪ್ಪಳ ಜಿಲ್ಲಾಡಳಿತ ಮತ್ತು ಮುಜರಾಯಿ ಇಲಾಖೆ ಅಂಜನಾದ್ರಿ ಬೆಟ್ಟದಲ್ಲಿ ನೀರು,ಉಪಹಾರ ವ್ಯವಸ್ಥೆ ಮಾಡಿತ್ತು ಆದರೆ ಭಕ್ತರ ತಂಡವು ಪವಸಾದ ವಿನಿಯೋಗ ಮಾಡಿ ಹನುಮ ಜಯಂತಿಯನ್ನು ಸಂಭ್ರಮದಿಂದ ಆಚರಿಸಿದರು. \ No newline at end of file diff --git a/eesanje/url_46_280_8.txt b/eesanje/url_46_280_8.txt new file mode 100644 index 0000000000000000000000000000000000000000..33f8e1832195a775c552ae340939acde719e87ff --- /dev/null +++ b/eesanje/url_46_280_8.txt @@ -0,0 +1,5 @@ +ಉದ್ಯಮಿಗಳೊಂದಿಗೆ ಸಿಎಂ ಸಭೆ +ಮೈಸೂರು,ಡಿ.23- ಸಾಂಸ್ಕøತಿಕ ನಗರಿ ಮೈಸೂರು ಹಾಗೂ ಸುತ್ತಮುತ್ತಲೂ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿದ ಸಿಎಂ, ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಬೇಕು ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ ಅವಕಾಶ ಕೊಡಬೇಕು ಎಂದರು. +ಹೇರಳವಾದ ಮಾನವ ಸಂಪನ್ಮೂಲ ನಮ್ಮಲ್ಲಿ ಇದೆ. ವೃತ್ತಿ ನೈಪುಣ್ಯ ಇರುವವರೂ ನಮ್ಮಲ್ಲಿ ಇದ್ದಾರೆ. ಸುಳ್ಳು ಕಾರಣ ಕೊಟ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ನಿರಾಕರಿಸಬಾರದು. ಕಾರ್ಖಾನೆಗಳು ಶಾಂತಿಯುತವಾಗಿ ನಡೆಯಬೇಕು. ನಮ್ಮ ಸರ್ಕಾರ ನಿರುದ್ಯೋಗಿ ಪದವೀಧರರಿಗಾಗಿ ಯುವ ನಿಧಿ ಯೋಜನೆ ಜಾರಿಗೆ ತರುತ್ತಿದೆ. ಯೋಜನೆ ಜನವರಿ 12ರಂದು ಉದ್ಘಾಟನೆಯಾಗಲಿದೆ. +ನಿಮಗೆ ಯಾವ ರೀತಿಯ ವೃತ್ತಿ ನೈಪುಣ್ಯತೆ ಇರುವವರು ಬೇಕು ಎಂಬುದನ್ನು ಮನಗಂಡು ಪದವೀಧರರಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಲಾಗುವುದು. ಕಾರ್ಖಾನೆಗಳಿಂದ ರಾಜ್ಯದ ಅಭಿವೃದ್ಧಿ ಆಗುತ್ತದೆ. ಜಿಡಿಪಿ ಬೆಳವಣಿಗೆಗೂ ಇದು ಸಹಕಾರಿ. ಕಾರ್ಖಾನೆಗಳಿಗೆ ಜಮೀನು ನೀಡಿದ ಮಾಲೀಕರ ಕುಟುಂಬದವರಿಗೆ ಪ್ರಮುಖವಾಗಿ ಉದ್ಯೋಗ ನೀಡಬೇಕು. ಸ್ಥಳೀಯರಿಗೆ ಆದ್ಯತೆ ಸಿಗಲೇಬೇಕು. ಒಂದು ವೇಳೆ ವೃತ್ತಿ ನೈಪುಣ್ಯತೆ ಇಲ್ಲದಿದ್ದರೆ ತರಬೇತಿ ನೀಡಿ ನೇಮಕ ಮಾಡಿಕೊಳ್ಳುವುದು ಸೂಕ್ತ ಎಂದು ಹೇಳಿದರು. +ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬ ದೃಷ್ಟಿಯಿಂದ ಕಾರ್ಖಾನೆಗಳ ಪ್ರಾರಂಭಕ್ಕೆ ಅನುಮತಿ ನೀಡಲಾಗುತ್ತದೆ. ಉದ್ಯೋಗ ಸಿಗದಿದ್ದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ನಮ್ಮ ಸರ್ಕಾರ ಕೈಗಾರಿಗಳಿಗೆ ಸೌಲಭ್ಯ ಒದಗಿಸಲು ಬದ್ಧವಾಗಿದೆ. ಅದೇ ರೀತಿ ಸೂಕ್ತ ರಿಯಾಯಿತಿ ನೀಡಲೂ ಸಿದ್ಧ. ನಮ್ಮ ಸರ್ಕಾರ ಕೈಗಾರಿಕೆಗಳ ವಿರುದ್ಧ ಇಲ್ಲ. ಸ್ಥಳೀಯರಿಗೆ ಉದ್ಯೋಗ ಸಿಗಬೇಕು ಎಂಬುದು ನಮ್ಮ ಆಶಯ ಎಂದು ತಿಳಿಸಿದರು. ಜಿಲ್ಲಾಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಡಳಿತದ ಅಧಿಕಾರಿಗಳು ಸಭೆಯಲ್ಲಿದ್ದರು. \ No newline at end of file diff --git a/eesanje/url_46_280_9.txt b/eesanje/url_46_280_9.txt new file mode 100644 index 0000000000000000000000000000000000000000..96d225a4ae6d4d27879c65a375087548d27cb409 --- /dev/null +++ b/eesanje/url_46_280_9.txt @@ -0,0 +1,13 @@ +ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ +ಬೆಂಗಳೂರು,ಸೆ.23- ಅತಿಯಾದ ತುಷ್ಟೀಕರಣ ಮಾಡಿದ್ದರಿಂದಲೇ 2018ರ ವಿಧಾನಸಭೆ ಚುನಾವಣೆಯಲ್ಲಿ ನೀವು ಸೋತಿದ್ದೀರಿ ಎಂಬುದನ್ನು ಮರೆಯಬಾರದು. ಈಗಲೂ ಅದು ಮುಂದುವರೆದರೆ ಜನ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರಲ್ಲಿ ಇದೇ ರೀತಿ ಅತಿಯಾದ ತುಷ್ಟಿಕರಣ ನಡೆಸಿದ್ದರಿಂದ ಚಾಮುಂಡೇಶ್ವರಿಯಲ್ಲಿ ಏನಾಯಿತು ಎಂಬುದು ನಿಮಗೆ ಗೊತಿದ್ದರೆ ಸಾಕು. ಪುನಃ ಅದನ್ನು ಮುಂದುವರೆಸುತ್ತೇನೆ ಎಂದರೆ ರಾಜ್ಯದ ಜನತೆ ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಅತಿಯಾದ ಪರಾಕಷ್ಠೆ ಒಳ್ಳೆಯದಲ್ಲ ಎಂದು ಸಲಹೆ ಮಾಡಿದರು. +ಅಷ್ಟಕ್ಕೂ ಕರ್ನಾಟಕದಲ್ಲಿ ಹಿಜಾಬ್‍ನ್ನು ಯಾರು ನಿಷೇಧ ಮಾಡಿದ್ದಾರೆ? ನಾನು ಆದೇಶವನ್ನು ವಾಪಸ್ ಪಡೆಯುತ್ತೇನೆಂದು ಹೇಳಿದ್ದೀರಿ. ನಿಮಗೆ ಕಾನೂನಿನ ಅರಿವು ಇದೆಯೇ ಎಂದು ಪ್ರಶ್ನಿಸಿದರು. ಶಾಲಾಕಾಲೇಜಿನ ಕೊಠಡಿಗಳಲ್ಲಿ ಮಾತ್ರ ಹಿಜಾಬ್ ಧರಿಸಬಾರದೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತು ಯಾರು ಎಲ್ಲಿ ಬೇಕಾದರೂ ತಮಗೆ ಇಷ್ಟವಾದ ಉಡುಗೆ ತೊಡುಗೆಗಳನ್ನು ಧರಿಸಲು ಅವಕಾಶವಿದೆ. +ಶಾಲಾಕಾಲೇಜುಗಳಲ್ಲಿ ಎಲ್ಲರೂ ಸಮಾನತೆ ಬರಲಿ ಎಂಬ ಕಾರಣಕ್ಕಾಗಿಯೇ ಸಂಹಿತೆಯನ್ನು ಜಾರಿಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಬಾರದೆಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತೆ? ಎಂದು ಪ್ರಶ್ನಿಸಿದರು. ಸರ್ಕಾರದ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿದೆ. +ಸುಪ್ರೀಂಕೋರ್ಟ್‍ನಲ್ಲಿ ವಿಚಾರಣಾ ಹಂತದಲ್ಲಿರುವಾಗ ಇಷ್ಟು ಆತುರವಾಗಿ ಹಿಜಾಬ್ ಬಗ್ಗೆ ಹೇಳಿಕೆ ಕೊಡುವ ಅಗತ್ಯವೇನಿತು? ನೀವು ಪ್ರತಿಯೊಂದನ್ನು ಬಣ್ಣದ ಮೂಲಕವೇ ಗುರುತಿಸಿಕೊಳ್ಳಲು ಹೊರಟಿದ್ದೀರಿ, ಇದಕ್ಕೆ ಜನತೆ ಕೂಡ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಬಂದರೆ ನಾಳೆ ಇನ್ಯಾರೊ ಕೇಸರಿ ಶಾಲು, ಉಳಿದವರು ಟೋಪಿ ಹಾಕಿಕೊಂಡು ಬರುತ್ತಾರೆ. +ಪೊಲೀಸ್ ಇಲ್ಲವೇ ಮಿಲ್ಟ್ರಿ ಪೆರೇಡ್‍ನಲ್ಲಿ ಹಿಜಾಬ್ ಹಾಕುತ್ತೇವೆ ಎಂದರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.ಸಿದ್ದರಾಮಯ್ಯನವರೇನೂ ಮೂರ್ಖರಲ್ಲ. ಇದನ್ನು ಉದ್ದೇಶ ಪೂರ್ವಕವಾಗಿಯೇ ಹೇಳಿದ್ದಾರೆ. ಅವರಿಗೆ ಇದರ ಅರಿವಿಲ್ಲ ಎಂದು ಯಾರು ಭಾವಿಸಬಾರದು. ಜನತೆ ಕಾದು ನೋಡಿ ಉತ್ತರ ಕೊಡುತ್ತಾರೆ ಎಂದು ತಿಳಿಸಿದರು. +ಸೋಲಿನ ಸೇಡು:ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ನೆಲ ಕಚ್ಚಿದ್ದರಿಂದ ಸಂಸತ್‍ನ ಸದನಗಳಿಗೆ ಅಡ್ಡಿಪಡಿಸಿತು. ಕಲಾಪ ಸುಗಮವಾಗಿ ನಡೆಯಬಾರದು ಎಂಬುದು ಅವರ ಉದ್ದೇಶವಾಗಿತ್ತು ಎಂದು ಆರೋಪಿಸಿದರು. ಚುನಾವಣೆಯಲ್ಲಿ ಸೋತು ಜನರಿಂದ ಕಾಂಗ್ರೆಸ್ ತಿರಸ್ಕøತಗೊಂಡಿತ್ತು. ಬಿಜೆಪಿ ದೇಶಾದ್ಯಂತ ಮೇಲುಗೈ ಸಾಧಿಸಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ಹೀಗಾಗಿ ವಿಷಯಾಂತರ ಮಾಡಲು ಸಂಸತ್‍ನ ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿತು. ಇದು ಕಾಂಗ್ರೆಸ್‍ನ ಅಜೆಂಡಾ ಕೂಡ ಹಾಗಿತ್ತು ಎಂದು ಆರೋಪಿಸಿದರು. +ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ : ಮಾಜಿ ಸಿಎಂ ಬೊಮ್ಮಾಯಿ +ನೂತನ ಸಂಸತ್ ಭವನದಲ್ಲಿ ಭಿತ್ತಿಪತ್ರ ಕಾರ್ಡ್‍ಗಳನ್ನು ಯಾರೊಬ್ಬರು ಕೈಯಲ್ಲಿ ಹಿಡಿದುಕೊಂಡು ಬರಬಾರದೆಂದು ಎಲ್ಲ ಸದಸ್ಯರಿಗೆ ಮೊದಲೇ ಸೂಚನೆ ಕೊಡಲಾಗಿತ್ತು. ಸದನ ಸಲಹಾ ಸಮಿತಿ ಸಭೆಯಲ್ಲಿ ಇದಕ್ಕೆ ಕಾಂಗ್ರೆಸ್ ಸೇರಿದಂತೆ ಎಲ್ಲ ಸದಸ್ಯರು ಒಪ್ಪಿಕೊಂಡಿದ್ದರು. ಬಳಿಕ ಸದನದಲ್ಲಿ ಭಿತ್ತಿಪತ್ರಗಳನ್ನು ಹಿಡಿದಿದ್ದು ಏಕೆ ಎಂದು ಪ್ರಶ್ನೆ ಮಾಡಿದರು. ಸದನ ಸುಗಮವಾಗಿ ನಡೆದರೆ ಅದರ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ ಎಂಬ ಕಾರಣಕ್ಕಾಗಿ ಇಲ್ಲದ ಸಲ್ಲದ ಕಾರಣಗಳನ್ನು ನೆಪವೊಡ್ಡಿ ಉಭಯ ಸದನಗಳಲ್ಲಿ ಗದ್ದಲ ಎಬ್ಬಿಸಿದರು. ಯಾವ ಪುರುಷಾರ್ಥಕ್ಕಾಗಿ ಕಲಾಪಕ್ಕೆ ಅಡ್ಡಿಪಡಿಸಬೇಕಾಯಿತು.ಇದರಿಂದ ನೀವು ಸಾಧಿಸಿದ್ದದಾರೂ ಏನು ಎಂದು ಕಿಡಿಕಾರಿದರು. +ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಸ್ಪೀಕರ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಮುಚ್ಚಿ ಹಾಕುವ ಪ್ರಶ್ನೆಯೇ ಇಲ್ಲ. ತನಿಖಾ ಹಂತದಲ್ಲಿ ಇರುವಾಗ ಗೃಹ ಸಚಿವರು ಸದನದಲ್ಲಿ ಹೇಳಿಕೆ ನೀಡುವುದು ಸರಿಯೇ ಎಂದು ಪ್ರಶ್ನಿಸಿದರು. +ಸಂಸತ್‍ನ ಭದ್ರತಾ ವ್ಯವಸ್ಥೆಯನ್ನು ಸಿಆರ್‍ಪಿಎಫ್‍ಗೆ ವಹಿಸುವ ಚಿಂತನೆ ನಡೆದಿದೆ. ಈಗಾಗಲೇ ಸ್ಪೀಕರ್ ಅವರು ಡಿಜಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ವಿಚಾರಣೆ ನಡೆಯುತ್ತಿರುವಾಗಲೇ ಹೇಳಿಕೆ ಕೊಡಿ ಎಂದು ಒತ್ತಾಯಿಸುವುದು ಸರಿಯಲ್ಲ. ತನಿಖೆ ಪೂರ್ಣಗೊಂಡ ಮೇಲೆ ಸಂಬಂಧಪಟ್ಟವರು ಹೇಳಿಕೆ ನೀಡುತ್ತಾರೆ ಎಂದು ಹೇಳಿದರು. +ಸದನದ ಸದಸ್ಯರನ್ನು ಅಮಾನತುಗೊಳಿಸಿದ್ದು ಇದೇ ಮೊದಲಲ್ಲ. 1979ರಲ್ಲೇ 69 ಸದಸ್ಯರನ್ನು ಅಮಾತುಪಡಿಸಲಾಗಿತ್ತು. ಮಹಾರಾಷ್ಟ್ರದಲ್ಲಿ ಒಂದು ವರ್ಷ ಸದಸ್ಯರನ್ನು ಅಮಾನತು ಪಡಿಸಲಾಗಿತ್ತು. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲೂ ಇದೇ ಪ್ರಸಂಗ ನಡೆದಿದೆ. ಸದಸ್ಯರನ್ನು ಅಮಾತುಪಡಿಸುವುದು, ಬಿಡುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದು ಜೋಷಿ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_281_1.txt b/eesanje/url_46_281_1.txt new file mode 100644 index 0000000000000000000000000000000000000000..365326a977609ab337453c69dce0b9be78b944f6 --- /dev/null +++ b/eesanje/url_46_281_1.txt @@ -0,0 +1,8 @@ +ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ +ಬೆಂಗಳೂರು,ಡಿ.23- ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದುದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದ್ದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. +ಶ್ರೀ ವೆಂಕಟೇಶ್ವರ ಗೊವಿಂದನ ದೇಗುಲಗಳಲ್ಲಿ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದ್ದು, ದೇವಸ್ಥಾನವನ್ನು ಸಿಂಗರಿಸಿ ವುಂಜಾನೆ 4 ಗಂಟೆಗೆ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆದಿದ್ದು ಭಕ್ತರ ದಂಡೇ ಹರಿದುಬಂದಿದೆ. +ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ ,ಮಾಲೂರಿನ ಚಿಕ್ಕತಿರುಪತಿ, ಮೈಸೂರು ,ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು ,ಹಾಸನ ,ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಸಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. +ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ +ಇನ್ನು ಬೆಮಗಳೂರಿನ ಮಲ್ಲೇಶ್ವರ ಹಾಗು ಜೆಪಿನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. +ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ. ಇನ್ನು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವೆಡೆ ಮಾಸ್ಕ್ ಹಾಕಿಕೊಂಡು ಭಕ್ತದಿಗಳು ದೇವಸ್ಥಾನಕ್ಕೆ ಬರಲು ಹೇಳಿ ಮಾಸ್ಕ ನೀಡಲಾಗಿದೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ರಾಜಾಜಿನಗರದ ಭೂ-ಕೈಲಾಸ ವೈಕುಂಟ ದೇವಾಲಯ. +ಇಸ್ಕಾನ್ ದೇವಾಲಯ,ಮಹಾಲಕ್ಷ್ಮಿಲೇಔಟ್‍ನ ವೆಂಕಟೇಶ್ವರ ದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಮಾಡಿದ್ದಾರೆ ಗೋವಿಂದ .ಗೋವಿಂದ ನಾಮ ಎಲ್ಲಡೆ ಪಸರಿಸಿದ್ದು ಸಂಭ್ರಮದಲ್ಲಿ ನಾಡಿನ ಜನತೆ ಮಿಂದಿದ್ದಾರೆ. \ No newline at end of file diff --git a/eesanje/url_46_281_10.txt b/eesanje/url_46_281_10.txt new file mode 100644 index 0000000000000000000000000000000000000000..e1119b2b8c15a5618e1d25361e7310c304ea4a3c --- /dev/null +++ b/eesanje/url_46_281_10.txt @@ -0,0 +1,8 @@ +ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ +ಬೆಂಗಳೂರು,ಡಿ.22 – ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರದ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರು ಹಾಗೂ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. +ಬೆಂಗಳೂರು ಗ್ರಾಮಾಂತರದ ನೆಲಮಂಗಲ ನಗರ ಪ್ರದೇಶದ ಯಲಹಂಕ, ಕೆಆರ್ ಪುರ, ಜಯನಗರ, ಕೆ.ಸಿ.ಜನರಲ್ ಆಸ್ಪತ್ರೆ, ಸಂಜಯನಗರ ಆಸ್ಪತ್ರೆ, ರಾಜೀವ್ ಗಾಂದಿ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ, ವಾಣಿ ವಿಲಾಸ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಪೋಲೀಸರು ಹಾಗೂ ಅಧಿಕಾರಿಗಳ ತಂಡ ಇಂದು ತಪಾಸಣಾ ಕಾರ್ಯ ಕೈಗೊಂಡಿದೆ. +ಲೋಕಾಯುಕ್ತ ನ್ಯಾಯ ಮೂರ್ತಿ ಬಿಎಸ್ ಪಾಟೀಲ್ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಕೆಸಿ ಜನರಲ್ ಆಸ್ಪತ್ರೆ ಹಾಗೂ ಯಲಹಂಕ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಮತ್ತು ಅವರ ಸಂಬಂದಿಕರಿಂದ ಅಹವಾಲುಗಳನ್ನು ಆಲಿಸಿದರು. +ಈ ವೇಳೆ ಇಲ್ಲಿ ಔಷಧಗಳನ್ನು ಬೇರೆಡೆಯಿಂದ ತರಲು ರಶೀದಿ ನೀಡುತ್ತಾರೆ ಮತ್ತು ಚಿಕಿತ್ಸೆಗಾಗಿ ಕೆಲವರು ಹಣ ಕೇಳುತ್ತಾರೆದು ದೂರುಗಳು ಕೇಳಿ ಬಂತು. ಸುಚಿತ್ವ ಕಾಪಾಡಿಕೊಳ್ಳದೇ ಮತ್ತು ಮೂಲಭೂತ ಸೌಕರ್ಯಗಳನ್ನು ಸರಿಯಾಗಿ ನಿರ್ವಹಿಸದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಅದೀಕ್ಷಕರಿಗೆ ಕೂಡಲೇ ಇದನ್ನು ಸರಿ ಪಡಿಸುವಂತೆ ಸೂಚಿಸಿ ಗಡುವು ನೀಡಿದರು. +ರಾಜ್ಯದಲ್ಲಿ ಬರ, ಐಷಾರಾಮಿ ವಿಮಾನದಲ್ಲಿ ಸಿದ್ದು-ಜಮೀರ್‌ ಆಡಂಬರ : ಬಿಜೆಪಿ ಟೀಕೆ +ವಾಣಿ ವಿಲಾಸ ಹಾಗೂ ಸಂಜಯ್ ಗಾಂದಿ ಆಸ್ಪತ್ರೆಗಳಿಗೆ ಎಡಿಜಿಪಿ ಎ ಸುಬ್ರಮಣ್ಯ ರಾವ್ ಅವರ ನೇತೃತ್ವ ತಂಡ ದಿಡೀರ್ ಭೇಟಿ ನೀಡಿದ್ದಾಗ ಆಸತ್ರೆಯ ಸಿಬ್ಬಂದಿ ಗಾಬರಿಗೊಂಡರು. ಲೋಕಾಯುಕ್ತರು ಬಂದಿದ್ದಾರೆಂಬ ಮಾಹಿತಿ ಪಡೆದ ಅಲ್ಲಿಂದ ಸಾರ್ವಜನಿಕರು ವೈದ್ಯರ ಕೊರತೆ, ಸೂಕ್ತ ಚಿಕಿತ್ಸೆ ನೀಡುವಲ್ಲಿ ವಿಳಂಬ ಮತ್ತು ಲಂಚ ಕೇಳುವ ದೂರುಗಳನ್ನು ಹೇಳಿಕೊಂಡರು. +ಈ ವೇಳೆ ವೈದ್ಯರಿಗೆ ಕಠಿಣ ಎಚ್ಚರಿಕೆ ನೀಡಿ ಸರಿಯಾದ ಸಮಯಕ್ಕೆ ಬಂದು ಕೆಲಸ ಮಾಡಿ ಇದು ನಿಮಗೆ ಪವಿತ್ರವಾದ ಕೆಲಸ ಆರೋಗ್ಯ ಸೇವೆಯಲ್ಲಿ ಉದಾಸೀನ ಬೇಜಾವಬ್ದಾರಿತನ ಸರಿಯಲ್ಲಯೆಂದು ಎಚ್ಚರಿಕೆ ಕೂಡ ನೀಡಿದರು. \ No newline at end of file diff --git a/eesanje/url_46_281_11.txt b/eesanje/url_46_281_11.txt new file mode 100644 index 0000000000000000000000000000000000000000..f39bd85909b885afa93c0b7473cc527ca493e32f --- /dev/null +++ b/eesanje/url_46_281_11.txt @@ -0,0 +1,7 @@ +ಪೊಲೀಸರ ಸೋಗಿನಲ್ಲಿ ಉದ್ಯಮಿ ಮನೆ ಡಕಾಯಿತಿ, ಉಪ ಅರಣ್ಯಾಧಿಕಾರಿ ಸೇರಿ 11 ಮಂದಿ ಅರೆಸ್ಟ್ +ಬೆಂಗಳೂರು,ಡಿ.22 -ಪೊಲೀಸರೆಂದು ಹೇಳಿಕೊಂಡು ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿ ಮನೆಗೆ ನುಗ್ಗಿ ಕುಟುಂಬದವರನ್ನು ಬೆದರಿಸಿ ಡಕಾಯಿತಿ ಮಾಡಿಕೊಂಡು ಪರಾರಿಯಾಗಿದ್ದ 11 ಮಂದಿ ಡಕಾಯಿತರ ಪೈಕಿ ಇಬ್ಬರು ರೌಡಿಗಳು, ಒಬ್ಬ ಉಪ ಅರಣ್ಯಾಧಿಕಾರಿ, ಕಾರು ಚಾಲಕ ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. +ಹೆಚ್.ಎಂ.ಟಿ.ಲೇಔಟ್‍ನಲ್ಲಿರುವ ಉದ್ಯಮಿ ಮಗ ಡಿ.4ರಂದು ಸಂಜೆ ಸುಮಾರು 6.30ರ ಸುಮಾರಿಗೆ ಪ್ಯಾಕ್ಟರಿಯಿಂದ ಬಂದು ಪತ್ನಿಯೊಂದಿಗೆ ಮನೆಯಲ್ಲಿದ್ದರು. ಅಂದು ರಾತ್ರಿ 7.30ರ ಸುಮಾರಿನಲ್ಲಿ ಡಕಾಯಿತರ ಗುಂಪು ಇವರ ಮನೆ ಬಂದಿದ್ದು, ಒಬ್ಬಾತ ಕಾಲಿಂಗ್ ಬೆಲೆ ಒತ್ತಿದ್ದಾನೆ. ಬಾಗಿಲು ತೆರೆಯುತ್ತಿದ್ದಂತೆ ಇಬ್ಬರು ಆರೋಪಿಗಳು ಪೊಲೀಸರೆಂದು ಹೇಳಿಕೊಂಡು ಮನೆಯೊಳಗೆ ನುಗ್ಗಿದ್ದಾರೆ. ನಂತರ ಹೊರಗಡೆ ಇದ್ದ ಉಳಿದ ಡಕಾಯಿತರು ಮನೆಯೊಳಗೆ ನುಗ್ಗಿ ಉದ್ಯಮಿಯ ಮಗ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಿ ಕೈಗಳನ್ನು ಕಟಿ ್ಟ ಹಾಕಿ, ಮನೆಯಲ್ಲಿದ್ದ ಚಿನ್ನಾಭರಣ, ಹಣ ಮತ್ತು ಉದ್ಯಮಿ ತಾಯಿಯ ಮೈಮೇಲಿದ್ದ ಚಿನ್ನಾಭರಣ, ಮೊಬೈಲ್ ಫೋನ್, ಲ್ಯಾಪ್‍ಟಾಪ್, ದೋಚಿಕೊಂಡು ಪರಾರಿಯಾಗಿದ್ದರು. +ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕೃತ್ಯ ನಡೆದ ಸ್ಥ ಳವನ್ನು ಪರಿಶೀಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಈ ಪ್ರಕರಣವನ್ನು ಇನ್ಸ್‍ಪೆಕ್ಟ ರ್ ನೇತೃತ್ವದಲ್ಲಿ ಒಂದು ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ತನಿಖೆ ಕೈ ಗೊಂಡು ಕೃತ್ಯ ನಡೆದ ಸ್ಥ ಳದ ಅಕ್ಕಪಕ್ಕ ರಸ್ತೆಯಲ್ಲಿನ ಸಿ.ಸಿ.ಕ್ಯಾಮರಾಗಳನ್ನು ಪರಿಶೀಲಿಸಿ, ಕೃತ್ಯ ತ್ಯವೆಸಗಿದ ವ್ಯಕ್ತಿಯ ಚಹರೆಯನ್ನು ತಂತ್ರಜ್ಞಾನ ಸಹಾಯದಿಂದ ಗುರುತು ಪತ್ತೆಹಚ್ಚಿ 11 ಮಂದಿಯನ್ನು ಬಂಧಿಸಿದೆ. +ವಜ್ರದುಡುಪಿನಲ್ಲಿ ಪಳಪಳ ಹೊಳೆದ ಊರ್ವಶಿ +ಆರೋಪಿಗಳಿಂದ 45.52 ಲಕ್ಷ ಬೆಲೆ ಬಾಳುವ 273 ಗ್ರಾಂ ಚಿನ್ನಾಭರಣಗಳು, 23,37,300 ರೂ. ನಗದು, 370 ಗ್ರಾಂ ಬೆಳಿ ್ಳ ಒಡವೆಗಳು 2 ಮೊಬೈಲ್ ಫೋನ್‍ಗಳು, ಕೃತ್ಯಕ್ಕೆ ಬಳಸಿದ್ದ 11 ಮೊಬೈಲ್ ಫೋನ್‍ಗಳು 3 ಲಾಂಗ್, ಡ್ರಾಗರ್, ರಾಡ್, ಕಾರು, ಹಾಗೂ 2 ದ್ವಿಚಕ ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಹೆಚಿ ್ಚನ ವಿಚಾರಣೆಗೊಳಪಡಿಸಿದಾಗ ಒಬ್ಬ ಕೆಜೆ ಹಳ್ಳಿ ಹಾಗೂ ಮತ್ತೊಬ್ಬ ಹೆಣ್ಣೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಎಂಬುದು ಗೊತ್ತಾಗಿದೆ. +ಮತ್ತೊಬ್ಬ ಆರೋಪಿ ಉದ್ಯಮಿಯ ಕಂಪನಿಯಲ್ಲಿ ಈ ಹಿಂದೆ ಲಾರಿ ಚಾಲಕನಾಗಿ ಹಾಗೂ ಹಣ ಕಲೆಕ್ಷನ್ ಮಾಡುವ ಕೆಲಸವನ್ನೂ ಮಾಡಿಕೊಂಡಿದ್ದಾಗ ಅವರ ಹಣಕಾಸಿನ ವ್ಯವಹಾರವನ್ನು ತಿಳಿದುಕೊಂಡು ಹಣ ದೋಚಲು ಯೋಚಿಸಿ ಈ ಕೃತ್ಯ ನಡೆಸಿದ್ದಾನೆ. ಇದಲ್ಲದೆ ಕೃತ್ಯದ ಸಂದರ್ಭದಲ್ಲಿ ಪೊಲೀಸ್ ಎಂದು ಹೇಳಿಕೊಂಡವರು ಚಿಕ್ಕ ಮಗಳೂರು ಮೂಲದ ಚನ್ನಗಿರಿ ಅರಣ್ಯವಲಯದಲ್ಲಿನ ಉಪ ಅರಣ್ಯಾಧಿಕಾರಿಯಾಗಿರುವುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ. \ No newline at end of file diff --git a/eesanje/url_46_281_12.txt b/eesanje/url_46_281_12.txt new file mode 100644 index 0000000000000000000000000000000000000000..706d26d6a6ed976789e6d4bf037701218c04ccdc --- /dev/null +++ b/eesanje/url_46_281_12.txt @@ -0,0 +1,6 @@ +ತಲೆ ಕೂದಲು ಒಣಗಿಸಲು ಹೋಗಿ ಫಜೀತಿಗೆ ಸಿಲುಕಿದ ಮಹಿಳಾ ಟೆಕ್ಕಿ +ಬೆಂಗಳೂರು,ಡಿ.22 – ಮಹಿಳೆಯರೇ ಹೇರ್‍ಡ್ರೈಯರ್ ಬಳಸುವ ಮುನ್ನ ಜಾಗ್ರತೆ ವಹಿಸಿ. ಇತ್ತೀಚಿನ ದಿನಗಳಲ್ಲಿ ತಲೆ ಕೂದಲನ್ನು ಒಣಗಿಸಲು ಹಾಗೂ ವಿವಿಧ ವಿನ್ಯಾಸ ಮಾಡಿಕೊಳ್ಳಲು ಹೇರ್ ಡ್ರೈಯರ್ ಮೊರೆ ಹೋಗುತ್ತಿದ್ದು, ಈ ಉಪಕರಣದಲ್ಲಿ ಅಧಿಕ ವಿದ್ಯುತ್ ಪಾಸ್ ಆಗಲಿದ್ದು, ಈ ಬಗ್ಗೆ ಎಚ್ಚರದಿಂದಿರಿ. ನಗರದಲ್ಲಿ ಮಹಿಳಾ ಸಾಫ್ಟ್‍ವೇರ್ ಎಂಜಿನಿಯರ್‍ರೊಬ್ಬರು ಹೇರ್ ಡ್ರೈಯರ್ ಬಳಸಿ ತಲೆಕೂದಲು ಒಣಗಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿರುವುದು ವರದಿಯಾಗಿದೆ. +ನಾರ್ತ್ ಇಂಡಿಯಾದ ಟೆಕ್ಕಿಯೊಬ್ಬರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ನೀಲಾದ್ರಿ ರಸ್ತೆಯ 15ನೇ ಕ್ರಾಸ್‍ನಲ್ಲಿನ ಪಿಜಿಯಲ್ಲಿ ನೆಲೆಸಿದ್ದು, ಮೊನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಪಿಜಿಗೆ ಬಂದಿದ್ದಾರೆ. ಸ್ನಾನದ ನಂತರ ಹೇರ್ ಡ್ರೈಯರ್‍ನಿಂದ ತಲೆಕೂದಲನ್ನು ಒಣಗಿಸುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. +ಗಾಬರಿಯಲ್ಲಿ ತಕ್ಷಣ ಅವರ ಹೇರಡ್ರೈಯರ್‍ನ್ನು ಹಾಸಿಗೆ ಮೇಲೆ ಬಿಸಾಕಿದ್ದರಿಂದ ಬೆಂಕಿ ಕಿಡಿ ಹಾಸಿಗೆಗೆ ಹೊತ್ತಿಕೊಂಡು ಅದರ ಮೇಲಿದ್ದ ವಸ್ತುಗಳನ್ನು ತಾಕಿದೆ. +2023ರಲ್ಲಿ ವಿರಾಟ್‍ ಕೊಹ್ಲಿಯ ಶತಕಗಳ ದರ್ಬಾರ್ +ತಕ್ಷಣ ಪಿಜಿಯಲ್ಲಿದ್ದ ಬೆಂಕಿ ನಂದಿಸುವ ಉಪಕರಣದಿಂದ ಬೆಂಕಿಯನ್ನು ನಂದಿಸಿದರಾದರೂ, ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಾರ್ಟ್ ಸಕ್ಯೂರ್ಟ್‍ನಿಂದ ಹೇರ್ ಡ್ರೈಯರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. \ No newline at end of file diff --git a/eesanje/url_46_281_2.txt b/eesanje/url_46_281_2.txt new file mode 100644 index 0000000000000000000000000000000000000000..2adec3d891ad8549aa11dd8996f75cefa48c5974 --- /dev/null +++ b/eesanje/url_46_281_2.txt @@ -0,0 +1,12 @@ +ರಾಜ್ಯದಲ್ಲಿ ಮತ್ತೆ ತಾರಕಕ್ಕೇರಿದ ಹಿಜಾಬ್ ಸಂಘರ್ಷ +ಬೆಂಗಳೂರು,ಡಿ.23- ಶಾಲಾಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಾದರೆ ನಮಗೂ ಕೇಸರಿ ಶಾಲು ಹಾಕಲು ಅವಕಾಶ ನೀಡಿ ಎಂದು ಹಿಂದೂಪರ ಸಂಘಟನೆಗಳು ಸರ್ಕಾರದ ವಿರುದ್ಧ ಕಾನೂನು ಸಮರ ಸಾರಲು ಮುಂದಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರ ಶಾಲಾ ಕೊಠಡಿಯೊಳಗೆ ನಿಷೇಧಿಸಿದ್ದ ಹಿಜಾಬ್ ಆದೇಶವನ್ನು ಹಿಂಪಡೆಯುವುದಾಗಿ ಹೇಳಿರುವುದು ಹಿಂದೂ ಸಂಘಟನೆಗಳನ್ನು ಕೆರಳುವಂತೆ ಮಾಡಿದೆ. ನೀವು ಮುಸ್ಲಿಂ ವಿದ್ಯಾರ್ಥಿನಿಯರು ಶಾಲಾ ಕೊಠಡಿಯೊಳಗೆ ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ನಮ್ಮದೇನು ಅಭ್ಯಂತರವಿಲ್ಲ. ಅದೇ ರೀತಿ ನಮಗೂ ಕೇಸರಿ ಶಾಲು ಹೊದಿಸಲು ಅವಕಾಶ ಕೊಡಿ ಎಂದು ಹಿಂದೂ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ. +ಶಾಲೆಗಳಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ ಪ್ರಕಾರ ಸಮವಸ್ತ್ರ ನೀತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸರ್ಕಾರ ಈಗ ಆದೇಶವನ್ನು ಹಿಂಪಡೆಯಲು ಮುಂದಾಗಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ನಾವು ಯಾರ ಸಮವಸ್ತ್ರವನ್ನೂ ವಿರೋಸುವುದಿಲ್ಲ. ಪ್ರತಿಯೊಬ್ಬರಿಗೂ ಅವರವರ ಉಡುಗೆ-ತೊಡುಗೆ ಆಚಾರವಿಚಾರ ಅನುಸರಿಸಲು ಅವಕಾಶ ಇರುವಂತೆ ನಾವು ಕೇಸರಿ ಶಾಲು ಹಾಕಿದರೆ ತಪ್ಪೇನು ಎಂಬ ಪ್ರಶ್ನೆಯನ್ನು ಅನೇಕರು ಮುಂದಿಟ್ಟಿದ್ದಾರೆ. +ಯಾವುದೇ ವಿದ್ಯಾರ್ಥಿಗಳಲ್ಲಿ ಮೇಲುಕೀಳು ಬರಬಾರದು ಎಂಬ ಕಾರಣಕ್ಕೆ 1964ರಲ್ಲಿ ಸಮವಸ್ತ್ರದ ಕಾಯ್ದೆಯನ್ನು ಜಾರಿಗಳಿಸಲಾಗಿತ್ತು. ಮಕ್ಕಳಲ್ಲಿ ಬಡವ, ಬಲ್ಲಿದ ಹಿಂದೂ ಮುಸ್ಲಿಂ ಎಂಬ ಬೇಧ ಉಂಟಾಗಬಾರದು. ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸಲು ಈ ಕಾಯ್ದೆ ಜಾರಿಗೊಳಿಸಲಾಗಿತ್ತು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಶಾಲೆಗಳಿಗೆ ಬಂದರೆ ಬೇರೆ ವಿದ್ಯಾರ್ಥಿಗಳು ಕೇಸರಿ ಶಾಲು, ಹಳದಿ ಅಥವಾ ನೀಲಿ ಶಾಲು ಹೊದ್ದು ಬಂದರೆ ಸರ್ಕಾರ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ. +ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ +ಸಮವಸ್ತ್ರದ ಮೂಲಕ ಯಾವುದೇ ವಿದ್ಯಾರ್ಥಿ ತನ್ನ ಐಡೆಂಟಿಟಿಯನ್ನು ಗುರುತಿಸಿಕೊಳ್ಳುವ ಅವಶ್ಯಕತೆ ಇಲ್ಲ. ಒಂದು ವೇಳೆ ಸರ್ಕಾರ ನಮಗೆ ಅವಕಾಶ ಕಲ್ಪಿಸದಿದ್ದರೆ ನಾವು ಹಿಂದೂ ವಿದ್ಯಾರ್ಥಿಗಳ ಪರವಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.ಹೈಕೋರ್ಟ್ ತೀರ್ಪಿನ ಕುರಿತು ವಿಚಾರಣೆ ಈಗಲೂ ನಡೆಯುತ್ತಿದೆ. ಸರ್ಕಾರ ತೀರ್ಪು ಬರುವ ಮುನ್ನವೇ ಆದೇಶವನ್ನು ಹಿಂಪಡೆಯುತ್ತಿರುವುದು ಕೇವಲ ಒಂದು ಸಮುದಾಯದ ಮತ ಗಳಿಕೆಗಾಗಿ. ನೀವು ರಾಜಕಾರಣ ಮಾಡುವುದಾದರೆ ನಾವು ಕೂಡ ಅದನ್ನೇ ಮಾಡುತ್ತೇವೆ ಎಂದು ಹೇಳಿದ್ದಾರೆ. +ಬಿಜೆಪಿಗೆ ಹೊಸ ಅಸ್ತ್ರ:ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಬಿಜೆಪಿಗೆ ಅನಗತ್ಯವಾಗಿ ಅಸ್ತ್ರ ನೀಡಿದಂತಾಗಿದೆ. ಬರುವ ದಿನಗಳಲ್ಲಿ ಇದನ್ನು ರಾಜ್ಯಾದ್ಯಂತ ಕೊಂಡೊಯ್ಯಲು ಮುಂದಾಗಿರುವ ಬಿಜೆಪಿ, ಈ ಮೂಲಕ ಹಿಂದೂಗಳ ಮತ ಧ್ರುವೀಕರಣಕ್ಕೆ ಕೈ ಹಾಕಿದೆ. ಬಿಜೆಪಿ ಅವಧಿಯಲ್ಲಿ ಹಿಜಾಬ್ ನಿಷೇಧದ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಹಲವು ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣವನ್ನು ತೊರೆದಿದ್ದರು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿದ್ದ ಹಿಜಾಬ್ ಗಲಾಟೆ ರಾಜ್ಯಾಧ್ಯಂತ ವ್ಯಾಪಿಸಿತ್ತು. ಕಾಲೇಜು ಆವರಣಗಳಲ್ಲಿ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳ ನಡುವಿನ ಗಲಾಟೆಗೂ ಕಾರಣವಾಗಿತ್ತು. +ಈ ನಡುವೆ ರಾಜ್ಯ ಸರ್ಕಾರದ ತೀರ್ಮಾನವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಆದರೆ ಈ ತೀರ್ಪಿನ ಬೆನ್ನಲ್ಲೇ ಹಲವು ವಿದ್ಯಾರ್ಥಿನಿಯರು ಕಾಲೇಜು ತೊರೆದಿದ್ದರು. ವಿದ್ಯಾರ್ಥಿಗಳ ನಡುವೆಯೂ ಇದು ಕಂದಕ ಸೃಷ್ಟಿಗೆ ಕಾರಣವಾಗಿತ್ತು. ಹಿಜಾಬ್ ನಿಷೇಧದ ಅರ್ಜಿ ಸುಪ್ರಿಂಕೋರ್ಟ್‍ನಲ್ಲಿದೆ. 2022 ರಲ್ಲಿ ಸುಪ್ರೀಂ ಕೋರ್ಟ್ ಹಿಜಾಬ್ ನಿಷೇಧದ ಸಿಂಧುತ್ವದ ಬಗ್ಗೆ ಭಿನ್ನ ತೀರ್ಪು ನೀಡಿ, ಪ್ರಕರಣವನ್ನು ವಿಸ್ತ್ರತ ಪೀಠಕ್ಕೆ ವರ್ಗಾಯಿಸಿತ್ತು. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಾವು ಹಿಜಾಬ್ ನಿಷೇಧದ ಆದೇಶವನ್ನು ವಾಪಸ್ ಪಡೆದುಕೊಳ್ಳುತ್ತೇವೆ. ಇನ್ನು ಮುಂದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು. ಉಡುಪು ಆಹಾರ ಪದ್ಧತಿ ನಿಮ್ಮ ಆಯ್ಕೆ. ನಾನೇಕೆ ಇವುಗಳಿಗೆ ಅಡ್ಡಿಯಾಗಲಿ? ಎಂದು ಪ್ರಶ್ನಿಸಿದ್ದಾರೆ. +ನೀವು ಬಯಸಿದ ಉಡುಪನ್ನು ಧರಿಸಿ, ನಿಮಗೆ ಬೇಕಾದನ್ನು ತಿನ್ನಿ, ನನಗೆ ಬೇಕೆನಿಸಿದ್ದನ್ನು ನಾನು ತಿನ್ನುವೆ. ಉಡುಪು ಆಹಾರ ಅವರರವ ಇಷ್ಟ ಎಂದು ಹೇಳಿದ್ದರು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಡೆಯ ಹಿಂದೆ ರಾಜಕೀಯ ಉದ್ದೇಶವೂ ಇದೆ. ಕಳೆದ ಚುನಾವಣೆಯಲ್ಲಿ ಮುಸ್ಲಿಂ ಮತಗಳ ಕ್ರೋಢೀಕರಣದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲೂ ಇದೇ ತಂತ್ರಗಾರಿಕೆಯನ್ನು ಪ್ರಯೋಗ ಮಾಡುವ ಉದ್ದೇಶ ಇದೆ ಎಂಬ ವ್ಯಾಖ್ಯಾನಗಳು ವ್ಯಕ್ತವಾಗುತ್ತಿದೆ. ಈ ಮೂಲಕ ಬಿಜೆಪಿಯ ಹಿಂದುತ್ವ ಪ್ರಯೋಗಕ್ಕೆ ಕಾಂಗ್ರೆಸ್ ಪ್ರತ್ಯಸ್ತ್ರ ಪ್ರಯೋಗ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಹಿಜಾಬ್ ಕೂಡಾ ಒಂದು ಚುನಾವಣಾ ಅಸ್ತ್ರವಾಗಲಿದೆ. +60 ಸಿಮ್‍ಕಾರ್ಡ್‍ಗಳೊಂದಿಗೆ ಸಿಕ್ಕಿಬಿದ್ದ ತೈವಾನ್ ಪ್ರಜೆ ವಿಚಾರಣೆ +ಕಳೆದ ಆರು ತಿಂಗಳಿಂದ ಕಾಂಗ್ರೆಸ್ ಸರಕಾರ ಗೊಂದಲದಲ್ಲಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಸಿಎಂ ಇಂತಹ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯ ಸರಕಾರ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ. ಸರಕಾರ ಹಿಜಾಬ್ ಹಿಂಪಡೆದರೆ ಜೇನುಗೂಡಿಗೆ ಕಲ್ಲು ಹೊಡೆದಂತೆ ಆಗುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಧಾರ್ಮಿಕ ನೆಲೆಯಲ್ಲಿ ಬಿರುಕು ಮೂಡಿಸುತ್ತದೆ. ನಿರ್ಧಾರದ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲು ನಾವು ಸಿದ್ಧರಿದ್ದೇವೆ ಎಂದು ಶಾಸಕರು ಹೇಳಿದ್ದಾರೆ. \ No newline at end of file diff --git a/eesanje/url_46_281_3.txt b/eesanje/url_46_281_3.txt new file mode 100644 index 0000000000000000000000000000000000000000..ffcd2a721593315e39d35b90e60336e97569e9f9 --- /dev/null +++ b/eesanje/url_46_281_3.txt @@ -0,0 +1,9 @@ +ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ : ಮಾಜಿ ಸಿಎಂ ಬೊಮ್ಮಾಯಿ +ಬೆಂಗಳೂರು,ಡಿ.23- ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧವಿದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. +ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, 1984ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್‍ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು. +ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ. +ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇದೆ ಇದೆಲ್ಲ ಮರೆತು ರಾಜದಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ ಎಂದು ದೂರಿದರು. +ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ ನಿರ್ಧಾರ : ಸಚಿವ ಮಧು ಬಂಗಾರಪ್ಪ +ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂದು ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್ ಇರಾನ್‍ನಲ್ಲಿ ಮಹಿಳೆಯರು ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂಕೋರ್ಟ್‍ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದರು. +ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್‍ನಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ ಸಿದ್ಧವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ. +ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಕೃತ ಜಾತಿ ಗಣತಿ ಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕವಾಗಿಲ್ಲ ಎಂಬ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದು ಸವಾಲು ಹಾಕಿದರು. \ No newline at end of file diff --git a/eesanje/url_46_281_4.txt b/eesanje/url_46_281_4.txt new file mode 100644 index 0000000000000000000000000000000000000000..96848e14a9d0a02cbca49d129386cf61ecdebcd2 --- /dev/null +++ b/eesanje/url_46_281_4.txt @@ -0,0 +1,12 @@ +“ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ” +ನವದೆಹಲಿ,ಸೆ.23-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ನಾಡಿನ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಟಪಕ್ಷ ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳನ್ನು ರಾಜಕೀಯದಿಂದ ದೂರ ಇಡುವ ಕೆಲಸ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು. +ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದರು. +ಮಾತೆತ್ತಿದರೆ ಕಾಂಗ್ರೆಸ್ಸಿಗರು ಅಲ್ಪಸಂಖ್ಯಾತರ ಕುರಿತು ಮಾತ್ರ ಮಾತನಾಡುತ್ತಾರೆ. ಕಾಂಗ್ರೆಸ್ಸಿಗರು, ತುಷ್ಟೀಕರಣ ನೀತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ ಎಂದ ಅವರು, ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯದ ನಂತರ 50ರಿಂದ 60 ವರ್ಷಗಳ ಕಾಲ ದೇಶ, ರಾಜ್ಯವನ್ನು ಆಳಿದೆ. ಆದರೂ, ಅಲ್ಪಸಂಖ್ಯಾತರಲ್ಲಿ ಶೇ.50ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದರೆ ಅದಕ್ಕೆ ಯಾರು ಹೊಣೆಗಾರರು? ಮುಖ್ಯಮಂತ್ರಿಗಳು ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. +ಇವತ್ತಿಗೂ ಕೂಡ ಶೇ 60ಕ್ಕಿಂತ ಹೆಚ್ಚು ಅಲ್ಪಸಂಖ್ಯಾತ ಬಂಧುಗಳು ರಾಜ್ಯ, ದೇಶದಲ್ಲಿ ಕೆಲಸ ಇಲ್ಲದೆ ಬೇಜಬಾಬ್ದಾರಿಯಿಂದ ಓಡಾಡುತ್ತಿದ್ದಾರೆ. ಅದಕ್ಕೆ ಹೊಣೆಗಾರರು ಕಾಂಗ್ರೆಸ್ ಪಕ್ಷದವರಲ್ಲವೇ? ಎಂದು ಪ್ರಶ್ನಿಸಿದರು. ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಕಾಂಗ್ರೆಸ್ ಪಕ್ಷ ದುರುಪಯೋಗಪಡಿಸಿಕೊಂಡಿದೆ. ಪ್ರಾಮಾಣಿಕವಾಗಿ ಅಲ್ಪಸಂಖ್ಯಾತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಅವರ ಶಿಕ್ಷಣಕ್ಕೆ ಒತ್ತು ಕೊಟ್ಟು ಆರ್ಥಿಕವಾಗಿ ಮೇಲೆತ್ತುವ ಕಾರ್ಯವನ್ನು ಕಾಂಗ್ರೆಸ್ ಮಾಡಲಿಲ್ಲ ಎಂದು ಟೀಕಿಸಿದರು. +ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಲ್ಪಸಂಖ್ಯಾತ ಮಹಿಳೆಯರನ್ನು ಕೂಡ ದೇಶದ ಜನತೆ ಗೌರವದಿಂದ ಕಾಣಬೇಕು. ಪ್ರತಿಯೊಬ್ಬ ಅಲ್ಪಸಂಖ್ಯಾತ ಮಹಿಳೆಯೂ ಗೌರವ, ಸ್ವಾಭಿಮಾನದಿಂದ ಬಾಳಿ ಬದುಕಬೇಕೆಂಬ ದೃಷ್ಟಿಕೋನದೊಂದಿಗೆ ತ್ರಿವಳಿ ತಲಾಖ್‍ನ್ನು ರದ್ದು ಮಾಡಿದ್ದಾರೆ. ನೀವೇನು ಮಾಡಿದ್ದೀರಿ? ಎಂದು ಪ್ರಶ್ನಿಸಿದರು. +ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ +ಅಲ್ಪಸಂಖ್ಯಾತರ ಕುರಿತು ಕೇವಲ ಭಾಷಣ ಮಾಡುತ್ತೀರಿ. ಅವರಿಗಾಗಿ ಯಾವುದಾದರೂ ಯೋಜನೆ ರೂಪಿಸುವ ಮೂಲಕ ಮೇಲೆತ್ತಿದ್ದೀರಾ? ಅಲ್ಪಸಂಖ್ಯಾತರು ನಿರುದ್ಯೋಗ ಸಮಸ್ಯೆ ಸೇರಿ ಅನೇಕ ಸಮಸ್ಯೆಗಳನ್ನು ಎದುರಿಸಲು ಕಾಂಗ್ರೆಸ್ಸೇ ಕಾರಣ ಎಂದು ಆರೋಪಿಸಿದರು. +ರಾಜ್ಯದಲ್ಲಿ ಇವತ್ತು ಭೀಕರ ಬರಗಾಲವಿದೆ. ರೈತರ ಸಂಕಷ್ಟಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಆ ಜವಾಬ್ದಾರಿ ಮರೆತ ರಾಜ್ಯ ಸರಕಾರವು, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ ಎಂದು ಆಕ್ಷೇಪಿಸಿದರು. ಲೋಕಸಭಾ ಚುನಾವಣೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ 20 ಕ್ಷೇತ್ರ ಗೆಲ್ಲುವ ಕನಸು ಕಾಣುತ್ತಿದೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮೂಲಕ ಈ ದೇಶದ ಪ್ರಜ್ಞಾವಂತ ಮತದಾರರು, ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ನಂಬುವುದಿಲ್ಲ. ಅದರ ಬದಲು ಮೋದಿ ಗ್ಯಾರಂಟಿಯನ್ನು ನಂಬುವುದು ರುಜುವಾತಾಗಿದೆ ಎಂದರು. +ಕಾಂಗ್ರೆಸ್ ಪಕ್ಷ ಹತಾಶೆಯಿಂದ ಸಮಾಜ ಸಮಾಜದ ಮಧ್ಯೆ, ಧರ್ಮ ಧರ್ಮದ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದೆ. ಸರಕಾರದ ಒಡೆದಾಳುವ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಶಾಲಾ ಮಕ್ಕಳಿಂದ ಶೌಚಾಲಯ ಶುಚಿಗೊಳಿಸಿದ ಘಟನೆಯು ಕಾನೂನು ಸುವ್ಯವಸ್ಥೆ ಕುಸಿದುದರ ಸಂಕೇತ. ರಾಜ್ಯದಲ್ಲಿ ಸಿಎಂ ಇದ್ದಾರಾ? ಸಚಿವರು ಇದ್ದಾರಾ? ಎಂದು ಪ್ರಶ್ನಿಸುವಂತಾಗಿದೆ. ಬರಗಾಲವಿದ್ದರೂ ಸಚಿವರು ಅಕಾರಿಗಳ ಸಭೆ ನಡೆಸಿಲ್ಲ. +ಈ ಬೇಜಾವಾಬ್ದಾರಿ ನಡೆ ಒಂದು ಕಡೆ ಇದ್ದರೆ, ಇನ್ನೊಂದೆಡೆ ಹಿಜಾಬ್ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಹಿಂದೂ ಹೆಣ್ಮಕ್ಕಳ ತಾಳಿ, ಕಾಲುಂಗುರ ತೆಗೆಸುತ್ತಾರೆ. ನಿಮ್ಮ ಉದ್ದೇಶ ಏನು? ಎಂದು ಕೇಳಿದರು. ಒಡೆದಾಳುವ ನೀತಿಯನ್ನು ಕೈಬಿಡಿ ನೀವು ಆರೂವರೆ ಕೋಟಿ ಜನರ ಸಿಎಂ ಎಂಬುದನ್ನು ನೆನಪಿಡಿ ಎಂದು ಆಗ್ರಹಿಸಿದರು. \ No newline at end of file diff --git a/eesanje/url_46_281_5.txt b/eesanje/url_46_281_5.txt new file mode 100644 index 0000000000000000000000000000000000000000..7eef99f84ba3699fceb2a82038f3f8bc33433368 --- /dev/null +++ b/eesanje/url_46_281_5.txt @@ -0,0 +1,11 @@ +ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ ನಿರ್ಧಾರ : ಸಚಿವ ಮಧು ಬಂಗಾರಪ್ಪ +ಬೆಂಗಳೂರು,ಡಿ.23- ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ, ಯಾರಿಗೂ ತೊಂದರೆಯಾಗದಂತೆ ಕಾನೂನಿನ ಇತಿಮಿತಿಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯವರಿಗೆ ಬರ ಮರೆತು ಹೋಗಿದೆ. ಈಗ ಹಿಜಾಬ್ ಹಿಂದೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ರೀತಿಯ ಆಲೋಚನೆಗಳನ್ನು ಮಾಡಿಯೇ ಹೇಳಿಕೆ ನೀಡಿರುತ್ತಾರೆ. ನಾನು ಅವರೊಂದಿಗೆ ಚರ್ಚೆ ಮಾಡುತ್ತೇನೆ. ಮುಖ್ಯಮಂತ್ರಿಯವರ ಹೇಳಿಕೆ ಜೊತೆಯಲ್ಲೇ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಪಂಚೆ ಹಾಕುತ್ತೇನೆ. ಉಡುಗೆ-ತೊಡುಗೆಗಳು ಭಿನ್ನವಾಗಿರುತ್ತವೆ. +ಆಹಾರ ಪದ್ಧತಿಯಲ್ಲೂ ಅದೇ ರೀತಿಯ ವಿಭಿನ್ನತೆ ಇರುತ್ತವೆ. ಅದು ಅವರ ಸ್ವಾತಂತ್ರ್ಯ. ಅದಕ್ಕೆ ಯಾರೂ ಅಡ್ಡಿಪಡಿಸಬಾರದು ಎಂದು ಮುಖ್ಯಮಂತ್ರಿಯವರೇ ಹೇಳಿದ್ದಾರೆ. ಅವರು ವಸ್ತ್ರ ಸಂಹಿತೆ ವಿಷಯವಾಗಿ ಸ್ಪಷ್ಟ ನಿಲುವು ಹೊಂದಿದ್ದರು. ಉಡುಗೆ ತೊಡುಗೆಗಳ ಬಗ್ಗೆ ಯಾವುದೇ ನಿರ್ಬಂಧಗಳಿರಬಾರದೆಂಬುದು ಸಿದ್ದರಾಮಯ್ಯನವರ ಹಾಗೂ ಕಾಂಗ್ರೆಸ್‍ನ ನಿಲುವು. ಚುನಾವಣೆ ಸಂದರ್ಭದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದೆವು. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅವರ ತೀರ್ಪಿನಂತೆ ನಡೆದುಕೊಳ್ಳುತ್ತೇವೆ ಎಂದರು. +ಈ ಹಿಂದೆ ಬಿಜೆಪಿ ಸರ್ಕಾರ ತೆಗೆದುಕೊಂಡಿದ್ದಂತಹ ನಿರ್ಧಾರ ನ್ಯಾಯಾಲಯದಲ್ಲಿ ಚರ್ಚೆಗೊಳಗಾಗಿತ್ತು. ಹಲವು ನಿರ್ಧಾರಗಳು ಹೊರಬಂದಿವೆ. ಈಗ ಎಸ್‍ಡಿಎಂಸಿಯವರು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ನಿನ್ನೆ ಬಹಿರಂಗ ಸಮಾವೇಶದಲ್ಲಿ ಸಾರ್ವಜನಿಕರು ಕೇಳಿದ್ದಕ್ಕಾಗಿ ಹಿಜಾಬ್ ವಿಷಯ ಕುರಿತಂತೆ ಮುಖ್ಯಮಂತ್ರಿ ಪ್ರಸ್ತಾಪಿಸಿದ್ದಾರೆ ಎಂದರು. +ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ +ಇದು ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ನ್ಯಾಯಾಂಗ ಹಾಗೂ ಇತರ ವ್ಯವಸ್ಥೆಯಿಂದಲೂ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ. ಹಾಗಾಗಿ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದರು. ಸಿದ್ದರಾಮಯ್ಯ ಅವರು ವಕೀಲರಾಗಿದ್ದರು. ಬಹಳ ತಿಳುವಳಿಕೆ ಹೊಂದಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡುವಂತೆಯೇ ಇಲ್ಲ. ನ್ಯಾಯಾಂಗ ನಿಂದನೆ ಸೇರಿದಂತೆ ಎಲ್ಲಾ ದೃಷ್ಟಿಕೋನದಿಂದಲೂ ಪರಿಶೀಲನೆ ನಡೆಸಿರುತ್ತಾರೆ ಎಂದರು. +ಈ ಹಿಂದೆ ಹಿಜಾಬ್ ನಿಷೇಧ ಹೇರಿದ್ದ ಬಿಜೆಪಿಯನ್ನು ಜನ ಸೋಲಿಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ದಾರೆ. ಜನಾಭಿಪ್ರಾಯಕ್ಕೆ ಮನ್ನಣೆ ನೀಡುವುದು ನಮ್ಮ ಕರ್ತವ್ಯ. ಇದು ಸೂಕ್ಷ್ಮ ವಿಚಾರ ಆಗಿರುವುದರಿಂದ ರಾಜಕೀಯ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಬಿಜೆಪಿಯವರಿಗೆ ಕೆಟ್ಟ ಬುದ್ದಿ ಇದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. +ಎಲ್ಲಾ ಧರ್ಮೀಯರಿಗೂ ಸಮಾನ ಅವಕಾಶ ನೀಡುವುದಾಗಿ ಹೇಳಲಾಗಿತ್ತು. ಒಂದು ವೇಳೆ ನಾವು ಅದನ್ನು ಪಾಲಿಸದೇ ಇದ್ದರೆ ಭರವಸೆಯನ್ನು ಈಡೇರಿಸಿಲ್ಲ ಎಂಬ ಟೀಕೆಗೆ ಗುರಿಯಾಗಬೇಕಾಗುತ್ತದೆ. ಶಾಂತಿಯ ತೋಟಕ್ಕೆ ರಾಜ್ಯದ ಜನ ಮತ ಹಾಕಿದ್ದಾರೆ. ದೇಶದಲ್ಲಿ ಕೋಮು ವಿಷಬೀಜ ಬಿತ್ತಿದ್ದು ಬಿಜೆಪಿಯವರು. ಅದಕ್ಕಾಗಿಯೇ ಅವರನ್ನು ಸೋಲಿಸಿ ವಿಷಬೀಜವನ್ನು ಕಿತ್ತೆಸೆಯುತ್ತಿದ್ದಾರೆ ಎಂದರು. +24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು +ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದೆ. ಅದನ್ನು ಬಿಜೆಪಿಯವರು ತಾಲೂಕು ಮತ್ತು ಜಿಲ್ಲಾ ಮಟ್ಟಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಆ ವರದಿಯನ್ನು ಯಾರಿಗೆ ನೀಡಿದ್ದಾರೆ. ಪ್ರಧಾನಮಂತ್ರಿಯವರು 6 ತಿಂಗಳ ಬಳಿಕ ಮುಖ್ಯಮಂತ್ರಿಯವರ ಭೇಟಿಗೆ ಸಮಯ ನೀಡಿದ್ದಾರೆ. ಕೇಂದ್ರದಿಂದ ಬರಬೇಕಾದ ಪಾಲು ನಮಗೆ ಈವರೆಗೂ ಬಿಡುಗಡೆಯಾಗಿಲ್ಲ. ಅದನ್ನೆಲ್ಲಾ ಮರೆತು ಬಿಜೆಪಿಯವರು ಉಡುಗೆ ತೊಡುಗೆಗಳ ಹಿಂದೆ ಬಿದ್ದಿದ್ದಾರೆ ಎಂದು ಲೇವಡಿ ಮಾಡಿದರು. \ No newline at end of file diff --git a/eesanje/url_46_281_6.txt b/eesanje/url_46_281_6.txt new file mode 100644 index 0000000000000000000000000000000000000000..237612ba6f7f5a73c320e0932f1dfa26a49269cf --- /dev/null +++ b/eesanje/url_46_281_6.txt @@ -0,0 +1,7 @@ +ಲೋಕಸಭಾ ಚುನಾವಣಾ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯ +ನವದೆಹಲಿ, ಡಿ.23 (ಪಿಟಿಐ) ಮುಂಬರುವ 2024ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಸಮಿತಿಯನ್ನು ರಚಿಸಿದ್ದು, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ಛತ್ತೀಸ್‍ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರನ್ನು ಪ್ರಮುಖ ಸಮಿತಿಯ ಸಂಚಾಲಕರನ್ನಾಗಿ ಮಾಡಲಾಗಿದೆ. +16 ಸದಸ್ಯರ ಸಮಿತಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇದ್ದಾರೆ. ನಿರ್ಣಾಯಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯ ಒಂದು ದಿನದ ನಂತರ ಈ ಬೆಳವಣಿಗೆಯು ಬಂದಿದೆ, ಅಲ್ಲಿ ಪಕ್ಷವು ತನ್ನ ಲೋಕಸಭಾ ಚುನಾವಣಾ ಕಾರ್ಯತಂತ್ರವನ್ನು ಚರ್ಚಿಸಿತು ಮತ್ತು ಶೀಘ್ರದಲ್ಲೇ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವುದಾಗಿ ಹೇಳಿದೆ. +ಕಾಂಗ್ರೆಸ್ ಅಧ್ಯಕ್ಷರು ಮುಂಬರುವ ಸಾರ್ವತ್ರಿಕ ಚುನಾವಣೆ 2024 ರ ಪ್ರಣಾಳಿಕೆ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚಿಸಿದ್ದಾರೆ ಎಂದು ಪಕ್ಷವು ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ಜೈರಾಮ್ ರಮೇಶ್ ಮತ್ತು ಶಶಿ ತರೂರ್ ಕೂಡ ಸಮಿತಿಯ ಭಾಗವಾಗಿದ್ದಾರೆ. +ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ +ಅಖಿಲ ಭಾರತ ವೃತ್ತಿಪರರ ಕಾಂಗ್ರೆಸ್ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಣಿಪುರದ ಮಾಜಿ ಉಪಮುಖ್ಯಮಂತ್ರಿ ಗೈಖಂಗಮ್ ಮತ್ತು ಲೋಕಸಭೆಯಲ್ಲಿ ಪಕ್ಷದ ಉಪ ನಾಯಕ ಗೌರವ್ ಗೊಗೊಯ್ ಕೂಡ ಸಮಿತಿಯಲ್ಲಿದ್ದಾರೆ. +ಚುನಾವಣೆಗೆ ಪಕ್ಷದ ಕಾರ್ಯಸೂಚಿಯನ್ನು ಅಂತಿಮಗೊಳಿಸುವ ಪ್ರಮುಖ ಸಮಿತಿಯ ಇತರ ಸದಸ್ಯರು ಇಮ್ರಾನ್ ಪ್ರತಾಪ್‍ಗರ್ಹಿ, ಕೆ ರಾಜು, ಓಂಕಾರ್ ಸಿಂಗ್ ಮಾರ್ಕಮ, ರಂಜೀತ್ ರಂಜನï, ಜಿಗ್ನೇಶ್ ಮೇವಾನಿ ಮತ್ತು ಗುರುದೀಪ್ ಸಪ್ಪಲ್ ಇದ್ದಾರೆ. \ No newline at end of file diff --git a/eesanje/url_46_281_7.txt b/eesanje/url_46_281_7.txt new file mode 100644 index 0000000000000000000000000000000000000000..a1d08b2a28b79dff09bdc7ab111ae30dc729e6e6 --- /dev/null +++ b/eesanje/url_46_281_7.txt @@ -0,0 +1,6 @@ +ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ +ಬೆಂಗಳೂರು,ಡಿ.22- ಕೋಲಾರದ ಮಾಲೂರು ತಾಲೂಕಿನ ಯಲುವಳ್ಳಿಯಲ್ಲಿನ ಅಹಿತಕರ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣ ವರದಿಯಾಗಿದೆ. ನಗರದ ಆಂದ್ರಹಳ್ಳಿಯಲ್ಲಿ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. +ಗ್ಲೌಸ್ ಹಾಗೂ ಇತರ ಯಾವುದೇ ಸುರಕ್ಷತಾ ಸಲಕರಣೆಗಳಿಲ್ಲದೆ ವಿದ್ಯಾರ್ಥಿಗಳು ಆಸಿಡ್‍ನಂತಹ ರಾಸಾಯನಿಕಗಳನ್ನು ಬಳಸಿ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಾರ್ವಜನಿಕರು ಇದನ್ನು ಗಮನಿಸಿ ಮೊಬೈಲ್‍ನಲ್ಲಿ ಚಿತ್ರಿಸಿದ್ದಾರೆ. ನಂತರ ಗ್ರಾಮದ ಹಿರಿಯರು ಶಾಲೆಗೆ ಭೇಟಿ ನೀಡಿ, ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೋಷಕರು ಪ್ರತಿಭಟನೆ ನಡೆಸಿ, ಶಿಕ್ಷಕರ ಕ್ರಮವನ್ನು ಖಂಡಿಸಿದ್ದಾರೆ. +ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮಕ್ಕಳನ್ನು ಇಂತಹ ಕಾರ್ಯಗಳಿಗೆ ತೊಡಗಿಸಿಕೊಳ್ಳಲು ಅವಕಾಶವಾಗದಂತೆ ಸುತ್ತೋಲೆ ರವಾನಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಸಲಹೆ ನೀಡಲಾಗುವುದು. ಶಿಕ್ಷಕರು ಯಾವ ರೀತಿಯ ತಪ್ಪು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಅಗತ್ಯವಾದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. +ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಭಾವನೆ ಇಲ್ಲ : ಮೋದಿ +ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಇತರ ವ್ಯವಸ್ಥೆಗಳ ಮೇಲೆ ನಿಗಾ ವಹಿಸಲು ವಿಚಕ್ಷಣಾ ದಳವನ್ನು ರಚಿಸಲಾಗುವುದು. ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವಂತಹ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ಯಾರನ್ನೂ ಕ್ಷಮಿಸುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_281_8.txt b/eesanje/url_46_281_8.txt new file mode 100644 index 0000000000000000000000000000000000000000..b44ba073fe3ce3565853019ccb2e08173fa8571e --- /dev/null +++ b/eesanje/url_46_281_8.txt @@ -0,0 +1,12 @@ +ಹೊಸ ವರ್ಷಾಚರಣೆಗೆ ಕಟ್ಟೆಚ್ಚರ, ಗೃಹಸಚಿವ ಪರಮೇಶ್ವರ್ ಸಭೆ +ಬೆಂಗಳೂರು,ಡಿ.22- ಹೊಸ ವರ್ಷಾಚರಣೆ ವೇಳೆ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುರಕ್ಷತೆಗೆ ಸಂಬಂಧಪಟ್ಟಂತೆ ಅನುಸರಿಸಬೇಕಾದ ಕ್ರಮಗಳ ಕುರಿತು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಸೌಧದಲ್ಲಿಂದು ಉನ್ನತ ಮಟ್ಟದ ಸಭೆ ನಡೆಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೆಪೊಲೀಸ್ ಆಯುಕ್ತ ಬಿ.ದಯಾನಂದ್, ಹಿರಿಯ ಅಧಿಕಾರಿಗಳಾದ ಕಮಲ್‍ಪಂಥ್ ಸೇರಿದಂತೆ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವರು, ಬೆಂಗಳೂರಿನಲ್ಲಿ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ, ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‍ಗಳು ಸೇರಿದಂತೆ ಅನೇಕ ಕಡೆ ಜನ ಸೇರಿಕೊಂಡು ಹೊಸ ವರ್ಷಾಚರಣೆ ಮಾಡುವುದು ಹಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಅಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ಎಚ್ಚರಿಕೆ ವಹಿಸಲು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ. ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿಯೂ ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು. +ಪೊಲೀಸರು, ಅಗ್ನಿಶಾಮಕ, ಅಬಕಾರಿ, ಮೆಟ್ರೋ, ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಎಲ್ಲಾ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡು ನಿಭಾಯಿಸಬೇಕು. ಆಯಾ ಇಲಾಖೆಗಳು ಈಗಾಗಲೇ ಅನುಸರಿಸಿರುವ ಮುಂಜಾಗ್ರತೆ ಬಗ್ಗೆಯೂ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದರು. +ಹೊಸ ವರ್ಷಕ್ಕೂ ಮೊದಲು ಆಯಾ ಇಲಾಖೆಗಳು ಆಂತರಿಕವಾಗಿ ಮತ್ತೊಂದು ಸಭೆ ನಡೆಸಿ ಅಂತಿಮ ಹಂತದ ಸಿದ್ಧತೆ ಕೈಗೊಳ್ಳಲಿವೆ. ಅನಂತರ ಎಲ್ಲಾ ಇಲಾಖೆಗಳು ಸಮನ್ವಯಗೊಂಡು ಕೆಲಸ ಮಾಡುತ್ತವೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. +ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಭಾವನೆ ಇಲ್ಲ : ಮೋದಿ +ಎನ್‍ಐಎ ಅಧಿಕಾರಿಗಳು ಕಳೆದೊಂದು ತಿಂಗಳಿನಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ದಾಳಿ ನಡೆಸಿ, ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆ ವೇಳೆ ಹೊರಗಡೆಯಿಂದ ಬೇರೆ ಉದ್ದೇಶವಿಟ್ಟುಕೊಂಡು ಬರುವವರ ಮೇಲೆ ತೀವ್ರ ನಿಗಾ ವಹಿಸಲಾಗುವುದು. ಈ ಬಗ್ಗೆ ಗುಪ್ತಚರ ಇಲಾಖೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದರು. +ಆರೋಗ್ಯ ಇಲಾಖೆಯ ಸೂಚನೆ ಪ್ರಕಾರ, ಹೆಚ್ಚು ಜನಸಂದಣಿ ಇರುವ ಕಡೆ ಮಾಸ್ಕ್ ಧರಿಸಬೇಕಿದೆ. ಅದರಲ್ಲೂ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯವಾಗಿದೆ. ಅದರ ಹೊರತಂತೆ ಬೇರೆ ನಿಬಂಧನೆಗಳಿಲ್ಲ. ಮೆಟ್ರೊ ಪ್ರಯಾಣಿಕರು ಎಂ.ಜಿ.ರಸ್ತೆ ಬದಲು ಕುಂಬ್ಳೆ ಅಥವಾ ಟ್ರಿನಿಟಿ ಸರ್ಕಲ್‍ನಲ್ಲಿ ಪ್ರವೇಶ ಪಡೆಯುವುದು ಸೇರಿದಂತೆ ಸಣ್ಣಪುಟ್ಟ ಬದಲಾವಣೆಗಳನ್ನಷ್ಟೇ ಮಾಡಲಾಗುತ್ತಿದೆ ಎಂದು ಹೇಳಿದರು. +ಜನಸಂದಣಿ ಸೇರುವ ಪ್ರದೇಶಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವ ಸಾಧ್ಯತೆಯಿದೆ. ಇದರಿಂದ ಅವಘಡಗಳಾಗುವ ಅವಕಾಶವಿದ್ದು, ಜಾಗೃತರಾಗಿರುವಂತೆ ಅಗ್ನಿಶಾಮಕ ಅಕಾರಿಗಳಿಗೆ ಸಲಹೆ ನೀಡಲಾಗಿದೆ. ಪಬ್ ಮತ್ತು ಬಾರ್‍ಗಳಲ್ಲಿ ಸುರಕ್ಷತಾ ಕ್ರಮಗಳಿವೆಯೇ ಎಂಬುದನ್ನು ಪರಿಶೀಲಿಸಬೇಕು. ಮೇಲ್ಛಾವಣಿಯಲ್ಲಿ ಅಡುಗೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಮದ್ಯದಂಗಡಿಗಳಿಗೆ ಯಥಾ ರೀತಿಯ ಸಮಯದ ನಿಗದಿಯಿರುತ್ತದೆ. ವಿಶೇಷ ರಿಯಾಯಿತಿ ಇರುವುದಿಲ್ಲ ಎಂದರು. +ತಾತ್ಕಾಲಿಕ ಷೆಡ್‍ಗಳನ್ನು ಹಾಕಿಕೊಂಡು ರೆಸ್ಟೋರೆಂಟ್ ನಡೆಸುವುದು, ಮದ್ಯ ಸರಬರಾಜು ಮಾಡುವಂತಹ ಚಟುವಟಿಕೆಗಳನ್ನು ಕ್ರಮಬದ್ಧಗೊಳಿಸಲಾಗುತ್ತಿದೆ. ಯಾವುದನ್ನೂ ನಿರ್ಬಂಧಿಸುವುದಿಲ್ಲ. ಆದರೆ ಎಚ್ಚರಿಕೆ ವಹಿಸುತ್ತೇವೆ ಎಂದು ತಿಳಿಸಿದರು. ಪೊಲೀಸರು ಅಲ್ಲಲ್ಲಿ ತಾತ್ಕಾಲಿಕ ಸಹಾಯ ವೇದಿಕೆಗಳನ್ನು ತೆರೆಯಬೇಕು, ಮೈಕ್‍ಗಳಲ್ಲಿ ಜನರಿಗೆ ಮಾಹಿತಿಯನ್ನು ನೀಡುತ್ತಿರಬೇಕು, ಮೆಟ್ರೋ, ಬಸ್ ಮತ್ತು ಸಾರ್ವಜನಿಕ ಬಸ್‍ಗಳು ಹೆಚ್ಚು ಸಂಚರಿಸಬೇಕು, ಪಾರ್ಕಿಂಗ್ ಸ್ಥಳಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚಿಸಿರುವುದಾಗಿ ಹೇಳಿದರು. +ಜನರ ದುಡ್ಡು, ಆಕಾಶದಲ್ಲಿ ಜಾತ್ರೆ : ಸುದ್ದು-ಜಮೀರ್ ಆಡಂಬರಕ್ಕೆ ವಿಜೆಯೇಂದ್ರ ಟೀಕೆ +ಇದಕ್ಕೂ ಮೊದಲು ತಮ್ಮ ಮನೆಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಕರ್ನಾಟಕದಲ್ಲಿ ಅಜಿತ್ ಪವಾರ್ ಮತ್ತು ಏಕನಾಥ್ ಶಿಂಧೆಯಂತಹ ನಾಯಕರಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿ, ವಿಪಕ್ಷ ನಾಯಕರು ಭ್ರಮೆಯಲ್ಲಿರಲಿ, ನಾವು ಬೇಡ ಎನ್ನುವುದಿಲ್ಲ ಎಂದು ತಿರುಗೇಟು ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಐಶಾರಾಮಿ ವಾಹನದಲ್ಲಿ ಬಂದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು. \ No newline at end of file diff --git a/eesanje/url_46_281_9.txt b/eesanje/url_46_281_9.txt new file mode 100644 index 0000000000000000000000000000000000000000..bf7da57b20b901c20cefd420fff02a411b8957c1 --- /dev/null +++ b/eesanje/url_46_281_9.txt @@ -0,0 +1,8 @@ +ಸದಾಶಿವ ಆಯೋಗ ವರದಿ ಜಾರಿಗೆ ಮಾದಿಗ ದಂಡೋರ ಆಗ್ರಹ +ಬೆಂಗಳೂರು,ಡಿ.22- ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಜನಜಾಗೃತಿ ಸಮಿತಿ ಇಂದೂ ಸರ್ಕಾರವನ್ನು ಒತ್ತಾಯಿಸಿತು. +ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಎಂ.ಸಿ. ಶ್ರೀನಿವಾಸ, ಮಾದಿಗ ದಂಡೋರ ಹೋರಾಟ ವೇದಿಕೆ ರಾಜ್ಯದಲ್ಲಿ ರಸ್ತೆತಡೆ, ರೈಲು ರೋಖೋ ಚಳುವಳಿ, ಜಿಲ್ಲಾ ಸಮಾವೇಶಗಳು, ಅರೆಬೆತ್ತಲೆ ಮೆರವಣಿಗೆ, ಪುಟಗೋಸಿ ಚಳುವಳಿ, ತಮಟೆ ಚಳುವಳಿ, ಏಕಕಾಲದಲ್ಲಿ ರಾಜ್ಯದಲ್ಲಿ 125 ತಾಲ್ಲೂಕು ಕಛೇರಿಗಳ ಮುಂದೆ ಮತ್ತು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಬೃಹತ್ ಸಮಾವೇಶಗಳು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ, ವಿಧಾನಸೌಧ ಅಧಿವೇಶನದಲ್ಲಿ ಗದ್ದಲ ಇನ್ನೂ ಮುಂತಾದ ಆಳುವ ಸರ್ಕಾರದ ಗಮನ ಸೆಳೆಯುವ ಹೋರಾಟಗಳ ಬಲದಿಂದ ಮುಂದುವರಿದ ನಮ್ಮ ಮಾದಿಗ ದಂಡೋರ, ಮೀಸಲಾತಿ ಹೋರಾಟ ಸಮಿತಿಯಿಂದ ಮೀಸಲಾತಿ ಹೋರಾಟವನ್ನು ಕಾರ್ಯರೂಪದಲ್ಲಿ ತರಲಾಗಿದೆ ಹಾಗೂ ಕಳೆದ 25 ವರ್ಷಗಳಿಂದ ನಿರಂತರವಾಗಿ ಈ ಬಗ್ಗೆ ಹಲವಾರು ಹೋರಾಟಗಳನ್ನು ಸಹ ಮಾಡುತ್ತಾ ಬಂದಿರುತ್ತೇವೆ. +ಹುಬ್ಬಳ್ಳಿಯ ಹೋರಾಟವನ್ನು ಮಾಡುವ ಸಂದರ್ಭದಲ್ಲಿ ಸಮಾವೇಶದಲ್ಲಿ ದಿನಾಂಕ: 11.12.2016 ರಲ್ಲಿ 07 ಜನರು ಮೃತಪಟ್ಟಿರುತ್ತಾರೆ. ಹಾಗೂ ದಿನಾಂಕ 11.12.2023 ರ ಸೋಮವಾರದಂದು ಬೆಂಗಳೂರಿನಿಂದ ಬೆಳಗವಿಯ ಸಮಾವೇಶಕ್ಕೆ ಹೋಗಿ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಸಂಬಂಧ ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ 4 ಕಾರ್ ನಲ್ಲಿ ತೆರಳುತ್ತಿದ್ದಾಗ ದಾವಣಗೆರೆ ಬಳಿ ಸದರಿ ಕಾರ್ ಅಪಘಾತಗೊಂಡು 18 ಜನರು ತೀವ್ರತರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. +ಇಷ್ಟೇ ಅಲ್ಲದೆ ಸಮಾಜದ ಏಳಿಗೆಗಾಗಿ ಶ್ರಮಿಸಿದ ಹಲವಾರು ಜನರು ಸಹ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಲ್ಲಿ ಹೋರಾಟ ಮಾಡಿ ತಮ್ಮ ಪ್ರಾಣವನ್ನು ತ್ಯಜಿಸಿರುತ್ತಾರೆ. 2012 ರಲ್ಲಿ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿಗಳಾದ ಸದಾನಂದಗೌಡರವರ ಅವಧಿಯಲ್ಲಿ ಸಲ್ಲಿಸಲಾಗಿತ್ತು. +ಜನರ ದುಡ್ಡು, ಆಕಾಶದಲ್ಲಿ ಜಾತ್ರೆ : ಸುದ್ದು-ಜಮೀರ್ ಆಡಂಬರಕ್ಕೆ ವಿಜೆಯೇಂದ್ರ ಟೀಕೆ +ಮುಂದುವರೆದು ನಮ್ಮ ಸಂಘಟನೆಯು ಹಲವಾರು ವರ್ಷಗಳಿಂದ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿ ಅನುಷ್ಠಾನಗೊಳಿಸಲು ಹಲವಾರು ಹೋರಾಟ, ಪ್ರತಿಭಟನೆ ಮತ್ತು ಚಳುವಳಿಗಳನ್ನು ಮಾಡುತ್ತಾ ಬಂದಿರುತ್ತದೆ. ಆದರೂ ಸಹ ಆಯೋಗದ ವರದಿಯನ್ನು ಇದುವರೆಗೂ ಜಾರಿಗೊಳಿಸಿದ ವಿಳಂಭ ಧೋರಣೆ ಅನುಸರಿಸಲಾಗುತ್ತಿದೆ. 2023 ರಲ್ಲಿನ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಆಗ ನಾವು ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಒತ್ತಾಯ ಮಾಡುವುದಾಗಿ ತಿಳಿಸಿದ್ದರು ಆ ಮಾತನ್ನು ಉಳಿಸಿಕೊಳ್ಳಬೇಕೆಂದು ಆಗ್ರಹಿಸಿದರು +ಆದ್ದರಿಂದ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವ ಸಂಬಂಧ ಕಡತವನ್ನು ಮಂಡಿಸಿ ಅನುಮೋದನೆ ನೀಡಿ ಸದರಿ ಕಡತವನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರವನ್ನು ಒತ್ತಾಯ ಮಾಡಲಾಗುವುದು ಈ ವಿಷಯವನ್ನು ತಮ್ಮ ಪ್ರತಿಷ್ಠಿತ ದಿನಪತ್ರಿಕೆಗಳಲ್ಲಿ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಿಸಲು ಕೋರಿದೆ. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ವಿ ರಾಮಪ್ಪ, ಗೌರವಾಧ್ಯಕ್ಷ ಕೆ.ಬಿ ನರಸಿಂಹ, ಮಹಿಳಾ ಅಧ್ಯಕ್ಷ ವೀಣಮ್ಮ,ಸುರೇಶ,ರಂಗಣ್ಣ ಮುಂತಾದವರು ಉಪಸ್ಥಿತರಿದ್ದರು \ No newline at end of file diff --git a/eesanje/url_46_282_1.txt b/eesanje/url_46_282_1.txt new file mode 100644 index 0000000000000000000000000000000000000000..2002e4c4b3d14bf192fbc5cd8bb86fa8373064c7 --- /dev/null +++ b/eesanje/url_46_282_1.txt @@ -0,0 +1,9 @@ +ಐಷಾರಾಮಿ ವಿಮಾನದಲ್ಲಿ ಮೋದಿ ಒಬ್ಬರೇ ಓಡಾಡ್ತಾರಲ್ಲಾ ಅದಕ್ಕೆ ಏನು ಹೇಳ್ತಿರಿ..? : ಸಿದ್ದು ತಿರುಗೇಟು +ಬೆಂಗಳೂರು,ಡಿ.22- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಐಷಾರಾಮಿ ವಿಮಾನದಲ್ಲಿ ಒಬ್ಬರೇ ತಿರುಗಾಡುತ್ತಿರುವ ಬಗ್ಗೆ ಬಿಜೆಪಿಯವರು ಏನು ಹೇಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಸಾಗುವ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸದಸ್ಯರು ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ವ್ಯಾಪಕ ಟೀಕೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು , ನರೇಂದ್ರಮೋದಿಯವರು ಯಾವುದರಲ್ಲಿ ತಿರುಗಾಡುತ್ತಾರೆ ಎಂದು ಬಿಜೆಪಿಯವರನ್ನು ಕೇಳಿ ಎಂದರು. +ಐಷಾರಾಮಿ ವಿಮಾನದಲ್ಲಿ ಒಬ್ಬರೇ ಓಡಾಡುತ್ತಾರಲ್ಲ. ಅದರ ಬಗ್ಗೆ ಬಿಜೆಪಿಯವರು ಏಕೆ ಉತ್ತರ ನೀಡುವುದಿಲ್ಲ. ಬಾಯಿಗೆ ಬಂದಂತೆ ಏನೋ ಮಾತನಾಡುವುದಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಹುದ್ದೆಯ ಅಭ್ಯರ್ಥಿ ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖರ್ಗೆಯವರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇಂಡಿಯಾ ಮೈತ್ರಿಕೂಟದಿಂದ ಯಾರನ್ನೇ ಅಭ್ಯರ್ಥಿ ಮಾಡಿದರೂ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. +ಅನುದಾನದ ನಿರೀಕ್ಷೆ :ಇತ್ತೀಚೆಗೆ ತಾವು ದೆಹಲಿಗೆ ಭೇಟಿ ನೀಡಿದ ವೇಳೆ ಪ್ರಧಾನಮಂತ್ರಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ನಮ್ಮ ಬೇಡಿಕೆಗಳನ್ನು ಸಮಾಧಾನದಿಂದ ಕೇಳಿದರು. ಪ್ರಧಾನಿಯವರು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ನಾಳೆ ಅಮಿತ್ ಶಾ ನೇತೃತ್ವದ ಉನ್ನತಾಧಿಕಾರ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಬರ ನಿರ್ವಹಣೆಗೆ ಅನುದಾನ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು. +ಜಾತಿ ಗಣತಿಗೆ ವಿರೋಧ ಇಲ್ಲ : ಆರ್‌ಎಸ್‌ಎಸ್‌ +ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿ ಕಲಾಪ ನಡೆದಿರುವುದಕ್ಕೆ ಜನ ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಒಪ್ಪಿಕೊಂಡ ಜನ ಕೇಂದ್ರಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಸಹಿಸುವುದಿಲ್ಲ. ಜನರಿಂದ ಮತ ಪಡೆದು ಚುನಾಯಿತರಾದ ಸಂಸದರನ್ನು ಅಮಾನತಿನಲ್ಲಿಡುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು. +ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷಗಳ ಅಭಿಪ್ರಾಯವನ್ನು ಕೇಳಬೇಕಾಗುತ್ತದೆ. ಸರ್ಕಾರದಲ್ಲಿರುವವರಿಗೆ ಮಾತ್ರವೇ ಜನ ಮತ ಹಾಕಿರುವುದಿಲ್ಲ. ವಿರೋಧಪಕ್ಷದಲ್ಲಿರುವವರೂ ಕೂಡ ಮತ ಪಡೆದೇ ಸಂಸತ್ ಪ್ರವೇಶಿಸಿರುತ್ತಾರೆ ಎಂದು ಹೇಳಿದರು. +ರಾಜ್ಯದಲ್ಲಿ ಬರ, ಐಷಾರಾಮಿ ವಿಮಾನದಲ್ಲಿ ಸಿದ್ದು-ಜಮೀರ್‌ ಆಡಂಬರ : ಬಿಜೆಪಿ ಟೀಕೆ +ಕೋವಿಡ್ ಹಿನ್ನೆಲೆಯಲ್ಲಿ ಆತಂಕ ಬೇಡ, ಎಚ್ಚರಿಕೆ ಅಗತ್ಯ ಎಂದು ಪದೇಪದೇ ಹೇಳುತ್ತಿದ್ದೇವೆ. ಜನಸಂದಣಿ ಇರುವ ಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕ್ಷೇಮ. ಮೈಸೂರಿನಲ್ಲಿ 6 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅವರಲ್ಲಿ ಬಹಳಷ್ಟು ಮಂದಿ ಗಂಭೀರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_282_10.txt b/eesanje/url_46_282_10.txt new file mode 100644 index 0000000000000000000000000000000000000000..63b5518c8ccd169aaee84f8122b23ff380e1f264 --- /dev/null +++ b/eesanje/url_46_282_10.txt @@ -0,0 +1,9 @@ +ಕೋವಿಡ್ ಹೆಚ್ಚಳ : ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ +ಬೆಂಗಳೂರು,ಡಿ.21- ಕೋವಿಡ್ ನಿಯಂತ್ರಣಕ್ಕೆ ಅನುಸರಿಸಲಾಗಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಗೃಹಕಚೇರಿ ಕೃಷ್ಣಾದಲ್ಲಿ ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಹಾಗು ಇತರ ಇಲಾಖೆಗಳ ಪ್ರಮುಖರ ಜೊತೆ ಸಭೆ ನಡೆಸಲಾಗಿದ್ದು, ಕೋವಿಡ್ ವಿಷಯದಲ್ಲಿ ಅನಗತ್ಯ ಆತಂಕವೂ ಬೇಡ ಜೊತೆಯಲ್ಲಿ ನಿರ್ಲಕ್ಷ್ಯವೂ ಸಲ್ಲ ಎಂದು ಸೂಚನೆ ನೀಡಿದ್ದಾರೆ. +ಜಿಲ್ಲೆ, ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಲಭ್ಯತೆ, ಐಸೊಲೇಷನ್ ಬೆಡ್‍ಗಳು, ವೆಂಟಿಲೇಟರ್, ತುರ್ತು ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದರಪಟ್ಟಿಯ ಕುರಿತು ಚರ್ಚೆ ಮಾಡಲಾಗಿದೆ. ಆರ್‍ಟಿಪಿಸಿಆರ್ ಹಾಗೂ ಇತರ ಪರೀಕ್ಷೆಗಳಿಗೆ ಖಾಸಗಿ ಆಸ್ಪತ್ರೆಗಳು ಸಂಗ್ರಹಿಸಬಹುದಾದ ದರಗಳ ಕುರಿತು ಸಮಾಲೋಚನೆಗಳಾಗಿವೆ. +ನಿನ್ನೆ ಕೇಂದ್ರ ಸಚಿವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು ಹಾಗೂ ಕೆಲ ಪ್ರಮುಖರೊಂದಿಗೆ ಸಭೆ ನಡೆಸಿದ್ದರು. ನಿನ್ನೆ ರಾತ್ರಿ ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಮರಳಿದ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಶಾಲಾ-ಕಾಲೇಜುಗಳು, ಸಾರ್ವಜನಿಕ ಸ್ಥಳಗಳು, ಜನನಿಬಿಡ ಪ್ರದೇಶಗಳು, ಮಾಲ್‍ಗಳು, ಜಾತ್ರೆ, ಸಮಾವೇಶಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆಗಳಾಗಿವೆ. ಈಗಾಗಲೇ ಆಸ್ಪತ್ರೆಗಳು ಹಾಗೂ ಕೆಲ ಸರ್ಕಾರಿ ಕಚೇರಿಗಳಲ್ಲಿ ಮಾಸ್ಕ್ ಖಡ್ಡಾಯಗೊಳಿಸಲಾಗಿದೆ. ಓಮಿಕ್ರಾನ್‍ನ ಉಪತಳಿಯಾಗಿರುವ ಜೆಎನ್-1 ಸೋಂಕು ಅಪಾಯಕಾರಿಯಲ್ಲ ಎಂಬ ವರದಿ ಇದ್ದರೂ ಕೂಡ ಸೋಂಕಿನಿಂದ ಅಸ್ವಸ್ಥತೆ ಹಾಗೂ ಆರೋಗ್ಯದ ಏರಿಳಿತಗಳಾಗುವ ಕಾರಣಕ್ಕೆ ಮುಂಜಾಗ್ರತೆ ಅನಿವಾರ್ಯ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. +ಸೋಂಕು ಹರಡುವ ಪ್ರಮುಖ ಪ್ರದೇಶಗಳನ್ನು ಗುರುತಿಸಿ ಸಾನಿಟೈಸೇಷನ್ ಸೇರಿದಂತೆ ಇತರ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗದಂತೆ ವಿಶ್ವಾಸ ಮೂಡಿಸಬೇಕು. ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಹೆಚ್ಚಾದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಬಾಯಿಸಲು ಅಗತ್ಯವಾದ ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಪಿಪಿಇ ಕಿಟ್, ಪರೀಕ್ಷಾ ಕಿಟ್‍ಗಳಂತಹ ಸೌಲಭ್ಯಗಳನ್ನು ಜಿಲ್ಲಾಮಟ್ಟದಲ್ಲೇ ಹೊಂದಿಸಿಕೊಳ್ಳುವಂತೆ ಸೂಚಿಸಲಾಗಿದೆ. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಗೃಹಸಚಿವ ಡಾ.ಜಿ.ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. +ಖರ್ಗೆಯವರು ಪ್ರಧಾನಿ ಅಭ್ಯರ್ಥಿಯಾದರೆ ಸಂತಸದ ವಿಷಯ : ಪರಮೇಶ್ವರ್ +ಕೋವಿಡ್ 1, 2 ಮತ್ತು 3 ನೇ ಅಲೆಯ ವೇಳೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ವಿಪಕ್ಷವಾಗಿದ್ದ ಕಾಂಗ್ರೆಸ್ ಆಡಳಿತ ವ್ಯವಸ್ಥೆಯ ಬಗ್ಗೆ ವ್ಯಾಪಕ ಟೀಕೆ ಮಾಡಿತ್ತು. ಕೋವಿಡ್ ಸಲಕರಣೆಗಳ ಖರೀದಿಯಲ್ಲೂ ಭಾರೀ ಅವ್ಯವಹಾರವಾಗಿದೆ ಎಂಬ ಆರೋಪ ಮಾಡಿದ್ದಲ್ಲದೆ, ಅದರ ತನಿಖೆಗೂ ಆದೇಶಿಸಿದೆ. ಈಗ ಪರಿಸ್ಥಿತಿ ತಿರುವು ಮುರುವಾಗಿದ್ದು ಕಾಂಗ್ರೆಸ್ ಅಧಿಕಾರದಲ್ಲಿದೆ, ಬಿಜೆಪಿ ವಿರೋಧಪಕ್ಷದಲ್ಲಿದೆ. +ಚಿಕಿತ್ಸೆಗೆ ತುರ್ತು ಕ್ರಮ ಕೈಗೊಳ್ಳುವುದು ಒಂದೆಡೆಯಾದರೆ, ಅದರ ಪೂರ್ವ ಸಿದ್ಧತೆಗಳಲ್ಲಿ ಯಾವುದೇ ನಿಯಮ ಬಾಹಿರ ಕೃತ್ಯಗಳಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_282_11.txt b/eesanje/url_46_282_11.txt new file mode 100644 index 0000000000000000000000000000000000000000..3e6451873187530fb77b9ab7f38eb4d6167c0875 --- /dev/null +++ b/eesanje/url_46_282_11.txt @@ -0,0 +1,7 @@ +ಲೋಕಸಭೆ ಚುನಾವಣೆ ಸ್ಪರ್ಧೆಗೆ ಖರ್ಗೆ ನಿರಾಸಕ್ತಿ +ಬೆಂಗಳೂರು,ಡಿ.21- ಪ್ರಧಾನಿ ಹುದ್ದೆಯ ಅಭ್ಯರ್ಥಿ ಸ್ಥಾನಕ್ಕೆ ಪ್ರಸ್ತಾಪಿಸಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರಾಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಕಳೆದ 6 ತಿಂಗಳಿನಿಂದಲೂ ಈ ನಿಟ್ಟಿನಲ್ಲಿ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. +ಮಲ್ಲಿಕಾರ್ಜುನ ಖರ್ಗೆಯವರು ಕಳೆದ ಲೋಕಸಭೆ ಚುನಾವಣೆಯ ಹಿನ್ನಡೆಯಿಂದ ತೀರಾ ಅಸಮಾಧಾನಗೊಂಡಿದ್ದು, ಈ ಬಾರಿ ವಯೋಸಹಜತೆ ಹಾಗೂ ಅಖಿಲ ಭಾರತ ಮಟ್ಟದಲ್ಲಿ ಪ್ರಚಾರ ನಡೆಸಿ ಚುನಾವಣೆ ನಡೆಸಬೇಕಾದ ಕಾರ್ಯದೊತ್ತಡದ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವುದಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಆದರೆ ಅವರ ಮನವೊಲಿಕೆಗೆ ರಾಜ್ಯ ಕಾಂಗ್ರೆಸಿಗರು ಸಾಕಷ್ಟು ಸರ್ಕಸ್ ನಡೆಸುತ್ತಿದ್ದಾರೆ. +ಕಲ್ಬುರ್ಗಿ ಕಾಂಗ್ರೆಸ್‍ನ ಭದ್ರ ಕೋಟೆ. ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ತಮ್ಮ ಹಿಡಿತ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬೇರೆ ಬೇರೆ ಕಾರಣಗಳಿಗಾಗಿ ಹಿನ್ನಡೆಯಾಗಿದೆಯೇ ಹೊರತು ಅದು ಆತಂಕ ಪಡುವಂತಹ ಸೋಲಲ್ಲ. ಈ ಬಾರಿ ಕಾಂಗ್ರೆಸ್ ಖಂಡಿತಾ ಗೆಲ್ಲುತ್ತದೆ. ಇಡೀ ಸರ್ಕಾರವೇ ನಿಮ್ಮ ಬೆನ್ನಿಗೆ ನಿಂತು ಗೆಲ್ಲಿಸುವ ಹೊಣೆ ಹೊರಲಿದೆ ಎಂದು ರಾಜ್ಯ ನಾಯಕರು ಮಲ್ಲಿಕಾರ್ಜುನ ಖರ್ಗೆಯವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. +ಎಐಸಿಸಿ ಅಧ್ಯಕ್ಷರೇ ಚುನಾವಣೆಯಿಂದ ಹಿಂದೆ ಸರಿದಿದ್ದರೆ, ಅದು ನಕಾರಾತ್ಮಕ ಸಂದೇಶ ರವಾನೆಗೆ ಕಾರಣವಾಗುತ್ತದೆ. ಕಾಂಗ್ರೆಸ್ ಶಸ್ತ್ರ ತ್ಯಾಗ ಮಾಡಿದೆ ಎಂಬ ಅರ್ಥದಲ್ಲಿ ವಿಪಕ್ಷಗಳು ವ್ಯಾಖ್ಯಾನ ಮಾಡುತ್ತವೆ. ಹೀಗಾಗಿ ನಿಮ್ಮ ಸ್ಪರ್ಧೆ ಪಕ್ಷದ ಆತ್ಮವಿಶ್ವಾಸ ಹೆಚ್ಚಿಸಲು ಅನಿವಾರ್ಯ ಎಂದು ರಾಜ್ಯ ನಾಯಕರು ಹೇಳಿರುವುದಾಗಿ ಮೂಲಗಳು ತಿಳಿಸಿವೆ. +ಗೃಹಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್ +ಒಂದು ವೇಳೆ ಖರ್ಗೆಯವರು ಸ್ರ್ಪಧಿಸುವುದೇ ಇಲ್ಲ ಎಂದಾದರೆ ಪರ್ಯಾಯ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ಖರ್ಗೆಯವರ ಕುಟುಂಬದಲ್ಲಿನ ಸದಸ್ಯರಿಗೂ ಟಿಕೆಟ್ ಕೊಟ್ಟು ಗೆಲ್ಲಿಸಿಕೊಡಬೇಕು ಎಂಬ ಒತ್ತಾಸೆಗಳಿವೆ. ಆದರೆ ಪ್ರಿಯಾಂಕ್ ಖರ್ಗೆ ಹೊರತುಪಡಿಸಿದರೆ ಕಲ್ಬುರ್ಗಿ ಜಿಲ್ಲಾ ರಾಜಕಾರಣದಲ್ಲಿ ಜನಜನಿತವಾದ ನಾಯಕರು ಖರ್ಗೆ ಕುಟುಂಬದಿಂದ ಹೊರಬಂದಿಲ್ಲ. ಹೀಗಾಗಿ ಯಾರನ್ನು ಕಣಕ್ಕಿಳಿಸಬೇಕೆಂಬ ಪ್ರಶ್ನೆ ಗಂಭೀರವಾಗಿ ಚರ್ಚೆಯಾಗುತ್ತಿದೆ. ಖರ್ಗೆಯವರ ಪುತ್ರರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆಯವರನ್ನೇ ಕಣಕ್ಕಿಳಿಸುವ ಬಗ್ಗೆ ಚರ್ಚೆಗಳಾಗುತ್ತಿವೆ. \ No newline at end of file diff --git a/eesanje/url_46_282_12.txt b/eesanje/url_46_282_12.txt new file mode 100644 index 0000000000000000000000000000000000000000..f20401cbb441300ed3b7880d5587447f76ad5047 --- /dev/null +++ b/eesanje/url_46_282_12.txt @@ -0,0 +1,7 @@ +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಬೆಂಗಳೂರು,ಡಿ.21- ನಿಗಮ ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಶಾಸಕರು ಹಾಗೂ ಮುಖಂಡರಿಗೆ ಮತ್ತೊಮ್ಮೆ ನಿರಾಶೆ ಮೂಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗುವುದು. ಎರಡನೇ ಹಂತದಲ್ಲಿ ಕಾರ್ಯಕರ್ತರು ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದವರಿಗೆ ಅವಕಾಶ ನೀಡುವುದಾಗಿ ತಿಳಿಸಲಾಗಿತ್ತು. +ದೆಹಲಿಗೆ ತೆರಳಿ ಜಂಟಿ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಗೆ ಅನುಮತಿ ಪಡೆದುಕೊಂಡೇ ಬರುವುದಾಗಿ ಪ್ರತಿಜ್ಞೆ ತೊಟ್ಟಿದ್ದರು. +ದೆಹಲಿಯಲ್ಲೂ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಶೀಘ್ರದಲ್ಲೇ ನೇಮಕಾತಿ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮೊದಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪುನರುಚ್ಛರಿಸಿದ್ದರು. ಆದರೆ ನಿನ್ನೆ ದೆಹಲಿಯಿಂದ ಮರಳಿದ ಇಬ್ಬರೂ ನಾಯಕರು ಬರಿಗೈನಲ್ಲಿ ವಾಪಸ್ ಬಂದಂತೆ ಕಾಣುತ್ತಿದೆ. ಆಪ್ತ ಮೂಲಗಳ ಪ್ರಕಾರ, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ನಡುವೆ ಹೊಂದಾಣಿಕೆಯಾಗದ ಕಾರಣಕ್ಕೆ ನಿಗಮ ಮಂಡಳಿಗಳ ನೇಮಕಾತಿ ಪಟ್ಟಿಗೆ ಮುಕ್ತಿ ಸಿಕ್ಕಿಲ್ಲ ಎನ್ನಲಾಗಿದೆ. +ಬೆಂಗಳೂರಿನಲ್ಲಿ 17 ಮಂದಿಯಲ್ಲಿ ಹೊಸ ಕೊರೊನಾ ಸೋಂಕು ಪತ್ತೆ +40ಕ್ಕೂ ಹೆಚ್ಚು ಶಾಸಕರನ್ನು ಮೊದಲ ಹಂತದಲ್ಲಿ ನಿಗಮಗಳಿಗೆ ನೇಮಿಸಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇರಾದೆಯಾಗಿತ್ತು. ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂಬುದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಒತ್ತಾಸೆ. ಈ ಇಬ್ಬರ ನಡುವಿನ ಹಗ್ಗ ಜಗ್ಗಾಟದಲ್ಲಿ ಶಾಸಕರು ಅತಂತ್ರರಾಗಿದ್ದಾರೆ. ಸಚಿವ ಸ್ಥಾನ ಸಿಗದೇ ಇದ್ದವರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡಿ ಸಮಾಧಾನಪಡಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಸದ್ಯ ಬ್ರೇಕ್ ಬಿದ್ದಿದೆ. +ಹೀಗಾಗಿ ಹೊಸ ವರ್ಷದ ವೇಳೆಗೆ ಪದಗ್ರಹಣ ಮಾಡಿ ಸರ್ಕಾರಿ ಕಾರಿನಲ್ಲಿ ಓಡಾಡುವ ಕನಸು ಕಂಡಿದ್ದವರು ನಿರಾಶರಾಗಿದ್ದಾರೆ. ಡಿಸೆಂಬರ್ 29 ರಂದು ಮತ್ತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಾಗುತ್ತಿದ್ದು, ಆ ವೇಳೆ ನಿಗಮ ಮಂಡಳಿ ಚರ್ಚೆ ನಡೆಸುವುದಾಗಿ ರಾಜ್ಯ ನಾಯಕರು ಮತ್ತೊಮ್ಮೆ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_46_282_2.txt b/eesanje/url_46_282_2.txt new file mode 100644 index 0000000000000000000000000000000000000000..08e7168f8d9063cfdc89769dac10ddf2ddc473ef --- /dev/null +++ b/eesanje/url_46_282_2.txt @@ -0,0 +1,5 @@ +ಜನರ ದುಡ್ಡು, ಆಕಾಶದಲ್ಲಿ ಜಾತ್ರೆ : ಸುದ್ದು-ಜಮೀರ್ ಆಡಂಬರಕ್ಕೆ ವಿಜೆಯೇಂದ್ರ ಟೀಕೆ +ಬೆಂಗಳೂರು,ಡಿ.22- ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ಅವರು ಆಡಳಿತರೂಡ ಕಾಂಗ್ರೆಸ್ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದ್ದಾರೆ. +ತಮ್ಮ ಆಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಹ ಗಂಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ ಎಂದು ಕಿಡಿಕಾರಿದ್ದಾರೆ. +ಮುನಿಸಿಕೊಂಡಿರುವ ನಿತೀಶ್ ಜತೆ ರಾಹುಲ್ ಮಾತುಕತೆ +ಮುಖ್ಯಮಂತ್ರಿ ಮತ್ತಿತರರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ ರೋಮ್ ದೊರೆ ನೀರೋ ಉಲ್ಲೇಖಿಸುತ್ತಾ ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ ಎಂದು ವರ್ಣಿಸಬಹುದಾಗಿದೆ ಎಂದು ಹರಿಹಾಯ್ದಿದ್ದಾರೆ. \ No newline at end of file diff --git a/eesanje/url_46_282_3.txt b/eesanje/url_46_282_3.txt new file mode 100644 index 0000000000000000000000000000000000000000..a22ee5172818332bae0e893e16f550f79fe0dbaf --- /dev/null +++ b/eesanje/url_46_282_3.txt @@ -0,0 +1,6 @@ +ರಾಜ್ಯದಲ್ಲಿ ಬರ, ಐಷಾರಾಮಿ ವಿಮಾನದಲ್ಲಿ ಸಿದ್ದು-ಜಮೀರ್‌ ಆಡಂಬರ : ಬಿಜೆಪಿ ಟೀಕೆ +ಬೆಂಗಳೂರು,ಡಿ.22- ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಸಿದ್ದರಾಮಯ್ಯ ಅವರ ಜತೆ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಅವರ ಮೇಲೆ ಮುಗಿಬಿದ್ದಿದೆ. ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೇನೂ ಕಡಿಮೆ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ. +ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.@INCKarnatakaಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ.ಆದರೆ, ಮಜವಾದಿ@siddaramaiahಮತ್ತು ಅವರ ಅತ್ಯಾಪ್ತ@BZZameerAhmedKಅವರ ಆಡಂಬರಕ್ಕೇನು ಕಡಿಮೆ ಇಲ್ಲ.ಜನರ ತೆರಿಗೆ…://./1vb2xSIv6W +ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮೆಯ ನಾಯಕರು, ಸಿಎಂ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ಜಮೀರ್ ಅಹ್ಮದ್ ಖಾನ್ ನಿನ್ನೆ ರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ವಿಮಾನ ಪ್ರಯಾಣದ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. +ರಾಹುಲ್‍ಗಾಂಧಿ ಸಂಸದರಾಗಲು ನಾಲಾಯಕ್ ; ವಿಜಯ್ ವರ್ಗಿಯಾ +ಜಮೀರ್ ಅಹ್ಮದ್ ಅವರು ಐಷಾರಾಮಿ ಚಾರ್ಟರ್ಡ್ ಫ್ಲೈಟ್‍ನಲ್ಲಿ ಉದ್ದನೆಯ ಸೋಫಾದಲ್ಲಿ ಕ್ಯಾಮೆರಾಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್ ಕೂಡ ಇರುವುದನ್ನು 32 ಸೆಕೆಂಡುಗಳ ವೀಡಿಯೊದಲ್ಲಿ ಕಾಣಬಹುದು. \ No newline at end of file diff --git a/eesanje/url_46_282_4.txt b/eesanje/url_46_282_4.txt new file mode 100644 index 0000000000000000000000000000000000000000..61ddb86b7589a6d66cfb43f6c3ea7876e86aef75 --- /dev/null +++ b/eesanje/url_46_282_4.txt @@ -0,0 +1,7 @@ +ಕೆಎಂಎಫ್ ಹೊಸ ಉತ್ಪನ್ನಗಳ ಬಿಡುಗಡೆ +ಬೆಂಗಳೂರು,ಡಿ.21- ಜಿಡ್ಡಿನಂಶ ಕಡಿಮೆ ಇರುವ ಉತ್ಕøಷ್ಟ ಗುಣಮಟ್ಟ ಕೆನೆಭರಿತ ಎಮ್ಮೆಯ ಹಾಲನ್ನು ಕೆಎಂಎಫ್ ಸಂಸ್ಕರಿಸಿ ಇಂದಿನಿಂದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ನಂದಿನಿ ಎಮ್ಮೆ ಹಾಲನ್ನು ಬಿಡುಗಡೆ ಮಾಡಿದರು. +ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಕೆಎಂಎಫ್‍ನ ರಾಯಭಾರಿ ನಟ ಶಿವರಾಜ್‍ಕುಮಾರ್, ಗೀತಾ ಶಿವರಾಜ್‍ಕುಮಾರ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಉತ್ಪನ್ನಗಳನ್ನು ಉನ್ನತೀಕರಿಸುತ್ತಿರುವ ಕೆಎಂಎಫ್ ಸ್ಪರ್ಧಾತ್ಮಕ ಬೆಲೆಯಲ್ಲಿ ಬೆಂಗಳೂರಿನ ನಾಗರಿಕರಿಗೆ ಎಮ್ಮೆ ಹಾಲು ಪೂರೈಸಲು ಮುಂದಾಗಿದೆ. +ಬೆಳಗಾವಿ, ವಿಜಯಪುರ ಹಾಲು ಒಕ್ಕೂಟಗಳಿಂದ ಎಮ್ಮೆ ಹಾಲನ್ನು ಪಡೆದು, ಸಂಸ್ಕರಿಸಿ, ವಿನೂತನ ಪ್ಯಾಕ್‍ನಲ್ಲಿ 35 ರೂ.ಗಳಿಗೆ ಅರ್ಧ ಲೀಟರ್‍ನಂತೆ ಮಾರಾಟ ಮಾಡಲು ಮುಂದಾಗಿದೆ. ಈ ಹಾಲು ಪೌಷ್ಠಕಾಂಶಗಳ ಖನಿಜವಾಗಿದ್ದು, ಮಕ್ಕಳ ಶಕ್ತಿವರ್ಧನೆಗೆ ಸಹಾಯವಾಗಲಿದೆ. ಯುವಕರಿಗೂ ಆರೋಗ್ಯಪೂರ್ಣವಾಗಿರಲಿದೆ ಎಂದು ಕೆಎಂಎಫ್ ತಿಳಿಸಿದೆ. ಗಟ್ಟಿಯಾದ ಮೊಸರು, ಸಿಹಿ ಉತ್ಪನ್ನಗಳ ತಯಾರಿಕೆಗೆ ಹೆಚ್ಚು ಪೆÇ್ರೀಟೀನ್, ಲವಣಾಂಶ ಹಾಗೂ ಕ್ಯಾಲ್ಶಿಯಂ ಭರಿತವಾಗಿದೆ. +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಇದೇ ವೇಳೆ ನಂದಿನಿ ಮೊಸರು ಲೈಟ್ ಬ್ರಾಂಡ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು 2 ವಿಶೇಷ ಪ್ಯಾಕ್‍ಗಳಲ್ಲಿ ಲಭ್ಯವಿದ್ದು, ಕಡಿಮೆ ಜಿಡ್ಡಿನಂಶವಿರುವಂತಹ ಅಧಿಕ ಪ್ರೋಟೀನ್ ಹಾಗೂ ಪೋಷಕಾಂಶಗಳ ಭರಿತ 180 ಗ್ರಾಂ.ಗೆ 10 ರೂ. ಅರ್ಧ ಲೀಟರ್ ಹಾಲಿಗೆ 25 ರೂ. ಗರಿಷ್ಠ ಮಾರಾಟ ದರವನ್ನು ನಿಗದಿಪಡಿಸಲಾಗಿದೆ. +ಈ ಮೊಸರು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಮೂಳೆಯನ್ನು ಗಟ್ಟಿಗೊಳಿಸುವುದಲ್ಲದೆ, ಸಂವಾತ, ರಕ್ತದೊತ್ತಡದಂತಹ ಜೀವನಶೈಲಿಯ ರೋಗಗಳನ್ನು ನಿವಾರಿಸುತ್ತದೆ ಎಂದು ತಿಳಿಸಲಾಗಿದೆ. ನಂದಿನಿ ಮೈಸೂರುಪಾಕ್, ಹಾಲಿನ ಪೇಡ, ಧಾರವಾಡ ಪೇಡ, ಕೇಸರಿ ಪೇಡ, ಏಲಕ್ಕಿ ಪೇಡ, ಕಾಜು ಕಟ್ಲೆಟ್, ಸಿರಿಧಾನ್ಯ ಲಡ್ಡು, ಬೇಸನ್ ಲಡ್ಡುಗಳಿಗೆ ಹೊಸ ಪ್ಯಾಕಿಂಗ್ ವಿನ್ಯಾಸಗೊಳಿಸಿ ಮಾರುಕಟ್ಟೆಗೆ ಸಮರ್ಪಿಸಲಾಗಿದೆ ಎಂದು ಕೆಎಂಎಫ್‍ನ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ತಿಳಿಸಿದ್ದಾರೆ. \ No newline at end of file diff --git a/eesanje/url_46_282_5.txt b/eesanje/url_46_282_5.txt new file mode 100644 index 0000000000000000000000000000000000000000..eacc2156042fc128ee1d212ecfaf6cee74caff1a --- /dev/null +++ b/eesanje/url_46_282_5.txt @@ -0,0 +1,9 @@ +ಪ್ರಧಾನಿ ಮೋದಿ ಭೇಟಿಯಾದ ಎಚ್‍ಡಿಡಿ, ಹೆಚ್‌ಡಿಕೆ +ಬೆಂಗಳೂರು,ಡಿ.21 – ರಾಜ್ಯದ ತೆಂಗು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೆಡಿಎಸ್ ಮನವಿ ಮಾಡಿದೆ. ಜೆಡಿಎಸ್ ರಾಪ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು, ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್‍ಡಿ ರೇವಣ್ಣ, ಶಾಸಕ ಸಿಎನ್ ಬಾಲಕೃಷ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗ ಪ್ರಧಾನಿ ಭೇಟಿ ಮಾಡಿ ವಿಶೇಷ ಪರಿಹಾರ ಪ್ಯಾಕೇಜ್‍ಗೆ ಮನವಿ ಮಾಡಿದೆ. +ಬರಗಾಲ ಹಾಗೂ ಕೀಟ ರೋಗಗಳಿಂದ ತೆಂಗು ಬೆಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 15 ಸಾವಿರ ರೂ.ನಂತೆ ನಪೇಡ್ ಮೂಲಕ ಖರೀದಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಹಾಸನ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ರಾಮನಗರ ಜಿಲ್ಲೆಗಳ 5.91 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತೆಂಗು ಬೆಳೆಗಳನ್ನೆ ಜೀವನೋಪಾಯಕ್ಕೆ ಅವಲಂಬಿಸಿದ್ದಾರೆ. +ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ@narendramodiಅವರು ಹಾಗೂ ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ@H_D_Devegowdaಅವರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್‌ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ.…../siTGEt4r6J +ಕೊಬ್ಬರಿ ಬೆಲೆ ಕುಸಿತದಿಂದಾಗಿ ಸಾಕಷ್ಟು ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತೆಂಗು ಬೆಳೆಗಾರರಿಗೆ ಹಣಕಾಸಿನ ವಿಶೇಷ ಬರಪರಿಹಾರ ಪ್ಯಾಕೇಜ್ ಘೋಷಿಸಬೇಕು, ಬರ ಪ್ರದೇಶದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ತೆಂಗು ಬೆಳೆಗಾರರಿಗೆ 25 ಸಾವಿರ ರೂ. ನೀಡಬೇಕು ಎಂದು ಮನವಿ ಮಾಡಲಾಗಿದೆ. +ಲೋಕಸಭೆ ಚುನಾವಣೆ ಸ್ಪರ್ಧೆಗೆ ಖರ್ಗೆ ನಿರಾಸಕ್ತಿ +ಸೀಟು ಹಂಚಿಕೆ ಸಮಸ್ಯೆಯಿಲ್ಲನವದೆಹಲಿಯಲ್ಲಿ ಪ್ರಧಾನಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ನಾವು ಸೇರಿದ್ದು, ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಸೀಟು ಹಂಚಿಕೆಗೆ ಸಂಬಂದಿಸಿದಂತೆ ಯಾವುದೇ ಸಮಸ್ಯೆಯಿಲ್ಲ, ಗೆಲ್ಲಲಲು ಸಾದ್ಯವಿರುವ ಕ್ಷೇತ್ರಗಳನ್ನಷ್ಟೇ ಕೇಳಿದ್ದೇವೆ. ಪಟ್ಟಿಯೂ ಸಿದ್ದವಿದೆ. ಬಿಜೆಪಿ, ಜೆಡಿಎಸ್ ಸೇರಿ ರಾಜ್ಯದಲ್ಲಿ 28 ಕ್ಷೇತ್ರ ಗೆಲ್ಲಬೇಕೆಂಬುವುದು ನಮ್ಮ ಉದ್ದೇಶ. +ಸಂಸತ್‍ನಲ್ಲಿ ವಿರೋಧಪಕ್ಷ ಇರಬೇಕೆಂದು ಪ್ರತಿಪಾದಿಸುವ ಕಾಂಗ್ರೆಸ್, ರಾಜ್ಯದಲ್ಲಿ ವಿರೋಧಪಕ್ಷಗಳ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ದೆಹಲಿಯಲ್ಲಿ ವಿರೋಧ ಪಕ್ಷ ಇದ್ದರೆ ಸಾಕು, ರಾಜ್ಯದಲ್ಲಿ ವಿರೋಧಪಕ್ಷ ಬೇಡ ಎಂಬ ಮನೋಭಾವವಿದೆ ಎಂದು ಅವರು ಆರೋಪಿಸಿದರು. ರಾಜ್ಯ ರಾಜಕೀಯದಲ್ಲಿ ಮುಂದೇನಾಗುತ್ತಿದೆ ಎಂಬುದನ್ನು ಕಾದು ನೋಡಬೇಕು ಎಂದು ಮಾರ್ಮಿಕವಾಗಿ ನುಡಿದರು. +ಕಾಡು-ಗೊಲ್ಲ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ದೇವೇಗೌಡರು ಪ್ರಧಾನಿ ಬಳಿ ಮನವಿ ಮಾಡಿದರು. ರಾಜ್ಯದ ನೀರಾವರಿ ಯೋಜನೆಗಳು, ಕೊಬ್ಬರಿ ಬೆಂಬಲ ಬೆಲೆ ವಿಚಾರಗಳ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದರು. \ No newline at end of file diff --git a/eesanje/url_46_282_6.txt b/eesanje/url_46_282_6.txt new file mode 100644 index 0000000000000000000000000000000000000000..634583f806fd635e226a220469de283809b64543 --- /dev/null +++ b/eesanje/url_46_282_6.txt @@ -0,0 +1,9 @@ +ಜ.26ರಿಂದ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ನೋಂದಣಿ ಪ್ರಾರಂಭ +ಬೆಂಗಳೂರು, ಡಿ.21- ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಡಿ. 26ರಿಂದ ಪ್ರಾರಂಭವಾಗಲಿದೆ. ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ಹಾಗೂ ಡಿಫ್ಲೋಮಾ ತೇರ್ಗಡೆಯಾದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅೀಧಿನದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. +ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ ಅವರು ಪ್ರಸಕ್ತ ಸಾಲಿನಲ್ಲಿ ನಿರುದ್ಯೋಗಿ ಭತ್ಯೆ ನೀಡಲು 250 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು. +ಯುವನಿಧಿ ಯೋಜನೆಗೆ ರಾಜ್ಯಾದ್ಯಂತ 5,29,153 ಫಲಾನುಭವಿಗಳಿರುವುದು ಅಂದಾಜು ಮಾಡಲಾಗಿದೆ. ಅವರಲ್ಲಿ 4.81 ಲಕ್ಷ ಪದವೀಧರರು ಹಾಗೂ 48,156 ಡಿಫ್ಲೋಮಾ ತೇರ್ಗಡೆ ಹೊಂದಿರುವವರು ಸೇರಿರುತ್ತಾರೆಂದು ಅಂದಾಜಿಸಲಾಗಿದೆ.ಸ್ನಾತಕೋತ್ತರ ಪದವೀಧರರು ಕೂಡ ನಿರುದ್ಯೋಗ ಭತ್ಯೆಗೆ ಅರ್ಹರಾಗಿದ್ದಾರೆ. ನಿರುದ್ಯೋಗ ಭತ್ಯೆಯನ್ನು ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಗುವುದು ಎಂದರು. +2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ ತೇರ್ಗಡೆಯಾಗಿರಬೇಕು. ಕನಿಷ್ಠ 6 ವರ್ಷಗಳ ಕಾಲ ಕರ್ನಾಟಕ ನಿವಾಸಿಯಾಗಿ ವ್ಯಾಸಂಗ ಮಾಡಿರಬೇಕೆಂಬ ಷರತ್ತು ಮೀಸಲಾಗಿದೆ. ಸರ್ಕಾರಿ, ಅನುದಾನಿತ ಸಂಸ್ಥೆ, ಖಾಸಗಿ ವಲಯದಲ್ಲಿ ಉದ್ದೇಶದಲ್ಲಿರುವ ಸ್ವಯಂ ಉದ್ಯೋಗಿಗಳಾಗಿರುವ ಹಾಗೂ ವಿದ್ಯಾಭ್ಯಾಸ ಮುಂದುವರೆಸುವ ಅಭ್ಯರ್ಥಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಹರಾಗಿವುದಿಲ್ಲ. ಆಸಕ್ತ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು. +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಎನ್‍ಎಡಿ ಪೋರ್ಟಲ್‍ನಲ್ಲಿ ಸಂಬಂಸಿದ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆ, ಮಂಡಳಿಗಳು ನೀಡಿರುವುದನ್ನು ಖಚಿತಪಡಿಸಿಕೊಳ್ಳಲು ನೊಂದಣಿ ಸಂಖ್ಯೆಯನ್ನು ದಾಖಲಿಸಿ ಪರಿಶೀಲಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರಗಳ ಮೂಲಕವೂ ಸೇವಾಸಿಂಧು ಜಾಲ ತಾಣದ ಮೂಲಕ ಅರ್ಜಿ ಸಲ್ಲಿಸಬಹುದು. ಆಧಾರ್ ಸಂಖ್ಯೆ ನಮೂದಿಸಿ ಒಟಿಪಿ ಪಡೆದು ಕೆವೈಸಿ ಪಡೆದುಕೊಳ್ಳಬೇಕು. ಕರ್ನಾಟಕದ ನಿವಾಸಿಯೆಂದು ರೂಪಿಸಲು ಎಸ್‍ಎಸ್‍ಎಲ್‍ಸಿ, ಪಿಯುಸಿ ಪ್ರಮಾಣಪತ್ರ, ರೇಷನ್ ಕಾರ್ಡ್ ಸಂಖ್ಯೆಗಳನ್ನು ಒದಗಿಸಬೇಕು. ಜೊತೆಗೆ ಜಾತಿ, ಪ್ರವರ್ಗಗಳನ್ನು ಆಯ್ಕೆ ಮಾಡಿಕೊಳ್ಳಬೇಕು. +ಅರ್ಜಿ ಸಲ್ಲಿಕೆಯು ಸಮರ್ಪಕವಾಗಿ ಸ್ವೀಕೃತವಾದ ನಂತರ ಮೊಬೈಲ್‍ಗೆ ಸಂದೇಶ ರವಾನೆಯಾಗಲಿದೆ ಎಂದರು.ಫಲಿತಾಂಶ ಪ್ರಕಟವಾದ 180 ದಿನ ಪೂರ್ಣವಾದ ನಂತರ ಯುವನಿಗೆ ಅರ್ಜಿಸಲ್ಲಿಸಬಹುದು. 2 ವರ್ಷ ಅಥವಾ ಉದ್ಯೋಗ ದೊರೆಯುವವರೆಗೂ ನಿರುದ್ಯೋಗ ಭತ್ಯೆ ಪಡೆಯಬಹುದಾಗಿದೆ. ಯುವನಿಧಿ ನೊಂದಣಿ ಪ್ರಕ್ರಿಯೆಗೆ ಡಿ. 26ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು. +ಜನವರಿ 12ರಂದು ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ನಡೆಸಿ ಯುವನಿಧಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮೂಲಕ ಚಾಲನೆ ನೀಡಲಾಗುತ್ತದೆ ಎಂದರು. ಲೋಕಸಭಾ ಚುನಾವಣೆ ನಂತರವೂ ಐದು ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಈ ಬಗ್ಗೆ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಎಂದು ಅವರು ಹೇಳಿದರು. \ No newline at end of file diff --git a/eesanje/url_46_282_7.txt b/eesanje/url_46_282_7.txt new file mode 100644 index 0000000000000000000000000000000000000000..0493a606c2359b92da28cfbe2728bbcd1f8c2579 --- /dev/null +++ b/eesanje/url_46_282_7.txt @@ -0,0 +1,9 @@ +ಪ್ರತಿಭಟನೆ ಕೈಬಿಡಿ ಇಲ್ಲ, ಕಠಿಣ ಕ್ರಮ ಎದುರಿಸಿ : ಅಥಿತಿ ಉಪನ್ಯಾಸಕರಿಗೆ ಎಚ್ಚರಿಕೆ +ಚಿಕ್ಕಬಳ್ಳಾಪುರ,ಡಿ.21- ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಡಿ ಬಗೆಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು, ಅತಿಥಿ ಉಪನ್ಯಾಸಕರು ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮುಷ್ಕರ ಕೈಬಿಡಬೇಕು. ಇಲ್ಲದೇ ಹೋದರೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳು ಇಂದು, ನೆನ್ನೆಯದಲ್ಲ. ಸುಮಾರು ವರ್ಷಗಳಿಂದಲೂ ನನೆಗುದಿಯಲ್ಲಿದೆ. ತಾವು ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು, ಅದರ ಹೊರತಾಗಿಯೂ ಅತಿಥಿ ಉಪನ್ಯಾಸಕರು ಮುಷ್ಕರ ಮುಂದುವರೆಸುತ್ತಿರುವುದು ಸರಿಯಲ್ಲ ಎಂದರು. +ಸರ್ಕಾರ ತಾತ್ಕಾಲಿಕವಾಗಿ ನಿರ್ಧಾರ ತೆಗೆದುಕೊಂಡು ಸಮಸ್ಯೆ ಬಗೆಹರಿಸಬಹುದು. ಆದರೆ ಅದನ್ನು ಯಾರಾದರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದರೆ ಕಾನೂನಾತ್ಮಕವಾಗಿ ತೊಂದರೆಯಾಗಲಿದೆ. ಅಭ್ಯರ್ಥಿಗಳ ಭವಿಷ್ಯವೇ ತ್ರಿಶಂಕು ಸ್ಥಿತಿಗೆ ಸಿಲುಕಲಿದೆ. ಹೀಗಾಗಿ ತರಾತುರಿಯಲ್ಲಿ ಇಂತಿಷ್ಟೇ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಿ ಎಂದು ಒತ್ತಡ ಹೇರುವುದು ಸರಿಯಲ್ಲ ಎಂದು ಹೇಳಿದರು. +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಹಿಂದಿನ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಖಾಯಂ ಮಾಡಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಉತ್ತರ ನೀಡಿತ್ತು. ನಾವು ಚುನಾವಣೆ ಪ್ರಣಾಳಿಕೆಯಲ್ಲಿ ಅತಿಥಿ ಉಪನ್ಯಾಸಕರ ಪರವಾಗಿ ಇರುವುದಾಗಿ ಭರವಸೆ ನೀಡಿದ್ದೆವು. ಅದಕ್ಕೆ ತಕ್ಕ ಹಾಗೆ ಕಾನೂನಾತ್ಮಕವಾಗಿ ಯಾವ ರೀತಿ ಅವಕಾಶ ಕಲ್ಪಿಸಬಹುದು ಎಂಬ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು. +ಪಾಠ ಪ್ರವಚನಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದು ಸರಿಯಲ್ಲ. ಕೆಲ ಸಂಘಟನೆಗಳು ಮುಷ್ಕರದಿಂದ ಹಿಂದೆ ಸರಿಯುವುದಾಗಿ ತಮ್ಮೊಂದಿಗೆ ಹೇಳಿವೆ. ಆದರೆ ಅದಿನ್ನೂ ಜಾರಿಯಾಗಿಲ್ಲ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾವು ಯೋಚಿಸಬೇಕಿದೆ. ಒಂದು ತಿಂಗಳಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ನಿಮ್ಮ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುತ್ತಿದೆ. ಆಡಳಿತಾತ್ಮಕ ಹಾಗೂ ಕಾನೂನಾತ್ಮಕವಾಗಿ ಚರ್ಚೆಗಳಾಗುತ್ತಿವೆ. ಈಗಲೂ ನೀವು ಮುಷ್ಕರ ಕೈಬಿಡದೇ ಇದ್ದರೆ ನಾವು ಬೇರೆ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಾಗಬಹುದು ಎಂದು ಎಚ್ಚರಿಸಿದರು. +ಗೃಹಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್ +ಕೋವಿಡ್‍ನ ಜೆಎನ್-1 ರ ಹರಡುವಿಕೆಯನ್ನು ನಿಯಂತ್ರಿಸಲು ಎಲ್ಲರೂ ಮಾಸ್ಕ್ ಧರಿಸುವುದು ಸೂಕ್ತ. ರಾಜ್ಯವಷ್ಟೇ ಅಲ್ಲ, ಕೇರಳ ಹಾಗೂ ಇತರ ರಾಜ್ಯಗಳಲ್ಲೂ ಸೋಂಕು ಹರಡುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಕಾಳಜಿ ವಹಿಸಬೇಕು ಎಂದು ಹೇಳಿದರು. \ No newline at end of file diff --git a/eesanje/url_46_282_8.txt b/eesanje/url_46_282_8.txt new file mode 100644 index 0000000000000000000000000000000000000000..dd76569be024e16cae9644ea4a081522faacd63a --- /dev/null +++ b/eesanje/url_46_282_8.txt @@ -0,0 +1,11 @@ +ಮೈತ್ರಿ ಪಕ್ಷಕ್ಕೆ 4 ಕ್ಷೇತ್ರ ಮಾತ್ರ ಕೊಡಿ, ವರಿಷ್ಠರಿಗೆ ವಿಜಯೇಂದ್ರ ಮನವಿ +ಬೆಂಗಳೂರು, ಡಿ.21- ಮುಂಬರುವ ಲೋಕಸಭೆ ಚುನಾವಣೆ ಯಲ್ಲಿ ಎನ್‍ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‍ಗೆ ರಾಜ್ಯ ದಲ್ಲಿ 4 ರಿಂದ 5 ಕ್ಷೇತ್ರಗಳನ್ನು ಮಾತ್ರ ನೀಡುವಂತೆ ಪಕ್ಷದ ವರಿಷ್ಠರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಲಿದ್ದಾರೆ. ಪ್ರಸ್ತುತ ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತಿತರ ಪ್ರಮುಖರ ಜೊತೆ ಮಾತುಕತೆ ನಡೆಸಿರುವ ಅವರು, ಜೆಡಿಎಸ್‍ಗೆ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳನ್ನು ನೀಡುವಂತೆ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ. +ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟು ಚಿಕ್ಕಬಳ್ಳಾಪುರ, ತುಮಕೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸುವಂತೆ ಕೋರಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ತಮಗೆ ಹಿನ್ನಡೆಗಳಾಗುವ ಸಾಧ್ಯತೆಗಳಿಲ್ಲ. 1999 ರಿಂದ 2019 ರ ಲೋಕಸಭಾ ಚುನಾವಣೆವರೆಗೂ ಬಿಜೆಪಿ ಪ್ರತಿ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಕಂಡುಕೊಂಡಿದೆ. +ಹೀಗಾಗಿ 3 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು 2 ಕಡೆ ಒಮ್ಮತದ ಅಭ್ಯರ್ಥಿಗಳು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸೋಣ. ವರಿಷ್ಠರು ಗಟ್ಟಿನಿರ್ಧಾರ ತೆಗೆದುಕೊಳ್ಳಬೇಕೆಂದು ವಿಜಯೇಂದ್ರರವರು ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ ಬಿಜೆಪಿಗೆ ಶೇ.36 ರಷ್ಟು ಮತಗಳಿಕೆ ಬಂದಿದೆ. ಅದರಲ್ಲೂ ಹಾಸನ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ನಾವು ತಮ್ಮ ಅಭ್ಯರ್ಥಿಗಳು ಸೋಲು ಕಂಡಿದ್ದರೂ ಅನೇಕ ಕ್ಷೇತ್ರಗಳಲ್ಲಿ ಮತಗಳಿಸುವ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. +ಹಾಸನ ಜಿಲ್ಲೆಯ ಹಾಸನ, ಅರಸೀಕೆರೆ, ಇಡೀ ಕ್ಷೇತ್ರಕ್ಕೆ ಒಳಪಡುವ ಕಡೂರು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮದ್ದೂರು, ಮಳವಳ್ಳಿ ಹೀಗೆ ಹಲವಾರು ಕಡೆ ಮತಪ್ರಮಾಣ ಏರಿಕೆಯಾಗಿದೆ. ಈ ಎಲ್ಲವನ್ನೂ ಪರಿಗಣಿಸಿ 3 ಕ್ಷೇತ್ರಗಳಲ್ಲಿ ಜೆಡಿಎಸ್ ತುಮಕೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಸೀಟು ಹಂಚಿಕೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ವ್ಯತ್ಯಾಸವಾಗದಂತೆ ಪರಸ್ಪರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಎಲ್ಲಿಯೂ ಉಭಯ ಪಕ್ಷಗಳ ಮುಖಂಡರ ನಡುವೆ ಅನುಮಾನಕ್ಕೆ ಆಸ್ಪದವಿರಬಾರದು. ಸಣ್ಣಪುಟ್ಟ ವ್ಯತ್ಯಾಸಗಳು ಬಂದರೆ, ಕೆಳಹಂತದಲ್ಲೇ ಪಕ್ಷದ ಪ್ರಮುಖರು ಬಿಕ್ಕಟ್ಟನ್ನು ಪರಿಹರಿಸಬೇಕು. ಹೀಗಾಗಿ ಆದಷ್ಟು ಬೇಗ ಸೀಟು ಹಂಚಿಕೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡುವಂತೆ ತಿಳಿದುಬಂದಿದೆ. +ಉಳಿದಂತೆ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲು ಜನವರಿ ತಿಂಗಳ ಮಧ್ಯಭಾಗದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ನಡೆಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಮಧ್ಯ ಕರ್ನಾಟಕದ ಪ್ರಮುಖ ಸ್ಥಳ ಹಾಗೂ ರಾಜಕಾರಣಿಗಳಿಗೆ ಅದೃಷ್ಟದ ನೆಲೆ ಎಂದೇ ಹೇಳಲಾಗುವ ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೃಹತ್ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. +ಪ್ರಧಾನಿ ನರೇಂದ್ರ ಮೋದಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ಮುಖಂಡರನ್ನು ಒಂದೇ ವೇದಿಕೆಗೆ ಕರೆತರಬೇಕು. ಈ ಮೂಲಕ ಕಾರ್ಯಕರ್ತರಿಗೆ ಹೊಸ ಸಂದೇಶ ನೀಡೋಣ ಎಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಸ್ಪಷ್ಟ ಜನಾದೇಶ ಪಡೆದು ಅಧಿಕಾರ ಹಿಡಿದಿರುವುದು ಕಾರ್ಯಕರ್ತರಲ್ಲಿ ಹೊಸ ಸಂದೇಶವನ್ನು ತಂದಿದೆ. +ಗೃಹಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್ +ಕರ್ನಾಟಕದಲ್ಲೂ ರಾಜ್ಯದ ಜನತೆ ಮತ್ತೊಮ್ಮೆ ಮೋದಿಯವರನ್ನೇ ಅಧಿಕಾರಕ್ಕೆ ತರಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಹೀಗಾಗಿ ಬೃಹತ್ ಸಮಾವೇಶ ನಡೆಸಲು ಅನುಮತಿ ನೀಡಬೇಕು. ಇದಕ್ಕೆ ಜೆಡಿಎಸ್ ವರಿಷ್ಠರ ಜೊತೆಗೂ ಮಾತುಕತೆ ನಡೆಸಿ ದಿನಾಂಕವನ್ನು ನಿಗದಿಪಡಿಸಬೇಕೆಂಬ ಕೋರಿಕೆಯನ್ನು ವಿಜಯೇಂದ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_282_9.txt b/eesanje/url_46_282_9.txt new file mode 100644 index 0000000000000000000000000000000000000000..e09d2cbddeac238cbb30bb8f7207c90239c3e3dd --- /dev/null +++ b/eesanje/url_46_282_9.txt @@ -0,0 +1,5 @@ +ಪ್ರೇಮ ಕಲಹ : ಪೆಟ್ರೋಲ್ ಸುರಿದು ಕಾನ್‍ಸ್ಟೆಬಲ್ ಕೊಲೆ +ಬೆಂಗಳೂರು, ಡಿ.21- ತನ್ನ ಪ್ರೀತಿಯನ್ನು ನಿರ್ಲಕ್ಷಿಸಿದ್ದನ್ನು ಪ್ರಶ್ನಿಸಲು ಪ್ರೇಯಸಿ ಸೆಕ್ಯೂರಿಟಿ ಗಾರ್ಡ್ ಮನೆಗೆ ಹೋಗಿದ್ದ ಕಾನ್‍ಸ್ಟೆ ಬಲ್‍ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. +ಕೆಆರ್ ಪೇಟೆ ಮೂಲದ ಬಸವನಗುಡಿ ಪೊಲೀಸ್ ಠಾಣೆಯ ಕಾನ್ಸ್‍ಟೆಬಲ್ ಸಂಜಯ್ (28) ಪ್ರೇಮಪಾಶಕ್ಕೆ ಸಲುಕಿ ದುರಂತ ಅಂತ್ಯಕಂಡ ಕಾನ್‍ಸ್ಟೆಬಲ್. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಹೋಂಗಾರ್ಡ್ ಕರ್ತವ್ಯಕ್ಕೆ ಸೇರಿಕೊಂಡಿದ್ದ ವಿವಾಹಿತ ಮಹಿಳೆ, ಕಾನ್‍ಸ್ಟೆಬಲ್ ಸಂಜಯ್ ಅವರ ಪರಿಚಯವಾಗಿದೆ. ಪರಿಚಯ ಸ್ನೇಹಿಕ್ಕೆ ತಿರುಗಿ ನಂತರ ಇಬ್ಬರೂ ಪ್ರೀತಿಸುತ್ತಿದ್ದರು. +ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ +ಹೋಂಗಾರ್ಡ್ ಮಹಿಳೆಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದರೂ ಸಹ ಕಾನ್‍ಸ್ಟೆಬಲ್ ಸಂಜಯ್‍ನನ್ನು ಪ್ರೀತಿಸುತ್ತಿದ್ದಳು. \ No newline at end of file diff --git a/eesanje/url_46_283_1.txt b/eesanje/url_46_283_1.txt new file mode 100644 index 0000000000000000000000000000000000000000..4af516c32ee6310abf65ea102d3686ee1c54d4cc --- /dev/null +++ b/eesanje/url_46_283_1.txt @@ -0,0 +1,10 @@ +ಖರ್ಗೆಯವರು ಪ್ರಧಾನಿ ಅಭ್ಯರ್ಥಿಯಾದರೆ ಸಂತಸದ ವಿಷಯ : ಪರಮೇಶ್ವರ್ +ಬೆಂಗಳೂರು,ಡಿ.21- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿ ಅಭ್ಯರ್ಥಿಯಾಗುವುದಾದರೆ ಅದು ಸಂತಸದ ವಿಷಯ. ಆದರೆ ಇದಕ್ಕೆ ನಮ್ಮ ಮುಂದಿರುವುದು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆಯವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೊ, ಮಾಡಬಾರದೊ ಎನ್ನುವುದನ್ನು ಖುದ್ದು ಅವರೇ ತೆಗೆದುಕೊಳ್ಳಬೇಕಾದ ನಿರ್ಧಾರ. ಒಂದು ವೇಳೆ ಸ್ಪರ್ಧೆ ಮಾಡಿದರೆ ಅವರನ್ನು ಗೆಲ್ಲಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದರು. ಪ್ರಧಾನಿಯ ಅಭ್ಯರ್ಥಿ ಕುರಿತಂತೆ ಚರ್ಚೆಯಾಗಬೇಕು. ಮತ್ತೊಬ್ಬ ಕನ್ನಡಿಗರಾದ ಖರ್ಗೆಯವರು ಪ್ರಧಾನಿ ಹುದ್ದೆಗೇರುವುದಾದರೆ ಅದಕ್ಕಿಂತ ಖುಷಿಯ ವಿಚಾರ ಮತ್ತೊಂದಿಲ್ಲ. ಆದರೆ ಖರ್ಗೆಯವರೇ ಹೇಳಿದ ಪ್ರಕಾರ, ಮೊದಲು ಬಿಜೆಪಿಯ ವಿರುದ್ಧ ಹೋರಾಟ ಮಾಡಿ ಗೆಲುವು ಸಾಧಿಸಬೇಕಿದೆ. ಆನಂತರ ಉಳಿದ ಚರ್ಚೆಗಳು ಸೂಕ್ತ ಎಂದರು. +ಬೆಂಗಳೂರಿನಲ್ಲಿ 17 ಮಂದಿಯಲ್ಲಿ ಹೊಸ ಕೊರೊನಾ ಸೋಂಕು ಪತ್ತೆ +ಎನ್‍ಐಎ ಕ್ರಮ ವಿಳಂಬ:ಶಂಕಿತ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ರಾಷ್ಟ್ರೀಯ ತನಿಖಾ ದಳ ರಾಜ್ಯದಿಂದ ಒಬ್ಬ ವ್ಯಕ್ತಿಯನ್ನು ಕರೆದುಕೊಂಡು ಹೋಗಿದೆ. ಆದರೆ ಈ ಮೊದಲೇ ರಾಜ್ಯದ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಆತನ ಚಲನವಲನಗಳ ಮೇಲೂ ನಿಗಾ ವಹಿಸಲಾಗಿತ್ತು. ಎನ್‍ಐಎಗೆ ಮಾಹಿತಿ ತಡವಾಗಿ ಸಿಕ್ಕಿದೆ ಎಂದು ಹೇಳಿದರು. +ರಾಜ್ಯದಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳು ಹಾಗೂ ಅದರಲ್ಲಿರುವ ಶಂಕಿತರ ಮೇಲೆ ನಿಗಾ ವಹಿಸಬೇಕು. ಶೀಥಲೀಕರಣದಲ್ಲಿರುವ ಪ್ರಕರಣಗಳಿಗೆ ಮರುಜೀವ ನೀಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಯಾರು ಸಕ್ರಿಯವಾಗಿದ್ದಾರೆ, ಯಾರು ಕೆಲಸ ಮಾಡುತ್ತಿದ್ದಾರೆ ಎಂಬುದು ಕಾಲಕಾಲಕ್ಕೆ ಮಾಹಿತಿ ಇರಬೇಕು ಎಂದರು. +ಸಂಸತ್‍ನಲ್ಲಿನ ಭದ್ರತಾ ಲೋಪಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆಯಲ್ಲಿನ ಯುವಕನೊಬ್ಬನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಬಂಧಿತ ಆರೋಪಿ ಮನೋರಂಜನ್ ಜೊತೆ ಡಿಸೆಂಬರ್ 4 ವರೆಗೂ ಬಾಗಲಕೋಟೆ ಯುವಕ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಹೀಗಾಗಿ ಸಂಸತ್ ಮೇಲಿನ ದಾಳಿಯ ಬಗ್ಗೆ ಯಾವುದಾದರೂ ಮಾಹಿತಿ ಹಂಚಿಕೊಂಡಿದ್ದನೇ ಎಂಬ ವಿವರ ಪಡೆದುಕೊಳ್ಳಲು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು. +ನಿಗಮ ಮಂಡಳಿಗಳ ನೇಮಕಾತಿ ಸಂಬಂಧಪಟ್ಟಂತೆ ದೆಹಲಿಯಲ್ಲಿ ಯಾವ ರೀತಿಯ ಚರ್ಚೆಗಳಾಗಿವೆ ಎಂಬುದು ತಮಗೆ ಮಾಹಿತಿ ಇಲ್ಲ. ಶಾಸಕರ ಪಟ್ಟಿಯನ್ನು ತಾವು ತಯಾರಿಸಿಕೊಟ್ಟಿದ್ದಾಗಿ ಹೇಳುತ್ತಿರುವುದು ಸತ್ಯಕ್ಕೆ ದೂರವಾದದ್ದು ಎಂದರು. ಸಂಸತ್‍ನಲ್ಲಿ ಹೆಚ್ಚು ಸಂಸದರ ಅಮಾನತುಗೊಳಿಸಿರುವುದನ್ನು ಗಮನಿಸಿದರೆ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬದಲಾವಣೆ ಮಾಡುವ ಹುನ್ನಾರ ನಡೆಸಿದೆ ಎಂಬುದು ಸ್ಪಷ್ಟವಾಗಿದೆ. +ವಿಪಕ್ಷಗಳ ಎಲ್ಲಾ ಸಂಸದರನ್ನೂ ಹೊರಗಿಟ್ಟು ಕಾಯ್ದೆಯನ್ನು ಅಂಗೀಕರಿಸುತ್ತಾರೆ ಎಂದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ. ಇತರ ದೇಶಗಳಂತೆ ನಾವೂ ಕೂಡ ಸೇನಾ ಆಡಳಿತವನ್ನು ಜಾರಿಗೆ ತರಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು. +ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಯೋಜನೆಗಳು ಕುಂಠಿತವಾಗಿವೆ ಎಂದು ಶಾಸಕ ಡಿ.ಆರ್.ಪಾಟೀಲ್ ಆಕ್ಷೇಪಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ವೇಳೆಯಲ್ಲಿ ಇತರ ಅಭಿವೃದ್ಧಿ ಯೋಜನೆಗಳು ನಿಧಾನವಾಗಿ ನಡೆಯುತ್ತವೆ ಎಂದು ಹೇಳಲಾಗಿತ್ತು. ಹೀಗಾಗಿ ಶಾಸಕರು ಸಹನೆಯಿಂದ ಇರಬೇಕು. ಮುಂದಿನ ಬಜೆಟ್‍ನಲ್ಲಿ ಸಾಕಷ್ಟು ಅನುದಾನ ಒದಗಿಸಿ ಅಭಿವೃದ್ಧಿಯನ್ನು ಚುರುಕುಗೊಳಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_283_10.txt b/eesanje/url_46_283_10.txt new file mode 100644 index 0000000000000000000000000000000000000000..b8a28ca51c53a1d28221db5cddf554adc849fb8d --- /dev/null +++ b/eesanje/url_46_283_10.txt @@ -0,0 +1,7 @@ +ಕ್ರಿಸ್‍ಮಸ್ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್ಸುಗಳ ಸೇವೆ +ಬೆಂಗಳೂರು, ಡಿ. 20- ವಾರಾಂತ್ಯದ ರಜೆ ಹಾಗೂ ಕ್ರಿಸ್‍ಮಸ್ ಹಬ್ಬದ ರಜೆಯ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಂದು ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಿದೆ. ಡಿ.23ರ ನಾಲ್ಕನೇ ಶನಿವಾರ, ಡಿ.24ರ ಭಾನುವಾರ ಹಾಗೂ ಡಿ.25ರಂದು ಕ್ರಿಸ್‍ಮಸ್ ಹಬ್ಬದ ರಜೆ ಇದೆ. ಈ ಮೂರು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಡಿ.22ರಿಂದ ಡಿ.24ರವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವುದಾಗಿ ಕೆಎಸ್ಆರ್‌ಟಿಸಿ ಪ್ರಕಟಣೆ ತಿಳಿಸಿದೆ. +ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ರಾಜ್ಯದ ಪ್ರಮುಖ ಸ್ಥಳಗಳು ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಕಲ್ಪಿಸಿದೆ. ಅದೇ ರೀತಿ ಪ್ರಯಾಣಿಕರು ಮರಳಿ ಬೆಂಗಳೂರಿಗೆ ಬರಲು ಅನುಕೂಲವಾಗುವಂತೆ ಡಿ.25ರಂದು ವಿಶೇಷ ಬಸ್‍ಗಳ ಸೌಲಭ್ಯವಿರಲಿದೆ ಎಂದು ಹೇಳಿದೆ. +ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ. +ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ತಿಳಿಸಿದೆ. +ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವÀನ್ನು ಕಲ್ಪಿಸಲಾಗಿದೆ. ಇ-ಟಿಕೇಟ್ ಬುಕಿಂಗ್‍ನ್ನು....inವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು. +ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ. \ No newline at end of file diff --git a/eesanje/url_46_283_11.txt b/eesanje/url_46_283_11.txt new file mode 100644 index 0000000000000000000000000000000000000000..ca74c602cb2f2eaff323315e275e39314ad917e3 --- /dev/null +++ b/eesanje/url_46_283_11.txt @@ -0,0 +1,9 @@ +ಲೋಕಸಭೆ ಸೀಟು ಹಂಚಿಕೆ, ವರಿಷ್ಠರೊಂದಿಗೆ ಚರ್ಚಿಸಲು ದೆಹಲಿಯತ್ತ ವಿಜಯೇಂದ್ರ +ಬೆಂಗಳೂರು,ಡಿ.20- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಹಾಗೂ ಜಂಟಿ ಪ್ರಚಾರದ ಕಾರ್ಯತಂತ್ರ ಕುರಿತಂತೆ ವರಿಷ್ಠರೊಂದಿಗೆ ಚರ್ಚಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಜೆ ನವದೆಹಲಿಗೆ ತೆರಳುತ್ತಿದ್ದಾರೆ. ವಿಶೇಷವೆಂದರೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಮಾತುಕತೆ ನಡೆಸಲು ನವದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ವಿಜಯೇಂದ್ರ ಕೂಡ ದೆಹಲಿಗೆ ಹೊರಟಿರುವುದು ಕುತೂಹಲ ಮೂಡಿಸಿದೆ. +ಮೂಲಗಳ ಪ್ರಕಾರ, ನಾಳೆ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರು ಜೆ.ಪಿ.ನಡ್ಡಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಗೃಹಸಚಿವ ಅಮಿತ್ ಷಾ ಅವರುಗಳನ್ನು ಭೇಟಿಯಾಗಿ ಲೋಕಸಭೆ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲಿದ್ದಾರೆ. +ಒಂದು ಕಡೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಈ ತಿಂಗಳ ಅಂತ್ಯಕ್ಕೆ ಸೀಟು ಹಂಚಿಕೆ ಹಾಗೂ ಜಂಟಿ ಪ್ರಚಾರ ಕುರಿತಂತೆ ಅಂತಿಮ ರೂಪುರೇಷೆಗಳನ್ನು ಸಿದ್ಧಪಡಿಸುತ್ತಿರುವ ಬೆನ್ನಲ್ಲೆ ರಾಜ್ಯದಲ್ಲೂ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್‍ಗೆ ಠಕ್ಕರ್ ಕೊಡಲು ಮೈಕೊಡವಿ ಎದ್ದಿದೆ. +2024 ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಈ ತಿಂಗಳ ಅಂತ್ಯಕ್ಕೆ ಸೀಟು ಹಂಚಿಕೆ ಕುರಿತಾಗಿ ಉಭಯ ಪಕ್ಷಗಳ ಮುಖಂಡರು ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ. ಕುಮಾರಸ್ವಾಮಿ ಅವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಾಥ್ ನೀಡುತ್ತಿದ್ದು, ನಾಳಿನ ಸಭೆಯಲ್ಲಿ ಜೆಡಿಎಸ್ 28 ಕ್ಷೇತ್ರಗಳ ಪೈಕಿ ಎಷ್ಟು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. +ಮೂಲಗಳ ಪ್ರಕಾರ, ಜೆಡಿಎಸ್ 28 ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳನ್ನು ತನಗೆ ಬಿಟ್ಟುಕೊಡಬೇಕೆಂಬ ಬೇಡಿಕೆಯನ್ನು ಇಟ್ಟಿದೆ ಎಂದು ತಿಳಿದುಬಂದಿದೆ. ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಮೈಸೂರು-ಕೊಡಗು ಕ್ಷೇತ್ರಗಳನ್ನು ತನಗೆ ನೀಡಬೇಕೆಂಬ ಬೇಡಿಕೆಯನ್ನು ಪ್ರಮೋದ್ ಸಾವಂತ್ ಮೂಲಕ ಮಾಹಿತಿ ನೀಡಿದೆ. +ಮಿಮಿಕ್ರಿ ಮಾಡಿ ಉಪರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಅಪಮಾನ, ಪ್ರಧಾನಿ ಮೋದಿ ಬೇಸರ +ಆದರೆ ಇದರಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಹಾಸನ ಕ್ಷೇತ್ರ ಹೊರತುಪಡಿಸಿದರೆ ಉಳಿದ ನಾಲ್ಕು ಕಡೆ ಬಿಜೆಪಿ ಅಭ್ಯರ್ಥಿಗಳೇ ಇರುವುದರಿಂದ ಈ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಜೆಪಿ ಬಿಟ್ಟುಕೊಡಲಿದೆಯೇ ಎಂಬ ಮೂಲಭೂತ ಪ್ರಶ್ನೆ ಎದುರಾಗಿದೆ. ಉಳಿದಂತೆ ಸೀಟು ಹಂಚಿಕೆ ನಂತರ ಜನವರಿ ತಿಂಗಳ ಮಧ್ಯದಲ್ಲಿ ಮಧ್ಯಕರ್ನಾಟಕದ ಪ್ರಮುಖ ಸ್ಥಳವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿ ಜಂಟಿ ಪ್ರಚಾರಕ್ಕೆ ಚಾಲನೆ ಕೊಡುವ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ಮುಖಂಡರು ಇದ್ದಾರೆ. +ವರಿಷ್ಠರನ್ನು ಪ್ರತ್ಯೇಕವಾಗಿ ಭೇಟಿಯಾಗಲಿರುವ ವಿಜಯೇಂದ್ರ, ಪಕ್ಷದ ವಿದ್ಯಮಾನಗಳ ಕುರಿತಂತೆ ಮಾಹಿತಿಯನ್ನು ನೀಡಲಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗಳಿಂದ ಪಕ್ಷದ ಸಂಘಟನೆಗೆ ಹಾನಿಯಾಗುತ್ತಿದ್ದು, ಕಡಿವಾಣ ಹಾಕಲು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_283_12.txt b/eesanje/url_46_283_12.txt new file mode 100644 index 0000000000000000000000000000000000000000..7fae713742b99501ac103d009d468322cd0bdf7a --- /dev/null +++ b/eesanje/url_46_283_12.txt @@ -0,0 +1,6 @@ +ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್ +ಬೆಂಗಳೂರು, ಡಿ.20- ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ. ಕಳೆದ 2022ರಲ್ಲಿ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿ ಮೇಲೆ ದಾಳಿ ನಡೆಸಿ 8 ಕೋಟಿ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದರು. +ಕೆಎಸ್‍ಡಿಎಲ್‍ನ ಕೆಲ ನೌಕರರು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಈ ಸಂಬಂಧ ದಾಳಿ ನಡೆಸಲಾಗಿತ್ತು. ಇದು ಆಗಿನ ಬಿಜೆಪಿ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ಗಂಭೀರವಾಗಿ ಪರಿಗಣಿಸಿ ಭ್ರಷ್ಟಾಚಾರ ನಡೆಸಿ ಈ ಹಣವನ್ನು ಸಂಪಾದಿಸಲಾಗಿದೆ ಎಂದು ಹೋರಾಟ ನಡೆಸಿತ್ತು. +ಈ ಸಂಬಂಧ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಸೇರಿ ಅವರ ಪುತ್ರ ಹಾಗೂ ಇತರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ನಂತರ ಜಾಮೀನಿನ ಮೇಲೆ ಇತ್ತೀಚೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರು ಬಿಡುಗಡೆಯಾಗಿದ್ದರು. +ನಟಿ ರಶ್ಮಿಕಾ ಡೀಪ್ ಫೇಕ್ ವಿಡಿಯೋ ಮಾಡಿದ ನಾಲ್ವರನ್ನು ಪತ್ತೆ ಹಚ್ಚಿದ ಪೋಲೀಸರು +ನಾನು ಅಡಿಕೆ ವ್ಯಾಪಾರಿಯಾಗಿದ್ದು, ವರ್ತಕರು ನನಗೆ ತಂದುಕೊಟ್ಟಿದ್ದ ಹಣವನ್ನು ಇಲ್ಲಿ ಇರಿಸಿದ್ದೆ ಎಂದು ಕೆಲ ದಾಖಲೆಗಳನ್ನು ನೀಡಿದ್ದರು ಮತ್ತು ಲೋಕಾಯುಕ್ತ ತನಿಖೆ ವಿರುದ್ಧವೂ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಸ್ಪೀಕರ್ ಅನುಮತಿ ಪಡೆಯದೆ ಶಾಸಕರನ್ನು ಬಂಧಿಸಿದ್ದು ಮತ್ತು ತನಿಖೆ ಕೈಗೊಳ್ಳಲಾಗಿದೆ ಎಂದು ತಾಂತ್ರಿಕ ಕಾರಣವೊಡ್ಡಿ ಇಂದು ಪ್ರಕರಣವನ್ನು ರದ್ದುಗೊಳಿಸಿದೆ. ಇದರಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರು ನಿರಾಳರಾಗಿದ್ದಾರೆ. \ No newline at end of file diff --git a/eesanje/url_46_283_2.txt b/eesanje/url_46_283_2.txt new file mode 100644 index 0000000000000000000000000000000000000000..b9a1d6769632c1a840ef7e2f333976a48eb81efd --- /dev/null +++ b/eesanje/url_46_283_2.txt @@ -0,0 +1,6 @@ +ಗೃಹಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್ +ಬೆಂಗಳೂರು,ಡಿ.21- ನಟ ಸುದೀಪ್ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ಗೃಹಸಚಿವರ ಮನೆಗೆ ಆಗಮಿಸಿದ ಸುದೀಪ್, ಸುದೀರ್ಘ ಕಾಲ ಚರ್ಚೆ ನಡೆಸಿದರು. ಭೇಟಿಯ ಕುರಿತು ಮಾಹಿತಿ ನೀಡಲು ನಿರಾಕರಿಸಿದ ಸುದೀಪ್, ಪ್ರೀತಿ ವಿಶ್ವಾಸಕ್ಕೆ ತಾವು ಗೃಹಸಚಿವರನ್ನು ಭೇಟಿ ಮಾಡಿದ್ದಾಗಿ ಸುದೀಪ್ ಹೇಳಿದರು. +ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಚಿತ್ರರಂಗದಲ್ಲಿರುವ ಎಲ್ಲರೂ ಸೇರಿ ಪ್ರತಿವರ್ಷ ಸಿಸಿಎಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಆಡುತ್ತಾರೆ. ಈ ವರ್ಷವೂ 23, 24 ಹಾಗೂ 25 ರಂದು ಪಂದ್ಯಾವಳಿಗಳು ನಡೆಯಲಿವೆ. ಅದರಲ್ಲಿ ಅಂತರರಾಷ್ಟ್ರೀಯ ಕ್ರಿಕಟಿಗರು ಭಾಗವಹಿಸುತ್ತಿದ್ದಾರೆ. ಆ ವಿಚಾರವಾಗಿ ಆಹ್ವಾನ ನೀಡಲು ಸುದೀಪ್ ತಮ್ಮನ್ನು ಭೇಟಿ ಮಾಡಿದ್ದರು ಎಂದು ತಿಳಿಸಿದರು. +ಕಾಂಗ್ರೆಸ್‍ನಲ್ಲಿ ಸಕ್ರಿಯರಾಗಿರಲು ನವಜೋತ್ ಸಿಂಗ್ ಸಿಧುಗೆ ಕರೆ +ಮಾಜಿ ಶಾಸಕರ ಗದ್ದಲ :ಪರಮೇಶ್ವರ್ ಅವರ ಮನೆಯ ಮುಂದೆ ಇತ್ತೀಚೆಗೆ ಜನಜಂಗುಳಿ ಹೆಚ್ಚಾಗುತ್ತಿದೆ. ಹಲವಾರು ಮಾಜಿ ಸಚಿವರು ಇಂದು ಬೆಳಿಗ್ಗೆ ಅವರ ಮನೆಯ ಮುಂದೆ ಕಾಣಿಸಿಕೊಂಡಿದ್ದರು. ಕೆಲವು ಮಾಜಿ ಶಾಸಕರು ಹಾಗೂ ಮಾಜಿ ಸಚಿವರು ಪರಮೇಶ್ವರ್ ಅವರ ಭೇಟಿಗೆ ಕಚೇರಿ ಸಿಬ್ಬಂದಿಗಳು ಸಮಯ ನಿಗದಿ ಮಾಡಿದ್ದರು. ಆದರೆ ಕೆಲವು ಮಾಜಿ ಶಾಸಕರು ಬೆಳಿಗ್ಗೆ 8 ಗಂಟೆಗೆ ಬಂದು ಕಾದು ಕುಳಿತಿದ್ದರು. 10 ಗಂಟೆಯಾದರೂ ಮನೆಯೊಳಗೆ ಬಿಡದೇ ಇದ್ದುದ್ದರಿಂದ ಸಿಟ್ಟಾದ ಮಾಜಿ ಶಾಸಕರು ಪೊಲೀಸರ ಜೊತೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆಸಿದರು. +ಗದ್ದಲ ಜೋರಾದಾಗ ಪೊಲೀಸರು ಕಚೇರಿ ಸಿಬ್ಬಂದಿಗಳನ್ನು ಸಂಪರ್ಕಿಸಿ ಮಾಜಿ ಶಾಸಕರನ್ನು ಮಾತ್ರ ಒಳಗೆ ಕರೆದುಕೊಂಡರು. ಮೂರ್ನಾಲ್ಕು ಮಂದಿ ಮಾಜಿ ಶಾಸಕರು ಪರಮೇಶ್ವರ್ ಮನೆಯ ಮುಂದೆ ಅಡ್ಡಾಡುತ್ತಿದ್ದುದು ಕಂಡುಬಂತು. \ No newline at end of file diff --git a/eesanje/url_46_283_3.txt b/eesanje/url_46_283_3.txt new file mode 100644 index 0000000000000000000000000000000000000000..fd9a098933b1e87812014c432b61e19c3857b00f --- /dev/null +++ b/eesanje/url_46_283_3.txt @@ -0,0 +1,8 @@ +ಅಮಿತ್ ಶಾ ಭೇಟಿಯಾದ ಸಿಎಂ ಸಿದ್ದು, ಬರ ಪರಿಹಾರ ಬಿಡುಗಡೆಗೆ ಆಗ್ರಹ +ನವದೆಹಲಿ, ಡಿ.20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು ಅದರಲ್ಲೂ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. +ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. +ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಪರಿಗಣಿಸುವಾಗ ಕೇಂದ್ರ ಸರ್ಕಾರವು 2015-16ರ ಕೃಷಿ ಗಣತಿಯ ದತ್ತಾಂಶವನ್ನು ಪರಿಗಣಿಸುತ್ತಿದೆ. ಆದರೆ ಇದು 8 ವರ್ಷ ಹಳೆಯ ಮಾಹಿತಿಯಾಗಿದ್ದು, ಆಸ್ತಿ ವಿಭಜನೆ ಮತ್ತಿತರ ಕಾರಣಗಳಿಂದ ಸಣ್ಣ ಮತ್ತು ಅತಿ ಸಣ್ಣ ರೈತರ ಸಂಖ್ಯೆ ಹೆಚ್ಚಾಗಿದ್ದು, 83 ಲಕ್ಷಕ್ಕೂ ಹೆಚ್ಚಿದೆ. ಪಿಎಂ-ಕಿಸಾನ್ ಯೋಜನೆಗೆ ರಾಜ್ಯದ ರೈತರ ದತ್ತಾಂಶ ಸಂಗ್ರಹಿಸುವ ತಂತ್ರಾಂಶ ಫ್ರೂಟ್ಸ್‍ನಲ್ಲಿ ದಾಖಲಿಸಿದ ಮಾಹಿತಿಯನ್ನು ಪರಿಗಣಿಸಲಾಗುತ್ತಿದೆ. ಅಂತೆಯೇ ಬೆಳೆ ಪರಿಹಾರ ವಿತರಣೆಗೂ ಈ ದತ್ತಾಂಶವನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. +ಬೆಂಗಳೂರಲ್ಲಿ ಸೋಂಕಿತ ಸಾವು, ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ಕೋವಿಡ್ +ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. +ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. +ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_283_4.txt b/eesanje/url_46_283_4.txt new file mode 100644 index 0000000000000000000000000000000000000000..ac3ab561a0305a26e3b263e02ff311c751090cf5 --- /dev/null +++ b/eesanje/url_46_283_4.txt @@ -0,0 +1,15 @@ +ಖರ್ಗೆ ಪ್ರಧಾನಿ ಅಭ್ಯರ್ಥಿ : ಹೊಸ ದಾಳ ಉರುಳಿಸಿದ ಇಂಡಿಯಾ ಒಕ್ಕೂಟ +ಬೆಂಗಳೂರು,ಡಿ.20- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಸಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಬೇಕೆನ್ನುವ ಪ್ರಸ್ತಾವನೆ ಮೂಲಕ ಇಂಡಿಯಾ ರಾಜಕೀಯ ಮೈತ್ರಿಕೂಟ ಕರ್ನಾಟಕದ ಚುನಾವಣಾ ಮಾದರಿಯನ್ನೇ ಅನುಸರಿಸಿ ಬಿಜೆಪಿಗೆ ಠಕ್ಕರ್ ನೀಡಲು ಮುಂದಾಗಿದೆ. ಪಂಚ ರಾಜ್ಯಗಳ ಚುನಾವಣೆಯ ಪೈಕಿ 3 ಕಡೆ ಭರ್ಜರಿ ಜಯಭೇರಿ ಭಾರಿಸಿ ಬಲಿಷ್ಠ ಸ್ಥಿತಿಯಲ್ಲಿರುವ ಬಿಜೆಪಿ ಮಹಾಸಮರದಲ್ಲೂ ದಿಗ್ವಿಜಯ ಸಾಧಿಸುವ ಹುಮ್ಮಸ್ಸಿನಲ್ಲಿದೆ. +ಆಡಳಿತ ವಿರೋಧಿ ಅಲೆಯಿಂದಾಗಿ ತೆಲಂಗಾಣದ ಬಿಎಸ್‍ಆರ್ ಪಕ್ಷ ಅಧಿಕಾರ ಕಳೆದುಕೊಂಡಿದ್ದು, ಅದರ ಲಾಭ ಪಡೆದು ಕಾಂಗ್ರೆಸ್ ಪಂಚರಾಜ್ಯಗಳಲ್ಲಿ ಒಂದು ಕಡೆ ಮಾತ್ರ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಆದರೂ ಗಣನೀಯ ಮತಗಳಿಕೆಯ ಮೂಲಕ ಕಾಂಗ್ರೆಸ್ ಸಂಪೂರ್ಣ ದುರ್ಬಲವಾಗಿಲ್ಲ ಎಂಬ ಸಂದೇಶ ರವಾನೆಯಾಗಿದೆ.ಮತಗಳಿಕೆಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ಸ್ಥಾನಗಳ ಗೆಲುವಿಕೆಯಲ್ಲಿ ಕಾಂಗ್ರೆಸ್ ಎಡವಿದೆ. ಬಿಜೆಪಿಯ ದಿಗ್ವಿಜಯ ಯಾತ್ರೆಯ ಕುದುರೆಯನ್ನು ಕಟ್ಟಿಹಾಕಬೇಕಾದರೆ ಮತಗಳ ಕ್ರೂಢೀಕರಣ ಅನಿವಾರ್ಯ ಎಂಬ ವಿಶ್ಲೇಷಣೆ ಇದ್ದು, ಈ ನಿಟ್ಟಿನಲ್ಲಿ ಇಂಡಿಯಾ ಮೈತ್ರಿಕೂಟ ಹೊಸ ದಾಳ ಉರುಳಿಸಿದೆ. +ಬದಲಾವಣೆಯಾದ ರಣತಂತ್ರ:ಈವರೆಗೂ ಇಂಡಿಯಾ ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ವಿಷಯ ಬಂದಾಗಲೆಲ್ಲಾ ಜಾರಿಕೆಯ ಉತ್ತರ ನೀಡುತ್ತಿದ್ದ 26 ಪಕ್ಷಗಳ ನಾಯಕರು ನಿನ್ನೆ ಇದ್ದಕ್ಕಿದ್ದಂತೆ ರಣತಂತ್ರ ಬದಲಿಸಿದ್ದಾರೆ. ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಹುದ್ದೆಗೆ ಪ್ರಸ್ತಾಪಿಸಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬೆಂಬಲಿಸಿರುವುದು, ಇದಕ್ಕೆ ಪರೋಕ್ಷ ಅಸಮಾಧಾನ ಎಂಬಂತೆ ಬಿಹಾರದ ಹಾಲಿ ಮುಖ್ಯಮಂತ್ರಿ ನಿತೀಶ್‍ಕುಮಾರ್, ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಹೊರ ನಡೆದಿರುವುದು ನಾಟಕೀಯ ಬೆಳವಣಿಗೆಗಳಾಗಿವೆ. +ನಿರೀಕ್ಷೆಯಂತೆ ಮಲ್ಲಿಕಾರ್ಜುನ ಖರ್ಗೆ ಯವರು ಮೊದಲು ನಾವು ಚುನಾವಣೆಯನ್ನು ಗೆಲ್ಲೋಣ. ಸಂಸದರೇ ಆಗದಿದ್ದ ಮೇಲೆ ಪ್ರಧಾನಿಯಾಗುವುದು ಹೇಗೆ ಎಂದು ಪ್ರಧಾನಿ ಹುದ್ದೆಯ ಪ್ರಸ್ತಾಪವನ್ನು ನಯವಾಗಿಯೇ ತಳ್ಳಿಹಾಕಿದ್ದಾರೆ. ಈ ಎಲ್ಲಾ ಬೆಳವಣಿಗೆಗಳೂ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. +ಕಾಂಗ್ರೆಸ್‍ನಲ್ಲೇ ಬಿಸಿತುಪ್ಪ :ಕಾಂಗ್ರೆಸ್‍ನಲ್ಲಿ ಖರ್ಗೆಯವರ ಹೆಸರು ಎಐಸಿಸಿ ಅಧ್ಯಕ್ಷ ಹುದ್ದೆಗೆ ಪ್ರಸ್ತಾಪವಾಗುತ್ತಿದ್ದಂತೆ ಒಂದು ಬಣ ರಾಹುಲ್‍ಗಾಂಧಿಯವರನ್ನು ಸರ್ವೋಚ್ಛ ನಾಯಕ ಎಂಬಂತೆ ಮೇಳೈಸಲಾರಂಭಿಸಿತ್ತು. ಆವರೆಗೂ ರಾಹುಲ್‍ಗಾಂಧಿಯನ್ನು ಅಪ್ರಬುದ್ಧ… ಪಪ್ಪು… ಎಂದೆಲ್ಲಾ ಬಿಂಬಿಸುತ್ತಿದ್ದ ಕಾಂಗ್ರೆಸ್‍ನ ಜಿ-23 ಬಣವೇ ಏಕಾಏಕಿ ಭಾರತ್ ಜೋಡೊ ಯಾತ್ರೆಯ ಬಳಿಕ ರಾಹುಲ್‍ಗಾಂಧಿ ಪ್ರಬುದ್ಧರು, ಬಲಿಷ್ಠ ನಾಯಕ ಎಂದೆಲ್ಲಾ ಹೊಗಳಲಾರಂಭಿಸಿತ್ತು. +ಖರ್ಗೆಯವರು ಅಧ್ಯಕ್ಷರಾದ ಬಳಿಕವಂತೂ ರಾಹುಲ್‍ಗಾಂ ಒಪ್ಪುತ್ತಾರೋ, ಬಿಡುತ್ತಾರೋ ಎಂಬುದನ್ನು ಗಮನಿಸದೇ ಪ್ರತಿ ಹಂತದಲ್ಲೂ ಭಟ್ಟಂಗಿತನವನ್ನು ಪಾಲಿಸಿ ರಾಹುಲ್ ಗಾಂಧಿಯನ್ನು ಉನ್ನತ ನಾಯಕ ಎಂದು ಬಿಂಬಿಸುವ ಜೊತೆಗೆ ಖರ್ಗೆಯವರನ್ನು ನಗಣ್ಯ ಮಾಡುವ ಯತ್ನಗಳು ನಡೆಯುತ್ತಲೇ ಇದ್ದವು. ಒಂದರ್ಥದಲ್ಲಿ ರಾಹುಲ್‍ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದೇ ಬಿಂಬಿಸಲಾಗಿತ್ತು. +ನಿನ್ನೆ ಮಮತಾ ಬ್ಯಾನರ್ಜಿ ಅವರ ಹೊಸ ದಾಳ ಅನ್ಯ ಪಕ್ಷಗಳಿಗಷ್ಟೇ ಅಲ್ಲ, ಸ್ವತಃ ಕಾಂಗ್ರೆಸ್‍ನಲ್ಲೂ ಬಹಳಷ್ಟು ಮಂದಿಗೆ ಬಿಸಿ ತುಪ್ಪವಾಗಿದೆ. ಆದರೆ ಚುನಾವಣೆ ಗೆಲ್ಲುವ ಮಹತ್ವದ ಗುರಿಯ ಎದುರು ಸಣ್ಣಪುಟ್ಟ ಅಸಹನೆಗಳನ್ನು ಕಡೆಗಣಿಸಿರುವಂತೆ ಕಂಡುಬರುತ್ತಿದೆ. +ಮತ ಬ್ಯಾಂಕ್‍ನ ಲೆಕ್ಕಾಚಾರ:ಬಿಜೆಪಿ ಬೇರೆಬೇರೆ ರೀತಿಯ ಕಾರ್ಯತಂತ್ರಗಳ ಮೂಲಕ ತನ್ನ ಮತ ಬ್ಯಾಂಕ್ ಅನ್ನು ಗಟ್ಟಿಗೊಳಿಸಿಕೊಂಡಿದೆ. ಅಲ್ಪಸಂಖ್ಯಾತರು, ದಲಿತರು ಕಾಂಗ್ರೆಸ್‍ನ ಮೂಲ ಮತ ಬ್ಯಾಂಕ್ ಎಂದು ಪರಿಗಣಿಸಲಾಗಿತ್ತು. ಆದರೆ ಚುನಾವಣೆಗಳಿಗಷ್ಟೇ ಈ ಸಮುದಾಯಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅಧಿಕಾರದ ವಿಷಯ ಬಂದಾಗ ಕಾಂಗ್ರೆಸ್ ಮೇಲ್ವರ್ಗದತ್ತಲೆ ಮುಖ ಮಾಡುತ್ತಿದೆ ಎಂಬ ಆಕ್ಷೇಪಣೆಯಿಂದಾಗಿ ಮೂಲ ಮತ ಬ್ಯಾಂಕ್ ಚದುರಿ ಹೋಗಿತ್ತು. +ಪ್ರಸ್ತುತ ರಾಜಕೀಯ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಜೊತೆಯಲ್ಲಿ ಅಳಿದುಳಿದ ಮೇಲ್ವರ್ಗ ಗಳ ಮತಗಳು ಮಾತ್ರ ಕಾಂಗ್ರೆಸ್ ಅಥವಾ ಇಂಡಿಯಾ ಮೈತ್ರಿಕೂಟವನ್ನು ಅಕಾರದ ಗದ್ದುಗೆಗೆ ಸಮೀಪ ತರಲು ಸಾಧ್ಯ ಎನ್ನಲಾಗುತ್ತಿದೆ.ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಓಬಿಸಿ ಹಾಗೂ ಮೇಲ್ವರ್ಗದ ಮತಗಳನ್ನು ಕ್ರೂಢೀಕರಿಸಿಕೊಳ್ಳುತ್ತಿದೆ. ಇದಕ್ಕೆ ಎದುರೇಟು ಎಂಬಂತೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪ್ರಸ್ತಾಪಿಸುವ ಮೂಲಕ ದಲಿತರ ಮತ ಬ್ಯಾಂಕ್ ಅನ್ನು ಗಟ್ಟಿಗೊಳಿಸಿಕೊಳ್ಳುವ ರಣತಂತ್ರ ರೂಪಿಸಿದೆ. +ನಟಿ ರಶ್ಮಿಕಾ ಡೀಪ್ ಫೇಕ್ ವಿಡಿಯೋ ಮಾಡಿದ ನಾಲ್ವರನ್ನು ಪತ್ತೆ ಹಚ್ಚಿದ ಪೋಲೀಸರು +ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಯವರ ಆಡಳಿತದಿಂದ ಅತೃಪ್ತಿಗೊಂಡಿರುವ ದಲಿತರು ಮತ್ತು ಹಿಂದುಳಿದ ವರ್ಗಗಳು ಟಿಎಂಸಿ ಯಿಂದ ದೂರವಾಗುತ್ತಿದ್ದರೂ, ಈ ಹಿನ್ನೆಲೆಯಲ್ಲಿಯೂ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಮತಾ ಬ್ಯಾನರ್ಜಿ ಖರ್ಗೆ ಹೆಸರು ಪ್ರಸ್ತಾಪಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಕಳೆದ 2 ತಿಂಗಳ ಹಿಂದೆ ಕರ್ನಾಟಕ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಇದೇ ರೀತಿಯ ಮತ ಬ್ಯಾಂಕ್ ರಾಜ ಕಾರಣದ ರಣತಂತ್ರವನ್ನು ಅನುಸರಿಸಿತ್ತು. +ನಾಯಕತ್ವದ ಗೊಂದಲ:ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಮುಖ್ಯ ಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯನ್ನು ಬಿಜೆಪಿ ಬೃಹದಾಕಾರವಾಗಿ ಮುಂದಿಟ್ಟಿತ್ತು. ಅದಕ್ಕೆ ನೇರವಾಗಿ ಉತ್ತರ ನೀಡದೇ ಕೆಲವು ಬೆಂಬಲಿಗರು ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಪ್ರಚಾರ ಮಾಡಿದ್ದರು. ಡಿ.ಕೆ.ಶಿವಕುಮಾರ್ ಕೆಲವು ಸಮಾವೇಶಗಳಲ್ಲಿ ತಮಗೆ ಅವಕಾಶ ಸಿಗಲಿದೆ ಎಂದು ಹೇಳಿಕೊಳ್ಳುವ ಮೂಲಕ ಒಕ್ಕಲಿಗ ಸಮುದಾಯದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ನಿರೀಕ್ಷೆ ಹುಟ್ಟಿಸಿದ್ದರು. ಮತ್ತೊಂದೆಡೆ ಖರ್ಗೆಯವರು ರಾಜ್ಯ ರಾಜಕಾರಣಕ್ಕೆ ಬರುವುದಾದರೆ ನಾನು ಎಲ್ಲಾ ತ್ಯಾಗಕ್ಕೂ ಸಿದ್ಧ ಎಂದು ಹೇಳಿ ಡಿ.ಕೆ.ಶಿವಕುಮಾರ್ ಗೊಂದಲ ಮೂಡಿಸಿದ್ದರು. ಇದು ದಲಿತರ ಮತಗಳನ್ನು ಸೆಳೆಯಲು ಸಹಾಯವಾಯಿತು. +ಅತ್ತ ಲಿಂಗಾಯತ ಸಮುದಾಯದ ಕೆಲ ನಾಯಕರು ಎಂ.ಬಿ.ಪಾಟೀಲ್ ಅವರ ಹೆಸರನ್ನು ಮುನ್ನೆಲೆಗೆ ತೇಲಿಬಿಟ್ಟರು. ಹೀಗಾಗಿ ವಿವಿಧ ಜಾತಿಗಳ ಮೂಗಿಗೆ ತುಪ್ಪ ಸವರುವ ಮೂಲಕ ಗೊಂದಲ ಮೂಡಿಸಿ ಎಲ್ಲಾ ಪ್ರಮುಖ ಜಾತಿಗಳ ಮತಗಳನ್ನು ಸೆಳೆದುಕೊಂಡು ಗೆಲುವು ಸಾಸಿತ್ತು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲೂ ಅದೇ ರೀತಿಯ ರಣತಂತ್ರವನ್ನು ಅನುಸರಿಸು ವಂತೆ ಕಂಡುಬರುತ್ತಿದೆ. +ಇಂಡಿಯಾ ಕೂಟದಲ್ಲಿರುವ ನಿತೀಶ್‍ಕುಮಾರ್, ಮಮತಾ ಬ್ಯಾನರ್ಜಿ, ಎಂ.ಕೆ. ಸ್ಟಾಲಿನ್, ಅರವಿಂದ್ ಕೇಜ್ರಿವಾಲ್ ಸೇರಿದಂತೆ ದಂಡು ದಂಡು ನಾಯಕರು ಪ್ರಧಾನಿ ಹುದ್ದೆಗೆ ಟವಲ್ ಹಾಕಲು ಹವಣಿಸುತ್ತಿದ್ದಾರೆ. ಈಗಾಗಲೇ ಹಲವಾರು ಬಾರಿ ಈ ರೀತಿಯ ಚರ್ಚೆಗಳೂ ಕೂಡ ಕೇಳಿಬಂದಿವೆ. ಅದೆಲ್ಲವನ್ನೂ ಬದಿಗಿರಿಸಿ ಏಕಾಏಕಿ ಖರ್ಗೆಯವರ ಹೆಸರನ್ನು ಪ್ರಸ್ತಾಪಿಸಿರುವುದು ಮತ್ತೊಂದು ಕಡೆ ರಾಹುಲ್‍ಗಾಂಯವರನ್ನು ಮೇಳೈಸುವ ಮೂಲಕ ಕಾಂಗ್ರೆಸ್ ಕರ್ನಾಟಕದಲ್ಲಿ ಅನುಸರಿಸಿದಂತೆ ನಾಯಕತ್ವದ ಗೊಂದಲದ ತಂತ್ರಗಾರಿಕೆ ಪಾಲಿಸಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. \ No newline at end of file diff --git a/eesanje/url_46_283_5.txt b/eesanje/url_46_283_5.txt new file mode 100644 index 0000000000000000000000000000000000000000..38270915f0ed099d9f48538dc152ded58c6e5710 --- /dev/null +++ b/eesanje/url_46_283_5.txt @@ -0,0 +1,9 @@ +ಬಿಜೆಪಿ ಸಂಸದರಿಂದ ರಾಜ್ಯಕ್ಕೆ ಅನ್ಯಾಯ : ಬಿ.ಕೆ.ಹರಿಪ್ರಸಾದ್ +ಬೆಂಗಳೂರು,ಡಿ.20- ರಾಜ್ಯದಿಂದ ಬಿಜೆಪಿಗೆ 25 ಸಂಸದರನ್ನು ಗೆಲ್ಲಿಸಿಕೊಡಲಾಗಿತ್ತು. ಆದರೂ ನೆರೆ, ಬರದಂತಹ ಸಂದರ್ಭದಲ್ಲಿ ಪ್ರಧಾನಿಯವರಾಗಲೀ, ಕೇಂದ್ರ ಗೃಹಸಚಿವರಾಗಲೀ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪರಿಸ್ಥಿತಿ ಪರಿಶೀಲನೆ ನಡೆಸದೆ ಅನ್ಯಾಯ ಮಾಡಿದ್ದಾರೆ ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಪದೇಪದೇ ರಾಜ್ಯ ಪ್ರವಾಸ ಮಾಡುತ್ತಿದ್ದ ಪ್ರಧಾನಿಯವರು ಅನಂತರ ಇತ್ತ ತಲೆ ಹಾಕಿಲ್ಲ. ನೆರೆಯ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಿಗೆ ಬಂದು ಹೋಗಿದ್ದಾರೆ. ನೆರೆ ಸಂದರ್ಭದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿಲ್ಲ. ಬರ ಪರಿಸ್ಥಿತಿಯನ್ನೂ ವಿಮರ್ಶೆ ಮಾಡಲಿಲ್ಲ. ರಾಜ್ಯಕ್ಕೆ ಅಗತ್ಯವಾದ ಆರ್ಥಿಕ ನೆರವು ನೀಡುವುದಂತೂ ದೂರದ ಮಾತೇ ಆಗಿದೆ. 25 ಸಂಸದರನ್ನು ಗೆಲ್ಲಿಸಿದ್ದಕ್ಕೆ ಬಿಜೆಪಿ ತಕ್ಕ ಪ್ರತಿಫಲ ನೀಡುತ್ತಿದೆ ಎಂದು ಹೇಳಿದರು. +ಇಂಡಿಯಾ ರಾಜಕೀಯ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆಯ ಹೆಸರು ಪ್ರಸ್ತಾಪವಾಗುತ್ತಿದ್ದಂತೆ ಬಿಜೆಪಿ ನಾಯಕರು, ರಾಹುಲ್‍ಗಾಂಧಿಯವರ ಅಸ್ತಿತ್ವವನ್ನು ಪ್ರಶ್ನಿಸುತ್ತಿದ್ದಾರೆ. ಮೊದಲು ಕರ್ನಾಟಕ ವಿಧಾನಪರಿಷತ್‍ಗೆ ವಿರೋಧಪಕ್ಷದ ನಾಯಕನನ್ನು ನೇಮಿಸಿಕೊಳ್ಳಲಿ. ಅವರ ಪಕ್ಷದಲ್ಲಿರುವ ಹುಳುಕುಗಳನ್ನು ಸರಿಪಡಿಸಿಕೊಳ್ಳಲಿ ಎಂದು ತಿಳಿಸಿದರು. +ಬಿಜೆಪಿಯಲ್ಲಿರುವ ಹಲವು ಶಾಸಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್‍ನ ಶಾಸಕಾಂಗ ಸಭೆಗೆ ಬಿಜೆಪಿ ಶಾಸಕರು ಬಂದು ಪುಷ್ಕಳವಾದ ಭೋಜನ ಮಾಡಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಕಾಂಗ್ರೆಸ್‍ಗೋಸ್ಕರ ಬಂದರೂ ಬರಬಹುದು ಎಂದು ಹೇಳಿದರು. ಸಂಸತ್‍ನಲ್ಲಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವರ ಮೌನ ಪ್ರಶ್ನಾರ್ಹವಾಗಿದೆ. ಎಲ್ಲದಕ್ಕೂ ಪ್ರತಿಕ್ರಿಯಿಸುವ ಪ್ರಧಾನಿಗಳು, ಕೇಂದ್ರ ಗೃಹಸಚಿವರು ಭದ್ರತಾ ಲೋಪ ವಿಷಯದಲ್ಲಿ ಜಾರಿಕೊಳ್ಳುತ್ತಿದ್ದಾರೆ ಎಂದು ದೂರಿದರು. +ಸಂಸತ್‍ನ ಭದ್ರತಾ ಲೋಪದ ವಾಸ್ತವಾಂಶವನ್ನು ಬಹಿರಂಗಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ +ಭದ್ರತಾ ಲೋಪವನ್ನು ಪ್ರಶ್ನಿಸಿದ ಸಂಸದರ ಪೈಕಿ 141 ಮಂದಿಯನ್ನು ಅಮಾನತುಪಡಿಸಲಾಗಿದೆ. ದೇಶದಲ್ಲಷ್ಟೇ ಅಲ್ಲ, ವಿಶ್ವದ ಯಾವುದೇ ಜನಪ್ರತಿನಿ ಸಂಸ್ಥೆಗಳಲ್ಲಿ ಚುನಾಯಿತ ಸದಸ್ಯರನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಅನರ್ಹಗೊಳಿಸಿದ ಉದಾಹರಣೆಗಳಿಲ್ಲ. +ಪ್ರಧಾನಿಯವರು ಸಂಸತ್ ನಡೆಯುವಾಗ ಭದ್ರತಾ ಲೋಪದ ಬಗ್ಗೆ ಸಂಸತ್‍ನಲ್ಲೇ ಉತ್ತರ ನೀಡಬೇಕು. ಅದು ಬಿಟ್ಟು ದಕ್ಷಿಣಾ ಕೊರಿಯಾದ ಚಾನೆಲ್‍ಗೆ ಪ್ರಧಾನಿಯವರು ಹೇಳಿಕೆ ನೀಡುತ್ತಾರೆ. ಅದು ದಾಖಲೆಯಾಗಿ ಉಳಿಯುವುದಿಲ್ಲ. ಸಂಸತ್‍ನಲ್ಲಿ ಮಾತನಾಡಿದರೆ ಅದು ಅಧಿಕೃತವಾದ ದಾಖಲೆ ಎಂದು ಹೇಳಿದರು. ದೇಶದ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಸಂಸತ್‍ನ ಭದ್ರತಾಲೋಪವನ್ನು ಸೃಷ್ಟಿಸಲಾಗಿದೆಯೇ ಎಂಬ ಅನುಮಾನ ಕಾಡುತ್ತಿದೆ. ಈವರೆಗೂ ಪ್ರಧಾನಿ ಮತ್ತು ಗೃಹಸಚಿವರ ಮೌನವನ್ನು ನೋಡಿದರೆ ಇಂತಹ ಅನುಮಾನಗಳು ಸಹಜವಾಗಿ ಮೂಡುತ್ತವೆ ಎಂದರು. +ರಾಜಕೀಯವಾಗಿ ತಾವು ಕಾಲಕಾಲಕ್ಕೆ ನೀಡಬೇಕಾದ ಹೇಳಿಕೆಗಳನ್ನು ಹೇಳುತ್ತಲೇ ಬಂದಿದ್ದೇನೆ. ಮೌನಕ್ಕೆ ಶರಣಾಗಿಲ್ಲ. ಈ ಮೊದಲು ಬಿಜೆಪಿ ಮತ್ತು ಅದರ ಅಂಗಪಕ್ಷಗಳು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದರು. ಈಗ ವಿಧಾನಸಭೆಯ ಚುನಾವಣೆ ಬಳಿಕ ಆ ಪರಿಸ್ಥಿತಿ ಕಡಿಮೆಯಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_283_6.txt b/eesanje/url_46_283_6.txt new file mode 100644 index 0000000000000000000000000000000000000000..e996f7fdadc9b3985920bec7ee3b3f64013c2515 --- /dev/null +++ b/eesanje/url_46_283_6.txt @@ -0,0 +1,6 @@ +ಬಸ್‍ಗಳಲ್ಲಿ ಮಾಸ್ಕ್ ಕಡ್ಡಾಯ +ಬೆಂಗಳೂರು, ಡಿ.20- ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬಿಎಂಟಿಸಿ ಮತ್ತು ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮನವಿ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಎಲ್ಲ ಬಸ್‍ಗಳಲ್ಲೂ ಕೋವಿಡ್ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಬಸ್‍ಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇಂದು ಕೇಂದ್ರ ಆರೋಗ್ಯ ಸಚಿವರೊಂದಿಗೆ ರಾಜ್ಯ ಆರೋಗ್ಯ ಸಚಿವರು ಸಭೆ ನಡೆಸಲಿದ್ದು, ಸಭೆಯಲ್ಲಿ ಸಲಹೆ ಪಡೆದು ನಂತರ ರಾಜ್ಯದಲ್ಲಿ ಮಾರ್ಗಸೂಚಿಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. +ಪ್ರತಿಯೊಬ್ಬ ಪ್ರಯಾಣಿಕರೂ ಬಸ್‍ಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. +ಸಂಸತ್‍ನ ಭದ್ರತಾ ಲೋಪದ ವಾಸ್ತವಾಂಶವನ್ನು ಬಹಿರಂಗಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ +ಕೇರಳದಿಂದ ಬರುವ ಹಾಗೂ ಹೋಗುವ ಬಸ್‍ಗಳಿಗೆ ಸ್ಯಾನಿಟೈಜರ್ ಸಿಂಪಡಿಸಲು ಸೂಚನೆ ನೀಡಲಾಗಿದೆ. ಇನ್ನು ಬಿಎಂಟಿಸಿ ಬಸ್‍ಗಳಲ್ಲಿ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರಿಗೆ ಅಧಿಕಾರಿಗಳು ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಪ್ರಯಾಣಿಕರು ಸಹ ಸಹಕರಿಸುವಂತೆ ತಿಳಿಸಿದರು. \ No newline at end of file diff --git a/eesanje/url_46_283_7.txt b/eesanje/url_46_283_7.txt new file mode 100644 index 0000000000000000000000000000000000000000..c8696e8f522005a95699b52f3426ed77a230794f --- /dev/null +++ b/eesanje/url_46_283_7.txt @@ -0,0 +1,13 @@ +ಕೋವಿಡ್ ಭಯ : ಆರೋಗ್ಯ ಇಲಾಖೆ ಉನ್ನತ ಮಟ್ಟದ ಸಭೆ +ಬೆಂಗಳೂರು,ಡಿ.20- ಕೋವಿಡ್‍ನ ಸಂಭವನೀಯ 4ನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳು ಪೂರ್ವ ತಯಾರಿ ಆರಂಭಿಸಿದ್ದು, ಇಂದು ಉನ್ನತ ಮಟ್ಟದ ಮಹತ್ವದ ಸಭೆ ನಡೆದಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು , ಹಿರಿಯ ಅಕಾರಿಗಳು, ತಂತ್ರಜ್ಞರು, ಐಸಿಎಂಆರ್, ನೀತಿ ಆಯೋಗ ಹಾಗೂ ಇತರ ವೈದ್ಯಕೀಯ ಸಂಸ್ಥೆಗಳ ಪ್ರಮುಖರ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಕರ್ನಾಟಕದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆನ್‍ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. +ಸಭೆಯಲ್ಲಿ ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್ ಸೋಂಕಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕಳೆದ ಆಗಸ್ಟ್‍ನಲ್ಲಿ ಕಾಣಿಸಿಕೊಂಡಿರುವ ಕೋವಿಡ್‍ನ ರೂಪಾಂತರಿ ಓಮಿಕ್ರಾನ್ ಬಿಎ.2.86 ನ ಉಪತಳಿ ಜೆಎನ್-1 ಸೋಂಕು ಈವರೆಗೂ 36 ದೇಶಗಳಲ್ಲಿ ಕಾಣಿಸಿಕೊಂಡಿದೆ. ಜಾಗತಿಕವಾಗಿ ದಿನವೊಂದಕ್ಕೆ ಸರಾಸರಿ 51,214 ಪ್ರಕರಣಗಳು ವರದಿಯಾಗುತ್ತಿವೆ. +ಭಾರತದಲ್ಲಿ ದಿನಕ್ಕೆ ಸರಾಸರಿ 310 ಪ್ರಕರಣಗಳು ಕಂಡುಬಂದಿವೆ. ಜಾಗತಿಕ ಸೋಂಕಿನಲ್ಲಿ ಭಾರತದ ಪಾಲು 0.009ರಷ್ಟು ಎಂದು ಸಭೆಯಲ್ಲಿ ವಿವರಿಸಲಾಗಿದೆ. ಈವರೆಗೂ 2,16,51,693 ಸಕ್ರಿಯ ಪ್ರಕರಣಗಳು ವಿಶ್ವದಾದ್ಯಂತ ಚಾಲ್ತಿಯಲ್ಲಿವೆ. ಕಳೆದ 7 ದಿನಗಳಿಂದೀಚೆಗೆ 34,29,723 ಪ್ರಕರಣಗಳು ವರದಿಯಾಗಿದ್ದು, ಸೋಂಕಿನ ಏರಿಕೆ ತೀವ್ರಗೊಂಡಿದೆ. ಬ್ರೆಜಿಲ್‍ನಲ್ಲಿ 11.73 ಲಕ್ಷ ಸಕ್ರಿಯ ಪ್ರಕರಣಗಳಿದ್ದರೆ, ಅಮೆರಿಕಾದಲ್ಲಿ 9.89 ಲಕ್ಷ , ವಿಯಾಟ್ನಾಂನಲ್ಲಿ 9.39 ಲಕ್ಷ, ಮೆಕ್ಸಿಕೊದಲ್ಲಿ 4.14 ಲಕ್ಷ, ಜರ್ಮನಿಯಲ್ಲಿ 3.02 ಲಕ್ಷ, ಭಾರತದಲ್ಲಿ 2,311 ಸಕ್ರಿಯ ಪ್ರಕರಣಗಳು ದಾಖಲಾಗಿವೆ. +ಭಾರತದಲ್ಲಿ ಕಳೆದ 2 ವಾರಗಳಿಂದೀಚೆಗೆ ಸೋಂಕು ಏರಿಕೆಯಾಗುತ್ತಿದ್ದು, ಡಿ.6 ರಂದು ದೈನಂದಿನ ಸೋಂಕಿನ ಪ್ರಕರಣ 115ರಷ್ಟಿದ್ದರೆ ಇಂದಿಗೆ ಅದು 614 ರಷ್ಟಾಗಿದೆ. ಸಕ್ರಿಯ ಪ್ರಕರಣಗಳು 587 ರಿಂದ 2,305 ರವರೆಗೂ ಹೆಚ್ಚಿವೆ. ದಿನೇ ದಿನೇ ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ದೈನಂದಿನ ಸೋಂಕಿನಲ್ಲಿ ಏರಿಳಿತಗಳು ಕಂಡುಬರುತ್ತಿವೆ. ಅದರಲ್ಲೂ ನಿನ್ನೆಯ ದಿನ ಅತೀ ಹೆಚ್ಚಿನ ಸೋಂಕಿನ ಪ್ರಕರಣಗಳು ವರದಿಯಾಗಿವೆ. +ಇನ್ನು ರಾಜ್ಯಗಳ ಮಟ್ಟಿಗೆ ವಿಶ್ಲೇಷಿಸುವುದಾದರೆ ಕೇರಳದಲ್ಲಿ ಅತೀ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, 2041 ಮಂದಿ ಒಟ್ಟು ಸೋಂಕಿತರಿದ್ದಾರೆ. ಕರ್ನಾಟಕದಲ್ಲಿ 2ನೇ ಅತಿ ಹೆಚ್ಚು ಸೋಂಕಿತರಿದ್ದು, 79 ಮಂದಿ ಬಾತರಾಗಿದ್ದಾರೆ. ತಮಿಳುನಾಡು 77, ಮಹಾರಾಷ್ಟ್ರ 35, ಗೋವಾ 23, ಪುದಿಚೇರಿ 20, ಗುಜರಾತ್ 12, ತೆಲಂಗಾಣ 9, ಪಂಜಾಬ್ 5, ದೆಹಲಿ 4, ಮಧ್ಯಪ್ರದೇಶ, ಜಾರ್ಖಂಡ್ ತಲಾ 2, ಉತ್ತರ ಪ್ರದೇಶದಲ್ಲಿ ಒಂದು ಕೋವಿಡ್ ಸೋಂಕು ಕಂಡುಬಂದಿದೆ. +ನಟಿ ರಶ್ಮಿಕಾ ಡೀಪ್ ಫೇಕ್ ವಿಡಿಯೋ ಮಾಡಿದ ನಾಲ್ವರನ್ನು ಪತ್ತೆ ಹಚ್ಚಿದ ಪೋಲೀಸರು +ಅದರಲ್ಲೂ 5 ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿವೆ. ಒಟ್ಟು 16 ಮಂದಿ ಜೀವ ಕಳೆದುಕೊಂಡಿದ್ದಾರೆ.ದೇಶದಲ್ಲೇ ಉತ್ತರ ಪ್ರದೇಶದ ನಂತರ ಕರ್ನಾಟಕ ಅತೀ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. +ರಾಜ್ಯದಲ್ಲಿ ನಿನ್ನೆಯ ಒಂದೇ ದಿನ 1,122 ಮಂದಿಯನ್ನು ಪರೀಕ್ಷೆಗೊಳಪಡಿಸಿದ್ದು, ಅವರಲ್ಲಿ ಶೇ.2.41 ರಷ್ಟು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೇರಳ 1,099 ಮಂದಿಗೆ ಪರೀಕ್ಷೆ ನಡೆಸಿದ್ದು, ಶೇ.20.75 ರಷ್ಟು ಸೋಂಕಿತರು, ಮಹಾರಾಷ್ಟ್ರದಲ್ಲಿ 167 ಜನರನ್ನು ಪರೀಕ್ಷೆಗೊಳಪಡಿಸಿದರೆ ಶೇ. 7.78 ರಷ್ಟು, ಜಾರ್ಖಂಡ್‍ನಲ್ಲಿ 62 ಜನರನ್ನು ಪರೀಕ್ಷೆಗೊಳಪಡಿಸಿದರೆ ಶೇ. 3.23 ರಷ್ಟು, ಮಧ್ಯಪ್ರದೇಶದಲ್ಲಿ 42 ಜನರನ್ನು ಪರೀಕ್ಷೆಗೊಳಪಡಿಸಿದರೆ ಶೇ. 2.38 ರಷ್ಟು ಮಂದಿ ಸೋಂಕಿತರು ಕಂಡುಬಂದಿದ್ದಾರೆ. +ಉತ್ತರ ಪ್ರದೇಶದಲ್ಲಿ ಅತ್ಯಕ ಪರೀಕ್ಷೆಗಳಾಗಿದ್ದರೂ, ಸೋಂಕಿತರ ಸಂಖ್ಯೆ ಶೂನ್ಯವಾಗಿದೆ. ಕೇರಳದಲ್ಲಿ ಕಳೆದ ವಾರ 10 ಸಾವುಗಳು ವರದಿಯಾಗಿದೆ. ಶೇ. 93 ರಷ್ಟು ಸಕ್ರಿಯ ಪ್ರಕರಣಗಳಲ್ಲಿ ಸಾಧಾರಣ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. +ಚೀನಾ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 131ಕ್ಕೆ ಏರಿಕೆ +ಕರ್ನಾಟಕದಲ್ಲಿ ಒಬ್ಬರು ಮಾತ್ರ ಮೃತಪಟ್ಟಿದ್ದು, ಉಳಿದ ಎಲ್ಲರೂ ಸಾಧಾರಣ ಆರೋಗ್ಯ ಸಮಸ್ಯೆಯಿಂದ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ 1 ಸಾವಿನ ಪ್ರಕರಣ ವರದಿಯಾಗಿದೆ. ಜೆನ್-1 ಉಪತಳಿಯ 20 ಪ್ರಕರಣಗಳು ಈವರೆಗೂ ವರದಿಯಾಗಿವೆ. ಅದರಲ್ಲಿ ಗೋವಾದಲ್ಲಿ 18, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ ಎಂದು ವಿವರಣೆ ನೀಡಲಾಗಿದೆ. +ಈ ಹಿಂದೆ ಪ್ರಧಾನಿಯವರ ನಿಯಿಂದ ದೇಶಾದ್ಯಂತ 4,135 ಆಮ್ಲಜನಕ ಉತ್ಪಾದನಾ ಘಟಕಗಳು, 4,16,857 ಆಮ್ಲಜನಕ ಸಿಲಿಂಡರ್‍ಗಳು, 896 ಸಂಗ್ರಹಣಾ ಟ್ಯಾಂಕುಗಳು, 1,13,186 ಆಕ್ಸಿಜನ್ ಕಾನ್ಸಟ್ರೇಂಟರ್‍ಗಳು, 52,853 ವೆಂಟಿಲೇಟರ್‍ಗಳನ್ನು ಒದಗಿಸಲಾಗಿತ್ತು. ಅವುಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಒಂದು ಪ್ರಾಥಮಿಕ ಆರೋಗ್ಯ ಸೇವೆಯನ್ನು ಸಜ್ಜುಗೊಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. \ No newline at end of file diff --git a/eesanje/url_46_283_8.txt b/eesanje/url_46_283_8.txt new file mode 100644 index 0000000000000000000000000000000000000000..61bf6da62fe1b4f2019386414144094dcbe06620 --- /dev/null +++ b/eesanje/url_46_283_8.txt @@ -0,0 +1,11 @@ +ಕಠಿಣ ಕ್ರಮಗಳ ಅಗತ್ಯವಿಲ್ಲ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ +ಬೆಂಗಳೂರು,ಡಿ.20- ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಸದ್ಯಕ್ಕೆ ಕೋವಿಡ್ ಸೋಂಕಿನ ವಿಷಯದಲ್ಲಿ ಗಡಿ ನಿಬಂಧನೆ, ಕ್ವಾರಂಟೈನ್‍ನಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿಲ್ಲ. ಜನಸಾಮಾನ್ಯರು ಸಹಜವಾಗಿ ಓಡಾಡಿಕೊಂಡು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. +ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ ನೇತೃತ್ವದಲ್ಲಿ ನಡೆದ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್‍ಗುಂಡೂರಾವ್, ರಾಜ್ಯಸರ್ಕಾರ ಈವರೆಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರವು ಕೆಲವು ಸೂಚನೆಗಳನ್ನು ನೀಡಿದ್ದು, ಆಮ್ಲಜನಕ ಲಭ್ಯತೆ, ಐಸ್ಯುಲೇಷನ್ ಕೇಂದ್ರ, ಐಸಿಯು ಬೆಡ್‍ಗಳು, ಔಷಧಿಗಳು, ಚಿಕಿತ್ಸೆ ಹಾಗೂ ಪರೀಕ್ಷೆ ಸಲಕರಣೆಗಳು ಸಜ್ಜುಗೊಳಿಸಿಟ್ಟುಕೊಳ್ಳುವಂತೆ ಸೂಚನೆ ನೀಡಿದೆ. +ಗಡಿಭಾಗದಲ್ಲಿ ನಿಬಂಧನೆಗಳನ್ನು ವಿಧಿಸುವುದಾಗಲೀ, ವಿಮಾನನಿಲ್ದಾಣ, ರೈಲ್ವೆ ನಿಲ್ದಾಣಗಳಲ್ಲಿ ಪ್ರಾಥಮಿಕ ಪರೀಕ್ಷೆ ನಡೆಸುವ ಸಂದರ್ಭ ಉದ್ಭವಿಸಿಲ್ಲ. ರೋಗ ಲಕ್ಷಣಗಳಿರುವ ವ್ಯಕ್ತಿಗಳ ಮೇಲೆ ನಿಗಾ ವಹಿಸಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. +ರಾಜ್ಯ ಅದರಂತೆ ನಡೆದುಕೊಳ್ಳುತ್ತಿದೆ. ವಿದೇಶಿ ಪ್ರಯಾಣಿಕರನ್ನು ಕ್ವಾರಂಟೈನ್‍ನಲ್ಲಿಡುವುದಾಗಲೀ, ಪರೀಕ್ಷೆಗೊಳಪಡಿಸುವುದಾಗಲೀ ಸದ್ಯಕ್ಕೆ ಮಾಡುತ್ತಿಲ್ಲ. ಅವರು ತಮ್ಮ ಮನೆಯಲ್ಲಿ 12 ದಿನಗಳ ಕಾಲ ಹೊರಗೆ ಓಡಾಡದಂತೆ ಎಚ್ಚರಿಕೆ ವಹಿಸುವ ಸ್ವಯಂ ಗೃಹಬಂಧನಕ್ಕೆ ಸಲಹೆ ನೀಡಲಾಗುತ್ತಿದೆ. ಕೇರಳದಲ್ಲೂ ಇದೇ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು. +ಪಿಎಂ ಕೇರ್ ನಿಯಡಿ ಸ್ಥಾಪಿಸಲಾಗಿರುವ ಪಿಎಸ್‍ಎ ಆಮ್ಲಜನಕ ಉತ್ಪಾದಕ ಘಟಕಗಳ ನಿರ್ವಹಣಾ ವೆಚ್ಚ ದುಬಾರಿಯಾಗುತ್ತಿದ್ದು, ಅದಕ್ಕೆ ನೆರವು ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಆರ್‍ಟಿಸಿಆರ್ ಪರೀಕ್ಷೆಗೆ ಮಾದರಿ ಸಂಗ್ರಹಿಸುವ ರಾಸಾಯನಿಕ ದ್ರವವನ್ನೊಳಗೊಂಡ ಕೊಳವೆಗಳ ಕೊರತೆ ಇದೆ. ಅವುಗಳನ್ನು ಒದಗಿಸುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು. +ಪ್ರತಿಪಕ್ಷಗಳ ಸಂಸದರ ಅಮಾನತು ಸಮರ್ಥಿಸಿಕೊಂಡ ಹೇಮಮಾಲಿನಿ +ನಾಳೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಪಿಪಿ ಕಿಟ್, ಮಾಸ್ಕ್ ಸೇರಿದಂತೆ ಇತರೆ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ತುರ್ತು ಲಭ್ಯತೆ ಹಾಗೂ ಮುಂದಿನ ಮೂರು ತಿಂಗಳ ಬೇಡಿಕೆ ಅಂದಾಜಿಸಿ ಪೂರ್ವ ಸಿದ್ಧತೆ ಕೈಗೊಳ್ಳಲಾಗುವುದು. ಶನಿವಾರದ ವೇಳೆಗೆ 5,000 ಕೋವಿಡ್ ಪರೀಕ್ಷೆಗಳನ್ನು ಮಾಡುವ ಸಾಮಥ್ರ್ಯ ಅಭಿವೃದ್ಧಿಪಡಿಸಲಾಗುವುದು ಎಂದರು. +ಕೋವಿಡ್ ಸೋಂಕು ಪತ್ತೆಗೆ ಆರ್‍ಟಿಪಿಸಿಆರ್ ಪರೀಕ್ಷೆಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನಡೆಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಹಿಂದಿನ ದರವೇ ಮುಂದುವರೆಯುತ್ತಿದೆ. ನಾಳೆ ಮುಖ್ಯಮಂತ್ರಿಗಳ ನೇತೃತ್ವದದಲ್ಲಿ ನಡೆಯುತ್ತಿರುವ ತಾಂತ್ರಿಕ ಸಮಿತಿ ಸಭೆಯಲ್ಲಿ ದರ ಪರಿಷ್ಕರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಜೆಎನ್-1 ಉಪತಳಿ ಪತ್ತೆಗೆ ಜಿನೋಮೆ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲು ಕನಿಷ್ಟ 10 ಮಾದರಿಗಳ ಅಗತ್ಯವಿದೆ. ಅಷ್ಟೂ ಲಭ್ಯವಿದ್ದಾಗ ಮಾತ್ರ ಸಮಗ್ರ ತಪಾಸಣೆ ನಡೆಸಿ ಉಪತಳಿಯ ಸ್ವರೂಪ ಏನು, ಯಾವ ಪ್ರಮಾಣದಲ್ಲಿದೆ, ಅದರ ಚಲನವಲನಗಳೇನು ಎಂಬುದನ್ನು ಗುರುತಿಸಲು ಸಾಧ್ಯವಾಗಲಿದೆ ಎಂದರು. +ವಿವಿಪ್ಯಾಟ್ ಸ್ಲಿಪ್‍ಗಳನ್ನು ಮತದಾರರಿಗೆ ನೀಡಲು ಇಂಡಿಯಾ ಒಕ್ಕೂಟ ಆಗ್ರಹ +ಕೋವಿಡ್ ದೈನಂದಿನ ದತ್ತಾಂಶಗಳನ್ನು ದಾಖಲಿಸಲು ಈ ಮೊದಲು ಅಸ್ತಿತ್ವದಲ್ಲಿದ್ದ ಐಸಿಎಂಆರ್ ವೆಬ್ ಫೋರ್ಟಲ್ ಸ್ಥಗಿತಗೊಂಡಿದ್ದು, ಅದನ್ನು ಮತ್ತೆ ಸಕ್ರಿಯಗೊಳಿಸಬೇಕೆಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಜೆಎನ್-1 ಉಪತಳಿ ಅಷ್ಟು ಅಪಾಯಕಾರಿಯಲ್ಲ ಎಂಬ ಮಾಹಿತಿ ಇದೆ. ಆತಂಕ ಬೇಡ ಎಂಬ ಸೂಚನೆಯಿದ್ದು, ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ. ಜನಸಂದಣಿ ಪ್ರದೇಶಗಳಲ್ಲಿ ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸುವುದು ಸೂಕ್ತ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಸಿಬ್ಬಂದಿಗಳು ಹಾಗೂ ವೈದ್ಯರು ಮಾಸ್ಕ್ ಧರಿಸಲು ಸೂಚಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_283_9.txt b/eesanje/url_46_283_9.txt new file mode 100644 index 0000000000000000000000000000000000000000..a0673542620da6e2607e7bba76029a2dd532ce5e --- /dev/null +++ b/eesanje/url_46_283_9.txt @@ -0,0 +1,9 @@ +ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆಶಿ +ಬೆಂಗಳೂರು,ಡಿ.20- ಮಹಾನಗರಿ ಬೆಂಗಳೂರಿನ ಸಂಚಾರದ ದಟ್ಟಣೆ ತಗ್ಗಿಸಲು ಪ್ರಸ್ತಾವಿತ ಸುರಂಗ ಮಾರ್ಗ ರಸ್ತೆಗಳ ನಿರ್ಮಾಣ ಹಾಗೂ ನಗರದ ಹೊರವಲಯ ಮತ್ತು ನಾಲ್ಕು ದಿಕ್ಕುಗಳನ್ನು ಸಂಪರ್ಕಿಸುವ 129 ಕಿ.ಮೀ. ಹೆಚ್ಚುವರಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ. +ದೆಹಲಿಯಲ್ಲಿಂದು ಕೇಂದ್ರಸಚಿವರನ್ನು ಭೇಟಿ ಮಾಡಿರುವ ಡಿ.ಕೆ.ಶಿವಕುಮಾರ್, ಬೆಂಗಳೂರಿನ 3 ಯೋಜನೆಗಳಿಗೆ ಮತ್ತು ಪ್ರಮುಖ ನೀರಾವರಿ ಯೋಜನೆಗಳಿಗೆ ಹಣಕಾಸಿನ ನೆರವು ನೀಡುವಂತೆ ಒತ್ತಾಯಿಸಿದ್ದಾರೆ. 1.20 ಕೋಟಿ ಜನ ನೆಲೆಸಿರುವ ಬೆಂಗಳೂರನ್ನು ವಾಸ ಯೋಗ್ಯ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ಕೈಗಾರಿಕೆಗಳು, ತಂತ್ರಜ್ಞಾನ, ವಿಜ್ಞಾನದ ತವರಾಗಿರುವ ಮಹಾನಗರಿಯ ಸುಸ್ಥಿರ ಅಭಿವೃದ್ಧಿ ಮತ್ತು ಪ್ರಮುಖ ಸವಾಲುಗಳನ್ನು ಸರಿಪಡಿಸಬೇಕಿದೆ ಎಂದಿದ್ದಾರೆ. +ಬೆಂಗಳೂರಿನಲ್ಲಿ ಸಂಚಾರದಟ್ಟಣೆ ದೊಡ್ಡ ಸಮಸ್ಯೆಯಾಗಿದೆ. ಇದಕ್ಕಾಗಿ ಉತ್ತರ-ದಕ್ಷಿಣ, ಪೂರ್ವ-ಪಶ್ಚಿಮ ದಿಕ್ಕುಗಳನ್ನು ಸಂಪರ್ಕಿಸುವ 60 ಕಿ.ಮೀ. ಸುರಂಗಮಾರ್ಗ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸುತ್ತಿದ್ದು, ಪ್ರತಿ ಕಿ.ಮೀ.ಗೆ 500 ಕೋಟಿ ರೂ.ನಂತೆ ಒತ್ತು ವೆಚ್ಚ 30 ಸಾವಿರ ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. ಇದರಲ್ಲಿ ಮೇಲ್ಸೇತುವೆ ಸೇರಿದಂತೆ ವಿವಿಧ ನಿರ್ಮಾಣಗಳನ್ನೊಳಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಯೋಜನೆ ಕೈಗೆತ್ತಿಕೊಳ್ಳುವ ಚಿಂತನೆಯಿದೆ ಎಂದು ವಿವರಿಸಿದ್ದಾರೆ. +ಪ್ರತಿಪಕ್ಷಗಳ ಸಂಸದರ ಅಮಾನತು ಸಮರ್ಥಿಸಿಕೊಂಡ ಹೇಮಮಾಲಿನಿ +ಬಿಎಂಆರ್‍ಸಿಎಲ್ ಯೋಜನೆಯಡಿ ಜಾರಿಗೊಂಡಿರುವ ಮೆಟ್ರೋ ಯೋಜನೆ ಮೊದಲ ಹಂತದಲ್ಲಿ 42.3 ಕಿ.ಮೀ. ಸಂಫೂರ್ಣ ಕಾರ್ಯಾಚರಣೆಯಲ್ಲಿದೆ. 2ನೇ ಹಂತದ 75.5 ಕಿ.ಮೀ. ಭಾಗಶಃ ಕಾರ್ಯಾಚರಣೆ ನಡೆಯುತ್ತಿದ್ದು, 2ನೇ ಎ ಹಂತದ 58.19 ಕಿ.ಮೀ. ನಿರ್ಮಾಣದ ಹಂತದಲ್ಲಿದೆ. 3ನೇ ಹಂತದ 44.65 ಕಿ.ಮೀ.ನ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದ್ದು, ಮಂಜೂರಾತಿ ಬಾಕಿ ಇದೆ. 3 ಎ ಹಂತದಲ್ಲಿ 37 ಕಿ.ಮೀ. ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದೆ. +ಒಟ್ಟು 257.19 ಕಿ.ಮೀ. ಉದ್ದದ ಮೆಟ್ರೊ ಜೊತೆಗೆ ಹೊರವರ್ತುಲ ಪ್ರದೇಶ ಉಪನಗರಗಳನ್ನು ಸಂಪರ್ಕಿಸುವ 129 ಕಿ.ಮೀ. ಉದ್ದದ ಹೆಚ್ಚುವರಿ ಮೆಟ್ರೋ ಮಾರ್ಗಕ್ಕೂ ಅಗತ್ಯ ಆರ್ಥಿಕ ನೆರವು ಮತ್ತು ಪೂರ್ವಾನುಮತಿ ನೀಡುವಂತೆ ಒತ್ತಾಯಿಸಲಾಗಿದೆ. ಮಳೆ ಪ್ರಮಾಣ ಹೆಚ್ಚಾದರೆ ಬೆಂಗಳೂರಿನಲ್ಲಿ ನೆರೆ ಪರಿಸ್ಥಿತಿ ನಿರ್ಮಾಣಗೊಳ್ಳುತ್ತದೆ. ಇದರಿಂದ ಮನೆಗಳಿಗೆ ನೀರು ನುಗ್ಗುತ್ತದೆ. ಇದನ್ನು ಸರಿಪಡಿಸಲು ಜಾಗತಿಕ ಮಾನದಂಡಗಳ ಆಧಾರದ ಮೇಲೆ 3 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಕ್ರಮ ಕೈಗೊಳ್ಳಲು ವಿಶ್ವಬ್ಯಾಂಕಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದು ಆರ್ಥಿಕ ಇಲಾಖೆ ಮಂಜೂರಾತಿ ದೊರೆಯದೆ ನೆನೆಗುದಿಯಲ್ಲಿದ್ದು, ಅದರ ಬಗ್ಗೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. +ವಿವಿಪ್ಯಾಟ್ ಸ್ಲಿಪ್‍ಗಳನ್ನು ಮತದಾರರಿಗೆ ನೀಡಲು ಇಂಡಿಯಾ ಒಕ್ಕೂಟ ಆಗ್ರಹ +ಮೇಕೆದಾಟು ಬಳಿ 67 ಟಿಎಂಸಿ ನೀರು ಸಂಗ್ರಹಿಸುವ ಸಮತೋಲಿತ ಅಣೆಕಟ್ಟು ನಿರ್ಮಾಣ ಯೋಜನೆಗೆ 2019 ರ ಜನವರಿ 18 ರಂದು ಸಿಡಬ್ಲ್ಯೂಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಅಗತ್ಯ ಮಂಜೂರಾತಿ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಹಾಗೂ ಎತ್ತಿನಹೊಳೆ ಯೋಜನೆಗಳಿಗೆ ಅಗತ್ಯ ಆರ್ಥಿಕ ನೆರವು ನೀಡಬೇಕು. ಮಹದಾಯಿ ನದಿಗೆ ಕಳಸಾಬಂಡೂರಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾವನೆಗೆ ಅಗತ್ಯ ಮಂಜೂರಾತಿಗಳನ್ನು ಮತ್ತು ಅರ್ಥಿಕ ನೆರವನ್ನು ಭರಿಸುವಂತೆ ಕೇಂದ್ರ ಸಚಿವರಲ್ಲಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_284_1.txt b/eesanje/url_46_284_1.txt new file mode 100644 index 0000000000000000000000000000000000000000..42d713c2f9511def26f0eb14f0be64327e47c22a --- /dev/null +++ b/eesanje/url_46_284_1.txt @@ -0,0 +1,5 @@ +ಬೆಂಗಳೂರಲ್ಲಿ ಸೋಂಕಿತ ಸಾವು, ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ಕೋವಿಡ್ +ಬೆಂಗಳೂರು,ಡಿ.20- ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬರು ತೀವ್ರ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕೇಂದ್ರ ಸಚಿವರು ನಡೆಸಿದ ವಿವಿಧ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯಲ್ಲಿ ವರ್ಚುಯಲ್ ಮೂಲಕ ಭಾಗವಹಿಸಿದ ದಿನೇಶ್ ಗುಂಡೂರಾವ್ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. +ಬೆಂಗಳೂರಿನ ಚಾಮರಾಜಪೇಟೆಯ 64 ವರ್ಷದ ಪುರುಷರೊಬ್ಬರು ಅಸ್ತಮಾ, ಉಸಿರಾಟದ ಸಮಸ್ಯೆ, ಕ್ಷಯ ರೋಗದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಡಿ.15 ರಂದು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪರೀಕ್ಷೆ ನಡೆಸಿದಾಗ ಅವರಲ್ಲಿ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಅವರಿಗೆ ರೂಪಾಂತರ ತಳಿ ಜೆಎನ್-1 ಸೋಂಕಿತ್ತೇ ಎನ್ನುವುದು ಇನ್ನೂ ಖಚಿತವಾಗಿಲ್ಲ ಎಂದರು. +ಮಿಮಿಕ್ರಿ ಮಾಡಿ ಉಪರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಅಪಮಾನ, ಪ್ರಧಾನಿ ಮೋದಿ ಬೇಸರ +ಕೋವಿಡ್‍ನ ರೂಪಾಂತರ ಉಪತಳಿ ಜೆಎನ್-1 ಸೋಂಕು ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ದೇಶಾದ್ಯಂತ 16 ಸಾವುಗಳಾಗಿವೆ. ಕೇರಳದಲ್ಲಿ ನಿನ್ನೆವರೆಗೂ 5 ಮಂದಿ ಮೃತಪಟ್ಟಿದ್ದಾರೆ. ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಗಂಭೀರ ಸ್ವರೂಪದ ಬೇರೆಬೇರೆ ರೀತಿಯ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರು. ಮೃತಪಟ್ಟ ವೇಳೆ ಕೋವಿಡ್ ಸೋಂಕಿಗೂ ಗುರಿಯಾಗಿದ್ದರು ಎಂದು ತಿಳಿಸಿದ್ದಾರೆ. ಈವರೆಗಿನ ಮಾಹಿತಿಯ ಪ್ರಕಾರ, ಜೆಎನ್-1 ಸೋಂಕು ಪ್ರಾಣಾಂತಿಕವಲ್ಲ ಎಂಬ ವರದಿ ಇದೆ ಎಂದರು. \ No newline at end of file diff --git a/eesanje/url_46_284_10.txt b/eesanje/url_46_284_10.txt new file mode 100644 index 0000000000000000000000000000000000000000..dbe9cf36937a68616faea01a741a0b38a2ebbde6 --- /dev/null +++ b/eesanje/url_46_284_10.txt @@ -0,0 +1,8 @@ +ಸಾಮಾಜಿಕ ಜಾಲತಾಣಗಳಲ್ಲಿ ತೀವ್ರಗೊಂಡ ಕಾಂಗ್ರೆಸ್-ಬಿಜೆಪಿ ಕಚ್ಚಾಟ +ಬೆಂಗಳೂರು,ಡಿ.18- ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಸಂಘರ್ಷ ತೀವ್ರಗೊಳ್ಳುತ್ತಿದೆ. ನೇರವಾಗಿ ಅಧಿಕೃತ ಖಾತೆಗಳಲ್ಲಿ ಪರಸ್ಪರ ಆರೋಪ, ಕೆಸರೆರಚಾಟಗಳು ಅಸಹನೀಯ ಮಟ್ಟಕ್ಕೆ ತಲುಪಿವೆ. ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯ ಕುರಿತಂತೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಬಿಜೆಪಿ ನಾಯಕರ ಸಾಲಮನ್ನಾ ಒತ್ತಾಯಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ್ದರು. +2018 ರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 1 ಲಕ್ಷ ರೂ. ರೈತರ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿತ್ತು. ಆದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಅದನ್ನು ಈಡೇರಿಸಲಿಲ್ಲ. ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಸಾಲಮನ್ನಾ ಮಾಡುವ ಕುರಿತಂತೆ ವಿಧಾನಪರಿಷತ್‍ನ ಸದಸ್ಯರಾಗಿದ್ದ ವಿ.ಎಸ್.ಉಗ್ರಪ್ಪ ಅವರು ಕೇಳಿದ ಪ್ರಶ್ನೆಗೆ, ನಾವು ನೋಟು ಪ್ರಿಂಟು ಮಾಡುವ ಯಂತ್ರ ಇಟ್ಟಿಲ್ಲ ಎಂದು ಹೇಳಿದ್ದರು. ಅದೇ ಯಡಿಯೂರಪ್ಪ ಬೆಳಗಾವಿಯಲ್ಲಿ ಸಮಾವೇಶ ಮಾಡಿ ಕಾಂಗ್ರೆಸ್ ಸರ್ಕಾರ ಸಾಲಮನ್ನಾ ಮಾಡದೇ ಇದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳುತ್ತಿದ್ದಾರೆ. +ಅಧಿಕಾರದಲ್ಲಿದ್ದಾಗ ಭರವಸೆ ಈಡೇರಿಸದೆ ಚುನಾವಣೆಯ ಕಾರಣಕ್ಕೆ ಏನೋ ಹೇಳಿರು ತ್ತೇವೆ. ಅದನ್ನೆಲ್ಲಾ ಜಾರಿಗೊಳಿಸಲಾಗುವುದಿಲ್ಲ ಎಂದಿದ್ದ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುವ ನೈತಿಕತೆ ಇಲ್ಲ ಎಂದು ಹೇಳಿದರು. ಈ ವಿಡಿಯೋವನ್ನು ತಿರುಚಿ ಕಾಂಗ್ರೆಸ್ ಪಕ್ಷವೇ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದಂತೆ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಅಶ್ವತ್ಥ ನಾರಾಯಣ ಸೇರಿದಂತೆ ಅನೇಕ ನಾಯಕರು ಸಿದ್ದರಾಮಯ್ಯ ಅವರ ತಿರುಚಿದ ಹೇಳಿಕೆಯನ್ನು ಹಂಚಿಕೊಂಡಿದ್ದರು. +ತಕ್ಷಣವೇ ಮುಖ್ಯಮಂತ್ರಿ ಕಚೇರಿ ಹಾಗೂ ಸಾಮಾಜಿಕ ಜಾಲತಾಣ ವಾಸ್ತವಾಂಶದ ಮತ್ತು ಸಿದ್ದರಾಮಯ್ಯ ಅವರ ಮಾತಿನ ಪೂರ್ತಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಬಿಜೆಪಿಯ ತಪ್ಪು ಮಾಹಿತಿಯನ್ನು ಜನರ ಮುಂದಿಡಲಾಯಿತು. ಅದರ ಬಳಿಕ ಬಿಜೆಪಿ ಮತ್ತೊಂದು ಪೋಸ್ಟ್ ಮಾಡಿ ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿಲ್ಲ ಎಂದು ಆರೋಪಿಸಿತ್ತು. ಅದಕ್ಕೆ ಕಾಂಗ್ರೆಸ್ ಸ್ಪಷ್ಟನೆ ನೀಡಿದ್ದು, ಲಕ್ಷ್ಮೀಹೆಬ್ಬಾಳ್ಕರ್ ಸಂತ್ರಸ್ತೆ ಮತ್ತು ಆಕೆಯ ಕುಟುಂಬವನ್ನು ಭೇಟಿ ಮಾಡಿದ ಫೋಟೊವನ್ನು ಹಂಚಿಕೊಂಡಿದೆ. +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +ಸುಳ್ಳು ಮೊದಲು ಹುಟ್ಟಿದ್ದೋ, ಬಿಜೆಪಿ ಮೊದಲು ಹುಟ್ಟಿದ್ದೋ ಎನ್ನುವುದನ್ನು ವಿಶ್ಲೇಷಿಸಿದರೆ ಬಿಜೆಪಿಯೇ ಹುಟ್ಟಿದ್ದು ಎಂಬ ಸತ್ಯ ಗೋಚರಿಸುತ್ತದೆ. ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ತಲೆಮಾಸಿದ ಎಳಸುಗಳನ್ನು ಕೂರಿಸಿದಂತಿದೆ. ಸುಳ್ಳು ಸಂಗತಿಯನ್ನು ಟ್ವೀಟ್ ಮಾಡಿ ಕೆಲ ಹೊತ್ತಿನಲ್ಲೇ ಡಿಲೀಟ್ ಮಾಡಿದ ಬಿಜೆಪಿಯವರಿಗೆ ತಮ್ಮದೇ ಪೋಸ್ಟ್‍ಗಳನ್ನು ಸತ್ಯ ಎಂದು ನಿರೂಪಿಸುವ ಧಮ್ಮು, ತಾಕತ್ತು ಇರಲಿಲ್ಲವೇ ಎಂದು ಪ್ರಶ್ನಿಸಿದೆ. +ವಂಟಮೂರಿ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲ ಎಂಬ ತಪ್ಪು ಮಾಹಿತಿ ನೀಡಲಾಗಿದೆ. ಪ್ರತಿ ಬಾರಿಯೂ ತಿರುಚಿದ ಮಾಹಿತಿಯನ್ನೇ ಬಿಜೆಪಿಯವರು ಜನರಿಗೆ ನೀಡುತ್ತಾರೆಂದು ಕಾಂಗ್ರೆಸ್ ಕಿಡಿಕಾರಿದೆ. ಇದಕ್ಕೆ ಬಿಜೆಪಿಯ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಮಹಿಳೆಯ ವಿವಸ್ತ್ರ ಪ್ರಕರಣಗಳು, ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛಗೊಳಿಸುವ ದುರ್ಘಟನೆಗಳು ನಡೆಯುತ್ತಿರುವುದೇಕೆ ಎಂದು ಪ್ರಶ್ನಿಸಿದೆ. \ No newline at end of file diff --git a/eesanje/url_46_284_11.txt b/eesanje/url_46_284_11.txt new file mode 100644 index 0000000000000000000000000000000000000000..513093b858b4018ec375debeefadc3b14a030086 --- /dev/null +++ b/eesanje/url_46_284_11.txt @@ -0,0 +1,6 @@ + : ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ +ಮಡಿಕೇರಿ,ಡಿ.18- ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು. +ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ ಎಂದು ಹೇಳಿದರು. +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದರು. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯದ ಎಲ್ಲಾ ಆಸ್ಪತ್ರೆಗಳನ್ನ ಸನ್ನದ್ಧ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ. +ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಗ್ನಿಜನ್ ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು. \ No newline at end of file diff --git a/eesanje/url_46_284_12.txt b/eesanje/url_46_284_12.txt new file mode 100644 index 0000000000000000000000000000000000000000..caa1bd90818c18160a1d378ab97da09148f8e868 --- /dev/null +++ b/eesanje/url_46_284_12.txt @@ -0,0 +1,14 @@ +ಮಹಿಳೆಯ ವಿವಸ್ತ್ರ ಪ್ರಕರಣ: ಮೂಕಪ್ರೇಕ್ಷಕರಾದ ಗ್ರಾಮಸ್ಥರಿಗೆ ಹೈಕೋರ್ಟ್ ದಂಡ +ಬೆಂಗಳೂರು,ಡಿ.18- ಮಹಿಳೆಯನ್ನು ವಿವಸ್ತ್ರಗೊಳಿಸುವ ಸಂದರ್ಭದಲ್ಲಿ ಸಹಾಯಕ್ಕೆ ಬಾರದೆ ಮೂಕ ಪ್ರೇಕ್ಷಕರಾಗಿ ನಿಂತಿದ್ದ ಗ್ರಾಮಸ್ಥರಿಗೆ ಶಿಕ್ಷೆಯಾಗುವಂತಹ ಅಥವಾ ದಂಡ ವಿಧಿಸಬಹುದಾದ ಯೋಜನೆಯನ್ನು ರೂಪಿಸಿ, ಸಂತ್ರಸ್ತೆಗೆ ಪರಿಹಾರ ನೀಡುವಂತೆ ರಾಜ್ಯ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. +ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗ್ರಾಮದ ಸಾರ್ವಜನಿಕರ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಅರ್ಜಿ ವಿಚಾರಣೆಯನ್ನು ಕೆಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗಳಾದ ಪ್ರಸನ್ನ.ಬಿ ವರಾಳೆ ಹಾಗೂ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಬ್ರಿಟಿಷರ ಕಾಲದಲ್ಲಿದ್ದ ಪುಂಡ ಕಂದಾಯ ತೆರಿಗೆಯನ್ನು ಹಾಕಿ ಸಾರ್ವಜನಿಕರಿಂದ ದಂಡ ವಸೂಲಿ ಮಾಡುವಂತೆ ಸೂಚನೆ ಕೊಟ್ಟಿದೆ. +ಬ್ರಿಟಿಷ್ ಆಡಳಿತದಲ್ಲಿ ವಿಲಿಯಂ ಬೆಂಟಿಂಕ್ ಎಂಬುವರು ಕಳ್ಳತನ ಮಾಡುವವರಿದ್ದ ಗ್ರಾಮಕ್ಕೆ ವಿಭಿನ್ನ ರೀತಿಯ ತೆರಿಗೆಯನ್ನು ವಿಧಿಸುತ್ತಿದ್ದರು. ಅದೇ ರೀತಿಯಲ್ಲಿ ಈಗ ತೆರಿಗೆಯನ್ನು ವಿಧಿಸಿದಲ್ಲಿ ಗ್ರಾಮಗಳಲ್ಲಿ ಜನರಿಗೆ ಸ್ವಲ್ಪ ಜವಾಬ್ದಾರಿ ಹೆಚ್ಚಾಗಲಿದೆ. ಇಂತಹ ಘಟನೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ ಜನರು ಮೌನವಾಗಿದ್ದರೆ ನಾಗರಿಕ ಸಮಾಜಕ್ಕೆ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನೆ ಮಾಡಿದರು. +ಸ್ವಾರ್ಥದ ಪರ ಹೇಡಿತನ ತೋರಿರುವ ಜನರಿಗೆ ಸಮುದಾಯಿಕ ಹೊಣೆಗಾರಿಕೆ ಏನೆಂಬುದು ತಿಳಿಯಬೇಕು. ಮಹಿಳೆಯನ್ನು ಕಂಡು ಮೂಕ ಪ್ರೇಕ್ಷಕರಾಗಿದ್ದರಿಂದಲೇ ಇದನ್ನು ಸಹಿಸಿಕೊಳ್ಳುವುದಾದರೂ ಹೇಗೆ? ಹೀಗಾಗಿ ಬ್ರಿಟಿಷ್ ಅಧಿಕಾರಿ ವಿಲಿಯಮ್ ಬೆಂಟೆಕ್ ಅವರ ಕಾಲದಲ್ಲಿದ್ದ ಪುಂಡ ಕಂದಾಯವನ್ನು ಹಾಕಿ ಗ್ರಾಮದಲ್ಲಿರುವ ಪ್ರತಿಯೊಬ್ಬರಿಂದ ದಂಡ ವಸೂಲಿ ಮಾಡಬೇಕೆಂದು ಸೂಚನೆ ಕೊಟ್ಟಿತು. +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +ಓರ್ವ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸುತ್ತಿದ್ದ ವೇಳೆ ಸಹಾಯಕ್ಕೆ ಬಾರದೆ ಮೂಕ ಪ್ರೇಕ್ಷಕರಾಗಿದ್ದ ಗ್ರಾಮಸ್ಥರ ವರ್ತನೆ ನಿಜಕ್ಕೂ ಖಂಡನೀಯ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸಬಾರದೆಂದರೆ ನಾಗರಿಕ ಸಮಾಜಕ್ಕೆ ಸಂದೇಶ ರವಾನೆಯಾಗಬೇಕು. ಹೀಗಾಗಿಯೇ ದಂಡ ವಸೂಲಿಗೆ ಆದೇಶ ನೀಡುತ್ತಿದ್ದೇವೆ ಎಂದು ನ್ಯಾಯಮೂರ್ತಿಗಳು ಹೇಳಿದರು. +ಸರ್ಕಾರದ ಪರವಾಗಿ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಘಟನೆ ನಡೆಯುವ ವೇಳೆ ಸಂತ್ರಸ್ತ ಮಹಿಳೆಗೆ ಜಹಾಂಗೀರ್ ಎಂಬುವರು ಸಹಾಯ ಮಾಡಿದ್ದಾರೆ. ಘಟನೆ ನಡೆದ ವೇಳೆ ಸುಮಾರು 60ರಿಂದ 70 ಮಂದಿ ಸ್ಥಳದಲ್ಲಿದ್ದರು. ಯಾರೊಬ್ಬರೂ ಸಹಾಯಕ್ಕೆ ಹೋಗಲಿಲ್ಲ. ಗ್ರಾಮ ಪಂಚಾಯ್ತಿ ಸೇರಿದಂತೆ ಯಾರೊಬ್ಬರೂ ಸಹಾಯ ಮಾಡಿಲ್ಲ ಎಂಬುದನ್ನು ನ್ಯಾಯಾಲಯದ ಗಮನಕ್ಕೆ ತಂದರು. +ಈಗಾಗಲೇ ಮಹಿಳೆಗೆ ಕೌನ್ಸಿಲಿಂಗ್ ನಡೆಸಿ ಉತ್ತಮ ಚಿಕಿತ್ಸೆಯನ್ನು ಕೊಡಿಸಲಾಗಿದೆ. ದಿನದಿಂದ ದಿನಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಐಡಿಗೆ ವಹಿಸಲಾಗಿದೆ. ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತ ಮಹಿಳೆಗೆ 5 ಲಕ್ಷ ಪರಿಹಾರ ಮತ್ತು ಎರಡು ಎಕರೆ ಜಮೀನನ್ನು ಪರಿಹಾರ ರೂಪದಲ್ಲಿ ನೀಡಿದ್ದೇವೆ ಎಂದು ಹೇಳಿದರು. +ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿ ಸೇರಿದಂತೆ ಹಲವರನ್ನು ಅಮಾನತುಪಡಿಸಲಾಗಿದೆ. ಗ್ರಾಮಪಂಚಾಯ್ತಿ ಸದಸ್ಯರು ಮತ್ತು ಇತರರು ತಕ್ಷಣವೇ ಮಧ್ಯಪ್ರವೇಶ ಮಾಡಿದ್ದರೆ ಪ್ರಕರಣ ನಡೆಯುತ್ತಿರಲಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಈ ಪ್ರಕರಣದಲ್ಲಿ ರಾಜಕೀಯವೇನೂ ಕಂಡುಬರುತ್ತಿಲ್ಲ. ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗ್ಬೇಕು ಎಂಬುದೇ ಎಲ್ಲರ ಆಶಯವಾಗಿದೆ ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಮುಂದಿನ ಅರ್ಜಿ ವಿಚಾರಣೆಯನ್ನು ಜನವರಿ 3ನೇ ವಾರಕ್ಕೆ ಮುಂದೂಡಿತು. +ಈ ಹಿಂದೆ ನಡೆದ ವಿಚಾರಣೆ ವೇಳೆ, ಮಹಾಭಾರತದಲ್ಲಿ ವಸ್ತ್ರಾಪಹರಣದ ವೇಳೆ ದ್ರೌಪದಿಯ ರಕ್ಷಣೆಗೆ ಪರಮಾತ್ಮ ಶ್ರೀಕೃಷ್ಣ ಧಾವಿಸಿದಂತೆ, ಈಗಿನ ಕಾಲದಲ್ಲಿ ಯಾರೂ ಕೂಡ ಬರುತ್ತಿಲ್ಲ ಎಂದು ಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಇಂದಿನ ಜಗತ್ತಿನಲ್ಲಿ ದುರ್ಯೋಧನರು ಅಥವಾ ದುಶ್ಯಾಸನರು ಬಂದರೆ ಯಾವ ಕೃಷ್ಣನೂ ಸಹಾಯಕ್ಕೆ ಬರುವುದಿಲ್ಲ ಎಂದು ಹೇಳಿದ್ದ ವಿಭಾಗೀಯ ಪೀಠ, ತನಿಖೆಯ ವಿವರಗಳಿಗೆ ಅತೃಪ್ತಿ ವ್ಯಕ್ತಪಡಿಸಿ ಹೆಚ್ಚುವರಿ ಸ್ಥಿತಿ ವರದಿಯನ್ನು ಕೋರಿತ್ತು. +ಸಂಸತ್‍ನಲ್ಲಿ ಭದ್ರತಾ ಲೋಪ ಪ್ರಕರಣದ ತನಿಖೆ ಚುರುಕು +ಏನಿದು ಪ್ರಕರಣ?:ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬುಸ್ಥರು ವಂಟಮೂರಿ ಗ್ರಾಮದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ತಡವಾಗಿ ಸ್ಥಳಕ್ಕೆ ಆಗಮಿಸಿದ್ದ ಪಿಎಸ್‍ಐ ಅಮಾನತುಗೊಂಡಿದ್ದಾರೆ. ಪ್ರಕರಣ ಸಂಬಂಧ 11 ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದಾರೆ. +ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸುವಂತೆ ಒತ್ತಾಯಗಳು ಕೇಳಿಬಂದವು. ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ರಾಜ್ಯ ಸರ್ಕಾರವು ಭಾನುವಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದೆ. \ No newline at end of file diff --git a/eesanje/url_46_284_2.txt b/eesanje/url_46_284_2.txt new file mode 100644 index 0000000000000000000000000000000000000000..209ba56519adf46826b197c17fab3a0e91320277 --- /dev/null +++ b/eesanje/url_46_284_2.txt @@ -0,0 +1,10 @@ +ಸಂಸತ್‍ನ ಭದ್ರತಾ ಲೋಪದ ವಾಸ್ತವಾಂಶವನ್ನು ಬಹಿರಂಗಕ್ಕೆ ಪ್ರಿಯಾಂಕ್ ಖರ್ಗೆ ಆಗ್ರಹ +ಕಲ್ಬುರ್ಗಿ,ಡಿ.20- ಸಂಸತ್‍ನ ಭದ್ರತಾ ಲೋಪದ ಪ್ರಕರಣದಲ್ಲಿ ಬಾಕಿ ಉಳಿದ ಇಬ್ಬರಿಗೆ ಪಾಸ್ ನೀಡಿದ್ದು, ಬಿಜೆಪಿಯ ಸಂಸದರು ಎಂಬ ಮಾಹಿತಿ ಇದ್ದು, ವಾಸ್ತವಾಂಶವನ್ನು ಬಹಿರಂಗಪಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. +ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಸಂಸತ್ ಪ್ರವೇಶಿಸಿದ ನಾಲ್ವರ ಪೈಕಿ ಇಬ್ಬರಿಗೆ ಪಾಸ್ ನೀಡಿದವರು ಮೈಸೂರಿನ ಲೋಕಸಭೆ ಸದಸ್ಯ ಪ್ರತಾಪ್ ಸಿಂಹ ಆದರೆ, ಬಾಕಿ ಉಳಿದ ಇನ್ನಿಬ್ಬರಿಗೆ ಪಾಸ್ ನೀಡಿದ್ದು ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಕೆಲ ಮಾಹಿತಿಗಳ ಪ್ರಕಾರ, ಅವರಿಗೂ ಕೂಡ ಬಿಜೆಪಿ ಸಂಸದರೇ ಪಾಸ್ ನೀಡಿದ್ದರು ಎಂದು ಹೇಳಲಾಗುತ್ತಿದೆ ಎಂದರು. +ಪ್ರತಿ ವಿಷಯಕ್ಕೂ ಹೇಳಿಕೆ ನೀಡುವ ಪ್ರತಾಪ್ ಸಿಂಹ ಸಂಸತ್ ನುಗ್ಗಿದವರಿಗೆ ಪಾಸ್ ಕೊಟ್ಟ ಬಗ್ಗೆ ಈವರೆಗೆ ಸದನದ ಒಳಗಾಗಲಿ, ಹೊರಗಾಗಲಿ ಏಕೆ ಮಾತನಾಡುತ್ತಿಲ್ಲ. ಇಷ್ಟಕ್ಕೂ ಅವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು. ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸುವ ಅಗತ್ಯವಿಲ್ಲ ಎಂದು ವಾದಿಸುವ ಕಲ್ಬುರ್ಗಿಯ ಸಂಸದ ಉಮೇಶ್ ದಾದವ್ ಅವರಿಗೆ ಬುದ್ಧಿ ಹಾಗೂ ಜವಾಬ್ದಾರಿ ಇಲ್ಲ. ಇದೊಂದು ಗಂಭೀರ ಪ್ರಕರಣ ಎಂದು ಖುದ್ದು ಪ್ರಧಾನಿಯವರೇ ಸ್ಪಷ್ಟಪಡಿಸಿದ್ದಾರೆ. +ಸಂಸತ್‍ನಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗದ್ದಲಗಳಾಗಿ 141 ಮಂದಿ ಸಂಸದರು ಅಮಾನತುಗೊಂಡಿದ್ದಾರೆ. ಹಾಗಿದ್ದರೂ ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೇಳುತ್ತಿರುವುದು ಬೇಜವಾಬ್ದಾರಿತನ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪ್ರಧಾನಿ ಹುದ್ದೆಗೆ ಎಐಸಿಸಿ ಅಧ್ಯಕ್ಷರ ಹೆಸರು ಪ್ರಸ್ತಾಪವಾಗಿರುವುದಕ್ಕೆ ನಿನ್ನೆಯೇ ಮಲ್ಲಿಕಾರ್ಜುನ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ. ಮೊದಲು ನಾವು ಚುನಾವಣೆ ಗೆಲ್ಲಬೇಕು, ನಂತರ ಉಳಿದ ವಿಷಯಗಳ ಕುರಿತು ಚರ್ಚೆ ಮಾಡಬಹುದು ಎಂದಿದ್ದಾರೆ. ಹೀಗಾಗಿ ನಮ್ಮ ಮುಂದಿರುವುದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ 250 ಸಂಸದರನ್ನು ಮತ್ತು ಇತರ ಪಕ್ಷಗಳಿಂದ ಹೆಚ್ಚು ಸದಸ್ಯರನ್ನು ಸಂಸತ್‍ಗೆ ಕಳುಹಿಸುವುದ್ದಾಗಿದೆ ಎಂದರು. +ಪ್ರತಿಬಾರಿ ಖರ್ಗೆಯವರ ಹೆಸರು ಪ್ರಸ್ತಾಪವಾದಾಗ ದಲಿತರು ಎಂದು ಜಾತಿ ಬಣ್ಣ ಲೇಪಿಸುವುದೇಕೆ, ಅದೇ ಮೋದಿಯವರು ಪ್ರಧಾನಿಯಾಗುವಾಗ ಜಾತಿಯನ್ನು ಪ್ರಸ್ತಾಪಿಸಲಾಗಿತ್ತೇ, ಸಾಮಥ್ರ್ಯ ಇದೆ ಎಂದು ಬಿಂಬಿಸಿರಲಿಲ್ಲವೇ, ಹತ್ತು ವರ್ಷಗಳಿಂದ ಅವರ ಸಾಮಥ್ರ್ಯವೇನು ಎಂದು ಜನ ನೋಡಿದ್ದಾರೆ. ಆದರೆ, ಖರ್ಗೆಯವರ ಹೆಸರು ಬಂದಾಗ ದಲಿತರು ಎನ್ನುತ್ತಾರೆ. ಇಲ್ಲಿ ಜಾತಿ ಬದಲಾಗಿ ಸಾಮಥ್ರ್ಯದ ವಿಚಾರ ಏಕೆ ಚರ್ಚೆಯಾಗುವುದಿಲ್ಲ ಎಂದು ಪ್ರಶ್ನಿಸಿದರು. +ಮಿಮಿಕ್ರಿ ಮಾಡಿ ಉಪರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಅಪಮಾನ, ಪ್ರಧಾನಿ ಮೋದಿ ಬೇಸರ +ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್, ಆರ್.ಅಶೊಕ್, ಬಿ.ವೈ.ವಿಜಯೇಂದ್ರ ಪ್ರತಿಯೊಬ್ಬರೂ ತಮ್ಮ ಗುಂಪು ಕಟ್ಟಿಕೊಂಡು ಬಣ ರಾಜಕೀಯ ಮಾಡುತ್ತಿದ್ದಾರೆ. ವಿಧಾನಮಂಡಲದ ಅವೇಶನದಲ್ಲಿ ಒಬ್ಬರು ಸಭಾತ್ಯಾಗ ಎಂದರೆ, ಮತ್ತೊಬ್ಬರು ಧರಣಿ ನಡೆಸುವುದಾಗಿ ಹೇಳುತ್ತಿದ್ದರು. ವಿರೋಧ ಪಕ್ಷದ ನಾಯಕನನ್ನೇ ಒಪ್ಪುವುದಿಲ್ಲ. ನಾನೇ ವಿಪಕ್ಷ ನಾಯಕ ಎಂದು ಕೆಲವರು ಪ್ರಸ್ತಾಪಿಸಿದರೆ, ಇನ್ನೂ ಕೆಲವರು ಬಿಜೆಪಿಯ ನಾಯಕತ್ವವನ್ನೇ ಕ್ಕರಿಸಿ ಮಾತನಾಡುತ್ತಿರುವುದು ಕಂಡುಬಂದಿತ್ತು ಎಂದು ಹೇಳಿದರು. +ಕೋವಿಡ್ ನಿಯಂತ್ರಣ ಕುರಿತಂತೆ ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. ಕೋವಿಡ್ ಉಪತಳಿಯ ಸೋಂಕು ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದೆ. ಆದರೂ ನಾವು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸುತ್ತೇವೆ ಎಂದರು. ಕಲ್ಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಮಾದಕ ವಸ್ತು ಸೇರಿದಂತೆ ನಿಯಮ ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮಾದಕ ವ್ಯಸನಿಗಳ ವಿರುದ್ಧ ಈಗಾಗಲೇ ಕೋಕಾ ಕಾಯಿದೆಯನ್ನು ಹಾಕಲಾಗುತ್ತಿದೆ. ಲೋಪಗಳಿದ್ದರೆ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_284_3.txt b/eesanje/url_46_284_3.txt new file mode 100644 index 0000000000000000000000000000000000000000..89a10abfc52ed3254c7f72610ea724c7dd2b9967 --- /dev/null +++ b/eesanje/url_46_284_3.txt @@ -0,0 +1,11 @@ +ಆರಂಭದಲ್ಲೇ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸಿದ್ಧತೆ : ಗುಂಡೂರಾವ್ +ಬೆಂಗಳೂರು, ಡಿ.19- ಕೋವಿಡ್ ಸಾಂಕ್ರಾಮಿಕ ರೋಗದ ಬೆಳವಣಿಗೆಯನ್ನು ಪ್ರಾಥಮಿಕ ಹಂತದಲ್ಲೇ ನಿಯಂತ್ರಿಸಲು ಪೂರಕವಾಗುವಂತೆ ಅಗತ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ತಪಾಸಣೆಗೆ ಅಗತ್ಯವಾದ ಸಲಕರಣೆಗಳನ್ನು ಜಿಲ್ಲಾ ಕೇಂದ್ರಗಳಲ್ಲೇ ಖರೀದಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ರೂಪಾಂತರ ಜೆಎನ್-1 ಉಪತಳಿ ರಾಜ್ಯದಲ್ಲಿ ಪತ್ತೆಯಾಗಿರುವುದು ಖಚಿತವಾಗಿಲ್ಲ. ಅದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. +ಅಮೆರಿಕ, ಸಿಂಗಾಪುರ ಸೇರಿದಂತೆ ವಿವಿಧ ದೇಶಗಳಲ್ಲಿ ಹಾಗೂ ಭಾರತದ ಹಲವು ರಾಜ್ಯದಲ್ಲಿ ಜೆಎನ್-1 ಸೋಂಕು ಕಂಡುಬಂದಿದೆ. ಅದರಿಂದ ಹೆಚ್ಚಿನ ಅಪಾಯ ಆಗಿರುವ ವರದಿ ಇಲ್ಲ. ಹಾಗಾಗಿ ಆತಂಕಗೊಳ್ಳುವ ಅಗತ್ಯವಿಲ್ಲ. ನಮ್ಮಲ್ಲಿ ಕಂಡುಬಂದ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಿಕೊಡಲಾಗಿದೆ ಎಂದರು. +ಸದ್ಯದ ಮಾಹಿತಿ ಪ್ರಕಾರ ಸೋಂಕು ಹೆಚ್ಚು ಹರಡಿದೆ ಎಂದು ಹೇಳಲಾಗುವುದಿಲ್ಲ. ಆದ್ಯತೆ ಮೇರೆಗೆ ಪರೀಕ್ಷೆಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲು ನಿರ್ಧರಿಸಲಾಗಿದೆ. ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದೆ. ಈ ಹಿಂದೆ ಖರೀದಿಸಿದ್ದ ಆರ್‍ಟಿಪಿಸಿಆರ್ ಹಾಗೂ ಇತರ ಕಿಟ್‍ಗಳ ಅವಧಿ ಮೀರಿವೆ. ಪರೀಕ್ಷಾ ಸಲಕರಣೆಗಳನ್ನು ಹೊಸದಾಗಿಯೇ ಸಂಗ್ರಹಿಸಬೇಕು. ಟೆಂಡರ್ ಕರೆದು ರಾಜ್ಯಮಟ್ಟದಿಂದಲೇ ಪೂರೈಸಬೇಕಾದರೆ ಸಮಯಾವಕಾಶ ಹಿಡಿಯುತ್ತದೆ. ಹೀಗಾಗಿ ಜಿಲ್ಲಾಮಟ್ಟದಲ್ಲೇ ಕೋವಿಡ್ ಪರೀಕ್ಷೆಗೆ ಅಗತ್ಯವಾದ ಸಲಕರಣೆಗಳನ್ನು ಖರೀದಿಸಲು ಸೂಚಿಸಲಾಗಿದೆ. +ವ್ಯಾಪಕವಾದ ಪರೀಕ್ಷೆಗಳನ್ನು ನಡೆಸಿದಾಗ ಮಾತ್ರ ಸೋಂಕು ಯಾವ ಮಟ್ಟಕ್ಕೆ ಹರಡಿದೆ ಎಂಬುದು ನಮಗೆ ತಿಳಿಯಲು ಸಾಧ್ಯ ಎಂದು ಹೇಳಿದರು. ಸದ್ಯದ ಪರಿಸ್ಥಿತಿಯಲ್ಲಿ ಜನಸಂದಣಿ ಸೇರುವುದು ಹಾಗೂ ಇತರ ಸಮಾವೇಶಗಳ ಮೇಲೆ ನಿರ್ಬಂಧ ಹೇರುವ ಪರಿಸ್ಥಿತಿಯಿಲ್ಲ. ಸೋಂಕಿನ ಬೆಳವಣಿಗೆಯ ಮೇಲೆ ನಿಗಾ ಇರಿಸಲಾಗಿದೆ. ಕೋವಿಡ್‍ನಿಂದಾಗಿ ಈವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಬೇರೆ ಆರೋಗ್ಯ ಸಮಸ್ಯೆಗಳಿದ್ದು, ಮಾರಣಾಂತಿಕ ಪರಿಸ್ಥಿತಿಯಲ್ಲಿದ್ದಾಗ ಕೋವಿಡ್ ಸೋಂಕು ತಗುಲಿರಬಹುದು. ಆದರೆ ಕೋವಿಡ್‍ನಿಂದಾಗಿಯೇ ಸಾವನ್ನಪ್ಪಿದ್ದಾರೆ ಎಂಬ ಸ್ಪಷ್ಟತೆ ಇಲ್ಲ ಎಂದರು. +ಸಂಸತ್‍ನ ಕಲಾಪಕ್ಕೆ ಅಡ್ಡಿ : ಇಂದು 50 ಮಂದಿ ಸಂಸದರ ಅಮಾನತು +ತಾಂತ್ರಿಕ ಸಲಹಾ ಸಮಿತಿ ಕಳೆದ ಭಾನುವಾರವೇ ಸಭೆ ನಡೆಸಿ ಶಿಫಾರಸ್ಸುಗಳನ್ನು ಮಾಡಿದೆ. ಅದನ್ನು ಆಧರಿಸಿ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಲಿದ್ದಾರೆ. ಬಳಿಕ ಅಗತ್ಯ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದರು.ನಾಳೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಸಭೆ ನಡೆಯಲಿದೆ. ಕೋವಿಡ್ ಅಂತರರಾಷ್ಟ್ರೀಯ ಸಮಸ್ಯೆಯಾಗಿರುವುದರಿಂದ ರಾಜ್ಯ ಸರ್ಕಾರವೊಂದೇ ಏಕಮುಖ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು. +60 ವರ್ಷ ಮೇಲ್ಪಟ್ಟವರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಕೆಮ್ಮು, ಜ್ವರದಂತಹ ರೋಗಲಕ್ಷಣಗಳಿರುವವರು ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಸಂತ್ರಸ್ತರ ಸ್ವಯಂ ರಕ್ಷಣೆ ಹಾಗೂ ಇತರರ ಸುರಕ್ಷತೆಗಾಗಿ ಕಡ್ಡಾಯ ಮಾಸ್ಕ್ ಬಳಕೆ ಒಳ್ಳೆಯದು ಎಂದರು. ಒಂದು ವೇಳೆ ರಾಜ್ಯದಲ್ಲಿ ಜೆಎನ್-1 ಸೋಂಕು ಪತ್ತೆಯಾದರೂ ಕೂಡ ಆತಂಕಪಡುವ ಅಗತ್ಯವಿಲ್ಲ. ರಾಜ್ಯಸರ್ಕಾರ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಮೂಲಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು. +ಅಘೋಷಿತ ತುರ್ತು ಪರಿಸ್ಥಿತಿ :ದೇಶದಲ್ಲಿಂದು ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಂಸತ್ ಮೇಲಿನ ದಾಳಿಯಲ್ಲಿನ ಲೋಪಗಳ ಬಗ್ಗೆ ಪ್ರಶ್ನೆ ಮಾಡಿದವರನ್ನು ಅಮಾನತುಗೊಳಿಸಲಾಗುತ್ತಿದೆ. ಪಾಸ್ ನೀಡಿ ಘಟನೆಗೆ ಕಾರಣವಾದ ಸಂಸದ ಪ್ರತಾಪ್ ಸಿಂಹ ವಿರುದ್ಧ ಯಾವುದೇ ಕ್ರಮ ಇಲ್ಲ. ಯಾವುದೇ ಚರ್ಚೆಯಿಲ್ಲದೆ ಮಸೂದೆಯನ್ನು ಅಂಗೀಕಾರಗೊಳಿಸಿದೆ. ಪ್ರತಿಬಾರಿ ತುರ್ತು ಪರಿಸ್ಥಿತಿಯನ್ನು ಪ್ರಶ್ನಿಸುವ ಬಿಜೆಪಿಯನ್ನು ದೇಶದಲ್ಲಿ ಅರಾಜಕತೆ ನಿರ್ಮಿಸಿದ್ದಾರೆ. ಬುದ್ಧಿಜೀವಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಕೇಂದ್ರ ಸರ್ಕಾರದ ಲೋಪಗಳ ವಿರುದ್ಧ ಮಾತನಾಡಲು ಎದುರುವಂತಹ ವಾತಾವರಣ ಇದೆ. +ತೆಲಂಗಾಣದ ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ +ಚುನಾವಣಾ ಆಯೋಗ, ಇಡಿ, ಐಟಿ, ಸಿಟಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳು ದುರುಪಯೋಗಗೊಳ್ಳುತ್ತಿವೆ, ಸಂಸತ್ ಮೇಲೆ ಗೌರವ ಇಲ್ಲದಂತಾಗಿದೆ, ಜನಪ್ರತಿನಿಗಳಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಕಿಡಿಕಾರಿದರು. ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸೇರಿದ ಮೇಲೆ ಬಲ ಹೆಚ್ಚಿಸಿಕೊಂಡು ಮಾತನಾಡುತ್ತಿದ್ದಾರೆ. ಆದರೆ ಚುನಾವಣೆಯಲ್ಲಿ ಅವರು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_284_4.txt b/eesanje/url_46_284_4.txt new file mode 100644 index 0000000000000000000000000000000000000000..3206f6c3c34ac97bcff180908c2e9bf1fd0ed4b0 --- /dev/null +++ b/eesanje/url_46_284_4.txt @@ -0,0 +1,6 @@ +ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಮೂವರ ಬಂಧನ +ಬೆಂಗಳೂರು,ಡಿ.19- ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯದ ಅವಿನಾಶ್, ಹಾಸನದ ಶಶಿಕುಮಾರ್ ಮತ್ತು ರಾಹುಲ್ ಬಂಧಿತ ಆರೋಪಿಗಳು. +ಶೇಷಾದ್ರಿಪುರಂ ಪೊಲೀಸ್ ಠಾಣೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಗಸ್ತಿನಲ್ಲಿದ್ದ ಪೊಲೀಸರು ಆ ವ್ಯಕ್ತಿಗಳ ಬಳಿ ಹೋಗಿ ದ್ವಿಚಕ್ರ ವಾಹನದ ಸಮೇತ ಠಾಣೆಗೆ ಕರೆತಂದು ಸುದೀರ್ಘ ವಿಚಾರಣೆಗೊಳಪಡಿಸಿದಾಗ ಈ ಹಿಂದೆ ಕಳವು ಮಾಡಿದ 20 ದ್ವಿಚಕ್ರ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇವುಗ¼ ಒಟ್ಟು ಬೆಲೆ 25 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. +ಬಂಧಿತ ಆರೋಪಿಗಳಿಬ್ಬರು ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ. +ತೆಲಂಗಾಣದ ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ +ಈ ಪ್ರಕರಣದಿಂದ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 20 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಕೇಂದ್ರ ವಿಭಾಗದ ಉಪಪೊಲೀಸ್ ಆಯುಕ್ತ ಶೇಖರ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರಕಾಶ್ ಅವರ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಮತ್ತು ಸಿಬ್ಬಂದಿ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_284_5.txt b/eesanje/url_46_284_5.txt new file mode 100644 index 0000000000000000000000000000000000000000..9e62ed58ccbcbb67ce83c63616bc3d23574d5db6 --- /dev/null +++ b/eesanje/url_46_284_5.txt @@ -0,0 +1,12 @@ +ನಮ್ಮ ಮನವಿಗೆ ಸ್ಪಂದಿಸುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ : ಸಿಎಂ +ನವದೆಹಲಿ, ಡಿ.19- ಬರ ಹಾಗೂ ನೀರಾವರಿಯ ವಿಚಾರವಾಗಿ ರಾಜ್ಯಸರ್ಕಾರದ ಮನವಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾಧಾನದಿಂದ ಕೇಳಿದ್ದು, ಸಂಬಂಧಪಟ್ಟ ಇಲಾಖೆಗಳಿಗೆ ಅಗತ್ಯ ಸೂಚನೆ ನೀಡುವ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಸತ್‍ನಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬರ ನಿರ್ವಹಣೆಯ ಅನುದಾನ ಹಾಗೂ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಸಂಬಂಧಪಟ್ಟಂತೆ 5 ಪ್ರಮುಖ ವಿಚಾರಗಳನ್ನು ಪ್ರಧಾನಿಯವರೊಂದಿಗೆ ಚರ್ಚಿಸಿದ್ದಾಗಿ ಹೇಳಿದರು. +ಬರ ನಿರ್ವಹಣೆಗೆ ಎನ್‍ಡಿಆರ್‍ಎಫ್ ನಡಿ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರ ಈಗಾಗಲೇ ಮೂರು ಬಾರಿ ಪ್ರಸ್ತಾವನೆಗಳನ್ನು ಸಲ್ಲಿಸಿದ್ದು, ಒಟ್ಟು 18,177.44 ಕೋಟಿ ರೂ.ಗಳನ್ನು ನೀಡುವಂತೆ ಮನವಿ ಮಾಡಿದೆ. ಕೇಂದ್ರದಿಂದ ಅಧಿಕಾರಿಗಳ ತಂಡ ರಾಜ್ಯಕ್ಕೆ ಬಂದು ಅಧ್ಯಯನ ನಡೆಸಿದ ವರದಿಯನ್ನು ಕೃಷಿ ಇಲಾಖೆಗೆ ನೀಡಿದೆ. ಅದರ ಆಧಾರದ ಮೇಲೆ ಉಪ ಸಮಿತಿ ರಚನೆಯಾಗಿತ್ತು. ಅಲ್ಲಿಂದ ಕಾರ್ಯಕಾರಿ ಸಮಿತಿಯ ಮುಂದೆಯೂ ಚರ್ಚೆಯಾಗಿದೆ. +ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿರುವ ಉನ್ನಾತಾಧಿಕಾರಿ ಸಮಿತಿ ಸಭೆ ನಡೆಸಿ ಪರಿಹಾರ ಪಾವತಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ಆದರೆ ಸಮಿತಿಯ ಸಭೆಯನ್ನೇ ನಡೆಸಿಲ್ಲ. ಈ ಬಗ್ಗೆ ಪ್ರಧಾನಮಂತ್ರಿಯವರ ಗಮನಕ್ಕೆ ತರಲಾಯಿತು. ಅಮಿತ್ ಷಾ ಅವರಿಗೆ ಈ ಬಗ್ಗೆ ಸೂಚನೆ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. +ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ +ಬರಗಾಲದ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಲು ಕಾಯ್ದೆಯಲ್ಲಿಯೇ ಅವಕಾಶವಿದೆ. ಅದಕ್ಕೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಬೇಕು. ಈ ಬಗ್ಗೆಯೂ ಪ್ರಧಾನಿಯವರ ಗಮನ ಸೆಳೆಯಲಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಂದ ಅನುಮತಿ ಕೊಡಿಸುವಂತೆ ಮನವಿ ಮಾಡಲಾಗಿದೆ ಎಂದರು. +ಮಹದಾಯಿ ನದಿ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಾಧಿಕರಣದ ತೀರ್ಪು ಪ್ರಕಟಗೊಂಡಿದ್ದು, ಅಧಿಸೂಚನೆ ಜಾರಿಯಾಗಿದೆ. ಪರಿಸರ ನಿರಪೇಕ್ಷಣ ಪತ್ರ ಬಾಕಿ ಇದ್ದು, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಪ್ರಮಾಣಪತ್ರ ಕೊಡಿಸುವಂತೆ ಮನವಿ ಮಾಡಿದ್ದೇವೆ. ಈಗಾಗಲೇ ಟೆಂಡರ್ ಕರೆದಿದ್ದು, ಅಂದಾಜು ವೆಚ್ಚವೂ ಸಿದ್ಧಗೊಂಡಿದೆ. ಕೇಂದ್ರದಿಂದ ನಿರಪೇಕ್ಷಣಾ ಪತ್ರ ದೊರೆತರೆ ಕಾಮಗಾರಿ ಆರಂಭಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿಯವರಿಗೆ ಒತ್ತಾಯಪೂರ್ವಕವಾಗಿ ಗಮನ ಸೆಳೆದಿದ್ದೇವೆ ಎಂದು ಹೇಳಿದರು. +ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಬಜೆಟ್‍ನಲ್ಲಿ 5,300 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿತ್ತು. ಹಿಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಮಂಡಿಸಿದ ಬಜೆಟ್‍ನಲ್ಲೂ ಇದನ್ನು ಉಲ್ಲೇಖಿಸಿದ್ದರು. ಬಹುತೇಕ ಡಿಸೆಂಬರ್ ತಿಂಗಳು ಮುಗಿಯುತ್ತಾ ಬಂದಿದ್ದರೂ ಈವರೆಗೂ ಒಂದು ರೂಪಾಯಿ ನೀಡಿಲ್ಲ. ಅದನ್ನು ಪ್ರಧಾನಿಯ ಗಮನಕ್ಕೆ ತಂದಿದ್ದು, ಕೂಡಲೇ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಈ ಹಣ ಕೇಂದ್ರಸರ್ಕಾರವೇ ಒಪ್ಪಿಕೊಂಡಿರುವ ಬದ್ಧತೆಯಾಗಿದೆ ಎಂದು ಉಲ್ಲೇಖಿಸುವುದಾಗಿ ಹೇಳಿದರು. +ಮೇಕೆದಾಟು ಯೋಜನೆ ಕುರಿತಂತೆಯೂ ಪ್ರಧಾನಿಯವರ ಬಳಿ ಚರ್ಚೆ ನಡೆಸಿದ್ದೇನೆ. 66 ಟಿಎಂಸಿ ನೀರು ಸಂಗ್ರಹಿಸುವ ಮೇಕೆದಾಟು ಸಮತೋಲಿತ ಅಣೆಕಟ್ಟು ನಿರ್ಮಾಣದಿಂದ ತಮಿಳುನಾಡಿಗೆ ಹೆಚ್ಚಿನ ಲಾಭವಾಗಲಿದೆ. ರಾಜಕೀಯ ಕಾರಣಕ್ಕಾಗಿ ಮಾತ್ರ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ರಾಜ್ಯ ಸರ್ಕಾರ ಈಗಾಗಲೇ ಯೋಜನೆಯ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ಪೂರ್ವಾನುಮತಿಗಳನ್ನು ನೀಡುವಂತೆ ಮನವಿ ಮಾಡಿದ್ದೇವೆ ಎಂದರು. +ಮೋದಿ ನಾಯಕತ್ವಕ್ಕೆ ಜಾಗತೀಕ ಮನ್ನಣೆ : ಭೂಪೇಂದರ್ +ನೀರಾವರಿ ಯೋಜನೆ ಹಾಗೂ ರಾಜ್ಯಕ್ಕೆ ಅಗತ್ಯ ನೆರವು ಪಡೆದುಕೊಳ್ಳುವ ಸಲುವಾಗಿ ಪ್ರಧಾನಿಯವರ ಭೇಟಿಗೆ ಸಮಯಾವಕಾಶ ಸಿಕ್ಕರೆ ಸರ್ವಪಕ್ಷ ನಿಯೋಗವನ್ನು ಕರೆತಂದು ಮತ್ತೊಮ್ಮೆ ಪ್ರಧಾನಿಯವರನ್ನು ಭೇಟಿ ಮಾಡಲು ಸಿದ್ಧವಿರುವುದಾಗಿ ಹೇಳಿದರು. +ಇಂದಿನ ಭೇಟಿಯಲ್ಲಿ ಬರ ಹಾಗೂ ನೀರಾವರಿ ಯೋಜನೆಗಳ ಕುರಿತಂತೆ ಹೆಚ್ಚು ಗಮನ ಕೇಂದ್ರೀಕರಿಸಲಾಯಿತು. ಜಿಎಸ್‍ಟಿ ಹಾಗೂ ತೆರಿಗೆ ಪಾಲು, ಅನ್ನಭಾಗ್ಯ ಯೋಜನೆ ಅಕ್ಕಿ ಸೇರಿದಂತೆ ಇತರ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿಲ್ಲ. ಹೆಚ್ಚಿನ ವಿಚಾರಗಳು ಪ್ರಸ್ತಾಪವಾದರೆ ವಿಷಯಾಂತರವಾಗಬಹುದು ಎಂಬ ಎಚ್ಚರಿಕೆ ವಹಿಸಲಾಯಿತು ಎಂದು ಹೇಳಿದರು. \ No newline at end of file diff --git a/eesanje/url_46_284_6.txt b/eesanje/url_46_284_6.txt new file mode 100644 index 0000000000000000000000000000000000000000..b539ca59fd841d7c67d76ad07d36bab59a2bf869 --- /dev/null +++ b/eesanje/url_46_284_6.txt @@ -0,0 +1,9 @@ +ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ +ನವದೆಹಲಿ,ಡಿ.19- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದರಲ್ಲಿ 4,663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ. +ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. +ಎನ್.ಡಿ.ಆರ್.ಎಫ್. ನಿಂದ ಬೆಳೆ ನಷ್ಟಕ್ಕೆ 4,663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, ಬರಪೀಡಿತ ಪ್ರದೇಶಗಳಲ್ಲಿ ಆದಾಯ ನಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಗ್ರಾಜುಯೇಷನ್ಸ್ ರಿಲೀಫ್ 12,577.86 ಕೋಟಿ ರೂ.ಗಳು ಸೇರಿ 18,177 ಕೋಟಿ ರೂ.ಗಳನ್ನು ಒದಗಿಸುವಂತೆ ಮನವಿ ಮಾಡಲಾಗಿದೆ. ರೈತರಿಗೆ ಇನ್ಪುಟ್ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ, ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು, ಪಿಎಂ-ಕಿಸಾನ್ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. +ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲ್ಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದರು. +ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ +ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ಸೆಪ್ಟಂಬರ್ 22 ರಂದು ಸಲ್ಲಿಸಲಾಗಿತ್ತು. ಭಾರತ ಸರ್ಕಾರದ ಬರ ಅಧ್ಯಯನ ತಂಡವು ಅಕ್ಟೋಬರ್ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. +ಇದರಲ್ಲಿ ತುರ್ತು ಪರಿಹಾರದ 12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. +ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮುಖ್ಯಮಂತ್ರಿಗಳು ಮನವರಿಕೆ ಮಾಡಿಕೊಟ್ಟಿದ್ದು, ರೈತರ ಹಿತರಕ್ಷಣೆಯ ದೃಷ್ಟಿಯಿಂದ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದಾರೆ. \ No newline at end of file diff --git a/eesanje/url_46_284_7.txt b/eesanje/url_46_284_7.txt new file mode 100644 index 0000000000000000000000000000000000000000..278be78e129c8e0a33be51aa94bc98ebf246bf34 --- /dev/null +++ b/eesanje/url_46_284_7.txt @@ -0,0 +1,6 @@ +ತೆಲಂಗಾಣದ ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಡಿ.19- ಬೆಳಗಾವಿಯ ಸುವರ್ಣಸೌಧದ ವಿಧಾನಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ತಿರುಚಿದ ವಿಡಿಯೋವನ್ನು ಹಂಚಿಕೊಂಡಿದ್ದ ತೆಲಂಗಾಣದ ಬಿಆರ್‍ಎಸ್ ಪಕ್ಷದ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. +ಮಾಜಿ ಸಚಿವರೂ ಆಗಿರುವ ಬಿಆರ್‍ಎಸ್‍ನ ಕೆ.ಟಿ.ರಾಮರಾವ್ ಅವರು ಬಿಜೆಪಿಯ ಐಟಿ ಸೆಲ್‍ನಿಂದ ವೈರಲ್ ಮಾಡಿದ್ದ ವಿಡಿಯೋವನ್ನು ಹಂಚಿಕೊಂಡು ಕರ್ನಾಟಕದಲ್ಲಿ ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಹಣವಿಲ್ಲ ಎಂದು ಮುಖ್ಯಮಂತ್ರಿ ಒಪ್ಪಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ತೆಲಂಗಾಣದಲ್ಲೂ ಇದೇ ರೀತಿಯ ವಾತಾವರಣ ನಿರ್ಮಾಣವಾಗಲಿದೆ. ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸಿ ಅಧಿಕಾರ ಹಿಡಿಯುವ ಮೊದಲು ತಾವು ನೀಡುವ ಭರವಸೆಗಳ ಬಗ್ಗೆ ತನಿಖಾ ಪ್ರಮಾಣದ ಅಧ್ಯಯನವನ್ನಾದರೂ ನಡೆಸಬೇಕಿತ್ತಲ್ಲವೇ ಎಂದು ಕೆ.ಟಿ.ಆರ್ ಪ್ರಶ್ನಿಸಿದ್ದಾರೆ. +ಕಾಶ್ಮೀರದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಿದವರ ವಿರುದ್ಧ ಎಫ್‍ಐಆರ್ +ಇದಕ್ಕೆ ಸಾಮಾಜಿಕ ಜಾಲತಾಣದಲ್ಲೇ ತಿರುಗೇಟು ನೀಡಿರುವ ಸಿದ್ದರಾಮಯ್ಯ, ತೆಲಂಗಾಣದಲ್ಲಿ ನಿಮ್ಮ ಪಕ್ಷ ಏಕೆ ಸೋತಿದೆ ಎಂದು ನಿಮಗೆ ಗೊತ್ತಿದೆಯೇ?, ನಿಮಗೆ ಕನಿಷ್ಟ ನಕಲಿಯಾದ ಅಥವಾ ತಿರುಚಿದ ವಿಡಿಯೋವನ್ನು ಗುರುತಿಸಲು ಸಾಧ್ಯವಾಗಿಲ್ಲ, ಸತ್ಯವನ್ನು ಕಂಡುಕೊಳ್ಳಲು ಬರುವುದಿಲ್ಲ ಎಂದು ಟಾಂಗ್ ನೀಡಿದ್ದಾರೆ. +ಬಿಜೆಪಿಯವರು ತಿರುಚಿದ ನಕಲಿ ವಿಡಿಯೋವನ್ನು ಸೃಷ್ಟಿಸಿದ್ದಾರೆ. ನಿಮ್ಮ ಪಕ್ಷವೂ ಅದನ್ನು ಪ್ರಸರಣ ಮಾಡುತ್ತಿದೆ. ಬಿಜೆಪಿಯ ಬಿಟೀಂ ಆಗಲು ಬಿಆರ್‍ಎಸ್ ಪಕ್ಷ ಸೂಕ್ತವಾಗಿದೆ. ನಿಮಗೆ ಸತ್ಯವನ್ನು ತಿಳಿದುಕೊಳ್ಳಬೇಕೆಂದಿದ್ದರೆ ನನ್ನದೆ ಸಾಮಾಜಿಕ ಜಾಲತಾಣದಲ್ಲಿರುವ ಪೂರ್ಣ ಪ್ರಮಾಣದ ಮಾಹಿತಿಯನ್ನು ಓದಿಕೊಳ್ಳಿ ಎಂದು ಲಿಂಕ್ ಒಂದನ್ನು ಶೇರ್ ಮಾಡಿದ್ದಾರೆ. \ No newline at end of file diff --git a/eesanje/url_46_284_8.txt b/eesanje/url_46_284_8.txt new file mode 100644 index 0000000000000000000000000000000000000000..867a90f0bac73053c1f05baef344c8f28c95601f --- /dev/null +++ b/eesanje/url_46_284_8.txt @@ -0,0 +1,7 @@ +ಅನಿಲ್ ಶೆಟ್ಟಿ ಮೇಲೆ ಹಲ್ಲೆ : ಶಿಸ್ತುಕ್ರಮಕ್ಕೆ ಒತ್ತಾಯಿಸಿ ವಿಜಯೇಂದ್ರಗೆ ಪತ್ರ +ಬೆಂಗಳೂರು,ಡಿ.19-ಸಂಸದ ತೇಜಸ್ವಿ ಸೂರ್ಯ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮುಖಂಡರಾದ ಅನಿಲ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನಿಷ್ಠಾವಂತ ಬಿಜೆಪಿ ಕಾರ್ಯಕರ್ತರು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದಾರೆ. ಬಿಜೆಪಿ ನಿಷ್ಠಾವಂತ ಕಾರ್ಯಕರ್ತರ ಬಳಗ ಬಿಟಿಎಂ ವಿಧಾನಸಭಾ ಕ್ಷೇತ್ರ ಎರಡು ಪುಟಗಳ ಪತ್ರವನ್ನು ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಬಿಜೆಪಿಯ ನಿಷ್ಠಾವಂತ ಕಾರ್ಯಕರು ಅನಿಲ್ ಶೆಟ್ಟಿ ಮೇಲೆ ಹಲ್ಲೆ ಮಾಡಿರುವ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ. +ನ.16ರಂದು ರಾಜೇಂದ್ರನಗರದ ಪಳನಿ ಮನೆ ಹತ್ತಿರ ಇರುವ ತೇಜಸ್ವಿ ಸೂರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ವಿಶ್ವಕರ್ಮ ಮತ್ತು ಸುಹಾನಿ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದರು. ಅದೇ ದಿನ ಸಂಜೆ ಸುದರ್ಶನ್ ಅವರು ರಾಜೇಂದ್ರನಗರದ ಕಾರ್ಯಕ್ರಮಕ್ಕೆ ತೇಜಸ್ವಿ ಸೂರ್ಯ ಬರುತ್ತಾರೆ. ಹೀಗಾಗಿ ಸ್ಥಳೀಯ ನಿವಾಸಿಗಳಿಗೆ ಬೆಡ್‍ಶೀಟ್‍ಗಳನ್ನು ಮುಖಂಡರಾದ ಶ್ರೀಧರ್ ರೆಡ್ಡಿ ಅವರು ಕೊಡಿಸುತ್ತಾರೆ ಎಂದು ಹೇಳಿದ್ದರು. +ರಾಜೇಂದ್ರ ನಗರದ 6ನೇ ಕ್ರಾಸ್‍ನ ಪುನೀತ್ ಸರ್ಕಲ್‍ನಲ್ಲಿ ಶಾಮೀನ ಹಾಕಿಸಿ ಬೆಡ್‍ಶೀಟ್ ಬದಲು ಸೀರೆ ವಿತರಿಸುವ ತೀರ್ಮಾನಕ್ಕೆ ಬರಲಾಯಿತು. ಅನಿಲ್ ಶೆಟ್ಟಿ ಬಳಗದವರು ಪಳನಿ ಮನೆಯ ಹತ್ತಿರ ಹೋಗೋಣವೆಂದರೆ ಶ್ರೀಧರ್ ರೆಡ್ಡಿ ಮತ್ತು ಸುದರ್ಶನ್ ಅವರು 6ನೇ ಕ್ರಾಸ್‍ನಲ್ಲಿ ಸೀರೆ ಹಂಚೋಣ ಎಂದು ಹೇಳಿದ್ದರು. +ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ +ಆ ವೇಳೆಗೆ ವಿಷಯ ತಿಳಿದ ಅನಿಲ್ ಶೆಟ್ಟಿ, ಸೀರೆ ಹಂಚುವ ಜಾಗಕ್ಕೆ ಬಂದು ನಿಮಗೆ ಇಲ್ಲಿ ಕಾರ್ಯಕ್ರಮ ನಡೆಸಲು ಹೇಳಿದವರು ಯಾರು? ನಮಗೆ ಮಾಹಿತಿ ನೀಡಬೇಕಲ್ಲವೇ ಎಂದು ಕೇಳಿದಾಗ, ಸುದರ್ಶನ್ ಬೆಂಬಲಿಗರು ಗಲಾಟೆ ಎಬ್ಬಿಸಿ ಒಂದು ಗತಿ ಕಾಣಿಸುತ್ತೇನೆ ಎಂದು ಧಮ್ಕಿ ಹಾಕಿದರು ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. ಸುಮಾರು 15 ಜನರು ಕೋರಮಂಗಲದ ಅನಿಲ್ ಶೆಟ್ಟಿ ಮನೆಗೆ ಹೋಗಿ ಕೆಟ್ಟ ಶಬ್ದಗಳಿಂದ ನಿಂದಿಸಿದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಾರೆ. +ಬಳಿಕ ಅನಿಲ್ ಶೆಟ್ಟಿ ಅವರು ಕೋರಮಂಗಲ ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಮುಂದಾಗುತ್ತಿದ್ದಂತೆ ತೇಜಸ್ವಿ ಸೂರ್ಯ ಮೂಲಕ ಸಮಸ್ಯೆ ಪರಿಹರಿಸುವ ಆಶ್ವಾಸನೆಯನ್ನು ನೀಡಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮವನ್ನು ಜರುಗಿಸಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೂಡಲೇ ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಸಾಕಷ್ಟು ಒಳಜಗಳಗಳಿದ್ದು, ಇದು ಪಕ್ಷ ಸಂಘಟನೆಗೆ ಹಿನ್ನಡೆಯಾಗಿದೆ. ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕೆಂದು ನಿಷ್ಠಾವಂತ ಪಕ್ಷದ ಕಾರ್ಯಕರ್ತರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_284_9.txt b/eesanje/url_46_284_9.txt new file mode 100644 index 0000000000000000000000000000000000000000..80ca168841f87fb7fa3c2daeaf60d45906a7615c --- /dev/null +++ b/eesanje/url_46_284_9.txt @@ -0,0 +1,8 @@ +ಮತ್ತೆ ವಕ್ಕರಿಸಿದ ಕಿಲ್ಲರ್ ಕೊರೊನಾ, ಶುರುವಾಯ್ತು ಆತಂಕ +ಬೆಂಗಳೂರು,ಡಿ.18- ಕೊರೊನಾ ಹೆಸರು ಕೇಳಿದರೆ ಸಾಕು ಜನರು ಬೆಚ್ಚಿ ಬೀಳ್ತಾರೆ. ಅಲೆಗಳ ಮೇಲೆ ಅಲೆ ಬಂದು ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಕಳೆದೆರಡು ವರ್ಷಗಳಿಂದ ಮರೆಯಾಗಿದ್ದ ಡೆಡ್ಲಿ ಕ್ರೂರಿ ಕೊರೊನಾ ಮತ್ತೆ ಒಕ್ಕರಿಸಿದ್ದು ದೇಶದೆಲ್ಲೆಡೆ ತಲ್ಲಣ ಉಂಟುಮಾಡಿದೆ. +ಕೆಲದಿನಗಳ ಹಿಂದೆ ಕೇರಳ, ತಮಿಳುನಾಡು ಸೇರಿ ಹಲವೆಡೆ ಕೊರೊನಾ ಪ್ರಕರಣಗಳ ಸಂಖ್ಯೆ ಉಲ್ಬಣಗೊಂಡಿದೆ. ಕೇರಳದಲ್ಲಿ ಕೊರೊನಾ ಹೊಸ ಥಳಿ ಪತ್ತೆಯಾಗಿದ್ದು, ಕರ್ನಾಟಕ ರಾಜ್ಯದಲ್ಲೂ ಸಹ ಆತಂಕದ ಕಾರ್ಮೋಡ ಕವಿಯತೊಡಗಿದೆ. ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಈಗಾಗಲೇ ಆರೋಗ್ಯ ಸಚಿವರು ಮೊದಲ ಸುತ್ತಿನ ಸಭೆ ನಡೆಸಿದ್ದಾರೆ. +ಹಿಂದುಳಿದ ವರ್ಗಗಳ ಸಮೀಕ್ಷೆಯನ್ನು ಆಕ್ಷೇಪಿಸುತ್ತಿರುವುದು ಅರ್ಥಹೀನ : ಸಚಿವ ರಾಜಣ್ಣ +ವೈರಸ್ ತಜ್ಞ ಡಾ.ರವಿ ನೇತೃತ್ವದಲ್ಲಿ ನಾಳೆ ನಡೆಯಲಿರುವ 2 ನೇ ಸುತ್ತಿನ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಏನೆಲ್ಲಾ ರೂಲ್ಸ್ ಜಾರಿಯಾಗಬಹುದು. ಮಾರ್ಗಸೂಚಿ ಹೇಗಿರಬಹುದು ಎಂಬುದನ್ನು ಕಾದುನೋಡಬೇಕಾಗಿದೆ. ಒಂದು ವೇಳೆ ಮಾರ್ಗಸೂಚಿ ಹೇಗಿರಲಿದೆ ಎನ್ನುವುದನ್ನು ನೋಡುವುದಾದರೆ ಆಸ್ಪತ್ರೆ ಒಳಗಡೆ ಹಾಗೂ ಹೊರಗಡೆ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿಯೇ ವೈದ್ಯರು ರೋಗಿಗಳಿಗೆ ಟ್ರೀಟ್‍ಮೆಂಟ್ ನೀಡಬೇಕು. +ಆಸ್ಪತ್ರೆ ಮತ್ತು ಜನಸಂದಣಿ ಇರುವ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಜ್ವರ ಹಾಗೂ ಶೀತದ ನಡುವೆ ಬೇರೆ ಖಾಯಿಲೆಯಿಂದ ಬಳಲುತ್ತಿರುವವರು ಸ್ವಚಿಕಿತ್ಸೆಗೆ ಒಳಗಾಗದೇ ವೈದ್ಯರನ್ನು ಭೇಟಿ ಮಾಡಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯಬೇಕು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಟೆಸ್ಟ್ ಅನ್ನು ಕಡ್ಡಾಯ ಮಾಡಲಾಗುವುದು. +ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ : ಗೃಹ ಸಚಿವ ಡಾ.ಜಿ.ಪರಮೇಶ್ವರ್ +ಹಾಸಿಗೆ, ಐಸಿಯು ಮತ್ತು ವೈದ್ಯಕೀಯ ಉಪಕರಣಗಳು ಸುಸ್ಥಿತಿಯಲ್ಲಿಡುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಹೀಗೆ ಹಲವಾರು ಮಾರ್ಗಸೂಚಿಗಳು, ನಿಯಮಗಳು ಜಾರಿಗೆ ಬರಲಿವೆ. ಏನೇ ಇದ್ದರೂ ಜನರು ಮಾತ್ರ ಸುರಕ್ಷಿತವಾಗಿ ಈ ಹಿಂದಿನ ಮಾರ್ಗಸೂಚಿಗಳನ್ನು ಪಾಲಿಸಿ ಮಹಾಮಾರಿಯಿಂದ ರಕ್ಷಿಸಿಕೊಳ್ಳಬೇಕಾಗಿದೆ. \ No newline at end of file diff --git a/eesanje/url_46_285_1.txt b/eesanje/url_46_285_1.txt new file mode 100644 index 0000000000000000000000000000000000000000..a44ae50963045336c7b369c0264048d135b04ccc --- /dev/null +++ b/eesanje/url_46_285_1.txt @@ -0,0 +1,9 @@ +ನಾಳೆ ಪಿಎಂ ಮೋದಿ – ಸಿಎಂ ಸಿದ್ದು ಭೇಟಿ +ಬೆಂಗಳೂರು,ಡಿ.18- ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳಿನಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಯವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತಲೇ ಇದ್ದರು. ಆದರೆ ಪ್ರಧಾನಿ ಕಚೇರಿಯಿಂದ ಸಮಯಾವಕಾಶ ಸಿಕ್ಕಿರಲಿಲ್ಲ. +ನವೆಂಬರ್ 27 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದ ಸಿದ್ದರಾಮಯ್ಯನವರು, ರಾಜ್ಯದ ಬರ ಪರಿಸ್ಥಿತಿ, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆಗೆ ತಮ್ಮನ್ನು ಭೇಟಿ ಮಾಡಲು ಸಮಯ ನೀಡುವಂತೆ ಮನವಿ ಮಾಡಿದ್ದರು. ಅದಕ್ಕೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. +ಇಂದು ಸಂಜೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯನವರು ಮೂರು ದಿನಗಳ ಕಾಲ ದೆಹಲಿಯಲ್ಲೇ ಉಳಿಯಲಿದ್ದಾರೆ. ಅಲ್ಲಿ ಅಖಿಲ ಭಾರತ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸುವ ಜೊತೆಗೆ ಕೇಂದ್ರ ಸರ್ಕಾರದ ವಿವಿಧ ಸಚಿವರುಗಳ ಜೊತೆ ಭೇಟಿಗೆ ಸಮಯ ಕೇಳಿದ್ದಾರೆ. ಕೆಲ ರಾಜ್ಯದ ಸಚಿವರುಗಳು ಸಮಯ ನೀಡಿದ್ದಾರೆ. +ಅಚ್ಚರಿ ಎಂಬಂತೆ ಪ್ರಧಾನಿ ಕಚೇರಿ ಕೂಡ ಸಿದ್ದರಾಮಯ್ಯ ಅವರಿಗೆ ನಾಳೆ ಬೆಳಿಗ್ಗೆ 11 ಗಂಟೆಗೆ ಸಮಯ ನೀಡಿದೆ. ಇಂದು ಸಂಜೆ ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಬರ ಪರಿಹಾರ, ಮಹದಾಯಿ, ಮೇಕೆದಾಟು ಸೇರಿದಂತೆ ವಿವಿಧ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅಗತ್ಯ ಪೂರ್ವಾನುಮತಿ, ತೆರಿಗೆ ಪಾಲಿನ ಹಂಚಿಕೆ ಹೆಚ್ಚಳ, ಆರ್ಥಿಕ ನೆರವು ಸೇರಿದಂತೆ ಹಲವಾರು ವಿಷಯಗಳಿಗೆ ಸಂಬಂಧಪಟ್ಟಂತೆ ಲಿಖಿತ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿ ಕಚೇರಿ ಸಿದ್ಧಪಡಿಸಿಕೊಂಡಿದೆ. +ನಾಳೆ ಸಿದ್ದರಾಮಯ್ಯಅವರು ಖುದ್ದಾಗಿ ಪ್ರಧಾನಿಯವರಿಗೆ ರಾಜ್ಯದ ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿಯವರ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಷಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಘೋಯಲ್ ಮತ್ತಿತರರು ಹಾಜರಿರುವ ಸಾಧ್ಯತೆಯಿದೆ. + : ಬೆಂಗಳೂರು ಸೇರಿ ದೇಶದ ಹಲವೆಡೆ ಎನ್‍ಐಎ ದಾಳಿ +ರಾಜ್ಯದ ಗಂಭೀರ ಸಮಸ್ಯೆಗಳ ಕುರಿತು ಚರ್ಚಿಸಲು ಕೇಂದ್ರದ ಬಳಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಬೇಕೆಂಬುದು ಹಲವು ದಿನಗಳ ಬೇಡಿಕೆಯಾಗಿದೆ. ಆದರೆ ಸದ್ಯಕ್ಕೆ ಮುಖ್ಯಮಂತ್ರಿಯವರ ವೈಯಕ್ತಿಕ ಭೇಟಿಗೆ ಮಾತ್ರ ಸಮಯ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಸರ್ವಪಕ್ಷದ ನಿಯೋಗದ ಭೇಟಿಗೂ ಸಮಯ ಸಿಗುವ ನಿರೀಕ್ಷೆಗಳು ಗರಿಗೆದರಿವೆ. ಮುಖ್ಯಮಂತ್ರಿಯಾದ ತಮ್ಮ ಭೇಟಿಗೆ ಪ್ರಧಾನಿಯವರು ಸಮಯ ನೀಡಿಲ್ಲ ಎಂದು ನಿನ್ನೆ ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. +ಬೆಳಗಾವಿ ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. ಆ ವೇಳೆ ಶಾಸಕ ಅರವಿಂದ್ ಬೆಲ್ಲದ್ ತಾವು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರೊಂದಿಗೆ ಚರ್ಚೆ ನಡೆಸಿದ್ದು, ಪ್ರಧಾನಿಯವರ ಭೇಟಿಗೆ ಶೀಘ್ರ ಸಮಯ ಸಿಗಲಿದೆ ಎಂಬ ಭರವಸೆ ನೀಡಿದ್ದರು.ನಿರೀಕ್ಷೆಯಂತೆ ಪ್ರಧಾನಿ ಕಚೇರಿ ಸಿದ್ದರಾಮಯ್ಯ ಅವರ ಭೇಟಿಗೆ ಸಮಯ ನೀಡಿದೆ. \ No newline at end of file diff --git a/eesanje/url_46_285_10.txt b/eesanje/url_46_285_10.txt new file mode 100644 index 0000000000000000000000000000000000000000..3403be31f8b7145a8fc753774f86c321af7554dc --- /dev/null +++ b/eesanje/url_46_285_10.txt @@ -0,0 +1,7 @@ +ಭೇಟಿಗೆ ಸಮಯ ಕೊಡದ ಪ್ರಧಾನಿ, ಸಿಎಂ ಸಿದ್ದರಾಮಯ್ಯಆಕ್ರೋಶ +ಹುಬ್ಬಳ್ಳಿ,ಡಿ.17- ಮುಖ್ಯಮಂತ್ರಿಯನ್ನು ಭೇಟಿ ಮಾಡಲಿ ಪ್ರಧಾನಿಯವರು ಸಮಯ ಕೊಡುವುದಿಲ್ಲ ಎಂದರೆ ಒಕ್ಕೂಟ ವ್ಯವಸ್ಥೆಗೆ ಬೆಲೆ ಇದೆಯೇ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಿಂದ ಸಂಗ್ರಹವಾಗುವ 4.50 ಲಕ್ಷ ಕೋಟಿ ತೆರಿಗೆಯಲ್ಲಿ ಕರ್ನಾಟಕಕ್ಕೆ ವಾಪಸ್ ನೀಡುತ್ತಿರುವುದು ಕೇವಲ 50 ಸಾವಿರ ಕೋಟಿ ರೂ.ಗಳು ಮಾತ್ರ ಎಂದು ಆರೋಪಿಸಿದ್ದಾರೆ. +ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರನ್ನು ಭೇಟಿ ಮಾಡಲು ತಾವು ನಾಳೆ ದೆಹಲಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು. ಕಳೆದ ನವೆಂಬರ್ 27 ರಂದು ಪ್ರಧಾನಮಂತ್ರಿ ನರೇಂದ್ರಮೋದಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ರಾಜ್ಯದ ಬರಪರಿಸ್ಥಿತಿ ಕುರಿತು ನಿಮ್ಮೊಂದಿಗೆ ಚರ್ಚೆ ಮಾಡಬೇಕು, ಅದಕ್ಕಾಗಿ ಸಮಯ ನೀಡುವಂತೆ ಮನವಿ ಮಾಡಿದ್ದೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈವರೆಗೂ ಭೇಟಿಗೆ ಸಮಯ ಸಿಕ್ಕಿಲ್ಲ. ಮುಖ್ಯಮಂತ್ರಿಗೇ ಈ ಪರಿಸ್ಥಿತಿ ಇದೆ ಎಂದರೆ ಜನ ಅರ್ಥ ಮಾಡಿಕೊಳ್ಳಬೇಕು ಎಂದರು. +ಶೆಟ್ಟರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ +ನಮ್ಮದು ಒಕ್ಕೂಟ ವ್ಯವಸ್ಥೆ. ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಮಯ ನೀಡುತ್ತಿಲ್ಲ ಎಂದರೆ ಏನರ್ಥ? ನಮ್ಮ ರಾಜ್ಯದ ಸಚಿವರಾದ ಕೃಷ್ಣಭೈರೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ ಕೂಡ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರ ಭೇಟಿಗೆ ಸಮಯ ಕೇಳಿದ್ದರು. ನನಗೂ ಸಮಯ ಕೊಡಲಿಲ್ಲ, ಅವರಿಗೂ ಅವಕಾಶ ಸಿಗಲಿಲ್ಲ. ಇಂತಹ ವಿಷಯಗಳ ಚರ್ಚೆಯೇ ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಬರಪರಿಸ್ಥಿತಿಯಿಂದ ಎನ್‍ಡಿಆರ್‍ಎಫ್ ಮಾರ್ಗಸೂಚಿಯನ್ವಯ 33 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರ 18 ಸಾವಿರ ಕೋಟಿ ರೂ. ಪರಿಹಾರ ನೀಡಬೇಕಿದೆ. ಅದರಲ್ಲಿ ಬೆಳೆ ನಷ್ಟ ಪರಿಹಾರ 4660 ಕೋಟಿ ರೂ. ನಷ್ಟವಾಗಿದೆ ಎಂದರು. ಎನ್‍ಡಿಆರ್‍ಎಫ್ ದುಡ್ಡು ಕೇಂದ್ರ ಸರ್ಕಾರದ್ದಲ್ಲ. ರಾಜ್ಯದ ದುಡ್ಡು. ರಾಜ್ಯಗಳಿಂದ ಸಂಗ್ರಹಿಸಲಾದ ದುಡ್ಡನ್ನೇ ಅದರಲ್ಲಿ ಮೀಸಲಿಡಲಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರವನ್ನು ಹೊರತುಪಡಿಸಿದರೆ ಅತೀ ಹೆಚ್ಚು ತೆರಿಗೆ ಸಂಗ್ರಹಿಸುವ ಎರಡನೇ ರಾಜ್ಯ. ನಮ್ಮಿಂದ ವಾರ್ಷಿಕ 4 ಲಕ್ಷ ಕೋಟಿಗೂ ಅಧಿಕ ಮೊತ್ತದ ತೆರಿಗೆ ಕೇಂದ್ರಕ್ಕೆ ಹೋಗುತ್ತಿದೆ. ಅದರಲ್ಲಿ ತೆರಿಗೆಯ ಪಾಲು ಎಂದು ಈ ವರ್ಷ 37 ಸಾವಿರ ಕೋಟಿ ರೂ. ಮತ್ತು ಕೇಂದ್ರದ ಪ್ರಾಯೋಜಿತ ಯೋಜನೆಯಡಿ 13 ಸಾವಿರ ಕೋಟಿ ರೂ. ಸೇರಿ 50 ಸಾವಿರ ಕೋಟಿ ರೂ. ಮಾತ್ರ. ಇದು ನ್ಯಾಯವೇ ಎಂದು ಪ್ರಶ್ನಿಸಿದರು. +ಈ ವಾಸ್ತವಾಂಶಗಳನ್ನು ಹೇಳಿದರೆ ಬಿಜೆಪಿಯವರು ಜಗಳಕ್ಕೆ ಬರುತ್ತಾರೆ. ನಮ್ಮ ದುಡ್ಡು ಎಂದು ವಾದ ಮಾಡುತ್ತಾರೆ. ಇದು ರಾಜ್ಯದ ದುಡ್ಡು. ಕನ್ನಡಿಗರ ತೆರಿಗೆಯ ಹಣ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. 4 ಲಕ್ಷ ಕೋಟಿ ರೂ. ಸಂಗ್ರಹಿಸಿ ಎಷ್ಟು ವಾಪಸ್ ಕೊಡುತ್ತಿದ್ದಾರೆ. ಬಿಜೆಪಿಯವರು, ಪ್ರಧಾನಿಯವರು ಬರೀ ಭಾಷಣ ಹೊಡಿಯುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_285_11.txt b/eesanje/url_46_285_11.txt new file mode 100644 index 0000000000000000000000000000000000000000..39659e81949cfd9646f223f1e759269a9bb47785 --- /dev/null +++ b/eesanje/url_46_285_11.txt @@ -0,0 +1,5 @@ +ನಕಲಿ ವೈದ್ಯ, ಕ್ಲಿನಿಕ್‍ಗಳಿಗೆ ಬೀಗ +ಬೆಂಗಳೂರು,ಡಿ.17- ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣದ ಬಳಿಕ ಎಚ್ಚೆತ್ತುಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯಾದ್ಯಂತ ತಪಾಸಣಾ ಕಾರ್ಯಗಳನ್ನು ಚುರುಕುಗೊಳಿಸಿದ್ದು, ನಕಲಿ ವೈದ್ಯರು ಹಾಗೂ ಕ್ಲಿನಿಕ್‍ಗಳನ್ನು ಮುಚ್ಚಿಸಲು ಮುಂದಾಗಿದೆ. +ಆರೋಗ್ಯ ಕುಟುಂಬ ಕಲ್ಯಾಣ, ಪೊಲೀಸ್, ಕಂದಾಯ ಇಲಾಖೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ತಂಡ ವೈದ್ಯಕೀಯ ಪ್ರಯೋಗಾಲಯಗಳು, ಚಿಕಿತ್ಸಾಲಯಗಳನ್ನು ಪರಿಶೀಲನೆಗೊಳಪಡಿಸುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಹಲವು ಕಡೆ ತಪಾಸಣಾ ಕಾರ್ಯ ನಡೆಸಲಾಗಿದೆ. ಕುಂದಾಪುರದಲ್ಲಿ 7 ಕ್ಲಿನಿಕ್‍ಗಳು ಹಾಗೂ ಪ್ರಯೋಗಾಲಯಗಳ ಮೇಲೆ ದಾಳಿ ನಡೆಸಿದಾಗ 2 ಕ್ಲಿನಿಕ್‍ಗಳು ನಕಲಿ ಎಂದು ಪತ್ತೆಯಾಗಿದೆ. +ಕೋವಿಡ್ ಹೆಚ್ಚಳ ; ಮುಂಜಾಗ್ರತಾ ಕ್ರಮ ಸಿಎಂ ಸಿದ್ದರಾಮಯ್ಯ ಸೂಚನೆ +ಬ್ರಹ್ಮಾವರ ಜಿಲ್ಲೆಯ ಕುಂಜಾಲಿನಲ್ಲಿ ಬಿಕಾಂ ಪದವೀಧರರಾಗಿದ್ದ ಸಂದೇಶ್ ರಾವ್ ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಅನುಮತಿ ಪಡೆದು ಆಲೋಪತಿ ಚಿಕಿತ್ಸೆ ನೀಡುತ್ತಿರುವುದು ಕಂಡುಬಂದಿದೆ. ಕೂಡಲೇ ಅಧಿಕಾರಿಗಳ ತಂಡ ಸಂದೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. \ No newline at end of file diff --git a/eesanje/url_46_285_12.txt b/eesanje/url_46_285_12.txt new file mode 100644 index 0000000000000000000000000000000000000000..8e1aa1f2700ee587576255463b48a37be6319031 --- /dev/null +++ b/eesanje/url_46_285_12.txt @@ -0,0 +1,5 @@ +ಪೈಲಟ್‍ಗೆ ಗೊಂದಲ : ಸುರಕ್ಷಿತವಾಗಿ ಲ್ಯಾಂಡ್ ಆದ ಸಿಎಂ ಹೆಲಿಕಾಪ್ಟರ್ +ಗದಗ,ಡಿ.17- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸದ ವೇಳೆ 2 ಹೆಲಿಪ್ಯಾಡ್‍ಗಳಿಂದಾಗಿ ಪೈಲಟ್ ಗೊಂದಲಕ್ಕೊಳಗಾದ ಪ್ರಸಂಗ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿರುವ ಗದಗಕ್ಕೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿ ಕಾಫ್ಟರ್‍ನಲ್ಲಿ ಪ್ರಯಾಣಿಸಿದರು. ಗದಗ್‍ನಲ್ಲಿ ಹೆಲಿಕಾಫ್ಟರ್ ಲ್ಯಾಂಡಿಂಗ್ ಮಾಡುವಾಗ ಒಂದೇ ಸ್ಥಳದಲ್ಲಿ 2 ಹೆಲಿಪ್ಯಾಡ್‍ಗಳನ್ನು ನಿರ್ಮಿಸಲಾಗಿತ್ತು. +ಪೈಲಟ್ ಮೊದಲು ಸಿಗುವಂತಹ ಚಿಕ್ಕದಾದ ಹೆಲಿಪ್ಯಾಡ್‍ನಲ್ಲಿ ಹೆಲಿಕಾಫ್ಟರ್ ಅನ್ನು ಲ್ಯಾಂಡ್ ಮಾಡಲು ಮುಂದಾದರು. ಭೂಮಿಗೆ ಕೇವಲ ನಾಲ್ಕೈದು ಅಡಿಗಳ ಅಂತರದಲ್ಲಿದ್ದಾಗ ಇದು ನಿಗದಿತ ಹೆಲಿಪ್ಯಾಡ್ ಅಲ್ಲ ಎಂದು ಮನವರಿಕೆಯಾಗಿ ಮತ್ತೆ ಟೇಕ್ ಆಫ್ ಆಗಿದ್ದು ಕೆಲವೇ ಮೀಟರ್‍ಗಳ ಅಂತರದಲ್ಲಿ ಮತ್ತೊಂದು ಹೆಲಿಪ್ಯಾಡ್‍ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. +ಮಲಗುಂಡಿ ಸ್ವಚ್ಛತೆಗೆ ಮಕ್ಕಳ ಬಳಕೆ : ಪ್ರಾಂಶುಪಾಲೆ, ವಾರ್ಡನ್, ಡಿ ಗ್ರೂಪ್ ನೌಕರರ ಅಮಾನತು +ಪೈಲಟ್ ಗೊಂದಲಕ್ಕೊಳಗಾಗಿದ್ದರಿಂದ ಕೆಲಕಾಲ ಅಧಿಕಾರಿಗಳು ಗಲಿಬಿಲಿಗೀಡಾಗಿದ್ದರು. ಆದರೆ ನಿಗದಿತ ಹೆಲಿಪ್ಯಾಡ್‍ನಲ್ಲೇ ಸಿದ್ದರಾಮಯ್ಯನವರ ಹೆಲಿಕಾಫ್ಟರ್ ಲ್ಯಾಂಡ್ ಆದ್ದರಿಂದ ಅಧಿಕಾರಿಗಳು ನಿಟ್ಟುಸಿರು ಬಿಟ್ಟರು. ಹೆಲಿಪ್ಯಾಡ್‍ಗೆ ಸಚಿವ ಎಚ್.ಕೆ.ಪಾಟೀಲ್, ಜಿಲ್ಲೆಯ ಶಾಸಕರುಗಳು ಆಗಮಿಸಿ ಮುಖ್ಯಮಂತ್ರಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಕ್ಕೂ ಮೊದಲು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್‍ರ ಮನೆಯಿಂದ ತೆರಳುವಾಗ ಸಿದ್ದರಾಮಯ್ಯ ಎಡವಿದ್ದು ಕಂಡುಬಂದಿತು. \ No newline at end of file diff --git a/eesanje/url_46_285_2.txt b/eesanje/url_46_285_2.txt new file mode 100644 index 0000000000000000000000000000000000000000..7424d066a51762cdc2892942a3ef4946bec506cf --- /dev/null +++ b/eesanje/url_46_285_2.txt @@ -0,0 +1,4 @@ +ನಿಗಮ ಮಂಡಳಿ ಪಟ್ಟಿ ಫೈನಲ್ ಮಾಡಿಕೊಂಡು ಬರುತ್ತೇವೆ : ಡಿಸಿಎಂ ಡಿಕೆಶಿ +ಬೆಂಗಳೂರು,ಡಿ.18- ರಾಜ್ಯದ ವಿವಿಧ ನಿಗಮಗಳಿಗೆ ನೇಮಕಾತಿ ಮಾಡುವ ಪಟ್ಟಿಯನ್ನು ಅಂತಿಮಗೊಳಿಸಿಕೊಂಡೇ ದೆಹಲಿಯಿಂದ ವಾಪಸ್ಸಾಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿಯನ್ನು ಹೈಕಮಾಂಡ್‍ಗೆ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ ಎಂದು ತಿಳಿಸಿದರು. +ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲು +ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದ್ದಾರಂತಲ್ಲ ಎಂದು ಕೇಳಿದಾಗ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದು ತಿಳಿಸಿದರು. ಇದೇ 21ಕ್ಕೆ ಸಿಡಬ್ಲ್ಯೂಸಿ ಸಭೆ ಬಗ್ಗೆ ಕೇಳಿದಾಗ, ಇಲ್ಲೂ ಇದೆ, ಹಾಗೂ ನಾಗ್ಪುರದಲ್ಲೂ ಸಭೆ ಇದೆ ಎಂದು ತಿಳಿಸಿದರು. \ No newline at end of file diff --git a/eesanje/url_46_285_3.txt b/eesanje/url_46_285_3.txt new file mode 100644 index 0000000000000000000000000000000000000000..c4babae36d587005824b1bbd23f75a092374abd0 --- /dev/null +++ b/eesanje/url_46_285_3.txt @@ -0,0 +1,11 @@ +ಹಿಂದುಳಿದ ಆಯೋಗದ ಸಮೀಕ್ಷೆಗೆ ಲಿಂಗಾಯತ ವೀರಶೈವ ಸಮುದಾಯದ ವಿರೋಧ ಇಲ್ಲ : ಸಚಿವ ಎಂ.ಬಿ.ಪಾಟೀಲ್ +ಬೆಂಗಳೂರು,ಡಿ.18- ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ಸಮೀಕ್ಷೆಗೆ ಲಿಂಗಾಯತ ವೀರಶೈವ ಸಮುದಾಯದ ವಿರೋಧ ಇಲ್ಲ. ಆದರೆ ವರದಿ ಬಹಿರಂಗಕ್ಕೂ ಮುನ್ನ ಉಪ ಸಮುದಾಯಗಳ ಜನಸಂಖ್ಯೆಯನ್ನು ಪರಿಗಣಿಸಿ ಸಮಗ್ರವಾಗಿ ಲೆಕ್ಕ ಹಾಕಬೇಕೆಂಬುದಷ್ಟೇ ನಮ್ಮ ಹಕ್ಕೊತ್ತಾಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವರದಿಯನ್ನು ವಿರೋಧಿಸಿ ಲಿಂಗಾಯತ ಸಮುದಾಯದ ಶಾಸಕರು, ಸಚಿವರು, ಮುಖ್ಯಮಂತ್ರಿಯವರಿಗೆ ಪತ್ರ ನೀಡಿದ್ದಾರೆ ಎಂಬ ವರದಿಗೆ ಸ್ಪಷ್ಟನೆ ನೀಡಿದರು. +ಸರ್ಕಾರದ ಭಾಗವಾಗಿ ಸಚಿವರು ವರದಿಗೆ ಸಹಿ ಹಾಕಿದ್ದಾರೆ ಎಂಬ ಆಕ್ಷೇಪ ಅನಗತ್ಯ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಎಲ್ಲರೂ ಈ ರೀತಿಯ ಮನವಿಗಳನ್ನು ನೀಡಿದ್ದಾರೆ. ನಮಗೂ ಆತಂಕಗಳಿವೆ. ಲಿಂಗಾಯತ ಸಮುದಾಯದಲ್ಲಿ 40 ರಿಂದ 50 ಉಪಸಮುದಾಯಗಳಿವೆ. ಲಿಂಗಾಯತ ಗಾಣಿಗ ಎಂದು ಬರೆಸಿದರೆ ಅವರಿಗೆ 2 ಎ ಸೌಲಭ್ಯ ಸಿಗುವುದಿಲ್ಲ. ಅದಕ್ಕಾಗಿ ಹಿಂದೂ ಗಾಣಿಗ ಎಂದು ಬರೆಸಿದ್ದಾರೆ. +ಸಾದರು, ಬಣಜಿಗ, ಕುಂಬಾರ, ಕಮ್ಮಾರ, ಉಪ್ಪಾರ, ಮಾಲಗಾರ ಸೇರಿದಂತೆ ಹಲವು ಜಾತಿಗಳು ಲಿಂಗಾಯತ ಎಂದು ಬರೆಸಿದರೆ 2 ಎ ಸೌಲಭ್ಯ ಸಿಗುವುದಿಲ್ಲ ಎಂಬ ಕಾರಣಕ್ಕೆ ಹಿಂದೂ ಎಂದು ಬರೆಸಿರುತ್ತಾರೆ.ರೆಡ್ಡಿ ಲಿಂಗಾಯತರು ಕೂಡ 3 ಎ ಸೌಲಭ್ಯ ಲಭ್ಯವಾಗುತ್ತದೆ ಎಂಬ ಕಾರಣಕ್ಕಾಗಿ ಹಿಂದೂ ಎಂದು ನಮೂದಿಸಿದ್ದಾರೆ. ಲಿಂಗಾಯತ ಉಪ ಸಮುದಾಯಗಳ ಬಗ್ಗೆ ಎಲ್ಲರಿಗೂ ಸ್ಪಷ್ಟ ಮಾಹಿತಿ ಇದೆ. ಅವರು ಏನೇ ಬರೆಸಿದರೂ ಲಿಂಗಾಯತ ಎಂದು ಪರಿಗಣಿಸಿ ಲೆಕ್ಕ ಹಾಕಿ ಜನಸಂಖ್ಯೆ ನಿರ್ಧರಿಸಬೇಕು ಎಂಬುದು ನಮ್ಮ ಬೇಡಿಕೆ. ಇದರಲ್ಲಿ ತಪ್ಪೇನಿದೆ ? ಎಂದು ಪ್ರಶ್ನಿಸಿದರು. +ನಾವು ಸಮಾವೇಶ ಮಾಡುತ್ತಿರುವುದು ವರದಿಯನ್ನು ವಿರೋಧಿಸಿ ಅಲ್ಲ. ಗೊಂದಲವನ್ನು ಸರಿಪಡಿಸಿ ಎಂದು ಮುಖ್ಯಮಂತ್ರಿಯವರ ಸಭೆಯಲ್ಲಿ ನಾನೇ ಒತ್ತಾಯಿಸಿದ್ದೇನೆ. ಒಕ್ಕಲಿಗ ಸಮುದಾಯ ಒಂದೇ ಶೀರ್ಷಿಕೆಯಡಿ ಬಂದರೂ ಕೂಡ ಅಲ್ಲೂ ಕೂಡ ಈ ರೀತಿಯ ಗೊಂದಲಗಳಾಗಿವೆ. ಕೆಲವರು ಉಪಜಾತಿಯನ್ನು ಬರೆಸಿಲ್ಲ, ಇನ್ನೂ ಕೆಲವರು ಉಪಜಾತಿಯನ್ನಷ್ಟೇ ಬರೆಸಿದ್ದಾರೆ. ಇವೆಲ್ಲವನ್ನೂ ಸರಿಪಡಿಸಬೇಕಿದೆ ಎಂದರು.ಗೊಂದಲಗಳನ್ನು ಸರಿಪಡಿಸಿದರೆ ವರದಿ ಆಧಾರಿತವಾಗಿ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. + : ಬೆಂಗಳೂರು ಸೇರಿ ದೇಶದ ಹಲವೆಡೆ ಎನ್‍ಐಎ ದಾಳಿ +ಜನಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರ ಇದೆ. ನಮ್ಮದು ಸಮೀಕ್ಷೆ ಮಾತ್ರ. ನಾವು ವಿರೋಧ ಮಾಡುತ್ತಿದ್ದೇವೆ ಎಂಬ ಅಭಿಪ್ರಾಯ ಸರಿಯಲ್ಲ. ಉಪಜಾತಿಗಳ ಜನಸಂಖ್ಯೆಯನ್ನು ವರದಿ ನೀಡಿದ ನಂತರ ಲೆಕ್ಕ ಹಾಕಲು ಹೋದರೆ ಸಮಸ್ಯೆಗಳಾಗುತ್ತವೆ. ವರದಿ ಬಹಿರಂಗವಾಗುವ ಮುನ್ನವೇ ಅದರ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ಇದಕ್ಕೆ ಅವಕಾಶಗಳಿವೆ ಎಂದು ತಿಳಿಸಿದರು. +ಅಹಿಂದ ಸಮಾವೇಶ ನಡೆಯುತ್ತಿರುವುದರಲ್ಲಿ ತಪ್ಪಿಲ್ಲ. ಎಲ್ಲರಿಗೂ ಹಕ್ಕಿದೆ. ಲಂಬಾಣಿ, ಪರಿಶಿಷ್ಟ ಪಂಗಡ, ಸಣ್ಣ ಸಮುದಾಯದ ಪತ್ತಾರ, ಕುಂಬಾರ ಸೇರಿದಂತೆ ಇತರ ಸಮುದಾಯಗಳು ಕೂಡ ಸಮಾವೇಶ ನಡೆಸಬಹುದು. ತಪ್ಪೇನೂ ಇಲ್ಲ. ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯಲ್ಲಿ ಆಗಿರುವ ಲೋಪಗಳನ್ನು ಮುಖ್ಯಮಂತ್ರಿಯವರು ಸರಿಪಡಿಸಿದ್ದಾರೆ ಎಂಬ ವಿಶ್ವಾಸವಿದೆ ಎಂದರು. ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆಗಳು ನಡೆಯುತ್ತಿವೆ. ವಿಜಯಪುರ ಜಿಲ್ಲೆಗೆ ಸಚಿವ ಸತೀಶ್ ಜಾರಕಿಹೊಳಿ ವೀಕ್ಷಕರಾಗಿದ್ದಾರೆ. ಈಗಾಗಲೆ ಅವರು ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. 20 ಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ರಾಜ್ಯದ ಯಾವುದೇ ಕ್ಷೇತ್ರಗಳಲ್ಲೂ ನಮಗೆ ಅಭ್ಯರ್ಥಿಗಳ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು. +ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದರೆ ಅದನ್ನು ಪಾಲಿಸಲೇಬೇಕಾಗುತ್ತದೆ ಎಂದು ತಿಳಿಸಿದರು. ಅಧಿಕಾರ ಹಂಚಿಕೆಯಾಗಬೇಕು. ಈ ಹಿನ್ನೆಲೆಯಲ್ಲಿ ನಿಗಮ ಮಂಡಳಿಗಳಲ್ಲಿ ನೇಮಕವಾಗಬೇಕು. ಮೂರ್ನಾಲ್ಕು ಬಾರಿ ಅಧ್ಯಕ್ಷರಾಗಿರುವವರಿಗೆ ಅವಕಾಶ ಸಿಗಬೇಕು. ತಮ್ಮ ಕೈಗಾರಿಕಾ ಇಲಾಖಾ ವ್ಯಾಪ್ತಿಯಲ್ಲಿ ಮೂರ್ನಾಲ್ಕು ನಿಗಮಗಳಿವೆ. ಅಲ್ಲಿಗೆ ಶಾಸಕರನ್ನು ನೇಮಿಸಲು ನಮ್ಮ ಯಾವುದೇ ಆಕ್ಷೇಪಗಳಿಲ್ಲ. ದೆಹಲಿಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. +ಎತ್ತಿನಹೊಳೆ ಯೋಜನೆ ಜಾರಿ ವಿಳಂಬವಾಗಿದೆ. ಯೋಜನಾ ವೆಚ್ಚ ದುಪ್ಪಟ್ಟಾಗಿದೆ. ನೀರಿನ ಲಭ್ಯತೆ ಇದ್ದಾಗ ಯೋಜನೆ ಆರಂಭಿಸಲಾಗಿತ್ತು. ಮತ್ತಷ್ಟು ವಿಳಂಬವಾಗಬಾರದು ಎಂಬುದು ನಮ್ಮ ಅಭಿಪ್ರಾಯ. ಹೀಗಾಗಿ ತಾವು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕೊನೆಯ ಭಾಗದವರೆಗೂ ನೀರು ತಲುಪಿಸಲು ಪ್ರಯತ್ನಿಸಬೇಕಿದೆ ಎಂದರು. ಕೆಪಿಸಿಸಿ ಸದಸ್ಯರ ಹುದ್ದೆಗೆ ತಾವು ಆಕಾಂಕ್ಷಿಯಲ್ಲ. ಪಕ್ಷದ ಪ್ರಚಾರ ಸಮಿತಿಗೆ ನಾನು ಅಧ್ಯಕ್ಷನಾಗಿದ್ದೇನೆ. ಅದನ್ನು ಬಿಟ್ಟುಕೊಡಲೂ ನಾನು ಸಿದ್ಧನಿದ್ದೇನೆ ಎಂದು ತಿಳಿಸಿದರು. \ No newline at end of file diff --git a/eesanje/url_46_285_4.txt b/eesanje/url_46_285_4.txt new file mode 100644 index 0000000000000000000000000000000000000000..91ebe47a500d353da49b9e4e6647624f0376df4e --- /dev/null +++ b/eesanje/url_46_285_4.txt @@ -0,0 +1,10 @@ +ಹಿಂದುಳಿದ ವರ್ಗಗಳ ಸಮೀಕ್ಷೆಯನ್ನು ಆಕ್ಷೇಪಿಸುತ್ತಿರುವುದು ಅರ್ಥಹೀನ : ಸಚಿವ ರಾಜಣ್ಣ +ಬೆಂಗಳೂರು,ಡಿ.18- ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಏಕಾಏಕಿ ಅಥವಾ ಒಂದೇ ದಿನದ ಸಮೀಕ್ಷೆ ನಡೆಸಿದ್ದಲ್ಲ. ವರ್ಷಗಟ್ಟಲೆ ಮಾಹಿತಿ ಕಲೆ ಹಾಕಲಾಗಿದೆ. ಆಗೆಲ್ಲಾ ಮೌನವಾಗಿದ್ದವರು ಈಗ ವೈಜ್ಞಾನಿಕವಾಗಿಲ್ಲ ಎಂದು ಆಕ್ಷೇಪಿಸುತ್ತಿರುವುದು ಅರ್ಥಹೀನ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. +ತುಮಕೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಜಾತಿಗೊಂದು ಅರ್ಜಿ ಬರೆದುಕೊಂಡು ವಿರೋಧ ವ್ಯಕ್ತಪಡಿಸುತ್ತಿರುವುದನ್ನು ನೋಡಿದರೆ ಅಚ್ಚರಿಯಾಗುತ್ತಿದೆ. ಸಮೀಕ್ಷೆ ವೈಜ್ಞಾನಿಕವಾಗಿಲ್ಲ ಎಂದು ಪ್ರಮುಖವಾಗಿ ಆಕ್ಷೇಪಿಸಲಾಗುತ್ತಿದೆ. ಏಕಾಏಕಿ ಸಮೀಕ್ಷೆ ಮಾಡಿದ 200 ಕೋಟಿ ರೂ.ಗಳನ್ನು ಬಳಕೆ ಮಾಡಲಾಗಿದೆ. ವರ್ಷಗಟ್ಟಲೆ ಮಾಹಿತಿ ಸಂಗ್ರಹಣೆಯಾಗಿದೆ. ಆಗೆಲ್ಲಾ ಏಕೆ ಸುಮ್ಮನಿದ್ದಿರಿ ಎಂದು ಪ್ರಶ್ನಿಸಿದರು. +ಕಾಂತರಾಜು ವರದಿ ಜಾರಿಯಾಗಲೇಬೇಕು ಎಂಬ ಬದ್ಧತೆ ಏನಿಲ್ಲ. ಅದನ್ನು ಮೊದಲು ಬಹಿರಂಗಪಡಿಸಬೇಕಿದೆ. ಅದರ ಬಳಿಕ ಜನ ಮತ್ತು ಸರ್ಕಾರ ಚರ್ಚಿಸಬೇಕು. ಜನಪರ ಅಂಶಗಳಿದ್ದರೆ ಜಾರಿಯಾಗುತ್ತದೆ. ಜನರಿಗೆ ಇಷ್ಟವಾಗದೇ ಇರುವ ಅಂಶಗಳಿದ್ದರೆ ತಿರಸ್ಕಾರಗೊಳ್ಳುತ್ತದೆ. ವರದಿಯಲ್ಲಿ ಏನಿದೆ ಎಂಬುದು ಈವರೆಗೂ ಯಾರಿಗೂ ಗೊತ್ತಿಲ್ಲ. ಕೇವಲ ಊಹೆಯ ಆಧಾರದಲ್ಲಿ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಮೊದಲು ವರದಿ ಮಂಡನೆಯಾಗಲಿ ಎಂದು ಹೇಳಿದರು. +ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲು +ಕೆಲವರು ನಮ್ಮ ಸಮುದಾಯದ ಸಂಖ್ಯೆ ಕಡಿಮೆ ಮಾಡಿದ್ದಾರೆ ಎಂದು ಆತಂಕ ತೋರುತ್ತಿದ್ದಾರೆ. ವರದಿ ಜಾರಿಯಾದ ನಂತರವಷ್ಟೇ ಅದರ ವಾಸ್ತವಾಂಶ ದೊರೆಯುವುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಯಾರಿಗೂ ಸರಿಸಾಟಿಯೇ ಇಲ್ಲದಂತಹ ಅಹಿಂದ ನಾಯಕರಾಗಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ. ಅವರಿಗೆ ಸರಿಸಮಾನವಾದ ಮತ್ತೊಬ್ಬ ನಾಯಕರಿಲ್ಲ ಎಂದು ಬಿ.ಕೆ.ಹರಿಪ್ರಸಾದ್‍ರವರ ವಿಷಯಕ್ಕೆ ಪರೋಕ್ಷವಾದ ತಿರುಗೇಟು ನೀಡಿದರು. +ಸಿದ್ದರಾಮಯ್ಯ ಈಗಾಗಲೇ ಪ್ರಭಾವಿಯಾಗಿದ್ದಾರೆ. ಸಮಾವೇಶಗಳು ಅವರನ್ನು ಪ್ರಭಾವಿಗೊಳಿಸುವ ಅಗತ್ಯವಿಲ್ಲ. ಎಲ್ಲಾ ಸಮುದಾಯಗಳು ಬಡವರ ಸಮಾವೇಶ ನಡೆಸಬೇಕೆಂಬ ಚರ್ಚೆಯಿದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ರೀತಿಯ ಸಭೆಗಳು ಸಹಜ. ಕಾಂಗ್ರೆಸ್‍ನಲ್ಲಿ ಎಂ.ಆರ್.ಸೀತಾರಂ ಅವರು ಅಹಿಂದ ಸಮಾವೇಶದ ಬಗ್ಗೆ ಕೆಲವು ತಿಂಗಳ ಹಿಂದೆ ತಮ್ಮೊಂದಿಗೆ ಸಮಾಲೋಚನೆ ನಡೆಸಿದ್ದರು. ಪಕ್ಷಕ್ಕೆ ಅನುಕೂಲವಾಗುವಂತೆ ಕಾರ್ಯಕ್ರಮ ಮಾಡುವುದಾದರೆ ತಮ್ಮ ಬೆಂಬಲ ಇದೆ ಎಂದು ಹೇಳಿದ್ದೆ. +ಎಲ್ಲಾ ಜಾತಿಯಲ್ಲೂ ಬಡವರು, ಶ್ರೀಮಂತರು ಇರುತ್ತಾರೆ. ಚುನಾವಣೆ ಕಾಲದಲ್ಲಿ ಎರಡು ಟ್ರಂಪ್‍ಕಾರ್ಡ್ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಜಾತಿ ಎಂಬುದು ಜಾಗತಿಕ ಸಮಸ್ಯೆ. ಸಹಜವಾಗಿಯೇ ಇದು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಅಭಿವೃದ್ಧಿಗೆ ಮಾರಕವಾಗಿದೆ ಎಂದರು. + : ಬೆಂಗಳೂರು ಸೇರಿ ದೇಶದ ಹಲವೆಡೆ ಎನ್‍ಐಎ ದಾಳಿ +ಒಳ್ಳೊಳ್ಳೆ ರಸ್ತೆಗಳು, ವಿದೇಶಿ ಕಾರುಗಳು ಓಡಾಡಿದಾಕ್ಷಣ ಅಭಿವೃದ್ಧಿ ಎಂದು ಹೇಳಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನರ ಜೀವನ ಸುಧಾರಿಸಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಸಿದ್ದರಾಮಯ್ಯ ಅವರ ಶಕ್ತಿಯನ್ನು ಕಾಂಗ್ರೆಸ್ ಬಳಸಿಕೊಳ್ಳಬೇಕಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_285_5.txt b/eesanje/url_46_285_5.txt new file mode 100644 index 0000000000000000000000000000000000000000..5d73fb3ec2bed52944f862998a6943cd25cbf037 --- /dev/null +++ b/eesanje/url_46_285_5.txt @@ -0,0 +1,11 @@ +ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ : ಗೃಹ ಸಚಿವ ಡಾ.ಜಿ.ಪರಮೇಶ್ವರ್ +ಬೆಂಗಳೂರು,ಡಿ.18- ಬೆಂಗಳೂರು ಮೊದಲಿನಿಂದಲೂ ಉಗ್ರ ಚಟುವಟಿಕೆಗಳ ಸ್ಲೀಪರ್‌ಸೆಲ್ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ರಾಷ್ಟ್ರೀಯ ತನಿಖಾ ದಳ ತನಗಿರುವ ಮಾಹಿತಿಯನ್ನು ಆಧರಿಸಿ ಪದೇಪದೇ ಕಾರ್ಯಾಚರಣೆ ನಡೆಸುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ತನಿಖಾ ದಳ ದಕ್ಷಿಣ ಭಾಗಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಕಚೇರಿಯನ್ನು ಹೊಂದಿದೆ. ಅವರಿಗೆ ಬೇರೆಬೇರೆ ಮೂಲಗಳಿಂದ ಮಾಹಿತಿ ದೊರೆಯುತ್ತಿರುತ್ತದೆ. ಅದನ್ನು ಕೆಲವೊಮ್ಮೆ ನಮ್ಮ ಜೊತೆ ಹಂಚಿಕೊಳ್ಳುತ್ತಾರೆ, ಇನ್ನೂ ಕೆಲವೊಮ್ಮೆ ಅವರಾಗಿಯೇ ಕಾರ್ಯಾಚರಣೆ ನಡೆಸುತ್ತಾರೆ ಎಂದು ಹೇಳಿದರು. +ಬೆಂಗಳೂರಿನ ವಾತಾವರಣ ಉತ್ತಮವಾಗಿದೆ ಎಂಬ ಕಾರಣಕ್ಕೆ ಬಹಳಷ್ಟು ಮಂದಿ ಇಲ್ಲಿಗೆ ಬರುತ್ತಿರುತ್ತಾರೆ. ಇದು ಉಗ್ರರ ಸ್ಲೀಪರ್‌ಸೆಲ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಎನ್‍ಐಎ ಹೆಚ್ಚು ಕ್ರಿಯಾಶೀಲವಾಗಿದೆ. ಅವರ ಕೆಲಸ ಅವರು ಮಾಡಲು ಯಾವುದೇ ಆಕ್ಷೇಪವಿಲ್ಲ ಎಂದರು. ಕಾಂಗ್ರೆಸ್‍ನ ರಾಷ್ಟ್ರೀಯ ಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಅಲ್ಲಿ ಬೇರೆಬೇರೆ ವಿಚಾರಗಳು ಚರ್ಚೆಯಾಗುತ್ತವೆ. ನಿಗಮ ಮಂಡಳಿ ಬಗ್ಗೆಯೂ ಚರ್ಚೆಯಾಗಬಹುದು ಎಂದರು. +ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ನಿಗಮ ಮಂಡಳಿಗಳಿಗೆ ಶೀಘ್ರವೇ ನೇಮಕಾತಿ ಮಾಡಿ ಎಂಬ ಒತ್ತಡ ಹೇರಲಾಗಿತ್ತು. ಅದರ ಪ್ರಕಾರ ಮೊದಲ ಹಂತದಲ್ಲಿ ಶಾಸಕರನ್ನು ಎರಡನೇ ಹಂತದಲ್ಲಿ ಕಾರ್ಯಕರ್ತರನ್ನು ನೇಮಿಸಲು ತೀರ್ಮಾನಿಸಿದಂತಿದೆ. ಬಹುಶಃ ಶೀಘ್ರವೇ ಈ ಕುರಿತು ನೇಮಕಾತಿಗಳು ನಡೆಯುವ ನಿರೀಕ್ಷೆಗಳು ಇವೆ ಎಂದು ಹೇಳಿದರು. +ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ +ಶೀಘ್ರ ಪೂರ್ಣ:ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ಬಯಲು ಸೀಮೆಯ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆಯನ್ನು ಎರಡು ವರ್ಷಗಳೊಳಗಾಗಿ ಪೂರ್ಣಗೊಳಿಸುತ್ತೇವೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದರಂತೆ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು. +ಆರಂಭದಲ್ಲಿ 13,500 ಕೋಟಿ ರೂ. ಮೊತ್ತದ ಯೋಜನೆಯಾಗಿತ್ತು. ವರ್ಷದಿಂದ ವರ್ಷಕ್ಕೆ ಯೋಜನಾ ವೆಚ್ಚ ಹೆಚ್ಚಳಗೊಂಡು ಈಗ 22 ಸಾವಿರ ಕೋಟಿ ರೂ.ಗಳಿಗೆ ತಲುಪಿದೆ. ಕಳೆದ 4 ವರ್ಷಗಳಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯೋಜನೆಗೆ ಹಣವನ್ನೇ ನೀಡಿರಲಿಲ್ಲ. ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು. +ಎತ್ತಿನಹೊಳೆಯಿಂದ ತರಲಾಗುವ ನೀರಿನ ಸಂಗ್ರಹಕ್ಕೆ ಕೊರಟಗೆರೆ ಹಾಗೂ ದೊಡ್ಡಬಳ್ಳಾಪುರ ತಾಲೂಕಿಗೆ ಹೊಂದಿಕೊಂಡಂತೆ ಬೈರಗೊಂಡ್ಲು ಸಮೀಪ ಅಣೆಕಟ್ಟು ನಿರ್ಮಾಣಕ್ಕೆ ಯೋಜಿಸಲಾಗಿತ್ತು. ಅರ್ಧಕೆರೆಯ ಮುಳುಗಡೆ ಭಾಗ ದೊಡ್ಡಬಳ್ಳಾಪುರಕ್ಕೆ ಸೇರಿದೆ. ಇನ್ನರ್ಧ ಕೊರಟಗೆರೆ ಭಾಗದ ವ್ಯಾಪ್ತಿಯನ್ನೊಳಗೊಂಡಿತ್ತು. ದೊಡ್ಡಬಳ್ಳಾಪುರ ತಾಲೂಕಿಗೆ 32 ಲಕ್ಷ ರೂ.ಗಳನ್ನು ಪರಿಹಾರ ನೀಡಿದರೆ, ಕೊರಟಗೆರೆಗೆ 8 ರಿಂದ 12 ಲಕ್ಷ ರೂ. ನೀಡಲಾಗುತ್ತಿತ್ತು. ಒಂದೇ ಕೆರೆಯ ಮುಳುಗಡೆ ಪ್ರದೇಶಕ್ಕೆ ಎರಡು ರೀತಿಯ ಪರಿಹಾರ ಏಕೆ, ಏಕರೂಪತೆಯನ್ನು ಜಾರಿಗೆ ತನ್ನಿ ಎಂದು ತಾವು ಒತ್ತಾಯಿಸಿದ್ದು ನಿಜ ಎಂದು ಹೇಳಿದರು. +ರಾಷ್ಟ್ರಪತಿಗಳಿಂದ 5 ದಿನಗಳ ತೆಲಂಗಾಣ ಪ್ರವಾಸ +ಇದರ ನಡುವೆಯೇ ಬೈರಗೊಂಡ್ಲು ಹಾಗೂ ಸುತ್ತಮುತ್ತಲ ಜನ ನಮ್ಮ ಪ್ರದೇಶದಲ್ಲಿ ಅಣೆಕಟ್ಟು ನಿರ್ಮಾಣ ಬೇಡ. ಸುಮಾರು 2,500 ಎಕರೆ ಭೂಮಿ ಮುಳುಗಿ ಹೋಗುತ್ತದೆ ಎಂದು ವಿರೋಧ ವ್ಯಕ್ತಪಡಿಸಿದರು. ನಾನು 2-3 ಬಾರಿ ಸಂಧಾನ ಸಭೆ ನಡೆಸಿ ರೈತರ ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಈಗ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 2 ಕಡೆ ಅಣೆಕಟ್ಟು ನಿರ್ಮಾಣ ಮಾಡುವ ಯೋಜನೆ ತಯಾರಾಗಿದೆ. ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_285_6.txt b/eesanje/url_46_285_6.txt new file mode 100644 index 0000000000000000000000000000000000000000..ae64d7e3eea1cb09f5aff9d98dcba9a0b993abf2 --- /dev/null +++ b/eesanje/url_46_285_6.txt @@ -0,0 +1,5 @@ +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +ಬೆಂಗಳೂರು,ಡಿ.18- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬೆಂಗಳೂರು ಇಸ್ಲಾಂ ಮೂಲಭೂತವಾದಿಗಳ ಸುರಕ್ಷಿತ ಅಡಗುತಾಣವಾಗಿ ಪರಿವರ್ತನೆಯಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಎನ್‍ಐಎ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರೀಯ ತನಿಖಾ ದಳ ಬೆಂಗಳೂರಿನ 23 ಕಡೆ ಶಂಕಿತ ಉಗ್ರರ ಮೇಲೆ ದಾಳಿ ನಡೆಸಿದೆ. ಬೆಂಗಳೂರು ಕಾಂಗ್ರೆಸ್ ಆಡಳಿತದಲ್ಲಿ ಉಗ್ರರ ಸ್ಲೀಪರ್‌ಸೆಲ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ +ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಕಾರ್ಯಕರ್ತರ ವಿರುದ್ಧ 200 ಪ್ರಕರಣಗಳನ್ನು ಹಿಂಪಡೆದಿದ್ದರು. ಅದರ ಪರಿಣಾಮ ಇಂದು ಬೆಂಗಳೂರು ಉಗ್ರರ ತಾಣವಾಗಿದೆ. ಕಾಂಗ್ರೆಸ್‍ನ ತುಷ್ಟೀಕರಣದ ನೀತಿಯನ್ನು ಅನುಭವಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_285_7.txt b/eesanje/url_46_285_7.txt new file mode 100644 index 0000000000000000000000000000000000000000..ebde8e233662677b9353719dcab16365bbc686fc --- /dev/null +++ b/eesanje/url_46_285_7.txt @@ -0,0 +1,5 @@ +ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ +ಬೆಂಗಳೂರು, ಡಿ.18- ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿದೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದೆ. ಮಂದಿರದ ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವ ಸಮಾರಂಭಕ್ಕೆ ಆಗಮಿಸುವಂತೆ ದೇವೇಗೌಡ ಅವರಿಗೆ ಅಧಿಕೃತವಾಗಿ ನಿನ್ನೆ ಆಹ್ವಾನ ನೀಡಲಾಗಿದೆ. +ಭೇಟಿಗೆ ಸಮಯ ಕೊಡದ ಪ್ರಧಾನಿ, ಸಿಎಂ ಸಿದ್ದರಾಮಯ್ಯಆಕ್ರೋಶ +ರಾಮಮಂದಿರ ಸಂಕೀರ್ಣ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ, ಆರ್‍ಎಸ್‍ಎಸ್‍ನ ಹಿರಿಯ ನಾಯಕ ರಾಮ್‍ಲಾಲ್ ಮತ್ತು ವಿಎಚ್‍ಪಿಯ ಹಿರಿಯ ನಾಯಕ ಅಲೋಕ್ ಕುಮಾರ್ ಅವರು ನವದೆಹಲಿಯ ನಿವಾಸದಲ್ಲಿ ದೇವೇಗೌಡರನ್ನು ಭೇಟಿಯಾಗಿ ಅಧಿಕೃತ ಆಹ್ವಾನ ಪತ್ರ ನೀಡಿದ್ದಾರೆ. +ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ತಮಗೆ ಆಹ್ವಾನ ನೀಡಿರುವುದು ಖುಷಿ ತಂದಿದೆ ಎಂದು ದೇವೇಗೌಡರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_46_285_8.txt b/eesanje/url_46_285_8.txt new file mode 100644 index 0000000000000000000000000000000000000000..a71daa85a850a1762558b120c73f466e34660074 --- /dev/null +++ b/eesanje/url_46_285_8.txt @@ -0,0 +1,5 @@ +ಪ್ಯಾಂಟ್‍ನಲ್ಲಿ ಚಿನ್ನ ಕಳ್ಳ ಸಾಗಣೆ, ಸಿಕ್ಕಿಬಿದ್ದ ಪ್ರಯಾಣಿಕ +ಮಂಗಳೂರು, ಡಿ.17- ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಇಲ್ಲಿಗೆ ಬಂದ ಪ್ರಯಾಣಿಕರೊಬ್ಬ ಪ್ಯಾಂಟ್‍ನಲ್ಲಿ ಅಡಗಿಸಿಕೊಂಡು ತಂದಿದ್ದ 17.73 ಲಕ್ಷ ಮೌಲ್ಯದ 286 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. +ಇಂಡಿಗೋ ವಿಮಾನ 6ಇ1163 ಮೂಲಕ ಬಂದ ಪ್ರಯಾಣಿಕನ ಚಲನವಲನ ಅನುಮಾನ ಮೂಡಿಸಿತು ಮೊದಲು ಆತನನ್ನು ಪರೀಕ್ಷಿಸಿದಾಗ ಏನು ತಿಳಿಯಲ್ಲಿಲ್ಲ ನಂತರ ಪ್ಯಾಂಟ್ ಅನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮತ್ತು ಸ್ಕ್ಯಾನಿಂಗ್ ಮಾಡಿದ ನಂತರ, ಕಪ್ಪು ಚಿತ್ರ ಅನುಮಾನವನ್ನು ಹುಟ್ಟುಹಾಕಿತು. ನಂತರದ ಸಂಪೂರ್ಣ ಪರೀಕ್ಷೆಯು ಪ್ಯಾಂಟ್‍ನ ಪದರಗಳಲ್ಲಿ ಮರೆಮಾಚಲ್ಪಟ್ಟ ಹಳದಿ ಬಣ್ಣದ ಪೇಸ್ಟ್ ವಸ್ತು ಕಂಡುಬಂತು. +ಸ್ಯಾಂಡಲ್‍ವುಡ್‍ನ ಕೆಲ ನಟ-ನಟಿಯರಿಗೆ ಡ್ರಗ್ಸ್ ಪೆಡ್ಲರ್‌ಗಳ ಜೊತೆ ನಂಟು +ನಂತರ ಚಿನ್ನ ಕಳ್ಳಸಾಗಣೆ ಅಸಲಿಯತ್ತು ಗೊತ್ತಾಯಿತು ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.ಪ್ರಯಾಣಿಕರ ಡೇಟಾ ಪರಿಶೀಲನೆ ವೇಳೆ ಈತನ ಬಗ್ಗೆ ಅನುಮಾನ ಮೂಡಿತ್ತು ಆತ ದುಬೈನಿಂದ ಬಂದ ಬಳಿಕ ಗುಮಾನಿ ಮೇಲೆ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಚಿನ್ನ ಕಳ್ಳ ಸಾಗಣೆ ಬೆಳಕಿಗೆ ಬಂದಿದೆ. \ No newline at end of file diff --git a/eesanje/url_46_285_9.txt b/eesanje/url_46_285_9.txt new file mode 100644 index 0000000000000000000000000000000000000000..5288ce9d5c39b2d08e14f4ba6979cc1192a324c9 --- /dev/null +++ b/eesanje/url_46_285_9.txt @@ -0,0 +1,9 @@ +ಬಿಜೆಪಿ ಅನಗತ್ಯ ಹೋರಾಟ, ಪರಮೇಶ್ವರ್ ಟೀಕೆ +ಬೆಂಗಳೂರು,ಡಿ.17- ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ್ದನ್ನು ಮುಂದಿಟ್ಟು ಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ಅನಗತ್ಯವಾದ ರಾಜಕಾರಣ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಆಕ್ಷೇಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಏನು ಹೇಳಬೇಕೊ ಗೊತ್ತಿಲ್ಲ. ವಿರೋಧಪಕ್ಷ ಬಿಜೆಪಿ ವಿಷಯವನ್ನು ಆಯ್ದುಕೊಳ್ಳುವುದರಲ್ಲೇ ಲೋಪವಿದೆ. ಘಟನೆ ನಡೆದಿರುವುದರಲ್ಲಿ ಸರ್ಕಾರದ ಪಾತ್ರ ಏನಿದೆ ಎಂದು ಪ್ರಶ್ನಿಸಿದರು. +ಘಟನೆ ನಡೆಯಬಾರದಿತ್ತು. ದುರದೃಷ್ಟಕರ ವಾಗಿ ನಡೆದಿದೆ. ಊರಿನಲ್ಲಿ ಒಂದು ವರ್ಗದ ಜನ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ ಮಾಡಿದ್ದಾರೆ. ಇದರಲ್ಲಿ ಸರ್ಕಾರದ ಲೋಪ ಏನಿದೆ. ರಾತ್ರಿ 1.30 ಗಂಟೆ ಸುಮಾರಿಗೆ ದುಷ್ಕøತ್ಯವಾಗಿದೆ. ಪೊಲೀಸರಿಗೆ ಮಾಹಿತಿ ದೊರೆಯುತ್ತಿದ್ದಂತೆ ಸ್ಥಳಕ್ಕೆ ಹೋಗಿದ್ದಾರೆ. ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 7 ಮಂದಿ ಆರೋಪಿಗಳನ್ನು ತಕ್ಷಣ ಬಂಧಿಸಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದಾರೆ. ಅದರಲ್ಲಿ ಹೆಚ್ಚು ಮಂದಿ ಮಹಿಳೆಯರೇ ಇದ್ದಾರೆ. ತಕ್ಷಣ ಪೊಲೀಸರು ಬಾರದೆ ಇದ್ದರೆ ನನಗೆ ಬೇರೆ ರೀತಿಯ ತೊಂದರೆಯಾಗುತ್ತಿದ್ದವು ಎಂದು ಸಂತ್ರಸ್ತರು ಮಾಹಿತಿ ನೀಡಿದ್ದಾರೆ. +ಕೋವಿಡ್ ಹೆಚ್ಚಳ ; ಮುಂಜಾಗ್ರತಾ ಕ್ರಮ ಸಿಎಂ ಸಿದ್ದರಾಮಯ್ಯ ಸೂಚನೆ +ಬೆಳಿಗ್ಗೆ ಮಾಹಿತಿ ನನಗೆ ತಿಳಿಯುತ್ತಿದ್ದಂತೆ ನಾನು ಸಂತ್ರಸ್ತೆಯನ್ನು ಭೇಟಿ ಮಾಡಿ ಸರ್ಕಾರ ನಿಮ್ಮ ಜೊತೆ ಇದೆ ಎಂದು ಆತ್ಮಸ್ಥೈರ್ಯ ತುಂಬಿದ್ದೇನೆ. ಘಟನೆಯ ಸ್ಥಳಕ್ಕೂ ಹೋಗಿ ಮನೆ ಒಡೆದಿರುವುದು, ಸಾಮಾನು ಚೆಲ್ಲಾಡಿರುವುದು, ಕಂಬಕ್ಕೆ ಕಟ್ಟಿದ ಸ್ಥಳ ಈ ಎಲ್ಲವನ್ನೂ ವೀಕ್ಷಿಸಿ ಬಂದಿದ್ದೇನೆ. ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದೇವೆ. ಬುಡಕಟ್ಟು ಸಮುದಾಯ ಅಭಿವೃದ್ಧಿ ಆಯೋಗದಿಂದ 2 ಎಕರೆ ಭೂಮಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. +ಪ್ರೀತಿಸಿ ಓಡಿಹೋಗಿದ್ದ ಜೋಡಿಯನ್ನು ಪತ್ತೆ ಹಚ್ಚಲು ತ್ವರಿತ ಕ್ರಮ ಕೈಗೊಂಡಿತ್ತು. ಅಷ್ಟರಲ್ಲಿ ಆ ಜೋಡಿಯೇ ಪೊಲೀಸ್ ಆಯುಕ್ತರ ಬಳಿ ಬಂದಿದೆ. ಅವರಿಗೂ ತೊಂದರೆಯಾಗದಂತೆ ರಕ್ಷಣೆ ನೀಡಿದ್ದೇವೆ ಎಂದು ತಿಳಿಸಿದರು. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ವಿರೋಧಪಕ್ಷವಾಗಿ ಅವರು ಅವರ ಕರ್ತವ್ಯ ಮಾಡುವುದಕ್ಕೆ ನಮ್ಮ ಆಕ್ಷೇಪಣೆಯಿಲ್ಲ. ಆದರೆ ಇದರಲ್ಲಿ ಸರ್ಕಾರದ ವೈಫಲ್ಯ ಎಲ್ಲಿದೆ. ಬಿಜೆಪಿಯವರು ದೆಹಲಿಯಿಂದ ನಿಯೋಗ ಬಂದ ಮೇಲಾದರೂ ಏನಾದರೂ ನೆರವು ನೀಡಿದ್ದಾರೆಯೇ. ಕೇಂದ್ರದ ಬುಡಕಟ್ಟು ಆಯೋಗದಿಂದ ಯಾವುದಾದರೂ ಸಹಾಯ ಮಾಡಿದ್ದಾರೆಯೇ, ರಾಜಕೀಯಕ್ಕಾಗಿ ಬಂದರು. ಇದರಲ್ಲಿ ಸರ್ಕಾರದ ವೈಫಲ್ಯ, ಗೃಹಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರೆ ಏನಾದರೂ ಪ್ರಯೋಜನವಿದೆಯೇ. ಸಂತ್ರಸ್ತರಿಗೆ ಏನು ಉಪಯೋಗವಾಯಿತು ಎಂದು ಪ್ರಶ್ನಿಸಿದರು. +ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಬಹಿರಂಗಪಡಿಸಿ ಎಂದು ಬಹಳಷ್ಟು ಜನ ಕೇಳುತ್ತಿದ್ದಾರೆ. ಅದನ್ನು ಅನುಷ್ಠಾನಗೊಳಿಸಿ ಎಂದು ಯಾರೂ ಕೇಳುತ್ತಿಲ್ಲ. ವರದಿಯನ್ನು ಆಧರಿಸಿ ತಕ್ಷಣ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಆದರೆ 168 ಕೋಟಿ ರೂ. ಖರ್ಚು ಮಾಡಿರುವ ವರದಿಯನ್ನೇ ಬಹಿರಂಗ ಪಡಿಸಬಾರದು ಎಂದು ಹೇಳಿದರೆ ಅದು ಸರಿಯಲ್ಲ. ವರದಿಯಿಂದ ಯಾರು ಎಷ್ಟು ಜನಸಂಖ್ಯೆಯಲ್ಲಿದ್ದಾರೆ ಎಂದು ತಿಳಿಯಲಿದೆ. ಅದರ ಆಧಾರದ ಮೇಲೆ ಸ್ಥಾನಮಾನಗಳ ಹಂಚಿಕೆಯೂ ಆಗಲಿದೆ. ವರದಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದರು. +ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ +ವರದಿ ಜಾರಿಯಿಂದಾಗುವ ಅಡ್ಡಪರಿಣಾಮಗಳ ವಿರುದ್ಧ ಪ್ರತಿಭಟನೆ ಮಾಡುವುದಾದರೆ ಸ್ವಾಗತಿಸಬಹುದು. ಆದರೆ ಸರ್ಕಾರ ನಡೆಸುವ ವರದಿಯನ್ನೇ ಬಹಿರಂಗಪಡಿಸಬಾರದು ಎಂಬುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಶಾಲಾ ಮಕ್ಕಳನ್ನು ಶೌಚಾಲಯ ಗುಂಡಿ ಸ್ವಚ್ಛಗೊಳಿಸಲು ಬಳಕೆ ಮಾಡಿರುವುದು ಸರಿಯಲ್ಲ. ಅದಕ್ಕೆ ಸಂಬಂಧಪಟ್ಟ ಶಿಕ್ಷಕರು ಹಾಗೂ ಅಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಒತ್ತಾಯಿಸುತ್ತೇವೆ. ಪೊಲೀಸರಿಗೆ ದೂರು ನೀಡಿದರೆ ಮುಂದಿನ ಕ್ರಮ ಜರುಗಿಸುತ್ತೇವೆ ಎಂದರು. \ No newline at end of file diff --git a/eesanje/url_46_286_1.txt b/eesanje/url_46_286_1.txt new file mode 100644 index 0000000000000000000000000000000000000000..90c839a51e965a75e83ee62db6ced3e4e345ce08 --- /dev/null +++ b/eesanje/url_46_286_1.txt @@ -0,0 +1,5 @@ +ಸ್ಯಾಂಡಲ್‍ವುಡ್‍ನ ಕೆಲ ನಟ-ನಟಿಯರಿಗೆ ಡ್ರಗ್ಸ್ ಪೆಡ್ಲರ್‌ಗಳ ಜೊತೆ ನಂಟು +ಬೆಂಗಳೂರು,ಡಿ.17- ಸ್ಯಾಂಡಲ್‍ವುಡ್‍ನ ಕೆಲ ನಟ-ನಟಿಯರಿಗೆ ಡ್ರಗ್ಸ್ ಪೆಡ್ಲರ್‍ಗಳ ಜೊತೆ ನಂಟಿರುವ ಬಗ್ಗೆ ಸಿಸಿಬಿ ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಕಳೆದ ವಾರ ಆಫ್ರಿಕಾ ಮೂಲದ ಡ್ರಗ್ ಪೆಡ್ಲರ್ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್‍ನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ, ಸ್ಪೋಟ ಮಾಹಿತಿ ಹೊರಬಿದ್ದಿದ್ದು, ಪೆಡ್ಲರ್ ಜೊತೆ ಕನ್ನಡದ ನಟ-ನಟಿ ಹಾಗೂ ಕಿರುತೆರೆ ಕಲಾವಿದರ ಸಂಪರ್ಕ ಇರುವ ಬಗ್ಗೆ ತಿಳಿದುಬಂದಿದೆ. +ಕಳೆದ ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣವೊಂದರಲ್ಲಿ ಕನ್ನಡದ ಖ್ಯಾತ ನಟಿ ಸೇರಿದಂತೆ ಹಲವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ ನಗರ ಪೊಲೀಸರು ಸ್ಯಾಂಡಲ್‍ವುಡ್ ತಾರೆಯರ ಮೇಲೆ ಕಣ್ಣಿಟ್ಟಿದ್ದಾರೆ. ಆರೋಪಿಯನ್ನು ಮತ್ತಷ್ಟು ವಿಚಾರಣೆಗೊಳಪಡಿಸಿರುವ ಸಿಸಿಬಿ ಪೆಪೊಲೀಸರು, ಯಾರೆಲ್ಲ ಜೊತೆ ವ್ಯವಹಾರ ನಡೆಸಿದ್ದಾರೆ, ಅವರಿಗೆಲ್ಲ ಯಾವ ರೀತಿ ಡ್ರಗ್ಸ್ ಸರಬರಾಜು ಆಗುತ್ತಿತ್ತು ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. +ಮಲಗುಂಡಿ ಸ್ವಚ್ಛತೆಗೆ ಮಕ್ಕಳ ಬಳಕೆ : ಪ್ರಾಂಶುಪಾಲೆ, ವಾರ್ಡನ್, ಡಿ ಗ್ರೂಪ್ ನೌಕರರ ಅಮಾನತು +ಪೊಲೀಸರ ಹದ್ದಿನ ಕಣ್ಣು:ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾಗಿದ್ದು, ಈ ವೇಳೆ ಡ್ರಗ್ಸ್ ಸೇವನೆ ಮತ್ತು ಮಾರಾಟದ ಮೇಲೆ ನಿಗಾ ಇಡುವಂತೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿದೇಶಿ ಪ್ರಜೆಗಳು ಹೆಚ್ಚು ವಾಸಿಸುತ್ತಿರುವ ಸ್ಥಳಗಳಲ್ಲಿ ಮುಫ್ತಿ ಕಾರ್ಯಾಚರಣೆ, ರೆಸಾರ್ಟ್, ರೇವಾ ಪಾರ್ಟಿ ನಡೆಯುವಂತಹ ಸ್ಥಳಗಳು, ಫಾರ್ಮ್‍ಹೌಸ್, ಸ್ಟಾರ್ ಹೋಟೆಲ್, ಪಬ್,ಬಾರ್‍ಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ. \ No newline at end of file diff --git a/eesanje/url_46_286_10.txt b/eesanje/url_46_286_10.txt new file mode 100644 index 0000000000000000000000000000000000000000..ad8ffcfeecfd0c5535f456da8cab261db68a05cb --- /dev/null +++ b/eesanje/url_46_286_10.txt @@ -0,0 +1,11 @@ +ಕಾಂಗ್ರೆಸ್‌ನಲ್ಲಿ ಅಹಿಂದಾ ಫೈಟ್, ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಸಿದ್ದು-ಹರಿಪ್ರಸಾದ್ +ಬೆಂಗಳೂರು,ಡಿ.16- ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಹಿಂದುಳಿದ ವರ್ಗಗಳ ನಾಯಕನ ಸ್ಥಾನಕ್ಕೆ ಪೈಪೋಟಿ ತೀವ್ರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿಯಲ್ಲಿ ಚಿತ್ರದುರ್ಗದಲ್ಲಿ ಮತ್ತೊಮ್ಮೆ ಅಹಿಂದ ಸಮಾವೇಶ ನಡೆಸಿ ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಕೂಡ ಜನವರಿ ತಿಂಗಳಿನಲ್ಲೇ ಸಮಾವೇಶ ನಡೆಸುವ ಪ್ರಯತ್ನದಲ್ಲಿದ್ದಾರೆ. +ಇತ್ತೀಚೆಗೆ ನಡೆದ ಆರ್ಯ ಈಡಿಗರ ಸಮಾವೇಶದಲ್ಲಿ ಹರಿಪ್ರಸಾದ್ ಅವರನ್ನು ಕಡೆಗಣಿಸಲಾಗಿತ್ತು. ಇದಕ್ಕೆ ಸೆಡ್ಡು ಹೊಡೆಯಲು ಬಿ.ಕೆ.ಹರಿಪ್ರಸಾದ್ ಬೃಹತ್ ಸಮಾವೇಶಕ್ಕೆ ತಯಾರಿ ನಡೆಸಿದ್ದರು. ಅದಕ್ಕೂ ಮುನ್ನವೇ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ ಅವರ ಟೀಂ ಜನವರಿಯಲ್ಲೇ ಸಮಾವೇಶಕ್ಕೆ ಸಜ್ಜುಗೊಳ್ಳುತ್ತಿದೆ. +ರಾಜಕೀಯದಲ್ಲಿ ಸಿದ್ದರಾಮಯ್ಯ ಅವರು ಕಾಲಕಾಲಕ್ಕೆ ಬೃಹತ್ ಸಮಾವೇಶಗಳ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಿ ರಾಜಕೀಯ ಎದುರಾಳಿಗಳನ್ನು ಬಗ್ಗುಬಡಿದಿರುವುದು ಮೊದಲಿನಿಂದಲೂ ಕಂಡುಬರುತ್ತಿದೆ. ಅಹಿಂದ ಸಮಾವೇಶ, ಸಿದ್ದರಾಮೋತ್ಸವ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಬಲವರ್ಧನೆಗೆ ಕಾರಣವಾಗಿವೆ. ಲೋಕಸಭೆ ಚುನಾವಣೆಯ ನಂತರ ರಾಜಕೀಯ ವಿಪ್ಲವಗಳ ಮುನ್ಸೂಚನೆಯಿದೆ. ಕೇಂದ್ರದಲ್ಲಿ ಬಿಜೆಪಿ ಆಡಳಿತವೇ ಮರುಕಳಿಸಿದರೆ, ಕರ್ನಾಟಕದಲ್ಲಿ ಆಪರೇಷನ್ ಕಮಲ ನಡೆದು ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಸೂಚನೆ ಇದೆ. +ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ +ಮತ್ತೊಂದೆಡೆ ಕಾಂಗ್ರೆಸ್ನ ಆಂತರಿಕ ಒಳ ಒಪ್ಪಂದದ ಪ್ರಕಾರ ಅಕಾರ ಹಂಚಿಕೆಯಾಗಲಿದೆ ಎಂದು ಒಂದು ಬಣ ಪ್ರತಿಪಾದಿಸುತ್ತಿದೆ. ಆದರೆ ಇದನ್ನು ಅಲ್ಲಗಳೆಯುತ್ತಿರುವ ಸಿದ್ದರಾಮಯ್ಯ ಅವರ ತಂಡ ಪೂರ್ಣಾವಧಿ ಮುಖ್ಯಮಂತ್ರಿಯಾಗಲಿದ್ದಾರೆ, ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆ ಮಾಡುತ್ತಿದೆ. +ಇದರ ನಡುವೆ ಮೂಲ ಕಾಂಗ್ರೆಸಿಗರ ಹೆಸರಿನಲ್ಲಿ ಹರಿಪ್ರಸಾದ್, ವೀರಪ್ಪ ಮೊಯ್ಲಿ ಸೇರಿದಂತೆ ಕೆಲವು ನಾಯಕರು ಸಿದ್ದರಾಮಯ್ಯ ಅವರ ವಿರುದ್ಧ ವ್ಯಕ್ತಪಡಿಸುತ್ತಿರುವ ಅಸಹನೆ ಗುಟ್ಟಾಗಿ ಉಳಿದಿಲ್ಲ. ಇದಕ್ಕೆಲ್ಲಾ ಪ್ರತ್ಯುತ್ತರ ನೀಡುವಂತೆ ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದ ಮಾದರಿಯಲ್ಲಿ ಚಿತ್ರದುರ್ಗದಲ್ಲಿ ಮತ್ತೊಂದು ಬೃಹತ್ ಸಮಾವೇಶವನ್ನು ನಡೆಸುವ ತಯಾರಿ ನಡೆದಿದೆ. +ಈಗಾಗಲೇ ಇದಕ್ಕೆ ಪೂರ್ವ ಸಿದ್ಧತೆಗಳು ಆರಂಭಗೊಂಡಿದ್ದು, ಹಲವಾರು ಉಪಸಮಿತಿಗಳನ್ನು ರಚಿಸಲಾಗುತ್ತಿದೆ. ಶೋಷಿತ ಸಮುದಾಯಗಳು ಅವಕಾಶ ವಂಚಿತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಸಮಾವೇಶ ನಡೆಸುತ್ತಿರುವುದಾಗಿ ಮುಖಂಡರು ಹೇಳುತ್ತಿದ್ದಾರೆ. +ಆದರೆ ಸಮಾವೇಶದ ಮೂಲ ಧಾತು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದು ರಹಸ್ಯವೇನಲ್ಲ. ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾದ ಸಾಮಾಜಿಕ, ಆರ್ಥಿಕ ಸಮೀಕ್ಷೆ ವರದಿಯ ಜಾರಿಗೂ ಈ ಸಮಾವೇಶ ಒತ್ತಡ ಹೇರಲಿದೆ ಎಂದು ಹೇಳಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಹಿಂದ ಮತಗಳನ್ನು ಕಾಂಗ್ರೆಸ್ನತ್ತ ಆಕರ್ಷಿಸುವ ನಿಟ್ಟಿನಲ್ಲಿ ಇಂತಹ ಸಮಾವೇಶಗಳು ಅನಿವಾರ್ಯ ಎಂಬ ಸಮರ್ಥನೆ ಕೇಳಿಬರುತ್ತಿವೆ. +ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ +ಆದರೆ ಇದಕ್ಕೆ ಎದುರೇಟು ಎಂಬಂತೆ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ವಿರೋಧಿ ಬಣವೂ ಕೂಡ ಸಮಾವೇಶ ಮಾಡಲು ಮುಂದಾಗಿರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_286_11.txt b/eesanje/url_46_286_11.txt new file mode 100644 index 0000000000000000000000000000000000000000..0c21ef38fd78c6613cd1379730674d3a5a79e11a --- /dev/null +++ b/eesanje/url_46_286_11.txt @@ -0,0 +1,9 @@ +64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಹೆಚ್ಡಿಕೆ +ಬೆಂಗಳೂರು, ಡಿ.16- ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು 64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ಜನ್ಮದಿನದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. +ಪಕ್ಷದ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು ಯಾರೂ ಹುಟ್ಟುಹಬ್ಬದ ಶುಭಕೋರಲು ತಮ್ಮ ಮನೆಗೆ ಬರುವುದು ಬೇಡ. ಹುಟ್ಟುಹಬ್ಬದ ಸಂದರ್ಭದಲ್ಲಿ ತಾವು ಲಭ್ಯವಿರುವುದಿಲ್ಲ. ತಾವಿದ್ದಲ್ಲಿಂದಲೇ ಶುಭಾಶಯ ಕೋರಿ ಎಂದು ಕುಮಾರಸ್ವಾಮಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿದ್ದರು. +ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ, ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸಿದ್ದಾರೆ. +ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ +ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಎನ್‍ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡು ರಾಷ್ಟ್ರ ಹಿತಾಸಕ್ತಿಗಾಗಿ ಕೈ ಜೋಡಿಸಿರುವ ನಿಮಗೆ ದೇವರು ಉತ್ತಮ ಆಯುರಾರೋಗ್ಯ ಕರುಣಿಸಿ ಸಾರ್ವಜನಿಕ ಜೀವನದಲ್ಲಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ. +ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಅನ್ನದಾನ ಮಾಡಿದರು. ಅಲ್ಲದೆ, ಬೆಂಗಳೂರಿನ ಮಲ್ಲೇಶ್ವರದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದರು. +ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ +ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್‍ಗೌಡ ಅವರು ಸಹ ಕುಮಾರಸ್ವಾಮಿ ಅವರೊಂದಿಗೆ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ. ಪ್ರವಾಸ ಮುಗಿಸಿ ಕುಮಾರಸ್ವಾಮಿ ಅವರು ಡಿ.18ರಂದು ನಗರಕ್ಕೆ ಮರಳುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_286_12.txt b/eesanje/url_46_286_12.txt new file mode 100644 index 0000000000000000000000000000000000000000..edb0165f41960c73beb726f4699e8c4c16b7dba2 --- /dev/null +++ b/eesanje/url_46_286_12.txt @@ -0,0 +1,7 @@ +ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆ ಕುರಿತು ಪರಿಶೀಲನೆ : ಸಚಿವ ಶಿವಾನಂದ ಪಾಟೀಲ್ +ಬೆಂಗಳೂರು,ಡಿ.16- ಆರ್ಥಿಕವಾಗಿ ನಷ್ಟದಲ್ಲಿರುವ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಸ್ಥಗಿತಗೊಂಡಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳಲ್ಲಿ ದೀರ್ಘಾವಧಿಯ ಆಧಾರದ ಮೇಲೆ ಖಾಸಗಿಯವರಿಗೆ ಗುತ್ತಿಗೆ ನೀಡಿ ಪುನಶ್ಚೇತನಗೊಳಿಸಲು ಪರಿಶೀಲಿಸಲಾಗಿದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ. +ಭೈಲಹೊಂಗಲ ಕ್ಷೇತ್ರದ ಶಾಸಕ ಮಹಂತೇಶ್ ಕೌಜಲಗಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ರಾಜ್ಯದಲ್ಲಿ 93 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿದ್ದವು. ಅವುಗಳಲ್ಲಿ 76 ಕಾರ್ಯನಿರತವಾಗಿವೆ. 12 ಸ್ಥಗಿತಗೊಂಡಿವೆ. 5 ಮುಚ್ಚಿ ಹೋಗಿವೆ ಎಂದು ಸಚಿವರು ತಿಳಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ 1 ಕಾರ್ಖಾನೆ ಕಾರ್ಯನಿರತವಾಗಿದ್ದರೆ, ಮತ್ತೊಂದು ಸ್ಥಗಿತಗೊಂಡಿದೆ. ಇನ್ನೊಂದು ಕಾರ್ಖಾನೆಯನ್ನು ಪೂರ್ಣವಾಗಿ ಮುಚ್ಚಲಾಗಿದೆ. ಸಹಕಾರಿ ವಲಯದಲ್ಲಿ 13 ಕಾರ್ಖಾನೆಗಳು ಕಾರ್ಯನಿರತವಾಗಿದ್ದರೆ 4 ಮುಚ್ಚಿವೆ, ಇನ್ನೂ 4 ಸ್ಥಗಿತಗೊಂಡಿವೆ. +ಸಹಕಾರಿ ವಲಯದಲ್ಲಿ 9 ಕಾರ್ಖಾನೆಗಳನ್ನು ಗುತ್ತಿಗೆ ಆಧಾರದ ಮೇಲೆ ನೀಡಲಾಗಿದೆ. ಅಷ್ಟೂ ಚಾಲನೆಯಲ್ಲಿವೆ. ಖಾಸಗಿ ವಲಯದ 60 ಕಾರ್ಖಾನೆಗಳಲ್ಲಿ 53 ಚಾಲ್ತಿಯಲ್ಲಿದ್ದರೆ, 7 ಸ್ಥಗಿತಗೊಂಡಿವೆ ಎಂದು ಸಚಿವರು ವಿವರಿಸಿದ್ದಾರೆ. +ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ +ಮಂಡ್ಯದ ದಿ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ರಾಜ್ಯಸರ್ಕಾರ 2020-21 ರಲ್ಲಿ 20.80 ಕೋಟಿ, ಪ್ರಸಕ್ತ ಸಾಲಿನಲ್ಲಿ 72.58 ಕೋಟಿ ಸೇರಿ 93.38 ಕೋಟಿ ರೂ.ಗಳನ್ನು ನೀಡಿದೆ. 2021-22 ನೇ ಸಾಲಿನಲ್ಲಿ ಯಾವುದೇ ಹಣ ನೀಡಿಲ್ಲ. 1933 ರಲ್ಲಿ ಸ್ಥಾಪಿಸಲಾದ ಈ ಕಾರ್ಖಾನೆ ಪ್ರಸ್ತುತ ರಾಜ್ಯಸರ್ಕಾರದ ಅೀಧಿನದಲ್ಲಿರುವ ಸಾರ್ವಜನಿಕ ಉದ್ಯಮವಾಗಿದೆ. ರಾಜ್ಯಸರ್ಕಾರ ಶೇ.89.39 ರಷ್ಟು ಷೇರುಗಳನ್ನು ಹೊಂದಿದೆ. ಕಂಪನಿಯ ಯಂತ್ರೋಪಕರಣಗಳ ವಿತರಣೆ, ಆಧುನೀಕರಣ, ದುಡಿಯುವ ಬಂಡವಾಳ ಮತ್ತು ನೌಕರರ ವೇತನ ಭತ್ಯೆಗಳಿಗೆ ರಾಜ್ಯಸರ್ಕಾರ ಕಾಲಕಾಲಕ್ಕೆ ಷೇರು, ಸಾಲ ಮತ್ತು ಸಹಾಯಧನದ ರೂಪದಲ್ಲಿ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಹೇಳಿದ್ದಾರೆ. +ಸಹಕಾರಿ ತಳಹದಿಯ ಮೇಲೆ ನಡೆಯುತ್ತಿರುವ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಸಿದ್ದಸಮುದ್ರದಲ್ಲಿನ ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆ 137.05 ಕೋಟಿ, ಬೈಲಹೊಂಗಲದ ಎಂ.ಕೆ.ಹುಬ್ಬಳ್ಳಿಯ ಶ್ರೀ ಮಲ್ಲಪ್ರಭ ಸಹಕಾರಿ ಸಕ್ಕರೆ ಕಾರ್ಖಾನೆ 146 ಕೋಟಿ, ಕಾಕತೀಯ ಶ್ರೀ ಮಾರ್ಕಂಡೇಯ ಸಕ್ಕರೆ ಕಾರ್ಖಾನೆ 112.43 ಕೋಟಿ ರೂ.ಗಳ ನಷ್ಟದಲ್ಲಿದೆ. ಕಬ್ಬು ಬೆಳೆಗಾರರ ರೈತರ ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ನಷ್ಟದಲ್ಲಿರುವ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_286_2.txt b/eesanje/url_46_286_2.txt new file mode 100644 index 0000000000000000000000000000000000000000..65be9eae61bf88eb372d0e91d6171f19e5a0364b --- /dev/null +++ b/eesanje/url_46_286_2.txt @@ -0,0 +1,6 @@ +ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದಲ್ಲಿ ಹಗುರ ಮಳೆ +ಬೆಂಗಳೂರು,ಡಿ.17- ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದೆ. ಆದರೆ ಭಾರೀ ಮಳೆಯಾಗುವ ಲಕ್ಷಣ ಗೋಚರಿಸುತ್ತಿಲ್ಲ. ಒಂದೆರೆಡು ಕಡೆ ಚದುರಿದಂತೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯಾದ್ಯಂತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ. +ಇದರಿಂದ ಚಳಿ ಅನುಭವ ಹೆಚ್ಚಾಗಿ ಕಂಡುಬರುತ್ತಿದೆ. ಅಲ್ಲದೆ, ಬಹಳಷ್ಟು ಕಡೆ ಸಂಜೆ ಹಾಗೂ ಬೆಳಿಗ್ಗೆ ಹೆಚ್ಚಿನ ಪ್ರಮಾಣದಲ್ಲಿ ಇಬ್ಬನಿ ಬೀಳುತ್ತಿದೆ. ಉತ್ತರ ಕರ್ನಾಟಕ ಸೇರಿದಂತೆ ಕೆಲವೆಡೆ ಬೆಳಗಿನ ಜಾವ ದಟ್ಟವಾದ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. +ವಾಯುಭಾರ ಕುಸಿತದ ಪರಿಣಾಮದಿಂದ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿರುವುದರಿಂದ ಮಬ್ಬು ಕವಿದ ವಾತಾವರಣ ಸೃಷ್ಟಿಯಾಗಿದೆ. ಆದರೆ ತಮಿಳುನಾಡಿನ ದಕ್ಷಿಣ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದರು. +ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ +ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಇರುವುದರಿಂದ ಕನಿಷ್ಟ ತಾಪಮಾನದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. 14 ಡಿಗ್ರಿ ಸೆಲ್ಶಿಯಸ್‍ನಿಂದ 18 ಡಿಗ್ರಿ ಸೆಲ್ಶಿಯಸ್ ಕನಿಷ್ಟ ತಾಪಮಾನ ದಾಖಲಾಗುತ್ತಿದೆ. ಹಗಲಿನಲ್ಲಿ ಬಿಸಲು ಇಲ್ಲದಿರುವ ಹಾಗೂ ತಂಪಾದ ಮೇಲ್ಮೈ ಗಾಳಿ ಬೀಸುವುದರಿಂದ ಹೆಚ್ಚು ಚಳಿಯಾಗುತ್ತದೆ. ಸಂಕ್ರಾಂತಿ ಹಬ್ಬದವರೆಗೂ ಇದೇ ರೀತಿ ಚಳಿಯ ವಾತಾವರಣ ಹೆಚ್ಚಾಗಿ ಕಂಡುಬರಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. \ No newline at end of file diff --git a/eesanje/url_46_286_3.txt b/eesanje/url_46_286_3.txt new file mode 100644 index 0000000000000000000000000000000000000000..c25b676968f51303a1eb96c9cd0d0c60d604d027 --- /dev/null +++ b/eesanje/url_46_286_3.txt @@ -0,0 +1,13 @@ +ಕೋವಿಡ್ ಹೆಚ್ಚಳ ; ಮುಂಜಾಗ್ರತಾ ಕ್ರಮ ಸಿಎಂ ಸಿದ್ದರಾಮಯ್ಯ ಸೂಚನೆ +ಬೆಂಗಳೂರು,ಡಿ.17- ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಿನ್ನೆ ತಾವು ಆರೋಗ್ಯ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಚರ್ಚೆ ನಡೆಸಿದ್ದು, ಸಭೆ ನಡೆಸುವಂತೆ ಸೂಚನೆ ನೀಡಿದ್ದೆ. ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆ ನೀಡಲಾಗಿದೆ. ಅದರಂತೆ ಅವರು ಸಭೆ ನಡೆಸಿದ್ದಾರೆ. ಇಂದು ಆರೋಗ್ಯ ಸಚಿವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ಹಾಗೂ ಮುಂಜಾಗ್ರತೆಯನ್ನು ರಾಜ್ಯಸರ್ಕಾರ ವಹಿಸಲಿದೆ ಎಂದು ಸ್ಪಷ್ಟಪಡಿಸಿದರು. +ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಪಕ್ಷದ ಶಾಸಕರು, ಕಾಂಗ್ರೆಸ್ ಅಭ್ಯರ್ಥಿಗಳಾಗಿದ್ದವರು , ಕಾರ್ಯಕರ್ತರು ಹೇಳಿದವರಿಗೆ ಟಿಕೆಟ್ ನೀಡಿದ್ದೇವೆ. ಪ್ರತೀ ಜಿಲ್ಲೆಗೂ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಅವರು ಸಭೆ ನಡೆಸಿ ಮೂರು ಜನರ ಹೆಸರನ್ನು ಸೂಚಿಸಲಿದ್ದಾರೆ. ಅವರಲ್ಲಿ ಯಾರು ಮುಖ್ಯ ಹಾಗೂ ಸೂಕ್ತ ಎಂಬುದನ್ನು ಚರ್ಚಿಸಿ ಆಯ್ಕೆ ಮಾಡುತ್ತೇವೆ ಎಂದು ಹೇಳಿದರು. +ಅಲ್ಪಸಂಖ್ಯಾತರು ಮೂರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ ಈ ಹಿಂದೆ ನಾವು ಅವರಿಗೆ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ. ಈ ಚುನಾವಣೆಯಲ್ಲೂ ಅವಕಾಶ ಕಲ್ಪಿಸುತ್ತೇವೆ. ಬಿಜೆಪಿಯವರು ಏನು ಮಾಡುತ್ತಾರೆ, ಅಲ್ಪಸಂಖ್ಯಾತರ ಮತವೇ ಬೇಡ ಎಂದು ಹೇಳುತ್ತಿದ್ದಾರೆ. ಅವರೇನು ಭಾರೀಯ ಪ್ರಜೆಗಳಲ್ಲವೇ ಎಂದು ಪ್ರಶ್ನಿಸಿದರು. +ಬಿಜೆಪಿ ಶಾಸಕ ಯತ್ನಾಳ್ ಗಡ್ಡ ಬಿಟ್ಟಿರುವವರು, ಬುರ್ಖಾ ಹಾಕಿರುವವರು ಬರಬೇಡಿ, ನಾನು ಭೇಟಿ ಮಾಡುವುದಿಲ್ಲ ಎನ್ನುತ್ತಾರೆ. ಬಿಜೆಪಿ ಬಹುತ್ವದ ಪಕ್ಷ ಅಲ್ಲ. ಭಾರತ ಬಹುತ್ವವನ್ನು ಒಪ್ಪಿಕೊಂಡಿದೆ. ದೇಶದಲ್ಲಿರುವ ಎಲ್ಲರೂ ಪ್ರಜೆಗಳೇ. ಎಲ್ಲರ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದರು. +ತಾವು ಹುಬ್ಬಳ್ಳಿಯ ಮೌಲ್ವಿಗಳ ಸಮಾವೇಶದಲ್ಲಿ ಭಾಗವಹಿಸಿದ್ದನ್ನು ಬಸನಗೌಡ ಪಾಟೀಲ್ ಯತ್ನಾಳ್ ಟೀಕಿಸುತ್ತಿರುವುದು ಸಂಪೂರ್ಣ ವೈಯಕ್ತಿಕ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರು ಯತ್ನಾಳ್ ಅವರನ್ನು ಸೋಲಿಸಲು ಸಕ್ರಿಯವಾಗಿ ಕೆಲಸ ಮಾಡಿದರು. ಆ ಸಿಟ್ಟಿಗೆ ಯತ್ನಾಳ್ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು. +ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಸರ್ಕಾರ ಈಗಾಗಲೇ ಕಠಿಣ ಕ್ರಮ ಕೈಗೊಂಡಿದೆ. ಆರೋಪಿಗಳನ್ನು ಬಂಸಲಾಗಿದೆ. ಆದರೆ ಬಿಜೆಪಿಯ ನಾಯಕರು ದುರುದ್ದೇಶಪೂರಕವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಘಟನೆಯ ಬಗ್ಗೆ ರಾಹುಲ್‍ಗಾಂಯವರು ಹೇಳಿಕೆ ನೀಡಬೇಕೆಂಬ ಬಿಜೆಪಿಯವರ ವಾದ ಅಪ್ರಸ್ತುತ. +ವಿಮಾನನಿಲ್ದಾಣದಲ್ಲಿ ತಾವು ಇಳಿಯುತ್ತಿದ್ದಂತೆ ಘಟನೆ ಬಗ್ಗೆ ಮಾಹಿತಿ ದೊರೆಯಿತು. ತಕ್ಷಣವೇ ಸರ್ಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಗೃಹಸಚಿವ ಪರಮೇಶ್ವರ್ ಅವರನ್ನು ಸ್ಥಳಕ್ಕೆ ಕಳುಹಿಸಿ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು. ಸರ್ಕಾರ ಯಾವುದೇ ಹಂತದಲ್ಲೂ ವೈಫಲ್ಯವಾಗಿಲ್ಲ ಎಂದರು. +ಉತ್ತರ ಪ್ರದೇಶದಲ್ಲಿ ಬಿಜೆಪಿಯ ಶಾಸಕ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಆತನಿಗೆ ನಿನ್ನೆಯಷ್ಟೇ 25 ವರ್ಷ ಜೈಲುಶಿಕ್ಷೆಯಾಗಿದೆ. ಅಂತವರನ್ನು ಪಕ್ಷದಲ್ಲಿ ಉಳಿಸಿಕೊಂಡಿರುವ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯೇ. ಬಿಜೆಪಿಯ ರಾಜಕೀಯ ಅಧ್ಯಕ್ಷ ದೆಹಲಿಯಿಂದ ಸಂಸದರ ತಂಡ ಕಳುಹಿಸಿದ್ದಾರೆ. ಹೆಣ್ಣು ಮಕ್ಕಳ ದೌರ್ಜನ್ಯ ಮಾಡುವ ಬಿಜೆಪಿಯವರು ನಮ್ಮ ಪಕ್ಷದವರ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪ್ರಧಾನಿ ಕಚೇರಿಯ ಅಧಿಕಾರಿ ಎಂದು ವಂಚಿಸುತ್ತಿದ್ದ ವ್ಯಕ್ತಿಯ ಬಂಧನ +ಕೋಲಾರದ ಮಾಲೂರಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಬಗ್ಗೆ ಈಗಷ್ಟೇ ಸುದ್ದಿ ಬಂದಿದೆ. ಸಂಪೂರ್ಣ ವರದಿ ಪಡೆದುಕೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. ಎನ್‍ಸಿಆರ್‍ಬಿ ಪ್ರಕಾರ ಯಾರ ಆಡಳಿತದಲ್ಲಿ ಹೆಣ್ಣು ಮಕ್ಕಳು, ಮಕ್ಕಳ ಮೇಲೆ ಹೆಚ್ಚು ದೌರ್ಜನ್ಯಗಳಾಗಿವೆ ಎಂಬುದನ್ನು ಕಣ್ತೆರೆದು ನೋಡಲಿ. ಬಿಜೆಪಿ ಮಕ್ಕಳ ಮತ್ತು ಮಹಿಳೆಯರ ಮೇಲೆ ದೌರ್ಜನ್ಯವೆಸಗುವ ಪಕ್ಷ ಎಂದು ಆರೋಪಿಸಿದರು. +ಬಿಜೆಪಿಯವರು ದುರುದ್ದೇಶಪೂರಕವಾದಂತಹ ರಾಜಕೀಯ ಮಾಡುತ್ತಾರೆ. ನಮ್ಮ ಸರ್ಕಾರ ಯಾರ ಮೇಲೆ ದೌರ್ಜನ್ಯ ನಡೆದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಎಲ್ಲರಿಗೂ ರಕ್ಷಣೆ ನೀಡುವುದು ನಮ್ಮ ಹೊಣೆಗಾರಿಕೆ. ಅದರಲ್ಲೂ ಮಹಿಳೆಯನ್ನು ವಿವಸ್ತ್ರಗೊಳಿಸುವುದು , ಕಂಬಕ್ಕೆ ಕಟ್ಟಿಹಾಕಿ ಹೊಡೆಯುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ. ಕಾನೂನು ಮೀರುವವರನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. +ಹಿಂದುಳಿದ ವರ್ಗಗಳ ಆಯೋಗದ ವರದಿಯಲ್ಲಿರುವ ಅಂಶಗಳ ಬಗ್ಗೆ ಊಹೆಗಳ ಆಧಾರದ ಮೇಲೆ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ವರದಿಯಲ್ಲಿಯೇನಿದೆ ಎಂದು ಯಾರಿಗೂ ಗೊತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರ ಇದ್ದಾಗಲೇ ವರದಿ ಸೋರಿಕೆಯಾಗಿದೆ ಎಂಬ ಆರೋಪಗಳಿವೆ. ಆದರೆ ಅದೆಲ್ಲಾ ಸುಳ್ಳು. ಯಾವ ಮಾಹಿತಿಯೂ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಬರಗಾಲದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳಲ್ಲಿ ರೈತರು ಪಡೆದಿರುವ ಸಾಲದ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ನಿರ್ಧಾರವನ್ನುನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ಹೇಳಿದರು. \ No newline at end of file diff --git a/eesanje/url_46_286_4.txt b/eesanje/url_46_286_4.txt new file mode 100644 index 0000000000000000000000000000000000000000..de911ea706f479c75ccf4370817a9ccfe76629b6 --- /dev/null +++ b/eesanje/url_46_286_4.txt @@ -0,0 +1,8 @@ +ಮಲಗುಂಡಿ ಸ್ವಚ್ಛತೆಗೆ ಮಕ್ಕಳ ಬಳಕೆ : ಪ್ರಾಂಶುಪಾಲೆ, ವಾರ್ಡನ್, ಡಿ ಗ್ರೂಪ್ ನೌಕರರ ಅಮಾನತು +ಬೆಂಗಳೂರು,ಡಿ.17- ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಯಲುವ ಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಸಮಾಜ ಕಲ್ಯಾಣ ಇಲಾಖೆ ಅಮಾನತುಗೊಳಿಸಿದೆ. +ಮೊರಾರ್ಜಿ ಶಾಲೆ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ವಾರ್ಡನ್ ಮಂಜುನಾಥ್ ಹಾಗೂ ಡಿ ಗ್ರೂಪ್ ನೌಕರರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿ ತನಿಖೆಗೂ ಸೂಚನೆ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಸೂಚನೆ ಮೇರೆಗೆ ಶಾಲೆಯ ಸಿಬ್ಬಂದಿಗಳನ್ನು ಇಲಾಖೆಯ ಜಂಟಿ ನಿರ್ದೇಶಕನನ್ನು ಅಮಾನತು ಮಾಡಿದ್ದಾರೆ. +ಸಂಸತ್ತಿಗೆ ನುಗ್ಗಿದವರ ಮೊಬೈಲ್ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ +ಅಲ್ಲದೆ ಭವಿಷ್ಯದಲ್ಲಿ ಇಂತಹ ಘಟನೆಗಳು ರಾಜ್ಯದ ಯಾವುದೇ ಸ್ಥಳಗಳಲ್ಲೂ ನಡೆಯದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸುತ್ತೋಲೆ ಹೊರಡಿಸುವುದಾಗಿ ಮಹದೇವಪ್ಪ ಹೇಳಿದ್ದಾರೆ.ಮಾಲೂರು ತಾಲ್ಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಮಲದಗುಂಡಿಯೊಳಗೆ ಇಳಿಸಿ ಪ್ರಾಂಶುಪಾಲರ ಎದುರೇ ಸ್ವಚ್ಛಗೊಳಿಸಿರುವ ಘಟನೆ ಭಾರೀ ವಿವಾದವನ್ನೇ ಸೃಷ್ಟಿಸಿತ್ತು. +ಮಕ್ಕಳಿಗೆ ಇಲ್ಲಿನ ಸಿಬ್ಬಂದಿಯವರು ಕಿರುಕುಳ ನೀಡುತ್ತಿದ್ದರು. ಅನಗತ್ಯವಾಗಿ ಹೊಡೆಯುವುದು, ಕಿರುಕುಳ ನೀಡುವುದು, ರಾತ್ರಿ ಹೊತ್ತಿನಲ್ಲಿ ಬ್ಯಾಗ್ ಹೊರಿಸಿ ಹಿಂಸೆ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಇನ್ನು ಘಟನಾ ಸ್ಥಳಕ್ಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್, ಕೋಲಾರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. +ರಾಮಮಂದಿರ ಉದ್ಘಾಟನೆ : ಅಮೆರಿಕದಲ್ಲಿನ ಹಿಂದೂ ಸಮುದಾಯದಿಂದ ಕಾರು ರ‍್ಯಾಲಿ +ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 250 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ಮಲದಗುಂಡಿಯಲ್ಲ. ಸ್ವಚ್ಛತಾ ಆಂದೋಲನ ಛೇಂಬರ್ ಒಳಗೆ ಇಳಿಸಲಾಗಿದೆ ಎಂದು ಅಧಿಕಾರಿಗಳು ಕೇಳಿದ್ದಾರೆ. ಆದರೆ ಇದು ಮಲದಗುಂಡಿ ಎಂದು ವಸತಿ ಶಾಲೆಯ ಶಿಕ್ಷಕರು ಹಾಗೂ ಸ್ಥಳೀಯರು ಖಚಿತಪಡಿಸಿದ್ದಾರೆ. \ No newline at end of file diff --git a/eesanje/url_46_286_5.txt b/eesanje/url_46_286_5.txt new file mode 100644 index 0000000000000000000000000000000000000000..46530508cbfcee0aace3e22425811098f71b80b7 --- /dev/null +++ b/eesanje/url_46_286_5.txt @@ -0,0 +1,5 @@ +ಸಿಲಿಂಡರ್ ಸ್ಫೋಟ : ಒಂದೇ ಕುಟುಂಬದ 7 ಮಂದಿಗೆ ಗಾಯ +ಬೆಳಗಾವಿ, ಡಿ.17- ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿದಂತೆ ಒಂದೆ ಕುಟುಂಬದ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋಕಾಕ್ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ರಾತ್ರಿ ನಡೆದಿದೆ.ರಾಜಶ್ರೀ ನಿರ್ವಾಣಿ (42), ಅಶೋಕ ನಿರ್ವಾಣಿ (45), ದೀಪಾ( 42), ಸೋಮನಗೌಡ (44), ನವೀನ(14), ವಿದ್ಯಾ(13) ಹಾಗೂ ಒಂಭತ್ತು ತಿಂಗಳ ಬಸವನಗೌಡ ನಿರ್ವಾಣಿ ಗಾಯಗೊಂಡ ಕುಟುಂಬ ಸದಸ್ಯರು. +ಕಳೆದ ರಾತ್ರಿ ಮನೆಯವರೆಲ್ಲ ಊಟ ಮಾಡಿ ಮಲಗಿದ್ದು, ಮಧ್ಯರಾತ್ರಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾದ ವಾಸನೆಯಿಂದ ಎಚ್ಚರಗೊಂಡ ಕುಟುಂಬ ಸದಸ್ಯರೊಬ್ಬರು ಮೊಬೈಲ್ ಟಾರ್ಚ್ ಆನ್ ಮಾಡಿ ಅಡುಗೆ ಮನೆಗೆ ಹೋದಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. +ಹೊಂದಾಣಿಕೆ ರಾಜಕಾರಣದ ಅನುಮಾನ, ಸೈಲೆಂಟಾಗಿ ಮುಗಿದೋಯ್ತು ಬೆಳಗಾವಿ ಅಧಿವೇಶನ +ಸ್ಫೋಟದ ರಭಸಕ್ಕೆ ಮನೆಯ ಹೆಂಚುಗಳು ಹಾರಿ ಹೋಗಿದ್ದು ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದಿಂದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಸ್ಥಳೀಯ ಆಸ್ಪತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. \ No newline at end of file diff --git a/eesanje/url_46_286_6.txt b/eesanje/url_46_286_6.txt new file mode 100644 index 0000000000000000000000000000000000000000..fcdc6a0bd924419e8bf6e63938506f14cf36a2cc --- /dev/null +++ b/eesanje/url_46_286_6.txt @@ -0,0 +1,11 @@ +ಹೊಂದಾಣಿಕೆ ರಾಜಕಾರಣದ ಅನುಮಾನ, ಸೈಲೆಂಟಾಗಿ ಮುಗಿದೋಯ್ತು ಬೆಳಗಾವಿ ಅಧಿವೇಶನ +ಬೆಂಗಳೂರು, ಡಿ.16- ಸುವರ್ಣ ಸೌಧದಲ್ಲಿ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷಗಳ ಸಹಿಷ್ಣತೆ, ಕಾಂಗ್ರೆಸ್ನ ಅಬ್ಬರ ಎದ್ದುಕಾಣುತ್ತಿದ್ದು, ರಾಜಕೀಯ ಹೊಂದಾಣಿಕೆಯ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಆರು ತಿಂಗಳಿನಿಂದಲೂ ವಿರೋಧ ಪಕ್ಷದ ನಾಯಕರನ್ನು ನೇಮಿಸದೇ ಇದ್ದ ಬಿಜೆಪಿ ಕೆಲವು ದಿನಗಳ ಹಿಂದಷ್ಟೇ ವಿಧಾನಸಭೆಗೆ ಆರ್. ಅಶೋಕ್ ಅವರನ್ನು ವಿಪಕ್ಷ ನಾಯಕರನ್ನಾಗಿ ನೇಮಿಸಿತ್ತು. ಬಿಜೆಪಿಗೆ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. +ವಿಧಾನಸಭೆ ಕಲಾಪದಲ್ಲಿ ಅಶೋಕ್ ಅವರಿಗೆ ಪಕ್ಷಭೇದ ಮರೆತು ಅಭಿನಂದನೆ ಸಲ್ಲಿಸಿದರು. ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಮಾತ್ರ ಇಬ್ಬರಿಗೂ ಅಭಿನಂದನೆ ಸಲ್ಲಿಸುವುದಿಲ್ಲ ಎಂದು ಹೇಳುವ ಮೂಲಕ ಸೆಟೆದು ನಿಂತರು.ನಿನ್ನೆ ನಡೆದ ಚರ್ಚೆಯಲ್ಲಿಯೂ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಹೊಂದಾಣಿಕೆ ಇದೆ ಎಂದು ನೇರವಾಗಿಯೇ ಆರೋಪಿಸಿದ್ದರು. ಅದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕರು ಚರ್ಚೆಯ ಪ್ರತಿ ಹಂತದಲ್ಲೂ ಮೃದು ಧೋರಣೆಯನ್ನು ಅನುಭವಿ ಸುತ್ತಿದ್ದುದು ಕಂಡುಬಂದಿತು. +ವಿಪಕ್ಷ ನಾಯಕ ಆರ್. ಅಶೋಕ್ ತಮಗೆ ಅಟಲ್ಬಿಹಾರಿ ವಾಜಪೇಯಿ ಮಾದರಿ. ನಾನು ಅವರಂತೆಯೇ ಲಕ್ಷ್ಮಣ ರೇಖೆ ದಾಟುವುದಿಲ್ಲ ಎಂದು ಸದನ ದಲ್ಲೇ ಘೋಷಣೆ ಮಾಡಿದ್ದರು. ಹತ್ತು ದಿನ ಕಲಾಪ ಪೂರ್ತಿಯಾಗಿ ಅದರಂತೆಯೇ ನಡೆದುಕೊಂಡರು.ವಿಪಕ್ಷ ನಾಯಕರಾಗಿ ಅಶೋಕ್ ಅವರ ಮೊದಲ ಅಧಿವೇಶನ ಇದಾಗಿರುವುದರಿಂದಾಗಿ ಆಕ್ರಮಣಕಾರಿಯಾದಂತಹ ಚರ್ಚೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಆ ರೀತಿಯ ಕಲಾಪಗಳು ಕಂಡುಬರಲೇ ಇಲ್ಲ. +ಬರದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಯವರ ಬದಲಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಉತ್ತರ ನೀಡಿದಾಗಲೂ ಬಿಜೆಪಿಯವರು ಸಹಿಸಿಕೊಂಡಿದ್ದರು. ಉತ್ತರ ಕರ್ನಾಟಕ ಅಭಿವೃದ್ಧಿಯ ಕುರಿತು ನಡೆದ ಸುದೀರ್ಘ ಚರ್ಚೆಯಲ್ಲಿ ನಿನ್ನೆ ಮುಖ್ಯಮಂತ್ರಿಯವರು ಉತ್ತರ ನೀಡಿದ ವೇಳೆ ಮಹತ್ವದ ಘೋಷಣೆಗಳೇನೂ ಕಂಡುಬರಲಿಲ್ಲ. ಆದರೂ ಬಿಜೆಪಿ ಪ್ರತಿಭಟನೆ ಮಾಡುವುದಾಗಿ ಸಭಾತ್ಯಾಗ ಮಾಡದೇ ಸಹನೆಯಿಂದ ಕುಳಿತಿದ್ದು ಅಚ್ಚರಿ ಮೂಡಿಸಿತ್ತು. +ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ +ಕೊನೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪರಿಸಮಾಪ್ತಿ ವರದಿ ಓದುವಾಗ ಬಿಜೆಪಿ ನಾಯಕರು ರೈತರ ಸಾಲಮನ್ನಾ ಮಾಡಬೇಕೆಂದು ಪಟ್ಟುಹಿಡಿದು ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾಗಿದ್ದರು. ಆ ವೇಳೆಗಾಗಲೇ ತಡವಾಗಿತ್ತು. ಸಭಾಧ್ಯಕ್ಷರು ಸದನವನ್ನು ಮುಕ್ತಾಯಗೊಳಿಸುವ ಸಲುವಾಗಿ ರಾಷ್ಟ್ರಗೀತೆ ಗಾಯನವನ್ನು ಆರಂಭಿಸಿದರು. ಹೀಗಾಗಿ ಬಿಜೆಪಿಯ ಹೋರಾಟ ನೆಪಮಾತ್ರ ಎನ್ನುವಂತಾಗಿತ್ತು. +ಅದೇ ವಿಧಾನಪರಿಷತ್ನಲ್ಲಿ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಭಾರೀ ಗದ್ದಲ ನಡೆಸಿದ್ದರು. ಅಲ್ಲಿ ವಿರೋಧಪಕ್ಷದ ನಾಯಕರು ಇಲ್ಲದೇ ಇದ್ದರೂ ಸಾಮೂಹಿಕ ನಾಯಕತ್ವದಲ್ಲಿ ಸರ್ಕಾರದ ವಿರುದ್ಧ ಸಮರ್ಥ ಪ್ರತಿಭಟನೆ ಕಂಡುಬಂದಿತು. +ವಿಧಾನಸಭೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ ಚರ್ಚೆಯಾದ ವೇಳೆಯಲ್ಲೂ ವಿಪಕ್ಷ ನಾಯಕರು ಸರಿಯಾದ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂಬ ಆಕ್ಷೇಪಗಳಿವೆ. ನಿನ್ನೆ ಮುಖ್ಯಮಂತ್ರಿಯವರು ಬಿಜೆಪಿಯ ಪ್ರಮುಖ ನಾಯಕರ ಹೆಸರನ್ನು ಹೇಳುತ್ತಾ, ಅವರು ನನ್ನ ಸ್ನೇಹಿತರು….ಇವರು ನಮ್ಮವರು ಎಂದು ಔಪಚಾರಿಕವಾಗಿ ಹೇಳಿದ್ದು ಕಂಡುಬಂದಿತ್ತಾದರೂ ವಾಸ್ತವದಲ್ಲಿ ಹೊಂದಾಣಿಕೆಯ ರಾಜಕಾರಣದ ಅನುಮಾನದ ಗುಮ್ಮ ಮೊಗಸಾಲೆಯಲ್ಲಿ ಬಿರುಸಾಗಿ ಓಡಾಡಿತು. +ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ +ಹೀಗಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರಬಲ ಪ್ರತಿಪಕ್ಷದ ಕೊರತೆಯನ್ನು ಎದುರಿಸುವಂತಾಗಿದೆ. ಜೆಡಿಎಸ್ ನಾಯಕರು ಅವೇಶನಕ್ಕೆ ಬರುವುದಕ್ಕೆ ನಿರಾಸಕ್ತಿ ತೋರಿಸಿದ್ದು ಎದ್ದು ಕಾಣುತ್ತಿತ್ತು. \ No newline at end of file diff --git a/eesanje/url_46_286_7.txt b/eesanje/url_46_286_7.txt new file mode 100644 index 0000000000000000000000000000000000000000..14c785f2a0707a4cd18644585d70df2e1550b0e1 --- /dev/null +++ b/eesanje/url_46_286_7.txt @@ -0,0 +1,11 @@ +ಸ್ಥಳೀಯ ನವೋದ್ಯಮಗಳ ಉತ್ತೇಜನಕ್ಕೆ ಕ್ರಮ : ಪ್ರಿಯಾಂಕ ಖರ್ಗೆ +ಬೆಳಗಾವಿ,ಡಿ.16- ಸ್ಥಳೀಯ ನವೋದ್ಯಮಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಾಶಸ್ತ್ಯದ ಸಾರ್ವಜನಿಕ ಸಂಗ್ರಹಣೆ ನೀತಿ ರೂಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. +ರಾಜ್ಯದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಐಟಿ, ಇಎಸ್ಡಿಎಂ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಲಯಗಳಿಗೆ ಒತ್ತು ನೀಡುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ-ಬೆಳಗಾವಿ (ಹೆಚ್ಡಿಬಿ) ಕ್ಲಸ್ಟರ್ನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಬೆಳಗಾವಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಟೆಕ್ಸೆಲರೇಶನ್ನ 3 ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಯಮಿಗಳ ಜತೆ ಸಚಿವರು ಸಂವಾದ ನಡೆಸಿದರು. +ಬಿಯಾಂಡ್ ಬೆಂಗಳೂರು ಯೋಜನೆಯಡಿ ಹೂಡಿಕೆ ಮಾಡಿ, ಸ್ಟ್ರಾರ್ಟ್ಅಪ್ ಸೆಲ್ನಲ್ಲಿ ನೋಂದಣಿಯಾದ ನವೋದ್ಯಮಗಳ ಉತ್ಪನ್ನವನ್ನು ಸರ್ಕಾರವೇ ಖರೀದಿಸುವ ಉದ್ದೇಶದಿಂದ ಈ ನೀತಿ ರೂಪಿಸಲಾಗುವುದು. ಈ ಸಂಬಂಧ ಅರ್ಜಿ ಸಲ್ಲಿಸಲು ಇದ್ದ ಗಡುವನ್ನು 2024ರ ಜನವರಿ 5ರವಗೆಗೆ ವಿಸ್ತರಿಸಲಾಗುವುದು. ಈ ನೀತಿ ಮೂಲಕ ರೀತಿ ಮೇಡ್ ಇನ್ ಕರ್ನಾಟಕದ ಉತ್ಪನ್ನಗಳನ್ನು ಖರೀದಿಸಿ, ಸ್ಟಾರ್ಟ್ ಅಪ್ಗಳನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧ ಎಂದರು. +ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳ ಅಭಿವೃದ್ಧಿಗೆ ಬದ್ಧವಾಗಿ, ಬಿಯಾಂಡ್ ಬೆಂಗಳೂರು ಯೋಜನೆಗೆ ಮತ್ತಷ್ಟು ಬಲ ತುಂಬಲಾಗುವುದು. ಇಂಥ ನಗರಗಳಲ್ಲಿ ಹೆಚ್ಚು ಉದ್ಯಮಗಳು ಸ್ಥಾಪನೆಯಾದರೆ, ಸ್ಥಳೀಯವಾಗಿ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತದೆ ಎಂದರು. +ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೋಡಿಶ್ರೀಗಳಿಗೆ ಆಹ್ವಾನ +ಸೆಂಟರ್ ಆಫ್ ಎಕ್ಸಲೆನ್ಸ್- ಫಿನ್ಟೆಕ್, ಗೇಮಿಂಗ್ ಆಕ್ಸಿಲರೇಟರ್, ಹೆಲ್ತ ಸೈನ್ಸ್, ಬಯೋಟೆಕ್ ಆಕ್ಸಿಲರೇಟರ್ಗಳನ್ನು ಸ್ಥಾಪಿಸುವ ಗುರಿ ಇದ್ದು, ಈ ಕ್ಷೇತ್ರಗಳಲ್ಲಿ ಪ್ರಾವಿಣ್ಯತೆ ಇರುವವರಿಗೆ ಇವುಗಳನ್ನು ನಡೆಸುವ ಹೊಣೆ ವಹಿಸಲಾಗುತ್ತದೆ. ರಾಜ್ಯ ಬೇರೆ ಬೇರೆ ಭಾಗಗಳಲ್ಲಿ ಸ್ಥಾಪಿಸಲಾಗುವ ಇಂಥ ಈ ಶ್ರೇಷ್ಠತಾ ಕೇಂದ್ರಗಳಿಗೆ ಎಲ್ಲ ರೀತಿಯ ಬೆಂಬಲ ನೀಡಲು ನಮ್ಮ ಸರ್ಕಾರ ಸಿದ್ಧ ಎಂದರು. +ಪ್ರಗತಿಯ ಹಾದಿಯಲ್ಲಿ ಹೆಚ್ಬಿಡಿ ಕ್ಲಸ್ಟರ್ಹೆಚ್ಬಿಡಿ ಕ್ಲಸ್ಟರ್ನಲ್ಲಿ 16 ಹೊಸ ಕಂಪನಿಗಳು ತಲೆ ಎತ್ತಿದ್ದು, 4 ಕಂಪನಿಗಳು ತಮ್ಮ ಉದ್ಯಮಗಳ ವಿಸ್ತರಣೆ ಮಾಡಿವೆ. ಕ್ಲಸ್ಟರ್ ಉದ್ಯಮ ಸ್ಥಾಪಿಸಲು 40 ಕಂಪನಿಗಳು ಮುಂದೆ ಬಂದಿವೆ. ಜತೆಗೆ, ಒಂದು ಉತ್ಪಾದನಾ ಘಟಕ ಸಹ ಆರಂಭವಾಗಿದ್ದು, ಇದರಿಂದ 3,000 ಜನರಿಗೆ ಉದ್ಯೋಗ ಲಭಿಸಿದೆ. ಬರೋಬ್ಬರಿ 25 ಕೋಟಿ ರೂ. ಬಂಡವಾಳದೊಂದಿಗೆ 150 ಸ್ಟಾರ್ಟ್ಅಪ್ಗಳು ಕಾರ್ಯಾರಂಭಿಸಿವೆ. +ಟೆಕ್ಸೆಲರೇಶನ್ ಸಂವಾದ:ರಾಜ್ಯದಾದ್ಯಂತ ಸ್ಟಾರ್ಟ್ಅಪ್ಗಳಿಗೆ ಬಂಡವಾಳ ಲಭ್ಯತೆಯನ್ನು ಹೆಚ್ಚಿಸಲು ಸರ್ಕಾರ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ಎಲೆಕ್ಟ್ರಾನಿಕ್ಸ್ ಇಲಾಖೆ ನಿರ್ದೇಶಕರು, ಕಿಟ್ಸ ವ್ಯವಸ್ಥಾಪಕ ನಿರ್ದೇಶಕ ದರ್ಶನ್ ಎಚ್.ವಿ. ಮಾತನಾಡಿದರು. ಇದಲ್ಲದೇ, ನಾಗರಿಕ ಸ್ನೇಹಿ ಸ್ಟಾರ್ಟ್ ಆಪ್ಗಳು, ಉದಯೋನ್ಮುಖ ಕ್ಲಸ್ಟರ್ಗಳಲ್ಲಿ ಇಎಸ್ಡಿಎಂ ಭವಿಷ್ಯ, ಎಂಜಿನಿಯರಿಂಗ್ ಮತ್ತು ವಿನ್ಯಾಸ ಕೇಂದ್ರವಾಗಿ ಹೆಚ್ಡಿಬಿ ಕ್ಲಸ್ಟರ್, ಕ್ಲಸ್ಟರ್ನಲ್ಲಿ ಆರಂಭಿಕ ಪರಿಸರ ವ್ಯವಸ್ಥೆಗೆ ಬಂಡವಾಳ, ಹೆಚ್ಡಿಬಿ ಕ್ಲಸ್ಟರ್ನೊಂದಿಗೆ ಜಾಗತಿಕ ಸಾಮಥ್ರ್ಯ ಕೇಂದ್ರಗಳ ಜೋಡಣೆ, ಕರ್ನಾಟಕ ಸ್ಕಿಲ್ ಕನೆಕ್ಟ್ ಪೋರ್ಟಲ್ ಮತ್ತು ಜಿಸಿಸಿಯ ಬೆಳವಣಿಗೆಗೆ ಇತರ ಉಪಕ್ರಮಗಳು, 100 ದಿನಗಳಲ್ಲಿ 1000 ಉದ್ಯಮ-ಸಿದ್ಧ ವೃತ್ತಿಪರರ ರೂಪಿಸುವ ಬಗ್ಗೆ ಸಂವಾದ ನಡೆಯಿತು. +ಉದ್ಯಮಿಗಳಿಗೆ ಸನ್ಮಾನ:ಹೆಚ್ಡಿಬಿ ಕ್ಲಸ್ಟರ್ ಸೀಡ್ ಫಂಡ್ಗೆ 2 ಕೋಟಿ ರೂ. ನೀಡಿದ್ದ ಗೋಲ್ಡ ಪ್ಲಸ್ನ ಸುಭಾಷ್ ತ್ಯಾಗಿ ಹಾಗೂ ಹೆಚ್ಬಿಡಿ ಕ್ಲಸ್ಟರ್ ಲೀಡ್ ಇಂಡಸ್ಟ್ರಿ ಆಂಕರ್ ವೆಂಕಟೇಶ್ ಪಾಟೀಲ್ ಅವರನ್ನು ಸಚಿವರು ಸನ್ಮಾನಿಸಿದರು. ಸಮಾರೋಪ ಸಮಾರಂಭದಲ್ಲಿ ಹೆಚ್ಡಿಬಿ ಕ್ಲಸ್ಟರ್ನ ಉದ್ಯಮಿಗಳನ್ನು ಅಭಿನಂದಿಸಲಾಯಿತು. ನಂತರ ಕೆಎಲಇ ಟೆಕ್, ಐಎಂಇಆರ್, ಜಿಐಟಿ ಜತೆಗಿನ ಒಪ್ಪಂದ ಪತ್ರಕ್ಕೆ ಕೆಡಿಇಎಂ ಸಹಿ ಹಾಕಿತು. ನವೋದ್ಯಮಗಳ ಉತ್ಪನ್ನಗಳ ಬಿಡುಗಡೆಗೂ ಕಾರ್ಯಕ್ರಮ ಸಾಕ್ಷಿಯಾಯಿತು. +ಕಾರ್ಯಕ್ರಮದಲ್ಲಿ ಐಟಿ ಮತ್ತು ಬಿಟಿ, ಎಲೆಕ್ಟ್ರಾನಿಕ್ಸ್ ಇಲಾಖೆ ನಿರ್ದೇಶಕರು, ಕಿಟ್ಸ ವ್ಯವಸ್ಥಾಪಕ ನಿರ್ದೇಶಕ ದರ್ಶನ್ ಎಚ್ ವಿ, ಕೆಡಿಇಎಂ ಅಧ್ಯಕ್ಷ ಬಿ.ವಿ ನಾಯ್ಡು, ಕೆಡಿಇಎಂನ ಸಿಇಓ ಸಂಜೀವ್ ಗುಪ್ತಾ, ಹೆಚ್ಬಿಡಿ ಕ್ಲಸ್ಟರ್ ಲೀಡ್ ಇಂಡಸ್ಟ್ರಿ ಆಂಕರ್ಗಳಾದ ವೆಂಕಟೇಶ್ ಪಾಟೀಲ, ಸಂತೋಷ್ ಹುರಳಿಕೊಪ್ಪಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_286_8.txt b/eesanje/url_46_286_8.txt new file mode 100644 index 0000000000000000000000000000000000000000..963fbbce2bbcb4e0288162727a99d52496433a70 --- /dev/null +++ b/eesanje/url_46_286_8.txt @@ -0,0 +1,8 @@ +ಕೇರಳದಲ್ಲಿ ಕೋವಿಡ್ ಹೆಚ್ಚಳ, ಕರ್ನಾಟಕಕ್ಕೂ ಶುರುವಾಯ್ತು ಆತಂಕ +ಬೆಂಗಳೂರು,ಡಿ.16- ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗಿರುವ ಮಾಹಿತಿ ಇದ್ದರೂ ರಾಜ್ಯದಲ್ಲಿ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದ ಮಾಗಡಿ ರಸ್ತೆಯ ಆರೋಗ್ಯ ಸೌಧದ ಬಳಿ ಸಿಎಸ್ಆರ್ ಯೋಜನೆಯಡಿ ಸಮುದಾಯ ಆರೋಗ್ಯ ಸೇವೆ ಒದಗಿಸುವ ವೆಲ್ನೆಸ್ ಆನ್ ವೀಲ್ಸ್ ವಾಹನಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೋವಿಡ್ ಸೋಂಕು ಯಾವ ರೀತಿ ಜನರ ಮೇಲೆ ಪ್ರಭಾವ ಬೀರಿದೆ ಎಂಬುದನ್ನು ಪರಿಶೀಲಿಸಲಾಗುತ್ತಿದೆ. +ರಾಜ್ಯದಲ್ಲಿ ಆತಂಕಪಡುವಂತಹ ಬೆಳವಣಿಗೆ ಏನೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.ಚಳಿಯ ವಾತಾವರಣದಿಂದಾಗಿ ವೈರಲ್ ಇನ್ಫ್ಲುಯೆಂಜ ಹಾಗೂ ಕೋವಿಡ್ ಸೋಂಕು ಕಂಡುಬರುತ್ತಿದೆ. ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಶಿಷ್ಟಾಚಾರ ಪಾಲನೆ ಮಾಡಬೇಕಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಎಲ್ಲವನ್ನು ಗಮನಿಸಲಾಗುತ್ತಿದೆ. +ಒಂದು ವೇಳೆ ಆತಂಕಪಡುವ ಸ್ಥಿತಿ ಬಂದಾಗ ಅದಕ್ಕೆ ಬೇಕಾದ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ರಾಜ್ಯದಲ್ಲಿ ಭಯ ಸೃಷ್ಟಿಸುವ ವಾತಾವರಣವಿಲ್ಲ. ಸೋಂಕು ಪೀಡಿತ ಪ್ರದೇಶದಿಂದ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತದೆ ಎಂದು ಹೇಳಿದರು. ಆರೋಗ್ಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕೇರಳದಲ್ಲಿ ಯಾವ ರೀತಿಯ ಸೋಂಕು ಹೆಚ್ಚಾಗಿದೆ ಎಂಬ ಬಗ್ಗೆ ತಜ್ಞರಿಂದ ಮಾಹಿತಿ ಪಡೆಯಲಾಗುವುದು ಎಂದರು. +ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಿ : ಯತ್ನಾಳ್ +ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗುವುದು. ಪೊಲೀಸ್ ಇಲಾಖೆಯ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು. +ಹೊಸಕೋಟೆಯಲ್ಲಿ ನಮ್ಮ ವೈದ್ಯರೇ ಕ್ರಮ ಕೈಗೊಂಡಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲ ಕಡೆಯೂ ಆಗಬೇಕು. ಹೆಣ್ಣು ಮಗುವಿನ ಬಗ್ಗೆ ಅಸಡ್ಡೆ ಬೇಡ ಪ್ರೀತಿ ಇರಬೇಕು. ತಪ್ಪು ಎಸಗಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಇಲಾಖೆಯಿಂದಲೂ ಈ ಬಗ್ಗೆ ಕಾರ್ಯಾಚರಣೆ ಹೆಚ್ಚು ಮಾಡಲಾಗುವುದು ಎಂದು ಹೇಳಿದರು. +ವೋಲ್ವೋ ಗ್ರೂಪ್ ಮತ್ತು ನಾರಾಯಣ ಹೆಲ್ತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವೆಲ್ನೆಸ್ ಆನ್ ವೀಲ್ಸ್ನ್ನು ಪ್ರಾರಂಭಿಸಲಾಗಿದೆ. ಇದು ಕ್ಯಾನ್ಸರ್, ಹೃದಯ ಮತ್ತು ರೋಗ ನಿರ್ಣಯ ಸೇವೆಗಳಿಗೆ ಉಚಿತ ಸ್ಕ್ರೀನಿಂಗ್ ಗಳಿಗೆ ಮೀಸಲಾಗಿರುವ ಸುಧಾರಿತ ಸಂಚಾರಿ ಕ್ಲಿನಿಕ್ ಆಗಿದೆ. ಇಂದಿನಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತದೆ. \ No newline at end of file diff --git a/eesanje/url_46_286_9.txt b/eesanje/url_46_286_9.txt new file mode 100644 index 0000000000000000000000000000000000000000..566852f7c2c2a32c8ec34f676f36a5702dfa7272 --- /dev/null +++ b/eesanje/url_46_286_9.txt @@ -0,0 +1,9 @@ +ಸಂಸದ ಪ್ರತಾಪ್ ಸಿಂಹಗೆ ಕಾನೂನು ಸಂಕಷ್ಟ..! +ಬೆಂಗಳೂರು,ಡಿ.16-ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೊಸ ಸಂಸತ್ ಭವನದ ಮೇಲೆ ನಡೆದ ಭದ್ರತಾ ಲೋಪ ಕುರಿತಾಗಿ ಬಿಜೆಪಿಯ ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ವಿಶೇಷ ಘಟಕದ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಪ್ರತಾಪ್ ಸಿಂಹ ಅವರಿಗೆ ನೋಟಿಸ್ ನೀಡಲು ಮುಂದಾಗಿದೆ. ಮುಂದಿನ ವಾರ ನೋಟಿಸ್ ನೀಡುವ ಸಂಭವ ಹೆಚ್ಚಾಗಿದ್ದು, ಪ್ರಕರಣ ಕುರಿತಂತೆ ದೆಹಲಿ ವಿಶೇಷ ಘಟಕದ ಅಪರಾಧ ವಿಭಾಗದ ಹಿರಿಯ ನೇತೃತ್ವದ ಪೊಲೀಸ್ ತಂಡ ವಿಚಾರಣೆಗೆ ಒಳಪಡಿಸಲು ಮುಂದಾಗಿದ್ದಾರೆ. +ಸಂಸತ್ ಒಳಗೆ ಪ್ರವೇಶಿಸಿದ್ದ ಇಬ್ಬರಲ್ಲಿ ಒಬ್ಬಾತ ಉತ್ತರಪ್ರದೇಶದ ಲಖ್ನೋ ನಿವಾಸಿಯಾಗಿದ್ದರೆ, ಮತ್ತೋರ್ವ ಮೈಸೂರಿನ ಮನೋರಂಜನ್. ಈ ಇಬ್ಬರಿಗೂ ಪ್ರತಾಪ್ ಸಿಂಹ ಅವರ ಆಪ್ತ ಕಾರ್ಯದರ್ಶಿ ಸಂಸತ್ ಭವನದೊಳಗೆ ಪ್ರವೇಶ ಪಡೆಯಲು ತಮ್ಮ ಅನುಮತಿಯುಳ್ಳ ಪಾಸ್ ನೀಡಿದ್ದರು. +34 ವರ್ಷದ ಮನೋರಂಜನ್ ಮೈಸೂರಿನ ವಿಜಯನಗರದ 2ನೇ ಹಂತದ ನಿವಾಸಿಯಾಗಿರುವ ದೇವರಾಜ ಗೌಡರ ಪುತ್ರ. ಬೆಂಗಳೂರಿನ ಬಿಐಟಿ ಕಾಲೇಜಿನಿಂದ ಬಿಇ ಪದವಿ ಪಡೆದುಕೊಂಡಿದ್ದ. ಸಂಸತ್ ಹೊರಗೆ ದಾಂಧಲೆ ಎಬ್ಬಿಸಿದ ಹರಿಯಾಣದ ಹಿರ್ಷದ ನಿವಾಸಿ ನೀಲಂ, ಮತ್ತೋರ್ವ ಮಹಾರಾಷ್ಟ್ರದ ಲಾಥೂರ್ನ ಅಮೂಲ್ ಸಿಂಧೆ ಬಂಧಿತ ಆರೋಪಿಗಳಾಗಿದ್ದಾರೆ. +ಬಂಧಿತ ಇಬ್ಬರು ಆರೋಪಿಗಳು ಪ್ರತಾಪ್ ಸಿಂಹ ಅವರ ಸಹಿವುಳ್ಳ ಪತ್ರದಲ್ಲೇ ಪಾಸ್ ಪಡೆದುಕೊಂಡಿರುವುದರಿಂದ ಇದನ್ನು ಭದ್ರತಾ ವೈಫಲ್ಯವೆಂದೇ ಪರಿಗಣಿಸಲಾಗಿದ್ದು, ಎಲ್ಲ ಆಯಾಮಗಳಿಂದಲೂ ಸಂಸದರನ್ನು ತನಿಖೆಗೆ ಒಳಪಡಿಸಲು ದೆಹಲಿ ವಿಶೇಷ ಘಟಕದ ಪೊಲೀಸರು ತೀರ್ಮಾನಿಸಿದ್ದಾರೆಂದು ಮೂಲಗಳು ತಿಳಿಸಿವೆ. +ರಾಷ್ಟ್ರೀಯ ಭದ್ರತಾ ವಿಷಯದಲ್ಲಿ ರಾಜೀಯಾಗುವ ಪ್ರಶ್ನೆಯೇ ಇಲ್ಲ ಎಂದು ಖುದ್ದು ನರೇಂದ್ರಮೋದಿ ಹಲವಾರು ಬಾರಿ ತಮ್ಮ ಭಾಷಣಗಳಲ್ಲಿ ಹೇಳಿರುವುದರಿಂದ ತಮ್ಮ ಪಕ್ಷದವರೇ ಸಂಸತ್ ಸದಸ್ಯರಾಗಿದ್ದರೂ ವಿಚಾರಣೆಯಿಂದ ವಿನಾಯ್ತಿ ನೀಡಬಾರದೆಂದು ಗೃಹ ಇಲಾಖೆಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈಗ ಬಂಧಿತರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಇಬ್ಬರಿಗೂ ಯಾವ ಕಾರಣದಿಂದ ಪಾಸ್ಗಳನ್ನು ನೀಡಲಾಗಿತ್ತು. ಎಷ್ಟು ವರ್ಷದಿಂದ ಇವರು ಪರಿಚಿತರು, ಇವರ ಹಿನ್ನಲೆ , ಆರೋಪಿಗಳಿಗೂ ಮತ್ತು ಸಂಸದರಿಗಿರುವ ಸಂಬಂಧ ಇದೆಲ್ಲವನ್ನೂ ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಲಿದೆ. +ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೋಡಿಶ್ರೀಗಳಿಗೆ ಆಹ್ವಾನ +ಒಂದು ವೇಳೆ ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸದಿದ್ದರೆ ಕೇಂದ್ರ ಸರ್ಕಾರ ತಮ್ಮ ಭದ್ರತಾ ವೈಫಲ್ಯವನ್ನು ಮುಚ್ಚಿ ಹಾಕಲು ಇಡೀ ಪ್ರಕರಣವನ್ನೇ ತಿಪ್ಪೆ ಸಾರಿಸಿದೆ ಎಂದು ಪ್ರತಿಪಕ್ಷಗಳು ಆರೋಪ ಮಾಡಬಹುದು.ಈಗಾಗಲೇ ಎಎಪಿ, ಟಿಎಂಸಿ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸಬೇಕು ಹಾಗೂ ಅವರ ವಿರುದ್ಧವೂ ಬಂಧಿತ ಆರೋಪಿಗಳ ಮೇಲೆ ದಾಖಲಾಗಿರುವ ಪ್ರಕರಣವನ್ನೇ ದಾಖಲಿಸಬೇಕೆಂದು ಒತ್ತಡ ಹಾಕಿದ್ದಾರೆ. +ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿರೋಧ ಪಕ್ಷಗಳಿಗೆ ಪ್ರಕರಣವು ಅಸ್ತ್ರವಾಗದಂತೆ ಬಿಜೆಪಿ ಜಾಗೃತ ಹೆಜ್ಜೆ ಇಡುತ್ತಿದ್ದು, ಪ್ರಕರಣದಲ್ಲಿ ಯಾರಿಗೂ ವಿನಾಯ್ತಿ ಬೇಡ ಎಂಬ ದೃಢ ನಿರ್ಧಾರಕ್ಕೆ ಬಂದಂತಿದೆ. \ No newline at end of file diff --git a/eesanje/url_46_287_1.txt b/eesanje/url_46_287_1.txt new file mode 100644 index 0000000000000000000000000000000000000000..b6d2b66a30a2e1ab11e84cb3207d67e4a6b06261 --- /dev/null +++ b/eesanje/url_46_287_1.txt @@ -0,0 +1,5 @@ +ಮೈಸೂರಿನ ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಿ : ಯತ್ನಾಳ್ +ಬೆಂಗಳೂರು,ಡಿ.16- ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. +ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಕೊಡುಗೆ ಕರ್ನಾಟಕ ಹಾಗೂ ಭಾರತಕ್ಕೆ ಅಪಾರವಾದದ್ದು. ರಾಜ್ಯ ಸರ್ಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ಇವರ ಹೆಸರನ್ನು ನಾಮಕರಣ ಮಾಡುವಂತೆ ಶಿಫಾರಸ್ಸು ಮಾಡಬೇಕು ಎಂದು ಕೋರಿದ್ದಾರೆ. +ವಿದೇಶಿ ವಿವಿ ಪದವಿ ಮಾನ್ಯವಲ್ಲ ; ಯುಜಿಸಿ + ತನಿಖೆಗೆ ಅನುಮತಿ ವಾಪಸಾತಿ ವಿರುದ್ಧ ನಾನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದೆ. ಭ್ರಷ್ಟಾಚಾರದ ವಿರುದ್ಧ ದಿನಂಪ್ರತಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟ್ರಾಚಾರಿಯ ರಕ್ಷಣೆಗೆ ನಿಂತಿರುವುದು ದುರಂತ ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_287_10.txt b/eesanje/url_46_287_10.txt new file mode 100644 index 0000000000000000000000000000000000000000..00a0ccc6263d4c665531b60e8690c168af7516bb --- /dev/null +++ b/eesanje/url_46_287_10.txt @@ -0,0 +1,15 @@ +ಡಿಕೆಶಿ ಸಿಬಿಐ ತನಿಖೆ ವಾಪಸ್ : ಉಭಯ ಸದನಗಳಲ್ಲಿ ಗದ್ದಲ, ವಾಕ್ಸಮರ +ಬೆಳಗಾವಿ, ಡಿ. 15- ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಅನು ಮತಿಯನ್ನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆ ಹಿಂಪಡೆದ ವಿಷಯ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿ ವಾಕ್ಸಮರಕ್ಕೆ ಕಾರಣವಾಯಿತು. +ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆಯಡಿ ತಾವು ನೀಡಿದ್ದ ಪ್ರಸ್ತಾವನೆಯನ್ನು ಮಂಡಿಸಲು ಅವಕಾಶ ನೀಡಬೇಕು ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕೋರಿದರು. ವಿಧಾನಪರಿಷತ್ನಲ್ಲಿ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ಇದೇ ವಿಚಾರದ ಬಗ್ಗೆ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರಲ್ಲಿ ವಿನಂತಿಸಿದರು. +ಈ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಚರ್ಚೆಗೆ ಅವಕಾಶ ನೀಡಲು ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ನಿರಾಕರಿಸಿದರು. ವಿಧಾನಸಭೆಯಲ್ಲಿ ಅಶೋಕ್ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ನ ಶಾಸಕ ಬಸವರಾಜರಾಯರೆಡ್ಡಿ ಮತ್ತು ಇತರರು ಪಟ್ಟು ಹಿಡಿದರು. ಶಾಸಕರನ್ನು ಸಮಾಧಾನಪಡಿಸಿದ ಸಭಾಧ್ಯಕ್ಷರು ವಿಪಕ್ಷ ನಾಯಕರಿಗೆ ನಿಲುವಳಿ ಸೂಚನೆಯ ಪೂರ್ವಭಾವಿ ಪ್ರಸ್ತಾವನೆಗೆ ಅವಕಾಶ ಮಾಡಿಕೊಟ್ಟರು. +ಕಾಂಗ್ರೆಸ್ ಶಾಸಕ ಎಚ್.ಡಿ.ರಂಗನಾಥ್ ಮಾತನಾಡಿ, ರಾಯರೆಡ್ಡಿಯವರಿಗೆ ಮಾತನಾಡಲು ಸಭಾಧ್ಯಕ್ಷರು ಆಹ್ವಾನಿಸಿ ಈಗ ಮಧ್ಯದಲ್ಲಿ ತಡೆದು ವಿಪಕ್ಷ ನಾಯಕರಿಗೆ ನಿಲುವಳಿ ಪ್ರಸ್ತಾವನೆಗೆ ಅವಕಾಶ ಮಾಡಿಕೊಟ್ಟಿದ್ದೇಕೆ, ವಿರೋಧ ಪಕ್ಷದ ನಾಯಕರು ಈ ಕಲಾಪದಲ್ಲಿ ಫುಲ್ ಆಕ್ಟಿಂಗ್ ಮಾಡಿದ್ದಾರೆ. ಹೆಚ್ಚು ಸಮಯ ತೆಗೆದುಕೊಂಡಿದ್ದಾರೆ. ಇನ್ನೂ ಎಷ್ಟು ಸಮಯ ಅವರಿಗೆ ಬೇಕು, ಈ ರೀತಿ ನಡೆದುಕೊಳ್ಳುತ್ತಿರುವುದು ಒಳ್ಳೆಯದಲ್ಲ ಎಂದರು. +ಆಕ್ಷೇಪದ ನಡುವೆಯೂ ಅವಕಾಶ ಪಡೆದ ಆರ್.ಅಶೋಕ್ ಮಾತನಾಡಿ, ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವುದು ಸರಿಯಲ್ಲ. ಸಚಿವ ಸಂಪುಟದ ಪಾವಿತ್ರ್ಯತೆಗೆ ಧಕ್ಕೆಯುಂಟು ಮಾಡಿದೆ. ಆಗಿನ ಸರ್ಕಾರ ಸ್ವಯಂಪ್ರೇರಿತ ಹಾಗೂ ರಾಜಕೀಯವಾಗಿ ನಿರ್ಧಾರ ತೆಗೆದುಕೊಳ್ಳಲಿಲ್ಲ. ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು ಕ್ರಮ ಕೈಗೊಂಡಿದೆ. +ಒಂದು ಪ್ರಕರಣದಲ್ಲಿ ಮಾತ್ರ ಪೂರ್ವಾನುಮತಿಯನ್ನು ಹಿಂಪಡೆಯುವುದಾದರೆ ಶಾಸಕ ಜನಾರ್ಧನರೆಡ್ಡಿಯವರ ಮೇಲೂ ಹಲವು ಪ್ರಕರಣಗಳಿವೆ. ಸಚಿವರಾಗಿರುವ ನಾಗೇಂದ್ರ ಅವರ ಮೇಲೆ 23 ಪ್ರಕರಣಗಳಿವೆ. ಅದರ ಜೊತೆಯಲ್ಲಿ ಹಿಂದೆ ಕಾಂಗ್ರೆಸ್ ಸರ್ಕಾರ ಯಡಿಯೂರಪ್ಪ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿದೆ. ಅವುಗಳನ್ನು ಹಿಂಪಡೆಯಬೇಕಲ್ಲವೇ ಎಂದು ಪ್ರಶ್ನಿಸಿದರು. +ಮಧ್ಯಪ್ರವೇಶಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಇದು ಸಾರ್ವಜನಿಕ ಮಹತ್ವದ ವಿಷಯ ಅಲ್ಲ. ಜೊತೆಗೆ ಪ್ರಕರಣ ನ್ಯಾಯಾಲಯದಲ್ಲಿದೆ. ವೈಯಕ್ತಿಕವೂ ಕೂಡ ಆಗಿದೆ. ಅದನ್ನೂ ನಿಲುವಳಿ ಸೂಚನೆಯಡಿ ಚರ್ಚಿಸಲು ಅವಕಾಶವಿಲ್ಲ ಎಂದು ಆಗ್ರಹಿಸಿದರು.ಆರ್.ಅಶೋಕ್ ಅವರು ಮಾತನಾಡಿ, ಪ್ರಕರಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಅವಕಾಶವನ್ನು ನ್ಯಾಯಾಲಯಕ್ಕೆ ಬಿಡಬೇಕಿತ್ತು. +ಸರ್ಕಾರ ತನಗೆ ತೋಚಿದಂತೆ ನಿರ್ಣಯ ಕೈಗೊಂಡು ನ್ಯಾಯಾಂಗದ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದೆ ಎಂದು ಆಕ್ಷೇಪಿಸಿದರು. ಬಿಜೆಪಿಯ ಸುನಿಲ್ಕುಮಾರ್ ಮಾತನಾಡಿ, ಇದು ವೈಯಕ್ತಿಕ ವಿಚಾರ ಆಗುವುದಿಲ್ಲ. ಸಚಿವ ಸಂಪುಟಕ್ಕೆ ಇದಕ್ಕಿಂತಲೂ ಆದ್ಯತೆ ವಿಷಯಗಳಿವೆ. ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನಗಳಾಗುತ್ತಿವೆ ಎಂದು ಕಿಡಿಕಾರಿದರು. +ಭ್ರಷ್ಟಾಚಾರದ ವಿರುದ್ಧ ನಾವು ಪಾಠ ಕಲಿಯಬೇಕಿಲ್ಲ ಮತ್ತು ಈ ಚರ್ಚೆ ಮಾಡುವುದರಿಂದ ನ್ಯಾಯಾಂಗ ನಿಂದನೆಯಾಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಾದಿಸಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಗಳು ನಡೆದವು.ನ್ಯಾಯಾಲಯದಲ್ಲಿ ಪ್ರಕರಣಗಳಿದ್ದರೂ ಕೂಡ ಸಭಾಧ್ಯಕ್ಷರ ವಿವೇಚನೆಗೆ ಸರಿಯೆನಿಸಿದರೆ ಚರ್ಚೆಗೆ ಅವಕಾಶ ನೀಡಬಹುದು ಎಂದು ಆರ್.ಅಶೋಕ್ ವಾದಿಸಿದರು. +ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಸರ್ಕಾರದ ನಿರ್ಧಾರವನ್ನು ಖಂಡಿಸಿದರು.ಕಾಂಗ್ರೆಸ್ ಶಾಸಕ ಬಸವರಾಯರೆಡ್ಡಿ ಮಾತನಾಡಿ, ಡಿ.ಕೆ.ಶಿವಕುಮಾರ್ರ ವಿರುದ್ಧ ಭ್ರಷ್ಟಾಚಾರದಡಿ ಪ್ರಕರಣ ದಾಖಲಾಗಿಲ್ಲ. ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಚರ್ಚೆ ನಡೆಸಲು ಇಲ್ಲಿ ಅವಕಾಶವಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಂಪುಟದ ನಿರ್ಣಯವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ ಎಂದು ಸರ್ಕಾರದ ಬೆಂಬಲಕ್ಕೆ ಬಂದರು. ಈ ಸಂದರ್ಭದಲ್ಲಿ ಬಿಜೆಪಿ ಸುರೇಶ್ಕುಮಾರ್ ಮತ್ತು ರಾಯರೆಡ್ಡಿ ನಡುವೆ ವಾದ-ಪ್ರತಿವಾದಗಳು ನಡೆದವು. +ಕೊನೆಗೆ ಸಭಾಧ್ಯಕ್ಷರು ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನಿಲುವಳಿ ಚರ್ಚೆಗೆ ಅವಕಾಶವಿಲ್ಲ. ನ್ಯಾಯಾಲಯವೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿ ವಿರೋಧಪಕ್ಷಗಳ ನಿಲುವಳಿ ಸೂಚನಾ ಪ್ರಸ್ತಾಪವನ್ನು ತಿರಸ್ಕರಿಸಿ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಅವಕಾಶ ಮಾಡಿಕೊಟ್ಟರು. +ಚರ್ಚೆಗೆ ಬಿಜೆಪಿ ಆಗ್ರಹ :ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿ ಉಪಮುಖ್ಯ ಮಂತ್ರಿ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಕೇಸ್ ವಾಪಸ್ ಪಡೆದಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಇದೊಂದು ಗಂಭೀರ ಪ್ರಕರಣ. ಈ ವಿಚಾರದ ಬಗ್ಗೆ ಚರ್ಚೆ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. +ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಬಿಜೆಪಿ ಇದನ್ನು ನಿಲುವಳಿ ಸೂಚನೆಗೆ ಎತ್ತಿಕೊಂಡಿದ್ದೇ ತಪ್ಪು. ಯಾವ ವಿಚಾರ ಕೋರ್ಟ್ನಲ್ಲಿದೆಯೋ ಅದನ್ನೇ ಚರ್ಚೆಗೆ ತಂದರೆ ಹೇಗೆ? ಇದನ್ನು ಕೈಬಿಡಬೇಕು ಎಂದು ಮನವಿ ಮಾಡಿದರು. ಕೋರ್ಟ್ನಲ್ಲಿ ಪ್ರಕರಣ ಬಾಕಿ ಇರುವಾಗ ಚರ್ಚೆಗೆ ಅವಕಾಶ ನೀಡುವುದಿಲ್ಲ, ಇದು ನ್ಯಾಯಾಂಗ ನಿಂದನೆ ಆಗುತ್ತದೆ. ಹೀಗಾಗಿ ಚರ್ಚೆಗೆ ಅವಕಾಶವಿಲ್ಲ ಎಂದು ಸಭಾಪತಿ ಹೊರಟ್ಟಿ ರೂಲಿಂಗ್ ನೀಡಿದರು. +ಇದನ್ನು ಒಪ್ಪದೇ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಸದಸ್ಯರು ಆಗ್ರಹಪಡಿಸಿದರು. ಸಭಾಪತಿ ರೂಲಿಂಗ್ ಕೊಟ್ಟ ಮೇಲೂ ಮಾತನಾಡುವುದು ಗೌರವ ಅಲ್ಲ ಎಂದು ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವಿಚಾರದ ಬಗ್ಗೆ ಆಡಳಿತ ಮತ್ತು ಬಿಜೆಪಿ ಸದಸ್ಯರ ನಡುವೆ ಕೆಲಕಾಲ ವಾಗ್ವಾದ ನಡೆದಾಗ ಮಧ್ಯಪ್ರವೇಶಿಸಿದ ಸಭಾಪತಿ, ಈ ವಿಷಯದ ಮೇಲೆ ಮತ್ತೆ ಮಾತಾಡಬೇಡಿ, ಹುಡುಗಾಟ ಮಾಡಬೇಡಿ ಎಂದು ಗರಂ ಆಗಿ ಮುಂದಿನ ಕಲಾಪ ಕೈಗೆತ್ತಿಕೊಂಡಾಗ ಚರ್ಚೆಗೆ ತೆರೆ ಬಿದ್ದಿತು. \ No newline at end of file diff --git a/eesanje/url_46_287_11.txt b/eesanje/url_46_287_11.txt new file mode 100644 index 0000000000000000000000000000000000000000..211be0faf61fc066e5034c64b2a0c5480bb2d3ed --- /dev/null +++ b/eesanje/url_46_287_11.txt @@ -0,0 +1,9 @@ +: ರೈತರಿಗೆ ಸಿಹಿಸುದ್ದಿ ಕೊಟ್ಟ ಸಿಎಂ, ಸಹಕಾರ ಬ್ಯಾಂಕುಗಳ ಬಡ್ಡಿ ಸಂಪೂರ್ಣ ಮನ್ನಾ +ಬೆಳಗಾವಿ, ಡಿ.15- ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವ ಮತ್ತು ದೀರ್ಘಾವ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡಿದ ಅವರು, ರೈತರ ಸಾಲ ಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. +ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಪ್ರಶ್ನಿಸಿದರು. +ಯಡಿಯೂರಪ್ಪನವರು 2019 ರ ಆಗಸ್ಟ್‍ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ಹೇಳಿದ್ದರು. ಇದೇ ರೀತಿ ಈ ಹಿಂದೆಯೂ ಹೇಳಿದ್ದರು ಎಂದು ಟೀಕಿಸಿದರು. +ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು. +ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳು, ಆತಂಕ ವ್ಯಕ್ತಪಡಿಸಿದ ವೈದ್ಯರು +ಧಾರವಾಡ ಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುತ್ತಿದ್ದು, ಈಗಾಗಲೇ 19 ಘಟಕಗಳು 1255 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಅಲ್ಲದೇ, ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲಾಗುತ್ತದೆ ಎಂದು ಪ್ರಕಟಿಸಿದರು. +ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು ನೀಡಲಾಗುವುದು ಎಂದರು. ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುವುದು. ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. +ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮ ವಹಿಸುತ್ತೇವೆ ಎಂದು ಹೇಳಿದರು.ಧಾರವಾಡದಲ್ಲಿರುವ ವಾಲ್ಮಿ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಯನ್ನು ಉನ್ನತೀಕರಿಸಲಾಗುವುದು. ಇದರ ಮೂಲಕ ಜಲ ಶಿಕ್ಷಣ ನೀಡುವುದಷ್ಟೆ ಅಲ್ಲ, ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_287_12.txt b/eesanje/url_46_287_12.txt new file mode 100644 index 0000000000000000000000000000000000000000..795bd65f99f6092644c5cb8987a9522b01669fbd --- /dev/null +++ b/eesanje/url_46_287_12.txt @@ -0,0 +1,7 @@ +ಬೆಂಗಳೂರು : ಚರ್ಚ್ ಸ್ಪೋಟದ ಆರೋಪಿಗೆ ಪೆರೋಲ್ ಮಂಜೂರು +ಬೆಂಗಳೂರು, ಡಿ 15 (ಪಿಟಿಐ) : ಚರ್ಚ್ ಸ್ಪೋಟ ಪ್ರಕರಣದಲ್ಲಿ ಜೀವಾವ ಶಿಕ್ಷೆ ಅನುಭವಿಸುತ್ತಿರುವ ಅಪರಾಗೆ ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಪೆರೋಲ್ ಮಂಜೂರು ಮಾಡಿದೆ. ಬಂತ ಮೊಹಮ್ಮದ್ ಅಖಿಲ್ ಜುಲೈ 2000 ರಲ್ಲಿ ಬೆಂಗಳೂರಿನಲ್ಲಿ ನಡೆದ ಚರ್ಚ್ ಸ್ಪೋಟ ಪ್ರಕರಣದ ಅಪರಾಗಳಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಗೋವಾದಲ್ಲಿ ಉಂಟಾದ ಸ್ಪೋಟಗಳಲ್ಲಿ ದೀನದರ್ ಅಂಜುಮನ್ ಪಂಥಕ್ಕೆ ಸೇರಿದ 24 ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಜೀವಾವ ಶಿಕ್ಷೆಗೆ ಗುರಿಯಾದ 13 ಮಂದಿಯಲ್ಲಿ ಅಖಿಲ್ ಕೂಡ ಒಬ್ಬ. +ಅಖಿಲ್ ಅವರ ಪತ್ನಿ ಮುಬೀನ್ ಉನ್ನಿಸ್ಸಾ ಬೇಗಂ ಅವರು ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು.ಅಪರಾಯು ಇಂದಿನವರೆಗೆ 23 ವರ್ಷಗಳ ಜೈಲುವಾಸವನ್ನು ವಿನಾಯಿತಿ ಇಲ್ಲದೆ ಅನುಭವಿಸಿದ್ದಾರೆ ಮತ್ತು 23 ವರ್ಷಗಳವರೆಗೆ ಪೆರೋಲ್ ನೀಡಲಾಗಿಲ್ಲ. +ಅಪರಾಯ ಪತ್ನಿ ಈಗ ನ್ಯಾಯಾಲಯದ ಮುಂದೆ ತಾನು ಅನುಭವಿಸುತ್ತಿರುವ ನೋವು ಹಾಗೂ ಇತರ ಕುಟುಂಬ ಸದಸ್ಯರು ಸಹ ವಯಸ್ಸಾದವರು ಮತ್ತು ಕಾಯಿಲೆಗಳಿಂದ ಬಳಲುತ್ತಿರುವ ಕಾರಣ ಕುಟುಂಬದಲ್ಲಿ ತನ್ನ ಗಂಡನ ಉಪಸ್ಥಿತಿಯು ತುಂಬಾ ಅವಶ್ಯಕವಾಗಿದೆ ಎಂದು ಮಾಡಿಕೊಂಡ ಮನವಿ ಪರಿಗಣಿಸಿ ಪೆರೋಲ್ ಮಂಜೂರು ಮಾಡಲಾಗಿದೆ ಎಂದು ನ್ಯಾಯಾಲಯವು ತನ್ನ ಇತ್ತೀಚಿನ ತೀರ್ಪಿನಲ್ಲಿ ತಿಳಿಸಿದೆ. +ಶಿಮ್ಲಾಗಿಂತಲೂ ತಂಪಾದ ದೆಹಲಿ +ಪೆರೋಲ್ ಅವಯಲ್ಲಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಮತ್ತು ಪೊಲೀಸ್ ಮಹಾನಿರ್ದೇಶಕರು, ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳು, ಸಾಮಾನ್ಯವಾಗಿ ನಿಗದಿಪಡಿಸಿದಂತೆ ಕಟ್ಟುನಿಟ್ಟಾದ ಷರತ್ತುಗಳನ್ನು ವಿಸಲು, ಬಂತ ಮತ್ತೆ ಜೈಲಿಗೆ ಹಿಂದಿರುಗಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರು ಯಾವುದೇ ಇತರ ಅಪರಾಧವನ್ನು ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಆದೇಶಿಸಲಾಗಿದೆ. +ಮುಬೀನ್ ಉನ್ನಿಸ್ಸಾ ಬೇಗಂ ಅವರು ತಮ್ಮ ಪತಿಗೆ 90 ದಿನಗಳ ಪೆರೋಲ್ ನೀಡುವಂತೆ ಕೋರಿದ್ದರು. ಅರ್ಜಿದಾರರ ಪತ್ನಿ ಪೆರೋಲ್‍ನ ವಿಸ್ತರಣೆಯನ್ನು ಕೋರಬಹುದು ಎಂದು ನ್ಯಾಯಾಲಯವು ಅರ್ಜಿದಾರನ ಪತಿ – ಅಪರಾ ಪೆರೋಲ್‍ನಲ್ಲಿ ಹೊರಗಿರುವಾಗ ಅವರ ನಡವಳಿಕೆಯನ್ನು ಪರಿಗಣಿಸುತ್ತದೆ ಎಂದು ಹೇಳಿದೆ. \ No newline at end of file diff --git a/eesanje/url_46_287_2.txt b/eesanje/url_46_287_2.txt new file mode 100644 index 0000000000000000000000000000000000000000..70691d32d02da7954da8e99889e280ab4fdf6c16 --- /dev/null +++ b/eesanje/url_46_287_2.txt @@ -0,0 +1,13 @@ +ಬೆಳಗಾವಿಗೆ ರಾಷ್ಟ್ರೀಯ ಮಹಿಳಾ ಆಯೋಗ ತಂಡ ಭೇಟಿ +ಬೆಂಗಳೂರು,ಡಿ.16- ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಬೆಳಗಾವಿ ಮಹಿಳಾ ವಿವಸ್ತ್ರ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗವು ಮಾಹಿತಿಯನ್ನು ಕಲೆ ಹಾಕಿದೆ. ಇದರ ಬೆನ್ನಲ್ಲೇ ಬಿಜೆಪಿ ಸತ್ಯಶೋಧನಾ ಸಮಿತಿಯು ಕೂಡ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿದೆ. ಮತ್ತೊಂದೆಡೆ ಬಿಜೆಪಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದೆ. +ಶನಿವಾರ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಕೊಂಗ್‍ಡೊಪ್ ನೇತೃತ್ವದ ತಂಡ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯ ಸಖಿ-1 ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿ ವಿವರಣೆ ಪಡೆದುಕೊಂಡಿತು. ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್ ಆಯುಕ್ತ, ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು. +ಆಯೋಗದ ಸದಸ್ಯರನ್ನು ನೋಡುತ್ತಲೇ ಸಂತ್ರಸ್ತೆ ಕಣ್ಣೀರಿಟ್ಟರು. ಅಂದು ಸಕಾಲಕ್ಕೆ ಸರಿಯಾಗಿ ಪೊಲೀಸರು ಬಾರದಿದ್ದರೆ ನನ್ನನ್ನು ಕೊಂದೇ ಬಿಡುತ್ತಿದ್ದರು. ಈಗಲೂ ಅದನ್ನು ನೆನೆಸಿಕೊಂಡರೆ ನನಗೆ ಮೈಜುಮ್ಮೆನ್ನುತ್ತದೆ ಎಂದು ಘಟನೆಯ ಬಗ್ಗೆ ಮಹಿಳೆಯು ದಿಗ್ಭ್ರಾಂತಿ ವ್ಯಕ್ತಪಡಿಸಿದರೆಂದು ತಿಳಿದುಬಂದಿದೆ. ಘಟನೆ ಹೇಗೆ ನಡೆಯಿತು? ಅಂದು ಮನೆಗೆ ಯಾರ್ಯಾರು ಬಂದಿದ್ದರು, ನಿಜವಾದ ಕಾರಣವೇನು? ಇದರ ಹಿಂದೆ ಯಾವುದಾದರೂ ಕಾಣದ ಕೈಗಳ ಕೈವಾಡವಿದೆಯೇ ಎಂಬುದು ಸೇರಿದಂತೆ ಹಲವಾರು ಆಯಾಮಗಳಲ್ಲಿ ಮಹಿಳಾ ಆಯೋಗ ಸಂತ್ರಸ್ತೆಯಿಂದ ಖುದ್ದು ವಿವರಣೆಯನ್ನು ಪಡೆದುಕೊಂಡಿತು. +ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅಧಿಕಾರ ಸ್ವೀಕಾರ +ಸಂತ್ರಸ್ತೆಯ ಹೇಳಿಕೆಯನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳಿಗೂ ಸಂಬಂಧವಿದೆಯೇ ಎಂಬುದರ ಬಗ್ಗೆಯೂ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ. ಇದಕ್ಕೂ ಮುನ್ನ ದೆಹಲಿಯಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದ ಸಂಸದರ ತಂಡವನ್ನು ಮಾಜಿ ಶಾಸಕ ಸಂಜಯ್ ಪಾಟೀಲ್ ಬರ ಮಾಡಿಕೊಂಡರು. ನಂತರ ಬೆಳಗಾವಿ ಲೋಕಸಭೆ ಸದಸ್ಯೆಮಂಗಳಾ ಅಂಗಡಿಯವರನ್ನು ಭೇಟಿ ಮಾಡಿದರು. ಈ ವೇಳೆ ಮಾಜಿ ಶಾಸಕ ಅನಿಲ್ ಬೆನಕೆ ಮತ್ತಿತರರು ಉಪಸ್ಥಿತರಿದ್ದರು. +ಬಿಜೆಪಿ ನಿಯೋಗ ಭೇಟಿ:ರಾಷ್ಟ್ರೀಯ ಮಹಿಳಾ ಆಯೋಗ ಭೇಟಿ ಕೊಟ್ಟ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿದ್ದ ಐವರು ಮಹಿಳಾ ಸಂಸದರ ಸತ್ಯ ಶೋಧನಾ ಸಮಿತಿಯ ತಂಡವೂ ಕೂಡ ಸಂತ್ರಸ್ತ ಮಹಿಳೆಯನ್ನು ಭೇಟಿ ಮಾಡಿದೆ. ಬಿಜೆಪಿ ಸಂಸದರಾದ ಅಪ್ರಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ ಅವರ ತಂಡವು ಆಸ್ಪತ್ರೆ ಮತ್ತು ಮನೆಗೆ ಪ್ರತ್ಯೇಕವಾಗಿ ಭೇಟಿ ಕೊಟ್ಟಿದೆ. +ಕೇಂದ್ರದ ಈ ತಂಡಕ್ಕೆ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಡಾ.ರಾಜೇಶ ನೆರ್ಲಿ, ಬೆಳಗಾವಿ ಮೇಯರ್ ಶೋಭಾ ಸೋಮನಾಚೆ, ಉಪಮೇಯರ್ ರೇಶ್ಮಾ ಪಾಟೀಲ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಶಶಿಕಲಾ ಜೊಲ್ಲೆ, ಅಭಯ ಪಾಟೀಲ, ವಿಧಾನಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ರಾಜ್ಯ ಕಾರ್ಯದರ್ಶಿ ಉಜ್ವಲಾ ಬಡವಣಾಚೆ, ಮುಖಂಡರಾದ ಬಸವರಾಜ ಹುಂದ್ರಿ ಹಾಗೂ ಪವನ ಕತ್ತಿ ಅವರು ಕೃತ್ಯದ ಕುರಿತ ಮಾಹಿತಿಗಳನ್ನು ನೀಡಿದ್ದರು. ಮೊದಲು ಆಸ್ಪತ್ರೆಗೆ ಭೇಟಿ ಕೊಟ್ಟ ತಂಡ ಮಹಿಳೆಯನ್ನು ಭೇಟಿ ಮಾಡಿ ಘಟನೆ ಕುರಿತು ಮಾಹಿತಿಯನ್ನು ಕಲೆ ಹಾಕಿದೆ. ನಂತರ ಘಟನೆ ನಡೆದ ವಂಟಮುರಿಗೂ ಭೇಟಿ ನೀಡಿ ಸಂಬಂಧಿಕರಿಂದ ಮಾಹಿತಿಯನ್ನು ಪಡೆದುಕೊಂಡಿದೆ. +ಈ ಸತ್ಯಶೋಧನಾ ಸಮಿತಿಯು ಘಟನೆ ಕುರಿತು ಹಲವರಿಂದ ಹೇಳಿಕೆಗಳನ್ನು ಪಡೆದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರಿಗೆ ವರದಿಯನ್ನು ಸಲ್ಲಿಸಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಘಟನೆ ಕುರಿತಂತೆ ಸತ್ಯ ಶೋಧನಾ ಸಮಿತಿಯಿಂದ ವಿಡಿಯೋ ಕಾನರೆನ್ಸ್ ಮೂಲಕ ಮಾಹಿತಿ ಪಡೆದುಕೊಂಡರು. ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. +ಬಿಜೆಪಿ ಪ್ರತಿಭಟನೆ:ಇನ್ನು ಬಿಜೆಪಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾದ್ಯಂತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಬೆಂಗಳೂರು ಸೇರಿದಂತೆ ಅನೇಕ ಕಡೆ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಮಹಿಳೆಗೆ ರಕ್ಷಣೆ ಕೊಡಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು. +ನಗರದ ಮೇಕ್ರಿವೃತ್ತದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಹಾಗು ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಗೃಹಸಚಿವ ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಲಾಯಿತು. ಸದಾಶಿವನಗರದಲ್ಲಿರುವ ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರಾದರೂ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡರು. +ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ಇಬ್ಬರು ಭಾರತೀಯರ ಬಂಧನ +ಡಿಸೆಂಬರ್ 11 ರಂದು ಬೆಳಗಾವಿ ಜಿಲ್ಲೆಯ ವಂಟಮುರಿ ಗ್ರಾಮದಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಬೆತ್ತಲೆ ಮೆರವಣಿಗೆ ನಡೆಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಲಾಗಿತ್ತು. ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಹೊರಟಿದ್ದ ಹುಡುಗಿಯೊಂದಿಗೆ ಈ ಮಹಿಳೆಯ ಮಗ ಓಡಿಹೋಗಿದ್ದಕ್ಕಾಗಿ ಇಂತಹ ಕೃತ್ಯ ಎಸಗಲಾಗಿತ್ತು. ಈಗಾಗಲೇ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ 8 ಜನರಿಗಾಗಿ ಶೋಧ ನಡೆಯುತ್ತಿದೆ. ಕರ್ನಾಟಕ ಹೈಕೋರ್ಟ್ ಈ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. \ No newline at end of file diff --git a/eesanje/url_46_287_3.txt b/eesanje/url_46_287_3.txt new file mode 100644 index 0000000000000000000000000000000000000000..5619af0ae8c0cc993f0b69de3c91cfdabcce827d --- /dev/null +++ b/eesanje/url_46_287_3.txt @@ -0,0 +1,8 @@ +ಕೃಷಿ ಸಾಲ ಮನ್ನಾ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಸಚಿವ ರಾಜಣ್ಣ +ಬೆಂಗಳೂರು,ಡಿ.16- ರಾಜ್ಯದ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, 2022-23 ನೇ ಸಾಲಿನಲ್ಲಿ ಸಹಕಾರ ಸಂಸ್ಥೆಗಳ ಮೂಲಕ 28,86,548 ರೈತರು, 21,324.05 ಕೋಟಿ ರೂ. ಮೊತ್ತದ ಬೆಳೆಸಾಲ ಪಡೆದಿದ್ದಾರೆ. ಅವರಲ್ಲಿ ನವೆಂಬರ್ 30 ರವರೆಗೆ 18,64,042 ರೈತರು 12,484.18 ಕೋಟಿ ರೂ.ಗಳನ್ನು ಮರುಪಾವತಿಸಿದ್ದಾರೆ. ಈ ಅವಯಲ್ಲಿ ಗಡುವು ಬರುವ ಸಾಲಗಳಿಗೆ 47,733 ರೈತರು 320 ಕೋಟಿ ರೂ.ಗಳನ್ನು ಪಾವತಿಸದೆ ಸುಸ್ತಿದಾರರಾಗಿದ್ದಾರೆ. +ರಾಷ್ಟ್ರೀಕೃತ ಬ್ಯಾಂಕುಗಳಿಂದ 5,47,777 ರೈತರು 9,761.85 ಕೋಟಿ ರೂ.ಗಳ ಬೆಳೆ ಸಾಲ ಪಡೆದುಕೊಂಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸಂಬಂಧಿಸಿದಂತೆ ಸಾಲದ ಮೊತ್ತದಲ್ಲಿ ಮರುಪಾವತಿ ಮಾಹಿತಿ ಲಭ್ಯವಿಲ್ಲ ಎಂದು ರಾಜ್ಯಮಟ್ಟದ ಬ್ಯಾಂಕರ್‍ಗಳ ಸಮಿತಿಯ ಸಂಚಾಲಕರು ತಿಳಿಸಿದ್ದಾರೆ. +ಬರಗಾಲದ ಹಿನ್ನೆಲೆಯಲ್ಲಿ ಸಾಲಮನ್ನಾ ಮಾಡಬೇಕು ಎಂಬ ವಿಪಕ್ಷಗಳ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ವಿಧಾನಮಂಡಲದ ಚರ್ಚೆಯಲ್ಲಿ ನೇರವಾಗಿ ಉತ್ತರಿಸದೆ ಅಸಮ್ಮತಿ ತೋರಿಸಿದ್ದಾರೆ. ಆದರೆ ಸಹಕಾರ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಬೆಳೆಸಾಲದ ಅಸಲನ್ನು ಪಾವತಿಸಿದರೆ ಸಂಪೂರ್ಣ ಬಡ್ಡಿ ಮನ್ನಾ ಮಾಡುವುದಾಗಿ ಹೇಳಿದ್ದಾರೆ. +ಸಹಕಾರ ಸಚಿವ ರಾಜಣ್ಣ ನೀಡಿರುವ ಮಾಹಿತಿ ಪ್ರಕಾರ ಸಹಕಾರ ಬ್ಯಾಂಕುಗಳಲ್ಲಿ ಸಾಲ ಪಡೆದವರ ಪೈಕಿ 10,22,506 ರೈತರು ಇನ್ನೂ 8,374.86 ಕೋಟಿ ರೂ.ಗಳನ್ನು ಪಾವತಿಸಬೇಕಿದೆ. ಬರದ ಹಿನ್ನೆಲೆಯಲ್ಲಿ ಸಾಲಮರುಪಾವತಿ ಕಷ್ಟಸಾಧ್ಯ ಎಂಬ ಕಾರಣಕ್ಕಾಗಿಯೇ ಮನ್ನಾ ಮಾಡುವ ಬೇಡಿಕೆಗಳು ಕೇಳಿಬಂದಿದ್ದವು. ಆದರೆ ಸರ್ಕಾರ ಸಾಲಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಉತ್ತರಿಸಿದೆ. +ಮಧ್ಯಪ್ರದೇಶ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಮಾರ್ ಸಿಂಗ್ ನೇಮಕ +ಯಶಸ್ವಿನಿ ಯೋಜನೆಯಡಿ ಸಹಕಾರ ಸಂಘಗಳ 48.24 ಲಕ್ಷ ಸದಸ್ಯರು ನೋಂದಣಿಬೆಂಗಳೂರು,ಡಿ.16- ರಾಜ್ಯದಲ್ಲಿ ಯಶಸ್ವಿನಿ ಯೋಜನೆಯಡಿ ಸಹಕಾರ ಸಂಘಗಳ 48.24 ಲಕ್ಷ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಗ್ರಾಮೀಣ ಭಾಗದಲ್ಲಿ 44,35,202 ಸದಸ್ಯರು ನೋಂದಣಿಯಾಗಿದ್ದು, 12,14,472 ಮಂದಿಗೆ ಕಾರ್ಡ್ ವಿತರಿಸಲಾಗಿದೆ. ನಗರ ಪ್ರದೇಶದಲ್ಲಿ 3,89,467 ಸದಸ್ಯರು ನೋಂದಣಿಯಾಗಿದ್ದು, 1,15,193 ಮಂದಿಗೆ ಕಾರ್ಡ್ ವಿತರಿಸಲಾಗಿದೆ. +ಒಟ್ಟಾರೆ ಯಶಸ್ವಿನಿ ಕಾರ್ಡ್ ವಿತರಣೆಯ ಪ್ರಮಾಣ ಶೇ.27 ರಷ್ಟಾಗಿದ್ದು, 13,21,665 ಮಂದಿಗೆ ಮಾತ್ರ ಕಾರ್ಡ್‍ಗಳನ್ನು ತಲುಪಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಜಿಲ್ಲಾ ಹಾಲು ಒಕ್ಕೂಟಗಳ ಸಹಯೋಗದೊಂದಿಗೆ ಯೋಜನೆಯ ಶಿಬಿರಗಳನ್ನು ಆಯೋಜಿಸಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯಾಧ್ಯಕ್ಷರ ಸಭೆ ನಡೆಸಿ ಹೆಚ್ಚಿನ ಸದಸ್ಯರನ್ನು ನೋಂದಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ. \ No newline at end of file diff --git a/eesanje/url_46_287_4.txt b/eesanje/url_46_287_4.txt new file mode 100644 index 0000000000000000000000000000000000000000..4d26d971dab3b834cfafbdda41296b8407426ba1 --- /dev/null +++ b/eesanje/url_46_287_4.txt @@ -0,0 +1,8 @@ +ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕೋಡಿಶ್ರೀಗಳಿಗೆ ಆಹ್ವಾನ +ಅರಸೀಕೆರೆ, ಡಿ.16- ಮುಂದಿನ ವರ್ಷದ ಜ.22ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗೃಹದಲ್ಲಿ ಜರುಗಲಿರುವ ಪವಿತ್ರ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಅಭಿಜಿನ್ ಮುಹೂರ್ತದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಪುಣ್ಯ ಹಾಗೂ ಐತಿಹಾಸಿಕ ಕ್ಷಣಕ್ಕೆ ಪೂಜ್ಯರು ಹಾಜರಿರಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ಆಹ್ವಾನಿಸಿದೆ. +ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ಇಬ್ಬರು ಭಾರತೀಯರ ಬಂಧನ +ಜ.21ರೊಳಗೆ ತಾವು ಅಯೋಧ್ಯೆಗೆ ಭೇಟಿ ನೀಡುವಂತೆ ಕೋರಲಾಗಿದ್ದು, ವಾಸ್ತವ್ಯಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ತಡವಾದರೆ ಬೇರೆ ಬೇರೆ ತೊಂದರೆ ಎದುರಾಗಲಿವೆ. ಹಾಗಾಗಿ ಮುಂಚಿತವಾಗಿ ಪೂಜ್ಯರು ಉಪಸ್ಥಿತರಿರುವಂತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂಪಲ್ ರೈ ವಿನಂತಿಸಿದ್ದಾರೆ. +ಉದ್ಘಾಟನೆಗೆ ಸಜ್ಜಾಗಿರುವ ಅಯೋಧ್ಯಾ ಶ್ರೀರಾಮ ಮಂದಿರ ಹತ್ತು-ಹಲವು ವಿಶೇಷತೆ ಹೊಂದಿರುವುದರ ಜೊತೆಗೆ ಇಲ್ಲಿನ ಪೂಜೆ-ಪುನಸ್ಕಾರಗಳೂ ವಿಶಿಷ್ಟವಾಗಿ ನಡೆಯಲಿವೆ. ಆದರೆ, ರಾಮ ಮಂದಿರದಲ್ಲಿ ಭಕ್ತರಿಗೆ ಹರಕೆ ಸೇವೆಗಳೇ ಇರುವುದಿಲ್ಲವಂತೆ. ಭಾರತ ದೇಶ ಮಾತ್ರವಲ್ಲ, ವಿಶ್ವದೆಲ್ಲೇಡೆ ಹಿಂದೂಗಳಿಗೆ ಜ.22 ಅತ್ಯಂತ ಮಹತ್ವದ ದಿನ. ಶತಮಾನಗಳ ಕಾಲ ಹಿಂದೂ ಸಮುದಾಯ ಕಾದು ಕುಳಿತಿದ್ದ ಮಹತ್ವದ ಕಾರ್ಯಕ್ರಮವೊಂದು ಆ ದಿನ ನಡೆಯಲಿದೆ. ಶ್ರೀರಾಮ ಮಂದಿರ ಇನ್ನೇನು ಮುಕ್ತಾಯ ಹಂತದಲ್ಲಿದೆ. ಮಂದಿರದ ಗರ್ಭ ಗೃಹದಲ್ಲಿ ರಾಮಲಲ್ಲಾ ಮೂರ್ತಿ, ಅಂದರೆ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಜ.22ರಂದು ಮುಹೂರ್ತ ನಿಗದಿ ಆಗಿದೆ. +ಪ್ರಧಾನಿ ಮೋದಿ ಅವರು ರಾಮ ಮಂದಿರದಿಂದ 500 ಮೀಟರ್ ದೂರದಲ್ಲಿ ಇರುವ ತಾತ್ಕಾಲಿಕ ನೆಲೆಯಿಂದ ಬಾಲ ರಾಮನ ಮೂರ್ತಿಯನ್ನು ತಮ್ಮ ಕೈಗಳಲ್ಲಿ ಹೊತ್ತು ತಂದು ಕಾಲ್ನಡಿಗೆ ಮೂಲಕವೇ ಶ್ರೀರಾಮ ಮಂದಿರದ ಗರ್ಭ ಗೃಹ ತಲುಪಲಿದ್ದಾರೆ. ಅಭಿಜಿನ್ ಮುಹೂರ್ತದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಈ ಮೂಲಕ ಶ್ರೀರಾಮನ ಭವ್ಯ ಮಂದಿರವನ್ನು ಪ್ರಧಾನಮಂತ್ರಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. +12 ಕೋಟಿ ಮೌಲ್ಯದ ಕೊಕೇನ್ ವಶ +ಗರ್ಭಗೃಹದಲ್ಲಿ ಮೂರ್ತಿ ಪ್ರತಿಷ್ಠಾಪನೆಯಾದ ಬೆನ್ನಲ್ಲೇ ಬ್ರಹ್ಮ ಕಳಶೋತ್ಸವ ಕೂಡ ಶುರುವಾಗಲಿದೆ. ಜ.22 ರಿಂದ ಮಾರ್ಚ್ 10ರ ವರೆಗೆ 48 ದಿನಗಳ ಕಾಲ ಬ್ರಹ್ಮ ಕಳಶೋತ್ಸವ ನಡೆಯಲಿದೆ. \ No newline at end of file diff --git a/eesanje/url_46_287_5.txt b/eesanje/url_46_287_5.txt new file mode 100644 index 0000000000000000000000000000000000000000..5c7cf72faebfeef3d88f3b03dba945a00de1487b --- /dev/null +++ b/eesanje/url_46_287_5.txt @@ -0,0 +1,5 @@ +ಮನೋರಂಜನ್ ಕುಟುಂಬದ ಮೇಲೆ ಐಬಿ ನಿಗಾ +ಮೈಸೂರು, ಡಿ. 16-ಸಂಸತ್ ಕಲಾಪದ ವೇಳೆ ಆತಂಕ ಸೃಷ್ಟಿಸಿದ್ದ ಪ್ರಕರಣ ಸಂಬಂಧ ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಆರೋಪಿ ಮನೋರಂಜನ್ ಪೋಷಕರು ಮನೆಯಿಂದ ಹೊರ ಹೋಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮನೋರಂಜನ್ ತಂದೆ ತಾಯಿ ಮನೆ ಬಿಟ್ಟು ಹೊರಗಡೆ ಹೋಗದಂತೆ ಐಬಿ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದು, ಹಾಗೆಯೇ ಮನೆಗೆ ಯಾವುದೇ ಸಂಬಂಧಿಕರು ಸದ್ಯದ ಪರಿಸ್ಥಿತಿಯಲ್ಲಿ ಬರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. +ಅಲ್ಲದೆ ಮನೆಯಲ್ಲಿರುವ ಯಾವುದೇ ಪತ್ರಿಕೆ ಹಾಗೂ ಪುಸ್ತಕಗಳನ್ನು ನಾವು ಹೇಳುವವವರೆಗೂ ಮಾರಾಟ ಮಾಡದಂತೆ ಮನೋರಂಜನ್ ತಂದೆ-ತಾಯಿಗೆ ಐಬಿ ಅಧಿಕಾರಿಗಳು ಸೂಚಿಸಿದ್ದಾರೆ. ಒಂದು ವೇಳೆ ತುರ್ತು ಪರಿಸ್ಥಿತಿ ಇದ್ದು ಹೊರಹೋಗಬೇಕಾದ ಅನಿವಾರ್ಯತೆ ಇದ್ದರೆ ನಮಗೆ ತಿಳಿಸುವಂತೆ ಹಾಗೂ ಅನಾಮಧೇಯ ಕರೆ ಬಂದರೆ ಅದರ ಬಗ್ಗೆ ಮಾಹಿತಿ ನೀಡುವಂತೂ ಅಧಿಕಾರಿಗಳು ಮನೋರಂಜನ್ ಪೋಷಕರಿಗೆ ತಿಳಿಸಿದ್ದಾರೆ. +ರತನ್ ಟಾಟಾಗೆ ಜೀವ ಬೆದರಿಕೆ ಹಾಕಿದ ವ್ಯಕಿ ಸುಳಿವು ಲಭ್ಯ +ಘಟನೆ ಮರುಸೃಷ್ಟಿ:ಆರೋಪಿಗಳು ಸಂಸತ್ ಭವನ ಪ್ರವೇಶಿಸಿದ್ದು ಹೇಗೆ ಎಂಬುದನ್ನು ದೃಢಪಡಿಸಿಕೊಳ್ಳಲು ದೆಹಲಿ ಪೋಲೀಸರು ಈ ಪ್ರಕರಣವನ್ನು ಮರುಸೃಷ್ಟಿಸಲು ಮುಂದಾಗಿದ್ದಾರೆ. ಆರೋಪಿಗಳನ್ನು ಸ್ಥಳಕ್ಕೆ ಕರೆದೊಯ್ದು ಸದ್ಯದಲ್ಲಿಯೇ ಮಹಜರು ಮಾಡಲಿದ್ದಾರೆ. ಲೋಕಸಭ ಗ್ಯಾಲರಿಯಿಂದ ಏಕಾಏಕಿ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ಜಿಗಿದು ಕೋಲಾಹಲ ಸೃಷ್ಟಿಸಿದ ಪ್ರಕರಣದ ತನಿಖೆಯನ್ನು ದೆಹಲಿ ಪೋಲೀಸರು ಚುರುಕುಗೊಳಿಸಿದ್ದಾರೆ. \ No newline at end of file diff --git a/eesanje/url_46_287_6.txt b/eesanje/url_46_287_6.txt new file mode 100644 index 0000000000000000000000000000000000000000..b99f0a394da1b91883ce33a6a5fd784faf0c29d8 --- /dev/null +++ b/eesanje/url_46_287_6.txt @@ -0,0 +1,5 @@ +ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ +ತುಮಕೂರು,ಡಿ.16- ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶುಭಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದರು. ಆರ್‍ಡಿಪಿಆರ್-ಇ ಆಡಳಿತದ ನಿರ್ದೇಶಕರಾಗಿದ್ದ ಶುಭಕಲ್ಯಾಣ್ ಅವರನ್ನು ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.2014ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಶುಭಕಲ್ಯಾಣ್ ಅವರು ತುಮಕೂರು ಜಿಲ್ಲೆಗೆ ಚಿರಪರಿಚಿತರು. ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. +ಭೌಗೋಳಿಕವಾಗಿ ರಾಜ್ಯದ ಎರಡನೇ ಅತಿ ದೊಡ್ಡ ಜಿಲ್ಲೆಯಾಗಿರುವ ತುಮಕೂರು ತಾಲೂಕುಗಳನ್ನು ಒಳಗೊಂಡಿದ್ದು, ತೀವ್ರ ಬರಪೀಡಿತ ಪ್ರದೇಶವಾಗಿದ್ದು, ಪ್ರಸ್ತುತ ಬರಗಾಲ ಆವರಿಸಿದ್ದು, ಕುಡಿಯುವ ನೀರು , ಜಾನುವಾರುಗಳ ಮೇವು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ನಿರ್ವಹಣೆಯ ಜವಾಬ್ದಾರಿ ಸೇರಿದಂತೆ ಹಲವಾರು ಹೊಣೆಗಾರಿಕೆ ಇವರ ಮೇಲಿದೆ. +ಸುಪ್ರೀಂ ಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಪಾಕ್ ಚುನಾವಣೆ ದಿನಾಂಕ ಘೋಷಣೆ +ಈ ಹಿಂದೆ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‍ರಿಂದ ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಜಿಲ್ಲಾಧಿಕಾರಿಗೆ ಜಿಲ್ಲಾ ತಾಲೂಕು ಪಂಚಾಯಿತಿ ಅಧಿಕಾರಿಗಳು ಶುಭ ಕೋರಿದ್ದಾರೆ. \ No newline at end of file diff --git a/eesanje/url_46_287_7.txt b/eesanje/url_46_287_7.txt new file mode 100644 index 0000000000000000000000000000000000000000..97bafb27113c9ffe3e8c6c61eb48e21fd46ef6ae --- /dev/null +++ b/eesanje/url_46_287_7.txt @@ -0,0 +1,9 @@ +“ನನ್ನನ್ನೂ ಮಂತ್ರಿ ಮಾಡಿ” ಎಂದು ಬೇಡಿಕೆಯಿಟ್ಟ ಆಡಳಿತ ಪಕ್ಷದ ಶಾಸಕರು +ಬೆಳಗಾವಿ, ಡಿ. 15- ಮುಖ್ಯಮಂತ್ರಿ ಅಥವಾ ಮಂತ್ರಿಯಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿಯಾಗುವುದಾದರೆ ನನ್ನನ್ನೂ ಮಂತ್ರಿ ಮಾಡಿ ಎಂದು ಆಡಳಿತ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಬೇಡಿಕೆ ಮಂಡಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ, ತಮ್ಮ ಕ್ಷೇತ್ರದಲ್ಲಿ ಅಡಿಕೆ ಬೆಳೆಗಳು ಅಗತ್ಯ ಬೆಂಬಲ ಮತ್ತು ಪೊ್ರೀತ್ಸಾಹ ದೊರೆಯದೆ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. +ನೆರೆಯ ಕ್ಷೇತ್ರವಾಗಿರುವ ಚನ್ನಗಿರಿ ಮತ್ತು ಶಿಗ್ಗಾವು ಕ್ಷೇತ್ರದಲ್ಲಿ ಅಡಿಕೆ ಬೆಳೆಗೆ ಹನಿ ನೀರಾವರಿ, ರಸಗೊಬ್ಬರ, ರಾಸಾಯನಿಕ ಸಿಂಪಡಣೆ ಸೇರಿದಂತೆ ವಿವಿಧ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಎಲ್ಲವೂ ದೊರೆಯುತ್ತಿದೆ ಎಂದು ಹೇಳಿದರು. +ಶಿಗ್ಗಾವಿಗೆ ಹೊಂದಿಕೊಂಡಿರುವ ತಮ್ಮ ಕ್ಷೇತ್ರ ಬಯಲು ಪ್ರದೇಶವಾಗಿರುವುದರಿಂದ ಅಡಿಗೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಪೊ್ರೀತ್ಸಾಹ ದೊರೆಯುವುದಿಲ್ಲ ಎಂದು ಸಚಿವರು ಉತ್ತರಿಸಿದ್ದಾರೆ. ಶಿಗ್ಗಾವು ಕ್ಷೇತ್ರದ ಶಾಸಕರಾದ ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು ಎಂಬ ಕಾರಣಕ್ಕೆ ಎಲ್ಲಾ ಸೌಲಭ್ಯಗಳನ್ನೂ ನೀಡಲಾಗುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಅಥವಾ ಸಚಿವರೇ ಆಗಬೇಕೆಂದಾದರೆ ನನ್ನನ್ನೂ ಮಂತ್ರಿ ಮಾಡಿ ಎಂದು ಒತ್ತಾಯಿಸಿದರು. +ಭದ್ರತಾ ಲೋಪದ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಲೋಕಸಭೆಯಲ್ಲಿ ಕೋಲಾಹಲ +ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪರವಾಗಿ ಉತ್ತರ ನೀಡಿದಂತಹ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡದಂತಹ ಪ್ರದೇಶಗಳಲ್ಲಿ ಅಡಿಕೆ ಬೆಳೆಯಲು ಪೊ್ರೀತ್ಸಾಹ ದೊರೆಯುತ್ತಿದೆ. ಬಯಲು ಸೀಮೆಯ ಪ್ರದೇಶಗಳಿಗೆ ಇಲಾಖೆಯ ಆರ್ಥಿಕ ಬೆಂಬಲ ದೊರೆಯುವುದಿಲ್ಲ ಎಂದು ಹೇಳಿದರು. +ಈ ವೇಳೆ ಬಿಜೆಪಿಯ ಅರಗಜ್ಞಾನೇಂದ್ರ ತಮ್ಮನ್ನು ಸಚಿವರನ್ನಾಗಿ ಮಾಡಿ ಎಂದು ಶಾಸಕರು ಕೇಳಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಸಿಕ್ಕಿಲ್ಲ ಎಂದು ಕಾಲೆಳೆದರು.ಶಾಸಕರ ಬೇಡಿಕೆಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರುವುದಾಗಿ ಎಂ.ಸಿ.ಸುಧಾಕರ್ ಭರವಸೆ ನೀಡಿದರು. +ಕೃಷಿ ಮಾರುಕಟ್ಟೆ ಸಚಿವರೂ ಆಗಿರುವ ಶಿವಾನಂದ ಪಾಟೀಲ್, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಮೂರು ತಾಲೂಕಿನಲ್ಲಿ ಅಡಿಕೆ ಬೆಳೆಯಲು ಅವಕಾಶ ಕಲ್ಪಿಸಲಾಗಿದೆ. ರಾಣೆಬೆನ್ನೂರು, ಹಾನಗಲ್ ತಾಲೂಕುಗಳನ್ನು ಅಡಿಕೆ ಬೆಳೆಗೆ ಪೊ್ರೀತ್ಸಾಹ ನೀಡುವ ಯೋಜನೆಗಳಿಗೊಳಪಡಿಸಲು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಒಪ್ಪುವುದಿಲ್ಲ ಎಂದು ಹೇಳಿದರು. +ವಿಧಾನಸಭೆಯ ಉಪಾಧ್ಯಕ್ಷರಾದ ರುದ್ರಪ್ಪ ಲಮಾಣಿ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಅಡಿಕೆ ಬೆಳೆಗಳಿಗೆ ಬೆಂಬಲ ನೀಡಬೇಕು ಎಂದು ಆಗ್ರಹಿಸಿದರು.ಹಾಸನ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಕೂಡ ತಮ್ಮ ಕ್ಷೇತ್ರಕ್ಕೂ ಪೊ್ರೀತ್ಸಾಹಕ ಯೋಜನೆಗಳನ್ನು ನೀಡಬೇಕೆಂದು ಒತ್ತಾಯಿಸಿದರು. \ No newline at end of file diff --git a/eesanje/url_46_287_8.txt b/eesanje/url_46_287_8.txt new file mode 100644 index 0000000000000000000000000000000000000000..a2d1c7af7437c1fc07eaf86e9332a0ac5a587d5e --- /dev/null +++ b/eesanje/url_46_287_8.txt @@ -0,0 +1,7 @@ +ಉಮಾಶ್ರೀ ನಟನೆಯ ಬಗ್ಗೆ ಪರಿಷತ್‌ನಲ್ಲಿ ಮೆಚ್ಚುಗೆ +ಬೆಂಗಳೂರು,ಡಿ.15- ಮೇಲ್ಮನೆ ಸದಸ್ಯರೂ ಆದ ಕನ್ನಡ ಚಿತ್ರರಂಗದ ಖ್ಯಾತ ನಟಿ ಉಮಾಶ್ರೀ ಅವರ ನಟನೆಯನ್ನು ವಿಧಾನಪರಿಷತ್ನಲ್ಲಿ ಸದಸ್ಯರು ಪ್ರಶಂಸಿಸಿದರು. ಶಾಸನ ರಚನಾ ಕಲಾಪದಲ್ಲಿ ವಿಧೇಯಕದ ಮೇಲೆ ಚರ್ಚೆ ನಡೆಯುವಾಗ ಪರಿಷತ್ ಸದಸ್ಯ ವಿಶ್ವನಾಥ್ ಅವರು ಉಮಾಶ್ರೀ ಅವರ ಹೆಸರು ಹೇಳುವಾಗ ಬಾಯ್ತಪ್ಪಿ ಮಾಲಾಶ್ರೀ ಎಂದು ಹೇಳಿದ್ದು ಸ್ವಾರಸ್ಯಕರ ಚರ್ಚೆಗೆ ಎಡೆ ಮಾಡಿಕೊಟ್ಟಿತು. +ಆಗ ಸಭಾಪತಿ ಬಸವರಾಜ ಹೊರಟ್ಟಿಯವರು ಮಾಲಾಶ್ರೀಯವರ ನೆನಪು ಈಗೇಕೆ ನಿಮಗೆ ಬಂತು ಎಂದು ಹಾಸ್ಯ ಮಾಡಿದರು. ಈ ವೇಳೆ ಮಧ್ಯಪ್ರವೇಶಿಸಿದ ತೇಜಸ್ವಿನಿಗೌಡ ಅವರು ಮಾತನಾಡಿ, ಭಾರತದಲ್ಲಿ ಹೇಮಮಾಲಿನಿ ಹೇಗೆ ಕನಸಿನ ಕನ್ಯೆ ಎಂದು ಹೆಸರು ಪಡೆದಿದ್ದರೋ, ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ ನಟನೆಯಿಂದ ಹೆಸರು ಮಾಡಿದ್ದಾರೆ. +ನಾಯಕಿಯಾಗಲು ಸೌಂದರ್ಯದ ಮಾನದಂಡದ ಬದಲು ನಟನೆಯ ಮಾನದಂಡದ ಮೇಲೆ ಆಯ್ಕೆ ಮಾಡುವ ಹಾಗಿದ್ದರೆ ಉಮಾಶ್ರೀಯವರು ನಾಯಕಿಯಾಗಿ ಹಲವು ಚಿತ್ರಗಳಲ್ಲಿ ನಟಿಸಬಹುದಿತ್ತು ಎಂದರು. ಆಗ ಎದ್ದು ನಿಂತ ಉಮಾಶ್ರೀಯವರು ಮಾತನಾಡಿ, ನನ್ನ ನಟನೆಯ ಬಗ್ಗೆ ಮಾತನಾಡಿದ್ದಕ್ಕೆ ಧನ್ಯವಾದ. ನಾನು ರಂಗಭೂಮಿಯಿಂದ ಬಂದವಳು, ರಂಗಭೂಮಿಯಲ್ಲಿ ನಾಯಕಿ, ಪೊಷಕನಟಿ, ಹಾಸ್ಯನಟಿ ಎಂಬ ವರ್ಗಗಳಲ್ಲಿಲ್ಲ. ಆದರೆ ಸಿನಿಮಾದಲ್ಲಿದೆ. +ಡಿಕೆಶಿ ಸಿಬಿಐ ತನಿಖೆ ವಾಪಸ್ : ಉಭಯ ಸದನಗಳಲ್ಲಿ ಗದ್ದಲ, ವಾಕ್ಸಮರ +ನಿರ್ದೇಶಕರಾದ ಗಿರೀಶ್ ಕಾಸರವಳ್ಳಿಯವರು ನನಗೆ ಗುಲಾಬಿ ಚಿತ್ರದಲ್ಲಿ ನಾಯಕಿ ನಟಿಯ ಅವಕಾಶ ನೀಡಿದರು. ಅದರಿಂದ ರಾಜ್ಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ ನನಗೆ ಬಂತು. ಈ ನಾಡಿನ ಜನತೆ ಕಲಾವಿದೆಯಾದ ನನಗೆ ಸಾಕಷ್ಟು ಬೆಂಬಲ ನೀಡಿದ್ದಾರೆ ಎಂದು ಧನ್ಯವಾದ ತಿಳಿಸಿದರು. +ಈ ವೇಳೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಉಮಾಶ್ರೀಯವರ ಒಡಲಾಳ ನಾಟಕ ನೋಡಿದರೆ ಎಂತಹ ಅದ್ಬುತ ಕಲಾವಿದೆ ಎಂದು ಗೊತ್ತಾಗಲಿದೆ. ಈ ಒಡಲಾಳ ನಾಟಕವನ್ನು ಸೋನಿಯಾ ಗಾಂಯವರಿಗೆ ತೋರಿಸಿದ್ದೇವೆ.ಆ ನಂತರ ಉಮಾಶ್ರೀಯವರನ್ನು ಭೇಟಿ ಮಾಡಿಸಿದಾಗ ಆ ನಾಟಕದಲ್ಲಿ ಪಾತ್ರ ಮಾಡಿರುವವರು ಇವರೇನಾ ಎಂದು ಮೂರು ಬಾರಿ ಕೇಳಿದರು ಎಂದು ಹೇಳಿದರು. ಬಳಿಕ ಈ ವಿಚಾರದ ಚರ್ಚೆಗೆ ತೆರೆ ಬಿದ್ದಿತು. \ No newline at end of file diff --git a/eesanje/url_46_287_9.txt b/eesanje/url_46_287_9.txt new file mode 100644 index 0000000000000000000000000000000000000000..ffc5d13e1d0b7c74ba65a025c69bc6591ea717b2 --- /dev/null +++ b/eesanje/url_46_287_9.txt @@ -0,0 +1,9 @@ +ನ್ಯಾಯವಾದಿಗಳ ರಕ್ಷಣಾ ಕಾಯ್ದೆ ಮೇಲ್ಮನೆಯಲ್ಲಿ ಅಂಗೀಕಾರ +ಬೆಳಗಾವಿ,ಡಿ.15- ನ್ಯಾಯವಾದಿಗಳು ಯಾವುದೇ ಭಯ ಅಥವಾ ಬಾಹ್ಯ ಪ್ರಭಾವಕ್ಕೆ ಒಳಗಾಗದೆ ತಮ್ಮ ವೃತ್ತಿಪರ ಸೇವೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲು ಹಾಗೂ ಅವರ ಮೇಲಿನ ಹಿಂಸೆಯನ್ನು ನಿಷೇಸಲು ಹಾಗೂ ಅವರಿಗೆ ರಕ್ಷಣೆ ಒದಗಿಸಲು ಅವಕಾಶ ಕಲ್ಪಿಸಿರುವ 2023ನೇ ಸಾಲಿನ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ವಿಧೇಯಕಕ್ಕೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ ಲಭಿಸಿತು. +ವಿಧೇಯಕ ಮಂಡಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ವಕೀಲರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಅವರಿಗೆ ಕಾನೂನಾತ್ಮಕ ರಕ್ಷಣೆ ಅವಶ್ಯಕತೆ ಇದೆ. ಈ ಸಂಬಂಧ ಸುಪ್ರೀಂ ಕೋರ್ಟ್ ಕೂಡ ಆದೇಶ ನೀಡಿದೆ. ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ಪೊಲೀಸರ ರೀತಿ, ವಕೀಲರೂ ಮುಖ್ಯ ಎಂದರು. +ವಿಧೇಯಕದ ಮೇಲೆ ಬಿಜೆಪಿಯ ತೇಜಸ್ವಿನಿ ರಮೇಶ್ ಮಾತನಾಡಿ, ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ವಿಧೇಯಕವನ್ನು ಜಾರಿಗೆ ಮಾಡಲು ಮುಂದಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಕಡೆ ಪಕ್ಷ ಈಗ ಬಂದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಹೇಳಿದರು. +ಕಾಂಗ್ರೆಸ್ನ ನಾಗರಾಜ್ ಯಾದವ್ ಅವರು, ಹಿಂದಿನ ಸರ್ಕಾರಕ್ಕೆ ಬದ್ದತೆ ಇರಲಿಲ್ಲ. ನಮ್ಮ ಸರ್ಕಾರ ವಕೀಲರ ಮೇಲಿನ ಹಲ್ಲೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿ ಮಾಡಿದೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂದು ಸಮರ್ಥನೆ ಮಾಡಿಕೊಂಡರು. ನಾಗರಾಜ್ ಯಾದವ್ ಅವರ ಈ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ, ಶಶಿಲ್ ನಮೋಶಿ, ತೇಜಸ್ವಿನಿ ರಮೇಶ್ ಮತ್ತಿತರರು ತಿರುಗಿ ಬಿದ್ದರು. +ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಇದರಲ್ಲಿ ಯಾವ ಸರ್ಕಾರವು ಭುಜ ತಟ್ಟಿಕೊಳ್ಳಬೇಕಾದ ಅಗತ್ಯವಿಲ್ಲ. ಹಿಂದೆ ನಮ್ಮ ಸರ್ಕಾರ ದೊಡ್ಡದು ಮಾಡಲು ಮುಂದಾಗಿತ್ತು. ವಕೀಲರ ಪರಿಷತ್ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕಾಯ್ದೆಯನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದರು. ಬಹುತೇಕ ನಮ್ಮ ಸರ್ಕಾರದ ಅವಧಿಯಲ್ಲೇ ಕಾಯ್ದೆ ಮಂಡನೆಗೆ ಸಿದ್ಧವಾಗಿತ್ತು. ಆದರೆ ಕೆಲವು ಕಾರಣಗಳಿಂದ ವಿಳಂಬವಾಗಿದೆ. +ನನ್ನ ಸ್ಪಷ್ಟನೆ ಎಂದರೆ ಕಾಯ್ದೆ ಮೇಲೆ ಮಾತನಾಡುವಾಗ ನಮ್ಮ ಸರ್ಕಾರ, ನಿಮ್ಮ ಸರ್ಕಾರ ಮಾಡಿತ್ತು ಎಂಬುದನ್ನು ಹೇಳಿಕೊಳ್ಳಬಾರದು. ನಾಗರಾಜ್ ಯಾದವ್ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಆಕ್ಷೇಪಿಸಿದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು, ಕಾಯ್ದೆ ಮೇಲೆ ಮಾತನಾಡುವಾಗ ಆ ಸರ್ಕಾರ, ಈ ಸರ್ಕಾರ ಎಂದು ಹೇಳಬಾರದು. ಕಾಯ್ದೆಯಲ್ಲಿರುವ ಅಂಶಗಳನ್ನು ಉಲ್ಲೇಖಿಸಿ ಮಾತನಾಡಬೇಕು. ಅಗತ್ಯವಾದರೆ ಸರ್ಕಾರಕ್ಕೆ ಸಲಹೆಗಳನ್ನು ನೀಡಬೇಕು ಎಂದು ಕಿವಿಮಾತು ಹೇಳಿದರು. +ಆಗ ಜೆಡಿಎಸ್ನ ಮರಿತಿಬ್ಬೇಗೌಡ ಅವರು, ಸದಸ್ಯರು ಹೇಗೆ ಮಾತನಾಡಬೇಕೆಂಬ ಸಾಮಾನ್ಯ ಜ್ಞಾನ ಇರಬೇಕಲ್ಲವೇ? ಪಾಕಿಸ್ತಾನ, ಅದು ಇದು ಎಂದು ಬೆಂಕಿ ಹಚ್ಚಿದವರು ಯಾರು ಎಂದು ತೇಜಸ್ವಿನಿ ರಮೇಶ್ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಳಿಕ ಸಭಾಪತಿಗಳ ಮಧ್ಯಪ್ರವೇಶದಿಂದ ಸದನ ತಿಳಿಗೊಂಡಿತು. ನಂತರ ವಿಧೇಯಕದ ಮೇಲೆ ಪಿ.ಎಚ್.ಪೂಜಾರ್, ಎಚ್.ವಿಶ್ವನಾಥ್ ಮತ್ತಿತರರು ಮಾತನಾಡಿದರು. +ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸಿಯೇ ವಿಧೇಯಕವನ್ನು ಜಾರಿಗೆ ಮಾಡಿದ್ದೇವೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಬಳಿಕ ಸಭಾಪತಿ ಹೊರಟ್ಟಿ ಅವರು ಧ್ವನಿ ಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು. ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಕಾಯಿದೆಯನ್ನು ಡಿಸೆಂಬರ್ 12ರಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ವಿಧಾನಸಭೆಯಲ್ಲಿ ಮಂಡಿಸಿದ್ದರು. \ No newline at end of file diff --git a/eesanje/url_46_288_1.txt b/eesanje/url_46_288_1.txt new file mode 100644 index 0000000000000000000000000000000000000000..d17de8e8b22854520097fc39d7897d8d66ce2d50 --- /dev/null +++ b/eesanje/url_46_288_1.txt @@ -0,0 +1,6 @@ +ಸುವರ್ಣಸೌಧದಲ್ಲಿ ಜಾರಿ ಬಿದ್ದ ಶಾಸಕ, ಸದನದಲ್ಲಿ ಸ್ವಾರಸ್ಯಕರ ಚರ್ಚೆ +ಬೆಳಗಾವಿ, ಡಿ. 15- ಶಾಸಕರು ಜಾರಿ ಬಿದ್ದ ಪ್ರಸಂಗ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಬಹಳಷ್ಟು ಮಂದಿ ಶಾಸಕರು ತಡವಾಗಿ ಬಂದರು. ಅವರಿಗೆ ಸರದಿ ದಾಟಿದ್ದರೂ ಕೂಡ ಪ್ರಶ್ನೆ ಕೇಳಲು ಸಭಾಧ್ಯಕ್ಷರು ಅವಕಾಶ ಮಾಡಿಕೊಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್‍ನ ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ ಅವರಿಗೂ ಅವಕಾಶ ಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ವಿಳಂಬ ಏಕೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಪ್ರಶ್ನಿಸಿದರು. +ಇದಕ್ಕೆ ತಾವು ನಿನ್ನೆ ಸುವರ್ಣಸೌಧದಲ್ಲಿ ಮೆಟ್ಟಿಲುಗಳ ಮೇಲೆ ಜಾರಿ ಬಿದ್ದಿದ್ದಾಗಿ ಕೋಳಿವಾಡ ಉತ್ತರಿಸಿದರು. ತಾವು ಮೆಟ್ಟಲಿಳಿಯುವಾಗ ಬಿದ್ದು ಪೆಟ್ಟಾಯಿತು. ಇಂದು ಬೆಳಿಗ್ಗೆ ಎಕ್ಸರೇ ಮಾಡಿಸಿಕೊಳ್ಳಲು ಹೋಗಿದ್ದೆ. ಹೀಗಾಗಿ ತಡವಾಯಿತು ಎಂದು ವಿವರಣೆ ನೀಡಿದರು.ಕಾಂಗ್ರೆಸ್‍ನ ಶಾಸಕ ಮಾಲತೇಶ್ ಕೌಜಲಗಿ, ಯಾಕೆ ಬಿದ್ದಿರಿ ಎಂದು ಕಿಚಾಯಿಸಿದರು.ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಅದೇ ರೀತಿಯ ಪ್ರಶ್ನೆಯ ಮೂಲಕ ಪ್ರಕಾಶ್ ಕೋಳಿವಾಡರ ಕಾಲೆಳೆದರು. +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ಅದಕ್ಕೆ ಉತ್ತರಿಸಿದ ಪ್ರಕಾಶ್ ಕೋಳಿವಾಡ ಸುವರ್ಣಸೌಧದಲ್ಲಿ ಹಗಲು ಹೊತ್ತಿನಲ್ಲೇ ಬಿದ್ದೆ. ಎಲ್ಲರನ್ನೂ ನಿಮ್ಮಂತೆಯೇ ಎಂದು ಅಂದುಕೊಳ್ಳಬೇಡಿ ಎಂದು ಹಾಸ್ಯಮಿಶ್ರಿತ ಧಾಟಿಯಲ್ಲಿ ತಿರುಗೇಟು ನೀಡಿದರು.ಬಿದ್ದು ಕಾಲು ನೋವಾಗಿದ್ದರೂ ಕ್ಷೇತ್ರದ ಜನರ ಪರವಾಗಿ ಕಾಳಜಿ ಇಟ್ಟುಕೊಂಡು ಕಲಾಪಕ್ಕೆ ಬಂದು ಪ್ರಶ್ನೆ ಕೇಳುತ್ತಿರುವ ಕೋಳಿವಾಡರಿಗೆ ಅಭಿನಂದನೆಗಳು ಎಂದು ಸಭಾಧ್ಯಕ್ಷರು ಹೇಳಿದರು. +ಪ್ರಶ್ನೋತ್ತರದ ಕಲಾಪದಲ್ಲಿ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನುಪ್ರಕಾಶ್ ಕೋಳಿವಾಡ ಕೇಳುತ್ತಿದ್ದಾಗ ನಿಮಗೆ ಕಾಲುನೋವು ಇದೆ ಹೆಚ್ಚು ಹೊತ್ತು ನಿಂತುಕೊಳ್ಳಬೇಡಿ ಕುಳಿತುಕೊಳ್ಳಿ ಎಂದು ಸಭಾಧ್ಯಕ್ಷರು ಸಮಾಧಾನ ಹೇಳಿದರು. \ No newline at end of file diff --git a/eesanje/url_46_288_10.txt b/eesanje/url_46_288_10.txt new file mode 100644 index 0000000000000000000000000000000000000000..edadec58a9b1249593ec5f29f4d246204094ed60 --- /dev/null +++ b/eesanje/url_46_288_10.txt @@ -0,0 +1,7 @@ +ಕ್ರೂರ ಮೃಗಗಳ ಸಂಘರ್ಷ ತಪ್ಪಿಸಲು ಶಾಶ್ವತ ಕ್ರಮಕ್ಕೆ ಪಕ್ಷಬೇಧ ಮರೆತು ಸದಸ್ಯರ ಆಗ್ರಹ +ಬೆಳಗಾವಿ,ಡಿ.14- ಆನೆ, ಹುಲಿ ಮತ್ತು ಇತರೆ ಕ್ರೂರ ಮೃಗಗಳ ಸಂಘರ್ಷ ತಪ್ಪಿಸಲು ಶಾಶ್ವತ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸೌಧದಲ್ಲಿಂದು ಪಕ್ಷಬೇಧ ಮರೆತು ಸದಸ್ಯರೆಲ್ಲರೂ ಆಗ್ರಹಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಪಿ.ಡಿ.ರಾಜೇಗೌಡ ವಿಷಯ ಪ್ರಸ್ತಾಪಿಸಿ, ತಮ್ಮ ಕ್ಷೇತ್ರದ 18 ಗ್ರಾಮಗಳಲ್ಲಿ ನಿರಂತರವಾಗಿ ಆನೆ ದಾಳಿಗಳಾಗುತ್ತಿವೆ. ಒಂದೆಡೆ ಕುದುರೆಮುಖ ಮತ್ತೊಂದೆಡೆ ಅಭಯಾರಣ್ಯಗಳನ್ನು ಹೊಂದಿರುವ ತಮ್ಮ ಕ್ಷೇತ್ರದಲ್ಲಿ ವನ್ಯಜೀವಿಗಳ ಸಂಘರ್ಷ ಮರುಕಳಿಸುತ್ತಿದೆ. +ಕಂದಕ ಹಾಗೂತಂತಿ ಬೇಲಿಗಳ ನಿರ್ಮಾಣ ಪ್ರಯೋಜನವಾಗುತ್ತಿಲ್ಲ. ರೈಲ್ವೆ ಹಳಿಗಳ ಬ್ಯಾರಿಕೇಡ್ ನಿರ್ಮಾಣ ಶಾಶ್ವತ ಪರಿಹಾರವಾಗಿದೆ. 225 ಕೋಟಿ ರೂ. ವೆಚ್ಚದಲ್ಲಿ ಬ್ಯಾರಿಕೇಡ್‍ಗಳನ್ನು ನಿರ್ಮಿಸುವ ಯೋಜನೆಯಾಗಿದ್ದು, ಈ ವರ್ಷ 120 ಕೋಟಿ ರೂ. ಒದಗಿಸುವುದಾಗಿ ತಿಳಿಸಲಾಗಿದೆ. ಆದ್ಯತೆ ಮೇರೆಗೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿದರು. +ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ +ಆರಗ ಜ್ಞಾನೇಂದ್ರ ಮಧ್ಯಪ್ರವೇಶಿಸಿ, ರೈತರು ಕಷ್ಟಪಟ್ಟು ಬೆಳೆದ ಬೆಳೆಗಳ ಮೇಲೆ ಆನೆಗಳು ದಾಳಿ ಮಾಡಿ ಒಂದು ಗಂಟೇಯಲ್ಲೇ ನಾಶ ಮಾಡುತ್ತಿವೆ ಎಂದರು. ಶಾಸಕ ಎಚ್.ಡಿ.ತಮ್ಮಯ್ಯ, ಹರೀಶ್ ಪೂಂಜ್ಯಾ, ಭಾಗಿರಥಿ ಮೂರಳ್ಯ ಸೇರಿದಂತೆ ಹಲವು ಸೇರಿದಂತೆ ಸಾಕಷ್ಟು ಶಾಸಕರು ವನ್ಯಜೀವಿಗಳ ಸಂಘರ್ಷದ ಬಗ್ಗೆ ಆತಂಕ ವ್ಯಕ್ತಪಡಿಸಿದರು. +ಚರ್ಚೆ ತೀವ್ರವಾದಾಗ ಸಭಾಧ್ಯಕ್ಷರು, ಅಲ್ಲಿ ಆನೆ ಕಾಟ, ಇಲ್ಲಿ ನಿಮ್ಮ ಕಾಟ ಎಂದರು. ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಆನೆ-ಮಾನವ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದೆ. ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ಬ್ಯಾರಿಕೇಡ್ ನಿರ್ಮಿಸುವುದರಿಂದ ಸಮಸ್ಯೆ ಬಗೆಹರಿಸಬಹುದು. ಶೃಂಗೇರಿ ಕ್ಷೇತ್ರದಲ್ಲಿ 7.51 ಕಿ.ಮೀ ಉದ್ದಕ್ಕೆ ಬ್ಯಾರಿಕೇಡ್ ನಿರ್ಮಿಸಬೇಕೆಂಬ ಪ್ರಸ್ತಾವನೆ ಕಲ್ಪಿಸಬೇಕು. ಈಗಾಗಲೇ 5 ಕೋಟಿರೂ.ಗಳನ್ನು ಖರ್ಚು ಮಾಡಿ 4 ಕಿ.ಮೀ ಹೆಚ್ಚಿನ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಅನುದಾನ ಆಧರಿಸಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದರು. +ರಾಜ್ಯಾದ್ಯಂತ 6395 ಆನೆಗಳಿವೆ. ಆನೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಜನವಸತಿ ಪ್ರದೇಶಗಳಿಗೆ ನುಗ್ಗದಂತೆ ತಡೆಯಲು 200 ಕೋಟಿ ರೂ. ವೆಚ್ಚದಲ್ಲಿ 120 ಕಿ.ಮೀ ಬ್ಯಾರಿಕೇಡ್‍ನ್ನು ರಾಜ್ಯಾದ್ಯಂತ ನಿರ್ಮಿಸಲಾಗುತ್ತಿದೆ. ಏಳು ವಿಶೇಷ ಕಾರ್ಯಪಡೆಗಳು ಕೆಲಸ ನಿರ್ವಹಿಸುತ್ತಿದ್ದು, ಅಗತ್ಯವಾದರೆ ಮತ್ತಷ್ಟು ಹೆಚ್ಚುವರಿ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_46_288_11.txt b/eesanje/url_46_288_11.txt new file mode 100644 index 0000000000000000000000000000000000000000..3ca531cf19fcff265c03a4e9fd65ba68288f3653 --- /dev/null +++ b/eesanje/url_46_288_11.txt @@ -0,0 +1,6 @@ +ಜಂಟಿ ಸರ್ವೆ ಬಳಿಕ ಹೆಚ್ಚುವರಿ ಭೂಮಿ ಕಂದಾಯ ಇಲಾಖೆಗೆ ಹಸ್ತಾಂತರ : ಖಂಡ್ರೆ +ಬೆಳಗಾವಿ,ಡಿ.14- ಅರಣ್ಯ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಬಳಿಕ ಹೆಚ್ಚುವರಿ ಭೂಮಿ ಕಂಡುಬಂದರೆ ಕಂದಾಯ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಿಧಾನಸಭೆಗೆ ತಿಳಿಸಿದರು. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಪ್ರಶ್ನೆ ಕೇಳಿ, ಅರಣ್ಯದ ಗಡಿಯಾಚೆಗೆ ಇರುವ ರೈತರ ಜಮೀನಿಗೆ ಸಾಗುವಳಿ ಚೀಟಿ ಪಡೆದುಕೊಳ್ಳಲು ಅರಣ್ಯ ಇಲಾಖೆಯ ನಿರಪಕ್ಷೇಣ ಪತ್ರ ಅಗತ್ಯವಿದೆ. ಆದರೆ ಇದು ಸುಲಭವಾಗಿ ದೊರೆಯದೆ ತೊಂದರೆಯಾಗುತ್ತಿದೆ. ತಮ್ಮ ಕ್ಷೇತ್ರದಲ್ಲಿ ಜಂಟಿ ಸಮೀಕ್ಷೆ ನಡೆಸಿದಾಗ 800 ಎಕರೆ ಅರಣ್ಯ ಪ್ರದೇಶವಿದ್ದು, ಹೆಚ್ಚುವರಿಯಾಗಿ 500 ಎಕರೆ ಭೂಮಿ ಪತ್ತೆಯಾಗಿದೆ. +ಹೀಗಾಗಿ ನಕ್ಷೆ ಇಲ್ಲದ ಜಮೀನುಗಳನ್ನು ಜಂಟಿ ಸರ್ವೆ ಮಾಡಿಸಿ ರೈತರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಚಿವ ಈಶ್ವರ್ ಖಂಡ್ರೆ, ಜಂಟಿ ಮೋಜಿಣಿಯನ್ನು ಶೀಘ್ರವಾಗಿ ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು. ಅರಣ್ಯ ಇಲಾಖೆಯ ಸುತ್ತಳತೆಯಲ್ಲಿ ಹೆಚ್ಚುವರಿ ಭೂಮಿ ಕಂಡುಬಂದರೆ ಗಡಿಯನ್ನು ಗುರುತಿಸಿ ಉಳಿದ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುತ್ತೇವೆ. +ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ +ನಿರಪೇಕ್ಷಣಾ ಪತ್ರ ನೀಡಲು ಕೃಷಿ ಭೂಮಿಗಳು 100 ಮೀಟರ್ ಅಂತರದಲ್ಲಿರಬೇಕು ಮತ್ತು ಅರಣ್ಯ ಎಂದು ಪರಿಗಣಿಸಬಹುದಾದಷ್ಟು ಮರಗಳ ಸಂಖ್ಯೆ ಇರಬಾರದು. ಜೊತೆಗೆ ಕೇಂದ್ರ ಇಲಾಖೆಗೂ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದುಕೊಳ್ಳಬೇಕಿದೆ ಎಂದು ಹೇಳಿದರು. ಈ ವೇಳೆ ಶೂಳ್ಯ ಕ್ಷೇತ್ರದ ಶಾಸಕರಾದ ಭಾಗಿರಥಿ ಮುರುಳ್ಯ ಅವರು ತಮ್ಮ ಕ್ಷೇತ್ರದಲ್ಲಿರುವ ರಬ್ಬರ್ ಕಾರ್ಮಿಕರಿಗೆ ಹೆಚ್ಚುವರಿ ಬೋನಸ್ ನೀಡಬೇಕು, ಆನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು. +ಈಗಾಗಲೇ ಶೇ.8.3ರಷ್ಟು ಬೋನಸ್ ನೀಡಲಾಗಿದೆ. ಕಾರ್ಮಿಕರು ಶೇ.20ರಷ್ಟು ಬೋನಸ್‍ಗಾಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆರ್ಥಿಕ ಸ್ಥಿತಿಗತಿಯಲ್ಲಿ ಅದು ಕಷ್ಟಸಾಧ್ಯ ಎಂದರಲ್ಲದೆ, ಆನೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_288_12.txt b/eesanje/url_46_288_12.txt new file mode 100644 index 0000000000000000000000000000000000000000..2e98f44cd9f9e9db09c26ca71551ce8e5a130e6e --- /dev/null +++ b/eesanje/url_46_288_12.txt @@ -0,0 +1,6 @@ +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಇದಕ್ಕೆ ಅಂಕಿ-ಅಂಶಗಳೇ ಸಾಕ್ಷಿ : ಸಚಿವ ಪರಮೇಶ್ವರ್ +ಬೆಳಗಾವಿ, ಡಿ.14- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಇದಕ್ಕೆ ಲಭ್ಯವಿರುವ ಅಂಕಿ-ಅಂಶಗಳೇ ಸಾಕ್ಷಿ ಎಂದು ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮೇಲ್ಮನೆಯಲ್ಲಿ ಪ್ರತಿಪಕ್ಷಗಳ ಬಾಯಿ ಮುಚ್ಚಿಸಿದ ಪ್ರಸಂಗ ಜರುಗಿತು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪಿ ಎಲ್ಲಿಯೂ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಇತ್ತೀಚಿಗೆ ನಡೆದ 57 ಕೊಲೆ ಪ್ರಕರಣಗಳ ಪೈಕಿ 56 ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳನ್ನು ಬಂಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಿದರು. +ಈ ಹಿಂದೆ 2011ರಿಂದ 2013ರವರೆಗೆ ಎರಡು ವರ್ಷ ನಾಲ್ಕು ತಿಂಗಳು ಬಿಜೆಪಿಯ ಆರ್.ಅಶೋಕ್ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಬರೋಬ್ಬರಿ 4121 ಕೊಲೆ ಪ್ರರಕಣಗಳು ನಡೆದಿವೆ. ಅದರಲ್ಲೂ ಅತ್ಯಾಚಾರ ಪ್ರರಕಣಗಳು 1639ರಷ್ಟಿದ್ದು, 234 ಪೆÇೀಕ್ಸೋ ಕಾಯ್ದೆ ಅಡಿಯೂ ಮೊಕದ್ದಮೆ ದಾಖಲಾಗಿವೆ. ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಸಂದರ್ಭದಲ್ಲಿಯೂ 2254 ಕೊಲೆಗಳು, 915ರಷ್ಟು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ ಎಂಬ ಮಾಹಿತಿ ನೀಡಿದರು. +ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ +ಅದೇ ರೀತಿ, ಕಳೆದ ಅವಗೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಆಡಳಿತ ವೇಳೆಯೂ 2417 ಕೊಲೆಗಳು, 949 ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಇನ್ನೂ, ಕಾಂಗ್ರೆಸ್ ಸರ್ಕಾರ ಆಡಳಿತದ ಆರಂಭದಿಂದ ಇದುವರೆಗೂ 616 ಕೊಲೆಗಳು, 310 ಅತ್ಯಾಚಾರ ಪ್ರಕರಣಗಳು ಮಾತ್ರ ವರದಿಯಾಗಿದೆ ಎಂದು ಅವರು ತಿಳಿಸಿದರು. +ಯಾವುದೇ ಅಂಕಿ-ಅಂಶಗಳು ಇಲ್ಲದೆ ನಮ್ಮ ಸರ್ಕಾರದ ವಿರುದ್ಧ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಅಲ್ಲದೆ, ಕೋಮು ಗಲಭೆಗಳು ನಿಯಂತ್ರಣದಲ್ಲಿವೆ. ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ಕೋಲಾರ, ಉಪ್ಪಿನ ಅಂಗಡಿ, ನರಗುಂದ, ಹಿಜಾಬ್ ಕಡೆ ಗಲಾಟೆ, ಶಿವಮೊಗ್ಗದಲ್ಲಿ ಸಾರ್ವಕರ್ ಫೋಟೋ , ಹೀಗೆ ಸಣ್ಣ ಸಣ್ಣ ವಿಚಾರಗಳಿಗೂ ಗಲಭೆ ನಡೆಸಲಾಗುತ್ತಿತ್ತು ಎಂದು ಪರಮೇಶ್ವರ್ ಹೇಳಿದರು. \ No newline at end of file diff --git a/eesanje/url_46_288_2.txt b/eesanje/url_46_288_2.txt new file mode 100644 index 0000000000000000000000000000000000000000..4a95a8f450a0a7380796f57d48cc04aea7f69a66 --- /dev/null +++ b/eesanje/url_46_288_2.txt @@ -0,0 +1,6 @@ +ವಿಧಾನಸಭೆಯಲ್ಲಿ ಕೋರಂ ಹಗ್ಗಜಗ್ಗಾಟ +ಬೆಳಗಾವಿ, ಡಿ. 15- ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅವೇಶನದ ಕೊನೆಯ ದಿನವಾದ ಇಂದು ಕಲಾಪದ ಆರಂಭದಲ್ಲಿ ಕೋರಂನ ಹಗ್ಗಜಗ್ಗಾಟ ಕಂಡುಬಂದಿತು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬೆಳಿಗ್ಗೆ 9 ಗಂಟೆಗೆ ಸದನ ಸಮಾವೇಶಕ್ಕೆ ಸಮಯ ನಿಗದಿ ಮಾಡಿದ್ದರು. ಆದರೆ ಆಡಳಿತ ಪಕ್ಷದ ಕಡೆಯಿಂದ ಕೇವಲ ನಾಲ್ಕೈದು ಮಂದಿ ಸದಸ್ಯರು ಮಾತ್ರ ಸದನದಲ್ಲಿ ಹಾಜರಿದ್ದರು. +ಬಿಜೆಪಿಯಿಂದ ಸುಮಾರು 20 ಕ್ಕೂ ಹೆಚ್ಚು ಶಾಸಕರು ಉಪಸ್ಥಿತರಿದ್ದರು. ಆಡಳಿತ ಪಕ್ಷದ ಸಾಲಿನಲ್ಲಿ ಸದಸ್ಯರ ಕೊರತೆ ಇದ್ದುದ್ದರಿಂದ ಬಿಜೆಪಿ ಶಾಸಕರು ಸದನ ಕರೆದವರೇ ಸಮಯಕ್ಕೆ ಬಂದಿಲ್ಲ. ನಾವು ಏಕೆ ಹಾಜರಿದ್ದು ಕೋರಂಗೆ ಬೆಂಬಲ ಏಕೆ ನೀಡಬೇಕು ಎಂದು ಹೇಳುತ್ತಾ ಹೊರನಡೆದರು. +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ಸುಮಾರು ಅರ್ಧಗಂಟೆ ಕಾಲ ಸದನದ ಬೆಲ್ಲು ಬಾರಿಸುತ್ತಲೇ ಇತ್ತು. ಕೊನೆಗೆ ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್ ಅವರು ಸದನದ ಮೊಗಸಾಲೆಯಲ್ಲಿದ್ದ ಕಾಂಗ್ರೆಸ್ ಶಾಸಕರನ್ನು ಒಳಗೆ ಕರೆತಂದರು. ಆದರೂ ಕೋರಂಗೆ ಸಂಖ್ಯೆ ಸಾಲದಿದ್ದಾಗ ಬಿಜೆಪಿ ಪಾಳಯದತ್ತ ಬಂದು ಹಿರಿಯ ಶಾಸಕ ಸುರೇಶ್‍ಕುಮಾರ್ ಅವರಲ್ಲಿ ಮೂರ್ನಾಲ್ಕು ಮಂದಿ ಶಾಸಕರನ್ನು ಒಳಗೆ ಬರುವಂತೆ ಹೇಳಿ ಕೋರಂ ಆಗುತ್ತಲೆ ಕಲಾಪ ಶುರು ಮಾಡೋಣ ಎಂದು ಮನವಿ ಮಾಡಿಕೊಂಡರು. +ಅಷ್ಟರಲ್ಲಿ ಕಾಂಗ್ರೆಸ್ ಶಾಸಕರುಗಳೇ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರಿಂದಾಗಿ ಕಲಾಪ ಆರಂಭಿಸಿದಾಗ ಬೆಲ್ಲು ನಿಲ್ಲಿಸಲಾಯಿತು. ಸಭಾಂಗಣದ ಒಳಗೆ ಬರುವಾಗ ಬಿಜೆಪಿ ಶಾಸಕರು, ನಾವು ಒಳಗೆಬರಲಿ ಎಂಬ ಕಾರಣಕ್ಕಾಗಿಯೇ ಬೆಲ್ ನಿಲ್ಲಿಸಿದ್ರಾ ಹೇಗೆ ಎಂದು ಅನುಮಾನ ವ್ಯಕ್ತಪಡಿಸುತ್ತಲೇ ಬಂದರು. \ No newline at end of file diff --git a/eesanje/url_46_288_3.txt b/eesanje/url_46_288_3.txt new file mode 100644 index 0000000000000000000000000000000000000000..b7d18a407a0f8a9ef2f5923ba74cd24a32763cfc --- /dev/null +++ b/eesanje/url_46_288_3.txt @@ -0,0 +1,9 @@ +ಲೋಕಸಭೆಯಲ್ಲಿ ಆತಂಕ ಸೃಷ್ಟಿಸಿದ್ದ ಮನೋರಂಜನ್ ಸಾಫ್ಟ್‌ವೇರ್ ಎಕ್ಸ್‌ಪರ್ಟ್‌ +ಮೈಸೂರು,ಡಿ.15- ಲೋಕಸಭೆ ಕಲಾಪದ ವೇಳೆ ಆತಂಕ ಸೃಷ್ಟಿಸಿದ್ದ ಪ್ರಕರಣ ಸಂಬಂಧ ಮೈಸೂರಿನಲ್ಲಿ ಆಂತರಿಕ ಭದ್ರತಾ ಪಡೆ ಅಧಿಕಾರಿಗಳು ಮನೋರಂಜನ್ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು.ಲೋಕಸಭೆ ಕಲಾಪ ವೇಳೆ ಮನೋರಂಜನ್ ಮತ್ತು ಸಾಗರ್ ಶರ್ಮಾ ನುಗ್ಗಿದ್ದು ಭಾರಿ ಸುದ್ದಿಯಾಗಿದೆ. +ಈ ಸಂಬಂಧ ಮೈಸೂರಿನ ಮನೋರಂಜನ್ ನಿವಾಸಕ್ಕೆ ಆಂತರಿಕ ಭದ್ರತಾ ಪಡೆ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಆಂತರಿಕ ಭದ್ರತಾ ಪಡೆ ಅಕಾರಿಗಳ ಮುಂದೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಮನೋರಂಜನ್ ಮನೆಗೆ ಸಾಗರ್ ಶರ್ಮ ಎರಡು ಬಾರಿ ಬಂದು ಹೋಗಿದ್ದ ಈ ವೇಳೆ ಊಟ ಮಾಡಿಕೊಂಡು ಹೋಗಿದ್ದ. ಆದರೆ ಸದ್ಯದ ಮಾಹಿತಿ ಪ್ರಕಾರ ಇಲ್ಲಿ ಉಳಿದುಕೊಂಡಿರಲಿಲ್ಲ ಎಂದು ಮನೋರಂಜನ್ ಕುಟುಂಬಸ್ಥರು ತಿಳಿಸಿದ್ದಾರೆ. +ಕುಟುಂಬಸ್ಥರ ಬಳಿಯು ಮನೋರಂಜನ್ ಹೆಚ್ಚು ಮಾತನಾಡಿರಲಿಲ್ಲವಂತೆ. ಹೆಚ್ಚು ಪುಸ್ತಕವನ್ನು ಓದುತ್ತಿದ್ದ, ಹೆಚ್ಚು ಮಾತನಾಡುತ್ತಿರಲ್ಲ. ಆದರ್ಶ ವ್ಯಕ್ತಿತ್ವದ ಹಿನ್ನೆಲೆ ತೋರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ.ಸಂಸತ್ ಭವನಕ್ಕೆ ನುಗ್ಗಿದ ಮನೋರಂಜನ್ ಸಾಫ್ಟ್‍ವೇರ್ ಪಂಟರ್ ಆಗಿದ್ದು ಎಲ್ಲಿಯೂ ವಾಟ್ಸಾಪ್, ಇನ್‍ಸ್ಟಾಗ್ರಾಂ, ಫೇಸ್ ಬುಕ್ ಐಡಿ ಬಿಟ್ಟುಕೊಟ್ಟಿಲ್ಲ. +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ತಂಗಿ ಮದುವೆ ಸಂದರ್ಭದಲ್ಲಿ ಎಲ್ಲಾ ಜಾಲತಾಣದಲ್ಲೂ ಸಕ್ರಿಯನಾಗಿದ್ದ. ಕಳೆದ ಮೂರು ತಿಂಗಳಿಂದ ಎಲ್ಲಾ ಅಕೌಂಟ್‍ಗಳು ಡಿಆಕ್ಟೀವ್ ಆಗಿತ್ತು. ತನ್ನ ಗುರುತು ಪತ್ತೆ ಆಗಬಾರದು ಎಂಬ ಕಾರಣಕ್ಕೆ ಮನೋರಂಜನ್ ಜಾಲತಾಣಗಳಲ್ಲಿ ಇನ್ ಆಕ್ಟೀವ್ ಆಗಿ ಗುರುತು ಮರೆಮಾಚಿದ್ದ. +ಕ್ರಾಂತಿಕಾರಿ ಪುಸ್ತಕಗಳೇ ಪ್ರೇರಣೆ. ಕಿಕ್ ಬಾಕ್ಸಿಂಗ್ ಮನೋರಂಜನ್ ಹವ್ಯಾಸ. ಎಂಜಿನಿಯರಿಂಗ್ ಮುಗಿಸಿದ್ರೂ ನಿರುದ್ಯೋಗಿ ಆಗಿದ್ದ ಮನೋರಂಜನ್ ಕೆಲಸಕ್ಕೂ ಹೋಗದೆ, ಮದುವೆಯನ್ನೂ ಆಗದೆ ಒಬ್ಬಂಟಿಯಾಗಿದ್ದ. ಮನೆ ಸುತ್ತ-ಮುತ್ತ ಅಪರಿಚಿತನಂತಿರುತ್ತಿದ್ದ ಆತ ಕೊಠಡಿ ಒಳಗೆ ಸೇರಿಕೊಂಡು ಪುಸ್ತಕ ಓದುತ್ತಿದ್ದ. ಬೆಂಗಳೂರು, ದೆಹಲಿಯಲ್ಲದೆ ವಿದೇಶಕ್ಕೂ ತೆರಳಿದ್ದ. +ಪದೇ ಪದೇ ಬೆಂಗಳೂರಿಗೆ ಅಂತ ಹೇಳಿ ಹೋಗುತ್ತಿದ್ದ. ಮನೆಗೆ ಬರುತ್ತಿದ್ದ ಪೋಸ್ಟ್ ಗಳನ್ನ ಬೇರೆ ವಿಳಾಸಕ್ಕೆ ವರ್ಗಾಯಿಸಿದ್ದ. ಬೆಂಗಳೂರಿನಲ್ಲಿ ತಾನು ಉಳಿದುಕೊಂಡಿದ್ದ ಕೊಠಡಿಗೆ ಬರುವಂತೆ ನೋಡಿಕೊಂಡಿದ್ದ ಎಂಬ ಮಾಹಿತಿ ಕುಟುಂಬಸ್ಥರಿಂದ ತಿಳಿದು ಗೊತ್ತಾಗಿದೆ.ಮನೋರಂಜನ್ ಫಸ್ಟ್ ಕ್ಲಾಸ್ ಸ್ಟೂಡೆಂಟ್ ಆಗಿದ್ದು, ಮೈಸೂರಿನಲ್ಲಿಯೇ ಪಿಯುಸಿವರೆಗೆ ವ್ಯಾಸಂಗ ಮಾಡಿದ್ದನು. +ಸೆಂಟ್ ಜೋಸೆಫ್ ಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ, ಮರಿಮಲ್ಲಪ್ಪ ಶಾಲೆಯಲ್ಲಿ ಪಿಯು ಶಿಕ್ಷಣ, ಬೆಂಗಳೂರಿನ ಬಿಐಟಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದನು. ಸಿವಿಲ್ ಓದು ಅಂದರೂ ಕಂಪ್ಯೂಟರ್ ಸೈನ್ಸೇ ಓದಬೇಕೆಂದು ಹಠ ಹಿಡಿದಿದ್ದನಂತೆ. ಆದರೆ ಪದವಿ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_46_288_4.txt b/eesanje/url_46_288_4.txt new file mode 100644 index 0000000000000000000000000000000000000000..b25b38a924fe4bd07b7dcf39c0578e27acdb137c --- /dev/null +++ b/eesanje/url_46_288_4.txt @@ -0,0 +1,5 @@ +ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ +ಬೆಳಗಾವಿ, ಡಿ.14- ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ. ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. +ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಅವಯು ಮೊದಲು ಎರಡು ವರ್ಷವಿತ್ತು. 7 ವರ್ಷದ ಹಿಂದೆ ಅದನ್ನು ಒಂದು ವರ್ಷಕ್ಕೆ ಮಾಡಲಾಗಿದೆ. ಪೊಲೀಸ್ ವರ್ಗಾವಣೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು. +ಮತ್ತೊಬ್ಬ ಮಹಿಳೆಯನ್ನು ಬಲಿಪಡೆದ ಕಿಲ್ಲರ್ ಬಿಎಂಟಿಸಿ +ಇದಕ್ಕೂ ಮುನ್ನ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿಗಳ ವರ್ಗಾವಣೆಯನ್ನು ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಒಂದು ಜಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳೇ ಠಾಣೆಯ ಸರಹದ್ದಿನ ಸಮಗ್ರ ಮಾಹಿತಿ ಪಡೆದು, ಕ್ರಿಮಿನಲ್ ಗುಂಡಾಗಳನ್ನೂ ಮಟ್ಟ ಹಾಕುವ ವೇಳೆಗೆ ಒಂದು ವರ್ಷ ಮುಗಿದು ಹೋಗುತ್ತದೆ. ಅದರಿಂದ ಕ್ರಿಮಿನಲ್ ಪ್ರಕರಣಗಳನ್ನು ಮಟ್ಟಹಾಕಲು ಆಗುತ್ತಿಲ್ಲ. ಹೀಗಾಗಿ ಕನಿಷ್ಠ ವರ್ಗಾವಣೆ ಅವಧಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಬೇಕು ಎಂದು ಹೇಳಿದರು. \ No newline at end of file diff --git a/eesanje/url_46_288_5.txt b/eesanje/url_46_288_5.txt new file mode 100644 index 0000000000000000000000000000000000000000..2d86e393742b5bc50c929be7834e063d93e236a2 --- /dev/null +++ b/eesanje/url_46_288_5.txt @@ -0,0 +1,17 @@ +ಭ್ರೂಣ ಲಿಂಗ ಪತ್ತೆ-ಹತ್ಯೆ ತಡೆಗೆ ಪ್ರತ್ಯೇಕ ಕಾಯ್ದೆ-ನೀತಿ ರಚನೆ : ಗುಂಡೂರಾವ್ +ಬೆಳಗಾವಿ, ಡಿ.14- ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಗಟ್ಟಲು ಐಪಿಸಿ ಸೆಕ್ಷನ್ಗೆ ತಿದ್ದುಪಡಿ ತರಲಾಗುವುದು, ಜೊತೆಗೆ ವಿಶೇಷ ಕಾಯ್ದೆ ಹಾಗೂ ಪ್ರತ್ಯೇಕ ನೀತಿ ರಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. +ವಿಧಾನಸಭೆಯ ಶೂನ್ಯವೇಳೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಕುರಿತು ನಡೆದ ಚರ್ಚೆಗೆ ಉತ್ತರ ನೀಡಿದ ಸಚಿವರು, ಸಾಮಾಜಿಕವಾದ ಈ ಪಿಡುಗನ್ನು ತಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.ಆಧುನಿಕ ತಂತ್ರಜಾ್ಞನದಿಂದ ಭ್ರೂಣ ಲಿಂಗ ಪತ್ತೆ ಮಾಡುವುದು ಸುಲಭವಾಗಿದೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಮಗು ಜನಿಸಿದ ಬಳಿಕ ಹೆಣ್ಣು ಮಗುವಾಗಿದ್ದರೆ ಅದರ ಬಾಯಿಗೆ ಕಾಳು ಹಾಕಿ ಉಸಿರುಗಟ್ಟುವಂತೆ ಮಾಡಿ ಕೊಲೆ ಮಾಡುವ ಉದಾಹರಣೆಗಳಿವೆ. ಇದು ಸಮಾಜದ ಕೆಟ್ಟ ಮನಸ್ಥಿತಿ ಎಂದು ಹೇಳಿದರು. +2002ರಿಂದ 2023ರವರೆಗೆ 21 ವರ್ಷದಲ್ಲಿ 100 ಭ್ರೂಣ ಲಿಂಗ ಪತ್ತೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಧಿಕಾರಿಗಳು ಕಾಳಜಿ ಹಾಗೂ ಪ್ರಾಣಿಕತೆಯಿಂದ ತಪಾಸಣೆ ನಡೆಸಿಲ್ಲ. ಇನ್ನೂ ಮುಂದೆ ಇದನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದರು.ಹೆಣ್ಣು ಭ್ರೂಣ ಹತ್ಯೆ ಮೊದಲಿನಿಂದಲೂ ನಡೆಯುತ್ತಿದೆ. ಆದರೆ ನಾವು ಅದನ್ನು ಕಂಡೂ ಕಾಣದಂತೆ ಇದ್ದು ಬಿಡುತ್ತೇವೆ. +ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ವಿಡಿಯೋ ಮಾಡಿದ ಪತಿರಾಯ +ಭ್ರೂಣ ಹತ್ಯೆಯಿಂದ ದೇಶದಲ್ಲಿ ಲಿಂಗಾನುಪಾತ 979ರಿಂದ 947ಕ್ಕೆ ಕುಸಿದಿದೆ. ಜನರೂ ಭ್ರೂಣ ಹತ್ಯೆಯನ್ನು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಅಕ್ರಮ ಸೆಂಟರ್ಗಳು, ಕೃತ್ಯಗಳು ಹೆಚ್ಚಾಗುತ್ತಿವೆ. ಈ ಕುರಿತು ಜನಜಾಗೃತಿ ಹೆಚ್ಚಾಗಬೇಕು, ಜೊತೆಗೆ ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಭ್ರೂಣ ಹತ್ಯೆ ಮಾಡಿಸಿದವರು ಹಾಗೂ ಮಾಡಿದವರು ಸೇರಿ ಎರಡು ಕಡೆಯವರನ್ನು ಹೊಣೆ ಮಾಡಬೇಕು. ಭ್ರೂಣ ಹತ್ಯೆ ಎಂದರೆ ಅದು ಕೊಲೆಯೇ ಆಗಿದೆ ಎಂದರು. +ಇಂತಹ ವೇಳೆಯಲ್ಲಿ ತಾಯಿ ಹೊಣೆಗಾರಿಕೆಯಿಂದ ನುಣಚಿಕೊಳ್ಳುವಂತಿಲ್ಲ. ಗರ್ಭಪಾತ ಮಾಡಿಸುವುದು ನನಗೆ ಗೋತ್ತಿಲ್ಲ, ಒತ್ತಡ ಹೇರಿ ಭ್ರೂಣ ಹತ್ಯೆ ಮಾಡಿಸಿದ್ದಾರೆ ಎಂದು ಹೇಳುವುದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು. ಮಂಡ್ಯದಲ್ಲಿ ನಡೆದ ಪ್ರಕರಣವನ್ನು ಗಮನಿಸುವಲ್ಲಿ ಅಧಿಕಾರಿಗಳು ಲೋಪವೆಸಗಿದ್ದಾರೆ. ಬೆಂಗಳೂರಿನ ಬಯ್ಯಪ್ಪನಹಳ್ಳಿ ಪೊಲೀಸರು ಪ್ರಕರಣ ಪತ್ತೆ ಹಚ್ಚಿದ್ದಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಪೊಲೀಸರ ತನಿಖೆಯಲ್ಲಿ ಹೆಚ್ಚು ಪ್ರಕರಣಗಳು ನಡೆದಿರುವುದು ಸಮಾಜದ ಕಣ್ಣು ತೆರೆಸಿದೆ ಎಂದರು. +ಇದನ್ನು ತಡೆಯಲು ಕಾನೂನು ಜಾರಿಗೆ ತರಬೇಕು. ಭ್ರೂಣ ಲಿಂಗ ಪತ್ತೆ ಕಾನೂನನ್ನು ಮತ್ತಷ್ಟು ಕಠಿಣಗೊಳಿಸಿ, ಪರಿಣಾಮಕಾರಿಯಾಗಿ ಬಳಕೆ ಮಾಡಬೇಕು. ಭ್ರೂಣ ಪತ್ತೆ ಪ್ರತ್ಯೇಕ ಕಾನೂನು ಇದೆ. ಭ್ರೂಣ ಹತ್ಯೆ ತಡೆಯಲು ಚಾಲ್ತಿಯಲ್ಲಿರುವ ಕಾನೂನು ಸಮರ್ಥವಾಗಿಲ್ಲ. ಪ್ರಸ್ತುತ ಐಪಿಸಿ ಸೆಕ್ಷನ್ ಸೆಕ್ಷನ್ 315, 316, ಬಳಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಐಪಿಸಿಗೂ ತಿದ್ದುಪಡಿ ತರಲಾಗುವುದು. ಬಯ್ಯಪ್ಪನಹಳ್ಳಿ ಪ್ರಕರಣದಲ್ಲಿ ದಾಖಲಿಸಲಾಗಿದ್ದ ಸೆಕ್ಷನ್ಗಳನ್ನೇ ಆಧಾರವಾಗಿಟ್ಟುಕೊಂಡು ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ ಎಂದರು. +ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆಯ ಮೇಲೆ ನಿಗಾವಹಿಸಲಾಗುತ್ತಿದೆ. ಇದು ಮಂಡ್ಯ ಅಥವಾ ಕೆಲವು ಜಿಲ್ಲೆಗಳಿಗೆ ಸೀಮಿತವಾಗಿಲ್ಲ. ರಾಜಾ್ಯದ್ಯಂತ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಅಧಿಕಾರಿಗಳು ಗಂಭೀರ ಸ್ವರೂಪದ ತಪಾಸಣೆ ನಡೆಸುವಂತೆ ಸೂಚಿಸಲಾಗಿದೆ ಎಂದರು. +ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಪೊಲೀಸ್ ಇಲಾಖೆಯ ಜಂಟಿ ಕಾರ್ಯಚರಣೆ ನಡೆಸಲಾಗುವುದು. ಈ ಕಾರ್ಯಚರಣೆಗಾಗಿಯೇ ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಶೇಷವಾಗಿ ನಿಯೋಜಿಸುವಂತೆ ಗೃಹ ಇಲಾಖೆಗೆ ಮನವಿ ಮಾಡಲಾಗಿದೆ ಎಂದರು. +ಹೊಸಕೋಟೆಯಲ್ಲಿ ಅಧಿಕಾರಿಗಳು ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಹತ್ಯೆಗೆ ಒಳಗಾದ ಭ್ರೂಣ ಪತ್ತೆಯಾಗಿದೆ. ತಕ್ಷಣವೇ ಆಸ್ಪತ್ರೆ ಹಾಗೂ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಭ್ರೂಣ ಹತ್ಯೆ ತಡೆಯಲು ಸೂಕ್ತ ಕಾನೂನು ತರುವುದು ಅನಿವಾರ್ಯ. ಮುಂದಿನ ಅವೇಶನದ ವೇಳೆಗೆ ಕಾನೂನು ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾನೂನು ರೂಪಿಸುತ್ತೇವೆ ಎಂದು ಭರವಸೆ ನೀಡಿದರು. +ಇದಕ್ಕೂ ಮೊದಲು ಚರ್ಚೆಯಲ್ಲಿ ಭಾಗವಹಿಸಿದ್ದ ಆರ್.ಅಶೋಕ್, ಚಾಲ್ತಿಯಲ್ಲಿರುವ ಕಾನೂನನ್ನು ಭ್ರೂಣ ಹತ್ಯೆ ಮಾಡಿದ ಕುಟುಂಬದವರನ್ನು ಮಾತ್ರ ಹೊಣೆ ಮಾಡಲು ಬಳಕೆಯಾಗುತ್ತದೆ. ಆಸ್ಪತ್ರೆಗಳು ಹಾಗೂ ಇತರ ಸಂಸ್ಥೆಗಳನ್ನು ಜವಾಬ್ದಾರಿ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಕಾನೂನು ತಿದ್ದುಪಡಿ ತನ್ನಿ ಎಂದರು. +ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ವಿಡಿಯೋ ಮಾಡಿದ ಪತಿರಾಯ +ರಾಜಾ್ಯದ್ಯಂತ ಭ್ರೂಣ ಹತ್ಯೆ ನಡೆಯುತ್ತಿದ್ದರೂ ಆರೋಗ್ಯ ಇಲಾಖೆ ಯಾವುದೇ ಕ್ರಮಕೈಗೊಳ್ಳದೇ ಸುಮ್ಮನೆ ಇದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್ಐಟಿ ತಂಡ ರಚಿಸಬೇಕು. ಕಳೆದ 27 ವರ್ಷದಲ್ಲಿ ಆರೋಗ್ಯ ಇಲಾಖೆ ಕೇವಲ 87 ಭ್ರೂಣಹತ್ಯೆ ಪ್ರಕರಣವನ್ನು ವರದಿ ಮಾಡಿದೆ. ಮಂಡ್ಯ, ಮೈಸೂರು, ರಾಮನಗರ ಬೆಂಗಳೂರು ಸೇರಿದಂತೆ ರಾಜಾ್ಯದ್ಯಂತ ಭ್ರೂಣಹತ್ಯೆ ಪ್ರಕರಣಗಳು ವ್ಯಾಪಿಸಿದೆ. ಇಂತಹ ದುಷ್ಕೃತ್ಯದಲ್ಲಿ ತೊಡಗಿರುವ ವರಿಗೆ ಮರಣದಂಡನೆ ಯಂತಹ ಕಠಿಣ ಶಿಕ್ಷೆಯನ್ನು ವಿಸಬೇಕು ಎಂದು ಒತ್ತಾಯಿಸಿದರು. +ಕೆಲ ವರದಿಗಳನ್ನು ನೋಡುತ್ತಿದ್ದರೆ ಒಬ್ಬೊಬ್ಬ 200, 300, 400 ಭ್ರೂಣ ಹತ್ಯೆ ಮಾಡಿದ್ದಾರೆ. ಇದು ಮಾನವಕುಲಕ್ಕೆ ಕಳಂಕ ತರುವ ವಿಷಯ. ಈ ಹತ್ಯೆಗೆ ಮೂಢನಂಬಿಕೆಗಳು ಕಾರಣ, ನಾನು ಅವನ್ನು ನಂಬುವುದಿಲ್ಲ, ನಮ್ಮಲಿ ಯಾರಾದರೂ ಸತ್ತರೆ ಅವರಿಗೆ ಕೊನೆ ಕಾರ್ಯಗಳನ್ನು ಮಾಡಲು ಗಂಡು ಮಗು ಬೇಕು ಎನ್ನುತ್ತಾರೆ. ಮತ್ತು ವರದಕ್ಷಿಣೆ ಕಾರಣದಿಂದಲೂ ಹೆಣ್ಣು ಭ್ರೂಣ ಹತ್ಯೆಗಳು ನಡೆಯುತಿದ್ದೆ. ಗರ್ಭಿಣಿ ಹೆಣ್ಣಿನ ಮೇಲೆ ಗಂಡ ಸೇರಿದಂತೆ ಕುಟುಂಬದವರು ಒತ್ತಡ ಹೇರಿದಾಗ ಈ ರೀತಿಯ ಕೃತ್ಯಗಳು ನಡೆಯುತ್ತವೆ ಎಂದರು. +ಇವತ್ತಿನ ಜಗತ್ತಿನಲ್ಲಿ ಹೆಣ್ಣು ಅಂತರಿಕ್ಷಕ್ಕೆ ಹಾರಿದ್ದಾರೆ, ಭಾರತ ಪಾಕ್ ಗಡಿಯಲ್ಲಿ ಎ ಕೆ 47 ಬಂದೂಕು ಹಿಡಿದು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ, ಮಹಿಳೆಯರು ಪಾಕಿಸ್ತಾನದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿದೆ ಎಂದರೆ ಅದು ಮನುಕುಲ ತಲೆ ತಗ್ಗಿಸುವ ವಿಚಾರ ಎಂದರು. ಇದು ಕೇವಲ 4-5 ತಂಡದಲ್ಲಿ ಮಂಡ್ಯ, ಮೈಸೂರು, ಬೆಂಗಳೂರಿಗೆ ಸೀಮಿತವಾಗಿಲ್ಲ ರಾಜ್ಯ ಬೇರೆ ಬೇರೆ ಕಡೆ ಸುಮಾರು 20 ರಿಂದ 30 ತಂಡ ಇರಬಹುದು ಸರ್ಕಾರ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು. +ಆರೋಪಿಗಳು 200-300 ಕೋಟಿಯಷ್ಟು ಆಸ್ತಿ ಮಾಡಿದ್ದಾರೆ. ವೈದ್ಯರು ಸೇರಿಕೊಂಡಿದ್ದಾರೆ. ಇದಕ್ಕಾಗಿಯೇ ಆಸ್ಪತ್ರೆಗಳನ್ನು ನಿರ್ಮಿಸಿದರೆ ಆ ಆಸ್ಪತ್ರೆಯ ಹೆಸರನ್ನು ನಮ್ಮ ಮನೆ ಎಂದು ಇಟ್ಟಿದ್ದಾರೆ. ನಾನು ಸಚಿವನಾಗಿ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ಮಾಡಿದಾಗ ಮಂತ್ರಿಗಳು, ಶಾಸಕರು, ಸಂಸದರು ಸೇರಿದಂತೆ ಅನೇಕ ಪ್ರಭಾವಿಗಳು ನನ್ನ ಮೇಲೆ ಒತ್ತಡವೇರಿ ಅವರನ್ನು ಬಿಡಿ ಎನ್ನುತ್ತಿದ್ದರು. ಸುಮಾರು 4 ಸಾವಿರದಿಂದ 5 ಸಾವಿರ ನಕಲಿ ವೈದ್ಯರು ಇದ್ದಾರೆ. ನನ್ನ ಜೊತೆ ಪೊಲೀಸರನ್ನು ಕರೆದುಕೊಂಡು ಹೋಗಿ ಅವರನ್ನು ಬಂದಿಸಿದ್ದೆ ಎಂದರು. ಇಂತಹ ಪ್ರಕರಣಗಳಿಗೆ ಪ್ರಭಾವಿಗಳ ಒತ್ತಡ ಬರುತ್ತೆ, ಕೆಲ ಪ್ರಕರಣಗಲ್ಲಿ ಆಸ್ಪತ್ರೆಯಾಗಲಿ, ವೈದ್ಯರಿಗೆ ಶಿಕ್ಷೆ ಯಾಗಲ್ಲ ಬೇರೆ ಯಾರ ಮೇಲೆ ಪ್ರಕರಣ ದಾಖಲಾಗಿರುತ್ತದೆ ಎಂದರು. \ No newline at end of file diff --git a/eesanje/url_46_288_6.txt b/eesanje/url_46_288_6.txt new file mode 100644 index 0000000000000000000000000000000000000000..d97f1bdc609ec2a18ea1e63e22d9911676001f66 --- /dev/null +++ b/eesanje/url_46_288_6.txt @@ -0,0 +1,7 @@ +ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ : ಡಿಕೆಶಿ +ಬೆಳಗಾವಿ,ಡಿ.14- ಮಂಡ್ಯ, ಮೈಸೂರು, ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ನಗರಗಳಿಗೆ ಕುಡಿಯುವ ನೀರು ಪೂರೈಸುವ ಮತ್ತು ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ನಮ್ಮ ಸರ್ಕಾರ ಬದ್ಧವಿದೆ. ಇದಕ್ಕೆ ಕೇಂದ್ರ ಸರ್ಕಾರ ನಮ್ಮ ಜತೆ ಕೈ ಜೋಡಿಸಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ಮನವಿ ಮಾಡಿದ್ದಾರೆ. +ಬಿಜೆಪಿ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ನೀರು, ನಮ್ಮ ಹಕ್ಕು. ನಿಮ್ಮ ನೀರು, ನಿಮ್ಮ ಹಕ್ಕು ಎಂಬ ತತ್ವದ ಮೇಲೆ ಹೋರಾಟ ಮಾಡೋಣ. ಯೋಜನೆ ಅನುಷ್ಠಾನವಾಗುವುದರಿಂದ ತಮಿಳುನಾಡಿಗೆ ನಮಗಿಂತಲೂ ಹೆಚ್ಚಿನ ಅನುಕೂಲವಾಗಲಿದೆ. ನಮಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆಗೆ ಅವಕಾಶ ಸಿಕ್ಕರೆ, ಅವರಿಗೆ ಇನ್ನೂ ಹೆಚ್ಚಿನ ಕುಡಿಯುವ ನೀರಿನ ಅನುಕೂಲವಾಗಲಿದೆ ಎಂದು ತಿಳಿಸಿದರು. +ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಜನೆಯನ್ನು ನಮ್ಮ ನೆಲದಲ್ಲೇ ಆರಂಭಿಸಿದರೂ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಬೇಕು. ಈ ಇಲಾಖೆಗಳ ಒಪ್ಪಿಗೆ ಇಲ್ಲದೆ, ಯೋಜನೆ ಪ್ರಾರಂಭಿಸಲಾಗುವುದು. ಈ ಯೋಜನೆಯಿಂದ ಶಾಶ್ವತ ಪರಿಹಾರ ದೊರೆಯಲಿದೆ. ಇದರಿಂದಾಗಿ ಸಂಕಷ್ಟ ಪರಿಸ್ಥಿತಿಯೂ ನಿವಾರಣೆಯಾಗಲಿದೆ ಎಂದು ಅವರು ಹೇಳಿದರು. +ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ +ರಾಜ್ಯದಲ್ಲಿ ಈ ಬಾರಿ ಬರಗಾಲ ಆವರಿಸಿದ್ದರೂ ರೈತರಿಗೆ ತೊಂದರೆಯಾಗದಂತೆ ಅವರ ಬೆಳೆಗಳನ್ನು ರಕ್ಷಣೆ ಮಾಡಿದ್ದೇವೆ. ಒಂದು ಕಡೆ ಸಿಡಬ್ಲ್ಯು ಆರ್ಸಿ ಮತ್ತು ಸಿಡಬ್ಲ್ಯು ಎಂಎ ನಿರ್ದೇಶನಗಳನ್ನು ಪಾಲನೆ ಮಾಡಿದ್ದೇವೆ. ಕೆಲವು ಸಂದರ್ಭಗಳಲ್ಲಿ ಅರ್ಕಾವತಿ ಮತ್ತು ಹಾರಂಗಿಯ ಹೆಚ್ಚುವರಿ ನೀರನ್ನು ಬಳಸಿಕೊಂಡು ಬಿಳಿಗುಂಡ್ಲುವಿಗೆ ಎಷ್ಟು ನೀರು ಬಿಡಬೇಕಿತ್ತೋ ಅಷ್ಟು ನೀರನ್ನು ಬಿಟ್ಟಿದ್ದೇವೆ. ಪ್ರತಿ ವರ್ಷ ತಮಿಳುನಾಡಿಗೆ 177 ಟಿಎಂಸಿ ಅಡಿ ನೀರು ಹರಿಸಬೇಕು. ಎಲ್ಲಿಯೂ ಕೂಡ ರೈತರ ಹಿತವನ್ನು ಕಡೆಗಣಿಸಿಲ್ಲ. +ಕುಡಿಯುವ ನೀರು, ರೈತರ ಬೆಳೆಗಳ ರಕ್ಷಣೆ ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ನಮ್ಮ ಆದ್ಯತೆಯಾಗಿತ್ತು. ಬರಗಾಲದ ಸಂದರ್ಭದಲ್ಲೂ ಪರಿಸ್ಥಿತಿಯನ್ನು ನಿಭಾಯಿಸಿದ್ದೇವೆ ಎಂದು ಸಮರ್ಥಿಸಿಕೊಂಡರು. ಮೇಕೆದಾಟು ಯೋಜನೆ ಸಂಬಂಧ ಕೆಳಹಂತದಲ್ಲೇ ಪರಿಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಪ್ರಧಾನಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಬಳಿಗೆ ನಮ್ಮ ರಾಜ್ಯದ ಎಲ್ಲಾ ಪಕ್ಷಗಳ ಸಂಸದರನ್ನೊಳಗೊಂಡ ನಿಯೋಗವನ್ನುಕರೆದೊಯ್ಯಲು ಸಿದ್ಧವಿದೆ. ಇದಕ್ಕೆ ನೀವು(ಬಿಜೆಪಿ) ಸಹಕಾರ ಕೊಡಿ ಎಂದು ಶಿವಕುಮಾರ್ ಅವರು ಮನವಿ ಮಾಡಿದರು. \ No newline at end of file diff --git a/eesanje/url_46_288_7.txt b/eesanje/url_46_288_7.txt new file mode 100644 index 0000000000000000000000000000000000000000..1f5c8e80babca4a51ec0c6c622585cac59de079d --- /dev/null +++ b/eesanje/url_46_288_7.txt @@ -0,0 +1,8 @@ +ಬಿಡಿಎ ಆಸ್ತಿ ರಕ್ಷಣೆಗೆ ಪ್ರತ್ಯೇಕ ಕೋಶ ರಚನೆ : ಡಿಸಿಎಂ ಡಿಕೆಶಿ +ಬೆಳಗಾವಿ,ಡಿ.14- ಬೆಂಗಳೂರು ಅಭಿವೃದ್ಧಿ ಪ್ರಾಕಾರ(ಬಿಡಿಎ)ದಲ್ಲಿರುವ ಆಸ್ತಿಗಳ ರಕ್ಷಣೆಗಾಗಿ ಪ್ರತ್ಯೇಕ ಕೋಶವನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. +ಪರಿಷತ್ನಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಡಿಎ ವ್ಯಾಪ್ತಿಯಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ಸ್ವತ್ತುಗಳಿವೆ. ಇವುಗಳನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಸವಾಲೇ ಸರಿ. ಹೀಗಾಗಿ ಪ್ರತ್ಯೇಕ ಕೋಶ ತೆರೆಯುವ ಚಿಂತನೆ ಇದೆ ಎಂದರು. +ಬಿಡಿಎ ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ತಮಗೆ ನ್ಯಾಯಾಲಯದಲ್ಲಿ ಸಾಕಷ್ಟು ಹಿನ್ನಡೆಯಾಗುತ್ತಿತ್ತು. ನಮ್ಮ ವಕೀಲರು ಸಮರ್ಥವಾಗಿ ವಾದ ಮಾಡಿದರೂ ತೀರ್ಪುಗಳು ಮಾತ್ರ ಖಾಸಗಿಯವರ ಪರವಾಗಿಯೇ ಬರುತ್ತಿದ್ದವು. ಹೀಗಾಗಿ ಇತ್ತೀಚೆಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್ ಅವರು ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಸಭೆ ನಡೆಸಿದ್ದರು. +ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ +ಈ ಸಭೆಗೆ ಬಿಡಿಎ ಹಾಗು ಬಿಬಿಎಂಪಿ ಪ್ರತಿನಿಸುವ ವಕೀಲರುಗಳನ್ನು ಕರೆಸಲಾಗಿತ್ತು. ಇನ್ನು ಮುಂದೆ ನ್ಯಾಯಾಲಯಗಳಲ್ಲಿ ನಮಗೆ ಹಿನ್ನಡೆಯಾಗದಂತೆ ಸಮರ್ಪಕವಾದ ಮಂಡಿಸಿ ಕಾನೂನು ಹೋರಾಟ ಮಾಡಬೇಕೆಂದು ಸೂಚನೆ ಕೊಡಲಾಗಿದೆ. ಏಕಾಏಕಿ ವಕೀಲರನ್ನು ಬದಲಾವಣೆ ಮಾಡಿದರೆ ಹೊಸ ವಕೀಲರಿಗೆ ಹಿಂದಿನ ಮಾಹಿತಿ ಇರುವುದಿಲ್ಲ. ಒಟ್ಟಿನಲ್ಲಿ ಬಿಡಿಎ ಸ್ವತ್ತುಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ಸಮರ್ಥವಾಗಿದೆ ಎಂದರು. +ಇದಕ್ಕೂ ಮುನ್ನ ಮರಿತಿಬ್ಬೇಗೌಡ ಅವರು ವಿಷಯ ಪ್ರಸ್ತಾಪಿಸಿ ಬಿಡಿಎ ಪ್ರಕರಣದಲ್ಲಿ ನಮಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆಯಾಗಿದೆ. ಕೇವಲ 3 ತಿಂಗಳಲ್ಲೇ ಒಬ್ಬರೇ ನ್ಯಾಯಾೀಶರು, ಅದೇ ವಕೀಲರು ವಾದ ಮಾಡಿದರೂ ತೀರ್ಪು ಮಾತ್ರ ಖಾಸಗಿಯವರ ಪರ ಬಂದಿದೆ. ಈ ಭೂಮಾಫಿಯಾವನ್ನು ಬಗ್ಗು ಬಡಿಯದಿದ್ದರೆ ಬಿಡಿಎ ಉಳಿಯುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. +ಇದಕ್ಕೆ ಸಹಮತ ವ್ಯಕ್ತಪಡಿಸಿದ ಡಿ.ಕೆ.ಶಿವಕುಮಾರ್, ಇನ್ನು ಮುಂದೆ ಈ ರೀತಿಯಾಗದಂತೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು. \ No newline at end of file diff --git a/eesanje/url_46_288_8.txt b/eesanje/url_46_288_8.txt new file mode 100644 index 0000000000000000000000000000000000000000..54deedd301d014c294b1dd1878d09d32e4ca80f1 --- /dev/null +++ b/eesanje/url_46_288_8.txt @@ -0,0 +1,6 @@ +ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ +ಬೆಂಗಳೂರು, ಡಿ.14- ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ಡಿ.18ರೊಳಗೆ ಕೈಗೊಂಡಿರುವ ಕ್ರಮದ ವರದಿಯನ್ನು ಸಲ್ಲಿಸುವಂತೆ ಸೂಚಿಸಿ ಬೆಳಗಾವಿ ಪೊಲೀಸ್ ಆಯುಕ್ತರು, ಹಾಗೂ ಎಸಿಪಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಖಡಕ್ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. +ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಂಡಿದ್ದಾರೆ. ಇವರು ಮನುಷ್ಯರೆಂದು ಕರೆಸಿಕೊಳ್ಳಲು ಯೋಗ್ಯರಲ್ಲ. ಎರಡು ಗಂಟೆ ಕಾಲ ಮಹಿಳೆಯನ್ನು ಹಿಂಸಿಸಲಾಗಿದೆ. ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಸಂತ್ರಸ್ತೆ ಎದುರಿಸಿರಬಹುದಾದ ನೋವನ್ನು ಊಹಿಸಲೂ ಸಾಧ್ಯವಿಲ್ಲ. ಬಡವರ ಮೇಲೆಯೇ ಇಂತಹ ದೌರ್ಜನ್ಯಗಳು ನಡೆಯುವುದೇಕೆ ಎಂದು ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ. +ಮೇ ತಿಂಗಳಿನಲ್ಲಿ ಮೈಸೂರಿಗೆ ಬಂದಿದ್ದ ಸಾಗರ್ ಶರ್ಮಾ +ಸಂತ್ರಸ್ತೆಗೆ ಅತ್ಯುತ್ತಮ ಚಿಕಿತ್ಸೆ ಹಾಗೂ ಕೌನ್ಸಿಲಿಂಗ್ ಒದಗಿಸುವ ಅಗತ್ಯವಿದೆ. ಯಾವ ಆಸ್ಪತ್ರೆಯಲ್ಲಿ ಯಾವ ವೈದ್ಯರು ಚಿಕಿತ್ಸೆ ನೀಡಿದ್ದಾರೆ, ಪೊಲೀಸರು ಕೈಗೊಂಡ ಕ್ರಮವೇನು, ಈ ಕುರಿತು ವರದಿ ನೀಡಲು ಸೂಚನೆ ನೀಡಿತು.ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿದೆ, ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಃ ಎಂಬ ಮಂತ್ರವಿದ್ದರೂ ಪ್ರಯೋಜನವೇನು ಬಂತು, ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ರಕ್ಷಿಸಲು ಕೃಷ್ಣನಿದ್ದ. ಇದು ದುಶ್ಯಾಸನರ ಕಾಲ. +ಸಂತ್ರಸ್ತೆಯ ಸಹಾಯಕ್ಕೆ ಯಾರೂ ಬರಲಿಲ್ಲ. ನಮ್ಮಲ್ಲಿ ಕಾನೂನು ಭಯವಿಲ್ಲವೆಂಬ ಸಂದೇಶ ಹೋಗುತ್ತಿದೆ. ಸ್ವತಂತ್ರ ಬಂದು 75 ವರ್ಷದ ನಂತರವೂ ಇಂತಹ ಘಟನೆ ನಡೆದಿದೆ. ಇಂತಹ ಸಮಾಜದಲ್ಲಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂಬ ಸ್ಥಿತಿ ಬರಬಾರದು. ಇದು ನಾವೆಲ್ಲ ನಾಚಿಕೆ ಪಡಬೇಕಾದ ವಿಷಯ ಎಂದು ಹೇಳಿದ ನ್ಯಾಯಪೀಠ, ಕೈಗೊಂಡಿರುವ ಕ್ರಮಗಳ ಬಗ್ಗೆ ಡಿ.18ರೊಳಗೆ ವರದಿ ಸಲ್ಲಿಸಬೇಕು. ಬೆಳಗಾವಿ ಪೊಲೀಸ್ ಆಯುಕ್ತರು ಮುಂದಿನ ವಿಚಾರಣೆಗೆ ಹಾಜರಾಗುವುದರ ಜತೆಗೆ ಎಸಿಪಿಯೂ ಕೂಡ ಹಾಜರಾಗಬೇಕು ಎಂದು ಹೇಳಿದೆ. \ No newline at end of file diff --git a/eesanje/url_46_288_9.txt b/eesanje/url_46_288_9.txt new file mode 100644 index 0000000000000000000000000000000000000000..0d086a8c368f19a1851c79c8cceab20d31a20e5c --- /dev/null +++ b/eesanje/url_46_288_9.txt @@ -0,0 +1,4 @@ +ಮೇ ತಿಂಗಳಿನಲ್ಲಿ ಮೈಸೂರಿಗೆ ಬಂದಿದ್ದ ಸಾಗರ್ ಶರ್ಮಾ +ಮೈಸೂರು, ಡಿ.14- ಸಂಸತ್ ಒಳಗೆ ಕೋಲಾಹಲ ಪ್ರಕರಣ ಆರೋಪಿ ಮೈಸೂರಿಗೆ ಆಗಮಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಪ್ರಮುಖ ಆರೋಪಿ ಸಾಗರ್ ಶರ್ಮಾ ಕಳೆದ ಮೇ ತಿಂಗಳಿನಲ್ಲಿ ಮೈಸೂರಿಗೆ ಆಗಮಿಸಿದ್ದ. ಕುತೂಹಲಕ್ಕೆ ಕಾರಣವಾದ ಉತ್ತರಪ್ರದೇಶ ಮೂಲದ ಸಾಗರ್ ಶರ್ಮಾ ಮೈಸೂರು ಭೇಟಿ ವೇಳೆ ಮತ್ತೊಬ್ಬ ಆರೋಪಿ ಮನೋರಂಜನ್‍ನ ಭೇಟಿಗೆ ಆಗಮಿಸಿದ್ದನಾ ಅಥವಾ ಬೇರೆ ಕಾರಣಕ್ಕೆ ಆಗಮಿಸಿದ್ದನಾ ಎಂಬ ಬಗ್ಗೆ ಪೊಲೀಸರು ಈಗ ಪರಿಶೀಲನೆ ನಡೆಸುತ್ತಿದ್ದಾರೆ. +ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ +ಸಾಗರ್ ಶರ್ಮಾ ಮೈಸೂರು ಭೇಟಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು, ಅವನು ಮೈಸೂರಿಗೆ ಬಂದಾಗ ಯಾರ್ಯಾರನ್ನು ಭೇಟಿ ಮಾಡಿದ್ದ ಮೈಸೂರಿನ ಇನ್ಯಾವ ಸ್ಥಳಗಳಿಗೆ ಈತ ತೆರಳಿದ್ದ ಎಂಬ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_289_1.txt b/eesanje/url_46_289_1.txt new file mode 100644 index 0000000000000000000000000000000000000000..f6fef76948ab591d983a563bbc8d9b201890e79e --- /dev/null +++ b/eesanje/url_46_289_1.txt @@ -0,0 +1,7 @@ +ಅನುದಾನಿತ ಸಂಸ್ಥೆಗಳ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಣೆ : ಸಿಎಂ +ಬೆಳಗಾವಿ,ಡಿ.14- ರಾಜ್ಯ ಸರ್ಕಾರಿ ನೌಕರರಿಗೆ ಇರುವ ಸೌಲಭ್ಯಗಳಲ್ಲಿ ಒಂದಾದ ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಸಂಸ್ಥೆಗಳ ನೌಕರರಿಗೂ ವಿಸ್ತರಣೆ ಮಾಡುವ ಸಂಬಂಧ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. +ಪ್ರಶ್ನೋತ್ತರ ವೇಳೆಯಲ್ಲಿಂದು ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ,ಜ್ಯೋತಿ ಸಂಜೀವಿನಿ ಯೋಜನೆ ಅನುದಾನಿತ ಸಂಸ್ಥೆಗಳ ನೌಕರರಿಗೆ ಇಲ್ಲ. ಆದರೂ, ಆರ್ಥಿಕ ಸಂಪನ್ಮೂಲಕ್ಕೆ ಅನುಗುಣವಾಗಿ ಲೆಕ್ಕಾಚಾರ ಹಾಕಿ ಅವರನ್ನೂ ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗುವುದು ಎಂದು ಹೇಳಿದರು. +ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರುಗಳಿಗೆ ರ್ನಿಷ್ಟವಾಗಿ ಗುರುತಿಸಲಾಗಿರುವ ಏಳು ಮಾರಣಾಂತಿಕ ರೋಗಗಳಾದ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ, ಯೂರಿನರಿ ಚಿಕಿತ್ಸೆಗಳು, ನವಜಾತ ಶಿಶು ಹಾಗೂ ಚಿಕ್ಕಮಕ್ಕಳ ಖಾಯಿಲೆ, ಸುಟ್ಟಗಾಯ ಮತ್ತು ಅಪಘಾತಗಳಿಗೆ ಸಂಬಂಸಿದಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ವತಿಯಿಂದ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನಗದು ರಹಿತವಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಸಂಜೀವಿನಿ ಯೋಜನೆಯನ್ನು 2015ರಿಂದ ಜಾರಿಗೊಳಿಸಿತ್ತು ಎಂದು ತಿಳಿಸಿದರು. +ಈ ಯೋಜನೆಯನ್ನು ಸರ್ಕಾರಿ ನೌಕರರಿಗೆ ಮಾತ್ರ ರೂಪಿಸಲಾಗಿದೆ. ಯಾವುದೇ ಅನುದಾನಿತ ನೌಕರರು ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಆದರೆ, ಈ ಸಂಬಂಧ ಪರಿಶೀಲನೆ ನಡೆಸಿ ಬದಲಾವಣೆ ಮಾಡಲಾಗುವುದು ಎಂದು ಅವರುಹೇಳಿದರು.ಅನುದಾನಿತ ಪ್ರಾಥಮಿಕ ಶಾಲೆಗಳು 2686ರಷ್ಟಿದ್ದು, ಅಲ್ಲಿ 11677 ಸಿಬ್ಬಂದಿಗಳಿದ್ದಾರೆ. ಪ್ರೌಢ ಶಾಲೆಗಳು 3756 ಇದ್ದು, 24383 ಸಿಬ್ಬಂದಿಗಳಿದ್ದಾರೆ.ಅದೇ ರೀತಿ ಪದವಿ ಪೂರ್ವ ಕಾಲೇಜುಗಳ ಸಂಖ್ಯೆಯೂ 831 ಇದ್ದು, 5848 ರಷ್ಟು ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸದನಕ್ಕೆ ತಿಳಿಸಿದರು. +ಮಾರುತಿ 800 ಕಾರಿಗೆ 40 ವರ್ಷ : ಇಂದಿರಾ, ರಾಜೀವ್ ಕೊಡುಗೆ ಸ್ಮರಿಸಿಕೊಂಡ ಜೈರಾಮ್ ರಮೇಶ್ +ನಿಮ್ಮ ಸರ್ಕಾರವಿದ್ದಾಗ ಏನು ಮಾಡುತ್ತಿದ್ದೀರಿ? ಈ ಹಿಂದೆ ನಿಮ್ಮದೇ ಸರ್ಕಾರವಿತ್ತು. ಇದರ ಬಗ್ಗೆ ಏಕೆ ಪ್ರಸ್ತಾಪ ಮಾಡಿ ಜಾರಿ ಮಾಡಿಸಲಿಲ್ಲ ಎಂದು ್ರ ಸಿದ್ದರಾಮಯ್ಯ ಅವರು ಪ್ರತಿಪಕ್ಷ ಬಿಜೆಪಿ ಸದಸ್ಯರಿಗೆ ಖಾರವಾಗಿ ಪ್ರಶ್ನಿಸಿದರು. ಬಿಜೆಪಿ ಸದಸ್ಯರು ಎದ್ದು ನಿಂತು, ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ರಹಿತ, ಅನುದಾನಿತ ನೌಕರರಿಗೂ ವಿಸ್ತರಣೆ ಮಾಡಿ ಎಂದು ಕೋರಿದಾಗ, ಈ ಹಿಂದೆ ಹಿಂದೆ ಸರ್ಕಾರವಿತ್ತು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_289_10.txt b/eesanje/url_46_289_10.txt new file mode 100644 index 0000000000000000000000000000000000000000..bcfac7dc03a1fc4c337e84a915b01629f9682add --- /dev/null +++ b/eesanje/url_46_289_10.txt @@ -0,0 +1,6 @@ +34,115 ಕೋಟಿ ಹೂಡಿಕೆಗೆ ಅನುಮೋದನೆ, 13,308 ಉದ್ಯೋಗ ಸೃಷ್ಟಿ ನಿರೀಕ್ಷೆ +ಬೆಳಗಾವಿ,ಡಿ.13- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ, ಒಟ್ಟು 34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. +ಹೆಚ್ಚುವರಿ 13,911 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‍ಕಾನ್ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ.ಫಾಕ್ಸ್‍ಕಾನ್, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‍ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‍ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್‍ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ), ಟಿಆರ್‍ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ಎಸ್‍ಎಚ್‍ಎಲ್ಸಿಸಿ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ. +ಕೆಇಎ : 40 ಸಾವಿರ ಸೀಟುಗಳ ಭರ್ತಿಗೆ ಫೆ.18ಕ್ಕೆ ಪರೀಕ್ಷೆ , ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ +ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು 9,461 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ಬೆಂಗಳೂರಿನ ಆಚೆ ಉಪಕ್ರಮದ ಭಾಗವಾಗಿವೆ. +ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲï, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_289_11.txt b/eesanje/url_46_289_11.txt new file mode 100644 index 0000000000000000000000000000000000000000..6bc8a53762a527d69fd2acb1de4cb8ef6f6bc549 --- /dev/null +++ b/eesanje/url_46_289_11.txt @@ -0,0 +1,7 @@ +ಕೆಇಎ : 40 ಸಾವಿರ ಸೀಟುಗಳ ಭರ್ತಿಗೆ ಫೆ.18ಕ್ಕೆ ಪರೀಕ್ಷೆ , ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ +ಬೆಂಗಳೂರು,ಡಿ.13- ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ನಾನಾ ಬಗೆಯ ವಸತಿ ಶಾಲೆಗಳು 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ 6ನೇ ತರಗತಿಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ.ಡಿಸೆಂಬರ್ 31ನೇ ತಾರೀಖು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, 2024ರ ಫೆಬ್ರವರಿ 18ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಕಾರವು ತಿಳಿಸಿದೆ. +ಆನ್ ಲೈನ್ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ತಾವು ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಈ ಅವಕಾಶದ ಅಡಿಯಲ್ಲಿ, ಆಯಾ ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳನ್ನೂ ನಮೂದಿಸಬೇಕು. 100 ಅಂಕಗಳಿಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸಲಿರುವ ಮೆರಿಟ್, ಮೀಸಲಾತಿ ಮತ್ತು ಅಭ್ಯರ್ಥಿಗಳು ಪ್ರವೇಶ ಕೋರಿ ನಮೂದಿಸುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-12-2023) +ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ತ್ವ ಮತ್ತು ಶ್ರೀ ನಾರಾಯಣ ಗುರು ವಸತಿ ಶಾಲೆಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. +ವಿಶೇಷ ವರ್ಗಗಳ ಮಕ್ಕಳಿಗೆ 10 ಸಾವಿರ ಸೀಟು ಲಭ್ಯ:ಮೇಲ್ಕಂಡ ವಸತಿ ಶಾಲೆಗಳಲ್ಲಿ ಒಟ್ಟು 40 ಸಾವಿರ ಸೀಟುಗಳು ಇದ್ದು, ಇದರಲ್ಲಿ 10 ಸಾವಿರ ಸೀಟುಗಳು ಆಶ್ರಮ ಶಾಲೆಯ ಮಕ್ಕಳು, ಅಲೆಮಾರಿ ಮತ್ತು ಅರೆ ಅಲೆಮಾರಿ, ವಿಕಲಚೇತನ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಸಫಾಯಿ ಕರ್ಮಚಾರಿ ಮತ್ತು ಪೌರ ಕಾರ್ಮಿಕರ ಮಕ್ಕಳು, ಸ್ಮಶಾನ ಸಿಬ್ಬಂದಿಯ ಮಕ್ಕಳು ಮತ್ತು ವಿಶೇಷ ದುರ್ಬಲ ವರ್ಗಗಳ ಮಕ್ಕಳಿಗೆ ಲಭ್ಯವಿರುತ್ತವೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ತಿಳಿಸಿದೆ. +ಈ ಪೈಕಿ ವಿಶೇಷ ದುರ್ಬಲ ವರ್ಗಗಳ ಅಡಿಯಲ್ಲಿ ದೇವದಾಸಿಯರು ಮತ್ತು ಎಚ್‍ಐವಿ ಪೀಡಿತರ ಮಕ್ಕಳು, ಅನಾಥ ಮಕ್ಕಳು, ಏಕ ಪೋಷಕರು, ವಿಧವೆಯರು, ಬಾಲ ಕಾರ್ಮಿಕರು, ಯೋಜನಾ ನಿರಾಶ್ರಿತರು, ಚಿಂದಿ ಆಯುವವರು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಕೋವಿಡ್ ಸೋಂಕಿನಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ಮಕ್ಕಳು ಬರುತ್ತಾರೆ ಎಂದು ಸಂಘವು ಮಾಹಿತಿ ನೀಡಿದೆ. \ No newline at end of file diff --git a/eesanje/url_46_289_12.txt b/eesanje/url_46_289_12.txt new file mode 100644 index 0000000000000000000000000000000000000000..8110070896b1c4e3f18ea91c8ecf719dee70eec3 --- /dev/null +++ b/eesanje/url_46_289_12.txt @@ -0,0 +1,7 @@ +ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು : ಡಿಕೆಶಿ +ಬೆಳಗಾವಿ, ಡಿ.12-ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಗಣತಿಯ ಸಮೀಕ್ಷೆಯು ವೈಜ್ಞಾನಿಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದರು. ನಿನ್ನೆ ರಾಜ್ಯಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದಲ್ಲಿ ಜಾತಿ ಗಣತಿ ಜಾರಿ ವಿಚಾರವಾಗಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಿರುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ಮೇಲಿನಂತೆ ಉತ್ತರಿಸಿದರು. +ಜಾತಿ ಗಣತಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ನಮ್ಮ ಅನೇಕ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ, ಮನೆಗೆ ತೆರಳಿ ಸಮೀಕ್ಷೆ ನಡೆಸಿಲ್ಲ ಎಂದು ದೂರುಗಳು ಬಂದಿವೆ. ಎಲ್ಲಾ ಸಮುದಾಯಗಳು ಅವರ ಜನಸಂಖ್ಯೆಗೆ ಅನುಗುಣವಾಗಿ ತಮ್ಮ ಹಕ್ಕನ್ನು ಪಡೆಯಬೇಕು ಎಂದರು. +ಇನ್ಷ್ಯೂರೆನ್ಸ್ ಕಂಪೆನಿ ಹೆಸರಲ್ಲಿ ಯಾಮಾರಿಸ್ತಾರೆ ಹುಷಾರ್..! +ಅಲ್ಪಸಂಖ್ಯಾತರು, ಪರಿಶಿಷ್ಟರು ಸೇರಿದಂತೆ ಎಲ್ಲರೂ ತಮ್ಮ ಜನಸಂಖ್ಯೆ ಅನುಗುಣವಾಗಿ ಹಕ್ಕು ಹಾಗೂ ಅನುದಾನ ಕೇಳುತ್ತಾರೆ. ಈ ಜಾತಿ ಗಣತಿಯನ್ನು ವೈಜ್ಞಾನಿಕವಾಗಿ ಮಾಡಲಾಗಿದೆಯೇ ಎಂಬ ವಿಚಾರವಾಗಿ ನಾವು ಸ್ಪಷ್ಟೀಕರಣ ಕೇಳಿದ್ದೇವೆ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ. ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ಕಾಂಗ್ರೆಸ್ ಪಕ್ಷದ ಬದ್ಧತೆಗೆ ನಾನು ಬೆಂಬಲವಾಗಿ ನಿಲ್ಲುತ್ತೇನೆ. ಕೇಂದ್ರ ಸರಕಾರದ ವರ್ಗಿಕರಣದ ಅನ್ವಯ ನಾನು ಕೂಡ ಇತರೆ ಹಿಂದುಳಿದ ವರ್ಗದ ಸಮುದಾಯದ ನಾಯಕ. ಪಕ್ಷದ ಅಧ್ಯಕ್ಷನಾಗಿ ನಾನು ಎಲ್ಲಾ ವರ್ಗದ ಜನರನ್ನು ಸಮಾನವಾಗಿ ನೋಡಬೇಕು ಎಂದು ಅವರು ತಿಳಿಸಿದರು. +ಜಾತಿ ಗಣತಿಯ ಕೆಲವು ದಾಖಲೆಗಳು ಕಾಣೆಯಾಗಿರುವ ಬಗ್ಗೆ ವರದಿಗಳಿವೆ ಎಂದು ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಜಯಪ್ರಕಾಶ್ ಹೆಗ್ಡೆ ಅವರೊಂದಿಗೆ ಮಾತನಾಡಿದ್ದು, ಈ ವರದಿಗೆ ಕಾರ್ಯದರ್ಶಿಗಳ ಸಹಿ ಇಲ್ಲವೆಂಬ ಮಾಹಿತಿ ಪಡೆದಿದ್ದೇನೆ. ಕಾರ್ಯದರ್ಶಿಗಳ ಸಹಿ ಇಲ್ಲದೇ ಅದು ಹೇಗೆ ಸಿಂಧುವಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ ಎಂದು ತಿಳಿಸಿದರು. +ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ:ಲೋಕಸಭೆ ಚುನಾವಣೆ ನಂತರ ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ನಿಮ್ಮನ್ನೇ ಗುರಿ ಮಾಡಿರುವಂತಿದೆ ಎಂದು ಕೇಳಿದಾಗ, ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ. ನನಗೆ ನನ್ನದೇ ಆದ ಮೂಲ ಆದರ್ಶಗಳಿವೆ. ನನಗೆ ಗಾಂ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಅಪಾರವಾದ ನಂಬಿಕೆ ಇದೆ ಎಂದು ತಿಳಿಸಿದರು. ಅವರು ಮಾತನಾಡಿದ್ದಕ್ಕೆಲ್ಲ ನಾನು ಬಾಧ್ಯಸ್ಥನಲ್ಲ. ಅವರು ಏನಾದರೂ ಹೇಳಿಕೊಂಡು ತಿರುಗಲಿ, ಆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. \ No newline at end of file diff --git a/eesanje/url_46_289_2.txt b/eesanje/url_46_289_2.txt new file mode 100644 index 0000000000000000000000000000000000000000..2a7b1b5a4b6588656bff3d574026beaba680dc7f --- /dev/null +++ b/eesanje/url_46_289_2.txt @@ -0,0 +1,8 @@ +ಬೆಂಗಳೂರನ್ನು ವರ್ಲ್ಡ್ ಕ್ಲಾಸ್ ವಾಸಯೋಗ್ಯ ನಗರ ಮಾಡ್ತೀವಿ : ಡಿಕೆಶಿ +ಬೆಳಗಾವಿ, ಡಿ.14- ಆರೋಗ್ಯ, ಸಂಚಾರ ಸೇರಿದಂತೆ ರಾಜಧಾನಿ ಬೆಂಗಳೂರನ್ನು ಜಾಗತಿಕ ಮಟ್ಟದ ವಾಸಯೋಗ್ಯ ನಗರವನ್ನಾಗಿ ರೂಪಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರನ್ನು ಉತ್ತಮ ದರ್ಜೆಯ ನಗರವನ್ನಾಗಿಸಲು ಪಣ ತೊಡಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು. ತ್ಯಾಜ್ಯವಿಲೇವಾರಿ, ಸಂಚಾರ ದಟ್ಟಣೆ, ಸರಗಳ್ಳತನ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಒಂದು ವ್ಯವಸ್ಥಿತ ಯೋಜನೆ ಮೂಲಕ ನಿವಾರಿಸಲಾಗುವುದು ಎಂದರು. +‘ಬ್ರಾಂಡ್ ಬೆಂಗಳೂರು’ ಪರಿಕಲ್ಪನೆ ಹಾಗೂ ಯೋಜನೆಗೆ ಸಂಬಅಸಿದಂತೆ 70,000ಕ್ಕೂ ಹೆಚ್ಚು ಅಭಿಪ್ರಾಯ, ಸಲಹೆಗಳು ನಾಗರಿಕರು ಮತ್ತು ವಿದೇಶಗಳಿಂದಲೂ ಬಂದಿವೆ. ಇದರಲ್ಲಿ ಆರೋಗ್ಯ, ಸಂಚಾರ, ತ್ಯಾಜ್ಯ- ಹೀಗೆ ಹಂಚಿಕೆ ಮಾಡಿ ಹಲವು ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಹೇಳಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2023) +ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಒಟ್ಟು 25 ಜಂಕ್ಷನ್‍ಗಳನ್ನು ಅಭಿವೃದ್ಧಿಪಡಿಸುವ 27.90 ಕೋಟಿ ರೂ.ಗಳ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ಸುಗಮ ಸಂಚಾರಕ್ಕೆ ಮೂಲಸೌಕರ್ಯಗಳನ್ನು ಒದಗಿಸಲು ‘ಸಮಗ್ರ ಸಂಚಾರ ಯೋಜನೆ’ಗಾಗಿ ಕಾರ್ಯಸಾಧ್ಯತೆ ಯೋಜನೆ ವರದಿ ತಯಾರಿಸಲು ಅಲ್ವಿನಾಕ್ ಸಂಸ್ಥೆಗೆ ವಹಿಸಲಾಗಿದೆ. +ಈ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಪೊಲೀಸ್ ಇಲಾಖೆಯ ಸಹಕಾರ ಪಡೆಯಲಾಗುವುದು ಎಂದು ಅವರು ತಿಳಿಸಿದರು. +ಬೆಂಗಳೂರಿನ ಘನತ್ಯಾಜ್ಯ ನಿರ್ವಹಣೆಗಾಗಿ ಕನಿಷ್ಠ ಮೂರು ದಿಕ್ಕುಗಳಲ್ಲಿ ಸುಮಾರು ತಲಾ 100 ಎಕರೆ ಪ್ರದೇಶದಲ್ಲಿ ಎಲ್ಲಾ ಬಗೆಯ ತ್ಯಾಜ್ಯಗಳ ಸಂಸ್ಕರಣಾ ಘಟಕಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ ನಿಯಮಿತದ ಮೂಲಕ ಸ್ಥಾಪಿಸಲು ಯೋಜಿಸಲಾಗಿದೆ. ಟೆಕ್ ಬೆಂಗಳೂರು ಅಡಿ ಒಂದು ‘ಸೈ ಡೆಕï’ ನಿರ್ಮಿಸಲು ಸ್ಥಳ ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. +ಸ್ವಚ್ಛ ಬೆಂಗಳೂರು ಅಡಿ ನಗರದ 1344.84 ಕಿ.ಮೀ. ಉದ್ದದ ಆರ್ಟಿರಿಯಲ್ ಮತ್ತು ಸಬï- ಆರ್ಟಿರಿಯಲ್ ರಸ್ತೆಗಳಿಗಾಗಿ ಯಾಂತ್ರಿಕ ಕಸ ಗುಡಿಸುವ ಯಂತ್ರವನ್ನು ಬಳಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ವಾರ್ಷಿಕ ಸುಮಾರು 130.00 ಕೋಟಿಗಳ ಯೋಜನಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಡಿಸಿಎಂ ಹೇಳಿದರು. \ No newline at end of file diff --git a/eesanje/url_46_289_3.txt b/eesanje/url_46_289_3.txt new file mode 100644 index 0000000000000000000000000000000000000000..21b87cc311ca89269f1ef0538a450583208c52ef --- /dev/null +++ b/eesanje/url_46_289_3.txt @@ -0,0 +1,5 @@ +ಬೆಂಗಳೂರಲ್ಲಿ 6 ಸ್ಥಳಗಳ ಮೇಲೆ ಎನ್ಐಎ ದಾಳಿ +ಬೆಂಗಳೂರು, ಡಿ.13- ಭಯೋತ್ಪಾದನೆ ಸಂಚಿನ ಪ್ರಕರಣದ ಹಿನ್ನೆಲೆಯಲ್ಲಿ ಎನ್ಐಎ ನಗರದ 6 ಕಡೆ ದಾಳಿ ನಡೆಸಿದೆ.ಇಸ್ಲಾಮಿಕ್ ಸ್ಟೇಟ್ (ಐಎಸ್) ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ನಗರದ ಉದ್ಯಮಿಯೊಬ್ಬರನ್ನು ಕಳೆದ ಶನಿವಾರ ಎನ್ಐಎ ಅಧಿಕಾರಿಗಳು ವಿಚಾರಣೆಗೊಳಪಡಿಸಿ, ಕೆಲವು ಮಾಹಿತಿಗಳನ್ನು ಪಡೆದುಕೊಂಡಿದ್ದರು. +ಮೂಲಗಳ ಪ್ರಕಾರ, 2008 ರ ಬೆಂಗಳೂರು ಸೋಟದ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಟಿ.ನಾಸಿರ್, ಜೈಲಿನಲ್ಲಿ ಅಲ್ಲಿನ ಐದಾರು ಮಂದಿ ವಿಚಾರಣಾ ಖೈದಿಗಳ ಮನಪರಿವರ್ತನೆ ಮಾಡಿದ್ದಾನೆಂಬ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಗೊತ್ತಾಗಿದೆ. +ಸ್ನೇಹಿತನ ಜೊತೆ ಸಹಕರಿಸುವಂತೆ ಪೀಡಿಸುತ್ತಿದ್ದ ಪತಿ ವಿರುದ್ಧ ದೂರು +ನಗರದ ಆರ್.ಟಿ.ನಗರ, ಹೆಬ್ಬಾಳ ಮುಂತಾದ ಪ್ರದೇಶಗಳಲ್ಲಿ ಎನ್ಐಎ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿನ್ನೆ ಮತ್ತು ಇಂದು ದಾಳಿ ನಡೆಸಿದ್ದಾರೆ.ಈ ದಾಳಿಯ ಸಂದರ್ಭದಲ್ಲಿ ಕೆಲವು ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಕಳೆದ ಶನಿವಾರ ಮಹಾರಾಷ್ಟ್ರ ಮತ್ತು ಬೆಂಗಳೂರು ನಗರದಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. \ No newline at end of file diff --git a/eesanje/url_46_289_4.txt b/eesanje/url_46_289_4.txt new file mode 100644 index 0000000000000000000000000000000000000000..9a6f377558112937a1ce60b8585beb6c4b46c7ba --- /dev/null +++ b/eesanje/url_46_289_4.txt @@ -0,0 +1,5 @@ +ರಾಜಭವನಕ್ಕೆ ತಮಾಷೆಗಾಗಿ ಬಾಂಬ್ ಕರೆ ಮಾಡಿದ್ದ ಆರೋಪಿ ಸೆರೆ +ಬೆಂಗಳೂರು, ಡಿ.13- ರಾಜಭವನದ ಮುಂದೆ ನಡೆದು ಹೋಗುತ್ತಿದ್ದಾಗ ಪೊಲೀಸರು ಇರುವುದು ಗಮನಿಸಿ ತಮಾಷೆ ಹಾಗೂ ಕುತೂಹಲಕ್ಕಾಗಿ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿ ವಿಚಾರಣೆ ವೇಳೆ ಹೇಳಿದ್ದಾನೆ. ಬಿಕಾಂ ಪದವೀಧರನಾಗಿರುವ ಆರೋಪಿ ಭಾಸ್ಕರ್ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ವಡ್ಡಳ್ಳಿ ಗ್ರಾಮದವನಾಗಿದ್ದು, ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದಾನೆ. +ಮೊನ್ನೆ ಕೋಲಾರದಿಂದ ಬೆಂಗಳೂರಿಗೆ ಬಂದಿದ್ದ ಈತ ರಾಜಭವನದ ಮುಂದೆ ನಡೆದು ಹೋಗುವಾಗ ಪೊಲೀಸರು ಭಾರೀ ಭದ್ರತೆಯಲ್ಲಿರುವುದು ಗಮನಿಸಿ ಕುತೂಹಲಕ್ಕಾಗಿ ಮೊಬೈಲ್ನಿಂದ ಗೂಗಲ್ನಲ್ಲಿ ಎನ್ಐಎ ಸಹಾಯವಾಣಿ ನಂಬರ್ ಹುಡುಕಿ ನಂತರ ಕರೆ ಮಾಡಿ ಬಾಂಬ್ ಇರಿಸಿರುವುದಾಗಿ ಹೇಳಿ ಮೊಬೈಲ್ ಸ್ಥಗಿತಗೊಳಿಸಿದ್ದನು. ಈತನ ಒಂದು ಹುಸಿ ಕರೆಯಿಂದ ಪೊಲೀಸರು ನಿದ್ದೆಗೆಡುವಂತಾಗಿತ್ತು. ಆರೋಪಿಯು ನಂತರ ಮೆಜೆಸ್ಟಿಕ್ಗೆ ಹೋಗಿ ಅಲ್ಲಿಂದ ಆಂಧ್ರಪ್ರದೇಶದ ಚಿತ್ತೂರಿಗೆ ಬಸ್ನಲ್ಲಿ ಹೋಗಿದ್ದನು. + : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..! +ಅಲ್ಲಿನ ದೇವಸ್ಥಾನವೊಂದರ ಬಳಿ ಅನುಮಾನಾಸ್ಪದವಾಗಿ ಆರೋಪಿ ತಿರುಗಾಡುತ್ತಿದ್ದಾಗ ಅನುಮಾನಗೊಂಡು ಪೊಲೀಸರು ಆತನನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲಿಸಿದಾಗ, ಈತನೇ ರಾಜಭವನಕ್ಕೆ ಹುಸಿ ಬಾಂಬ್ ಕರೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಕುತೂಹಲಕ್ಕೆ ಕರೆ ಮಾಡಿದ್ದಾಗಿ ತಿಳಿಸಿದ್ದಾನೆ. ಬಾಂಬ್ ಕರೆ ಬಂದಾಗ ಪೊಲೀಸರು ಎಷ್ಟರ ಮಟ್ಟಿಗೆ ಅಲರ್ಟ್ ಆಗುತ್ತಾರೆ ಎಂಬುದನ್ನು ತಿಳಿಯಲು ಕರೆ ಮಾಡಿದೆ ಎಂದು ವಿಚಾರಣೆಯ ಸಮಯದಲ್ಲಿ ಆರೋಪಿ ಹೇಳಿದ್ದಾನೆ. \ No newline at end of file diff --git a/eesanje/url_46_289_5.txt b/eesanje/url_46_289_5.txt new file mode 100644 index 0000000000000000000000000000000000000000..98e78e29aae69fbe039ce60fb6ae0dfabece644a --- /dev/null +++ b/eesanje/url_46_289_5.txt @@ -0,0 +1,15 @@ +ಜಮೀರ್ ಹೇಳಿಕೆ ಖಂಡಿಸಿ ಮೇಲ್ಮನೆಯಲ್ಲಿ ಸಭಾತ್ಯಾಗ +ಬೆಳಗಾವಿ,ಡಿ.13- ತೆಲಂಗಾಣ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸ್ಪೀಕರ್ ಸ್ಥಾನದ ಬಗ್ಗೆ ಬಿಜೆಪಿಯವರಿಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆ ವಿಧಾನಪರಿಷತ್ನಲ್ಲಿಂದು ಭಾರೀ ಗದ್ದಲ ಉಂಟು ಮಾಡಿ ಪ್ರತಿಪಕ್ಷ ಸದಸ್ಯರು ಸಭಾತ್ಯಾಗ ನಡೆಸಿದ ಪ್ರಸಂಗ ಜರುಗಿತು.ಪ್ರಶ್ನೋತ್ತರ ಸಂದರ್ಭದಲ್ಲಿ ಕಾಂಗ್ರೆಸ್ನ ಯು.ಬಿ.ವೆಂಕಟೇಶ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೆ ರಾಜ್ಯದಲ್ಲಿ ಮುಂಬೈ ಕೊಳಗೇರಿ ಪುನರ್ವಸತಿ ಪ್ರಾಕಾರದ ವತಿಯಿಂದ ವಸತಿ ಸಂಕೀರ್ಣ ರಚಿಸುವ ಕುರಿತು ಪ್ರಶ್ನೆ ಕೇಳಿದರು. +ಈ ವೇಳೆ ಜಮೀರ್ ಅವರು ಉತ್ತರ ನೀಡಲು ಮುಂದಾಗುತ್ತಿದ್ದಂತೆ ಈ ವೇಳೆ ಕೋಟಾ ಶ್ರೀನಿವಾಸ್ ಪೂಜಾರಿ, ನಾರಾಯಣಸ್ವಾಮಿ ಸೇರಿದಂತೆ ಮತ್ತಿತರ ಸದಸ್ಯರು ಜಮೀರ್ ವಿರುದ್ಧ ತಿರುಗಿ ಬಿದ್ದರು.ಸಭಾಪತಿ ಪೀಠಕ್ಕೆ ಅವರು ಅಗೌರವ ತೋರಿದ್ದಾರೆ ಇಂಥವರಿಂದ ಉತ್ತರ ಕೊಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಇದರಿಂದಾಗಿ ಇಡೀ ಸದನದ ಕ್ಕೇ ತಪ್ಪಿ ಹೋಯಿತು.ಸಭಾಪತಿ ಬಸವರಾಜ್ ಹೊರಟ್ಟಿ ಅವರು ಮಾಡಿದ ಪ್ರಯತ್ನ ಫಲ ನೀಡದ ಕಾರಣ ಅಂತಿಮವಾಗಿ ಸದನವನ್ನು ಎರಡು ಬಾರಿ ಮುಂದೂಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ನಡೆಸಿದರಾದರೂ ಬಿಜೆಪಿ ಸದಸ್ಯರು ಸಭಾ ತ್ಯಾಗ ಮಾಡಿದರು. +ತಮ್ಮ ಹೇಳಿಕೆಯನ್ನು ಸದನದಲ್ಲಿ ಬಲವಾಗಿ ಸಮರ್ಥಿಸಿಕೊಂಡ ಜಮೀರ್, ನಾನು ಎಲ್ಲಿಯೂ ಸಭಾಪತಿ ಸ್ಥಾನಕ್ಕೆ ಅಗೌರವ ತೋರಿಲ್ಲ. ತೋರಿಸುವುದೂ ಇಲ್ಲ. ಮುಂದೆಯೂ ಕೂಡ ಆ ರೀತಿ ನಡೆದುಕೊಳ್ಳುವುದಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನಾನು ಏನು ಹೇಳಿದ್ದೇನೆ ಎಂದು ಮೊದಲು ಸರಿಯಾಗಿ ನೀವೇ ನೋಡಿ ಎಂದು ಸವಾಲು ಹಾಕಿದರು. +ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ನಾನು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 17 ಮುಸ್ಲಿಮರಿಗೆ ಟಿಕೆಟ್ ನೀಡಿದ್ದರು. ನಾನು, ರಹೀಮ್ ಖಾನ್ ಸಚಿವರಾದರೆ, ಸಲೀಂ ಅಹ್ಮದ್ ಮುಖ್ಯ ಸಚೇತಕರಾಗಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯು.ಟಿ.ಖಾದರ್ ಅವರನ್ನು ಸ್ಪೀಕರ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಬಿಜೆಪಿಯವರು ಅವರಿಗೆ ಎದ್ದು ನಿಂತು ನಮಸ್ಕರಿಸುತ್ತಾರೆ. ಇಂಥ ನ್ಯಾಯ ಒದಗಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.ಈ ವೇಳೆ ಸಭಾ ನಾಯಕ ಭೋಸ್ರಾಜ್ ಅವರು, ಜಮೀರ್ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿರುವುದರಿಂದ ಪುನಃ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವುದರಲ್ಲಿ ಅರ್ಥವಿಲ್ಲ. ಅಲ್ಲದೆ ಅವರು ಕೆಳಮನೆ ಬಗ್ಗೆ ಮಾತನಾಡಿದ್ದಾರೆ. ಅದಕ್ಕೂ ಇದಕ್ಕೂ ಸಂಬಂಧವೇ ಇಲ್ಲ. ಸಚಿವರು ನಾನು ಪೀಠಕ್ಕೆ ಅಗೌರವ ಕೊಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟಾಗ ಪುನಃ ಕಲಾಪಕ್ಕೆ ಅಡ್ಡಿಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ, ಗದ್ದಲ ಪ್ರಾರಂಭವಾಯಿತು. ಪರಿಸ್ಥಿತಿ ತಹಬದಿಗೆ ಬರದ ಕಾರಣ ಸಭಾಪತಿಗಳು 10 ನಿಮಿಷಗಳ ಕಾಲ ಸದನವನ್ನು ಮುಂದೂಡಿದರು.ಪುನಃ ಸದನ ಸೇರಿದಾಗ ಬಿಜೆಪಿಯವರು ತಮ್ಮ ಆಕ್ಷೇಪವನ್ನು ಮುಂದುವರೆಸಿದರು. ಆಗ ಜೆಡಿಎಸ್ನ ಮರಿತಿಬ್ಬೇ ಗೌಡ ಅವರು ಮಾತನಾಡಿ, ಸದನ ಉಳಿದಿರುವುದೇ ಮೂರೇ ದಿನ. ಈ ಕಲಾಪವನ್ನು ಕರೆದಿರುವ ಉದ್ದೇಶವೇ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ಪರಿಹಾರ ಸಿಗಬೇಕು ಎಂಬ ಉದ್ದೇಶದಿಂದ. +ಈಗಾಗಲೇ ಸಚಿವರು ಸ್ಪಷ್ಟನೆ ಕೊಟ್ಟಿರುವುದರಿಂದ ಪುನಃ ಪ್ರಶ್ನೆ ಮಾಡುವ ಅಗತ್ಯವಿಲ್ಲ. ಪ್ರಶ್ನೋತ್ತರ ಕಲಾಪವನ್ನು ಆರಂಭಿಸಿ ಎಂದರು.ಆಗ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಪ್ರಕರಣ ಸಂಬಂಧ ಸಚಿವರು ಹೇಳಿಕೆ ಕೊಟ್ಟಿದ್ದಾರೆ. ಅವರು ಹೇಳಿಕೆ ನೀಡಿದ ನಂತರವೂ ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯಲ್ಲ. ಒಂದೇ ವಿಷಯವನ್ನು ಮುಂದಿಟ್ಟುಕೊಂಡು ಪದೇ ಪದೇ ಕಲಾಪಕ್ಕೆ ಅಡ್ಡಿಪಡಿಸಿದರೆ ಅದು ಯಾರಿಗೂ ಶೋಭೆ ತರುವುದಿಲ್ಲ. ಪ್ರತಿಷ್ಠೆಯನ್ನು ಬಿಟ್ಟು ಕಲಾಪ ನಡೆಯಲು ಎಲ್ಲರೂ ಸಹಕಾರ ಕೊಡಬೇಕು. ಈ ವಿಷಯವನ್ನು ಪೀಠದಲ್ಲಿರುವ ನೀವೇ ನಿರ್ಧಾರ ಮಾಡಿ ಎಂದು ಸಭಾಪತಿಗಳಿಗೆ ಮನವಿ ಮಾಡಿದರು. +ಈ ಹಂತದಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರು, ಜಮೀರ್ ಎಲ್ಲಿಯೂ ಪೀಠಕ್ಕೆ ಅಗೌರವ ಆಗುವ ರೀತಿಯಲ್ಲಿ ಮಾತನಾಡಿಲ್ಲ. ನಮಗೆ ಅಪಾರವಾದ ಗೌರವವಿದೆ ಎಂದು ಹೇಳಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲ ಮುಸ್ಲಿಂ ಸಮುದಾಯಕ್ಕೆ 17 ಮಂದಿಗೆ ಟಿಕೆಟ್ ಕೊಟ್ಟಿದ್ದೇವೆ. ಕಾಂಗ್ರೆಸ್ ಪಕ್ಷ ನಮಗೆ ಎಷ್ಟು ಸ್ಥಾನಮಾನ ನೀಡಿದ್ದಾರೆ ಎಂದು ಹೇಳಿದ್ದಾರೆ. ಸುಖಾಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ಮಾಡಬೇಡಿ ಎಂದರು. +ಸಚಿವರ ಹೇಳಿಕೆಗೆ ಆಕ್ಷೇಪಿಸಿದ ಜೆಡಿಎಸ್ನ ಭೋಜೇಗೌಡ ಮತ್ತು ಶರವಣ ಅವರು, ಲಕ್ಷ್ಮಿಗೂ ಗೂಬೆ ಎಂದು ಕರೆಯುತ್ತಾರೆ. ಹಾಗಾದರೆ ಮನೆಯಲ್ಲಿ ಇದನ್ನೇ ಹೇಳುತ್ತೀರಾ? ಮೊದಲು ಇದನ್ನು ಕಡತದಿಂದ ತೆಗೆದು ಹಾಕುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡಿದರು.ನಾನು ಗ್ರಾಮೀಣ ಭಾಷೆಯಲ್ಲಿ ಹೇಳಿದ್ದೇನೆ. ಮಾಡದ ತಪ್ಪಿಗೆ ಗೂಬೆ ಕೂರಿಸುವ ಕೆಲಸ ಮಾಡಬೇಡಿ ಎಂದು ಹೇಳುವುದರಲ್ಲಿ ತಪ್ಪೇನಿದೆ ಎಂದು ಸುರೇಶ್ ಸಮರ್ಥಿಸಿಕೊಂಡರು. + : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು. +ಗದ್ದಲದ ನಡುವೆಯೂ ಬಿಜೆಪಿಯ ರವಿಕುಮಾರ್ ಅವರು ಜಮೀರ್ ಅವರು ರಾಜ್ಯದ ಮಂತ್ರಿ. ಅವರು ಕೇವಲ ಒಂದು ಸಮುದಾಯಕ್ಕೆ ಸಚಿವರಲ್ಲ. ರಾಜ್ಯದಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ಗೂ ಮತ ಹಾಕುತ್ತಾರೆ, ಬಿಜೆಪಿಗೂ ಹಾಕುತ್ತಾರೆ. ಸ್ಪೀಕರ್ ಸ್ಥಾನಕ್ಕೆ ಪ್ರತಿಯೊಬ್ಬರು ಗೌರವ ಕೊಡಬೇಕು. ಅದರಲ್ಲಿ ಎರಡು ಮಾತಿಲ್ಲ. ಬಿಜೆಪಿಯವರನ್ನು ನಮಸ್ಕಾರ ಮಾಡುವಂತೆ ಮಾಡಿದ್ದೇವೆ ಎನ್ನುತ್ತಾರೆ. ನಾವು ಮೊದಲು ಆ ಸ್ಥಾನಕ್ಕೆ ಗೌರವ ಕೊಡುತ್ತಿರಲಿಲ್ಲವೇ ಎಂದು ಪ್ರಶ್ನೆ ಮಾಡಿದರು.ನಾನು ಹಾಗೆ ಹೇಳಿರಲಿಲ್ಲ ಎಂದು ಜಮೀರ್ ಹೇಳಿದಾಗ, ಹಾಗಾದರೆ ನೀವು ನೀಡಿದ ಹೇಳಿಕೆಯ ವಿಡಿಯೋಗಳನ್ನು ಬಿಡುಗಡೆ ಮಾಡಿ ಎಂದು ಬಿಜೆಪಿಯವರು ಪ್ರತಿ ಸವಾಲು ಹಾಕಿದರು. + +ಸಭಾಪತಿಯವರು ಮತ್ತೆ 5 ನಿಮಿಷಗಳ ಕಾಲ ಸದನವನ್ನು ಮುಂದೂಡಿದರು. ಬಳಿಕ ಸಭೆ ಸೇರಿದಾಗ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ವೀಕ್ಷಿಸಲು ಶಾಲಾ ಮಕ್ಕಳು ಬಂದಿದ್ದಾರೆ. ಅವರ ಮುಂದೆ ಈ ರೀತಿ ನಡೆದುಕೊಂಡರೆ ನಿಮಗೆ ಮರ್ಯಾದೆ ಇರುತ್ತದೆಯೇ? ಎಲ್ಲರೂ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಿ, ಎರಡು ಬಾರಿ ಸದನ ಮುಂದೂಡಿದ್ದೇನೆ. ಸಂಬಂಧಪಟ್ಟ ಸಚಿವರು ಉತ್ತರ ನೀಡಿದ್ದಾರೆ. ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಿದೆ. ದಯಮಾಡಿ ಕಲಾಪ ನಡೆಸಲು ಸಹಕರಿಸಿ ಜಲ್ವಂತ ಸಮಸ್ಯೆಗಳನ್ನು ಚರ್ಚಿಸಬೇಕಿದೆ ಎಂದರು. +ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ನಿಮ್ಮ ಕಛೇರಿಯಲ್ಲಿ ಜಮೀರ್ ಹೇಳಿಕೆ ವಿಡಿಯೋ ತೋರಿಸಿದ್ದೇವೆ. ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಖಾದರ್ಗೆ ಕೈಮುಗಿಯುವಂತೆ ಮಾಡಿದ್ದೇವೆ ಅಂತ ಹೇಳಿದ್ದಾರೆ. ಜಮೀರ್ ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವೇ ಈ ಸದನಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದಸರು. +ಬಿಜೆಪಿಯ ರಘುನಾಥ್ ಮಲ್ಕಾಪುರೆ ಮಾತನಾಡಿ, ಜಮೀರ್ ಅಹಮ್ಮದ್ ಕ್ಷಮೆ ಕೇಳಬೇಕು ಇಲ್ಲವೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ನಾವು ಅವರ ಯಾವುದೇ ಪ್ರಶ್ನೆಗಳಿಗೆ ಉತ್ತರವನ್ನು ಬಯಸುವುದಿಲ್ಲ ಬಹಿಷ್ಕಾರ ಮಾಡುತ್ತೇವೆ ಎಂದು ಗುಡುಗಿದರು.ಅಂತಿಮವಾಗಿ ಸಭಾಪತಿಯವರು ಪ್ರಶ್ನೋತ್ತರ ಕಲಾಪ ಆರಂಭಿಸುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ್ದಾರೆಂದು ಆರೋಪಿಸಿ ಜಮೀರ್ ಅಹಮ್ಮದ್ ವಿರುದ್ಧ ಘೋಷಣೆ ಕೂಗುತ್ತಾ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. \ No newline at end of file diff --git a/eesanje/url_46_289_6.txt b/eesanje/url_46_289_6.txt new file mode 100644 index 0000000000000000000000000000000000000000..935248bb072195a2771cef76939cd9e16aecec01 --- /dev/null +++ b/eesanje/url_46_289_6.txt @@ -0,0 +1,7 @@ +ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಅಶೋಕ್ ವಾಗ್ದಾಳಿ +ಬೆಳಗಾವಿ,ಡಿ.13- ಕಾಂಗ್ರೆಸ್ ಜಾತಿ ಗಣತಿ ವಿಚಾರ ವಾಗಿ ಎಐಸಿಸಿ ಅಧ್ಯಕ್ಷರು ಒಂದು ರೀತಿ ಹೇಳಿಕೆ ಕೊಟ್ಟರೆ ಅದಕ್ಕೆ ವಿರುದ್ಧವಾಗಿ ಕೆಪಿಸಿಸಿ ಅಧ್ಯಕ್ಷರು ಮತ್ತೊಂದು ಹೇಳಿಕೆ ಕೊಡುತ್ತಾರೆ. ಹೀಗಾಗಿ ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಜಾತಿಗಣತಿಗೆ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷರೇ ವಿರೋಧ ಮಾಡಿದ್ದಾರೆ ಎಂದು ಹೇಳಿದ್ದಾರೆ. +ಡಿ.ಕೆ.ಶಿವಕುಮಾರ್ ಅವರು, ನಾನು ವಿರೋಧ ವ್ಯಕ್ತಪಡಿಸಿಲ್ಲ. ವೈಜ್ಞಾನಿಕವಾಗಿ ನಡೆಯಬೇಕು ಎಂದಿದ್ದೆ ಎನ್ನುತ್ತಾರೆ. ಹೀಗೆ ವರದಿ ಬಗ್ಗೆಯೇ ಎಐಸಿಸಿ ಅಧ್ಯಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವೇ ಗೊಂದಲಗಳಿರುವುದರಿಂದ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದರು.ಜನ ಸಂಕಷ್ಟದಲ್ಲಿದ್ದಾರೆ. ಬರ ಇದೆ. ಸರ್ಕಾರದಿಂದ ಪರಿಹಾರದ ಮಾತೇ ಇಲ್ಲ ರೈತರ ಸಾಲ ಮನ್ನಾ ಮಾಡುತ್ತಾರೆರೈತರ ಬೆಳೆ ಪರಿಹಾರ 25 ಸಾವಿರ ಕೊಡ್ತಾರೆ ಎಂದುನಾವೆಲ್ಲಾ ಕಾತುರದಿಂದ ಕಾಯುತ್ತಿದ್ದೆವು. ಅವೇಶನದಲ್ಲಿ ಉತ್ತರ ಕೊಡಲಿಲ್ಲ. ಅವೇಶನ ಕರೆದಿರುವುದು ಯಾಕೆ? ಎಂದು ಪ್ರಶ್ನಿಸಿದರು. + : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..! +ಉತ್ತರ ಕರ್ನಾಟಕ ಸಮಸ್ಯೆ ಪರಿಹಾರ ಕಂಡುಕೊಳ್ಳಲು, ಸ್ಟ್ಯಾಂಪ್ ಬೆಲೆ ಹೆಚ್ಚಳ ಮಾಡೋಕೆ, ಮನೆಗಳ ತೆರಿಗೆ ಹೆಚ್ಚಳ ಮಾಡೋಕೆ ಅವೇಶನ ಕರೆದಿದ್ದಾರೆ. ಈ ಸರ್ಕಾರಕ್ಕೆ ಹೇಳೋರಿಲ್ಲ, ಕೇಳೋರಿಲ್ಲದಂತಾಗಿದೆ. ಪೊಲೀಸರೇ ರೈತರ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ ಇದನ್ನು ಯಾರೂ ಕೇಳೋರು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ, ತೆರಿಗೆ ಹೆಚ್ಚಳ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹದಿನೈದು ಸಾವಿರ ಜನ ಸೇರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು. +ಇಂದು ಸದನದಲ್ಲಿ ಪ್ರಮುಖ ವಿಚಾರ ಚರ್ಚೆ ಮಾಡುತ್ತೇವೆ, ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವುದು, ಚಿಕ್ಕಮಗಳೂರು ವಕೀಲರ ಗಲಾಟೆ, ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ, ಕೋಲಾರದಲ್ಲಿ ತಲ್ವಾರ್ ಹಾಕಿರುವುದು ಇದನ್ನೆಲ್ಲಾ ಖಂಡಿಸಿ ಸದನದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದರು. ಜೆಡಿಎಸ್ ಮತ್ತು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_289_7.txt b/eesanje/url_46_289_7.txt new file mode 100644 index 0000000000000000000000000000000000000000..992e3f734173d6bac769a9a480ad9e647ec81ed1 --- /dev/null +++ b/eesanje/url_46_289_7.txt @@ -0,0 +1,9 @@ +ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರಿಂದಲೇ ಪ್ರತಿಭಟನೆ +ಬೆಳಗಾವಿ,ಡಿ.13- ಆಡಳಿತ ಪಕ್ಷವಾಗಿರುವ ಕಾಂಗ್ರೆಸ್ನ ಶಾಸಕರೆ, ಹಿಂದುಳಿದ ವರ್ಗಗಳ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಟೀಕಾಪ್ರಹಾರ ನಡೆಸಿದ್ದಲ್ಲದೆ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ ಘಟನೆ ವಿಧಾನ ಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರದ ಅವಧಿಯಲ್ಲಿ ಚನ್ನಗಿರಿ ಕ್ಷೇತ್ರದ ಶಾಸಕ ಬಸವರಾಜು .ವಿ.ಶಿವಗಂಗಾ ಅವರು, ಸದನಕ್ಕೆ ತಡವಾಗಿ ಬಂದಿದ್ದು, ವಿಳಂಬಕ್ಕೆ ಕಾರಣ ಏನು ಎಂದು ಸಭಾಧ್ಯಕ್ಷರು ಪ್ರಶ್ನಿಸಿದರು. ನಾನು ಬಿಳಿ ಶರ್ಟ್ ಧರಿಸಿ ಬಂದಿದ್ದೆ. ಹಿಂದುಳಿದ ವರ್ಗಗಳ ಇಲಾಖೆ ನಿಷ್ಕ್ರಿಯವಾಗಿದೆ. ಅದರ ವಿರುದ್ಧ ಪ್ರತಿಭಟನೆ ನಡೆಸುವ ಸಲುವಾಗಿ ಕಪ್ಪು ಬಣ್ಣದ ಶರ್ಟ್ ಧರಿಸಿ ಬರಲು ವಿಳಂಬವಾಯಿತು ಎಂದರು. +ಅದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷರು, ಆ ರೀತಿಯೆಲ್ಲಾ ಕಪ್ಪು ಬಟ್ಟೆ ಧರಿಸುವಂತಿಲ್ಲ. ಆದರೂ ಪರವಾಗಿಲ್ಲ. ಕಪ್ಪು ಬಟ್ಟೆ ಚೆನ್ನಾಗಿ ಕಾಣುತ್ತಿದೆ ಎಂದು ಹೇಳಿದರು.ಪ್ರಶ್ನೆಯನ್ನು ಮುಂದುವರೆಸಿದ ಬಸವರಾಜು.ವಿ.ಶಿವಗಂಗಾ, ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಗೆ ಬರುವ ವಿವಿಧ ಅಭಿವೃದ್ಧಿ ನಿಗಮಗಳ ಸಾಲ ಸೌಲಭ್ಯಕ್ಕೆ ಭೌತಿಕ ಗುರಿ ಈಡೇರದೆ ಬಡವರಿಗೆ ಸೌಲಭ್ಯ ದೊರೆಯದೆ ವಂಚಿತವಾಗುತ್ತಿದೆ ಎಂದು ಆರೋಪಿಸಿದರು. +ಸಾವಿರಾರು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಗಂಗಾ ಕಲ್ಯಾಣ ಯೋಜನೆಯಡಿ 12, ಸ್ವಯಂ ಉದ್ಯೋಗಕ್ಕಾಗಿ 4, ಸ್ವಾವಲಂಬಿ ಸಾರಥಿ ಯೋಜನೆಯಡಿ 2 ಫಲಾನುಭವಿಗಳಿಗೆ ಮಾತ್ರ ಮಂಜೂರಾತಿ ಸಿಕ್ಕಿದೆ. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿರುವ ಅಧಿಕಾರಿ, ನಿಮ್ಮದೇ ಸರ್ಕಾರ, ಹೋಗಿ ಮುಖ್ಯಮಂತ್ರಿಯವರನ್ನೇ ಕೇಳಿ ಎಂದು ಉದ್ಧಟತನದಿಂದ ಉತ್ತರಿಸುತ್ತಾರೆ. ನಾನು ಹಿಂದುಳಿದ ವರ್ಗಗಳ ಕಲ್ಯಾಣ ಸಮಿತಿಯ ಸದಸ್ಯನಾಗಿದ್ದೇನೆ. ಇಲಾಖೆ ಅಧಿಕಾರಿಗಳು ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. +ಅಲ್ಲದೆ, ಕೋಟ್ಯಂತರ ರೂ. ಖರ್ಚು ಮಾಡಿ ಸಮಾವೇಶ ಮಾಡಲಾಗುತ್ತದೆ, ಬಡವರಿಗೆ ಸೌಲಭ್ಯ ನೀಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.ತತ್ಕ್ಷಣ ಪ್ರತ್ಯುತ್ತರಿಸಿದ ಸಭಾಧ್ಯಕ್ಷರು ಕೋಟ್ಯಂತರ ರೂ. ಖರ್ಚು ಮಾಡಿ ಶಾಸಕರಾಗಲು ಸಾಧ್ಯವಾಗಿರುವಾಗ ಬಡವರಿಗೆ ಕೊಡಲು ಹಣವಿಲ್ಲವೇ ಎಂದು ಶಾಸಕರಿಗೆ ತಿರುಗೇಟು ನೀಡಿದರು. + : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..! +ಶಾಸಕ ನರೇಂದ್ರಸ್ವಾಮಿ ಕೂಡ ಇಲಾಖೆಯ ಕಾರ್ಯದರ್ಶಿ ವಿರುದ್ಧ ಆಕ್ರೋಶ ಹೊರಹಾಕಿದರು. ಆಡಳಿತ ಪಕ್ಷದ ಶಾಸಕರ ಅಸಮಾಧಾನಕ್ಕೆ ಧ್ವನಿಗೂಡಿಸಿದ ಬಿಜೆಪಿ ಶಾಸಕ ಶರಣು ಸಲಗಾರ, ಆಡಳಿತ ಪಕ್ಷದ ಶಾಸಕರೇ ಈ ಸರ್ಕಾರ ದಿವಾಳಿಯಾಗಿದೆ, ನಿಷ್ಕ್ರಿಯವಾಗಿದೆ ಎಂದು ಹೇಳುತ್ತಿದ್ದಾರೆ ಎಂದು ಕಿಚಾಯಿಸಿದರು. +ಆಗ ಕಾಂಗ್ರೆಸ್ನ ಶಾಸಕರಾದ ರೂಪಾ ಶಶಿಧರ್, ಶರತ್ ಬಚ್ಚೇಗೌಡ, ಕೋನರೆಡ್ಡಿ ಮತ್ತಿತರರು ಇದು ಆರು ತಿಂಗಳ ಸಮಸ್ಯೆಯಲ್ಲ. ಮೊದಲಿನಿಂದಲೂ ನಡೆದುಕೊಂಡು ಬಂದಿದೆ ಎಂದು ಸಮಜಾಯಿಷಿ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಅರ್ಜಿ ಸಲ್ಲಿಸಿದ ಎಲ್ಲರಿಗೂ ಸೌಲಭ್ಯಗಳನ್ನು ಒದಗಿಸಬೇಕೆಂಬುದು ನಮ್ಮ ಅಭಿಲಾಷೆ ಕೂಡ. ಆದರೆ ಹಣಕಾಸಿನ ಇತಿಮಿತಿಗಳು ಅದಕ್ಕೆ ಸಹಕರಿಸುವುದಿಲ್ಲ. ಲಭ್ಯತೆ ಆಧರಿಸಿ ಆದ್ಯತೆ ಮೇರೆಗೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು. +ಶಾಸಕರು ಪ್ರಸ್ತಾಪಿಸಿದಂತೆ ನಮ್ಮಲ್ಲಿ ಹಾಸ್ಟೆಲ್ ವಾರ್ಡನ್ಗಳ ಕೊರತೆ ಇರುವುದು ನಿಜ. ಒಬ್ಬೊಬ್ಬರಿಗೆ ನಾಲ್ಕು-ಐದು ಹಾಸ್ಟೆಲ್ಗಳ ಉಸ್ತುವಾರಿ ವಹಿಸಲಾಗಿದೆ. ಬೇರೆ ಇಲಾಖೆಗಳಿಂದಲೂ ಕೂಡ ಅಧಿಕಾರಿಗಳನ್ನು ಎರವಲು ಸೇವೆಯ ಮೇಲೆ ಕರೆಸಿಕೊಳ್ಳಲಾಗಿದೆ ಎಂದು ಹೇಳಿದರು.ಕಾರ್ಯದರ್ಶಿ ದೂರಿನ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಕೆಲವು ವೇಳೆ ಶಾಸಕರಿಗೆ ನೋವಾಗುವಂತಹ ಘಟನೆಗಳು ನಡೆದಿವೆ ಎಂದು ಸಚಿವರು ವಿಷಾದಿಸಿದರು. \ No newline at end of file diff --git a/eesanje/url_46_289_8.txt b/eesanje/url_46_289_8.txt new file mode 100644 index 0000000000000000000000000000000000000000..9f470a400536a91435c202bf5f86abbf76efdcf2 --- /dev/null +++ b/eesanje/url_46_289_8.txt @@ -0,0 +1,7 @@ +ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಕ್ಕೆ ಸೂಚನೆ : ಸಚಿವ ಕೆ.ಎಚ್.ಮುನಿಯಪ್ಪ +ಬೆಳಗಾವಿ.ಡಿ.13- ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದ್ದು, ಈ ಸಂಬಂಧ ಕಾರ್ಖಾನೆಗಳ ಮಾಲೀಕರಿಗೆ ಹದಿನೈದು ದಿನಗಳ ಗಡುವು ನೀಡಲಾಗಿದೆ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದರು. +ಸಚಿವರಾದ ಶಿವಾನಂದ ಪಾಟೀಲ, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಅಕಾರಿಗಳೊಂದಿಗೆ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. +ಪ್ರಸಕ್ತ ಹಂಗಾಮಿನಲ್ಲಿ 78 ಸಕ್ಕರೆ ಕಾರ್ಖಾನೆಗಳು ಕಬ್ಬು ಅರೆಯುತ್ತಿದ್ದು, 24 ಕಾರ್ಖಾನೆಗಳು ಮಾತ್ರ ಡಿಜಿಟಲ್ ತೂಕದ ಯಂತ್ರಗಳನ್ನು ಅಳವಡಿಸಿಕೊಂಡಿವೆ. ಉಳಿದ 54 ಕಾರ್ಖಾನೆಗಳು ಮುಂದಿನ ಹದಿನೈದು ದಿನಗಳಲ್ಲಿ ಡಿಜಿಟಲ್‍ಗೆ ಪರಿವರ್ತನೆ ಆಗಬೇಕು ಅವರು ತಿಳಿಸಿದರು. +ವಾರದೊಳಗೆ ಬರ ಪೀಡಿತ ತಾಲ್ಲೂಕಿನ ರೈತರಿಗೆ ಪರಿಹಾರ ಬಿಡುಗಡೆ +ರೈತರು, ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಯಾವುದೇ ಕಾರಣಕ್ಕೂ ಮೋಸ ಆಗಬಾರದು. ರೈತರ ಗದ್ದೆಗಳಿಂದ ಲಾರಿಯಲ್ಲಿ ಎಷ್ಟು ಕಬ್ಬು ಬಂದಿರುತ್ತದೆಯೋ ಅಷ್ಟೇ ತೂಕದ ಕಬ್ಬು ಕಾರ್ಖಾನೆಗಳಲ್ಲಿ ತೂಕ ಮಾಡಿದಾಗಲೂ ಬರಬೇಕು. ಸರಿಯಾಗಿ ತೂಕ ಮಾಡದಿದ್ದರೆ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಅವರುಎಚ್ಚರಿಸಿದರು. +ಡಿಜಿಟಲ್ ತೂಕ ಯಂತ್ರಗಳ ಅಳವಡಿಕೆಗೆ ಸಂಬಂಸಿದಂತೆ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳ ಮಾಪನಶಾಸ್ತ್ರ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ನಿಯಂತ್ರಕರು ಸೇರಿದಂತೆ ಅಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ 5 ಕೆಜಿ ಅಕ್ಕಿ ಬದಲಿಗೆ ಗ್ರಾಹಕರಿಗೆ ನಗದು ನೀಡಲಾಗುತ್ತಿದೆ. ಹಲವು ಪ್ರಯತ್ನಗಳ ನಂತರವೂ ಅಕ್ಕಿ ದೊರೆಯದ ಕಾರಣ ಹಣ ನೀಡಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ, ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_289_9.txt b/eesanje/url_46_289_9.txt new file mode 100644 index 0000000000000000000000000000000000000000..54338a88ba826be3977c88210b2b66e5260816cd --- /dev/null +++ b/eesanje/url_46_289_9.txt @@ -0,0 +1,8 @@ +ವಾರದೊಳಗೆ ಬರ ಪೀಡಿತ ತಾಲ್ಲೂಕಿನ ರೈತರಿಗೆ ಪರಿಹಾರ ಬಿಡುಗಡೆ +ಬೆಳಗಾವಿ, ಡಿ.13- ಒಂದು ಬರ ಪೀಡಿತ ತಾಲ್ಲೂಕಿನ ರೈತರಿಗೆ ಎರಡು ಸಾವಿರ ರೂ.ವರೆಗಿನ ಬರ ಪರಿಹಾರವನ್ನು ಈ ವಾರದೊಳಗೆ ಪ್ರಾಯೋಗಿಕವಾಗಿ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ರಾಜೇಂದ್ರ ರಾಜಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬರಗಾಲದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಎರಡು ಸಾವಿರ ರೂ.ವರೆಗಿನ ಬರ ಪರಿಹಾರ ನೀಡುವ ಪ್ರಕ್ರಿಯೆಗೆ ಈ ವಾರದಲ್ಲಿ ಪ್ರಾರಂಭಿಸಲಾಗುವುದು ಎಂದರು. +ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿರುವುದರಿಂದ ರಾಜ್ಯ ಸರಕಾರದ ವತಿಯಿಂದಲೇ 2 ಸಾವಿರ ರೂ.ವರೆಗಿನ ಬರ ಪರಿಹಾರವನ್ನು ವಿತರಿಸುವ ಪ್ರಕ್ರಿಯೆಗೆ ಈ ವಾರದಲ್ಲಿ ಒಂದು ತಾಲ್ಲೂಕಿನಿಂದ ಚಾಲನೆ ನೀಡಲಾಗುವುದು. ಕೇಂದ್ರ ಸರ್ಕಾರವು ನಮ್ಮ ನೆರವಿಗೆ ಬಂದಿದ್ದರೆ ಪರಿಸ್ಥಿತಿ ಈ ರೀತಿ ಆಗುತ್ತಿರಲಿಲ್ಲ ಎಂದು ಅವರು ಆಕ್ಷೇಪಿಸಿದರು. +ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರಿಸ್ಥಿತಿ ವಿವರಿಸಲು ಮುಖ್ಯಮಂತ್ರಿಗಳು ಮೂರು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಾವು ಕೇಂದ್ರದ ಗೃಹ ಹಾಗೂ ಕೃಷಿ ಸಚಿವರ ಭೇಟಿಗೆ ಅವಕಾಶ ಕೋರಿದರೂ ಕಾಲಾವಕಾಶ ಸಿಕ್ಕಿಲ್ಲ. ನಾವು ಸಂಬಂಧಪಟ್ಟ ಇಲಾಖೆಯ ಅಕಾರಿಗಳಿಗೆ ಮನವಿ ಪತ್ರಗಳನ್ನು ನೀಡಿ ಬರುವಂತಾಗಿದೆ. ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು. +ಕೇಂದ್ರ ಸರ್ಕಾರ ತನ್ನ ಮಾನದಂಡಗಳ ಅನುಸಾರ ರಾಜ್ಯದಲ್ಲಿ ಶೇ.44ರಷ್ಟು ಸಣ್ಣ, ಅತಿ ಸಣ್ಣ ರೈತರು ಇರುವುದಾಗಿ ಭಾವಿಸಿದೆ. ಆದರೆ, ನಮ್ಮ ಮಾಹಿತಿಯ ಪ್ರಕಾರ ಶೇ.70ರಷ್ಟು ಸಣ್ಣ, ಅತಿ ಸಣ್ಣ ರೈತರು ಇದ್ದಾರೆ. ಆಧಾರ್ ಜೋಡಣೆಯೊಂದಿಗೆ ಇರುವ ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ. ಎನ್‍ಡಿಆರ್‍ಎಫ್ ಅಡಿಯಲ್ಲಿ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸುವಂತೆಯೂ ಮನವಿ ಮಾಡಿದ್ದೇವೆ ಎಂದು ಕೃಷ್ಣ ಬೈರೇಗೌಡ ಹೇಳಿದರು. +ಬಿಜೆಪಿ ನಾಯಕರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ನಿರ್ಧರಿಸಿತ್ತು : ಸಹಾ +ಪ್ರಸಕ್ತ ಸಾಲಿನ ಜೂನ್‍ನಲ್ಲಿ ವಾಡಿಕೆಗಿಂತ ಶೇ.57ರಷ್ಟು (ಕಡಿಮೆ), ಜುಲೈನಲ್ಲಿ ಶೇ.29ರಷ್ಟು(ಹೆಚ್ಚು), ಆಗಸ್ಟ್ ನಲ್ಲಿ ಶೇ.73ರಷ್ಟು(ಕಡಿಮೆ), ಸೆಪ್ಟಂಬರ್ ನಲ್ಲಿ ಶೇ.10ರಷ್ಟು ಹಾಗೂ ಅಕ್ಟೋಬರ್ ನಲ್ಲಿ ಶೇ.65ರಷ್ಟು ಕಡಿಮೆ ಮಳೆಯಾಯಿತು.85.95 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯ ಗುರಿ ಇತ್ತು. 74 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಯಿತು. 46 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾಗೂ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆಯ ಕೊರತೆಯಿಂದ ಬೆಳೆ ನಷ್ಟವಾಯಿತು. ಮೂರು ಹಂತಗಳಲ್ಲಿ ಕ್ರಮವಾಗಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು ಎಂದರು. +ಮಹಾತ್ಮ ಗಾಂ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ಉದ್ಯೋಗಕ್ಕೆ ಬರುವವರ ಕೂಲಿ ಬಾಕಿ ಇದೆ. ಹೀಗಾಗಿ ಕೇಂದ್ರ ಸರ್ಕಾರ 468 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದರು. ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಾನವ ದುಡಿಯುವ ದಿನಗಳನ್ನು ಹೆಚ್ಚುವರಿ 50 ದಿನ ನೀಡಬೇಕೆಂದು ಕಾನೂನು ಇದ್ದರೂ, ಕೇಂದ್ರ ಸರ್ಕಾರ ಅನುಮತಿಗೆ ಮೀನಾಮೇಷ ಎಣಿಸುತ್ತಿದೆ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_46_28_1.txt b/eesanje/url_46_28_1.txt new file mode 100644 index 0000000000000000000000000000000000000000..61f9e5ad0f68e4203d2fd800bd098131e67e3dda --- /dev/null +++ b/eesanje/url_46_28_1.txt @@ -0,0 +1,7 @@ +ರಾಜ್ಯದಲ್ಲಿ ಅರಣ್ಯ ಅಪರಾಧ ಪ್ರಕರಣಗಳಲ್ಲಿ ಭಾರಿ ಏರಿಕೆ + +ಬೆಂಗಳೂರು,ಸೆ.2-ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅರಣ್ಯ ಅಪರಾಧ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಅರಣ್ಯ ಇಲಾಖೆಯಲ್ಲಿ ಬರೊಬ್ಬರಿ 5,866 ಪ್ರಕರಣಗಳು ದಾಖಲಾಗಿವೆ. ಮಾತ್ರವಲ್ಲ ಇದುವರೆಗೂ 17 ಸಾವಿರಕ್ಕೂ ಹೆಚ್ಚಿನ ಅರಣ್ಯ ಅಪರಾಧ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದು ತಲೆನೋವಾಗಿ ಪರಿಣಮಿಸಿದೆ. +ಅರಣ್ಯ ಸಂರಕ್ಷಣೆಗೆ ಧಕ್ಕೆ, ವನ್ಯಜೀವಿಗಳಿಗೆ ಹಾನಿ ಮಾಡುವವರ ವಿರುದ್ದ ಕೇಸ್‌‍ ದಾಖಲಿಸಿರುವ ಅರಣ್ಯ ಇಲಾಖೆಯ ಭದ್ರತಾ ಪಡೆಗಳು ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುತ್ತ ಬಂದಿದೆ.ಇಲಾಖೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ 17 ಸಾವಿರ ಪ್ರಕರಣಗಳಲ್ಲಿ ಅರಣ್ಯ ಭೂಮಿ ಅತಿಕ್ರಮಣ ಪ್ರಕರಣಗಳೇ ಹೆಚ್ಚು ಇರುವುದು ವಿಶೇಷವಾಗಿದೆ. +ಶ್ರೀಗಂಧ, ಬೀಟೆ, ರಕ್ತ ಚಂದನ ಮರಗಳ ಕಳ್ಳ ಸಾಗಣೆ, ವನ್ಯ ಜೀವಿಗಳಿಗೆ ಸುರಕ್ಷತೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣಗಳಲ್ಲೂ ಏರಿಕೆ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. +ರಾಜ್ಯ ದಲ್ಲಿ ಪ್ರತಿವರ್ಷ ಸರಾಸರಿ 4,500ರಿಂದ 5 ಸಾವಿರ ಅರಣ್ಯ ಅಪರಾಧ ಪ್ರಕರಣಗಳು ದಾಖಲಾಗುತ್ತಿದೆ. ಅರಣ್ಯ ಭೂಮಿಯನ್ನು ಅತಿಕ್ರಮಿಸಿದ್ದಕ್ಕೆ ದಾಖಲಿಸಲಾದ ಪ್ರಕರಣಗಳ ಸಂಖ್ಯೆ 44,608 ಆದರೆ, 2,840 ಶ್ರೀಗಂಧ ಕಳ್ಳಸಾಗಣೆ, 63 ರಕ್ತಚಂದನ, 1,544 ಬೀಟೆ ಮರ ತುಂಡು ಕಳ್ಳ ಸಾಗಣೆ ಪ್ರಕರಣಗಳನ್ನು ದಾಖಲಿಸಲಾಗಿದೆ. +ಪ್ರಸಕ್ತ ಸಾಲಿನ ಪ್ರಕರಣಗಳ ಸಂಖ್ಯೆ:ಅರಣ್ಯ ಭೂಮಿ ಒತ್ತುವರಿ- 1,385ಶ್ರೀಗಂಧ ಕಳ್ಳಸಾಗಣೆ – 237ರಕ್ತಚಂದನ ಕಳ್ಳಸಾಗಣೆ – 07ಬೀಟೆ ಕಳ್ಳಸಾಗಣೆ- 1,326ವನ್ಯಜೀವಿ ಸಂಬಂಧಿತ ಪ್ರಕರಣ-429ಇತರೆ- 2,482ಒಟ್ಟು- 5,866 diff --git a/eesanje/url_46_28_10.txt b/eesanje/url_46_28_10.txt new file mode 100644 index 0000000000000000000000000000000000000000..f185b1c2742da8a9c469dc09538b7416f506cdd4 --- /dev/null +++ b/eesanje/url_46_28_10.txt @@ -0,0 +1,10 @@ +ಕೆಎಸ್‌‍ಆರ್‌ಟಿಸಿಗೆ 16 ರಾಷ್ಟ್ರದ ಮಟ್ಟದ ಪ್ರಶಸ್ತಿಗಳ ಗರಿ +16 +ಬೆಂಗಳೂರು, ಆ.31– ದೇಶದಲ್ಲಿ ಉತ್ತಮ ಸಾರಿಗೆ ಸೇವೆಗೆ ಹೆಸರಾಗಿರುವ ಕೆಎಸ್‌‍ಆರ್‌ಟಿಸಿಗೆ ರಾಷ್ಟ್ರ ಮಟ್ಟದ ಎಂಟು ವೀಡಿಯಾ, ಐದು ಎಮ್ಕ್ಯೂಬ್‌, ಎರಡು ಸ್ಕೋಚ್‌ ಆರ್ಡರ್‌ ಆಫ್‌ ಮೆರಿಟ್‌ ಹಾಗೂ ಒಂದು ಸ್ಕೋಚ್‌ ಪ್ರಶಸ್ತಿಗಳು ಲಭಿಸಿವೆ. +ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನ ತಂತ್ರಜ್ಞಾನ ಉತ್ತಮ ಸೇವೆ ನೀಡುತ್ತಾ ದೇಶದೆಲ್ಲೆಡೆ ಮನೆ ಮಾತಾಗಿದ್ದು, ಒಂದಿಲ್ಲೊಂದು ಸಾಧನೆಯ ಮೂಲಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುತ್ತಲೇ ಬರುತ್ತಿದೆ. ಅದರಂತೆ ಇದೀಗ ರಾಷ್ಟ್ರಮಟ್ಟದ 16 ಪ್ರಶಸ್ತಿಗಳು ಲಭಿಸಿರುವುದು ಹೆಮೆಯ ವಿಷಯ. +ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರಾಡಕ್ಟ್‌ ಪ್ಲೇಸೆಂಟ್‌ನಲ್ಲಿ ಅತ್ಯುತ್ತಮ ವೀಡಿಯೋ ಕಂಟೆಂಟ್‌ ಪ್ರಶಸ್ತಿ.ಅಶ್ವಮೇಧ ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್‌ ಮಾರ್ಕೆಂಟಿಂಗ್‌. ಕ್ಯಾಂಪೇನ್‌(ಆಫ್ಲೈನ್‌) ನಲ್ಲಿ ಅತ್ಯುತ್ತಮ ವೀಡಿಯೋ ಕಂಟೆಂಟ್. +ಶಕ್ತಿ ಯೋಜನೆಗೆ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.ಅಶ್ವಮೇಧ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. +ಪಲ್ಲಕ್ಕಿ ಬ್ರಾಂಡಿಂಗ್‌ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್‌ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್.ಅಂಬಾರಿ ಉತ್ಸವದ ಬ್ರಾಂಡಿಂಗ್‌ಗಾಗಿ ಇನ್ಸ್ಟಾಗ್ರಾಮ್‌ ಕ್ಯಾಂಪೇನ್‌ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. +ಅಶ್ವಮೇಧ ಬ್ರಾಂಡಿಂಗ್‌ಗಾಗಿ ಮೊಬೈಲ್‌ ಮಾರ್ಕೆಂಟಿಂಗ್‌ ಕ್ಯಾಂಪೇನ್‌- ಒಟ್ಟಾರೆ ಅತ್ಯುತ್ತಮ ವೀಡಿಯೊ ಕಂಟೆಂಟ್.ಶ್ರೇಷ್ಠ ವೀಡಿಯೊ ಕಂಟೆಂಟ್‌ ಬ್ರಾಂಡ್ಸ್ ಎಂಟರ್‌ಪ್ರೈಸಸ್‌‍- ಕೆಎಸ್‌‍ಆರ್‌ಟಿಸಿ ಲಭಿಸಿವೆ. +ಎಮ್ಕ್ಯೂಬ್‌ ಪ್ರಶಸ್ತಿಗಳು:ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಪಿಆರ್‌ ಕ್ಯಾಂಪೇನ್.ಬ್ರಾಂಡಿಂಗ್‌ಗಾಗಿ ಕಡಿಮೆ ಬಜೆಟ್‌ ಮಾರ್ಕೆಂಟಿಂಗ್‌ ಕ್ಯಾಂಪೇನ್‌ (ಆಫ್ಲೈನ್).ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್‌ ಕ್ಯಾಂಪೇನ್.ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್‌ ಕಂಟೆಂಟ್.ಬ್ರಾಂಡಿಂಗ್‌ಗಾಗಿ ಶ್ರೇಷ್ಠ ಆನ್‌ಲೈನ್‌ ಪಿಆರ್‌ ಕ್ಯಾಂಪೇನ್‌ ಪ್ರಶಸ್ತಿಗಳು ದೊರೆತಿವೆ. +ನಿಗಮವು ಸಾರಿಗೆ ಸಂಜೀವಿನಿ- ನೌಕರರ ಹೃದಯ ರೋಗ ತಪಾಸಣೆಗಾಗಿ ಮತ್ತು ರಸ್ತೆ ಸುರಕ್ಷತೆ ಉಪಕ್ರಮಗಳಿಗಾಗಿ 2 ಸ್ಕೋಚ್‌ ಆರ್ಡರ್‌ ಆಫ್‌ ಮೆರಿಟ್‌ ಪ್ರಶಸ್ತಿಗಳು ಮತ್ತು ಒಂದು ಸ್ಕೋಚ್‌ ಪ್ರಶಸ್ತಿಯನ್ನು ಪಡೆದಿದೆ. ವೀಡಿಯೊ ಪ್ರಶಸ್ತಿ ಮತ್ತು ಎಮ್ಕ್ಯೂಬ್‌ ಪ್ರಶಸ್ತಿಗಳನ್ನು ಗುರುಗಾಂವ್‌ನಲ್ಲಿ ಪ್ರಧಾನ ಮಾಡಲಾಯಿತು. ಸ್ಕೋಚ್‌ ಆರ್ಡರ್‌ ಆಫ್‌ ಮೆರಿಟ್‌ ಪ್ರಶಸ್ತಿಗಳನ್ನು ಆನ್‌ಲೈನ್‌ನಲ್ಲಿ ನೀಡಲಾಯಿತು. ಇನ್ನು ಸ್ಕೋಚ್‌ ಪ್ರಶಸ್ತಿ ಸಮಾರಂಭವು ಸೆ. 21ರಂದು ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ. \ No newline at end of file diff --git a/eesanje/url_46_28_11.txt b/eesanje/url_46_28_11.txt new file mode 100644 index 0000000000000000000000000000000000000000..62f7263ab3e6969a9e711e49739de144b83e63e2 --- /dev/null +++ b/eesanje/url_46_28_11.txt @@ -0,0 +1,11 @@ +ಅಕ್ಕ ಸಮ್ಮೇಳನ : ಅಮೆರಿಕದಲ್ಲಿ ಮೊಳಗಿದ ಕನ್ನಡ ಕಹಳೆ + +ಬೆಂಗಳೂರು,ಆ.31-ಅಮೆರಿಕದ ಕನ್ನಡ ಕೂಟಗಳ ಆಗರ (ಅಕ್ಕ) ನಡೆಸುವ 12ನೇ ವಿಶ್ವ ಕನ್ನಡ ಸಮೇಳನ ಅಮೆರಿಕದ ವರ್ಜಿನಿಯಾ ರಾಜ್ಯದ ಗ್ರೇಟರ್‌ ರಿಚಂಡ್‌ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಅದ್ಧೂರಿಯಾಗಿ ಆರಂಭಗೊಂಡಿದೆ. +ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರು ಒಗ್ಗೂಡಿ ನಡೆಸುತ್ತಿರುವ ಈ ವಿಶ್ವ ಕನ್ನಡ ಸಮೇಳನಕ್ಕೆ ಅತ್ಯಂತ ಉತ್ಸಾಹ ಕಂಡುಬಂದಿದ್ದು, ಕನ್ನಡ ನಾಡಿನ ಹಿರಿಮೆ, ಗರಿಮೆ, ಸಾಹಿತ್ಯ, ಸಂಗೀತದ ಮತ್ತು ಸಂಸ್ಕೃತಿ ಅನಾವರಣಗೊಂಡಿದೆ. +ಎಲ್ಲೆಡೆ ಕನ್ನಡ ಬಾವುಟ ರಾರಾಜಿಸುತ್ತಿದ್ದು, ಉದ್ಘಾಟನೆಗೆ ಮುನ್ನ ನಡೆದ ಮೆರವಣಿಗೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ನೂರಾರು ಮಂದಿ ಕನ್ನಡಿಗರು ಭಾಗವಹಿಸಿದ್ದು ಎಲ್ಲರನ್ನೂ ಚಕಿತಗೊಳಿಸಿತು. +ಮಾಯಾನಗರಿ ಎಂದೇ ಬಿಂಬಿತವಾಗಿರುವ ವಿಶ್ವದ ಶ್ರೀಮಂತ ರಾಷ್ಟ್ರ ಅಮೆರಿಕದಲ್ಲಿ ನಡೆಯುತ್ತಿರುವ ಮೂರು ದಿನಗಳ ಈ ಕನ್ನಡ ಸಮೇಳನಕ್ಕೆ ರಾಜ್ಯದಿಂದಲೂ ಕಲಾವಿದರು, ಸಾಹಿತಿಗಳು, ಜನಪ್ರತಿನಿಧಿಗಳು ತೆರಳಲಿದ್ದಾರೆ. +ಸಭಾಪತಿ ಬಸವರಾಜ ಹೊರಟ್ಟಿ, ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಸಚಿವ ಆಂಜನೇಯ ಸೇರಿದಂತೆ ಹಲವು ಗಣ್ಯರು ಅಮೆರಿಕಕ್ಕೆ ಆಗಮಿಸಿದ್ದಾರೆ. ನಾವು ಅಮೆರಿಕದಲ್ಲಿ ನೆಲೆಸಿದ್ದರೂ ನಮ ತಾಯ್ನಾಡಿನ ಬೇರು ಮರೆಯುವಂತಿಲ್ಲ. ನಾವು ಹುಟ್ಟಿದ ಸ್ಥಳವನ್ನು ಸದಾ ನೆನೆದು ಕರ್ಮಭೂಮಿಯಾದ ಭಾರತದ ಬಗ್ಗೆ ನಮಗೆ ಅಪಾರ ಗೌರವವಿದೆ. +ಇಂದು ವಿಶ್ವದಲ್ಲಿ ಅತಿ ಎತ್ತರಕ್ಕೆ ಬೆಳೆಯುತ್ತಿರುವ ಭಾರತದ ಬಗ್ಗೆ ನಮಗೆ ಅತೀವ ಹೆಮೆಯಿದೆ. ನಮ ಕನ್ನಡ ಭಾಷೆಯನ್ನು ಅಮೆರಿಕದಲ್ಲಿ ಪಸರಿಸುವಂತಹ ಜವಾಬ್ದಾರಿ ನನ್ನ ಮೇಲಿದೆ. ಇದನ್ನು ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂಬ ವಿಶ್ವಾಸವಿದೆ ಎಂದು ರವಿ ಬೋರೇಗೌಡ ಹೇಳಿದರು. +ಇದೇ ವೇಳೆ ಅಕ್ಕ ಸಂಸ್ಥಾಪಕ ಅಧ್ಯಕ್ಷ ಡಾ.ಅಮರನಾಥ್‌ ಗೌಡ, ಖ್ಯಾತ ಉದ್ಯಮಿ ವಿಶ್ವಾಮಿತ್ರ ಸೇರಿದಂತೆ ಹಲವು ಕನ್ನಡಿಗರು ನಾಲ್ಕು ವರ್ಷದ ಬಳಿಕ ಮತ್ತೆ ಅಮೆರಿಕದಲ್ಲಿ ಅಕ್ಕ ವಿಶ್ವ ಕನ್ನಡ ಸಮೇಳನ ನಡೆಯುತ್ತಿದೆ. ಅಚ್ಚುಕಟ್ಟಾಗಿ ಎಲ್ಲರೂ ಒಂದಾಗಿ ನಮ ಕನ್ನಡದ ಸಿರಿಯನ್ನು ಎಲ್ಲೆಡೆ ಹರಡುತ್ತಿದ್ದೇವೆ. +ಸುಮಾರು 5 ಸಾವಿರಕ್ಕೂ ಹೆಚ್ಚು ಕನ್ನಡಿಗರು ಅಮೆರಿಕದ ವಿವಿಧ ರಾಜ್ಯಗಳಿಂದ ರಿಚಂಡ್‌ಟೌನ್‌ಗೆ ಬಂದಿದ್ದಾರೆ. ಇಲ್ಲಿನ ಸರ್ಕಾರ ಕೂಡ ನಮಗೆ ಸ್ಪಂದಿಸಿದೆ. ನಮ ಸಂಸ್ಕೃತಿಯಲ್ಲಿ ಅವರೂ ಕೂಡ ಬೆರೆತಿದ್ದಾರೆ.ಕರ್ನಾಟಕ ಸರ್ಕಾರ ಕೂಡ ಸಹಕಾರ ನೀಡುತ್ತಿದ್ದು, ಉದ್ಘಾಟನೆ ನೆರವೇರಿದ್ದು, ಇನ್ನೂ ಹಲವಾರು ಕಾರ್ಯ ಕ್ರಮಗಳು ನಡೆಯುತ್ತಿದ್ದು, ಸುಸೂತ್ರವಾಗಿ ನಡೆಯಲು ಎಲ್ಲಾ ಸಿದ್ಧತೆಗಳು ನಡೆದಿವೆ ಎಂದು ತಿಳಿಸಿದರು. +ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂ ಡಿಂ ಡಮವ ಹಾಡಿನ ಜೊತೆಗೆ ಎಲ್ಲಾದರೂ ಇರು, ಎಂತಾದರೂ ಇರು, ನೀ ಕನ್ನಡವಾಗಿರು ಸೇರಿದಂತೆ ಹಲವಾರು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಕಲಾವಿದರು ಅಮೆರಿಕದ ರಿಚಂಡ್‌ಟೌನ್‌ನಲ್ಲಿ ಕನ್ನಡದ ವಾತಾವರಣವನ್ನು ಮೂಡಿಸಿದ್ದಾರೆ. ವಿದ್ಯಾಭೂಷಣ್‌ ಅವರ ಗೀತಗಾಯನ, ಗುರುಕಿರಣ್‌ ಅವರ ಪುನೀತ್‌ ನೈಟ್‌್ಸ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ನಡೆದವು. \ No newline at end of file diff --git a/eesanje/url_46_28_12.txt b/eesanje/url_46_28_12.txt new file mode 100644 index 0000000000000000000000000000000000000000..9ca1b605f0aa1465181fb8301cb07187073738c9 --- /dev/null +++ b/eesanje/url_46_28_12.txt @@ -0,0 +1,7 @@ +ತಿಂಗಳೊಳಗೆ ದರ್ಶನ್‌ ರಾಜಾತಿಥ್ಯ ಪ್ರಕರಣದ ತನಿಖೆ ಪೂರ್ಣಗೊಳಿಸಲು ಸೂಚನೆ + +ಬೆಂಗಳೂರು,ಆ.31-ನಟ ದರ್ಶನ್‌ ಹಾಗೂ ಕುಖ್ಯಾತ ರೌಡಿಗಳಿಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ ಬಗ್ಗೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಒಂದು ತಿಂಗಳೊಳಗೆ ಮುಗಿಸಬೇಕೆಂದು ತಂಡಗಳಿಗೆ ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ಆದೇಶಿಸಿದ್ದಾರೆ. +ಈ ಹಿನ್ನೆಲೆಯಲ್ಲಿ ಮೂರು ತನಿಖಾ ತಂಡಗಳೂ ತನಿಖೆಯನ್ನು ಚುರುಕುಗೊಳಿಸಿದ್ದು, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ, ಹೇಳಿಕೆ ಪಡೆದುಕೊಳ್ಳುತ್ತಿವೆ. +ನಟ ದರ್ಶನ್‌ ಹಾಗೂ ಕುಖ್ಯಾತ ರೌಡಿಗಳಿಗೆ ಯಾವ ಯಾವ ರೀತಿಯ ಸೌಲಭ್ಯಗಳನ್ನು ನೀಡುತ್ತಿದ್ದೀರಾ, ಎಷ್ಟು ದಿನಗಳಿಂದ ಈ ಎಲ್ಲಾ ಸವಲತ್ತುಗಳನ್ನು ಕೊಟ್ಟಿದ್ದೀರಾ, ಬೇರೆ ಖೈದಿ, ವಿಚಾರಣಾ ಖೈದಿಗಳಿಗೂ ಈ ರೀತಿಯ ಸೌಲಭ್ಯಗಳನ್ನು ನೀಡಿದ್ದೀರಾ? ಎಂಬೆಲ್ಲಾ ಬಗ್ಗೆ ಮೂರು ತನಿಖಾ ತಂಡಗಳು ಅಲ್ಲಿನ ಸಿಬ್ಬಂದಿಗಳು, ಹಿರಿಯ ಅಧಿಕಾರಿಗಳಿಂದ ಮಾಹಿತಿಯನ್ನು ಸಂಗ್ರಹಿಸುತ್ತಿವೆ. +ನಟ ದರ್ಶನ್‌ ಹಾಗೂ ರೌಡಿಗಳಿಗೆ ರಾಜಾತಿಥ್ಯ ನೀಡುತ್ತಿದ್ದ ಫೋಟೊಗಳು ವೈರಲ್‌ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. +ಜೈಲಧಿಕಾರಿಗಳು ಕರ್ತವ್ಯಲೋಪ ಎಸಗಿರುವ ಬಗ್ಗೆ ಎಲೆಕ್ಟ್ರಾನ್‌ ಸಿಟಿ ಉಪವಿಭಾಗದ ಎಸಿಪಿಯವರು, ಉಳಿದ ಎರಡು ಪ್ರಕರಣಗಳನ್ನು ಪರಪ್ಪನ ಅಗ್ರಹಾರ ಹಾಗೂ ಬಂಡೆಪಾಳ್ಯ ಠಾಣೆಯ ಇನ್‌್ಸಪೆಕ್ಟರ್‌ಗಳು ತನಿಖೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_28_2.txt b/eesanje/url_46_28_2.txt new file mode 100644 index 0000000000000000000000000000000000000000..2811f2f895ff9dc6d80fbbc3e517ac6c84e72302 --- /dev/null +++ b/eesanje/url_46_28_2.txt @@ -0,0 +1,11 @@ +ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ, ಕೆಲವು ಗ್ರಾಮಗಳಿಗೆ ಜಲದಿಗ್ಬಂಧನ +ಯಾದಗಿರಿ/ಬೆಳಗಾವಿ,ಸೆ.2-ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಜಿಲ್ಲೆಯ ಗುರುಮಟ್ಕಲ್‌ ತಾಲ್ಲೂಕಿನ ನಂದೆಪಲ್ಲಿ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. +ಜಿಲ್ಲೆಯಲ್ಲಿ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ನಂದೆಪಲ್ಲಿ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. +ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮೋಟನಹಳ್ಳಿ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. +ಅದೇ ರೀತಿ ಹುಬ್ಬಳ್ಳಿಯಲ್ಲೂ ಭಾರಿ ಮಳೆಯಾಗುತ್ತಿದ್ದು, ಕಮಲಾವತಿ ನದಿ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೆಲವು ಗ್ರಾಮಗಳು ಜಲದಿಗ್ಬಂಧನವಾಗಿವೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯ ಬೆನಕನಹಳ್ಳಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ಮಿರಿಯಾಣ ಸೇತುವೆ ಮುಳುಗಡೆಯಾಗಿದೆ. +ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮೂರ್ನಾಲ್ಕು ದಿನಗಳಿಂದ ಅಬ್ಬರಿಸುತ್ತಿದ್ದು, ಅಕ್ಷರಸಹ ಜನರು ಪರದಾಡುವಂತಾಗಿದೆ. ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿವೆ. +ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. +ಮಲಪ್ರಭಾ, ಘಟಪ್ರಭಾ ನದಿ ಮತ್ತೆ ಉಕ್ಕಿ ಹರಿಯತೊಡಗಿದೆ. ಕಾಗಿಣ ನದಿ ಪ್ರವಾಹದಿಂದ ಸೇಡಂ ತಾಲ್ಲೂಕಿನ ಹಳೆಯ ಸೇತುವೆ ಮುಳುಗಡೆಯಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಜಲಾಶಯಗಳು ಭರ್ತಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದ್ದು, ನದಿಪಾತ್ರದ ಜನ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. +ಕಾಳಗಿಯ ಐತಿಹಾಸಿಕ ನೀಲಕಂಠ ಕಾಳೇಶ್ವರ ದೇವಸ್ಥಾನ, ಮುಳಕೇಡದ ಉತ್ತರಾದಿಮಠ, ಜಯತೀರ್ಥ ಮೂಲ ವೃಂದಾವನ, ಸಂಗಮೇಶ್ವರ ದೇವಾಲಯ ಜಲಾವೃತಗೊಂಡಿವೆ. +ಕಲಬುರಗಿಯ ಕಿರು ಮೃಗಾಲಯಕ್ಕೆ ನೀರು ನುಗ್ಗಿ ಮೃಗಾಲಯದಲ್ಲಿರುವ ಪ್ರಾಣಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ಕೊಪ್ಪಳದಲ್ಲೂ ಭಾರಿ ಮಳೆಯಾಗಿದೆ. ಅಬ್ಬರದ ಮಳೆ-ಗಾಳಿಗೆ ಹತ್ತಾರು ಮನೆಗಳಿಗೆ ಹಾನಿಯಾಗಿದೆ. ಬೆಳಗಾವಿ, ಗದಗ ಜಿಲ್ಲೆಯಲ್ಲೂ ಕೂಡ ಮಳೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. +ಒಟ್ಟಾರೆ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ವರುಣ ಕಳೆದೆರಡು ದಿನಗಳಿಂದ ಮತ್ತೆ ಅಬ್ಬರಿಸತೊಡಗಿದ್ದು, ಉತ್ತರ ಕರ್ನಾಟಕದ ಜನ ತತ್ತರಿಸತೊಡಗಿದ್ದಾರೆ. \ No newline at end of file diff --git a/eesanje/url_46_28_3.txt b/eesanje/url_46_28_3.txt new file mode 100644 index 0000000000000000000000000000000000000000..87728d22a5d1aeb0ec8d99d50b430283028cc704 --- /dev/null +++ b/eesanje/url_46_28_3.txt @@ -0,0 +1,9 @@ +ಬಿಜೆಪಿ ವಿರುದ್ಧ ಹೋರಾಟ ತೀವ್ರಗೊಳಿಸಲು ಸಿಎಂ ಸಿದ್ದರಾಮಯ್ಯ ಕರೆ + +ಬೆಂಗಳೂರು,ಸೆ.1-ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳನ್ನು ಸಮರ್ಥವಾಗಿ ಜನರ ಮುಂದಿಡುವ ಮೂಲಕ ಕಾನೂನಾತಕ ಹಾಗೂ ರಾಜಕೀಯ ಹೋರಾಟಗಳನ್ನು ಮುಂದುವರೆಸಲು ಆಯಾ ಜಿಲ್ಲೆಗಳಲ್ಲಿ ಜನಜಾಗೃತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. +ನಿನ್ನೆ ತಮ ನಿವಾಸದಲ್ಲಿ ಸಂಪುಟದ ಸಚಿವರೊಂದಿಗೆ ಔತಣಕೂಟ ನಡೆಸಿದ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿನ ವಾಸ್ತವಾಂಶಗಳನ್ನು ಮತ್ತೊಮೆ ಸಂಪುಟದ ಸದಸ್ಯರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದರಲ್ಲಿ ತಮದು ಯಾವುದೇ ಪಾತ್ರವಿಲ್ಲ ಎಂದು ಪುನರುಚ್ಚರಿಸಿದ್ದಾರೆ. +ಮುಡಾದಿಂದ 14 ನಿವೇಶನಗಳನ್ನು ಪಡೆಯಲು ತಾವು ಯಾವುದೇ ಪ್ರಭಾವ ಬಳಕೆ ಮಾಡಿಲ್ಲ. ಜಮೀನಿಗೆ ಪರ್ಯಾಯವಾಗಿ ಭೂಮಿ ನೀಡಲಾಗಿದೆ. ಬಿಜೆಪಿಯವರು ಇದನ್ನು ದುರುದ್ದೇಶಪೂರಿತವಾಗಿ ಹಗರಣ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ. +ಬಿಜೆಪಿ ಅವಧಿಯಲ್ಲಿನ ಲೆಕ್ಕಾಚಾರಗಳನ್ನು ಬಯಲಿಗೆಳೆಯಲು ಹೈಕಮಾಂಡ್ ಸೂಚನೆ ನೀಡಿದೆ. ಅದೇ ಸಂದರ್ಭದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಡೆಸುತ್ತಿರುವ ಹುನ್ನಾರಗಳ ವಿರುದ್ಧವೂ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಆಪರೇಷನ್ ಕಮಲದ ವಿಚಾರವಾಗಿ ಎಚ್ಚರಿಕೆ ವಹಿಸಬೇಕು. +ಸಚಿವರುಗಳು ತಮ ಜಿಲ್ಲಾ ಸಚಿವರ ಜೊತೆಗೆ ಸೌಹಾರ್ದಯುತ ಸಂಪರ್ಕವನ್ನು ರೂಢಿಸಿಕೊಳ್ಳ ಬೇಕು. ಬಿಜೆಪಿ ಕೋಟ್ಯಂತರ ರೂಪಾಯಿ ಹಣದ ಆಮಿಷ ತೋರಿಸಿ ಶಾಸಕರನ್ನು ಸೆಳೆಯುವ ಯತ್ನ ನಡೆಸುತ್ತಿದೆ.ಇದಕ್ಕೆ ಅವಕಾಶ ನೀಡದಂತೆ ಪದೇಪದೇ ಪಕ್ಷದ ಶಾಸಕರ ಜೊತೆ ಸಭೆ ನಡೆಸುವುದು, ಸಮಾಲೋಚನೆಗಳನ್ನು ಮುಂದುವರೆಸುವಂತೆ ತಾಕೀತು ಮಾಡಿದ್ದಾರೆ. +ಮಹಾತ ಗಾಂಧೀಜಿ ಎಐಸಿಸಿ ಅಧ್ಯಕ್ಷರಾಗಿ ಬೆಳಗಾವಿಯಲ್ಲಿ ಮಹಾ ಅಧಿವೇಶನ ನಡೆಸಿ 100 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಣೆಗೆ ತಯಾರಿ ನಡೆದಿದ್ದು, ಈ ಕಾರ್ಯಕ್ರಮದ ಉಸ್ತುವಾರಿಯನ್ನು 15 ಸಚಿವರು ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. +ಈ ಮೂಲಕ ಪಕ್ಷದ ಸಂಘಟನೆಗೂ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ , ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತಯಾರಿ ನಡೆಸುವಂತೆಯೂ ಹೈಕಮಾಂಡ್ ಸೂಚನೆ ನೀಡಿದೆ.ಸಭೆಯಲ್ಲಿ ಆಯ್ದ ಸಚಿವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_28_4.txt b/eesanje/url_46_28_4.txt new file mode 100644 index 0000000000000000000000000000000000000000..e45367a05403118a909b46ee1765aad6b05b2dd2 --- /dev/null +++ b/eesanje/url_46_28_4.txt @@ -0,0 +1,7 @@ +ಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್, ಹಿಂದಿನ ಆಯುಕ್ತರ ವಿರುದ್ಧ `ಲೋಕಾ’ಗೆ ದೂರು + : +ಮೈಸೂರು,ಸೆ.1-ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮುಡಾ ಆಯುಕ್ತರಾಗಿದ್ದ ಇಬ್ಬರ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.ಕೆಎಎಸ್ ಅಧಿಕಾರಿಗಳಾದ ನಟೇಶ್, ದಿನೇಶ್ ಕುಮಾರ್ ಅವರ ವಿರುದ್ಧ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.ಈ ಇಬ್ಬರೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೂಡಲೇ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧಿಸಬೇಕು. +ಇದಲ್ಲದೆ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಅಧಿಕಾರಿಗಳಿಂದಲೇ ಹಣ ವಸೂಲಿ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. +ಅಕ್ರಮವಾಗಿ 50:50 ಅನುಪಾತದಲ್ಲಿ ಸರಿ ಸುಮಾರು 5.00 ಲಕ್ಷ ಚ.ಅ. ಗೂ ಹೆಚ್ಚಿನ ನಿವೇಶನಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿರುವುದು ಕಂಡುಬಂದ ಹಿನ್ನಲೆಯಲ್ಲಿ ಅಂತಹ ಆದೇಶಗಳನ್ನು ರದ್ದುಗೊಳಿಬೇಕು. +ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ, ಕೆಎಎಸ್ ಅಧಿಕಾರಿ ದಿನೇಶ್ ಕುಮಾರ್ ಜಿ.ಟಿರವರ ವಿರುದ್ಧ ಮತ್ತು ಇಂತಹ ಪ್ರಕರಣಗಳಲ್ಲಿ ಭಾಗಿಯಾದಂತಹ ಇತರೆ ಅಧಿಕಾರಿ ವರ್ಗದವರ ಮೇಲೆ ಸೂಕ್ತ ತನಿಖೆ ನಡೆಸಿ ಸರಿಯಾದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ಇವರಿಗೆ ಸೂಕ್ತ ದಾಖಲೆಗಳೊಂದಿಗೆ ಪತ್ರ ಬರೆದಿದ್ದರೂ ಸಹ ಈ ತನಕ ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. +ಅಕ್ರಮಗಳಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 5,000 ಕೋಟಿಗಳಷ್ಟು ನಷ್ಟ ಉಂಟಾಗಿದೆ.ಈ ಕೂಡಲೇ ಅಕ್ರಮದಲ್ಲಿ ಭಾಗಿಯಾಗಿರುವ ಅಧಿಕಾರಿ ವರ್ಗದವರನ್ನು ಬಂಧಿಸಿ ಸರ್ಕಾರಕ್ಕೆ ಆಗಿರುವ ನಷ್ಟವನ್ನು ಸದರಿ ಅಧಿಕಾರಿಗಳಿಂದಲೇ ಭರಿಸುವಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_28_5.txt b/eesanje/url_46_28_5.txt new file mode 100644 index 0000000000000000000000000000000000000000..dda38285fa1a2650ace3dd99f994a0411da2e138 --- /dev/null +++ b/eesanje/url_46_28_5.txt @@ -0,0 +1,11 @@ +ಕ್ರಸ್ಟ್ ಗೇಟ್ ತುಂಡಾಗಿ ಖಾಲಿಯಾಗಿದ್ದ ತುಂಗಭದ್ರಾ ಜಲಾಶಯ ಮತ್ತೆ ಭಾರ್ತಿ + 92tmcft +ಬೆಂಗಳೂರು,ಸೆ.1-ಕ್ರಸ್ಟ್ ಗೇಟ್ವೊಂದರ ಚೈನ್ ಲಿಂಕ್ ತುಂಡಾಗಿ ಆತಂಕ ಉಂಟು ಮಾಡಿದ್ದ ತುಂಗಭದ್ರಾ ಜಲಾಶಯ ಮತ್ತೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಆಶಾಭಾವನೆ ಮೂಡಿಸಿದೆ. ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಶೇ.92ರಷ್ಟು ನೀರು ಹರಿದುಬಂದಿದೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, 105.79 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಇಂದು 96.84 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. 40 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಒಳಹರಿವಿದ್ದು, 13 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಹೊರಹರಿವಿದೆ. ಶೇ.92ರಷ್ಟು ಭರ್ತಿಯಾಗಿದೆ. +1633 ಅಡಿ ಎತ್ತರದ ಈ ಜಲಾಶಯದಲ್ಲಿ ಈಗಾಗಲೇ 1630.73 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಒಳಹರಿವು ಸಾಕಷ್ಟು ಪ್ರಮಾಣದಲ್ಲಿದೆ. ಹೀಗಾಗಿ ಜಲಾಶಯ ಭರ್ತಿಯಾಗುವುದು ಬಹುತೇಕ ಖಚಿತವಾಗಿದೆ.ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಮುನ್ಸೂಚನೆಯನ್ನು ತುಂಗಭದ್ರಾ ಮಂಡಳಿ ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸೂಚನೆ ರವಾನಿಸಿದೆ. +ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಸುಮಾರು 35 ಸಾವಿರ ಟಿಎಂಸಿಗೂ ಅಧಿಕ ನೀರು ಹರಿದುಹೋಗಿತ್ತು. ಮತ್ತೆ ಜಲಾಶಯ ಭರ್ತಿಯಾಗುತ್ತೋ ಇಲ್ಲವೋ ಎಂಬ ಆತಂಕ ಮನೆ ಮಾಡಿತ್ತು.ಸರ್ಕಾರ ಮುರಿದು ಹೋಗಿದ್ದ ಗೇಟ್ ಅನ್ನು ಬದಲಿಸಿ ತುರ್ತಾಗಿ ಹೊಸ ಗೇಟ್ ಅಳವಡಿಸಿದ್ದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಏರಿಕೆಯಾಗುತ್ತಾ ಬಂದಿದೆ. +ರಾಜ್ಯದ ಪ್ರಮುಖ 14 ಜಲಾಶಯಗಳ ಗರಿಷ್ಠ ನೀರಿನ ಪ್ರಮಾಣ 895.62 ಟಿಎಂಸಿ ಆಗಿದ್ದು, ಇದುವರೆಗೂ 831.95 ಟಿಎಂಸಿ ಸಂಗ್ರಹವಾಗಿದೆ. ಕಾವೇರಿ ಜಲಾನಯನ ಭಾಗದ ಹಾರಂಗಿ, ಹೇಮಾವತಿ, ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿವೆ. +ಅದೇ ರೀತಿ ಕೃಷ್ಣಾ ಕೊಳ್ಳದ ಭದ್ರಾ, ಘಟಪ್ರಭ, ಮಲಪ್ರಭ, ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿವೆ. ತುಂಗಭದ್ರ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿತ್ತು. ಆದರೆ ಗೇಟ್ ಚೈನ್ಲಿಂಕ್ ಕಟ್ಟಾದ ಪರಿಣಾಮ ನೀರು ಪೋಲಾಗಿತ್ತು. ಈಗ ಮತ್ತೆ ಜಲಾಶಯದಲ್ಲಿ ನೀರು ಸಂಗ್ರಹವಾಗಿರುವುದರಿಂದ ನದಿಪಾತ್ರದ ಜನರಲ್ಲಿ ಸಂತಸ ಉಂಟಾಗಿದೆ. +ವಾಣಿವಿಲಾಸ ಸಾಗರದ ಜಲಾಶಯದಲ್ಲಿ ಶೇ.70ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಗರಿಷ್ಠ 30.42 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಇದುವರೆಗೂ 21.22 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಒಳ ಹರಿವು 693 ಕ್ಯೂಸೆಕ್ನಷ್ಟಿದ್ದು, ಹೊಳಹರಿವು 135 ಕ್ಯೂಸೆಕ್‌್ಸನಷ್ಟಿದೆ. +ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ ಹಾಗೂ ಸೂಪಾ ಜಲಾಶಯಗಳು ಕೂಡ ಭರ್ತಿಯಾಗುವ ಹಂತದಲ್ಲಿವೆ. ಲಿಂಗನಮಕ್ಕಿ ಜಲಾಶಯಕ್ಕೆ 151.75 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯವಿದ್ದು, ಈಗಾಗಲೇ 146.75 ಟಿಎಂಸಿ ನೀರಿದೆ.17 ಸಾವಿರ ಕ್ಯೂಸೆಕ್ಗೂ ಹೆಚ್ಚು ಕ್ಯೂಸೆಕ್ ನೀರಿನ ಒಳಹರಿವಿದ್ದು, 12 ಸಾವಿರಕ್ಕೂ ಹೆಚ್ಚು ಹೊರಹರಿವಿದೆ. ಶೇ. 97ರಷ್ಟು ಈಗಾಗಲೇ ಭರ್ತಿಯಾಗಿದೆ. +ಸೂಪಾ ಜಲಾಶಯವು 145.3 ಟಿಎಂಸಿ ಗರಿಷ್ಠ ಸಾಮರ್ಥ್ಯವಿದ್ದು, ಈಗಾಗಲೇ 131.08 ಟಿಎಂಸಿ ನೀರು ಸಂಗ್ರಹವಾಗಿದ್ದು, ಶೇ.90ರಷ್ಟು ಭರ್ತಿಯಾಗಿದೆ.10 ಸಾವಿರ ಕ್ಯೂಸೆಕ್ಗೂ ಹೆಚ್ಚು ಒಳಹರಿವು, 4.5 ಸಾವಿರ ಕ್ಯೂಸೆಕ್ಗೂ ಹೆಚ್ಚು ಹೊರಹರಿವಿದೆ. ವಾರಾಹಿ ಜಲಾಶಯದ ಗರಿಷ್ಠ ಸಾಮರ್ಥ್ಯ 31.10 ಟಿಎಂಸಿ ಆಗಿದ್ದು, 23.65 ಟಿಎಂಸಿ ನೀರು ಸಂಗ್ರಹವಿದ್ದು, ಶೇ.76ರಷ್ಟು ಭರ್ತಿಯಾಗಿದೆ. 1800 ಕ್ಯೂಸೆಕ್ಗೂ ಹೆಚ್ಚು ಒಳ ಹರಿವಿದೆ. \ No newline at end of file diff --git a/eesanje/url_46_28_6.txt b/eesanje/url_46_28_6.txt new file mode 100644 index 0000000000000000000000000000000000000000..87d54598be7d2f5add455474fb5c24bd15952d00 --- /dev/null +++ b/eesanje/url_46_28_6.txt @@ -0,0 +1,5 @@ +ದಸರಾ ಗಜಪಡೆಗೆ ಭಾರ ಹೊರುವ ತಾಲೀಮು ಆರಂಭ + +ಮೈಸೂರು,ಸೆ.1-ವಿಶ್ವ ವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವ ಆನೆಗಳಿಗೆ ಭಾರ ಹೊರುವ ತಾಲೀಮು ಇಂದಿನಿಂದ ಆರಂಭಿಸಲಾಗಿದೆ.ದಸರಾ ಆಕರ್ಷಣೆಯಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು 5 ಕಿಲೋಮೀಟರ್ ಹೆಜ್ಜೆ ಹಾಕಲಿದ್ದಾನೆ. +ಈ ಹಿನ್ನೆಲೆಯಲ್ಲಿ ಅಭಿಮನ್ಯು ಸೇರಿದಂತೆ ಇತರೆ ಆನೆಗಳಿಗೆ ಇಂದಿನಿಂದ ಭಾರ ಹೊರುವ ತಾಲೀಮು ಆರಂಭಿಸಲಾಗಿದೆ.ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆ ಶೆಡ್ನಲ್ಲಿ ಇಂದು ಬೆಳಿಗ್ಗೆ 7.30 ಸುಮಾರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಅಭಿಮನ್ಯುವಿನ ಹೆಗಲ ಮೇಲೆ 600 ಕೆ.ಜಿ. ತೂಕದ ಮರಳಿನ ಮೂಟೆಗಳನ್ನು ಹೊರಿಸಿ ಅರಮನೆಯಿಂದ ಬನ್ನಿಮಂಟಪದವರೆಗೂ ತಾಲೀಮು ನಡೆಸಲಾಯಿತು. +ಈ ವೇಳೆ ಗಾಂಭೀರ್ಯದಿಂದಲೇ ಅಭಿಮನ್ಯು ಹೆಜ್ಜೆ ಹಾಕಿದ್ದು, ಜನರು ವೀಕ್ಷಿಸಿದರು. ಉಳಿದ ಆನೆಗಳಿಗೆ ಹಂತಹಂತವಾಗಿ ಭಾರ ಹೊರುವ ತಾಲೀಮು ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಮಾವುತರು ತಿಳಿಸಿದ್ದಾರೆ. \ No newline at end of file diff --git a/eesanje/url_46_28_7.txt b/eesanje/url_46_28_7.txt new file mode 100644 index 0000000000000000000000000000000000000000..17505cfefe07faaeab16ad50a7b70a58e08a2ef5 --- /dev/null +++ b/eesanje/url_46_28_7.txt @@ -0,0 +1,6 @@ +ಬ್ಲ್ಯಾಕ್‌ ಮೇಲ್‌ಗೆ ಯತ್ನಿಸಿದ ಬಳ್ಳಾರಿ ವೈದ್ಯೆಗೆ ಹೈಕೋರ್ಟ್‌ ತರಾಟೆ + +ಬೆಂಗಳೂರು :ಕೊಟ್ಟ ಸಾಲ ವಾಪಾಸ್‌ ಕೇಳಿದ ಕಾರಣಕ್ಕೆ ಬಿಜೆಪಿ ಮುಖಂಡನ ವಿರುದ್ಧ ದೈಹಿಕ ಹಾಗೂ ಮಾನಸಿಕ ಕಿರುಕುಳದ ಸುಳ್ಳು ದೂರು ನೀಡಿದ ಬಳ್ಳಾರಿ ಮೂಲದ ವೈದ್ಯೆ ಡಾ.ಶಶಿಕಲಾ ಹೊನ್ನಾಳಿ ಎಂಬವರಿಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡು ಛೀಮಾರಿ ಹಾಕಿದೆ. +ಬಳ್ಳಾರಿ ಜಿಲ್ಲೆಯ ಹೊನ್ನಾಳಿ ಗ್ರಾಮದ ಡಾ.ಶಶಿಕಲಾ ಹೊನ್ನಾಳಿ ಅವರ ಈ ವರ್ತೆನೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ನ್ಯಾಯಾಲಯ, ಸಿವಿಲ್‌ ಸ್ವರೂಪದ ಈ ಪ್ರಕರಣಕ್ಕೆ ಅನಗತ್ಯವಾಗಿ ಕ್ರಿಮಿನಲ್‌ ರೂಪ ನೀಡಲಾಗಿದೆ. ಇದೊಂದು ಉತ್ಪೇಕ್ಷೆ ಹಾಗೂ ಕಟ್ಟುಕತೆಯಿಂದ ಕೂಡಿದ ಪ್ರಕರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ದೂರುದಾರರ ವಿರುದ್ಧ ಹಣದ ಬೇಡಿಕೆಗಾಗಿ ಕ್ರಿಮಿನಲ್‌ ಪ್ರಕರಣ ದಾಖಲಿಸುವ ಬೆದರಿಕೆ ಹಾಗೂ ಒತ್ತಡ ತಂತ್ರವನ್ನು ಅನುಸರಿಸಿರುವುದು ಕಂಡು ಬರುತ್ತಿದೆ ಎಂದು ಹೇಳಿ ಪ್ರಕರಣವನ್ನು ವಜಾಗೊಳಿಸಿದೆ. +ಅರ್ಜಿದಾರರು ದೂರುದಾರರ ಜತೆಗೆ ಪಾಲುದಾರಿಕೆಯಲ್ಲಿ ಪ್ರಾರಂಭಿಸಿದ ಕಂಪನಿಯೊಂದರಲ್ಲಿ ನಿರ್ದೇಶಕರಾಗಿದ್ದರು. ವ್ಯಾಪಾರ ಉದ್ದೇಶಕ್ಕಾಗಿಯೇ ವೈದ್ಯೆ ಶಶಿಕಲಾ ಹೊನ್ನಾಳಿ ಸಾಲ ಪಡೆದಿದ್ದರು. ಕೊಟ್ಟ ಸಾಲ ವಾಪಾಸ್‌ ಕೇಳಿದ ಕಾರಣಕ್ಕಾಗಿ “ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆʼ ಎಂದು ಆರೋಪಿಸಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. +ಇದನ್ನು ಪ್ರಶ್ನಿಸಿ ಬಿಜೆಪಿ ಮುಖಂಡ ಹೈಕೋರ್ಟ್‌ ಧಾರವಾಡ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಒತ್ತಡದ ಮೂಲಕ ಸಿವಿಲ್‌ ಪ್ರಕರಣಕ್ಕೆ ಕ್ರಿಮಿನಲ್‌ ಸ್ವರೂಪ ನೀಡಿದ್ದು ತಪ್ಪೆಂದು ಡಾ.ಶಶಿಕಲಾಗೆ ಛೀಮಾರಿ ಹಾಕಿ ಪ್ರಕರಣ ವಜಾಗೊಳಿಸಿದೆ. ಸುಳ್ಳು ಪ್ರಕರಣ ದಾಖಲಿಸಿದ ಶಶಿಕಲಾ ವಿರುದ್ಧ ಬೆಂಗಳೂರಿನ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನಹಾನಿ ಹಾಗೂ ಸಾಲ ವಸೂಲಾತಿಗೆ ದಾವೆ ಹೂಡಲಾಗಿದೆ. \ No newline at end of file diff --git a/eesanje/url_46_28_8.txt b/eesanje/url_46_28_8.txt new file mode 100644 index 0000000000000000000000000000000000000000..9b491a1165d139810e85de07e89cbae284583295 --- /dev/null +++ b/eesanje/url_46_28_8.txt @@ -0,0 +1,8 @@ +ಚನ್ನಪಟ್ಟಣ ಚುನಾವಣೆಯನ್ನು ಪ್ರತಿಷ್ಠೆಯಾಗಿಸಿಕೊಂಡ ಡಿಕೆಶಿ, ರಜಾ ದಿನವೂ ಫುಲ್ ಬ್ಯುಸಿ + +ಬೆಂಗಳೂರು, ಸೆ.1-ಚನ್ನಪಟ್ಟಣ ವಿಧಾನ ಸಭೆ ಉಪಚುನಾವಣೆಯನ್ನು ಸವಲಾಗಿ ಸ್ವೀಕರಿಸುವ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಇಂದು ರಜಾ ದಿನವೂ ವಿಶ್ರಾಂತಿ ಪಡೆಯದೆ ಜನಸ್ಪಂದನ ಸಭೆ ನಡೆಸಿದ್ದಾರೆ.ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿದ್ದ ಎಚ್‌.ಡಿ. ಕುಮಾರಸ್ವಾಮಿ, ಸಂಡೂರು ಕ್ಷೇತ್ರದ ಇ. ತುಕರಾಂ, ಶಿಗ್ಗಾಂವಿ ಕ್ಷೇತ್ರದ ಬಸವರಾಜ ಬೊಮಾಯಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿರುವುದರಿಂದ ತೆರವಾಗಿರುವ ಈ ಮೂರು ಕ್ಷೇತ್ರಗಳಿಗೆ ವಿಧಾನ ಸಭೆ ಉಪಚುನಾವಣೆ ನಡೆಯಬೇಕಿದೆ. +ಅದರಲ್ಲೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತರದಲ್ಲಿ ಡಿ.ಕೆ. ಸುರೇಶ್‌ ಸೋಲುಕಂಡ ಬಳಿಕ ಡಿ.ಕೆ. ಶಿವಕುಮಾರ್‌ ಚನ್ನಪಟ್ಟಣದ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದಾರೆ. ಉಪಚುನಾವಣೆಯಲ್ಲಿ ಜೆಡಿಎಸ್‌‍ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ತಮ ಸಹೋದರನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. +ಈಗಾಗಿ ಚನ್ನಪಟ್ಟಣ ಕ್ಷೇತ್ರಕ್ಕೆ ಪದೆ ಪದೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಈಗಾಗಲೇ ನಾಲ್ಕು ಜನಸ್ಪಂದನ ಸಭೆಗಳನ್ನು, ಒಂದು ಬೃಹತ ಉದ್ಯೋಗ ಮೇಳವನ್ನು ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಕ್ಷೇತ್ರ ರಾಮನಗರ ಬಿಟ್ಟು, ಕನಕಪುರದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಡಿ.ಕೆ ಶಿವಕುಮಾರ್‌ ಅಚ್ಚರಿ ಮೂಡಿಸಿದರು. ಇದು ವಿಧಾನ ಸಭೆಯ ಉಪಚುನಾವಣೆ ಹಿನ್ನಲೆಯಲ್ಲಿ ತೆಗೆದುಕೊಳ್ಳಲಾಗುತ್ತಿರಯವ ಕ್ರಮಗಳು ಎಂಬ ವ್ಯಾಖಾನಿಗಳಿಗೆ ಕಾರಣವಾಯಿತು. +ಅಭ್ಯರ್ಥಿ ಆಯ್ಕೆ ವಿಚಾರವಾಗಿ ಈವರೆಗೂ ಕಾಂಗ್ರೆಸ್‌‍ ಯಾವುದೇ ನಿಧಾರಗಳನ್ನು ತೆಗೆದುಕೊಂಡಿಲ್ಲ ಒಂದು ಹಂತದಲ್ಲಿ ಡಿ.ಕೆ. ಶಿವಕುಮಾರ್‌ ನಾನೆ ಅಭ್ಯರ್ಥಿ ಯಾರೇ ಸ್ಪರ್ಧೆ ಮಾಡಿದ್ದರೂ ಜನ ನನಗೆ ಮತ ಹಾಕಬೇಕು ಎಂದು ಹೇಳುವ ಮೂಲಕ ಪ್ರತಿಷ್ಟೆಯನ್ನು ಪಣಕ್ಕೆ ಹೊಡ್ಡಿದ್ದಾರೆ. +ಇತ್ತ ಜೆಡಿಎಸ್‌‍ ಮತ್ತು ಬಿಜೆಪಿಯಿಂದ ಮೈತ್ರಿ ಅಭ್ಯರ್ಥಿಯ ಆಯ್ಕೆ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿವೆ. ಕೇಂದ್ರ ಸಚಿವ ಎಚ್‌.ಡಿ. ಕುಮಾರ ಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಕುಮಾರ ಸ್ವಾಮಿ ಕೂಡ ಚನ್ನಪಟ್ಟಣ ಕ್ಷೇತ್ರವನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸುವ ಸಾದ್ಯತೆ ಇದೆ. +ಈಗಾಗಿ ಡಿ.ಕೆ ಶಿವಕುಮಾರ್‌ಅವರು ಆರಂಭದಿಂದಲೂ ಅಖಾಡಕ್ಕೆ ಇಳಿದಿದ್ದು, ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದ್ದಾರೆ. ಹಲವಾರು ಸರ್ಕಾರಿ ಕ್ರಮಗಳನ್ನು ಆಯೋಜಿಸಿದ್ದಾರೆ. ಇಂದು ರಜಾದಿನ ಭಾನುವಾರವು ಜನಸ್ಪಂದನ ನಡೆಸುತ್ತಿರುವುದು ಕುತೂಹಲ ಕೆರಳಿಸಿದೆ. ಸರ್ಕಾರಿ ಕಾರ್ಯಕ್ರಮಗಳ ನೆಪದಲ್ಲಿ ಡಿ.ಕೆ. ಶಿವಕುಮಾರ್‌ ರಾಜಕೀಯ ಶಕ್ತಿತಯನ್ನು ಕ್ರೋಢೀಕರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. \ No newline at end of file diff --git a/eesanje/url_46_28_9.txt b/eesanje/url_46_28_9.txt new file mode 100644 index 0000000000000000000000000000000000000000..0f4f029c39c5e8cf9ec4ad745e2f8f970decd06f --- /dev/null +++ b/eesanje/url_46_28_9.txt @@ -0,0 +1,10 @@ +ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಎಚ್‌ಡಿಕೆ ನಡುವೆ ಸಭೆಗಳ ಸಂಘರ್ಷ + +ಬೆಂಗಳೂರು, ಸೆ.1– ರಾಜಮನೆತನದ ವಿರೋಧ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮೈಸೂರಿನಲ್ಲಿ ಶ್ರೀ ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ. ಈ ನಡುವೆ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ದಿಶಾ ಸಭೆ ರದ್ದುಗೊಂಡಿರುವುದು ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. +ಇತ್ತ ಹೈಕೋರ್ಟ್‌ನಲ್ಲಿ ಮುಡಾ ಪ್ರಕರಣದ ಕುರಿತಂತೆ ವಾದವಿವಾದಗಳು ತೀವ್ರಗೊಂಡಿದ್ದು, ನಾಳೆ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆಯಾಗಲಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ ಚಾಮುಂಡಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. +ಬಳಿಕ ಬೆಟ್ಟದಲ್ಲೇ ಇರುವ ದಾಸೋಹ ಭವನದಲ್ಲಿ ಚಾಮುಂಡಿ ಕ್ಷೇತ್ರದ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಇದು ರಾಜಕೀಯವಾಗಿ ಇದು ಚರ್ಚೆಗೆ ಗ್ರಾಸವಾಗಿದೆ. ಚಾಮುಂಡಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಮೈಸೂರಿನ ರಾಜ ಮನೆತನ ವಿರೋಧಿಸಿತ್ತು. ಈ ಕುರಿತು ಬಹಿರಂಗ ಹೇಳಿಕೆ ನೀಡಿದ್ದಷ್ಟೇ ಅಲ್ಲದೇ ನ್ಯಾಯಾಲಯದಲ್ಲೂ ಪ್ರಶ್ನಿಸಲಾಗಿದೆ. +ಪ್ರಾಧಿಕಾರ ರಚನೆಗಾಗಿ ವಿಧಾನ ಮಂಡಲದಲ್ಲಿ ಅಂಗೀಕಾರ ಪಡೆಯಲಾಗಿರುವ ಮಸೂದೆ ಆಧರಿತವಾಗಿ ಸದ್ಯಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದೆಂದು ನ್ಯಾಯಾಲಯದ ನಿರ್ದೇಶನ ಇದೆ. ಚಾಮುಂಡಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರ ಮೊದಲಿನಿಂದಲೂ ಅಸ್ತಿತ್ವದಲ್ಲಿದ್ದು, ಸಿದ್ದರಾಮಯ್ಯ ಈ ಮೊದಲಿನ ಪ್ರಾಧಿಕಾರದ ಪ್ರಮುಖರ ಜೊತೆ ನಾಳೆ ಚರ್ಚೆ ನಡೆಸಲಿದ್ದಾರೆ. +ಸಿದ್ದರಾಮಯ್ಯ ರಾಜಕೀಯವಾಗಿ ವಿರೋಧ ಪಕ್ಷಗಳ ಜೊತೆ ಮುಖಾಮುಖಿಯಾಗಿದ್ದು, ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದರಲ್ಲಿ ತವರು ಜಿಲ್ಲೆ ಮೈಸೂರಿನಲ್ಲಿ ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರ ಸಭೆ ನಡೆಸಿ, ತಮ ಸರ್ಕಾರ ನಿಲುವನ್ನು ಸಮರ್ಥಿಸಿಕೊಳ್ಳಲು ಮುಂದಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. ಇದೇ ವೇಳೆ ಮತ್ತೊಂದು ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಬೇಕಿದ್ದ ದಿಶಾ ಸಭೆ ರದ್ದುಗೊಂಡಿದೆ. +ಕೇಂದ್ರ ಸಚಿವರು ಹಾಗೂ ಸಂಸದರಿಗೆ ಡೆವಲಪ್‌ಮೆಂಟ್‌ ಕೋಆರ್ಡಿನೇಷನ್‌ಅಂಡ್‌ ಮಾನಿಟರಿಂಗ್‌ ಕಮಿಟಿ (ದಿಶಾ) ಸಭೆಗಳನ್ನು ನಡೆಸಲು ಅವಕಾಶ ಇದೆ. ಕೇಂದ್ರ ಸಚಿವರಾದ ಕುಮಾರ ಸ್ವಾಮಿ ಹಾಗೂ ಮೈಸೂರಿನ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ನಾಳೆ ಮೈಸೂರಿನಲ್ಲಿ ದಿಶಾ ಸಭೆಗಳನ್ನು ನಡೆಸಬೇಕಿತ್ತು. +ಮುಖ್ಯಮಂತ್ರಿ ಸಿದ್ದರಾಮಯಯ್ಯ ಅವರು, ಜಿಲ್ಲೆಗೆ ಭೇಟಿ ನೀಡುತ್ತಿರುವುದರಿಂದಾಗಿ ದಿಶಾ ಸಭೆಗಳನ್ನು ರದ್ದುಗೊಳಿಸಲಾಗಿದೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮತ್ತೊಂದು ರೀತಿಯ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. +ಕುಮಾರಸ್ವಾಮಿ ಅವರು ಈ ಮೊದಲು ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳ ಸಭೆ ಕರೆದಾಗ ಅದರಲ್ಲಿ ಅಧಿಕಾರಿಗಳು ಭಾಗವಹಿಸದಂತೆ ರಾಜ್ಯ ಸರ್ಕಾರ ತಡೆ ಹಿಡಿದಿತ್ತು ಎಂಬ ಆರೋಪಗಳಿವೆ. ಈಗ ಕೇಂದ್ರ ಸಚಿವರಿಗೆ ಮತ್ತು ಸಂಸದರಿಗೆ ಪ್ರದತ್ತವಾಗಿರುವ ದಿಶಾ ಸಭೆ ನಡೆಸಲು ಸಿದ್ದರಾಮಯ್ಯ ಅವರ ಪ್ರವಾಸ ಅಡ್ಡಿಯಾಗಿರುವುದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ಕಾರಣವಾಗಿದೆ. \ No newline at end of file diff --git a/eesanje/url_46_290_1.txt b/eesanje/url_46_290_1.txt new file mode 100644 index 0000000000000000000000000000000000000000..1dc3abfc41f1c71f5c74e8cf96bf5667856e38a1 --- /dev/null +++ b/eesanje/url_46_290_1.txt @@ -0,0 +1,12 @@ +ಪ್ರಾದೇಶಿಕ ತಾರತಮ್ಯ ನಿವಾರಿಸಿ ಪ್ರತ್ಯೇಕ ರಾಜ್ಯದ ಕೂಗು ತಪ್ಪಿಸಿ : ಯತ್ನಾಳ್ +ಬೆಳಗಾವಿ, ಡಿ.12- ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವ ಮೂಲಕ ಪ್ರತ್ಯೇಕ ರಾಜ್ಯದ ಕೂಗು ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅವೇಶದಲ್ಲಿ ಇಂದಿನಿಂದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಚರ್ಚೆ ಆರಂಭವಾಯಿತು. ಅದರಲ್ಲಿ ಭಾಗವಹಿಸಿದ್ದ ಯತ್ನಾಳ್ ಅವರು, ಬೆಳಗಾವಿ ಸುವರ್ಣ ಸೌಧ ನಿರ್ಮಾಣ ಆದ ಮೇಲೆ ಇದು 11 ನೇ ಸದನವಾಗಿದೆ. ಉತ್ತರ ಕರ್ನಾಟಕದ ಬಗ್ಗೆ ಮೊದಲ ದಿನವೇ ಇಲ್ಲಿ ಚರ್ಚೆಯಾಗಬೇಕಿತ್ತು, ಆದರೆ ಈವರೆಗೂ ಆಗಲಿಲ್ಲ. ಹಾಗಿದ್ದರೆ ಈ ಭಾಗದಲ್ಲಿ ಸದನ ಮಾಡುವ ಉದ್ದೇಶವೇನು ಎಂದು ಪ್ರಶ್ನಿಸಿದರು. +ಬೆಳಗಾವಿ ಸಮಸ್ಯೆ ಮಹಾರಾಷ್ಟ್ರ ಗಡಿ, ಉತ್ತರಕನ್ನಡ ಅಭಿವೃದ್ಧಿ ಚರ್ಚೆ ಆಗಬೇಕೆಂದು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ ಸುವರ್ಣ ಸೌಧ ನಿರ್ಮಿಸಿದ್ದಾರೆ. ಆದರೆ ಲಾಭವೇನು, ಸಮಸ್ಯೆಗಳೆ ಚರ್ಚೆಯಾಗುತ್ತಿಲ್ಲ. ನಾನು ಸಮಗ್ರ ಕರ್ನಾಟಕ ದ ಪರವಾಗಿದ್ದೇನೆ, ಕರ್ನಾಟಕ ಪ್ರತ್ಯೇಕತೆಗೆ ಎಂದಿಗೂ ಬೆಂಬಲ ಕೊಟ್ಟಿಲ್ಲ, ಎಲ್ಲರೂ ಒಂದಾಗಿ ಚಾಮರಾಜನಗರದಿಂದ ಬೀದರ್, ಕೋಲಾರದಿಂದ ಕೊಡಗುವರಿಗೂ ಒಂದೇ ಎಂಬ ಭಾವನೆ ಗಟ್ಟಿಗೊಳಿಸಬೇಕು. ಅಭಿವೃದ್ಧಿ ಮತ್ತು ಸ್ಥಾನಮಾನಗಳಲ್ಲಿ ಸಮಾನ ಅವಕಾಶ ನೀಡುವ ಮೂಲಕ ಪ್ರತ್ಯೇಕ ರಾಜ್ಯದ ಕೂಗಿಗೆ ಅವಕಾಶ ನೀಡಬಾರದು ಎಂದರು. +ಬೆಂಗಳೂರಿನಲ್ಲಿ ಒಂದು ಸಚಿವ ಸಂಪುಟ ಸಭೆ ನಡೆದರೆ, ಇನ್ನೊಂದು ಸಭೆ ಸುವರ್ಣ ಸೌಧದಲ್ಲಿ ನಡೆಸಬೇಕು. ವರ್ಷದಲ್ಲಿ 100 ದಿನ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಕಲಾಪ ನಡೆಸಬೇಕು. ಸುವರ್ಣ ಸೌಧಕ್ಕೆ ಕೇವಲ ಲೈಟಿಂಗ್ ಮಾಡಿದರೆ ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಾಗುವುದಿಲ್ಲ. ಎರಡನೇ ಹಂತದ ಕಾರ್ಯದರ್ಶಿ ಹು್ದÉಗಳನ್ನು ಇಲ್ಲಿಗೆ ಸ್ಥಳಾಂತರಿಸಿ. ಸಕ್ಕರೆ ನಿರ್ದೇಶನಾಲಯ ಇಲ್ಲಿದೆ ಆದರೆ ಕಚೇರಿಯಲ್ಲಿ ಮೂವರು ಸಿಬ್ಬಂದಿಗಳಲ್ಲ. ಎಲ್ಲಾ ಹು್ದÉಗಳು ಮಧ್ಯ ಕರ್ನಾಟಕ, ಹಳೆ ಮೈಸೂರು ಭಾಗಕ್ಕೆ ಸಿಕ್ಕಿವೆ. ಉತ್ತರ ಕರ್ನಾಟಕ ಭಾಗಕ್ಕೆ ಭಾರೀ ಅನ್ಯಾಯವಾಗಿದೆ. ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಸರಿಯಲ್ಲ. ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. +ಇನ್ಷ್ಯೂರೆನ್ಸ್ ಕಂಪೆನಿ ಹೆಸರಲ್ಲಿ ಯಾಮಾರಿಸ್ತಾರೆ ಹುಷಾರ್..! +ಆಹಾರದ ಕೊರತೆ ಇದ್ದಾಗ ಜೈ ಜವಾನ್, ಜೈ ಕಿಸಾನ್ ಎಂದು ಕರೆ ಕೊಟ್ಟ ಲಾಲ್ ಬಹುದ್ದೂರ್ ಶಾಸ್ತ್ರಿ 1964ರಲ್ಲಿ ಆಲಮಟ್ಟಿಗೆ ಶಿಲಾನ್ಯಾಸ ಮಾಡಿದ್ದರು. ಜನರ ಬದುಕು ಸುಧಾರಣೆಗೆ ಇರುವ ಭೌತಿಕ ಸೌಕರ್ಯಗಳನ್ನು ಹೆಚ್ಚಿಸಬೇಕು. ಉತ್ಪಾದನೆಯನ್ನು ವೃದ್ಧಿಸಬೇಕು. ಪ್ರತಿಯೊಂದು ರಾಜ್ಯದ ಧ್ಯೇಯವೇ ಆರ್ಥಿಕ ವರಮಾನವನ್ನು ಹೆಚ್ಚಿಸಿಕೊಳ್ಳುವುದು. ಎಲ್ಲ ಜನಾಂಗಗಳ, ಎಲ್ಲ ಭಾಗಗಳ ಸಮಗ್ರ ಅಭಿವೃದ್ಧಿಯಾಗಬೇಕು. ಜನರ ಆದಾಯ ಹೆಚ್ಚಾಗಬೇಕು ಎಲ್ಲರಿಗೂ ನ್ಯಾಯ ಸಿಗಬೇಕು. ಮೈಸೂರು ಕರ್ನಾಟಕ ಉತ್ತಮ ಅಭಿವೃದ್ಧಿ ಸಾಸಿದೆ. ಮೈಸೂರು ಮಹಾರಾಜರು ನೀರಾವರಿಗೆ ಆದ್ಯತೆ ನೀಡಿದರು, ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದರು. ನಾಲ್ವಡಿ ಕೃಷ್ಣ ಒಡೆಯರ್ ಮಹಾರಾಜರು ಏಷ್ಯಾ ಖಂಡದಲ್ಲೇ ಮೊದಲ ವಿದ್ಯುತ್ ಘಟಕ ಸ್ಥಾಪಿಸಿದರು. ಆದರೆ ಉತ್ತರ ಕರ್ನಾಟಕ ಭಾಗದ ದುರ್ದೈವ ಕಲ್ಯಾಣ ಕರ್ನಾಟಕ , ಮುಂಬೈ ಕರ್ನಾಟಕ ದಲ್ಲಿ ನವಾಬರ ಆಡಳಿತವಿತ್ತು. ನಿಜಾಂ ಶಾಹಿ, ಆದಿಲ್ ಶಾಹಿ ಸೇರಿದಂತೆ ಹಲವು ರಾಜರು ಗೋರಿಗಳನ್ನು ಅಭಿವೃದ್ಧಿಪಡಿಸಿಕೊಂಡರು. ಆ ರಾಣಿ, ಈ ರಾಣಿ ಎಂದು ಗೋರಿಗಳನ್ನು ಕಟ್ಟಿಕೊಂಡರು. ಕಲಬುರಗಿ, ಬೀದರ್ , ವಿಜಯಪುರ ಸೇರಿದಂತೆ ಎಲ್ಲ ಕಡೆ ಗೋರಿಗಳೇ ಹೆಚ್ಚಾಗಿ ಕಾಣುತ್ತವೆ ಎಂದರು. +ಈ ಹಂತದಲ್ಲಿ ಕಾಂಗ್ರೆಸಿಗರು ಆಕ್ಷೇಪ ವ್ಯಕ್ತಪಡಿಸಿದ್ದಾಗ, ನಿಜಾಮರನ್ನು ಸಮರ್ಥಿಸಿಕೊಳ್ಳುವುದೇ ನಿಮ್ಮ ಉದ್ಯೋಗ ಕುಳಿತುಕೊಳ್ಳಿ ಎಂದು ತಿರುಗೇಟು ನೀಡಿದ ಯತ್ನಾಳ್, ಆ ಭಾಗ ಅಭಿವೃದ್ಧಿಯಾಗಿದೆ, ನಮ್ಮ ಭಾಗ ಅಭಿವೃದ್ಧಿಯಾಗಿಲ್ಲ ಎಂಬ ಹೊಟ್ಟೆ ಕಿಚ್ಚಿಲ್ಲ. ಹಳೆ ಮೈಸೂರು ಭಾಗವನ್ನು ಆದರ್ಶವಾಗಿಟ್ಟುಕೊಂಡು ನಾವು ಬದ್ಧತೆ ಪ್ರದರ್ಶಿಸಬೇಕಿದೆ ಎಂದರು.ಉತ್ತರ ಕರ್ನಾಟಕ ಭಾಗ ಹಿಂದುಳಿಯಲು ನಮ್ಮ ಭಾಗದ ಜನಪ್ರತಿನಿಗಳು ಕಾರಣರಾಗಿದ್ದಾರೆ. ಕಾಲಕಾಲಕ್ಕೆ ಧ್ವನಿ ಎತ್ತಿದ್ದರೆ 100 ರೂಪಾಯಿನಲ್ಲಿ 20 ರೂಪಾಯಿಗಳಾದರೂ ನಮ್ಮ ಭಾಗಕ್ಕೆ ಸಿಗುತ್ತಿತ್ತು. ಅದರೆ ಜನಪ್ರತಿನಿಗಳು ಗಂಭೀರವಾಗಿ ಕೆಲಸ ಮಾಡಲಿಲ್ಲ ಎಂದು ಆರೋಪಿಸಿದರು. +ಎಚ್.ಕೆ ಪಾಟೀಲ್ , ಎಂ. ಬಿ ಪಾಟೀಲ್ , ಬಸವರಾಜ ಬೊಮ್ಮಾಯಿ ಬಿಟ್ಟರೆ ಉಳಿದೆಲ್ಲಾ ನೀರಾವರಿ ಮಂತ್ರಿಗಳು ಹಳೆ ಮೈಸೂರು ಭಾಗದವರೇ ಹೆಚ್ಚಾಗಿದ್ದಾರೆ. ರಮೇಶ ಜಾರಕಿಹೊಳಿಯವರು ಏನೋ ಮಾಡಬೇಕೆಂದು ಹೊರಟರು. ಅವರ ವಿರುದ್ಧ ಕುತಂತ್ರ ರಾಜಕಾರಣ ಮಾಡಿ ಮುಗಿಸಿದರು. ಇಂತಹ ಹಲ್ಕಾ ರಾಜಕಾರಣ ಬೇಕಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಲ್ಕಾ ಪದ ಬಳಕೆ ಸರಿಯಲ್ಲ. ಅದನ್ನು ಹಿಂಪಡೆಯಿರಿ ಎಂದು ಸಭಾಧ್ಯಕ್ಷ ಪೀಠದಲ್ಲಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿ ಸಲಹೆ ನೀಡಿದರು. ನೀವು ಬೇಕಾದರೆ ಕಡತದಿಂದ ತೆಗೆಯಿರಿ ನಾನು ಹಿಂಪಡೆದುಕೊಳ್ಳುವುದಿಲ್ಲ ಎಂದು ಯತ್ನಾಳ್ ಪಟ್ಟು ಹಿಡಿದರು. +ಎಲ್ಲಾ ಅಭಿವೃದ್ಧಿಯೂ ಬೆಂಗಳೂರು ಕೇಂದ್ರೀಕೃತವಾಗಿದೆ. ಬಿಜಾಪುರ, ಬೀದರ್ ಗಳಿಂದ ಬರುವ ಹುಡುಗರು 120-15 ಸಾವಿರಕ್ಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದು ಕೊಠಡಿಯಲ್ಲಿ 4-5 ಜನ ಇದ್ದುಕೊಂಡು, ತಲಾ 3 ಸಾವಿರ ರೂಪಾಯಿ ಬಾಡಿಗೆ ಹಂಚಿಕೊಳ್ಳುತ್ತಿದ್ದಾರೆ. ಶನಿವಾರ ಬಟ್ಟೆ ಹೊಗೆದು, ಒಂದು ಸಿನಿಮಾ ನೋಡಿದರೆ 12 ಸಾವಿರ ಆಗುತ್ತದೆ. ಇನ್ನು ಆರ್ಥಿಕವಾಗಿ ಉದ್ಧಾರವಾಗುವುದು ಹೇಗೆ ಎಂದು ಪ್ರಶ್ನಿಸಿದರು.ನೆರೆಯ ಮಹಾರಾಷ್ಟ್ರದಲ್ಲಿ 3-4 ನಗರಗಳನ್ನು ನಿರ್ಮಾಣ ಮಾಡಿದ್ದಾರೆ. ಮುಂಬೈ, ಪುಣೆ ಸೇರಿ ಪ್ರತಿ ಜಿಲ್ಲೆಯಲ್ಲೂ ಕೈಗಾರಿಕೆ ಮಾಡಲಾಗುತ್ತಿದೆ. ನಾಗ್ಪುರ ಎಂದು ಮಾಡಿ, ವರ್ಷಕ್ಕೆ ಎರಡು ಬಾರಿ ಅವೇಶನ ನಡೆಸುತ್ತಾರೆ. ಇಲ್ಲಿ 10 ದಿನವೂ ಅವೇಶನ ನಡೆಯುವುದಿಲ್ಲ ಎಂದರು. +ನಮ್ಮ ಅಶೋಕ್ ವಿರುದ್ಧ ಪಕ್ಷ ನಾಯಕರಾಗಿದ್ದಾರೆ, ನಮಗೆ ಬೇಜಾರಿಲ್ಲ, ಅವರು ಯಾವ ರೀತಿ ನಡೆದುಕೊಂಡಿದ್ದಾರೆ ಎಂದು ಉತ್ತರ ಕರ್ನಾಟಕದ ಜನರಿಗೆ ಗೊತ್ತಾಗಿದೆ.ಯತ್ನಾಳ್ ಬಾಯಿ ಸರಿಯಿದ್ದರೆ ರಾಜ್ಯದ ಮುಖ್ಯಮಂತ್ರಿ ಯಾಗುತ್ತಿದ್ದರು ಎಂದು ಕೆಲವರು ಹೇಳುತ್ತಾರೆ. ನನ್ನ ಬಾಯಿ ಸರಿ ಇರಲಿ, ಬಿಡಲಿ. ಆದರೆ ವಿಜಯಪುರದಲ್ಲಿ ಒಂದು ರಸ್ತೆ ಸರಿ ಇರಲಿಲ್ಲ. ನಾನು ಹೋರಾಟ ಮಾಡಿ ಕುಮಾರಸ್ವಾಮಿಯಿಂದ 1500 ಕೋಟಿ ಪಡೆದುಕೊಂಡಿದ್ದೆ. ನಾವು ಜನರ ಸಲುವಾಗಿ ಮಾತನಾಡಲೇಬೇಕು. +ಉಸಿರಾಯಿತು ಕನ್ನಡ, ಹೆಸರಾಯಿತು ಕರ್ನಾಟಕ ಎಂದು ಕಾರ್ಯಕ್ರಮ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜನರು ಕನ್ನಡ ಬಳಸುತ್ತಿದ್ದೇವೆ. ಆದರೆ ಪ್ರಾದೇಶಿಕ ಅಸಮಾನತೆ ಬಹಳ ಇದೆ , ಕೈಗಾರಿಕೆ, ಮೂಲಭೂತ ಸೌಕರ್ಯ, ಕೃಷಿ, ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ನಾವು ಹಿಂದೆ ಉಳಿಸಿದ್ದೇವೆ.ಡಾ ನಂಜುಂಡಪ್ಪ ವರದಿ ಪ್ರಕಾರ ಕಳೆದ 25 ವರ್ಷಗಳಿಂದಲೂ ಅಸಮಾನತೆ ನಿರ್ವಹಣೆಯಾಗಿಲ್ಲ. ಭೌಗೊಳಿಕವಾಗಿ ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ 8916 ಚದರ ಕಿಲೋ ಮೀಟರ್ ಹೆಚ್ಚು ವಿಸ್ತೀರ್ಣ ಹೊಂದಿದೆ. ಶೇ.58ರಷ್ಟು ನೀರಿನ ಸಂಪನ್ಮೂಲವಿದೆ. ಆದರೆ ನೀರಾವರಿ ಯೋಜನೆಗಳು ಕುಂಠಿತವಾಗಿವೆ ಎಂದರು. +ಕಳೆದ 30-40 ವರ್ಷಗಳಿಂದ ಯೋಜನೆಗಳು ಮುಗಿದಿಲ್ಲ. ಕೃಷ್ಣ ಮೇಲ್ದಂಡೆ ಯೋಜನೆ 16 ಸಾವಿರ ಕೋಟಿ ನಿಗದಿಪಡಿಸಲಾಗಿತ್ತು, ಈಗ 80 ಸಾವಿರ ಕೋಟಿ ದಾಟಿದೆ, ಶೀಘ್ರ ಪೂರ್ಣಗೊಳಿಸಬೇಕು. ಬರಗಾಲದಿಂದ ಮುಕ್ತಿ ಸಿಗಬೇಕೆಂದರೆ ಕೆರೆಗಳಿಗೆ ನೀರು ತುಂಬಿಸಬೇಕು. ಮಹದಾಯಿ, ನವಲಿ ಜಲಾಶಯಗಳನ್ನು ಹೊಸದಾಗಿ ನಿರ್ಮಿಸಿ 31 ಟಿಎಂಸಿ ನೀರು ಸಂಗ್ರಹಿಸಬೇಕು ಎಂದು ಆ \ No newline at end of file diff --git a/eesanje/url_46_290_10.txt b/eesanje/url_46_290_10.txt new file mode 100644 index 0000000000000000000000000000000000000000..4a4fcf8bd70e77d727cbf1bd6017c5fbb22bc0fa --- /dev/null +++ b/eesanje/url_46_290_10.txt @@ -0,0 +1,4 @@ +ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಸಿ.ಸಿ.ಪಾಟೀಲ್ ನೇಮಕ +ಬೆಂಗಳೂರು. ಡಿ.12- ಪ್ರಸಕ್ತ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಸಿ.ಸಿ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. 2023-24ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ಆರ್.ಅಶೋಕ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವುದರಿಂದ ಅವರ ಬದಲಿಗೆ ಸಮಿತಿಯ ಸದಸ್ಯರಾದ ಸಿ.ಸಿ.ಪಾಟೀಲ್ ಅವರನ್ನು ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನಾಮ ನಿರ್ದೇಶನ ಮಾಡಿದ್ದಾರೆ. +ಕೆಂಪು ಸಮುದ್ರದಲ್ಲಿ ತೈಲ ಸಾಗಿಸುತ್ತಿದ್ದ ಹಡಗಿನ ಮೇಲೆ ದಾಳಿ +ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಾವಳಿಗಳ ನಿಯಮ 211(2)ರ ಮೇರೆಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ಸಿ.ಸಿ.ಪಾಟೀಲ್ ಅವರನ್ನು ಸಭಾಧ್ಯಕ್ಷರು ನಾಮನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_290_11.txt b/eesanje/url_46_290_11.txt new file mode 100644 index 0000000000000000000000000000000000000000..94dd430f491c47997e085406da8163e4fa0ed82f --- /dev/null +++ b/eesanje/url_46_290_11.txt @@ -0,0 +1,10 @@ +ವಿಧಾನಸಭೆಯಲ್ಲಿ ಧರಣಿ ಮಧ್ಯೆಯೂ 5 ವಿಧೇಯಕಗಳ ಅಂಗೀಕಾರ +ಬೆಳಗಾವಿ,ಡಿ.11- ವಸತಿ, ಅಲ್ಪಸಂಖ್ಯಾತ ಸಚಿವರು ತೆಲಂಗಾಣ ಚುನಾವಣಾ ಕಣದಲ್ಲಿ ನೀಡಿದ್ದ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿಯ ಶಾಸಕರು ಧರಣಿ ನಡೆಸುತ್ತಿದ್ದ ವೇಳೆಯಲ್ಲೇ 5 ವಿಧೇಯಕಗಳನ್ನು ಬಹುತೇಕ ಚರ್ಚೆ ಇಲ್ಲದೆ ಅಂಗೀಕರಿಸಲಾಯಿತು.ಇಂದು ಬೆಳಿಗ್ಗೆ ವಿಧಾನಸಭೆಯ ಪ್ರಶ್ನೋತ್ತರದ ವೇಳೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ರ ಉತ್ತರವನ್ನು ತಿರಸ್ಕರಿಸುವುದಾಗಿ ಹೇಳಿದ ಬಿಜೆಪಿ ಸದಸ್ಯರು ವಿವಾದಿತ ಹೇಳಿಕೆ ನೀಡಿದ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪಟ್ಟುಹಿಡಿದರು. +ಸರ್ಕಾರ ಬಿಜೆಪಿ ಶಾಸಕರ ಬೇಡಿಕೆಗೆ ಸೊಪ್ಪು ಹಾಕದಿದ್ದಾಗ ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಅದರ ನಡುವೆಯೇ ಪ್ರಶ್ನೋತ್ತರ ಕಲಾಪ ನಡೆಯಿತು. ಶಾಸನ ರಚನೆಯ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಜಿಎಸ್ಟಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು.ಆನ್ಲೈನ್ ಗೇಮ್ಗಳನ್ನು ಜಿಎಸ್ಟಿ ತೆರಿಗೆ ವ್ಯಾಪ್ತಿಗೊಳಪಡಿಸಲು ವಿಧೇಯಕ ರೂಪಿಸಲಾಗಿದೆ. ಅಂದ ಮಾತ್ರಕ್ಕೆ ಆನ್ಲೈನ್ ಗೇಮ್ಗಳನ್ನು ಕಾನೂನುಬದ್ಧಗೊಳಿಸಲಾಗಿದೆ ಎಂದರ್ಥವಲ್ಲ. ಈ ಹಿಂದೆ ಕೇಂದ್ರ ಸರ್ಕಾರದ ಕಾಯ್ದೆಗನುಗುಣವಾಗಿ ರಾಜ್ಯಸರ್ಕಾರ ತಿದ್ದುಪಡಿಯನ್ನು ರೂಪಿಸಿದೆ ಎಂದು ಹೇಳಿದರು. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ 2023 ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸ್ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತಿದ್ದುಪಡಿ ವಿಧೇಯಕಗಳನ್ನು ಪರ್ಯಾಲೋಚನೆಗೆ ಮಂಡಿಸಿದರು. ಈ ವಿಧೇಯಕದಿಂದ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ಕೊರತೆ ನೀಗಲಿದೆ ಎಂದು ಹೇಳಿದರು. +ಸ್ಪೀಕರ್ ಸ್ಥಾನದ ಕುರಿತು ಹೇಳಿಕೆ, ಜಮೀರ್ ವಜಾಕ್ಕೆ ಪಟ್ಟು, ವಿಧಾನಸಭೆಯಲ್ಲಿ ವಾಕ್ಸಮರ +ಸಚಿವ ಕೃಷ್ಣಭೈರೇಗೌಡ, ತಮ್ಮ ಇಲಾಖೆಗೆ ಸೇರಿದ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡಿಸಿದರು. ಈ ವಿಧೇಯಕ ನೋಂದಣಿ ಸ್ಟಾಂಪ್ ಶುಲ್ಕವನ್ನು ಹೆಚ್ಚಿಸುವುದಲ್ಲ. ಬದಲಾಗಿ ವಿವಿಧ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಖರೀದಿಸುವ ಸ್ಟಾಂಪ್ಗಳ ದರವನ್ನು ಹೆಚ್ಚಿಸಲಾಗಿದೆ. 5, 10, 20 ರೂ.ಗಳಿದ್ದ ದರವನ್ನು ಕಾಲಕ್ಕನುಗುಣವಾಗಿ ಹೆಚ್ಚಿಸಲಾಗಿದೆ. ಈ ಮೊದಲು 1994 ಮತ್ತು 2002 ರಲ್ಲಿ ಮಾತ್ರ ಕೆಲ ಸ್ಟಾಂಪ್ಗಳ ಮೇಲೆ ದರ ಪರಿಷ್ಕರಣೆಯಾಗಿತ್ತು ಎಂದು ವಿವರಿಸಿದರು. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಸಚಿವ ಕೃಷ್ಣಭೈರೇಗೌಡ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಿದರು. ಮಲೆನಾಡು ಭಾಗದಲ್ಲಿ ಜಿಲ್ಲಾ ಪಂಚಾಯತ್ ಕ್ಷೇತ್ರಗಳು ವಿಸ್ತೀರ್ಣ ವಿಶಾಲವಾಗಿರುತ್ತದೆ. ಜನಸಂಖ್ಯೆ ಕಡಿಮೆಯಿರುತ್ತದೆ. ಮಲೆನಾಡಿನ ಭದ್ರಾವತಿ, ಶಿವಮೊಗ್ಗ, ಶಿಕಾರಿಪುರ ತಾಲೂಕುಗಳನ್ನು ಹೊರತುಪಡಿಸಿ ವಿವಿಧ ಮಲೆನಾಡು ಭಾಗದಲ್ಲಿ ಪ್ರತಿಕ್ಷೇತ್ರದ ಜನಸಂಖ್ಯೆಯನ್ನು 18 ರಿಂದ 25 ಸಾವಿರಕ್ಕೆ ಮರುನಿಗದಿ ಮಾಡಲು ಈ ಕಾಯ್ದೆ ಅವಕಾಶ ಕಲ್ಪಿಸಲಿದೆ. +ರಾಜ್ಯದ ಉಳಿದ ಭಾಗಗಳಲ್ಲಿ ಪ್ರತಿಕ್ಷೇತ್ರದ ಜನಸಂಖ್ಯೆ 35 ರಿಂದ 45 ಸಾವಿರದಷ್ಟಿದೆ ಎಂದು ವಿವರಿಸಿದರು.ಶಾಸಕರಾದ ಎ.ಎಸ್.ಪನ್ನಣ್ಣ, ಮಂತರ್ಗೌಡ ಸೇರಿದಂತೆ ಕೆಲವು ಆಡಳಿತ ಪಕ್ಷದ ಶಾಸಕರು ಮಾತ್ರ ಚರ್ಚೆಯಲ್ಲಿ ಭಾಗವಹಿಸಿದ್ದರು.ಈ ನಾಲ್ಕು ವಿಧೇಯಕಗಳು ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದ ಮೂಲಕ ಅಂಗೀಕಾರಗೊಂಡವು. ನಂತರ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕವನ್ನು ಮಂಡಿಸಿದರು. +ಈ ಹಂತದಲ್ಲಿ ಸಭಾಧ್ಯಕ್ಷರು, ಇದೇ ಪ್ರಮುಖ ವಿಚಾರ. ಕರಾವಳಿ ಭಾಗದ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಎಂದು ಸಲಹೆ ನೀಡಿದರು. ಆದರೂ ಬಿಜೆಪಿಯ ವತಿಯಿಂದ ನಡೆಯುತ್ತಿದ್ದ ಧರಣಿ , ಸತ್ಯಾಗ್ರಹ, ಘೋಷಣೆಗಳ ಕೂಗಾಟ ಮುಂದುವರೆದಿತ್ತು. ಹೀಗಾಗಿ ಮತ್ತೊಮ್ಮೆ ಯಾವುದೇ ಚರ್ಚೆಯಿಲ್ಲದೆ ಒಟ್ಟು 5 ವಿಧೇಯಕಗಳು ಅಂಗೀಕಾರಗೊಂಡವು. ಸದನವನ್ನು ಈ ರೀತಿ ನಡೆಸುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಚರ್ಚೆಯಿಲ್ಲದೆ ವಿಧೇಯಕಗಳನ್ನು ಅಂಗೀಕರಿಸುವುದು ಇಷ್ಟವಿಲ್ಲ. ಆದರೆ ಅಂತಹ ಪರಿಸ್ಥಿತಿಯನ್ನು ಇಲ್ಲಿ ನಿರ್ಮಿಸಲಾಗಿದೆ ಎಂದು ವಿಷಾದಿಸಿದರು. +ವಿಧೇಯಕಗಳನ್ನು ಪರ್ಯಾಲೋಚನೆಪಡಿಸಿದ ವೇಳೆ ಹಲವಾರು ಬಾರಿ ಚರ್ಚೆಯಲ್ಲಿ ಭಾಗವಹಿಸುವಂತೆ ಶಾಸಕರಿಗೆ ಮನವಿ ಮಾಡಲಾಯಿತು. ಗದ್ದಲದ ವಾತಾವರಣದಿಂದಾಗಿ ಆಡಳಿತ ಮತ್ತು ಪ್ರತಿಪಕ್ಷ ಎರಡೂ ಕಡೆಯಿಂದಲೂ ಚರ್ಚೆಗೆ ಆಸಕ್ತಿ ಕಂಡುಬರಲಿಲ್ಲ. ವಿರೋಧಪಕ್ಷದ ನಾಯಕರು ಶುಕ್ರವಾರದ ಕಲಾಪದ ದಿನ ಸೋಮವಾರ ವಿಧೇಯಕಗಳ ಅಂಗೀಕಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿ ಏಕಾಏಕಿ ಧರಣಿ ನಡೆಸಲಾಗುತ್ತಿದೆ. ಇದು ಸರಿಯಲ್ಲ ಎಂದು ವಿಧಾನಸಭಾಧ್ಯಕ್ಷರು ಅಸಮಾಧಾನ ಹೊರಹಾಕಿದರು. \ No newline at end of file diff --git a/eesanje/url_46_290_12.txt b/eesanje/url_46_290_12.txt new file mode 100644 index 0000000000000000000000000000000000000000..6ef7b54fac6f081996afe158e40b008009dcbb42 --- /dev/null +++ b/eesanje/url_46_290_12.txt @@ -0,0 +1,6 @@ +ಮಂಗನ ಕಾಯಿಲೆ ತಡೆಗೆ ಶೀಘ್ರ ಹೊಸ ಲಸಿಕೆ : ದಿನೇಶ್ ಗುಂಡೂರಾವ್ +ಬೆಳಗಾವಿ, ಡಿ.11- ಮಂಗನ ಕಾಯಿಲೆ ತಡೆಗೆ ಶೀಘ್ರದಲ್ಲೇ ಹೊಸ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನ ಪರಿಷತ್ತಿಗೆ ತಿಳಿಸಿದರು. +ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಬಿ.ಎಸ್.ಅರುಣ್ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮಲೆನಾಡಿಗರನ್ನು ಬಿಟ್ಟು ಬಿಡದೆ ಕಾಡುತ್ತಿರುವ ಕೆಎಫ್ ಡಿ ಸಮಸ್ಯೆಯನ್ನು ಸರ್ಕಾರ ಗಂಭೀರ ಪರಿಗಣಿಸಿದೆ. ಹಾಗಾಗಿ, ಐಸಿಎಂಆರ್ ನೊಂದಿಗೆ ಚರ್ಚೆ ನಡೆಸಿದ್ದು, ಹೊಸ ಲಸಿಕೆ ಸಂಶೋಧನೆ ನಡೆಸಲಾಗುತ್ತಿದೆ ಎಂದರು. +ಸ್ಪೀಕರ್ ಸ್ಥಾನದ ಕುರಿತು ಹೇಳಿಕೆ, ಜಮೀರ್ ವಜಾಕ್ಕೆ ಪಟ್ಟು, ವಿಧಾನಸಭೆಯಲ್ಲಿ ವಾಕ್ಸಮರ +ಮಂಗನ ಕಾಯಿಲೆ ತಡೆಗೆ ನೀಡುತ್ತಿದ್ದ ಲಸಿಕೆ ವಿತರಣೆಯನ್ನು ಸ್ಥಗಿತ ಮಾಡಲಾಗಿದೆ. ಏಕೆಂದರೆ ಈ ಲಸಿಕೆ ಯಾವುದೇ ರೀತಿಯ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಹೀಗಾಗಿ, ಖಾಸಗಿ ಕಂಪನಿಯ ಸಹಯೋಗದೊಂದಿಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದು ಹೇಳಿದರು. +ಮಂಗನ ಕಾಯಿಲೆ ಅತೀ ಕಡಿಮೆ ಜನರಿಗೆ ಬಾಸುತ್ತಿರುವ ಕಾರಣದಿಂದಲೇ ಇತರೆ ಕಂಪನಿಗಳು ಈ ಲಸಿಕೆ ಕಂಡು ಹಿಡಿಯಲು ಮುಂದಾಗುತ್ತಿಲ್ಲ.ಆದರೂ, ಸರ್ಕಾರ ಸಂಶೋಧನೆ ಗೆ ಧನ ಸಹಾಯ ನೀಡುವುದಾಗಿಯೂ ತಿಳಿಸಿದ್ದು, ಶೀಘ್ರವಾಗಿ ಹೊಸ ಲಸಿಕೆಯನ್ನು ರೋಗಿಗಳಿಗೆ ನೀಡಲಾಗುವುದು ಎಂದೂ ಸಚಿವರು ತಿಳಿಸಿದರು. \ No newline at end of file diff --git a/eesanje/url_46_290_2.txt b/eesanje/url_46_290_2.txt new file mode 100644 index 0000000000000000000000000000000000000000..2c203fcb1a8222a33472151c559273c7ea11bde5 --- /dev/null +++ b/eesanje/url_46_290_2.txt @@ -0,0 +1,10 @@ +ಜಮೀರ್ ವಿರುದ್ಧದ ಪ್ರತಿಭಟನೆ ಹಿಂಪಡೆದ ಪ್ರತಿಪಕ್ಷಗಳು +ಬೆಳಗಾವಿ, ಡಿ.12- ಸಚಿವ ಜಮೀರ್ ಅಹಮ್ಮದ್ಖಾನ್ ರ ಹೇಳಿಕೆಯನ್ನು ವಿರೋಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆಯಿಂದ ನಡೆಸುತ್ತಿದ್ದ ಧರಣಿಯನ್ನು ಇಂದು ಹಿಂಪಡೆದರು. ವಿಧಾನಸಭೆಯ ಕಲಾಪದ ಆರಂಭದಲ್ಲೇ ವಿಪಕ್ಷಗಳ ಶಾಸಕರು ಧರಣಿಯನ್ನು ಮುಂದುವರೆಸಿದರು. ಗೃಹಸಚಿವ ಪರಮೇಶ್ವರ್ ಅವರು ಎದ್ದು ನಿಂತು, ಇಡೀ ದೇಶವೇ ನಮ್ಮನ್ನು ನೋಡುತ್ತಿದೆ. +ಇಲ್ಲಿ ಗಂಭೀರ ಚರ್ಚೆಗಳು ನಡೆಯಬೇಕು. ನಿನ್ನೆಯಿಂದಲೂ ಧರಣಿ ನಡೆಸುತ್ತಿದ್ದೀರ. ಇದರಿಂದಾಗಿ ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಗಮನ ಸೆಳೆಯುವ ಸೂಚನೆ. ಶಾಸನ ರಚನೆ ಸೇರಿದಂತೆ ಮಹತ್ವದ ಕಲಾಪಗಳಲ್ಲಿ ಪ್ರತಿಪಕ್ಷಗಳ ಶಾಸಕರು ಭಾಗವಹಿಸಿರಲಿಲ್ಲ ಎಂದು ವಿಷಾದಿಸಿದರು. +ಬರದ ಮೇಲೆ ಚರ್ಚೆಯಾಗಿದೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಚರ್ಚೆಗಳು ನಡೆಯಬೇಕಿದೆ. ಅದರಲ್ಲಿ ಅವರು ಭಾಗವಹಿಸಬೇಕು. ರಾಜ್ಯದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕಿದೆ. ಈ ನಿಟ್ಟಿನಲ್ಲಿ ಧರಣಿ ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. +ವಿಪಕ್ಷ ನಾಯಕ ಆರ್.ಅಶೊಕ್ ಮಾತನಾಡಲು ಎದ್ದು ನಿಂತಾಗ ಸಭಾಧ್ಯಕ್ಷರು ಮಧ್ಯಪ್ರವೇಶಿಸಲು ಯತ್ನಿಸಿದರು. ನಮಗೂ ಮಾತನಾಡಲು ಅವಕಾಶ ನೀಡಬೇಕು. ಸಭಾಧ್ಯಕ್ಷರು ಆಡಳಿತ ಪಕ್ಷದ ಕಡೆಗಷ್ಟೇ ನೋಡಬಾರದು, ನಮ್ಮನ್ನೂ ಗಮನಿಸಬೇಕು. ಗೃಹಸಚಿವರು ಮಾತನಾಡಲು ಅವಕಾಶ ಕೊಟ್ಟಿದ್ದೀರ. ನಾನು ಮಾತನಾಡಲು ಎದ್ದು ನಿಲ್ಲುತ್ತಿದ್ದಂತೆ ಮಧ್ಯಪ್ರವೇಶ ಮಾಡುವುದು ಬೇಡ ಎಂದರು. +ಇನ್ಷ್ಯೂರೆನ್ಸ್ ಕಂಪೆನಿ ಹೆಸರಲ್ಲಿ ಯಾಮಾರಿಸ್ತಾರೆ ಹುಷಾರ್..! +ಗೃಹಸಚಿವರು ಇದೇ ಮಾತುಗಳನ್ನು ನಿನ್ನೆಯೇ ಹೇಳಬಹುದಿತ್ತು. ಆದರೆ ನಮ್ಮನ್ನು ಸತಾಯಿಸಿ ಕಾಲಾಹರಣ ಮಾಡಲಾಗಿದೆ. ಸರ್ಕಾರದ ದೌರ್ಜನ್ಯಗಳು ಹೆಚ್ಚಾಗಿವೆ. ಕೂಗಾಡಿ ನಮ್ಮ ಗಂಟಲು ಒಣಗಿದೆ. ಸದನದ ಯಾವುದೇ ಕಲಾಪಗಳಲ್ಲೂ ತಾವು ಭಾಗವಹಿಸಲಾಗಿಲ್ಲ. ಸರ್ಕಾರ ನಿನ್ನೆ ಮಂಡಿಸಿದ ವಿವಿಧ ಮಸೂದೆಗಳಲ್ಲಿ ಜನರ ಮೇಲೆ 2500 ಕೋಟಿ ರೂ. ತೆರಿಗೆ ವಿಸಿದೆ. ಇದರ ಬಗ್ಗೆ ನಾವು ಪ್ರಸ್ತಾಪಿಸಬೇಕಿದೆ ಎಂದು ಅವರು ಹೇಳಿದರು. +ಸಂವಿಧಾನಬದ್ಧವಾದ ಸಭಾಧ್ಯಕ್ಷರ ಪೀಠಕ್ಕೆ ಅಗೌರವ ಆಗಿದೆ ಎಂಬುದಷ್ಟೇ ನಮ್ಮ ಕಳಕಳಿ. ಇದರಲ್ಲಿ ವೈಯಕ್ತಿಕ ವಿಚಾರಗಳಿಲ್ಲ ಎಂದರು.ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಯಾಗಬೇಕೆಂಬುದು ನಮ್ಮ ಕಾಳಜಿ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಬಗ್ಗೆ ತಮ್ಮೊಂದಿಗೆ ಚರ್ಚೆ ಮಾಡಿದ್ದಾರೆ. ನಾವು ಧರಣಿಯನ್ನು ಹಿಂಪಡೆಯುತ್ತಿದ್ದೇವೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗಳ ಕುರಿತು ಚರ್ಚೆಯನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕು. ಅಗತ್ಯವಾದರೆ ಪ್ರಶ್ನೋತ್ತರ ಸೇರಿದಂತೆ ಎಲ್ಲಾ ಕಲಾಪಗಳನ್ನೂ ಬದಿಗಿರಿಸಿ ಎಂದು ಸಲಹೆ ನೀಡಿದರು. +ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಜಮೀರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅದರ ಹೊರತಾಗಿಯೇ ಸರ್ಕಾರ, ವಿಪಕ್ಷಗಳು ಮತ್ತು ತನ್ನ ಪೀಠದ ಪ್ರತ್ಯೇಕ ಅಭಿಪ್ರಾಯಗಳನ್ನು ಹೊಂದಿರುವುದು ಸರಿಯಲ್ಲ. ಹೇಳಿಕೆ ನೀಡಿ ಒಂದು ತಿಂಗಳು ಕಳೆದಿವೆ. ಕಳೆದ ಒಂದು ವಾರದಿಂದ ಸದನ ಉತ್ತಮವಾಗಿ ನಡೆಯುತ್ತಿತ್ತು. ವಿಪಕ್ಷ ನಾಯಕರು ನಿನ್ನೆ ಏಕಾಏಕಿ ವಿಷಯ ಪ್ರಸ್ತಾಪಿಸಿ ಧರಣಿ ನಡೆಸುವುದು ಸರಿಯಲ್ಲ. +ನಿಯಮಾನುಸಾರ ನೋಟಿಸ್ ಕೊಟ್ಟರೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು. ಸಭಾಧ್ಯಕ್ಷ ಪೀಠ, ಸದನ, ಶಾಸಕರ ಗೌರವ ತಿಳಿಯಬೇಕು ಎಂಬುದು ಎಲ್ಲರ ಕಾಳಜಿಯಾಗಿದೆ. ನಿಯಮಬದ್ಧವಾಗಿ ಕಾರ್ಯಕಲಾಪ ನಡೆಸುವುದು ನಮ್ಮ ಬದ್ಧತೆ ಎಂದು ಹೇಳಿದರು.ಬಳಿಕ ವಿಪಕ್ಷಗಳ ಶಾಸಕರು ಧರಣಿಯನ್ನು ಹಿಂಪಡೆದರು. \ No newline at end of file diff --git a/eesanje/url_46_290_3.txt b/eesanje/url_46_290_3.txt new file mode 100644 index 0000000000000000000000000000000000000000..d593b5a0d1dcc21a034ea7081474f67ca7a6df8e --- /dev/null +++ b/eesanje/url_46_290_3.txt @@ -0,0 +1,11 @@ +ರಾಜ್ಯದಲ್ಲಿ ಹುಕ್ಕಾ ಬಾರ್‌ಗಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಪರಮೇಶ್ವರ್ +ಬೆಳಗಾವಿ, ಡಿ.12- ರಾಜ್ಯದಲ್ಲಿ ಹುಕ್ಕಾ ಬಾರ್‌ಗಳನ್ನು ನಿಯಂತ್ರಿಸಲು ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕರಾದ ಸಿ.ಕೆ.ರಾಮಮೂರ್ತಿ ಅವರ ತಡೆಹಿಡಿಯಲಾದ ಪ್ರಶ್ನೆ ಇಂದು ಸದನದಲ್ಲಿ ಗಂಭೀರ ಚರ್ಚೆಗೆ ಕಾರಣವಾಯಿತು. +ಬೆಂಗಳೂರಿನಲ್ಲಿ ಇತ್ತೀಚೆಗೆ ಹುಕ್ಕಾಬಾರ್ಗಳ ಸಂಖ್ಯೆ ತೀವ್ರವಾಗಿ ಹೆಚ್ಚಾಗಿದೆ. ದೆಹಲಿಯ ನಂತರ ಅತೀ ಹೆಚ್ಚು ಹುಕ್ಕಾಬಾರ್ಗಳ ಸಂಖ್ಯೆ ಬೆಂಗಳೂರಿನಲ್ಲಿ ಇದೆ ಎಂದು ಆಕ್ಷೇಪಿಸಿದರು.ಬಿಜೆಪಿ ಶಾಸಕ ಸುರೇಶ್ಕುಮಾರ್ ಮಧ್ಯಪ್ರವೇಶಿಸಿ ಪಂಜಾಬ್, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 10 ರಾಜ್ಯಗಳಲ್ಲಿ ಹುಕ್ಕಾಬಾರ್ಗಳನ್ನು ನಿಷೇಸಲಾಗಿದೆ. ಹುಕ್ಕಾಬಾರ್ಗಳಲ್ಲಿನ ಧೂಮಪಾನ, ಸಿಗರೇಟ್ ಸೇವನೆಗಿಂತಲೂ ಇನ್ನೂರು ಪಟ್ಟು ಹೆಚ್ಚು ಹಾನಿಕರ. ಹೀಗಾಗಿ ಸಂಪೂರ್ಣ ನಿಯಂತ್ರಿಸಬೇಕು ಎಂದು ಆಗ್ರಹಿಸಿದರು. +ಅರವಿಂದ್ ಬೆಲ್ಲದ್ ಮಾತನಾಡಿ, ಪಂಜಾಬಿನಲ್ಲಿ ತಮ್ಮ ಮಕ್ಕಳು ಅಮಲಿಗೆ ಸಿಲುಕಬಾರದು ಎಂಬ ಕಾರಣಕ್ಕೆ 15, 16 ವರ್ಷಕ್ಕೆ ರಾಜ್ಯದಿಂದ ಹೊರಗೆ ಕಳುಹಿಸುತ್ತಿದ್ದಾರೆ. ಹುಕ್ಕಾಬಾರ್ಗಳು ಮಾದಕವಸ್ತುವಿನ ಆರಂಭಿಕ ಹಂತ. ಇದನ್ನು ಸಂಪೂರ್ಣ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. +ಹೊಸ ವರ್ಷಕ್ಕೆ ಸಂಗ್ರಹಿಸಿದ್ದ 21ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ +ಗೃಹಸಚಿವ ಡಾ.ಜಿ.ಪರಮೇಶ್ವರ್, ಬೆಂಗಳೂರು ಹಾಗೂ ಬೇರೆ ಪ್ರದೇಶಗಳಲ್ಲಿ ಹುಕ್ಕಾಬಾರ್ಗಳ ಪ್ರಮಾಣ ಹೆಚ್ಚಾಗಿದೆ. ದೊಡ್ಡ ಪೈಪ್ನಲ್ಲಿ ಬೇರೆ ಬೇರೆ ರೀತಿಯ ಫ್ಲೇವರ್ಗಳನ್ನು ಸೇರಿಸಿ ಧೂಮಪಾನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಇವುಗಳಿಗೆ ಬಿಬಿಎಂಪಿ ಟ್ರೇಡ್ ಲೈಸೆನ್ಸ್ ನೀಡುತ್ತಿಲ್ಲ. ಹುಕ್ಕಾಬಾರ್ಗಳ ಮಾಲಿಕರು 2022 ರಿಂದಲೂ ರಾಷ್ಟ್ರೀಯ ಆಹಾರ ಸುರಕ್ಷತಾ ಪ್ರಾಕಾರ (ಫುಡ್ ಸೇಫ್ಟಿ ಅಥಾರಿಟಿ ಆಫ್ ಇಂಡಿಯಾ) ದಿಂದ ಅನುಮತಿ ಪಡೆದು ಹುಕ್ಕಾಬಾರ್ಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ನ್ಯಾಯಾಲಯ ಈ ಕುರಿತು ತೀರ್ಪು ನೀಡಿದ್ದು, ಕಾಫಿ ಬಾರ್, ಟೀ ಬಾರ್ನಂತಹ ವಾಣಿಜ್ಯ ಪ್ರದೇಶಗಳಲ್ಲೇ ಪ್ರತ್ಯೇಕವಾದ ಜಾಗ ಮೀಸಲಿರಿಸಿ ಹುಕ್ಕಾಬಾರ್ ನಡೆಸಬಹುದು ಎಂದು ತಿಳಿಸಿದರು. +ನಿಯಮಗಳನ್ನು ಪಾಲನೆ ಮಾಡದೇ ಇದ್ದ ವೇಳೆ ದೂರು ಬಂದರೆ ಪೊಲೀಸರು ಸ್ಥಳ ಪರಿಶೀಲನೆ ಮಾಡಲು ಅವಕಾಶವಿದೆ. ಆದರೆ ಹುಕ್ಕಾಬಾರ್ಗಳ ಮೇಲೆ ನಿಯಂತ್ರಣ ಸಾಸಲು ನಮಗೆ ಅವಕಾಶಗಳಿಲ್ಲವಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.ಕಳೆದ ಅಕ್ಟೋಬರ್ 19 ರಂದು ಕೋರಮಂಗಲದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಅದರಲ್ಲಿ ಮೂರನೇ ಮಹಡಿಯಲ್ಲಿ 14 ಗ್ಯಾಸ್ ಸಿಲಿಂಡರ್ಗಳನ್ನು ಇರಿಸಲಾಗಿತ್ತು. ಬೆಂಕಿ ಅನಾಹುತ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಕೆಲವರಿಗೆ ಗಾಯಗಳಾಗಿವೆ. +ವ್ಯಕ್ತಿಯೊಬ್ಬರು ಮೂರನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಆತ ಮರದ ಮೇಲೆ ಬಿದ್ದಿರುವುದರಿಂದ ಅವರು ಪವಾಡದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಕ್ಕಾಬಾರ್ಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಯುವಕರ ಭವಿಷ್ಯದ ದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ವಿವಿಧ ಇಲಾಖೆಗಳೊಂದಿಗೆ ಚರ್ಚಿಸಿ ಪ್ರತ್ಯೇಕ ಕಾನೂನು ರೂಪಿಸಲಾಗುವುದು ಎಂದು ಹೇಳಿದರು. ಈ ಹಿಂದೆ 4 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹುಕ್ಕಾಬಾರ್ಗಳನ್ನು ನಿಷೇಸಿದ್ದರೆ ಇಂದು ಸಮಸ್ಯೆಯೇ ಇರುತ್ತಿರಲಿಲ್ಲ. ನನ್ನ ಬಗ್ಗೆ ನಿಷೇಧ ಸಮಸ್ಯೆಗೆ ಪರಿಹಾರ ಅಲ್ಲ. ಅದನ್ನು ನಿಯಂತ್ರಣ ಮಾಡುವುದು ಸೂಕ್ತ ಎಂದರು. +20 ಕೋಟಿ ರೂ. ಮೌಲ್ಯದ ಡ್ರಗ್ ವಶ :ಮಾದಕವಸ್ತುಗಳು ಹಾಗೂ ಹುಕ್ಕಾಬಾರ್ಗಳ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ಪೊಲೀಸರು ಸಾಮಾಜಿಕವಾದ ಈ ಪಿಡುಗುಗಳ ವಿರುದ್ಧ ನಿರಂತರವಾದ ಕಾರ್ಯಾಚರಣೆ ನಡೆಸುತ್ತಲೇ ಬಂದಿದ್ದಾರೆ. +ಬೆಂಗಳೂರಿನಲ್ಲಿ ನಿನ್ನೆ 20 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನೈಜೀರಿಯಾ ಮೂಲದ ವ್ಯಕ್ತಿಯೊಬ್ಬ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ದಾಸ್ತಾನು ಮಾಡಿಕೊಂಡಿದ್ದ. ಪೊಲೀಸರು ಕ್ರಮ ಕೈಗೊಂಡು 20 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿಸಿದರು. +ಕಳೆದ 4 ವರ್ಷಗಳಲ್ಲಿ ನಿಯಮ ಉಲ್ಲಂಘನೆ ಮಾಡಿದ 102 ಪ್ರಕರಣಗಳನ್ನು ದಾಖಲಿಸಲಾಗಿದೆ. 2020 ರಲ್ಲಿ 14, 2021 ರಲ್ಲಿ 25, 2022 ರಲ್ಲಿ 38, 2023 ರಲ್ಲಿ 25 ಪ್ರಕರಣಗಳು ದಾಖಲಾಗಿವೆ ಎಂದು ವಿವರಣೆ ನೀಡಿದರು. \ No newline at end of file diff --git a/eesanje/url_46_290_4.txt b/eesanje/url_46_290_4.txt new file mode 100644 index 0000000000000000000000000000000000000000..dff8313a9551af37c529a575d04322f4752a3103 --- /dev/null +++ b/eesanje/url_46_290_4.txt @@ -0,0 +1,12 @@ +ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ +ಬೆಳಗಾವಿ, ಡಿ.12- ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣದಲ್ಲಿ ರಾಜ್ಯಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರ ವಸೆ ನೀಡಿದ್ದಾರೆ.ವಿಧಾನಸಭೆಯ ಶೂನ್ಯವೇಳೆಯಲ್ಲಿ ಬಿಜೆಪಿ ಸದಸ್ಯ ವಿ.ಸುನಿಲ್ಕುಮಾರ್ ಅವರು ಘಟನೆಯನ್ನು ಖಂಡಿಸಿದರು. +ನಮ್ಮ ರಾಜ್ಯದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ ಪ್ರಕರಣಗಳು ನಡೆದಿರಲಿಲ್ಲ. ಇತ್ತೀಚೆಗೆ ಜನರಿಗೆ ಪೊಲೀಸರ ಮೇಲಿನ ಭಯ ಕಡಿಮೆಯಾಗಿದೆ. ಅದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ. ಸರ್ಕಾರ ಆರೋಪಿಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳಬೇಕು. ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು. +ಬೆಳಗಾವಿ ಜಿಲ್ಲೆ ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಕಾಂಗ್ರೆಸ್ನ ಅಶೋಕ್ ಪಟ್ಟಣ್ ಅವರು ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು.ಇದಕ್ಕೆ ಉತ್ತರ ನೀಡಿದ ಸಚಿವ ಡಾ.ಜಿ.ಪರಮೇಶ್ವರ್, ಸದಸ್ಯರಿಗೆ ಲಿಖಿತ ಉತ್ತರವನ್ನು ಕಳುಹಿಸಿಕೊಡುತ್ತೇನೆ. ಆದರೆ ಸದ್ಯಕ್ಕೆ ಸದಸ್ಯರ ಪ್ರಸ್ತಾಪಕ್ಕೆ ಮೌಖಿಕ ಮಾಹಿತಿ ನೀಡುವುದಾಗಿ ತಿಳಿಸಿದರು. +ಮೊನ್ನೆ ರಾತ್ರಿ 12.30 ರ ಸುಮಾರಿಗೆ ಬೆಳಗಾವಿಯಿಂದ 15 ಕಿ.ಮೀ. ದೂರದಲ್ಲಿರುವ ಗ್ರಾಮದಲ್ಲಿ ಘಟನೆ ನಡೆದಿದೆ. ಅಶೋಕ್ ಗಟ್ಕರಿ 24 ವರ್ಷದ ಯುವಕ ಪ್ರಿಯಾಂಕ ಎಂಬುವರನ್ನು ಪ್ರೀತಿಸಿದ್ದಾರೆ. ಮದುವೆಗೆ ಕುಟುಂಬಗಳಿಂದ ಅನುಮತಿ ಸಿಕ್ಕಿಲ್ಲ. ಹೀಗಾಗಿ ಮೊನ್ನೆ 12.30 ಕ್ಕೆ ಅವರಿಬ್ಬರೂ ಓಡಿಹೋಗಿದ್ದಾರೆ. +ಹೊಸ ವರ್ಷಕ್ಕೆ ಸಂಗ್ರಹಿಸಿದ್ದ 21ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ +ಪ್ರಿಯಾಂಕ ಕುಟುಂಬದ 15 ರಿಂದ 20 ಜನರು ಹುಡುಗನ ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿರುವ ಯುವಕನ ತಾಯಿ 55 ವರ್ಷದ ಕಮಲಮ್ಮ ಒಂಟಿಯಾಗಿದ್ದರು. ಆಕೆಯ ಪತಿ ಚಾಲಕರಾಗಿದ್ದು, ಮಹಾರಾಷ್ಟ್ರದಲ್ಲಿದ್ದಾರೆ. ಇವರೆಲ್ಲರೂ ಮಹಿಳೆಯನ್ನು ಹೊರಗೆಳೆದುಕೊಂಡು ಬಂದು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದಾರೆ. +ಪೊಲೀಸರಿಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಧಾವಿಸಿ ಮಹಿಳೆಗೆ ಬಟ್ಟೆ ಕೊಟ್ಟು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾನು ಆಸ್ಪತ್ರೆಗೆ ಹಾಗೂ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಅಮಾನವೀಯವಾಗಿ ನಡೆಸಿಕೊಂಡವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಇದರ ಜೊತೆಗೆ ಓಡಿ ಹೋಗಿರುವ ಆ ಇಬ್ಬರನ್ನೂ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಘಟನೆಯಿಂದ ಆಘಾತಕ್ಕೊಳಗಾಗಿ ಅವರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಕಾಳಜಿ ವಹಿಸಿದ್ದೇನೆ ಎಂದರು. +ಪ್ರೀತಿ, ಪ್ರೇಮ ಸಹಜವಾದ ಪ್ರಕ್ರಿಯೆಗಳು. ಇಷ್ಟವಾದವರನ್ನು ಮದುವೆಯಾಗಲು ಹಲವು ಸಂದರ್ಭಗಳಲ್ಲಿ ಕುಟುಂಬದವರು ಒಪ್ಪಿಕೊಳ್ಳುತ್ತಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ವಿರೋಧಗಳಿರುತ್ತವೆ. ಮರ್ಯಾದೆಯ ಹೆಸರಿನಲ್ಲಿ ಸ್ವಂತ ಮಗಳನ್ನೇ ಕತ್ತರಿಸಿ ಹಾಕಿರುವ ಪ್ರಕರಣಗಳೂ ಇವೆ. ಸಮಾಜದ ಮನಸ್ಥಿತಿ ಬದಲಾಗಬೇಕು. ಪೊಲೀಸರು, ಕಾನೂನಿನಿಂದಲೇ ಎಲ್ಲವನ್ನೂ ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. +ಮಹಿಳೆ ಮೇಲೆ ದೌರ್ಜನ್ಯ : ಕಠಿಣ ಕ್ರಮಕ್ಕೆ ಆಗ್ರಹಬೆಳಗಾವಿ,ಡಿ.12 – ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಖಂಡನೀಯ. ಇಂಥ ಪ್ರಕರಣಗಳು ಮತ್ತೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮನವಿ ಮಾಡಿದರು. +ಮಾಧ್ಯಮ ಪ್ರತಿನಿಗಳ ಜೊತೆ ಮಾತನಾಡಿದ ಅವರು, ವಂಟಮೂರಿಯ ಘಟನೆ ಬಗ್ಗೆ ನಾವು ಪ್ರತಿಯೊಬ್ಬರೂ ತಲೆತಗ್ಗಿಸುವಂತೆ ಮಾಡಿದೆ. ನಾಗರಿಕ ಸಮಾಜದಲ್ಲಿ ಈ ರೀತಿ ಅಮಾನವೀಯವಾಗಿ ಆ ತಾಯಿಯನ್ನು ಗಂಟೆಗಟ್ಟಲೆ ಕಟ್ಟಿಹಾಕಿ ಇಂಥ ಘಟನೆ ನಡೆದುದು ಖಂಡನಾರ್ಹ ಎಂದರು. +ಇಂಥ ಘಟನೆ ಪುನರಾವರ್ತನೆ ಆಗಬಾರದು. ದೇಶದ ಜನರ ಮುಂದೆ ತಲೆತಗ್ಗಿಸುವಂಥ ಇಂಥ ಘಟನೆ ಮರುಕಳಿಸದಂತೆ ರಾಜ್ಯ ಸರಕಾರ ಮತ್ತು ಗೃಹ ಸಚಿವರು, ಪೊಲೀಸ್ ಇಲಾಖೆಗೆ ಸ್ಪಷ್ಟ ಸಂದೇಶ ಕೊಡಬೇಕು ಎಂದು ಅವರು ಮನವಿ ಮಾಡಿದರು. ಈ ರೀತಿಯ ಘಟನೆ ಕುರಿತು ಯಾರೂ ಯೋಚಿಸದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. \ No newline at end of file diff --git a/eesanje/url_46_290_5.txt b/eesanje/url_46_290_5.txt new file mode 100644 index 0000000000000000000000000000000000000000..0dac07264b0d61bcaa1c98484818ab7ce4e395da --- /dev/null +++ b/eesanje/url_46_290_5.txt @@ -0,0 +1,7 @@ +ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ + +ಬೆಂಗಳೂರು, ಡಿ.12- ಭಾರೀ ಭದ್ರತೆಯಿರುವ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಧೇಯ ಕರೆಯಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ನಗರದಲ್ಲಿ 60 ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಸಂದೇಶ ಕಳುಹಿಸಿ ಆತಂಕವನ್ನುಂಟು ಮಾಡಿದ್ದ ಘಟನೆ ಮಾಸುವ ಮುನ್ನವೇ ಇಂದು ರಾಜಭವನದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಕರೆಬಂದಿರುವುದು ಪೊಲೀಸರ ನಿದ್ದೆಗೆಡೆಸಿದೆ. +ರಾತ್ರಿ 11.30 ರ ಸುಮಾರಿನಲ್ಲಿ ಎನ್‍ಐಎ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಕಂಟ್ರೋಲ್ ರೂಂ ಸಿಬ್ಬಂದಿ ನಗರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ರವಾನಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದರೂ ಯಾವುದೇ ಬಾಂಬ್ ಪತ್ತೆಯಾಗದಿದ್ದಾಗ ನಿಟ್ಟುಸಿರು ಬಿಟ್ಟರು. +ಬೆಂಗಳೂರಲ್ಲಿ ಅಕ್ರಮ ನೀರು ಸಂಪರ್ಕ ಹೊಂದಿದ್ದರೆ ಜೈಲು ಗ್ಯಾರಂಟಿ..! +ಇದೊಂದು ಹುಸಿ ಕರೆ ಎಂಬುದು ಖಚಿತವಾಗುತ್ತಿದ್ದಂತೆ ಎನ್‍ಐಎ ಕಂಟ್ರೋಲ್ ರೂಂ ಸಿಬ್ಬಂದಿಯಿಂದ ಕರೆ ಮಾಡಿದ ನಂಬರ್ ಪಡೆದು ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಸಿ ಕರೆ ಮಾಡಿದ ವ್ಯಕ್ತಿಗಾಗಿ ಶೋಧ ನಡೆಸುತ್ತಿದ್ದಾರೆ.ಡಿ.1 ರಂದು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಸುಮಾರು 60 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಸಂದೇಶ ಬಂದಿದ್ದವು. +ಅಂದಿನ ಘಟನೆಗೆ ಸಂಬಂಸಿದಂತೆ ಆಯಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ಇ-ಮೇಲ್ ರಿಜಿಸ್ಟ್ರೇಶನ್ ಲಾಗಿನ್ ಐಪಿ ಮಾಹಿತಿ, ಇ-ಮೇಲ್ ಚಾಟ್ ಸೇರಿದಂತೆ ಹಲವು ಮಾಹಿತಿ ನೀಡುವಂತೆ ಗೂಗಲ್‍ಗೆ ಪತ್ರ ಬರೆದು ವಿವರಣೆ ಕೇಳಿದ್ದಾರೆ. ಹುಸಿ ಬಾಂಬ್ ಸಂದೇಶ ಕಳುಹಿಸಿದ್ದ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಪೊಲೀಸ್ ಇಲಾಖೆ ಸರ್ವರ್ ಪ್ರೊವೈಡರ್‍ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. \ No newline at end of file diff --git a/eesanje/url_46_290_6.txt b/eesanje/url_46_290_6.txt new file mode 100644 index 0000000000000000000000000000000000000000..8254fd90bf4fc78ae5323d820d3957709d6cebdb --- /dev/null +++ b/eesanje/url_46_290_6.txt @@ -0,0 +1,5 @@ +ಬೀದಿ ನಾಯಿಗಳ ಸಮೀಕ್ಷೆ ಮಾಡಿ ಸಂತಾನಹರಣ ಶಸ್ತ್ರ ಚಿಕಿತ್ಸೆ : ಸಚಿವ ರಹೀಂ ಖಾನ್ +ಬೆಳಗಾವಿ, ಡಿ.12- ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಸಮೀಕ್ಷೆಯನ್ನು ಕೈಗೊಂಡು, ಸಂತಾನಹರಣ ಶಸ್ತ್ರ ಚಿಕಿತ್ಸೆ ಹಾಗೂ ರೋಗನಿರೋಧಕ ಲಸಿಕೆಯನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. +ಪ್ರಶ್ನೋತ್ತರ ಕಲಾಪದಲ್ಲಿಂದು ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ನಗರ ಸ್ಥಳೀಯ ಸಂಸ್ಥೆಗಳು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸೂಚಿಸಲಾಗಿದೆ ಎಂದರು. +ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿವರಿಗೆ ಕಾಲಾವಕಾಶ +ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಸೂಕ್ತವಾದ ಪ್ರಮಾಣಿತ ಕಾರ್ಯಾಚರಣೆ ಅನುಷ್ಠಾನಗೊಳಿಸುವ ವಿಧಾನವನ್ನು ಕುರಿತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ವತಿಯಿಂದ ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟುವ ಕಾಯ್ದೆ 2001 ರಡಿ ಪ್ರಾಣಿಗಳನ್ನು ರಕ್ಷಿಸಲು, ವಶಪಡಿಸಿಕೊಳ್ಳಲು ಮತ್ತು ಪ್ರಾಣಿಗಳ ಪಾಲನೆಗಾಗಿ ಶಿಷ್ಟಾಚಾರವನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_290_7.txt b/eesanje/url_46_290_7.txt new file mode 100644 index 0000000000000000000000000000000000000000..e7fd7ada58690ce5eda43b6565c52a9bb25dc29b --- /dev/null +++ b/eesanje/url_46_290_7.txt @@ -0,0 +1,7 @@ +ಆರ್ಟಿಕಲ್ 370 ಕುರಿತ ಸುಪ್ರೀಂ ಆದೇಶ ಸ್ವಾಗತಾರ್ಹ : ದೇವೇಗೌಡರು +ಹಾಸನ,ಡಿ.12- ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಅಸ್ತು ನೀಡಿರುವುದು ಸಂತಸ ತಂದಿದ್ದು, ಸುಪ್ರೀಂ ಆದೇಶವನ್ನು ಸ್ವಾಗತಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ .ದೇವೇಗೌಡ ತಿಳಿಸಿದರು. +ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಟಿಕಲ್ 370 ಯಾವಾಗ ಕಾಶ್ಮೀರ ಕ್ಕೆ ಕೊಟ್ಟಿದ್ದಂತಹ ವಿಶೇಷ ಸವಲತ್ತು ಇದೆಯೋ ಅದನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ತರುವುದರ ಮುಖೇನ ಆ ಒಂದು ಸವಲತ್ತನ್ನು ರದ್ದು ಮಾಡಿದೆ. +ಅದರಿಂದ ಬೇರೆ ರಾಜ್ಯಗಳಿಗೆ ಏನು ಅನುಕೂಲ ಆಗುತ್ತದೆಯೋ, ಅನ್ವಯ ಆಗುತ್ತದೆಯೋ, ಅದೇ ಕಾಶ್ಮೀರಕ್ಕೂ ಜಮ್ಮುಗೂ ಅನ್ವಯವಾಗಲಿದೆ ಎಂದು ಹೇಳಿದರು.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಂದು ಕಡೆ ಮತ್ತೊಂದು ಕಡೆ ಎನ್‍ಡಿಎ ಇದ್ದು ನಾವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಈ ರಾಷ್ಟ್ರದ ಮಹಾ ಜನತೆ ಇಂಡಿಯಾಗೆ ತೀರ್ಪು ಕೊಡುತ್ತಾರೋ ಅಥವಾ ಎನ್‍ಡಿಎ ಮೈತ್ರಿಕೂಟಕ್ಕೆ ತೀರ್ಪು ಕೊಡುತ್ತಾರೋ ಕಾದು ನೋಡಬೇಕು ಎಂದರು. +ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿವರಿಗೆ ಕಾಲಾವಕಾಶ +ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ರ್ಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಹಾಸನದಲ್ಲಿ ಸಿಟ್ಟಿಂಗ್ ಎಂಪಿ ಇದ್ದು ಅವರೇ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ಮೇ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಅದಕ್ಕೆಲ್ಲ ಉತ್ತರ ಕೊಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು. +ಕಡೆ ಕಾರ್ತಿಕ: ವಿಶೇಷ ಪೂಜೆಜಿಲ್ಲೆ ಹೊಳೆನರಸೀಪುರದ ಹರದನಹಳ್ಳಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ದಂಪತಿ ಸಮೇತರಾಗಿ ಹುಟ್ಟೂರಿನಲ್ಲಿ ಮನೆ ದೇವರ ಪೂಜೆ ನೆರವೇರಿಸಿ, ಕಾರ್ತಿಕ ಮಾಸದ ಕಡೇ ಸೋಮವಾರ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ಹೋಮ ಹವನದಲ್ಲಿ ಭಾಗಿಯಾಗಿದ್ದರು.ಪುತ್ರ ರೇವಣ್ಣ ಹಾಗು ಪತ್ನಿ ಚೆನ್ನಮ್ಮ ಜೊತೆ ಹೆಚ್.ಡಿ.ದೇವೇಗೌಡರು ಪೂಜೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_290_8.txt b/eesanje/url_46_290_8.txt new file mode 100644 index 0000000000000000000000000000000000000000..3391641b48dc276861997fc63ff9b48af1ebb6f4 --- /dev/null +++ b/eesanje/url_46_290_8.txt @@ -0,0 +1,6 @@ +ಸರ್ಕಾರಿ ಜಾಗಕ್ಕೆ ‘ಈ ಜಾಗ ನಮ್ಮದು’ ಎಂದು ಬೋರ್ಡ್ ಹಾಕಿದ್ದಾರೆ : ಶಾಸಕ ಮುನಿರತ್ನ +ಬೆಳಗಾವಿ,ಡಿ.12-ರಾಜರಾಜೇಶ್ವರಿ ನಗರದಲ್ಲಿ ನಾವು ಎರಡು ಎಕರೆ ಜಾಗ ಸರ್ಕಾರಿ ಜಾಗದಲ್ಲಿ ಉದ್ಯಾನವನ ನಿರ್ಮಿಸಲು ಗುದ್ದಲಿ ಪೂಜೆ ಮಾಡಲಾಗಿತ್ತು ಆದರೆ ಈಗ ಯಾರೊ ಈ ಜಾಗ ನಮ್ಮದು ಎಂದು ಬೋರ್ಡ್ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಮುನಿರತ್ನ ವಿಧಾನಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಬಗ್ಗೆ ಪ್ರಸ್ತಾಪಿಸಿದ್ದಾರೆ. +ನನ್ನ ಕ್ಷೇತ್ರದಲ್ಲಿ ನಾವು ಹಿಂದೆ ಪಾರ್ಕ್ ನಿರ್ಮಿಸಲು ಗುದ್ದಲಿ ಪೂಜೆ ಮಾಡಲಾಗಿತ್ತು ನಂತರ ಕಾಮಗಾರಿ ಆರಂಭಿಸಲು ಹೋದಾಗ ಚುನಾವಣೆ ನೀತಿಸಂಹಿತೆ ಇತ್ತು ಆದರೆ ಹೊಸ ಸರ್ಕಾರ ಬಂದ ಮೇಲೆ ಅಲ್ಲಿ ಖಾಸಗಿ ಸ್ವತ್ತು ಎಂದು ಬೋರ್ಡ್ ಹಾಕಿದ್ದಾರೆ. ನಾನು ಬಿಬಿಎಂಪಿ ಅಧಿಕಾರಿಗಳನ್ನು ಕರೆದು ಮಾತನಾಡಿದೆ ಆದರೆ ಕೋರ್ಟ್‍ನಲ್ಲಿ ಜಾಗ ಅವರಿಗೆ ಆಗಿದೆ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ. ಬೆಂಗಳೂರು ರಕ್ಷಣೆ ಮಾಡಬೇಕಾದದ್ದು ಉಸ್ತುವಾರಿ ಸಚಿವರ ಜವಾಬ್ದಾರಿ ,ಸರ್ಕಾರಿ ಭೂಮಿ ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು. +ಕೆಂಪು ಸಮುದ್ರದಲ್ಲಿ ತೈಲ ಸಾಗಿಸುತ್ತಿದ್ದ ಹಡಗಿನ ಮೇಲೆ ದಾಳಿ +ಡಿಸಿಎಂ ಡಿ ಕೆ ಶಿವಕುಮಾರ್ ಉತ್ತರಿಸಿ ಯಾವ ವಾರ್ಡ್‍ನಲ್ಲಿ ಹಿಗಾಗಿದೆ ಎಂದಾಗ ವಾರ್ಡ್ ನಂಬರ್ 73 ಕೊಟ್ಟಿಗೆಪಾಳ್ಯ ಎಂದು ಶಾಸಕ ಮುನಿರತ್ನ ಹೇಳಿದರು ಇದಕ್ಕೆ ಸರ್ಕಾರದ ಜಮೀನು ಕಬಳಿಕೆಗೆ ನಾವು ಬಿಡಲ್ಲ ನಾವು ತೆರವು ಗೋಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. +ಮತ್ತೆ ಎದ್ದು ನಿಂತ ಮುನಿರತ್ನ ಅವರು ಪ್ರಭಾವಿ ನಾಯಕರ ಹೆಸರು ಹೇಳಿ ಭೂಮಿ ಕಬಳಿಕೆ ಮಾಡಿದ್ದಾರೆ ಅವರ ಹೆಸರು ಹೇಳಲ್ಲ ಎಂದು ಕೇಳಿದರು ರಾಜರಾಜೇಶ್ವರಿ ನಗರದಲ್ಲಿ ನಿನಿಗಿಂತ ಯಾರಪ್ಪ ಪ್ರಭಾವಿ ಇದ್ದಾರೆ ಎಂದು ಹೇಳಿ ಡಿಸಿಎಂ ಡಿ ಕೆ ಶಿವಕುಮಾರ್ ಹಾಸ್ಯ ಚಟಾಕಿ ಹಾರಿಸಿದರು. \ No newline at end of file diff --git a/eesanje/url_46_290_9.txt b/eesanje/url_46_290_9.txt new file mode 100644 index 0000000000000000000000000000000000000000..3db28397bb072d9da04b1e0886f6686219c3b38d --- /dev/null +++ b/eesanje/url_46_290_9.txt @@ -0,0 +1,7 @@ +ವಾಹನಗಳಿಗೆ ಹೈಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿವರಿಗೆ ಕಾಲಾವಕಾಶ + +ಬೆಳಗಾವಿ : ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟರ್ ನಂಬರ್ ಪ್ಲೇಟ್ () ಕಡ್ಡಾಯಗೊಳಿಸಲಾಗಿದ್ದು, ಹಳೆ ವಾಹನಗಳಿಗೆ ನಂಬರ್ ಪ್ಲೇಟ್ ಬದಲಾಹಿಸಲು 2024ರ ಫೆಬ್ರವರಿವರಿಗೆ ಕಾಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಶಾಸಕ ಯಶವಂತರಾಯ ಗೌಡ ಪಾಟೀಲ್ ರವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಕೇಂದ್ರ ಸರ್ಕಾರದ ಆದೇಶದ ಅನುಸಾರ ರಾಜ್ಯದಲ್ಲಿ ೧-೦೪-೧೯ ನಂತರ ಮಾರಾಟವಾಗುವ ಎಲ್ಲ ವಾಹನಗಳಿಗೂ ನಂಬರ್ ಪ್ಲೇಟ್ ಕಡ್ಡಾಯ ವಾಗಿದ್ದು, ಹಳೆ ವಾಹನಗಳಿಗೆ ನಂಬರ್ ಪ್ಲೇಟ್ ಬದಲಾಯಿಸಲು 17-02-24 ವರಿಗೆ ಕಾಲಾವಕಾಶ ನೀಡಲಾಗಿದೆ. +ಹೆಚ್. ಎಸ್. ಆರ್.ಪಿ ಅಥವಾ ಹೈ ಸೆಕ್ಯುರಿಟಿ ರಿಜಿಸ್ಟರ್ ಪ್ಲೇಟ್ ಟ್ಯಾಮ್ ಪರ್ ಪ್ರೂಫ್ ಮತ್ತು ಮರುಬಳಕೆ ಮಾಡಲಾಗದ ಲಾಕ್‌ಗಳನ್ನು ಹೊಂದಿರುವ ನಂಬ‌ರ್ ಪ್ಲೇಟ್‌ನ ಹೊಸ ರೂಪವಾಗಿದೆ. ಒಮ್ಮೆ ನಂಬರ್ ಪ್ಲೇಟ್ ಅನ್ನು ಅಳವಡಿಸಿದರೆ, ಅದನ್ನು ಸುಲಭವಾಗಿ ತೆಗೆದುಹಾಕಲು ಸಾಧ್ಯವಾಗುವುದಿ. ನಂಬರ್ ಪ್ಲೇಟ್‌ನ್ನು ಬದಲಾಯಿಸಲು ಪ್ರಯತ್ನಿಸಿದಲ್ಲಿ ಅದು ನಾಶವಾಗುತ್ತದೆ. +ಕೇರಳದಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ 50 ಸಾವಿರ ದಂಡ, ತಪ್ಪಿದರೆ 1ವರ್ಷ ಜೈಲು + ಪ್ಲೇಟ್‌ಗಳು ಒಂದೇ ರೀತಿಯ ಫಾಂಟ್ ಮತ್ತು ವಿನ್ಯಾಸವನ್ನು ಹೊಂದಿರುತ್ತದೆ ಮತ್ತು ನಂಬರ್ ಪ್ಲೇಟ್‌ ಎಡಭಾಗದಲ್ಲಿ ನೀಲಿ ಬಣ್ಣದ ಚಕ್ರವನ್ನು ಹೊಂದಿರುತ್ತದೆ. ಪ್ಲೇಟ್‌ನ ಉಳಿದ ಭಾಗದಲ್ಲಿ ವಾಹನ ವರ್ಗದ ಆಧಾರದ ಮೇಲೆ బణ ನಿರ್ಧರಿಸಲಾಗುತ್ತದೆ. ಉದಾಹರಣೆಗೆ ಖಾಸಗಿ ವಾಹನಗಳಿಗೆ ಬಣ್ಣದ ಹಿನ್ನೆಲೆಯಲ್ಲಿ ಕಪ್ಪು ಬಣ್ಣದ ಸಂಖ್ಯೆಗಳಿರುತ್ತವೆ. ನಂಬರ್ ಪ್ಲೇಟ್‌ನಲ್ಲಿ “ಇಂಡಿಯಾ” ಎಂಬ ಹಾಟ್ ಸ್ಟ್ಯಾಂಪ್ ಕೂಡ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. +ಕಳೆದ ಮೂರು ವರ್ಷಗಳಲ್ಲಿ ದೋಷ ಪೂರಿತ ನಂಬ‌ರ್ ಪ್ಲೇಟ್ ಹೊಂದಿರುವ ವಾಹನಗಳ ವಿರುದ್ಧ ಒಟ್ಟು 71,796 ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ. ಮುಂದಿನ ಕಾಲಾವಕಾಶದ ವರಿಗೆ ದಂಡ ವಿಧಿಸದಂತೆ ಪೊಲೀಸ್ ಪತ್ರ ಬರೆಯಲಾಗಿದೆ ಎಂದು ಉತ್ತರ ನೀಡಿದ್ದಾರೆ. ಸಾರಿಗೆ ಇಲಾಖೆಯು ಹೆಚ್. ಎಸ್. ಆರ್.ಪಿ ನಂಬರ್ ಪ್ಲೇಟ್ ಗಳಿಗೆ ದರ ನಿಗದಿ ಮಾಡಿರುವುದಿಲ್ಲ, ಸದರಿ ದರವನ್ನು ಹೆಚ್. ಎಸ್. ಆರ್.ಪಿ ತಯಾರಿಕಾ ನಿಗದಿಪಡಿಸುತ್ತಾರೆ ಎಂದು ಸಚಿವರು ತಿಳಿಸಿದ್ದಾರೆ \ No newline at end of file diff --git a/eesanje/url_46_291_1.txt b/eesanje/url_46_291_1.txt new file mode 100644 index 0000000000000000000000000000000000000000..bc03b37763b2a7a887803fae39b5ea14cb5ccbf1 --- /dev/null +++ b/eesanje/url_46_291_1.txt @@ -0,0 +1,5 @@ +ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿ ಅಳವಡಿಕೆಗೆ ನಿರ್ಧರಿಸಿಲ್ಲ : ಖಂಡ್ರೆ +ಬೆಳಗಾವಿ, ಡಿ.11-ಆನೆ ಸೇರಿದಂತೆ ವನ್ಯ ಜೀವಿಗಳ ದಾಳಿ ಸಂಬಂಧ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸೋಲಾರ್ ತಂತಿ ಬೇಲಿಯನ್ನು ಅಳವಡಿಸಲು ಸದ್ಯಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯ ಕೆ.ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವನ್ಯಪ್ರಾಣಿಗಳಿಗಾಗಿ ಅರಣ್ಯ ಪ್ರದೇಶಗಳ ಒಳಗೆ ನೀರಿನ ಲಭ್ಯತೆ ಹೆಚ್ಚಿಸಲು ರಕ್ಷಿತಾರಣ್ಯಗಳಲ್ಲಿ ಕೆರೆಗಳ ನಿರ್ಮಾಣ ಹಾಗೂ ಪುನಶ್ಚೇತನ ಗೊಳಿಸಿ ವನ್ಯಪ್ರಾಣಿಗಳ ಆವಾಸ ಸ್ಥಾನವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಇದರಿಂದ ಕಾಡಾನೆ ಹಾಗೂ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬಾರದಂತೆ ತಡೆಯಲಾಗುತ್ತಿದೆ ಎಂದರು. +ಅರಣ್ಯ ಪ್ರದೇಶಗಳಲ್ಲಿ ಹುಲ್ಲುಗಾವಲು ಸಂರಕ್ಷಣೆ ಹಾಗೂ ಅಭಿವೃದ್ಧಿಗೊಳಿಸಲು ಹೆಚ್ಚಿನ ಅರಣ್ಯ ಪ್ರದೇಶಗಳಲ್ಲಿ ದಟ್ಟವಾಗಿ ಬೆಳೆದ ಲಂಟಾನ ಮತ್ತು ಯುಪಟೋರಿಯಂ ಕಳೆಗಳಿಂದಾಗಿ ಹುಲ್ಲಿನ ಬೆಳವಣಿಗೆಗೆ ತೀವು ಅಡಚಣೆಯಾಗಿದೆ. ಅರಣ್ಯದಲ್ಲಿ ಹುಲ್ಲಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಹುಲ್ಲು ಬೆಳೆಯುವ ಪ್ರದೇಶಗಳಲ್ಲಿ ಬೆಳದಿರುವ ಲಂಟಾನ ಮತ್ತು ಯುಪಟೋರಿಯಂ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸಿ ಅರಣ್ಯಕ್ಕೆ ಪೂರಕವಾದ ಹುಲ್ಲು ಬೆಳೆಯಲು ಅನುವು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. +ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆ ಏರಿಕೆ +ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ, ನಿರ್ವಹಣೆ, ಆನೆ ಕಂದಕ ನಿರ್ಮಾಣ, ನಿರ್ವಹಣೆ ಮಾಡಲಾಗಿದ್ದು, ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಅದೇ ರೀತಿ, ಕಾಡಾನೆ ಹಾವಳಿ ತುರ್ತು ನಿರ್ವಹಣೆಗಾಗಿ ಕ್ಷಿಪ್ರ ಕಾರ್ಯಪಡೆ ತಂಡಗಳನ್ನು ರಚಿಸಿ ನಿರ್ವಹಿಸಲಾಗುತ್ತಿದೆ. ಕಾಡಾನೆ ಹಿಮ್ಮೆಟ್ಟಿಸುವ ತಂಡಗಳನ್ನು ರಚಿಸಿ ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_291_10.txt b/eesanje/url_46_291_10.txt new file mode 100644 index 0000000000000000000000000000000000000000..9bd0028fa2a374a6aa15a22c7338d8f6ab2ffb87 --- /dev/null +++ b/eesanje/url_46_291_10.txt @@ -0,0 +1,9 @@ +ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ..! +ಹಾಸನ,ಡಿ.10- ಕಾಂಗ್ರೆಸ್‍ನ ನಾಯಕರೊಬ್ಬರು 50 ಜನರನ್ನು ಕರೆದುಕೊಂಡು ಬರುವುದಾಗಿ ಕೇಂದ್ರದ ಬಿಜೆಪಿ ನಾಯಕರ ಬಳಿ ಹೋಗಿದ್ದ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 50 ಜನರನ್ನು ಕರೆದುಕೊಂಡು ಸಣ್ಣಪುಟ್ಟವರು ಬಿಜೆಪಿ ನಾಯಕರ ಬಳಿಗೆ ಹೋಗಲು ಆಗುತ್ತದೆಯೇ? ಐದಾರು ತಿಂಗಳು ರಿಲೀಫ್ ಕೊಡಿ ಎಂದು ಕೇಂದ್ರದ ಬಿಜೆಪಿ ನಾಯಕರ ಬಳಿಗೆ ಹೋಗಿದ್ದಾರೆ ಎಂದು ಆರೋಪಿಸಿದರು. +ಮಾಡಿರುವ ಅಕ್ರಮಗಳನ್ನು ಸರಿಪಡಿಸಿಕೊಳ್ಳಲು ಹೋಗಿರುವ ಮಾಹಿತಿ ಇದೆ. ಬಿಜೆಪಿ ನಾಯಕರ ಬಳಿ ವ್ಯಾಪಾರ ಮಾಡಲು ಹೋಗಿದ್ದಾರೆ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೆ ಕುಮಾರಸ್ವಾಮಿ ಆರೋಪ ಮಾಡಿದರು. ಯಾರು ಯಾರಿಗೂ ನಿಷ್ಠೆ, ಪ್ರಾಮಾಣಿಕತೆ ಇಲ್ಲ. ಅವರವರ ಅನುಕೂಲಕ್ಕೆ ತಕ್ಕಂತೆ ಮಾಡುತ್ತಾರೆ. +ಲೋಕಸಭೆ ಚುನಾವಣೆ ಬಳಿಕ ಈ ಸರ್ಕಾರ ಏನಾಗಲಿದೆ ಎಂಬುದು ಗೊತ್ತಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು. ಮಹಾರಾಷ್ಟ್ರದಲ್ಲಿ ನಡೆದ ರೀತಿಯಲ್ಲಿ ಕರ್ನಾಟಕದಲ್ಲೂ ಯಾರು ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಇವತ್ತಿನ ರಾಜಕಾರಣ ನೋಡಿದರೆ ದೇಶದಲ್ಲಿ ಏನು ಬೇಕಾದರೂ ನಡೆಯಬಹುದು. ಯಾರಿಗೂ ಪ್ರಾಮಾಣಿಕತೆ ನಿಷ್ಠೆ ಎಂಬುದು ಉಳಿದಿಲ್ಲ ಎಂದರು. +ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಂದ ಹಿಂದೆ ಸರಿಯುವುದಿಲ್ಲ. ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ ಎಂದರು. ಬೆಳಗಾವಿಯ ಅವೇಶನದಲ್ಲಿ ಒಳ್ಳೆಯ ಚರ್ಚೆಯಾಗಲಿ ಎಂಬ ಉದ್ದೇಶದಿಂದ ಸುಮ್ಮನಿದ್ದೇನೆ. ಪೆನ್‍ಡ್ರೈವ್ ಸೇರಿದಂತೆ ಹಲವು ವಿಚಾರಗಳನ್ನು ಬದಿಗಿಟ್ಟು, ಬಲಗಾಲ ಹಾಗೂ ಉತ್ತರ ಕರ್ನಾಟಕ ಭಾಗದ ಚರ್ಚೆಗೆ ಆದ್ಯತೆ ನೀಡಲಾಗುವುದು. ಆದರೆ ಮಾಡಿರುವ ಆರೋಪಗಳಿಂದ ಪಲಾಯನ ಮಾಡುವುದಿಲ್ಲ ಎಂದು ಹೇಳಿದರು. +ಸ್ವಪಕ್ಷದವರ ವಿರುದ್ದ ವಾಗ್ದಾಳಿ ನಡೆಸಿದವರಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಒಬ್ಬರೇ ಅಲ್ಲ ಇನ್ನು ಸಾಕಷ್ಟು ಮಂದಿ ಕಾಂಗ್ರೆಸ್‍ನಲ್ಲಿದ್ದಾರೆ. ಒಂದೊಂದೇ ಧ್ವನಿ ಹೊರಬರಲಿದೆ ಎಂದು ಮಾರ್ಮಿಕವಾಗಿ ನುಡಿದರು. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಹೋರಾಟ ಮಾಡುತ್ತೇವೆ ಎಂದ ಅವರು, 2ನೇ ಬಾರಿ ಕಷ್ಟಪಟ್ಟು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಮುಸ್ಲಿಂ ಸಮುದಾಯವನ್ನು ಓಲೈಸಲು ಹೇಳಿಕೆ ನೀಡಿ ಜನರಲ್ಲಿ ಕೆಟ್ಟ ರೀತಿಯ ಭಾವನೆ ಮೂಡುವ ಪರಿಸ್ಥಿತಿಯನ್ನು ಅವರೇ ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಛತ್ತೀಸ್‍ಗಢ ಮುಖ್ಯಮಂತ್ರಿ ಆಯ್ಕೆ ಇಂದು ಫೈನಲ್ +ನಿಮಗೆ ಜಾತಿ ಗಣತಿ ಯಾಕೆ ಬೇಕು. ರಾಜ್ಯ, ದೇಶ ಉದ್ದಾರವಾಗಬೇಕಾದರೆ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ ಜಾತಿ ಗಣತಿ ಮಾಡಿ ಜಾತಿ ಜಾತಿಗಳ ನಡುವೆ ವಿಷಯ ಬೀಜ ಬಿತ್ತುತ್ತೀರ, ಅಲ್ಲೂ ಕಮೀಷನ್ ಎಷ್ಟಿದೆ ಎಂದು ಗೊತ್ತಿದೆ ಎಂದು ಆರೋಪಿಸಿದರು. +ಕಾಡಾನೆಗಳ ಕಾದಾಟದಲ್ಲಿ ಅರ್ಜುನ ಆನೆ ವೀರ ಮರಣವನ್ನಪ್ಪಿರುವುದು ದುರದೃಷ್ಟಕರ ಸಂಗತಿ. ಆ ಆನೆಯನ್ನು ಮನೆಯ ಮಗುವಿನ ರೀತಿ ನೋಡುತ್ತಿದ್ದರು. ಮೊದಲೆ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದರೆ ಆನೆ ಜೀವಂತ ಇರುತ್ತಿತ್ತು ಎಂದು ಹೇಳಿದರು. \ No newline at end of file diff --git a/eesanje/url_46_291_11.txt b/eesanje/url_46_291_11.txt new file mode 100644 index 0000000000000000000000000000000000000000..745cac952b1abfc998a4e4da24cb7fb8f6a066d6 --- /dev/null +++ b/eesanje/url_46_291_11.txt @@ -0,0 +1,9 @@ +ಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಡಿ.10- ಕಾಂಗ್ರೆಸ್‍ನವರನ್ನೇ ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. +ಐಟಿ ಅಧಿಕಾರಿಗಳು ಕಾಂಗ್ರೆಸ್‍ನವರ ಮನೆಗಳ ಮೇಲೆ ದಾಳಿ ಮಾಡುವಂತೆ ಬಿಜೆಪಿಯವರ ಮನೆಗಳ ಮೇಲೆ ಏಕೆ ದಾಳಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಜಾರ್ಖಂಡ್ ಸಂಸದರ ಮನೆಯಲ್ಲಿ ಐಟಿ ದಾಳಿಯಾಗಿ ಸಾಕಷ್ಟು ಹಣ ದೊರೆತಿದ್ದು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್‍ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಸಿದ ಸಿಎಂ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕು ಎಂದರು. +ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದು ಹೇಳಿದರು. +ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ +ಬಿಜೆಪಿಯವರ ಮನೆಗಳ ಮೇಲೆ ದಾಳಿ ಮಾಡಿದರೆ ಬೇಕಾದಷ್ಟು ಹಣ ಸಿಗಬಹುದು ಎಂದ ಅವರು, ಕರ್ನಾಟಕದಿಂದ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬುದರ ಬಗ್ಗೆ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹಾಗೆಯೇ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೂ ಮುಖ್ಯಮಂತ್ರಿ ಉತ್ತರಿಸಲಿಲ್ಲ. +ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ, ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾದ ಬಳಿಕ ಎಸ್.ನಿಜಲಿಂಗಪ್ಪನವರು ಮೊದಲ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು, ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು. +ಅಪರೂಪದ ‘ರೆಡ್ ಸ್ಟ್ರೆಟ್’ ಸೆರೆ ಹಿಡಿದ ಯುರೋಪಿಯನ್ ಸ್ಪೇಸ್ ಏಜೆನ್ಸಿ +ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಜಿತ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು. ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_291_12.txt b/eesanje/url_46_291_12.txt new file mode 100644 index 0000000000000000000000000000000000000000..246e2a9f698c96fee4efa0c9c79839a6633f1bc9 --- /dev/null +++ b/eesanje/url_46_291_12.txt @@ -0,0 +1,6 @@ +ತೆಂಗು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಚ್‍ಡಿಕೆ ಪಾದಯಾತ್ರೆ +ಹಾಸನ, ಡಿ.10- ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಣ್ಣು ತೆರೆಸಲು ಅರಸೀಕರೆಯಿಂದ ತುಮಕೂರಿನವರೆಗೂ ಪಾದಯಾತ್ರೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಜೆಡಿಎಸ್ ಹೋರಾಟ ನಡೆಸಲಿದ್ದು, ಜನವರಿಯಲ್ಲಿ ಪಾದಯಾತ್ರೆ ನಡೆಸುವುದಾಗಿ ಹೇಳಿದರು. ತೀವ್ರವಾದ ಬರಗಾಲದಿಂದ ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೊಬ್ಬರಿ ಬೆಲೆ ಕುಸಿತವಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಒಂದು ವೇಳೆ ನಾನು ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದರೆ ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಕ್ವಿಂಟಾಲ್‍ಗೆ 15000 ರೂ. ನಿಗದಿ ಮಾಡುತ್ತಿದ್ದೆ ಎಂದರು. +ಭಾರತ-ಪ್ಯಾಲೇಸ್ತೀನ್‍ ದೀರ್ಘಕಾಲದ ಸಂಬಂಧ ಮುಂದುವರೆಯಲಿದೆ : ಜೈಶಂಕರ್ +ಬರ ಪರಿಸ್ಥಿತಿಯಿಂದಾಗಿ ರಾಜ್ಯದಲ್ಲಿ 35 ಸಾವಿರ ಕೋಟಿ ರೂ.ನಷ್ಟು ಬೆಳೆ ನಷ್ಟವಾಗಿದೆ. 18 ಸಾವಿರ ಕೋಟಿ ರೂ. ಬೆಳೆ ಹಾನಿಯ ಬಗ್ಗೆ ವರದಿ ಸಲ್ಲಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಪರಿಹಾರ ಕೊಡಲು ಸಾಧ್ಯವಾಗುವುದಿಲ್ಲ. ಬರ ಪರಿಹಾರ ನೀಡಲು ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಆದರೆ, ಹೊಸ ಕಾರು ಖರೀದಿ, ಮನೆ ನವೀಕರಣಕ್ಕೆ ಹಣದ ಕೊರತೆ ಇಲ್ಲ ಎಂದು ಟೀಕಿಸಿದರು. +ಕಳೆದ ಆರು ತಿಂಗಳಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಜಪ ಮಾಡುತ್ತಿದೆ. ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಸರ್ಕಾರದ ಸಾಧನೆಯ ಪ್ರಚಾರಕ್ಕೆ ನೀಡಿದ ಜಾಹೀರಾತು 140 ಕೋಟಿ ರೂ. ಬಿಡುಗಡೆ ಮಾಡಿಲ್ಲ. ರೈತರಿಗೆ ನೆರವು ನೀಡಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. \ No newline at end of file diff --git a/eesanje/url_46_291_2.txt b/eesanje/url_46_291_2.txt new file mode 100644 index 0000000000000000000000000000000000000000..0e0c86b3c78308cc8483c1f4c9936f5973e772b0 --- /dev/null +++ b/eesanje/url_46_291_2.txt @@ -0,0 +1,8 @@ +ಹೊಸಕೋಟೆ : ಮನೆಗೆ ನುಗ್ಗಿ ವೃದ್ಧ ದಂಪತಿ ಭೀಕರ ಹತ್ಯೆ + +ಬೆಂಗಳೂರು, ಡಿ.11- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವೃದ್ಧ ದಂಪತಿ ಯನ್ನು ಬರ್ಬರವಾಗಿ ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿರುವ ಘಟನೆ ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಹೊಸಕೋಟೆ ತಾಲೂಕಿನ ಸೂಲಿಬೆಲೆ ಸಮೀಪದ ವಾಲ್ಮಿಕಿ ನಗರದ ನಿವಾಸಿಗಳಾದ ರಾಮಕೃಷ್ಣಪ್ಪ(70) ಮತ್ತು ಮುನಿರಾಮಕ್ಕ(65) ಕೊಲೆಯಾದ ವೃದ್ಧ ದಂಪತಿ. +ವ್ಯವಸಾಯ ಮಾಡಿಕೊಂಡಿದ್ದ ಈ ದಂಪತಿಗೆ ಐದು ಮಂದಿ ಮಕ್ಕಳು. ನಾಲ್ಕು ಹೆಣ್ಣು ಮಕ್ಕಳು ಹಾಗೂ ಒಬ್ಬ ಗಂಡು ಮಗ. ಎಲ್ಲರಿಗೂ ಮದುವೆಯಾಗಿದ್ದು, ಮಗ ಬೇರೆ ವಾಸವಿದ್ದಾರೆ.ದಂಪತಿಗೆ ಎರಡು ಎಕರೆ ಜಮೀನು ಹಾಗೂ ಸೂಲಿಬೆಲೆಯಲ್ಲಿ ಸೈಟುಗಳಿದ್ದು, ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೂ ಪಾಲು ಕೊಡಬೇಕೆಂದು ಮಗನಿಗೆ ಹೇಳಿದ್ದರು. ಇದೇ ವಿಚಾರಕ್ಕೆ ತಂದೆ-ತಾಯಿ ಜೊತೆ ಮಗ ಜಗಳ ಮಾಡಿಕೊಂಡಿದ್ದನು. +ಶನಿವಾರ ರಾತ್ರಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ರಾಡಿನಿಂದ ದಂಪತಿ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿ ನಂತರ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ. ಹೆಣ್ಣು ಮಕ್ಕಳು ಆಗಾಗ್ಗೆ ತಂದೆ- ತಾಯಿಗೆ ಪೊನ್ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುತ್ತಿದ್ದರು. ಅದರಂತೆ ಭಾನುವಾರ ಬೆಳಗ್ಗೆ ಒಬ್ಬ ಮಗಳು ಪೊನ್ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಹಲವಾರು ಬಾರಿ ಮಾಡಿದರೂ ಪೊನ್ ತೆಗೆಯದಿದ್ದಾಗ ಅನುಮಾನಗೊಂಡು ಸಂಜೆ ಮನೆ ಬಳಿ ಬಂದು ನೋಡಿದಾಗ ಮನೆ ಬೀಗ ಹಾಕಿರುವುದು ಕಂಡು ಬಂದಿದೆ. +ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆ ಏರಿಕೆ +ಮನೆ ಹೊರಗಡೆ ಚಪ್ಪಲಿಗಳಿರುವುದು ಗಮನಿಸಿ ಮಗಳು ಅನುಮಾನಗೊಂಡು ಕಿಟಕಿ ಮೂಲಕ ನೋಡಿದಾಗ ಅಪ್ಪ- ಅಮ್ಮ ಕೊಲೆಯಾಗಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಹಾಗೂ ಅಕ್ಕ-ಪಕ್ಕದವರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಸೂಲಿಬೆಲೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮನೆಯ ಬೀಗ ಒಡೆದು ಒಳಗೆ ಹೋಗಿ ಪರಿಶೀಲಿಸಿದಾಗ ದಂಪತಿ ಕೊಲೆಯಾಗಿರುವುದು ಕಂಡು ಬಂದಿದೆ. +ಮೃತದೇಹಗಳನ್ನು ಎಂವಿಜೆ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ದಂಪತಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಂಬಂಕರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_291_3.txt b/eesanje/url_46_291_3.txt new file mode 100644 index 0000000000000000000000000000000000000000..e9d315b33ba1c3c00914281b552d9790acb593e2 --- /dev/null +++ b/eesanje/url_46_291_3.txt @@ -0,0 +1,6 @@ +6 ತಿಂಗಳು ಪರಿಷತ್ ವಿಪಕ್ಷ ನಾಯಕ ಸ್ಥಾನ ಖಾಲಿ ಇರುವುದು ದುರಂತ : ಗುಂಡೂರಾವ್ +ಬೆಳಗಾವಿ,ಡಿ.11- ಇತಿಹಾಸದಲ್ಲೇ 6 ತಿಂಗಳ ಕಾಲ ವಿಧಾನಪರಿಷತ್ನ ವಿರೋಧಪಕ್ಷದ ನಾಯಕ ಸ್ಥಾನವನ್ನು ಖಾಲಿ ಬಿಟ್ಟಿರುವುದು ದುರಂತದ ವಿಚಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿದೆ. ಆದರೆ ಅದರ ಹಿಂದೆಯೇ ಭಿನ್ನಾಭಿಪ್ರಾಯಗಳು ಕೇಳಿಬರುತ್ತಿವೆ. ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಅವುಗಳನ್ನೆಲ್ಲಾ ಸರಿಪಡಿಸಿಕೊಂಡು ಬಿಜೆಪಿ ಪರಿಣಾಮಕಾರಿಯಾಗಿ ವಿರೋಧಪಕ್ಷದಲ್ಲಿ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು. +ವಿಧಾನಪರಿಷತ್ನ ನಾಯಕನ ಸ್ಥಾನವನ್ನು 6 ತಿಂಗಳ ಕಾಲ ಖಾಲಿ ಬಿಟ್ಟಿರುವುದು ತಪ್ಪು ಸಂದೇಶ ರವಾನಿಸುತ್ತದೆ. ವಿರೋಧಪಕ್ಷವನ್ನು ಅವರದೇ ಪಕ್ಷ ಅವಮಾನ ಮಾಡಿದಂತಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು. +50 ಅಧಿಕಾರಿಗಳು, 40 ಎಣಿಕೆ ಯಂತ್ರ, ಎಣಿಸಿದಷ್ಟು ಹೆಚ್ಚುತ್ತಲೆ ಇದೆ ಸಾಹು ಸಂಪತ್ತು +ವಿಧಾನಮಂಡಲದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಗಂಭೀರವಾದ ಚರ್ಚೆಯಾಗಬೇಕು. ಅದನ್ನು ಬಿಟ್ಟು ಬಿಜೆಪಿ ಅನಗತ್ಯ ವಿಷಯಗಳನ್ನು ಪ್ರಸ್ತಾಪಿಸಿ ಕಾಲಾಹರಣ ಮಾಡುತ್ತಿದೆ. ರಾಜ್ಯದ ಪ್ರಮುಖ ವಿಚಾರಗಳು ವಿಧಾನಮಂಡಲದಲ್ಲಿ ಚರ್ಚೆಯಾಗಬೇಕು. ಆದರೆ ಬೆಳಗಾವಿಯಲ್ಲಿ ಅವೇಶನ ನಡೆಯುತ್ತಿರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_291_4.txt b/eesanje/url_46_291_4.txt new file mode 100644 index 0000000000000000000000000000000000000000..00c2202dae7007b4c5e73dc9783f2d2b40b11ca6 --- /dev/null +++ b/eesanje/url_46_291_4.txt @@ -0,0 +1,7 @@ +ವಿಧಾನಸಭೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ವಿಷಯ ಪ್ರಸ್ತಾಪಿಸಲು ಮುಂದಾದ ಪ್ರತಿಪಕ್ಷಗಳು +ಬೆಳಗಾವಿ, ಡಿ.11- ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಹೆಣ್ಣು ಭ್ರೂಣ ಹತ್ಯೆ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಲು ಪ್ರತಿಪಕ್ಷಗಳು ಜಂಟಿಯಾಗಿ ನಿಲುವಳಿ ಸೂಚನೆ ನೋಟಿಸ್ ನೀಡಿವೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಲುವಳಿ ಸೂಚನೆ ನೋಟಿಸ್ ಅನ್ನು ವಿಧಾನಸಭೆ ಕಾರ್ಯದರ್ಶಿ ಅವರಿಗೆ ನೀಡಿದ್ದಾರೆ. ನೋಟಿಸ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ, ಜೆಡಿಎಸ್ನ ಹಲವು ಸದಸ್ಯರು ಸಹಿ ಹಾಕಿದ್ದಾರೆ. +ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 60ನೇ ನಿಯಮದ ಮೇರೆಗೆ ಇಂದು ವಿಧಾನಸಭೆಯ ಅವೇಶನದಲ್ಲಿ ಪ್ರಶ್ನೋತ್ತರ ಮತ್ತು ಶೂನ್ಯವೇಳೆಯ ತರುವಾಯ ಹೆಣ್ಣು ಭ್ರೂಣ ಹತ್ಯೆ ವಿಚಾರವನ್ನು ಪ್ರಸ್ತಾಪಿಸಲು ಅವಕಾಶ ಕೋರಲಾಗಿದೆ.ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣವು ನಾಗರೀಕ ಸಮಾಜ ತಲೆತಗ್ಗಿಸುವ ಘಟನೆಯಾಗಿದೆ. ಕಳೆದ 2 ವರ್ಷಗಳಲ್ಲಿ ಮೊಬೈಲ್ ಸ್ಕ್ಯಾನಿಂಗ್ ಯಂತ್ರ ಬಳಸಿ, 900 ಕ್ಕೂ ಹೆಚ್ಚು ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡಿ ಕಾನೂನುಬಾಹಿರವಾಗಿ ಗರ್ಭಪಾತ ಮಾಡಿರುವುದು ಈ ಕರಾಳ ದಂಧೆ ವ್ಯಾಪಕವಾಗಿ ಹರಡಿರುವುದರ ಸೂಚನೆಯಾಗಿದೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. +ಮಂಡ್ಯ ಜಿಲ್ಲೆಯ ಆಲೆ ಮನೆಯಲ್ಲಿ ಭ್ರೂಣ ಲಿಂಗ ಪರೀಕ್ಷೆಗೆ ಸ್ಕ್ಯಾನಿಂಗ್ ಪ್ರಯೋಗಾಲಯವನ್ನು ಸಿದ್ಧಪಡಿಸಿ ಅಲ್ಲಿ ಲಿಂಗ ಪರೀಕ್ಷೆ ನಡೆಸಿ ನಂತರ ಮೈಸೂರಿನಲ್ಲಿ ನಡೆಯುತ್ತಿದ್ದ ಅನಧಿಕೃತ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಲಾಗುತ್ತಿತ್ತು. ಹಣದಾಸೆಗೆ ಪ್ರಪಂಚಕ್ಕೆ ಕಾಲಿಡುವ ಮೊದಲೇ ಭ್ರೂಣಗಳ ಹತ್ಯೆ ಮಾಡಲಾಗಿದೆ. +50 ಅಧಿಕಾರಿಗಳು, 40 ಎಣಿಕೆ ಯಂತ್ರ, ಎಣಿಸಿದಷ್ಟು ಹೆಚ್ಚುತ್ತಲೆ ಇದೆ ಸಾಹು ಸಂಪತ್ತು +ಈ ಪ್ರಕರಣದ ಆರೋಪಿಗಳೆಲ್ಲರೂ ವೈದ್ಯರೇ ಅಲ್ಲ. ಭ್ರೂಣ ಲಿಂಗ ಪತ್ತೆ ಪರೀಕ್ಷೆಯನ್ನು ನಿಷೇಸುವ ಕಾಯ್ದೆಯು ಜಾರಿಗೆ ಬಂದು 29 ವರ್ಷಗಳು ಕಳೆದಿದ್ದರೂ ರಾಜ್ಯದಲ್ಲಿ ಈ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿಲ್ಲ ಎಂದು ಆರೋಪಿಸಲಾಗಿದೆ.ರಾಜ್ಯದಲ್ಲಿ ಅವ್ಯಾಹತವಾಗಿ ಭ್ರೂಣಲಿಂಗ ಪತ್ತೆ ಪರೀಕ್ಷೆ ಮತ್ತು ಹೆಣ್ಣು ಭ್ರೂಣಗಳ ಹತ್ಯೆ ನಡೆಯುತ್ತಲೇ ಇದ್ದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲದಿರುವುದು ಈ ಕೃತ್ಯದಲ್ಲಿ ಅವರ ಪಾತ್ರದ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ. +ಹೆಣ್ಣಿನ ಮೇಲೆ ಅನೇಕ ರೀತಿಯ ದೌರ್ಜನ್ಯಗಳು ನಡೆಯುತ್ತಲೇ ಇದೆ. ಇದರಲ್ಲಿ ಅತ್ಯಂತ ಭೀಕರ ಹಾಗೂ ಪ್ರಮುಖವಾದದ್ದು ಈ ಹೆಣ್ಣು ಭ್ರೂಣ ಹತ್ಯೆಯಾಗಿದೆ. ಬೆಳಕಿಗೆ ಬಂದಿರುವ ಈ ಕರಾಳ ದಂಧೆಯ ಕುರಿತು ಚರ್ಚಿಸಲು ಅವಕಾಶ ನೀಡಬೇಕೆಂದು ಕೋರಿದ್ದಾರೆ. \ No newline at end of file diff --git a/eesanje/url_46_291_5.txt b/eesanje/url_46_291_5.txt new file mode 100644 index 0000000000000000000000000000000000000000..876367d1a0adac887004c579d9af7a596369208c --- /dev/null +++ b/eesanje/url_46_291_5.txt @@ -0,0 +1,11 @@ +ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ, ಇಂದೇ ಹರಿದುಬಂದ ಜನಸಾಗರ +ಬೆಂಗಳೂರು, ಡಿ.10- ಐತಿಹಾಸಿಕ ಬಸವನಗುಡಿಯ ಕಡಲೆಕಾಯಿ ಪರಿಷೆಗೆ ನಾಳೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಮದುವಣಗಿತ್ತಿಯಂತೆ ರಸ್ತೆ ಸಿಂಗಾರಗೊಂಡಿದೆ. ಗ್ರಾಮೀಣ ಸೊಗಡಿನ ಪರಿಷೆಯನ್ನು ಈ ಬಾರಿ ಪ್ಲಾಸ್ಟಿಕ್ ಮುಕ್ತವಾಗಿಸುವ ಘೊಷಣೆಯೊಂದಿಗೆ ಪರಿಷೆಗೆ ಬನ್ನಿ ಕೈ ಚೀಲ ತನ್ನಿ ಎಂದು ಸಂಕಲ್ಪ ಮಾಡಲಾಗಿದೆ. +ಪರಿಷೆ ಹಿನ್ನೆಲೆಯಲ್ಲಿ ಬಸವನ ಗುಡಿಯ ರಸ್ತೆಗಳು ತಳಿರುತೋರಣ ಲೈಟಿಂಗ್‍ನಿಂದ ಮದುವಣ ಗಿತ್ತಿಯಂತೆ ಸಿಂಗಾರಗೊಂಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು, ರೈತರು ಮಳಿಗೆಗಳನ್ನು ತೆರೆದು ಕಡಲೆಕಾಯಿ ವ್ಯಾಪಾರ ಆರಂಭಿಸಿದ್ದಾರೆ. ಹಸಿ, ಹುರಿದ, ಬೇಯಿಸಿದ ಕಡಲೆಕಾಯಿಯ ಘಮ ಆವರಿಸಿದ್ದು, ವಾರಾಂತ್ಯದ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಜನರು ಭೇಟಿ ನೀಡಿ ಕಡಲೆ ಖರೀದಿಸಿ ಸಂಭ್ರಮಿಸುತ್ತಿದ್ದಾರೆ. +ಬೆಲೆ ಏರಿಕೆ: ಈ ಬಾರಿ ರಾಜ್ಯಾದ್ಯಂತ ಬರ ಆವರಿಸಿದ್ದು, ಕಡಲೆಕಾಯಿ ಬೆಳೆ ಬಾರದ ಹಿನ್ನಲೆಯಲ್ಲಿ ಮಳೆಯಾಶ್ರಿದಲ್ಲಿ ಬೆಳೆದ ಕಡಲೆಗಿಂತ ನೀರಾವರಿಯಲ್ಲಿ ಬೆಳೆದ ಕಡಲೆಕಾಯಿಯನ್ನೇ ತಂದು ಮಾರಾಟ ಮಾಡಲಾಗುತ್ತಿದ್ದು, ಬೆಲೆ ಏರಿಕೆಯಾಗಿದೆ. +ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಾಗಡಿ, ಬೆಂಗಳೂರು ಗ್ರಾಮಾಂತರ , ನೆರೆಯ ತಮಿಳುನಾಡು, ಆಂಧ್ರ ಪ್ರದೇಶದಿಂದ ನಾಟಿ, ಮೂರು ಪಪ್ಪಿನ ಕಾಯಿ, ಕೆಂಪು ಕಡಲೆ, ಕಲ್ಯಾಣಿ ಸೇರಿದಂತೆ ವಿವಿಧ ತಳಿಯ ಕಡಲೆ ಮಾರಾಟಕ್ಕೆ ಬಂದಿವೆ ಆದರೆ ಬೆಲೆ ದುಬಾರಿಯಾಗಿದೆ. +ಒಂದು ಸೇರು 60 ರಿಂದ 80 ರೂ. ಕೆಜಿಯಾದರೆ 100 ರೂ.ಗೆ ಮರಾಟ ಮಾಡಲಾಗುತ್ತಿದ್ದು, ಬಡವರ ಬಾದಾಮಿ ಅಂದ್ರೆ ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ, ಬೆಲೆ ಹೆಚ್ಚಾದರೂ ಪರವಾಗಿಲ್ಲ ಎಂದು ನಗರವಾಸಿಗಳು ಖರೀದಿಯಲ್ಲಿ ತೊಡಗಿದ್ದ ದೃಶ್ಯಗಳು ಕಂಡುಬಂದವು. +ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ : ಡಿ.ಕೆ.ಶಿವಕುಮಾರ್ +ಜಾತ್ರೆ ಅಂದರೆ ಬರೀ ಕಡಲೆಕಾಯಿ ಅಲ್ಲ, ಮಕ್ಕಳ ಆಟಿಕೆಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ಸಾಮಗ್ರಿಗಳ ಮರಾಟವೂ ಸಹ ಜೋರಾಗಿದೆ. ಉದ್ಯಾನನಗರಿ ಜನತೆ ಇಂದು ವೀಕೆಂಡ್‍ಅನ್ನು ಬಸವನಗುಡಿಗೆ ಟ್ರಿಪ್ ಹಾಕಿಕೊಂಡು ಕಡಲೆ ಕೊಂಡು ಸೊಬಗನ್ನು ಸವಿದು ಸಂಭ್ರಮಿಸಿದ್ದಾರೆ. +ಕಾರ್ತಿಕ ಸೋಮವಾರದ ಪ್ರಯುಕ್ತ ನಾಳೆ ಬೆಳಗ್ಗೆ ದೊಡ್ಡಬಸವಣ್ಣ ಹಾಗೂ ದೊಡ್ಡಗಣಪತಿಗೆ ವಿಶೇಷ ಪೂಜೆ, ಕಡಲೆಕಾಯಿ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಭಿಷೇಕದ ನಂತರ ಭಕ್ತರಿಗೆ ಕಡಲೆಕಾಯಿಯನ್ನು ಪ್ರಸಾದವಾಗಿ ನೀಡಲಾಗುವುದು. +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಿಷೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, 10 ಗಂಟೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಪರಿಷೆಗೆ ಚಾಲನೆ ನೀಡಲಿದ್ದಾರೆ.ಇಂದು ಬೆಳಗ್ಗೆ ಸಚಿವರು ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿ ಕಡಲೆಕಾಯಿಯನ್ನು ಸವಿದರು. ಸಂಜೆ ಆರು ಗಂಟೆಗೆ ಕೆಂಪಾಂಬುದಿ ಕರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ. +ಸಿಸಿ ಕ್ಯಾಮೆರಾ: ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಭದ್ರತಾ ದೃಷಿಯಿಂದ 200ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇನ್ನು ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಂಚಾರಿ ಪೊಲೀಸರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_46_291_6.txt b/eesanje/url_46_291_6.txt new file mode 100644 index 0000000000000000000000000000000000000000..c9056125a3bbf6d5ce04eddd956987380f0a2c7a --- /dev/null +++ b/eesanje/url_46_291_6.txt @@ -0,0 +1,6 @@ +ಮಗಳನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆ +ಮಡಿಕೇರಿ, ಡಿ.10- ಹನ್ನೆರಡು ವರ್ಷದ ಮಗಳನ್ನು ಕೊಂದು ತಂದೆ- ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಕಗ್ಗೋಡ್ಲುವಿನ ಹೋಂಸ್ಟೇನಲ್ಲಿ ನಡೆದಿದೆ. ಕೇರಳದ ವಿನೋದ್(30), ಜೀವಿ ಅಬ್ರಹಮ್(28) ಆತ್ಮಹತ್ಯೆ ಮಾಡಿಕೊಂಡ ದಂಪತಿ. +ಹಣಕಾಸು ವಿಚಾರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೇರಳದಿಂದ ಕಳೆದ ಶುಕ್ರವಾರ ಮಗಳೊಂದಿಗೆ ಈ ದಂಪತಿ ಕಗ್ಗೋಡ್ಲುವಿನ ಹೋಂ ಸ್ಟೇಗೆ ಬಂದು ನೆಲೆಸಿದ್ದರು. ಈ ನಡುವೆ ತಮ್ಮ 12 ವರ್ಷದ ಮಗಳನ್ನು ಕೊಲೆ ಮಾಡಿ ದಂಪತಿ ಹೋಂಸ್ಟೇನ ಹುಕ್‍ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. +ನಿನ್ನೆ ಬಹಳ ಹೊತ್ತಾದರೂ ಹೋಂಸ್ಟೇನಿಂದ ಯಾರೂ ಹೊರಗೆ ಬರದಿದ್ದಾಗ ಅನುಮಾನಗೊಂಡ ಹೋಂಸ್ಟೇ ಸಿಬ್ಬಂದಿ ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅನುಮಾನಗೊಂಡು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. +ಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ +ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿ ಬಂದ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಾಗಿಲು ಒಡೆದು ನೋಡಿದಾಗ ಶವಗಳು ಪತ್ತೆಯಾಗಿವೆ. ಸ್ಥಳ ಪರಿಶೀಲಿಸಿದಾಗ ಡೆತ್‍ನೋಟ್ ಸಹ ಸಿಕ್ಕಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. \ No newline at end of file diff --git a/eesanje/url_46_291_7.txt b/eesanje/url_46_291_7.txt new file mode 100644 index 0000000000000000000000000000000000000000..49ade255affed677e0eae66d9717f7be27216251 --- /dev/null +++ b/eesanje/url_46_291_7.txt @@ -0,0 +1,11 @@ +ಈಡಿಗರಿಗೆ 2 ಸಚಿವ ಸ್ಥಾನ, 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ +ಬೆಂಗಳೂರು,ಡಿ.10- ಈಡಿಗ ಮತ್ತು ಅದರ ಉಪಪಂಗಡಗಳಿಗೆ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಮತ್ತು ನಿಗಮಕ್ಕೆ 500 ಕೋಟಿ ಅನುದಾನ ಒದಗಿಸಬೇಕೆಂಬ ಹಕ್ಕೋತ್ತಾಯ ಕೇಳಿಬಂತು. ನಗರದಲ್ಲಿಂದು ನಡೆದ ಈಡಿಗ ಹಾಗೂ ಅದರ ಉಪಪಂಗಡಗಳ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಬಹುತೇಕ ನಾಯಕರು ಎರಡು ಸಚಿವ ಸ್ಥಾನಗಳಿಗೆ ಬೇಡಿಕೆ ಇಟ್ಟರು. +ಆರಂಭದಲ್ಲಿ ಮಾತನಾಡಿದ ಸಂಘದ ಮುಖಂಡರು ಕೂಡ ಸಮುದಾಯಕ್ಕಾಗಿ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದರು. ಇದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದನಿಗೂಡಿಸಿದರು. ನಿಗಮ ಮಂಡಳಿ ಮತ್ತು ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ದೊರೆಯಬೇಕು. ಒಂದು ವೇಳೆ ಸಚಿವ ಸ್ಥಾನ ನೀಡುತ್ತಾರೋ ಬಿಡುತ್ತೀರೊ ನಿಮಗೆ ಸೇರಿದ್ದು ಆದರೆ ಆರ್ಯ-ಈಡಿಗರ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಗಳ ಅನುದಾನವನ್ನಂತೂ ಕೊಡಲೇಬೇಕು. ಇದು ನಮ್ಮ ಒಕ್ಕೊರಲ ಆಗ್ರಹ ಎಂದರು. +ಆನಂತರ ಮಾತನಾಡಿದ ಸಮುದಾಯದ ಶಾಸಕ ಹರತಾಳ್ ಹಾಲಪ್ಪ, ರಾಜ್ಯದಲ್ಲಿ ಈಡಿಗ ಸಮುದಾಯ 50 ಲಕ್ಷಕ್ಕಿಂತಲೂ ಹೆಚ್ಚಿನ ಜನಸಂಖ್ಯೆ ಹೊಂದಿದೆ ಎಂಬುದು ಕಾಂತರಾಜ್ ಆಯೋಗದ ವರದಿಯಲ್ಲಿನ ಮಾಹಿತಿಗಳು ಹೇಳುತ್ತಿವೆ. ಈಗಾಗಲೇ ಮಧುಬಂಗಾರಪ್ಪ ಸಚಿವರಾಗಿದ್ದಾರೆ. ಮತ್ತೊಂದು ಸಚಿವ ಸ್ಥಾನವನ್ನು ನೀಡಬೇಕು, ದಟ್ಟದ ಮೇಲೆ ಮತ್ತು ದಟ್ಟದ ಕೆಳಗೆ ಎಂಬ ಎರಡು ಭೌಗೋಳಿಕ ಆದ್ಯತೆ ಆಧಾರದಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡಬೇಕು. ವಿಧಾನಪರಿಷತ್‍ಗೂ ಒಂದು ಸಚಿವ ಸ್ಥಾನ ನೀಡಬೇಕು ಎಂದು ಹೇಳುವ ಮೂಲಕ ಬಿ.ಕೆ.ಹರಿಪ್ರಸಾದ್ ಪರವಾಗಿ ವಕಾಲತ್ತು ವಹಿಸಿದರು. +ಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ +ಬಿಜೆಪಿಯ ಶಾಸಕ ಮಾಲೀಕಯ್ಯಗುತ್ತೇದಾರ್ ಮಾತನಾಡಿ, ಬಿ.ಕೆ.ಹರಿಪ್ರಸಾದ್ ಅವರು ಸಮಾವೇಶದಲ್ಲಿ ಭಾಗಿಯಾಗಬೇಕಿತ್ತು. ಆದರೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಮುಂದಿನ ದಿನಗಳಲ್ಲಿ ಸಂಘ ಹಾಗೂ ಧಾರ್ಮಿಕ ಮುಖಂಡರ ಸಮ್ಮುಖದಲ್ಲಿ ಹರಿಪ್ರಸಾದ್ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅವರಲ್ಲಿರುವ ಅಸಮಾಧಾನವನ್ನು ನಿವಾರಣೆ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು. +ಎರಡು ಸಚಿವ ಸ್ಥಾನದ ಕೂಗಿಗೆ ಮಾಲೀಕಯ್ಯ ಗುತ್ತೇದಾರ್ ಕೂಡ ಬೆಂಬಲ ವ್ಯಕ್ತಪಡಿಸಿದರು. ಉಳಿದಂತೆ ಸಮುದಾಯದ ಹೆಣ್ಣುಮಕ್ಕಳ ವಿದ್ಯಾರ್ಥಿನಿಲಯಗಳಿಗೆ ನಿವೇಶನ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಲಾಯಿತು. +ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಬಹಿರಂಗಗೊಳಿಸಿ ಎಂದು ಬಹುತೇಕ ನಾಯಕರು ಆಗ್ರಹಿಸಿದರು. ನಿಗಮದ ಅಭಿವೃದ್ಧಿ ಚಟುವಟಿಕೆಗಳಿಗೆ 500 ಕೋಟಿ ರೂ. ಅನುದಾನದ ನೀಡುವುದು, ಸಮುದಾಯದ ನಾಯಕರಿಗೆ ರಾಜಕೀಯ ಸ್ಥಾನಮಾನ ಸೇರಿದಂತೆ ಹಲವು ಹಕ್ಕೋತ್ತಾಯಗಳು ಕೇಳಿಬಂದವರು.ಹೆಂಡ, ಸಾರಾಯಿ ನಿಷೇಧದ ಬಳಿಕ ಅದರ ವ್ಯಾಪಾರದಲ್ಲಿ ತೊಡಗಿದ್ದವರು ನಿರುದ್ಯೋಗಿಗಳಾಗಿದ್ದು ಅವರ ಪುನರ್ವಸತಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. +ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಮಾತನಾಡಿ, ಸಣ್ಣ ಪ್ರಮಾಣದಲ್ಲಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹಿಡುವಳಿ ಮಾಡುತ್ತಿರುವ ರೈತರಿಗೆ ಜಮೀನುಗಳನ್ನು ಸಕ್ರಮ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಗೆ ಸರ್ಕಾರಿ ಆದೇಶ ಹೊರಡಿಸಿದರು. ನಾರಾಯಣ ಗುರುಗಳ ಅಧ್ಯಯನ ಪೀಠಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು ಮತ್ತು ಶಾಲಾ ಪಠ್ಯದಲ್ಲಿ ನಾರಾಯಣ ಗುರುಗಳ ವಿಷಯ ಸೇರಿಸಬೇಕೆಂದು ಕೋರಿದರು. +ತೆಂಗು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಚ್‍ಡಿಕೆ ಪಾದಯಾತ್ರೆ +ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ವಿನಯ್‍ಕುಮಾರ್ ಸೊರಕೆ, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ನಟ ಶ್ರೀಮುರುಳಿ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_291_8.txt b/eesanje/url_46_291_8.txt new file mode 100644 index 0000000000000000000000000000000000000000..4ad60dfcea792af81f5edb21a77ba73a48048e60 --- /dev/null +++ b/eesanje/url_46_291_8.txt @@ -0,0 +1,8 @@ +ದಾಳಿ ಪ್ರಕರಣಗಳಲ್ಲಿ ಬೆಂಗಳೂರೇ ನಂ.1 +ಬೆಂಗಳೂರು,ಡಿ.10- ಕಳೆದ 2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‍ಸಿಆರ್‍ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ. +ಅಂಕಿಅಂಶಗಳ ಪ್ರಕಾರ, ಎನ್‍ಸಿಆರ್‍ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾದ ಒಟ್ಟಾರೆ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ದೆಹಲಿಯು 2022 ರಲ್ಲಿ ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾದರು, ನಂತರ ಅಹಮದಾಬಾದ್ ಮೂರನೇ ಸ್ಥಾನದಲ್ಲಿ ಅಂತಹ ಐದು ಪ್ರಕರಣಗಳು ದಾಖಲಾಗಿವೆ ಎಂದು ಅಂಕಿಅಂಶಗಳು ತೋರಿಸಿವೆ. +ಎನ್‍ಸಿಆರ್‍ಬಿ ದತ್ತಾಂಶದ ವಿಶ್ಲೇಷಣೆಯು ರಾಷ್ಟ್ರೀಯ ರಾಜಧಾನಿ (ದೆಹಲಿ) 7 ದಾಳಿಯ ಯತ್ನ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಬೆಂಗಳೂರಿನಲ್ಲಿ ಕಳೆದ ವರ್ಷ ಅಂತಹ 3 ಪ್ರಕರಣಗಳು ದಾಖಲಾಗಿವೆ ಎಂದು ತೋರಿಸಿದೆ. +ಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ +ಏತನ್ಮಧ್ಯೆ, ಹೈದರಾಬಾದ್ ಮತ್ತು ಅಹಮದಾಬಾದ್‍ನಂತಹ ಮೆಟ್ರೋಪಾಲಿಟನ್ ನಗರಗಳು 2022 ರಲ್ಲಿ ದಾಳಿಯ ಪ್ರಯತ್ನದ ಎರಡು ಪ್ರಕರಣಗಳನ್ನು ದಾಖಲಿಸಿವೆ. ಕಳೆದ ವರ್ಷ ಬೆಂಗಳೂರನ್ನು ಬೆಚ್ಚಿಬೀಳಿಸಿದ ಆಸಿಡ್ ದಾಳಿಯ ಪ್ರಮುಖ ಪ್ರಕರಣಗಳಲ್ಲಿ ಒಂದಾದ 24 ವರ್ಷದ ಎಂ.ಕಾಂ ಪದವೀಧರ ಮಹಿಳೆ ಏಪ್ರಿಲ್ 28 ರಂದು ಕೆಲಸಕ್ಕೆ ಹೋಗುತ್ತಿದ್ದಾಗ ದಾಳಿಗೊಳಗಾದಳು. ಪೊಲೀಸರ ಪ್ರಕಾರ ಆರೋಪಿಯು ಹಲವು ವರ್ಷಗಳಿಂದ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. +ಮದುವೆಗೆಂದು ಆಕೆಯನ್ನು ಸಂಪರ್ಕಿಸಿದ್ದು ಆಕೆ ತನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವ್ಯಕ್ತಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಿಂದ ಬಂಧಿಸಲಾಯಿತು, ಅಲ್ಲಿ ಅವರು ಸ್ವಾಮಿ ವೇಷದಲ್ಲಿ ಅಡಗಿಕೊಂಡಿದ್ದರು. ಜೂನ್ 2023 ರಲ್ಲಿ, ಸಂತ್ರಸ್ತರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಅವರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು. +ಇದೇ ರೀತಿಯ ಮತ್ತೊಂದು ಪ್ರಕರಣವು ಜೂನ್ 10, 2022 ರಂದು ವರದಿಯಾಗಿದೆ, ಇದರಲ್ಲಿ ಪುರುಷನು ತನ್ನ ಮಹಿಳಾ ಸ್ನೇಹಿತೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಆಕೆಯ ಮುಖದ ಮೇಲೆ ಆಸಿಡ್ ಎರಚಿದ್ದನ್ನು. \ No newline at end of file diff --git a/eesanje/url_46_291_9.txt b/eesanje/url_46_291_9.txt new file mode 100644 index 0000000000000000000000000000000000000000..cc9fbd8260b33abfbc5cd501a75d3006b78e19c4 --- /dev/null +++ b/eesanje/url_46_291_9.txt @@ -0,0 +1,6 @@ +ವಿಜ್ಞಾನದ ಕುತೂಹಲ ಹೆಚ್ಚಿಸಲು ಹೊಸ ನೀತಿ : ಭೋಸ್‍ರಾಜ್ +ಬೆಂಗಳೂರು, ಡಿ.10- ವೈಜ್ಞಾನಿಕ ಮನೋಭಾವವನ್ನು ಪ್ರೋತ್ಸಾಹಿಸಲು ಹಾಗೂ ಎಲ್ಲರಿಗೂ ವಿಜ್ಞಾನ ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿ ರಚಿಸುವಂತೆ ಸಚಿವ ಎನ್.ಎಸ್‍ಭೋಸರಾಜ್ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. +ಚಂದ್ರಯಾನ – 3ರ ಯಶಸ್ಸಿನ ನಂತರ ಮಕ್ಕಳಲ್ಲಿ ಬಾಹ್ಯಾಕಾಶದ ಬಗ್ಗೆ ಆಸಕ್ತಿ ಹೆಚ್ಚಾಗಿದೆ. ಇದಕ್ಕೆ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಕುತೂಹಲವನ್ನು ಉತ್ತೇಜಿಸುವ ಸಲುವಾಗಿ ದೂರದರ್ಶಕಗಳನ್ನು ಒದಗಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ನೀತಿಯನ್ನು ರೂಪಿಸುವಂತೆ ಸೂಚನೆ ನೀಡಿದ್ದೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ. +ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ +ರಾಜ್ಯದಲ್ಲಿ 2 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು, 2 ತಾರಾಲಯಗಳು, 08 ಉಪಪ್ರಾದೇಶಿಕ ವಿಜ್ಞಾನ ಕೇಂದ್ರಗಳಿವೆ. 11 ಸಂಚಾರಿ ತಾರಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ವಿದ್ಯಾರ್ಥಿಗಳಲ್ಲಿ ಬಾಲ್ಯಾವಸ್ಥೆಯಿಂದಲೇ ವೈಜ್ಞಾನಿಕ ವಿಷಯಗಳಲ್ಲಿ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೂತನ ಯೋಜನೆಯೊಂದನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. +ಈ ಯೋಜನೆಯಡಿ ರಾಜ್ಯದ ಸರಕಾರಿ ಪ್ರೌಢ ಶಾಲೆಗಳಲ್ಲಿ ಟೆಲಿಸ್ಕೋಪ್ ಮತ್ತು ಮೈಕ್ರೋಸ್ಕೋಪ್‍ಗಳನ್ನು ನೀಡಲು ಹಾಗೆಯೇ, ಈ ಉಪಕರಣಗಳ ನಿರ್ವಹಣೆ ಮತ್ತು ಅವುಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಶಿಕ್ಷಕರುಗಳಿಗೆ ತರಬೇತಿಯನ್ನು ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಪ್ರಾರಂಭಿಸುವಂತೆ ಅವರು ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_292_1.txt b/eesanje/url_46_292_1.txt new file mode 100644 index 0000000000000000000000000000000000000000..8d6d1ce75825cc35fc87ca3ac88b142d76436457 --- /dev/null +++ b/eesanje/url_46_292_1.txt @@ -0,0 +1,14 @@ +ಈಡಿಗ ಸಮುದಾಯ ಒಡೆಯುವ ಹುನ್ನಾರ ನಡೆಯುತ್ತಿದೆ : ಹರಿಪ್ರಸಾದ್ ಆಕ್ರೋಶ +ಬೆಂಗಳೂರು,ಡಿ.10- ಆರ್ಯ ಈಡಿಗರ ಸಂಘದ ವತಿಯಿಂದ ನಡೆಯುತ್ತಿರುವ ಸುವರ್ಣ ಮಹೋತ್ಸವ ಹಾಗೂ ಸ್ವಾಭಿಮಾನ ಸಮಾವೇಶದಿಂದ ತಮ್ಮನ್ನು ದೂರ ಇಡಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ಸಮುದಾಯದ ಮುಖಂಡ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. +ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರ ನೇತೃತ್ವದಲ್ಲಿಂದು ನಗರದಲ್ಲಿ ಆರ್ಯ ಈಡಿಗರ ಸಂಘದ ವತಿಯಿಂದ ಈಡಿಗ, ಬಿಲ್ಲವ, ನಾಮದಾರಿ ಸೇರಿದಂತೆ 26 ಉಪಪಂಗಡಗಳ ಸ್ವಾಭಿಮಾನಿ ಸಮಾವೇಶ ನಡೆದಿತ್ತು. ಆದರೆ ಉದ್ದೇಶಪೂರ್ವಕವಾಗಿಯೇ ಬಿ.ಕೆ.ಹರಿಪ್ರಸಾದ್ ಅವರನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಸ್ಪಷ್ಟನೆ ನೀಡಿರುವ ಹರಿಪ್ರಸಾದ್, ಇದು ರಾಜಕೀಯಪ್ರೇರಿತ ಸಮಾವೇಶ. ಆರ್ಯ ಈಡಿಗ ಸಂಘ ಸಮುದಾಯವನ್ನು ಒಳಗೊಳ್ಳುವುದಿಲ್ಲ ಎಂದಿದ್ದಾರೆ. +26 ಉಪಪಂಗಡಗಳಿರುವ ಸುಮಾರು 50ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದ ಆರ್ಯ ಈಡಿಗ ಸಂಘದಲ್ಲಿ 12 ಸದಸ್ಯರು ಮಾತ್ರ. ಹೀಗಾಗಿ ಸಂಘ ಸಮುದಾಯದ ಪ್ರತಿನಿಧಿಗಳು ಅಲ್ಲ ಎಂದು ತಿರುಗೇಟು ನೀಡಿದ್ದಾರೆ. ತಮ್ಮನ್ನು ಉದ್ದೇಶಪೂರ್ವಕವಾಗಿ ಸಮಾವೇಶದಿಂದ ದೂರ ಇಡಲಾಗಿದೆ. ಅದೇ ರೀತಿ ಸಮಾಜದಲ್ಲಿ ಐದು ಮಂದಿ ಸ್ವಾಮೀಜಿಗಳಿದ್ದಾರೆ. ಅವರಲ್ಲಿ ಪ್ರಣವಾನಂದ ಸ್ವಾಮೀಜಿಯವರನ್ನು ಹೊರಗಿಡಲಾಗಿದೆ. +ಇದೇ ಸಂಘದವರೇ ಅವರನ್ನು ಕರೆತಂದು ಸ್ವಾಮೀಜಿ ಮಾಡಿದರು. ಅವರು ಉಗ್ರ ಹಿಂದುತ್ವವಾದಿಯಾಗಿದ್ದರು. ಹಿಂದುಳಿದ ಬಿಲ್ಲವ ಸಮುದಾಯದ ವಿಷಯದಲ್ಲಿ ಆ ರೀತಿಯ ಸಿದ್ದಾಂತಗಳು ಸೂಕ್ತವಲ್ಲ ಎಂದು ಸಲಹೆ ನೀಡಿ ಸ್ವಾಮೀಜಿಗಳು ಸುಧಾರಿಸುವ ಹಂತದಲ್ಲಿ ಅವರನ್ನು ದೂರ ಇಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು. +ಕಳೆದ ಸೆಪ್ಟೆಂಬರ್ 9ರಂದು ತಾವು ಹಿಂದುಳಿದ ವರ್ಗಗಳು ಹಾಗೂ ಬಿಲ್ಲವರ ಸಮಾವೇಶ ನಡೆಸಿದ ಬಳಿಕ ರಾಜ್ಯದಲ್ಲಿ ಅಹಿಂದ ಸಮಾವೇಶಗಳು ಹೆಚ್ಚಾಗುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ತತ್ವದಲ್ಲಿ ನಂಬಿಕೆ ಇಟ್ಟಿರಬಹುದು. ಆದರೆ ಕಾಂಗ್ರೆಸ್ ಸಿದ್ದಾಂತವನ್ನು ಪಾಲಿಸುತ್ತೇನೆ. +ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಮೇಲ್ವರ್ಗ ಸೇರಿದಂತೆ ಎಲ್ಲರನ್ನೂ ಒಳಗೊಳ್ಳುವುದು ಕಾಂಗ್ರೆಸ್‍ನ ಸಿದ್ದಾಂತ. ತಾವು ಅದರ ಪರವಾಗಿರುವುದಾಗಿ ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಹರಿಪ್ರಸಾದ್ ಟಾಂಗ್ ನೀಡಿದ್ದಾರೆ. +ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಹರಿಪ್ರಸಾದ್ ಅವರನ್ನು ಸಂಪುಟದಿಂದ ದೂರ ಇರಿಸಿದ್ದಾರೆ. ಮಧುಬಂಗಾರಪ್ಪ ಅವರಿಗೆ ಹೆಚ್ಚಿನ ಮಣೆ ಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.ಕಳೆದ ಸೆಪ್ಟೆಂಬರ್‍ನಲ್ಲಿ ನಡೆಸಿದ್ದ ಸಮಾವೇಶದಲ್ಲಿ ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದರು. ಇದಕ್ಕೆ ತಿರುಗೇಟು ನೀಡಲೆಂದೇ ಮಧುಬಂಗಾರಪ್ಪ ನೇತೃತ್ವದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. +ಭಾರತ-ಪ್ಯಾಲೇಸ್ತೀನ್‍ ದೀರ್ಘಕಾಲದ ಸಂಬಂಧ ಮುಂದುವರೆಯಲಿದೆ : ಜೈಶಂಕರ್ +ಇದನ್ನು ಪುಷ್ಟೀಕರಿಸಿರುವ ಸಮುದಾಯದ ಪ್ರಣವಾನಂದ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿ.ಕೆ.ಹರಿಪ್ರಸಾದ್ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಸಲುವಾಗಿಯೇ ಸಂಚು ರೂಪಿಸಿದ್ದಾರೆ. ಈ ಹಿಂದೆ ಲಿಂಗಾಯಿತ-ವೀರಶೈವ ಸಮುದಾಯವನ್ನು ಒಡೆಯಲು ಇದೇ ರೀತಿಯ ಸಂಚು ನಡೆದಿತ್ತು. ಈಗ ಬಿಲ್ಲವ, ಈಡಿಗ ಸಮುದಾಯದವರ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಸಮುದಾಯದ ಪ್ರಮುಖ ನಾಯಕರಾದ ಬಿ.ಕೆ.ಹರಿಪ್ರಸಾದ್ ಇಂದಿನ ಸಮಾವೇಶದಲ್ಲಿ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಜೆಟ್‍ನಲ್ಲಿ ತಮಗೆ ಬೇಕಾದ ಜಾತಿಗಳಿಗೆ ನೂರಾರು ಕೋಟಿ ರೂ.ಗಳನ್ನು ಹಂಚಿಕೆ ಮಾಡುತ್ತಾರೆ. ಅದೇ ಕೋಟಿ ಚೆನ್ನಯ್ಯ ಪ್ರತಿಷ್ಠಾನಕ್ಕೆ ಮತ್ತು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಲ್ಲವರ ಅಧ್ಯಯನ ಪೀಠಕ್ಕೆ 6 ಕೋಟಿ ರೂ.ಗಳ ನೀಡಲು ಸರ್ಕಾರದ ಬಳಿ ಹಣ ಇಲ್ಲ. ಸಮುದಾಯಗಳೆಂದರೆ ಅಷ್ಟು ಕೀಳೇ ಎಂದು ಪ್ರಶ್ನಿಸಿದರು. +ಟ್ರಕ್‍ಗೆ ಅಪ್ಪಳಿಸಿ ಹೊತ್ತಿ ಉರಿದ ಕಾರು, 8 ಮಂದಿ ಸಜೀವ ದಹನ +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದಕ್ಕಾಗಿ ಹಿಂದುಳಿದ ವರ್ಗದವನು ಎಂಬ ಕಾರಣಕ್ಕೆ ನನಗೆ ನೋಟಿಸ್ ನೀಡಲಾಯಿತು. ಆದರೆ ಹೈಕಮಾಂಡ್‍ನನ್ನು ಪ್ರಶ್ನಿಸಿದ ಹಲವು ನಾಯಕರ ವಿರುದ್ಧ ಕ್ರಮಗಳಾಗಿಲ್ಲ. ನಾನು ಹೈಕಮಾಂಡ್‍ನನ್ನು ಪ್ರಶ್ನಿಸುವುದಿಲ್ಲ. ರಾಜ್ಯದ ಕೆಲವು ನಾಯಕರು ಈ ರೀತಿಯ ತಾರತಮ್ಯ ಮಾಡುತ್ತಿದ್ದಾರೆ. ಪಕ್ಷದಲ್ಲಿ ಮನಸ್ಸಿಗೆ ಬಂದಂತೆ ನಡೆದುಕೊಳ್ಳಲು ಅವಕಾಶ ಇಲ್ಲ. +ನನಗೆ ಕೊಟ್ಟ ನೋಟಿಸ್‍ಗೆ ಉತ್ತರ ನೀಡಿದ್ದೇನೆ. ಅದರ ನಂತರ ರಾಷ್ಟ್ರೀಯ ಕಾರ್ಯಕಾರಣಿಯ ಎರಡು ಸಭೆಗಳಲ್ಲೂ ಭಾಗವಹಿಸಿದ್ದೇನೆ. ಹೀಗಾಗಿ ನನಗೆ ಪಕ್ಷದ ಶಿಸ್ತಿನ ಬಗ್ಗೆ ಹೆಚ್ಚಿನ ಆತಂಕ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_292_10.txt b/eesanje/url_46_292_10.txt new file mode 100644 index 0000000000000000000000000000000000000000..1b24c06966b8f5eb9305f6814d7608cbb8c5144b --- /dev/null +++ b/eesanje/url_46_292_10.txt @@ -0,0 +1,6 @@ +3 ತಿಂಗಳಿಗೊಮ್ಮೆ ರೈತರಿಗೆ ತರಬೇತಿ ಶಿಬಿರ +ಬೆಂಗಳೂರು, ಡಿ.9- ರೈತರಿಗೆ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಫಲವತ್ತತೆ ಪರೀಕ್ಷಿಸಿ ಅದಕ್ಕನುಗುಣವಾಗಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಮನವರಿಕೆ ಮಾಡಿಕೊಡಲು ಪ್ರತಿ 3 ತಿಂಗಳಿಗೊಮ್ಮೆ ತರಬೇತಿ ಶಿಬಿರಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗಣಿ-ಭೂವಿಜ್ಞಾನ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಿಳಿಸಿದ್ದಾರೆ. +ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸುಲಿದ ತೆಂಗಿನಕಾಯಿ ಮತ್ತು ಒಣಕೊಬ್ಬರಿಗೆ ಪ್ರತಿ ವರ್ಷ ಬೆಂಬಲ ಬೆಲೆ ನಿಗದಿಪಡಿಸಲಾಗುತ್ತಿದೆ. ಉಳಿದ ತೋಟಗಾರಿಕೆ ಬೆಳೆಗಳಿಗೆ ಸಂದರ್ಭಾನುಸಾರ ಬೆಲೆ ನೀಡಲಾಗುವುದು ಎಂದು ಹೇಳಿದರು. +ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಗಣ್ಯರು, ಸಾರ್ವಜನಿಕರು +ಕೇಂದ್ರ ಸರ್ಕಾರದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಪರಂಪರಾಗತ. ಕೃಷಿ ವಿಕಾಸ್ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ, ತಾಳೆ ಬೆಳೆ ಹಾಗೂ ರಾಜ್ಯಸರ್ಕಾರದ ಯೋಜನೆಗಳಾದ ಸಮಗ್ರ ತೋಟಗಾರಿಕೆ ಅಭಿವೃದ್ಧಿ, ಜಿಲ್ಲಾವಲಯ ಯೋಜನೆಯಲ್ಲಿ ರೈತರಿಗೆ ತರಬೇತಿ ಹಾಗೂ ಮಾಹಿತಿ ನೀಡಲಾಗುತ್ತಿದೆ. ಕ್ಷೇತ್ರೋತ್ಸವ ವಿಚಾರ ಸಂಕಿರಣ ಹಾಗೂ ಅಧ್ಯಯನ ಪ್ರವಾಸಗಳನ್ನು ಆಯೋಜಿಸಲಾಗುತ್ತಿದೆ. +ಇಲಾಖೆಯ ಸಂಪನ್ಮೂಲ ಕೇಂದ್ರಗಳಾದ ಜೈವಿಕ ಕೇಂದ್ರ, ಉತ್ಕøಷ್ಟ ಕೇಂದ್ರ, ಮಣ್ಣು ಮತ್ತು ನೀರು ವಿಶ್ಲೇಷಣಾ ಪ್ರಯೋಗಶಾಲೆಗಳಲ್ಲಿ ಮಣ್ಣಿನ ಫಲವತ್ತತೆ ವರದಿ ಆಧಾರದ ಮೇಲೆ ಸೂಕ್ತ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಮಾಹಿತಿ ನೀಡಲಾಗುತ್ತಿದೆ. ವಿಸ್ತರಣಾಧಿಕಾರಿಗಳು ರೈತರ ತಾಲ್ಲೂಕುಗಳಿಗೆ ಭೇಟಿ ನೀಡಿ, ಕ್ಷೇತ್ರ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_292_11.txt b/eesanje/url_46_292_11.txt new file mode 100644 index 0000000000000000000000000000000000000000..3541bdebcd33816d5a68e103d5da18f057c83aee --- /dev/null +++ b/eesanje/url_46_292_11.txt @@ -0,0 +1,6 @@ +31 ಸಾವಿರ ರೈತರ 167 ಕೋಟಿ ಸಾಲಮನ್ನಾಗೆ ಪ್ರಸ್ತಾವನೆ ; ಕೆ.ಎನ್.ರಾಜಣ್ಣ +ಬೆಂಗಳೂರು,ಡಿ.9- ಕಳೆದ ಐದು ವರ್ಷಗಳ ಹಿಂದೆ ಜಾರಿಗೊಳಿಸಲಾದ ಒಂದು ಲಕ್ಷ ರೂ.ಗಳ ಸಾಲಮನ್ನಾ ಯೋಜನೆಯ ಸೌಲಭ್ಯವನ್ನು ರಾಜ್ಯದ 17.35 ಲಕ್ಷ ರೈತರು ಪಡೆದುಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಲಿಖಿತ ಮಾಹಿತಿ ನೀಡಿರುವ ಅವರು, 2018 ರಲ್ಲಿ ಒಂದು ಲಕ್ಷ ರೂ.ಗಳವರೆಗೆ ಬೆಳೆಸಾಲವನ್ನು ಮನ್ನಾ ಮಾಡಲು ನಿರ್ಧರಿಸಲಾಯಿತು. ಆ ಬಳಿಕ ಈವರೆಗೂ ಬೇರೆ ಯಾವ ಸಾಲಮನ್ನಾ ಯೋಜನೆಗಳೂ ಜಾರಿಯಾಗಿಲ್ಲ ಎಂದಿದ್ದಾರೆ. +ದೇಶದ ಆರ್ಥಿಕತೆ ವೃದ್ದಿಯಿಂದ ಉತ್ತಮ ಭವಿಷ್ಯ : ಮೋದಿ +2018 ರಲ್ಲಿ ಜಾರಿಯಾದ ಯೋಜನೆಯ ಪೈಕಿ ಸಹಕಾರ ಸಂಘಗಳು, ಭೂಮಾಪನ ಕಂದಾಯ ವ್ಯವಸ್ಥೆ, ಭೂ ದಾಖಲೆಗಳ ಇಲಾಖೆ ಅಭಿವೃದ್ಧಿಪಡಿಸಿದ ಸಾಲತಂತ್ರಾಂಶದಲ್ಲಿ 19.07 ಲಕ್ಷ ರೈತರ ಮಾಹಿತಿಯನ್ನು ಅಳವಡಿಸಲಾಯಿತು. ಅದರಲ್ಲಿ ಅರ್ಹತೆ ಹೊಂದದಿರುವ 1.57 ಲಕ್ಷ ರೈತರನ್ನು ತಂತ್ರಾಂಶದಿಂದ ತಿರಸ್ಕರಿಸಲಾಯಿತು. ಬಾಕಿ ಉಳಿದ 17.50 ಲಕ್ಷ ರೈತರ ಪೈಕಿ ಎಲ್ಲಾ ಷರತ್ತುಗಳನ್ನೂ ಪೂರೈಸಿರುವ 17.32 ಲಕ್ಷ ರೈತರಿಗೆ 8,154.98 ಕೋಟಿ ರೂ. ಸಾಲಮನ್ನಾ ಮಾಡಲು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಹಸಿರು ಪಟ್ಟಿ ನೀಡಲಾಯಿತು. +ಸರ್ಕಾರ 17.06 ಲಕ್ಷ ರೈತರಿಗೆ 7,987.47 ಕೋಟಿ ರೂ.ಗಳನ್ನು ಉಳಿತಾಯ ಖಾತೆಗೆ ಬಿಡುಗಡೆ ಮಾಡಿ ಸಾಲಮನ್ನಾ ಸೌಲಭ್ಯವನ್ನು ದೊರಕಿಸಿದೆ ಎಂದು ವಿವರಿಸಿದ್ದಾರೆ. ಸಾಲಮನ್ನಾ ತಂತ್ರಾಂಶದಲ್ಲಿ ಅರ್ಹತೆ ಹೊಂದಿ 2020-21 ನೇ ಸಾಲಿನಲ್ಲಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ಹಸಿರು ಪಟ್ಟಿ ನೀಡಿದ 31 ಸಾವಿರ ರೈತರಿಗೆ 167.51 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಅಲ್ಲಿ ಅಂಗೀಕಾರಗೊಂಡ ಬಳಿಕ ಸಾಲಮನ್ನಾದ ಅನುದಾನವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. +ಕೆಲವು ಡಿಸಿಸಿ ಬ್ಯಾಂಕ್‍ಗಳ ವ್ಯಾಪ್ತಿಯಲ್ಲಿ ಬರುವ ಸಹಕಾರ ಸಂಘಗಗಳಲ್ಲಿ ಸಾಲಮನ್ನಾ ಆಗಿರುವ ರೈತರಿಗೆ ಪುನಃ ಸಾಲ ನೀಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_292_12.txt b/eesanje/url_46_292_12.txt new file mode 100644 index 0000000000000000000000000000000000000000..eb64d899f7946001a547011dd2c72b57e0e69635 --- /dev/null +++ b/eesanje/url_46_292_12.txt @@ -0,0 +1,5 @@ +ಲೀಲಾವತಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ ಸಿಗದಿರುವುದಕ್ಕೆ ಬೇಸರವಿದೆ : ಸಿದ್ದರಾಮಯ್ಯ +ಬೆಂಗಳೂರು,ಡಿ.9- ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ ಅವರು, 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೀಲಾವತಿಯವರು ತಮ್ಮ ನೈಜ ಅಭಿನಯದ ಮೂಲಕ ಹೆಸರು ಮಾಡಿದವರು. ಕನ್ನಡ, ತೆಲುಗು, ಮಲೆಯಾಳಂ ಸೇರಿದಂತೆ ಬಹು ಭಾಷಾ ಚಿತ್ರಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದಲ್ಲಿ ಹೆಸರು ಮಾಡಿದ್ದರು ಎಂದರು. +ಮೆರವಣಿಗೆ ವೇಳೆ ಗೋಡೆ ಕುಸಿದು ಮಗು ಸೇರಿ 7 ಮಹಿಳೆಯರ ಸಾವು +ಲೀಲಾವತಿಯವರ ಈ ಸಾಧನೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರ ಸಿಗದೆ ಇರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು. ನನ್ನ ವಿದ್ಯಾರ್ಥಿ ಜೀವನದ 60-70ರ ದಶಕದಲ್ಲಿ ಡಾ.ರಾಜ್‍ಕುಮಾರ್ ಮತ್ತು ಲೀಲಾವತಿ ಜೋಡಿಯ ಚಿತ್ರಗಳನ್ನು ನೋಡುತ್ತಿದ್ದೆ. ನೈಜ ಮತ್ತು ಮನೋಜ್ಞ ನಟನೆಯಿಂದ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದರು ಎಂದು ಸ್ಮರಿಸಿದರು. +ರಂಗಭೂಮಿಯಿಂದ ಸಿನಿಮಾದವರೆಗೆ ಬೆಳೆದಿದ್ದ ಅವರು, ಜೀವರಾಶಿಗಳನ್ನು ತುಂಬ ಇಷ್ಟಪಡುತ್ತಿದ್ದರು. ನೆಲಮಂಗಲದ ಬಳಿ ಜಮೀನು ಖರೀದಿಸಿ ರೈತಾಪಿ ಮಹಿಳೆಯಾಗಿ ಜಮೀನಿನಲ್ಲಿ ಹಣ್ಣು, ತರಕಾರಿಗಳನ್ನು ಬೆಳೆದು ಬಂದ ಹಣವನ್ನು ಸಾಮಾಜಿಕ ಸೇವೆಗಳಲ್ಲಿ ತೊಡಗಿಸುತ್ತಿದ್ದರು. ಇದು ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು. ಅವರ ಸಾವು ತುಂಬ ದುಃಖ ತಂದಿದೆ. ಪುತ್ರ ವಿನೋದ್‍ರಾಜ್ ಮತ್ತು ಅವರ ಅಭಿಮಾನಿಗಳಿಗೆ ಭಗವಂತ ದುಃಖಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವೆ ಎಂದು ಹೇಳಿದರು. \ No newline at end of file diff --git a/eesanje/url_46_292_2.txt b/eesanje/url_46_292_2.txt new file mode 100644 index 0000000000000000000000000000000000000000..d9daec294858e345a1faf8c69a94421b0ac81249 --- /dev/null +++ b/eesanje/url_46_292_2.txt @@ -0,0 +1,14 @@ +ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ +ಬೆಂಗಳೂರು,ಡಿ.10- ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಮರು ಆರಂಭಗೊಳ್ಳುತ್ತಿರುವ ಅಧಿವೇಶನ ಮತ್ತಷ್ಟು ಕಾವೇರಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗುವ ಸಾಧ್ಯತೆ ಇದೆ. ಡಿ.4ರಿಂದ 8ರವರೆಗೆ ನಡೆದ ಮೊದಲ ವಾರದ ಅವೇಶನ ಅಷ್ಟೇನೂ ಬಲಪ್ರದವಾಗಿಲ್ಲ. ಮೊದಲ ದಿನ ಸಂತಾಪದ ನಂತರ ಸರಳ ಕಾರ್ಯಕಲಾಪಗಳು ನಡೆದಿವೆ. +ಪ್ರಶ್ನೋತ್ತರ, ಶೂನ್ಯವೇಳೆಗಳು ಎಂದಿನಂತೆ ನಡೆದರೆ ರಾಜ್ಯದ ಬರ ಪರಿಸ್ಥಿತಿಯ ಬಗ್ಗೆ ಬುಧವಾರದಿಂದ ಚರ್ಚೆ ಶುರುವಾಗಿದೆ. ಸುಮಾರು 20ಕ್ಕೂ ಹೆಚ್ಚು ಶಾಸಕರು ಚರ್ಚೆಯಲ್ಲಿ ಭಾಗವಹಿಸಿದ್ದಾರೆ. ಸೋಮವಾರ ಸರ್ಕಾರದ ವತಿಯಿಂದ ಬರ ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಉತ್ತರಿಸಲಿದ್ದಾರೆ. ಅದರ ನಂತರ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ಆರಂಭವಾಗುವ ನಿರೀಕ್ಷೆಯಿದೆ. +ವಾರಾಂತ್ಯದ ಕೊನೆಯ ದಿನ ಮೂರು ವಿಧೇಯಕಗಳಿಗೆ ಅಂಗೀಕಾರ ಪಡೆದುಕೊಳ್ಳಲು ಸರ್ಕಾರ ಮುಂದಾಗಿತ್ತು. ಆದರೆ ವಿರೋಧ ಪಕ್ಷದ ನಾಯಕರು ಅದಕ್ಕೆ ಅಡ್ಡಿಪಡಿಸಿದರು. ಸೋಮವಾರ ವಿಧೇಯಕಗಳ ಅಂಗೀಕಾರಕ್ಕೆ ಸಹಕರಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕರು ಭರವಸೆ ನೀಡಿದ್ದಾರೆ. ಮೊದಲ ವಾರದ ಕಲಾಪದಲ್ಲಿ ಪ್ರಮುಖವಾಗಿ ಚರ್ಚೆಯಾದ ಎರಡು ವಿಚಾರಗಳೆಂದರೆ ಹುಬ್ಬಳ್ಳಿಯ ಮೌಲ್ವಿಗಳ ಸಮಾವೇಶದಲ್ಲಿ ಅಲ್ಪಸಂಖ್ಯಾತರ ಅಭಿವೃದ್ದಿಗೆ 10 ಸಾವಿರ ಕೋಟಿ ರೂ. ಅನುದಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. +ಮಂಗಳವಾರ ಇಡೀ ದಿನ ಇದೇ ವಿಚಾರವಾಗಿಯೇ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಗಳು ನಡೆದಿತ್ತು. ಆನಂತರ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರಾದ ಪೃಥ್ವಿ ಸಿಂಗ್ ಮೇಲೆ ನಡೆದ ಹಲ್ಲೆ ಹಾಗೂ ಮತ್ತೊಬ್ಬ ನಗರಸೇವಕರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ದ ಬಿಜೆಪಿ ಆಕ್ರೋಶಭರಿತ ವಾಗ್ದಾಳಿ ನಡೆಸಿತು. ಇಡೀ ದಿನ ಇದೇ ವಿಚಾರವಾಗಿ ಕಲಾಪ ವ್ಯರ್ಥವಾಯಿತು. ಮೊದಲ ದಿನ ಸಂತಾಪಕ್ಕೆ ಸಮಯ ಮೀಸಲಾದರೆ ಮತೆರಡು ದಿನ ರಾಜಕೀಯ ಅಜೆಂಡಾಗಳಿಗೆ ಅಮೂಲ್ಯ ಸಮಯ ಕಳೆದು ಹೋಯಿತು. ಉಳಿದೆರಡು ದಿನಗಳಲ್ಲಿ ಬರದ ಕುರಿತು ಚರ್ಚೆಗಳಾಗಿವೆ. +ಈ ನಡುವೆ ತೆಂಗು ಮತ್ತು ಕೊಬ್ಬರಿ ಬೆಲೆ ಕುಸಿತದ ಬಗ್ಗೆಯೂ ಚರ್ಚೆಯಾಯಿತು. ಆದರೆ ಮೊದಲು ಯಾರು ಚರ್ಚೆ ಮಾಡಬೇಕು ಎಂಬ ವಿಚಾರವೇ ಎರಡುಮೂರು ಗಂಟೆಗಳ ಕಾಲಹರಣಕ್ಕೆ ಕಾರಣವಾಯಿತು. ಬರದ ಮೇಲಿನ ಚರ್ಚೆಯಲ್ಲಿ ಕೆಲವು ಶಾಸಕರು ಅಮೂಲ್ಯ ಸಲಹೆಸೂಚನೆಗಳು ನೀಡಿದ್ದರು. ಆದರೆ ಬಹುತೇಕರು ಚರ್ಚೆಯಲ್ಲಿ ಕಾಟಾಚಾರಕ್ಕೆ ಎಂಬಂತೆ ಭಾಗವಹಿಸಿದ್ದರು. +ಹೇಳಿದ್ದೇ ಹೇಳುವುದು, ಅನಗತ್ಯವಾದ ವಿಷಯಗಳನ್ನು ಪ್ರಸ್ತಾಪಿಸುವುದು ಕಂಡುಬಂತು. ಈ ನಡುವೆ ಪ್ರಮುಖ ವಿರೋಧ ಪಕ್ಷದವಾದ ಬಿಜೆಪಿಯಲ್ಲಿನ ಒಡಕುಗಳು ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದವು. ಕಾಂಗ್ರೆಸ್ ವಿರುದ್ಧ ಹೋರಾಟ ಎಂಬ ಸಂದರ್ಭ ಬಂದರೆ ಬಿಜೆಪಿಯ ಎಲ್ಲ ಶಾಸಕರು ಎದ್ದು ನಿಂತು ಅಬ್ಬರಿಸುವುದು ಸಾಮಾನ್ಯ. ಆದರೆ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ದೌರ್ಜನ್ಯ ವಿಷಯವಾಗಿ ಸುದೀರ್ಘ ಚರ್ಚೆಗಳಾಗಿದ್ದು, ಸರ್ಕಾರದ ಪರವಾಗಿ ಉತ್ತರಿಸಿದ್ದ ಗೃಹ ಸಚಿವ ಪರಮೇಶ್ವರ್, ತನಿಖೆ ಪ್ರಗತಿಯಲ್ಲಿದೆ. ಅದರ ವರದಿ ಬಂದನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. +ಪೃಥ್ವಿ ಸಿಂಗ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‍ನ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಬಂಸಬೇಕೆಂಬ ಬಿಜೆಪಿಯ ಬೇಡಿಕೆಗೆ ಸರ್ಕಾರ ಸೊಪ್ಪು ಹಾಕಲಿಲ್ಲ. ಈ ವಿಚಾರವಾಗಿ ಬಿಜೆಪಿಯ ಒಂದು ಬಣ ಧರಣಿ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕುಬೇಕು ಎಂಬ ನಿಲುವು ಹೊಂದಿತ್ತು. ಆದರೆ ಉತ್ತರ ಕರ್ನಾಟಕ ಭಾಗದ ಚರ್ಚೆಗಳಿಗೆ ಬೆಳಗಾವಿಯ ಅಧಿವೇಶನದಲ್ಲಿ ಆದ್ಯತೆ ದೊರೆಯಬೇಕು. ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಯನ್ನು ಮುಖ್ಯವಾಗಿಟ್ಟುಕೊಂಡು ಧರಣಿ ನಡೆಸಿ ಸಮಯ ವ್ಯರ್ಥ ಮಾಡುವುದಾದರೆ ತಾವು ಬಿಜೆಪಿ ನಾಯಕರ ವಿರುದ್ಧವೇ ಹೋರಾಟ ನಡೆಸುವುದಾಗಿ ಅದೇ ಪಕ್ಷದ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. +ಭಾರತ-ಪ್ಯಾಲೇಸ್ತೀನ್‍ ದೀರ್ಘಕಾಲದ ಸಂಬಂಧ ಮುಂದುವರೆಯಲಿದೆ : ಜೈಶಂಕರ್ +ಇದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಪೀಕಲಾಟಕ್ಕೆ ತಂದಿಟ್ಟಿತ್ತು. ಬಿಜೆಪಿಯ ಒಂದು ಬಣದ ನಿರ್ಧಾರದ ಪ್ರಕಾರ ಕಾಂಗ್ರೆಸ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಬಂಸುವಂತೆ ಒತ್ತಡ ಹೇರಿ ಧರಣಿ ಮಾಡಬೇಕಿತ್ತು. ಧರಣಿ ಮಾಡಿದರೆ ಯತ್ನಾಳ್ ಅವರು ಪಕ್ಷದ ನಾಯಕರ ವಿರುದ್ಧ ಹೋರಾಟಕ್ಕಿಳಿದಿರೆ ಸದನದಲ್ಲಿ ಬಿಜೆಪಿಯಲ್ಲಿ ನಗೆಪಾಟಲಿಗೆ ಈಡಾಗುತ್ತದೆ ಎಂಬ ಗೊಂದಲದಿಂದಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರೊಂದಿಗೆ ಚರ್ಚಿಸಿ ವಿಪಕ್ಷ ನಾಯಕ ಆರ್.ಅಶೋಕ್ ಸಭಾತ್ಯಾಗ ಮಾಡುವ ನಿರ್ಣಯ ಕೈಗೊಂಡಿದ್ದರು. +ಸಭಾತ್ಯಾಗ ಮಾಡುವುದಾಗಿ ಹೇಳಿ ಹೊರನಡೆಯುತ್ತಿದ್ದಂತೆ ಬಿಜೆಪಿಯ ಎಸ್.ಆರ್.ವಿಶ್ವನಾಥ್ ಸೇರಿದಂತೆ ಹಲವು ಶಾಸಕರು ಆರ್.ಅಶೋಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾರಂಭಿಸಿದರು. ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಆರ್.ಅಶೋಕ್ ಗಹನವಾದ ವಿಚಾರವೊಂದನ್ನು ಕೈ ಚೆಲ್ಲಿದ್ದಾರೆ. ಧರಣಿ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಅವಕಾಶವಿತ್ತು ಎಂದು ಕೂಗಾಡುತ್ತಿದ್ದ ದೃಶ್ಯ ಕಂಡುಬಂದಿತ್ತು. +ಒಂದು ಹಂತದಲ್ಲಿ ತಮ್ಮ ಬೆಂಬಲಿಗರಾದ ನಗರ ಸೇವಕರೊಬ್ಬರ ಮೇಲಿನ ಹಲ್ಲೆಯನ್ನು ಖಂಡಿಸಿ ಬಿಜೆಪಿಯ ಶಾಸಕ ಅಭಯ ಪಾಟೀಲ್ ಏಕಾಂಗಿಯಾಗಿ ಧರಣಿ ನಡೆಸಿದ್ದರು. ಬಿಜೆಪಿಯ ಎಲ್ಲ ಶಾಸಕರು ಹೊರಗಿದ್ದರೆ ಅಭಯ ಪಾಟೀಲ್ ಮಾತ್ರ ಧರಣಿಯಲ್ಲಿದ್ದರು. ಕೊನೆಗೆ ಗೃಹಸಚಿವ ಪರಮೇಶ್ವರ್ ಅವರೇ ಸಮಾಧಾನದ ಮಾತುಗಳನ್ನಾಡಿ ಧರಣಿಯಿಂದ ಹಿಂದೆ ಸರಿಯುವಂತೆ ಮಾಡಿದರು. +ಮುಖ್ಯಮಂತ್ರಿಯವರ ಅಲ್ಪಸಂಖ್ಯಾತರಿಗೆ ಅನುದಾನ ನೀಡುವ ಹೇಳಿಕೆ ವಿರೋಧಿಸಿ ನಡೆದ ಚರ್ಚೆಯ ಬಳಿಕ ಬಿಜೆಪಿ ಸಭಾತ್ಯಾಗ ಮಾಡಿದಾಗ ಅದೇ ಪಕ್ಷದ ಶಾಸಕ ಎಸ್.ಟಿ.ಸೋಮಶೇಖರ್, ಸದನದಲ್ಲೇ ಕುಳಿತು ಸ್ವಪಕ್ಷೀಯರಿಗೆ ಸೆಡ್ಡು ಹೊಡೆದಿದ್ದರು. +ಬಿಜೆಪಿಯಲ್ಲಿನ ಈ ವೈಪರೀತ್ಯಗಳು ಕಾಂಗ್ರೆಸ್ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿವೆ. ಬಹುಶಃ ನಾಳೆ ನಡೆಯುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಆನೆ ಬಲದೊಂದಿಗೆ ಮುಗಿಬೀಳುವ ನಿರೀಕ್ಷೆಗಳಿವೆ. \ No newline at end of file diff --git a/eesanje/url_46_292_3.txt b/eesanje/url_46_292_3.txt new file mode 100644 index 0000000000000000000000000000000000000000..45778ef89e85d88aadee10e2af3fc6b258f362ec --- /dev/null +++ b/eesanje/url_46_292_3.txt @@ -0,0 +1,7 @@ +ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ, ಉಜಿರೆಯಿಂದ ಪಾದಯಾತ್ರೆ +ಬೆಳ್ತಂಗಡಿ, ಡಿ.9- ಹೃದಯ ಪರಿವರ್ತನೆ ಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಲಕ್ಷದೀಪೋತ್ಸವ ಸಂದರ್ಭದಲ್ಲಿ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಹತ್ತು ಸಾವಿರಕ್ಕೂ ಹೆಚ್ಚು ಭಕ್ತರನ್ನು ಅಭಿನಂದಿಸಿ ಮಾತನಾಡಿದರು. +ನಾವು ಎಲ್ಲರಲ್ಲಿಯೂ ಒಳ್ಳೆಯತನ ಕಾಣಬೇಕು. ದೋಷ ಹುಡುಕಬಾರದು. ಯಾವಾಗಲೂ ಕೆಟ್ಟ ಯೋಚನೆ ಮಾಡದೆ ಸದಾಶಯದೊಂದಿಗೆ ಸತ್ಕಾರ್ಯಗಳನ್ನೇ ಮಾಡಿದರೆ ಲೋಕಕಲ್ಯಾಣವಾಗುತ್ತದೆ. ಎಲ್ಲರಲ್ಲಿಯೂ ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆ ಮತ್ತು ಗೌರವ ಬೆಳೆಯುತ್ತದೆ. ದೇವರು ನನಗೆ ಕೊಟ್ಟ ಎಲ್ಲಾ ಅವಕಾಶ ಮತ್ತು ಸಂಪತ್ತನ್ನು ಬಳಸಿ ಸತ್ಕಾರ್ಯಗಳನ್ನೇ ಮಾಡಿದ್ದೇನೆ. ಅಗಾಧ ಸಂಪತ್ತಿಗಿಂತ ಸತ್ಕಾರ್ಯಕ್ಕೆ ಮೌಲ್ಯ ಜಾಸ್ತಿ. ಎಲ್ಲರೂ ಸೇರಿ ಜೊತೆಯಾಗಿ ಸತ್ಕಾರ್ಯಗಳನ್ನೇ ಮಾಡೋಣ ಎಂದು ಅವರು ಕಿವಿಮಾತು ಹೇಳಿದರು. +ಧರ್ಮಸ್ಥಳದ ಬಗ್ಗೆ ಯಾವುದೇ ಅನುಮಾನ, ಸಂಶಯ ಬೇಡ. ನೇರವಾಗಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಅವರು ಸಲಹೆ ನೀಡಿದರು. ಸಂಸದರ ನಿಯಿಂದ ತನಗೆ ಮಂಜೂರಾದ ಎರಡೂವರೆ ಕೋಟಿ ರೂ. ಅನುದಾನವನ್ನು ಬೀದರ್ ಜಿಲ್ಲೆಗೆ ನೀಡಿದ್ದು, ಅಲ್ಲಿ ಇದರಿಂದಾಗಿ ಕ್ಷೀರ ಕ್ರಾಂತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಪಾದಯಾತ್ರೆ ಮೂಲಕ ಎಲ್ಲರೂ ನಿಮ್ಮ ಪ್ರೀತಿ-ವಿಶ್ವಾಸ, ಗೌರವ, ಭಕ್ತಿ ಮತ್ತು ಸಂತೋಷವನ್ನು ವ್ಯಕ್ತಪಡಿಸಿರುವಿರಿ. ಇದರಿಂದ ನನ್ನಲ್ಲಿ ತೃಪ್ತಿ, ಸಂತೋಷ ಮತ್ತು ಧನ್ಯತಾಭಾವ ಮೂಡಿಬಂದಿದೆ ಎಂದರು. +31 ಸಾವಿರ ರೈತರ 167 ಕೋಟಿ ಸಾಲಮನ್ನಾಗೆ ಪ್ರಸ್ತಾವನೆ ; ಕೆ.ಎನ್.ರಾಜಣ್ಣ +ಪಾದಯಾತ್ರಿಗಳ ಭೀಷ್ಮ ಪ್ರತಿಜ್ಞೆ: ಪಾದಯಾತ್ರಿಗಳೆಲ್ಲ ಸಂಘಟನೆ ಮೂಲಕ ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗಾಗಿ ತಾವೆಲ್ಲರೂ ಧರ್ಮಸ್ಥಳದ ಜೊತೆ ಹಾಗೂ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಜೊತೆ ಸದಾ ಇದ್ದೇವೆ ಎಂದು ಸಾಮೂಹಿಕವಾಗಿ ದೃಢಸಂಕಲ್ಪದೊಂದಿಗೆ ಭೀಷ್ಮ ಪ್ರತಿಜ್ಞೆ ಮಾಡಿದರು. +ಹೇಮಾವತಿ ವಿ.ಹೆಗ್ಗಡೆ, ಶ್ರದ್ಧಾ ಅಮಿತ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್, ಸೋನಿಯವರ್ಮ, ಪೂರನ್ವರ್ಮ, ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ಎಸ್‍ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ.ಎಸ್. ಸತೀಶ್ ಚಂದ್ರ, ಪ್ರಾಂಶುಪಾಲ ಕುಮಾರ ಹೆಗ್ಡೆ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಎಲ.ಎಚ್. ಮಂಜುನಾಥ್, ಸಿರಿ ಗ್ರಾಮೋದ್ಯೋಗ ಸಂಸ್ಥೆ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ಧನ್, ಎಸ್‍ಡಿಎಂ ಆಸ್ಪತ್ರೆ ನಿರ್ದೇಶಕ ಎಂ. ಜನಾರ್ಧನ್, ಸಿಒಒ ಅನಿಲ್ ಕುಮಾರ್, ವಕೀಲ ಬಿ.ಕೆ. ಧನಂಜಯ ರಾವ್ , ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಶ್ರೀನಿವಾಸ ರಾವ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_292_4.txt b/eesanje/url_46_292_4.txt new file mode 100644 index 0000000000000000000000000000000000000000..b9b79a176bfc712167900063c8dff17dd6ee3199 --- /dev/null +++ b/eesanje/url_46_292_4.txt @@ -0,0 +1,6 @@ +ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ಓವೈಸಿ ನೇಮಕ, ಪ್ರಮಾಣವಚನ ಬಹಿಷ್ಕರಿಸಿದ ಬಿಜೆಪಿ +ಹೈದರಾಬಾದ್, ಡಿ.9- ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅಧಿಕಾರ ವಹಿಸಿಕೊಂಡ ಮರುಕ್ಷಣವೇ ಹಂಗಾಮಿ ಸ್ಪೀಕರ್ ಆಯ್ಕೆ ಭಾರೀ ವಿವಾದ ಸೃಷ್ಟಿಯಾಗಿದೆ. ಕಾಂಗ್ರೆಸ್ ಬಹುಮತ ಗಳಿಸಿದ್ದರೂ ಎಐಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿರುವುದನ್ನು ಖಂಡಿಸಿ ತೆಲಂಗಾಣ ಬಿಜೆಪಿ ಭಾರೀ ಪ್ರತಿಭಟನೆ ನಡೆಸಿದೆ. +ವಿಧಾನಸಭೆಯಲ್ಲಿಂದು ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದ್ದು, ಇದನ್ನು ಬಿಜೆಪಿಯಿಂದ ಆಯ್ಕೆಯಾಗಿರುವ ಎಂಟೂ ಶಾಸಕರು ಬಹಿಷ್ಕರಿಸಿದ್ದಾರೆ. ನಾನು ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಶಾಸಕನಾಗಿ ವಿಧಾನಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ರಾಜಾಸಿಂಗ್ ಹೇಳಿದ್ದಾರೆ. +ಬೆಂಗಳೂರು ಸೇರಿ ದೇಶದ 40ಕ್ಕೂ ಹೆಚ್ಚು ಕಡೆ ಎನ್‍ಐಎ ದಾಳಿ +ಸದಾ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವ ಓವೈಸಿ ಅವರ ಕುಟುಂಬದವರನ್ನು ಓಲೈಸಲು ಕಾಂಗ್ರೆಸ್ ಈ ಲಾಬಿ ಮಾಡಿದೆ. ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಮಾಡಿರುವುದನ್ನು ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಜನತೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದ್ದಾರೆ. +ಹಿಂದೂ ವಿರೋಧಿ ಹೇಳಿಕೆ ನೀಡಿ ಸಂವಿಧಾನಕ್ಕೆ ಅಪಚಾರ ಮಾಡಿರುವವರನ್ನು ಈ ಸ್ಥಾನದಲ್ಲಿ ಕೂರಿಸುವುದು ಸರಿಯಲ್ಲ. ಈ ಬಗ್ಗೆ ನಾನು ಜನರ ಬಳಿಗೆ ಹೋಗುತ್ತೇನೆ ಎಂದು ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯಾಗಿ ಸ್ರ್ಪಧಿಸಿದ್ದ ರೇವಂತ್ ರೆಡ್ಡಿ ಹಾಗೂ ಮಾಜಿ ಸಿಎಂ ಚಂದ್ರಶೇಖರ್ ರಾವ್ ಅವರನ್ನು ಮಣಿಸಿ ಗೆದ್ದಿರುವ ಟಿ.ರಾಜಾಸಿಂಗ್ ಹೇಳಿದ್ದಾರೆ. \ No newline at end of file diff --git a/eesanje/url_46_292_5.txt b/eesanje/url_46_292_5.txt new file mode 100644 index 0000000000000000000000000000000000000000..21f9e2269116fab9e7c9c4f51e2789552c446b15 --- /dev/null +++ b/eesanje/url_46_292_5.txt @@ -0,0 +1,8 @@ +ವಿದ್ಯುತ್ ಖರೀದಿಗೆ 1997 ಕೋಟಿ ರೂ. ಬಳಕೆ : ಕೆ.ಜೆ.ಜಾರ್ಜ್ +ಬೆಂಗಳೂರು, ಡಿ.9- ತಡೆರಹಿತ ವಿದ್ಯುತ್ ಸರಬರಾಜು ತಡೆಗಾಗಿ ಕಳೆದ ವರ್ಷ 476.61 ಕೋಟಿ ರೂ.ಗಳನ್ನು ವೆಚ್ಚ ಮಾಡಿ ವಿದ್ಯುತ್ ಖರೀದಿಸಲಾಗಿದ್ದು, ಈ ವರ್ಷ ಅಕ್ಟೋಬರ್ ವೇಳೆಗೆ 1997.29 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. +ರಾಯಭಾಗ ಕ್ಷೇತ್ರದ ಶಾಸಕ ದುರ್ಯೋಧನ ಐಹೊಳೆ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, 2022-23ರಲ್ಲಿ 37 ಸಾವಿರ ಮಿಲಿಯನ್ ಯುನಿಟ್ ಮತ್ತು 2023-24 ನೇ ಸಾಲಿನ ಏಪ್ರಿಲ್‍ನಿಂದ ಸೆಪ್ಟೆಂಬರ್ ಅಂತ್ಯದವರೆಗೆ ವಿವಿಧ ಮೂಲಗಳಿಂದ 46,847.42 ಮಿಲಿಯನ್ ಯುನಿಟ್ ವಿದ್ಯುತ್ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ. +ರಾಜ್ಯಸರ್ಕಾರ ನೇರವಾಗಿ ಇತರ ರಾಜ್ಯಗಳಿಂದಾಗಲಿ ಅಥವಾ ಖಾಸಗಿ ಕಂಪನಿಗಳಿಂದಾಗಲಿ ವಿದ್ಯುತ್ ಖರೀದಿಸುವುದಿಲ್ಲ. ಆದರೆ ವಿವಿಧ ವಿದ್ಯುತ್ ವಿನಿಮಯ ಕೇಂದ್ರಗಳ ಮೂಲಕ ಖರೀದಿಸಲಾಗುತ್ತದೆ. ಅದರ ಪ್ರಕಾರ, ಈ ವರ್ಷ ಐಇಎಕ್ಸ್ ವಿನಿಮಯ ಕೇಂದ್ರದಿಂದ ಪ್ರತಿ ಯುನಿಟ್‍ಗೆ 6.81 ಪೈಸೆಯಂತೆ 1544.52 ಮಿಲಿಯನ್ ಯುನಿಟ್‍ಗಳನ್ನು 1036.12 ಕೋಟಿ ರೂ. ವೆಚ್ಚ ಮಾಡಿ ಖರೀದಿಸಲಾಗಿದೆ. +ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಗಣ್ಯರು, ಸಾರ್ವಜನಿಕರು +ಟಿಎಕ್ಸ್‍ಐಎಲ್ ಸಂಸ್ಥೆಯಿಂದ ಯುನಿಟ್‍ಗೆ 7.58 ರೂ.ನಂತೆ 69.20 ಕೋಟಿ ಖರ್ಚು ಮಾಡಿ 91.31 ಮಿಲಿಯನ್ ಯುನಿಟ್, ಎಚ್‍ಪಿಎಕ್ಸ್ ವಿನಿಮಯ ಕೇಂದ್ರದಿಂದ ಪ್ರತಿ ಯುನಿಟ್‍ಗೆ 7.63 ರೂ.ನಂತೆ 91.97 ಕೋಟಿ ವೆಚ್ಚ ಮಾಡಿ 120.50 ಮಿಲಿಯನ್ ಯುನಿಟ್ ಅನ್ನು ಖರೀದಿಸಲಾಗಿದೆ. ಒಟ್ಟು 1756.33 ಮಿಲಿಯನ್ ಯುನಿಟ್‍ಗೆ 1197.29 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಒಟ್ಟಾರೆ ಸರಾಸರಿ ಯುನಿಟ್‍ನ ದರ 6.82 ರೂ.ಗಳು ಎಂದು ತಿಳಿಸಿದ್ದಾರೆ. +ಕಳೆದ ವರ್ಷ 476.61 ಕೋಟಿಗಳನ್ನು ಬಳಕೆ ಮಾಡಿ 589.14 ಮಿಲಿಯನ್ ಯುನಿಟ್‍ಗಳನ್ನು ಖರೀದಿಸಲಾಗಿತ್ತು. ಪ್ರತಿ ಯುನಿಟ್‍ಗೆ 8.09 ರೂ. ಸರಾಸರಿ ದರ ನೀಡಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ಪಂಜಾಬ್ ಹಾಗೂ ಉತ್ತರ ಪ್ರದೇಶಗಳ ರಾಜ್ಯಗಳಿಂದ ವಿದ್ಯುತ್ ವಿನಿಮಯ ಆಧಾರದ ಮೇಲೆ ಪ್ರತಿದಿನ 8.9 ಮಿಲಿಯನ್ ಯುನಿಟ್‍ಗಳನ್ನು ಪಡೆದುಕೊಳ್ಳಲಾಗುತ್ತಿದೆ. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 7 ಗಂಟೆ ಕಾಲ ತ್ರಿ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. +2023-24 ನೇ ಸಾಲಿಗೆ 89112 ವಿದ್ಯುತ್ ಬೇಡಿಕೆಯಾಗಬಹುದು ಎಂಬ ಅಂದಾಜಿದೆ. ದಿನವಹಿ ಸರಾಸರಿ ಬೇಡಿಕೆಯ ಪರಿಮಾಣ ಏಪ್ರಿಲ್‍ನಿಂದ ಸೆಪ್ಟೆಂಬರ್ ನಡುವೆ 245.20 ಮಿಲಿಯನ್ ಯುನಿಟ್‍ಗಳಾಗಿವೆ. ಬರಗಾಲದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_292_6.txt b/eesanje/url_46_292_6.txt new file mode 100644 index 0000000000000000000000000000000000000000..29468c211454136e3659ce95c630a4cb5c2756cd --- /dev/null +++ b/eesanje/url_46_292_6.txt @@ -0,0 +1,6 @@ +ಯತ್ನಾಳ್‍ಗೆ ತಾಕತ್ತಿದ್ದರೆ ಎನ್‍ಐಎ ತನಿಖೆ ನಡೆಸಲಿ : ಎಂ.ಬಿ.ಪಾಟೀಲ್ +ಬೆಂಗಳೂರು, ಡಿ.9- ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಾಕತ್ತಿದ್ದರೆ ಧಾರ್ಮಿಕ ಮುಖಂಡರಾದ ತನ್ವಿರ್ ಅಸ್ಮಿ ಅವರ ವಿರುದ್ಧ ಎನ್‍ಐಎ ತನಿಖೆ ನಡೆಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಅದರ ಬಳಿಕ ಯತ್ನಾಳ್ ಆರೋಪ ಮಾಡಿ ಸಮಾವೇಶದಲ್ಲಿದ್ದ ವಿಜಯಪುರ ಮೂಲದವರಾದ ತನ್ವೀರ್ ಅಸ್ಮಿಗೆ ಐಸಿಸ್ ಉಗ್ರರ ನಂಟಿದೆ ಎಂದು ಆರೋಪಿಸಿದ್ದಾರೆ. +ಕೇಂದ್ರದಲ್ಲಿ ಬಿಜೆಪಿಯ ಸರ್ಕಾರವಿದೆ. ಬಸನಗೌಡ ಯತ್ನಾಳ್ ಅವರು ಎನ್‍ಐಎ ಮೂಲಕ ತನಿಖೆ ಮಾಡಿಸಿ ತಮ್ಮ ಆರೋಪವನ್ನು ಸಾಬೀತುಪಡಿಸಬೇಕು ಎಂದರು. ತಾವು ಯಾವುದೇ ತನಿಖೆಗಾದರೂ ಸಿದ್ಧ ಎಂದು ತನ್ವೀರ್ ಅಸ್ಮಿ ಹೇಳಿದ್ದಾರೆ. ತಮ್ಮ ಮೇಲಿನ ಆರೋಪ ಸಾಬೀತಾದರೆ ದೇಶ ತೊರೆಯುವುದಾಗಿ ಸವಾಲು ಹಾಕಿದ್ದಾರೆ. ಒಂದು ವೇಳೆ ಆರೋಪ ಸಾಬೀತುಪಡಿಸುವಲ್ಲಿ ಯತ್ನಾಳ್ ವಿಫಲರಾದರೆ ಯಾವ ಕ್ರಮಕ್ಕೆ ಒಳಗಾಗುತ್ತಾರೆ ಎಂದು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು. +ಕೋಟಿ ಕೋಟಿ ಹಣ ಪತ್ತೆಯಾದ ಕಾಂಗ್ರೆಸ್ ಸಂಸದನ ಬಂಧನಕ್ಕೆ ಮರಾಂಡಿ ಒತ್ತಾಯ +ಉಗ್ರಗಾಮಿಗಳ ವಿಚಾರ ಬರುತ್ತಿದ್ದಂತೆ ರಾಷ್ಟ್ರೀಯ ತನಿಖಾ ದಳ ಸ್ವಯಂ ವಿಚಾರಣೆಗೆ ಧಾವಿಸಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಪರ್ಕಗಳಿರುವುದರಿಂದ ಉಗ್ರಗಾಮಿಗಳ ವಿಚಾರವನ್ನು ರಾಜ್ಯದ ಪೊಲೀಸರು ತನಿಖೆ ಮಾಡಲಾಗುವುದಿಲ್ಲ. ಯತ್ನಾಳ್ ಅವರು ಮೊದಲು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಎನ್‍ಐಎ ತನಿಖೆಗೆ ಒತ್ತಾಯಿಸಬೇಕು ಎಂದು ಆಗ್ರಹಿಸಿದರು. \ No newline at end of file diff --git a/eesanje/url_46_292_7.txt b/eesanje/url_46_292_7.txt new file mode 100644 index 0000000000000000000000000000000000000000..10f75b033e8d6867b266cff53436779591a24ed8 --- /dev/null +++ b/eesanje/url_46_292_7.txt @@ -0,0 +1,7 @@ +ಎಪಿಎಂಸಿ ಕಾಯ್ದೆಯ ಮರುಸ್ಥಾಪನೆಗೆ ಕ್ರಮ +ಬೆಂಗಳೂರು,ಡಿ.9- ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರಗಳ ವಿಧೇಯಕದ ತಿದ್ದುಪಡಿಯ ಬಳಿಕ ರಾಜ್ಯದ ಎಪಿಎಂಸಿಗಳು ಆದಾಯದ ಕೊರತೆ ಅನುಭವಿಸುತ್ತಿದ್ದು, ಅದನ್ನು ಹಿಂದಿನಂತೆ ಸರಿಪಡಿಸಲು ರೂಪಿಸಲಾಗಿರುವ ವಿಧೇಯಕ ಸದನ ಸಮಿತಿಯ ಪರಿಶೀಲನೆಗೆ ಒಳಪಡುತ್ತದೆ ಎಂದು ಕೃಷಿ ಇಲಾಖೆ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ. +ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರಗಳ ವಿಧೇಯಕ ತಿದ್ದುಪಡಿಯಿಂದ 145 ಎಪಿಎಂಸಿಗಳು ಅನಾಥವಾಗಿರುವುದು ಸರ್ಕಾರದ ಗಮನದಲ್ಲಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ನಿಯಂತ್ರಣಾ ಅಧಿಕಾರವನ್ನು ಮಾರುಕಟ್ಟೆ ಪ್ರಾಂಗಣಗಳಿಗೆ ಮಿತಿಗೊಳಿಸಿರುವುದರಿಂದ ರಾಜ್ಯದಲ್ಲಿನ ಬಹಳಷ್ಟು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಆದಾಯದ ಕೊರತೆ ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ. +ಕೋಟಿ ಕೋಟಿ ಹಣ ಪತ್ತೆಯಾದ ಕಾಂಗ್ರೆಸ್ ಸಂಸದನ ಬಂಧನಕ್ಕೆ ಮರಾಂಡಿ ಒತ್ತಾಯ +ರಾಜ್ಯಸರ್ಕಾರವು ಮಾರುಕಟ್ಟೆ ಪ್ರಾಂಗಣಗಳ ಹೊರಗಡೆ ನಡೆಯುವ ವಹಿವಾಟಿನ ಮೇಲೆ ಈ ಮೊದಲಿನಂತೆ ನಿಯಂತ್ರಣ ಹೊಂದುವುದು ರೈತ ಬೆಳೆಗಾರರ ಹಿತದೃಷ್ಟಿಯಿಂದ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ವಿಧಾನಮಂಡಲದಲ್ಲಿ ಮಂಡಿಸಲಾಯಿತು. ವಿಧಾನಸಭೆಯಲ್ಲಿ ಜುಲೈ 17 ರಂದು ಕಾಯ್ದೆ ಅಂಗೀಕಾರಗೊಂಡಿದೆ. ಮಾರನೆಯ ದಿನ ವಿಧಾನಪರಿಷತ್‍ನಲ್ಲಿ ಕಾಯ್ದೆಯ ಕುರಿತು ಚರ್ಚೆಯಾಗಿದೆ. +ಅಂಗೀಕಾರಗೊಳ್ಳದೆ ಸದನ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ ಎಂದು ವಿವರಿಸಿದ್ದಾರೆ. ಸದನ ಸಮಿತಿಯು ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ತಿದ್ದುಪಡಿ ವಿಧೇಯಕ -2023 ನ್ನು ಸಮಗ್ರವಾಗಿ ಪರಿಶೀಲಿಸುತ್ತಿದೆ. +ಶಾಸಕರ ಭವನದಲ್ಲಿ ಅಕ್ಟೋಬರ್ 16 ರಂದು ಮೊದಲ ಸಭೆ ನಡೆಸಿದ್ದರು. ಕೋಲಾರ ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 2 ಮತ್ತು 3 ನೇ ಸಭೆ ನಡೆಸಲಾಗಿದೆ. ಸದನ ಸಮಿತಿ ವರದಿ ಸಲ್ಲಿಸಬೇಕಿದ್ದು, ಬಳಿಕ ಅದನ್ನು ಪರಿಶೀಲಿಸುವುದಾಗಿ ಸಚಿವರು ತಿಳಿಸಿದ್ದಾರೆ. \ No newline at end of file diff --git a/eesanje/url_46_292_8.txt b/eesanje/url_46_292_8.txt new file mode 100644 index 0000000000000000000000000000000000000000..00a55ac93d4dbd43881fbe5dbcec6c780e3255bb --- /dev/null +++ b/eesanje/url_46_292_8.txt @@ -0,0 +1,9 @@ +200 ಕೋಟಿ ಹಣ ಜಪ್ತಿ ಬಗ್ಗೆ ಕಾಂಗ್ರೆಸ್ ಏಕೆ ಮಾತಾಡಲ್ಲ..? : ಪ್ರಹ್ಲಾದ ಜೋಶಿ +ಹುಬ್ಬಳ್ಳಿ, ಡಿ.9- ಜಾರ್ಖಂಡ್‍ನ ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸೇರಿದ್ದು ಎನ್ನಲಾದ ಉದ್ಯಮ ಸಮೂಹ ಸಂಸ್ಥೆ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದು, 200 ಕೋಟಿ ಹಣ ಜಪ್ತಿಗೆ ಮಾಡಿದ್ದಾರೆ. ಈ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‍ನವರು ಯಾಕೆ ಮಾತನಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. +ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಯವರಿಗೆ ಬಹಳ ಹತ್ತಿರದವರು. ರಾಹುಲ್ ಗಾಂಧಿ ಭ್ರಷ್ಟಾಚಾರದ ಹಾಗೂ ಮೊಹಬತ್ ಕಾ ದುಖಾನ್ ಬಗ್ಗೆ ಮಾತನಾಡುತ್ತಾರೆ. ಮೊಹಬತ್ ದುಖಾನ್‍ನಲ್ಲಿ ಮೊದಲು ಸಿಗುವುದು ಭ್ರಷ್ಟಾಚಾರದ ಹಣ. ರಾಹುಲ್ ಗಾಂಧಿ ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಕಾಂಗ್ರೆಸ್ ನವರು ಭ್ರಷ್ಟಾಚಾರದ ಬಗ್ಗೆ ಒಂದು ಶಬ್ಧ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು. +ಉಚ್ಛಾಟಿತ ಸಂಸದೆ ಮಹುವಾ ಮೊಯಿತ್ರಾ ಅಂತ್ಯತ ಕೀಳಾಗಿ ಹಿಂದೂ ಬಗ್ಗೆ ಮಾತನಾಡುತ್ತಿದ್ದರು ಅಂಥವರಿಗೆ ಈಗ ದ್ರೌಪದಿ ವಸ್ತ್ರಾಪಹರಣದ ಬಗ್ಗೆ ಗೊತ್ತಾಗಿದೆ. ಭಾರತ ಸರ್ಕಾರ ಲಾಗಿನ್ ಖಾತೆ, ಅಧಿಕೃತ ಇ ಮೇಲ್ ನೀಡಿದೆ ಎಂದರು. ಉದ್ಯಮಿ ನೀಡಿದ ಸ್ಕ್ಯಾಪ್ ಬಗ್ಗೆ ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ. ಅದರ ಬೆಲೆ 2.5 ಲಕ್ಷವಾಗಿದೆ. ಇವರು ಇಲ್ಲಿಯವರೆಗೆ ಆದಾಯ ತೆರಿಗೆ ತುಂಬಿದ್ದು, ಕೇವಲ 4 ಲಕ್ಷ ರೂ. ಇಷ್ಟೊಂದು ಹಣ ಎಲ್ಲಿಂದ ಬಂದಿದೆ ಎಂದು ಪ್ರಶ್ನಿಸಿದರು. +ಕೋಟಿ ಕೋಟಿ ಹಣ ಪತ್ತೆಯಾದ ಕಾಂಗ್ರೆಸ್ ಸಂಸದನ ಬಂಧನಕ್ಕೆ ಮರಾಂಡಿ ಒತ್ತಾಯ + +ಸದನದಲ್ಲಿ ಕೇಳಿದ 60 ಪ್ರಶ್ನೆಗಳಲ್ಲಿ 45 ಹೆಚ್ಚು ಪ್ರಶ್ನೆಗಳು ಸ್ನೇಹಿತರ ಉದ್ಯಮಕ್ಕೆ ಅನುಕೂಲಕ್ಕೆ ಸಂಬಂಧಿಸಿದಾಗಿದೆ. 36 ಬಾರಿ ದೆಹಲಿಯಿಂದ ಹೊರ ದೇಶಕ್ಕೆ ಪ್ರಯಾಣ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಹಳಷ್ಟು ಅವಕಾಶ ಕೊಡಲಾಗಿತ್ತು ಎಂದು ತಿಳಿಸಿದರು. +ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ +ಮೊಯಿತ್ರಾ ಹಾಗೂ ಸಂಸದ ಧಿರಜ್ ಪ್ರಸಾದ್ ಸಾಹು ಭ್ರಷ್ಟಾಚಾರ ಮಾಡಿದ ಹಣ ದೇಶದ ಜನರದಾಗಿದೆ. ಅದನ್ನು ಒಂದು ಪೈಸೆ ಸಹ ನಾವು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_292_9.txt b/eesanje/url_46_292_9.txt new file mode 100644 index 0000000000000000000000000000000000000000..1cd1fa45b5fad6d5d798c6ed22e29a5b33e83e8e --- /dev/null +++ b/eesanje/url_46_292_9.txt @@ -0,0 +1,6 @@ +ರಾಮನಗರ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು +ಬೆಂಗಳೂರು, ಡಿ.9- ರಾಮನಗರ ಮತ್ತು ಕನಕಪುರ ಎರಡೂ ಕಡೆಗಳಲ್ಲಿ 2024-25 ನೇ ಸಾಲಿನಲ್ಲಿ ಹೊಸದಾಗಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಆಸಕ್ತಿ ಹೊಂದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. +ಶಾಸಕ ಯಶವಂತರಾಯಗೌಡ ವಿಠ್ಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ರಾಜ್ಯದಲ್ಲಿ 24 ಸರ್ಕಾರಿ ಮತ್ತು 46 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ದಾವಣಗೆರೆ, ಉಡುಪಿ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಬಾಗಲಕೋಟೆ, ದಕ್ಷಿಣ ಕನ್ನಡ, ವಿಜಯನಗರ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಲ್ಲ ಎಂದು ತಿಳಿಸಿದ್ದಾರೆ. +ಅಸ್ಸಾಮಿ ಮುಸ್ಲಿಮರ ಆರ್ಥಿಕ ಮೌಲ್ಯಮಾಪನಕ್ಕೆ ನಿರ್ಧಾರ +ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಬೇಕೆಂದು ಸರ್ಕಾರದ ನೀತಿಯಾಗಿದೆ. ಪ್ರಸ್ತುತ ವರ್ಷದಲ್ಲಿ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಇಲ್ಲ. ಅನುದಾನ ಲಭ್ಯತೆ ಆಧರಿಸಿ ಹಂತಹಂತವಾಗಿ ಜಿಲ್ಲೆಗೊಂದು ಕಾಲೇಜುಗಳನ್ನು ಆರಂಭಿಸಲಾಗುವುದು. +ಮೆಡಿಕಲ್ ಕಾಲೇಜಿಗೆ 610 ಕೋಟಿ ರೂ. ಅನಾವರ್ಥಕ ವೆಚ್ಚ, 600 ಕೋಟಿ ರೂ. ವಾರ್ಷಿಕ ಆವರ್ತಕ ವೆಚ್ಚದ ಅವಶ್ಯಕತೆಯಿದೆ. ಅನುದಾನದ ಲಭ್ಯತೆ ಆಧರಿಸಿ ಕಾಲೇಜುಗಳನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. \ No newline at end of file diff --git a/eesanje/url_46_293_1.txt b/eesanje/url_46_293_1.txt new file mode 100644 index 0000000000000000000000000000000000000000..21a9519b393ce92050ab3384d3bb5758217235d1 --- /dev/null +++ b/eesanje/url_46_293_1.txt @@ -0,0 +1,8 @@ +ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಗಣ್ಯರು, ಸಾರ್ವಜನಿಕರು +ನೆಲಮಂಗಲ,ಡಿ.9- ಕನ್ನಡ ಚಿತ್ರರಂಗದ ಹಿರಿಯ ನಟಿ ಡಾ.ಎಂ.ಲೀಲಾವತಿಯವರ ನಿಧನಕ್ಕೆ ನಾಡಿನ ಗಣ್ಯಮಾನ್ಯರು ಕಂಬನಿ ಮಿಡಿದಿದ್ದು, ಚಿತ್ರರಂಗ, ರಾಜಕೀಯ ಕ್ಷೇತ್ರದ ಗಣ್ಯರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ. +ಪಟ್ಟಣದ ಅಂಬೇಡ್ಕರ್ ಮೈದಾನದಲ್ಲಿ ಬೆಳಿಗ್ಗೆ 5.30 ರಿಂದ 10.45 ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನೆಲಮಂಗಲ, ಸೋಲದೇವನಹಳ್ಳಿ, ಬೆಂಗಳೂರು, ತುಮಕೂರು ಸೇರಿದಂತೆ ವಿವಿಧ ಭಾಗಗಳಿಂದ ಅಭಿಮಾನಿಗಳು ಹಾಗೂ ಕಲಾವಿದರು ಭೇಟಿ ನೀಡಿ ಅಂತಿಮ ದರ್ಶನ ಪಡೆದರು. +ಅವರ ಪುತ್ರ ವಿನೋದ್ ರಾಜ್‍ರ ಒಪ್ಪಿಗೆಯಂತೆ 11 ಗಂಟೆಯಿಂದ 2 ಗಂಟೆವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಬಯಲು ರಂಗಮಂದಿರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ವಿ.ಸೋಮಣ್ಣ, ಚಿತ್ರರಂಗ ಕಲಾವಿದರಾದ ಸುಧಾರಾಣಿ, ಮಾಳವಿಕ, ಶ್ರೀನಾಥ್, ಉಪೇಂದ್ರ, ಉಮಾಶ್ರೀ, ದ್ವಾರಕೀಶ್ ಸೇರಿದಂತೆ ಅನೇಕ ಗಣ್ಯರು, ಹಿರಿಯ ಕಲಾವಿದರು ಹಾಗೂ ಅಭಿಮಾನಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. +ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಲೀಲಾವತಿಯವರ ಅಂತಿಮ ದರ್ಶನ ಪಡೆದು ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಇವರ ನಿಧನದಿಂದಾಗಿ ಚಿತ್ರರಂಗ ಅಮೂಲ್ಯರತ್ನವೊಂದನ್ನು ಕಳೆದುಕೊಂಡಿದೆ. ಕನ್ನಡ ಸೇರಿದಂತೆ ಇತರೆ ಭಾಷೆ ಸಿನಿಮಾಗಳಲ್ಲಿ ನಟಿಸುವ ಮೂಲಕ ಬಹುಭಾಷಾ ತಾರೆ ಎನಿಸಿಕೊಂಡಿದ್ದರು. ಅವರ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಆದರ್ಶಪ್ರಾಯವಾಗಿವೆ. ಅವರ ನಿಧನದಿಂದ ಕನ್ನಡ ಸಿನಿಮಾ ಲೋಕಕ್ಕೆ ಅಪಾರ ನಷ್ಟವಾಗಿದೆ. ಇವರ ಪುತ್ರ ವಿನೋದ್‍ರಾಜ್ ಅವರಿಗೆ ದುಃಖವನ್ನು ಭರಿಸುವಂತಹ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಪ್ರಾರ್ಥಿಸಿದರು. +ನಟ ಉಪೇಂದ್ರ ಲೀಲಾವತಿಯವರ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ಕನ್ನಡ ಚಿತ್ರರಂಗದ ಶ್ರೇಷ್ಠ ನಟಿ ಲೀಲಾವತಿಯವರನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ. ಆಸ್ಪತ್ರೆ ಸೇರಿದಂತೆ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ. ಅವರ ಅಗಲಿಕೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಲಿದೆ ಎಂದು ಕಂಬನಿ ಮಿಡಿದರು. +ಹಿರಿಯ ನಟ ಅನಂತನಾಗ್ ಲೀಲಾವತಿಯವರ ನಿಧನಕ್ಕೆ ಕಂಬನಿ ಮಿಡಿದರು. ನಾನು ಅವರನ್ನು ಎರಡನೇ ತಾಯಿಯನ್ನಾಗಿ ನೋಡಿದ್ದೇನೆ. ಅದೇ ರೀತಿ ಪ್ರೀತಿ ಗೌರವವನ್ನು ಕೂಡ ಕೊಟ್ಟಿದ್ದೇನೆ. ಅವರು ನನಗೆ ಮೊದಲು ಸಿಕ್ಕಿದ್ದು ನನ್ನ ಸಿನಿಮಾದ ತಾಯಿಯ ಪಾತ್ರದಲ್ಲಿ. ನಂತರ ಸಹೋದರಿಯಾಗಿ ನಟಿಸಿದ್ದಾರೆ. ಇಂದು ಅವರು ನಮ್ಮೊಂದಿಗೆ ಇಲ್ಲದಿರುವುದು ಅರಗಿಸಿಕೊಳ್ಳಲಾಗುತ್ತಿಲ್ಲ ಎಂದರು. +ಪ್ರಧಾನಿ ನರೇಂದ್ರ ಮೋದಿಯವರೂ ಕೂಡ ಲೀಲಾವತಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಬಹುಮುಖ ಪ್ರತಿಭೆಯೊಂದಿಗೆ ಬೆಳ್ಳಿಪರದೆಯನ್ನು ಅಲಂಕರಿಸಿದ ಅವರು ವಿವಿಧ ಪಾತ್ರಗಳು ಹಾಗೂ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ಚಿತ್ರಸೇವೆ ನಿಜಕ್ಕೂ ಪ್ರಶಂಸಾರ್ಹ. ಪುತ್ರ, ಕುಟುಂಬ ಹಾಗೂ ಅಭಿಮಾನಿಗಳಿಗೆ ಲೀಲಾವತಿಯ ಅಗಲಿಕೆಗೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. \ No newline at end of file diff --git a/eesanje/url_46_293_10.txt b/eesanje/url_46_293_10.txt new file mode 100644 index 0000000000000000000000000000000000000000..1bbbe99fd0ed8aa9d16f2ed22f742a63a76565a9 --- /dev/null +++ b/eesanje/url_46_293_10.txt @@ -0,0 +1,5 @@ +ಯತ್ನಾಳ್ ವಿರುದ್ಧ ಹರಿಹಾಯ್ದ ಪುಟ್ಟರಂಗ ಶೆಟ್ಟಿ +ಬೆಳಗಾವಿ,ಡಿ.8- ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಬಗ್ಗೆ ಯತ್ನಾಳ್ ನೀಡಿರುವ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದರು. +ಮುಸ್ಲಿಂರನ್ನು ತುಚ್ಛವಾಗಿ ಕಾಣುತ್ತಾ, ಅವರು ವಿರುದ್ಧ ಹೇಳಿಕೆ ನೀಡುತ್ತಾ ಚುನಾವಣೆಯಲ್ಲಿ ಅವರು ಗೆದ್ದಂತಹವರು. ಒಬ್ಬ ರಾಜಕಾರಣಿ ಆದವರು ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಇನ್ನು ಮೌಲ್ವಿಗಳ ಸವಾಲನ್ನು ಯತ್ನಾಳ್ ಸ್ವೀಕರಿಸುತ್ತಾನಾ ಎಂದು ಏಕವಚನದಲ್ಲೇ ಹರಿಹಾಯ್ದಿದರು. +ಅಮೆರಿಕದಲ್ಲಿ ಭಾರತೀಯ ಮೂಲದ ಹೋಟೆಲ್ ಮಾಲೀಕನ ಹತ್ಯೆ +ಯತ್ನಾಳ್ ನಾನೇ ಮಹಾನ್ ನಾಯಕ ಎಂಬಂತೆ ಮಾತನಾಡುತ್ತಾರೆ. ಸ್ವಪಕ್ಷೀಯರ ವಿರುದ್ದವೇ ಹೇಳಿಕೆಗಳನ್ನು ನೀಡುತ್ತಾರೆ. ಅವರ ಪಕ್ಷದ ಹೈಕಮಾಂಡ್ ಆಯ್ಕೆಗಳನ್ನು ಒಪ್ಪಲು ತಯಾರಿಲ್ಲ. ಬಿಜೆಪಿಯಲ್ಲಿ ಇಂತಹ ನಾಯಕರನ್ನು ಬೆಳೆಸಿದರೆ ಬಿಜೆಪಿ ಸರ್ವನಾಶವಾಗಲಿದೆ. ಹಾಗಾಗಿ ಬಿಜೆಪಿಯವರು ಯತ್ನಾಳ್‍ನನ್ನು ಪಕ್ಷದಿಂದ ಉಚ್ಛಾಟಿಸಿದರೆ ಒಳ್ಳೆಯದು ಎಂದು ಅವರು ಹೇಳಿದರು. \ No newline at end of file diff --git a/eesanje/url_46_293_11.txt b/eesanje/url_46_293_11.txt new file mode 100644 index 0000000000000000000000000000000000000000..765e21afec75b5c6c70cbf2661c8f4f612fe8529 --- /dev/null +++ b/eesanje/url_46_293_11.txt @@ -0,0 +1,10 @@ +ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು +ಬೆಳಗಾವಿ,ಡಿ.8- ಕಳೆದ ಎರಡು ಬಂಡವಾಳ ಹೂಡಿಕೆದಾರರ ಸಮಾವೇಶಗಳಲ್ಲಿ ಮಾಡಿಕೊಳ್ಳಲಾಗಿರುವ ಒಪ್ಪಂದಗಳು ಹಂತಹಂತವಾಗಿ ಜಾರಿಯಾಗಲಿದ್ದು, ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಪ್ರಶ್ನೆ ಕೇಳಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಗಳಿಗಾಗಿ 88 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಆದರೆ ಹೂಡಿಕೆಯಾಗಿರುವುದು 94 ಕೋಟಿ ರೂ.ಗಳು ಮಾತ್ರ. ಇದು ಸರಿಯೇ? ಎಂದು ಆಕ್ಷೇಪಿಸಿದ್ದಲ್ಲದೆ, 1995 ರಲ್ಲಿ ಬಿಡದಿಯ ಬಳಿ ಟಯೋಟಾ ಕಂಪನಿಗೆ 400 ಎಕರೆ ಜಮೀನು ಮತ್ತು 16 ವರ್ಷ ತೆರಿಗೆ ಬಾಕಿ ಉಳಿಸಿಕೊಳ್ಳಲು ಅನುಕೂಲ ಕಲ್ಪಿಸಲಾಗಿತ್ತು. +ಟಯೋಟಾ ಸಂಸ್ಥೆಯ ಬಳಿ 8,500 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಉಳಿದಿದೆ. ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಹಿ ಹಾಕಿರುವ ಕಂಪನಿಗಳಿಗೆ 16 ಸಾವಿರ ಎಂಎಲ್‍ಡಿ ನೀರು ಪೂರೈಸುವುದಾಗಿ ತಿಳಿಸಲಾಗಿದೆ. ನಮ್ಮಲ್ಲಿ ಕುಡಿಯಲಿಕ್ಕೇ ನೀರಿಲ್ಲ. ಇಷ್ಟೆಲ್ಲಾ ಸೌಲಭ್ಯ ಮತ್ತು ಸವಲತ್ತುಗಳನ್ನು ನೀಡಿ ರತ್ನಗಂಬಳಿ ಹಾಸಿ ಕೈಗಾರಿಕೆಗಳನ್ನು ಆಹ್ವಾನಿಸಲಾಗುತ್ತಿದೆ. ಆದರೆ ಅದರಿಂದ ಪ್ರಯೋಜನವೇನು? ಸ್ಥಳೀಯರಿಗೆ ಉದ್ಯೋಗ ದೊರೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಎಂ.ಬಿ.ಪಾಟೀಲ್, 2022 ರ ನವೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ ನಡೆಸಲಾಯಿತು. ಅದರಲ್ಲಿ 57 ಕಂಪನಿಗಳೊಂದಿಗೆ 5.41 ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅವುಗಳಲ್ಲಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿ ಅನುಮೋದನೆ ನೀಡಿದೆ. ಭೂಮಿ, ನೀರು, ವಿದ್ಯುತ್ ಪೂರೈಕೆಯಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸುಮಾರು 75 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ವಿವರಿಸಿದರು. +ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ +2022 ರ ಅಕ್ಟೋಬರ್ 28 ರಂದು 12.23 ಲಕ್ಷ ಕೋಟಿ ರೂ. ಖರ್ಚು ಮಾಡಿ ಹುಬ್ಬಳ್ಳಿಯಲ್ಲಿ ಎಫ್‍ಎಂಸಿಜಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗಿದೆ. ಅಲ್ಲಿ 16 ಕಂಪನಿಗಳಿಂದ 1275 ಕೋಟಿ ರೂ. ಬಂಡವಾಳ ಹೂಡಿಕೆಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅವುಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ಯೋಜನೆಗಳಡಿ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು. +ಬೃಹತ್ ಯೋಜನೆ ಸ್ಥಾಪನೆಯಾಗಲು ಮೂರ್ನಾಲ್ಕು ವರ್ಷಗಳ ಸಮಯಾವಕಾಶ ಬೇಕಾಗುತ್ತದೆ. ಅದರಲ್ಲಿ ಶೇ.38 ರಷ್ಟು ಯೋಜನೆಗಳು ಹಸಿರು ಇಂಧನ ವಲಯಕ್ಕೆ ಸಂಬಂಧಪಟ್ಟದ್ದಾಗಿವೆ ಎಂದು ವಿವರಿಸಿದರು. ಸರೋಜಿನಿ ಮಹಿಷಿ ವರದಿಯ ಪ್ರಕಾರ, ಡಿ ವರ್ಗಗಳ ಹುದ್ದೆಗಳಿಗೆ ಶೇ.100 ರಷ್ಟು ಮೀಸಲಾತಿ ನೀಡಬೇಕು. ಒಟ್ಟಾರೆ ಶೇ.70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕಾಗಿದೆ ಎಂದರು. +2018 ರಿಂದ ಇಲ್ಲಿಯವರೆಗೆ ವಿದೇಶಗಳಲ್ಲಿ 403 ಭಾರತೀಯ ವಿದ್ಯಾರ್ಥಿಗಳ ಸಾವು +ಸರ್ವತಾ ಸಂಸ್ಥೆಯ ಬಗ್ಗೆ ಶಾಸಕರು ನೀಡಿರುವ ಮಾಹಿತಿಯನ್ನು ಪರಿಶೀಲನೆ ನಡೆಸಿ ಅಗತ್ಯಬಿದ್ದರೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_293_12.txt b/eesanje/url_46_293_12.txt new file mode 100644 index 0000000000000000000000000000000000000000..f43e24ba39809b535fa3e9d5abddf704fd81ccc4 --- /dev/null +++ b/eesanje/url_46_293_12.txt @@ -0,0 +1,7 @@ +ನಗರಸಭೆ, ಪುರಸಭೆಗಳಲ್ಲಿ ನಮೂನೆ-3ರ ವಿತರಣೆಗೆ ಕ್ರಮ +ಬೆಳಗಾವಿ,ಡಿ.8- ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3 ರ ವಿತರಣೆಯಲ್ಲಾಗುತ್ತಿರುವ ಅಡಚಣೆಗಳನ್ನು ನಿವಾರಿಸಲು ಇನ್ನೆರೆಡು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯಕ್ ಅವರು ಪ್ರಶ್ನೆ ಕೇಳಿ, ಶಿರಸಿ ಸಿದ್ಧಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂ-3 ನೀಡುತ್ತಿಲ್ಲ. ಇದರಿಂದ ಪಟ್ಟಣ, ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಅವಕಾಶಗಳಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ +ಶಾಸಕ ಜಿ.ಟಿ.ದೇವೇಗೌಡ ಇದಕ್ಕೆ ಬೆಂಬಲವಾಗಿ ಮಾತನಾಡಿ, ಗ್ರಾಮ ಪಂಚಾಯಿತಿಗಳಿಂದ ಮೇಲ್ದೆರ್ಜೆಗೇರಿರುವ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ-11 ಬಿ ಯನ್ನು ನೀಡುತ್ತಿಲ್ಲ. ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವಿವರಿಸಿದರು. +ಶಾಸಕರಾದ ಕೋ.ನ.ರೆಡ್ಡಿ, ಸತೀಶ್ ಸೈಲ್ ಸೇರಿದಂತೆ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಚಿವ ರಹೀಂಖಾನ್ ಇದು ರಾಜ್ಯಾದ್ಯಂತ ಗಂಭೀರ ಸ್ವರೂಪದ ಸಮಸ್ಯೆಯಾಗಿದೆ. ಅದರ ನಿವಾರಣೆಗಾಗಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ಈಗಾಗಲೇ ಎರಡು ಸಭೆಗಳಾಗಿದ್ದು, ಹಿಂದಿನ ಏಳೆಂಟು ದಿನಗಳಲ್ಲಿ ಮೂರನೇ ಸಭೆ ನಡೆಯಲಿದೆ. ಅಲ್ಲಿ ಸೂಕ್ತ ತೀರ್ಮಾನ ತೆಗೆದುಕೊಂಡು ಬಿಬಿಎಂಪಿಯ ಮಾದರಿಯಲ್ಲಿ ಬಿ ಖಾತಾಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. +ಮತ್ತೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ಈ ಹಿಂದೆ ಹಳೆಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರುವುದಿಲ್ಲ. ಫಾರಂ-ಸಿ ನೀಡಲು ಯೋಜಿತ ನಕ್ಷೆ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ಷರತ್ತುಗಳನ್ನು ವಿಸಲಾಗಿದೆ. ಅವುಗಳು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಾಗಿದೆ ಎಂದರು. ಶೀಘ್ರದಲ್ಲೇ ನಿರ್ಧಾರ ತೆಗೆದುಕೊಂಡು 2 ತಿಂಗಳೊಳಗಾಗಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_293_2.txt b/eesanje/url_46_293_2.txt new file mode 100644 index 0000000000000000000000000000000000000000..796c886e4917662ac94362366ff342dcde15ac65 --- /dev/null +++ b/eesanje/url_46_293_2.txt @@ -0,0 +1,13 @@ +ನಾಳೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ +ಬೆಂಗಳೂರು, ಡಿ.8- ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹತ್ವದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ನಾಳೆ ಪಕ್ಷದ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ. +ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಆಗಮಿಸುವಂತೆ ಎಲ್ಲಾ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯರಿಗೆ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ಅವರು ಆಹ್ವಾನ ನೀಡಿದ್ದಾರೆ. +ಎನ್‍ಡಿಎ ಮೈತ್ರಿಕೂಟ ಸೇರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ ಬೆನ್ನಲ್ಲೇ ಜೆಡಿಎಸ್‍ನಲ್ಲಿ ಉಂಟಾಗಿರುವ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಾಳೆ ನಡೆಯುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಭಾರೀ ಮಹತ್ವ ಪಡೆದುಕೊಂಡಿದ್ದು, ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದೆ. +ಎನ್‍ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರು, ಪ್ರತ್ಯೇಕ ಸಭೆ ನಡೆಸಿ ನಮ್ಮದೇ ಒರ್ಜಿನಲ್ ಜನತಾದಳವೆಂದು ಘೋಷಿಸಿಕೊಂಡು ಪಕ್ಷದ ನಾಯಕರಿಗೆ ಸಡ್ಡು ಹೊಡೆದಿದ್ದರು. ಜೊತೆಗೆ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ.ನಾನು ನೇತೃತ್ವದಲ್ಲಿ ಕೇರಳದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಸಿದ್ದು, ಎನ್‍ಡಿಎ ಮೈತ್ರಿಕೂಟದಿಂದ ಹೊರಬರಲು ಡಿಸೆಂಬರ್ 10ರ ಗಡುವು ನೀಡಲಾಗಿತ್ತು. +ಈ ಸಂಬಂಧ ಸಿ.ಕೆ.ನಾನು ಅವರು ದೇವೇಗೌಡರಿಗೆ ಪತ್ರವನ್ನು ಬರೆದು ಸಭೆಯ ನಿರ್ಣಯವನ್ನು ತಿಳಿಸಿದ್ದರು. ಅಲ್ಲದೆ, ಡಿ.11ರಂದು ಮತ್ತೆ ರಾಷ್ಟ್ರ ಮಟ್ಟದ ಸಮಗ್ರವಾದ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಮುಂದಿನ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆಗಳಿವೆ. +ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರುವುದರಿಂದ ಜೆಡಿಎಸ್‍ನ ಜಾತ್ಯತೀತ ನಿಲುವಿಗೆ ಧಕ್ಕೆಯಾಗಲಿದೆ ಎಂದು ಇಬ್ರಾಹಿಂ ಹೇಳಿದರೆ, ಬಿಜೆಪಿ ಜೊತೆಗೆ ಹೋಗುವುದರಿಂದ ಪಕ್ಷದ ಜಾತ್ಯತೀತ ಸಿದ್ಧಾಂತಕ್ಕೆ ಧಕ್ಕೆಯಾಗುವುದಿಲ್ಲ ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದರು. +ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಪಕ್ಷ ವಿರೋ ಚಟುವಟಿಕೆಗಳ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತ್ತು ಮಾಡಿದ್ದಾರೆ. ಇದಕ್ಕೂ ಮುನ್ನ ಇಬ್ರಾಹಿಂ ನಾವೇ ಒರ್ಜಿನಲ್ ಜೆಡಿಎಸ್ ಎಂದು ಹೇಳಿಕೆ ನೀಡಿದ ಸಂದರ್ಭದಲ್ಲಿ ಪಕ್ಷದ ರಾಜ್ಯ ಘಟಕವನ್ನೇ ಗೌಡರು ವಿಸರ್ಜಿಸಿ, ಇಬ್ರಾಹಿಂ ಅವರಿಗೆ ಅಧಿಕಾರವಿಲ್ಲದಂತೆ ಮಾಡಿದ್ದರು. ಹಂಗಾಮಿ ರಾಜ್ಯಾಧ್ಯಕ್ಷರಾಗಿ ಹೆಚ್.ಡಿ.ಕುಮಾರಸ್ವಾಮಿ ನೇಮಕಗೊಂಡಿದ್ದಾರೆ. +ಇಂದಿರಾ ಕ್ಯಾಂಟಿನ್‍ನಲ್ಲಿ ಚಪಾತಿ, ಮುದ್ದೆ, ಬಸ್ಸಾರು ಭಾಗ್ಯ +ಕಾನೂನಾತ್ಮಕ ಬಿಕಟ್ಟು ಉಂಟಾಗದಂತೆ ಪಕ್ಷದ ಸಿದ್ಧಾಂತ ಹಾಗೂ ನಿಯಮಗಳಿಗೆ ಅನುಗುಣವಾಗಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸುವ ಮೂಲಕ ಸೂಕ್ತ ನಿರ್ಣಯ ಕೈಗೊಳ್ಳಲು ಉದ್ದೇಶಿಸಲಾಗಿದೆ. ಮುಂದೆ ಎದುರಾಗಬಹುದಾದ ತೊಡಕುಗಳ ನಿವಾರಣೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಚುನಾವಣಾ ಮೈತ್ರಿ ಮಾಡಿಕೊಂಡಿದ್ದು, ಕ್ಷೇತ್ರಗಳ ಹಂಚಿಕೆ ಮಾತ್ರ ಬಾಕಿ ಉಳಿದಿದೆ. ಈ ಹಂತದಲ್ಲಿ ಇಬ್ರಾಹಿಂ ಬಣದಿಂದ ಯಾವುದೇ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. +ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್. ಡಿ. ಕುಮಾರಸ್ವಾಮಿ ಯವರು ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯ ಕಾರಿಣಿ ಸಮಿತಿ ಸದಸ್ಯರುಗಳು ಉಪಸ್ಥಿತರಿರು ತ್ತಾರೆ ಎಂದು ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಈ ಸಂದರ್ಭದಲ್ಲಿ ಬೆಂಗಳೂರು ನಗರದ ಪಕ್ಷದ ಮುಖಂಡರು , ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಕಾರಿ ಗಳು, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಸಿದ್ದ ಅಭ್ಯರ್ಥಿಗಳು ಹಾಗೂ ಬಿಬಿಎಂಪಿ ಮಾಜಿ ಸದಸ್ಯರು ಸಭೆಗೆ ಆಗಮಿಸುವಂತೆ ಅವರು ಕೋರಿದ್ದಾರೆ. \ No newline at end of file diff --git a/eesanje/url_46_293_3.txt b/eesanje/url_46_293_3.txt new file mode 100644 index 0000000000000000000000000000000000000000..7873c70d8d27cf91ac9bed2f00177a2382c4033d --- /dev/null +++ b/eesanje/url_46_293_3.txt @@ -0,0 +1,5 @@ +ಈ ಕ್ಷಣವೇ ರಾಜೀನಾಮೆ ನೀಡಲು ಸಿದ್ಧ : ಬಸವರಾಜ ಹೊರಟ್ಟಿ +ಬೆಳಗಾವಿ, ಡಿ.8- ನಾನು ಈ ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ. ಈ ಕ್ಷಣವೇ ಬೇಕಾದರೂ ರಾಜೀನಾಮೆ ನೀಡುವೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಮಾರ್ಮಿಕವಾಗಿ ಮೇಲ್ಮನೆಯಲ್ಲಿ ನುಡಿದರು. +ವಿಧಾನಪರಿಷತ್ತಿನ ಕಲಾಪದಲ್ಲಿಂದು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ವಿಚಾರಕ್ಕೆ ಮೇಲ್ಮನೆಯಲ್ಲಿ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ, ಪೀಠದಿಂದ ಎದ್ದು ನಿಂತ ಅವರು, ಇದೇ ರೀತಿ ಪದ್ಧತಿ ಮುಂದುವರೆಸಿದರೆ ಸುಗಮ ಕಲಾಪ, ಸದನ ನಡೆಸುವುದು ಬೇಡ ಅನಿಸುತ್ತಿದೆ ಎಂದರು. +ಇಂದಿರಾ ಕ್ಯಾಂಟಿನ್‍ನಲ್ಲಿ ಚಪಾತಿ, ಮುದ್ದೆ, ಬಸ್ಸಾರು ಭಾಗ್ಯ +ಪ್ರಶ್ನೋತ್ತರ ವೇಳೆಯಲ್ಲಿ ಚರ್ಚೆಗೆ ಅವಕಾಶ ನೀಡಲು ಸಾಧ್ಯವೇ ಇಲ್ಲ. ಆದರೂ, ಈ ವಿಷಯದ ಗಂಭೀರವನ್ನು ಅರೆತು ಸೋಮವಾರ ಅರ್ಧ ಗಂಟೆ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ, ಧರಣಿ ಕೈಬಿಟ್ಟು ಹೊರಬಣ್ಣಿ ಎಂದು ರೂಲಿಂಗ್ ನೀಡಿದರು. ಆದರೂ, ವಿಪಕ್ಷ ಸದಸ್ಯರು ಸದನದ ಬಾವಿಯಲ್ಲಿಯೇ ಇದ್ದ ಕಾರಣಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸ್ಥಾನದಲ್ಲಿ ನನಗೂ ಸಾಕಾಗಿದೆ. ನಾನು ಈ ಕುರ್ಚಿಗಾಗಿ ಅಂಟಿಕೊಂಡಿಲ್ಲ, ಈ ಕ್ಷಣವೇ ರಾಜೀನಾಮೆ ನೀಡಿ ಮನೆಗೆ ಹೋಗುವೇ ಎಂದರು ತಿಳಿಸಿದರು. \ No newline at end of file diff --git a/eesanje/url_46_293_4.txt b/eesanje/url_46_293_4.txt new file mode 100644 index 0000000000000000000000000000000000000000..6c802ea39f841aefd1b5691c1d15fca7c034d988 --- /dev/null +++ b/eesanje/url_46_293_4.txt @@ -0,0 +1,6 @@ +ಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು +ಕಾರವಾರ,ಡಿ.8- ಅತಿವೇಗವಾಗಿ ಮುನ್ನುಗ್ಗಿದ್ದ ಕೆಎಸ್ಆರ್‌ಟಿಸಿ ಬಸ್‍ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಡೆದಿದೆ. +ಮೃತರನ್ನು ಮಂಗಳೂರು ಮೂಲದ ಸುಹಾಸ್, ಪುಷ್ಪಲತಾ, ನಿತ್ಯಲಕ್ಷ್ಮಿ, ರಾಮಕೃಷ್ಣ ರಾವ್, ಅರವಿಂದ್ ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಈ ಐದು ಮಂದಿ ಮದುವೆ ಸಮಾ ರಂಭಕ್ಕಾಗಿ ಮಂಗಳೂರಿನಿಂದಶಿರಸಿಗೆ ಕಾರಿನಲ್ಲಿ ಹೋಗುತ್ತಿದ್ದರು. +ಗ್ಯಾರಂಟಿ ಯೋಜನೆಗಳಿಗೆ - ಅನುದಾನ ಬಳಕೆ : ಮೇಲ್ಮನೆಯಲ್ಲಿ ಕೋಲಾಹಲ +ಉತ್ತರ ಕನ್ನಡ ಜಿಲ್ಲೆ, ಶಿರಸಿ-ಕುಮುಟಾ ರಸ್ತೆಯ ಬಂಡಲ್ ಗ್ರಾಮದ ಬಳಿ ಅತಿವೇಗವಾಗಿ ಮುನ್ನುಗ್ಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. +ಬಸ್‍ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದು ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಾಲ್ವರ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_293_5.txt b/eesanje/url_46_293_5.txt new file mode 100644 index 0000000000000000000000000000000000000000..32b99655a94c37e5bc2c9843c1bb11dfaa1fd1fd --- /dev/null +++ b/eesanje/url_46_293_5.txt @@ -0,0 +1,10 @@ +ಯತ್ನಾಳ್ ಗುರಿ ನಾನಲ್ಲ, ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಡಿ.8- ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. +ಸಾಮಾಜಿಕ ಮಾಧ್ಯಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ ಎಂದಿದ್ದಾರೆ. +ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿ ಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ ಎಂದು ದೂರಿದ್ದಾರೆ. +ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎಂಬ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ ಎಂದು ಟೀಕಿಸಿದ್ದಾರೆ. ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. +ಈಗ ಪ್ರಧಾನಿ ನರೇಂದ್ರಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲ್ವಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧವಿದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. +ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು +ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡ್‍ಗೆ ಎರಡು ಸಾವಿರ ಕೋಟಿ ರೂ. ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿ ಬಲದ ಹಿಂದೆ ಇರುವ ಶಕ್ತಿ ಯಾವುದು? ಎಂದು ಪ್ರಶ್ನಿಸಿದ್ದಾರೆ. +ಬಿಜೆಪಿಯಲ್ಲಿರುವ ಯಾವ ಜೀ..ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದಿದ್ದಾರೆ. ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. +ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_293_6.txt b/eesanje/url_46_293_6.txt new file mode 100644 index 0000000000000000000000000000000000000000..93a2cb8bca16f31275a27079af95ba49e26494b9 --- /dev/null +++ b/eesanje/url_46_293_6.txt @@ -0,0 +1,8 @@ +ಸದ್ಯದಲ್ಲೇ ಹಾಲಿನ ದರ ಏರಿಕೆ ಸಾಧ್ಯತೆ..? +ಬೆಂಗಳೂರು,ಡಿ.8- ಈಗಾಗಲೇ ದರ ಏರಿಕೆಯಿಂದ ಬಸವಳಿದಿರುವ ರಾಜ್ಯದ ಜನತೆಗೆ ಸದ್ಯದಲ್ಲೇ ಮತ್ತೊಂದು ದರ ಏರಿಕೆಯ ಶಾಕ್ ಕಾದಿದೆ. ಏಕೆಂದರೆ, ಒಕ್ಕೂಟಗಳು ನಷ್ಟದಲ್ಲಿರುವ ಕಾರಣ, ಹಾಲಿನ ದರ ಪರಿಷ್ಕರಣೆ ಮಾಡಲು ಕೆಎಂಎಫ್ ಮುಂದಾಗಿದೆ. ಈ ಕುರಿತು ಜನವರಿಯಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಪ್ ಮುಂದಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದೀಗ ಹಾಲಿನ ದರ ಮತ್ತೆ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ. +ಈಗಾಗಲೇ ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಚಿಂತನೆ ನಡೆದಿದೆ. ಹಾಲಿನ ದರ ಪರಿಷ್ಕರಣೆಗೆ 14 ಹಾಲು ಒಕ್ಕೂಟದಿಂದ ಕೆಎಂಎಫ್ ಮನವಿ ಬಂದಿದೆ. ಹೀಗಾಗಿ ಅಧಿವೇಶನದಿಂದ ಸಿಎಂ ಬಂದ ಬಳಿಕ ಸಿದ್ದರಾಮಯ್ಯರ ಭೇಟಿ ಮಾಡಿ ನಂದಿನಿ ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಆಡಳಿತ ಮಂಡಳಿ ತೀರ್ಮಾನಿಸಿದೆ. +ಈ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಜನವರಿ ಆರಂಭದಲ್ಲಿ ಭೇಟಿಯಾಗಲು ಕೆಎಂಎಫ್ ಅಧ್ಯಕ್ಷ, ಎಂಡಿ ನಿರ್ಧರಿಸಿದ್ದಾರೆ. ಕೆಎಂಎಫ್ ಆರ್ಥಿಕ ನಷ್ಟದ ಹಿನ್ನಲೆ 5 ರೂ. ಪ್ರತಿ ಲೀಟರ್‍ಗೆ ದರ ಹೆಚ್ಚಿಸುವಂತೆ ಮನವಿ ಮಾಡಲು ನಿರ್ಧರಿಸಿದೆ. ಕಳೆದ ಆಗಸ್ಟ್ 1 ರಿಂದ ನಂದಿನಿ ಪ್ರತೀ ಲೀಟರ್ ಗೆ 3 ರೂ.ಹೆಚ್ಚಳ ಮಾಡಿತ್ತು. 5 ರೂ ಹೆಚ್ಚಳ ಮಾಡಲು ಮನವಿ ಮಾಡಿದ್ದಕ್ಕೆ ಕೇವಲ ಮೂರು ರೂ.ಹೆಚ್ಚಳ ಮಾಡಿತ್ತು. ಹೀಗಾಗಿ ಲೀಟರ್ ಗೆ 3 ರೂ ಹೆಚ್ಚುವರಿ ಹಣ ರೈತರಿಗೆ ಕೆಎಂಎಫ್ ನೀಡಿತ್ತು. +ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು +ಕೆಎಂಎಫ್ ಆರ್ಥಿಕ ನಷ್ಟದ ಹಿನ್ನಲೆ 5 ರೂಪಾಯಿ ಪ್ರತಿ ಲೀಟರ್ ಗೆ ದರ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆದಿದೆ. ಆಗಸ್ಟ್ ಒಂದರಿಂದ ಪ್ರತಿ ಲೀಟರ್ ಗೆ ಮೂರು ರೂಪಾಯಿ ಏರಿಕೆ ಆಗಿತ್ತು. 5 ರೂಪಾಯಿ ಹೆಚ್ಚಳಕ್ಕೆ ಮನವಿ ಮಾಡಿದ್ದಕ್ಕೆ 3 ರೂಪಾಯಿ ಏರಿಕೆ ಮಾಡಲಾಗಿತ್ತು. ಆದರೆ ಒಕ್ಕೂಟಗಳಿಂದ ದರ ಏರಿಕೆಯಾದರೂ ಒಕ್ಕೂಟಗಳ ನಷ್ಟ ಇನ್ನೂ ಸರಿದೂಗಿಲ್ಲ. ಹೀಗಾಗಿ ದರ ಪರಿಷ್ಕರಣೆ ಮಾಡಿ ಎಂದು ಒಕ್ಕೂಟಗಳು ಪಟ್ಟು ಹಿಡಿದಿವೆ. +ಅಲ್ಲದೆ ಕ್ಷೀರ ಭಾಗ್ಯ ಯೋಜನೆಯಡಿ ಕೆಎಂಎಫ್ ಪೂರೈಸುತ್ತಿರುವ ಹಾಲಿನ ಪುಡಿ ದರ ಪ್ರತಿ ಕೆಜಿಗೆ 400 + ಜಿಎಸ್ಟಿ ನೀಡಲು ಮನವಿ ಮಾಡಲಾಗಿದೆ. ಈಗ 300+ ಜಿಎಸ್ಟಿ ನೀಡುತ್ತೀದ್ದೀರ ಅದರಿಂದ ನಷ್ಟವಾಗುತ್ತಿದೆ ಎಂದು ಕೆಎಂಎಫ್ ಹೇಳುತ್ತಿದ್ದರೆ, ಇತ್ತ ಹಾಲಿನ ದರ ಏರಿಕೆಗೆ ರೈತರು ಹಾಗೂ ಹಾಲು ಒಕ್ಕೂಟದಿಂದ ಒತ್ತಡವಿದೆ ಎಂದಿದ್ದಾರೆ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್. ಉತ್ಪಾದನ ವೆಚ್ಚ ಹೆಚ್ಚಳದಿಂದ ಹೊರೆ ಆಗುತ್ತಿರುವ ಬಗ್ಗೆ ಹಾಲು ಉತ್ಪಾದಕರ ಒಕ್ಕೂಟ ಸಭೆಯಲ್ಲಿ ಅಹವಾಲು ಸಲ್ಲಿಸಿದೆ. +ಇತರ ರಾಜ್ಯಕ್ಕೆ ಹೊಲಿಕೆ ಮಾಡಿದರೆ ನಮ್ಮಲ್ಲಿ ಕಮ್ಮಿಯಿದೆ, ಹಾಗೆಯೇ ಅಮೂಲ್ 10 ತಿಂಗಳಿನಲ್ಲಿ 12 ರೂ.ಹೆಚ್ಚಿಸಿದೆ, ನಾವು 3 ರೂ. ಮಾತ್ರ ಹೆಚ್ಚಿಸಿರುವುದು ಎಂದಿದ್ದಾರೆ. ದರ ಏರಿಕೆ ಬಿಸಿಯಿಂದ ತತ್ತಿರಿಸುತ್ತಿರುವ ಶ್ರೀಸಾಮಾನ್ಯನಿಗೆ ಮತ್ತೆ ಹಾಲಿನ ದರ ಏರಿಕೆಯ ಬಿಸಿ ತಟ್ಟಲಿದೆ. ಇದಕ್ಕೆ ಸರ್ಕಾರ ಕೆಎಂಎಫ್ ದರ ಏರಿಕೆ ಪ್ರಸ್ತಾವನೆಗೆ ಯಾವ ನಿರ್ಧಾರ ಕೈಗೊಳ್ಳುತ್ತೋ? ಕಾದು ನೋಡಬೇಕು.ಯಾವ್ಯಾವ ಹಾಲಿಗೆ ಎಷ್ಟಿದೆ? \ No newline at end of file diff --git a/eesanje/url_46_293_7.txt b/eesanje/url_46_293_7.txt new file mode 100644 index 0000000000000000000000000000000000000000..493d5242c27220b9a93df360faf28f7edf170594 --- /dev/null +++ b/eesanje/url_46_293_7.txt @@ -0,0 +1,21 @@ +ಗ್ಯಾರಂಟಿ ಯೋಜನೆಗಳಿಗೆ - ಅನುದಾನ ಬಳಕೆ : ಮೇಲ್ಮನೆಯಲ್ಲಿ ಕೋಲಾಹಲ +ಬೆಳಗಾವಿ,ಡಿ.8-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕಾಗಿ ಮೀಸಲಿಟ್ಟ ಎಸ್‍ಸಿ-ಎಸ್‍ಪಿ/ಟಿಎಸ್‍ಪಿ ಅನುದಾನವನ್ನು ರಾಜ್ಯ ಸರ್ಕಾರವು ತನ್ನ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬಳಸಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಗದ್ದಲ ಎಬ್ಬಿಸಿದ ಪರಿಣಾಮ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮೇಲ್ಮನೆಯಲ್ಲಿ ಮಾತಿನ ಚಕಮಕಿ, ಆರೋಪ, ಪ್ರತ್ಯಾರೋಪ ನಡೆದು ಸದನವನ್ನು ಕೆಲಕಾಲ ಮುಂದೂಡಿದ ಪ್ರಸಂಗ ಜರುಗಿತು. +ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಅವರು, ಎಸ್‍ಸಿಎಸ್‍ಪಿ ಟಿಎಸ್‍ಪಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಬಳಕೆ ಮಾಡಿರುವ ಅನುದಾನದ ಕುರಿತು ಪ್ರಶ್ನೆ ಕೇಳಿದ್ದರು.ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ನೀಡಿದ ಉತ್ತರಕ್ಕೆ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. +ಸಚಿವ ಎಚ್.ಸಿ.ಮಹದೇವಪ್ಪನವರು ಎಸ್‍ಸಿಎಸ್‍ಪಿ ಟಿಎಸ್‍ಪಿ ಅಧಿನಿಯಮ 2013ರ ಅನ್ವಯ ಸೆಕ್ಷನ್ ಎ, ಬಿ ಸಿ, ಡಿ ಪ್ರಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ನೇರವಾಗಿ ಪ್ರಯೋಜನವಾಗುವ ವೈಯಕ್ತಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಅನುದಾನವನ್ನು ಅನ್ಯ ಕಾರ್ಯಕ್ರಮಗಳಿಗೆ ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಸಮರ್ಥಿಸಿಕೊಂಡರು. +ಸೆಕ್ಷನ್ 7 ಎ ಪ್ರಕಾರ ನೇರ ಫಲಾನುಭವಿಗಳು, ಸೆಕ್ಷನ್ 7ಬಿ ಪ್ರಕಾರ ಕಾಲೇಜುಗಳು, ಶಿಕ್ಷಣ ಸಂಸ್ಥೆ, ಅಭಿವೃದ್ಧಿ, ಸೆಕ್ಷನ್ 7 ಸಿ ಆರೋಗ್ಯ, ಶಿಕ್ಷಣ , ಸಮುದಾಯ ಭವನ ಹಾಗೂ 7ಡಿ ಅಭಿವೃದ್ಧಿ ಬಳಕೆ ಬಿಟ್ಟು ಅನ್ಯ ಯೋಜನೆಗಳಿಗೆ ಬಳಸುವಂತಿಲ್ಲ ಎಂದು ಕಾಯ್ದೆಯಲ್ಲಿವೆ. +ಇದು ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಮುಂತಾದ ಸಾಮಾನ್ಯ ಸಾಮಾಜಿಕ ವಲಯದ ಯೋಜನೆಗಳನ್ನು ಎಸ್‍ಸಿಎಸ್‍ಪಿ-ಟಿಎಸ್‍ಪಿ ಕಾಯ್ದೆಯಡಿ ಸೇರಿಸಲು ಅವಕಾಶವಿರುತ್ತದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಾರಣಕ್ಕೂ ಅನುದಾನ ಹಂಚಿಕೆ ಆಗಿಲ್ಲ ಎಂದು ವಿವರಿಸಿದರು.ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ನಾರಾಯಣಸ್ವಾಮಿ, ನಿಮಗೆ ನೀಡಿರುವ ಲಿಖಿತ ಉತ್ತರದಲ್ಲಿ ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳಿಗೆ ಒಟ್ಟು 10 ಸಾವಿರಕ್ಕೂ ಅಧಿಕ ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಲಾಗಿದೆ. ಇದು ಮರೆಮಾಚುವ ಪ್ರಯತ್ನ ಎಂದರು. +ಸಚಿವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಲು ಮುಂದಾದರು. ಇದು ದಲಿತ ವಿರೋಧ ಸರ್ಕಾರ, ಚುನಾವಣೆಯಲ್ಲಿ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿ ಈಗ ಎಸ್‍ಸಿಎಸ್‍ಪಿ-ಟಿಎಸ್‍ಪಿ ಮೀಸಲಿಟ್ಟ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. +ಆಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಧ್ಯಪ್ರವೇಶಿಸಿ, ಈ ಯೋಜನೆಯಡಿ ಮೀಸಲಿಟ್ಟ ಯೋಜನೆಗಳನ್ನು ಅನ್ಯ ಯೋಜನೆಗಳಿಗೆ ಬಳಸಿಕೊಳ್ಳುವಂತಿಲ್ಲ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ. ನಾವು ಫಲಾನುಭವಿಗಳನ್ನು ಗುರುತಿಸಿ ಹಂಚಿಕೆ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. +ಅಲ್ಲಿ ಗೂಳಿಹಟ್ಟಿ ಶೇಖರ್ ಅವರನ್ನು ಒಳಗೆ ಬಿಡುವುದಿಲ್ಲ. ಇಲ್ಲಿ ಬಿಜೆಪಿಯವರು ಧರಣಿ ಮಾಡುತ್ತಾರೆ ಎಂದು ತಿರುಗೇಟು ನೀಡಿದರು. ಗೂಳಿಹಟ್ಟಿ ಶೇಖರ್ ಅವರ ಪ್ರಕರಣವನ್ನು ವಿಷಯಾಂತರ ಮಾಡಲು ಇಲ್ಲಿ ಧರಣಿ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಆಗ ಆರೋಪ-ಪ್ರತ್ಯಾರೋಪಗಳು ಮುಂದುವರೆದ ಕಾರಣ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು. +ಪುನಃ ಸದನ ಸೇರಿದಾಗ ಪ್ರತಿಪಕ್ಷದವರು ಸದನದ ಬಾವಿಗಿಳಿದು ತಮ್ಮ ಧರಣಿಯನ್ನು ಮುಂದುವರೆಸಿದರು. ಈ ವೇಳೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿಯವರು, ಸದಸ್ಯರು ನೀವು ನೀಡಿರುವ ಉತ್ತರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸಾಧ್ಯವಾದರೆ ಇನ್ನೊಮ್ಮೆ ಉತ್ತರ ಕೊಡಿ ಎಂದು ಸಚಿವ ಮಹದೇವಪ್ಪ ಅವರಿಗೆ ಸೂಚಿಸಿದರು. +ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು +ಆಗ ಮಹದೇವಪ್ಪನರು ಈ ಕಾಯ್ದೆಯಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯವರೂ ಇಬ್ಬರು ಕೆಲಸ ಮಾಡಿದ್ದೇವೆ. ಈ ಕಾಯ್ದೆ ಪ್ರಕಾರ ಎಸ್‍ಸಿ-ಎಸ್‍ಟಿ/ಟಿಎಸ್‍ಪಿ ಅಭಿವೃದ್ಧಿಗಾಗಿಯೇ ಈ ಹಣವನ್ನು ಮೀಸಲಿಡಲಾಗಿದೆ. ಬೇರೆ ಉದ್ದೇಶಗಳಿಗೆ ಇದನ್ನು ಬಳಕೆ ಮಾಡಲು ಸಾಧ್ಯವಿಲ್ಲ ಎಂದು ಬಲವಾಗಿ ಸಮರ್ಥಿಸಿಕೊಂಡರು. +ಆಗ ಛಲವಾದಿ ನಾರಾಯಣಸ್ವಾಮಿ ಹಾಗಾದರೆ ಈ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಏಕೆ ಕೊಟ್ಟಿದ್ದೀರಿ, ಅನ್ಯ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ ಎಂದು ನೀವೇ ಹೇಳುತ್ತಿದ್ದೀರಿ, ಆದರೆ 11 ಸಾವಿರ ಕೋಟಿ ಹಣವನ್ನು ನಿಮ್ಮ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೀರಿ. ದಲಿತರ ಹಣ ದಲಿತರ ಅಭಿವೃದ್ಧಿಗೇ ಮೀಸಲಿಡಬೇಕು. ಕೇವಲ ಸಿಮೆಂಟ್ ರಸ್ತೆ, ಸಮುದಾಯಭವನ, ಚರಂಡಿ ನಿರ್ಮಾಣ ಮಾಡಿದರೆ ಸಾಲದು, ಶಿಕ್ಷಣ ಅದಕ್ಕೆ ಬೇಕಾದ ಹಣ ಒದಗಿಸಿದರೆ ದಲಿತರ ಉದ್ದಾರವಾಗುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. +ಈ ಹಂತದಲ್ಲಿ ಗದ್ದಲ ಜೋರಾದಾಗ ಸಭಾಪತಿಯವರು ಮತ್ತೆ ಸದನವನ್ನು ಮುಂದೂಡಿದರು. ಸದನ 2ನೇ ಬಾರಿಗೆ ಸೇರಿದಾಗ ಹಿಂದಿನ ಸರ್ಕಾರದ ಅವಧಿಯಲ್ಲೇ 10 ಸಾವಿರ ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈಗ ನಾವು ಕಾಯ್ದೆಯನ್ನು ಮತ್ತಷ್ಟು ಬಲಪಡಿಸುತ್ತಿದ್ದೇವೆ. +ಯಾವ ಯೋಜನೆಗೆ ಹಣ ಮೀಸಲಿಡಲಾಗಿದೆಯೋ ಅದಕ್ಕಷ್ಟೇ ಬಳಸಿಕೊಳ್ಳಬೇಕು. ಇವರಿಗೆ ದಲಿತರ ಉದ್ದಾರವಾಗಬೇಕಿಲ್ಲ. ಎಲ್ಲರದಲ್ಲೂ ರಾಜಕಾರಣ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲೇ 7800 ಕೋಟಿ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಲಾಗಿದೆ ಎಂದು ಸದನದಲ್ಲೇ ಉತ್ತರ ಕೊಟ್ಟಿದ್ದಾರೆ. ಈಗ ದಲಿತರ ಬಗ್ಗೆ ಮಾತನಾಡುತ್ತಾರೆ. ನಾಚಿಕೆಯಾಗುವುದಿಲ್ಲವೇ ಎಂದು ಕಿಡಿಕಾರಿದರು. +ಆಗ ಸಚಿವ ಮುನಿಯಪ್ಪ ಅವರು ಅಧಿವೇಶನದಲ್ಲಿ ಮುಖ್ಯವಾಗಿ ಉತ್ತರ ಕರ್ನಾಟಕದ ಅಭಿವೃದ್ದಿ ಬಗ್ಗೆ ಚರ್ಚೆಯಾಗಬೇಕಿದೆ. ಇನ್ನು ಸಮಸ್ಯೆಗಳು ಏನೇ ಇದ್ದರೂ ಸರ್ಕಾರ ಉತ್ತರ ಕೊಡಲು ಸಿದ್ದವಿದೆ. ದಯವಿಟ್ಟು ಎಲ್ಲಾ ಸದಸ್ಯರು ಸಹಕರಿಸಿ ಎಂದು ಮನವಿ ಮಾಡಿದರು. +ಮುನಿಯಪ್ಪನವರ ಮಾತಿಗೂ ಬಿಜೆಪಿ ಸದಸ್ಯರು ಕಿವಿಕೊಡದಿದ್ದಾಗ ಆಕ್ರೋಶಗೊಂಡ ಸಭಾಪತಿ ಬಸವರಾಜ ಹೊರಟ್ಟಿಯವರು ಪೀಠದಿಂದ ಎದ್ದುನಿಂತು, ನಾನು 43 ವರ್ಷಗಳಿಂದ ಈ ಸದನವನ್ನು ನೋಡಿದ್ದೇನೆ. ಸದನ ನಡೆಸಲು ನಾನು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು. +ಈ ಹಂತದಲ್ಲಿ ತೇಜಸ್ವಿನಿ ಗೌಡ, ತಿಪ್ಪೇಸ್ವಾಮಿ ಅವರುಗಳು ಮಾತನಾಡಿ, ಅನ್ಯ ಉದ್ದೇಶಗಳಿಗೆ ಸರ್ಕಾರ ಹಣ ವರ್ಗಾವಣೆ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಮ್ಮ ಸರ್ಕಾರ, ನಿಮ್ಮ ಸರ್ಕಾರ ಎನ್ನಬೇಡಿ. ತಪ್ಪು ಯಾರೇ ಮಾಡಿದರೂ ತಪ್ಪೇ. ಸರ್ಕಾರಕ್ಕೆ ಸಮರ್ಪಕವಾದ ಮಾಹಿತಿ ನೀಡಲು ಸೂಚಿಸಬೇಕೆಂದು ಮನವಿ ಮಾಡಿದರು. +ಬಂಡವಾಳ ಹೂಡಿಕೆ ಸಮಾವೇಶಗಳಿಗಾಗಿ 88 ಕೋಟಿ ಖರ್ಚು +ಆಗ ಸಭಾಪತಿಯವರು ಹಣ ಬಳಕೆ ವಿಚಾರದ ವಿಷಯವನ್ನು ಸೋಮವಾರಕ್ಕೆ ತೆಗೆದುಕೊಳ್ಳುತ್ತೇನೆ ಎಂದಾಗ, ಇದಕ್ಕೆ ಒಪ್ಪದ ವಿಪಕ್ಷ ಸದಸ್ಯರರು 330ಕ್ಕೆ ಕೊಡಿ ಎಂದು ಪಟ್ಟು ಹಿಡಿದರು. ಸದನದ ಸಮಯ ಹಾಳು ಮಾಡಲು ಹೀಗೆ ಮಾತಾಡ್ತಾಯಿದ್ದೀರಿ ಎಂದು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಿದ್ದಂತೆ, ಬಿಜೆಪಿಯ ಸದಸ್ಯ ರವಿಕುಮಾರ್ ಅವರು ನೀವು ಆ ಕೆಲಸ ಮಾಡಿದ್ದು ಎಂದಾಗ ಸದನದಲ್ಲಿ ಗದ್ದಲ ಮತ್ತಷ್ಟು ಹೆಚ್ಚಾಯಿತು. +ಸಭಾಪತಿ ಬಸವರಾಜ ಹೊರಟ್ಟಿ ಅವರು ಮಧ್ಯಪ್ರವೇಶಿಸಿ, ಹೀಗೆ ಮುಂದುವರೆದರೆ ಸದನ ನಡೆಸಲು ಕಷ್ಟವಾಗುತ್ತದೆ. ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಗರಮ್ಮಾದರು. ಬಳಿಕ ಸೋಮವಾರ ಚರ್ಚೆಗೆ ಅವಕಾಶ ಕೊಟ್ಟ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿಯನ್ನು ಕೈ ಬಿಟ್ಟರು. \ No newline at end of file diff --git a/eesanje/url_46_293_8.txt b/eesanje/url_46_293_8.txt new file mode 100644 index 0000000000000000000000000000000000000000..7316ccd3a95c4022260e45234a0115c84ce882f1 --- /dev/null +++ b/eesanje/url_46_293_8.txt @@ -0,0 +1,6 @@ +2 ದಿನದಲ್ಲಿ ಬೆಳೆ ಹಾನಿ ಪರಿಹಾರ ಮಾರ್ಗಸೂಚಿ ಬಿಡುಗಡೆ +ಬೆಳಗಾವಿ, ಡಿ.8- ಮುಂಗಾರು ಹಂಗಾಮಿನ ಬೆಳೆ ಹಾನಿ ಪರಿಹಾರ ಸಂಬಂಧಿಸಿದಂತೆ ನಾಳೆ ಅಥವಾ ನಾಡಿದ್ದು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು. +ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಶರಣಗೌಡ ಬಯ್ಯಪುರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಅವರ ಜಮೀನಿಗೆ ಅನುಗುಣವಾಗಿ 2 ಸಾವಿರ ರೂ.ವರೆಗೆ ಬೆಳೆ ಪರಿಹಾರ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಜಮೆ ಮಾಡಲಾಗುವುದು. ಈ ಸಂಬಂಧ ನಾಳೆ ಅಥವಾ ನಾಳಿದ್ದು ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು. +ಹಿಂದಿ ಚಿತ್ರ ಪ್ರದರ್ಶಿಸಲಾಗುತ್ತಿದ್ದ ಕೆನಡಾ ಚಿತ್ರಮಂದಿಗಳಲ್ಲಿ ಖಲಿಸ್ತಾನಿಗಳ ಕುಚೇಷ್ಟೆ +2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೃಣಧಾನ್ಯಗಳು, ತೊಗರಿ, ಹೆಸರು, ಉದ್ದು, ಹುರುಳಿ, ಅವರೆ, ಅಲಸಂದೆ, ಕಡಲೆ, ಸಾಸಿವೆ, ಸೂರ್ಯಕಾಂತಿ. ಸೋಯಾ ಅವರೆ, ಹತ್ತಿ,ಕಬ್ಬು ಹಾಗೂ ತಂಬಾಕು ಬೆಳೆಗಳು ಹಾಳಾಗಿವೆ. +ಹಾನಿಯಾದ ಬೆಳೆ ಹಾನಿ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ನಿಯಮದಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಆರ್ಥಿಕ ನೆರವನ್ನು ನಿರೀಕ್ಷಿಸಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು. \ No newline at end of file diff --git a/eesanje/url_46_293_9.txt b/eesanje/url_46_293_9.txt new file mode 100644 index 0000000000000000000000000000000000000000..d0b81e7c8910718c5b8b4ab34d5e1d00b11f0b02 --- /dev/null +++ b/eesanje/url_46_293_9.txt @@ -0,0 +1,7 @@ +ಮೋಡ ಬಿತ್ತನೆಯಿಂದ ಜನರಿಗೆ ಅನುಕೂಲವಾಗಲಿದೆ : ಡಿಕೆಶಿ +ಬೆಳಗಾವಿ,ಡಿ.8- ಬರಗಾಲದ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ತಾವೂ ಕೂಡ ಸಕಾರಾತ್ಮಕ ನಿಲುವು ಹೊಂದಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸಭೆಯ ಶೂನ್ಯ ವೇಳೆಯಲ್ಲಿ ರಾಣೆಬೆನ್ನೂರಿನ ಶಾಸಕ ಪ್ರಕಾಶ್ ಕೋಳಿವಾಡ ವಿಷಯ ಪ್ರಸ್ತಾಪಿಸಿ, ಇಂದಿನಿಂದ ಡಿಸೆಂಬರ್ 11 ರವರೆಗೂ ರಾಜ್ಯದಲ್ಲಿ ಮೋಡಗಳು ಹೆಚ್ಚಾಗಿವೆ. ಮೋಡ ಬಿತ್ತನೆ ಮಾಡಿದರೆ ಒಳ್ಳೆಯ ಫಲಿತಾಂಶ ಬರಲಿದೆ. ಮಳೆಯಾದರೆ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಸುಧಾರಿಸುತ್ತವೆ. ಕಡಿಮೆ ಖರ್ಚಿನಲ್ಲಿ ಮೋಡ ಬಿತ್ತನೆಗೆ ಅವಕಾಶವಿದೆ. +ಈ ನಿಟ್ಟಿನಲ್ಲಿ ತಂತ್ರಜ್ಞರ ಜೊತೆ ತಾವು ಚರ್ಚೆ ಮಾಡಿದ್ದು, ಎಲ್ಲಾ ರೀತಿಯ ಸಿದ್ಧತೆಗಳೂ ಲಭ್ಯ ಇವೆ. ಸರ್ಕಾರ ಇಂದೇ ತೀರ್ಮಾನ ಮಾಡಿದರೆ ಮೋಡ ಬಿತ್ತನೆಯಾಗಲಿದೆ. ಜನರಿಗೆ ಅನುಕೂಲವಾಗಲಿದೆ ಎಂದು ಗಮನ ಸೆಳೆದರು. ಆಡಳಿತ ಪಕ್ಷದ ಶಾಸಕ ಕೋ.ನ.ರೆಡ್ಡಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮೋಡ ಬಿತ್ತನೆಗೆ ಉಪಮುಖ್ಯಮಂತ್ರಿಯವರು ಉತ್ತರಿಸುತ್ತಾರೆ ಎಂದು ಹೇಳಿದರು. +ಸಿಖ್ ಪ್ರತ್ಯೇಕತಾವಾದಿ ಹತ್ಯೆ ಪ್ರಕರಣದ ತನಿಖೆಯಾಗಲೇಬೇಕು : ಅಮೆರಿಕ +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಕಾಶ್ ಕೋಳಿವಾಡ ಅವರು ಈ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಮೋಡ ಬಿತ್ತನೆ ಮಾಡುವ ಕಂಪನಿಗಳ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆ ಮಾಡಲು ಕೂಡ ಅವರು ಆಸಕ್ತಿ ತೋರಿಸಿದ್ದಾರೆ. ಜನರಿಗೆ ಒಳ್ಳೆಯದನ್ನ ಮಾಡಬೇಕೆನ್ನುವ ಅವರ ಆಸಕ್ತಿ ಶ್ಲಾಘನೀಯ. ನಾನು ಕೂಡ ಮೋಡ ಬಿತ್ತನೆಯ ಪರವಾಗಿದ್ದೇನೆ. ಆದರೆ, ಕೆಲವು ತಾಂತ್ರಿಕ ತೊಂದರೆಗಳಿವೆ. +ಟೆಂಡರ್ ಕರೆಯುವುದೂ ಸೇರಿದಂತೆ ಹಲವಾರು ಪ್ರಕ್ರಿಯೆಗಳನ್ನು ಅನುಸರಿಸಬೇಕು. ಆದರೂ ತಾವು ಹಣಕಾಸು ಇಲಾಖೆಯ ಅಕಾರಿಗಳ ಜೊತೆ ಸಮಾಲೋಚನೆ ನಡೆಸಿ ಯಾವ ರೀತಿ ನೆರವು ನೀಡಬಹುದೆಂಬುದನ್ನು ಪರಿಶೀಲಿಸುತ್ತೇನೆ ಎಂದು ಭರವಸೆ ನೀಡಿದರು.ಮೋಡ ಬಿತ್ತನೆಯನ್ನು ಈಗಾಗಲೇ ಹಲವು ರಾಜ್ಯಗಳು ಜಾರಿಗೊಳಿಸಿವೆ. ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕಾಣಸಿಗುವ ಮೋಡಗಳ ಸದ್ಬಳಕೆಗಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು. +ಪ್ರಕಾಶ್ ಕೋಳಿವಾಡರವರು ಒಂದು ವೇಳೆ ಸರ್ಕಾರಕ್ಕೆ ನಿರ್ಧಾರ ತೆಗೆದುಕೊಳ್ಳಲು ವಿಳಂಬವಾಗುವುದಾದರೆ ಚಿಂತೆ ಇಲ್ಲ. ನನ್ನ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆ ಮಾಡಿಸುತ್ತೇನೆ. ಮುಖ್ಯ ಕಾರ್ಯದರ್ಶಿಯವರಿಂದ ಅನುಮತಿ ಕೊಡಿಸಿ ಎಂದು ಮನವಿ ಮಾಡಿದರು. \ No newline at end of file diff --git a/eesanje/url_46_294_1.txt b/eesanje/url_46_294_1.txt new file mode 100644 index 0000000000000000000000000000000000000000..669f119551a5ab74e4b11ec3112e79e590051980 --- /dev/null +++ b/eesanje/url_46_294_1.txt @@ -0,0 +1,13 @@ +ಕೇಂದ್ರದಿಂದ 40 ಸಾವಿರ ಕೋಟಿ ಕಡಿಮೆಯಾದ ಜಿಎಸ್‍ಟಿ ಪರಿಹಾರ : ಸಚಿವ ಕೃಷ್ಣಭೈರೇಗೌಡ +ಬೆಳಗಾವಿ, ಡಿ.7- ಕಳೆದ ಐದು ವರ್ಷಗಳಿಂದ ಕೇಂದ್ರ ಸರ್ಕಾರದ ಪುರಷ್ಕøತ ಯೋಜನೆ ಹಾಗೂ ಜಿಎಸ್‍ಟಿ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ 40 ಸಾವಿರ ಕೋಟಿ ರೂ. ಅನುದಾನ ಕಡಿಮೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ. +ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕಂದಾಯ ಸಚಿವರು, ನಮ್ಮ ರಾಜ್ಯದ ಬಜೆಟ್ ಗಾತ್ರ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ನಾವು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ತೆರಿಗೆ ಪಾಲು ಹೆಚ್ಚಳವಾಗಿದೆ. ಆದರೆ, ಬಜೆಟ್ ಗಾತ್ರಕ್ಕೆ ಹೋಲಿಕೆ ಮಾಡಿದರೆ, ಕೇಂದ್ರದಿಂದ 5 ವರ್ಷಗಳಲ್ಲಿ ಸು.40 ಸಾವಿರ ಕೋಟಿ ರೂ. ಅನುದಾನ ಕಡಿತವಾಗಿದೆ. +ಇದರಿಂದ ನಮ್ಮ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಹೊಡೆತ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದರು.ಕೇಂದ್ರ ಪುರಸ್ಕøತ ಯೋಜನೆಯಿಂದ 20 ಸಾವಿರ ಕೋಟಿ ರೂ. ಹಾಗೂ ಜಿಎಸ್‍ಟಿ ಪರಿಹಾರವಾಗಿ 20 ಸಾವಿರ ಕೋಟಿ ರೂ. ರಾಜ್ಯಕ್ಕೆ ಬರಬೇಕು. ವರ್ಷದಿಂದ ವರ್ಷಕ್ಕೆ ಕೇಂದ್ರದ ತೆರಿಗೆ ಪಾಲು ಕಡಿಮೆಯಾಗುತ್ತಿದೆಯೇ ಹೊರತು ಹೆಚ್ಚಳವಾಗುತ್ತಿಲ್ಲ. ನಮ್ಮ ಪಾಲು ಮಾತ್ರ ಹೆಚ್ಚಾಗುತ್ತಲೇ ಇದೆ. +ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು +ಕೇಂದ್ರ ಸರ್ಕಾರ ನಮಗೆ ಆರ್ಥಿಕ ವರ್ಷದ ಅವಧಿಯೊಳಗೆ ನಮ್ಮ ಪಾಲಿನ ಹಣವನ್ನು ಕೊಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಹೊರತುಪಡಿಸಿ 2ಲಕ್ಷ 37 ಸಾವಿರ ಕೋಟಿ ರೂ. ಬಜೆಟ್ ಮಂಡಿಸಿದಾಗ ಕೇಂದ್ರ ಸರ್ಕಾರ 43,369 ಕೋಟಿ ರೂ. (ಶೇ.23.3) ಅನುದಾನ ನೀಡಿತ್ತು. ಪ್ರಸ್ತುತ 3 ಲಕ್ಷದ 25 ಸಾವಿರ ಕೋಟಿ ರೂ. ಬಜೆಟ್ ಮಂಡಿಸಲಾಗಿದ್ದು, ಕೇಂದ್ರದಿಂದ ನಮಗೆ ಸಿಗುವುದು 76 ಸಾವಿರ ಕೋಟಿ ರೂ.(ಶೇ.17) ಮಾತ್ರ. ನಮ್ಮ ಬಜೆಟ್ ಗಾತ್ರ ಹೆಚ್ಚುತ್ತಿದೆಯೇ ಹೊರತು, ಕೇಂದ್ರದ ಪಾಲು ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಿದೆ. ಬಜೆಟ್ ಗಾತ್ರಕ್ಕೆ ತಕ್ಕಂತೆ ಅನುದಾನ ನೀಡಬೇಕಲ್ಲವೇ? ಎಂದು ಅವರು ಪ್ರಶ್ನಿಸಿದರು. +14 ಮತ್ತು 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರಕ್ಕೆ 5495 ಕೋಟಿ ರೂ. ವಿಶೇಷ ಅನುದಾನ ಹಾಗೂ 6 ಸಾವಿರ ಕೋಟಿ ಜಿಎಸ್‍ಟಿ ಪರಿಹಾರ ಸೇರಿದಂತೆ ರಾಜ್ಯಕ್ಕೆ 11,495 ಕೋಟಿ ಅನುದಾನ ಬರಬೇಕು. ಕಳೆದ ಆ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಪತ್ರ ಬರೆದು ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು. ಆದರೂ ಹಣ ಬಿಡುಗಡೆ ಮಾಡಿಲ್ಲ. ಖಂಡಿತವಾಗಿಯೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. +ಜಿಎಸ್‍ಟಿ ಪರಿಹಾರವಾಗಿ 2339 ಕೋಟಿ ರೂ. ಹಾಗೂ ಕೇಂದ್ರ ಪುರಸ್ಕøತ ಯೋಜನೆಗೆ 1191 ಕೋಟಿ ರೂ. ಬಾಕಿ ಇದ್ದು, ಇದನ್ನು ಬಿಡುಗಡೆ ಮಾಡುವಂತೆ ಕೋರಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ನಮ್ಮ ಪ್ರಯತ್ನವನ್ನು ನಾವು ಮುಂದುವರೆಸಿದ್ದೇವೆ. ಕೇಂದ್ರ ಸರ್ಕಾರ ನಮಗೆ ಅನುದಾನವನ್ನು ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದರು. +ಒಂದು ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದಾಗ, ಶೇ.23 ರಷ್ಟು ಕೇಂದ್ರದ ಅನುದಾನ ದೊರೆಯುತ್ತಿತ್ತು. ಈಗ ಮೂರು ಲಕ್ಷ ಕೋಟಿ ರೂ. ಗೂ ಹೆಚ್ಚು ಬಜೆಟ್ ಮಂಡಿಸಿರುವಾಗ 76 ಸಾವಿರ ಕೋಟಿ ರೂ. ಅನುದಾನ ದೊರೆಯಬೇಕು. ದುರ್ದೈವವೆಂದರೆ, ಬಜೆಟ್ ಗಾತ್ರವನ್ನೇ ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. ನಮ್ಮ ಸಂಪತ್ತಿನ ಮೇಲೆ ನಾವು ಅವಲಂಭಿತವಾಗಿರುವುದರಿಂದ ನಮಗೆ ಹೆಚ್ಚಿನ ಆರ್ಥಿಕ ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಅವರು ಮನವಿ ಮಾಡಿದರು. +ಇದಕ್ಕೂ ಮುನ್ನ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಮಹಾರಾಷ್ಟ್ರ ಹೊರತುಪಡಿಸಿದರೆ, ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ಆದರೆ, ನಮ್ಮ ಪಾಲಿನ ತೆರಿಗೆ ಹಣವನ್ನು ಕಟ್ಟಿಸಿಕೊಂಡು ನಮಗೆ ಸೂಕ್ತ ಅನುದಾನ ನೀಡುತ್ತಿಲ್ಲ ಎಂದರೆ ಹೇಗೆ? ನಿನ್ನನ್ನು ಮುದ್ದಾಗಿ ಸಾಕುತ್ತೇನೆ. ನಾನು ಹೇಳಿದ ಹಾಗೆ ಕೇಳು ಎಂದು ಗಿಳಿಗೆ ಹೇಳಿದಂತಾಗಿದೆ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರವನ್ನು ಛೇಡಿಸಿದರು. +ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು +ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರಾದ ಕೋಟಶ್ರೀನಿವಾಸ ಪೂಜಾರಿ, ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಮತ್ತಿತರರು ಕೇಂದ್ರದಿಂದ ಎಷ್ಟು ಅನುದಾನ ಬಂದಿದೆ ಎಂಬುದರ ಬಗ್ಗೆ ಚರ್ಚಿಸಲು ನಾವು ಕೂಡ ಸಿದ್ಧರಿದ್ದೇವೆ. ಕೇಂದ್ರ ಅನುದಾನ ನೀಡಿದರೂ ಅದನ್ನು ರಾಜ್ಯ ಸರಿಯಾಗಿ ಸದ್ಬಳಕೆ ಮಾಡಿಕೊಂಡಿಲ್ಲ. ಆರೋಪ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನಚಕಮಕಿ ನಡೆಯಿತು. ಸಭಾಪತಿ ಬಸವರಾಜ ಹೊರಟ್ಟಿ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದಾಗ ಮಾತಿನಚಕಮಕಿಗೆ ತೆರೆಬಿದ್ದಿತು. \ No newline at end of file diff --git a/eesanje/url_46_294_10.txt b/eesanje/url_46_294_10.txt new file mode 100644 index 0000000000000000000000000000000000000000..5bf736da72f28a755caf58439915d97cab7451b0 --- /dev/null +++ b/eesanje/url_46_294_10.txt @@ -0,0 +1,8 @@ +ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ : ಸಚಿವ ರಾಮಲಿಂಗಾರೆಡ್ಡಿ +ಬೆಳಗಾವಿ,ಡಿ.6- ಸಾರಿಗೆ ನೌಕರರಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ಸರಿಯಾಗಿ ವೇತನವನ್ನು ನೀಡಲಾಗುತ್ತಿದ್ದು, ವಿಳಂಬವಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ವಿಧಾನಪರಿಷ್ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪ್ರಶ್ನೋತ್ತರ ಅವಯಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನಳೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಎಸ್ಆರ್ಟಿಸಿಯಲ್ಲಿ ಪ್ರತಿ ತಿಂಗಳು 1ನೇ ತಾರೀಖು, ಬಿಎಂಟಿಸಿಯಲ್ಲಿ 5ನೇ ತಾರೀಖು ಹಾಗೂ ವಾಯುವ್ಯ ಮತ್ತು ಈಶಾನ್ಯ ನಿಗಮಗಳಲ್ಲಿ ತಿಂಗಳ 10ರೊಳಗೆ ವೇತನವನ್ನು ಒದಗಿಸುತ್ತಿದ್ದೇವೆ. ವಿಳಂಬ ಮಾಡುತ್ತಿಲ್ಲ. ಸಮಯಕ್ಕೆ ಸರಿಯಾಗಿ ವೇತನವನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು. +ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆ ಸಂಸ್ಥೆ ಒಟ್ಟು ನಾಲ್ಕು ನಿಗಮಗಳಿಂದ 5 ಸಾವಿರದ 200 ಕೋಟಿ ಸಾಲ ಇದೆ. ಕೇಂದ್ರ ಸರ್ಕಾರ 9 ಸಾವಿರ ಕೋಟಿ ನೀಡದಿದ್ದರೆ ಸಾಲದ ಮೊತ್ತ 15 ಸಾವಿರ ಕೋಟಿಯಾಗುತ್ತಿತ್ತು ಎಂದರು. +ನಮ್ಮ ಸರ್ಕಾರ ಅಕಾರಕ್ಕೆ ಬಂದ ಮೇಲೆ 9 ಸಾವಿರ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, 5 ಸಾವಿರ ಹೊಸದಾಗಿ ಬಸ್ಗಳನ್ನು ಖರೀದಿ ಮಾಡಲು ಮುಂದಾಗಿದ್ದೇವೆ. ಹಿಂದಿನ ಸರ್ಕಾರ ಒಂದೇ ಒಂದು ಬಸ್ನ್ನು ಖರೀದಿ ಮಾಡಿರಲಿಲ್ಲ. 13,088 ನೌಕರರು ಸೇವೆಯಿಂದ ನಿವೃತ್ತರಾದರೂ ಒಬ್ಬ ನೌಕರರನ್ನು ಕೂಡ ನೀವು ಏಕೆ ನೇಮಕ ಮಾಡಿಕೊಳ್ಳಲಿಲ್ಲ ಎಂದು ಪ್ರಶ್ನೆ ಮಾಡಿದರು. +ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ +ಬಸ್ಗಳನ್ನು ಖರೀದಿ ಮಾಡುವುದು ನಿರಂತರ ಪ್ರಕ್ರಿಯೆ, ಹಳೆ ಬಸ್ಗಳ ಸಾಮಥ್ರ್ಯ ಮುಗಿದ ನಂತರ ಹೊಸ ಬಸ್ಗಳನ್ನು ಖರೀದಿಸಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೊಸ ಬಸ್ ಖರೀದಿಗೆ ಅವಕಾಶ ಕಲ್ಪಿಸಿದ್ದಾರೆ. ಇದರಿಂದ ಇನ್ನಷ್ಟು ಸುಧಾರಣೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಹಿಂದಿನ ಸರ್ಕಾರ ಕೊರೋನ ಕಾರಣದಿಂದ ಬಸ್ ಖರೀದಿ ಮಾಡಲಿಲ್ಲ. ಅದೇ ಕಾಲಕ್ಕೆ 3800 ಬಸ್ ರೂಟ್ಗಳನ್ನು ರದ್ದುಪಡಿಸಿತ್ತು. ಈಗ ಹೊಸದಾಗಿ ನಾವು ಬಸ್ ರೂಟ್ಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ. +ಈ ಹಿಂದೆ ಶಕ್ತಿ ಯೋಜನೆ ಬರುವ ಮುನ್ನ ನಾಲ್ಕು ನಿಗಮಗಳಲ್ಲಿ ಅಂದಾಜು ಸರಾಸರಿ 85 ಲಕ್ಷ ಜನರು ಪ್ರತಿದಿನ ಪ್ರಯಾಣಿಸುತ್ತಿದ್ದರು. ಈ ಯೋಜನೆ ಆರಂಭವಾದ ನಂತರ ಇದರ ಸಂಖ್ಯೆ ದಿನಕ್ಕೆ 1.6 ಕೋಟಿವರೆಗೂ ಏರಿಕೆಯಾಗಿದೆ. ಇದು ಇನ್ನಷ್ಟು ಹೆಚ್ಚಳವಾಗುವ ಸಂಭವವಿದೆ ಎಂದು ಹೇಳಿದರು. +ಶಕ್ತಿ ಯೋಜನೆ ಆರಂಭವಾದಾಗಿನಿಂದ ನಾಲ್ಕು ನಿಗಮಗಳಿಂದ ಪ್ರತಿದಿನ ಸಾರಿಗೆ ಸಂಸ್ಥೆಗೆ 5.92 ಕೋಟಿ ರೂ. ಆದಾಯ ಬರುತ್ತಿದೆ. ಈ ಯೋಜನೆಗೆ ಬಜೆಟ್ನಲ್ಲಿ 2,800 ಕೋಟಿ ರೂ. ಅನುದಾನ ನೀಡಿದ್ದೆವು. ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಅನುದಾನದ ಮೊತ್ತವನ್ನು ನಾಲ್ಕುವರೆ ಸಾವಿರ ಕೋಟಿಗೆ ಹೆಚ್ಚಳ ಮಾಡಬೇಕೆಂದು ಕೋರಲಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_294_11.txt b/eesanje/url_46_294_11.txt new file mode 100644 index 0000000000000000000000000000000000000000..99b8538e712c6c0d7d38cd577900d739a1da97b4 --- /dev/null +++ b/eesanje/url_46_294_11.txt @@ -0,0 +1,9 @@ +ಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆ : 12 ವರ್ಷ ಜೈಲು, 10 ಕೋಟಿವರೆಗೂ ದಂಡ +ಬೆಳಗಾವಿ, ಡಿ.6- ಸರ್ಕಾರದ ವಿವಿಧ ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ರೂಪಿಸಿರುವ ರಾಜ್ಯಸರ್ಕಾರ ಅಕ್ರಮದಲ್ಲಿ ಭಾಗಿ ಯಾದ ಅಭ್ಯರ್ಥಿಗೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಲಕ್ಷ ರೂ. ದಂಡ ವಿಧಿಸುವುದು ಮತ್ತು ಒಳಸಂಚು ನಡೆಸುವವರಿಗೆ 8 ರಿಂದ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 15 ಲಕ್ಷ ರೂ.ಗಳಿಂದ 10 ಕೋಟಿ ರೂ.ಗಳ ದಂಡ ವಿಧಿಸಲು ಅವಕಾಶವಿರುವ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸ ಲಾಯಿತು. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ಖರ್ಗೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಪರವಾಗಿ ವಿಧೇಯಕವನ್ನು ಮಂಡಿಸಿದರು.ಪ್ರಸ್ತಾವಿತ ವಿಧೇಯಕದಲ್ಲಿ ಸಾರ್ವ ಜನಿಕ ಪರೀಕ್ಷೆಗಳ ಅಕ್ರಮಗಳು, ಭ್ರಷ್ಟಾ ಚಾರ, ಅನುಚಿತ ವಿಧಾನಗಳ ಬಳಕೆಗೆ ಕಡಿವಾಣ ಹಾಕಲು ಕಾಯಿದೆ ಯನ್ನು ರೂಪಿಸಿರುವುದಾಗಿ ತಿಳಿಸಲಾಗಿದೆ. +ಪರೀಕ್ಷಾ ಅಕ್ರಮಗಳು ನೀಚ ವ್ಯಕ್ತಿಗಳಿಗೆ ಹಾಗೂ ಅನಿಹಿತವಾದ ಹಿತಾಸಕ್ತಿಗಳಿಗೆ ಅಗಾಧ ಪ್ರಮಾಣದ ಹಣಕಾಸಿನ ಅನುಕೂಲಗಳನ್ನು ಮಾಡಿ ಕೊಡುವುದಲ್ಲದೆ ಯುವಜನರ ಪ್ರಗತಿಯ ಅವಕಾಶವನ್ನು ಕುಂಠಿತಗೊಳಿಸುತ್ತದೆ. ನ್ಯಾಯಸಮ್ಮತವಾದ ರೀತಿಯಲ್ಲಿ ಸಾರ್ವಜನಿಕ ಪರೀಕ್ಷೆ ನಡೆಸುವುದನ್ನು ವಿಫಲಗೊಳಿಸಲು ಹೊಸ ಹೊಸ ಭ್ರಷ್ಟ ಹಾಗೂ ಅನುಚಿತ ವಿಧಾನಗಳನ್ನು ಬಳಸಲಾಗುತ್ತಿದೆ. ಲಕ್ಷಾಂತರ ಪ್ರತಿಭಾನ್ವಿತರ ಕಠಿಣ ಪರಿಶ್ರಮವನ್ನು ನಿರರ್ಥಕ ಗೊಳಿಸಿ ಯುವಜನರ ಅವಕಾಶ ಗಳನ್ನು ವಂಚಿಸುತ್ತಿದೆ. ಜನಸಾಮಾನ್ಯರ ನಂಬಿಕೆಗೆ ದ್ರೋಹವೆಸಗಲಾಗುತ್ತಿದೆ ಎಂದು ಆಕ್ಷೇಪಿಸಲಾಗಿದೆ. +ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ +ಪರೀಕ್ಷಾ ಪಾವಿತ್ರ್ಯತೆಗೆ ಚ್ಯುತಿ ತರುವ ವ್ಯಕ್ತಿಗಳು, ಸಂಚುಕೋರರು, ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ನ್ಯಾಯ ಸಮ್ಮತ ನೇಮಕ ಪ್ರಕ್ರಿಯೆಗಾಗಿ ಈ ಕಾಯ್ದೆ ಅಗತ್ಯವಿದೆ ಎಂದು ಪ್ರತಿಪಾದಿಸಲಾಗಿದೆ.ಪರೀಕ್ಷಾರ್ಥಿಗಳು ಮತ್ತು ಅಪರಾಕ ಸೂತ್ರಧಾರರನ್ನು ಪ್ರತಿಸ್ಪಂಸಲು ಹೊಸ ಕಾನೂನಿನಲ್ಲಿ 10 ವರ್ಷಗಳವರೆಗೆ ಶಿಕ್ಷೆ ಮತ್ತು 10 ಕೋಟಿ ರೂ.ಗಳವರೆಗೆ ದಂಡನೆ ಹಾಗೂ ಸ್ವತ್ತುಗಳ ಜಪ್ತಿ, ಆಸ್ತಿಗಳ ಮುಟ್ಟುಗೋಲಿನಂತಹ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿದೆ. +ಪ್ರಶ್ನೆಪತ್ರಿಕೆ ಬಹಿರಂಗ, ಸ್ವಾಧೀನ , ಸೋರಿಕೆ, ಒಎಂಆರ್ ಸೀಟುಗಳ ಸ್ವಾೀನ ಅಥವಾ ಅನಕೃತವಾಗಿ ಬಹಿರಂಗಪಡಿಸುವುದು ಪರೀಕ್ಷಾ ಕೇಂದ್ರಕ್ಕೆ ಅಕ್ರಮ ಪ್ರವೇಶ , ಪರೀಕ್ಷಾ ಸಾಮಗ್ರಿಗಳ ದುರ್ಬಳಕೆಯನ್ನು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲಾಗಿದೆ. ಆಡಳಿತ ಮಂಡಳಿ ಮತ್ತು ಸಂಸ್ಥೆಗಳು ಅಪರಾಧದಲ್ಲಿ ಭಾಗಿಯಾಗಿರುವುದರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲು ಕಾಯ್ದೆಯಲ್ಲಿ ಅವಕಾಶ ಮಾಡಿಕೊಟ್ಟಿದೆ. +ಅಪರಾಧದಲ್ಲಿ ದೋಷಿ ಎಂದು ಕಂಡುಬರುವ ವ್ಯಕ್ತಿಗಳನ್ನು ಮುಂದೆ ಯಾವುದೇ ಪರೀಕ್ಷೆ ತೆಗೆದುಕೊಳ್ಳದಂತೆ ಅನರ್ಹಗೊಳಿಸಲು ಅವಕಾಶವಿದೆ. ಯಾವುದೇ ಸಂದರ್ಶನಗಳಿಗೂ ಭಾಗವಹಿಸಲು ಅವಕಾಶ ಇರುವುದಿಲ್ಲ. ನಿಯಮಿತ ಅಪರಾಧಗಳಲ್ಲಿ ಎರಡು ವರ್ಷಗಳವರೆಗೂ ಪರೀಕ್ಷೆಯಿಂದ ನಿಷೇಧಗೊಳಿಸಲಾಗುತ್ತದೆ. +ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಆರೋಪಿಗಳ ಸ್ವತ್ತುಗಳನ್ನು ಜಪ್ತಿ ಮಾಡಿಕೊಳ್ಳಲು ತನಿಖಾಕಾರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಪರೀಕ್ಷೆಗೆ ಸಂಬಂಧಪಟ್ಟ ವೆಚ್ಚವನ್ನು ಅಪರಾಗಳು ಮತ್ತು ಅಪರಾಕ ಸಂಸ್ಥೆಗಳಿಂದ ವಸೂಲಿ ಮಾಡುವ ಪ್ರಸ್ತಾಪವಿದೆ.ಅಪರ ಪೊಲೀಸ್ ಅೀಕ್ಷಕರ ದರ್ಜೆಗಿಂತ ಕಡಿಮೆ ಇರದ ಯಾರೇ ಪೊಲಿಸ್ಅಧಿಕಾರಿಯು ಪರೀಕ್ಷಾ ಅಕ್ರಮಗಳ ತನಿಖೆ ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.ಈ ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳುವುದು ಅಥವಾ ದುರ್ಬಲ ಗೊಳಿಸದಂತೆಯೂ ಎಚ್ಚರಿಕೆ ವಹಿಸಲಾಗಿದೆ. \ No newline at end of file diff --git a/eesanje/url_46_294_12.txt b/eesanje/url_46_294_12.txt new file mode 100644 index 0000000000000000000000000000000000000000..47f3c32c8cd472f0dc73de127ee55b8611663191 --- /dev/null +++ b/eesanje/url_46_294_12.txt @@ -0,0 +1,11 @@ +ಸಚಿವ ಜಮೀರ್ ಗೈರು, ಮೇಲ್ಮನೆಯಲ್ಲಿ ಕಾವೇರಿದ ಚರ್ಚೆ +ಬೆಳಗಾವಿ,ಡಿ.6- ವಸತಿ ಮತ್ತು ವಕ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗೈರು ಹಾಜರಾದ ವಿಷಯ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಗಿ ಕಾವೇರಿದ ಚರ್ಚೆಗೆ ಎಡೆಮಾಡಿಕೊಟ್ಟಿದಲ್ಲದೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಅವರು, ವಕ್ಪ್ ಆಸ್ತಿಗಳನ್ನು ಅನಕೃತವಾಗಿ ಒತ್ತುವರಿ ಮಾಡುತ್ತಿರುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರಿಗೆ ಪ್ರಶ್ನೆ ಕೇಳಿದ್ದರು. +ಈ ವೇಳೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಮೀರ್ ಪರವಾಗಿ ಉತ್ತರಿಸಿದರು.ಪ್ರಶ್ನೆ ಮುಗಿಯುತ್ತಿದ್ದಂತೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ಸಚಿವರಿಗೆ ಸದನಕ್ಕೆ ಬಂದು ಮುಖ ತೋರಿಸಲು ಹೇಳಿ ಎಂದು ಸಭಾನಾಯಕ ಬೋಸ್ ರಾಜ್ಗೆ ಸಲಹೆ ಮಾಡಿದರು.ಸಭಾಪತಿಗಳು ಈ ಮಾತು ಹೇಳುತ್ತಿದ್ದಂತೆ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ಪ್ರಶ್ನಿಸಲಾರಂಭಿಸಿದರು. +ಸಚಿವರು ಸದನಕ್ಕೆ ಏಕೆ ಬಂದಿಲ್ಲ? ಅವರು ಬರಲು ಸಮಸ್ಯೆ ಏನು? ಅವರು ಅನುಮತಿ ಕೇಳಿದ್ದರೇ ಅಥವಾ ಪತ್ರವನ್ನು ಕೊಟ್ಟಿದ್ದಾರೆಯೇ ಎಂದು ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಶ್ನೆ ಮಾಡಿದರು. ಸ್ಪೀಕರ್ ಸ್ಥಾನದ ಬಗ್ಗೆ ಜಮೀರ್ ಅವರಿಗೆ ಗೌರವವಿಲ್ಲ. ಸ್ಪೀಕರ್ ಸ್ಥಾನದ ಮೇಲೆ ಜಮೀರ್ ಅವರಿಗೆ ವಿಶ್ವಾಸ ಇಲ್ಲ. ಸ್ಪೀಕರ್ ಸ್ಥಾನಕ್ಕೆ ಧರ್ಮದ ಲೇಪನ ಮಾಡಿ ಮಾತನಾಡಿದ್ದಾರೆ. ಸ್ಪೀಕರ್ ಹಾಗೂ ಸಭಾಪತಿ ಸ್ಥಾನಕ್ಕೆ ಗೌರವ ಇಲ್ಲವೆಂದು ಅವರು ಬಂದಿಲ್ಲವೇ? ಸ್ಪೀಕರ್ ಸ್ಥಾನಕ್ಕೆ ಗೌರವ ನೀಡದೇ ಅಪಮಾನ ಮಾಡಿದರೆ ಅದಕ್ಕಿಂತ ದೊಡ್ಡ ದುರಂತ ಇಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು. +ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ +ಸಭಾನಾಯಕ ಬೋಸ್ರಾಜ್ ಅವರು ವೈಯಕ್ತಿಕ ಕೆಲಸಕ್ಕೆ ಹೋಗಿದ್ದಾರೆ ಎಂದಾಗ, ಸಭಾಪತಿಯವರು, ಹಾಗೆಲ್ಲ ಸಚಿವರು ಗೈರು ಹಾಜರಾಗುವುದು ಸರಿಯಲ್ಲ ಎಂದು ಹೇಳಿದರು.ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ನಾರಾಯಣಸ್ವಾಮಿ ಅವರು, ಸರ್ಕಾರಕ್ಕೆ ಸಭಾಪತಿ ಛಾಟಿ ಬೀಸಬೇಕು, ಮುಖ ತೋರಿಸಿ ಎಂದು ಮಾತ್ರ ಹೇಳಿದರೆ ಹೇಗೆ? ಎಂದು ಪ್ರಶ್ನಿಸಿದರು.ಕೋಟ ಶ್ರೀನಿವಾಸ್ ಪೂಜಾರಿಯವರು ಯಾರು ಏನು ಬೇಕಾದರೂ ಮಾತಾಡಬಹುದಾ? ಎಂದಾಗ ನಾನು ಸೂಕ್ಷ್ಮವಾಗಿ ಹೇಳಿದ್ದೇನೆ ಎಲ್ಲರೂ ಅರ್ಥ ಮಾಡಿಕೊಳ್ಳಿ ಎಂದು ಸಭಾಪತಿ ಹೊರಟ್ಟಿ ಕಿವಿಮಾತು ಹೇಳಿದರು. +ಬಿಜೆಪಿ ಸದಸ್ಯ ರಘುನಾಥ್ ಮಲ್ಕಾಪುರೆ ಮಾತನಾಡಿ, ಯಾವ ಕಾರಣ ಹೇಳಿ ಜಮೀರ್ ಅಹ್ಮದ್ ಗೈರಾಗಿದ್ದಾರೆ? ಕುಟುಂಬದ ಸದಸ್ಯರಿಗೆ ಅನಾರೋಗ್ಯ , ತುರ್ತು ಕೆಲಸ ಇದ್ದರೆ ಗೈರಾಗಬಹುದು. ಆದರೆ ಬೆಳಗಾವಿಯಲ್ಲಿ ಅವೇಶನ ನಡೆಯುತ್ತಿದೆ. ಪೀಠದ ಬಗ್ಗೆ ಅವಹೇಳನ ಮಾತನಾಡಿದ್ದಾರೆ. ಹೀಗಾಗಿ ಉದ್ದೇಶಪೂರ್ವಕವಾಗಿ ಅವರು ಗೈರಾಗಿದ್ದಾರೆ ಎಂದು ಆರೋಪಿಸಿದರು.ಸಭಾಪತಿಯಾದ ನನ್ನ ಅನುಮತಿ ಕೇಳಿದ್ದಾರೆ. ಕಾರಣವನ್ನೂ ನಾನು ಹೇಳಲಾಗುವುದಿಲ್ಲ ಎಂದು ಸಭಾಪತಿಗಳು ಸಮರ್ಥಿಸಿಕೊಂಡರು. +ಆಗ ಸದನದ ನಿಯಮ ಓದಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಉಳಿದದ್ದು ಸಭಾಪತಿಗಳ ನಿರ್ಣಯಕ್ಕೆ ಬಿಟ್ಟಿದ್ದು ಎಂದರು. ಗೈರಾದ ಬಗ್ಗೆ ಆಕ್ಷೇಪವಿಲ್ಲ , ಪೀಠದ ಬಗ್ಗೆ ಅವಹೇಳನ ಮಾಡಿರುವ ಜಮೀರ್ ಹೇಳಿಕೆ ಬಗ್ಗೆ ಚರ್ಚೆಗೆ ಅವಕಾಶ ಬೇಕು ಎಂದ ಕೋಟಾ ಶ್ರೀ ನಿವಾಸ ಪೂಜಾರಿ ಅವರಿಗೆ , ಸಭಾಪತಿಗಳು ಪರಿಗಣಿಸುವುದಾಗಿ ಹೇಳಿದರು. +ಕೃಷ್ಣ ಬೈರೆಗೌಡರು ಓದಿದ ನಿಯಮದ ಪ್ರತಿ ಸರಿ ಇದೆ. ಆದರೆ ಸಭಾಪತಿ ಪೀಠದಿಂದ ಈ ಉತ್ತರ ನಿರೀಕ್ಷೆ ಮಾಡಿರಲಿಲ್ಲ. ಸದನದ ಸದಸ್ಯರು ಕೇಳಿದಾಗ ಕಾರಣವನ್ನು ಹೇಳುವುದು ನಿಮ್ಮ ಕರ್ತವ್ಯ ಎಂದು ಜೆಡಿಎಸ್ ಸದಸ್ಯ ಭೋಜೆಗೌಡ ಅವರು ಒತ್ತಾಯಿಸಿದರು.ಗೈರಾಗುವ ಬಗ್ಗೆ ಹೇಳಿದ್ದಾರೆ, ಅನುಮತಿ ಕೊಟ್ಟಿದ್ದೇನೆ ಅಷ್ಟೇ. ಮಂತ್ರಿಗಳು ನಾಳೆಯಿಂದ ಎಲ್ಲರೂ ಹಾಜರಿರುವ ಬಗ್ಗೆ ಸೂಚನೆ ನೀಡಿದ್ದೇನೆ ಎಂದು ಸಭಾಪತಿ ಸದನಕ್ಕೆ ತಿಳಿಸಿದರು.ಪುನಃ ಪ್ರವೇಶಿಸಿದ ಕೃಷ್ಣ ಭೈರೇಗೌಡ ಅವರು, ಸಾಮಾನ್ಯವಾಗಿ ಸಚಿವರು ಗೈರು ಹಾಜರಾಗಲು ಅನುಮತಿ ಬೇಕಿಲ್ಲ. ನಿಯಮಗಳ ಪ್ರಕಾರ ಹೇಳುವ ಅವಶ್ಯಕತೆ ನನಗೂ ಇರಲಿಲ್ಲ, ವಿಷಯ ತಿಳಿದುಕೊಂಡು ಪೂಜಾರಿಯವರು ಮಾತನಾಡಲಿ ಎಂದು ಹೇಳಿದರು. +ಸಭಾಪತಿ ಅನುಮತಿ ಪಡೆದುಕೊಳ್ಳಬೇಕು, ಜಮೀರ್ ಪಡೆದುಕೊಂಡಿದ್ದಾರೆ, ಅವರ ಕಾರಣಗಳು ನನಗೆ ಸಂಬಂಧ ಇಲ್ಲ ಎಂದು ಸಭಾಪತಿ ಹೊರಟ್ಟಿ ಪುನರುಚ್ಚಿಸಿದರು. ಆಗ ಕೋಟಾ ಶ್ರೀನಿವಾಸ್ ಪೂಜಾರಿಯವರು, ಪೀಠ ಯಾವತ್ತೂ ನಮ್ಮ ರಕ್ಷಣೆಗೆ ಬರಬೇಕು. ಕ್ಯಾಬಿನೆಟ್ ದರ್ಜೆಯ ಮಂತ್ರಿ ಪೀಠಕ್ಕೆ ಅವಮಾನ ಆಗುವಂತೆ ಮಾತನಾಡಿದ್ದಾರೆ. ಅದರ ಬಗ್ಗೆ ಚರ್ಚೆ ಮಾಡಲು ನಮಗೆ ಅವಕಾಶ ನೀಡಬೇಕು ಎಂದು ಕೋರಿದಾಗ, ಸಭಾಪತಿಗಳು ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದರು. +ಬಿಜೆಪಿ ಸದಸ್ಯ ಎನ್.ರವಿ ಕುಮಾರ್ ಮಾತನಾಡಿ, ಸಚಿವರು ಗೈರು ಹಾಜರಾಗಬಹುದು? ಅನುಮಾನದ ಪ್ರಶ್ನೆ ಎಂದರೆ ಕೃಷ್ಣ ಭೈರೇಗೌಡ, ರಾಮಲಿಂಗಾರೆಡ್ಡಿ ಗೈರಾಗಿರುವುದು. ಆದರೆ ನಾವು ಪ್ರಶ್ನೆಯೇ ಕೇಳುವುದಿಲ್ಲ ಎಂದು ಚರ್ಚೆಗೆ ತೆರೆ ಎಳೆದರು. \ No newline at end of file diff --git a/eesanje/url_46_294_2.txt b/eesanje/url_46_294_2.txt new file mode 100644 index 0000000000000000000000000000000000000000..f3b8db1b92d2b91beb6b3a50650ff58a9241441d --- /dev/null +++ b/eesanje/url_46_294_2.txt @@ -0,0 +1,6 @@ +ಹೊಸ ಮದ್ಯದಂಗಡಿಗಳಿಗೆ ಪರವಾನಗಿ ಇಲ್ಲ : ಸಚಿವ ಆರ್.ಬಿ.ತಿಮ್ಮಾಪುರ +ಬೆಳಗಾವಿ, ಡಿ.7- ರಾಜ್ಯದಲ್ಲಿ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಅವಶ್ಯಕವಿರುವ ಲೈಸನ್ಸ್ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರು ವಿಧಾನ ಪರಿಷತ್ತನಲ್ಲಿ ಇಂದು ಸ್ಪಷ್ಟಪಡಿಸಿದರು. +ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ವೈ.ಎ.ನಾರಾಯಾಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಹೊಸದಾಗಿ ಬಾರ್ ಅಂಗಡಿ ತೆರೆಯುವುದಾಗಲಿ, ಇಲ್ಲವೆ ಲೈಸನ್ಸ್ ನೀಡುವ ಪ್ರಸ್ತಾವನೆ ಇಟ್ಟುಕೊಂಡಿಲ್ಲ. ಈ ಸಂಬಂಧದ ಕೆಲವು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. +ರಾಜ್ಯದಲ್ಲಿ ಪ್ರಸ್ತುತ 3981 ಸಿಎಲ್ -2 ಸನ್ನದ್ದುದಾರರಿದ್ದು, ಅದೇ ರೀತಿ 3631 ಸಿಎಲ್-9 ಸನ್ನದ್ದುದಾರರಿದ್ದಾರೆ. 2465 ಸಿಎಲ್-7 ಸನ್ನದ್ದುದಾರರಿದ್ದಾರೆ. ಸಿಎಲ್-2 ಸನ್ನದ್ದುದಾರರಿಂದ 208.91 ಕೋಟಿ ರೂ., ಸಿಎಲ್-9 ಸನ್ನದ್ದುದಾರರಿಂದ 232.46 ಕೋಟಿ ರೂ. ಸಿಎಲ್-7 ಸನ್ನದ್ದುದಾರರಿಂದ 152.81ಕೋಟಿ ರೂ. ವಾರ್ಷಿಕ ಶುಲ್ಕ ಪಡೆದುಕೊಳ್ಳಲಾಗಿದೆ. +ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ +ಗ್ರಾಮೀಣ ಭಾಗಗಳಲ್ಲಿ ಅಂಗಡಿ ಮತ್ತಿತರ ಕಡೆಗಳಲ್ಲಿ ಮದ್ಯದ ಅಂಗಡಿಗಳನ್ನು, ಮದ್ಯವನ್ನು ಮಾರಾಟ ಮಾಡುತ್ತಾರೆ. ಇದನ್ನು ತಪ್ಪಿಸಲು ಸಿಎಲ್-7ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆಯೇ ಹೊರತು ಸರ್ಕಾರ ಮದ್ಯಪಾನಕ್ಕೆ ಎಲ್ಲಿಯೂ ಸರ್ಕಾರ ಉತ್ತೇಜನ ನೀಡಿಲ್ಲ ಎಂದು ತಿಮ್ಮಾಪುರ ತಿಳಿಸಿದರು. \ No newline at end of file diff --git a/eesanje/url_46_294_3.txt b/eesanje/url_46_294_3.txt new file mode 100644 index 0000000000000000000000000000000000000000..b87f66bc84a22da84424ae28c5d27224586c2096 --- /dev/null +++ b/eesanje/url_46_294_3.txt @@ -0,0 +1,11 @@ +ವನ್ಯಜೀವಿ ಸಂಘರ್ಷ ತಡೆಗೆ ಕ್ರಮ : ಈಶ್ವರ್ ಖಂಡ್ರೆ +ಬೆಳಗಾವಿ, ಡಿ.7- ಇತ್ತೀಚೆಗೆ ಬೆಂಗಳೂರಿನ ಬೊಮ್ಮನಹಳ್ಳಿಯ ಅಪಾರ್ಟ್‍ಮೆಂಟಿನಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಪ್ರಕರಣ ವಿಧಾನಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದಲ್ಲದೆ, ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಅಗತ್ಯ ಮೂಲಸೌಲಭ್ಯ ಒದಗಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರು, ಪ್ರಶ್ನೆ ಕೇಳಿ ನವೆಂಬರ್ 1 ರಂದು ಚಿರತೆ ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಗೆ ಬಂದಿದ್ದು, ಅಪಾರ್ಟ್‍ಮೆಂಟಿನಲ್ಲಿ ಕಾಣಿಸಿಕೊಂಡಿತ್ತು. ಇಲ್ಲಿಂದ ಬನ್ನೇರುಘಟ್ಟ 20 ಕಿ.ಮೀ. ಅಂತರದಲ್ಲಿದ್ದರೂ ಅಲ್ಲಿಂದ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ನುಗ್ಗಿ ಬರುತ್ತಿವೆ. ಈ ಮೊದಲೂ ಕೂಡ ಹುಲಿ, ಆನೆ, ಚಿರತೆ ಹಾವಳಿಯನ್ನು ಜನ ಅನುಭವಿಸಿದ್ದಾರೆ.ವನ್ಯಜೀವಿ ಸಂಘರ್ಷದ ವೇಳೆ ಅವುಗಳನ್ನು ಸುರಕ್ಷಿತವಾಗಿ ಹಿಡಿಯಲು ಅಥವಾ ಹಿಮ್ಮೆಟ್ಟಿಸಲು ಅಗತ್ಯ ಸೌಲಭ್ಯಗಳ ಕೊರತೆಯಿದೆ. +ಚಿರತೆ ಬಂದಾಗ 200 ಕಿ.ಮೀ. ಪ್ರದೇಶವನ್ನು ಸುತ್ತುವರೆಯಲಾಗಿದ್ದು, ಅಲ್ಲಿ ಸುರಕ್ಷಾ ತಂತಿಬೇಲಿ ಅಳವಡಿಸಲು ಹಾಗೂ ಥರ್ಮಲ್ ಡ್ರೋನ್ ಕ್ಯಾಮರಾ ವ್ಯವಸ್ಥೆ ಇರಲಿಲ್ಲ. ಈ ಎರಡನ್ನೂ ಖಾಸಗಿಯವರಿಂದ ಪಡೆಯಬೇಕಾಗಿತ್ತು. ಚಿರತೆಗೆ ನೀಡಿದ ಅರವಳಿಕೆಯ ಮದ್ದು ಕೆಲಸ ಮಾಡಲಿಲ್ಲ. ಬಹುಷಃ ಅದರ ಅವ ಮುಗಿದಿರಬಹುದು. ಮೂರು ಜನ ಅರಣ್ಯ ಸಿಬ್ಬಂದಿಗಳಿಗೆ ಚಿರತೆ ಕಚ್ಚಿ ಹಲ್ಲೆ ಮಾಡಿತ್ತು. ಕೊನೆಗೆ ಅದನ್ನು ಎನ್‍ಕೌಂಟರ್ ಮಾಡಿ ಕೊಲ್ಲಬೇಕಾಯಿತು. ಹೀಗಾಗಿ ಅರಣ್ಯ ಇಲಾಖೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. +ಅರಗ ಜ್ಞಾನೇಂದ್ರ ಮಲೆನಾಡು ಭಾಗದಲ್ಲಿ ಮಂಗ, ಕಾಡುಕೋಣ, ಹಂದಿಯ ಹಾವಳಿ ತೀವ್ರಗೊಂಡಿದೆ. ಇತ್ತೀಚೆಗೆ ಹಂದಿ ಹಾವಳಿಯನ್ನು ತಡೆಯಲು ಪ್ರಾಣಭಯದಿಂದ ವ್ಯಕ್ತಿಯೊಬ್ಬರು ಗುಂಡು ಹಾರಿಸಿದ್ದಾರೆ. ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಕಾಡುಕೋಣವೊಂದು ವ್ಯಕ್ತಿಯೊಬ್ಬರ ಕೈ ಮುರಿದಿದೆ. ಹಂದಿ ಹೊಡೆಯಲು ಅವಕಾಶವಿದೆ. ಆದರೆ ತಿಂದರೆ ಅಪರಾಧ ಎಂದು ಪ್ರಕರಣ ದಾಖಲಿಸುತ್ತಿದ್ದಾರೆ. ವನ್ಯಜೀವಿ ಸಂರಕ್ಷಣಾ ಸಂದರ್ಭದಲ್ಲಿ ಕಾನೂನಿನ ವಿನಾಯಿತಿ ನೀಡಿ ಎಂದು ಮನವಿ ಮಾಡಿದರು. +ಬಿಜೆಪಿಯ ಸುನಿಲ್‍ಕುಮಾರ್, ಸಿಮೆಂಟ್ ಮಂಜು, ಸುರೇಶ್‍ಗೌಡ, ಎಂ.ಕೃಷ್ಣಪ್ಪ ಸೇರಿದಂತೆ ಹಲವಾರು ಮಂದಿ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಅರಣ್ಯ ಪ್ರದೇಶದಲ್ಲಿನ ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಬೆಂಗಳೂರು ಸುತ್ತಮುತ್ತ ಮಾಂಸದಂಗಡಿಗಳ ತ್ಯಾಜ್ಯ ವಿಸರ್ಜನೆಯನ್ನು ವೈಜ್ಞಾನಿಕವಾಗಿ ಮಾಡಬೇಕೆಂದು ಆಗ್ರಹಿಸಿದರು. ಉತ್ತರ ನೀಡಿದ ಸಚಿವ ಈಶ್ವರ್ ಖಂಡ್ರೆ, ಆನೆ, ಚಿರತೆ ಹಾವಳಿಯನ್ನು ತಡೆಯಲು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ. 59 ಸಿಬ್ಬಂದಿಗಳನ್ನು ನೇಮಿಸಲಾಗಿದೆ. +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ಒತ್ತುವರಿಯಿಂದಾಗಿ ಅರಣ್ಯ ಪ್ರದೇಶ ಕಿರಿದಾಗುತ್ತಿದೆ. ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಹಸಿರು ಪ್ರದೇಶ ಕಡಿಮೆಯಾಗಿದೆ. 1051 ಪ್ರಕರಣಗಳಲ್ಲಿ 2570 ಎಕರೆ ಪ್ರದೇಶ ಒತ್ತುವರಿಯಾಗಿದೆ. ಅದರಲ್ಲಿ 403 ಪ್ರದೇಶವನ್ನು ತೆರವುಗೊಳಿಸಲಾಗಿದೆ. ಈಗ ಭೂಮಿಯ ಉಳಿದ ಒತ್ತುವರಿ ತೆರವಿಗೆ ಶಾಸಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. +ವನ್ಯಜೀವಿ ಸಂರಕ್ಷಣೆ ಸಮಯದಲ್ಲಿ ಅಗತ್ಯವಾಗಿರುವ ಬೋನುಗಳು, ಬಲೆಗಳು, ಸುರಕ್ಷತಾ ಸಲಕರಣೆಗಳು, ಅಗತ್ಯ ತರಬೇತಿ ನೀಡಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಯ ವೇಳೆ ಶಾಸಕರು ಸಂಪೂರ್ಣ ಸಹಕಾರ ನೀಡಿದ್ದರು. ಗಾಯಗೊಂಡ ಸಿಬ್ಬಂದಿಗಳಿಗೆ ಶಾಸಕರು ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ನೀಡುವುದನ್ನು ಸ್ವಾಗತಿಸಲಾಗುವುದು. +ಇಲಾಖೆಯಿಂದಲೂ ಸಿಬ್ಬಂದಿಗಳಿಗೆ ಪರಿಹಾರ ನೀಡಲಾಗುತ್ತದೆ. ಅಂದು ಚಿರತೆ ಮೂರು ಜನರ ಮೇಲೆ ದಾಳಿ ಮಾಡಿ 4ನೆಯವರ ಮೇಲೆ ಎರಗಿದಾಗ ಗುಂಡು ಹಾರಿಸಬೇಕಾಯಿತು. ಅರವಳಿಕೆಯ ಮದ್ದಿನ ಸಿರಿಂಜ್ ಚಿರತೆಗೆ ಚುಚ್ಚಿಕೊಂಡಿತ್ತು. ಆದರೆ ಔಷ ಚಿರತೆಯ ದೇಹಕ್ಕೆ ಸ್ಪಂದಿಸಲಿಲ್ಲ. ಹೀಗಾಗಿ ಅದು ಪ್ರಜ್ಞೆ ತಪ್ಪಲಿಲ್ಲ ಎಂದು ಹೇಳಿದರು. +ಅಂದು ಚಿರತೆಯನ್ನು ಕೊಲ್ಲದೆ ಇದ್ದರೆ ಹೊರಗಡೆ ಸುಮಾರು ಒಂದೂವರೆ ಸಾವಿರ ಜನ ಇದ್ದರು. ಹೆಚ್ಚಿನ ಅನಾಹುತ ಆಗುತ್ತಿತ್ತು. ಸಚಿವರು ಸಕಾಲಿಕ ಆದೇಶ ನೀಡಿ ಅನಾಹುತ ತಪ್ಪಿಸಿದ್ದಾರೆ ಎಂದು ಶಾಸಕರು ಸಚಿವರನ್ನು ಅಭಿನಂದಿಸಿದರು. \ No newline at end of file diff --git a/eesanje/url_46_294_4.txt b/eesanje/url_46_294_4.txt new file mode 100644 index 0000000000000000000000000000000000000000..192680f846dd07482afcff058922a854fb7147ed --- /dev/null +++ b/eesanje/url_46_294_4.txt @@ -0,0 +1,5 @@ +ರಾಯಚೂರು : ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ +ರಾಯಚೂರು,ಡಿ.5- ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಸಿಂದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಇಸ್ಮಾಯಿಲ್(25), ಚನ್ನಬಸವ(26), ರವಿ(21) ಮತ್ತು ಅಂಬರೀಶ್(20) ಮೃತಪಟ್ಟ ದುರ್ದೈವಿಗಳು. ಕೊಲ್ಕತ್ತಾ ಮೂಲದ ಸಮೀರ್ ಎಂಬಾತ ಗಾಯಗೊಂಡಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. +ಟಾಟಾಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ ಮದ್ಲಾಪುರಕ್ಕೆ ಮದುವೆ ಸಮಾರಂಭದ ಡೆಕೋರೇಟ್‍ಗಾಗಿ ಸಾಮಾಗ್ರಿಗಳನ್ನು ತೆಗೆದುಕೊಂಡು ಇಂದು ಬೆಳಗಿನ ಜಾಗ 4.30ರ ಸುಮಾರಿನಲ್ಲಿ ಹೋಗುತ್ತಿದ್ದಾಗ ಪಗಡದಿನ್ನಿ ಕ್ಯಾಂಪ್ ಬಳಿ ಅತಿ ವೇಗವಾಗಿ ಬಂದ ಲಾರಿ ಟಾಟಾಏಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟಿದ್ದು ಸಮೀರ್ ಎಂಬಾತ ಗಾಯಗೊಂಡಿದ್ದಾರೆ. +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ಸುದ್ದಿ ತಿಳಿಯುತ್ತಿದ್ದಂತೆ ಸಿಂದನೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ವಾಹನದೊಳಗೆ ಸಿಲುಕಿ ಮೃತಪಟ್ಟಿದ್ದ ನಾಲ್ವರ ಮೃತದೇಹಗಳನ್ನು ಹೊರಗೆ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಸಿಂಧನೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡ ಸಮೀರ್‍ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_294_5.txt b/eesanje/url_46_294_5.txt new file mode 100644 index 0000000000000000000000000000000000000000..c894e5ffc91eca0a3f2e425c2f78e0ba65e003d8 --- /dev/null +++ b/eesanje/url_46_294_5.txt @@ -0,0 +1,7 @@ +ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ +ಬೆಳಗಾವಿ, ಡಿ.7- ಮುಂದಿನ ಆರ್ಥಿಕ ವರ್ಷದಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕ ಪ್ರದೀಪ್‍ಈಶ್ವರ್ ಪ್ರಶ್ನೆ ಕೇಳಿ, ಸೈಕಲ್ ವಿತರಣೆಯನ್ನು ಹಿಂದಿನ ಸರ್ಕಾರ ಸ್ಥಗಿತಗೊಳಿಸಿದೆ. ಅದನ್ನು ಮರು ಆರಂಭಿಸಬೇಕು. ಇದರಿಂದಾಗಿ ವಿದ್ಯಾರ್ಥಿಗಳು ಶಾಲೆ ತೊರೆಯುವ ಪ್ರಕರಣಗಳು ತಗ್ಗಲಿವೆ ಎಂದು ಹೇಳಿದರು. +ವಿಪಕ್ಷ ನಾಯಕ ಆರ್.ಅಶೋಕ್, ಈ ಹಿಂದೆ ಯಡಿಯೂರಪ್ಪ ಈ ಯೋಜನೆಯನ್ನು ಆರಂಭಿಸಿದ್ದರು. ಆದರೆ ಅದು ಸ್ಥಗಿತಗೊಂಡಿದೆ. ರಾಜ್ಯಸರ್ಕಾರದ ಶಕ್ತಿ ಯೋಜನೆಯಿಂದಾಗಿ ತಾಯಂದಿರು ಬಸ್ಸಿನಲ್ಲಿ ಹೋಗುತ್ತಿದ್ದಾರೆ, ಮಕ್ಕಳು ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲೂ ಕೆಲವು ಕಡೆ ಜೆಸಿಬಿಯಲ್ಲಿ ಮಕ್ಕಳು ಪ್ರಯಾಣಿಸುತ್ತಿರುವ ಪ್ರಕರಣಗಳೂ ಕಂಡುಬಂದಿವೆ ಎಂದು ವಿವರಿಸಿದರು. +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಹಿಂದೆ ಆಡಳಿತದಲ್ಲಿದ್ದ ನಿಮ್ಮ ಸರ್ಕಾರವೇ ಸೈಕಲ್ ವಿತರಣೆಯನ್ನು ಸ್ಥಗಿತಗೊಳಿಸಿದೆ. ನಮ್ಮ ಸರ್ಕಾರ ಮತ್ತೆ ಆರಂಭಿಸುವ ಪ್ರಯತ್ನ ಮಾಡುತ್ತಿದೆ ಎಂದರು. ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಬಜೆಟ್‍ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. +ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್‍ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು. +ಒಂದರಿಂದ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆಯಡಿ ಶೈಕ್ಷಣಿಕ ವರ್ಷದಲ್ಲಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಹೇಳಿದರು. ಇದನ್ನು ದುಪ್ಪಟ್ಟು ಪ್ರಮಾಣಕ್ಕೆ ಹೆಚ್ಚಿಸಬೇಕೆಂದು ಪ್ರದೀಪ್ ಈಶ್ವರ್ ಮನವಿ ಮಾಡಿದರು. \ No newline at end of file diff --git a/eesanje/url_46_294_6.txt b/eesanje/url_46_294_6.txt new file mode 100644 index 0000000000000000000000000000000000000000..09fee043082c130ac12d00c34a3674f9b8b69710 --- /dev/null +++ b/eesanje/url_46_294_6.txt @@ -0,0 +1,8 @@ +ಹಳೆ ಪಿಂಚಣಿ ಜಾರಿ ವರದಿ ವಿಳಂಬ +ಬೆಳಗಾವಿ, ಡಿ.7- ರಾಜ್ಯದಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡುವ ಸಂಬಂಧ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡುವುದು ವಿಳಂಬವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಪರಿಷತ್ತಿಗೆ ತಿಳಿಸಿದರು. +ಸದಸ್ಯರಾದ ಮರಿತಿಬ್ಬೇಗೌಡ, ಎಸ್.ವಿ.ಸಂಕನೂರ, ಹೇಮಲತಾನಾಯಕ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಉತ್ತರಿಸಿದ ಕೃಷ್ಣಬೈರೇಗೌಡ ಅವರು, ಹೊಸ ಪಿಂಚಣಿ ಯೋಜನೆ (ಎನ್‍ಪಿಎಸ್)ಜಾರಿಗೆ ಬಂದ ಮೇಲೆ ಇದನ್ನು ಮುಂದುವರೆಸಬೇಕೆ? ಇಲ್ಲವೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಮಾಡಬೇಕೇ ಎಂಬುದರ ಬಗ್ಗೆ ವಿಸ್ತೃತ ವರದಿ ನೀಡುವಂತೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹಾಗೂ ಇತ್ತರೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. +ಈ ಸಮಿತಿಯು ಈಗಾಗಲೇ ಮೂರು ಬಾರಿ ಸಭೆ ನಡೆಸಿದೆ. ಆದಷ್ಟು ಬೇಗ ವರದಿ ನೀಡುವಂತೆ ಸರ್ಕಾರ ಸಮಿತಿಗ ಸೂಚಿಸಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ವರದಿ ನೀಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ವರದಿ ನೀಡಲು ಸಂಬಂಧಪಟ್ಟವರಿಗೆ ಸೂಚನೆ ನೀಡುವುದಾಗಿ ತಿಳಿಸಿದರು. +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ಎನ್‍ಪಿಎಸ್‍ನಿಂದ ಕೆಲವು ನೌಕರರ ಭವಿಷ್ಯ ನಿಧಿ ಹಣ ಕೇಂದ್ರಕ್ಕೆ ಹೋಗುತ್ತದೆ. ನಾವು ಹಳೇ ಪಿಂಚಣಿ ವ್ಯವಸ್ಥೆ ಮುಂದುವರೆಸಿದರೆ ಈ ಹಣ ಬರುವುದಿಲ್ಲ. ಇದನ್ನು ಹೇಗೆ ಸರಿಪಡಿಸಬೇಕು ಎಂಬುದರ ಬಗ್ಗೆ ಸಮಿತಿ ಕೂಲಂಕುಷವಾಗಿ ಪರಿಶೀಲಿಸಲಿದೆ. +ರಾಜಸ್ಥಾನ ಸರ್ಕಾರ ನಮ್ಮ ನೌಕರರ ಪಿಎಫ್ ಹಣವನ್ನು ಹಿಂದಿರುಗಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ. +ಕೇಂದ್ರದಲ್ಲಿರುವ ನಮ್ಮ ನೌಕರರ ಹಣವನ್ನು ನಾವೇ ಕಟ್ಟಬೇಕು ಎಂದರೆ ಆರ್ಥಿಕವಾಗಿ ಹೊರೆಯಾಗಲಿದೆ. ಈ ಎಲ್ಲದರ ಬಗ್ಗೆಯೂ ಸಮಿತಿ ಪರಿಶೀಲಿಸಿ ವರದಿ ನೀಡಲಿದೆ. ಅದಾದ ನಂತರ ಸರ್ಕಾರ ವರದಿ ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು. \ No newline at end of file diff --git a/eesanje/url_46_294_7.txt b/eesanje/url_46_294_7.txt new file mode 100644 index 0000000000000000000000000000000000000000..672c37d966399f02f51360e315df5e3671463157 --- /dev/null +++ b/eesanje/url_46_294_7.txt @@ -0,0 +1,11 @@ +ಡಯಾಲಿಸಿಸ್ ಕೇಂದ್ರಗಳ ಸಮಸ್ಯೆ ನಿವಾರಿಸಲು ಆಗ್ರಹ +ಬೆಳಗಾವಿ, ಡಿ.7- ಮೂತ್ರಪಿಂಡ ಆರೋಗ್ಯದ ಸಮಸ್ಯೆಗೊಳಗಾದ ರೋಗಿಗಳಿಗೆ ಡಯಾಲಿಸಿಸ್ ಸೌಲಭ್ಯ ಕಲ್ಪಿಸಲು ಒಂದು ತಿಂಗಳ ಒಳಗಾಗಿ ಸಮರ್ಪಕ ವ್ಯವಸ್ಥೆಗಳನ್ನು ಕೈಗೊಳ್ಳುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಉಡುಪಿ ಕ್ಷೇತ್ರದ ಬಿಜೆಪಿ ಶಾಸಕ ಯಶಪಾಲ್ ಸುವರ್ಣ ಕೇಳಿದ ಪ್ರಶ್ನೆ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. +ಪಕ್ಷಾತೀತವಾಗಿ ಶಾಸಕರು ಡಯಾಲಿಸಿಸ್ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಕಾರವಾರದ ಮಂಡಸೂಡು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೌಲಭ್ಯವಿಲ್ಲದೆ ಸಯ್ಯದ್ ಎಂಬುವರು ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಹೊಣೆ ಯಾರು ಎಂದು ಪ್ರಶ್ನಿಸಿದರು. ಸರ್ಕಾರ ಏಜೆನ್ಸಿ ಬದಲಾವಣೆಗೆ ಕ್ರಮ ಕೈಗೊಂಡಿದೆ. ಈ ಅವಧಿಯಲ್ಲಿ ಪರ್ಯಾಯ ಸೌಲಭ್ಯಗಳಿಗೆ ಮುನ್ನೆಚ್ಚರಿಕೆ ವಹಿಸಬೇಕು. ತುರ್ತು ಆರೋಗ್ಯ ಸಮಸ್ಯೆ ಇರುವ ರೋಗಿಗಳಿಗೆ ತೊಂದರೆಯಾಗಬಾರದು ಎಂದು ಒತ್ತಾಯಿಸಿದರು. +ಖಾಸಗಿ ಸಹಭಾಗಿತ್ವದಲ್ಲಿ ಡಯಾಲಿಸಿಸ್ ಯಂತ್ರಗಳನ್ನು ಖರೀದಿಸಲು ಶಾಸಕರು ಕ್ರಮ ಕೈಗೊಳ್ಳುತ್ತಾರೆ. ಅದರ ನಿರ್ವಹಣೆಗೆ ತಂತ್ರಜ್ಞರನ್ನು ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇದರಿಂದಾಗಿ ತುರ್ತು ಸಮಸ್ಯೆ ಇರುವವರಿಗೆ ಸಹಾಯವಾಗಲಿದೆ ಮತ್ತು ಡಯಾಲಿಸಿಸ್ ಸೌಲಭ್ಯವನ್ನು ಆರೋಗ್ಯ ಕರ್ನಾಟಕ ವಿಮಾ ವ್ಯಾಪ್ತಿಗೆ ಒಳಪಡಿಸಿದರೆ ಖಾಸಗಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸಹಾಯವಾಗಲಿದೆ ಎಂದು ಹೇಳಿದರು. ಪಿ.ಎಂ.ಅಶೋಕ್, ರಾಜೇಗೌಡ ಸೇರಿದಂತೆ ಹಲವಾರು ಶಾಸಕರು ಚರ್ಚೆಯಲ್ಲಿ ಭಾಗವಹಿಸಿದ್ದರು. +ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿದ್ದ ಇಎಸ್‍ಕೆಎಜಿ ಸಂಸ್ಥೆ ಸಿಬ್ಬಂದಿಗಳಿಗೆ ವೇತನ, ಇಎಸ್‍ಐ, ಪಿಎಫ್ ಸೌಲಭ್ಯಗಳನ್ನು ಸರಿಯಾಗಿ ನೀಡುತ್ತಿರಲಿಲ್ಲ. ಹೀಗಾಗಿ ಸರ್ಕಾರದಿಂದಲೇ ಇಎಸ್‍ಐ, ಪಿಎಫ್ ಸೌಲಭ್ಯ ನೀಡಲು ನಿರ್ಧರಿಸಲಾಗಿದೆ. ಗುತ್ತಿಗೆ ಪಡೆದ ಇಎಸ್‍ಕೆಎಜಿ ಸಂಸ್ಥೆಗೆ ಅಸಮರ್ಥ ಸೇವೆಗಾಗಿ ದಂಡ ವಿಸಲಾಗಿದ್ದು, ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. +ಜೊತೆಗೆ ರಾಜ್ಯದಲ್ಲಿ 4 ಕಂದಾಯ ವಿಭಾಗಗಳಲ್ಲೂ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಗೆ ಹೊಸ ಗುತ್ತಿಗೆಗಾಗಿ ಟೆಂಡರ್ ಕರೆಯಲಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ ವಿಭಾಗಗಳ ಗುತ್ತಿಗೆ ಅಂತಿಮಗೊಂಡಿವೆ. ಒಂದು ತಿಂಗಳ ಒಳಗಾಗಿ ಹೊಸ ಗುತ್ತಿಗೆದಾರರು ಆಧುನಿಕವಾದ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಿದ್ದಾರೆ. ತಂತ್ರಜ್ಞರು ವೇತನ ಪಾವತಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಿ ಉತ್ತಮವಾಗಿ ನಿರ್ವಹಣೆ ಮಾಡುವ ನಿರೀಕ್ಷೆಯಿದೆ. +ಈ ಬಾರಿ ಏಕ ಬಳಕೆಯ ಡಯಲೈಸರ್‍ಗಳನ್ನು ಉಪಯೋಗಿಸಲು ನಿರ್ಧರಿಸಲಾಗಿದೆ. ಈ ಮೊದಲು ಬಹು ಬಳಕೆಯ ಡಯಲೈಸರ್‍ಗಳಿಂದಾಗಿ ಸೋಂಕು ವ್ಯಾಪಿಸುವ ಆತಂಕ ಇತ್ತು. ಶುದ್ಧ ನೀರಿನ ಘಟಕ ಸೇರಿದಂತೆ ಹಲವಾರು ಅಗತ್ಯಗಳು ಬೇಕಿದ್ದು, ಏಕ ಬಳಕೆ ಸುರಕ್ಷಿತವಾಗಿದೆ ಎಂದು ತಿಳಿಸಿದರು. +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ಕಲಬುರ್ಗಿ ವಿಭಾಗದ ಟೆಂಡರ್‍ನ ದರದಲ್ಲಿ ಹೊಂದಾಣಿಕೆಯಾಗಿಲ್ಲ. ಹೀಗಾಗಿ ಅಲ್ಲಿಗೆ ಮರು ಟೆಂಡರ್ ಕರೆಯಲಾಗಿದೆ. ಡಯಾಲಿಸಿಸ್ ಕೇಂದ್ರಗಳನ್ನು ನಮ್ಮ ಸರ್ಕಾರ 168 ರಿಂದ 219 ಕ್ಕೆ ಹೆಚ್ಚಿಸಿದೆ. ಡಯಾಲಿಸಿಸ್ ಯಂತ್ರಗಳ ಸಂಖ್ಯೆಯನ್ನು 490 ರಿಂದ 800 ಕ್ಕೆ ಹೆಚ್ಚಿಸಲಾಗಿದೆ. 59 ಹೊಸ ತಾಲೂಕುಗಳ 48 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು. +ಮುಷ್ಕರ ನಿರತ ತಂತ್ರಜ್ಞರ ಜೊತೆ ಸಂಧಾನ ನಡೆಸಿದ್ದು, ಅವರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಈಗ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಗುತ್ತಿಗೆ ಸಂಸ್ಥೆಯ ಬದಲಾಗಿ ಆಯಾ ಜಿಲ್ಲೆಗಳ ಕುಟುಂಬ ಕಲ್ಯಾಣ ಆರೋಗ್ಯಾಧಿಕಾರಿಗಳೇ ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಹೆಚ್ಚುವರಿ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸುವುದಾದರೆ ಅಗತ್ಯವಾದ ತಂತ್ರಜ್ಞರನ್ನು ಒದಗಿಸಲು ಸರ್ಕಾರ ಸಿದ್ಧವಿದೆ. +ಪ್ರಸ್ತುತ ಡಯಾಲಿಸಿಸ್ ಕೇಂದ್ರಗಳಲ್ಲಿ ಗುತ್ತಿಗೆ ಪಡೆದ ಸಂಸ್ಥೆಗಳೇ ಯಂತ್ರಗಳನ್ನು ಅಳವಡಿಸುತ್ತಾರೆ. ಸರ್ಕಾರ ಯಾವುದೇ ಯಂತ್ರಗಳನ್ನೂ ಹಾಕುವುದಿಲ್ಲ ಎಂದು ತಿಳಿಸಿದರು. ಡಯಾಲಿಸಿಸ್ ಸೇವೆಯನ್ನು ಆರೋಗ್ಯ ಕರ್ನಾಟಕ ವಿಮಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು. \ No newline at end of file diff --git a/eesanje/url_46_294_8.txt b/eesanje/url_46_294_8.txt new file mode 100644 index 0000000000000000000000000000000000000000..c25b7412f803cbf9511ae06eae73317141cc56c0 --- /dev/null +++ b/eesanje/url_46_294_8.txt @@ -0,0 +1,9 @@ +ಒಗ್ಗಟ್ಟು ಪ್ರದರ್ಶನ : ಕಾಂಗ್ರೆಸ್ ವಿರುದ್ಧ ಜೆಡಿಎಸ್-ಬಿಜೆಪಿ ಮೈತ್ರಿ ತಂತ್ರ ಯಶಸ್ವಿ +ಬೆಂಗಳೂರು, ಡಿ.7- ಎನ್‍ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಮಿತ್ರ ಪಕ್ಷಗಳಾದ ಜೆಡಿಎಸ್-ಬಿಜೆಪಿ ನಡುವೆ ಒಗ್ಗಟ್ಟು ಪ್ರದರ್ಶನವಾಗುತ್ತಿದೆ. ಸದನದ ಒಳ-ಹೊರಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಆರೋಪ, ಟೀಕೆಗಳನ್ನು ಮಾಡುತ್ತಿವೆ. ಸರ್ಕಾರದ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಹರಿಹಾಯುತ್ತಿವೆ. +ಮುಂಬರುವ ಲೋಕಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ಉಭಯ ಪಕ್ಷಗಳು ಒಂದಾಗಿವೆ. ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧದ ಹೋರಾಟಗಳನ್ನು ಎರಡೂ ಪಕ್ಷಗಳು ಜತೆಗೂಡಿ ನಡೆಸುತ್ತಿವೆ. ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಎರಡೂ ಪಕ್ಷಗಳು ಜಂಟಿಯಾಗಿ ನೋಟಿಸ್ ನೀಡಿ ಚರ್ಚೆ ಆರಂಭಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ನೀಡುವ ಬಹಿರಂಗ ಹೇಳಿಕೆಗಳ ವಿರುದ್ಧವಾಗಿ ಬಿಜೆಪಿ-ಜೆಡಿಎಸ್ ಟೀಕಿಸುವ ಇಲ್ಲವೆ ವಿರೋಧಿಸುವ ಮೂಲಕ ತೀಕ್ಷ್ಣ ಹೇಳಿಕೆ ನೀಡುತ್ತಿವೆ. +ಆದರೆ, ವಿಧಾನಸಭೆ ಚುನಾವಣೆಗೂ ಮುನ್ನ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದ ಈ ಎರಡೂ ಪಕ್ಷಗಳು ಈಗ ಪರಸ್ಪರ ಟೀಕಿಸುವ ಇಲ್ಲವೆ ಆರೋಪ ಮಾಡುವ ಗೋಜಿಗೆ ಹೋಗುತ್ತಿಲ್ಲ. ಬದಲಿಗೆ ಒಟ್ಟಾಗಿ ಗೆಳೆತನದೊಂದಿಗೆ ಲೋಕಸಭೆ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ. +ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು +ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ಮೇಲೆ ಮಿತ್ರ ಪಕ್ಷಗಳ ಸಖ್ಯ ಇನ್ನಷ್ಟು ಗಟ್ಟಿಯಾಗಿದೆ. ಕಾಂಗ್ರೆಸ್‍ನತ್ತ ಮುಖ ಮಾಡಿದ್ದ ಜೆಡಿಎಸ್, ಬಿಜೆಪಿಯ ಕೆಲವು ಮುಖಂಡರು ಸದ್ಯಕ್ಕೆ ತಟಸ್ಥ ನಿಲುವು ತಳೆದು ತಮ್ಮ ತಮ್ಮ ಪಕ್ಷದಲ್ಲೇ ಉಳಿದಿದ್ದಾರೆ. +ಸದನದ ಒಳ-ಹೊರಗೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ತರಾಟೆಗೆ ತೆಗೆದುಕೊಳ್ಳುವ ಕಾರ್ಯತಂತ್ರ ರೂಪಿಸಿವೆ. ಅದರಂತೆ ನಿತ್ಯವೂ ಒಟ್ಟಿಗೆ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡುತ್ತಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿವೆ. ಗುರಿ ತಲುಪಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿವೆ. ಅದರ ಭಾಗವಾಗಿಯೇ ಜತೆಗೂಡಿ ಹೋರಾಟ ನಡೆಸುತ್ತಿವೆ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. +ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿಯಲ್ಲಿ ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಒಂದೆಡೆ ನಡೆದರೆ, ಮತ್ತೊಂದೆಡೆ ಔತಣ ಕೂಟದ ನೆಪದಲ್ಲಿ ಬಿಜೆಪಿ-ಜೆಡಿಎಸ್ ಶಾಸಕರು ಒಟ್ಟಿಗೆ ಸೇರಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಎರಡೂ ಪಕ್ಷದ ಶಾಸಕರಿಗೆ ಔತಣ ಕೂಟ ಆಯೋಜಿಸಿದ್ದರು. ಇದೊಂದು ಸೌಹಾರ್ಧ ಔತಣ ಕೂಟವಾಗಿತ್ತು. ಯಾವುದೇ ರಾಜಕೀಯ ವಿಚಾರಗಳು ಚರ್ಚೆಗೆ ಬರಲಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. +ಆದರೆ, ಒಟ್ಟಿಗೆ ಸೇರಿ ಔತಣ ಕೂಟದಲ್ಲಿ ಭಾಗಿಯಾಗಿರುವುದೇ ರಾಜಕೀಯವಾಗಿ ಮಿತ್ರ ಪಕ್ಷಗಳಲ್ಲಿ ಒಗ್ಗಟ್ಟಿದೆ ಎಂಬ ಸಂದೇಶ ರವಾನಿಸುವುದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು ಸೇರಿದಂತೆ ಕೆಲವರು ಔತಣಕೂಟದಲ್ಲಿ ಭಾಗಿಯಾಗಿರಲಿಲ್ಲ ಎಂದು ಮೂಲಗಳು ಹೇಳಿವೆ. \ No newline at end of file diff --git a/eesanje/url_46_294_9.txt b/eesanje/url_46_294_9.txt new file mode 100644 index 0000000000000000000000000000000000000000..8c9fec8a997db2a1b24be5f93239a043d00b100c --- /dev/null +++ b/eesanje/url_46_294_9.txt @@ -0,0 +1,8 @@ +ಮೌಲ್ವಿಗೆ ಉಗ್ರರ ನಂಟು, ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ +ಬೆಳಗಾವಿ,ಡಿ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಉಗ್ರರ ಸಂಪರ್ಕ ಹೊಂದಿರುವ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಆರೋಪಿಸಿದ್ದ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರೀಯ ತನಿಖಾ ದಳ ( ಎನ್‍ಐಎ) ದಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದಾರೆ. +ಸಿದ್ದರಾಮಯ್ಯನವರು ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಸಂಬಂಧಿಸಿದ ಕೆಲವು ಫೋಟೋ ಟ್ವೀಟ್ ಮಾಡಿದ್ದರು. ಮೌಲ್ವಿ ಕೂಡ ಉಗ್ರರ ಸಂಪರ್ಕ ಇರುವುದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಮೌಲ್ವಿ ಉಗ್ರರ ಸಂಪಕ ಹೊಂದಿರುವ ಆರೋಪದ ಬಗ್ಗೆ ಎನ್‍ಐಎ ತನಿಖೆ ನಡೆಸುವಂತೆ ಮನವಿ ಮಾಡಿ ಪತ್ರವನ್ನು ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ. +ಇದಕ್ಕೂ ಮೊದಲು ಈ ಬಗ್ಗೆ ಟ್ವೀಟ್ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವೀರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಒಂದು ಟ್ವೀಟ್ ಪೋಸ್ಟ್‍ನಲ್ಲಿ ಬರೆದುಕೊಂಡಿದ್ದರು. +ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ +ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು. ಕೆಲವೇ ದಿನಗಳಲ್ಲಿ ತನ್ವೀರ್ ಪೀರಾ ಎಂಬುವವರ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಟಕ ಆರೋಪ ಮಾಡಿದ್ದರು. +ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು +ಹಾಗೆಯೇ ಮತ್ತೊಂದು ಟ್ವೀಟ್‍ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ಕುರಿತು ಆರೋಪ ಮಾಡುತ್ತಾ, ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದಿದ್ದರು. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದರು. \ No newline at end of file diff --git a/eesanje/url_46_295_1.txt b/eesanje/url_46_295_1.txt new file mode 100644 index 0000000000000000000000000000000000000000..a751d6610f6fd74e2e39aeefc316a52588958959 --- /dev/null +++ b/eesanje/url_46_295_1.txt @@ -0,0 +1,9 @@ +ಎಂ.ಎಂ.ಕಲುಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ : ಸಿಎಂ +ಬೆಳಗಾವಿ, ಡಿ.6- ಹಿರಿಯ ಸಾಹಿತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಹಾಗೂ ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ. +ಈ ಸಂಬಂಧ ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಎಂ.ಎಂ.ಕಲಬುರ್ಗಿ ಅವರು ವಿಶೇಷ ನ್ಯಾಯಾಲಯ ರಚಿಸುವಂತೆ ಕೋರಿರುವ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. +ಗೌರಿ ಸಹೋದರಿ ಕವಿತಾ ಲಂಕೇಶ್ರವರೂ ಕೂಡ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕೋರಿದ್ದಾರೆ. ಈ ಬಗ್ಗೆ ಜರೂರು ಅಗತ್ಯ ಕ್ರಮ ವಹಿಸಲು ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಸೂಚಿಸಿದ್ದಾರೆ. ಈ ಎರಡೂ ಪ್ರಕರಣಗಳ ಬಗ್ಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ. +ಹಿರಿಯ ಸಾಹಿತಿ ಹಾಗೂ ಕನ್ನಡ ಸಂಶೋಧನಾ ಕ್ಷೇತ್ರದ ದಿಗ್ಗಜ ಡಾ.ಎಂ.ಎಂ.ಕಲಬುರ್ಗಿ ಅವರು 2015 ರ ಆಗಸ್ಟ್ 31 ರಂದು ಧಾರವಾಡದ ಅವರ ಸ್ವಗೃಹದಲ್ಲಿ ಹತ್ಯೆಯಾಗಿದ್ದರು. ಹತ್ಯೆಯಾಗಿ 7 ವರ್ಷಗಳು ಪೂರ್ಣಗೊಂಡಿವೆ. ಈ ಪ್ರಕರಣದ ಸಂಬಂಧ 2018-19 ರಲ್ಲಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. +ಮೃತರ ಕುಟುಂಬದವರ ವಿಚಾರಣೆಗಳು ಪೂರ್ಣಗೊಂಡಿದ್ದರೂ ನ್ಯಾಯಾಲಯದಲ್ಲಿ ವಿಚಾರಣೆಗಳು ಮುಂದುವರೆದಿವೆ. ಈಗಾಗಲೇ ಸಾಕಷ್ಟು ಸಮಯವಾಗಿದ್ದು, ವಿಶೇಷ ನ್ಯಾಯಾಲಯ ರಚಿಸುವಂತೆ ಕಲಬುರ್ಗಿಯವರ ಪತ್ನಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ. +ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ +ಖ್ಯಾತ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ 2017 ರ ಸೆಪ್ಟೆಂಬರ್ 5 ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೆ ಒಳಗಾಗಿದ್ದು, 1200 ಪುರಾವೆ ಹಾಗೂ 5 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನು ಒಳಗೊಂಡ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. +ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ 2022 ರ ಜುಲೈನಿಂದ ಪ್ರಾರಂಭವಾಗಿದೆ. ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ ಪೂರ್ಣಾವ ನ್ಯಾಯಾೀಶರನ್ನು ನೇಮಕ ಮಾಡುವಂತೆ ಕವಿತಾ ಲಂಕೇಶ್ ಕೋರಿದ್ದು, ಮುಖ್ಯಮಂತ್ರಿ ಒಳಾಡಳಿತ ಇಲಾಖೆಗೆ ಅಗತ್ಯ ಕ್ರಮ ಜರುಗಿಸಲು ಸೂಚಿಸಿದ್ದಾರೆ. \ No newline at end of file diff --git a/eesanje/url_46_295_10.txt b/eesanje/url_46_295_10.txt new file mode 100644 index 0000000000000000000000000000000000000000..051a83584ec02e7d07dbdf30305cdf8a34bd6e5c --- /dev/null +++ b/eesanje/url_46_295_10.txt @@ -0,0 +1,6 @@ +ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ : ಹೆಚ್‌ಡಿಕೆ +ಬೆಳಗಾವಿ,ಡಿ.6- ಸಂಕಷ್ಟದಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಅಂಗವಾಗಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. +ರಾಜ್ಯ ಸರ್ಕಾರದ ವೈಫಲ್ಯ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ಸದನದಲ್ಲಿ ಚರ್ಚಿಸಲಾಗುವುದು ಎಂದರು. ರೈತರಿಗೆ ಯಾವುದೇ ರೀತಿಯ ಸ್ಪಂದನೆ ರಾಜ್ಯ ಸರ್ಕಾರದಿಂದ ಸಿಗುತ್ತಿಲ್ಲ. ರಾಜ್ಯದಲ್ಲಿ ಆರ್ಥಿಕ ಸಮಸ್ಯೆಗಳಿಲ್ಲ. ನಾಡಿನ ಜನರು ತೆರಿಗೆ ಕಟ್ಟುತ್ತಿದ್ದರು. ಸಾಕಷ್ಟು ತೆರಿಗೆ ಸಂಗ್ರಹವೂ ಆಗುತ್ತಿದೆ ಎಂದ ಅವರು, ಹಣದ ಕೊರತೆ ಇದ್ದರೆ ರಾಜ್ಯ ಸರ್ಕಾರಕ್ಕೆ ಏಕೆ ನಡೆಸಬೇಕು ಎಂದು ಅವರು ಪ್ರಶ್ನಿಸಿದರು. +ಗಂಗಾಕಲ್ಯಾಣ ಬೋರ್‌ವೆಲ್‌ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ +ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆರ್ಥಿಕ ನೆರವು ನೀಡುವಂತೆ ಕೋರಲಾಗಿದೆ ಎಂದು ಹೇಳಿದರು. ಅಸಮಾನತೆ ಹೋಗಲಾಡಿಸಲು ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಶಾಶ್ವತವಾಗಿದೆ. ದನಿ ಇಲ್ಲದವರಿಗೆ ಧ್ವನಿಯನ್ನು ನೀಡಿದ್ದಾರೆ ಎಂದು ಸ್ಮರಿಸಿದರು. +ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಲು ಪ್ರತಿಯೊಬ್ಬರು ಕ್ಷಮಿಸಬೇಕು. ಆ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಬೇಕು ಎಂದರು. \ No newline at end of file diff --git a/eesanje/url_46_295_11.txt b/eesanje/url_46_295_11.txt new file mode 100644 index 0000000000000000000000000000000000000000..99907bb3091af8d4edc3e22db77e452f6e030e5b --- /dev/null +++ b/eesanje/url_46_295_11.txt @@ -0,0 +1,7 @@ +ಹಾಲಿನ ದರ ಹೆಚ್ಚಿಸಲು ಸರ್ಕಾರ ಸಿದ್ಧವಿದೆ : ಸಚಿವ ಕೆ.ವೆಂಕಟೇಶ್ +ಬೆಳಗಾವಿ,ಡಿ.6- ಸದನದ ಸದಸ್ಯರು ಸಮ್ಮತಿಸಿದರೆ ರೈತರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಹಾಲಿನ ಮಾರಾಟ ದರವನ್ನು ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ಪಶುಸಂಗೋಪನ ಸಚಿವ ಕೆ.ವೆಂಕಟೇಶ್ ವಿಧಾನಪರಿಷತ್‍ಗೆ ತಿಳಿಸಿದರು. +ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಕೆ.ಹರೀಶ್‍ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಲಿನ ಮಾರಾಟ ದರವನ್ನು ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇದೆ. ಇದರಿಂದ ರೈತರಿಗೆ ಅನುಕೂಲವಾಗುವುದಾದರೆ ಖಂಡಿತವಾಗಿಯೂ ನಮ್ಮ ಸರ್ಕಾರ ಸಿದ್ಧವಿದೆ. ಆದರೆ ಅದಕ್ಕೂ ಮುನ್ನ ಸದನ ಸದಸ್ಯರ ಒಪ್ಪಿಗೆ ಅಗತ್ಯ ಎಂದು ಮನವಿ ಮಾಡಿದರು. +ಕರ್ನಾಟಕ ಹಾಲು ಮಹಾಮಂಡಳಿಯು ಪಶು ಆಹಾರ ಉತ್ಪಾದನೆಗೆ ಅವಶ್ಯಕವಿರುವ ಕಚ್ಚಾ ಪದಾರ್ಥಗಳ ವೆಚ್ಚದ ಮೇಲೆ ಪಶು ಆಹಾರದ ದರವನ್ನು ಹೆಚ್ಚಳ ಮಾಡಿದೆ. ಒಂದು ಮೆಟ್ರಿಕ್ ಟನ್‍ಗೆ ಒಂದು ಸಾವಿರ ರೂ.ಗಳಾದರೆ, ಒಂದು ಕೆಜಿಗೆ 1 ರೂ. ಹೆಚ್ಚಳವಾಗಿದೆ. ಇದಕ್ಕೆ ಬಳಸುವ ಕಚ್ಚಾ ಪದಾರ್ಥಗಳ ದರ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಆಧರಿಸಿ ದರವನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಿದರು. +ಮತ್ತೆ ಅಮೆರಿಕ ಅಧ್ಯಕ್ಷನಾದರೆ ಸರ್ವಾಧಿಕಾರಿಯಾಗಿ ಬದಲಾಗುವುದಿಲ್ಲ : ಟ್ರಂಪ್ +ಆಗ ವೆಂಕಟೇಶ್ ಅವರು ಸಭಾಪತಿ ಹೊರಟ್ಟಿ ಅವರತ್ತ, ನೀವು ಕೂಡ ಹಸುಗಳನ್ನು ಸಾಕಿದ್ದೀರಿ, ಪಶು ಆಹಾರದ ಕಚ್ಚಾ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದು ನಿಮಗೂ ಗೊತ್ತು ಎಂದಾಗ, ಆಗ ಹೊರಟ್ಟಿಯವರು, ಒಂದು ಮೆಟ್ರಿಕ್ ಟನ್‍ಗೆ ಒಂದು ಸಾವಿರ ರೂ. ಮಾಡಿದ್ದೀರಲ್ಲವೇ? ಎಂದು ಪ್ರಶ್ನೆ ಹಾಕಿದರು. +ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣಕನ್ನಡದಲ್ಲಿ ಪ್ರತಿ ಲೀಟರ್ ಹಾಲಿಗೆ 40ರೂ. 85 ಪೈಸೆ ಕೊಡುತ್ತೇವೆ. ಇದಕ್ಕೆ ಬೆಂಬಲ ಬೆಲೆ ಸಿಗುವುದರಿಂದ ಇದು ಇನ್ನಷ್ಟು ಹೆಚ್ಚಾಗುತ್ತದೆ. ಆದರೆ ಮೈಸೂರು, ಕೊಡುಗು ಬೇರೆ ಬೇರೆ ಭಾಗಗಳಲ್ಲಿ ಇದರ ದರ ಕಡಿಮೆ ಇದೆ ಎಂದು ಮಾಹಿತಿ ನೀಡಿದರು. \ No newline at end of file diff --git a/eesanje/url_46_295_12.txt b/eesanje/url_46_295_12.txt new file mode 100644 index 0000000000000000000000000000000000000000..2dba4c1d9e15a63e4b74a232ebcf22da9f3cdf18 --- /dev/null +++ b/eesanje/url_46_295_12.txt @@ -0,0 +1,13 @@ +ಗಂಗಾಕಲ್ಯಾಣ ಬೋರ್‌ವೆಲ್‌ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ +ಬೆಳಗಾವಿ, ಡಿ.6- ಹಿಂದುಳಿದ ವರ್ಗದ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾಕಲ್ಯಾಣ ಯೋಜನೆಯಡಿ ನಿರೀಕ್ಷಿತ ಮಟ್ಟದಲ್ಲಿ ಬೋರ್‌ವೆಲ್‌ ಗಳ ಮಂಜೂರಾತಿ ಆಗುತ್ತಿಲ್ಲ ಎಂದು ಪಕ್ಷಾತೀತವಾಗಿ ಶಾಸಕರು ವಿಧಾನಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಪ್ರಶ್ನೋತ್ತರದ ಅವಧಿಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಮತ್ತು ಚಾಮರಾಜನಗರದ ಪುಟ್ಟರಂಗಶೆಟ್ಟಿ ಅವರು ಕೇಳಿದ ಪ್ರಶ್ನೆಗಳು ವ್ಯಾಪಕ ಚರ್ಚೆಗಳಿಗೆ ಗ್ರಾಸವಾಯಿತು. +ಪುಟ್ಟರಂಗಶೆಟ್ಟಿಯವರು ಪ್ರಶ್ನೆ ಕೇಳುತ್ತಾ, ವಿವಿಧ ಅಭಿವೃದ್ಧಿ ನಿಗಮಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಆದರೆ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಮೀಸಲಿಟ್ಟಿಲ್ಲ. ಹೀಗಾಗಿ ಜನರಿಗೆ ಸೌಲಭ್ಯ ಸಿಗುತ್ತಿಲ್ಲ . ಪ್ರತಿದಿನ ಅರ್ಜಿ ಹಿಡಿದು ಸಾವಿರಾರು ಮಂದಿ ನಮ್ಮ ಮನೆಬಾಗಿಲಿಗೆ ಬರುತ್ತಿದ್ದಾರೆ. ಅವರಿಗೆ ಸಮಜಾಯಿಷಿ ನೀಡುವುದೇ ಕಷ್ಟವಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಬಿ.ಸಿ.ಪಾಟೀಲ್ ಮಾತನಾಡಿ, ವಿವಿಧ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಗಂಗಾ ಕಲ್ಯಾಣ ಯೋಜನೆಯಡಿ ಒಂದು ಅಥವಾ ಎರಡು ಬೋರ್‍ವೆಲ್‍ಗಳನ್ನು ಮಂಜೂರು ಮಾಡುತ್ತಿದ್ದಾರೆ. ಇದರಿಂದ ಫಲಾನುಭವಿಗಳ ಆಯ್ಕೆ ಕಷ್ಟವಾಗುತ್ತಿದೆ ಎಂದು ಆಕ್ಷೇಪಿಸಿದರು. ಶಾಸಕ ಸಿದ್ಧು ಸವದಿ ಇದಕ್ಕೆ ಧ್ವನಿಗೂಡಿಸಿದರು. +ಉತ್ತರ ನೀಡಿದ ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ ತಂಗಡಗಿ ಈ ಹಿಂದಿನ ಸರ್ಕಾರದಲ್ಲಿ ಭಾಷಣ ಮಾಡಿದ ಕಡೆಯಲ್ಲೆಲ್ಲಾ ಜಾತಿವಾರು ಅಭಿವೃದ್ಧಿ ನಿಗಮಗಳನ್ನು ಘೋಷಣೆ ಮಾಡಲಾಗಿದೆ. +ಮತ್ತೆ ಅಮೆರಿಕ ಅಧ್ಯಕ್ಷನಾದರೆ ಸರ್ವಾಧಿಕಾರಿಯಾಗಿ ಬದಲಾಗುವುದಿಲ್ಲ : ಟ್ರಂಪ್ +ಆದರೆ ಸರಿಯಾದ ಅನುದಾನ ಹಂಚಿಕೆ ಮಾಡಿಲ್ಲ. ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮಡಿವಾಳ, ನೇಕಾರ, ಉಪ್ಪಾರ, ಗಾಣಿಗ, ವಿಶ್ವಕರ್ಮ, ಸವಿತ ಸಮಾಜ ಸೇರಿದಂತೆ 11 ಕ್ಕೂ ಹೆಚ್ಚು ನಿಗಮಗಳನ್ನು ಘೋಷಣೆ ಮಾಡಲಾಗಿದೆ. ಆದರೆ ಅನುದಾನ ನೀಡಿಲ್ಲ. ನಾವು ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿದ್ದು, ನಿಗಮಗಳನ್ನು ನೋಂದಣಿ ಮಾಡಿಸಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. +ದೇವರಾಜು ಅರಸು ಅಭಿವೃದ್ಧಿ ನಿಗಮದಲ್ಲಿ ಸಾಕಷ್ಟು ಅನುದಾನವಿದೆ. ಬೋರ್‍ವೆಲ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಸಣ್ಣ ಪ್ರಮಾಣದ ಜನಸಂಖ್ಯೆ ಹೊಂದಿರುವ ಸಮುದಾಯಗಳ ನಿಗಮಗಳಿಗೆ ಅನುದಾನ ಇಲ್ಲ. ಆದರೂ ವಿವಿಧ ಸೌಲಭ್ಯಗಳ ಹಂಚಿಕೆಗೆ ಗುರಿ ನಿಗದಿಪಡಿಸಲಾಗಿದೆ. +ಹಿಂದಿನ ಆರ್ಥಿಕ ವರ್ಷದಲ್ಲಿ ಲಭ್ಯವಿರುವ ಅನುದಾನದ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಫೆಬ್ರವರಿಯ ವೇಳೆಗೆ ಸ್ವಾವಲಂಬಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್‍ವೆಲ್‍ಗಳನ್ನು ಕೊರೆಸಲಾಗುವುದು ಎಂದರು. ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಫೆಬ್ರವರಿಯಲ್ಲಿ ಸಾಧ್ಯವಾಗದಿದ್ದರೆ ಮಾರ್ಚ್ ಒಳಗಾದರೂ ಬೋರ್‍ವೆಲ್ ಕೊರೆಸುವ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. +ಗೆದ್ದ 3 ರಾಜ್ಯಗಳಲ್ಲಿ ಬಿಜೆಪಿಯ ಹೊಸ ಮುಖಗಳಿಗೆ ಸಿಎಂ ಸ್ಥಾನ +ಶಾಸಕ ಧೀರಜ್ ಮುನಿರಾಜು ಕೂಡ ಅನುದಾನದ ಅಲಭ್ಯತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಶಾಸಕರಾದ ಚಂದ್ರಪ್ಪ ಅವರು ಇದರಲ್ಲಿ ಭಾಗವಹಿಸಿ ಆನ್‍ಲೈನ್‍ನಲ್ಲಿ ಅರ್ಜಿ ಪಡೆಯುತ್ತಾರೆ. 4 ಸಾವಿರ ಮಂದಿ ಅರ್ಜಿ ಹಾಕಿದ್ದಾರೆ. ಇವರು ಒಬ್ಬರಿಗೆ ಮಾತ್ರ ಸೌಲಭ್ಯ ನೀಡುವುದರಿಂದ ಸಾವಿರಾರು ಮಂದಿ ದಿನ ಬೆಳಗಾದರೆ ಶಾಸಕರ ಬಳಿ ಬಂದು ಸೌಲಭ್ಯ ಕೊಡಿಸಿ ಎಂದು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಸಮಸ್ಯೆಯಾಗುತ್ತಿದೆ ಎಂದರು. +ಸುರೇಶ್‍ಬಾಬು ಅವರು ಮಧ್ಯಪ್ರವೇಶಿಸಿ ಪ್ರತಿ ವರ್ಷವೂ ಯೋಜನೆಗಾಗಿ ಹೊಸದಾಗಿ ಅರ್ಜಿ ಹಾಕಲು ಒಂದು ಸಾವಿರ ರೂ. ಖರ್ಚಾಗುತ್ತಿದೆ. ಅದರ ಬದಲು ಒಮ್ಮೆ ಸಲ್ಲಿಕೆಯಾದ ಅರ್ಜಿಯನ್ನೇ ಯೋಜನೆ ಸಿಗುವವರೆಗೂ ಅಥವಾ ಜೀವನಪರ್ಯಂತ ಪರಿಗಣಿಸುವಂತೆ ಸಲಹೆ ನೀಡಿದರು. +ಆಡಳಿತ ಪಕ್ಷದ ಶಾಸಕ ನರೇಂದ್ರಸ್ವಾಮಿ ಹಿಂದಿನ ಸರ್ಕಾರದಲ್ಲಿ ಒಂದು ಬೋರ್‍ವೆಲ್ ಕೂಡ ಕೊರೆಸಿಲ್ಲ. ಅದರ ಬಗ್ಗೆ ವಿರೋಧ ಪಕ್ಷಗಳ ಶಾಸಕರು ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_295_2.txt b/eesanje/url_46_295_2.txt new file mode 100644 index 0000000000000000000000000000000000000000..ff3aeb4fe08bba4323402b7404bc19542e918b0a --- /dev/null +++ b/eesanje/url_46_295_2.txt @@ -0,0 +1,5 @@ +ರಾಜ್ಯದ ಮದರಸಾಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಬೋಧನೆ ಕಡ್ಡಾಯ +ಬೆಳಗಾವಿ,ಡಿ.6-ರಾಜ್ಯ ವ್ಯಾಪಿ ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರವನ್ನು ಬೋಧಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. +ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಧಾರ್ಮಿಕ ಬೋಧನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋದನೆ ಮಾಡಲಾಗುವುದು ಎಂದರು. +ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..? +ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ ಆಸ್ತಿಗಳಲ್ಲಿ ಹಾಗೂ ವಕ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ಕನ್ನಡ, ಇಂಗ್ಲೀಷ್, ವಿಜಾ್ಞನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಸತತವಾಗಿ ಬೋಸಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_295_3.txt b/eesanje/url_46_295_3.txt new file mode 100644 index 0000000000000000000000000000000000000000..f79083132c559ea3fe642ed451d1e9965fbd7d10 --- /dev/null +++ b/eesanje/url_46_295_3.txt @@ -0,0 +1,7 @@ +ಬರಗಾಲದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸರಬರಾಜಿಗೆ ನಿಬಂಧನೆ +ಬೆಳಗಾವಿ, ಡಿ. 6- ಬರಗಾಲ ಹಿನ್ನೆಲೆಯಲ್ಲ ರಾಜ್ಯದಿಂದ ಯಾವುದೇ ಕಾರಣಕ್ಕೂ ಮೇವು ಹೊರ ರಾಜ್ಯಕ್ಕೆ ಹೋಗಬಾರದು ಎಂದು ನಿಬಂಧನೆ ಹೇರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. +ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು ಪ್ರಸ್ತಾಪಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇವಿನ ಕೊರತೆ ಉಂಟಾಗದಂತೆ ರೈತರಿಗೆ ಮೇವಿನ ಬೀಜ ವಿತರಿಸಲು 20 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು. +ಬರ ಪರಿಹಾರ ಕಾರ್ಯಗಳಿಗಾಗಿ ಪ್ರಕೃತಿ ವಿಕೋಪ ಪರಿಹಾರ ನಿಯಡಿ ಪ್ರತಿ ಬರಪೀಡಿತ ತಾಲ್ಲೂಕಿಗೆ 324 ಕೋಟಿ ರೂ.ಗಳನ್ನು ರಾಜದ ಎಲ್ಲಾ ಜಿಲ್ಲೆಗಳಿಗೆ ಬಿಡುಗಡೆಗೊಳಿಸಲಾಗಿದೆ ಎಂದು ವಿವರಿಸಿದರು. +ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..? +ಇನ್ನೂ, ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಎನ್ ಡಿಆರ್ಎಫ್ ಅನುದಾನವನ್ನು ನಿರೀಕ್ಷಿಸಿ ಮಾರ್ಗನೋಚಿಗಳ ಪ್ರಕಾರ ಬೆಳೆ ಹಾನಿ ಪರಿಹಾರದ ಮೊದಲನೆ ಕಂತಾಗಿ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಯ ಅನುಗೋಣವಾಗಿ 2,000 ಸಾವಿರವರೆಗೆ ಅರ್ಹ ರೈತರಿಗೆ ಪಾವತಿಲು ತೀರ್ಮಾನಿಸಿದೆ ಎಂದು ಹೇಳಿದರು. +ಇದಕ್ಕೂ ಮೊದಲು ಎನ್.ರವಿಕುಮಾರ್ ಪ್ರಸ್ತಾಪಿಸಿ, ರಾಜ್ಯ ಸರ್ಕಾರದ ಕೇಂದ್ರದ ಪರಿಹಾರಕ್ಕೂ ಮೊದಲು 10 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವ ಮೂಲಕ ರೈತರ ಹಿತ ಕಾಪಾಡಲಿ ಎಂದು ಆಗ್ರಹಿಸಿದರು. \ No newline at end of file diff --git a/eesanje/url_46_295_4.txt b/eesanje/url_46_295_4.txt new file mode 100644 index 0000000000000000000000000000000000000000..34dbb5e69d7b7824198ef3b91478e45c67ed501d --- /dev/null +++ b/eesanje/url_46_295_4.txt @@ -0,0 +1,7 @@ +ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..? +ಬೆಂಗಳೂರು,ಡಿ.6- ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರನ್ನು ಹಣಕಾಸು ವಿಚಾರಕ್ಕೆ ಅಪಹರಿಸಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. +6 ತಂಡ ರಚನೆ:ಮಹದೇವಯ್ಯಅವರನ್ನು ಅವರದ್ದೇ ಕಾರಿನಲ್ಲಿ ಅಪಹರಿಸಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಚನ್ನಪಟ್ಟಣ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ವಿವಿಧ ದೃಷ್ಟಿಕೋನಗಳಲ್ಲಿ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿವೆ. +ಪರಿಚಯಸ್ಥರೇ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಒಂದು ತಂಡ ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದೆ.ಮಹದೇವಯ್ಯ ಅವರು ಕಾಣೆಯಾಗಿದ್ದ ತೋಟದ ಮನೆಯನ್ನು ಇಂಚಿಂಚೂ ಬಿಡದೆ ಪರಿಶೀಲನೆ ನಡೆಸಿರುವ ಪೊಲೀಸರು ಹಲವು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. +ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ +ಮಹದೇವಯ್ಯ ಅವರ ಕಾರು ಚಾಮರಾಜನಗರ ಜಿಲ್ಲೆಯ ರಾಮಪುರ ಬಳಿ ಪತ್ತೆಯಾಗುತ್ತಿದ್ದಂತೆ ಪೊಲೀಸರು, ಬೆರಳಚ್ಚು ತಜ್ಞರು ಅಲ್ಲಿಗೆ ತೆರಳಿ ಕಾರನ್ನೂ ಸಹ ಕೂಲಂಕುಶವಾಗಿ ತಪಾಸಣೆ ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. +ಮೃತದೇಹ ಪತ್ತೆಯಾದ ಸ್ಥಳಕ್ಕೆ ಭೇಟಿ:ಮಹದೇವಯ್ಯ ಅವರ ಮೃತದೇಹ ಪತ್ತೆಯಾದ ಸ್ಥಳಕ್ಕೆ ಒಂದು ತಂಡ ಭೇಟಿ ನೀಡಿ ಟೆಕ್ನಿಕಲ್ ಆಧಾರದ ಮೂಲಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಒಟ್ಟಾರೆ ಮಹದೇವಯ್ಯ ಅವರ ಅಪಹರಣ ಹಾಗೂ ಕೊಲೆ ಮಾಡಿ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹಗಲಿರುಳು ರಾಮನಗರ ಜಿಲ್ಲಾ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು , ಶೀಘ್ರದಲ್ಲೇ ಬಂಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_295_5.txt b/eesanje/url_46_295_5.txt new file mode 100644 index 0000000000000000000000000000000000000000..90cb5f398fad5097b720f45ee5b85294cd7b1f13 --- /dev/null +++ b/eesanje/url_46_295_5.txt @@ -0,0 +1,8 @@ +ಭ್ರೂಣಹತ್ಯೆ ತಡೆಗೆ ಕಠಿಣ ನಿಯಮ ಜಾರಿಗೆ ಚಿಂತನೆ, ಸ್ಕ್ಯಾನಿಂಗ್ ಸೆಂಟರ್ಗಳ ತಪಾಸಣೆ +ಬೆಂಗಳೂರು,ಡಿ.5- ಭ್ರೂಣ ಹತ್ಯೆ ತಡೆಯುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಲು ಚಿಂತನೆ ನಡೆಸಿದೆ.ಭ್ರೂಣಹತ್ಯೆ ಮಾಡಿದರೆ ಐಪಿಸಿ ಸೆಕ್ಷನ್ 302 ಅಡಿ (ಕೊಲೆ) ಪ್ರಕರಣ ದಾಖಲಿಸಿಕೊಳ್ಳಲು ಚರ್ಚೆ ನಡೆಸಲಾಗುತ್ತಿದೆ.ಈ ಹೊಸ ನಿಯಮವನ್ನು ಜಾರಿಗೆ ತರುವ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರ ಚಿಂತನೆ ನಡೆಸಿದ್ದು, ಕೊಲೆ ಪ್ರಕರಣ ದಾಖಲಿಸಲು ಕರಡು ತಯಾರಿಸುವ ಬಗ್ಗೆ ಚರ್ಚೆಗಳು ನಡೆದಿದ್ದು, ಆರೋಗ್ಯಾಧಿಕಾರಿಗಳಿಗೆ ಸಲಹೆ ನೀಡಲಾಗಿದೆ. +ರಾಜ್ಯದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸದ್ದು ಮಾಡಿದ್ದು, ಭೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಭ್ರೂಣಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ವೈದ್ಯರು, ನರ್ಸ್ಗಳು ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.ಮೈಸೂರಿನ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಪರಿಶೀಲಿಸಲಾಗಿದೆ.ಮೈಸೂರು-ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರಿ ಜಾಲವನ್ನೇ ಪೊಲಿಸರು +ಬೇಸಿದ್ದು, ಇದೀಗ ಇದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಹೊಸ ಚಿಂತನೆ ನಡೆಸಿದೆ. ಭ್ರೂಣ ಪತ್ತೆ, ಹತ್ಯೆ ಪ್ರಕರಣಗಳು ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನಲ್ಲಿ ಎಗ್ಗಿಲ್ಲದೆ ನಡೆದಿರುವುದು ಬೆಳಕಿಗೆ ಬರುತ್ತಿದ್ದಂತೆ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ್ದು, ಈ ಬಗ್ಗೆ ಸಿಐಡಿ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಮುಂದಿನ ದಿನಗಳಲ್ಲಿ ಆರು ತಿಂಗಳು ಮತ್ತು ನಂತರದ ಭ್ರೂಣಹತ್ಯೆ ಮಾಡಿದರೆ ಕೊಲೆ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ. +ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ +ಸ್ಕ್ಯಾನಿಂಗ್ ಸೆಂಟರ್ಗಳ ತಪಾಸಣೆ ?:ಬೆಂಗಳೂರು,ಡಿ.6- ಭ್ರೂಣ ಲಿಂಗ ಪತ್ತೆ ಪ್ರಕರಣದ ಬಳಿಕ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ರಾಜ್ಯದ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳ ಮಾಹಿತಿ ಪಡೆಯಲು ತೀರ್ಮಾನಿಸಿದೆ. ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ಡಿಟೈಲ್ ರಿಪೊರ್ಟ್ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿರುವುದರಿಂದ ಭ್ರೂಣ ಲಿಂಗ ಪತ್ತೆ ಮಾಡಿರುವ ಸೆಂಟರ್ಗಳ ವೈದ್ಯರಿಗೆ ಡವ ಡವ ಶುರುವಾಗಿದೆ. +ರಾಜ್ಯದ 6000 ಸಾವಿರ ಸ್ಕ್ಯಾನಿಂಗ್ ಸೆಂಟರ್ ಹಾಗೂ ಕ್ಲಿನಿಕ್ಗಳ ತಪಾಸಣೆಗೆ ಹಾಗೂ ಕಾರ್ಯಾಚರಣೆ ಬೆಂಗಳೂರು ಸೇರಿದಂತೆ ರಾಜ್ಯದ ಸೆಂಟರ್ಗಳಲ್ಲಿರುವ ಯಂತ್ರೋಪಕರಣಗಳ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.ರಾಜ್ಯದಲ್ಲಿರುವ 6000 ಸ್ಕ್ಯಾನಿಂಗ್ ಸೆಂಟರ್ ನಲ್ಲಿರುವ ಎಲ್ಲ ಮಷಿನಗಳನ್ನ ತಪಾಷಣೆ ಮಾಡಬೇಕು ಅಲ್ಲಿರುವ ನ್ಯೂನೆತಗಳನ್ನ ಪರಿಶೀಲನೆ ಮಾಡಬೇಕು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಕಂಡು ಬಂದ್ರೆ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. +ಡಿಸೆಂಬರ್ 30 ರೊಳಗೆ ರಾಜ್ಯದ ಎಲ್ಲ ಸ್ಕ್ಯಾನಿಂಗ್ ಸೆಂಟರ್ ಗಳ ನ್ಯೂನೆತೆ ಹಾಗೂ ಎಷ್ಟು ಸ್ಕ್ಯಾನಿಂಗ್ ಮಾಡಲಾಗಿದೆ ಎಂಬುದರ ಬಗ್ಗೆ ಸ್ಕ್ಯಾನಿಂಗ್ ಮಷಿನ್ ಗಳ ಡಾಟಾ ಇಮೇಜ್ ಸಂಗ್ರಹಿಸುವಂತೆ ಸೂಚನೆ ನೀಡಿದೆ. ಅನುಮತಿ ಪಡೆಯದಿರುವ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಮಾರ್ಗಸೂಚಿ ಅನ್ವಯ ಸ್ಕ್ಯಾನಿಂಗ್ ನಡೆಸಲಾಗುತ್ತಿದೆಯೇ? ಪಾಲಕರು, ತಾಯಿ ಹೊರತು ಅನ್ಯ ವ್ಯಕ್ತಿಗಳ ಪತ್ತೆಗಾಗಿ ಅಲ್ಲಿಯ ಸಿಸಿ ಕ್ಯಾಮರಾ ಪರಿಶೀಲನೆ ಮಾಡಬೇಕು ಇಮೇಜ್ ಡಾಟಾ ಹಾಗೂ ಸ್ಕ್ಯಾನಿಂಗ್ ಹಿಸ್ಟರಿ ದತ್ತಾಂಶ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭ್ರೂಣ ಲಿಂಗ್ ಪತ್ತೆ ವಿರುದ್ಧ ದೊಡ್ಡ ಭೇಟೆಯನ್ನ ಆರೋಗ್ಯ ಇಲಾಖೆ ಶುರು ಮಾಡಿರುವುದು ಮಾತ್ರ ಆರೋಗ್ಯಕರ ಬೆಳವಣಿಗೆಯಾಗಿದೆ. \ No newline at end of file diff --git a/eesanje/url_46_295_6.txt b/eesanje/url_46_295_6.txt new file mode 100644 index 0000000000000000000000000000000000000000..443b5685b688935793f3aaf93fc6bf4c7fc07181 --- /dev/null +++ b/eesanje/url_46_295_6.txt @@ -0,0 +1,8 @@ +ವಿಧಾನಸಭೆ ಪ್ರತಿಪಕ್ಷದ ಉಪನಾಯಕನ ಸ್ಥಾನಕ್ಕೆ ಅರವಿಂದ್ ಬೆಲ್ಲದ್..? +ಬೆಳಗಾವಿ,ಡಿ.6- ವಿಧಾನಸಭೆಯ ಪ್ರತಿಪಕ್ಷದ ಉಪನಾಯಕರಾಗಿ ಅರವಿಂದ್ ಬೆಲ್ಲದ್ ಅವರನ್ನು ಬಿಜೆಪಿ ನೇಮಕ ಮಾಡಲು ಮುಂದಾಗಿದ್ದು, ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನು ಹೊಡೆಯಲು ಮುಂದಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂಬ ಅಸಮಾಧಾನವನ್ನು ಸರಿದೂಗಿಸುವುದು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪ ಹಾಗೂ ಪಕ್ಷದ ವಿರುದ್ಧವೇ ಗುಟುರು ಹಾಕುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕುವುದು ಇದರ ಹಿಂದಿನ ಉದ್ದೇಶವಾಗಿದೆ. +ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಗೆದ್ದಿರುವ ಅರವಿಂದ್ ಬೆಲ್ಲದ್ ಅವರನ್ನು ವಿಧಾನಸಭೆಯ ಪ್ರತಿಪಕ್ಷದ ಉಪನಾಯಕನ ಸ್ಥಾನಕ್ಕೆ ನೇಮಕ ಮಾಡಲು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೇಂದ್ರದ ವರಿಷ್ಠರಿಗೆ ಮಾಹಿತಿಯನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. +ರಾಜ್ಯ ಬಿಜೆಪಿ ಘಟಕ ಸಮ್ಮತಿ ಸೂಚಿಸಿದ್ದು, ಅರವಿಂದ್ ಬೆಲ್ಲದ್ ಹೆಸರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅರವಿಂದ್ ಬೆಲ್ಲದ್ ಇತ್ತೀಚೆಗೆ ಶಾಸಕಾಂಗ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದ್ದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ವೇಳೆ ಬೆಲ್ಲದ್ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯೂ ಕೂಡ ಆಗಿದ್ದರು. ಇದೀಗ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವು ಮಧ್ಯ ಕರ್ನಾಟಕ ಹಾಗೂ ಪ್ರತಿ ಪಕ್ಷದ ನಾಯಕನ ಸ್ಥಾನ ಬೆಂಗಳೂರಿಗೆ ಸಿಕ್ಕಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಭದ್ರಕೋಟೆ ಎನ್ನಿಸಿದ್ದ ಉತ್ತರಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. +ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ +ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಬೆಲ್ಲದ್ ಹೆಸರಿಗೆ ಬಹುತೇಕ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ. ಜೊತೆಗೆ ಪಂಚಮಸಾಲಿ ಸಮುದಾಯಕ್ಕೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಆಗಾಗ್ಗೆ ಆರೋಪ ಮಾಡುತ್ತಲೇ ಇದ್ದರು. ಈ ಬೆಳವಣಿಗೆಗಳ ನಡುವೆಯೇ ಪ್ರತಿಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಯತ್ನಾಳ್ಗೆ ಆ ಸ್ಥಾನ ಕೈತಪ್ಪಿದ್ದರಿಂದ ಮತ್ತೆ ತಮ್ಮ ಹಳೆ ಛಾಳಿಯನ್ನು ಮುಂದುವರೆಸಿದ್ದರು. +ಇದೆಲ್ಲವನ್ನು ಪರಿಗಣಿಸಿರುವ ವರಿಷ್ಠರು ಅರವಿಂದ್ ಬೆಲ್ಲದ್ಗೆ ಉಪನಾಯಕನ ಸ್ಥಾನವನ್ನು ನೀಡುವ ಮೂಲಕ ಯತ್ನಾಳ್ ಬಾಯಿ ಬಂದ್ ಮಾಡುವ ಲೆಕ್ಕಾಚಾರದಲ್ಲಿ ವರಿಷ್ಠರಿದ್ದಾರೆ. ಇನ್ನು ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕರ ಸ್ಥಾನಕ್ಕೆ ಶಾಸಕರಾದ ಸತೀಶ್ ರೆಡ್ಡಿ, ಹರೀಶ್ ಪೂಂಜಾ, ಅಭಯ್ ಪಾಟೀಲ್ ಹೆಸರುಗಳನ್ನು ದೆಹಲಿ ನಾಯಕರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_295_7.txt b/eesanje/url_46_295_7.txt new file mode 100644 index 0000000000000000000000000000000000000000..6b754a906105ab3a209d6bf4b4aea939d29056c1 --- /dev/null +++ b/eesanje/url_46_295_7.txt @@ -0,0 +1,7 @@ +ಒಲಿಂಪಿಕ್ ಕ್ರೀಡೆಗೆ ರಾಜ್ಯದ ಕ್ರೀಡಾಪಟುಗಳಿಗೆ ಉನ್ನತಮಟ್ಟದ ತರಬೇತಿ +ಬೆಳಗಾವಿ, ಡಿ.6- ಮುಂಬರುವ 2024 ರ ಒಲಿಂಪಿಕ್ ಕ್ರೀಡೆಗೆ ರಾಜ್ಯದಿಂದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ತಲಾ 10 ಲಕ್ಷ ರೂ. ವೆಚ್ಚದಲ್ಲಿ ತರಬೇತಿ ಕೊಡಿಸಲಾಗುತ್ತಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಶ್ನೆ ಕೇಳುತ್ತಾ, ಬೆಂಗಳೂರು ಹಾಗೂ ಇತರ ನಗರ ಪ್ರದೇಶಗಳ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯಗಳ ಕೊರತೆಯಿಂದಾಗಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ ಎಂದು ಸರ್ಕಾರದ ಗಮನ ಸೆಳೆದರು. +ಇದಕ್ಕೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತಿ ಯೋಜನೆಯಡಿ 75 ಮಂದಿಯನ್ನು ಆಯ್ಕೆ ಮಾಡಿಕೊಂಡು ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಸೇರಿದಂತೆ ಹಲವು ಸೌಲಭ್ಯಗಳ ಮೂಲಕ ಕ್ರೀಡೆಗೆ ಬೆಂಬಲ ನೀಡಲಾಗುತ್ತಿದೆ ಎಂದರು. +ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ +2024 ರ ಒಲಂಪಿಕ್ ಕ್ರೀಡೆಗೆ ಸಜ್ಜುಗೊಳ್ಳುವ ಕ್ರೀಡಾಪಟುಗಳಿಗೆ ಆಹಾರದಿಂದ ಹಿಡಿದು ಎಲ್ಲಾ ರೀತಿಯ ಕಾಳಜಿಯನ್ನು ವಹಿಸಲಾಗುತ್ತಿದೆ. ಪ್ರತಿಯೊಬ್ಬರ ತರಬೇತಿಗೆ 10 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು.180 ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ತರಬೇತಿ ನಡೆಯುತ್ತಿದೆ. ಶೀಘ್ರವೇ ಅವರು ಸೇವೆಗೆ ಸಮರ್ಪಣೆಗೊಳ್ಳಲಿದ್ದಾರೆ. ಈ ಮೂಲಕ ತರಬೇತುದಾರರ ಕೊರತೆಯೂ ನೀಗಲಿದೆ ಎಂದರು. +ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ನಾಗೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಅೀನದಲ್ಲಿ ರಾಜ್ಯಾದ್ಯಂತ 125 ಕ್ರೀಡಾಂಗಣಗಳಿವೆ. ಕ್ರೀಡಾಂಗಣಗಳ ಅಭಿವೃದ್ಧಿಗೆ 5,622 ಲಕ್ಷ ರೂಪಾಯಿಗಳನ್ನು 2 ವರ್ಷಗಳಿಂದ ಬಿಡುಗಡೆ ಮಾಡಲಾಗಿದೆ. +ಹಣಕಾಸು ಲಭ್ಯತೆಯನ್ನು ಆಧರಿಸಿ 16 ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಕ್ರೀಡಾಂಗಣಗಳ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಶ್ರವಣಬೆಳಗೊಳದ ಕ್ಷೇತ್ರಗಳಿಗೂ ಆದ್ಯತೆ ಮೇರೆಗೆ ಕ್ರೀಡಾಂಗಣ ಪುನರ್ ಅಭಿವೃದ್ಧಿಗೊಳಿಸುವುದಾಗಿ ಕರೆ ನೀಡಿದರು. ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಚಿನ್ನದ ಪದಕ ವಿಜೇತರಿಗೆ 25 ಲಕ್ಷ, ಬೆಳ್ಳಿ ಪದಕ ಗೆದ್ದವರಿಗೆ 15 ಲಕ್ಷ ರೂ.ಗಳ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_295_8.txt b/eesanje/url_46_295_8.txt new file mode 100644 index 0000000000000000000000000000000000000000..3efd73ce84b56dc0021d7172a1210c49d20e6395 --- /dev/null +++ b/eesanje/url_46_295_8.txt @@ -0,0 +1,6 @@ +4 ವರ್ಷ ಅಧಿಕಾರದಲ್ಲಿದ್ದರೂ ಗುಂಡಿ ಮುಚ್ಚಲಾಗಲಿಲ್ಲ : ಬಿಜೆಪಿ ವಿರುದ್ಧ ಸಿಎಂ ಕಿಡಿ +ಬೆಳಗಾವಿ, ಡಿ.6- ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ನಾಲ್ಕು ವರ್ಷ ಅಧಿಕಾರದಲ್ಲಿದ್ದು ಅವರಿಂದ ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಾವು ಅಕಾರಕ್ಕೆ ಬಂದು 6 ತಿಂಗಳಾಯಿತು. +ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ, ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು. +ಬೆಂಗಳೂರು : ಆಟೋ ಚಾಲಕನ ಬರ್ಬರ ಹತ್ಯೆ +ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಅವರು, ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ. ರಾಜಕೀಯವನ್ನೂ ಮಾಡಬೇಕಲ್ಲವೆ? ಸಚಿವ ಜಮೀರ್ ಅಹ್ಮದ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ ಎಂದರು. ಬಹುತೇಕರು ವಾಪಸ್ಸು ಬಂದಿದ್ದಾರೆ ಎಂದು ಹೇಳಿದರು. +ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು. \ No newline at end of file diff --git a/eesanje/url_46_295_9.txt b/eesanje/url_46_295_9.txt new file mode 100644 index 0000000000000000000000000000000000000000..f992e820dcd71704eb59a1f6272802e463f418e8 --- /dev/null +++ b/eesanje/url_46_295_9.txt @@ -0,0 +1,14 @@ +ಮುಸ್ಲಿಮರಿಗೆ 10,000 ಕೋಟಿ ಕೊಡುವುದಾಗಿ ಸಿಎಂ ಹೇಳಿಕೆ, ಸದನ ಕೋಲಾಹಲ +ಬೆಳಗಾವಿ, ಡಿ.6- ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳ ಅನುದಾನ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಭರವಸೆ ವಿಧಾನಸಭೆಯಲ್ಲಿಂದು ಪ್ರಸ್ತಾಪ ವಾಗಿ ಕೋಲಾಹಲದ ವಾತಾವರಣ ಸೃಷ್ಟಿಸಿತು.ಪ್ರಶ್ನೋತ್ತರದ ಬಳಿಕ ಬಿಜೆಪಿಯ ಸುನಿಲ್ಕುಮಾರ್ ವಿಷಯ ಪ್ರಸ್ತಾಪಿಸಿ ಹುಬ್ಬಳ್ಳಿಯಲ್ಲಿ ನಡೆದ ಮೌಲಿಗಳ ಸಮಾವೇಶದಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಗಳನ್ನು ನೀಡುವುದಾಗಿ ಹೇಳಿದ್ದಾರೆ. +ಎಷ್ಟು ಹಣ ಕೊಡು ತ್ತಾರೆ, ಯಾರಿಗೆ ಕೊಡುತ್ತಾರೆ ಎಂದು ಪ್ರಶ್ನಿಸಿ ದರಲ್ಲದೆ, ಸದನ ನಡೆಯುವ ಸಂದರ್ಭದಲ್ಲಿ ಯಾವುದೇ ಹೊಸ ಯೋಜನೆಗಳ ಅನುದಾನವನ್ನು ಘೋಷಿಸಬಾರದು ಎಂಬ ನಿಯಮವಿದೆ. ಆದರೆ ಮುಖ್ಯಮಂತ್ರಿಯವರ ಈ ಹೇಳಿಕೆ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಯ ಅರಗ ಜ್ಞಾನೇಂದ್ರ, ಚಂದ್ರಪ್ಪ, ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಮಂದಿ ಇದಕ್ಕೆ ಬೆಂಬಲ ವ್ಯಕ್ತಪಡಿಸಿದರು. +ಸರ್ಕಾರದ ವತಿಯಿಂದ ಪ್ರತ್ಯುತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರನ್ನು ಕೇಳಿಯೇ ಮುಖ್ಯಮಂತ್ರಿಯವರು ಮಾತನಾಡಲಾಗುವುದಿಲ್ಲ. ವಿರೋಧಪಕ್ಷಗಳು ಹೇಳಿದಂತೆ ಸರ್ಕಾರ ನಡೆಸಲು ಸಾಧ್ಯವಿಲ್ಲ. 10 ಸಾವಿರ ಕೋಟಿ ರೂ.ಗಳ ಅನುದಾನ ನೀಡಬೇಕಾದರೆ ಇದೇ ಅವೇಶನದಲ್ಲಿ ಬಿಲ್ ಮಂಡಿಸುತ್ತೇವೆ. ಹೊರಗೆ ಮಾತನಾಡುವುದನ್ನೆಲ್ಲಾ ಇಲ್ಲಿ ಪ್ರಸ್ತಾಪಿಸುವುದು, ಆಕ್ಷೇಪಿಸುವುದು ಸರಿಯಲ್ಲ ಎಂದರು.ಸಚಿವರಾದ ದಿನೇಶ್ಗುಂಡೂರಾವ್ ಸೇರಿದಂತೆ ಆಡಳಿತ ಪಕ್ಷದ ಶಾಸಕರು ಬಿಜೆಪಿಯವರ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದರು. +ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ 8000ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ +ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಅಧಿಕೃತವಾಗಿ ಸ್ಪಷ್ಟನೆ ನೀಡಿ ತಾವು ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಮುಖ್ಯಮಂತ್ರಿಯವರು ಈ ವರ್ಷವೇ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದು ಹೇಳಿಲ್ಲ. ಈಗಾಗಲೇ 2 ರಿಂದ 3 ಸಾವಿರ ಕೋಟಿ ರೂ.ಗಳ ಅನುದಾನ ನೀಡಿದ್ದೇವೆ. ಮುಂದಿನ ವರ್ಷ ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು 10 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಇದರಲ್ಲಿ ಸದನದ ಸಂಪ್ರದಾಯಕ್ಕೆ ಧಕ್ಕೆಯಾಗುವ ಯಾವ ಅಂಶಗಳೂ ಇಲ್ಲ ಎಂದು ಸ್ಪಷ್ಟಪಡಿಸಿದರು. +ಆಡಳಿತ ಪಕ್ಷ ಮತ್ತು ವಿರೋಧಪಕ್ಷಗಳ ವಾದ-ಪ್ರತಿವಾದ ಸುದೀರ್ಘ ಚರ್ಚೆಗೆ ಗ್ರಾಸವಾಯಿತು. ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯವರಿಗೆ ಅಲ್ಪಸಂಖ್ಯಾತರ ಮೇಲೆ ದ್ವೇಷ. ಅದಕ್ಕೆ ಮುಸ್ಲಿಂರ ಅಭಿವೃದ್ಧಿಗೆ ಹಣ ನೀಡುತ್ತೇವೆ ಎಂದಾಕ್ಷಣ ಗದ್ದಲ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ಸಚಿವರು, ಮುಖ್ಯಮಂತ್ರಿಯವರು ಮುಂದಿನ ವರ್ಷ ಅನುದಾನವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ. ಇದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡರು. +ಆಡಳಿತ ಪಕ್ಷದ ನರೇಂದ್ರಸ್ವಾಮಿ, ಕಂಚಿನ ಪ್ರತಿಮೆ ಮಾಡುತ್ತೇವೆ ಎಂದು ಹೇಳಿ ಪ್ಲಾಸ್ಟ್ ಆಫ್ ಪ್ಯಾರಿಸ್ ಪ್ರತಿಮೆ ನಿರ್ಮಿಸಿದ ವ್ಯಕ್ತಿಗಳು ಇಲ್ಲಿ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಅವರು ಲೇವಡಿ ಮಾಡಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸುನಿಲ್ಕುಮಾರ್ರ ಪ್ರಸ್ತಾವನೆಯನ್ನು ಸಮರ್ಥಿಸಿಕೊಂಡು, ಮುಖ್ಯಮಂತ್ರಿಗಳ ಭಾಷಣವನ್ನು ನಾನು ಕೇಳಿದ್ದೇನೆ. 10 ಸಾವಿರ ಕೋಟಿ ರೂ.ಗಳನ್ನು ಈ ವರ್ಷವೇ ನೀಡುತ್ತೇವೆ ಎಂದಿದ್ದಾರೆ. ಇದು ಸರಿಯಲ್ಲ ಎಂದರು. +ಈ ವೇಳೆ ಬಸವರಾಜರಾಯರೆಡ್ಡಿಯವರು ಇದರ ಬಗ್ಗೆ ಪ್ರಸ್ತಾಪ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ವಿಪಕ್ಷ ನಾಯಕರ ಬಳಿ ಮನವಿ ಮಾಡಿಕೊಂಡು ಕ್ರಿಯಾಲೋಪ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಮುಖ್ಯಮಂತ್ರಿಯವರ ಹೇಳಿಕೆ ಸದನದ ಶಿಷ್ಟಾಚಾರವಾಗಲಿ ಅಥವಾ ಹಕ್ಕುಚ್ಯುತಿಯ ಉಲ್ಲಂಘನೆಯಾಗಲಿ ಆಗುವುದಿಲ್ಲ ಎಂದು ಹೇಳಿದರು.ಪಾಯಿಂಟ್ ಆಫ್ ಆರ್ಡರ್ನಲ್ಲಿ ಪಾಯಿಂಟ್ ಇಲ್ಲ, ಆರ್ಡರ್ ಕೂಡ ಇಲ್ಲ. ಹಾಗಾಗಿ ರಾಯರೆಡ್ಡಿಯವರ ಮಾತುಗಳು ಕಡತಕ್ಕೆ ಹೋಗಬಾರದು ಎಂದು ಅರಗ ಜ್ಞಾನೇಂದ್ರ ಹೇಳಿದರು. +ಆರ್.ಅಶೋಕ್ರವರು ಚರ್ಚೆ ಮುಂದುವರೆಸಿ ಮುಖ್ಯಮಂತ್ರಿಯವರ ಹೇಳಿಕೆ ಸರಿಯಲ್ಲ ಎಂದು ಪ್ರತಿಪಾದಿಸಲಾರಂಭಿಸಿದರು. ಈ ಹಂತದಲ್ಲಿ ಆಡಳಿತ ಪಕ್ಷದ ಶಾಸಕರು ಪ್ರತಿರೋಧ ವ್ಯಕ್ತಪಡಿಸಿದರು. ವಿರೋಧಪಕ್ಷದ ನಾಯಕರುಗಳ ಮಾತುಗಳಿಗೆ ಅಡ್ಡಿಪಡಿಸಬೇಡಿ ಎಂದು ಸಭಾಧ್ಯಕ್ಷರು ಮನವಿ ಮಾಡಿದರು. ಆದರೂ ಕಾಂಗ್ರೆಸ್ ಸದಸ್ಯರು ಗಲಾಟೆ ಮಾಡಿದ್ದರಿಂದ ಸಿಟ್ಟಾದ ಆರ್.ಅಶೋಕ್, ವಿಪಕ್ಷ ನಾಯಕರು ಮಾತನಾಡುವಾಗ ಅಡ್ಡಿಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮಾತನಾಡುವಾಗ ಅಡ್ಡಿಪಡಿಸುವ ತಾಕತ್ತು ನಮಗೂ ಇದೆ. ನಾವು 85 ಮಂದಿ ಇದ್ದೇವೆ ಎಂದು ಹೇಳಿದರು. +ಜೊತೆಗೆ ಬರ ಪರಿಸ್ಥಿತಿ ತೀವ್ರವಾಗಿದೆ. ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬರ ನಿರ್ವಹಣೆಗೆ ತಕ್ಷಣಕ್ಕೆ 2 ಸಾವಿರ ಕೋಟಿ ರೂ. ನೀಡಿದರೆ ರೈತರಿಗೆ ಎಷ್ಟೋ ಅನುಕೂಲವಾಗಲಿದೆ. ಅದನ್ನು ಬಿಟ್ಟು ರಾಜಕೀಯ ಕಾರಣಕ್ಕಾಗಿ 10 ಸಾವಿರ ಕೋಟಿ ರೂ.ಗಳನ್ನು ಏಕೆ ಘೋಷಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು. ಆಡಳಿತ ಪಕ್ಷದ ಶಾಸಕರು, ಬಿಜೆಪಿಯ ನಾಯಕರು ಎಷ್ಟೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎಂಬುದು ನಮ್ಮ ಕಣ್ಣ ಎದುರಿಗಿದೆ. ಅದನ್ನೆಲ್ಲಾ ಇಲ್ಲಿ ಪ್ರಸ್ತಾಪ ಮಾಡುವುದು ಬೇಕಿಲ್ಲ ಎಂದರು. +ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಮುಖ್ಯಮಂತ್ರಿಯ ಹೇಳಿಕೆ ವಿರುದ್ಧ ತೀವ್ರ ಕಿಡಿಕಾರಿದರು. ಚರ್ಚೆಗಳು ಕಾವೇರಿ ಬಹಳ ಹೊತ್ತು ಜಟಾಪಟಿಗೆ ಕಾರಣವಾಯಿತು.ಕಾಂಗ್ರೆಸ್ನ ಸಿ.ಎಸ್.ನಾಡಗೌಡ ಮಾತನಾಡಿ, ಸುನಿಲ್ಕುಮಾರ್ರ ಪ್ರಸ್ತಾಪ ಅನಗತ್ಯವಾಗಿತ್ತು. ಯಾವುದೇ ಪ್ರಮುಖ ವಿಚಾರವಲ್ಲ ಮತ್ತು ಗಣನೀಯ ಸಂಗತಿಗಳೂ ನಡೆದಿಲ್ಲ. ಆದರೂ ಶೂನ್ಯವೇಳೆಯನ್ನು ಬದಿಗಿರಿಸಿ ಚರ್ಚೆ ಮಾಡಿದ್ದೇಕೆ ಎಂದು ಕ್ರಿಯಾಲೋಪ ಪ್ರಸ್ತಾಪಿಸಿದರು.ಸಚಿವ ದಿನೇಶ್ಗುಂಡೂರಾವ್ ಸರ್ಕಾರದ ಪರವಾಗಿ ಎಚ್.ಕೆ.ಪಾಟೀಲರ ಅಭಿಪ್ರಾಯವನ್ನೇ ಪುನರುಚ್ಚರಿಸಿದರು. ಇದರಿಂದ ಬಿಜೆಪಿಯ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಖುದ್ದು ಮುಖ್ಯಮಂತ್ರಿಯವರೇ ಬಂದು ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದರು. +ಸರ್ಕಾರದ ಉತ್ತರಗಳು ಸಮಾಧಾನಕರವಾಗಿಲ್ಲ ಎಂದು ಆರೋಪಿಸಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.ಬರದ ಮೇಲಿನ ಚರ್ಚೆಯಲ್ಲಿ ಭಾಗವಹಿಸುವ ಬದಲು ಸಣ್ಣ ವಿಚಾರಕ್ಕಾಗಿ ಸಭಾತ್ಯಾಗ ಮಾಡುವುದು ಸರಿಯಲ್ಲ ಎಂದು ಸಭಾಧ್ಯಕ್ಷರು ಆಕ್ಷೇಪಿಸಿದರು.ಅದರ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ವಿಪಕ್ಷ ನಾಯಕರು ಮುಖ್ಯಮಂತ್ರಿಯವರಿಗೆ ಮಾತನಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇವರು ಇಲ್ಲಿಗೆ ಚರ್ಚೆ ಮಾಡಲು ಬರುತ್ತಾರೋ, ಜಗಳ ಆಡಲು ಬರುತ್ತಾರೋ ಎಂದು ಪ್ರಶ್ನೆ ಮಾಡಿದರು. +ವಿರೋಧ ಪಕ್ಷದ ನಾಯಕರ ಈ ಧೋರಣೆ ಸಂಸದೀಯ ವ್ಯವಹಾರಗಳಿಗೆ ಮತ್ತು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಿದೆ. ಕೂಡಲೇ ವಿರೋಧಪಕ್ಷದ ನಾಯಕರುಗಳು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಯಾಚಿಸಬೇಕು ಎಂದರು.ಸಚಿವ ಜಯಚಂದ್ರ, ತಾಕತ್ತಿನ ಪ್ರಶ್ನೆ ಮಾಡುವುದಾದರೆ ಕಾಂಗ್ರೆಸ್ನ ಶಾಸಕರ ಸಂಖ್ಯೆ 135 ರಷ್ಟಿದೆ. ನಾವು ಪ್ರಶ್ನೆ ಮಾಡಬಹುದು ಎಂದರು.ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರ ಬರದ ಮೇಲಿನ ಚರ್ಚೆಗೆ ಸಿದ್ಧವಿದೆ. ಆದರೆ ವಿರೋಧಪಕ್ಷಗಳಿಗೆ ಚರ್ಚೆ ಮಾಡಲು ಅವಕಾಶವಿಲ್ಲ. ಅದಕ್ಕಾಗಿ ಸಭಾತ್ಯಾಗದ ಮೂಲಕ ಫಲಾಯನವಾದ ಅನುಸರಿಸಿದ್ದಾರೆ ಎಂದು ಆಕ್ಷೇಪಿಸಿದರು. ಸದಸ್ಯ ಬಸವರಾಜರಾಯರೆಡ್ಡಿಯವರು ವಿಪಕ್ಷ ನಾಯಕರ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕಬೇಕು ಎಂದು ಕ್ರಿಯಾಲೋಪದಡಿ ಪ್ರಸ್ತಾಪ ಮಾಡಿದರು.ಆದರೆ ಸಭಾಧ್ಯಕ್ಷರು ಕ್ರಿಯಾಲೋಪವನ್ನು ತಳ್ಳಿಹಾಕಿದರು. \ No newline at end of file diff --git a/eesanje/url_46_296_1.txt b/eesanje/url_46_296_1.txt new file mode 100644 index 0000000000000000000000000000000000000000..0c7f843aadb0c16a676f1d3695a9c89adee65542 --- /dev/null +++ b/eesanje/url_46_296_1.txt @@ -0,0 +1,11 @@ +ಅರ್ಜನನ ಸಾವಿನ ವರದಿ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ +ಬೆಂಗಳೂರು, ಡಿ.6- ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈ ಪ್ರಕರಣದಲ್ಲಿ ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. +ಈಗಾಗಲೇ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ, ಯಾರ್ಯಾರು ಈ ಪ್ರಕರಣಕ್ಕೆ ಕಾರಣಕರ್ತರಾಗಿದ್ದಾರೆಯೋ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. +ಇಸ್ರೇಲ್ ಮಹಿಳೆಯರ ಮೇಲೆ ಹಮಾಸ್ ಉಗ್ರರ ಲೈಂಗಿಕ ಅಟ್ಟಹಾಸ : ಬಿಡೆನ್ ಖಂಡನೆ +ಅರ್ಜನ ಸಾವಿನ ವರದಿ ನೀಡಲು ಸೂಚನೆ :ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ಇನ್ನೂ ಹೆಚ್ಚು ಕಾಲ ಬದುಕಬೇಕಿತ್ತು. ಆದರೆ ಆನೆ ಕಾರ್ಯಾಚರಣೆಗೆ ಅರ್ಜುನನನ್ನು ಉಪಯೋಗಿಸಿದ ಕಾರಣದಿಂದ ಸಾವನ್ನಪ್ಪಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಅರ್ಜುನ ಆನೆ ಸಕಲೇಶಪುರದಲ್ಲಿ ಎಲ್ಲಿ ಪ್ರಾಣ ಕಳೆದುಕೊಂಡಿದೆಯೋ ಅಲ್ಲಿಯೇ ಸ್ಮಾರಕ ಮಾಡುತ್ತೇವೆ. ಹೆಗ್ಗಡದೇವನಕೋಟೆಲ್ಲಿಯೂ ಸ್ಮಾರಕ ಮಾಡಲು ತಿಳಿಸಿದ್ದೇವೆ ಎಂದರು. +ಡಾಲಿ ಧನಂಜಯ ಲಿಡ್ಕರ್ ರಾಯಭಾರಿ: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ ಅವರನ್ನು ರಾಯಭಾರಿಯಾಗಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ತಿಳಿಸಿದರು. ಧನಂಜಯ್ಯ ಅವರು ಉದಯೋನ್ಮುಖ ನಟ. ಸಾಮಾಜಿಕ ಕಳಕಳಿ ಇರುವ ನಟ. ಅವರನ್ನು ರಾಯಭಾರಿಯಾಗಿ ಮಾಡಿರುವುದು ಅರ್ಥಪೂರ್ಣವಾಗಿದೆ. ಉಚಿತವಾಗಿ ರಾಯಬಾರಿ ಕೆಲಸ ಮಾಡಲಿದ್ದಾರೆ. ಇದರಿಂದಾಗಿ ಚರ್ಮೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂದರು. +ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಅಭಿಪ್ರಾಯ ಸಂಗ್ರಹಿಸಿದ್ದು, ರೇವಂತ್ ರೆಡ್ಡಿ ಅವರಿಗೆ ಬಹುಮತ ಇದೆಯೆಂದು ಆಯ್ಕೆ ಮಾಡಿದ್ದಾರೆ. ನಾವು ಅಲ್ಲಿ ಆರು ಗ್ಯಾರಂಟಿ ಭರವಸೆಗಳನ್ನು ಕೊಟ್ಟಿದ್ದೇವೆ. ಕಾಂಗ್ರೆಸ್ ಮತ್ತು ನಮ್ಮ ನಾಯಕರ ಮೇಲೆ ಜನ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಕೊಟ್ಟ ಮಾತಿನಂತೆ ನಂಬಿಕೆ ಉಳಿಸಿಕೊಳ್ಳುವ ವಿಶ್ವಾಸ ಇದೆ ಎಂದು ಅವರು ಹೇಳಿದರು. +ರಾಯಬಾರಿಯಾಗಿರುವುದು ಖುಷಿ ತಂದಿದೆ:ರಾಯಬಾರಿಯಾದ ಬಳಿಕ ನಟ ಡಾಲಿ ಧನಂಜಯ ಮಾತನಾಡಿ, ಮೊದಲನೇ ಬಾರಿಗೆ ರಾಯಬಾರಿ ಆಗಿರುವುದು ಖುಷಿ ಇದೆ. ಅದೂ ಕೂಡ ಲಿಡ್ಕರ್‍ಗೆ ರಾಯಭಾರಿ ಆಗುತ್ತಿರುವುದು ಇನ್ನೂ ಹೆಚ್ಚಿನ ಖುಷಿಯಾಗುತ್ತಿದೆ. ಸುಮಾರು 50 ಸಾವಿರ ಕುಟುಂಬಗಳು ಈ ಉದ್ಯಮದಲ್ಲಿವೆ. ಲಿಡ್ಕರ್ ಕೇಂದ್ರಕ್ಕೆ ಭೇಟಿ ನೀಡಿದಾಗ ಅಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ಅವರ ಭಾವಚಿತ್ರ ಹಾಕಿದ್ದರು. ನಮ್ಮ ಕರ್ನಾಟಕದಲ್ಲಿ ಕಲ್ಯಾಣಮ್ಮ ಮತ್ತು ಹರಳಯ್ಯ ರಂತಹ ಸಾವಿರಾರು ಜನ ಕುಶಲಕರ್ಮಿಗಳಿದ್ದಾರೆ ಎಂದರು. +ಮಳೆ ಹಾನಿ : 5060 ಕೋಟಿ ರೂ. ಪರಿಹಾರಕ್ಕೆ ತಮಿಳುನಾಡು ಮನವಿ +ಇದು ಸರ್ಕಾರದಿಂದಲೇ ಮಾಡಿರುವಂತಹ ಉತ್ಪನ್ನ. ಇದರಿಂದ ಏನೇ ಬಂದರೂ ಅಷ್ಟೂ ಕುಟುಂಬಗಳಿಗೆ ಹೋಗುತ್ತದೆ. ಈ ಸಂಸ್ಥೆಗೆ ನನ್ನನ್ನು ರಾಯಭಾರಿಯಾಗಿ ಮಾಡಿದ್ದು ಖುಷಿ ಇದೆ. ಸಿದ್ದರಾಮಯ್ಯ ಮತ್ತು ಮಹದೇವಪ್ಪ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. +ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ಬಗ್ಗೆ ಹೇಳಿದ್ದರು. ನಂದಿನಿ, ಮೈಸೂರ್ ಸಿಲ್ಕ, ಮೈಸೂರ್ ಸ್ಯಾಂಡಲ್, ಲಿಡ್ಕರ್ ಇವು ನಮ್ಮದೇ ಉದ್ಯಮ. ಇದು ಮೇಡ್ ಇನ್ ಕರ್ನಾಟಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಮಾಜಿ ಸಚಿವ ಎಚ್. ಆಂಜನೇಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_296_10.txt b/eesanje/url_46_296_10.txt new file mode 100644 index 0000000000000000000000000000000000000000..b9c05aea8e4a92121a6115175671ee25e15bdc58 --- /dev/null +++ b/eesanje/url_46_296_10.txt @@ -0,0 +1,5 @@ +ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ +ಬೆಳಗಾವಿ,ಡಿ.5-ರಾಜ್ಯದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಂದ 87.51 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಪರಿಷತ್‍ನಲ್ಲಿಂದು ಸದಸ್ಯ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿರುವ ಗಣಿ ಮಾಲೀಕರ ವಿರುದ್ಧ 87.51 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದರು. +ಕಳೆದ ಮೂರು ವರ್ಷಗಳ ಅವಯಲ್ಲಿ 42,53,50,000 ರೂ. ದಂಡ ಹಾಗೂ 211 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗೆ ಸಚಿವ ಸಂಪುಟ ಉಪಸಮಿತಿಯಲ್ಲೂ ಇದರ ಬಗ್ಗೆ ವ್ಯಾಪಕವಾಗಿ ಚರ್ಚಿಸಿ ಎಲ್ಲೆಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿ ಗಣಿಗಾರಿಕೆ ನಡೆಸಿದ್ದಾರೋ ಅಂತಹ ಕಡೆ ಇನ್ನಷ್ಟು ದಂಡ ಹಾಕಬೇಕೆಂಬ ಚರ್ಚೆ ಇದೆ ಎಂದು ಹೇಳಿದರು. +ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು +ರಾಜ್ಯದ ಎಲ್ಲಾ ಕಡೆ ಡ್ರೋನ್ ಮೂಲಕ ಸರ್ವೆ ನಡೆಸಿ ಕಾನೂನು ಉಲ್ಲಂಘನೆ ಮಾಡಿರುವವರ ಮೇಲೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_296_11.txt b/eesanje/url_46_296_11.txt new file mode 100644 index 0000000000000000000000000000000000000000..6a4ce02735684d9aac44ff47e75bf9571d9de9bb --- /dev/null +++ b/eesanje/url_46_296_11.txt @@ -0,0 +1,11 @@ +ಮೆಕ್ಕೆಜೋಳ ಗೋದಾಮು ದುರಂತದಲ್ಲಿ ಮತೃಪಟ್ಟ ಕಾರ್ಮಿಕರ ಸಂಖ್ಯೆ 7ಕ್ಕೆ ಏರಿಕೆ +ವಿಜಯಪುರ, ಡಿ.5- ಕೈಗಾರಿಕ ಪ್ರದೇಶದಲ್ಲಿರುವ ಗೋದಾಮಿನಲ್ಲಿ ಮೆಕ್ಕೆಜೋಳದ ಮೂಟೆಗಳು ಕಾರ್ಮಿಕರ ಮೇಲೆ ಉರುಳಿ ಬಿದ್ದು, ಅದರಡಿಯಲ್ಲಿ ಸಿಲುಕಿದ್ದ ಕಾರ್ಮಿಕರ ಪೈಕಿ ಏಳು ಮಂದಿ ಮೃತಪಟ್ಟಿದ್ದು, ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ.ಬಿಹಾರ ಮೂಲದ ಕಾರ್ಮಿಕರಾದ ರಾಜೇಶ್ ಮುಖಿಯಾ(25), ರಾಮಬ್ರೀಜ್ ಮುಖಿಯಾ(29), ಶಂಭು ಮುಖಿಯಾ(26), ಲುಕೋ ಜಾಧವ್(45), ರಾಮ್ ಬಾಲಕ್(52), ಕೃಷ್ಣಕುಮಾರ್(22), ಗುರುಲಾಲ್ ಚಂದ್(50) ಮೃತಪಟ್ಟ ದುರ್ದೈವಿಗಳು. +ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು +ವಿಜಯಪುರ ನಗರದ ಹೊರ ವಲಯದಲ್ಲಿ ರಾಜಗುರು ಇಂಡಸ್ಟ್ರೀಸ್ ಎಂಬ ಗೋದಾಮು ಇದ್ದು, ಈ ಗೋದಾಮಿನಲ್ಲಿ ಮೆಕ್ಕೆಜೋಳದ ಮೂಟೆಗಳನ್ನು ಸಂಗ್ರಹಿಸಿಡಲಾಗಿದೆ. ಹಲವು ವರ್ಷಗಳಿಂದ ಬಿಹಾರ ಮೂಲದ ಕಾರ್ಮಿಕರು ಈ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಸಂಜೆ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಏಕಾಏಕಿ ಮೆಕ್ಕೆಜೋಳದ ಮೂಟೆಗಳು ಅವರ ಮೇಲೆ ಉರುಳಿ ಬಿದ್ದಿವೆ. ತಕ್ಷಣ ನಾಲ್ಕು ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತ್ತಾದರೂ ಕಾರ್ಮಿಕರನ್ನು ಆ ಸಂದರ್ಭದಲ್ಲಿ ರಕ್ಷಿಸಲು ಸಾಧ್ಯವಾಗಿಲ್ಲ. +ಸ್ಥಳಕ್ಕೆ ಬೆಳಗಾವಿ ಹಾಗೂ ಕಲಬುರಗಿಯಿಂದ ಎಸ್‍ಡಿಆರ್‍ಎಫ್ ಸಿಬ್ಬಂದಿ, ಅಗ್ನಿಶಾಮಕ ದಳದ ಸಿಬ್ಬಂದಿಯೂ ಸಹ ರಕ್ಷಣಾ ತಂಡದ ಜೊತೆ ಕೈಜೋಡಿಸಿ ಕಾರ್ಮಿಕರ ಮೇಲೆ ಬಿದ್ದಿರುವ ಮೂಟೆಗಳನ್ನು ತೆರವು ಮಾಡುವ ಕಾರ್ಯಾಚರಣೆ ಬರದಿಂದ ಸಾಗಿತ್ತು. ಸಂಜೆಯಿಂದ ನಿರಂತರವಾಗಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದರಾದರೂ ಮೂಟೆಗಳಡಿ ಸಿಲುಕಿ ಉಸಿರುಗಟ್ಟಿ ಕಾರ್ಮಿಕರು ಮೃತಪಟ್ಟಿದ್ದು, ಇದುವರೆಗೂ ಏಳು ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. +ಸಚಿವರ ಭೇಟಿ:ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿದ್ದ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿಂದ ವಾಪಸ್ ಆಗಿದ್ದು, ರಾಜಗುರು ಮೆಕ್ಕೆಜೋಳ ಸಂಸ್ಕರಣ ಘಟಕಕ್ಕೆ ಆಗಮಿಸಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸ್ಥಳದಲ್ಲಿದ್ದ ಕಾರ್ಮಿಕರಿಗೆ ಸಾಂತ್ವನ ಹೇಳಿದರು. +ಭೀಕರ ದುರಂತ:ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಭೀಕರ ದುರಂತ ನಡೆದು ಹೋಗಿದೆ. ಉದ್ಯೋಗ ಅರಸಿಕೊಂಡು ಬೇರೆ ರಾಜ್ಯದಿಂದ ಇಲ್ಲಿಗೆ ಬಂದು ಕೆಲಸ ಮಾಡುತ್ತಿರುವಾಗ ಇಂತಹ ಅನಾಹುತ ಸಂಭವಿಸಿರುವುದು ವಿಷಾದಕರ. ನಮ್ಮ ಪ್ರಥಮ ಆದ್ಯತೆ ಕಾರ್ಮಿಕರ ರಕ್ಷಣೆಯಾಗಿದೆ ಎಂದರು.ಕಾರ್ಮಿಕರ ಮೃತದೇಹಗಳನ್ನು ಅವರ ಮನೆಗಳಿಗೆ ತಲುಪಿಸುವಂತಹ ಕಾರ್ಯ ಮಾಡಲಾಗುತ್ತದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಂಡು ಮುಖ್ಯಮಂತ್ರಿಗಳಿಗೂ ಸಹ ಈ ಬಗ್ಗೆ ವಿವರಿಸಿದ್ದೇನೆ. ಗಾಯಾಳುಗಳಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. +ಮೃತರ ಕುಟುಂಬಕ್ಕೆ ಪರಿಹಾರ:ಮೃತ ಕಾರ್ಮಿಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದ ಸಚಿವರು, ಗೋದಾಮು ಮಾಲೀಕರಿಂದಲೂ ಸಹ ಕಾರ್ಮಿಕರ ಕುಟುಂಬಕ್ಕೆ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.ಗೋದಾಮಿನಲ್ಲಿ ಸಂಪೂರ್ಣ ಕಾರ್ಯಾಚರಣೆ ಮುಗಿದ ನಂತರ ಹೆಚ್ಚಿನ ಮಾಹಿತಿ ದೊರೆಯಲಿದೆ. ಕಾರ್ಮಿಕರು ಮತ್ತು ಕುಟುಂಬಸ್ಥರು ದುಃಖದಲ್ಲಿದ್ದಾರೆ ಎಂದರು. +ಬಿಗುವಿನ ವಾತಾವರಣ:ರಕ್ಷಣ ಕಾರ್ಯಾಚರಣೆ ವೇಳೆ ಗೋದಾಮಿನ ಬಳಿ ಬಿಗುವಿನ ವಾತಾವರಣ ಉಂಟಾಗಿತ್ತು. ರಕ್ಷಣಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ, ಗ್ಯಾಸ್ ಕಟರ್ ಮೂಲಕ ಕಬ್ಬಿಣದ ರಾಡುಗಳನ್ನು ಕತ್ತರಿಸಿ ಕಾರ್ಮಿಕರ ಶವಗಳನ್ನು ಹೊರತೆಗೆದು ಮೃತದೇಹಗಳನ್ನು ಅಂಬ್ಯುಲೆನ್ಸ್‍ನಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲು ದಾರಿ ಬಿಡದೆ ಪ್ರತಿಭಟನೆಗೆ ಮುಂದಾದರು. ಅಂಬ್ಯಲೆನ್ಸ್‍ನ್ನು ಅಡ್ಡ ಹಾಕಿ ಮೊದಲು ಪರಿಹಾರ ಘೋಷಿಸಿ ನಂತರ ಮೃತದೇಹಗಳನ್ನು ಕೊಂಡೊಯ್ಯಿರಿ ಎಂದು ಪಟ್ಟು ಹಿಡಿದರು. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸಚಿವರು ಕಾರ್ಮಿಕರ ಮನವೊಲಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. +ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್ +ಕಾರ್ಮಿಕರ ರಕ್ಷಣೆ:ಮೆಕ್ಕೆಜೋಳ ಮೂಟೆಗಳಡಿ 11 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದು, ಮೂವರನ್ನು ರಕ್ಷಿಸಲಾಗಿದೆ. ಏಳು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಿಲುಕಿರುವ ಕಾರ್ಮಿಕರ ರಕ್ಷಣೆಗಾಗಿ ಪೂನಾದಿಂದ 30ಕ್ಕೂ ಅಧಿಕ ಸಿಬ್ಬಂದಿ ಇರುವ ಎನ್‍ಡಿ ಆರೆಸ್ಟ್ ತಂಡ ಕಾರ್ಯಾಚರಣೆಯಲ್ಲಿ ತೊಡಗಿದೆ. \ No newline at end of file diff --git a/eesanje/url_46_296_12.txt b/eesanje/url_46_296_12.txt new file mode 100644 index 0000000000000000000000000000000000000000..b42fcfb7641dcc251ca5455d2bedd7deda300121 --- /dev/null +++ b/eesanje/url_46_296_12.txt @@ -0,0 +1,13 @@ +ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ +ಬೆಂಗಳೂರು, ಡಿ. 5- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ಮಿಂಚಿನ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ 13 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದ್ದಾರೆ. +ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು, ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ವಿಶೇಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ .ವೈ.ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. +ಯಾದಗಿರಿಯಲ್ಲಿ ಡಿಎಚ್‍ಒ ಆಗಿರುವ ಡಾ.ಪ್ರಭುಲಿಂಗ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸ ಸೇರಿದಂತೆ ಹಲವೆಡೆ ಲೋಕಾ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 4 ಲಕ್ಷ ನಗದು ಪತ್ತೆಯಾಗಿದ್ದು, ಇವರ ಸಂಬಂಗಳ ನಿವಾಸಗಳಲ್ಲೂ ಕೂಡ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. +ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್ +ಬೆಂಗಳೂರಿನ ಮೈಸೂರು ರಸ್ತೆ ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೋಡು ಬಳಿಯ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.ಕೃಷಿ ಜಮೀನು, ಹಲವೆಡೆ ನಿವೇಶನ ಸೇರಿದಂತೆ ಹಲವು ಆಸ್ತಿ ದಾಖಲೆ ಪತ್ರಗಳು ಪತ್ತೆಯಾಗಿವೆ. +ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್ ರೆಡ್ಡಿ ಅವರ ಅಮೃತಹಳ್ಳಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 92.95 ಲಕ್ಷ ನಗದು, ಚಿನ್ನಾಭರಣ,28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರದ ಆಭರಣಗಳು ಹಾಗೂ ಅಪಾರ ಪ್ರಮಾಣದ ಸ್ಥಿರಾಸ್ತಿಗಳು ಪತ್ತೆಯಾಗಿವೆ. ಚಿಂತಾಮಣಿ ಬಳಿಯ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ. +ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಎಂಬುವವರ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಕಾರ್ಯಾಚರಣೆ ನಡೆದಿದೆ. ಕುಟುಂಬದ ಹೆಸರಿನಲ್ಲಿ ಎಂ.ಎಸ್. ಗ್ರೂಪ್ ಕಂಪೆನಿ ಇದ್ದು, ಇದರಲ್ಲಿ ಇವರ ಹೂಡಿಕೆ ಇದೆ ಎಂಬ ಆರೋಪವಿದ್ದು, ಪಿ.ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿಎಸ್‍ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ. +ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್‍ಎಫ್‍ಒ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ. ಚಂದ್ರಶೇಖರ್ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್‍ಎಫ್‍ಓ ಮಾರುತಿ ಗಂಗಾವತಿಯಲ್ಲಿ ಕೆಲಸ ಮಾಡುತ್ತಿದ್ದು , ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸಲಾಗುತ್ತಿದ್ದು ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. +ಬೀದರ್‍ನಲ್ಲೂ ಸಹ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಬೀದರ್‍ನ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಅವರ ಒಡೆತನದ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ಉಪನಿರ್ದೇಶಕ ಮುನೇಗೌಡ ಅವರ ನಂದಿ ಕ್ರಾಸ್ ಬಳಿ ಇರುವ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. +ಚಿಕ್ಕಬಳ್ಳಾಪುರದ ಹಲವೆಡೆ ಇವರು ಅಪಾರ ಪ್ರಮಾಣದ ಆಸ್ತಿ ಖರೀದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಹಲವಾರು ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. +ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ +ಬೆಳಗಾವಿಯಲ್ಲಿ ಕೆಆರ್‍ಐಡಿಎಲ್‍ನ ಸೂಪರಿಂಡೆಂಟ್ ಎಂಜಿನಿಯರ್ ತಿಮ್ಮರಾಜಪ್ಪ ಅವರ ನಿವಾಸ ಸೇರಿದಂತೆ 8 ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಕೋಲಾರದ ಕೆಜಿಎಫ್‍ನಲ್ಲಿರುವ ಸ್ವಂತ ಊರಿನಲ್ಲಿರುವ ಮನೆ ಹಾಗೂ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆಸಲಾಗಿದೆ. ಕೋಲಾರ ಲೋಕಾಯುಕ್ತ ಎಸ್‍ಪಿ ಉಮೇಶ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. \ No newline at end of file diff --git a/eesanje/url_46_296_2.txt b/eesanje/url_46_296_2.txt new file mode 100644 index 0000000000000000000000000000000000000000..075c0b2ab1b07d3b272fab5f2edd3e198dacc6be --- /dev/null +++ b/eesanje/url_46_296_2.txt @@ -0,0 +1,10 @@ +ಸಿದ್ದರಾಮಯ್ಯ ಜೊತೆ ವೇದಿಕೆಯಲ್ಲಿ ಪಾಕ್ ಐಎಸ್‍ಐ ಸಂಪರ್ಕ ಹೊಂದಿರುವ ಮೌಲ್ವಿ : ಯತ್ನಾಳ್ ಬಾಂಬ್ +ಬೆಳಗಾವಿ,ಡಿ.6- ಪಾಕಿಸ್ತಾನದ ಗುಪ್ತಚರ ಐಎಸ್‍ಐ ಜೊತೆ ಸಂಪರ್ಕ ಹೊಂದಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಐಎಸ್‍ಐ ಹಾಗೂ ಭಯೋತ್ಪಾದನೆ ಸಂಘಟನೆಗಳ ಜೊತೆ ಸಂಪರ್ಕ ಇಟ್ಟುಕೊಂಡಿರುವ ಮೌಲ್ವಿ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದು ಅತ್ಯಂತ ದುರ್ದೈವ ಎಂದು ವಾಗ್ದಾಳಿ ನಡೆಸಿದರು. +ಮುಖ್ಯಮಂತ್ರಿ@siddaramaiahಅವರು ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಶ) ಉದ್ಘಾಟಿಸಿದರು.ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ…../PjBcK7t235 +ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಅದು ಹೇಗೆ ಜಾರಿ ಮಾಡುತ್ತೀರಿ ಎಂದು ಇದೇ ಮೌಲ್ವಿ ಪ್ರಾಣ ಬೆದರಿಕೆ ಹಾಕಿದ್ದ . ಇಂಥವರ ಬಗ್ಗೆ ಕಾಳಜಿ ತೋರುವ ಮುಖ್ಯಮಂತ್ರಿ ವೇದಿಕೆ ಹಂಚಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.ದೇಶದ ಪ್ರಧಾನಿ ರಾಜ್ಯಕ್ಕೆ ಬರುವಾಗ ಅವರ ಜೊತೆ ಯಾರ್ಯಾರು ಇರಬೇಕೆಂದು ಮೊದಲು ತೀರ್ಮಾನವಾಗುತ್ತದೆ. ಅಲ್ಲದೆ ಪೂರ್ವಪರ ಹಿನ್ನೆಲೆಯಲ್ಲ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ. ಅದೇ ಮುಖ್ಯಮಂತ್ರಿ ಜೊತೆ ವೇದಿಕೆ ಹಂಚಿಕೊಳ್ಳುವಾಗ ಪೊಲೀಸ್ ಇಲಾಖೆ ಹಾಗೂ ಗುಪ್ತಚರಕ್ಕೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು. +ತುರ್ತು ಚಿಕಿತ್ಸೆಗಾಗಿ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದ ಸ್ಪೈಸ್‍ಜೆಟ್ +ಈ ಮೌಲ್ವಿಯ ಹಿನ್ನೆಲೆ ಏನೆಂಬುದನ್ನು ಒಂದು ವಾರದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿ ಕೊಡುತ್ತೇನೆ. ಮುಖ್ಯಮಂತ್ರಿಯವರು ಇಂಥವರ ಜೊತೆ ವೇದಿಕೆ ಹಂಚಿಕೊಂಡು ರಾಜ್ಯದ ಜನತೆಗೆ ಏನು ಸಂದೇಶ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹಣ ಹಂಚುತ್ತೇನೆ ಎಂದು ಹೇಳಿದ್ದಾರೆ. ನೀವು ಕೇವಲ ಮುಸ್ಲಿಮರಿಗೆ ಮಾತ್ರ ಮುಖ್ಯಮಂತ್ರಿಯಲ್ಲ. ಈ ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆಯಬೇಡಿ. ನಿಮಗೆ ಕೇವಲ ಅವರೊಬ್ಬರೇ ಮಾತ್ರ ಮತ ಹಾಕಿದ್ದಾರೆಯೇ ಎಂದು ಪ್ರಶ್ನಿಸಿದರು. +ರಾಜ್ಯದ ಮುಖ್ಯಮಂತ್ರಿಯಾದವರು ಎಲ್ಲಾ ಸಮುದಾಯದವರನ್ನು ಸಮಾನವಾಗಿ ಕಾಣಬೇಕು. ಕೇವಲ ವೋಟ್ ಬ್ಯಾಂಕ್‍ಗಾಗಿ ಒಂದು ಸಮುದಾಯವನ್ನು ಓಲೈಕೆ ಮಾಡುವುದು ಸರಿಯಲ್ಲ. ಹೀಗೆ ತುಷ್ಟೀಕರಣ ಮಾಡಿದ್ದರಿಂದಲೇ ನಿಮ್ಮ ಪರಿಸ್ಥಿತಿ ಏನಾಯಿತು ಎಂಬುದನ್ನು ಪಂಚರಾಜ್ಯ ಚುನಾವಣೆಯಿಂದಾದರೂ ತಿಳಿದುಕೊಳ್ಳಿ ಎಂದರು. ನೀವು ನಿಮ್ಮ ಪಕ್ಷದ ವತಿಯಿಂದ ಹಣ ನೀಡಿದರೆ ಸಮಸ್ಯೆ ಇಲ್ಲ. ಸರ್ಕಾರದ ದುಡ್ಡು ಎಲ್ಲ ಸಮುದಾಯಗಳಿಗೂ ಸದ್ಬಳಕೆಯಾಗಲಿ ಎಂದು ಹೇಳಿದರು. +ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆ ನಿಗೂಢ ಸಾವು +ಸ್ವಪಕ್ಷೀಯರ ವಿರುದ್ಧ ವಾಗ್ದಾಳಿ:ಇನ್ನು ಯತ್ನಾಳ್ ಎಂದಿನಂತೆ ಸ್ವಪಕ್ಷೀಯರ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ನಾನಾಗಿಯೇ ದೆಹಲಿಗೆ ಹೋಗುವುದಿಲ್ಲ. ದೆಹಲಿಯಿಂದ ಕರೆ ಬಂದ ಮೇಲೆ ಹೋಗುತ್ತೇನೆ. ನಿನ್ನೆ ಸೂಚನೆ ಕೊಟ್ಟಿದ್ದಾರೆ. ಯಾವಾಗ ಕರೆ ಬರುತ್ತದೆ ಆಗ ಹೋಗುತ್ತೇನೆ ಎಂದು ಹೇಳಿದರು. +ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಅವರಿಗೂ ಹೇಳಿರಬಹುದು. ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಉಚಿತ ಇಲ್ಲ ಎಂದು ವ್ಯಂಗ್ಯವಾಡಿದರು. ಇಬ್ಬರು ಮಹಾನುಭಾವರು ಇದ್ದಾರೆ. ಅವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ಇಬ್ಬರು ಸಿಂಗ್‍ಗಳಿಂದ ಈ ನಿರ್ಧಾರ ಮಾಡಿದ್ದೇನೆ. ದೆಹಲಿಯ ಒಬ್ಬರು, ಕರ್ನಾಟಕದ ಒಬ್ಬರು ಇದ್ದಾರೆ ಎಂದು ಮಾರ್ಮಿಕವಾಗಿ ನುಡಿದರು. \ No newline at end of file diff --git a/eesanje/url_46_296_3.txt b/eesanje/url_46_296_3.txt new file mode 100644 index 0000000000000000000000000000000000000000..16db54b3f51a383c9cd578a84a51001592d40c0e --- /dev/null +++ b/eesanje/url_46_296_3.txt @@ -0,0 +1,5 @@ +ಸಚಿವರು ಗೈರು, ಸಭಾಪತಿ ಗರಂ +ಬೆಳಗಾವಿ, ಡಿ.5- ಬೆಳಗಾವಿಯ ಚಳಿಗಾಲದ ಅಧಿವೇಶನ ಎರಡನೇ ದಿನವಾದ ಇಂದೂ ಸಹ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಚಿವರು ಗೈರಾಗಿದ್ದಕ್ಕೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಮೇಲೆ ಗರಂ ಆದರು. +ಪ್ರಶ್ನೋತ್ತರ ಕಲಾಪದ ವೇಳೆ ಇಲಾಖೆಗೆ ಸಂಬಂಧಿಸಿದ ಸಚಿವರು ಕಾಣದ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಭಾಪತಿ ಹೊರಟ್ಟಿ, ಯಾರು, ಯಾವ ಇಲಾಖೆ ಸಚಿವರು ಗೈರಾಗುತ್ತಾರೆ ಎಂದು ಸರ್ಕಾರದ ಪರವಾಗಿ ಮುಖ್ಯ ಸಚೇತಕರು ಮಾಹಿತಿ ನೀಡಬೇಕು ಅಲ್ಲವೇ ಎಂದು ಏರು ಧ್ವನಿಯಲ್ಲಿ ಪ್ರಶ್ನೆ ಮಾಡಿದರು. +ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ +ಈ ವೇಳೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಉತ್ತರ ನೀಡದೇ ಮೌನಕ್ಕೆ ಜಾರಿದರು. ಆಗ ವಿಪಕ್ಷ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರು ಮುಖ್ಯ ಸಚೇತಕರಿಗೆ ಅವರ ಕೆಲಸವೇ ಗೊತ್ತಿಲ್ಲ ಎಂದು ಕಾಲೆಳೆದರು. ಬಳಿಕ ಸಭಾಪತಿ, ಆಯಾ ಸಚಿವರು ಅವರ ಇಲಾಖೆ ಕುರಿತು ಉತ್ತರಿಸಿದರೆ, ಒಳಿತು. ಒಂದು ವೇಳೆ ಗೈರಾದರೆ ಮಾಹಿತಿ ಮುಟ್ಟಿಸಿ. ನೀವೇ ಇಲಾಖೆ ಬದಲಾಯಿಸಿ ಉತ್ತರಿಸುವುದು ಸೂಕ್ತವೇ ಎಂದು ಪ್ರಶ್ನೆ ಮಾಡಿದರು. \ No newline at end of file diff --git a/eesanje/url_46_296_4.txt b/eesanje/url_46_296_4.txt new file mode 100644 index 0000000000000000000000000000000000000000..2b4a68a2e097e34ea5cea016297fa4379bf34140 --- /dev/null +++ b/eesanje/url_46_296_4.txt @@ -0,0 +1,6 @@ +ಯಶಸ್ವಿನಿ ಯೋಜನೆಯ ಬಿಲ್ ಬಾಕಿ ಉಳಿಸಿಕೊಂಡಿಲ್ಲ : ಸಚಿವ ರಾಜಣ್ಣ +ಬೆಳಗಾವಿ,ಡಿ.5-ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಜಾರಿಯಾದ ನಂತರ ಒಪ್ಪಂದ ಮಾಡಿಕೊಂಡಿರುವ ಯಾವುದೇ ಆಸ್ಪತ್ರೆಗಳಿಗೂ ಪಾವತಿಸಬೇಕಾದ ಶುಲ್ಕ(ಬಿಲ್)ವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ವಿಧಾನಪರಿಷತ್‍ಗೆ ಸ್ಪಷ್ಟಪಡಿಸಿದ್ದಾರೆ. +ಸದಸ್ಯ ಪಿ.ಎನ್.ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 2023ರಿಂದ ಈ ಯೋಜನೆಯನ್ನು ಹೊಸದಾಗಿ ಮರುಜಾರಿ ಮಾಡಲಾಗಿದೆ. ಸರ್ಕಾರದ ಮಾನದಂಡಗಳನ್ನು ಪಾಲನೆ ಮಾಡಿಕೊಂಡಿರುವ ಆಸ್ಪತ್ರೆಗಳ ಜೊತೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಯಾವ ಆಸ್ಪತ್ರೆಗಳಿಗೆ ಶುಲ್ಕ ನೀಡಬೇಕೊ ಅದನ್ನು ಹಂತ ಹಂತವಾಗಿ ನೀಡಲಾಗುತ್ತದೆ. ಈವರೆಗೂ ಯಾವ ಆಸ್ಪತ್ರೆಯ ಬಿಲ್ ಬಾಕಿ ಇಲ್ಲ ಎಂದು ಪ್ರಶ್ನಿಸಿದರು. +2003ರಲ್ಲಿ ಯಶಸ್ವಿನಿ ಯೋಜನೆಯನ್ನು ಪ್ರಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಜಾರಿ ಮಾಡಲಾಯಿತು. 2003-04ರಿಂದ 2017ರಿಂದ 18ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ನಂತರ ಯೋಜನೆಯನ್ನು ಸಹಕಾರಿ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಯಿತು. 1-6-2017ರಿಂದ 31-05-2018ವರೆಗೆ ಅನುಷ್ಠಾನ ಮಾಡಲಾಯಿತು. ಆದರೆ 1-6-1-2018ರಿಂದ ಯೋಜನೆಯನ್ನು ಸ್ಥಗಿತಗೊಳಿಸಲಾಯಿತು ಎಂದರು. +ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ +ಆಗ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅವರು, ಈ ಯೋಜನೆಯನ್ನು ತಡೆದವರು ಯಾರು ಎಂದು ಪ್ರಶ್ನಿಸಿದಾಗ, ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಆಸ್ಪತ್ರೆಗಳು ಕಳುಹಿಸಿಕೊಡುವ ಪ್ರತಿಯೊಂದು ಬಿಲ್‍ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ನಮ್ಮ ಮಾನದಂಡಗಳನ್ನು ಪಾಲನೆ ಮಾಡಲಾಗಿದೆಯೇ? ಆಧಾರ್‍ಕಾರ್ಡ್ ಲಿಂಕ್ ಹೀಗೆ ಎಲ್ಲ ನಿಯಮಗಳು ಕ್ರಮಬದ್ಧವಾಗಿದ್ದರೆ ಮಾತ್ರ ಬಿಲ್ ಪಾವತಿಯಾಗುತ್ತದೆ. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿರಬಹುದು ಎಂದು ಹೇಳಿದರು.ರಾಜ್ಯದಲ್ಲಿ 2023ರಿಂದ ಈ ಯೋಜನೆಯನ್ನು ಜಾರಿ ಮಾಡಿದ್ದು, ಇದು ಸಮರ್ಪಕವಾಗಿ ಅನುಷ್ಠಾನಗೊಂಡಿದೆ ಎಂದು ರಾಜಣ್ಣ ತಿಳಿಸಿದರು. \ No newline at end of file diff --git a/eesanje/url_46_296_5.txt b/eesanje/url_46_296_5.txt new file mode 100644 index 0000000000000000000000000000000000000000..db4434d8d5c23a597bb13de8ed20bef899a257f4 --- /dev/null +++ b/eesanje/url_46_296_5.txt @@ -0,0 +1,6 @@ +ನೈಸ್ ಸಂಸ್ಥೆಗೆ ನೀಡಿರುವ 554 ಎಕರೆ ಜಾಮೀನು ಹಿಂಪಡೆಯಲು ಸರ್ಕಾರ ಬದ್ಧ +ಬೆಳಗಾವಿ,ಡಿ.5-ಬಿಎಂಐಸಿ ಯೋಜನೆಗೆ ಹೆಚ್ಚುವರಿಯಾಗಿ ನೈಸ್ ಸಂಸ್ಥೆಗೆ ನೀಡಿರುವ 554 ಎಕರೆ ಜಮೀನನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ್ ಅವರು ವಿಧಾನಪರಿಷತ್‍ಗೆ ಹೇಳಿದ್ದಾರೆ. +ಬಿಜೆಪಿ ಸದಸ್ಯ ಮುನಿರಾಜೇಗೌಡ.ಪಿ.ಎಂ. ಅವರ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪರವಾಗಿ ಉತ್ತರಿಸಿದ ಸಚಿವ ಶರಣಬಸಪ್ಪ ದರ್ಶನಾಪುರ್, ನೈಸ್ ಸಂಸ್ಥೆಯವರಿಗೆ ಹೆಚ್ಚುವರಿಯಾಗಿ 554 ಎಕರೆ ಜಮೀನನ್ನು ಹಿಂತಿರುಗಿಸಬೇಕೆಂದು ಕೆಐಎಡಿಬಿ ಮೂಲಕ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಜಮೀನು ಹಿಂಪಡೆಯುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು +ಬಿಎಂಐಸಿ ಯೋಜನೆಗೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತು ಈಗಾಗಲೇ ಜಮೀನುಗಳನ್ನು ಗುರುತಿಸಿ ಸರ್ವೆ ನಂಬರ್ ಕೂಡ ನೀಡಲಾಗಿದೆ. ಈಗಾಗಲೇ ಕಾನೂನಿನ ಪ್ರಕ್ರಿಯೆಗಳು ಪ್ರಾರಂಭವಾಗಿದೆ. ನೈಸ್ ಸಂಸ್ಥೆಯವರಿಗೆ ಜಮೀನು ಬಿಡಬೇಕು. ಅದರಿಂದ ನಮಗಾಗುವ ಉಪಯೋಗವೇನು ಎಂದು ಪ್ರಶ್ನಿಸಿದರು.ಹೆಚ್ಚುವರಿ ಭೂಮಿ ಹಿಂಪಡೆಯುವ ಬಗ್ಗೆ ಸದನ ಸಮಿತಿಯು ತನ್ನ ವರದಿಯಲ್ಲಿ ನೀಡಿರುವ ಜಮೀನಿನ ಸರ್ವೆ ನಂಬರ್‍ಗಳಿಗೂ ಮತ್ತು ವಿಸ್ತೀರ್ಣಕ್ಕೂ ವ್ಯತ್ಯಾಸಗಳಿವೆ. ಇದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. +ಭೂಮಿಯನ್ನು ಹಿಂಪಡೆದ ನಂತರ ಇದನ್ನು ಯಾವ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬುದರ ಕುರಿತು ಪರಿಶೀಲನೆಯಲ್ಲಿದೆ. ಜಮೀನು ನಮ್ಮ ಕೈಗೆ ಬಂದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. \ No newline at end of file diff --git a/eesanje/url_46_296_6.txt b/eesanje/url_46_296_6.txt new file mode 100644 index 0000000000000000000000000000000000000000..01ef0a49e834cf281dc2e39b47c231749c6050b9 --- /dev/null +++ b/eesanje/url_46_296_6.txt @@ -0,0 +1,10 @@ +ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಕಾಲಾಹರಣ : ಬಿಜೆಪಿ ಆಕ್ರೋಶ +ಬೆಳಗಾವಿ,ಡಿ.5- ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಸರ್ಕಾರ ಸಲಹೆ ಪಡೆದುಕೊಳ್ಳುವುದರಲ್ಲೇ ಕಾಲಾಹರಣ ಮಾಡುತ್ತಿದೆ, ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಆಡಳಿತ ಪಕ್ಷದ ಶಾಸಕ ಎನ್.ಎ.ಹ್ಯಾರಿಸ್ ಅವರು ಪ್ರಶ್ನೆ ಕೇಳಿದರು. ಇದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು. +ಡಿ.ಕೆ.ಶಿವಕುಮಾರ್‍ರವರು ಬ್ರಾಂಡ್ ಬೆಂಗಳೂರು ಕಲ್ಪನೆಯನ್ನು ಸಾಕಾರಗೊಳಿಸಲು ಆಸಕ್ತಿ ತೋರಿಸಿದ್ದಾರೆ. ಸುಮಾರು 70 ಸಾವಿರಕ್ಕೂ ಅಕ ಸಲಹೆಗಳು ಬಂದಿವೆ. ಅವುಗಳನ್ನು ಕ್ರೂಢೀಕರಿಸಲು 8 ಶೈಕ್ಷಣಿಕ ಸಂಸ್ಥೆಗಳನ್ನು ಪಾಲುದಾರರನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. +ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್ +ಸಚಿವರ ಉತ್ತರಕ್ಕೆ ಮುನ್ನವೇ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಸದಸ್ಯರಾದ ಭಾಸ್ಕರ್, ಸಿ.ಎನ್.ಅಶ್ವತ್ಥನಾರಾಯಣ, ವಿಪಕ್ಷ ನಾಯಕ ಆರ್.ಅಶೋಕ್, ಎಸ್.ಎಸ್.ವಿಶ್ವನಾಥ್ ಮತ್ತಿತರರು ಸರ್ಕಾರ ರಚನೆಯಾಗಿ 6 ತಿಂಗಳಾಗಿದೆ. ಇನ್ನೂ ಅಭಿವೃದ್ಧಿ ಸಲಹೆ ಪಡೆಯುವುದರಲ್ಲೇ ಕಾಲಾಹರಣ ಮಾಡಲಾಗುತ್ತಿದೆ. ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಶಾಸಕ ಮುನಿರತ್ನ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರು ಸಂಚಾರದಟ್ಟಣೆಯಲ್ಲಿ 3 ಗಂಟೆಗಳ ಕಾಲ ಒದ್ದಾಡಬೇಕಿದೆ. ಹೆಬ್ಬಾಳ ಮೇಲು ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಇನ್ನೂ ಎಷ್ಟು ಸಮಯ ಬೇಕು ಎಂದು ವಿಪಕ್ಷ ನಾಯಕರು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಸಚಿವರ ನೆರವಿಗೆ ಧಾವಿಸಿದ ಆಡಳಿತ ಪಕ್ಷದ ಶಾಸಕರಾದ ಎನ್.ಎ.ಹ್ಯಾರಿಸ್, ಎಚ್.ಸಿ.ಬಾಲಕೃಷ್ಣ ಮತ್ತಿತರರು 9 ವರ್ಷಗಳ ಕಾಲ ಕೇಂದ್ರದಲ್ಲಿ ಬಿಜೆಪಿ ಅಕಾರದಲ್ಲಿದೆ. ರಾಜ್ಯದಲ್ಲೂ ವಿವಿಧ ಹಂತಗಳಲ್ಲಿ 9 ವರ್ಷ ಸರ್ಕಾರ ನಡೆಸಿದ್ದೀರ. ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಕೊಡುಗೆಗಳೇನು. ಸಮಸ್ಯೆಗಳ ಪರಿಹಾರಕ್ಕೆ ನಿಮ್ಮ ಸರ್ಕಾರ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ತಿರುಗೇಟು ನೀಡಿದರು. +ಬ್ರಾಂಡ್ ಬೆಂಗಳೂರು ಮೂಲಕ ಒಳ್ಳೆಯ ಕೆಲಸ ಮಾಡಲು ಮುಂದಾಗಿದ್ದರೂ ವಿರೋಧ ವ್ಯಕ್ತಪಡಿಸುತ್ತಿದ್ದೀರ ಎಂದು ಆಕ್ರೋಶ ಹೊರಹಾಕಿದರು. ನಾವು ಬ್ರಾಂಡ್ ಬೆಂಗಳೂರಿಗೆ ವಿರೋಧ ಮಾಡಿಲ್ಲ. ಆದರೆ ಸಲಹೆ ಪಡೆಯುವುದರಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ವಿಪಕ್ಷ ಶಾಸಕರು ಅಸಮಾಧಾನ ಹೊರಹಾಕಿದರು.ಒಂದು ಹಂತದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿ ಜೋರಾಗಿತ್ತು. +ಮೇಲ್ಸೇತುವೆ ಯೋಜನೆಗೆ ಬಿಜೆಪಿಯವರು ವಿರೋಧ ಮಾಡಿತ್ತು. ಈಗ ವಿಮಾನನಿಲ್ದಾಣ ರಸ್ತೆಯಲ್ಲಿ ಸಂಚಾರದ ಸಮಸ್ಯೆಯಾಗುತ್ತಿದೆ ಎಂದು ಮಾತನಾಡುತ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದರು.ಹೆಬ್ಬಾಳ ಮೇಲು ಸೇತುವೆ ಯೋಜನೆಗೆ ಯಾವುದೇ ವಿರೋಧ ಇಲ್ಲ. ಹೆಬ್ಬಾಳದಿಂದ ಚಾಲುಕ್ಯ ವೃತ್ತದವರೆಗೂ ಸ್ಟೀಲ್ ಬ್ರಿಡ್ಜ್ ಮಾಡಲು ಬೆಂಗಳೂರಿನ ಜನರೇ ವಿರೋಧ ವ್ಯಕ್ತಪಡಿಸಿದ್ದರು ಎಂದು ಬಿಜೆಪಿ ಶಾಸಕರು ಸ್ಪಷ್ಟನೆ ನೀಡಿದರು. +ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ +ಆರೋಪ-ಪ್ರತ್ಯಾರೋಪಗಳ ಬಳಿಕ ಸಮಜಾಯಿಷಿ ನೀಡಿದ ರಾಮಲಿಂಗಾರೆಡ್ಡಿಯವರು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯ ಜಾರಿಗೆ ಉಪಮುಖ್ಯಮಂತ್ರಿಯ ಅಧ್ಯಕ್ಷತೆಯಲ್ಲಿ ಸಮನ್ವಯ ಸಮಿತಿ ರಚಿಸಲಾಗಿದೆ. ಮುಖ್ಯಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಅಸ್ತಿತ್ವದಲ್ಲಿದೆ. ಶೀಘ್ರವೇ ಯೋಜನೆ ಜಾರಿಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_296_7.txt b/eesanje/url_46_296_7.txt new file mode 100644 index 0000000000000000000000000000000000000000..66b35df744afe00d7cafb1cd2ec90c18f1c1f3d0 --- /dev/null +++ b/eesanje/url_46_296_7.txt @@ -0,0 +1,8 @@ +ಸಹಕಾರ ಸಂಘಗಳ ಅವ್ಯವಹಾರ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ +ಬೆಳಗಾವಿ,ಡಿ.5- ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನಿಯಂತ್ರಣ ಮಾಡಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಹಿರಿಯ ತಜ್ಞರ ಸಮಿತಿಯನ್ನು ರಚನೆ ಮಾಡಲಾಗಿದ್ದು, ಮುಂದಿನ ಅವೇಶನದಲ್ಲಿ ವರದು ಮಂಡಿಸುತ್ತೇವೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನಪರಿಷತ್‍ಗೆ ತಿಳಿಸಿದ್ದಾರೆ. +ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಹಕಾರ ಸಂಘಗಳಲ್ಲಿ ಹಲವಾರು ವರ್ಷಗಳಿಂದ ವ್ಯಾಪಕವಾದ ಭ್ರಷ್ಟಾಚಾರ ಮತ್ತು ಹಗರಣಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಇದನ್ನು ನಿಯಂತ್ರಿಸಲು ಈಗಿರುವ ಕಾಯ್ದೆಗೆ ತಿದ್ದುಪಡಿ ತರಲು ಹಿರಿಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಮುಂದಿನ ಅಧಿವೇಶನದೊಳಗೆ ವರದಿಯು ಸರ್ಕಾರದ ಕೈ ಸೇರಲಿದ್ದು, ಬಳಿಕ ಮಂಡನೆ ಮಾಡುತ್ತೇವೆ ಎಂದು ತಿಳಿಸಿದರು. +ಸೋಮವಾರವಷ್ಟೇ ಸಮಿತಿ ತಜ್ಞರ ಜೊತೆ ಸಭೆ ನಡೆಸಿದ್ದೇನೆ. ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಇದನ್ನು ಮಂಡಿಸುವ ಉದ್ದೇಶವಿತ್ತು. ಅಮೂಲಾಗ್ರ ಬದಲಾವಣೆಗೆ ಸಮಯಾವಕಾಶ ಬೇಕು ಎಂದು ಕೇಳಿಕೊಂಡಿದ್ದಾರೆ. ಇನ್ನು ಮುಂದೆ ಸಹಕಾರಿ ಸಂಘಗಳಲ್ಲಿ ಅವ್ಯವಹಾರ, ಹಗರಣಗಳು, ಸಹಕಾರಿಗಳು ಒಪ್ಪದ ಯಾವುದೇ ವ್ಯವಹಾರಗಳು ನಡೆಯುವುದಿಲ್ಲ. ಈಗ ನಮ್ಮ ಸರ್ಕಾರ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ಹೇಳಿದರು. +ಸಹಕಾರ ಸಂಘಗಳ ಸ್ಥಿತಿಗತಿಗಳನ್ನು ಕಲಂ 63ರಡಿ ಪ್ರತಿ ಸಹಕಾರಿ ಸಂಘದ ಲೆಕ್ಕ ಪರಿಶೋಧನೆಯನ್ನು ಸೆಪ್ಟಂಬರ್ 1ನೇ ತಾರೀಖಿನೊಳಗೆ ಮುಕ್ತಾಯಗೊಳಿಸಬೇಕೆಂಬ ನಿಯಮವಿದೆ. ಚಾರ್ಟರ್ಡ್ ಅಕೌಂಟೆಂಟ್‍ಗಳಿಗೆ ಹೆಚ್ಚಿನ ವೆಚ್ಚ ತಗಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ತಿದ್ದುಪಡಿಯಲ್ಲಿ ಇದು ಕೂಡ ಪ್ರಸ್ತಾವನೆಯಾಗಲಿದೆ ಎಂದು ತಿಳಿಸಿದರು. +ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್ +ಸಹಕಾರ ಸಂಘಗಳ ಲೆಕ್ಕ ಪರಿಶೋಧನೆಯನ ತಜ್ಞರು, ಲೆಕ್ಕ ಪರಿಶೋಧಕರು ಹಾಗೂ ಇಲಾಖೆಯ ಲೆಕ್ಕ ಪರಿಶೋಧಕರು ನಿರ್ವಹಿಸುತ್ತಾರೆ. ರಾಜ್ಯ ಸಹಕಾರಿ ಬ್ಯಾಂಕ್ ಹಾಗೂ ಕೇಂದ್ರ ಸಹಕಾರಿ ಬ್ಯಾಂಕ್‍ಗಳು ರಾಷ್ಟ್ರೀಯ ಬ್ಯಾಂಕ್‍ನಿಂದ ಅನುಮೋದನೆಗೊಂಡ ಆಯ್ಕೆಯಾದ ಲೆಕ್ಕಿಗರು ಲೆಕ್ಕ ಪರಿಶೋಧನೆ ಮಾಡುತ್ತಾರೆ. ಸಹಕಾರಿ ಸಂಘಗಳ ಸ್ಥಿತಿಗತಿಗಳನ್ನು ಅವಲೋಕಿಸಿ ಸುಧಾರಣೆ ಕೈಗೊಳ್ಳುವ ವ್ಯವಸ್ಥೆ ರೂಪಿಸಲಾಗಿದೆ ಎಂದು ರಾಜಣ್ಣ ಹೇಳಿದರು. +ಸಹಕಾರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಸಮಯ, ಸಂದರ್ಭ ಹಾಗು ಆರ್ಥಿಕ ಸ್ಥಿತಿಗತಿ ನೋಡಿಕೊಂಡು ಭರ್ತಿ ಮಾಡಲು ಅವಕಾಶವಿದೆ. ಖಾಲಿ ಹುದ್ದೆಗಳನ್ನು ಆಡಳಿತ ಮಂಡಳಿಯವರೇ ಭರ್ತಿ ಮಾಡಿಕೊಳ್ಳುತ್ತಾರೆ ಎಂದು ಅವರು ಹೇಳೀದರು. \ No newline at end of file diff --git a/eesanje/url_46_296_8.txt b/eesanje/url_46_296_8.txt new file mode 100644 index 0000000000000000000000000000000000000000..22bdf74abb659725f95171dfc8f2dfa93a01d348 --- /dev/null +++ b/eesanje/url_46_296_8.txt @@ -0,0 +1,5 @@ +ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ +ಬೆಳಗಾವಿ,ಡಿ.5- 43 ಅಸಂಘಟಿತ ಕಾರ್ಮಿಕ ವಲಯಗಳಿಗೆ ಇಎಸ್‍ಐ, ಪಿಎಫ್ ಸೇರಿದಂತೆ ಇತರೆ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಪು ಕ್ಷೇತ್ರದ ಗುರ್ಮೆ ಸುರೇಶ್‍ಶೆಟ್ಟಿ ಅವರು ಮಾತನಾಡಿ, ರಾಜ್ಯಾದ್ಯಂತ 10 ಲಕ್ಷ ಟೈಲರ್ ವೃತ್ತಿ ಮಾಡುವವರಿ ದ್ದಾರೆ. ಅವರಿಗೆ ಸರಿಯಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದರು. +ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 43 ಅಸಂಘಟಿತ ವಲಯಗಳಲ್ಲಿ ವಿವಿಧ ಕ್ಷೇತ್ರದ ಕಾರ್ಮಿಕರಿದ್ದಾರೆ. ಅವರಿಗೆ ಇಎಸ್‍ಐ, ಪಿಎಫ್‍ನಂತಹ ಸೌಲಭ್ಯಗಳನ್ನು ಒದಗಿಸಲು ಅವಕಾಶವಿಲ್ಲ ಎಂದರು.ತೇರದಾಳ ಕ್ಷೇತ್ರದ ಸಿದ್ಧುಸವದಿಯವರು ಕೂಡ ಕಾರ್ಮಿಕ ಕಲ್ಯಾಣದ ಬಗ್ಗೆ ಪ್ರಶ್ನೆ ಕೇಳಿದರು. ಇದು ವ್ಯಾಪಕ ಚರ್ಚೆಗೆ ಕಾರಣವಾಯಿತು. +ಸಚಿವ ಸಂತೋಷ್ ಲಾಡ್ ಮಾತನಾಡಿ, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸೆಸ್ ಸಂಗ್ರಹ ಮಾಡಲಾಗುತ್ತಿದೆ. ಅದರಡಿ ಕಲ್ಯಾಣ ಯೋಜನೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಉಳಿದಂತೆ ರಾಜ್ಯಸರ್ಕಾರ ಗಿಗ್ ಕ್ಷೇತ್ರದ ನೌಕರರಿಗೆ ವಿಮಾ ಯೋಜನೆ ಮತ್ತು ಇಎಸ್‍ಐ, ಪಿಎಫ್ ಸೌಲಭ್ಯ ಒದಗಿಸುತ್ತಿದೆ. ಸಾರಿಗೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 35 ರಿಂದ 40 ಲಕ್ಷ ನೌಕರರಿಗೂ ಸೌಲಭ್ಯ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರ ಕ್ಷೇತ್ರಗಳ ಕಾರ್ಮಿಕರಿಗೂ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. +ಸಭಾಧ್ಯಕ್ಷ ಯು.ಟಿ.ಖಾದರ್‍ರವರು, ಗಾರ್ಮೆಂಟ್ಸ್, ವಾಹನ ಉತ್ಪಾದನೆ, ಖರೀದಿಯಂತಹ ಕ್ಷೇತ್ರಗಳಿಗೆ ಸೆಸ್ ಹಾಕಿ ಅದರಿಂದ ಬರುವ ಹಣವನ್ನು ಆಯಾ ಕ್ಷೇತ್ರದ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ ಮಾಡುವಂತೆ ಸಲಹೆ ನೀಡಿದರು. ಇದನ್ನು ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದರು. \ No newline at end of file diff --git a/eesanje/url_46_296_9.txt b/eesanje/url_46_296_9.txt new file mode 100644 index 0000000000000000000000000000000000000000..2e8ff07e929fd9ef1025f899f88d9eac5c523a4c --- /dev/null +++ b/eesanje/url_46_296_9.txt @@ -0,0 +1,10 @@ +ವೀರ ಅರ್ಜುನನ ನೆನಪಿನಲ್ಲಿ ಸ್ಮಾರಕ ನಿರ್ಮಾಣ +ಬೆಳಗಾವಿ, ಡಿ.5-ಐತಿಹಾಸಿಕ ಮೈಸೂರು ದಸರಾದ ಕೇಂದ್ರ ಬಿಂದುವಾಗಿದ್ದ ಗಜರಾಜ ವೀರ ಅರ್ಜುನ ನೆನಪಿನಲ್ಲಿ ಸರ್ಕಾರ ಸ್ಮಾರಕವೊಂದನ್ನು ನಿರ್ಮಾಣ ಮಾಡುವುದಾಗಿ ಪ್ರಕಟಿಸಿದೆ. ವಿಧಾನ ಪರಿಷತ್ತಿನ ಎರಡನೇ ದಿನ ಕಲಾಪ ಆರಂಭದಲ್ಲಿ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಹಾಗೂ ವೀರ ಯೋಧರು ಮತ್ತು ಐತಿಹಾಸಿಕ ಮೈಸೂರು ದಸರಾ ವೈಭವದ ಕೇಂದ್ರ ಬಿಂದುವಾಗಿದ್ದ ಗಜರಾಜ ಅರ್ಜುನ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸಲಾಯಿತು. +ಈ ವೇಳೆ ಸಭಾ ನಾಯಕ ಎನ್.ಎಸ್.ಭೋಸರಾಜು ಪ್ರಸ್ತಾಪಿಸಿ, ಬಲಶಾಲಿ ಮಾಸ್ಟರ್ ಹಾಗೂ ಹಿರಿಯ ಎಂಬ ಹೆಸರುಗಳಿಂದ ಖ್ಯಾತನಾಗಿದ್ದ ಅರ್ಜುನನನ್ನು 1968ರಲ್ಲಿ ಖೆಡ್ಡಾ ವಿಧಾನದಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿದ್ದು, 22ವರ್ಷಗಳಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿತ್ತು. +2012ರಿಂದ 2019ರವರೆಗೆ 8 ಬಾರಿ ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತು ತನ್ನ ರಾಜಗಾಂಭೀರ್ಯದ ನಡಿಗೆಯ ಮೂಲಕ ದಸರೆಯ ಮೆರುಗಿಗೆ ಕೇಂದ್ರ ಬಿಂದುವಾಗಿ ನಾಡಿನ ಜನತೆಯ ಪ್ರೀತಿಗೆ ಪಾತ್ರವಾಗಿತ್ತು.ಇದರ ನೆನಪು ಸದಾ ಉಳಿಸುವ ನಿಟ್ಟಿನಲ್ಲಿ ಸ್ಮಾರಕವೊಂದು ನಿರ್ಮಿಸಲಾಗುವುದು ಎಂದು ಹೇಳಿದರು. +ಇದಕ್ಕೂ ಮುನ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು, 60 ವರ್ಷದ ನಂತರ ಚಿನ್ನದ ಅಂಬಾರಿ ಹೊರುವ ಕೆಲಸದಿಂದ ನಿವೃತ್ತಿ ಹೊಂದಿ ಈ ಬಾರಿ ದಸರಾ ಮೆರವಣಿಗೆಯಲ್ಲಿ ದಿಕ್ಕು ತೋರುವ ನಿಶಾನೆ ಆನೆ¿ ಯಾಗಿ ಸಾಗಿದ್ದ ಅರ್ಜುನ ನಾಡಿನ ಜನತೆಯ ಮನಸೂರೆಗೊಂಡಿತ್ತು. ಸಕಲೇಶಪುರ ತಾಲ್ಲೂಕಿನ ಯಸಳೂರಿನಲ್ಲಿ ಕಾಡಾನೆಯನ್ನು ಹಿಡಿಯುವ ಕಾರ್ಯಾಚರಣೆ ವೇಳೆಯಲ್ಲಿ ಆಕಸ್ಮಿಕವಾಗಿ ಗಾಯಗೊಂಡು ಮೃತಪಟ್ಟಿರುತ್ತದೆ. +ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್ +ಮೈಸೂರು ದಸರಾ ಅಂಬಾರಿ ಹೊರುವ ಕಾಯಕವನ್ನು ಅತ್ಯಂತ ಠೀವಿಯಿಂದ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದ ಹೆಮ್ಮೆಯ ಅರ್ಜುನನ ನಿಧನದಿಂದಾಗಿ ರಾಜ್ಯವು ರಾಜಗಾಂಭೀರ್ಯದ ಗಜರಾಜನನ್ನು ಕಳೆದುಕೊಂಡು ಶೋಕದ ಮಡುವಿನಲ್ಲಿ ಮುಳುಗಿದೆ ಎಂದು ಹೇಳಿದರು. +ಅದೇ ರೀತಿ, ವೀರ ಯೋಧರುಗಳ ಹಾಗೂ ವೀರ ಅರ್ಜುನನ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ವೀರ ಯೋಧರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಹಾಗೂ ವೀರ ಅರ್ಜುನನ ಅಪಾರ ಅಭಿಮಾನಿಗಳ ಬಳಗಕ್ಕೆ ಉಂಟಾಗಿರುವ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ನುಡಿದರು. +ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ +ವಿಪಕ್ಷ ಸದಸ್ಯ ಭೋಜೇಗೌಡ ಮಾತನಾಡಿ, ಅರ್ಜುನ ಸಾವು ಆಕಸ್ಮಿಕವಾಗಿ ನಡೆದಿಲ್ಲ. ಈಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಕೋರಿದರು. ಆಗ ಸಭಾಪತಿ ಚರ್ಚೆಗೆ ಅವಕಾಶ ನೀಡುವುದಾಗಿ ಸಮ್ಮತಿ ಸೂಚಿಸಿದರು. ಕೋಟಾ ಶ್ರೀನಿವಾಸ ಪೂಜಾರಿ ಪ್ರಸ್ತಾಪಿಸಿ, ಜಮ್ಮು ಕಾಶ್ಮೀರದ ರಚೌರಿ ಜಿಲ್ಲೆಯಲ್ಲಿ ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಪ್ರಾಂಜಲ್ ಸೇರಿದಂತೆ ಕ್ಯಾಪ್ಟನ್ ಶುಭಂ ಗುಪ್ತಾ, ಹವಲ್ದಾರ ಅಬ್ದುಲ್ ಮಜಿಕ್, ಲಾನ್ಸ್ ನಾಯ್ ಸಂಜಯ್ ಬಿಸ್ಟ್ ಮತ್ತು ಸಚಿನ್ ಲಾರ್ ಈ ಐದು ವೀರ ಯೋಧರುಗಳು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದು, ಇವರ ದೇಶ ಸೇವೆ ಎಂದಿಗೂ ನೆನಪಿನಲ್ಲಿ ಉಳಿಸಿಕೊಳ್ಳಲಿದೆ ಎಂದರು. \ No newline at end of file diff --git a/eesanje/url_46_297_1.txt b/eesanje/url_46_297_1.txt new file mode 100644 index 0000000000000000000000000000000000000000..32271c7780fb4842b2c2bade77dd3c2e4ac11df4 --- /dev/null +++ b/eesanje/url_46_297_1.txt @@ -0,0 +1,5 @@ +ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ : ಗುಂಡೂರಾವ್ +ಬೆಳಗಾವಿ,ಡಿ.5- ಚೈನಾ ವೈರಸ್ ಮತ್ತು ನ್ಯುಮೋನಿಯಾ ಹೆಚ್ಚಳದ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‍ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಆದರೆ ಚೈನಾದಲ್ಲಿ ಕಂಡುಬಂದಿರುವ ನ್ಯುಮೋನಿಯಾದ ಬಗ್ಗೆ ಆತಂಕ ಪಡುವುದು ಅನಗತ್ಯ ಎಂದರು. +ಈಗಾಗಲೇ ಈ ಸಂಬಂಧ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿ ತೀವ್ರ ನಿಗಾಘಟಕ, ವೆಂಟಿಲೇಟರ್, ಆಕ್ಸಿಜನ್, ಮಾಸ್ಕ್, ಪಿಪಿ ಇ ಕಿಟ್‍ಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸೋಂಕಿನ ಹಾವಳಿ ತೀವ್ರಗೊಂಡಾಗ ಅದನ್ನು ನಿಯಂತ್ರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು. +ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್ +ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರ್ಕಾರ ಕೂಡ ಚೀನಾ ನ್ಯುಮೋನಿಯಾ ವೈರಸ್ ಬಗ್ಗೆ ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿವೆ. ಹೀಗಾಗಿ ಜನರು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು. \ No newline at end of file diff --git a/eesanje/url_46_297_10.txt b/eesanje/url_46_297_10.txt new file mode 100644 index 0000000000000000000000000000000000000000..8e698b4b0a292c5f383512f13b6f3cf320c34024 --- /dev/null +++ b/eesanje/url_46_297_10.txt @@ -0,0 +1,6 @@ +ಬರಗಾಲದ ಚರ್ಚೆಗೆ ಪ್ರತಿಪಕ್ಷಗಳಿಂದ ನಿಲುವಳಿ ಸೂಚನೆಯಡಿ ನೋಟಿಸ್ +ಬೆಳಗಾವಿ,ಡಿ.4- ಚಳಿಗಾಲ ಅಧಿವೇಶನದ ಮೊದಲ ದಿನವೇ ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಲು ಅವಕಾಶ ಕೋರಿ ಪ್ರತಿಪಕ್ಷಗಳು ನಿಲುವಳಿ ಸೂಚನೆಯಡಿ ನೋಟಿಸ್ ನೀಡಿವೆ. ಇಂದು ಬೆಳಗ್ಗೆ ವಿಧಾನಸಭೆ ಕಾರ್ಯದರ್ಶಿ ಯವರಿಗೆ ನಿಲುವಳಿ ಸೂಚನೆ ನೋಟಿಸ್ ನೀಡಲಾಗಿದ್ದು, ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಕೋರಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನೋಟಿಸ್ ನೀಡಿದ್ದಾರೆ. +ರಾಜ್ಯಾದ್ಯಂತ ತೀವ್ರ ಸ್ವರೂಪದ ಬರಗಾಲ ಆವರಿಸಿದೆ. ಕೃಷಿ, ತೋಟಗಾರಿಕೆ ಬೆಳೆಗಳು ಮಳೆ ಅಭಾವದಿಂದ ಹಾನಿಗೀಡಾ ಗಿವೆ. ಸುಮಾರು 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದ್ದು, ಅತಂಕಕ್ಕೊಳಗಾಗಿರುವ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ. +ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ +ತೀವ್ರ ಸ್ವರೂಪದ ಬರ ಪರಿಸ್ಥಿತಿ ಇದ್ದರೂ ರಾಜ್ಯದಲ್ಲಿ ಸಮಪರ್ಕವಾಗಿ ಬರ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಕೃಷಿ, ಕೂಲಿ ಕಾರ್ಮಿಕರು ಉದ್ಯೋಗ ಹುಡುಕಿಕೊಂಡು ಬೇರೆ ರಾಜ್ಯಗಳತ್ತ ಗೂಳೇ ಹೋಗುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ. +ಇತ್ತೀಚೆಗಷ್ಟೇ ರೈತರಿಗೆ 2000 ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಬರಪರಿಹಾರ ಕಾಮಗಾರಿಗಳು ನಡೆಯುತ್ತಿಲ್ಲ. ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ತೆರೆಯಲು ಅಗತ್ಯ ಕ್ರಮ ಕೈಗೊಂಡಿಲ್ಲ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ, ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ರಾಜ್ಯ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳ ಶಾಸಕರು ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕೆಂದು ನೋಟಿಸ್‍ನಲ್ಲಿ ಕೋರಿದ್ದಾರೆ. \ No newline at end of file diff --git a/eesanje/url_46_297_11.txt b/eesanje/url_46_297_11.txt new file mode 100644 index 0000000000000000000000000000000000000000..b8e06b7cb8ccf21bef5484c0828bbf4d86bc923b --- /dev/null +++ b/eesanje/url_46_297_11.txt @@ -0,0 +1,5 @@ +ವಿಪಕ್ಷಗಳಿಗೆ ಉತ್ತರ ನೀಡಲು ಸರ್ಕಾರ ತಯಾರಾಗಿದೆ : ಸಿಎಂ +ಬೆಳಗಾವಿ,ಡಿ.4- ಅಧಿವೇಶನದಲ್ಲಿ ವಿರೋಧ ಪಕ್ಷಗಳು ಮಾಡುವ ಪ್ರಸ್ತಾಪಗಳಿಗೆ ಉತ್ತರ ನೀಡಲು ರಾಜ್ಯ ಸರ್ಕಾರ ತಯಾರಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಿದರೂ ಸೂಕ್ತ ಉತ್ತರ ನೀಡಲು ನಾವು ತಯಾರಾಗಿದ್ದೇವೆ ಎಂದರು. +ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕೆಲವು ಮಸೂದೆಗಳು ಮಂಡನೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಯಾಗಲಿದೆ ಎಂದು ಹೇಳಿದರು. ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಎಲ್ಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಲು ಜಾರಿಗೆ ತರಲಾಗಿದೆ. ಬಡವರ ಪರವಾಗಿ ತಂದಿರುವಂತಹ ಕಾರ್ಯಕ್ರಮಗಳು ಎಂದು ಸಮರ್ಥಿಸಿಕೊಂಡರು. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ತೆಲಂಗಾಣದಲ್ಲಿ ನೀಡಿದ್ದ ಗ್ಯಾರಂಟಿ ಭರವಸೆಯಿಂದ ಕಾಂಗ್ರೆಸ್‍ಗೆ ಗೆಲುವು ಸಿಕ್ಕಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಗ್ಯಾರಂಟಿ ಭರವಸೆ ಘೋಷಣೆ ಮಾಡಿರಲಿಲ್ಲವೇ? ಹಾಗಿದ್ದರೆ ಅವರು ಯಾವ ಭರವಸೆ ಮೇಲೆ ಗೆದ್ದಿದ್ದಾರೆ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು 6 ತಿಂಗಳು ತೆಗೆದುಕೊಂಡ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಎಂದರು. \ No newline at end of file diff --git a/eesanje/url_46_297_12.txt b/eesanje/url_46_297_12.txt new file mode 100644 index 0000000000000000000000000000000000000000..79d30befb69108f971fec1e07aabeeadf02fa8ea --- /dev/null +++ b/eesanje/url_46_297_12.txt @@ -0,0 +1,12 @@ +ನಿಂತ ಬಸ್‍ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು +ಬೆಂಗಳೂರು,ಡಿ.4- ಪ್ರಯಾಣಿಕರನ್ನು ಇಳಿಸಲು ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ನಿಲ್ಲುತ್ತಿದ್ದಂತೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಇಂದು ಬೆಳಗ್ಗೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. +ಬೆಂಕಿಯ ತೀವ್ರತೆಯಿಂದಾಗಿ ಬಸ್ ಹಿಂಭಾಗ ಭಾಗಶಃ ಹಾನಿಯಾಗಿದೆ. ಚಾಲಕ ಹಾಗೂ ನಿರ್ವಾಹಕರ ಸಮಯ ಪ್ರಜ್ಞೆಯಿಂದ ಬಸ್‍ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಲೋಕೇಶ್, ಇವರ ಪತ್ನಿ ಹಾಗೂ ಮಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಇಂದು ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಯಶವಂತಪುರದಿಂದ ಬಿಎಂಟಿಸಿ ಬಸ್ ನಾಯಂಡಹಳ್ಳಿ ಹೋಗುತ್ತಿತ್ತು. ರಿಂಗ್ ರಸ್ತೆಯ ಸುವರ್ಣ ಲೇಔಟ್, ನಾಗರಬಾವಿ ಜಂಕ್ಷನ್‍ನಲ್ಲಿ ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದಾಗ ಹಿಂದಿನಿಂದ ಅತಿವೇಗವಾಗಿ ಬಂದ ಕಾರು ಬಸ್ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. +ಡಿಕ್ಕಿ ರಭಸಕ್ಕೆ ಕಾರಿನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರನ್ನು ಪೂರ್ತಿ ಆವರಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ಕಾರಿನಲ್ಲಿದ್ದ ದಂಪತಿ ಹಾಗೂ ಮಗಳನ್ನು ಕಾರಿನಿಂದ ಹೊರ ಕರೆತಂದು ರಕ್ಷಿಸಿದ್ದಾರೆ. ಬಸ್ ಹಿಂಭಾಗಕ್ಕೆ ಕಾರು ಕಚ್ಚಿಕೊಂಡಿದ್ದರಿಂದ ಚಾಲಕ ಕಾರನ್ನು ಬೇರ್ಪಡಿಸಲು ಬಸ್ಸನ್ನು ಸ್ವಲ್ಪ ದೂರ ಚಾಲನೆ ಮಾಡಿಕೊಂಡು ಹೋಗಿ ಬುದ್ಧಿವಂತಿಕೆ ಉಪಯೋಗಿಸಿ ಮೀಡಿಯನ್ ಮೇಲೆ ಬಸ್ ಹತ್ತಿಸಿದಾಗ ಉರಿಯುತ್ತಿದ್ದ ಕಾರು ಕಳಚಿಕೊಂಡಿದೆ. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ನಂತರ ಸಾರ್ವಜನಿಕರ ಸಹಾಯದಿಂದ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ ಹಿಂಭಾಗ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಒಂದು ವೇಳೆ ಬಸ್ ಇಂಜಿನ್‍ಗೆ ಬೆಂಕಿ ತಾಗಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಚಾಲಕ ವಿವರಿಸಿದ್ದಾರೆ. +ಬಸ್ ಹಿಂಭಾಗಕ್ಕೆ ಬೆಂಕಿ ತಾಗಿದ್ದರಿಂದ ಭಾಗಶಃ ಹಾನಿಯಾಗಿದೆ. ನೋಡ ನೋಡುತ್ತಿದ್ದಂತೆ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರಾದರೂ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.ಈ ಬಗ್ಗೆ ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಚಾಲಕನ ಸಮಯಪ್ರಜ್ಞೆ:ಪ್ರಯಾಣಿಕರನ್ನು ಇಳಿಸಲು ಬಸ್ ನಿಲ್ಲಿಸಿದಾಗ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಬಸ್‍ಗೆ ಕಚ್ಚಿಕೊಂಡು ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಚಾಲಕ ಬಸ್ ಇಳಿದು ನಿರ್ವಾಹಕ ಹಾಗೂ ಸ್ಥಳೀಯರೊಂದಿಗೆ ಸೇರಿ ನೀರು ಹಾಗೂ ಮಣ್ಣು ಹಾಕಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು. +ಸಾಧ್ಯವಾಗದಿದ್ದಾಗ ಬಸ್‍ನ್ನು ಸ್ವಲ್ಪ ಮುಂದೆ ಚಾಲನೆ ಮಾಡಿದರಾದರೂ ಕಾರು ಬಸ್‍ನಿಂದ ಬಿಡಿಸಿಕೊಳ್ಳದೆ ಬಸ್‍ನ ಜೊತೆಗೆ ಬರುತ್ತಿರುವುದನ್ನು ಗಮನಿಸಿ ಬಸ್‍ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. +ಜನ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ : ಮೋದಿ +ನಂತರ ಬಸ್‍ನಲ್ಲಿದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ನಂದಿಸಲು ಯತ್ನಿಸಿದರು. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ತಕ್ಷಣ ಅಗ್ನಿಶಾಮಕ ದಳ ಹಾಗೂ ಡಿಫೋಗೆ ವಿಷಯ ತಿಳಿಸಿದ್ದಾರೆ. ಡಿಫೋದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ತಹಬದಿಗೆ ತರಲು ಯತ್ನಿಸುತ್ತಿದ್ದಾಗ ಅಗ್ನಿಶಾಮಕ ಸಿಬ್ಬಂದಿ ವಾಹನದೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದರು. \ No newline at end of file diff --git a/eesanje/url_46_297_2.txt b/eesanje/url_46_297_2.txt new file mode 100644 index 0000000000000000000000000000000000000000..f4c95ee319bd87d73346dff786a15a9d3290b9ba --- /dev/null +++ b/eesanje/url_46_297_2.txt @@ -0,0 +1,12 @@ +ಬಿಜೆಪಿ-ಜೆಡಿಎಸ್ ಮೋದಿ ನಾಯಕತ್ವದಲ್ಲಿ ಮುನ್ನಡೆಯಲಿದೆ : ದೇವೇಗೌಡರು +ಹಾಸನ, ಡಿ.5- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯೊಂದಿಗೆ 28 ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುವ ಮೂಲಕ ಐಕ್ಯತೆ ಪ್ರದರ್ಶನ ಮಾಡಲಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಿಳಿಸಿದರು. +ನಗರದ ಸಂಸದರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿಯ ನಂತರ ಸೀಟು ಹಂಚಿಕೆ ವಿಚಾರವಾಗಿ ಮುಂದಿನ ವಾರ ಶಾ, ಮೋದಿಯವರು ಮಾತುಕತೆಗೆ ಕರೆಯಬಹುದು, ಮಾತುಕತೆಯ ನಂತರ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಅಂತಿಮವಾಗಲಿದೆ ಎಂದರು. +ನಾನು ಕೇವಲ ಅಹಂಕಾರದಲ್ಲಿ ಮಾತನಾಡುತ್ತಿಲ್ಲ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯುತ್ತರ ಕೊಡುವಂತಹ ಸಾಮಥ್ರ್ಯ ಶಕ್ತಿ ಜೆಡಿಎಸ್ ಹಾಗೂ ಬಿಜೆಪಿಗೆ ಇದೆ. ಮೋದಿ ಅವರ ನಾಯಕತ್ವದಲ್ಲಿ ಮುನ್ನಡೆಯಲ್ಲಿದ್ದೇವೆ ಎಂದು ತಿಳಿಸಿದರು. +ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು +ಜನತಾ ಪರಿವಾರ ಪ್ರಾರಂಭವಾದ ದಿನದಿಂದ ರೈತರು, ಹಿಂದುಳಿದ ವರ್ಗದ ಜನರ ಪರವಾಗಿ ಕೆಲಸ ಮಾಡಿದ್ದೇವೆ. ಇದಕ್ಕೆ ಹಲವು ನಿದರ್ಶನಗಳು ಇದೆ. ನಾಯಕ ಸಮಾಜಕ್ಕೆ, ಮಹಿಳೆಯರಿಗೆ, ಮುಸ್ಲಿಮರಿಗೆ ಮೀಸಲಾತಿ ದೊರಕಿಸಿ ಕೊಟ್ಟಿರುವ ಕೀರ್ತಿ ಜೆಡಿಎಸ್‍ಗೆ ಇದೆ ಎಂದು ಅವರು ಹೇಳಿದರು. +ರೈತರ ಸಂಕಷ್ಟಕ್ಕೆ ಸ್ಪಂದನೆ:ರಾಜ್ಯದ ರೈತರ ಸಂಕಷ್ಟದ ಸಮಯದಲ್ಲಿ ಜೆಡಿಎಸ್ ಹೋರಾಟ ನಡೆಸಿದ್ದು, 3000 ಮಂದಿ ರೈತರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ ಉದಾಹರಣೆಗಳು ಇದೆ. ಕಾಫಿ ಬೆಳೆಗಾರರ ಸಂಕಷ್ಟಕ್ಕೂ ಸಹ ಜೆಡಿಎಸ್ ಸ್ಪಂದಿಸಿದೆ. ಇಂತಹ ಪಕ್ಷವನ್ನು ಮುಗಿಸಿಬಿಡುತ್ತೇವೆ ಎಂದು ಬಂದಾಗ ಮೋದಿ ಅವರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬರುವ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಮುಖಂಡರು ಚರ್ಚೆ ನಡೆಸಲಿದ್ದು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೊರಟ ಮಾಡಲಿದ್ದೇವೆ ಎಂದರು. +ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನ:ಪ್ರಧಾನ ಮಂತ್ರಿ ಮೋದಿ, ಗೃಹ ಮಂತ್ರಿ ಅಮಿತ್ ಶಾ, ಪಕ್ಷದ ಅಧ್ಯಕ್ಷರಾದ ನಡ್ದಾ, ರಾಜ್ಯ ಘಟಕದ ಅಧ್ಯಕ್ಷರಾದ ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಅಶೋಕ್, ಹಿರಿಯ ಮುಖಂಡರಾದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜೆಡಿಎಸ್‍ನ ರಾಜ್ಯ ಘಟಕದ ಅಧ್ಯಕ್ಷ ಕುಮಾರಸ್ವಾಮಿ ಹಾಗೂ ಕೇಂದ್ರದ ಮುಖಂಡರೊಂದಿಗೆ ಸಮಾಲೋಚನೆ ಮಾಡುವ ಮೂಲಕ ಮುಂಬರುವ ಲೋಕಸಭೆ ಚುನಾವಣೆಗೆ ಮೈತ್ರಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು. +ನಾವು ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನು ಗೆಲ್ಲಲಿದ್ದೇವೆ ಈ ವಿಚಾರದಲ್ಲಿ ಐಕ್ಯತೆಯನ್ನು ಪ್ರದರ್ಶನ ಮಾಡಲಿದ್ದು ಯಾವುದೇ ಸಂಕೋಚ ಇಲ್ಲ ,ಲೋಕಾ ಚುನಾವಣೆ ಸಂದರ್ಭದಲ್ಲಿನ ಮೈತ್ರಿ ಸ್ಥಳೀಯ ಚುನಾವಣೆ ಗಳಲ್ಲಿಯೂ ಮುಂದುವರೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು ಸ್ಥಳೀಯ ಸಂಸ್ಥೆಯ ಚುನಾವಣೆ ರಾಷ್ಟ್ರೀಯ ಚುನಾವಣೆಗೆ ಬೆರೆಸುವುದು ಬೇಡ ಎರಡು ಚುನಾವಣೆಗಳಿಗೆ ಅನವಶ್ಯಕ ಹೊಂದಾಣಿಕೆ ಮಾಡುವುದು ಸರಿಯಲ್ಲ ಎಂದರು. +ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ +ರಾಜ್ಯದಲ್ಲಿ ಜೆಡಿಎಸ್ ಪ್ರಾದೇಶಿಕ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಮೊನ್ನೆ ಕೂಡ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿದ್ದಾರೆ. ಇದು ಒಂದೆಡೆಯಾದರೆ ಮೋದಿ ಪ್ರಧಾನಿ ಆಗಿ ನನ್ನ ಬಗ್ಗೆ ವೈಯಕ್ತಿಕ ಗೌರವ ಇಟ್ಟುಕೊಂಡಿದ್ದು, ಕಾಂಗ್ರೆಸ್ ನಡವಳಿಕೆಗೆ ಸೂಕ್ಷ್ಮವಾಗಿ ಗಮನಿಸಿ ಮೋದಿ ಮತ್ತು ಷಾ ಅವರು ನಮ್ಮನ್ನು ಸ್ವಾಗತ ಮಾಡಿದ್ದಾರೆ. ಮುಂದಿನ ರಾಜಕೀಯ ಬೆಳವಣಿಗೆ ಮೋದಿ, ಶಾ ಅವರ ಜೊತೆ ಕರ್ನಾಟಕದಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುವುದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು. +ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 130ಕ್ಕೂ ಹೆಚ್ಚು ಸ್ಥಾನ ಗೆದ್ದಿದ್ದೇವೆ ಎಂದು ಬೀಗುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎಂದು ತೋರಿಸಲಿದ್ದೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_297_3.txt b/eesanje/url_46_297_3.txt new file mode 100644 index 0000000000000000000000000000000000000000..696ddfc7413499cca6c074d8e7d1bb4867d7139c --- /dev/null +++ b/eesanje/url_46_297_3.txt @@ -0,0 +1,8 @@ +ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್ +ಬೆಳಗಾವಿ,ಡಿ.5- ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಪಕ್ಷದ ಸಂಪತ್ತು ಇದ್ದರೆ ಹಂಚಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಅಂದರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ. ಅವರ ಹೇಳಿಕೆ ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಹಿಂದೆ ಏನಾಯ್ತು? ಎಂಬುದನ್ನು ಅವರು ಮನಗಾಣಬೇಕು ಎಂದು ಟೀಕಿಸಿದರು. +ಹಿಂದೂಗಳನ್ನ ಎರಡನೇ ದರ್ಜೆಯ ಪ್ರಜೆಗಳ ರೀತಿ ನೋಡುತ್ತಿದ್ದಾರೆ. ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿ ಕಾರ್ಯಕ್ರಮಗಳನ್ನ ತಂದರು. ಮುಸ್ಲಿಂಮರನ್ನ ವೋಟಿನ ಗಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. +ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು +ಬಿಜೆಪಿ ಕಾರ್ಯಕರ್ತನ ಮೇಲೆ ಚಾಕು ಇರಿತ ಪ್ರಕರಣ ಕುರಿತು ಮಾತನಾಡಿದ ಅಶೋಕ್, ನಾನು ಸಂಜೆ ಪೃಥ್ವಿರಾಜ್ ಅವರನ್ನು ಭೇಟಿಯಾಗುತ್ತೇನೆ. ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡ ಇರುವುದು ಪಕ್ಕಾ ಇದೆ ಎಂದು ಆರೋಪಿಸಿದರು. +ಕಾಂಗ್ರೆಸ್‍ಗೆ ಗೂಂಡಾ ಸಂಸ್ಕೃತಿ ಮೊದಲಿಂದಲೂ ಇದೆ. ಇದೊಂದು ಗೂಂಡಾ ಸರ್ಕಾರ. ಕಳೆದ ಆರು ತಿಂಗಳಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಮಂಗಳೂರು ಉಡುಪಿಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಗಡಿಪಾರು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಜ್ಯದಲ್ಲಿ ಭೀಕರವಾದ ಬರ ತಾಂಡವಾಡುತ್ತಿದೆ. ಸರ್ಕಾರಕ್ಕೆ ಅನ್ನದಾತನ ಬಗ್ಗೆ ತಾಯಿ ಹೃದಯ ಇರಬೇಕಿತ್ತು. ಆದರೆ ಸರ್ಕಾರಕ್ಕೆ ಕಟುಕುನ ಹೃದಯ ಇದೆ. ಇಷ್ಟೊತ್ತಿಗೆ ಬರ ನಿರ್ವಹಣೆಗೆ ಹಲವಾರು ಕಾರ್ಯಕ್ರಮ ಕೊಡಬೇಕಿತ್ತು. ಸಬೂಬು ಹೇಳಿಕೊಂಡು ಸುಮ್ಮನೇ ಕೇಂದ್ರದ ಮೇಲೆ ಗೂಬೆ ಕೂರಿಸುವುದಲ್ಲ ಎಂದರು. ಸಚಿವರು, ಶಾಸಕರು ತೆಲಂಗಾಣದಲ್ಲಿದ್ದಾರೆ. ಕಾಂಗ್ರೆಸ್ ತೆಲಂಗಾಣದಲ್ಲಿ ಗ್ಯಾರೆಂಟಿಗಳ ಭರವಸೆ ನೀಡಿ ಸ್ಪಷ್ಟವಾಗಿ ಕಾನೂನು ಉಲ್ಲಂಘನೆ ಮಾಡಿದೆ ಎಂದು ದೂರಿದರು. \ No newline at end of file diff --git a/eesanje/url_46_297_4.txt b/eesanje/url_46_297_4.txt new file mode 100644 index 0000000000000000000000000000000000000000..f5c2d62c17c2130b642afbbbec74d19e72c76a4e --- /dev/null +++ b/eesanje/url_46_297_4.txt @@ -0,0 +1,10 @@ +ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ ಬಂಧನಕ್ಕೆ ವಿಜಯೇಂದ್ರ ಒತ್ತಾಯ +ಬೆಳಗಾವಿ,ಡಿ.5-ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಚಾಕು ಇರಿತ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಹಾಗೂ ವಿಧಾನಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಅವರ ಕೈವಾಡ ಇರುವುದರಿಂದ ಕೂಡಲೇ ಪೊಲೀಸರು ಬಂಧಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ ನಡೆದ ಜಾಗದಲ್ಲಿ ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಕಾರು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ತಮ್ಮ ಕೈವಾಡ ಇಲ್ಲ ಎನ್ನುವುದಾಗಿದ್ದರೆ ಅಲ್ಲಿ ವಾಹನ ಪತ್ತೆಯಾಗಿದ್ದು ಏಕೆ ಎಂದು ಪ್ರಶ್ನಿಸಿದರು. ಪ್ರಕರಣವನ್ನು ಮುಚ್ಚಿ ಹಾಕಲು ಸರ್ಕಾರ ವ್ಯವಸ್ಥಿತ ಪಿತೂರಿ ನಡೆಸಿದೆ. ಇದು ನಿಷ್ಪಕ್ಷಪಾತ ತನಿಖೆಯಾಗಬೇಕೆಂದರೆ ಕೂಡಲೇ ಚನ್ನರಾಜ್ ಹಟ್ಟಿಹೊಳಿ ಅವರನ್ನು ಬಂಧಿಸಬೇಕು ಎಂದು ಹೇಳಿದರು. ಈ ಪ್ರಕರಣದಲ್ಲಿ ಹಟ್ಟಿಹೊಳಿ ಜೊತೆ ಇನ್ನು ಇಬ್ಬರು ಅಂಗರಕ್ಷಕರು(ಗನ್‍ಮ್ಯಾನ್) ಶಾಮೀಲಾಗಿದ್ದಾರೆ. +ಅವರನ್ನು ಸಹ ಬಂಧಿಸಬೇಕು. ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುವ ಕುತಂತ್ರವನ್ನು ಮಾಡಬಾರದು. ಅವರ ಮೇಲೆ ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ಕೊಟ್ಟರು.ಆಸ್ಪತ್ರೆಯಲ್ಲಿ ಪೃಥ್ವಿ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಾಸಕರೂ ಆಗಿರುವ ಬಿ.ವೈ ವಿಜಯೇಂದ್ರ ಅವರು, ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಗನ್ ಮ್ಯಾನ್‍ಗಳು ಹಲ್ಲೆ ಮಾಡಿದ್ದಾರೆ. +ಚಂಡಮಾರುತಕ್ಕೆ ಚೆನ್ನೈ ತತ್ತರ, 8 ಮಂದಿ ಸಾವು + +ಗನ್ ಮ್ಯಾನ್ ಸುಜೀತ್ ಜಾಧವ್, ಎಂಎಲ್‍ಸಿ ಅವರ ಪಿಎ ಸದ್ದಾಂ ಅವರು ಪೃಥ್ವಿ ಮನೆಗೆ ಹೋಗಿ ಚೂರಿಯಿಂದ ಇರಿದಿದ್ದಾರೆ. ಮೊದಲು ಮನೆಯಲ್ಲಿದ್ದ ಪೃಥ್ವಿ ಸಿಂಗ್ ಅವರನ್ನು ಹೊರಗಡೆ ಕರೆಸಿ ಹಲ್ಲೆ ಮಾಡಲಾಗಿದೆ. ಈ ದೃಶ್ಯವನ್ನು ಪೃಥ್ವಿ ಸಿಂಗ್ ವಿಡಿಯೋ ರೆಕಾರ್ಡ್ ಮಾಡುವ ಪ್ರಯತ್ನ ಮಾಡಿದ್ದಾರೆ. ಬ್ಲಾಕ್ ಕಲರ್ ಕ್ರಿಷ್ಟಾ ಇನ್ನೊವಾ ಕಾರಿನಲ್ಲಿ ಚನ್ನರಾಜ್ ಹಟ್ಟಿಹೊಳಿ ಅವರೂ ಬಂದಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದರು. ಪೃಥ್ವಿ ಸಿಂಗ್ ಅವರನ್ನು ಹೊರಗೆ ಕರೆದು ಮಾತಿಗೆ ಮಾತು ಬೆಳೆಸಿ ಹಲ್ಲೆ ಮಾಡಲಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. +ಚನ್ನರಾಜ ಹಟ್ಟಿಹೊಳಿ ಅವರು ಸಚಿವರಾಗಿರುವ ಮತ್ತು ಪ್ರಭಾವಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ. ಇಷ್ಟು ಪ್ರಭಾವ ಇದ್ದಿದ್ದರಿಂದಲೇ ಹಾಡು ಹಗಲೇ ಹಲ್ಲೆ ಮಾಡಿದ್ದಾರೆ. ಮಾರಣಾಂತಿಕ ಹಲ್ಲೆ ಮಾಡಿದ್ದು ಖಂಡನೀಯ. ರಾಜ್ಯ ಸರ್ಕಾರ ಇಡೀ ವ್ಯವಸ್ಥೆಯೇ ಇಲ್ಲಿದೆ. ಮುಖ್ಯಮಂತ್ರಿಗಳೂ ಇಲ್ಲಿದ್ದಾರೆ. ಈ ಸಂದರ್ಭದಲ್ಲಿ ಆಡಳಿತ ಪಕ್ಷದ ವಿಧಾನ ಪರಿಷತ್ ಸದಸ್ಯರು ದರ್ಪ ತೋರಿದ್ದಾರೆ. ದಲಿತ ಮುಖಂಡನ ಮೇಲೆ ಹಲ್ಲೆ ಮಾಡಿದ್ದಾರೆ ಆರೋಪ ಮಾಡಿದರು. +ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ +ಇಲ್ಲಿರುವ ಪೊಲೀಸ್ ವ್ಯವಸ್ಥೆಯ ಬಗ್ಗೆ ನನಗೆ ನಂಬಿಕೆ ಇಲ್ಲ, ನಮ್ಮ ಮನೆಗೆ ರಾತ್ರೋರಾತ್ರಿ ಮನೆಗೆ ನುಗ್ಗುತಾರೆ, ಕೊಲೆ ಮಾಡುತ್ತಾರೆ ಎಂದು ಪ್ರಥ್ವಿ ಸಿಂಗ್ ಭಯದಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆಯ ಬಗ್ಗೆ ನಮಗೆ ಎಳ್ಳಷ್ಟೂ ನಂಬಿಕೆಯಿಲ್ಲ, ಅಧಿಕಾರದ ದರ್ಪದಿಂದ ಸಚಿವರ ತಮ್ಮ ಯಾವ ರೀತಿ ನಡೆದುಕೊಂಡಿದ್ದಾನೆ ಎಂದು ಎಲ್ಲರೂ ನೋಡ್ತಿದ್ದಾರೆ. ಅಧಿಕಾರದ ಸೊಕ್ಕಿನಿಂದ ಮೆರೆಯುತ್ತಿರುವವರಿಗೆ ತಕ್ಕ ಪಾಠ ಆಗಬೇಕು. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು, \ No newline at end of file diff --git a/eesanje/url_46_297_5.txt b/eesanje/url_46_297_5.txt new file mode 100644 index 0000000000000000000000000000000000000000..e5bd85864199bd8f90c0c960e7e84d1b36fde6a4 --- /dev/null +++ b/eesanje/url_46_297_5.txt @@ -0,0 +1,7 @@ +ಪೊಲೀಸರು ಕಾಂಗ್ರೆಸ್ ಏಜೆಂಟ್ ಆಗಿದ್ದಾರೆ : ಯತ್ನಾಳ್ ವಾಗ್ದಾಳಿ +ಬೆಳಗಾವಿ,ಡಿ.5- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪೊಲೀಸರು ಆ ಪಕ್ಷದ ಏಜೆಂಟರ್ ಆಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಪಾಕಿಸ್ತಾನ ಆಗುತ್ತದೆ ಎಂದು ನಾವು ಆಗಲೂ ಹೇಳಿದ್ದೆವು. ಈಗಲೂ ಹೇಳುತ್ತೇವೆ. ಒಂದು ಸಮುದಾಯವನ್ನು ಓಲೈಸಿಕೊಳ್ಳುವ ಭರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಕಿಡಿಕಾರಿದರು.ಪೊಲೀಸರು ಕಾಂಗ್ರೆಸ್‍ನವರ ಕೈಗೊಂಬೆಯಾಗಿದ್ದಾರೆ. ಕೇವಲ ಬಿಜೆಪಿ ಮತ್ತು ಬೇರೆ ಪಕ್ಷದವರನ್ನು ಗುರಿಯಾಗಿಟ್ಟುಕೊಂಡು ಕೆಲವರು ಹಲ್ಲೆ ಮಾಡುತ್ತಿದ್ದಾರೆ.ಇದಕ್ಕೆ ಸರ್ಕಾರದ ಕುಮ್ಮಕ್ಕು ಕೂಡ ಇದೆ ಎಂದು ಗುಡುಗಿದರು. +ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು +ದೆಹಲಿಯಲ್ಲಿ ಒಬ್ಬರು ಮೇಡಂ ಇದ್ದರೆ, ಬೆಳಗಾವಿಯಲ್ಲಿ ಇನ್ನೊಬ್ಬ ಮೇಡಂ ಇದ್ದಾರೆ. ಅವರನ್ನು ಓಲೈಸಿಕೊಳ್ಳಲು ಚಾಕು ಇರಿತದಂತಹ ಪ್ರಕರಣಗಳನ್ನೇ ಸರ್ಕಾರ ಮುಚ್ಚಿ ಹಾಕಲು ಹೊರಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರ ಸಂಬಂಧಿಕರ ಮೇಲೆ ಲೋಕಾ ದಾಳಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಯಾರೇ ಭ್ರಷ್ಟಾಚಾರ ಮಾಡಿದರೂ ಅದು ಭ್ರಷ್ಟಾಚಾರವೇ. ಅದರಲ್ಲಿ ಯಡಿಯೂರಪ್ಪ ಅಥವಾ ವಿಜಯೇಂದ್ರ ಎಂದು ಕೇಳಬೇಡಿ. ತಪ್ಪು ತಪ್ಪೇ ಎಂದು ಮಾರ್ಮಿಕವಾಗಿ ನುಡಿದರು. +ಭ್ರಷ್ಟರು ಭ್ರಷ್ಟರೇ ನಾನು ಭ್ರಷ್ಟಾಚಾರ ಮಾಡಿದರೂ ಭ್ರಷ್ಟನೇ . ಡಿ.ಕೆ.ಶಿವಕುಮಾರ್ ಮಾಡಿದರೂ ಭ್ರಷ್ಟರೇ ಎಂದರು. ಯಾರು ಕರ್ನಾಟಕವನ್ನು ಲೂಟಿ ಹೊಡೆದಿದ್ದಾರೆ, ಕರ್ನಾಟಕವನ್ನು ಲೂಟಿ ಮಾಡಿ ಸಿಂಗಾಪುರ ಮಾರಿಶಸ್ ನಲ್ಲಿ ಹೂಡಿಕೆ ಮಾಡಿದ್ದಾರೆ ಅದರ ಬಗ್ಗೆ ತನಿಖೆ ಆಗಬೇಕು ಹಾಗೂ ಜೈಲಿಗೆ ಹೋಗಬೇಕು. +ಅಲ್ಪಸಂಖ್ಯಾತರಿಗೆ ಅನುದಾನ ಬಿಡುಗಡೆ ಮಾಡುವ ಸಿದ್ದರಾಮಯ್ಯ ವಿಚಾರ ಕುರಿತು ಮಾತನಾಡಿದ ಅವರು, ಪಾಕಿಸ್ತಾನದವರ ಸರ್ಕಾರ ಬಂದಂತಾಗಿದೆ. ಇಂತಹ ಸರ್ಕಾರ ಇದೇ ಉದ್ಧಟತನ ಮುಂದುವರಿಸಿದರೆ ಅತೀ ಹೆಚ್ಚು ಮತಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣದಲ್ಲಿ ಇಷ್ಟೆಲ್ಲಾ ದಾಖಲೆ ಇರುವಾಗ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಇಲ್ಲಿಯ ಮೇಡಂ ಕೈಗೊಂಬೆಯಾಗಿದ್ದಾರೆ. ಬೆಳಗಾವಿ ಸುಸಂಸ್ಕೃತವಾದ ಜಿಲ್ಲೆ ಗುಂಡಾಗಿರಿ ಯಾರು ಪ್ರಾರಂಭ ಮಾಡಿದ್ದಾರೆ ಅವರ ಅಂತ್ಯ ಕಾಣಲಿದೆ ಎಂದು ಭವಿಷ್ಯ ನುಡಿದರು. \ No newline at end of file diff --git a/eesanje/url_46_297_6.txt b/eesanje/url_46_297_6.txt new file mode 100644 index 0000000000000000000000000000000000000000..0e0ffb1cbb39205ddd4fa8ad64e78db65bc4fe55 --- /dev/null +++ b/eesanje/url_46_297_6.txt @@ -0,0 +1,9 @@ +ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು +ಬೆಳಗಾವಿ,ಡಿ.4- ಸರ್ಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳ ಅಕ್ರಮಗಳನ್ನು ತಡೆಗಟ್ಟಲು ಗಂಭೀರ ಚಿಂತನೆ ನಡೆಸಿರುವ ರಾಜ್ಯಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಲು ಮುಂದಾಗಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ 19 ಕ್ಕೂ ಹೆಚ್ಚು ವಿಧೇಯಕಗಳನ್ನು ಮಂಡಿಸುವ ತಯಾರಿ ನಡೆದಿದೆ. +ಕಳೆದ ಅಧಿವೇಶನದಿಂದಲೂ ನೆನೆಗುದಿಗೆ ಬಿದ್ದಿರುವ ನಾಲ್ಕು ವಿಧೇಯಕಗಳು, ಸಚಿವ ಸಂಪುಟ ಸಭೆಯಿಂದ ಅಂಗೀಕಾರಗೊಂಡಿರುವ ಎರಡು ವಿಧೇಯಕಗಳು, ಪರಿಶೀಲನಾ ಸಮಿತಿಯಿಂದ ಅನುಮತಿ ಪಡೆಯಲಾದ ಆರು ವಿಧೇಯಕಗಳನ್ನು ಮಂಡಿಸಲು ತಯಾರಿ ನಡೆಸಲಾಗಿದೆ. +ಜೊತೆಗೆ ಸಂಬಂಧಿಸಿದ ಇಲಾಖೆಗಳಿಂದ ಪೂರ್ವಾನುಮತಿಯಾಗಿ ಕಾಯಿಸಿರುವ ಏಳು ವಿಧೇಯಕಗಳನ್ನು ಮಂಡಿಸುವ ಸಾಧ್ಯತೆ ಇದೆ. ಇದರಲ್ಲಿ ಪ್ರಮುಖವಾಗಿ ಸಚಿವ ಸಂಪುಟ ಸಭೆಯಿಂದ ಅಂಗೀಕಾರಗೊಂಡಿರುವ ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಅಹಿತಕರವಾದ ಕಾರ್ಯವಿಧಾನಗಳನ್ನು ನಿಯಂತ್ರಿಸಲು 2023 ರ ಮಸೂದೆಯನ್ನು ಗೃಹ ಇಲಾಖೆಯಿಂದ ರೂಪಿಸಲಾಗಿದೆ. ಇದನ್ನು ಮಂಡಿಸುವ ತಯಾರಿಗಳಾಗಿವೆ. +ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ +ಒಂದು ವೇಳೆ ಕಾಯ್ದೆ ಅಂಗೀಕಾರಗೊಂಡರೆ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮತ್ತು ಅಕ್ರಮಗಳಿಗೆ ನೆರವಾಗುವವರನ್ನು ಉಗ್ರವಾಗಿ ದಂಡಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಉಳಿದಂತೆ ಕರ್ನಾಟಕ ಕರಾವಳಿ ಅಭಿವೃದ್ಧಿ ನಿಗಮ ತಿದ್ದುಪಡಿ ವಿಧೇಯಕ 2021, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ 2023, ವೈದ್ಯಕೀಯ ಪದವೀಧರ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕ, +ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ, ಗದಗ ಬೆಟ್ಟಗೇರಿ ವ್ಯಾಪಾರ ಸಂಸ್ಕøತಿ ಮತ್ತು ವಸ್ತು ಪ್ರದರ್ಶನ ವಿಧೇಯಕ, ಕರ್ನಾಟಕ ಪರಿಶಿಷ್ಟ ಜಾತಿ ಪಂಗಡಗಳ ಉಪ ಮಂಜೂರತಿ ಮಸೂದೆ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಶ್ರೀ ರೇಣುಕಾ ಎಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ರಚನೆ ವಿಧೇಯಕ, +ವಿಧಾನಮಂಡಲದ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ +ಕರ್ನಾಟಕ ಅಭಿವೃದ್ಧಿ ಮಂಡಳಿ ಮೈಸೂರು ನಗರ ಅಭಿವೃದ್ಧಿ ವಿಧೇಯಕ, ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣೆ ಪ್ರಾಧಿಕಾರ, ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ವಿಧೇಯಕ, ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ, ಕರ್ನಾಟಕ ನಗರ ಮತ್ತು ಯೋಜನೆ ತಿದ್ದುಪಡಿ ವಿಧೇಯಕ, ಕರ್ನಾಟಕ ಸಿವಿಲ್ ಕೋರ್ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ಹೈಕೋರ್ಟ್ ತಿದ್ದುಪಡಿ ವಿಧೇಯಕ, ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‍ಗಳ ಪರಿಷತ್ ಮಸೂದೆ, ಕರ್ನಾಟಕ ಆಡಳಿತಾತ್ಮಕ ಕಾರ್ಯ ವಿಧಾನ ಮಸೂದೆಗಳನ್ನು ಮಂಡಿಸಲು ತಯಾರಿ ನಡೆಸಲಾಗಿದೆ. \ No newline at end of file diff --git a/eesanje/url_46_297_7.txt b/eesanje/url_46_297_7.txt new file mode 100644 index 0000000000000000000000000000000000000000..ad79dda81d59a745cbd3adebfdfcc654c5055636 --- /dev/null +++ b/eesanje/url_46_297_7.txt @@ -0,0 +1,7 @@ +ಅರಣ್ಯ ಕಳೆ ಬೆಳೆಗಳ ನಿಯಂತ್ರಣಕ್ಕೆ ಕ್ರಮ : ಈಶ್ವರ್ ಖಂಡ್ರೆ +ಬೆಳಗಾವಿ,ಡಿ.4- ರಾಜ್ಯದ ಅರಣ್ಯ ಭಾಗಗಳಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಕಳೆ ಬೆಳೆಗಳನ್ನು ಕೇಂದ್ರ ಸರ್ಕಾರದ ನೆರವು ಪಡೆದುಕೊಂಡು ನಿಯಂತ್ರಿಸಲು ಸರ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯದಲ್ಲಿ ಕಳೆಗಳು ಇರುವುದು ನಿಜ. ಒಂದು ಎಕರೆ ಕಳೆ ತೆಗೆಯಲು 87 ಸಾವಿರ ರೂ. ವೆಚ್ಚವಾಗುತ್ತದೆ. ಪ್ರಸಕ್ತ ವರ್ಷ ನಮಗೆ ಕಳೆ ತೆಗೆಯಲು 8-10 ಕೋಟಿ ಅನುದಾನ ಬೇಕು. ಕೇಂದ್ರದ ನೆರವು ಪಡೆದುಕೊಂಡು ಕಳೆಯನ್ನು ನಿಯಂತ್ರಿಸಲಾಗುವುದು ಎಂದು ಭರವಸೆ ನೀಡಿದರು. +ಇದಕ್ಕೂ ಮುನ್ನ ಪ್ರಶ್ನೆ ಕೇಳಿದ ತೇಜಸ್ವಿನಿಗೌಡ, ಅತಿ ಹೆಚ್ಚು ಆನೆ ಕರ್ನಾಟಕದಲ್ಲಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಆನೆಗಳು ಹೆಚ್ಚಾಗಿವೆ. ಅರಣ್ಯದಲ್ಲಿ ಕಳೆ ಬೆಳೆಗಳು ಹೆಚ್ಚಾಗುತ್ತಿದೆ. ಪ್ರಾಣಿಗಳ ಅಹಾರ, ಸಂಚಾರಕ್ಕೆ ಕಷ್ಟವಾಗುತ್ತಿದೆ. +ರಾಜ್ಯದ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ : ಸಚಿವ ಖರ್ಗೆ +ಬಂಡಿಪುರದಲ್ಲಿ 87 ಸಾವಿರ ಹೆಕ್ಟರ್ ಕಳೆ ಆವರಿಸಿದೆ. ನಾಗರಹೊಳೆಯಲ್ಲಿ ಅರಣ್ಯದಲ್ಲಿ 25% ಕಳೆಗಳು ಇದೆ ಎಂಬ ಮಾಹಿತಿಯನ್ನು ನೀಡಿದರು. ಇದರ ತಡೆಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು. ನಾಗರಹೊಳೆ, ಬಂಡೀಪುರ, ಬನ್ನೇರುಘಟ್ಟ ಉದ್ಯಾನಗಳಲ್ಲಿ ದಟ್ಟವಾದ ಕಳೆಗಿಡಗಳು ಆವರಿಸಿವೆ. ದಟ್ಟವಾದ ಕಳೆಗಿಡಗಳಿಂದ ಆನೆಗಳು ಸೇರಿ ವನ್ಯಜೀವಿಗಳಿಗೆ ಆಹಾರ ಲಭ್ಯವಾಗುತ್ತಿಲ್ಲ. ವನ್ಯಪ್ರಾಣಿಗಳ ಮೇವಿಗೂ ಇದರಿಂದ ಕೊರತೆ ಉಂಟಾಗುತ್ತಿದೆ. +ಶೇ. 40-50ರಷ್ಟು ಕಳೆ ಗಿಡಗಳು ಬಂಡೀಪುರದಲ್ಲಿ ಆವರಿಸಿದೆ. ನಾಗರಹೊಳೆಯಲ್ಲಿ ಶೇ.30-40ರಷ್ಟು, ಬನ್ನೇರುಘಟ್ಟದಲ್ಲಿ ಶೇ.20-25ರಷ್ಟು ಕಳೆ ಗಿಡಗಳಿವೆ ಹಬ್ಬಿವೆ ಎಂದು ತೇಜಸ್ವಿನಿ ಗೌಡ ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಖಂಡ್ರೆ, ಎಲ್ಲ ಉದ್ಯಾನಗಳಲ್ಲಿ ಕಳೆಗಿಡದ ಸಮಸ್ಯೆ ಗಂಭೀರವಾಗಿ ಇದೆ. ಲಾಂಟಾನಾ, ಮೈಕೇನಿಯಾ ಮೀಕರಾಂಥ, ಸೆನ್ನ ಸ್ಪೆಕ್ಟಾಬಿಲಿಸ್ ಕಳೆಗಿಡಗಳು ಆವರಿಸಿವೆ. ಕಳೆ ತೆಗೆಯುವುದಕ್ಕೆ 1 ಹೆಕ್ಟೇರ್‍ಗೆ ಮೂರು ವರ್ಷಕ್ಕೆ 87000 ರೂ. ಅನುದಾನ ಬೇಕಾಗುತ್ತದೆ. 1200 ಕೋಟಿ ರೂ. ಒಟ್ಟಾರೆ ಅನುದಾನ ಬೇಕಾಗುತ್ತದೆ. +ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಕೂಡ ಕೇಂದ್ರದಿಂದ ಅನುದಾನ ಲಭ್ಯವಿಲ್ಲ. ಮುಂದೆ ವನ್ಯಜೀವಿಗಳಿಗೆ ಆಹಾರ ಲಭ್ಯತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಆನೆ ಹಾವಳಿ ತಡೆದು ಆನೆ ಹಿಡಿಯುವುದಕ್ಕೆ 15 ಲಕ್ಷ ಖರ್ಚಾಗುತ್ತದೆ. ಬುಡಕಟ್ಟು ಜನರು ಕಳೆ ತೆಗೆಯುವುದರಲ್ಲಿ ನಿಪುಣರಾಗಿರುತ್ತಾರೆ. ಅವರನ್ನೂ ಬಳಸಿಕೊಂಡು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ತೇಜಸ್ವೀನಿ ಗೌಡ ಸಲಹೆ ಮಾಡಿದರು. \ No newline at end of file diff --git a/eesanje/url_46_297_8.txt b/eesanje/url_46_297_8.txt new file mode 100644 index 0000000000000000000000000000000000000000..cc2b3bbd6b4ba853010934d5785a8ae6cbd73034 --- /dev/null +++ b/eesanje/url_46_297_8.txt @@ -0,0 +1,7 @@ +ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಶೀಘ್ರ ನೇಮಕ +ಬೆಳಗಾವಿ,ಡಿ.4- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಣ ಇಲಾಖೆಯ ಹುದ್ದೆಗಳನ್ನು ಹಣಕಾಸಿನ ಲಭ್ಯತೆ ಆಧಾರದ ಮೇಲೆ ಹಂತ ಹಂತವಾಗಿ ತ್ವರಿತವಾಗಿ ನೇಮಕ ಮಾಡುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ನಲ್ಲಿಂದು ತಿಳಿಸಿದರು. +ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಹೇಳಿದರು. +ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಶಾಲೆಗಳಲ್ಲಿ 45,535 ಪ್ರಾಥಮಿಕ ಶಿಕ್ಷಕರು, 11,724 ಪ್ರೌಢಶಾಲೆ ಶಿಕ್ಷಕರು, 1369 ಗ್ರೂಪ್ ಡಿ ನೌಕರರು, 3,323 ಬೋಧಕೇತರ ಸಿಬ್ಬಂದಿ ಸೇರಿದಂತೆ 61,891 ಸಿಬ್ಬಂಯವರು ಕಾರ್ಯ ನಿರ್ವಹಿಸುತ್ತಿದ್ದಾರೆ. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೆಲವು ಪ್ರಮುಖ ಹುದ್ದೆಗಳು ಭರ್ತಿ ಮಾಡಬೇಕಾಗಿದೆ. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿ ಕಾಲೇಜುಗಳವರೆಗೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.ನಮ್ಮ ಸರ್ಕಾರ ಒಟ್ಟು 16 ಸಾವಿರ ಶಿಕ್ಷಕರನ್ನು ಖಾಯಂ ಮಾಡಿದೆ. +ಇದರಲ್ಲಿ 5 ಸಾವಿರ ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿದ್ದೇವೆ ಎಂದು ಸಚಿವರು ಹೇಳುತ್ತಿದ್ದಂತೆ ಅಸಮಾಧಾನಗೊಂಡ ಸದಸ್ಯ ಶಶಿಲ್ ನಮೋಶಿ, ಮಂಡ್ಯ, ಮೈಸೂರು ಭಾಗಗಳಲ್ಲಿ 12-13 ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಒಬ್ಬ ಶಿಕ್ಷಕರನ್ನು ಕೊಡುತ್ತೀರಿ, ಮೈಸೂರು ಭಾಗದ ವ್ಯವಸ್ಥೆಯು ಕಲ್ಯಾಣ ಕರ್ನಾಟಕಕ್ಕೂ ಇರಬೇಕಲ್ಲವೇ ಎಂದು ಪ್ರಶ್ನಿಸಿದರು. ಅಗತ್ಯವಿರುವ ಸಿಬ್ಬಂದಿಯನ್ನು ನೇಮಕ ಮಾಡಲು ಬದ್ದವಾಗಿದೆ ಎಂದು ಸಚಿವ ಕುಮಾರ ಬಂಗಾರಪ್ಪ ಆಶ್ವಾಸನೆ ನೀಡಿದರು. \ No newline at end of file diff --git a/eesanje/url_46_297_9.txt b/eesanje/url_46_297_9.txt new file mode 100644 index 0000000000000000000000000000000000000000..e862b0d9aaee24f66e9bc51544aade997e863b35 --- /dev/null +++ b/eesanje/url_46_297_9.txt @@ -0,0 +1,5 @@ +ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆ ಓದುವ ಹೊಸ ಸಂಪ್ರದಾಯ ಪ್ರಾರಂಭ +ಬೆಳಗಾವಿ,ಡಿ.4- ಇದೇ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಹೊಸ ಸಂಪ್ರದಾಯವನ್ನು ಆರಂಭಿಸಲಾಯಿತು. ಬೆಳಿಗ್ಗೆ ವಂದೇ ಮಾತರಂನೊಂದಿಗೆ ವಿಧಾನಸಭೆಯ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷ ಯು.ಟಿ.ಖಾದರ್ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಸೂಚನೆ ನೀಡಿದರು. +ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೂಲಪ್ರತಿಯನ್ನು ಓದಲಾಗುತ್ತದೆಯೋ ಅಥವಾ ತಿದ್ದುಪಡಿ ಮಾಡಲಾದ ಮಾಹಿತಿಯನ್ನೋ ಎಂದು ಪ್ರಶ್ನೆ ಮಾಡಿದರು. ತಮಗೆ ಪ್ರಸ್ತಾವನೆಯ ಪ್ರತಿಯೇ ತಲುಪಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ನಾನು ಓದುತ್ತೇನೆ, ನೀವು ಅದರಂತೆ ಹೇಳಿ ಎಂದು ಸಮಜಾಯಿಷಿ ನೀಡಿದ ಸಭಾಧ್ಯಕ್ಷರು ಬಸನಗೌಡ ಪಾಟೀಲ್ ಯತ್ನಾಳ್‍ರಿಗೆ ಪ್ರತಿಯನ್ನು ತಲುಪಿಸಲು ಸೂಚಿಸಿದರು. ನಂತರ ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಅದರ ಸಮಸ್ತ ನಾಗರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ ಅಭಿವ್ಯಕ್ತಿ ವಿಶ್ವಾಸ ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃ ಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನದ ಸಭೆಯಲ್ಲಿ 1949 ನೆಯ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ ಅನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಹೇಳಿದರು. ಎಲ್ಲಾ ಸಚಿವರು ಮತ್ತು ಪಕ್ಷಾತೀತವಾಗಿ ಶಾಸಕರು ಎದ್ದುನಿಂತು ಸಂವಿಧಾನದ ಪೀಠಿಕೆಯನ್ನು ಓದಿದರು. \ No newline at end of file diff --git a/eesanje/url_46_298_1.txt b/eesanje/url_46_298_1.txt new file mode 100644 index 0000000000000000000000000000000000000000..9d2890e37e77ea2f7bf4e3965b0504b401e94884 --- /dev/null +++ b/eesanje/url_46_298_1.txt @@ -0,0 +1,5 @@ +ಅತಿಥಿ ಉಪನ್ಯಾಸಕರ ಖಾಯಂ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ : ಮಧುಬಂಗಾರಪ್ಪ +ಬೆಳಗಾವಿ,ಡಿ.4 -ಅತಿಥಿ ಉಪನ್ಯಾಸಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯೆ ಹೇಮಲತಾ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ಸರ್ಕಾರ ನಡೆದುಕೊಳ್ಳಬೇಕು. ಗೌರವಧನದ ಹೊರತು ಖಾಯಮ್ಮಾತಿ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. +ನ್ಯಾಯಾಲಯದ ತೀರ್ಪು ನೋಡಿಕೊಂಡು ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗುವುದು. ಇದರ ಸಾಧಕ-ಬಾಧಕಗಳ ಬಗ್ಗೆ ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ. ನ್ಯಾಯಾಲಯದ ಆದೇಶಕ್ಕೆ ನಾವು ವಿರುದ್ಧವಾಗಿ ನಡೆದುಕೊಳ್ಳಲು ಆಗುವುದಿಲ್ಲ ಎಂದರು. +ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ +ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ನೇಮಿಸಿಕೊಳ್ಳುತ್ತಾರೆ. 9 ತಿಂಗಳಿಗೆ ಮಾತ್ರ ಇವರ ಸೇವೆಯನ್ನು ಬಳಸಿಕೊಳ್ಳಲಾಗುತ್ತದೆ. ಪ್ರತಿಯೊಬ್ಬರಿಗೂ ಮಾಸಿಕವಾಗಿ 12 ಸಾವಿರ ಗೌರವಧನವನ್ನು ನೀಡುತ್ತೇವೆ. ತಾತ್ಕಾಲಿಕ ನೌಕರರಾಗಿರುವುದರಿಂದ ಅವರ ಸೇವೆಯನ್ನು ಖಾಯಂಗೊಳಿಸಲು ಬರುವುದಿಲ್ಲ. ಸದಸ್ಯರ ಕೋರಿಕೆಯನ್ನು ಸರ್ಕಾರ ಪರಿಗಣಿಸಲಿದೆ ಎಂದು ಆಶ್ವಾಸನೆ ಕೊಟ್ಟರು. \ No newline at end of file diff --git a/eesanje/url_46_298_10.txt b/eesanje/url_46_298_10.txt new file mode 100644 index 0000000000000000000000000000000000000000..060472402b54a7af706914da3f920a644943b2fd --- /dev/null +++ b/eesanje/url_46_298_10.txt @@ -0,0 +1,7 @@ +ತೆಲಂಗಾಣ ಗೆದ್ದು ಮತ್ತೆ ಟ್ರಬಲ್ ಶೂಟರ್ ಎಂದು ಸಾಬೀತು ಪಡಿಸಿದ ಡಿಕೆಶಿ +ಬೆಂಗಳೂರು,ಡಿ.3- ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲ್ಲಿಸಿಕೊಳ್ಳಲು ರಣತಂತ್ರ ರೂಪಿಸಿ ಯಶಸ್ವಿಯಾಗುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಟ್ರಬಲ್ ಶೂಟರ್ ಎಂದು ಸಾಬೀತು ಪಡಿಸಿದ್ದಾರೆ. ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರಿಗೆ ತೆಲಂಗಾಣ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿತ್ತು. +ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸುಮಾರು ಒಂದು ವಾರಕ್ಕೂ ಹೆಚ್ಚು ಕಾಲ ತೆಲಂಗಾಣದಲ್ಲಿ ವಾಸ ಮಾಡಿ ಚುನಾವಣಾ ಉಸ್ತುವಾರಿಯನ್ನು ನೋಡಿಕೊಂಡಿದ್ದರು. ರಾಜ್ಯ ಕಾಂಗ್ರೆಸ್‍ನಿಂದ ಸುಮಾರು 70 ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಚುನಾವಣಾ ಉಸ್ತುವಾರಿಗಾಗಿ ನಿಯೋಜಿಸಲಾಗಿತ್ತು. +ಡಿ.6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ +ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು, ಪ್ರಧಾನ ಕಾರ್ಯದರ್ಶಿಗಳು ಲೋಕಸಭಾ ಕ್ಷೇತ್ರಗಳ ಉಸ್ತುವಾರಿಯನ್ನು ವಹಿಸಿಕೊಂಡು ಹಗಲಿರುಳು ಶ್ರಮಿಸಿದ್ದರು. ತೆಲಂಗಾಣದಲ್ಲಿ ಸ್ಥಳೀಯ ನಾಯಕತ್ವ ಅಷ್ಟೇನೂ ಪ್ರಭಾವವಾಗಿಲ್ಲದೇ ಇದ್ದರೂ ಕೂಡ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ನೀಡಿದ ನೆರವು ಮತ್ತು ಬೆಂಬಲ ಪಕ್ಷದ ಗೆಲುವಿಗೆ ಮಹತ್ವದ ಪಾತ್ರ ವಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಮೂರ್ನಾಲ್ಕು ದಿನ ತೆಲಂಗಾಣದ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಇದೆಲ್ಲದರ ಪರಿಣಾಮ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. +ಶ್ರೀಲಂಕಾ ಯೋಗಕ್ಷೇಮಕ್ಕೆ ಭಾರತ ಬದ್ಧ +ಆಂದ್ರಪ್ರದೇಶದಿಂದ ವಿಭಜನೆಗೊಂಡು ಪ್ರತ್ಯೇಕ ರಾಜ್ಯವಾದ ಬಳಿಕ ಟಿಆರ್‍ಎಸ್ ಈಗಿನ ಬಿಆರ್‍ಎಸ್ ಪಕ್ಷವೇ ಗದ್ದುಗೆ ಹಿಡಿದಿತ್ತು. ಕೆ.ಸಿ.ಚಂದ್ರಶೇಖರ್ ಎರಡು ಅವಗೆ ಮುಖ್ಯಮಂತ್ರಿಯಾಗಿದ್ದರು. ರಾಜ್ಯವಿಭಜನೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಂಗೀಕಾರ ನೀಡಿದ್ದರೂ ಅದರ ಫಲವನ್ನು ಟಿಆರ್‍ಎಸ್ ಅನುಭವಿಸಿತ್ತು. ಕರ್ನಾಟಕ ಕಾಂಗ್ರೆಸ್ ನಾಯಕರ ಬೆಂಬಲದಿಂದಾಗಿ ತೆಲಂಗಾಣ ಕೈವಶವಾಗಿದೆ. \ No newline at end of file diff --git a/eesanje/url_46_298_11.txt b/eesanje/url_46_298_11.txt new file mode 100644 index 0000000000000000000000000000000000000000..39e4a3366b04b494d4f6aa9b289cf30406638aee --- /dev/null +++ b/eesanje/url_46_298_11.txt @@ -0,0 +1,8 @@ +ವಿಶೇಷ ಚೇತನರ ಅಭಿವೃದ್ಧಿಗೆ ಹೊಸ ಯೋಜನೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಡಿ.3- ವಿಶೇಷ ಚೇತನರ ಅಭಿವೃದ್ಧಿಗೆ ತಮ್ಮ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ಅಗತ್ಯವಾದ ಆರ್ಥಿಕ ನೆರವನ್ನು ಒದಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಇಲಾಖೆಯ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವಾದ್ಯಂತ ವಿಕಲಚೇತನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. +ದೇಶದ ಜಿಡಿಪಿ ಹೊರಸೂಸುವಿಕೆ ಶೇ.33 ಕಡಿಮೆಯಾಗಿದೆಯಂತೆ +ಅಂಗವೈಕಲ್ಯ ಇರುವವರನ್ನು ಅಂಗವಿಕಲರು ಎಂದು ಕರೆಯುವಂತಿಲ್ಲ. ಏಕೆಂದರೆ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲುವ ಮೂಲಕ ತಾವು ಸಬಲರು ಎಂದು ಸಾಬೀತುಪಡಿಸಿದ್ದಾರೆ. ಹೀಗಾಗಿ ಅವರನ್ನು ಕೆಲಸಕ್ಕೆ ಬಾರದವರು, ಸಮಾಜಕ್ಕೆ ಹೊರೆ ಎಂದು ಪರಿಗಣಿಸುವಂತಿಲ್ಲ ಎಂದರು. +2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ 13,24,205 ವಿಶೇಷ ಚೇತನರಿದ್ದಾರೆ. ರಾಜ್ಯಸರ್ಕಾರ 2015 ರಲ್ಲಿ ಅಂಗವಿಕಲರ ಹಕ್ಕುಗಳ ಅಧಿನಿಯಮವನ್ನು ರಚಿಸಿದೆ. ಸಮಾಜದಲ್ಲಿ ಎಲ್ಲರ ಜೊತೆ ಬೆರೆತು ಬದುಕುವ ಅವಕಾಶ ಅವರಿಗಿದೆ. ಉದ್ಯೋಗ ಮಾಡಿ ಬದುಕುವ ಹಕ್ಕುಗಳಿವೆ. ಅದನ್ನು ರಕ್ಷಣೆ ಮಾಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. +4,000 ಯಂತ್ರಕಾಲಿಕ ತ್ರೈಸೈಕಲ್‍ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಬಜೆಟ್‍ನಲ್ಲಿ 384 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. 2 ಕೋಟಿ ರೂ. ವೆಚ್ಚದಲ್ಲಿ 7 ಜಿಲ್ಲೆಗಳಲ್ಲಿ ಬುದ್ಧಿಮಾಂದ್ಯರ ವಸತಿ ಶಾಲೆಗಳನ್ನು ಸ್ಥಾಪಿಸಲಾಗುತ್ತಿದ್ದು, ಈ ವರ್ಷದಿಂದಲೇ ಆರಂಭಗೊಳ್ಳುತ್ತಿದೆ. ವಿಶೇಷ ಚೇತನರ ಶೈಕ್ಷಣಿಕ, ವೈದ್ಯಕೀಯ, ಪುನರ್‍ವಸತಿಗೆ ಇಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. +ತಾವು ಇತ್ತೀಚೆಗೆ ನಡೆಸಿದ ಜನತಾದರ್ಶನದಲ್ಲಿ ಹೆಚ್ಚು ವಿಕಲಚೇತನರು ಭಾಗವಹಿಸಿದ್ದರು. ಮನೆ, ಕೆಲಸ ಸೇರಿದಂತೆ ಹಲವಾರು ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಚೇತನರು ಮರಣ ಹೊಂದಿದ ಸಂದರ್ಭದಲ್ಲಿ ನೀಡಲಾಗುವ 50 ಸಾವಿರ ರೂ.ಗಳ ಪರಿಹಾರವನ್ನು 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ವಿಕಲಚೇತನರ ಶೇ.50 ರಷ್ಟು ಮೀಸಲಾತಿಯನ್ನು ಕಡ್ಡಾಯ ಜಾರಿಗೆ ರಾಜ್ಯಸರ್ಕಾರ ಆದೇಶಿಸಿದೆ ಎಂದು ಹೇಳಿದರು. +ವಿಶೇಷಚೇತನರಲ್ಲಿ ಬಹುಮುಖ ಪ್ರತಿಭೆಗಳಿರುತ್ತವೆ. ಇಂದಿನ ಕಾರ್ಯಕ್ರಮದಲ್ಲಿ ವಿವಿಧ ಚಿತ್ರಕಲಾ ಸ್ಪರ್ಧೆಗಳನ್ನು ನೋಡಿ ತಮಗೆ ಸಂತೋಷವಾಯಿತು. ತಮ್ಮ ಭಾವಚಿತ್ರವನ್ನೂ ಬರೆದುಕೊಟ್ಟಿದ್ದಾರೆ ಎಂದು ಸ್ಮರಿಸಿಕೊಂಡರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_298_12.txt b/eesanje/url_46_298_12.txt new file mode 100644 index 0000000000000000000000000000000000000000..571560f416c3dafa2735f2f41dcf283e638dfcfd --- /dev/null +++ b/eesanje/url_46_298_12.txt @@ -0,0 +1,7 @@ +ವಿಧಾನಸಭೆ ಬೇರೆ, ಲೋಕಸಭೆ ಚುನಾವಣೆಗಳೇ ಬೇರೆ : ಪ್ರಿಯಾಂಕ್ ಖರ್ಗೆ +ಕಲ್ಬುರ್ಗಿ,ಡಿ.3- ವಿಧಾನಸಭೆ ಚುನಾವಣೆಗಳೇ ಬೇರೆ, ಲೋಕಸಭೆ ಚುನಾವಣೆಗಳೇ ಬೇರೆ. ಕಾಂಗ್ರೆಸ್ ಮುಂದಿನ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಶ್ರೀಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಕ್ರಿಯೆ ನೀಡುವುದು ಆತುರದ ಕ್ರಮವಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ತೆಲಂಗಾಣದಲ್ಲಿ ನಾವು ಸರ್ಕಾರ ರಚಿಸುತ್ತಿದ್ದೇವೆ. ರಾಜಸ್ಥಾನದಲ್ಲಿ ಕಡಿಮೆ ಅಂತರದಲ್ಲಿ ಪೈಪೋಟಿ ಇದೆ. ಅಂತಿಮ ಫಲಿತಾಂಶ ಏನೇ ಆದರೂ ಜನಾಶೀರ್ವಾದವನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು. +ಕಾಂಗ್ರೆಸ್ ಪಕ್ಷದ ಪ್ರಭಾವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಪರಿಣಾಮ ಬೀರಿದೆ. ಪ್ರತಿ ಕುಟುಂಬದ ಆರ್ಥಿಕ ಸ್ಥಿತಿಯನ್ನು ಗ್ಯಾರಂಟಿ ಯೋಜನೆಗಳು ಸುಧಾರಿಸುತ್ತಿದೆ. ರಾಜ್ಯದ ಆರ್ಥಿಕಾಭಿವೃದ್ಧಿಗೆ ನೀಲನಕ್ಷೆಯಾಗಿದೆ. ಬಿಜೆಪಿಯವರು ಒಂದೆಡೆ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ದಿವಾಳಿತನವಾಗಲಿದೆ ಎಂದು ಟೀಕೆ ಮಾಡುತ್ತಾರೆ. ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಐದು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ತೆಗೆದುಕೊಂಡಿದೆ. +ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ +ವಿಶ್ವಗುರು ದೇಶದ ಅಭಿವೃದ್ಧಿಗಾಗಿ ಯಾವ ಕೊಡುಗೆ ನೀಡಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ. ಒಂದೆಡೆ ಬಡವರು ಬಡವರಾಗಿಯೇ ಉಳಿದಿದ್ದರೆ, ಶ್ರೀಮಂತರು ಮತ್ತಷ್ಟು ಅಭಿವೃದ್ಧಿಯಾಗುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳನ್ನು ಕೊಟ್ಟರೆ ಆರ್ಥಿಕ ಸ್ಥಿತಿಗೆ ಪೆಟ್ಟಾಗುತ್ತಿದೆ ಎಂದು ಆರೋಪಿಸುವ ಬಿಜೆಪಿಗರು ಅವರ ಪಕ್ಷದ ಸರ್ಕಾರ ಉಚಿತ ಯೋಜನೆಗಳನ್ನು ಘೋಷಿಸಿದರೆ ಜನಕಲ್ಯಾಣ ಯೋಜನೆಗಳು ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇದು ದ್ವಿಮುಖ ನೀತಿ ಎಂದು ಕಿಡಿಕಾರಿದರು. +ಬಿಜೆಪಿಯವರು ಐಟಿ, ಸಿಬಿಐ, ಇಡಿಗಳನ್ನು ಬಳಸಿಕೊಂಡು ರಂಗೋಲಿ ಕೆಳಗೆ ನುಸುಳುವ ಪ್ರಯತ್ನ ಮಾಡುತ್ತಿದ್ದಾರೆ. ತೆಲಂಗಾಣದಲ್ಲಿ ಸ್ಪಷ್ಟ ಬಹುಮತ ಪಡೆದಿದ್ದರೂ ಕೂಡ ಬಿಜೆಪಿಯವರು ಬೇರೆಯೇ ತಂತ್ರಗಾರಿಕೆ ಅನುಸರಿಸಬಹುದು. ಹೀಗಾಗಿ ಕಾಂಗ್ರೆಸ್ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಿಕೊಳ್ಳುವುದು ಅನಿವಾರ್ಯ. ರೆಸಾರ್ಟ್ ರಾಜಕೀಯವನ್ನು ಶುರು ಮಾಡಿದ್ದು ಮತ್ತು ಕಲಿಸಿದ್ದು ಕಾಂಗ್ರೆಸಿಗರಲ್ಲ, ಬಿಜೆಪಿಯವರು ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_298_2.txt b/eesanje/url_46_298_2.txt new file mode 100644 index 0000000000000000000000000000000000000000..2df1b054775ce7a30bc01f3f1bfa435cfd0d6a54 --- /dev/null +++ b/eesanje/url_46_298_2.txt @@ -0,0 +1,9 @@ +ಕೇಂದ್ರ ಸರ್ಕಾರದಿಂದ ‘ಕನ್ನಡ’ ತಿರಸ್ಕಾರ +ಬೆಳಗಾವಿ,ಡಿ.4- ರಾಜ್ಯದ ಎಲ್ಲಾ ಶಾಲೆಗಳಲ್ಲಿ ಒಂದರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ.2015ರಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಾದ ವಿಧಾನಸಭೆ ಮತ್ತು ವಿಧಾನಪರಿಷತ್‍ನಲ್ಲಿ 1ರಿಂದ 5ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಅಥವಾ ರಾಜ್ಯ ಭಾಷೆಯನ್ನು ಶಿಕ್ಷಣ ಮಾಧ್ಯಮವಾಗಿ ಕಡ್ಡಾಯಗೊಳಿಸಿ ಅಂಗೀಕರಿಸಿದ ಮಸೂದೆಯನ್ನು ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. +ಆದರೆ, ಕೇಂದ್ರ ಸರ್ಕಾರವು ಮಾತೃಭಾಷೆನ್ನು ಕಡ್ಡಾಯಗೊಳಿಸುವುದು, ಶಿಕ್ಷಣದ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಮಸೂದೆಯನ್ನು ತಿರಸ್ಕಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಬಹಿರಂಗಪಡಿಸಿದ್ದಾರೆ. +ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ರಾಜ್ಯದ ಈ ವಿಧೇಯಕವನ್ನು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಕೇಂದ್ರ ಶಿಕ್ಷಣ ಇಲಾಖೆ ತಿರಸ್ಕರಿಸಿದೆ ಎಂದು ವಿಧಾನ ಪರಿಷತ್ತಿನಲ್ಲಿ ತಿಳಿಸಿದರು. +ಆಗ ಯು.ಬಿ.ವೆಂಕಟೇಶ್ ಅವರು, 2015ರಲ್ಲಿ ರಾಜ್ಯ ಸರ್ಕಾರ ಎರಡು ಸದನಗಳಲ್ಲಿ ಬಹುಮತದಿಂದ ಅಂಗೀಕರಿಸಿ ಕೇಂದ್ರ ಸರ್ಕಾರದ ಅಂಕಿತಕ್ಕೆ ಕಳುಹಿಸಿಕೊಟ್ಟಿತ್ತು. 1ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಶಾಲಾ ಮಕ್ಕಳಿಗೆ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ, ಇಲ್ಲವೇ ಮಾತೃ ಭಾಷೆಯನ್ನಾಗಿ ಕಡ್ಡಾಯಗೊಳಿಸಬೇಕೆಂಬುದು ಈ ಮಸೂದೆಯ ಮೂಲ ಉದ್ದೇಶ. ನಮ್ಮ ಮಕ್ಕಳಿಗೆ ನಾವೇ ಕನ್ನಡ ಕಲಿಸಲು ಆದ್ಯತೆ ನೀಡದಿದ್ದರೆ ಹೇಗೆ? ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಹುಡುಕಲಿ ಎಂದು ಸಲಹೆ ಮಾಡಿದರು. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ಕಳೆದ ಎಂಟು ವರ್ಷಗಳಿಂದ ಈ ವಿಧೇಯಕಕ್ಕೆ ಅನುಮೋದನೆ ಸಿಕ್ಕಿಲ್ಲ. ರಾಜ್ಯವನ್ನು ಪ್ರತಿನಿಧಿಸುವ ಸಂಸದರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಿ. ನಮ್ಮ ಭಾಷೆಯನ್ನು ನಾವೇ ರಕ್ಷಣೆ ಮಾಡಿಕೊಳ್ಳಲು ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು. +ಆಗ ಸಚಿವ ಮಧುಬಂಗಾರಪ್ಪ, ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರ ಮೀಡಿಯಂ ಆಫ್ ಸ್ಟಡೀಸ್‍ಗೆ ಸಂಬಂಸಿದ ಸುಪ್ರೀಂಕೋರ್ಟ್‍ನ ತೀರ್ಪಿನ ಹಿನ್ನಲೆಯಲ್ಲಿ ಕಡ್ಡಾಯ ಮಾಡಲು ಬರುವುದಿಲ್ಲ ಎಂದು ರಾಜ್ಯ ಸರ್ಕಾರ ಕಳುಹಿಸಿದ ಮಸೂದೆಯನ್ನು ತಿರಸ್ಕರಿಸಿದೆ ಎಂದರು. ಆಗ ಯು.ಬಿ.ವೆಂಕಟೇಶ್, ಈ ಮಸೂದೆಯನ್ನು ಕೇಂದ್ರ ತಿರಸ್ಕರಿಸಿದೆ ಎಂದರೆ ಕೇಂದ್ರ ಸರ್ಕಾರ ನಮ್ಮ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು. +ಇದಕ್ಕೆ ಸ್ಪಷ್ಟಪಡಿಸಿದ ಮಧುಬಂಗಾರಪ್ಪ, ಮೂಲಭೂತ ಹಕ್ಕನ್ನು ಉಲ್ಲಂಘನೆ ಮಾಡಲು ಬರುವುದಿಲ್ಲ. ಹಿಂದಿ ಹೇರಿಕೆಯನ್ನು ನಾವು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_298_3.txt b/eesanje/url_46_298_3.txt new file mode 100644 index 0000000000000000000000000000000000000000..007af8fee2346c86fa2372eaefcec87c4799d3f0 --- /dev/null +++ b/eesanje/url_46_298_3.txt @@ -0,0 +1,9 @@ +ಉತ್ತರ ಕರ್ನಾಟಕಕ್ಕೆ ಸಿಗದ ನ್ಯಾಯ : ಯತ್ನಾಳ್ ಬಂಡಾಯ +ಬೆಳಗಾವಿ,ಡಿ.4- ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುವವರಿಗೂ ನಾನು ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ ಎಂದು ಬಿಜೆಪಿ ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ವರಿಷ್ಠರಿಗೆ ಬಹಿರಂಗವಾಗಿಯೇ ಸಡ್ಡು ಹೊಡೆದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಉಕ ಭಾಗದವರಿಗೆ ನೀಡಬೇಕಿತ್ತು. ಪಕ್ಷದ ವರಿಷ್ಠರು ಈ ಭಾಗಕ್ಕೆ ಯಾವುದೇ ಪ್ರಾಶಸ್ತ್ಯ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗುವವರೆಗೂ ನನ್ನ ಹೋರಾಟ ಮುಂದುವರೆಯುತ್ತಲೇ ಇರುತ್ತದೆ. ನಾನು ಯಾರಿಗೂ ಅಂಜುವವನ್ನಲ್ಲ. ಈ ಭಾಗಕ್ಕೆ ನ್ಯಾಯ ಸಿಗಬೇಕು ಎಂಬ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಸಕಾಂಗ ಸಭೆಗೆ ನಾನು ಹಾಜ ರಾಗುವುದಿಲ್ಲ ಎಂದು ಸವಾಲು ಹಾಕಿದರು. +ಈ ಭಾಗದಲ್ಲಿ ಅಧಿವೇಶನ ನಡೆಯುವ ವೇಳೆ ಉತ್ತರಕರ್ನಾಟಕದ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಸುಮ್ಮನೆ ಬೇಕಾಬಿಟ್ಟಿ ಚರ್ಚೆ ನಡೆದರೆ ಅಧಿವೇಶನದ ಉದ್ದೇಶ ಈಡೇರುವುದಿಲ್ಲ. ನಾನು ಇಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ಸ್ಪೀಕರ್ ಅವರಿಗೆ ಮನವಿ ಮಾಡುತ್ತೇನೆ. ಚರ್ಚೆಯನ್ನು ನಾನೇ ಮೊದಲು ಆರಂಭಿಸುತ್ತೇನೆ ಎಂದರು. +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ಸುಮ್ಮನೆ ತವಡು ಕುಟ್ಟಿ ಹೋಗುವುದರಲ್ಲಿ ಅರ್ಥವಿಲ್ಲ. ಕಲಾಪದಲ್ಲಿ ಉತ್ತಮ ಚರ್ಚೆಯಾಗಬೇಕು. ಅದಕ್ಕೆ ಎಲ್ಲ ಪಕ್ಷದ ಶಾಸಕರು ಸಹಕಾರ ಕೊಡಬೇಕು. ಸ್ಪೀಕರ್ ಇದಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಿ ಎಂದು ಯತ್ನಾಳ್ ಮನವಿ ಮಾಡಿದರು. ದೇಶದಲ್ಲಿ ಬರುವ ದಿನಗಳಲ್ಲಿ ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ. ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಕುಟುಂಬ ರಾಜಕಾರಣ ಮಾಡುವವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. +ರಾಜಕಾರಣದಲ್ಲಿ ನಾವೇ ಇರಬೇಕೆಂದು ಪ್ರತಿಪಾದಿಸುವವರಿಗೆ ಈ ಫಲಿತಾಂಶ ಎಚ್ಚರಿಕೆಯ ಘಂಟೆ. ಮುಂದಿನ ದಿನಗಳಲ್ಲಿ ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ ಎಂದು ಹೇಳಿದರು.ಹಿಂದುತ್ವ ಮತ್ತು ಅಭಿವೃದ್ಧಿ ಪರವಾಗಿ ಇರುವವರಿಗೆ ಮತದಾರರು ಕೈ ಹಿಡಿಯಲಿದ್ದಾರೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಸಂಪೂರ್ಣವಾಗಿ ನಿರ್ಮೂಲನೆಯಾಗಲಿದೆ. +ಜನ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ : ಮೋದಿ +ಯಾವುದೇ ಕಾರಣಕ್ಕೂ ಮತದಾರ ಇದನ್ನು ಸಹಿಸುವುದಿಲ್ಲ. ಇದಕ್ಕೆ ನಿನ್ನೆಯ ಫಲಿತಾಂಶವೇ ಸಾಕ್ಷಿ ಎಂದರು.ದೇಶದಲ್ಲಿ ಮೋದಿಯವರ ಜನಪ್ರಿಯತೆ, ಅಭಿವೃದ್ಧಿಪರವಾದ ಕೆಲಸಕ್ಕೆ ಮತದಾರ ಮತ ಹಾಕಿದ್ದಾನೆ. ಯಾರು ಏನೇ ಹೇಳಿದರೂ ಮುಂದಿನ ದಿನಗಳಲ್ಲಿ ಮೋದಿಯವರೇ ಪ್ರಧಾನಿಯಾಗಲಿದ್ದಾರೆ. ಪ್ರತಿಪಕ್ಷಗಳ ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ. ಹಿಂದುತ್ವ ಮತ್ತು ಅಭಿವೃದ್ಧಿ ದೇಶದಲ್ಲಿ ಉಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_298_4.txt b/eesanje/url_46_298_4.txt new file mode 100644 index 0000000000000000000000000000000000000000..b2b11e943f8721847738cf1bb5e6e93aca109dde --- /dev/null +++ b/eesanje/url_46_298_4.txt @@ -0,0 +1,10 @@ +ರಾಜ್ಯದ ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆ : ಸಚಿವ ಖರ್ಗೆ +ಬೆಳಗಾವಿ,ಡಿ.4-ಬರಗಾಲದ ಸಂಕಷ್ಟದ ನಡುವೆಯೂ ರಾಜ್ಯದ ರೈತರಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಲು ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿಯವರ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಪರವಾಗಿ ಉತ್ತರಿಸಿದ ಅವರು, ರಾಜ್ಯದಲ್ಲಿ ಈ ಬಾರಿ ತಮ್ಮ ನಿರೀಕ್ಷೆಗೆ ತಕ್ಕಂತೆ ಮಳೆ ಬಾರದ ಕಾರಣ ಬರಗಾಲ ಆವರಿಸಿ ವಿದ್ಯುತ್ ಸಮಸ್ಯೆಯಾಗಿದೆ ಎಂಬುದನ್ನು ಒಪ್ಪಿಕೊಂಡರು. +ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಆದರೂ ಸರ್ಕಾರ ರೈತರಿಗೆ ತೊಂದರೆಯಾಗದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ ಎಂದರು. +ವಿವಿಧ ಭಾಗಗಳಲ್ಲಿ ಹೆಚ್ಚು ಪೂರೈಕೆ ಮಾಡಬೇಕೆಂಬ ಬೇಡಿಕೆಯಿದೆ. ಭತ್ತ ಮತ್ತು ಕಬ್ಬು ಬೆಳೆಯುತ್ತಿರುವ ಪ್ರದೇಶಗಳಲ್ಲಿ ಬೇಡಿಕೆ ಹೆಚ್ಚಿದೆ. ಹೀಗಾಗಿ ಕೆಲವು ಪ್ರದೇಶಗಳಲ್ಲಿ ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಹಗಲಿನಲ್ಲಿ ನಾಲ್ಕು ಗಂಟೆ, ರಾತ್ರಿ 3 ಗಂಟೆ ಸೇರಿದಂತೆ ಒಟ್ಟು 7 ಗಂಟೆ ಕಾಲ ವಿದ್ಯುತ್ ಪೂರೈಸುತ್ತಿದ್ದೇವೆ. +ಬರಗಾಲದ ಹಿನ್ನಲೆಯಲ್ಲಿ ಈ ಬಾರಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಬಳಕೆಯ ಪ್ರಮಾಣ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಬರಗಾಲ ಆವರಿಸಿರುವ ಕಾರಣ ಸರ್ಕಾರ ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಿದೆ. ಸೆಕ್ಷನ್ 6ರ ಪ್ರಕಾರ ನಮ್ಮ ರಾಜ್ಯದಲ್ಲಿ ಉತ್ಪಾದನೆ ಮಾಡಿದ ವಿದ್ಯುತ್‍ನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡದಂತೆ ನಿರ್ಬಂಧ ಹಾಕಿದ್ದೇವೆ. ಅಲ್ಲದೆ ಹರಿಯಾಣ, ಪಂಜಾಬ್‍ನಿಂದಲೂ ವಿದ್ಯುತ್ ಖರೀದಿ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. +ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ +ಸದ್ಯಕ್ಕೆ ರೈತರಿಗೆ ದಿನಕ್ಕೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ಕಬ್ಬು ಬೆಳೆಗಾರರಿಗೆ ತೊಂದರೆಯಾಗದಂತೆ ವಿದ್ಯುತ್ ಒದಗಿಸುತ್ತಿದ್ದೇವೆ. ಒಂದೂವರೆ ತಿಂಗಳು ಸ್ವಲ್ಪ ಮಟ್ಟಿಗೆ ತೊಂದರೆಯಾಗಿದ್ದು ನಿಜ. ಈಗ ಪರಿಸ್ಥಿತಿ ಸುಧಾರಿಸಿದೆ ಎಂದು ಹೇಳಿದರು. ಸಚಿವರ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು, ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ಗ್ರಾಮೀಣ ಭಾಗಗಳಲ್ಲಿ ಸಕಾಲಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೆ ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ, ಕೋಟಾ ಶ್ರೀನಿವಾಸ್ ಪೂಜಾರಿ, ವೈ.ನಾರಾಯಣಸ್ವಾಮಿ ಮತ್ತಿತರರು ಕಿಡಿಕಾರಿದರು. +ಇದಕ್ಕೆ ತಿರುಗೇಟು ಕೊಟ್ಟ ಕಾಂಗ್ರೆಸ್ ಸದಸ್ಯರು, ನಿಮ್ಮ ಕಾಲದಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಮಾಡಿದ್ದೀರಿ. ಒಂದೇ ಒಂದು ಯೂನಿಟ್ ಉತ್ಪಾದನೆ ಮಾಡದೆ ನಿಮ್ಮಿಂದ ನಾವೇನು ಪಡೆಯುವುದಿದೆ ಎಂದು ಪ್ರಶ್ನಿಸಿದರು. ಈ ಹಂತದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಗ ಸಭಾಪತಿಯವರು ತಮ್ಮ ಪೀಠದಿಂದ ಎದ್ದು ನಿಂತು ಸದಸ್ಯರನ್ನು ಹೊರತುಪಡಿಸಿ ಯಾರೂ ಮಾತನಾಡಬಾರದು. ನಾನು ಈ ವಿಷಯದ ಬಗ್ಗೆ ಚರ್ಚಿಸಲು ಅರ್ಧ ಗಂಟೆ ಸಮಯ ಕೊಡುವುದಾಗಿ ಹೇಳಿದಾಗ ಚರ್ಚೆಗೆ ತೆರೆ ಬಿದ್ದಿತು. +ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬರದಿಂದ ನೀರಾವರಿ ಅವಲಂಬಿತ ಬೆಳೆಗಾರರಿಗೆ ಆತಂಕ ಆಗಿದೆ. ಸರ್ಕಾರ 7 ಗಂಟೆಗಳ ವಿದ್ಯುತ್ ಪೂರೈಸುವುದಾಗಿ ಹೇಳಿ.ಅವರು ಕೇವಲ 3 ತಾಸು ವಿದ್ಯುತ್ ಕೊಡುತ್ತೀದ್ದಿರಿ. ಮಧ್ಯರಾತ್ರಿ 2-3 ಗಂಟೆಗೆ ವಿದ್ಯುತ್ ಕೊಡುತ್ತಿದ್ದಾರೆ ರೈತರಿಗೆ ಇದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದರು. +ಸರ್ಕಾರದ ವಾಗ್ದಾನ ಮಾತ್ರ ಜಾರಿ ಆಗುತ್ತಿಲ್ಲ. ವಿದ್ಯುತ್ ಸಿಗುತ್ತಾ ಇದ್ದರೆ ಮೊಸಳೆಯನ್ನು ತಂದು ರೈತರು ಯಾಕೆ ಪ್ರತಿಭಟನೆ ಮಾಡುತ್ತಿದ್ದರು ಎಂದು ಪ್ರಶ್ನೆ ಮಾಡಿದರು. \ No newline at end of file diff --git a/eesanje/url_46_298_5.txt b/eesanje/url_46_298_5.txt new file mode 100644 index 0000000000000000000000000000000000000000..b0b01b78b6db17be50962ccb6707aaf5be20de11 --- /dev/null +++ b/eesanje/url_46_298_5.txt @@ -0,0 +1,15 @@ +ವಿಧಾನಮಂಡಲದ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ +ಬೆಳಗಾವಿ,ಡಿ.4- ಇತ್ತೀಚೆಗೆ ಅಗಲಿರುವ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಡಿ.ಬಿ.ಚಂದ್ರೇಗೌಡ ಸೇರಿದಂತೆ ಹಲವು ಗಣ್ಯರಿಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಲಾಪ ಆರಂಭದಲ್ಲೇ ಸಭಾಧ್ಯಕ್ಷ ಯು.ಟಿ.ಖಾದರ್ ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಿದರು. ಮಾಜಿ ಸಚಿವ ಶ್ರೀರಂಗದೇವರಾಯಲು, ವಿಧಾನಸಭೆಯ ಮಾಜಿ ಸದಸ್ಯರಾದ ಸಿ.ವೆಂಕಟೇಶಪ್ಪ, ಶ್ರೀಕಾಂತ್‍ಶೆಟ್ಟಪ್ಪ ಭೀಮಣ್ಣವರ ವಿಲಾಸಬಾಬು ಆಲಮೇಕರ್, ಈಶಾನ್ಯ ರಾಜ್ಯಗಳ ಮಾಜಿ ರಾಜ್ಯಪಾಲ ಪಿ.ಬಿ.ಆಚಾರ್ಯ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸದನದಲ್ಲಿ ಗೌರವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಅಗಲಿದ ಗಣ್ಯರ ಪರಿಚಯ ಮಾಡಿಕೊಟ್ಟರು. ಡಿ.ಬಿ.ಚಂದ್ರೇಗೌಡರವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ದಾರದಹಳ್ಳಿ ಗ್ರಾಮದಲ್ಲಿ ಜನಿಸಿದರು. ಕಾನೂನು ಪದವೀಧರರಾಗಿದ್ದು, ವೃತ್ತಿಯಲ್ಲಿ ವಕೀಲರಾಗಿದ್ದರು. ಸಂಗೀತ, ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ನನ್ನ ಗೋಪಾಲ ಚಲನಚಿತ್ರದಲ್ಲೂ ಅಭಿನಯಿಸಿದ್ದರು. +ಪ್ರಜಾಪ್ರಭುತ್ವದ ಗಟ್ಟಿ ಧ್ವನಿಯ ಪ್ರತಿಪಾದಕರಾಗಿದ್ದ ಚಂದ್ರೇಗೌಡರು ನರಗುಂದದಲ್ಲಿ ನಡೆದ ಗೋಲಿಬಾರ್ ಪ್ರಕರಣವನ್ನು ವಿರೋಸಿ ಬೆಂಗಳೂರಿಗೆ ರೈತ ಜಾಥಾ ಏರ್ಪಡಿಸಿದ್ದರು. 1971, 1976, 2009 ರಲ್ಲಿ ಲೋಕಸಭಾ ಸದಸ್ಯರಾಗಿ 1986 ರಿಂದ 1989 ರವರೆಗೆ ರಾಜ್ಯಸಭಾ ಸದಸ್ಯರಾಗಿ 1978 ರಿಂದ 1983 ರವರೆಗೆ ವಿಧಾನಪರಿಷತ್ ಸದಸ್ಯರಾಗಿ ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. 1983 ರಲ್ಲಿ ಪ್ರಥಮ ಬಾರಿಗೆ ಏಳನೇ ವಿಧಾನಸಭೆಗೆ ತೀರ್ಥಹಳ್ಳಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. +ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ +ವಿಧಾನಸಭೆಯ ಅಧ್ಯಕ್ಷ, ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 1989 ರಲ್ಲಿ ಪುನರ್ ಆಯ್ಕೆಯಾಗಿದ್ದ ಅವರು ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. 1999 ರಲ್ಲಿ ಶೃಂಗೇರಿ ಕ್ಷೇತ್ರದಿಂದ ಚುನಾಯಿತರಾಗಿದ್ದ ಚಂದ್ರೇಗೌಡರು ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರುಗಳಾಗಿ ಕೆಲಸ ನಿರ್ವಹಿಸಿದ್ದರು. +ಶ್ರೀರಂಗದೇವರಾಯಲು ಅವರು ಆನೆಗುಂದಿ ಗ್ರಾಮದಲ್ಲಿ ಜನಿಸಿದ್ದರು. ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಿದ ಅವರು, ಕನಕಗಿರಿ ಕ್ಷೇತ್ರದಿಂದ 7,8 ನೇ ವಿಧಾನಸಭೆಗೆ ಗಂಗಾವತಿ ಕ್ಷೇತ್ರದಿಂದ 9,10 ಮತ್ತು 11 ನೇ ವಿಧಾನಸಭೆಗೆ ಪುನರ್ ಆಯ್ಕೆಯಾಗಿದ್ದರು. ಕಾಡ ಸಚಿವರಾಗಿಯೂ ಕೆಲಸ ಮಾಡಿದ್ದರು. ವಿಜಯನಗರದ ರಾಜ ವಂಶಸ್ಥರಾಗಿದ್ದ ಶ್ರೀರಂಗದೇವರಾಯಲು ಆಗಸ್ಟ್ 22 ರಂದು ನಿಧನ ಹೊಂದಿದರು ಎಂದು ವಿವರಿಸಿದರು. +ಪಿ.ಬಿ.ಆಚಾರ್ಯ ಅವರು ಉಡುಪಿ ಜಿಲ್ಲೆಯ ತೆಂಕಪೇಟೆಯಲ್ಲಿ ಜನಿಸಿದ್ದು, ಕಾನೂನು ಪದವೀಧರರಾಗಿದ್ದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ನ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂಬೈ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ನಾಗಾಲ್ಯಾಂಡ್ ರಾಜ್ಯಪಾಲರಾಗಿ ತ್ರಿಪುರ, ಅಸ್ಸಾಂ, ಅರುಣಾಚಲ ಪ್ರದೇಶ ಹಾಗೂ ಮಣಿಪುರ ರಾಜ್ಯಗಳಲ್ಲಿ ಹಂಗಾಮಿ ರಾಜ್ಯಪಾಲರಾಗಿ ಕೆಲಸ ನಿರ್ವಹಿಸಿದ್ದರು. ನವೆಂಬರ್ 10 ರಂದು ನಿಧನರಾಗಿದ್ದಾರೆಂದು ತಿಳಿಸಿದರು. +ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನವೆಂಬರ್ 22 ರಂದು ಸೇನಾಪಡೆ ಮತ್ತು ಉಗ್ರರ ನಡುವೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಮಂಗಳೂರು ಜಿಲ್ಲೆಯ ಕ್ಯಾಪ್ಟನ್ ಎಂ.ಬಿ.ಪ್ರಾಂಜಲ್ ಸೇರಿದಂತೆ ಕ್ಯಾಪ್ಟನ್ ಶುಭನ್ ಗುಪ್ತಾ, ಹವಲ್ದಾರ್ ಅಬ್ದುಲ್ ಮಜಿದ್, ಲಾನ್ಸ್‍ನಾಯ್ಕ್ ಸಂಜಯ್ ಬಿಸ್ಟ್ ಮತ್ತು ಪಾರಾಟ್ರುಪರ್ ಸಚಿನ್ ಲಾರ್ ಸೇರಿದಂತೆ ಐವರು ವೀರಯೋಧರು ಹುತಾತ್ಮರಾಗಿದ್ದಾರೆ ಎಂದು ವಿವರಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಡಿ.ಬಿ.ಚಂದ್ರೇಗೌಡರವರು ಉತ್ತಮ ವಾಜ್ಮಿಗಳಾಗಿದ್ದರು, ಸಂಸ್ಕøತಿಯ ವ್ಯವಹಾರಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದರು ಎಂದು ಗುಣಗಾನ ಮಾಡಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯ ನ್ನು ಹುಡುಕುವಂತೆ ಬಿಜೆಪಿಯ ಪ್ರಮುಖ ನಾಯಕರಾದ ಅನಂತಕುಮಾರ್ ಮತ್ತು ಯಡಿಯೂರಪ್ಪನವರು ತಮಗೆ ಸಲಹೆ ನೀಡಿದ್ದರು. +ತಾವು ಚಂದ್ರೇಗೌಡರ ಹೆಸರನ್ನು ಸೂಚಿಸಿ, ಖುದ್ದು ಚಂದ್ರೇಗೌಡರಿಗೆ ದೂರವಾಣಿ ಕರೆ ಮಾಡಿದ್ದೆ, ಅದಕ್ಕೆ ಪ್ರತಿಕ್ರಿಯಿಸಿದ ಅವರು, ನೀನು ಹೇಳುವುದಾದರೆ ನಾನು ಈಗಲೇ ಬಸ್ ಹತ್ತಿ ಬೆಂಗಳೂರಿಗೆ ಬರುತ್ತೇನೆ ಎಂದು ಉತ್ಸಾಹ ತೋರಿದ್ದರು. ಕಾನೂನಿನ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ನಮಗೆ ಯಾವುದೇ ಸಮಸ್ಯೆಗಳಾದರೂ ಅವರ ಬಳಿ ಸಲಹೆ ಕೇಳುತ್ತಿದ್ದೆವು ಎಂದು ಸ್ಮರಿಸಿಕೊಂಡರು. +ಪಿ.ಬಿ.ಆಚಾರ್ಯ ಈಶಾನ್ಯ ರಾಜ್ಯಗಳಲ್ಲಿ ರಾಜ್ಯಪಾಲರಾಗಿದ್ದಾಗ ಕರ್ನಾಟಕದಲ್ಲಿ ಈ ಭಾಗದ ಜನರ ಮೇಲೆ ದಾಳಿ ಮಾಡುವ ಹುಸಿ ಬೆದರಿಕೆಯ ಕರೆ ಬಂದಿತ್ತು. ಅದರಿಂದ ಆತಂಕಗೊಂಡ ಸಾವಿರಾರು ಜನ ಏಕಾಏಕಿ ತಮ್ಮ ಊರಿಗೆ ತೆರಳಲು ಮುಂದಾದರು. ಒಂದೇ ಒಂದು ರೈಲು ವ್ಯವಸ್ಥೆ ಇತ್ತು. ಅವರಲ್ಲಿ ಒಂದು ಸಾವಿರ ಜನ ಮಾತ್ರ ಪ್ರಯಾಣಿಸುವ ವ್ಯವಸ್ಥೆ ಇತ್ತು. ಮೂರ್ನಾಲ್ಕು ಸಾವಿರ ಜನ ಏಕಾಏಕಿ ಮುನ್ನುಗ್ಗಿದ್ದರಿಂದಾಗಿ ಸಮಸ್ಯೆ ಎದುರಾಯಿತು. ಆಗ ರಾಜ್ಯಪಾಲರಾಗಿದ್ದ ಆಚಾರ್ಯ ಅವರು ತಮ್ಮ ನೆರವಿಗೆ ಧಾವಿಸಿದ್ದರು ಎಂದು ಹೇಳಿದರು. +ಅಬ್ಬರಿಸುತ್ತಿದೆ ಮೈಚಾಂಗ್ ಚಂಡಮಾರುತ +ಜಮ್ಮು-ಕಾಶ್ಮೀರದ ಧಾಳಿಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಮತ್ತಷ್ಟು ಸಹಾಯಧನ ನೀಡಬೇಕೆಂದು ಅಶೋಕ್ ಸಲಹೆ ನೀಡಿದರು. ಗೃಹಸಚಿವ ಜಿ.ಪರಮೇಶ್ವರ್ ಮಾತನಾಡಿ, ಡಿ.ಬಿ.ಚಂದ್ರೇಗೌಡ ಅವರು ಇಂದಿರಾಗಾಂಯವರಿಗೆ ಚಿಕ್ಕಮಗಳೂರು ಕ್ಷೇತ್ರ ಬಿಟ್ಟುಕೊಟ್ಟು ದೇಶದಲ್ಲೇ ರಾಜಕೀಯ ಬದಲಾವಣೆಗೆ ನಾಂದಿ ಹಾಡಿದ್ದರು. ಅಂತಹ ಕ್ಯಾಪ್ಟನ್ ಪ್ರಾಂಜಲ್ ಯುವಕರಿಗೆ ಸೂರ್ತಿ ಎಂದು ಸ್ಮರಿಸಿಕೊಂಡರು. +ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ್ ತಂಗಡಗಿ, ಶಾಸಕರಾದ ಸಿ.ಎನ್.ಬಾಲಕೃಷ್ಣ, ಜನಾರ್ಧನ ರೆಡ್ಡಿ ಮತ್ತಿತರರು ಸಂತಾಪ ಸೂಚಿಸಿದರು. \ No newline at end of file diff --git a/eesanje/url_46_298_6.txt b/eesanje/url_46_298_6.txt new file mode 100644 index 0000000000000000000000000000000000000000..2b8dd697c38fdde75934c93dce091b89aa6db366 --- /dev/null +++ b/eesanje/url_46_298_6.txt @@ -0,0 +1,7 @@ +ಅಧಿವೇಶನಕ್ಕೆ ಮಧುವಣಗಿತ್ತಿಯಂತೆ ಸಿಂಗಾರಗೊಂಡ ಕುಂದಾನಗರಿ +ಬೆಳಗಾವಿ,ಡಿ.4- ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಬಹುನಿರೀಕ್ಷಿತ ವಿಧಾನಮಂಡಲ ಅಧಿವೇಶನ ಆರಂಭಗೊಂಡಿದ್ದು, ಕುಂದಾನಗರಿ ಅಧಿವೇಶನಕ್ಕಾಗಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. +ಬಿಜೆಪಿ ಕಳೆದ ತಿಂಗಳಷ್ಟೇ ವಿಧಾನಸಭೆಯ ವಿರೋಧಪಕ್ಷದ ನಾಯಕನನ್ನು ನೇಮಕ ಮಾಡಿರುವುದರಿಂದ ಆರ್.ಅಶೋಕ್ ಕೇಸರಿ ಪಡೆಯನ್ನು ಮುನ್ನಡೆಸಲಿದ್ದಾರೆ. ವಿಧಾನಪರಿಷತ್‍ಗೆ ಈವರೆಗೂ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹತ್ತು ದಿನಗಳ ಕಾಲದ ಅವೇಶನ ಜಿದ್ದಾಜಿದ್ದಿನ ಕಣವಾಗಿರಲಿದೆ. ಸದನದ ಒಳಗೆ ಪ್ರಜಾಸತ್ತಾತ್ಮಕ ಚರ್ಚೆಗಳು ನಡೆಯುತ್ತಿದ್ದರೆ, ಸದನದ ಹೊರಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. +ಗೊಂದಲಕ್ಕೆ ಆಸ್ಪದವಾಗದಂತೆ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಭದ್ರತೆಯಿಂದ ಹಿಡಿದು ವಸತಿ, ಊಟ ಸೇರಿದಂತೆ ಹಲವು ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಸದನದ ಆರಂಭದ ದಿನವಾದ ಇಂದು ವಿಧಾನಸೌಧದ ಮುಂದೆ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. +ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ +ಬೆಳಗಾವಿಯ ರಸ್ತೆಗಳಲ್ಲೆಲ್ಲಾ ವಿವಿಧ ರಾಜಕೀಯ ನಾಯಕರುಗಳ ಫ್ಲೆಕ್ಸ್, ಪೋಸ್ಟರ್‍ಗಳು ರಾರಾಜಿಸುತ್ತಿದ್ದವು. ವಿಧಾನಪರಿಷತ್ ಹಾಗೂ ವಿಧಾನಸಭೆ ಸದಸ್ಯರು ಅತ್ಯುತ್ಸಾಹದಿಂದ ಕಲಾಪದಲ್ಲಿ ಭಾಗವಹಿಸಿದ್ದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಇಂದಿನ ಕಲಾಪಕ್ಕೆ ಗೈರುಹಾಜರಾಗಿದ್ದರು. ಉಳಿದಂತೆ ಎಲ್ಲಾ ಸಚಿವರು, ಶಾಸಕರು ಕಲಾಪದಲ್ಲಿ ಭಾಗವಹಿಸಿದ್ದರು. ಹೊಸ ಕ್ಯಾಪ್ಟನ್ ನೇಮಕದ ಬಳಿಕ ಬಿಜೆಪಿ ಪಾಳೆಯದಲ್ಲಿ ಅತ್ಯುತ್ಸಾಹ ಕಂಡುಬಂದಿತು. \ No newline at end of file diff --git a/eesanje/url_46_298_7.txt b/eesanje/url_46_298_7.txt new file mode 100644 index 0000000000000000000000000000000000000000..06d2fa250f5eea9cfaa8c52506c677a5e6df58f1 --- /dev/null +++ b/eesanje/url_46_298_7.txt @@ -0,0 +1,5 @@ +ಎಡವಿದ ಸಿಎಂ-ಡಿಸಿಎಂ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ +ಬೆಂಗಳೂರು, ಡಿ.3- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಎಡವಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. +ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ +ಕಾರ್ಯಕ್ರಮ ಮುಗಿಸಿ ವಾಪಸ್ ತೆರಳುವಾಗ ಹಸಿರು ಹೊದಿಕೆಗಳ ಕೆಳಗೆ ಇದ್ದಂತಹ ಮೆಟ್ಟಿಲನ್ನು ನೋಡದೇ ತಪ್ಪು ಹೆಜ್ಜೆ ಇಟ್ಟು ಎಡವಿದರು. ತಕ್ಷಣವೇ ಭದ್ರತಾ ಅಧಿಕಾರಿಗಳು ಅವರನ್ನು ಹಿಡಿದುಕೊಂಡು ಬ್ಯಾರಿಕೇಡ್‍ನ ಆಚೆಬದಿಯಲ್ಲಿ ನಿಂತಿದ್ದ ಯುವತಿಯೊಬ್ಬರ ಸಹಾಯದಿಂದ ಸಿದ್ದರಾಮಯ್ಯ ಕೆಳಗೆ ಬೀಳದಂತೆ ಆಸರೆಯಾದರು. +ಅತ್ತ ತೆಲಂಗಾಣ ವಿಧಾನಸಭೆ ಚುನಾವಣೆ ನಿಮಿತ್ತ ಹೈದ್ರಾಬಾದ್‍ನಲ್ಲಿರುವ ಡಿ.ಕೆ.ಶಿವಕುಮಾರ್‍ರವರು ಕಾರು ಹತ್ತುವಾಗ ತಕ್ಷಣಕ್ಕೆ ಕಾರಿನ ಹ್ಯಾಂಡಲ್ ಕೈಗೆ ಸಿಗದೆ ಆಯತಪ್ಪಿ ಬೀಳುವಂತಾಗಿದ್ದರು. ಅವರಿಗೆ ಸಿಬ್ಬಂದಿ ಆಸರೆಯಾಗಿ ಬೀಳದಂತೆ ತಡೆದಿದ್ದರು. ರಾಜ್ಯದ ಇಬ್ಬರು ಪ್ರಮುಖ ನಾಯಕರು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಸಂದರ್ಭದಲ್ಲೇ ಆಯತಪ್ಪಿದ್ದು ಕಾಕತಾಳೀಯವಾಗಿತ್ತು. \ No newline at end of file diff --git a/eesanje/url_46_298_8.txt b/eesanje/url_46_298_8.txt new file mode 100644 index 0000000000000000000000000000000000000000..07fac8b47c95a810b2b80684ce896e1b50a1cdd7 --- /dev/null +++ b/eesanje/url_46_298_8.txt @@ -0,0 +1,7 @@ +ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು +ಬೆಂಗಳೂರು,ಡಿ.3- ಕರ್ನಾಟಕ ಚುನಾವಣೆಯಲ್ಲಿ ಕಮಾಲ್ ಮಾಡಿದ ಗ್ಯಾರಂಟಿ ಯೋಜನೆಗಳು ತೆಲಂಗಾಣದಲ್ಲಿ ಕಾಂಗ್ರೆಸ್‍ನ ಕೈಹಿಡಿದರೆ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ ಈ ಯೋಜನೆಗಳಿಗೆ ಜನ ಆದ್ಯತೆ ನೀಡಿದಂತಿಲ್ಲ. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳು ;ಭಾರೀ ಸದ್ದು ಮಾಡಿದ್ದವು. ತೆಲಂಗಾಣದಲ್ಲಿ ಆರು ಗ್ಯಾರಂಟಿ ಯೋಜನೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸೇರಿದಂತೆ ಮುಖಂಡರು ಅಬ್ಬರದ ಪ್ರಚಾರ ನಡೆಸಿ ಘೋಷಣೆ ಮಾಡಿದ್ದರು. +ಕರ್ನಾಟಕದ ಮಾದರಿಯಂತೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಭರವಸೆ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರೆಲ್ಲಾ ಪ್ರಚಾರದ ಕಣಕ್ಕೆ ದಾಂಗುಡಿಯಿಟ್ಟು ಅಬ್ಬರದ ಪ್ರಚಾರ ನಡೆಸಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. +ರಾಜಸ್ಥಾನ ಮಾಂತ್ರಿಕನ ಕಾಟದಿಂದ ಮುಕ್ತವಾಗಿದೆ : ಶೇಖಾವತ್ +ತೆಲಂಗಾಣದಲ್ಲಿ ಭಾರೀ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವಿನ ನಿರೀಕ್ಷೆ ಮಾಡಿತ್ತು. ಆದರೆ ಕರ್ನಾಟಕದಷ್ಟು ಭರ್ಜರಿ ಬಹುಮತ ಸಾಧಿಸಲು ಸಾಧ್ಯವಾಗಿಲ್ಲ. ಅದೇ ರೀತಿ ಛತ್ತೀಸ್‍ಗಢದಲ್ಲೂ ಕೂಡ ಜನ ಕಾಂಗ್ರೆಸ್ ಅನ್ನು ನಿರೀಕ್ಷಿತ ಮಟ್ಟದಲ್ಲಿ ಕೈ ಹಿಡಿದಿಲ್ಲ. +ಛತ್ತೀಸ್‍ಗಢದಲ್ಲಿ ಕಾಂಗ್ರೆಸ್‍ಗೆ ಬಿಜೆಪಿ ಸಮಬಲದ ಪೈಪೋಟಿ ನೀಡಿದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಭರ್ಜರಿ ಬಹುಮತದತ್ತ ದಾಪುಗಾಲು ಇಟ್ಟಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿ ಅಧಿಕಾರ ಹಿಡಿಯಲು ಮುಂದಾಗಿದೆ. ಮಧ್ಯಪ್ರದೇಶದಲ್ಲೂ ಕೂಡ ಭಾರೀ ಮುನ್ನಡೆ ಸಾಧಿಸಿದ್ದು, ಅಧಿಕಾರ ಚುಕ್ಕಾಣಿ ಹಿಡಿಯುವ ಕಸರತ್ತುಗಳು ಆರಂಭವಾಗಿವೆ. +ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳು ಫಲ ನೀಡಿದಂತೆ ಕಂದುಬಂದಿಲ್ಲ. ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿ ಕಾಂಗ್ರೆಸ್‍ಗೆ ಬಹುಮತ ಬಂದಿತ್ತು. ಕಾಂಗ್ರೆಸ್ ನೀಡಿದ ಗ್ಯಾರಂಟಿ ಯೋಜನೆಗಳು ಫಲ ನೀಡಿದ್ದವು. ಅದೇ ಮಾದರಿಯನ್ನು ಪಂಚರಾಜ್ಯಗಳ ಚುನಾವಣೆಯಲ್ಲಿ ಅನುಸರಿಸಿತ್ತಾದರೂ ಜನ ಗ್ಯಾರಂಟಿ ಯೋಜನೆಗಳಿಗೆ ಮಾನ್ಯತೆ ನೀಡಿರುವುದು ಕಂಡುಬಂದಂತಿಲ್ಲ. \ No newline at end of file diff --git a/eesanje/url_46_298_9.txt b/eesanje/url_46_298_9.txt new file mode 100644 index 0000000000000000000000000000000000000000..1ad92379d7615192925447a48034b8c0293904fa --- /dev/null +++ b/eesanje/url_46_298_9.txt @@ -0,0 +1,5 @@ +ಮೋದಿ ನಾಯಕತ್ವದ ಪರ ಜನರ ತೀರ್ಪು ನೀಡಿದ್ದಾರೆ : ಎಚ್‍ಡಿಕೆ +ಬೆಂಗಳೂರು,ಡಿ.3- ಪಂಚರಾಜ್ಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ನಾಯಕತ್ವದ ಪರವಾಗಿ ಜನ ತೀರ್ಮಾನ ಕೈಗೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ನಡೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ ಎಂದ ಅವರು, ಮತದಾನೋತ್ತರ ಸಮೀಕ್ಷೆಗಳಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ, ಮತ್ತೆರಡು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದಿತ್ತು. +ಆದರೆ ಮತ ಎಣಿಕೆಯ ನಂತರದ ಫಲಿತಾಂಶದಲ್ಲಿ ನರೇಂದ್ರಮೋದಿ ಅವರ ಪರವಾಗಿ ಜನರ ತೀರ್ಮಾನ ಇರುವುದು ಕಂಡುಬರುತ್ತಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲು ನಾನಾ ಕಾರಣಗಳಿವೆ. ಮುನ್ನಡೆಗೆ ಕಾಂಗ್ರೆಸ್‍ನ ಶಕ್ತಿ ಕಾರಣವಲ್ಲ. ಯಾವ ಕಾರಣಕ್ಕೆ ಕಾಂಗ್ರೆಸ್ ಅಲ್ಲಿ ಮೇಲೆ ಬಂದಿದೆ ಎಂಬುದು ಗೊತ್ತಿದೆ. ಐದಕ್ಕೆ ಐದೂ ರಾಜ್ಯಗಳನ್ನು ಗೆಲ್ಲುತ್ತೇವೆ ಎಂದು ಬೀಗುತ್ತಿದ್ದ ಕಾಂಗ್ರೆಸ್‍ನವರಿಗೆ ಜನರು ಸೂಕ್ತ ಉತ್ತರ ನೀಡಿದ್ದಾರೆ. +ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ +ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಹಲವು ಕಾರಣಗಳಿವೆ. ಇಲ್ಲಿಂದ ರವಾನೆಯಾದ ಆರ್ಥಿಕ ತೈಲಿಗಳು, ಚೀಲಗಳು ಕಾರಣ ಇರಬಹುದು. ಕಾಂಗ್ರೆಸ್‍ನವರ ಸಮಾಜಸೇವೆ ಅಭಿವೃದ್ಧಿಗೆ ಪೂರಕವಾದ ಜನಸೇವೆ ನೋಡಿ ತೆಲಂಗಾಣದ ಜನರು ಈ ತೀರ್ಪು ನೀಡಿಲ್ಲ. ಮುಂಬರುವ ಲೋಕಸಭೆ ಚುನಾವಣೆ ನಂತರ ಏನೇನಾಗುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರು. \ No newline at end of file diff --git a/eesanje/url_46_299_1.txt b/eesanje/url_46_299_1.txt new file mode 100644 index 0000000000000000000000000000000000000000..0b6bc980776728ef5bf0ef77175dea506e13ea37 --- /dev/null +++ b/eesanje/url_46_299_1.txt @@ -0,0 +1,6 @@ +ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಅಂತಿಮ : ನಾಳೆಯೊಳಗೆ ಹೊರಬೀಳಲಿದೆ ಪಟ್ಟಿ +ಬೆಂಗಳೂರು, ಡಿ. 2- ನಿಗಮ ಮಂಡಳಿಗಳಿಗೆ, ಅಧ್ಯಕ್ಷರ ನೇಮಕಾತಿಗೆ ಅಂತಿಮ ಹಂತದ ಸಿದ್ಧತೆಗಳು ನಡೆದಿದ್ದು, ಇಂದು ಸಂಜೆ ಅಥವಾ ನಾಳೆಯೊಳಗೆ ನೇಮಕಾತಿಯ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ನಿಗಮಮಂಡಳಿಗಳ ಜೊತೆಗೆ ಇನ್ನೂ ನಾಲ್ಕೈದು ರಾಜಕೀಯ ಕಾರ್ಯದರ್ಶಿಗಳನ್ನು ನೇಮಿಸುವ ನಿರೀಕ್ಷೆಯಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆ.ಗೋವಿಂದರಾಜು, ನಸೀರ್ ಅಹಮ್ಮದ್ ಅವರನ್ನು ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. +ಮುಖ್ಯಮಂತ್ರಿಗಳಿಗೆ ಇನ್ನೂ ಇಬ್ಬರು ಶಾಸಕರನ್ನು ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸುವ ಸಾಧ್ಯತೆಯಿದೆ. ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮೂರು ಮಂದಿ ರಾಜಕೀಯ ಕಾರ್ಯದರ್ಶಿಗಳನ್ನು ನಿಯೋಜಿಸುವ ಚರ್ಚೆಗಳಾಗಿವೆ ಎಂದು ಮೂಲಗಳು ತಿಳಿಸಿವೆ. +ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ +ಕಳೆದ ವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಡುವೆ ನಡೆದ ಸಭೆಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿಯ ಕುರಿತು ಚರ್ಚೆ ನಡೆಸಲಾಗಿದೆ. +ಸಂಭವನೀಯ ಪಟ್ಟಿಯನ್ನು ದೆಹಲಿಗೆ ಕಳುಹಿಸಲಾಗಿದೆ. ಹೈಕಮಾಂಡ್ ನಾಯಕರು ಪಟ್ಟಿಯನ್ನು ಪರಿಶೀಲಿಸಿದ್ದು, ಬಹುತೇಕ ಅಂಕಿತ ನೀಡುವ ನಿರೀಕ್ಷೆಯಿದ್ದು, ಇಂದು ಅಥವಾ ನಾಳೆಯೊಳಗೆ ಅಧಿಕೃತವಾಗಿ ಪಟ್ಟಿ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ. ಬಳಿಕ ನೇಮಕಾತಿ ಪ್ರಕ್ರಿಯೆಗಳು ನಡೆಯಲಿವೆ. ವಿಧಾನಮಂಡಲ ಅಧಿವೇಶನದ ಮುನ್ನ ನೇಮಕಾತಿಯಾಗುವುದಾದರೆ ಅದು ಸಾಧ್ಯ. ಇಲ್ಲವಾದರೆ ಸಂಕ್ರಾಂತಿಯ ಬಳಿಕವೇ ನಿಗಮ ಮಂಡಳಿಗಳಿಗೆ ಮೋಕ್ಷ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_299_10.txt b/eesanje/url_46_299_10.txt new file mode 100644 index 0000000000000000000000000000000000000000..0d08312dbcc864a925f2f2c9ec1a995d814c3d8e --- /dev/null +++ b/eesanje/url_46_299_10.txt @@ -0,0 +1,14 @@ +ಆಡಳಿತ-ಪ್ರತಿಪಕ್ಷಗಳ ವಾಕ್ಸಮರಕ್ಕೆ ಸುವರ್ಣಸೌಧ ಸಜ್ಜು +ಬೆಂಗಳೂರು, ಡಿ. 2- ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಕಾಸ ಸೌಧದದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷದ ಮೇಲೆ ಮುಗಿಬೀಳಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದ್ದರೆ ಇನ್ನು ಸದನದಲ್ಲೇ ಪ್ರತಿಪಕ್ಷಗಳನ್ನು ಉತ್ತರದ ಮೂಲಕ ಕಟ್ಟಿಹಾಕಲು ಕಾಂಗ್ರೆಸ್ ಕೂಡ ಸಿದ್ಧತೆ ಮಾಡಿಕೊಂಡಿದೆ. ಚಳಿಗಾಲದಲ್ಲೂ ಸರ್ಕಾರವನ್ನು ಚಳಿ ಬಿಡಿಸಲು ಪ್ರತಿಪಕ್ಷಗಳು ಸಜ್ಜಾಗಿದ್ದರೆ ಸದನದಲ್ಲಿ ಪ್ರತ್ಯುತ್ತರ ನೀಡಲು ಸರ್ಕಾರ ಸಜ್ಜಾಗಿದೆ. +ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿಯಾದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿರುವುದರಿಂದ ಸರ್ಕಾರದ ವಿರುದ್ಧ ಸದನದಲ್ಲಿ ಉಭಯ ಪಕ್ಷಗಳು ಜಂಟಿ ಹೋರಾಟ ನಡೆಸಲು ಮುಂದಾಗಿವೆ. +ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಡೆದ ಎರಡು ಅಧಿವೇಶನಗಳಿಗೆ ಪ್ರತಿಪಕ್ಷದ ನಾಯಕರು ಇರಲಿಲ್ಲ. ಇದನ್ನೇ ಅಸ್ತ್ರ ಮಾಡಿಕೊಂಡಿದ್ದ ಸರ್ಕಾರ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗದವರು ನಮಗೇನು ಹೇಳುತ್ತೀರಿ ಎಂದು ತಿರುಗೇಟು ನೀಡುತ್ತಿದ್ದರು. +ಕಿಂಗ್ ಚಾಲ್ರ್ಸ್ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ; ಮೋದಿ +ಇದೀಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಸತತ ಏಳು ಬಾರಿ ಗೆದ್ದಿರುವ ಆರ್.ಅಶೋಕ್ ಅವರು ನೇಮಕವಾಗಿದ್ದಾರೆ. ಮೊದಲ ಬಾರಿಗೆ ಅವರು ಪ್ರತಿಪಕ್ಷದ ನಾಯಕರಾಗಿ ಕಲಾಪದಲ್ಲಿ ಭಾಗಿಯಾಗುತ್ತಿರುವುದರಿಂದ ಸರ್ಕಾರದ ವಿರುದ್ಧ ಚಾಟಿ ಬೀಸುವ ಮುನ್ಸೂಚನೆಯನ್ನು ಕೊಟ್ಟಿದ್ದಾರೆ. ವಿಧಾನಪರಿಷತ್‍ಗೆ ನಾಳೆ ಸಂಜೆಯೊಳಗೆ ಪ್ರತಿಪಕ್ಷದ ನಾಯಕ, ಉಪನಾಯಕ, ಮುಖ್ಯ ಸಚೇತಕ ನೇಮಕವಾಗುವ ಸಾಧ್ಯತೆಯಿದೆ. +ಇನ್ನು ಈ ಬಾರಿಯ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳಿಗೆ ಸಾಕಷ್ಟು ಅಸ್ತ್ರಗಳು ಸಿಕ್ಕಿವೆ. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. +ರಾಜ್ಯಸರ್ಕಾರ ಬರನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ದೂರುತ್ತಲೇ ಬಂದಿವೆ. ಸದನದಲ್ಲಿ ಇದನ್ನು ಚರ್ಚಿಸಲು ಆರ್.ಅಶೋಕ್ ಅವರು ಮುಂದಾಗಿದ್ದಾರೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ರೈತರಿಗೆ ನಿರಂತರವಾಗಿ ಆರು ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡದಿರುವುದು ಸೇರಿದಂತೆ ಕೆಲವು ಪ್ರಚಲಿತ ಸಮಸ್ಯೆಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜಾಗಿವೆ. +ಸದನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಶುಕ್ರವಾರವಷ್ಟೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವು ರಹಸ್ಯ ಸಭೆ ನಡೆಸಿದ್ದರು. ಸದನದಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡದೇ ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಧ್ವನಿಯಾಗಬೇಕೆಂಬ ತೀರ್ಮಾನಕ್ಕೆ ಪ್ರತಿಪಕ್ಷಗಳು ಬಂದಿವೆ. +ಎರಡು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಗಾಲದಿಂದ ತತ್ತರಿಸಿರುವ ರೈತರಿಗೆ ಸರ್ಕಾರದ ವತಿಯಿಂದ ಕನಿಷ್ಠ 1 ಸಾವಿರದಿಂದ ಗರಿಷ್ಠ 2 ಸಾವಿರ ಹಣ ನೀಡುವುದಾಗಿ ಘೋಷಣೆ ಮಾಡಿದ್ದರು. ಇದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಸಂಕಷ್ಟದಲ್ಲಿರುವ ರೈತರ ಪ್ರತಿ ಹೆಕ್ಟೇರ್‍ಗೆ 25 ಸಾವಿರ ರೂ. ಹಣವನ್ನು ಪರಿಹಾರ ಧನ ಬಿಡುಗಡೆ ಮಾಡಬೇಕೆಂದು ಹೋರಾಟ ನಡೆಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ. +ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ +ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸಿ ರಾಜ್ಯಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಬೇಡ. ಮೊದಲು ರಾಜ್ಯಸರ್ಕಾರ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲಿ. ಕೇಂದ್ರಕ್ಕೆ ಆರ್ಥಿಕ ನೆರವು ನೀಡಲು ನಾವು ಕೂಡ ಮನವಿ ಮಾಡುತ್ತೇವೆ ಎಂದು ಉತ್ತರಿಸಲು ಸಿದ್ಧರಾಗಿದ್ದಾರೆ.ಸದನದಲ್ಲಿ ಇತ್ತೀಚೆಗೆ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವರಾದ ಕೃಷ್ಣಭೈರೇಗೌಡ ಮತ್ತು ಪ್ರಿಯಾಂಕ ಖರ್ಗೆ ವಿರುದ್ಧ ಮುಖ್ಯಮಂತ್ರಿಗೆ ಬರೆದ ಪತ್ರದ ಬಗ್ಗೆಯೂ ಪ್ರಸ್ತಾಪಿಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ. +ಜಮೀರ್ ವಿರುದ್ಧ ಹಕ್ಕುಚ್ಯುತಿ:ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ವಿಧಾನಸಭೆಯ ಸ್ಪೀಕರ್ ಸ್ಥಾನಮಾನದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಪ್ರತಿಪಕ್ಷಗಳು ತೀರ್ಮಾನಿಸಿವೆ. ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿರುವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿದ್ದು, ಸದನದಲ್ಲಿ ಹೋರಾಟಕ್ಕೂ ಮುಂದಾಗಿವೆ. +ಒಟ್ಟಿನಲ್ಲಿ 2 ವಾರಗಳ ಕಾಲ ನಡೆಯಲಿರುವ ಈ ಚಳಿಗಾಲದ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತಾರಕಕ್ಕೇರಿದ ಚರ್ಚೆ ನಡೆಯಲಿದೆ. \ No newline at end of file diff --git a/eesanje/url_46_299_11.txt b/eesanje/url_46_299_11.txt new file mode 100644 index 0000000000000000000000000000000000000000..96a5b6a2748896b44323c70512faf5cff35c1a2e --- /dev/null +++ b/eesanje/url_46_299_11.txt @@ -0,0 +1,6 @@ +ಅಶೋಕ್-ವಿಜಯೇಂದ್ರ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬ +ಬೆಂಗಳೂರು,ಡಿ.1- ಐದು ರಾಜ್ಯಗಳ ಚುನಾವಣೆಯ ಫಲಿತಾಂಶಗಳು ಡಿ.3 ರಂದು (ಭಾನುವಾರ) ಪ್ರಕಟವಾಗಲಿದ್ದು, ಹೊಸದಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಬಿಜೆಪಿ ಹೈಕಮಾಂಡ್ ಭೇಟಿ ಮತ್ತಷ್ಟು ವಿಳಂಬವಾಗಲಿದೆ. +ಡಿ.4 ರಂದು ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ಈ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಯೋಜಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್ ನಾಯಕರು ಪ್ರಚಾರದಲ್ಲಿ ನಿರತರಾಗಿದ್ದರು ಮತ್ತು ಈಗ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. +ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿಲ್ಲ : ಶ್ರೀನಿವಾಸನ್ +ಆದ್ದರಿಂದ ರಾಜ್ಯದ ಇಬ್ಬರು ನಾಯಕರನ್ನು ಭೇಟಿ ಮಾಡಲು ಲಭ್ಯವಿಲ್ಲ ಎಂದು ಬಲ್ಲ ಮೂಲಗಳು ತಿಳಿಸಿವೆ.ಇದೇ ವೇಳೆ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ವಿ.ಸೋಮಣ್ಣ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಸಮಾನ ಮನಸ್ಕ ಮುಖಂಡರು ಡಿ.7ರಿಂದ 9ರ ನಡುವೆ ಯಾವಾಗ ಬೇಕಾದರೂ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ. +ಇದೇ ವೇಳೆ, ವೀರಶೈವ-ಲಿಂಗಾಯತ ಮುಖಂಡ ಸೋಮಣ್ಣ, ಅದೇ ಸಮುದಾಯದ ವಿಜಯೇಂದ್ರ ಅವರನ್ನು ದೂರವಿಟ್ಟು ಗುರುಭವನ ಉದ್ಘಾಟನೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ರ್ಯಾಲಿ ನಡೆಸುತ್ತಿದ್ದಾರೆ.ಹೈಕಮಾಂಡ್ ನಾಯಕರು ಭಿನ್ನಮತೀಯರನ್ನು ಭೇಟಿಯಾದ ನಂತರವೇ ವಿಜಯೇಂದ್ರ ಮತ್ತು ಅಶೋಕ ಅವರನ್ನು ಭೇಟಿ ಮಾಡುತ್ತಾರೆಯೇ ಎಂದು ನೋಡಬೇಕು. ಹೀಗಾದರೆ, ಇಬ್ಬರೂ ಡಿ. 9 ರ ನಂತರವಷ್ಟೇ ದೆಹಲಿಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_299_12.txt b/eesanje/url_46_299_12.txt new file mode 100644 index 0000000000000000000000000000000000000000..4ff813f65b0305c31053901babb3b23882ef508e --- /dev/null +++ b/eesanje/url_46_299_12.txt @@ -0,0 +1,7 @@ +ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ +ಬೆಂಗಳೂರು,ಡಿ.1- ನಗರದ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಹಾಕಿರುವುದನ್ನು ನಿರ್ಲಕ್ಷಿಸದೆ ಗಂಭೀರವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಟತ್ತು ಕಡೆ ಹುಸಿ ಬಾಂಬ್ ಬೆದರಿಕೆ ಹಾಕಿ, ಒಂದು ಕಡೆ ಟಾರ್ಗೆಟ್ ಮಾಡುವ ಸಾಧ್ಯತೆ ಇರುವುದರಿಂದ ಇಂಥ ಬೆದರಿಕೆಯನ್ನು ನಿರ್ಲಕ್ಷಿಸಲಾಗುವುದಿಲ್ಲ ಎಂದರು. +ನಾನು ಮನೆಯಲ್ಲಿ ಬೆಳಗ್ಗೆ ವ್ಯಾಯಾಮ ಮಾಡುತ್ತಿದ್ದಾಗ ಸುದ್ದಿ ತಿಳಿದು ಗಾಬರಿಯಾದೆ. ತಕ್ಷಣ ಪರಿಚಯಸ್ಥರು ಮತ್ತು ಇತರೆ ಶಾಲೆಗಳಿಗೆ ಬೆದರಿಕೆ ಬಂದಿರುವ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ಇಮೇಲ್ ಮೂಲಕ ಮಾಹಿತಿ ಬಂದಿರುವುದು ಗೊತ್ತಾಗಿದೆ ಎಂದು ಹೇಳಿದರು. +ಇದು ಮೇಲ್ನೋಟಕ್ಕೆ ಹುಸಿ ಬೆದರಿಕೆಯಾಗಿದ್ದರೂ ನಾವು ನಿರ್ಲಕ್ಷ್ಯ ಮಾಡಲು ಆಗುವುದಿಲ್ಲ. ಒಮ್ಮೆ ಗಂಭೀರ ಪ್ರಯತ್ನವನ್ನು ಮಾಡುತ್ತಾರೆ. ಪೆÇಲೀಸರು ಎಲ್ಲಾ ಪರಿಶೀಲನೆ ನಡೆಸಿದ್ದು, ಬೆದರಿಕೆ ಹಾಕಿದವರನ್ನು ಪತ್ತೆಹಚ್ಚುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್ +ತಕ್ಷಣ ಎಲ್ಲಾ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಪರಿಶೀಲನೆ ನಡೆಸುತ್ತಿದ್ದು, ಈವರೆಗೂ ಯಾವುದೇ ರೀತಿಯ ಸ್ಪೋಟಕ ವಸ್ತು ಪತ್ತೆಯಾಗಿಲ್ಲ ಎಂದು ಹೇಳಿದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ರೀತಿಯ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. +ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ. ಕೆಲ ಕಿಡಿಕೇಡಿಗಳಿಂದ ಇಂತಹ ಕೃತ್ಯಗಳು ನಡೆಯುತ್ತವೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಬೆಂಗಳೂರು ಹಬ್ಬದ ವೇಳೆ ಬೆದರಿಕೆ ಹಾಕಲಾಗಿದ್ದು, ಹಬ್ಬ ಮಾಡುವವರು ಮಾಡಬೇಕು, ಆದರೂ ಈ ವಿಚಾರವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಮುನ್ನಚ್ಚರಿಕೆ ವಹಿಸಬೇಕು ಎಂದು ಹೇಳಿದರು. \ No newline at end of file diff --git a/eesanje/url_46_299_2.txt b/eesanje/url_46_299_2.txt new file mode 100644 index 0000000000000000000000000000000000000000..dea8e5ceef30dc9e69f64060a730fd03a729d72a --- /dev/null +++ b/eesanje/url_46_299_2.txt @@ -0,0 +1,10 @@ +ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ : ತೀವ್ರಗೊಂಡ ತನಿಖೆ +ಬೆಂಗಳೂರು,ಡಿ.2- ನಗರ ಹಾಗೂ ಹೊರವಲಯದ 70ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಕಳುಹಿಸಿರುವ ದುಷ್ಕರ್ಮಿ ಬಂಧನಕ್ಕಾಗಿ ಸಿಸಿಬಿ ಸೈಬರ್ ಕ್ರೈಂ ಅಧಿಕಾರಿ ಮತ್ತು ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. +ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್‍ಕುಮಾರ್ ಅವರ ನೇತೃತ್ವದಲ್ಲಿ ಸಿಸಿಬಿ ಪೊಲೀಸರ ತಂಡ ಹಲವು ಆಯಾಮಗಳಲ್ಲಿ ತನಿಖೆ ಕೈಗೊಂಡಿದೆ. ಈ ಹಿಂದೆ ಬಂದಿದ್ದ ಹುಸಿ ಬಾಂಬ್ ಇ-ಮೇಲ್‍ಗಳನ್ನು ಆಧರಿಸಿ ಈ ತಂಡ ತನಿಖೆ ಕೈಗೊಂಡಿದ್ದು, ಪದೇ ಪದೇ ಈ ರೀತಿ ನಡೆಯುತ್ತಿರುವ ಕೃತ್ಯದ ಹಿಂದಿರುವ ದುಷ್ಕರ್ಮಿಗಳಾರು?; ಇದರ ಹಿಂದಿನ ಅಸಲಿ ಕಾರಣವೇನು? ಪ್ರತಿಷ್ಠಿತ ಖಾಸಗಿ ಶಾಲೆಗಳನ್ನೇ ಟಾರ್ಗೆಟ್ ಮಾಡಿ ಇಮೇಲ್ ಕಳುಹಿಸುತ್ತಿರುವ ಇದರ ಉದ್ದೇಶವಾದರೂ ಏನು? ಈ ಕೃತ್ಯಕ್ಕೆ ಇ-ಮೇಲ್ ಬಳಸುತ್ತಿರುವ ದುಷ್ಕರ್ಮಿ ಯಾರೆಂಬ ಬಗ್ಗೆ ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ. +ದುಷ್ಕರ್ಮಿಯು ವರ್ಚುಯಲ್ ಪ್ರೈವೇಟ್ ನೆಟ್‍ವರ್ಕ್ ಬಳಸಿ ಶಾಲೆಗಳಿಗೆ ಇಮೇಲ್ ಸಂದೇಶಗಳನ್ನು ಕಳುಹಿಸಿದ್ದಾನೆ. ಹೀಗಾಗಿ ಪೊಲೀಸರು ದುಷ್ಕರ್ಮಿ ಬಳಸಿರುವ ಕಂಪ್ಯೂಟರ್, ಸೈಬರ್ ಕೆಫೆ ಇಲ್ಲವೇ ಲ್ಯಾಪ್‍ಟಾಪ್ ಬಗ್ಗೆ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. +ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ +ಪೊಲೀಸ್ ಮೂಲಗಳ ಪ್ರಕಾರ ದುಷ್ಕರ್ಮಿಯು ಖಾಸಗಿ ಕಂಪನಿಯ ವರ್ಚುಯಲ್ ಪ್ರೈವೇಟ್ ನೆಟ್‍ವರ್ಕ್ ಬಳಸಿ ಇಮೇಲ್ ಮಾಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಕಂಪನಿಯ ಯಾವ ಸರ್ವರ್ ಬಳಸಲಾಗಿದೆ, ಬಳಸಿದ ಐಡಿ, ಐಪಿ ಯಾವುದು ಎಂಬುದರ ಬಗ್ಗೆಯೂ ಮಾಹಿತಿ ನೀಡುವಂತೆ ವಿದೇಶದ ಸಿರ್ಟಸ್ ಎಂಬ ಕಂಪನಿಗೆ ಪೊಲೀಸ್ ಅಧಿಕಾರಿಗಳು ಪತ್ರ ಬರೆದಿದ್ದಾರೆ. +ನಿನ್ನೆ ಬೆಳಗ್ಗೆ ಶಾಲೆಗೆ ಬಂದ ಆಡಳಿತ ಮಂಡಳಿ ಸಿಬ್ಬಂದಿಗಳು ಇಮೇಲ್ ಪರಿಶೀಲಿಸಿದಾಗ ಅದರಲ್ಲಿ ನಿಮ್ಮ ಶಾಲೆಗೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ನೋಡಿ ಆತಂಕಗೊಂಡು ಪೊಲೀಸರಿಗೆ ವಿಷಯ ತಿಳಿಸುತ್ತಿದ್ದಂತೆ ಇದೇ ರೀತಿ 70ಕ್ಕೂ ಹೆಚ್ಚು ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಸಂದೇಶ ಬಂದಿರುವುದು ಗಮನಿಸಿ ಪೋಷಕರು ಆತಂಕಗೊಂಡಿದ್ದರು. +ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಶಾಲೆಗಳ ಬಳಿ ಪೋಷಕರು ದೌಡಾಯಿಸಿ ತಮ್ಮ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕರೆದುಕೊಂಡು ಹೋದ ದೃಶ್ಯ ಕಂಡುಬಂತು. ಬಾಂಬ್ ಇಡಲಾಗಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ, ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಶಾಲೆಯ ಕೊಠಡಿಗಳ ಒಳಗೆ ಹಾಗೂ ಶೌಚಾಲಯ ಸೇರಿದಂತೆ ಕಾಂಪೌಂಡ್ ಸುತ್ತ ತಪಾಸಣೆ ನಡೆಸಿದರಾದರೂ ಯಾವುದೇ ಬಾಂಬ್ ಪತ್ತೆಯಾಗಿಲ್ಲ. +ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ +ಇದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ತಿಳಿದು ಪೋಷಕರು ನಿಟ್ಟುಸಿರು ಬಿಟ್ಟರು. ಎಂದಿನಂತೆ ಇಂದು ಎಲ್ಲಾ ಶಾಲೆಗಳಲ್ಲಿ ತರಗತಿಗಳು ನಡೆದವು. \ No newline at end of file diff --git a/eesanje/url_46_299_3.txt b/eesanje/url_46_299_3.txt new file mode 100644 index 0000000000000000000000000000000000000000..56f93416ff0070b23b6875a6af26028709d966d5 --- /dev/null +++ b/eesanje/url_46_299_3.txt @@ -0,0 +1,8 @@ +ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಜಾರಿ : ಗುಂಡೂರಾವ್ +ಬೆಂಗಳೂರು, ಡಿ. 2- ಭ್ರೂಣ ಹತ್ಯೆ ತಡೆಗೆ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಡ್ಯ ಹಾಗೂ ಮಂಗಳೂರಿನಲ್ಲಿ ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣಹತ್ಯೆ ಅತ್ಯಂತ ಹೇಯ ಮತ್ತು ಖಂಡನೀಯ ಕೃತ್ಯ. ಇದು ಸಮಾಜದ ಮನಸ್ಥಿತಿ, ಸಾಮಾಜಿಕ ಪಿಡುಗು ಕೂಡ ಆಗಿದೆ. ಈಗಾಗಲೇ ಇರುವ ಕಾನೂನುಗಳನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾನೂನು ಬದಲಾವಣೆಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು. +ಇಂತಹ ಕೃತ್ಯಗಳನ್ನು ತಡೆಯಲು ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಗುಪ್ತಚರ ಮಾಹಿತಿಯನ್ನು ಕಲೆ ಹಾಕಬೇಕು. ಅದರ ಆಧಾರದ ಮೇಲೆ ಪಿಡುಗನ್ನು ತಡೆಯಬೇಕಿದೆ ಎಂದು ಹೇಳಿದರು. +ವೈದ್ಯರಾಗಿದ್ದ ಸತೀಶ್ ಆತ್ಮಹತ್ಯೆ ಕುರಿತಂತೆ ತಾವು ಪ್ರತಿಕ್ರಿಯಿಸುವುದಿಲ್ಲ. ಅವರು ಪಿರಿಯಾಪಟ್ಟಣದಲ್ಲಿ ಆಯುರ್ವೇದ ವೈದ್ಯರಾಗಿದ್ದರು. ಮಂಡ್ಯದಲ್ಲಿ ಆಲೋಪತಿ ಕ್ಲಿನಿಕ್ ನಡೆಸುತ್ತಿದ್ದರು. ಭ್ರೂಣಹತ್ಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದು ಸಾರ್ವಜನಿಕರೇ ಹೇಳಿಕೆ ನೀಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. +ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ +ಡಯಾಲಿಸಿಸ್ ಕೇಂದ್ರಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ 20 ತಿಂಗಳಿನಿಂದಲೂ ವೇತನ ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ. ಗುತ್ತಿಗೆ ಸಂಸ್ಥೆಗಳೊಂದಿಗೆ ಚರ್ಚೆ ನಡೆಸಿ ವೇತನ ಪಾವತಿಸಲು ಒತ್ತಡ ಹೇರಲಾಗುತ್ತಿದೆ. ಇಎಸ್‍ಐ, ಪಿಎಫ್ ಸೌಲಭ್ಯದ ಹಣವನ್ನು ಸರ್ಕಾರದಿಂದಲೇ ಪಾವತಿಸಬೇಕಾದರೆ ಗುತ್ತಿಗೆ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಬೇಕಿದೆ. ಅದಕ್ಕೆ ಈಗಾಗಲೇ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. +ಡಯಾಲಿಸಿಸ್ ತೊಂದರೆಗಳ ನಿರ್ವಹಣೆಗೆ ಹೊಸದಾಗಿ ಟೆಂಡರ್ ಕರೆಯಲಾಗಿದೆ. ಪಿಪಿಪಿ ಮಾದರಿಯಲ್ಲಿ ಈ ಸೇವೆಯನ್ನು ಜಾರಿಗೆ ತರಲಾಗಿದೆ. ಬಹಳಷ್ಟು ಕಡೆ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿವೆ. ಅದನ್ನು ಬದಲಾವಣೆ ಮಾಡಲಾಗುತ್ತಿಲ್ಲ. ಸರ್ಕಾರ ಎಲ್ಲಾ ರೀತಿಯ ಸಹಕಾರ ಕೊಡುತ್ತಿದೆ. ಯಂತ್ರಗಳ ಬದಲಾವಣೆ ಹಾಗೂ ಸಿಬ್ಬಂದಿಗಳ ವರ್ಗಾವಣೆ ಗುತ್ತಿಗೆ ಪಡೆದಿರುವ ಸಂಸ್ಥೆಗಳ ಹೊಣೆಗಾರಿಕೆ. ಅವರು ಅದನ್ನು ಮಾಡದೇ ಇದ್ದರೆ ಏನು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. +ಹೊಸದಾಗಿ ಟೆಂಡರ್ ಕರೆಯಲಾಗಿದ್ದು, ಡಯಾಲಿಸಿಸ್ ಯಂತ್ರಗಳನ್ನು ಬದಲಾವಣೆ ಮಾಡಲಾಗುವುದು. ಒಂದು ವೇಳೆ ಆಗಲೂ ಸರಿ ಹೋಗದೇ ಇದ್ದರೆ ಏನು ಮಾಡಬೇಕು ಎಂಬುದನ್ನು ಪರಿಶೀಲನೆ ನಡೆಸಲಾಗುವುದು. ಸಿಬ್ಬಂದಿಗಳ ಹಿತರಕ್ಷಣೆಗೆ ಸರ್ಕಾರ ಆದ್ಯತೆ ನೀಡುತ್ತಿದೆ, ಬೇಡಿಕೆಗಳನ್ನು ಈಡೇರಿಸಲು ಚರ್ಚೆ ನಡೆಯುತ್ತಿದೆ. ಒಂದು ವೇಳೆ ಸಿಬ್ಬಂದಿಗಳು ಮುಷ್ಕರ ನಿಲ್ಲಿಸಿ ಕರ್ತವ್ಯಕ್ಕೆ ಮರಳದಿದ್ದರೆ ಜಿಲ್ಲಾ ಆರೋಗ್ಯಧಿಕಾರಿಗಳೇ ಲಭ್ಯವಿರುವ ಸಿಬ್ಬಂದಿಗಳನ್ನು ಬಳಸಿಕೊಂಡು ಡಯಾಲಿಸಿಸ್ ಕೇಂದ್ರಗಳನ್ನು ನಿರ್ವಹಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_299_4.txt b/eesanje/url_46_299_4.txt new file mode 100644 index 0000000000000000000000000000000000000000..baa1997fdba02f98727868782f0d49dac8817994 --- /dev/null +++ b/eesanje/url_46_299_4.txt @@ -0,0 +1,9 @@ +ಹೆಣ್ಣು ಭ್ರೂಣ ಪತ್ತೆ-ಹತ್ಯೆ ಪ್ರಕರಣದಲ್ಲಿ ನರ್ಸ್ ಬಂಧನ +ಬೆಂಗಳೂರು,ಡಿ.2- ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಬೈಯಪ್ಪನ ಹಳ್ಳಿ ಠಾಣೆ ಪೊಲೀಸರು ನರ್ಸ್ ಮಂಜುಳ ಎಂಬಾಕೆಯನ್ನು ಬಂಧಿಸಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಇದುವರೆಗೂ ಬಂಧಿತರಾಗಿರುವ ಸಂಖ್ಯೆ 10ಕ್ಕೆ ಏರಿದೆ. +ಚಾಮರಾಜನಗರದ ನಿವಾಸಿ, ನರ್ಸ್ ಮಂಜುಳಾ ಈ ಹಿಂದೆ ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ಅಲ್ಲಿ ಕೆಲಸವನ್ನು ಬಿಟ್ಟು ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇರಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಇದೀಗ ಮಂಜುಳಾಳನ್ನು ಬಲೆಗೆ ಬೀಳಿಸಿಕೊಂಡು ವಿಚಾರಣೆಗೊಳಪಡಿಸಿದ್ದಾರೆ. +ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ : ತನಿಖೆ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..? +ಮಾತ್ರೆ ಕೊಟ್ಟು ಭ್ರೂಣ ಹತ್ಯೆ:ಭ್ರೂಣವನ್ನು ಹೇಗೆ ಹತ್ಯೆ ಮಾಡುತ್ತಿದ್ದರು ಎಂಬ ಬಗ್ಗೆ ಆರೋಪಿಗಳು ಮಾಹಿತಿ ನೀಡಿದ್ದನ್ನು ತಿಳಿದು ಪೊಲೀಸರೇ ಒಂದು ಕ್ಷಣ ಶಾಕ್ ಆಗಿದ್ದಾರೆ. ಆರು ತಿಂಗಳ ಗರ್ಭಿಣಿಗೆ ಮಾತ್ರೆಯನ್ನು ಕೊಟ್ಟು ಬಳಿಕ ಡೆಲಿವರಿ ಮಾದರಿಯಲ್ಲಿ ಭ್ರೂಣವನ್ನು ಆರೋಪಿಗಳು ಹೊರತೆಗೆಯುತ್ತಿದ್ದರು ಎಂಬುದು ಗೊತ್ತಾಗಿದೆ. +ಸಾಮಾನ್ಯವಾಗಿ 14ರಿಂದ 18 ವಾರಗಳ ಭ್ರೂಣದಲ್ಲಿ ಲಿಂಗ ಪತ್ತೆಯಾಗುತ್ತದೆ. ಸ್ಕ್ಯಾನಿಂಗ್ ವೇಳೆ ಲಿಂಗ ಪತ್ತೆಯಾದ ನಂತರ ಗರ್ಭಿಣಿಗೆ ರಕ್ತ ಪರೀಕ್ಷೆ ಮಾಡಿ ನಂತರ ಭ್ರೂಣವನ್ನು ಹೊರತೆಗೆದು ಹತ್ಯೆ ಮಾಡಿರುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಗರ್ಭಿಣಿಗೆ ರಕ್ತ ಪರೀಕ್ಷೆ ಮಾಡಿದ ನಂತರ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಮಾಡಲು ಆರೋಪಿಗಳಾದ ಮಂಜುಳಾ ಹಾಗೂ ಚಂದನ್ ಕೆಲಸ ಆರಂಭಿಸುತ್ತಿದ್ದರು. +ಗರ್ಭಿಣಿ ಮಾತ್ರೆ ತೆಗೆದುಕೊಂಡ ಕೆಲ ಸಮಯದ ನಂತರ ಆಕೆಗೆ ರಕ್ತಸ್ರಾವವಾಗಿ ಭ್ರೂಣ ಹೊರಬರುತ್ತಿತ್ತು. ಆ ವೇಳೆ ಈ ಇಬ್ಬರು ಆರೋಪಿಗಳು ಸೇರಿಕೊಂಡು ಡೆಲಿವರಿ ಮಾಡಿಸಿದ ರೀತಿಯಲ್ಲಿ ಭ್ರೂಣ ಹೊರತೆಗೆಯುತ್ತಿದ್ದರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಭ್ರೂಣ ಹತ್ಯೆ ಸಂಬಂಧ ಅಕ್ಟೋಬರ್‍ನಲ್ಲಿ ಬೈಯಪ್ಪನಹಳ್ಳಿ ಠಾಣೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪ್ರಕರಣ ದಾಖಲಿಸಿದ್ದರು. +ತನಿಖೆಯ ವೇಳೆ ಇದರ ಹಿಂದೆ ಬೃಹತ್ ಜಾಲವೇ ಇರುವುದು ಪತ್ತೆಯಾಗಿತ್ತು. ಅದರಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಚುರುಕುಗೊಳಿಸಿ ಒಬ್ಬೊಬ್ಬರಂತೆ ಇದುವರೆಗೂ ಹತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಎರಡು ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. +ಇದೀಗ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವಹಿಸಿದೆ. ಸದ್ಯದಲ್ಲೇ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಿದ್ದಾರೆ. \ No newline at end of file diff --git a/eesanje/url_46_299_5.txt b/eesanje/url_46_299_5.txt new file mode 100644 index 0000000000000000000000000000000000000000..7ebd227a8e1968d39c7885d26da80cb922d49086 --- /dev/null +++ b/eesanje/url_46_299_5.txt @@ -0,0 +1,5 @@ +ಹೈದ್ರಾಬಾದ್‍ನತ್ತ ಡಿಸಿಎಂ ಡಿ.ಕೆ.ಶಿವಕುಮಾರ್ +ಬೆಂಗಳೂರು, ಡಿ. 2- ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುವುದು ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಹೈದ್ರಾಬಾದ್‍ಗೆ ತೆರಳುವುದಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ತೆಲಂಗಾಣ ನಮ್ಮ ನೆರೆಯ ರಾಜ್ಯ. ಅಲ್ಲಿನ ಚುನಾವಣೆಯ ಪ್ರಕ್ರಿಯೆಗಳಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ಗೆಲ್ಲುವ ವಿಶ್ವಾಸವಿದೆ. ನಾಳೆ ಫಲಿತಾಂಶ ಬಂದ ಬಳಿಕ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೆಳೆಯಲು ಬೇರೆ ಬೇರೆ ಪಕ್ಷದವರು ಪ್ರಯತ್ನ ನಡೆಸಿದ್ದಾರೆ. ಸಂಪರ್ಕಕ್ಕೆ ಒಳಗಾದ ಅಭ್ಯರ್ಥಿಗಳು ನಮಗೆ ಮಾಹಿತಿ ನೀಡಿದ್ದಾರೆ. ಯಾರು ಕೂಡ ಆಮಿಷಗಳಿಗೆ ಒಳಗಾಗುವುದಿಲ್ಲ. ಪಕ್ಷಾಂತರ ಮಾಡುವುದಿಲ್ಲ. ನಮಗೆ ಯಾವುದೇ ಆತಂಕವಿಲ್ಲ ಎಂದು ಸ್ಪಷ್ಟಪಡಿಸಿದರು. +ತೆಲಂಗಾಣದ ಶಾಸಕರನ್ನು ಸುರಕ್ಷಿತವಾಗಿಡಲು ರಾಜ್ಯದಲ್ಲಿ ರೆಸಾರ್ಟ್‍ಗಳನ್ನು ಕಾಯ್ದಿರಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು. +ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಇಟಲಿ ಪ್ರಧಾನಿ +ಇಂದು ತಾವು ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದೇನೆ. 10 ದಿನ ಬೆಳಗಾವಿಯಲ್ಲಿ ವಿಧಾನಮಂಡಲ ಅವೇಶನವಿದೆ. ಅದರಲ್ಲಿ ಭಾಗವಹಿಸುತ್ತಿದ್ದೇನೆ. ಅಷ್ಟೂ ದಿನ ಕ್ಷೇತ್ರದ ಜನರ ಜೊತೆ ಮಾತನಾಡಲಾಗುವುದಿಲ್ಲ ಎಂಬ ಕಾರಣಕ್ಕೆ ಇಂದು ಜನಸಂಪರ್ಕ ಸಭೆ ನಡೆಸುವುದಾಗಿ ಹೇಳಿದರು. \ No newline at end of file diff --git a/eesanje/url_46_299_6.txt b/eesanje/url_46_299_6.txt new file mode 100644 index 0000000000000000000000000000000000000000..af208e6589fffb669170060481372484eed1153e --- /dev/null +++ b/eesanje/url_46_299_6.txt @@ -0,0 +1,7 @@ +ಸಾಮಾಜಿಕ ನ್ಯಾಯಪಾಲನೆಯಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ : ಸಿದ್ದರಾಮಯ್ಯ +ಬೆಂಗಳೂರು, ಡಿ. 2- ಯಾರು, ಏನೇ ಹೇಳಿದರೂ ಸಾಮಾಜಿಕ ನ್ಯಾಯಪಾಲನೆಯಿಂದ ತಾವು ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಅಖಿಲ ಕರ್ನಾಟಕ ಗಾಣಿಗರ ಸಂಘದ ಸುವರ್ಣ ಮಹೋತ್ಸವ, ಗಾಣಿಗ ಜನಾಂಗದ ಸಮಾವೇಶ, ಗಾಣಿಗರ ಭವನದ ನೂತನ ಕಟ್ಟಡ ಬ್ಲಾಕ್ 1 ರ ಉದ್ಘಾಟನೆ, ಬ್ಲಾಕ್ 2 ರ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. +ಶತಶತಮಾನಗಳಿಂದ ಅಕ್ಷರ ಸಂಸ್ಕøತಿ, ಸಾಮಾಜಿಕ ನ್ಯಾಯ ಸೇರಿದಂತೆ ಅವಕಾಶ ವಂಚಿತ ಸಮುದಾಯಗಳ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದರು. ಗಾಣಿಗ ಸಮುದಾಯ ಎಣ್ಣೆ ಉತ್ಪಾದನೆಯನ್ನು ಕುಲಕಸುಬನ್ನಾಗಿ ಪಾಲಿಸುತ್ತಿದ್ದರು. ಕೈಗಾರೀಕರಣದ ಬಳಿಕ ವೃತ್ತಿ ತೊರೆಯಬೇಕಾದ ಪರಿಸ್ಥಿತಿ ಬಂದು ಬಹಳಷ್ಟು ಮಂದಿ ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಕೆಲವರಿಗಷ್ಟೇ ಜಮೀನುಗಳಿವೆ. ಉಳಿದವರಿಗೆ ಜೀವನಾದಾಯ ಮೂಲಗಳಿಲ್ಲ ಎಂಬುದು ತಮ್ಮ ಗಮನದಲ್ಲಿದೆ ಎಂದರು. +ವಿಶ್ವಕರ್ಮ ಯೋಜನೆಯಡಿ ಗಾಣಿಗ ವೃತ್ತಿಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಇದು ದುರ್ದೈವ. ನಿಮ್ಮ ಸಮುದಾಯಕ್ಕೆ ಸೇರಿದವರೇ ಪ್ರಧಾನಮಂತ್ರಿಯಾಗಿದ್ದಾರೆ. ಅವರಿಗೆ ಸಮಸ್ಯೆ ಗೊತ್ತಿದೆಯೋ, ಗೊತ್ತಿಲ್ಲವೋ ಮಾಹಿತಿ ಇಲ್ಲ. ನಾನು ಕೂಡಲೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು. +ರಾಜ್ಯದಲ್ಲಿ ನಡೆದಿರುವ ಆರ್ಥಿಕ, ಸಾಮಾಜಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗಲೇ ಆಯೋಗ ರಚನೆ ಮಾಡಲಾಗಿತ್ತು. ಸಮೀಕ್ಷೆ ಅವೈಜ್ಞಾನಿಕ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಇದಕ್ಕೆ ಮುಂಚಿತವಾಗಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ. ವರದಿ ಸ್ವೀಕರಿಸುವ ಸಲುವಾಗಿಯೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರ ಅಕಾರ ಅವಯನ್ನು 2 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದರು. +ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಹೆಚ್ಚಿದ ಕಾತುರ +ಗಾಣಿಗ ಸಮುದಾಯಕ್ಕೆ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗಿತ್ತು. ಇನ್ನೂ ಹೆಚ್ಚಿನ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯಕ್ಕೆ ನ್ಯಾಯ ಕೊಡಿಸುವಲ್ಲಿ ತಾವು ಸದಾ ನಿಮ್ಮೊಂದಿಗಿರುತ್ತೇನೆ. ಅವಕಾಶ ವಂಚಿತ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯದವರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗುರ್ತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ ಎಂದು ಹೇಳಿದರು. ವಿಧಾನಪರಿಷತ್‍ನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_299_7.txt b/eesanje/url_46_299_7.txt new file mode 100644 index 0000000000000000000000000000000000000000..3adf031bae3332da0ddb77f313f8a5c3e9d7ef10 --- /dev/null +++ b/eesanje/url_46_299_7.txt @@ -0,0 +1,11 @@ +ರಾಜ್ಯಶಿಕ್ಷಣ ನೀತಿ ನಮ್ಮ ಆದ್ಯತೆ : ಸಚಿವ ಮಧು ಬಂಗಾರಪ್ಪ +ಬೆಂಗಳೂರು, ಡಿ. 2- ರಾಜ್ಯಕ್ಕೆ ಪ್ರತ್ಯೇಕವಾದ ಶಿಕ್ಷಣ ನೀತಿ ರೂಪಿಸುವುದಾಗಿ ಪ್ರಣಾಳಿಕೆಯಲ್ಲಿ ಬರೆದು ಜನರಿಗೆ ಭರವಸೆ ನೀಡಿ ಮತ ಹಾಕಿಸಿಕೊಂಡು ಅಧಿಕಾರದಲ್ಲಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಬಿಜೆಪಿಯವರು ಹೇಳಿದ್ದಾರೆ ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯ ಬಗ್ಗೆ ಬಿಜೆಪಿಯವರು ವಿಧಾನಮಂಡಲದಲ್ಲಿ ಪ್ರಸ್ತಾಪ ಮಾಡುವುದಾದರೆ ಅದನ್ನು ಸ್ವಾಗತಿಸುತ್ತೇವೆ. ನಾವು ಚುನಾವಣೆಯ ಸಂದರ್ಭದಲ್ಲಿ ಸ್ಪಷ್ಟ ಭರವಸೆಯನ್ನು ನೀಡಿದ್ದೇವೆ. ಜನ ಅದಕ್ಕಾಗಿಯೇ ನಮಗೆ ಮತ ಹಾಕಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯ ಎಂದು ಪುನರುಚ್ಚರಿಸಿದರು. +ಇತ್ತೀಚೆಗೆ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಇನೋಸಿಸ್‍ನ ನಾರಾಯಣಮೂರ್ತಿಯವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಉತ್ತಮವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಬಿಜೆಪಿ ಎನ್‍ಇಪಿ ಜಾರಿಯನ್ನು ರಾಜ್ಯದಲ್ಲಿ ಮುಂದುವರೆಸಬೇಕು ಎಂದು ಪಟ್ಟು ಹಿಡಿದಿದೆ. ಇದಕ್ಕೆ ತಿರುಗೇಟು ನೀಡಿದ ಮಧುಬಂಗಾರಪ್ಪ, ಭರವಸೆಗಳನ್ನು ಈಡೇರಿಸದೇ ಇದ್ದರೆ ರಾಜ್ಯದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಪಂಚಖಾತ್ರಿಗಳ ರೀತಿಯಲ್ಲೇ ರಾಜ್ಯ ಶಿಕ್ಷಣ ನೀತಿ ರೂಪಿಸುವುದು ನಮ್ಮ ಆದ್ಯತೆ ಎಂದರು. +ಬಾಹ್ಯಾಕಾಶದಲ್ಲಿ ಕಾರ್ಯಚರಣೆ ಆರಂಭಿಸಿದ ಆದಿತ್ಯ-ಎಲ್1 +ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಭದ್ರತೆಯ ಲೋಪ ಎಂದು ಬಿಜೆಪಿ ಟೀಕೆ ಮಾಡುತ್ತಿರುವುದು ಅಸಮಂಜಸ. ತಮ್ಮ ಪಕ್ಷದ ಅಧ್ಯಕ್ಷರು ಹಾಗೂ ವಿಧಾನಸಭೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆರು ತಿಂಗಳು ತೆಗೆದುಕೊಂಡವರಿಂದ ಇನ್ನೆಂಥಹ ಮಾತುಗಳನ್ನು ನಿರೀಕ್ಷಿಸಲು ಸಾಧ್ಯ ಎಂದು ಲೇವಡಿ ಮಾಡಿದರು. +ಬಿಜೆಪಿಯವರು ವಿಪಕ್ಷದಲ್ಲಿದ್ದಾರೆ. ಜವಾಬ್ದಾರಿಯುತವಾಗಿ ಮಾತನಾಡಬೇಕು. ರಾಜ್ಯಸರ್ಕಾರ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಬಿಟ್ಟು ಇಂತಹ ಘಟನೆಗಳನ್ನೇ ಮುಂದಿಟ್ಟುಕೊಂಡು ಜನರನ್ನು ಆತಂಕಕ್ಕೀಡು ಮಾಡುವಂತಹ ಹೇಳಿಕೆಗಳನ್ನು ನೀಡಬಾರದು ಎಂದರು. +ನಿನ್ನೆ ಇಡೀ ದಿನ ಶಿಕ್ಷಣ ಇಲಾಖೆ ಅಕಾರಿಗಳು ಮತ್ತು ಪೊಲೀಸರು ಜೊತೆಯಾಗಿ ಕೆಲಸ ಮಾಡಿದ್ದಾರೆ. ಯಾವನೋ ತಲೆಹರಟೆ ಮಾಡಿದ ಕೆಲಸದಿಂದ ಆತಂಕ ನಿರ್ಮಾಣವಾಗಿತ್ತು. ಪೋಷಕರು, ಶಾಲಾ ಆಡಳಿತ ಮಂಡಳಿ, ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹುದನ್ನು ನಿಲ್ಲಿಸುವುದು ಹೇಗೆ ಎಂಬ ಪ್ರಶ್ನೆ ಎಲ್ಲರ ಮುಂದಿದೆ ಎಂದು ಹೇಳಿದರು. +ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವುದರಲ್ಲಿ ಸರ್ಕಾರ ವೈಫಲ್ಯವಿಲ್ಲ. ದೇಶದಲ್ಲಿ ನಾನಾ ರೀತಿಯ ಘಟನೆಗಳಾಗುತ್ತವೆ. ಅದಕ್ಕೆಲ್ಲಾ ಬಿಜೆಪಿಯವರೇ ಹೊಣೆ ಎಂದು ಹೇಳಲು ಸಾಧ್ಯವೇ? ಬೆದರಿಕೆಯ ಮಾಹಿತಿ ದೊರೆತ ತಕ್ಷಣವೇ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪಾಸಣೆಗಳಾಗಿವೆ. ಭಾರತದಲ್ಲಷ್ಟೇ ಅಲ್ಲ, ದೇಶ-ವಿದೇಶದಲ್ಲೂ ಈ ರೀತಿಯ ಘಟನೆಗಳಾಗಿವೆ. ಹಾಗೆಂದು ನಿರ್ಲಕ್ಷಿಸಲು ಸಾಧ್ಯವಿಲ್ಲ. ಮಕ್ಕಳ ವಿಷಯ ಬಂದಾಗ ಕಾಳಜಿ ವಹಿಸಬೇಕಾಗುತ್ತದೆ. ಗೃಹಸಚಿವರು ಮತ್ತು ಪೆÇಲೀಸರ ಜೊತೆ ತಾವು ನಿರಂತರವಾಗಿ ಸಂಪರ್ಕದಲ್ಲಿದ್ದು, ಸಹಕಾರ ನೀಡಲಾಗಿದೆ. ಪೊಲೀಸರು ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ +ಮಕ್ಕಳಿಗೆ ಬೆದರಿಕೆ ಹಾಕುವುದು ಅಸತ್ಯ ಮತ್ತು ಕ್ಷುದ್ರ ಕೃತ್ಯ. ಇದಕ್ಕೆ ಸಂಬಂಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಶತಸಿದ್ಧ ಎಂದು ಸ್ಪಷ್ಟಪಡಿಸಿದರು. ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಜಿಲ್ಲೆಗೆ ಅವಕಾಶ ಸಿಗಬೇಕೆಂಬುದು ನಮ್ಮ ಅಭಿಲಾಷೆ. ಆದರೆ ಸ್ಥಳಾವಕಾಶ ಎಷ್ಟಿದೆ ಎಂಬುದು ಕೂಡ ಗಮನಾರ್ಹ ಎಂದರು. \ No newline at end of file diff --git a/eesanje/url_46_299_8.txt b/eesanje/url_46_299_8.txt new file mode 100644 index 0000000000000000000000000000000000000000..2095693f5f560d154f41d6cb196e8f33e1472d25 --- /dev/null +++ b/eesanje/url_46_299_8.txt @@ -0,0 +1,8 @@ +ಪಿಎಸ್‍ಐ ಪರೀಕ್ಷೆ ಮುಂದೂಡಿಕೆಗೆ ದೂರವಾಣಿ ಕರೆ ಅಭಿಯಾನ +ಬೆಂಗಳೂರು, ಡಿ. 2- ಪಿಎಸ್‍ಐ ಪರೀಕ್ಷೆ ದಿನಾಂಕವನ್ನು ಮುಂದೂಡಬೇಕೆಂದು ಅಭ್ಯರ್ಥಿಗಳು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ದೂರವಾಣಿ ಕರೆ ಅಭಿಯಾನ ನಡೆಸಿದ್ದಾರೆ. +ನೂರಾರು ಅಭ್ಯರ್ಥಿಗಳು ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿ, ತಮ್ಮ ನೆರವಿಗೆ ಧಾವಿಸುವಂತೆ ಮನವಿ ಮಾಡಿದ್ದಾರೆ. ಅಭ್ಯರ್ಥಿಗಳ ಮನವಿಗಳನ್ನು ಸಹನೆ ಯಿಂದ ಕೇಳಿದ ಸುರ್ಜೆವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ತೆರಳುವಂತೆ ಸಲಹೆ ನೀಡಿದ್ದಾರೆ. +ಕಿಂಗ್ ಚಾಲ್ರ್ಸ್ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ; ಮೋದಿ +ಅಭ್ಯರ್ಥಿಗಳು ತಾವು ಗೃಹಸಚಿವರ ಬಳಿಗೆ ಹೋಗಿ ಮಾತುಕತೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಆದರೆ ಅವರ ಜೊತೆ ಮಾತನಾಡುವುದಕ್ಕಿಂತಲೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರ ಜೊತೆ ಸಮಾಲೋಚನೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಹಿಂದೆ 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮಗಳಾಗಿವೆ ಎಂಬ ಆರೋಪಗಳಿದ್ದವು. ಈ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಹೈಕೋರ್ಟ್ ಸದರಿ ಆದೇಶವನ್ನು ಎತ್ತಿಹಿಡಿದು ಇತ್ತೀಚೆಗೆ ತೀರ್ಪು ನೀಡಿದೆ. +ಅದರ ಆಧಾರದ ಮೇಲೆ ರಾಜ್ಯಸರ್ಕಾರ ಮರುಪರೀಕ್ಷೆಗೆ ಕ್ರಮ ಕೈಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಡಿಸೆಂಬರ್ 23 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಇದನ್ನು ವಿರೋಧಿಸುತ್ತಿದ್ದಾರೆ. +ಒಂದು ತಿಂಗಳ ಕಲಾವಕಾಶ ಸಾಕಾಗುವುದಿಲ್ಲ. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಮಯ ಬೇಕು. ಹೀಗಾಗಿ ಡಿಸೆಂಬರ್ 23 ರಂದು ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಬೇಕು ಎಂಬುದು ಅಭ್ಯರ್ಥಿಗಳ ಬೇಡಿಕೆಯಾಗಿದೆ. +ರಣದೀಪ್ ಸಿಂಗ್ ಸುರ್ಜೆವಾಲರೊಂದಿಗೆ ದೂರವಾಣಿ ಕರೆ ಅಭಿಯಾನ ನಡೆಸಿರುವ ಅಭ್ಯರ್ಥಿಗಳು ಸಮಸ್ಯೆಗೆ ಪರಿಹಾರ ದೊರಯದೇ ಇದ್ದರೆ ರಾಹುಲ್‍ಗಾಂಯವರೊಂದಿಗೂ ದೂರವಾಣಿ ಕರೆ ಅಭಿಯಾನ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_299_9.txt b/eesanje/url_46_299_9.txt new file mode 100644 index 0000000000000000000000000000000000000000..d76960c3827719bf5d0f7dc127009b59904dc590 --- /dev/null +++ b/eesanje/url_46_299_9.txt @@ -0,0 +1,9 @@ +ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ : ತನಿಖೆ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..? +ಬೆಂಗಳೂರು, ಡಿ. 2- ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕಳುಹಿಸಿದ ಇ-ಮೇಲ್‍ನ ಐಪಿ ಅಡ್ರೆಸ್ ವಿದೇಶಿ ಮೂಲದ್ದಾಗಿರುವ ಅನುಮಾನಗಳಿದ್ದು, ಈ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲುಪ್ರತ್ಯೇಕ ಕಾಯ್ದೆ ರೂಪಿಸುವುದಾಗಿ ಹೇಳಿದ್ದಾರೆ. ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವ ಮೇಲ್ ಐಡಿಯ ಐಪಿ ವಿಳಾಸ ಭಾರತ ದೇಶದಲ್ಲಿಲ್ಲ. ಹೀಗಾಗಿ ಅದರ ಮೂಲ ಮಾಹಿತಿಗಳನ್ನು ನೀಡಲು ಸಂಬಂಧಿಸಿದ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಅಲ್ಲಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. +ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ವಿದ್ಯಮಾನ ಹೊಸದಲ್ಲ. ಈ ಮೊದಲು ಮಲೇಶಿಯಾ, ಸಿಂಗಾಪುರ್, ಜರ್ಮನಿ ಸೇರಿದಂತೆ ಹಲವಾರು ವಿದೇಶಿ ಶಾಲೆಗಳಿಗೂ ಇದೇ ರೀತಿಯ ಮೇಲ್ ಐಡಿಯಿಂದ ಬೆದರಿಕೆ ಹಾಕಲಾಗಿದೆ. ಹಾಗೆಂದು ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸರ್ಕಾರ ಗಂಭೀರ ಕ್ರಮಗಳನ್ನು ಕೈಗೊಂಡಿದೆ. +ನಕಲಿ ಬೆದರಿಕೆ ಹಾಕುವವರ ಮೂಲವನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಜೊತೆಯಲ್ಲೇ ಶಾಲೆಗಳಿಗೆ ಆಯಾ ಪೊಲೀಸ್ ಠಾಣೆಯ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಪೊಲೀಸರು ಇಂತಹ ಕ್ರಮಗಳನ್ನು ಆರಂಭಿಸಿದ್ದಾರೆ ಎಂದು ಹೇಳಿದರು. +ನಕ್ಸಲರು ಹುದುಗಿಸಿಟ್ಟಿದ ಸ್ಪೋಟ, ಇಬ್ಬರು ಯೋಧರು ಗಂಭೀರ +ಕೇಂದ್ರ ಸರ್ಕಾರವೂ ನಮ್ಮ ಸಂಪರ್ಕದಲ್ಲಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚೆ ನಡೆಸಿದೆ. ಆರಂಭದಲ್ಲಿ 15 ಶಾಲೆಗಳಿಗೆ ಬೆದರಿಕೆ ಬಂದಿತ್ತು. ನಂತರ ಅದು 45 ಶಾಲೆಗಳಿಗೆ ಎಂದು ಖಚಿತವಾಗಿದೆ. ಎಲ್ಲಾ ಶಾಲೆಗಳಲ್ಲೂ ತಪಾಸಣೆ ನಡೆಸಿ ಯಾವುದೇ ಸ್ಪೋಟಕಗಳಿಲ್ಲ ಎಂದು ದೃಢಪಡಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದರು. +ಆಧುನಿಕತೆಯ ಪರಿಸ್ಥಿತಿಯಲ್ಲಿ ಪ್ರತಿದಿನ ಈ ರೀತಿಯ ಸವಾಲುಗಳು ಉದ್ಭವಿಸುತ್ತಲೇ ಇರುತ್ತವೆ. ಅವುಗಳನ್ನು ನಿಭಾಯಿಸಲೇಬೇಕು. ಶಾಲೆಗಳಿಗೆ ಬೆದರಿಕೆ ಕರೆ ಹಾಕಿದ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡುವ ಅಗತ್ಯವಿಲ್ಲ. ನಮ್ಮ ಸಿಐಡಿ ವಿಭಾಗದಲ್ಲಿ ನುರಿತ ಅಧಿಕಾರಿಗಳ ಸಿಬ್ಬಂದಿಗಳಿದ್ದು, ಸಮರ್ಪಕ ತನಿಖೆ ಮಾಡುತ್ತಾರೆ. ಒಂದು ವೇಳೆ ಆರೋಪಿ ವಿದೇಶದಲ್ಲಿದ್ದು, ಆತನನ್ನು ಬಂಧಿಸಿ ಕರೆತರಲು ಅನುಮತಿಸಿದರೆ ಆ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು. +ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ +ಈ ಮೊದಲು ಮೊರಾಕೊದಿಂದ ಕೊಲೆ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ. ದುಬೈನಲ್ಲಿರುವ ಕುಖ್ಯಾತನ ಬಂಧನಕ್ಕೂ ತಂಡ ರಚಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಭ್ರೂಣಲಿಂಗಪತ್ತೆ ಜೊತೆಗೆ ನವಜಾತ ಶಿಶುಗಳ ಮಾರಾಟ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಎರಡೂ ರೀತಿಯ ಕೃತ್ಯಗಳು ರಾಜ್ಯಾದ್ಯಂತ ನಡೆದಿರುವ ಸಾಧ್ಯತೆಗಳಿದ್ದು, ಅದನ್ನು ಸಿಐಡಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದರು. \ No newline at end of file diff --git a/eesanje/url_46_29_1.txt b/eesanje/url_46_29_1.txt new file mode 100644 index 0000000000000000000000000000000000000000..a13d196dff85a6b15b57c716cce8367e82e7bb3a --- /dev/null +++ b/eesanje/url_46_29_1.txt @@ -0,0 +1,13 @@ +ಸಿಎಂ ವಿರುದ್ಧ ಪ್ರಾಸಿಕ್ಯೂಷನ್ : ಮುಂದುವರೆದ ವಿಚಾರಣೆ + +ಬೆಂಗಳೂರು,ಆ.31-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ಮುಂದುವರೆದಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು ಸುದೀರ್ಘ ವಾದ ಮಂಡಿಸಿದರು. +ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ನಡೆದ ವಿಚಾರಣಾ ಸಂದರ್ಭದಲ್ಲಿ ತಮ ಸುದೀರ್ಘ ವಾದ ಮಂಡಿಸಿದ ತುಷಾರ್ಮೆಹ್ತಾಅವರು 5 ಅಂಶಗಳನ್ನು ಉಲ್ಲೇಖಿಸಿ, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನ್ನು ಸಮರ್ಥಿಸಿಕೊಂಡರು. +ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಾಗ ಸಂಪುಟದ ಅಭಿಪ್ರಾಯ ಪುರಸ್ಕರಿಸಿಲ್ಲ ಎಂದು ತಿಳಿಸಿದ್ದಾರೆ. ಮುಡಾ ಹಗರಣದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ರಾಜ್ಯಪಾಲರು ತನಿಖೆಯ ನಂತರವೇ ತೀರ್ಮಾನ ತೆಗೆದುಕೊಳ್ಳಬೇಕು ಎಂದೇನಿಲ್ಲ. ತನಿಖಾ ಸಂಸ್ಥೆ ನೋಡಿಕೊಳ್ಳುತ್ತದೆ ಎಂದು ಹೇಳಿದರು. +ಸಿಎಂ ವಿರುದ್ಧ ಆರೋಪ ಬಂದಿದೆ, ತನಿಖೆ ಆಗಬೇಕಿದೆ, ಸಿಎಂ ಪರ ವಕೀಲರು ಆತಾಹುತಿ ವಾದ ಮಂಡಿಸುತ್ತಿದ್ದಾರೆ, ಪತ್ನಿ ವಿರುದ್ಧ ಆರೋಪಕ್ಕೆ ಗಂಡನ ಹೊಣೆ ಮಾಡುತ್ತಿದ್ದಾರೆ ಎನ್ನುವುದನ್ನು ಒಪ್ಪುವುದಾದರೆ 17 ಎ ಅವಶ್ಯಕತೆ ಇಲ್ಲ. ದೂರುದಾರ ನೇರವಾಗಿ ತನಿಖಾ ಸಂಸ್ಥೆ ಬಳಿ ಹೋಗಬಹುದಿತ್ತು. 17 ಎ ಅಡಿಯಲ್ಲಿ ತನಿಖೆಗೆ ಮಾತ್ರ ಅನುಮತಿ ನೀಡಲಾಗಿದೆ. ಬಿಎನ್ಎಸ್ ಕಾಯ್ದೆಯಡಿ ತನಿಖೆಗೆ ಕೇಳಲಾಗಿದೆ ಎಂದು ತುಷಾರ್ ಮೆಹ್ತಾ ತಮ ವಾದ ಮಂಡಿಸಿದರು. +ರಾಜ್ಯಪಾಲರ ಶೋಕಾಸ್ ನೋಟಿಸ್ಗೆ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಕ್ಯಾಬಿನೆಟ್ ಸಲಹೆ, ದೂರುದಾರರ ಅರ್ಜಿ ಎಲ್ಲವನ್ನೂ ಪರಿಗಣಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಆದೇಶ ನೀಡಿದ್ದಾರೆ. ಲಿಖಿತ ದೂರು ಆಧರಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. ಇಲ್ಲಿ ರಾಜ್ಯಪಾಲರು ತಮ ವಿವೇಚನೆ ಬಳಸಿ ಆದೇಶ ನೀಡಿದ್ದಾರೆ. 17 ಎ ಬಳಕೆ ಬಗ್ಗೆ ಸುಪ್ರೀಂ ಕೋರ್ಟ್ ಹಲವು ತೀರ್ಪು ನೀಡಿದೆ. ಈ ಕಾಯ್ದೆ ಬಳಸುವ ಬಗ್ಗೆ ಅನುಮತಿ ನೀಡುವಾಗ ವಿವರಣೆ ನೀಡಬೇಕೆಂದೇನಿಲ್ಲ ಎಂದು ಹೇಳಿದರು. +ಈ ಸೆಕ್ಷನ್ನಡಿಯಲ್ಲಿ ಶಿಕ್ಷೆ ವಿಧಿಸಬೇಕು ಎಂದು ರಾಜ್ಯಪಾಲರು ಸೂಚಿಸಿಲ್ಲ, ಕೇವಲ ತನಿಖೆಗೆ ಅವಕಾಶ ನೀಡಲಾಗಿದೆ. ಯಾವುದೇ ದೂರಿನಲ್ಲಿ ಸಂದೇಹ ಬಂದರೆ ರಾಜ್ಯಪಾಲರು ತನಿಖೆಗೆ ಆದೇಶಿಸಬಹುದು. ರಾಜ್ಯಪಾಲರಿಗೆ ತನಿಖೆಯ ಅವಶ್ಯಕತೆ ಇದೆ ಎಂದೆನಿಸಿದರೆ ಆದೇಶಿಸಬಹುದು. ಇದು ಅವರ ಹಕ್ಕು ಮಾತ್ರ ಅಲ್ಲ, ಕರ್ತವ್ಯವೂ ಆಗಿದೆ. ಇದು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ನಡುವಿನ ಪ್ರಕರಣವಲ್ಲ ಎಂದು ಮೆಹ್ತಾ ವಾದಿಸಿದರು. +ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಸಂಪೂರ್ಣ ಆದೇಶವನ್ನು ತಮ ವಾದದ ಸಂದರ್ಭದಲ್ಲಿ ಓದಿದರು.ಎಜೆ ಅಭಿಪ್ರಾಯ, ಕ್ಯಾಬಿನೇಟ್ ನಿರ್ಣಯ ತಮ ಅಭಿಪ್ರಾಯ ಎಂದು ಮುಖ್ಯಮಂತ್ರಿಗಳು ತಮ ಅಭಿಪ್ರಾಯದಲ್ಲಿ ತಿಳಿಸಿದ್ದಾರೆ. ಸಿಎಂ ಕೂಡ ತಮ ವಿವೇಚನವನ್ನು ಬಳಸಿಲ್ಲ ಎಂದರು. +ಒಬ್ಬರ ದೂರಿಗೆ ಶೋಕಾಸ್ ನೋಟಿಸ್ ನೀಡಿದಾಕ್ಷಣ ಉಳಿದವರ ದೂರಿಗೂ ಶೋಕಾಸ್ ನೋಟಿಸ್ ನೀಡಬೇಕೆಂದೇನಿಲ್ಲ. ಹೀಗಾಗಿಯೇ ಉಳಿದವರ ದೂರಿಗೆ ಶೋಕಾಸ್ ನೋಟಿಸ್ ನೀಡಿಲ್ಲ. ದೂರುದಾರರಾದ ಅಬ್ರಹಾಂ ದೂರಿಗೂ ಶೋಕಾಸ್ ನೋಟಿಸ್ ಕಡ್ಡಾಯವಾಗಿರಲಿಲ್ಲ. +ಸಂಪುಟದ ಸಲಹೆಯನ್ನು ಪರಿಗಣಿಸುವ ಅಗತ್ಯ ರಾಜ್ಯಪಾಲರಿಗೆ ಇಲ್ಲ. ಸಂಪುಟದ ಸದಸ್ಯರನ್ನು ಮುಖ್ಯಮಂತ್ರಿಗಳು ನೇಮಿಸುತ್ತಾರೆ. ಮುಖ್ಯಮಂತ್ರಿಗಳು ಆಯ್ಕೆ ಮಾಡುವ ಸಚಿವರು ಸಂಪುಟದ ಸದಸ್ಯರಾಗಿರುತ್ತಾರೆ. ಅಂತಹ ಸಂಪುಟ ಸದಸ್ಯರ ನಿರ್ಣಯಕ್ಕೆ ಮಹತ್ವ ನೀಡುವ ಅಗತ್ಯವಿರುವುದಿಲ್ಲ. ಅವರು ನೇಮಿಸಿದ ವ್ಯಕ್ತಿಯೇ ಸಂಪುಟದ ನೇತೃತ್ವ ವಹಿಸಿ ನೀಡಿರುವ ಸಲಹೆಯನ್ನು ರಾಜ್ಯಪಾಲರು ಪರಿಗಣಿಸಬೇಕೆಂದೇನಿಲ್ಲ ಎಂದು ತುಷಾರ್ ಮೆಹ್ತಾ ಪ್ರಬಲ ವಾದ ಮಂಡಿಸಿದರು. +ರಾಜ್ಯಪಾಲರು ಅಪರೂಪದ ಸಂದರ್ಭದಲ್ಲಿ ಸ್ವತಂತ್ರ್ಯ ವಿವೇಚನೆ ಬಳಸಬಹುದಾಗಿದೆ ಎಂದು ಮಧ್ಯಪ್ರದೇಶದ ಪ್ರಕರಣವನ್ನು ಉಲ್ಲೇಖಿಸಿದರು. ಈ ಪ್ರಾಸಿಕ್ಯೂಷನ್ ನೀಡಿದ ಪ್ರಕರಣದಲ್ಲಿ ರಾಜ್ಯಪಾಲರು ತರಾತುರಿ ನಿರ್ಣಯ ಕೈಗೊಂಡಿಲ್ಲ. +ಎಲ್ಲವನ್ನೂ ಅಧ್ಯಯನ ಮಾಡಿ, ನಿರ್ಣಯಿಸಿ ಅನುಮತಿ ನೀಡಿದ್ದಾರೆ ಎಂದು ಹೈ ಕೋರ್ಟ್ ಗಮನಕ್ಕೆ ತಂದರು.ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣೀಂದರ್ ಸಿಂಗ್ ವಾದ ಮಂಡಿಸಿದರು. ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ನಾಗಪ್ರಸನ್ನ ಅವರು ಮಧ್ಯಾಹ್ನಕ್ಕೆ ಮುಂದೂಡಿದರು. \ No newline at end of file diff --git a/eesanje/url_46_29_10.txt b/eesanje/url_46_29_10.txt new file mode 100644 index 0000000000000000000000000000000000000000..bb779a08a8e48b0305431fe2a9fed69d7032cbbf --- /dev/null +++ b/eesanje/url_46_29_10.txt @@ -0,0 +1,14 @@ +ಸೆ. 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್‌ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ +ಬೆಂಗಳೂರು ಆಗಸ್ಟ್‌ 30: ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು. +“ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಮುಂದಾಗಬೇಕು, ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು” ಎಂದು ಸೂಚಿಸಿದರು. +ಮುಂದುವರೆದು, “ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ, ಅಂತಹ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಛೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. +ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಈ ಸಮಸ್ಯೆಯನ್ನು ಪರಿಹರಿಸಲು, ಸೂಕ್ತ ಪರಿಹಾರ ಕ್ರಮಕೈಗೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆ ದುರಸ್ಥಿಗೆ ಬಾಕಿಯಿರುವ ಪ್ರಕರಣಗಳ ವಿಲೆಗೆ ವ್ಯವಸ್ಥಿತವಾದ ಯೋಜನೆ ಆರಂಭಿಸಿದೆ” ಎಂದು ಮಾಹಿತಿ ನೀಡಿದರು. +“ಈ ಹಿಂದೆ ಪೋಡಿ ದುರಸ್ಥಿ ಮಾಡಲು ಅವಶ್ಯವಿರುವ 1-5 ನಮೂನೆಗಳನ್ನು ತಯಾರಿಸಲು ಕಾಗದದ ಕಡತಗಳನ್ನು ತಯಾರಿಸಲು ಪ್ರಯತ್ನಿಸಲಾಗಿತ್ತು. ಆದರೆ, ಆ ಕೆಲಸವೂ ಸಮರ್ಪಕವಾಗಿ ಆಗಿರುವುದಿಲ್ಲ. ಆದ ಕೆಲವು ಕಡತಗಳು ಕಾಣೆಯಾಗಿವೆ ಅಥವಾ ಕೈಗೆ ಸಿಗುವುದಿಲ್ಲ. ಇದರಿಂದ ಕಡತಗಳು ಇದ್ದರೂ ಅನೇಕರಿಗೆ ಅದರ ಪ್ರಯೋಜನ ಸಿಗುತ್ತಿಲ್ಲ. ಈ ಸಮಸ್ಯೆಗಳಿಂದ ಕಂದಾಯ ಇಲಾಖೆ ಪೋಡಿ ದುರಸ್ಥಿ 1-5 ಕಡತಗಳನ್ನು ಕಂಪ್ಯೂಟರ್ಗಳನ್ನು ಬಳಸಿ ಗಣಕೀಕರಿಸಿದ (ಡಿಜಿಟಲ್‌) 1-5 ಕಡತಗಳನ್ನು ತಯಾರಿಸಲು ಆರಂಭಿಸಿದೆ. +ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ” ಎಂದು ತಿಳಿಸಿದರು. +ಮುಂದುವರೆದು, “ಈ ಅಭಿಯಾನವನ್ನು ಸೆಪ್ಟೆಂಬರ್‌ 02 ರಿಂದ ರಾಜ್ಯಾದ್ಯಂತ ಆರಂಭಿಸುತ್ತಿದ್ದೇವೆ. ರಾಜ್ಯದಲ್ಲಿ ಎಲ್ಲೆಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳ ದುರಸ್ಥಿಯಾಗದೆ ಬಾಕಿ ಉಳಿದಿದೆ ಅಂತಹ ಪ್ರತಿಯೊಂದು ಕಡೆಯಲ್ಲೂ ಡಿಜಿಟಲಾಗಿ 1-5(ನಮೂನೆ)ಕಡತ ಸೆಪ್ಟೆಂಬರ್‌ 02 ರಿಂದ ತಯಾರಿ ಮಾಡಲಾಗುವುದು. 1-5(ನಮೂನೆ)ಕಡತ ಎಲ್ಲಾ ಸರ್ಕಾರಿ ಜಮೀನಿಗೆ (ರೈತರಿಗೆ ಮಂಜೂರಾಗಿರುವ), ರೈತರ ಅರ್ಜಿಗೆ ಕಾಯದೆ ಕಂದಾಯ ಇಲಾಖೆ ಸ್ವಯಂ ಕಡತಗಳನ್ನು ತಯಾರಿಸಲಿದೆ. +1-5ನಮೂನೆ ಪ್ರಕಾರ ತಯಾರಾದ ಕಡತಗಳನ್ನು ಮುಂದೆ 6-10 ಮಾಡಿ ಅವರಿಗೆ ಸರ್ವೆಯೊಂದಿಗೆ ದುರಸ್ಥಿ ಮಾಡಿದ ನಂತರ ಹೊಸ ಸರ್ವೆ ನಂಬರ್ ಪಹಣಿಯೊಂದಿಗೆ ಸಂಪೂರ್ಣ ದಾಖಲೆ ಮಾಡಿಕೊಡಲಾಗುವುದು. ಇದನ್ನು ಅಭಿಯಾನ ಮಾದರಿಯಲ್ಲಿ ಅನುಷ್ಟಾನ ಮಾಡಲಾಗುವುದು. ಇದೊಂದು ದೀರ್ಘಕಾಲದ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ರೈತರಿಗೆ ನೆಮ್ಮದಿಯನ್ನು ನೀಡುವ ಅಭಿಯಾನವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳೂ ಈ ಯೋಜನೆ ಯಶಸ್ವಿಯಾಗಲು ಸಹಕರಿಸಬೇಕಿದೆ. ಆ ಮೂಲಕ ರೈತರ ದೀರ್ಘ ಕಾಲದ ಸಮಸ್ಯೆಗಳನ್ನು ಪರಿಹರಿಸಲು ತಮ್ಮಿಂದಾದ ಸಹಕಾರ ನೀಡಬೇಕಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮನವಿ ಮಾಡಿದರು. +ಹಾಸನದಲ್ಲಿ ಯಶಸ್ವಿಯಾದ ಪೈಲಟ್‌ ಯೋಜನೆ +ಡಿಜಿಟಲಾಗಿ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ರಾಜ್ಯಾದ್ಯಂತ ವಿಸ್ತರಿಸುವ ಮುನ್ನ ಈ ಯೋಜನೆಯನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ನಡೆಸಲಾಗಿದೆ. ಈ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಇದೀಗ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದರು. +ಈ ಬಗ್ಗೆ ಗಮನ ಸೆಳೆದ ಅವರು, “ಪೋಡಿ ದುರಸ್ಥಿಗೊಳಿಸಿ ರೈತರಿಗೆ ನೆಮ್ಮದಿ ನೀಡಬೇಕು ಎಂಬ ಉದ್ದೇಶದಿಂದ ಎಂಟು ತಿಂಗಳ ಹಿಂದೆಯೇ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಹಾಗೂ ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಸೇರಿ ಹಿರಿಯ ಅಧಿಕಾರಿಗಳ ಜೊತೆ ನಿರಂತರವಾಗಿ ಚರ್ಚಿಸಲಾಯಿತು. ಚರ್ಚೆಯ ಫಲವಾಗಿ ಇದೀಗ ಡಿಜಿಟಲ್‌ ಆ್ಯಪ್ ಸಿದ್ದಗೊಂಡಿದೆ. ಇದರ ಸಹಾಯದಿಂದ 1-5(ನಮೂನೆ) ಪೋಡಿ ದುರಸ್ಥಿ ಕಾರ್ಯವನ್ನು ಸುಲಭವಾಗಿ ನಿಭಾಯಿಸಬಹುದು” ಎಂದರು. +ಮುಂದುವರೆದು, “ಆ್ಯಪ್ ಗೆ ಹಾಸನದಲ್ಲಿ ಪ್ರಾಯೋಗಿಕವಾಗಿ ಚಾಲನೆ ನೀಡಿ ಕಳೆದ ಕೆಲ ತಿಂಗಳಿನಿಂದ ಪೋಡಿ ದುರಸ್ಥಿ ಕೆಲಸವನ್ನು ಯಶಸ್ವಿಯಾಗಿ ಮುನ್ನಡೆಸಲಾಗುತ್ತಿದೆ. ಇದರ ಸಹಾಯದಿಂದ ಪೋಡಿ ದುರಸ್ಥಿ ಕೆಲಸ ನೂರಕ್ಕೆ ನೂರರಷ್ಟು ಸಾಧ್ಯ ಎಂಬುದನ್ನು ಹಾಸನದಲ್ಲಿ ಸಾಧಿಸಿ ತೋರಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಪೋಡಿ ದುರಸ್ಥಿ ಬಗ್ಗೆ ಇನ್ನೂ ಕಥೆ ಹೇಳುವ ಅಗತ್ಯವಿಲ್ಲ. ಇಲಾಖೆಯ ಬಳಿ ಪ್ರತಿ ತಾಲೂಕಿನ ಡಾಟಾ ಇದ್ದು, ದುರಸ್ಥಿ ಕೆಲಸ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಆರಂಭವಾಗಬೇಕು. +ಅಲ್ಲದೆ, ಈ ಆ್ಯಪ್ ಮೂಲಕ ಯಾವ ಫೈಲು ಯಾವ ಅಧಿಕಾರಿಯ ಬಳಿ ಎಷ್ಟು ದಿನದಿಂದ ಬಾಕಿ ಇದೆ ಎಂಬ ಮಾಹಿತಿಯನ್ನೂ ಪತ್ತೆಹಚ್ಚಬಹುದು. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ. ನಿಮ್ಮ ತಾಲೂಕಿನಲ್ಲಿ ದರ್ಖಾಸ್ತು ಪೋಡಿ ಆಗಬೇಕಿರುವ ಸರ್ವೇ ನಂಬರ್ ಎಷ್ಟಿದೆ ಎಂದು ಮೊದಲು ಪಟ್ಟಿ ಮಾಡಿ, ಮುಖ್ಯವಾಗಿ ಜಿಲ್ಲಾಧಿಕಾರಿಗಳು ಪ್ರತಿ ವಾರ ಗ್ರಾಮ ಆಡಳಿತ ಅಧಿಕಾರಿಯಿಂದ ತಹಶೀಲ್ದಾರ್‌ ವರೆಗೆ ಎಲ್ಲಾ ಅಧಿಕಾರಿಗಳ ಸಭೆ ನಡೆಸಿ ಸಲಹೆ ಸೂಚನೆ ನೀಡಬೇಕು, ಈ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಬೇಕು ಹಾಗೂ ಪೋಡಿ ದುರಸ್ಥಿ ಕೆಲಸದ ಬಗ್ಗೆ ನಿರಂತರ ಮೇಲುಸ್ತುವಾರಿ ನಡೆಸಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. \ No newline at end of file diff --git a/eesanje/url_46_29_11.txt b/eesanje/url_46_29_11.txt new file mode 100644 index 0000000000000000000000000000000000000000..b3c96b3e92d1ef13ec04bb231a96cd54a31ebb46 --- /dev/null +++ b/eesanje/url_46_29_11.txt @@ -0,0 +1,4 @@ +ಕಾಶ್ಮೀರದ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ದೇವೇಗೌಡರು +ಶ್ರೀನಗರ, ಆ.31-ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಇಂದು ಕಾಶ್ಮೀರದ ಶಂಕರಾಚಾರ್ಯರ ಬೆಟ್ಟದ ಮೇಲಿರುವ ಜ್ಯೇಷ್ಟೇಶ್ವರ ದೇವರ ದರ್ಶನ‌ ಪಡೆದು ವಿಶೇಷ ಪೂಜೆ ಮಾಡಿದ್ದಾರೆ. ಶಿವನ ದೇವಸ್ಥಾನವೆಂದೇ ಕರೆಯಲ್ಪಡುವ ಈ ಪವಿತ್ರ ಶಂಕರಾಚಾರ್ಯ ದೇವಸ್ಥಾನದಲ್ಲಿ ದೇವರ ದರ್ಶನ‌ ಪಡೆದು ಪ್ರಾಥನೆ ಸಲ್ಲಿಸಿದ್ದಾರೆ. + , , , . ’ .1/2pic../Fo2wckXjpp +ಈ ದೇವಸ್ಥಾನಕ್ಕೆ ಭೇಟಿ ನೀಡಿ, ಶಿವನ‌‌ ದರ್ಶನ ಪಡೆಯಬೇಕೆಂಬುದು ನನ್ನ ಜೀವಮಾನದ ಆಸೆಯಾಗಿತ್ತು ಎಂದು ಗೌಡರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಾಶ್ಮೀರ ಕಣಿವೆಯಲ್ಲಿನ ತ್ರಾಸದಾಯಕವಾದ ಈ ದೇವಾಲಯಕ್ಕೆ ಗೌಡರು, ಸೇನೆಯ ಬಿಗಿ ಭದ್ರತೆಯ ಜತೆಗೆ ಸಹಾಯಕರ ಸಹಾಯದಿಂದ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಿನ್ನೆ ಕಾಶ್ಮೀರದ ಉರಿಯ ಜಲ ವಿದ್ಯುತ್ ಉತ್ಪಾದನಾ ಸ್ಥಾವರಕ್ಕೆ ಭೇಟಿ ನೀಡಿದ್ದರು. \ No newline at end of file diff --git a/eesanje/url_46_29_12.txt b/eesanje/url_46_29_12.txt new file mode 100644 index 0000000000000000000000000000000000000000..b59069e954d30ff504b8f27143ba1aa52d44ee46 --- /dev/null +++ b/eesanje/url_46_29_12.txt @@ -0,0 +1,9 @@ +ದೇವೇಗೌಡರ ಕನಸು ಈಡೇರಿಸಲು ಕಾರ್ಯಕರ್ತರು ಕೆಲಸ ಮಾಡಬೇಕು : ನಿಖಿಲ್‌ ಕುಮಾರಸ್ವಾಮಿ +ತುಮಕೂರು,ಆ.30- ಸದಸ್ಯತ್ವ ನೋಂದಣಿ ಇವತ್ತು ನೆನ್ನೆಯದು ಅಲ್ಲ ಮಾಜಿ ಪ್ರಧಾನಿ ದೇವೇಗೌಡರ ಹಲವು ವರ್ಷಗಳ ಕನಸು ಈ ಕನಸು ಈಡೇರಬೇಕು ಆ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕರೆ ನೀಡಿದರು. +ನಗರದ ಕೊಲ್ಲಾಪುರದಮ ಸಭಾಂಗಣದಲ್ಲಿ ಹಮಿಕೊಂಡಿದ್ದ ಬೂತ್‌ ಸಮಿತಿ ಅಭಿಯಾನ ಹಾಗೂ ಸದಸ್ಯತ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮೂವತ್ತೊಂದು ಜೆಲ್ಲೆಯಲ್ಲೂ ಸದಸ್ಯತ್ವ ನೋಂದಣಿ ಕಾರ್ಯ ನಡೆಯಲ್ಲಿದ್ದು ಇಂದು ತುಮಕೂರಿನಿಂದ ಪ್ರಾರಂಭ ಮಾಡಿದೇವೆ. ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಬೇಕಾಗಿದೆ ಅಲ್ಲದೆ ಗ್ರಾಮೀಣ ಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುವ ಉದ್ದೇಶ ದಿಂದ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ. ಈ ಹಿಂದೆ ತುಮಕೂರು ಜಿಲ್ಲೆಯ ಹನ್ನೊಂದು ಕ್ಷೇತ್ರಗಳ ಪೈಕಿ ಒಂಬತ್ತು ಸ್ಥಾನಗಳನ್ನು ಪಕ್ಷ ಗೆದ್ದಿತ್ತು.ಅದೇ ರೀತಿ ಮುಂದಿನ ದಿನದಲ್ಲೂ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಬೇಕು ಎಂದರು. +ಕಾಂಗ್ರೆಸ್‌‍ನವರು ಕುಮಾರಸ್ವಾಮಿಯವರನ್ನು ಐದು ವರ್ಷ ಮುಖ್ಯಮಂತ್ರಿ ಎಂದು ಕರೆದುಕೊಂಡು ಹೋದರು. ಮತ್ತೆ ಮಾಜಿ ಪ್ರಧಾನಿ ದೇವೇಗೌಡರನ್ನು ಲೋಕಸಭೆಗೆ ಕರೆದುಕೊಂಡು ಬಂದು ವಿಶ್ವಾಸ ದ್ರೋಹ ವೆಸಗುವ ಕೆಲಸ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.ಮುಂದಿನ ದಿನಗಳಲ್ಲಿ ಜಿಪಂ, ತಾಪಂ, ಪಾಲಿಕೆ,ಪುರಸಭೆಯ ಚುನಾವಣೆಗಳು ನಡೆಯುತ್ತವೆ ಆಗ ನಮ ಶಕ್ತಿ ಪ್ರದರ್ಶನ ವಾಗಬೇಕಾಗಿದೆ ಗ್ರಾಮೀಣ ಮಟ್ಟದಲ್ಲಿ ಪಕ್ಷ ಸದೃಡವಾಗಿ ಬೆಳೆದರೆ ಎಲ್ಲಾ ಕಾರ್ಯಕರ್ತರಿಗೂ ಪ್ರಾತಿನಿಧ್ಯ ಕಲ್ಪಿಸಲು ಅವಕಾಶ ಸಿಕ್ಕಂತೆ ಆಗುತ್ತದೆ ಎಂದು ತಿಳಿಸಿದರು. +ಪಕ್ಷದ ಕಾರ್ಯಕರ್ತರಿಗೆ ತರಬೇತಿ ಯನ್ನು ನಿರಂತರವಾಗಿ ಮಾಡುತ್ತೇವೆ ,ವಿಚಾರ ಸಂಕಿರಣ ಗಳನ್ನು ಹಮಿಕೊಂಡು ಪಕ್ಷದ ತತ್ವಸಿದ್ದಾಂತಗಳನ್ನು ತಿಳಿಸುವಕೆಲಸ ಮಾಡುತ್ತೇವೆ ಎಂದು ಹೇಳಿದರು. ಜೆಡಿಎಸ್‌‍ ಪಕ್ಷದ ಜೆ ಡಿ ಎಲ್‌ ಪಿ ನಾಯಕ ಹಾಗೂ ಶಾಸಕ ಸುರೇಶ್‌ ಬಾಬು ಮಾತನಾಡಿ, ಪಕ್ಷವನ್ನು ಕೇಡರ್‌ ಬೇಸಡ್‌ ಪಕ್ಷವನ್ನಾಗಿ ಕಟ್ಟಬೇಕಾಗಿದೆ. ಕಳೆದ ಲೋಕಸಭೆಯಲ್ಲಿ ವಿ.ಸೋಮಣ್ಣ ನವರನ್ನು ಗೆಲ್ಲಿಸಲ್ಲು ಪ್ರಾಮಣಿಕ ಪ್ರಯತ್ನ ಮಾಡಿದೇವೆ ಸೋಮಣ್ಣ ಪಕ್ಷದ ಕಾರ್ಯಕರ್ತರನ್ನು ನೆನಪು ಮಾಡಿಕೊಳ್ಳುತ್ತಾರೆ ಪಕ್ಷವನ್ನು ಸದೃಡವಾಗಿ , ಬಲಿಷ್ಠವಾಗಿ ಕಟ್ಟಬೇಕಾಗಿದೆ, ಹಾಸನ ಮತ್ತು ಮಂಡ್ಯ ಜಿಲ್ಲೆಗಿಂತ ಪಕ್ಷ ತುಮಕೂರಿನಲ್ಲಿ ಸದೃಢವಾಗಿದೆ. ಮಂಡ್ಯ ,ಹಾಸನ ಈ ಎರಡು ಜಿಲ್ಲೆಗಳಿಗಿಂತ ತುಮಕೂರು ಜಿಲ್ಲೆಯಲ್ಲಿ ಪಕ್ಷ ಹೆಚ್ಟು ಮತಗಳನ್ನುಗಳಿಸಿದೆ ಎಂದು ಹೇಳಿದರು. +ಭೂತ್‌ ಮಟ್ಟದ ಸಮಿತಿ ರಚನೆ ಮಾಡುವಾಗ ಎಲ್ಲಾ ಜಾತಿಯವರು ಮತ್ತು ಮಹಿಳೆಯರನ್ನು ಹಿರಿಯರನ್ನು ಒಳಗೊಂಡಂತೆ ಪ್ರಾತಿನಿಧ್ಯ ನೀಡಬೇಕು ಪ್ರತಿ ಭೂತ್‌ ಮಟ್ಟದ ಸದಸ್ಯರಿಂದಲ್ಲೂ ಸದಸ್ಯತ್ವ ಶುಲ್ಕ ಹತ್ತು ರೂಪಾಯಿ ಪಡೆಯಲೇ ಬೇಕು ಆಗ ಕಾರ್ಯಕರ್ತರಲ್ಲಿ ನಾನು ಶುಲ್ಕ ನೀಡಿ ಸದಸ್ಯ ಆಗಿದ್ದೇನೆ ಎಂಬ ಹೆಮೆಯಿಂದ ಇರುತ್ತಾರೆ ಎಂದು ನುಡಿದರು. +ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ದಲಿತರಿಗೆ ನೀಡುತ್ತಿದ್ದ ಸೌಲಭ್ಯ ಗಳಿಗೂ ಕತ್ತರಿ ಹಾಕುತ್ತಿದೆ ಇದು ದುರ್ದೈವದ ಸಂಗತಿ ಕುಮಾರಸ್ವಾಮಿ ಅವರು ನೀಡಿದ ಪಂಚರತ್ನ ಯೋಜನೆಗಳೇ ಕಾಂಗ್ರೆಸ್‌‍ ನ ಗ್ಯಾರೆಂಟಿಗಳಿಗಿಂತ ಚೆನ್ನಾಗಿದ್ದವು. ರೈತರಿಗೆನಾವು ಏನನ್ನಾದರೂ ಕೊಟ್ಟರೆ, ರೈತರು ಮರಳಿ ಮತ್ತೆ ನಮಗೆ ನೀಡುತ್ತಾರೆ ಎಂದು ತಿಳಿಸಿದರು. ಮಾಜಿ ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌‍.ಶಿವಶಂಕರ್‌ ಮಾತನಾಡಿ, ಪಕ್ಷದಲ್ಲಿ ಕಾರ್ಯಕರ್ತರಿಗಿಂತ ನಾಯಕರೇ ಹೆಚ್ಚು. ಅದ್ದರಿಂದ ಇಷ್ಟು ದಿನ ಸದಸ್ಯತ್ವ ನೋಂದಣಿ ಸಾಧ್ಯವಾಗುತ್ತಿರಲಿಲ್ಲ. ಈಗ ಕಡ್ಡಾಯವಾಗಿ ಈ ಬಾರಿ ಸದಸ್ಯತ್ವ ನೋಂದಣಿ ಮಾಡಿಸಲೇಬೇಕು ಎಂದರು. +ಜಿಲ್ಲಾಧ್ಯಕ್ಷ ಆರ್‌.ಸಿ.ಅಂಜನಪ್ಪ ಮಾತನಾಡಿ, ಪಕ್ಷ ಮುಂದಿನ ದಿನದಲ್ಲಿ ರಾಜ್ಯದಲ್ಲಿ ನೂರು ಸೀಟು ಪಡೆದು ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕು, ಆದ್ದರಿಂದ ಕುಮಾರಸ್ವಾಮಿ ಮತ್ತು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಹತ್ತುಸಾವಿರ ಸದಸ್ಯರು, 500 ಮಂಚೂಣಿ ಕಾರ್ಯಕರ್ತರನ್ನು ಗುರುತಿಸಿ ನೋಂದಾಯಿಸುವ ಕೆಲಸವನ್ನು ಪಕ್ಷ ಮಾಡುತ್ತದೆ ಎಂದು ಹೇಳಿದರು. +ಮಾಜಿ ಸಚಿವ ಡಿ.ನಾಗರಾಜಯ್ಯ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕರಾದ ತಿಮರಾಯಪ್ಪ, ಸುಧಾಕರ್‌ ಲಾಲ್‌, ವೀರಭದ್ರಪ್ಪ, ಎಚ್‌.ಲಿಂಗಪ್ಪ, ಮಾಜಿ ಜಿಪಂ ಸದಸ್ಯ ತಿಮಾರೆಡ್ಡಿ, ಗಂಗಣ್ಣ, ಪಾಲಿಕೆ ಮಾಜಿ ಉಪಮೇಯರ್‌ ನಾಗರಾಜ್‌, ಸದಸ್ಯರಾದ ಮಂಜುನಾಥ್‌, ಮನು, ಯೋಗೀಶ್‌, ರಾಮಚಂದ್ರಯ್ಯ, ಮಹಿಳಾ ಘಟಕದ ಲಕ್ಷ್ಮಮ, ರೇಖಾ, ಮುಖಂಡರಾದ ಉಗ್ರೇಶ್‌, ಭದ್ರಣ್ಣ, ಜಹಂಗೀರ್‌ ರವೀಶ್‌, ಕೊಂಡವಾಡಿ ಚಂದ್ರಶೇಖರ್‌ ಸೇರಿದಂತೆ ಮತ್ತಿತರರು ಇದ್ದರು. \ No newline at end of file diff --git a/eesanje/url_46_29_2.txt b/eesanje/url_46_29_2.txt new file mode 100644 index 0000000000000000000000000000000000000000..23164326fdf86dc77b8c2851a25f155cf6119a7c --- /dev/null +++ b/eesanje/url_46_29_2.txt @@ -0,0 +1,7 @@ +ಕೋವಿಡ್ ತನಿಖಾ ಆಯೋಗದ ಅವಧಿ ವಿಸ್ತರಣೆ : ಡಾ.ಜಿ.ಪರಮೇಶ್ವರ್ + +ಬೆಂಗಳೂರು,ಆ.31– ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ತನಿಖಾ ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಯೋಗದ ಕೋರಿಕೆ ಮೇರೆಗೆ ಇನ್ನು ಆರು ತಿಂಗಳು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೋವಿಡ್ ಸಂದರ್ಭದಲ್ಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರ ನೇತೃತ್ವದ ತನಿಖಾ ಆಯೋಗ ರಚಿಸಲಾಗಿತ್ತು. +ಆಯೋಗವು ಮಧ್ಯಂತರ ವರದಿಯನ್ನು ನೀಡಬಹುದಷ್ಟೆ. ಆದರೆ ಪೂರ್ಣ ಪ್ರಮಾಣದ ವರದಿ ನೀಡಲು ಇನ್ನು ಸಮಯ ಅವಕಾಶವಿದೆ ಎಂದು ಹೇಳಿದರು.ಬಳ್ಳಾರಿ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಅವರನ್ನು ಮೊದಲ ಅಥವಾ 2ನೇ ಆರೋಪಿ ಮಾಡಬೇಕೆಂಬುದನ್ನು ತನಿಖಾ ಅಧಿಕಾರಿಗಳು ನಿರ್ಧರಿಸುತ್ತಾರೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಫೋನ್ ಕಾಲ್, ವಿಡಿಯೋ ಕಾಲ್ ಮಾಡಿರುವ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. +ಈ ಬಗ್ಗೆ ತನಿಖೆ ನಡೆಸಲು ಸಿಸಿಬಿ ಮುಖ್ಯಸ್ಥರಾದ ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ತನಿಖೆ ನಡೆಸಿ ಅವರು ವರದಿ ನೀಡಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ನಿವೇಶನ ಪಡೆಯಲು ಪ್ರಭಾವ ಬೀರಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಈಗಾಗಲೇ ನಾವೆಲ್ಲ ಹೇಳಿದ್ದೇವೆ. ಹೀಗಾಗಿ ಊಹಾಪೋಹಕ್ಕೆ ಅವಕಾಶವಿಲ್ಲ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_29_3.txt b/eesanje/url_46_29_3.txt new file mode 100644 index 0000000000000000000000000000000000000000..b3706956d88d661034862aa1c6057a10d12ace24 --- /dev/null +++ b/eesanje/url_46_29_3.txt @@ -0,0 +1,12 @@ +ಪ್ರತಿಪಕ್ಷದವರ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಆಗ್ರಹಿಸಿ ಕಾಂಗ್ರೆಸ್ ರಾಜಭವನ ಚಲೋ + +ಬೆಂಗಳೂರು, ಆ.31-ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಜಿ.ಜನಾರ್ಧ ನರೆಡ್ಡಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ರಾಜ್ಯಪಾಲರನ್ನು ಆಗ್ರಹಿಸಿ ಕಾಂಗ್ರೆಸ್ ಇಂದು ರಾಜಭವನ ಚಲೋ ಪ್ರತಿಭಟನೆ ನಡೆಸಿತು. +ವಿಧಾನಸೌಧ ಮತ್ತು ವಿಕಾಸಸೌಧದ ನಡುವೆ ಇರುವ ಮಹಾತಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ರಾಜಭವನದವರೆಗೂ ಪಾದಯಾತ್ರೆ ನಡೆಸಿದರು. ಆನಂತರ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಸಂಬಂಧ ಮನವಿಪತ್ರವನ್ನು ಸಲ್ಲಿಸಲಾಯಿತು. +ಮಹಾತಗಾಂಧೀಜಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ಸಚಿವರಾದ ಡಾ.ಜಿ.ಪರಮೇಶ್ವರ, ಹೆಚ್.ಕೆ.ಪಾಟೀಲ್, ಕೃಷ್ಣಭೈರೇಗೌಡ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್ ಖಾನ್,ಈಶ್ವರ್ ಖಂಡ್ರೆ, ಬೈರತಿ ಸುರೇಶ್, ಡಿ.ಸುಧಾಕರ್, ಡಾ. ಎಂ.ಸಿ.ಸುಧಾಕರ್, ಎಸ್.ಎಸ್.ಮಲ್ಲಿಕಾರ್ಜುನ್, ಡಾ.ಶರಣ ಪ್ರಕಾಶ್ ಪಾಟೀಲ್ ಸೇರಿಂದತೆ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು , ಮಾಜಿ ಸಂಸದರು, ಮಾಜಿ ಶಾಸಕರು ಕೆಲಕಾಲ ಪ್ರತಿಭಟನೆ ನಡೆಸಿದರು. +ಈ ಸಂದರ್ಭದಲ್ಲಿ ಧರಣಿನಿರತರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಪ್ರಜಾಪ್ರಭುತ್ವ ಬಜಾವೋ ಸೇರಿದಂತೆ ಹಲವು ರೀತಿಯ ಫಲಕಗಳನ್ನು ಪ್ರದರ್ಶಿಸಿದರು.ಪ್ರಜಾ ತಾಂತ್ರಿಕವಾಗಿ ಚುನಾಯಿತರಾದ ಸರ್ಕಾರಗಳನ್ನು ಅಪ್ರಜಾ ತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನ ಷಡ್ಯಂತ್ರ ನಡೆಸುತ್ತಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು. +ಅಲ್ಲದೆ ತನಿಖೆಗೆ ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವುದಾಗಿ ಕಾಂಗ್ರೆಸ್ ನಾಯಕರು ಹೇಳಿದರು. +ರಾಜ್ಯಪಾಲರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ತನಿಖೆ ನಡೆದು ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿರುವ ಹಲವು ಪ್ರಕರಣಗಳಿಗೆ ರಾಜ್ಯಪಾಲರು ಅನುಮತಿಯನ್ನೇ ಕೊಟ್ಟಿಲ್ಲ. ಸಾಯಿ ವೆಂಕಟೇಶ್ವರ್ ಮಿನರಲ್ಸ್ ಗೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ಅವರ ಮೇಲಿರುವ ಆರೋಪದ ವಿರುದ್ಧ, ಇನ್ವೆಸ್ಟ್ ಕರ್ನಾಟಕ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮುರುಗೇಶ್ ನಿರಾಣಿ ವಿರುದ್ಧ, ಮೊಟ್ಟೆ ಖರೀದಿಯ ಟೆಂಡರ್ ಪ್ರಕರಣದಲ್ಲಿನ ಅವ್ಯವಹಾರದ ಆರೋಪದಲ್ಲಿ ಶಶಿಕಲಾ ಜೊಲ್ಲೆ ವಿರುದ್ಧ ಹಾಗೂ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಲಾಗಿದ್ದರೂ ರಾಜ್ಯಪಾಲರು ಈತನಕ ನೀಡಿಲ್ಲ ಎಂದು ಪ್ರತಿಭಟನಾನಿರತ ಕಾಂಗ್ರೆಸ್ ನಾಯಕರು ಆರೋಪಿಸಿದರು. +ಅಭಿಯೋಜನೆಗೆ ಕೋರಿ ವರ್ಷವಾಗಿದ್ದರೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿಲ್ಲ. ಅಭಿಯೋಜನೆಗೆ ಬಾಕಿ ಇರುವ ಮನವಿಗಳ ವಿಚಾರದಲ್ಲೂ ರಾಜ್ಯಪಾಲರು ಕೂಡಲೇ ತೀರ್ಮಾನ ಕೈಗೊಳ್ಳಬೇಕು ಎಂದು ಧರಣಿ ನಿರತ ಕಾಂಗ್ರೆಸ್ ನಾಯಕರು ಆಗ್ರಹಿಸಿದರು. +ಅಭಿಯೋಜನೆ ನೀಡುವ ವಿಚಾರದಲ್ಲಿ ರಾಜ್ಯಪಾಲರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪ ಮಾಡಿದ ಕಾಂಗ್ರೆಸ್ ನಾಯಕರು, ಕಳೆದ ವರ್ಷವೇ ಹೆಚ್.ಡಿ.ಕುಮಾರಸ್ವಾಮಿ, ಜನಾರ್ಧನರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಅಭಿಯೋಜನೆಗೆ ಅನುಮತಿ ಕೋರಿದ್ದರೂ ಇದುವರೆಗೂ ಏಕೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ನೀಡಿರುವ ಅನುಮತಿಯನ್ನು ಹಿಂದಕ್ಕೆ ಪಡೆಯುವಂತೆ ರಾಜ್ಯಪಾಲರ ಮೇಲೆ ಒಂದೆಡೆ ಒತ್ತಡ ತರುವ ತಂತ್ರವನ್ನು ಅನುಸರಿಸುತ್ತಿದ್ದ ಕಾಂಗ್ರೆಸ್ ಮತ್ತೊಂದೆಡೆ ಕಾನೂನು ಹೋರಾಟವನ್ನು ಮುಂದುವರೆಸಿದೆ. +ಈ ನಡುವೆ ರಾಜ್ಯಪಾಲರು ತಮ ವಿರುದ್ಧ ನೀಡಿರುವ ಅಭಿಯೋಜನೆ ರದ್ದುಗೊಳಿಸುವಂತೆ ಕೋರಿ ಸಿದ್ದರಾಮಯ್ಯ ಅವರು ಈಗಾಗಲೇ ಹೈಕೋರ್ಟ್ ಮೊರೆ ಹೋಗಿದ್ದಾರೆ. \ No newline at end of file diff --git a/eesanje/url_46_29_4.txt b/eesanje/url_46_29_4.txt new file mode 100644 index 0000000000000000000000000000000000000000..c1fb06c8a2152e7405e34e7c7f3053d195212b2d --- /dev/null +++ b/eesanje/url_46_29_4.txt @@ -0,0 +1,10 @@ +ರಾಜ್ಯಪಾಲರು ನ್ಯಾಯ ಕೊಡುವ ಭರವಸೆ ನೀಡಿದ್ದಾರೆ : ಡಿಕೆಶಿ + : +ಬೆಂಗಳೂರು,ಆ.31-ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ನಮ ಮನವಿಯನ್ನು ಆಲಿಸಿದ್ದು, ನ್ಯಾಯ ಕೊಡುವ ಭರವಸೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. +ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಯೊಬ್ಬರ ಹಾಗೂ ಮೂವರು ಮಾಜಿ ಸಚಿವರ ವಿರುದ್ಧ ಅಭಿಯೋಜನೆ ಕೋರಿ ಬಂದಿರುವ ಮನವಿಗಳಿಗೆ ಕಾನೂನು ಬದ್ದವಾಗಿ, ನ್ಯಾಯಬದ್ಧವಾಗಿ ಸಮಾನತೆಯಿಂದ ಅನುಮತಿ ನೀಡಬೇಕೆಂದು ವಿನಂತಿಸಿದ್ದೇವೆ ಎಂದರು. +ರಾಜಭವನದಲ್ಲಿ ಅಂತಹ ಯಾವುದೇ ಪ್ರಕರಣಗಳು ಬಾಕಿ ಇಲ್ಲ. ವಿಲೇವಾರಿ ಮಾಡಿರುವುದಾಗಿ ರಾಜ್ಯಪಾಲರು ಹೇಳಿದ್ದಾರೆ. ಅವರು ಸ್ಪಷ್ಟನೆ ಕೇಳಿರಬಹುದು. ಈ ಬಗ್ಗೆ ನಾವು ಕೂಡ ಮರುಪರಿಶೀಲನೆ ಮಾಡುತ್ತೇವೆ. ರಾಜ್ಯಪಾಲರು ಅನುಮತಿ ಕೊಡಬೇಕಾಗುತ್ತದೆ. ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ರಾಜಭವನ ಪಕ್ಷಾತೀತವಾಗಿ ನಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ನಮ ಕರ್ತವ್ಯವನ್ನು ನಾವು ಮಾಡಿದ್ದೇವೆ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಹೋರಾಟ ಮಾಡಿದ್ದೇವೆ. ನಮ ಕೋರಿಕೆಗೆ ಸಂಬಂಧಿಸಿದಂತೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸದೆ ಎಂದರು. +ಮಾಜಿ ಮುಖ್ಯಮಂತ್ರಿಯೊಬ್ಬರ ವಿಚಾರದಲ್ಲಿ ಎಸ್ಐಟಿ ಹಾಗೂ ಲೋಕಾಯುಕ್ತದಿಂದ ತನಿಖೆಯಾಗಿದ್ದು, ಚಾರ್ಜ್ಶೀಟ್ ಸಲ್ಲಿಸಲು ಅಭಿಯೋಜನೆಗೆ ರಾಜ್ಯಪಾಲರ ಅನುಮತಿಯನ್ನು ಕೋರಲಾಗಿದೆ. ಅದೇ ರೀತಿ ಮೂವರು ಸಚಿವರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅಭಿಯೋಜನೆಗೆ ಅನುಮತಿ ಕೋರಲಾಗಿದೆ. ಆದರೂ ಈತನಕ ನೀಡಿಲ್ಲ ಎಂದು ಅವರು ಹೇಳಿದರು. +ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರದಲ್ಲಿ ಯಾರೊಬ್ಬರು ಅರ್ಜಿ ಕೊಟ್ಟ ತಕ್ಷಣ ಶೋಕಾಸ್ ನೀಡಿ ಅನಂತರ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಅರ್ಜಿಯನ್ನು ತಿರಸ್ಕಾರ ಮಾಡುವಂತೆ ಸಚಿವ ಸಂಪುಟ ಸಭೆ ಸಲಹೆ ಮಾಡಿತ್ತು. ಅಲ್ಲದೆ ಯಾವುದೇ ತನಿಖಾ ವರದಿ ಸಿದ್ದರಾಮಯ್ಯನವರ ಪ್ರಕರಣದಲ್ಲಿ ಇರಲಿಲ್ಲ . ಈ ಪ್ರಕರಣವನ್ನು ನಾವು ರಾಜ್ಯಪಾಲರ ಬಳಿ ಪ್ರಸ್ತಾಪಿಸಿಲ್ಲ. ಏಕೆಂದರೆ ಈಗಾಗಲೇ ಈ ಪ್ರಕರಣ ನ್ಯಾಯಾಲಯದಲ್ಲಿದ್ದು, ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. +ನಮ ಉದ್ದೇಶ ರಾಜಭವನ ರಾಜಕೀಯ ಕಚೇರಿ ಆಗಬಾರದು. ಅಧಿಕಾರದಲ್ಲಿರುವ ನಾವ್ಯಾರು ಶಾಶ್ವತವಲ್ಲ. ಸಂವಿಧಾನಬದ್ದವಾಗಿ ರಚನೆಯಾಗಿರುವ ರಾಜ್ಯಪಾಲರ ಸ್ಥಾನ ನ್ಯಾಯಾಲಯದ ಸ್ಥಾನದಲ್ಲಿದೆ. ರಾಜಭವನ ಸರ್ಕಾರವನ್ನು ರಕ್ಷಿಸುವ ಕೆಲಸ ಮಾಡಬೇಕು. ವಿಧಾನಸಭೆ ಚುನಾವಣೆಯಲ್ಲಿ 136 ಶಾಸಕರನ್ನು ಗೆಲ್ಲಿಸಿ ಜನರು ನಮಗೆ ಜನಾದೇಶ ನೀಡಿದ್ದಾರೆ. ಇಂತಹ ಬಲಿಷ್ಠ ಸರ್ಕಾರವನ್ನು ಅಸ್ಥಿರಗೊಳಿಸುವ ದೊಡ್ಡ ಪ್ರಯತ್ನ ಹಾಗೂ ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು. +ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ನಮ ರಾಜ್ಯ ದೇಶಕ್ಕೆ ಹಾಗೂ ಬೇರೆ ರಾಜ್ಯಗಳಿಗೂ ಸಹಾಯ ಮಾಡುತ್ತಿದೆ. ಇದನ್ನು ಸಹಿಸದೆ ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆ ಮಾಡಬೇಕು, ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಆ ಪ್ರಯತ್ನಕ್ಕೆ ಅವಕಾಶವಾಗಬಾರದು ಎಂದು ರಾಜ್ಯಪಾಲರ ಮನವಿ ಮಾಡಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_29_5.txt b/eesanje/url_46_29_5.txt new file mode 100644 index 0000000000000000000000000000000000000000..809114d1cd42e2acc8d974d2db0616647f543559 --- /dev/null +++ b/eesanje/url_46_29_5.txt @@ -0,0 +1,10 @@ +ಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್ + 4 , : +ಕೋಲಾರ,ಆ.31-ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಅವರು ಅಧಿಕಾರ ಕಳೆದುಕೊಳ್ಳಲಿದ್ದು, ಮುಂದಿನ 15 ವರ್ಷ ರಾಹುಲ್ ಗಾಂಧಿ ಅವರಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. +ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಅವರ ಪತನದ ಕಾಲ ಸನಿಹಿತವಾಗಿದೆ ಎಂದರು. +ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಿಲ್ಲ. ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದರು. +ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು. +ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತಿದ್ದಾರೆ. ಅಧಿಕಾರವಿರಲಿ ಇಲ್ಲದಿರಲಿ ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು. +ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಹೇಳಿದರು. +ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು, +ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷೀದೇವಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು ಮುಂತಾದವರಿದ್ದರು. \ No newline at end of file diff --git a/eesanje/url_46_29_6.txt b/eesanje/url_46_29_6.txt new file mode 100644 index 0000000000000000000000000000000000000000..366c5cd8842879aad85b1d4e66e9c189a0aa8faf --- /dev/null +++ b/eesanje/url_46_29_6.txt @@ -0,0 +1,9 @@ +ಶ್ರಾವಣ ಮಾಸದ ಕಡೇ ಶನಿವಾರ, ರಾಜ್ಯದೆಲ್ಲೆಡೆ ಗೋವಿಂದ ನಾಮಸ್ಮರಣೆ + +ಬೆಂಗಳೂರು, ಆ.31– ಶ್ರಾವಣ ಮಾಸದ ಕಡೇ ಶನಿವಾರದ ಅಂಗವಾಗಿ ರಾಜ್ಯದೆಲ್ಲೆಡೆ ಇಂದು ಗೋವಿಂದ ನಾಮಸ್ಮರಣೆ ಮೊಳಗಿತ್ತು.ಇಂದು ಮುಂಜಾನೆಯಿಂದಲೇ ರಾಜ್ಯದ ವೆಂಕಟೇಶ್ವರ, ಶನಿಮಹಾತ, ಆಂಜನೇಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳು ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. +ಶನಿಶ್ಚರಸ್ವಾಮಿಗೆ ಭಕ್ತರು ಅತ್ಯಂತ ನಿಷ್ಠೆ ಹಾಗೂ ನಿಯಮದಿಂದ ಪೂಜೆ ಸಲ್ಲಿಸುವ ಪದ್ದತಿ ಹಿಂದಿನಿಂದಲೂ ರೂಢಿಸಿಕೊಂಡು ಬಂದಿದ್ದು, ಇಂದು ದೇವಾಲಯಗಳಿಗೆ ತೆರಳಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿದರು. +ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಧುರೆಯ ಶನಿಮಹಾತ ದೇವಾಲಯದಲ್ಲಿ ವಿವಿಧ ಬಗೆಯ ಪುಷ್ಪಗಳಿಂದ ದೇವಾಲಯಗಳನ್ನು ಶೃಂಗರಿಸಿದ್ದು, ಬೆಂಗಳೂರು, ತುಮಕೂರು, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. +ಅದೇ ರೀತಿ ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ಗೆಟ್ ವೃತ್ತದ ಸಮೀಪವಿರುವ ಶ್ರೀ ಶನೇಶ್ವರ ದೇವಾಲಯದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. +ಚಿಕ್ಕಬಳ್ಳಾಪುರ ನಗರದ ಕಂದಾವರ ಪೇಟೆಯಲ್ಲಿರುವ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದೇವರಿಗೆ ಮುತ್ತಿನ ಅಲಂಕಾರ ಹಾಗೂ ವಿವಿಧ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು.ಇಂದು ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದು ಪುನೀತರಾದರು. ಸರದಿ ಸಾಲಿನಲ್ಲೇ ನಿಂತ ಭಕ್ತರು ಗೋವಿಂದ ಗೋವಿಂದ ಎಂಬ ನಾಮಸರಣೆಯೊಂದಿಗೆ ಪೂಜೆ ಸಲ್ಲಿಸಿ ಭಕ್ತಿಪರಕಾಷ್ಠೆ ಮೆರೆದರು. +ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದುಬಂದಿದ್ದು, ಮುಂಜಾನೆ 4 ಗಂಟೆಯಿಂದಲೇ ಸರದಿ ಸಾಲಿನಲ್ಲಿ ಆಗಮಿಸಿ ಇಂದು ವೆಂಕಟರಮಣನ ದರ್ಶನ ಪಡೆದು ಕೃತಾರ್ಥರಾದರು. +ಶ್ರಾವಣ ಮಾಸದಲ್ಲಿ ವೆಂಕಟರಮಣನ ದರ್ಶನ ಪಡೆದು ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬುವುದು ಭಕ್ತರ ನಂಬಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ವಿವಿಧ ದೇವಾಲಯಗಳಿಗೆ ಭಕ್ತರು ಆಗಮಿಸಿ ಹರಕೆಗಳನ್ನು ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_29_7.txt b/eesanje/url_46_29_7.txt new file mode 100644 index 0000000000000000000000000000000000000000..75e6f38d16721735fd4c127d69f774b4aa5df5cf --- /dev/null +++ b/eesanje/url_46_29_7.txt @@ -0,0 +1,15 @@ + : ಸಿಎಂ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ರಾಷ್ಟ್ರಪತಿ ಎಂಟ್ರಿ + ' +ಬೆಂಗಳೂರು,ಆ.31-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿರುವ ರಾಜ್ಯಪಾಲರ ಕ್ರಮದ ವಿರುದ್ಧ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸ್ಪಂದಿಸಿದ್ದು ಸೂಕ್ತ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ. +ಮುಡಾ ಪ್ರಕರಣದಲ್ಲಿ ಟಿ.ಜೆ.ಅಬ್ರಹಾಂ, ಪ್ರದೀಪ್‌ ಕುಮಾರ್‌, ಸ್ನೇಹಮಯಿ ಕೃಷ್ಣ ಅವರುಗಳು ನೀಡಿದ್ದ ದೂರನ್ನು ಪರಿಗಣಿಸಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆ ಹಾಗೂ ತನಿಖೆಗೆ ಪೂರ್ವಾನುಮತಿ ನೀಡಿದ್ದಾರೆ. +ಇದನ್ನು ವಿರೋಧಿಸಿ ರಾಜ್ಯಪಾಲರ ವಿರುದ್ಧ ಆ.19 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆಗಳು ನಡೆದಿದ್ದವು. ಅಂದು ಕಾಂಗ್ರೆಸ್‌‍ ಪಕ್ಷದ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್‌ಬಾಬು ರಾಷ್ಟ್ರಪತಿಯವರಿಗೆ ಇ-ಮೇಲ್‌ ಮೂಲಕ ದೂರು ನೀಡಿದ್ದರು. +ಇದಕ್ಕೆ ಪ್ರತಿಯಾಗಿ ರಾಷ್ಟ್ರಪತಿಯವರ ಅಧೀನ ಕಾರ್ಯದರ್ಶಿ ಪಿ.ಸಿ.ಮೀನಾ ಅವರು ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರನ್ನು ರವಾನಿಸಿದ್ದು, ರಾಷ್ಟ್ರಪತಿಯವರಿಗೆ ಸಲ್ಲಿಕೆಯಾಗಿರುವ ಈ ಅರ್ಜಿಯ ಮೇಲೆ ಕ್ರಮ ತೆಗೆದುಕೊಂಡು ಅರ್ಜಿದಾರರಿಗೆ ನೇರವಾಗಿ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ. +ರಮೇಶ್‌ಬಾಬು ತಮ ದೂರಿನಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ಕ್ರಮವನ್ನು ಅಸಂವಿಧಾನಿಕ ಎಂದು ವಿವರಿಸಿದರು. ಜನರಿಂದ ಚುನಾಯಿತವಾಗಿರುವ ರಾಜ್ಯದ ಕಾಂಗ್ರೆಸ್‌‍ ಸರ್ಕಾರದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮುನ್ನಡೆಸುತ್ತಿದ್ದಾರೆ. ಹಲವಾರು ಜನಪರವಾದ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. +ಇಂತಹ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ರಾಜಕೀಯ ಪ್ರೇರಿತವಾಗಿ ಪ್ರಜಾಸತ್ತಾತಕ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಗಾಳಿಗೆ ತೂರಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಇದು ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಾಗಿದ್ದು, ಜನಾದೇಶವನ್ನು ಅಪಮಾನ ಮಾಡಿದಂತೆ ಎಂದು ದೂರಿದರು. +ಪ್ರಮುಖ ಅಂಶಗಳ ಪೈಕಿ ರಾಜ್ಯಪಾಲರ ನಿರ್ಧಾರ ಕೇಂದ್ರ ಸರ್ಕಾರದ ರಾಜಕೀಯ ಹಿತಾಸಕ್ತಿಯಿಂದ ಪ್ರಭಾವಿತವಾಗಿದೆ. ಎನ್‌ಡಿಎ ಮಿತ್ರಪಕ್ಷಗಳಾಗಿರುವ ಜೆಡಿಎಸ್‌‍ ಮತ್ತು ಬಿಜೆಪಿ ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ರಾಜಕೀಯ ದ್ವೇಷಕ್ಕಾಗಿ ಜನಪರವಾದ ಯೋಜನೆಗಳಿಗೆ ತೊಂದರೆಯುಂಟು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ರ ಸೆಕ್ಷನ್‌ 17ಎ ಪ್ರಕಾರ ಅಭಿಯೋಜನೆಗೆ ಅನುಮತಿ ನೀಡಬೇಕಾದರೆ ಅನುಸರಿಸಬೇಕಾದ ಪ್ರಮಾಣಿತ ಕಾರ್ಯನಿರ್ವಹಣಾ ಪ್ರಕ್ರಿಯೆ(ಎಸ್‌‍ಓಪಿ)ಯನ್ನು ಕೇಂದ್ರ ಸರ್ಕಾರ ನಿರ್ಣಯಿಸಿದೆ. ಅದನ್ನು ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ರಾಜ್ಯಪಾಲರು ಉಲ್ಲಂಘಿಸಿದ್ದಾರೆ ಎಂದು ದೂರಿದರು. +ರಾಜ್ಯಪಾಲರಿಗೆ ಸಲ್ಲಿಕೆಯಾಗಿದ್ದ ದೂರುಗಳಿಗೆ ಸವಿಸ್ತಾರವಾದ ವಿವರಣೆಗಳನ್ನು ಹಾಗೂ ಸ್ಪಷ್ಟನೆಗಳನ್ನು ನೀಡಲಾಗಿತ್ತು. ಅದರ ಹೊರತಾಗಿಯೂ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿದ್ದರು. ನಂತರ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಇದು ಸಂವಿಧಾನದ ಬಾಧ್ಯತೆಯನ್ನು ಉಲ್ಲಂಘಿಸಿದಂತಾಗಿದ್ದು, ರಾಜ್ಯಪಾಲರ ನಿಸ್ಪಕ್ಷಪಾತ ನಡವಳಿಕೆಗೆ ಅಪಚಾರವಾಗಿದೆ ಎಂದು ಕಿಡಿಕಾರಿದರು. +ಮುಖ್ಯಮಂತ್ರಿಯವರ ವಿರುದ್ಧ ದೂರುಗಳು ಆಧಾರರಹಿತ ಎಂದು ರಾಜ್ಯಪಾಲರಿಗೆ ಮನವರಿಕೆಯಾಗಿದ್ದರೂ ಕೂಡ ರಾಜಕೀಯ ಆಧಾರಿತ ದ್ವೇಷದ ಪ್ರಭಾವದಿಂದ ಪೂರ್ವಾನುಮತಿ ನೀಡಿದ್ದಾರೆ. +ಸಿದ್ದರಾಮಯ್ಯ ಅವರ ವಿರುದ್ಧ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ಇತರೆ ರಾಜಕೀಯ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ, ಮುರುಗೇಶ್‌ನಿರಾಣಿ, ಶಶಿಕಲಾ ಜೊಲ್ಲೆ, ಅವರ ವಿರುದ್ಧ ತನಿಖೆ ನಡೆದು ಅಭಿಯೋಜನೆಗೆ ಪೂರ್ವಾನುಮತಿ ಕೇಳಿದ್ದರೂ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ. +ಕಾಂಗ್ರೆಸ್‌‍ ಪಕ್ಷಕ್ಕೆ ಜನ ಮತ ಹಾಕಿರುವುದನ್ನು ಮತ್ತೆ ಅದರ ನಂತರ ರಚನೆಯಾದ ಸರ್ಕಾರ ಜಾರಿಗೊಳಿಸಿದ ಪಂಚಖಾತ್ರಿ ಯೋಜನೆಗಳನ್ನು ಬಿಜೆಪಿಯಿಂದ ಸಹಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಅನ್ಯಮಾರ್ಗದ ಮೂಲಕ ಪ್ರಜಾಪ್ರಭುತ್ವದ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗಿದೆ. ಈ ಹಿಂದೆ ಉತ್ತರಕಾಂಡ್‌, ದೆಹಲಿ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗಿತ್ತು ಎಂದು ದೂರಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಲಾಗಿರುವ ಅಭಿಯೋಜನೆ ಪೂರ್ವಾನುಮತಿಯನ್ನು ಹಿಂಪಡೆಯಬೇಕು. ರಾಜಭವನವನ್ನು ಸಾಂವಿಧಾನಿಕ ಹಾಗೂ ನಿಸ್ಪಕ್ಷಪಾತವಾಗಿ ವರ್ತಿಸುವ ಕಚೇರಿಯನ್ನಾಗಿ ಖಾತ್ರಿ ಪಡಿಸಬೇಕು. ಒಕ್ಕೂಟ ವ್ಯವಸ್ಥೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ರಚಿಸಬೇಕು. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳಿಗೆ ಕಡಿವಾಣ ಹಾಕಬೇಕು ಎಂದು ರಮೇಶ್‌ಬಾಬು ದೂರಿನಲ್ಲಿ ವಿವರಿಸಿದರು. +ಈ ದೂರನ್ನು ರಾಷ್ಟ್ರಪತಿಯವರು ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿಕೊಟ್ಟಿದ್ದು, ಸೂಕ್ತ ಕ್ರಮ ಕೈಗೊಂಡು ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_29_8.txt b/eesanje/url_46_29_8.txt new file mode 100644 index 0000000000000000000000000000000000000000..aa846619425d9d31db85cb0530251681b33c9aad --- /dev/null +++ b/eesanje/url_46_29_8.txt @@ -0,0 +1,7 @@ +ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿ ಪೂಜಿಸುವಂತೆ ಸಚಿವ ಈಶ್ವರ ಖಂಡ್ರೆ ಮನವಿ + +ಬೆಂಗಳೂರು,ಆ.31-ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. +ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ ಹೊಣೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ. ಈ ಬಾರಿಯ ಗಣೇಶೋತ್ಸವವನ್ನು ಪರಿಸರ ಸ್ನೇಹಿ ಮಾಡೋಣ. ಪ್ರಕೃತಿ ವಿಕೋಪ ನಿವಾರಕ – ನಮ ಪರಿಸರ ವಿನಾಯಕನನ್ನು – ಬಣ್ಣ ರಹಿತ ಮಣ್ಣಿನ ಮೂರ್ತಿಗಳ ರೂಪದಲ್ಲಿ ಪೂಜಿಸೋಣ ಎಂದು ಅವರು ಸಂದೇಶ ನೀಡಿದ್ದಾರೆ. +ಸಂಕಲ್ಪ:ಜಲಚರಗಳ ಸಾವಿಗೆ ಕಾರಣವಾಗುವ, ಜಲ ಮೂಲಗಳನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣೇಶ ಮೂರ್ತಿ ಪೂಜೆ ಮಾಡದೆ, ಸಣ್ಣ ಮಣ್ಣಿನ ಪರಿಸರ ಸ್ನೇಹಿ ಗಣಪನನ್ನೇ ತಂದು ಪೂಜಿಸಿ, ಮನೆಯಲ್ಲೇ ವಿಸರ್ಜಿಸಿ ಆ ನೀರನ್ನು ಮರ -ಗಿಡಗಳಿಗೆ ಹಾಕುತ್ತೇನೆ ಎಂದು ಸಂಕಲ್ಪ ಮಾಡೋಣ ಎಂದು ಅವರು ವಿನಂತಿಸಿದ್ದಾರೆ. +ಹಬ್ಬದ ಸಂಭ್ರಮದಲ್ಲಿ, ಗಣೇಶನ ಮೆರವಣಿಗೆಯ ವೇಳೆ ಹಸಿರು ಪಟಾಕಿಯನ್ನಷ್ಟೇ ಹಚ್ಚಬೇಕು. ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕ ಬಳಸಬೇಕು ಜೊತೆಗೆ ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಬೇಕು ಎಂದು ಅವರು ನಾಡಿನ ಜನತೆಗೆ ಮನವಿ ಮಾಡಿದ್ದಾರೆ. +ಮುಚ್ಚಳಿಕೆ :ಎಲ್ಲ ಗಣೇಶೋತ್ಸವ ಸಮಿತಿಗಳಿಂದ ಮಣ್ಣಿನ ಗಣೇಶ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಪೆಂಡಾಲ್‌ ಗೆ ಅನುಮತಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_29_9.txt b/eesanje/url_46_29_9.txt new file mode 100644 index 0000000000000000000000000000000000000000..62ea14b96cdbd643b4988024c87e896969f46b6e --- /dev/null +++ b/eesanje/url_46_29_9.txt @@ -0,0 +1,5 @@ +ಹಬ್ಬಕ್ಕೆ ಖಾಸಗಿ ಬಸ್‌ಗಳು ಪ್ರಯಾಣ ದರ ಹೆಚ್ಚಿಸಿದರೆ ಪರವಾನಗಿ ರದ್ದು :ರಾಮಲಿಂಗಾರೆಡ್ಡಿ +ಬೆಂಗಳೂರು,ಆ.30- ಗೌರಿ-ಗಣೇಶ ಸೇರಿದಂತೆ ಇತರ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣದರವನ್ನು ಹೆಚ್ಚಳ ಮಾಡಿದರೆ ಖಾಸಗಿ ಬಸ್‌‍ಗಳ ರಹದಾರಿಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಮಾರ್ಗದರ್ಶನ ನೀಡಿರುವ ಸಚಿವರು, ಖಾಸಗಿ ಬಸ್‌‍ಗಳ ಪ್ರಯಾಣದರದಲ್ಲಿ ನಿಗಾ ವಹಿಸುವಂತೆ ತಾಕೀತು ಮಾಡಿದ್ದಾರೆ. +ಸಾಮಾನ್ಯವಾಗಿ ಖಾಸಗಿ ಬಸ್‌‍ಗಳು ಗೌರಿ-ಗಣೇಶ, ಯುಗಾದಿ, ನಾಗರಪಂಚಮಿ, ದೀಪಾವಳಿ, ಆಯುಧಪೂಜೆಯಂತಹ ಸಂದರ್ಭಗಳಲ್ಲಿಬಸ್‌‍ ಪ್ರಯಾಣ ದರಗಳನ್ನು ಮೂರರಿಂದ ನಾಲ್ಕು ಪಟ್ಟು ಏರಿಕೆ ಮಾಡಿ ಹಗಲು ದರೋಡೆಗಿಳಿಯುತ್ತವೆ. 15 ದಿನಕ್ಕೂ ಮೊದಲೇ ಟಿಕೆಟ್‌ ಬುಕ್ಕಿಂಗ್‌ ದರ ಏಕಾಏಕಿ ಹೆಚ್ಚಳವಾಗಿರುತ್ತದೆ. ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ದೂರದೂರುಗಳಿಗೆ ಪ್ರಯಾಣಿಸುವವರು ಖಾಸಗಿ ಬಸ್‌‍ಗಳ ಹಗಲು ದರೋಡೆಯಿಂದ ಚಡಪಡಿಕೆಗೊಳಗಾಗುವುದು ಸಾಮಾನ್ಯ. +ಈ ಹಿನ್ನೆಲೆಯಲ್ಲಿ ಈ ಬಾರಿ ಎಚ್ಚೆತ್ತುಕೊಂಡಿರುವ ರಾಜ್ಯಸರ್ಕಾರ ವಾರದ ಮೊದಲೇ ಕಟ್ಟುನಿಟ್ಟಿನ ಸೂಚನೆಗಳನ್ನು ರವಾನಿಸಿದೆ.ಈ ಹಿಂದಿನ ಸಾಮಾನ್ಯ ದರಕ್ಕಿಂತಲೂ ಅಸಾಮಾನ್ಯವಾಗಿ ಪ್ರಯಾಣದರ ಹೆಚ್ಚಳವಾದರೆ ಸದರಿ ಖಾಸಗಿ ಬಸ್‌‍ಗಳ ಮಾಲಿಕರಿಗೆ ನೋಟೀಸ್‌‍ ಕೊಟ್ಟು ವಿಚಾರಣೆ ನಡೆಸುವಂತೆ ದುರುದ್ದೇಶಪೂರಿತವಾಗಿ ಅಥವಾ ನಿಯಮ ಮೀರಿ ಲಾಭದ ಆಸೆಯಿಂದ ಪ್ರಯಾಣ ದರ ಹೆಚ್ಚಳ ಮಾಡಿದರೆ ಅಂತಹ ಬಸ್‌‍ಗಳ ರಹದಾರಿ(ಪರ್ಮಿಟ್‌)ಯನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. +ಖಾಸಗಿ ಬಸ್‌‍ಗಳ ಟಿಕೆಟ್‌ ಬುಕ್ಕಿಂಗ್‌, ಆನ್‌ಲೈನ್‌ ಬುಕ್ಕಿಂಗ್‌ ಮೇಲೆ ನಿಗಾ ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_2_1.txt b/eesanje/url_46_2_1.txt new file mode 100644 index 0000000000000000000000000000000000000000..302bce1772cf6abdd5ea6c506138b3bad2d50fb6 --- /dev/null +++ b/eesanje/url_46_2_1.txt @@ -0,0 +1,9 @@ +ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಸಾವರ್ಕರ್‌ ಬಳಕೆ : ವಿಜಯೇಂದ್ರ + ' : +ಬೆಂಗಳೂರು, ಅ.4-ಮುಡಾ ಹಗರಣದಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್‌‍ ಸರ್ಕಾರ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್‌ ಸಾವರ್ಕರ್ ಅವರನ್ನು ಗುರಿಯಾಗಿಸಿಕೊಂಡಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ. +ಕರ್ನಾಟಕ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸಾವರ್ಕರ್‌ ಮಾಂಸ ತಿನ್ನುತ್ತಿದ್ದರು ಮತ್ತು ಗೋಹತ್ಯೆಯನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. +ಇದು ನಮ ರಾಷ್ಟ್ರನಾಯಕರಿಗೆ ಮಾಡಿದ ದ್ರೋಹ! ಅಧಿಕಾರದ ದುರಾ ಸೆಯಿಂದ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರವು ಭಾರತದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟ ದೇಶಭಕ್ತ ವೀರ್‌ ಸಾವರ್ಕರ್‌ ಅವರನ್ನು ನಾಚಿಕೆಗೇಡಿನ ರೀತಿಯಲ್ಲಿ ಗುರಿಯಾಗಿಸಿದೆ – ಕೇವಲ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು. +ಮುಡಾಸ್ಕಾಮ್‌ನಲ್ಲಿನ ಅವರ ಭ್ರಷ್ಟಾಚಾರದಿಂದ ಸಾರ್ವಜನಿಕರನ್ನು ದಾರಿತಪ್ಪಿಸುವ ಈ ಹತಾಶ ತಂತ್ರವು ಸ್ವೀಕಾರಾರ್ಹವಲ್ಲ. ಕಾಂಗ್ರೆಸ್‌‍ನ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.ಇದು ಕೇವಲ ಸಾವರ್ಕರ್‌ ಮೇಲಿನ ದಾಳಿಯಲ್ಲ, ಆದರೆ ನಮ ರಾಷ್ಟ್ರದ ತ್ಯಾಗವನ್ನು ಗೌರವಿಸುವ ಪ್ರತಿಯೊಬ್ಬ ಭಾರತೀಯನಿಗೆ ಅವಮಾನವಾಗಿದೆ. +ವೀರ್‌ ಸಾವರ್ಕರ್‌ ಸ್ವತಃ ಹೇಳಿದಂತೆ, ಸ್ವಾತಂತ್ರ್ಯವನ್ನು ಎಂದಿಗೂ ನೀಡಲಾಗುವುದಿಲ್ಲ, ಅದನ್ನು ಯಾವಾಗಲೂ ತೆಗೆದುಕೊಳ್ಳಲಾಗುತ್ತದೆ. ಯಾವುದೇ ಸುಳ್ಳು ಅಥವಾ ಗೊಂದಲಗಳು ಸತ್ಯವನ್ನು ಮರೆಮಾಚುವುದಿಲ್ಲ ಮತ್ತು ನಿಮ ಭ್ರಷ್ಟ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವವರೆಗೆ ನಾವು ಹೋರಾಡುತ್ತೇವೆ ಎಂದು ಹೇಳಿದರು. +ಚಿತ್ಪಾವನ ಬ್ರಾಹಣರಾಗಿದ್ದ ಸಾವರ್ಕರ್‌ ಮಾಂಸಾಹಾರ ಸೇವಿಸುತ್ತಿದ್ದರು, ಮಾಂಸಾಹಾರ ಸೇವಿಸುತ್ತಿದ್ದರು ಮತ್ತು ಗೋಹತ್ಯೆಗೆ ವಿರೋಧವಿರಲಿಲ್ಲ, ಅವರು ಒಂದು ರೀತಿಯಲ್ಲಿ ಆಧುನಿಕರಾಗಿದ್ದರು ಎಂದು ಸಚಿವ ಗುಂಡೂರಾವ್‌ ಹೇಳಿದ್ದರು. +ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಬಿಎಂ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಸೆ.27ರಂದು ಎಫ್‌ಐಆರ್‌ ದಾಖಲಿಸಿದ್ದಾರೆ.ಮುಡಾದಿಂದ ಅವರ ಪತ್ನಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ವಿರುದ್ಧ ಪೊಲೀಸರು ಎಫ್‌ಐಆರ್‌ಗೆ ಸಮಾನವಾದ ಎನ್‌ಫೋರ್ಸ್‌ಮೆಂಟ್‌ ಕೇಸ್‌‍ ಮಾಹಿತಿ ವರದಿಯನ್ನು (ಇಸಿಐಆರ್‌) ಇಡಿ ದಾಖಲಿಸಿದ್ದಾರೆ. \ No newline at end of file diff --git a/eesanje/url_46_2_10.txt b/eesanje/url_46_2_10.txt new file mode 100644 index 0000000000000000000000000000000000000000..a4ee22aca546ac191b6f6031435c5174a3056278 --- /dev/null +++ b/eesanje/url_46_2_10.txt @@ -0,0 +1,7 @@ +ದೋಸ್ತಿ ನಾಯಕರಿಗೆ ಜಿಟಿಡಿ ಟಾಂಗ್ + +ಮೈಸೂರು,ಅ.3– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್‌‍ ದೋಸ್ತಿ ನಾಯಕರಿಗೆ ಶಾಸಕ ಹಾಗೂ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಟಾಂಗ್‌ ಕೊಟ್ಟಿದ್ದಾರೆ. +ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ.ರಾಜೀನಾಮೆ ಕೊಡೋದೆ. ಆದರೆ ಎಫ್‌ಐಆರ್‌ ಆಗಿರೋ ಎಲ್ಲಾ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯೂ ಕೊಡಲಿ ಎಂದು ಹೇಳುವ ಮೂಲಕ ಸ್ವಪಕ್ಷದ ನಾಯಕ ಕುಮಾರಸ್ವಾಮಿಗೆ ಟಾಂಗ್‌ ಕೊಟ್ಟರು. +ಸಿಎಂ ಪರ ಬ್ಯಾಟ್‌ ಬೀಸಿದ ಜೆಡಿಎಸ್‌‍ ಶಾಸಕ ಜಿ.ಟಿ.ದೇವೇಗೌಡ, ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ? ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ? ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ ? ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ. +ಒಂದು ಎಫ್‌ಐಆರ್‌ ನಾ ಎಷ್ಟು ದಿನ ತೋರಿಸುತ್ತಿರಾ? ಯಾರ ಯಾರ ಮೇಲೆ ಎಫ್‌ ಐ ಆರ್‌ ಆಗಿದೆ ಅವರೆಲ್ಲರೂ ರಾಜೀನಾಮೆ ಕೊಡಿ ಎಂದು ಸವಾಲು ಹಾಕಿದರು. +ಶಾಸಕ ಜಿ.ಟಿ.ದೇವೇಗೌಡ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌‍ ಸಚಿವರು ಶಾಸಕರು ಫಿದಾ ಆದರು. ಭಾಷಣ ಮುಗಿಸಿ ಬಂದ ಜಿ.ಟಿ.ದೇವೇಗೌಡರಿಗೆ ಶಾಸಕರಾದ ರಮೇಶ್‌ ಬಂಡೀಸಿದ್ದೇಗೌಡ ತನ್ವೀರ್‌ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರು. ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌, ವೆಂಕಟೇಶ್‌ ಹಸ್ತಲಾಘವ ಮಾಡಿ ಅಭಿನಂದನೆ ಸಲ್ಲಿಸಿದರು. diff --git a/eesanje/url_46_2_11.txt b/eesanje/url_46_2_11.txt new file mode 100644 index 0000000000000000000000000000000000000000..ca08a8714f7ab5b1ebbe431e3cd71b3ffbd3d143 --- /dev/null +++ b/eesanje/url_46_2_11.txt @@ -0,0 +1,10 @@ +ಕರ್ನಾಟಕದಲ್ಲಿ ಪಾಕಿಗಳು : ದಾವಣಗೆರೆ ಅಲ್ತಾಫ್‌ ಜೊತೆ ಮದುವೆಯಾಗಿದ್ದ ಪಾಕ್‌ ಮಹಿಳೆ + +ದಾವಣಗೆರೆ,ಅ.3-ಬೆಂಗಳೂರಿನಲ್ಲಿ ಪಾಕ್‌ ಪ್ರಜೆ ಸೇರಿ ಇಬ್ಬರ ಬಂಧನದ ಬೆನ್ನಲ್ಲೇ ಪಾಕಿಸ್ತಾನಿ ಮಹಿಳೆಯೊಬ್ಬರು ರಾಜ್ಯದ ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದ್ದು ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್‌ ಎಂಬಾತನನ್ನು ಕಳೆದ 4 ವರ್ಷಗಳ ಹಿಂದೆ ವಿವಾಹವಾಗಿರುವುದು ತನಿಖೆಯಿಂದ ತಿಳಿದುಬಂದಿದೆ. +ನಗರದ ಶಿವಕುಮಾರ ಸ್ವಾಮಿ ಬಡಾವಣೆ 1ನೇ ಹಂತದಲ್ಲಿ ವಾಸವಾಗಿರುವ ಆರೋಗ್ಯ ಇಲಾಖೆ ನಿವೃತ್ತ ನೌಕರ ಖಲಂದರ್‌ ಎಂಬವರ ಮೊದಲ ಮಗ ಅಲ್ತಾಫ್‌ನನ್ನು ಫಾತಿಮಾ ಮದುವೆಯಾಗಿದ್ದಾಳೆ. +ಖಲಂದರ್‌ ನಿವೃತ್ತಿ ನಂತರ ಬೆಂಗಳೂರಿಗೆ ಕುಟುಂಬ ಸಮೇತ ಶಿಫ್ಟ್ ಆಗಿದ್ದರು. ಅಲ್ಲಿಯೇ ಅಲ್ತಾಫ್‌ ಮತ್ತು ಫಾತಿಮಾ ನಿಖಾ (ಮದುವೆ) ನಡೆದಿತ್ತು ಎಂದು ತಿಳಿದುಬಂದಿದ್ದು ಪ್ರಸ್ತುತ ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯ ಮನೆಯನ್ನು ಖಲಂದರ್‌ ಬಾಡಿಗೆ ನೀಡಿದ್ದಾರೆ. +ಅಲ್ತಾಫ್‌ನನ್ನು ವಿವಾಹವಾಗಿದ್ದ ಫಾತಿಮಾ ಆಗಾಗ ದಾವಣಗೆರೆಗೆ ಬಂದು, ಹೋಗುತ್ತಿದ್ದಳು. ಕಳೆದ ವರ್ಷ ಖಲಂದರ್‌ ಪತ್ನಿ ಮೃತಪಟ್ಟಿದ್ದಾಗ ಕೂಡ ಫಾತಿಮಾ ದಾವಣಗೆರೆಗೆ ಬಂದಿದ್ದಳು ಎನ್ನಲಾಗಿದೆ. +ಅಲ್ತಾಫ್‌ ಹಾಗೂ ಫಾತಿಮಾ ದಂಪತಿ ಇಸ್ಲಾಂ ಧರ್ಮದ ಬಗ್ಗೆ ಪ್ರಚಾರ ಮಾಡುವ ಮೆಹದಿ ಫೌಂಡೇಷನ್‌ ಇಂಟರ್‌ ನ್ಯಾಷನಲ್ ಸಂಸ್ಥೆಗಾಗಿ ಕೆಲಸ ಮಾಡುತ್ತಿದುದ್ದಲ್ಲದೆ ತಮ ಸಮಾಜದವರಿಗೆ ಮುಸ್ಲಿಂ ಪ್ರಚಾರ ಕಾರ್ಯಗಳನ್ನು ನೋಡುವಂತೆ ಪ್ರೇರೇಪಿಸುತ್ತಿದ್ದರು. ಅದಕ್ಕಾಗಿ ಅವರಿಗೆ ಹಣ ಸಂದಾಯವಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ.ಪಾಕ್‌ ಮೂಲದ ಮಹಿಳೆಗೆ ದಾವಣಗೆರೆ ನಿವಾಸದ ವಿಳಾಸದಲ್ಲೇ ಪಾರ್ಸ್‌ಪೋರ್ಟ್‌ ಹಾಗೂ ಇನ್ನಿತರ ಅಗತ್ಯ ದಾಖಲೆಗಳನ್ನು ಮಾಡಿಸಿಕೊಡಲಾಗಿದೆ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. +ಪ್ರಸ್ತುತ ಅಲ್ತಾಫ್‌ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ದಾವಣಗೆರೆ ಪೊಲೀಸರು ಸಹ ತನಿಖೆಗೆ ಸಹಕರಿಸಿದ್ದು, ಪಾಸ್‌‍ಪೋರ್ಟ್‌ ಮೇಲೆ ನಿಗಾ ಇಟ್ಟಿದ್ದಾರೆ. ಫಾತಿಮಾಳನ್ನು ಮದುವೆಯಾದ ಬಳಿಕ ಆಕೆಯ ಕುಟುಂಬದವರನ್ನು ಪಾಕ್‌ ಮತ್ತು ಬಾಂಗ್ಲಾದಿಂದ ಮೊದಲು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ತನಿಖಾ ಅಧಿಕಾರಿಗಳು ಕಲೆ ಹಾಕಿದ್ದಾರೆ. +ಇತ್ತೀಚೆಗೆ ಜಿಗಣಿ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ಪಾಕ್‌ ಕುಟುಂಬ ಆರು ವರ್ಷಗಳಿಂದ ಹಿಂದು ಹೆಸರಿಟ್ಟುಕೊಂಡು ಬೆಂಗಳೂರಿನಲ್ಲೇ ವಾಸವಿದ್ದರೂ ಯಾರಿಗೂ ತಿಳಿದಿರಲಿಲ್ಲ ಎಂಬುದು ಅಚ್ಚರಿ ಮೂಡಿಸಿದೆ. +ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ಪೊಲೀಸರು ಪಾಕಿಸ್ತಾನಿ, ಬಾಂಗ್ಲಾದೇಶ ಮೂಲದ ಪ್ರಜೆಗಳನ್ನ ಬಂಧಿಸಿದ್ದರು ಇದೀಗ ದಾವಣಗೆರೆಯಲ್ಲೂ ಪಾಕಿಸ್ತಾನ ಮೂಲದ ಮಹಿಳೆ ಮದುವೆಯಾಗಿರುವ ಬಗ್ಗೆ ಬೆಳಕಿಗೆ ಬಂದಿರುವುದು ಸ್ಥಳೀಯರನ್ನು ಬೆಚ್ಚಿಬಿಳಿಸಿದೆ. \ No newline at end of file diff --git a/eesanje/url_46_2_12.txt b/eesanje/url_46_2_12.txt new file mode 100644 index 0000000000000000000000000000000000000000..a86e9af89ec70f17e0b9eb45f1e9acf1404a66eb --- /dev/null +++ b/eesanje/url_46_2_12.txt @@ -0,0 +1,16 @@ +ನನಗೆ ಇ.ಡಿ.ನೋಟೀಸ್ ಬಂದಿಲ್ಲ : ಸಚಿವ ಬೈರತಿ ಸುರೇಶ್‌ ಸ್ಪಷ್ಟನೆ +.. +ಬೆಂಗಳೂರು,ಅ.3– ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್‌ ದಾಖಲಾಗಿರುವ ಬೆನ್ನಲ್ಲೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ಗೆ ವಿಚಾರಣೆಗೆ ಹಾಜರಾಗಬೇಕೆಂದು ಜಾರಿನಿರ್ದೇಶನಾಲಯ(ಇಡಿ) ನೋಟಿಸ್‌‍ ಜಾರಿ ಮಾಡಿದೆ. +ಇ.ಡಿ ನೋಟಿಸ್‌‍ಗೆ ಉತ್ತರಿಸಿರುವ ಸಚಿವ ಭೈರತಿ ಸುರೇಶ್‌ ಅವರು ನವರಾತ್ರಿ ಹಬ್ಬ ಇರುವ ಕಾರಣ ವಿಚಾರಣೆಗೆ ಬರಲು ಸಾಧ್ಯವಾಗುತ್ತಿಲ್ಲ. ಹಬ್ಬ ಮುಗಿದ ತಕ್ಷಣ ಬರುವುದಾಗಿ ಹೇಳಿದ್ದಾರೆ. ಬೆಳಗ್ಗೆ ಹೆಬ್ಬಾಳದಲ್ಲಿರುವ ಭೈರತಿ ಸುರೇಶ್‌ ಅವರ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳ ತಂಡ ನೋಟಿಸ್‌‍ ನೀಡಿ ವಿಚಾರಣೆಗೆ ಆಗಮಿಸಬೇಕೆಂದು ಸೂಚನೆ ನೀಡಿದೆ. +ನಗರಾಭಿವೃದ್ದಿ ಸಚಿವರಾಗಿರುವ ಸುರೇಶ್‌ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. +ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕುಟುಂಬದವರ ಹೆಸರು ಪ್ರಕರಣದಲ್ಲಿ ಕೇಳಿಬರುತ್ತಿದ್ದಂತೆ ರಾತ್ರೋರಾತ್ರಿ ಮೈಸೂರಿಗೆ ತೆರಳಿದ್ದ ಸಚಿವರು ಕೆಲವು ಮಹತ್ವದ ದಾಖಲೆಗಳನ್ನು ವಿಶೇಷ ವಿಮಾನದಲ್ಲಿ ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದಾರೆ ಎಂಬ ಆರೋಪವನ್ನು ಪ್ರತಿಪಕ್ಷದ ನಾಯಕರು ಮಾಡಿದ್ದರು. +ಇ.ಡಿಗೆ 500 ಪುಟಗಳ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕೆಲವು ಮಹತ್ವದ ಮಾಹಿತಿಯನ್ನು ತನಿಖಾಧಿಕಾರಿಗಳ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ಈ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಸಚಿವ ಸುರೇಶ್‌ಗೆ ನೋಟಿಸ್‌‍ ನೀಡಿದ್ದು, ಸರ್ಕಾರದ ಪ್ರಭಾವಿ ಸಚಿವರಿಗೆ ಕಾನೂನಿನ ಕುಣಿಕೆ ಬಿಗಿಯಾಗಿದೆ. +ಬೆಂಗಳೂರು: ಮುಡಾ ಹಗರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿರುವುದಾಗಿ ದೂರು ನೀಡಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶಾನಾಲಯ (ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. +ಇಡಿ ನೋಟೀಸ್‌ ಕೊಟ್ಟಿಲ್ಲ ಬೈರತಿ ಸುರೇಶ್‌ ಸ್ಪಷ್ಟನೆಮುಡಾ ಪ್ರಕರಣ ಸಂಬಂಧ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದರು. +ತಮಗೆ ವಿಚಾರಣೆಗೆ ಹಾಜರಾಗಬೇಕೆಂದು ಇಡಿ ನೋಟಿಸ್‌‍ ನೀಡಿದೆ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಅವರು, ನನ್ನ ಕಚೇರಿಗೆ ಆಗಲಿ, ಮನೆಗೆ ಯಾರು ಬಂದು ನೋಟಿಸ್‌‍ ಕೊಟ್ಟಿಲ್ಲ. ತಪ್ಪೇ ಮಾಡದಿದ್ದಾಗ ನನಗೇಕೆ ನೋಟಿಸ್‌‍ ಕೊಡುತ್ತಾರೆ ಎಂದು ಪ್ರಶ್ನೆ ಮಾಡಿದರು. +ನನ್ನನ್ನು ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗಿದೆ. ಕಾನೂನುಬದ್ದವಾಗಿ ನಾನು ಇಲಾಖೆಯನ್ನು ನಿರ್ವಹಿಸಿದ್ದೇನೆ. ಇಂಥ ಸುಳ್ಳು ಸುದ್ದಿಗಳನ್ನು ಯಾರೂ ಹಬ್ಬಿಸುತ್ತಿದ್ದಾರೋ ಗೊತ್ತಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಪರೋಕ್ಷವಾಗಿ ತಮ ಎದುರಾಳಿಗಳಿಗೆ ತಿರುಗೇಟು ನೀಡಿದರು. +ವಿಚಾರಣೆಗೆ ಹಾಜರಾದ ಸ್ನೇಹಮಯಿ ಕೃಷ್ಣ:ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಎಸಗಿರುವುದಾಗಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಅಂದಿನ ಮುಡಾ ಆಯುಕ್ತರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. +ಈ ಮಧ್ಯೆ ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯಾಗಿದ್ದು ಸಿದ್ದರಾಮಯ್ಯ ಒಳಗೊಂಡಂತೆ ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸೆ.27ರಂದು ಇಡಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು ಇಂದು ವಿಚಾರಣೆಗೆ ಬರುವಂತೆ ಅ.1ರಂದು ನೋಟಿಸ್‌‍ ಜಾರಿ ಮಾಡಿದ್ದರು. ಇದರಂತೆ ಇಂದು ಇಡಿ ಮುಂದೆ ಹಾಜರಾಗಿದ್ದರು. +ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್‌‍ ನೀಡಿ ನನ್ನ ಮತ್ತು ನನ್ನ ಕುಟುಂಬದ ಬಗ್ಗೆ ದಾಖಲೆ ಕೇಳಿದ್ದರು. ಆಸ್ತಿ ಪತ್ರ, ಬ್ಯಾಂಕ್‌ ಖಾತೆ ವಿವರ ಹಾಗೂ ಆದಾಯದ ಮಾಹಿತಿ ಕೇಳಿದ್ದರು. ಇಡಿ ಅಧಿಕಾರಿಗಳ ತನಿಖೆ ಪ್ರಕಾರ ಮೊದಲು ದೂರುದಾರರ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಾರೆ. ಹೀಗಾಗಿ ಮೊದಲು ನನ್ನ ವಿಚಾರಣೆಗೆ ಕರೆದಿದ್ದಾರೆ. 500 ಪುಟಗಳ ದಾಖಲೆಗಳನ್ನು ಸಲ್ಲಿಸಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದರು. +ಪ್ರಕರಣದ ಹಿಂದೆ ಕಾಣದ ಕೈಗಳು ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಇಲ್ಲಿ ಸಿಎಂ ವಿರುದ್ಧ ಹೋರಾಡಲು ಯಾರಾದರೇನು? ಸಮಾಜದ ಕಟ್ಟ ಕಡೆಯ ವ್ಯಕ್ತಿ ಕೂಡ ಸಿಎಂ ವಿರುದ್ಧ ಹೋರಾಟ ಮಾಡಬಹುದು. ಸಿಎಂ ವಿರುದ್ಧ ಒಬ್ಬ ಮಧ್ಯಮವರ್ಗದವನು ಹೋರಾಟ ಮಾಡಬಾರದಾ? ಕಾಣದ ಕೈಗಳು ಇದಾವೋ ಇಲ್ವೋ ಅನ್ನೋದು ಮುಖ್ಯವಲ್ಲ. ಸಿಎಂ ವಿರುದ್ಧ ಕೇಳಿ ಬಂದಿರುವ ಆರೋಪ ಎಷ್ಟು ಸತ್ಯ ಅಥವಾ ಸುಳ್ಳು ಅನ್ನೋದು ನೋಡಬೇಕು. ಹಾಗೇನಾದರೂ ನನ್ನ ಮೇಲೆ ಅನುಮಾನವಿದ್ದರೆ ಯಾವ ತನಿಖಾ ಸಂಸ್ಥೆಯಾದರೂ ನನ್ನ ವಿಚಾರಣೆ ನಡೆಸಬಹುದು ಎಂದರು. +ಸಿಬಿಐಗೆ ವರ್ಗಾವಣೆ ವಿಚಾರ ಸಂಬಂಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನನ್ನ ಕಣ್ಣ ಮುಂದೆಯೇ ಕೇಸ್‌‍ ತನಿಖೆ ಶುರು ಮಾಡಿದ್ದಾರೆ. ಆದರೂ ನಾನು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೇನೆ. ಸಿಬಿಐ ತನಿಖೆ ಬಗ್ಗೆ ನಮ ವಕೀಲರು ವಾದ ಮಾಡಲಿದ್ದಾರೆ ಎಂದರು. diff --git a/eesanje/url_46_2_2.txt b/eesanje/url_46_2_2.txt new file mode 100644 index 0000000000000000000000000000000000000000..ca2a4f50bdbf424841a75e99e4169c35526a9f81 --- /dev/null +++ b/eesanje/url_46_2_2.txt @@ -0,0 +1,12 @@ +ಜಾತಿ ಗಣತಿ ವರದಿ ವಿಚಾರದಲ್ಲಿ ಆತುರದ ನಿರ್ಧಾರ ಬೇಡ : ಡಿ.ಕೆ.ಸುರೇಶ್‌ + +ಬೆಂಗಳೂರು, ಅ.4-ರಾಜ್ಯ ಸರ್ಕಾರದಿಂದ ನಡೆಸಲಾಗಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಯ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆಯ ಹೆಜ್ಜೆ ಇಡಬೇಕು. +ರಾಷ್ಟ್ರ ಮಟ್ಟದ ಜನಗಣತಿಯವರೆಗೂ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಕುರಿತು ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಮೀಕ್ಷಾ ವರದಿಯನ್ನು ಬಹಿರಂಗಗೊಳಿಸಬೇಕು ಮತ್ತು ಅಂಗೀಕರಿಸಬೇಕು ಎಂಬ ಒತ್ತಡಗಳು ಹೆಚ್ಚಿವೆ. ಮುಂದಿನ ಸಚಿವ ಸಂಪುಟದಲ್ಲಿ ಜಾತಿ ಜನಗಣತಿ ಎಂದೇ ಹೇಳಲಾದ ಸಮೀಕ್ಷಾ ವರದಿ ಕುರಿತು ಚರ್ಚಿಸುವ ಸನ್ನಿವೇಶಗಳು ಸೃಷ್ಟಿಯಾಗಿರುವ ಹಂತದಲ್ಲಿ ಡಿ.ಕೆ.ಸುರೇಶ್‌ ಅವರ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. +ಕೇಂದ್ರ ಸರ್ಕಾರ ಈಗಾಗಲೇ ಜನಗಣತಿಯನ್ನು ಘೋಷಣೆ ಮಾಡಿದೆ. ಅದಕ್ಕೆ ಯಾವ ರೀತಿಯ ಮಾನದಂಡಗಳನ್ನು ಅಳವಡಿಸಲಾಗುತ್ತಿದೆ ಎಂದು ಕಾದು ನೋಡುತ್ತಿದ್ದೇವೆ. ಬಹುತೇಕ ಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ಅಲ್ಲಿ ಜಾತಿ ಗಣತಿ ನಡೆದರೆ ರಾಷ್ಟ್ರಮಟ್ಟದಲ್ಲೇ ದತ್ತಾಂಶಗಳು ಸಂಗ್ರಹವಾಗುತ್ತವೆ. ಎಲ್ಲಾ ಗೊಂದಲಗಳು ಬಗೆ ಹರಿಯುತ್ತವೆ. +ಜೊತೆಗೆ ರಾಷ್ಟ್ರ ಮಟ್ಟದ ಸಮೀಕ್ಷಾ ವರದಿಗೆ ಅಧಿಕೃತ ಮಾನ್ಯತೆಯೂ ದೊರೆಯಲಿದೆ. ರಾಜ್ಯ ಮಟ್ಟದಲ್ಲಿ ನಡೆದಿರುವ ಸಮೀಕ್ಷೆಗೆ ಮಾನ್ಯತೆ ಪಡೆಯಲು ಹೋರಾಟ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ. ರಾಷ್ಟ್ರ ಮಟ್ಟದ ಗಣತಿ ಒಂದು ವರ್ಷದಲ್ಲಿ ಮುಗಿಯುವ ಸಾಧ್ಯತೆ ಇದ್ದು ಅಲ್ಲಿಯವರೆಗೂ ಕಾದು ನೋಡುವಂತೆ ಸಲಹೆ ನೀಡಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ ನಾಯಕರು. ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು ಎಂಬುದು ನಮ ಆಸೆಯಾಗಿದೆ. ಆದಷ್ಟು ಶೀಘ್ರದಲ್ಲಿ ಅವರ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಅವರು ಹೊರಬರಲಿ ಎಂದು ಹೇಳಿದರು. +ನಿನ್ನೆ ಮೈಸೂರಿನಲ್ಲಿ ಜೆಡಿಎಸ್‌‍ ನ ಶಾಸಕ ಜಿ.ಟಿ.ದೇವೇಗೌಡರು ನೀಡಿರುವ ಹೇಳಿಕೆ ಸರಿಯಿದೆ. ಮುಡಾದಿಂದ ನಿವೇಶನ ನೀಡಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅದರಲ್ಲಿ ಎಲ್ಲಾ ಪಕ್ಷಗಳ ನಾಯಕರು ಫಲಾನುಭವಿಗಳಿದ್ದಾರೆ. ಅನಗತ್ಯವಾಗಿ ಈ ಕುರಿತು ಹೆಚ್ಚು ಚರ್ಚೆ ಮಾಡುವ ಅಗತ್ಯ ಇಲ್ಲ . ಜೆಡಿಎಸ್‌‍ ನಾಯಕರು ಮಾಡಿರುವುದನ್ನು ಜಿ.ಟಿ.ದೇವೇಗೌಡರು ಜನರ ಮುಂದೆ ಮಂಡಿಸಿದ್ದಾರೆ. ಪಕ್ಷದಲ್ಲಿದ್ದೇವೆ ಎಲ್ಲವನ್ನೂ ಸಹಿಸಿಕೊಂಡಿರಬೇಕು ಎಂದೇನು ಇಲ್ಲ ಎಂದರು. +ಶಾಸಕ ಮುನಿರತ್ನ ಅವರ ಪ್ರಕರಣದಿಂದ ಕರ್ನಾಟಕ ದೇಶದ ಎದರು ತಲೆ ತಗ್ಗಿಸುವಂತಾಗಿದೆ. ಇಂತಹ ಚರ್ಚೆಗಳು ಒಳ್ಳೆಯದಲ್ಲ. ಅನಗತ್ಯ ವಿವಾದಗಳಿಂದ ರಾಜ್ಯದ ಘನತೆಗೆ ಕುಂದುಡಾಗುತ್ತಿದೆ. ಎಲ್ಲರೂ ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಚರ್ಚೆಗಳು ಹೆಚ್ಚಾಗುತ್ತಿವೆ. ರಾಜ್ಯದ ಹಿತದೃಷ್ಟಿಯಿಂದ ಸಕಾರಾತಕ ಚರ್ಚೆಗಳು ಹೆಚ್ಚಬೇಕು ಎಂದರು. +ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಜನ ನನ್ನನ್ನು ಸೋಲಿಸಿ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಅದರಂತೆ ನಾನು ನಡೆದುಕೊಳ್ಳುತ್ತಿದ್ದೇನೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗುವ ಆಕಾಂಕ್ಷಿಯಲ್ಲ. ಉಪಚುನಾವಣೆ ಘೋಷಣೆಯಾದ ಬಳಿಕ ನಮ ಪಕ್ಷದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುವುದು ಎಂದರು. +ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಬೇರೆಯವರ ಬಗ್ಗೆ ಮಾಹಿತಿ ಪಡೆದುಕೊಳ್ಳುವುದು ನನ್ನ ಕೆಲಸವಲ್ಲ. ನನಗೆ ನನ್ನದೆ ಆದ ಕೆಲಸಗಳಿವೆ. ಅದರಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು. \ No newline at end of file diff --git a/eesanje/url_46_2_3.txt b/eesanje/url_46_2_3.txt new file mode 100644 index 0000000000000000000000000000000000000000..6306297f51ff963870a57496326716d4e5ee8409 --- /dev/null +++ b/eesanje/url_46_2_3.txt @@ -0,0 +1,10 @@ +ತೀವ್ರಗೊಂಡ ಪಿಡಿಒ, ಕಾರ್ಯದರ್ಶಿಗಳ ಅನಿರ್ದಿಷ್ಟಾವಧಿ ಪ್ರತಿಭಟನೆ + +ಬೆಂಗಳೂರು, ಅ.4-ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. +ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. +ನಮದು ಶಾಂತಿಯುತ ಹೋರಾಟ. ನಮ ಹಕ್ಕಿನ ಬೇಡಿಕೆಯಾಗಿದ್ದು, ಇದನ್ನು ಸಹಾನುಭೂತಿಯಿಂದ ಕೇಳಿಸಿಕೊಳ್ಳದೆ ಇಲಾಖೆ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.ಅತ್ತ ನಾವು ಎಷ್ಟೇ ಬಾರಿ ಮನವಿ ಸಲ್ಲಿಸಿದರೂ ಅದನ್ನು ಕಸದ ಬುಟ್ಟಿಗೆ ಎಸೆದು ನಮನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಹೋರಾಟದ ಹಾದಿ ಅನಿವಾರ್ಯವಾಗಿತ್ತು ಎಂದು ಗ್ರಾಮಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾಡಾಶೆಟ್ಟಿಹಳ್ಳಿ ಸತೀಶ್‌ ಹೇಳಿದ್ದಾರೆ. +ಯಾವುದೇ ಸೂಚನೆ ನೀಡದೆ ವರ್ಗಾವಣೆ ಮಾಡಲಾಗುತ್ತಿದೆ. ಬಡತಿಯಲ್ಲೂ ಅನ್ಯಾಯವಾಗುತ್ತಿದೆ. ನಿರಂತರ ಕೆಲಸರಜೆ ನೀಡದೆ ಸತಾಯಿಸುವುದೂ ಸೇರಿದಂತೆ ಹಲವಾರು ನಮ ಬೇಡಿಕೆ ದೂರು-ದುಮಾನಗಳನ್ನು ಸಚಿವರ ಗಮನಕ್ಕೆ ತಂದಿದ್ದೇವೆ. +ಬಹುದಿನದ ಬೇಡಿಕೆಯಾದ ಖಾಲಿ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಗಳನ್ನು ಬಿ ಗ್ರೂಪ್‌ಗೆ ಸೇರ್ಪಡೆಗೊಳಿಸುವುದೂ ಸೇರಿದಂತೆ ಉಚಿತ ಬಸ್‌‍, ಆರೋಗ್ಯ ವಿಮೆ, ಇಎಸ್‌‍ಐ, ಪಿಎಫ್‌ ಸೇರಿದಂತೆ ಗ್ರಾಪಂ ಸಿಬ್ಬಂದಿಗಳಿಗೆ ಕಂದಾಯ ಇಲಾಖೆ ವತಿಯಿಂದಲೇ ವೇತನವನ್ನು ನೀಡಬೇಕೆಂದು ನಾವು ಕೇಳುತ್ತಿದ್ದರೂ ಬಲವಂತವಾಗಿ ಕೆಲ ನಿಯಮಗಳನ್ನು ಹೇರಲಾಗುತ್ತಿದೆ ಎಂದು ರಾಜ್ಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ಆರೋಪಿಸಿದ್ದಾರೆ. +ನಮ ಈ ಹೋರಾಟಕ್ಕೆ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು, ಕರವಸೂಲಿ ಸಿಬ್ಬಂದಿ, ಕಂಪ್ಯೂಟರ್‌ ಡೇಟಾ ಆಪರೇಟರ್‌ಗಳು ಬೆಂಬಲ ಸೂಚಿಸಿ ಹೋರಾಟಕ್ಕೆ ಬಂದಿದ್ದಾರೆ. ಕಳೆದ ವಾರವೇ ನಾವು ಅನಿರ್ದಿಷ್ಟ ಹೋರಾಟದ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ನಮಗೆ ಯಾವುದೇ ಭರವಸೆ ಸಿಕ್ಕಿಲ್ಲ ಎಂದು ಟೀಕಿಸಿದ್ದಾರೆ. +ಒಂದೇ ತಾಲ್ಲೂಕಿನಲ್ಲಿ 7 ವರ್ಷ ಸೇವೆಸಲ್ಲಿಸಿದವರನ್ನು ವರ್ಗಾವಣೆ ಮಾಡುವ ನಿಯಮವನ್ನು ಬಲವಂತವಾಗಿ ಹೇರಲಾಗಿದೆ. ಇದರಿಂದ ಹಲವರು ಒತ್ತಡದ ಕೆಲಸದ ಒತ್ತಡದಲ್ಲಿ ಜೀವ ಕಳೆದುಕೊಂಡಿದ್ದಾರೆ. ಇನ್ನೂ ಹಲವರಿಗೆ ಮಾನಸಿಕ ಒತ್ತಡದಿಂದ ಆರೋಗ್ಯ ಹಾಳಾಗಿದೆ ಇಷ್ಟಾದರೂ ಅಧಿಕಾರಿಗಳು ನಮ ನೋವನ್ನು ಮನಗಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಜ್ಯಾದ್ಯಂತ ಸುಮಾರು 45000ಕ್ಕೂ ಹೆಚ್ಚು ಸಿಬ್ಬಂದಿಗಳು ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂದೆ ಆಗುವ ಅನಾಹುತಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು. \ No newline at end of file diff --git a/eesanje/url_46_2_4.txt b/eesanje/url_46_2_4.txt new file mode 100644 index 0000000000000000000000000000000000000000..2dba98a5bf3b93a5e48a88ecc15d409cefe8fd9f --- /dev/null +++ b/eesanje/url_46_2_4.txt @@ -0,0 +1,13 @@ +ಸಚಿವ ಮಹದೇವಪ್ಪ ಸೇರಿ ಹಲವು ಕಾಂಗ್ರೆಸ್ಸಿಗರಿಗೂ ಮುಡಾ ಉರುಳು + +ಮೈಸೂರು, ಅ.4-ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ, ಈಗ ಜಾರಿ ನಿರ್ದೇಶನಾಲಯಕ್ಕೆ ಮಹತ್ವದ ದಾಖಲೆಗಳನ್ನು ನೀಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ.ಮಹದೇವಪ್ಪ ಹಾಗೂ ಇತರ ಕಾಂಗ್ರೆಸ್‌‍ ನಾಯಕರು ನಿದ್ದೆಗೆಡುವಂತೆ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಡಾ ಪ್ರಕರಣದಲ್ಲಿ ಹಣ ಅಕ್ರಮ ವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇನೆ. ಪ್ರಬಲ ಸಾಕ್ಷ್ಯವನ್ನೂ ನೀಡಿದ್ದೇನೆ ಎಂದರು. +ಕೋಟ್ಯಂತರ ರೂಪಾಯಿಗಳ ಲಂಚದ ಹಣವನ್ನು ಬಳಕೆ ಮಾಡಿ ಸೆಟ್‌್ಲಮೆಂಟ್‌ ಡಿಡ್‌ಗಳ ಮೂಲಕ ನಿವೇಶನ ಪಡೆದಿದ್ದಾರೆ. ಇದನ್ನೂ ಇಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಸಿ.ಮಹದೇವಪ್ಪ, ಅವರ ಸಹೋದರರ ಪುತ್ರ ನವೀನ್‌ ಬೋಸ್‌‍ ಹೆಸರಿಗೆ ಇರುವ ಸೆಟ್ಲ್ ಮೆಂಟ್ ಡೀಡ್‌ ಹಾಗೂ ಮುಡಾದ ಅಧ್ಯಕ್ಷರಾಗಿದ್ದ ಮರಿಗೌಡ ಮತ್ತು ಅವರ ಸಹೋದರ ಶಿವಣ್ಣ ಹೆಸರಿಗೆ ನೋಂದಣಿಯಾಗಿರುವ ದಾಖಲಾತಿಗಳನ್ನು ನೀಡಿದ್ದೇನೆ. ಇದರ ವಿರುದ್ಧವೂ ತನಿಖೆಯಾಗಬೇಕು ಎಂದು ಒತ್ತಾಯಿಸಿರುವುದಾಗಿ ಹೇಳಿದರು. +ಹೆಚ್‌.ಸಿ.ಮಹದೇವಪ್ಪ ಅವರ ಸಹೋದರನ ಮಗ ನವೀನ್‌ ಬೋಸ್‌‍ ಎಂಬುವವರು ಮಂಜುನಾಥ್‌ ಎಂಬುವವರಿಂದ ಹಾಗೂ ಇದೇ ಮಂಜುನಾಥ್‌ರಿಂದ ಮರಿಗೌಡರು ತಮ ಸಹೋದರ ಶಿವಣ್ಣನ ಹೆಸರಿಗೆ ಸೆಟ್ಲಮೆಂಟ್‌ ಡಿಡ್‌ ಮಾಡಿಕೊಂಡಿದ್ದಾರೆ ಎಂದರು.ನಿನ್ನೆ ಜಾರಿ ನಿರ್ದೇಶನಾಲಯ ಕಚೇರಿಗೆ ಭೇಟಿ ನೀಡಿ 500 ಪುಟಗಳ ದಾಖಲೆಗಳನ್ನು ನೀಡಿದ್ದೇನೆ. +ಹೆಚ್ಚಿನ ದಾಖಲೆಗಳು ಕನ್ನಡದಲ್ಲಿ ಇರುವುದರಿಂದ ಅಧಿಕಾರಿಗಳು ಕೇಳಿ ಮಾಹಿತಿ ಪಡೆದು, ಬರೆದುಕೊಂಡಿದ್ದಾರೆ. ತಮ ಕುಟುಂಬದ ಕುರಿತು ವಿವರಣೆ ಪಡೆದುಕೊಂಡಿದ್ದಾರೆ. ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಇಸಿಐಆರ್‌ ಎಂದು ದಾಖಲು ಮಾಡಿಕೊಂಡಿದೆ. ತನಿಖೆಯ ಉದ್ದೇಶಕ್ಕಾಗಿ ಇಸಿಐಆರ್‌ ದಾಖಲಿಸಿದ್ದೇವೆ. ಅದನ್ನು ಯಾರಿಗೂ ನೀಡುವುದಿಲ್ಲ ಎಂದು ತಿಳಿಸಿದ್ದಾರೆ ಎಂದರು. +ಸುಮಾರು ಆರು ಗಂಟೆಗಳ ಕಾಲ ಇಡಿ ಅಧಿಕಾರಿಗಳು ತಮಿಂದ ವಿವರಣೆ ಹಾಗೂ ಹೇಳಿಕೆ ಪಡೆದುಕೊಂಡಿದ್ದಾರೆ. ಕೊನೆಯಲ್ಲಿ ನಿಮ ನಿರೀಕ್ಷೆಗೆ ತಕ್ಕ ಹಾಗೆ ನ್ಯಾಯ ದೊರಕಿಸುತ್ತೇವೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಇದು ತಮಗೆ ತೃಪ್ತಿ ನೀಡಿದೆ ಎಂದು ಹೇಳಿದರು. +ಶ್ರೀಮತಿ ಪಾರ್ವತಿಯವರು ಪಡೆದುಕೊಂಡಿರುವ 14 ನಿವೇಶನಗಳ ಮಹಜರು ಇಂದು ನಡೆದಿದೆ. ಅದರಲ್ಲಿ ತಾವು ಭಾಗವಹಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು, ಪಂಚರ ಸಮುಖದಲ್ಲಿ ಪಂಚನಾಮೆ ನಡೆದಿದೆ. ಮೊದಲ ಹಂತದಲ್ಲಿ ಲೋಕಾಯುಕ್ತ ಪೊಲೀಸರು ಮುಡಾದಿಂದ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಮತ್ತಷ್ಟು ದಾಖಲಾತಿಗಳನ್ನು ಪಡೆಯಬೇಕಿದೆ. ಸ್ಥಳ ಮಹಜರು ನಡೆಯುತ್ತಿದೆ. ಅದರ ಬಳಿಕ ಆರೋಪಿಗಳಿಗೆ ನೋಟಿಸ್‌‍ ನೀಡಿ, ವಿಚಾರಣೆ ನಡೆಸಬಹುದು ಎಂದರು. +ಮುಡಾದಲ್ಲಿ 2015ರಿಂದ ಅವೈಜ್ಞಾನಿಕ ಅಧಿಸೂಚನೆ ನೆಪ ಮಾಡಿಕೊಂಡು ಅಕ್ರಮವಾಗಿ ನಿವೇಶನ ಪಡೆದಿರುವವರು, ಅದಕ್ಕೆ ಸಹಕರಿಸಿ ವಿವಿಧ ಅಧಿಕಾರಿಗಳಿಗೆ ಶಿಕ್ಷೆ ಕೊಡಿಸುವುದು ತಮ ಉದ್ದೇಶವಾಗಿದೆ. ಕೆಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಅಕ್ರಮವಾಗಿ ನಿವೇಶನ ಹಂಚಿದ್ದಾರೆ ಮತ್ತು ತಮ ಕುಟುಂಬದ ಸದಸ್ಯರ ಹೆಸರಿಗೂ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರಕರಣ ಒಂದು ಉದಾಹರಣೆ ಮಾತ್ರ ಎಂದರು. +14 ನಿವೇಶನಗಳನ್ನು ವಾಪಸ್‌‍ ನೀಡಿರುವುದೇ ಪ್ರಕರಣಕ್ಕೆ ಪ್ರಬಲ ಸಾಕ್ಷಿಯಾಗಿದೆ. ಇದರಿಂದ ತನಿಖೆಗೆ ಯಾವುದೇ ರೀತಿಯ ಹಿನ್ನಡೆಯೂ ಆಗುವುದಿಲ್ಲ. ಮತ್ತಷ್ಟು ಪುರಾವೆಗಳು ಸಿಕ್ಕಂತೆ ಆಗಿದೆ ಎಂದರು. +ಕಳ್ಳರು ಕಳ್ಳರು ಒಂದಾಗಿದ್ದಾರೆ. 50:50ರ ಅನುಪಾತದಲ್ಲಿ ನಿವೇಶನ ಪಡೆದವರು ಒಂದಾಗಿ ಕೂಡ ರಚಿಸಿಕೊಂಡು ನನ್ನ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದಾರೆ. ಮೂರು ತಿಂಗಳಿನಿಂದ ಸುಮನಿದ್ದ ಜಿ.ಟಿ.ದೇವೇಗೌಡರು ನಿನ್ನೆ ಅದರಲ್ಲೂ ದಸರಾದಂತಹ ಪವಿತ್ರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿರುವುದು ಸರಿಯಲ್ಲ ಎಂದರು. +ಅಕ್ರಮವಾಗಿ ನಿವೇಶನ ಪಡೆದವು ತಮ ವಿರುದ್ಧ ಹಲವು ರೀತಿಯ ಸಂಚು ರೂಪಿಸುತ್ತಿದ್ದಾರೆ. ಜಿ.ಟಿ.ದೇವೇಗೌಡರಷ್ಟೇ ಅಲ್ಲ ಈ ಭಾಗದ ಅನೇಕ ಜನಪ್ರತಿನಿಧಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ನೇರವಾಗಿ ಯಾರೂ ನಿವೇಶನ ಪಡೆದಿಲ್ಲ. ಸಿದ್ದರಾಮಯ್ಯ ತಮ ಭಾವಮೈದುನನ ಹೆಸರಿನಲ್ಲಿ ನಿವೇಶನ ಪಡೆದಂತೆ ಎಲ್ಲಾ ಜನ ಪ್ರತಿನಿಧಿಗಳು ತಮ ಕುಟುಂಬದ ಸದಸ್ಯರು, ಸ್ನೇಹಿತರ ಹೆಸರಿನಲ್ಲಿ ನಿವೇಶನ ಪಡೆದಿದ್ದಾರೆ. ಈ ಅಕ್ರಮಗಳನ್ನು ಹಂತ ಹಂತವಾಗಿ ಬಯಲಿಗೆ ತರುತ್ತೇನೆ ಎಂದರು. \ No newline at end of file diff --git a/eesanje/url_46_2_5.txt b/eesanje/url_46_2_5.txt new file mode 100644 index 0000000000000000000000000000000000000000..13a7074355491c49ea57c4ccef30bb112784fec7 --- /dev/null +++ b/eesanje/url_46_2_5.txt @@ -0,0 +1,8 @@ +ಮುಂದುವರೆದ ಮಳೆ : ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಣೆ + : +ಬೆಂಗಳೂರು. ಅ.4-ರಾಜ್ಯದಲ್ಲಿ ನಿನ್ನೆ ಸಾಧಾರಣ ಮಳೆಯಾಗಿದ್ದು, ಇನ್ನೂ ಎರಡು ದಿನ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾದರೆ, ಕೆಲವೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. +ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಚದುರಿದಂತೆ ಕೆಲವೆಡೆ ಮಳೆಯಾಗುತ್ತಿದೆ.ನಿನ್ನೆ ಕೂಡ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಬಿದ್ದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಮುಷ್ಠಿಗೇರಿಯಲ್ಲಿ 85.5ಮಿ.ಮೀ.ನಷ್ಟು ಅತಿ ಹೆಚ್ಚು ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗಿದ್ದು, ದಾಸರಹಳ್ಳಿ ವಲಯದ ಬಾಗಲಗುಂಟೆಯಲ್ಲಿ 15 ಮಿ.ಮೀ.ನಷ್ಟು ಮಳೆಯಾಗಿದೆ. +ರಾಜ್ಯದಲ್ಲಿ ಮಳೆ ಚೇತರಿಕೆಯಾಗಿದ್ದರೂ ಮಳೆ ಕೊರತೆ ಮಾತ್ರ ನೀಗಿಲ್ಲ. ಸೆಪ್ಟೆಂಬರ್ನಂತೆ ಅಕ್ಟೋಬರ್ನಲ್ಲೂ ಮಳೆ ಅಭಾವ ಕಂಡುಬಂದಿದೆ. ಕಳೆದ ಒಂದು ವಾರದಿಂದ ವಾಡಿಕೆ ಮಳೆಯಾಗಿಲ್ಲ. ಹಾಗೆಯೇ ಕಳೆದ ನಾಲ್ಕು ದಿನಗಳಿಂದಲೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. +ಸೆಪ್ಟೆಂಬರ್ನಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿ ಹಲವು ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ.ಇತ್ತೀಚೆಗೆ ಮಳೆ ಚೇತರಿಕೆಯಾಗಿ ರೈತರಲ್ಲಿ ಆಶಾಭಾವನೆ ಮೂಡಿಸಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. +ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. diff --git a/eesanje/url_46_2_6.txt b/eesanje/url_46_2_6.txt new file mode 100644 index 0000000000000000000000000000000000000000..d0ea6d2ec349860276b4d730cffd612c22770eea --- /dev/null +++ b/eesanje/url_46_2_6.txt @@ -0,0 +1,8 @@ +ದಿನೇಶ್‌ ಗುಂಡೂರಾವ್‌ ವಿರುದ್ಧ ಹಿಂದೂ ಸಂಘಟನೆಗಳ ಹೋರಾಟದ ಎಚ್ಚರಿಕೆ + ' +ಬೆಂಗಳೂರು,ಅ.3-ಆರ್ಎಸ್ಎಸ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಾಗೂ ಪ್ರಬಲ ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ವೀರ್ ಸಾರ್ವಕರ್ ಕೂಡ ಮಾಂಸ ಸೇವನೆ ಮಾಡುತ್ತಿದ್ದರೆಂಬ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ. +ತಕ್ಷಣವೇ ದಿನೇಶ್ ಗುಂಡೂ ರಾವ್ ತಮ್ಮ ಹೇಳಿಕೆಗೆ ಕ್ಷಮೆ ಕೇಳ ಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ. +ಗಾಂಽ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ವೀರ್ ಸಾರ್ವಕರ್ ಬ್ರಾಹ್ಮಣ ಸಮುದಾಯದವರು ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು. +ಈ ಮೂಲಕ ಅವರೊಬ್ಬ ಮಾರ್ಡನಿಸ್ಟ್ ಆಗಿದ್ದರು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ವೀರ್ ಸಾರ್ವಕರ್ ಮೂಲಭೂತವಾದಿ ಆಗಿದ್ದರು. ವಿಶೇಷವೆಂದರೆ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಯಲ್ಲ. ವೀರ್ ಸಾರ್ವಕರ್ ಯುರೋಪ್ನಿಂದ ಪ್ರಭಾವಿತರಾಗಿದ್ದರೆಂದು ಹೇಳಿದ್ದರು. +ರಾಷ್ಟ್ರಪಿತ ಮಹಾತ್ಮ ಗಾಂಽೕಜಿಯವರು ಸಸ್ಯಹಾರಿ ಆಗಿದ್ದರು. ನಮ್ಮ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದರು. ದೇಶದಲ್ಲಿಂದು ದೊಡ್ಡ ಸಂಪ್ರದಾಯವಾದಿಗಳಿದ್ದಾರೆ. ಆದರೆ ಸಂಪ್ರದಾಯವಾದಿಗಳಲ್ಲ, ಮೂಲಭೂತವಾದಿಗಳೂ ಅಲ್ಲ. ಇದನ್ನು ನಾವು ಅರಿತುಕೊಳ್ಳಬೇಕಿದೆ ಎಂದು ವೀರ್ ಸಾರ್ವಕರ್ ಹಾಗೂ ಗಾಂಽ ಬಗ್ಗೆ ತುಲನೆ ಮಾಡಿದ್ದರು. +ಸಚಿವ ಈ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ. ಹಿಂದೂ ಧರ್ಮದ ಐಕಾನ್ನಂತಿರುವ ವೀರ್ ಸಾರ್ವಕರ್ ಬಗ್ಗೆ ಲಘುವಾಗಿ ಮಾತನಾಡಿರುವ ದಿನೇಶ್ ಗುಂಡೂರಾವ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಗುಂಡೂರಾವ್ಗೆ ಎಚ್ಚರಿಕೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_2_7.txt b/eesanje/url_46_2_7.txt new file mode 100644 index 0000000000000000000000000000000000000000..069f9f040f6274d0bd147489f7fc3ee5a7644dfc --- /dev/null +++ b/eesanje/url_46_2_7.txt @@ -0,0 +1,8 @@ +ನೈತಿಕತೆಯ ಪಾಠ ಮಾಡುವ ಬಿಜೆಪಿಯ ನಾಯಕರು ಮೊದಲು ರಾಜೀನಾಮೆ ನೀಡಲಿ : ಪ್ರಿಯಾಂಕ ಖರ್ಗೆ + : +ಬೆಂಗಳೂರು,ಅ.3-ನೈತಿಕತೆಯ ಪಾಠ ಮಾಡಿದ ಬಿಜೆಪಿಯ ನಾಯಕರು ಮೊದಲು ತಮ ತಪ್ಪುಗಳಿಗಾಗಿ ರಾಜೀನಾಮೆ ನೀಡಲಿ. ನಂತರ ಬೇರೆಯವರ ಬಗ್ಗೆ ಮಾತನಾಡಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ರವರ ಭೂಹಗರಣದ ಬಗ್ಗೆ ನಿನ್ನೆ ದಾಖಲಾತಿ ಕೇಳಿದ ಹಗರಣವನ್ನು ಬಯಲು ಮಾಡಿದ್ದೇವೆ. ಈವರೆಗೂ ನೈತಿಕತೆಯ ಪಾಠ ಮಾಡುತ್ತಿದ್ದ ಆರ್‌.ಅಶೋಕ್‌ ಮೊದಲು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು. +ನಂತರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ಕೊಡಬೇಕಾಗುತ್ತದೆ. ಆಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರದಿ ಬರುತ್ತದೆ. ಹೀಗೆ ಬಿಜೆಪಿಯಲ್ಲಿ ರಾಜೀನಾಮೆಯ ಸರಣಿ ಮುಂದುವರೆದರೆ ನಂತರ ಕೆ.ಎಸ್‌‍.ಈಶ್ವರಪ್ಪ ಹೇಳಿದಂತೆ ಬಿಜೆಪಿ ಸ್ವಚ್ಛವಾಗಲಿದೆ ಎಂದು ಹೇಳಿದರು. +ಜಾರಿ ನಿರ್ದೇಶನಾಲಯವೇ ನೀಡಿರುವ ಅಂಕಿ ಅಂಶಗಳನ್ನು ನೋಡಿದರೆ ಅದು ಎಷ್ಟು ದುರುಪಯೋಗವಾಗುತ್ತಿದೆ ಎಂದು ಸ್ಪಷ್ಟವಾಗುತ್ತದೆ. 5,297 ಪ್ರಕರಣಗಳು ದಾಖಲಾಗಿದ್ದು, ಶಿಕ್ಷೆಯಾಗಿರುವುದು ಕೇವಲ 40 ಕ್ಕೆ ಮಾತ್ರ. 4 ಪ್ರಕರಣಗಳು ಸಕ್ರಿಯವಾಗಿವೆ. ಮನಿಲ್ಯಾಂಡ್ರಿಂಗ್‌ ಕಾಯ್ದೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳ ಲಾಗುತ್ತಿದೆ. ಕೇಂದ್ರ ಗೃಹಸಚಿವ ಅಮಿತ್‌ ಷಾ ನೀಡಿರುವ ಮಾಹಿತಿಯೇ ಇದನ್ನು ಸ್ಪಷ್ಟಪಡಿಸಿದೆ ಎಂದರು. +ಕರ್ನಾಟಕದಲ್ಲೂ ಸಿಬಿಐ, ಐಟಿ, ಇಡಿ ಗಳನ್ನು ರಾಜಕೀಯಕ್ಕೆ ಬಳಸಲಾಗುತ್ತಿದೆ. ರಾಜಭವನವನ್ನು ಸ್ವಂತ ಕಚೇರಿಯ ಹಾಗೆ ಬಿಜೆಪಿಯವರು ಬಳಸುತ್ತಿದ್ದಾರೆ. ನನ್ನನ್ನೂ ಸೇರಿದಂತೆ ಕಾಂಗ್ರೆಸಿಗರ ಪ್ರಕರಣಗಳು ಬಂದಾಗ 24 ಗಂಟೆಯಲ್ಲಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಬಿಜೆಪಿಯ ವಿರುದ್ಧ ದೂರು ನೀಡಿದರೆ ಅದು ರಾಜಭವನದಲ್ಲೇ ಉಳಿದುಹೋಗುತ್ತದೆ ಎಂದು ಆಕ್ಷೇಪಿಸಿದರು. +ಸಾವರ್ಕರ್‌, ಮಹಾತಗಾಂಧೀಜಿ ಹಾಗೂ ನಾಥೂರಾಮ್‌ ಗೂಡ್ಸೆ ಕುರಿತಂತೆ ಸಚಿವ ದಿನೇಶ್‌ ಗುಂಡೂರಾವ್‌ ನೀಡಿರುವ ಹೇಳಿಕೆ ಬಗ್ಗೆ ಚರ್ಚೆಗೆ ನಾವು ಸಿದ್ಧರಿದ್ದೇವೆ. ಬಿಜೆಪಿಯವರು ವಾಟ್‌್ಸಆ್ಯಪ್‌ ಯೂನಿವರ್ಸಿಟಿಯಲ್ಲಿ ಓದಿಕೊಂಡು ಬಂದಿದ್ದಾರೆ. ನೈಜ ಇತಿಹಾಸ ತಿಳಿದುಕೊಳ್ಳಲು ಪ್ರಯತ್ನಿಸುವುದಿಲ್ಲ. ಸಾವರ್ಕರ್‌ ಬ್ರಿಟಿಷರಿಂದ ಪಿಂಚಣಿ ತೆಗೆದುಕೊಂಡಿದ್ದು ಸುಳ್ಳೇ ಎಂದು ಪ್ರಶ್ನಿಸಿದರು. ಬಿಜೆಪಿಯವರು ಇತಿಹಾಸವನ್ನು ತಿಳಿದುಕೊಂಡು ಚರ್ಚೆಗೆ ಬರಲಿ. ನಾನು ಮತ್ತು ದಿನೇಶ್‌ಗುಂಡೂರಾವ್‌ ಈ ವಿಚಾರವಾಗಿ ಮಾತನಾಡಲು ಸಿದ್ಧರಿದ್ದೇವೆ ಎಂದರು. \ No newline at end of file diff --git a/eesanje/url_46_2_8.txt b/eesanje/url_46_2_8.txt new file mode 100644 index 0000000000000000000000000000000000000000..521765b52e0bceda52dbe700b2789e3c3befd1be --- /dev/null +++ b/eesanje/url_46_2_8.txt @@ -0,0 +1,10 @@ +ಮುಡಾ ಹಗರಣ : ಇ.ಡಿ.ಗೆ 500 ಪುಟಗಳ ದಾಖಲೆ ಸಲ್ಲಿಕೆ + : 500- +ಬೆಂಗಳೂರು,ಅ.3-ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯಕ್ಕೆ ನೀಡಿದ್ದ ದೂರರ್ಜಿಗೆ ಪೂರಕವಾಗಿ 500 ಪುಟಗಳ ದಾಖಲೆಗಳನ್ನು ಸಲ್ಲಿಸಲಾಗಿದೆೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. +ನಗರದಲ್ಲಿಂದು ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲೇ ದೂರರ್ಜಿಯ ಜೊತೆ ದಾಖಲೆಗಳನ್ನು ನೀಡಿದ್ದೇನೆ. ಇಂದು ಹೊಸದಾಗಿ ದಾಖಲೆಗಳನ್ನು ನೀಡುವ ಅಗತ್ಯವಿರಲಿಲ್ಲ. ಆದರೆ ಜಾರಿ ನಿರ್ದೇಶನಾಲಯವು ನಮ ಕುಟುಂಬದ ಮಾಹಿತಿಯನ್ನು ಪಡೆಯಲು ಸಮನ್‌್ಸ ನೀಡಿತ್ತು ಎಂದು ಹೇಳಿದರು. +ಲಭ್ಯವಿರುವ ಮಾಹಿತಿ ಪ್ರಕಾರ ಜಾರಿ ನಿರ್ದೇಶನಾಲಯ ದೂರುದಾರರ ಎಲ್ಲಾ ಮಾಹಿತಿಗಳನ್ನು ಮೊದಲು ಪಡೆದು ನಂತರ ವಿಚಾರಣೆ ಮುಂದುವರೆಸಲಿದೆ ಎಂದು ತಿಳಿದುಬಂದಿದೆ. ಹೀಗಾಗಿ ಸಮನ್ಸ್ ನಲ್ಲಿ ಕೇಳಿದ್ದ ಮಾಹಿತಿಗಳನ್ನು ತಾವು ಸಲ್ಲಿಸುವುದಾಗಿ ಹೇಳಿದರು. +ಮುಖ್ಯಮಂತ್ರಿಯವರ ಪತ್ನಿ ಪಾರ್ವತಿಯವರು ತಪ್ಪನ್ನು ಒಪ್ಪಿಕೊಂಡು ಮುಡಾಗೆ 14 ನಿವೇಶನಗಳನ್ನು ವಾಪಸ್‌‍ ನೀಡಿದ್ದಾರೆ. ಇದು ನಮ ತನಿಖೆಗೆ ಸಹಕಾರಿಯಾಗಿದೆ ಎಂದರು.ವಾಸ್ತವವಾಗಿ ಆ 14 ನಿವೇಶನಗಳು ಮತ್ತು ಕೆಸರೆ ಗ್ರಾಮದ ಭೂಮಿ ಮುಡಾಗೆ ಸೇರಿದೆ. ಈಗ ಪಾರ್ವತಿಯವರು 14 ನಿವೇಶನಗಳನ್ನು ಮುಡಾಗೆ ವಾಪಸ್‌‍ ನೀಡಲು ಅವಕಾಶವಿಲ್ಲ ಎಂದು ಹೇಳಿದರು. +ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಪ್ರದೀಪ್‌ರವರು ಮಧ್ಯಮ ವರ್ಗದ ಕುಟುಂಬದವರಾಗಿದ್ದು, ಅವರಿಗೆ ಅಷ್ಟೊಂದು ವಕೀಲರನ್ನು ನೇಮಿಸಿಕೊಳ್ಳುವ ಆರ್ಥಿಕ ಚೈತನ್ಯ ಇಲ್ಲ. ಹೀಗಾಗಿ ಅವರಿಬ್ಬರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಆದಾಯ ಮೂಲಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ವಕೀಲರೊಬ್ಬರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಮುಖ್ಯಮಂತ್ರಿಯ ವಿರುದ್ಧ ಸಾಮಾನ್ಯ ಕುಟುಂಬದ ವ್ಯಕ್ತಿಯೂ ತನ್ನ ಹಕ್ಕು ಚಲಾಯಿಸಿ ಹೋರಾಟ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಮುಖ್ಯಮಂತ್ರಿ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂಬ ಕಾರಣಕ್ಕೆ ಈ ರೀತಿಯ ಅನಗತ್ಯ ಆರೋಪಗಳು ಸರಿಯಲ್ಲ ಎಂದರು. +ಇಲ್ಲಿ ಕಾಣದ ಕೈಗಳಿವೆ ಎಂಬುದು ಮುಖ್ಯ ಪ್ರಶ್ನೆಯಲ್ಲ. ನಾವು ಮಾಡಿರುವ ಆರೋಪ ಸತ್ಯವೋ, ಸುಳ್ಳೋ ಎಂಬುದು ಆದ್ಯತೆ ಪಡೆಯಬೇಕು. ನಾನು ಯಾವುದೇ ರೀತಿಯ ತನಿಖೆಗಾದರೂ ಸಿದ್ಧನಿದ್ದೇನೆ ಎಂದು ತಿಳಿಸಿದರು. +ತಮ ವಿರುದ್ಧ ನ್ಯಾಯಾಲಯ ಜಾಮೀನುರಹಿತ ವಾರೆಂಟ್‌ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ 2015 ರಿಂದಲೂ ತಮ ವಿರುದ್ಧ ಪ್ರಕರಣ ನಡೆಯುತ್ತಿದೆ. ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ಸ್ಥಳ ಪರಿಶೀಲನೆ ನಡೆಸಲು ಕರೆದಾಗ ನಾನು ಅದರಲ್ಲಿ ಭಾಗವಹಿಸಿದ್ದೆ. ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಎಂಬಿಡಬ್ಲ್ಯೂ ಆಗಿದೆ. ನ್ಯಾಯಾಲಯಕ್ಕೆ ಹಾಜರಾಗುತ್ತೇನೆ. ಅದಕ್ಕೆ ದಾಖಲೆಗಳನ್ನು ಸಲ್ಲಿಸಿ ಜಾಮೀನು ರಹಿತ ಬಂಧನ ಆದೇಶವನ್ನು ತೆರವುಗೊಳಿಸಿಕೊಳ್ಳಲಾಗುವುದು ಎಂದರು. +ಲೋಕಾಯುಕ್ತ ಪೊಲೀಸರು ಆರಂಭಿಸಿರುವ ತನಿಖೆಗೆ ಸಹಕರಿಸುವುದು ದೂರುದಾರನಾಗಿ ನನ್ನ ಕರ್ತವ್ಯ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬುದು ನಮ ವಾದವಾಗಿತ್ತು. ಈ ಬಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದರ ವಿಚಾರಣೆ ಶೀಘ್ರವೇ ನಡೆಯಲಿದೆ. ಆ ವೇಳೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದು ಎಷ್ಟು ಅಗತ್ಯ ಎಂದು ನಮ ವಕೀಲರು ವಾದಿಸಲಿದ್ದಾರೆ. ನ್ಯಾಯಾಲಯ ನಮ ವಾದವನ್ನು ಪರಿಗಣಿಸಲಿದೆ ಎಂಬ ವಿಶ್ವಾಸವಿದೆ ಎಂದರು. \ No newline at end of file diff --git a/eesanje/url_46_2_9.txt b/eesanje/url_46_2_9.txt new file mode 100644 index 0000000000000000000000000000000000000000..692d0ea8a9aed714261dcbbe98f71d6e552765a3 --- /dev/null +++ b/eesanje/url_46_2_9.txt @@ -0,0 +1,15 @@ +ಭೂ ಕಬಳಿಕೆ ಸಾಬೀತಾದರೆ ರಾಜೀನಾಮೆ ಕೊಡಲು ಸಿದ್ಧ : ಸಿಎಂಗೆ ಅಶೋಕ್‌ ಸವಾಲು + +ಬೆಂಗಳೂರು,ಅ.3– ಒಂದು ವೇಳೆ ನಾನು ನಿಯಮಬಾಹಿರವಾಗಿ ಬಿಡಿಎಗೆ ಸೇರಿದ ಜಮೀನನ್ನು ಭೂ ಕಬಳಿಕೆ ಮಾಡಿರುವುದು ಸಾಬೀತಾದರೆ ವಿರೋಧ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ. ನಿಮಗೆ ನೈತಿಕತೆ ಇದ್ದರೆ ಸಿಎಂ ಸಿದ್ದರಾಮಯ್ಯನವರಿಂದ ರಾಜೀನಾಮೆಯನ್ನು 24 ಗಂಟೆಗಳ ಒಳಗೆ ಕೊಡಿಸುತ್ತೀರಾ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾಂಗ್ರೆಸ್‌‍ಗೆ ಬಹಿರಂಗ ಸವಾಲು ಹಾಕಿದ್ದಾರೆ. +ತಮ ವಿರುದ್ಧ ಸಚಿವರಾದ ಡಾ.ಜಿ.ಪರಮೇಶ್ವರ್‌, ಕೃಷ್ಣಭೈರೇಗೌಡ, ಎಚ್‌.ಕೆ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಅವರುಗಳು ಮಾಡಿದ ಆರೋಪಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಅವರು ನನ್ನ ಪ್ರಕರಣವೇ ಬೇರೆ, ಸಿಎಂ ಸಿದ್ದರಾಮಯ್ಯನವರಪ್ರಕರಣವೇ ಬೇರೆ ಎಂದು ಸಮರ್ಥಿಸಿಕೊಂಡರು. +ಹಾಗೊಂದು ವೇಳೆ ಭೂ ಕಬಳಕೆ ಮಾಡಿರುವುದು ರುಜುವಾತಾದರೆ ಒಂದೇ ಒಂದು ಕ್ಷಣವೂ ಕೂಡ ವಿರೋಧ ಪಕ್ಷದಲ್ಲಿ ಕೂರದೆ ರಾಜೀನಾಮೆ ನೀಡುತ್ತೇನೆ. ನಾನು 24 ಗಂಟೆ ಗಡುವು ಕೊಡುತ್ತೇನೆ. ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರಿಂದ ರಾಜೀನಾಮೆ ಕೊಡಿಸುತ್ತೀರಾ ಎಂದು ಪ್ರಶ್ನಿಸಿದರು. +ಒಂದು ವೇಳೆ ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ಕಡೆಪಕ್ಷ ನೀವಾದರೂ ರಾಜೀನಾಮೆ ಕೊಡಲು ಸಿದ್ದರಿದ್ದೀರಾ? ನಾವು ರಾಮನ ಭಂಟ ಹನುಮಂತನಂತೆ ಸಿಎಂ ಬೆಂಬಲಕ್ಕೆ ಇದ್ದೇವೆ ಎಂದು ಹೇಳಿಕೊಳ್ಳುತ್ತೀರಿ. ಈ ಮೂಲಕವಾದರೂ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಆಗ್ರಹಿಸಿದರು. +ಕಾಂಗ್ರೆಸ್‌‍ನವರು ನಾವು ಒಂದು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಭಾವಿಸಿದ್ದಾರೆ. ಕಾಲಚಕ್ರ ಉರುಳತ್ತದೆ ಎಂಬುದನ್ನು ಮರೆಯಬೇಡಿ. ಕರ್ನಾಟಕದಲ್ಲಿ 30 ವರ್ಷಗಳಿಂದ ಯಾವುದೇ ಒಂದು ಪಕ್ಷ ಸತತವಾಗಿ ಅಧಿಕಾರಕ್ಕೆ ಬಂದಿಲ್ಲ. ಇದು ನಿಮ ಗಮನದಲ್ಲಿ ಇರಲಿ ಎಂದು ಎಚ್ಚರಿಕೆ ಕೊಟ್ಟರು. +ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಹಂತಕ್ಕೆ ಬಂದಿರುವುದರಿಂದ ಇದನ್ನು ಮರೆಮಾಚಲು ನನ್ನ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರಕರಣದಲ್ಲಿ ನನ್ನನ್ನು ಯಾಕೆ ಹೋಲಿಕೆ ಮಾಡ್ತೀರಾ..? ಇದು ಅರಿಶಿನ ಕುಂಕುಮ ಕೊಟ್ಟು ತೆಗೆದುಕೊಂಡ ಜಮೀನು ಅಲ್ಲ. ಹಣ ಕೊಟ್ಟು ಜಮೀನು ತೆಗೆದುಕೊಂಡಿದ್ದೇನೆ. ಯಾರೋ ದಾಖಲೆ ಕೊಟ್ಟರು ಎಂದು ನನ್ನ ಮೇಲೆ ಆರೋಪ ಮಾಡುತ್ತೀರಾ ಎಂದು ಕಾಂಗ್ರೆಸ್‌‍ ನೈತಿಕತೆ ಪ್ರಶ್ನೆ ಮಾಡಿದರು. +ನಿವೇಶನ ಏಕೆ ವಾಪಸ್‌‍ ಕೊಟ್ಟರು ಎಂದು ನಾಲ್ಕು ಜನ ಮಂತ್ರಿಗಳು ಮಾತನಾಡಿದ್ದಾರೆ. ಸಿದ್ದರಾಮಯ್ಯ ಮೇಲೆ ಹೈಕೋರ್ಟ್‌ ಈಗಾಗಲೇ ಆಪಾದಿತ ಮಾಡಿದೆ. ಮೇಲ್ನೋಟಕ್ಕೆ ಅರೋಪ ಕಂಡುಬಂದಿದೆ. ಹೈಕೋರ್ಟ್‌, ಜನಪ್ರತಿನಿಧಿ ನ್ಯಾಯಾಲಯ ಸಹ ತನಿಖೆಗೆ ಆದೇಶ ಕೊಟ್ಟಿದೆ. ಸಿದ್ದರಾಮಯ್ಯ ಈಗ ನ್ಯಾಯಾಲಯದ ಆದೇಶ ಬಂದ ಮೇಲೆ ನಿವೇಶನ ವಾಪಸ್‌‍ ಮಾಡಿದ್ದಾರೆ ಎಂದು ಟೀಕಿಸಿದರು. +ನ್ಯಾಯಾಲಯದ ಆದೇಶ ಬರುವ ಮೊದಲೇ ನಾನು ಸೈಟ್‌ ವಾಪಸ್‌‍ ಮಾಡಿದ್ದೇನೆ. ಆದರೆ ಸಿದ್ದರಾಮಯ್ಯ ಆದೇಶ ಬಂದ ಮೇಲೆ ವಾಪಸ್‌‍ ಮಾಡಿದ್ದಾರೆ ಎಂದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನನ್ನನ್ನು ಆರೋಪ ಮುಕ್ತ ಮಾಡಿದೆ. ಹೈಕೋರ್ಟ್‌ ಸಹ ರಿಲೀಫ್‌ ಕೊಟ್ಟಿದೆ. ಪ್ರಕರಣ ದಾಖಲು ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ನ್ಯಾಯಾಲಯ ದೊಡ್ಡದೋ..? ಕಾಂಗ್ರೆಸ್‌‍ ದೊಡ್ಡದೋ..? ಎಂದು ತರಾಟೆಗೆ ತೆಗೆದುಕೊಂಡರು. +ರಾಮಸ್ವಾಮಿ ಯಾರು..? ಬೇನಾಮಿ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಮಿಸ್ಟರ್‌ ಕೃಷ್ಣ ಬೈರೇಗೌಡ್ರೆ ಕೋಲಾರದಲ್ಲಿ ಇರುವ ನಿಮ ತಂದೆ ಆಸ್ತಿ ಯಾರಿಗೆ ಬಂದಿದೆ? ನಿಮಗೆ ಆಸ್ತಿ ಬರುತ್ತದೆಯೇ ಇಲ್ಲವೇ? ಎಂದು ಪ್ರಶ್ನಿಸಿದರು. ಮುನಿ ವೆಂಕಟಪ್ಪ ವಿಲ್‌ ಮಾಡಿ ಅವರ ಮಕ್ಕಳಿಗೆ ಕೊಟ್ಟಿದ್ದಾರೆ. ನಿವೇಶನ ನನಗೆ ಕೊಡುವಾಗ ಮುನಿ ವೆಂಕಟಪ್ಪ ಮಕ್ಕಳು 20 ಜನ ಸಹಿ ಮಾಡಿದ್ದಾರೆ. ಹೀಗಿದ್ದ ಮೇಲೆ ಬೇನಾಮಿ ಹೇಗೆ ಆಗುತ್ತದೆ ಎಂದು ಆಕ್ರೊಶಗೊಂಡರು. +ಅಕ್ರಮವಾಗಿ ಯಡಿಯೂರಪ್ಪನವರ ಮೇಲೆ ಡಿನೋಟಿಫೈ ಮಾಡಿದ್ದಾರೆ ಎಂದು ಕಾಂಗ್ರೆಸ್‌‍ ಸಚಿವರು ಆರೋಪಿಸಿದ್ದಾರೆ. ರಿಂಗ್‌ರೋಡ್‌ ಹತ್ತಿರ 1 ಎಕರೆ ಹತ್ತಿರ ಜಮೀನು ಖರೀದಿ ಮಾಡಿದ್ದೇನೆ ಎಂದು ಎಸ್‌‍. ಎಮ್‌.ಕೃಷ್ಣ ಅವರು, ನಮ ಸರ್ಕಾರ ಇದ್ದಾಗ ರಿಂಗ್‌ ರೋಡ್‌ ಗೆ ಹೊರತಾಗಿ ಉಳಿದ ಜಮೀನು ಬಿಡಬೇಕು ಎಂದಿದ್ದರು. ಆಗ ಅವರು ಕೇಂದ್ರ ಸಚಿರಾಗಿದ್ದಾರು ಎಂದು ಹೇಳಿದರು. +ಬಿಡಿಎ ಸ್ವತ್ತು ಜಮೀನು ಸ್ವಾಧೀನ ಹೇಗೆ ಮಾಡಿದ್ದೀರಿ ಎಂದು ಸಚಿವರು ಪ್ರಶ್ನೆ ಮಾಡಿದ್ದಾರೆ. ಬಿಡಿಎ ಪತ್ರದ ಮೂಲಕ ನಮಗೆ ಬಿಟ್ಟು ಕೊಟ್ಟಿದೆ ಎಂದು ಸಮರ್ಥನೆ ಮಾಡಿಕೊಂಡರು.ಮುಡಾದಲ್ಲಿ ಸಿದ್ದರಾಮಯ್ಯ 60/40 ನಿವೇಶನ ಪಡೆದ್ದಿದ್ದಾರೆ. ಇಲ್ಲಿ ಶೇ.60ರಷ್ಟು ಸಿದ್ದರಾಮಯ್ಯಗೆ ಶೇ.40ರಷ್ಟು ಮಾತ್ರವೇ ಸರ್ಕಾರಕ್ಕೆ. ಆದರೆ ನಿವೇಶನದಲ್ಲಿ ಶೇ.70ಸರ್ಕಾರಕ್ಕೆ , ಶೇ.30 ನಮಗೆ ನೀಡಿದ್ದಾರೆ ಎಂದು ತಿಳಿಸಿದರು. +ರಿಂಗ್‌ ರೋಡ್‌ಗೆ ಬೇಕಾದ ಭೂಮಿ ಬಳಕೆ ಆಗಿದೆ. ಉಳಿದ ಭೂಮಿ ಮಾಲೀಕರಿಗೆ ನೀಡಲಾಗಿದೆ ಎಂದು ಬಿಡಿಎ ಪತ್ರ ಬರೆದಿದೆ. ಗೃಹಸಚಿವ ಪರಮೇಶ್ವರ್‌ ಅವರು ಈ ಭೂಮಿ ಬಿಡಿಎದ್ದು ಎಂದು ಹೇಳುತ್ತಾರೆ, ಯಾವುದಪ್ಪ ಬಿಡಿಎ ಸೈಟ್‌ ಎಂದು ಅಶೋಕ್‌ ವ್ಯಂಗ್ಯವಾಡಿದರು. +ಕೃಷ್ಣ ಬೈರೇಗೌಡರ ಹತ್ತಿರ ಹಣ ಅಂತಸ್ತು ಇದೆ. ಬಹಳ ಗೌರವಾನ್ವಿತ ಮನುಷ್ಯ, ಹೆಚ್‌.ಕೆ.ಪಾಟೀಲ್‌ ಬಹಳ ಹಿರಿಯರು. ಪರಮೇಶ್ವರ್‌ ಬಹಳ ಸಜ್ಜನ ರಾಜಕಾರಣಿ, ಸತೀಶ್‌ ಜಾರಕಿಹೊಳಿ ಒಬ್ಬರೇ ಸುಮನೇ ಕುಳಿತಿದ್ದರು. ಏಕೆಂದರೆ ಅವರಿಗೆ ಗೊತ್ತಿತ್ತು ಅನಿಸುತ್ತದೆ ಇದು ಬುರುಡೆ ಪ್ರಕರಣ ಎಂದು ಕುರುಹಕವಾಡಿದರು. diff --git a/eesanje/url_46_300_1.txt b/eesanje/url_46_300_1.txt new file mode 100644 index 0000000000000000000000000000000000000000..0d34d3ff0b9a5cfe3f9edcee9ed1b2c769682ae2 --- /dev/null +++ b/eesanje/url_46_300_1.txt @@ -0,0 +1,9 @@ +ಬೆಳಗಾವಿ ಅಧಿವೇಶನಕ್ಕೆ ಕಾರ್ಯತಂತ್ರ : ಬಿಜೆಪಿ-ಜೆಡಿಎಸ್ ನಾಯಕರ ಸಭೆ +ಬೆಂಗಳೂರು,ಡಿ.1- ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಹಾಗೂ ಲೋಕಸಭೆ ಚುನಾವಣೆ ಕಾರ್ಯತಂತ್ರ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. +ರೇಸ್‍ಕೋರ್ಸ್ ರಸ್ತೆಯಲ್ಲಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸೇರಿದ ಫ್ಲಾಟ್‍ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕೆಲವೇ ಕೆಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು. +ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಧಿವೇಶನದ ವೇಳೆ ಸರ್ಕಾರದ ವಿರುದ್ಧ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು. ಸರ್ಕಾರದ ವೈಫಲ್ಯವನ್ನು ಈ ಅಧಿವೇಶನದಲ್ಲಿ ಎತ್ತಿ ತೋರಿಸಿ ಜನರಿಗೆ ಮನವರಿಕೆ ಮಾಡಿಕೊಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. +ಸರ್ಕಾರದ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಆರೋಪಗಳು ಭ್ರಷ್ಟಾಚಾರ, ಶಾಸಕರೇ ಪತ್ರ ಬರೆದಿರುವುದು ಬರ ನಿರ್ವಹಣೆಯಲ್ಲಿ ವೈಫಲ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ಉಭಯ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ. 10 ಕೆ.ಜಿ. ಅಕ್ಕಿಯನ್ನು ಕೊಡದೆ, ಫಲಾನುಭವಿಗಳ ಖಾತೆಗೆ ಹಣವನ್ನೂ ಹಾಕದೆ ಮೋದಿ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಎಂಬ ಅಪಪ್ರಚಾರ ನಡೆಸಲಾಗಿದೆ. +ದುಬೈನಲ್ಲಿ ಮೊಳಗಿತು ‘ಭಾರತ್ ಮಾತಾ ಕೀ ಜೈ’ ಘೋಷಣೆ +ಗೃಹಲಕ್ಷ್ಮಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡುತ್ತಿಲ್ಲ. ನವೆಂಬರ್ ತಿಂಗಳು ಮುಗಿದರೂ ಶೇ. 50 ರಷ್ಟು ಫಲಾನುಭವಿಗಳಿಗೆ ಹಣ ಸಂದಾಯವಾಗಿಲ್ಲ. ಇನ್ನು ಅಧಿಕಾರಕ್ಕೆ ಬಂದ ಮೊದಲ ಸಂಪುಟದಲ್ಲಿ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. +ಪದವೀಧರರಿಗೆ ಪ್ರತಿ ತಿಂಗಳು ಮಾಸಾಶನ ನೀಡುವ ಯುವನಿಧಿ ಯೋಜನೆ ಈಗಲೂ ಅನುಷ್ಠಾನವಾಗಿಲ್ಲ. ಇದರ ಬಗ್ಗೆಯೂ ಸರ್ಕಾರದ ಕಿವಿ ಹಿಂಡುವ ಕೆಲಸವನ್ನು ಮಾಡಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಕೈಗೊಳ್ಳಬೇಕು. 2 ರಿಂದ 3 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 2024 ರ ಲೋಕಸಭೆ ಚುನಾವಣೆಗೆ ಸಿದ್ಧತೆಯನ್ನು ಆರಂಭಿಸಬೇಕು. +ಕ್ಷೇತ್ರ ಹಂಚಿಕೆ ಸರ್ಕಾರದ ವಿರುದ್ಧ ಜನಾಂಧೋಲನ ರೂಪಿಸುವುದು, ಚುನಾವಣೆ ಕಾರ್ಯತಂತ್ರ, ಜಂಟಿ ಪ್ರಚಾರ ಹೀಗೆ ಹಲವು ವಿಷಯಗಳ ಬಗ್ಗೆ ಕುಮಾರಸ್ವಾಮಿ, ಅಶೋಕ್ ಮತ್ತು ವಿಜಯೇಂದ್ರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_300_10.txt b/eesanje/url_46_300_10.txt new file mode 100644 index 0000000000000000000000000000000000000000..96b4eab8db95b06ded91b4d27845326453905ab7 --- /dev/null +++ b/eesanje/url_46_300_10.txt @@ -0,0 +1,8 @@ +ಶಿಶು ಮಾರಾಟ ದಂಧೆ : 250ಕ್ಕೂ ಹೆಚ್ಚು ಶಿಶುಗಳ ಮಾರಾಟ ಬೆಳಕಿಗೆ +ಬೆಂಗಳೂರು,ನ.30- ಹಸುಗೂಸು ಮಾರಾಟ ದಂಧೆಯ ಆರೋಪಿಗಳು ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ನವಜಾತ ಶಿಶುಗಳನ್ನು ಮಾರಾಟ ಮಾಡಿದ್ದಾರೆಂಬುದು ಸಿಸಿಬಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಮಾರಾಟ ಮಾಡಿರುವ ಮಕ್ಕಳ ಪೈಕಿ 50ರಿಂದ 60 ಮಕ್ಕಳನ್ನು ಕರ್ನಾಟಕದಲ್ಲಿ ಹಾಗೂ ಉಳಿದ ಮಕ್ಕಳನ್ನು ತಮಿಳುನಾಡಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ಹಸುಗೂಸು ಮಾರಾಟ ಸಂಬಂಧ ಬಂಧಿತರಾಗಿರುವ 10 ಆರೋಪಿಗಳನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಈ ಮಾಹಿತಿ ಹೊರಬಂದಿದೆ. +ಆರೋಪಿಗಳು ಈ ವಿಚಾರವನ್ನು ಬಾಯ್ಬಿಡುತ್ತಿದ್ದಂತೆ ಸಿಸಿಬಿ ಪೊಲೀಸರು ಮತ್ತಷ್ಟು ಕಾರ್ಯಪ್ರವೃತ್ತರಾಗಿ ಕರ್ನಾಟಕದಲ್ಲಿ ಮಾರಾಟವಾಗಿರುವ ಮಕ್ಕಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು, ಸದ್ಯ 10 ಮಕ್ಕಳ ಸುಳಿವು ಸಿಕ್ಕಿದ್ದು, ಉಳಿದ ಮಕ್ಕಳನ್ನು ಎಲ್ಲಿ, ಯಾರಿಗೆ ಮಾರಾಟ ಮಾಡಿದ್ದಾರೆಂಬ ಬಗ್ಗೆ ವಿವರಗಳನ್ನು ಪಡೆಯುತ್ತಿದ್ದಾರೆ. +ಮೊಬೈಲ್‍ ಬಳಕೆ ವಿಚಾರಕ್ಕೆ ರೊಚ್ಚಿಗೆದ್ದು ಮಗನನ್ನೇ ಕೊಂದ ಅಪ್ಪ +ಆಗ ಗಾರ್ಮೆಂಟ್ಸ್ ಉದ್ಯೋಗಿ- ಈಗ ಕೋಟ್ಯಾಶ್ವರಿ:ಕರ್ನಾಟಕದ ಗ್ಯಾಂಗ್ ಲೀಡರ್ ಮಹಾಲಕ್ಷ್ಮಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದುಕೊಂಡು 2015ರಿಂದ 17ರವರೆಗೂ ಗಾರ್ಮೆಂಟ್ಸ್‍ನಲ್ಲಿ 8 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿದ್ದಳು. 2017ರಿಂದಲೂ ಶಿಶು ಮಾರಾಟ ದಂಧೆಯಲ್ಲಿ ತೊಡಗಿಕೊಂಡಿರುವ ಈಕೆ ಇದೀಗ ಸ್ವಂತ ಮನೆ, ಕಾರು ಹಾಗೂ ಚಿನ್ನಾಭರಣಗಳನ್ನು ಹೊಂದಿದ್ದು, ಕೋಟ್ಯಾೀಧಿಶ್ವರಿಯಾಗಿದ್ದಾಳೆ. +ಈಕೆಗೆ ಪರಿಚಯವಾದ ಮಹಿಳೆಯೊಬ್ಬಳು ಅಂಡಾಣು ಕೊಟ್ಟರೆ ಹಣ ಕೊಡುವುದಾಗಿ ಹೇಳಿದ್ದರಿಂದ ಮಹಾಲಕ್ಷ್ಮಿ ಅಂಡಾಣು ದಾನ ಮಾಡಿ 20 ಸಾವಿರ ಪಡೆದುಕೊಂಡಿದ್ದಳು. ನಂತರದ ದಿನಗಳಲ್ಲಿ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಅಂಡಾಣು ಕೊಡುವವರನ್ನು ಪತ್ತೆ ಮಾಡಿ ಅವರಿಂದ ಕಮೀಷನ್ ಪಡೆಯುವ ಕೆಲಸ ಮಾಡಿಕೊಂಡಿದ್ದಳು ಎಂಬುವುದು ತನಿಖೆಯಿಂದ ತಿಳಿದುಬಂದಿದೆ. +ಆರೋಪಿಗಳು ಸಿಕ್ಕಿದ್ದೇ ರೋಚಕ:ಮದ್ಯವ್ಯಸನಿಯೊಬ್ಬ ಬಾಯ್ಬಿಟ್ಟಿದ್ದ ಮಹತ್ವದ ಸುಳಿವು ಆಧರಿಸಿ ಸಿಸಿಬಿ ಪೊಲೀಸರು ಮಕ್ಕಳು ಕೊಳ್ಳುವ ಪೊಷಕರ ಸೋಗಿನಲ್ಲಿ ಬೇಟೆಗಿಳಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ಪ್ರಕರಣದಲ್ಲಿ ವೈದ್ಯರು ಸೇರಿದಂತೆ ಸರ್ಕಾರಿ ಅಧಿಕಾರಿಗಳವರೆಗೂ ಶಾಮೀಲಾಗಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. +ಮಾರಾಟಾಗುವ ಮಕ್ಕಳ ನಕಲಿ ದಾಖಲೆ ಸೃಷ್ಟಿಸಿರುವುದು ಸೇರಿದಂತೆ ಒಂದೊಂದೇ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಸಿಸಿಬಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. \ No newline at end of file diff --git a/eesanje/url_46_300_11.txt b/eesanje/url_46_300_11.txt new file mode 100644 index 0000000000000000000000000000000000000000..8f8209d23d32bc1117ce8d2dfe875b87d78205e6 --- /dev/null +++ b/eesanje/url_46_300_11.txt @@ -0,0 +1,7 @@ +ಆಸ್ತಿ ವಿವರ ಸಲ್ಲಿಸದ ಶಾಸಕರು, ಪರಿಷತ್ ಸದಸ್ಯರ ಪಟ್ಟಿ ಬಹಿರಂಗಪಡಿಸಿದ ಲೋಕಾಯುಕ್ತ +ಬೆಂಗಳೂರು,ನ.30- ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ತಕ್ಷಣವೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಪ್ರಕಾರ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಲಾಗಿದೆ. +ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ. ಆದರೆ ಶಾಸಕರು ಹಾಗೂ ಪರಿಷತ್ ಸದಸ್ಯರು ಇದುವರೆಗೂ ಲೋಕಾಯುಕ್ತ ಕಚೇರಿಗೆ ಆಸ್ತಿ ವಿವರವನ್ನು ಸಲ್ಲಿಸಿಲ್ಲ. +ಇದೀಗ ಅಂತಿಮವಾಗಿ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸದ ಶಾಸಕರುಗಳ ಹೆಸರುಗಳ ಪಟ್ಟಿಯನ್ನು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. ಕಳೆದ ಬಾರಿ ಸಚಿವರಾಗಿದ್ದ ಶ್ರೀರಾಮುಲು, ಕೆ.ಸಿ.ನಾರಾಯಣಗೌಡ, ಎಸ್.ಅಂಗಾರ ಆಸ್ತಿ ವಿವರ ಸಲ್ಲಿಸದೇ ನಿಮಯ ಉಲ್ಲಂಘಿಸಿದ್ದರು. ಈ ಬಾರಿ ಸಚಿವರಾದ ರಹೀಂ ಖಾನ್, ಕೆ.ಎನ್.ರಾಜಣ್ಣ, ಜಮೀರ್ ಅಹಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್.ಮುನಿಯಪ್ಪ ಅವರು ಸಹ ಆಸ್ತಿ ವಿವರ ಸಲ್ಲಿಸಿಲ್ಲ. ಹೀಗೆ ಕಳೆದ ವಿಧಾನಸಭೆ ಅವಯ 81 ಮಂದಿ ಶಾಸಕರಿಂದ ಆಸ್ತಿ ವಿವರ ಸಲ್ಲಿಸದೇ ಲೋಪ ಎಸಗಿದ್ದಾರೆ. +ಈ ಬಾರಿ ಅಂದರೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಅವಧಿಯ 51 ಮಂದಿ ಶಾಸಕರ ಆಸ್ತಿ ವಿವರ ಸಲ್ಲಿಕೆ ಆಗಿಲ್ಲ. ಹಾಗೇ 21 ವಿಧಾನ ಪರಿಷತ್ ಸದಸ್ಯರು ಸಹ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲ. ಇನ್ನು ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಸಚಿವ ಮುರಿಗೇಶ್ ನಿರಾಣಿ ಸೇರಿದಂತೆ ಹಲವು ಗಡುವು ಮುಗಿದ ಅಂದರೆ ಜೂನ್ 30 ರ ಬಳಿಕ ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವಧಿ ಮುಗಿದ ಬಳಿಕ 10 ಶಾಸಕರು, ಓರ್ವ ವಿಧಾನ ಪರಿಷತ್ ಸದಸ್ಯ ಆಸ್ತಿ ವಿವರ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. +ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ಜೂನ್ 30 ಡೆಡ್‍ಲೈನ್ ನೀಡಿದ್ದರು. ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಎಲ್ಲಾ ಪಕ್ಷದ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮೌಖಿಕ ಸೂಚನೆ ನೀಡಿದ್ದರು. +ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆಂದು ಸುಮ್ಮನಿರುವಂತಿಲ್ಲ. ಪುನರ್ ಆಯ್ಕೆಯಾದ ಶಾಸಕರು ಮತ್ತೊಮ್ಮೆ ಆಸ್ತಿ ವಿವರ ಸಲ್ಲಿಸಬೇಕು. ಮೊದಲ ಬಾರಿ ಆಯ್ಕೆಯಾದ ಶಾಸಕರು ಕೂಡ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂ.30ರೊಳಗೆ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. \ No newline at end of file diff --git a/eesanje/url_46_300_12.txt b/eesanje/url_46_300_12.txt new file mode 100644 index 0000000000000000000000000000000000000000..58256c60b3196a2135e21df4267598212fe59a7a --- /dev/null +++ b/eesanje/url_46_300_12.txt @@ -0,0 +1,12 @@ +ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಯಷ್ಟೆ ಉತ್ತಮ ಆರೋಗ್ಯ ಸೇವೆ ದೊರೆಯಬೇಕು : ಸಿಎಂ +ಬೆಂಗಳೂರು, ನ.30- ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲೂ ಎಂಆರ್‍ಐ ಸೌಲಭ್ಯಗಳು ದೊರೆಯಬೇಕು, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಸಗಿ ಆಸ್ಪತ್ರೆಯಷ್ಟೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂಬ ಭಾವನೆ ಮೂಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಹೇಳಿದರು. +ವಿಧಾನಸೌಧದ ಮೆಟ್ಟಿಲುಗಳ ಮೇಲೆ 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಸೇವೆಗೆ 262 ಆ್ಯಂಬುಲೆನ್ಸ್‍ಗಳನ್ನು ಆರೋಗ್ಯ ಇಲಾಖೆಗೆ ಸೇರ್ಪಡೆ ಮಾಡಿದ ಬಳಿಕ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜನರ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಸರ್ಕಾರ ಹೊಂದಿದೆ. ಗ್ರಾಮೀಣ, ನಗರ, ಜಾತಿ, ಧರ್ಮ ಬೇಧವಿಲ್ಲದೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿದೆ. ನಾವು ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ನೀಡಿದರೆ ಮಾನವ ಸಂಪನ್ಮೂಲ ಹೆಚ್ಚಾಗಲು ಸಾಧ್ಯ. ಮಾನವ ಸಂಪನ್ಮೂಲ ಹೆಚ್ಚಾದರೆ ಉತ್ಪಾದನೆ ಹೆಚ್ಚಾಗುತ್ತದೆ, ಜಿಡಿಪಿ ವೃದ್ಧಿಯಾಗುತ್ತದೆ ಎಂದರು. +ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಸೇವೆ ಆರಂಭಿಸಿದರು. ಯೋಜನೆಯಡಿ ಕೇಂದ್ರ ಸರ್ಕಾರ ಶೇ.60ರಷ್ಟು, ರಾಜ್ಯ ಸರ್ಕಾರ ಶೇ.40ರಷ್ಟು ಹಣ ಖರ್ಚು ಮಾಡುತ್ತಿವೆ. ಒಟ್ಟಾರೆ ಯೋಜನೆಯ ಉದ್ದೇಶ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ಒದಗಿಸುವುದಾಗಿದೆ. ಅಪಘಾತ, ಹೆರಿಗೆ, ಹೃದಯಾಘಾತ ಸೇರಿದಂತೆ ಇತರ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ಸಿಗದೆ ಯಾರು ಸಾವನ್ನಪ್ಪಬಾರದು ಎಂದು 2008ರಲ್ಲಿ ತುರ್ತು ಆ್ಯಂಬುಲೇನ್ಸ್‍ಗಳನ್ನು ಆರೋಗ್ಯ ಸೇವೆಗೆ ಸಮರ್ಪಿಸಲಾಗಿದೆ. +ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ +ರಾಜ್ಯದಲ್ಲಿ 236 ತಾಲ್ಲೂಕುಗಳಿದ್ದು, ಏಳು ಕೋಟಿ ಜನಸಂಖ್ಯೆ ಇದೆ. ತುರ್ತು ಸೇವೆಗೆ 840 ಆ್ಯಂಬುಲೇನ್ಸ್‍ಗಳ ಅಗತ್ಯ ಇದೆ. ಪ್ರಸ್ತುತ 740 ಆ್ಯಂಬುಲೆನ್ಸ್‍ಗಳಿವೆ. ಈಗ ಪ್ರತಿ ತಾಲ್ಲೂಕಿಗೆ ನಾಲ್ಕು ಆ್ಯಂಬುಲೆನ್ಸ್‍ಗಳಿವೆ ಎನ್ನಲಾಗಿದೆ. ರಸ್ತೆ ಅಪಘಾತದಲ್ಲಿ ಒಂದು ಗಂಟೆಯಲ್ಲಿ ಗೋಲ್ಡನ್ ಅವರ್‍ನಲ್ಲಿ ಚಿಕಿತ್ಸೆ ದೊರೆತರೆ ಜೀವ ಉಳಿಸಲು ಸಾಧ್ಯ. ಪ್ರಾಥಮಿಕ ಚಿಕಿತ್ಸೆ ಬಳಿಕ ರೋಗಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ವೈದ್ಯರು ನಿರ್ಧರಿಸುತ್ತಾರೆ. ಹೊಸ ಆ್ಯಂಬುಲೆನ್ಸ್‍ನಲ್ಲಿ ನುರಿತ ಶೂಶ್ರೂಶಕರು, ತರಬೇತಿ ಪಡೆದ ತಂತ್ರಜ್ಞರು ಇರಲಿದ್ದಾರೆ. ಆತ್ಯಾಧುನಿಕ ಜೀವ ರಕ್ಷಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಅಗತ್ಯದಷ್ಟು ಆ್ಯಂಬುಲೆನ್ಸ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ಆರ್ಥಿಕ ನೆರವು ನೀಡಲಾಗುವುದು ಎಂದರು. +ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಎಂಆರ್‍ಐ ಸೌಲಭ್ಯ ಇರಬೇಕು, ಕೆಲ ಜಿಲ್ಲೆಗಳಲ್ಲಿ ಇವೆ, ಇನ್ನೂ ಕೆಲ ಜಿಲ್ಲೆಗಳಲ್ಲಿ ಇಲ್ಲ. ಇತ್ತೀಚೆಗೆ ತಾವು ಪ್ರಗತಿ ಪರಿಶೀಲನೆ ನಡೆಸಿದಾಗ ಎಲ್ಲಾ ಜಿಲ್ಲೆಗಳಲ್ಲೂ ಎಂಆರ್‍ಐ ಸೇವೆ ದೊರಕುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ, ಈ ಪ್ರಕ್ರಿಯೆ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಹಳೆಯ, ಕೊಳೆಯಾದ ಬಟ್ಟೆ ಹಾಕಿಕೊಂಡು ಹಾಕಿಕೊಂಡು ಬರುವ ಬಡವರನ್ನು ಮಾನವೀಯ ದೃಷ್ಟಿಯಲ್ಲಿ ನೋಡಿ ತಾರತಮ್ಯ ಇಲ್ಲದಂತೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು ಎಂದು ಕರೆ ನೀಡಿದರು. +ಖಾಸಗಿ ಆಸ್ಪತ್ರೆಗಳಿಗೆ ಅಥವಾ ಪ್ರಾಯೋಗಲಯಗಳಿಗೆ ಹೋದರೆ ದುಬಾರಿ ಖರ್ಚಾಗಲಿದೆ. ನಾನು ಮುಖ್ಯಮಂತ್ರಿಯಾದ ಬಳಿಕ 25 ಕೋಟಿ ರೂಪಾಯಿಗಳನ್ನು ಆರೋಗ್ಯ ಚಿಕಿತ್ಸೆಗಾಗಿಯೇ ಪರಿಹಾರ ನಿಯಿಂದ ನೆರವು ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ 20-30 ಲಕ್ಷ ರೂಪಾಯಿ ಖರ್ಚಾಗಿರುವ ಬಿಲ್‍ಗಳನ್ನು ಸಾರ್ವಜನಿಕರು ಸಲ್ಲಿಸುತ್ತಿದ್ದಾರೆ. ನಾನು ಗರಿಷ್ಠ ಐದು ಲಕ್ಷದವರೆಗೂ, ಅಂದರೆ ಸುಮಾರು ನಾಲ್ಕನೇ ಒಂದು ಭಾಗದಷ್ಟು ವೆಚ್ಚದ ನೆರವನ್ನು ನೀಡುತ್ತೇನೆ ಎಂದರು. +ಜನರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗಲಿದೆ ಎಂಬ ಭಾವನೆ ಇದೆ. ಸರ್ಕಾರಿ ಆಸ್ಪತ್ರೆಗಳಲ್ಲೂ ಉತ್ತಮ ಸೇವೆ ಸಿಗಲಿದೆ ಎಂಬ ಭಾವನೆ ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಯದೇವ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುವುದಾದರೆ ಬೇರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.ಇದಕ್ಕೆ ಪೂರಕವಾಗಿ ಸಿಬ್ಬಂದಿಗಳ ಕೊರತೆಯನ್ನು ನಿಗಿಸಲು ಸರ್ಕಾರ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಳ್ಳುತ್ತಿದೆ. +ಸೂರತ್ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ, 7 ಕಾರ್ಮಿಕರ ಶವ ಪತ್ತೆ +ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಿಂತಲೂ ವೈದ್ಯರ ಸಂಖ್ಯೆ ಹೆಚ್ಚಿದೆ. ಪದವಿ ಪಡೆದು ಹೊರ ಬಂದ ವೈದ್ಯರಿಗೆ ಒಂದು ವರ್ಷ ಗ್ರಾಮೀಣ ಸೇವೆ ಕಡ್ಡಾಯ ಎಂದು ನಿಯಮ ಇತ್ತು. ಇದರಿಂದಾಗಿ ಹುದ್ದೆಗಳಿಗಿಂತಲೂ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಸರ್ಕಾರ ನೇರವಾಗಿ ಖಾಲಿ ಹುದ್ದೆಗಳಿಗೆ ವೈದ್ಯರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ ಎಂದರು. +ಆರೋಗ್ಯ ಇಲಾಖೆ ಉತ್ತರ ಕರ್ನಾಟಕ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದತ್ತ ಹೆಚ್ಚಿನ ಗಮನ ಹರಿಸಬೇಕು. ಹಿಂದುಳಿದ ಭಾಗಗಳ ಬಗ್ಗೆ ಭಾಷಣ ಹೊಡೆದರೆ ಆಗುವುದಿಲ್ಲ, ಅಗತ್ಯ ಸೌಲಭ್ಯ ದೊರಕಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕಿದೆ ಎಂದರು. \ No newline at end of file diff --git a/eesanje/url_46_300_2.txt b/eesanje/url_46_300_2.txt new file mode 100644 index 0000000000000000000000000000000000000000..e915263e3be91792c916f90ed8253bb945bd66fd --- /dev/null +++ b/eesanje/url_46_300_2.txt @@ -0,0 +1,12 @@ +ದೇಶದಲ್ಲಿ ಏಡ್ಸ್ ಮುಕ್ತಗೊಳಿಸಲು ಸಿಎಂ ಸಿದ್ದು ಕರೆ +ಬೆಂಗಳೂರು, ಡಿ.1- ಮುಂದಿನ ಐದು ವರ್ಷಗಳಲ್ಲಿ ದೇಶ ಮತ್ತು ರಾಜ್ಯವನ್ನು ಏಡ್ಸ್ ಮುಕ್ತಗೊಳಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ವತಿಯಿಂದ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. +ಹೆಚ್‍ಐವಿ ಮಾರಕ ಸಾಂಕ್ರಾಮಿಕ ರೋಗ. ಇದನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿಯಾಗಿದೆ. 1981ರಲ್ಲಿ ಮೊದಲು ಇದು ಕಾಣಿಸಿಕೊಂಡಿತ್ತು. 1986 ಭಾರತದಲ್ಲಿ, 1996 ರಾಜ್ಯದಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಂಕು ಹರಡುವುದು ಕಡಿಮೆಯಾಗಿದೆ. ಆದರೆ ಸೋಂಕನ್ನು ಶೂನ್ಯಕ್ಕೆ ತರುವ ಘೋಷಣೆ ಇನ್ನೂ ಸಾಧ್ಯವಾಗಿಲ್ಲ ಎಂದರು. +ಸೋಂಕಿನ ಪ್ರಮಾಣದಲ್ಲಿ ಜಗತ್ತಿನಲ್ಲಿ ನಾವು ಮೂರನೇ ಸ್ಥಾನದಲ್ಲಿದ್ದೇವೆ. ಅದಕ್ಕಾಗಿ ಹೆಚ್ಚು ಜಾಗೃತರಾಗಿರುವ ಅಗತ್ಯವಿದೆ. ಸೋಂಕು ಹರಡುವಿಕೆಯ ಬಗ್ಗೆ ತಪ್ಪು ಕಲ್ಪನೆಗಳಿವೆ. ಮಾತನಾಡುವುದರಿಂದ ಸೋಂಕು ಹರಡುವುದಿಲ್ಲ. ರಕ್ತ, ಲಾಲಾ ರಸದ ಮೂಲಕ ಹರಡುತ್ತದೆ. ಸೋಂಕು ತಗಲಿದ ಬಳಿಕ ಅನುಭವಿಸುವ ಬದಲು ಮುಂಜಾಗ್ರತೆ ಅಗತ್ಯ ಎಂದರು. +ಐದು ವರ್ಷದಲ್ಲಿ ಭಾರತ ಮತ್ತು ರಾಜ್ಯ ಏಡ್ಸ್ ಮುಕ್ತವಾಗಬೇಕು. ಇಂದಿನ ದಿನ ಆಚರಣೆಗೆ ನಾನು ಶುಭಾಷಯ ಕೋರುವುದಿಲ್ಲ, ರೋಗ ತೊಲಗಲಿ ಎಂದು ಆಶಿಸುತ್ತೇನೆ. ಹೆಚ್‍ಐವಿ ನಿಯಂತ್ರಣ ಕಾಯ್ದೆಯನ್ನು 2017ರಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿತ್ತು ಎಂದು ಸ್ಮರಿಸಿಕೊಂಡರು. ಏಡ್ಸ್ ರೋಗ ನಿಯಂತ್ರಣ ಅಭಿಯಾನದ ರಾಯಭಾರಿಯಾಗಿದ್ದ ನಟಿ ಸಂಜನಾ ಗಲ್ರಾನಿಯವರನ್ನು ಇದೇ ವೇಳೆ ಅಭಿನಂದಿಸಿದರು. +ಈ ವೇಳೆ ಸಂಜನಾ ಅವರನ್ನು ಶ್ರೀಮತಿ ಎಂದು ಸಂಬೋಸಿದ ಮುಖ್ಯಮಂತ್ರಿಯವರು, ಸಾರಿ , ಕುಮಾರಿ ಸಂಜನಾ.. ಶ್ರೀಮತಿ ಎಂದು ಬಿಟ್ಟೆ, ನನಗೆ ಗೊತ್ತಿರಲಿಲ್ಲ. ಶ್ರೀಮತಿನಾ ಎಂದು ಪ್ರಶ್ನಿಸಿದರು. ಸಂಜನಾ ತಾವು ಶ್ರೀಮತಿ ಎಂದು ಒಪ್ಪಿಕೊಂಡರು. +ಇದೇ ವೇಳೆ ಹೆಚ್‍ಐವಿ ಸೋಂಕನ್ನು ಜಯಿಸಿದ ತ್ಯಾಗರಾಜು ಅವರನ್ನು ಮುಖ್ಯಮಂತ್ರಿ ವೇದಿಕೆಯಲ್ಲಿ ಅಭಿನಂದಿಸಿದರು. ಸೋಂಕಿನೊಂದಿಗೆ ತ್ಯಾಗರಾಜ್ ಇಪ್ಪತ್ತಾರು ವರ್ಷ ಬದುಕಿದ್ದಾರೆ, ಅವರಿಗೀಗ ಅರವತ್ತಾರು ವರ್ಷ ಎಂದು ಭುಜ ತಟ್ಟಿದರು. ಇವರಿಂದ ಕಾರ್ಯಕ್ರಮದಲ್ಲಿ ಮಾತಮಾಡಿಸಿ, ಇತರರಿಗೂ ಮಾರ್ಗದರ್ಶನವಾಗಲಿ ಎಂದರು. ನಿಮ್ಮ ಶ್ರೀಮತಿಯವರಿಗೆ ಸೋಂಕು ಇದೆಯಾ? ಎಂದು ಮುಖ್ಯಮಂತ್ರಿ ಕೇಳಿ ತಿಳಿದುಕೊಂಡರು. ತಮ್ಮ ಪತ್ನಿಗೆ ಸೋಂಕು ಇದೆ, ನಮ್ಮ ಮಕ್ಕಳಿಗೆ ಇಲ್ಲ ಎಂದು ತ್ಯಾಗರಾಜ್ ಹೇಳಿದರು. +ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ +ಹುಟ್ಟಿನಿಂದಲೇ ಸೋಂಕು ಬಾತನಾಗಿದ್ದ 25 ವರ್ಷದ ಪ್ರಶಾಂತ್ ಮಾತನಾಡಿ, ತಾನು ಕಲಬುರಗಿಯವನು. ನಾಲ್ಕನೆ ತರಗತಿಯಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಸೋಂಕು ಪತ್ತೆಯಾಯಿತು. ಆರಂಭದಲ್ಲಿ ತುಂಬಾ ಕಷ್ಟವಾಗುತ್ತಿತ್ತು. ತಾರತಮ್ಯ ಹೆಚ್ಚಿತ್ತು. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದೇನೆ. ಸೋಂಕಿತರು ನಿಯಮಿತವಾಗಿ ಔಷ ಸೇವಿಸಿ ಆತಂಕವಿಲ್ಲದೆ ಜೀವನ ನಡೆಸಿ ಎಂದುಸಲಹೆ ನೀಡಿದರು.ನಟ ಪ್ರೇಮ್ ಎದ್ದು ಬಂದು ಪ್ರಶಾಂತ್ ಹೆಗಲ ಮೇಲೆ ಕೈ ಇಟ್ಟು ನಿಜವಾದ ರಾಯಬಾರಿ ಮತ್ತು ಹಿರೋ ಈತ ಎಂದರು. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ಪ್ರಾರಂಭವಾಗಿ 25 ವರ್ಷಗಳಾಗಿದ್ದು, ಈ ವರ್ಷ ರಜತ ಮಹೋತ್ಸವ ಆಚರಿಸಲಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ ಎಲ್ಲರನ್ನು ಅಭಿನಂದಿಸುವುದಾಗಿ ಹೇಳಿದರು. +2013-14ರಲ್ಲಿ ಸೋಂಕಿತರ ಪ್ರಮಾಣ ಶೇ. 1.77 ರಷ್ಟಿತ್ತು. ಗರ್ಭಿಣಿಯರಲ್ಲಿ ಶೇ. 0.3ರಷ್ಟಿದ್ದ ಸೋಂಕಿನ ಪ್ರಮಾಣ ಈಗ ಶೇ.0.21ರಷ್ಟಾಗಿದೆ 2023-24 ಸಾಲಿನಲ್ಲಿ ಸೋಂಕಿನ ಪ್ರಮಾಣ ಶೇ. 0.36 ಇಳಿಕೆಯಾಗಿದೆ. ರಾಜ್ಯದಲ್ಲಿ 3,82,910 ಮಂದಿ ನೋಂದಣಿಯಾಗಿದ್ದರು. 1.85 ಲಕ್ಷ ಮಂದಿ ಎಆರ್ ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ಆತಂಕ ಪಡಬೇಕಿಲ್ಲ, ಸುರಕ್ಷಿತ ಕ್ರಮಗಳ ಮೂಲಕ ಮುಂಜಾಗ್ರತೆ ಅವಶ್ಯ ಎಂದರು. +ಏಡ್ಸ್ ನಿರ್ಮೂಲನೆಯಲ್ಲಿ ಶ್ರಮಿಸಿದ ವ್ಯಕ್ತಿ ಮತ್ತು ಸಂಸ್ಥೆಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಲಿ ಅಧ್ಯಕ್ಷರೂ ಆದ ಶಾಸಕ ಅಜಯ್ ಸಿಂಗ್, ನಟ ಪ್ರೇಮ್, ನಟಿ ಸಂಜನಾ ಗಲ್ರಾನಿ, ಹಿರಿಯ ಅಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_300_3.txt b/eesanje/url_46_300_3.txt new file mode 100644 index 0000000000000000000000000000000000000000..ae0fd233a1360c00869688f8c08a44ed538b48c3 --- /dev/null +++ b/eesanje/url_46_300_3.txt @@ -0,0 +1,6 @@ +ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸುವ ಮುಜಾಹಿದ್ದೀನ್ ಯಾರು..? +ಬೆಂಗಳೂರು,ಡಿ.1- ಬೆಂಗಳೂರು ನಗರ ಸೇರಿದಂತೆ ಹೊರವಲಯದ ಕೆಲವು ಖಾಸಗಿ ಶಾಲೆಗಳಿಗೆ ಮುಜಾಹಿದ್ದೀನ್ ಹೆಸರಿನಲ್ಲಿ ಕಳುಹಿಸಿರುವ ಇ-ಮೇಲ್‍ನಲ್ಲಿ ಕೆಲವು ಉಗ್ರವಾದದ ಪದಬಳಕೆ ಮಾಡಲಾಗಿರುವುದು ಆತಂಕ ಸೃಷ್ಟಿಸಿದೆ. ಇಷ್ಟು ಶಾಲೆಗಳಿಗೆ ಒಂದೇ ಕಡೆಯಿಂದ ಇ-ಮೇಲ್ ಕಳುಹಿಸಿರುವ ಸಾಧ್ಯತೆ ಇದ್ದು, ಇದೊಂದು ಬೆದರಿಕೆಯ ತಂತ್ರವಾಗಿದ್ದು , ; ಬೆಂಗಳೂರು ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ಹಲವು ಆಯಾಮಗಳಲ್ಲಿ ಈಗ ತನಿಖೆ ಆರಂಭಿಸಿದ್ದಾರೆ. +ಸಮಾಜದಲ್ಲಿ ಭೀತಿಯ ವಾತಾವರಣ ಸೃಷ್ಟಿಸುವ ಸಲುವಾಗಿಯೇ ಶಾಲೆಗಳನ್ನೇ ಕೇಂದ್ರೀಕರಿಸಲಾಗಿದೆ. ಪೊಲೀಸರು ಈಗಾಗಲೇ ರಾಷ್ಟ್ರೀಯ ತನಿಖಾ ತಂಡಗಳನ್ನು ಸಂಪರ್ಕಿಸಿದ್ದು, ಇದರ ಹಿಂದಿನ ಸಂಘಟನೆಗಳು ಅಥವಾ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. +ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ +ಇ-ಮೇಲ್ ಡೊಮೈನ್‍ನಲ್ಲಿ ಮುಜಾಹಿದ್ದೀನ್ ಎಂಬ ಹೆಸರಿದೆ. ಆದರೆ ಕಳುಹಿಸಿದವರ ಪೂರ್ಣ ವಿವರವಿಲ್ಲದ ಕಾರಣ ಸೈಬರ್ ಅಪರಾಧ ಪೊಲೀಸರು ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಬೆಂಗಳೂರಿನಲ್ಲಿ ಕುಳಿತು ಅಥವಾ ಬೇರೆ ಕಡೆಯಿಂದ ಇಮೇಲ್ ಕಳುಹಿಸಲಾಗಿದೆಯೇ, ಇದು ಪೂರ್ವನಿಯೋಜಿತ ಕೃತ್ಯವೇ ಎಂಬುದರ ಬಗ್ಗೆ ನಗರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. +ಬಿಬ್ಲೇ ಡೊಮೈನ್‍ನಿಂದ ಮೇಲ್‍ನಿಂದ ಇದನ್ನು ಕಳುಹಿಸಲಾಗಿದ್ದು, ಇದರಲ್ಲಿ ಯಾರು ಕಳುಹಿಸುತ್ತಿದ್ದಾರೆ ಎಂಬುದು ತಿಳಿಯುವುದಿಲ್ಲ ಮತ್ತು ಅವರ ಐಪಿ ಕೂಡ ಸಿಗುವುದಿಲ್ಲ. ಹಾಗಾಗಿ ಪೊಲೀಸರಿಗೆ ಇದೊಂದು ಸವಾಲಾಗಿದೆ. \ No newline at end of file diff --git a/eesanje/url_46_300_4.txt b/eesanje/url_46_300_4.txt new file mode 100644 index 0000000000000000000000000000000000000000..499a150c6a23a8881522a8a968363b469a7ab864 --- /dev/null +++ b/eesanje/url_46_300_4.txt @@ -0,0 +1,8 @@ +ಸಮಾಜಘಾತುಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಆರ್.ಅಶೋಕ್ ಆಗ್ರಹ +ಬೆಂಗಳೂರು,ಡಿ.1- ಶಾಲೆಗಳಿಗೆ ಇಮೇಲ್ ಮೂಲಕ ಕಳುಹಿಸಿರುವ ಟೈಪ್ ಮಾಡಿದ್ದ ರೀತಿ ನೋಡಿದರೆ ಇದೊಂದು ಹೈಲೆವಲ್ ಟೆರರಿಸ್ಟ್ ತರಹ ಕಾಣುತ್ತದೆ. ಅಲ್ಲಾಹುಗೆ ತೊಂದರೆ ಮಾಡುತ್ತಿದ್ದೀರಿ ಎಂದು ಬರೆಯಲಾಗಿದೆ. ಇಂತಹ ಸಮಾಜಘಾತುಕರ ವಿರುದ್ಧ ಯಾವುದೇ ಮುಲಾ ಜಿಲ್ಲದೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈನಲ್ಲಿ ಗಲಾಟೆ ಮಾಡಿದ್ದೀರಿ, ಮುಸ್ಲಿಮರಿಗೆ ಅಪಮಾನ ಮಾಡಲಾಗುತ್ತದೆ. ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು ಹೀಗೆ ಗಂಭೀರ ವಿಷಯಗಳನ್ನು ಇಮೇಲ್‍ನಲ್ಲಿ ಬರೆಯಲಾಗಿದೆ. +ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದರಲ್ಲದೆ, ಒಂದೇ ಹಂತದಲ್ಲಿ ಇಷ್ಟು ಶಾಲೆಗಳಿಗೆ ಒಬ್ಬರೇ ಇಮೇಲ್ ಮಾಡಿ ಬಾಂಬ್ ಬೆದರಿಕೆ ಹಾಕಿರುವುದರ ಹಿಂದೆ ದೊಡ್ಡ ಷಡ್ಯಂತರ ಅಡಗಿದೆ ಎಂದು ಅನುಮಾನವನ್ನು ವ್ಯಕ್ತಪಡಿಸಿದರು. +ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ +ಇಮೇಲ್ ಎಲ್ಲಿಂದ ಬಂದಿದೆ? ಯಾರಿಂದ ಬಂದಿದೆ? ಇವರ ಉದ್ದೇಶವೇನು? ಎಂಬುದನ್ನು ಪತ್ತೆ ಹಚ್ಚಬೇಕು. ಈಗಿನ ತಂತ್ರಜ್ಞಾನದಲ್ಲಿ ಇದನ್ನು ಪತ್ತೆ ಮಾಡುವುದು ಅಷ್ಟೇನೂ ಕಷ್ಟಕರವಲ್ಲ. ಪೊಲೀಸರು ಸೈಬರ್ ತಂತ್ರಜ್ಞರ ಸಹಾಯದಿಂದ ಮೇಲ್ ಎಲ್ಲಿಂದ ಬಂದಿದೆ ಎಂಬುದನ್ನು ಮೊದಲು ಪತ್ತೆ ಹಚ್ಚಲಿ ಎಂದು ಒತ್ತಾಯಿಸಿದರು. ಮುಂಬೈ ತಾಜ್‍ಹೋಟೆಲ್ ಮೇಲಿನ ದಾಳಿ ಮಾದರಿಯಲ್ಲೇ ನಗರದ ಶಾಲೆಗಳ ಮೇಲೆ ದಾಳಿ ನಡೆಸಲು ಬೆದರಿಕೆ ಸಂದೇಶಗಳು ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. +ಭಾರತೀಯರು ಮುಸ್ಲಿಮರನ್ನು ಅವಹೇಳನ ಮಾಡುತ್ತಿದ್ದಾರೆ ಎಂದು ಈ ರೀತಿ ಸಂದೇಶ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ಇದೆ. ಇಂತಹ ಸಮಾಜಘಾತುಕರನ್ನು ಎಡೆಮುರಿ ಕಟ್ಟಿದಾಗ ಮಾತ್ರ ಮುಂದೆ ಇಂತಹ ಪ್ರಕರಣಗಳು ಮರುಕಳುಹಿಸುವುದಿಲ್ಲ ಎಂದು ಅಶೋಕ್ ತಿಳಿಸಿದರು. +ಇದು ಭಾರತೀಯರಿಗೆ ಬೆದರಿಕೆಯೊಡ್ಡುವ ಸಂದೇಶವಾಗಿದೆ. ಯಾರು ಈ ರೀತಿ ಸಂದೇಶ ಕಳುಹಿಸಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆದರಿಕೆ ಸಂದೇಶದಿಂದ ಪೊಷಕರು ಆತಂಕಕ್ಕೊಳಗಾಗಿದ್ದಾರೆ. ಮೊದಲು ಮಕ್ಕಳ ಸುರಕ್ಷತೆಗೆ ಒತ್ತು ಕೊಡಬೇಕು ಎಂದು ಸಲಹೆ ನೀಡಿದರು. \ No newline at end of file diff --git a/eesanje/url_46_300_5.txt b/eesanje/url_46_300_5.txt new file mode 100644 index 0000000000000000000000000000000000000000..b2671424994aaed482e19871025497ed9e58e84a --- /dev/null +++ b/eesanje/url_46_300_5.txt @@ -0,0 +1,6 @@ +ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಪರಮೇಶ್ವರ್ +ತುಮಕೂರು, ಡಿ.1- ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ಅೀಧಿಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದರು. +ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ, ಸಿಬ್ಬಂದಿ ಹಾಗೂ ಎಲ್ಲ ಸ್ಕ್ವಾಡ್‍ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು, ಕಟ್ಟೆಚ್ಚರ ವಹಿಸುವಂತೆ ನಿರ್ದೇಶಿಸಿದರು. +ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವೂ ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶೀಲಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು. +ಸೆಂಬರ್‌ನಲ್ಲಿ 18 ದಿನ ಬ್ಯಾಂಕ್‍ ರಜೆ +ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕ ಪಡುವುದು ಬೇಡ ಎಂದರು. \ No newline at end of file diff --git a/eesanje/url_46_300_6.txt b/eesanje/url_46_300_6.txt new file mode 100644 index 0000000000000000000000000000000000000000..bc7fe32a814c644c8dc8b56320ce518f19fd117f --- /dev/null +++ b/eesanje/url_46_300_6.txt @@ -0,0 +1,8 @@ + : ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ +ಬೆಂಗಳೂರು,ಡಿ.1- ಇಂದು ಬೆಳ್ಳಂಬೆಳಗ್ಗೆ ರಾಜ್ಯ ರಾಜಧಾನಿ ಹಾಗೂ ಹೊರವಲಯದಲ್ಲಿನ 15ಕ್ಕೂ ಹೆಚ್ಚು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇಮೇಲ್ ಮೂಲಕ ಕಳುಹಿಸಿರುವ ಸಂದೇಶದಿಂದ ಕೆಲಕಾಲ ಆತಂಕ ಉಂಟಾಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಶಾಲಾ ಆಡಳಿತ ಮಂಡಳಿ ಶಾಲೆಗೆ ಬಂದು ಇಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ತಕ್ಷಣ ಶಾಲಾ ಕೊಠಡಿಗಳಿಂದ ಮಕ್ಕಳನ್ನು ಹೊರಗೆ ಕರೆತಂದು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. +ಬಸವೇಶ್ವರನಗರದ ನ್ಯಾಷಲ್ ಶಾಲೆ, ವಿದ್ಯಾಶಿಲ್ಪ ಶಾಲೆ, ಸದಾಶಿವನಗರದ ನೀವ್ ಶಾಲೆ, ಹೆಬ್ಬಗೋಡಿಯ ಎಬಿನೇಜರ್ ಶಾಲೆ, ಸರ್ಜಾಪುರದ ಗ್ರೀನ್‍ವುಡ್ ಹೈಸ್ಕೂಲ್, ದೊಮ್ಮಸಂದ್ರದ ಇನ್ವೇಚರ್ ಶಾಲೆ, ಸಿಂಗೇನ ಅಗ್ರಹಾರ ಸಮೀಪದ ಶಾಲೆ, ಚಾಮರಾಜಪೇಟೆಯ ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಆನೆಕಲ್ ವ್ಯಾಪ್ತಿಯ ಐದು ಶಾಲೆಗಳು, ನಾಗದೇವಹಳ್ಳಿಯ ಚಿತ್ರಕೂಟ ಶಾಲೆ, ಯಲಹಂಕ ವ್ಯಾಪ್ತಿಯ ಖಾಸಗಿ ಶಾಲೆಗಳು, ಬನ್ನೇರುಘಟ್ಟ ಬಳಿಯ ಗ್ಲೋಬಲ್ ಇಂಟರ್‍ನ್ಯಾಷನಲ್ ಶಾಲೆ ಸೇರಿದಂತೆ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಇಮೇಲ್ ಮೂಲಕ ರವಾನೆಯಾಗಿದೆ. +ಭಾರತದ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಚೀನಾ +ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ ಇಲ್ಲದಿದ್ದರೆ ಸಾಯಲು ಸಿದ್ದವಾಗಿ ಎಂಬ ಸಂದೇಶವನ್ನು ಮುಜಾಹಿದ್ದೀನ್ ಎಂಬ ಹೆಸರಿನಲ್ಲಿ ಬೆದರಿಕೆ ಕರೆ ಬಂದಿದೆ ಎಂಬುದು ತಿಳಿದುಬಂದಿದೆ. +ಶಾಲೆಗಳತ್ತ ಪೋಷಕರ ದೌಡು:ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗಳತ್ತ ದೌಡಾಯಿಸಿ ಮಕ್ಕಳನ್ನು ವಾಪಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು. +ಬಾಂಬ್ ನಿಷ್ಕ್ರಿಯ ದಳ:ಸ್ಥಳಕ್ಕೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರು ಶಾಲೆಗಳಿಗೆ ಧಾವಿಸಿ ಶಾಲಾ ಕೊಠಡಿಗಳು ಸೇರಿದಂತೆ ಶೌಚಾಲಯ ಹಾಗೂ ಶಾಲಾ ಸುತ್ತಮುತ್ತ ಪರಿಶೀಲಿಸಿದರಾದರೂ ಸದ್ಯಕ್ಕೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. +ಶಾಲೆಗಳಿಗೆ ರಜೆ:ಬಾಂಬ್ ಬೆದರಿಕೆ ಸಂದೇಶ ಬಂದ ಶಾಲೆಗಳ ಆಡಳಿತ ಮಂಡಳಿಗಳು ಮಕ್ಕಳ ಪೋಷಕರಿಗೆ ಕರೆ ಮಾಡಿ ಶಾಲೆಗೆ ರಜೆ ನೀಡಿ ಮಕ್ಕಳನ್ನು ಕಳುಹಿಸಿದರು. ಕಳೆದ ಒಂದು ವರ್ಷದಿಂದ ನಿರಂತರವಾಗಿ ಬೆದರಿಕೆ ಕರೆಗಳು, ಸಂದೇಶಗಳು ಬರುತ್ತಿವೆ. ಕಳೆದ ವರ್ಷ ಒಂದೇ ದಿನ 30 ಶಾಲೆಗಳಿಗೆ ಇಮೇಲ್ ಬೆದರಿಕೆ ಹಾಕಲಾಗಿತ್ತು. ಇದೀಗ ಕಿಡಿಗೇಡಿಗಳು ಅದೇ ಚಾಳಿ ಮುಂದುವರೆಸಿದ್ದಾರೆ. \ No newline at end of file diff --git a/eesanje/url_46_300_7.txt b/eesanje/url_46_300_7.txt new file mode 100644 index 0000000000000000000000000000000000000000..82e92a3cef29b57d4f1280b7e2c305991c2c90b6 --- /dev/null +++ b/eesanje/url_46_300_7.txt @@ -0,0 +1,10 @@ +ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿ : ಸತೀಶ್ ಜಾರಕಿಹೊಳಿ +ಬೆಂಗಳೂರು, ನ.30- ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೂ ಅವಕಾಶ ನೀಡಬೇಕು ಮತ್ತು ಶೀಘ್ರ ನೇಮಕಾತಿಯಾದರೆ ಸೂಕ್ತ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸಬರಿಗೆ ನಿಗಮ ಮಂಡಳಿ ಅವಕಾಶ ಇಲ್ಲವೇ ಇಲ್ಲ ಎಂದು ಮೊದಲೇ ಹೇಳಲಾಗಿತ್ತು. ಈಗಲೂ ಅದನ್ನೇ ಹೇಳುತ್ತಿದ್ದಾರೆ. ಮೊದಲ ಸಲ ಆಯ್ಕೆಯಾದವರಿಗೆ ಅವಕಾಶ ಇಲ್ಲ. ಮೂರು ನಾಲ್ಕು ಬಾರಿ ಗೆದ್ದವರಿಗೆ ನಿಗಮ ಮಂಡಳಿ ನೀಡಲು ಪಕ್ಷ ಬದ್ದವಾಗಿದೆ. +ಹಿರಿಯರಿಗೆ ಅವಕಾಶ ಮಾಡಿಕೊಟ್ಟರೆ ಭಿನ್ನಮತಗಳು ಇರುವುದಿಲ್ಲ. ನಮ್ಮ ಜಿಲ್ಲೆಯಲ್ಲಿ ಮೂವರು ಹಿರಿಯರಿದ್ದಾರೆ. ಅವರಿಗೆ ನಿಗಮ ಮಂಡಳಿ ಕೊಟ್ಟೇ ಕೊಡ್ತಾರೆ ಎಂಬ ವಿಶ್ವಾಸವಿದೆ. ಶೀಘ್ರವಾಗಿ ನಿಗಮ ಮಂಡಳಿ ನೇಮಕವಾಗಬೇಕು. ಸದನ ಪ್ರಾರಂಭ ಆಗುವ ಮೊದಲೇ ನೇಮಕವಾದರೆ ಒಳ್ಳೆಯದು ಎಂದರು. +ಕಾರ್ಯಕರ್ತರಿಗೂ ಅವಕಾಶ ಮಾಡಿಕೊಡಬೇಕು, ಪಕ್ಷಕ್ಕೆ ಕಾರ್ಯಕರ್ತರೆ ಆಧಾರ ಸ್ಥಂಬ, ಸಹಜವಾಗಿ ಕಾರ್ಯಕರ್ತರಿಂದಲೂ ಬೇಡಿಕೆ ಇದೆ. ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿವೇಶನಕ್ಕೆ ಮೊದಲೇ ನೇಮಕಾತಿ ಮಾಡಿ, ಆದೇಶ ನೀಡಿದರೆ ಸೂಕ್ತ. ಆದರೆ ಮುಖ್ಯಮಂತ್ರಿ ಮತ್ತು ಅಧ್ಯಕ್ಷರು ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. +ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ +ಬೆಳಗಾವಿ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗಿಲ್ಲ. ಈ ಬಾರಿಯಾದರೂ ಚರ್ಚೆಯಾಗುತ್ತಾ ನೋಡಬೇಕಿದೆ ಎಂದು ಹೇಳಿದರು. ನಿಗಮ ಮಂಡಳಿ ನೇಮಕಾತಿ ವೇಳೆಯಲ್ಲಿ ಹಿರಿಯರ ಅಭಿಪ್ರಾಯ ಪಡೆದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಧಾನಕ್ಕೆ ದನಿಗೂಡಿಸಿದ ಸತೀಶ್ ಜಾರಕಿಹೊಳಿ, ಹೌದು, ಪರಮೇಶ್ವರ್ ಅಭಿಪ್ರಾಯ ಕೇಳಬೇಕಿತ್ತು. ಅವರು ಎಂಟು ವರ್ಷ ಅವರು ಅಧ್ಯಕ್ಷರಾಗಿದ್ದವರು. ಪಕ್ಷದ ಭಾಗವಾಗಿದ್ದರು. ಅವರ ಸಲಹೆ ಕೂಡ ಪಡೆಯಬೇಕಿತ್ತು ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟದಲ್ಲಿ ಸಹಮತದಿಂದಲೇ ಈ ನಿರ್ಣಯವಾಗಿದೆ. ಸಂಖ್ಯಾಬೆಂಬಲ ಇಲ್ಲದಿದ್ದರೆ ನಿರ್ಣಯ ಅಂಗೀಕಾರಗೊಳ್ಳುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. +ಗುತ್ತಿಗೆದಾರರ ಬಿಲ್‍ಗಳು ಬಾಕಿ ಉಳಿದಿರುವ ಕುರಿತು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ತಗಾದೆ ಇಲ್ಲ. ಬಿಬಿಎಂಪಿಯಲ್ಲಿ ಬಿಲ್ ಬಾಕಿ ಇರುವ ಕುರಿತಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಆ ವಿಷಯವಾಗಿ ವಿಚಾರಣೆಯಾಗಿದೆ. ನಮ್ಮ ಇಲಾಖೆಯಲ್ಲಿ ಸಾಧ್ಯವಾದಷ್ಟು ಬಾಕಿಯನ್ನು ಪಾವತಿಸಲಾಗುತ್ತಿದೆ ಎಂದು ತಿಳಿಸಿದರು. +ಶಿಶು ಮಾರಾಟ ದಂಧೆ : 250ಕ್ಕೂ ಹೆಚ್ಚು ಶಿಶುಗಳ ಮಾರಾಟ ಬೆಳಕಿಗೆ +ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅಸಮಾಧಾನ ವಿಚಾರವಾಗಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕ್ಷೇತ್ರದ ಸಮಸ್ಯೆ ಇರಬಹುದು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಶಾಸಕರು ಚರ್ಚೆ ನಡೆಸಿದ್ದಾರೆ. ಈಗ ಅದು ಮುಗಿದು ಹೋದ ಕಥೆಯಾಗಿದೆ. ತಮ್ಮ ನಿರ್ದಿಷ್ಟ ಸಮಸ್ಯೆಗಳು ಮತ್ತು ಯಾರಿಂದ ಸಮಸ್ಯೆ ಎಂಬ ಬಗ್ಗೆ ಖುದ್ದು ಬಿ.ಆರ್.ಪಾಟೀಲ್ ಅವರೇ ಹೇಳಬೇಕು. ಸರ್ಕಾರ ಎಂದ ಮೇಲೆ ಪ್ರತಿನಿತ್ಯ ಸಮಸ್ಯೆಗಳು ಉದ್ಭವಿಸುತ್ತಲೇ ಇರುತ್ತವೆ. ಅವುಗಳನ್ನು ಬಗೆ ಹರಿಸಿ ಮುಂದೆ ಹೋಗಬೇಕಾಗುತ್ತದೆ. ಈ ಮೊದಲು ಶಾಸಕಾಂಗ ಸಭೆ ಕರೆದು ಬಗೆ ಹರಿಸುವ ಯತ್ನ ನಡೆಸಲಾಗಿತ್ತು. ಮುಂದೆಯೂ ಈ ರೀತಿಯ ಸಮಸ್ಯೆಗಳು ಬರಬಹುದು ಎಂದರು. \ No newline at end of file diff --git a/eesanje/url_46_300_8.txt b/eesanje/url_46_300_8.txt new file mode 100644 index 0000000000000000000000000000000000000000..336d76e493ad029af5b0a8d31d2a918e236cc373 --- /dev/null +++ b/eesanje/url_46_300_8.txt @@ -0,0 +1,12 @@ +ನಾಳೆ ಅಶೋಕ್, ವಿಜಯೇಂದ್ರ ದೆಹಲಿಗೆ +ಬೆಂಗಳೂರು,ನ.30- ನೂತನ ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನಾಳೆ ದೆಹಲಿಗೆ ತೆರಳಲಿದ್ದು, ಪಕ್ಷದ ಪ್ರಮುಖರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಜಯೇಂದ್ರ ಅವರ ಮೊದಲ ದೆಹಲಿ ಭೇಟಿ ಇದಾಗಿದೆ. +ಅಲ್ಲದೆ ಅಶೋಕ್ ಕೂಡ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಪಕ್ಷದ ಹಿರಿಯರನ್ನು ಭೇಟಿ ಮಾಡುತ್ತಿರುವುದು ಇದೇ ಮೊದಲು. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವರನ್ನು ಭೇಟಿಯಾಗಿ ಪಕ್ಷದ ಬೆಳವಣಿಗೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ. +ತಮ್ಮನ್ನು ಅತ್ಯಂತ ಜವಾಬ್ದಾರಿಯುತ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ವರಿಷ್ಠರಿಗೆ ಕೃತಜ್ಞತೆ ಸಲ್ಲಿಸಲು ವಿಜಯೇಂದ್ರ ದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ. ಅಶೋಕ್ ಕೂಡ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದರಿಂದ ತಮ್ಮ ಮೇಲೆ ವಿಶ್ವಾಸವಿಟ್ಟು ಮಹತ್ವದ ಜವಾಬ್ದಾರಿಯನ್ನು ನೀಡಿರುವ ಪಕ್ಷದ ನಾಯಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. +ಮೊಬೈಲ್‍ ಬಳಕೆ ವಿಚಾರಕ್ಕೆ ರೊಚ್ಚಿಗೆದ್ದು ಮಗನನ್ನೇ ಕೊಂದ ಅಪ್ಪ +ದೆಹಲಿಯ ಭೇಟಿ ಸಂದರ್ಭದಲ್ಲಿ ವಿಜಯೇಂದ್ರ ಮತ್ತು ಅಶೋಕ್, ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ಹಾಗೂ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ, ಉಪನಾಯಕ, ಮುಖ್ಯ ಸಚೇತಕರು, ಸೇರಿದಂತೆ ಪ್ರಮುಖ ಹುದ್ದೆಗಳ ಬಗ್ಗೆ ನೇಮಕ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. +ಇದೇ ಸಂದರ್ಭದಲ್ಲಿ ಹೊಸ ರಾಜ್ಯಾಧ್ಯಕ್ಷರ ನೇಮಕವಾಗಿರುವ ಹಿನ್ನಲೆಯಲ್ಲಿ ವಿಜಯೇಂದ್ರ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವ ಬಗ್ಗೆಯೂ ಸಲಹೆಯನ್ನು ಪಡೆಯಲಿದ್ದಾರೆ. ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಅಧಿಕಾರ ಅವಧಿಯಲ್ಲಿ ನೇಮಕವಾಗಿದ್ದ ಪದಾಕಾರಿಗಳನ್ನು ಬದಲಾಯಿಸಿ ಸೇವಾ ಹಿರಿತನ, ಪ್ರದೇಶವಾರು, ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಎಲ್ಲ ಸಮುದಾಯಗಳನ್ನು ಒಳಗೊಂಡ ಸಮನ್ವಯ ಸಾಸುವ ಪದಾಕಾರಿಗಳ ನೇಮಕಾತಿಗೆ ಒಲವು ತೋರಿದ್ದಾರೆ. +ಮೂಲ, ವಲಸಿಗ, ಆರ್‍ಎಸ್‍ಎಸ್, ಸಂಘ ಪರಿವಾರ ಎನ್ನದೆ ಪಕ್ಷ ನಿಷ್ಠರಿಗೆ ಮಾತ್ರ ಪಟ್ಟಿಯಲ್ಲಿ ಮಣೆ ಹಾಕಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವ ಲೆಕ್ಕಾಚಾರದಲ್ಲಿ ವಿಜಯೇಂದ್ರ ಇದ್ದಾರೆ. ಆ ಬಣ, ಈ ಬಣ ಎನ್ನದೆ ಬಿಜೆಪಿಯೇ ಮೂಲ ಬಣ ಎಂಬುದಕ್ಕೆ ಒತ್ತು ಕೊಟ್ಟಿರುವ ವಿಜೇಂದ್ರ ಯಾರಿಗೂ ಅಸಮಾಧಾನವಾಗದಂತೆ ಎಲ್ಲರನ್ನು ಸಮಾಧಾನಪಡಿಸುವ ಸಮತೋಲನ ಕಾಪಾಡುವ ಪಟ್ಟಿಯನ್ನು ಸಿದ್ದಪಡಿಸುವ ಲೆಕ್ಕಾಚಾರದಲ್ಲಿದ್ದಾರೆ. +ಇನ್ನು ಬರಲಿರುವ ಲೋಕಸಭೆ ಚುನಾವಣೆಗೆ ಪಕ್ಷವನ್ನು ಬಲಪಡಿಸುವುದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಕ್ಷೇತ್ರಗಳ ಹಂಚಿಕೆ, ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ರೂಪಿಸುವುದು ಸೇರಿದಂತೆ ಹಲವಾರು ಕಾರ್ಯತಂತ್ರಗಳ ಬಗ್ಗೆಯೂ ಹಿರಿಯ ನಾಯಕರಿಂದ ಸಲಹೆಗಳನ್ನು ಪಡೆದುಕೊಳ್ಳಲಿದ್ದಾರೆ. +ತೆಲಂಗಾಣ ಚುನಾವಣೆ : ಮತ ಚಲಾಯಿಸಿದ ಸ್ಟಾರ್ ನಟರು +ವಿಜಯೇಂದ್ರ ಮತ್ತು ಅಶೋಕ್ ನೇಮಕಾತಿಗೆ ಮಾಜಿ ಸಚಿವರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶಾಸಕ ಅರವಿಂದ ಬೆಲ್ಲದ್ ಮತ್ತಿತರರು ಅಪಸ್ವರ ತೆಗೆದಿದ್ದಾರೆ. ಭಿನ್ನಮತೀಯ ಬಣ ಡಿ.7ರಂದು ನವದೆಹಲಿಗೆ ತೆರಳುತ್ತಿದ್ದು, ವರಿಷ್ಠರಿಗೆ ದೂರು ನೀಡಲಿದ್ದಾರೆ. ಇದಕ್ಕೂ ಮುನ್ನವೇ ದೆಹಲಿಗೆ ತೆರಳುತ್ತಿರುವ ವಿಜಯೇಂದ್ರ ಮತ್ತು ಅಶೋಕ್ ಪಕ್ಷದೊಳಗೆ ವರಿಷ್ಠರ ತೀರ್ಮಾನವನ್ನು ಯಾರೊಬ್ಬರು ಪ್ರಶ್ನೆ ಮಾಡದಂತೆ ಸೂಚನೆ ನೀಡಬೇಕೆಂದು ಮನವಿ ಮಾಡುವ ಸಾಧ್ಯತೆ ಇದೆ. +ವಿಧಾನಸಭೆ ಚುನಾವಣೆಗೂ ಮುನ್ನವೇ ಕೆಲವರು ಈ ರೀತಿ ತಮ್ಮ ಬಾಯಿಯನ್ನು ಸಡಿಲ ಮಾಡಿದ್ದರಿಂದಲೇ ನಮಗೆ ಒಡೆತ ಬಿದ್ದಿತ್ತು ಪುನಃ ಇದು ಪುನರಾವರ್ತನೆಯಾದರೆ ಮತ್ತೆ ಹಿನ್ನಡೆಯಾಗಲಿದೆ. ಭಿನ್ನಮತೀಯರ ಬಾಯಿಗೆ ಕಡಿವಾಣ ಹಾಕುವಂತೆ ದೂರು ನೀಡುವ ಸಾಧ್ಯತೆ ಇದೆ. \ No newline at end of file diff --git a/eesanje/url_46_300_9.txt b/eesanje/url_46_300_9.txt new file mode 100644 index 0000000000000000000000000000000000000000..5ab1bdb9e2c1ac441de1f28275cb60f573a91129 --- /dev/null +++ b/eesanje/url_46_300_9.txt @@ -0,0 +1,14 @@ +ಆ್ಯಂಬುಲೆನ್ಸ್ ಸೇವೆ ಅವ್ಯವಸ್ಥೆ : ಡಿಸಿಎಂ ಡಿಕೆಶಿ ಆಕ್ರೋಶ +ಬೆಂಗಳೂರು,ನ.30- ಆರೋಗ್ಯ ಕವಚ ಯೋಜನೆಯಡಿ ಒದಗಿಸಲಾಗುತ್ತಿರುವ 108 ತುರ್ತು ಆ್ಯಂಬುಲೆನ್ಸ್ ಸೇವೆಯ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ 262 ಆ್ಯಂಬುಲೆನ್ಸ್‍ಗಳನ್ನು ಆರೋಗ್ಯ ಕವಚ ಯೋಜನೆಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆ್ಯಂಬುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಂಡಿರುವ ಚಾಲಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. +ಕನಕಪುರಕ್ಕೆ ಮೆಡಿಕಲ್ ಕಾಲೇಜು ಬೇಕು ಎಂದು ನಾನು ಏಕೆ ಕೇಳಿಕೊಳ್ಳುತ್ತೇನೆ ಎಂದರೆ 108 ಚಾಲಕರದ್ದು ಒಂದು ಚೇಸ್ಟೆ ಇದೆ. ಮಳವಳ್ಳಿ ಕಡೆಯಿಂದ ಅನೇಕರು ಬರುತ್ತಾರೆ. ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು. ಆದರೆ, ಖಾಸಗಿ ಆಸ್ಪತ್ರೆಗಳ ಜತೆ ಹೊಂದಾಣಿಕೆ ಮಾಡಿಕೊಂಡು ಆ್ಯಂಬುಲೆನ್ಸ್ ಚಾಲಕರು ರೋಗಿಗಳನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತಾರೆ. +ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ +ಅಲ್ಲಿ ಸಾವಿರಾರು ರೂ.ಗಳ ಚಿಕಿತ್ಸಾ ವೆಚ್ಚವಾಗುತ್ತದೆ. ತುರ್ತು ಸಂದರ್ಭದಲ್ಲಿ ಪೋಷಕರು ಅಥವಾ ಸಂಬಂಧಿಕರಿಗೆ ಪ್ರಾಣ ರಕ್ಷಣೆಯೇ ಮುಖ್ಯವಾಗುತ್ತದೆ. ಆದರೆ, ಜೀವ ಉಳಿದ ಬಳಿಕ ಹಣ ಭರಿಸಲಾಗದೆ ಪರದಾಡುತ್ತಾರೆ. ಶಾಸಕರ ಬಳಿ ಸರ್ಕಾರದಿಂದ ನೆರವು ಕೊಡಿಸುವಂತೆ ಮನವಿ ಮಾಡುತ್ತಾರೆ. +ನಾವುಗಳು ಮುಖ್ಯಮಂತ್ರಿಯವರ ಬಳಿ ಅರ್ಜಿಗಳನ್ನು ತೆಗೆದುಕೊಂಡು ಹೋಗಿ ಹಣ ಕೊಡಿಸಬೇಕು. ನಾನೇ ಪ್ರತಿ ತಿಂಗಳು 20 ಲಕ್ಷ ರೂ.ಗಳನ್ನು ಈ ರೀತಿಯ ವೆಚ್ಚಗಳಿಗೆ ನೆರವು ನೀಡುವ ಪರಿಸ್ಥಿತಿ ಇದೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕಿದೆ ಎಂದರು. +ಸರ್ಕಾರದ ಆಸ್ಪತ್ರೆಗಳು ಯಾವುದಕ್ಕೂ ಕಡಿಮೆ ಇಲ್ಲ. ನಾರಾಯಣ ಹೃದಯಾಲಯದಲ್ಲಿರುವಂತೆ ಆಧುನಿಕ ಸೌಲಭ್ಯಗಳು ಜಯದೇವ ಆಸ್ಪತ್ರೆಯಲ್ಲೂ ಇವೆ. ಖುದ್ದು ನಾನೇ ಬೌರಿಂಗ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದೇನೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದಿದ್ದೇನೆ. ಆ್ಯಂಬುಲೆನ್ಸ್ ಚಾಲಕರು ಜಯನಗರ, ವಿಕ್ಟೋರಿಯಾ, ಬೌರಿಂಗ್‍ನಂತಹ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆತರುವುದಿಲ್ಲ. ಈ ನಿಟ್ಟಿನಲ್ಲಿ ಚಾಲಕರಿಗೆ ಸೂಕ್ತ ತರಬೇತಿ ನೀಡಬೇಕು. ಅಗತ್ಯ ತಿಳುವಳಿಕೆಯೊಂದಿಗೆ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದರು. +ಸರ್ಕಾರಿ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸೇವೆಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. ಆರೋಗ್ಯ ಸಚಿವ ದಿನೇಶ್‍ಗುಂಡೂರಾವ್ ಮಾತನಾಡಿ, ಆ್ಯಂಬುಲೆನ್ಸ್ ತುರ್ತು ಗತಿಯಲ್ಲಿ ಸೇವೆಗೆ ಲಭ್ಯವಾಗಬೇಕು. ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಆ್ಯಂಬುಲೆನ್ಸ್ ಸಿಬ್ಬಂದಿಗಳು ರೋಗಿಗಳನ್ನು ಕರೆದುಕೊಂಡು ಹೋಗುವ ಹಾದಿಯ ಮಧ್ಯೆಯೇ ಹತ್ತಿರದ ಆಸ್ಪತ್ರೆಗೆ ಯಾವ ರೀತಿ ಸಮಸ್ಯೆಯಾಗಿದೆ ಎಂಬ ಮಾಹಿತಿ ನೀಡಿ ಸೂಕ್ತ ಚಿಕಿತ್ಸೆಗೆ ವೈದ್ಯರನ್ನು ಸಜ್ಜುಗೊಳಿಸಿಕೊಳ್ಳುವಂತೆ ಸಲಹೆ ನೀಡಬೇಕು ಎಂದು ಹೇಳಿದರು. +108 ಸೇವೆಯ ಬಗ್ಗೆ ಸಾಕಷ್ಟು ದೂರುಗಳಿವೆ. ಅವುಗಳನ್ನು ಸರಿಪಡಿಸಲು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. 2008ರಲ್ಲಿ ಆರಂಭವಾದ ಈ ಸೇವೆಗಳು ಕಾಲಕ್ಕನುಗುಣವಾದಂತಹ ತಂತ್ರಜ್ಞಾನ ಮತ್ತು ಆಧುನಿಕತೆಯನ್ನು ಅಳವಡಿಸಿಕೊಂಡಿಲ್ಲ. ಗುಣಮಟ್ಟ ವೃದ್ಧಿಯಲ್ಲಿ ಕುಂಟಿತವಾಗಿದೆ. ಸಮಯಕ್ಕೆ ಸರಿಯಾಗಿ ತಲುಪದಿರುವ ಬಗ್ಗೆಯೂ ಸಾಕಷ್ಟು ದೂರುಗಳಿವೆ. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಿ ದೇಶದಲ್ಲೇ ನಂ.1 ಸೇವೆಯನ್ನಾಗಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುವುದು ಎಂದರು. +ಇಂದು ಸಮರ್ಪಣೆಗೊಂಡ 262 ಆ್ಯಂಬುಲೆನ್ಸ್‍ಗಳಲ್ಲಿ 105 ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ್ದು, 152 ಸಾಮಾನ್ಯ ಸೌಲಭ್ಯಗಳನ್ನು ಹೊಂದಿವೆ. ಹಳೆಯ ಆ್ಯಂಬುಲೆನ್ಸ್‍ಗಳನ್ನು ಬದಲಾವಣೆ ಮಾಡಲಾಗುವುದು. ನವಜಾತ ಶಿಶುಗಳಿಗಾಗಿಯೇ ಪ್ರತ್ಯೇಕ ಆ್ಯಂಬುಲೆನ್ಸ್ ಒದಗಿಸಲು ಚಿಂತನೆ ನಡೆದಿದೆ. ಅಪಘಾತದ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಹೆದ್ದಾರಿಗಳ ಪಕ್ಕದಲ್ಲಿ ಟ್ರಾಮಾಕೇರ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. +ಹೊಸ ಆ್ಯಂಬುಲೆನ್ಸ್‍ಗಲ್ಲಿ ಜೀವ ರಕ್ಷಣೆಗೆ ಅತ್ಯಗತ್ಯವಾದ ಆಧುನಿಕ ಸಲಕರಣೆಗಳನ್ನು ಅಳವಡಿಸಲಾಗಿದೆ. ಬಿಎಲ್‍ಎಸ್ ಆ್ಯಂಬುಲೆನ್ಸ್‍ಗಳಲ್ಲಿ ಮೂಲಭೂತ ಜೀವ ರಕ್ಷಕ ಸಲಕರಣೆಗಳನ್ನು ಒಳಗೊಂಡಿದ್ದರೆ, ಎಎಲ್‍ಎಸ್ ಆ್ಯಂಬುಲೆನ್ಸ್‍ಗಳು ಟ್ರಾನ್ಸ್‍ಫೋರ್ಟ್ ವೆಂಟಿಲೇಟರ್‍ಗಳನ್ನು ಒಳಗೊಂಡಿವೆ. +ತೆಲಂಗಾಣ ಚುನಾವಣೆ : ಮತ ಚಲಾಯಿಸಿದ ಸ್ಟಾರ್ ನಟರು +ಪ್ರಸ್ತುತ ನಗರ ಪ್ರದೇಶದಲ್ಲಿ 20 ನಿಮಿಷದಲ್ಲಿ, ಗ್ರಾಮೀಣ ಪ್ರದೇಶದಲ್ಲಿ 30ನಿಮಿಷಗಳಲ್ಲಿ ಆ್ಯಂಬುಲೆನ್ಸ್‍ಗಳು ಸ್ಥಳಕ್ಕೆ ತಲುಪುತ್ತಿವೆ. ಆ ಸಮಯವನ್ನು ಮತ್ತಷ್ಟು ಕಡಿತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. \ No newline at end of file diff --git a/eesanje/url_46_301_1.txt b/eesanje/url_46_301_1.txt new file mode 100644 index 0000000000000000000000000000000000000000..3ec757b3f03893006b6a338877d13308169fab31 --- /dev/null +++ b/eesanje/url_46_301_1.txt @@ -0,0 +1,10 @@ +ಡಯಾಲಿಸಿಸ್ ಕೇಂದ್ರಗಳು ಸ್ಥಗಿತ, ಆರೋಗ್ಯ ಸೇವೆ ವ್ಯತ್ಯಯ +ಬೆಂಗಳೂರು,ನ.30- ವೇತನ ಪಾವತಿ ಹಾಗೂ ಪರಿಷ್ಕರಣೆಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿಗಳು ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿರುವುದ ರಿಂದಾಗಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣ ವಾಗಿದೆ. ರಾಜ್ಯದಲ್ಲಿರುವ 202 ಡಯಾಲಿಸಿಸ್ ಕೇಂದ್ರಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬ ಆರೋಪವಿದೆ. +ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೆಲಸವನ್ನು ಸ್ಥಗಿತಗೊಳಿಸಿ ಸಿಬ್ಬಂದಿಗಳು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ಆರಂಭಿಸಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯದ ಸಲುವಾಗಿ ರಾಜ್ಯಾದ್ಯಂತ ಕೇಂದ್ರಗಳನ್ನು ಆರಂಭಿಸಿತ್ತು. ಕೋವಿಡ್ ವೇಳೆಯಲ್ಲಿ ಈ ಕೇಂದ್ರಗಳ ಸಿಬ್ಬಂದಿಗಳಿಗೆ ಅರ್ಧ ವೇತನ ನೀಡಲಾಗಿತ್ತು. ಅನಂತರ ಅದನ್ನು ಹೆಚ್ಚಿಸಿಲ್ಲ. ಕಳೆದ ನಾಲ್ಕು ತಿಂಗಳುಗಳಿಂದಲೂ ವೇತನವನ್ನೇ ನೀಡಿಲ್ಲ ಎಂದು ಆರೋಪಿಸಲಾಗಿದೆ. +ಸರ್ಕಾರದ ಸೇವೆ ಹಾಗೂ ಕಾಮಗಾರಿಯನ್ನು ಗುತ್ತಿಗೆ ಪಡೆಯಬೇಕಾದರೆ ಆ ಸಂಸ್ಥೆ ತನ್ನ ಸಿಬ್ಬಂದಿಗಳಿಗೆ ಇಎಸ್‍ಐ, ಪಿಎಫ್ ಸೌಲಭ್ಯ ಒದಗಿಸುವುದು ಕಡ್ಡಾಯವಾಗಿದೆ. ಆದರೆ, ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಕೆಎಸ್‍ಕೆಎಜಿ ಸಂಜೀವಿನಿ ಸಂಸ್ಥೆ 20 ತಿಂಗಳಿನಿಂದಲೂ ಇಎಸ್‍ಐ, ಪಿಎಫ್ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಆರೋಪಿಸಲಾಗಿದೆ. +ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ +ಕಳೆದ ಆಗಸ್ಟ್ 2-3ರಂದು ಈ ವಿಷಯವಾಗಿ ಫ್ರೀಡಂಪಾರ್ಕ್‍ನಲ್ಲಿ ಎರಡು ದಿನಗಳ ಸಾಂಕೇತಿಕ ಪ್ರತಿಭಟನೆ ನಡೆಸಲಾಗಿತ್ತು. ಆಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಒಂದು ತಿಂಗಳ ಒಳಗಾಗಿ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಈಡೇರಿಲ್ಲ. +ಕಿರಿಯ ಅಧಿಕಾರಿಗಳಿಂದ ಆಯುಕ್ತರವರೆಗೂ ಎಲ್ಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ ಉದ್ದೇಶ ಪೂರ್ವಕವಾಗಿಯೇ ನಮ್ಮನ್ನು ಕಡೆಗಣಿಸುತ್ತಿವೆ ಎಂದು ಕಿಡಿಕಾರಿದ್ದಾರೆ. +ಹಿಂದಿನ ಸರ್ಕಾರ ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸುವುದು ಅಥವಾ ನವೀಕರಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಸ್ಥೆಯ ನಡುವಿನ ಹಗ್ಗಜಗ್ಗಾಟದಿಂದ ಸಿಬ್ಬಂದಿಗಳು ಪರದಾಡುವಂತಾಗಿದೆ. ನೀಡುವ ಕಡಿಮೆ ವೇತನವನ್ನೇ ನಾಲ್ಕು ತಿಂಗಳುಗಳಿಂದ ತಡೆಹಿಡಿಯಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಿಬ್ಬಂದಿಗಳು ಕಟುಂಬ ನಿರ್ವಹಣೆ ಮಾಡುವುದು ಹೇಗೆ? ಕೆಲಸ ಮಾಡುವುದಾದರೂ ಹೇಗೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. +ಬಡವರ ಅನುಕೂಲಕ್ಕಾಗಿ ಆರಂಭಿಸಿರುವ ಡಯಾಲಿಸಿಸ್ ಸೇವೆಯನ್ನು ಉದ್ದೇಶ ಪೂರ್ವಕವಾಗಿಯೇ ಕಡೆಗಣಿಸಲಾಗುತ್ತಿದೆ. ದಿನವೊಂದಕ್ಕೆ ಎರಡೂವರೆಯಿಂದ ಮೂರು ಸಾವಿರ ಡಯಾಲಿಸಿಸ್ ಸೈಕಲ್‍ಗಳು ನಡೆಯುತ್ತಿವೆ. ಬಡವರ್ಗದವರಿಗೆ ಸಾವಿರಾರು ರೂ.ಗಳ ಉಳಿತಾಯವಾಗುತ್ತಿದೆ. ಆದರೆ, ಕಾಂಗ್ರೆಸ್ ಸರ್ಕಾರ ಪಂಚಖಾತ್ರಿಗಳ ಯೋಜನೆ ಬೆನ್ನಹತ್ತಿ ಉಚಿತ ಡಯಾಲಿಸಿಸ್‍ನಂತಹ ಸೇವೆಗಳನ್ನು ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಪಂಚಖಾತ್ರಿಗಳಿಗೆ ನೀಡಲು ಸರ್ಕಾರದ ಬಳಿ ಹಣವಿದೆ. ಬಡವರ ಸೇವೆ ಮಾಡುವ ಸಿಬ್ಬಂದಿಗಳಿಗೆ ವೇತನ ನೀಡಲು ಹಣ ಇಲ್ಲವೇ ಎಂದು ಕಿಡಿಕಾರಿರುವ ಪ್ರತಿಭಟನಾಕಾರರು ತಮ್ಮ ಬೇಡಿಕೆ ಈಡೇರುವವರೆಗೂ ಧರಣಿಯನ್ನು ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. \ No newline at end of file diff --git a/eesanje/url_46_301_10.txt b/eesanje/url_46_301_10.txt new file mode 100644 index 0000000000000000000000000000000000000000..f014ca9d673b7ce617b78a657a57ce32b13b2f2a --- /dev/null +++ b/eesanje/url_46_301_10.txt @@ -0,0 +1,6 @@ +3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ +ಬೆಂಗಳೂರು, ನ.29-ಬೃಹತ್ ಮತ್ತು ಕೈಗಾರಿಕೆ, ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ 141ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ.ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. +50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. +15 ಕೋಟಿ ರೂ. ಗಳಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023) +ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತಗುಂಜನ್ ಕೃಷ್ಣ, ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿ ಬಿ.ಪಿ. ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಾಹಕ ಅಕಾರಿ ಡಾ. ಎಂ. ಮಹೇಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ತಾಂತ್ರಿಕ ನಿರ್ದೇಶಕ ಆರ್. ರಮೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಕಾರಿಗಳು ಹಾಜರಿದ್ದರು. \ No newline at end of file diff --git a/eesanje/url_46_301_11.txt b/eesanje/url_46_301_11.txt new file mode 100644 index 0000000000000000000000000000000000000000..b5a191af590aa0e32004ac475c89e4d345e050e2 --- /dev/null +++ b/eesanje/url_46_301_11.txt @@ -0,0 +1,9 @@ +ಪೊಲೀಸರೊಂದಿಗೆ ಜನಸ್ನೇಹಿ ವಾತಾವರಣ ಸೃಷ್ಠಿ : ಪರಮೇಶ್ವರ್ +cದೂರುಗಳನ್ನೇ ದಾಖಲಿಸುತ್ತಿರಲಿಲ್ಲ. ಆದರೆ, ತಮ್ಮ ಸರ್ಕಾರ ಜನಸ್ನೇಹಿ ವಾತಾವರಣ ನಿರ್ಮಿಸಿದ್ದು, ಪ್ರತಿಯೊಂದು ದೂರುಗಳೂ ದಾಖಲಾಗುತ್ತಿವೆ. ಹೀಗಾಗಿ ಅಪರಾಧಗಳ ಸಂಖ್ಯೆ ಹೆಚ್ಚು ಎಂದು ಕಂಡುಬರುವಂತಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಅಪರಾಧಗಳ ಸಂಖ್ಯೆ ಹೆಚ್ಚಾಗಿವೆ ಎಂದು ಬೊಂಬ್ಡ ಹೊಡೆಯುತ್ತಿವೆ. ಆದರೆ, ಇದು ಆಧಾರ ರಹಿತ ಎಂದರು. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಜನರನ್ನು ನಿರ್ಲಕ್ಷಿಸಲಾಗಿತ್ತು. ಪೊಲೀಸ್ ಠಾಣೆಗೆ ಬಂದು ದೂರು ನೀಡಲು ಸಾರ್ವಜನಿಕರು ಹೆದರುತ್ತಿದ್ದರು. ಒಂದೊಮ್ಮೆ ಠಾಣೆಗೆ ಹೋಗಿ ದೂರು ನೀಡಿದರೂ ಅವು ದಾಖಲಾಗುತ್ತಿರಲಿಲ್ಲ. ಆದರೆ, ನಮ್ಮ ಸರ್ಕಾರ ಸ್ಪಷ್ಟ ನಿಯಮಾವಳಿಗಳನ್ನು ಜಾರಿ ಮಾಡಿದೆ. ಜನರನ್ನು ವಿಶ್ವಾಸದಿಂದ ಕಾಣಬೇಕು. ಪ್ರತಿಯೊಂದು ದೂರನ್ನೂ ತಕ್ಷಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸೈಬರ್ ಅಪರಾಧಗಳಲ್ಲಿ ಈ ಹಿಂದೆಲ್ಲ ದೂರುಗಳೇ ದಾಖಲಾಗುತ್ತಿರಲಿಲ್ಲ. +ನಾವು ಯಾವುದನ್ನೂ ನಿರ್ಲಕ್ಷಿಸುತ್ತಿಲ್ಲ. ಪ್ರತಿಯೊಂದು ಪ್ರಕರಣದ ದೂರು ಸ್ವೀಕರಿಸುತ್ತೇವೆ. ಅವನ್ನು ದಾಖಲಿಸಿ ನಂತರ ಸಂಬಂಧಿಸಿದ ಠಾಣೆಗಳಿಗೆ ಮುಂದಿನ ಕ್ರಮಕ್ಕಾಗಿ ರವಾನೆ ಮಾಡುತ್ತಿದ್ದೇವೆ. ಹೀಗಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಕೆಳಹಂತದ ಪೆಪೊಲೀಸ್ ಠಾಣೆಗಳಲ್ಲಿ ಜನರಿಗೆ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ನಿನ್ನೆ ನಡೆದ ಜನತಾ ದರ್ಶನದಲ್ಲಿ ಹೆಚ್ಚು ದೂರುಗಳು ಕೇಳಿಬಂದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೂರುಗಳು ದಾಖಲಾಗುವುದರಿಂದಾಗಿ ಈ ರೀತಿಯ ಚರ್ಚೆಗಳು ಸಹಜ ಎಂದರು. +ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ +ಭ್ರೂಣಹತ್ಯೆ ಪ್ರಕರಣಗಳ ಬಗ್ಗೆ ತನಿಖೆ ಪ್ರಗತಿಯಲ್ಲಿದೆ. ಅದು ಮುಗಿದ ಬಳಿಕ ಯಾರು ಭಾಗಿಯಾಗಿದ್ದಾರೆ, ಎಷ್ಟು ಕೃತ್ಯಗಳು ನಡೆದಿವೆ ಎಂಬ ಮಾಹಿತಿ ತಿಳಿಸಲಾಗುವುದು. ಸದ್ಯಕ್ಕೆ ಇದೊಂದು ವ್ಯವಸ್ಥಿತ ಜಾಲವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದರು. +ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ +ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಚರ್ಚೆಗಳು ಪ್ರಗತಿಯಲ್ಲಿವೆ. ಪಕ್ಷದ ಹಿರಿಯ ಸಚಿವರ ಅಭಿಪ್ರಾಯ ಕೇಳಿದರೆ ಚೆನ್ನಾಗಿತ್ತು. ನಾನು ಎಂಟು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಇಂತಹ ಸಂದರ್ಭದಲ್ಲಿ ಯಾರಿಗೆಲ್ಲ ಅವಕಾಶ ಕೊಟ್ಟರೆ ಪಕ್ಷ ಸಂಘಟನೆಗೆ ಸಹಾಯವಾಗಲಿದೆ ಎಂಬ ಮಾಹಿತಿ ತಮಗಿದೆ. ರಾಜ್ಯದ ಪ್ರಮುಖ ನಾಯಕರು ಹೈಕಮಾಂಡ್ ನಾಯಕರ ಒಪ್ಪಿಗೆ ಪಡೆದು ನೇಮಕಾತಿ ಮಾಡುತ್ತಿದ್ದಾರೆ ಎಂದು ಹೇಳಿದರು. +ತೆಲಂಗಾಣ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಪಂಚಖಾತ್ರಿಗಳ ಜಾಹಿರಾತು ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_301_12.txt b/eesanje/url_46_301_12.txt new file mode 100644 index 0000000000000000000000000000000000000000..4b0b728e7624730d390bfbf866b70d38891e070c --- /dev/null +++ b/eesanje/url_46_301_12.txt @@ -0,0 +1,6 @@ +ಬಂಧಿತ ವಿದೇಶಿ ಡ್ರಗ್ಸ್ ಪೆಡ್ಲರ್ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ +ಬೆಂಗಳೂರು, ನ.28- ಹೊಸವರ್ಷಕ್ಕೆ ಸುಮಾರು 25 ಕೋಟಿ ಮೌಲ್ಯದ ಡ್ರಗ್ಸ್ ಮಾರಾಟ ಮಾಡಲು ಬಂಧಿತ ವಿದೇಶಿ ಡ್ರಗ್ಸ್ ಪೆಡ್ಲರ್ ಬೆಂಜಮಿನ್ ಯೋಜಿಸಿದ್ದ ಎಂದು ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ತಿಳಿದು ಬಂದಿದೆ. +ಇತ್ತೀಚೆಗೆ ಮನೆಯೊಂದರಲ್ಲಿ ಡ್ರಗ್ಸ್ ತಯಾರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಬೆಂಜಮಿನ್ ನನ್ನು ಬಂಧಿಸಿ 10 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದರು. ವಿಚಾರಣೆ ವೇಳೆ ಸುಮಾರು 25 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸರಬರಾಜು ಮಾಡಲು ಎಲ್ಲಾ ತಯಾರಿಯನ್ನು ಮಾಡಿದ್ದ ಸುಮಾರು 350 ಗ್ರಾಹಕರು ಈತನ ಸಂಪರ್ಕದಲ್ಲಿದ್ದರು ಎಂಬ ಸ್ಪೋಟಕ ಮಾಹಿತಿ ಬಯಲಿಗೆ ಬಂದಿದೆ. +ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ +ಹೊಸ ವರ್ಷಕ್ಕೆ ಡ್ರಗ್ಸ್ ಮಾರಾಟದ ಯೋಜನೆ ರೂಪಿಸಿದ್ದ ಸಂದರ್ಭದಲ್ಲಿ ಸಿಸಿಬಿ ಪೊಲೀಸರ ಕೈಗೆ ಈತ ಸಿಕ್ಕಿ ಬಿದ್ದಿದ್ದ. ಆ್ಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಯಾವುದೇ ಸಾಕ್ಷ್ಯಗಳು ಸಿಗದಂತೆ ಈ ದಂಧೆಯನ್ನು ನಡೆಸಲಾಗಿತ್ತು. ದೆಹಲಿ ಹಾಗೂ ಮುಂಬೈಯಿಂದ ರೈಲಿನ ಮೂಲಕ ಡ್ರಗ್ಸ್ ತಯಾರಿಕಾ ಸಾಮಾಗ್ರಿಗಳನ್ನು ತರಿಸುತ್ತಿದ್ದ ಎಂದು ಹೇಳಲಾಗಿದೆ. +ಮುಂದಿನ ಡಿಸೆಂಬರ್ ವೇಳೆಗೆ 25 ಕೋಟಿ ಮೌಲ್ಯದ ಡ್ರಗ್ಸ್ ತಯಾರಿಕೆಗೆ ಪ್ಲಾನ್ ಮಾಡಿದ್ದ. ಪ್ರಸ್ತುತ ಈತನ ಸಂಪರ್ಕದಲ್ಲಿದ್ದವರ ಬಗ್ಗೆ ಸಿಸಿಬಿ ಮಾಹಿತಿ ಕಲೆ ಹಾಕುತ್ತಿದ್ದು, ಈ ದಂಧೆಯಲ್ಲಿ ಯಾರ್ಯಾರು ಇದ್ದಾರೆಂಬುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. \ No newline at end of file diff --git a/eesanje/url_46_301_2.txt b/eesanje/url_46_301_2.txt new file mode 100644 index 0000000000000000000000000000000000000000..a29d6983e2703619430d253434b9554af5eef3cc --- /dev/null +++ b/eesanje/url_46_301_2.txt @@ -0,0 +1,5 @@ +ಚಿತ್ರದುರ್ಗ : ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ರೂ. ಹಣ ಜಪ್ತಿ +ಚಿತ್ರದುರ್ಗ,ನ.30- ಕಾರಿನಲ್ಲಿ ಸಾಗಿಸುತ್ತಿದ್ದ 8 ಕೋಟಿ ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ ತಿಳಿಸಿದ್ದಾರೆ. ತಡರಾತ್ರಿವರೆಗೂ ನಾವು ನೋಟುಗಳನ್ನು ಎಣಿಸುವ ಕಾರ್ಯದಲ್ಲಿ ತೊಡಗಿದ್ದೆವು. ಕಾರಿನ ಚಾಲಕ ಸುನೀಲ್ ಮತ್ತು ಅವರ ಜೊತೆ ಇದ್ದ ಹರೀಶ್ ಎಂಬುವರವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. +500 ಮುಖಬೆಲೆಯ ನೋಟುಗಳ ಜೊತೆಗೆ 200 ಮತ್ತು 100 ಮುಖಬೆಲೆಯ ನೋಟುಗಳಿದ್ದು, ಇದನ್ನು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ. ಪ್ರಸ್ತುತ ವಿಚಾರಣೆ ವೇಳೆ ನಾವು ಅಡಿಕೆ ವ್ಯಾಪಾರಿಗಳಾಗಿದ್ದು, ಶಿವಮೊಗ್ಗದ ಸುರೇಶ್ ಎಂಬುವರಿಗೆ ಹಣ ನೀಡಿದ್ದರು. ನಾವು ಅಡಿಕೆ ಮಾರಲು ಸಾಧ್ಯವಾಗದ ಕಾರಣ ಆ ಹಣವನ್ನು ವಾಪಸ್ ಕೊಡಲು ತೆಗೆದುಕೊಂಡು ಹೋಗುತ್ತಿದ್ದೆವು ಎಂದು ಹೇಳಿದ್ದಾರೆ. +ಮುಜರಾಯಿ ದೇವಾಲಯಗಳ ಪೂಜೆಗೆ ಅರ್ಚಕರ ಮಕ್ಕಳ ನೇಮಕ +ಆದರೆ ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಸಿದಾಗ ಮಾತ್ರ ನಿಖರವಾದ ಮಾಹಿತಿ ದೊರೆಯಲಿದೆ. ಪ್ರಸ್ತುತ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದರು. ಕಳೆದ ರಾತ್ರಿ ಇನ್ನೋವಾ ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಅಪಾರ ಪ್ರಮಾಣದ ಹಣ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಲ್ಯಾಡಿಹಳ್ಳಿ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ 8 ಕೋಟಿ ನಗದು ಪತ್ತೆಯಾಗಿದೆ. \ No newline at end of file diff --git a/eesanje/url_46_301_3.txt b/eesanje/url_46_301_3.txt new file mode 100644 index 0000000000000000000000000000000000000000..a5e2d00004e2cf80eccc43356743ecfdef7c36c9 --- /dev/null +++ b/eesanje/url_46_301_3.txt @@ -0,0 +1,8 @@ +ಮುಜರಾಯಿ ದೇವಾಲಯಗಳ ಪೂಜೆಗೆ ಅರ್ಚಕರ ಮಕ್ಕಳ ನೇಮಕ +ಬೆಂಗಳೂರು,ನ.30- ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರಿಗೆ ವಯಸ್ಸಾಗಿದ್ದರೆ ಅಥವಾ ಅನಾರೋಗ್ಯಪೀಡಿತರಾಗಿ ಸೇವೆ ಸಲ್ಲಿಸಲಾಗದಿದ್ದರೆ ಅವರ ಮಕ್ಕಳನ್ನೇ ಈ ಹುದ್ದೆಗೆ ನೇಮಕಾತಿ ಮಾಡುವ ಕುರಿತು ರಾಜ್ಯ ಸರ್ಕಾರದ ಮಹತ್ವದ ಆದೇಶ ಹೊರಡಿಸಿದೆ. +ರಾಜ್ಯದಲ್ಲಿ 34 ಸಾವಿರಕ್ಕೂ ಅಧಿಕ ಸಿ ಗ್ರೇಡ್ ದೇವಾಲಯಗಳಿವೆ. ಸಿ ಗ್ರೇಡ್ ದೇವಾಲಯಗಳಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವವರು ನಿಧನರಾದರೆ ಮಾತ್ರ ಅಂಥವರ ಮಕ್ಕಳನ್ನು ಅನುಕಂಪದ ಆಧಾರದ ಮೇಲೆ ಅರ್ಚಕರ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು. ಆದರೆ ಇನ್ನು ಮುಂದೆ ಅನಾರೋಗ್ಯಕ್ಕೆ ತುತ್ತಾದರೂ, ಇಲ್ಲವೇ ವಯೋಸಹಜ ಸಮಸ್ಯೆಗಳಿಂದ ಅರ್ಚಕ ವೃತ್ತಿ ಮಾಡಲಾಗದಿದ್ದರೆ ಅಂಥವರ ಮಕ್ಕಳನ್ನು ದೇವಾಲಯಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಸಿದ್ದರಾಮಯ್ಯನವರ ಸರ್ಕಾರ ಆದೇಶ ಹೊರಡಿಸಿದೆ. +ಸಿ ವರ್ಗಗಳ ದೇವಾಲಯಗಳಲ್ಲಿ ವಂಶ ಪಾರಂಪರ್ಯ ವಾಗಿ ಪೂಜಾ ಕೈಂಕರ್ಯಗಳನ್ನು ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅರ್ಚಕರು ನಿಧನರಾದರೆ ಅಥವಾ ವಯಸ್ಸಾಗಿದ್ದರೆ, ತೀವ್ರ ರೀತಿಯ ಅನಾರೋಗ್ಯದ ನಿಮಿತ್ತ ಅರ್ಚಕರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ಅನುವಂಶಿಕ ಹಕ್ಕನ್ನು ಕಾನೂನುಬದ್ಧ ವಾರಸುದಾರರಿಗೆ ವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನು ಆಯಾ ತಾಲೂಕುಗಳ ತಹಸೀಲ್ದಾರ್ ಹಂತದಲ್ಲಿ ವರ್ಗಾವಣೆ ಮಾಡಲು ಅಧಿಕಾರ ನೀಡಿ ಆದೇಶ ಹೊರಡಿಸಲಾಗಿದೆ. +ನ್ಯೂಜೆರ್ಸಿಯಲ್ಲಿ ಅಜ್ಜ, ಅಜ್ಜಿ, ಚಿಕ್ಕಪ್ಪನನ್ನು ಕೊಂದ ಭಾರತೀಯ ವಿದ್ಯಾರ್ಥಿ +ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಸಿ ವರ್ಗಗಳ ದೇವಾಲಯಗಳ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಅನುವಂಶಿಕ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ವರ್ಗಾಯಿಸುವ ಬಗ್ಗೆ ತಹಸೀಲ್ದಾರ್ ಅವರಿಗೆ ಅಧಿಕಾರ ನೀಡಲಾಗಿದೆ. +ಆದರೆ ಅರ್ಚಕರು ವಯಸ್ಸಾದ ಸಂದರ್ಭದಲ್ಲಿ ಹಾಗೂ ತೀವ್ರ ರೀತಿಯ ಅನಾರೋಗ್ಯದ ನಿಮಿತ್ತ ಅರ್ಚಕರಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದೆ ಇರುವ ಸಂದರ್ಭಗಳಲ್ಲೂ ಅವರ ಅನುವಂಶಿಕ ಹಕ್ಕನ್ನು ಕಾನೂನುಬದ್ಧ ವಾರಸುದಾರರಿಗೆ ವಹಿಸಲು ಅವಕಾಶ ಕಲ್ಪಿಸುವಂತೆ ಅರ್ಚಕ ಸಂಘ ಕೋರಿತ್ತು. ಸಂಘದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸಿ ಈ ನಿರ್ಧಾರಕ್ಕೆ ಮುಂದಾಗಿದೆ +ಷರತ್ತುಗಳು:ಅರ್ಚಕರು ವಯಸ್ಸಾದ ಸಂದರ್ಭದಲ್ಲಿ ಅಥವಾ ತೀವ್ರ ರೀತಿ ಅನಾರೋಗ್ಯದ ಸಂಬಂಧ ವೈದ್ಯಕೀಯ ಧೃಢೀಕರಣ ಪಡೆಯತಕ್ಕದ್ದು, ಕಾನೂನುಬದ್ಧ ವಾರಸುದಾರರು ಅರ್ಚಕರು ಹುದ್ದೆಗೆ ಕಾಯ್ದೆ ಅಥವಾ ನಿಯಮಗಳಲ್ಲಿ ನಿಗಪಡಿಸಿರುವ ಅರ್ಹತೆ ಹೊಂದಿರಬೇಕು. \ No newline at end of file diff --git a/eesanje/url_46_301_4.txt b/eesanje/url_46_301_4.txt new file mode 100644 index 0000000000000000000000000000000000000000..07d2bf1d26e9b04f0ce549d9f9a4b936b97d94aa --- /dev/null +++ b/eesanje/url_46_301_4.txt @@ -0,0 +1,6 @@ +ದಾಸ ಶ್ರೇಷ್ಠ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣ : ಎಚ್‍ಡಿಡಿ +ಬೆಂಗಳೂರು, ನ.30-ದಾಸ ಶ್ರೇಷ್ಠರಾದ ಕನಕದಾಸರ ಆದರ್ಶ ಚಿಂತನೆಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣದೆಡೆಗೆ ಸಾಗೋಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕರೆ ನೀಡಿದ್ದಾರೆ. +ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತಗಳ ಭೇದಭಾವ ಯಾಕೆ ಇರುವುದೊಂದೇ ಅದು ಮನುಷ್ಯ ಜಾತಿ ಎಂಬುದನ್ನು ಜಗತ್ತಿಗೆ ಸಾರಿದ ಕನಕದಾಸರ ಜಯಂತಿಯಂದು ಅಗಣಿತ ನಮನಗಳನ್ನು ಸಲ್ಲಿಸುವುದಾಗಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ತಿಳಿಸಿದ್ದಾರೆ.ಕನಕದಾಸರ ಆದರ್ಶ ಚಿಂತನೆಗಳನ್ನು ನಾವೆಲ್ಲರೂ ಸ್ಮರಿಸೋಣ ಮತ್ತು ಅವುಗಳನ್ನು ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗೋಣ ಎಂದಿದ್ದಾರೆ. +ಶಂಕರ್ ನಾಗ್ ನಂತರ ಸಿಲ್ವರ್ ಪೀಕಾಕ್ ಪ್ರಶಸ್ತಿ ಪಡೆದ ರಿಷಭ್ ಶೆಟ್ಟಿ +ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕುಲ ಕುಲ ಕುಲವೆಂದು ಒಡೆದಾಡದಿರಿ ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ಹೇಳಿರುವ ದಾಸಶ್ರೇಷ್ಠರಾದ ಕನಕದಾಸರ ಜಯಂತಿಯಂದು ನಾಡಿನ ಸಮಸ್ತ ಜನತೆಗೆ ಶುಭಾಷಯಗಳನ್ನು ಕೋರಿದ್ದಾರೆ. +ಇಂತಹ ಅನೇಕ ಪದಗಳ ಮೂಲಕ ಮನುಕುಲವನ್ನು ತಿದ್ದಿ ತೀಡಿದ ದಾಸೋತ್ತಮರಿಗೆ ನಮನಗಳನ್ನು ಸಲ್ಲಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_301_5.txt b/eesanje/url_46_301_5.txt new file mode 100644 index 0000000000000000000000000000000000000000..88e74fce8b29eda712e1423449799a90f7409077 --- /dev/null +++ b/eesanje/url_46_301_5.txt @@ -0,0 +1,23 @@ +26ನೇ ಬೆಂಗಳೂರು ಟೆಕ್ ಸಮ್ಮಿಟ್ ಉಧ್ಘಾಟನೆ, ಇಲ್ಲಿದೆ ಹೈಲೈಟ್ಸ್ +ಬೆಂಗಳೂರು,ನ.29- ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸೇರಿದಂತೆ ತಾಂತ್ರಿಕ ವಲಯದಲ್ಲಿ ಜಾಗತಿಕ ಆಶೋತ್ತರಗಳನ್ನು ತಲುಪಲು ಪೂರಕ ವಾತಾವರಣ ನಿರ್ಮಾಣ, ವೇಗ ವರ್ಧಕ ಸಂಶೋಧನೆಗಳು, ನವೋದ್ಯಮಗಳಿಗೆ ಬೆಂಬಲ, ಪ್ರತಿಭೆಗಳಿಗೆ ಪ್ರೋತ್ಸಾಹ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ನಗರದಲ್ಲಿಂದು ನಡೆದು 26ನೇ ಬೆಂಗಳೂರು ತಾಂತ್ರಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 5500ಕ್ಕೂ ಹೆಚ್ಚು ಐಟಿ ಕಂಪನಿಗಳು ಬಂದಿವೆ. 750ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳಿವೆ. ದೇಶದ ರಫ್ತು ವಹಿವಾಟಿನಲ್ಲಿ 85 ಬಿಲಿಯನ್ ಡಾಲರ್ ಕೊಡುಗೆಯನ್ನು ರಾಜ್ಯ ನೀಡುತ್ತಿದೆ ಎಂದು ಹೇಳಿದರು. +ಮಾಹಿತಿ ತಂತ್ರಜ್ಞಾನ ಕ್ಷೇತ್ರದಿಂದ 12 ಲಕ್ಷ ವೃತ್ತಿಪರ ಉದ್ಯೋಗ ಅವಕಾಶಗಳು ದೊರೆತಿವೆ. ಪರೋಕ್ಷವಾಗಿ 31 ಲಕ್ಷ ಉದ್ಯೋಗಗಳು ಸೃಷ್ಟಿಯಾಗಿವೆ. ದೇಶದ ಸಾಫ್ಟ್ವೇರ್ ರಫ್ತಿನಲ್ಲಿ ಶೇ.40ರಷ್ಟು ಪಾಲು ಹೊಂದಿವೆ. ಜಾಗತಿಕ ಮಾಹಿತಿ ತಂತ್ರಜ್ಞಾನ ಕೇಂದ್ರ ಸ್ಥಾನದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬೆಂಗಳೂರು ದೇಶದ ಸಿಲಿಕಾನ್ ವ್ಯಾಲಿ ಎನಿಸಿಕೊಂಡಿದೆ. ಜಾಗತಿಕವಾಗಿ ತಂತ್ರಜ್ಞಾನ ಮತ್ತು ಸಂಶೋಧನೆಗಳಲ್ಲಿ ಆದ್ಯ ಸ್ಥಾನ ಪಡೆದಿದೆ ಎಂದು ವಿವರಿಸಿದರು. +ವಿಶ್ವದ ಗಂಭೀರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವಂತಹ ಅನ್ವೇಷಣೆಗಳಿಗೆ, ಹೊಸ ಆಲೋಚನೆಗಳು ಮತ್ತು ಆಶೋತ್ತರಗಳಿಗೆ ಬೆಂಗಳೂರು ಮುಂದಾಳಾಗಿರುತ್ತದೆ. ಜಾಗತಿಕ ನವೋದ್ಯಮ ಪೂರಕ ಪರಿಸರದ ಸೂಚ್ಯಂಕದಲ್ಲಿ 8ನೇ ಸ್ಥಾನದಲ್ಲಿದೆ ಎಂದರು. ಮಾಹಿತಿ ತಂತ್ರಜ್ಞಾನದಲ್ಲಷ್ಟೇ ಅಲ್ಲದೆ ಬಂಡವಾಳ ಹೂಡಿಕೆಯಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ. ಕಳೆದ ಮೂರು ವರ್ಷಗಳಿಂದ ನೀತಿ ಆಯೋಗ ಸಿದ್ದಪಡಿಸುತ್ತಿರುವ ಸೂಚ್ಯಂಕದಲ್ಲಿ ನಿರಂತರವಾಗಿ ಮೇಲ್ಪಂಕ್ತಿಯನ್ನು ಕಾಯ್ದುಕೊಂಡು ಬಂಡವಾಳ ಹೂಡಿಕೆ, ಪ್ರತಿಭೆ ಮತ್ತು ಅವಕಾಶಗಳು ಕೊನೆಯ ಭಾಗದವರೆಗೂ ಉತ್ತಮ ಸೌಲಭ್ಯಗಳನ್ನು ತಲುಪಿಸುವುದು ಹಾಗೂ ಸಂಶೋಧನಾ ಆಧರಿತ ವ್ಯಾಪಾರೋದ್ಯಮಗಳಿಗೆ ಅನಿಯಮಿತವಾದಂತಹ ಬೆಂಬಲವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. +ಶಿಶು ಮಾರಾಟ ಪ್ರಕರಣದಲ್ಲಿ ನಕಲಿ ವೈದ್ಯನ ಸೆರೆ +ಏಕಗವಾಕ್ಷಿ ಅನುಮೋದನೆ, ಕೇಂದ್ರಿತ ತಪಾಸಣಾ ವ್ಯವಸ್ಥೆ, ಭೂ ಮಂಜೂರಾತಿ ವ್ಯವಸ್ಥೆ ಸೇರಿದಂತೆ ಹಲವು ಕೈಗಾರಿಕಾಸ್ನೇಹಿ ಕ್ರಮಗಳು ಚಾಲ್ತಿಯಲ್ಲಿವೆ ಎಂದರು. 1997ರಲ್ಲೇ ಮೊದಲ ಬಾರಿಗೆ ಮಾಹಿತಿ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿತ್ತು. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಇಂದು ಜಿಡಿಪಿಯಲ್ಲಿ ಶೇ.25ರಷ್ಟು ಪಾಲು ಹೊಂದಿದೆ. ಜೈವಿಕ ತಂತ್ರಜ್ಞಾನಕ್ಕೂ 2001ರಲ್ಲೇ ನೀತಿ ರೂಪಿಸಲಾಗಿತ್ತು. +2015ರಲ್ಲಿ ನವೋದ್ಯಮ ನೀತಿಯನ್ನು ರಚಿಸುವ ಮೂಲಕ ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿದೆ ಎಂದು ವಿವರಿಸಿದ್ದಾರೆ. ಅನಿಮೇಷನ್, ವಿಷ್ಯುಲ್ ಎಫೆಕ್ಟ್, ಗೇಮಿಂಗ್, ಕಾಮಿಕ್ಸ್ಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ನೀತಿಯೊಂದನ್ನು ಕೂಡ ರೂಪಿಸಲಾಗಿದೆ. ಉದ್ಯಮ, ಕೈಗಾರಿಕೆ ಹಾಗೂ ಶಿಕ್ಷಣ ಸಂಸ್ಥೆಗಳ ನಡುವೆ ಪರಸ್ಪರ ಸಹಯೋಗದ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆಗಳಿಗೆ ನೆರವು ನೀಡಲಾಗುತ್ತಿದೆ ಎಂದರು. +ಹಲವಾರು ಸವಾಲುಗಳಿಗೆ ಡಿಜಿಟಿಲ್ ಅಭಿಯಾನ ಪರಿಹಾರ ಒದಗಿಸಲಿದೆ. ಪ್ರತಿಯೊಬ್ಬರಿಗೂ ತಂತ್ರಜ್ಞಾನದ ಸೌಲಭ್ಯ ಕಲ್ಪಿಸುವುದು ನಮ್ಮ ಗುರಿ. ದತ್ತಾಂಶ ಮತ್ತು ವಿಶ್ಲೇಷಣೆಯ ಪ್ರಯೋಜನಗಳನ್ನು ಆಡಳಿತಾತ್ಮವಾಗಿ ಬಳಸಿಕೊಳ್ಳುವುದು, ಬೆಂಗಳೂರು ಹೊರತಾಗಿ ಅಭಿವೃದ್ಧಿಗಳಿಗೆ ಆದ್ಯತೆ ನೀಡುವುದು ನಮ್ಮಗ ಗುರಿಯಾಗಿದೆ ಎಂದು ಹೇಳಿದರು. 26ನೇ ಬೆಂಗಳೂರು ಟೆಕ್ ಸಮ್ಮೇಳನ ಹಲವು ಮಿತಿಗಳನ್ನು ದಾಟುವ ಗುರಿಯನ್ನು ಹೊಂದಿದೆ. ಪ್ರಾದೇಶಿಕ ಮತ್ತು ಕ್ಷೇತ್ರವಾರು ಮಿತಿಗಳನ್ನು ದಾಟುವುದು ನಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು. +ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ ಖರ್ಗೆ, ಮಧುಬಂಗಾರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಉದ್ಯಮಿಗಳಾದ ಮಾರ್ಕ್ ಪೇಪರ್ ಮಾಸ್ಟರ್, ಕ್ರಿಷ್ ಗೋಪಾಲಕೃಷ್ಣ, ಕಿರಣ್ ಮುಜುಂದಾರ್ ಷಾ, ನಿವೃತ್ತಿ ರೈ, ಅರವಿಂದ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. +ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಜೈವಿಕ ತಂತ್ರ ನೀತಿ ಅನಾವರಣನಗರದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನ ನೀತಿ ಹಾಗೂ ಎವಿಜಿಸಿ-ಎಕ್ಸ್ಆರ್ ಕರುಡನ್ನ ಅನಾವರಣಗೊಳಿಸಲಾಯಿತು. 2023ರಿಂದ 28ರ ನಡುವಿನ ಐದು ವರ್ಷಗಳ ಅವಯಲ್ಲಿ 30 ಸಾವಿರ ಹೊಸ ಗುಣಮಟ್ಟದ ಉದ್ಯೋಗಗಳನ್ನು ಸೃಷ್ಟಿಸುವ ಅನಿಮೇಷನ್, ವಿಷ್ಯುಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್, ಎಕ್ಸ್ಟೆಂಡೆಡ್ ರಿಯಾಲಿಟಿ(ಎವಿಜಿಸಿ-ಎಕ್ಸ್ಆರ್) ನೀತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. +ರಾಜ್ಯದ ಮಾಹಿತಿ ತಂತ್ರಜ್ಞಾನ ವಲಯವನ್ನು ಮತ್ತಷ್ಟು ಸದೃಢಗೊಳಿಸುವ ಗುರಿ ಹೊಂದಿರುವ ಈ ನೀತಿ ಎವಿಜಿಸಿ-ಎಕ್ಸ್ಆರ್ ವಲಯದಲ್ಲಿ ಜಾಗತಿಕವಾಗಿ ಕರ್ನಾಟಕವನ್ನು ಮುಂಚೂಣಿಗೆ ತರುವ ವಿಶ್ವಾಸ ವ್ಯಕ್ತಪಡಿಸಿದೆ. ಕೌಶಲ್ಯಾಭಿವೃದ್ಧಿಗೆ ಆದ್ಯತೆ, ರಾಜ್ಯದ ವಹಿವಾಟು ವಲಯದ ರಫ್ತಿನಲ್ಲಿ ಶೇ.80ರಷ್ಟು ಪಾಲು ಹೊಂದುವ ನಿರೀಕ್ಷೆಗಳನ್ನು ಸ್ಪಷ್ಟಪಡಿಸಿದೆ. +ಕೌಶಲ್ಯಾಭಿವೃದ್ಧಿ ಸಲಹಾ ಸಮಿತಿ, ಕೈಗಾರಿಕಾ ಆಧರಿತ ಪಠ್ಯಕ್ರಮ, ಶಿಕ್ಷಣ ಸಂಸ್ಥೆಗಳು-ಕೈಗಾರಿಕೆಗಳ ಸಹಭಾಗಿತ್ವದಲ್ಲಿ ವೃತ್ತಿಪರ ತರಬೇತಿ, ನವೋದ್ಯಮ ಮತ್ತು ಉದ್ಯೋಗ ಸೃಷ್ಟಿಯ ಹೆಸರಿನಲ್ಲಿ ಪ್ರತಿಭೆಗಳ ಅನ್ವೇಷಣೆ, ಜೇಷ್ಠತಾ ಕೇಂದ್ರ ಸ್ಥಾಪನೆ ಸೇರಿದಂತೆ ಆರು ಉದ್ದೇಶಗಳನ್ನು ನೀತಿ ಹೊಂದಿದೆ. ವಿಶೇಷ ಆರ್ಥಿಕ ವಲಯ, ಗೇಮಿಂಗ್ ಕ್ಷೇತ್ರಕ್ಕೆ ಜೇಷ್ಠತಾ ಕೇಂದ್ರ, ಡಿಜಿಟಲ್ ಕೇಂದ್ರಗಳ ಉನ್ನತೀಕರಣ, ಎವಿಜಿಸಿ-ಎಕ್ಸ್ಆರ್ ವಲಯದಲ್ಲಿ ಸಂಶೋಧನಾ ಸಂಸ್ಥೆ ಸ್ಥಾಪನೆ ಸೇರಿದಂತೆ ಹಲವಾರು ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು ನೀಡಲಾಗಿದೆ. +ಮಾರುಕಟ್ಟೆ ಮತ್ತು ವಹಿವಾಟು ವಲಯದ ನಡುವೆ ಸಂಪರ್ಕಕೊಂಡಿಯಾಗುವುದಾಗಿ ಸರ್ಕಾರ ಭರವಸೆ ನೀಡಿದೆ. ಜೈವಿಕ ತಂತ್ರಜ್ಞಾನ ನೀತಿಯಲ್ಲಿ ಕರ್ನಾಟಕ ಮಹತ್ವದ ಗುರಿಗಳೊಂದಿಗೆ ಮುಂದಡಿ ಇಡುವ ಸಂಕಲ್ಪ ಮಾಡಿದೆ. +2025ರ ವೇಳೆಗೆ ಭಾರತ ಜೈವಿಕ ಆರ್ಥಿಕತೆಯಲ್ಲಿ 150 ಬಿಲಿಯನ್ ಡಾಲರ್, 2030ರ ವೇಳೆಗೆ 300 ಬಿಲಿಯನ್ ಡಾಲರ್ ಆಶೋತ್ತರವನ್ನು ಹೊಂದಿದೆ. ಇದಕ್ಕೆ ಬೆಂಬಲವಾಗಿ ಕರ್ನಾಟಕ ಜೈವಿಕ ವಲಯದ ಸಂಶೋಧನೆ ಮತ್ತು ಅಭಿವೃದ್ಧಿಗೆ 200 ಕೋಟಿ ರೂ. ಹೂಡಿಕೆ ಮಾಡುವ ಗುರಿಯನ್ನು ಹೊಂದಿದೆ. ಸುಮಾರು 60ಕ್ಕೂ ಹೆಚ್ಚಿನ ಗೃಹ ಉತ್ಪನ್ನಗಳತ್ತ ಗಮನಹರಿಸಿದೆ.ಕನಿಷ್ಟ 27.1 ಬಿಲಿಯನ್ ಡಾಲರ ಜೈವಿಕ ಆರ್ಥಿಕತೆಯನ್ನು ರಾಜ್ಯ ಹೊಂದಿದೆ. 5ರಿಂದ ಎಕರೆ ಪ್ರದೇಶದಲ್ಲಿ ಹೈಟೆಕ್ ಬಯೋ ಕ್ಲಸ್ಟರ್ ಸೇರಿದಂತೆ ಹಲವು ಕ್ರಮಗಳ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. +ಗಮನ ಸೆಳೆದ ಐಟಿ ಸಮ್ಮಿಟ್ಐಟಿ-ಬಿಟಿ, ಎಐ ಸೇರಿದಂತೆ ಭವಿಷ್ಯದ ಪ್ರವರ್ಧಮಾನ ತಂತ್ರಜ್ಞಾನಗಳ ಬಗ್ಗೆ ಇಂದಿನಿಂದ ಆರಂಭಗೊಂಡಿ ರುವ 26ನೇ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಹತ್ವದ ವಿಚಾರಗಳ ವಿನಿಮಯಗಳಾಗಿವೆ.ಸಮ್ಮೇಳನದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಬೆಳೆದು ಬಂದ ಹಾದಿಯನ್ನು ಸ್ಮರಿಸಿಕೊಂಡರು. +1999ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ಅಡಿಗಲ್ಲು ಹಾಕಿತು. ಬೆಂಗಳೂರು ಟೆಕ್ ಸಮ್ಮೇಳನ ದೇಶದಲ್ಲೇ ಅಷ್ಟೇ ಅಲ್ಲ, ಏಷ್ಯಾಖಂಡದ ಅತಿದೊಡ್ಡದಾದ ಸಮಾವೇಶವಾಗಿದೆ. ಈ ಬಾರಿಯ ಸಮಾವೇಶದಲ್ಲಿ ಗಡಿಗಳನ್ನು ದಾಟುವ ಧ್ಯೇಯ ಹೊಂದಿರುವುದು ಸೂಕ್ತವಾಗಿದೆ. ಮೊಟ್ಟೆಯ ಗೋಡೆಯನ್ನು ದಾಟದೇ ಇದ್ದರೆ ಮರಿಗಳು ಹೊರ ಬರುವುದಿಲ್ಲ. ಗಡಿಗಳನ್ನು ದಾಟದೇ ಇದ್ದರೆ ಯಾವುದೇ ಸಾಮ್ರಾಜ್ಯವೂ ನಿರ್ಮಾಣವಾಗುವುದಿಲ್ಲ. ಹೀಗಾಗಿ ಪ್ರತಿಯೊಬ್ಬರಿಗೂ ಅಂತಹ ಧ್ಯೇಯೋದ್ದೇಶಗಳು ಅಗತ್ಯ ಎಂದರು. +ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಅಮೆರಿಕ, ಜರ್ಮನಿಯ ನಂತರ ಕೃತಕ ಬುದ್ದಿಮತೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಅದರಲ್ಲೂ ಬೆಂಗಳೂರು ಐಟಿ-ಬಿಟಿ, ರಕ್ಷಣೆ, ಬಾಹ್ಯಾಕಾಶ ಸೇರಿದಂತೆ ವಿವಿಧ ವಲಯಗಳಲ್ಲಿನ ಉತ್ಪಾದನೆ ಮತ್ತು ರಫ್ತಿನಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅಂಕಿ-ಅಂಶಗಳ ಸಹಿತ ವಿವರಿಸಿದರು. ವಿದೇಶಿ ಬಂಡವಾಳ ಹೂಡಿಕೆ ಭವಿಷ್ಯದ ನೀಲನಕ್ಷೆ ಸೇರಿದಂತೆ ಹಲವಾರು ವಲಯಗಳಲ್ಲಿ ಕರ್ನಾಟಕ ಮುಂದಿದೆ ಎಂದರು. +ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ , ಕರ್ನಾಟಕ ಸಂಶೋಧನೆ ಮತ್ತು ಆರ್ಥಿಕ ಅಭಿವೃದ್ಧಿ ಹಾದಿಯಲ್ಲಿ ಸುದೀರ್ಘ ಪ್ರಯಾಣ ಮಾಡಿದೆ. ಅನಿರೀಕ್ಷಿತವಾದ ಸಾಧ್ಯತೆಗಳನ್ನು ನಿಭಾಯಿಸುವಲ್ಲೂ ಮುಂಚೂಣಿಯಲ್ಲಿದ್ದೇವೆ. ಕ್ರಿಯಾತ್ಮಕ ಮತ್ತು ಸ್ವಾವಲಂಬಿತ ಪರಿಸರ ಸೃಷ್ಟಿಸುವಲ್ಲಿ ಮಹತ್ವದ ಎತ್ತರದಲ್ಲಿದ್ದೇವೆ. ಬಂಡವಾಳ ಆಕರ್ಷಣೆ, ಉದ್ಯಮ ಶೀಲತೆ, ನೀತಿ ನಿರೂಪಣೆಗಳ ಮೂಲಕ ಪ್ರಗತಿಯ ಹಾದಿಯಲ್ಲಿ ಅಪತ್ಯ ಸೃಷ್ಟಿಸುತ್ತಿದ್ದೇವೆ. ಸುಸ್ಥಿರತೆ ಮತ್ತು ಒಳಗೊಳ್ಳುವಿಕೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. +ಕರ್ನಾಟಕ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಶೇ.40ರಷ್ಟು, ಬಯೋತಂತ್ರಜ್ಞಾನ ವಲಯದಲ್ಲಿ ಶೇ.30ರಷ್ಟು, ಇಎಸ್ಡಿಎಂ ವಲಯದಲ್ಲಿ ಶೇ.64ರಷ್ಟು ಪಾಲು ಹೊಂದಿದೆ. ರಾಜ್ಯದಲ್ಲಿ 52 ವಿಶ್ವವಿದ್ಯಾಲಯಗಳು, 234 ಇಂಜಿನಿಯರಿಂಗ್ ಕಾಲೇಜುಗಳು, 1777 ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಇವೆ. 10 ಕೈಗಾರಿಕಾ ವಲಯಗಳಿವೆ. ಡಿಫೆನ್ಸ್ಪಾರ್ಕ್, ಇವಿ ಪಾರ್ಕ್ ಸೇರಿದಂತೆ ಹಲವಾರು ಕ್ಷೇತ್ರಗಳ ಮೂಲಕ ಹೂಡಿಕೆಗೆ ವ್ಯಾಪಕ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. +ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್ನ ಅಧ್ಯಕ್ಷ ಕ್ರಿಷ್ ಗೋಪಾಲಕೃಷ್ಣ ಮಾತನಾಡಿ, ಜಾಗತಿಕವಾದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಕರ್ನಾಟಕ ಶೇ.9ರಷ್ಟು ಪಾಲು ಪಡೆದಿದ್ದು, 200 ಬಿಲಿಯನ್ ಡಾಲರ್ ವಹಿವಾಟು ನಡೆಸಿದೆ. 2030ರ ವೇಳೆಗೆ 350 ಬಿಲಿಯನ್ ಡಾಲರ್ ಗುರಿಯನ್ನು ಹೊಂದಿದೆ. ವೇಗ ವರ್ಧಕ ಹಾಗೂ ನಿರಂತರ ಬೆಳವಣಿಗೆಗಳನ್ನು ಕಾಯ್ದುಕೊಂಡಿದೆ. ತಂತ್ರಜ್ಞಾನದ ಪರಿವರ್ತನೆಗೆ ಸ್ಪಂದಿಸುತ್ತಿದೆ. 2022ರ ನವೆಂಬರ್ನಲ್ಲಿ ಆರಂಭಗೊಂಡ ಚಾಟ್ ಜಿಪಿಟಿ ಅಪ್ಲಿಕೇಶನ್ ಆಧಾರಿದ ತಂತ್ರಜ್ಞಾನ ಹೆಚ್ಚು ಜನಪ್ರಿಯಗೊಂಡಿದೆ ಎಂದರು. +ಜೈವಿಕ ತಂತ್ರಜ್ಞಾನ ವಲಯದ ವಿಷನ್ ಗ್ರೂಪ್ನ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಮಾತನಾಡಿ, ಜೈವಿಕ ತಂತ್ರಜ್ಞಾನ 2030ರ ವೇಳೆಗೆ 150 ಬಿಲಿಯನ್ ಡಾಲರ್ ವಹಿವಾಟು ದಾಖಲಿಸಲಿದೆ. ಪ್ರಸ್ತುತ 80 ಬಿಲಿಯನ್ ಡಾಲರ್ ವಹಿವಾಟು ನಡೆಸುತ್ತಿದೆ ಎಂದು ತಿಳಿಸಿದರು.ಬೆಂಗಳೂರು ಐಟಿ-ಬಿಟಿಗಳಿಗೆ ಅಪೇಕ್ಷಣೀಯ ಸ್ಥಳವಾಗಿದೆ. ಜೈವಿಕ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಕೊಡುಗೆ ಅಪಾರವಾದದ್ದು, ದತ್ತಾಂಶ ವಿಶ್ಲೇಷಣೆ, ದತ್ತಾಂಶ ಆಧರಿಸಿದ ತಂತ್ರಜ್ಞಾನ, ಕೃತಕ ಬುದ್ದಿಮತ್ತೆಗಳ ವಲಯದಲ್ಲಿ ವಿಫಲ ಹೂಡಿಕೆಗಳಾಗುತ್ತಿವೆ. ಜೈವಿಕ ತಂತ್ರಜ್ಞಾನ ಜೀವನ ಶೈಲಿ, ಔಷ, ಪೌಷ್ಠಿಕತೆ ಸೇರಿದಂತೆ ಹಲವು ವಲಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. +ಶಿವಪ್ರಸಾದ್ ಪ್ರಕಾಶ್ ಮಾತನಾಡಿ, ಭವಿಷ್ಯದಲ್ಲಿ ಜೆನ್ಎಐ, ಕ್ಲೈಮೆಟ್ಕೆ, ಫಿನ್ಟೆಕ್ ತಂತ್ರಜ್ಞಾನಗಳು ಜನ ಜೀವನದ ಹಾಸುಹೊಕ್ಕುಗಳಾಗಲಿದೆ. ಜೆನ್ಎಐನಲ್ಲಿ ಜಾಗತಿಕವಾಗಿ ಈಗಾಗಲೇ 25 ಸಾವಿರ ಬಿಲಿಯನ್ ಡಾಲರ್ ಹೂಡಿಕೆಯಾಗಿದೆ. ನಮ್ಮ ದೇಶದಲ್ಲಿ ಈವರೆಗೂ ಆ ಬಗ್ಗೆ ಹೆಚ್ಚು ಆಸಕ್ತಿ ತೋರಿದ್ದಿಲ್ಲ. ಆದರೆ, ಈ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗಿದೆ ಎಂದರು.ಸಮ್ಮೇಳನದಲ್ಲಿ ಜೈವಿಕ ತಂತ್ರಜ್ಞಾನ ಹಾಗೂ ಎವಿಜಿಸಿ-ಎಕ್ಸ್ಆರ್ ಕರಡು ನೀತಿಗಳನ್ನು ಪ್ರಕಟಿಸಲಾಯಿತು. \ No newline at end of file diff --git a/eesanje/url_46_301_6.txt b/eesanje/url_46_301_6.txt new file mode 100644 index 0000000000000000000000000000000000000000..c37de45b1bdf1e866d30b61b42d3bbf0731800ba --- /dev/null +++ b/eesanje/url_46_301_6.txt @@ -0,0 +1,8 @@ +ಶಿಶು ಮಾರಾಟ ಪ್ರಕರಣದಲ್ಲಿ ನಕಲಿ ವೈದ್ಯನ ಸೆರೆ +ಬೆಂಗಳೂರು, ನ.29- ಹಸುಗೂಸು ಮಾರಾಟ ದಂಧೆ ಬಗ್ಗೆ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮಹಿಳಾ ಏಜೆಂಟ್ ಹಾಗೂ ನಕಲಿ ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಈ ಪ್ರಕರಣದ ಏಜೆಂಟ್ ಆಗಿದ್ದ ರಮ್ಯಾಳನ್ನು ಹೆಬ್ಬಾಳದಲ್ಲಿ ಹಾಗೂ ನಕಲಿ ವೈದ್ಯನೊಬ್ಬನನ್ನು ರಾಜಾಜಿನಗರದಲ್ಲಿ ಬಂಸಲಾಗಿದೆ. ಈಗ ಈ ಪ್ರಕರಣದಲ್ಲಿ ಬಂತರ ಸಂಖ್ಯೆ 10ಕ್ಕೇರಿದೆ. +ಶಿಶು ಮಾರಾಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಬಂತರಾಗಿರುವ ಒಬ್ಬೊಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆಗೊಳಪಡಿಸಿದಾಗ ಅನೇಕ ವಿಚಾರಗಳು ಬಯಲಾಗುತ್ತಿವೆ. ರಮ್ಯಾ ಸಂಬಂ ಯುವತಿಯೊಬ್ಬರು ಮದುವೆಗೂ ಮೊದಲೇ ಗರ್ಭಿಣಿಯಾಗಿದ್ದರಿಂದ ಆಕೆ ಅಬಾಷನ್ಗೆ ಓಡಾಡುತ್ತಿದ್ದಾಗ ಆಕೆಯನ್ನು ಒಂಭತ್ತು ತಿಂಗಳು ರಮ್ಯಾ ಆರೈಕೆ ಮಾಡಿ ಮಗುವನ್ನು ಪಡೆದುಕೊಂಡಿದ್ದಳು. ಬಳಿಕ ಇದೇ ಗ್ಯಾಂಗ್ ಜೊತೆ ಸೇರಿ ಆ ಶಿಶುವನ್ನು ಮಾರಾಟ ಮಾಡಿದ್ದಳು. +ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಸಮ್ಮತಿ : ಡಿಕೆಶಿ ಸದ್ಯನಿರಾಳ +ಮಗು ಹೆತ್ತುಕೊಟ್ಟಿದ್ದ ಸಂಬಂ ಯುವತಿಗೆ ರಮ್ಯಾ ಹಣ ನೀಡಿ ನಂತರ ಹೊಸ ವರನನ್ನು ನೋಡಿ ಆ ಯುವತಿಗೆ ಮದುವೆ ಕೂಡ ಮಾಡಿಸಿದ್ದಾಳೆ.ಈಗಾಗಲೇ ಹಸುಗೂಸು ಮಾರಾಟ ಪ್ರಕರಣದಲ್ಲಿ ಬಂತರಾಗಿರುವ ಆರೋಪಿಗಳು ರಮ್ಯಾ ಹೆಸರು ಬಾಯ್ಬಿಟ್ಟಿದ್ದರು. ಆ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಹೆಬ್ಬಾಳದಲ್ಲಿ ರಮ್ಯಾಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. +ಈ ಪ್ರಕರಣದಲ್ಲಿ ಮೊದಲು ಬಂತರಾದ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಹಲವು ಮಾಹಿತಿಗಳು ಹಾಗೂ ಹೆಸರನ್ನು ಬಾಯ್ಬಿಟ್ಟಿದ್ದರು. ಇವರ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಬಂಸಲಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ ಈಗ ಹತ್ತು ಮಂದಿ ಖಾಕಿ ಬಲೆಗೆ ಬಿದ್ದಿದ್ದಾರೆ. +ನಕಲಿ ವೈದ್ಯ ಆರೆಸ್ಟ್:ಎಂಬಿಬಿಎಸ್ ಉತ್ತೀರ್ಣ ಆಗದಿದ್ದರೂ ರಾಜಾಜಿನಗರದಲ್ಲಿ ಕ್ಲೀನಿಕ್ ನಡೆಸುತ್ತಿದ್ದ ನಕಲಿ ವೈದ್ಯನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಈ ನಕಲಿ ವೈದ್ಯ ಕ್ಲೀನಿಕ್ನಲ್ಲಿ ತನ್ನ ಹೆಸರು ಹಾಕಿಕೊಂಡಿದ್ದಲ್ಲದೆ, ರೋಗಿಗಳಿಗೆ ಟ್ರೀಟ್ಮೆಂಟ್ ಕೊಡುತ್ತಿದ್ದನು.ಹಸುಗೂಸು ಮಾರಾಟಕ್ಕೆ ದಾಖಲೆಗಳನ್ನು ಮಾಡಿಕೊಡುತ್ತಿದ್ದ ಹಾಗೂ ಜನ್ಮದಾಖಲೆ ಸೇರಿ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಡುತ್ತಿದ್ದ ಎಂಬ ಬಗ್ಗೆ ಸಿಸಿಬಿ ಪೊಲೀಸರಿಗೆ ಲಭ್ಯವಾದ ಮಾಹಿತಿ ಮೇರೆ ಇದೀಗ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. +ರಾಜರಾಜೇಶ್ವರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜರಾಜೇಶ್ವರಿ ದೇವಸ್ಥಾನದ ಬಳಿ ತಮಿಳುನಾಡು ಮೂಲದವರು ಒಂದು ಗಂಡು ಮಗುವನ್ನು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ದೇವಸ್ಥಾನದ ಬಳಿ ನಿಂತಿದ್ದ ಕೆಂಪು ಬಣ್ಣದ ಸ್ವಿಫ್ಟ್ ಕಾರನ್ನು ಪರಿಶೀಲಿಸಿ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 20 ದಿನದ ಗಂಡು ಮಗುವನ್ನು ರಕ್ಷಿಸಿದ್ದರು. \ No newline at end of file diff --git a/eesanje/url_46_301_7.txt b/eesanje/url_46_301_7.txt new file mode 100644 index 0000000000000000000000000000000000000000..92ebbc628e94e26a244ff3df25fa16ce23d3676e --- /dev/null +++ b/eesanje/url_46_301_7.txt @@ -0,0 +1,17 @@ +ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಸಮ್ಮತಿ : ಡಿಕೆಶಿ ಸದ್ಯನಿರಾಳ +ಬೆಂಗಳೂರು,ನ.29- ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಹಿಂಪಡೆದ ಕಾರಣ, ತಮ್ಮ ವಿರುದ್ಧದ ಅಕ್ರಮ ಆಸ್ತಿ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಸುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಮತ್ತು ಮೇಲ್ಮನವಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ಗೆ ತಾತ್ಕಲಿಕ ಜಯ ಸಿಕ್ಕಿದ್ದು, ಸಿಬಿಐನ ಮುಂದಿನ ನಡೆಯ ಮೇಲೆ ಪ್ರಕರಣದ ಭವಿಷ್ಯ ನಿಂತಿದೆ. +ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ, ಸಲ್ಲಿಸಿದ್ದ ಮೇಲ್ಮನವಿ ಹಾಗೂ ರಿಟ್ ಅನ್ನು ಡಿಕೆಶಿ ವಾಪಸ್ ಪಡೆದಿದ್ದಾರೆ. ಏತನ್ಮಧ್ಯೆ ಸಿಬಿಐ ಅನುಮತಿ ವಾಪಸ್ ಪಡೆದ ಸರ್ಕಾರದ ಕ್ರಮ ಆಕ್ಷೇಪಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಿಲ್ಲ. +ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ದ್ವಿಸದಸ್ಯ ಪೀಠ, ನಾವು ಪ್ರಕರಣದ ಅರ್ಹತೆ ಕುರಿತು ತೀರ್ಮಾನ ನೀಡುತ್ತಿಲ್ಲ. ಸಚಿವ ಸಂಪುಟದ ನಿರ್ಧಾರವನ್ನು ಯಾರು ಬೇಕಾದರೂ ಪ್ರಶ್ನಿಸಬಹುದು. ಅದು ಸಿಬಿಐ ಇರಬಹುದು ಇಲ್ಲವೇ ಸಾರ್ವಜನಿಕರು ಬೇಕಾದರೂ ರಿಟ್ ಅರ್ಜಿ ಸಲ್ಲಿಸಲಿ. ಆಗ ಹೈಕೋರ್ಟ್ ಅರ್ಜಿಯನ್ನು ಪರಿಗಣಿಸಿ ಸಿಬಿಐ ವಿಚಾರಣೆ ಮಾಡಬೇಕೆ ಎಂಬದನ್ನು ತೀರ್ಮಾನ ಮಾಡುತ್ತದೆಂದು ಆದೇಶದಲ್ಲಿ ಉಲೇಖ ಮಾಡಿದೆ. +ಮಧ್ಯಂತರ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಪ್ರಕರಣದಲ್ಲಿ ಪ್ರತಿ ವಾದಿಯಾಗಲು ಬಯಸಿಲ್ಲ. ಕೇವಲ ಮಾಧ್ಯಮದ ವರದಿ ಆಧರಿಸಿ ಮಧ್ಯಂತರದ ಅರ್ಜಿ ಸಲ್ಲಿಸಿದ್ದಾರೆ. ಇಲ್ಲಿಯವರೆಗೂ ಸರ್ಕಾರದ ತೀರ್ಮಾನವನ್ನು ಯಾರು ಪ್ರಶ್ನಿಸಿಲ್ಲ. ಸಿಬಿಐ ಹಾಗೂ ಯತ್ನಾಳ್ ಅವರ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಖಾಜಿ ಲೆಂಡಫ್ ದೋರ್ಜಿ ಪ್ರಕರಣದಲ್ಲಿ ಸರ್ಕಾರದ ಕ್ರಮವನ್ನು ಪ್ರಶ್ನಿಸಲಾಗಿತ್ತು. ಈ ಹಿನ್ನಲೆಯಲ್ಲಿ ಅರ್ಜಿ ಹಿಂಪಡೆಯಲು ಅವಕಾಶ ಕಲ್ಪಿಸಿದ್ದೇವೆ ಎಂದು ಆದೇಶದಲ್ಲಿ ಹೇಳಿದರು. +ಮೇಲ್ಮನವಿ ಹಿಂಪಡೆದುಕೊಳ್ಳಲು ಅರ್ಜಿದಾರರಿಗೆ ಅವಕಾಶವಿದೆ ಎಂದು ಹೇಳಿದ ನ್ಯಾಯಾಲಯ, ಪಂಜಾಬ್ ಸರ್ಕಾರ ವರ್ಸಸ್ ಗುರುದೇವ್ ಪ್ರಕರಣವನ್ನು ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿ ವಿಚಾರಣೆ ಆರಂಭಕ್ಕೂ ಮುನ್ನ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಚಿವ ಸಂಪುಟದಲ್ಲಿ ತೆಗೆದುಕೊಂಡ ಪ್ರಸ್ತಾವನೆಯನ್ನು ನ್ಯಾಯಾಲಯದ ಗಮನಕ್ಕೆ ತಂದರು. ನಂತರ ಡಿ.ಕೆ.ಶಿವಕುಮಾರ್ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಾಲ್, ಅಭಿಷೇಕ್ ಮನು ಸಿಂಘ್ವಿ, ಉದಯ ಹೊಳ್ಳ ವಾದ ಮಂಡಿಸಿದರು. +ಹೆಣ್ಣು ಭ್ರೂಣ ಹತ್ಯೆ ಪ್ರಕರಣ, ಪೊಲೀಸರ ವಿರುದ್ಧ ಯತ್ನಾಳ್ ಆಕ್ರೋಶ +ವಾದ ಪ್ರಾರಂಭಿಸಿದ ಅಭಿಷೇಕ್ ಮನು ಸಿಂಘ್ವಿ ಸಚಿವ ಸಂಪುಟ ಸಭೆಯಲ್ಲಿ ಅರ್ಜಿದಾರರಾದ ಡಿ.ಕೆ.ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಹಿಂಪಡೆದ ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು. ಸಿಬಿಐ ತನಿಖೆಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಹಿಂಪಡೆದಿದೆ. ಇದು ಸರಿಯೋ , ತಪೊ್ಪೀ ಎಂಬುದನ್ನು ನ್ಯಾಯಾಲಯ ತೀರ್ಮಾನಿಸಲಿ. ಹೀಗಾಗಿ ನಾವು ರಿಟ್ ಮತ್ತು ಮೇಲ್ಮನವಿ ಅರ್ಜಿಯನ್ನು ವಾಪಸ್ ಹಿಂಪಡೆಯುತ್ತೇವೆ ಎಂದು ನ್ಯಾಯಾೀಶರ ಗಮನಕ್ಕೆ ತಂದರು. +ಈ ವೇಳೆ ಡಿಕೆಶಿ ಪರ ವಕೀಲರಾದ ಕಪಿಲ್ ಸಿಬಾಲ್ ಅವರು ದೆಹಲಿ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ ಪ್ರಕಾರ, ಹಿಂದಿನ ಸರ್ಕಾರ ನೀಡಿದ್ದ ಪೂರ್ವಾನುಮತಿಯನ್ನು ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಈ ಕಾಯ್ದೆ ಪ್ರಕಾರ ಸರ್ಕಾರದ ಅನುಮತಿ ಇಲ್ಲದೆ ತನಿಖೆ ಮಾಡುವಂತಿಲ್ಲ. ಶಾಸನಬದ್ದವಾಗಿ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿದೆ. ಇದನ್ನು ಸಿಬಿಐ ಪ್ರಶ್ನಿಸಲಿ. ನಮ್ಮ ಅಭ್ಯಂತರವಿಲ್ಲ. ನಾವು ನಮ್ಮ ರಿಟ್ ಅರ್ಜಿಯನ್ನು ಹಿಂಪಡೆಯಲು ಸಿದ್ದರಿದ್ದೇವೆ ಎಂದು ಹೇಳಿದರು. +ಸರ್ಕಾರ ತೀರ್ಮಾನ ತೆಗೆದುಕೊಂಡ ಮೇಲೆ ನಾವು ವಾದ ಮಾಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಒಮ್ಮೆ ನಿರ್ಧಾರ ತೆಗೆದುಕೊಂಡ ಮೇಲೆ ತನಿಖೆಯನ್ನು ನಿಲ್ಲಿಸಬೇಕು. ಇದರಂತೆ ಅರ್ಜಿ ಇತ್ಯರ್ಥವಾಗಬೇಕು. ಸರ್ಕಾರದ ಅನುಮತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ಈಗ ಮೇಲ್ಮನವಿ ಅರ್ಜಿ ಅಗತ್ಯವಿಲ್ಲ. ಈಗ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತೇವೆ ಎಂದು ತಿಳಿಸಿದರು. +ಇತ್ತೀಚೆಗೆ ಸಿಬಿಐ ಪ್ರಕರಣಗಳು ಯಾವ ಕಾರಣದಿಂದ ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಂಪುಟದ ತೀರ್ಮಾನವಾದ ಮೇಲೆ ಯಾವುದೆ ತನಿಖಾ ಸಂಸ್ಥೆಗಳು ಮುಂದುವರೆಸುವಂತಿಲ್ಲ ಎಂಬುದನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. +ಸಿಬಿಐ ಪರ ವಾದ:ಇನ್ನು ಸಿಬಿಐ ಪರವಾಗಿ ಹಾಜರಾದ ವಕೀಲ ಪ್ರಸನ್ನಕುಮಾರ್ ಅವರು, ಈಗಾಗಲೇ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದೆ. ಇಂತಹ ಸಮಯದಲ್ಲಿ ಕ್ಯಾಬಿನೆಟ್ ಈ ರೀತಿ ನಿರ್ಧಾರ ಮಾಡೋದು ಕಾನೂನು ಬಾಹಿರ ಎಂದು ವಾದ ಮಂಡಿಸಿದರು.ಈಗಾಗಲೇ ತನಿಖೆ ಅಂತಿಮ ಹಂತದಲ್ಲಿದೆ. ಸರ್ಕಾರದ ನಿರ್ಧಾರದ ಮೂಲಕ ತನಿಖೆಯನ್ನು ನಿಷಲಗೊಳಿಸಲಾಗುತ್ತಿದೆ. ಸರ್ಕಾರದ ಈ ನಿರ್ಧಾರ ಕಾನೂನು ಬಾಹಿರವಾಗಿದೆ. ಸರ್ಕಾರದ ಈ ಆದೇಶ ನಮಗೆ ಪರಿಣಾಮ ಬೀರಲ್ಲ ಎಂದು ಸ್ಪಷ್ಟಪಡಿಸಿದರು. +ಸರ್ಕಾರ ನಿರ್ಧಾರ ಹೈಕೋರ್ಟ್ ಆದೇಶವನ್ನು ನಿಷ್ಪಲಗೊಳಿಸುತ್ತಿದೆ. ಸಿಬಿಐ ತನಿಖೆ ಈಗಾಗಲೇ ಮುಕ್ತಾಯದ ಹಂತದಲ್ಲಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಕೂಡ ಸ್ಪಷ್ಟವಾಗಿದ್ದು, ಒಮ್ಮೆ ನೀಡಿದ್ದ ಒಪ್ಪಿಗೆಯನ್ನು ಸರ್ಕಾರ ಹಿಂಪಡೆಯಲು ಸಾಧ್ಯವಿಲ್ಲ ಎಂದರು. ಆಗ ಸುಪ್ರೀಂಕೋರ್ಟ್ ತೀರ್ಪು ಓದುವಂತೆ ಸಿಬಿಐ ಪರ ವಕೀಲರಿಗೆ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಸೂಚಿಸಿದರು. 1994ರಲ್ಲಿ ಸುಪ್ರೀಂ ತೀರ್ಪಿನಂತೆ ತನಿಖೆ ಮುಂದುವರೆಸಬಹುದಾಗಿದೆ. ತನಿಖೆ ಮುಕ್ತಾಯ ಹಂತದಲ್ಲಿರುವಾಗ ಸರ್ಕಾರಕ್ಕೆ ಮಧ್ಯಪ್ರವೇಶಿಸಲು ಅವಕಾಶವಿಲ್ಲ ಎಂದು ತಿಳಿಸಿದರು. +ಕಾನೂನುಬಾಹಿರ ಕ್ರಮ:ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿ ಪರವಾಗಿ ವಾದ ಮಂಡಿಸಿದ ವಕೀಲ ವೆಂಕಟೇಶ್ ಅವರು, ಇಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ತನಿಖೆಯ ಹಾದಿಯನ್ನು ತಪ್ಪಿಸಲು ಯತ್ನ ನಡೆದಿದೆ. ತನಿಖೆ ಅರ್ಧಕ್ಕೆ ನಿಲ್ಲಲು ಅವಕಾಶ ನೀಡಬಾರದು. ಸಿಬಿಐ ತನಿಖೆ ಮುಂದುವರಿಯಬೇಕು. ಕ್ಯಾಬಿನೆಟ್ ಇಷ್ಟೊಂದು ವೇಗವಾಗಿ ನಿರ್ಧಾರ ತೆಗೆದುಕೊಂಡಿದ್ದು ನಾವು ನೋಡಿಲ್ಲ. ಇಡೀ ಸಂಪುಟ ಡಿಸಿಎಂ ಪರ ನಿಂತು ಆದೇಶ ಮಾಡಿದೆ ಸರ್ಕಾರ ಆದೇಶ ಉಲ್ಲಂಘನೆ ಮಾಡಬಹುದೇ ಎಂದು ಪ್ರಶ್ನೆ ಮಾಡಿದರು.ಅಂತಿಮವಾಗಿ ಎಲ್ಲರ ವಾದ-ವಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ಕೃಷ್ಣದೀಕ್ಷಿತ್ ಅವರಿದ್ದ ಪೀಠ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಅವಕಾಶ ಕಲ್ಪಿಸಿತ್ತು. +ನಾನು ಯಾವುದೇ ತಪ್ಪು ಮಾಡಿಲ್ಲಬೆಂಗಳೂರು,ನ.29- ನಾನು ಯಾವುದೇ ತಪ್ಪು ಮಾಡಿಲ್ಲ. ಪಕ್ಷದ ಕೆಲಸ ಮಾಡಿದ್ದೇನೆ. ಎಲ್ಲ ಆರೋಪ ಮತ್ತು ಆಚಾರಗಳಿಗೆ ಸೂಕ್ತ ಕಾಲದಲ್ಲಿ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. +ನ್ಯಾಯಾಲಯದ ಆದೇಶ ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿದ್ದೆ. ಬಂಡವಾಳ ಹೂಡಿಕೆ ಸಮಾವೇಶದ ಕುರಿತು ಚರ್ಚೆ ನಡೆಸಲಾಗುತ್ತಿತ್ತು. ನ್ಯಾಯಾಲ ಯದಲ್ಲಿ ಏನಾಗಿದೆ ಎಂದು ಗೊತ್ತಿಲ್ಲ. ಮಾಹಿತಿ ಇಲ್ಲದೆ ಪ್ರತಿಕ್ರಿಯಿ ಸುವುದು ಸರಿಯಲ್ಲ ಎಂದರು. ಇದು ಕೋರ್ಟ್ನ ವಿಚಾರ ಆದಷ್ಟು ದೂರ ಇರುವುದು ಒಳ್ಳೆಯದು. ನನ್ನ ವಕೀಲರು ಹೇಳುವವರೆಗೂ ನಾನು ಯಾವುದೇ ಮಾತನಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು. +ಶಾಸಕ ಯತ್ನಾಳ್ ಸೇರಿದಂತೆ ಹಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರು ಏನು ಬೇಕಾದರೂ ಮಾತನಾಡಿಕೊಳ್ಳಲ್ಲಿ, ಎಲ್ಲರ ಆಚಾರ, ವಿಚಾರ ಮತ್ತು ಮನಸ್ಸಿನಲ್ಲಿ ಏನಿದೆ ಎಂಬುದನ್ನು ನಮ್ರತೆಯಿಂದ ಗಮನಿಸಿದ್ದೇನೆ. ಸೂಕ್ತ ಕಾಲದಲ್ಲಿ ಉತ್ತರ ನೀಡುತ್ತೇನೆ ಎಂದರು. ನಾನೇನು ತಪ್ಪು ಮಾಡಿಲ್ಲ ಎಂದು ಒತ್ತಿ ಹೇಳಿದ ಅವರು, ಪಕ್ಷದ ಕೆಲಸ ಮಾಡಿದ್ದೇನೆ. ಅದರ ಪರಿಣಾಮ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದೇನೆ. ಮುಂದೆಯೂ ತೊಂದರೆ ಕೊಡುತ್ತೇವೆ ಎನ್ನುವುದಾದರೆ ಆ ಭಗವಂತ ಇದ್ದಾನೆ. ನಾಡಿನ ಜನರಿದ್ದಾರೆ ಎಂದು ಭಾವನಾತ್ಮಕವಾಗಿ ಹೇಳಿದರು. ನನಗೆ ತೊಂದರೆ ಕೊಡಲು ಹೊರಟ್ಟಿದ್ದಕ್ಕೆ ರಾಜ್ಯದಲ್ಲಿ ಏನಾಗಿದೆ ಎಂದು ಜನ ನೋಡಿದ್ದಾರೆ. ನನ್ನ ಬೆಂಬಲಕ್ಕೆ ನಿಂತ ಮತ್ತು ನನ್ನ ಪರವಾಗಿ ಪ್ರಾರ್ಥಿಸಿದ ಕೋಟ್ಯಂತರ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು. \ No newline at end of file diff --git a/eesanje/url_46_301_8.txt b/eesanje/url_46_301_8.txt new file mode 100644 index 0000000000000000000000000000000000000000..1663ed3626bf2788f06ce33cab7b2d7e8653d7aa --- /dev/null +++ b/eesanje/url_46_301_8.txt @@ -0,0 +1,6 @@ +ಹೆಣ್ಣು ಭ್ರೂಣ ಹತ್ಯೆ ಪ್ರಕರಣ, ಪೊಲೀಸರ ವಿರುದ್ಧ ಯತ್ನಾಳ್ ಆಕ್ರೋಶ +ಬೆಂಗಳೂರು,ನ.29- ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಂದ ಅಸಹಾಯಕ ಮಾತುಗಳನ್ನು ನಿರೀಕ್ಷಿಸಿರಲಿಲ್ಲ. +ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ +ಗೃಹ, ಪೊಲೀಸ್ ಹಾಗೂ ಬೇಹುಗಾರಿಕೆ ಇಲಾಖೆಯ ಸಾಮೂಹಿಕ ವೈಫಲ್ಯವೇ ಭ್ರೂಣ ಹತ್ಯೆಗೆ ಕಾರಣವಾಗಿದೆ. ಈ ಇಲಾಖೆಗಳು ಸರಿಯಾಗಿ ಕಾರ್ಯ ನಿರ್ವಹಿಸಿದ್ದರೆ ಭ್ರೂಣ ಹತ್ಯೆ ತಡೆಯಬಹುದಿತ್ತು ಎಂದು ಬರೆದುಕೊಂಡಿದ್ದಾರೆ. +ಸೊಪ್ಪು, ಹಣ್ಣು ಮಾರುವವರನ್ನು ಎತ್ತಂಗಡಿ ಮಾಡುವುದನ್ನು ಬಿಟ್ಟು, ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುವುದನ್ನು ಬಿಟ್ಟು, ಕೊಟ್ಟಿರುವ ಗಸ್ತು ವಾಹನದಲ್ಲಿ ವಸೂಲಿ, ಹಫ್ತಾ ತೆಗೆಯುವುದು ಬಿಟ್ಟು, ಕಟ್ಟುನಿಟ್ಟಾಗಿ ಕೆಲಸ ಮಾಡಿದ್ದರೆ ಕಂದಮ್ಮಗಳ ಮಾರಣಹೋಮ ತಪ್ಪುತಿತ್ತು ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_301_9.txt b/eesanje/url_46_301_9.txt new file mode 100644 index 0000000000000000000000000000000000000000..175a32c62139a10074d2a7d756054a0be30bdd0e --- /dev/null +++ b/eesanje/url_46_301_9.txt @@ -0,0 +1,9 @@ +ಡಿ.15ರೊಳಗೆ ಕೆಎಸ್‌ಆರ್‌ಟಿಸಿ ಕಾರ್ಗೋ ಸೇವೆ ಆರಂಭ +ಬೆಂಗಳೂರು, ನ.29-ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‍ಆರ್‍ಟಿಸಿ) ಸಾರಿಗೆಯೇತರ ಆದಾಯ ವೃದ್ಧಿಸಿಕೊಳ್ಳಲು ಮುಂದಾಗಿದ್ದು, ಡಿಸೆಂಬರ್ 15ರೊಳಗೆ ಕಾರ್ಗೋ ಸೇವೆ ಆರಂಭಿಸಲಿದೆ.ಪಾರ್ಸೆಲ್‍ಗಳನ್ನು ಒಂದು ನಗರದಿಂದ ಮತ್ತೊಂದು ನಗರಕ್ಕೆ ಸಾಗಾಣಿಕೆ ಮಾಡುವ ಕಾರ್ಗೋ ಸೇವೆಗಾಗಿ 20 ಲಾರಿ ಟ್ರಕ್‍ಗಳನ್ನು ಖರೀದಿಸಿದ್ದು, ಸದ್ಯದಲ್ಲಿ ಅಧಿಕೃತ ಚಾಲನೆ ನೀಡಲಿದೆ. +ಬಸ್ ಸೇವೆಯಲ್ಲಿ ಪ್ರಯಾಣಿಕರ ವಿಶ್ವಾಸಕ್ಕೆ ಪಾತ್ರವಾಗಿರುವ ಕೆಎಸ್‍ಆರ್‍ಟಿಸಿಯು ಪ್ರಥಮ ಬಾರಿಗೆ ಟ್ರಕ್‍ಗಳ ಮೂಲಕ ಪಾರ್ಸೆಲ್ ಸೇವೆಗೆ ಮುಂದಾಗಿದೆ. ಕಾರ್ಗೋ ಪಾರ್ಸೆಲ್ ಸೇವೆಗೂ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುವ ನಿರೀಕ್ಷೆಯಲ್ಲಿ ಕೆಎಸ್‍ಆರ್‍ಟಿಸಿ ಇದೆ.ಪಾರ್ಸಲ್ ಸಾಗಾಣಿಕೆಗೆ ಕೃಷಿ, ಟೆಕ್ಸ್‍ಟೈಲ್ಸ್,ಅಟೊಮೊಬೈಲ್ ಸೇರಿದಂತೆ ಹಲವು ಕ್ಷೇತ್ರಗಳಿಂದ ಸಾಕಷ್ಟು ಬೇಡಿಕೆ ಇದೆ. ಐದಾರು ಟನ್‍ನಷ್ಟು ಸಾಗಾಟ ಮಾಡುವ ಟ್ರಕ್‍ಗಳಿಗೆ ಬೇಡಿಕೆ ಹೆಚ್ಚಿದೆ. +ರಾಜ್ಯದೆಲ್ಲೆಡೆ ಡಿಪೋ, ನಿಲ್ದಾಣಗಳಿರುವುದರಿಂದ ಕಾರ್ಗೋ ಸೇವೆ ಸುಲಭವಾಗಲಿದೆ.ಸದ್ಯಕ್ಕೆ ಪಾರ್ಸೆಲ್‍ಗಳಿಗೆ ಬೇಡಿಕೆ ಹೆಚ್ಚಿರುವ ಮಾರ್ಗಗಳಲ್ಲಿ ಕಾರ್ಗೋ ಸೇವೆಗೆ ಟ್ರಕ್ ಬಳಕೆ ಮಾಡುವುದಾಗಿ ಕೆಎಸ್‍ಆರ್‍ಟಿಸಿ ತಿಳಿಸಿದೆ. ಆರಂಭಿಕ ಹಂತದಲ್ಲಿ 20 ಟ್ರಕ್‍ಗಳ ಮೂಲಕ ಕಾರ್ಗೋ ಪ್ರಾರಂಭಿಸಲಿದ್ದು, ಸಾರ್ವಜನಿಕರಿಂದ ಬೇಡಿಕೆ ಹೆಚ್ಚಾದಂತೆ ಟ್ರಕ್‍ಗಳ ಸಂಖ್ಯೆಯನ್ನೂ ಹೆಚ್ಚಿಸಲು ಉದ್ದೇಶಿಸಲಾಗಿದೆ. +ಸುರಂಗದಲ್ಲಿದ್ದಾಗ ವಾಕ್, ಯೋಗ ಮಾಡುತ್ತಿದ್ದರಂತೆ ಕಾರ್ಮಿಕರು +ಈಗಾಗಲೇ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಲಗೇಜ್(ಪಾರ್ಸಲ್)ಸಾಗಾಣಿಕೆ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಕಾರ್ಯಾರಂಭ ಮಾಡಿದೆ. 109 ಕೇಂದ್ರಗಳಲ್ಲಿ ಸಣ್ಣ ಪ್ರಮಾಣದ ಪಾರ್ಸೆಲ್‍ಗಳನ್ನು ಬಸ್ ಮೂಲಕ ಕೊಂಡೊಯ್ಯುವ ಕಾರ್ಯವನು ಪ್ರಾರಂಭ ಮಾಡಿತ್ತು. ಆನಂತರ ಎಲ್ಲಾ ಬಸ್ ನಿಲ್ದಾಣಗಳಿಗೆ ವಿಸ್ತರಣೆ ಮಾಡಲಾಗಿತ್ತು. ಪಾರ್ಸಲ್ ಸೇವೆಯಿಂದ ವಾರ್ಷಿಕ 4 ಕೋಟಿ ರೂ.ವರೆಗೆ ಆದಾಯವೆದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ. +ಕೆಎಸ್‍ಆರ್‍ಟಿಸಿಯು ಕಾರ್ಗೊ ಸೇವೆ ಕೈಗೊಳ್ಳಲು ಖಾಸಗಿ ಏಜೆನ್ಸಿಗಳ ಜೊತೆಗೆ ಒಡಂಬಡಿಕೆ ಮಾಡಿಕೊಂಡಿದ್ದು, ಬರುವ ಆದಾಯದಲ್ಲಿ ಕೆಎಸ್‍ಆರ್‍ಟಿಸಿಗೆ ಶೇ. 80, ಖಾಸಗಿ ಏಜೆನ್ಸಿಗೆ ಶೇ. 20 ರಷ್ಟು ಪಾಲುದಾರಿಕೆ ನಿಗದಿಯಾಗಿತ್ತು. ಇದರಿಂದ ಕೆಎಸ್‍ಆರ್‍ಟಿಸಿ ವಾರ್ಷಿಕ ಸು. 13.20 ಕೋಟಿ ರೂ. ಆದಾಯವಿದೆ. +ಬಸ್‍ಗಳಲ್ಲಿ ಸಾಗಿಸುವ ಪಾರ್ಸೆಲ್‍ಗಳನ್ನು ಸಂಬಂಧಪಟ್ಟವರು ಬಸ್ ನಿಲ್ದಾಣಗಳಿಗೆ ಬಂದು ಕೊಂಡೊಯ್ಯಬೇಕಿತ್ತು. ಆದರೆ, ಕಾರ್ಗೋ ಟ್ರಕ್ ಆರಂಭಗೊಂಡರೆ ನಿಗದಿತ ಸ್ಥಳಕ್ಕೇ ತಲುಪಿಸಲಿದೆ. ಹೀಗಾಗಿ ವ್ಯವಸ್ಥಿತ ಮತ್ತು ಸಮರ್ಪಕವಾದ ಪಾರ್ಸೆಲ್ ಸೇವೆ ಆರಂಭಿಸುವ ಮೂಲಕ ಪ್ರಸ್ತುತ ಗಳಿಸುತ್ತಿರುವ ಆದಾಯವನ್ನು ಹತ್ತು ಪಟ್ಟು ಹೆಚ್ಚಿಸುವ ಉದ್ದೇಶವನ್ನು ಕೆಎಸ್‍ಆರ್‍ಟಿಸಿ ಹೊಂದಿದೆ. +ಪ್ರಸ್ತುತ 800 ಬಸ್‍ಗಳಲ್ಲಿ ಪಾರ್ಸೆಲ್ ಸೇವೆ ಇದ್ದು, ಇನ್ನು ಮುಂದೆ ಖರೀದಿಸಲಾಗುವ ಎಲ್ಲಾ ಬಸ್‍ಗಳಲ್ಲೂ ಪಾರ್ಸೆಲ್ ಕೊಂಡೊಯ್ಯುವ ವ್ಯವಸ್ಥೆ ಇರುತ್ತದೆ. ಈ ಸೇವೆಯನ್ನು ಮುಂದಿನ ನಾಲ್ಕು ವರ್ಷಗಳಲ್ಲಿ 4000 ಬಸ್‍ಗಳಿಗೆ ವಿಸ್ತರಿಸುವ ಉದ್ದೇಶವಿದೆ. ಹೀಗಾಗಿ ಬಸ್ ಮತ್ತು ಟ್ರಕ್ ಎರಡರಲ್ಲೂ ಪಾರ್ಸಲ್ ಸೇವೆ ದೊರೆಯಲಿದೆ ಎಂದು ಕೆಎಸ್‍ಆರ್‍ಟಿಸಿ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_302_1.txt b/eesanje/url_46_302_1.txt new file mode 100644 index 0000000000000000000000000000000000000000..c10672cbb609d60e00ce5b2825014510ee73a8d0 --- /dev/null +++ b/eesanje/url_46_302_1.txt @@ -0,0 +1,7 @@ +ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ವೈದ್ಯರು, ಸಹಚರರ ಸೆರೆ +ಬೆಂಗಳೂರು, ನ.28- ಹೆಣ್ಣು ಲಿಂಗ ಭ್ರೂಣ ಪತ್ತೆ ಮಾಡಿ ಗರ್ಭಪಾತ ಮಾಡುತ್ತಿದ್ದ ವೈದ್ಯರು ಮತ್ತು ಸಹಚರರನ್ನು ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಳೆ ಮದ್ರಾಸ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಅನುಮಾನಾಸ್ಪದವಾಗಿ ಬರುತ್ತಿದ್ದ ಒಂದು ಮಾರುತಿ ಸುಜುಕಿ ಬ್ರೀಜಾ ಕಾರನ್ನು ತಡೆದು, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ವಿಚಾರಿಸಿದ್ದಾರೆ. +ಆ ಇಬ್ಬರು ವ್ಯಕ್ತಿಗಳು ತಾವು ಗರ್ಭಿಣಿಯಾಗಿರುವ ಮಹಿಳೆಯರಿಗೆ ಅಕ್ರಮವಾಗಿ ಸ್ಕ್ಯಾನ್ ಮಾಡಿಸಿ, ಹೊಟ್ಟೆಯಲ್ಲಿ ಇರುವ ಮಗು ಗಂಡು ಅಥವಾ ಹೆಣ್ಣು ಎಂಬುದನ್ನು ಪತ್ತೆ ಮಾಡಿಸುತ್ತೇವೆ. ಹೆಣ್ಣು ಮಗು ಆಗಿದ್ದರೆ ತಮಗೆ ತಿಳಿದಿರುವ ಆಸ್ಪತ್ರೆಗಳಲ್ಲಿ ಗರ್ಭಪಾತ ಮಾಡಿಸುವುದಾಗಿ ತಿಳಿಸಿರುತ್ತಾರೆ. ಆ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ಸುದೀರ್ಘವಾಗಿ ವಿಚಾರಣೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿ ವ್ಯಕ್ತಿಗಳು ನೀಡಿದ ಮಾಹಿತಿ ಮೇರೆಗೆ ಇತರೆ 9 ಮಂದಿ ಸೇರಿದಂತೆ, ಒಟ್ಟು 11 ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ಧೃಡಪಟ್ಟಿರುತ್ತದೆ. +ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ +ಬಂಧಿತರಾಗಿರುವವರ ಪೈಕಿ 4 ಮಂದಿ ಏಜೆಂಟ್‍ಗಳಾಗಿದ್ದು, ಮೈಸೂರಿನ ಉದಯಗಿರಿಯಲ್ಲಿರುವ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಆಸ್ಪತ್ರೆಯ ಒಬ್ಬರು ವ್ಯವಸ್ಥಾಪಕಿ, ಒಬ್ಬರು ಸ್ವಾಗತಕಾರರು ಹಾಗೂ ಒಬ್ಬರು ಲ್ಯಾಬ್ ಟೆಕ್ನೀಷಿಯನ್. +ಇವರುಗಳನ್ನು ವಿಚಾರಣೆ ಮಾಡಿದಾಗ, ವೈದ್ಯರು ಮತ್ತು ಇತರೆ ವ್ಯಕ್ತಿಗಳು ಜೊತೆ ಸೇರಿ ಮೈಸೂರು ನಗರದ ಉದಯಗಿರಿಯಲ್ಲಿರುವ ಆಸ್ಪತ್ರೆ ಮತ್ತು ಮೈಸೂರು ನಗರ ಡಾ.ರಾಜ್‍ಕುಮಾರ್ ರಸ್ತೆಯಲ್ಲಿರುವ ಆಯುರ್ವೇದಿಕ್ ಪೈಲ್ಸ್ ಡೇ ಕೇರ್ ಸೆಂಟರ್‍ನಲ್ಲಿ ಅನಕೃತವಾಗಿ ಸುಮಾರು 3 ವರ್ಷಗಳಿಂದ ಗರ್ಭಪಾತ ಮಾಡಿಸುತ್ತಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ ಸುಮಾರು 242 ಗರ್ಭಿಣಿಯರಿಗೆ ಗರ್ಭಪಾತ ಮಾಡಿಸಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ. ಅಲ್ಲದೆ, ಈ ಪ್ರಕರಣದಲ್ಲಿ ಆರೋಪಿಗಳು ಕೋಟ್ಯಾಂತರ ರೂಗಳ ಹಣಕಾಸಿನ ವ್ಯವಹಾರವನ್ನು ಸಹ ಮಾಡಿರುತ್ತಾರೆ. +ಬಂಧಿತರ ಪೈಕಿ ಇಬ್ಬರು ಆರೋಪಿಗಳ ವಿರುದ್ಧ ಈಗಾಗಲೆ ದಾವಣಗೆರೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇರುತ್ತದೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಪ್ರಶಾಂತ್ ಮತ್ತು ಸಿಬ್ಬಂದಿಗಳ ತಂಡ ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. \ No newline at end of file diff --git a/eesanje/url_46_302_10.txt b/eesanje/url_46_302_10.txt new file mode 100644 index 0000000000000000000000000000000000000000..6861364f328a033aebad394b6ddc3dadd2de2656 --- /dev/null +++ b/eesanje/url_46_302_10.txt @@ -0,0 +1,5 @@ +ಟರ್ಮಿನಲ್ ಒಳಗೆ ಪ್ರವೇಶಿಸಿದ್ದ ಮಹಿಳೆ ಬಂಧನ +ಬೆಂಗಳೂರು,ನ.27- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಕಲಿ ಟಿಕೆಟ್ ತೋರಿಸಿ ಭದ್ರತಾ ನಿಯಂತ್ರಣ ದಾಟಿ ಟರ್ಮಿನಲ್ ಒಳಗೆ ಪ್ರವೇಶಿಸಿದ್ದ ಮಹಿಳಾ ಪ್ರಯಾಣಿಕರೊಬ್ಬರನ್ನು ಬಂಧಿಸಲಾಗಿದೆ. ಹರ್‍ಪೀತ್ ಕೌರ್ ಸೈನಿ ಬಂಧಿತ ಮಹಿಳಾ ಪ್ರಯಾಣಿಕರು. ಇವರ ವಿರುದ್ದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿರುತ್ತಾರೆ. +ನ.26ರಂದು ಹರಪೀತ್ ಕೌರ್ ಸೈನಿ ಅವರು ಸ್ನೇಹಿತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದರು. ಡಿಪಾರ್ಚರ್ ಗೇಟ್‍ನಲ್ಲಿ ಇ-ಟಿಕೆಟ್ ತೋರಿಸಿ ಟರ್ಮಿನಲ್ ಒಳಗೆ ಕಳುಹಿಸಿ ಒಳಪ್ರವೇಶಿಸಿ ನಂತರ ಹರ್‍ಪೀತ್ ಅವರು ತನ್ನ ಲ್ಯಾಪ್‍ಟಾಪ್‍ನ್ನು ಸಿಟಿಸೈಡ್‍ನಲ್ಲಿ ಮರೆತು ಹೋಗಿರುವುದಾಗಿ ಏರ್‍ಲೈನ್ಸ್ ಸಿಬ್ಬಂದಿಗೆ ತಿಳಿಸಿದ್ದಾರೆ. +ಪಿಟಿಬಿಯಿಂದ ಹಿಂತಿರುಗಿ ಚೆಕ್‍ಇನ್ ಕೌಂಟರ್‍ನಲ್ಲಿ ಇಂಡಿಗೋ ಏರ್‍ಲೈನ್ಸ್ ಸಿಬ್ಬಂದಿಯವರು ಹರಪೀತ್ ಸಿಬ್ಬಂದಿಯವರು ಹರ್‍ಪೀತ್ ಅವರ ಬಳಿ ಇದ್ದ ಟಿಕೆಟ್ ಪರಿಶೀಲಿಸಿದಾಗ ನಕಲಿ ಟಿಕೆಟ್ ಎಂಬುದು ಕಂಡುಬಂದಿದೆ. ಆ ಬಗ್ಗೆ ಆ ಮಹಿಳೆಯನ್ನು ವಿಚಾರಿಸಿದಾಗ, ತನ್ನ ಸ್ನೇಹಿತರಾದ ಆಯುಷ್ ಶರ್ಮ ಎಂಬುವರು ಇಪಿಎಸ್‍ಸಿವರೆಗೆ ಬಿಟ್ಟು ಬರುವ ಸಲುವಾಗಿ ಟರ್ಮಿನಲ್ ಒಳಗೆ ಪ್ರವೇಶಿಸಲು ತಾನೇ ಸ್ವತಃ ಇ-ಟಿಕೆಟ್‍ನ್ನು ಎಡಿಟ್ ಮಾಡಿದ್ದಾಗಿ ತಿಳಿಸಿದ್ದಾರೆ. +ನಕಲಿ ಟಿಕೆಟ್ ತೋರಿಸಿ ಭದ್ರತಾ ನಿಯಂತ್ರಣವನ್ನು ದಾಟಿ ಟರ್ಮಿನಲ್ ಒಳ ಪ್ರವೇಶಿಸಿರುವ ಬಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ಏರ್‍ಲೈನ್ಸ್ ಸಿಬ್ಬಂದಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೆಪೊಲೀಸರು ಮಹಿಳಾ ಪ್ರಯಾಣಿರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_302_11.txt b/eesanje/url_46_302_11.txt new file mode 100644 index 0000000000000000000000000000000000000000..6230ac5a8c1444d38f0757228d5e8ade31f1e11f --- /dev/null +++ b/eesanje/url_46_302_11.txt @@ -0,0 +1,11 @@ +ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತ ಡಿಐಎಸ್ ತಂತ್ರಾಂಶ ಲೋಕಾರ್ಪಣೆ +ಬೆಂಗಳೂರು, ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದ ಸಂದರ್ಭ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಫೋರ್ಟಲ್ 2.0 ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. +ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯ ಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಇದ್ದರು. +ಸಾರ್ವಜನಿಕ ಸಂಗ್ರಹಣೆ ಪೋರ್ಟಲ್ 2.0: ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ 1 ಕೋಟಿ ರೂ.ಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‍ನಲ್ಲಿ ಡ್ಯಾಷ್‍ಬೋರ್ಡ್‍ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಲಾಗಿದೆ. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ 50 ಲಕ್ಷ ರೂ. ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಎಲ್ಲಾ ಟೆಂಡರ್‍ಗಳಿಗೆ ಮೂರು ತಿಂಗಳ ಅವಗೆ ಪ್ರಾಯೋಗಿಕ ಆಧಾರದ ಮೇಲೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‍ನಲ್ಲಿ ಗುತ್ತಿಗೆ ನಿರ್ವಹಣಾ ಮಾಡ್ಯೂಲ್‍ನ್ನು ಹೆಚ್ಚಿನ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. +ಭಾರತೀಯ ರಾಯಭಾರಿಯನ್ನು ತಡೆದ ಖಲಿಸ್ತಾನಿಗಳು +ಅದರಂತೆ ಇ-ಪ್ರೊಕ್ಯೂರ್‍ಮೆಂಟ್ ವೇದಿಕೆಯಲ್ಲಿ ಒಟ್ಟು 40,000 ಟೆಂಡರ್ ಗಳು ಪ್ರಕಟಿಸಲಾಗಿದ್ದು ಈ ಪೈಕಿ ಆಯ್ಕೆಯಾದ 3 ಇಲಾಖೆಗಳ ರೂ 50 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ಕೇವಲ 3165 ಟೆಂಡರ್ ಗಳನ್ನು ಈ ಯೋಜನೆಗಾಗಿ ಗುರುತಿಸಲಾಗಿದೆ. ಸದರಿ ಇಲಾಖೆಗಳಿಂದ ಕಾಂಟ್ರಾಕ್ಟ್ ಮ್ಯಾನೇಜ್ಮೆಂಟ್ ಸಿಸ್ಟಮ್ ದಲ್ಲಿ ಕಡ್ಡಾಯವಾಗಿ ತಂತ್ರಾಂಶದ ಮೂಲಕ ಮಾಹಿತಿಯನ್ನು ಡ್ಯಾಶ್ ಬೋರ್ಡ್ ದಲ್ಲಿ ಅಳವಡಿಸಲಾಗುವುದು. +ಡಿಐಎಸ್ ತಂತ್ರಾಂಶ:ಮುಖ್ಯಮಂತ್ರಿಗಳು ಸೆಪ್ಟಂಬರ್ 12- 13ರಂದು ನಡೆದ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಮ್ಮೇಳನದಲ್ಲಿ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ, 28 ವಿಷಯಗಳ ಬಗ್ಗೆ ಪರಿಶೀಲನೆ ನಡೆಸಿ ಪ್ರತಿ ತಿಂಗಳೂ ವರದಿಯನ್ನು ಸಲ್ಲಿಸಲು ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಸದರಿ ವರದಿಗಳನ್ನು ವಿಶ್ಲೇಷಿಸಿ ಮಂಡಿಸುವಂತೆ ಸೂಚಿಸಲಾಗಿದೆ. ಅದರಂತೆ, ಕ್ರಮ ವಹಿಸಿ, ಇ-ಆಡಳಿತ ಇಲಾಖೆಯಿಂದ ಡಿಐಎಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. +ಈ ತಂತ್ರಾಂಶದ ಮೂಲಕ ಎಲ್ಲಾ ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ಆನ್‍ಲೈನ್ ವರದಿಯನ್ನು ಸಲ್ಲಿಸಲು ಅನುವು ಮಾಡಿಕೊಡಲಾಗಿದೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಇತರೆ ಇಲಾಖಾ ಕಾರ್ಯದರ್ಶಿಗಳಿಗೆ ಹಾಗೂ ಜಿಲ್ಲಾಧಿಕಾರಿ /ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಮಾಹಿತಿ ದಾಖಲಿಸಬಹುದು. ಸದರಿ ಸಮಸ್ಯೆಗಳಿಗೆ ಇಲಾಖಾ ಕಾರ್ಯದರ್ಶಿ/ ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ತಂತ್ರಾಂಶದ ಮೂಲಕವೇ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸಬಹುದಾಗಿದೆ. ಸಲ್ಲಿಸಲಾಗಿರುವ ಜಿಲ್ಲಾ ವರದಿಗಳ ಕುರಿತ ಎಮ್‍ಐಎಸ್ ವರದಿಗಳನ್ನು ಮುಂತ್ರಿಗಳು ಈ ತಂತ್ರಾಂಶದಲ್ಲಿ ವೀಕ್ಷಿಸಬಹುದಾಗಿದೆ. +ನಾಸಾ ಕಣ್ಣಿಗೆ ಬಿದ್ದ ‘ದುಷ್ಟ ಕಣ್ಣು’ +ತಂತ್ರಾಂಶದ ಬಳಕೆ ಬಗ್ಗೆ ಎಲ್ಲಾ ಇಲಾಖಾ/ಜಿಲ್ಲಾ ಸಮಾಲೋಚಕರಿಗೆ ತರಬೇತಿಯನ್ನು ಸಹ ನೀಡಲಾಗಿದೆ. ತಂತ್ರಾಂಶದ ಲಿಂಕ್ ಅನ್ನು ಇ-ಕಛೇರಿ ಮುಖಪುಟದಲ್ಲಿ ನೀಡಲಾಗಿದ್ದು, ಅಲ್ಲಿಂದಲೇ ಬಳಕೆದಾರರು ತಂತ್ರಾಂಶ ಪ್ರವೇಶಿಸಬಹುದಾಗಿದೆ. \ No newline at end of file diff --git a/eesanje/url_46_302_12.txt b/eesanje/url_46_302_12.txt new file mode 100644 index 0000000000000000000000000000000000000000..eb6c914f2586d5e9692e57b74f964238dfe5fdad --- /dev/null +++ b/eesanje/url_46_302_12.txt @@ -0,0 +1,9 @@ +ಅಚ್ಚುಕಟ್ಟಾಗಿ ನೆರವೇರಿದ ಸಿಎಂ ಜನಸ್ಪಂದನ +ಬೆಂಗಳೂರು,ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುವ ಮೂಲಕ ಸಾವಿರಾರು ಜನರ ದೂರುದುಮ್ಮಾನಗಳಿಗೆ ಸ್ಪಂದಿಸಿದರು. ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನದಷ್ಟೇ ವಿಶ್ವಾಸರ್ಹತೆಯನ್ನು 2ನೇ ಅಧಿಕಾರಾವಧಿಯ ಜನತಾ ದರ್ಶನ ವೂ ಉಳಿಸಿಕೊಂಡಿದ್ದು, ಸಮಸ್ಯೆಗೆ ಸ್ಪಂದಿಸಲು ಈ ಮೊದಲಿಗಿಂತಲೂ ಕ್ರಮಬದ್ದವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. +ಜನತಾದರ್ಶನಕ್ಕೆ ರಾಜ್ಯದ ನಾನಾ ದಿಕ್ಕುಗಳಿಂದಲೂ ಜನಸಾಮಾನ್ಯರು ಆಗಮಿಸಿದ್ದರು. ಎಲ್ಲರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ಜನಸಂಪರ್ಕ ಇಲಾಖೆಯ ತಂತ್ರಾಂಶದಲ್ಲಿ ದಾಖಲಿಸಿ ಕ್ರಮ ಸಂಖ್ಯೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಯೊಬ್ಬರ ಅರ್ಜಿಗಳನ್ನು ಪಡೆದು ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಮೂಲಕ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು. +ವಿವಿಧ ಇಲಾಖೆಗಳ ಅಕಾರಿಗಳು, ಸಿಬ್ಬಂದಿಗಳು, ಸ್ಥಳದಲ್ಲೇ ಮೊಕ್ಕಾಂ ಹೂಡಿದರು. ಹೀಗಾಗಿ ಆಯಾ ಇಲಾಖೆಗಳ ಮತ್ತು ಪ್ರಾದೇಶಿಕವಾದ ಸಮಸ್ಯೆಗಳ ಬಗ್ಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ದೊರಕಿಸುವ ಪ್ರಯತ್ನ ನಡೆಸಲಾಯಿತು. ಜನತಾ ದರ್ಶನಕ್ಕಾಗಿ ಸಾವಿರಾರು ಜನ ಸಾಲುಗಟ್ಟಿ ಬಂದಿದ್ದರು. ದೂರದ ಊರುಗಳಿಂದ ಬಂದವರಿಗೆ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. +ಡಿಸಂಬರ್‌ನಲ್ಲಿ ಆಗಲಿವೆ ಹಲವಾರು ಮಹತ್ವದ ಬದಲಾವಣೆಗಳು +ಪಾರ್ಕಿಂಗ್ ಸೇರಿದಂತೆ ನಾನಾ ರೀತಿಯ ವ್ಯವಸ್ಥೆಗಳಿಗೆ ಕುಮಾರಕೃಪ ಹಾಗೂ ಇತರ ಸ್ಥಳಗಳನ್ನು ಬಳಸಿಕೊಳ್ಳಲಾಗಿತ್ತು. ಸಾವಿರಾರು ಜನ ಆಗಮಿಸಿದ್ದರಿಂದ ಜನದಟ್ಟಣೆ ಹೆಚ್ಚಾಗಿತ್ತು. ಅರ್ಜಿದಾರರ ಸಾಲು ಕುಮಾರಕೃಪ ಅತಿಥಿಗೃಹದವರೆಗೂ ಮುಂದುವರೆದಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಳ್ಮೆಯಿಂದಲೇ ಪ್ರತಿಯೊಬ್ಬರ ಅಹವಾಲನ್ನು ಸ್ವೀಕರಿಸಿ ಪರಿಹಾರ ದೊರಕಿಸುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಚೇರಿಯ ಹಿರಿಯ, ಕಿರಿಯ ಅಧಿಕಾರಿಗಳು ಸಕ್ರಿಯವಾಗಿ ಜನತಾದರ್ಶನದಲ್ಲಿ ತೊಡಗಿಸಿಕೊಂಡಿದ್ದರು. 20ಕ್ಕೂ ಹೆಚ್ಚು ಕೌಂಟರ್‍ಗಳನ್ನು ನಿರ್ಮಿಸಲಾಗಿತ್ತು. +ಭಾರೀ ಭದ್ರತೆ 600 ಮಂದಿ ಪೊಲೀಸರ ನಿಯೋಜನೆಬೆಂಗಳೂರು, ನ.27- ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಸಿಎಂ ಜನಸ್ಪಂದನ ಕಾರ್ಯಕ್ರಮದ ಬಂದೋಬಸ್ತ್‍ಗೆ ಅಧಿಕಾರಿಗಳು ಸೇರಿದಂತೆ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.ಕಾರ್ಯಕ್ರಮ ಸ್ಥಳದಲ್ಲಿ ಯಾವುದೇ ಸಣ್ಣ ಪುಟ್ಟ ಲೋಪಗಳು ಆಗದಂತೆ ಸಿಬ್ಬಂದಿ ಕರ್ತವ್ಯದಲ್ಲಿದ್ದರು. +ಇಬ್ಬರು ಡಿಸಿಪಿ, 4 ಮಂದಿ ಎಸಿಪಿ, 10 ಮಂದಿ ಇನ್ಸ್‍ಪೆಕ್ಟರ್‍ಗಳು, 15ಕ್ಕೂ ಹೆಚ್ಚು ಪಿಎಸ್‍ಐಗಳು, 550 ಮಂದಿ ಹೆಡ್ ಕಾನ್ಸ್‍ಟೆಬಲ್‍ಗಳು, ಕಾನ್ಸ್‍ಟೆಬಲ್‍ಗಳು ಹಾಗೂ ಹೋಂ ಗಾಡ್ರ್ಸ್‍ಗಳು ಬಂದೋಬಸ್ತ್‍ನಲ್ಲಿದ್ದರು. \ No newline at end of file diff --git a/eesanje/url_46_302_2.txt b/eesanje/url_46_302_2.txt new file mode 100644 index 0000000000000000000000000000000000000000..102f49e9be143178c6457006e115109720a925b3 --- /dev/null +++ b/eesanje/url_46_302_2.txt @@ -0,0 +1,9 @@ +40 ಶಾಸಕರಿಗೆ ನಿಗಮ ಭಾಗ್ಯ, ಚಳಿಗಾಲದ ಅಧಿವೇಶನದೊಳಗೆ ಆದೇಶ +ಬೆಂಗಳೂರು,ನ.28- ಶಾಸಕರು, ವಿಧಾನಪರಿಷತ್ ಸದಸ್ಯರೂ ಸೇರಿದಂತೆ 39 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು, ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ನಿರ್ಣಯ ಹೊರ ಬೀಳುವ ನಿರೀಕ್ಷೆಗಳಿವೆ. ನಗರಕ್ಕೆ ಆಗಮಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. +ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿದ್ದು, ಇಂದು ನಡೆಯುವ ಸಭೆ ಬಹುತೇಕ ಅಂತಿಮ ಎಂದು ಹೇಳಲಾಗಿದೆ. ಎರಡು-ಮೂರಕ್ಕೂ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವವರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗುತ್ತಿದೆ. ಇದರಲ್ಲಿ ನಾಲ್ಕೈದು ಮಂದಿ ವಿಧಾನಪರಿಷತ್ ಸದಸ್ಯರೂ ಸೇರಿದ್ದಾರೆ. +ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ +ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ ಮಂಡಳಿಗಳ ನೇಮಕಾತಿಗೆ ಕಾಂಗ್ರೆಸ್ ಚಾಲನೆ ನೀಡಿದೆ. ಮೂಲಗಳ ಪ್ರಕಾರ ಪ್ರಕಾಶ್‍ಕೋಳಿವಾಡ, ವಿಜಯಾನಂದ ಕಾಶಪ್ಪನವರ್, ಎಂ.ವೈ.ಪಾಟೀಲ್, ಅಲ್ಲಂಪ್ರಭು ಪಾಟೀಲ್, ಬಸನಗೌಡ ದದ್ದಲ್, ಯಶವಂತರಾಯ ಗೌಡ ವಿಠಲಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ರಾಘವೇಂದ್ರ ಹಿಟ್ನಾಳ್, ಪ್ರಸಾದ್ ಅಬ್ಬಯ್ಯ, ಶ್ರೀನಿವಾಸ್ ಮಾನೆ, ಜಿ.ಎನ್.ಗಣೇಶ್, ಈ ತುಕಾರಾಮ್, ಟಿ.ರಘುಮೂರ್ತಿ, ಬೇಳೂರು ಗೋಪಾಲಕೃಷ್ಣ, ಟಿ.ಡಿ.ರಾಜೇಗೌಡ, ಡಾ.ರಂಗನಾಥ್, ಎಸ್.ಆರ್.ಶ್ರೀನಿವಾಸ್, ಕೆ.ವೈ.ನಂಜೇಗೌಡ, ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ, ಬಿ.ಶಿವಣ್ಣ, ಎಚ್.ಸಿ.ಬಾಲಕೃಷ್ಣ, ಕೆ.ಎಂ.ಶಿವಲಿಂಗೇಗೌಡ, ವಿನಯ್‍ಕುಲಕರ್ಣಿ, ನರೇಂದ್ರಸ್ವಾಮಿ ಅವರ ಹೆಸರುಗಳು ಸಂಭವನೀಯರ ಪಟ್ಟಿಯಲ್ಲಿ ಸೇರಿವೆ. +ಮೊದಲರೆಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರುಗಳ ನಡುವೆ ಹೊಂದಾಣಿಕೆಯಾಗಿರಲಿಲ್ಲ. ಇನ್ನೂ ಕೆಲವು ಹಿರಿಯರ ಹೆಸರುಗಳು ಬಿಟ್ಟುಹೋಗಿದ್ದವು. ಬಹಳಷ್ಟು ಮಂದಿ ತಮಗೆ ನಿಗಮ ಮಂಡಳಿ ಬೇಡ. ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿತ್ತು. +ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ.ವೇಣುಗೋಪಾಲ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಜತೆ ಚರ್ಚೆ ನಡೆಸಿ ಬಹುತೇಕ ಸ್ಪಷ್ಟ ನಿರ್ಣಯ ರೂಪಿಸಿದ್ದಾರೆ ಎನ್ನಲಾಗಿದೆ.ಹೈಕಮಾಂಡ್‍ನ ಸಂದೇಶದೊಂದಿಗೆ ರಾಜ್ಯಕ್ಕೆ ಆಗಮಿಸಿರುವ ರಣದೀಪ್ ಸಿಂಗ್ ಸುರ್ಜೇವಾಲ ಅವರು ಇಂದು ನಡೆಯುವ ಸಭೆಯಲ್ಲಿ ಸಂಭವನೀಯ ಪಟ್ಟಿಗೆ ಅಂಕಿತ ಹಾಕಲಿದ್ದು, ಇನ್ನೆರಡು ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳು ಆರಂಭಗೊಳ್ಳುವ ಸಾಧ್ಯತೆ ಇದೆ. +ಅಮೆರಿಕ ನೆಲೆಗಳ ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ +ಆರ್ಥಿಕವಾಗಿ ಸುಸ್ಥಿಯಲ್ಲಿರುವ 90ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ನೇಮಕಾತಿ ನಡೆಯುವುದು ಖಚಿತವಾಗಿದೆ.ಮೊದಲ ಹಂತದಲ್ಲಿ 40ಕ್ಕೂ ಹೆಚ್ಚು ನಿಗಮ ಮಂಡಳಿಗಳಿಗೆ ಶಾಸಕರನ್ನು ನೇಮಿಸಲಾಗುತ್ತಿದ್ದು, ಎರಡನೇ ಹಂತದಲ್ಲಿ ಕಾರ್ಯಕರ್ತರು, ಪ್ರಮುಖ ನಾಯಕರನ್ನು ಪರಿಗಣಿಸುವ ಸಾಧ್ಯತೆ ಇದೆ. ಕಾರ್ಯಕರ್ತರ ನೇಮಕಾತಿಯ ಕುರಿತಂತೆಯೂ ಇಂದಿನ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_302_3.txt b/eesanje/url_46_302_3.txt new file mode 100644 index 0000000000000000000000000000000000000000..d94004a06ba6b270fc1e364aa4167012ebbbd36b --- /dev/null +++ b/eesanje/url_46_302_3.txt @@ -0,0 +1,9 @@ +ನ್ಯಾಯಾಂಗ ಆಯೋಗಕ್ಕೆ ಬಿಜೆಪಿ ಸರ್ಕಾರದ 40% ಕಮಿಷನ್ ಕುರಿತ ದಾಖಲೆಗಳ ಸಲ್ಲಿಕೆ : ಕೆಂಪಣ್ಣ +ಬೆಂಗಳೂರು, ನ.28- ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಮಾಡಲಾಗದ ಶೇ.40ರಷ್ಟು ಕಮಿಷನ್ ಆರೋಪವನ್ನು ಸಾಬೀತು ಪಡಿಸುವಂತಹ ದಾಖಲೆಗಳನ್ನು ನ್ಯಾಯಾಂಗ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ. +ಶೇ.40ರಷ್ಟು ಕಮಿಷನ್ ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲಾಗಿದೆ. ಇಂದು ಆಯೋಗದ ಮುಂದೆ ಹಾಜರಾದ ಕೆಂಪಣ್ಣ ಸೇರಿದಂತೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ದಾಖಲೆಗಳನ್ನು ಹಾಜರು ಪಡಿಸಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ತಾವು ಹಿಂದೆ ಸರ್ಕಾರದಲ್ಲಿ ನಡೆಯುತ್ತಿರುವ ಶೇ.40ರಷ್ಟು ಕಮಿಷನ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪ ಮಾಡಿದ್ದೇವು. ಇಂದು ಆಯೋಗದ ಮುಂದೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದೇವೆ. ಯಾವೆಲ್ಲಾ ದಾಖಲೆ ನೀಡಿದ್ದೇವೆ, ಎಷ್ಟು ಪ್ರಮಾಣದ ದಾಖಲೆ ನೀಡಿದ್ದೇವೆ ಎಂಬ ಬಗ್ಗೆ ನಾವು ಬಹಿರಂಗ ಪಡಿಸುವುದಿಲ್ಲ. ಈಗಾಗಲೇ ಆಯೋಗಕ್ಕೆ ಸಲ್ಲಿಸಿರುವುದರಿಂದ ಇನ್ನೂ ಮುಂದೆ ನ್ಯಾಯಮೂರ್ತಿಯವರೇ ಮಾಹಿತಿ ನೀಡಬೇಕು ಎಂದರು. +ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ +ತಮ್ಮ ಬಳಿ ಇನ್ನೂ ಹೆಚ್ಚುವರಿ ದಾಖಲೆಗಳನ್ನು ನೀಡುವಂತೆ ಆಯೋಗ ಕೇಳಿದೆ. ಅವುಗಳನ್ನು 10 ದಿನಗಳ ಒಳಗಾಗಿ ಒದಗಿಸುತ್ತೇವೆ. ಕೆಲವು ಮಾಹಿತಿಗಳಿಗಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಲಾಗಿದೆ. ಅದು ನಮ್ಮ ಕೈ ಸೇರಲು ಕೆಲ ಸಮಯಾವಕಾಶ ಬೇಕಿದೆ. ಅದಕ್ಕಾಗಿ 10 ದಿನಗಳ ಬಳಿಕ ಮತ್ತೆ ಆಯೋಗದ ಮುಂದೆ ಹಾಜರಾಗುತ್ತೇವೆ ಎಂದರು. +ನಾವು ಗುತ್ತಿಗೆದಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ನಾವು ಯಾವುದೇ ಪಕ್ಷಕ್ಕೆ ಸೇರಿಲ್ಲ. ಯಾರ ವಿರುದ್ಧವೂ ಇಲ್ಲ. ವ್ಯವಸ್ಥೆ ಕುರಿತು ನಮ್ಮ ಹೋರಾಟ ನಡೆಯುತ್ತಿದೆ. ನಮ್ಮ ಸಂಘಟನೆಯಲ್ಲಿ ಎಲ್ಲಾ ಪಕ್ಷಕ್ಕೆ ಸೇರಿದವರು ಇದ್ದಾರೆ ಎಂದರು. +ಡೀಪ್‍ಫೇಕ್ ವಿಡಿಯೋ ಬಗ್ಗೆ ಮೌನ ಮುರಿದ ರಶ್ಮಿಕಾ +ಇಂದು ಸಲ್ಲಿಸಿರುವ ದಾಖಲೆಗಳಲ್ಲಿ ಲೋಕಪಯೋಗಿ, ಸಣ್ಣ, ಬೃಹತ್ ನೀರಾವರಿ, ಪಂಚಾಯತ್ ರಾಜ್, ಆರೋಗ್ಯ ಸೇರಿ ಎಲ್ಲಾ ಇಲಾಖೆಗಳಿಗೆ ಸೇರಿದ ದಾಖಲೆಗಳನ್ನು ನೀಡಲಾಗಿದೆ ಎಂದು ಹೇಳಿದರು. ಪ್ರಸ್ತುತ ಸರ್ಕಾರಕ್ಕೆ ಸೇರಿದ ಒಂದೆರಡು ಪ್ರಕರಣಗಳ ದಾಖಲೆಗಳನ್ನು ನೀಡಲಾಗಿದೆ ಎಂದರು. \ No newline at end of file diff --git a/eesanje/url_46_302_4.txt b/eesanje/url_46_302_4.txt new file mode 100644 index 0000000000000000000000000000000000000000..27c982d7bf1c8672e433ed35a21a6a9b60509f89 --- /dev/null +++ b/eesanje/url_46_302_4.txt @@ -0,0 +1,9 @@ +86 ವರ್ತಕರ ಮೇಲೆ ದಾಳಿ, 64 ಕೋಟಿ ತೆರಿಗೆ ವಂಚನೆ ಪತ್ತೆ +ಬೆಂಗಳೂರು, ನ.28- ಕಬ್ಬಿಣ, ಉಕ್ಕು ಹಾಗೂ ಸ್ಕ್ರ್ಯಾಪ್ ವಲಯದಲ್ಲಿನ 86 ವರ್ತಕರ ಮೇಲೆ ದಾಳಿನಡೆಸಿರುವ ವಾಣಿಜ್ಯ ತೆರಿಗೆ ಇಲಾಖೆ 64 ಕೋಟಿ ರೂಪಾಯಿಗಳ ತೆರಿಗೆ ವಂಚನೆಯನ್ನು ಪತ್ತೆ ಹಚ್ಚಿದೆ. ವಾಣಿಜ್ಯ ತೆರಿಗೆ ಇಲಾಖೆಯ ದಕ್ಷಿಣ ವಲಯ ಜಾರಿ ವಿಭಾಗ ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ. ನಕಲಿ ಹೂಡುವಳಿ, ತೆರಿಗೆ ಜಮೆಯನ್ನು (ಐಟಿಸಿ) ಬಳಸಿಕೊಂಡು ಸರ್ಕಾರದ ಬೊಕ್ಕಸಕ್ಕೆ ತೆರಿಗೆಯನ್ನು ವಂಚಿಸಿ ನಷ್ಟ ಉಂಟುಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. +ಈ ಜಾಲ ನಕಲಿ ಬಿಲ್‍ಗಳನ್ನು ವ್ಯವಸ್ಥಿತವಾಗಿ ಸೃಷ್ಟಿಸಿ ತೆರಿಗೆಯನ್ನು ತಪ್ಪಿಸುತ್ತಿತ್ತು, ಎಲ್ಲಾ ವಂಚಕರ ಸಮಗ್ರ ತಪಾಸಣೆ ನಡೆಸಲು ಕಳೆದೆರಡು ತಿಂಗಳ ಅವಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ, ಸದರಿ ವಂಚಕರ ವ್ಯಾಪಾರ ಸ್ಥಳಗಳ ಹೆಚ್ಚಿನ ತಪಾಸಣೆಯನ್ನೂ ಮುಂದುವರೆಸಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ ತಿಳಿಸಿದ್ದಾರೆ. +ಈ ವರ್ತಕರು ಹೂಡುವಳಿ ತೆರಿಗೆ ಜಮೆಯನ್ನು ಕೃತಕವಾಗಿ ಸೃಷ್ಟಿಸುತ್ತಿದ್ದ ವ್ಯವಸ್ಥಿತ ರೀತಿಯು ಕುತೂಹಲಕಾರಿಯಾಗಿದೆ. ಇಲಾಖೆಯಿಂದ ಈಗಾಗಲೇ ನೋಂದಣಿ ಅಮಾನತ್ತಿನಲ್ಲಿರುವ ಅಥವಾ ರದ್ದುಗೊಂಡಿರುವ ಜಿಎಸ್‍ಟಿಎನ್ ಸಂಖ್ಯೆಗಳನ್ನು ಬಳಸಿಕೊಂಡು ಅವುಗಳಿಂದ ಕೃತಕ ಖರೀದಿ ಬಿಲ್ಲುಗಳನ್ನು ಸೃಷ್ಟಿಸಿ ಅವುಗಳಿಂದ ಐಟಿಸಿಯನ್ನು ಪಡೆದುಕೊಂಡು ತೆರಿಗೆಯನ್ನು ಪಾವತಿಸದೇ ವಂಚಿಸುತ್ತಿದ್ದರು ಎಂದು ತಿಳಿಸಿದ್ದಾರೆ. +ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ +ಇದರ ಜೊತೆಗೆ ಕೆಲವೊಂದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ಮೋಸದಿಂದ ಜಿಎಸ್‍ಟಿ ನೋಂದಣಿ ಮಾಡಿಸಿ, ಯಾವುದೇ ವ್ಯವಹಾರ ಸ್ಥಳಗಳನ್ನು ಹೊಂದಿಲ್ಲದೆ ನಕಲಿ ಬಿಲ್ಲುಗಳನ್ನು ನೀಡುವುದರ ಮೂಲಕವೂ ತೆರಿಗೆ ತಪ್ಪಿಸಲಾಗುತ್ತಿತ್ತು ಎಂದು ವಿವರಿಸಿದ್ದಾರೆ. +ಈ ಜಾಲ ನಕಲಿ ಬಿಲ್‍ಗಳ ಮೂಲಕ 352 ಕೋಟಿ ರೂಪಾಯಿಗಳ ವಹಿವಾಟು ನಡೆಸಿದೆ. ಅದರಿಂದ ಸರ್ಕಾರಕ್ಕೆ 64 ಕೋಟಿ ರೂಪಾಯಿಗಳ ತೆರಿಗೆ ವಂಚನೆಯಾಗಿದೆ. ನಕಲಿ ಬಿಲ್ ತಯಾರಿಕೆ ಹಾಗೂ ತೆರಿಗೆ ವಂಚನೆ ಶಿಕ್ಷಾರ್ಹ ಅಪರಾಧವಾಗಿದೆ. ಜುಲ್ಮಾನೆ ವಿಧಿಸುವಿಕೆ, ಸರಕುಗಳ ಮುಟ್ಟುಗೋಲು, ಸ್ವತ್ತುಗಳ ಮತ್ತು ಬ್ಯಾಂಕ್ ಖಾತೆಗಳ ಮುಟ್ಟುಗೋಲು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ. +ಅಮೆರಿಕ ನೆಲೆಗಳ ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ +ತೆರಿಗೆ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಇಲಾಖೆ ನಿರಂತರ ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿ ಈ ರೀತಿಯ ಮೋಸಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ತೆರಿಗೆ ವಂಚನೆಗೆ ಸಂಬಂಧಿಸಿದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೂ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_302_5.txt b/eesanje/url_46_302_5.txt new file mode 100644 index 0000000000000000000000000000000000000000..e68b80cfa19fd84eac693e62b23d77d42e8fbe08 --- /dev/null +++ b/eesanje/url_46_302_5.txt @@ -0,0 +1,8 @@ +ಡಿಕೆಶಿ ಸಿಬಿಐ ಪ್ರಕರಣ : ಸಚಿವ ಸಂಪುಟದ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್ +ಬೆಂಗಳೂರು,ನ.28- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪೂರ್ವಾನುಮತಿಯನ್ನು ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. +ವಿಶೇಷವೆಂದರೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಹೈಕೋರ್ಟ್‍ನ ಮುಖ್ಯನ್ಯಾಯಮೂರ್ತಿ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಇದರ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಡಿ.ಕೆ.ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣವನ್ನು ಸಿಬಿಐ ತನಿಖೆ ವಾಪಸ್ ಪಡೆದಿರುವುದು ಸರ್ಕಾರದ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. +ತಮ್ಮ ಅರ್ಜಿಯನ್ನು ಸೀಮಿತವಾಗಿ ವಿಚಾರಣೆ ನಡೆಸಬೇಕೆಂದು ಮನವಿ ಮಾಡಿರುವ ಯತ್ನಾಳ್, ಈಗಾಗಲೇ ಪ್ರಕರಣವು ಅಂತಿಮ ಹಂತದಲ್ಲಿದೆ. ಸ್ವತಃ ಸಿಬಿಐ ತನಿಖಾ ತಂಡ 80ರಿಂದ 90ರಷ್ಟು ವಿಚಾರಣೆ ಮುಗಿದಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ಕೊಟ್ಟಿದೆ. ಆದರೆ, ಸಚಿವ ಸಂಪುಟವು ವಿಚಾರಣೆ ಮುಕ್ತಾಯ ಹಂತದಲ್ಲಿರುವಾಗ ಪೂರ್ವಾನುಮತಿಯನ್ನು ವಾಪಸ್‍ಪಡೆದಿರುವುದು ವಿಚಾರಣೆಯನ್ನು ನಿಷಲಗೊಳಿಸುವ ಯತ್ನವಾಗಿದೆ. ಇದು ಕಾನೂನು ಬಾಹಿರವಾಗಿದ್ದು, ತಮ್ಮ ಮೇಲ್ಮನವಿ ಅರ್ಜಿಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. +ಬಿಜೆಪಿ ಅಸಮಾಧಾನಿತರೊಂದಿಗೆ ವರಿಷ್ಠರ ಸಮಾಲೋಚನೆ +ಸಂಪುಟದ ತೀರ್ಮಾನವನ್ನು ನೋಡಿದರೆ ಪ್ರಕರಣವನ್ನು ಮೊಟಕುಗೊಳಿಸುವ ದುರುದ್ದೇಶ ಹೊಂದಿದೆ. ಒಂದು ಬಾರಿ ತನಿಖಾ ಸಂಸ್ಥೆಗೆ ರಾಜ್ಯ ಸರ್ಕಾರ ವಹಿಸಿದ ಮೇಲೆ ಅದನ್ನು ಹಿಂಪಡೆಯುವ ಅಧಿಕಾರ ಯಾವುದೇ ಸರ್ಕಾರಕ್ಕೆ ಇರುವುದಿಲ್ಲ. ಸರ್ಕಾರದ ನಡೆ ಪೂರ್ವಾಗ್ರಹ ಪೀಡಿತವಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖಿಸಲಾಗಿದೆ. +ತಮ್ಮ ಮೇಲ್ಮನವಿಯಲ್ಲಿ ಸಿಕ್ಕಿಂ ಪ್ರಕರಣವನ್ನು ಉಲ್ಲೇಖ ಮಾಡಿರುವ ಯತ್ನಾಳ್, ಅಂದು ಅಲ್ಲಿನ ಸರ್ಕಾರ ಮುಖ್ಯಮಂತ್ರಿ ವಿರುದ್ಧ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಬಳಿಕ ಮತ್ತೊಂದು ಸರ್ಕಾರ ಬಂದಾಗ ಪ್ರಕರಣವನ್ನು ಹಿಂಪಡೆಯಿತು. +ಅಂತಿಮವಾಗಿ ಸುಪ್ರೀಂಕೋರ್ಟ್ ಒಂದು ಬಾರಿ ವಿಚಾರಣೆಗೆ ಆದೇಶ ನೀಡಿದ ನಂತರ ಹಿಂಪಡೆಯಲು ಯಾವುದೇ ಸರ್ಕಾರಗಳಿಗೆ ಅವಕಾಶವಿಲ್ಲ ಎಂದು ತೀರ್ಪು ಕೊಟ್ಟಿದೆ. ಇದು ಕೂಡ ಅಕ್ರಮ ಆಸ್ತಿ ಪ್ರಕರಣವಾಗಿರುವುದರಿಂದ ಸಂಪುಟದ ತೀರ್ಮಾನವು ಸಂಪೂರ್ಣವಾಗಿ ಕಾನೂನಿಗೆ ವಿರುದ್ಧವಾಗಿದೆ. ತಮ್ಮ ಮನವಿಯನ್ನು ನ್ಯಾಯಾಲಯ ಪರಿಗಣಿಸಿ ವಿಚಾರಣೆ ನಡೆಸಬೇಕೆಂದು ಅವರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_302_6.txt b/eesanje/url_46_302_6.txt new file mode 100644 index 0000000000000000000000000000000000000000..ab9ebe908eee9b244357cec54ab9650efdebd38a --- /dev/null +++ b/eesanje/url_46_302_6.txt @@ -0,0 +1,7 @@ +ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂ.1 ಆಗಿಸಬೇಕಿದೆ : ಸಿದ್ದರಾಮಯ್ಯ +ಬೆಂಗಳೂರು, ನ.28- ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮುನಿಸಿಪಾಲಿಕಾ-2023 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ರಾಜ್ಯದ 316 ನಗರಗಳಿಗೆ ಅಗತ್ಯ ಎಲ್ಲಾ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ ಎಂದರು. +ರಾಜ್ಯದಲ್ಲಿ ಶೇ.38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಟ್ರಾಫಿಕ್ ಕಿರಿಕಿರಿ ಇಲ್ಲದ, ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದರು. +ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸುತ್ತಿದೆ ಎಂದರು. +ಜನರ ನಿದ್ದೆ ಕೆಡಿಸಿದ್ದ ನರಭಕ್ಷಕ ಹುಲಿ ಸೆರೆ +ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ವಿವರಿಸಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ, ಎಂಎಲ್ಸಿ ಎಸ್.ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನರ್ ಜಯರಾಮ್ ಮತ್ತಿತರರು ಭಾಗವಹಿಸಿದ್ದರು. \ No newline at end of file diff --git a/eesanje/url_46_302_7.txt b/eesanje/url_46_302_7.txt new file mode 100644 index 0000000000000000000000000000000000000000..82787cd35078bce0018e5da424b1d654135bd1c1 --- /dev/null +++ b/eesanje/url_46_302_7.txt @@ -0,0 +1,9 @@ +ಭರ್ತಿ 5 ವರ್ಷಗಳ ಗೃಹಲಕ್ಷ್ಮಿ ಹಣದ ಕಂತನ್ನು ಚಾಮುಂಡೇಶ್ವರಿಗೆ ಸಮರ್ಪಿಸಿದ ಸರ್ಕಾರ +ಮೈಸೂರು, ನ.28- ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಇಂದು ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದರು. +ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಇಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ಸಚಿವರ ಪರವಾಗಿ ಹಣದ ಚೆಕ್ ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು. +ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. +ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ +ಆಗಸ್ಟ್ 30 ರಂದು ದೇವಿಯ ದರ್ಶನ ಮಾಡಿ ಹರಕೆ, ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು, ಅದೇ ದಿನ ದೇವಿಗೆ ಮೊದಲ ಕಂತಿನ ಹಣವನ್ನು ಸಮರ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಮೊದಲ ಕಂತು ಸಮರ್ಪಿಸಿದ್ದ ಬಳಿಕ ಉಳಿದ 59 ತಿಂಗಳ ಹಣವನ್ನು ಒಮ್ಮೆಲೆ ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. +ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ ಎಂದು ಸಚಿವರು ವಿವರಿಸಿದ್ದಾರೆ. +ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ. \ No newline at end of file diff --git a/eesanje/url_46_302_8.txt b/eesanje/url_46_302_8.txt new file mode 100644 index 0000000000000000000000000000000000000000..3538605e9eb3b0d0ddb3b8757b1bf9861c57062e --- /dev/null +++ b/eesanje/url_46_302_8.txt @@ -0,0 +1,9 @@ +ರಾಜ್ಯದಲ್ಲಿ ನಾಳೆಯಿಂದ 2 ದಿನ ಮಳೆ ಸಾಧ್ಯತೆ +ಬೆಂಗಳೂರು, ನ.28- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಆದರೆ, ಭಾರೀ ಮಳೆಯಾ ಗುವ ಮುನ್ಸೂಚನೆಗಳಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. +ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ತೀವ್ರ ಸ್ವರೂಪ ಪಡೆದು ಲಘು ಚಂಡಮಾರುತ ಉಂಟಾಗುವ ಸಂಭವವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ತಮಿಳುನಾಡು ಕರಾವಳಿಗೆ ಹೊಂದಿಕೊಂಡಂತಿರುವ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಆದರೆ, ರಾಜ್ಯದ ದಕ್ಷಿಣ ಹಾಗೂ ಪೂರ್ವ ಭಾಗದ ಕೆಲವು ಜಿಲ್ಲೆಗಳಲ್ಲಿ ಗುರುವಾರದವರೆಗೂ ಹಗುರದಿಂದ ಸಾಧಾರಣಾ ಮಳೆಯಾಗುವ ಲಕ್ಷಣಗಳಿವೆ ಎಂದು ಹೇಳಿದ್ದಾರೆ. +ಅಮೆರಿಕ ನೆಲೆಗಳ ಛಾಯಾಚಿತ್ರ ತೆಗೆದಿದೆಯಂತೆ ಉತ್ತರ ಕೊರಿಯಾ ಉಪಗ್ರಹ +ವಾಯುಭಾರ ಕುಸಿತವು ಚಂಡಮಾರುತದ ಸ್ವರೂಪ ಪಡೆದರೂ ರಾಜ್ಯದ ಮೇಲೆ ಅದರ ಪರಿಣಾಮ ಹೆಚ್ಚಾಗಿರುವುದಿಲ್ಲ. ತಮಿಳುನಾಡು ಕರಾವಳಿ ಸನಿಹಕ್ಕೆ ಬರುತ್ತಿದ್ದಂತೆ ಚಂಡಮಾರುತವು ಪೂರ್ವ ಹಾಗೂ ಈಶಾನ್ಯದ ಕಡೆಗೆ ತಿರುವು ಪಡೆದು ಚಲಿಸುವ ಸಾಧ್ಯತೆಗಳು ಹೆಚ್ಚಾಗಿವೆ. +ಹೀಗಾಗಿ ಅದರ ಪ್ರಭಾವದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಬಹುದು. ಒಂದೆರಡು ಕಡೆ ಚದುರಿದಂತೆ ತುಂತುರು ಮಳೆ ನಿರೀಕ್ಷಿಸಬಹುದು. ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ವಿರಳ. ವಾಯುಭಾರ ಕುಸಿತ ಯಾವ ರೀತಿ ಮಾರ್ಪಾಡಾಗಲಿದೆ ಎಂಬುದರ ಮೇಲೆ ಮಳೆ ಬರುವಿಕೆಯೂ ಅವಲಂಭಿತವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. +ನೈರುತ್ಯ ಮುಂಗಾರಿನಂತೆ ಈಶಾನ್ಯ ಹಿಂಗಾರು ಮಳೆಯೂ ಕೈಕೊಟ್ಟಿದೆ. ಇದರಿಂದ ಮುಂಗಾರು ಹಂಗಾಮಿನಂತೆ ಹಿಂಗಾರು ಹಂಗಾಮಿನಲ್ಲೂ ಬರದ ಕರಾಳ ಛಾಯೆ ಮುಂದುವರೆದಿದೆ. ಇದರಿಂದ ಹಿಂಗಾರಿನಲ್ಲೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಬಿತ್ತನೆಯಾಗಿದ್ದ ಅಲ್ಪ, ಸ್ವಲ್ಪ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ. +ಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು +ರಾಜ್ಯದಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಅಲ್ಲದೆ, ಒಣ ಹವೆ ಎಲ್ಲೆಡೆ ಮುಂದುವರೆದಿದೆ.ಪ್ರತಿಕೂಲ ಹವಾಮಾನದಿಂದ ಚಳಿಗಾಲ ಶುರುವಾಗಿ ತಿಂಗಳಾದರೂ ವಾಡಿಕೆಯಂತೆ ಇಬ್ಬನಿಯೂ ಬೀಳುತ್ತಿಲ್ಲ ಎಂದು ರೈತ ಸಮುದಾಯ ಆತಂಕಗೊಂಡಿದೆ. ಸಂಜೆ ಹಾಗೂ ಮುಂಜಾನೆ ಸಾಕಷ್ಟು ಇಬ್ಬನಿ ಬೀಳುತ್ತಿತ್ತು. ಇಬ್ಬನಿಗೆ ಕೆಲವೊಂದು ಬೆಳೆಗಳು ಕಾಳು ಕಟ್ಟುತ್ತಿದ್ದವು. ಆದರೆ, ಮೋಡ ಮುಸುಕಿದ ವಾತಾವರಣದಿಂದ ಇಬ್ಬನಿ ಕಡಿಮೆಯಾಗಿದೆ. ಅಲ್ಲದೆ, ಬೆಳೆಗಳಿಗೆ ಕೀಟ ಹಾಗೂ ರೋಗ ಹಾವಳಿ ಹೆಚ್ಚಾಗಿದೆ. ಹೀಗಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. \ No newline at end of file diff --git a/eesanje/url_46_302_9.txt b/eesanje/url_46_302_9.txt new file mode 100644 index 0000000000000000000000000000000000000000..652d92ef8a7e33c698a2bc77e6daa168bdd206cd --- /dev/null +++ b/eesanje/url_46_302_9.txt @@ -0,0 +1,8 @@ +ಉರ್ದು ಶಾಲೆ ಸ್ಥಳಾಂತರ ಮಾಡುವಂತೆ ಒತ್ತಡ : ಸಿಎಂಗೆ ದೂರು +ಬೆಂಗಳೂರು,ನ.27- ಕನ್ನಡ ಶಾಲೆಯ ಜೊತೆಯಲ್ಲಿ ನಡೆಯುತ್ತಿರುವ ಉರ್ದು ಶಾಲೆಯನ್ನು ಸ್ಥಳಾಂತರ ಮಾಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದರು. +ಇಂದು ಬೆಳಗ್ಗೆ ಜನತಾದರ್ಶನಕ್ಕೆ ಆಗಮಿಸಿದ ಶಾಲಾಭಿವೃದ್ಧಿ ಸಮಿತಿಯ ನಾಲ್ವರು ಸದಸ್ಯರು ಲಿಖಿತದೂರು ನೀಡಿದರು. 12 ವರ್ಷಗಳ ಹಿಂದೆ ಮಳೆ ಬಂದು ನೀರು ನುಗ್ಗಿದ ಕಾರಣಕ್ಕೆ ಹರಿಹರದ ಗಂಗಾನಗರದಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯನ್ನು ತಳವಾರ ಕೇರಿಯ ಕನ್ನಡ ಶಾಲೆಗೆ ಸ್ಥಳಾಂತರಿಸಲು ಸೂಚಿಸಲಾಗಿತ್ತು. +ಬಡ್ಡಿ ದಂಧೆಗೆ ಕಡಿವಾಣ ಹಾಕಲು ಕ್ರಮ : ಗೃಹ ಸಚಿವ ಪರಮೇಶ್ವರ್ +ಆಗಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೌಖಿಕ ಆದೇಶ ಮೇಲೆ ಶಾಲೆ ಸ್ಥಳಾಂತರಗೊಂಡಿದೆ. ಕನ್ನಡ ಶಾಲೆಯಲ್ಲಿ ಆರು ಕೊಠಡಿಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ. ಆದರೆ ಸ್ಥಳೀಯ ಶಾಸಕರಾದ ಬಿಜೆಪಿಯ ಹರೀಶ್ ಅವರು ಶಾಲೆಯನ್ನು ಬೇರೆಡೆ ಸ್ಥಳಾಂತರ ಮಾಡಲು ಬಿಇಒ ಒತ್ತಡ ಹಾಕಿಸುತ್ತಿದ್ದಾರೆ. ಪಕ್ಕದಲ್ಲೇ ದೇವಸ್ಥಾನವಿದೆ. +ಹಾಗಾಗಿ ಉರ್ದು ಶಾಲೆ ಇಲ್ಲಿರುವುದು ಬೇಡ ಎನ್ನುತ್ತಿದ್ದಾರೆಂದು ಇಸ್ಮಾಯಿಲ್ ಜಬೀವುಲ್ಲಾ ದೂರು ನೀಡಿದರು. ರಾಣೆಬೆನ್ನೂರಿನ ಜೀವಬೆಳಕು ಅಂಧ ಮಕ್ಕಳ ಶಾಲೆಗೆ ಸಿಎ ನಿವೇಶನ ಮಂಜೂರಾಗಿದೆ. 9 ಲಕ್ಷ ರೂ. ಪಾವತಿ ಮಾಡುವಂತೆ ಸೂಚನೆ ಕೊಟ್ಟಿದ್ದಾರೆ. ಹಣ ಪಾವತಿ ಮಾಡಲು ಶಾಲೆ ಆಡಳಿತ ಮಂಡಳಿಗೆ ಶಕ್ತಿ ಇಲ್ಲ ವಿನಾಯ್ತಿ ಕೊಡಿ ಎಂದು ಸಿಎಂಗೆ ಮನವಿ ಸಲ್ಲಿಸಲಾಯಿತು. ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ಕೊಟ್ಟರು. +ರಾಮನಗರ ಜಿಲ್ಲೆಯ ರಾಜಮ್ಮ ಎಂಬುವರು ತಮ್ಮ ಜಮೀನನ್ನು ಮೈದುನ ಒತ್ತುವರಿ ಮಾಡಿಕೊಂಡಿದ್ದಾರೆ. ಜಮೀನಿನಲ್ಲಿದ್ದ ಬಾವಿಯನ್ನು ಮುಚ್ಚಿದ್ದಾರೆ. ತಮಗೆ ಗಂಡುಮಕ್ಕಳಿಲ್ಲ. ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆಯಲ್ಲಿದ್ದಾರೆ. ಒತ್ತುವರಿಯಾಗಿರುವ ಜಮೀನನ್ನು ಬಿಡಿಸಿಕೊಡುವಂತೆ ಮನವಿ ಮಾಡಿಕೊಂಡರು. ಆನ್‍ಲೈನ್‍ನಲ್ಲಿ ಹಾಜರಿದ್ದಂಥ ರಾಮನಗರ ಜಿಲ್ಲಾಧಿಕಾರಿಯವರಿಗೆ ಮುಖ್ಯಮಂತ್ರಿ ತಕ್ಷಣವೇ ಸ್ಪಂದಿಸುವಂತೆ ಸೂಚನೆ ಕೊಟ್ಟರು. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಆಧಾರಿತ ಶುಶ್ರೂಕರು ದಿನಗೂಲಿ ಆಧಾರದಲ್ಲಿ ನೀಡುತ್ತಿರುವ ವೇತನವನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಜನತಾದರ್ಶನದಲ್ಲಿ ಬಹುತೇ ಅರ್ಜಿಗಳು ಜಮೀನು ಒತ್ತುವರಿ, ನಿವೇಶನ ಕಬಳಿಕೆಯಂತಹ ಗಂಭೀರ ಸಮಸ್ಯೆಗಳಿಗೆ ಸಂಬಂಧಿಸಿದ್ದಾಗಿದ್ದವು. \ No newline at end of file diff --git a/eesanje/url_46_303_1.txt b/eesanje/url_46_303_1.txt new file mode 100644 index 0000000000000000000000000000000000000000..f0fc8b3e84525f7f73b88599ee31103e8fb4f451 --- /dev/null +++ b/eesanje/url_46_303_1.txt @@ -0,0 +1,7 @@ +ಸಿಎಂಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳ ಪಟ್ಟಿ ಮಾಡಿದ ಬಿಜೆಪಿ +ಬೆಂಗಳೂರು,ನ.27- ತನ್ನಿಂದ ಕೊಡಲು ಅಕ್ಕಿಯೇ ಇಲ್ಲ ಎನ್ನುತ್ತಿರುವ ಎಐಸಿಸಿಯೂ ಕಲೆಕ್ಷನ್ ಆಸೆಗೆ ಟನ್‍ಗಟ್ಟಲೆ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಹಂತಕ್ಕೆ ತಲುಪಿದೆ ಎಂದು ಬಿಜೆಪಿ ತೀವ್ರ ವಾಗ್ದಳಿ ನಡೆಸಿದೆ. +ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾಲು ಸಾಲು ಪೋಸ್ಟ್ ಮಾಡಿರುವ ಬಿಜೆಪಿ, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, ಕಳ್ಳತನಕ್ಕೇ ಇಳಿದುಬಿಟ್ಟಿದೆ ಎಂದು ಟೀಕಾ ಪ್ರಹಾರ ನಡೆಸಿದೆ. +ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ@siddaramaiahಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳು:▪ ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ?▪ ನೀವೇ ಹೇಳಿದ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ ಏಕೆ?▪ ಗೃಹ ಲಕ್ಷ್ಮಿ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯರನ್ನು… +ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಇಂಧನ ಇಲಾಖೆ ಮಾತ್ರವಲ್ಲ. ಸಚಿವ ಕೆ.ಹೆಚ್.ಮುನಿಯಪ್ಪ ಅವರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲೂ ಹೆಗ್ಗಣಗಳ ಕಾಟ ಜೋರಾಗಿದೆ. ಲಂಚ ಕೊಡುವುದಕ್ಕಾಗಿಯೇ ಅಕ್ರಮ ಅಕ್ಕಿ ಮಾರಾಟ ಮಾಡುತ್ತಿರುವುದು ಈಗೇನೂ ಗುಟ್ಟಾಗಿ ಉಳಿದಿಲ್ಲ ಎಂದು ಹೇಳಿದೆ. +ಮಾ.30ರೊಳಗೆ ಸಿದ್ಧವಾಗಲಿದೆ ಅಂತಿಮ ಕರಡು : ಅಜಯ್ ಮಿಶ್ರಾ +ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ. \ No newline at end of file diff --git a/eesanje/url_46_303_10.txt b/eesanje/url_46_303_10.txt new file mode 100644 index 0000000000000000000000000000000000000000..72a32d05f212b0d184bdabc784a1a1b9e6449959 --- /dev/null +++ b/eesanje/url_46_303_10.txt @@ -0,0 +1,8 @@ +ಮಾನವೀಯತೆಯೇ ಸಂವಿಧಾನದ ಆಶಯ : ಸಿದ್ದರಾಮಯ್ಯ +ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸಂವಿಧಾನದ ಪ್ರಸ್ತಾವನೆಯನ್ನು ಓದುವುದರಿಂದ ಮಕ್ಕಳಿಗೆ ಸಂವಿಧಾನದ ಅರಿವಾಗುತ್ತದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು. +ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ತಿಳಿಸಿದರು. ಇಂದು ಸಂವಿಧಾನ ಅಂಗೀಕರಾವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು. +ಬಿಜೆಪಿಯಿಂದ ಸಂವಿಧಾನ ಹತ್ತಿಕ್ಕುವ ಕಾರ್ಯ ನಡೆಯುತ್ತಿದೆ : ಖರ್ಗೆ +ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ಇಂದು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು ಎಂದು ಹೇಳಿದರು. +ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದವರ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವವರ ಕೈಗಳಲ್ಲಿ ಸಂವಿಧಾನ ಇದ್ದಾಗ ಮಾತ್ರ, ಅದರ ಧ್ಯೇಯೋದ್ದೇಶಗಳನ್ನು ಸಾಸಿದಂತಾಗುತ್ತದೆ ಎಂದರು. +ರಾಷ್ಟ್ರಕವಿ ಕುವೆಂಪು ಹೇಳಿದಂತೆ, ಸರ್ವ ಜನಾಂಗದ ಶಾಂತಿಯ ತೋಟ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂ, ಜವಾಹರ್ ಲಾಲ್ ನೆಹರೂ ಕನಸು ಕಂಡಿದ್ದರು ಎಂದು ಹೇಳಿದರು.ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಭಾಗವನ್ನು ಮುಖ್ಯಮಂತ್ರಿಗಳು ಬೋಸಿದರು. +ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ , ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. \ No newline at end of file diff --git a/eesanje/url_46_303_11.txt b/eesanje/url_46_303_11.txt new file mode 100644 index 0000000000000000000000000000000000000000..a288554a75da732dd43edf88b43396a24115a850 --- /dev/null +++ b/eesanje/url_46_303_11.txt @@ -0,0 +1,6 @@ +ಕಂಬಳ ನೋಡಿ ಹಿಂತಿರುಗುತ್ತಿದ್ದಾಗ ಕಾರು ಅಪಘಾತ, ಇಬ್ಬರ ಸಾವು +ಕುಣಿಗಲ್, ನ.26- ಬೆಂಗಳೂರಿನ ಅರಮನೆಯ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ನೋಡಿಕೊಂಡು ವಾಪಸ್ ಊರಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೋರ್‍ವೆಲ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತಗೆರೆಯಲ್ಲಿಂದು ಮುಂಜಾನೆ ನಡೆದಿದೆ. +ಮಂಗಳೂರಿನ ಬಜ್ಪೆ ಮೂಲದ ಕಿಶಾನ್ ಶೆಟ್ಟಿ(20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೊಟದ ನಿವಾಸಿ ಫಿಲೀಪ್ ನೇರಿ ಲೋಬೋ(32) ಮೃತಪಟ್ಟ ದುರ್ದೈವಿಗಳು. ಹರೀಶ್‍ಶೆಟ್ಟಿ, ನಿತೇಶ್ ಭಂಡಾರಿ, ಪ್ರೀತಿ ಲೋಭೋ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. +ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಕಂಬಳ ವಿಕ್ಷೀಸಿ ಸ್ವಿಫ್ಟ್ ಕಾರಿನಲ್ಲಿ ಮಂಗಳೂರಿಗೆ ಹಿಂದಿರುಗುತ್ತಿದ್ದಾಗ ರಾತ್ರಿ 1.30 ಸುಮಾರಿನಲ್ಲಿ ಕೊತ್ತಗೆರೆ ಸಮೀಪ ಎದುರಿನಿಂದ ಬಂದ ಬೋರ್‍ವೆಲ್ ಲಾರಿಗೆ ಕಾರು ನಿಯಂತ್ರಣ ಕಳೆದುಕೊಂಡು ಡಿಕ್ಕಿ ಹೊಡೆದಿದೆ. +ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ +ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣ ಠಾಣೆಯ ಸಿಪಿಐ ನವೀನ್‍ಗೌಡ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ನೆರವಿನಿಂದ ನಜ್ಜುಗುಜ್ಜಾದ ಕಾರಿನ ಬಾಗಿಲನ್ನು ಆರೆಯಿಂದ ಮೀಟಿ ಶವಗಳನ್ನು ಹೊರತೆಗಿದಿದ್ದಾರೆ. ಕುಣಿಗಲ್ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. \ No newline at end of file diff --git a/eesanje/url_46_303_12.txt b/eesanje/url_46_303_12.txt new file mode 100644 index 0000000000000000000000000000000000000000..e57349f53662a83b7cb2e50d090a1576670c7a12 --- /dev/null +++ b/eesanje/url_46_303_12.txt @@ -0,0 +1,6 @@ +ನಾಳೆ ಸಿಎಂ ಜನತಾ ದರ್ಶನ +ಬೆಂಗಳೂರು, ನ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಅವರು ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. +ಜನತಾ ದರ್ಶನದ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಲ್ಲಾ ಉಪ ವಿಭಾಗಗಳ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಲು ಸರ್ಕಾರ ನಿರ್ದೇಶನ ನೀಡಿದೆ. +ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ +ಈ ಸಂಬಂಧ ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಎಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ನಾಳೆ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಮುಖ್ಯಮಂತ್ರಿಯವರ ಕಚೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ. +ರಾಜ್ಯದ ವಿವಿಧ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನತಾ ದರ್ಶನಕ್ಕೆ ಆಗಮಿಸಲಿದ್ದಾರೆ. ಜನತಾ ದರ್ಶನದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_303_2.txt b/eesanje/url_46_303_2.txt new file mode 100644 index 0000000000000000000000000000000000000000..32846840234f8c145fe08e38a1aca65b4f7a4d6b --- /dev/null +++ b/eesanje/url_46_303_2.txt @@ -0,0 +1,10 @@ +ಬಡ್ಡಿ ದಂಧೆಗೆ ಕಡಿವಾಣ ಹಾಕಲು ಕ್ರಮ : ಗೃಹ ಸಚಿವ ಪರಮೇಶ್ವರ್ +ತುಮಕೂರು, ನ.27- ಬಡ್ಡಿದಂಧೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ವ್ಯವಹಾರಕ್ಕೆ ಕಡಿವಾಣ ಹಾಕಲು ಎಸ್‍ಪಿಗೆ ಸೂಚಿಸಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಸದಾಶಿವನಗರದಲ್ಲಿ ಮೂವರು ಮಕ್ಕಳನ್ನು ಸಾಯಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಬಂಧ ಇಂದು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಐದು ಮಂದಿಯ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡರು. +ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಡಿಮೆ ಹಣಕ್ಕೆ ಐದು ಮಂದಿ ಸಾಯೋದು ಸಾಮಾನ್ಯ ವಿಷಯವಲ್ಲ. ಅಮಾಯಕರಿಗೆ ಸಾಲಕೊಟ್ಟು ಹೆಚ್ಚಿನ ಬಡ್ಡಿ ವಸೂಲಿ ಮಾಡುವುದಲ್ಲದೆ, ಕಿರುಕುಳ ನೀಡಿ ಅವರನ್ನು ನೋಯಿಸಿರುವುದು ಬೇಸರದ ಸಂಗತಿ ಎಂದರು.ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು, ಐದು ಮಂದಿ ಸಾವಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು, ಮೀಟರ್ ಬಡ್ಡಿ ದಂಧೆಗೆ ಕಡಿವಾಣಹಾಕಬೇಕು ಎಂದರು. +ಎರಡು ಎಫ್‍ಐಆರ್ ದಾಖಲು: ಮೃತ ಗರೀಬ್‍ಸಾಬ್ ಅವರ ಸಹೋದರ ನೀಡಿದ ದೂರಿನ ಮೇರೆಗೆ ತಿಲಕ್‍ಪಾರ್ಕ್ ಠಾಣೆ ಪೊಲೀಸರು ಎರಡು ಪ್ರಕರಣ ದಾಖಲಿಸಿದ್ದಾರೆ. ಮೊದಲ ಎಫ್‍ಐಆರ್‍ನಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾದರೆ, ಎರಡನೇ ಎಫ್‍ಐಆರ್‍ನಲ್ಲಿ ಬಡ್ಡಿ ದಂಧೆ, ಕಿರುಕುಳ ಪ್ರಕರಣ ದಾಖಲಾಗಿದೆ. ಗರೀಬ್‍ಸಾಬ್ ಅವರು ತಮ್ಮ ಮಕ್ಕಳ ವಿದ್ಯಾಭ್ಯಾಸ ಹಾಗೂ ತನ್ನ ವ್ಯವಹಾರಕ್ಕಾಗಿ ನೆರೆಮನೆ ನಿವಾಸಿ ಕಲಂದರ್ ಹಾಗೂ ಇತರರು ನನಗೆ ಸಾಲ ಕೊಡಿಸಿ ಮೀಟರ್ ಬಡ್ಡಿ ವಸೂಲಿ ಮಾಡಿ ಕಿರುಕುಳ ನೀಡಿದ್ದಾರೆಂದು ಡೆತ್‍ನೋಟ್‍ನಲ್ಲಿ ಬರೆಯಲಾಗಿದೆ. +ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ +ವಶಕ್ಕೆ: ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‍ನೋಟ್‍ನಲ್ಲಿ ನಮೂದಾಗಿದ್ದ ಕಲಂದರ್, ಈತನ ಪುತ್ರ ಶಾಬಾಜ್, ನೆರೆಮನೆ ನಿವಾಸಿ ಶಬಾನಾ, ಈಕೆಯ ಪುತ್ರಿ ಸಾನಿಯಾಳನ್ನು ತಿಲಕ್‍ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. +ಘಟನೆ ವಿವರ:ಮೂಲತಃ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿಯವರಾದ ಗರೀಬ್‍ಸಾಬ್ ಅವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತುಮಕೂರಿಗೆ ಕುಟುಂಬದೊಂದಿಗೆ ಬಂದು ಸದಾಶಿವನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಗರೀಬ್‍ಸಾಬ್ ಅವರು ಸದಾಶಿವನಗರದಲ್ಲಿ ಜೀವನೋಪಾಯಕ್ಕಾಗಿ ಕಬಾಬ್ ಅಂಗಡಿ ನಡೆಸುತ್ತಿದ್ದರು. ವ್ಯವಹಾರಕ್ಕಾಗಿ ಈ ನಡುವೆ ಅವರು ಸಾಲ ಮಾಡಿಕೊಂಡಿದ್ದರು. +ಪಡೆದ ಸಾಲಕ್ಕೆ ಬಡ್ಡಿ ಕೊಡುತ್ತಿದ್ದರು, ಈ ನಡುವೆ ಇವರ ಮನೆ ಕೆಳಗೆ ವಾಸವಾಗಿದ್ದ ವ್ಯಕ್ತಿ ಗರೀಬ್ ಕುಟುಂಬದವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರೆಂದು ಹೇಳಲಾಗಿದೆ. ಒಂದು ಕಡೆ ಸಾಲಬಾದೆ, ಮತ್ತೊಂದೆಡೆ ನೆರೆ ಮನೆಯವರ ಕಿರುಕುಳದಿಂದ ನೊಂದಿದ್ದ ಕುಟುಂಬ ನಿನ್ನೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದೆ. ಅದರಂತೆ ಡೆತ್‍ನೋಟ್ ಹಾಗೂ ಮೊಬೈಲ್‍ನಲ್ಲಿ ವಿಡಿಯೋ ಮಾಡಿ ತಮಗಾಗಿರುವ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆ. +ನಂತರ ಗರೀಬ್ ಸಾಬ್ (32), ಪತ್ನಿ ಸುಮಯ್ಯ (30) ರೊಂದಿಗೆ ಸೇರಿ ಮೊದಲು ಮಕ್ಕಳಾದ ಹಾಜೀರಾ (14), ಮಹಮ್ಮದ್ ಶುಬಾನ್(10) ಮತ್ತು ಮೊಹಮ್ಮದ್ ಮುನೀರ್(8)ನನ್ನು ಸಾಯಿಸಿ ನಂತರ ದಂಪತಿ ನೇಣಿಗೆ ಶರಣಾಗಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ತಿಲಕ್‍ಪಾರ್ಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸ್ಥಳದಲ್ಲಿ ದೊರೆತ ಡೆತ್‍ನೋಟ್ ಹಾಗೂ ಮೊಬೈಲ್ ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಮರಣೋತ್ತರ ಪರೀಕ್ಷೆ:ಇಂದು ಐದು ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ವಾರಸುದಾರರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಯಿತು. \ No newline at end of file diff --git a/eesanje/url_46_303_3.txt b/eesanje/url_46_303_3.txt new file mode 100644 index 0000000000000000000000000000000000000000..09c2d691083824e1028e32a600de1c7732defb70 --- /dev/null +++ b/eesanje/url_46_303_3.txt @@ -0,0 +1,11 @@ +ಡಿ.1ರಂದು ಬಿ.ವೈ.ವಿಜಯೇಂದ್ರ ದೆಹಲಿ ಪ್ರವಾಸ +ಬೆಂಗಳೂರು,ನ.27- ಪಕ್ಷದೊಳಗೆ ಉಂಟಾಗಿರುವ ಅಸಮಾಧಾನವನ್ನು ಹೋಗಲಾಡಿಸಲು ಮುಂದಾಗಿರುವ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಡಿ.1ರಂದು ದೆಹಲಿಗೆ ತೆರಳಲಿದ್ದಾರೆ. ವಿಜಯೇಂದ್ರ ಜೊತೆಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕೂಡ ತೆರಳುತ್ತಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮತ್ತಿತರರನ್ನು ಭೇಟಿಯಾಗಲಿದ್ದಾರೆ. +ವಿಶೇಷವೆಂದರೆ ಡಿ.7ರಂದು ಬಿಜೆಪಿಯ ಅಸಮಾಧಾನಿತ ಒಂದು ಬಣ ದೆಹಲಿಗೆ ತೆರಳಿ ಕೆಲವು ಬಿಜೆಪಿ ನಾಯಕರ ವಿರುದ್ಧ ದೂರು ನೀಡಲು ಮುಂದಾಗಿರುವ ಬೆನ್ನಲ್ಲೇ ಅದಕ್ಕೂ ಮುನ್ನವೇ ವಿಜಯೇಂದ್ರ ವರಿಷ್ಠರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದುಕೊಂಡಿದೆ. +ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಲಾಗುತ್ತಿದ್ದರೂ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಯ್ಕೆಯಾದ ನಂತರ ಬಿಜೆಪಿಯ ಒಂದು ಬಣ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದೆ. +ಇದು ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಭಿನ್ನಮತವನ್ನು ಪ್ರಾರಂಭದಲ್ಲೇ ಚಿವುಟಿ ಹಾಕಲು ವಿಜಯೇಂದ್ರ ಶತಪ್ರಯತ್ನ ನಡೆಸಿದ್ದಾರೆ. ಅಸಮಾಧಾನಗೊಂಡಿರುವವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸುವ ಪ್ರಯತ್ನ ಮಾಡುತ್ತಿದ್ದರಾದರೂ ಅದು ಕೈಗೂಡಿಲ್ಲ. ಸದ್ಯಕ್ಕೆ ರಮೇಶ್ ಜಾರಕಿಹೊಳಿ, ಅರವಿಂದ ಬೆಲ್ಲದ್ ಮೌನಕ್ಕೆ ಜಾರಿದ್ದರೆ ಸೋಮಣ್ಣ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಸೆಡ್ಡು ಹೊಡೆದಿದ್ದಾರೆ. +ಇದು ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಭಿನ್ನಮತೀಯರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕೆಂದು ವರಿಷ್ಠರ ಬಳಿ ಖುದ್ದು ವಿಜಯೇಂದ್ರ ಮನವಿ ಮಾಡಲಿದ್ದಾರೆ ಎಂದು ಗೊತ್ತಾಗಿದೆ. ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ, ಅತೃಪ್ತಗೊಂಡಿರುವ ನಾಯಕರ ಒಗ್ಗೂಡಿಸಲು ಮುಂದಾಗಿದ್ದಾರೆ. +ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ +ಡಿಸೆಂಬರ್ 7 ಮತ್ತು 9ರ ನಡುವೆ ಯಾವುದೇ ಸಮಯದಲ್ಲಿ ಹೈಕಮಾಂಡ್ ತಮ್ಮನ್ನು ಕರೆಸಿ, ಮಾತುಕತೆ ನಡೆಸುವ ಸಾಧ್ಯತೆಗಳಿರುವುದರಿಂದ ಈ ಸಂದರ್ಭದಲ್ಲಿ ಅತೃಪ್ತ ನಾಯಕರನ್ನೂ ತಮ್ಮೊಂದಿಗೆ ಕರೆದುಕೊಂಡು ಹೋಗಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾತನಾಡಿದ್ದ ಅವರು, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಅರವಿಂದ ಲಿಂಬಾವಳಿ, ರಮೇಶ ಜಾರಕಿಹೊಳಿ ಅವರೊಂದಿಗೆ ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೇನೆ ಎಂದಿದ್ದರು. +ಡಿಸೆಂಬರ್ 6ರಂದು ಗುರುಭವನ ಉದ್ಘಾಟನೆ ಬೆನ್ನಲ್ಲೇ ಮಠದ ಬಳಿ ಸೋಮಣ್ಣ ಅವರು ರ್ಯಾಲಿ ನಡೆಸುತ್ತಿದ್ದಾರೆ. ಈ ವೇಳೆ ವಿಜಯೇಂದ್ರ ನೇಮಕದ ಬಗ್ಗೆ ಮೌನ ಮುರಿಯುತ್ತೇನೆ ಎಂದು ತಿಳಿಸಿದ್ದಾರೆ. ಈ ನಡುವೆ ಸೋಮಣ್ಣ ಅವರಿಗೆ ಹಳೆ ಮೈಸೂರು ಭಾಗದ ವೀರಶೈವ-ಲಿಂಗಾಯತ ನಾಯಕ, ತುಮಕೂರು ಸಂಸದ ಜಿ.ಎಸ್.ಬಸವರಾಜ್ ಅವರ ಬೆಂಬಲವೂ ದೊರೆತಿದೆ. +2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಗೆಲುವು ಸಾಸಲು ಸೋಮಣ್ಣ ನನಗೆ ಸಹಾಯ ಮಾಡಿದ್ದರು. 2024ರಲ್ಲಿ ತುಮಕೂರಿನಿಂದ ಸ್ರ್ಪಧಿಸಲು ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೆ ನಾನು ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ. +ಈ ನಡುವೆ ಧಾರ್ಮಿಕ ಮುಖಂಡರ ಮೂಲಕ ಬಿಜೆಪಿ ತೊರೆಯದಂತೆ ಸೋಮಣ್ಣ ಅವರ ಮನಸ್ಸು ಪರಿವರ್ತಿಸಲು ವಿರೋಧ ಪಕ್ಷದ ನಾಯಕರಾಗಿರುವ ಆರ್.ಅಶೋಕ್ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ. \ No newline at end of file diff --git a/eesanje/url_46_303_4.txt b/eesanje/url_46_303_4.txt new file mode 100644 index 0000000000000000000000000000000000000000..14c2815b577d9a8f36f4773ee8d764464cb13975 --- /dev/null +++ b/eesanje/url_46_303_4.txt @@ -0,0 +1,7 @@ +ಜನತಾ ದರ್ಶನದ ಮೂಲಕ ಜನರ ನೋವುಗಳಿಗೆ ಸ್ಪಂದಿಸಿದ ಸಿಎಂ +ಬೆಂಗಳೂರು,ನ.27- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುವ ಮೂಲಕ ಸಾವಿರಾರು ಜನರ ದೂರುದುಮ್ಮಾನಗಳಿಗೆ ಸ್ಪಂದಿಸಿದರು. ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನದಷ್ಟೇ ವಿಶ್ವಾಸರ್ಹತೆಯನ್ನು 2ನೇ ಅಧಿಕಾರಾವಧಿಯ ಜನತಾ ದರ್ಶನವೂ ಉಳಿಸಿಕೊಂಡಿದ್ದು, ಸಮಸ್ಯೆಗೆ ಸ್ಪಂದಿಸಲು ಈ ಮೊದಲಿಗಿಂತಲೂ ಕ್ರಮಬದ್ದವಾದ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. +ಜನತಾದರ್ಶನಕ್ಕೆ ರಾಜ್ಯದ ನಾನಾ ದಿಕ್ಕುಗಳಿಂದಲೂ ಜನಸಾಮಾನ್ಯರು ಆಗಮಿಸಿದ್ದರು. ಎಲ್ಲರ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ಜನಸಂಪರ್ಕ ಇಲಾಖೆಯ ತಂತ್ರಾಂಶದಲ್ಲಿ ದಾಖಲಿಸಿ ಕ್ರಮ ಸಂಖ್ಯೆ ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಯೊಬ್ಬರ ಅರ್ಜಿಗಳನ್ನು ಪಡೆದು ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ ಮೂಲಕ ಪರಿಹಾರ ದೊರಕಿಸುವ ಪ್ರಯತ್ನ ನಡೆಸಿದರು. +ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸ್ಥಳದಲ್ಲೇ ಮೊಕ್ಕಾಂ ಹೂಡಿದರು. ಹೀಗಾಗಿ ಆಯಾ ಇಲಾಖೆಗಳ ಮತ್ತು ಪ್ರಾದೇಶಿಕವಾದ ಸಮಸ್ಯೆಗಳ ಬಗ್ಗೆ ಸಮನ್ವಯತೆಯೊಂದಿಗೆ ತುರ್ತು ಪರಿಹಾರ ದೊರಕಿಸುವ ಪ್ರಯತ್ನ ನಡೆಸಲಾಯಿತು. +ಭಾರತೀಯರ ಯೋಗಕ್ಷೇಮಕ್ಕೆ ತಿಮ್ಮಪ್ಪನ ಮೊರೆ ಹೋದ ಮೋದಿ +ಜನತಾ ದರ್ಶನಕ್ಕಾಗಿ ಸಾವಿರಾರು ಜನ ಸಾಲುಗಟ್ಟಿ ಬಂದಿದ್ದರು. ದೂರದ ಊರುಗಳಿಂದ ಬಂದವರಿಗೆ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗಿತ್ತು. ಪಾರ್ಕಿಂಗ್ ಸೇರಿದಂತೆ ನಾನಾ ರೀತಿಯ ವ್ಯವಸ್ಥೆಗಳಿಗೆ ಕುಮಾರಕೃಪ ಹಾಗೂ ಇತರ ಸ್ಥಳಗಳನ್ನು ಬಳಸಿಕೊಳ್ಳಲಾಗಿತ್ತು. ಸಾವಿರಾರು ಜನ ಆಗಮಿಸಿದ್ದರಿಂದ ಜನದಟ್ಟಣೆ ಹೆಚ್ಚಾಗಿತ್ತು. ಅರ್ಜಿದಾರರ ಸಾಲು ಕುಮಾರಕೃಪ ಅತಿಥಿಗೃಹದವರೆಗೂ ಮುಂದುವರೆದಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾಳ್ಮೆಯಿಂದಲೇ ಪ್ರತಿಯೊಬ್ಬರ ಅಹವಾಲನ್ನು ಸ್ವೀಕರಿಸಿ ಪರಿಹಾರ ದೊರಕಿಸುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಕಚೇರಿಯ ಹಿರಿಯ, ಕಿರಿಯ ಅಧಿಕಾರಿಗಳು ಸಕ್ರಿಯವಾಗಿ ಜನತಾದರ್ಶನದಲ್ಲಿ ತೊಡಗಿಸಿಕೊಂಡಿದ್ದರು. 20ಕ್ಕೂ ಹೆಚ್ಚು ಕೌಂಟರ್‍ಗಳನ್ನು ನಿರ್ಮಿಸಲಾಗಿತ್ತು. \ No newline at end of file diff --git a/eesanje/url_46_303_5.txt b/eesanje/url_46_303_5.txt new file mode 100644 index 0000000000000000000000000000000000000000..163c0543db5cadeabfc29a7a87631a5ea4b2ff66 --- /dev/null +++ b/eesanje/url_46_303_5.txt @@ -0,0 +1,5 @@ +ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ +ಬೆಂಗಳೂರು,ನ.27- ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ರಾಜಭವನ ಚಲೋ ಹಮ್ಮಿಕೊಂಡಿದೆ. ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ಇನ್ನಿತರ ಸಂಘಟನೆಗಳ ವತಿಯಿಂದ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ವಿ.ಭಟ್ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. +ಕೃಷಿ ಕಾಯ್ದೆಗಳ ರದ್ದತಿ, ಬೆಂಬಲ ಬೆಲೆಗೆ ಕಾನೂನಿನ ಸ್ವರೂಪ, ಕಾರ್ಮಿಕ ಕಾಯ್ದೆಗಳ ರದ್ದತಿ, ಬೆಲೆ ಏರಿಕೆಗೆ ಕಡಿವಾಣ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಫ್ರೀಡಂಪಾರ್ಕ್‍ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ಪ್ರತಿಭಟನೆ ಇಂದು ತೀವ್ರಗೊಂಡಿದೆ. +ಪ್ರಧಾನಿ ಮೋದಿ ಶ್ಲಾಘನೆ ಖುಷಿ ತಂದಿದೆ : ವರ್ಷಾ +ಮಹಾಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ, ಹೆಚ್.ಆರ್ ಬಸವರಾಜಪ್ಪ, ಹಾಗೂ ಭೂಮಿ ಮತ್ತು ವಸತಿ ಸಮಿತಿಯ ಕುಮಾರ್ ಸಮತಲ, ಕೆಪಿಆರ್‍ಎಸ್ ಸಂಘಟನೆಯ ಯಶವಂತ್, ಎಐಕೆಕೆಎಂಎಸ್ ಸಂಘಟನೆಯ ಹೆಚ್.ಆರ್ ಶಿವಪ್ರಸಾದ್ ಹಾಗೂ ಇನ್ನಿತರ ಸಂಘಟನೆಯ ನಾಯಕರುಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_303_6.txt b/eesanje/url_46_303_6.txt new file mode 100644 index 0000000000000000000000000000000000000000..a7f0b47abd4e9e801012c0e8c088ed8be1fcad6e --- /dev/null +++ b/eesanje/url_46_303_6.txt @@ -0,0 +1,6 @@ +14 ವಾಹನಗಳಿಗೆ ಬೆಂಕಿಯಿಟ್ಟ ನಕ್ಸಲರು +ದಾಂತೇವಾಡ, ನ.27 (ಪಿಟಿಐ) ಛತ್ತೀಸ್‍ಗಢದ ದಾಂತೇವಾಡ ಜಿಲ್ಲೆಯಲ್ಲಿ ಶಂಕಿತ ನಕ್ಸಲೀಯರು ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕನಿಷ್ಠ 14 ವಾಹನಗಳು ಮತ್ತು ಯಂತ್ರಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗಾಲಿ ಕ್ಯಾಂಪ್‍ನಲ್ಲಿ ಬೆಳಗಿನ ಜಾವ 1.30 ರ ಸುಮಾರಿಗೆ ನಡೆದ ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪ್ರತ್ಯಕ್ಷದರ್ಶಿಗಳ ಪ್ರಕಾರ, 40 ರಿಂದ 50 ಅಪರಿಚಿತ ಜನರು, ನಾಗರಿಕರಂತೆ ಬಟ್ಟೆ ಧರಿಸಿದ್ದರು ಮತ್ತು ಅವರಲ್ಲಿ ಕೆಲವರು ಶಸ್ತ್ರಸಜ್ಜಿತರು, ಘಟನಾ ಸ್ಥಳಕ್ಕೆ ತಲುಪಿದರು ಮತ್ತು ಅಲ್ಲಿ ನಿಲ್ಲಿಸಿದ್ದ ಟ್ರಕ್‍ಗಳು, ಪೊಕ್ಲೇನ್ ಮತ್ತು ಮಣ್ಣು ಚಲಿಸುವ ಯಂತ್ರಗಳು ಸೇರಿದಂತೆ 14 ವಾಹನಗಳು ಮತ್ತು ಯಂತ್ರಗಳನ್ನು ಸುಟ್ಟು ಹಾಕಿದರು ಎಂದು ಅವರು ಹೇಳಿದರು. +ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ +ಖಾಸಗಿ ನಿರ್ಮಾಣ ಸಂಸ್ಥೆಗೆ ಸೇರಿದ 13 ವಾಹನಗಳು ಮತ್ತು ಯಂತ್ರಗಳು ದಂತೇವಾಡ ಮತ್ತು ಬಾಚೇಲಿ ನಡುವೆ ರಸ್ತೆ ನಿರ್ಮಾಣದಲ್ಲಿ ತೊಡಗಿದ್ದರೆ, ನೀರಿನ ಟ್ಯಾಂಕರ್ ರೈಲ್ವೆ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದರು. +ಕೂಡಲೇ ಎಚ್ಚೆತ್ತ ಭಾನ್ಸಿ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ ಎಂದು ಅವರು ಹೇಳಿದರು. ಮೇಲ್ನೋಟಕ್ಕೆ ಇದು ನಕ್ಸಲೀಯರ ಕೈವಾಡವಿದ್ದು, ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_46_303_7.txt b/eesanje/url_46_303_7.txt new file mode 100644 index 0000000000000000000000000000000000000000..288317364115ff37a504089184d3ed4d71fbce42 --- /dev/null +++ b/eesanje/url_46_303_7.txt @@ -0,0 +1,8 @@ +ಪ್ರಧಾನಿ ಮೋದಿ ಶ್ಲಾಘನೆ ಖುಷಿ ತಂದಿದೆ : ವರ್ಷಾ +ಬೆಂಗಳೂರು, ನ.27 (ಪಿಟಿಐ) – ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಎಂಟೆಕ್ ಪದವೀಧರರೊಬ್ಬರು ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‍ನಿಂದ ಪ್ರೇರಿತರಾಗಿ ಬಾಳೆ ಕಾಂಡದಿಂದ ಉತ್ಪನ್ನಗಳನ್ನು ತಯಾರಿಸುವ ಉದ್ಯಮವನ್ನು ಪ್ರಾರಂಭಿಸಿ ಪ್ರಧಾನಿ ನರೇಂದ್ರ ಮೋದಿಯವರ ಪುರಸ್ಕಾರ ಗಳಿಸಿದ್ದಾರೆ. +ತಮ್ಮ ಮಾಸಿಕ ಕಾರ್ಯಕ್ರಮದ ಭಾನುವಾರದ ಸಂಚಿಕೆಯಲ್ಲಿ, ಈ ಉಪಕ್ರಮವು ಹಲವಾರು ಜನರನ್ನು ಪ್ರೇರೇಪಿಸಿದೆ ಎಂದು ಪ್ರಧಾನಿ ಹೇಳಿದರು. ಈ ಕಾರ್ಯಕ್ರಮದ ಸಂಚಿಕೆಯಿಂದ ಪ್ರೇರಿತರಾದ ಚಾಮರಾಜನಗರದ ವರ್ಷಾ ಅವರು ಬಾಳೆಗಿಡದಿಂದ ಗೊಬ್ಬರ ಉತ್ಪಾದಿಸುವ ವ್ಯವಹಾರವನ್ನು ಪ್ರಾರಂಭಿಸಿದರು ಎಂದು ಪ್ರಧಾನಿ ಹೇಳಿದರು. ಮನ್ ಕಿ ಬಾತ್ ವರ್ಷಾ ಅವರನ್ನು ಅವರ ಕಾಲಿನ ಮೇಲೆ ನಿಲ್ಲುವಂತೆ ಪ್ರೇರೇಪಿಸಿತು. +ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ +ಈ ಕಾರ್ಯಕ್ರಮದ ಸಂಚಿಕೆಯಿಂದ ಪ್ರೇರಿತರಾದ ಅವರು ಬಾಳೆಹಣ್ಣಿನಿಂದ ಜೈವಿಕ ಗೊಬ್ಬರವನ್ನು ತಯಾರಿಸಲು ಪ್ರಾರಂಭಿಸಿದರು. ಪ್ರಕೃತಿಯನ್ನು ಪ್ರೀತಿಸುವ ವರ್ಷಾ ಅವರ ಈ ಉಪಕ್ರಮವು ಇತರರಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ನೀಡಿದೆ ಎಂದು ಮೋದಿ ಹೇಳಿದರು. +ಚಾಮರಾಜನಗರದ ಉಮ್ಮತ್ತೂರಿನವರಾದ ವರ್ಷಾ ಅವರು ತಮ್ಮ ಆಕೃತಿ ಪರಿಸರ ಸ್ನೇಹಿ ಎಂಟರ್‌ಪ್ರೈಸಸ್ ಅನ್ನು ಬಾಳೆ ಕಾಂಡದ ಫೈಬರ್ ಬಳಸಿ ಮ್ಯಾಟ್ಸ್, ಮೊಬೈಲ್ ಸ್ಟ್ಯಾಂಡ್‍ಗಳು, ಪೆನ್ ಸ್ಟ್ಯಾಂಡ್‍ಗಳು, ಟೋಪಿಗಳು ಮತ್ತು ಫ್ರಿಜ್ ಕವರ್‍ಗಳಂತಹ ವಿವಿಧ ಉತ್ಪನ್ನಗಳನ್ನು ತಯಾರಿಸಲು ಪ್ರಾರಂಭಿಸಿದರು. +ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವರ್ಷಾ, ಕೋವಿಡ್ ಲಾಕ್‍ಡೌನ್ ಸಮಯಮನ್ ಕಿ ಬಾತ್ ಸಂಚಿಕೆಗಳಲ್ಲಿ ಪ್ರಧಾನಿಯವರ ಮಾತುಗಳನ್ನು ಕೇಳಿ ಸೂರ್ತಿ ಪಡೆದಿದ್ದೇನೆ ಎಂದಿದ್ದಾರೆ. ತಮಿಳುನಾಡು ಮೂಲದ ಉದ್ಯಮಿಯೊಬ್ಬರು ಹಲವಾರು ವ್ಯವಹಾರಗಳು ಸ್ಥಗಿತಗೊಂಡಾಗ ಬಾಳೆ ನಾರುಗಳನ್ನು ಬಳಸಿ ಉದ್ಯಮವನ್ನು ಪ್ರಾರಂಭಿಸಿದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ ಎಂದು ಅವರು ಹೇಳಿದರು. +ಪ್ರಧಾನಿ ನನ್ನ ಕೆಲಸವನ್ನು ಗುರುತಿಸುತ್ತಿರುವುದಕ್ಕೆ ನನಗೆ ಅತ್ಯಂತ ಸಂತೋಷವಾಗಿದೆ. ನಾನು ಈಗ ವ್ಯವಹಾರವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಪ್ರೇರೇಪಿಸುತ್ತಿದ್ದೇನೆ ಎಂದು ವರ್ಷಾ ಹೇಳಿದರು \ No newline at end of file diff --git a/eesanje/url_46_303_8.txt b/eesanje/url_46_303_8.txt new file mode 100644 index 0000000000000000000000000000000000000000..0acfb186e22c6fca5302cbae474aa7a94923ad34 --- /dev/null +++ b/eesanje/url_46_303_8.txt @@ -0,0 +1,9 @@ +ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ +ಬೆಂಗಳೂರು,ನ.26-ನೆಹರೂ ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಎಸ್‍ಸಿ ಮೋರ್ಚಾ ವತಿಯಿಂದ ಏರ್ಪಡಿಸಿದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿ. ಡಾ.ಅಂಬೇಡ್ಕರ್ ಹೆಸರನ್ನು ನುಡಿ ಮುತ್ತಾಗಿ ಬಳಸುವ ಕಾಂಗ್ರೆಸ್ ಪಕ್ಷವು ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. +ನೆಹರೂ ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಸ್ಮಾರಕ ಘೋಷಿಸಿ ಉದ್ಘಾಟನೆ ಮಾಡಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ ಎಂದ ಅವರು, ಬಿಜೆಪಿ ಸರಕಾರವು ಪಂಚತೀರ್ಥಗಳನ್ನು ಅಭಿವೃದ್ಧಿ ಮಾಡಿದ್ದನ್ನು ನೆನಪಿಸಿದರು. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷ ಕಾಂಗ್ರೆಸ್ ಎಂದು ವಿವರಿಸಿದರು. +26 ನವೆಂಬರ್ ಅನ್ನು ಸಂವಿಧಾನ ಸಮರ್ಪಣಾ ದಿನ ಎಂದು ಘೋಷಿಸುವ ಮೂಲಕ ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸಿದ್ದೇ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿಯವರು. ಬಿಜೆಪಿ ಉದ್ದೇಶವೇ ಕಟ್ಟಕಡೆಯ ವ್ಯಕ್ತಿಗೂ ಕೂಡ ನ್ಯಾಯ ನೀಡುವುದು ಎಂದರು. +ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ +ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂದು ಮಹತ್ವದ ದಿನ. 1949 ನವೆಂಬರ್ 26 ರಂದು ಭಾರತೀಯರಿಗೆ ಪವಿತ್ರವಾದ ಸಂವಿಧಾನವನ್ನು ಅಂಗೀಕರಿಸಿದ ದಿನ. ಭಾರತರತ್ನ ಸಿದ್ದರಾಮಯ್ಯನವರು ಮತಬ್ಯಾಂಕ್ ರಾಜಕೀಯವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಬಾಸಾಹೇಬರ ಆಶಯವನ್ನು ಮೋದಿಜೀ ಅವರು ಅನುಷ್ಠಾನ ಮಾಡುತ್ತಿದ್ದಾರೆ. ಸಂವಿಧಾನವನ್ನು ಉಳಿಸುವ ಮಹತ್ವದ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಯ ಮೇಲೂ ಇದೆ ಎಂದು ತಿಳಿಸಿದರು. +ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ಅತಿಥಿಯಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡತನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಪಕ್ಷ ಮಾಡಲಿಲ್ಲ ಎಂದು ತಿಳಿಸಿದರು. +ಮೋದಿ ಪಂಜಾಬ್‍ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು +ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ,ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಪಕ್ಷದ ಪದಾ„ಕಾರಿಗಳು, ಎಸ್‍ಸಿ ಮೋರ್ಚಾ ಪದಾ„ಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_303_9.txt b/eesanje/url_46_303_9.txt new file mode 100644 index 0000000000000000000000000000000000000000..956b3530d8451eac587bd219777e0674fb08487c --- /dev/null +++ b/eesanje/url_46_303_9.txt @@ -0,0 +1,6 @@ +ಕಾಂತರಾಜು ಆಯೋಗದ ವರದಿಯಲ್ಲಿ ಲೋಪ, ನೈಜ ವರದಿ ತಯಾರಿಕೆಗೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ +ಬೆಂಗಳೂರು,ನ.26- ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕೆಂದು ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ಪ್ರಧಾನ ಸಂಚಾಲಕರಾದ ಆಡಿಟರ್ ನಾಗರಾಜ್ ಯಲಚವಾಡಿ ಒತ್ತಾಯಿಸಿದ್ದಾರೆ. ಪ್ರತಿ ಮನೆಗೂ ಹೋಗಿ ಸರ್ವೆ ಮಾಡುವುದರ ಮೂಲಕ ನೈಜ ವರದಿಯನ್ನು ಸಿದ್ದಪಡಿಸಲು ಆದೇಶಿಸಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ. +ಕಳೆದ 50 ವರ್ಷಗಳಿಂದ ಮೀಸಲಾತಿ ಸೌಲಭ್ಯ ಪಡೆಯುತ್ತಿರುವ ಸಮುದಾಯ ಬಗ್ಗೆ ನಾವು ಯಾವತ್ತೂ ವಿರೋಧವನ್ನು ವ್ಯಕ್ತಪಡಿಸಿಲ್ಲ. ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಿದ್ದಪಡಿಸಲಾದ ವರದಿಯು 8 ವರ್ಷಗಳಷ್ಟು ಹಳೆಯದಾಗಿದ್ದು, ವರದಿಯ ಬಗ್ಗೆ ಹಲವಾರು ಸಂಶಯಗಳು ವ್ಯಕ್ತವಾಗಿವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ +ಡಾ. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡುವುದರ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಎಲ್ಲಾ ಸಮುದಾಯದ ಜನಾಂಗಕ್ಕೂ ಕೂಡ ಮೀಸಲಾತಿ ಸೌಲಭ್ಯ ದೊರಕಬೇಕೆಂಬ ಆಶಯವಿದೆ. ಅದರ ವಿಚಾರವಾಗಿ ಅಹಿಂದ ರಾಮಚಂದ್ರಪ್ಪರು ತಿಳಿದುಕೊಳ್ಳದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಹೇಳಿರುವುದು ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. +ಯಾವುದೇ ಸಮಾಜದ ವ್ಯಕ್ತಿ ಜನಪ್ರತಿನಿ„ಯಾದರೂ ಕೂಡ ಅವರವರ ಸಮುದಾಯಕ್ಕೆ ಸಂಬಂಧಪಟ್ಟ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ , ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಹೊಂದಿರುತ್ತಾರೆ. ಆದರೆ ಉಪಮುಖ್ಯಮಂತ್ರಿ ರಾಜೀನಾಮೆ ನೀಡಿಬೇಕೆಂದು ಒತ್ತಾಯಿಸುವುದು ಸರಿಯಾದ ಮಾರ್ಗವಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_304_1.txt b/eesanje/url_46_304_1.txt new file mode 100644 index 0000000000000000000000000000000000000000..fa855986ab9f66d86a2f37759431cd7cd2338f65 --- /dev/null +++ b/eesanje/url_46_304_1.txt @@ -0,0 +1,6 @@ +ಬಿಜೆಪಿ ಕಾರ್ಯಕರ್ತರ ನೆರವಿಗೆ ಕಂಟ್ರೋಲ್ ರೂಂ : ವಿಜಯೇಂದ್ರ +ಬೆಂಗಳೂರು,ನ.26- ಬಿಜೆಪಿ ಕಾರ್ಯಕರ್ತರಿಗೆ ತೊಂದರೆ, ಕಿರುಕುಳ, ನೀಡಿದರೆ ಅವರಿಗೆ ಕಾನೂನಿನ ನೆರವು ನೀಡಲು ಅನುಕೂಲವಾಗುವಂತೆ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್‍ನ್ನು ತೆರೆಯುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂವಿಧಾನ ನಮಗೆ ಕೊಡ ಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ ಎಂದು ಅಭಯ ನೀಡಿದ್ದಾರೆ. +ಸಾಮಾಜಿಕ ಜಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೋಲಿಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ. +ಮೋದಿ ಪಂಜಾಬ್‍ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು +ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಧೈರ್ಯ ತುಂಬಿದ್ದಾರೆ. \ No newline at end of file diff --git a/eesanje/url_46_304_10.txt b/eesanje/url_46_304_10.txt new file mode 100644 index 0000000000000000000000000000000000000000..646a20e85d3fb4eb6e127ad1f56ea40eac4a1fc3 --- /dev/null +++ b/eesanje/url_46_304_10.txt @@ -0,0 +1,9 @@ +ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಸಲು ಜೆಡಿಎಸ್ ಸಿದ್ದತೆ +ಬೆಂಗಳೂರು, ನ.25-ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಜೆಡಿಎಸ್ ನಡೆಸಿರುವ ಅಧ್ಯಯನ ವರದಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಲ್ಲಿಸಲಿದೆ.ಜಿಲ್ಲಾವಾರು ಬರ ಅಧ್ಯಯನದ ಮಾಹಿತಿಯನ್ನು ಆಧರಿಸಿ ಜೆಡಿಎಸ್ ವರದಿಯನ್ನು ಸಿದ್ಧಪಡಿಸುತ್ತಿದೆ. +ಅಧ್ಯಯನ ಪ್ರವಾಸದ ಸಂದರ್ಭದಲ್ಲಿ ಕಂಡು ಬಂದ ವಾಸ್ತವ ಸಂಗತಿಗಳು, ರೈತರೊಂದಿಗೆ ನಡೆಸಿದ ಮಾತುಕತೆಯ ಅಂಶವನ್ನು ವರದಿ ಒಳಗೊಂಡಿರುತ್ತದೆ. ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಈ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಅಲ್ಲದೆ, ಅಧಿವೇಶನದಲ್ಲಿ ಬರ ಪರಿಸ್ಥಿತಿಯಿಂದ ರೈತರು ಹಾಗೂ ನಾಡಿನ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಲು ಉದ್ದೇಶಿಸಿದೆ. ರಾಜ್ಯ ಸರ್ಕಾರ ಸಮರ್ಪಕ ಬರ ಪರಿಹಾರ ಒದಗಿಸಲು ವಿಫಲವಾಗಿದೆ ಎಂದು ಈಗಾಗಲೇ ಆರೋಪಿಸಿದೆ. +ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಜಿಲ್ಲಾವಾರು ತಂಡಗಳನ್ನು ರಚನೆ ಮಾಡಿತ್ತು. ಆಯಾ ಜಿಲ್ಲೆಯಲ್ಲಿನ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದರು. +ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್ +ಆಯಾ ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಪರಾಭವಗೊಂಡಿರುವ ಅಭ್ಯರ್ಥಿಗಳು, ಮತ್ತಿತರ ಹಿರಿಯ ಮುಖಂಡರನ್ನು ಒಳಗೊಂಡ 31 ತಂಡಗಳನ್ನು ರಚನೆ ಮಾಡಲಾಗಿತ್ತು. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಚನೆ ಮಾಡಲಾಗಿದ್ದ ತಂಡಗಳು 31 ಜಿಲ್ಲೆಗಳಿಗೂ ಭೇಟಿ ನೀಡಿ ದೀಪಾವಳಿ ಹಬ್ಬದ ಒಳಗಾಗಿ ಅಧ್ಯಯನ ಮುಗಿಸಿ ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು. +ಪಕ್ಷದ ಕೇಂದ್ರ ಕಚೇರಿಯು ಆಯಾ ತಂಡದ ಮುಖ್ಯಸ್ಥರಿಂದ ಬರ ಅಧ್ಯಯನದ ಮಾಹಿತಿಯನ್ನು ಕಲೆ ಹಾಕಿದೆ. ಎಲ್ಲಾ ಜಿಲ್ಲೆಗಳ ಮಾಹಿತಿ ಒಳಗೊಂಡ ಬರ ಕುರಿತ ವರದಿಯೊಂದನ್ನು ಸಿದ್ಧಪಡಿಸಲಾಗುತ್ತಿದೆ. ಬೆಳೆ ಹಾನಿಗೆ ಒಳಗಾಗಿರುವ ಪ್ರತಿ ಪ್ರದೇಶಕ್ಕೂ ಭೇಟಿ ನೀಡಿ, ಸಂಕಷ್ಟದಲ್ಲಿರುವ ರೈತರ ಜತೆ ನೇರ ಮಾತುಕತೆ ನಡೆಸಿ ವರದಿಗಳನ್ನು ಸಿದ್ಧಪಡಿಸಬೇಕು ಎಂದು ಮುಖಂಡರಿಗೆ ಸೂಚಿಸಲಾಗಿತ್ತು. ಈ ಅಧ್ಯಯನ ವರದಿ ಮುಂದಿಟ್ಟುಕೊಂಡು ಪಕ್ಷವು ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು. +ಒಂದೆಡೆ ಬರ ಮತ್ತೊಂದೆಡೆ ವಿದ್ಯುತ್ ಅಭಾವದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಪರವಾಗಿ ಪಕ್ಷ ಹೋರಾಟ ನಡೆಸುವ ಪೂರ್ವಭಾವಿಯಾಗಿ ಅಧ್ಯಯನ ನಡೆಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದ್ದರು. ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ಹಾನಿ ಪರಿಹಾರ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಿದೆ. \ No newline at end of file diff --git a/eesanje/url_46_304_11.txt b/eesanje/url_46_304_11.txt new file mode 100644 index 0000000000000000000000000000000000000000..ed9ac0b0a8f3e8fed44a06d88468c8170101c6d6 --- /dev/null +++ b/eesanje/url_46_304_11.txt @@ -0,0 +1,7 @@ +ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್ +ಬೆಂಗಳೂರು,ನ.24- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆ ಹಿಂಪಡೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ನ್ಯಾಯಲಯದಲ್ಲಿ ಪ್ರಶ್ನೆ ಮಾಡುತ್ತೇನೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. +ಈ ಕುರಿತು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್‍ಗೆ ಎರಡು ಪುಟಗಳ ಪತ್ರ ಬರೆದಿರುವ ಯತ್ನಾಳ್, ಸಚಿವ ಸಂಪುಟ ಸಭೆಯಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಿರುವ ಕ್ರಮವನ್ನು ವಾಪಸ್ ಪಡೆದಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದ್ದಾರೆ. ಶಿವಕುಮಾರ್ ಅವರು ಈ ಹಿಂದೆ ಸಿಬಿಐ ತನಿಖೆ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಈಗಾಗಲೇ ವಜಾಗೊಳಿಸಿದೆ. ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, 90 ದಿನದೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ನೀಡುವಂತೆ ಹೈಕೋರ್ಟ್ ಸೂಚನೆ ಕೊಟ್ಟಿದೆ ಎಂದು ಹೇಳಿದ್ದಾರೆ. +ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಮೇಲಿನ ಆದಾಯಕ್ಕಿಂತ ಮೀರಿದ ಆಸ್ತಿ ಪ್ರಕರಣದ ಅರ್ಜಿ ವಿಚಾರಣೆಯನ್ನು ಇದೇ 29ರಂದು ಹೈಕೋರ್ಟ್ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಹಂತದಲ್ಲಿರುವ ಸರ್ಕಾರ ಮೂಗು ತೂರಿಸುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. +ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ +ರಾಜ್ಯ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸರ್ಕಾರದ ಪರವಾಗಿ ವರದಿಯನ್ನು ನೀಡಿದ್ದಾರೆ. ಲೋಕಾಯುಕ್ತ ಇಲ್ಲವೇ ಸ್ಥಳೀಯ ಪೊಲೀಸರಿಂದ ಇದನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವೇ ಇಲ್ಲ. ಏಕೆಂದರೆ ಶಿವಕುಮಾರ್ ಓರ್ವ ಪ್ರಭಾವಿ ರಾಜಕಾರಣಿ. ಹೀಗಾಗಿ ತನಿಖಾಕಾರಿಗಳ ಮೇಲೆ ಡಿ.ಕೆ.ಶಿವಕುಮಾರ್ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. +ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರ ಅವರನ್ನು ಸಂಪೂರ್ಣವಾಗಿ ರಕ್ಷಣೆ ಮಾಡುವ ಉದ್ದೇಶದಿಂದ ಕೂಡಿದೆ. ಹೀಗಾಗಿ ನಾನು ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಪ್ರಶ್ನಿಸಲಿದ್ದೇನೆ ಎಂದು ಹೇಳಿದರು.ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಯತ್ನಾಳ್ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_304_12.txt b/eesanje/url_46_304_12.txt new file mode 100644 index 0000000000000000000000000000000000000000..1ee264eee0affff9130fea018f0b735645a283d8 --- /dev/null +++ b/eesanje/url_46_304_12.txt @@ -0,0 +1,11 @@ +ಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ +ಬೆಂಗಳೂರು,ನ.24- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ. ತಕ್ಷಣವೇ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡಲಿ ಎಂದು ಮನವಿ ಮಾಡಿದರು. +ಐಟಿ ದಾಳಿಯ ವೇಳೆ ರಾಜ್ಯ ಮತ್ತು ಬೇರೆ ಬೇರೆ ಭಾಗಗಳಲ್ಲಿ ಸಾಕಷ್ಟು ಹಣ ಸಿಕಿತ್ತು. ವಿಚಾರಣೆ ನಡೆಯುತ್ತಿರುವ ಹಂತದಲ್ಲೇ ಸರ್ಕಾರದ ಈ ತೀರ್ಮಾನ ಅತ್ಯಂತ ದುರದೃಷ್ಟಕರ. ಸರ್ಕಾರ ಕಾನೂನಿನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ ಎಂದು ದೂರಿದರು. ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲೆಂದೇ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯತೆಗೆದುಕೊಂಡಿದೆ. ಅಷ್ಟಕ್ಕೂ ಏನೂ ತಪ್ಪು ಮಾಡಿಲ್ಲವೆಂದ ಮೇಲೆ ಡಿ.ಕೆ.ಶಿವಕುಮಾರ್ ಹೆದರುವುದು ಏಕೆ ಎಂದು ಪ್ರಶ್ನಿಸಿದರು. +ಸಚಿವ ಸಂಪುಟದ ನಿರ್ಧಾರವನ್ನು ಡಿ.ಕೆ.ಶಿವಕುಮಾರ್ ಮೊದಲು ವಿರೋಧಿಸಬೇಕಿತ್ತು. ಇದನ್ನು ನೋಡಿದರೆ ತಪ್ಪು ಮಾಡಿದ್ದೇವೆಂದು ಅವರೇ ಒಪ್ಪಿಕೊಂಡಂತಾಗಿದೆ. ಸಂಪುಟದ ನಿರ್ಧಾರವನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು. +ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ +ಸರ್ಕಾರದ ತೀರ್ಮಾನದ ವಿರುದ್ಧ ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಅಂತ ಚರ್ಚೆ ನಡೆಸಿ ನಿರ್ಧರಿಸಲಿದೆ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತ ಆಗಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಆಗಿದೆ ಎಂಬ ಮಾಹಿತಿ ಆಧಾರದಲ್ಲಿ ಸಿಬಿಐಗೆ ತನಿಖೆಗೆ ಅನುಮತಿ ಕೊಡಲಾಗಿತ್ತು ಎಂದರು. +ಡಿಕೆಶಿ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಅವರು ತಾವು ಸತ್ಯಹರಿಶ್ಚಂದ್ರರು ಎಂದು ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ತೋರಿಸಿ ಎಂದು ಹೇಳಿದರು. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರ ಜೊತೆ ಮಾತಾಡಿ ಹೋರಾಟದ ತೀರ್ಮಾನ ಮಾಡುತ್ತೇವೆ. ಪ್ರಾಥಮಿಕವಾಗಿ ಜಾರಿನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಅಕ್ರಮ ಆಸ್ತಿ ಎಂಬುದು ಗೊತ್ತಾಗಿದೆ. ಇಂಥ ಹೊತ್ತಲೇ ಸರ್ಕಾರದ ತೀರ್ಮಾನ ಸರಿಯಲ್ಲ ಎಂದು ಆಕ್ಷೇಪಿಸಿದರು. +ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ವಿನಾಕಾರಣ ತಡೆಹಿಡಿಯುವಂತಿಲ್ಲ : ಸುಪ್ರೀಂ +ಹಿಂದಿನ ವರದಿ, ಆದೇಶದ ಬಗ್ಗೆ ಮಾತಾಡಲ್ಲ. ಪ್ರಕರಣ ವಿಚಾರಣೆಯಲ್ಲಿರುವಾಗ ಈ ರೀತಿ ಮಾಡುವುದು ಸರಿಯಲ್ಲ, ಅಕ್ಷಮ್ಯ ಅಪರಾಧ ಎಂದರು. ಬೆಳಗಾವಿ ಅಧಿವೇಶದಲ್ಲಿ ಸಾಕಷ್ಟು ವಿಚಾರ ಚರ್ಚೆ ಮಾಡುತ್ತೇವೆ. ಬರ ನಿರ್ವಹಣೆ, ಕಬ್ಬು ಬೆಳೆಗಾರರ ಸಮಸ್ಯೆ, ಡಿಕೆಶಿ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು. +ಸಚಿವ ಜಮೀರ್ ಅಹಮ್ಮದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರ ಹೇಳಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರೊಬ್ಬ ಭಾರತೀಯನೆಂದು ಹೇಳಲು ನಮಗೆ ನಾಚಿಕೆಯಾಗುತ್ತದೆ ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_304_2.txt b/eesanje/url_46_304_2.txt new file mode 100644 index 0000000000000000000000000000000000000000..532f93fc99f795e619fe1ac2ea9db4fcf4e432d0 --- /dev/null +++ b/eesanje/url_46_304_2.txt @@ -0,0 +1,6 @@ +ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ನ.26- ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ಣಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. +ಭ್ರೂಣ ಹತ್ಯೆ ಆರೋಪದ ಹಿನ್ನಲೆಯಲ್ಲಿ ವೈದ್ಯರೊಬ್ಬರನ್ನು ಬಂಧಿಸಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಮೇಲಿನಂತೆ ಪ್ರತಿಕ್ರಿಯಿಸಿದರು. ಮೈಸೂರಿನ ವೈದ್ಯರೊಬ್ಬರನ್ನು ಹೆಣ್ಣು ಭ್ರೂಣ ಹತ್ಯೆ, ಭ್ರೂಣ ಲಿಂಗ ಪತ್ತೆ ಆರೋಪದ ಮೇಲೆ ಪೆಪೊಲೀಸರು ಬಂಧಿಸಿದ್ದಾರೆ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದರು. +ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ಅವಧಿಯಲ್ಲಿ ಸಿದ್ಧಪಡಿಸಲಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಗೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಲು ಅವರು ಇದೇ ಸಂದರ್ಭದಲ್ಲಿ ನಿರಾಕರಿಸಿದರು. +ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ +ಒಂದು ಗುಂಪು ಮುಖ್ಯಮಂತ್ರಿಯವರನ್ನು ಪದಚ್ಯುತಗೊಳಿಸಲು ಹೊರಟಿದೆ ಎಂಬ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪಾಪ ಈಗ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ವಿಪಕ್ಷ ನಾಯಕರಾದ ಮೇಲೆ ಏನೇನು ಮಾತನಾಡುತ್ತಾರೋ ಮಾತನಾಡಲಿ ಎಂದಷ್ಟೇ ಹೇಳಿದರು. \ No newline at end of file diff --git a/eesanje/url_46_304_3.txt b/eesanje/url_46_304_3.txt new file mode 100644 index 0000000000000000000000000000000000000000..bfb0bb9a8540e7e422894261db82a2e28019df2e --- /dev/null +++ b/eesanje/url_46_304_3.txt @@ -0,0 +1,6 @@ +ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ವೀರತರ್ಪಣ +ಆನೇಕಲ್. ನ. 25 – ಜಮ್ಮು – ಕಾಶ್ಮೀರದ ರಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಕರ್ನಾಟಕದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಅಂತ್ಯಕ್ರಿಯೆ ಇಂದು ಸಕಲ ಸೇನಾ ಗೌರವದೊಂದಿಗೆ ನೆರವೇರಿತು. +ಯೋಧ ಕ್ಯಾಪ್ಟನ್ ಪ್ರಾಂಜಲ್‍ರವರ ಪಾರ್ಥಿವ ಶರೀರವನ್ನು ಜಿಗಣಿ ಸಮೀಪವಿರುವ ನಂದನವನ ಬಡಾವಣೆಯ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನೂರಾರು ಮಂದಿ ದೇಶಭಕ್ತರು ಅಮರ್ ರಹೆ… ಅಮರ್ ರಹೆ ಫ್ರಾಂಜಲ್… ಅಮರ್ ರಹೆ ಎಂದು ಹೇಳುತ್ತಾ ಕ್ಯಾಪ್ಟನ್ ಪ್ರಾಂಜಲ್‍ಗೆ ಅಂತಿಮ ನಮನ ಸಲ್ಲಿಸಿದರು. +ನಂದನವನ ಬಡಾವಣೆಯಿಂದ ಸೇನಾ ವಾಹನದಲ್ಲಿ ಅಂತಿಮ ಯಾತ್ರೆ ಸುಮಾರು 25 ಕಿ.ಮೀ.ಆನೇಕಲ್ ತಹಶೀಲ್ದಾರ್ ಅಕಾರಿಗಳಿಂದ ಪ್ರಾಂಜಲ್ ಕುಟುಂಬದ ಸದಸ್ಯರಿಗೆ ದೈರ್ಯ ತುಂಬುವ ಕೆಲಸವನ್ನು ಮಾಡಿದರು ಜೊತೆಗೆ ಅಂತಿಮ ದರ್ಶನಕ್ಕೆ ಯಾವುದೇ ತೊಂದರೆ ಯಾಗದಂತೆ ತಾಲ್ಲೂಕು ಆಡಳಿತ ಎಲ್ಲಾ ರೀತಿಯಾದ ಸಿದ್ದತೆಗಳನ್ನು ಮಾಡಲಾಗಿತ್ತು.ಇಂದು ಬೆಳಗ್ಗೆ 11 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. +ಗಣ್ಯರಿಂದ ಅಂತಿಮ ದರ್ಶನ:ನಿನ್ನೆ ರಾತ್ರಿ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಅವರ ಪ್ರಾರ್ಥೀವ ಶರೀರವನ್ನು ತರಲಾಯಿತು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ. ಜಾರ್ಜ್, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರು ಗೌರವ ನಮನ ಸಲ್ಲಿಸಿದರು. +ಇಂದು ಬೆಳಗ್ಗೆ ಸಂಸದ ಡಿ.ಕೆ. ಸುರೇಶ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. \ No newline at end of file diff --git a/eesanje/url_46_304_4.txt b/eesanje/url_46_304_4.txt new file mode 100644 index 0000000000000000000000000000000000000000..2e563f85e37ac706dad84f3dde79d2806579a375 --- /dev/null +++ b/eesanje/url_46_304_4.txt @@ -0,0 +1,8 @@ +ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಡಿಪ್‍ಟೇಕ್ ಚರ್ಚೆ +ಬೆಂಗಳೂರು,ನ.25- ಇದೇ 29ರಿಂದ ನಗರದಲ್ಲಿ ನಡೆಯುವ ಬೆಂಗಳೂರು-ಟೆಕ್ ಶೃಂಗಸಭೆ ಅಂಗವಾಗಿ ಐಟಿಇ-ಡಿಪ್‍ಟೇಕ್ ಟ್ರಾಕ್ ಜಿಸಿಸಿಗಳಿಗೆ ಅವಕಾಶಗಳು, ಕೃತಕ ಬುದ್ದಮತ್ತೆ, ಸುರಕ್ಷತೆಗಾಗಿ ತಂತ್ರಜ್ಞಾನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆಗಳಾಗಲಿವೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಪತ್ರಿಕಾ ಗೋಷ್ಟಿಯಲ್ಲಿಂದು ಮಾತನಾಡಿದ ಅವರು, ವಿಶ್ವದ 30 ದೇಶಗಳ ಮಾಹಿತಿ ತಂತ್ರಜ್ಞಾನ ನಾಯಕರು, ನವೋದ್ಯಮಗಳ ಹೂಡಿಕೆದಾರರು, ಸಂಶೋಧನಾ ಪ್ರಯೋಗಾಲಯಗಳ ತಜ್ಞರ ಸಮಾವೇಶಕ್ಕೆ ಸಮ್ಮೇಳನ ಸಾಕ್ಷಿಯಾಗಲಿದೆ. 26ನೇ ಆವೃತ್ತಿಯ ಸಮ್ಮೇಳನದಲ್ಲಿ ದಂತಕಥೆ, ಪರಂಪರೆ, ನಾಯಕತ್ವ ವಿಭಾಗದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತದ್ದನ್ನು ಸಾಧಿಸಿದ ನಾರಾಯಣಮೂರ್ತಿ ಹಾಗೂ ಇತರರ ದಂತಕಥೆಗಳ ವಿಶ್ಲೇಷಣೆ ಸಂವಾದಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದರು. +ವೈವಿಧ್ಯಮಯ, ಉತ್ಕøಷ್ಟ ಕಾರ್ಯಕ್ರಮಗಳೊಂದಿಗೆ ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸಂವಾದಗಳು, ಡಿಪ್‍ಟೇಕ್, ಜಾಗತಿಕ ಆವಿಷ್ಕಾರಗಳು, ಆರ್ ಅಂಡ್ ಆರ್ ಲ್ಯಾಬ್-2, ಬಿ2ಬಿ ಸಭೆಗಳು, ರಫ್ತು ಪ್ರಶಸ್ತಿಗಳು ಸೇರಿದಂತೆ ಹಲವು ಆಯಾಮಗಳನ್ನು ಒಳಗೊಂಡಿದೆ ಎಂದು ತಿಳಿಸಿದರು. +ಭವಿಷ್ಯದ ಸೈಬರ್ ಸುರಕ್ಷತೆ, ಸೈಬರ್ ವಾರ್ ಫೇರ್, 5ಜಿ ಅಳವಡಿಕೆ, ವೈರ್‍ಲೆಸ್ ತಂತ್ರಜ್ಞಾನ, ಸೆಮಿಕಂಡಕ್ಟರ್ ವಿಚಾರಗಳ ವಿನಿಮಯವಾಗಲಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಇಸ್ರೋದ ಚಂದ್ರಯಾನ-3ರ ಲ್ಯಾಂಡರ್ ಮಾದರಿಯನ್ನು ಪ್ರದರ್ಶಿಸಲಾಗುತ್ತಿದೆ ಎಂದರು. +ಭ್ರಷ್ಟರ ಪೋಷಕ ಸಿದ್ದರಾಮಯ್ಯ: ಬಿಜೆಪಿ ಕಿಡಿ +ಪರಿಸರಸ್ನೇಹಿಯಾದ ಕ್ರಮಗಳಿಗೆ ಉತ್ತೇಜನ ನೀಡಲಾಗುತ್ತಿದೆ. 75 ಸೆಷನ್‍ಗಳು, 400ಕ್ಕೂ ಹೆಚ್ಚು ಭಾಷಣಕಾರರು, 350ಕ್ಕೂ ಹೆಚ್ಚು ನವೋದ್ಯಮಗಳು, 600ಕ್ಕೂ ಹೆಚ್ಚು ಪ್ರದರ್ಶಕರು, 20 ಸಾವಿರಕ್ಕೂ ಹೆಚ್ಚಿದ ವ್ಯಾಪಾರಿಗಳು ಸಮ್ಮೇಳನದ ಭಾಗವಾಗಲಿದ್ದಾರೆ ಎಂದು ವಿವರಿಸಿದರು. +ಮುಂದಿನ ಎರಡು ವರ್ಷಗಳ ಪೈಕಿ 2024-2025ರಲ್ಲಿ ನವೆಂಬರ್ 19-21ರಂದು ಬೆಂಗಳೂರು ಟೆಕ್ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಸಮ್ಮೇಳನದಲ್ಲಿ ದೇಶ, ವಿದೇಶಗಳ ಪ್ರಖ್ಯಾತ ಸಂಸ್ಥೆಗಳು ಭಾಗವಹಿಸುತ್ತಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_304_5.txt b/eesanje/url_46_304_5.txt new file mode 100644 index 0000000000000000000000000000000000000000..0a7353a8acda5778bbbbb248fa29db7bfcde16f4 --- /dev/null +++ b/eesanje/url_46_304_5.txt @@ -0,0 +1,7 @@ +ಭ್ರಷ್ಟರ ಪೋಷಕ ಸಿದ್ದರಾಮಯ್ಯ: ಬಿಜೆಪಿ ಕಿಡಿ +ಬೆಂಗಳೂರು, ನ.25- ಕಾಂಗ್ರೆಸ್‍ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಅರಸಿ ಬಂದವರಿಗೆಲ್ಲ ನೀರು, ನೆರಳು ಒದಗಿಸುವ ಮಹಾಸಂರಕ್ಷಕರ ಭ್ರಷ್ಟ ಸಾಧನೆಯ ಪಕ್ಷಿನೋಟ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. +ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ. ಕೆಪಿಸಿಎಲ್‍ನ 447 ಕೋಟಿ ಮೆಗಾ ಹಗರಣದಿಂದ ಡಿಕೆಶಿ ಅವರನ್ನು ಸಂರಕ್ಷಿಸಿದ್ದೂ ಈ ಭ್ರಷ್ಟ ಪೋಷಕ ಎಂದು ವಾಗ್ದಾಳಿ ನಡೆಸಿದೆ. +ಪಿಎಫ್‍ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಜಾ ಮಾಡಿದ್ದೇ ಈ ಭ್ರಷ್ಟ ಪೋಷಕ. 1,700 ಪಿಎಫ್‍ಐ ಪ್ರಕರಣಗಳನ್ನು ಹಿಂಪಡೆದದ್ದು ಈ ಭ್ರಷ್ಟ ಪೋಷಕ, ಹೈಕಮಾಂಡ್‍ಗೆ 1,000 ಕೋಟಿ ಕಪ್ಪ ಸಾಗಿಸಿದ ಎಂಎಲ್‍ಸಿ ಗೋವಿಂದರಾಜು ಅವರನ್ನು ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ. ಖಡಕ್ ಅಧಿಕಾರಿ ಅನುರಾಗ್ ತಿವಾರಿ, ಗಣಪತಿ ಅವರನ್ನು ಸಾವಿಗೆ ತಳ್ಳಿ ಕುಚುಕು ಗೆಳೆಯ ಕೆ. ಜೆ. ಜಾರ್ಜ್ ರಕ್ಷಿಸಿದ್ದೇ ಈ ಭ್ರಷ್ಟ ಪೋಷಕ ಎಂದು ಗುಡುಗಿದೆ. +ಇಜಿಎಲ್ ಅಕ್ರಮದಲ್ಲಿ ಕೆ. ಜೆ. ಜಾರ್ಜ್‍ಗೆ ದಡ ಮುಟ್ಟಿಸಿದ್ದೂ ಈ ಭ್ರಷ್ಟ ಪೋಷಕರೇ. ಕಾಂಗ್ರೆಸ್ ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಟುಕಿದೆ. +ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ +ಭ್ರಷ್ಟರ ಕೂಪ, ಇವರ ಹೈಕಮಾಂಡೇ ಮುಖ್ಯ ಅತಿಥಿ. ಹಾಗಾಗಿ, ಸಿದ್ದರಾಮಯ್ಯರವರಿಗೆ ಭ್ರಷ್ಟರ ಸಂಕುಲ ವಿಸ್ತರಣೆ ಪರಮ ಕರ್ತವ್ಯವೂ, ಕಲ್ಯಾಣಕಾರಿಯೂ ಆಗಿರುವುದು ನಾಡಿನ ದುರಂತ ಎಂದಿದೆ. \ No newline at end of file diff --git a/eesanje/url_46_304_6.txt b/eesanje/url_46_304_6.txt new file mode 100644 index 0000000000000000000000000000000000000000..4b59d462bd59cc241265986b59a106a7b76c7b8b --- /dev/null +++ b/eesanje/url_46_304_6.txt @@ -0,0 +1,10 @@ +ಅಮಿತ್ ಷಾ ನನ್ನ ಜೀವ ತೆಗೆದರು : ಸೋಮಣ್ಣ +ಬೆಂಗಳೂರು,ನ.25- ನಾನು ಎರಡು ಕ್ಷೇತ್ರದಲ್ಲಿ ಸ್ರ್ಪಧಿಸಿದ್ದೇ ಮಹಾ ಅಪರಾಧವಾಯಿತು. ಗೃಹ ಸಚಿವ ಅಮಿತ್ ಷಾ ಅವರು ನಮ್ಮ ಮನೆಯಲ್ಲೇ ಕುಳಿತು ನನ್ನ ಜೀವ ತೆಗೆದರು ಎಂದು ಮಾಜಿ ಸಚಿವ ವಿ.ಸೋಮಣ್ಣ ತಮ್ಮ ಬೇಗುದಿಯನ್ನು ಹೊರ ಹಾಕಿದ್ದಾರೆ. +ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿಕೊಟ್ಟ ಅವರು ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಮಠದಲ್ಲಿ ಶ್ರೀಗಳ ಜೊತೆ ಗೌಪ್ಯವಾಗಿ ಮಾತನಾಡುತ್ತಿದ್ದ ಸೋಮಣ್ಣನವರು, ನಾನು ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನು ಬಿಟ್ಟು ಹೋಗದಿದ್ದರೆ ನನಗೆ ಇಂದು ದುಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವಾಮೀಜಿ ಮುಂದೆ ನೋವಿನಿಂದಲೇ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. +ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ನಾನು ಸ್ಪರ್ಧೆ ಮಾಡಬಾರದಿತ್ತು. ಪಕ್ಷದ ಮಾತು ಕೇಳಿ ನನ್ನ ರಾಜಕೀಯ ಜೀವನಕ್ಕೆ ನಾನೇ ಕಲ್ಲು ಹಾಕಿಕೊಂಡೆ. ನಾನು ಗೋವಿಂದರಾಜನಗರ ಕ್ಷೇತ್ರ ಬಿಟ್ಟು ಬೇರೆ ಕಡೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದೆ. ಆದರೆ ನನಗೆ ಬಲವಂತವಾಗಿ ಸ್ಪರ್ಧೆ ಮಾಡಬೇಕೆಂದು ಒತ್ತಡ ಹಾಕಿದರೆಂದು ಹೇಳಿದರು. +ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ನಮ್ಮ ಮನೆಗೆ ಬಂದು ನೀವು ವರುಣಾ ಮತ್ತು ಚಾಮರಾಜನಗರದಿಂದ ಸರ್ಧೆ ಮಾಡಬೇಕೆಂದು ಬಲವಂತ ಮಾಡಿದರು. ನಾನು ವಿಧಿಯಿಲ್ಲದೆ ಒಪ್ಪಿಕೊಂಡೆ. ಅಮಿತ್ ಷಾ ನಮ್ಮ ಮನೆಗೆ ಬಂದು ಪ್ರಾಣ ತೆಗೆದರು ಎಂದು ಸೋಮಣ್ಣ ವಿಷಾದದಿಂದಲೇ ಶ್ರೀಗಳ ಜೊತೆ ತಮ್ಮ ನೋವನ್ನು ವ್ಯಕ್ತಪಡಿಸಿದರು. +ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ +ಪ್ರಧಾನಿ ನರೇಂದ್ರಮೋದಿ ಅವರು ಕೂಡ ನನಗೆ ಬಲವಂತವಾಗಿ ಸ್ಪರ್ಧೆ ಮಾಡಬೇಕೆಂದರು. ನೀವು ರ್ಸಸಿ ನಾನು ಪ್ರಚಾರ ಮಾಡುತ್ತೇನೆ ಎಂದಾಗ ಒಲ್ಲೆ ಎಂದು ಹೇಳಲು ಆಗಲಿಲ್ಲ ಎಂದರು. ಶ್ರೀಗಳ ಜೊತೆ ಮುಕ್ತವಾಗಿ ಮಾತನಾಡುತ್ತಿದ್ದ ವೇಳೆ ಕ್ಯಾಮೆರಾಗಳನ್ನು ಕಂಡು ಸೋಮಣ್ಣ ತಮ್ಮ ಮಾತು ಬದಲಿಸಿ ಏನೇನೂ ಆಗಿಲ್ಲ ಎಂಬಂತೆ ಸಾಗಹಾಕುವ ಪ್ರಯತ್ನ ಮಾಡಿದರು. +ಕ್ಯಾರೆ ಎನ್ನದ ಸೋಮಣ್ಣ:ಇದಕ್ಕೂ ಮುನ್ನ ಮಠಕ್ಕೆ ಆಗಮಿಸಿದ ಸೋಮಣ್ಣನವರ ಜೊತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರವಾಣಿ ಮೂಲಕ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರು. ಮಠದಲ್ಲಿದ್ದ ತಮ್ಮ ಆಪ್ತರೊಬ್ಬರಿಂದ ಸೋಮಣ್ಣಗೆ ಮೊಬೈಲ್ ಫೆÇೀನ್ ಕೊಡುವಂತೆ ಬಿಎಸ್‍ವೈ ಎರಡು ಬಾರಿ ಕರೆ ಮಾಡಿದರೂ ನಾನು ಯಾರ ಜೊತೆಯೂ ಮಾತನಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರೆಂದು ಗೊತ್ತಾಗಿದೆ. +ನಂತರ ತುಮಕೂರು ಸಂಸದ ಜಿ.ಎಸ್.ಬಸವರಾಜ್ ಜೊತೆ ಸೋಮಣ್ಣ ರಹಸ್ಯವಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಡಿಸೆಂಬರ್ 6ರಂದು ತುಮಕೂರಿನ ಸಿದ್ದಗಂಗಾ ಆವರಣದಲ್ಲಿ ಗುರುಭವನ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ತುಮಕೂರಿನ ಜನಪ್ರತಿನಿಗಳನ್ನು ಕಾರ್ಯಕ್ರಮಕ್ಕೆ ಸೋಮಣ್ಣ ಆಹ್ವಾನಿಸಿದ್ದಾರೆ. +ಡಿ.6ರ ನಂತರ ನಾನು ಕೆಲವು ವಿಷಯಗಳನ್ನು ಬಹಿರಂಗಪಡಿಸುತ್ತೇನೆ ಎಂದು ಖುದ್ದು ಸೋಮಣ್ಣನವರೇ ಹೇಳಿರುವುದರಿಂದ ಅವರ ರಾಜಕೀಯ ನಡೆ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. \ No newline at end of file diff --git a/eesanje/url_46_304_7.txt b/eesanje/url_46_304_7.txt new file mode 100644 index 0000000000000000000000000000000000000000..52147e2504027dded93a8270ff3e0e64264708fe --- /dev/null +++ b/eesanje/url_46_304_7.txt @@ -0,0 +1,12 @@ +ಬಿಜೆಪಿಯಲ್ಲಿ ನಿಲ್ಲದ ಬಡಿದಾಟ: ದೆಹಲಿಯತ್ತ ಅತೃಪ್ತರ ಬಣ +ಬೆಂಗಳೂರು,ನ.25- ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ನಂತರ ಉಂಟಾಗಿರುವ ವಿದ್ಯಮಾನಗಳ ಕುರಿತು ಡಿ.7ರಂದು ವರಿಷ್ಠರ ಜೊತೆ ಕೆಲವು ಅಸಮಾಧಾನಿತ ನಾಯಕರು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. +ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೇರಿದಂತೆ ಹಲವರನ್ನು ಮಾಜಿ ಸಚಿವರಾದ ವಿ.ಸೋಮಣ್ಣ, ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಅವರುಗಳು ಡಿ.7, 8 ಮತ್ತು 9ರಂದು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. +ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿಯೊಳಗಿನ ಒಂದು ಬಣ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದೆ. +ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್‌ವೈ ಗರಂ +ವರಿಷ್ಠರು ಆಯ್ಕೆ ಮಾಡುವ ಮುನ್ನ ಸೌಜನ್ಯಕ್ಕಾದರೂ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿಲ್ಲ. ಹಿರಿಯರನ್ನು ಕಡೆಗಣಿಸಿ ಕೇವಲ ಯಡಿಯೂರಪ್ಪ ಪುತ್ರ ಎಂಬ ಒಂದೇ ಕಾರಣಕ್ಕಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ವಿರೋಧಿ ಬಣ ಅಸಮಾಧಾನಗೊಂಡಿದೆ. +ಇದರ ನಡುವೆಯೇ ಅತ್ಯಂತ ಮಹತ್ವದ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದಕ್ಕೂ ವಿರೋಧಿ ಬಣ ಕುದಿಯುತ್ತಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅಂತೂ ವರಿಷ್ಠರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. +ಒಂದು ಹಂತದಲ್ಲಿ ಬಿ.ವೈ. ವಿಜಯೇಂದ್ರ ಯತ್ನಾಳ್ ಅವರ ಮನೆಗೆ ಹೋಗಿ ಸಂಧಾನ ನಡೆಸುವ ಪ್ರಯತ್ನ ಮಾಡಿದರೂ ಫಲ ಕೊಟ್ಟಿಲ್ಲ. ನನ್ನ ಮನೆಗೆ ಅವರು ಬರುವ ಅಗತ್ಯವಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ.ಈ ಅಸಮಾಧಾನ ಇನ್ನಷ್ಟು ಬೆಳೆಯಬಹುದೆಂಬ ಆತಂಕಕ್ಕೆ ಒಳಗಾಗಿರುವ ವರಿಷ್ಠರು ಮಾತುಕತೆಗೆ ಬನ್ನಿ ಎಂದು ಸೋಮಣ್ಣ ಯತ್ನಾಳ್, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಮತ್ತಿತರರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. +ವಿಜಯೇಂದ್ರ ಮತ್ತು ಆರ್.ಅಶೋಕ್ ಅವರನ್ನು ಎರಡು ಪ್ರಮುಖ ಸ್ಥಾನಗಳಿಗೆ ಆಯ್ಕೆ ಮಾಡಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿರುವುದರಿಂದ ರಾಷ್ಟ್ರೀಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.ಭೇಟಿ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ವೇಳೆ ತಮಗೆ ಪಕ್ಷದಲ್ಲಿ ಯಾವ ರೀತಿ ಹಿನ್ನಡೆಯಾಯಿತು, ಇದಕ್ಕೆ ಯಾರು ಕಾರಣ ಎಂಬ ಇತ್ಯಾದಿ ವಿಷಯಗಳನ್ನು ವರಿಷ್ಟರ ಗಮನಕ್ಕೆ ತರಲು ಮುಂದಾಗಿದ್ದಾರೆ. +ಕೆಲವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಕುಟುಂಬದ ಹಿತ ಕಾಪಾಡಲು ಒಳ ಒಪ್ಪಂದ ಮಾಡಿಕೊಂಡು ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡಿದರೂ ಪುನಃ ಇಂಥವರಿಗೆ ಪಕ್ಷದಲ್ಲಿ ಮಣೆ ಹಾಕಿದರೆ ನಾವು ಹೇಗೆ ರಾಜಕಾರ ಮಾಡಬೇಕೆಂಬ ಪ್ರಶ್ನೆಯನ್ನು ಮುಂದಿಡಲಿದ್ದಾರೆ. +ಸುರಂಗ ಕಾರ್ಯಾಚರಣೆಗೆ ಮತ್ತೆ ಅಡ್ಡಿ +ಒಂದು ರಾಜಕೀಯ ಪಕ್ಷ ಕೇವಲ ಕುಟುಂಬಕ್ಕೆ ಸೀಮಿತವಾಗಬಾರದು. ಕುಟುಂಬ ರಾಜಕಾರಣವನ್ನು ವಿರೋಸುವ ಬಿಜೆಪಿಯೇ ಯಾರದೋ ಒತ್ತಡಕ್ಕೆ ಮಣಿದು ಇಡೀ ಪಕ್ಷವನ್ನೇ ಅವರ ಸುಪರ್ದಿಗೆ ನೀಡಿದರೆ ನಮ್ಮ ಗತಿ ಏನು? ಎಂಬ ಮೂಲ ಪ್ರಶ್ನೆಯನ್ನು ಮಾಡಲಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_304_8.txt b/eesanje/url_46_304_8.txt new file mode 100644 index 0000000000000000000000000000000000000000..74a5df2b5f8afbecb371945d137218e05d2384bc --- /dev/null +++ b/eesanje/url_46_304_8.txt @@ -0,0 +1,9 @@ +2023ನೇ ಸಾಲಿನ ಕೆ-ಟಿಇಟಿ ಫಲಿತಾಂಶ ಪ್ರಕಟ +ಬೆಂಗಳೂರು,ನ.25- ಶಾಲಾ ಶಿಕ್ಷಣ ಇಲಾಖೆಯು 2023ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷಾ (ಕೆ-ಟಿಇಟಿ) ಫಲಿತಾಂಶವನ್ನು ಪ್ರಕಟಿಸಿದೆ. ಪತ್ರಿಕೆ 1 ಮತ್ತು 2ರಿಂದ ಒಟ್ಟಾರೆ 64,830 ಮಂದಿ ಅಭ್ಯರ್ಥಿಗಳು ಶಿಕ್ಷಕರಾಗಲು ಅರ್ಹತೆ ಪಡೆದಿದ್ದು, ಇವರೆಲ್ಲರೂ ಸರ್ಕಾರಿ ಶಾಲಾ ಶಿಕ್ಷಕ ಹುದ್ದೆಗಳ ಭರ್ತಿಗೆ ಸರ್ಕಾರ ನಡೆಸುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. +1 ರಿಂದ 5ನೇ ತರಗತಿವರೆಗೆ ಬೋಧನಾ ಅರ್ಹತೆಗೆ ನಡೆಸಲಾದ ಪತ್ರಿಕೆ 1ರ ಪರೀಕ್ಷೆಗೆ ಹಾಜರಾಗಿದ್ದ 1,27,131 ಮಂದಿಯಲ್ಲಿ 14,922 (ಶೇ.11.74) ಮಂದಿ ಉತ್ತೀರ್ಣರಾಗಿದ್ದಾರೆ. ಇದರಲ್ಲಿ 4139 ಪುರುಷರು , 10,783 ಮಹಿಳಾಯರಿದ್ದಾರೆ. +ಇನ್ನು 6ರಿಂದ 8ನೇ ತರಗತಿ ವರೆಗಿನ ಬೋಧನಾ ಅರ್ಹತೆಗೆ ನಡೆಸಲಾಗಿದ್ದ ಪತ್ರಿಕೆ- 2 ಪರೀಕ್ಷೆ ಬರೆದಿದ್ದ 3,01,962 ಮಂದಿಯಲ್ಲಿ 64,830 ಮಂದಿ (ಶೇ.28.54) ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ. ಇದರಲ್ಲಿ ಪುರುಷರ ಸಂಖ್ಯೆ 16,268 ಆದರೆ ಮಹಿಳಾ ಅಭ್ಯರ್ಥಿಗಳು 33,634 ಅರ್ಹರಾಗಿದ್ದಾರೆ. ಈ ಪೈಕಿ 187 ಮಂದಿ ಶೇ.80ಕ್ಕಿಂತ ಹೆಚ್ಚು ಫಲಿತಾಂಶ ಪಡೆದಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. +ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಸಲು ಜೆಡಿಎಸ್ ಸಿದ್ದತೆ +ಇನ್ನು ಪತ್ರಿಕೆ 2ನಲ್ಲಿ ಉತ್ತೀರ್ಣರಾದವರ ಪೈಕಿ ಸಮಾಜ ವಿಜ್ಞಾನ ವಿಷಯ ಬೋಧನೆಗೆ 35,349 ಮಂದಿ ಮತ್ತು ಗಣಿತ ಮತ್ತು ವಿಜ್ಞಾನ ವಿಷಯ ಬೋಧನೆಗೆ 14,559 ಮಂದಿ ಅರ್ಹರಾಗಿದ್ದಾರೆ. ಕೆ- ಟಿಇಟಿ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್://... / ... ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ವೀಕ್ಷಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. +ಡಿ.31ಕ್ಕೆ ಕೆಸೆಟ್ ಪರೀಕ್ಷೆ:ಈ ಮಧ್ಯೆ, ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ 1208 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. +ಇದೇ ನವೆಂಬರ್ 26ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) 2023ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದ್ದು ನವೆಂಬರ್ 26ರ ಬದಲು ಪರೀಕ್ಷೆಯನ್ನು ಡಿ.31ರಂದು ನಡೆಸಲು ಪ್ರಾಕಾರ ತಾತ್ಕಾಲಿಕ ದಿನಾಂಕ ನಿಗದಿ ಮಾಡಿದೆ. ಇದೇ ದಿನಾಂಕವೇ ಅಂತಿಮ ದಿನಾಂಕ ಆಗಬಹುದು ಅಥವಾ ಬದಲಾವಣೆಯೂ ಆಗಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. +ಕೆ- ಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಪ್ರಶ್ನೆ ಪತ್ರಿಕೆ -1 ಸಾಮಾನ್ಯವಾಗಿರಲಿದೆ. ಅಭ್ಯರ್ಥಿಗಳು ಪರಿಮಾಣಾತ್ಮಕ ತರಬೇತಿಗಿಂತ ಗುಣಾತ್ಮಕ ತರಬೇತಿಗೆ ಹೆಚ್ಚು ಒತ್ತು ನೀಡಬೇಕಾಗುತ್ತದೆ. ಪ್ರಶ್ನೆ ಪತ್ರಿಕೆ-1 ರ ಪಠ್ಯಕ್ರಮದ ಜೊತೆ ಅದರಲ್ಲಿರುವ ವಿವಿಧ ಮಾದರಿಯ ಪ್ರಶ್ನೆಗಳ ಬಗ್ಗೆ ಜ್ಞಾನ ಹೊಂದಿರಬೇಕು. \ No newline at end of file diff --git a/eesanje/url_46_304_9.txt b/eesanje/url_46_304_9.txt new file mode 100644 index 0000000000000000000000000000000000000000..1eb7abcd9d3cb6d79be0d9f426c46eed4b7b548c --- /dev/null +++ b/eesanje/url_46_304_9.txt @@ -0,0 +1,10 @@ +ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿಎಸ್‌ವೈ ಗರಂ +ಬೆಂಗಳೂರು,ನ.25- ಜಾರಿ ನಿರ್ದೇಶನಾಲಯ(ಇಡಿ)ವು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರಿಂದಲೇ ರಾಜ್ಯ ಸರ್ಕಾರ ಈ ಕ್ರಮವನ್ನು ತೆಗೆದುಕೊಂಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿರ್ಧಾರವನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ. +ಅಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಇಡಿ ಅಕಾರಿಗಳು ಡಿ.ಕೆ.ಶಿವಕುಮಾರ್ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಸಿಬಿಐಗೆ ವಹಿಸುವಂತೆ ಸೂಚನೆ ನೀಡಿದ್ದರಿಂದಲೇ ನಮ್ಮ ಸರ್ಕಾ ಈ ಕ್ರಮವನ್ನು ತೆಗೆದುಕೊಂಡಿತ್ತೆಂದು ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪಡೆದೇ ಸಿಬಿಐ ತನಿಖೆಗೆ ಆದೇಶ ಮಾಡಲಾಗಿತ್ತು. ಇಡಿಯವರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸಿಬಿಐಗೆ ಕೊಡುವಂತೆ ಸೂಚನೆ ಕೊಟ್ಟಿದ್ದರಿಂದ ಆದೇಶ ಮಾಡಿದೆವು.ಇದರಲ್ಲಿ ನಿಯಮಗಳ ಉಲ್ಲಂಘನೆಯಾಗಿರುವುದು ಎಲ್ಲಿಂದ ಎಂದು ಪ್ರಶ್ನೆ ಮಾಡಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇದೆಲ್ಲವೂ ಗೊತ್ತಿದ್ದರೂ ಜನರನ್ನು ದಿಕ್ಕು ತಪ್ಪಿಸಲು ಸುಳ್ಳು ಹೇಳುತ್ತಿದ್ದಾರೆ. ಈಗ ತಿರುಚುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ. ಸಿಬಿಐ ತನಿಖೆ ನಡೆಸುವ ಆದೇಶವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. +ದೀರ್ಘ ಕಾಲದ ಗೆಳತಿಯ ವರಿಸಿದ ನವದೀಪ್ ಶೈನಿ +ಹೇಳಿದ್ದನ್ನೇ ಹೇಳಿ ಸುಳ್ಳನ್ನು ಸತ್ಯ ಮಾಡಲು ಸಿದ್ದರಾಮಯ್ಯ ಮತ್ತು ಅವರ ತಂಡದವರು ಮುಂದಾಗಿದ್ದಾರೆ. ಒಂದಲ್ಲ, ಎರಡಲ್ಲ, ಸಾವಿರ ಬಾರಿ ಹೇಳುತ್ತೇನೆ. ನಾನು ಹೇಳಿದ್ದೇನೋ ಅದಕ್ಕೆ ಬದ್ದನಾಗುತ್ತೇನೆ. ಎಜಿಯವರ ಅಭಿಪ್ರಾಯದ ಮೇರೆಗೆ ಸಿಬಿಐಗೆ ವಹಿಸಿದ್ದೆವು. ಇಂದು ಮುಂದಾದರೂ ಸರ್ಕಾರ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು. +ಮನೆಗೆ ಹೋಗುವವರು ಯಾರು?:ನಮ್ಮ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರುವುದು ಬೇಡ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೂ ಯಡಿಯೂರಪ್ಪ ತಿರುಗೇಟು ಕೊಟ್ಟರು. ಅವರ ಮನೆಗೆ ಹೋಗುತ್ತೇನೆ ಎಂದವರು ಯಾರು ಎಂದು ಬಿಎಸ್‍ವೈ ಪ್ರಶ್ನೆ ಮಾಡಿದರು. +ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ನಾನು ದೂರವಾಣಿಯಲ್ಲಿ ಸಂಪರ್ಕಿಸುವ ಪ್ರಯತ್ನ ಮಾಡಿದೆ. ಅವರಿಗೆ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಮುಂದಿನ ದಿನಗಳಲ್ಲಿ ಅವರ ಜೊತೆ ಮಾತನಾಡುತ್ತೇನೆಎಂದು ಹೇಳಿದರು.ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜೊತೆ ಸೋಮಣ್ಣ ಮಾತನಾಡಿರುವುದನ್ನು ಗಮನಿಸಿದ್ದೇನೆ. ಫೋನ್ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಬರುವ ದಿನಗಳಲ್ಲಿ ಎಲ್ಲವೂ ಇತ್ಯರ್ಥವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. +ಸೋಮಣ್ಣ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲಾಗುವುದು. ಅವರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಏನೇ ಸಮಸ್ಯೆಗಳಿದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಅವರಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು. ಬಿಜೆಪಿ ಬಿಟ್ಟು ಹೋಗುವ ಚಿಂತನೆಯಲ್ಲಿ ಅವರಿಲ್ಲ ಎಂದು ಯಡಿಯೂರಪ್ಪ ಹೇಳಿದರು. \ No newline at end of file diff --git a/eesanje/url_46_305_1.txt b/eesanje/url_46_305_1.txt new file mode 100644 index 0000000000000000000000000000000000000000..e9e3286c2b97cff935b019b92ab084023c30b88c --- /dev/null +++ b/eesanje/url_46_305_1.txt @@ -0,0 +1,11 @@ +ಡಿಕೆಶಿ ಪ್ರಕರಣ, ಕಾನೂನಾತ್ಮಕ ನಿರ್ಧಾರ ತೆಗೆದುಕೊಂಡಿದ್ದೇವೆ : ಪರಮೇಶ್ವರ್ +ಬೆಂಗಳೂರು, ನ.24- ಡಿ.ಕೆ.ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಗೆ ವಹಿಸುವಾಗ ಹಿಂದಿನ ಬಿಜೆಪಿ ಸರ್ಕಾರ ಮಾಡಿದಂತಹ ಲೋಪವನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತನ್ನ ಇತಿ-ಮಿತಿಯಲ್ಲಿ ತೀರ್ಮಾನ ತೆಗೆದುಕೊಂಡಿದೆ. ನಾವು ಪ್ರಕರಣದ ಸತ್ಯಾಸತ್ಯತೆಯ ಜೇಷ್ಠತೆ ಮೇಲೆ ಚರ್ಚೆ ಮಾಡಿಲ್ಲ. ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಆಗಿದ್ದಂತಹ ಲೋಪಗಳ ಬಗ್ಗೆಯಷ್ಟೇ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದರು.ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಕಾರ್ಯದರ್ಶಿ ಅವರಿಗೆ ಮೌಖಿಕ ಸೂಚನೆ ನೀಡಿ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. +ಯಾವುದೇ ಶಾಸಕರ ವಿರುದ್ಧ ತನಿಖೆ ಅಥವಾ ವಿಚಾರಣೆಗೆ ಮುನ್ನ ವಿಧಾನಸಭಾಧ್ಯಕ್ಷರ ಪೂರ್ವಾನುಮತಿ ಅಗತ್ಯ. ಆದರೆ, ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಆ ರೀತಿಯ ಯಾವ ಪ್ರಕ್ರಿಯೆಗಳನ್ನೂ ಪಾಲನೆ ಮಾಡಲಾಗಿಲ್ಲ. +ಹಿಂದಿನ ಸರ್ಕಾರ ಮಾಡಿದ ಈ ಲೋಪಗಳನ್ನು ನಾವು ಮುಂದುವರೆಸಲು ಸಾಧ್ಯವಿಲ್ಲ. ಅದಕ್ಕಾಗಿ ಸರಿಪಡಿಸುವ ಪ್ರಯತ್ನ ಮಾಡಿದ್ದೇವೆ ಎಂದರು. ಪ್ರಕರಣದ ತನಿಖೆಗೆ ಅನುಮತಿ ನೀಡುವಾಗಲೇ ಆಗ ಅಧಿಕಾರದಲ್ಲಿ ಇದ್ದವರಿಗೆ ಜವಾಬ್ದಾರಿ ಇರಬೇಕಿತ್ತು. ಅದರಲ್ಲೂ ಶಾಸಕರ ವಿರುದ್ಧ ಸಿಬಿಐ ತನಿಖೆಗೆ ವಹಿಸುವಂತಹ ಸೂಕ್ಷ್ಮ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆ ಎದುರಾಗಬಹುದು, ನ್ಯಾಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷವಾಗಬಹುದು ಎಂಬ ಅರಿವಿನ ಅಗತ್ಯವಿತ್ತು. +ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ +ಸೂಕ್ಷ್ಮ ಪ್ರಕರಣದಲ್ಲಿ ಮುಖ್ಯಮಂತ್ರಿಯವರು ಮೌಖಿಕ ಸೂಚನೆ ನೀಡಿ ಮುಖ್ಯ ಕಾರ್ಯದರ್ಶಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಾರೆ ಎಂದರೆ ಇದು ರಾಜಕೀಯ ಪ್ರೇರಿತವಲ್ಲವೇ ?ಲಿಖಿತ ಸೂಚನೆ ಇಲ್ಲದೆ ಮೌಖಿಕ ಆದೇಶದ ಮೇಲೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರೆ ಅದನ್ನು ಏನೆಂದು ಭಾವಿಸಬೇಕೆಂದು ಪ್ರಶ್ನಿಸಿದರು. +ಬಿಜೆಪಿ ಸರ್ಕಾರದಲ್ಲಿನ ಅಡ್ವೋಕೇಟ್ ಜನರಲ್ ಅವರು ಈ ಪ್ರಕರಣ ಸಿಬಿಐ ತನಿಖೆಗೆ ಸೂಕ್ತವಲ್ಲ ಎಂದಿದ್ದರು. ನಮ್ಮ ಸರ್ಕಾರದ ಅಡ್ವೋಕೇಟ್ ಜನರಲ್ ಕೂಡ ಇದೇ ಅಭಿಪ್ರಾಯ ಹೇಳಿದ್ದಾರೆ. ಅದರ ಆಧಾರದ ಮೇಲೆ ನಾವು ಪ್ರಕ್ರಿಯೆಗಳಲ್ಲಿನ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ. +ಎರಡು-ಮೂರು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸುತ್ತೇವೆ. ನ್ಯಾಯಾಲಯಕ್ಕೂ ಸಂಪುಟ ಸಭೆಯ ನಿರ್ಧಾರವನ್ನು ತಿಳಿಸಿ ಹಿಂದಿನ ಸರ್ಕಾರ ಮಾಡಿದ್ದು ಸರಿಯಲ್ಲ ಎಂದು ಮನವರಿಕೆ ಮಾಡಿಕೊಡುತ್ತೇವೆ ಎಂದರು. +ರಾಜ್ಯ ಸರ್ಕಾರ ಪ್ರಕರಣದಲ್ಲಿನ ಸತ್ಯಾಸತ್ಯತೆ ಬಗ್ಗೆ ಚರ್ಚಿಸಲು ಹೋಗಿಲ್ಲ. ಡಿ.ಕೆ.ಶಿವಕುಮಾರ್ ಅವರು ಅಕ್ರಮ ಆಸ್ತಿ ಮಾಡಿದ್ದಾರೆಯೇ ? ಹೇಗೆ ಸಂಪಾದಿಸಿದ್ದಾರೆ ಎಂಬ ಬಗ್ಗೆ ನಾವು ಒಂದು ಪದವನ್ನೂ ಪ್ರಸ್ತಾಪಿಸಿಲ್ಲ. ಪ್ರಕ್ರಿಯೆಗಳ ಪಾಲನೆಯಲ್ಲಿ ನಷ್ಟವಾದಾಗ ಅದನ್ನು ಸರಿಪಡಿಸುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ ಎಂದು ಪುನರುಚ್ಚರಿಸಿದರು. +ಸಂಪುಟದ ನಿರ್ಣಯದ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಯಾವ ರೀತಿ ಬೇಕಾದರೂ ವ್ಯಾಖ್ಯಾನ ಮಾಡಿಕೊಳ್ಳಬಹುದು. ನಮಗೆ ಅದರ ಬಗ್ಗೆ ಚಿಂತನೆ ಇಲ್ಲ. ಕಾನೂನಾತ್ಮಕವಾಗಿ ಸರಿಯಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ ಎಂಬುದಷ್ಟೇ ನಮ್ಮ ಸಂದೇಶ ಎಂದರು. \ No newline at end of file diff --git a/eesanje/url_46_305_10.txt b/eesanje/url_46_305_10.txt new file mode 100644 index 0000000000000000000000000000000000000000..dd290f1637a7a7f13f09f818131a6a7c5fe0b778 --- /dev/null +++ b/eesanje/url_46_305_10.txt @@ -0,0 +1,9 @@ +ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್ +ಕೆಂಗೇರಿ, ನ.23- ನನ್ನ ಕಲಾ ಸೇವೆ ಅತ್ಯಂತ ಕಿರಿದು. ನನಗೆ ದೊರೆತಿರುವ ಕರುನಾಡ ಪ್ರೀತಿ ಅತ್ಯಂತ ಹಿರಿದು ಎಂದು ರಾಕಿಂಗ್ ಸ್ಟಾರ್ ಯಶ್ ಇಂದಿಲ್ಲಿ ಹೇಳಿದರು. ಕೆಂಗೇರಿ ಬಳಿಯ ಬಿಜಿಎಸ್ ಹೆಲ್ತ್ ಅಂಡ್ ಎಜುಕೇಷನ್ ಸಿಟಿ ಕ್ಯಾಂಪಸ್‍ನಲ್ಲಿಂದು ನಡೆದ 15ನೆ ಬಿಜಿಎಸ್ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಮಾತ್ರ ಗಮನ ಹರಿಸಿ. ಅಕ್ಕ ಪಕ್ಕದವರ ತೆಗಳಿಕೆಗೆ ಬೆಲೆ ನೀಡಬೇಡಿ ಎಂದು ಸಲಹೆ ನೀಡಿದರು. +ನಿಮ್ಮ ಪ್ರಾಮಾಣಿಕ ಗುರಿಗೆ ಸಹಕಾರ ನೀಡುವವರ ಸಂಪರ್ಕದಲ್ಲಿರಿ. ನಾನು ಕೂಡ ನನ್ನ ಮನದ ಮಾತಿಗೆ ಮಾತ್ರ ಬೆಲೆ ನೀಡಿದ್ದೆ ಎಂದು ಹೇಳಿದರು. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಮೊದಲು ಭೇಟಿ ಮಾಡಿದ ಸಂದರ್ಭ ಇನ್ನೂ ನನ್ನ ಮನದಲ್ಲಿ ಅಚ್ಚ ಹಸಿರಾಗಿದೆ. ಅವರ ದೂರದೃಷ್ಟಿ, ಶೈಕ್ಷಣಿಕ ದೃಷ್ಟಿಕೋನಗಳು, ಸಾಂಸ್ಕøತಿಕ ನಿಲುವುಗಳು ಅಂದೇ ನನ್ನ ಮನಸ್ಸು ಗೆದ್ದಿದ್ದವು ಎಂದು ಹೇಳಿದರು. +ಯಾರೋ ಒಬ್ಬರ ಶ್ರಮ, ಬದ್ಧತೆಯಿಂದ ಒಂದು ಉತ್ತಮ ಸಂಸ್ಥೆ ರೂಪುಗೊಳ್ಳಲು ಸಾಧ್ಯ. ಅದೇ ರೀತಿ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಅವಿರತ ಪ್ರಯತ್ನದಿಂದ ದೇಶದ ಉನ್ನತ ಶಿಕ್ಷಣ ಸಂಸ್ಥೆಯಾಗಿ ಬಿಜಿಎಸ್ ರೂಪುಗೊಂಡಿದೆ ಎಂದು ಶ್ಲಾಘಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಇಲ್ಲಿ ನಮ್ಮ ಮಧ್ಯೆ ಇರುವ ನಟ ಯಶ್ ಎತ್ತರಕ್ಕೆ ಬೆಳೆದಿದ್ದಾರೆ. ಅವರ ಹೆಸರಿನಲ್ಲೇ ಯಶಸ್ಸು ಇದೆ ಎಂದರು. +ಯಾವ ವ್ಯಕ್ತಿ ಗುರು- ಹಿರಿಯರನ್ನು ಗೌರವಿಸುತ್ತಾರೋ, ಅಬಲರಿಗೆ ಬೆಂಬಲ ನೀಡುತ್ತಾರೋ ಹಾಗೂ ಯಶಸ್ಸು ಬಂದಾಗ ಅಹಂಕಾರ ತೋರದೆ ತನ್ನ ಸುತ್ತಮುತ್ತಲಿನ ಜನರೊಂದಿಗೆ ಅದೇ ಸಾಮಾನ್ಯ ಬದುಕು ಸಾಗಿಸುವ ಮನಃಸ್ಥಿತಿ ಹೊಂದಿ ರುವರೋ ಅವರು ಯಶಸ್ಸು ಗಳಿಸಲು ಸಾಧ್ಯ ಎಂದರು. +ಯಾವುದೇ ಕ್ಷೇತ್ರದಲ್ಲಾದರೂ ಅವಿರತ ಪ್ರಯತ್ನ ಮಾಡಬೇಕು. ವಿಶೇಷ ಆವಿಷ್ಕಾರದಲ್ಲಿ ಚಿತ್ತ ಹರಿಸಬೇಕು. ಈ ನಿಟ್ಟಿನಲ್ಲಿ ಕಲೆ ಮತ್ತು ಸಂಸ್ಕøತಿಗೆ ಬೆಲೆ ನೀಡಬೇಕು. ಈ ನಿಟ್ಟಿನಲ್ಲಿ ಸಾಗುತ್ತಿರುವ ಯಶ್ ಅವರು ವರನಟ ರಾಜ್‍ಕುಮಾರ್ ಅವರಂತೆ ಸಾಧನೆಯ ಹಾದಿಯಲ್ಲಿದ್ದಾರೆ ಎಂದು ಅವರು ಶ್ಲಾಘಿಸಿದರು. +ಶಿಕ್ಷಣಕ್ಕೆ ದೊರಕುವಂತಹ ಮಹತ್ವ ಕ್ರೀಡೆಗೂ ದೊರಕಬೇಕು. ಕ್ರೀಡೆ ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಸುವುದರೊಂದಿಗೆ ದೇಶದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್. ಗೋವಿಂದರಾಜು ಹೇಳಿದರು. ಬಿಜಿಎಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಾಧನೆ ಮಾಡಿದ ಇಬ್ಬರು ಪ್ರಾಧ್ಯಾಪಕರಾದ ಸವಿತಾ ಸುವರ್ಣ ಹಾಗೂ ಡಾ.ಶಾಂತಕುಮಾರ್ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. +ಇದೇ ವೇಳೆ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಬಿಜಿಎಸ್ ದಂತ ವೈದ್ಯಕೀಯ ಕಾಲೇಜಿನ ಹೊಸ ಕಟ್ಟಡವನ್ನು ಕೂಡ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜಿಎಸ್ ಶಿಕ್ಷಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಶ್ರೀ ಪ್ರಕಾಶನಾಥ ಸ್ವಾಮೀಜಿ, ಶಾಸಕ ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. +ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನರಂಜನಾ ಕಾರ್ಯಕ್ರಮ ಕೂಡ ಗಮನ ಸೆಳೆಯಿತು. \ No newline at end of file diff --git a/eesanje/url_46_305_11.txt b/eesanje/url_46_305_11.txt new file mode 100644 index 0000000000000000000000000000000000000000..9e330cb94443817220fa95db83556056639566f1 --- /dev/null +++ b/eesanje/url_46_305_11.txt @@ -0,0 +1,9 @@ +ಕುತೂಹಲ ಮೂಡಿಸಿದೆ ರಾಜಣ್ಣ-ಪರಂ ಉಪಹಾರ ಕೂಟ +ತುಮಕೂರು,ನ.23- ರಾಜ್ಯ ಸರ್ಕಾರದಲ್ಲಿ ಪ್ರಭಾವಿಗಳಾಗಿರುವ ಇಬ್ಬರು ಸಚಿವರು ಇಂದು ಪರಸ್ಪರ ಭೇಟಿಯಾಗಿ ಉಪಹಾರ ಕೂಟ ನಡೆಸಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂದು ಬೆಳಗ್ಗೆ ಭೇಟಿಯಾಗಿ ಚರ್ಚೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. +ಈ ಮೊದಲು ಪರಮೇಶ್ವರ್ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಅವರ ಜೊತೆ ಭೋಜನಕೂಟ ನಡೆಸಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ರಾಜಕಾರಣದಲ್ಲಿ ಇದ್ದಕ್ಕಿದ್ದ ಹಾಗೆ ಸಿದ್ದರಾಮಯ್ಯನವರ ಗುಂಪಿಗೆ ಸ್ಥಳಾಂತರಗೊಂಡಿರುವ ಪರಮೇಶ್ವರ್ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ರಾಜಣ್ಣ ಜಾತಿ ಆಧಾರಿತವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಪದೇ ಪದೇ ಒತ್ತಾಯಿಸುತ್ತಿದ್ದಾರೆ. +ಡಿ.ಕೆ.ಶಿವಕುಮಾರ್ ಅವರು ತಮ್ಮನ್ನು ಹೊರತುಪಡಿಸಿ ಬೇರೆಯವರನ್ನು ಉಪಮುಖ್ಯಮಂತ್ರಿ ಮಾಡಬಾರದೆಂದು ಹೈಕಮಾಂಡ್ ಮಟ್ಟದಲ್ಲಿ ಪಟ್ಟು ಹಿಡಿದಿದ್ದಾರೆ. ಅಲ್ಲದೆ ಡಿ.ಕೆ.ಶಿವಕುಮಾರ್‍ರವರ ಪ್ರಭಾವ ತಗ್ಗಿಸಲು ಸಿದ್ದರಾಮಯ್ಯನವರ ಬಣ ನಾನಾ ರೀತಿಯ ರಣತಂತ್ರಗಳನ್ನು ರೂಪಿಸುತ್ತಿದೆ. +ಪರಮೇಶ್ವರ್ ಮತ್ತು ರಾಜಣ್ಣ ಈ ಮೊದಲು ವಿಧಾನಪರಿಷತ್ ಸದಸ್ಯರ ನೇಮಕಾತಿ ವೇಳೆ ಬಹಿರಂಗ ಅಸಮಾಧಾನ ಹೊರಹಾಕಿದ್ದರು. ಅದೆಲ್ಲವನ್ನು ದಾಟಿ ಡಿ.ಕೆ.ಶಿವಕುಮಾರ್ ತಮ್ಮ ಆಪ್ತರನ್ನು ಪರಿಶಿಷ್ಟ ಜಾತಿ ಕೋಟಾದಡಿ ವಿಧಾನಪರಿಷತ್‍ಗೆ ಆಯ್ಕೆ ಮಾಡಿದ್ದರು. ಅದರ ನಂತರ ಪರಮೇಶ್ವರ್ ಮತ್ತು ತಂಡ ಡಿ.ಕೆ.ಶಿವಕುಮಾರ್ ವಿರುದ್ಧ ಒಳಗೊಳಗೆ ಶೀತಲ ಸಮರ ನಡೆಸುತ್ತಿದೆ. ಇದಕ್ಕೆ ಅನುಗುಣವಾಗಿ ಇತ್ತೀಚೆಗೆ ಶುರುವಾಗಿರುವ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಕೆಲವರ ಪಾರುಪತ್ಯ ನಡೆಯುತ್ತಿದೆ ಎಂಬ ಆರೋಪಗಳಿವೆ. +ಜಾತಿಗಣತಿ ಸಮೀಕ್ಷೆಯನ್ನು ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ : ಆರ್.ಅಶೋಕ್ +ಅನ್ಯ ಪಕ್ಷಗಳಿಂದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಕರೆತರಲು ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬ ಆಕ್ಷೇಪಗಳಿವೆ. ತುಮಕೂರು ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಅವರನ್ನು ಕಾಂಗ್ರೆಸ್‍ಗೆ ಕರೆತರಲಾಗಿತ್ತು. ಪರಮೇಶ್ವರ್ ಮತ್ತು ಕೆ.ಎನ್.ರಾಜಣ್ಣ ಅವರಿಲ್ಲದೆ ಕೆಪಿಸಿಸಿ ಕಚೇರಿಯಲ್ಲಿ ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಕೆ.ಎನ್.ರಾಜಣ್ಣ ಈ ಕುರಿತಂತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು. +ಮೂಲಗಳ ಪ್ರಕಾರ ಗೌರಿಶಂಕರ್ ಸೇರ್ಪಡೆಗೆ ಪರಮೇಶ್ವರ್ ಬೆಂಬಲವಿದೆ ಎನ್ನಲಾಗುತ್ತಿದೆ. ಸಮಾಧಾನಗೊಂಡಿರುವ ರಾಜಣ್ಣ ಅವರನ್ನು ಸಮಾಧಾನಪಡಿಸಲು ಪರಮೇಶ್ವರ್ ಉಪಹಾರಕೂಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. +ಆದರೂ ತೆರೆಮರೆಯ ವದಂತಿಗಳ ಪ್ರಕಾರ ಬೆಳಗಾವಿ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡಿದಂತೆ ತುಮಕೂರು ಜಿಲ್ಲಾ ರಾಜಾಕರಣದಲ್ಲೂ ಹಸ್ತಕ್ಷೇಪಗಳಾಗುತ್ತಿವೆ. ಅದಕ್ಕೆ ಕಡಿವಾಣ ಹಾಕಲು ಪರಮೇಶ್ವರ್ ಮತ್ತು ರಾಜಣ್ಣ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_305_12.txt b/eesanje/url_46_305_12.txt new file mode 100644 index 0000000000000000000000000000000000000000..387c66ca2a11fe94be813ff7dc47de63ee1e1266 --- /dev/null +++ b/eesanje/url_46_305_12.txt @@ -0,0 +1,7 @@ +ಸಿದ್ದು ಸರ್ಕಾರದ 6 ತಿಂಗಳ ವೈಫಲ್ಯಗಳನ್ನು ಪಟ್ಟಿ ಮಾಡಿದ ಬಿಜೆಪಿ +ಬೆಂಗಳೂರು,ನ.23- ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಆರು ತಿಂಗಳು ಪೂರೈಸಿದ್ದು, ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಧನೆಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದೆ. +ಸಿದ್ದರಾಮಯ್ಯ ಸರ್ಕಾರ ಮಾಡಿದ ಸಾಧನೆಗಳ ಪಟ್ಟಿ!ಬರಗಾಲ ನಿರ್ವಹಣೆ ವೈಫಲ್ಯ ಕಲುಷಿತ ನೀರಿನಿಂದ ಅಪಾರ ಸಾವು-ನೋವು ರೈತರ ಸರಣಿ ಆತ್ಮಹತ್ಯೆ, ಶ್ಯಾಡೋ ಸಿಎಂ ಪ್ರಭಾವ, ವರ್ಗಾವಣೆ ದಂಧೆ, ಗುತ್ತಿಗೆದಾರರಿಂದ ಕಲೆಕ್ಷನ್100 ಕೋಟಿ ಅಕ್ರಮ ಹಣ ಮಂಚದಡಿ ಪತ್ತೆ , ಹಿಂದೂಗಳ ಮೇಲೆ ಹಲ್ಲೆ -ಹತ್ಯೆ, ಪಂಚ ರಾಜ್ಯ ಚುನಾವಣೆಗೆ ಹಣ ಸಾಗಾಟ ಕಾಸಿಗಾಗಿ ಪೋಸ್ಟಿಂಗ್, ಅಕ್ರಮ ನೇಮಕಾತಿ ಪರೀಕ್ಷೆ , ಶಾಸಕರಿಗಿಲ್ಲ ಅನುದಾನ, ಕುರ್ಚಿಗಾಗಿ ಕಾದಾಟ ಸಿಎಂ ಡಿನ್ನರ್, ಬ್ರೇಕ್‍ಫಾಸ್ಟ್ ಪಾರ್ಟಿ, ಕಳ್ಳತನದಿಂದ ಕಾವೇರಿ ಪೂರೈಕೆ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಅಧಿಕಾರ ಎಂದು ಟೀಕಿಸಿದೆ. +ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ +ಆರು ತಿಂಗಳಿಗೆ ಇಷ್ಟೆಲ್ಲಾ ಹಳವಂಡಗಳಾದರೆ, ಒಂದು ವರ್ಷಕ್ಕೆ ಕರ್ನಾಟಕದ ಪರಿಸ್ಥಿತಿ ಹೇಗಿರಬೇಡ ಯೋಚಿಸಿ..! ನಾನೇ ಮುಂದಿನ ಸಿಎಂ, ನಮ್ಮವರೇ ಮುಂದಿನ ಸಿಎಂ ಎಂದು ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬರು ಹೇಳಿಕೆ ಕೊಡುತ್ತಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿ ಕೂತ ಮಹನೀಯರು ಆ ಸ್ಥಾನದ ಘನತೆಯನ್ನು ಮರೆತು ಕಲೆಕ್ಷನ್ ಮಾಸ್ಟರ್ ಆಗಿರುವ ಕಾರಣ ಚೀಫ್ ಮಿನಿಸ್ಟರ್ ಎಂಬ ಸಿಎಂ ಕುರ್ಚಿ ಖಾಲಿ ಇದೆ ಎಂದು ಲೇವಡಿ ಮಾಡಿದೆ. +ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿಯ ದಂಗಲ್ ದಿನೇ ದಿನೇ ಜಾಸ್ತಿಯಾಗುತ್ತಿದೆ. ಸಿಎಂ ಕುರ್ಚಿಯ ಸಲುವಾಗಿ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ ಫೈಟ್ ಜೋರಾಗಿದ್ದು, ಸಚಿವರು ಹಾದಿಬೀದಿಯಲ್ಲಿ ಕಿತ್ತಾಡುತ್ತಿದ್ದು, ರಾಜ್ಯದ ಆಡಳಿತ ಮಾತ್ರ ಮೂರಾಬಟ್ಟೆಯಾಗಿದೆ ಎಂದು ವ್ಯಂಗ್ಯವಾಡಿದೆ. +ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಕ್ಷದಲ್ಲಿ ದಿನಕ್ಕೊಬ್ಬ ಸಿಎಂ ಕ್ಯಾಂಡಿಡೇಟ್ ಹುಟ್ಟಿಕೊಳ್ಳುತ್ತಿರುವುದನ್ನು ನೋಡಿದರೆ, ನಿಮ್ಮ ಆಡಳಿತ ಅದ್ಯಾವ ಪರಿ ಹದಗೆಟ್ಟಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಬಿಜೆಪಿ ಕುಟುಕಿದೆ. \ No newline at end of file diff --git a/eesanje/url_46_305_2.txt b/eesanje/url_46_305_2.txt new file mode 100644 index 0000000000000000000000000000000000000000..dab872edc979101bcfcf3ef9d18302f81c82dd26 --- /dev/null +++ b/eesanje/url_46_305_2.txt @@ -0,0 +1,12 @@ +ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ +ಬೆಂಗಳೂರು ನ 24: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. +ಸಾರಿಗೆ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಕಾರ್ಯಕಮವನ್ನು ಉದ್ಘಾಟಿಸಿ ಅಪಘಾತ ರಹಿತ ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಮಾತನಾಡಿದರು. +ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಇದು ಕಣ್ಣ ಮುಂದಿದೆ. ಆದರ ದಾಖಲೆ ಕಣ್ಣ ಮುಂದಿದೆ. ಬಿಜೆಪಿಯವರು ನಿರ್ಲಜ್ಜವಾಗಿ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು ಎಂದರು. +ಜೂನ್ 11 ಕ್ಕೆ ಶಕ್ತಿ ಯೋಜನೆ ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ದಾಖಲೆಗಳು ಕಣ್ಣ ಮುಂದಿವೆ. ಆದರೂ ಈ ಬಿಜೆಪಿ ನಾಯಕರು ಯಾಕಿಷ್ಟು ಸುಳ್ಳು ಹೇಳುತ್ತಾರೆ ಎಂದು ಪ್ರಶ್ನಿಸಿದರು. +ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಸೇರಿದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಹೊಟ್ಟೆಕಿಚ್ಚಿನ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. +1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ. ಇದು ಬಿಜೆಪಿಯವರ ಹೊಟ್ಟಿಕಿಚ್ಚಿಗೆ ಕಾರಣವಾಗಿದೆ ಎಂದು ವಿವರಿಸಿದರು. +ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ +ಜತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಪ್ರಶ್ನಿಸಿದರು. +ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ , ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ವಿವರಿಸಿದರು. +ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡವರಿಗೆ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದು ಸಿಎಂ ದಿಟ್ಟವಾಗಿ ಮಾತನಾಡಿದರು. +ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_305_3.txt b/eesanje/url_46_305_3.txt new file mode 100644 index 0000000000000000000000000000000000000000..5cf062f8d6a8c1653e37b092d7c1f3c1632d461b --- /dev/null +++ b/eesanje/url_46_305_3.txt @@ -0,0 +1,8 @@ +ಸಾರಿಗೆ ಇಲಾಖೆ ಖಾಲಿ ಇರುವ 9000 ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು,ನ.24- ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಒಂಭತ್ತು ಸಾವಿರ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ, ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು, ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. +ಕಳೆದ ಏಳು ವರ್ಷದಿಂದ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳು ನೇಮಕವಾಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಿದ್ದಾರೆ. ನಾಲ್ಕು ಸಾರಿಗೆ ಸಂಸ್ಥೆಗಳಿಗೆ 5,500 ಹೊಸ ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. ಸಂಕಷ್ಟದ ಸಂದರ್ಭದಲ್ಲೂ ಶಕ್ತಿ ಯೋಜನೆ ಮೂಲಕ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಯಿತು ಎಂದು ಹೇಳಿದರು. +ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ +ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ್ದ 5 ಗ್ಯಾರಂಟಿಗಳಲ್ಲಿ ಶಕ್ತಿಯೂ ಒಂದಾಗಿದ್ದು, ಅಧಿಕಾರಕ್ಕೆ ಬಂದ 15 ದಿನದಲ್ಲೆ ಜಾರಿಗೆ ತಂದಿದ್ದೇವೆ. ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ತಮಿಳುನಾಡು ಮತ್ತು ದೆಹಲಿಯಲ್ಲಿ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಿದೆ. +ಮಹಾರಾಷ್ಟ್ರದಲ್ಲಿ ಶೇ.50ರಷ್ಟು ರಿಯಾಯ್ತಿ ಇದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವಿದೆ ಎಂದು ಸಚಿವರು ತಿಳಿಸಿದರು. ಶಕ್ತಿ ಯೋಜನೆ ಆರಂಭದಿಂದ ಈತನಕ 1.58 ಲಕ್ಷ ಟ್ರಿಪ್‍ಗಳಲ್ಲಿ ಶತಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದು, ಈ ಯೋಜನೆ ಯಶಸ್ವಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. +ಶಾಲಾ ವಿದ್ಯಾರ್ಥಿನಿಯರು, ಮಹಿಳೆಯರು ಪ್ರವಾಸಿ ಕೇಂದ್ರಗಳು, ಯಾತ್ರಾ ಸ್ಥಳಗಳಿಗೆ, ದೇವಾಲಯಗಳಿಗೆ ಖುಷಿಯಿಂದ ಹೋಗುತ್ತಿದ್ದಾರೆ ಎಂದರು. ಕೆಎಸ್‍ಆರ್‍ಟಿಸಿಯಲ್ಲಿ 1 ಕೋಟಿ ರೂ.ವರೆಗೂ ಹಾಗು ಇತರೆ ಸಂಸ್ಥೆಗಳಲ್ಲಿ 50 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ ಒದಗಿಸಲಾಗಿದ್ದು, ಉಚಿತ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. 15 ವರ್ಷ ಅಪಘಾತ ರಹಿತ ವಾಹನ ಚಾಲನೆ ಮಾಡಿದ ಚಾಲಕರಿಗೆ ಮುಖ್ಯಮಂತ್ರಿಗಳು ಚಿನ್ನದ ಪದಕ ನೀಡಿ ಗೌರವಿಸಿದ್ದಾರೆ. ದೇಶದಲ್ಲೇ ಅತಿಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಕೆಎಸ್‍ಆರ್‍ಟಿಸಿಗೆ ಲಭಿವಿಸಿವೆ ಎಂದರು. +ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಶಾಸಕ ಸೌಮ್ಯ ರೆಡ್ಡಿ, ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_305_4.txt b/eesanje/url_46_305_4.txt new file mode 100644 index 0000000000000000000000000000000000000000..2f70c72b15226b965a7e262f5ddc925e2111fe0c --- /dev/null +++ b/eesanje/url_46_305_4.txt @@ -0,0 +1,14 @@ +ಸಾಂವಿಧಾನಿಕ ಸಂಘರ್ಷಕ್ಕೆ ಮುನ್ನುಡಿ ಬರೆದ ಸಂಪುಟ ನಿರ್ಣಯ +ಬೆಂಗಳೂರು, ನ.24- ಕಳೆದ ಒಂದು ತಿಂಗಳಿನಿಂದಲೂ ತೆರೆ ಮರೆಯಲ್ಲಿ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದ್ದ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ತನಿಖೆಯ ಅನುಮತಿ ವಿಚಾರ ಕೊನೆಗೂ ಸಂಪುಟದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ಮಹತ್ವದ ಘಟ್ಟಕ್ಕೆ ತಲುಪಿದೆ. +ಸಚಿವ ಸಂಪುಟದ ನಿರ್ಣಯದ ಬಗ್ಗೆ ವಿಪಕ್ಷಗಳಷ್ಟೇ ಅಲ್ಲ ಸ್ವಪಕ್ಷದಲ್ಲೂ ತೀವ್ರ ಅಸಮಾಧಾನಗಳು ಕೇಳಿ ಬರುತ್ತಿವೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಅಡ್ವೋಕೇಟ್ ಜನರಲ್ ಅವರ ಅಭಿಪ್ರಾಯಗಳನ್ನು ಕಡೆಗಣಿಸಿ ಬಿಜೆಪಿಯ ದೆಹಲಿ ನಾಯಕರ ಒತ್ತಡಕ್ಕೆ ಮಣಿದು ಸಿಬಿಐ ತನಿಖೆಗೆ ಮುಖ್ಯಕಾರ್ಯದರ್ಶಿ ಅವರಿಂದ ಅನುಮತಿ ಕೊಡಿಸಿದ್ದರು ಎಂಬ ಆರೋಪಗಳಿವೆ. +ಸಿಬಿಐ ಈಗಾಗಲೇ ಶೇ.80ರಷ್ಟು ತನಿಖೆ ಮುಗಿದಿದೆ ಎಂದು ನ್ಯಾಯಾಲಯದಲ್ಲಿ ಪ್ರತಿಪಾದಿಸಿದ್ದರಿಂದಾಗಿ ಡಿ.ಕೆ.ಶಿವಕುಮಾರ್ ಅವರು ಸಲ್ಲಿಸಿದ್ದ ತಗಾದೆ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ವಜಾಗೊಂಡಿತ್ತು.ಹೈಕೋರ್ಟ್‍ನಲ್ಲೇ ಪ್ರಕರಣ ಇತ್ಯರ್ಥಗೊಳಿಸುವಂತೆ ಸೂಚನೆ ನೀಡಿತ್ತು. ಹೈಕೋರ್ಟ್ ಕೂಡ ಸಿಬಿಐ ವಾದವನ್ನು ಪರಿಗಣಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು. +ಈಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಅನುಮತಿ ನೀಡಿದ ನಿರ್ಧಾರವನ್ನು ಹಿಂಪಡೆದುಕೊಳ್ಳುವ ಮೂಲಕ ಸಾಂವಿಧಾನಿಕ ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. ಗುಜರಾತ್‍ನ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯಬೇಕಿದ್ದ ಸಮಯದಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿತ್ತು. ಆ ವೇಳೆ ಕಾಂಗ್ರೆಸ್ ನೆರವಿಗೆ ಬಂದಂತಹ ಡಿ.ಕೆ.ಶಿವಕುಮಾರ್ ಅವರು ಅಲ್ಲಿನ ಎಲ್ಲಾ ಶಾಸಕರನ್ನು ಬೆಂಗಳೂರಿಗೆ ಕರೆತಂದು ರೆಸಾರ್ಟ್‍ನಲ್ಲಿರಿಸಿ ಭದ್ರತೆ ಒದಗಿಸಿದ್ದರು. +ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ +ಆ ವೇಳೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬಳಿಕ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. 58 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿ ಡಿ.ಕೆ.ಶಿವಕುಮಾರ್ ಸೆರೆವಾಸ ಅನುಭವಿಸಿದ್ದರು. ಒಂದೇ ಸ್ವರೂಪದ ಪ್ರಕರಣದಲ್ಲಿ ಪದೇ ಪದೇ ಬಂಧಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಹದ್ಧುಬಸ್ತಿನಲ್ಲಿಡಲು ಒತ್ತಾಯ ಪೂರ್ವಕವಾಗಿ ಸಿಬಿಐ ತನಿಖೆಗೆ ಒಪ್ಪಿಸಲಾಗಿತ್ತು ಎಂಬ ಆರೋಪಗಳಿವೆ. +ಇದನ್ನು ಡಿ.ಕೆ.ಶಿವಕುಮಾರ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಿದ್ದರು. ತನಿಖೆ ಅಂತಿಮ ಘಟ್ಟದಲ್ಲಿದೆ ಎಂದು ಸಿಬಿಐ ವಾದಿಸಿದ್ದರಿಂದ ನ್ಯಾಯಾಲಯ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ರಾಜ್ಯ ವಿಧಾನಸಭೆ ಚುನಾವಣೆ ಬಳಿಕ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜಕೀಯವಾಗಿ ತಿರುಗೇಟು ನೀಡಲು ಮುಂದಾಗಿದೆ. +ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸುವ ಪ್ರಸ್ತಾವನೆಗೆ ಅಂಗೀಕಾರ ನೀಡುವ ಮೂಲಕ ಸಂಪುಟ ಸಭೆ ಕಾನೂನು ಸಂಘರ್ಷಕ್ಕೆ ಮುನ್ನುಡಿ ಬರೆದಿದೆ. ಸಂಪುಟದಲ್ಲಿ ಪ್ರಸ್ತಾವನೆಯ ಅಂಗೀಕಾರಕ್ಕಾಗಿ ಡಿ.ಕೆ.ಶಿವಕುಮಾರ್ ಅವರು ಕಳೆದ ಒಂದು ತಿಂಗಳಿನಿಂದಲೂ ಭಾರೀ ಲಾಬಿ ನಡೆಸಿದ್ದರು. ದೆಹಲಿಯಿಂದ ಎಐಸಿಸಿಯ ರಣದೀಪ್‍ಸಿಂಗ್ ಸುರ್ಜೆವಾಲ ಅವರು ಬೆಂಗಳೂರಿಗೆ ಬಂದು ಮುಖ್ಯಮಂತ್ರಿಯವರೊಂದಿಗೆ ವಿಶೇಷ ಸಭೆ ನಡೆಸಿದ್ದು ಕೂಡ ಇದೇ ಕಾರಣಕ್ಕೆ ಎಂದು ಹೇಳಲಾಗಿದೆ. +ಡಿ.ಕೆ.ಶಿವಕುಮಾರ್ ಅವರ ಒತ್ತಡವನ್ನು ನಿಭಾಯಿಸಲಾಗದೆ, ಗೃಹ ಸಚಿವ ಪರಮೇಶ್ವರ್ ಅವರು ತಮ್ಮ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಭೋಜನ ಕೂಟ ನಡೆಸಿ ಚರ್ಚಿಸಿದ್ದರು.ಸಂಪುಟದ ಬಹುತೇಕ ಸಚಿವರು ಈ ರೀತಿ ನಿರ್ಣಯ ತೆಗೆದುಕೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದರು ಎನ್ನಲಾಗಿದೆ. +ನಾಳೆ ನ್ಯಾಯಾಲಯದಲ್ಲಿ ಸಂಪುಟದ ನಿರ್ಣಯಕ್ಕೆ ಹಿನ್ನಡೆಯಾದರೆ ಸರ್ಕಾರಕ್ಕೆ ಮುಖಭಂಗವಾಗಲಿದೆ. ಲೋಕಸಭೆ ಚುನಾವಣೆ ವೇಳೆಗೆ ಇದು ರಾಜಕೀಯವಾಗಿ ಭಾರೀ ಹಾನಿ ಮಾಡುವ ಆತಂಕ ಇದೆ ಎಂದು ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಆದರೆ, ಅದ್ಯಾವುದನ್ನೂ ಲೆಕ್ಕಸಿದೆ ನಿರ್ಣಯ ತೆಗೆದು ಕೊಳ್ಳಲೇಬೇಕೆಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿದೆ. +ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್‍ಡಿಕೆ ಆಕ್ರೋಶ +ರಾಜಕೀಯವಾಗಿ ಯಾವುದೇ ಪರಿಣಾಮವಾದರೂ ನಾನು ಎದುರಿಸುತ್ತೇನೆ. ಸಂಪುಟದಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ಸರ್ಕಾರ ಈ ಹಿಂದಿನ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ವಾದವಾಗಿತ್ತು ಎನ್ನಲಾಗಿದೆ. +ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅಸಮಾಧಾನಗೊಂಡಿದ್ದರು. ಪಕ್ಷ ಹಾಗೂ ಸರ್ಕಾರದ ಹಲವು ಸಭೆ-ಸಮಾರಂಭಗಳಿಂದ ದೂರ ಉಳಿಯಲಾರಂಭಿಸಿದ್ದರು ಎಂದು ಹೇಳಲಾಗಿದೆ.ಒಂದು ತಿಂಗಳಿನಿಂದ ನಡೆದ ಸಂಘರ್ಷ ಮಹತ್ವದ ಘಟ್ಟಕ್ಕೆ ಬಂದಿದೆ. ಸಂಪುಟ ಸಭೆಯ ನಿರ್ಣಯದ ಬಳಿಕ ಕಾನೂನಾತ್ಮಕ ವಾದ-ಪ್ರತಿವಾದಗಳು ಮುಂದುವರೆಯುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_305_5.txt b/eesanje/url_46_305_5.txt new file mode 100644 index 0000000000000000000000000000000000000000..e1df1b2876e8eb039416e5f01a2cb60be07149c9 --- /dev/null +++ b/eesanje/url_46_305_5.txt @@ -0,0 +1,21 @@ +ಡಿಕೆಶಿ ವಿರುದ್ಧ ಸಿಬಿಐ ತನಿಖೆ ಕಾನೂನು ಬಾಹಿರ: ಸಚಿವ ಪ್ರಿಯಾಂಕ್ ಖರ್ಗೆ + +ಬೆಂಗಳೂರು,ನ.24- ಡಿ.ಕೆ.ಶಿವ ಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಹಿಂದಿನ ಬಿಜೆಪಿ ಸರ್ಕಾರದ ನಿರ್ಧಾರ ರಾಜಕೀಯ ಪ್ರೇರಿತ ಮತ್ತು ಸಂಪೂರ್ಣ ಕಾನೂನುಬಾಹಿರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. +ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ನಡೆದ ಪ್ರಕ್ರಿಯೆಗಳ ದಾಖಲಾತಿ ಗಳೊಂದಿಗೆ ಸಮಗ್ರ ವಿವರಣೆ ನೀಡಿದರು ಜೊತೆಗೆ ಬಿಜೆಪಿ ನಾಯಕರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. +ಸಿಬಿಐ ತನಿಖೆಗೆ ಅನುಮತಿ ನೀಡಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆದ ಬಳಿಕ ಬಿಜೆಪಿಯ ನಾಯಕರು ಸಂವಿಧಾನಕ್ಕೆ ಅಪಚಾರವಾಗಿದೆ ಎಂದು ದೊಡ್ಡ ಮಟ್ಟದಲ್ಲಿ ಟೀಕೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಸಂವಿಧಾನವನ್ನು ಗೌರವಿಸುತ್ತದೆ. ಅದರಂತೆ ನಡೆದುಕೊಳ್ಳುತ್ತದೆ. ಬಿಜೆಪಿಯವರು ನಿಯಮಾವಳಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಅನುಮತಿ ನೀಡಿದ್ದರು. ಇದರ ಹಿಂದೆ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರನ್ನು ಹತ್ತಿಕ್ಕುವ ರಾಜಕೀಯಪ್ರೇರಿತ ದುರದ್ದೇಶವಿತ್ತು ಎಂದು ಆರೋಪಿಸಿದರು. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲರ ವಿರುದ್ದವೂ ಬಿಜೆಪಿ ಅಧಿಕಾರಕ್ಕೆ ಬಂದ 9 ವರ್ಷಗಳಿಂದಲೂ ರಾಜಕೀಯ ಕಾರಣಕ್ಕಾಗಿ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಒಂದಿಲ್ಲೊಂದು ತನಿಖೆ ನಡೆಯುತ್ತಿವೆ. ಚುನಾವಣೆ ವೇಳೆ ಕಾಂಗ್ರೆಸಿಗರ ಮೇಲೆ ಐಟಿ ದಾಳಿಗಳಾಗುತ್ತವೆ. ಅದೇ ಬಿಜೆಪಿ ಯವರು ದರೋಡೆ ಮಾಡಿರಲಿ, ಕೊಲೆ ಮಾಡಿದ್ದರೂ ಕೂಡ ಯಾವುದೇ ಕ್ರಮಗಳಾಗುವುದಿಲ್ಲ ಎಂದು ಟೀಕಿಸಿದರು. +ಡಿ.ಕೆ.ಶಿವಕುಮಾರ್ ಪ್ರಕರಣದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಯಡಿಯೂರಪ್ಪ ವಿರುದ್ಧ ಇರುವ ಪ್ರಕರಣ, ಬಿಟ್ ಕಾಯಿನ್ ಹಗರಣ, ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದ ಆರೋಪಗಳ ಬಗ್ಗೆ ಏಕೆ ಪ್ರಸ್ತಾಪ ಮಾಡುವುದಿಲ್ಲ, ಸಿಬಿಐ ತನಿಖೆಗೆ ಏಕೆ ಒತ್ತಾಯಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. +75 ವರ್ಷಗಳ ಇತಿಹಾಸದಲ್ಲಿ ಅಕ್ರಮ ಆಸ್ತಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಉದಾರಹಣೆಗಳಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಪ್ರಕರಣದಲ್ಲಿ ಆತುರಾತುರವಾಗಿ ಯಾವ ಕಾರಣಕ್ಕೆ ನಿರ್ಧಾರ ಕೈಗೊಳ್ಳಲಾಯಿತು ಎಂಬುದಕ್ಕೆ ಬಿಜೆಪಿಯವರು ಉತ್ತರಿಸಬೇಕು ಎಂದು ಸವಾಲು ಹಾಕಿದರು. +ಪ್ರಸ್ತುತ ನಮ್ಮ ಸರ್ಕಾರ ಸಾಂವಿಧಾನಿಕವಾಗಿ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ನಾವು ಯಾವುದೇ ವೇದಿಕೆಯಲ್ಲಾದರೂ ಚರ್ಚೆಗೆ ಸಿದ್ದರಿದ್ದೇವೆ. ಬಿಜೆಪಿಯವರು ಬರಲಿ, ವಿಧಾನಮಂಡಲದಲ್ಲೂ ಚರ್ಚೆಯಾಗಲಿ. ಸುಪ್ರೀಂಕೋರ್ಟ್‍ನ ಮೂರು ತೀರ್ಪುಗಳಿವೆ. ಅವುಗಳನ್ನು ಆಧರಿಸಿಯೇ ನಾವು ಪ್ರಕರಣಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದ್ದೇವೆ ಎಂದು ಸಮರ್ಥಿಸಿಕೊಂಡರು. ನಮಗೆ ಯಾವುದೇ ಭಯವಿಲ್ಲ. +ಬಿಜೆಪಿಯವರದು ಅವಿವೇಕತನದ ಪರಮಾವ. ಕೇಂದ್ರ ಸರ್ಕಾರದ ಮಾನದಂಡಗಳು, ನಿಯಮಗಳಿಗೆ ವಿರುದ್ಧವಾಗಿ ಯಡಿಯೂರಪ್ಪ ಅವರ ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಅದನ್ನು ನಾವು ಸರಿಪಡಿಸಿದ್ದೇವೆ. ಆದರೆ ಕಾನೂನಿನ ಪರಿಜ್ಞಾನ ಇಲ್ಲದ ಬಿಜೆಪಿಯವರು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ದೂರಿದರು. +ಡಿ.ಕೆ.ಶಿವಕುಮಾರ್ ವಿರುದ್ಧ ಇರುವ ಪ್ರಕರಣ ಗಳು ಸಂಪೂರ್ಣ ವೈಯಕ್ತಿಕ. ಅದನ್ನು ಅವರು ಕಾನೂನಾತ್ಮಕವಾಗಿಯೇ ನಿಭಾಯಿಸಿಕೊಳ್ಳುತ್ತಾರೆ. ಪಕ್ಷ ಅವರ ಬೆಂಬಲಕ್ಕಿದೆ. ನಮ್ಮ ಮುಂದಿರುವ ಪ್ರಶ್ನೆ ಎಂದರೆ ಸಿಬಿಐ ತನಿಖೆಗೆ ಅನುಮತಿ ನೀಡಿರುವ ಲೋಪಗಳ ಕುರಿತಾಗಿದೆ ಎಂದು ವಿವರಿಸಿದರು. +ಜಾರಿ ನಿರ್ದೇಶನಾಲಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ 2019ರ ಸೆಪ್ಟೆಂಬರ್ 9ರಂದು ಪತ್ರ ಬರೆದು ಡಿ.ಕೆ.ಶಿವಕುಮಾರ್ ಹಾಗು ಇತರರ ವಿರುದ್ಧ ಆದಾಯ ತೆರಿಗೆ ದಾಖಲಿಸಿರುವ ಪ್ರಕರಣದ ಬಗ್ಗೆ ಮಾಹಿತಿ ನೀಡಿದೆ. ಇದನ್ನು ಸಿಬಿಐಗೂ ಜೊತೆಗೂ ಹಂಚಿಕೊಂಡಿರುವುದಾಗಿ ಹೇಳಿದೆ. ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಾದಾಗ ಮಾಹಿತಿ ಹಂಚಿಕೊಳ್ಳುವುದು ಕಡ್ಡಾಯ. ಹಾಗಾಗಿ ಇಡಿ ಪತ್ರ ಬರೆದಿದೆ. ಎಲ್ಲಿಯೂ ಸಿಬಿಐಗೆ ವಹಿಸುವಂತೆ ಒಂದೇ ಒಂದು ಅಕ್ಷರವನ್ನೂ ನಮೂದಿಸಿಲ್ಲ. ಕೇಂದ್ರದ ಯಾವ ಇಲಾಖೆಗಳು ಇದನ್ನು ಪ್ರಸ್ತಾಪಿಸಿಲ್ಲ ಎಂದು ಹೇಳಿದರು. +ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ +ಆದಾಯ ತೆರಿಗೆ ಸೆ.2ರಂದು ನೀಡಿದ ದೂರು ಆಧರಿಸಿ ಕ್ರಮ ಕೈಗೊಂಡಿರುವುದಾಗಿ ಜಾರಿನಿರ್ದೇಶನಾಲಯ ನೀಡಿರುವ ಮಾಹಿತಿಯ ಪತ್ರವನ್ನು ಮುಖ್ಯ ಕಾರ್ಯದರ್ಶಿಯವರು ಸೆ.11ರಂದು ಸ್ವೀಕರಿಸಿದ್ದಾರೆ.ಮಾರನೆಯ ದಿನ ಅಂದರೆ ಸೆ.12ರಂದು ಅನಗತ್ಯವಾಗಿದ್ದರೂ ಅದನ್ನು ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಡಿಪಿಎಆರ್)ಗೆ ರವಾನಿಸಲಾಗಿದೆ. +ಅಲ್ಲಿನ ಅೀಧಿನ ಕಾರ್ಯದರ್ಶಿಯವರು ಜನಪ್ರತಿನಿಗೆ ಸಂಬಂಧಪಟ್ಟ ಪ್ರಕರಣವಾಗಿರುವುದರಿಂದ ಪೂರ್ಣಾನುಮತಿ ಅಗತ್ಯವಿದೆ. ಆದರೆ ರಾಜ್ಯಪಾಲರು ಅಥವಾ ವಿಧಾನಸಭಾಧ್ಯಕ್ಷರ ಪೈಕಿ ಯಾರಿಂದ ಅನುಮತಿ ಪಡೆಯಬೇಕೆಂಬ ಸ್ಪಷ್ಟನೆ ನೀಡಬೇಕು ಮತ್ತು ದೆಹಲಿ ವಿಶೇಷ ಅಧಿಕಾರ ಕಾನೂನಿನ ಪ್ರಕಾರ ಜೊತೆಗೆ ಸಿಬಿಐ ತನಿಖೆಗೆ ಗೃಹ ಸಚಿವಾಲಯ ಅನುಮತಿ ನೀಡಬೇಕೆಂದು ಹೇಳಿ ಕಡತವನ್ನು ಮುಂದೂಡಿದ್ದಾರೆ. +ಸೆ.13ರಂದು ಗೃಹ ಇಲಾಖೆಯ ಅೀನ ಕಾರ್ಯದರ್ಶಿಯವರು ಪತ್ರ ಸ್ವೀಕರಿಸಿರುತ್ತಾರೆ. ಸೆ.16ರಂದು ಅವರು ಅಭಿಪ್ರಾಯ ತಿಳಿಸಿ ಪಿಎಂಎಲ್‍ಎ ಕಾಯ್ದೆ ಅೀಧಿನವಾಗಿರುವುದರಿಂದ ತನಿಖೆ ನಡೆಸದೆ ನೇರವಾಗಿ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ ಎಂದು ತಿಳಿಸಿದ್ದಾರೆ. +ಅಲ್ಲಿಂದ ಉಪಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ವ್ಯವಹಾರಗಳಾಗುತ್ತವೆ. ಪ್ರಕರಣದ ಬಗ್ಗೆ ಅಭಿಪ್ರಾಯ ನೀಡುವಂತೆ ಅಪರ ಮುಖ್ಯ ಕಾರ್ಯದರ್ಶಿಯವರು ಆಗಿನ ಅಡ್ವೋಕೇಟ್ ಜನರಲ್ ಅವರಿಗೆ ಸೆ.17ರಂದು ಮನವಿ ಮಾಡುತ್ತಾರೆ. ಐದು ದಿನವಾದರೂ ಅಲ್ಲಿಂದ ಪ್ರತಿಕ್ರಿಯೆ ಬರುವುದಿಲ್ಲ. ಈ ನಡುವೆ ಎಜಿ ಕಚೇರಿಯಲ್ಲಿ ಕಡತ ಬಾಕಿ ಇರುವ ಹಿನ್ನಲೆಯಲ್ಲಿ ಆತುರಾತುರವಾಗಿ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಸೆ.24ರಂದು ಹೊಸದಾಗಿ ಕಡತವನ್ನು ತೆರೆಯಲಾಗುತ್ತದೆ. +ನ. 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ +ಅದೇ ದಿನ ಸಿಬಿಐ ತನಿಖೆಗೆ ವಹಿಸುವಂತೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕ ಆದೇಶ ನೀಡುತ್ತಾರೆ. ಮಾರನೇ ದಿನ ಸಿಬಿಐ ತನಿಖೆಗೆ ಅನುಮತಿ ನೀಡಲಾಗುತ್ತದೆ. ಆ ಬಳಿಕ ಅಡ್ವೋಕೇಟ್ ಜನರಲ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿ ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದಿದ್ದಾರೆ ಎಂದು ವಿವರಿಸಿದರು. +ಇಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ 5 ಮಾನದಂಡಗಳ ಪೈಕಿ ಯಾವುದನ್ನೂ ಪಾಲನೆ ಮಾಡಲಾಗಿಲ್ಲ. ರಾಜ್ಯದಿಂದ ಸಿಬಿಐ ತನಿಖೆಗೆ ಒಪ್ಪಿಸಬೇಕಾದರೆ ಪ್ರಕರಣದ ಸಂಪೂರ್ಣ ಮಾಹಿತಿ ಇರಬೇಕು, ಎಫ್‍ಐಆರ್ ಪ್ರತಿ, ತನಿಖೆಯ ಹಂತ, ಬಂಧನದ ವಿವರಗಳನ್ನು ಒದಗಿಸಬೇಕು, ನ್ಯಾಯಾಲಯದಲ್ಲಿ ಪ್ರಕರಣಗಳಿದ್ದರೆ ಅದರ ಮಾಹಿತಿ, ಸಿಬಿಐ ತನಿಖೆಯನ್ನು ಸಮರ್ಥಿಸುವ ಕಾರಣಗಳು, ರಾಜ್ಯ ಪೊಲೀಸರಿಂದ ವಿಚಾರಣೆ ಸಾಧ್ಯವಿಲ್ಲ ಎಂಬುದನ್ನು ದೃಢೀಕರಿಸಬೇಕು. ಅಂತಾರಾಜ್ಯ, ಅಂತಾರಾಷ್ಟ್ರೀಯ ವ್ಯಾಪ್ತಿ ಇರುವ ಬಗ್ಗೆ ವಿವರಣೆ ನೀಡಬೇಕಿದೆ. ಇದಾವುದನ್ನೂ ಅನುಸರಿಸಿಲ್ಲ. +ಸಿಬಿಐ ತನಿಖೆಗೆ ಅನುಮತಿ ನೀಡುವಾಗ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿರಲಿಲ್ಲ. ಅವರು ಜೈಲಿನಲ್ಲೂ ಇರಲಿಲ್ಲ. ನ್ಯಾಯಾಲಯಗಳಲ್ಲೂ ಪ್ರಕರಣಗಳಿರಲಿಲ್ಲ. ಮೇಲಾಗಿ ಅಡ್ವೋಕೇಟ್ ಜನರಲ್ ಅವರೇ ವಿರೋಧ ವ್ಯಕ್ತಪಡಿಸಿದರು. ಇದೆಲ್ಲವನ್ನೂ ಹೊರತುಪಡಿಸಿ ಸಿಬಿಐ ತನಿಖೆಗೆ ಕೊಟ್ಟಿದ್ದರ ಉದ್ದೇಶ ಏನು ಎಂಬುದನ್ನು ರಾಜ್ಯ ಜನರಿಗೆ ಬಿಜೆಪಿ ನಾಯಕರು ಉತ್ತರಿಸಬೇಕಿದೆ ಎಂದು ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು. \ No newline at end of file diff --git a/eesanje/url_46_305_6.txt b/eesanje/url_46_305_6.txt new file mode 100644 index 0000000000000000000000000000000000000000..86fd4561e28698d82b7f630bfef680eda9740cec --- /dev/null +++ b/eesanje/url_46_305_6.txt @@ -0,0 +1,5 @@ +ಮಲೆನಾಡು ಮಿತ್ರವೃಂದದ ನೂತನ ಅಧ್ಯಕ್ಷರಾಗಿ ಪ್ರದೀಪ್ ಹೆಗ್ಗೊಡು ಆಯ್ಕೆ +ಬೆಂಗಳೂರು, ನ.24-ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರ ಸಂಘಟನೆ ಮಲೆನಾಡು ಮಿತ್ರವೃಂದ ಕಾರ್ಯಕಾರಿ ಮಂಡಳಿ ಸಭೆಯನ್ನು ಅಧ್ಯಕ್ಷರಾದ ವಾಸಪ್ಪ ಪಡುಬೈಲ್‍ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. +ಹಾಲಿ ಅಧ್ಯಕ್ಷರಾದ ವಾಸಪ್ಪ ಪಡುಬೈಲ್ ಅವರ ಅಧ್ಯಕ್ಷತೆಯ ಅವಧಿ ಮುಗಿದಿದ್ದು ನೂತನ ಕಾರ್ಯಕಾರಿ ಮಂಡಳಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಪ್ರದೀಪ್ ಹೆಗ್ಗೊಡು, ಉಪಾಧ್ಯಕ್ಷರಾಗಿ ಹರೀಶ್ ಹಿಂಬರವಳ್ಳಿ, ಕಾರ್ಯದರ್ಶಿಯಾಗಿ ಸಂದೇಶ್ ಹಂದಿಗೋಡು, ಸಹ ಕಾರ್ಯದರ್ಶಿಯಾಗಿ ಕೃಷ್ಣಮೂರ್ತಿ ಭಟ್, ಖಜಾಂಚಿಯಾಗಿ ಸುಧಾಕರ್ ಯಡದಾಳು, ಸಂಘಟನಾ ಕಾರ್ಯ ದರ್ಶಿಯಾಗಿ ರಾಘವೇಂದ್ರ ಸಿಸ್ಲೆ, ದಿನೇಶ್ ಹೊಸನಗರ ಇವರನ್ನು ಆಯ್ಕೆ ಮಾಡಲಾಯಿತು. +ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ +ಇದೇ ಸಂದರ್ಭದಲ್ಲಿ 17ನೇ ವರ್ಷದ ಮಲೆನಾಡಿಗರ ಕ್ರೀಡಾಕೂಟ ನಡೆಸುವ ಬಗ್ಗೆ ಚರ್ಚಿಸಿ ಜನವರಿ 2024 ರಂದು ಕ್ರೀಡಾಕೂಟ ನಡೆಸಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_305_7.txt b/eesanje/url_46_305_7.txt new file mode 100644 index 0000000000000000000000000000000000000000..ad0b0a4d0f1277d23d0aab65e5027d7f82ecaa25 --- /dev/null +++ b/eesanje/url_46_305_7.txt @@ -0,0 +1,6 @@ +ನ. 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ +ಬೆಂಗಳೂರು, ನ.24- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. +ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಜನತಾ ದರ್ಶನದ ಸ್ವರೂಪ ಮತ್ತು ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಕಚೇರಿ ಸಿದ್ಧತೆ ನಡೆಸಿದೆ. +ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್‍ಡಿಕೆ ಆಕ್ರೋಶ +ಈ ಮೊದಲು ಸೆಪ್ಟಂಬರ್‍ನಲ್ಲಿ ಜನತಾದರ್ಶನ ನಡೆಸುವುದಾಗಿ ಘೋಷಿಸಲಾಗಿತ್ತು. ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು. +ಈ ಮೊದಲಿನ ಅವಧಿಯಲ್ಲಿ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನಗಳು ಭಾರೀ ಪರಿಣಾಮ ಬೀರುತ್ತಿದ್ದವು. ಸಾರ್ವಜನಿಕರ ಸಮಸ್ಯೆಗಳು ಪರಿಹಾರಗೊಳ್ಳುತ್ತಿದ್ದವು. \ No newline at end of file diff --git a/eesanje/url_46_305_8.txt b/eesanje/url_46_305_8.txt new file mode 100644 index 0000000000000000000000000000000000000000..5e74b90af96b8b5b83dc03ad6a727d6c905b772c --- /dev/null +++ b/eesanje/url_46_305_8.txt @@ -0,0 +1,5 @@ +ಸರ್ಕಾರದಿಂದ ದರೋಡೆಕೋರರ ರಕ್ಷಣೆ: ಎಚ್‍ಡಿಕೆ ಆಕ್ರೋಶ +ಬೆಂಗಳೂರು, ನ.24- ರಾಜ್ಯ ಸರ್ಕಾರದಲ್ಲಿ ದರೋಡೆಕೋರರಿಗೆ ರಕ್ಷಣೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾರನ್ನು ಹೇಗೆ ರಕ್ಷಣೆ ಮಾಡುತ್ತಿದೆ ಎಂಬುದು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಿಂದ ಗೊತ್ತಾಗುತ್ತದೆ ಎಂದು ಟೀಕಿಸಿದ್ದಾರೆ. +ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದನ್ನು ವಾಪಸ್ಸು ಪಡೆಯಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಸ್ವಜನ ಪಕ್ಷಪಾತವಲ್ಲ. +ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ +ಮಾನ ಮರ್ಯಾದೆ ಇದ್ದವರು ಹೆದರುತ್ತಾರೆ. ಕೋರ್ಟಿನಲ್ಲಿದ್ದರೇನು? ಬೇರೆ ಯಾವುದೇ ಬೇಕಾದರೂ ಇರಲಿ ಕೊಂಡುಕೊಳ್ಳುತ್ತೇನೆ ಎಂಬ ದುರಹಂಕಾರದಲ್ಲಿರುವವರಿಗೆ ಏನು ಮಾಡುವುದು ಎಂಬ ಅಸಮಾಧಾನ ಹೊರಹಾಕಿದರು. ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಹೆಚ್ಚಿಗೆ ಮಾತನಾಡುವುದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_46_305_9.txt b/eesanje/url_46_305_9.txt new file mode 100644 index 0000000000000000000000000000000000000000..38665bd853d815ab52a5a995001a9485d20cbdfd --- /dev/null +++ b/eesanje/url_46_305_9.txt @@ -0,0 +1,6 @@ +ಶಿವಕುಮಾರ್ ತಪಿತಸ್ಥ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ : ಸಿ.ಟಿ. ರವಿ +ಬೆಂಗಳೂರು,ನ.24-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಹೇಳಿದ್ದಾರೆ. +ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ. +ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ +ಭ್ರಷ್ಟ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ. +ಡಿ.ಕೆ.ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_46_306_1.txt b/eesanje/url_46_306_1.txt new file mode 100644 index 0000000000000000000000000000000000000000..3b9d39e29957684c533252f567af56ca77378dfe --- /dev/null +++ b/eesanje/url_46_306_1.txt @@ -0,0 +1,20 @@ +ಕೆರಳಿದ ಒಕ್ಕಲಿಗರು, ಲಿಂಗಾಯಿತರು: ಕಾವೇರಿದ ಜಾತಿ ಜನಗಣತಿ ಜ್ವಾಲೆ +ಬೆಂಗಳೂರು,ನ.23- ಜಾತಿ ಜನಗಣತಿ ಎಂದು ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿಗಳ ಬಗ್ಗೆ ದಿನಕ್ಕೊಂದು ಗೊಂದಲ ಸೃಷ್ಟಿಯಾಗುತ್ತಿದ್ದು, ಪರ-ವಿರೋಧ ಚರ್ಚೆಗಳು ಕಾವೇರುತ್ತಿವೆ. ವರದಿಯನ್ನು ಅಂಗೀಕರಿಸಿಯೇ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವರದಿಯನ್ನು ತಿರಸ್ಕಾರ ಮಾಡಬೇಕೆಂದು ಒಕ್ಕಲಿಗರ ಸಂಘ ನೀಡಿದ್ದ ಮನವಿಗೆ ಸರ್ಕಾರದ ಪಾಲುದಾರರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ ಸೇರಿದಂತೆ ಅನೇಕ ಶಾಸಕರು ಸಹಿ ಹಾಕಿದ್ದಾರೆ. +ಲಿಂಗಾಯಿತ ವೀರಶೈವ ಮಹಾಸಭಾದ ಮಹಾ ಅಧಿವೇಶನದ ಬಳಿಕ ಮಾತನಾಡಿದ ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ, ವರದಿಯನ್ನು ಸಚಿವರ ಮನೆಯಲ್ಲಿ ಕುಳಿತು ತಯಾರಿಸಲಾಗಿದ್ದು, ಅದು ಸಂಪೂರ್ಣ ಅವೈಜ್ಞಾನಿಕ, ತಿರಸ್ಕಾರರ್ಹ ಎಂದು ಹೇಳಿದ್ದರು. +ರಾಜ್ಯದ ಎರಡು ಪ್ರಮುಖ ಸಮುದಾಯಗಳನ್ನು ಪ್ರತಿಬಿಂಬಿಸುವ ಸಂಘ-ಸಂಸ್ಥೆಗಳು ಮತ್ತು ಅದರ ಪ್ರತಿನಿಧಿಗಳು ವರದಿಯನ್ನು ವಿರೋಧಿಸಿವೆ. ಇನ್ನು ಹಲವು ಸಮುದಾಯಗಳಲ್ಲೂ ಈ ರೀತಿಯ ಮಿಶ್ರ ಪ್ರತಿಕ್ರಿಯೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ಪ್ರಕಾರ ವರದಿ ಮೊದಲು ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದು ಚರ್ಚೆಯಾಗಬೇಕು. ಅನಂತರ ಸ್ವೀಕಾರವೋ, ಇಲ್ಲವೋ ಎಂಬುದರ ಬಗ್ಗೆ ನಿರ್ಣಯ ಸೂಕ್ತ ಎಂಬ ವಾದಗಳಿವೆ. +162 ಕೋಟಿ ರೂ. ಖರ್ಚು ಮಾಡಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸುವುದು ಬೇಡವೇ ಎಂದು ಸಿದ್ದರಾಮಯ್ಯ ನೇರವಾಗಿ ಕೇಳಿದ್ದಾರೆ. ಅದೇ ವೇಳೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೈಜ್ಞಾನಿಕವಾಗಿ ಸಮೀಕ್ಷೆಯಾಗಬೇಕು ಎಂಬ ಅಭಿಪ್ರಾಯಗಳಿವೆ. ಸರ್ಕಾರ ಯಾವುದೇ ಇದ್ದರೂ, ಅಧಿಕಾರ ಏನೇ ಇದ್ದರೂ ಸಮುದಾಯದ ಗೌರವ ಮತ್ತು ಸ್ವಾಭಿಮಾನದ ಜತೆ ತಾವು ನಿಲ್ಲವುದಾಗಿ ಹೇಳಿದ್ದಾರೆ. +ಹೇಳಿಕೆ-ಪ್ರತಿ ಹೇಳಿಕೆ ಹೊರತಾಗಿ ಹೊರ ಬಂದಿರುವ ಹೊಸ ವಿಷಯ ಎಂದರೆ ಸಮೀಕ್ಷಾ ವರದಿಯ ಹಸ್ತ ಪ್ರತಿಗಳು ನಾಪತ್ತೆಯಾಗಿವೆ ಎಂಬುದು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರೇ ಇದನ್ನು ಖಚಿತ ಪಡಿಸಿದ್ದಾರೆ. 2021ರ ಅಕ್ಟೋಬರ್ 5ರಂದು ಸರ್ಕಾರಕ್ಕೆ ಪತ್ರ ಬರೆದು ಈ ವಿಷಯವನ್ನು ತಿಳಿಸಿದ್ದರು. ಆದರೆ, ಈವರೆಗೂ ಹಸ್ತ ಪ್ರತಿಗಳನ್ನು ಹುಡುಕುವ ನಿಟ್ಟಿನಲ್ಲಿ ಯಾವುದೇ ಕ್ರಮಗಳಾಗಿಲ್ಲ. ಕನಿಷ್ಠ ತನಿಖೆಯೂ ನಡೆದಿಲ್ಲ ಎಂಬುದು ಆಘಾತಕಾರಿ ವಿಚಾರ. +ಕಾಂತರಾಜು ಅವರು ಅಧ್ಯಕ್ಷರಾಗಿದ್ದಾಗ ಸಿದ್ಧಪಡಿಸಲಾಗಿದ್ದ ಮೂಲ ವರದಿ ಕೂಡ ನಾಪತ್ತೆಯಾಗಿದೆ. ಆ ವರದಿಯ ಸದಸ್ಯ ಕಾರ್ಯದರ್ಶಿ ಹೊರತುಪಡಿಸಿ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಪೈಕಿ ಬಹುತೇಕರು ಸಹಿ ಹಾಕಿದ್ದರು. ಅದು ನಾಪತ್ತೆಯಾಗಿರುವುದರಿಂದ ಹೊಸದಾಗಿಯೇ ವರದಿ ಸಿದ್ಧಪಡಿಸಬೇಕಾಗಿದೆ. +ಸಮೀಕ್ಷೆ ನಡೆದ ಬಳಿಕ ಅದರ ದತ್ತಾಂಶಗಳನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆ ವೆಬ್‍ಸೈಟ್‍ಗೆ ಅಪ್‍ಲೋಡ್ ಮಾಡಿತ್ತು. ಆದರೆ, ಅದನ್ನು ಸಾರ್ವಜನಿಕವಾಗಿ ಮುಕ್ತಗೊಳಿಸಿರಲಿಲ್ಲ. ಜತೆಗೆ ಪ್ರತಿಯೊಂದು ಜಿಲ್ಲಾಕಾರಿಗಳ ಕಚೇರಿಯಲ್ಲೂ ದತ್ತಾಂಶಗಳು ಸಂರಕ್ಷಿಸಲ್ಪಟ್ಟಿದ್ದವೂ ಎಂದು ಹೇಳಲಾಗಿದೆ.ಈ ದತ್ತಾಂಶಗಳನ್ನು ಇಟ್ಟುಕೊಂಡು ಹೊಸದಾಗಿ ಬರೆಯಲು ಸಾಧ್ಯವಾಗಿದೆ. ಆ ಕೆಲಸವನ್ನು ಆಯೋಗ ಪ್ರಸ್ತುತ ಮಾಡುತ್ತಿದೆ. +ಆದರೆ, ಮೂಲ ಪ್ರಶ್ನೆ ಇರುವುದು ಸಮೀಕ್ಷೆ ನಡೆದಿರುವ ಮಾದರಿಯ ಬಗ್ಗೆ. ಸಮೀಕ್ಷಾಕಾರರು ಮನೆ ಮನೆಗೆ ಹೋಗಿ ಮನೆ ಮನೆಗೆ ಹೋಗಿ ಮಾಹಿತಿ ಕಲೆ ಹಾಕಿದ್ದಾರೆ ಎಂದು ವಾದಿಸಲಾಗುತ್ತಿದೆ. ಆದರೆ, ಬಹಳಷ್ಟು ಮಂದಿ ತಮ್ಮ ಮನೆಗೆ ಯಾರೂ ಬಂದಿಲ್ಲ , ಮಾಹಿತಿ ಪಡೆದುಕೊಂಡಿಲ್ಲ ಎಂದು ಹೇಳುತ್ತಿದ್ದಾರೆ. +ಅದರಲ್ಲೂ ಬೆಂಗಳೂರಿನಂತಹ ಮಹಾನಗರಿಯಲ್ಲಿ ಶೇ.73ರಷ್ಟು ಮಾತ್ರ ಸಮೀಕ್ಷೆ ನಡೆದಿದೆ ಎಂದು ತಿಳಿಸಲಾಗಿತ್ತು. ಗ್ರಾಮೀಣ ಭಾಗದಲ್ಲಿ ಶೇ.90ರಷ್ಟು ಮನೆಗಳಿಗೆ ಭೇಟಿ ನೀಡಲಾಗಿದೆ ಎಂದು ಸಚಿವರು ಮತ್ತು ಆಯೋಗದ ಮುಖ್ಯಸ್ಥರು ಪದೇ ಪದೇ ಹೇಳುತ್ತಿದ್ದರು. +ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ ವರದಿ ಅತ್ಯಂತ ನಿಖರ ಮತ್ತು ಸ್ಪಷ್ಟತೆ ಹೊಂದಿರುತ್ತದೆ ಎಂಬ ವಿಶ್ವಾಸವಿದೆ. ಅದಕ್ಕೆ ಪರ್ಯಾಯವಾಗಿ ನಡೆದ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಬಗ್ಗೆ ಆಗಿನ ಸರ್ಕಾರವೇ ಒಂದಿಷ್ಟು ಗೊಂದಲಗಳನ್ನು ಹುಟ್ಟಿಹಾಕಿತ್ತು. +ವರದಿಯನ್ನು ಯಾರು ನೋಡಿಲ್ಲ ಎಂದು ಬಲವಾದ ಪ್ರತಿಪಾದನೆಯ ನಡುವೆಯೇ 2017ರ ಕೊನೆಯಲ್ಲಿ ಮಾಹಿತಿಯನ್ನು ಸೋರಿಕೆ ಮಾಡಲಾಗಿತ್ತು. ಅದರ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಂತರದ ಸ್ಥಾನಗಳನ್ನು ಮುಸ್ಲಿಂ ಸಮುದಾಯ ಹೊಂದಿದೆ ಎಂಬ ವಿವರಗಳಿದ್ದವು. ಇದು ಆತಂಕಕ್ಕೆ ಕಾರಣವಾಗಿದೆ. +ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ +ಈವರೆಗೂ ಯಾರೂ ಕೂಡ ಈ ಮಾಹಿತಿಗಳ ಬಗ್ಗೆ ಸ್ಪಷ್ಟನೆ ನೀಡಿಲ್ಲ. ವರದಿಯನ್ನು ಯಾರು ನೋಡದೇ ಇರುವುದರಿಂದ ಸ್ಪಷ್ಟನೆ ನೀಡಲು ಅವಕಾಶ ಇಲ್ಲ ಎಂಬ ಸ್ಪಷ್ಟನೆ ಇದೆ. ಆದರೆ, ಕಾಲ ಕಾಲಕ್ಕೆ ಕೇಳಿ ಬಂದಿರುವ ಕಾನೂನಾತ್ಮಕವಾಗಿ ಹೊರಗುಳಿದ ಗೊಂದಲಗಳಿಗೆ ಸಮಜಾಯಿಸಿ ನೀಡುವ ಪ್ರಯತ್ನಗಳನ್ನು ಯಾವ ಸರ್ಕಾರಗಳೂ ಮಾಡಿಲ್ಲ. +ಸಮೀಕ್ಷೆಯ ಹಸ್ತ ಪ್ರತಿಗಳು ಮತ್ತು ಮೂಲ ವರದಿ ನಾಪತ್ತೆಯಾಗಿದೆ ಎಂಬುದು ಸತ್ಯವಾಗಿದ್ದರೆ ಅದನ್ನು ಹುಡುಕಲು ಏಕೆ ಗಂಭೀರ ಪ್ರಯತ್ನಗಳು ನಡೆದಿಲ್ಲ ? 162 ಕೋಟಿ ರೂ.ಗಳ ವೆಚ್ಚದಲ್ಲಿ ಸರ್ಕಾರ ತಯಾರಿಸಿದ ವರದಿಯ ಬಗ್ಗೆ ಈ ಮಟ್ಟದ ನಿರ್ಲಕ್ಷ್ಯ ಸಮರ್ಥನೀಯವೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. +ಕನಿಷ್ಠ ಈವರೆಗೂ ಮೂಲ ಪ್ರತಿ ನಾಪತ್ತೆಯಾಗಿರುವ ಬಗ್ಗೆ ಒಂದು ದೂರನ್ನೂ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಆಂದಮೇಲೆ ಮೂಲ ಪ್ರತಿಗಳು ಯಾವುದೋ ಅಜ್ಞಾತ ಸ್ಥಳದಲ್ಲಿದೆ. ಅದು ಎಲ್ಲರಿಗೂ ಗೊತ್ತು. ಆದರೂ ಯಾರೂ ಬಹಿರಂಗವಾಗಿ ಮಾತನಾಡದೆ ಜಾಣಮೌನ ಅನುಸರಿಸುತ್ತಿದ್ದಾರೆ ಎಂಬ ಭಾವನೆಗಳು ಗಟ್ಟಿಗೊಳ್ಳುತ್ತಿವೆ. ಆಗಿದ್ದ ಮೇಲೆ ಯಾರ ಮನೆಯಲ್ಲಿ ಹಸ್ತ ಪ್ರತಿಗಳು ಅಡಗಿ ಕುಳಿತಿವೆ ಎಂಬ ಸತ್ಯವನ್ನು ಈಗಲಾದರೂ ಬಹಿರಂಗಪಡಿಸುವ ಅಗತ್ಯವಿದೆ. +ಆಯೋಗದಲ್ಲೇ ಇದೆ ಎಂದಾದರೆ ಅದನ್ನಾದರೂ ಸಾರ್ವಜನಿಕವಾಗಿ ತಿಳಿಸಬೇಕಿದೆ. ವರದಿಯ ಬಗ್ಗೆ ನಿಷ್ಪಕ್ಷವಾಗಿ ನಿರ್ಣಯ ಕೈಗೊಳ್ಳಬೇಕು ಎಂಬ ಕಾಳಜಿ ಸರ್ಕಾರಕ್ಕೆ ಇದ್ದಿದೇ ಆದರೆ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬಹುದಿತ್ತು. ವಿರೋಧ ಅಥವಾ ಅನುಮಾನ ವ್ಯಕ್ತಪಡಿಸುವ ಸಂಘ-ಸಂಸ್ಥೆಗಳು, ಸರ್ವಪಕ್ಷಗಳ ಜತೆ ಸಮಾಲೋಚನೆ ನಡೆಸುವ ಅವಕಾಶವಿತ್ತು. +ಮತ್ತೊಂದೂ ಒಂದು ಹೆಜ್ಜೆ ಮುಂದೆ ಹೋಗಿ ನೋಡುವುದಾದರೆ. ಪ್ರಸ್ತುತ ದಿನಮಾನಗಳ ತಂತ್ರಜ್ಞಾನ ಅತ್ಯಾಧುನಿಕವಾಗಿದೆ. ಆಧಾರ್ ಬಯೋಮೆಟ್ರಿಕ್ ಆಧಾರಿತ ಸಮೀಕ್ಷೆಗೆ ಅವಕಾಶಗಳಿವೆ. ಸಾರ್ವಜನಿಕರಿಗೆ ಸ್ವಯಂ ಸಮೀಕ್ಷೆಯಲ್ಲಿ ಭಾಗವಹಿಸಲು ಮನವಿ ಮಾಡಬಹುದು. ಬಯೋಮೆಟ್ರಿಕ್ ಆಧಾರಿತವಾಗಿರುವುದರಿಂದ ನಕಲು ಅಥವಾ ಅಪ್ರಸ್ತುತ ಮಾಹಿತಿಗಳು ಸೇರ್ಪಡೆಗೊಳ್ಳುವ ಸಾಧ್ಯತೆಗಳು ಕಡಿಮೆ. +ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ +ಮನೆ ಮನೆಗೆ ತೆರಳಿ ಮಾಹಿತಿ ಕಲೆ ಹಾಕಬೇಕು ಎಂಬ ಸಾಂಪ್ರದಾಯಿಕ ಪದ್ಧತಿಯನ್ನು ಬದಿಗಿಟ್ಟು ಹೊಸ ವಿಧಾನಗಳನ್ನು ಅನುಸರಿಸುವ ಅವಕಾಶಗಳಿವೆ. ಆದರೆ, ಎಲ್ಲವನ್ನೂ ನಿರ್ಲಕ್ಷಿಸಿ 8 ವರ್ಷಗಳ ಹಿಂದಿನ ವರದಿಯನ್ನೇ ಸಾರ್ವಜನಿಕವಾಗಿ ಪ್ರಕಟಿಸುವ ಇರಾಧೆಯನ್ನು ಸರ್ಕಾರ ಹೊಂದಿದೆ. ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳೇ ಪ್ರಮುಖವಾಗಿ ಕಾಣಿಸುತ್ತಿರುವುದು ಸತ್ಯ. \ No newline at end of file diff --git a/eesanje/url_46_306_10.txt b/eesanje/url_46_306_10.txt new file mode 100644 index 0000000000000000000000000000000000000000..2716048bbf048c097ab2ed2ac501fdc35e135496 --- /dev/null +++ b/eesanje/url_46_306_10.txt @@ -0,0 +1,9 @@ +ಬೆಳಗಾವಿ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ +ಬೆಂಗಳೂರು, ನ.22- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಕಾಯ್ದಿರಿಸುವುದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಡಿ.6ಮತ್ತು7ರಂದು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತ ಚರ್ಚೆಗೆ ಎರಡು ದಿನ ನಿಗದಿ ಮಾಡಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುವುದಕ್ಕೂ ಪೂರ್ವದಲ್ಲೇ ಧರಣಿ, ಪ್ರತಿಭಟನೆ, ಸತ್ಯಾಗ್ರಹ ಮಾಡುವಂತಹ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದ್ದರು. +ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವ ಹಿನ್ನಲೆಯಲ್ಲಿ ಸರ್ಕಾರಕ್ಕೆ ಸಲಹೆ ನೀಡುವುದು ಸೂಕ್ತ ಎಂದು ನಾನು ಭಾವಿಸಿ ಮುಖ್ಯಮಂತ್ರಿಗಳಿಗೆ ಹಾಗೂ ಕೃಷಿ, ಕಂದಾಯ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಿಗೆ ಪತ್ರ ಬರೆದು ನನ್ನ ಭಾವನೆಗಳನ್ನು ಹಂಚಿಕೊಂಡಿದ್ದೇನೆ ಎಂದು ಹೇಳಿದರು. +ಕರ್ನಾಟಕ ವಿಧಾನ ಮಂಡಲದ ನೂರಐವತ್ತೊಂದನೇ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿ.4ರಿಂದ 15ರ ವರೆಗೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನಕ್ಕಾಗಿ ಒಟ್ಟಾರೆ 400ಕ್ಕೂ ಅಧಿಕ ಕೋಟಿ ರೂಪಾಯಿಯನ್ನು ಸರ್ಕಾರ ಖರ್ಚು ಮಾಡುತ್ತಿದೆ ಎಂದರು. ಒಂದು ಅರ್ಥದಲ್ಲಿ ಬೆಳಗಾವಿಯ ಅಧಿವೇಶನ ಎಂದರೆ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವೇದಿಕೆ ಕಲ್ಪಿಸಿದಂತಾಗಿದೆ ಎಂದರೆ ಅತಿಶಯೋಕ್ತಿ ಎನಿಸಲಾರದು ಎನ್ನುವುದು ಹಲವರ ಅಭಿಪ್ರಾಯವಾಗಿದ್ದು, ಬಹಳಷ್ಟು ಜನ ಈ ರೀತಿಯ ಭಾವನೆಯನ್ನು ನನ್ನ ಮುಂದೆ ವ್ಯಕ್ತಪಡಿಸಿರುವುದಾಗಿ ತಿಳಿಸಿದರು. +ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ +ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲಾಗುವ ಅಧಿವೇಶನದ ಸಂದರ್ಭದಲ್ಲಿ ವಿಧಾನ ಸೌಧದ ಹೊರಗಡೆ ಧರಣಿ, ಸಮಾವೇಶ, ಸತ್ಯಾಗ್ರಹ ಮುಂತಾದ ಚಟುವಟಿಕೆಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಮೂಲ ಉದ್ದೇಶ ಸಮರ್ಪಕವಾಗಿ ಈಡೇರುತ್ತಿಲ್ಲ ಎನ್ನುವುದು ಹಲವು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ ಎಂದರು. +ಕಳೆದ ವರ್ಷ ಡಿಸೆಂಬರ್ 19 ರಿಂದ 29 ರ ವರೆಗೆ ನಡೆದ ಅಧಿವೇಶನದ ಸಂದರ್ಭದಲ್ಲಿ ಪೊಲೀಸ್ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಮಾಹಿತಿ ಪ್ರಕಾರ 10 ದಿನಗಳಲ್ಲಿ 102 ಕ್ಕೂ ಹೆಚ್ಚು ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿವೆ. ಅವುಗಳಲ್ಲಿ ಸುಮಾರು 64 ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ, ಸತ್ಯಾಗ್ರಹ, ಧರಣಿ ಮುಂತಾದ ಹೋರಾಟಾತ್ಮಕ ಚಟುವಟಿಕೆಗಳನ್ನು ನಡೆಸಿವೆ. ಈ ಎಲ್ಲಾ ಪ್ರತಿಭಟನೆ ಸತ್ಯಾಗ್ರಹಗಳಲ್ಲಿ ಸುಮಾರು 65,000 ದಿಂದ 80,000 ಜನರು ಪಾಲ್ಗೊಂಡಿದ್ದರು ಎಂಬ ಮಾಹಿತಿಯನ್ನು ಅವರು ನೀಡಿದರು. +ಈ ಎಲ್ಲಾ ಪ್ರತಿಭಟನೆ, ಸತ್ಯಾಗ್ರಹ, ಸಮಾವೇಶ, ಧರಣಿಗಳಿಗಾಗಿ ಸರ್ಕಾರದ ವತಿಯಿಂದ ಸುಮಾರು 14 ಟೆಂಟ್‍ಗಳನ್ನು ನಿರ್ಮಾಣ ಮಾಡಲಾಗಿತ್ತು. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅವೇಶನ ನಡೆಸಿದ್ದು, ಸಾರ್ಥಕ. ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎನ್ನುವುದು ನನ್ನ ಮನದಾಳದ ಇಂಗಿತವಾಗಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_306_11.txt b/eesanje/url_46_306_11.txt new file mode 100644 index 0000000000000000000000000000000000000000..2d2df657694cb1e42d86af027bc479dc390ca682 --- /dev/null +++ b/eesanje/url_46_306_11.txt @@ -0,0 +1,6 @@ +ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ +ಬೆಂಗಳೂರು, ನ.22- ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ವರದಿ ಸಲ್ಲಿಸುವವರೆಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮುಂದುವರೆಯುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್‍ನಲ್ಲಿ ಆಯೋಗದ ವರದಿ ನೀಡಲಿದ್ದು, ಅಲ್ಲಿಯವರೆಗೂ ಮುಂದುವರೆಸಲಾಗುವುದು ಎಂದರು. ಜಯಪ್ರಕಾಶ್ ಹೆಗ್ಡೆಯವರು ತಮ್ಮನ್ನು ಭೇಟಿಯಾಗಿ ನಮ್ಮ ಅವಧಿ ಮುಗಿಯುವುದರೊಳಗೆ ವರದಿ ನೀಡಲಾಗುವುದು. ಒಂದು ವೇಳೆ ವರದಿ ನೀಡುವುದು ಒಂದು ತಿಂಗಳು ಹೆಚ್ಚು ಕಡಿಮೆಯಾದರೂ ಅಲ್ಲಿಯವರೆಗೂ ಮುಂದುವರೆಸಲು ಕೋರಿದ್ದರು. ಹೀಗಾಗಿ ಅವರ ವರದಿ ನೀಡುವವರೆಗೂ ಆಯೋಗದ ಅಧ್ಯಕ್ಷರಾಗಿ ಹೆಗ್ಡೆ ಮುಂದುವರೆಯುತ್ತಾರೆ ಎಂದು ಹೇಳಿದರು. +ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ನಂತರ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವರದಿ ಸ್ವೀಕರಿಸಬಾರದು ಎಂದು ನೀಡಿರುವ ಮನವಿಯನ್ನು ಸ್ವೀಕರಿಸಲಾಗಿದೆ. ಸಮೀಕ್ಷೆಯ ಮೂಲ ಪ್ರತಿ ಹಾಳಾಗಿದೆ ಎಂದು ಹೇಳಲು ನಾನೇನು ಆಯೋಗದ ಕಾರ್ಯದರ್ಶಿಯೇ ಎಂದು ಪ್ರಶ್ನಿಸಿದರು. +ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: +ಸಮೀಕ್ಷೆಯ ಮೂಲ ಪ್ರತಿ ಹಾಳಾಗಿದೆ ಎಂದು ಯಾರು ಹೇಳಿದ್ದಾರೆಯೋ ಅವರನ್ನೇ ಕೇಳಿ. ನನಗೆ ಗೊತ್ತಿಲ್ಲ. ವರದಿ ಸಲ್ಲಿಕೆಗೂ ಮುನ್ನ ಅದರಲ್ಲಿ ಏನಿದೆ ಎಂಬುದನ್ನು ಹೇಗೆ ಹೇಳಲು ಸಾಧ್ಯ ? ವರದಿ ಸಲ್ಲಿಕೆಯಾಗುವವೆರೆಗೂ ಕಾಯಬೇಕು. ರಾಜ್ಯ ಸರ್ಕಾರ 160 ಕೋಟಿ ರೂ. ಗೂ ಹೆಚ್ಚುಖರ್ಚು ಮಾಡಿ ಸಮೀಕ್ಷಾ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_306_12.txt b/eesanje/url_46_306_12.txt new file mode 100644 index 0000000000000000000000000000000000000000..34b1f53d210042818d6845682a90c0728c1663cd --- /dev/null +++ b/eesanje/url_46_306_12.txt @@ -0,0 +1,7 @@ +ಆನ್‍ಲೈನ್ ರಮ್ಮಿ ಸಾಲ ತೀರಿಸಲು ಎಳನೀರು ಕಳ್ಳತನ +ಬೆಂಗಳೂರು, ನ.22- ಆನ್‍ಲೈನ್ ರಮ್ಮಿ ಆಟಕ್ಕೆ ಮಾಡಿಕೊಂಡಿದ್ದ ಸಾಲ ತೀರಿಸಲು ರಾತ್ರಿ ವೇಳೆ ಎಳನೀರು ಕಳ್ಳತನ ಮಾಡಿ ಬೆಳಗ್ಗೆ ಮಾರಾಟ ಮಾಡುತ್ತಿದ್ದ ಟ್ಯಾಕ್ಸಿ ಚಾಲಕನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. +ತಮಿಳುನಾಡು ಮೂಲದ ಮೋಹನ್ ಬಂಧಿತ ಆರೋಪಿ. ಈತ ನಗರದಲ್ಲಿ ವಾಸವಾಗಿದ್ದು, ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದಾನೆ. ಆರೋಪಿ ಮೋಹನ್ ಈ ಹಿಂದೆ ಎಳನೀರು ವ್ಯಾಪಾರ ಮಾಡುತ್ತಿದ್ದನು. ಬಿಡುವಿನ ಸಮಯದಲ್ಲಿ ಆನ್‍ಲೈನ್‍ನಲ್ಲಿ ರಮ್ಮಿ ಆಟವಾಡಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲು ಕಾರು ಬಾಡಿಗೆ ಪಡೆದು ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದನು. ಕಾರಿನಲ್ಲಿ ಹೋಗುವಾಗ ಫುಟ್‍ಪಾತ್‍ನಲ್ಲಿ ಎಳನೀರನ್ನು ಸಂಗ್ರಹಿಸಿಟ್ಟಿರುವುದನ್ನು ಗಮನಿಸಿದ್ದಾನೆ. ಹೇಗಾದರೂ ಮಾಡಿ ಎಳನೀರನ್ನು ಕಳ್ಳತನ ಮಾಡಿ ಮಾರಾಟ ಮಾಡಿ ಬಂದ ಹಣದಿಂದ ಸಾಲ ತೀರಿಸಲು ನಿರ್ಧರಿಸಿದ್ದಾನೆ. +ನ. 6ರಂದು ಮಂಜುಳಾ ಅವರ ಪತಿ ರಾಜಣ್ಣ ಅವರು ಮಂಕುತಿಮ್ಮ ಪಾರ್ಕ್ ಹತ್ತಿರ ಫುಟ್‍ಪಾತ್ ಮೇಲೆ ಎಳನೀರು ವ್ಯಾಪಾರ ಮಾಡಿ ಉಳಿದ 1150 ಎಳನೀರನ್ನು ಟಾರ್ಪಲ್‍ನಿಂದ ಮುಚ್ಚಿ ಮನೆಗೆ ಹೋಗಿದ್ದರು. ಮಾರನೇ ದಿನ ಬೆಳಗ್ಗೆ ಬಂದು ನೋಡಿದಾಗ ಫುಟ್‍ಪಾತ್‍ನಲ್ಲಿದ್ದ ಎಳನೀರು ಮಾಯವಾಗಿತ್ತು.ಯಾರೋ ಎಳನೀರನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಅವರು ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. +ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: ಡಿ.ಕೆ.ಶಿವಕುಮಾರ್ +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿ ಆರೋಪಿಯನ್ನು ಬಂಧಿಸಿ 8.75 ಲಕ್ಷ ರೂ. ಬೆಲೆಬಾಳುವ 90 ಎಳನೀರುಗಳು, ಒಂದು ರಾಯಲ್ ಎನ್‍ಫೀಲ್ಡ್ ದ್ವಿಚಕ್ರ ವಾಹನ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ವಿಭಾಗದ ಉಪಪೊಲೀಸ್ ಆಯುಕ್ತ ರಾಹುಲ್ ಕುಮಾರ್ ಶಹಪುರ ವಾಡ್, ವಿವಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಾಗರಾಜು ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು. +ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತರಾದ ದಯಾನಂದ, ಅಪರ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್ ಅವರು ಶ್ಲಾಘಿಸಿದ್ದಾರೆ. \ No newline at end of file diff --git a/eesanje/url_46_306_2.txt b/eesanje/url_46_306_2.txt new file mode 100644 index 0000000000000000000000000000000000000000..8c4cdd48f9c06d7e258dd3ae984e47de715cba92 --- /dev/null +++ b/eesanje/url_46_306_2.txt @@ -0,0 +1,10 @@ +ನಾಳೆಯಿಂದ 3 ದಿನ ಆನ್‍ಲೈನ್ ವಿದ್ಯುತ್ ಸೌಲಭ್ಯ ಬಂದ್ +ಬೆಂಗಳೂರು,ನ.23- ರಾಜ್ಯಾದ್ಯಂತ ಎಲ್ಲಾ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಬರುವ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನ. 26ರವರೆಗೆ (ಮೂರು ದಿನಗಳ ಕಾಲ) ಮಾಹಿತಿ ತಂತ್ರಜ್ಞಾನ ಆಧರಿತ ವಿದ್ಯುತ್ ಸೇವೆಗಳನ್ನು ಸ್ಥಗಿತಗೊಳಿಲಾಗುತ್ತಿದೆ. +ಸದರಿ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುವ ಪ್ರಕ್ರೀಯೆ ಚಾಲನೆಯಲ್ಲಿದ್ದು, ಹಾಲಿ ಇರುವ ತಂತ್ರಾಂಶಗಳನ್ನು ಹೊಸ ಹಾರ್ಡ್ ವೇರ್ ಗಳ ಮೇಲೆ ಅಳವಡಿಸುವ ಹಾಗೂ ಸ್ಥಳಾಂತರಿಸುವ ಕೆಲಸವನ್ನು ಪ್ರಥಮ ಹಂತವಾಗಿ ತೆಗೆದುಕೊಳ್ಳಲಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು, ಬೆಳಗಾವಿ, ಹಬ್ಬಳ್ಳಿ ಧಾರವಾಡ , ಬೆಳಗಾವಿ, ಮಂಗಳೂರು ಹಾಗು ಕಲಬರುಗಿ ನಗರ ಸೇರಿದಂತೆ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮೂರು ದಿನಗಳ ಕಾಲ ಎಲ್ಲಾ ಮಾಹಿತಿ ತಂತ್ರಜ್ಞಾನ ಆಧರಿತ ಹಾಗೂ ವಿದ್ಯುತ್ ಕಛೇರಿಗಳ ನಗದು ಪಾವತಿ ಕೌಂಟರ್ ಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. +ಈ ಅವಧಿಯಲ್ಲಿ ಆನ್ ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು ಬದಲಾವಣೆ, ನಗದು ಪಾವತಿ, ಆನ್ ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ. ಆನ್ ಲೈನ್ ಸೇವೆಗಳ ಅಲಭ್ಯತೆಯನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳಲು ಬೆಸ್ಕಾಂ ವಿನಂತಿಸಿದೆ. ಈ ಅವದಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. +ಆನ್ ಲೈನ್ ಸೇವೆ ಲಭ್ಯ ಇಲ್ಲದ ಪಟ್ಟಣಗಳ ವಿವರ: +ಬೆಸ್ಕಾಂ:ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು. +ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ರ್ಆ.ï ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ. +ಮೆಸ್ಕಾಂ:ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು. +ಜೆಸ್ಕಾಂ:ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ. +ಹೆಸ್ಕಾಂ:ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ. \ No newline at end of file diff --git a/eesanje/url_46_306_3.txt b/eesanje/url_46_306_3.txt new file mode 100644 index 0000000000000000000000000000000000000000..02bc725097d917aee800c28fef0d31515a971f00 --- /dev/null +++ b/eesanje/url_46_306_3.txt @@ -0,0 +1,11 @@ +ಬಿಜೆಪಿಯಲ್ಲಿ ನಿಲ್ಲದ ಹಿರಿಯರ ಆಕ್ರೋಶ +ಬೆಂಗಳೂರು,ನ.23- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿಯ ರಾಜ್ಯಾಧ್ಯಕ್ಷರಾದ ಮೇಲೆ ಅಸಮಾಧಾನ ಶಮನಗೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದ್ದು ಇನ್ನಷ್ಟು ಅತೃಪ್ತಿ ಸೋಟಗೊಳ್ಳುವ ಲಕ್ಷಣಗಳು ಗೋಚರಿಸಿವೆ. +ಮಾಜಿ ಸಚಿವರಾದ ವಿ.ಸೋಮಣ್ಣ, ಅರವಿಂದ ಲಿಂಬಾವಳಿ ಅವರುಗಳು ಬಹಿರಂಗವಾಗಿಯೇ ವರಿಷ್ಠರ ತೀರ್ಮಾನಕ್ಕೆ ಅಸಮಾಧಾನ ವ್ಯಕ್ತಪಡಿಸಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಜಗಜ್ಜಾಹೀರವಾಗಿದೆ. ಅದರಲ್ಲೂ ವೀರಶೈವ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕನೆಂದೇ ಗುರುತಿಸಿಕೊಂಡಿರುವ ವಿ.ಸೋಮಣ್ಣ ಗುರುವಾರ ಮೈಸೂರಿನಲ್ಲಿ ಹೇಳಿರುವ ಮಾತುಗಳು ಬಿಜೆಪಿಯಲ್ಲಿ ಇನ್ನಷ್ಟು ಅಸಮಾಧಾನ ಸೋಟಗೊಳ್ಳುವುದಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ. +ಬಿಜೆಪಿ ಯಾವುದೋ ಒಂದು ಕುಟುಂಬಕ್ಕೆ ಸೀಮಿತವಾಗಬಾರದು. ಡಿ.6ರ ನಂತರ ನಾನು ಅನೇಕ ಮಾಹಿತಿಗಳನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸುತ್ತೇನೆ ಎಂದು ಹೇಳಿರುವುದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದವರ ವಿರುದ್ಧ ಸಿಡಿದೇಳುವ ಮುನ್ಸೂಚನೆಯನ್ನು ಕೊಟ್ಟಿದ್ದಾರೆ. +ಡಿಸೆಂಬರ್ 6ರವರೆಗೆ ಯಾವುದೇ ಹೇಳಿಕೆ ನೀಡದಂತೆ ತಿಳಿಸಿರುವುದರಿಂದ ಅಲ್ಲಿಯವರೆಗೂ ಏನೂ ಮಾತಾಡುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಹೇಳಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅತಂತ್ರ ಪರಿಸ್ಥಿತಿಗೆ ಸಿಲುಕಿದ್ದ ಸಂಘಪರಿವಾರದ ನಿಷ್ಠೆಯ ಅರವಿಂದ ಲಿಂಬಾವಳಿ ಕೂಡ ವರಿಷ್ಠರ ತೀರ್ಮಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. +ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ +ವಿಜಯೇಂದ್ರ ಅವರ ಪಕ್ಷದ ವರಿಷ್ಠರು ಸಾಮಥ್ರ್ಯದ ಮೇಲೆ ಆಯ್ಕೆ ಮಾಡಿಲ್ಲ. ಇಲ್ಲಿ ವಿರೋಧ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದಲೇ ಅವರ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ವಿಜಯೇಂದ್ರ ಆಯ್ಕೆಗೆ ತಮ್ಮ ಸಹಮತ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಅರವಿಂದ ಲಿಂಬಾವಳಿ, ಸೋಮಣ್ಣ ಮಾತ್ರವಲ್ಲದೆ, ಪಕ್ಷದೊಳಗೆ ಇನ್ನೊಂದು ಬಣ ಕೂಡ ಮುನಿಸಿಕೊಂಡಿದೆ. +ಶಾಸಕಾಂಗ ಸಭೆಯನ್ನೇ ಬಹಿಷ್ಕಾರ ಮಾಡಿ ಹೊರನಡೆದಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ರಮೇಶ್ ಜಾರಕಿಹೊಳಿ ಹೀಗೆ ಪಕ್ಷದೊಳಗಿರುವ ವಿರೋ ಬಣವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. +ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆರ್.ಅಶೋಕ್ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಮೇಲೆ ಈ ಇಬ್ಬರ ಆಯ್ಕೆ ಕುರಿತು ಅನೇಕರು ಒಳಗೊಳಗೆ ಕುದಿಯುತ್ತಿದ್ದಾರೆ. ಏಕೆಂದರೆ ಇಬ್ಬರು ಕೂಡ ಯಡಿಯೂರಪ್ಪನವರ ಬಣಕ್ಕೆ ಸೇರಿದ್ದು ಸಂಘಪರಿವಾರದ ನಿಷ್ಠರಿಗೆ ಪ್ರಮುಖ ಸ್ಥಾನ ನೀಡಲು ವರಿಷ್ಠರು ನಿರ್ಲಕ್ಷ್ಯ ಮಾಡಿದ್ದಾರೆಂಬ ಅಸಮಾಧಾನ ಮಡುಗಟ್ಟಿದೆ. +ವರದಿ ಜಾರಿಗೂ ಮುನ್ನವೇ ಅವೈಜ್ಞಾನಿಕ ಎಂಬುದು ಸರಿಯಲ್ಲ : ಕಾಂತರಾಜು +ಸದ್ಯಕ್ಕೆ ಒಂದಿಬ್ಬರು ಮಾತ್ರ ವರಿಷ್ಠರ ನಿರ್ಧಾರವನ್ನು ಪ್ರಶ್ನೆ ಮಾಡುತ್ತಿದ್ದರಾದರೂ ಅನೇಕರು ಬಹಿರಂಗವಾಗಿ ಏನೂ ಹೇಳಲೂ ಆಗದೆ ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‍ಗೆ ಗಾಳ: ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಬೇಕೆಂದು ವರಿಷ್ಠರು ಸೂಚನೆ ಕೊಟ್ಟಿದ್ದರೂ ಸ್ಥಳೀಯ ನಾಯಕರ ಸಹಕಾರ ಸಿಗದಿರುವುದು ವಿಜಯೇಂದ್ರಗೆ ಹಿನ್ನಡೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_306_4.txt b/eesanje/url_46_306_4.txt new file mode 100644 index 0000000000000000000000000000000000000000..a0b92548c06a176f15ac805c8c54f2f3b8b0d907 --- /dev/null +++ b/eesanje/url_46_306_4.txt @@ -0,0 +1,8 @@ +ನ.25 ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ +ಬೆಂಗಳೂರು,ನ.23- ಎಚ್‍ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರಮೋದಿ ಅವರು ನವೆಂಬರ್​ 25 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವದೆಹಲಿಯಿದ ವಿಶೇಷ ವಿಮಾನದಲ್ಲಿ ಹೊರಡಲಿರುವ ಮೋದಿ ಅವರು ಬೆಳಗ್ಗೆ 9.15ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. +ಮಧ್ಯಾಹ್ನ 12.15ರವರೆಗೆ ಬೆಂಗಳೂರಿನಲ್ಲೇ ಇರುವ ಮೋದಿಯವರು ನಂತರ ಇಲ್ಲಿಂದ ಹೈದರಾಬಾದ್‍ಗೆ ತೆರಳಿ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಬಿಜೆಪಿಯ ಯಾವುದೇ ಮುಖಂಡರನ್ನು ಭೇಟಿಯಾಗುವ ಸಾಧ್ಯತೆಗಳಿಲ್ಲ. +ಪ್ರಧಾನಿಯವರನ್ನು ಸ್ವಾಗತಿಸಲು ಶಿಷ್ಟಾಚಾರದಂತೆ ರಾಜ್ಯಪಾಲರು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಇಲ್ಲವೇ ಸಚಿವರು, ಮುಖ್ಯ ಕಾರ್ಯದರ್ಶಿ ಹಾಗೂ ನಗರ ಪೊಲೀಸ್ ಆಯುಕ್ತ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಭಾಗಿಯಾಗಲಿದ್ದಾರೆ. +ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ +ಇದು ಸಂಪೂರ್ಣವಾಗಿ ಸರ್ಕಾರಿ ಕಾರ್ಯಕ್ರಮವಾಗಿರುವುದರಿಂದ ಮೋದಿಯವರನ್ನು ಯಾವುದೇ ಕಾರಣಕ್ಕೂ ಭೇಟಿ ಮಾಡುವ ಅಗತ್ಯವಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಸೂಚನೆ ಕೊಟ್ಟಿದೆ ಎಂದು ತಿಳಿದುಬಂದಿದೆ. ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಈ ಹಿಂದೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. +ಈ ವೇಳೆ ಚಂದ್ರಯಾನ-3 ಯೋಜನೆ, ಪ್ರಜ್ಞಾನ್ ರೋವರ್ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದರು. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅನ್ವೇಷಣೆ ಬಗ್ಗೆ ವಿವರಿಸಿದ್ದರು. +ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಿದ್ದರು. ಈ ವೇಳೆ ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ನಾಮಕರಣ ಮಾಡಿದ್ದರು. \ No newline at end of file diff --git a/eesanje/url_46_306_5.txt b/eesanje/url_46_306_5.txt new file mode 100644 index 0000000000000000000000000000000000000000..9e0f2007f0f563fbeecad14f59e7efb64ab39391 --- /dev/null +++ b/eesanje/url_46_306_5.txt @@ -0,0 +1,8 @@ +ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ : ಸಚಿವ ರಾಜಣ್ಣ +ತುಮಕೂರು,ನ.23- ಬಿಹಾರದಲ್ಲಿ ಜಾತಿಗಣತಿ ವರದಿ ಅಂಗೀಕಾರಗೊಂಡಿರುವುದರಿಂದ ಆಕಾಶವೇನೂ ಬಿದ್ದುಹೋಗಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. +ತಮ್ಮ ಮನೆಯಲ್ಲಿಂದು ಗೃಹಸಚಿವ ಪರಮೇಶ್ವರ್ ಅವರೊಂದಿಗೆ ಉಪಹಾರಕೂಟ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಮೀಕ್ಷಾ ವರದಿಯಲ್ಲಿ ಏನಿದೆ ಎಂದು ಈವರೆಗೂ ಯಾರಿಗೂ ಗೊತ್ತಿಲ್ಲ. ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದರಲ್ಲಿ ಏನಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಬಳಿಕ ನಿರ್ಧಾರ ತೆಗೆದುಕೊಳ್ಳಬೇಕು. ಯಾವುದೂ ಆಗದೆ ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದರು. +ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ ಈಗಿನ ಪರಿಸ್ಥಿತಿ. ನೀರಿನಲ್ಲಿ ನಿಂತಿರುವುದು ಎಮ್ಮೆಯೋ? ಕೋಣವೋ ಎಂಬುದೇ ಗೊತ್ತಿಲ್ಲ ಎಂದು ಮುಗುಮ್ಮಾಗಿ ಹೇಳಿದರು. ಬಿಹಾರದಲ್ಲಿ ಜಾತಿಗಣತಿ ನಡೆದಿದೆ. ವರದಿ ಸಲ್ಲಿಕೆಯಾಗಿ ಅಂಗೀಕಾರಗೊಂಡಿದೆ. ಬಳಿಕ ಆಕಾಶವೇನು ಬಿದ್ದು ಹೋಗಿಲ್ಲ ಎಂದು ಪುನರುಚ್ಚರಿಸಿದರು. +ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ +ಪರಮೇಶ್ವರ್ ಅವರೊಂದಿಗೆ ಭೇಟಿ ಸೌಹಾರ್ದಯುತವಾಗಿದೆ. ಉಪಹಾರಕೂಟದ ವೇಳೆ ನಡೆದ ಚರ್ಚೆಯ ಬಗ್ಗೆ ಮುಂದಿನ ದಿನಗಳಲ್ಲಿ ವಿವರಣೆ ನೀಡುತ್ತೇವೆ. ಹಿರಿಯೂರಿನ ಕಾರ್ಯಕ್ರಮವೊಂದಕ್ಕೆ ನಾವಿಬ್ಬರು ಭೇಟಿ ನೀಡಬೇಕಾಗಿತ್ತು. ಹೀಗಾಗಿ ಜೊತೆಯಲ್ಲಿ ಉಪಹಾರ ಸೇವಿಸಿದ್ದೇವೆ ಎಂದರು. +ಬಿಜೆಪಿಯ ನಾಯಕ ಮಾಜಿ ಸಚಿವ ವಿ.ಸೋಮಣ್ಣ ನಮ್ಮ ಸ್ನೇಹಿತ. ಅವರೊಂದಿಗೆ ಮಾತನಾಡುವುದರಲ್ಲಿ ವಿಶೇಷತೆ ಏನಿಲ್ಲ. ನಾನಾಗಿಯೇ ಅವರಿಗೆ ಕರೆ ಮಾಡುತ್ತೇನೆ. ನನ್ನನ್ನು ಅವರು ಬಿಜೆಪಿಗೆ ಆಹ್ವಾನಿಸಿದ್ದಾರೆ ಎಂದು ಹೇಳಿದರು. +ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು ಸೋಮಣ್ಣ ಸೇರಿದಂತೆ ಯಾರೇ ಕಾಂಗ್ರೆಸ್‍ಗೆ ಬರುವಂತಿದ್ದರೆ ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆಯಾಗುತ್ತದೆ. ತಮಗೆ ಮಾಹಿತಿ ಇರುವುದಿಲ್ಲ ಎಂದು ತಿಳಿಸಿದರು. \ No newline at end of file diff --git a/eesanje/url_46_306_6.txt b/eesanje/url_46_306_6.txt new file mode 100644 index 0000000000000000000000000000000000000000..6a6ef1b0328a8010d5dc638f1bd2ff9111f1b74f --- /dev/null +++ b/eesanje/url_46_306_6.txt @@ -0,0 +1,7 @@ +ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ +ಬೆಂಗಳೂರು,ನ.23-ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್‍ನಂತೆ ಒಂದು ತಿಂಗಳು ಕಾವೇರಿ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ. ನ.23ರಿಂದ ಡಿ.23ರವರೆಗೂ ಒಂದು ತಿಂಗಳ ಕಾಲ ನೀರು ಹರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. +ಕರ್ನಾಟಕದಲ್ಲಿ ಮಳೆ ಕೊರತೆ ಇದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಹಲವು ಬಾರಿ ಮನವಿ ಮಾಡಿದರೂ ಅದನ್ನು ಪರಿಗಣಿಸಿಲ್ಲ. ಸುಪ್ರೀಂಕೋರ್ಟ್‍ನ ಆದೇಶದ ಪ್ರಕಾರ ನೀರು ಹರಿಸುವಂತೆ ತಾಕೀತು ಮಾಡಲಾಗಿದೆ. ಕಾವೇರಿ ನದಿಕೊಳ್ಳದಲ್ಲಿ ಮಳೆಯಾಗುತ್ತಿದೆ. ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ನೀರು ಹರಿಸಬೇಕು ಎಂದು ತಮಿಳುನಾಡು ವಾದ ಮಂಡಿಸಿದೆ. +ಕಾವೇರಿ ನದಿಪಾತ್ರದಿಂದ ಯಾಂತ್ರಿತವಾಗಿ ಮೂರು ಸಾವಿರ ಕ್ಯೂಸೆಕ್ ನೀರು ಹರಿದು ಹೋಗುತ್ತದೆ. ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ವಾದವನ್ನು ಪರಿಗಣಿಸಿ ನೀರಿನ ಹರಿವಿನ ಪ್ರಮಾಣವನ್ನು 2700 ಕ್ಯೂಸೆಕ್ಸ್‍ಗೆ ಮಿತಿಗೊಳಿಸಲಾಗಿದೆ ಎಂಬ ಅಭಿಪ್ರಾಯಗಳಿವೆ. +ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ +ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಇದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಬೆಂಗಳೂರಿನ ಕುಡಿಯುವ ನೀರಿಗೆ ಸುಪ್ರೀಂಕೋರ್ಟ್ ಹಂಚಿಕೆ ಮಾಡಿದ ಪ್ರಕಾರ ನೀರಿನ ಪ್ರಮಾಣವನ್ನು 18 ಟಿಎಂಸಿಯಿಂದ 24 ಟಿಎಂಸಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಅಸೂಚನೆ ಹೊರಡಿಸಿದೆ. +ಒಂದಷ್ಟು ದಿನ ಮಳೆಯಾದ ಕಾರಣಕ್ಕೆ ನೀರಿನ ಒಳಹರಿವು ಸುಧಾರಿಸತ್ತಾದರೂ ಮತ್ತೆ ತಗ್ಗಿದೆ. ಇದರ ನಡುವೆ ಪದೇ ಪದೇ ನೀರು ಬಿಡುವಂತೆ ನಿಯಂತ್ರಣ ಸಮಿತಿ ಆದೇಶಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.ನಿಯಂತ್ರಣ ಸಮಿತಿಯ ತೀರ್ಪನ್ನು ನೀರು ನಿರ್ವಹಣಾ ಪ್ರಾಕಾರದ ಮುಂದೆ ಪ್ರಶ್ನಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. \ No newline at end of file diff --git a/eesanje/url_46_306_7.txt b/eesanje/url_46_306_7.txt new file mode 100644 index 0000000000000000000000000000000000000000..89a49c535bf8e699842dc449ca7d1aae88eec8fe --- /dev/null +++ b/eesanje/url_46_306_7.txt @@ -0,0 +1,14 @@ +ಜಾತಿಗಣತಿ ಸಮೀಕ್ಷೆಯನ್ನು ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ : ಆರ್.ಅಶೋಕ್ +ಬೆಂಗಳೂರು, ನ.23- ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿರುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ನಡೆಸಿರುವ ಸಮೀಕ್ಷೆ ಎಲ್ಲೋ ಕುಳಿತುಕೊಂಡು ಇನ್ನಾರದ್ದೋ ಮನೆಯಲ್ಲಿ ತಯಾರಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. +ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಮೊದಲಿನಿಂದಲೂ ವರದಿ ಬಗ್ಗೆ ಸಾಕಷ್ಟು ಸಂಶಯಗಳಿದ್ದವು. ಇದನ್ನು ಮನೆ ಮನೆಗೆ ತೆರಳಿ ಜನರಿಂದ ಮಾಹಿತಿ ಪಡೆದು ಸಮೀಕ್ಷೆ ನಡೆಸಿದ್ದರೆ ಖಂಡಿತವಾಗಿಯೂ ನಮ್ಮ ತಕರಾರು ಇರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು. +ಆಯೋಗ ನೇಮಿಸಿದ್ದ ಸಿಬ್ಬಂದಿಗಳು ಮನೆ ಮನೆಗೆ ತೆರಳದೆ ಎಲ್ಲೋ ಕುಳಿತುಕೊಂಡು ತಮಗೆ ಬೇಕಾದ ರೀತಿಯಲ್ಲಿ ವರದಿಯನ್ನು ತಯಾರಿಸಿ ಆತುರಾತುರವಾಗಿ ಸರ್ಕಾರಕ್ಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. +ವರದಿಯನ್ನು ವೈಜ್ಞಾನಿಕವಾಗಿಯೇ ನಡೆಸಲಾಗಿದೆ ಎಂದು ಹಿಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜ್ ಹೇಳಿದ್ದಾರೆ. ಹಾಗಾದರೆ ಇದು ವೈಜ್ಞಾನಿಕವಾಗಿ ಮತ್ತು ವಸ್ತುನಿಷ್ಠವಾಗಿದ್ದರೆ ಅಂತಿಮ ವರದಿಗೆ ಅಲ್ಲಿನ ಸದಸ್ಯ ಕಾರ್ಯದರ್ಶಿಯವರು ಏಕೆ ಸಹಿ ಹಾಕಲಿಲ್ಲ. ಇದನ್ನು ಅವರು ಮೊದಲು ಸ್ಪಷ್ಟಪಡಿಸಲಿ ಎಂದು ಒತ್ತಾಯ ಮಾಡಿದರು. +ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ +ವರದಿಗೆ ಸದಸ್ಯ ಕಾರ್ಯದರ್ಶಿ ಸಹಿ ಹಾಕುವುದನ್ನೇ ಮರೆತುಬಿಟ್ಟಿದ್ದಾರೆ ಎನ್ನುವುದಾದರೆ ಇನ್ನು ವರದಿ ತಯಾರಿಸುವಾಗ ಇನ್ನಷ್ಟು ಅವಾಂತರಗಳನ್ನು ಮಾಡಿರಬಹುದು. ಕಾಂತರಾಜ ಅವರು ಬಹಳಷ್ಟು ಬುದ್ದಿವಂತರು ಎಂದುಕೊಂಡಿದ್ದೆ. ಯಾರನ್ನೋ ಓಲೈಸಲು ಈ ರೀತಿ ಹಸಿಬಿಸಿ ವರದಿಯನ್ನು ತಯಾರಿಸುತ್ತಾರೆ ಎಂದುಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು. +ವೈಜ್ಞಾನಿಕವಾಗಿ ವರದಿ ಇದ್ದಿದ್ದರೆ ಕಾರ್ಯದರ್ಶಿ ಏಕೆ ಸಹಿ ಹಾಕಲಿಲ್ಲ. ಇದಕ್ಕೆ ಕಾಂತರಾಜ್ ಅವರು ಏನು ಉತ್ತರ ಕೊಡುತ್ತಾರೆ? ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂಬುದು ಹಲವರ ಒತ್ತಾಯವಾಗಿದೆ. ಈ ನಿಲುವಿನಲ್ಲಿ ನಮ್ಮ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. +ಸಹಿ ಹಾಕುವ ಪರಿಜ್ಞಾನವಿಲ್ಲ ಎಂದರೆ ವರದಿಯನ್ನು ವೈಜ್ಞಾನಿಕವಾಗಿದೆ ಎಂದು ಹೇಗೆ ಒಪ್ಪಿಕೊಳ್ಳಬೇಕು? ವರದಿ ಸರ್ಕಾರಕ್ಕೆ ಹಸ್ತಾಂತರವಾಗುವ ಮೊದಲೇ ಸಾಕಷ್ಟು ಮಾಹಿತಿಗಳು ಸೋರಿಕೆಯಾಗಿವೆ. ಇದನ್ನು ಒಪ್ಪಿಕೊಳ್ಳುವುದಾದರೆ ಹೇಗೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. +ವೈಜ್ಞಾನಿಕ ಮತ್ತು ನ್ಯಾಯಯುತವಾಗಿ ಸಮೀಕ್ಷೆಯಾಗಬೇಕೆಂಬುದು ನಮ್ಮ ಒತ್ತಾಯ. ಜನಸಂಖ್ಯೆ ಆಧಾರದ ಮೇಲೆ ಸಮೀಕ್ಷೆ ನಡೆಸಿದರೆ ನಾವು ವಿರೋಧಿಸುವುದಿಲ್ಲ. ಯಾವುದೋ ಒಂದು ಸಮುದಾಯವನ್ನು ಓಲೈಕೆ ಮಾಡಿಕೊಂಡು ಇನ್ಯಾವುದೋ ಸಮುದಾಯವನ್ನು ತುಳಿಯಲು ಸಿದ್ದಪಡಿಸಿರುವ ಈ ವರದಿಯನ್ನು ಒಪ್ಪಿಕೊಳ್ಳಬೇಕೆ ಎಂದು ಮರುಪ್ರಶ್ನೆ ಮಾಡಿದರು. +ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ +ವರದಿ ಬಗ್ಗೆ ಅನೇಕ ಸಚಿವರೇ ಆಕ್ಷೇಪಿಸಿದ್ದಾರೆ. ಅನೇಕರು ಸರ್ಕಾರ ವರದಿ ಸ್ವೀಕಾರ ಮಾಡಬಾರದೆಂದು ಒತ್ತಡ ಹಾಕಿದ್ದಾರೆ. ಮೊದಲು ಮುಖ್ಯಮಂತ್ರಿಗಳು ಅವರ ಸಂಪುಟ ಸಚಿವರ ಜೊತೆ ಮಾತನಾಡಲಿ, ನಿಜವಾಗಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿ ಬರೆಸಿದ್ದಾರೆ ಎಂಬ ಅನುಮಾನವಿದೆ ಎಂದರು. ಮೂಲ ಪ್ರತಿ ಕಳವಾಗಿರುವ ಬಗ್ಗೆ ಸರ್ಕಾರ ಏಕೆ ತನಿಖೆ ಮಾಡಿಸಿಲ್ಲ. ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬಗ್ಗೆ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. +ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಸರ್ಕಾರ ಮಾಡಬಾರದು. ಈ ಹಿಂದೆ ಪ್ರತ್ಯೇಕ ಧರ್ಮ ಮಾಡಲು ಹೋಗಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿತ್ತೆಂಬುದನ್ನು ನೋಡಿಕೊಳ್ಳಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಓಲೈಕೆ ಮಾಡಿಕೊಳ್ಳಲು ಮಾಡುತ್ತಿರುವ ಈ ನಾಟಕವನ್ನು ನಿಲ್ಲಿಸಬೇಕೆಂದರು. +ಮಾಜಿ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣನವರು ಹಿರಿಯರಿದ್ದಾರೆ. ಅವರ ಬಗ್ಗೆ ನಮ್ಮ ಪಕ್ಷದ ಪ್ರಮುಖರು ಮಾತಾಡುತ್ತಿದ್ದಾರೆ ಇನ್ನೊಂದು ವಾರದಲ್ಲಿ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. \ No newline at end of file diff --git a/eesanje/url_46_306_8.txt b/eesanje/url_46_306_8.txt new file mode 100644 index 0000000000000000000000000000000000000000..28df0fe4ade15a1789b08847f3b7e6c10f1b1b1e --- /dev/null +++ b/eesanje/url_46_306_8.txt @@ -0,0 +1,10 @@ +ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ +ಬೆಂಗಳೂರು,ನ.23- ವರಿಷ್ಠರ ತೀರ್ಮಾನದಿಂದ ಅಸಮಾಧಾನಗೊಂಡು ಶಾಸಕಾಂಗ ಸಭೆಯಿಂದಲೇ ಅರ್ಧಕ್ಕೆ ಹೊರನಡೆದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದರು. +ಸದಾಶಿವನಗರದಲ್ಲಿರುವ ಮನೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ರಮೇಶ್ ಜಾರಕಿಹೊಳಿ, ಬೆಳಗಿನ ಉಪಹಾರವನ್ನು ಸೇವಿಸಿದರು. ಬಳಿಕ ಉಭಯ ನಾಯಕರು ಕೆಲಹೊತ್ತು ರಹಸ್ಯ ಮಾತುಕತೆ ನಡೆಸಿದ್ದು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಮಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. +ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷದ ಹಿತದೃಷ್ಟಿಯಿಂದ ತಮ್ಮೊಂದಿಗೆ ಸಹಕರಿಸುವಂತೆ ವಿಜಯೇಂದ್ರ ಕೋರಿದ್ದು, ಪ್ರಧಾನಿ ನರೇಂದ್ರಮೋದಿ ಅವರನ್ನು ಮೂರನೇ ಅವಗೆ ಪ್ರಧಾನಿ ಮಾಡಬೇಕಾದರೆ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದ್ದಾರೆ. +ವರಿಷ್ಠರು ಈ ಹಿಂದೆ ನಮಗೆ ಇಷ್ಟವಿಲ್ಲದಿದ್ದರೂ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ನಾವು ಕೂಡ ಒಪ್ಪಿಕೊಂಡಿದ್ದೇವೆ. ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ವರಿಷ್ಠರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಒಂದು ಪಕ್ಷವೆಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಮನವಿ ಮಾಡಿಕೊಂಡರು. +ನನಗೆ ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ ರಾಜ್ಯ ನಾಯಕರ ಬಳಿ ಒಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂಬುದು ನನ್ನ ಒತ್ತಾಸೆಯಾಗಿತ್ತು. ಹಿಂದೆ ಕಷ್ಟಕಾಲದಲ್ಲಿದ್ದಾಗಲೂ ಯಡಿಯೂರಪ್ಪನವರ ಜೊತೆ ಇದ್ದೆ. ಮುಂದೆಯೂ ಇರುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆಂದು ಗೊತ್ತಾಗಿದೆ. +ಖಾಸಗಿ ಬಸ್ ಪಲ್ಟಿ, ಒಂದೇ ಕುಟುಂಬದ ಮೂವರ ದುರ್ಮರಣ +ಯಾವುದೇ ನಿರ್ಧಾರವನ್ನು ಪಕ್ಷದ ವೇದಿಕೆಯಲ್ಲೇ ತೀರ್ಮಾನವಾಗಬೇಕು. ಆತುರದ ಇಲ್ಲವೇ ಯಾರದೋ ಒತ್ತಡಕ್ಕೆ ಮಣಿದು ತೀರ್ಮಾನಿಸಬೇಡಿ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪಕ್ಷ ಸಂಘಟನೆಗೆ ಒತ್ತು ಕೊಡಿ. ನಿಮ್ಮೊಂದಿಗೆ ನಾವು ಕೂಡ ಇರುತ್ತೇವೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಮೇಶ್ ಜಾರಕಿಹೊಳಿ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಪಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. +ವಿಜಯೇಂದ್ರ ಅವರು ಅಸಮಾಧಾನಗೊಂಡಿರುವವರನ್ನು ಸಮಾಧಾನಪಡಿಸಿ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ ಪುಟ್ಟ ಗೊಂದಲ, ಅಸಮಾಧಾನಗಳಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಹೀಗಾಗಿ ಇಂದು ಅವರೊಂದಿಗೆ ಮುಕ್ತವಾಗಿ ಮಾತನ್ನಾಡಿದ್ದೇನೆ ಎಂದು ಹೇಳಿದರು. +ಮುಂದಿನ ಲೋಕಸಭಾ ಚುನಾವಣೆಗೆ 28 ಸಂಸದರನ್ನು ಆಯ್ಕೆ ಮಾಡಿ, ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ, ರಮೇಶ್ ಜಾರಕಿಹೊಳಿ ಅವರು ಕೂಡ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನಮ್ಮೆಲ್ಲರ ಗುರಿ ಒಂದೇ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮಾಡುವುದು ಎಂದರು. \ No newline at end of file diff --git a/eesanje/url_46_306_9.txt b/eesanje/url_46_306_9.txt new file mode 100644 index 0000000000000000000000000000000000000000..7392584784f8f98ed57dd4578cafcd0bfd5159a5 --- /dev/null +++ b/eesanje/url_46_306_9.txt @@ -0,0 +1,16 @@ +ವರದಿ ಜಾರಿಗೂ ಮುನ್ನವೇ ಅವೈಜ್ಞಾನಿಕ ಎಂಬುದು ಸರಿಯಲ್ಲ : ಕಾಂತರಾಜು +ಬೆಂಗಳೂರು,ನ.23- ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಪ್ರಸ್ತುತ ಅಂಕಿ-ಅಂಶಗಳನ್ನು ಸಮೀಕರಿಸಿಕೊಂಡು ಜಾರಿಯಾಗಬೇಕು ಎಂದು ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯನ್ನು ಇನ್ನೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅದು ಅವೈಜ್ಞಾನಿಕ, ಹಳೆಯದು ಎಂಬೆಲ್ಲಾ ಅಭಿಪ್ರಾಯಗಳು ಅಪ್ರಸ್ತುತ ಎಂದರು. +ಸುಪ್ರೀಂಕೋರ್ಟ್‍ನ ಪ್ರಕರಣ ಒಂದರಲ್ಲಿ ತೀರ್ಪು ನೀಡಿದ್ದು, 10 ವರ್ಷಗಳಷ್ಟು ಹಿಂದಿನ ವರದಿಯನ್ನು ಜಾರಿ ಮಾಡಬಹುದು ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಯಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ. +ತಳ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಉದ್ದೇಶದಿಂದ 2013ರಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಅದರಂತೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. 55 ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಲಾಗಿದೆ. ಇದನ್ನು ಜಾತಿ ಜನಗಣತಿ ಎಂದು ಬಿಂಬಿಸುವುದು ಸರಿಯಲ್ಲ. +ಜಾತಿ ಮಾಹಿತಿ ಕಲೆಹಾಕುವ ಒಂದು ಕಾಲಂ ಇತ್ತು ಎಂಬುದು ಸತ್ಯ. ಆದರೆ, ಅದನ್ನು ಮೀರಿ ಬಹಳಷ್ಟು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಮನೆ, ನಿವೇಶನ ಹೊಂದಿರುವವರು, ರೇಷನ್ ಕಾರ್ಡ್, ಬ್ಯಾಂಕ್ ಖಾತೆ, ಉದ್ಯೋಗ, ಆರ್ಥಿಕ ಸ್ಥಿತಿ-ಗತಿ ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸಲಾಗಿದೆ. +ಸಂವಿಧಾನದ ಪ್ರಕಾರ ಮೀಸಲಾತಿ ನೀಡಬೇಕಾದರೆ ಸಾಮಾಜಿಕ ಮತ್ತು ಶೈಕ್ಷಣಿಕ ಮಾನದಂಡಗಳು ಅರ್ಹವಾಗಿವೆ. ಜಾತಿ ಆಧಾರಿತವಾಗಿ ಸಮೀಕ್ಷೆ ನಡೆದು ಅದನ್ನು ಪರಿಗಣಿಸಿ ಮೀಸಲಾತಿ ನೀಡಲಾಗುವುದಿಲ್ಲ ಮತ್ತು ಜಾತಿ ಆಧಾರಿತ ಸಮೀಕ್ಷೆಗಳು ಸಂವಿಧಾನ ಬಾಹಿರವಾಗುತ್ತದೆ. +ಈ ಹಿನ್ನೆಲೆಯಲ್ಲಿ ಅರ್ಥಪೂರ್ಣ ಹಾಗೂ ಸಂವಿಧಾನತ್ಮಕವಾಗಿರಬೇಕು ಎಂಬ ಕಾರಣಕ್ಕಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಕಲೆಹಾಕಲಾಯಿತು ಎಂದು ಹೇಳಿದರು. ಸಿದ್ದರಾಮಯ್ಯ ಅವರ ಸರ್ಕಾರದಲ್ಲೇ ವರದಿ ನೀಡದಿರುವ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ. ಆದರೆ, ಆಗಿನ್ನೂ ವರದಿ ಸಂಪೂರ್ಣವಾಗಿ ತಯಾರಾಗಿರಲಿಲ್ಲ. 2019ರಲ್ಲಿ ವರದಿ ಸಿದ್ಧಗೊಂಡಿತ್ತು. ಅದನ್ನು ಸರ್ಕಾರಕ್ಕೆ ಸಲ್ಲಿಸಲು ನಾವು ಪ್ರಯತ್ನಿಸಿದೆವು. ಆದರೆ, ಅವಕಾಶ ಸಿಗಲಿಲ್ಲ. ನನ್ನ ಅವ ಮುಗಿದ್ದಿದರಿಂದಾಗಿ ಆಯೋಗದ ಸದಸ್ಯ ಕಾರ್ಯದರ್ಶಿಯವರಿಗೆ ವರದಿ ನೀಡಿ ಸರ್ಕಾರಕ್ಕೆ ತಲುಪಿಸಲು ಸಲಹೆ ನೀಡಿ ಬಂದಿದ್ದೆ. +ಸದಸ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಯಾಗಿದ್ದು, ಆಯೋಗದ ಮುಖ್ಯಸ್ಥರಾಗಿದ್ದರು. ಸಮೀಕ್ಷೆಯ ಕಾರ್ಯತಂಡದ ಸದಸ್ಯರೂ ಆಗಿದ್ದರು. ಅಂತಿಮ ವರದಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬುದು ಸತ್ಯ. ಆದರೆ, ಆಯೋಗದ ಕಾರ್ಯಕಾರಿ ಮಂಡಳಿ ಅಂತಿಮಗೊಂಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಅದಕ್ಕೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಿದ್ದರು ಎಂದು ಹೇಳಿದರು. +ಸಮೀಕ್ಷೆ ನಡೆದು 8 ವರ್ಷಗಳಾಗಿದ್ದರೂ ಪ್ರಸ್ತುತ ಜಾರಿಗೊಳಿಸುವುದು ಸರಿಯಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್‍ನ ತೀರ್ಪಿನ ಪ್ರಕಾರ 10 ವರ್ಷಗಳ ವರೆಗೂ ಯಾವುದೇ ಆಯೋಗದ ವರದಿಯನ್ನು ಜಾರಿಗೊಳಿಸುವ ಅವಕಾಶವಿದೆ. +ಹಿಂದುಳಿದ ವರ್ಗಗಳ ಆಯೋಗ ಪ್ರತಿಯೊಂದು ಮನೆಗೂ ತೆರಳಿ ಮಾಹಿತಿ ಕಲೆ ಹಾಕಲಿದೆ. ಅಲೆಮಾರಿಗಳು, ಬೀದಿ ಬದಿ ವಾಸಿಗಳು, ಆಸ್ಪತ್ರೆ ಮುಂಭಾಗ, ಶಾಲಾ-ಕಾಲೇಜುಗಳ ಹೊರ ಭಾಗದ ಮರದ ಕೆಳಗೆ, ಸೇತುವೆಗಳ ಕೆಳಗೆ ಹೀಗೆ ಎಲ್ಲೇಲ್ಲಿ ಜನರು ವಾಸಿಸುತ್ತಾರೋ ಅಲ್ಲಿಗೆಲ್ಲಾ ತೆರಳಿ ಮಾಹಿತಿ ಕಲೆ ಹಾಕಲಾಗಿದೆ. ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ. +ಸರ್ಕಾರ ಮೊದಲು ವರದಿಯನ್ನು ಸ್ವೀಕರಿಸಬೇಕು. ಅದನ್ನು ಮುದ್ರಿಸಿ ಎಲ್ಲರಿಗೂ ಹಂಚಬೇಕು. ಅದನ್ನು ಅಧ್ಯಯನ ನಡೆಸಿದ ಬಳಿಕ ನಿರ್ಣಯ ಕೈಗೊಳ್ಳಬೇಕು. ಏಕಾಏಕಿ ಅವೈಜ್ಞಾನಿಕ ಎಂಬುದು ಸರಿಯಲ್ಲ. ಟೀಕೆ ಮಾಡಲು ಎಲ್ಲರಿಗೂ ಸ್ವತಂತ್ರವಿರುತ್ತದೆ. ನಾನು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ವರದಿ ಹಳೆಯದು ಎಂಬುದು ಸರಿಯಲ್ಲ. +1980ರಲ್ಲಿ ನೀಡಲಾಗಿದ್ದ ಮಂಡಲ್ ಆಯೋಗದ ವರದಿಯನ್ನು 1993ರಲ್ಲಿ ಜಾರಿಗೊಳಿಸಲಾಗಿದೆ. 2015ರಲ್ಲಿ ಸಿದ್ಧಪಡಿಸಿದ್ದ ಸಮೀಕ್ಷಾ ವರದಿಯ ಮಾಹಿತಿಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ದಿನ ಮಾನದ ಅಂಕಿ-ಅಂಶಗಳನ್ನು ಪರಿಗಣಿಸಿ ಜಾರಿ ಮಾಡಬಹುದು. ಈ ರೀತಿಯ ಸಮೀಕರಣಕ್ಕೆ ತಜ್ಞರುಗಳಿದ್ದಾರೆ ಎಂದು ಹೇಳಿದರು. +ರಾಮಮಂದಿರವನ್ನು ಲೋಕಸಭಾ ಚುನಾವಣಾ ಅಸ್ತ್ರವನ್ನಾಗಿಸಲು ಬಿಜೆಪಿ ಪ್ಲಾನ್ +ಮೀಸಲಾತಿಯ ಪ್ರಮಾಣ ಶೇ.50ರಷ್ಟೇ ಇರಬೇಕೇ ? ಅದನ್ನು ಮೀರಬೇಕೆ? ಅವಕಾಶ ವಂಚಿತರಿಗೆ ಸೌಲಭ್ಯ ನೀಡುವುದೇಗೆ ಎಂಬೆಲ್ಲಾ ಪ್ರಶ್ನೆಗಳು ನಮ್ಮ ಮುಂದಿವೆ. ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‍ಗಳು ಹಲವಾರು ಬಾರಿ ಇಂತಹ ಪ್ರಶ್ನೆಗಳು ನಮ್ಮ ಮುಂದಿವೆ. ಅದಕ್ಕೆ ಉತ್ತರ ನೀಡಲು 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿಯಲ್ಲಿ ಜಾತಿ ಮಾಹಿತಿ ಸಂಗ್ರಹ ಸಮರ್ಪಕ. ಇಲ್ಲವಾದರೆ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಗಳು ಪರ್ಯಾಯವಾಗಲಿವೆ ಎಂದರು. +ಕರ್ನಾಟಕ ದೇಶದಲ್ಲೇ ಪ್ರಥಮ ಬಾರಿಗೆ ಸಮೀಕ್ಷೆಗೆ ಕೈ ಹಾಕಿತು. ಬಿಹಾರದಲ್ಲಿ ಈ ರೀತಿಯ ಪ್ರಯತ್ನಗಳಾದ ಹಲವಾರು ಬಾರಿ ಆಕ್ಷೇಪಗಳು, ಅಡೆತಡೆಗಳು ಎದುರಾಗುತ್ತವೆ. ನ್ಯಾಯಾಲಯಗಳಲ್ಲಿ ತಗಾದೆ ತೆಗೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಲಿಲ್ಲ. ಅಂತಿಮವಾಗಿ ವರದಿ ಸಿದ್ಧಗೊಂಡು ಜಾರಿಯಾಗಿದೆ ಎಂದು ಹೇಳಿದರು. +ತಮ್ಮ ನೇತೃತ್ವದ ಆಯೋಗದ ವರದಿ ಸದಸ್ಯ ಕಾರ್ಯದರ್ಶಿ ಅವರ ಬಳಿ ಇದೆ. ಅದನ್ನು ಸದಸ್ಯ ಕಾರ್ಯದರ್ಶಿಯಾದರೂ ಸರ್ಕಾರಕ್ಕೆ ತಲುಪಿಸಬೇಕು ಅಥವಾ ಸರ್ಕಾರವೇ ಪಡೆದುಕೊಳ್ಳಬೇಕು. ಮೂಲ ಪ್ರತಿ ನಾಪತ್ತೆಯಾದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾವು ಅವ ಮುಗಿಯುವ ಮುನ್ನವೇ ಸದಸ್ಯ ಕಾರ್ಯದರ್ಶಿ ಅವರಿಗೆ ವರದಿ ನೀಡಿ ಬಂದಿದ್ದೇವೆ. ಒಳಗಿನ ಮಾಹಿತಿಗಳು ತಮಗೆ ಗೊತ್ತಿಲ್ಲ ಎಂದು ತಿಳಿಸಿದರು. \ No newline at end of file diff --git a/eesanje/url_46_307_1.txt b/eesanje/url_46_307_1.txt new file mode 100644 index 0000000000000000000000000000000000000000..39683167017581bc413e0b8938b0ebf9df02236e --- /dev/null +++ b/eesanje/url_46_307_1.txt @@ -0,0 +1,6 @@ +ಆರೋಗ್ಯ ಇಲಾಖೆಯಲ್ಲೂ ಕೌನ್ಸಿಲಿಂಗ್ ಮೂಲಕ ವರ್ಗಾವಣೆ +ಬೆಂಗಳೂರು, ನ.22- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವರ್ಗಾವಣೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ಶಿಕ್ಷಣ ಇಲಾಖೆಯ ಮಾದರಿಯಲ್ಲೇ ಕೌನ್ಸಿಲ್ ಮೂಲಕವೇ ವರ್ಗಾವಣೆ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‍ಕುಮಾರ್ ಆದೇಶ ಹೊರಡಿಸಿದ್ದು, ಎ, ಬಿ, ಸಿ ಮತ್ತು ಡಿ ವೃಂದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಕೌನ್ಸಿಲ್ ಕಾಯ್ದೆಯ ಅನ್ವಯ ನಿರ್ವಹಿಸಲಾಗುವುದು ಎಂದು ತಿಳಿಸಿದ್ದಾರೆ. +ಈ ಮೂಲಕ ಮುಂದಿನ ಎಲ್ಲಾ ವರ್ಗಾವಣೆಗಳು ಕೌನ್ಸಿಲ್ ಮಾದರಿಯಲ್ಲೇ ನಡೆಯಲಿದೆ ಎಂದು ಸರ್ಕಾರ ಸ್ಪಷ್ಟಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮತ್ತು ತುರ್ತು ಸೇವೆಗೆ ಹೆಸರಾಗಿದೆ. ಆದರೆ, ಇಲ್ಲಿ ಗ್ರಾಮೀಣ ಭಾಗದಲ್ಲಿ ಸಿಬ್ಬಂದಿಗಳ ಕೊರತೆ ತೀವ್ರವಾಗಿ ಕಾಡುತ್ತಿದೆ. ಅದರಲ್ಲೂ ವೈದ್ಯರ ವರ್ಗಾವಣೆಗೆ ಭಾರೀ ಲಾಬಿಗಳು ನಡೆಯುತ್ತಿವೆ. + : ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ +ಗ್ರಾಮೀಣ ಭಾಗದ ಆಸ್ಪತ್ರೆಗಳಲ್ಲಿ ತಾಂತ್ರಿಕ ಸಿಬ್ಬಂದಿಗಳ ಕೊರತೆ ತೀವ್ರವಾಗಿದೆ. ವರ್ಗಾವಣೆಗೆ ಪ್ರಭಾವಗಳಿ, ಚಿತಾವಣೆಗಳು ಭಾರೀ ಪ್ರಮಾಣದಲ್ಲಿ ಕೆಲಸ ಮಾಡುತ್ತವೆ. ಇದಕ್ಕೆಲ್ಲಾ ಕಡಿವಾಣ ಹಾಕುವಲ್ಲಿ ಕೌನ್ಸಿಲ್ ಮಾದರಿಯನ್ನು ಸರ್ಕಾರ ಜಾರಿಗೊಳಿಸಿದೆ. \ No newline at end of file diff --git a/eesanje/url_46_307_10.txt b/eesanje/url_46_307_10.txt new file mode 100644 index 0000000000000000000000000000000000000000..c6b765b7a12c111ae83f7407fc6bbf410ba431e5 --- /dev/null +++ b/eesanje/url_46_307_10.txt @@ -0,0 +1,8 @@ +ಜೆಡಿಎಸ್ ನಾಯಕರ ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ.. +ಬೆಂಗಳೂರು,ನ.21-ಆಕ್ಷೇಪಾರ್ಹ ಪೋಸ್ಟರ್ ಮೂಲಕ ನಮ್ಮ ನಾಯಕರ ತೇಜೋವಧೆ ಮಾಡಲಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸಬೇಕೆಂದು ಮಾಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಮಂಜುನಾಥ್ ಒತ್ತಾಯಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ ಆಕ್ಷೇಪಾರ್ಹ ಪೋಸ್ಟ್ ಅಂಟಿಸಲಾಗುತ್ತಿದೆ. ಇದು ಜನರನ್ನು ದಿಕ್ಕು ತಪ್ಪಿಸುವ ಕೆಲಸ. ಉಪಮುಖ್ಯಮಂತ್ರಿಯವರು ಪೋಸ್ಟರ್ ಅಂಟಿಸಬೇಡಿ, ಬ್ಯಾನರ್ ಹಾಕಬೇಡಿ ಎಂದು ಹೇಳಿದ್ದರು. ಆದರೆ ಪೋಸ್ಟರ್ ಅಂಟಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. +ಪಂಚತಾರಾ ಹೊಟೇಲ್‌ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ +ಹಿಂದಿನ ಬಿಜೆಪಿ ಸರ್ಕಾರದ ಅವಯಲ್ಲಿ ರಾತ್ರೋರಾತ್ರಿ ಪೇಸಿಎಂ ಪೋಸ್ಟರ್‍ಗಳನ್ನು ಅಂಟಿಸಿದ್ದರು. ಸರ್ಕಾರವನ್ನು ಈಗ ಟೀಕೆ ಮಾಡುವವರ ಬಗ್ಗೆ ವ್ಯಂಗ್ಯವಾದ ಪೋಸ್ಟರ್ ಅಂಟಿಸಿದರೆ ಮೇಲುಗೈ ಸಾಧಿಸಬಹುದೆಂಬ ಭ್ರಮೆಯಲ್ಲಿದ್ದಾರೆ. ಇದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಪೋಸ್ಟರ್‍ಗಳನ್ನು ಅಂಟಿಸುವುದು ದೊಡ್ಡ ವಿಚಾರವಲ್ಲ. +ರಾಜಕಾರಣದಲ್ಲಿ ಅಕಾರ ಶಾಶ್ವತವಲ್ಲ. ಗೃಹ ಇಲಾಖೆ ಹಾಗೂ ಪೊಲೀಸ್ ಮಹಾನಿರ್ದೇಶಕರು ಇಂಥವುಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದಾಗ ಏನು ಮಾಡುತ್ತಿದ್ದರು? ಮತ್ತದೇ ಪ್ರವೃತ್ತಿ ನಿನ್ನೆಯೂ ಮುಂದುವರೆದಿದೆ. ಇಂಥದ್ದನ್ನು ಕೂಡಲೇ ನಿಲ್ಲಿಸಬೇಕು. ಇದು ನಿಲ್ಲಿಸದಿದ್ದರೆ ನಾವು ಅದೇ ರೀತಿ ಮುಂದುವರೆಯಬೇಕಾಗುತ್ತದೆ. +ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ +ಕುಮಾರಸ್ವಾಮಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆ ಸಹಿತ ಆರೋಪ ಮಾಡಿದ್ದಾರೆ. ಆರೋಪ ಮಾಡಿದ ಕೂಡಲೇ ಸರ್ಕಾರ ನಡೆಸುವವರಿಗೆ ಭಯವೇಕೆ? ತಪ್ಪು ಮಾಡದಿದ್ದರೆ ಅವರೇಕೆ ಭಯಪಡಬೇಕು ಎಂದ ಅವರು ಇದನ್ನು ಇಲ್ಲಿಗೆ ನಿಲ್ಲಿಸದಿದ್ದರೆ ನಾವು ಕೂಡ ಅದೇ ರೀತಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಅಶ್ವಿನ್‍ಕುಮಾರ್, ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ರಮೇಶ್‍ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_307_11.txt b/eesanje/url_46_307_11.txt new file mode 100644 index 0000000000000000000000000000000000000000..f7139c1113f027a85c085a5d043d585de9966924 --- /dev/null +++ b/eesanje/url_46_307_11.txt @@ -0,0 +1,8 @@ +ಬೆಂಗಳೂರು ಕಂಬಳ ಉತ್ಸವದಿಂದ ಬ್ರಿಜ್ ಭೂಷಣ್‍ಗೆ ಕೋಕ್ +ಬೆಂಗಳೂರು,ನ.21-ಇದೇ ತಿಂಗಳ 25ರಂದು ನಗರದ ಅರಮನೆ ಮೈದಾನದಲ್ಲಿ ನಡೆಯಲಿರುವ ಕರಾವಳಿಯ ಹೆಮ್ಮೆ ಕಂಬಳ ಉತ್ಸವಕ್ಕೆ ವಿವಾದಿತ ವ್ಯಕ್ತಿ ಬ್ರಿಜ್ ಭೂಷಣ್ ಅವರನ್ನು ಕಾರ್ಯಕ್ರಮದಿಂದ ಆಯೋಜಕರು ಕೈಬಿಟ್ಟಿದ್ದಾರೆ. +ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಅವರನ್ನು ಕಂಬಳ ಉತ್ಸವಕ್ಕೆ ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಿದ್ದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣ ಮತ್ತಿತರ ಕಡೆ ಬ್ರಿಡ್ಜ್ ಭೂಷಣ್ ಅವರನ್ನು ಯಾವುದೇ ಕಾರಣಕ್ಕೂ ಕಂಬಳ ಉತ್ಸವಕ್ಕೆ ಆಹ್ವಾನಿಸಬಾರದೆಂದು ಅನೇಕರು ಮನವಿ ಮಾಡಿದ್ದರು. +ಇದಕ್ಕೆ ಅಂತಿಮ ತೆರೆ ಎಳೆದ ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ರೈ, ಕಂಬಳ ಒಂದು ಜನಪ್ರಿಯ ಕ್ರೀಡೆ. ಇದೊಂದು ದೊಡ್ಡ ಕಾರ್ಯಕ್ರಮ. ಹೀಗಾಗಿ ಬೇರೆಯವರು ಬಂದು ಮನವಿ ಮಾಡಿದ್ದರಿಂದ ಬ್ರಿಜ್ ಭೂಷಣ್ ಅವರನ್ನು ಆಹ್ವಾನಿಸಲಾಗಿತ್ತು ಎಂದು ಸಮರ್ಥಿಸಿಕೊಂಡರು. +ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಬೇಕೆಂದು ಮನವಿ ಮಾಡಿದರೆ ಸಿದ್ದಿ ಜನಾಂಗದವರು ಬಂದು ಮತ್ತೊಂದು ಮನವಿ ಮಾಡುತ್ತಾರೆ. ಹೀಗೆ ಎಲ್ಲರ ಮನವಿಯನ್ನು ಸಮಿತಿಯು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಬ್ರಿಜ್ ಭೂಷಣ್ ಅವರನ್ನು ಸಮಿತಿಯಿಂದ ಕೈಬಿಡಲು ತೀರ್ಮಾನಿಸಲಾಗಿದೆ. ಈಗಾಗಲೇ ಮುದ್ರಣಗೊಂಡಿರುವ ಆಹ್ವಾನ ಪತ್ರಿಕೆಗಳನ್ನು ಹೊಸದಾಗಿ ಮುದ್ರಣ ಮಾಡುತ್ತೇವೆ. ಕಂಬಳ ಉತ್ಸವಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಅಶೋಕ್ ರೈ ಸ್ಪಷ್ಟಪಡಿಸಿದರು. +ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ +ಇದು ಗೊತ್ತಿದ್ದೋ ಅಥವಾ ಗೊತ್ತಿಲ್ಲದೆಯೇ ಆಗಿರುವ ಅಚಾತುರ್ಯ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಗೋವಾದಲ್ಲಿ ಕುಡುವಿ ಮತ್ತು ಸಿದ್ದಿ ಜನಾಂಗದವರಿಗೆ ಅವರು ಕುಸ್ತಿ ತರಬೇತಿಯನ್ನು ನೀಡಿದ್ದರು. ಹೀಗಾಗಿ ಅವರ ಸೇವೆಯನ್ನು ಪರಿಗಣಿಸಿ ಇದೇ 25ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉತ್ಸವಕ್ಕೆ ಆಹ್ವಾನಿಸಲಾಗಿತ್ತು. +ಅಂದು ಅವರು ಕುಸ್ತಿಪಟುಗಳನ್ನು ಸನ್ಮಾನಿಸುವ ಕಾರ್ಯಕ್ರಮವಿತ್ತು. ಆದರೆ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದ್ದರಿಂದ ಬ್ರಿಜ್ ಭೂಷಣ್ ಹೆಸರನ್ನು ಕೈಬಿಡಲಾಗಿದೆ. ಎಂದಿನಂತೆ ಕಂಬಳ ಉತ್ಸವಕ್ಕೆ ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಅಶೋಕ್ ರೈ ಮನವಿ ಮಾಡಿದರು. \ No newline at end of file diff --git a/eesanje/url_46_307_12.txt b/eesanje/url_46_307_12.txt new file mode 100644 index 0000000000000000000000000000000000000000..dfae1fd7dbba99230984e024b31cd56cf5b4fd5b --- /dev/null +++ b/eesanje/url_46_307_12.txt @@ -0,0 +1,11 @@ +ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ +ಬೆಂಗಳೂರು, ನ.21- ಬ್ಲೂಫಿಲಂ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡುತ್ತಿರುವ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯದಿಂದ ನಿವೃತ್ತನಾಗುತ್ತೇನೆ. ನೀವು ಏನು ಮಾಡಿಕೊಳ್ಳುತ್ತೀರಾ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹತಾಶರಾಗಿದ್ದಾರೆ. ಬಾಯಿಗೆ ಬಂದಂತೆ ಮಾತನಾಡಿ ಜನರ ನಡುವೆ ನಗೆ ಪಾಟಲಿಗೆ ಈಡಾಗುತ್ತಿದ್ದಾರೆ ಎಂದರು. ರಾಜಕಾರಣದಲ್ಲಿ ನಾನು ಅಂತ ಕೆಲಸ ಮಾಡಿಲ್ಲ, ಮಾಡಿದ್ದನ್ನು ಸಾಬೀತು ಪಡಿಸಿ ಇಂದೇ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಈ ಹಿಂದೆ ಅವರ ತಂದೆ ತಮ್ಮ ವಿರುದ್ಧ ಚುನಾವಣೆಗೆ ನಿಂತು ಸೋಲು ಕಂಡಿದ್ದರು. ಆಗ ಏಕೆ ಈ ವಿಚಾರ ಪ್ರಸ್ತಾಪ ಮಾಡಲಿಲ್ಲ. ಮಾಜಿ ಮುಖ್ಯಮಂತ್ರಿ ಎಂದರೆ ಒಂದು ಘನತೆ, ಗೌರವ ಇರಬೇಕು. ಕುಮಾರಸ್ವಾಮಿ ಹತಾಶರಾಗಿ ನೀಡುತ್ತಿರುವ ಹೇಳಿಕೆಗಳು ಅವರನ್ನು ನಾಚಿಕೆಗೀಡು ಮಾಡುತ್ತಿವೆ ಎಂದರು. +ಕುಮಾರಸ್ವಾಮಿಯವರು ಕನಕಪುರಕ್ಕೆ ಹೋಗಲಿ ನಮ್ಮ ಪಕ್ಷದ ಕಾರ್ಯಕರ್ತರು ಬೇಡ, ಅವರ ಪಕ್ಷ ಕಾರ್ಯಕರ್ತರನ್ನೇ ಕೇಳಿ ನನ್ನ ಬಗ್ಗೆ ತಿಳಿದುಕೊಳ್ಳಲಿ. ಕನಕಪುರದ ಜನ ನಾನು ಚುನಾವಣೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡದೆ ಇದ್ದರೂ 1.23,000 ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ. ಈವರೆಗೂ ಸಾಕಿ ಸಲಹಿದ್ದಾರೆ ಎಂದರು.ಕುಮಾರಸ್ವಾಮಿಯವರ ವರ್ತನೆ ಸರಿಯಲ್ಲ. ಕುಮಾರಸ್ವಾಮಿ ವಿರುದ್ಧ ನಡೆದಿರುವ ಪೋಸ್ಟರ್ ವಾರ್ ಬಗ್ಗೆಯೂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಯಾರೇ ಇಂತಹ ಕೆಲಸ ಮಾಡಿದ್ದರೂ ಅದು ತಪ್ಪು. ಅಂತ ಕೀಳು ರಾಜಕಾರಣಕ್ಕೆ ನಾನು ಪ್ರೋತ್ಸಾಹ ಕೊಡುವುದಿಲ್ಲ ಎಂದರು. +ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯದಲ್ಲಿ ಬರ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರವಾಸ ಮಾಡುವವರನ್ನು ಬೇಡ ಎನ್ನಲ್ಲ. ಪ್ರವಾಸ ಮಾಡುವ ಜೊತೆಗೆ ಎಲ್ಲರನ್ನು ಕರೆದು ಕೊಂಡು ದೆಹಲಿಗೆ ಹೋಗಲಿ, ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ ಎಂದರು. +ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿಯಡಿ 150 ದಿನಕ್ಕೆ ಹೆಚ್ಚಿಸಲು ಅವಕಾಶ ಇದೆ. ಅದಕ್ಕೆ ಮಂಜೂರಾತಿ ಮಾಡಿಸಲಿ, ಅದರ ಜೊತೆಗೆ ಪ್ರವಾಸ ಮಾಡಲಿ, ಪಕ್ಷ ಕಟ್ಟಲಿ ಅದಕ್ಕೂ ಮೊದಲು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ. ಆಗ ಇವರು ಒಳ್ಳೆಯದು ಮಾಡ್ತಾರೆ ಎಂದು ಕೊಳ್ಳುತ್ತೇವೆ ಎಂದರು. +ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ +ಬೆಂಗಳೂರಿನಲ್ಲಿ ವಿದ್ಯುತ್ ಶಾಕ್‍ನಿಂದ ತಾಯಿ ಮಗು ಸಾವು ಗಂಭೀರ ವಿಚಾರವಾಗಿದೆ. ಇದು ನಮ್ಮ ಗಮನದಲ್ಲಿದೆ, ಹಾದಿಯಲ್ಲಿ ಬಿದ್ದಿರುವ ಅಪಾಯಕಾರಿ ಕೇಬಲ್‍ಗಳನ್ನು ತೆಗೆಯಲು ಆಗ್ರಹಗಳು ಬರುತ್ತಿವೆ. ಅದರ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಿದೆ. ಆದರೆ ಆ ರೀತಿಯ ಕೇಬಲ್‍ಗಳನ್ನು ಕತ್ತರಿಸಿದ ತಕ್ಷಣ ಟಿವಿಯ ಸಂಪರ್ಕಗಳು ಕಡಿತಗೊಳ್ಳುತ್ತವೆ. ನಮಗೆ ಟಿವಿಯವರದೆ ಕಾಟವಾಗಿದೆ, ಟಿವಿಯವರನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ಈ ರೀತಿಯ ಕೇಬಲ್‍ಗಳನ್ನು ಉಳಿಸಿಕೊಂಡಿದ್ದೇವೆ. ನಿನ್ನೆ ಮುದ್ರಣ ಮಾಧ್ಯಮದವರು ನಮಗೆ ಸೇರಿದ ಕೇಬಲ್‍ಗಳನ್ನು ಕತ್ತರಿಸಿ ಅಡ್ಡಿ ಪಡಿಸುವುದಿಲ್ಲ ಎಂದಿದ್ದಾರೆ. ಟಿವಿಯವರು ಒಪ್ಪಿಕೊಂಡರೆ ಸಂಜೆಯ ಒಳಗೆ ಎಲ್ಲವನ್ನೂ ಕತ್ತರಿಸಿ ಹಾಕುತ್ತೇವೆ ಎಂದರು. +ವಿದ್ಯುತ್‍ನಿಂದ ಮೃತಪಟ್ಟವರಿಗೆ 5 ಲಕ್ಷ ಪರಿಹಾರ ನೀಡುತ್ತಿರುವ ಹಾಗೂ ಅದನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಪಕ್ಷದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಅವರು ಬಂದು ಹೋದ ಮೇಲೆ ಎಲ್ಲಾ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಭೆಯಲ್ಲಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತೇನೆ. +ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ +ಕಾರ್ಯಕರ್ತರು ಸೇರಿದಂತೆ ಎಲ್ಲರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ನೀಡಬೇಕಿದೆ. ಆದರೆ ಎಲ್ಲರಿಗೂ ಒಮ್ಮೆಲೆ ಅವಕಾಶ ನೀಡಲಾಗುವುದಿಲ್ಲ. ಎರಡು ಮೂರು ಹಂತದಲ್ಲಿ ನೇಮಕಾತಿಗಳಾಗುತ್ತವೆ ಎಂದರು.ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ ಎಂದು ಕಾಂಗ್ರೆಸ್ ಶಾಸಕರು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ ಎಂದರು. \ No newline at end of file diff --git a/eesanje/url_46_307_2.txt b/eesanje/url_46_307_2.txt new file mode 100644 index 0000000000000000000000000000000000000000..e7ef61f9acc3703b3601cc0b1bfeb6f6bcf090da --- /dev/null +++ b/eesanje/url_46_307_2.txt @@ -0,0 +1,11 @@ +ಜಾತಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಬೇಕು ಎಂಬುದು ಸಮುದಾಯದ ಅಭಿಪ್ರಾಯ: ಡಿ.ಕೆ.ಶಿವಕುಮಾರ್ +ಬೆಂಗಳೂರು, ನ.22- ರಾಜ್ಯದಲ್ಲಿ ಜಾತಿವಾರು ಜನಸಂಖ್ಯೆಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸ ಬೇಕು ಎಂಬುದು ಎಲ್ಲಾ ಸಮುದಾಯದ ಅಭಿಪ್ರಾಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಇಂದು ಬೆಳಗ್ಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ದಿಢೀರ್ ಭೇಟಿ ನೀಡಿದಅವರು, ಹಲವು ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಏನೇ ಇದ್ದರೂ ಸಮಾಜದ ಸ್ವಾಭಿಮಾನ, ಗೌರವದ ವಿಷಯ ಬಂದಾಗ ನಾವು ಹೆಚ್ಚು ಆದ್ಯತೆ ನೀಡಬೇಕಾಗುತ್ತದೆ ಎಂದರು. ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಅದಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ, ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಹೇಳಿದರು. +ಜಾತಿ ಗಣತಿ ವರದಿಯನ್ನು ತಿರಸ್ಕರಿಸಬೇಕು ಎಂಬ ಪತ್ರಕ್ಕೆ ನೀವು ಸಹಿ ಹಾಕಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂಬುದು ಅನೇಕ ಸಮುದಾಯಗಳ ಆಗ್ರಹವಾಗಿದೆ. ಪರಿಶಿಷ್ಟರಲ್ಲಿ ಎಡಗೈ ಸಮುದಾಯ, ಪಂಚಮಸಾಲಿಗಳು, ವೀರಶೈವರು, ಲಿಂಗಾಯಿತರು, ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳು ಹೋರಾಟ ಮಾಡುತ್ತಿವೆ. ಇದರಲ್ಲಿ ಪಕ್ಷಭೇದವಿಲ್ಲದೆ ಭಾಗವಹಿಸಲಾಗುತ್ತಿದೆ ಎಂದರು. +ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ಅವರು ಪುನರುಚ್ಚರಿಸಿದರು.ಜಾತಿ ಜನಗಣತಿ ವರದಿ ಕುರಿತಂತೆ ಮುಖ್ಯಮಂತ್ರಿಗಳಿಗೆ ನೀಡಿರುವ ಪತ್ರಕ್ಕೆ ನಾನು ಸಹಿ ಮಾಡಬಾರದೇ ಎಂದು ನಾನು ಮರುಪ್ರಶ್ನಿಸಿದ ಅವರು, ಎಷ್ಟು ಜನ ಮಂತ್ರಿಗಳು ಈ ವಿಚಾರವಾಗಿ ಸಭೆ ಮಾಡಿಲ್ಲ? ಅದೇ ರೀತಿ ನಾನು ರಾಜಕೀಯ ಪಕ್ಕಕ್ಕಿಟ್ಟು ನಮ್ಮ ಸಮಾಜ, ಅದರ ಗೌರವ, ಅಭಿಮಾನ ಉಳಿಸಿಕೊಳ್ಳಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದೇನೆ. ಇದು ಎಲ್ಲಾ ನಾಯಕರಲ್ಲೂ ಇರುತ್ತದೆ ಎಂದರು. + : ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ +ನಿಗಮ ಮಂಡಳಿ ನೇಮಕ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ. ಹಿರಿಯ ನಾಯಕರು, ಶಾಸಕರ ಅಭಿಪ್ರಾಯವನ್ನು ಪಡೆಯುತ್ತಿದ್ದೇವೆ. ನಾನು ಹಾಗೂ ಮುಖ್ಯಮಂತ್ರಿಗಳು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಹೋಗಬೇಕಿದೆ. ನ.28ರಂದು ನಮ್ಮ ದೆಹಲಿ ನಾಯಕರು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಆ ಸಭೆ ಬಳಿಕ ನಮ್ಮ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ಕಳುಹಿಸುತ್ತೇವೆ ಎಂದು ಹೇಳಿದರು. +ಗೃಹಸಚಿವರು ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆಯೇ ಎಂದು ಕೇಳಿದಾಗ, ಗೃಹಮಂತ್ರಿಗಳು ಮೂರು ದಿನಗಳ ಕಾಲ ಪ್ರವಾಸದಲ್ಲಿದ್ದರು, ಅವರಿಗೆ ಅವರದೇ ಆದ ಕೆಲಸಗಳಿರುತ್ತವೆ. ಸುಮ್ಮನೆ ಯಾರೋ ಹೇಳಿದ್ದನ್ನು ಮಾಧ್ಯಮಗಳು ದೊಡ್ಡದಾಗಿ ಬಿಂಬಿಸುತ್ತಿವೆ. ಅವರು ಯಾವ ಕಾರಣಕ್ಕೆ ಅಸಮಾಧಾನಗೊಳ್ಳುತ್ತಾರೆ? ಅಸಮಾಧಾನ ಆಗುವಂತಹದ್ದು ಏನಾಗಿದೆ? ಈ ರೀತಿ ಅಸಮಾಧಾನ ಸೃಷ್ಟಿಸಿ ಎಂದು ವದಂತಿ ಹಬ್ಬಿಸಿ ನಿಮ್ಮ ಘನತೆ ಏಕೆ ಹಾಳುಮಾಡಿಕೊಳ್ಳುತ್ತೀರಿ ಎಂದು ಪ್ರತಿಕ್ರಿಯಿಸಿದರು. +ಕಾಂಗ್ರೆಸ್‍ನಲ್ಲಿ ಎಲ್ಲರೂ ಒಂದೇ. ಇಲ್ಲಿ ನನ್ನ ಅಥವಾ ಮುಖ್ಯಮಂತ್ರಿಯವರ ಬೆಂಬಲಿಗರು ಎಂಬುದಿಲ್ಲ. ಗೃಹ ಸಚಿವರ ಬೆಂಬಲಿಗರೂ ಎಂಬುದೂ ಸರಿಯಲ್ಲ. ಎಲ್ಲರೂ ಕಾಂಗ್ರೆಸಿಗರು. ಮಂತ್ರಿಗಿರಿ ಸಿಗದ ಹಿರಿಯ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡುವ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. +ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು +ನಿಗಮ ಮಂಡಳಿ ನೇಮಕ ವಿಳಂಬ ಮಾಡುತ್ತಿರುವುದು ಕಲೆಕ್ಷನ್ ಗಾಗಿ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ನಾವು ಅಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ನಿಗಮ ಮಂಡಳಿ ನೇಮಕ ಮಾಡುತ್ತಿದ್ದೇವೆ. ಅವರು ಅಕಾರಕ್ಕೆ ಬಂದ ಎಷ್ಟು ವರ್ಷಗಳ ನಂತರ ಮಾಡಿದರು? ಅವರಿಗೆ ನಾಲ್ಕೆ ೈದು ಸಚಿವರನ್ನು ನೇಮಕ ಮಾಡಲಾಗದೆ ಮುಖ್ಯಮಂತ್ರಿಗಳೇ ಖಾತೆಯನ್ನು ಇಟ್ಟುಕೊಂಡಿದ್ದರು. ಬಿಜೆಪಿ ತಟ್ಟಿಯಲ್ಲಿ ಹೆಗ್ಗಣ ಬಿದ್ದಿದ್ದು, ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. \ No newline at end of file diff --git a/eesanje/url_46_307_3.txt b/eesanje/url_46_307_3.txt new file mode 100644 index 0000000000000000000000000000000000000000..7a983e160c33be1ff55bce286520534af96997ae --- /dev/null +++ b/eesanje/url_46_307_3.txt @@ -0,0 +1,14 @@ +ಜಾತಿ ಜನಗಣತಿ ಮೂಲ ಹಸ್ತ ಪ್ರತಿ ನಾಪತ್ತೆ +ಬೆಂಗಳೂರು, ನ.22- ಜಾತಿ ಜನಗಣತಿ ಎಂದೇ ಭಾವಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಮೂಲ ಹಾಗೂ ಹಸ್ತ ಪ್ರತಿಗಳೇ ನಾಪತ್ತೆಯಾಗಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ ಅವರು ರಾಜ್ಯ ಸರ್ಕಾರಕ್ಕೆ ಕಳೆದ 2021ರ ಅಕ್ಟೋಬರ್ 5ರಂದೇ ಪತ್ರ ಬರೆದಿದ್ದು, ಮುಂದೆ ಈ ವಿಷಯಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಕೋರಿದ್ದಾರೆ. +ಈ ಕುರಿತ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪತ್ರದ ಮಾಹಿತಿ ಪ್ರಕಾರ 2021ರ ಆಗಸ್ಟ್ 26ರಂದು ಕಚೇರಿಯಲ್ಲಿ ಇರಿಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರಲ್ಲಿ ಸಂಗ್ರಹಿಸಿದ್ದ ಮುಖ್ಯ ಅಂಶಗಳು ಹಾಗೂ ಇತರ ವಿವರಗಳನ್ನೊಳಗೊಂಡ ಸೀಲ್ಡ್ ಬಾಕ್ಸ್‍ಗಳಲ್ಲಿದ್ದ ವರದಿಯನ್ನು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯ ಕಾರ್ಯದರ್ಶಿ ಅವರ ಸಮ್ಮುಖದಲ್ಲಿ ಮಹಜರ್ ನಡೆಸಿ ತೆರೆಯಲಾಗಿದೆ. +ಮುದ್ರಿತ ಮುಖ್ಯವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲದೆ ಇರುವುದನ್ನು ಆಯೋಗ ಗಮನಿಸಿದೆ. ಇದರೊಂದಿಗೆ ಸಂಬಂಸಿದ ಮುಖ್ಯವರದಿಯ ಮೂಲ ಅಥವಾ ಹಸ್ತಪ್ರತಿ ಬಾಕ್ಸ್‍ನಲ್ಲಿ ಲಭ್ಯ ಇಲ್ಲದಿರುವುದನ್ನು ಅಕಾರಿಗಳ ಗಮನಕ್ಕೆ ತರಲಾಗಿದ್ದು, ಮೂಲ ಪ್ರತಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ. +ಅಕಾರಿಗಳು ಈ ಬಗ್ಗೆ ಉತ್ತರವನ್ನೂ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಆದರೆ, ಅಕಾರಿಗಳ ಉತ್ತರವನ್ನು ಮುಖ್ಯಮಂತ್ರಿಯವರಿಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ. ಮೂಲ ಪ್ರತಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬ ತಗಾದೆ ಮೊದಲಿನಿಂದಲೂ ಇದೆ. ಅದನ್ನು ಅಂಗೀಕರಿಸಲು ತಾಂತ್ರಿಕ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಈವರೆಗಿನ ಎಲ್ಲಾ ಸರ್ಕಾರಗಳು ಈ ವಿಷಯದಲ್ಲಿ ಜಾರಿಕೊಳ್ಳುತ್ತಾ ಬರುತ್ತಿವೆ. +ಕಾಂತರಾಜು ಆಯೋಗ ಸಿದ್ಧಪಡಿಸಿದ ವರದಿಯಲ್ಲಿ ಕೆಲವು ಮಾಹಿತಿಗಳನ್ನು ತಿದ್ದಲಾಗಿದೆ ಎಂಬ ಆರೋಪಗಳಿವೆ. ಇದಕ್ಕೆ ಸಾಕ್ಷ್ಯವಾಗಿ ಹಸ್ತ ಪ್ರತಿಗಳ ಪರಿಶೀಲನೆ ನಡೆಯಬೇಕಿತ್ತು. ಆದರೆ, ಈಗ ಅವುಗಳೇ ನಾಪತ್ತೆಯಾಗಿವೆ. ಮೂಲ ವರದಿಯ ಪ್ರತಿ ಕೂಡ ಇಲ್ಲ. ಮನೆ ಮನೆ ಸಮೀಕ್ಷೆಯಲ್ಲೂ ನಿಖರತೆ ಇಲ್ಲ. ಮಾಹಿತಿ ಕಲೆ ಹಾಕುವಲ್ಲಿ ಅಸ್ಪಷ್ಟತೆ ಮತ್ತು ಅವೈಜ್ಞಾನಿಕ ಕ್ರಮಗಳನ್ನು ಅನುಸರಿಸಲಾಗಿತ್ತು ಎಂಬ ಆರೋಪಗಳಿವೆ.ಮೂಲ ಅಥವಾ ಹಸ್ತ ಪ್ರತಿಯ ಅನುಪಸ್ಥಿತಿಯಲ್ಲಿ ಸರ್ಕಾರಕ್ಕೆ ಸಲ್ಲಿಕೆಯಾಗುವ ಅಥವಾ ಸ್ವೀಕರಿಸಲ್ಪಡುವ ವರದಿಯ ನೈಜ್ಯತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. +ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು +ಹಲವಾರು ಜಾತಿ ಹಾಗೂ ಸಮುದಾಯಗಳು ಸಮೀಕ್ಷಾ ವರದಿಯನ್ನು ವಿರೋಧಿಸುತ್ತಿವೆ. ಸರ್ಕಾರದಲ್ಲಿ ಭಾಗಿಯಾಗಿರುವ ಸಚಿವರುಗಳ ನಡುವೆಯೇ ಬಹಳಷ್ಟು ಗೊಂದಲಗಳಿವೆ. ಕೆಲವರು ವರದಿ ಅಂಗೀಕಾರಗೊಳ್ಳಬೇಕು ಎಂದರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. +ಇಂತಹ ಸಂಕಷ್ಟದ ಸಮಯದಲ್ಲಿ ಮೂಲ ಮತ್ತು ಹಸ್ತ ಪ್ರತಿಗಳು ಇಲ್ಲ ಎನ್ನುವುದಾದರೆ 2015ರ ಸಮೀಕ್ಷಾ ವರದಿ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗುತ್ತದೆ. 172 ಕೋಟಿ ರೂ. ಖರ್ಚು ಮಾಡಿ ತಯಾರಿಸಲಾದ ವರದಿ ಯಾವುದಕ್ಕೂ ಪ್ರಯೋಜನಕ್ಕೆ ಬಾರದೆ ನಿರರ್ಥಕವಾಗುವ ಆತಂಕವಿದೆ. +ಈ ಹಿಂದೆ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊದಲ ಬಾರಿಗೆ ಜಾತಿ ಜನಗಣತಿ ನಡೆಸಲಾಗುತ್ತಿದೆ ಎಂದು ಭಾರೀ ಪ್ರಚಾರ ಪಡೆದುಕೊಂಡಿದ್ದರು. ಆದರೆ ಸಮೀಕ್ಷೆ ನಡೆದ ಬಳಿಕ ವರದಿ ಸ್ವೀಕರಿಸಲಿಲ್ಲ. +ಸರ್ಕಾರದ ಅವಧಿ ಮುಗಿಯುವ ವೇಳೆ ವರದಿ ಸಿದ್ಧವಾಗಿರಲಿಲ್ಲ ಎಂಬ ನೆಪ ಹೇಳಲಾಗುತ್ತಿದೆ. ಅನಂತರ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಜಾತಿ ಜನಗಣತಿಯ ವರದಿಯಿಂದ ಅಂತರ ಕಾಯ್ದುಕೊಂಡಿದ್ದರು. +ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲೇ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದಾಗಿ ಭರವಸೆ ನೀಡಿತ್ತು. ನಿರೀಕ್ಷೆ ಮೀರಿ ಗೆಲುವು ಸಾಸಿದ ಕಾಂಗ್ರೆಸ್ ಸರ್ಕಾರ ರಚಿಸಿದ 6 ತಿಂಗಳಾದರೂ ವರದಿಯ ವಿಷಯದಲ್ಲಿ ಹಗ್ಗ ಜಗ್ಗಾಟವಾಡುತ್ತಿದೆ. +ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರ ವರದಿಯ ಪರವಾಗಿದ್ದರೆ, ಡಿ.ಕೆ.ಶಿವಕುಮಾರ್ ಮತ್ತು ಹಲವಾರು ಮಂದಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಯಬೇಕು ಬಳಿಕ ಜಾರಿಯಾಗಬೇಕು ಎಂಬ ನಿಲುವಿಗೆ ಅಂಟಿಕೊಂಡಿದ್ದಾರೆ. ಇದೆಲ್ಲದರ ನಡುವೆ ಮೂಲ ಹಾಗೂ ಹಸ್ತಪ್ರತಿಗಳ ಲಭ್ಯವಿಲ್ಲ ಎಂಬ ವಿಚಾರ ವಿವಾದಗಳಿಗೆ ಹೊಸ ಸ್ವರೂಪ ನೀಡುವ ಸಾಧ್ಯತೆ ಇದೆ. \ No newline at end of file diff --git a/eesanje/url_46_307_4.txt b/eesanje/url_46_307_4.txt new file mode 100644 index 0000000000000000000000000000000000000000..ba6cb519c96a97cf04b4012aa304ecfd34ac4943 --- /dev/null +++ b/eesanje/url_46_307_4.txt @@ -0,0 +1,9 @@ + : ಡಿಸೆಂಬರ್ 23ರಂದು 545 ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ +ಬೆಂಗಳೂರು, ನ.22- ತೀವ್ರ ವಿವಾದಕ್ಕೆ ಗುರಿಯಾಗಿದ್ದ 545 ಪಿಎಸ್‍ಐಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. 2021ರ ಜನವರಿ 21ರಂದು ಪೊಲೀಸ್ ಇಲಾಖೆಯಿಂದ 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು. +ಆದರೆ, ಪರೀಕ್ಷೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿ ಬಂದಿತ್ತು. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‍ಪಾಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳು, ಪರೀಕ್ಷಾರ್ಥಿಗಳು, ಅವರ ಕೆಲವು ಪೋಷಕರನ್ನು ತನಿಖಾ ಅಧಿಕಾರಿಗಳು ಬಂಧಿಸಿದ್ದರು. +ಮೇಲ್ನೋಟಕ್ಕೆ ಅಕ್ರಮಗಳ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪರೀಕ್ಷೆಯ ಅಧಿಸೂಚನೆಯನ್ನು ಆಗಿನ ಸರ್ಕಾರ ರದ್ದುಗೊಳಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು. ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು. +ಜ.22 ರಂದು ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ, 48 ದಿನ ಮಂಡಲೋತ್ಸವ ಆಚರಣೆ.. +ಸುದೀರ್ಘ ವಿಚಾರಣೆ ನಡೆದ ಬಳಿಕ ಹೈಕೋರ್ಟ್ ಇತ್ತೀಚೆಗಷ್ಟೇ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ. +ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಬೇಕು ಎಂಬ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತಿದೆ. ಪರೀಕ್ಷಾ ಪ್ರಾಧಿಕಾರದ ಪ್ರಕಟಣೆಯ ಪ್ರಕಾರ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. +ಎನ್‌ಸಿಇಆರ್‌ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು +ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. \ No newline at end of file diff --git a/eesanje/url_46_307_5.txt b/eesanje/url_46_307_5.txt new file mode 100644 index 0000000000000000000000000000000000000000..7d11fe44331d0fded1992b16e2b3e530be1f7c3f --- /dev/null +++ b/eesanje/url_46_307_5.txt @@ -0,0 +1,8 @@ +ಬರ ಅಧ್ಯಯನ ವರದಿ ಸಿದ್ಧಪಡಿಸುತ್ತಿರುವ ಜೆಡಿಎಸ್ : ಅಧಿವೇಶನದಲ್ಲಿ ಹೋರಾಟಕ್ಕೆ ಸಜ್ಜು +ಬೆಂಗಳೂರು, ನ.22- ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಪಕ್ಷದ ಮುಖಂಡರು ನಡೆಸಿರುವ ಅಧ್ಯಯನದ ಜಿಲ್ಲಾವಾರು ಮಾಹಿತಿಯನ್ನು ಜೆಡಿಎಸ್ ಸಂಗ್ರಹ ಮಾಡುತ್ತಿದೆ. ಜಿಲ್ಲಾವಾರು ತಂಡಗಳನ್ನು ರಚನೆ ಮಾಡಿದ್ದು, ಆಯಾ ಜಿಲ್ಲೆಯಲ್ಲಿನ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ನೀಡಲು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರ್ದೇಶನ ನೀಡಿದ್ದರು. +ಆಯಾ ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಪರಾಭವಗೊಂಡಿರುವ ಅಭ್ಯರ್ಥಿಗಳು, ಮತ್ತಿತರ ಹಿರಿಯ ಮುಖಂಡರನ್ನು ಒಳಗೊಂಡ 31 ತಂಡಗಳನ್ನು ರಚನೆ ಮಾಡಲಾಗುತ್ತು. ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ರಚನೆ ಮಾಡಲಾಗಿದ್ದ ತಂಡಗಳು 31 ಜಿಲ್ಲೆಗಳಿಗೂ ಭೇಟಿ ನೀಡಿ ದೀಪಾವಳಿ ಹಬ್ಬದ ಒಳಗಾಗಿ ಅಧ್ಯಯನ ಮುಗಿಸಿ ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ಸೂಚನೆ ನೀಡಲಾಗಿತ್ತು. +ಎನ್‌ಸಿಇಆರ್‌ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು +ಪಕ್ಷದ ಕೇಂದ್ರ ಕಚೇರಿಯು ಆಯಾ ತಂಡದ ಮುಖ್ಯಸ್ಥರಿಂದ ಬರ ಅಧ್ಯಯನದ ಮಾಹಿತಿಯನ್ನು ಕಲೆ ಹಾಕುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳ ಮಾಹಿತಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಎಲ್ಲಾ ಜಿಲ್ಲೆಗಳ ಮಾಹಿತಿ ಒಳಗೊಂಡ ಬರ ಕುರಿತ ವರದಿಯೊಂದನ್ನು ಸಿದ್ದರಪಡಿಸಲಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಬೆಳೆ ಹಾನಿಗೆ ಒಳಗಾಗಿರುವ ಪ್ರತಿ ಪ್ರದೇಶಕ್ಕೂ ಭೇಟಿ ನೀಡಬೇಕು. ಸಂಕಷ್ಟದಲ್ಲಿರುವ ರೈತರ ಜತೆ ನೇರ ಮಾತುಕತೆ ನಡೆಸಿ ವರದಿಗಳನ್ನು ಸಿದ್ಧ ಮಾಡಬೇಕು. ಅಧ್ಯಯನ ವರದಿ ಮುಂದಿಟ್ಟುಕೊಂಡು ಪಕ್ಷವು ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತುವುದಾಗಿ ಕುಮಾರಸ್ವಾಮಿ ತಿಳಿಸಿದ್ದರು. +41 ಕಾರ್ಮಿಕರನ್ನು ರಕ್ಷಿಸುವ ಅರ್ಧ ದಾರಿ ಸವೇಸಿರುವ ರಕ್ಷಣಾ ಸಿಬ್ಬಂದಿ +ಬರ ಪರಿಹಾರ ಕ್ರಮಗಳನ್ನು ಸರ್ಕಾರ ಸಮರ್ಪಕವಾಗಿ ಕೈಗೊಂಡಿಲ್ಲ. ಬೆಳೆ ಹಾನಿಗೆ ಪರಿಹಾರ ನೀಡಿಲ್ಲ. ಒಂದೆಡೆ ಬರ ಮತ್ತೊಂದೆಡೆ ವಿದ್ಯುತ್ ಅಭಾವದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರೈತರ ಪರವಾಗಿ ಪಕ್ಷ ಹೋರಾಟ ನಡೆಸುವ ಪೂರ್ವಭಾವಿಯಾಗಿ ಅಧ್ಯಯನ ನಡೆಸಬೇಕು ಎಂಬ ನಿರ್ದೇಶನವನ್ನು ಕುಮಾರಸ್ವಾಮಿ ನೀಡಿದ್ದರು. \ No newline at end of file diff --git a/eesanje/url_46_307_6.txt b/eesanje/url_46_307_6.txt new file mode 100644 index 0000000000000000000000000000000000000000..6f39473e31a4bb8c5992f5acd174e72d80e00270 --- /dev/null +++ b/eesanje/url_46_307_6.txt @@ -0,0 +1,16 @@ +ಲೋಕಸಭಾ ಟಿಕೆಟ್‍ಗೆ ಬಿಜೆಪಿ ನಾಯಕರ ಪೈಪೋಟಿ +ಬೆಂಗಳೂರು, ನ.22- ವಿಧಾನಸಭೆ ಚುನಾವಣೆ ಯಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿಗಳ ಕಣ್ಣು ಈಗ ಲೋಕಸಭೆ ಚುನಾವಣೆ ಮೇಲೆ ನೆಟ್ಟಿದೆ. ತೀವ್ರ ಪೈಪೋಟಿಯಿಂದ ಕೂಡಿರುವ ಸಂಸತ್ತಿನ ಚುನಾವಣೆಯ ಟಿಕೆಟ್ ಪಡೆಯಲು ಭಗೀರಥ ಪ್ರಯತ್ನ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮಗೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿ ಹಲವಾರು ಪರಾಜಿತ ಅಭ್ಯರ್ಥಿಗಳು ಸಂಸತ್ತಿನ ಚುನಾವಣೆ ಪ್ರಚಾರವನ್ನೂ ಸಹ ತೆರೆಮರೆಯಲ್ಲಿ ನಡೆಸಿದ್ದಾರೆ. +ಬಿಜೆಪಿಯಲ್ಲಿ ಹತ್ತಕ್ಕೂ ಹೆಚ್ಚು ಜನ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವರು, ಮಾಜಿ ಶಾಸಕರು ಲೋಕಸಭೆ ಚುನಾವಣೆ ಟಿಕೆಟ್ ಗಿಟ್ಟಿಸಿಕೊಳ್ಳಲು ಈಗಿನಿಂದಲೇ ಲಾಬಿ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಈ ಬಾರಿಯೂ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. +ಪ್ರಧಾನಿ ಮೋದಿ ಅವರ ಜನಪ್ರಿಯ ಅಲೆಯಲ್ಲಿ ಲೋಕಸಭೆ ಚುನಾವಣೆ ಗೆಲವು ಕಷ್ಟವಾಗಲಾರದು ಎನ್ನುವ ಅಭಿಪ್ರಾಯದಿಂದ ಹೆಚ್ಚಿನ ಮುಖಂಡರು ಸಂಸತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ಹೊಂದಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮಗೆ ಟಿಕೆಟ್ ನೀಡಬೇಕೆಂದು ಮಾಜಿ ಸಚಿವರು ಮತ್ತು ಮಾಜಿ ಶಾಸಕರುಗಳು ರಾಜ್ಯ ಬಿಜೆಪಿ ನಾಯಕರು ಮತ್ತು ದೆಹಲಿ ನಾಯಕರುಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. ತಮಗೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸವನ್ನು ಸಹ ಅವರುಗಳು ಪಕ್ಷದ ವೇದಿಕೆಯಲ್ಲಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. +ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಿ ಸೋತಿರುವ ಮಾಜಿ ಸಚಿವರಾದ ಸಿ ಟಿ ರವಿ, ಬಿ.ಸಿ.ಪಾಟೀಲ , ವಿ.ಸೋಮಣ್ಣ, ಎಂ.ಪಿ.ರೇಣುಕಾಚಾರ್ಯ, ಡಾ.ಡಿ.ಸುಧಾಕರ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಮಾಜಿ ಸಾರಿಗೆ ಸಚಿವ ಶ್ರೀರಾಮುಲು, ಕರುಣಾಕರ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ಹಲವಾರು ಮುಖಂಡರುಗಳು ಲೋಕಸಭೆ ಚುನಾವಣೆ ಸ್ಪರ್ಧೆಗಾಗಿ ಬಿಜೆಪಿಯ ಟಿಕೆಟ್ ಪಡೆಯಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. +ಎನ್‌ಸಿಇಆರ್‌ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು +ಸಂಸತ್ತಿನ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಹಲವಾರು ಲೋಕಸಭೆ ಸದಸ್ಯರುಗಳು ಬರಲಿರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರಾಸಕ್ತಿ ತೋರಿರುವುದು ಹಾಗೂ ವಯೋಮಾನದ ಕಾರಣದಿಂದ ಹಾಲಿ ಸಂಸದರುಗಳಿಗೆ ಟಿಕೆಟ್ ನೀಡದೆ ಇರುವ ಬಗ್ಗೆ ಪಕ್ಷದ ಹೈಕಮಾಂಡ್ ಯೋಚಿಸುತ್ತಿರುವುದು ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಪಡೆಯಲು ಕಸರತ್ತು ನಡೆಸುವುದಕ್ಕೆ ಪ್ರಬಲವಾದ ಅಸ್ತ್ರ ದೊರೆತಂತಾಗಿದೆ. +ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಾಜಿ ಸಚಿವ ಸಿ.ಟಿ.ರವಿ ಉಡುಪಿ – ಚಿಕ್ಕಮಗಳೂರು ಇಲ್ಲವೇ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಲಾಗಿದೆ. ಮಾಜಿ ಆರೋಗ್ಯ ಸಚಿವ ಡಾ.ಡಿ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಈ ಕ್ಷೇತ್ರದಲ್ಲಿ ಸಂಸದರಾಗಿರುವ ಬಿ.ಎನ್.ಬಚ್ಚೇಗೌಡರಿಗೆ ವಯಸ್ಸಿನ ಕಾರಣದಿಂದಾಗಿ ಟಿಕೆಟ್ ದೊರೆಯುವುದು ಅನುಮಾನ ಎನ್ನಲಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರ ವರುಣ ಮತ್ತು ಚಾಮರಾಜನಗರ ಕ್ಷೇತ್ರಗಳೆರಡರಲ್ಲಿ ಸ್ಪರ್ಧೆ ಮಾಡಿ ಸೋತಿರುವ ಮಾಜಿ ಸಚಿವ ವಿ.ಸೋಮಣ್ಣನವರು ಬೆಂಗಳೂರು ದಕ್ಷಿಣ ಅಥವಾ ತುಮಕೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೊನ್ನಾಳಿ ಕ್ಷೇತ್ರದಲ್ಲಿ ಸೋತಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ದಾವಣಗೆರೆ ಲೋಕಸಭೆ ಕ್ಷೇತ್ರದ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದಾರೆ. +ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೆಚ್ಚಿನ ಆಸಕ್ತಿ ತೋರದಿರುವ ಹಾವೇರಿ ಸಂಸದ ಶಿವಕುಮಾರ ಉದಾಸಿ ಅವರ ಕ್ಷೇತ್ರದಲ್ಲಿ ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪರ್ಧೆ ಮಾಡಲು ಉತ್ಸುಕರಾಗಿದ್ದಾರೆ. ಮಾಜಿ ಕೈಗಾರಿಕೆ ಸಚಿವ ಮುರುಗೇಶ ನಿರಾಣಿಯವರು ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವ ಇರಾದೆಯಲ್ಲಿದ್ದಾರೆ. +ಮಾಜಿ ಸಚಿವರಾದ ಶ್ರೀರಾಮುಲು ಹಾಗೂ ಕರುಣಾಕರ ರೆಡ್ಡಿಯವರು ಬಳ್ಳಾರಿ ಕ್ಷೇತ್ರದಿಂದ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವಿಜಯಪುರ ಕ್ಷೇತ್ರದಿಂದ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉತ್ತರ ಕನ್ನಡ ಕ್ಷೇತ್ರದಿಂದ ಸಂಸತ್ ಚುನಾವಣೆಗೆ ಸ್ಪರ್ಧೆ ಮಾಡಲು ಒಲವನ್ನು ವ್ಯಕ್ತ ಪಡಿಸಿದ್ದಾರೆಂದು ಹೇಳಲಾಗಿದೆ. +ಹಾಲಿ ಸಂಸದರಿಗೆ ಕೊಕ್ :ಇದರ ಬೆನ್ನಲ್ಲೇ ಬಿಜೆಪಿಯ ಹಲವಾರು ಹಿರಿಯ ಲೋಕಸಭಾ ಸದಸ್ಯರಿಗೆ ತಳಮಳ ಹೆಚ್ಚಾಗಿದೆ. ಈ ಬಾರಿ ಅಂದಾಜು 10 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ದಾವಣಗೆರೆ ಸಂಸದ ಜಿ.ಸಿದ್ದೇಶ್ವರ ಹಾಗೂ ಹಾವೇರಿ – ಗದಗ ಸಂಸದ ಎಂ.ಪಿ. ಶಿವಕುಮಾರ್ ಉದಾಸಿ ಅವರು ಮುಂದಿನ ಲೋಕಸಭಾ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ. ಅವರೂ ಸೇರಿದಂತೆ ಅಂದಾಜು 9 ಹಾಲಿ ಸಂಸದರಿಗೆ ಟಿಕೆಟ್ ಎಂದು ಮೂಲಗಳು ಹೇಳುತ್ತಿವೆ. +ತುಮಕೂರು ಸಂಸದ ಜಿ.ಎಸ್. ಬಸವರಾಜು (82), ದಾವಣಗೆರೆ ಸಂಸದ ಜಿ. ಸಿದ್ದೇಶ್ವರ (71), ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗ್ಡೆ (55), ಹಾವೇರಿ – ಗದಗ ಸಂಸದ ಶಿವಕುಮಾರ್ ಉದಾಸಿ (56), ಬಳ್ಳಾರಿಯ ಸಂಸದ ವೈ. ದೇವೇಂದ್ರಪ್ಪ (72), ಕೊಪ್ಪಳ ಸಂಸದ ಸಂಗಣ್ಣ ಕರಡಿ (73), ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್ (66), ಬಿಜಾಪುರ ಸಂಸದ ರಮೇಶ್ ಜಿಗಜಿಣಗಿ (71), ಬಾಗಲಕೋಟೆ ಸಂಸದ ಪಿ.ಸಿ. ಗಡ್ಡಿಗೌಡರ್ (72), ಬೆಳಗಾವಿ ಸಂಸದ ಮಂಗಳಾ ಅಂಗಡಿ (60) ಅವರಿಗೆ ಟಿಕೆಟ್ ಸಿಕ್ಕುವುದು ಅನುಮಾನ ಎನ್ನಲಾಗಿದೆ. +ಪಾಕ್ ಉಗ್ರ ನಂಟು: ನಾಲ್ವರು ಸರ್ಕಾರಿ ಅಧಿಕಾರಿಗಳು ಸೇವೆಯಿಂದ ವಜಾ +ಇವರಲ್ಲಿ ದಾವಣಗೆರೆ ಸಂಸದರಾದ ಜಿ. ಸಿದ್ದೇಶ್ವರ ಅವರು ತಮ್ಮ ಪುತ್ರ ಜಿ.ಎಸ್. ಅನಿತ್ ಕುಮಾರ್ ಅವರಿಗೆ ಮುಂದಿನ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಬೇಕೆಂದು ಪಕ್ಷದ ಹೈಕಮಾಂಡ್‍ಗೆ ಈಗಗಾಲೇ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಅತ್ತ, ಕರಡಿ ಸಂಗಣ್ಣ ಸಹ ತಮ್ಮ ಪುತ್ರ ಅಮರೇಶ್ ಕರಡಿಯವರಿಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ. +ಕೆಲವು ಮೂಲಗಳ ಪ್ರಕಾರ, 2024ರ ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷವು ಆಂತರಿಕ ಸರ್ವೆ ಕಾರ್ಯ ಆರಂಭಿಸಿದೆ. ವಯೋಮಾನ ಹಾಗೂ ಸರ್ವೆ ವರದಿಯ ಅನುಸಾರವಾಗಿ ಹೇಳುವುದಾದರೆ ಅಂದಾಜು 8ರಿಂದ 10 ಸಂಸದರಿಗೆ ಈ ಬಾರಿ ಟಿಕೆಟ್ ಇಲ್ಲ. ಪಕ್ಷದಲ್ಲಿ 2ನೇ ದರ್ಜೆಯ ನಾಯಕರನ್ನು ಬೆಳೆಸುವ ಸಲುವಾಗಿಯೂ ಅವರು ಹೀಗೆ ಮಾಡಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_307_7.txt b/eesanje/url_46_307_7.txt new file mode 100644 index 0000000000000000000000000000000000000000..6f123a881442d750d8fdda3ce955a750474ff2d0 --- /dev/null +++ b/eesanje/url_46_307_7.txt @@ -0,0 +1,6 @@ +ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಆತ್ಮಹತ್ಯೆ: ಪೊಲೀಸ್ ಸಿಬ್ಬಂದಿಗಳ ಅಮಾನತ್ತು +ಮೈಸೂರು, ನ. 22- ಪೊಲೀಸರು ವಿಚಾರಣೆಗೆ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಸಾವಿಗೆ ಶರಣಾದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ನಂಜೇಶ್ ಹಾಗೂ ಕಾನ್‍ಸ್ಟೇಬಲ್ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು. +ಗಲಾಟೆ ವಿಚಾರದಲ್ಲಿ ನ. 12 ರಂದು ಬಿಳಿಗೆರೆ ಠಾಣೆಯ ಪಿಎಸ್‍ಐ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿದ್ದಾರೆ. ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್‍ಐ ಅವರು ತೆರಳುವ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿ ಕರ್ತವ್ಯದಲ್ಲಿದ್ದ ನಂಜೇಶ್ ಹಾಗೂ ಪ್ರಸನ್ನ ಕುಮಾರ್ ರವರದ್ದಾಗಿರುತ್ತದೆ. +41 ಕಾರ್ಮಿಕರನ್ನು ರಕ್ಷಿಸುವ ಅರ್ಧ ದಾರಿ ಸವೇಸಿರುವ ರಕ್ಷಣಾ ಸಿಬ್ಬಂದಿ +ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. +ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಸಾವನ್ನಪ್ಪಿದ್ದಾನೆ. ಕರ್ತವ್ಯಲೋಪ ಹಿನ್ನಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ. \ No newline at end of file diff --git a/eesanje/url_46_307_8.txt b/eesanje/url_46_307_8.txt new file mode 100644 index 0000000000000000000000000000000000000000..1e5fd79d80663747d61706772e9e682fb15f2773 --- /dev/null +++ b/eesanje/url_46_307_8.txt @@ -0,0 +1,6 @@ +ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಖಚಿತ..! +ಬೆಳಗಾವಿ,ನ.21- ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯಎಂದು ಶಾಸಕ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದು ,ಇದು ಹೊಸ ಸಂಚಲನ ಸೃಷ್ಠಿಸಿದೆ. +ಯರಗಟ್ಟಿಯಲ್ಲಿ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ ಮುಂದೆ ಸಿಎಂ ಆಗುತ್ತಾರೆ ಅವರನ್ನು ಆ ಸ್ಥಾನದಲ್ಲಿ ನೋಡಬೇಕಾಗಿದೆ ಎಂದು ಹೇಳಿದ್ದಾರೆ. +ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ಜಪ್ತಿ +ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ಈ ಭಾಗದಲ್ಲಿ ಭಾರಿ ಸದ್ದು ಮಾಡಿದೆ. +ಈ ಮೊದಲೇ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನಗೊಂಡು ತಮ್ಮ ರಾಜಕೀಯ ದಾಳ ಉರುಳಿಸಿದ್ದರು.ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು ಆದರೆ ಈಗ ಬೆಂಬಲಿಗ ಶಾಸಕರು ನೀಡುತ್ತಿರುವ ಹೇಳಿಕೆ ಹೊಸ ಗೊಂದಲ ಸೃಷ್ಠಿಸುತ್ತಿದೆ. \ No newline at end of file diff --git a/eesanje/url_46_307_9.txt b/eesanje/url_46_307_9.txt new file mode 100644 index 0000000000000000000000000000000000000000..53f067a5a5002cd2288c00f480f6d9178cf6ec26 --- /dev/null +++ b/eesanje/url_46_307_9.txt @@ -0,0 +1,7 @@ +ವಿದ್ಯುತ್ ಅವಘಡದಿಂದ ತಾಯಿ-ಮಗು ಸಾವು ಪ್ರಕರಣ 4 ಮಾದರಿಯ ತನಿಖೆ: ಕೆ.ಜೆ.ಜಾರ್ಜ್ +ಬೆಂಗಳೂರು, ನ.21- ಕಾಡುಗೋಡಿಯಲ್ಲಿ ವಿದ್ಯುತ್ ಅವಘಡದಿಂದ ತಾಯಿ ಮಗು ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿರುವ ರಾಜ್ಯ ಸರ್ಕಾರ, ನಾಲ್ಕು ಮಾದರಿಯ ತನಿಖೆ ನಡೆಸುತ್ತಿದೆ. ವರದಿಯ ನಂತರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು. +ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಬೆಸ್ಕಾಂ, ಪೊಲೀಸ್, ಇಂಧನ ಇಲಾಖೆ ಹಾಗೂ ಸ್ವತಂತ್ರ ಮಾದರಿಯ ತನಿಖೆಗಳು ನಡೆಯುತ್ತಿವೆ ಎಂದು ಹೇಳಿದರು. ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಲು ನಾವು ಯಾವುದೇ ಅಡ್ಡಿ ಪಡಿಸಿಲ್ಲ. ತನಿಖಾ ವರದಿ ನೀಡಲು ಸಮಿತಿಗಳಿಗೆ ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದರು. +ವಿದ್ಯುತ್ ತಂತಿ ಕಡಿತಗೊಂಡಿರುವುದನ್ನು ನೋಡಿಕೊಳ್ಳದೆ ಇರುವುದು ಲೋಪವಾಗಿದೆ. ಇದನ್ನು ತಾಂತ್ರಿಕ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಒಂದು ಕಡೆ ವಿದ್ಯುತ್ ತಂತಿಗಳ ಸಮಸ್ಯೆಯಾದರೆ ಮತ್ತೊಂದು ಆಫ್ಟಿಕಲ್ ಫೈಬರ್ ಕೇಬಲ್‍ಗಳದು ಸಮಸ್ಯೆ ಇದೆ. ಏಕಾಏಕಿ ಎಲ್ಲವನ್ನೂ ಒಮ್ಮಲೆ ಕಿತ್ತು ಹಾಕಲು ಆಗಲ್ಲ. ಅದಕ್ಕಾಗಿ ಆಪ್ಟಿಕಲ್ ಕೇಬಲ್‍ಗಳನ್ನು ಭೂಮಿ ಒಳಗಿನ ಮಾರ್ಗಗಳಲ್ಲಿ ಅಳವಡಿಸಲು ಹದಿನೈದು ದಿನಗಳ ಕಾಲಾವಕಾಶ ನೀಡಲಾಗುತ್ತಿದೆ. +ನಿಗದಿತ ಕಾಲಾವಧಿಯಲ್ಲಿ ನೆಲ ಮಾರ್ಗದಲ್ಲಿ ಅಳವಡಿಸದಿದ್ದರೆ ನಂತರ ಕ್ರಮ ಕೈಗೊಳ್ಳುತ್ತೇವೆ. ವಿದ್ಯುತ್ ತಂತಿ ಕಂಬಿಯ ಮೇಲಿರುವ ಎಲ್ಲಾ ಆಫ್ಟಿಕಲ್ ಕೇಬಲ್‍ಗಳನ್ನು ಕಡಿತ ಮಾಡಲಾಗುವುದು ಎಂದರು. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ, ವಾಡಿಕೆಗಿಂತ ಮಳೆ ಕಡಿಮೆ ಇದೆ. ಕಳೆದ ಬಾರಿಗಿಂತ ಡಬಲ್ 16.900 ಮೆ.ವ್ಯಾ ಬೇಡಿಕೆ ಇದೆ, ಗಣಿಗಾರಿಕೆ ಪ್ರದೇಶಗಳಲ್ಲಿ ಮಳೆಯಾದ ಹಿನ್ನಲೆ ಕಲ್ಲಿದ್ದಲು ಒದ್ದೆಯಾಗಿದೆ. ಇದರಿಂದ ಥರ್ಮಲ್ ಪ್ಲ್ಯಾಂಟ್ ಗೆ ಕಲ್ಲಿದ್ದಲು ಸಮಸ್ಯೆ ಎದುರಾಗಿದೆ. ಸೋಲಾರ್ ವಿದ್ಯುತ್ ಉತ್ಪತ್ತಿಯೂ ಕಡಿಮೆಯಾಗಿದೆ. ಕರ್ನಾಟಕ ಕತ್ತಲೆಗೆ ಹೋಗಿದೆ ಎಂಬ ಆರೋಪ ಸರಿಯಲ್ಲ ಎಂದರು. +ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ +ರೈತರಿಗೆ 5 ಗಂಟೆ ವಿದ್ಯುತ್ ಕೊಡ್ತೇವೆ ಎಂದಿದ್ದೆವು, ಕಬ್ಬು, ಬತ್ತಕ್ಕೆ ಹೆಚ್ಚು ನೀರು ಕೊಡಲು ಕ್ರಮ ಕೈಗೊಂಡಿದ್ದೇವೆ, ದಾಖಲೆ ಮಟ್ಟದಲ್ಲಿ ಥರ್ಮಲ್ ವಿದ್ಯುತ್ ಉತ್ಪಾದನೆ ಆಗಿದೆ, ಬಳ್ಳಾರಿ,ರಾಯಚೂರಿನಲ್ಲಿ ಉತ್ಪಾದನೆಯಾಗಿದೆ. ಕಲ್ಲಿದ್ದಲು ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕೊ ಜನರೇಷನ್ ಮೂಲಕ ವಿದ್ಯುತ್ ಉತ್ಪಾದನೆ ಹೆಚ್ಚಾಗುತ್ತಿದೆ. ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. \ No newline at end of file diff --git a/eesanje/url_46_308_1.txt b/eesanje/url_46_308_1.txt new file mode 100644 index 0000000000000000000000000000000000000000..a426fe37d72443c55a153f15b06996360e39915b --- /dev/null +++ b/eesanje/url_46_308_1.txt @@ -0,0 +1,8 @@ +ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿಗೆ ಸಭಾಪತಿ ಸಲಹಾ ಪತ್ರ +ಬೆಂಗಳೂರು, ನ. 21- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನವನ್ನು ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಸಲಹೆ ನೀಡಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಭಾಪತಿ, ಅಧಿವೇಶನದ ಅತ್ಯಮೂಲ್ಯವಾದ ಸಮಯವು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ. +ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ. +ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ +ಈ ಹಿನ್ನಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು. ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ. +ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ. +ಇದರಿಂದ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ ಎಂದು ಬಸವರಾಜ ಎಸ್. ಹೊರಟ್ಟಿ ಅವರು ಪತ್ರದ ಮೂಲಕ ಕೋರಿದ್ದಾರೆ ಎಂದು ಸಭಾಪತಿಯವರ ಕಚೇರಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_308_10.txt b/eesanje/url_46_308_10.txt new file mode 100644 index 0000000000000000000000000000000000000000..70c7dd67450349eca3f8b8c99783551742d5ad7c --- /dev/null +++ b/eesanje/url_46_308_10.txt @@ -0,0 +1,10 @@ +ಬರಪೀಡಿತ ಪ್ರದೇಶಗಳಿಗೆ ಪ್ರವಾಸ: ಆರ್. ಅಶೋಕ್ +ಬೆಂಗಳೂರು, ನ.20-ನಾಳೆಯಿಂದ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ವಿಜಯನಗರದ ಆದಿಚುಂಚನಗಿರಿ ಶಾಖ ಮಠದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಜೊತೆ ಮಾತನಾಡಿದ್ದು, ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತೇವೆ. +ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಹಾರ ನೀಡದೆ, ಕೇಂದ್ರ ಸರ್ಕಾರದ ಕಡೆ ಸರ್ಕಾರ ಬೆರಳು ಮಾಡುತ್ತಿದೆ. ಎಲ್ಲ ಶಾಸಕರಿಗೆ ಅಧ್ಯಯನ ಮಾಡಿಕೊಂಡು ವರದಿ ಸಿದ್ದಮಾಡಿಕೊಂಡು ಬರುವಂತೆ ಹೇಳಿದ್ದೇನೆ ಎಂದು ಹೇಳಿದರು. +ರಾಜ್ಯದ ಕಾಂಗ್ರೆಸ್ ಸರ್ಕಾರ ನಿದ್ದೆ ಮಾಡುತ್ತಿದ್ದು, ಎಚ್ಚರಿಸುವ ಕೆಲಸ ಮಾಡಬೇಕಿದೆ. ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಆದರೂ ಎಚ್ಚರವಾಗದಿದ್ದರೆ ಬೇರೆ ಮದ್ದು ಹುಡುಕುತ್ತೇವೆ. ಎಲ್ಲ ವಿಚಾರವನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು. +ಸಮರ್ಥ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತೇನೆ. ಸದನದಲ್ಲಿ ಸಚಿವ ಜಮೀರ್ ಅಹಮದ್ ಹೇಳಿಕೆ ವಿಚಾರ ಚರ್ಚೆ ಮಾಡುತ್ತೇವೆ. ರಾಜ್ಯದ ಜನರ ಸಮಸ್ಯೆ ವಿಚಾರವಾಗಿ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತೇವೆ. ಉತ್ತರ ಕರ್ನಾಟಕದ ವಿಚಾರಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಜೆಡಿಎಸ್ ಕೂಡ ಬೆಂಬಲ ನೀಡಲಿದ್ದು, ಬರ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು. +ತಂಡವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಲ್ಯಾಣ ಕರ್ನಾಟಕದಿಂದ ಪ್ರವಾಸ ಕೈಗೊಂಡು, ಪಕ್ಷದ ಅಸಮಾಧಾನಿತರ ಜೊತೆ ಮಾತನಾಡುತ್ತೇನೆ. ಅವರ ಮನೆಗೇ ಹೋಗಿ ಮಾತಾಡಲಾಗುವುದು. ಯಾರೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಎಲ್ಲರ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದರು. +ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ +ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಸೋಮಣ್ಣ ಅವರಿಗೆ ಸೋಲಾಗಿದೆ. ನಾನು ಅವರು ಸಹೋದರರ ರೀತಿ ಇದ್ದೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಜನ ಭಾರತ ಮಾತಾಕಿ ಜೈ ಎನ್ನಲು ಆರಂಭಿಸಿದ್ದಾರೆ. ಕುಮಾರಸ್ವಾಮಿ ದತ್ತಮಾಲೆ ಧರಿಸುತ್ತೇನೆ ಎಂದು ಹೇಳಿರುವುದನ್ನು ಸ್ವಾಗತಿಸಲಾಗುವುದು. ಇದು ಭಾರತದ ಪರಂಪರೆ. ನಮ್ಮ ತಂದೆ, ಅಜ್ಜ ಎಲ್ಲರೂ ಮಾಲೆ ಧರಿಸಿದ್ದರು. +ಶಿವಮಾಲೆ, ದತ್ತಮಾಲೆ, ಶಬರಿ ಮಾಲೆ ಹೀಗೆ ಅನೇಕ ಮಾಲೆ ಧರಿಸುವುದು ನಮ್ಮ ಪರಂಪರೆ. ದೇವರ ಮೇಲೆ ಭಕ್ತಿ ತೋರಿಸುವುಕ್ಕೆ ಭೇದ ಭಾವ ಬೇಡ ಮಾಡುವುದು ಬೇಡ. ಆ ರೀತಿ ಮಾಡುವುದು ಏನಿದ್ದರು ಕಾಂಗ್ರೆಸ್ ಎಂದು ಆರೋಪಸಿದರು. ಹಿಂದೂ ದ್ವೇಷ ಮಾಡೋದು, ಮುಸ್ಲಿಂರಿಗೆ ಸೆಲ್ಯುಟ್ ಹೊಡೆದು ನಿಲ್ಲಬೇಕು ಎಂಬ ದುರಹಂಕಾರದ ಹೇಳಿಕೆಗೆ ನಮ್ಮಲ್ಲಿ ಅವಕಾಶ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಮರ್ಥ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿನ್ನೆ ಸುತ್ತೂರು ಶ್ರೀಗಳಿಗೆ ಕರೆ ಮಾಡಿದ್ದೆ. ಎಲ್ಲ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಗೋಪಾಲಯ್ಯ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು. \ No newline at end of file diff --git a/eesanje/url_46_308_11.txt b/eesanje/url_46_308_11.txt new file mode 100644 index 0000000000000000000000000000000000000000..5d813ca124477749a498dca373b7e69c02cc5fb1 --- /dev/null +++ b/eesanje/url_46_308_11.txt @@ -0,0 +1,16 @@ +ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ +ಬಾಗಲಕೋಟೆ, ನ.20- ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಸಾಧನೆಗಾಗಿ ಅನ್ಯ ಪಕ್ಷಗಳಿಂದ ನಾಯಕರನ್ನು ಕರೆ ತರುವುದು ಸೇರಿದಂತೆ ರಾಜಕೀಯ ಧ್ರುವೀಕರಣಕ್ಕೆ ಜನವರಿ 26ರ ಬಳಿಕ ಚಾಲನೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಸ್ಪೋಟವಾಗುವುದು ಮಾತ್ರ ಬಾಕಿ ಇದೆ. ನನಗೆ ಆ ಪಕ್ಷದಲ್ಲಿ ಬಹಳಷ್ಟು ಜನ ಸ್ನೇಹಿತರಿದ್ದಾರೆ. ಅಸಮಾಧಾನ ಯಾವಾಗ ಹೊರ ಬೀಳಲಿದೆಯೋ ಗೋತ್ತಿಲ್ಲ. ಜ್ವಾಲಾಮುಖಿ ಹೊರ ಬರುವುದಂತೂ ಖಚಿತ ಎಂದರು. +ಬಿಜೆಪಿಯಿಂದ ಬಹಳಷ್ಟು ನಾಯಕರು ಕಾಂಗ್ರೆಸ್‍ಗೆ ಬರುವ ಪ್ರಕ್ರಿಯೆ ಜನವರಿ 26ರ ನಂತರ ಸಕ್ರಿಯವಾಗಲಿದೆ. ಎಷ್ಟು ಜನ ಬರುತ್ತಾರೆ ಎಂದು ಕಾದು ನೋಡಿ. ಸದ್ಯಕ್ಕೆ ಯಾವುದೇ ಮುನ್ಸೂಚನೆ ನೀಡುವುದಿಲ್ಲ. ಜ.26ರ ಬಳಿಕ ನಮ್ಮ ಚಟುವಟಿಕೆಗಳನ್ನು ಆರಂಭಿಸುತ್ತೇವೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಅಗತ್ಯವಾದ ಬ್ಲೂ ಪ್ರಿಂಟ್ ತಯಾರು ಮಾಡಿದ್ದೇವೆ ಎಂದು ಹೇಳಿದರು. +ತಮಗೆ ಲಿಂಗಾಯಿತ ಸಮುದಾಯದ ನಾಯಕರನ್ನಷ್ಟೇ ಅಲ್ಲ; ಎಲ್ಲಾ ಸಮುದಾಯದ ನಾಯಕರನ್ನು ಸೆಳೆಯುವ ಜಬಾಬ್ದಾರಿಯು ಇದೆ. ಕಾಂಗ್ರೆಸ್ ಪಕ್ಷವು ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಬದ್ಧತೆ ಹೊಂದಿದೆ. ಬಿಜೆಪಿಯಲ್ಲಿ ಹಿಂದುತ್ವ, ಹಿಂದುತ್ವ ವಿರೋಧಿ ಎಂಬ ಭಾವನೆಗಳಿವೆ. ಆದರೆ, ನಮ್ಮಲ್ಲಿ ಆ ರೀತಿ ಇಲ್ಲ ಎಂದರು. +ಅನ್ಯ ಪಕ್ಷಗಳ ಬಹಳಷ್ಟು ಜನ ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ, ಅವರನ್ನು ಇಲ್ಲಿಗೆ ಕರೆ ತಂದ ಮೇಲೆ ಅವರಿಗೆ ಸೂಕ್ತ ಮಾನ ನೀಡುವ ಬಗ್ಗೆಯೂ ಚಿಂತನೆ ಮಾಡಬೇಕಿದೆ. ಇಲ್ಲಿದ್ದವರಿಗೆ ಮನಸ್ಸಿಗೆ ನೋವು ಆಗಬಾರದು. ಹೊರಗಿನಿಂದ ಬಂದವರಿಗೆ ನೀಡಲು ಇಲ್ಲಿ ಸೂಕ್ತ ಸ್ಥಾನ ಮಾನ ಇರಬೇಕು. ಆ ನಿಟ್ಟಿನಲ್ಲಿ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. +ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’ +ಬಿಜೆಪಿಯಿಂದ ಎಷ್ಟು ಜನ ಬರುತ್ತಾರೆ ಎಂಬುದಕ್ಕೆ ಮುಗುಮ್ಮಾಗಿ ಉತ್ತರ ನೀಡಿದ ಅವರು, ಗೋಳಿ ಹೊಡೆಯುವುದು ಅಂದರೆ ಬಂದೂಕು ಹಿಡಿಯುವಾಗ ಎರಡು ರೀತಿ ಇರುತ್ತದೆ. ಚರ್ರಿಗೋಳಿ ಚಿದ್ರವಾಗಿರುತ್ತದೆ. ಎಷ್ಟು ಮಂದಿಗೆ ಬಡಿಯುತ್ತದೆ ಎಂದು ಗೊತ್ತಿರುವುದಿಲ್ಲ. ಫೈರಿಂಗ್ ಮಾಡುವಾಗ ಎರಡು ರೀತಿ ಇರುತ್ತದೆ, ಯಾವ ಸಮಯಕ್ಕೆ ಯಾವುದನ್ನು ಫೈರಿಂಗ್ ಮಾಡಬೇಕೋ ಅದನ್ನು ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕಾದರೆ ಫೈರಿಂಗ್ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ರಾಜಕೀಯದಲ್ಲಿ ದ್ರುವೀಕರಣ ಅನಿವಾರ್ಯ ಎಂದರು. +ನಾವು ಆಪರೇಷನ್ ಹಸ್ತ ಮಾಡುವುದಿಲ್ಲ. ಬಿಜೆಪಿಯಲ್ಲಿ ತಿರಸ್ಕಾರಕ್ಕೆ ಒಳಗಾಗಿ, ನಮಗೆ ಗೌರವ ನೀಡುತ್ತಿಲ್ಲ. ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನೋಂದು ನಮ್ಮ ಪಕ್ಷಕ್ಕೆ ಬರುವವರನ್ನು ಕರೆದುಕೊಂಡು ಗೌರವಯುತವಾಗಿ ನಡೆಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. +ಬಿಜೆಪಿಯಲ್ಲಿ ಪಕ್ಷದ ರಾಜಾಧ್ಯಕ್ಷ ಸ್ಥಾನ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಎರಡನ್ನು ಮಲೆನಾಡು ಮತ್ತು ಬೆಂಗಳೂರಿಗೆ ನೀಡಲಾಗಿದೆ. ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯಿಸಲಾಗಿದೆ. ಅದರಲ್ಲೂ ಲಿಂಗಾಯಿತ ಸಮುದಾಯ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ದಾವಣೆಗೆರೆಯಿಂದ ಕಿತ್ತೂರು ಕರ್ನಾಟಕ ಭಾಗದವರೆಗೂ ಲಿಂಗಾಯಿತರು ಹೆಚ್ಚಿದ್ದಾರೆ. ಬಿಜೆಪಿಯಲ್ಲಿನ ಅಧಿಕಾರಗಳು ಬೆಂಗಳೂರು, ಶಿವಮೊಗ್ಗಕ್ಕೆ ಸೀಮಿತವಾಗಿವೆ. ಈಗ ನಡೆದಿರುವ ಆಯ್ಕೆ ಬಹಳಷ್ಟು ಮಂದಿಗೆ ಸಮಾಧಾನ ತಂದಿಲ್ಲ. ತಮಗಿಂತಲೂ ಕಿರಿಯರ ಕೈ ಕೆಳಗೆ ಹೇಗೆ ಕೆಲಸ ಮಾಡುವುದು ಎಂಬ ಹಿಂಜರಿಕೆ ಆ ಪಕ್ಷ ಬಹಳಷ್ಟು ನಾಯಕರಲ್ಲಿದೆ ಎಂದರು. +ತಾವು ಬಿಜೆಪಿ ಬಿಟ್ಟ ಬಂದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ. ಈಗ ನಾವು ಇರುವ ಪಕ್ಷದ ಬಗ್ಗೆ ಚರ್ಚೆ ಮಾಡುವುದು ಸೂಕ್ತ. ಪ್ರಶ್ನೆ ಎದುರಾದ ಕಾರಣಕ್ಕೆ ಉತ್ತರಿಸುವುದಾದರೆ ಇವತ್ತಿನ ಪರಿಸ್ಥಿತಿಯಲ್ಲಿ ವಿಜಯೇಂದ್ರ ಸೇರಿದಂತೆ ಯಾರೇ ಬಿಜೆಪಿ ಅಧ್ಯಕ್ಷರಾದರೂ ಆ ಪಕ್ಷ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲ. +ಅಶೋಕ್ ಮತ್ತು ವಿಜಯೆಂದ್ರ ಜೋಡೆತ್ತುಗಳಂತೆ ಪಕ್ಷ ಕಟ್ಟುತ್ತೇವೆ ಎನ್ನುತ್ತಾರೆ. ಜೋಡೆತ್ತು ಅಷ್ಟೆ ಅಲ್ಲ, ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ಕು ಎತ್ತುಗಳನ್ನು ಹೂಡಿ ನೇಗಿಲು ಹೂಳುವ ಪದ್ಧತಿ ಇದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಎತ್ತುಗಳನ್ನು ಹೂಡಿದರೂ ಹೊಲದಲ್ಲಿನ ಗಳೇ ಜಗ್ಗಲು ಆಗಲ್ಲ. ಆ ಶಕ್ತಿ ಬಿಜೆಪಿಗೆ ಇಲ್ಲ, ನೆಲ ಗಟ್ಟಿಯಾಗಿದೆ, ಬಿರುಸಾಗಿದೆ. ಅಲ್ಲಿ ಎರಡು ಎತ್ತುಗಳಿಗೆ ಜಗ್ಗುವ ಪರಿಸ್ಥಿತಿ ಉಳಿದಿಲ್ಲ. ಆ ನೇಗಿಲು ಜಗ್ಗ ಬೇಕಾದರೆ ಎಂಟತ್ತು ಎತ್ತುಗಳನ್ನು ಹೂಡಿದರೂ ಸಾಧ್ಯವಾಗುವುದಿಲ್ಲ ಎಂದರು. +ವಿಧಾನಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರಿಗೆ ಬಿಜೆಪಿಯವರು ಗೌರವ ಸಲ್ಲಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ತಾವು ಕೂಡ ಒಪ್ಪಲ್ಲ. ಮಾತಿನ ಭರದಲ್ಲಿ ಜಮೀರ್ ಆ ರೀತಿ ಹೇಳಿರಬಹುದು. ಸ್ಥಾನಕ್ಕೆ ಗೌರವ ಇರುತ್ತದೆ. ಅದು ವ್ಯಕ್ತಿಗೆ ಸೀಮಿತವಲ್ಲ. ಸಂವಿಧಾನ ಬದ್ಧವಾದ ಹುದ್ದೆ ಒಂದು ಸಮಾಜಕ್ಕೆ ಸೇರಿದ್ದಲ್ಲ. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಸ್ಪೀಕರ್ ಹುದ್ದೆಗೆ ಗೌರವ ನೀಡುತ್ತಾರೆ. ವ್ಯಕ್ತಿ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ಕುರಿತ ಗೌರವ ಬದಲಾಗುತ್ತದೆ ಎಂದರು. +ಮಾಜಿ ಶಾಸಕ ಯತೀಂದ್ರ ವಿಡಿಯೋ ಕುರಿತು ಟೀಕೆ ಮಾಡುವವರನ್ನು ನೋಡಿದರೆ ನನಗೆ ನಗು ಬರುತ್ತದೆ. ಮಾತನಾಡುವವರೆಲ್ಲಾ ಸತ್ಯ ಹರಿಶ್ಚಂದ್ರ ರಾಜರ ಮನೆಯಲ್ಲಿ ಬಾಡಿಗೆ ಇದ್ದಂತೆ ಮಾತನಾಡುತ್ತಾರೆ. ಬೇರೆಯವರಿಗೆ ಗೊತ್ತಿಲ್ಲದೆ ಇರಬಹುದು, ನಾನು ಇಪ್ಪತ್ತು ವರ್ಷ ಅವರ ಜೊತೆ ಇದ್ದು ನೋಡಿದ್ದೇನೆ. ಬಹಳ ಚೆನ್ನಾಗಿ ಗೊತ್ತಿದೆ. ಆರೋಪ ಮಾಡಲಿ, ಆದರೆ ಒಂದು ಬೆರಳನ್ನು ಬೇರೆಯವರತ್ತ ತೋರಿಸುವ ಮುನ್ನಾ ನಾಲ್ಕು ಬೆರಳು ತಮ್ಮತ್ತ ಇರುತ್ತವೆ ಎಂಬ ಅರಿವಿರಬೇಕು ಎಂದರು. +ಸ್ವಲ್ಪ ದಿನ ಕಳೆದ ಮೇಲೆ ಜನ ಸರ್ಕಾರ ನಡೆಸುವವರನ್ನು ಕಲ್ಲು ತೆಗೆದುಕೊಂಡು ಹೊಡೆಯುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮಲು ನೀಡಿರುವ ವಿವಾದಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ಶ್ರೀರಾಮುಲುರಿಗೆ ಸಮಯ ಪ್ರಜ್ಞೆ ಬಹಳ ಕಡಿಮೆ ಇದೆ. ಅವರು ಬಳ್ಳಾರಿ ಜಿಲ್ಲೆಯನ್ನೂ ಈಗಾಗಲೇ ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ, ಯಾರದರೂ ಪ್ರಭುದ್ಧ ರಾಜಕಾರಣಿ ಮಾತನಾಡಿದರೆ ಪ್ರತಿಕ್ರಿಯಿಸುತ್ತೇನೆ ಎಂದರು. +ನನ್ನ ಕ್ಷೇತ್ರದಲ್ಲಿ ಗಂಭೀರ ಸಮಸ್ಯೆಗಳಿವೆ, ನೀರಾವರಿ ಸೇರಿದಂತೆ ಅನೇಕ ಯೋಜನೆಗಳು ನಡೆಯಬೇಕಿದೆ. ಮಂತ್ರಿಯಾದ ಮೇಲೆ ರಾಜ್ಯ ಸುತ್ತ ಬೇಕಿದೆ. ಕ್ಷೇತ್ರ ಸಮಸ್ಯೆಗಳತ್ತ ಗಮನ ಹರಿಸಲು ಕಷ್ಟವಾಗುತ್ತದೆ. ಕಳೆದ ನಾಲ್ಕೈದು ವರ್ಷದಿಂದ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಮೊದಲು ಅವುಗಳನ್ನು ಸರಿ ಪಡಿಸಿ, ಬಳಿಕ ಸಚಿವ ಸ್ಥಾನದ ಬಗ್ಗೆ ಗಮನ ಹರಿಸುತ್ತೇನೆ ಎಂದರು. \ No newline at end of file diff --git a/eesanje/url_46_308_12.txt b/eesanje/url_46_308_12.txt new file mode 100644 index 0000000000000000000000000000000000000000..f7ae26d2457f6b95a2efb4810bb67336aaef4213 --- /dev/null +++ b/eesanje/url_46_308_12.txt @@ -0,0 +1,5 @@ +ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್‍ಗೆ ವಿಮಾನ ಸಂಚಾರ +ಬೆಂಗಳೂರು,ನ.20- ನಾಳೆಯಿಂದ ಸ್ಟಾರ್ ಏರ್ ವಿಮಾನಯಾನ ಸಂಸ್ಥೆಯು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ಮೂರು ಹೊಸ ದೈನಂದಿನ ವಿಮಾನಗಳ ಸಂಚಾರವನ್ನು ಪ್ರಾರಂಭಿಸಲಿದೆ. +ವಿಮಾನಯಾನ ಸಂಸ್ಥೆಯು ತಮ್ಮ ಹೊಸ ಎಂಬ್ರಾರ್ ಇ175 ವಿಮಾನವನ್ನು ಬಳಸಿಕೊಂಡು ಈ ಬಹು ನಿರೀಕ್ಷಿತ ಮಾರ್ಗಗಳಲ್ಲಿ ಸಂಚಾರ ಪ್ರಾರಂಭಿಸಲಿದೆ. ಹೈದರಾಬಾದ್‍ನ ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಅನ್ವೇಷಿಸುವ ಪ್ರವಾಸಿಗರಿಗೆ ಮತ್ತು ಬ್ಯುಸಿನೆಸ್ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಶಿವಮೊಗ್ಗ ಮತ್ತು ಹೈದರಾಬಾದ್ ನಡುವೆ ತಡೆರಹಿತ ದೈನಂದಿನ ವಿಮಾನಗಳ ಸೇವೆ ಲಭ್ಯವಿರುತ್ತದೆ ಎಂದು ಸ್ಟಾರ್ ಏರ್ ಮೂಲಗಳು ತಿಳಿಸಿವೆ. +ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’ +ಇದಲ್ಲದೆ ದೈನಂದಿನ ವಿಮಾನಗಳು ಶಿವಮೊಗ್ಗದಿಂದ ತಿರುಪತಿಗೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಇತರ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಆನಂದಿಸಬಹುದು ಮತ್ತು ನಮ್ಮ ಸೌಕರ್ಯವನ್ನು ಅನುಭವಿಸಬಹುದು.ಇನ್ನು ಗೋವಾ ಪ್ರವಾಸಿಗರಿಗೂ ಸಂಪರ್ಕ ಒದಗಿಸುತ್ತದೆ ಎಂದು ಸ್ಟಾರ್ ಏರ್ ಹೇಳಿದೆ. \ No newline at end of file diff --git a/eesanje/url_46_308_2.txt b/eesanje/url_46_308_2.txt new file mode 100644 index 0000000000000000000000000000000000000000..94eaef8420f94633a08e5805d6daceafc51c15bf --- /dev/null +++ b/eesanje/url_46_308_2.txt @@ -0,0 +1,15 @@ +ನಿಗಮ – ಮಂಡಳಿಗಳ ನೇಮಕ: ಸುರ್ಜೆವಾಲ ಜೊತೆ ಸಮಾಲೋಚನೆ +ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. +ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ. ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಧಿಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ. +ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. +ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು. ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ. +ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ. +ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸೊಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. +ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ. +ಬೆಂಗಳೂರು,ನ.21- ಕಾಂಗ್ರೆಸ್‍ನಲ್ಲಿ ಕಾರ್ಯಕರ್ತರು, ಮುಖಂಡರು ಜಾತಕ ಪಕ್ಷಿಗಳಂತೆ ಕಾಯುತ್ತಿರುವ ನಿಗಮ ಮಂಡಳಿಗಳ ನೇಮಕಾತಿಗೆ ಮುಹೂರ್ತ ಕೂಡಿಬಂದಂತೆ ಇದ್ದು, ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೆವಾಲ ಇಂದು ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಇನ್ನು ಸರ್ಕಾರದಲ್ಲಿ ಸಹಭಾಗಿತ್ವ ದೊರೆತಿಲ್ಲ. +ಹೀಗಾಗಿ ಬಹಳಷ್ಟು ಮಂದಿ ಅಸಮಾಧಾನದಿಂದ ಕುದಿಯುತ್ತಿದ್ದಾರೆ. ಕಾಂಗ್ರೆಸ್ ಅಕಾರಕ್ಕೆ ಬಂದ ನಂತರ ಸಚಿವರಾಗಿರುವವರು ಮಾತ್ರ ಅಕಾರದ ಅವಕಾಶಗಳನ್ನು ಅನುಭವಿಸುತ್ತಿದ್ದಾರೆ. ನಿಗಮ ಮಂಡಳಿಗಳ ನೇಮಕಾತಿಯಿಂದ ಆಡಳಿತ ಯಂತ್ರ ಚುರುಕುಗೊಳ್ಳುವುದಷ್ಟೇ ಅಲ್ಲ ಜನಸಾಮಾನ್ಯರಿಗೆ ಹೆಚ್ಚಿನ ಸೇವೆ ಒದಗಿಸಲು ಸಹಾಯವಾಗುತ್ತದೆ. ಪಕ್ಷ ಸಂಘಟನೆಗೂ ಅನುಕೂಲವಾಗಲಿದೆ. ಆದರೆ, ಪ್ರತಿ ಬಾರಿಯೂ ಉದ್ದೇಶ ಪೂರ್ವಕವಾಗಿಯೇ ನಿಗಮ ಮಂಡಳಿಗಳ ನೇಮಕಾತಿಯನ್ನು ವಿಳಂಬ ಮಾಡಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಾಪಕವಾಗಿ ಕೇಳಿ ಬರುತ್ತಿವೆ. +ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ +ಈ ಹಿಂದೆ ಮೈಸೂರು ಸೋಪ್‍ನ ನಿಗಮದ ಅಧ್ಯಕ್ಷರಾಗಿದ್ದ ಚನ್ನಗಿರಿ ಕ್ಷೇತ್ರದ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಗುತ್ತಿಗೆಯಲ್ಲಿ ಲಂಚ ಸ್ವೀರಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದು, ಬಿಜೆಪಿ ಸರ್ಕಾರಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಲು ಕಾರಣವಾದರು. +ಅಂತಹದ್ದೇ ಘಟನೆಗಳು ಮರುಕಳುಹಿಸಬಹುದು ಎಂಬ ಭಯ ಕಾಂಗ್ರೆಸ್ ನಾಯಕರಲ್ಲೂ ಕಾಡುತ್ತಿದೆ. ಹೀಗಾಗಿ ಅಳೆದು-ತೂಗಿ ನೇಮಕಾತಿಗೆ ಕ್ರಮ ಕೈಗೊಳ್ಳುತ್ತಿದ್ದಾರೆ. ಶೇ.50:50ರ ಅನುಪಾತದಲ್ಲಿ ಶಾಸಕರು ಮತ್ತು ಕಾರ್ಯಕರ್ತರ ನಡುವೆ ಅಧಿಕಾರ ಹಂಚಿಕೆಗೆ ನಿರ್ಣಯಿಸಲಾಗಿದೆ. ಈಗಾಗಲೇ 30 ಮಂದಿ ಶಾಸಕರು ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಂಭವನೀಯ ಶಾಸಕರ ಪಟ್ಟಿಯನ್ನು ತಯಾರಿಸಿದ್ದು, ಹೈಕಮಾಂಡ್ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಿ ಅಖೈರುಗೊಳಿಸುವ ಸಾಧ್ಯತೆ ಇದೆ. +ಜಿಲ್ಲಾಧ್ಯಕ್ಷರ ಪೈಕಿ 18 ಮಂದಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಕಲ್ಪಿಸಲು ಚರ್ಚಿಸಲಾಗಿದೆ. ಉಳಿದಂತೆ ಪ್ರಮುಖ ಕಾರ್ಯಕರ್ತರಿಗೆ ಅಧಿಕಾರ ನೀಡುವ ಚಿಂತನೆ ನಡೆದಿದೆ. ಆದರೆ, ಲೋಕಸಭೆ ಚುನಾವಣೆಗೂ ಮುನ್ನ ನೇಮಕಾತಿಗಳಾದರೆ ಅಸಮಾಧಾನಗಳು ಸ್ಪೋಟಗೊಳ್ಳಬಹುದು ಎಂಬ ಅಳಕು ಕೂಡ ಕಾಡುತ್ತಿದ್ದು, ಈ ನಿಟ್ಟಿನಲ್ಲಿ ನಿಧಾನದ ಕ್ರಮ ಅನುಸರಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. +ಕಾರ್ಯಕರ್ತರ ಒತ್ತಡ ದಿನೇ ದಿನೇ ಹೆಚ್ಚುತ್ತಿದ್ದು, ಅದನ್ನು ನಿಭಾಯಿಸಲು ನಾಯಕರು ಪರದಾಡುತ್ತಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಯಾಗಲಿದ್ದು, ಸೂಕ್ತ ನಿರ್ಣಯ ಕೈಗೊಳ್ಳುವ ನಿರೀಕ್ಷೆಗಳಿವೆ. \ No newline at end of file diff --git a/eesanje/url_46_308_3.txt b/eesanje/url_46_308_3.txt new file mode 100644 index 0000000000000000000000000000000000000000..d608f8f29536b697084d9db9b9ead2c55093403f --- /dev/null +++ b/eesanje/url_46_308_3.txt @@ -0,0 +1,8 @@ +ಪಂಚತಾರಾ ಹೊಟೇಲ್‌ಗಳ ನಿರ್ಮಾಣಕ್ಕೆ ಮುಂದಾದ ಸರ್ಕಾರ +ಬೆಂಗಳೂರು,ನ.21- ಪ್ರತಿವರ್ಷ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಶಾಸಕರು ಹಾಗೂ ಅಧಿಕಾರಿಗಳ ವಾಸ್ತವ್ಯಕ್ಕೆ ಕೋಟಿ ಕೋಟಿ ಹಣ ಖರ್ಚು ಮಾಡಲಾಗುತ್ತದೆ. ಇದೀಗ ಇಂಥ ಖರ್ಚು ಕಡಿಮೆಗೊಳಿಸುವುದು, ವಾಸ್ತವ್ಯದ ಅನಾನುಕೂಲತೆ, ವೆಚ್ಚವನ್ನು ತಗ್ಗಿಸಲು ಬೆಳಗಾವಿ ಸುವರ್ಣಸೌಧದ ಸಮೀಪದಲ್ಲೇ ಪಂಚತಾರಾ ಹೊಟೇಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. +ಡಿ.4ರಿಂದ ಡಿ.15ರವರೆಗೆ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕಳೆದ ವರ್ಷ ನಡೆದ ಅಧಿವೇಶನಕ್ಕೆ ಅಂದಾಜು 37 ಕೋಟಿ ರೂ. ವೆಚ್ಚವಾಗಿತ್ತು. 2021ರಲ್ಲಿ ಸುಮಾರು 30 ಕೋಟಿ ರೂ. ಖರ್ಚು ಮಾಡಲಾಗಿತ್ತು. 2018ರಲ್ಲಿ 17 ಕೋಟಿ ರೂ. ಖರ್ಚಾಗಿತ್ತು. ವರ್ಷಂಪ್ರತಿ ಅಧಿವೇಶನದ ವೆಚ್ಚದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಒಟ್ಟು ಖರ್ಚಿನಲ್ಲಿ ಬಹುಪಾಲು ವಾಸ್ತವ್ಯದ್ದಾಗಿದೆ. +ಅಧಿವೇಶನದ ಎರಡು ವಾರಗಳ ಕಾಲ ಬೆಳಗಾವಿ ನಗರದ ಎಲ್ಲಾ ಹೊಟೇಲ್ ಹಾಗೂ ರೆಸಾರ್ಟ್‍ಗಳನ್ನು ಜಿಲ್ಲಾಡಳಿತ ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕಾಗಿ ವಶಕ್ಕೆ ಪಡೆಯುತ್ತದೆ. ಅಧಿವೇಶನದ ವೇಳೆ ಅಧಿಕಾರಿಗಳ ವರ್ಗ ಹಾಗೂ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿಗಳ ವಾಸ್ತವ್ಯಕ್ಕಾಗಿ ಸುಮಾರು 2000 ಹೊಟೇಲ್ ಕೊಠಡಿಗಳನ್ನು ಬುಕ್ ಮಾಡಲಾಗುತ್ತದೆ. +ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ +2022ರಲ್ಲಿ ನಗರದ ಸುಮಾರು 80 ಹೊಟೇಲ್‍ಗಳನ್ನು ವಾಸ್ತವ್ಯಕ್ಕಾಗಿ ಬಳಸಲಾಗಿತ್ತು. ಶಾಸಕರು, ವಿಐಪಿಗಳು, ಅಧಿಕಾರಿಗಳ ವಾಸ್ತವ್ಯಕ್ಕಾಗಿ 67 ಐಷಾರಾಮಿ ಹೊಟೇಲ್‍ಗಳನ್ನು ಬಳಸಲಾಗುತ್ತದೆ. ಇದಕ್ಕಾಗಿ ಕಳೆದ ವರ್ಷ ಸುಮಾರು 6 ಕೋಟಿ ರೂ. ವೆಚ್ಚವಾಗಿದೆ. ಸರಾಸರಿ ಸರ್ಕಾರ ಶಾಸಕರ ವಾಸ್ತವ್ಯಕ್ಕೆ ಸುಮಾರು 10-12 ಲಕ್ಷ ರೂ. ಖರ್ಚು ಮಾಡುತ್ತದೆ. ಬೆಳಗಾವಿ ನಗರದಲ್ಲಿನ ಲಕ್ಸುರಿ ಹೊಟೇಲ್‍ಗಳು ಸುಮಾರು 20 ಲಕ್ಷ ರೂ.ನಿಂದ 70 ಲಕ್ಷ ರೂ.ವರೆಗೆ ಬಿಲ್ ಮಾಡುತ್ತವೆ ಎಂದು ತಿಳಿದುಬಂದಿದೆ. +ಸುವರ್ಣಸೌಧದ ಬಳಿ 10 ಎಕರೆ ಸರ್ಕಾರಿ ಜಮೀನಿನಲ್ಲಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಪಬ್ಲಿಕ್-ಪ್ರೈವೇಟ್ ಪಾಟ್ನರ್‍ಶಿಪ್ ಮಾದರಿಯಲ್ಲಿ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಜಮೀನು ಸರ್ಕಾರದ್ದಾಗಿದ್ದು, ಖಾಸಗಿಯವರು ಹೊಟೇಲ್ ನಿರ್ಮಿಸಲಿದ್ದಾರೆ. 30 ವರ್ಷಗಳ ಕಾಲ ಖಾಸಗಿಯವರಿಗೆ ಕಟ್ಟಡ ಗುತ್ತಿಗೆ ನೀಡುವ ಯೋಚನೆ ಇದೆ. +ಅಧಿವೇಶನ ವೇಳೆ ಈ ಹೊಟೇಲ್‍ನ್ನು ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕೆ ಬಳಸಲಾಗುವುದು. ಉಳಿದ ಅವಧಿಗಳಲ್ಲಿ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಲಿದೆ. ಅಂದಾಜು 300 ಕೋಟಿ ರೂ. ವೆಚ್ಚದಲ್ಲಿ ವಸತಿ ಹೊಟೇಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_308_4.txt b/eesanje/url_46_308_4.txt new file mode 100644 index 0000000000000000000000000000000000000000..9fd27ec1ace76546d875e89fd8a5df361c0d1914 --- /dev/null +++ b/eesanje/url_46_308_4.txt @@ -0,0 +1,6 @@ +ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ +ಮಳವಳ್ಳಿ,ನ.21- ರಾಜ್ಯದ 224 ತಾಲ್ಲೂಕುಗಳು ಕೂಡ ಬರ ಪೀಡಿತ ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. +ತಾಲ್ಲೂಕಿನ ಹಲಗೂರು, ಬಿ.ಜಿ.ಪುರ ಹೋಬಳಿಯಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಮಾತನಾಡಿ, ರೈತರಿಗೆ ಧೈರ್ಯ ತುಂಬಿದರು. ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತರಿಗೆ ತುಂಬಾ ನಷ್ಟವಾಗಿದೆ. ಅನ್ನದಾತರ ಸಂಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಲಿದೆ. ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ರೂ. ಅನುದಾನವನ್ನು ಕೇಳಲಾಗಿದೆ. +ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ +ಹಣ ಬಿಡುಗಡೆಯಾದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುವ ಕಾರ್ಯ ನಡೆಯಲಿದೆ ಎಂದರು.ಒಣಗಿದ ಮುಸುಕಿನ ಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ವೀಕ್ಷಿಸಿ ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವರು, ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ಸೂಚಿಸಿದರು. +ಈ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಕುಮಾರ್, ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ತಹಸೀಲ್ದಾರ್ ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. \ No newline at end of file diff --git a/eesanje/url_46_308_5.txt b/eesanje/url_46_308_5.txt new file mode 100644 index 0000000000000000000000000000000000000000..802f3d5f272a996b3a1c239ef3f7e4d6bd49f267 --- /dev/null +++ b/eesanje/url_46_308_5.txt @@ -0,0 +1,12 @@ +ಹಿಂದುತ್ವ ಪ್ರತಿಪಾದಕರಿಗೆ ಅನ್ಯಾಯ ಮಾಡಿತೇ ಹೈಕಮಾಂಡ್ +ಬೆಂಗಳೂರು,ನ.21- ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ವಿಜಯೇಂದ್ರ ಹಾಗೂ ಆರ್.ಅಶೋಕ್ ನೇಮಕದ ಬಳಿಕ ರಾಜ್ಯದಲ್ಲಿ ಹಿಂದುತ್ವ ಪ್ರತಿಪಾದಿಸುವ ನಾಯಕರಿಗೆ ಹೈಕಮಾಂಡ್ ಅನ್ಯಾಯ ಮಾಡಿತೇ? ಎಂಬ ಪ್ರಶ್ನೆ ಸೃಷ್ಟಿಯಾಗಿದ್ದು, ಅಡ್ಜೆಸ್ಟ್ಮೆಂಟ್ ರಾಜಕಾರಣವನ್ನು ದೆಹಲಿ ವರಿಷ್ಠರೂ ಒಪ್ಪಿ ಬಿಟ್ಟರೇ ಎಂಬ ಸಂಶಯ ಮೊಳಕೆಯೊಡೆದಿದೆ. +ಬಿಜೆಪಿ ಹೈಕಮಾಂಡ್ ಅದರಲ್ಲೂ ಪ್ರಧಾನಿ ನರೇಂದ್ರಮೋದಿ ಹೊಂದಾಣಿಕೆ ಹಾಗೂ ಕುಟುಂಬ ರಾಜಕಾರಣವನ್ನು ಸಮಯ ಸಿಕ್ಕಾಗಲೆಲ್ಲ ವಿರೋಧಿಸಿದ್ದಾರೆ. ಆದರೆ ಈ ಎರಡು ನೇಮಕಗಳು ಮಾತ್ರ ಅವರ ವಾದಕ್ಕೆ ವ್ಯತಿರಿಕ್ತವಾಗಿದ್ದು, ಬಿಜೆಪಿ ಹಾಗೂ ಅದರ ಮಾತೃ ಸಂಸ್ಥೆ ಬೆಳೆಸಿದ ಸಿದ್ಧಾಂತ ಬದ್ಧ ರಾಜಕಾರಣಿಗಳನ್ನು ಅಕ್ಷರಶಃ ನೇಪಥ್ಯಕ್ಕೆ ಸರಿಸಿದೆ. ಹಿಂದುತ್ವದ ಕಟ್ಟರ್ ಪ್ರತಿಪಾದಕರು ಈ ಬೆಳವಣಿಗೆಯೊಂದಿಗೆ ಸಂಪೂರ್ಣವಾಗಿ ಮೂಲೆಗುಂಪಾಗುವ ಸಾಧ್ಯತೆಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು ಅಸಮಾಧಾನ ಮಡುಗಟ್ಟಿದೆ. +ಪ್ರಖರ ಹಿಂದುತ್ವದ ಭಾಷಣ ಹಾಗೂ ಹೋರಾಟ ಮಾಡುವವರು ಸದ್ಯಕ್ಕೆ ಯುದ್ಧ ಗೆದ್ದುಕೊಡುವ ಶಕ್ತಿ ಹೊಂದಿಲ್ಲಎಂಬ ನಿರ್ಧಾರಕ್ಕೆ ಬಿಜೆಪಿ ಹೈಕಮಾಂಡ್ ಬಂದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಹೆಚ್ಚು ಸ್ಥಾನಗಳನ್ನು ತಂದುಕೊಡುವ ಶಕ್ತಿ ಇದೆಯೋ ಅವರಿಗೆ ಆದ್ಯತೆ. ಸಿದ್ಧಾಂತವೆಲ್ಲ ಮಣ್ಣಾಂಗಟ್ಟಿ ಎಂದು ಕೇಸರಿ ಹೈಕಮಾಂಡ್ ಭಾವಿಸಿದೆ. +ಭಾರತೀಯ ಮೂಲದ ಜೈಲು ವಾರ್ಡನ್‍ಗೆ ಸಿಂಗಾಪುರದಲ್ಲಿ ಶಿಕ್ಷೆ +ಹೀಗಾಗಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಯಡಿಯೂರಪ್ಪನವರ ಕೊಡುಗೆ ಎಷ್ಟಿದೆ ಎಂಬುದು ಗೊತ್ತಿದ್ದೂ ವಿಜಯೇಂದ್ರ ಅವರಿಗೆ ಅವಕಾಶ ನೀಡಿದೆ. ಅದೇ ರೀತಿ ಕಳೆದ ಚುನಾವಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ಗೆ ಠಕ್ಕರ್ ನೀಡಲು ಕನಕಪುರದಿಂದ ಸ್ಪರ್ಧೆಗಿಳಿದು ಹೀನಾಯವಾಗಿ ಸೋತ ಆರ್.ಅಶೋಕ್ ಬಿಜೆಪಿಯ ಅಡ್ಜೆಸ್ಟ್‍ಮೆಂಟ್ ರಾಜಕಾರಣದ ಪಿತಾಮಹರ ಪೈಕಿ ಒಬ್ಬರು. +ಆದರೆ ಈ ಗೆಲುವಷ್ಟೇ ಮಾನದಂಡವೆಂಬ ನಿರ್ಣಯ ಬಿಜೆಪಿ ಹಾಗೂ ಸಂಘ-ಪರಿವಾರವೇ ಬೆಳೆಸಿದ ನಾಯಕರು ಸಂಪೂರ್ಣವಾಗಿ ಕಡೆಗಣನೆಗೆ ಗುರಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ ಹೆಗಡೆ, ನಳೀನ್‍ಕುಮಾರ್ ಕಟೀಲ್, ಕೇಂದ್ರದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ವಿ.ಸುನೀಲ್‍ಕುಮಾರ್, ಶಾಸಕ ಅರವಿಂದ ಬೆಲ್ಲದ್ ಮುಂತಾದವರನ್ನು ವರಿಷ್ಠರು ಪಕ್ಕಕ್ಕೆ ಇಟ್ಟಿದ್ದು, ಇವರೆಲ್ಲರೂ ಈಗ ಪಕ್ಷದಲ್ಲಿ ಬೇಡದ ವಸ್ತುಗಳಾಗಿದ್ದಾರೆ. +ಹಾಗಾದರೆ ಇವರೆಲ್ಲರೂ ಮಾಡಿದ ಅಪಚಾರವಾದರೂ ಏನು? ಹೊಂದಾಣಿಕೆ ರಾಜಕಾರಣ ನಡೆಸದಿರುವುದೇ ಅಥವಾ ಕುಟುಂಬ ರಾಜಕಾರಣದ ಕುಡಿಗಳಾಗದೇ ಇರುವುದೇ? ಸದನದ ಒಳಗೆ ಹಾಗೂ ಹೊರಗೆ ಇವರು ಬಿಜೆಪಿಯ ತತ್ವಾದರ್ಶಗಳನ್ನು ಪ್ರತಿಪಾದಿಸಿದ್ದು ತಪ್ಪೇ? ಯತ್ನಾಳ್, ಸಿ.ಟಿ.ರವಿಯವರ ಆಕ್ರೋಶದ ನುಡಿಗಳಲ್ಲಿ ಅನಂತಕುಮಾರ್, ಸುನಿಲ್ ಕುಮಾರ್ ಅವರ ಮೌನ ಪ್ರತಿಭಟನೆಯಲ್ಲಿ ಯಾವುದಾದರೂ ತಪ್ಪಿದೆಯೇ ಎಂದು ಕಾರ್ಯಕರ್ತರು ಪ್ರಶ್ನಿಸುವಂತಾಗಿದೆ. +ದೇಶದಲ್ಲೇ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಸಂಸದರ ಪೈಕಿ ಒಬ್ಬರಾಗಿದ್ದು, ಜಾತಿ ಲೆಕ್ಕಾಚಾರವನ್ನು ಮೀರಿ ಕರ್ನಾಟಕದಲ್ಲಿ ಹಿಂದುತ್ವದ ಅಲೆ ಎಬ್ಬಿಸಿದ್ದ ಅನಂತಕುಮಾರ ಹೆಗಡೆಯವರ ಪ್ರಸ್ತಾಪ ಔಪಚಾರಿಕವಾಗಿಯೂ ಪಕ್ಷ ಮಾಡುತ್ತಿಲ್ಲ. ಕಟು ಸತ್ಯ ಹೇಳುವ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ಗೆ ಬೇಕಿಲ್ಲ. +ಅಪ್ಪಟ ಸೈದ್ಧಾಂತಿಕ ನೆಲೆಯಲ್ಲೇ ಬೆಳೆದು ಪಕ್ಷದ ಎರಡನೇ ಶ್ರೇಣಿಯ ನಾಯಕರೆಂದು ಪರಿಗಣಿಸಲ್ಪಟ್ಟಿದ್ದ ಸಿ.ಟಿ.ರವಿ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್ ಕೂಡ ಈ ಬೆಳವಣಿಗೆಯೊಂದಿಗೆ ಆದ್ಯತೆ ಕಳೆದುಕೊಳ್ಳುವಂತಾಗಿದೆ. +ಇನ್ನು ಮುಂದೆ ಅತ್ಯುತ್ತಮ ವೆಬ್‍ಸರಣಿಗೂ ಪ್ರಶಸ್ತಿ +ಇವರೆಲ್ಲರೂ ಪಕ್ಷ ಹಾಗೂ ಸಂಘಟನೆ ಏನನ್ನು ಬಯಸಿದೆಯೋ ಅದನ್ನು ಮಾತನಾಡಿದ್ದರು. ಆದರೆ ಈಗ ಜಾತಿ ಹಾಗೂ ಹೊಂದಾಣಿಕೆ ರಾಜಕಾರಣದ ಕಾರಣಕ್ಕಾಗಿ ಪಕ್ಷ ಹಾಗೂ ಸಂಘಟನೆಯೇ ಇವರನ್ನು ನಿರ್ಲಕ್ಷಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. \ No newline at end of file diff --git a/eesanje/url_46_308_6.txt b/eesanje/url_46_308_6.txt new file mode 100644 index 0000000000000000000000000000000000000000..be0c90aa6d3b47e097366735815700cf34763138 --- /dev/null +++ b/eesanje/url_46_308_6.txt @@ -0,0 +1,14 @@ +ತಾಯಿ – ಮಗು ಸಾವು : ಬೆಸ್ಕಾಂ ವಿರುದ್ಧ ವ್ಯಾಪಕ ಆಕ್ರೋಶ +ಬೆಂಗಳೂರು, ನ.20- ಕಾಡುಗೋಡಿಯಲ್ಲಿ ಸಂಭವಿಸಿದ ವಿದ್ಯುತ್ ಅಪಘಾತದಲ್ಲಿ ತಾಯಿ, ಮಗು ಪ್ರಾಣ ಕಳೆದುಕೊಂಡ ಧಾರುಣ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶಗಳು ಕೇಳಿ ಬರುತ್ತಿದ್ದು, ಕರ್ತವ್ಯಲೋಪ ಎಸಗಿದ ಐವರು ಅಧಿಕಾರಿಗಳಿಂದ ತಲಾ 10 ಲಕ್ಷ ರೂಪಾಯಿ ವಸೂಲಿ ಮಾಡಿ ಸಂತ್ರಸ್ಥರ ಕುಟುಂಬಗಳಿಗೆ ಪರಿಹಾರ ರೂಪದಲ್ಲಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. +ಈ ಘಟನೆಯಲ್ಲಿ ವಿದ್ಯುತ್ ಎಂಬ ಪ್ರಾಣಕಂಠಕ ಅಪಾಯಕಾರಿ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿತನ ಎದ್ದು ಕಾಣುತ್ತದೆ. ಇದು ಬೆಂಗಳೂರು ಮಾತ್ರವಲ್ಲ ನಾಡಿನಾದ್ಯಂತ ಸಾಮಾನ್ಯ ಎಂಬಂತಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳ ಧೋರಣೆ ಹೇಗಿದೆಯೆಂದರೆ ವಿದ್ಯುತ್ ತಂತಿ ತುಂಡಾಗಿ ಬಿದ್ದರೆ ಅದರ ಬಗ್ಗೆ ಸಾರ್ವಜನಿಕರೆ ಮುಂಜಾಗ್ರತೆ ವಹಿಸಿ ಸುರಕ್ಷಿತವಾಗಿ ದಾಟಿ ಹೋಗಬೇಕು. ನಿರ್ಲಕ್ಷ್ಯ ವಹಿಸಿದರೆ ಯಾರು ತಾನೇ ಏನು ಮಾಡಲಾಗುತ್ತದೆ ಎಂಬ ದಾಷ್ಟ್ಯದ ಸಮಜಾಯಿಷಿಗಳಿವೆ. ವಿದ್ಯುತ್ ಅವಘಡಗಳಿಗೆ ಯಾರೋ ಒಬ್ಬ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಹೊಣೆ ಮಾಡಿ ಕಣ್ಣೋರೆಸುವ ಯತ್ನ ನಡೆಯುತ್ತಿದೆ. ವಾಸ್ತವವಾಗಿ ಇಂತಹ ಪ್ರಕರಣಗಳಲ್ಲಿ ಮೇಲಿನಿಂದ ಕೆಳಗಿನವರೆಗೆ ಎಲ್ಲರೂ ಹೊಣೆಗಾರರು ಎಂಬುದನ್ನು ಮರೆಯಲಾಗುತ್ತಿದೆ. +ರಾಜ್ಯ ಸರ್ಕಾರ ಗೃಹಜ್ಯೋತಿಯಡಿ ಕೋಟ್ಯಂತರ ಜನರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ, ಜನರೆಲ್ಲಾ ಖುಷಿಯಾಗಿದ್ದಾರೆ ಎಂಬ ಭ್ರಮೆಯಲ್ಲಿದೆ. ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾದಾಗ ಕೊರತೆ ಸರಿದೂಗಿಸಲು ವಿದ್ಯುತ್ ಖರೀದಿಗೆ ಹಣದ ಒದಗಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ ಎಂಬ ವಾದಗಳು ಕೇಳಿ ಬರುತ್ತಿವೆ. +ವಿಶ್ವಕಪ್ ಮೇಲೆ ಕಾಲಿಟ್ಟು ಉದ್ದಟತನ ಮೆರೆದ ಮಿಚೆಲ್ ಮಾರ್ಷ್ +ಈ ಎರಡು ಬಾಬ್ತುಗಳಿಗೆ ಹೆಚ್ಚು ಹಣ ಖರ್ಚು ಮಾಡಿ ಸರ್ಕಾರ ಸುಸ್ತಾದಂತೆ ಕಂಡು ಬರುತ್ತಿದೆ. ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿನ ಕೊರತೆಗಳನ್ನು ಸರಿದೂಗಿಸಲು ಸಂಪೂರ್ಣ ನಿರ್ಲಕ್ಷ್ಯ ಕಂಡು ಬರುತ್ತಿದೆ. ಶಿಥಲಗೊಂಡಿರುವ ವಿದ್ಯುತ್ ಕಂಬಗಳ ಬದಲಾವಣೆ, ತಂತಿ ಮಾರ್ಗ ದುರಸ್ಥಿತಿ, ಸೋರಿಕೆ ನಿಯಂತ್ರಣ ಸೇರಿದಂತೆ ಹಲವಾರು ಕೆಲಸಗಳು ನಿರ್ಲಕ್ಷ್ಯಿಸಲ್ಪಡುತ್ತಿವೆ. +ಕಾಡುಗೋಡಿಯಲ್ಲಿ ತಾಯಿ-ಮಗುವಿನ ಸಜೀವ ದಹನ ಆಕಸ್ಮಿಕ ಪ್ರಕರಣ ಎಂದು ನಿರ್ಲಕ್ಷ್ಯಿಸುವುದು ಸಲ್ಲ. ಅದೊಂದು ಸಾಂಸ್ಥಿಕ ಕೊಲೆಯೆಂದೆ ಭಾವಿಸಬೇಕಾಗಿದೆ. ಸಾರ್ವಜನಿಕ ಸ್ಥಳದಲ್ಲಿ ವಿದ್ಯುತ್ ತಂತಿ ಹರಿದು ಬಿದ್ದಿದೆ. ಅದನ್ನು ಕಂಡು ಜನ ಬೆಸ್ಕಾಂಗೆ ಹಲವು ಬಾರಿ ದೂರು ನೀಡಿದ್ದಾರೆ. ಆದರೂ ದುರಸ್ಥಿತಿಯ ಗೋಜಿಗೆ ಹೋಗದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಅಮಾಯಕರಾದ ತಾಯಿ-ಮಗು ವಿದ್ಯುತ್ ಸಂಪರ್ಕಕ್ಕೆ ಸಿಲುಕಿ ಘೋರವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರ ಐದು ಲಕ್ಷ ಪರಿಹಾರ ನೀಡಿ ಕೈ ತೊಳೆದುಕೊಂಡಿದೆ. +ಸಂತ್ರಸ್ಥರ ಕುಟುಂಬದ ಸದಸ್ಯರು ಮತ್ತು ಸ್ಥಳೀಯರು ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಮನೆಯ ಎದರು ಶವ ಇಟ್ಟು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಆದರೆ, ಸರ್ಕಾರ ಪೊಲೀಸರನ್ನು ಬಳಸಿ ಸ್ಥಳಿಯರ ಮೇಲೆ ಒತ್ತಡ ಹೇರಿ ಪ್ರತಿಭಟನೆಯನ್ನು ಹತ್ತಿಕ್ಕಿದೆ. ಪತ್ನಿ ಹಾಗೂ ಪುತ್ರಿಯನ್ನು ಕಳೆದುಕೊಂಡ ತಮಿಳುನಾಡಿನ ಸಂತೋಷ ಕುಮಾರ್ ಎಂಬುವರಿಗೆ ತಪ್ಪಿತಸ್ಥ ಅಧಿಕಾರಿಗಳಿಂದ ತಲಾ 10 ಲಕ್ಷದಂತೆ ಹಣ ವಸೂಲಿ ಮಾಡಿ ಪರಿಹಾರ ಕೊಡಿಸಬೇಕು ಎಂಬ ಒತ್ತಾಯ ಮಾಡಲಾಗಿದೆ. +ಸಾರ್ವಜನಿಕ ಸ್ಥಳದಲ್ಲಿ ತಂತಿ ಹರಿದು ಬಿದ್ದಿದ್ದರೂ ಗಮನಹರಿಸದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಐಪಿಸಿ 304 ಎ ಅಡಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿಯೇ ಐವರು ಆರೋಪಿಗಳಿಗೆ ಠಾಣೆಯಲ್ಲೆ ಜಾಮೀನು ನೀಡಿ ಕಳುಹಿಸಲಾಗಿದೆ. +ಪ್ರತಿ ಭಾರಿಯೂ ಇಂತಹ ಘಟನೆಗಳು ನಡೆದಾಗ ಒಂದಿಬ್ಬರು ಅಧಿಕಾರಿಗಳನ್ನು ಅಮಾನತು ಮಾಡುವುದು, ಸಂತ್ರಸ್ಥರಿಗೆ ಪರಿಹಾರ ನೀಡಿ ಕೈ ತೊಳೆದುಕೊಳ್ಳುವುದು ಸಾಮಾನ್ಯವಾಗಿದೆ. ಯಾವುದೇ ಸರ್ಕಾರವಿದ್ದರೂ ಇಂತಹ ನಿರ್ಲಕ್ಷ್ಯಗಳನ್ನು ಗಂಭಿರವಾಗಿ ಪರಿಗಣಿಸುವುದೇ ಇಲ್ಲವಾಗಿದೆ. ಕೆಲ ಅಧಿಕಾರಿಗಳನ್ನು ದಂಡಿಸಿದ ಮಾತ್ರಕ್ಕೆ ಎಲ್ಲವೂ ಸರಿ ಹೋಗುವುದಿಲ್ಲ. +ಅಪಾಯಕಾರಿಯಾದ ವಿದ್ಯುತ್ ಸರಬರಾಜನ್ನು ಸುರಕ್ಷಿತವಾಗಿಸಲು ಸಮರೋಪಾದಿಯಲ್ಲಿ ಕೆಲಸಗಳಾಗಬೇಕಾಗಿದೆ. ಎಲ್ಲೆಲ್ಲೆ ಅಪಾಯಕಾರಿ ಸಂಪರ್ಕಗಳಿವೆ ಎಂಬ ಸಮೀಕ್ಷೆ ನಡೆಯಬೇಕಿದೆ. ಕೆಲವು ಕಡೆ ಕೈಗೆಟಕುವ ಅಂತರದಲ್ಲೇ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗಿದೆ ಅವುಗಳನ್ನು ಸುರಕ್ಷಿತ ಅಂತರದಲ್ಲಿ ಇರಿಸಬೇಕಿದೆ. ಗುಂಡಿಗಳಲ್ಲಿ ಹರಿದು ತಂಡಾದ ವಿದ್ಯುತ್ ತಂತಿಗಳು ಜೋತಾಡುತ್ತಿರುತ್ತವೆ. ಮಳೆ ಬಂದು ನೀರು ನಿಂತು ಆ ಸ್ಥಳ ಮರಣಕೂಪವಾಗಿರುತ್ತದೆ. ಇಂತ ಲೋಪಗಳ ಬಗ್ಗೆ ತುರ್ತು ಗಮನ ಹರಿಸಬೇಕಿದೆ. +ಕಾಡುಗೋಡಿಯಲ್ಲಿ ಪುಟ್‍ಪಾತ್ ಮೇಲೆಯೇ ವಿದ್ಯುತ್ ಪ್ರಹರಿಸುವ ತಂತಿ ತುಂಡಾಗಿ ಬಿದ್ದಿತ್ತು. ಇದಕ್ಕೆ ಅಧಿಕಾರಿಗಳನ್ನು ಮಾತ್ರವೇ ಹೊಣೆ ಮಾಡಲಾಗಿದೆ. ಸರ್ಕಾರದ ಜವಾಬ್ದಾರಿ ಇಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ. ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದಾಕ್ಷಣ, ಹಾದಿ ಬಿದಿಯಲ್ಲೆ ಹೆಣ ಬೀಳುವಂತೆ ನಿರ್ಲಕ್ಷ್ಯತೆ ವಹಿಸುವುದು ತರವೇ ಎಂದು ಪ್ರತಿಭಟನಾಕಾರರು ಕೇಳುತ್ತಿದ್ದಾರೆ. +ಗೃಹಜ್ಯೋತಿಯಿಂದ ಲಕ್ಷಾಂತರ ಕುಟುಂಬಗಳು ಖುಷಿಯಾಗಿರಬಹುದು. ಆದರೆ, ತಂತಿ ತುಳಿದು ಪ್ರಾಣ ಕಳೆದುಕೊಂಡ ಒಬ್ಬ ಮಹಿಳೆ ಮತ್ತು ಮಕ್ಕಳ ಕುಟುಂಬಕ್ಕಾದ ನಷ್ಟ ಅಷ್ಟು ಕುಟುಂಬಗಳ ಖುಷಿಯ ಮುಂದೆ ಶೂನ್ಯವಾಗುತ್ತದೆ. ಕಾಡುಗೋಡಿಯಲ್ಲಿ ಪ್ರಾಣ ಕಳೆದುಕೊಂಡ 23 ವರ್ಷದ ಸೌಂದರ್ಯ ಮತ್ತು ಆಕೆಯ ಒಂಬತ್ತು ತಿಂಗಳು ಕೂಸು ಸುವಿಕ್ಷಾ ಏನು ತಪ್ಪು ಮಾಡಿದ್ದರು ಎಂಬ ಪ್ರಶ್ನೆ ಕಾಡುತ್ತದೆ. +ಜನರ ಪ್ರಾಣಗಳ ಜೊತೆ ಆಟವಾಡುವ ಅಕಾರ ಸರ್ಕಾರಕ್ಕಷ್ಟೆ ಅಲ್ಲ, ಯಾವ ವ್ಯವಸ್ಥೆಗೂ ಇಲ್ಲ ಎಂಬ ಗಂಭೀರತೆಯನ್ನು ಸಚಿವರು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಅರ್ಥ ಮಾಡಿಕೊಳ್ಳಬೇಕಿದೆ. \ No newline at end of file diff --git a/eesanje/url_46_308_7.txt b/eesanje/url_46_308_7.txt new file mode 100644 index 0000000000000000000000000000000000000000..d573c2913bec4e0ba1a52879f0e31c56e459709a --- /dev/null +++ b/eesanje/url_46_308_7.txt @@ -0,0 +1,9 @@ +ಬರ ಪರಿಹಾರ ಕೆಲಸ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ +ವಿಜಯಪುರ, ನ.20- ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. +ವಿಜಯಪುರ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು. +ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು. +ಐಸಿಸಿ ವಿಶ್ವಕಪ್ ಪ್ಲೇಯಿಂಗ್11ಗೆ ರೋಹಿತ್ ಶರ್ಮಾ ನಾಯಕ +ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈಗ ಮಧ್ಯ ಪ್ರದೇಶ ಹಾಗೂ ಇತರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಅಧಿಕಾರಲ್ಲಿದ್ದಾಗ ಏನು ಮಾಡದ ಬಿಜೆಪಿಯವರು ಈಗ ಜನಪ್ರಿಯ ಯೋಜನೆಗಳ ಬೆನ್ನು ಹತ್ತಿದ್ದಾರೆ. ಆದರೆ ಬಿಜೆಪಿಯವರು ನುಡಿದಂತೆ ನಡೆಯುವ ಜನ ಅಲ್ಲ. ಅವರು ಏನೇ ಹೇಳಿದರು ಸಾರ್ವಜನಿಕರು ನಂಬುವುದಿಲ್ಲ ಎಂದರು. +ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ತಮ್ಮ ಮಗಳ ಮದುವೆಗಾಗಿ ಆಹ್ವಾನ ನೀಡಲು ಇಂದು ತಮ್ಮ ಮನೆಗೆ ಭೇಟಿ ನೀಡಿದ್ದರು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕುಮಾರಸ್ವಾಮಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ. ವಿದ್ಯುತ್ ಕಳ್ಳತನ ಮಾಡಿ ತಪ್ಪು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅಂತಹವರು ಇನ್ನೊಬ್ಬರನ್ನು ಪ್ರಶ್ನಿಸುವ ಅಧಿಕಾರ ಹೊಂದಿದ್ದಾರೆಯೇ ? ಅವರ ಕಾಲದಲ್ಲಿ ವರ್ಗಾವಣೆಯಲ್ಲಿ ದಂಧೆ ಮಾಡಿದ್ದು ಜಗತ್ತಿಗೆ ಗೋತ್ತಿದೆ. ನಮ್ಮ ವಿರುದ್ಧ ದ್ವೇಷ, ಅಸೂಯೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಟೀಕೆಗಳಿಗೆ ಯಾವುದಕ್ಕೂ ಆಧಾರಗಳಿಲ್ಲ ಎಂದು ಹೇಳಿದರು. +ಮಾರ್ಷಲ್‍ಗಳ ಸೇವೆಯಲ್ಲಿ ಕೋಟಿ ಕೋಟಿ ಲೂಟಿ +ಡಿ.ಕೆ.ಶಿವಕುಮರ್ ಅವರು ಮುಖ್ಯಮಂತ್ರಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೆಂದ್ರರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದ ವ್ಯವಹಾರಗಳನ್ನು ನಾವು ನೋಡಿಕೊಳ್ಳುತ್ತೇವೆ, ಅವರಿಗೆ ಏಕೆ ಚಿಂತೆ ಎಂದು ಹೇಳಿದರು. \ No newline at end of file diff --git a/eesanje/url_46_308_8.txt b/eesanje/url_46_308_8.txt new file mode 100644 index 0000000000000000000000000000000000000000..d350ad60697bf2c01d71f753e51690c07be01c4d --- /dev/null +++ b/eesanje/url_46_308_8.txt @@ -0,0 +1,12 @@ + : ಮತ್ತೆ ಮುರುಘಾ ಶ್ರೀ ಬಂಧನ? +ಚಿತ್ರದುರ್ಗ, ನ.20- ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾೀಧಿನವಾಗಿದ್ದು, ಒಂದನೇ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದ ಚಿತ್ರದುರ್ಗದ ಶಿವಮೂರ್ತಿ ಮುರುಘಾರಾಜೇಂದ್ರ ಶರಣರಿಗೆ ಎರಡನೇ ಪ್ರಕರಣ ಮುಳುವಾಗಿದ್ದು ಬಂಧನದ ಭೀತಿ ಎದುರಾಗಿದೆ. +ಚಿತ್ರದುರ್ಗದಲ್ಲಿನ ಮಠದಲ್ಲಿದ್ದಾಗ ಅಲ್ಲಿನ ವಸತಿ ಶಾಲೆಗಳಲ್ಲಿರುವ ಬಾಲಕೀಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳಿದ್ದವು. ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ಫೋಕ್ಸೋ ಸೇರಿದಂತೆ ವಿವಿಧ ಸೆಕ್ಸನ್‍ಗಳ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಶರಣರನ್ನು ಬಂಧಿಸಿದ್ದರು, ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದ ಶಿವಮೂರ್ತಿ ಶರಣರು ನವೆಂಬರ್ 16ರಂದು ಮೊದಲ ಪ್ರಕರಣದಲ್ಲಿ ಜಾಮೀನು ಪಡೆದ್ದರು. ಎರಡನೇ ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿ ಇರುವುದರಿಂದ ಶರಣರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾೀಧಿಶರಾದ ಕೋಮಲ ಅವರು ಸೂಚನೆ ನೀಡಿದ್ದರು. +ನ.16ರಂದು ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗಿದ್ದ ಶರಣರು 11.45ಕ್ಕೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದನ್ನು ಪ್ರಶ್ನಿಸಿ ದೂರುದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡನೇ ಪ್ರಕರಣದಲ್ಲಿ ಜಾಮೀನು ದೊರೆಯದೇ ಇರುವ ಕಾರಣ ಆರೋಪಿಯನ್ನು ಬಿಡುಗಡೆ ಮಾಡಿರುವುದು ಸರಿಯಲ್ಲ, ಕೂಡಲೇ ಬಂಧನಾದೇಶ ನೀಡಬೇಕು ಎಂದು ಸರ್ಕಾರದ ಅಭಿಯೋಜಕರಾದ ಜಗದೀಶ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. +ನ್ಯಾಯಾಲಯದ ಆದೇಶದ ಹೊರತಾಗಿಯೂ ಆರೋಪಿಯನ್ನು ಬಿಡುಗಡೆ ಮಾಡಿದ ಬಗ್ಗೆ ಜೈಲಿನ ಅಧಿಕಾರಿಗಳನ್ನು ನ್ಯಾಯಾೀಧಿಶರು ಪ್ರಶ್ನೆ ಮಾಡಿದ್ದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಂದ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು. ಈ ನಡುವೆ ಸರ್ಕಾರಿ ಅಭಿಯೋಜಕರ ವಾದವನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಲಯ ಬಂಧನಾದೇಶ ಜಾರಿ ಮಾಡಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುದ್ದುರಾಜ ವಾರೆಂಟ್‍ನೊಂದಿಗೆ ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿದ್ದಾರೆ. +ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಶರಣರಿಗೆ ಚಿತ್ರದುರ್ಗದ ಮಠಕ್ಕೆ ಭೇಟಿ ನೀಡಬಾರದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆ ಕಾರಣಕ್ಕೆ ಶರಣರು ದಾವಣಗೆರೆಯ ವಿರಕ್ತ ಮಠದಲ್ಲಿದ್ದಾರೆ. +ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಜೈಲಿನಿಂದ ಶರಣರನ್ನು ಬಿಡುಗಡೆ ಮಾಡಿದ್ದಕ್ಕೆ ಹಲವು ರೀತಿಯ ವ್ಯಾಖ್ಯಾನಗಳು ಕೇಳಿ ಬಂದಿವೆ. ಒಂದೇ ಮಾದರಿಯ ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಎರಡನೇ ಪ್ರಕರಣಕ್ಕೂ ಅದು ಅನ್ವಯಗೊಳ್ಳುತ್ತದೆ ಎಂದು ಅಧಿಕಾರಿಗಳು ಅರ್ಥೈಸಿಕೊಂಡು ಬಿಡುಗಡೆ ಮಾಡಿರುವುದಾಗಿ ಹೇಳಲಾಗುತ್ತಿದೆ. +ಮೂಲಗಳ ಪ್ರಕಾರ ಮೊದಲ ಪ್ರಕರಣದಲ್ಲಿ ಶರಣರನ್ನು ಬಂಧಿಸಲಾಗಿತ್ತು. ಎರಡನೇ ಪ್ರಕರಣದಲ್ಲಿ ಶರಣರನ್ನು ಬಂಧಿಸಿರಲಿಲ್ಲ. ಬದಲಾಗಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಶ್ರೀಗಳನ್ನು ಬಾಡಿ ವಾರೆಂಟ್ ಮೇಲೆ ವಿಚಾರಣೆ ನಡೆಸಿದ್ದರು. ಬಂಧನವಾಗದೆ ಇರುವುದರಿಂದ ಜಾಮೀನಿನ ಅಗತ್ಯ ಇಲ್ಲ ಎಂಬ ವಾದಗಳಿದ್ದವು. ಒಂದು ವರ್ಷ ಎರಡು ತಿಂಗಳ ಬಳಿಕ ಎರಡನೇ ಪ್ರಕರಣದಲ್ಲಿ ಈಗ ಬಂಧಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗಳು ಕೇಳಿ ಬಂದಿವೆ. ಮೊದಲನೇ ಪ್ರಕರಣದಲ್ಲಿ ಬಂಧನವಾಗಿದ್ದರಿಂದ ಜಾಮೀನು ಪಡೆಯಬೇಕು, ಎರಡನೇ ಪ್ರಕರಣದಲ್ಲಿ ಬಂಧನವಾಗದೆ ಬಾಡಿ ವಾರೆಂಟ್ ಮೇಲಷ್ಟೆ ವಿಚಾರಣೆಯಾಗಿದ್ದರಿಂದ ಜಾಮೀನು ಪಡೆಯುವ ಅಗತ್ಯ ಇಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು. ಅದನ್ನು ಬಳಸಿಕೊಂಡು ಶರಣರ ಪರ ವಕೀಲರು ವಾದ ಮಂಡಿಸಿದ್ದರು. +ದೂರುದಾರರ ಪರ ವಕೀಲರು ಇದಕ್ಕೆ ಪ್ರಬಲ ವಿರೋಧ ವ್ಯಕ್ತ ಪಡಿಸಿದ್ದು, ಎಲ್ಲಾ ಪ್ರಕರಣಗಳು ಪ್ರತ್ಯೇಕವಾದ ಜಾಮೀನು ಪಡೆದುಕೊಳ್ಳುವುದು ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಎರಡನೇ ಪ್ರಕರಣದಲ್ಲಿ ಜಾಮೀನು ಪಡೆಯದೆ ಹೊರಗೆ ಇದ್ದಾಗ ಮರು ಬಂಧನಕ್ಕೆ ಆದೇಶಿಸಿದ ಕೇರಳ ಪ್ರಕರಣವನ್ನು ವಕೀಲರು ಉಲ್ಲೇಖಿಸಿದ್ದರು. +ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ +ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಶರಣರ ಪರ ವಕೀಲರಾದ ಉಮೇಶ್, ಶ್ರೀಗಳು ಕಾನೂನಿಗೆ ತಲೆ ಬಾಗಿದ್ದಾರೆ. ಷರತ್ತಿನ ಅನ್ವಯ ಚಿತ್ರದುರ್ಗ ಮಠಕ್ಕೆ ಭೇಟಿ ನೀಡದೆ ದೂರ ಉಳಿದಿದ್ದಾರೆ. ಅದರ ಹೊರತಾಗಿಯೂ ದುರುದ್ದೇಶ ಪೂರ್ವಕವಾಗಿ ಮರು ಬಂಧನಕ್ಕೆ ಮನವಿ ಮಾಡಲಾಗುತ್ತಿದೆ. +ಈಗಾಗಲೇ ಜಾಮೀನು ದೊರೆತಿರುವುದರಿಂದ ಮತ್ತೆ ಬಂಧನದ ಅಗತ್ಯ ಇಲ್ಲ ಎಂದು ವಾದಿಸಿದ್ದರು. ಆದರೆ ದೂರುದಾರರ ಪರ ವಾದವನ್ನು ನ್ಯಾಯಾಲಯ ಎತ್ತಿ ಹಿಡಿದಿತ್ತು. ಜಿಲ್ಲಾ ನ್ಯಾಯಾಲಯ ವಾರೆಂಟ್ ಜಾರಿ ಮಾಡುತ್ತಿದ್ದಂತೆ ಶರಣರ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ. \ No newline at end of file diff --git a/eesanje/url_46_308_9.txt b/eesanje/url_46_308_9.txt new file mode 100644 index 0000000000000000000000000000000000000000..2b49b5987a3d75e4b26818490912d99dccc8a50c --- /dev/null +++ b/eesanje/url_46_308_9.txt @@ -0,0 +1,17 @@ +ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ +ಬೆಂಗಳೂರು, ನ. 20-ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಮತ್ತು ಭ್ರಷ್ಟ ಅಧಿಕಾರಿಗಳಿಗೂ ಕಾನೂನಿನ ರುಚಿ ತೋರಿಸಲಾಗಿದೆ ಎಂದು ಕಂದಾಯ ಸಚಿವಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲ ಒಂದು ರೀತಿಯಲ್ಲಿ ಬೆಸೆದುಕೊಂಡಿರುವ ಕಂದಾಯ ಇಲಾಖೆಯಲ್ಲಿ ಮನೆ ಮಾಡಿರುವ ನೂರಾರು ಸಮಸ್ಯೆಗಳಿಗೆ ಪರಿಹಾರ ನೀಡುವ ಮತ್ತು ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಉದ್ದೇಶದಿಂದಾಗಿಯೇ ಈ ಮಹತ್ವದ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ವಸಿದ್ದರು ಎಂದಿದ್ದಾರೆ. +ಕಳೆದ ಆರು ತಿಂಗಳಿನಿಂದ ಇಲಾಖೆಯ ಕೆಲಸದ ಕಾರ್ಯವೈಖರಿಯನ್ನು ಬದಲಿಸಲು ಸಾಕಷ್ಟು ಶ್ರಮಿಸಲಾಗಿದೆ. ಜನರ ನೂರಾರು ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಬಗೆಹರಿಸಲಾಗಿದೆ. ಜನಸ್ನೇಯಾಗಿ ಕಾರ್ಯನಿರ್ವಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಲಾಗಿದೆ. +16 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆ: ಕಳೆದ ಆರು ತಿಂಗಳಲ್ಲಿ ಬೀದರ್, ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ಗದಗ, ರಾಮನಗರ, ಹಾಸನ ಸೇರಿದಂತೆ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ. +ಅಲ್ಲದೆ, ಬೆಳಗಾವಿ, ಮೈಸೂರು, ಕಲಬುರಗಿ ಹಾಗೂ ಬೆಂಗಳೂರು ವಿಭಾಗಾವಾರು ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ಅಕಾರಿಗಳಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಕೆಲಸಗಳು ಜನರಿಗೆ ಮತ್ತಷ್ಟು ಹತ್ತಿರವಾಗಲು ಅಗತ್ಯವಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ. ಪರಿಣಾಮ ಜನರ ದಶಕಗಳ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದು ಹೇಳಿದ್ದಾರೆ. +ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಕ್ರಮ, ಕಂದಾಯ ಗ್ರಾಮಗಳ ಶೀಘ್ರ ಘೋಷಣೆ, ರೈತರಿಗೆ ಬರ ಪರಿಹಾರ ಮತ್ತು ಅಗತ್ಯ ಸೇವೆಗಳನ್ನು ನೀಡುವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಶೇಷ ಸೂಚನೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 5 ವರ್ಷಕ್ಕೂ ಹಳೆಯ ಸಾವಿರಾರು ತಕರಾರು ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಜನರಿಗೆ ನೆಮ್ಮದಿ ನೀಡಲಾಗಿದೆ ಎಂದಿದ್ದಾರೆ. +ಕಳೆದ ಆರು ತಿಂಗಳ ಹಿಂದೆ ಉಪ ಭಾಗಾಧಿಕಾರಿ (ಎಸಿ ಕೋರ್ಟ್) ನ್ಯಾಯಾಲಯದಲ್ಲೇ ರಾಜ್ಯಾದ್ಯಂತ ಸುಮಾರು 62,000 ತಕರಾರು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದವು. ಆದರೆ, ನಾನು ಇಲಾಖೆಯ ಜವಾಬ್ದಾರಿ ವಸುತ್ತಿದ್ದಂತೆ ಈ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಸೂಚಿಸಿದ್ದರ ಪರಿಣಾಮ ಇಂದು ಸುಮಾರು 30,000 ಅರ್ಜಿಗಳನ್ನು ಕೇವಲ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ. +ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ +ಇನ್ನೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇದ್ದ ಸುಮಾರು ಶೇ.60 ರಷ್ಟು ತಕರಾರು ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. +ಜಿಲ್ಲಾಧಿಕಾರಿಗಳ ಮಾಸಿಕ ಸಭೆ: ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ವಿಚಾರದ ಕುರಿತು ತಿಳಿದುಕೊಳ್ಳುವ ಸಲುವಾಗಿಯೇ ಕಳೆದ ಆರು ತಿಂಗಳಿಂದ ಪ್ರತೀ ತಿಂಗಳು ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಶೀಲಿಸಲಾಗಿದೆ. ಇಲಾಖೆಯಲ್ಲಿ ಅಕ್ರಮ ಎಸಗಿ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಲುಕಿಬಿದ್ದೂ ಸಹ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದಿದ್ದ, ಸುಮಾರು 350ಕ್ಕೂ ಅಕ ಭ್ರಷ್ಟ ಅಧಿಕಾರಿಗಳ ಫೈಲ್‍ಗಳನ್ನು ಕಳೆದ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. +ಈ ಪಟ್ಟಿಯಲ್ಲಿ ಹಲವು ತಹಶೀಲ್ದಾರರು, ಉಪ ಭಾಗಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಇದ್ದು, ಹಲವರಿಗೆ ಕಡ್ಡಾಯ ನಿವೃತ್ತಿ, ಪಿಂಚಣಿಯಲ್ಲಿ ಕಡಿತ ಸೇರಿದಂತೆ ಹಲವು ಶಿಕ್ಷೆಗಳಿಗೆ ಗುರಿಪಡಿಸಲಾಗಿದೆ. ಅಲ್ಲದೆ, ಇನ್ನುಳಿದ ಪ್ರಕರಣಗಳನ್ನೂ ಸಹ ಶೀಘ್ರದಲ್ಲಿ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. +ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ +ಜನರ ಸಮಸ್ಯಗಳಿಗೆ ಸ್ಥಳದಲ್ಲೇ ಸ್ಪಂದನೆ:ಕಳೆದ ಆರು ತಿಂಗಳ ಅವಯಲ್ಲಿ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಾಗಿದೆ. ಈ ಎಲ್ಲಾ ಅವಧಿಯಲ್ಲೂ ಸ್ಥಳೀಯ ತಾಲೂಕು ಕಚೇರಿ ಮತ್ತು ನಾಡ ಕಚೇರಿಗಳಿಗೆ ದಿಢೀರ್ ಭೇಟಿ ನೀಡಲಾಗಿತ್ತು. ಈ ವೇಳೆ ರೆಕಾರ್ಡ್ ರೂಂಗಳನ್ನು ಪರಿಶೀಲಿಸುವ ಜೊತೆಗೆ, ಅಧಿಕಾರಿಗಳು ಯಾವೆಲ್ಲಾ ಸೇವೆಗಳನ್ನು ಜನರಿಗೆ ಎಷ್ಟು ದಿನದಲ್ಲಿ ನೀಡುತ್ತಿದ್ದಾರೆ? ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿತ್ತು. +ಅಲ್ಲದೆ, ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಾಗಿತ್ತು. ಸಣ್ಣ ಪುಟ್ಟ ಕೆಲಸಗಳಿಗೆ ತಿಂಗಳು-ವರ್ಷಗಳಿಂದ ಅಲೆದಿದ್ದರೂ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಜನರ ಸೇವೆಗೆ ತ್ವರಿತವಾಗಿ ಸ್ಪಂದಿಸದ ಅಧಿಕಾರಿಗಳಿಗೆ ಸ್ಥಳದಲ್ಲೇ ನೊಟೀಸ್ ಜಾರಿ ಮಾಡಲಾಗಿದೆ. ಅಲ್ಲದೆ, ಜನರ ಕೆಲಸಗಳನ್ನೂ ಅಲ್ಲಿಯೇ ಮಾಡಿಕೊಟ್ಟು, ಜನಸ್ನೇಹಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ. +ಬೆಂಗಳೂರಿನ ಒತ್ತುವರಿ ತೆರವಿಗೆ ಶೇಷ ಕಾರ್ಯತಂತ್ರ:ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ಖಾಸಗಿಯವರ-ಭೂಗಳ್ಳರ ಪಾಲಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ಸಲುವಾಗಿ ಜಿಲ್ಲಾಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡಕ್ಕೆ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ. +ಈ ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಕನಿಷ್ಟ 60 ಎಕರೆಗೂ ಅಧಿಕ ಸರ್ಕಾರಿ ಭೂಮಿಯಲ್ಲಿ ಖಾಸಗಿ ಒತ್ತುವರಿಯನ್ನು ತೆರವುಗೊಳಿಸಿದೆ. ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ರಕ್ಷಿಸುವ ಅಕಾರಿಗಳ ಬೀಟ್ ವ್ಯವಸ್ಥೆಗೂ ಈಗಾಗಲೇ ಚಾಲನೆ ನೀಡಲಾಗಿದೆ. +ಜಿಲ್ಲಾ ಪ್ರವಾಸ, ಪ್ರಗತಿ ಪರಿಶೀಲನಾ ಸಭೆ, ಸರ್ಕಾರಿ ಕಚೇರಿಗಳಿಗೆ ದಿಡೀರ್ ಭೇಟಿಯ ಜೊತೆಗೆ ಕಳೆದ ಆರು ತಿಂಗಳಿನಿಂದ ವಿಕಾಸಸೌಧದ ಕಚೇರಿಯಲ್ಲೂ ಅಧಿಕಾರಿಗಳ ನೂರಾರು ಸಭೆಗಳನ್ನು ನಡೆಸಲಾಗಿದೆ. ಸರಳ ಆಡಳಿತಕ್ಕೆ ಸೂಚಿಸಲಾಗಿದೆ. ದಿನಂಪ್ರತಿ ಕಚೇರಿಗೆ ಆಗಮಿಸುವ ನೂರಾರು ಜನರನ್ನು ಮಾತನಾಡಿಸಿ ಅವರ ನ್ಯಾಯಯುತ ಮನವಿ, ಕೋರಿಕೆಗೆ ಸ್ಪಂದಿಸಲಾಗಿದೆ. ಅವರ ಸಮಸ್ಯಗಳನ್ನು ಬಗೆಹರಿಸಲಾಗಿದೆ. ಮುಂದಿನ ದಿನಗಳಲ್ಲೂ ಸಹ ಜನರಿಗೆ ಸರಳ, ಸುಲಭ ಮತ್ತು ತ್ವರಿತ ಆಡಳಿತ ನೀಡುವ ನಿಟ್ಟಿನಲ್ಲೇ ನಮ್ಮ ಕಾರ್ಯವೈಖರಿ ಇರಲಿದೆ ಎಂದು ಸಚಿವರು ಹೇಳಿದ್ದಾರೆ. \ No newline at end of file diff --git a/eesanje/url_46_309_1.txt b/eesanje/url_46_309_1.txt new file mode 100644 index 0000000000000000000000000000000000000000..e6dffc5bc45adc995c484dc1ad00be023a75e4a7 --- /dev/null +++ b/eesanje/url_46_309_1.txt @@ -0,0 +1,5 @@ +ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’ +ಬೆಂಗಳೂರು, ನ.20- ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪಡೆದ ಬಿರುದುಗಳ ಪಟ್ಟಿಯನ್ನು ನೀಡಿದೆ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ್ ಎಂದು ಬಿಜೆಪಿ ದೂರಿದೆ. +ಈ ಕುರಿತು ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಶ್ಯಾಡೋ ಸಿಎಂ ಯತೀಂದ್ರರವರಿಗೆ ಎಟಿಎಂ ಸರ್ಕಾರದ ಆಡಳಿತದಲ್ಲಿ ದೊರೆತಿರುವ ಬಿರುದುಗಳು ಎಂದು ಟ್ವೀಟ್ ಮಾಡಿದೆ.ಕಡು ಭ್ರಷ್ಟ , ಹಲೋ ಅಪ್ಪ ವೈ.ಎಸ್.ಟಿ ಕಲೆಕ್ಷನ್ ಪ್ರಿನ್ಸ್ ಸಿಎಂ ಸಿದ್ದರಾಮಯ್ಯರವರ ಕಲೆಕ್ಷನ್-ಕಮಿಷನ್-ಕರಪ್ಷನ್ ಆಡಳಿತ ಮುಗಿಯುವ ಮುನ್ನ ಮತ್ತಷ್ಟು ಬಿರುದುಗಳು ಬಂದರೂ ಸಹ ಅಚ್ಚರಿಯಿಲ್ಲ!! ಎಂದು ಬಿಜೆಪಿ ಹೇಳಿದೆ. +ಜನಾರ್ಧನರೆಡ್ಡಿ ಬಿಜೆಪಿಗೆ ಕರೆತರಲು ಯತ್ನ +ಹಲೋ ಅಪ್ಪ ಕರ್ನಾಟಕದಲ್ಲಿ ಕಳೆದ ವಾರದಿಂದ ಹೆಚ್ಚಾಗಿ ಕೇಳಿ ಬರುತ್ತಿರುವ ಮಾತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ತಂದೆಯ ಜೊತೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬಳಿಕ ಹಲೋ ಅಪ್ಪ ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. \ No newline at end of file diff --git a/eesanje/url_46_309_10.txt b/eesanje/url_46_309_10.txt new file mode 100644 index 0000000000000000000000000000000000000000..c6ff2f29d23b7ef7a302ebdbf8954b91a7611ee3 --- /dev/null +++ b/eesanje/url_46_309_10.txt @@ -0,0 +1,11 @@ +ಪೆನ್‍ಡ್ರೈವ್ ಇದೆ, ಕಳೆದಿಲ್ಲ: ಹೆಚ್.ಡಿ.ಕುಮಾರಸ್ವಾಮಿ +ಬೆಂಗಳೂರು,ನ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪೆನ್‍ಡ್ರೈವ್ ಇದೆ, ಕಳೆದಿಲ್ಲ. ಅದನ್ನು ತೋರಿಸಿದೊಡನೆ ನನ್ನಲ್ಲಿಗೆ ಓಡಿ ಬಂದವರ ಪಟ್ಟಿ ಕೊಡಲೇ ಎಂದು ಪ್ರಶ್ನಿಸಿದ್ದಾರೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ನನ್ನ ಮಾನಸಿಕ ಸ್ವಾಸ್ಥ್ಯಇರಲಿ. ನಿಮ್ಮ ಅಕಾರದ ಅಂಟುರೋಗಕ್ಕೆ ಮದ್ದೇನು? ನಿಮಗಿರುವ ಧನದಾಹ ಜಾಡ್ಯಕ್ಕೆ ಚಿಕಿತ್ಸೆ ಪಡೆಯಬಾರದೇ? ಮಾನಸಿಕ ಅಸ್ವಾಸ್ಥ್ಯಕ್ಕಿಂತ ಇದು ಮಾರಕ ಮನೋರೋಗವಲ್ಲವೇ? ಮುಖ್ಯಮಂತ್ರಿಯೇ ಇಂಥ ವಿನಾಶಕಾರಿ ಕಾಯಿಲೆಗೆ ತುತ್ತಾದರೆ ನಾಡಿನ ಪಾಡೇನು? ತುರ್ತು ಚಿಕಿತ್ಸೆ ನಿಮಗೆ ಅಗತ್ಯವಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ. ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು? ತಿರುಚುವ, ವಕ್ರೀಕರಿಸುವ ಚಾಳಿ ಬಿಡಿ. ನೀವು ಈ ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಪ್ರತಿನಿಧಿ ಮತ್ತು ಉತ್ತರದಾಯಿ. ಉತ್ತರ ಕೊಡಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. +ಒಂದು ವಿಡಿಯೋ ಬಗ್ಗೆ ಪ್ರಶ್ನಿಸಿದ್ದಕ್ಕೆ ನಿಮಗೆ, ನಿಮ್ಮ ಸಂಪುಟಕ್ಕೆ ನಿದ್ದೆಯೇ ಹಾರಿ ಹೋಗಿದೆ. ಸಚಿವರನ್ನು ಗುಂಪು ಗುಂಪಾಗಿ ವಾಗ್ದಾಳಿ ಮಾಡಿದರೆ ಕುಮಾರಸ್ವಾಮಿ ಹೆದರಿ ಓಡಿ ಹೋಗುವುದಿಲ್ಲ. ವರುಣಾದ ಜನ ನಿಮ್ಮನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನೀವೇ ಅವರ ಕೆಲಸ ಮಾಡಬೇಕು. ನಿಮ್ಮ ಪುತ್ರನಿಗೆ ಕ್ಷೇತ್ರದ ಹೊರಗುತ್ತಿಗೆ ಯಾಕೆ? ಸಿಎಂ ಆಗಿದ್ದಾಗ ನಾನು ನನ್ನ ಮಗನಿಗೆ ಕ್ಷೇತ್ರದ ಹೊರಗುತ್ತಿಗೆ ನೀಡಿದ್ದಿಲ್ಲ. ನೀವು ಮಗನಿಗೆ ವರುಣಾದ ಹೊರಗುತ್ತಿಗೆ ನೀಡಿದ್ದೀರಿ. +ಅಷ್ಟೇ ಅಲ್ಲ ನಿಮ್ಮ ಪುತ್ರ ಮಹಾಶಯರನ್ನು ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ಮಾಡಿ, ಅವರ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಸಲು ಹಾಗೂ ಸರ್ಕಾರಿ ಅಧಿಕಾರಿಗಳ ಸಭೆ ನಡೆಸಿ ದರ್ಬಾರ್ ಮಾಡಲು ಅನುವು ಮಾಡಿಕೊಟ್ಟಿದ್ದೀರಿ. ಇದಕ್ಕೆ ಕಾನೂನಿನಲ್ಲಿ ಅವಕಾಶ ಇದೆಯಾ? ಇದ್ದರೆ ತಿಳಿಸಿ ಎಂದು ಆಗ್ರಹಿಸಿದ್ದಾರೆ. +ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ +ನನಗೆ ತಿಳಿದಮಟ್ಟಿಗೆ ಈವರೆಗೆ ಯಾವ ಸಿಎಂ ಕೂಡ ಸ್ವಕ್ಷೇತ್ರದ ಹೊರಗುತ್ತಿಗೆ ಮಕ್ಕಳಿಗೆ ಕೊಟ್ಟಿದ್ದಿಲ್ಲ. ನೀವು ಕೊಟ್ಟು ಮೇಲ್ಪಂಕ್ತಿ ಹಾಕಿದ್ದೀರಿ. ಹಿಂಬಾಗಿಲಿನಿಂದ ಮಗನಿಗೆ ಅಧಿಕಾರ ಕೊಡಲು ಕೆಡಿಪಿ ಪಟ್ಟ ಕಟ್ಟಿದ್ದೀರಿ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿರುವ ಯಾವುದಾದರೂ ವಿಧಿ-ವಿಧಾನ ಇದೆಯಾ? ಇದ್ದರೆ ತಿಳಿಸಿ ಎಂದು ಅವರು ಒತ್ತಾಯಿಸಿದ್ದಾರೆ. +ನಿಮ್ಮ ಸಚಿವಾಲಯದ ಅಧಿಕಾರಿಗಳ ಕರ್ತವ್ಯ ಹಂಚಿಕೆ ಪಟ್ಟಿ ಪ್ರಕಾರ, ವಿಶೇಷ ಕರ್ತವ್ಯಾಧಿಕಾರಿ ಆರ್.ಮಹದೇವುಗೆ ಶಿಕ್ಷಣ ಇಲಾಖೆ ಹೊಣೆ ಇಲ್ಲ. ಜಂಟಿ ಕಾರ್ಯದರ್ಶಿ ಎಂ.ರಾಮಯ್ಯಗೆ ಆ ಹೊಣೆ ಇದೆ. ವರುಣಾ ಹೊಣೆ ಇನ್ನೊಬ್ಬ ವಿಶೇಷ ಕರ್ತವ್ಯಾಕಾರಿ ಕೆ.ಎನ್.ವಿಜಯ್ ರದ್ದು. ಇದು ಸತ್ಯಸ್ಥಿತಿ. ಅಪರ ಸತ್ಯಹರಿಶ್ಚಂದ್ರರಾದ ನೀವೇ ಸುಳ್ಳು ಹೇಳೋದೇ? ಎಂದು ಪ್ರಶ್ನಿಸಿದ್ದಾರೆ. +ಯತೀಂದ್ರರು ಶಿಕ್ಷಣದ ಕುರಿತು ಎಂ.ರಾಮಯ್ಯ ಜತೆ, ವರುಣಾ ಬಗ್ಗೆ ಕೆ.ಎನ್.ವಿಜಯ್ ಜತೆ ಚರ್ಚಿಸದೆ, ಇವೆರಡಕ್ಕೂ ಸಂಬಂಧವಿಲ್ಲದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಚಿವರ ಆಪ್ತಶಾಖೆ, ವರ್ಗಾವಣೆ -ಸೇವಾ ಹೊಣೆಯ ಮಹದೇವು ಜತೆ ಫೋನ್ ಚರ್ಚೆ ನಡೆಸಿದ್ದೇಕೆ? ಸಿಎಸ್‍ಆರ್‍ಗೂ ಅವರಿಗೂ ಸಂಬಂಧವೇನು? ಸಿಎಸ್‍ಆರ್ ಶಿಕ್ಷಣ ಇಲಾಖೆಗೆ ಸಂಬಂಧಿಸಿದ್ದಲ್ಲ ಎಂದು ಮಧು ಬಂಗಾರಪ್ಪ ಕೂಡ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಮಾಡದ ತಪ್ಪಿಗೆ ವಿದ್ಯುತ್ ಪ್ರಕರಣದಲ್ಲಿ ದಂಡ ತೆತ್ತಿದ್ದೇನೆ, ವಿಷಾದಿಸಿದ್ದೇನೆ. ಈಗ ನಿಮ್ಮ ಪ್ರತಿಷ್ಠೆ ಮೂರಾಬಟ್ಟೆಯಾಗಿದ್ದು ಇರಲಿ, ನಿಮ್ಮ ಪುತ್ರನಿಂದ ಇಡೀ ಕರ್ನಾಟಕ ತಲೆ ತಗ್ಗಿಸುವಂತೆ ಆಗಿದೆ. ಕಾಸಿಗಾಗಿ ಹುದ್ದೆ ದಂಧೆಯಿಂದ ಹೋದ ಮಾನ ವಾಪಸ್ ಪಡೆಯಲಿಕ್ಕೇನು ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_309_11.txt b/eesanje/url_46_309_11.txt new file mode 100644 index 0000000000000000000000000000000000000000..cbadc5f6e4b180766c2dbb53e05f78e09f4bbf6c --- /dev/null +++ b/eesanje/url_46_309_11.txt @@ -0,0 +1,9 @@ +ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ನ.19- ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು. ಅದೇ ಅನುಭವವನ್ನು ಪದೇ ಪದೇ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. +ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾರಿರುವ ಟ್ವೀಟ್ ವಾರ್‍ಗೆ ಸಿಡಿಮಿಡಿಗೊಂಡಿರುವ ಸಿದ್ದರಾಮಯ್ಯ ಇಂದು ಪ್ರತ್ಯಾರೋಪದ ಮೂಲಕ ತಿರುಗೇಟು ನೀಡಿದ್ದಾರೆ.ನಾನು ಈಗಾಗಲೇ ಮೂರು ಬಾರಿ ಸ್ಪಷ್ಟನೆ ನೀಡಿದ್ದೇನೆ. ಆದರೂ ಪದೇ ಪದೇ ಕುಮಾರಸ್ವಾಮಿ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇನ್ನು ಮುಂದೆ ಅವರು ನೂರು ಟ್ವೀಟ್ ಮಾಡಲಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು. +ಪದೇ ಪದೇ ಪ್ರಶ್ನೆಗಳು ಎದುರಾದಾಗ ಸಿಟ್ಟಾದ ಸಿದ್ದರಾಮಯ್ಯ ಅವರು ನಮ್ಮ ಅಕಾರ ಅವಯಲ್ಲಿ ಹಣ ಪಡೆದು ವರ್ಗಾವಣೆ ಮಾಡಿರುವ ಒಂದೇ ಒಂದು ಪ್ರಕರಣವನ್ನು ತೋರಿಸಿದರೂ ರಾಜಕೀಯವಾಗಿ ನಾನು ನಿವೃತ್ತಿ ಹೊಂದುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಅದರ ನಂತರ ಪದೇ ಪದೇ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು. +ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ +ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಪರ್ಕ ಸಭೆಯಲ್ಲಿ ಮಾತನಾಡುವ ವೇಳೆ ಐದು ಹೆಸರನ್ನು ಕೊಟ್ಟಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಸೇರಬಾರದು ಎಂದು ತಾಕೀತು ಮಾಡಿದರು. +ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಆನಂತರ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಕಾರಿ ಮಹದೇವ್ ಅವರೊಂದಿಗೆ ಯತೀಂದ್ರ ಸಮಾಲೋಚನೆ ನಡೆಸಿದರು. ಈ ವಿಡಿಯೋ ಬಹಿರಂಗವಾಗುತ್ತಿದ್ದಂತೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದವು. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ವರ್ಗಾವಣೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದವು. +ಅದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಯವರು ತಮ್ಮ ಪುತ್ರ ವರುಣಾ ವಿಧಾನಸಭಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಯಡಿ ಶಾಲೆಗಳ ಅಭಿವೃದ್ಧಿಗೆ ಪಟ್ಟಿ ತಯಾರಿಸಲಾಗಿದ್ದು, ಆ ಕುರಿತಂತಹ ಹೆಸರುಗಳ ಬಗ್ಗೆ ಯತೀಂದ್ರ ಪ್ರಸ್ತಾಪಿಸಿದ್ದಾರೆ. ಅದು ಅಧಿಕಾರಿಗಳ ವರ್ಗಾವಣೆ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು. +ನಿನ್ನೆ ಮೈಸೂರಿನಲ್ಲಿ ಹೇಳಿಕೆ ನೀಡಿ ಇದೇ ವಿಚಾರವನ್ನು ಪುನರುಚ್ಚರಿಸಿದರು. ಅದರ ಹೊರತಾಗಿಯೂ ಇಂದು ಬೆಳಗ್ಗೆ ಕುಮಾರಸ್ವಾಮಿ ಮತ್ತೆ ಟ್ವೀಟ್ ಮಾಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಇನ್ನು ಮುಂದೆ ಕುಮಾರಸ್ವಾಮಿ ನೂರು ಟ್ವೀಟ್ ಮಾಡಲಿ ನಾನು ಉತ್ತರಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. \ No newline at end of file diff --git a/eesanje/url_46_309_12.txt b/eesanje/url_46_309_12.txt new file mode 100644 index 0000000000000000000000000000000000000000..97ca4900fbff28cd0d1f5e307750a6150df690a2 --- /dev/null +++ b/eesanje/url_46_309_12.txt @@ -0,0 +1,11 @@ +ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಸಮರ +ಬೆಂಗಳೂರು,ನ.18- ರಾಜ್ಯ ಕಾಂಗ್ರೆಸ್ ಸರಕಾರ ಘೋಷಿಸಿದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಸರಕಾರ ಪೋಸ್ಟರ್ ಅಭಿಯಾನ ಆರಂಭಿಸಿದ್ದು, ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದೆ. +ಚಿಕ್ಕಮಗಳೂರಿನಲ್ಲಿ ಬಿಜೆಪಿ ವತಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿದ್ದು, ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ವ್ಯಂಗ್ಯವಾಡಿದ್ದಾರೆ. +ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ವೈರಲ್ಲಾಗಿತ್ತು. ಇದರ ವಿರುದ್ದವೂ ಶ್ಯಾಡೋ ಸಿಎಂ ಫೋಸ್ಟರ್ ಅಂಟಿಸಿ ಬಿಜೆಪಿ ಟೀಕೆ ಮಾಡಿದೆ.ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಹಾಕಿದೆ. +ಈ ಅಭಿಯಾನದಲ್ಲಿ ಸೋನಿಯಾ ಗಾಂಧಿ ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ. +ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೆÇೀಸ್ಟರ್ ಹಾಕಿದ್ದಾರೆ. ಅದೇ ರೀತಿ, ವೈಎಸ್‍ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂತ ಸೇವೆಗಳಿಗಾಗಿ ಹಲೋ ಅಪ್ಪಾ.. ಆಪ್ ಡೌನ್‍ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್‍ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ. +ಕಾಂಗ್ರೆಸ್ ನಾಯಕಿ ಸೋನಿಯಾ ಗಾಂ ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂ ಕೇಳುತ್ತಾರೆ. ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.ಅಲ್ಲದೆ ಬಸ್ ಟಿಕೆಟ್ ದರಗಳನ್ನು ಸದ್ದಿಲ್ಲದೆ ಏರಿಸಿದ್ದನ್ನು ಮುಂದಿಟ್ಟುಕೊಂಡು ಪೋಸ್ಟರ್ ಅಂಟಿಸಲಾಗಿದೆ. +ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ +ಫ್ರೀ ಬಸ್ ಟಿಕೆಟ್ ಅಂತಾ ನಂಬಿಸಿ 3 ಬಾರಿ ಬಸ್ ಟಿಕೆಟ್ ದರ ಏರಿಸಲಾಗಿದೆ. ಮೈಸೂರು-ಬೆಂಗಳೂರಿಗೆ 160 ರೂ. ಇದ್ದ ಟಿಕೆಟ್ ದರ ಈಗ 200 ರೂ. ಆಗಿದೆ. ಒಂದು ಕಡೆ ಸುಲಿಗೆ.. ಇನ್ನೊಂದು ಕಡೆ ಉಚಿತ.. ಇದು ಫ್ರೀ ಭಾಗ್ಯವಲ್ಲ, ಹಗಲು ದರೋಡೆ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ. +ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕಪಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮಿ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲುತ್ತಿಲ್ಲ. ಯುವನಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ. +ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್‍ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ. \ No newline at end of file diff --git a/eesanje/url_46_309_2.txt b/eesanje/url_46_309_2.txt new file mode 100644 index 0000000000000000000000000000000000000000..117502c9450b0a614892a7d9fb98485a9d476c1b --- /dev/null +++ b/eesanje/url_46_309_2.txt @@ -0,0 +1,9 @@ +ರಾಜ್ಯದಲ್ಲಿ 3 ದಿನ ಮಳೆ ಸಾಧ್ಯತೆ +ಬೆಂಗಳೂರು, ನ.20- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ದಿಂದ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಮುನ್ಸೂಚನೆ ಪ್ರಕಾರ ಆಗಾಗ್ಗೆ ಬಲವಾದ ಮೇಲ್ಮೈ ಗಾಳಿ ಬೀಸಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. +ನವೆಂಬರ್ 22ರಿಂದ 24ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಇಲ್ಲವೆ ಮಧ್ಯಮ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರ ಪರಿಣಾಮ ರಾಜ್ಯದ ಮೇಲೆ ಹೆಚ್ಚಾಗುವುದಿಲ್ಲ. ಆದರೆ, ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. +ನೈರುತ್ಯ ಮುಂಗಾರಿನಂತೆ ಈಶಾನ್ಯ ಹಿಂಗಾರು ಮಳೆಯೂ ಕೈಕೊಟ್ಟಿದೆ. ಇತ್ತೀಚೆಗೆ ಹಿಂಗಾರು ಚೇತರಿಕೆ ಕಂಡು ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು. ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿತ್ತು. ಆದರೆ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ಚಂಡಮಾರುತದ ಪರಿಣಾಮದಿಂದ ಹಿಂಗಾರು ಕೂಡ ದುರ್ಬಲಗೊಂಡಿತ್ತು. ಹೀಗಾಗಿ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಒಣ ಹವೆ ಮುಂದುವರೆದಿದೆ. +ಹಿಂಗಾರು ಆರಂಭವಾಗುವ ಅಕ್ಟೋಬರ್‍ನಲ್ಲಿ ಶೇ.65ರಷ್ಟು ಮಳೆ ಕೊರತೆ ರಾಜ್ಯದಲ್ಲಿ ಉಂಟಾಗಿತ್ತು. ನವೆಂಬರ್‍ನಲ್ಲಿ ಈತನಕ ವಾಡಿಕೆಗಿಂತೆ ಹೆಚ್ಚಿನ ಮಳೆ ಬಿದ್ದ ಮಾಹಿತಿ ಇದೆ. ಆದರೆ, ಬೆಳೆಗೆ ಅನುಕೂಲವಾಗುವಂತೆ ಕಾಲಕಾಲಕ್ಕೆ ಮಳೆಯಾಗಿಲ್ಲ. 8-10 ದಿನಗಳ ಹಿಂದೆ ಕೆಲವೆಡೆ ಬಿದ್ದ ಭಾರಿ ಮಳೆಯಿಂದ ವಾಡಿಕೆಗಿಂತ ಹೆಚ್ಚು ಮಳೆಯಾದಂತಾಗಿದೆ ಅಷ್ಟೆ. +ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು +ಕಳೆದ ಒಂದು ವಾರದಿಂದಲ್ಲೂ ಒಣ ಹವೆ ಮುಂದುವರೆದಿದ್ದು, ಶೇ.95ರಷ್ಟು ಮಳೆ ಕೊರತೆ ಕಂಡುಬಂದಿದೆ. ಕೆಲವೆಡೆ ಮುಂಜಾನೆ ಮಂಜು ಕವಿಯುವ ವಾತಾವರಣ ಕಂಡುಬರುತ್ತಿದೆ. ರಾತ್ರಿ ವೇಳೆ ಚಳಿಯೂ ಹೆಚ್ಚಾಗುತ್ತಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್‍ನಿಂದ ನಿನ್ನೆವರೆಗೆ ರಾಜ್ಯಲ್ಲಿ ವಾಡಿಕೆಗಿಂತ ಶೇ.27ರಷ್ಟು ಕಡಿಮೆ ಮಳೆಯಾಗಿದ್ದು, ರಾಜ್ಯದಲ್ಲಿ ಬರದ ವಾತಾವರಣ ಸೃಷ್ಟಿಯಾಗಿದೆ. +ಅಕ್ಟೋಬರ್‍ನಿಂದ ನಿನ್ನೆಯವರೆಗೆ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ರಾಜ್ಯದಲ್ಲಿ ಶೇ. 39ರಷ್ಟು ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ.31ರಷ್ಟು, ಉತ್ತರ ಒಳನಾಡಿನಲ್ಲಿ ಶೇ.74 ಹಾಗೂ ಮಲೆನಾಡಿನಲ್ಲಿ ಶೇ.17ರಷ್ಟು ಮಳೆ ಕೊರತೆ ಉಂಟಾಗಿದೆ. ಸದ್ಯಕ್ಕೆ ಮಳೆ ಬಿಡುವು ಕೊಟ್ಟಿರುವುದರಿಂದ ಮುಂಗಾರು ಹಂಗಾಮಿನ ಕೊಯ್ಲು ಮಾಡುವಂತಹ ಭತ್ತ, ರಾಗಿ, ಶೇಂಗಾ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ. +ಆದರೆ, ಹಿಂಗಾರಿನಲ್ಲಿ ಬಿತ್ತನೆ ಮಾಡಿದ್ದ ಬೆಳೆಗಳು ತೇವಾಂಶವಿಲ್ಲದೆ ಒಣಗುತ್ತಿವೆ. ಅದರಲ್ಲೂ ಉತ್ತರ ಕರ್ನಾಟಕದ ಭಾಗದಲ್ಲಿ ಹಿಂಗಾರು ಬೆಳೆ ಹೆಚ್ಚು ಬೆಳೆಯಲಾಗುತ್ತಿತ್ತು. ಈ ಬಾರಿಯ ಮಳೆಯ ಅಭಾವದಿಂದ ಮುಂಗಾರಿನಂತೆ ಹಿಂಗಾರು ಬೆಳೆಯೂ ಹಾನಿಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. \ No newline at end of file diff --git a/eesanje/url_46_309_3.txt b/eesanje/url_46_309_3.txt new file mode 100644 index 0000000000000000000000000000000000000000..0d911cefce75bed67808e2a11039639ca14b2225 --- /dev/null +++ b/eesanje/url_46_309_3.txt @@ -0,0 +1,16 @@ +ಸರ್ಕಾರದಿಂದ ರೈತರ ನಿರ್ಲಕ್ಷ್ಯ : ವಿಜಯೇಂದ್ರ ಕಿಡಿ +ಮೈಸೂರು, ನ.20- ಬಿಜೆಪಿಯಲ್ಲಿ ಸದ್ಯದಲ್ಲೇ ಅಸಮಾಧಾನ ಸ್ಪೋಟಗೊಳ್ಳಲಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಎಲ್ಲಿ ಅಸಮಾಧಾನಗೊಳ್ಳಲಿದೆ ಎಂಬುದನ್ನು ಕಾದು ನೋಡಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಾಂಗ ಸಭೆಯಲ್ಲಿ ಅನೇಕರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ಹಂಚಿಕೊಂಡಿ ದ್ದಾರೆ. ಸಣ್ಣ-ಪುಟ್ಟ ಸಮಸ್ಯೆ ಗಳಿದ್ದರೂ ಸರಿಪಡಿಸುವ ಕೆಲಸವನ್ನು ವರಿಷ್ಠರು ಮಾಡಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‍ನಲ್ಲೇ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸದ್ಯದಲ್ಲೇ ಸ್ಪೋಟಗೊಳ್ಳಲಿದೆ ಎಂದು ಅವರು ಭವಿಷ್ಯ ನುಡಿದರು. +ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ವರಿಷ್ಠರು ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಅಸಮಾಧಾನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ನಿಮ್ಮ ಶಾಸಕರು ಅವರ ಕ್ಷೇತ್ರದಲ್ಲಿ ತಲೆಎತ್ತಿಕೊಂಡು ಓಡಾಡಲು ಆಗದಂತೆ ಮಾಡಿದ್ದೀರಿ. ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ಸಾಧನೆಯಾಗಿದೆ. ಒಬ್ಬ ಸಚಿವರಾದರು ಅವರ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದಾರೆಂದು ಹೇಳಲಿ. ಬರದ ಬಗ್ಗೆ ಚರ್ಚೆ ಮಾಡಿದ್ದಾರೆಯೇ? ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ನಿರಂತರ ವಿದ್ಯುತ್ ನೀಡಲಾಗುತ್ತಿತ್ತು. ರೈತರ, ಬಡವರ ವಿರೋಧಿ ರಾಜ್ಯ ಸರ್ಕಾರವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ರಾಜ್ಯದ ಜನರು ಇವರಿಗೆ ಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ನೆರವೂ ಕಾಯದೇ ರಾಜ್ಯ ಸರ್ಕಾರ ಕೂಡಲೇ ಬರಪೀಡಿತ ತಾಲ್ಲೂಕುಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿ ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ಧಾವಿಸಬೇಕು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿದೆ. ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ 314 ಕೋಟಿ ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಕೈತೊಳೆದುಕೊಂಡಿದೆ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡದಿರಲು ಸರ್ಕಾರವೇನು ದಿವಾಳಿಯಾಗಿದೆಯೇ ಎಂದು ಪ್ರಶ್ನಿಸಿದರು. +ಎಲ್ಲದಕ್ಕೂ ಕೇಂದ್ರ ಸರ್ಕಾರವನ್ನು ಎದುರು ನೋಡದೆ, ರಾಜ್ಯ ಸರ್ಕಾರ ಮೊದಲು ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿ. ನಾವೇನು ಕರ್ನಾಟಕಕ್ಕೆ ಅನುದಾನ ಕೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ, ಇಲ್ಲವೆ, ಸಂಬಂಧಪಟ್ಟ ಸಚಿವರಿಗೆ ಪತ್ರ ಬರೆದಿಲ್ಲ. ಸೂಕ್ತ ಕಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನವನ್ನು ಕೊಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. +ಚುನಾವಣೆ ವೇಳೆ ಕಾಂಗ್ರೆಸ್ ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ,ಇವರ ಆಡಳಿತದಿಂದ ಜನ ನಿರಾಶರಾಗಿದ್ದು, ಆಕ್ರೋಶಗೊಂಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜೋಡೆತ್ತುಗಳಂತೆ ಇದ್ದರು. ಈಗ ಹಾದಿ ಬೀದಿಯಲ್ಲಿ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಾಗೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಶಿವಕುಮಾರ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದರ ಬಗ್ಗೆ ನಮಗೆ ಯಾವ ಆಸಕ್ತಿಯೂ ಇಲ್ಲ. ಆದರೆ ರಾಜ್ಯದ ಜನರಿಗೆ ಏನು ಕೊಟ್ಟಿದ್ದೀರಾ? ಎಂದು ಪ್ರಶ್ನಿಸಿದರು. +ಸಿಎಂ ಸಿದ್ದರಾಮಯ್ಯ ಅವರ ಪ್ರವಾಸದ ವೇಳೆ ರೈತರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರವಾಗಿ ಮಾತನಾಡಿದ ಅವರು ಸೌಜನ್ಯಕ್ಕೂ ಸಿದ್ದರಾಮಯ್ಯ ಭೇಟಿ ಮಾಡದೆ ಅಧಿಕಾರ ಬಳಸಿ ಬಂಧಿಸಿದ್ದಾರೆ. ಬರಗಾಲದ ವೇಳೆ ಆಡಳಿತ ಯಂತ್ರ ಕುಸಿದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ರೈತರಿಗೂ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಸಚಿವ ಪ್ರಿಯಾಂಕ ಖರ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಖರಿ ಕಣ್ಣೀರು ತರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು. +ಸಚಿವ ಜಮೀರ್ ಅಹಮದ್ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಇದು ಹುಡುಗಾಟದ ಮಾತಲ್ಲ. ಜಮೀರ್ ಅಹಮದ್ ಅವರ ಮನದಾಳದ ಮಾತು. ನ್ಯಾಯದೇವತೆ ಎಂದು ಗೌರವ ಕೊಡುತ್ತೇವೆ. ಅದಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಜಮೀರ್ ರಾಜೀನಾಮೆ ತೆಗೆದುಕೊಳ್ಳುತ್ತಿದ್ದರು. ಆದರೆ, ಸರ್ಕಾರ ಈ ಹೇಳಿಕೆ ಖಂಡಿಸುವ ಕೆಲಸ ಸಹ ಮಾಡಿಲ್ಲ. ಜಮೀರ್ ಅಹಮದ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. +ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು +ಸಚಿವ ಪ್ರಿಯಾಂಕ ಖರ್ಗೆ ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿದ್ದಾರೆ. ಗೂಂಡಾಗಿರಿ ಕಲುಬುರುಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಿಯಾಂಕ ತವರು ಜಿಲ್ಲೆಯಲ್ಲಿ ಗುಂಡಾಗಿರಿ ಹೆಚ್ಚಾಗಿದೆ. ಮಣಿಕಂಠ ರಾಥೋಡ್ ಮೇಲೆ ರಾಜಕೀಯ ಪುಡಾರಿಗಳಿಂದ ಹಲ್ಲೆ ನಡೆಸಲಾಗಿದೆ. ಅಧಿಕಾರದ ದರ್ಪದಿಂದ ಏನೇ ಮಾಡಿದರು ನಡೆಯುತ್ತದೆ ಅಂದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು. +ಅಧಿಕಾರದ ದರ್ಪದಿಂದ ಕಾಂಗ್ರೆಸ್‍ನವರು ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಹಾಗೂ ಮುಂದಿನ ಎಲ್ಲಾ ಚುನಾವಣೆ ಒಗ್ಗಟ್ಟಾಗಿ ಒಂದಾಗಿ ಎದುರಿಸುತ್ತೇವೆ. ರಾಜ್ಯ ಸರ್ಕಾರದ ರುದ್ಧ ಬೇಸರಕ್ಕೆ ಪರ್ಯಾಯ ಬಿಜೆಪಿ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು. +ಮೈಸೂರು ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧವಿದೆ. ಬಿ.ವೈ. ವಿಯೇಂದ್ರರನ್ನು ಗುರುತಿಸಿ, ಶಾಸಕ ಆಗಲು ಭದ್ರ ಬುನಾದಿ ಹಾಕಿರುವುದು ವರುಣ ಕ್ಷೇತ್ರ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದರು. +ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಕಾರಕ್ಕೆ ತರುವ ಗುರಿ ಹೊಂದಬೇಕು. +ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಷ್ಟೇ ಮಹತ್ವ ಸ್ಥಳೀಯ ಸಂಸ್ಥೆಗೂ ನೀಡಲಾಗುವುದು. ಅದು ನಮ್ಮ ಕಾರ್ಯಕರ್ತರ ಚುನಾವಣೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_309_4.txt b/eesanje/url_46_309_4.txt new file mode 100644 index 0000000000000000000000000000000000000000..a23ff6ace555d6f15edfb942b53a87b36036480a --- /dev/null +++ b/eesanje/url_46_309_4.txt @@ -0,0 +1,13 @@ +ಜನಾರ್ಧನರೆಡ್ಡಿ ಬಿಜೆಪಿಗೆ ಕರೆತರಲು ಯತ್ನ +ಬೆಂಗಳೂರು, ನ.20- ಆಕ್ರಮ ಗಣಿಗಾರಿಕೆ ಪ್ರಕಣದಿಂದ ಜೈಲು ಪಾಲಾಗಿ ಬಿಜೆಪಿಯಿಂದ ದೂರ ಸರಿದಿದ್ದ ಮಾಜಿ ಸಚಿವ ಹಾಗೂ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮತ್ತು ಹಾಲಿ ಶಾಸಕ ಗಾಲಿ ಜನಾರ್ಧನರೆಡ್ಡಿ ಅವರನ್ನು ಪುನಃ ಮಾತೃ ಪಕ್ಷಕ್ಕೆ ಕರೆತರುವ ಬಗ್ಗೆ ಚರ್ಚೆ ಪಕ್ಷದ ವಲಯದಲ್ಲಿ ಚರ್ಚೆ ಆರಂಭವಾಗಿದೆ. +ಲೋಕಸಭಾ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಗೆಲ್ಲಲು ತಂತ್ರಗಾರಿಕೆ ಹೆಣೆಯತ್ತಿದ್ದು, ಇದರ ಭಾಗವಾಗಿಯೇ ಕೆಕೆಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಸರ್ವ ಯತ್ನಗಳು ನಡೆಯುತ್ತಿವೆ. +ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆ ಗಾಲಿ ಜನಾರ್ದನ ರೆಡ್ಡಿ ಕಳೆದ ಒಂದು ದಶಕದಿಂದ ರಾಜಕೀಯದಿಂದ ದೂರ ಉಳಿದಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪ್ರವೇಶಿಸಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದರು. +ನೂತನ ಪಕ್ಷ ಸ್ಥಾಪನೆ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸವಾಲೊಡ್ಡಿದ್ದರು. ರೆಡ್ಡಿಯವರ ಈ ತಂತ್ರಗಾರಿಕೆ ಮತ ವಿಭಜನೆಗೂ ಕಾರಣವಾಗಿತ್ತು. ಕೆಆರ್‍ಪಿ ಪಕ್ಷದಿಂದ ರಾಜ್ಯದ ನಾನಾ ಭಾಗಗಳಲ್ಲಿಅಭ್ಯರ್ಥಿಗಳನ್ನು ನಿಲ್ಲಿಸಿದ್ದ ರೆಡ್ಡಿ, ಈ ಪೈಕಿ ಗಂಗಾವತಿ ಕ್ಷೇತ್ರದಿಂದ ಸ್ರ್ಪಧಿಸಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯದಲ್ಲಿ ಪಕ್ಷದಿಂದ ಗೆದ್ದ ಏಕೈಕ ಶಾಸಕರು ಎನ್ನಿಸಿಕೊಂಡಿದ್ದಾರೆ. +ಬಳ್ಳಾರಿ ನಗರ ಕ್ಷೇತ್ರದಿಂದ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧ, ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಕಣಕ್ಕಿಳಿಸಿ ಬಿಜೆಪಿಗೇ ಸೆಡ್ಡು ಹೊಡೆದಿದ್ದರು. ಮುಂಬರುವ ಚುನಾವಣೆಗಳಲ್ಲಿ ಕೆಆರ್‍ಪಿಪಿಯಿಂದ ಎದುರಾಗಬಹುದಾದ ಪರಿಣಾಮಗಳನ್ನು ತಡೆಯಲು ಮತ್ತು ಕಾಂಗ್ರೆಸ್‍ಗೆ ತಿರುಗೇಟು ನೀಡುವ ತಂತ್ರದೊಂದಿಗೆ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಕರೆತರುವ ಪ್ರಯತ್ನಗಳನ್ನು ಸದ್ದಿಲ್ಲದೆ ನಡೆಸಲಾಗುತ್ತಿದೆ ಎಂದು ಮೂಲಗಳು ಖಚಿತಪಡಿಸಿವೆ. +ಇತ್ತೀಚೆಗಷ್ಟೇ ಕೆಆರ್‍ವ ಮೂಲಕ ಮುಂದಿನ ಚುನಾವಣೆಗಲ್ಲಿ ಸ್ಥಾನ ಕೈತಪ್ಪದಂತೆ ಬಿಜೆಪಿ ಯೋಚಿಸಿದೆ. ಇದರಿಂದ ಕಾಂಗ್ರೆಸ್‍ಗೆ ತಕ್ಕ ಉತ್ತರ ನೀಡಿದಂತಾಗುತ್ತದೆ ಎಂದು ಬಿಜೆಪಿ ಲೆಕ್ಕಾಚಾರ ಹಾಕಿದೆ. ರೆಡ್ಡಿ ಅವರ ರಾಜಕೀಯ ಪ್ರವೇಶ ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು. ರೆಡ್ಡಿಯವರ ಈ ನಡೆಯಿಂದ ಬಿಜೆಪಿಗೆ ಕಲ್ಯಾಣ ಕರ್ನಾಟಕದಲ್ಲಿ ಸವಾಲುಗಳು ಸೃಷ್ಟಿಯಾದವು. ಮತಗಳು ಒಡೆದು ಹೋಗುವ ಜೊತೆಗೆ ಕ್ಷೇತ್ರಗಳು ಕೈತಪ್ಪುವ ಭೀತಿ ಎದುರಾಗಿತ್ತು. +ಇದೆಲ್ಲ ಗಮನಿಸಿರುವ ಬಿಜೆಪಿ ಮುಂದೆ ಹೀಗಾಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತಿದೆ. ಕೆಆರ್ಪಿಪಿ ಸಂಸ್ಥಾಪಕರನ್ನು ಕರೆತರಲು ಕೇಂದ್ರ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. +ನಾಯಕರ ಬಳಿ ಚರ್ಚೆ:ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಮರಳಿ ಸೇರ್ಪಡೆಗೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ನಾಯಕರ ಅಂಗಳದಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಇದಲ್ಲದೆ, ರೆಡ್ಡಿ ವಾಪಸ್ ಬಿಜೆಪಿಗೆ ಬರುವುದರಿಂದ ಆಗುವ ಲಾಭ, ಎದುರಾಗುವ ಸವಾಲುಗಳ ಕುರಿತೂ ಪಕ್ಷದಲ್ಲಿ ಚರ್ಚೆಗಳು ಮುನ್ನಲೆಗೆ ಬಂದಿದ್ದು, ರೆಡ್ಡಿ ಬಿಜೆಪಿ ಸೇರ್ಪಡೆ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ. +ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು +ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಸೋಲು ಅನುಭವಿಸಿರುವ ಬಿಜೆಪಿ, ಮುಂಬರುವ ದಿನಗಳಲ್ಲಿ ಎದುರಾಗುವ ಲೋಕಸಭೆ, ತಾಪಂ, ಜಿಪಂ ಹಾಗೂ ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಈಗಿನಿಂದಲೇ ನಾನಾ ಕಾರ್ಯತಂತ್ರ ರೂಪಿಸುತ್ತಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಲು ಮುಂದಾಗಿರುವ ಬಿಜೆಪಿ, ಕೆಆರ್‍ಪಿಪಿಯಿಂದ ಬಿಜೆಪಿಗೆ ಕೈತಪ್ಪುವ ಮತಗಳನ್ನು ತಡೆಯುವ ಉದ್ದೇಶದಿಂದ ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಉತ್ಸಾಹ ತೋರಿದೆ ಎನ್ನಲಾಗಿದೆ. +ರೆಡ್ಡಿಯನ್ನು ಕರೆತರುವ ಮೂಲಕ ಲೋಕಸಭಾ ಚುನಾವಣೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ಮುಂದಾಗಿದೆ. ಇದರೊಂದಿಗೆ ನಂತರ ಬರಲಿರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಪದವಿಧರರ ಕ್ಷೇತ್ರದ ಚುನಾವಣೆಗಳಲ್ಲಿ ಸೀಟು ಭದ್ರಪಡಿಸಿಕೊಳ್ಳಲು, ತಮ್ಮ ಮತ ಬ್ಯಾಂಕ್ ಕೈತಪ್ಪದಂತೆ ರಣತಂತ್ರ ಹೆಣೆಯುತ್ತಿದೆ. ಸದ್ಯ ಈ ಕುರಿತು ಎಲ್ಲವು ಅಂತಿಮಗೊಳ್ಳಬೇಕಿದೆ. +ಗಾಲಿ ಜನಾರ್ಧನ್ ರೆಡ್ಡಿ ಅವರು ಬಿಜೆಪಿಗೆ ಸೇರ್ಪಡೆಯಾದರೆ, ಇತ್ತೀಚೆಗೆಷ್ಟೇ ರಚನೆಯಾದ ಜಿಲ್ಲಾಮಟ್ಟದ ಘಟಕ, ಅಧ್ಯಕ್ಷರು ಮತ್ತು ಕಾರ್ಯಕರ್ತರ ಗತಿ ಏನು. ಸಂಸ್ಥಾಪಕರನ್ನೇ ನಂಬಿ ಬಂದ ಅವರು ಬಿಜೆಪಿ ವಿರುದ್ಧ ಸೆಣಸಿ ತಮ್ಮ ಅಭ್ಯರ್ಥಿ ಗೆಲ್ಲಿಸುವಲ್ಲಿ ಶ್ರಮಿಸಿದ್ದಾರೆ. ಮುಂದೆ ಅವರ ನಡೆ ಹೇಗಿರಲಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_309_5.txt b/eesanje/url_46_309_5.txt new file mode 100644 index 0000000000000000000000000000000000000000..22e95ca412d4a05a373cc83c43d20de1afde37f8 --- /dev/null +++ b/eesanje/url_46_309_5.txt @@ -0,0 +1,6 @@ +ಇಷ್ಟ ಇದೆಯೋ, ಇಲ್ಲವೋ ಹೈಕಮಾಂಡ್ ನಿರ್ಧಾರವನ್ನು ಒಪ್ಪಬೇಕು : ಶ್ರೀರಾಮುಲು +ಬೆಂಗಳೂರು, ನ.20- ಯಾರಿಗೆ ಇಷ್ಟ ಇದೆಯೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಂದು ಬಾರಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಅದಕ್ಕೆ ಎಲ್ಲರೂ ಒಪ್ಪಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಾಮಾಧಾನಕ್ಕೆ ಮಾಜಿ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ. +ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿಪಕ್ಷ ಸ್ಥಾನ ಸಿಗದ ಹಿನ್ನೆಲೆ ಯತ್ನಾಳ್ ಬಹಿರಂಗ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಒಂದು ಬಾರಿ ರಾಜ್ಯಾಧ್ಯಕ್ಷರಾಗಿ ಘೋಷಣೆ ಮಾಡಿದ ನಂತರ ಮುಗೀತು. ಯತ್ನಾಳ್ ಅವರು ಹಿರಿಯ ನಾಯಕ. ಒಂದು ಬಾರಿ ಪಕ್ಷ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನು ಸರಿ ಮಾಡಿಕೊಂಡು ಪಕ್ಷ ಮುನ್ನಡೆಸಬೇಕು ಹೀಗಾಗಿ ಎಲ್ಲ ಸರಿ ಮಾಡಿಕೊಂಡು ಹೋಗುವ ವಿಶ್ವಾಸವಿದೆ ಎಂದರು. +ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್.ಆಶೋಕ್ ನೇಮಕ ಆಗಿದ್ದಾರೆ. ಅದೇ ರೀತಿ ಬಿ.ವೈ. ವಿಜಯೇಂದ್ರ ಕಿರಿಯರು ಎಂಬುದನ್ನು ಒಪ್ಪಿಕೊಳ್ಳುವೆ. ಇಲ್ಲಿ ನನ್ನ ಅಥವಾ ಇನ್ನೊಬ್ಬರ ಇಷ್ಟ, ಕಷ್ಟ ಮುಖ್ಯವಲ್ಲ. ಪಕ್ಷದ ಹಿತದೃಷ್ಟಿಯಿಂದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು. ವೈಯಕ್ತಿಕ ಅಭಿಪ್ರಾಯ ಏನೇ ಇದ್ದರೂ ರಾಷ್ಟ್ರೀಯ ಪಕ್ಷದಲ್ಲಿ ಅದು ಪರಿಗಣನೆಗೆ ಬರುವವುದಿಲ್ಲ ಎಂದು ತಿಳಿಸಿದರು. +ವಿಶ್ವದ ವಿಶ್ವಾಸಾರ್ಹ ಪಕ್ಷ ಬಿಜೆಪಿ; ರಾಜ್‍ನಾಥ್‍ಸಿಂಗ್ +ಈಗ ವಿಜೆಯೇಂದ್ರ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಎಲ್ಲರೂ ಸಹಕಾರವನ್ನು ಅವರಿಗೆ ನಾನು ಸೇರಿದಂತೆ ಕೊಡಬೇಕು. ಆಗ ಮಾತ್ರ ಪಕ್ಷ ಕಟ್ಟಲು ಅನುಕೂಲ ಆಗುತ್ತದೆ. ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ. ಏನೇ ಅಸಮಾಧಾನ ಇದ್ದರೂ ಸರಿ ಮಾಡಿಕೊಂಡು ಹೋಗೋ ಕೆಲಸ ಮಾಡುವುದಾಗಿ ರಾಮುಲು ಹೇಳಿದರು. \ No newline at end of file diff --git a/eesanje/url_46_309_6.txt b/eesanje/url_46_309_6.txt new file mode 100644 index 0000000000000000000000000000000000000000..f3573242d07769fcb0121136b9badbb192392f9e --- /dev/null +++ b/eesanje/url_46_309_6.txt @@ -0,0 +1,9 @@ +ಅರ್ಜೆಂಟೀನಾ ಆಧ್ಯಕ್ಷರಾದ ಮಿಲೀ +ಬ್ಯೂನಸ್ ಐರಿಸ್, ನ.20- ಹಣದುಬ್ಬರ ಮತ್ತು ಹೆಚ್ಚುತ್ತಿರುವ ಬಡತನದ ಬಗ್ಗೆ ತೀವ್ರ ಅಸಮಾಧಾನದ ನಡುವೆ ನಡೆದ ತೀವ್ರ ಧ್ರುವೀಕೃತ ಚುನಾವಣಾ ಪ್ರಚಾರದಲ್ಲಿ ರಾಜ್ಯಕ್ಕೆ ನಾಟಕೀಯ ಬೆಳವಣಿಗೆಗಳ ನಂತರ ಬಲಪಂಥೀಯ ಜನಪ್ರಿಯ ನಾಯಕ ಜೇವಿಯರ್ ಮಿಲೀ ಅರ್ಜೆಂಟೀನಾದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. +ಪೆರೋನಿಸ್ಟ್ ಪಕ್ಷದ ಆರ್ಥಿಕ ಸಚಿವ ಸೆರ್ಗಿಯೋ ಮಾಸ್ಸಾ ಅವರು ಸೋಲನ್ನು ಒಪ್ಪಿಕೊಂಡರು ಮತ್ತು ಮಾಜಿ ಅಮೆರಿಕ ಅಧ್ಯಕ್ಷ ಡೊನಾಲ್ಡ ಟ್ರಂಪ್‍ಗೆ ಆಗಾಗ್ಗೆ ಹೋಲಿಕೆಗಳನ್ನು ಮಾಡಿಕೊಳ್ಳುತ್ತಿದ್ದ ಮಿಲೀ ಅವರನ್ನು ಅಭಿನಂದಿಸಿದರು. +ಮಾಸ್ಸಾ ಅವರ ರಿಯಾಯಿತಿ ಭಾಷಣದ ನಂತರ, ಅರ್ಜೆಂಟೀನಾದ ಚುನಾವಣಾ ಪ್ರಾಕಾರವು ಭಾಗಶಃ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಪ್ರಾರಂಭಿಸಿತು. ಶೇ.95 ರಷ್ಟು ಮತಗಳು ಎಣಿಕೆಯಾದಾಗ, ಮಿಲಿ ಶೇ. 55.8 ಮತ್ತು ಮಾಸಾ ಶೇ. 44.2 ರಷ್ಟು ಮತಗಳನ್ನು ಹೊಂದಿದ್ದರು. ಆ ಮಾರ್ಜಿನ್ ಹೊಂದಿದ್ದಲ್ಲಿ, ಇದು ಎಲ್ಲಾ ಸಮೀಕ್ಷೆಗಳು ಊಹಿಸಿದ್ದಕ್ಕಿಂತ ವಿಸ್ತಾರವಾಗಿರುತ್ತದೆ ಮತ್ತು 1983 ರಲ್ಲಿ ಅರ್ಜೆಂಟೀನಾ ಪ್ರಜಾಪ್ರಭುತ್ವವನ್ನು ಹಿಂದಿರುಗಿಸಿದ ನಂತರ ಇದು ವಿಶಾಲವಾಗಿರುತ್ತದೆ. +ವಿಶಾಖಪಟ್ಟಣಂ ಜೆಟ್ಟಿ ಪ್ರದೇಶದಲ್ಲಿ 25 ದೋಣಿಗಳು ಬೆಂಕಿಗೆ ಆಹುತಿ +ಬ್ಯೂನಸ್ ಐರಿಸ್‍ನ ಬೀದಿಗಳಲ್ಲಿ, ಚಾಲಕರು ತಮ್ಮ ಹಾರ್ನ್‍ಗಳನ್ನು ಬಾರಿಸಿದರು ಮತ್ತು ಹಲವಾರು ನೆರೆಹೊರೆಗಳಲ್ಲಿ ಆಚರಿಸಲು ಅನೇಕರು ಬೀದಿಗಿಳಿದರು. ಮಿಲೀಯವರ ಪಕ್ಷದ ಪ್ರಧಾನ ಕಛೇರಿಯ ಹೊರಗೆ, ಬ್ಯೂನಸ್ ಐರಿಸ್ ಡೌನ್‍ಟೌನ್‍ನಲ್ಲಿರುವ ಹೋಟೆಲï, ಬೆಂಬಲಿಗರು ಸಂಭ್ರಮಿಸಿದರು. +ಮಿಲೀ ವಿಜಯದೊಂದಿಗೆ, ದೇಶವು ಬಲ ಪಂಥಕ್ಕೆ ತಿರುಗುತ್ತದೆ ಮತ್ತು ಅವರು ರಾಜಕೀಯ ಜಾತಿ ಎಂದು ಕರೆದದ್ದನ್ನು ಸ್ಪೋಟಿಸುವ ದೂರದರ್ಶನ ಮಾತನಾಡುವ ಮುಖ್ಯಸ್ಥರಾಗಿ ಪ್ರಾರಂಭವನ್ನು ಪಡೆದ ಹೊಸಬ ಶಾಸಕರಿಗೆ ಅಧಿಕಾರ ನೀಡುತ್ತದೆ. +ಇದು ಮಿಲೀ ಮತ್ತು ಅವರ ವಿಶಿಷ್ಟತೆಗಳು ಮತ್ತು ವಿಶೇಷತೆಗಳಿಂದಾಗಿ ಕಡಿಮೆ ವಿಜಯವಾಗಿದೆ ಮತ್ತು ಬದಲಾವಣೆಯ ಬೇಡಿಕೆಯಿಂದಾಗಿ ಹೆಚ್ಚು ಎಂದು ಸ್ಥಳೀಯ ರಾಜಕೀಯ ಸಲಹಾ ಸಂಸ್ಥೆಯಾದ ಸಿನೊಪ್ಸಿಸ್‍ನ ಮುಖ್ಯಸ್ಥ ಲ್ಯೂಕಾಸ್ ರೊಮೆರೊ ಹೇಳಿದರು. ಮತದಾನದಲ್ಲಿ ವ್ಯಕ್ತವಾಗುತ್ತಿರುವುದು ಬಹುಪಾಲು ಅರ್ಜೆಂಟೀನಾದ ಆಯಾಸ, ಆಯಾಸ, ಪ್ರತಿಭಟನೆಯ ಮತ. +ಹಣದುಬ್ಬರವು ಶೇಕಡಾ 140 ಕ್ಕಿಂತ ಹೆಚ್ಚಾಗಿದೆ ಮತ್ತು ಮಾಸ್ಸಾ ಅವರ ಹುದ್ದೆಯನ್ನು ಹೊಂದಿದ್ದಾಗ ಬಡತನವು ಹದಗೆಟ್ಟಿದೆ. ರಾಜ್ಯದ ಗಾತ್ರವನ್ನು ಕಡಿತಗೊಳಿಸಲು ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಮೈಲಿ ಪ್ರಸ್ತಾಪಿಸಿದ್ದಾರೆ, ಆದರೆ ಸರ್ಕಾರದ ಸಚಿವರು ಅಂತಹ ನೀತಿಗಳ ಋಣಾತ್ಮಕ ಪರಿಣಾಮಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದರು. ಎರಡರಲ್ಲಿ ಯಾವುದನ್ನು ಕಡಿಮೆ ಕೆಟ್ಟ ಆಯ್ಕೆ ಎಂದು ನಿರ್ಧರಿಸಲು ಚುನಾವಣೆಯು ಅನೇಕರನ್ನು ಒತ್ತಾಯಿಸಿತು. \ No newline at end of file diff --git a/eesanje/url_46_309_7.txt b/eesanje/url_46_309_7.txt new file mode 100644 index 0000000000000000000000000000000000000000..0712e7ee692a8eb932750c26a96e21877cfa97dc --- /dev/null +++ b/eesanje/url_46_309_7.txt @@ -0,0 +1,6 @@ +ಬೆಸ್ಕಾಂ ನಿರ್ಲಕ್ಷ್ಯ : ವಿದ್ಯುತ್ ತಂತಿ ತುಳಿದು ಸುಟ್ಟು ಕರಕಲಾದ ತಾಯಿ-ಮಗು +ಬೆಂಗಳೂರು, ನ.19- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ -ಮಗು ಮೃತಪಟ್ಟಿರುವ ಭೀಕರ ಘಟನೆ ಇಂದು ಮುಂಜಾನೆ ವೈಟ್‍ಫೀಲ್ಡ್ ಬಳಿಯ ಕಾಡುಗೋಡಿಯಲ್ಲಿ ನಡೆದಿದೆ. ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿ ನಿವಾಸಿ ಸೌಂದರ್ಯ(23), 9 ತಿಂಗಳ ಮಗು ಸುವಿಕ್ಸಲಿಯ ಮೃತಪಟ್ಟ ದುರ್ದೈವಿಗಳು. +ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯದಿಂದ ಈ ಮನಕಲಕುವ ಘಟನೆಯೊಂದು ನಡೆದಿದ್ದು ಎರಡು ಅಮಾಯಕ ಜೀವಗಳು ಕುಟುಂಬ ಸದಸ್ಯರ ಸಮುಖದಲ್ಲೇ ಬಲಿಯಾಗಿವೆ .ಮೃತ ಸೌಂದರ್ಯ ತಮ್ಮ ಕುಟುಂಬದ ಜೊತೆ ತಮಿಳುನಾಡಿಗೆ ಹೋಗಿ ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿಗೆ ಬಂದು ಬಸ್ ಇಳಿದು ತಾಯಿ ಮನೆಗೆ ನಡೆದು ಹೋಗುತ್ತಿದ್ದಾಗ ರಸ್ತೆ ಬದಿ ತುಂಡಾಗಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ತುಳಿದಿದ್ದಾರೆ. +ಆಲ್ ದಿ ಬೆಸ್ಟ್ ಟೀಂ ಇಂಡಿಯಾ: ಶುಭಕೋರಿದ ಪ್ರಧಾನಿ ಮೋದಿ +ಈ ವೇಳೆ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ತಾಯಿ- ಮಗಳು ಪ್ರಾಣ ಬಿಟ್ಟಿದ್ದಾರೆ. ಸುದ್ದಿ ತಿಳಿದು ಕಾಡುಗೋಡಿ ಪೊಲೀಸರು ಹಾಗು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿಲ್ಲ.ವಿದ್ಯುತ್ ತಂತಿ ತುಳಿದ ತಕ್ಷಣ ಬೆಂಕಿ ಹತ್ತಿಕೊಂಡಿದ್ದು ತಾಯಿ -ಮಗು ದಹನಗೊಂಡಿದ್ದಾರೆ. ಸೌಂದರ್ಯ ಪತಿ ಸಂತೋಷ್ ಕೂಡ ಸ್ಥಳಕ್ಕೆ ಬಂದು ಈ ದೃಶ್ಯ ಕಂಡು ರೋದಿಸಿದ್ದಾರೆ. ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿದ್ದರು. +ಈ ದೃಶ್ಯವನ್ನು ಕಂಡು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೆಸ್ಕಾಂ ಎಇ ಚೇತನ್, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_309_8.txt b/eesanje/url_46_309_8.txt new file mode 100644 index 0000000000000000000000000000000000000000..516b902fec6782ed5ed2e0207fe147ad593d6508 --- /dev/null +++ b/eesanje/url_46_309_8.txt @@ -0,0 +1,15 @@ +ಮೋದಿ ಶ್ರೀಮಂತರ ಸಾಲ ಮನ್ನಾ ಮಾಡಿ, ಬಡವರನ್ನು ದೂರ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ನ.19- ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರೀಮಂತರ ಸಾಲ ಮನ್ನಾ ಮಾಡುತ್ತಾರೆ. ಬ್ಯಾಂಕ್‍ಗಳನ್ನು ಖಾಸಗೀಕರಣ ಮಾಡಿ, ಅವುಗಳನ್ನು ಬಡವರಿಂದ ದೂರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. +ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಹಾಗೂ ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವತಂತ್ರ್ಯ ಭಾರತದಲ್ಲಿ ಮತ್ತು ಪೂರ್ವದಲ್ಲಿ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದರೆ ಅದು ಕಾಂಗ್ರೆಸ್ ಮಾತ್ರ. ಇಂದು ಅಧಿಕಾರದಲ್ಲಿರುವ ಬಿಜೆಪಿಯಲ್ಲಿ ದೇಶಕ್ಕಾಗಿ ಯಾರು ತ್ಯಾಗ ಬಲಿದಾನ ಮಾಡಿಲ್ಲ. ಜಾತ್ಯತೀತ ತತ್ವ, ಸಾಮಾಜಿಕ ನ್ಯಾಯ, ಬಡವರ ಪರ ಕಾಳಜಿ, ಸಮಸಮಾಜ ನಿರ್ಮಾಣ ಸೇರಿದಂತೆ ಎಲ್ಲದಕ್ಕೂ ಸ್ಪಂದಿಸಿ, ಜನರ ಸಮಸ್ಯೆ ಬಗೆ ಹರಿಸುವ ಕೆಲಸ ಮಾಡಿದ್ದು ಕಾಂಗ್ರೆಸ್ ಮಾತ್ರ. +ನೆಹರು ಈ ದೇಶದ ಪ್ರಧಾನಿಯಾಗಿದ್ದ ದಿನಗಳಲ್ಲಿ ದೇಶ ಹೇಗಿತ್ತು ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಕೆಳಮಟ್ಟದಲ್ಲಿತ್ತು. ಅಂತಹ ಸಂಕಷ್ಟ ಸಮಯದಲ್ಲಿ ಪ್ರಧಾನಿಯಾದ ನೆಹರು ದೇಶ ಕಟ್ಟಿದರು, ನಂತರ ಲಾಲ್ ಬಹುದೂರ್ ಶಾಸ್ತ್ರಿ, ಇಂದಿರಾಗಾಂಧಿ ದೇಶದ ದಿಕ್ಕು ಬದಲಿಸಿದರು. +ವಿರೋಧ ಪಕ್ಷಗಳು ಇಂದಿರಾಗಾಂಧಿ ಹಠಾವೋ ಎನ್ನುತ್ತಿದ್ದವು. ಅದಕ್ಕೆ ತಿರುಗೇಟು ನೀಡಿದ ಇಂದಿರಾಗಾಂಧಿ, ಗರೀಬಿ ಹಠಾವೋ ಎಂದರು. ಹಸಿರು ಕ್ರಾಂತಿಯ ಮೂಲಕ ಆಹಾರದ ಸ್ವಾವಲಂಬನೆ ತಂದರು. ಜನಸಂಖ್ಯೆಯಲ್ಲಿ ನಾವು ಚೀನಾವನ್ನು ಹಿಂದಿಕ್ಕಿ ಮೊದಲ ಸ್ಥಾನದಲ್ಲಿದ್ದೇವೆ. ಎಲ್ಲರಿಗೂ ಆಹಾರ ಒದಗಿಸಬೇಕಾದರೆ ನಿರಂತರವಾದ ಹಸಿರು ಕ್ರಾಂತಿಯಾಗಬೇಕು, ಆಗ ಮಾತ್ರ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯ ಎಂದರು. +ಖಾಸಗಿ ಬ್ಯಾಂಕ್‍ಗಳು ಬಡವರಿಗೆ, ಸಾಮಾನ್ಯರಿಗೆ ಬಾಗಿಲು ತೆರೆದಿರಲಿಲ್ಲ. ಬ್ಯಾಂಕ್ ರಾಷ್ಟ್ರೀಕರಣದ ಮೂಲಕ ಇಂದಿರಾಗಾಂ ಬಡವರಿಗೆ ಬ್ಯಾಂಕ್ ಬಾಗಿಲು ತೆರೆದಿಟ್ಟರು. ಈಗ ಪ್ರಧಾನಿಯಾಗಿರುವ ನರೇಂದ್ರ ಮೋದಿ ಹಿಂದಿನ ಅಭಿವೃದ್ಧಿ ಎಲ್ಲಾ ಕೆಲಸವನ್ನು ತಿರುವು ಮುರುವು ಮಾಡುತ್ತಿದ್ದಾರೆ. ಬ್ಯಾಂಕ್‍ಗಳನ್ನು ಖಾಸಗೀಕರಣ ಮಾಡುವ ಮೂಲಕ ಬಡವರಿಗೆ ಅವುಗಳ ಬಾಗಿಲುಗಳನ್ನು ಮುಚ್ಚುತ್ತಿದ್ದಾರೆ. ಶ್ರೀಮಂತರ ಸಾಲ ಮನ್ನಾ ಮಾಡುವ ಮೋದಿ, ರೈತರ ಸಾಲ ಮನ್ನಾ ಮಾಡುವುದಿಲ್ಲ ಎನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು. +ಹಸಿರು ಕ್ರಾಂತಿಯಾಗಿದ್ದಾಗ ಬಾಬುಜಗಜೀವನರಾಮ್ ಕೃಷಿ ಸಚಿವರಾಗಿದ್ದರು. ಇಂದಿರಾಗಾಂಧಿ 1971ರಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದು, ಬಾಂಗ್ಲಾದೇಶ ವಿಭಜನೆ ಮಾಡಿದಾಗ ಬಾಬು ಜಗಜೀವನರಾಮ್ ರಕ್ಷಣಾ ಸಚಿವರಾಗಿದ್ದರು, 20 ಅಂಶಗಳ ಮೂಲಕ ಬಡವರಿಗೆ ಶಕ್ತಿ ತುಂಬಿದ ಇಂದಿರಾಗಾಂ, ಉಳುವವನೆ ಭೂಮಿ ಒಡೆಯ ಕಾನೂನಿನ ಮೂಲಕ ರೈತರಿಗೆ ಭೂಮಿ ಕೊಡಿಸಿದರು. ಉಗ್ರವಾದವನ್ನು ಬಲವಾಗಿ ಖಂಡಿಸುತ್ತಿದ್ದರು. ಕೊನೆಗೆ ಅದೇ ಉಗ್ರವಾದಕ್ಕೆ ಬಲಿಯಾದರು ಎಂದರು. +ಪಕ್ಷದ ಅಧ್ಯಕ್ಷರಾಗಿ ಅಕಾರ ಸ್ವೀಕರಿಸಿದವರಿಗೆ ಲೋಕಸಭೆ ಚುನಾವಣೆಯ ಸವಾಲು ಮುಂದಿದೆ. ಬಿಬಿಎಂಪಿ ಚುನಾವಣೆಯಲ್ಲೂ ಅಧಿಕಾರ ಹಿಡಿಯಬೇಕಿದೆ. ಬಿಜೆಪಿ, ಜನತಾದಳದವರು ನಮಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ನಾವು ಆಡಳಿತ ನಡೆಸುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಹೊಟ್ಟೆ ಉರಿ, ದ್ವೇಷ, ಅಸೂಯೆ, ಮತ್ಸರ ಸೇರಿ ಎಲ್ಲಾ ಪದಗಳು ಅವರಿಗೆ ಅನ್ವರ್ಥವಾಗಿವೆ. ಕುಮಾರಸ್ವಾಮಿ ಮಾಡುವ ಯಾವ ಆರೋಪಕ್ಕೂ ದಾಖಲೆ ನೀಡುವುದಿಲ್ಲ. ನನ್ನ ಮೇಲೆ, ಡಿ.ಕೆ.ಶಿವಕುಮಾರ್ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿರುತ್ತಾರೆ ಎಂದರು. +ಬಿಜೆಪಿಯವರು ಹೇಳಿಕೊಟ್ಟು ಆರೋಪ ಮಾಡಿಸುತ್ತಿದ್ದಾರೆ. ಎರಡು ಪಕ್ಷಗಳ ಮೈತ್ರಿ ಹೇಗಿದೆ ಎಂದರೆ ಅನ್ನ ಹಳಸಿತ್ತು, ನಾಯಿ ಕಾದಿತ್ತು ಎಂಬಂತಾಗಿದೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆಯಲ್ಲಿ ಲಂಚ ಪಡೆದಿದ್ದರು. ಶೇ.40ರಷ್ಟು ಕಮಿಷನ್ ಪಡೆದವರು ಅವರು, ಈಗ ನಮ್ಮ ಮೇಲೆ ಸುಳ್ಳು ಹೇಳುತ್ತಿದ್ದಾರೆ. ಮುಖ್ಯಮಂತ್ರಿಯಾಗಲು ಕುಮಾರಸ್ವಾಮಿಗೆ ಕಾಂಗ್ರೆಸ ಸಂಪೂರ್ಣ ಬೆಂಬಲ ನೀಡಿದ್ದರೂ ಅವರಿಂದ ಸರ್ಕಾರ ಉಳಿಸಿಕೊಳ್ಳಲಾಗಲಿಲ್ಲ. ಸುಳ್ಳೆ ಅವರ ಮನೆ ದೇವರು. ಇನ್ನೂ ಮುಂದೆ ಅವರ ಸುಳ್ಳುಗಳಿಗೆ ಉತ್ತರ ಕೊಡಲ್ಲ ಎಂದು ತೀರ್ಮಾನಿಸಿದ್ದೇನೆ ಎಂದರು. +ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ +ವರ್ಗಾವಣೆ ಮಾಡುವ ಅಧಿಕಾರ ಇರುವುದು ಸರ್ಕಾರಕ್ಕಲ್ಲದೆ, ಕುಮಾರಸ್ವಾಮಿ, ಬಿಜೆಪಿಯವರಿಗೆ ಇದೆಯೇ, ಅವರು ಲಂಚ ಪಡೆದಿದ್ದರು, ಅದನ್ನು ನಮ್ಮ ಕಾಲದಲ್ಲೂ ನಡೆಯುತ್ತದೆ ಎಂದು ಅಂದುಕೊಂಡಿದ್ದಾರೆ. ಎರಡು ಭಾರೀ ಮುಖ್ಯಮಂತ್ರಿಯಾಗಿದ್ದವರು ವಿದ್ಯುತ್ ಕಳ್ಳತನ ಮಾಡಿ, ತಪ್ಪನ್ನು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅದನ್ನು ಕ್ಷುಲ್ಲಕ ಪ್ರಕರಣ ಎನ್ನುತ್ತಿದ್ದಾರೆ, ಕುಮಾರಸ್ವಾಮಿಯವರೇ ಕ್ಷುಲ್ಲಕ ವ್ಯಕ್ತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ವಿರೋಧ ಪಕ್ಷಗಳ ಆರೋಪಗಳಿಗೆ ಆದ್ಯತೆ ಬೇಡ, ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಎಂದು ಮುಖ್ಯಮಂತ್ರಿ ಕರೆ ನೀಡಿದರು. ಇಂದಿರಾಗಾಂಧಿಯವರ ಜನ್ಮದಿನವನ್ನು ಇಂದು ರಾಷ್ಟ್ರಾದ್ಯಂತ ಆಚರಣೆ ಮಾಡಲಾಗುತ್ತಿದೆ. 16 ವರ್ಷ ದೇಶದ ಪ್ರಧಾನಿಯಾಗಿದ್ದ ಅವರು ವಿರೋಧ ಪಕ್ಷದ ನಾಯಕರಿಂದಲೂ ಹೊಗಳಿಸಿಕೊಂಡಿದ್ದರು. +ಇಂದಿರಾಗಾಂಧಿ ಹುಟ್ಟಿದ ಸ್ಥಳ ರಾಜಕೀಯ ಕೇಂದ್ರವಾಗಿತ್ತು, ತಂದೆ ಜವಹಾರ್‍ಲಾಲ್ ನೆಹರು ಸೇರಿದಂತೆ ಎಲ್ಲರೂ ಸಕ್ರಿಯ ರಾಜಕಾರಣದಲ್ಲಿದ್ದರು. ಮಹಾತ್ಮ ಗಾಂ ಸೇರಿದಂತೆ ಅನೇಕ ಮಹನೀಯರನ್ನು ನೋಡಿಕೊಂಡು ಬೆಳೆದ ಇಂದಿರಾಗಾಂಯವರ ಮೇಲೆ ಸ್ವತಂತ್ರ್ಯ ಹೋರಾಟದ ಗಾಢ ಪರಿಣಾಮ ಬೀರಿತ್ತು, ಬಾಲ್ಯದಿಂದಲೇ ಜನಪರವಾದ ದೋರಣೆ ಬೆಳೆದಿತ್ತು. ಲಾಲ್ ಬಹುದೂರ್ ಶಾಸ್ತ್ರಿ ನಂತರ 1977 ರಿಂದ 1980ರವರೆಗೆ ಮೂರು ವರ್ಷ ಹೊರತು ಪಡಿಸಿದರೆ 196ರಿಂದ 1984ರವರೆಗೆ ದೇಶದ ಪ್ರಧಾನಿಯಾಗಿದ್ದರು. ಅವರನ್ನು ಉಕ್ಕಿನ ಮಹಿಳೆ ಎಂದು ಕರೆಯುತ್ತಾರೆ. ದೇಶಕ್ಕಾಗಿ ದೃಢವಾದ, ಜನಪರವಾದ ನಿರ್ಧಾರ ತೆಗೆದುಕೊಳ್ಳುತ್ತಿದ್ದರು, ರಾಜಕೀಯವನ್ನ ಸಮಜ ಸೇವೆ ಎಂದು ಭಾವಿಸಿದ್ದರು ಎಂದರು. +ಆಲ್ ದಿ ಬೆಸ್ಟ್ ಟೀಂ ಇಂಡಿಯಾ: ಶುಭಕೋರಿದ ಪ್ರಧಾನಿ ಮೋದಿ +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್, ಸಚಿವರಾದ ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದೇ ವೇಳೆ ಬೆಂಗಳೂರು ನಗರ ಜಿಲ್ಲೆಗಳ ನಾಲ್ವರು ಕಾಂಗ್ರೆಸ್ ಅಧ್ಯಕ್ಷರು ಅಕಾರ ಸ್ವೀಕರಿಸಿದರು. ಇಂದಿರಾಗಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. \ No newline at end of file diff --git a/eesanje/url_46_309_9.txt b/eesanje/url_46_309_9.txt new file mode 100644 index 0000000000000000000000000000000000000000..fafa4629d4a2eac769b37fc02acae4a707f56335 --- /dev/null +++ b/eesanje/url_46_309_9.txt @@ -0,0 +1,5 @@ +ಸಿದ್ದರಾಮಯ್ಯರನ್ನು ದೃತರಾಷ್ಟ್ರನಿಗೆ ಹೋಲಿಸಿದ ಬಿಜೆಪಿ +ಬೆಂಗಳೂರು,ನ.19- ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಪರಿ ದೃತರಾಷ್ಟ್ರನಿಗೂ ಅವರಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಬಿಜೆಪಿ ಕಿಡಿಕಾರಿದೆ. +ತನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವರ್ಗಾವಣೆಗೆ ಫೋನ್ ಕರೆ ಮಾಡಿ ಹಲೋ ಅಪ್ಪ ಎಂದ ಪುತ್ರ ಡಾ.ಯತೀಂದ್ರ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡುತ್ತಿರುವ ಪರಿ ದೃತರಾಷ್ಟ್ರನಿಗೂ, ಸಿದ್ದರಾಮಯ್ಯನಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಟೀಕಿಸಿದೆ. +ಡಾ.ಯತೀಂದ್ರ ಅವರನ್ನು ಸಮರ್ಥಿಸಿಕೊಳ್ಳುತ್ತಿರುವ ಪರಿ ಹೇಗಿದೆ ಎಂದರೆ ಸ್ವಾತಂತ್ರ ಇಲ್ವಾ? ಅಧಿಕಾರ ಇಲ್ವಾ? ಶ್ಯಾಡೊ ಸಿಎಂ ಅಲ್ವಾ? ಮುಖ್ಯಮಂತ್ರಿ ಮಗ ಅಲ್ವಾ? ಕ್ಷೇತ್ರ ನೋಡಿಕೊಳ್ಳಬಾರದ?ನನಗೆ ಕ್ಷೇತ್ರ ಬಿಟ್ಟು ಕೊಟ್ಟಿಲ್ವಾ? ಎಂದು ಸಿದ್ದರಾಮಯ್ಯನವರಿಗೆ ಎಕ್ಸ್ ಮೂಲಕ ಟಾಂಗ್ ಕೊಟ್ಟಿದೆ. +ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ \ No newline at end of file diff --git a/eesanje/url_46_30_1.txt b/eesanje/url_46_30_1.txt new file mode 100644 index 0000000000000000000000000000000000000000..e97634ca8ddd4bca07414bf782e70b0d5eec8090 --- /dev/null +++ b/eesanje/url_46_30_1.txt @@ -0,0 +1,5 @@ +ಸರ ದೋಚುತ್ತಿದ್ದ ಮಹಿಳಾ ಶುಂಠಿ ವ್ಯಾಪಾರಿ ಅರೆಸ್ಟ್ +ಬೆಂಗಳೂರು,ಆ.30- ಜಾತ್ರೆ, ಸಂತೆ ಹಾಗು ಬಸ್‌‍ಗಳಲ್ಲಿ ಸಂಚರಿಸುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಚಿನ್ನಾಭರಣಗಳನ್ನು ದೋಚುತ್ತಿದ್ದ ಶುಂಠಿ ವ್ಯಾಪಾರಿ ಮಹಿಳೆಯನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ಮೌಲ್ಯದ536 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಶಾರದಾ(28) ಬಂಧಿತ ಆರೋಪಿತೆ. ಈಕೆ ಶುಂಠಿ ವ್ಯಾಪಾರಿ. +ಈಕೆಯ ಬಂಧನದಿಂದ ಈ ಹಿಂದೆ ಚಿಕ್ಕಪೇಟೆ ಹಾಗೂ ತುಮಕೂರಿನ ಗುಬ್ಬಿ ಪೊಲೀಸ್‌‍ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ನಗರದ ವಿವಿಧ ಪೊಲೀಸ್‌‍ ಠಾಣೆಗಳಲ್ಲಿ ವರದಿಯಾಗಿದ್ದ ಏಳು ಕಳವು ಪ್ರಕರಣಗಳು ಪತ್ತೆಯಾಗಿವೆ. ಕೆ.ಆರ್‌.ಪುರದ ನಿವಾಸಿಯೊಬ್ಬರು ಬಟ್ಟೆ ಅಂಗಡಿಯಲ್ಲಿ ಬಟ್ಟೆ ಖರೀದಿಸಲು ಹೋಗಿದ್ದು, ಆ ಸಂದರ್ಭದಲ್ಲಿ ಅವರ ಪರ್ಸ್‌ನಿಂದ ಸುಮಾರು 6 ಸಾವಿರ ರೂ. ಕಳುವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಕೇವಲ 24 ಗಂಟೆಯೊಳಗೆ ಮಹಿಳೆಯನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆ ಗೊಳಪಡಿಸಿದಾಗ ಪರ್ಸ್‌ನಿಂದ ಹಣ ಎಗರಿಸಿರುವುದಾಗಿ ತಿಳಿಸಿದ್ದಾಳೆ. +ತನಿಖೆಯನ್ನು ಮುಂದುವರೆಸಿದ ಪೊಲೀಸರು ಅರಸೀಕೆರೆಯಲ್ಲಿರುವ ಆರೋಪಿತೆಯ ಸ್ನೇಹಿತನಿಂದ 18 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿ ದ್ದಲ್ಲದೆ ಅಲ್ಲಿನ ಜ್ಯೂವೆಲರಿ ಶಾಪ್‌ನಿಂದ 29 ಗ್ರಾಂ ಚಿನ್ನಾಭರಣ, ಮತ್ತೊಂದು ಜ್ಯೂವೆಲರಿ ಶಾಪ್‌ನಿಂದ 135 ಗ್ರಾಂ ಚಿನ್ನಾಭರಣ, ಹಾಗೂ ಹರ್ಬನ್‌ ಕೋ ಅಪರೇಟಿವ್‌ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ 315 ಗ್ರಾಂ ಚಿನ್ನಾಭರಣ ಹಾಗೂ ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿಟ್ಟಿದ್ದ 39 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಇವುಗಳ ಒಟ್ಟು ಮೌಲ್ಯ 40 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. +ಆರೋಪಿತೆಯ ಬಂಧನದಿಂದ ನಗರದ ವಿವಿಧ ಪೊಲೀಸ್‌‍ ಠಾಣೆಗಳಲ್ಲಿ ವರದಿಯಾಗಿದ್ದ 7 ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಕೆ.ಆರ್‌.ಪುರಂ 4, ಅನ್ನಪೂರ್ಣೇಶ್ವರಿ, ಬಾಗಲುಗುಂಟೆ ಹಾಗೂ ಮಹದೇವಪುರ ಪೊಲೀಸ್‌‍ ಠಾಣೆಯ ತಲಾ 1 ಕಳವು ಪ್ರಕರಣಗಳು ಪತ್ತೆಯಾಗಿವೆ. ಕೆ.ಆರ್‌.ಪುರ ಠಾಣೆ ಇನ್‌್ಸಪೆಕ್ಟರ್‌ ರಾಮಮೂರ್ತಿ ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_30_10.txt b/eesanje/url_46_30_10.txt new file mode 100644 index 0000000000000000000000000000000000000000..e166ca7e16af69c52f5eca41efbd7f0ee4610044 --- /dev/null +++ b/eesanje/url_46_30_10.txt @@ -0,0 +1,8 @@ +ದರ್ಶನ್ ಚಟುವಟಿಕೆಗಳ ಮೇಲೆ ಕಣ್ಣಿಡಲು ಸೂಚನೆ + +ಬೆಂಗಳೂರು,ಆ.29-ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ಗೆ ಪ್ರತ್ಯೇಕ ಕೊಠಡಿಯಲ್ಲಿರಿಸಿ ಅವರ ಚಟುವಟಿಕೆಗಳ ಮೇಲೆ ನಿಗಾ ಇಡಲು ದಿನದ 24 ಗಂಟೆಗಳ ಕಾಲ ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು ಸೇರಿದಂತೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿರುವ ಉತ್ತರ ವಲಯದ ಕಾರಾಗೃಹಗಳ ಉಪ ಮಹಾನಿರೀಕ್ಷಕರು, ಬಳ್ಳಾರಿ ಕಾರಾಗೃಹದ ಅಧೀಕ್ಷಕರಿಗೆ ಎಚ್ಚರಿಕೆ ನೀಡಿದ್ದಾರೆ. +ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ರಾಜಾತಿಥ್ಯ ಅನುಭವಿಸಿದ್ದರು ಎಂಬ ಆರೋಪಗಳು, ಬಹಿರಂಗಗೊಂಡಿದ್ದ ವಿಡಿಯೋಗಳಿಂದಾಗಿ ನ್ಯಾಯಾಲಯದ ಆದೇಶದ ಮೇರೆಗೆ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿದೆ.ದರ್ಶನ್ರನ್ನು ಇರಿಸಿರುವ ಬಂಧೀಖಾನೆಯಲ್ಲಿ ಸೆರೆ ಹಿಡಿಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರತಿನಿತ್ಯ ಮುಂಜಾಗ್ರತಾ ಕ್ರಮವಾಗಿ ಶೇಖರಣೆ ಮಾಡಿಡಬೇಕು. +ದರ್ಶನ್ ಇರುವ ಬಂಧೀಖಾನೆ ವಿಭಾಗದ ಕರ್ತವ್ಯಕ್ಕೆ ಮುಖ್ಯ ವೀಕ್ಷಕ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ಅನುಭವವುಳ್ಳ ಸಿಬ್ಬಂದಿ ವರ್ಗದವರನ್ನು ಪಹರೆ ಕರ್ತವ್ಯಕ್ಕೆ ನಿಯೋಜಿಸುವುದು. +ದರ್ಶನ್ ಇರುವ ಬಂಧೀಖಾನೆಯ ವಿಭಾಗಕ್ಕೆ ಜೈಲರ್ ಮತ್ತು ಹಿರಿಯ ಅಧಿಕಾರಿ ವರ್ಗದವರು ಪ್ರತಿನಿತ್ಯ ಭೇಟಿ ನೀಡಿ ಭದ್ರತೆ ಹಾಗೂ ಬಂಧಿಯ ಚಲನವಲನಗಳನ್ನು ಗಮನಿಸಿ ಪಹರೆಯಲ್ಲಿರುವ ಕರ್ತವ್ಯದ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೆಲವು ಸೂಚನೆಯನ್ನು ನೀಡಲಾಗಿದೆ. +ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಆಡಳಿತ ಮತ್ತು ಭದ್ರತೆಗೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕಾರಾಗೃಹದ ಆಡಳಿತ ವೈಫಲ್ಯದ ಬಗ್ಗೆ ಲಿಖಿತವಾಗಿ ಅಥವಾ ಸುದ್ದಿಮಾದ್ಯಮದಲ್ಲಿ ಪ್ರಸಾರಗೊಂಡ ಪಕ್ಷದಲ್ಲಿ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿಸಿ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ. +ದರ್ಶನ್ ಬಳ್ಳಾರಿ ಜೈಲಿಗೆ ಕಾಲಿಡುತ್ತಿದ್ದಂತೆಯೇ ಕಾರಾಗೃಹಗಳ ಉಪ ಮಹಾ ನಿರೀಕ್ಷಕರು ನೀಡಿರುವ ಈ ಸೂಚನೆಗಳು ಭಾರಿ ಕುತೂಹಲ ಕೆರಳಿಸಿವೆ. \ No newline at end of file diff --git a/eesanje/url_46_30_11.txt b/eesanje/url_46_30_11.txt new file mode 100644 index 0000000000000000000000000000000000000000..3c777a25c5453ca74086d0c1432b316bee8cf21e --- /dev/null +++ b/eesanje/url_46_30_11.txt @@ -0,0 +1,9 @@ +ಬಳ್ಳಾರಿ ಜೈಲಿನ ಮುಂಭಾಗ ದರ್ಶನ್ ಅಭಿಮಾನಿಗಳ ಜೈಕಾರ + +ಬೆಂಗಳೂರ,ಆ.29-ಅಭಿಮಾನಿಗಳ ಕಣ್ತಪ್ಪಿಸಿ ದರ್ಶನ್ನನ್ನು ಬಳ್ಳಾರಿಗೆ ಕರೆದೊಯ್ಯುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರವಾಗುತ್ತಿರುವ ವಿಷಯ ತಿಳಿದು ಇಂದು ಮುಂಜಾನೆಯಿಂದಲೇ ಅವರ ನೂರಾರು ಅಭಿಮಾನಿಗಳು ಬಳ್ಳಾರಿ ಕಾರಾಗೃಹ ಬಳಿ ಜಮಾಯಿಸಿದ್ದರು. +ಅಭಿಮಾನಿಗಳನ್ನು ನಿಯಂತ್ರಿಸಲು ಕಾರಾಗೃಹದ ಸುತ್ತ ಪೊಲೀಸ್ ಬಿಗಿಬಂದೋಬಸ್ತ್ ಮಾಡ ಲಾಗಿತ್ತು. ಕಾರಾಗೃಹದ ಬಳಿ ದರ್ಶನ್ನನ್ನು ಕರೆತರುತ್ತಿದ್ದಂತೆ ಅಭಿಮಾನಿಗಳು ಡಿ ಬಾಸ್ ಡಿ ಬಾಸ್ ಎಂದು ಜೈಕಾರ ಕೂಗಿ ತಮ ಅಭಿಮಾನ ಮೆರೆದರು. +ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೈರಲ್ಲಾಗುತ್ತಿದ್ದಂತೆ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿ ಬಳ್ಳಾರಿ ಕಾರಾಗೃಹಕ್ಕೆ ಜೈಲಾಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ. +ನಿನ್ನೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಪ್ರಕ್ರಿಯೆ ಮುಗಿಸಲು ತಡವಾದ ಕಾರಣ ಇಂದು ಮುಂಜಾನೆ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. +ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್ ಇರುವ ಫೋಟೋ ವೈರಲ್ಲಾಗಿದ್ದರ ಜೊತೆಗೆ ತಮ ಸೆಲ್ನಿಂದಲೇ ವಿಡಿಯೋ ಕಾಲ್ನಲ್ಲಿ ರೌಡಿಯ ಮಗನೊಂದಿಗೆ ಮಾತನಾಡಿರುವುದು ಕೂಡ ದರ್ಶನ್ಗೆ ಕಂಟಕವಾಗಿ ಪರಿಣಮಿಸಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿಯ ತಲೆದಂಡವೂ ಆಗಿದೆ. +ದರ್ಶನ್ ಗ್ಯಾಂಗ್ ಛಿದ್ರ:ರೇಣಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಹಚರರಿಗೂ ಸಂಕಷ್ಟ ಎದುರಾಗಿದ್ದು, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶಿಸಿದೆ. ಮೂವರು ಆರೋಪಿಗಳು ಈಗಾಗಲೇ ತುಮಕೂರು ಜೈಲಿನಲ್ಲಿದ್ದು, ಮತ್ತೆ ಮೂವರನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ನಡೆಯುತ್ತಿದೆ. +ಮೈಸೂರು ಕಾರಾಗೃಹದಲ್ಲಿ 20 ಬ್ಯಾರೆಕ್ಗಳಿದ್ದು ಒಟ್ಟು 850 ಕೈದಿಗಳಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲವು ಆರೋಪಿಗಳು ಮೈಸೂರಿಗೆ ಸ್ಥಳಾಂತರವಾಗುತ್ತಿರುವುದರಿಂದ ಜೈಲಿನ ಅಧಿಕಾರಿಗಳು ಸಿಸಿಟಿವಿ ಕಣ್ಗಾವಲು ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಪ್ರಕರಣದ ಮೊದಲನೇ ಆರೋಪಿ ಪವಿತ್ರಗೌಡ ಮಾತ್ರ ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಉಳಿದುಕೊಂಡಿದ್ದಾರೆ. \ No newline at end of file diff --git a/eesanje/url_46_30_12.txt b/eesanje/url_46_30_12.txt new file mode 100644 index 0000000000000000000000000000000000000000..407d12b701fe8f98b442907c6803bfe7b9912fca --- /dev/null +++ b/eesanje/url_46_30_12.txt @@ -0,0 +1,15 @@ +ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಕಾನೂನಿನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ : ಪರಮೇಶ್ವರ್ + 5 , +ಬೆಂಗಳೂರು,ಆ.29– ಮುಖ್ಯ ಮಂತ್ರಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದು ವಿರೋಧಪಕ್ಷಗಳ ಬಯಕೆ. ಅದು ಸಹಜವೂ ಇರಬಹುದು. ಆದರೆ ನಮ ಉದ್ದೇಶ ಮುಖ್ಯಮಂತ್ರಿಯವರು ಐದು ವರ್ಷ ಮುಂದುವರೆಯಬೇಕು ಎಂಬುದಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಯಾವುದೇ ಕ್ಷಣದಲ್ಲಿ ಸಿದ್ದರಾಮಯ್ಯ ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ. ಸಹಜವಾಗಿ ಅವರು ಈ ರೀತಿ ಹೇಳಲೇಬೇಕು. ಅವರ ಉದ್ದೇಶವೂ ಅದೇ ಆಗಿರುತ್ತದೆ ಎಂದರು. +ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಅಭಿಯೋಜನೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್ಗೆ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. +ಪರಪ್ಪನ ಅಗ್ರಹಾರ ಬಂಧೀಖಾನೆಯಲ್ಲಿ ನಟ ದರ್ಶನ್ ಹೆಚ್ಚುವರಿ ಸೌಲಭ್ಯ ಪಡೆದಿರುವ ಘಟನೆ ವರದಿಯಾದ ಬೆನ್ನಲ್ಲೇ ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಜೈಲಿನ ಅಧಿಕಾರಿಗಳು ತೀರ್ಮಾನಿಸಿದರು. ಎಂಟತ್ತು ಜನರನ್ನು ಸ್ಥಳಾಂತರಿಸಲಾಗುತ್ತಿದೆ. ದರ್ಶನ್ ಸ್ಥಳಾಂತರವಾಗಿದೆಯೋ, ಇಲ್ಲವೋ ಎಂಬುದು ತಮಗೆ ಗೊತ್ತಿಲ್ಲ ಎಂದು ನಗುತ್ತಾ ಹೇಳಿದರು. +ಭದ್ರತಾ ದೃಷ್ಟಿಯಿಂದ ಯಾರು, ಎಲ್ಲಿಗೆ ಸ್ಥಳಾಂತರವಾಗಬೇಕು ಎಂಬ ನಿರ್ಧಾರವನ್ನು ಜೈಲಿನ ಅಧಿಕಾರಿಗಳು ತೆಗೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಗೆ ಜಮೀರ್ ಅಹಮದ್ ಖಾನ್ ಉಸ್ತುವಾರಿ ಸಚಿವರಾಗಿರುವುದಕ್ಕೂ ದರ್ಶನ್ ಅವರನ್ನು ಅಲ್ಲಿಗೆ ಸ್ಥಳಾಂತರಿಸುತ್ತಿರುವುದಕ್ಕೂ ಸಂಬಂಧವಿಲ್ಲ. +ಯಾವುದೇ ಜಿಲ್ಲೆಯಾದರೂ ಒಬ್ಬ ಉಸ್ತುವಾರಿ ಸಚಿವರಿದ್ದೇ ಇರುತ್ತಾರೆ. ಜಮೀರ್ ಅಹಮದ್ ಖಾನ್ರಿಂದಾಗಿ ದರ್ಶನ್ ಮತ್ತಷ್ಟು ಸೌಲಭ್ಯ ಪಡೆಯುತ್ತಾರೆ ಎಂಬುದು ಆಧಾರರಹಿತವಾಗಿದೆ. ಯಾರೇ ಇದ್ದರೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. +ಬಂಧೀಖಾನೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಮುಂದಿನ ದಿನಗಳಲ್ಲಿ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು. +ಪಿಎಸ್ಐ ನೇಮಕಾತಿ ಹಗರಣದಲ್ಲಿ ಈವರೆಗೂ ಮಧ್ಯಂತರ ಅವಧಿ ಮಾತ್ರ ಸಲ್ಲಿಕೆಯಾಗಿದೆ. ಸಂಪೂರ್ಣ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ. ನೇಮಕಾತಿ ಕುರಿತಂತೆ ಈಗಾಗಲೇ ರಾಜ್ಯಸರ್ಕಾರ ಪೂರ್ವಾನುಮತಿ ಪಡೆದು 545 ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಿದೆ. +ಹಗರಣಕ್ಕೆ ಸಂಬಂಧಪಟ್ಟಂತೆ ಅಂತಿಮ ವರದಿ ಸಲ್ಲಿಕೆಯಾದ ಬಳಿಕ ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. +ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೆಲವು ಮಸೂದೆಗಳನ್ನು ವಾಪಸ್ ಕಳುಹಿಸಿ ಸ್ಪಷ್ಟನೆ ಕೇಳಿದ್ದಾರೆ. ಅದನ್ನು ಪರಿಶೀಲಿಸಿ ಮರು ಸಲ್ಲಿಸಲಾಗುವುದು. ಇದರ ಹಿಂದೆ ರಾಜಕೀಯ ಇದೆ ಎಂದು ನಮಗೆ ಅನ್ನಿಸುವುದಿಲ್ಲ. ಒಂದು ವೇಳೆ ಆ ರೀತಿ ಇದ್ದರೆ ರಾಜಕೀಯವಾಗಿಯೂ ಪ್ರತಿಕ್ರಿಯಿಸುತ್ತೇವೆ. ಮತ್ತೊಮೆ ತಿರಸ್ಕಾರಗೊಂಡರೆ ಆಗ ಮರು ಪರಿಶೀಲಿಸುತ್ತೇವೆ ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯಸಚಿವ ಸಂಪುಟ ಸಭೆ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಲಾಗಿದ್ದು, ಅದು ನ್ಯಾಯಮೂರ್ತಿ ಸೋಮಶೇಖರ್ ಅವರ ಪೀಠದಲ್ಲಿ ವಿಚಾರಣೆಗೊಳಪಡಲಿದೆ. ಬಹುತೇಕ ಉಪಮುಖ್ಯಮಂತ್ರಿಯವರಿಗೂ ನ್ಯಾಯ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಪೊಲೀಸರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು 40 ವರ್ಷಗಳಿಗೆ ಹೆಚ್ಚಿಸುವಂತೆ ಬೇಡಿಕೆಗಳಿವೆ. ಅದಕ್ಕೆ ಆಕ್ಷೇಪಗಳೂ ಇವೆ. ಸೇವೆಗೆ 16 ವರ್ಷಕ್ಕೆ ನೇಮಕಾತಿಯಾಗುತ್ತದೆ. ಪೊಲೀಸರ ನೇಮಕಾತಿಗೆ 40 ವರ್ಷ ಹೆಚ್ಚಿಸಿದರೆ ಸೇವಾವಧಿ ಸಿಗುವುದಿಲ್ಲ ಎಂಬ ಆಕ್ಷೇಪವನ್ನು ಯುವ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. +ಈವರೆಗೂ ಯಾವುದೇ ತೀರ್ಮಾನವಾಗಿಲ್ಲ. ಪರಿಶೀಲನೆ ನಡೆಯುತ್ತಿದೆ ಎಂದರು.ಪ್ರತಿವರ್ಷ 2,500 ಹುದ್ದೆಗಳು ನಿವೃತ್ತಿಯಿಂದ ತೆರವಾಗಲಿವೆ. ನೇಮಕಾತಿ ಮಾಡಿಕೊಳ್ಳಲು ಕಾಲಕಾಲಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ವಿವಿಧ ಹಂತದ 3,500 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ಹಂತದಲ್ಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_30_2.txt b/eesanje/url_46_30_2.txt new file mode 100644 index 0000000000000000000000000000000000000000..0c3e3d7696429dab05a72c66097d4424e1cebc72 --- /dev/null +++ b/eesanje/url_46_30_2.txt @@ -0,0 +1,6 @@ +ಹುದ್ದೆಗಾಗಿ ನಕಲಿ ದಾಖಲೆ ನೀಡಿದ್ದ 3 ಸರ್ಕಾರಿ ನೌಕರರು ಸೇರಿ 48 ಮಂದಿ ಬಂಧನ +ಬೆಂಗಳೂರು,ಆ.30- ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲ್ಯಾಗ್‌ ಹುದ್ದೆಗೆ ನಕಲಿ ದಾಖಲೆ ಸಲ್ಲಿಸಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ವಂಚನೆ ಮಾಡಿ ಉದ್ಯೋಗ ಪಡೆಯಲು ನಕಲಿ ಅಂಕಪಟ್ಟಿ ಒದಗಿಸಿದ್ದ 11 ಮಧ್ಯವರ್ತಿಗಳು ಹಾಗೂ 37 ಅನರ್ಹ ಅಭ್ಯರ್ಥಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 2 ಕಾರುಗಳು, 17 ಮೊಬೈಲ್‌ಗಳು, ಹಾರ್ಡ್‌ ಡಿಸ್ಕ್‌ನ್ನು ವಶಪಡಿಸಿಕೊಂಡಿದ್ದಾರೆ. +ಈ ಮಧ್ಯವರ್ತಿಗಳ ಪೈಕಿ ಮೂವರು ಆರೋಪಿತರು ವಿವಿಧ ಇಲಾಖೆಯಲ್ಲಿ ಸರ್ಕಾರಿ ನೌಕರರಾಗಿರುತ್ತಾರೆ. ಶೇಷಾದ್ರಿಪುರಂನಲ್ಲಿರುವ ಜಲಸಂಪನೂಲ ಇಲಾಖೆಯಿಂದ 2022ನೇ ಸಾಲಿನ ಅಕ್ಟೋಬರ್‌ ತಿಂಗಳಿನಲ್ಲಿ ಸಿ ವೃಂದದ ದ್ವಿತೀಯ ದರ್ಜೆ ಸಹಾಯಕ ಬ್ಯಾಕ್‌ಲಾಗ್‌ ಹುದ್ದೆಗಳಿಗೆ ನೇರ ನೇಮಕಾತಿಯಡಿ ಆನ್‌ಲೈನ್‌ ಮೂಲಕ 182 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲಾಗಿತ್ತು. +ಈ ನೇಮಕಾತಿಗೆ ಒಟ್ಟು 62 ಅಭ್ಯರ್ಥಿಗಳು ಇಲಾಖೆಯು ಸೂಚಿಸಿದಂತಹ ಮಾನದಂಡಗಳ ವ್ಯಾಪ್ತಿಗೊಳಪಟ್ಟಿರಲಿಲ್ಲ. ಇವರು ಅನ್ಯಮಾರ್ಗದ ಮೂಲಕ ಉದ್ಯೋಗವನ್ನು ಪಡೆಯಬೇಕೆನ್ನುವ ದುರುದ್ದೇಶದಿಂದ ನಕಲಿ ಅಂಕಪಟ್ಟಿಗಳನ್ನು ತಯಾರಿಸುವ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು. ಪ್ರತಿ ವಿಷಯದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುವಂತೆ ಕಂಡುಬರುವ ಅನಧಿಕೃತವಾಗಿ ಸೃಷ್ಟಿಸಿದ ದ್ವಿತೀಯ ಪಿಯುಸಿ, 12ನೇ ತರಗತಿಯ ಸಿಬಿಎಸ್‌‍ಸಿ ಮತ್ತು ದ್ವಿತೀಯ ಪಿಯುಸಿಗೆ ತತ್ಸಮಾನವಾದ ಎನ್‌ಐಓಎಸ್‌‍ ಅಂಕಪಟ್ಟಿಗಳನ್ನು ಪಡೆದುಕೊಂಡಿದ್ದರು. +ಈ ರೀತಿ ಪಡೆದ ಅಂಕಪಟ್ಟಿಯನ್ನು ಜಲಸಂಪನೂಲ ಇಲಾಖೆಗೆ ಆನ್‌ಲೈನ್‌ ಮೂಲಕ ಸಲ್ಲಿಸಿದ್ದರು. ಇದರಿಂದಾಗಿ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ವಂಚನೆಯಾಗಿತ್ತು. ದಾಖಲಾತಿಗಳ ಪರಿಶೀಲನೆಯನ್ನು ನಡೆಸಿದ ಇಲಾಖೆಯವರು ಅಂಕಪಟ್ಟಿಗಳಲ್ಲಿ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು. +ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ಸಿ.ಸಿ.ಬಿ ಘಟಕಕ್ಕೆ ವಹಿಸಲಾಗಿತ್ತು. ತನಿಖೆ ಮುಂದುವರೆಸಿದ ಸಿಸಿಬಿ ಪೊಲೀಸರು, ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅನಧಿಕೃತವಾಗಿ ಸೃಷ್ಟಿಸಿದ್ದ ಅಂಕಪಟ್ಟಿಯನ್ನು ಸಲ್ಲಿಸಿದ್ದ ಒಟ್ಟು 12 ಜಿಲ್ಲೆಗಳಿಂದ ಪತ್ತೆಹಚ್ಚಿದ್ದಾರೆ.ಅರ್ಜಿ ಸಲ್ಲಿಸಿದ್ದ 62 ಅಭ್ಯರ್ಥಿಗಳ ಪೈಕಿ ಕಲ್ಬುರ್ಗಿ ಜಿಲ್ಲೆಯಿಂದ 25 ಅಭ್ಯರ್ಥಿಗಳು, ಹಾಸನ 12, ವಿಜಯಪುರ 8, ಬೀದರ್‌ 6, ಬೆಳಗಾವಿ 3, ಯಾದಗಿರಿ 2, ಚಿತ್ರದುರ್ಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯನಗರದ ತಲಾ ಒಬ್ಬರು, ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿರುವುದನ್ನು ಪತ್ತೆ ಮಾಡಿರುವ ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. \ No newline at end of file diff --git a/eesanje/url_46_30_3.txt b/eesanje/url_46_30_3.txt new file mode 100644 index 0000000000000000000000000000000000000000..ec2aa44f36c98a8f2411897172b330025b14419d --- /dev/null +++ b/eesanje/url_46_30_3.txt @@ -0,0 +1,4 @@ +ಟ್ರೆಂಡ್‌ ಆಯ್ತು 511 ಖೈದಿ ನಂಬರ್‌ +ಬೆಂಗಳೂರು,ಆ.30- ದರ್ಶನ್‌ ಅಭಿಮಾನಿಗಳ ಹುಚ್ಚಾಟ ಮಿತಿ ಮೀರುತ್ತಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ದರ್ಶನ್‌ಗೆ ನೀಡಲಾಗಿರುವ ಖೈದಿ ನಂಬರ್‌ ಇದೀಗ ಅವರ ಅಭಿಮಾನಿಗಳ ಟ್ರೆಂಡ್‌ ಆಗಿ ಪರಿವರ್ತನೆಗೊಂಡಿದೆ.ದರ್ಶನ್‌ಗೆ ನೀಡಲಾಗಿರುವ ಖೈದಿ ನಂಬರ್‌ 511 ಗೆ ಅಭಿಮಾನಿಗಳು ಫಿದಾ ಆಗಿದ್ದು ತಮ ವಾಹನಗಳ ಮೇಲೆ ಬಳ್ಳಾರಿ ಖೈದಿ 511 ಎಂದು ಬರೆಸಿಕೊಳ್ಳತೊಡಗಿದ್ದಾರೆ. +ಈ ಹಿಂದೆ ದರ್ಶನ್‌ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ನೀಡಲಾಗಿದ್ದ 6106ಗೆ ಫಿದಾ ಆಗಿದ್ದ ಅಭಿಮಾನಿಗಳು ತಮ ವಾಹನಗಳ ಮೇಲೆ ಅದೇ ನಂಬರ್‌ ಬರೆಸಿಕೊಂಡು ಖುಷಿ ಪಟ್ಟಿದ್ದರು. ತಮ ಬೈಕ್‌, ಆಟೋ, ಟ್ಯಾಟು, ಹಾಗೂ ಮಗುವಿಗೆ 6106 ಖೈದಿ ನಂಬರ್‌ ಬಟ್ಟೆ ಹಾಕಿಸಿ ಫೋಟೋ ಶೂಟ್‌ ಮಾಡಲಾಗಿತ್ತು ಇದೀಗ 511 ನಂಬರ್‌ ಕೂಡ ಟ್ರೆಂಡ್‌ ಆಗಿ ಪರಿವರ್ತನೆಯಾಗಿದೆ. +ದರ್ಶನ್‌ ಅಭಿಮಾನಿಗಳು ತಮ ವಾಹನಗಳ ಮೇಲೆ ಬಳ್ಳಾರಿ ಖೈದಿ ನಂಬರ್‌ 511 ಎಂದು ಬರೆಸಿಕೊಂಡು ತಮ ಅಭಿಮಾನ ಪ್ರದರ್ಶಿಸುತ್ತಿದ್ದಾರೆ. \ No newline at end of file diff --git a/eesanje/url_46_30_4.txt b/eesanje/url_46_30_4.txt new file mode 100644 index 0000000000000000000000000000000000000000..3d1a112a3459e68fb560c60adb7f29398ba5a8d7 --- /dev/null +++ b/eesanje/url_46_30_4.txt @@ -0,0 +1,5 @@ +ವಾಯುಭಾರ ಕುಸಿತ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಆ.30-ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಎರಡು ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್‌ ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ಇಂದೂ ಕೂಡ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು, ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಕರಾವಳಿ ಭಾಗಕ್ಕೆ ರೆಡ್‌ ಅಲರ್ಟ್‌ ಹಾಗೂ ಉಳಿದೆಡೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. +ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಭಾನುವಾರದಿಂದ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಆಗಾಗ್ಗೆ ಹಗುರ ಇಲ್ಲವೇ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ. +ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ಸ್ವರೂಪ ಪಡೆಯುತ್ತಿದೆ.ಅದರ ನೇರ ಪರಿಣಾಮ ರಾಜ್ಯದ ಮೇಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್‌‍.ಪ್ರಕಾಶ್‌ ಹೇಳಿದರು. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರೆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಚದುರಿದಂತೆ ಆಗಾಗ್ಗೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು. +ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಅಷ್ಟಾಗಿ ಆಗುವುದಿಲ್ಲ. ಗುಜರಾತ್‌ ರಾಜಸ್ಥಾನದ ಕಡೆಗಿರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಿಲ್ಲ. ಅದೇ ರೀತಿ ಬಂಗಾಳ ಕೊಲ್ಲಿಯಲ್ಲಿ ಉಯಂಟಾಗಿರುವ ಚಂಡ ಮಾರುತವು ಒಡಿಸ್ಸಾ ಹಾಗೂ ಆಂಧ್ರಪ್ರದೇಶದ ಕಡೆಗೆ ಚಲಿಸುವುದರಿಂದ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆ ಇದೆ. ಹೀಗಾಗಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ವಿರಳ ಎಂದು ಅವರು ಹೇಳಿದರು. \ No newline at end of file diff --git a/eesanje/url_46_30_5.txt b/eesanje/url_46_30_5.txt new file mode 100644 index 0000000000000000000000000000000000000000..25ced18b77cece7e45acc52712b5271c738ec464 --- /dev/null +++ b/eesanje/url_46_30_5.txt @@ -0,0 +1,5 @@ +ಬೆಳ್ಳುಳ್ಳಿ-ಈರುಳ್ಳಿ ಬೆಲೆ ಏರಿಕೆ : ಗ್ರಾಹಕರಿಗೆ ಹೊರೆ +ಬೆಂಗಳೂರು,ಆ.30- ಕಳೆದ ಫೆಬ್ರವರಿ ತಿಂಗಳಿನಲ್ಲಿ ಬರೋಬ್ಬರಿ ಕೆಜಿಗೆ 500 ರೂ. ತಲುಪಿ ಭಾರಿ ದುಬಾರಿಯಾಗಿತ್ತು. ಮತ್ತೆ ಇನ್ನೇನು ಶ್ರಾವಣ ಮುಗಿಯುತ್ತಿರುವ ಬೆನ್ನಲ್ಲೇ ಮತ್ತೆ ಬೆಲೆ ಏರಿಕೆಯಾಗಿದೆ. ಶ್ರಾವಣ ಮಾಸದಲ್ಲಿ ಕೆಲವರು ಅಷ್ಟಾಗಿ ಮಾಂಸಾಹಾರ ಸೇವಿಸುವುದಿಲ್ಲ. ಹಾಗಾಗಿ ಒಗ್ಗರಣೆಗೆ ಹೆಚ್ಚಾಗಿ ಬೆಳ್ಳುಳ್ಳಿ ಕೂಡ ಬಳಸುತ್ತಿಲ್ಲ. ಶ್ರಾವಣ ಮುಗಿದು ದಸರಾ ಪ್ರಾರಂಭವಾಗುತ್ತಿದೆ. ಮನೆಗಳಲ್ಲಿ ಒಗ್ಗರಣೆ ಘಾಟು ಹೆಚ್ಚಲಿದೆ. ಈ ನಡುವೆ ಬೆಳ್ಳುಳ್ಳಿ ಬೆಲೆ ಗ್ರಾಹಕರ ಜೇಬು ಸುಡುತ್ತಿದೆ. ಈಗ ಮಾರುಕಟ್ಟೆಯಲ್ಲಿ ಕೆಜಿಗೆ 400 ರೂ. ದಾಟಿದ್ದು, ಮಸಾಲೆಗೆ ಬೆಳ್ಳುಳ್ಳಿ ಬಳಸಲು ಹಿಂದೇಟು ಹಾಕುವಂತಾಗಿದೆ. +ತಿಂಡಿಗಳಿಗೆ, ಸಾಂಬಾರಿಗೆ ಬೆಳ್ಳುಳ್ಳಿ ಇಲ್ಲದಿದ್ದರೆ ರುಚಿ ಇರುವುದಿಲ್ಲ. ಆದರೆ ಬೆಲೆ ಏರಿಕೆಯಾಗಿದ್ದು, ಗೃಹಿಣಿಯರಿಗೆ ಕೈ ಕಟ್ಟಿದಂತಾಗಿದೆ.ಬೆಂಗಳೂರಿನ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಪ್ರತಿದಿನ 5000 ರಿಂದ 6000 ಚೀಲ ಬೆಳ್ಳುಳ್ಳಿ ಮಾರಾಟವಾಗುತ್ತಿತ್ತು. ಸದ್ಯ ಬೆಲೆ ಹೆಚ್ಚಳದಿಂದ ಕೇವಲ 2,500 ಚೀಲ ಮಾರಾಟವಾಗುತ್ತಿದೆ. ಮಾರುಕಟ್ಟೆಯಿಂದ ರಾಜ್ಯದ ವಿವಿಧೆಡೆಗೆ ಪೂರೈಕೆಯಾಗುತ್ತಿದೆ.ರಾಜ್ಯದ ವಿವಿಧೆಡೆ ಈ ಬಾರಿ ಭಾರಿ ಮಳೆಯಾಗಿದ್ದು, ಬೆಳೆಗಳು ನಾಶವಾಗಿದ್ದು, ಹೊಸ ಬೆಳ್ಳುಳ್ಳಿ ಇನ್ನು 2-3 ತಿಂಗಳಲ್ಲಿ ಕಟಾವಿಗೆ ಬರಲಿದೆ. ಅಲ್ಲಿಯವರೆಗೂ ಬೆಲೆ ಇಳಿಕೆಯಾಗುವ ಲಕ್ಷಣಗಳಿಲ್ಲ ಎಂದು ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ. +ಈರುಳ್ಳಿ ಬೆಲೆಯೂ ಏರಿಕೆ :ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಲೇ ಇದ್ದು, ಗ್ರಾಹಕರ ಕಣ್ಣಲ್ಲಿ ಕೊಳ್ಳುವಾಗಲೇ ನೀರು ತರಿಸುತ್ತಿದೆ. ಗುಣಮಟ್ಟದ ಈರುಳ್ಳಿ ಕೆ.ಜಿ.ಗೆ 60 ರೂ.ಗೆ ಮಾರಾಟವಾಗುತ್ತಿದೆ. ಕಳೆದ ಕೆಲವು ತಿಂಗಳ ಹಿಂದೆ 100 ರೂ.ಗೆ 5 ಕೆ.ಜಿ. ಮಾರಾಟವಾಗುತ್ತಿದ್ದ ಈರುಳ್ಳಿ ಈಗ 250 ರೂ.ಗೆ 4 ಕೆ.ಜಿ. ಮಾರಾಟ ಮಾಡಲಾಗುತ್ತಿದೆ. +ಹೆಚ್ಚಾಗಿ ಈರುಳ್ಳಿ ಬೆಳೆಯುವ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೆಳಗಾವಿ ಸೇರಿದಂತೆ ಮತ್ತಿತರ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳವಾಗಿದೆ. \ No newline at end of file diff --git a/eesanje/url_46_30_6.txt b/eesanje/url_46_30_6.txt new file mode 100644 index 0000000000000000000000000000000000000000..42dbc6a094039a40c4b9763b539dde657c856ca9 --- /dev/null +++ b/eesanje/url_46_30_6.txt @@ -0,0 +1,6 @@ +ಸುಪ್ರೀಂ ಅಂಗಳಕ್ಕೆ ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ + ; +ಬೆಂಗಳೂರು, ಆ.29: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್‌ ವಿರುಧ್ದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯಸರ್ಕಾರದ ನಿರ್ಧಾಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಹೈಕೋಟ್‌ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್‌ ಹಾಗು ಉಮೇಶ್‌ಎಂ ಅಡಿಗ ಅವರು ಕಾಯ್ದಿರಿಸಿದ್ದ ತೀರ್ಪು ಅನ್ನು ಪ್ರಕಟಿಸಿದೆ. +ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಬಿಎಸ್‌‍ ಯಡಿಯೂರಪ್ಪ ಅವರ ಅಧಿಕಾರದ ಅವಧಿಯಲ್ಲಿ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಹಿಂಪಡೆಯಲಾಗಿತ್ತು.ಇದನ್ನು ಪ್ರಶ್ನಿಸಿ ಕಳೆದ ಜ.5ರಂದು ಹೈಕೋರ್ಟ್‌ಗೆ ರಿಟ್‌ ಪಿಟೀಷನ್‌ ಸಲ್ಲಿಸಿತ್ತು.ಅದರಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ.ಗೃಹ ಇಲಾಖೆ ಕಾರ್ಯದರ್ಶಿ,ಉಪ ಕಾರ್ಯದರ್ಶಿ,ಕರ್ನಾಟಕ ಲೋಕಾಯುಕ್ತ ಹಾಗು ಉಪ ಮುಖ್ಯಮಂತ್ರಿ ಡಿ.ಕೆ ಶವಕುಮಾರ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. +2023ರ ನ.28 ರಂದು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಧಾರ ಸರಿಯಲ್ಲ ,ಈಗಾಗಲೆ ಸಿಬಿಐ ಬಹುತೇಖ ತನಿಖೆ ಪೂರ್ಣಗೊಂಡಿದೆ ಈ ಹಂತದಲ್ಲಿ ಅನುಮತಿ ಹಿಂಪಡೆಯಲಾಗಿದೆ ಎಂದು ಆಕ್ಷೇಪಿಸಿತ್ತು.ಇದಕ್ಕೆ ಪ್ರತಿಯಾಗಿ ಡಿಕೆಶಿ ಪರ ವಾದ ಮಂಡಿಸಿದ ಅಭಿಶೇಕ್‌ ಮನು ಸಿಂಘ್ವಿ ಹಿಂದಿನ ಸರ್ಕಾರ ರಾಜಕೀಯ ದ್ವೇಷದಿಂದ ಸಿಬಿಐ ತನಿಖೆಗೆ ನೀಡಿದೆ ,ಇದಲ್ಲದೆ ಇಡಿ ತನಿಖೆಯೂ ನಡೆಯುತ್ತಿದೆ ಎಂದು ಪ್ರತಿಪಾದಿಸಿತ್ತು. +ಈ ನಡುವೆ ರಾಜ್ಯ ಸರ್ಕಾರ ಸಿಬಿಐ ತನಿಖೆ ಬದಲಾಗಿ ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರಿಸಲಾಗಿತು.ಇದು ಗೊಂದಲ ಮೂಡಿಸಿತ್ತು.ವಾದ -ಪ್ರತಿವಾದ ಆಲಿಸಿ ತೀರ್ಪನ್ನು ಕಾಯ್ಧಿರಿಸಿತ್ತು.ಇಂದು ವಿಭಾಗೀಯ ಪೀಠ ತೀರ್ಪು ಪ್ರಕಟಿಸಿ.ಸಂವಿಧಾನಕ್ಕೆ ಸಂಬಂಧಿಸಿದ ಈ ವಿಷಯದ ತೀರ್ಮಾನವನ್ನು ಸುಪ್ರಿಂ ಕೋರ್ಟ್‌ನಲ್ಲಿ ಕೈಗೊಳ್ಳಬೇಕು ಇಲ್ಲಿ ಈ ಅರ್ಜಿ ಅಮಾನ್ಯ ಎಂದು ಹೇಳಿದೆ. ಸುಪ್ರೀಂ ಕೋರ್ಟ್ ನಲ್ಲಿ ಹೋಗಿ ಇದರ ಬಗ್ಗೆ ತೀರ್ಮಾನ ಕೈಗೊಳ್ಳಿ ಎಂದು ಹೈಉಕೋರ್ಟ್ ತಿಳಿಸಿದೆ. \ No newline at end of file diff --git a/eesanje/url_46_30_7.txt b/eesanje/url_46_30_7.txt new file mode 100644 index 0000000000000000000000000000000000000000..493b56cc09f38ef8610c6952b6668ddc75f5a98a --- /dev/null +++ b/eesanje/url_46_30_7.txt @@ -0,0 +1,6 @@ +ಪರಪ್ಪನ ಕಾರಾಗೃಹದ ಅಧಿಕಾರಿ, ಸಿಬ್ಬಂದಿಯ ವಿಚಾರಣೆ + , +ಬೆಂಗಳೂರು,ಆ.29-ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಕಳೆದ ಶನಿವಾರ ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಏನೂ ಪತ್ತೆಯಾಗದ ಬಗ್ಗೆ ಹಾಗೂ ಜೈಲಿನ ಸೂಪರಿಡೆಂಟ್ ಬರಬೇಕೆಂದು ಅರ್ಧಗಂಟೆ ಮುಖ್ಯದ್ವಾರದಲ್ಲೇ ತಡೆದಿದ್ದ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಎಸಿಪಿ ನೇತೃತ್ವದ ತಂಡ ತನಿಖೆ ತೀವ್ರಗೊಳಿಸಿದೆ. +ಅಂದು ಸಿಸಿಬಿ ಪೊಲೀಸರು ತಪಾಸಣೆಗೆಂದು ಹೋದಾಗ 4 ರಟ್ ಬಾಕ್‌್ಸಗಳಲ್ಲಿ ಕಸ ಇದೆ ಎಂದು ಹೊರಗೆ ತೆಗೆದುಕೊಂಡು ಹೋಗಿದ್ದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.ಕಳೆದ ಶನಿವಾರ ಯಾವ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯದಲ್ಲಿದ್ದರು? ಎಂಬ ಬಗ್ಗೆ ಪಟ್ಟಿಯನ್ನು ತೆಗೆದುಕೊಂಡು ಒಬ್ಬೊಬ್ಬ ಸಿಬ್ಬಂದಿಯನ್ನೇ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳುತ್ತಿದೆ. +ಅಂದು ಸಿಸಿಬಿ ಪೊಲೀಸರು ಬಂದ ಸಂದರ್ಭದಲ್ಲಿ ಯಾಕೆ ತಡೆದೀರಿ? ಕಸದ ಬಾಕ್‌್ಸನ್ನು ಎಲ್ಲಿ ತೆಗೆದುಕೊಂಡು ಹೋಗಿ ಎಸಿದ್ದೀರಿ? ಅದರಲ್ಲಿ ಯಾವ ರೀತಿಯ ಕಸ ಇತ್ತು? ಪ್ರತಿದಿನ ಹೀಗೆ ಮಾಡುತ್ತಿದ್ದೀರಾ? ಎಂಬಿತ್ಯಾದಿ ಮಾಹಿತಿಗಳನ್ನು ತಂಡ ಕಲೆ ಹಾಕುತ್ತಿದೆ. +ನಂತರ ಅಂದು ಕರ್ತವ್ಯದಲ್ಲಿದ್ದ ಜೈಲು ಅಧಿಕಾರಿಗಳನ್ನು ಸಹ ಒಬ್ಬೊಬ್ಬರಾಗಿ ವಿಚಾರಣೆ ನಡೆಸಲಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಘಟನೆಗೆ ಸಂಬಂಧಿಸಿದಂತೆ ಎಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಲೋಪ ವೆಸಗಿದ್ದಾರೆ ಎಂಬ ಬಗ್ಗೆ ಈ ತಂಡ ತನಿಖೆ ಕೈಗೊಂಡಿದೆ. \ No newline at end of file diff --git a/eesanje/url_46_30_8.txt b/eesanje/url_46_30_8.txt new file mode 100644 index 0000000000000000000000000000000000000000..409727b3fb6c46a0640e29eacb7275a757e2502d --- /dev/null +++ b/eesanje/url_46_30_8.txt @@ -0,0 +1,8 @@ +ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ + , +ಬೆಂಗಳೂರು, ಆ.29– ಉತ್ತರ ಬಂಗಾಳ ಕೊಲ್ಲಿ ಮತ್ತು ಪೂರ್ವ ಮಧ್ಯ ಸಮುದ್ರಗಳಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ ಯಾಗುವ ಮುನ್ಸೂಚನೆಗಳಿವೆ. +ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲೆ ಹೆಚ್ಚಿನ ರೀತಿ ಉಂಟಾಗುವುದಿಲ್ಲ. ಆದರೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. +ಕಡಿಮೆ ಒತ್ತಡದ ಪ್ರದೇಶದಿಂದಾಗಿ ಮಳೆಯ ಮಾರುತಗಳು ಎರಡು ದಿನಗಳಲ್ಲಿ ದಕ್ಷಿಣ ಒಡಿಶಾ ಮತ್ತು ಆಂದ್ರಪ್ರದೇಶದ ಉತ್ತರ ಕರಾವಳಿಯಿಂದ ಪಶ್ಚಿಮ-ವಾಯುವ್ಯ ದಿಕ್ಕಿನ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯವರೆಗೆ, ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. +ಶನಿವಾರದಿಂದ ಮಳೆ ತೀವ್ರತೆ ಈ ಭಾಗದಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಚದುರಿಂತೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. +ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ವಾಯುಭಾರ ಕುಸಿತದ ಪ್ರಭಾವದಿಂದ ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಕೆಲವೆಡೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. \ No newline at end of file diff --git a/eesanje/url_46_30_9.txt b/eesanje/url_46_30_9.txt new file mode 100644 index 0000000000000000000000000000000000000000..7bc37d5a64a04bd2d55cf11d0443f1fdce19d457 --- /dev/null +++ b/eesanje/url_46_30_9.txt @@ -0,0 +1,17 @@ +16ನೇ ಹಣ ಕಾಸು ಆಯೋಗದ ಬಳಿ ವಿಶೇಷ ಅನುದಾನಕ್ಕೆ ಸಿಎಂ ಮನವಿ + 16th +ಬೆಂಗಳೂರು,ಆ.29-ಬೆಂಗಳೂರಿನ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಅಸಮತೋಲನ ನಿವಾರಣೆ, ಪಶ್ಚಿಮ ಘಟ್ಟಗಳಲ್ಲಿನ ವಿಶೇಷ ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ 16ನೇ ಹಣ ಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಜೊತೆಗೆ ಸೆಸ್ ಮತ್ತು ಸರ್ಚಾರ್ಜ್ನಲ್ಲೂ ಪಾಲು ನೀಡುವಂತೆ ಪ್ರತಿಪಾ ದಿಸಿದ್ದಾರೆ. +ನಗರದ ಖಾಸಗಿ ಹೋಟೆಲ್ನಲ್ಲಿ 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯ, ಸದಸ್ಯರಾದ ಅಜಯ್ ನಾರಾಯಣಝ, ಅನೈಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡೆ, ಡಾ.ಸೌಮ್ಯಕಾಂತಿ ಘೋಷ್ ಅವರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಆರ್ಥಿಕ ಒಕ್ಕೂಟ ವ್ಯವಸ್ಥೆಯ ಸಹಭಾಗಿತ್ವವನ್ನು ಪ್ರತಿಪಾದಿಸಿದ್ದಾರೆ. +ಆರ್ಥಿಕವಾಗಿ ಹಿಂದುಳಿದ ರಾಜ್ಯಗಳಿಗೆ ಮುಂದುವರೆದ ರಾಜ್ಯಗಳು ಬೆಂಬಲ ನೀಡುವುದು ಅತ್ಯಗತ್ಯ. ಆದರೆ ಅದು ಅವರದ್ದೇ ಸ್ವಂತ ನೆಲದ ಖರ್ಚುವೆಚ್ಚಗಳಿಗೆ ಮತ್ತು ಆರ್ಥಿಕ ಸಾಮರ್ಥ್ಯಕ್ಕೆ ದುಬಾರಿಯಾಗಬಾರದು. ಬೃಹತ್ ಪ್ರಮಾಣದ ಸಂಪನೂಲ ಸಂಗ್ರಹವಾಗುವ ರಾಜ್ಯಗಳಲ್ಲಿ ತಮಲ್ಲೇ ಹಣಕಾಸು ಹಂಚಿಕೆಯಾಗುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. +ಕರ್ನಾಟಕ ರಾಜ್ಯ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಗಮನ ಕೇಂದ್ರೀಕರಿಸಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಒತ್ತು ನೀಡುತ್ತಿದೆ. ನಗರೀಕರಣದ ಸವಾಲುಗಳು ನಮ ಮುಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದಿಂದ ಬೃಹತ್ ಪ್ರಮಾಣದ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. +ಬೆಂಗಳೂರಿನಲ್ಲಿ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ.ಗಳ ಹೂಡಿಕೆಯ ಅಗತ್ಯವಿದ್ದು, ಇದಕ್ಕೆ ಹೊಂದಾಣಿಕೆಯ ಮೊತ್ತವಾಗಿರುವ 27,793 ಕೋಟಿ ರೂ.ಗಳನ್ನು ಕೇಂದ್ರಸರ್ಕಾರ ಅನುದಾನದ ರೂಪದಲ್ಲಿ ನೀಡಬೇಕಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 25,000 ಕೋಟಿ ರೂ. ನೀಡಬೇಕಿದ್ದು, ಇದಕ್ಕೆ ಸಮನಾಂತರವಾದ ನೆರವಿಗೆ ಹಣಕಾಸು ಆಯೋಗ ಶಿಫಾರಸ್ಸು ಮಾಡಬೇಕಿದೆ. +ಪಶ್ಚಿಮಘಟ್ಟಗಳಲ್ಲಿನ ವಿಪತ್ತು ನಿರ್ವಹಣಾ ಸಾಮರ್ಥ್ಯ ವೃದ್ಧಿ ಹಾಗೂ ಸಕಾಲಿಕ ಪರಿಹಾರ ಪುನರ್ವಸತಿ ಕ್ರಮಗಳಿಗಾಗಿ 10 ಸಾವಿರ ಕೋಟಿ ರೂ.ಗಳ ನೆರವು ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ. +ಸಮನಾಂತರ ಹಾಗೂ ಲಂಬಾಕೃತಿಯ ಆರ್ಥಿಕಾಭಿವೃದ್ಧಿಗೆ ಪ್ರಮುಖ ಶಿಫಾರಸ್ಸುಗಳನ್ನು ನೀಡುವ ಕುರಿತು ಸಲಹೆ ನೀಡಿರುವ ಸಿದ್ದರಾಮಯ್ಯ, ಲಂಬಾಕಾರದ ಸಂಪನೂಲ ಹಂಚಿಕೆ ಶೇ.50ರ ಪ್ರಮಾಣದಲ್ಲಿರಬೇಕು. ಸರ್ಚಾರ್ಜ್ ಮತ್ತು ಸೆಸ್ಗಳ ಗರಿಷ್ಠ ಮಿತಿ ಒಟ್ಟು ತೆರಿಗೆಯ ಶೇ.5ರ ಮಿತಿಯೊಳಗಿರಬೇಕು. ಯಾವುದಾದರೂ ಮಿತಿಯನ್ನು ಮೀರಿದರೆ ಅದು ಅನುದಾನದ ವಿಭಜನೆಯ ಭಾಗವಾಗಿರಬೇಕು. ಕೇಂದ್ರದಿಂದ ತೆರಿಗೆಯೇತರ ಸಂಪನೂಲಗಳ ಹಂಚಿಕೆಗೆ ಅಗತ್ಯವಾದ ಸಾಂವಿಧಾನಿಕ ತಿದ್ದುಪಡಿ ತರಲು ಶಿಫಾರಸ್ಸು ಮಾಡುವಂತೆ ಅವರು ಒತ್ತಾಯಿಸಿದ್ದಾರೆ. +ಸಮತೋಲಿತ, ಸಮರ್ಥ ಹಾಗೂ ಕಾರ್ಯಸಾಧುವಾದ ಸಲಹೆಗಳನ್ನು ಆಯೋಗ ದಿಟ್ಟತನದಿಂದ ನೀಡಬೇಕಿದೆ. ಕರ್ನಾಟಕಕ್ಕೆ ಸಂಪನೂಲ ಕೊಡುಗೆಯಲ್ಲಿ ಸ್ಥಳೀಯವಾಗಿ ಶೇ.60 ರಷ್ಟು ಮರುಪಾವತಿಯಾಗಬೇಕು. ಕೇಂದ್ರ ಮತ್ತು ರಾಜ್ಯಗಳ ನಡುವಿನ ಆರ್ಥಿಕ ಸಂಬಂಧಗಳು ಮೊನಚಾದ ಘಮ್ಯವನ್ನು 16ನೇ ಹಣಕಾಸು ಆಯೋಗದ ಶಿಫಾರಸ್ಸಿಗೆ, ಸುಸ್ಥಿರ ಅಭಿವೃದ್ಧಿ ಮತ್ತು ಪರಿಣಾಮಕಾರಿ ಸಾಮರ್ಥ್ಯ ವೃದ್ಧಿಗೆ ಪೂರಕವಾಗಿರಬೇಕು ಎಂದು ಹೇಳಿದ್ದಾರೆ. +ಬಲಿಷ್ಠ ಭಾರತಕ್ಕೆ ಬಲಿಷ್ಠ ಕರ್ನಾಟಕದ ಪಾತ್ರ ಪ್ರಮುಖವಾಗಿದೆ. ದೇಶದ ಜಿಡಿಪಿ ಮತ್ತು ನಿವ್ವಳ ತೆರಿಗೆ ಆದಾಯಕ್ಕೆ ರಾಜ್ಯದ ಕೊಡುಗೆ ಅಮೂಲ್ಯವಾದುದು. ದೇಶಕ್ಕೆ ಕೊಡುಗೆ ನೀಡುತ್ತಿರುವ 7 ಕೋಟಿ ಕನ್ನಡಿಗರು ಹೆಮೆಯ ಭಾವನೆ ಹಾಗೂ ಅಷ್ಟೇ ಆಶಾಭಾವನೆಯನ್ನು ಹೊಂದಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸಂಪನೂಲ ಹಂಚಿಕೆಯ ಶಿಫಾರಸ್ಸುಗಳನ್ನು ಮಾಡುವಂತೆ ಸಲಹೆ ನೀಡಿದ್ದಾರೆ. +ಸಹಭಾಗಿತ್ವ ಒಕ್ಕೂಟ ಮತ್ತು ಆರ್ಥಿಕ ಒಕ್ಕೂಟದ ಹಿನ್ನೆಲೆಯಲ್ಲಿ ಸಂವಿಧಾನದ ಪರಿಚ್ಛೇದ 280 ರಡಿ ಪ್ರಧಾನಮಂತ್ರಿಗಳು ಹಣಕಾಸು ಆಯೋಗವನ್ನು ರಚಿಸಿದ್ದಾರೆ. +ಸ್ವತಂತ್ರ, ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾದ ಸಲಹೆಗಳನ್ನು ಆಯೋಗ ನೀಡಬೇಕಿದೆ. ಈ ವೇಳೆ ಸಾಮರ್ಥ್ಯ ವೃದ್ಧಿ ಮತ್ತು ಪಾಲುದಾರಿಕೆ ತತ್ವಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸಂಪನೂಲದ ಮರು ಹಂಚಿಕೆಯ ಪ್ರಕ್ರಿಯೆಗಳು ಅಗತ್ಯವಿದೆ. ತೆರಿಗೆದಾರರ ನಿರೀಕ್ಷೆಗಳಿಗೆ ತಕ್ಕ ಪ್ರತಿಫಲ ದೊರೆತರೆ ಸಾರ್ವಜನಿಕರ ವಿಶ್ವಾಸವು ವೃದ್ಧಿಯಾಗಲಿದೆ. ಹೀಗಾಗಿ ಹಣಕಾಸು ಆಯೋಗ ಸಮತೋಲಿತ ಸಾಮರ್ಥ್ಯಕ್ಕಾಗಿ ಬಿಗಿಯಾದ ಹಗ್ಗದ ನಡಿಗೆಯನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. +ಕರ್ನಾಟಕ ದೇಶದ ಜಿಡಿಪಿಗೆ ಶೇ.8.4 ರಷ್ಟು ಕೊಡುಗೆ ನೀಡಿದ್ದರೆ, ಜನಸಂಖ್ಯೆಯಲ್ಲಿ ಶೇ.5 ರಷ್ಟು ಪಾಲು ಹೊಂದಿದೆ. ಜಿಎಸ್ಟಿ ಸಂಗ್ರಹದಲ್ಲಿ 2ನೇ ಸ್ಥಾನದಲ್ಲಿದೆ. ವಾರ್ಷಿಕವಾಗಿ 4 ಲಕ್ಷ ಕೋಟಿ ರೂ.ಗಳ ಸಂಪನೂಲ ಒದಗಿಸಲಾಗುತ್ತಿದೆ. ಪ್ರತಿಯಾಗಿ ನಮಗೆ ಹಂಚಿಕೆಯಾಗುತ್ತಿರುವುದು 45 ಸಾವಿರ ಕೋಟಿ ಮಾತ್ರ. ಅದರಲ್ಲಿ 15 ಸಾವಿರ ಕೋಟಿ ಅನುದಾನದ ರೂಪದಲ್ಲಿದೆ. ಇದರ ಅರ್ಥ ಕರ್ನಾಟಕದ ತೆರಿಗೆದಾರರು 1 ರೂಪಾಯಿಯಲ್ಲಿ 15 ಪೈಸೆಯನ್ನು ಮಾತ್ರ ವಾಪಸ್ ಪಡೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. +15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದ ಕರ್ನಾಟಕದ ತೆರಿಗೆ ಪಾಲು ಶೇ.4.713 ರಿಂದ ಶೇ.3.647 ಕ್ಕೆ ಕುಸಿದಿದೆ. ಇದರ ಪರಿಣಾಮ 2021 ರಿಂದ 2026 ರ ಅವಧಿಯಲ್ಲಿ 68,275 ಕೋಟಿ ರೂ.ಗಳ ನಷ್ಟವಾಗಿದೆ. ವಿಶೇಷವಾಗಿ 11,495 ಕೋಟಿ ರೂ.ಗಳ ಅನುದಾನಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಂಡಿಲ್ಲ. ಹೀಗಾಗಿ ಹಿಂದಿನ ಹಣಕಾಸು ಆಯೋಗದಿಂದ ರಾಜ್ಯಕ್ಕಾದ ಒಟ್ಟು ನಷ್ಟ 79,770 ಕೋಟಿ ರೂ.ಗಳೆಂದು ಸಿದ್ದರಾಮಯ್ಯ ವಿವರಿಸಿದ್ದಾರೆ. +ಕರ್ನಾಟಕದ ಸಂಪನೂಲದಲ್ಲಿ 35 ರಿಂದ 40 ಸಾವಿರ ಕೋಟಿ ರೂ.ಗಳು ಇತರ ರಾಜ್ಯಗಳಿಗೆ ಹಂಚಿಕೆಯಾಗುತ್ತದೆ. ಜೊತೆಗೆ ಸೆಸ್ ಮತ್ತು ಸರ್ಚಾರ್ಜ್ಗಳನ್ನು ಕೇಂದ್ರ ಸರ್ಕಾರ 50 ರಿಂದ 55 ರಷ್ಟು ಹೆಚ್ಚಳ ಮಾಡಿಕೊಂಡಿದ್ದು, ಇದರ ಹಂಚಿಕೆಯಾಗದೇ ಇರುವುದರಿಂದ 2017 ರಿಂದ 2025 ರವರೆಗೆ 55,359 ಕೋಟಿ ರೂ.ಗಳ ನಷ್ಟವಾಗುತ್ತಿದೆ ಎಂದಿದ್ದಾರೆ. +ಕೇಂದ್ರಸರ್ಕಾರ ಅನುದಾನ ಕಡಿತ ಮಾಡಿದ್ದರ ಹೊರತಾಗಿಯೂ ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಿದೆ. ಬಂಡವಾಳ ವೆಚ್ಚವನ್ನು ಜಿಡಿಪಿಯ ಶೇ.2 ರ ಮಿತಿಯಲ್ಲೇ ನಿರ್ವಹಣೆ ಮಾಡುತ್ತಿದ್ದು, ದೇಶದಲ್ಲೇ ಮುಂಚೂಣಿ ಸ್ಥಾನದಲ್ಲಿದೆ ಎಂದು ಪ್ರಶಂಸಿಕೊಂಡಿದ್ದಾರೆ. \ No newline at end of file diff --git a/eesanje/url_46_310_1.txt b/eesanje/url_46_310_1.txt new file mode 100644 index 0000000000000000000000000000000000000000..128df2a8aa1a2ef69fadbe489b11b04b31b61f35 --- /dev/null +++ b/eesanje/url_46_310_1.txt @@ -0,0 +1,13 @@ +ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ +ಮೈಸೂರು, ನ.18- ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. +ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದರು. +ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಭ್ರಮೆ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ. +ವಿಜೆಯೆಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ, ಆರ್.ಅಶೋಕರನ್ನು ವಿಪಕ್ಷ ನಾಯಕನ್ನಾಗಿ ಮಾಡಿರುವುದಕ್ಕೆ ಅವರೆಲ್ಲಾ ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ಕಾದು ನೋಡಿ ಬಿಜೆಪಿಯ ಪರಿಸ್ಥಿತಿ ಗೋತ್ತಾಗಲಿದೆ ಎಂದರು. +ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕ ಹರೀಶ್‍ಗೌಡರನ್ನು ಕೇಳಿ ಎಂದರು. +ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ +ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. +ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಕಾಂಗ್ರೆಸ್ ನವರು ಕೌರವ ಸಂಸ್ಕøತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸುಳ್ಳು ಹೇಳುವುದರಿಂದಲೇ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು 19 ಸ್ಥಾನಕ್ಕೆ ಕುಸಿದಿದ್ದಾರೆ ಎಂದರು. +ತಮ್ಮ ಪುತ್ರ ಮಾಜಿ ಶಾಸಕ ಯತೀಂದ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದರೆ ಅಂತಹ ವ್ಯತ್ಯಾಸವೇನು ಆಗುವುದಿಲ್ಲ ಎಂದ ಅವರು, ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು. +ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಾಲಿಶವಾದದ್ದು, ಪೆನ್ ಡ್ರೈವ್ ತೋರಿಸಿದ ಬಳಿಕ ವಿಧಾನಸಭೆ ಅಧಿವೇಶನ ನಡೆದಿತ್ತು. ಅಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ. ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಕುಮಾರಸ್ವಾಮಿಯವರಿಗೆ ಯಾರು ಮನವಿ ಮಾಡಿದವರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಲಿ. +ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಚಿಕ್ಕದಾಗಲಿ, ದೊಡ್ಡದಾಗಲಿ ಅಪರಾಧವೇ ಆಗಿದೆ. ಅವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದರು. \ No newline at end of file diff --git a/eesanje/url_46_310_10.txt b/eesanje/url_46_310_10.txt new file mode 100644 index 0000000000000000000000000000000000000000..faaa7ae10ec780759ddb611a37949a1ab54e6ccd --- /dev/null +++ b/eesanje/url_46_310_10.txt @@ -0,0 +1,11 @@ +ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಎಂಪಿ ಪುತ್ರನ ವಿರುದ್ಧ ದೂರು ದಾಖಲು +ಬೆಂಗಳೂರು, ನ.17- ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿ ಇದೀಗ ಮೋಸ ಮಾಡಿದ್ದಾನೆಂದು ಸಂಸದರೊಬ್ಬರ ಪುತ್ರನ ವಿರುದ್ಧ ನಗರದ ಯುವತಿಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. +ಮೈಸೂರಿನ ಪಿಯು ಕಾಲೇಜಿನ ಉಪನ್ಯಾಸಕ, ಸಂಸದರೊಬ್ಬರ ಪುತ್ರ ರಂಗನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ವಿಜಯನಗರದ ನಿವಾಸಿ 24 ವರ್ಷದ ಯುವತಿಗೆ ರಂಗನಾಥ್ ಸ್ನೇಹಿತರ ಮೂಲಕ ಪರಿಚಯವಾಗಿದ್ದು, ಆಗಾಗ ಫೋನ್ ಮಾಡಿ ಮಾತನಾಡಿಸುತ್ತಿದ್ದನು. +ಸ್ವಲ್ಪ ದಿನಗಳ ನಂತರ ಯುವತಿಗೆ ರಂಗನಾಥ್ ಕರೆ ಮಾಡಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ನಾನು ಮೈಸೂರಿನ ಪಿಯು ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದು, ಕೈ ತುಂಬಾ ಸಂಬಳ ಬರುತ್ತದೆ ಎಂದು ಹೇಳಿದ್ದಾನೆ. ಅಲ್ಲದೆ, ನೀನು ನನ್ನನ್ನು ಮದುವೆಯಾದರೆ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ನಂಬಿಸಿದ್ದರಿಂದ ಆ ಯುವತಿ ಸ್ನೇಹ ಮುಂದುವರೆಸಿದ್ದಾರೆ. +ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್ +ಕಳೆದ ಜ.23ರಂದು ರಂಗನಾಥ್ ಕರೆ ಮಾಡಿ, ಬೆಂಗಳೂರಿನಲ್ಲಿ ಕೆಲಸವಿದೆ, ನಾನು ಬರುತ್ತಿದ್ದೇನೆಂದು ಹೇಳಿ 24ರಂದು ಬಂದು ಕೊಡಿಗೇಹಳ್ಳಿಯ ಸ್ವಾತಿ ಹೊಟೇಲ್‍ಗೆ ಯುವತಿಯನ್ನು ಕರೆಸಿಕೊಂಡಿದ್ದಾನೆ. ನಂತರ ಅಲ್ಲಿಂದ ಮೈಸೂರಿಗೆ ಹೋಗಿ ಅಲ್ಲಿನ ಲಲಿತ ಮಹಲ್ ಪ್ಯಾಲೆಸ್ ಹೊಟೇಲ್‍ಗೆ ಕರೆದುಕೊಂಡು ಹೋಗಿ ನಿನ್ನನ್ನು ನಮ್ಮ ಮನೆಗೆ ಕರೆದುಕೊಂಡು ಹೋಗಲು ಆಗುವುದಿಲ್ಲ. ಇವತ್ತು ಇಲ್ಲಿಯೇ ಇದ್ದು, ಬೆಳಗ್ಗೆ ನಮ್ಮ ಮನೆಗೆ ಹೋಗೋಣವೆಂದು ನಂಬಿಸಿ ಹೊಟೇಲ್‍ನಲ್ಲೇ ಉಳಿಸಿಕೊಂಡಿದ್ದಾಗ ರಾತ್ರಿ ಮದ್ಯ ಸೇವಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿ ಮಾರನೆ ದಿನ ಬೆಳಗ್ಗೆ ನನ್ನನ್ನು ಬೆಂಗಳೂರಿಗೆ ಕಳುಹಿಸಿದ್ದಾನೆಂದು ದೂರಿನಲ್ಲಿ ಯುವತಿ ತಿಳಿಸಿದ್ದಾಳೆ. +ನಂತರದ ದಿನಗಳಲ್ಲಿ ರಂಗನಾಥ್ ನನ್ನ ಜತೆ ಮೊದಲಿನ ಹಾಗೆ ಮಾತನಾಡದೆ ನಿರ್ಲಕ್ಷ್ಯ ಮಾಡಿ ಮದುವೆ ಮಾಡಿಕೊಳ್ಳದೆ ಮೋಸ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದಾಗ ಕೊಲೆ ಬೆದರಿಕೆ ಹಾಕಿರುತ್ತಾನೆಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ. +ನೋಟಿಸ್: ಯುವತಿ ನೀಡಿರುವ ದೂರಿನನ್ವಯ ಬಸವನಗುಡಿ ಮಹಿಳಾ ಠಾಣೆ ಇನ್ಸ್‍ಪೆಕ್ಟರ್ ಅವರು ರಂಗನಾಥ್‍ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ದೂರಿನನ್ವಯ ಯುವತಿಗೆ ಸೂಕ್ತ ದಾಖಲೆಯೊಂದಿಗೆ ಠಾಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. +ಯುವತಿ ವಿರುದ್ಧ ದೂರು:ರಂಗನಾಥ್ ಸಹ ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿಯು ಸ್ನೇಹಿತರ ಮೂಲಕ ಪರಿಯಚವಾಗಿದ್ದು, ಆಕೆ ಜತೆ ನಾನು ಇರುವ ಫೋಟೋಗಳನ್ನು ನನ್ನ ಪತ್ನಿಗೆ ಕಳುಹಿಸಿ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿ, ಮಾನಸಿಕ ಹಿಂಸೆ ನೀಡಿರುತ್ತಾರೆ. ಪದೇ ಪದೇ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ್ದು, 32,500ರೂ. ಆಕೆ ಖಾತೆಗೆ ವರ್ಗಾವಣೆ ಮಾಡಿದ್ದೆನು. +ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್ +ನಂತರದ ದಿನಗಳಲ್ಲಿ 15 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದು, ಹಣ ನೀಡಲು ನಿರಾಕರಿಸಿದಾಗ ಕೊಲೆ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ರಂಗನಾಥ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_310_11.txt b/eesanje/url_46_310_11.txt new file mode 100644 index 0000000000000000000000000000000000000000..9372df942123592b4e2279c9122b81f3ec73bfff --- /dev/null +++ b/eesanje/url_46_310_11.txt @@ -0,0 +1,8 @@ +ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್ +ಬೆಂಗಳೂರು, ನ.17- ಕಾನೂನನ್ನು ಯಾರೇ ಉಲ್ಲಂಘನೆ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು. ಇದರಲ್ಲಿ ವ್ಯಕ್ತಿಗತ ದ್ವೇಷ ಅಥವಾ ರಾಜಕೀಯ ಕಾರಣಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ಕರಾವಳಿ ಭಾಗದಲ್ಲಿ ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ ನೀಡಿರುವುದಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಇರುವುದೇ ಕಾನೂನು ಪರಿಪಾಲನೆ ಮಾಡಲಿಕ್ಕೆ.ಕಾನೂನು ಮೀರಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು. +ಕಾನೂನನ್ನು ಹೊರತು ಪಡಿಸಿ ಪೊಲೀಸ್ ಇಲಾಖೆ ಕೆಲಸ ಮಾಡಲಾಗುವುದಿಲ್ಲ. ಬಜರಂಗದಳವಾಗಲಿ, ಸಂಘ ಸಂಸ್ಥೆಯಾಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ನಮ್ಮ ಸಹಕಾರ ಇರುತ್ತದೆ. ಕಾನೂನು ಮೀರಿದರೆ ಏನು ಮಾಡಬೇಕು. ಪೊಲೀಸ್ ಇಲಾಖೆ ಇರುವುದೇ ಕಾನೂನು ಪಾಲನೆಗೆ ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಈ ಹಂತದಲ್ಲಿ ಯಾವುದೇ ವ್ಯಕ್ತಿಗತ ದ್ವೇಷ, ಮತ್ತೊಬ್ಬರನ್ನು ಹತ್ತಿಕ್ಕವ ಉದ್ದೇಶ ಅಥವಾ ರಾಜಕೀಯ ಕಾರಣಗಳು ಇರುವುದಿಲ್ಲ ಎಂದರು. +ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ +ಬಜರಂಗದಳದವರು ಕಾನೂನು ವ್ಯಾಪ್ತಿಯಲ್ಲಿದ್ದರೆ ನಾವು ಅವರ ಜೊತೆಯಲ್ಲಿ ಇರುತ್ತೇವೆ. ಅವರು ಕಾನೂನು ಮೀರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನಸಾಮಾನ್ಯರಿಗೆ ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‍ಗೆ ಬರುವುದಾದರೆ ನನ್ನ ಅಭ್ಯಂತರ ಇಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡುತ್ತೇನೆ. ಈಗೀನ್ನೂ ಅವರು ಇನ್ನೂ ಬಿಜೆಪಿಯ ಮುಖಂಡರಾಗಿದ್ದಾರೆ. ಈ ಹಂತದಲ್ಲಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದರು. +ಸೋಮಣ್ಣ ವಿಷಯದಲ್ಲಿ ಏನಾಗುತ್ತಿದೆ ಎಂದು ಗೋತ್ತಿಲ್ಲ. ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಅವರು ಅಭ್ಯರ್ಥಿ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅಧ್ಯಕ್ಷರ ಜೊತೆ ಚರ್ಚೆ ಮಾಡಿರಬಹುದು, ಆದರೆ ತಮಗೆ ಮಾಹಿತಿ ಇಲ್ಲ ಎಂದರು. +ರಾಜಕೀಯದಲ್ಲಿ ಎಲ್ಲರಿಗೂ ತಮ್ಮದೆ ಆದ ಶಕ್ತಿ ಇದೆ, ಹಿಂಬಾಲಕರಾಗಿರುತ್ತಾರೆ. ನಾಯಕರು ಬರುವುದರಿಂದ ಅದು ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್‍ಖಾನ್ ನೀಡಿರುವ ಹೇಳಿಕೆಯ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ಗಮನಿಸಿಲ್ಲ, ಗೋತ್ತಿಲ್ಲದೆ ಪ್ರತಿಕ್ರಿಯಿಸಲ್ಲ. ವಿಷಯ ಗೋತ್ತಿಲ್ಲದೆ ಹೇಳಿಕೆ ನೀಡುವುದಿಲ್ಲ ಎಂದರು. \ No newline at end of file diff --git a/eesanje/url_46_310_12.txt b/eesanje/url_46_310_12.txt new file mode 100644 index 0000000000000000000000000000000000000000..9d2d12df687b59c2b1a762acaac5b7e77c9ef703 --- /dev/null +++ b/eesanje/url_46_310_12.txt @@ -0,0 +1,6 @@ +ಡಿಸಿಎಂ ಭೇಟಿ ರಾಜಕೀಯ ಬಣ್ಣ ಬೇಡ: ಜಿ.ಟಿ.ದೇವೇಗೌಡ +ಬೆಂಗಳೂರು,ನ.17- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರು ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿಲ್ಲ ಎಂದು ಸ್ಪಷ್ಟಪಡಿಸಿದರು. ಲೋಕೋಭಿರಾಮವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಯಾವುದೇ ರಾಜಕೀಯ ಉದ್ದೇಶ ಇಟ್ಟುಕೊಂಡು ಭೇಟಿಯಾಗಿರಲಿಲ್ಲ. ವಯಸ್ಸಾದ ಸಂದರ್ಭದಲ್ಲಿ ನೀವು ತಪ್ಪು ಮಾಡಿದ್ದೀರಿ ಅನಿಸುತ್ತೆ ಎಂದು ಶಿವಕುಮಾರ್ ಹೇಳಿದರು. ಆದರೆ ನಾನು ಜೆಡಿಎಸ್‍ನಲ್ಲೇ ಚೆನ್ನಾಗಿದ್ದೇನೆ ಎಂದು ಹೇಳಿದ್ದೇನೆ. +ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್ +ಜೆಡಿಎಸ್ ಬಿಜೆಪಿ ಜೊತೆ ಸದ್ಯಕ್ಕೆ ಹೊಂದಾಣಿಕೆ ಮಾಡಿಕೊಂಡಿದ್ದು, ಅದೇ ರೀತಿ ಮುಂದುವರೆಯಲಿದೆ ಎಂದು ಹೇಳಿದರು. ಮಾಜಿ ಸಿಎಂ ಕುಮಾರಸ್ವಾಮಿ ಯವರನ್ನು ಪದೇ ಪದೇ ಆಕ್ಷೇಪಾರ್ಹವಾಗಿ ಮಾತನಾಡುವುದು ಸರಿಯಲ್ಲ. ನಾವು ಅದೇ ರೀತಿ ಅವರಿಗೆ ಹೇಳಿದರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದರು. +ಇದಕ್ಕೂ ಮುನ್ನ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡರು ಮತ್ತು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದಕ್ಕೆ ಏಕೆ ಬೇರೆ ಅರ್ಥ ಕಲ್ಪಿಸಬೇಕು ಎಂದು ಪ್ರಶ್ನಿಸಿದರು. ಜಿ.ಟಿ.ದೇವೇಗೌಡರು ಶಾಸಕರಾಗಿದ್ದು, ಅವರು ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು. \ No newline at end of file diff --git a/eesanje/url_46_310_2.txt b/eesanje/url_46_310_2.txt new file mode 100644 index 0000000000000000000000000000000000000000..f99e65c27436a11e87c15d0e8834fc29f6878eb6 --- /dev/null +++ b/eesanje/url_46_310_2.txt @@ -0,0 +1,6 @@ +ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ +ಬೆಂಗಳೂರು, ನ.18- ಬಳ್ಳಾರಿ ಸಂಸದ ದೇವೇಂದ್ರಪ್ಪರ ಪುತ್ರ, ಉಪನ್ಯಾಸಕ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ನೇಹ, ಪ್ರೀತಿ, ವಂಚನೆ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. +ಬೆಂಗಳೂರಿನ ವಿಜಯನಗರದ ನಿವಾಸಿ, 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಉಪನ್ಯಾಸಕನ ಜೊತೆ ಆಕೆಗೆ ಮೈಸೂರಿನಲ್ಲಿ ಒಡನಾಟವಿದುದ್ದು. ಬೆಂಗಳೂರಿನಲ್ಲಿ ಈ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ. +ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ +ಉಪನ್ಯಾಸಕ ರಂಗನಾಥ್ ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆಸಿಕೊಂಡು ಅಲ್ಲಿನ ಹೊಟೇಲ್‍ಗೆ ಕರೆದೊಯ್ದು ಲೈಂಗಿಕ ಸಂಪರ್ಕ ಹೊಂದಿ ನಂತರ ಆಕೆಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಪ್ರಕರಣವನ್ನು ಇದೀಗ ಮೈಸೂರು ನಗರ ಪೊಲೀಸರಿಗೆ ವರ್ಗಾಯಿಸಲು ಸಿದ್ಧತೆ ನಡೆಸಿದ್ದಾರೆ. +ಈ ನಡುವೆ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಕೊಡುವಂತೆ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆಂದು ಆಕೆ ವಿರುದ್ಧ ರಂಗನಾಥ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. \ No newline at end of file diff --git a/eesanje/url_46_310_3.txt b/eesanje/url_46_310_3.txt new file mode 100644 index 0000000000000000000000000000000000000000..aa86313fb99e382573ccd75a2c2819d959568a9d --- /dev/null +++ b/eesanje/url_46_310_3.txt @@ -0,0 +1,9 @@ +ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಕಿಡಿ +ಮೈಸೂರು,ನ.18- ಲಿಸ್ಟ್ ಎನ್ನುತ್ತಿದ್ದಂತೆ ಅದು ವರ್ಗಾವಣೆಯ ಪಟ್ಟಿ ಎಂದೇ ಭಾವಿಸುವುದೇಕೆ ಎಂದು ಪ್ರಶ್ನಿಸಿರುವ ಮಾಜಿ ಶಾಸಕ ಯತೀಂದ್ರಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರೆನೋ ಗೋತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಗಾವಣೆಯಲ್ಲೂ ದಂಧೆ ನಡೆದಿದೆ ಎಂದು ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೈರಲ್ ಆಗಿರುವ ವಿಡಿಯೋ ಬಗ್ಗೆ ನಾನು ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ. ಮೊಬೈಲ್ ಸಂಭಾಷಣೆಯಲ್ಲಿ ನಾನು ದುಡ್ಡಿನ ಕುರಿತು ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು ಎಂದಿದ್ದಾರೆ. +ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್‍ಆರ್ ಫಂಡ್ ವಿಚಾರದ ಬಗ್ಗೆ, ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ಎಂದು ಏಕೆ ಭಾವಿಸುತ್ತಾರೆ. ಇವರ ಅವಧಿಯಲ್ಲಿ ಲಿಸ್ಟ್ ಅಂದರೇ ವರ್ಗಾವಣೆ ಅಂದರೇ ಮಾತ್ರವಾಗಿತ್ತಾ, ಅದು ದಂಧೆಯಾಗಿತ್ತಾ ಎಂದು ಯತೀಂದ್ರ ಪ್ರಶ್ನಿಸಿದ್ದಾರೆ. +ಕುಮಾರಸ್ವಾಮಿಯವರ ಪತ್ನಿ, ಪುತ್ರ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಗಳಲ್ಲೆಲ್ಲಾ ದಂಧೆಯೇ ನಡೆದಿದೆಯೇ ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ ಎಂದು ಕೇಳಿದ್ದಾರೆ. +ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್ +ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ. ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೆ, ಅವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ಲವೇ ? ಆರೋಪಗಳನ್ನ ಮಾಡುವಾಗ ದಾಖಲೆ ಇಟ್ಟು ಮಾತನಾಡಲಿ. ದಾಖಲೆ ಇಲ್ಲದೆ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದರು. +ಅನಗತ್ಯವಾಗಿ ಎಲ್ಲಾ ವಿಚಾರಗಲಿಗೂ ನನ್ನ ಹೆಸರನ್ನು ಎಳೆದು ತರಬೇಡಿ, ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಎನ್ನುವವರ ವರ್ಗಾವಣೆ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದರು. +ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎಂಬುವರ ಹೆಸರು ಇರುವುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. \ No newline at end of file diff --git a/eesanje/url_46_310_4.txt b/eesanje/url_46_310_4.txt new file mode 100644 index 0000000000000000000000000000000000000000..b773b76db5ec19bfa7d9caf2a7739091b157c8f2 --- /dev/null +++ b/eesanje/url_46_310_4.txt @@ -0,0 +1,11 @@ +ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ +ಬೆಂಗಳೂರು,ನ.18- ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಫಲಿತಾಂಶ ಬಂದು ಆರು ತಿಂಗಳ ನಂತರ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಗೌರವ ಕೊಟ್ಟಿದೆ. ಆದರೆ ಅವರದೇ ಪಕ್ಷದ ಶಾಸಕರು ಮಾಡಿರುವ ಆರೋಪಗಳಿಗೆ ಬಿಜೆಪಿ ಸಾರ್ವಜನಿಕವಾಗಿ ಉತ್ತರ ಕೊಡಬೇಕು ಎಂದರು. +ನಮ್ಮ ಸರ್ಕಾರವನ್ನು ಹೇಗೆ? ಕಿತ್ತೊಗೊಯ್ಯುತ್ತಾರೆ. ಅವರಲ್ಲಿರುವ ಭಿನ್ನತೆಯನ್ನು ಸರಿಪಡಿಸಿಕೊಂಡು ಜೋಡಿಸಿಕೊಳ್ಳಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರಿಗೆ ಅಭಿನಂದಿಸುತ್ತೇನೆ. ಈ ಆಯ್ಕೆಯಿಂದ ಕಾಂಗ್ರೆಸ್‍ಗೆ ಖುಷಿಯಾಗಿದೆ. ಆದರೆ ಬಿಜೆಪಿಗೆ ಸಂತೋಷವಿಲ್ಲ. ಚಾಪ್ಟರ್-2 ಸುಲಭವಾಗಲಿದೆ ಎಂದರು. +ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ +ಈ ಹಿಂದೆ ಅಶೋಕ್ ಅವರಿಗೆ ಮಂಡ್ಯದಿಂದ ಗೋಬ್ಯಾಕ್ ಎಂಬ ಪೆÇೀಸ್ಟರ್ ಹಾಕಲಾಗಿತ್ತು. ಮತ್ತೆ ಬಿಜೆಪಿ ಕಚೇರಿಯಿಂದ ಗೋಬ್ಯಾಕ್ ಅಶೋಕ್ ಪೋಸ್ಟರ್ ಬರಬಹುದು ಎಂದು ಅವರು ವ್ಯಂಗ್ಯವಾಡಿದರು.ಬಿಜೆಪಿಯನ್ನು ಒಂದು ಕುಟುಂಬದ ಪಕ್ಷವಾಗಲು ಬಿಡುವುದಿಲ್ಲ. ಬೆಟ್ಟದ ಹುಲಿ ಮಾಡಬೇಡಿ, ರಾಜ್ಯಾಧ್ಯಕ್ಷ ಸ್ಥಾನದ ಖರೀದಿಗೆ ಬಂದಿದ್ದರು ಎಂಬೆಲ್ಲ ಹೇಳಿಕೆಯನ್ನು ಅವರದೇ ಪಕ್ಷದವರು ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಕೊಟ್ಟರು? ಬಿಜೆಪಿಯಲ್ಲಿ ಎಲ್ಲವೂ ಮಾರಾಟಕ್ಕಿದೆ ಎಂದು ಆರೋಪಿಸಿದರು. +ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಬಗ್ಗೆ ಕೊಡುವ ಗಮನವನ್ನು ಜೆಡಿಎಸ್ ಶಾಸಕರ ಬಗ್ಗೆ ಕಾಳಜಿ ತೋರಿದರೆ 19 ಶಾಸಕರು ಹತ್ತು ಆಗುವುದಿಲ್ಲ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ವ್ಯಂಗ್ಯವಾಡಿದರು. +ವಿವೇಕಾನಂದ ಎಂಬುದು ಕಾಮನ್ ಹೆಸರು. ವರುಣಾ ಕ್ಷೇತ್ರದ ಬಿಇಒ ಒಬ್ಬರ ಹೆಸರು ಕೂಡ ಆಗಿದೆ. ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಬಗ್ಗೆ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಪೆನ್ ಡ್ರೈವ್‍ನಲ್ಲಿನ ಮಾಹಿತಿಯನ್ನು ಏಕೆ ಪ್ರದರ್ಶಿಸಲಿಲ್ಲ. ಕೇವಲ ತಿರುಚುವುದರಲ್ಲೇ ಏನು ಉಪಯೋಗ? +ಕರೆಂಟ್ ವಿಚಾರಕ್ಕೆ ತಪ್ಪು ಮಾಡಿ ದಂಡ ಕಟ್ಟಿದ್ದಾರೆ. ಅದನ್ನು ವಿಷಯಾಂತರ ಮಾಡಲು ಯತೀಂದ್ರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಆರೋಪಿಸಿದರು.ವರ್ಗಾವಣೆ ದಂಧೆ ಆರೋಪಕ್ಕೆ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ನೀಡಲಿ, ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಸಿದ್ದ. ಅದನ್ನು ಬಿಟ್ಟು ಮೊಸರಲ್ಲಿ ಕಲ್ಲು ಹುಡುಕುವುದರಿಂದ ಏನು ಪ್ರಯೋಜನ ಎಂದರು. +ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ +ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್‍ಗೆ ಬಿಜೆಪಿಯವರು ತಲೆ ಬಾಗಿಸುತ್ತಾರೆ ಎಂದು ಹೇಳಿರುವುದು ಸಭಾಧ್ಯಕ್ಷರ ಪೀಠಕ್ಕೆ ಗೌರವ ಸಲ್ಲಿಸುತ್ತಾರೆ ಎಂಬರ್ಥದಲ್ಲಿ. ಅದನ್ನು ಬೇರೆ ರೀತಿ ಅರ್ಥೈಸುವುದು ಸರಿಯಲ್ಲ ಎಂದರು. \ No newline at end of file diff --git a/eesanje/url_46_310_5.txt b/eesanje/url_46_310_5.txt new file mode 100644 index 0000000000000000000000000000000000000000..c74e9165603f8ad416d163880096bf52bc311084 --- /dev/null +++ b/eesanje/url_46_310_5.txt @@ -0,0 +1,10 @@ +ಸುಳ್ಳಿನ ಕಂತೆಗಳ ಸಂಚಿನ ವಿಫಲ ಯತ್ನ: ಎಚ್‍ಡಿಕೆಗೆ ಸಿಎಂ ತಿರುಗೇಟು +ಬೆಂಗಳೂರು,ನ.18- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪದೇ ಪದೇ ಸುಳ್ಳು ಕತೆಗಳ ಸಂಚು ರೂಪಿಸುವ ವಿಫಲ ಯತ್ನ ನಡೆಸುತ್ತಿದ್ದಾರೆ. ಸೋಲು, ವೈಫಲ್ಯಗಳಿಂದ ಹತಾಶರಾಗಿರುವ ಅವರು ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. +ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೊಬೈಲ್‍ನಲ್ಲಿ ಮಾತನಾಡುವಾಗ ವಿವೇಕಾನಂದ ಎಂಬುವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದನ್ನು ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ನಡೆದ ಮಾತುಕತೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ನಿನ್ನೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಅದರಲ್ಲಿ ವಿವೇಕಾನಂದ ಎಂಬ ಅಧಿಕಾರಿಯನ್ನು ಮೈಸೂರಿನ ವಿ.ವಿ.ಪುರಂ ಠಾಣೆಗೆ ನಿಯೋಜಿಸಲಾಗಿದೆ. ಅದನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಇಂದು ಸರಣಿ ಟ್ವಿಟ್‍ಗಳ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. +ಪ್ರತಿಯಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ ಎಂದು ಮರುಕ ವ್ಯಕ್ತಪಡಿಸಿದ್ದಾರೆ. +ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ +ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ? +ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್ ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತದೆಯೇ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಗೆ ಶಿಕ್ಷೆಯಾಗಿದೆ ಎಂದು ನಾವು ಹೇಳಿದ್ದೇವೆಯೇ? ಎಲ್ಲಿದಿಯಪ್ಪಾ ನಿಖಿಲ್ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ಲವೇ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. +ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ? +ಜವಾಬ್ದಾರಿಯುತ ರಾಜಕೀಯ ನಾಯಕರಾಗಿ ಸತ್ಯಗಳನ್ನು ಪ್ರಸ್ತುತಪಡಿಸಬೇಕು, ಪಿತೂರಿ ಸಿದ್ಧಾಂತಗಳನ್ನಲ್ಲ. ಕುಮಾರಸ್ವಾಮಿಯವರ ಈ ಸರಣಿ ವಿಫಲ ಹತಾಶ ಪ್ರಯತ್ನಗಳು ಅವರ ಬೇಜವಾಬ್ದಾರಿಯನ್ನು ತೋರಿಸುತ್ತವೆ. ದುಃಖಕರವೆಂದರೆ ಜನರ ಗಮನ ಸೆಳೆಯುವುದಕ್ಕಾಗಿ ಅವರು ಮತ್ತಷ್ಟು ಅಳಲು ಮುಂದುವರೆಸಿದ್ದಾರೆ. ಸುಳ್ಳು ನಿರೂಪಣೆಗಳ ಮೂಲಕ ಸಮಯವನ್ನು ವ್ಯರ್ಥ ಮಾಡುವ ಬದಲು, ತಮ್ಮ ಮೈತ್ರಿ ಪಾಲುದಾರರೊಂದಿಗೆ ಮಾತನಾಡಿ ವಿವಿಧ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ದೊರೆಕಿಸುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ. +ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಹೆಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ. \ No newline at end of file diff --git a/eesanje/url_46_310_6.txt b/eesanje/url_46_310_6.txt new file mode 100644 index 0000000000000000000000000000000000000000..b161bed51601709481ff9af0faa7efb4ce9bf4c1 --- /dev/null +++ b/eesanje/url_46_310_6.txt @@ -0,0 +1,14 @@ +ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್ +ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೇಕ್ಟರ್ ಹುದ್ದೆಗಳಿಗೆ 1500 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆ ಹಾಗೂ ಹೊಸ ಪರೀಕ್ಷೆಗಳನ್ನು ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಸಂಬಂಧಿಸಿದ ತಗಾದೆ ನ್ಯಾಯಾಲಯಲ್ಲಿತ್ತು. ಸರ್ಕಾರ ಮರು ಪರೀಕ್ಷೆ ಅವಕಾಶ ನೀಡುವಂತೆ ಸರ್ಕಾರ ವಾದ ಮಂಡಿಸಿತ್ತು. ಹಿಂದಿನ ಸರ್ಕಾರವೂ ಮರು ಪರೀಕ್ಷೆಗೆ ಅಧಿಸೂಚನೆ ಹೊರಡಿಸಿತ್ತು. ಕೆಲ ಅಭ್ಯರ್ಥಿಗಳು ಅದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಕೊನೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ ಎಂದರು. +ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಸ್ವತಂತ್ರ ಸಂಸ್ಥೆಗಳಿವೆ. ನ್ಯಾಯಾಲಯದ ಆದೇಶ ದೊರೆತ ನಾಲ್ಕೈದು ದಿನಗಳಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು. +ವಿದ್ಯಾರ್ಥಿಗಳ ಭವಿಷ್ಯ ಹಾಗೂ ಇಲಾಖೆಯ ಕಾರ್ಯಧ್ಯಕ್ಷತೆ ದೃಷ್ಟಿಯಿಂದ ಶೀಘ್ರವೇ ಮರು ಪರೀಕ್ಷೆಯಾಗಬೇಕಿದೆ. ವಿಳಂಬ ಮಾಡಲು ಸಾಧ್ಯವಿಲ್ಲ. ಬೇರೆ ಇಲಾಖೆಗಳಂತೆ ನೇಮಕಾತಿಯಾದ ತಕ್ಷಣವೇ ಕೆಲಸಕ್ಕೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಧ್ಯವಿಲ್ಲ. ಒಂದು ವರ್ಷ ತರಬೇತಿ ನೀಡಬೇಕಿದೆ. ಮೈಸೂರಿನಲ್ಲಿರುವ ನಮ್ಮ ತರಬೇತಿ ಸಂಸ್ಥೆಯ ಸಾಮಥ್ರ್ಯ 300 ರಿಂದ 400 ಮಂದಿಯಷ್ಟೆ ,ಅದನ್ನು ಹೆಚ್ಚಿಸಬೇಕಿದೆ. ನೇಮಕಾತಿಯ ಜೊತೆಗೆ ತರಬೇತಿಯ ಸಾಮಥ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಹೇಳಿದರು. +ನಮ್ಮ ಪೊಲೀಸ್‍ಠಾಣೆಗಳಲ್ಲಿ ಪಿಎಸ್‍ಐಗಳೇ ಇಲ್ಲವಾಗಿ, ಸಾವಿರಾರು ಹುದ್ದೆಗಳು ಖಾಲಿ ಇವೆ. ನಿಯಮ 32ನ್ನು ಜಾರಿ ಮಾಡಿ 600 ಪಿಎಸ್‍ಐಗಳಿಗೆ ಇತ್ತೀಚೆಗೆ ಬಡ್ತಿ ನೀಡಿದ್ದೇವೆ. ಅವರು ಈಗ ಪಿಎಸ್‍ಐಗಳಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈಗಾಗಲೇ 400 ಹುದ್ದೆಗಳು ಈಗಾಗಲೇ ಖಾಲಿಯಾಗಿವೆ. ಜೊತೆಯಲ್ಲಿ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಹಾಗೂ ಗೃಹ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಒಂದು ಸಾವಿರ ಹಾಗೂ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇಂದು ಸಭೆ ನಡೆಸಿ ಈ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು ಎಂದರು. +ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ. ಅದಕ್ಕಾಗಿ ಇಲಾಖೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ. ಅನೇಕ ಕಾರಣದಿಂದ ವರ್ಗಾವಣೆಗಳಾಗುತ್ತವೆ. ಪೊಲೀಸ್ ಇಲಾಖೆ ಬೇರೆ ಇಲಾಖೆಯಂತಲ್ಲ, ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಇಡಲಾಗಲ್ಲ. ಠಾಣೆಯಲ್ಲಿ ಇನ್ ಸ್ಪೆಕ್ಟರ್ ಇಲ್ಲ ಅಂದರೆ ಮುಂದಿನ ವರ್ಷ ವರ್ಗಾವಣೆ ಸಮಯ ಬರುವವರೆಗೂ ಕಾಯಲು ಆಗಲ್ಲ, ಅದಕ್ಕಾಗಿ ಮಂಡಳಿಯ ಮೂಲಕ ಕಾಲ ಕಾಲಕ್ಕೆ ವರ್ಗಾವಣೆ ಮಾಡುತ್ತಲೇ ಇರುತ್ತೇವೆ. ಕೆಲವೊಮ್ಮೆ ಕಾರ್ಯಧ್ಯಕ್ಷತೆ ಕೊರತೆಯಾದಾಗಲೂ ಬದಲಾವಣೆ ಮಾಡುತ್ತೇವೆ ಎಂದರು. +ಮೈಸೂರಿನ ವಿ.ವಿ.ಪುರಂ ಠಾಣೆಗೆ ವಿವೇಕಾನಂದ ಎಂಬ ಅಧಿಕಾರಿ ವರ್ಗಾವಣೆಯಾಗಿರುವುದು, ಯತೀಂದ್ರ ಅವರ ವಿಡಿಯೋದಲ್ಲಿ ವಿವೇಕಾನಂದ ಹೆಸರು ಹೇಳಿರುವುದು ಕಾಕತಾಳೀಯ ಇರಬಹುದು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ನನ್ನ ಮೇಲೆ ಯಾರು ಒತ್ತಡ ಹೇರಿಲ್ಲ. ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೂ ಯತೀಂದ್ರ ಅವರ ವಿಡಿಯೋದಲ್ಲಿನ ಸಂಭಾಷಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು. +ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡಲಿ. ಹಣ ತೆಗೆದುಕೊಂಡಿರುವ ಬಗ್ಗೆ ದಾಖಲೆ ಇದ್ದರೆ ಪ್ರಸ್ತಾಪ ಮಾಡಲಿ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ, ಅವರಿಗೆ ಸಮಾಧಾನ ಆಗುವ ರೀತಿಯಲ್ಲೇ ಉತ್ತರ ನೀಡುತ್ತೇವೆ, ನಾವೇನು ಉದ್ವೇಗಕ್ಕೆ ಒಳಗಾಗುವುದಿಲ್ಲ ಎಂದರು ಹೇಳಿದರು. +ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ +ಬಿಜೆಪಿಯಿಂದ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾದ ಆರ್.ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಸರ್ಕಾರಕ್ಕೆ ಸಲಹೆ ಕೊಟ್ಟು, ಎಚ್ಚರಿಸುವ ಕೆಲಸ ಮಾಡಲಿ, ವಿರೋಧ ಪಕ್ಷದ ನಾಯಕರಾದ ಮೇಲೆ ಟೀಕೆ ಮಾಡುವುದು, ಸರ್ಕಾರದ ತಪ್ಪು ಹೇಳುವುದು ಸ್ವಾಭಾವಿಕ. ಸತ್ಯಾಸತ್ಯತೆ ಅರಿತು ಮಾತನಾಡಲಿ. +ಸರ್ಕಾರ ಬಿಳಿಸುತ್ತೇನೆ ಎಂದು ಹೇಳುತ್ತಿದ್ದಾರೆ, ಕಾಂಗ್ರೆಸ್‍ಗೆ ಜನ 135 ಶಾಸಕರನ್ನು ಆರಿಸಿಕಳಿಸಿದ್ದಾರೆ. ನಮಗೆ ಅಧಿಕಾರ ಕೊಟ್ಟಿದ್ದಾರೆ, ಸರ್ಕಾರ ಬಿಳಿಸಲು ಇವರ್ಯಾರು. ಬೇರೆ ರೀತಿಯಲ್ಲಿ ಹೇಳಿಕೆ ಕೊಟ್ಟರೆ ಅದಕ್ಕೆ ಅರ್ಥ ಇರಲ್ಲ ಎಂದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್‍ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿರುವ ಕುರಿತಂತೆ ಮಾತನಾಡಿದ ಅವರು, ಇತರ ಪಕ್ಷಗಳ ನಾಯಕರು ಆಸಕ್ತಿ ತೋರಿಸಿದರೆ ನಾವು ಕರೆಯುತ್ತೇವೆ. ನಮ್ಮ ಪಕ್ಷದತ್ತ ಆಸಕ್ತಿ ತೋರಿಸಿದರೆ ಕರೆಯುವುದರಲ್ಲಿ ತಪ್ಪೇನಿದೆ. ಇಬ್ಬರು ನಾಯಕರ ಭೇಟಿ ಸೌಜನ್ಯದಷ್ಟೆ, ಅಲ್ಲಿ ಏನು ಚರ್ಚೆಯಾಗಿದೆ ಎಂದು ಮಾಹಿತಿ ಇಲ್ಲ. ಸರಿಯಾದ ವಿವರ ಇಲ್ಲದೆ ಪಕ್ಷ ಸೇರ್ಪಡೆಗೆ ಚರ್ಚೆಯಾಗಿದೆ ಎಂದರೆ ಹೇಗೆ ಎಂದರು. +ಬಿಜೆಪಿ ಮಾಜಿ ಶಾಸಕ ವಿ.ಸೋಮಣ್ಣ ಮೊನ್ನೆ ನಮ್ಮ ಮನೆಗೆ ಬಂದಿದ್ದರು, ಅವರ ಮನೆಯಲ್ಲಿ ಕಾರ್ಯಕ್ರಮವೊಂದಿದೆ, ಅದಕ್ಕೆ ನಾನು ಹೋಗುತ್ತೇನೆ. ಅದನ್ನು ಪಕ್ಷಕ್ಕೆ ಕರೆಯಲು ಹೋಗಿದ್ದರು, ಕಳುಹಿಸಲು ಹೋಗಿದ್ದರು ಎಂದರೆ ಹೇಗೆ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_310_7.txt b/eesanje/url_46_310_7.txt new file mode 100644 index 0000000000000000000000000000000000000000..77c1d6a602de1ef6ea381680128e750ed862d689 --- /dev/null +++ b/eesanje/url_46_310_7.txt @@ -0,0 +1,8 @@ +ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ +ಬೆಂಗಳೂರು,ನ.18- ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಶೋಕ್ ಅವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು. +ಆರ್.ಟಿ.ನಗರದ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೊಮ್ಮಾಯಿ ಮತ್ತು ಅಶೋಕ್ ಪಕ್ಷದ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಕಾಲ ಪಕ್ಷದ ಸಂಘಟನೆ, ಬೆಳಗಾವಿ ಅವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ. ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ನಡೆಸುವುದಗಿ ಹೇಳಿದರು. +ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್ +ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆ ಗೆ ಹೋಗುತ್ತಿದೆ ಎಂದರು. +ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ. ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸೋಣ ಎಂದು ಪ್ರಶ್ನಿಸಿದರು. +ಇಲ್ಲ ಅಂದರೆ ಪರಮೇಶ್ವರ್ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮೀರ್ ಹೇಳಿಕೆ ಕುರಿತು ಅವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು. +ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರದಕ್ಷಿಣ ಕರ್ನಾಟಕ ಎಂದಿಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_310_8.txt b/eesanje/url_46_310_8.txt new file mode 100644 index 0000000000000000000000000000000000000000..df15563febe0b058bebe76c753623a7b513ff718 --- /dev/null +++ b/eesanje/url_46_310_8.txt @@ -0,0 +1,11 @@ +ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್ +ಬೆಂಗಳೂರು,ನ.18- ವರ್ಗಾವಣೆ ದಂಧೆ ಈಗಲೂ ಎಗ್ಗಿಲ್ಲದೆ ನಡೆಯುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಇದೇ ಕಾಂಗ್ರೆಸ್‍ನಾಯಕರು ಆರೋಪಿಸಿದ್ದರು. ಅಂದು ಯಾವುದೇ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿರಲಿಲ್ಲ. ಈಗ ಇವರ ವರ್ಗಾವಣೆ ದಂಧೆಗೆ ದಾಖಲೆಗಳೇ ಬಹಿರಂಗಗೊಂಡಿವೆ. ನನ್ನ ಪ್ರಕಾರ ಇದು60% ಕಮಿಷನ್ ಸರ್ಕಾರ ಎಂದು ಆಪಾದಿಸಿದರು. +ಪಕ್ಷದೊಳಗೆ ಏನೇ ಅಸಮಾಧಾನ ಇದ್ದರೂ ಅಸಮಾಧಾನವಿದ್ದರೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದರು. ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದೇ ಇರುತ್ತವೆ. ಒಬ್ಬರಿಗೆ ಒಂದು ಸ್ಥಾನ ಸಿಕ್ಕಾಗ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸಹಜ. ಆದರೆ ನಮ್ಮ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಲಿದ್ದಾರೆ ಎಂದು ಹೇಳಿದರು. +ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ +ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಯಾರು ಬೇಸರಪಟ್ಟುಕೊಂಡಿದ್ದಾರೋ ಅವರ ಜೊತೆ ನಾನೇ ಖುದ್ದು ಮಾತನಾಡುತ್ತೇನೆ. ಯಾರೂ ಕೂಡ ಪಕ್ಷದ ತೀರ್ಮಾನವನ್ನು ವಿರೋಧಿಸಬಾರದು. ಕೆಲವು ಸಂದರ್ಭಗಳಲ್ಲಿ ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಮುಖ್ಯ ಎಂದು ತಿಳಿಸಿದರು. +ಬಿಜೆಪಿ ಎಲ್ಲ ಸಂದರ್ಭಗಳಲ್ಲೂ ಸರ್ಕಾರಕ್ಕೆ ಅಗತ್ಯವಾದ ಸಲಹೆಸೂಚನೆಗಳನ್ನು ಕೊಟ್ಟು ಸಹಕಾರವನ್ನೂ ನೀಡಲಿದ್ದೇವೆ. ಸದನದ ಒಳಗೆ, ಹೊರಗೆ ಒಂದು ರಚನಾತ್ಮಕ ರಾಜಕೀಯ ಪಕ್ಷವಾಗಿ ನಾವು ಕೆಲಸ ಮಾಡಲಿದ್ದೇವೆ. ಅದನ್ನು ತಪ್ಪು ಎಂದು ಹೇಳಲು ಹಿಂದೆಮುಂದೆ ನೋಡುವುದಿಲ್ಲ. ಸರ್ಕಾರದ ಕಿವಿ ಹಿಂಡುವುದನ್ನು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು. +ವಿರೋಧ ಪಕ್ಷವಾಗಿ ನಾವು ಎಲ್ಲವನ್ನು ವಿರೋಧ ಮಾಡುವುದೇ ನಮ್ಮ ಕೆಲಸವಲ್ಲ. ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಜನರ ದನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡುತ್ತೇವೆ. ಅದಕ್ಕೂ ಬಗ್ಗದಿದ್ದಾಗ ಸರ್ಕಾರವನ್ನೇ ಕಿತ್ತೆಸೆಯಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು. +ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಂದೂ ಕೂಡ ಯಾವುದೇ ಹುದ್ದೆಗೆ ಲಾಬಿ ಮಾಡಿದವನಲ್ಲ. ವರಿಷ್ಠರು ನನ್ನ ಮೇಲೆ ಯಾವ ವಿಶ್ವಾಸ ಇಟ್ಟುಕೊಂಡು ಉನ್ನತ ಸ್ಥಾನ ನೀಡಿದ್ದಾರೋ ಅವರ ಗೌರವಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. +ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು +ಬೆಳಗಾವಿ ಅವೇಶನದಿಂದಲೇ ಸರ್ಕಾರದ ವಿರುದ್ಧ ನಮ್ಮ ಹೋರಾಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಅದನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ಬಾರಿ ಕಾಂಗ್ರೆಸ್ ಅಕಾರದಲ್ಲಿದ್ದರೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_310_9.txt b/eesanje/url_46_310_9.txt new file mode 100644 index 0000000000000000000000000000000000000000..8736d93473654c3a6c3590d5a243f347dd6a4fc9 --- /dev/null +++ b/eesanje/url_46_310_9.txt @@ -0,0 +1,8 @@ +ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ +ಬೆಂಗಳೂರು, ನ.18- ರಾಜ್ಯ ಸರ್ಕಾರದ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ. ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಎಂದು ಆರೋಪಸಿದ್ದಾರೆ. +ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ವ್ಯಂಗ್ಯವಾಡಿದ್ದಾರೆ.ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್‍ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಬೇಕು. ಅದು ನಿಮ್ಮ ದುರ್ವಿಧಿ. ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. +ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ +ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ, 71 ಪೊಲೀಸ್ ಇನಸ್ಪೆಕ್ಟರ್‍ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲೆ ನಿಮ್ಮ ಸುಲಿಗೆಪುತ್ರನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಎಂದು ಅವರು ಆರೋಪಿಸಿದ್ದಾರೆ. +ಈ ಪಾಪದ ಕಾಸಿನ ದುರ್ನಾತ ಅಸಹ್ಯಕರ. ವರ್ಗಾವರ್ಗಿ ಬಜೆಟ್‍ನಲ್ಲಿ ನಿಮ್ಮ ಪಟಾಲಂದು ಶಿಖರ ಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಂ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಂ ನಿರ್ದೇಶಕ ಎಂದು ಟೀಕಿಸಿದ್ದಾರೆ. +ಸತ್ಯ ಹೇಳಿದರೆ ಗುಂಪು ಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_311_1.txt b/eesanje/url_46_311_1.txt new file mode 100644 index 0000000000000000000000000000000000000000..f77dcc911ccf249acf05acf1ac808032493f2fb5 --- /dev/null +++ b/eesanje/url_46_311_1.txt @@ -0,0 +1,9 @@ +ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್ +ಬೆಂಗಳೂರು,ನ.17- ಯಾವುದೋ ಒಂದು ಕುಟುಂಬದ ಒತ್ತಡಕ್ಕೆ ಮಣಿಯದೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ವಿಪಕ್ಷ ನಾಯಕನ ಆಯ್ಕೆ ನಡೆಯಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಬ್ಲಾಕ್‍ಮೇಲ್ ಮಾಡಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳುತ್ತಾರೆ. ಅಂಥವರ ಬಗ್ಗೆ ಹೈಕಮಾಂಡ್ ಎಚ್ಚರಿಕೆ ಇಡಬೇಕು. ಬಿಜೆಪಿ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಕಾರ್ಯಕರ್ತರೇ ಈ ಪಕ್ಷದ ಆಸ್ತಿ. ಹೀಗಾಗಿ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು. +ಉತ್ತರಕರ್ನಾಟಕ ಭಾಗಕ್ಕೆ ಪ್ರತಿ ಹಂತದಲ್ಲೂ ಅನ್ಯಾಯವಾಗಿದೆ. ಹೀಗಾಗಿ ನಮ್ಮ ಭಾಗಕ್ಕೆ ಕೊಟ್ಟರೆ ಪಕ್ಷದ ಬಲವರ್ಧನೆಗೆ ಸಹಾಯವಾಗಲಿದೆ. ಎಲ್ಲ ಭಾಗಕ್ಕೂ ಅವಕಾಶ ಕಲ್ಪಿಸಿರುವಾಗ ನಮ್ಮ ಭಾಗವನ್ನು ಕಡೆಗಣಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ನಾನು ಏನೇ ಮಾತನಾಡಿದರೂ ಅದು ವಿರೋಧವಾಗಬಹುದು. ಏನು ಹೇಳಬೇಕೋ ಅದನ್ನು ವೀಕ್ಷಕರಿಗೆ ಹೇಳಿದ್ದೇನೆ. +ಸ್ಥಳೀಯ ವಿಷಯಗಳು ದೆಹಲಿ ನಾಯಕರಿಗೆ ಗೊತ್ತಿರುವುದಿಲ್ಲ. ಇದೆಲ್ಲವನ್ನೂ ಗಮನಕ್ಕೆ ತಂದಿದ್ದೇನೆ. ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನಮ್ಮ ಭಾಗಕ್ಕೆ ಅನ್ಯಾಯ ಮಾಡಿದರೆ ಅಲ್ಲಿನ ಜನ ಸುಮ್ಮನಿರುವುದಿಲ್ಲ. ಪಕ್ಷ ಬಲವರ್ಧನೆಯಾಗಬೇಕಾದರೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗಲೇಬೇಕು. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ನೋಡೋಣ ಎಂದು ಸೂಚ್ಯವಾಗಿ ಹೇಳಿದರು. +ನನ್ನನ್ನು ನಿನ್ನೆ ಒಬ್ಬ ಏಜೆಂಟ್ ಖರೀದಿಸಲು ಬಂದಿದ್ದ.ನಾನು ಅಷ್ಟು ಸುಲಭವಾಗಿ ಖರೀದಿಯಾಗುವುದಿಲ್ಲ ಎಂದು ಅವನಿಗೆ ಗೊತ್ತಾಗಿ ಜಾಗ ಖಾಲಿ ಮಾಡಿದ ಎಂದು ಯತ್ನಾಳ್ ಹೇಳಿದರಾದರೂ ಆತನ ಹೆಸರನ್ನು ಬಹಿರಂಗಪಡಿಸಲಿಲ್ಲ. +ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ +ಈ ಯತ್ನಾಳ್ ಯಾರಿಗೂ ಹೆದರುವವನೂ ಅಲ್ಲ, ಜಗ್ಗುವವನೂ ಅಲ್ಲ. ಇದನ್ನು ನಾನು ವೀಕ್ಷಕರ ಗಮನಕ್ಕೂ ತಂದಿದ್ದೇನೆ. ಅವರು ಕೂಡ ನೀವು ಯಾರಿಗೂ ಹೆದರುವುದಿಲ್ಲ ಎಂಬುದು ಗೊತ್ತಿದೆ ಎಂದರು. ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಿದರೆ ಎಂತಹ ಫಲಿತಾಂಶ ಬರುತ್ತದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯ ಫಲಿತಾಂಶವೇಶ ಸಾಕ್ಷಿ. ಎಲ್ಲದಕ್ಕೂ ನಾವು ಇನ್ನೊಬ್ಬರ ಮನೆ ಬಾಗಿಲಿಗೆ ಸಾರ್ ಸಾರ್ ಎಂದು ಹಿಂದೆ ಹೋಗಲು ಸಾಧ್ಯವೇ. ಪ್ರತಿಯೊಂದು ದಕ್ಷಿಣ ಕರ್ನಾಟಕಕ್ಕೆ ಕೊಟ್ಟರೆ ಉತ್ತರ ಕರ್ನಾಟಕದವರು ಏನು ಮಾಡಬೇಕೆಂದು ಪ್ರಶ್ನಿಸಿದರು. +ನಾನು ಹೆಚ್ಚು ಮಾತನಾಡುವುದಿಲ್ಲ. ವಿಪಕ್ಷ ನಾಯಕನ ಆಯ್ಕೆಯಾದ ಬಳಿಕ ಮಾತನಾಡುತ್ತೇನೆ ಎನ್ನುವ ಮೂಲಕ ಯತ್ನಾಳ್ ಕುತೂಹಲ ಕೆರಳಿಸಿದರು. \ No newline at end of file diff --git a/eesanje/url_46_311_10.txt b/eesanje/url_46_311_10.txt new file mode 100644 index 0000000000000000000000000000000000000000..504c275726cada303fe3308ebb83a5d8b4a54e7d --- /dev/null +++ b/eesanje/url_46_311_10.txt @@ -0,0 +1,9 @@ +ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ +ಬೆಂಗಳೂರು,ನ.17-ಸ್ಪೀಕರ್ ಸ್ಥಾನದ ಘನತೆಯನ್ನು ಹಾಳು ಮಾಡಿರುವ ವಸತಿ ಸಚಿವ ಜಮೀರ್ ಅಹಮ್ಮದ್ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಸ್ಥಾನ ಎನ್ನುವುದು ಅತ್ಯಂತ ಗೌರವ ಮತ್ತು ಸಾಂವಿಧಾನಿಕ ಹುದ್ದೆ. ಈ ಸ್ಥಾನವನ್ನು ಯಾರೊಬ್ಬರೂ ಜಾತಿ-ಧರ್ಮ ನೋಡಿ ಗೌರವ ಕೊಡುವುದಿಲ್ಲ. ಸ್ಥಾನಕ್ಕೆ ಗೌರವ ಕೊಡುತ್ತಾರೆ. ಜಮೀರ್ ಅಹಮ್ಮದ್ ಇದರಲ್ಲಿ ಕೂಡ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು. +ಸ್ಪೀಕರ್ ಕುರ್ಚಿಯಲ್ಲಿ ಯಾವ ಜಾತಿಯವರು ಇಲ್ಲವೇ ಯಾವ ಧರ್ಮದವರು ಕುಳಿತಿದ್ದಾರೆ ಎಂಬುದು ಮುಖ್ಯವಲ್ಲ. ಆ ಸ್ಥಾನಕ್ಕೆ ಯಾರೇ ಕುಳಿತರೂ ಸದಸ್ಯರು ಎದ್ದು ನಿಂತು ಗೌರವಿಸುವುದು ಶಿಷ್ಟಾಚಾರ. ಕೇವಲ ಮುಸ್ಲಿಂ ಎನ್ನುವ ಕಾರಣಕ್ಕೆ ಬಿಜೆಪಿಯವರು ಗೌರವ ಕೊಡುವುದಿಲ್ಲ. ಅವರೊಬ್ಬ ಗೌರವಾನ್ವಿತ ವಿಧಾನಸಭೆಯ ಸ್ಪೀಕರ್ ಇದನ್ನು ಸಚಿವ ಜಮೀರ್ ಅರ್ಥ ಮಾಡಿಕೊಳ್ಳಬೇಕೆಂದು ಟೀಕಿಸಿದರು. +ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಏರ್​ಶೋ +ಮತ ಗಳಿಸುವ ಒಂದೇ ಕಾರಣಕ್ಕಾಗಿ ಒಂದು ಸಮುದಾಯದ ಮತಗಳ ಧೃವೀಕರಣಕ್ಕಾಗಿ ಸ್ಪೀಕರ್ ಸ್ಥಾನವನ್ನೇ ದುರ್ಬಳಕೆ ಮಾಡಿಕೊಂಡಿರುವ ಜಮೀರ್ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. +ಮುಖ್ಯಮಂತ್ರಿಯವರು ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸ್ಪೀಕರ್ ಸ್ಥಾನದ ಬಗ್ಗೆ ನಾಳೆ ಯಾರು ಏನೂ ಬೇಕಾದರೂ ಮಾತನಾಡುತ್ತಾರೆ. ಇದರ ಗೌರವ ಉಳಿಯಲಿದೆಯೇ ಎಂದು ಪ್ರಶ್ನೆ ಮಾಡಿದರು.ಜಮೀರ್ ಯಾವಾಗಲು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಕೆಲಸವನ್ನೇ ಮಾಡುತ್ತಿದ್ದಾರೆ. ಅವರಿಗೆ ಸಾಂವಿಧಾನಿಕ ಹುದ್ದೆ ಯಾವುದು, ಸ್ಪೀಕರ್ ಹುದ್ದೆ ಘನತೆಯೇ ಗೊತ್ತಿಲ್ಲ. ಇಂಥವರು ಸಂಪುಟದಲ್ಲಿ ಮುಂದುವರೆಯಲೂ ಬಾರದು. +ತಕ್ಷಣವೇ ರಾಜ್ಯದ ಜನತೆಯ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. +ಚುನಾವಣೆ ಸಂದರ್ಭದಲ್ಲಿ ಮತ ಕೇಳುವುದು ಪ್ರತಿಯೊಬ್ಬರ ಹಕ್ಕು. ಹಾಗಂತ ಒಂದು ಸಮುದಾಯವನ್ನು ಓಲೈಕೆ ಮಾಡಿ ಮತ್ತೊಂದು ರಾಜಕೀಯ ಪಕ್ಷಕ್ಕೆ ಇಲ್ಲವೇ ಆ ಪಕ್ಷದ ಮುಖಂಡರ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡಬಾರದು. ಈ ಹಿಂದೆಯೇ ಇಂತಹ ಹೇಳಿಕೆಯನ್ನೇ ಕೊಟ್ಟಿದ್ದರು. ಈಗಲಾದರೂ ಎಚ್ಚೆತ್ತುಕೊಂಡು ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_311_11.txt b/eesanje/url_46_311_11.txt new file mode 100644 index 0000000000000000000000000000000000000000..ec25f5e43a3e217b02ed84c7ee6e2420cc9fb390 --- /dev/null +++ b/eesanje/url_46_311_11.txt @@ -0,0 +1,10 @@ +ನನ್ನ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆ ಮೇಲು ಆಗಿದೆ: ಜಗದೀಶ್ ಶೆಟ್ಟರ್ +ಹುಬ್ಬಳ್ಳಿ,ನ.16-ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಐದು ರಾಜ್ಯಗಳಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದು ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು. +ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ ಎಂದ ಅವರು, +ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತುಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ. ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ ಎಂದರು. +ಇನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಸದಾನಂದ ಗೌಡರನ್ನು ದೆಹಲಿಗೆ ಕರೆಯಿಸಿ ಮೂರು ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯವನ್ನು ತೋರಲಿಲ್ಲ. ಬಿಜೆಪಿ ಹಿರಿಯರನ್ನು ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ. ಎಲ್‍ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು. +ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ +ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲ. ಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ. ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದರು. +ಹೀಗಾಗಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. ಈಗ 70-75 ಯಸ್ಸಾದಂತವರಿಗೂ ಟಿಕೆಟ್ ನೀಡಲಾಗಿದ್ದು ಅವರಿಗೆ ಯಾಕೆ ಟಿಕೆಟ್ ಕೊಟ್ಟರು. ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ ಅಧಿಕಾರ ಆಸೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ.ವಯಸ್ಸಿನ ನೆಪದಲ್ಲಿ ಅಡ್ವಾಣಿ ಮುರಳಿ ಮನೋಹರ್ ಜೋಶಿಯವರನ್ನು ಮನೆಗೆ ಕಳಿಸಿದ್ರು ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. +ಜಗದೀಶ್ ಶೆಟ್ಟರ್ ಎಫೆಕ್ಟ್ ಪಂಚ ರಾಜ್ಯಗಳಲ್ಲಿಯೂ ಆಗಿದೆ. ಹಾಗಾಗಿ ವಯಸ್ಸು ದಾಟಿದರೂ ಟಿಕೆಟ್ ನೀಡಲಾಗಿದೆ. ನನ್ನ ಪಕ್ಷಾಂತರದ ಎಫೆಕ್ಟ್ ತಿಳಿದುಕೊಂಡು ಮೂರ್ನಾಲ್ಕು ಮಾಜಿ ಸಿಎಂ ಗಳಿಗೆ ಟಿಕೆಟ್ ಕೊಟ್ಟಿದ್ದಾರೆ ಆದ್ದರಿಂದ ಈಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಯಾವುದೇ ಆಗಲ್ಲ. ಬಿಜೆಪಿ ಕುಸಿತಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ಧೃತಿಗೆಟ್ಟಿದ್ದಾರೆ, ಭರವಸೆ ಕಳೆದುಕೊಂಡಿದ್ದಾರೆ. ನಾಯಕನಿಲ್ಲದ ಪಕ್ಷ ಅನ್ನೋ ಕೊರಗು ಅವರನ್ನು ಕಾಡ್ತಿದೆ ಎಂದರು. +ಇನ್ನು ಆಪರೇಷನ್ ಕಮಲ ಪ್ರಕ್ರಿಯೆ ನಡೆದೆ ಇದೆ ಈ ರೀತಿ ಮಾಡಿದ್ರೆ ಕೈ ಶಾಸಕರು ತಮ್ಮ ಪಕ್ಷಕ್ಕೆ ಬರ್ತಾರೆ ಅನ್ನೋ ಭ್ರಮೆಯಲ್ಲಿದ್ದಾರೆ. ಆಪರೇಷನ್ ಕಮಲ ಪ್ರಯತ್ನ ಸಫಲವಾಗಲ್ಲ ಎಂದರು. \ No newline at end of file diff --git a/eesanje/url_46_311_12.txt b/eesanje/url_46_311_12.txt new file mode 100644 index 0000000000000000000000000000000000000000..8915ed8f1dc0997bb15187dcb30d54436bc12a14 --- /dev/null +++ b/eesanje/url_46_311_12.txt @@ -0,0 +1,5 @@ +ಮಗಳ ಮೇಲಿನ ವ್ಯಾಮೋಹವೇ ನಾಲ್ವರ ಕೊಲೆಗೆ ಕಾರಣ..? +ಬೆಂಗಳೂರು, ನ.16- ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಹಂತಕ ಪ್ರವೀಣ್ ಅರುಣ್ ಚೌಗಲೆ , ಹಸೀನಾ ಅವರ ಎರಡನೇ ಮಗಳ ಮೇಲಿನ ವ್ಯಾಮೋಹದಿಂದ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. +ಹಸೀನಾ ಅವರ ಎರಡನೇ ಮಗಳು ಅಜ್ಞಾಝ್‍ಳನ್ನು ವಿಮಾನದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಪಿ ಪ್ರವೀಣ್ ಆಕೆಯ ಸ್ನೇಹ ಬೆಳೆಸಿದ್ದ. ಆರೋಪಿ ಪ್ರವೀಣ್ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದು ಇಬ್ಬರು ಮಕ್ಕಳಿರುವ ವಿಷಯ ಅಜ್ಞಾಝ್‍ಗೆ ಗೊತ್ತಾಗಿ ಪ್ರವೀಣ್‍ನಿಂದ ಅಂತರ ಕಾಯ್ದುಕೊಂಡು ಆತನನ್ನು ದೂರ ಮಾಡಿದ್ದಳು. +ಆರೋಪಿ ಪ್ರವೀಣ್ ತನ್ನಿಂದ ದೂರವಿದ್ದ ಅಜ್ಞಾಝ್‍ಳ ಪ್ರೀತಿ ಸಿಗುವುದಿಲ್ಲವೆಂದು ತಿಳಿದು ಆಕೆಯ ಜೊತೆ ಕುಟುಂಬವನ್ನೆ ಮುಗಿಸಲು ಸಂಚು ರೂಪಿಸಿ ಅ.12ರಂದು ಅವರ ಮನೆಗೆ ನುಗ್ಗಿ ಮೊದಲು ಆಕೆಯ ತಾಯಿಯನ್ನು ಕೊಲೆ ಮಾಡಿ ನಂತರ ಅಜ್ಞಾಝ್, ಈಕೆಯ ಸಹೋದರಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿ ಬೆಳಗಾವಿಯಲ್ಲಿ ತಲೆಮರೆಸಿಕೊಂಡಿದ್ದನು. +ಪ್ರವೀಣ್ ಈ ಹಿಂದೆ ಮಹರಾಷ್ಟ್ರದಲ್ಲಿ ಎರಡು ವರ್ಷ ಪೊಲೀಸ್ ಸೇವೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. \ No newline at end of file diff --git a/eesanje/url_46_311_2.txt b/eesanje/url_46_311_2.txt new file mode 100644 index 0000000000000000000000000000000000000000..16c571f61c804f1f722d1b385c93fea27452c9f9 --- /dev/null +++ b/eesanje/url_46_311_2.txt @@ -0,0 +1,7 @@ +ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ +ಬೆಂಗಳೂರು, ನ.17- ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಈ ಪೊಗರು, ಬ್ಲಾಕ್‍ಮೆಲ್‍ಗೆಲ್ಲಾ ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. +ಕುಮಾರಸ್ವಾಮಿ ಅವರ ಆರೋಪಗಳಿಗೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರತಿಕ್ರಿಯಿಸಿ ದರು. ಅವರು ಏನೇನು ಕೇಳುತ್ತಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಅವರ ಮಾತುಗಳಿಗೆ, ಆಚಾರ ವಿಚಾರ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಇನ್ನೂ ಬೇಕಾದರೂ ನಾವು ಉತ್ತರ ಕೊಡುತ್ತೇವೆ. ಪಟ್ಟಿ ಕೇಳುತ್ತಿದ್ದಾರೆ ಕೊಡೋಣ ಎಂದರು. +ಬೆಂಗಳೂರಿನಲ್ಲಿ ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದು. ದಾಖಲೆ ಮಾಡಿ ಟೆಂಡರ್ ಹಾಕಿದ್ದರು. ಅದನ್ನು ನನ್ನ ಸ್ನೇಹಿತರು ತೆಗೆದುಕೊಂಡಿದ್ದರು. ನಾನು ಅವರಿಂದ ತೆಗೆದುಕೊಂಡು, ಸಹಭಾಗಿತ್ವದಲ್ಲಿ ಮಾಲ್ ಕಟ್ಟಿದ್ದೇನೆ. ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದರು. +ಕೆಲಸಕ್ಕಿದ್ದ ಅಂಗಡಿಯಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರ ಬಂಧನ +ಹಿಂದೆ ಎಲ್ಲಾ ಪ್ರಯತ್ನಗಳಾಗಿವೆ. ಬಹುಶಃ ಕುಮಾರಸ್ವಾಮಿಯವರು ಮರೆತಿರಬಹುದು, ಅವರ ತಂದೆ 10-15 ವರ್ಷದ ಹಿಂದೆಯೇ ಜೈರಾಜ್ ಎಂಬ ಅಧಿಕಾರಿಗೆ ಹೇಳಿ ಖಾತೆ ನಿಲ್ಲಿಸಿದ್ದರು. ಏನು ತನಿಖೆ ಮಾಡಿಸಬೇಕೋ ಎಲ್ಲಾ ಮಾಡಿಸಿದ್ದಾರೆ. ಈಗಲೂ ಏನು ಬೇಕಾದರೂ ತನಿಖೆ ಮಾಡಿಸಿ. ನಾನೇನಾದರೂ ತಪ್ಪು ಮಾಡಿದ್ದರೆ ಗಲ್ಲಿಗೆ ಬೇಕಾದರೆ ಹಾಕಿ ಬಿಡಿ. ಅದಕ್ಕೆಲ್ಲಾ ನಾನು ರೆಡಿ ಇದ್ದೇನೆ. ಈ ಪೊಗರು, ಬ್ಲಾಕ್‍ಮೇಲ್‍ಗೆ ಹೆದರಲ್ಲ. ಸಾರ್ವಜನಿಕ ವ್ಯಕ್ತಿ ಯಾಗಿದ್ದೇನೆ. ಏನು ಬೇಕಾದರೂ ದಾಖಲೆ ಕೊಡುತ್ತೇನೆ ಎಂದರು. +ಮಾಲ್ ಕಟ್ಟಿದ್ದು ನಾನನ್ನಲ್ಲ ಜಾಯಿಂಟ್ ವೆಂಚರ್‍ನಲ್ಲಿ ಶೋಭಾ ಡೆವಲಪರ್ಸ್ ಕಟ್ಟಿದ್ದಾರೆ. ಅವರಿಗೆ ಹೇಳುತ್ತೇನೆ ಯಾವ ವಿದ್ಯುತ್ ಕದ್ದಿದ್ದಾರೆ ದಾಖಲೆ ಬಿಡುಗಡೆ ಮಾಡಿ ಎಂದು ಎಂದ ಅವರು, ಕುಮಾರಸ್ವಾಮಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_311_3.txt b/eesanje/url_46_311_3.txt new file mode 100644 index 0000000000000000000000000000000000000000..8beb4c798213cdff0b74a8b93e501f94f39970bc --- /dev/null +++ b/eesanje/url_46_311_3.txt @@ -0,0 +1,13 @@ +ಗಣಿ ಪ್ರಕರಣದ ತನಿಖೆಗೆ ಅಂಜುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ +ಬೆಂಗಳೂರು,ನ.17- ಬಿಡದಿ ಬಳಿ ತಾವು ಖರೀದಿಸಿರುವ ಆಸ್ತಿ ಹಾಗೂ ಜಂತ್ಕಲ್ ಗಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆಯನ್ನು ಬೇಗ ಪೂರ್ಣಗೊಳಿಸಲಿ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನನ್ನನ್ನು ಹೆದುರಿಸಲು ಸಾಧ್ಯವಿಲ್ಲ. ಏಕಾಂಗಿಯಾಗಿ ಹೋರಾಟ ಮಾಡುವುದಾಗಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಚಿವ ಸಂಪುಟ ಸಭೆ ನಡೆದ ನಂತರ ನನ್ನ ಬಗ್ಗೆಯೇ ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿಡದಿ ಬಳಿ ಜಮೀನು ಖರೀದಿಸಿ 38 ವರ್ಷವಾಗಿದೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಕಾಲದಿಂದ ಇಲ್ಲಿಯವರೆಗೆ ಆಗಿರುವ ತನಿಖೆ ಬಗ್ಗೆ ಪುಸ್ತಕ ಬರೆಯಬಹುದು. ಲೋಕಾಯುಕ್ತ, ಸಿಐಡಿ ತನಿಖೆ ಎಲ್ಲವೂ ಆಗಿದೆ. ಇನ್ನೊಮ್ಮೆ ತನಿಖೆ ಮಾಡಿಸಿ ನನಗಿನ್ನೂ ಮೂರ್ನಾಲ್ಕು ಎಕರೆ ಜಮೀನು ಸಿಕ್ಕಿಲ್ಲ. ಅದನ್ನು ಹುಡುಕಿ ಕೊಡಲಿ ಎಂದು ಹೇಳಿದರು. +ಮುಖ್ಯಮಂತ್ರಿ ಉಸ್ತುವಾರಿಯಲ್ಲೇ ಜಂತ್ಕಲ್ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ಜಂತ್ಕಲ್ ಪ್ರಕರಣ ಮುಗಿಸಲು ಮುಖ್ಯಮಂತ್ರಿಯಾಗಿದ್ದಾಗ ಒತ್ತಡವನ್ನೂ ಹೇರಿಲ್ಲ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿ ಮಾಲೀಕರಿಂದ 20 ಲಕ್ಷ ರೂ.ವನ್ನು ಪುತ್ರನ ಖಾತೆಗೆ ಪಡೆದುಕೊಂಡಿದ್ದ ಅಧಿಕಾರಿ ಜೈಲಿಗೆ ಹೋಗಿದ್ದಾರೆ. ಅದನ್ನು ನನ್ನ ತಲೆಗೆ ಕಟ್ಟಲು ಹುನ್ನಾರ ನಡೆಸಿದ್ದರು ಎಂದರು. +ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ +ಜಂತ್ಕಲ್ ಗಣಿಗಾರಿಕೆ ಪ್ರಕರಣವನ್ನು ಶೀಘ್ರವಾಗಿ ಪೂರ್ಣಗೊಳಿಸಲಿ ಎಂದ ಅವರು, ನಾನು ಯಾವುದೇ ಕಾರಣಕ್ಕೂ ಅಂಜುವುದಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿಲ್ಲ ಎಂದು ಆರೋಪಿಸಿದರು.ಹಲವು ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಎಸಿಬಿ ರಚಿಸಿಕೊಂಡಿದ್ದರು. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ರೀಡೂ ವರದಿ ಏನಾಯ್ತು ಎಂದು ಪ್ರಶ್ನಿಸಿದರು. +ಕರಾಬ್ ಜಮೀನಿನಲ್ಲಿ ಮಾಲು:ವಿರೋಧ ಪಕ್ಷದ ಸ್ಥಾನದಲ್ಲಿದ್ದು ಕಾನೂನು ಬಾಹಿರ ಕೃತ್ಯಗಳನ್ನು ಹೊರಗೆ ತರುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ಮಿನರ್ವ ಮಿಲ್‍ಗೆ ಸುಮಾರು 1934ರಲ್ಲಿ ಮಂಜೂರಾಗಿದ್ದ ಜಮೀನು 24 ಎಕರೆ ಕರಾಬ್ ಭೂಮಿಯಲ್ಲಿ ಲೂಲು ಮಾಲ್ ನಿರ್ಮಿಸಲಾಗಿದೆ. ಅಲ್ಲಿದ್ದ ಹೈಟೆನ್ಷನ್ ವೈರ್‍ಗಳನ್ನು ಅಂಡರ್‍ಗ್ರೌಂಡ್‍ನಲ್ಲಿ ತೆಗೆದುಕೊಂಡು ಹೋಗಲಾಗಿದೆ. ಇದಕ್ಕೆ ಕಂಪನಿಯಿಂದ ಹಣ ಕಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು. +ಅಲ್ಲದೆ ಮಾಲ್‍ನ ಕಟ್ಟಡ ನಿರ್ಮಾಣ ಮಾಡುವಾಗ ಬಳಸಿದ ವಿದ್ಯುತ್‍ಗೆ ಪೂರ್ವಾನುಮತಿ ಪಡೆದು ಹಣ ಪಾವತಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ನನ್ನ ವಿರುದ್ಧ ನಾಲ್ಕು ಕೇಸ್‍ಗಳನ್ನು 2009ರಲ್ಲಿ ಹಾಕಲಾಗಿತ್ತು. ವಕೀಲರ ಸಲಹೆ ಮೇರೆಗೆ ಜಾಮೀನನ್ನು ಪಡೆದಿದ್ದಾಗಿ ಸ್ಪಷ್ಟಪಡಿಸಿದರು. +ಕ್ಷಮೆಗೆ ಆಗ್ರಹ:ಸಭಾಧ್ಯಕ್ಷರಾದವರು ವಿಧಾನಸಭೆಯ 224 ಸದಸ್ಯರ ರಕ್ಷಣೆ ಮಾಡಬೇಕು. ಸಭಾಧ್ಯಕ್ಷರ ಹೆಸರನ್ನು ಬಳಸಿ ಸಚಿವರೊಬ್ಬರು ಬಿಜೆಪಿ ನಾಯಕರ ಬಗ್ಗೆ ಬಳಸಿರುವ ಪದಬಳಕೆಗೆ ಕ್ಷಮೆ ಯಾಚಿಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು. ಸಭಾಧ್ಯಕ್ಷರಾದವರು ಒಂದು ಧರ್ಮದ ಪ್ರತಿನಿಧಿಯಲ್ಲ. ಸಂವಿಧಾನ ಬದ್ದವಾಗಿ ಕರ್ತವ್ಯ ನಿರ್ವಹಿಸುವವರು. ಅವರ ಹೆಸರಿನಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ. ಈ ರೀತಿಯಾದರೆ ಸದನದ ನಿಯಮವನ್ನು ಉಳಿಸುತ್ತಾರೆಯೇ ಎಂದು ಪ್ರಶ್ನಿಸಿದರು. +ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್ +ನಂಬಬೇಕೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ಐದು ಶಾಲೆಗಳಿಗೆ ಸಿಎಸ್‍ಆರ್ ನಿಧಿ ಬಳಕೆ ವಿಚಾರಕ್ಕೆ ಮಾತನಾಡಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನು ನಾವು ನಂಬಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. +ಇನ್ನು ಬೆಳಗ್ಗೆ ಮಾಧ್ಯಮಗಳಲ್ಲಿ ಆ ವಿಡಿಯೋ ಪ್ರಸಾರವಾದ ಕೂಡಲೇ ಅಂದರೆ 10-11 ಗಂಟೆಗೆ ಈ ಆರೋಪದ ಬಗ್ಗೆ ಸ್ಪಷ್ಟನೆ ನೀಡಬಹುದಿತ್ತು. ಆದರೆ ಮಧ್ಯಾಹ್ನ 3 ಗಂಟೆವರೆಗೆ ಏಕೆ ಕಾಯಬೇಕಿತ್ತು ಎಂದರು.ಡೂಪ್ಲಿಕೇಟ್ ಸಿಎಂ ಹೇಳಿದ ಮೇಲೆ ಸಿಎಸ್‍ಆರ್ ನಿಧಿ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದ ಅವರು, ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು. +ಮಾತನಾಡುವಾಗ ವಿವೇಕನಂದ ಯಾರೂ ಎಂದು ಪ್ರಶ್ನಿಸಿದ್ದಾರೆ. ಸಿಎಸ್‍ಆರ್ ನಿಧಿ ವಿಚಾರವಾಗಿದ್ದರೆ ಬಿಇಒ ವಿವೇಕನಂದ ಎಂಬುದು ಗೊತ್ತಾಗುತ್ತಿರಲಿಲ್ಲವೇ? ಸಿದ್ದರಾಮಯ್ಯನವರ ಹುಟ್ಟೂರಿನ ಶಾಲೆಗೆ ಈ ನಿಧಿ ಕೊಟ್ಟಿದ್ದಾರೆಯೆ? ಎಂದು ಪ್ರಶ್ನಿಸಿದ ಅವರು, ನನ್ನ ಪುತ್ರ ಹಾಗೂ ಶಾಸಕರಾಗಿದ್ದ ಪತ್ನಿ ಎಂದು ಕೂಡ ಮುಖ್ಯಮಂತ್ರಿ ಕಚೇರಿಯ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು.ಗೋಷ್ಠಿಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_311_4.txt b/eesanje/url_46_311_4.txt new file mode 100644 index 0000000000000000000000000000000000000000..b551c723b5b80aca5e5d65aa4a9935e7261aa4f3 --- /dev/null +++ b/eesanje/url_46_311_4.txt @@ -0,0 +1,8 @@ +ಕಾಂಗ್ರೆಸ್‍ಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ವಿಜಯೇಂದ್ರ +ಬೆಂಗಳೂರು,ನ.17- ವಿಧಾನಸಭೆಯಲ್ಲಿ ಭಾರೀ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‍ಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಜನತೆ ಶೀಘ್ರದಲ್ಲೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ವರ್ಗಾವಣೆಯ ದಂಧೆ ನಡೆಯುತ್ತಲೇ ಇದೆ ಎಂದು ನಾವು ಹೇಳಿದ್ದೆವು. ಈಗ ಅವರ ಪಕ್ಷದವರೇ ನಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು. +ಅಧಿಕಾರ ಶಾಶ್ವತವಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದರ್ಪ, ದುರಹಂಕಾರ, ಮ್ಮಾಕು ಬಹಳ ದಿನ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ನಿಮಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು. +ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಪತ್ತೆಯಾದ ಹಣದ ಮೂಲ ಯಾರಿಗೆ ಸೇರಿದ್ದು ಎಂಬುದನ್ನು ಕಾಂಗ್ರೆಸ್ ನಾಯಕರು ಹೇಳಲು ಸಿದ್ದರಿದ್ದೀರಾ? ಐಟಿ ದಾಳಿಯಾದಾಗ ಮುಖ್ಯಮಂತ್ರಿ ಡಿಸಿಎಂ ಸೇರಿದಂತೆ ಎಲ್ಲರೂ ಬಾಯಿಗೆ ಬಂದಂತೆ ಮಾತನಾಡಿದರು ಎಂದು ಕಿಡಿಕಾರಿದರು. +ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ +ಕಡೆಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ ದಾಳಿಯನ್ನು ಸ್ವಾಗತಿಸಬೇಕು. ಬದಲಿಗೆ ದಾಳಿ ನಡೆದಿದ್ದು ತಪ್ಪು ಎಂಬ ರೀತಿಯಲ್ಲಿ ಮಾತನಾಡಿದರು ಎಂದು ಕಿಡಿಕಾರಿದರು.ಸ್ಪೀಕರ್ ಸ್ಥಾನದ ಬಗ್ಗೆ ಲಘುವಾಗಿ ಸಚಿವ ಜಮೀರ್ ಅಹಮ್ಮದ್ ನೀಡಿರುವ ಹೇಳಿಕೆ ಅತ್ಯಂತ ದುರದೃಷ್ಟಕರ. ಸ್ಪೀಕರ್ ಸ್ಥಾನದ ಬಗ್ಗೆಯೇ ಗೌರವವಿಲ್ಲ ಎಂದರೆ ಹೇಗೆ ಎಂದು ವಿಜಯೇಂದ್ರ ಪ್ರಶ್ನೆ ಮಾಡಿದರು. +ಜಮೀರ್ ತಮ್ಮ ಮನದಲ್ಲಿರುವ ಇಂಗಿತವನ್ನೇ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯಿಂದ ಮಾತನಾಡಬೇಕು. ಇತ್ತೀಚೆಗೆ ಅವರಿಗೆ ವಿವಾದ ಎಳೆದುಕೊಳ್ಳುವುದು ಕಾಯಕವಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಮಧ್ಯಪ್ರವೇಶಿಸಿ ಜಮೀರ್‍ಗೆ ಬಾಯಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು. \ No newline at end of file diff --git a/eesanje/url_46_311_5.txt b/eesanje/url_46_311_5.txt new file mode 100644 index 0000000000000000000000000000000000000000..05254c40c2d7201e394b23369f95b832674a9f59 --- /dev/null +++ b/eesanje/url_46_311_5.txt @@ -0,0 +1,8 @@ +ಸರ್ಕಾರಕ್ಕೆ ಮುಜುಗರ ತಂದ ಜಮೀರ್ ಹೇಳಿಕೆ +ಬೆಂಗಳೂರು, ನ.17- ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ಪಕ್ಷವನ್ನು ಹೊಗಳುವ ಭರದಲ್ಲಿ ಸ್ಪೀಕರ್ ಹುದ್ದೆಯ ಕುರಿತು ಅನಪೇಕ್ಷಿತ ಹೇಳಿಕೆ ತೀವ್ರ ಮುಜುಗರಕ್ಕೆ ಕಾರಣವಾಗಿದೆ. +ತೆಲಂಗಾಣದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದ ಸಚಿವ ಜಮೀರ್ ಅಹ್ಮದ್ ಖಾನ್, ಕಾಂಗ್ರೆಸ್ ಪಕ್ಷ 17 ಮಂದಿ ಮುಸ್ಲಿಂರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಿತ್ತು. ಒಂಬತ್ತು ಮಂದಿ ಆಯ್ಕೆಯಾಗಿದ್ದೇವೆ. ಅವರಲ್ಲಿ ನನ್ನನ್ನು ಸೇರಿದಂತೆ ಐದು ಮಂದಿಗೆ ಬೇರೆ ಬೇರೆ ರೀತಿಯ ಅಕಾರವನ್ನು ಕಾಂಗ್ರೆಸ್ ನೀಡಿದೆ. +ನನಗೆ ಸಚಿವ ಸ್ಥಾನ ನೀಡಿ, ಮೂರು ಖಾತೆಗಳ ಜವಾಬ್ದಾರಿ ವಹಿಸಲಾಗಿದೆ. ರಹಿಂಖಾನ್‍ರನ್ನು ಸಚಿವರನ್ನಾಗಿ ಮಾಡಲಾಗಿದೆ, ಕೆಪಿಸಿಸಿ ಕಾರ್ಯಧ್ಯಕ್ಷ ಸಲಿಂ ಅಹಮದ್‍ರನ್ನು ವಿಧಾನ ಪರಿಷತ್‍ನ ಮುಖ್ಯಸಚೇತಕರನ್ನಾಗಿ ಮಾಡಲಾಗಿದೆ. ನಸೀರ್ ಅಹ್ಮದ್‍ರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿ ಈವರೆಗೂ ಮುಸ್ಲಿಂ ನಾಯಕನೊಬ್ಬನನ್ನು ಸ್ಪೀಕರ್ ಮಾಡಿರಲಿಲ್ಲ. ಕಾಂಗ್ರೆಸ್ ಮೊದಲ ಬಾರಿಗೆ ಯು.ಟಿ.ಖಾದರ್‍ರನ್ನು ಸ್ಪೀಕರ್ ಮಾಡಿದೆ. ಇವತ್ತು ಬಿಜೆಪಿಯ ನಾಯಕರು ಕೂಡ ಯು.ಟಿ.ಖಾದರ್ ಅವರ ಮುಂದೆ ನಮಸ್ಕಾರ ಸಾರ್ ಎಂದು ನಿಲ್ಲಬೇಕಾಗಿದೆ. ಇದನ್ನು ಮಾಡಿರುವುದು ಕಾಂಗ್ರೆಸ್ ಎಂದು ಹೇಳಿದ್ದಾರೆ. ಈ ಹೇಳಿಕೆ ವಿರೋಧ ಪಕ್ಷಗಳನ್ನು ಕೆರಳಿಸಿದೆ. +ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್ +ವಿವಾದಗಳ ನಿಸ್ಸಿಮ:ಜಮೀರ್ ಅಹ್ಮದ್ ಖಾನ್ ಪದೇ ಪದೇ ವಿವಾದಗಳನ್ನು ಸೃಷ್ಟಿಸುವುದರಲ್ಲಿ ನಿಸ್ಸಿಮರು. ಈ ಮೊದಲು ಕಾಂಗ್ರೆಸ್ ಪಕ್ಷದಲ್ಲೇ ನಾನಾ ರೀತಿಯ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದರು. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ವಿಧಾನಸಭೆ ಚುನಾವಣೆಗೂ ಮೊದಲೇ ಪ್ರತಿಪಾದನೆ ಮಾಡಿದ್ದರು. ಹೈಕಮಾಂಡ್ ಎಚ್ಚರಿಕೆ ನೀಡಿದರೂ ಕ್ಯಾರೆ ಎನ್ನದೆ ಮಾತುಗಳನ್ನಾಡಿದರು. ಅದರ ಪರಿಣಾಮ ಅವರ ಆಪ್ತ ಸ್ನೇಹಿತರಾಗಿದ್ದ ಪುಲಕೇಶಿನಗರದ ಕ್ಷೇತ್ರದ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಶಾಸಕರಾಗಿದ್ದರು, ಟಿಕೆಟ್ ತಪ್ಪುವಂತಾಯಿತು. ಆ ಬಳಿಕ ಪಕ್ಷದ ಒಳಗೆ ಮುಜುಗರವಾಗುವಂತಹ ಹೇಳಿಕೆಗಳಿಗೆ ಜಮೀರ್ ಕಡಿವಾಣ ಹಾಕಿಕೊಂಡಿದ್ದರು. +ಅಭಿವೃದ್ಧಿ ವಿಷಯದಲ್ಲಿ ಹೆಚ್ಚು ಸುದ್ದಿಯಾಗದ ಸಚಿವ ಜಮೀರ್ ವಿವಾದಿತ ಹೇಳಿಕೆ, ಹಾಸ್ಯಾಸ್ಪದ ನಡವಳಿಕೆಗಳಿಂದಲೇ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ಕಾಂಗ್ರೆಸ್‍ನಲ್ಲಿ ಜಮೀರ್‍ಗಾಗಿ ಹಲವು ನಿಷ್ಠಾವಂತ ಮೂಲ ಕಾಂಗ್ರೆಸಿಗರನ್ನು ಬದಿಗೆ ಸರಿಸಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ವ್ಯಾಪಕ ಆಕ್ರೋಶಗಳು ಒಳಗೊಳಗೆ ಕುದಿಯುತ್ತಿವೆ. +ಚುನಾವಣಾ ಕಾಲದಲ್ಲಿ ಗೊಂದಲಗಳಾದರೆ ಕಾಂಗ್ರೆಸ್‍ಗೆ ನಷ್ಟವಾಗುತ್ತದೆ. ಮುಸ್ಲಿಂರ ವಿರುದ್ಧ ಸದಾ ಕಲ ಕೆಂಡ ಕಾರುವ ಬಿಜೆಪಿಗೆ ಲಾಭವಾಗುತ್ತದೆ. ಇದರಿಂದ ಭವಿಷ್ಯದಲ್ಲಿ ಮುಸ್ಲಿಂ ಸಮುದಾಯ ಮತ್ತಷ್ಟು ಆತಂಕಗಳನ್ನು ಹೆದರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದೊಳಗಿನ ಅಲ್ಪಸಂಖ್ಯಾತ ನಾಯಕರು ಜಮೀರ್ ಅವರ ಪಾರುಪತ್ಯವನ್ನು ಅವಡುಗಚ್ಚಿ ಸಹಿಸಿಕೊಂಡಿದ್ದಾರೆ. ಆದರೂ ಜಮೀರ್ ಅನಪೇಕ್ಷಿತ ಹೇಳಿಕೆಗಳ ಮೂಲಕ ಸರ್ಕಾರ ಹಾಗೂ ಪಕ್ಷವನ್ನು ಮುಜಗರಕ್ಕೀಡು ಮಾಡುವುದನ್ನು ಮುಂದುವರೆಸಿರುವುದು ನಾಯಕರ ಅಸಹನೆಗೆ ಕಾರಣವಾಗಿದೆ. \ No newline at end of file diff --git a/eesanje/url_46_311_6.txt b/eesanje/url_46_311_6.txt new file mode 100644 index 0000000000000000000000000000000000000000..4445b90f1c33188af52ed97aeeccae87290cbd70 --- /dev/null +++ b/eesanje/url_46_311_6.txt @@ -0,0 +1,13 @@ +ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್ +ಉಡುಪಿ, ನ.17- ನಾಲ್ವರ ಹತ್ಯೆ ಪ್ರಕರಣದಿಂದ ಸಂಕಷ್ಟಕ್ಕೀಡಾಗಿರುವ ಕುಟುಂಬದ ಸದಸ್ಯರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಹಾಗೂ ಮಹಿಳಾ-ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. +ಈ ವೇಳೆ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ನೀಡಿ ಪ್ರಕರಣವನ್ನು ತ್ವರಿತ ನ್ಯಾಯಾಲಯದಿಂದ ವಿಚಾರಣೆ ನಡೆಸಬೇಕು, ಸರ್ಕಾರಿ ಅಭಿಯೋಜಕರನ್ನಾಗಿ ಶಿವಪ್ರಸಾದ್ ಆಳ್ವರನ್ನು ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜನನಿಭೀಡ ಪ್ರದೇಶದಲ್ಲಿ ನಡೆದ ಹತ್ಯೆ ಪ್ರಕರಣ ಜನ ಸಾಮಾನ್ಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಆಘಾತಕ್ಕೆ ಒಳದ ಸ್ಥಳೀಯರು ಕುಟುಂಬದ ಸದಸ್ಯರ ಜೊತೆಗೆ ಬೆಂಬಲವಾಗಿ ನಿಂತರು. ಸಂತ್ರಸ್ಥರಿಗೆ ನೀರು, ಶರಬತ್ತು ನೀಡಿ ಸಂತೈಸಲಾಯಿತು. ಪರಸ್ಪರ ಸೌಹಾರ್ದತೆಯಿಂದ ಘಟನೆಯನ್ನು ಜನ ನಿಭಾಯಿಸಿದ್ದಾರೆ. ಹಿಂದುಗಳು ದೀಪಾವಳಿಯನ್ನು ಆಚರಿಸದೆ ಶೋಕಾಚರಣೆ ಮಾಡಿದ್ದಾರೆ ಎಂದು ಸಚಿವರಿಗೆ ಸ್ಥಳಿಯ ಮುಖಂಡರು ವಿವರಿಸಿದರು. +ಮುಖ್ಯಮಂತ್ರಿ ಕಚೇರಿಯಿಂದ ಅಧಿಕಾರಿಗಳು ಹಾಗೂ ಗೃಹಸಚಿವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ಈಗ ಸರ್ಕಾರದ ಪ್ರತಿನಿಧಿಯಾಗಿ ನೀವು ಬಂದಿದ್ದೀರಿ, ಸಮಾಧಾನವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಂತೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರ ನಿಮ್ಮ ಜೊತೆಗಿದೆ ಎಂದು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ಜಿಲ್ಲೆ ಬೆಚ್ಚಿ ಬೀಳುವಂತಹ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಶವಾಗಿ ರಾಕ್ಷಸ ಪ್ರವೃತ್ತಿಯಿಂದ ಕೊಲೆ ಮಾಡಲಾಗಿದೆ. ಸರ್ಕಾರ ಕುಟುಂಬದವರ ಜೊತೆಯಲ್ಲಿದೆ. ಪೊಲೀಸರು 60 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕುಟುಂಬದ ಸದಸ್ಯರಿಗೆ ಆದಷ್ಟು ಬೇಗ ನ್ಯಾಯ ದೊರಕಿಸಲು ಸಾಧ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು. +ಆರೋಪಿಯನ್ನು ನೋಡಿದರೆ ಸೈಕೋ ಥರಾ ಇದ್ದಾನೆ. ಮೊದಲನೇ ಮದುವೆಯಾಗಿದ್ದ ಆತನಿಗೆ ಎರಡು ಮಕ್ಕಳಿವೆ. ಸೈಕೋ ಕ್ಲಿಲರ್ ಥರಾ ಬಂದು 20 ನಿಮಿಷದಲ್ಲಿ ಕೊಲೆ ಮಾಡಿದ್ದಾನೆ ಎಂದರೆ ಆತನ ಮಾನಸಿಕ ಸ್ಥಿತಿ ಎಷ್ಟು ಕ್ರೋರವಾಗಿತ್ತು ಎಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. +ಆರೋಪಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿನ ನೀರಾವರಿ ಇಲಾಖೆಯ ಮಾಜಿ ಅಧಿಕಾರಿ ಮನೆಯಲ್ಲಿ ಅಡಗಿಕೊಂಡಿದ್ದ. ಕೃತ್ಯದ ಬಗ್ಗೆ ಆಶ್ರಯ ನೀಡಿದ ಮನೆಯವರಿಗೆ ತಿಳಿದಿರಲಿಲ್ಲ. ಆತನ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇರಲಿಲ್ಲ ಎಂದು ಹೇಳಿದರು. ಪ್ರಕರಣವನ್ನು ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು. ಸರ್ಕಾರಿ ಅಭಿಯೋಜಕರ ನೇಮಕ ಕುರಿತಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ಸರ್ಕಾರ ಕಾನೂನಾತ್ಮಕ ನೆಲೆಯಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು. +ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್ +ಉಡುಪಿ ಜಿಲ್ಲೆಯ ಜನ ಶಾಂತಿ ಪ್ರಿಯರು, ಜನವಸತಿ ಪ್ರದೇಶದಲ್ಲಿ ಘಟನೆ ನಡೆದಿರುವುದು ಆಘಾತ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇಂತಹದ್ದಕ್ಕೆ ಅವಕಾಶವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ, ಎಸ್‍ಪಿ ಅವರಿಗೆ ಸೂಚಿಸುತ್ತೇನೆ. ಘಟನೆಯಾದ ತಕ್ಷಣ ನಾನು ಸ್ಥಳಕ್ಕೆ ಬರಲಿಲ್ಲ ಎಂಬುದಕ್ಕೆ ಹೆಚ್ಚಿನ ಮಹತ್ವ ನೀಡಬಾರದು. ನಾನು ಅಂದು ಬೆಳಗಾವಿಯಲ್ಲಿ ಇದ್ದೆ, ಬೆಳಗಾವಿಯಿಂದ ಉಡುಪಿಗೆ ರೈಲು ಅಥವಾ ವಿಮಾನದ ಸೌಲಭ್ಯ ಇಲ್ಲ. ನಾನು ಎಲ್ಲೇ ಇದ್ದರೂ ಜಿಲ್ಲಾಡಳಿತ ಹಾಗೂ ಕುಟುಂಬದ ಸದಸ್ಯರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಜವಾಬ್ದಾರಿ ನಿಭಾಯಿಸಿದ್ದೇನೆ. ನಿನ್ನೆ ಸಚಿವ ಸಂಪುಟ ಸಭೆ ಮುಗಿಸಿದ ಬಳಿಕ ಇಂದು ಇಲ್ಲಿಗೆ ಆಗಮಿಸಿದ್ದೇನೆ ಎಂದರು. +ಬಳಿಕ ಸಚಿವರು ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಆಕಸ್ಮಿಕ ನಡೆದಲ್ಲೇ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು. +9 ಬೋಟ್‍ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು. ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು. +ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ +ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಮುಖಂಡರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_311_7.txt b/eesanje/url_46_311_7.txt new file mode 100644 index 0000000000000000000000000000000000000000..6650ca87f849ca695fc519c072334973f40f615a --- /dev/null +++ b/eesanje/url_46_311_7.txt @@ -0,0 +1,6 @@ +ಪ್ರೀತಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ +ಹಾಸನ,ನ.17- ಪ್ರೀತಿಸುತ್ತಿದ್ದ ಯುವತಿಯನ್ನೇ ಕತ್ತು ಸೀಳಿ ಕ್ರೂರಿ ಪ್ರಿಯಕರ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರ ಹೊರವಲಯದ ಕುಂತಿಬೆಟ್ಟದಲ್ಲಿ ನಡೆದಿದೆ. ಸುಚಿತ್ರಾ(21)ಕೊಲೆಯಾದ ದುರ್ದೈವಿಯಾಗಿದ್ದು, ಶಂಕರನಹಳ್ಳಿ ಗ್ರಾಮ ನಿವಾಸಿ ಆರೋಪಿ ತೇಜಸ್‍ನನ್ನು ಪೊಲೀಸರು ಬಂಧಿಸಿದ್ದಾರೆ. +ಮೊಸಳೆ ಹೊಸಳ್ಳಿ ಬಳಿಯ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಾಗಿದ್ದಾಗ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಪದವಿ ಪೂರ್ಣಗೊಳಿಸಿದ ನಂತರ ಉದ್ಯೋಗ ಹುಡುಕುತ್ತಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಜಗಳವಾಗಿ ಸುಮಾರು 1 ತಿಂಗಳು ಪರಸ್ಪರ ಮಾತುಕತೆ ಬಿಟ್ಟಿದ್ದರು ,ಪ್ರೀತಿ ಬ್ರೇಕ್‍ಅಪ್ ಆಗಿತ್ತು ಮೊನ್ನೆ ಸುಚಿತ್ರಾಗೆ ಕರೆ ಮಾಡಿ ಮಾತನಾಡಬೇಕು ಬಾ ಎಂದು ಆರೋಪಿ ತೇಜಸ್ ಕರೆದಿದ್ದಾನೆ. +ಇಸ್ರೇಲ್-ಹಮಾಸ್ ಯುದ್ದದ ಸಾವು-ನೋವುಗಳಿಗೆ ಮೋದಿ ಖಂಡನೆ +ಗುರುವಾರ ಮುಂಜಾನೆ ಭೇಟಿಯಾದ ಇಬ್ಬರು ಮಾತುಕತೆ ನಡೆಸಿದ್ದಾರೆ, ನಂತರ ತೇಜಸ್ ಬಲವಂತ ಮಾಡಿ ಸುಚಿತ್ರಾಳನ್ನು ಕುಂತಿಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದಾನೆ .ಅಲ್ಲಿ ಮತ್ತೆ ಜಗಳ ನಡೆದು ಪೂರ್ವ ಯೋಜನೆಯಂತೆ ತನ್ನ ಜೊತೆ ತಂದಿದ್ದ ಚಾಕುವಿನಿಂದ ಗೆಳತಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. +ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳದಲ್ಲಿ ಸಿಕ್ಕ ಮೊಬೈಲ್ ಆಧಾರದ ಮೇಲೆ ಆರೋಪಿಯನ್ನಿ ಬಂಧಿಸಿ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ,ತನಿಖೆ ಮುಂದುವರೆದಿದೆ. \ No newline at end of file diff --git a/eesanje/url_46_311_8.txt b/eesanje/url_46_311_8.txt new file mode 100644 index 0000000000000000000000000000000000000000..1d9e5321ded84309dc4adc35163bf9eeca140726 --- /dev/null +++ b/eesanje/url_46_311_8.txt @@ -0,0 +1,16 @@ +ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಅಶೋಕ್-ಅಶ್ವತ್ಥ್ ಪೈಪೋಟಿ +ಬೆಂಗಳೂರು,ನ.17- ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳ ಬಳಿಕ ವಿಧಾನಮಂಡಲದ ಉಭಯ ಸದನಗಳಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಹಲವರ ಹೆಸರುಗಳು ಪ್ರಸ್ತಾಪವಾಗಿದ್ದು, ಅಂತಿಮವಾಗಿ ನಾಯಕ ಯಾರು ಎಂಬುದನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. +ಖಾಸಗಿ ಹೋಟೆಲ್‍ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕೇಂದ್ರದಿಂದ ಚುನಾವಣಾವೀಕ್ಷಕರಾಗಿ ಆಗಮಿಸಿದ್ದ ಹಾಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‍ಕುಮಾರ್ ಗೌತಮ್ ಅವರುಗಳು ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. +ವಿಧಾನಸಭೆ ಮತ್ತು ವಿಧಾನಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿರುವುದರಿಂದ ಶಾಸಕರ ಅಭಿಪ್ರಾಯವನ್ನು ಪಡೆದಿರುವ ವೀಕ್ಷಕರು ಪಕ್ಷದ ವರಿಷ್ಠರಿಗೆ ವರದಿ ನೀಡಿದ ಬಳಿಕ ಒಂದೆರಡು ದಿನಗಳಲ್ಲಿ ಅಂತಿಮ ಹೆಸರು ಘೋಷಣೆಯಾಗಲಿದೆ. +ಪ್ರತಿಪಕ್ಷದ ನಾಯಕನ ರೇಸ್‍ನಲ್ಲಿ ಒಕ್ಕಲಿಗ ಸಮುದಾಯದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮತ್ತು ಹಾಲಿ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಆರ್.ಅಶೋಕ್ ಹೆಸರು ಮುಂಚೂಣಿಯಲ್ಲಿದೆ.ಇದರ ಜೊತೆಗೆ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕಾರ್ಕಳದ ವಿ.ಸುನೀಲ್‍ಕುಮಾರ್, ತೀರ್ಥಹಳ್ಳಿಯ ಅರಗ ಜ್ಞಾನೇಂದ್ರ, ವಿಜಾಪುರದ ಬಸನಗೌಡ ಪಾಟೀಲ್ ಯತ್ನಾಳ್ ಹೆಸರುಗಳು ಕೂಡ ಪ್ರಸ್ತಾಪವಾಗಿದೆ. +ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ವೀರಶೈವ ಲಿಂಗಾಯಿತ ಸಮುದಾಯಕ್ಕೆ ನೀಡಿರುವುದರಿಂದ ಒಕ್ಕಲಿಗ ಸಮುದಾಯಕ್ಕೆ ಪ್ರತಿಪಕ್ಷದ ನಾಯಕನ ಸ್ಥಾನ ಕೊಡಬೇಕೆಂಬ ಕೂಗು ಕೇಳಿಬಂದಿತ್ತು. ಮೂಲಗಳ ಪ್ರಕಾರ ಅಶೋಕ್‍ಗೆ ಕೆಲ ಹೆಚ್ಚಿನ ಶಾಸಕರು ಬೆಂಬಲವನ್ನು ಸೂಚಿಸಿದ್ದು, ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಬೆಂಬಲವೂ ಸಿಕ್ಕಿದೆ ಎನ್ನಲಾಗುತ್ತಿದೆ. +ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ +ಈ ಮೊದಲು ಪ್ರತಿಪಕ್ಷದ ನಾಯಕನ ಸ್ಥಾನವನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲವೇ ಯತ್ನಾಳ್ ಅವರಿಗೆ ನೀಡುವ ಬಗ್ಗೆ ಚಿಂತನೆ ಇತ್ತು. ಆದರೆ ವಿಜಯೇಂದ್ರ ಬಿಜೆಪಿ ಸಾರಥ್ಯ ವಹಿಸಿದ ಮೇಲೆ ಈ ಇಬ್ಬರ ಹೆಸರುಗಳು ಪಟ್ಟಿಯಿಂದ ಹೊರಗುಳಿದವು.ಆರ್.ಅಶೋಕ್ ಪ್ರತಿಪಕ್ಷದ ನಾಯಕನಾದರೆ ಹಿಂದುಳಿದ ಸಮುದಾಯದ ವಿ.ಸುನೀಲ್‍ಕುಮಾರ್ ಉಪನಾಯಕನಾಗುವ ಸಂಭವವಿದೆ. +ಒಂದು ಹೈಕಮಾಂಡ್ ಕಳಿಸಿರುವ ಹೆಸರನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸುವುದು ಅಥವಾ ಎರಡನೆಯದ್ದಾಗಿ ಶಾಸಕರ ಅಭಿಪ್ರಾಯ ಆಲಿಸಿ ಹೈಕಮಾಂಡ್ ನಾಯಕರ ಜೊತೆ ಸಂಪರ್ಕ ಮಾಡಿ ಹೆಸರನ್ನು ಅಂತಿಮಗೊಳಿಸಿ ಶಾಸಕಾಂಗ ಪಕ್ಷದ ಸಭೆಯಲ್ಲೇ ಹೆಸರು ಪ್ರಕಟಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದು ಸಾಧ್ಯವಾಗದಿದ್ದರೆ ವರಿಷ್ಠರೇ ಹೆಸರನ್ನು ಪ್ರಕಟಿಸಲಿದ್ದಾರೆ ಎನ್ನಲಾಗಿದೆ. +ಡಾ.ಅಶ್ವತ್ಥನಾರಾಯಣ್ ನೇರ ಪ್ರತಿಪಕ್ಷ ಸ್ಥಾನ ಕೇಳದಿದ್ದರೂ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕ ಯಾವ ಸ್ಥಾನ ಸಿಕ್ಕರೂ ನಿಭಾಯಿಸಲು ಸಿದ್ದವಾಗಿ ಕುಳಿತಿದ್ದಾರೆ. ಈಗಾಗಲೇ ರಾಜ್ಯಾಧ್ಯಕ್ಷರ ಆಯ್ಕೆ ಮುಗಿದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. +ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಪಕ್ಷ ನಾಯಕ ಸ್ಥಾನವನ್ನು ನೇರವಾಗಿ ಕೇಳದಿದ್ದರೂ ಪಕ್ಷ ನೀಡುವ ಯಾವುದೇ ಜವಾಬ್ದಾರಿ ನಿರ್ವಹಿಸುತ್ತೇನೆ. ಪ್ರತಿಪಕ್ಷ ನಾಯಕನ ಸ್ಥಾನ ನೀಡಿದರೂ ನಿರ್ವಹಿಸುವ ಅರ್ಹತೆ ನನಗಿದೆ ಎಂದು ತಮ್ಮ ಅಪೇಕ್ಷೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. +ಇನ್ನುಳಿದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಳೆದ ಅಧಿವೇಶನದಲ್ಲಿಯೇ ಪ್ರತಿಪಕ್ಷ ನಾಯಕನ ರೀತಿಯಲ್ಲಿ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದರು, ಸದನದಲ್ಲಿ ಸಾಮಥ್ರ್ಯ ಪ್ರದರ್ಶಿಸಿ ಪ್ರತಿಪಕ್ಷ ನಾಯಕನ ಸ್ಥಾನದ ರೇಸ್‍ಗೆ ಬಂದಿದ್ದಾರೆ. ಹೈಕಮಾಂಡ್ ನಾಯಕರ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದಾರೆ. +ಇವರ ಜೊತೆ ಮಾಜಿ ಸಚಿವ ಸುನೀಲ್‍ಕುಮಾರ್ ಕೂಡ ರೇಸ್‍ನಲ್ಲಿದ್ದಾರೆ. ಹಿಂದುಳಿದ ವರ್ಗದ ನಾಯಕ, ಉತ್ತಮ ವಾಗ್ಮಿಯೂ ಆಗಿರುವ ಸುನೀಲ್‍ಕುಮಾರ್ ಯಾವ ಬಣದಲ್ಲಿಯೂ ಗುರುತಿಸಿಕೊಳ್ಳದೇ ಪಕ್ಷದ ಪರವಾಗಿ ದನಿ ಎತ್ತುತ್ತಾ ಬಂದಿದ್ದು, ಈ ಬಾರಿ ಪ್ರತಿಪಕ್ಷ ನಾಯಕನ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. +ಆರ್.ಅಶೋಕ್‍ಗೆ ಅವಕಾಶ ನೀಡಿದರೆ ರಾಜ್ಯಾಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ನಡುವೆ ಸಮನ್ವಯತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆ. ಹೀಗಾಗಿ ಅಶೋಕ್‍ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.ಹಾಗಂತ ಅಶ್ವತ್ಥನಾರಾಯಣ್ ಅವರನ್ನು ಕಡೆಗಣಿಸಲೂ ಸಾಧ್ಯವಿಲ್ಲ. ಡಿಸಿಎಂ ಡಿಕೆ.ಶಿವಕುಮಾರ್‍ಗೆ ಠಕ್ಕರ್ ಕೊಡುತ್ತಲೇ ಬಂದಿರುವ ಅಶ್ವತ್ಥನಾರಾಯಣ್‍ಗೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ ಎನ್ನುವುದು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ. +ಪರಿಷತ್‍ಗೆ ಕೋಟಾ?:ವಿಧಾನಪರಿಷತ್ ಪ್ರತಿಪಕ್ಷ ನಾಯಕರ ಸ್ಥಾನಕ್ಕೂ ಹೆಸರನ್ನು ಪ್ರಕಟಿಸಲಾಗುತ್ತದೆ. ಒಮ್ಮೆ ಪ್ರತಿಪಕ್ಷ ನಾಯಕರಾಗಿ ಸಭಾ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಕೆಲಸ ಮಾಡಿರುವ ಹಿನ್ನೆಲೆ ಈ ಬಾರಿ ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಇಲ್ಲಿ ಅಷ್ಟಾಗಿ ರಾಜಕೀಯ ಲೆಕ್ಕಾಚಾರ ಹಾಕುವುದಿಲ್ಲ, ಪಕ್ಷದ ಮೂಲಗಳ ಪ್ರಕಾರ, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅಥವಾ ಮಹಿಳೆಗೆ ಅವಕಾಶ ನೀಡಲು ನಿರ್ಧರಿಸಿದರೆ ತೇಜಸ್ವಿನಿಗೌಡ ಅವರಿಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. +ನಾಳೆ ನಡೆಯುವ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸುವಂತೆ ಪಕ್ಷದ ಎಲ್ಲ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಆಹ್ವಾನ ಕಳಿಸಿದ್ದು, ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ನಿಕಟಪೂರ್ವ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. \ No newline at end of file diff --git a/eesanje/url_46_311_9.txt b/eesanje/url_46_311_9.txt new file mode 100644 index 0000000000000000000000000000000000000000..0a08f7d6b2e22af3cac68ac845a93f99ed567de9 --- /dev/null +++ b/eesanje/url_46_311_9.txt @@ -0,0 +1,9 @@ +ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್ +ಬೆಂಗಳೂರು,ನ.17-ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯು.ಟಿ.ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆ ಎನ್ನುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. +ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್‍ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಹೇಳಿದ್ದಾರೆ. +ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. +ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದ್ದಾರೆ. +ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ +ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು. +ಕಣಿವೆಯಲ್ಲಿ ಮುಂದುವರೆದ ಉಗ್ರ ಬೇಟೆ +ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_312_1.txt b/eesanje/url_46_312_1.txt new file mode 100644 index 0000000000000000000000000000000000000000..46c00ff0bced3b06ea50c31e13bb1436b42696ff --- /dev/null +++ b/eesanje/url_46_312_1.txt @@ -0,0 +1,13 @@ +ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ +ಬೆಂಗಳೂರು,ನ,16- ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಹತಾಶೆ ಹಾಗೂ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್- ಬಿಜೆಪಿಯವರಿಗೆ ಕೆಲಸ ಇಲ್ಲ. ಯತೀಂದ್ರ ಸಿದ್ದರಾಮಯ್ಯ ಕೆಡಿಪಿ ಸದಸ್ಯರಾಗಿದ್ದಾರೆ. ಕ್ಷೇತ್ರದಲ್ಲಿ ಆಶ್ರಯ ಸಮಿತಿಯ ಅಧ್ಯಕ್ಷರು. ಜನಸಂಪರ್ಕ ಸಭೆ ನಡೆಸುವಾಗ ಫೋನಿನಲ್ಲಿ ಮಾತನಾಡಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಕೆಲವು ಶಾಲೆಗಳಿಗೆ ಕುರ್ಚಿ, ಬೆಂಚುಗಳನ್ನು ಪೂರೈಸುವ ಪ್ರಯತ್ನ ನಡೆಯುತ್ತಿದೆ. ಆ ಪಟ್ಟಿ ತಯಾರಿಸುವಾಗ ವಿವೇಕಾನಂದ ಎಂಬ ಅಧಿಕಾರಿ ಒಂದೆರಡು ಹೆಸರುಗಳನ್ನು ಬದಲಾವಣೆ ಮಾಡಿದ್ದಾರೆ. ಸ್ಥಳೀಯರು ಈ ಬಗ್ಗೆ ಯತೀಂದ್ರ ಅವರಿಗೆ ದೂರು ನೀಡಿದ್ದಾರೆ. ಚುನಾವಣೆ ವೇಳೆ ಮಾತುಕೊಟ್ಟಂತೆ ಶಾಲೆಗಳನ್ನು ಅಭಿವೃದ್ಧಿಪಡಿಸುವುದು ಸ್ಥಳೀಯ ಜನಪ್ರತಿನಿಧಿಗಳ ಕರ್ತವ್ಯ. ಯತೀಂದ್ರ ಅದರಂತೆ ನಡೆದುಕೊಂಡಿದ್ದಾರೆ ಎಂದರು. +ತಂದೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಪರವಾಗಿ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾರೆ. ಫೋನ್‍ನಲ್ಲಿ ಮಾತನಾಡುವಾಗ ಎಲ್ಲಿಯೂ ಅಧಿಕಾರಿಗಳ ಹೆಸರು ಹಾಗೂ ಹುದ್ದೆ ಪ್ರಸ್ತಾಪವಾಗಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜೆಡಿಎಸ್-ಬಿಜೆಪಿಯವರು ವರ್ಗಾವಣೆ ದಂಧೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ವರ್ಗಾವಣೆ ನಿಂತು ಬಹಳ ದಿನವಾಗಿದೆ. ದಂಧೆ ಎಲ್ಲಿ ನಡೆಯುತ್ತಿದೆ ಎಂಬುದನ್ನು ತೋರಿಸಿ ಎಂದು ಸವಾಲು ಹಾಕಿದ ಡಿ.ಕೆ.ಶಿವಕುಮಾರ್, ಯತೀಂದ್ರ ಮಾಜಿ ಶಾಸಕರಾಗಿದ್ದಾರೆ. ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಕೆಲಸ ಮಾಡಲು ನಾಲ್ಕೈದು ಅಧಿಕಾರಿಗಳು ಬೇಕು ಎಂದು ಕೇಳಿದ್ದರೂ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು. +ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ +ಮುಖ್ಯಮಂತ್ರಿ ಯಾದವರಿಗೆ ತಮ್ಮ ಕ್ಷೇತ್ರ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಉಪ ಮುಖ್ಯಮಂತ್ರಿಯಾದ ನನಗೂ ನನ್ನ ಕ್ಷೇತ್ರಕ್ಕೆ ನಿಯಮಿತವಾಗಿ ಭೇಟಿ ನೀಡಲು ಆಗುತ್ತಿಲ್ಲ. ಹೀಗಾಗಿ ತಮ್ಮ ಸಹೋದರರೂ ಆಗಿರುವ ಸಂಸದ ಡಿ.ಕೆ.ಸುರೇಶ್ ಅವರು ಕ್ಷೇತ್ರದ ಜನರ ಅಹವಾಲು ಕೇಳುತ್ತಾರೆ. ಮನೆಯ ಬೇಡಿಕೆ ಸೇರಿದಂತೆ ಹಲವಾರು ಮನವಿಗಳನ್ನು ಆಧರಿಸಿ ಫಲಾನುಭವಿಗಳ ಆಯ್ಕೆಯಾಗುತ್ತದೆ. ಆ ಪಟ್ಟಿಯನ್ನು ಪರಿಶೀಲಿಸಿ ತಾವು ಸಹಿ ಹಾಕುವುದು ಸಾಮಾನ್ಯ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಪ್ರಜ್ಞೆ ಇದೆ. ಅವರನ್ನು ಯಾರೂ ದಾರಿ ತಪ್ಪಿಸಲು ಆಗುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್‍ನವರಿಂದ ಸಿದ್ದರಾಮಯ್ಯ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದರು. +ಜೆಡಿಎಸ್‍ನ ಶಾಸಕರು ನಿನ್ನೆ ರಾತ್ರಿ ತಮ್ಮನ್ನು ಭೇಟಿಯಾಗಿಲ್ಲ. ಕ್ಷೇತ್ರದ ಅಭಿವೃದ್ದಿ ಕೆಲಸಗಳಿದ್ದರೆ ಬರುತ್ತಾರೆ. ನಾವು ತುರ್ತಾಗಿ ಕೆಲಸ ಮಾಡಿಕೊಡುತ್ತೇವೆ. ಅದರ ಹೊರತಾಗಿ 13 ಮಂದಿ ಜೆಡಿಎಸ್ ಶಾಸಕರು ಕಾಂಗ್ರೆಸ್‍ಗೆ ಬರುತ್ತಾರೆ ಎಂಬುದೆಲ್ಲಾ ವದಂತಿ. ಸದ್ಯಕ್ಕೆ ಯಾವ ಶಾಸಕರೂ ಬರುವುದಿಲ್ಲ. ಯಾರೂ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಪುನರುಚ್ಚರಿಸಿದರು. +ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿಯವರು ಹತಾಷೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ವಿರುದ್ಧ ಟೀಕೆ ಮಾಡುವಾಗ ಜಮೀನುಗಳಿಗೆ ಬೇಲಿ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಲ್ಲಿ, ಯಾವ ಜಮೀನು, ಯಾವ ಬೇಲಿ, ಯಾವ ಬಂಡೆ, ಯಾವ ಕಲ್ಲು ಎಂಬುದನ್ನು ತೋರಿಸಲಿ ಎಂದು ತಿರುಗೇಟು ನೀಡಿದರು. +ಅಕ್ರಮ ವಿದ್ಯುತ್ ಸಂಪರ್ಕಕ್ಕೆ ಸಂಬಂಧ ಪಟ್ಟಂತೆ ಕುಮಾರಸ್ವಾಮಿಯವರೇ ತಪ್ಪು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಯಾರೋ ಗುತ್ತಿಗೆದಾರನಿಗೆ ಮನೆ ಅಲಂಕಾರ ಮಾಡಲು ಹೇಳಿರಬಹುದು. ಆತ ತಪ್ಪು ಮಾಡಿರುತ್ತಾನೆ. ಕಾರು ನನ್ನ ಹೆಸರಿನಲ್ಲಿ ನೋಂದಣಿಯಾಗಿದೆ. ಚಾಲಕ ಅಪಘಾತ ಮಾಡಿದರೆ ಡಿ.ಕೆ.ಶಿವಕುಮಾರ್ ಕಾರು ಅಪಘಾತವಾಗಿದೆ ಎಂದೇ ಹೇಳುತ್ತಾರೆ. ಚಾಲಕ ಅಪಘಾತ ಮಾಡಿದ್ದಾನೆ ಎಂದು ಹೇಳುವುದಿಲ್ಲ. 25 ವರ್ಷಗಳ ಹಿಂದೆ ಇಂಥದ್ದೇ ಪ್ರಕರಣವೊಂದು ತಮ್ಮ ಜೀವನದಲ್ಲಿ ನಡೆದಿತ್ತು ಎಂದು ಉದಾಹರಣೆ ಕೊಟ್ಟರು. +ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’ +ಕುಮಾರಸ್ವಾಮಿಯವರು ಪ್ರತಿಬಾರಿಯೂ ಲೂಟಿ.. ಲೂಟಿ.. ಎಂದು ಹೇಳುತ್ತಾರೆ. ಅವರ ಅನುಭವ ಆಚಾರ-ವಿಚಾರಗಳನ್ನು ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. ಬಿಜೆಪಿಗೆ ಈಗಷ್ಟೇ ಹೊಸ ಅಧ್ಯಕ್ಷರ ನೇಮಕವಾಗಿದೆ. ಅಸಮಾಧಾನ ಹೊಂದಿರುವವರ ಕೈ-ಕಾಲು ಕಟ್ಟಿ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು. \ No newline at end of file diff --git a/eesanje/url_46_312_10.txt b/eesanje/url_46_312_10.txt new file mode 100644 index 0000000000000000000000000000000000000000..3c7e0fd8f15e392b05fd6f41bddba7d3176fd36b --- /dev/null +++ b/eesanje/url_46_312_10.txt @@ -0,0 +1,11 @@ +ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದ ಹಂತಕನ ಬಂಧನ +ಬೆಂಗಳೂರು,ನ.15-ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಪ್ರವೀಣ್ ಅರುಣ್ ಚೌಗಲೆ (37) ಬಂತ ಹಂತಕ. ಈತ ಮಂಗಳೂರು ಏರ್ ಪೋರ್ಟ್ ಉದ್ಯೋಗಿ. +ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಹಸೀನಾ(46),ಅತ್ತೆ ಹಾಜಿರಾ, ಇಬ್ಬರು ಹೆಣ್ಣುಮಕ್ಕಳಾದ ಅಫ್ನಾನ್ (23) ಅಜ್ಞಝ್ (21) ಮತ್ತು ಪುತ್ರ ಆಸೀಂ (12) ವಾಸವಾಗಿದ್ದರು. ಇವರ ಪತಿ ನೂರ್ ಮಹಮ್ಮದ್ ದುಬೈನಲ್ಲಿ ನೆಲೆಸಿದ್ದರೆ, ಇವರ ಮೊದಲ ಮಗ ಬೆಂಗಳೂರಿನಲ್ಲಿ ಏರ್ ಪೋರ್ಟ್ ಉದ್ಯೋಗಿ. +ನ.12ರಂದು ಬೆಳಗ್ಗೆ 8.30 ಸುಮಾರಿನಲ್ಲಿ ಹಂತಕ ಆಟೋದಲ್ಲಿ ಇವರ ಮನೆ ಬಳಿ ಡ್ರಾಪ್ ಪಡೆದುಕೊಂಡಿದ್ದಾನೆ. ನಂತರ ಮನೆಯೊಳಗೆ ಹೋಗಿದ್ದು ಅಡುಗೆ ಮನೆಯಲ್ಲಿದ್ದ ಹಸೀನಾಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಇಬ್ಬರೂ ಹೆಣ್ಣು ಮಕ್ಕಳನ್ನು ಸಾಯಿಸಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಆರೋಪಿ ಹೊರಗೆ ಆಟವಾಡುತ್ತಿದ್ದ ಬಾಲಕ ಆಸೀಂ ಮನೆಯೊಳಗೆ ಬರುತ್ತಿದ್ದಂತೆ ಆತನಿಗೂ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. +ಮನೆಯೊಳಗೆ ನಡೆಯುತ್ತಿದ್ದ ಕೊಲೆಯನ್ನು ತಪ್ಪಿಸಲು ತಡೆಯಲು ಬಂದ ಹಸೀನಾ ಅವರ ಅತ್ತೆ ಹಾಜಿರಾ ಅವರ ಮೇಲೂ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದಾಗ ಇವರ ಮನೆಯಿಂದ ಕಿರುಚಾಟ, ಕೂಗಾಟ ಕೇಳಿ ನೆರೆಮನೆಯ ಯುವತಿ ಇವರ ಮನೆ ಬಳಿ ಬಂದಾಗ ಆರೋಪಿ ಆಕೆಗೆ ಚಾಕು ತೋರಿಸಿ ಹೆದರಿಸಿ ಪರಾರಿಯಾಗಿದ್ದನು. +ಸುದ್ದಿ ತಿಳಿದು ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ನಾಲ್ವರ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ಎಫ್ಎಸ್ಎಲ್ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. +ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ +ಚಾಕುವಿನಿಂದ ಇರಿತಕ್ಕೊಳಗಾಗಿ ಗಾಯಗೊಂಡಿದ್ದ ಹಾಜಿರಾ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ದುಬೈನಿಂದ ಹಸೀನಾ ಅವರ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರು ಏರ್ ಪೋರ್ಟ್ ಉದ್ಯೋಗಿಯಾಗಿರುವ ಮೊದಲನೆಯ ಮಗ ಮನೆಗೆ ಬಂದು ಕಣ್ಣೀರು ಹಾಕಿದ್ದರು. +ಐದು ತಂಡ ರಚನೆಆರೋಪಿ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಹಸೀನಾ ಮನೆಯ ಬಳಿ ವ್ಯಕ್ತಿಯೊಬ್ಬನಿಗೆ ಆಟೋ ಚಾಲಕರೊಬ್ಬರು ಡ್ರಾಪ್ ಕೊಟ್ಟಿರುವುದಾಗಿ ಹೇಳಿದ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದರು. +ಆರೋಪಿಯು ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಕುಡಚಿಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ತಾಂತ್ರಿಕ ಆಧಾರದಲ್ಲಿ ಪತ್ತೆ ಹಚ್ಚಿದ ಪೊಲೀಸ್ ತಂಡ ತಕ್ಷಣ ಅಲ್ಲಿಗೆ ತೆರಳಿ ಕಾರ್ಯಾಚರಣೆ ಕೈಗೊಂಡು ಸಂಬಂಕರ ಮನೆಯಲ್ಲಿ ಅವಿತುಕೊಂಡಿದ್ದ ಆರೋಪಿಯನ್ನು ಬಂಧಿಸಿ ಮಲ್ಪೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. +ಪ್ರೇಮ ವೈಫಲ್ಯ ಶಂಕೆಹಸೀನಾ ಅವರ ಎರಡನೇ ಮಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಹೋಸ್ಟರ್ ವೃತ್ತಿ ಮಾಡುತ್ತಿದ್ದು, ಅದೇ ವಿಮಾನ ನಿಲ್ದಾಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಕೆಲಸ ಮಾಡುತ್ತಿದ್ದಾಗ ಆಕೆಯ ಪರಿಚಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೇಮ ವೈಫಲ್ಯದಿಂದಾಗಿ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಆರೋಪಿ ಪ್ರವೀಣ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_312_11.txt b/eesanje/url_46_312_11.txt new file mode 100644 index 0000000000000000000000000000000000000000..636f2dfe693a8dd2a680e2667194373e43566bf8 --- /dev/null +++ b/eesanje/url_46_312_11.txt @@ -0,0 +1,9 @@ +ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ +ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. +ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು. ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ. +ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್ +ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಧಿಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ. +ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ. +ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು. +ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_312_12.txt b/eesanje/url_46_312_12.txt new file mode 100644 index 0000000000000000000000000000000000000000..da3795734febf0dfa2e627c60ee06f6347dfb21f --- /dev/null +++ b/eesanje/url_46_312_12.txt @@ -0,0 +1,6 @@ +ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್ +ಬೆಂಗಳೂರು,ನ.15- ಬಿಜೆಪಿ ಪಕ್ಷವನ್ನು ನಾಲ್ಕು ವರ್ಷ ಮೂರು ತಿಂಗಳ ಕಾಲ ಯಶಸ್ವಿಯಾಗಿ ನಿಭಾಯಿಸಿದ ಸಮಾಧಾನ ನನಗಿದೆಯೆಂದು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. +ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನಾನು ಪಕ್ಷದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಸೌಭಾಗ್ಯ ಸಿಕ್ಕಿತ್ತು, ಇದನ್ನು ನಿಸ್ವಾರ್ಥವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆಂಬ ತೃಪ್ತಿಯಿದೆ ಎಂದರು. +ಕೋವಿಡ್ ಸಂದರ್ಭದಲ್ಲಿ ನಾವು ಸೇವಾ ಕಾರ್ಯದ ರೂಪದಲ್ಲಿ ಜನತೆಗೆ ಸ್ಪಂದಿಸುವಂತಹ ಕಾರ್ಯ ಮಾಡಿದ್ದೇವೆ, ಕೇಂದ್ರ ನಾಯಕರು ನಮಗೆ ನೀಡಿದ ನಿರ್ದೇಶನದಂತೆ ಈ ಮಹಾಮಾರಿ ವಿರುದ್ಧ ಹೋರಾಟದಲ್ಲಿ ನಮ್ಮ ಕಾರ್ಯಕರ್ತರು ಹಗಲಿರುಳು ದುಡಿದಿದ್ದಾರೆ ಎಂದರು.ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಎಲ್ಲರ ಜೊತೆಗೆ ಸೇರಿ ಯಶಸ್ವಿಯಾಗಿ ಪಕ್ಷವನ್ನು ಮುನ್ನಡೆಸುತ್ತಾರೆಂಬ ವಿಶ್ವಾಸ ಇದೆ. ಅವರ ಬೆಂಗಾವಲಾಗಿ ಅವರ ಜೊತೆ ಸದಾ ನಾವು ಕೆಲಸ ಮಾಡುತ್ತೇವೆ ಎಂದರು. +ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ +ನನಗೆ ಸಹಕಾರ ನೀಡಿದ ಎಲ್ಲಾ ಹಿರಿಯರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ನೀಡಿದ ಸಹಕಾರವನ್ನು ವಿಜಯೇಂದ್ರ ಅವರಿಗೂ ನೀಡುತ್ತೀರೆಂಬ ವಿಶ್ವಾಸವಿದೆ. ಎಲ್ಲರೂ ಜೊತೆಗೂಡಿ ವಿಜಯೇಂದ್ರ ಅವರಿಗೆ ಶಕ್ತಿ ತುಂಬಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. \ No newline at end of file diff --git a/eesanje/url_46_312_2.txt b/eesanje/url_46_312_2.txt new file mode 100644 index 0000000000000000000000000000000000000000..e60d932e9a11ad034897b8d538459a859c7de005 --- /dev/null +++ b/eesanje/url_46_312_2.txt @@ -0,0 +1,4 @@ +ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ +ಚಿತ್ರದುರ್ಗ, ನ.16- ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿದ್ದ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್‍ಗೆ ಪ್ರಕರಣ ಸಂಬಂಧ ಜಾಮೀನು ಅರ್ಜಿ ಸಲ್ಲಿಸಿದ್ದರು. +ಕಳೆದ ನವೆಂಬರ್ 8ರಂದು ಫೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, 14 ತಿಂಗಳ ಕಾರಾಗೃಹ ವಾಸದ ನಂತರ ಇಂದು ಬಿಡುಗಡೆಯಾಗಿದ್ದಾರೆ. +ಷರತ್ತುಬದ್ಧ ಜಾಮೀನಿನಲ್ಲಿ ತಿಳಿಸಿರುವಂತೆ ಚಿತ್ರದುರ್ಗ ಜಿಲ್ಲಾ ಪ್ರವೇಶ ನಿಷೇಧವಾಗಿರುವುದರಿಂದ ಮುರುಘಾ ಶ್ರೀಗಳು ಎಲ್ಲಿಗೆ ತೆರಳುತ್ತಾರೆಂಬುವುದು ತಿಳಿದು ಬಂದಿಲ್ಲ. ಬಿಡುಗಡೆಯಾಗುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಅವರನ್ನು ಸಮಾಧಾನಪಡಿಸಿ ಕಾರಿನಲ್ಲಿ ಕರೆದೊಯ್ದಿದ್ದಾರೆ. \ No newline at end of file diff --git a/eesanje/url_46_312_3.txt b/eesanje/url_46_312_3.txt new file mode 100644 index 0000000000000000000000000000000000000000..c904e9d59fe1c2c1200ed2980ef00c589f911946 --- /dev/null +++ b/eesanje/url_46_312_3.txt @@ -0,0 +1,7 @@ +ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ +ಬೆಂಗಳೂರು,ನ,16- ಮಾಜಿ ಶಾಸಕರೂ ಆಗಿರುವ ತಮ್ಮ ಪುತ್ರ ಡಾ.ಯತೀಂದ್ರ ಅವರು ಫೋನ್‍ನಲ್ಲಿ ಮಾತನಾಡುವಾಗ ಸಿಎಸ್‍ಆರ್ ನಿಯಡಿ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಚರ್ಚೆ ಮಾಡಿದ್ದಾರೆ. ಅದನ್ನು ತಿರುಚಿ ವರ್ಗಾವಣೆಯ ಪಟ್ಟಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಮಾತನಾಡಿರುವುದರಲ್ಲಿ ಎಲ್ಲಿಯೂ ವರ್ಗಾವಣೆಯ ಪ್ರಸ್ತಾಪವಾಗಿಲ್ಲ. ನನ್ನ ರಾಜಕೀಯ ಜೀವನದಲ್ಲಿ ದುಡ್ಡು ತೆಗೆದುಕೊಂಡು ಒಂದೇ ಒಂದು ವರ್ಗಾವಣೆ ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸವಾಲು ಹಾಕಿದರು. +ಬಂಧಿತ ಸಚಿವ ಸೆಂಥಿಲ್ ಬಾಲಾಜಿಗೆ ಆಂಜಿಯೋಗ್ರಾಮ್ ಮಾಡಲು ಸೂಚನೆ +ಯತೀಂದ್ರ ವರುಣಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯ ಸದಸ್ಯರ ಬಗ್ಗೆ ಚರ್ಚೆ ಮಾಡಲಾಯಿತು. ತಾವು ಆಯ್ಕೆಯಾಗಿರುವ ವರುಣಾ ಕ್ಷೇತ್ರವನ್ನು ನೋಡಿಕೊಳ್ಳಲು ಯತೀಂದ್ರ ಅವರಿಗೆ ಹೇಳಿದ್ದೇನೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‍ಆರ್)ಯಡಿ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಿಸಲಾಗುತ್ತಿದೆ. ಸಚಿವ ಎಚ್.ಸಿ.ಮಹದೇವಪ್ಪ ಈ ಪಟ್ಟಿ ನೀಡಿದ್ದಾರೆ. ಯತೀಂದ್ರ ಆ ಕುರಿತು ಚರ್ಚೆ ಮಾಡಿದರು ಎಂದು ಹೇಳಿದರು. +ಸಂಭಾಷಣೆ ವೇಳೆ ಎಲ್ಲಿಯೂ ವರ್ಗಾವಣೆ ಉಲ್ಲೇಖ ಇಲ್ಲ. ಆ ರೀತಿ ಹೇಳಿರುವ ವಿಡಿಯೋ ಇದ್ದರೆ ತೋರಿಸಿ. ನಾಲ್ಕೈದು ಹೆಸರುಗಳು ಎಂದರೆ ಅದು ವರ್ಗಾವಣೆಯ ಪಟ್ಟಿ ಅಲ್ಲ. ಶಾಲೆಗಳ ದುರಸ್ತಿಯ ಪಟ್ಟಿ ಎಂದು ಸಮರ್ಥಿಸಿಕೊಂಡರು. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯಕ್ಕಾಗಿ ಆರೋಪ ಮಾಡುತ್ತಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಯತೀಂದ್ರ ಮಾತನಾಡಿರುವುದರಲ್ಲಿ ಏನೋ ಇದೆ ಎಂದು ಭಾರೀ ಪ್ರಮಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು. \ No newline at end of file diff --git a/eesanje/url_46_312_4.txt b/eesanje/url_46_312_4.txt new file mode 100644 index 0000000000000000000000000000000000000000..81fcb87b8c15971408f6c42cc472c3cec5ae8dcf --- /dev/null +++ b/eesanje/url_46_312_4.txt @@ -0,0 +1,13 @@ +ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು : +ಬೆಂಗಳೂರು, ನ.16- ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಲ್ಲಿ ಬಹಿರಂಗವಾಗಿರುವ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು. +ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ದಂಧೆ ಆರೋಪಕ್ಕೆ ಈ ವಿಡಿಯೋಗಿಂತ ಮತ್ತೊಂದು ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದರಲ್ಲದೆ, ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. +ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರ ಮೇಲೆ ಶೇ. 20ರಷ್ಟು ಕಮಿಷನ್ ಆರೋಪವನ್ನು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಮಾಡಿದ್ದರು. ದಾವಣಗೆರೆಯಲ್ಲಿ ಮಾಡಿದ್ದ ಈ ಆರೋಪಕ್ಕೆ ಯಾವ ಸಾಕ್ಷ್ಯವನ್ನು ಒದಗಿಸಿದ್ದರು ಎಂದು ಪ್ರಶ್ನಿಸಿದರು. +ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪೇಸಿಎಂ ಪೋಸ್ಟರ್ ಹಾಕಿದ್ದರು. ಅದಕ್ಕೆ ಯಾವ ದಾಖಲೆ ನೀಡಿದ್ದರು ಎಂದ ಅವರು, ಯತೀಂದ್ರ ಅವರು ಯಾರೊಂದಿಗೆ ಮಾತನಾಡಿದ್ದಾರೆ, ಎಂಬುದನ್ನು ಬಹಿರಂಗ ಪಡಿಸಲಿ. ದೂರವಾಣಿಯಲ್ಲಿ ಅಪ್ಪ ಎಂದು ಯಾರನ್ನು ಕರೆದರು, ದೂರವಾಣಿ ಮಾಡಿ ಯತೀಂದ್ರ ಅವರನ್ನು ಕೇಳಿದ್ದು, ಮುಖ್ಯಮಂತ್ರಿ ಅಲ್ಲವೆ? ಎಂದು ವಿಡಿಯೋದಲ್ಲಿದೆ ಎನ್ನಲಾದ ಮಾಹಿತಿಯನ್ನು ಪ್ರಸ್ತಾಪಿಸಿದರು. +ಪಂಚರಾಜ್ಯಗಳ ಚುನಾವಣೆ : ನಾಳೆ ಮಧ್ಯಪ್ರದೇಶದಲ್ಲಿ ಮತದಾನ +ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರು ಮಾಡಿದ ಆರೋಪದ ವಿಡಿಯೋವನ್ನು ಪ್ರದರ್ಶಿಸಿದ ಅವರು, ಮುಖ್ಯಮಂತ್ರಿಯಾದವರು ಪುತ್ರನನ್ನು ಕೇಳಿ ಆಡಳಿತ ನಡೆಸುವುದೇ, ವಿವೇಕಾನಂದ ಯಾರು? ಮಹದೇವ ಯಾರು ಎಂದು ಪ್ರಶ್ನಿಸಿದರು. +ಕಂಬದಿಂದ ವಿದ್ಯುತ್ ಕದಿಯುವ ದಾರಿದ್ರ್ಯ ನನಗೆ ಬಂದಿಲ್ಲ. ಆಚಾರ್ತುದಿಂದ ಉಂಟಾಗಿದ್ದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆದರೂ ಜೆಡಿಎಸ್ ಕಚೇರಿಯ ಕಾಂಪೌಂಡ್‍ಗೆ ಆಕ್ಷೇಪಾರ್ಹ ಪೋಸ್ಟನ್ನು ಅಂಟಿಸಲಾಗಿದೆ ಎಂದರು. ವಿಜಯೇಂದ್ರ ಅವರನ್ನು ಅನಧಿಕೃತ ಸಿಎಂ ಎಂದು ಆರೋಪಿಸುತ್ತಿದ್ದ ನೀವು ಈಗ ಸೂಪರ್ ಸಿಎಂ ಯಾರು ಹೇಳಿ ಎಂದು ಪ್ರಶ್ನಿಸಿದರು. +ನಾಡಿನ ಜನತೆ ಒಳ್ಳೆಯ ರೀತಿಯಲ್ಲಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಲೂಟಿ ಮಾಡಲು ಅಲ್ಲ. ಯತೀಂದ್ರ ಅವರು ಶಾಲೆಗಳ ಸಿಎಸ್‍ಆರ್ ನಿ ಬಗ್ಗೆ ಮಾತನಾಡಿದ್ದಾರೆ. ವರ್ಗಾವಣೆ ಬಗ್ಗೆ ಅಲ್ಲ ಎನ್ನುವುದಾದರೆ ದಾಖಲೆಗಳನ್ನು ಜನರ ಮುಂದಿಡಿ. ಮೈಸೂರು ಜಿಲ್ಲೆಯ ಡಿಡಿಪಿಐಗೆ ಕಳುಹಿಸಿರುವ ಮಾಹಿತಿಯನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸ್ಥಾನ ಶಾಶ್ವತವಲ್ಲ. ಚುನಾವಣೆಗಾಗಿ ಕೆಲವರಿಂದ ಸಹಕಾರ ಪಡೆದಿದ್ದು, ನಾನು ಶೇ. 100ರಷ್ಟು ಶುದ್ಧನಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದರು. +ತನಿಖೆಗೆ ಸಿದ್ಧ:ನಮ್ಮ ಕುಟುಂಬದ ಆಸ್ತಿ ತನಿಖೆಗೆ ಈಗಲೂ ಸಿದ್ದ ಎಂದ ಅವರು, ದಾಸನಪುರ ಹೋಬಳಿಯಲ್ಲಿ ಮೂರುವರೆ ಎಕರೆ ಕೆರೆ ನುಂಗಿ ಹಾಕಿದವರು ಯಾರು ಎಂದು ಪ್ರಶ್ನಿಸಿದ ಅವರು, ನಮ್ಮ ಆಸ್ತಿಯ ಬಗ್ಗೆ ಆರೋಪ ಮಾಡಿದವರನ್ನೇ ಕೇಳಿ? ಸರ್ಕಾರದ ಆದೇಶವನ್ನು ಮಾರಾಟಕ್ಕೆ ಇಡಬೇಡಿ ಎಂದರು. +ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಮಾಡಿರುವ ಯಾವ ಆರೋಪವನ್ನು ಸಾಬೀತುಪಡಿಸಿದ್ದಾರೆ ಎಂದು ಪ್ರಶ್ನಿಸಿದ ಅವರು, ನೈಸ್ ಸಂಸ್ಥೆಯ ಬಗ್ಗೆ ಸದನ ಸಮಿತಿ ನೀಡಿರುವ ವರದಿಯ ಶಿಫಾರಸ್ಸು ಏಕೆ ಅನುಷ್ಠಾನಗೊಳಿಸಿಲ್ಲ ಎಂದು ಪ್ರಶ್ನಿಸಿದರು. +ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದ ಅವರು ವರ್ಗಾವಣೆ ವಿಚಾರ ಎನ್ನಲಾದ ವಿಡಿಯೋ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. +ವಿಡಿಯೋ ಆದರಿಸಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಆರೋಪಗಳ ಸುರಿ ಮಳೆಗೈದು ವರ್ಗಾವಣೆ ದಂಧೆ ನಡೆಯುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ವಿಧಾನಪರಿಷತ್ ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ರಮೇಶ್ ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_312_5.txt b/eesanje/url_46_312_5.txt new file mode 100644 index 0000000000000000000000000000000000000000..bb7553713c6faea05ad83162d4bad303f64c3a7e --- /dev/null +++ b/eesanje/url_46_312_5.txt @@ -0,0 +1,7 @@ +ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’ +ಬೆಂಗಳೂರು, ನ.16-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಡಿ.4ರಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಂದು ಬೆಳಿಗ್ಗೆ 11ಗಂಟೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅವೇಶನಗಳು ಸಮಾವೇಶಗೊಳಲಿವೆ. +ಅಂದಿನಿಂದ ಡಿ.15ರವರೆಗೆ ಹತ್ತು ದಿನಗಳ ಅಧಿವೇಶನ ನಡೆಸಲು ನಿಗದಿಪಡಿಸಲಾಗಿದೆ. ಈ ಸಂಬಂಧ ವಿಧಾನಸಭೆ ಸಚಿವಾಲಯ ಅಕೃತ ಪ್ರಕಟಣೆ ಹೊರಡಿಸಿದೆ. ಪ್ರತಿ ವರ್ಷದಂತೆ ಎರಡು ವಾರ ಕಾಲ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಾಗುತ್ತದೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದ್ದಾರೆ. ಉಭಯ ಸಚಿವಾಲಯಗಳು ಅಧಿವೇಶನಕ್ಕೆ ಸಿದ್ಧತೆ ಆರಂಭಿಸಿವೆ. +16ನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯ ಲೋಪ-ದೋಷಗಳು, ಬರಪರಿಸ್ಥಿತಿಯಿಂದ ಉಂಟಾಗಿರುವ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡದಿರುವುದು ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗುತ್ತಿವೆ. +ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ +ಹಾಗೆಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ತೀವ್ರ ಬರಪರಿಸ್ಥಿತಿ ಇದ್ದರೂ ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಸ್ಪಂಸುತ್ತಿಲ್ಲ ಎಂದು ಆರೋಪಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸಿದ್ಧತೆ ನಡೆಸಿದೆ. +ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರು, ಗುಳೆ ಹೋಗದಂತೆ ಉದ್ಯೋಗ, ಜಾನುವಾರುಗಳ ಮೇವು, ವಿದ್ಯುತ್ ಅಭಾವ ಮೊದಲಾದ ಜ್ವಲಂತ ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ವೇದಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. \ No newline at end of file diff --git a/eesanje/url_46_312_6.txt b/eesanje/url_46_312_6.txt new file mode 100644 index 0000000000000000000000000000000000000000..290e8a44d801f32615ede150d35bd173cf63116e --- /dev/null +++ b/eesanje/url_46_312_6.txt @@ -0,0 +1,10 @@ +ವಿವಾದಕ್ಕೀಡಾದ ಸಿಎಂ ಪುತ್ರ ಯತೀಂದ್ರರ ವಿಡಿಯೋ +ಬೆಂಗಳೂರು, ನ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮೊಬೈಲ್‍ನಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. +ವಿಡಿಯೋದಲ್ಲಿ ಚರ್ಚಿಸಲಾದ ಮಾಹಿತಿ ಯನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಹರಿ ಹಾಯ್ದಿವೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಗ್ರಾಮವೊಂದರಲ್ಲಿ ಜನ ಸಂಪರ್ಕ ಸಭೆ ನಡೆಸುವ ವೇಳೆ ಯತೀಂದ್ರ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಆರಂಭದಲ್ಲೇ ಹಲೋ ಅಪ್ಪಾ ಎಂದು ಮಾತು ಶುರು ಮಾಡಿದ್ದಾರೆ. +ಹಾಗಾಗಿ ಯತೀಂದ್ರ ಅವರು ಸಿದ್ದರಾಮಯ್ಯ ಅವರ ಜೊತೆಯಲ್ಲೇ ಮಾತನಾಡಿದ್ದಾರೆ ಎಂದು ಭಾವಿಸಲಾಗಿದೆ.ವಿವೇಕಾನಂದನಾ ಎಲ್ಲಿಗೆ… ಇಲ್ಲಪ್ಪ ಇದ್ಯಾವುದು ಕೊಟ್ಟಿಲ್ಲ. ಯಾರು ಆ ಮಹದೇವ್… ? ಕೊಡಿ ಅವನಿಗೆ, ಅದಕ್ಕೆ ಹೇಳಿದ್ದು, ಕೊಡಿ ಆ ಮಹದೇವ್‍ಗೆ ಹೇಳ್ತೀನಿ. ನಾನು ಕೊಟ್ಟಿರೋದೆ ಐದು, ಅಲ್ಲಿ ಕೊಡಿ ಅದು ಎಂದು ಹೇಳುತ್ತಾರೆ. +ಅತ್ತ ಕಡೆ ಮೊಬೈಲ್ ಕೈ ಬದಲಾದಂತೆ ಕಂಡು ಬರುತ್ತಿದ್ದು, ಹಲೋ ಮಹದೇವ್ ಎಂದು ಯತೀಂದ್ರ ಮಾತು ಮುಂದುವರೆಸುತ್ತಾರೆ. ಮಹದೇವ್ ಯಾಕೆ ಯಾವುದ್ಯಾವುದೋ ಕೊಡ್ತಾ ಇದ್ದೀರಿ.. ? ಮತ್ತೆ ಇದೆಲ್ಲಾ ಯಾರು ಕೊಡ್ತಿರೋದು, ಲಿಸ್ಟ್ ಅಲ್ಲಿ. ನಾನು ಯಾವುದು ನಾಲ್ಕೈದು ಕೊಟ್ಟಿದ್ದೇನೋ, ಅಷ್ಟೇ ಮಾತ್ರ ಮಾಡಿ, ಒಕೆ ಎಂದು ಹೇಳಿ ಯತೀಂದ್ರ ಮೊಬೈಲ್ ಅನ್ನು ಸಹಾಯಕರಿಗೆ ಕೊಡುತ್ತಾರೆ. +ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ +ಈ ವಿಡಿಯೋ ಮತ್ತು ಆಡಿಯೋದಲ್ಲಿ ಕಂಡು ಬಂದಿರುವಂತೆ ನಾಲ್ಕೈದು ಹೆಸರುಗಳನ್ನು ಕೊಡಲಾಗಿದೆ. ಅಷ್ಟಕ್ಕೆ ಸೀಮಿತವಾಗಿ ಕೆಲಸವಾಗಬೇಕು, ಉಳಿದವನ್ನು ಪರಿಗಣಿಸಬಾರದು ಎಂದು ಯತೀಂದ್ರ ಸೂಚನೆ ನೀಡಿರುವುದು ಕಂಡು ಬಂದಿದೆ. +ಆ ವಿಡಿಯೋದಲ್ಲಿ ಹೇಳಿರುವಂತೆ ನಾಲ್ಕೈದು ಹೆಸರುಗಳು ವರ್ಗಾವಣೆಯೇ, ಗುತ್ತಿಗೆಯೇ, ನೇಮಕವೇ ಯಾವುದು ಎಂದು ಸ್ಪಷ್ಟವಾಗಿಲ್ಲ. ಸಬ್ ರಿಜಿಸ್ಟರ್ ಆಗಿದ್ದ ಮಹದೇವ್ ಸಿದ್ದರಾಮಯ್ಯ ಅವರ ಸಂಬಂಧಿ ಎನ್ನಲಾಗಿದೆ. ಅವರು ಮುಖ್ಯಮಂತ್ರಿ ಕಚೇರಿಯಲ್ಲಿ ವಿಶೇಷ ಕರ್ತವ್ಯಾಕಾರಿಯನ್ನಾಗಿ ಕೆಲಸ ಮಾಡುತ್ತಿದ್ದಾರೆ. ಯತೀಂದ್ರ ಅವರ ಜೊತೆಯಲ್ಲಿ ಮಾತನಾಡುವಾಗ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. +ಈ ಮಾತುಕತೆ ಯಾವ ವಿಚಾರ ಕುರಿತು ಎಂಬುದು ಸ್ಪಷ್ಟವಾಗಿಲ್ಲ. ಬಿಜೆಪಿ ಇದನ್ನು ವರ್ಗಾವಣೆ ದಂಧೆ ಎಂದು ವ್ಯಾಖ್ಯಾನಿಸಿದೆ. ಯತೀಂದ್ರ ಮೊದಲಿನಿಂದಲೂ ಅಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅದು ಮತ್ತೂ ಮುಂದುವರೆದಿದೆ, ಎಲ್ಲಾ ಕಾಲದಲ್ಲೂ ಇದು ನಡೆದಿದೆ. ಕಾಂಗ್ರೆಸ್ ಆಡಳಿತದಲ್ಲಿ ಇದು ಸ್ವಲ್ಪ ಹೆಚ್ಚಾಗಿದೆ ಎಂದು ಬಿಜೆಪಿ ನಾಯಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ. +ಬೆಳಗಾವಿ ವಿಧಾನಮಂಡಲದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದು, ಅದಕ್ಕೂ ಮುನ್ನಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲು ಚರ್ಚಿಸುವುದಾಗಿ ತಿಳಿಸಿದ್ದಾರೆ. ಜೆಡಿಎಸ್ ಕೂಡ ಇದನ್ನು ವರ್ಗಾವಣೆ ದಂಧೆ ಎಂದು ಟೀಕಿಸಿದೆ. \ No newline at end of file diff --git a/eesanje/url_46_312_7.txt b/eesanje/url_46_312_7.txt new file mode 100644 index 0000000000000000000000000000000000000000..3f18b6df34d3919a608387622f9f1f3c19c1ff83 --- /dev/null +++ b/eesanje/url_46_312_7.txt @@ -0,0 +1,5 @@ +ಬೆಂಗಳೂರು-ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು +ಬೆಂಗಳೂರು, ನ.16- ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಬೆಂಗಳೂರು-ಬೆಳಗಾವಿ ನಡುವೆ ಸಂಚರಿಸಲಿದೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದು ಬೆಂಗಳೂರು-ಧಾರಾವಾಡ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲನ್ನು ಬೆಳಗಾವಿಯವರೆಗೂ ವಿಸ್ತರಿಸಲು ಮನವಿ ಮಾಡಿದ್ದರು, ಇದನ್ನು ಪರಿಣಿಸಿ ಬೆಂಗಳೂರು-ಧಾರಾವಾಡ ಮೂಲಕ ಬೆಳಗಾವಿಗೆ ರೈಲು ಸಂಚಾರ ನಡೆಸಲಿದೆ. +ರೈಲು ಸಂಖ್ಯೆ 20661 ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45ಕ್ಕೆ ಹೊರಟು ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ರೈಲು ಸಂಖ್ಯೆ 20662ಬೆಳಗಾವಿಯಿಂದ ಮಧ್ಯಾಹ್ನ 2ಕ್ಕೆ ಹೊರಟು ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ. +ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ +ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಯಾವ ದಿನಾಂಕದಿಂದ ಸಂಚಾರ ವಿಸ್ತರಣೆಯಾಗಲಿದೆಯೆಂದು ತಿಳಿಸಿಲ್ಲವಾದರೂ ಅತಿ ಶೀಘ್ರದಲ್ಲೇ ಪ್ರಯಾಣಿಕರಿಗೆ ಇದರ ಉಪಯೋಗವಾಗಲಿದೆ. ಮನವಿಯನ್ನು ಪುರಷ್ಕರಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಸಂಸದ ಈರಣ್ಣ ಕಡಾಡಿ ಅಭಿನಂದನೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_312_8.txt b/eesanje/url_46_312_8.txt new file mode 100644 index 0000000000000000000000000000000000000000..63d6a718ae629425b61397441f103befef17dd9a --- /dev/null +++ b/eesanje/url_46_312_8.txt @@ -0,0 +1,12 @@ +ವಿಪಕ್ಷ ನಾಯಕನ ಆಯ್ಕೆಗೆ ನಾಳೆ ಬಿಜೆಪಿ ಶಾಸಕರ ಸಭೆ +ಬೆಂಗಳೂರು, ನ.16- ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ ನಾಳೆ ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಮಹತ್ವದ ಶಾಸಕಾಂಗ ಸಭೆ ನಡೆಯಲಿದೆ. ಸುಮಾರು ಆರು ತಿಂಗಳಿಂದ ಬಾಕಿ ಉಳಿದಿರುವ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿಯ ಕೇಂದ್ರ ಘಟಕದಿಂದ ವೀಕ್ಷಕರು ಆಗಮಿಸಲಿದ್ದಾರೆ. ಅವರು ಶಾಸಕರೊಂದಿಗೆ ಸಮಾಲೋಚನೆ ನಡೆಸಿ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಹೊರುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. +ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ನಾಳೆ (ನ.17) ಸಂಜೆ 6 ಗಂಟೆಗೆ ನಗರದ ಐಟಿಸಿ ಗಾರ್ಡೇನಿಯಾ ಹೋಟೆಲ್‍ನಲ್ಲಿ ಶಾಸಕಾಂಗ ಪಕ್ಷದ ಸಭೆ ನಿಗದಿಪಡಿಸಿದ್ದು, ಪಕ್ಷದ ಎಲ್ಲ ಶಾಸಕರು ಮತ್ತು ಪರಿಷತ್ ಸದಸ್ಯರು ತಪ್ಪದೇ ಭಾಗವಹಿಸಬೇಕೆಂದು ಸೂಚಿಸಲಾಗಿದೆ. +ಡಿಸೆಂಬರ್ 4ರಂದು ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದ್ದು, ಅದಕ್ಕೂ ಮೊದಲೇ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ಮಾಡಬೇಕಿದೆ. ಅದಕ್ಕಾಗಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ನೂತನ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಚೊಚ್ಚಲ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. +ಶಾಸಕರ ಸಭೆಗೆ ದೆಹಲಿಯಿಂದ ಹೈಕಮಾಂಡ್ ಪ್ರತಿನಿಗಳಾಗಿ ಇಬ್ಬರು ನಾಯಕರು ವೀಕ್ಷಕರಾಗಿ ಆಗಮಿಸಲಿದ್ದಾರೆ. ಯಾವ ನಾಯಕರನ್ನು ಕಳುಹಿಸಲಿದ್ದಾರೆ ಎನ್ನುವ ಮಾಹಿತಿ ಇನ್ನು ರಾಜ್ಯ ಘಟಕಕ್ಕೆ ಬಂದಿಲ್ಲ. ಬಹುತೇಕ ರಾಜ್ಯ ರಾಜಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಇರುವ ನಾಯಕರನ್ನೇ ಕಳುಹಿಸಿಕೊಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದು ಬಂದಿದೆ. +ದೇಶ ತೊರೆಯಲು ಭಾರತೀಯ ಪಡೆಗಳಿಗೆ ಮಾಲ್ಡೀವ್ಸ್ ಸೂಚನೆ +ಹೈಕಮಾಂಡ್ ಸಂದೇಶ ಹೊತ್ತು ಬರುವ ವೀಕ್ಷಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೈಕಮಾಂಡ್ ಸೂಚನೆ ತಿಳಿಸಿ ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ಮುಗಿಸಲಿದ್ದಾರೆ. ಸದನದಲ್ಲಿ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಸಮರ್ಥವಾಗಿ ಎದುರಿಸಬಲ್ಲ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ. ಅದೇ ರೀತಿ ಪರಿಷತ್‍ನಲ್ಲೂ ಆಡಳಿತ ಪಕ್ಷವನ್ನು ಎದುರಿಸಬಲ್ಲ ವ್ಯಕ್ತಿಗೆ ಅವಕಾಶ ನೀಡಲಾಗುತ್ತದೆ. +ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಶಾಸಕರನ್ನು ಉದ್ದೇಶಿಸಿ ಮೊದಲ ಭಾಷಣ ಮಾಡಲಿದ್ದಾರೆ. ಶಾಸಕರ ಸಹಕಾರ ಕೋರಲಿದ್ದಾರೆ. ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸುವ ಪೂರ್ವದಲ್ಲಿ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಮುಂದಿನ ಹೆಜ್ಜೆ ಇರಿಸಲು ಶಾಸಕರ ಜೊತೆ ಮಾತುಕತೆ ನಡೆಸಿ, ಅವರ ಅಭಿಪ್ರಾಯ ಆಲಿಸಲಿದ್ದಾರೆ. +ನಂತರ ರಾಜ್ಯ ಪ್ರವಾಸ, ಕಾರ್ಯಕಾರಿ ಸಮಿತಿಯಲ್ಲಿ ಮಾರ್ಪಾಡು ಮಾಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂಬುದಾಗಿ ತಿಳಿದು ಬಂದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ ಎಂದು ಹೇಳಿದ್ದಾರೆ. +ತಮಿಳುನಾಡು, ಪುದುಚೇರಿಯಲ್ಲಿ ರಣಮಳೆ +ರೇಸ್‍ನಲ್ಲಿ ಯಾರೆಲ್ಲಾ ಇದ್ದಾರೆ?ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಭರ್ಜರಿ ಪೈಪೋಟಿಯೇ ಇದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕರಾದ ಡಾ. ಸಿ.ಎನ್.ಅಶ್ವತ್ಥ ನಾರಾಯಣ್, ಆರ್ ಅಶೋಕ್ ಮುಂಚೂಣಿಯಲ್ಲಿದ್ದಾರೆ. ಇತ್ತ ಶಾಸಕ ಸುನೀಲ್ ಕುಮಾರ್ ಹಿಂದುಳಿದ ವರ್ಗ ಪರವಾಗಿ ಪರಿಗಣಿಸಬೇಕು ಎನ್ನುತ್ತಾರೆ. ಉಳಿದಂತೆ ಇತರೆ ನಾಯಕರಲ್ಲಿಯೂ ಕೂಡ ಆಕಾಂಕ್ಷಿಗಳಿದ್ದು ಹೈಕಮಾಂಡ್ ತೀರ್ಮಾನ ಏನು ಎಂಬುದನ್ನು ಕಾದುನೋಡಬೇಕಿದೆ. +ಆದರೆ, ನಾಳೆ ಹೆಸರನ್ನು ಘೋಷಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ವೀಕ್ಷಕರು ಇಲ್ಲಿ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ವಾಪಸಾದ ಬಳಿಕ ವರಿಷ್ಠರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ. ಇದೇ ವೇಳೆ ವಿಜಯೇಂದ್ರ ಅವರು ಮುಂದಿನ ವಾರ ದೆಹಲಿಗೆ ತೆರಳುವುದರಿಂದ ಅವರು ವಾಪಸಾದ ಬಳಿಕ ಅಂತಿಮಗೊಳ್ಳುವ ಸಂಭವವೂ ಇದೆ ಎನ್ನಲಾಗಿದೆ. \ No newline at end of file diff --git a/eesanje/url_46_312_9.txt b/eesanje/url_46_312_9.txt new file mode 100644 index 0000000000000000000000000000000000000000..a9c1ab025f4ad4e997a099c42fd75f3019b85621 --- /dev/null +++ b/eesanje/url_46_312_9.txt @@ -0,0 +1,11 @@ +ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕಲೆಕ್ಷನ್ ಪ್ರಿನ್ಸ್ ಮಗ : ಹೆಚ್‌ಡಿಕೆ ಟೀಕೆ +ಬೆಂಗಳೂರು, ನ.16-ಕಾಸಿಗಾಗಿ ಹುದ್ದೆ ನೀಡಲಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ.ಡಿ.ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮಿಂದ( ಮುಖ್ಯಮಂತ್ರಿ) ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ? ನೈತಿಕ ಮೌಲ್ಯಗಳಂತೂ ದುಪ್ಪಟ್ಟು ಜಾಸ್ತಿ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದ್ದಾರೆ. +ಕಾಸಿಗಾಗಿ ಹುದ್ದೆ ಉರುಫ್#CashForPostingದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ.@INCKarnatakaಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ…../T1366ek2iS +ಕಾಸಿಗಾಗಿ ಹುದ್ದೆ ಉರುಫ್ ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ ನಡೆದಿದೆ ಎನ್ನುವುದಕ್ಕೆ ವಿಡಿಯೋ ತುಣುಕೇ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಆರೋಪಿಸಿದ್ದಾರೆ. +ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. +ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, ನಾನು ಹೇಳಿದವರಷ್ಟನ್ನೇ ಮಾಡಿ ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೊಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ಒಳ ವಸೂಲಿ ಸಚಿವಾಲಯದ ಸಚಿವರಾ? ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. +ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ತಿಂಗಳಿಗೊಬ್ಬ ಸಿಎಂ ಗ್ಯಾರಂಟಿ : ಕೆ.ಟಿ.ರಾಮರಾವ್ +ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳುತ್ತಿದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? ಎಂದು ಕೇಳಿದ್ದಾರೆ. +ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು? ಎಂದು ಆರೋಪಿಸಿದ್ದಾರೆ. ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. +ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ಸುಲಿಗೆಪುತ್ರ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ. ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು ಎಂದಿದ್ದಾರೆ. \ No newline at end of file diff --git a/eesanje/url_46_313_1.txt b/eesanje/url_46_313_1.txt new file mode 100644 index 0000000000000000000000000000000000000000..aa4c2034184bc0b7357d8c96691b2a7e24ab7901 --- /dev/null +++ b/eesanje/url_46_313_1.txt @@ -0,0 +1,11 @@ +ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ +ಹಾಸನ, ನ.15- ಕಳೆದ 12 ದಿನಗಳಿಂದ ಭಕ್ತರಿಗೆ ದರ್ಶನ ನೀಡಿದ್ದ ನಗರದ ಅದೇವತೆ ಹಾಸನಾಂಬಾ ದೇವಾಲದ ಗರ್ಭಗುಡಿಯ ಬಾಗಿಲನ್ನು ಇಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು. +ನ.2ರಿಂದ ಆರಂಭವಾಗಿದ್ದ ಹಾಸನಾಂಬ ದರ್ಶನೋತ್ಸವಕ್ಕೆ ಇಂದು ತೆರೆ ಬಿದ್ದಿದ್ದು, ಮತ್ತೆ ದರ್ಶನಕ್ಕೆ ಒಂದು ವರ್ಷ ಕಾಯಬೇಕಾಗಿದೆ. ಈ ಬಾರಿ 13. 5 ಲಕ್ಷ ಭಕ್ತರು ದರ್ಶನ ಪಡೆದು ಪುನೀತರಾಗಿರುವುದು ದಾಖಲೆಯಾಗಿದೆ. ನಿನ್ನೆ ಬೆಳಗ್ಗೆ 6 ಗಂಟೆವರೆಗೂ ವಿಶೇಷ ದರ್ಶನ ಸಾವಿರ ರೂ. ಹಾಗೂ 300 ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ. ಹಣ ಸಂಗ್ರಹವಾಗಿದ್ದು ದಾಖಲೆಯಾಗಿದೆ. +ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ +ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇವಿಗೆ ಅಲಂಕಾರ ಮಾಡಲಾಗಿದ್ದ ಆಭರಣಗಳನ್ನು ತೆಗೆದು ಪೂಜೆ ಸಲ್ಲಿಸಿ ದೀಪ ಹಚ್ಚಿ ಹೂ ನೈವೇದ್ಯವಿಟ್ಟು ವಿವಿಧ ಗಣ್ಯರು ಅಕಾರಿಗಳ ಸಮ್ಮುಖದಲ್ಲಿ ವಿಶ್ವರೂಪ ದರ್ಶನದ ಬಳಿಕ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು. +ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಈ ಬಾರಿ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಪ್ರಾರಂಭದಲ್ಲಿ ಕೆಲ ಗೊಂದಲಗಳಾಗಿದ್ದು, ನೂಕುನುಗ್ಗುಲು ಉಂಟಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಕೊನೆಗೆ ಜಿಲ್ಲಾಧಿಕಾರಿಗಳೇ ದೇವಾಲಯದ ಆವರಣದಲ್ಲಿ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡುತ್ತ ದೇವಿಯ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದರು. +ಹಾಸನಾಂಬೆ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ: 14.20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ +ಹಾಸನಾಂಬ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಎಳೆಯಲಾಯಿತು. ಇಂದು ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಅಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಯಿತು.ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ ಎಂಬ ಪ್ರತೀತಿ ಇದೆ. +ಗರ್ಭಗುಡಿ ಬಾಗಿಲನ್ನು ನ.2 ರಿಂದ 15ರ ವರೆಗೆ ತೆರೆದಿದ್ದು, 14 ದಿನಗಳಲ್ಲಿ 12 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದುವರೆಗೆ ಸುಮಾರು 14.20 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. 1000, 300ರೂ. ವಿಶೇಷ ಟಿಕೆಟï, ಲಾಡು ಮಾರಾಟದಿಂದ ದಾಖಲೆಯೆ 6 ಕೋಟಿಗೂ ಅಕ ಆದಾಯ ಬರಲಿದೆ ಎಂದು ಅಂದಾಜಿಸಲಾಗಿದ್ದು , ಹುಂಡಿ ಕಾಣಿಕೆಯಿಂದ ಹೆಚ್ಚು ಆದಾಯ ಬರುವ ನಿರೀಕ್ಷೆ ಇದೆ. +ಧಾರ್ಮಿಕ ವಿ-ವಿಧಾನಗಳೊಂದಿಗೆ ಹಾಸನಾಂಬ ದೇವಿ ಬಾಗಿಲು ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನಾಂಬೆ ದರ್ಶನೋತ್ಸವ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಜಿಲ್ಲಾಡಳಿತ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಹಕಾರದಿಂದ ಯಶಸ್ವಿ ಕಂಡಿದೆ. 12 ದಿನಗಳ ಸಾರ್ವಜನಿಕ ದರ್ಶನದಲ್ಲಿ ಪ್ರತಿಯೊಬ್ಬ ಭಕ್ತರಿಗೂ ದರ್ಶನ ಪಡೆಯಲು ಉತ್ತಮ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. +ಮುಂದಿನ ಬಾರಿ 11 ದಿನ ಮಾತ್ರ ದರ್ಶನ:2014 ಅಕ್ಟೋಬರ್ 23 ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದೇವಿಯ ದೇವಾಲಯ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 11 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುತ್ತದೆ. \ No newline at end of file diff --git a/eesanje/url_46_313_10.txt b/eesanje/url_46_313_10.txt new file mode 100644 index 0000000000000000000000000000000000000000..e66ae4a8309927946e01623374c4ff61096dd512 --- /dev/null +++ b/eesanje/url_46_313_10.txt @@ -0,0 +1,7 @@ +ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ, ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ +ಬೆಂಗಳೂರು, ನ.13- ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಫರ್ನಿಚರ್ ಶೋರೂಂ ಸುಟ್ಟು ಕರಕಲಾಗಿರುವ ಘಟನೆ ಹೊರಮಾವು ಬಳಿಯ ಔಟರ್ ರಿಂಗ್ ರೋಡ್‍ನಲ್ಲಿ ತಡರಾತ್ರಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೆಲ ಹಾಗೂ ಮೊದಲನೇ ಮಹಡಿಯಲ್ಲಿದ್ದ ಪಿಠೋಪಕರಣದ ಅಂಗಡಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಪಿಠೋಪಕರಣಗಳು ಹಾಗೂ ದಾಖಲೆಗಳು ಸುಟ್ಟು ಕರಕಲಾಗಿವೆ. +ಶಂಕರ್ ಎಂಬುವವರಿಗೆ ಸೇರಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಕೋಚಿಂಗ್ ಸೆಂಟರ್ ಹಾಗೂ 3 ಮತ್ತು 4ನೇ ಅಂತಸ್ತಿನಲ್ಲಿ ಐಟಿ ಕಂಪನಿ ಇದ್ದು, ಅಲ್ಲಿಗೂ ಸಹ ಬೆಂಕಿ ಆವರಿಸಿ ಅಲ್ಲಿದ್ದ ಪಿಠೋಪಕರಣಗಳು, ದಾಖಲೆಗಳು ಸುಟ್ಟು ಬೆಂಕಿಗಾಹುತಿಯಾಗಿದೆ. +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ಕೂಡಲೇ ಎಚ್ಚೆತ್ತ ಸೆಕ್ಯೂರಿಟಿ ಗಾರ್ಡ್‍ಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಐದು ವಾಹನಗಳಲ್ಲಿ ಬಂದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಭದ್ರತಾ ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ. ಶೋರೂಂನಲ್ಲಿ ಮರದ ಪಿಠೋಪಕರಣಗಳು ಹೆಚ್ಚಾಗಿದ್ದರಿಂದ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಉಳಿದ ಮೇಲಂತಸ್ತಿನ ಕಟ್ಟಡಗಳಿಗೂ ಬೆಂಕಿ ವ್ಯಾಪಿಸುವಷ್ಟರಲ್ಲಿ ಸಿಬ್ಬಂದಿಗಳು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದು ಸಂಭವಿಸಬಹುದಾದ ಬಾರಿ ಅನಾಹುತವನ್ನು ತಪ್ಪಿಸಿದ್ದಾರೆ. +ಫರ್ನಿಚರ್ ಶೋರೂಂನಲ್ಲಿ ಶಾರ್ಕ್‍ಸಕ್ಯೂರ್ಟ್‍ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ನಗರದ ವೀರಭದ್ರ ನಗರದಲ್ಲಿ ಬಸ್ ಗ್ಯಾರೇಜ್‍ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 18 ಖಾಸಗಿ ಬಸ್‍ಗಳು ಸುಟ್ಟು ಕರಕಲಾಗಿದ್ದವು. +ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಕಾನ್ ಸಿಟಿಯಲ್ಲಿ ಮೇಲಿಂದ ಮೇಲೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದ್ದು, ಕಾರ್ಖಾನೆ, ಶೋರೂಂ, ಕಚೇರಿ, ಅಂಗಡಿ ಮಾಲೀಕರು ಎಚ್ಚರದಿಂದ ಇರಬೇಕಾಗುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಹೆಚ್ಚಿನ ಅನಾಹುತವನ್ನು ನಿಯಂತ್ರಿಸಬಹುದಾಗಿದೆಯೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_313_11.txt b/eesanje/url_46_313_11.txt new file mode 100644 index 0000000000000000000000000000000000000000..a045518349eaf2e8a174f3094a4b8032da4e217c --- /dev/null +++ b/eesanje/url_46_313_11.txt @@ -0,0 +1,8 @@ +ದೇವೇಗೌಡರು, ಎಸ್.ಎಂ.ಕೃಷ್ಣ ಹಾಗೂ ಬೊಮ್ಮಾಯಿ ಭೇಟಿ ಮಾಡಿದ ವಿಜಯೇಂದ್ರ +ಬೆಂಗಳೂರು,ನ.13-ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರುಗಳನ್ನು ಭೇಟಿ ಮಾಡಿದರು. +ಮೊದಲು ಬೆಳಗ್ಗೆ ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಆರೋಗ್ಯದ ವಿಚಾರಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡು ಕೆಲಕಾಲ ಉಭಯ ಕುಶಲೋಪರಿ ವಿಚಾರಿಸಿದರು. ಇತ್ತೀಚೆಗೆ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರ ಜೊತೆಗೆ ಅಧ್ಯಕ್ಷರಾದ ಬಿವೈವಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. +ಪಕ್ಷದ ಸಾರಥ್ಯ ವಹಿಸಿರುವ ತಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ, ಸಹಕಾರ ನೀಡವುದಾಗಿ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ. ಆರ್‍ಟಿನಗರದಿಂದ ನೇರವಾಗಿ ವಿಜಯೇಂದ್ರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. +ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಹಾಸನ ಲೋಕಸಭಾ ಸದಸ್ಯರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ತಮ್ಮಣ್ಣ ಮತ್ತಿತರರು ಬರಮಾಡಿಕೊಂಡರು. +ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ +ವಿಜಯೇಂದ್ರ ಅವರಿಗೆ ದೇವೇಗೌಡರು ಶಾಲು ಹೊದಿಸಿ ಗಂಧದ ಹಾರ ತೊಡಿಸಿ ಶುಭ ಕೋರಿದರು. ನಂತರ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿಕೊಟ್ಟ ವಿಜಯೇಂದ್ರ, ಅವರಿಂದಲೂ ಆಶೀರ್ವಾದ ಪಡೆದುಕೊಂಡರು. +ಪಕ್ಷದ ಸಂಘಟನೆ ವಿಷಯದಲ್ಲಿ ತಮ್ಮನ್ನು ಯಾವಾಗಲಾದರೂ ಭೇಟಿ ಮಾಡಿದರೂ ಅಗತ್ಯ ಸಲಹೆ, ಮಾರ್ಗದರ್ಶನ ಮಾಡುವುದಾಗಿ ಎಸ್.ಎಂ.ಕೃಷ್ಣ ಅವರು ಆಶ್ವಾಸನೆ ನೀಡಿದ್ದಾರೆ. ಬಳಿಕ ಸಂಜೆ ವಿಜಯೇಂದ್ರ ಬಿಜೆಪಿ ಹಿರಿಯ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಿದ್ದಾರೆ. \ No newline at end of file diff --git a/eesanje/url_46_313_12.txt b/eesanje/url_46_313_12.txt new file mode 100644 index 0000000000000000000000000000000000000000..c5799185d0c78b9f8491e01a9f66394ebd79229a --- /dev/null +++ b/eesanje/url_46_313_12.txt @@ -0,0 +1,13 @@ +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ಬೆಂಗಳೂರು, ನ.13- ದೀಪಾವಳಿಗೆ ನಿಗಮ ಮಂಡಳಿಗಳ ನೇಮಕಾತಿಯ ಉಡುಗೊರೆ ಸಿಗಲಿದೆ ಎಂದು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಶೆಯಾಗಿದ್ದು, ಮತ್ತೆ ಹೊಸ ವರ್ಷದ ಬಂಪರ್ ಆಫರ್‍ನ ಆಸೆ ತೋರಿಸಲಾಗುತ್ತಿದೆ.ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದೆ, ಸಚಿವರು ದರ್ಬಾರ್ ನಡೆಸುತ್ತಿದ್ದಾರೆ. ಹಿರಿಯ ಶಾಸಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ. +ಕಿರಿಯ ಶಾಸಕರು ನಿಗಮ ಮಂಡಳಿಗಳಲ್ಲಿಯಾದರೂ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದಾರೆ. ಅತ್ತ ಪಕ್ಷವನ್ನು ಅಧಿಕಾರಕ್ಕೆ ತರಲು ತನು, ಮನ, ಧನಪೂರ್ವಕವಾಗಿ ಯೋಧರಂತೆ ಶ್ರಮಿಸಿದ ಕಾರ್ಯಕರ್ತರು ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಹಣೆಯ ಬರಹ ಇಷ್ಟೆ ಎಂದು ಸಿನಿಕತನಕ್ಕೆ ಜಾರಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಕಿರುಕೂಳಗಳಿಗೆ ಎದೆ ಕೊಟ್ಟು ಹೋರಾಟ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದಲ್ಲಿ ಅನಾಥ ಪ್ರಜ್ಞೆಯಿಂದ ನರಳುತ್ತಿದ್ದಾರೆ ಎಂಬ ಅಸಮಧಾನಗಳು ಕೇಳಿ ಬರುತ್ತಿವೆ. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಕಾರ್ಯಕರ್ತರೇ ಮೊದಲು, ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿ ಕಾರ್ಯಕ್ರಮದಲ್ಲೂ ಒತ್ತಿ ಹೇಳುತ್ತಿದ್ದಾರೆ. ಆದರೆ ಅವರ ಮಾತುಗಳು ಹೇಳಿಕೆಗಳಿಗಷ್ಟೆ ಸೀಮಿತವಾಗಿವೆ. ಮೂಗಿಗೆ ತುಪ್ಪ ಸವರಿ ಮಾಧ್ಯಮಗಳಲ್ಲಿ ದೊಡ್ಡ ದೊಡ್ಡದಾಗಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ. ಪಕ್ಷ ನಿಷ್ಠರಾದ ಡಿ.ಕೆ.ಶಿವಕುಮಾರ್ ಅವರ ಮಾತುಗಳನ್ನು ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಾಳು ಬಂಗಾರವಾಯಿತು ಎಂದು ಖುಷಿ ಪಡಬೇಕು, ಆದರೆ ಆ ಖುಷಿ ಕಾರ್ಯಕರ್ತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಅಸಹನೆಗಳು ಸಾಮಾನ್ಯವಾಗಿದೆ. +ಸಚಿವರಂತೂ ತಮ್ಮನ್ನು ತಾವು ರಾಜ ಮಹಾರಾಜರು ಎಂದುಕೊಂಡಿದ್ದಾರೆ. ಅವರ ಸುತ್ತಮುತ್ತಾ ಇರುವ ಸಿಬ್ಬಂದಿಗಳು, ಅಧಿಕಾರಿಗಳು, ಗನ್ ಮ್ಯಾನ್‍ಗಳದೇ ದರ್ಬಾರ್ ಆಗಿದೆ. ಒಂದಿಬ್ಬರು ಸಚಿವರನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಮಂತ್ರಿಗಳ ಕಚೇರಿಗಳಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದೇ ದರ್ಬಾರ್ ಆಗಿದೆ. +ಸಾಮಾನ್ಯ ಕಾರ್ಯಕರ್ತರ ಪಾಡು ಹೇಳ ತೀರದಾಗಿದೆ. ಬ್ಲಾಕ್, ಜಿಲ್ಲಾಧ್ಯಕ್ಷರ ಮಾತಿಗೂ ಸಚಿವರ ಕಚೇರಿಗಳಲ್ಲಿ ಬೆಲೆ ಇಲ್ಲವಾಗಿದೆ. ವೈಯಕ್ತಿಕ ಕೆಲಸಗಳಿಗೆ ಅಗತ್ಯ ಬೆಲೆಯನ್ನು ಸಂದಾಯ ಮಾಡಲೇಬೇಕು, ಇನ್ನೂ ಕೆಲ ಸಚಿವರು ಸಾರ್ವಜನಿಕ ಸಮಸ್ಯೆಗಳು ಹಾಗೂ ಕೆಲಸಗಳಿಗೂ ಕೈ ಬಾಯಿ ನೋಡುತ್ತಿರುತ್ತಾರೆ. ಅಧಿಕಾರಿಗಳು ಬರಿಗೈನಲ್ಲೇ ಬರುತ್ತಿರಾ ಎಂದು ನೇರವಾಗಿ ಮಾತನಾಡುತ್ತಿದ್ದಾರೆ ಎಂಬ ಆಕ್ಷೇಪಗಳಿವೆ. +ಪ್ರತಿಯೊಬ್ಬ ಸಚಿವರ ಮನೆಯ ಮುಂದೆಯೂ ನೂರೈವತ್ತರಿಂದ 300 ಮಂದಿ ಮಂದಿ ಠಳಾಯಿಸಿರುತ್ತಾರೆ. ಅವರಲ್ಲಿ ಶೇ.50ರಷ್ಟು ಮಂದಿ ಮಧ್ಯವರ್ತಿಗಳಿದ್ದರೆ, ಶೇ.40ರಷ್ಟು ಅಧಿಕಾರಿಗಳು, ಉಳಿದ ಶೇ.10ರಷ್ಟು ಕಾರ್ಯಕರ್ತರು. +ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ +ಮಧ್ಯವರ್ತಿಗಳಲ್ಲಿ ಹಿಂದಿನ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದವರ ಪ್ರಮಾಣವೇ ಹೆಚ್ಚು ಕಾಣುತ್ತಿದೆ. ಠಾಕುಠೀಕಾಗಿ ಬಟ್ಟೆ ಧರಿಸಿ ತಿರುಗಾಡುವ ಪಿಆರ್ ಏಜೆನ್ಸಿಗಳ ಪ್ರತಿನಿಧಿಗಳು ಕಡ್ಡಾಯವಾಗಿ ಕಾಣಸಿಗುತ್ತಾರೆ. ಸಚಿವರ ಭೇಟಿಗೆ ಮೊದಲ ಆದತೆ ಲಾಭ ಮಾಡಿಕೊಡುವವರಿಗೆ ಸಿಗುತ್ತಿದೆ. ಸಮಯ ಉಳಿದರೆ ಕಾರ್ಯಕರ್ತರ ಮನವಿಗಳನ್ನು ಸಚಿವರು ಕಸಿದುಕೊಂಡು ಕಾರು ಏರುತ್ತಾರೆ ಎಂದು ಹೇಳಲಾಗುತ್ತಿದೆ. +2013ರಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾಗಲೂ ನಿಗಮ ಮಂಡಳಿಗಳ ನೇಮಕಾತಿಗೆ ಒಂದುವರೆ ವರ್ಷ ತಡ ಮಾಡಲಾಗಿತ್ತು. ಪ್ರಸ್ತುತ ಸರ್ಕಾರದಲ್ಲೂ ಅದೇ ನಡೆಯಬಹುದೇನೋ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡುತ್ತಿದೆ. ಆಡಳಿತ ವೆಚ್ಚ ತಗ್ಗಿಸುವ ನೆಪವೊಡ್ಡಿ ನೇಮಕಾತಿಯನ್ನು ಮುಂದೂಡಲಾಗುತ್ತಿದೆ. ಆದರೆ ಮತ್ತೊಂದೆಡೆ ಸಚಿವರು ಹೊಸ ಕಾರ್ ಖರೀದಿ, ಮನೆ, ಕಚೇರಿಗಳ ನವೀಕರಣಕ್ಕೆ ಕೋಟ್ಯಂತರ ರೂಪಾಯಿಗಳ ಖರ್ಚು ಮಾಡಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳ ಆಚರಣೆಯನ್ನು ಪಿಆರ್ ಕಂಪೆನಿಗಳಿಗೆ ವಹಿಸಿ ಒಂದಕ್ಕೆ ಐದು ಪಟ್ಟು ಬಿಲ್ ಏರಿಸಿ ವೆಚ್ಚ ಮಾಡಲಾಗುತ್ತಿದೆ. +ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ನೀಡಲು ಆಡಳಿತಾತ್ಮಕ ವೆಚ್ಚ ಎಂದು ನೆಪ ಹೇಳುತ್ತಾರೆ ಎಂದು ಕಾರ್ಯಕರ್ತರರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಬಾರಿಯೂ ಶಾಸಕರಿಗೆ ಆದ್ಯತೆ ನೀಡುವುದಾಗಿ ಹೇಳಲಾಗುತ್ತಿದೆ. ಹಾಗಿದ್ದರೆ ಕಾರ್ಯಕರ್ತರು ಮಾತ್ರ ದುಡಿಯಲಿಕ್ಕೆ ಮಾತ್ರ ಇರುವುದಾ ಎಂದು ಇತ್ತೀಚೆಗೆ ರಹಸ್ಯೆ ಸಭೆ ನಡೆಸಿದ ಕೆಲ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಹೀಗೆ ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಗ್ಗರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. +ಈ ಮೊದಲು ದೀಪಾವಳಿ ವೇಳೆಗೆ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಹೇಳಲಾಗಿತ್ತು, ಅದು ಮುಂದೂಡಿಕೆಯಾಗಿದ್ದು ಹೊಸ ವರ್ಷಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಪಂಚರಾಜ್ಯಗಳ ಚುನಾವಣಾ ಉಸ್ತುವಾರಿಯಲ್ಲಿದ್ದು ಅವು ಮುಗಿದ ಬಳಿಕ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ನಡೆಯಲಿದೆ. ಅದು ಮುಗಿದ ಬಳಿಕ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. +ಗಣೇಶ್ ಹಬ್ಬ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ ಎಂದು ನಿರೀಕ್ಷಿಸುವುದೇ ನಮ್ಮ ಹಣೆಯ ಬರಹ ಎಂದು ಕಾರ್ಯಕರ್ತರು ಹಲಬುತ್ತಿದ್ದಾರೆ. ಸಂಕ್ರಾಂತಿ ಬಳಿ ಲೋಕಸಭೆ ಚುನಾವಣೆ ತಯಾರಿಗಳು ಎಂದು ನಾಯಕರು ಬ್ಯೂಸಿಯಾಗುತ್ತಾರೆ. ಅಲ್ಲಿಗೆ ಮತ್ತೆ ಒಂದು ವರ್ಷ ಕಾರ್ಯಕರ್ತರಿಗೆ ಅರ್ಧ ಚಂದ್ರ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_313_2.txt b/eesanje/url_46_313_2.txt new file mode 100644 index 0000000000000000000000000000000000000000..39e31ad375d7049a60ad1adb29d9f211fb982f30 --- /dev/null +++ b/eesanje/url_46_313_2.txt @@ -0,0 +1,10 @@ +ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ +ಬೆಂಗಳೂರು, ನ.15- ಹಲವರ ಅಪಸ್ವರದ ನಡುವೆಯೂ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದು ಅವರ ಪಾಲಿಗೆ ಹೂವಿನ ಹಾಸಿಗೆಯಲ್ಲ. ಬದಲಿಗೆ ಕೆಳ ಹೀನವಾಗಿರುವ ಪಕ್ಷಕ್ಕೆ ಹೊಸ ಹುರುಪು ನೀಡಿ, ಪಕ್ಷವನ್ನು ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ. +ಇದೀಗ ರಾಜ್ಯಾಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಂಡಿರುವ ವಿಜಯೇಂದ್ರ ಮುಂದೆ ಸಾಲು ಸಾಲು ಸವಾಲುಗಳು ಇವೆ. ಅದರಲ್ಲೂ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪಕ್ಷ ಸಂಘಟನೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಲವು ಅಸ್ತ್ರಗಳೂ ಮುಂದಿದೆ. +ಜಾತಿ ಗಣತಿ ಬಿಜೆಪಿಯ ಮುಂದೆ ಇರುವ ಪ್ರಮುಖ ಅಸ್ತ್ರ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಶಾಶ್ವತ ಹಿಂದುಳಿದ ಆಯೋಗ ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿ ತಿಳಿಸಿದೆ. ಆದರೆ ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. +ಮಹಾರಾಷ್ಟ್ರ : ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿ +ಅದರಲ್ಲೂ ಲಿಂಗಾಯತ ಸಮುದಾಯ ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪುಸುವಲ್ಲಿ ವಿಜಯೇಂದ್ರಗೆ ಅವಕಾಶ ಇದೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ ಎಂದು ಅಭಿಪ್ರಾಯ ರೂಪಿಸುವ ಮೂಲಕ ಹೋರಾಟ ರೂಪಿಸಲು ಅವಕಾಶ ಇದೆ. +ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿದೆ. ಈ ವಿಚಾರವಾಗಿ ಬಿಜೆಪಿಗಿಂತ ಹೆಚ್ಚಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಆದರೆ ಬಿಜೆಪಿ ಸೈಲೆಂಟಾಗಿತ್ತು. ಇದೀಗ ವಿಜಯೇಂದ್ರ ಅವರಿಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸಲು ಅವಕಾಶ ಇದೆ. +ಐದು ಗ್ಯಾರಂಟಿ ಘೋಷಣೆ ಮಾಡುವ ಮೂಲಕ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಲಾಭವನ್ನು ಪಡೆದುಕೊಂಡಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಜಾರಿ ಮಾಡಿರುವುದನ್ನು ಮುಂದಿಟ್ಟುಕೊಂಡು ವರ್ಚಸ್ಸು ಹೆಚ್ಚಿಸುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ. ಆದರೆ ಗ್ಯಾರಂಟಿ ಜಾರಿಯಲ್ಲಿ ಹಲವು ಎಡವಟ್ಟುಗಳು ಮಾಡಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಲ್ಲಿ ಸಮಸ್ಯೆಗಳು ಎದುರಾಗುತ್ತಿದೆ. ಇದನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿಜಯೇಂದ್ರ ಹೋರಾಟದವನ್ನು ರೂಪಿಸಲು ಅವಕಾಶ ಇದೆ. +ರಾಜ್ಯದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುತ್ತಿದೆ. ಆದರೆ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂಬ ಆರೋಪ ಇದೆ. ಸರ್ಕಾರ ಅಕಾರಕ್ಕೆ ಬಂದು ಆರು ತಿಂಗಳಾದರೂ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇಲಾಖಾವಾರು ಕೆಲಸಗಳು ನಡೆದಿಲ್ಲ ಎಂಬ ಆರೋಪಗಳು ಇವೆ. +ಈ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ವಿಜಯೇಂದ್ರ ಮುಂದಾಗುತ್ತಾರಾ ಎಂಬುದು ಕೂಡ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಸಾಕಷ್ಟು ಅಸ್ತ್ರಗಳು ವಿಜಯೇಂದ್ರ ಮುಂದಿದೆ. ವಿರೋಧ ಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸರ್ಕಾರದ ವಿರುದ್ಧ ಹೇಗೆ ಹೋರಾಟ ರೂಪಿಸಿ ಜನಾಭಿಪ್ರಾಯ ರೂಪಿಸುತ್ತಾರೆ ಎಂಬುದನ್ನು ಕಾದುನೊಡಬೇಕಿದೆ. \ No newline at end of file diff --git a/eesanje/url_46_313_3.txt b/eesanje/url_46_313_3.txt new file mode 100644 index 0000000000000000000000000000000000000000..8a5afec2e88a0065f7e1b4dc0b8e5df2b0ca5e59 --- /dev/null +++ b/eesanje/url_46_313_3.txt @@ -0,0 +1,9 @@ +ಕಾರ್ಯಕರ್ತರ ಹರ್ಷೋದ್ಘಾರಗಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ +ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. +ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು.ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ. +ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ಪ್ರಕರಣದಲ್ಲಿ ಬಿಹಾರದ ಯುವಕನ ವಿಚಾರಣೆ +ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ. +ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ. +ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು. +ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_313_4.txt b/eesanje/url_46_313_4.txt new file mode 100644 index 0000000000000000000000000000000000000000..25334d0a730127b03d33b54dd49563bf9a4acac0 --- /dev/null +++ b/eesanje/url_46_313_4.txt @@ -0,0 +1,6 @@ +ಅಕ್ರಮವಾಗಿ ವಿದ್ಯುತ್ ಸಂಪರ್ಕ : ಅಚಾತುರ್ಯಕ್ಕೆ ವಿಷಾದವಿದೆ, ದಂಡ ಕಟ್ಟುವೆ ಎಂದ ಕುಮಾರಸ್ವಾಮಿ + +ಬೆಂಗಳೂರು, ನ.15-ದೀಪಾವಳಿ ಹಬ್ಬದ ನಿಮಿತ್ತ ಜೆ.ಪಿ.ನಗರದ ತಮ್ಮ ನಿವಾಸಕ್ಕೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕೊಡಲಾಗಿದೆ ಎಂಬ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ. +ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. +ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ… +ಸೋಮವಾರ ನಾನು ಬಿಡದಿಯ ತೋಟದಲ್ಲಿದ್ದೆ. ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. \ No newline at end of file diff --git a/eesanje/url_46_313_5.txt b/eesanje/url_46_313_5.txt new file mode 100644 index 0000000000000000000000000000000000000000..cebebe61ee9069f5fd21707fcd8de6b15f66aa5a --- /dev/null +++ b/eesanje/url_46_313_5.txt @@ -0,0 +1,4 @@ +ಕರ್ನಾಟಕ ಕರ-ಕುಶಲ ವಸ್ತುಗಳ ಪ್ರದರ್ಶನಕ್ಕೆ ದೆಹಲಿಯಲ್ಲಿ ಶಾಪಿಂಗ್ ಕಟ್ಟಡ ಸಂಕೀರ್ಣ +ನವದೆಹಲಿ, ನ.15-ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023ರ ಅಂಗವಾಗಿ ಇಲ್ಲಿನ ಪ್ರಗತಿ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಕರ್ನಾಟಕ ಪೆವಿಲಿಯನ್ ಮಾದರಿಯಲ್ಲಿ ದೆಹಲಿಯಲ್ಲಿ ಶಾಶ್ವತವಾಗಿ 50 ಮಳಿಗೆಗಳನ್ನು ಒಳಗೊಂಡ ಒಂದು ಶಾಪಿಂಗ್ ಕಟ್ಟಡ ಸಂಕೀರ್ಣವನ್ನು ಆದಷ್ಟು ಬೇಗ ನಿರ್ಮಾಣ ಮಾಡುವುದಾಗಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪ್ರಕಟಿಸಿದ್ದಾರೆ. +ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023ರಲ್ಲಿ ಕರ್ನಾಟಕ ಪೆವಿಲಿಯನ್ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಕರ -ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ದೆಹಲಿಯಲ್ಲಿ 50 ಮಳಿಗೆಗಳನ್ನು ಶಾಶ್ವತವಾಗಿ ನಿರ್ಮಾಣ ಮಾಡಲಾಗುವುದು. ಇದರಿಂದ ಕರ್ನಾಟಕದ ಗುಡಿ ಕೈಗಾರಿಕೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು. +ಕರ್ನಾಟಕ ಪೆವಿಲಿಯನ್ ನಲ್ಲಿದ್ದ 40ಕ್ಕೂ ಹೆಚ್ಚು ಮಳೆಗೆಗಳನ್ನು ಜಯಚಂದ್ರ ಅವರು ವೀಕ್ಷಿಸಿದರು. ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿದ್ದ ಗ್ರಾಮೀಣ ಗುಡಿ ಕೈಗಾರಿಕೆ ವಸ್ತುಗಳು, ಚನ್ನಪಟ್ಟಣದ ಗೊಂಬೆಗಳು, ಕೆಎಸ್‍ಐಸಿ ಮೈಸೂರು ರೇಷ್ಮೆ ಸೀರೆಗಳು, ಸಿರಿಧಾನ್ಯಗಳು, ಮರದಿಂದ ಮಾಡಿದ್ದ ಅಲಂಕಾರಿಕ ವಸ್ತುಗಳು, ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ತಯಾರಿಸಿದ್ದ ಉತ್ಪನ್ನಗಳು, ಚರ್ಮದ ಉತ್ಪನ್ನಗಳು, ಆಯುರ್ವೇದ ಔಷಗಳು, ವಿವಿಧ ಬಗೆಯ ತಿಂಡಿ-ತಿನಿಸುಗಳು ಸೇರಿದಂತೆ ಕರ್ನಾಟಕದಲ್ಲಿ ತಯಾರಿಸಿದ್ದ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿ ಮಾರಟಗಾರರಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಭವನ ನಿವಾಸಿ ಆಯುಕ್ತರಾದ ಎಂ.ಇಮ್. ಕೊಂಗ್ಲ ಜಮೀರ್ ಹಾಜರಿದ್ದರು. \ No newline at end of file diff --git a/eesanje/url_46_313_6.txt b/eesanje/url_46_313_6.txt new file mode 100644 index 0000000000000000000000000000000000000000..07ac33fedfe9c40eae2b55f3a7e29d6e8c16eec5 --- /dev/null +++ b/eesanje/url_46_313_6.txt @@ -0,0 +1,8 @@ +ಬೆಳಗಾವಿ ಅಧಿವೇಶನದಲ್ಲಿ ಜಾತಿಜನಗಣತಿ ವರದಿ ಮಂಡನೆ : ಸತೀಶ್ ಜಾರಕಿಹೊಳಿ +ಬೆಳಗಾವಿ,ನ.13- ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಮೀಕ್ಷಾ ವರದಿ ಡಿ.15ಕ್ಕೆ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆಗಳು ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜು ಅಧ್ಯಕ್ಷತೆಯ ಆಯೋಗದ ವರದಿಯ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಮೊದಲು ಅದು ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದರಲ್ಲಿರುವ ಶಬ್ದಗಳೇನು, ಅಂಕಿಸಂಖ್ಯೆಗಳೇನು ಎಂಬ ಬಗ್ಗೆ ಸಾರ್ವಜನಿಕವಾಗಿ ಸದನದಲ್ಲಿ ಚರ್ಚೆಯಾಗಬೇಕು. ಎಲ್ಲರು ಒಪ್ಪಿದರೆ ವರದಿ ಅಂಗೀಕಾರವಾಗುತ್ತದೆ. ಇಲ್ಲವಾದರೆ ತಿರಸ್ಕಾರಗೊಳ್ಳಲಿದೆ. ಎಲ್ಲದಕ್ಕಿಂತ ಮೊದಲು ಅದರ ಬಗ್ಗೆ ಚರ್ಚೆ ಅಗತ್ಯ ಎಂದರು. +ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡನೆಯಾಗುವ ಸಾಧ್ಯತೆಗಳು ತೀವ್ರ ಕಡಿಮೆಯಿದೆ. ಡಿ.15ಕ್ಕೆ ವರದಿ ಸಲ್ಲಿಕೆಯಾಗಬಹುದು ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಎಂದು ಸಚಿವರಿಗೆ ಈವರೆಗೂ ಹೈಕಮಾಂಡ್ ಸೂಚನೆ ಮಾಡಿಲ್ಲ. ಹಾಗಾಗಿ ಸಚಿವರ ಸ್ಪರ್ಧೆ ಇಲ್ಲ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿವೆ. ಆಸಕ್ತರಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಮೊದಲು ಅರ್ಜಿ ಸಲ್ಲಿಕೆಯಾಗಬೇಕು. ಆನಂತರ ನಿಗದಿತ ಮಾನದಂಡಗಳನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ಆಕಾಂಕ್ಷಿಗಳು ಸಮುದಾಯದಲ್ಲಿ ಜನಪ್ರಿಯತೆ ಹೊಂದಿರಬೇಕು, ಪಕ್ಷನಿಷ್ಠರಾಗಿರಬೇಕು, ಹೈಕಮಾಂಡ್ ಪರಿಗಣಿಸಬೇಕು. ಅಂಥವರನ್ನು ಆಯ್ಕೆ ಮಾಡಲಾಗುತ್ತದೆ. ಬೆಳಗಾವಿ ಲೋಕಸಭೆಗೆ ಲಿಂಗಾಯಿತ ಸಮುದಾಯದ ಬಗ್ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಕುರುಬ ಸಮುದಾಯದಲ್ಲಿ ಟಿಕೆಟ್‍ನೀಡುವ ಚರ್ಚೆಗಳಾಗಿವೆ. ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುಟುಂಬ ಈವರೆಗೂ ಟಿಕೆಟ್ ಕೇಳಿಲಿಲ್ಲ ಎಂದು ಸ್ಪಷ್ಟಪಡಿಸಿದರು. ನಿಗಮಮಂಡಳಿ ನೇಮಕಾತಿಗೆ ಪಂಚರಾಜ್ಯಗಳ ಚುನಾವಣೆ ಮತ್ತು ವಿಧಾನಮಂಡಲದ ಅಧಿವೇಶನದ ಬಳಿಕ ಪ್ರಕ್ರಿಯೆ ನಡೆಯಲಿದೆ ಎಂದರು. +ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಎಲ್ಲಿಯೂ ಹೇಳಿಕೆ ನೀಡಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯಾಗುವ ಬಗ್ಗೆ ಯಾವುದೇ ಆತುರವಿಲ್ಲ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಬೇಕು. ಆ ವೇಳೆ ಹೈಕಮಾಂಡ್ ನಾಯಕತ್ವವನ್ನು ಗುರುತಿಸಿದಾಗ ಮಾತ್ರ ತಾವು ಪ್ರಯತ್ನಿಸುವುದಾಗಿ ಹೇಳಿದರು. +ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದೇವೆ. ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊರಲು ತಾವು ಸದ್ಯಕ್ಕೆ ತಯಾರಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_313_7.txt b/eesanje/url_46_313_7.txt new file mode 100644 index 0000000000000000000000000000000000000000..5bafbff9eba301465359ec9830a712050d5012ea --- /dev/null +++ b/eesanje/url_46_313_7.txt @@ -0,0 +1,7 @@ +ಕಟ್ಟೆಚ್ಚರದ ನಡವೆಯೂ ಸಿಕ್ಕಾಪಟ್ಟೆ ಸದ್ದುಮಾಡಿದ ರಾಸಾಯನಿಕ ಪಟಾಕಿಗಳು +ಬೆಂಗಳೂರು,ನ.13- ರಾಜ್ಯ ಸರ್ಕಾರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಟ್ಟೆಚ್ಚರದ ಹೊರತಾಗಿಯೂ ನಿನ್ನೆ ಮತ್ತೆ ರಾಸಾಯನಿಕ ಪಟಾಕಿಗಳೇ ಅಬ್ಬರಿಸಿವೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅ.17ರಂದು ಸುತ್ತೋಲೆ ಹೊರಡಿಸಿ ಪಟಾಕಿಗಳ ಬಳಕೆ ಬಗ್ಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿತ್ತು. +ಸುಪ್ರೀಂಕೋರ್ಟ್ 2018ರಲ್ಲಿ ನೀಡಿದ್ದ ನಿರ್ದೇಶನಗಳ ಪ್ರಕಾರ ಶಬ್ದ ಹಾಗೂ ವಾಯುಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ಬಳಸಲು ಅವಕಾಶ ಇಲ್ಲ. ಜೊತೆಗೆ ರಾತ್ರಿ 8ರಿಂದ 10 ಗಂಟೆವರೆಗೂ ಮಾತ್ರ ಹಸಿರು ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳು, ಎಸ್ಪಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಕಾರಿಗಳನ್ನೊಳಗೊಂಡ ವಿಶೇಷ ಕಾರ್ಯಪಡೆಗಳನ್ನು ರಚಿಸಿತ್ತು. ಈ ಕಾರ್ಯಪಡೆಗಳು ರಾಜ್ಯಾದ್ಯಂತ ಪರಿಶೀಲನೆ ನಡೆಸಿ ಪರಿಸರಕ್ಕೆ ಹಾನಿ ಮಾಡುವ ಪಟಾಕಿಗಳ ಸಂಗ್ರಹವನ್ನು ತಡೆಯಲು ಯತ್ನಿಸಿದರು. +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ಹಸಿರು ಪಟಾಕಿಗಳ ಪತ್ತೆಹಚ್ಚುವಿಕೆಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿತ್ತು. ಆದರೆ ಈ ಎಲ್ಲ ಪ್ರಯತ್ನಗಳು ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಅಧಿಕಾರಿಗಳ ಕಠಿಣ ನಿಯಮಾವಳಿಗಳು ಎಂದಿನಂತೆ ಜನಸಾಮಾನ್ಯರಿಗೆ ಬರೆ ಎಳೆದಿದೆ. ಸರ್ಕಾರದ ನಿಯಮಗಳನ್ನು ಮುಂದಿಟ್ಟುಕೊಂಡು ಮಾರಾಟಗಾರರು ಪಟಾಕಿಯ ದರಗಳನ್ನು ಏರಿಕೆ ಮಾಡಿಕೊಂಡಿದ್ದಾರೆ. ಹಸಿರು ಪಟಾಕಿಗಳು ದುಬಾರಿ ಯಾಗಿರುವುದರಿಂದ ಮತ್ತು ಅವುಗಳು ದೀಪಾವಳಿಯ ಅಬ್ಬರಕ್ಕೆ ಪೂರಕವಾಗಿ ಇಲ್ಲದಿರುವುದರಿಂದ ಸಾರ್ವಜನಿಕರು ಮತ್ತೆ ರಾಸಾಯನಿಕ ಮಿಶ್ರಿತ ಪಟಾಕಿಗಳ ಮೊರೆ ಹೋಗಿದ್ದಾರೆ. +ನಿನ್ನೆ ತಡರಾತ್ರಿಯವರೆಗೂ ಪಟಾಕಿಗಳ ಅಬ್ಬರಿಸಿವೆ. ವಾಯು ಮಾಲಿನ್ಯ ಉಸಿರುಗಟ್ಟಿಸುವಂತಾಗಿತ್ತು. ಹಸಿರು ಪಟಾಕಿಗಳ ಬಳಕೆ ಕ್ಷೀಣವಾಗಿತ್ತು. ಇಂದು ಮತ್ತು ನಾಳೆ ದೀಪಾವಳಿಯ ಸಂಭ್ರಮ ಬಾಕಿಯಿದ್ದು, ಪಟಾಕಿಗಳ ಅಬ್ಬರ ಖಾಯಂ ಎಂಬಂತಾಗಿದೆ. +ಈ ಹಿಂದೆ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ಬಿದ್ದು ದುರಂತ ಸಂಭವಿಸಿದ್ದರಿಂದಾಗಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ನಿಯಮಾವಳಿಗಳನ್ನು ಬಿಗಿಗೊಳಿಸಿತ್ತು. ಆದರೆ ಅದು ನಿರೀಕ್ಷಿತ ಪರಿಣಾಮ ಬೀರಿಲ್ಲ. ಭಾವನಾತ್ಮಕ ವಿಷಯಗಳಾಗಿರುವುದರಿಂದ ಅಧಿಕಾರಿಗಳು ಕೂಡ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಸಾರ್ವಜನಿಕರು ಪರಿಸರ ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ ದೀಪಾವಳಿಯ ಸಂಭ್ರಮದಲ್ಲಿ ಮುಳುಗಿದ್ದಾರೆ. \ No newline at end of file diff --git a/eesanje/url_46_313_8.txt b/eesanje/url_46_313_8.txt new file mode 100644 index 0000000000000000000000000000000000000000..7ab89060bbf8f31d04c80d2fd88de016ee7ac073 --- /dev/null +++ b/eesanje/url_46_313_8.txt @@ -0,0 +1,10 @@ +ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಚಳಿ ಬಿಡಿಸಲು ಪ್ರತಿಪಕ್ಷ ಸಜ್ಜು +ಬೆಂಗಳೂರು, ನ.13-ಡಿಸೆಂಬರ್‌ನಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನಕ್ಕೆ ಒಂದೆಡೆ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ತಯಾರಾಗುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳತ್ತಿಲ್ಲ ಎಂಬ ಆರೋಪವನ್ನು ಪ್ರತಿಪಕ್ಷಗಳು ಮಾಡುತ್ತಿವೆ. +ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಧಿವೇಶನದ ಪೂರ್ವ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿವೆ. ರಾಜ್ಯದಲ್ಲಿ ತೀವ್ರವಾಗಿರುವ ಬರಪೀಡಿತ ಪ್ರದೇಶಗಳಲ್ಲಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪ್ರವಾಸ ಕೈಗೊಂಡಿವೆ. +ಪ್ರವಾಸದ ಸಂದರ್ಭದಲ್ಲಿ ವಾಸ್ತವ ಪರಿಸ್ಥಿತಿಯ ಮಾಹಿತಿಯನ್ನು ಕಲೆ ಹಾಕುತ್ತಿವೆ. ಚಳಿಗಾಲದ ಅಧಿವೇಶನದಲ್ಲಿ ಬರಪರಿಸ್ಥಿತಿ ನಿರ್ವಹಣೆಯನ್ನೇ ಪ್ರಮುಖ ಅಸ್ತ್ರವಾಗಿ ವಿರೋಧ ಪಕ್ಷಗಳು ಬಳಸಲಿವೆ. ಜೆಡಿಎಸ್ ಎನ್‍ಡಿಎ ಮೈತ್ರಿಕೂಟ ಸೇರಿರುವುದರಿಂದ ಬಿಜೆಪಿ ಜತೆಗೂಡಿ ಅಧಿವೇಶನದಲ್ಲಿ ಹೋರಾಟ ನಡೆಸಲಿದೆ. ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷರು ಬದಲಾಗಿದ್ದಾರೆ. ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರು ಹಾಲಿ ಶಾಸಕರೇ ಆಗಿದ್ದಾರೆ. ಹೀಗಾಗಿ ಉಭಯ ಪಕ್ಷಗಳು ಜಂಟಿಯಾಗಿ ಸರ್ಕಾರದ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸುವ ಸಾಧ್ಯತೆಯೇ ಹೆಚ್ಚಾಗಿದೆ. +ಮಳೆ ಕೊರತೆಯಿಂದ ತೀವ್ರ ಸ್ವರೂಪದ ಬರವಿದ್ದರೂ ಬೆಳೆಹಾನಿಯಾದ ರೈತರಿಗೆ ಬೆಳೆ ಪರಿಹಾರ ನೀಡಿಲ್ಲ. ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಸಿ ರಾಜ್ಯ ಸರ್ಕಾರ ಕಾಯುತ್ತಾ ಕುಳಿತಿದೆ ಎಂದು ಈಗಾಗಲೇ ಆರೋಪಿಸಿವೆ. ಸಮರ್ಪಕ ಕುಡಿಯುವ ನೀರು ಪೂರೈಕೆ, ಜನರು ಗುಳೆ ಹೋಗದಂತೆ ಉದ್ಯೋಗ, ಬೆಳೆ ಹಾನಿಗೆ ಪರಿಹಾರ, ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸಬೇಕು ಎಂಬ ಆಗ್ರಹವನ್ನು ಪ್ರತಿಪಕ್ಷಗಳು ಮಾಡುತ್ತಿವೆ. +ವಿದ್ಯುತ್ ಅಭಾವದಿಂದ ರೈತರು ಹಾಗೂ ಜನರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆ ಮೇಲೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿವೆ. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಅನುಷ್ಠಾನದಲ್ಲಿನ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಗಳಿವೆ. +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ, ಬೆಳೆ ಪರಿಹಾರ, ವಿದ್ಯುತ್ ಸಮಸ್ಯೆ, ಕುಡಿಯುವ ನೀರು, ಬೆಲೆ ಏರಿಕೆ ಸೇರಿದಂತೆ ನಾಡಿನ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಪ್ರತಪಕ್ಷಗಳು ಪ್ರಮುಖ ಅಸ್ತ್ರವಾಗಿ ಬಳಸಲು ತಯಾರಿ ನಡೆಸುತ್ತಿವೆ. ಸಚಿವರು ಕೂಡ ಈಗಾಗಲೇ ಬರಪೀಡ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ವಾಸ್ತವ ಸ್ಥಿತಿಗತಿಯ ಮಾಹಿತಿ ಪಡೆದಿದ್ದಾರೆ. +ಬೀಕರ ಬರಗಾಲವಿದ್ದರೂ ಕೇಂದ್ರ ಸರ್ಕಾರ ನೆರವಿಗೆ ಬಾರದಿರುವ ವಿಚಾರವನ್ನೇ ಪ್ರತಿಪಕ್ಷಗಳ ಅಸ್ತ್ರಕ್ಕೆ ಗುರಾಣಿಯಾಗಿ ಬಳಸಲು ಆಡಳಿತ ಪಕ್ಷ ಸಜ್ಜಾಗಿದೆ. ಅಲ್ಲದೆ, ಗ್ಯಾರಂಟಿ ಅನುಷ್ಠಾನ ಹಾಗೂ ಬರದ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸದನದ ಮುಂದಿಟ್ಟು ಬಲವಾಗಿ ಸಮರ್ಥಿಸಿಕೊಳ್ಳಲು ಸರ್ಕಾರವೂ ಕೂಡ ಸಿದ್ಧತೆ ನಡೆಸಿದೆ. ಮುಂಬರುವ ಲೋಕಸಭಾ ಚುನಾವಣೆ ತಯಾರಿಯ ಗುಂಗಿನಲ್ಲಿ ಮೂರು ಪಕ್ಷಗಳಿವೆ. ಹೀಗಾಗಿ ಅವೇಶನದ ವೇಳೆ ರಾಜಕೀಯ ಚಟುವಟಿಕೆಗಳು ಹೆಚ್ಚಾಗಲಿವೆ ಎಂಬ ಅಭಿಪ್ರಾಯವಿದೆ. +ಒಟ್ಟಾರೆ ಡಿಸೆಂಬರ್‍ನಲ್ಲಿ ಬೆಳಗಾವಿಯಲ್ಲಿ ನಡೆಯುವ ರಾಜ್ಯ ವಿಧಾನಮಂಡಲದ ಅಧಿವೇಶನವುಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಆರೋಪ- ಪ್ರತ್ಯಾರೋಪಗಳಿಗೆ ವೇದಿಕೆಯಾಗಲಿದೆ. \ No newline at end of file diff --git a/eesanje/url_46_313_9.txt b/eesanje/url_46_313_9.txt new file mode 100644 index 0000000000000000000000000000000000000000..e2fed6471862aceb7a3a40e6605cd866fe46a0dc --- /dev/null +++ b/eesanje/url_46_313_9.txt @@ -0,0 +1,7 @@ +ಉಡುಪಿಯಲ್ಲಿ ತಾಯಿ-ಮಕ್ಕಳನ್ನು ಕೊಂದಿದ್ದು ಬೋಳುತಲೆಯ ವ್ಯಕ್ತಿಯೇ..? +ಬೆಂಗಳೂರು,ನ.13- ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಸುಮಾರು 45 ವರ್ಷ ವಯಸ್ಸಿನ ಬೋಳು ತಲೆಯ ವ್ಯಕ್ತಿಯೇ ಉಡುಪಿಯ ನೇಜಾರಿನ ತೃಪ್ತಿನಗರದಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವ ಆರೋಪಿ ಎಂದು ಶಂಕಿಸಲಾಗಿದೆ. ದುಬೈನಲ್ಲಿ ಉದ್ಯೋಗದಲ್ಲಿರುವ ನೂರ್ ಮಹಮ್ಮದ್ ಅವರ ಪತ್ನಿ ಹಸೀನಾ ಮತ್ತು ಅವರ ಮೂವರು ಮಕ್ಕಳ ಹತ್ಯೆ ಮತ್ತು ವೃದ್ಧೆ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ ಜಿಲ್ಲಾ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಾಯಿ ಮತ್ತು ಅವರ ಮೂವರು ಮಕ್ಕಳನ್ನು ಅಮಾನವೀಯವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಈಗಾಗಲೇ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. +ಈಗಾಗಲೇ ಆರೋಪಿ ಬಗ್ಗೆ ಕೆಲ ಮಾಹಿತಿಗಳು ದೊರೆತಿದ್ದು, ಪೊಲೀಸರ ಅನುಮಾನ 45 ವರ್ಷದ ಬೋಳು ತಲೆಯ ವ್ಯಕ್ತಿಯ ಮೇಲೆ ಬಿದ್ದಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಿದ್ದಾರೆ. ಕೊಲೆಯಾದ ದಿನ ಬೋಳು ತಲೆಯ ವ್ಯಕ್ತಿಯನ್ನು ಸಂತೆಕಟ್ಟೆಯಿಂದ ತೃಪ್ತಿನಗರಕ್ಕೆ ಡ್ರಾಪ್ ಮಾಡಿದೆ ಆತ ಬಿಳಿ ಅಂಗಿ ಧರಿಸಿದ್ದ ಬೆಳಿಗ್ಗೆ 8.30 ರಲ್ಲಿ ಆತನನ್ನು ಡ್ರಾಪ್ ಮಾಡಿದ್ದೇ ಆದರೆ, ಅದೇ ವ್ಯಕ್ತಿ ಒಂದು ಗಂಟೆಯ ನಂತರ ಸಂತೆಕಟ್ಟೆಯಲ್ಲಿ ಕಾಣಿಸಿಕೊಂಡಿದ್ದ ಎಂದು ಸ್ಥಳೀಯ ಆಟೋ ಚಾಲಕ ನೀಡಿರುವ ಮಾಹಿತಿ ಹಂತಕನ ಬಂಧನಕ್ಕೆ ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ. +ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ +ಆಟೋ ಚಾಲಕನ ಮಾಹಿತಿ ಮೇರೆಗೆ ಪರಾರಿಯಾಗಿರುವ ಬೋಳು ತಲೆ ವ್ಯಕ್ತಿಯ ಬಂಧನಕ್ಕಾಗಿ ಶೋಧ ಮುಂದುವರೆಸಲಾಗಿದೆ. ಆತ ಸಂತೆಕಟ್ಟೆಯಿಂದ ಯಾವ ಕಡೆ ತೆರಳಿದ. ಇಲ್ಲವೇ ಆತನ ನಿವಾಸ ಅಕ್ಕಪಕ್ಕದಲ್ಲೇ ಇರಬಹುದೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. +ಬೆಳಗ್ಗೆ ಮನೆಗೆ ನುಗ್ಗಿದ ಹಂತಕ ಮೊದಲು ಅಡುಗೆ ಮನೆಯಲ್ಲಿದ್ದ ಹಸೀನಾ ಅವರನ್ನು ಕೊಲೆ ಮಾಡಿದ, ಆಕೆಯನ್ನು ಬಿಡಿಸಿಕೊಳ್ಳಲು ಬಂದ ಮಕ್ಕಳನ್ನು ನಿರ್ದಯಿಯಾಗಿ ಕೊಂದು ಹಾಕಿ ನಂತರ ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ನೋಡಿದರೆ ಆತನಿಗೆ ಹಸೀನಾ ಕುಟುಂಬದ ಮೇಲೆ ಎಷ್ಟು ದ್ವೇಷ ಇತ್ತು ಎನ್ನುವುದಕ್ಕೆ ಉದಾಹರಣೆಯಾಗಿದೆ. ಅದರಲ್ಲೂ ಆತ ಕೃತ್ಯದ ನಂತರ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗದಿರುವುದನ್ನು ನೋಡಿದರೆ ವೈಯಕ್ತಿಕ ಕಾರಣದಿಂದಾಗಿ ಆತ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಪೊಲೀಸರು. +ಈ ಮಧ್ಯೆ ದುಬೈನಲ್ಲಿ ಉದ್ಯೋಗದಲ್ಲಿದ್ದ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರಿನ ಏರ್‍ಪೆಪೊರ್ಟ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಪುತ್ರ ನೇಜಾರಿಗೆ ಆಗಮಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಎಫ್‍ಎಸ್‍ಎಲ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಹಂತಕ ಬಿಟ್ಟು ಹೋಗಿರಬಹುದಾದ ಸಾಕ್ಷ್ಯ ಸಂಗ್ರಹದಲ್ಲಿ ನಿರತರಾಗಿದ್ದಾರೆ. \ No newline at end of file diff --git a/eesanje/url_46_314_1.txt b/eesanje/url_46_314_1.txt new file mode 100644 index 0000000000000000000000000000000000000000..685bde08457ae28220f936376cd1cb6164065fe2 --- /dev/null +++ b/eesanje/url_46_314_1.txt @@ -0,0 +1,5 @@ +ಆಂಬುಲೆನ್ಸ್ ನಲ್ಲಿ ಜಾಲಿ ರೈಡ್ ಹೊರಟಿದ್ದವರಿಗೆ ದಂಡ +ಚಿಕ್ಕಮಗಳೂರು, ನ.13- ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಓರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ , ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೊರಟಿದ್ರು. ಆದ್ರೆ ಕೊಟ್ಟಿಗೆಹಾರ ಆಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. +ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟ್ ಮೂಲಕ ಉಜಿರೆ ಕಡೆ ಹೋಗುವಾಗ ಕೊಟ್ಟಿಗೆಹಾರದಲ್ಲಿ ರಸ್ತೆ ಉದ್ದಕ್ಕೂ ಕೇಕೆ ಹಾಕುತ್ತಾ ಹೋಗುತ್ತಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಂಬುಲೆನ್ಸ್‍ನ್ನು ತಡೆದು ವಿಚಾರಣೆ ಮಾಡಿದಾಗ ಗೆಳೆಯರು ಪ್ರವಾಸ ಬಂದಿರುವುದು ತಿಳಿದಿದೆ. +ಕಮಲ್‍ನಾಥ್ ನಮ್ಮವರಲ್ಲ, ಹೊರಗಿನವರು : ಶಿವರಾಜ್‍ಸಿಂಗ್ ಚೌಹಾಣ್ +ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅರ್ಜುನ್ ಅವರು, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್‍ನನ್ನು ಉಜಿರೆ ಬೀಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ದಂಡ ಹಾಕಿದ್ದಾರೆ. \ No newline at end of file diff --git a/eesanje/url_46_314_10.txt b/eesanje/url_46_314_10.txt new file mode 100644 index 0000000000000000000000000000000000000000..0d05c7be9e50ab81df0c944598bb6bba39b80de5 --- /dev/null +++ b/eesanje/url_46_314_10.txt @@ -0,0 +1,5 @@ +ಬಿಜೆಪಿ ಜೊತೆ ಜೆಡಿಎಸ್ ವಿಲೀನವಿಲ್ಲ : ಹೆಚ್‌ಡಿಕೆ +ಬೆಂಗಳೂರು, ನ.12- ಬಿಜೆಪಿ ಜತೆ ಜೆಡಿಎಸ್ ವಿಲೀನವಿಲ್ಲ. ಎನ್‍ಡಿಎ ಮೈತ್ರಿಕೂಟದಲ್ಲಿ ಇದ್ದೇವೆ ಅಷ್ಟೇ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸ್ವಾಗತಾರ್ಹ. ನಮ್ಮ ಹೋರಾಟ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದು. ಅದಕ್ಕಾಗಿ ಒಬ್ಬ ಯುವ ನಾಯಕನ ಅಗತ್ಯವಿತ್ತು. ಆ ಜವಾಬ್ದಾರಿಯನ್ನು ವಿಜಯೇಂದ್ರ ಅವರು ಸಮರ್ಥವಾಗಿ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು +ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆಯೂ ಆಗಬಹುದು. ಒಕ್ಕಲಿಗ ಲಿಂಗಾಯಿತ ಸಮೀಕರಣ ಎನ್ನುವುದಕ್ಕಿಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುವುದೇ ನಮ್ಮ ಉದ್ದೇಶ ಎಂದರು. \ No newline at end of file diff --git a/eesanje/url_46_314_11.txt b/eesanje/url_46_314_11.txt new file mode 100644 index 0000000000000000000000000000000000000000..57818a450abf98202c3385f074eaa55c5202993d --- /dev/null +++ b/eesanje/url_46_314_11.txt @@ -0,0 +1,17 @@ +ಕಾಂಗ್ರೆಸ್ ನಡೆ “ಒನ್ ಸ್ಟೇಟ್-ಮೆನಿ ಎಲೆಕ್ಷನ್” ಕಡೆ : ಕುಮಾರಸ್ವಾಮಿ +ಬೆಂಗಳೂರು,ನ.12- ದೇಶದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ರಾಜ್ಯದಲ್ಲಿ ಕಾಂಗ್ರೆಸ್ ಒನ್ ಸ್ಟೇಟ್-ಮೆನಿ ಎಲೆಕ್ಷನ್ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಅನಾನುಕೂಲಗಳ ಬಗ್ಗೆ ಸುದೀರ್ಘ ವಿವರಣೆ ನೀಡಿದ ಅವರು, ಪಂಚ ರಾಜ್ಯದ ಚುನಾವಣೆಯಲ್ಲೂ ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಭರವಸೆಯನ್ನು ಕಾಂಗ್ರೆಸ್ ನೀಡುತ್ತಿದೆ. ಅಲ್ಲಿನ ಮತದಾರರು ಮರುಳಾಗಬಾರದು. ಗ್ಯಾರಂಟಿ ಯೋಜನೆಗಳು ಆಶಾದಾಯಕವಾಗಿಲ್ಲ ಎಂದರು. +ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆಬಂದಿದ್ದು, ಜನರ ಬದುಕಿನ ಭಾಗ್ಯದ ಬಾಗಿಲು ತೆಗೆದಿದ್ದೇವೆ ಎಂದು ಹೇಳುತ್ತಿದ್ದೆ. ಪ್ರತಿ ದಿನ ಕಾಂಗ್ರೆಸ್ ನಾಯಕರಿಂದ ಐದು ಗ್ಯಾರಂಟಿಗಳ ಭಜನೆಗಳನ್ನು ನಿತ್ಯ ಕೇಳುತ್ತಿದ್ದೇವೆ ಎಂದು ಟೀಕಿಸಿದರು. +ಗ್ಯಾರಂಟಿಗಳನ್ನು ರಾಷ್ಟ್ರಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಹೊರಟಿದೆ. ತೆಲಂಗಾಣ ಚುನಾವಣೆಗೆ ಟಿಸಿಎಂ, ಡಿಸಿಎಂ(ಟೆಂಪ್ರವರಿ ಚೀಫ್ ಮಿನಿಸ್ಟರ್, ಡ್ಯುಪ್ಲಿಕೇಟ್ ಚೀಫ್ ಮಿನಿಸ್ಟರ್) ಉಸ್ತುವಾರಿ ಇದ್ದಾರೆ. ಐದು ಗ್ಯಾರಂಟಿಗಳ ಬೆನ್ನು ತಟ್ಟಿಕೊಳ್ಳೋಕೆ ಹೋಗಿ ಬೇರೆ ರಾಜ್ಯದಲ್ಲಿ ನಗೆಪಾಟಲಿಗೆ ಈಡಾಗಿದ್ದಾರೆ ಎಂದು ವ್ಯಂಗ್ಯವಾಡಿದರು. +ಗ್ಯಾರಂಟಿಗಳು ರಾಜ್ಯ, ರಾಷ್ಟ್ರದ ಅಭಿವೃದ್ಧಿಗೆ ಮಾರಕವಾಗಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ 6 ಗ್ಯಾರಂಟಿ ಜಾರಿ ಮಾಡೋದಾಗಿ ಹೇಳಿದೆ. ಉಚಿತ ಗ್ಯಾರಂಟಿಗಳ ಕುರಿತಂತೆ ಮೋಸ ಹೋಗದೆ ಎಚ್ಚರಿಕೆಯಿಂದ ಇರಿ ಎಂದ ಅವರು ಪಂಚ ರಾಜ್ಯದ ಮತದಾರರಿಗೆ ಗ್ಯಾರಂಟಿ ಯೋಜನೆಗೆ ಮಾರುಹೋಗಬೇಡಿ ಎಂದು ಮನವಿ ಮಾಡಿದರು. +ಎರಡೂವರೆ ಸಾವಿರ ಲಕ್ಷ ಹುದ್ದೆ ಖಾಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಆಡಳಿತಾವಯಲ್ಲಿ ಎರಡು ಮುಕ್ಕಾಲು ಲಕ್ಷ ಸರ್ಕಾರಿ ನೌಕರರ ನೇಮಕಾತಿ ಏಕೆ ಆಗಿಲ್ಲ. ಸದ್ಯ ರಾಜ್ಯದಲ್ಲಿ ಎರಡೂವರೆ ಸಾವಿರ ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಏಕೆ ನೇಮಕಾತಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಬೇರೆ ರಾಜ್ಯದ ಪ್ರನಾಳಿಕೆಯಲ್ಲಿ ಘೋಷಿಸುವ ಬದಲು ಮೊದಲು ನಮ್ಮ ರಾಜ್ಯದಲ್ಲಿ ಸರ್ಕಾರಿ ನೌಕರರ ನೇಮಕ ಮಾಡಿಲಿ. ತೋಟಗಾರಿಕೆ, ಕೃಷಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ನೌಕರರ ಕೊರತೆ ಇದೆ ಎಂದರು. +ಬಿಜೆಪಿ ಸರ್ಕಾರ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ 10 ಸಾವಿರ ಕೊಡ್ತಿತ್ತು. ತೆಲಂಗಾಣದಲ್ಲಿ ರೈತರಿಗೆ 15 ಸಾವಿರ ಕೊಡುವುದಾಗಿ ಡ್ಯುಪ್ಲಿಕೇಟ್ ಸಿಎಂ ಹೇಳಿದ್ದಾರೆ. ಆದರೆ ರಾಜ್ಯದ ರೈತರ ಹಿತ ಕಾಪಾಡುವ ಕೆಲಸ ಮರೆತು ಹೋಯಿತೆ ಎಂದು ಟೀಕಿಸಿದರು. ರೈತರಿಗೆ ಈ ಹಿಂದೆ ನೀಡುತ್ತಿದ್ದ 4 ಸಾವಿರ ಯಾಕೆ ಕಡಿತ ಮಾಡಿದಿರಿ? ಟಾರ್ಚ್ ಬೆಳಕಲ್ಲಿ ಅಕಾರಿ ಕೆಲಸ ಮಾಡಿದ್ದನ್ನ ಪ್ರಸ್ತಾಪಿಸಿದ ಹೆಚ್ ಡಿಕೆ, ಗೃಹ ಜ್ಯೋತಿ ಹೆಸರಲ್ಲಿ ಕತ್ತಲ ಭಾಗ್ಯ ನೀಡುತ್ತಿದೆ ಎಂದು ವ್ಯಂಗ್ಯವಾಡಿದರು. +ರೈತರಿಗೆ 24 ಗಂಟೆ ವಿದ್ಯುತ್ ನೀಡದ ಸರ್ಕಾರ ಬೇರೆ ರಾಜ್ಯದಲ್ಲಿ 24 ಗಂಟೆ ವಿದ್ಯುತ್ ನೀಡುವ ಕುರಿತು ಮಾತನಾಡುತ್ತಾರೆ. ಉಚಿತ ವಿದ್ಯುತ್ ಹೆಸರಲ್ಲಿ ಆಗಿರುವ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಚುನಾವಣೆಗೂ ಮೊದಲು ಮಹದೇವಪ್ಪ ನಿಂಗೂ ಫ್ರೀ, ಕಾಕಾ ಪಾಟೀಲ್ ನಿಂಗೂ ಫ್ರೀ ಅಂತ ಘೋಷಿಸಿದ್ದರು. ಈಗ ಮಹದೇವಪ್ಪ ನಿಂಗೂ ಕತ್ತಲು ಕಾಕಾ ಪಾಟೀಲ್ ನಿಂಗೂ ಕತ್ತಲು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಇಂಧನ ಇಲಾಖೆ ಅಧೋಗತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು. +ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ತಲುಪುತ್ತಿಲ್ಲ. ಕೇವಲ ನಾಮಾಕಾವಸ್ತೆ ಎನ್ನುವಂತೆ ಯೋಜನೆ ಜಾರಿ ಮಾಡಲಾಗಿದೆ. ಸಿಎಂ ತವರು ಕ್ಷೇತ್ರದಲ್ಲಿ 1.40 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ತಲುಪಿಲ್ಲಎಂದು ಅವರು ಆರೋಪಿಸಿದರು. +ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸಿದ್ದಾರೆ. ಆದರೆ, ವಿದ್ಯಾರ್ಥಿಗಳು ಜೆಸಿಬಿಯಲ್ಲಿ ಪ್ರಯಾಣಿಸುವಂತಾಗಿದೆ. ಆಟೋ ಚಾಲಕರ ಜೀವನ ದುಸ್ತರವಾಗಿದೆ. ಇಂದಿರಾ ಕ್ಯಾಂಟೀನ್, ಗುತ್ತಿಗೆದಾರರಿಂದ ಕಮೀಷನ್ ಪಡೆಯಲಾಗುತ್ತಿದೆ ಎಂದು ಆರೋಪ ಮಾಡಿದರು. +ಸಮಾಜ ಕಲ್ಯಾಣ ಇಲಾಖೆಯ 11 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡುವುದು ಸರಿನಾ ಎಂದ ಅವರು, ಗ್ಯಾರಂಟಿ ಜಾರಿಗಾಗಿ ಸಾಲ ಮಾಡಲು ಸರ್ಕಾರ ಹೊರಟಿದೆ ಎಂದು ಆರೋಪಿಸಿದರು. +ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣ, ಧರಂಸಿಂಗ್, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಅವಧಿಯ 12 ವರ್ಷದಲ್ಲಿ 1 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಆದರೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮೊದಲ ಐದು ವರ್ಷದಲ್ಲು 2.42 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದ ಅವರು, ಪ್ರಧಾನಿ ಅವರು ಮಾಡಿರುವ ಸಾಲದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. +ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ +ಈಗ 5 ಲಕ್ಷದ 71 ಸಾವಿರ 655. ಕೋಟಿ ರಾಜ್ಯದ ಸಾಲ ಇದೆ. ಈ ವರ್ಷ 85,815 ಕೋಟಿ ಸಾಲದ ಗುರಿ ಇಟ್ಟುಕೊಂಡಿದ್ದೀರಿ. ಗ್ಯಾರಂಟಿಗಳ ಜಾರಿಗೆ 56 ಸಾವಿರ ಕೋಟಿ ಸಾಲ ಕಟ್ಟಬೇಕು. ಐದು ತಿಂಗಳಲ್ಲಿ ಆರ್ಥಿಕ ಸ್ಥಿತಿ ಹದಗೆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. +ರಾಜ್ಯದಲ್ಲಿ ದುಡ್ಡಿಗೆ ಕೊರತೆ ಇಲ್ಲ ಎನ್ನುವುದು ಐಟಿ ದಾಳಿಯಲ್ಲಿ ಬಟಾಬಯಲಾಗಿದೆ ಎಂದು ಆರೋಪಿಸಿದರು. ಯುವನಿ ಹೆಸರಲ್ಲಿ ಯುವಕರಿಗೆ ಉಂಡೆನಾಮ ಹಾಕುವ ಕೆಲಸವಾಗುತ್ತಿದೆ. ಚುನಾವಣೆಗಾಗಿ ರಾಜ್ಯದ ಜನತೆಯ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೇ ಆರೋಪ ಮಾಡಿದರು.ಯರಗೋಳ ಅಭಿವೃದ್ಧಿಗೆ ಮೊದಲು ಹಣ ಕೊಟ್ಟಿದ್ದು ಕುಮಾರಸ್ವಾಮಿ ಅಂತಾ ಗೊತ್ತಿರಲಿ ಎಂದು ಸಿಎಂಗೆ ತಿರುಗೇಟು ನೀಡಿದರು. +ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ಸರ್ಕಾರದ ಖಜಾನೆಯಲ್ಲಿ ಹಣದ ಕೊರತೆ ಇದೆ. ಆದರೆ, ಬ್ಲಾಕ್ ಮನಿಗೇನೂ ಕೊರತೆ ಇಲ್ಲ. ಯಾವ ಯಾವ ಅಧಿಕಾರಿಗಳ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಗ್ಯಾರಂಟಿಗಳ ಮೂಲಕ ವೈಎಸ್ಟಿ,ಎಸ್ ಎಸ್ಟಿ ಟ್ಯಾಕ್ಸ್ ಬೇರೆ ರಾಜ್ಯದಲ್ಲಿ ಜಾರಿಗೆ ಹೊರಟ್ಟೀದಿರಿ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ನೊಟೀಸ್‍ನ ಮೇಲೆ ನಡೀತಿದೆ. ಸಿಎಂಗೆ ಹೈ ಕಮಾಂಡ್ ನೊಟೀಸ್ ಕೊಟ್ಟಿದೆ. +ಯಾರು ಹೆಚ್ಚು ಹಣ ಕೊಡ್ತಾರೋ ಅವರಿಗೆ ಅಧಿಕಾರ. ಇಂಥ ಟಾಸ್ಕ್ ನೀಡಿದೆ ಎಂಬ ಆರೋಪ ಮಾಡಿದರು. ಒಕ್ಕಲಿಗೆ ಲಿಂಗಾಯಿತ ಎಂಬುದಕ್ಕಿತ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನಾಡುವವರು ಬೇಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕವಾಗಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_314_12.txt b/eesanje/url_46_314_12.txt new file mode 100644 index 0000000000000000000000000000000000000000..470bc00e46b460452a163f3a07d531aeb32c9236 --- /dev/null +++ b/eesanje/url_46_314_12.txt @@ -0,0 +1,6 @@ +‘ಮುಂದಿನ ಸಿಎಂ ವಿಜಯೇಂದ್ರ’ ಎಂದು ಘೋಷಣೆ ಕೂಗಿದ ಕಾರ್ಯಕರ್ತರು +ಬೆಂಗಳೂರು,ನ.12- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವೇಳೆ, ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಎಂದು ಜೈಕಾರದ ಘೋಷಣೆಗಳನ್ನು ಕೂಗಿದ್ದಾರೆ.ಬೆಂಗಳೂರಿನಿಂದ ತುಮಕೂರಿಗೆ ಹೊರಟ ವೇಳೆ ಮಾರ್ಗಮಧ್ಯೆ ದಾಬಸ್ ಪೇಟೆ ಬಳಿ ಬಿಜೆಪಿಯ ನೂರಾರು ಕಾರ್ಯಕರ್ತರು ಕಾರು ತಡೆದು ಹೂವಿನಹಾರ ಹಾಕಿ ಪಟಾಕಿ ಸಿಡಿಸಿ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಘೋಷಣೆಗಳನ್ನು ಕೂಗಿದರು. +ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ರಾಜಹುಲಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರಗೆ ಜಯವಾಗಲಿ ಎಂದು ಜೈಕಾರ ಕೂಗಿ ಶುಭ ಹಾರೈಸಿದರು. ಅಲ್ಲಿಂದ ತುಮಕೂರಿಗೆ ಆಗಮಿಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿಯ ಕಾರ್ಯಕರ್ತರು ಮತ್ತೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದೇ ಘೋಷಣೆ ಕೂಗಿದರು. +ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ +ದೊಡ್ಡ ಮಟ್ಟದಲ್ಲಿ ಸೇರಿದ್ದ ಕಾರ್ಯಕರ್ತರು ವಿಜಯೇಂದ್ರ ಆಗಮಿಸುತ್ತಿದ್ದಂತೆ ಪಟಾಕಿ ಹಚ್ಚಿ ಸಂಭ್ರಮಿಸಿದರು. ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು. ಇದಕ್ಕೂ ಮೊದಲು ಮಠಕ್ಕೆ ಆಗಮಿಸಿದ ವಿಜಯೇಂದ್ರ ಅವರು ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. +ಈ ವೇಳೆ ಸಂಸದರಾದ ಜಿ.ಎಸ್.ಬಸವರಾಜು, ಶಾಸಕರಾದ ಸುರೇಶ್ ಗೌಡ, ಎಸ್.ಆರ್.ವಿಶ್ವನಾಥ್, ರಾಮಮೂರ್ತಿ, ಮಾಜಿ ಶಾಸಕ ಪ್ರೀತಂಗೌಡ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ರುದ್ರೇಶ್ ಸೇರಿದಂತೆ ಉಪಸ್ಥಿತರಿದ್ದರು. \ No newline at end of file diff --git a/eesanje/url_46_314_2.txt b/eesanje/url_46_314_2.txt new file mode 100644 index 0000000000000000000000000000000000000000..61bd6a6b331a9a9d990f96fb9bba3d7596fe817c --- /dev/null +++ b/eesanje/url_46_314_2.txt @@ -0,0 +1,5 @@ +ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ +ಉಡುಪಿ, ನ.13- ದೀಪಾವಳಿ ಪೂಜೆ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಬೋಟುಗಳು ಸುಟ್ಟು ಕರಕಲಾಗಿರುವ ಘಟನೆ ಬೈಂದೂರಿನ ಗಂಗೊಳ್ಳಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಬೋಟ್ ಮಾಲೀಕರು ಪೂಜೆಯಲ್ಲಿ ಸಂಭ್ರಮದಲ್ಲಿದ್ದರು. ಮುಂಜಾನೆಯಿಂದಲೇ ಖುಷಿ ಖುಷಿಯಲ್ಲಿ ತಮ್ಮ ಬೋಟುಗಳು ಹಾಗೂ ಮೀನುಗಾರಿಕೆಗೆ ಬಳಸುವ ಯಂತ್ರಗಳು ಹಾಗೂ ವಸ್ತುಗಳಿಗೆ ಪೂಜೆ ಸಲ್ಲಿಸುತ್ತಿದ್ದರು. +ಈ ವೇಳೆ ಹಾರಿದ ಪಟಾಕಿ ಕಿಡಿ ಲಂಗರು ಹಾಕಿದ್ದ ಬೋಟುಗಳಿಗೆ ತಾಗಿ ಬೆಂಕಿ ಹತ್ತಿಕೊಂಡು ಉರಿದಿದೆ.ಬೋಟ್‍ನ ಇಂಜಿನ್‍ಗಳಿಗೆ ಬೆಂಕಿ ಕಿಡಿ ತಗುಲಿ ನೋಡನೋಡುತ್ತಿದ್ದಂತೆ ಏಳು ಬೋಟುಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ. +ಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ +ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ತಹಬದಿಗೆ ತಂದು ಅಕ್ಕಪಕ್ಕದ ಇತರ ಬೋಟುಗಳಿಗೆ ಹಬ್ಬುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.ಬೆಂಕಿ ಅವಘಡ ಮೀನುಗಾರರ ದೀಪಾವಳಿ ಸಂಭ್ರಮದಲ್ಲಿವನ್ನು ಕಸಿದುಕೊಂಡಿದೆ. \ No newline at end of file diff --git a/eesanje/url_46_314_3.txt b/eesanje/url_46_314_3.txt new file mode 100644 index 0000000000000000000000000000000000000000..105c6a33c0d0dcc242c0074f0259a5307ee36bf7 --- /dev/null +++ b/eesanje/url_46_314_3.txt @@ -0,0 +1,10 @@ +ವಿಜಯೇಂದ್ರ ಆಯ್ಕೆ : ಹಿರಿಯರ ಅಪಸ್ವರಕ್ಕೆ ಹೈಕಮಾಂಡ್ ಅಂಕುಶ +ಬೆಂಗಳೂರು,ನ.13- ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಕುರಿತು ಯಾರೂ ಕೂಡ ಅಪಸ್ವರ ಎತ್ತಬಾರದೆಂದು ಕೇಂದ್ರ ಬಿಜೆಪಿ ನಾಯಕರು ಸ್ಥಳೀಯ ನಾಯಕರಿಗೆ ಕಟ್ಟಪ್ಪಣೆ ವಿಧಿಸಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ನಂತರ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಹಿರಿಯರು ಬಹಿರಂಗವಾಗಿ ಮಾತನಾಡದಿದ್ದರೂ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. +ಕೆಲವರಂತೂ ಕನಿಷ್ಟ ಪಕ್ಷ ವಿಜಯೇಂದ್ರಗೆ ಶುಭಾಷಯವನ್ನು ಹೇಳದೆ ಅಂತರ ಕಾಪಾಡಿಕೊಂಡಿದ್ದರು. ಇದು ಮತ್ತೊಂದು ರೀತಯ ಭಿನ್ನಮತಕ್ಕೆ ದಾರಿ ಕಲ್ಪಿಸಲಿದೆ ಎಂಬುದನ್ನು ಅರಿತಿರುವ ಕೇಂದ್ರ ವರಿಷ್ಠರು ಪಕ್ಷದ ತೀರ್ಮಾನವನ್ನು ಯಾರೊಬ್ಬರೂ ಪ್ರಶ್ನಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಸೂಚಿಸಿದರು. +ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಆಲೋಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಅದೇ ರೀತಿ ಕರ್ನಾಟಕ ಬಿಜೆಪಿ ಘಟಕಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಮುನ್ನ ನಾವು ಎಲ್ಲ ಸಾಧಕಬಾಧಕಗಳನ್ನು ಚರ್ಚಿಸಿದ್ದೇವೆ. ವಿಜಯೇಂದ್ರ ನೇಮಕವಾದ ನಂತರ ವಿರೋಧ ವ್ಯಕ್ತಪಡಿಸುತ್ತಿರುವ ಔಚಿತ್ಯವಾದರೂ ಏನೆಂದು ಪ್ರಶ್ನಿಸಿದ್ದಾರೆ. +ದೆಹಲಿ ಮಟ್ಟದಲ್ಲಿ ಪ್ರಭಾವಿಯಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಪ್ರಮುಖರೊಬ್ಬರು ಕೆಲ ಹಿರಿಯರ ಜೊತೆ ದೂರವಾಣಿ ಮುಖೇನ ಚರ್ಚಿಸಿ ಹೈಕಮಾಂಡ್ ತೀರ್ಮಾನಕ್ಕೆ ವಿರೋಧ ಬೇಡ ಎಲ್ಲರೂ ಸಹಕಾರ ಕೊಡಬೇಕೆಂದು ಸೂಚಿಸಿದ್ದಾರೆ. +ತಮಿಳುನಾಡಿನ 7 ಹಳ್ಳಿಗಳಲ್ಲಿ ಶಬ್ದರಹಿತ ದೀಪಾವಳಿ ಆಚರಣೆ +ಈ ಹಿಂದೆ ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಂದ ಬಹಿರಂಗವಾಗಿ ಮಾತನಾಡಿದ್ದರಿಂದ ಒಂದು ಸಮುದಾಯ ಮುನಿಸಿಕೊಂಡು ಫಲಿತಾಂಶದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ.ಲೋಕಸಭೆ ಚುನಾವಣೆ ನಮ್ಮೆಲ್ಲರಿಗೂ ಬಹುದೊಡ್ಡ ಸವಾಲಾಗಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಟ ಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಬೇಕು. ಇದು ಸಾಕಾರವಾಗಬೇಕಾದರೆ ಹಿರಿಯರು, ಕಿರಿಯರು ಸಹಕಾರ ಕೊಡಬೇಕು. ಪಕ್ಷದ ವಿರುದ್ಧ ಒಂದೇ ಒಂದು ಅಪಸ್ವರ ಬೇಡವೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಕೇವಲ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕಾಗಿ ಅಧ್ಯಕ್ಷರನ್ನಾಗಿ ನೇಮಿಸಿಲ್ಲ. ಇಂತಹ ಪ್ರಮುಖ ತೀರ್ಮಾನ ತೆಗೆದುಕೊಳ್ಳುವ ಮುನ್ನ ರಾಷ್ಟ್ರೀಯ ನಾಯಕರು ಎಲ್ಲ ಆಯಾಮಗಳಲ್ಲೂ ಚರ್ಚೆ ಮಾಡಿರುತ್ತಾರೆ. ಅವರ ನಿರ್ಧಾರವು ನಮಗೆ ಒಪ್ಪಿಗೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಅಂತಿಮವಾಗಿ ರಾಷ್ಟ್ರೀಯ ನಾಯಕರ ನಿರ್ಧಾರವನ್ನು ಗೌರವಿಸುವುದು ಮುಖ್ಯ ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ. +ಒಂದಿಬ್ಬರು ಬಹಿರಂಗವಾಗಿ ವಿಜಯೇಂದ್ರ ವಿರುದ್ಧ ಹೇಳಿಕೆ ಕೊಟ್ಟರೆ ವಿರೋಧ ಪಕ್ಷಗಳು ಅದನ್ನೇ ಅಸ್ತ್ರ ಮಾಡಿಕೊಳ್ಳಲಿವೆ. ಇದಕ್ಕೆ ಅವಕಾಶ ಕಲ್ಪಿಸಬಾರದೆಂದರೆ ಪಕ್ಷದ ನಿರ್ಧಾರವನ್ನು ಪ್ರಶ್ನಿಸಬಾರದು. ಎಲ್ಲರೂ ಸಹಕಾರ ಕೊಡುವಂತೆ ಸೂಚನೆ ಕೊಟ್ಟಿದ್ದಾರೆ. +ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್.ಈಶ್ವರಪ್ಪ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಮತ್ತಿತರರು ಅಪಸ್ವರ ತೆಗೆದಿದ್ದರು.ಇದೀಗ ವರಿಷ್ಠರೇ ಮಧ್ಯಪ್ರವೇಶಿಸಿ ಭಿನ್ನಮತಕ್ಕೆ ಪೂರ್ಣ ವಿರಾಮ ಹಾಕುವ ಪ್ರಯತ್ನ ಮಾಡಿದ್ದಾರೆ. \ No newline at end of file diff --git a/eesanje/url_46_314_4.txt b/eesanje/url_46_314_4.txt new file mode 100644 index 0000000000000000000000000000000000000000..d7de274ce39579dd2b538ccac4bcb6a683abe72c --- /dev/null +++ b/eesanje/url_46_314_4.txt @@ -0,0 +1,11 @@ +ಬಿಜೆಪಿ ಪದಾಧಿಕಾರಿಗಳ ಬದಲಾವಣೆ : ಕಮಲ ಪಾಳಯಕ್ಕೆ ಹೊಸ ವರ್ಚಸ್ಸು +ಬೆಂಗಳೂರು,ನ.13- ರಾಜ್ಯ ಬಿಜೆಪಿಯ ಚುಕ್ಕಾಣಿ ಹಿಡಿದಿರುವ ಬಿ.ವೈ.ವಿಜಯೇಂದ್ರ ಪಕ್ಷದೊಳಗೆ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಚಿಂತನೆಯಲ್ಲಿದ್ದಾರೆ. ಬುಧವಾರ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಾಗಿ ಮೊದಲು ಶಾಸಕಾಂಗ ಸಭೆಯನ್ನು ಕರೆಯಲಿದ್ದಾರೆ. +ಇದು ಮುಗಿದ ನಂತರ ನ.17 ಇಲ್ಲವೇ ಮುಂದಿನ ವಾರ ನವದೆಹಲಿಗೆ ತೆರಳಲಿರುವ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತಿತರರನ್ನು ಭೇಟಿಯಾಗಲಿದ್ದಾರೆ. +ಬಳಿಕ ಪಕ್ಷದ ಪದಾಧಿಕಾರಿಗಳ ಬದಲಾವಣೆಗೆ ಕೈ ಹಾಕುವ ಸಂಭವವಿದ್ದು, ಹಳಬರು, ಹೊಸಬರು,ಸಂಘದ ಪರಿವಾರದ ಹಿನ್ನಲೆಯುಳ್ಳವರು ಸೇರಿದಂತೆ ಎಲ್ಲರಿಗೂ ಸ್ಥಾನ ಕಲ್ಪಿಸುವ ಸಾಧ್ಯತೆ ಇದೆ. ಈ ಹಿಂದೆ ನೇಮಕವಾಗಿದ್ದ ಪದಾಧಿಕಾರಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಿ ಎಲ್ಲಾ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಿದ್ದಾರೆ. +ಈ ಮೊದಲು ನೇಮಕಗೊಂಡಿದ್ದ ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಬೆಂಬಲಿಗರನ್ನು ಕಡೆಗಣಿಸಿ ಬಿ.ಎಲ್.ಸಂತೋಷ್ ಆಪ್ತರಿಗೆ ಮಣೆ ಹಾಕಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಹಿರಿಯ ಉಪಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿ, ಖಜಾಂಚಿ, ಕಚೇರಿ ಸಿಬ್ಬಂದಿ ಹೀಗೆ ಪಕ್ಷದಲ್ಲಿ ಪ್ರತಿಯೊಂದು ಹಂತದಲ್ಲೂ ಯಡಿಯೂರಪ್ಪ ಬೆಂಬಲಿಗರನ್ನು ಹೊರಗಿಟ್ಟು ಸಂತೋಷ್ ಆಪ್ತರಿಗೆ ಮಣೆ ಹಾಕಲಾಗಿತ್ತು ಎಂಬ ಅಸಮಾಧಾನವಿತ್ತು. +ಇದನ್ನು ಸರಿದೂಗಿಸಲು ಮುಂದಾಗಿರುವ ವಿಜಯೇಂದ್ರ ಯಾರೂ ಕೂಡ ಅಸಮಾಧಾನಗೊಳ್ಳದಂತೆ ಸಂತೋಷ್ ಮತ್ತು ಯಡಿಯೂರಪ್ಪ ಬಣ ಎನ್ನುವುದಕ್ಕೂ ಅವಕಾಶ ಕಲ್ಪಿಸದೆ ಎರಡೂ ಕಡೆಯವರೆಗೂ ಪದಾಧಿಕಾರಿಗಳ ಪಟ್ಟಿಯಲ್ಲಿ ಅವಕಾಶ ನೀಡುವ ಮೂಲಕ ತಕ್ಕಡಿಯನ್ನು ಸರಿದೂಗಿಸಲು ಮುಂದಾಗಿದ್ದಾರೆ. +ಮುಂದೆ ಲೋಕಸಭೆ, ಸ್ಥಳೀಯ ಸಂಸ್ಥೆ, ಬಿಬಿಎಂಪಿ ಸೇರಿದಂತೆ ವಿವಿಧ ಹಂತದ ಚುನಾವಣೆ ಇರುವುದರಿಂದ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಹಿರಿಯರು ವಿಜಯೇಂದ್ರಗೆ ಸಲಹೆಯನ್ನು ನೀಡಿದ್ದಾರೆ. +ಅಮೆರಿಕ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ಟಿಮ್ ಸ್ಕಾಟ್ +ಕೇವಲ ನಿಮ್ಮ ಹಿಂದೆ ಇರುವವರಿಗೆ, ಜೈಕಾರ ಹಾಕುವವರಿಗೆ ಮಾತ್ರ ಪಕ್ಷದೊಳಗೆ ಮಣೆ ಹಾಕುವ ಸಂಪ್ರದಾಯವನ್ನು ನೀವು ಕೂಡ ಮುಂದುವರೆಸಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗಲೇ ಮಾತ್ರ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲು ಸಾಧ್ಯವಾಗುತ್ತದೆ. ಪಕ್ಷ ಸಂಘಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಎಷ್ಟೇ ವ್ಯತ್ಯಾಸಗಳು ಕಂಡುಬಂದರೂ ಸಂಘಟನೆಗೆ ಕೊರತೆಯಾಗದಂತೆ ಡಿಕೆಶಿ ಎಚ್ಚರಿಕೆ ಹೆಜ್ಜೆ ಇಟ್ಟರು. +ಪದಾಧಿಕಾರಿಗಳ ಆಯ್ಕೆಯಲ್ಲಿ ಮೂಲ ಕಾಂಗ್ರೆಸಿಗರ ಜೊತೆಗೆ ಸಿದ್ದರಾಮಯ್ಯ ಬೆಂಬಲಿಗರಿಗೂ ಅವಕಾಶ ಕಲ್ಪಿಸಿದರು. ನೀವು ಕೂಡ ಇದೇ ತಂತ್ರವನ್ನು ಅನುಸರಿಸಬೇಕು. ಪ್ರತಿಯೊಂದು ನಿರ್ಧಾರವು ಧವಳಗಿರಿಯಿಂದ ಆಗಬಾರದು. ಯಾವುದೇ ತೀರ್ಮಾನಗಳು ಜಗನ್ನಾಥ ಭವನದಲ್ಲಿಯೇ ನಡೆಯಬೇಕೆಂದು ಆರ್‍ಎಸ್‍ಎಸ್ ನಾಯಕರು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. +ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸ ಬಂದೇ ಬರುತ್ತದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋದಾಗಲೇ ನಾಯಕನಾಗಿ ಬೆಳೆಯಬಹುದು. ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ನಾವು ಹೇಳುವುದಿಲ್ಲ. ಹಿರಿಯರನ್ನು ಕಡೆಗಣಿಸದೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಪದಾಧಿಕಾರಿಗಳನ್ನು ನೇಮಕ ಮಾಡುವಾಗ ಪಕ್ಷ ನಿಷ್ಠರಿಗೆ ಮೊದಲ ಆದ್ಯತೆ ಎಂದು ಕಿವಿಮಾತು ಹೇಳಿದ್ದಾರೆ. \ No newline at end of file diff --git a/eesanje/url_46_314_5.txt b/eesanje/url_46_314_5.txt new file mode 100644 index 0000000000000000000000000000000000000000..3720bc8272246e98993d66c326d2020ba6defad4 --- /dev/null +++ b/eesanje/url_46_314_5.txt @@ -0,0 +1,9 @@ +ವಿಜಯೇಂದ್ರಗೆ ಪಟ್ಟ : ಸೈಲೆಂಟ್ ಅದ ಸಿ.ಟಿ.ರವಿ, ಯತ್ನಾಳ್ +ಬೆಂಗಳೂರು,ನ.12- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾಗಿರುವುದು ಪಕ್ಷದೊಳಗಿನ ಹಿರಿಯರಿಗೆ ಮುನಿಸು ತಂದಿದ್ದು ಇದು ಕಮಲದಲ್ಲಿ ಇನ್ನಷ್ಟು ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆ ಇದೆ. ನೇಮಕಾತಿ ಆದೇಶ ಹೊರಬಿದ್ದು, ಎರಡು ದಿನಗಳು ಕಳೆದರೂ ಅಧ್ಯಕ್ಷ ಸ್ಥಾನ ಕೈತಪ್ಪಿರುವ ಅನೇಕರು ಒಂದೇ ಒಂದು ಶುಭಾಷಯವನ್ನೂ ಕೋರದೆ ಒಳಗೊಳಗೆ ಕುದಿಯುತ್ತಿದ್ದಾರೆ. +ವರಿಷ್ಠರ ಆದೇಶವನ್ನು ಪ್ರಶ್ನಿಸಲು ಆಗದೆ, ಒಪ್ಪಿಕೊಳ್ಳಲು ಆಗದೆ ಅನೇಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದು, ಮುಂದಿನ ನಮ್ಮ ರಾಜಕೀಯ ಭವಿಷ್ಯವೇನು ಎನ್ನುತ್ತಿದ್ದಾರೆ. ಮಾಜಿ ಸಚಿವರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಟಿ.ರವಿ, ಶಾಸಕರಾದ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕರು ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಈ ಕ್ಷಣದವರೆಗೂ ಶುಭಾಷಯ ಕೋರಿಲ್ಲ. +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಾದರೂ ವಿಜಯೇಂದ್ರಗೆ ಶುಭಾಷಯ ಹೇಳದೆ ಮೌನ ವಹಿಸಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಕಾಂಗ್ರೆಸ್ ಪಕ್ಷವನ್ನು ಎಕ್ಸ್‍ನಲ್ಲಿ ಟೀಕಾ ಪ್ರಹಾರ ನಡೆಸಿದ ಈ ನಾಯಕರು ಯಡಿಯೂರಪ್ಪ ಪುತ್ರ ಎಂಬ ಒಂದೇ ಕಾರಣಕ್ಕಾಗಿ ಮುನಿಸಿಕೊಂಡಿದ್ದಾರೆ. ಭಾನುವಾರವೂ ಕೂಡ ಇದೇ ನಾಯಕರು ಬಿವೈವಿಗೆ ಶುಭಾಷಯ ಹೇಳದೆ ಮುಗ್ಗಾಮ್ಮಾಗಿ ಉಳಿದಿದ್ದಾರೆ. +ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು +ಮಾಜಿಕ ಜಾಲತಾಣದಲ್ಲಿ ಯಾವಾಗಲು ಸಕ್ರಿಯರಾಗಿರುತ್ತಿದ್ದ ಯತ್ನಾಳ್, ಸಿ.ಟಿ.ರವಿ ಶುಭ ಕೋರದೆ ಅಂತರ ಕಾಪಾಡಿಕೊಂಡಿರುವುದು ಬಿಜೆಪಿಯೊಳಗೆ ಮನೆಯೊಂದು ಮೂರು ಬಾಗಿಲು ಎಂಬುದನ್ನು ಸಾಬೀತುಪಡಿಸಿದೆ. ಯಾರೋ ಒಬ್ಬ ವ್ಯಕ್ತಿಯಿಂದ ಪಕ್ಷ ಬೆಳೆಯಲ್ಲ ಭಾರತೀಯ ಜನತಾ ಪಾರ್ಟಿ ಯಾರ ಮೇಲೂ ನಿಂತಿಲ್ಲ. ನರೇಂದ್ರ ಮೋದಿ ಕೂಡಾ ಓರ್ವ ಬಿಜೆಪಿಯಲ್ಲಿ ಕಾರ್ಯಕರ್ತರು. ನಾನು ಕೂಡ ಕಾರ್ಯಕರ್ತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿರುವುದು ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳಿದೆ. +ವಿಜಯೇಂದ್ರ ಒಬ್ಬರಿಂದಲೇ ಎಲ್ಲವೂ ಆಗಲ್ಲ. ಅವರು ಒಬ್ಬ ನಾಯಕ ಮಾತ್ರ, ಎಲ್ಲರೂ ಒಟ್ಟಾಗಿ 28 ಸ್ಥಾನ ಗೆಲ್ಲುತ್ತೇವೆ. ಸಾಮೂಹಿಕ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. +ಇದಕ್ಕೆ ದನಿಗೂಡಿಸಿರುವ ಮಾಜಿ ಸಚಿವ ಸಿ.ಟಿ.ರವಿ, 35 ವರ್ಷಗಳ ರಾಜಕೀಯದಲ್ಲಿ ಈಗಾಗಲೇ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೆ ನಮ್ಮ ಮಾತೇ ನಮಗೆ ತಿರುಗು ಬಾಣವಾಗುತ್ತದೆ. ಪಕ್ಷ ನೇಮಕ ಮಾಡಿದೆ. ವೈಚಾರಿಕ ಸ್ಪಷ್ಟತೆಯ ಜೊತೆಗೆ ವಿಜಯೇಂದ್ರ ಪಕ್ಷ ಕಟ್ಟುವ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆಯಿದೆ. ಯಶಸ್ವಿಯಾಗಲಿ ಎಂದು ವ್ಯಂಗ್ಯಭರಿತವಾಗಿ ಹೇಳಿದ್ದಾರೆ. +ಒಟ್ಟಾರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿರುವುದು ಬಿ.ಎಸ್. ಯಡಿಯೂರಪ್ಪ ಪಾಳಯದಲ್ಲಿ ಹರ್ಷ ಮೂಡಿಸಿದ್ದರೆ, ಅವರ ವಿರೋಗಳು ಮತ್ತು ಪ್ರಬಲ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದವರು ಮೆದುಧ್ವನಿಯಲ್ಲಿ ಅಸಮಾಧಾನ ಹೊರ ಹಾಕಲಾರಂಭಿಸಿದ್ದಾರೆ. \ No newline at end of file diff --git a/eesanje/url_46_314_6.txt b/eesanje/url_46_314_6.txt new file mode 100644 index 0000000000000000000000000000000000000000..7eccfa17906a93dc30291923868876fc6f3eebf7 --- /dev/null +++ b/eesanje/url_46_314_6.txt @@ -0,0 +1,12 @@ +ನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ +ಬೆಂಗಳೂರು,ನ.12- ಇದೇ ತಿಂಗಳ 15ರಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವುದಾಗಿ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 15ರಂದು ಜಗನ್ನಾಥ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಹಿರಿಯರ ಮಾರ್ಗದರ್ಶನದಂತೆ ಅಧಿಕಾರವನ್ನು ಸ್ವೀಕರಿಸಲಿದ್ದೇನೆ ಎಂದು ತಿಳಿಸಿದರು. +ನಿರ್ಗಮಿತ ಅಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರು ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ.ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಸಂಘಟನೆ ಮಾಡಿ ನಮಗೆ ದೊಡ್ಡ ಗೆಲುವು ತಂದುಕೊಟ್ಟಿದ್ದರು.ಅವರ ನೇತೃತ್ವದಲ್ಲಿ ಬಿಜೆಪಿ ಸಾಧನೆ ಮಾಡಿದೆ ಎಂದು ಬಣ್ಣಿಸಿದರು. +ನ.16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ. ಪಕ್ಷಕ್ಕೆ ನವಚೈತನ್ಯ ನೀಡುವ ಉದ್ದೇಶದಿಂದ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಸಚಿವರಾದ ವಿ.ಸೋಮಣ್ಣ, ಗೋವಿಂದ ಕಾರಜೋಳ, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. +ರಾಜ್ಯದಲ್ಲಿ ಭೀಕರ ಬರಗಾಲ ಇರುವುದರಿಂದ ಇದರ ಬಗ್ಗೆ ನಮ್ಮ ಪಕ್ಷ ಮೊದಲ ಆದ್ಯತೆ ನೀಡಲಿದೆ. ಇದೇ 16ರಂದು ಶಾಸಕಾಂಗ ಸಭೆ ನಡೆಸಬೇಕೆಂಬ ತೀರ್ಮಾನಕ್ಕೆ ಬಂದಿದ್ದೇವೆ. ಪಕ್ಷದ ವರಿಷ್ಠರು ವೀಕ್ಷಕರನ್ನು ಕಳುಹಿಸಿಕೊಡಲಿದ್ದಾರೆ. ಎಲ್ಲರ ಜೊತೆ ಚರ್ಚಿಸಿ ಸರ್ವಸಮ್ಮತವಾಗಿರುವ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವುದಾಗಿ ಹೇಳಿದರು. +ಒಂದು ರಾಷ್ಟ್ರೀಯ ಪಕ್ಷ ಎಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಬಂದೇ ಬರುತ್ತವೆ. ಎಲ್ಲವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಲಾಗುವುದು. ಯಾರನ್ನೂ ಕೂಡ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಪಕ್ಷ ಬಲವರ್ಧನೆ ಮಾಡಲಾಗುವುದು ಎಂದರು. +ಯಾರನ್ನು ಕೂಡ ಕಡೆಗಣಿಸುವ ಮಾತೇ ಇಲ್ಲ. ಕಾಂಗ್ರೆಸ್‍ನವರು ಏನೇ ಸಲಹೆ ಕೊಟ್ಟರೂ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇವೆ. ನಮಗೆ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. +ಸಿದ್ದಗಂಗಾ ಮಠದಿಂದ ಪಕ್ಷದ ಕಚೇರಿಗೆ ಭೇಟಿಕೊಟ್ಟ ಅವರು ಪದಾಕಾರಿಗಳನ್ನು ಭೇಟಿಯಾದರು. ಮೊದಲ ಬಾರಿಗೆ ಪಕ್ಷದ ಜವಬ್ದಾರಿಯಂತೆ ಶಾಸಕನಾಗಿದ್ದು, ಈಗ ಅಧ್ಯಕ್ಷನಾಗುತ್ತಿದ್ದೇನೆ. ಅದಕ್ಕಿಂತ ಮಿಗಿಲಾಗಿ ನಾನೊಬ್ಬ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ಎಂದರು. +ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸಿ ದುಷ್ಟ ಮತ್ತು ಭ್ರಷ ಹಾಗೂ ಬಡವರ, ರೈತ ವಿರೋ ಸರಕಾರದ ವಿರುದ್ಧ ಹೋರಾಟಕ್ಕಿಳಿಯಬೇಕಿದೆ. ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನು ನಾವು ಮಾಡಬೇಕಿದೆ ಎಂದು ಕರೆ ನೀಡಿದರು. +ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು +ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕೆಲಸವನ್ನು ಆರಂಭಿಸುವ ಮುನ್ನ ಸಿದ್ದಗಂಗಾಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆಯುತ್ತಿದ್ದರು. ಅದೇ ರೀತಿ ನಾನು ಕೂಡ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಹೇಳಿದರು. +ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಬಿ.ಕೆ.ಮಂಜುನಾಥ್ , ಉಪಾಧ್ಯಕ್ಷ ಎಂ.ಬಿ.ನಂದೀಶ್, ಜಿ.ಬಿ. ಜ್ಯೋತಿ ಗಣೇಶ್, ಬಿ.ಸುರೇಶ್ ಗೌಡ , ಹುಲಿನಾಯ್ಕರ್ ಇದ್ದರು. \ No newline at end of file diff --git a/eesanje/url_46_314_7.txt b/eesanje/url_46_314_7.txt new file mode 100644 index 0000000000000000000000000000000000000000..ff439e3f4328fbec53441e6f4754435a33207780 --- /dev/null +++ b/eesanje/url_46_314_7.txt @@ -0,0 +1,10 @@ +ಬೆಚ್ಚಿಬಿದ್ದ ಉಡುಪಿ : ಹಾಡಹಗಲೇ ಚಾಕುವಿನಿಂದ ಇರಿದು ತಾಯಿ-ಮಕ್ಕಳ ಕೊಲೆ +ಬೆಂಗಳೂರು, ನ.12- ಇಡೀ ರಾಜ್ಯ ದೀಪಾವಳಿ ಹಬ್ಬದ ಸಡಗರದಲ್ಲಿರುವ ಸಂದರ್ಭ ದಲ್ಲೇ ದೂರದ ಉಡುಪಿಯಲ್ಲೊಂದು ಅಮಾನವೀಯ ಕೃತ್ಯವೊಂದು ನಡೆದು ಹೋಗಿದೆ. ಏಕಾಏಕಿ ಮನೆಗೆ ನುಗ್ಗಿದ ಮಾಸ್ಕ್ ಧರಿಸಿದ್ದ ಹಂತಕನೊಬ್ಬ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ವೃದ್ಧೆಯೊಬ್ಬರನ್ನು ಗಂಭೀರವಾಗಿ ಗಾಯಗೊಳಿಸಿ ಪರಾರಿಯಾಗಿರುವ ಘಟನೆ ಉಡುಪಿ ತಾಲೂಕಿನ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. +ಈ ಘೋರ ಕೃತ್ಯದಲ್ಲಿ ಸಾವನ್ನಪ್ಪಿದ ದುರ್ದೈವಿ ಗಳನ್ನು ಹಸೀನಾ (46), ಮಕ್ಕಳಾದ ಅಪ್ನಾನ್(23), ಅಜ್ಞಾಝ್(21) ಹಾಗೂ 12 ವರ್ಷದ ಆಸೀಂ ಎಂದು ಗುರುತಿಸಲಾಗಿದೆ. ಹಂತಕನಿಂದ ಗಾಯಗೊಂಡ ಹಸೀನಾ ಅವರ ಅತ್ತೆ ಅಜೀರಾ ತಕ್ಷಣ ಸ್ನಾನದ ಮನೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರಿಂದ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಹಸೀನಾ ಅವರ ಪತಿ ದೂರದ ದುಬೈನಲ್ಲಿ ಕೆಲಸ ಮಾಡುತ್ತಿದ್ದು, ಆಗೊಮ್ಮೆ ಈಗೊಮ್ಮೆ ಊರಿಗೆ ಬಂದು ಹೋಗುತ್ತಿದ್ದ. ಉಳಿದಂತೆ ತಾಯಿ-ಮೂರು ಮಕ್ಕಳು ಹಾಗೂ ಆತ್ತೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ 8.30ರ ಸಮಯದಲ್ಲಿ ಮಾಸ್ಕ್ ಧರಿಸಿಕೊಂಡು ಏಕಾಏಕಿ ಮನೆಗೆ ನುಗ್ಗಿದ ಹಂತಕ ಮೊದಲು ಹಸೀನಾ ಅವರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಇಬ್ಬರು ಹೆಣ್ಣು ಮಕ್ಕಳಿಗೂ ಇರಿದಿದ್ದಾನೆ ಇದನ್ನು ಕಂಡು ಅತ್ತೆ ಗಾಬರಿಯಿಂದ ಸ್ನಾನದ ಮನೆಗೆ ಹೋಗಿ ತಪ್ಪಿಸಿಕೊಳ್ಳಲು ಹೋದ ಅತ್ತೆ ಮೇಲೂ ಹಂತಕ ಚಾಕು ಬೀಸಿದ್ದಾನೆ ಆದರೆ, ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿ ಸ್ನಾನದ ಮನೆ ಬಾಗಿಲು ಹಾಕಿಕೊಳ್ಳುವಲ್ಲಿ ಯಶಸ್ವಿಯಾದ್ದರಿಂದ ಅವರು ಬಚಾವಾಗಿದ್ದಾರೆ. +ದೀಪಾವಳಿ ವೇಳೆ ಲಕ್ಷ್ಮೀಪೂಜೆ ಏಕೆ ಮಾಡಬೇಕು..? ಹೇಗೆ ಮಾಡಬೇಕು..? +ಈ ಸಂದರ್ಭದಲ್ಲಿ ಮನೆ ಹೊರಗೆ ಆಟವಾಡುತ್ತಿದ್ದ 12 ವರ್ಷದ ಆಸೀಂ ಒಳ ಬಂದಾಗ ಆ ಮಗುವನ್ನು ಹಂತಕ ನಿರ್ದಯವಾಗಿ ಕೊಲೆ ಮಾಡಿದ್ದಾನೆ. ಈ ಸಂದರ್ಭದಲ್ಲಿ ಮನೆಯವರ ಕಿರುಚಾಟ ಕೇಳಿ ಸ್ಥಳಕ್ಕೆ ಬಂದ ಪಕ್ಕದ ಮನೆಯ ಮಹಿಳೆ ಮನೆಗೆ ಬಂದಾಗ ಆಕೆಗೆ ಎದುರಾದ ಹಂತಕ ಕೂಗಾಡಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾನೆ. +ಮಾಸ್ಕ್ ಹಾಕಿಕೊಂಡು ಬಂದಿದ್ದ ಹಂತಕ ಮನೆಯಿಂದ ಹೊರಗೆ ತೆರಳಿ ಹೆಲ್ಮೆಟ್ ಹಾಕಿಕೊಂಡು ತಾನು ಬಂದಿದ್ದ ಸ್ಕೂಟಿಯಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣ ಗಾಬರಿಯಿಂದ ಚೇತರಿಸಿಕೊಂಡ ಮಹಿಳೆ ವಿಷಯವನ್ನು ಅಕ್ಕಪಕ್ಕದವರಿಗೆ ತಿಳಿಸಿ ನಂತರ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. +ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಂತಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅಕ್ಕಪಕ್ಕದ ಮನೆಯವರ ಸಿಸಿ ಕ್ಯಾಮರಾಗಳ ವಿಡಿಯೋ ತುಣುಕುಗಳನ್ನು ಪರಿಶೀಲಿಸುತ್ತಿದ್ದು, ಕೊಲೆಗಾರನ ಬಂಧನಕ್ಕೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. +ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ ಮತ್ತೊಬ್ಬರನ್ನು ತೀವ್ರವಾಗಿ ಗಾಯಗೊಳಿಸಿ ಪರಾರಿಯಾಗಲು ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‍ಪಿ ಡಾ.ಕೆ.ಅರುಣ್ ಸುದ್ದಿಗಾರರಿಗೆ ತಿಳಿಸಿದ್ದಾರೆ. +ಸಭ್ಯ ಕುಟುಂಬ:ಹಸೀನಾ ಅವರ ಕುಟುಂಬ ಕಳೆದ ಐವತ್ತು ವರ್ಷಗಳಿಂದ ತೃಪ್ತಿನಗರದಲ್ಲೇ ವಾಸಿಸುತ್ತಿದೆ. ಅವರದು ಸಭ್ಯ ಕುಟುಂಬ ಯಾವುದೆ ತಂಟೆ ತಕರಾರಿಗೂ ಹೋಗುತ್ತಿರಲಿಲ್ಲ. ಅವರ ಕುಟುಂಬ ವರ್ಗದವರು ಅನ್ಯೋನ್ಯವಾಗಿದ್ದರೂ. ದುಬೈನಲ್ಲಿರುವ ಪತಿ ಆಗೊಮ್ಮ ಈಗೊಮ್ಮೆ ಬಂದು ಹೋಗುತ್ತಿದ್ದರು. ಅವರು ಯಾರೊಂದಿಗೂ ಹಗೆ ಬೆಳೆಸಿಕೊಂಡಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. \ No newline at end of file diff --git a/eesanje/url_46_314_8.txt b/eesanje/url_46_314_8.txt new file mode 100644 index 0000000000000000000000000000000000000000..523e7a9707c5d45598365d27d4266a23e90a1a85 --- /dev/null +++ b/eesanje/url_46_314_8.txt @@ -0,0 +1,4 @@ +ಮಾಜಿ ಶಾಸಕರ ಜೇಬಿನಿಂದ ಹಣ ಕದಿಯಲು ಹೋಗಿ ಸಿಕ್ಕಿಬಿದ್ದ ಕಳ್ಳ +ಬೆಂಗಳೂರು,ನ.12- ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾಜಿ ಶಾಸಕರೊಬ್ಬರ ಜೇಬಿಗೆ ಚಾಲಾಕಿಯೊಬ್ಬ ಹಣ ಎಗರಿಸಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟಿದ್ದರು. +ದೀಪಾವಳಿ ವೇಳೆ ಲಕ್ಷ್ಮೀಪೂಜೆ ಏಕೆ ಮಾಡಬೇಕು..? ಹೇಗೆ ಮಾಡಬೇಕು..? +ಇದೇ ಸಂದರ್ಭದಲ್ಲಿ ಬಿ.ವೈ.ವಿ ಅವರನ್ನು ಅಭಿನಂದಿಸಲು ತುರುವೇಕೆರೆಯ ಮಾಜಿ ಶಾಸಕ ಮಸಾಲ ಜಯರಾಮ್ ಕೂಡ ಆಗಮಿಸಿದ್ದರು. ಚಾಲಾಕಿ ಕಳ್ಳ ಅದ್ಹೇಗೊ ಮಠದೊಳಗೆ ಬಂದು ಜಯರಾಮ್ ಅವರ ಜೇಬಿಗೆ ಕೈ ಹಾಕಿ ಹಣ ಎಗರಿಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ. ಕೂಡಲೇ ಇದನ್ನು ಗಮನಿಸಿದ ಹಿಂಬಾಲಕರು ಆತನನ್ನು ಹಿಡಿದು ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ. \ No newline at end of file diff --git a/eesanje/url_46_314_9.txt b/eesanje/url_46_314_9.txt new file mode 100644 index 0000000000000000000000000000000000000000..b0cbd8fc37abe88260591e1b2bfb330412a892e6 --- /dev/null +++ b/eesanje/url_46_314_9.txt @@ -0,0 +1,13 @@ +ಮುಂಗಾರಿನಲ್ಲಿ ಕೊರತೆ; ಹಿಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ +ಬೆಂಗಳೂರು, ನ.12-ಆಗಸ್ಟ್‍ನಿಂದ ನಿರಂತರ ತೀವ್ರ ಮಳೆ ಕೊರತೆ ಉಂಟಾಗಿದ್ದ ರಾಜ್ಯದಲ್ಲಿ ಈಗ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಉತ್ತಮ ಮಳೆಯಾಗಿದೆ. ಇದರಿಂದ ಹಿಂಗಾರು ಬೆಳೆಗೆ ಅನುಕೂಲವಾಗಿದ್ದರೆ, ಮುಂಗಾಗರು ಹಂಗಾಮಿನ ಬೆಳೆಗಳಿಗೆ ಹಾನಿಯುಂಟಾಗಿದೆ. +ಮುಂಗಾರಿನಲ್ಲಿ ಉಂಟಾಗಿದ್ದ ಮಳೆ ಕೊರತೆಯೂ ಹಿಂಗಾರಿನಲ್ಲಿ ಚೇತರಿಸಿಕೊಂಡಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬಂದಿದೆ. ಆದರೂ ಕೊಯ್ಲಿಗೆ ಬಂದಿದ್ದ ಬತ್ತ, ರಾಗಿ ಮೊದಲಾದ ಬೆಳೆಗಳಿಗೆ ತೊಂದರೆಯಾಗಿದೆ. ಆದರೆ, ರಾಜ್ಯಾದ್ಯಂತ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಹಾನಿಗೀಡಾಗಿವೆ. ಹಿಂಗಾರು ಆರಂಭವೂ ವಿಳಂಬವಾದ ಹಿನ್ನೆಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆಯೂ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ. +ಇತ್ತೀಚೆಗೆ ಒಂದು ವಾರ ಕಾಲ ಬಿದ್ದ ಮಳೆಯಿಂದ ಬಿತ್ತನೆ ಮಾಡಿರುವ ಬೆಳೆಗಳಿಗೆ ಸಾಕಷ್ಟು ಅನುಕೂಲವಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದ ಹಿನ್ನೆಯಲ್ಲಿ ಜಲಾಶಯಗಳ ಒಳಹರಿವು ಸಹ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. +ಮಳೆ ಕೊರತೆಯಿಂದಾಗಿ ಬಹುತೇಕ ಜಲಾಶಯಗಳ ಒಳಹರಿವು ನಿಂತಿತ್ತು. ಹಿಂಗಾರು ಚೇತರಿಸಿಕೊಂಡು ಬಹಳಷ್ಟು ಕಡೆಗಳಲ್ಲಿ ಉತ್ತಮ ಮಳೆಯಾದ್ದರಿಂದ ಪ್ರಮುಖ ಜಲಾಶಗಳಿಗೆ ಒಳಹರಿವಿನ ಪ್ರಮಾಣ ಸ್ವಲ್ಪ ಹೆಚ್ಚಿದೆ. ಈಗಾಗಲೇ ಚಳಿಗಾಲ ಆರಂಭವಾಗಿರುವುದರಿಂದ ಮುಂದೆ ಉತ್ತಮ ಮಳೆಯಾಗುವ ಸಾಧ್ಯತೆ ವಿರಳ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನವೆಂಬರ್ ಒಂದರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. +ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 53 ಮಿ.ಮೀ. ಇದ್ದು, 156 ಮಿ.ಮೀ.ನಷ್ಟು ಮಳೆಯಾಗಿದೆ. ಇದರಿಂದ ವಾಡಿಕೆಗಿಂತ ಶೇ. 156ರಷ್ಟು ಮಳೆಯಾದಂತಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 171, ಉತ್ತರ ಒಳನಾಡಿನಲ್ಲಿ ಶೇ.93, ಮಲೆನಾಡಿನಲ್ಲಿ ಶೇ.186 ಹಾಗೂ ಕರಾವಳಿಯಲ್ಲಿ ಶೇ.226ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. +ನವೆಂಬರ್ ತಿಂಗಳು ಚಳಿಗಾಲವಾಗಿರುವುದರಿಂದ ವಾಡಿಕೆ ಮಳೆಯ ಪ್ರಮಾಣ ಕಡಿಮೆಯೇ ಇದೆ. ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಕಳೆದ ಒಂದು ವಾರದಲ್ಲೂ ವಾಡಿಕೆಗಿಂತ ಶೇ.277ರಷ್ಟು ಅಧಿಕ ಮಳೆಯಾಗಿದೆ. ಈ ಅವಧಿಯ ವಾಡಿಕೆ ಪ್ರಮಾಣ 13 ಮಿ.ಮೀ. ಆಗಿದ್ದು, 48 ಮಿ.ಮೀ.ನಷ್ಟು ಮಳೆಯಾಗಿದೆ. +ಮುಂಗಾರು ಆರಂಭವಾಗುವ ಜೂನ್‍ನಿಂದ ನಿನ್ನೆಯವರೆಗೆ ಶೇ.26ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆಯವರೆಗಿನ ಮಾಹಿತಿ ಅವಲೋಕಿಸಿದರೆ, ವಾಡಿಕೆ ಮಳೆ ಪ್ರಮಾಣ 152 ಮಿ.ಮೀ. ಇದ್ದು, ಕೇವಲ 99 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ರಾಜ್ಯದಲ್ಲಿ ಶೇ.35ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕರಾವಳಿಯಲ್ಲಿ ಶೆ.14ರಷ್ಟು ಹೆಚ್ಚು ಮಳೆಯಾಗಿದ್ದರೆ ಮಲೆನಾಡಿನಲ್ಲಿ ಶೇ. 10, ಉತ್ತರ ಒಳನಾಡಿನಲ್ಲಿ ಶೇ.72, ದಕ್ಷಿಣ ಒಳನಾಡಿನಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. +ಜಲಾಶಯಗಳ ಮಾಹಿತಿ:ರಾಜ್ಯದ 14 ಪ್ರಮುಖ ಜಲಾಶಗಳ ಗರಿಷ್ಠ ನೀರು ಸಂಗ್ರಹ ಸಾಮಥ್ರ್ಯ 895.62 ಟಿಎಂಸಿ ಅಡಿ ಇದೆ. ಪ್ರಸ್ತುತ 480.34 ಟಿಎಂಸಿಯಷ್ಟು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಯಲ್ಲಿ 794.46 ಟಿಎಂಸಿಯಷ್ಟು ನೀರು ಸಂಗ್ರವಾಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 314 ಟಿಎಂಸಿಯಷ್ಟು ಕಡಿಮೆ ನೀರಿದೆ. ಒಟ್ಟಾರೆ ಎಲ್ಲಾ ಜಲಾಶಯಗಳಲ್ಲಿ ಸರಾಸರಿ ಶೇ.54ರಷ್ಟು ಮಾತ್ರ ನೀರಿದೆ. ಒಳಹರಿವಿನ ಪ್ರಮಾಣ 17787 ಕ್ಯುಸೆಕ್‍ನಷ್ಟಿದ್ದರೆ, ಹೊರ ಹರಿವು 24349 ಕ್ಯುಸೆಕ್‍ನಷ್ಟಿದೆ. +ಶಿಶುವಿಹಾರಗಳಲ್ಲಿ ಮದ್ದುಗುಂಡು ಮುಚ್ಚಿಟ್ಟಿರುವ ಹಮಾಸ್ ಉಗ್ರರು +ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪ, ವರಾಹಿ ಜಲಾಶಯಗಳಿಗೆ 843 ಕ್ಯುಸೆಕ್ ಒಳಹರಿವಿದ್ದರೆ, 2581 ಕ್ಯುಸೆಕ್ ಹೊರ ಹರಿವಿದೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ, ಕೆಆರ್‍ಎಸ್ ಹಾಗೂ ಕಬಿನಿ ಜಲಾಶಯಗಳ ಒಳಹರಿವು 10 ಸಾವಿರ ಕ್ಯುಸೆಕ್‍ನಷ್ಟಿದ್ದು, ಹೊರ ಹರಿವು 1200 ಕ್ಯುಸೆಕ್‍ಗೂ ಹೆಚ್ಚಿದೆ. +ಕೃಷ್ಣಾ ಕೊಳದ ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ 6659 ಕ್ಯುಸೆಕ್‍ನಷ್ಟು ಒಳ ಹರಿವಿದ್ದರೆ, 19881ರಷ್ಟು ಹೊರ ಹರಿವಿದೆ. ವಾಣಿವಿಲಾಸ ಸಾಗರ ಜಲಾಶಯಕ್ಕೆ 17787 ಕ್ಯುಸೆಕ್‍ನಷ್ಟು ಒಳಹರಿವು ಇದ್ದರೆ, 24349ರಷ್ಟು ಹೊರ ಹರಿವಿದೆ. +ಮುಂಗಾರು ಮಳೆಯ ವೈಫಲ್ಯದಿಂದಾಗಿ ಈಗಾಗಲೇ ಕುಡಿಯುವ ನೀರು, ವಿದ್ಯುತ್ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಕಂಡುಬರುತ್ತಿದೆ. ಹಿಂಗಾರು ಕೂಡ ಕೈ ಕೊಟ್ಟರೆ, ಬೇಸಿಗೆಯಲ್ಲಿ ರಾಜ್ಯ ತೀವ್ರ ಸ್ವರೂಪದ ಸಮಸ್ಯೆ ಎದುರಿಸಬೇಕಾಗಬಹುದು. \ No newline at end of file diff --git a/eesanje/url_46_315_1.txt b/eesanje/url_46_315_1.txt new file mode 100644 index 0000000000000000000000000000000000000000..78c740b77ea5607c15ee88476ee506fd678c8e72 --- /dev/null +++ b/eesanje/url_46_315_1.txt @@ -0,0 +1,10 @@ +ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು +ಗಾಜಾಪಟ್ಟಿ, ನ.12- ಯಾವುದೇ ಕಾರಣಕ್ಕೂ ಅಮಾಸ್ ಮೇಲಿನ ದಾಳಿಯನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕರೆಗಳನ್ನು ಕಡೆಗಣಿಸಿರುವ ಅವರು ಗಾಜಾದ ಆಡಳಿತಾರೂಢ ಹಮಾಸ್ ಉಗ್ರಗಾಮಿಗಳನ್ನು ಹತ್ತಿಕ್ಕಲು ಇಸ್ರೇಲ್‍ನ ಯುದ್ಧವು ಪೂರ್ಣ ಬಲದಿಂದ ಮುಂದುವರಿಯುತ್ತದೆ ಎಂದು ಹೇಳಿದರು. +ಗಾಜಾದಲ್ಲಿ ಉಗ್ರಗಾಮಿಗಳು ಒತ್ತೆಯಾಳುಗಳಾಗಿದ್ದ ಎಲ್ಲಾ 239 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಮಾತ್ರ ಕದನ ವಿರಾಮ ಸಾಧ್ಯ ಎಂದು ನೆತನ್ಯಾಹು ದೂರದರ್ಶನದ ಭಾಷಣದಲ್ಲಿ ಹೇಳಿದರು. +ಯುದ್ಧದ ಈಗ ಆರನೇ ವಾರಕ್ಕೆ ಪ್ರವೇಶಿಸುತ್ತಿರುವಾಗ, ಗಾಜಾವನ್ನು ಸೇನಾಮುಕ್ತಗೊಳಿಸಲಾಗುವುದು ಮತ್ತು ಇಸ್ರೇಲ್ ಅಲ್ಲಿ ಭದ್ರತಾ ನಿಯಂತ್ರಣವನ್ನು ಉಳಿಸಿಕೊಳ್ಳುತ್ತದೆ ಎಂದು ಇಸ್ರೇಲಿ ನಾಯಕಹೇಳಿದೆ. ಈ ಸ್ಥಾನವು ಇಸ್ರೇಲ್‍ನ ನಿಕಟ ಮಿತ್ರರಾಷ್ಟ್ರವಾದ ಯುನೈಟೆಡ್ ಸ್ಟೇಟ್ಸ್‍ನಿಂದ ತೇಲುತ್ತಿರುವ ಯುದ್ಧಾನಂತರದ ಸನ್ನಿವೇಶಗಳಿಗೆ ವಿರುದ್ಧವಾಗಿ ಕಂಡುಬರುತ್ತದೆ, ಇದು ಭೂಪ್ರದೇಶದ ಇಸ್ರೇಲಿ ಮರುಆಕ್ರಮಣವನ್ನು ವಿರೋಧಿಸುತ್ತದೆ ಎಂದು ಹೇಳಿದೆ. +ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್ +ಭದ್ರತಾ ನಿಯಂತ್ರಣದ ಅರ್ಥವೇನು ಎಂದು ಕೇಳಿದಾಗ, ಉಗ್ರಗಾಮಿಗಳನ್ನು ಬೇಟೆಯಾಡಲು ಇಸ್ರೇಲಿ ಪಡೆಗಳು ಅಗತ್ಯವಿದ್ದಾಗ ಗಾಜಾವನ್ನು ಪ್ರವೇಶಿಸಲು ಶಕ್ತವಾಗಿರಬೇಕು ಎಂದು ನೆತನ್ಯಾಹು ಹೇಳಿದರು. +ಕೊನೆಯ ಜನರೇಟರ್‍ನಲ್ಲಿ ಇಂಧನ ಖಾಲಿಯಾಗಿದೆ ಎಂದು ಗಾಜಾದ ಅತಿದೊಡ್ಡ ಆಸ್ಪತ್ರೆಯ ಉದ್ರಿಕ್ತ ವೈದ್ಯರು ಹೇಳಿದ ನಂತರ ಇಸ್ರೇಲ್‍ನ ಮೇಲೆ ಒತ್ತಡ ಹೆಚ್ಚುತ್ತಿದೆ, ಇದು ಅಕಾಲಿಕ ಮಗು, ಇನ್ಕ್ಯುಬೇಟರ್‍ನಲ್ಲಿ ಮತ್ತೊಂದು ಮಗು ಮತ್ತು ಇತರ ನಾಲ್ವರು ರೋಗಿಗಳ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಯುದ್ಧದಲ್ಲಿ ಗಾಯಗೊಂಡರು, ವೈದ್ಯಕೀಯ ಸಿಬ್ಬಂದಿ ಮತ್ತು ಸ್ಥಳಾಂತರಗೊಂಡರು. ನಾಗರಿಕರು ಹೋರಾಟದಲ್ಲಿ ಸಿಕ್ಕಿಬಿದ್ದರು. +ಇತ್ತೀಚಿನ ದಿನಗಳಲ್ಲಿ, ಉತ್ತರ ಗಾಜಾದ ಶಿಫಾ ಮತ್ತು ಇತರ ಆಸ್ಪತ್ರೆಗಳ ಬಳಿ ಹೋರಾಟ ತೀವ್ರಗೊಂಡಿದೆ ಮತ್ತು ಸರಬರಾಜುಗಳು ಖಾಲಿಯಾಗಿವೆ. ಹಮಾಸ್ ಆಸ್ಪತ್ರೆಗಳಲ್ಲಿ ಮತ್ತು ಅದರ ಕೆಳಗೆ ಕಮಾಂಡ್ ಪೋಸ್ಟ್‍ಗಳನ್ನು ಸ್ಥಾಪಿಸಿದೆ, ನಾಗರಿಕರನ್ನು ಮಾನವ ಗುರಾಣಿಗಳಂತೆ ಬಳಸಿಕೊಂಡಿದೆ ಎಂದು ಇಸ್ರೇಲಿ ಮಿಲಿಟರಿ ಪುರಾವೆಗಳನ್ನು ಒದಗಿಸದೆ ಆರೋಪಿಸಿದೆ. ಶಿಫಾದಲ್ಲಿನ ವೈದ್ಯಕೀಯ ಸಿಬ್ಬಂದಿ ಅಂತಹ ಹಕ್ಕುಗಳನ್ನು ನಿರಾಕರಿಸಿದ್ದಾರೆ ಮತ್ತು ಇಸ್ರೇಲ್ ವಿವೇಚನಾರಹಿತ ದಾಳಿಯಿಂದ ನಾಗರಿಕರಿಗೆ ಹಾನಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. +ಇಸ್ರೇಲಿ ಮಿಲಿಟರಿ ಗುಪ್ತಚರದ ಮಾಜಿ ಮುಖ್ಯಸ್ಥ ಅಮೋಸ್ ಯಾಡ್ಲಿನ್ ಬ್ರಾಡ್‍ಕಾಸ್ಟರ್ ಚಾನೆಲ್ 12 ಗೆ ಇಸ್ರೇಲ್ ಹಮಾಸ್ ಅನ್ನು ಹತ್ತಿಕ್ಕುವ ಗುರಿಯನ್ನು ಹೊಂದಿದ್ದು, ಆಸ್ಪತ್ರೆಗಳ ನಿಯಂತ್ರಣವನ್ನು ತೆಗೆದುಕೊಳ್ಳುವುದು ಪ್ರಮುಖವಾಗಿದೆ ಆದರೆ ರೋಗಿಗಳು, ಇತರ ನಾಗರಿಕರು ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ನೋಯಿಸದೆ ಸಾಕಷ್ಟು ಯುದ್ಧತಂತ್ರದ ಸೃಜನಶೀಲತೆ ಅಗತ್ಯವಿದೆ ಎಂದು ಹೇಳಿದರು. +ಇಬ್ಬರು ಮಕ್ಕಳು ಸೇರಿದಂತೆ ಜನರೇಟರ್ ಸ್ಥಗಿತಗೊಂಡ ನಂತರ ಶಿಫಾದಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ \ No newline at end of file diff --git a/eesanje/url_46_315_10.txt b/eesanje/url_46_315_10.txt new file mode 100644 index 0000000000000000000000000000000000000000..4a346013aa649be1d4820f202690992e32e2ae3a --- /dev/null +++ b/eesanje/url_46_315_10.txt @@ -0,0 +1,13 @@ +ಪಿಎಸ್‍ಐ ನೇಮಕಾತಿ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ +ಬೆಂಗಳೂರು,ನ.10- ಹಿಂದಿನ ಬಿಜೆಪಿ ಸರ್ಕಾರವನ್ನು ಬಿಟ್ಟುಬಿಡದಂತೆ ಪೆಡಂಬೂತವಾಗಿ ಕಾಡಿದ್ದ 545 ಪಿಎಸ್‍ಐ ನೇಮಕಾತಿ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಮರುಪರೀಕ್ಷೆ ನಡೆಸಲು ಆದೇಶ ನೀಡಿದೆ. ಸ್ವತಂತ್ರ ಸಂಸ್ಥೆಯಿಂದ ಪಿಎಸ್‍ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಬೇಕೆಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಈ ಹಿಂದೆ ಪರೀಕ್ಷೆ ಬರೆದು ನೇಮಕಗೊಂಡಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. +ಸುದೀರ್ಘ ವಿಚಾರಣೆ ನಡೆಸಿ ಇಂದಿಗೆ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್ ನ್ಯಾಯಮೂರ್ತಿಗಳಾದ ದಿನೇಶ್‍ಕುಮಾ, ಟಿ.ಜಿ.ಶಿವಶಂಕರೇಗೌಡ ಅವರನ್ನೊಳಗೊಂಡ ದ್ವಿಸದಸ್ಯಪೀಠ ಹಿಂದಿನ ಬಿಜೆಪಿ ಸರ್ಕಾರ ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿದ್ದನ್ನು ಎತ್ತಿ ಹಿಡಿಯಿತು. +ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್‍ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಲಾಗಿತ್ತು. ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ರದ್ದುಪಡಿಸಿರುವ ಸರ್ಕಾರದ ಕ್ರಮ ಸರಿಯಾಗಿದೆ ಎಂದು ತೀರ್ಪಿನಲ್ಲಿ ನ್ಯಾಯಾೀಧಿಶರು ಉಲ್ಲೇಖಿಸಿದ್ದಾರೆ. +ಸುಮಾರು 3600ಕ್ಕೂ ಹೆಚ್ಚು ಪುಟಗಳ ದೋಷಾರೋಪ ಪಟ್ಟಿಯಲ್ಲಿ ಈಗಾಗಲೇ ಬಂಧನಕ್ಕೊಳಪಟ್ಟಿರುವ ಆರೋಪಿಗಳಿಂದ ಹೇಳಿಕೆಗಳನ್ನು ಪಡೆಯಲಾಗಿದ್ದು, ಕೆಲವರು ತಪ್ಪು ಒಪ್ಪಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿರುವುದರಿಂದ ಮುಂದೆ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆ ನಡೆಸಬೇಕೆಂದು ಆದೇಶ ಮಾಡಿತು. +ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ +ಪ್ರಕರಣದ ಹಿನ್ನಲೆ: ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಇದಕ್ಕೆ ಪಿಎಸ್‍ಐ ಆಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. +ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿದ್ದರು. ಬಳಿಕ ಸರ್ಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. +ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪಿಎಸ್‍ಐ ನೇಮಕಾತಿಗೆ ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆ.27ರಂದು ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಆ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದೆ. ವಿಭಾಗೀಯ ಪೀಠವು ಅರ್ಜಿಗಳ ವಿಚಾರಣೆಯನ್ನು 2023ರ ಅ.26ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. +ಅರ್ಜಿ ಕುರಿತು ಆಗಸ್ಟ್ ತಿಂಗಳಿನಲ್ಲಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಿಎಸ್‍ಐ ಮರುಪರೀಕ್ಷೆ ನಡೆಸಬಹುದು ಎಂದು ಮೌಖೀಕವಾಗಿ ಅಭಿಪ್ರಾಯಪಟ್ಟಿತ್ತು. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಸೇರಿ ಹಲವರನ್ನು ಸಿಐಡಿ ಬಂಧಿಸಿ ವಿಚಾರಣೆ ನಡೆಸಿತ್ತು. ಜೊತೆಗೆ ಅಕ್ರಮ ಎಸಗಿ ಪರೀಕ್ಷೆಯಲ್ಲಿ ಪಾಸ್ ಆಗಿ ಪಿಎಸ್‍ಐ ಆಗಿ ಆಯ್ಕೆಯಾಗಿದ್ದವರನ್ನು ಮತ್ತು ಅಕ್ರಮಕ್ಕೆ ಸಹಾಯ ಮಾಡಿದ್ದವರನ್ನು ಬಂಧಿಸಲಾಗಿತ್ತು. +ಮರುಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶಿಸಿರುವುದರಿಂದ ಹೊಸದಾಗಿ ಅರ್ಜಿ ಹಾಕಲು ಅವಕಾಶ ಇರುವುದಿಲ್ಲ. ಏಕೆಂದರೆ ಈ ಹಿಂದೆ ಯಾವೆಲ್ಲ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರೋ ಪುನಃ ಅವರೇ ಮರುಪರೀಕ್ಷೆಗೆ ಹಾಜರಾಗಬೇಕು. ಇಡೀ ಅಧಿಸೂಚನೆಯನ್ನೇ ಹಿಂದಿನ ಸರ್ಕಾರ ರದ್ದುಪಡಿಸಿದ್ದರೂ ಹೊಸದಾಗಿ ಮತ್ತೆ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿಲ್ಲ. ಹಿಂದಿನ ಅಧಿಸೂಚನೆಗೆ ಅನುಗುಣವಾಗಿಯೇ ಸ್ವತಂತ್ರ ಸಂಸ್ಥೆಯಿಂದ ಮರುಪರೀಕ್ಷೆಯನ್ನು ನಡೆಸಬೇಕಾಗುತ್ತದೆ. +ಹಿಂದಿನ ಬಿಜೆಪಿ ಸರ್ಕಾರಕ್ಕೆ ಪಿಎಸ್‍ಐ ಹಗರಣ ದೊಡ್ಡ ಕಂಟಕವಾಗಿ ಪರಿಣಮಿಸಿತ್ತು. ಅಂದು ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ದೊಡ್ಡ ಅಸ್ತ್ರವಾಗಿ ಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಇಡೀ ಸರ್ಕಾರದ ವಿರುದ್ಧ ಮುಗಿಬಿದ್ದಿತ್ತು. ಚುನಾವಣಾ ಪ್ರಚಾರದಲ್ಲಿ ಇದನ್ನೇ ದೊಡ್ಡ ಅಸ್ತ್ರವನ್ನಾಗಿ ಮಾಡಿಕೊಂಡು ಬಿಜೆಪಿಗೆ ಹಣ್ಣುಗಾಯಿ ನೀರುಗಾಯಿ ಮಾಡಿತ್ತು. +ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಸ್‍ಐ ಹಗರಣವನ್ನು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ. ಈ ತಿಂಗಳ ಅಂತ್ಯಕ್ಕೆ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಅವರು ಹೇಳಿರುವುದರಿಂದ ಯರ ಯಾರ ಕೊರಳಿಗೆ ಉರುಳಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. \ No newline at end of file diff --git a/eesanje/url_46_315_11.txt b/eesanje/url_46_315_11.txt new file mode 100644 index 0000000000000000000000000000000000000000..6e4549e74fc656422802c7c5a461069b6746d7cb --- /dev/null +++ b/eesanje/url_46_315_11.txt @@ -0,0 +1,15 @@ +ಉದ್ಯೋಗ ಖಾತ್ರಿ ದಿನಗಳನ್ನು 150ಕ್ಕೆ ಹೆಚ್ಚಿಸಲು ಪ್ರಸ್ತಾವನೆ : ಡಿಸಿಎಂ +ಬೆಂಗಳೂರು, ನ.10- ಬರದ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನೀಡಲಾಗುತ್ತಿರುವ ಮಾನವ ದಿನಗಳ ಉದ್ಯೋಗವನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅಲ್ಲಿಂದ ಒಪ್ಪಿಗೆ ಸಿಗಬೇಕು, ಇಲ್ಲವಾದರೆ ನಾವೇ ಉದ್ಯೋಗ ದಿನಗಳನ್ನು ಹೆಚ್ಚಿಸುವ ಚಿಂತನೆ ನಡೆಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಭಾದಿತ ಎಂದು ಘೋಷಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಮಾನವ ದಿನಗಳ ಉದ್ಯೋಗ 100ದಿನಗಳಿಗೆ ಸೀಮಿತವಾಗಿದೆ. ಅದನ್ನು 150 ದಿನಗಳಿಗೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದಕ್ಕೆ ಕೇಂದ್ರ ಅನುಮತಿ ನೀಡಬೇಕು, ಇಲ್ಲವಾದರೆ ರಾಜ್ಯ ಸರ್ಕಾರವೇ 150 ದಿನಗಳಿಗೆ ಹೆಚ್ಚಿಸಲು ಚಿಂತನೆ ನಡೆಸಿದೆ. ಆದರೆ ಅದಕ್ಕೂ ಮೊದಲು ಕೇಂದ್ರ ಸರ್ಕಾರ ತಮ್ಮಿಂದ ಆಗುವುದಿಲ್ಲ ಎಂದು ಹೇಳಬೇಕು ಎಂದರು. +ಬಿಜೆಪಿ, ಜನತಾದಳಕ್ಕೆ ಈಗ ಅನುಕಂಪ ಬಂದು ಬರ ಅಧ್ಯಯನ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಉತ್ತಮ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಅದನ್ನು ಕೇಂದ್ರ ಸ್ವೀಕರಿಸಿ, ಅಧಿಕಾರಿಗಳ ತಂಡವನ್ನು ಕಳುಹಿಸಿಕೊಟ್ಟಿತ್ತು. ಕೇಂದ್ರ ತಂಡವೂ ಇಲ್ಲಿ ಅಧ್ಯಯನ ಮಾಡಿ ಹೋಗಿದೆ. ಈಗ ಬಿಜೆಪಿ-ಜೆಡಿಎಸ್‍ನವರು ಕಾಟಾಚಾರಕ್ಕೆ ಹೋಗಿ ಗಿಡ ನೋಡುವುದಲ್ಲ, ನಾವು ಈಗಾಗಲೇ ಗಿಡ ನೋಡಿದ್ದೇವೆ. ಬಿಜೆಪಿಯ 66. ಜೆಡಿಎಸ್‍ನ 19 ಶಾಸಕರು ಹಾಗೂ ಬಿಜೆಪಿಯ 26 ಜನ ಸಂಸದರು ದೆಹಲಿಗೆ ಹೋಗಿ ಕೇಂದ್ರ ಸಚಿವರು, ಪ್ರಧಾನಿಯನ್ನು ಭೇಟಿ ಮಾಡಿ ರಾಜ್ಯಕ್ಕೆ ಪರಿಹಾರ ಕೊಡಿಸಲಿ ಎಂದು ಒತ್ತಾಯಿಸಿದರು. +ಸಂಪೂರ್ಣ ಕಣ್ಣು ಕಸಿ ಮಾಡುವಲ್ಲಿ ಅಮೆರಿಕ ವೈದ್ಯರು ಯಶಸ್ವಿ +ವಿರೋಧ ಪಕ್ಷಗಳು ರಾಜಕಾರಣ ಮಾಡಲಿ ಅಭ್ಯಂತರ ಇಲ್ಲ, ರಾಜ್ಯದ ಹಿತಕ್ಕೆ ಬದ್ಧರಾಗಿದ್ದೇವೆ ಎಂದಾದರೆ ಮೊದಲು ಪರಿಹಾರ ಕೊಡಿಸಿ, ಉದ್ಯೋಗ ಖಾತ್ರಿಯಡಿ 150 ದಿನಗಳನ್ನು ಮಂಜೂರು ಮಾಡಿಸಿ ಎಂದರು. ಬರ ಅಧ್ಯಯನ ನಡೆಸುವವರು ತಮ್ಮಿಂದ ರಾಜ್ಯಕ್ಕೆ ಏನು ಅನುಕೂಲವಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ನಾವು ಪರಿಹಾರಕ್ಕಾಗಿ ಕೇಂದ್ರದ ಬಲಿ ಭಿಕ್ಷೆ ಬೇಡುತ್ತಿಲ್ಲ. ಕಾನೂನು ಪ್ರಕಾರ ಪರಿಹಾರ ನೀಡುವ ಬದ್ಧತೆ ಕೇಂದ್ರ ಸರ್ಕಾರದ ಮೇಲಿದೆ. ಅದರಂತೆ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದರು. +ರಾಜ್ಯ ಸರ್ಕಾರ 800 ಕೋಟಿ ಹಣ ಒದಗಿಸಿದ್ದು, ಅದನ್ನು ಕುಡಿಯುವ ನೀರು, ಮೇವು ಸರಬರಾಜಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದ ವಿಷಯದಲ್ಲಿ ತಾರತಮ್ಯ ಮಾಡುತ್ತಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ಸೇರಿ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದರು. +ತೆಲಂಗಾಣದ ವಿಧಾನಸಭೆ ಚುನಾವಣೆಗೆ ರಾಜ್ಯ ಸರ್ಕಾರದ ನಾಲೈದು ಜನ ಸಚಿವರನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚು ಸಚಿವರನ್ನು ನಿಯೋಜನೆ ಮಾಡಿಲ್ಲ. ಕಂದಾಯ ಸಚಿವರನ್ನು ತೆಲಂಗಾಣ ಚುನಾವಣೆಗೆ ನಿಯೋಜಿಸಲಾಗಿತ್ತು. ರಾಜ್ಯದಲ್ಲಿ ಬರ ಇರುವುದರಿಂದ ಅವರಿಗೆ ವಿನಾಯಿತಿ ನೀಡಲಾಗಿದೆ. 40 ಮಂದಿ ಶಾಸಕರನ್ನು ನಿಯೋಜಿಸಲಾಗಿದೆ. ಅವರಲ್ಲಿ ಅನಾರೋಗ್ಯದ ಕಾರಣಕ್ಕೆ ಎನ್.ವೈ.ಗೋಪಾಲಕೃಷ್ಣ ಸೇರಿ ಮೂರು ನಾಲ್ಕು ಜನ ಹೋಗುತ್ತಿಲ್ಲ. ಉಳಿದ ಎಲ್ಲರೂ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಬಿಜೆಪಿಯವರು ಕೂಡ ಚುನಾವಣೆಗೆ ರಾಜ್ಯದ ನಾಯಕರನ್ನು ನಿಯೋಜನೆ ಮಾಡಿದ್ದರು ಎಂದರು. +ನಾನು ಇಂದು ವಿಜಯವಾಡ ಮೂಲಕ ತೆಲಂಗಾಣಕ್ಕೆ ಹೋಗುತ್ತಿದ್ದೇನೆ. ಮೂರು ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ನಾಳೆ ಶ್ರೀಶೈಲ ದೇವಸ್ಥಾನಕ್ಕೆ ಹೋಗಿ ನಾಡಿದ್ದು ವಾಪಾಸ್ ಬರುತ್ತೇನೆ ಎಂದು ಸ್ಪಷ್ಟ ಪಡಿಸಿದರು. +ಹಿಂದುಳಿದ ವರ್ಗಗಳಿಂದ ನಡೆಸಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆ ಅವೈಜ್ಞಾನಿಕವಾಗಿದ್ದು, ಮರು ಸಮೀಕ್ಷೆ ನಡೆಸಬೇಕು ಎಂದು ವೀರಶೈವ ಲಿಂಗಾಯಿತ ಮಹಾ ಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆ ಕುರಿತು ಬೇರೊಂದು ದಿನ ಚರ್ಚೆ ಮಾಡುವುದಾಗಿ ಹೇಳಿದ ಡಿ.ಕೆ.ಶಿವಕುಮಾರ್, ಸದಸ್ಯಕ್ಕೆ ಬರ ಹಾಗೂ ರಾಜ್ಯದ ಇತರ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು. +ಕಾಂಗ್ರೆಸ್‍ನಲ್ಲಿ ಯಾವ ಗೊಂದಲವೂ ಇಲ್ಲ. ಶಿವಮೊಗ್ಗ ರಾಜಕಾರಣದ ವಿಷಯವಾಗಿ ಯಾವುದೇ ವಿಚಾರಗಳಿದ್ದರೂ ತಮ್ಮೊಂದಿಗೆ ಚರ್ಚೆ ಮಾಡಬಹುದು, ಅದನ್ನು ಬಿಟ್ಟು ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಎಚ್ಚರಿಕೆ ನೀಡಿದರು. +ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳು ನೋಂದಣಿ ಮಾಡಿಕೊಳ್ಳಬೇಕು, ಅಗಲ ಇರುವ ಪುಟ್‍ಪಾತ್‍ನ ಪಕ್ಕದಲ್ಲಿ ನಿಂತು ವ್ಯಾಪಾರ ಮಾಡಿಕೊಂಡರೆ ಅಭ್ಯಂತರ ಇಲ್ಲ. ರಸ್ತೆಯಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ಮಲ್ಲೇಶ್ವರಂ, ಮಡಿವಾಳದಂತಹ ಪ್ರದೇಶಗಳಲ್ಲಿ ಇದರಿಂದ ತೊಂದರೆಯಾಗುತ್ತಿದೆ. ಅಧಿಕಾರಿಗಳು ಫೋಟೋ ವಿಡಿಯೋ ಸಹಿತಿ ನನಗೆ ಮಾಹಿತಿ ನೀಡಿದ್ದಾರೆ. ಹೈಕೋರ್ಟ್ ಸೂಚನೆ ನೀಡಿದೆ, ಅದರ ಆಧಾರದ ಮೇಲೆ ಪಾಲಿಕೆ ಅಧಿಕಾರಿಗಳು ತೆರವು ಮಾಡುತ್ತಿದ್ದಾರೆ. ಇಲ್ಲಿ ಪಕ್ಷಪಾತ ಇಲ್ಲ. ಎಲ್ಲಾ ಕಡೆ ಒಂದೇ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. +ಲೋಕ ಚುನಾವಣೆಗೆ ಬಿಜೆಪಿ ರಣತಂತ್ರ, 12 ಹಾಲಿ ಸಂಸದರಿಗೆ ಕೊಕ್ +ಬೀದಿ ಬದಿ ವ್ಯಾಪಾರಿಗಳು ತಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ರಸ್ತೆಯಲ್ಲಿ ವ್ಯಾಪಾರ ಮಾಡುವುದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ, ಅಪಘಾತಗಳಾಗುತ್ತಿವೆ. ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಲು ನಮ್ಮ ಅಕ್ಷೇಪ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ಹಿಂದೊಮ್ಮೆ ಅವರೊಂದಿಗೆ ಚರ್ಚೆ ನಡೆಸಿದ್ದೆ, ಮತ್ತೊಮ್ಮೆಯೂ ಚರ್ಚೆ ಮಾಡುತ್ತೇನೆ. ಅವರ ಜೀವನವೂ ನಡೆಯಬೇಕು, ಅವರಿಗೆ 10 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲು ನಾವು ಸಿದ್ಧರಿದ್ದೇವೆ ಎಂದರು. +ಬಿಜೆಪಿಯವರು ಆಪರೇಷನ್ ಕಮಲ ಮಾಡುವ ಅವರ ವೃತ್ತಿ ಬಿಡುವುದಿಲ್ಲ. ಸುಮ್ಮನ್ನೆ ನಮ್ಮನ್ನು ಕೆಣಕುತ್ತಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_315_12.txt b/eesanje/url_46_315_12.txt new file mode 100644 index 0000000000000000000000000000000000000000..21a07a865f62bb57c0f99ad6d14cbfd0b6aed88e --- /dev/null +++ b/eesanje/url_46_315_12.txt @@ -0,0 +1,5 @@ +ತೆಲಂಗಾಣದಲ್ಲಿ ಕರ್ನಾಟಕ ಸಿಎಂ, ಡಿಸಿಎಂ, ಸಚಿವರು ಸೇರಿ ಕಾಂಗ್ರೆಸ್ ನಾಯಕರಿಂದ ಮತಬೇಟೆ +ಬೆಂಗಳೂರು, ನ.10- ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐದು ಮಂದಿ ಸಚಿವರು, ನಲವತ್ತಕ್ಕೂ ಅಧಿಕ ಶಾಸಕರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪ್ರಮುಖ ಕಾಂಗ್ರೆಸಿಗರು ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. +ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರೊಂದಿಗೆ ವಿಶೇಷ ವಿಮಾನದಲ್ಲಿ ತೆಲಂಗಾಣಕ್ಕೆ ತೆರಳಿದರು. ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ವಿಜಯವಾಡದ ಮೂಲಕ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ಕರ್ನಾಟಕದ ಮಾದರಿಯಲ್ಲಿ ತೆಲಂಗಾಣದಲ್ಲೂ ಗೆಲುವು ಸಾಧಿಸಬೇಕು ಎಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ತನ್ನಲ್ಲೆಲ್ಲಾ ಬಲವನ್ನೂ ಕ್ರೋಢಿಕರಿಸಿದೆ. +ಸಂಪೂರ್ಣ ಕಣ್ಣು ಕಸಿ ಮಾಡುವಲ್ಲಿ ಅಮೆರಿಕ ವೈದ್ಯರು ಯಶಸ್ವಿ +ಕೆಪಿಸಿಸಿ ಪದಾಧಿಕಾರಿಗಳು, ಸಚಿವರು, ಶಾಸಕರು ಅಲ್ಲಿನ ಕ್ಷೇತ್ರವಾರು ಉಸ್ತುವಾರಿ ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಚಿವರು, ಶಾಸಕರು ಚುನಾವಣೆಯತ್ತ ಗಮನ ಹರಿಸಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತವೆ, ಅದಕ್ಕೆ ತಲೆ ಕೆಡಿಸಿಕೊಳ್ಳದ ಕಾಂಗ್ರೆಸಿಗರು ತೆಲಂಗಾಣ ಚುನಾವಣೆ ಗೆಲ್ಲಲು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. \ No newline at end of file diff --git a/eesanje/url_46_315_2.txt b/eesanje/url_46_315_2.txt new file mode 100644 index 0000000000000000000000000000000000000000..d36f8b70d6c6122862c0c9a9cb90fc2d09d0deb2 --- /dev/null +++ b/eesanje/url_46_315_2.txt @@ -0,0 +1,9 @@ +ವಿಜಯೇಂದ್ರ ನೇಮಕ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ +ಬೆಂಗಳೂರು, ನ.11- ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. +ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ನೀವು ಯಾರನ್ನು ಬೇಕಾದರೂ ಕೇಳಿ ನೋಡಿ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ನಾನು ಒಂದು ದಿನವೂ ದೆಹಲಿಗೆ ಹೋಗಿ ಕೇಳಿರಲಿಲ್ಲ, ಹೈಕಮಾಂಡ್ ಮುಂದೆ ಮನವಿ ಮಾಡಿರಲಿಲ್ಲ. ಹಲವು ವಿಚಾರಗಳನ್ನು ಅಳೆದು ತೂಗಿ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.’ +ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆಗಿದೆ, ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಸಮಾಜದ ಬೆಂಬಲ ಇನ್ನೂ ಹೆಚ್ಚು ಸಿಗಲಿದೆ. ಮುಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿ ಅವರಿಗೆ ಒಳ್ಳೆಯ ಉಡುಗೊರೆ ಕೊಡಬೇಕೆಂಬುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು. +ಅತ್ತೂ ಕರೆದು ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ್ದಾರೆ : ಶೆಟ್ಟರ್ ಲೇವಡಿ +ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜಾ್ಯಧ್ಯಕ್ಷ ಸ್ಥಾನ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ. ದೆಹಲಿಗೆ ಹೋಗಿ ನನ್ನ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಅಂತಾನೂ ಕೇಳಿರಲಿಲ್ಲ. ದೊಡ್ಡ ಸ್ಥಾನ ಸಿಕ್ಕಿದಾಗ ಸವಾಲುಗಳು ಸಹಜ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಆದರೆ ಹಾದಿ ಕಠಿಣ ಇದೆ. ನಾನೂ ಕೂಡ ರಾಜ್ಯ ಪ್ರವಾಸ ಮಾಡಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದರು. +ಅಮಿತ್ ಶಾ, ನಡ್ಡಾ ಅವರು ಸೂಕ್ತ ಸಮಯಕ್ಕೆ ಒಳ್ಳೆಯ ನಿರ್ಧಾರ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜಾ್ಯದ್ಯಂತ ಪ್ರವಾಸ ಮಾಡಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ. ಈ ಬಾರಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.ಮೋದಿ ಅವರಂತಹ ಮಹಾನ್ ವ್ಯಕ್ತಿ ದೇಶದ ಪ್ರಧಾನಿಯಾಗಿದ್ದಾರೆ. +ದೆಹಲಿಯಲ್ಲಿ ಕುಳಿತು ವಿಜಯೇಂದ್ರನನ್ನು ಅಧ್ಯಕ್ಷನನ್ನಾಗಿ ಮಾಡಿ ಅಂತ ಯಾರನ್ನೂ ಕೇಳಿಲ್ಲ. ಬೇಕಾದರೆ ನೀವುಗಳು ವಿಚಾರಿಸಿ. ನಾವು ಪ್ರವಾಸ ಮಾಡಿದ ಮೇಲೆ ಜನರ ರೆಸ್ಪಾನ್ಸ್ ಹೇಗಿದೆ ಅಂತ ನೋಡಿದ ಮೇಲೆ ನಮ್ಮ ಬಲ ಗೊತ್ತಾಗಲಿದೆ. 25 ಕ್ಷೇತ್ರ ಗೆಲ್ಲೋದು ಸುಲಭವಲ್ಲ. ರಾಜಾ್ಯದ್ಯಂತ ಓಡಾಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಎಲ್ಲರೂ ಒಟ್ಟಾಗಿ ಹೋದಲ್ಲಿ ಯಶಸ್ಸು ಖಚಿತ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ನಂತರ ಮಾತನಾಡಿದ ಮಾಜಿ ಸಚಿವ ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಈಗ ಅಧಿಕಾರದಲ್ಲಿ ಇಲ್ಲ. ಹೀಗಾಗಿ ಇದು ವಂಶವಾದ ಆಗೋದಿಲ್ಲ ಎಂದು ವಂಶವಾದ ರಾಜಕೀಯಕ್ಕೆ ಹೊಸ ವ್ಯಾಖ್ಯಾನ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷನನ್ನಾಗಿ ಆಯ್ಕೆ ಮಾಡುವ ಮೂಲಕ ಯುವಕರಿಗೆ ಅವಕಾಶ ನೀಡಿದಂತಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಆಗ ಯಶಸ್ಸು ಸಿಗಲಿದೆ. ಸದ್ಯ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. \ No newline at end of file diff --git a/eesanje/url_46_315_3.txt b/eesanje/url_46_315_3.txt new file mode 100644 index 0000000000000000000000000000000000000000..c03c2873215666f610bedfbe7340dc2894ebe7a3 --- /dev/null +++ b/eesanje/url_46_315_3.txt @@ -0,0 +1,7 @@ +ರಾಜ್ಯಪಾಲರು ಆತ್ಮವಿಮರ್ಶೆ ಮಾಡಿಕೊಳ್ಳಲಿ : ಸಚಿವ ಗುಂಡೂರಾವ್ +ಬೆಂಗಳೂರು, ನ.11- ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವಾದರೂ ಹಲವು ರಾಜ್ಯಗಳ ರಾಜ್ಯಪಾಲರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ಪಂಜಾಬ್ ರಾಜ್ಯಪಾಲರ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಅತ್ಯಂತ ಕಟುವಾದ ಭಾಷೆಯಲ್ಲಿ ಎಚ್ಚರಿಕೆ ನೀಡಿದೆ. +ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆಯೂ ಹೌದು ಎಂದಿದ್ದಾರೆ. +ರಾಷ್ಟ್ರಪತಿಗಳ ಮೂಲಕ ರಾಜ್ಯಗಳಿಗೆ ನೇಮಕವಾಗುವ ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಬೇಕು. ವಿಪರ್ಯಾಸವೆಂದರೆ ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ನಿಯುಕ್ತರಾಗಿರುವ ಕೆಲವು ರಾಜ್ಯಪಾಲರು ಬಿಜೆಪಿಯ ಏಜೆಂಟ್ಗಳಾಗಿದ್ದಾರೆ. ಅವೇಶನದಲ್ಲಿ ಅಂಗೀಕಾರವಾದ ಮಸೂದೆಗಳನ್ನು ಅನಗತ್ಯವಾಗಿ ತಡೆ ಹಿಡಿಯುವುದು, ಬಿಕ್ಕಟ್ಟು ಸೃಷ್ಟಿಸುವುದು ಸಾಮಾನ್ಯವಾಗಿದೆ. +ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೇ ಬದಲಾದ ಕಾಂಗ್ರೆಸ್ ತಂತ್ರಗಾರಿಕೆ +ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಗಂಭೀರವಾಗಿದೆ. ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ, ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂ ಕೋರ್ಟ್ನ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದಾರೆ. +ಈ ವಿಷಯದಲ್ಲಿ ನಮ್ಮ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ನಿಶ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಸರಳ ಸಜ್ಜನಿಕೆ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_315_4.txt b/eesanje/url_46_315_4.txt new file mode 100644 index 0000000000000000000000000000000000000000..2a95e4f0bc8e932102483ae218273a1603976023 --- /dev/null +++ b/eesanje/url_46_315_4.txt @@ -0,0 +1,9 @@ +ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು +ಬೆಂಗಳೂರು, ನ.11- ಸಾಕಷ್ಟು ಸವಾಲುಗಳ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಭವಿಷ್ಯದಲ್ಲಿ ಬೆಟ್ಟದಷ್ಟು ಸವಾಲುಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವುದು ಅಷ್ಟು ಸರಳವಾಗಿಲ್ಲ.ವಿಧಾನಸಭಾ ಚುನಾವಣೆ ಸೋಲಿನ ನಂತರ ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವುದಂತಾಗಿದೆ. ಈಗಾಗಲೇ ಅನೇಕರು ಪಕ್ಷ ಬಿಟ್ಟು ಅನ್ಯ ಪಕ್ಷಗಳ ಕಡೆ ಮುಖ ಮಾಡಿದ್ದಾರೆ, ಉಳಿದವರು ಕೂಡಾ ಕಮಲಕ್ಕೆ ಗುಡ್ ಬೈ ಹೇಳುವ ಲೆಕ್ಕಾಚಾರದಲ್ಲಿ ಇದ್ದಾರೆ. +ಬಿಜೆಪಿಯಲ್ಲಿ ಬಹಿರಂಗವಾಗಿ ಎಲ್ಲವೂ ಚೆನ್ನಾಗಿದ್ದಂತೆ ಕಾಣಿಸಿದರೂ ಎಲ್ಲ ಪಕ್ಷಗಳಲ್ಲಿ ಇರುವಂತೆ ಇಲ್ಲಿಯೂ ಆಂತರಿಕ ಸಂಘರ್ಷ, ಗುಂಪುಗಾರಿಕೆ ಸಾಕಷ್ಟಿದೆ. ಜಾತಿ, ಸಂಘ ಪರಿವಾರ, ವಲಸೆ ಬಂದವರು.. ಹೀಗೆ ನಾನಾ ಸಂಗತಿಗಳನ್ನು ಅವಲಂಬಿಸಿ ಇರುವ ಈ ಗುಂಪುಗಾರಿಕೆ ನಿಯಂತ್ರಣ ಕೂಡ ವೈಯಕ್ತಿಕ ಸಾಮಥ್ರ್ಯಕ್ಕೆ ಒಂದು ಅಳತೆಗೋಲಿನಂತೆ ಇರುವುದರಿಂದ ಇದು ಕೂಡ ಅವರಿಗೆ ಸವಾಲಾಗಿ ಪರಿಣಮಿಸಲಿದೆ. +ರಾಜ್ಯಾಧ್ಯಕ್ಷ ಪಟ್ಟಕ್ಕೇರುತ್ತಿದಂತೆ ವಿಜಯೇಂದ್ರಗೆ ತಲೆನೋವು ಶುರು, ಸ್ವಪಕ್ಷದವರಿಂದಲೇ ಅಸಮಾಧಾನ +ಬಿಜೆಪಿ ಎಂದರೆ ಕಾರ್ಯಕರ್ತರ ಪಕ್ಷ ಎಂದೇ ಹೆಸರುವಾಸಿ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲ, ಪಕ್ಷಕ್ಕಾಗಿ ಏನೇ ಮಾಡಬೇಕಾಗಿ ಬಂದರೂ ಬಿಜೆಪಿಯ ತಳಮಟ್ಟದ ಕಾರ್ಯಕರ್ತರ ಪಾತ್ರ, ಅವರ ಸಂಘಟಿತ ಪ್ರಯತ್ನ ಮಹತ್ವದ್ದು. ಅಪಾರ ಸಂಖ್ಯೆಯಲ್ಲಿರುವ ಈ ಕಾರ್ಯಕರ್ತರನ್ನು ಒಗ್ಗೂಡಿಸಿ, ಉತ್ಸಾಹ ತುಂಬಿ, ಪಕ್ಷಕ್ಕಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಶ್ರಮಿಸುವಂತೆ ಮಾಡುವ ಸವಾಲನ್ನೂ ವಿಜಯೇಂದ್ರ ನಿಭಾಯಿಸಬೇಕಾಗಿದೆ. +ಪಕ್ಷದಲ್ಲಿ ಅನೇಕ ಹಿರಿತಲೆಗಳಿದ್ದು, ಪ್ರಭಾವಿಗಳಾಗಿರುವ ಅವರ ಮಾತನ್ನು ಅಷ್ಟು ಸುಲಭದಲ್ಲಿ ತೆಗೆದುಹಾಕಲು ಸಾಧ್ಯವಿಲ್ಲ. ಅಲ್ಲದೆ, ಈಗಾಗಲೇ ಕೆಲವರು ಮಾಜಿ ಸಿಎಂ ಬಿಎಸ್‍ವೈ ಅಕಾರದಲ್ಲಿದ್ದಾಗಲೇ ಬಹಿರಂಗವಾಗಿ ಅಸಮಾಧಾನ ತೋರ್ಪಡಿಸಿದ್ದು, ಅಂಥವರನ್ನು ಬಿಎಸ್‍ವೈ ಪುತ್ರ ನಿಭಾಯಿಸುವುದು ಸುಲಭವಲ್ಲ. ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಯುವ ನಾಯಕರನ್ನೂ ಕಡೆಗಣಿಸುವಂತಿಲ್ಲ. ಹೀಗೆ ಹಿರಿ-ಕಿರಿಯರಿಬ್ಬರನ್ನೂ ಒಟ್ಟಿಗೇ ಸಾಮರಸ್ಯದಲ್ಲಿ ಇರಿಸಿಕೊಂಡು ಪಕ್ಷವನ್ನು ಮುನ್ನಡೆಸುವುದು ಕೂಡ ದೊಡ್ಡ ಸವಾಲೇ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಕಾರ ಕಳೆದುಕೊಂಡಿರುವ ಬಿಜೆಪಿಗೆ ಈ ಲೋಕಸಭಾ ಚುನಾವಣೆಯ ಗೆಲುವು ಮಹತ್ವದ್ದು ಹಾಗೂ ಪ್ರತಿಷ್ಠೆಯ ಸಂಗತಿ ಆಗಿರುವುದರಿಂದ ವಿಜಯೇಂದ್ರ ಅವರಿಗೆ ಸಂಸತ್ ಚುನಾವಣೆ ಸಂಕಟ ಎನಿಸಿದರೂ ಅಚ್ಚರಿ ಏನಿಲ್ಲ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಏನೆಲ್ಲ ತಪ್ಪುಗಳಾದವು, ಹಿನ್ನಡೆಗೆ ಕಾರಣಗಳು ಏನು ಎಂಬುದನ್ನೆಲ್ಲ ತಿಳಿದು ಲೋಕಸಭೆ ಚುನಾವಣೆಯಲ್ಲಿ ಪಕ್ಷ ಭರ್ಜರಿ ಗೆಲವು ಸಾಸುವಂತೆ ಮಾಡುವ ದೊಡ್ಡ ಸವಾಲು ವಿಜಯೇಂದ್ರ ಮುಂದಿದೆ. +ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಗೆದ್ದು ಅಕಾರ ಪಡೆದು, ಗ್ಯಾರಂಟಿಗಳ ಜÁರಿಯಿಂದ ಹಿಗ್ಗಿರುವ ಕಾಂಗ್ರೆಸ್ ಪಕ್ಷ ಈ ಸಲ ಬಿಜೆಪಿಗೆ ಭಾರಿ ಪ್ರತಿಸ್ರ್ಪ ಆಗಿರಲಿದೆ. ಅಕಾರದಲ್ಲಿ ಇರುವುದರಿಂದ ಈಗಾಗಲೇ ಒಂದಷ್ಟು ಆಯಕಟ್ಟಿನ ಜಾಗ-ಕ್ಷೇತ್ರಗಳ ಮೇಲೆ ಹಿಡಿತ ಸಾಸಿರುವ ಕಾಂಗ್ರೆಸ್ ವಿರುದ್ಧ ಕಾರ್ಯತಂತ್ರ ಹೆಣೆಯುವುದು ಕೂಡ ಭಾರಿ ಸಂಗತಿಯೇ. ಅದರಲ್ಲೂ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ಅವರಂಥ ಎರಡು ಪ್ರಬಲ ಸಮುದಾಯದ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮಣಿಸಲು ವಿಜಯೇಂದ್ರ ಕೈಮೀರಿದ ಪ್ರಯತ್ನ ಮಾಡಬೇಕಾಗಿರುವುದು ಮತ್ತೊಂದು ಸವಾಲು. +ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಬಿಜೆಪಿಯ ಚುಕ್ಕಾಣಿಯನ್ನು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಂತಾದವರು ವಿಜಯೇಂದ್ರ ಅವರಿಗೆ ನೀಡಿದ್ದಾರೆ. ಪಕ್ಷದ ವರಿಷ್ಠರು, ಕೇಂದ್ರ ನಾಯಕರು ಇಂಥ ದೊಡ್ಡ ಜವಾಬ್ದಾರಿ ಕೊಟ್ಟಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಅವರು ತಮ್ಮ ಮೇಲೆ ಇರಿಸಿರುವ ವಿಶ್ವಾಸವನ್ನು ಉಳಿಸಿಕೊಳ್ಳಲೇಬೇಕಾದ ಅತ್ಯಂತ ಮಹತ್ವದ ಸವಾಲು ವಿಜಯೇಂದ್ರ ಮುಂದಿದೆ. \ No newline at end of file diff --git a/eesanje/url_46_315_5.txt b/eesanje/url_46_315_5.txt new file mode 100644 index 0000000000000000000000000000000000000000..2cf47072e5a88095e9d09959befbb3879c31c692 --- /dev/null +++ b/eesanje/url_46_315_5.txt @@ -0,0 +1,9 @@ +ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹರಿದು ಬಂದ ಅಭಿನಂದನೆಗಳ ಮಹಾಪೂರ +ಬೆಂಗಳೂರು, ನ 11 (ಪಿಟಿಐ) : ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ ವೈ ವಿಜಯೇಂದ್ರ ಅವರನ್ನು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತಿತರ ನಾಯಕರು ಅಭಿನಂದಿಸಿದ್ದಾರೆ. ಬಿಜೆಪಿಯ ಹೊಸ ಪಾಲುದಾರ ಪಕ್ಷವಾಗಿರುವ ಜೆಡಿಎಸ್ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ವಿಜಯೇಂದ್ರ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. +ಈಗಾಗಲೇ ಯುವ ನಾಯಕರಾಗಿ (ಬಿಜೆಪಿ) ಸಂಘಟನೆಯಲ್ಲಿ ಸಕ್ರಿಯರಾಗಿರುವ ಅವರಿಗೆ ಚಿಕ್ಕವಯಸ್ಸಿನಲ್ಲೇ ಬಹುದೊಡ್ಡ ಜವಾಬ್ದಾರಿ ನೀಡಲಾಗಿದೆ. ತಮಗೆ ವಹಿಸಿರುವ ಈ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಹೀಗಾಗಿ ವಿಜಯೇಂದ್ರ ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. +ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಮೈತ್ರಿಯ ವಿವರಗಳನ್ನು ಉಭಯ ಪಕ್ಷಗಳು ಇನ್ನೂ ಔಪಚಾರಿಕಗೊಳಿಸಬೇಕಾಗಿಲ್ಲ, ಇದರಲ್ಲಿ ವಿಜಯೇಂದ್ರ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.ಯಡಿಯೂರಪ್ಪನವರ ಮಗ ಎಂಬ ಅರ್ಹತೆಯ ಮೇರೆಗೆ ಬಿಜೆಪಿಯ ಹೊಸ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಕಾಲೇಳೆದಿದೆ. +ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಪ್ರಮುಖ ನಾಯಕರು ವಿಜಯೇಂದ್ರ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023) +ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಎಸ್ ಎಂ ಕೃಷ್ಣ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೂಡ ಅವರಿಗೆ ದೂರವಾಣಿ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. +ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಮೊದಲ ಬಾರಿಗೆ ಶಾಸಕರಾಗಿರುವ 47 ವರ್ಷ ವಯಸ್ಸಿನವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಗಳ ಅವಯನ್ನು ಪೂರ್ಣಗೊಳಿಸಿದ ದಕ್ಷಿಣ ಕನ್ನಡದಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಬಂದಿದ್ದಾರೆ. ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಕಳೆದ ವರ್ಷ ವಿಸ್ತರಣೆಯನ್ನು ನೀಡಲಾಗಿತ್ತು. +ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ವಿಜಯೇಂದ್ರ ಅವರು ಸಾಮಾನ್ಯ ಕಾರ್ಯಕರ್ತರಿಂದ ಪಕ್ಷದಲ್ಲಿ ಬೆಳೆದ ಸಂಘಟನಾ ಪುರುಷ ಎಂದು ಕರೆದರು ಮತ್ತು ಅವರ ನೇಮಕವು ಪಕ್ಷಕ್ಕೆ ಹೊಸ ಚೈತನ್ಯವನ್ನು ತಂದಿದೆ.ವಿಜಯೇಂದ್ರ ನೇತೃತ್ವದಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಒಗ್ಗಟ್ಟಿನಿಂದ ಬಲಪಡಿಸಲಾಗುವುದು ಮತ್ತು ಕಾಂಗ್ರೆಸ್ ದುರಾಡಳಿತದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು. \ No newline at end of file diff --git a/eesanje/url_46_315_6.txt b/eesanje/url_46_315_6.txt new file mode 100644 index 0000000000000000000000000000000000000000..3b771457fe1cb1ba74a0c2d22eac6dfbff574883 --- /dev/null +++ b/eesanje/url_46_315_6.txt @@ -0,0 +1,11 @@ +ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಮೇಲ್ಮನವಿ ಅರ್ಜಿ ಹೈಕೋರ್ಟ್ ಅಂಗಳಕ್ಕೆ +ನವದೆಹಲಿ,ನ.10- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿದೆ. +ಪ್ರಕರಣದ ಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ. +ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಡೆಸದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು. ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಸಿಬಿಐ ಪರ ವಾದ ಮಂಡಿಸಿದ ಎಎಸ್‍ಜಿ ಎಸ್.ರಾಜು ನ್ಯಾಯಾಲಯಕ್ಕೆ ತಿಳಿಸಿದ್ದರು. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ್ದರು. ಈ ಪ್ರಕರಣ ಸಂಬಂಧ ಜೂನ್‍ನಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ನಂತರ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. +ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‍ನ ಮಧ್ಯಂತರ ಆದೇಶವನ್ನು ತೆರವು ಮಾಡಲು ಅ.17ರಂದು ನ್ಯಾಯಾಲಯ ನಿರಾಕರಿಸಿತ್ತು.ಏಪ್ರಿಲ್ 2013ರಿಂದ ಏಪ್ರಿಲ್ 2018ರ ನಡುವೆ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಸ್ವಾೀನಕ್ಕೆ ಪಡೆಯಲಾದ ಒಟ್ಟು ಮೌಲ್ಯವು 128 ಕೋಟಿಯಿಂದ 162 ಕೋಟಿಗೆ ಏರಿಕೆಯಾಗಿದೆ. +ಇದು ಸುಮಾರು ಶೇ. 45 ಅಥವಾ ರೂ. 75 ಕೋಟಿಯಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಈಗಲ್ಟನ್ ರೆಸಾರ್ಟ್‍ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. +ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ +ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆ ತಡೆ ಕೋರಿ ಡಿ.ಕೆ ಶಿವಕುಮಾರ್ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಮೊದಲು ತಡೆ ನೀಡಿದ್ದ ಕೋರ್ಟ್ ಇತ್ತಿಚೀಗೆ ತಡೆ ರದ್ದು ಮಾಡಿ ಸಿಬಿಐ ತನಿಖೆಗೆ ಆದೇಶ ನೀಡಿತ್ತು. +ಏನಿದು ಪ್ರಕರಣ?2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. +ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. +ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. \ No newline at end of file diff --git a/eesanje/url_46_315_7.txt b/eesanje/url_46_315_7.txt new file mode 100644 index 0000000000000000000000000000000000000000..ae0d73130d4cb3d8f43ff23947017de6abc78e27 --- /dev/null +++ b/eesanje/url_46_315_7.txt @@ -0,0 +1,6 @@ +ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಸೆರೆ +ಮದ್ದೂರು,ನ.10- ಮೈಸೂರಿನಲ್ಲಿ ನಡೆದ ಯುವ ದಸರಾ ವೇಳೆ ಅಪ್ರಾಪ್ತ ಯುವತಿಯನ್ನು ಪರಿಚಯಿಸಿಕೊಂಡು, ಪುಸಲಾಯಿಸಿ ಲಾಡ್ಜ್‍ಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ವೆಸಗಿದ್ದ ಇಬ್ಬರು ಅಪ್ರಾಪ್ತ ಯುವಕರು ಸೇರಿದಂತೆ ಮೂವರನ್ನು ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. +ಇಬ್ಬರು ಅಪ್ರಾಪ್ತ ಯುವಕರು ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಮತ್ತೊಬ್ಬ ಆರೋಪಿ 19 ವರ್ಷದ ಯುವಕನಾಗಿದ್ದು, ಈತ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಊರಿನಲ್ಲಿದ್ದನು. ಇವರೆಲ್ಲರೂ ಸಂತ್ರಸ್ತೆಯ ಅಕ್ಕಪಕ್ಕದ ಗ್ರಾಮದವರು.ಮೈಸೂರಿನಲ್ಲಿ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮ ವೀಕ್ಷಿಸಲು ಹೋಗಿದ್ದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ತಾಲ್ಲೂಕಿನ ಅಪ್ರಾಪ್ತೆಯನ್ನು ಯುವಕ ಪರಿಚಯಿಸಿಕೊಂಡು ಪ್ರೀತಿಸುವುದಾಗಿ ಪೀಡಿಸಿದ್ದಾನೆ. +ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ +ನಂತರ ಆಕೆಯನ್ನು ಪುಸಲಾಯಿಸಿ ಇಲ್ಲಿನ ಲಾಡ್ಜ್‍ವೊಂದಕ್ಕೆ ಕರೆದೊಯ್ದು ನಂತರ ಇನ್ನಿಬ್ಬರು ಅಪ್ರಾಪ್ತ ಯುವಕರನ್ನು ಕರೆಸಿಕೊಂಡು ಸಾಮೂಹಿಕವಾಗಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಅತ್ಯಾಚಾರದ ವಿಡಿಯೋ ಮಾಡಿಕೊಂಡಿದ್ದ ಕಿರಾತಕರು ಆ ವಿಡಿಯೋವನ್ನು ಆಕೆಗೆ ತೋರಿಸಿ, ನಾವು ಕರೆದಾಗ ಬರಬೇಕೆಂದು ಬೆದರಿಕೆ ಹಾಕಿದ್ದಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಆ ವಿಡಿಯೋವನ್ನು ವೈರಲ್ ಮಾಡುವುದಾಗಿ ಹೆದರಿಸಿದ್ದಾರೆ. +ಅಪ್ರಾಪ್ತೆಯ ಮೊಬೈಲ್‍ಗೂ ಸಹ ವಿಡಿಯೋ ಕಳಿಸಿ ಬೆದರಿಕೆ ಹಾಕಿದ್ದರು. ಇದರಿಂದ ಗಾಬರಿಯಾದ ಸಂತ್ರಸ್ತೆ ತನ್ನ ಪೋಷಕರಿಗೆ ನಡೆದ ವಿಷಯವನ್ನು ತಿಳಿಸಿದ್ದಾಳೆ. ತಕ್ಷಣ ಸಂತ್ರಸ್ತೆಯ ತಂದೆ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಾಲ್ಲೂಕಿನ ಮೂವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_315_8.txt b/eesanje/url_46_315_8.txt new file mode 100644 index 0000000000000000000000000000000000000000..a43190be214b597328b3ea42f06bf48f58b99c2a --- /dev/null +++ b/eesanje/url_46_315_8.txt @@ -0,0 +1,8 @@ +ಸಿಸಿಬಿ ಪೊಲೀಸರ ಕಾರ್ಯಾಚರಣೆ : 10 ಕೋಟಿ ಮೌಲ್ಯದ ಡ್ರಗ್ಸ್ ವಶ +ಬೆಂಗಳೂರು,ನ.10- ನಗರದ ಹೊರವಲ ಯದ ಮನೆಯೊಂದರಲ್ಲಿ ಅಡುಗೆ ಮಾಡುವ ಪ್ರೆಜರ್‍ಕುಕ್ಕರ್ ಬಳಸಿ ಸಿಂಥೆಟಿಕ್ ಡ್ರಗ್ಸ್ ತಯಾರು ಮಾಡಿ ದೇಶ-ವಿದೇಶಗಳಿಗೆ ಸರಬರಾಜು ಮಾಡಿ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 10 ಕೋಟಿ ಮೌಲ್ಯದ ಎಂಡಿಎಂಎ ಮಾದಕವಸ್ತು ಹಾಗೂ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ನೈಜೀರಿಯ ದೇಶದ ಪ್ರಜೆ ಬೆಂಜಮಿನ್(40) ಬಂಧಿತ ಡ್ರಗ್ ಪೆಡ್ಲರ್. ಈತ ಬಿಸ್ನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದನು. ವೀಸಾ ಅವಧಿ ಮುಗಿದಿದ್ದರೂ ಅನಧಿಕೃತವಾಗಿ ನಗರದಲ್ಲಿ ನೆಲೆಸಿದ್ದು,ಬಟ್ಟೆ ವ್ಯಾಪಾರಿ ಎಂದು ಮನೆ ಬಾಡಿಗೆ ಪಡೆದುಕೊಂಡಿದ್ದನು. +ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದೇಶಿ ಮೂಲದ ವ್ಯಕ್ತಿಯೊಬ್ಬ ನಿಷೇಧಿತ ಮಾದಕವಸ್ತು ಮನೋಪರಿಣಾಮಕ ವಸ್ತುವಾದ ಎಂಡಿಎಂಎ ಕ್ರಿಸ್ಟಲ್ ತಯಾರು ಮಾಡಿ ನಗರ ಸೇರಿದಂತೆ ರಾಜ್ಯ ಹಾಗೂ ದೇಶವಿದೇಶಗಳಲ್ಲಿ ಇರುವ ಗಿರಾಕಿಗಳಿಗೆ ಮತ್ತು ಸಬ್ ಪೆಡ್ಲರ್‍ಗಳಿಗೆ ಸರಬರಾಜು ಹಾಗೂ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ. +ರಾಜ್ಯದ 1673 ಸಣ್ಣ ಕೆರೆಗಳಲ್ಲಿ ಭರ್ತಿಯಾಗಿದ್ದು ಕೇವಲ 428 ಮಾತ್ರ +ತಕ್ಷಣ ಖಚಿತ ಮಾಹಿತಿ ಮೇರೆಗೆ ಕೇಂದ್ರ ಅಪರಾಧ ವಿಭಾಗದ ಮಾದಕದ್ರವ್ಯ ನಿಗ್ರಹದ ದಳದ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿಚಾರಣೆಗೊಳಪಡಿಸಿ ಆತ ನೀಡಿದ ಮಾಹಿತಿ ಮೇರೆಗೆ ನಗರದ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತನ್ನ ಮನೆಯಲ್ಲಿ ಕುಕ್ಕರ್ ಬಳಸಿ ಸಿಂಥೆಟಿಕ್ ಡ್ರಗ್ಸ್ ತಯಾರು ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ 10 ಕೋಟಿ ರೂ. ಮೌಲ್ಯದ 5 ಕೆಜಿ ಎಂಡಿಎಂಎ ಮಾದಕವಸ್ತು, ಎಂಡಿಎಂಎ ತಯಾರು ಮಾಡಲು ಬೇಕಾದ ಕಚ್ಚಾ ಪದಾರ್ಥಗಳಾದ ಎಂಎಸ್‍ಎಂ 12.450 ಕೆಜಿ, ಸೋಡಿಯಂ ಹೈಡ್ರಾಕ್ಸೈಡ್ ಕ್ರಿಸ್ಟಲ್ 5 ಕೆಜಿ, ಹೈಡ್ರೋಕ್ಲೋರಿಕ್‍ಆ್ಯಸಿಡ್ 5 ಲೀಟರ್, ಅಸೆಟ್‍ಟೊನ್ 2.5 ಲೀಟರ್ ಹಾಗೂ 5 ಲೀಟರ್ ಕುಕ್ಕರ್, ಸ್ಟವ್, ಗ್ಯಾಸ್ ಸಿಲಿಂಡರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್, 2 ಡಿಜಿಟಲ್ ತೂಕದ ಯಂತ್ರ, ಒಂದು ಎನ್‍ಟ್ರಾಕ್ ದ್ವಿಚಕ್ರ ವಾಹನ ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. +ಆರೋಪಿಯು ಡ್ರಗ್ಸ್ ತಯಾರಿಕೆಗೆ ಬಳಸುವ ಕಚ್ಚಾ ಸಾಮಾಗ್ರಿಗಳನ್ನು ದೆಹಲಿ ಹಾಗೂ ಇನ್ನಿತರೆ ಕಡೆಗಳಿಂದ ತರಿಸಿಕೊಳ್ಳುತ್ತಿದುದ್ದು ವಿಚಾರಣೆಯಿಂದ ಗೊತ್ತಾಗಿದೆ. ಆರೋಪಿ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಹಾಗೂ 14 ಫಾರಿರ್ನರ್ಸ್ ಆಕ್ಟ್‍ನಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ.20ರವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ. +ಪಶ್ಚಿಮ ವಿಭಾಗದ ಅಪರ ಪೊಲೀಸ್ ಆಯುಕ್ತರಾದ ಸತೀಶ್‍ಕುಮಾರ್, ಉಪಪೊಲೀಸ್ ಆಯುಕ್ತರು ಅಪರಾಧ-2 ಶ್ರೀನಿವಾಸ್ ಗೌಡ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಮಾದಕದ್ರವ್ಯ ನಿಗ್ರಹದಳದ ಅಧಿಕಾರಿ ಹಾಗೂ ಸಿಬ್ಬಂದಿ ತಂಡವು ಕಾರ್ಯಾಚರಣೆ ಕೈಗೊಂಡಿರುತ್ತದೆ. \ No newline at end of file diff --git a/eesanje/url_46_315_9.txt b/eesanje/url_46_315_9.txt new file mode 100644 index 0000000000000000000000000000000000000000..2940cb854e9f5d35052aa91945f402b35bf9b516 --- /dev/null +++ b/eesanje/url_46_315_9.txt @@ -0,0 +1,6 @@ +ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಡಿಸಿಎಂಗೆ ದೂರು +ಬೆಂಗಳೂರು,ನ.10- ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಸಚಿವರು ಯಾರಿದ್ದಾರೋ ಗೊತ್ತಿಲ್ಲ ಎಂದು ವಿವಾದಿತ ಹೇಳಿಕೆ ನೀಡಿ, ಗೊಂದಲ ಮೂಡಿಸುತ್ತಿರುವ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ. +ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಧು ಬಂಗಾರಪ್ಪ, ಅಧ್ಯಕ್ಷರ ಬಳಿ ಏನು ಹೇಳಬೇಕೋ ಹೇಳಿದ್ದೇನೆ. ಬಹಿರಂಗವಾಗಿ ಮಾತನಾಡುವುದಿಲ್ಲ ಎಂದಿದ್ದಾರೆ. ಇದೆಲ್ಲ ಪಕ್ಷದ ಆಂತರಿಕ ವಿಚಾರ, ಏನೇ ಇದ್ದರೂ ಪಕ್ಷವೇ ನಿರ್ಣಯ ಕೈಗೊಳ್ಳುತ್ತದೆ, ನನಗೆ ಬೇರೆ ಕೆಲಸ ಕೊಟ್ಟಿದ್ದಾರೆ. ನಾನಾಗಲಿ ಬೇಳೂರಾಗಲಿ ಹುಷಾರಾಗಿ ಮಾತನಾಡುವುದು ಒಳ್ಳೆಯದು. ಬೇಳೂರು ಬಹಿರಂಗ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲಿ ಉತ್ತರ ಕೊಡಬೇಕೋ ಅಲ್ಲಿ ಕೊಡುತ್ತೇನೆ ಎಂದರು. +ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಬೇಟೆಯಾಡಿದ ‘ಅಪರಿಚಿತ’ ಬಂಧೂಕುದಾರಿ +ಹಸ್ತದ ಆಶೀರ್ವಾದ, ಪಕ್ಷದ ಅಂಬ್ರೆಲ್ಲಾ ಅಡಿ ನಾವೆಲ್ಲ ಗೆದ್ದು ಬಂದಿದ್ದೇವೆ. ವೈಯಕ್ತಿಕವಾಗಿ ನಾವು ಯಾರೂ ಗೆದ್ದವರಲ್ಲ, ಹೀಗಾಗಿ ಹೇಗಿರಬೇಕು ಅನ್ನೋದು ಮುಖ್ಯವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಬಹಳ ಮುಖ್ಯ ಎಂದರು.ಅಧ್ಯಕ್ಷರು, ಮುಖ್ಯಮಂತ್ರಿಯವರು ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ. ಅವರ ಮುಂದೆ ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. +ಮಾಧ್ಯಮದ ಮುಂದೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಶಿವಮೊಗ್ಗದಲ್ಲಿ ಈಗಲೂ ಕಾಂಗ್ರೆಸ್ ಪರ ವಾತಾವರಣವಿದೆ. ಮಾಧ್ಯಮದಲ್ಲಿ ಬೇಳೂರುರನ್ನು ಹೆಚ್ಚಾಗಿ ತೋರಿಸಲಾಗುತ್ತದೆ, ಜನ ನೋಡುತ್ತಾರೆ. ಶಿವಮೊಗ್ಗದ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳಬೇಕಿಲ್ಲ. ನಾವು ಸರಿ ಮಾಡಿಕೊಳ್ತೇವೆ, ಪಕ್ಷ ಇದೆ. ಅಲ್ಲಿ ಉತ್ತರ ಕೊಟ್ಟುಕೊಳ್ತೇವೆ ಎಂದರು. \ No newline at end of file diff --git a/eesanje/url_46_316_1.txt b/eesanje/url_46_316_1.txt new file mode 100644 index 0000000000000000000000000000000000000000..32c86adef586fa3ab9f36bef4c62d052dc8158ae --- /dev/null +++ b/eesanje/url_46_316_1.txt @@ -0,0 +1,7 @@ +ರಾಜ್ಯದ 1673 ಸಣ್ಣ ಕೆರೆಗಳಲ್ಲಿ ಭರ್ತಿಯಾಗಿದ್ದು ಕೇವಲ 428 ಮಾತ್ರ +ಬೆಂಗಳೂರು,ನ.10-ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯಿಂದಾಗಿ ರಾಜ್ಯದ 104 ಸಣ್ಣ ಕೆರೆಗಳಿಗೆ ನೀರಿಲ್ಲದೆ ಬತ್ತಿ ಹೋಗಿವೆ. ಅದರಲ್ಲೂ ಕೋಲಾರ ಜಿಲ್ಲೆಯ 31 ಹಾಗೂ ಬೀದರ್ ಜಿಲ್ಲೆಯ 33 ಕೆರೆಗಳಿಗೆ ನೀರಿಲ್ಲ. ರಾಜ್ಯದಲ್ಲಿ ಈ ಎರಡು ಜಿಲ್ಲೆಯಲ್ಲಿ ಹೆಚ್ಚು ಕೆರೆಗಳು ನೀರಿಲ್ಲದೆ ಒಣಗಿವೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನ.4ರವರೆಗೆ ದಕ್ಷಿಣ ಕರ್ನಾಟಕ ಭಾಗದಲ್ಲಿ 48 ಕೆರೆಗಳಿಗೆ ನೀರು ಬಂದಿಲ್ಲ. ಅದೇ ರೀತಿ ಉತ್ತರ ಕರ್ನಾಟಕದ 56 ಕೆರೆಗಳಿಗೆ ನೀರೇ ಬಂದಿಲ್ಲ. ಹೀಗಾಗಿ ರಾಜ್ಯದಲ್ಲಿ ಒಟ್ಟು 104 ಕೆರೆಗಳಿಗೆ ಮುಂಗಾರು ಹಂಗಾಮಿನಲ್ಲಿ ನೀರೇ ಬಂದಿಲ್ಲ. +ರಾಜ್ಯದಲ್ಲಿ 3673 ಕೆರೆಗಳಿದ್ದು, 428 ಕೆರೆಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿವೆ. ಅದರಲ್ಲೂ ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ, ಕೊಪ್ಪಳ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಕೆರೆಗಳಲ್ಲಿ ಹೆಚ್ಚು ನೀರು ಸಂಗ್ರಹವಾಗಿದೆ. +ಬೆಂಗಳೂರಿನಲ್ಲಿ 3 ದಿನ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ +1297 ಕೆರೆಗಳಲ್ಲಿ ಶೇ.30ರಷ್ಟು ನೀರು ಬಂದಿದ್ದರೆ 991 ಕೆರೆಗಳಲ್ಲಿ ಶೇ.50ರಷ್ಟು ನೀರು ಸಂಗ್ರಹವಾಗಿದೆ. 853 ಕೆರೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಸಂಗ್ರಹವಾಗಿದೆ. ದಕ್ಷಿಣ ಕರ್ನಾಟಕದ 165 ಕೆರೆಗಳು ಪೂರ್ಣವಾಗಿ ತುಂಬಿದ್ದರೆ, ಉತ್ತರ ಕರ್ನಾಟಕದ 263 ಕೆರೆಗಳು ತುಂಬಿವೆ. ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಕೆಲವು ಕೆರೆಗಳಿಗೆ ಅಲ್ಪಪ್ರಮಾಣದ ನೀರು ಕೂಡ ಬಂದಿದೆ. +ಮುಂಗಾರು ಮಳೆಯಂತೆ ಹಿಂಗಾರು ಕೂಡ ದುರ್ಬಲಗೊಂಡಿದ್ದು, ರಾಜ್ಯದಲ್ಲಿ ಬರಪರಿಸ್ಥಿತಿ ಮುಂದುವರೆದಿದೆ. ಹೀಗಾಗಿ ಸಣ್ಣಪುಟ್ಟ ಕೆರೆಗಳು ಕೂಡ ಭರ್ತಿಯಾಗುವ ಸಾಧ್ಯತೆ ವಿರಳ. ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ಪ್ರಮುಖ ಜಲಾಶಯಗಳು ಭರ್ತಿಯಾಗಿಲಿಲ್ಲ. ಹೀಗಾಗಿ ನೀರಾವರಿ ಬೆಳೆಗಳಿಗೆ ತೊಂದರೆ ಉಂಟಾಗಿದೆ. \ No newline at end of file diff --git a/eesanje/url_46_316_10.txt b/eesanje/url_46_316_10.txt new file mode 100644 index 0000000000000000000000000000000000000000..2ff293609b536dd8af15352ea543f2cab9c60314 --- /dev/null +++ b/eesanje/url_46_316_10.txt @@ -0,0 +1,10 @@ +ಜನವರಿ 2ನೇ ವಾರದಲ್ಲಿ ಲೋಕಸಭೆ ಚುನಾವಣೆಗೆ ಕೈ ಅಭ್ಯರ್ಥಿಗಳ ಘೋಷಣೆ +ಬೆಂಗಳೂರು, ನ.8- ಲೋಕಸಭೆ ಚುನಾವಣೆಗೆ ಮುಂದಿನ ವರ್ಷದ ಜನವರಿ 2ನೇ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, ಶೇ.75ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. +ಮುಂದಿನ ಒಂದು ವಾರಗಳಲ್ಲಿ ಮಂತ್ರಿಗಳು ಹಾಗೂ ವೀಕ್ಷಕರುಗಳು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸಚಿವರಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಂತರ ನಮ್ಮ ಹೈಕಮಾಂಡ್ ಗೆ ವರದಿ ಸಲ್ಲಿಸಲಿದ್ದಾರೆ ಎಂದರು. +ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಮ್ಮ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಮ್ಮ ಸರ್ಕಾರ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ. ಹೀಗಾಗಿ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ. ನಮ್ಮ ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದರು. +ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ 17,900 ಕೋಟಿ ಹಣವನ್ನು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕೇಂದ್ರದಿಂದ ಸ್ಪಂದನೆ ಸಿಗದಿರುವುದು ದುರದೈವ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದರೂ ಹಾಗೂ 5 ಜನ ಕೇಂದ್ರ ಸಚಿವರಿದ್ದು ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. +ನವೆಂಬರ್ 9ರಂದು ಅರಮನೆ ಮೈದಾನದಲ್ಲಿ ಸೇವಾದಳದ ಶತಮಾನೋತ್ಸವ ಹಾಗೂ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಸೇವಾದಳದ ಅಧ್ಯಕ್ಷರಾದ ಲಾಲ್ ಜಿ ಅವರು ಧ್ವಜಾರೋಹಣ ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ವಹಿಸಿಕೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಚಿವರುಗಳು ಪಕ್ಷದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು. +ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ +ಇದೇ ತಿಂಗಳ 28ರಂದು ಸೇವಾದಳ ನೂರು ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಗಳು ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ. +ಸೇವಾದಳದ ಅಧ್ಯಕ್ಷರಾದ ರಾಮಚಂದ್ರಪ್ಪ ಮಾತನಾಡಿ, 1923ರಲ್ಲಿ ಸೇವಾದಳ ಸ್ಥಾಪನೆಯಾಗಿದ್ದು, ಹರ್ಡಿಕರ್ ಅವರು ಜೈಲಿನಲ್ಲಿ ಈ ಸಂಘಟನೆ ಆರಂಭಿಸಿದರು. ಆರಂಭದಲ್ಲಿ ಹಿಂದುಸ್ಥಾನಿ ಸೇವಾದಳ ಎಂದು ಸ್ಥಾಪನೆಯಾಗಿತ್ತು. ನಂತರ 1930-31ರಲ್ಲಿ ಗಾಂಜಿ, ನೆಹರೂ ಸೇರಿದಂತೆ ಅನೇಕ ನಾಯಕರು ಸೇವಾದಳವನ್ನು ಕಾಂಗ್ರೆಸ್ ಗೆ ವಿಲೀನ ಮಾಡುತ್ತಾರೆ. ಅಲ್ಲಿಂದ ಇಲ್ಲಿಯವರೆಗೂ ಸೇವಾದಳ ಕಾಂಗ್ರೆಸ್ ವಿಭಾಗವಾಗಿ ಸಂಘಟನೆ ಮಾಡಿಕೊಂಡು ಬಂದಿದೆ ಎಂದರು. +ಬ್ರಿಟೀಷರ ಹಿಂಸೆ ತಾಳಲಾರದೆ ಹುಟ್ಟುಕೊಂಡ ಸಂಘಟನೆ ಇದಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಸೇವಾದಳ ಬೆಳೆದುಕೊಂಡು ಬಂದಿದೆ. ನಾನು ಇದರ ಅಧ್ಯಕ್ಷನಾಗಿ 2 ವರ್ಷಗಳಾಗಿದ್ದು, ಈ ಅವಯಲ್ಲಿ ರಾಜ್ಯಮಟ್ಟದ ಜಿಲ್ಲಾಮಟ್ಟದ ಪದಾಕಾರಿಗಳ ನೇಮಕ ಮಾಡಿ ಈ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. \ No newline at end of file diff --git a/eesanje/url_46_316_11.txt b/eesanje/url_46_316_11.txt new file mode 100644 index 0000000000000000000000000000000000000000..6cfb3b823e374a8ac053f507436fd5059c946955 --- /dev/null +++ b/eesanje/url_46_316_11.txt @@ -0,0 +1,9 @@ +ಜೆಡಿಎಸ್ ಬಿಟ್ಟು ಹೋಗುವವ ಶಾಸಕರು ಯಾರೂ ಇಲ್ಲ : ಹೆಚ್ಡಿಕೆ +ಹಾಸನ, ನ.8- ಕಾಂಗ್ರೆಸ್ ಪಕ್ಷದ ಆಮಿಷಗಳಿಗೆ ಒಳಗಾಗಿ ಜೆಡಿಎಸ್ ಬಿಟ್ಟು ಹೋಗುವ ಶಾಸಕರು ಯಾರೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಜೆಡಿಎಸ್ ಶಾಸಕರೊಂದಿಗೆ ಹಾಸನಾಂಬೆ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಶಾಸಕರ ಬಗ್ಗೆ ಅನುಮಾನ ಪಡುವ ಪರಿಸ್ಥಿತಿಯಿಲ್ಲ. ಎಲ್ಲರೂ ಒಂದು ಕುಟುಂಬದ ಸದಸ್ಯರಂತೆ ಇದ್ದೇವೆ. ಪಕ್ಷದಲ್ಲಿ ಅಸಮಾಧಾನಗೊಂಡು ಬಿಟ್ಟು ಹೋಗುವವರು ಯಾರೂ ಇಲ್ಲ. ಆದರೂ ಕಾಂಗ್ರೆಸ್‍ನವರು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆಂದು ಆರೋಪಿಸಿದರು. +ಪದೇಪದೇ ಕಾಂಗ್ರೆಸ್‍ನವರು ಇಂತಹ ಗೊಂದಲದ ಸುದ್ದಿಯನ್ನು ಹರಡುತ್ತಿದ್ದಾರೆ ಇದಕ್ಕೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ . ಎಲ್ಲರೂ ಒಗ್ಗಟ್ಟಾಗಿದ್ದೇವೆ. ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದಲೇ ಸಭೆ ನಡೆಸಿ ಶಾಸಕರ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು. +ರಾಜ್ಯಕ್ಕಾಗಿರುವ ಅನ್ಯಾಯ ಸರಿ ಪಡಿಸಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಹಿತಕ್ಕಾಗಿ ಹೊಂದಾಣಿಕೆ ಹೊರತು ಬೇರೆನೂ ಇಲ್ಲ. ಈ ಹೊಂದಾಣಿಕೆ ಅಧಿಕಾರ, ಚುನಾವಣೆಗೆ ಮಾತ್ರ ಸೀಮಿತವಾಗಿಲ್ಲ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಎಷ್ಟು ಸೀಟು ಗಳಿಸಲಿದೆ ಎಂಬುದು ಮುಖ್ಯವಲ್ಲ. ಜೆಡಿಎಸ್, ಬಿಜೆಪಿ ಸೇರಿ ರಾಜ್ಯದ 28 ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದೇ ನಮ್ಮ ಮೊದಲ ಗುರಿಯಾಗಿದೆ. +ಮುಖ್ಯಮಂತ್ರಿ ನಿವಾಸದಲ್ಲಿ ಉಪಹಾರ ಸಭೆ ನಡೆಸಿ ಕೆಲವು ಮಂತ್ರಿಗಳಿಗೆ ಪಕ್ಷಕ್ಕೆ ಬರುವವರನ್ನು ಕರೆ ಕರಲು ಟಾಸ್ಕ್ ಕೊಟ್ಟಿದ್ದಾರೆ. ಅಲ್ಲದೇ ಉಪಮುಖ್ಯಮಂತ್ರಿಗಳು ಪದೇ ಪದೇ 45 ಮಂದಿ ಬಿಜೆಪಿ, ಜೆಡಿಎಸ್ ಪಕ್ಷದ ಶಾಸಕರು ಕಾಂಗ್ರೆಸ್ ಸೇರುತ್ತಾರೆಂದು ಹೇಳುತ್ತಿದ್ದಾರೆ ಇದನ್ನು ತಡೆಯಲು ಯಾರೂ ಕಸರತ್ತು ಮಾಡುತ್ತಿದ್ದಾರೆಂದು ಪ್ರಶ್ನಿಸಿದರು. +ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ +ಉಪಮುಖ್ಯ ಮಂತ್ರಿಗಳು, ಮುಖ್ಯಮಂತ್ರಿಯಾಗುವುದಾದರೆ ನಮ್ಮ ಪಕ್ಷದ ಶಾಸಕರನ್ನು ಕಳುಹಿಸುವುದಾಗಿ ನಾನೇ ಹೇಳಿದ್ದೇನೆ. ರಾಜ್ಯದ ಜನ ಬಹುಮತ ಕೊಟ್ಟಿದ್ದರು. ಏಕೆ ಇಂತಹ ಕೆಲಸ ಮಾಡಲಾಗುತ್ತಿದೆ. ಪ್ರಾಮಾಣಿಕವಾಗಿ ನಾಡಿನ ಅಭಿವೃದ್ಧಿ ಕೆಲಸ ಮಾಡಲು ಕಾಂಗ್ರೆಸ್ ನಾಯಕರಿಗೆ ಸಲಹೆ ಮಾಡುವುದಾಗಿ ಹೇಳಿದರು. ಬರ ಪರಿಹಾರ ಕೇಳಲು ನಾವ್ಯಾಕೆ ಹೋಗಬೇಕು. 136 ಶಾಸಕರಿರುವ ನೀವು ಪ್ರಧಾನಿಯವರ ಬಳಿಗೆ ಹೋಗಿ ಪರಿಹಾರ ಕೇಳಿ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟರು. +ನಾನು ಬರಿ ಸತ್ಯ ಹೇಳುತ್ತೇನೆಂದು ಎದೆ ಮೇಲೆ ಹಾಕಿಕೊಂಡಿಲ್ಲ. ಸತ್ಯಹರಿಶ್ಚಂದ್ರ ಕಾಡಿಗೆ ಹೋಗುವಾಗ ನಿಮ್ಮ ಮನೆ ಹಿತ್ತಲಿನಿಂದಲೇ ಹೋಗಿದ್ದು ಅಲ್ಲವೇ ಎಂದು ವ್ಯಂಗ್ಯವಾಡಿದರು. ತಾನೊಂದು ಬಗೆದರೆ ದೈವವೊಂದು ಬಗೆಯುತ್ತದೆ ಎಂಬ ಹಾಡಿದೆ. ನಾಡಿನ ಜನ 136 ಶಾಸಕರನ್ನು ಆಯ್ಕೆ ಮಾಡಿ ನಿಮಗೆ ಕೊಟ್ಟಿದ್ದರೂ ಏಕೆ ಆಪರೇಷನ್ ಹಸ್ತ ಮಾಡುತ್ತೀರೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನು ಪ್ರಶ್ನಿಸಿದರು. ಈ ಸರ್ಕಾರ 5 ವರ್ಷ ಇದ್ದರೆ 10 ಲಕ್ಷ ಕೋಟಿ ಸಾಲ ಮಾಡುತ್ತೀರಿ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತಾಗಿದೆ ಗ್ಯಾರಂಟಿ ಯೋಜನೆಗಳು. +ಬರವೀಕ್ಷಣೆ ನೆಪದಲ್ಲಿ ಎಲ್ಲೆಲ್ಲಿ ಸಮರ್ಥ ನಾಯಕರು ಇರುತ್ತಾರೋ, ಅವರನ್ನು ಹುಡುಕಿಕೊಂಡು ಕರೆದುಕೊಂಡು ಬನ್ನಿ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿ.ಟಿ. ದೇವೇಗೌಡರು ಹಾಸನ ಶಾಸಕ ಸ್ವರೂಪ್ ಪ್ರಕಾಶ್ ಸೇರಿದಂತೆ ಪಕ್ಷದ ಶಾಸಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_316_12.txt b/eesanje/url_46_316_12.txt new file mode 100644 index 0000000000000000000000000000000000000000..beb74bb08b8f9ecd8d4ded41aa6b0f19634b53fc --- /dev/null +++ b/eesanje/url_46_316_12.txt @@ -0,0 +1,16 @@ +ಸದ್ದು ಗದ್ದಲವಿಲ್ಲದೆ ನಡೆಯುತ್ತಿದೆಯಾ ಆಪರೇಷನ್ ಕಮಲ..? +ಬೆಂಗಳೂರು, ನ.8- ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಭಾಗವಾಗಿ ಸದ್ದು ಮಾಡುತ್ತಿರುವ ಆಪರೇಷನ್ ಕಮಲ ತೆರೆಮರೆಯಲ್ಲಿ ಚಾಲ್ತಿಯಲ್ಲಿದ್ದು, ಕಾಂಗ್ರೆಸ್‍ನ 50ಕ್ಕೂ ಹೆಚ್ಚು ಮಂದಿ ಅಸಮಧಾನಿತ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. +ಲೋಕಸಭೆ ಚುನಾವಣೆಗೂ ಮುನ್ನವೇ ಸರ್ಕಾರವನ್ನು ಪತನಗೊಳಿಸಲು ಸಂಚು ನಡೆದಿದ್ದು, ಅದಕ್ಕಾಗಿ ಬೇರೆ ಬೇರೆ ರಾಜ್ಯಗಳ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಾಂಗ್ರೆಸ್‍ನ ಅಸಮಧಾನಿತ ಶಾಸಕರನ್ನು ಸಂಪರ್ಕ ಮಾಡುತ್ತಿದ್ದಾರೆ ಎನ್ನಲಾಗಿದೆ. ರಾಜ್ಯ ಬಿಜೆಪಿಯ ಎಲ್ಲಾ ನಾಯಕರು 17 ತಂಡಗಳನ್ನು ಮಾಡಿಕೊಂಡು ಬರ ಅಧ್ಯಯನ ಮಾಡುತ್ತಿರುವುದರಿಂದ ಕಾಂಗ್ರೆಸ್ ನಿರಾಳವಾಗಿದೆ. ಆದರೆ ಬೆಜೆಪಿ ನಾಯಕರು ಬರ ಅಧ್ಯಯನ ನಡೆಸುತ್ತಿದ್ದರೆ, ಒಳಗೊಳಗೆ ಅನಾಮಧೇಯರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯಿದೆ. +ಕಾಂಗ್ರೆಸ್ ಶಾಸಕರ ಬಳಿ ಚರ್ಚೆ ನಡೆಸುವಾಗ ಈಗಾಗಲೇ ತಮ್ಮೊಂದಿಗೆ 50ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ನೀವು ಒಪ್ಪಿಕೊಂಡರೆ 51ನೇಯವರಾಗುತ್ತಿರಾ ? ಮುಂದಿನ ದಿನಗಳಲ್ಲಿ ನಿಮ್ಮ ಭವಿಷ್ಯವನ್ನು ರಕ್ಷಣೆ ಮಾಡುವ ಹೊಣೆಗಾರಿಕೆಯನ್ನು ಬಿಜೆಪಿ ನಿರ್ವಹಣೆ ಮಾಡಲಿದೆ, ಯಾವುದೇ ಅನುಮಾನ ಇಲ್ಲದೆ ನಮ್ಮ ಜೊತೆ ಕೈ ಜೋಡಿಸಿ ಎಂದು ಕಾಂಗ್ರೆಸ್‍ನ ಅತೃಪ್ತ ಹಾಗೂ ಹೊಸ ಶಾಸಕರಿಗೆ ಹೇಳಲಾಗುತ್ತಿದೆ ಎಂಬ ಮಾಹಿತಿ ಇದೆ. +ಮಹಾರಾಷ್ಟ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳ ನಾಯಕರು ರಂಗ ಪ್ರವೇಶ ಮಾಡಿದ್ದಾರೆ. ನೇರವಾಗಿ ದೆಹಲಿಯ ಬಿಜೆಪಿ ನಾಯಕರನ್ನು ಭೇಟಿ ಮಾಡಿಸುವುದಾಗಿ ಹಾಗೂ ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದಾರೆ ಎಂದು ಹೇಳಲಾಗಿದೆ. +ಹಿಂದೆ ಮಹಾರಾಷ್ಟ್ರ ಸರ್ಕಾರ ಪತನಗೊಳಿಸುವಾಗಿ ಶಿವಸೇನೆಯ 47ಕ್ಕೂ ಹೆಚ್ಚು ಶಾಸಕರನ್ನು ಕೇಂದ್ರ ಮೀಸಲು ಪಡೆಯ ರಕ್ಷಣೆಯೊಂದಿಗೆ ಅಸ್ಸಾಂನಲ್ಲಿರಿಸಲಾಗಿತ್ತು. ಉಗ್ರ ಹೋರಾಟಕ್ಕೆ ಹೆಸರಾಗಿದ್ದ ಶಿವಸೇನೆಯೇ ಅಸಹಾಯಕತೆ ಸಿಲುಕಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಲ್ಲಿಯೂ ಅದೇ ಮಾದರಿಯಲ್ಲಿ ಕಾರ್ಯಚರಣೆಯಾಗುತ್ತದೆ, ನಿಮಗೆ ಸಂಪೂರ್ಣ ರಕ್ಷಣೆ ಕೊಡಿಸುತ್ತೇವೆ, ಮಹಾರಾಷ್ಟ್ರ ಅಸ್ಸಾಂ, ಗುಜರಾತ್, ಉತ್ತರ ಪ್ರದೇಶ ಸೇರಿದಂತೆ ನಿಮಗೆ ಬೇಕಾದ ಕಡೆ ಇರಿಸುತ್ತೇವೆ. ಧೈರ್ಯವಾಗಿ ನಮ್ಮ ಜೊತೆ ಬನ್ನಿ ಎಂದು ಹೇಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಕಾಂಗ್ರೆಸ್‍ನಲ್ಲಿ ಕೆಲವೇ ಕೆಲವು ಕುಟುಂಬಗಳ ಪ್ರಾಬಲ್ಯದಿಂದ ಬೇಸರಗೊಂಡಿರುವವರು, ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡಿರುವವರು, ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಾತು ಕೇಳುತ್ತಿಲ್ಲ, ಅಧಿಕಾರಿಗಳ ವರ್ಗಾವಣೆಯಲ್ಲಿ ತಮ್ಮ ಮಾತು ನಡೆಯುತ್ತಿಲ್ಲ ಎಂಬೆಲ್ಲಾ ಆಕ್ಷೇಪಗಳು ಹೊಂದಿರುವವರನ್ನು ಸಂಪರ್ಕಿಸಲಾಗುತ್ತಿದೆ. +ದುಗುಡ ಹುಟ್ಟಿಸಿರುವ ಬೆಳವಣಿಗೆ:ಕಾಂಗ್ರೆಸ್ ನಾಯಕರಿಗೆ ದುಗುಡ ಹುಟ್ಟಿಸಿರುವ ಮತ್ತೊಂದು ಬೆಳವಣಿಗೆ ಎಂದರೆ, ಬಿಜೆಪಿ ನಾಯಕರು ತಮ್ಮನ್ನು ಸಂಪರ್ಕಿಸಿರುವ ಬಗ್ಗೆ ಕೆಲವು ಶಾಸಕರು ಹೇಳಿಕೊಳ್ಳದೆ, ತಮಗೆ ಏನು ಗೋತ್ತಿಲ್ಲ ಎಂಬಂತೆ ತಟಸ್ಥವಾಗಿರುವುದು. +ಬಿಜೆಪಿಯವರು ಚರ್ಚೆ ಮಾಡುವ ವೇಳೆ ಕಾಂಗ್ರೆಸ್ ಶಾಸಕರ ಬಳಿ, ತಾವು ಯಾರನ್ನೆಲ್ಲಾ ಸಂಪರ್ಕ ಮಾಡಿದ್ದೇವೆ ಎಂದು, ಬಿಜೆಪಿ ಜೊತೆ ಕೈಜೋಡಿಸಲು ಯಾರೆಲ್ಲಾ ಸಿದ್ಧರಿದ್ದಾರೆ ಎಂಬ ವಿಚಾರಗಳನ್ನು ಅನೌಪಚಾರಿಕವಾಗಿ ಹೇಳಿಕೊಳ್ಳುತ್ತಿದ್ದಾರೆ. ಪಕ್ಷ ನಿಷ್ಠ ಹಾಗೂ ಪ್ರಾಮಾಣಿಕ ಶಾಸಕರು ಕಾಂಗ್ರೆಸ್ ನಾಯಕರಿಗೆ ಮಾಹಿತಿ ನೀಡುವಾಗ ಬಿಜೆಪಿಯ ಮುಖಂಡರು ತಮ್ಮನ್ನು ಸಂಪರ್ಕ ಮಾಡಿರುವುದು, ಏನೆಲ್ಲಾ ಆಮಿಶವೊಡ್ಡಿದ್ಧಾರೆ ಎಂಬುದನ್ನು ಹೇಳಿಕೊಳ್ಳುತ್ತಿದ್ದಾರೆ. +ಜೊತೆಗೆ ಬಿಜೆಪಿಯವರು ಯಾರನ್ನೆಲ್ಲಾ ಸಂಪರ್ಕ ಮಾಡಿರುವುದಾಗಿ ಹೇಳಿದ್ದಾರೆ ಎಂದನ್ನು ಬಾಯಿ ಬಿಡುತ್ತಿದ್ದಾರೆ. ಪಕ್ಷ ನಿಷ್ಠರು ಹೇಳಿದಂತೆ ಬಿಜೆಪಿಯವರು ಸಂಪರ್ಕ ಮಾಡಿರುವ ಬಗ್ಗೆ ಬಹಳಷ್ಟು ಶಾಸಕರು ಮಾಹಿತಿ ನೀಡದೆ ಇರುವುದು ಕಾಂಗ್ರೆಸ್ ನಾಯಕರ ನಿದ್ದೆ ಗೆಡಿಸಿದೆ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಗೊಂದಲ ಮೂಡಿಸಲು ಹೆಸರುಗಳನ್ನು ತೇಲಿ ಬಿಡುತ್ತಿದ್ದಾರೆಯೇ ? ಅಥವಾ ಅದರಲ್ಲೇನ್ನಾದರೂ ಸತ್ಯಾಂಶ ಇದೆಯೇ ಎಂಬ ಗೊಂದಲ ಕಾಂಗ್ರೆಸಿಗರನ್ನು ಕಾಡುತ್ತಿದೆ. +ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಪರೇಷನ್ ಕಮಲದ ಮೇಲೆ ನಿಗಾವಹಿಸುವಂತೆ ಸಿಐಡಿಗೆ ಆದೇಶಿಸಿದ್ದು, ಬಿಜೆಪಿ ನಾಯಕರ ಚಲನವಲನಗಳ ಮೇಲೆ ನಿಗಾ ವಹಿಸುವ ಜೊತೆಗೆ ಕಾಂಗ್ರೆಸ್ ನಾಯಕರನ್ನು ಯಾರೆಲ್ಲಾ ಸಂಪರ್ಕ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸೂಚಿಸಲಾಗಿದೆ. ಆಪರೇಷನ್ ಕಮಲದ ಪ್ರತಿ ಮಾಹಿತಿ ಮೇಲೂ ಕಣ್ಣಿಡಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಗುಪ್ತಚರ ಇಲಾಖೆಗೆ ತಾಕೀತು ಮಾಡಲಾಗಿದೆ. +ಇತ್ತೀಚಿನ ದಿನಗಳಲ್ಲಿ ವಾಟ್ಸ್‍ಅಪ್ ಕಾಲ್‍ಗಳಲ್ಲಿ ಸಮಾಲೋಚನೆಗಳಾಗುತ್ತಿರುವುದರಿಂದ ಮಾಹಿತಿ ಮೇಲೆ ನಿಗಾವಹಿಸುವುದು ದೊಡ್ಡ ಸಲಾವಾಗಿದೆ. ಆದರೂ ತಮ್ಮದೇ ಆದ ಮೂಲದಿಂದ ಚಲನವಲನಗಳ ಮೇಲೆ ಗುಪ್ತದಳ ನಿಗಾ ಇಟ್ಟಿದ್ದಾರೆ ಎಂದು ಹೇಳಲಾಗಿದೆ. +ಮೂಲಗಳ ಪ್ರಕಾರ 50 ಮಂದಿ ಶಾಸಕರನ್ನು ಬಿಜೆಪಿ ಪರವಾಗಿ ಅನಾಮದೇಯರು ಸಂಪರ್ಕ ಮಾಡಿದ್ದಾರೆ. ಗುತ್ತಿಗೆ ಟೆಂಡರ್, ವರ್ಗಾವಣೆ ಸೇರಿದಂತೆ ಇತರ ವಿಚಾರಗಳ ನೆಪದಲ್ಲಿ ಶಾಸಕ ಬಳಿ ಬರುವ ಅನಾಮದೇಯರು, ಅಲ್ಲಿಂದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರಭಾವಿಗಳಿಗೆ ಕರೆ ಮಾಡಿ, ಕಾಂಗ್ರೆಸ್ ಶಾಸಕರೊಂದಿಗೆ ಮಾತನಾಡಿಸುತ್ತಿದ್ದಾರೆ. ಅನಂತರ ಚರ್ಚೆಗಳು ಮುಂದುವರೆಯುತ್ತಿವೆ ಎಂದು ಹೇಳಲಾಗುತ್ತಿದೆ. +ಕೆಲವು ಶಾಸಕರು ಮಾಹಿತಿ ಹಂಚಿಕೊಳ್ಳುತ್ತಿರುವುದು, ಇನ್ನೂ ಕೆಲವರು ಏನು ಗೋತ್ತಿಲ್ಲದಂತೆ ಮೌನವಾಗಿರುವುದು ಪರಿಸ್ಥಿತಿಯ ಗಂಭೀರತೆಯನ್ನು ಹೆಚ್ಚಿಸಿದೆ. ತಮ್ಮನ್ನು ಭೇಟಿ ಮಾಡಿದವರು ಯಾರು ಎಂಬ ತಲೆಬುಡವೂ ಅರ್ಥವಾಗದೆ ಕೆಲವು ಶಾಸಕರು ಗೊಂದಲದಲ್ಲಿರುವುದಾಗಿಯೂ ಹೇಳಲಾಗುತ್ತಿದೆ. +ಬೆಳಗಾವಿ ಅವೇಶನದಲ್ಲಿ ಆಪರೇಶನ್ ಕಮಲ ಚರ್ಚೆ ಮಾಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಏನಾಗಲಿದೆಯೋ ಗೋತ್ತಿಲ್ಲ, ಅದಕ್ಕೂ ಮುನ್ನಾ ಆಪರೇಷನ್ ಕಮಲ ನಡೆಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಬೇಕು ಎಂಬ ಉಮೇದಿನಲ್ಲಿ ಕಾರ್ಯಚರಣೆ ನಡೆಯುತ್ತಿದೆ. ಕೆಲವು ಶಾಸಕರು ಲೋಕಸಭೆ ಚುನಾವಣೆವರೆಗೂ ತಾವು ಏನನ್ನೂ ಹೇಳುವುದಿಲ್ಲ ಎಂದು ಹೇಳಿ ಕಳುಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_316_2.txt b/eesanje/url_46_316_2.txt new file mode 100644 index 0000000000000000000000000000000000000000..ad2622becc1f5c936ffcc1f0ae72c7906c56faea --- /dev/null +++ b/eesanje/url_46_316_2.txt @@ -0,0 +1,5 @@ +ಒಳ ಉಡುಪುನಲ್ಲಿ ಚಿನ್ನ ಸಾಗಿಸುತ್ತಿದ್ದ ಮಹಿಳೆಯರ ಬಂಧನ, 5 ಕೆಜಿ ಚಿನ್ನ ವಶ +ಬೆಂಗಳೂರು,ನ.10- ಮಹಿಳೆಯರ ಒಳ ಉಡುಪು, ಪರ್ಸ್‍ಗಳಲ್ಲಿ ಅಕ್ರಮವಾಗಿ ಸುಮಾರು ಮೂರು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. +ಕುವೈತ್, ಸಾರ್ಜಾ, ದುಬೈ, ಅಬುದಾಬಿ, ಬ್ಯಾಂಕಾಕ್‍ನಿಂದ ವಿಮಾನದಲ್ಲಿ ಬಂದಿದ್ದ ಆರೋಪಿಗಳು ನಿಲ್ದಾಣದಿಂದ ಹೊರಗೆ ಹೋಗುವಾಗ ಅನುಮಾನಗೊಂಡ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅವರ ಬಳಿ 5 ಕೆಜಿ 315 ಗ್ರಾಂ ತೂಕದ ಚಿನ್ನ ಸಿಕ್ಕಿದೆ. ಕೆಲವನ್ನು ಪೇಸ್ಟ್ ರೂಪದಲ್ಲಿ, ಇನ್ನೂ ಕೆಲವನ್ನು ತಂತಿಯ ರೂಪದಲ್ಲಿ ಅಡಗಿಸಿ ತರಲಾಗಿತ್ತು ಎಂದು ಮೂಲಗಳು ತಿಳಿಸಿವೆ. +ಆರೋಪಿ ಮಹಿಳೆಯೊಬ್ಬರು ಔಷಧ ತುಂಬುವ ಕ್ಯಾಪ್ಸಿಲ್‍ನಲ್ಲಿ ಚಿನ್ನ ತುಂಬಿ ತಂದಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾಮಾನ್ಯ ಪ್ರಯಾಣಿಕರ ಪರ್ಸ್‍ಗಳಲ್ಲೂ ಅರ್ಧ ಕೆಜಿಗೂ ಹೆಚ್ಚು ಚಿನ್ನ ಸಿಕ್ಕಿದೆ. ಅನುಮಾನ ಬಾರದ ರೀತಿಯಲ್ಲಿ ಚಿನ್ನಕ್ಕೆ ಹಲವು ಲೇಪನಗಳನ್ನು ಬಳಸಲಾಗಿದೆ. ಅವುಗಳನ್ನು ಸೂಕ್ಷ್ಮವಾಗಿ ಗಮನಿಸಿದ ನಂತರವೇ ಅದು ಚಿನ್ನ ಎಂಬುದು ತಿಳಿದು ಬಂದಿದೆ. +ಕೇರಳ ವಿಮಾನ ನಿಲ್ದಾಣದ ಮೂಲಕ ಅತಿ ಹೆಚ್ಚು ಚಿನ್ನ ಕಳ್ಳಸಾಗಾಣಿಕೆ ದಂಧೆ ನಡೆಯುತ್ತಿದ್ದು, ಆದರೆ, ಇದು ಈಗ ಬೆಂಗಳೂರಿಗೂ ವ್ಯಾಪಿಸಿದ್ದು, ಕಸ್ಟಮ್ಸ್ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನು ಯಾರಿಗೆ ತಲುಪಿಸಲು ತರಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದ್ದು, ಇವರೆಲ್ಲರೂ ಕಳ್ಳಸಾಗಾಣಿಕೆ ದಾರರ ಏಜೆಂಟ್‍ಗಳು ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_316_3.txt b/eesanje/url_46_316_3.txt new file mode 100644 index 0000000000000000000000000000000000000000..c752fdf0cf8b2809cefc0b41ab98ce2e47f82de8 --- /dev/null +++ b/eesanje/url_46_316_3.txt @@ -0,0 +1,7 @@ +ಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ : ಡಿಕೆಶಿ +ಬೆಂಗಳೂರು, ನ.9- ಮೇಕೆದಾಟು ಯೋಜನೆಯನ್ನು ನಮ್ಮ ಸರ್ಕಾರ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ನಾವು ಶುರು ಮಾಡುತ್ತೇವೆ. +ವಿಚಾರಣೆಗೆ ಸಮುಯ ನಿಗದಿ ಮಾಡುವುದಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ತಿಳಿಸಿದೆ. 2018ರ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿಯನ್ನು ನಿಗದಿ ಮಾಡಿತ್ತು. ಅದನ್ನು ಬಳಸಿಕೊಳ್ಳಲು ನಾವು ಸರ್ಕಾರಿ ಆದೇಶ ಹೊರಡಿಸಿದ್ದೇವೆ. ಮೇಕೆದಾಟು ಯೋಜನೆ ಕುರಿತು ವಿಚಾರಣೆ ನಡೆಯುವ ವೇಳೆ ರಾಜ್ಯಕ್ಕೆ ಎಷ್ಟು ನೀರಿನ ಅಗತ್ಯ ಇದೆ ಎಂದು ಸಮರ್ಥ ವಾದ ಮಂಡಿಸಬೇಕಿದೆ. ಅದಕ್ಕೆ ತಯಾರಿಯಾಗಿ 24 ನೀರು ಬಳಕೆಯ ಆದೇಶ ಹೊರಡಿಸಲಾಗಿದೆ ಎಂದರು. +ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು, ಶಾಸಕರಿಗೆ ಮೊದಲ ಆದ್ಯತೆ ನೀಡಲು ನಿರ್ಧಸಲಾಗಿದೆ ಎಂದರು. +ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ +ಕಾಂಗ್ರೆಸ್ ಪಕ್ಷದಲ್ಲಿ ಯಾರೇಲ್ಲಾ 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೆ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕು ಎಂಬ ಚರ್ಚೆ ಆಗಿದೆ. ಇನ್ನು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ, ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿದ್ದಾರೆ ಎಂದರು. +ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿರುವುದು ಬಹಳ ಸಂತೋಷದ ವಿಷಯ. ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದರು. \ No newline at end of file diff --git a/eesanje/url_46_316_4.txt b/eesanje/url_46_316_4.txt new file mode 100644 index 0000000000000000000000000000000000000000..8e30d9f06d59823b99e33e92fbf1bc152b1c51be --- /dev/null +++ b/eesanje/url_46_316_4.txt @@ -0,0 +1,6 @@ +ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಸಾಧ್ಯತೆ +ಬೆಂಗಳೂರು,ನ.9- ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕಗೊಳ್ಳುವ ಸಾಧ್ಯತೆ ಇದೆ. ಕಳೆದ ವರ್ಷ ಮೇ 31ರಿಂದಲೂ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ವಂದಿತಾ ಶರ್ಮ ಅವರು ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ. +ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹರಿಯಾಣ ಮೂಲದ ರಜನೀಶ್ ಗೋಯಲ್ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ವರ್ಷದ ಜುಲೈವರೆಗೂ ಸೇವಾವ ಹೊಂದಿರುವ ರಜನೀಶ್ ಗೋಯಲ್ ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. +ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ +ಸಾರ್ವಜನಿಕ ಆಡಳಿತದಲ್ಲಿ ಡಾಕ್ಟರೇಟ್ ಪಡೆದಿರುವ ಅವರು 1986ರ ಆ.25ರಂದು ಐಎಎಸ್ ಸೇವೆಗೆ ಸೇರ್ಪಡೆಯಾದರು. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಪ್ರಸ್ತುತ ಐಎಎಸ್ ಅಧಿಕಾರಿಯಾಗಿದ್ದಾರೆ.ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿಗಳಾದ ವಿ.ಮಂಜುಳ, ಅಜಯ್ ಸೇಠ್, ಡಾ.ಇ.ವಿ.ರಮಣರೆಡ್ಡಿ, ಅನಿಲ್‍ಕುಮಾರ್ ಝಾ ಜೇಷ್ಠತಾ ಪಟ್ಟಿಯಲ್ಲಿದ್ದಾರೆ. ಆದರೆ ಸರ್ಕಾರ ರಜನೀಶ್ ಗೋಯಲ್ ಅವರ ಕುರಿತು ಒಲವು ಹೊಂದಿದೆ ಎಂದು ಹೇಳಲಾಗಿದೆ. +ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಪಟ್ಟಂತೆ ನಿರ್ಧಾರ ಕೈಗೊಳ್ಳಲಿರುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡುವ ಸಾಧ್ಯತೆಗಳಿರುವುದಾಗಿ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_316_5.txt b/eesanje/url_46_316_5.txt new file mode 100644 index 0000000000000000000000000000000000000000..2e60fbea656a904335e84d72677b40fb8ac89be8 --- /dev/null +++ b/eesanje/url_46_316_5.txt @@ -0,0 +1,6 @@ +ಡಿಸಿಎಂ ಡಿಕೆಶಿ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರ ಸಭೆ +ಬೆಂಗಳೂರು,ನ.9- ಆಡಳಿತ ಪಕ್ಷದ ಶಾಸಕರಲ್ಲಿ ಇರುವ ಅಸಮಧಾನವನ್ನು ಹೋಗಲಾಡಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಸಕರಿಗೆ ಲಭ್ಯವಾಗುತ್ತಿಲ್ಲ ಎಂಬ ಆಕ್ಷೇಪಗಳು ಇತ್ತೀಚೆಗೆ ಕೇಳಿ ಬರಲಾರಂಭಿಸಿದ್ದವು. ಜಿಲ್ಲೆಗಳ ಮಟ್ಟದಲ್ಲಿ ಸಚಿವರ ಜೊತೆಗೆ ಕೆಲ ಶಾಸಕರು ಅಸಮಧಾನ ಹೊರ ಹಾಕಿದ್ದಾರೆ. +ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶಾಸಕರು, ಸಚಿವರ ಭೇಟಿಗಾಗಿಯೇ ಪ್ರತ್ಯೇಕ ಕೊಠಡಿ ನಿರ್ಮಿಸಿದ್ದಾರೆ. ಡಿ.ಕೆ.ಶಿವಕುಮಾರ್ ತಮ್ಮ ಮನೆಯಲ್ಲಿ ಬೆಳಗ್ಗೆ ಒಂದು ಗಂಟೆ ಕಾಲ ಶಾಸಕರಿಗಾಗಿ ಸಮಯ ಮೀಸಲಿಟ್ಟಿದ್ದಾರೆ. +ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ +ಇಂದು ಬೆಳಗ್ಗೆ ಸದಾಶಿವನಗರದ ನಿವಾಸದಲ್ಲಿ ಸಚಿವರಾದ ಶಿವಾನಂದ್ ಪಾಟೀಲ್, ಸಂತೋಷ್ ಲಾಡ್, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್, ಶಾಸಕರಾದ ಜಿ ಎಸ್ ಪಾಟೀಲ್, ತರೀಕೆರೆ ಶ್ರೀನಿವಾಸ್, ಶಾಂತನಗೌಡ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಮಾನಪ್ಪ ವಜ್ಜಲ್, ಡಾ ರಂಗನಾಥ್, ವಿಧಾನ ಪರಿಷತ್ ಸದಸ್ಯ ಸುನಿಲ್ ಪಾಟೀಲ್, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್, ಶಿವರಾಮ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮತ್ತಿತರರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. +ವರ್ಗಾವಣೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಶಾಸಕರ ಅಹವಾಲುಗಳನ್ನು ಡಿ.ಕೆ.ಶಿವಕುಮಾರ್ ಅಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಲೋಕಸಭೆ ಚುನಾವಣೆಗ ತಯಾರಿಗಳನ್ನು ನಡೆಸುವಂತೆಯೂ ಶಾಸಕರಿಗೆ ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_316_6.txt b/eesanje/url_46_316_6.txt new file mode 100644 index 0000000000000000000000000000000000000000..f012408051d1babff4d961ade22367e7c40e4737 --- /dev/null +++ b/eesanje/url_46_316_6.txt @@ -0,0 +1,7 @@ +ಮುಗಿಯದ `ಕೈ’ ಗೊಂದಲ : ಜಾರಕಿಹೊಳಿ ಸಮಾಧಾನಕ್ಕೆ ತೆರೆಮರೆ ಕಸರತ್ತು +ಬೆಂಗಳೂರು,ನ.9- ಸರ್ಕಾರದಲ್ಲಿ ಎಲ್ಲವೂ ಸುಗಮವಾಗಿದೆ ಎಂದು ಹೇಳುತ್ತಲೇ ಒಬ್ಬರಾದ ನಂತರ ಒಬ್ಬರಂತೆ ಬೆಳಗಾವಿಯ ಸಾಹುಕಾರರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಿನ್ನೆ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ. +ಒಂದೆಡೆ ಆಪರೇಷನ್ ಕಮಲ ಚಾಲ್ತಿಯಲ್ಲಿದೆ. ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಸಮಸ್ಯೆಗಳಿರುತ್ತವೆ, ಬಗೆಹರಿಯುತ್ತವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳುತ್ತಾರೆ. ಮತ್ತೊಂದೆಡೆ ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರಿಸ್ಥಿತಿಯನ್ನು ಸರಿದೂಗಿಸುವ ಪ್ರಯತ್ನ ಮಾಡುತ್ತಿದ್ದಾರೆ. +ಎರಡು ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏಕಾಏಕಿ ಸತೀಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದರು. ಎಲ್ಲವೂ ಸರಿ ಇದೆ ಎಂದು ಹೇಳುತ್ತಲೇ ತೆರೆಮರೆಯಲ್ಲಿ ಸಾಕಷ್ಟು ಗೊಂದಲಗಳನ್ನು ಕಾಂಗ್ರೆಸ್ ತೋರಿಸಿಕೊಳ್ಳುತ್ತಿದೆ. ಸತೀಶ್ ಜಾರಕಿಹೊಳಿಯವರು ತಮ್ಮ ಕುಟುಂಬದ ಸದಸ್ಯರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ತಮ್ಮ ಪುತ್ರನಿಗೆ ಚುನಾವಣೆಯಲ್ಲಿ ಸ್ರ್ಪಸಲು ಅವಕಾಶ ನೀಡಬೇಕೆಂದು ಪ್ರಸ್ತಾವನೆ ಮುಂದಿಡುವ ಮೂಲಕ ಪೈಪೋಟಿಗಿಳಿದಿದ್ದಾರೆ ಎಂದು ಹೇಳಲಾಗಿದೆ. +ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ +ಜಾರಕಿಹೊಳಿ ಕುಟುಂಬದ ಜೊತೆ ಲಕ್ಷ್ಮಿಹೆಬ್ಬಾಳ್ಕರ್ ಪೈಪೋಟಿ ನಡೆಸುತ್ತಿರುವುದು ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ಏರಿಳಿತಗಳಿಗೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ನಡೆಸುತ್ತಿರುವುದು ಕೂಡ ಬೆಂಕಿಗೆ ತುಪ್ಪ ಸುರಿದಂತಾಗಿವೆ ಎಂಬ ವ್ಯಾಖ್ಯಾನಗಳಿವೆ. +ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_316_7.txt b/eesanje/url_46_316_7.txt new file mode 100644 index 0000000000000000000000000000000000000000..f03eae1da757c8a33a6ffb3bdbb5c5e36d779fd2 --- /dev/null +++ b/eesanje/url_46_316_7.txt @@ -0,0 +1,7 @@ +ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ಪರಿವರ್ತನೆಗೆ ಸಂಶೋಧನೆ ಅಗತ್ಯ : ಸಿಎಂ +ಬೆಂಗಳೂರು, ನ.9- ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ಪರಿವರ್ತನೆಯಿಂದ ಮತ್ತಷ್ಟು ಸುಧಾರಣೆ ತರುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆಯಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ನಗರದ ಯಲಹಂಕದಲ್ಲಿ ನಿರ್ಮಿಸಲಾಗಿರುವ ಪಿಲಿಪ್ಸ್‍ನ ಸಂಶೋಧನಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಸುಲಭ ವ್ಯವಹಾರಕ್ಕೆ ಪೂರಕ ವಾತವರಣ ಹೊಂದಿರುವ ರಾಜ್ಯಗಳಲ್ಲಿ ಮುಂಚೂಣಿಯಲ್ಲಿದೆ ಎಂದರು. +ಬೆಂಗಳೂರಿನ ಪಿಲಿಪ್ಸ್ ಸಂಶೋಧನಾ ಕೇಂದ್ರ ಆರೋಗ್ಯ ಕ್ಷೇತ್ರದ ಡಿಜಿಟಲ್ ಶಕ್ತಿ ಕೇಂದ್ರವಾಗಿದೆ. ದೇಶದಲ್ಲೇ ಆರೋಗ್ಯ ಕಾಳಜಿಲ್ಲಿ ಮುಂಚೂಣಿ ಸ್ಥಾನದಲ್ಲಿರುವ ಈ ಸಂಸ್ಥೆ, ಬೆಂಗಳೂರಿನಲ್ಲಿ 6.50 ಲಕ್ಷ ಚದುರ ಅಡಿ ಜಾಗದಲ್ಲಿ ಅಸ್ತಿತ್ವದಲ್ಲಿದ್ದು, ಐದು ಸಾವಿರ ಜನ ಕೆಲಸ ಮಾಡುತ್ತಿದ್ದಾರೆ. ಕಳೆದ 27 ವರ್ಷಗಳಿಂದಲೂ ಕರ್ನಾಟಕದಲ್ಲಿ ಪೂರಕ ವಾತಾವಣ ನಿರ್ಮಿಸುವಲ್ಲಿ ಪ್ರಧಾನ ಪಾತ್ರ ವಹಿಸಿದೆ ಎಂದರು. +ಜನರ ಆರೋಗ್ಯ ಹಾಗೂ ಕ್ಷೇಮಕ್ಕೆ ಡಿಜಿಟಲ್ ಪರಿವರ್ತನೆ ನೆರವಾಗಲಿದೆ. ರೋಗಿಗಳ ಅನುಭವ ಸುಧಾರಣೆ, ಉತ್ತಮ ಫಲಿತಾಂಶ, ವೆಚ್ಚ ತಗ್ಗಿಸುವಿಕೆ ವಲಯಗಳಲ್ಲಿ ಅನ್ವೇಷಣೆಗಳು ನಡೆಯಬೇಕಿದೆ. ಭಾರತೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಬಯಾಲಾಜಿಕಲ್ ಸೈನ್ಸ್, ರಾಷ್ಟ್ರೀಯ ಮಾನಸಿಕ ಆರೋಗ್ಯ ಕೇಂದ್ರ ಸೇರಿದಂತೆ ರಾಜ್ಯದಲ್ಲಿ ಹಲವು ವೈದ್ಯಕೀಯ ಸಂಸ್ಥೆಗಳಿವೆ. ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರುವ ನವೋದ್ಯಮಗಳಿಗೆ ಪೂರಕ ವಾತವರಣವೂ ಇದೆ. ಜೀವನ ಸುಧಾರಣೆ, ಡಿಜಿಟಲ್ ಆರೋಗ್ಯ, ಅಮೂಲ್ಯ ಔಷಧಿಗಳ ಸಂಶೋಧನೆ ಸೇರಿದಂತೆ ಸಂಶೋಧನೆಗಳು ಹೆಚ್ಚಾಗಬೇಕು ಎಂದು ಸಲಹೆ ನೀಡಿದರು. +ಹೃದಯಘಾತದಿಂದ ಬಚಾವ್ ಮಾಡಿದ ಸ್ಮಾರ್ಟ್ ವಾಚ್‍..! +ರಾಜ್ಯ ಸರ್ಕಾರ ಜೈವಿಕ ತಂತ್ರಜ್ಞಾನ ಸೇರಿದಂತೆ ಅನೇಕ ನೀತಿಗಳನ್ನು ಜಾರಿಗೆ ತರುವ ಮೂಲಕ ಆಧುನಿಕ ವಾತಾವರಣ ನಿರ್ಮಿಸಿದೆ. ದೇಶಿಯ ಹಾಗೂ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಗುರಿ ತಲುಪಲು ಗಮನ ನೀಡಿದೆ. ಅದಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸೃಷ್ಟಿಸಲಾಗುತ್ತಿದೆ. . 2022ರಲ್ಲಿ ದೇಶದಲ್ಲಿ ಸುಲಭ ವ್ಯವಹಾರಿಕ ವಾತಾವರಣದ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಕಾಲಕಾಲಕ್ಕೆ ನೀತಿ, ನಿರೂಪಣೆಗಳ ಮೂಲಕ ಬೆಂಬಲ ಮುಂದುವರೆಸಲಾಗಿದೆ ಎಂದರು. +2023ರಲ್ಲಿ ನಡೆಯುವ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಯವರು ಉದ್ಯಮಿಗಳಿಗೆ ಕರೆ ನೀಡಿದರು. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_316_8.txt b/eesanje/url_46_316_8.txt new file mode 100644 index 0000000000000000000000000000000000000000..95b44ba46ce5a6e81832da71c470e92fe8b0f14d --- /dev/null +++ b/eesanje/url_46_316_8.txt @@ -0,0 +1,8 @@ +ಆರ್ಯುವೇದ ಪ್ರಚುರಪಡಿಸಲು ಜನಜಾಗೃತಿ ಶಿಬಿರ +ಬೆಂಗಳೂರು,ನ.9- ಪ್ರಧಾನಿ ನರೇಂದ್ರಮೋದಿ ಅವರ ಆಶಯದಂತೆ ಆರ್ಯುವೇದ ಪದ್ದತಿಯನ್ನು ಇನ್ನಷ್ಟು ಪ್ರಚುರಪಡಿಸುವ ನಿಟ್ಟಿನಲ್ಲಿ ಆಯುಷ್ ಸಚಿವಾಲಯವು ಹಲವಾರು ಜನಜಾಗೃತಿ ಶಿಬಿರಗಳನ್ನು ಆಯೋಜಿಸಿ ಇದರ ಮಹತ್ವವನ್ನು ಸಾರುವಲ್ಲಿ ಯಶಸ್ವಿಯಾಗಿದೆ.ಕಳೆದ 2016ರಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯ ನ.10ರಂದು ಆರ್ಯುವೇದ ದಿನಾಚರಣೆಯನ್ನು ಹಮ್ಮಿಕೊಳ್ಳುತ್ತದೆ. ಆರ್ಯುವೇದ ಪದ್ದತಿಯಿಂದ ಜನರಿಗೆ ಆಗಬಹುದಾದ ಅನುಕೂಲಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತದೆ. +ಸಂಸ್ಥೆಯಲ್ಲಿ ಲಭ್ಯವಿರುವ ಉಚಿತ ಆರೋಗ್ಯ ಸೇವೆಗಳನ್ನು ಉಪಯೋಗಿಸಿಕೊಳ್ಳುವಂತೆ ಕೇಂದ್ರಿಯ ಆಯುರ್ವೇದ ಸಂಶೋಧನಾ ಸಂಸ್ಥೆಯ (ಆಯುಷ್ ಸಚಿವಾಲಯ, ಭಾರತ ಸರಕಾರ) ಸಹಾಯಕ ನಿರ್ದೇಶಕರಾದ ಡಾ. ಸುಲೋಚನಾ ಭಟ್ಟ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. +ದೇಶದಾದ್ಯಂತ ಆಯುರ್ವೇದಕ್ಕಾಗಿ ಓಟ 8ನೇ ಆಯುರ್ವೇದ ದಿನಾಚರಣೆಯನ್ನು ರಾಜ್ಯದಲ್ಲೂ ನವೆಂಬರ್ ತಿಂಗಳಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಆಯುರ್ವೇದ ದಿನವನ್ನು ಹೆಚ್ಚು ಅರ್ಥಪೂರ್ಣವಾಗಿಸುವ ಆಚರಿಸಲು ಸಹಕರಿಸಿದ ಕೇಂದ್ರಿಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಎಲ್ಲ ಸಿಬ್ಬಂದಿವರ್ಗಕ್ಕೂ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ಹೇಳಿದ್ದಾರೆ. +ಕಾರ್ಯಕ್ರಮದಲ್ಲಿ ಪ್ರದರ್ಶನ ಮತ್ತು ಸಣ್ಣ -ಎಕ್ಸ್ ಪೋ, ದೇಶಾದ್ಯಂತ ವೈದ್ಯಕೀಯ ಮತ್ತು ಸ್ವಾಸ್ಥ್ಯ ಶಿಬಿರಗಳು, ಸಾರ್ವಜನಿಕ ಜಾಗೃತಿ ಉಪನ್ಯಾಸಗಳು, ಸಾಮಾನ್ಯ ಔಷೀಯ ಸಸ್ಯಗಳ ವಿತರಣೆ, ಪಾರಂಪರಿಕ ಸ್ಥಳಗಳಲ್ಲಿ ಎಲ್‍ಇಡಿ ಪ್ರದರ್ಶನ (ವಿಷಯಗಳನ್ನು ಆಯುಷ್ ಸಚಿವಾಲಯ ಒದಗಿಸುವುದು), ಶಾಲಾ ಸಂಪರ್ಕ ಕಾರ್ಯಕ್ರಮಗಳು, ಅಂಗನವಾಡಿಗಳ ಒಳಗೊಳ್ಳುವಿಕೆ, ಆಯುರ್ವೇದ ಪೋಷಣೆಯನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದೊಂದಿಗೆ ಜೋಡಿಸುವುದು, ಆಯುಷ್ ಕ್ಯಾಂಪೇನ್ ಪೋರ್ಟಲ್‍ನಲ್ಲಿ ರಸಪ್ರಶ್ನೆ ಸ್ಪರ್ಧೆಗಳು, ಸಮುದಾಯ ಸೇವಾ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು / ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ತೊಡಗಿಸಿಕೊಳ್ಳಲಾಗಿತ್ತು. +ಆಯುರ್ವೇದದ ಬಳಕೆಗೆ ಸಂಬಂಸಿದಂತೆ ಆನ್‍ಲೈನ್ ಪೋರ್ಟಲ್‍ಗಳ ಮೂಲಕ ಪ್ರಕೃತಿಮೌಲ್ಯಮಾಪನ ಮತ್ತು ಸ್ವಾಸ್ಥ್ಯ ಮೌಲ್ಯಮಾಪನ, ಕೃಷಿ ವಿಶ್ವವಿದ್ಯಾನಿಲಯಗಳು ಇತ್ಯಾದಿ ಸೇರಿದಂತೆ ಇತರ ಅನುಷ್ಠಾನ ಸಂಸ್ಥೆಗಳ ಮೂಲಕ ಸಸ್ಯಗಳ ಔಷೀಯ ಮತ್ತು ಆರ್ಥಿಕ ಮËಲ್ಯದ ಕುರಿತು ಜಾಗೃತಿಕಾರ್ಯಕ್ರಮಗಳನ್ನು ನಡೆಸಲಾಗಿದೆ. ಚಿತ್ರಕಲೆ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಆಯುರ್ವೇದ ಪಾಕವಿಧಾನಗಳ ಜ್ವಾಲೆಯಿಲ್ಲದ ಅಡುಗೆ, ಜಿಂಗಲ್, ಘೋಷಣೆ, ಪೋಸ್ಟರ್ , ಕಿರು ವಿಡಿಯೋ ಚಿತ್ರ ಸ್ಪರ್ಧೆ, ಪ್ರಬಂಧ, ಔಷೀಯ ಸಸ್ಯ ಸಂಬಂತ ಸ್ಪರ್ಧೆ ಮತ್ತು ಚರ್ಚಾ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. +ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ, ಗಣ್ಯ ವ್ಯಕ್ತಿಗಳಿಂದ ವೀಡಿಯೊ ಸಂದೇಶಗಳು, ಆಯುರ್ವೇದದ ಮೇಲೆ ಮಾಹಿತಿ ಪತ್ರಗಳ ಪ್ರಸರಣ, ಆಕಾಶವಾಣಿ /ಟಿವಿ ಸಂದೇಶಗಳು , ಕಿರುಚಿತ್ರಗಳು/ ಜಾಹಿರಾತು ಫಲಕಗಳು / ಎಲ್‍ಇಡಿ ಪ್ರದರ್ಶಕಗಳು / ಯೂಟ್ಯೂಬ್ ದೃಶ್ಯ ಸಂದೇಶಗಳು /ಪತ್ರಿಕಾ ಜಾಹೀರಾತುಗಳು, ಆಯುರ್ವೇದದಲ್ಲಿ ರೇಡಿಯೋ ಮತ್ತು ಟಿವಿ ವಿಚಾರವಿನಿಮಯ ಕಾರ್ಯಕ್ರಮಗಳು, +ಆಯುರ್ವೇದ ದಿನದಂದು ಇ-ಕಿಟ್ ಪ್ರಸಾರ, ಒಣ ಭೂಮಿಗೆ ಸೂಕ್ತವಾದ ಔಷೀಧಿಯ ಸಸ್ಯಗಳನ್ನು ಒಳಗೊಂಡಂತೆ (ರಾಜ್ಯವಾರು) ಕೃಷಿಗೆ ಸೂಕ್ತವಾದ ಔಷೀಯ ಸಸ್ಯಗಳ ಪಟ್ಟಿಯ ಪ್ರಸರಣ, ರಾಷ್ಟ್ರೀಯ ಔಷೀಧಿಯ ಸಸ್ಯ ಮಂಡಳಿ ಅಭಿವೃದ್ಧಿಪಡಿಸಿರುವ ಕೃಷಿ-ತಂತ್ರಜ್ಞಾನಗಳ ಪ್ರಸರಣ, ವಿವಿಧ ಪಾಲುದಾರರು, ರೈತ ಉತ್ಪಾದಕರ ಸಂಸ್ಥೆಗಳು, ಇತ್ಯಾದಿಗಳೊಂದಿಗೆ ಔಷೀಯ ಸಸ್ಯಗಳು/ ಇ-ಚರಕ್‍ಗಳ ಮಾರುಕಟ್ಟೆಯ ಅರಿವು ಮೂಡಿಸುವಿಕೆ ಮತ್ತು ರೈತರಲ್ಲಿ ಉತ್ತಮ ಕೃಷಿ ಪದ್ಧತಿ (ಜಿಎಪಿ) ಮತ್ತು ಉತ್ತಮ ಕ್ಷೇತ್ರ ಸಂಗ್ರಹ ಪದ್ಧತಿಗಳ (ಜಿಎಫ್‍ಸಿಪಿ) ಪರಿಕಲ್ಪನೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು. \ No newline at end of file diff --git a/eesanje/url_46_316_9.txt b/eesanje/url_46_316_9.txt new file mode 100644 index 0000000000000000000000000000000000000000..3c3cf58087b82deba07d0b8809f2542422e0947e --- /dev/null +++ b/eesanje/url_46_316_9.txt @@ -0,0 +1,7 @@ +ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ರೂ. ಅವ್ಯವಹಾರ: ಪ್ರಧಾನಿಗೆ ದೂರು ಸಲ್ಲಿಕೆ +ಬೆಂಗಳೂರು, ನ.8- ಬಿಬಿಎಂಪಿ ಯಲ್ಲಿ ನಡೆದಿದೆ ಎನ್ನಲಾದ 10 ಸಾವಿರ ಕೋಟಿ ರೂ.ಗಳ ಬಿಗ್ ಸ್ಕ್ಯಾಮ್ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ದೂರು ನೀಡಲಾಗಿದೆ. ಬಿಬಿಎಂಪಿಯಲ್ಲಿ ಅಧಿಕಾರಿಗಳು ಬ್ರಹ್ಮಾಂಡ ಭ್ರಷ್ಟಾಚಾರ ನಡೆಸುತ್ತಿ ದ್ದಾರೆ ಆದರೂ ಸಂಬಂಧಪಟ್ಟವರು ಅವರ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದರಿಂದ ಈ ವಿಚಾರದಲ್ಲಿ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಎಂಬುವರು ಪ್ರಧಾನಿ ಕಾರ್ಯಲಯಕ್ಕೆ ಪತ್ರ ಬರೆದಿದ್ದಾರೆ. +ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ +ಬೆಂಗಳೂರಿನಲ್ಲಿ ರಾಜಕಾಲುವೆ ನಿರ್ವಹಣೆ ನೆಪದಲ್ಲಿ ಹಣ ದುರು ಪಯೋಗದ ಮೆಗಾ ಸ್ಕ್ಯಾಮ್ ಬಗ್ಗೆ ಮೋದಿಯಂಗಳಕ್ಕೆ ದೂರು ಸಲ್ಲಿಸಲಾಗಿದೆ. ಕಳೆದ 10 ವರ್ಷ ದಿಂದ ಬಿಬಿಎಂಪಿಯಲ್ಲಿ ರಾಜ ಕಾಲುವೆ ದುರಸ್ತಿ, ನಿರ್ವಹಣೆ ಹೆಸರಲ್ಲಿ 10 ಸಾವಿರ ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಪ್ರಧಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ವೀರೇಶ್ ತಿಳಿಸಿದ್ದಾರೆ. +ಹತ್ತು ಸಾವಿರ ಕೋಟಿ ಹಣ ವಿನಿಯೋಗ ಮಾಡಿ ಅಭಿವೃದ್ಧಿ ಕಾರ್ಯ ನಡೆಸಿದ್ದರೆ ಒಂದು ಸಣ್ಣ ಮಳೆಗೆ ನಗರ ಅಧ್ವಾನಾವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕಾಲುವೆ ನಿರ್ವಹಣೆಗಾಗಿ ಕೋಟಿ ಕೋಟಿ ಹಣ ಮೀಸಲಿಡುತ್ತವೆ ಆದರೆ, ಹಣ ವಿನಿಯೋಗವಾಗುತ್ತಿಲ್ಲ ಬಿಬಿಎಂಪಿಯ ಈ ಕರ್ಮಕಾಂಡದ ಬಗ್ಗೆ ಈಗಾಗಲೇ ಸಿಎಜಿ ರಿಪೋರ್ಟ್ ನಲ್ಲಿಯೂ ಬಹಿರಂಗಗೊಂಡಿದೆ ಎಂದು ಅವರು ಮಾಹಿತಿ ನೀಡಿದರು. +ಸಾವಿರಾರು ಕೋಟಿ ರೂ.ಗಳ ಈ ಹಗರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರ್ಕಾರ ಇಡಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಬಿಬಿಎಂಪಿಯಲ್ಲಿ ನಡೆಯುತ್ತಿ ರುವ ಕಾಮಗಾರಿಗಳ ಬಗ್ಗೆ ವಿಶೇಷ ತನಿಖಾ ಸಂಸ್ಥೆ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ಎಸ್‍ಐಟಿ ಅಕಾರಿಗಳಿಗೆ ದೂರು ನೀಡಬಹುದು ಆದರೂ ಕೆಲವರು ಪ್ರಧಾನ ಮಂತ್ರಿಗಳಿಗೆ ದೂರು ನೀಡಿದ್ದಾರೆ. +ಅವರು ಏನು ದೂರು ನೀಡಿದ್ದಾರೆ ಎನ್ನುವುದು ನಮಗೆ ತಿಳಿದಿಲ್ಲ. ಪ್ರಧಾನಿ ಕಾರ್ಯಲಯದಿಂದ ಬರುವ ಆದೇಶದಂತೆ ಮುಂದಿನ ಕ್ರಮ ವಹಿಸಲಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. \ No newline at end of file diff --git a/eesanje/url_46_317_1.txt b/eesanje/url_46_317_1.txt new file mode 100644 index 0000000000000000000000000000000000000000..d0457a706d335697f5457ea946c8e0f72fd4346f --- /dev/null +++ b/eesanje/url_46_317_1.txt @@ -0,0 +1,5 @@ +ಪೋಕ್ಸೋ ಪ್ರಕರಣದಲ್ಲಿ ಬಂಧನದಲ್ಲಿದ್ದ ಮುರುಘಾ ಶರಣರಿಗೆ ಜಾಮೀನು ಮಂಜೂರು +ಬೆಂಗಳೂರು,ನ.8- ಮಹತ್ವದ ಬೆಳವಣಿಗೆಯಲ್ಲಿ ಮುರುಘ ಮಠದ ಡಾ. ಶ್ರೀ ಶಿವಮೂರ್ತಿ ಮುರುಘ ಶರಣರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪೋಕ್ಸೊ ಪ್ರಕರಣದಲ್ಲಿ ಬಂಧಿಯಾಗಿದ್ದ ಮುರುಘ ಮಠದ ಶ್ರೀಗಳಿಗೆ ಹೈಕೋರ್ಟ್ ಇಂದು ಷರತ್ತು ಬದ್ದ ಮಧ್ಯಂತರ ಜಾಮೀನು ನೀಡಿದೆ. +ಜಾಮೀನು ಪಡೆದ ನಂತರ ಅವರು ಯಾವುದೇ ಕಾರಣಕ್ಕೂ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ ಮತ್ತು ಸಾಕ್ಷಿ ನಾಶ ಮಾಡುವಂತಹ ಪ್ರಕರಣ ಕಂಡು ಬಂದಲ್ಲಿ ಜಾಮೀನು ರದ್ದುಗೊಳ್ಳಲಿದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ. +ಮಾನವಕಳ್ಳ ಸಾಗಾಣಿಕೆ ದಂಧೆ : ಬೆಂಗಳೂರು ಸೇರಿ ದೇಶದ ಹಲವೆಡೆ ದಾಳಿ +ಪ್ರಸ್ತುತ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದ್ದು, ಇನ್ನೊಂದು ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಅವರು ಜೈಲಿನಿಂದ ಬಿಡುಗಡೆಯಾಗುವುದು ಅನುಮಾನ ಎನ್ನಲಾಗಿದೆ. ಪಾಸ್ ಪೋರ್ಟ್ ವಶಕ್ಕೆ ನೀಡುವುದರ ಜೊತೆಗೆ ಒಟ್ಟು ಏಳು ಷರತ್ತುಗಳನ್ನ ನ್ಯಾಯಾಲಯ ವಿಧಿಸಿದೆ. ಸದ್ಯದಲ್ಲಿಯೇ ಮೊತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳ ಪರವಾಗಿ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ \ No newline at end of file diff --git a/eesanje/url_46_317_10.txt b/eesanje/url_46_317_10.txt new file mode 100644 index 0000000000000000000000000000000000000000..aa86aee1b9c5ac5ea1a262b047b417cf73d110c0 --- /dev/null +++ b/eesanje/url_46_317_10.txt @@ -0,0 +1,9 @@ +ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಕೆ +ಬೆಂಗಳೂರು,ನ.7- ಕಳೆದ ನಾಲ್ಕೈದು ದಿನಗಳಿಂದ ಚೇತರಿಕೆ ಕಂಡಿರುವ ಹಿಂಗಾರು ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾಗಿದ್ದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ. +ಬೆಂಗಳೂರಿನ ಜಕ್ಕೂರಿನಲ್ಲಿ 164 ಮಿ.ಮೀನಷ್ಟು ಭಾರೀ ಮಳೆಯಾಗಿದೆ. ಉತ್ತರಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲೂ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. + : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ +ನಿನ್ನೆ ಸಂಜೆ ಆರಂಭವಾದ ಮಳೆ ತಡರಾತ್ರಿಯವರೆಗೂ ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿದಿದೆ. ಇದರಿಂದ ರಸ್ತೆಗಳು ಕಾಲುವೆಗಳಂತೆ ನೀರು ತುಂಬಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ರಾಜ್ಯದ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಲವೆಡೆ ಹಳ್ಳ-ಕೊಳ್ಳಗಳು ಕೂಡ ತುಂಬಿ ಹರಿದಿವೆ. +ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ಮಳೆ ನಿರೀಕ್ಷಿಸಬಹುದಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಡಾಗುವ ಸಾಧ್ಯತೆಗಳಿವೆ. +ಅಲ್ಲದೆ ಬಂಗಾಳಕೊಲ್ಲಿಯಲ್ಲಿ ಟ್ರಫ್ ನಿರ್ಮಾಣ ವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿ ಹಾಗೂ ಮಳೆನಾಡು ಭಾಗದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ. +ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಸಂತಸವಾಗಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಅನುಕೂಲವಾಗಿದ್ದರೆ ಕೊಯ್ಲಿಗೆ ಬಂದಿದ್ದ ಮುಂಗಾರು ಬೆಳೆಗಳಿಗೆ ಹಾನಿ ಉಂಟಾಗಿದೆ. \ No newline at end of file diff --git a/eesanje/url_46_317_11.txt b/eesanje/url_46_317_11.txt new file mode 100644 index 0000000000000000000000000000000000000000..d1f0720842c59a7f98943e07cb3b217b5e75a755 --- /dev/null +++ b/eesanje/url_46_317_11.txt @@ -0,0 +1,13 @@ +ಮಾಜಿ ಸಚಿವ, ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ +ಚಿಕ್ಕಮಗಳೂರು, ನ.7- ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87) ಇಂದು ಮುಂಜಾನೆ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು. +ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.ಪತ್ನಿ ಶ್ರೀಮತಿ ಪೂರ್ಣಿಮಾ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. +ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿಯಲ್ಲಿ 26 ಆಗಸ್ಟ್ 1936 ರಂದು ಜನಿಸಿದರು . ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ತಮ್ಮ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್ಎಲ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿಯನ್ನು ಪಡೆದರು . 22 ಮೇ 1966 ರಂದು ಪೂರ್ಣ ಚಂದ್ರೇಗೌಡರನ್ನು ವಿವಾಹವಾದರು ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಹೊಂದಿದ್ದರು. +ತಮ್ಮ ಕಾಲೇಜು ದಿನಗಳಲ್ಲಿ ಸುದೀರ್ಘ ರಾಜಕೀಯ ವೃತ್ತಿಜೀವನಕ್ಕೆ ದಾರಿ ಮಾಡಿಕೊಡುವ ಮೂಲಕ ತಮ್ಮ ನಾಯಕತ್ವ ಕೌಶಲ್ಯಗಳನ್ನು ಕಲಿತರು; ರೇಣುಕಾಚಾರ್ಯ ಕಾಲೇಜು ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಆರ್ ಎಲ್ ಲಾ ಕಾಲೇಜಿನಲ್ಲಿದ್ದಾಗ ಕಾಲೇಜಿನ ಪ್ರಧಾನ ಕಾರ್ಯದರ್ಶಿಯಾದರು . +1967 ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ, ಅವರು – ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುವ ಚಿಕ್ಕಮಗಳೂರು ಕ್ಷೇತ್ರದಿಂದ 5 ನೇ ಲೋಕಸಭೆಗೆ ಆಯ್ಕೆಯಾದರು . ಚಿಕ್ಕಮಗಳೂರಿನಿಂದ 6 ನೇ ಲೋಕಸಭೆಗೆ ಮರು ಆಯ್ಕೆಯಾದರು , ಆದರೆ ಇಂದಿರಾ ಗಾಂಧಿಯವರು ಅಲ್ಲಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ಗೆಲ್ಲಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನವನ್ನು ತೆರವು ಮಾಡಿದರು. +1978 ಮತ್ತು 1983 ರ ನಡುವೆ ಅವರು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದರು ಮತ್ತು 1979 ರಿಂದ 1980 ರವರೆಗೆ ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದರು. 1980 ರಲ್ಲಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿದರು ಮತ್ತು ಕರ್ನಾಟಕ ಕ್ರಾಂತಿ ರಂಗಕ್ಕೆ ಸೇರಿದರು, ಕರ್ನಾಟಕ ರಾಜ್ಯ ಕಾಂಗ್ರೆಸ್ (ಯು) ಅಧ್ಯಕ್ಷರಾದರು . ಮತ್ತು 1980 ರಿಂದ 1981 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು. +ಬೆಂಗಳೂರು : ಲಿವಿಂಗ್ ಟು ಗೆದರ್‌ನಲ್ಲಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ +1983 ರಲ್ಲಿ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿದರು ಮತ್ತು 1983 ರಿಂದ 1985 ರವರೆಗೆ ವಿಧಾನಸಭೆಯಲ್ಲಿ ಸ್ಪೀಕರ್ ಆಗಿ ಸೇವೆ ಸಲ್ಲಿಸಿದರು. 1986 ರಲ್ಲಿ ಅವರು ಜನತಾ ದಳದ ರಾಜಕೀಯ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆಯಲ್ಲಿ ಸಂಸದರಾಗಿ ಆಯ್ಕೆಯಾದರು. 1989ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಪುನರಾಯ್ಕೆಗೊಂಡು ವಿರೋಧ ಪಕ್ಷದ ನಾಯಕರಾದರು. 1999 ರಲ್ಲಿ, ಅವರು ಶೃಂಗೇರಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರಾಗಿ ಮೂರನೇ ಅವಧಿಗೆ ಆಯ್ಕೆಯಾದರು ಮತ್ತು 2004 ರವರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದರು. +2008 ರಲ್ಲಿ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದರು ; ತರುವಾಯ, ಅವರು 2009 ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರವನ್ನು ಪ್ರತಿನಿಧಿಸುವ 15 ನೇ ಲೋಕಸಭೆಯಲ್ಲಿ ಸಂಸದರಾದರು. ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯ ಸಮಿತಿಯ ಸದಸ್ಯರಾಗಿದ್ದರು. +1971 : ಚಿಕ್ಕಮಗಳೂರಿನ ಲೋಕಸಭಾ ಸದಸ್ಯ (ಕಾಂಗ್ರೆಸ್) 1977 : ಚಿಕ್ಕಮಗಳೂರಿನ ಲೋಕಸಭಾ ಸದಸ್ಯ (ಕಾಂಗ್ರೆಸ್) 1978 ರಲ್ಲಿ ಇಂದಿರಾ ಗಾಂಧಿಯವರು ಲೋಕಸಭೆಗೆ ಸ್ಪರ್ಧಿಸಲು ಮತ್ತು ಪ್ರವೇಶಿಸಲು ರಾಜೀನಾಮೆ ನೀಡಿದರು 1978-1983 : ಕರ್ನಾಟಕ ವಿಧಾನ ಪರಿಷತ್ತಿನಲ್ಲಿ (ಕಾಂಗ್ರೆಸ್) ದೇವರಾಜ್ ಅರಸರ ಕರ್ನಾಟಕ ಕ್ರಾಂತಿ ರಂಗಕ್ಕೆ ಕಾಂಗ್ರೆಸ್ ತೊರೆದರು +1983-1985 : 1983 ರಲ್ಲಿ ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ (ಜನತಾ ಪಕ್ಷ) 1986 : ರಾಜ್ಯಸಭಾ ಸಂಸದ (ಜನತಾ ಪಕ್ಷ, ನಂತರ ಜನತಾದಳ ಎಂದು ಮರುನಾಮಕರಣ ಮಾಡಲಾಯಿತು ) 1989 : ತೀರ್ಥಹಳ್ಳಿ ಕ್ಷೇತ್ರವನ್ನು ಪ್ರತಿನಿಧಿಸುವ ಕರ್ನಾಟಕ ವಿಧಾನಸಭಾ ಸದಸ್ಯ (ಜನತಾ ದಳ) 1999 : ಶೃಂಗೇರಿ (ಕಾಂಗ್ರೆಸ್) ಪ್ರತಿನಿಧಿಸುವ ಶಾಸಕ 2009 : ಬಿಜೆಪಿಗೆ ಬೆಂಗಳೂರು (ಉತ್ತರ) ಲೋಕಸಭಾ ಸದಸ್ಯ. +ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ.ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜ್ಯ ಮತ್ತು ರಾಷ್ಟ್ರ ಮಟ್ಟದ ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ವೈವಿದ್ಯಮಯವಾಗಿ ತೊಡಗಿಸಿಕೊಂಡಿದ್ದರು. 2014 ರಿಂದೀಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ದಾರದಹಳ್ಳಿಯ ತಮ್ಮ ಪೂರ್ಣಚಂದ್ರ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. \ No newline at end of file diff --git a/eesanje/url_46_317_12.txt b/eesanje/url_46_317_12.txt new file mode 100644 index 0000000000000000000000000000000000000000..2549b593c0823e8708a8f06976ece15a31cd0172 --- /dev/null +++ b/eesanje/url_46_317_12.txt @@ -0,0 +1,7 @@ +ಪರೀಕ್ಷಾ ಅಕ್ರಮದಲ್ಲಿ 32 ಮಂದಿ ಸೆರೆ : ಸಚಿವ ಪ್ರಿಯಾಂಕ್ ಖರ್ಗೆ +ಕಲ್ಬುರ್ಗಿ,ನ.6- ಸರ್ಕಾರದ ವಿವಿಧ ಹುದ್ದೆಗಳಿಗೆ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಪಟ್ಟಂತೆ ಕಲ್ಬುರ್ಗಿಯಲ್ಲಿ 13 ಜನ, ಯಾದಗಿರಿಯಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಅಕ್ರಮ ತಡೆಗೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿತ್ತು. 24 ಗಂಟೆಗೂ ಮುನ್ನ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. 200 ಮೀಟರ್ ಅಂತರದಲ್ಲಿ ವಾಹನ ನಿಲುಗಡೆ ನಿಷೇಧ, ಪ್ರತಿಯೊಂದು ವಸತಿ ಗೃಹ ಹಾಗೂ ವಾಹನಗಳ ತಪಾಸಣೆ, ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟಕ್ಟರ್ ಮತ್ತು ಹ್ಯಾಂಡ್‍ಹೆಲ್ಡ್ ಡಿಟಕ್ಟರ್‍ಗಳನ್ನು ಅಳವಡಿಸಲಾಗಿತ್ತು. +ಅದರ ಹೊರತಾಗಿಯೂ ಅಕ್ರಮ ನಡೆಸುವವರು ವಿಶೇಷವಾದ ಶರ್ಟ್‍ಗಳನ್ನು ಧರಿಸಿದ್ದಾರೆ. ಬ್ಲೂಟೂತ್ ಸಲಕರಣೆ ಅತ್ಯಂತ ಚಿಕ್ಕದಾಗಿದ್ದು, ಪತ್ತೆಹಚ್ಚಲು ಕಷ್ಟಸಾಧ್ಯವಾಗುವಂತೆ ಬಳಕೆ ಮಾಡಿದ್ದಾರೆ. ಆದರೂ ಪೊಲೀಸರು ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿಗಳು ತೀವ್ರ ತಪಾಸಣೆ ನಡೆಸಿದಾಗ ನಗರದಲ್ಲಿ ಒಂದು ಪ್ರಕರಣ, ಯಾದಗಿರಿಯಲ್ಲಿ ಮೂರ್ನಾಲ್ಕು ಕಡೆ ಅಕ್ರಮಗಳು ಪತ್ತೆಯಾಗಿವೆ. ಕಲ್ಬುರ್ಗಿಯಲ್ಲಿ 13, ಯಾದಗಿರಿಯಲ್ಲಿ 19 ಮಂದಿಯನ್ನು ಬಂಸಲಾಗಿದೆ ಎಂದು ತಿಳಿಸಿದರು. + ಮುಖ್ಯಸ್ಥರಾಗಿ ನೇಮಕಗೊಂಡ ದೇಶದ ಮೊದಲ ದಲಿತ ಅಧಿಕಾರಿ +ಹಿಂದಿನ ಸರ್ಕಾರದ ಅವಧಿಯಲ್ಲಿ ಪರೀಕ್ಷಾ ಅಕ್ರಮಗಳ ತಡೆಗೆ ಮುಂಜಾಗ್ರತೆ ವಹಿಸಿರಲಿಲ್ಲ. ನಾವು ಬಿಗಿ ಕ್ರಮ ಕೈಗೊಂಡಿದ್ದರಿಂದಾಗಿ ಅಕ್ರಮಗಳು ಕಡಿಮೆಯಾಗಿವೆ. ಸಾಮಾನ್ಯವಾಗಿ ಪರೀಕ್ಷೆಗೆ ಶೇ.15ರಿಂದ 20ರಷ್ಟು ಜನ ಗೈರು ಹಾಜರಾಗುತ್ತಾರೆ. ಪರೀಕ್ಷಾ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ಬಾರಿ ಗೈರು ಹಾಜರಿಯ ಪ್ರಮಾಣ ಶೇ.40ರಷ್ಟಾಗಿದೆ ಎಂದು ಹೇಳಿದರು. +ಮೂಲಗಳ ಪ್ರಕಾರ ಪರೀಕ್ಷಾ ಅಕ್ರಮಗಳಲ್ಲಿ ಬಂತರಾಗಿರುವವರ ಪೈಕಿ ಶೇ.90ರಷ್ಟು ಅಫ್ಜಲಪುರ ತಾಲ್ಲೂಕಿನವರಾಗಿದ್ದಾರೆ. ಬಹುತೇಕ ಆರೋಪಿಗಳ ವಾಟ್ಸಪ್‍ಗೆ ಪರೀಕ್ಷೆಯ ಹಿಂದಿನ ದಿನ ಕರೆ ಬಂದಿದೆ. ಕೆಲವರು ಆ ಸಂಖ್ಯೆಯನ್ನು ಸರ್ಕಾರ್ ಎಂದು ಸೇವ್ ಮಾಡಿಕೊಂಡಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಜತೆಗೂ ಈ ಸಂಖ್ಯೆಯಲ್ಲಿ ಸಂವಹನ ನಡೆದಿರುವ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_317_2.txt b/eesanje/url_46_317_2.txt new file mode 100644 index 0000000000000000000000000000000000000000..c2b27dc5fc121de7a210f33b272b630197e1fd04 --- /dev/null +++ b/eesanje/url_46_317_2.txt @@ -0,0 +1,17 @@ +ನಮ್ಮ ಗ್ಯಾರಂಟಿಗಳು ಪ್ರಧಾನಿಯ ನಿದ್ದೆಗೆಡಿಸಿದೆ : ಡಿಕೆಶಿ +ಬೆಂಗಳೂರು,ನ.8- ಲೋಕಸಭೆ ಚುನಾವಣೆಗೂ ಮುನ್ನಾ ರಾಜ್ಯ ಸರ್ಕಾರದಲ್ಲಿ ಗೊಂದಲ ಮೂಡಿಸಬೇಕು ಎಂದು ಬಿಜೆಪಿಯ ಕೆಲಸವಿಲ್ಲದ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಮ್ಮ ಒಬ್ಬನೆ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮಗೆ ಬಹಳಷ್ಟು ಮಾಹಿತಿಗಳಿವೆ. ಸದ್ಯಕ್ಕೆ ನಾವು ಏನನ್ನು ಬಹಿರಂಗ ಪಡಿಸುವುದಿಲ್ಲ ಎಂದರು. +ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನಾವೀಸ್ ನಡೆಸಿರುವ ಸಭೆಗೆ ರಾಜ್ಯದ ಕಾಂಗ್ರೆಸ್ ಶಾಸಕರು ಹೋಗಿಲ್ಲ. ಆದರೆ ಬಿಜೆಪಿಯವರು ಲೋಕಸಭೆ ಚುನಾವಣೆಗೂ ಮುನ್ನಾ ಗೊಂದಲ ಮಾಡಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿಯೇ ಸಾಕಷ್ಟು ಗೊಂದಲ ಇದೆ, ನಾಯಕತ್ವ ಇನ್ನೂ ತೀರ್ಮಾನವಾಗಿಲ್ಲ. ಅದರ ನಡುವೆ ನಮ್ಮ ಶಾಸಕರ ಕುಶಲ ವಿಚಾರಿಸಲು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವಂತೆ ಬಂದು, ಹೊರ ಹೋಗುವಾಗ ರಾಜಕೀಯ ಮಾತನಾಡಿದ್ದಾಗಿ ಬಿಂಬಿಸುತ್ತಿದ್ದಾರೆ. +ಇಂತಹ ನೂರು ಪ್ರಯತ್ನ ಮಾಡಲಿ, ಮಾಡದಿರಲಿ, ನಮಗೆ ಎಲ್ಲಾ ಮಾಹಿತಿ ಗೋತ್ತಿದೆ. ಬಿಜೆಪಿಯ ಕೆಲವು ನಿರೋದ್ಯೋಗಿಗಳು, ಏಜೆಂಟರು ಓಡಾಡುತ್ತಿದ್ದಾರೆ. ಬಿಜೆಪಿಯವರು ಸಂಪರ್ಕ ಮಾಡಿ ಚರ್ಚೆ ಮಾಡಿದ ಬಳಿಕ ನಮ್ಮ ಶಾಸಕರು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದರು. +ಮಹಿಳೆಯರ ಕುರಿತು ಹೊಲಸು ನಾಲಿಗೆ ಹರಿಬಿಟ್ಟಿದ್ದ ನಿತೀಶ್ ಕುಮಾರ್ ಕ್ಷಮೆಯಾಚನೆ +ನಾನು ಮನೆಯ ಮುಖ್ಯಸ್ಥ:ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಗೆ ನಿನ್ನೆ ದಿಡೀರ್ ಭೇಟಿ ನೀಡಿದ ಬಗ್ಗೆ ಪತಿಕ್ರಿಯಿಸಿದ ಅವರು, ನಾನು ಮನೆಯ ಮುಖ್ಯಸ್ಥ, ಎಲ್ಲರ ಮನೆಗೂ ಹೋಗುತ್ತೇನೆ. ಕೆಲವರನ್ನು ನಮ್ಮ ಮನೆಗೆ ಕರೆಸಿಕೊಳ್ಳುತ್ತೇನೆ. ಅದರಲ್ಲಿ ವಿಶೇಷವೇನು ಇಲ್ಲ. ರಾಮಲಿಂಗಾರೆಡ್ಡಿ ಮನೆಗೆ ಹೋಗಿದ್ದೇನೆ, ಪರಮೇಶ್ವರ್ ನಮ್ಮ ಮನೆಗೆ ಬರುತ್ತೇನೆ ಎಂದಿದ್ದರು ನಾನೇ ಬರುತ್ತೇನೆ ಎಂದು ಹೇಳಿದ್ದೇನೆ. ಸತೀಶ್ ಜಾರಕಿಹೊಳಿ ನಮ್ಮ ಮನೆಗೆ ಬರುವುದಾಗಿ ಹೇಳಿದರು, ಬೇಡ ನಾನೇ ಬರುತ್ತೇನೆ ಎಂದು ಹೋಗಿದ್ದೆ ಎಂದರು. +ನಮ್ಮ ಮನೆಯಲ್ಲಿ ಜಾಗವೇ ಇರುವುದಿಲ್ಲ. ಜನ ಒಬ್ಬರ ಮೇಲೆ ಒಬ್ಬರು ನುಗ್ಗುತ್ತಿರುತ್ತಾರೆ. ಮನೆಯಲ್ಲಿ ಸಮಯವೂ ಇರುವುದಿಲ್ಲ, ಜಾಗವೂ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮಯವನ್ನೇ ನೀಡಲಾಗುತ್ತಿಲ್ಲ, ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದರು. +ಕಾಂಗ್ರೆಸ್‍ನಲ್ಲಿಲ ಸತೀಶ್ ಜಾರಕಿಹೊಳಿ ಮೂರನೇ ಶಕ್ತಿ ಕೇಂದ್ರವಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ಒಬ್ಬರೆ ಕೆಪಿಸಿಸಿ ಅಧ್ಯಕ್ಷ ಹಾಗೂ ಒಬ್ಬರೆ ಮುಖ್ಯಮಂತ್ರಿ ಮಾತ್ರ. ಮೂರನೇ ಶಕ್ತಿ ಕೇಂದ್ರ ಇಲ್ಲ. ರಾಜ್ಯದ ಐದು ವರ್ಷ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ, ಅದು ಮುಗಿದ ಬಳಿಕ 2028ಕ್ಕೆ ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸ ಇದೆಯಲ್ಲಾ ಅದೇ ಸಂತೋಷ ಎಂದರು. +ಸಂಪುಟದಲ್ಲಿ ಬದಲಾವಣೆ ಇಲ್ಲ:ಪಂಚರಾಜ್ಯಗಳ ಚುನಾವಣೆಯ ನಂತರ ರಾಜ್ಯ ಸಚಿವ ಸಂಪುಟ ಪುನಃರಚನೆಯಾಗಲಿದೆ ಎಂಬುದು ಆಧಾರ ರಹಿತ. ಸದ್ಯಕ್ಕೆ ಅಂತಹ ಯಾವ ಬದಲಾವಣೆಗಳು ಇಲ್ಲ. ನಿಗಮ ಮಂಡಳಿಗೆ ನೇಮಕಾತಿ ಕುರಿತು ಚರ್ಚೆ ನಡೆಸಲು ನವೆಂಬರ್ 15ರ ಬಳಿಕ ಎಐಸಿಸಿ ನಾಯಕರು ರಾಜ್ಯಕ್ಕೆ ಬರುತ್ತಾರೆ ಎಂದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸಚಿವರಾಗಿದ್ದಾರೆ. ಹೊಸ ತಂಡ ಬರಬೇಕು ಎಂದು ಹೈಕಮಾಂಡ್‍ನವರೊಂದಿಗೆ ಚರ್ಚೆ ಮಾಡಿದ್ದೇವೆ. ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರೆ ಇದ್ದಾರೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು. +ಪ್ರಧಾನಿ ನಿದ್ದೆ ಕೆಟ್ಟಿದೆ:ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಮಂತ್ರಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪ್ರಧಾನಿ ನಮ್ಮನ್ನು ಅಷ್ಟು ನೆನೆಸಿಕೊಳ್ಳುತ್ತಿದ್ದಾರಲ್ಲ ಸಂತೋಷ, ನಮ್ಮ ಗ್ಯಾರಂಟಿ, ರಾಜ್ಯದ ಜನರ ತೀರ್ಮಾನ ಪ್ರಧಾನಿಯವರ ನಿದ್ದೆ ಗೆಡಿಸಿದೆ ಎಂದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಐದರಲ್ಲೂ ಗೆಲ್ಲುತ್ತದೆ. ಮಿಜೋರಾಂನ ಬಗ್ಗೆ ಮಾಹಿತಿ ಇಲ್ಲ. ಉಳಿದಂತೆ ಎಲ್ಲಾ ಕಡೆ ಗೆಲ್ಲುತ್ತೇವೆ. ಉತ್ತರ ಭಾರತದಲ್ಲೆ ರಾಜಸ್ಥಾನದಲ್ಲಿ ಉತ್ತಮ ಅಭಿವೃದ್ಧಿಯ ಕೆಲಸಗಳಾಗಿವೆ ಎಂದರು. +ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡುವ ಅಂತಹ ಪರಿಸ್ಥಿತಿ ಯಾಕೆ ಬಂತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಬೇಕು. ನಮಗೆ 136 ಶಾಸರಕ ಹಾಗೂ ಪಕ್ಷೇತರರ ಬೆಂಬಲ ಇದೆ. ಜೆಡಿಎಸ್‍ನವರು ಒಗ್ಗಟ್ಟು ಪ್ರದರ್ಶನ ಮಾಡುವ ಪರಿಸ್ಥಿತಿ ಬಂದಿರುವುದು ಏಕೆಂದು ಆ ಪಕ್ಷದ ನಾಯಕರೇ ಹೇಳಬೇಕು ಎಂದರು. +ಮುಖ್ಯಮಂತ್ರಿಯವರು ಹೇಳಿದಂತೆ ಬಿಜೆಪಿ-ಜೆಡಿಎಸ್‍ನ ಬಹಳಷ್ಟು ಮಂದಿ ಕಾಂಗ್ರೆಸ್‍ಗೆ ಬರುತ್ತಾರೆ. ಇದೇ 15ಕ್ಕೆ ಅಡ್ಮಿಷನ್ ದಿನಾಂಕ ನಿಗದಿಯಾಗಿದೆ ಎಂದು ಡಿ.ಕೆ.ಶಿವಕುಮಾರ ಜೇಬು ತಡಕಾಡಿದರು.ಬಹುಶಃ ಮನೆಯಲ್ಲಿ ಅಪಾಯಿಂಟ್ ಮೆಂಟ್ ಕಾರ್ಡ್ ಅನ್ನು ಮನೆಯಲ್ಲಿ ಬಿಟ್ಟಿರಬಹುದು. ಎಷ್ಟು ಜನ ಅಡ್ಮಿಷನ್ ತೆಗೆದುಕೊಳ್ಳುತ್ತಾರೆ ಎಂದು 14ರ ಸಂಜೆ ತಿಳಿಸುತ್ತೇನೆ ಎನ್ನುವ ಮೂಲಕ ನವೆಂಬರ್ 15ರಂದು ಪ್ರಭಾವಿ ನಾಯಕರು ಕಾಂಗ್ರೆಸ್ ಸೇರುತ್ತಿರುವ ಸುಳಿವು ನೀಡಿದರು. +ಎಲ್ಲಾ ಜಾತಿಗಳು ನ್ಯಾಯ:ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ಪರಿಶಿಷ್ಟರ ಬೇಡಿಕೆಗಳ ಈಡೇರಿಕೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. ನಮ್ಮ ಪಕ್ಷದಲ್ಲಿ ಕೆಲವು ಬದ್ಧತೆಗಳಿವೆ. ಚಿತ್ರದುರ್ಗದ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಣಯ ಕೈಗೊಂಡಿದೆ. ಎಲ್ಲವನೂ ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಎಲ್ಲಾ ಸಮಾಜಕ್ಕೂ ನ್ಯಾಯ ಕೊಡಿಸುತ್ತೇವೆ, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.ಬಿಬಿಎಂಪಿ ಇಂಜಿನಿಯರ್ ಇನ್ ಛೀಪ್ ಪ್ರಹ್ಲಾದ್ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. +ರಾಜ್ಯದಲ್ಲಿ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿಲ್ಲ. ಬಜೆಟ್ ಘೋಷಿತ ಯೋಜನೆಗಳ ಪ್ರಕಾರ ಕೆಲಸ ನಡೆಯುತ್ತಿದೆ. ಹೊಸ ಬಜೆಟ್ ಕೊಟ್ಟಿಲ್ಲ, ಡಿಸೆಂಬರ್‍ಗೆ ವೇಳೆಗೆ ಹಣಕಾಸು ಹೊಂದಾಣಿಕೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದರು. +ಅದಾನಿ ಸಂಸ್ಥೆಯಲ್ಲಿ ಅಮೆರಿಕದಿಂದ 553 ಮಿಲಿಯನ್ ಡಾಲರ್ ಹೂಡಿಕೆ +ರಾಜ್ಯದಲ್ಲಿ ಹೊಸ ಕಾರು ಖರೀದಿ ಸೇರಿದಂತೆ ಅನಗತ್ಯ ವೆಚ್ಚಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು,ಡಿಸೇಲ್ ಕಾರುಗಳನ್ನು ಬದಲಾವಣೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇರುವ ನನ್ನ ಕಾರನ್ನು ಬದಲಾಯಿಸಬೇಕಿದೆ. ಇಲ್ಲಿ ಹೊಸ ಬುಕ್ಕಿಂಗ್‍ಗೆ ಅವಕಾಶ ಇಲ್ಲ. ಬೆಂಗಳೂರಿಗೆ ಹೋಗಿ ಕಾರು ಬುಕ್ ಮಾಡಿ ಬದಲಾವಣೆ ಮಾಡಬೇಕಿದೆ. ಡಿಸೇಲ್ ಕಾರು ದಲಾಯಿಸಿ ಪೆಟ್ರೋಲ್ ಕಾರು ಖರೀದಿಸಲು ಅಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದರು. +ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಮೈಸೂರು ದಸರಾಗೆ ಜನವೋ ಜನ. ಜಂಬು ಸವಾರಿ ದಿನ ನಾನು ಮುಖ್ಯಮಂತ್ರಿಯವರ ಜೊತೆ ಬಸ್‍ನಲ್ಲಿ ಬಂದು ಬಿಟ್ಟೆ. ನನ್ನ ಪತ್ನಿ ಅವರ ಮನೆಯಲ್ಲಿದ್ದರು. ನನ್ನ ಮಾವನ ಮನೆಗೂ ಅರಮನೆಗೂ ಒಂದು ಕಿಲೋ ಮೀಟರ್. ನನ್ನ ಪತ್ನಿಯನ್ನು ಕರೆ ತರುವಂತೆ ಪೆÇಲೀಸ್ ಗಾಡಿ ಕಳುಹಿಸಿದೆ ಆದರೆ ಜನರ ನಡುವೆ ಕರೆ ತರಲಾಗಲಿಲ್ಲ, ನಾನು ಹೋಗಿ ಬಟ್ಟೆ ಬದಲಾಯಿಸಿಕೊಂಡು ಬರಬೇಕು ಎಂದು ಕೊಂಡಿದ್ದೆ, ಅದು ಆಗಲಿಲ್ಲ ಅಷ್ಟು ಜನ. ಉಚಿತ ಪ್ರಯಾಣ ಎಂದು ಮಹಿಳೆಯರು ಮಾತ್ರ ಬರುತ್ತಿಲ್ಲ, ಜೊತೆಗೆ ಪತಿ, ಮಕ್ಕಳನ್ನು ಕರೆ ತರುತ್ತಾರೆ. ಪ್ರಯಾಣ ದರ 500 ರೂಪಾಯಿ ಉಳಿಸಿದರೆ ಊಟ, ವಸತಿ ಎಂದು ಒಂದುವರೆ ಸಾವಿರ ರೂಪಾಯಿ ಖರ್ಚು ಮಾಡುತ್ತಿದ್ದಾರೆ ಎಂದರು. \ No newline at end of file diff --git a/eesanje/url_46_317_3.txt b/eesanje/url_46_317_3.txt new file mode 100644 index 0000000000000000000000000000000000000000..b2074e7ff0bb67672f170e6d03a76570040e1a40 --- /dev/null +++ b/eesanje/url_46_317_3.txt @@ -0,0 +1,10 @@ +ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡಲು ಆದೇಶ : ಡಿಸಿಎಂ +ಬೆಂಗಳೂರು, ನ.8- ಕಾವೇರಿ ನ್ಯಾಯಾೀಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹಂಚಿಕೆಯಾಗಿರುವಂತೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ 24 ಟಿಎಂಸಿ ನೀರನ್ನು ಮೀಸಲಿಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಸಚಿವರು ಆಗಿರುವ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ಅಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಮ್ಮ ಅಧಿಕಾರಿಗಳು ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ್ದಾರೆ. +ಈ ಬಗ್ಗೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಪ್ರಾಧಿಕಾರದವರು ಭರವಸೆ ನೀಡಿದ್ದಾರೆ. ಬಹುಶಃ ಮುಂದಿನ ವಾರ ವಿಚಾರಣೆಗೆ ಸಮಯ ನಿಗದಿಯಾಗಬಹುದು. ನಾವು ಅದಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದೇವೆ. ನಮಗೆ ಎಷ್ಟು ನೀರು ಬೇಕು, ಎಷ್ಟು ಉಳಿತಾಯವಾಗಲಿದೆ, ಸಮುದ್ರಕ್ಕೆ ಎಷ್ಟು ಹರಿದು ಹೋಗುತ್ತದೆ ಎಂಬ ಮಾಹಿತಿಯನ್ನು ಸಲ್ಲಿಸಲಿದ್ದೇವೆ. +ನಮಗೆ ಕುಡಿಯುವ ನೀರಿಗೆ 24 ಟಿಎಂಸಿ ಬೇಕು ಎಂದು ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಮೀಸಲಿಟ್ಟಿದ್ದೇವೆ. ಅದನ್ನು ಬಿಡಬ್ಯೂಎಸ್‍ಎಸ್‍ಬಿ ಬಳಸಿಕೊಳ್ಳಬೇಕು ಎಂದು ನಿನ್ನೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಮೊದಲು 18 ಟಿಎಂಸಿ ನಿಗದಿ ಮಾಡಲಾಗಿತ್ತು. ಉಳಿಕೆ ಆರು ಟಿಎಂಸಿಯನ್ನು ಬಳಕೆ ಮಾಡಲು ಪರಿಶೀಲನೆ ನಡೆಸಿ ಅನುಮತಿ ನೀಡಲಾಗಿದೆ. ಗರಿಷ್ಠ 24 ಟಿಎಂಸಿಗೆ ಮಿತಿಗೊಳಿಸಿ ಆದೇಶಿಸಲಾಗಿದೆ. ಇನ್ನೂ ಮುಂದೆ ಅಣೆಕಟ್ಟೆಗಳಲ್ಲಿ 24 ಟಿಎಂಸಿಯನ್ನು ಮೀಸಲಿರಿಸಿ ನಂತರ ಉಳಿದ ನೀರನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದರು. +3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್ +ಕೆಆರ್‍ಎಸ್‍ನಲ್ಲಿ ನೀರಿದೆ ನಮಗೆ ಬಿಡಿ ಎಂದು ತಮಿಳುನಾಡಿನವರು ಕೇಳುತ್ತಾರೆ. ಇನ್ನೂ ಮುಂದೆ ಕುಡಿಯುವ ನೀರಿಗೆ 24 ಟಿಎಂಸಿಯನ್ನು ಮೀಸಲಿಡಬೇಕು. ಇದು 2018ರ ಸುಪ್ರೀಂಕೋರ್ಟ್ ಆದೇಶದಲ್ಲೇ ಉಲ್ಲೇಖವಿದೆ. ನಮ್ಮ ಹಕ್ಕನ್ನು ನಾವು ಕಳೆದುಕೊಳ್ಳುವುದಿಲ್ಲ. ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದಾದರೆ ನಮ್ಮ ಅಭ್ಯಂತರ ಇಲ್ಲ. ನ್ಯಾಯಾಲಯದ ಆದೇಶದ ಪ್ರಕಾರವೇ ನಿರ್ಧಾರ ಕೈಗೊಂಡು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನೀರು ಸರಬರಾಜು, ಒಳಚರಂಡಿ ಮಂಡಳಿ 24 ಟಿಎಂಸಿ ಬಳಸಿಕೊಳ್ಳಲು ಅನುಮತಿಸಿಸಲಾಗಿದೆ ಎಂದರು. +ಬೆಂಗಳೂರು ಸುತ್ತಮುತ್ತಾ ಆನೆಕಲ್‍ನಲ್ಲಿ ಬೆಂಗಳೂರು ಬೆಳೆದಿದೆ, ವಿಮಾನ ನಿಲ್ದಾಣಕ್ಕೆ ನೀರು ಪೂರೈಸಲೇಬೇಕು.ಹಿಂದೆ ತಾವು ನಗರಾಭಿವೃದ್ಧಿ ಸಚಿವರಾಗಿದ್ದಾಗ ಹೆಬ್ಬಾಳದ ಮುಂದಕ್ಕೆ ನೀರು ಕೊಡಬಾರದು ಎಂದು ನಿರ್ಧರಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಆದೇಶ ಬದಲಿಸಿವೆ, ಹೀಗಾಗಿ ಎಲ್ಲಾ ಕಡೆಗೂ ನೀರು ಹಂಚಿಕೆ ಮಾಡಬೇಕಿದೆ, ಬೆಂಗಳೂರು ಉತ್ತರ ಭಾಗದಲ್ಲಿ ಬೆಳೆಯುತ್ತಿದೆ ಎಂದರು. +ಅದಾನಿ ಸಂಸ್ಥೆಯಲ್ಲಿ ಅಮೆರಿಕದಿಂದ 553 ಮಿಲಿಯನ್ ಡಾಲರ್ ಹೂಡಿಕೆ +ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗಲಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತಮಿಳುನಾಡಿನಲ್ಲಿ ಕೆಲ ನದಿಗಳ ಅಂತರ್ ಜೋಡಣೆಯ ಪ್ರಸ್ತಾವನೆ ಮಾಡಿರುವುದರ ಬಗ್ಗೆ ಸದ್ಯಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಬಿಡುತ್ತೇವೆ ಅದರ ಬಗ್ಗೆ ಅವರಿಗೆ ಚಿಂತೆ ಬೇಡ. ನಾವು ನಮ್ಮ ರಾಜ್ಯದಲ್ಲಿ ಆಂತರಿಕವಾಗಿ ನದಿ ಜೋಡಣೆ ಮಾಡುತ್ತೇವೆಯೋ, ಅಣೆಕಟ್ಟುತ್ತೇವೆಯೋ ಅದರ ಬಗ್ಗೆ ತಮಿಳುನಾಡು ತಲೆ ಕೆಡಿಕೊಳ್ಳುವ ಅಗತ್ಯ ಇಲ್ಲ. ಮಳೆ ಇಲ್ಲದೆ ಸಂಕಷ್ಟ ಸಂದರ್ಭದಲ್ಲೂ ತಮಿಳುನಾಡಿಗೆ 2 ಸಾವಿರ ಎರಡುವರೆ ಸಾವಿರ ಬಿಡಿ ಎನ್ನುತ್ತಾರೆ, ಸಂಕಷ್ಟ ಕಾಲದಲ್ಲಿ ಇದನ್ನು ಪಾಲನೆ ಮಾಡುವುದು ಕಷ್ಟವಾಗುತ್ತದೆ. ನಿನ್ನೆ ಮೊನ್ನೆ ಮಳೆಯಾಗಿದ್ದರಿಂದ ಕೆಆರ್‍ಎಸ್‍ಗೆ ಒಳ ಸ್ವಲ್ಪ ಹರಿವು ಹೆಚ್ಚಾಗಿದೆ ಎಂದರು. \ No newline at end of file diff --git a/eesanje/url_46_317_4.txt b/eesanje/url_46_317_4.txt new file mode 100644 index 0000000000000000000000000000000000000000..01ca6c94b3ce8eaebb157d736b0e8f8d12eb0392 --- /dev/null +++ b/eesanje/url_46_317_4.txt @@ -0,0 +1,6 @@ +ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ +ತುಮಕೂರು, ನ.8- ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ನಂತರ ಪ್ರೀತಿ ಹುಟ್ಟಿ ಜೊತೆಯಾಗಿ ಓಡಾಡಿಗೊಂಡಿದ್ದ ಪ್ರಿಯಕರ ಇದೀಗ ಮದುವೆ ದಿನವೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದೀಗ ಪ್ರೇಯಸಿ ಪೊಲೀಸ್ ಠಾಣೆ ಮೆಟ್ಟಿಲೇರಿ ನ್ಯಾಯ ಒದಗಿಸುವಂತೆ ಕಣ್ಣೀರಿಟ್ಟಿದ್ದಾಳೆ. ಎರಡೂವರೆ ವರ್ಷಗಳಿಂದ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಇದೀಗ ಮದುವೆಯಾಗದೆ ಪರಾರಿಯಾಗಿದ್ದಾನೆಂದು ತುಮಕೂರು ಮೂಲದ ಯುವತಿ ಬೆಂಗಳೂರು ಮೂಲದ ಪ್ರಿಯಕರ ಗಜೇಂದ್ರ ವಿರುದ್ದ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. +ಬೆಂಗಳೂರಿನ ನೆಲಗದರನಹಳ್ಳಿ ವಾಸವಾಗಿರುವ ಗಜೇಂದ್ರ ಹಾಗು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ನಿವಾಸಿ, ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಕಳೆದ ಎರಡು ವರ್ಷಗಳಿಂದ ಇವರಿಬ್ಬರು ಪ್ರೀತಿಸುತ್ತಿದ್ದರು ಮತ್ತು ಹಲವೆಡೆ ಜೊತೆಯಾಗಿ ಸುತ್ತಾಡಿದ್ದರು. +3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್ +ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ತನ್ನ ಪ್ರೇಯಸಿಯನ್ನು ಇತ್ತೀಚೆಗೆ ಲಾಡ್ಜ್ ಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದ ಗಜೇಂದ್ರ, ಈಗ ಏಕಾಏಕಿ ಮನೆಯಲ್ಲಿ ಒಪ್ಪುತ್ತಿಲ್ಲ ನಾವಿಬ್ಬರು ಬೇರೆಯಾಗೋಣ ಎಂದು ಹೊಸ ವರಸೆ ತೆಗೆದಿದ್ದ. ಇದರಿಂದ ಆತಂಕಗೊಂಡು ಯುವತಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಗಜೇಂದ್ರನನ್ನು ಕರೆಸಿದ ಪೊಲೀಸರು ಆತನಿಗೆ ಬುದ್ಧಿ ಹೇಳಿದ್ದರು. ನಂತರ ಆತ ಯುವತಿಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡು ಠಾಣೆಯಲ್ಲೇ ಮುಚ್ಚಳಿಕೆ ಪತ್ರವನ್ನೂ ಸಹ ಬರೆದುಕೊಟ್ಟಿದ್ದ. +ಬೆಂಗಳೂರಿನ ಪೀಣ್ಯಾದ ದುಗ್ಗಾಲಮ್ಮ ದೇವಾಲಯ ಬಳಿ ಇವರಿಬ್ಬರ ಮದುವೆಗಾಗಿ ಎಲ್ಲಾ ತಯಾರಿ ಮಾಡಲಾಗಿತ್ತು. ಇಬ್ಬರೂ ತುಮಕೂರಿನಿಂದ ಕಾರಿನಲ್ಲಿ ಬರುವಾಗ ನೆಲಗದರನಹಳ್ಳಿ ಬಳಿ ಕಾರು ನಿಲ್ಲಿಸಿ ಅಲ್ಲಿಂದ ಇಳಿದು ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಗಜೇಂದ್ರ ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಈತ ಯುವತಿಗೆ ದೂರದ ಸಂಬಂಧಿ ಆಗಿದ್ದಾನೆ. ಈ ಬಗ್ಗೆ ಗಜೇಂದ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_317_5.txt b/eesanje/url_46_317_5.txt new file mode 100644 index 0000000000000000000000000000000000000000..1265455a3eb23f360d3448a92bb2add977ce7c2b --- /dev/null +++ b/eesanje/url_46_317_5.txt @@ -0,0 +1,15 @@ +ರಾಜ್ಯದಲ್ಲಿ ಇನ್ನೂ 3 ದಿನ ಮಳೆ +ಬೆಂಗಳೂರು, ನ.8- ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಚುರುಕಾಗಿದ್ದು, ಶುಕ್ರವಾರದವರೆಗೆ ಮಳೆ ಮುಂದು ವರೆಯಲಿದೆ. ಆದರೆ, ಮಳೆ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ. ಹಿಂಗಾರು ಚೇತರಿಸಿಕೊಂಡಿದ್ದರೂ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಚದುರಿದಂತೆ ಅಲ್ಲಲ್ಲಿ ಮಾತ್ರ ಮಳೆಯಾಗಿದೆ. +ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಜಲಾಶಯಗಳ ಒಳ ಹರಿವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ. +ಸೋಮವಾರಕ್ಕೆ ಹೋಲಿಸಿದರೆ ನಿನ್ನೆ ಮಳೆ ಪ್ರಮಾಣ ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ನಿನ್ನೆ ಮಧ್ಯಾಹ್ನವೇ ಮಳೆ ಆರಂಭಗೊಂಡು ಜನ ಜೀವನ ಅಸ್ತವ್ಯಸ್ತಗೊಳಿಸಿತ್ತು. ಬಹಳಷ್ಟು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದೆ. +ತೀವ್ರ ಬರಪರಿಸ್ಥಿತಿ ಎದುರಿಸುತ್ತಿದ್ದ ರಾಜ್ಯಕ್ಕೆ ಹಿಂಗಾರು ಚೇತರಿಕೆಯಾಗಿ ಮಳೆಯಾಗುತ್ತಿರುವುದು ಜನರಲ್ಲಿ ಅದರಲ್ಲೂ ರೈತರಿಗೆ ಖುಷಿ ತಂದಿದೆ. ಆದರೆ, ಕೊಯ್ಲಿಗೆ ಬಂದಿದ್ದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಈ ಮಳೆಯಿಂದ ತೊಂದರೆಯಾಗಿದೆ. ಕೆಲವೆಡೆ ಅಗಾಗ್ಗೆ ಮಳೆ ಬಂದರೆ, ಮತ್ತೆ ಕೆಲವೆಡೆ ಜಿಟಿ-ಜಿಟಿ ಮಳೆಯಾಗಿದೆ. +ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್ +ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದ್ದು, ಆನಂತರ ಇಳಿಮುಖವಾಗಲಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಟ್ರಪ್‍ನಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಮಳೆಯ ಅಬ್ಬರ ಕಡಿಮೆಯಾದರೂ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಮುಂದಿನ ಮೂರು ದಿನಗಳ ಅವಯಲ್ಲಿ ದಾವಣಗೆರೆ, ಹರಪನಹಳ್ಳಿ, ಚನ್ನಗಿರಿ, ಹಾವೇರಿ, ಗದಗ, ಹುಬ್ಬಳ್ಳಿ, ಸವದತ್ತಿ, ಬಾಗಲಕೋಟೆ, ಜಮಖಂಡಿ, ವಿಜಯಪುರ, ಇಂಡಿ ಭಾಗದಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ 15ರಿಂದ 20 ಮಿ.ಮೀ., ಉತ್ತರ ಒಳನಾಡಿನಲ್ಲಿ 25ರಿಂದ 40 ಮಿ. ಮೀ. ನಷ್ಟು ಮಳೆಯಾಗುವ ಸೂಚನೆಗಳಿವೆ. +ಗಾಜಾ ಹೃದಯಭಾಗ ತಲುಪಿದ ಇಸ್ರೇಲ್ ಸೇನೆ +ಅದೇ ರೀತಿ ಮುಂದಿನ ಹತ್ತು ದಿನಗಳ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ 20ರಿಂದ 40 ಮಿ.ಮೀ., ಮಲೆನಾಡಿನಲ್ಲಿ 30ರಿಂದ 60 ಮಿ.ಮೀ., ಕರಾವಳಿಯಲ್ಲಿ 35ರಿಂದ 50 ಮಿ.ಮೀ. ಹಾಗೂ ಉತ್ತರ ಒಳನಾಡಿನಲ್ಲಿ 20ರಿಂದ 50 ಮಿ.ಮೀ.ನಷ್ಟು ಮಳೆಯಾಗಲಿದೆ ಎಂದು ಅವರು ವಿವರಿಸಿದರು. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಅಕ್ಟೋಬರ್‍ನಲ್ಲಿ 131ಮಿ.ಮೀ. ವಾಡಿಕೆ ಮಳೆಗೆ ಕೇವಲ 47 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ಶೇ.65 ರಷ್ಟು ಮಳೆ ಕೊರತೆ ಉಂಟಾಗಿತ್ತು. ಸೋಮವಾರ ರಾಜ್ಯದಲ್ಲಿ ವಾಡಿಕೆಗಿಂತ ನಾಲ್ಕು ಪಟ್ಟು ಮಳೆಯಾಗಿದೆ. +ಕಳೆದೊಂದು ವಾರದಲ್ಲಿ 30 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾಗಿದೆ. ಆದರೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್ ಒಂದರಿಂದ 7ರ ನಡುವಿನ ಅವಯಲ್ಲಿ ವಾಡಿಕೆಗಿಂತ ಶೇ.160ರಷ್ಟು ಅಧಿಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಶೇ.29ರಷ್ಟು ಕಡಿಮೆಯಾಗಿದೆ. ಮಲೆನಾಡಿನಲ್ಲಿ ಶೇ.132 ಹಾಗೂ ಶೇ.208ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. +ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್ +ಹಿಂಗಾರು ಹಂಗಾಮಿನ ಅವಯ ಅಕ್ಟೋಬರ್ ಒಂದರಿಂದ ನವೆಂಬರ್ 7ರ ನಡುವಿನ ಅವಯಲ್ಲಿ ವಾಡಿಕೆಗಿಂತ ಶೇ.47ರಷ್ಟು ಮಳೆ ಕೊರತೆ ರಾಜ್ಯದಲ್ಲಿ ಕಂಡುಬಂದಿತ್ತು. ಅದೇ ರೀತಿ ಜೂನ್ ನಿಂದ ಈವರೆಗೆ ಶೇ.28ರಷ್ಟು, ಏಪ್ರಿಲ್‍ನಿಂದ ಇಲ್ಲಿವರೆಗೆ ಶೇ.25ರಷ್ಟು ಹಾಗೂ ಜನವರಿಯಿಂದ ಈತನಕ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. \ No newline at end of file diff --git a/eesanje/url_46_317_6.txt b/eesanje/url_46_317_6.txt new file mode 100644 index 0000000000000000000000000000000000000000..b25811db355e693c76f0112634307b0cdb9d3716 --- /dev/null +++ b/eesanje/url_46_317_6.txt @@ -0,0 +1,7 @@ +ರೇಸಾರ್ಟ್‍ನಲ್ಲಿ ಜೆಡಿಎಸ್ ಶಾಸಕರ ವಾಸ್ತವ್ಯ +ಬೆಂಗಳೂರು, ನ.8-ಆಪರೇಷನ್ ಹಸ್ತ ನಡೆಸುವ ಸುಳಿವಿನ ಬೆನ್ನಲೇ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ನಿನ್ನೆಯಿಂದ ಹಾಸನದ ರೆಸಾರ್ಟ್‍ನಲ್ಲಿ ಬೀಡು ಬಿಟ್ಟಿರುವ ಜೆಡಿಎಸ್ ಶಾಸಕರು ಪಕ್ಷ ಸಂಘಟನೆ, ಬಿಜೆಪಿಯೊಂದಿಗಿನ ಮೈತ್ರಿ, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. +ಹಾಸನಾಂಬೆಯ ದರ್ಶನ ಪಡೆದಿರುವ ಜೆಡಿಎಸ್ ಶಾಸಕರು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಪಕ್ಷದ ಶಾಸಕರಿಗೆ ಮಾರ್ಗದರ್ಶನ ಮಾಡಿದ್ದಾರೆ. +ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್ +ಆಸೆ, ಆಮಿಷಗಳಿಗೆ ಒಳಗಾಗಬೇಡಿ, ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜನಪರ ಹೋರಾಟ ಮಾಡಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡೋಣ. ಮುಂದೆ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಎಂಬ ಸಂದೇಶ ನೀಡಿದ್ದಾರೆ. +ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ರಾಷ್ಟ್ರೀಯ ಪಕ್ಷಗಳಲ್ಲಾಗುತ್ತಿರುವ ಬದಲಾವಣೆ ಸೇರಿದಂತೆ ಹಲವು ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಪಕ್ಷಕ್ಕೆ ಆಗುತ್ತಿರುವ ಲಾಭ, ನಷ್ಟದ ಲೆಕ್ಕಾಚಾರವನ್ನು ಮಾಡಲಾಗಿದೆ. ಲೋಕಸಭಾ ಚುನಾವಣೆಯ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚಿಸಿ ಒಗ್ಗಟ್ಟಿನಿಂದ ಪಕ್ಷದ ಬೆಳವಣಿಗೆಗೆ ಶ್ರಮಿಸಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷಾಂತರಕ್ಕೆ ಮುಂದಾಗಿ ಶಾಸಕ ಸ್ಥಾನ ಕಳೆದುಕೊಳ್ಳಬೇಡಿ ಎಂಬ ಕಿವಿ ಮಾತು ಹೇಳಿದ್ದಾರೆ. +ಆಪರೇಷನ್ ಹಸ್ತ ಮಾಡಲಾಗುತ್ತದೆ ಎಂಬ ಉಹಾಪೋಹದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ಹಾಸನಾಂಬೆ ಸನ್ನಿಯಲ್ಲಿ ಒಟ್ಟಾಗಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. \ No newline at end of file diff --git a/eesanje/url_46_317_7.txt b/eesanje/url_46_317_7.txt new file mode 100644 index 0000000000000000000000000000000000000000..022f447051d280633ae4d7bef876be3eeaf91d9f --- /dev/null +++ b/eesanje/url_46_317_7.txt @@ -0,0 +1,6 @@ +ಬೆಳಗಾವಿ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಮಂಡನೆ : ಪರಮೇಶ್ವರ್ +ಬೆಂಗಳೂರು,ನ.7- ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿಯನ್ನು ಬೆಳಗಾವಿಯ ಅಧಿವೇಶನದಲ್ಲಿ ಮಂಡಿಸಲು ಪ್ರಯತ್ನಗಳು ನಡೆದಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‍ನ ಎಸ್‍ಸಿ-ಎಸ್‍ಟಿ ಘಟಕದಿಂದ ಚಿತ್ರದುರ್ಗದಲ್ಲಿ ಸಮಾವೇಶ ನಡೆಸಿ ಹತ್ತು ಘೋಷಣೆ ಮಾಡಲಾಯಿತು. ಚಿತ್ರದುರ್ಗದ ಘೋಷಣೆ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮೊದಲ ಅಧಿವೇಶನದಲ್ಲೇ ಸದಾಶಿವ ಆಯೋಗದ ವರದಿ ಮಂಡಿಸುವುದಾಗಿ ಭರವಸೆ ನೀಡಲಾಗಿತ್ತು. +ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ +ಈಗ ನಾವು ಅಧಿಕಾರಕ್ಕೆ ಬಂದಿದ್ದೇವೆ. ಮೊದಲ ಅಧಿವೇಶನದಲ್ಲಿ ವರದಿ ಮಂಡಿಸಲಾಗಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ 2ನೇ ಅಧಿವೇಶನದಲ್ಲಿ ಮಂಡನೆ ಮಾಡಲು ಒತ್ತಡ ಹೇರುತ್ತಿದ್ದೇವೆ ಎಂದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ. ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಮತ್ತು ತಾವು ಮುಖ್ಯಮಂತ್ರಿಯರ ಜೊತೆ ಚರ್ಚೆ ನಡೆಸಿದ್ದು, ವರದಿ ಮಂಡನೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಇತರ ಸಮುದಾಯಗಳ ಮುಖಂಡರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. +ವರದಿ ಮಂಡನೆ ಯಾಗಬೇಕು, ಚರ್ಚೆಯಾಗಬೇಕು ಎಂಬುದು ಎಲ್ಲರ ಒತ್ತಾಸೆ. ಆದರೆ ಅದಕ್ಕೂ ಮುನ್ನ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿಯವರು, ಶಾಸಕರು, ಸಚಿವರು, ಮುಖಂಡರೊಂದಿಗೆ ಚರ್ಚೆ ಮಾಡಲಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_317_8.txt b/eesanje/url_46_317_8.txt new file mode 100644 index 0000000000000000000000000000000000000000..aa080e20d09ca7c178d455a56685f2d916f33629 --- /dev/null +++ b/eesanje/url_46_317_8.txt @@ -0,0 +1,13 @@ +ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿಸಿಎಂ ಹಸ್ತಕ್ಷೇಪ ಮಾಡಿಲ್ಲ : ಸತೀಶ್ ಜಾರಕಿಹೊಳಿ +ಬೆಂಗಳೂರು, ನ.7- ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ತಾವು ಆಕಾಂಕ್ಷಿಯಲ್ಲ. ತಮ್ಮ ಸಾಮಥ್ರ್ಯಕ್ಕೆ ತಕ್ಕಷ್ಟು ಜವಾಬ್ದಾರಿ (ಲೋಡ್ ) ಇದೆ. ಸದ್ಯಕ್ಕೆ ನಾನು ಅಷ್ಟಕ್ಕೇ ಸೀಮಿತವಾಗಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಗ್ಗೆ ಸತೀಶ್ ಜಾರಕಿಹೊಳಿ ಅವರ ಮನೆಗೆ ದಿಢೀರ್ ಭೇಟಿ ನೀಡಿ ಚರ್ಚೆ ನಡೆಸಿದರು. +ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಉಪಮುಖ್ಯ ಮಂತ್ರಿಗಳು ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ, ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಕುರಿತು ಮಾಲೋಚನೆಗಳಾಗಿವೆ. ಬಂದಷ್ಟೇ ವೇಗವಾಗಿ ವಾಪಸ್ ಹೋಗಿದ್ದಾರೆ. ನಮ್ಮ ಚರ್ಚೆಯ ವೇಳೆ ಬೆಳಗಾವಿ ಜಿಲ್ಲಾ ರಾಜಕಾರಣ ಕುರಿತು ಚರ್ಚೆ ನಡೆದಿಲ್ಲ ಎಂದರು. +ಬೆಳಗಾವಿ ಜಿಲ್ಲಾ ಮಟ್ಟದಲ್ಲಿ ಕೆಲ ಸಮಸ್ಯೆಗಳಿವೆ. ಕಾಲಕಾಲಕ್ಕೆ ಅವು ಉದ್ಭವಿಸು ತ್ತವೆ ಮತ್ತು ಬಗೆಹರಿಯುತ್ತದೆ. ಅದನ್ನು ನಾವು ಸ್ಥಳೀಯವಾಗಿಯೇ ಬಗೆಹರಿಸಿಕೊಳ್ಳುತ್ತೇವೆ. ಉಪಮುಖ್ಯಮಂತ್ರಿಯವರು ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ಅವರೊಂದಿಗೆ ಚರ್ಚಿ ಸುವ ಅಗತ್ಯವೂ ಇಲ್ಲ. ಬೆಳಗಾವಿ ಯೊಂದೇ ಅಲ್ಲ ಎಲ್ಲ ಜಿಲ್ಲೆಗಳಲ್ಲೂ ಸ್ಥಳೀಯ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಸರ್ಕಾರವಷ್ಟೇ ಅಲ್ಲ ಹಿಂದಿನ ಸರ್ಕಾರದಲ್ಲೂ ಆ ರೀತಿಯ ಸಮಸ್ಯೆಗಳಿದ್ದವು ಎಂದು ಹೇಳಿದರು. +ಸದ್ಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ದೆಹಲಿ ಮಟ್ಟದಲ್ಲಿ ಹೈಕಮಾಂಡ್ ನಿರ್ಧರಿಸಿದೆ. ಲೋಕಸಭೆ ಚುನಾವಣೆವರೆಗೂ ಯಥಾಸ್ಥಿತಿಯೇ ಮುಂದುವರೆಯುವ ಸಾಧ್ಯತೆಗಳಿವೆ. ಚಂದ್ರಪ್ಪ ಅವರನ್ನು ಹೊರತುಪಡಿಸಿದರೆ ಉಳಿದ ನಾಲ್ವರು ಕಾರ್ಯಾಧ್ಯಕ್ಷರು ಒಂದಲ್ಲ ಒಂದು ಹುದ್ದೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ ಎಂದು ಎಲ್ಲರೂ ಹೇಳಿದ್ದಾರೆ. ಅದು ಚರ್ಚೆಯ ಹಂತದಲ್ಲೂ ಇದೆ ಎಂದು ಹೇಳಿದರು. +ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ +ಕೆಪಿಸಿಸಿ ಅಧ್ಯಕ್ಷರ ರೇಸ್‍ನಲ್ಲಿ ನನ್ನ ಹೆಸರಿಲ್ಲ. ನಾನು ಆಕಾಂಕ್ಷಿಯೂ ಅಲ್ಲ. ನನ್ನ ಸಾಮಥ್ರ್ಯಕ್ಕೆ ಅನುಗುಣವಾಗಿ ಕಾರ್ಯಭಾರಗಳಿವೆ. ಅವುಗಳನ್ನೇ ನಿಭಾಯಿಸುತ್ತೇನೆ. ನಾವಿನ್ನು ಬಹಳಷ್ಟು ದೂರ ಪ್ರಯಾಣ ಮಾಡಬೇಕು. ಟ್ರಾಕ್‍ಗೆ ಬರಬೇಕು. ಆವರೆಗೂ ಇರುವ ಜವಾಬ್ದಾರಿಗಳನ್ನೇ ನಿಭಾಯಿಸುತ್ತೇನೆ. ಸದ್ಯಕ್ಕೆ ನಮ್ಮ ಗಾಡಿ ಆರಾಮಾಗಿ ಚಲಿಸುತ್ತಿದೆ ಎಂದು ತಮ್ಮದೇ ಶೈಲಿಯಲ್ಲಿ ಹೇಳಿದರು. +ಬೆಂಗಳೂರಿನಲ್ಲಿ ಸುರಂಗಮಾರ್ಗ ರಸ್ತೆಗಳ ನಿರ್ಮಾಣದ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚೆಗಳು ನಡೆದಿವೆ. ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಯೋಜನೆ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಆದರೆ ಯಾವ ಇಲಾಖೆ ಕಾಮಗಾರಿಯನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಿರ್ಧಾರವಾಗಿಲ್ಲ. +ಬಿಬಿಎಂಪಿಯೇ ಅಥವಾ ಲೋಕೋಪಯೋಗಿ ಇಲಾಖೆಯೇ ಎಂಬುದನ್ನು ಸರ್ಕಾರದ ಮಟ್ಟದಲ್ಲಿ ಮುಖ್ಯಮಂತ್ರಿಯವರು ಚರ್ಚಿಸಿ ನಿರ್ಧರಿಸಬೇಕಾಗುತ್ತದೆ. ಈ ವಿಷಯದಲ್ಲಿ ತಮ್ಮ ಹಾಗೂ ಡಿ.ಕೆ.ಶಿವಕುಮಾರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ಸದಾಶಿವ ಆಯೋಗದ ವರದಿ ಜಾರಿಯಾಗ ಬೇಕು ಎಂಬುದು ಹಲವು ವರ್ಷಗಳ ಬೇಡಿಕೆ. ಒಮ್ಮೆ ಈ ಬಗ್ಗೆ ನಿರ್ಧಾರ ತೆಗೆದುಕೊಂಡು ಆ ಸಮುದಾಯಗಳಿಗೆ ನ್ಯಾಯ ದೊರಕಿಸಬೇಕಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರು ವರದಿ ಜಾರಿಗೆ ಒತ್ತಾಯಿಸಿ ಮಾದಿಗ ಸಮುದಾಯದ ಮುಖಂಡರು, ಶಾಸಕರು ಮತ್ತು ಸಚಿವರ ಮನೆಗಳಿಗೆ ಮುತ್ತಿಗೆ ಹಾಕಬೇಕು ಎಂದು ಕರೆ ನೀಡಿರುವುದು ತಪ್ಪಲ್ಲ. +ಮಾಹಿತಿ ಆಯುಕ್ತರ ನೇಮಕದಲ್ಲಿ ಲೋಪ : ರಾಷ್ಟ್ರಪತಿಗಳಿಗೆ ಪತ್ರ ಬರೆದ ಚೌಧರಿ +ಸಚಿವರಾಗಿದ್ದರೂ ಕೆಲವೊಮ್ಮೆ ಸಮುದಾಯದ ಜೊತೆಯಲ್ಲೂ ನಿಲ್ಲಬೇಕಾಗುತ್ತದೆ. ಇದನ್ನು ಸರ್ಕಾರದ ವಿರುದ್ಧ ಎಂದು ಭಾವಿಸಲಾಗುವುದಿಲ್ಲ ಎಂದರು. ಮಾದಿಗ ಸಮುದಾಯದವರು ಶಾಸಕರ ಮನೆಗೆ ಮುತ್ತಿಗೆ ಹಾಕುವುದು ಹೊಸದೇನಲ್ಲ. ಎಷ್ಟು ಜನ ಬರುತ್ತಾರೋ ಬರಲಿ ನಾನು ಸಿದ್ದನಿದ್ದೇನೆ. ಊಟ ಉಪಚಾರ ಎಲ್ಲವನ್ನು ತಯಾರಿ ಮಾಡಿಕೊಂಡು ಅವರ ಜೊತೆ ಒಂದು ಗಂಟೆ ನಾನು ಕೂಡ ಸಾಂಕೇತಿಕವಾಗಿ ಧರಣಿ ಮಾಡುತ್ತೇನೆ ಎಂದು ಹೇಳಿದರು. +ಕಾಂತರಾಜು ಆಯೋಗದ ವರದಿಯಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಮೊದಲು ಅದು ಸರ್ಕಾರಕ್ಕೆ ಸಲ್ಲಿಕೆಯಾಗಲಿ. ಆ ಬಳಿಕ ವಿಧಾನಸಭೆಯಲ್ಲಿ ಒಂದು ವಾರ ಕಾಲ ನಿರಂತರ ಚರ್ಚೆಯಾಗಲಿ ಎಲ್ಲ ಸಮುದಾಯಗಳು ಅಭಿಪ್ರಾಯ ಹೇಳುವ ಮೂಲಕ ಯಾರಿಗೂ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕಿದೆ. ಲೋಪವಿದ್ದರೆ ಸಾರಸಗಟಾಗಿ ತಿರಸ್ಕಾರ ಮಾಡಬಹುದು ಇಲ್ಲವಾದರೆ ಅಂಗೀಕಾರದ ಬಗ್ಗೆ ಚರ್ಚೆಯಾಗಲಿ ಎಂದು ಹೇಳಿದರು. \ No newline at end of file diff --git a/eesanje/url_46_317_9.txt b/eesanje/url_46_317_9.txt new file mode 100644 index 0000000000000000000000000000000000000000..c5afab013a60a499a6ece6b659a15be83da59a18 --- /dev/null +++ b/eesanje/url_46_317_9.txt @@ -0,0 +1,7 @@ +ಪರೀಕ್ಷಾ ಅಕ್ರಮ ಪ್ರಕರಣ ಸಿಐಡಿ ತನಿಖೆ +ಬೆಂಗಳೂರು,ನ.7-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು ಹೋಗಲು ಅಧಿಕಾರಿಗಳೇ ಸಹಕರಿಸಿದ್ದಾರೆ. +ಆತ ಇರುವ ಬಗ್ಗೆ ಐಪಿಎಸ್ ಅಧಿಕಾರಿಯೇ ಮಾಹಿತಿ ನೀಡಿದರೂ ಬಂಧಿಸದೆ ನಾಪತ್ತೆಯಾಗಲು ನೆರವು ನೀಡಲಾಗಿದೆ ಎಂಬ ಕುರಿತು ತನಿಖೆ ನಡೆಸುತ್ತೇವೆ. ಯಾವುದೇ ಅಧಿಕಾರಿ ಶಾಮೀಲಾಗಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು. +ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರ್.ಡಿ.ಪಾಟೀಲ್ ಹೆಸರು ಪದೇ ಪದೇ ಇಂಥ ಪ್ರಕರಣಗಳಲ್ಲಿ ಕೇಳಿಬರುತ್ತಿದೆ. ಇನ್ನು ಮುಂದೆ ಕಠಿಣ ಕ್ರಮ ಕೈಗೊಂಡು ಆರೋಪಿಗಳಿಗೆ ಭಯ ಹುಟ್ಟುವಂತೆ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. +5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ +ಅಕ್ರಮದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಸ್ಪಷ್ಟಪಡಿಸಿದರು. ತನಿಖೆ ಉತ್ತಮ ಹಾದಿಯಲ್ಲಿದೆ ಎಲ್ಲ ರೀತಿಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. +ಒಂದು ವೇಳೆ ಸಿಐಡಿ ತನಿಖೆ ಅಗತ್ಯವಾದರೆ ಅದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮಗೆ ಪ್ರಕರಣದಲ್ಲಿ ಸತ್ಯಾಂಶ ಗೊತ್ತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_318_1.txt b/eesanje/url_46_318_1.txt new file mode 100644 index 0000000000000000000000000000000000000000..9e9f341b0aeb550f885859cbd217483e456ed496 --- /dev/null +++ b/eesanje/url_46_318_1.txt @@ -0,0 +1,13 @@ +ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್ +ಬೆಂಗಳೂರು, ನ.6- ಕಾಂಗ್ರೆಸ್‍ನ ಶಾಸಕರ ವಿದೇಶಿ ಪ್ರವಾಸ ಸದ್ಯಕ್ಕಿಲ್ಲ. ಮುಂದೆ ಅವಕಾಶ ಬಂದಾಗ ನೋಡೋಣ, ವರಿಷ್ಠರ ಗಮನಕ್ಕೆ ತಂದು ಪ್ರವಾಸ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾನಮನಸ್ಕರು ಸೇರಿದಾಕ್ಷಣ ಅದನ್ನು ಗುಂಪು ಅಥವಾ ಪಕ್ಷ ವಿರೋಧಿ ಚಟುವಟಿಕೆ ಎಂದು ಬಿಂಬಿಸಲಾಗುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಜಾರಿಯಲ್ಲಿದೆ, ಎಲ್ಲವೂ ತಣ್ಣಗಿದೆ, ಬಹಳಷ್ಟು ಕೆಲಸ ಮಾಡಬೇಕಿದೆ ಎಂದರು. +ದಲಿತ ಮುಖ್ಯಮಂತ್ರಿ ವಿಚಾರ 2013ರಲ್ಲೂ ಚಾಲನೆಯಲ್ಲಿತ್ತು, ಐದು ವರ್ಷ ಪೂರ್ತಿ ಚರ್ಚೆಯಲ್ಲಿತ್ತು. ಕೊನೆಗೆ ಫಿಚ್ಚರ್ ರಿಲೀಸ್ ಆಗಲಿಲ್ಲ, ಹಾಗಿದೆ ನಮ್ಮ ಪರಿಸ್ಥಿತಿ. 2008ರಿಂದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂದಿತ್ತು ಅವಕಾಶ ಸಿಗಲಿಲ್ಲ, ಪರಮೇಶ್ವರ್ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಿಎಂ ಆಗಲಿಲ್ಲ. ಆ ಸಮುದಾಯದಲ್ಲಿ ಅವಕಾಶಕ್ಕಾಗಿ ಕೂಗು ಕೇಳಿ ಬರುತ್ತಲೇ ಇದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಬೇಕಿದೆ ಎಂದರು. +ವಾಲ್ಮಿಕಿ ಸಮುದಾಯದ ಸ್ವಾಮೀಜಿ ಯವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಯಾಗಬೇಕು ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದಾರೆ. ಸಮುದಾಯದ ಸಭೆ ನಡೆದಾಗಲೆಲ್ಲಾ ಈ ವಿಚಾರ ಚರ್ಚೆಯಾಗುತ್ತದೆ. ಅದೇ ರೀತಿ ದಲಿತರಲ್ಲಿ, ಲಿಂಗಾಯಿತರಲ್ಲಿ, ಒಕ್ಕಲಿಗರಲ್ಲೂ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇದೆ. ಅದೇ ರೀತಿ ನನ್ನ ಹೆಸರು ರೇಸ್‍ನಲ್ಲಿ ಇದೆ, ಅದರಲ್ಲಿ ವಿಶೇಷವೇನು ಇಲ್ಲ ಎಂದರು. +ಮುಖ್ಯಮಂತ್ರಿಯವರು ಕರೆದಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಲು ಆಗಲಿಲ್ಲ. ಅಂದು ನನಗೆ ಆರೋಗ್ಯ ಸರಿ ಇರಲಿಲ್ಲ, ಹಾಗಾಗಿ ಭಾಗವಹಿಸಲಿಲ್ಲ. ಸಭೆಯಲ್ಲಿ ಇರಲಿಲ್ಲ ಎಂದಾಕ್ಷಣ ನಾವು ಹೊರಗಿದ್ದೇವೆ ಎಂದರ್ಥವಲ್ಲ. ಏನೇ ತೀರ್ಮಾನವಾದರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ, ತೀರ್ಮಾನಗಳನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು. +ಕಾಂಗ್ರೆಸ್‍ನಲ್ಲಿ ಎರಡು ಮೂರು ಶಕ್ತಿ ಕೇಂದ್ರಗಳು ಇವೆ ಎಂಬುದು ವದ್ಧಂತಿ ಮಾತ್ರ. ನಮ್ಮಲ್ಲಿ ಇರುವುದು ಒಂದೇ ಶಕ್ತಿ ಕೇಂದ್ರ, ಅದು ದೆಹಲಿಯಲ್ಲಿದೆ. ಅಧಿಕಾರ ಹಂಚಿಕೆಯ ಬಗ್ಗೆ ಯಾರು ಚರ್ಚೆ ಮಾಡಬಾರದು ಎಂಬದಕ್ಕೆ ಎಲ್ಲರೂ ಬದ್ಧರಾಗಿಬೇಕಿದೆ ಎಂದರು. +ಪ್ರಧಾನಿ ನರೇಂದ್ರ ಮೋದಿ ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಕಾರಣಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ, ಹಿಂದೆ ನಾವು ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಪಡೆದ ಹಾಗೂ ಪೇ ಸಿಎಂ ಆರೋಪ ಮಾಡಿದ್ದೇವು. ಪ್ರಧಾನಿಯವರು ಅದನ್ನು ಒಪ್ಪಿಕೊಳ್ಳುತ್ತಾರೆಯೇ, ರಾಜಕೀಯದಲ್ಲಿ ಆರೋಪ ಮಾಡುವುದು ಸುಲಭ ಸಾಬೀತು ಪಡಿಸುವುದು ಕಷ್ಟ ಎಂದು ಪ್ರಶ್ನಿಸಿದರು. +ರಾಜಕೀಯದಲ್ಲಿ ಮಾತನಾಡುವವರಿಗೆ ಪ್ರಾಮುಖ್ಯತೆ ಸಿಗಬಾರದು. ಟಿವಿ ಮುಂದೆ ಬಂದವರು ಮಾತ್ರವೇ ನಾಯಕರಲ್ಲ. ಮಾತನಾಡದವರಿಗೂ ಅವಕಾಶಗಳು ಸಿಗಬೇಕು. ಕೆಲವರಿಗೆ ಪ್ರಾಕ್ಟಿಕಲ್ ಗೋತ್ತಿರುತ್ತದೆ, ಇನ್ನೂ ಕೆಲವರಿಗೆ ಥಿಯೆರಿ ಗೋತ್ತಿರುತ್ತದೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದರು. +ಜಾತಿ ಜನಗಣತಿ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಬಳಿಕ ಸಂಪುಟದಲ್ಲಿ ಚರ್ಚೆಯಾಗಬೇಕು. ಒಮ್ಮೇಲೆ ಒಪ್ಪಿಕೊಳ್ಳುವುದಿಲ್ಲ. ವಿಧಾನಮಂಡಲದ ಉಭಯ ಸದನಗಳಲ್ಲೂ ಚರ್ಚೆಯಾಗಬೇಕು. ಅಲ್ಲಿ ಸಮುದಾಯಗಳವಾರು ಇರುವ ಆಕ್ಷೇಪಗಳನ್ನು ಹೇಳಬಹುದಾಗಿದೆ, ಸರಿ ಇದ್ದರೆ ಒಪ್ಪಿಕೊಳ್ಳಬಹುದು, ಇಲ್ಲವಾದರೆ ಮರು ಸಮೀಕ್ಷೆ ನಡೆಸಬಹುದು ಎಂದರು. +ಪ್ಲಾಟ್‍ಫಾರ್ಮ್ ಮೇಲೆ ಬಸ್ ಉರುಳಿ ಇಬ್ಬರ ಸಾವು +ಎಂಟು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆ ಸರಿಯಾಗಿತ್ತು. ಜನಗಣತಿ ವರದಿಗಳನ್ನು ಸಾಮಾನ್ಯವಾಗಿ ಐದಾರು ವರ್ಷಗಳ ಹಿಂದಿನದವುಗಳನ್ನೇ ಪರಿಗಣಿಸಲಾಗುತ್ತದೆ. ಒಕ್ಕಲಿಗ, ಲಿಂಗಾಯಿತ ಸಮುದಾಯಕ್ಕೆ ತಮ್ಮ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂಬ ಆತಂಕ ಇದೆ, ಉಪಜಾತಿಗಳನ್ನು ಕೈ ಬಿಡಲಾಗಿದೆ ಎಂಬ ಆಕ್ಷೇಪ ಇದೆ. +ಈಗಲೂ ಉಪಜಾತಿಗಳನ್ನು ಸೇರಿಸಿ ಲೆಕ್ಕ ಮಾಡಬಹುದು. ವರದಿ ಜಾರಿಯಾದರೆ ರಾಜಕೀಯವಾಗಿ ಮಹತ್ವದ ಬದಲಾವಣೆಯೇನು ಆಗುವುದಿಲ್ಲ. ಹೆಚ್ಚೆಂದರೆ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸಬಹುದು. ಬಹಳಷ್ಟು ಸಣ್ಣಪುಟ್ಟ ಜಾತಿಗಳು ಪರಿಗಣನೆಯಾಗಿ ಉಳಿದಿಲ್ಲ. ಎಸ್‍ಸಿ ಎಂದರೆ ನಾಲ್ಕೈದು ಜಾತಿ, ಪರಿಶಿಷ್ಟ ಪಂಗಡ ಎಂದರೆ ಮೂರ್ನಾಲ್ಕು ಸಮುದಾಯಗಳ ಹೆಸರುಗಳಷ್ಟೆ ಕೇಳಿ ಬರುತ್ತವೆ. +50 ಸಾವಿರ, ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಬಹಳಷ್ಟು ಸಮುದಾಯಗಳು ಪರಿಗಣನೆಗೆ ಒಳಗಾಗುತ್ತಿಲ್ಲ. ಈ ಕಾರಣಕ್ಕಾಗಿ ಜಾತಿ ಜನಗಣತಿ ವರದಿ ಚರ್ಚೆಯಾಗಿ ದಾಖಲೆಯಾಗಿ ಉಳಿಯಬೇಕು, ವರದಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ, ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದರು. \ No newline at end of file diff --git a/eesanje/url_46_318_10.txt b/eesanje/url_46_318_10.txt new file mode 100644 index 0000000000000000000000000000000000000000..e19626f2398fbaa32aa90fbd454efe63b65509b2 --- /dev/null +++ b/eesanje/url_46_318_10.txt @@ -0,0 +1,11 @@ +ದತ್ತಪೀಠವನ್ನು ಹಿಂದೂ ಪೂಜಾ ಕೇಂದ್ರವಾಗಿ ಉಳಿಸಲು ಸಿಎಂ ಮಧ್ಯಸ್ಥಿಕೆಗೆ ಮುತಾಲಿಕ್ ಆಗ್ರಹ + +ಚಿಕ್ಕಮಗಳೂರು,ನ.5-  ತಾಲೂಕಿನ ದತ್ತಪೀಠ ಹಿಂದೂಗಳ ಪೂಜಾ ಕೇಂದ್ರವಾಗಿ ಉಳಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಸ್ಥಿಕೆ ವಹಿಸಬೇಕೆಂದು ರಾಷ್ಟ್ರೀಯ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದರು.20ನೇ ವರ್ಷದ ದತ್ತಮಾಲಾ ಅಭಿಯಾನದ ಅಂಗವಾಗಿ ನಗರದ ಶಂಕರ ಮಠದ ಮುಂಭಾಗ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು,  ಎಲ್ಲಾ ದಾಖಲೆಗಳು ಹಾಗೂ  ಸರ್ಕಾರಿ ದಾಖಲೆಗಳ ಪ್ರಕಾರ ದತ್ತಪೀಠ ಹಿಂದೂಗಳಿಗೆ ಸೇರಿದ್ದಾಗಿದೆ. ಈಗಾಗಲೇ ಇಬ್ಬರೂ ಹಿಂದು ಅರ್ಚಕರ ನೇಮಕಗೊಂಡು ತ್ರಿಕಾಲ ಪೂಜೆ ನಡೆಯುತ್ತಿದೆ ಎಂದರು. +ಮುಸ್ಲಿಮರ ಪವಿತ್ರ ಗ್ರಂಥ ಖುರಾನ್ ನ ಪ್ರಕಾರ ವಿವಾದವಿರುವ ಸ್ಥಳದಲ್ಲಿ ದರ್ಗಾ ಪ್ರಾರ್ಥನೆ ಸಲ್ಲಿಸುವಂತಿಲ್ಲ ಹಾಗಾಗಿ   ದತ್ತ ಪೀಠದಿಂದ ಸ್ವಲ್ಪವೇ ದೂರದಲ್ಲಿರುವ  ನಾಗೇನಹಳ್ಳಿ ಯಲ್ಲಿ ದರ್ಗಾ ಇದ್ದು ಅಲ್ಲಿ ಉರುಸ್ ಮಾಡಿಕೊಳ್ಳಲು ನಮ್ಮ ಯಾವುದೇ ಅಭ್ಯಂತರ ಇಲ್ಲ  ದತ್ತ ಪೀಠದ ಆವರಣದಲ್ಲಿರುವ ಗೋರಿಗಳನ್ನ ಸ್ಥಳಾಂತರಿಸಿ ಸಂಪೂರ್ಣ ಹಿಂದೂ ಭಕ್ತರ ಶ್ರದ್ಧಾ ಕೇಂದ್ರವಾಗಿ ಪರಿವರ್ತಿಸಲು ಹಿಂದೂ ಮುಸ್ಲಿಂ ಮುಖಂಡರನ್ನು ಚಿಕ್ಕಮಗಳೂರಿನಲ್ಲಿ ಸಭೆ ಸೇರಿಸಿ ಸೌಹಾರ್ದವಾಗಿ   ಬಗೆಹರಿಸಲು  ಮುಖ್ಯಮಂತ್ರಿಗಳು   ಮಧ್ಯಸ್ಥಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳನ್ನು  ಒತ್ತಾಯಿಸಿದರು. +ಬಿಗಿ ಪೊಲೀಸ್ ಸರ್ಪಗಾವಲಿನಲ್ಲಿ  ಶೋಭ ಯಾತ್ರೆ +ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದು ಬಸ್ತ್‍ನೊಂದಿಗೆ ಶೋಭ ಯಾತ್ರೆ ಹಾಗೂ ದತ್ತಪೀಠದಲ್ಲಿ ದತ್ತಮಾಲಾ ವಿಸರ್ಜನೆ ನಡೆಯಿತು.  ದತ್ತ ಮಾಲೆ ಧರಿಸಿದ ನೂರಾರು ಕಾರ್ಯಕರ್ತರು ಹಾಗೂ ದತ್ತ ಭಕ್ತರು ಶೋಭಾ   ಯಾತ್ರೆಯಲ್ಲಿ ಪಾಲ್ಗೊಂಡಿದ್ದರು ರಾಜ್ಯದ ಹುಬ್ಬಳ್ಳಿ, ಬೆಳಗಾಂ, ಬಾಗಲಕೋಟೆ, ಕೋಲಾರ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಸೇರಿದಂತೆ ವಿವಿಧ   ಜಿಲ್ಲೆಗಳಿಂದ ಹಾಗೂ ಜಿಲ್ಲೆಯ  ತಾಲೂಕುಗಳಿಂದ ದತ್ತ ಮಾಲೆ ಧರಿಸಿ  ದತ್ತಮಾಲಾಧಾರಿಗಳು ಯಾತ್ರೆಯಲ್ಲಿ ಭಾಗವಹಿಸಿದ್ದರು. +ನಗರದ ಶಂಕರ ಮಠದಿಂದ ಹೊರಟ ಶೋಭಾ ಯಾತ್ರೆಯಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ರಾಜ್ಯಾಧ್ಯಕ್ಷ  ಗಂಗಾಧರ ಕುಲಕರ್ಣಿ, ಚಿಕ್ಕಮಗಳೂರು ವಿಭಾಗದ ಅಧ್ಯಕ್ಷ ರಂಜಿತ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ನವೀನಾ  ರಂಜಿತ್, ಜೇವರ್ಗಿ ಮಠದ ಸಿದ್ದಲಿಂಗ ಸ್ವಾಮೀಜಿ, ಅಲ್ಲಂ ಪುರದ ರಾಜೇಂದ್ರ ಸೇರಿದಂತೆ ಪಾಲ್ಗೊಂಡಿದ್ದರು. +ಸಿಎಂ ಕುರ್ಚಿ ಕಿತ್ತಾಟಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಡಿಕೆಶಿ +ಶಂಕರ್ ಮಠದಿಂದ ಹೊರಟ ಮೆರವಣಿಗೆ ಬಸವನಹಳ್ಳಿ ಮುಖ್ಯ  ರಸ್ತೆಯ ಮೂಲಕ ಆಜಾದ್ ಪಾರ್ಕ್ ತಲುಪಿತು. ಬೆಳಿಗ್ಗೆನಿಂದ ಸಂಜೆವರೆಗೂ ಬಸವನಹಳ್ಳಿ ಮುಖ್ಯರಸ್ತೆ ಹಾಗೂ ಎಂಜಿ ರಸ್ತೆಯಲ್ಲಿ ವಾಹನಗಳ ನಿಲುಗಡೆ ಹಾಗೂ ಸಂಚಾರ ನಿಷೇಸಲಾಗಿತ್ತು .ಎರಡು ರಸ್ತೆಗಳ ಅಡ್ಡ ರಸ್ತೆಗಳಿಗೆ ಬ್ಯಾರಿಕೆಡ್ ಹಾಕಲಾಗಿತ್ತು. ಶೋಭ ಯಾತ್ರೆ ಯುದ್ಧಕ್ಕೂ ದತ್ತ ಭಕ್ತರು ಭಜನೆ ಹಾಗೂ ಜಯ ಘೋಷಗಳನ್ನು ಕೂಗಿದರು. ಮೆರವಣಿಗೆಯಲ್ಲಿ ಶ್ರೀರಾಮನ ಸ್ತಬ್ಧಚಿತ್ರ ಗಮನ ಸೆಳೆಯಿತು. +ಆಜಾದ್ ಪಾರ್ಕಿನಿಂದ ವಿವಿಧ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿದ ದತ್ತ ಭಕ್ತರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಬ್ಯಾರಿಕ್ಯಾಡ್‍ನಲ್ಲಿ ಸಾಲಿನಲ್ಲಿ ನಿಂತು ದತ್ತ ಗುಹೆ ಪ್ರವೇಶಿಸಿ ದತ್ತಪಾದಿಕೆಗಳ ದರ್ಶನ ಪಡೆದರು. +ದತ್ತಪೀಠ ಮುಳ್ಳಯ್ಯನಗಿರಿ ಸೀತಾಳಯನ್ ಗಿರಿ, ಹೊನ್ನಮ್ಮನ ಹಳ್ಳ, ಗಾಳಿಕೆರೆ ಹಾಗೂ ಮಾಣಿಕ್ಯದಾರ ವಿವಿಧ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಸಲಾಗಿತ್ತು. ಅತ್ತಿ ಗುಂಡಿ ಮಾಣಿಕ್ಯದಾರ ಹಾಗೂ ನಗರದಲ್ಲಿ ಮೆರವಣಿಗೆ ಹೋಗುವ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕ್ಯಾಮೆರಾ ಕಾರ್ಯಾಚರಣೆ ಮಾಡಲಾಗಿತ್ತು. \ No newline at end of file diff --git a/eesanje/url_46_318_11.txt b/eesanje/url_46_318_11.txt new file mode 100644 index 0000000000000000000000000000000000000000..3113342e9725d705d2cb99d8f4aee61e8e0ce557 --- /dev/null +++ b/eesanje/url_46_318_11.txt @@ -0,0 +1,6 @@ +ಬರ ಪರಿಹಾರಕ್ಕಾಗಿ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಜೆಡಿಎಸ್ ಸಹಕಾರ ಕೇಳಿದ ಸಿಎಂ +ಬೆಂಗಳೂರು, ನ.5- ರಾಜ್ಯದ ಬರ ನಿರ್ವಹಣೆಗೆ ಹೆಚ್ಚಿನ ನೆರವು ಪಡೆದುಕೊಳ್ಳಲು ಕೇಂದ್ರದ ಬಳಿ ಸರ್ವ ಪಕ್ಷ ನಿಯೋಗ ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ನಾಯಕರಲ್ಲಿ ಮನವಿ ಮಾಡಿದ್ದಾರೆ. ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ತಿಳಿಸಿದ್ದಾರೆ. +ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದಿದ್ದಾರೆ. +ಹಿಂಗಾರು ಚೇತರಿಕೆ : ರಾಜ್ಯದಲ್ಲಿ 10 ದಿನ ಮಳೆ ಸಾಧ್ಯತೆ +ಹೊಸ ಬೆಳವಣಿಗೆಯಲ್ಲಿ ಕುಮಾರಸ್ವಾಮಿಯವರು ಅವರು ಈಗ ಕೇಂದ್ರದಲ್ಲಿ ಅಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದಿದ್ದಾರೆ. +ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. \ No newline at end of file diff --git a/eesanje/url_46_318_12.txt b/eesanje/url_46_318_12.txt new file mode 100644 index 0000000000000000000000000000000000000000..fd0044a06b96e576814be7e3a4f42d1d55b70f73 --- /dev/null +++ b/eesanje/url_46_318_12.txt @@ -0,0 +1,9 @@ +ಹಿಂಗಾರು ಚೇತರಿಕೆ : ರಾಜ್ಯದಲ್ಲಿ 10 ದಿನ ಮಳೆ ಸಾಧ್ಯತೆ +ಬೆಂಗಳೂರು, ನ.5-ಈಶಾನ್ಯ ಹಿಂಗಾರು ಮಳೆ ಚೇತರಿಕೆಯಾಗಿದ್ದು ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ನಿನ್ನೆ ಸಂಜೆ ಸುರಿದ ಮಳೆಗೆ ರಾಮನಗರದ ಬಳಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲಿನ ಅಂಡರ್ ಪಾಸ್‍ಗಳಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. +ನಿನ್ನೆ ಸಂಜೆ ಹಾಗೂ ರಾತ್ರಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಚದುರಿದಂತೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಐದುರಿಂದ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಅಕ್ಟೋಬರ್ ಕೊನೆಯ ವಾರದಲ್ಲಿ ಆರಂಭಗೊಂಡ ಹಿಂಗಾರು ದುರ್ಬಲವಾಗಿತ್ತು. ಇದರಿಂದ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿತ್ತು. ನವೆಂಬರ್ ಒಂದರಿಂದ ಈ ತನಕ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. +ಮುಂಗಾರಿನಂತೆ ಹಿಂಗಾರು ಕೈಕೊಟ್ಟಿದೆ ಎಂದು ಜನರು ಅದರಲ್ಲೂ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಕಳೆದ ಎರಡು ದಿನಗಳಿಂದ ಕೆಲವೆಡೆ ಉತ್ತಮ ಮಳೆ ಹಾಗೂ ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿರುವುದು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ. +ವಾತಾವರಣದಲ್ಲಿ ಕೆಲವೊಂದು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ಹಿಂಗಾರು ಚೇತರಿಸಿಕೊಂಡಿದ್ದು, ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆಗಳು ಇವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ಅವರು ತಿಳಿಸಿದರು. +ಅರಣ್ಯ ಸಿಬ್ಬಂದಿ-ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ, ಒಬ್ಬ ಬೇಟೆಗಾರ ಸಾವು +ರಾಜ್ಯದಲ್ಲಿ ಮುಂದಿನ ಹತ್ತು ದಿನಗಳ ಕಾಲ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ 5ದಿನಗಳ ಕಾಲ ಹೆಚ್ಚು ಮಳೆಯಾಗಲಿದೆ. ಐದು ದಿನಗಳ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದರು. ಹಿಂಗಾರು ಮಳೆ ಮುಂದಿನ ಹತ್ತು ದಿನಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ 75ರಿಂದ 100 ಮಿ.ಮೀ.ವರೆಗೂ ಮಳೆಯಾಗುವ ಸೂಚನೆಗಳಿವೆ. +ಉತ್ತರ ಒಳನಾಡಿನಲ್ಲಿ 16ರಿಂದಿ 65 ಮಿ.ಮೀ., ಕರಾವಳಿ 50-75 ಮಿ.ಮೀ. ಮಳೆಯಾಗಲಿದ್ದು, ಮಲೆನಾಡಿನಲ್ಲಿ 40ರಿದ 65 ಮಿ.ಮೀ.ನಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ವಿವರಿಸಿದರು. +ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಭಾಗದಲ್ಲಿ ನಾಲ್ಕೈದು ದಿನಗಳ ನಂತರ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ತಡವಾಗಿ ಹಿಂಗಾರು ಚೇತರಿಸಿಕೊಂಡಿರುವುದರಿಂದ ಕಟಾವಿಗೆ ಬಂದಿರುವ ಬೆಳೆಗಳಿಗೆ ತೊಂದರೆಯಾಗಲಿದೆ. ನೀರಿನ ಅವಶ್ಯಕತೆ ಇದ್ದ ಬೆಳಗಳಿಗೆ ಅನುಕೂಲವಾಗಲಿದೆ. ಜಾನುವಾರಗಳ ಮೇವು, ಕುಡಿಯುವ ನೀರಿಗೂ ಸಹಕಾರಿಯಾಗಲಿದೆ ಎಂದರು. \ No newline at end of file diff --git a/eesanje/url_46_318_2.txt b/eesanje/url_46_318_2.txt new file mode 100644 index 0000000000000000000000000000000000000000..c331fa91bc17472d5753848e5ea2c3c933fda195 --- /dev/null +++ b/eesanje/url_46_318_2.txt @@ -0,0 +1,9 @@ +ರೈತರ ಪಂಪ್ ಸೆಟ್‍ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ +ಬೆಂಗಳೂರು,ನ.6- ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವವನ್ನು ನೀಗಿಸಲು 1500 ಕೋಟಿ ರೂ.ಗಳ ಅಗತ್ಯವಿದ್ದು, ಅದನ್ನು ಅನುದಾನದ ಉಳಿತಾಯ ಹಾಗೂ ಮರು ಹಂಚಿಕೆ ಮೂಲಕ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯದಾದ್ಯಂತ ಐಪಿ ಸೆಟ್‍ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು ಗಂಟೆಗೆ 600 ಮೆಗಾವ್ಯಾಟ್ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್‍ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು. +2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ.45ರಷ್ಟು ಹೆಚ್ಚಿದೆ. +ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ +ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. +ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್ ಪಡೆಯಲಾಗುತ್ತಿದೆ ಎಂದು ತಿಳಿಸಿದರು.ಸೆಕ್ಷನ್ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದರು. +ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಗಿದೆ.ಮುಂದಿನ ವರ್ಷದಲ್ಲಿ ಐಪಿ ಸೆಟ್‍ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು. +ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_46_318_3.txt b/eesanje/url_46_318_3.txt new file mode 100644 index 0000000000000000000000000000000000000000..7deec39d6b2aa7593e5ebd98efd86f1b92bef9b3 --- /dev/null +++ b/eesanje/url_46_318_3.txt @@ -0,0 +1,7 @@ +ಪ್ರತಿ ತಿಂಗಳು 20ರೊಳಗೆ ಸಂದಾಯವಾಗಲಿದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಹಣ +ಬೆಂಗಳೂರು,ನ.6- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಗೆ ಪ್ರತಿ ತಿಂಗಳ 20ರೊಳಗೆ ಹಣ ಸಂದಾಯ ಮಾಡುವುದಾಗಿ ಆರ್ಥಿಕ ಇಲಾಖೆ ತಿಳಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಜಾರಿಗೊಳಿಸುತ್ತಿರುವ ಅನ್ನಭಾಗ್ಯಯೋಜನೆಯಲ್ಲಿ ಅಕ್ಕಿ ಬದಲಾಗಿ ನಗದು ಪಾವತಿ ಸಲಾಗುತ್ತಿದೆ. ಅದನ್ನು ತಿಂಗಳ ಆರಂಭದ 10ರಿಂದ 15ರೊಳಗೆ ಪಾವತಿಸಬೇಕು. +ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಪಡಿತರಚೀಟಿ ಹೊಂದಿರುವ ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ನಗದನ್ನು ಏಕೀಕೃತ ನೇರ ನಗದು ರೂಪದಲ್ಲಿ ವರ್ಗಾವಣೆ ಮಾಡಲಾಗುತ್ತಿದ್ದು ಅದನ್ನು 15ರಿಂದ 20ರೊಳಗೆ ಪಾವತಿಸಬೇಕಿದೆ. ಈ ಎರಡೂ ಯೋಜನೆಗಳಿಗೂ ಆರ್ಥಿಕ ಇಲಾಖೆ ಪ್ರತಿ ತಿಂಗಳ 20ರೊಳಗೆ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಲಾಗಿದೆ. +ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ನೀಡಲಾಗುತ್ತಿರುವ ಹಲವಾರು ಮಾಸಾಶನಗಳನ್ನು 1ರಿಂದ 5ನೇ ತಾರೀಖಿನೊಳಗೆ ಪಾವತಿ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ. ಪ್ರತಿ ಕಲ್ಯಾಣ ಯೋಜನೆಯ ಹಾಗೂ ಸಬ್ಸಿಡಿ ಸ್ಕೀಮ್‍ಗಳಲ್ಲಿ ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಗಳ ಜೋಡನೆ ಮಾಡಿ ಡಿಬಿಟಿ ಮೂಲಕ ಅಡೆತಡೆ ಇಲ್ಲದೆ ಹಣ ಪಾವತಿಸಲಾಗುತ್ತಿದೆ. +ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ +ಸರ್ಕಾರ ನೌಕರರ ವೇತನ ಪಾವತಿ ಸಮಯದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬಿಲ್‍ಗಳನ್ನು ಪಾವತಿಸಬೇಕಾದರೆ ಒತ್ತಡ ಹೆಚ್ಚಾಗುತ್ತದೆ. ಡಿಬಿಟಿಯಲ್ಲಿ ವಿಳಂಬವಾಗುತ್ತಿದೆ. ಪ್ರತಿ ಕಡತದ ಪರಿಶೀಲನೆಗೂ ವಿಳಂಬವಾಗುತ್ತದೆ ಎಂದು ವಿವರಿಸಲಾಗಿದೆ. +ಪಾವತಿ ಮತ್ತು ವಿತರಣೆ ವ್ಯವಸ್ಥೆಗಳ ನಡುವೆ ಸಮನ್ವಯೀಕರಣ ಅಗತ್ಯವಿದೆ ಗೃಹಲಕ್ಷ್ಮಿ, ಅನ್ನಭಾಗ್ಯಮತ್ತು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಸಂಖ್ಯೆಹೆಚ್ಚಾಗಿದೆ. ಆದ್ದರಿಂದ ಆರ್ಥಿಕ ಇಲಾಖೆಯ ಖಜಾನೆ ಘಟಕಕ್ಕೆ ಫಲಾನುಭವಿಗಳ ಪಟ್ಟಿಯನ್ನು ನಿಗದಿತ ಅವಯೊಳಗೆ ತಲುಪಿಸಬೇಕು. ಸದರಿ ಬಿಲ್‍ಗಳನ್ನು ಸೃಷ್ಟಿಸಿ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ. \ No newline at end of file diff --git a/eesanje/url_46_318_4.txt b/eesanje/url_46_318_4.txt new file mode 100644 index 0000000000000000000000000000000000000000..e05e080941f0893bd9ba401fd33c7f87e3d55a64 --- /dev/null +++ b/eesanje/url_46_318_4.txt @@ -0,0 +1,8 @@ +ಬಸ್ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ : ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು,ನ.6-ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನಾಲ್ಕು ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ ಸ್ವಾಲಂಬಿಯಾಗಿ ರೂಪಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಂ.ಆರ್.ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು. ಸಮಿತಿ ಹಲವು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಆಗಿನ ಮುಖ್ಯಮಂತ್ರಿಯವರಿಗೂ ನೀಡಿದೆ. ತಾವು ಸಚಿವರಾದ ಮೇಲೆ ತಮಗೂ ತಲುಪಿಸಿದೆ ಎಂದು ಹೇಳಿದರು. +ಸಮಿತಿಯ ಶಿಫಾರಸ್ಸಿನಲ್ಲಿ ಪ್ರಮುಖವಾಗಿ ಪ್ರಯಾಣ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಸಮಿತಿ ಮಾದರಿಯಲ್ಲಿ ಪ್ರತ್ಯೇಕವಾದ ಸ್ವಾಯತ್ತ ಸಮಿತಿ ರಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ಆ ವೇಳೆ ಡೀಸೆಲ್ ಬೆಲೆ 50ರಿಂದ 60 ರೂ.ನಷ್ಟಿತ್ತು. ಈಗ ತೀವ್ರವಾಗಿ ಏರಿಕೆಯಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ 2017 ಮತ್ತು 2022ರಲ್ಲಿ ಪರಿಷ್ಕರಣೆಯಾಗಿದೆ. +ಬಿಡಿಭಾಗಗಳ ಬೆಲೆ ಕೂಡ ಹೆಚ್ಚಾಗಿದೆ. ಆದರೂ ಯಾವುದೇ ಸರ್ಕಾರಗಳು ಬಸ್ ಪ್ರಯಾಣ ದರ ಪರಿಷ್ಕರಣೆಗೆ ಅನುಮತಿ ನೀಡುತ್ತಿಲ್ಲ. ಹೀಗೇ ಆದರೆ ಸಾರಿಗೆ ನಿಗಮಗಳು ಶಾಶ್ವತವಾಗಿ ನಷ್ಟದಲ್ಲಿರಬೇಕಾಗುತ್ತದೆ. ಆ ಕಾರಣಕ್ಕೆ ದರ ಪರಿಷ್ಕರಣೆಗೆ ಸ್ವಾಯತ್ತವಾಗಿ ನಿರ್ಣಯ ಕೈಗೊಳ್ಳುವ ಸಮಿತಿ ರಚಿಸುವಂತೆ ಶ್ರೀನಿವಾಸ್‍ಮೂರ್ತಿಯವರು ಶಿಫಾರಸ್ಸು ಮಾಡಿದ್ದಾರೆ. +“ಭಾರತ-ಕೆನಡಾ ಮುನಿಸು ಸದ್ಯಕ್ಕೆ ಮುಗಿಯಲ್ಲ” +ಆ ವರದಿ ಸರ್ಕಾರದ ಮುಂದಿದೆ. ಮುಖ್ಯಮಂತ್ರಿ ಹಾಗೂ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಮುಂದೆ ದರ ಏರಿಕೆಯ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿರುವ 25 ಸಾವಿರ ಹಳ್ಳಿಗಳ ಪೈಕಿ 300ರಿಂದ 400 ಗ್ರಾಮಗಳನ್ನು ಹೊರುತಪಡಿಸಿ ಉಳಿದೆಲ್ಲ ಕಡೆ ಬಸ್ ಸೇವೆ ಒದಗಿಸಲಾಗುತ್ತಿದೆ. ನಷ್ಟವಾದರೂ ಕೂಡ ಜನರಿಗೆ ಸೇವೆ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮುಂದುವರೆಸುತ್ತದೆ.ಇದರಿಂದಾಗಿ ನಷ್ಟ ಸಹಜ. ಖಾಸಗಿ ಸಾರಿಗೆಯವರು ನಷ್ಟವಾಗುವ ಕಡೆ ಬಸ್ ಸೇವೆ ಒದಗಿಸುವುದಿಲ್ಲ ಎಂದರು. +ಬಿಬಿಎಂಪಿಗೆ ಚುನಾವಣೆ ನಡೆಸಲು ಎಲ್ಲ ರೀತಿಯ ತಯಾರಿಗಳಾಗಿವೆ. ಆದರೆ ಹಿಂದುಳಿದ ವರ್ಗಗಳ ಮೀಸಲಾತಿ ವಿಷಯ ಇತ್ಯರ್ಥವಾಗದ ಹಿನ್ನಲೆಯಲ್ಲಿ ವಿಳಂಬವಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದವರು ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿ ನೀಡಲಾಗಿದೆ. ನಮ್ಮಲ್ಲಿ ಕಾಂತರಾಜು ಆಯೋಗದ ವರದಿ ಸಲ್ಲಿಕೆಯಾದ ಬಳಿಕ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಅದನ್ನು ಆಧರಿಸಿ ಮೀಸಲಾತಿ ನೀಡಬಹುದು. +ಪ್ರಸ್ತುತ ಸಂದರ್ಭದಲ್ಲಿ ಒಬಿಸಿ ಮೀಸಲಾತಿ ಇಲ್ಲದೆ ಬಿಬಿಎಂಪಿ ಚುನಾವಣೆ ನಡೆಸಬೇಕಾಗುತ್ತದೆ. ಅದು ಸಾಧ್ಯವಿಲ್ಲ. ಈ ತಿಂಗಳೊಳಗೆ ಒಬಿಸಿ ಮೀಸಲಾತಿ ವಿಷಯ ಇತ್ಯರ್ಥವಾದರೆ ಒಂದು ತಿಂಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ದವಿದೆ ಎಂದರು. \ No newline at end of file diff --git a/eesanje/url_46_318_5.txt b/eesanje/url_46_318_5.txt new file mode 100644 index 0000000000000000000000000000000000000000..921bb46d6e4be3d265c5a78a44c2e9c992fced41 --- /dev/null +++ b/eesanje/url_46_318_5.txt @@ -0,0 +1,13 @@ +ಬರಕ್ಕಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಸರ್ಕಾರಕ್ಕೆ ದೊಡ್ಡ ಸಂಕಷ್ಟವಾಗಿದೆ : ಹೆಚ್‌ಡಿಕೆ +ಬೆಂಗಳೂರು,ನ.6- ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ. +ಅಲ್ಲದೆ, ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ವ್ಯಂಗ್ಯವಾಡಿದ್ದಾರೆ. +ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ, ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರ ದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. +ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ +ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ ಎಂದು ಅವರು ಕುಟುಕಿದ್ದಾರೆ. +236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮËಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ ಎಂದು ಅವರು ಪ್ರಶ್ನಿಸಿದ್ದಾರೆ. +ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ವಿಶ್ವವಿಖ್ಯಾತ ವಿತ್ತತಜ್ಞರಾಗಿ ಮೆರೆಯುತ್ತಿರುವವರು ನೀವು. ಅಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ಜೋಪಾನ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರ್ಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. +ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೆ ೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು. +ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದುಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. +ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ +ಕುತ್ತಿಗೆಗೆ ಗ್ಯಾರಂಟಿ ಬೋರ್ಡ್ ಹಾಕಿಕೊಂಡು ಹಾದಿ-ಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರ್ಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಉತ್ತರ ನೀಡಿ ಸನ್ಮಾನ್ಯ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ. \ No newline at end of file diff --git a/eesanje/url_46_318_6.txt b/eesanje/url_46_318_6.txt new file mode 100644 index 0000000000000000000000000000000000000000..ce2b01ffb311fa74daa66258a7c1ce7dffe7ecc6 --- /dev/null +++ b/eesanje/url_46_318_6.txt @@ -0,0 +1,6 @@ +ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ : ಸಚಿವ ಈಶ್ವರ ಖಂಡ್ರೆ +ಬೆಂಗಳೂರು,ನ.6- ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. +ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ. +ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ +ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ. +ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_318_7.txt b/eesanje/url_46_318_7.txt new file mode 100644 index 0000000000000000000000000000000000000000..fa82dd5c4bbdbd232b4756ba8b3a5fa392eb355c --- /dev/null +++ b/eesanje/url_46_318_7.txt @@ -0,0 +1,7 @@ +ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ +ಬೆಂಗಳೂರು, ನ.6-ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ. +ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. +ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದ ರಾಹುಲ್ ಗಾಂಧಿ +ಹಿನ್ನೆಲೆ: ಮೊನ್ನೆ ಸಂಜೆ ಪ್ರತಿಮಾ ಅವರು ಕೆಲಸ ಮುಗಿಸಿಕೊಂಡು ಇಲಾಖೆ ಕಾರಿನಲ್ಲಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‍ಮೆಂಟ್ ಪಕ್ಕದ ತಮ್ಮ ಮನೆಗೆ ಡ್ರಾಪ್ ಪಡೆದ ಕೆಲವೇ ನಿಮಿಷದಲ್ಲಿ ಅವರ ಕೊಲೆ ನಡೆದು ಹೋಗಿತ್ತು. +ಪ್ರತಿಮಾ ಅವರ ಕುತ್ತಿಗೆಗೆ ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ಮೊನ್ನೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ. +ನಿನ್ನೆ ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆಗಾಗಿ ರಚಿಸಲಾಗಿದ್ದ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. \ No newline at end of file diff --git a/eesanje/url_46_318_8.txt b/eesanje/url_46_318_8.txt new file mode 100644 index 0000000000000000000000000000000000000000..f326c3d6af016cc9c4aa960e6b0e8f83d30a7abc --- /dev/null +++ b/eesanje/url_46_318_8.txt @@ -0,0 +1,6 @@ +ಧೈರ್ಯ ಮತ್ತು ದಕ್ಷತೆಯೇ ಪ್ರತಿಮಾ ಪ್ರಾಣಕ್ಕೆ ಮುಳುವಾಯ್ತಾ..? +ಬೆಂಗಳೂರು,ನ.5- ಪ್ರತಿಮಾ ಅವರು ಧಕ್ಷ ಹಾಗೂ ಧೈರ್ಯವಂತ ಅಕಾರಿಯಾಗಿದ್ದರು. ಅವರ ಸಾವು ನಿಜಕ್ಕೂ ಆಘಾತ ತಂದಿದೆ ಎಂದು ಬೆಂಗಳೂರು ನಗರ ಜಿಲ್ಲಾಕಾರಿ ದಯಾನಂದ್ ತಿಳಿಸಿದ್ದಾರೆ. ಇಂದು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಬಳಿ ಮನೆಯಲ್ಲಿ ಕೊಲೆಯಾದ ಪ್ರತಿಮಾ ಅವರ ನಿವಾಸಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. +ಗಣಿಗಾರಿಕೆ ವಿಭಾಗದಲ್ಲಿ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅಕ್ರಮಗಳನ್ನು ತಡೆಯುವುದು ಮತ್ತು ಪರಿಸರ ಸಂರಕ್ಷಣೆ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಮಾ ಅವರು ನಿರ್ಭೀತಿಯಿಂದ ಕೆಲಸ ಮಾಡಿದ್ದರು ಎಂದು ತಿಳಿಸಿದ್ದಾರೆ. +ಸಾವಯವ ಕೃಷಿಯಾಯ್ತು ಈಗ ಅಡುಗೆಗೂ ಸಾವಯವ +ರಾಮನಗರದಲ್ಲಿ ಕೆಲಸ ಮಾಡಿ ಸುಮಾರು ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಕುರಿತಂತೆ ಅಕಾರಿಗಳ ಸಭೆ ನಡೆಸಲಾಗಿತ್ತು ಅಲ್ಲಿ ಅವರು ಭಾಗವಹಿಸಿದ್ದರು. ಎಲ್ಲರಿಗೂ ಅಕ್ರಮ ಗಣಿಗಾರಿಕೆ ತಡೆಯುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಅವರು ಪ್ರಕರಣವೊಂದರಲ್ಲಿ ತನಿಖೆ ನಡೆಸಿ ನನಗೆ ವರದಿ ನೀಡಿದ್ದರು ಎಂದು ತಿಳಿಸಿದ್ದಾರೆ. +ಪ್ರತಿಮಾ ಅವರಿಗೆ ಕೆಲಸದ ವೇಳೆ ಯಾರಾದರೂ ಅಡಚಣೆ ಉಂಟು ಮಾಡಿದ್ದಾರಾ? ಬೆದರಿಕೆ ಹಾಕಿದ್ದರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಕಾರಿಗಳು, ಈ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಕೆಲವರು ಅಡ್ಡಿಪಡಿಸುತ್ತಾರೆ ಆದರೆ ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ. ಪೊಲೀಸರು ಎಲ್ಲ ಹಂತದಲ್ಲೂ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚುತ್ತಾರೆ ಶಿಕ್ಷೆಯಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_318_9.txt b/eesanje/url_46_318_9.txt new file mode 100644 index 0000000000000000000000000000000000000000..15c3b1e1dec1892da040b7ba7337142014f7328f --- /dev/null +++ b/eesanje/url_46_318_9.txt @@ -0,0 +1,14 @@ +ಹಾಸನಾಂಬೆ ವಿಶೇಷ ದರ್ಶನ ಪಾಸ್‌ಗಳಿಂದ ಎರಡೇ ದಿನಗಳಲ್ಲಿ ಭಕ್ತರಿಂದ 24 ಲಕ್ಷ ರೂ. ಸಂಗ್ರಹ +ಹಾಸನ, ನ.5- ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ನ.3 ಹಾಗೂ ನ.4ರ ವಿಶೇಷ ದರ್ಶನಕ್ಕೆ 1000ರೂ. ಮುಖ ಬೆಲೆಯ 860 ಪಾಸ್ ಮಾರಾಟವಾಗಿದ್ದು 8,60,000 ರೂ. ಸಂಗ್ರಹಿಸಲಾಗಿದೆ.300 ಮುಖ ಬೆಲೆಯ 5178 ಪಾಸ್ ಮಾರಾಟ ಮಾಡಲಾಗಿ 15,53,400ರೂ. ಸಂಗ್ರಹಿಸಲಾಗಿದ್ದು, ಒಟ್ಟು 23,13,400ರೂ. ಸಂಗ್ರಹವಾಗಿದೆ ಎಂದು ಎಡಿಎಲ್ ಆರ್.ಸುಜಯ್ ಮಾಹಿತಿ ನೀಡಿದ್ದಾರೆ. ಲಾಡು ಮಾರಾಟದಿಂದ 5,12,340 ಸಂಗ್ರಹಿಸಲಾಗಿದೆ. ಆಳ್ವಾಸ್ ಸಾಂಸ್ಕøತಿಕ ಕಾರ್ಯಕ್ರಮ: ನಗರದ ಕಲಾ ಕಾಲೇಜಿನಲ್ಲಿ ಸಂಜೆ 7 ಗಂಟೆಗೆ ಹಮ್ಮಿಕೊಂಡಿರುವ ಆಳ್ವಾಸ್ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ. +ರಾಜ್ಯದಲ್ಲಿ ವಿಶೇಷವಾದ ಸಾಂಸ್ಕøತಿಕ ಕಾರ್ಯಕ್ರಮ ಆಯೋಜನೆಯಲ್ಲಿ ಪ್ರಖ್ಯಾತಿ ಪಡೆದಿರುವ ಆಳ್ವಾಸ್ ನುಡಿಸಿರಿ ತಂಡವು ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಯೋಜನೆ ಮಾಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದಲೂ ಅಗತ್ಯ ಬಂದೋಬಸ್ತ ವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ. +ಸ್ಕೌಟ್ಸ್ ಮತ್ತು ಗೈಡ್ಸ್ ತಂಡದಿಂದ ಅಳಿಲು ಸೇವೆ: +ಹಾಸನಾಂಬ ದರ್ಶನೋತ್ಸವ ಪ್ರಾರಂಭವಾದ ದಿನದಿಂದ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸದಸ್ಯರು ಭಕ್ತಾದಿಗಳಿಗೆ ದರ್ಶನಕ್ಕೆ ನೆರವಾಗುವ ಮೂಲಕ ಅಳಿಲು ಸೇವೆ ನೀಡುತ್ತಿದ್ದು , ಸುಮಾರು 200 ಮಂದಿ ನಿಯೋಜನೆಗೊಂಡಿದ್ದಾರೆ. +ಪ್ರತಿದಿನ ಭಕ್ತಾದಿಗಳಿಗೆ ನೀರು- ಮಜ್ಜಿಗೆ ವಿತರಿಸುತ್ತಿರುವ ಇವರ ತಂಡ ವಿಕಲಚೇತನ, ವೃದ್ಧ ಭಕ್ತಾದಿಗಳಿಗೆ ವೀಲ್ ಚೇರ್‍ಗಳ ಮೂಲಕ ದೇವಾಲಯದ ಆವರಣಕ್ಕೆ ಕರೆದುಕೊಂಡು ಬಂದು ದೇವರ ದರ್ಶನ ಮಾಡಿಸಿ ಪುನಃ ನಿಗದಿತ ಸ್ಥಳಕ್ಕೆ ತಲುಪಿಸುತ್ತಿದ್ದಾರೆ. +ಮಡಿಕೇರಿಯ ಬಾಂಬ್ ಸ್ಕ್ವಾಡ್‍ನಿಂದ ಪರಿಶೀಲನೆ:ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇವಾಲಯದ ಆವರಣಕ್ಕೆ ಅಲಂಕಾರಕ್ಕೆ ಬಳಸುವ ಹೂವು ಹಾಗೂ ಇತರ ವಸ್ತುಗಳ ಪರಿಶೀಲನೆಗಾಗಿಯೇ ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡಿರುವ ತಂಡವು ಇಂದು ಪರಿಶೀಲನೆ ನಡೆಸಿತು.ಮಡಿಕೇರಿಯಿಂದ ಆಗಮಿಸಿರುವ 8 ಮಂದಿಯ ತಂಡ ಇಂದು ಹಾಸನಾಂಬ ದೇವಾಲಯದ ಆವರಣ ಹಾಗೂ ದೇವಾಲಯದ ಸುತ್ತಮುತ್ತ ಹೊರಗಡೆಯಿಂದ ತಂದು ಅಲಂಕಾರಕ್ಕೆ ಬಳಸಲಾಗುತ್ತಿರುವ ಹೂವಿನ ಹಾರ ಹಾಗೂ ಇತರೆ ವಸ್ತುಗಳನ್ನು ಬಾಂಬ ಪತ್ತೆ ಉಪಕರಣದ ಮೂಲಕ ಎಎಸ್‍ಐ ಶಿವಾನಂದಾ ಹಾಗೂ ರಂಗನಾಥ್ ಪರಿಶೀಲನೆ ನಡೆಸಿದರು. +ದರ್ಶನೋತ್ಸವ ಹಿನ್ನೆಲೆ ವಿವಿಧ ಕಾರ್ಯಕ್ರಮ: +ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಈ ಬಾರಿ ವಿಶೇಷವಾಗಿ ಆಯೋಜಿಸಲಾಗಿದ್ದ ಆಗಸದಿಂದ ಹಾಸನ ಹೆಲಿ ಟೂರಿಸಂ, ಪ್ಯಾರಾಸೆಲಿಂಗ್, ಪ್ಯಾರಾ ಮೋಟರಿಂಗ್, ಪ್ಯಾಕೇಜ್ ಸಾರಿಗೆ ಪ್ರವಾಸದಲ್ಲಿ ಬಹುತೇಕ ಮಂದಿ ಪ್ರಯೋಜನ ಪಡೆದಿದ್ದಾರೆ. +ಹೆಲಿ ಟೂರಿಸಂನಲ್ಲಿ ನ.3ರಂದು 85 ಮಂದಿ ಆಗಸದಲ್ಲಿ ಹಾರಾಟ ನಡೆಸಿದ್ದಾರೆ. ಇಂದು 135 ಮಂದಿ ಹೆಲಿಕ್ಯಾಪ್ಟರ್‍ನಲ್ಲಿ ಹಾಸನ ನಗರ ಸೇರಿದಂತೆ ಹಾಸನಾಂಬ ದೇವಾಲಯ ವೀಕ್ಷಣೆ ಮಾಡಿದ್ದು, ಪ್ರತಿ ಬಾರಿಯೂ ಐದರಿಂದ ಆರು ಮಂದಿ ಹೆಲಿಕ್ಯಾಪ್ಟರ್‍ನಲ್ಲಿ ಸಂಚರಿಸಿದ್ದು ಇದುವರೆಗೆ ಒಟ್ಟು 210 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. +ಪ್ರತಿ ವ್ಯಕ್ತಿಗೆ 4300ರೂ. ದರ ನಿಗದಿ ಮಾಡಲಾಗಿದ್ದು, ಇನ್ನು ಎರಡು ದಿನಗಳ ಕಾಲ ಕಾರ್ಯಕ್ರಮ ಮುಂದುವರೆಯಲಿದ್ದು ಇಂದು ಮತ್ತು ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಹಾಸನ ನಗರ ವೀಕ್ಷಣೆ ಮಾಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ಅಭಿಯಂತರ ಮನು ತಿಳಿಸಿದ್ದಾರೆ. +ನ.3ರಂದು ಪ್ಯಾರಾ ಸೈಲಿಂಗ್‍ನಲ್ಲಿ 50 ಮಂದಿ, ಪ್ಯಾರಾ ಮೋಟರಿಂಗ್‍ನಲ್ಲಿ 15 ಮಂದಿ ಆಗಸದಲ್ಲಿ ಹಾರಾಟ ನಡೆಸಿದ್ದು, 30 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ ಎಂದು ಅಕಾರಿ ನಂದಕುಮಾರ್ ಮಾಹಿತಿ ನೀಡಿದ್ದಾರೆ. +ಕೆಎಸ್‍ಆರ್‍ಟಿಸಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪ್ರಕೃತಿ ಪ್ರವಾಸೋದ್ಯಮ ಪ್ಯಾಕೇಜ್ ಟೂರ್ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಹೆಚ್ಚಿನ ಉತ್ಸಾಹ ಕಂಡಂತೆ ಕಾಣುತ್ತಿಲ್ಲ. ಇಂದು ಸಕಲೇಶಪುರ ಮಾರ್ಗ 425 ರೂ.ಗಳ ಪ್ಯಾಕೇಜ್ ಟೂರ್‍ಗೆ ಹಾಗೂ ಬೇಲೂರು ಮಾರ್ಗದ 350 ರೂ.ನ ಪ್ಯಾಕೇಜ್ ಸ್ಟೋರಿಗೆ ಎರಡು ಬಸ್‍ಗಳನ್ನು ನಿಯೋಜನೆ ಮಾಡಲಾಗಿದ್ದು, ಎರಡು ಮಾರ್ಗಗಳಿಂದ 45 ಮಂದಿ ಪ್ರವಾಸ ಮಾಡಿದ್ದಾರೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ರಕ್ಷಿತ್ ಮಾಹಿತಿ ನೀಡಿದ್ದಾರೆ. +ಇಂದು ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.ಜಿಲ್ಲಾಡಳಿತದಿಂದ ನ.2ರಂದು ನಗರದ ಹಾಸನಾಂಬ ಕಲಾ ಕ್ಷೇತ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಸುಮಾರು 40 ಮಂದಿ ಮಹಿಳೆಯರು ಭಾಗವಹಿಸಿದ್ದು, ಇವರಲ್ಲಿ ಪ್ರಥಮ ಬಹುಮಾನ 5000, ದ್ವಿತೀಯ ಬಹುಮಾನ 2000 ಹಾಗೂ ತೃತೀಯ 1000 ಬಹುಮಾನ ವಿತರಣೆ ಮಾಡಲಾಗಿದೆ. ಉಳಿದ 32 ಸ್ರ್ಪಗಳಿಗೆ ತಲಾ 500 ರೂ. ಸಮಾಧಾನಕರ ಬಹುಮಾನ ವಿತರಿಸಲಾಗಿದೆ ಎಂದು ಅಕಾರಿ ಸುಧಾ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_319_1.txt b/eesanje/url_46_319_1.txt new file mode 100644 index 0000000000000000000000000000000000000000..de4b089a6e6475bc90c756fdc2c3723a709529d4 --- /dev/null +++ b/eesanje/url_46_319_1.txt @@ -0,0 +1,7 @@ +ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಂದ ಮೈದುನ +ಬೆಂಗಳೂರು,ನ.4- ಮೈದುನನೇ ತನ್ನ ಅತ್ತಿಗೆ ಮತ್ತು ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕು ಯಳ್ಳೂರು ಗ್ರಾಮದಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ನಿವಾಸಿಗಳಾದ ಗೀತಾ ಮರಿಗೌಡ (35), ಇವರ ಮಕ್ಕಳಾದ ಅಕುಲ್(10) ಮತ್ತು ಅಂಕಿತಾ (7) ಕೊಲೆಯಾದ ದುರ್ದೈವಿಗಳು. +ಗೀತಾ ಅವರ ಪತಿ ಹೊನ್ನಗೌಡ ಮರಿಗೌಡ ಅವರು ದುಬೈನಲ್ಲಿ ಮೆಕ್ಯಾನಿಕಲ್ ವೃತ್ತಿ ಮಾಡುತ್ತಿದ್ದು, ಯಳ್ಳೂರಿನಲ್ಲಿ ಇವರ ಕುಟುಂಬ ನೆಲೆಸಿದ್ದು, ಇವರ ಜೊತೆ ಮೈದುನ ಕುಮಾರ ಗೌಡ ಮರಿಗೌಡ (32) ವಾಸವಿದ್ದು ಈತ ಅವಿವಾಹಿತ. ಮನೆ ಹಾಗೂ ಅಂಗಡಿಯನ್ನು ಹೊನ್ನಗೌಡ ಅವರು ಬಾಡಿಗೆಗೆ ಕೊಟ್ಟಿದ್ದು, ಬಾಡಿಗೆ ಹಣವನ್ನು ಸಹೋದರ ಕುಮಾರ ಗೌಡನೇ ಪಡೆದುಕೊಳ್ಳುತ್ತಿದ್ದನು. +ಇತ್ತೀಚೆಗಷ್ಟೇ ದುಬೈನಿಂದ ಹೊನ್ನಗೌಡ ಅವರು ಮನೆಗೆ ಬಂದಿದ್ದರು. ಆ ಸಂದರ್ಭದಲ್ಲಿ ಕುಮಾರ ಗೌಡ ಬಾಡಿಗೆ ಹಣವನ್ನು ದುಂದುವೆಚ್ಚ ಮಾಡಿ ದುಶ್ಚಟ ಕಲಿತಿದ್ದಾನೆಂದು ಪತಿಗೆ ಗೀತಾ ಅವರು ತಿಳಿಸಿದ್ದಾರೆ. ತನ್ನ ಸಹೋದರ ಹಾಳಾಗುತ್ತಿದ್ದಾನೆಂದು ತಿಳಿದು ಅಂಗಡಿ ಹಾಗೂ ಮನೆಗಳು ಬಾಡಿಗೆದಾರರಿಗೆ ಬಾಡಿಗೆ ಹಣವನ್ನು ಪತ್ನಿಗೆ ಕೊಡಿ ಎಂದು ಹೇಳಿ ನಂತರದ ದಿನಗಳಲ್ಲಿ ಹೊನ್ನಗೌಡ ಅವರು ದುಬೈಗೆ ಹೋಗಿದ್ದಾರೆ. +ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ +ಇದರಿಂದ ಅತ್ತಿಗೆ ಮೇಲೆ ಕೋಪಗೊಂಡ ಮೈದುನ ಕುಮಾರಗೌಡ ಮಧ್ಯರಾತ್ರಿ ಎದ್ದು, ನಿದ್ರೆಗೆ ಜಾರಿದ್ದ ಅತ್ತಿಗೆ ಮತ್ತು ಇಬ್ಬರು ಮಕ್ಕಳ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಮನಬಂದಂತೆ ಕತ್ತಿಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ವಿಷಯ ಹಾನಗಲ್ ಠಾಣೆ ಪೊಲೀಸರಿಗೆ ಗೊತ್ತಾಗಿದೆ. +ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದಾಗ ತಾಯಿ ಹಾಗೂ ಇಬ್ಬರು ಮಕ್ಕಳು ರಕ್ತದ ಮಡುವಿನಲ್ಲಿ ಕೊಲೆಯಾಗಿರುವುದು ಕಂಡು ಬಂದಿದೆ. ಈ ಬಗ್ಗೆ ಹಾನಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_319_10.txt b/eesanje/url_46_319_10.txt new file mode 100644 index 0000000000000000000000000000000000000000..6c961077e9f87152e6bd232a2beee1241f57a8c8 --- /dev/null +++ b/eesanje/url_46_319_10.txt @@ -0,0 +1,7 @@ +ಕುಡಿಯುವ ನೀರಿನ ಸಮಸ್ಯೆ ಯಾಗದಂತೆ ನೋಡಿಕೊಳ್ಳಿ : ಸಿಎಂ ಎಚ್ಚರಿಕೆ +ಬೆಂಗಳೂರು,ನ.3- ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದ ಅನುದಾನದ ಹೊರತಾಗಿಯೂ ರಾಜ್ಯ ಸರ್ಕಾರ ಮುಂದಾಗಿದ್ದು, ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿದೆ. ಯಾವುದೇ ಭಾಗದಲ್ಲಿ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. +ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯಾದ್ಯಂತ ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಮಳೆ ಕೊರತೆಯಿಂದಾಗಿ ಜಲಮೂಲಗಳು ಬತ್ತಿದ್ದು, ಹಾಹಾಕಾರ ಹೆಚ್ಚಾಗಿದೆ. ಸುಮಾರು ಸಾವಿರಕ್ಕೂ ಹೆಚ್ಚು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕಾದಂತಹ ಪರಿಸ್ಥಿತಿ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಸರ್ಕಾರ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಯಲ್ಲಿ ಸಾಕಷ್ಟು ಹಣ ಲಭ್ಯವಿದೆ. ಜೊತೆಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ತಲಾ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. +ಅದರ ಹೊರತಾಗಿಯೂ ಅನುದಾನದ ಕೊರತೆ ಎಂದು ಹಲವು ಕಡೆ ಆಕ್ಷೇಪಗಳು ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರ ಪಂಚ ಖಾತ್ರಿ ಯೋಜನೆಗಳಿಗೆ ಹಣ ಬಳಕೆ ಮಾಡಿ ಕುಡಿಯುವ ನೀರಿಗೆ ಸಂಕಷ್ಟದ ಸ್ಥಿತಿ ನಿರ್ಮಿಸಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. +ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ +ಬಿಜೆಪಿ ಹಲವಾರು ತಂಡಗಳನ್ನು ರಚಿಸಿಕೊಂಡು ಬರ ಅಧ್ಯಯನಕ್ಕೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. +ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಗತ್ಯವಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಬರಗಾಲ ಮತ್ತು ಅದರ ಪರಿಣಾಮಗಳ ಬಗ್ಗೆ ತೀವ್ರ ನಿಗಾ ಇಡಬೇಕು. ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು, ನರೇಗಾ ಯೋಜನೆಯಡಿ ಕೇಂದ್ರದಿಂದ ಆರ್ಥಿಕ ನೆರವು ದೊರೆಯುವುದು ವಿಳಂಬವಾದರೂ ಕೂಡ ರಾಜ್ಯದ ಬೊಕ್ಕಸದಿಂದಲೇ ಉದ್ಯೋಗ ಸೃಷ್ಟಿಗೆ ಹಣ ನೀಡಬೇಕು. ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡೆ ನೀಡಬಾರದು ಎಂದು ಕಟ್ಟಪ್ಪಣೆ ಮಾಡಿದ್ದಾರೆ. \ No newline at end of file diff --git a/eesanje/url_46_319_11.txt b/eesanje/url_46_319_11.txt new file mode 100644 index 0000000000000000000000000000000000000000..122e4ed6e0b2fab60d33cd67d29632891441cd3d --- /dev/null +++ b/eesanje/url_46_319_11.txt @@ -0,0 +1,5 @@ +ಹಾಸನಾಂಬೆ ದರ್ಶನ ಪಡೆದ ಎಚ್‍ಡಿಡಿ +ಹಾಸನ, ನ.3- ಪರಮೇಶ್ವರನ ಅನುಗ್ರಹದಿಂದ ಮುಂದಿನ ಬಾರಿ ಮೆಟ್ಟಿಲು ಹತ್ತಿ ಬರಲು ತಾಯಿ ಹಾಸನಾಂಬೆ ಶಕ್ತಿ ನೀಡುವ ನಂಬಿಕೆ ಇದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಹೇಳಿದರು. ಹಾಸನಾಂಬೆಯ ದರ್ಶನದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆರೋಗ್ಯವಾಗಿ ಮುಂದಿನ ಬಾರಿ ಬರುವಂತೆ ತಾಯಿಯಲ್ಲಿ ಆಶೀರ್ವಾದ ಬೇಡುತ್ತೇನೆ ಎಂದು ಹೇಳಿದರು. +ಶ್ರೀಕ್ಷೇತ್ರ ಐತಿಹಾಸಿಕವಾಗಿದ್ದು, ಬಹಳ ವಿಜೃಂಭಣೆಯಿಂದ ದೀಪದ ಅಲಂಕಾರವನ್ನು ಬೀದಿ ಬೀದಿಗಳಲ್ಲಿ ಸೊಗಸಾಗಿ ಮಾಡಿದ್ದಾರೆ. ಕುಡಿಯುವ ನೀರು ಸೇರಿದಂತೆ ಎಲ್ಲ ರೀತಿಯ ಸೌಲಭ್ಯ ಒದಗಿಸಿ ಬಹಳ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಉಸ್ತುವಾರಿ ಸಚಿವರಾದ ರಾಜಣ್ಣನವರು ಮುಂದೆ ನಿಂತು ಅಧಿಕಾರಿಗಳ ಸಹಕಾರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆಡಳಿತ ಮಂಡಳಿ ಹಾಗೂ ಜನತೆ ಪರವಾಗಿ ಎಲ್ಲರಿಗೂ ಅಭಿನಂದಿಸುವುದಾಗಿ ಹೇಳಿದರು. +ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ +ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ರೀಕ್ಷೇತ್ರದ ಪ್ರಚಾರ ಮಾಡಿರುವುದರಲ್ಲಿ ಮಾಧ್ಯಮದ ಕೊಡುಗೆ ಅಪಾರವಾಗಿದೆ ಎಂದು ದೇವೇಗೌಡರು ತಿಳಿಸಿದರು. ಶಾಸಕ ಸ್ವರೂಪ್, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‍ಪಿ ಸುಜಿತಾ ಶಾಂತಲಾ, ಎಸಿ ಮಾರುತಿ, ತಹಸೀಲ್ದಾರ್ ಶ್ವೇತಾ ಎಲ್ಲರೂ ಒಂದೇ ಮನಸ್ಸಿನಲ್ಲಿ ದೇಗುಲದ ಬಾಗಿಲು ಮುಚ್ಚುವವರೆಗೆ ಭಕ್ತಿಪೂರ್ವಕವಾಗಿ ಕಾರ್ಯ ನಡೆಸಿಕೊಡಬೇಕು ಎಂದು ದೇವೇಗೌಡರು ಹೇಳಿದರು. \ No newline at end of file diff --git a/eesanje/url_46_319_12.txt b/eesanje/url_46_319_12.txt new file mode 100644 index 0000000000000000000000000000000000000000..f539b871aca54d94551bed25077df21d0a8c9266 --- /dev/null +++ b/eesanje/url_46_319_12.txt @@ -0,0 +1,12 @@ +ದೀಪಾವಳಿ ವೇಳೆ ಪಟಾಕಿ ಸಿಡಿಸಲು ಮಾರ್ಗಸೂಚಿ ಬಿಡುಗಡೆ +ಬೆಂಗಳೂರು,ನ.3- ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನಗರದಲ್ಲಿ ಪಟಾಕಿ ಸಿಡಿಸಲು ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹಸಿರು ಪಟಾಕಿಗಳ ಮೇಲೆ ಹಾಗು ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆಯಿರಬೇಕು ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ, ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. +ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ್ಯಾಂಡಮ್ ಆಗಿ ಸಂಗ್ರಹಿಸಿ ನಿಗತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಬೇಕು ಮತ್ತು ನಿಗದಿತ ಗುಣಮಾಪನಗಳಿಗೆ ಸರಿಹೊಂದಿದ್ದಲ್ಲಿ, ಅವುಗಳನ್ನು ಸಹಾ ಕೂಡಲೆ ಮುಟ್ಟುಗೋಲು ಹಾಕಿಕೊಳ್ಳಬೇಕು. +ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗು ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. +ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳ ಕುರಿತಂತೆ ಸಾರ್ವಜನಿಕರಿಗೆ ಮತ್ತು ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವುದು. +ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು +ಯಾವುದೇ ಸ್ಥಳೀಯ ಆಸ್ಪತ್ರೆ ಹಾಗು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಹಾಗು ಇನ್ನಾವುದೇ ನಿಷೇತ ಪ್ರದೇಶದಲ್ಲಿ ಯಾವುದೇ ರೀತಿಯ ಪಟಾಕಿಗಳನ್ನು ಸೋಟಿಸುವಂತಿಲ್ಲ ಅಥವಾ ಬಳಸುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆ ಹಾಗು ಪೊಲೀಸ್ ಇಲಾಖೆಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. +ಪರಿಸರ ಸ್ನೇಹಿ ದೀಪಾವಳಿ ಹಬ್ಬದ ಕುರಿತು ಸಾರ್ವಜನಿಕ ಸ್ಥಳಗಳಾದ ಮೆಟ್ರೋ ನಿಲ್ದಾಣ, ರೈಲು, ಬಸ್ ನಿಲ್ದಾಣ, ಮಾಲ್‍ಗಳಲ್ಲಿ ಕರಪತಭಿತ್ತಿಪತ್ರಗಳನ್ನು ಹಂಚುವ ಮೂಲಕ ಆಡಿಯೋ ಮತ್ತು ಆಡಿಯೋ ಮುಖಾಂತರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸುವುದು. +ಸ್ಥಳೀಯ ಟಿ.ವಿ. ಹಾಗೂ ರೇಡಿಯೋ ಮುಖಾಂತರ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸುವ ಬಗ್ಗೆ ಜಾಗೃತಿ ಮೂಡಿಸುವುದು. ದೀಪಾವಳಿಯ ಸಮಯದಲ್ಲಿ ಉತ್ಪಾದನೆಯಾಗುವಂತಹ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮವಹಿಸುವುದು. +ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಣೆ ಮಾಡುತ್ತಿದ್ದಲ್ಲಿ ಕೂಡಲೆ ವಾಣಿಜ್ಯ ತೆರಿಗೆ ಇಲಾಖೆಯವತಿಯಿಂದ ರಾಜ್ಯದ ಗಡಿಗಳಲ್ಲಿರುವ ತಮ್ಮ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗು ಸಂಬಂಧಿತ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಹಾಗು ಸಾಗಾಣೆ ಮಾಡುವ ವಾಹನಗಳನ್ನು ಸಾರಿಗೆ ಇಲಾಖೆಯಿಂದ ಮುಟ್ಟುಗೋಲು ಹಾಕಿಕೊಳ್ಳುವುದು. +ಇದಕ್ಕೆ ಅವಶ್ಯಕತೆಯಿದ್ದಲ್ಲಿ ಸಂಬಂಧಪಟ್ಟ ಇಲಾಖೆಗಳ ಸಹಯೋಗವನ್ನು ಪಡೆದುಕೊಳ್ಳಬಹುದು.ಸದರಿ ಆದೇಶದಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸಮಯ: ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದಲ್ಲದೆ ಮಾನ್ಯ ಸರ್ವೋಚ್ಛ ನ್ಯಾಯಾಲಯವು ಮೇಲ್ಯಾಣಿಸಿದ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು, ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಸಿರುತ್ತದೆ. +ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು ಹಾಗು ಅಲ್ಲಿ ಹಸಿರು ಪಟಾಕಿಯಲ್ಲದೆ, ಇನ್ನಾವುದಾದರೂ ನಿಷೇತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ ಅಂತಹ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗು ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆಯನ್ನು ಹೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. \ No newline at end of file diff --git a/eesanje/url_46_319_2.txt b/eesanje/url_46_319_2.txt new file mode 100644 index 0000000000000000000000000000000000000000..62f28c949fd24c2a1ffa2161ec72f601155c6913 --- /dev/null +++ b/eesanje/url_46_319_2.txt @@ -0,0 +1,7 @@ +ನ.24ರೊಳಗೆ ಕಾಂತರಾಜ್ ಆಯೋಗದ ವರದಿ ಸಲ್ಲಿಕೆ +ಬೆಂಗಳೂರು,ನ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು ಸಲ್ಲಿಸುವು ದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂತರಾಜು ವರದಿಯ ಕುರಿತು ಕೇಳಿ ಬರುತ್ತಿರುವ ಆಕ್ಷೇಪಗಳ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು. ಹಿಂದೆ ಸಮೀಕ್ಷೆ ನಡೆಸಲಾಗಿದೆ. ಶಿಕ್ಷಕರು ದತ್ತಾಂಶ ಸಂಗ್ರಹಿಸಿದ್ದಾರೆ. ಅದನ್ನೂ ಕ್ರೋಢಿಕರಿಸಿ ವರದಿ ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ. ಸಮೀಕ್ಷೆ ಬಗ್ಗೆ ಕೇಳಿ ಬರುತ್ತಿರುವ ಟೀಕೆಗಳು ನಮಗೆ ಅದನ್ನೂ ಕ್ರೋಢಿಕರಿಸಲು ಅಡ್ಡಿ ಪಡಿಸುವುದಿಲ್ಲ ಎಂದರು. +ಕಾಂತರಾಜು ಆಯೋಗ ಸಂಗ್ರಹಿಸಿದ ಮಾಹಿತಿ ಅಸ್ಪಷ್ಟವಾಗಿದ್ದು, ಅವೈಜ್ಞಾನಿಕವಾಗಿದೆ ಎಂದು ಬಹಳಷ್ಟು ಟೀಕೆಗಳು ಕೇಳಿ ಬರುತ್ತಿವೆ. ಆದರೆ ಅದು ನಮಗೆ ಸಂಬಂಧಿಸಿದ್ದಲ್ಲ. ನಾವು ಸರ್ಕಾರಕ್ಕೆ ವರದಿ ನೀಡುತ್ತೇವೆ. ಅದರ ಬಳಿಕ ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ. ಟೀಕೆ ಮಾಡುವವರು ಯಾವ ಆಧಾರದ ಮೇಲೆ ಅದು ಅವೈಜ್ಞಾನಿಕ ಎಂದು ಹೇಳುತ್ತಿದ್ದಾರೋ ಗೋತ್ತಿಲ್ಲ ಎಂದರು. +ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ +ಹಿಂದೆ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಗೆ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಮುಂದೆ ನಾವು ಸರ್ಕಾರಕ್ಕೆ ಸಲ್ಲಿಸುವ ವರದಿಯಲ್ಲಿ ಯಾರ ಸಹಿ ಇರಲಿದೆ, ಇರುವುದಿಲ್ಲ ಎಂದು ಬೇರೆಯವರು ಈಗಲೇ ಹೇಗೆ ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು. +ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯಿಸದೆ ನಾವು ನಮ್ಮ ಕೆಲಸ ಮಾಡುತ್ತೇವೆ. ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಅದನ್ನು ನೋಡಿ ಅಂತಿಮ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಮರು ಗಣತಿ ನಡೆಸುವುದು ಸೇರಿದಂತೆ ಎಲ್ಲಲ್ಲಾ ರೀತಿಯ ನಿರ್ಧಾರಗಳನ್ನು ಸರ್ಕಾರವೇ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. \ No newline at end of file diff --git a/eesanje/url_46_319_3.txt b/eesanje/url_46_319_3.txt new file mode 100644 index 0000000000000000000000000000000000000000..a7e5e151fa9e05416a7f83cb664476611588a394 --- /dev/null +++ b/eesanje/url_46_319_3.txt @@ -0,0 +1,15 @@ +ಗೊಂದಲ ಬಿಡಿ ಕೆಲಸ ಮಾಡಿ : ಸಚಿವರಿಗೆ ಸಿಎಂ ಸಲಹೆ +ಬೆಂಗಳೂರು,ನ.4- ಕಾಂಗ್ರೆಸ್‍ನಲ್ಲಿ ಇತ್ತೀಚೆಗೆ ಸೃಷ್ಟಿಯಾಗಿರುವ ಗೊಂದಲಗಳನ್ನು ಬಗೆಹರಿಸುವುದು ಮತ್ತು ಲೋಕಸಭೆ ಚುನಾವಣೆ ತಯಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಂಪುಟ ಸಚಿವರ ಜೊತೆ ಉಪಹಾರಕೂಟ ನಡೆಸಿದ್ದು, ಗೊಂದಲಗಳನ್ನು ಬದಿಗಿಟ್ಟು ಬರ ನಿರ್ವಹಣೆ ಮತ್ತು ಚುನಾವಣೆ ಸಿದ್ದತೆಗಳಿಗೆ ಆದ್ಯ ಗಮನ ನೀಡುವಂತೆ ಸೂಚನೆ ನೀಡಿದ್ದಾರೆ. +ಮೊದಲ ಹಂತದಲ್ಲಿ 19 ಸಚಿವರಿಗೆ ಆಹ್ವಾನ ನೀಡಲಾಗಿದ್ದು, ಬಾಕಿ ಉಳಿದ ಸಚಿವರ ಜೊತೆಗೆ ಮುಂದಿನ ಬುಧವಾರ ಅಥವಾ ಗುರುವಾರ ಉಪಹಾರಕೂಟ ನಡೆಸುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಉಪಹಾರಕೂಟದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್, ಎಚ್.ಸಿ.ಮಹದೇವಪ್ಪ, ಜಮೀರ್ ಅಹಮ್ಮದ್ ಖಾನ್, ದಿನೇಶ್ ಗುಂಡೂ ರಾವ್, ಕೃಷ್ಣಭೈರೇಗೌಡ, ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಕೆ.ಎನ್. ರಾಜಣ್ಣ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಎನ್. ಎಸ್.ಬೋಸರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸಚಿವ ಸತೀಶ್ ಜಾರಕಿಹೊಳಿ ವೈಯಕ್ತಿಕ ಕಾರಣದಿಂದಾಗಿ ಸಭೆಯಿಂದ ದೂರ ಉಳಿದಿದ್ದರು. +ಸಚಿವ ಕೆ.ಜೆ.ಜಾರ್ಜ್ ದೆಹಲಿ ಪ್ರವಾಸದಲ್ಲಿರುವುದರಿಂದ ಸಭೆಯಲ್ಲಿ ಭಾಗವಹಿಸಲಿಲ್ಲ ಎಂದು ಹೇಳಲಾಗಿದೆ.ಇತ್ತೀಚೆಗೆ ಕಾಂಗ್ರೆಸ್‍ನಲ್ಲಿ ಒಂದರ ಮೇಲೊಂದರಂತೆ ಗೊಂದಲಕಾರಿ ಹೇಳಿಕೆಗಳು ಕೇಳಿಬರುತ್ತಿದ್ದು, ಲೋಕಸಭೆ ಚುನಾವಣೆಗೆ ಕೆಟ್ಟ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿತ್ತು. +ಪಕ್ಷದಲ್ಲಿ ಎರಡು ಶಕ್ತಿ ಕೇಂದ್ರಗಳು ಮತ್ತೊಮ್ಮೆ ಗಂಭೀರ ಸ್ವರೂಪದಲ್ಲಿ ಸಕ್ರಿಯಗೊಂಡಿದ್ದವು. ಡಿ.ಕೆ.ಶಿವಕುಮಾರ್ ಪರವಾಗಿ ಕೆಲವು ಶಾಸಕರು ಬ್ಯಾಟಿಂಗ್ ಮಾಡಿದರೆ, ಕೆಲವು ಸಚಿವರು ಮತ್ತು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬಹಿರಂಗ ಹೇಳಿಕೆ ನೀಡುವ ಮೂಲಕ ಒಳಬೇಗುದಿಗೆ ತುಪ್ಪ ಸುರಿದಿದ್ದರು. ಇದು ದಿನೇ ದಿನೇ ತೀವ್ರಗೊಳಲಾರಂಭಿಸಿ ಅಕಾರ ಹಂಚಿಕೆಯ ವಿಚಾರವನ್ನು ಹಾದಿರಂಪ ಬೀದಿರಂಪ ಮಾಡಿತ್ತು. +ಎರಡೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುತ್ತಲೇ ಕೆಲವು ಶಾಸಕರು ಬಿಜೆಪಿ ಆಪರೇಷನ್ ಕಮಲವನ್ನು ಚಾಲ್ತಿಯಲ್ಲಿಟ್ಟಿದೆ. ಕಾಂಗ್ರೆಸ್‍ನ 11ಕ್ಕೂ ಹೆಚ್ಚು ಮಂದಿ ಶಾಸಕರನ್ನು ಈಗಾಗಲೇ ಸಂಪರ್ಕಿಸಲಾಗಿದೆ. 50 ಕೋಟಿ ರೂ. ಆಮಿಷವೊಡ್ಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಅಸ್ಥಿರಗೊಳಿಸುವ ಆತಂಕವಿದೆ. ಅಂತಹ ಪರಿಸ್ಥಿತಿಯನ್ನು ನಿಭಾಯಿಸಲು ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ್ ಅವರು ಅನಿವಾರ್ಯ ಎಂದು ಬಿಂಬಿಸಲು ಯತ್ನಿಸಲಾಗಿತ್ತು. +ಇದಕ್ಕೆ ತಮ್ಮದೇ ಶೈಲಿಯಲ್ಲಿ ಮಾಸ್ಟರ್ ಸ್ಟ್ರೋಕ್ ನೀಡಿರುವ ಸಿದ್ದರಾಮಯ್ಯ, ಐದು ವರ್ಷ ನಮ್ಮ ಸರ್ಕಾರ ಅಧಿಕಾರದಲ್ಲಿರುತ್ತದೆ. ನಾನು ಮುಖ್ಯಮಂತ್ರಿಯಾಗಿದ್ದೇನೆ. ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಮೂಡಿಸಿದ್ದರು. +ಅದರ ಬೆನ್ನಲ್ಲೇ ಕೆ.ಎನ್.ರಾಜಣ್ಣ ವಿವಾದಕ್ಕೆ ತುಪ್ಪ ಸುರಿಯುವಂತೆ ಸಿದ್ದರಾಮಯ್ಯ ಅವರ ಬಳಿಕ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಘೋಷಿಸಿಬಿಟ್ಟರು. ಪಕ್ಷದಲ್ಲಿ ಮೇಲಿಂದ ಮೇಲೆ ಆಕ್ರಮಣಕಾರಿ ಹೇಳಿಕೆಗಳು ಹೊರಬರುತ್ತಿರುವುದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ಸ್ವಲ್ಪ ತಣ್ಣಗಾದಂತಾಗಿದ್ದಾರೆ. ತಾವು ಮುಖ್ಯಮಂತ್ರಿಯಾಗುವುದಾಗಿ ಎಲ್ಲಿಯೂ ಹೇಳಿಲ್ಲ. ಹಂಚಿಕೆ ಮಾಡಿಕೊಳ್ಳಲು ಅಧಿಕಾರವೇನು ಅವರ ಸ್ವಂತ ಆಸ್ತಿಯಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. +ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ +ಇದರ ಬೆನ್ನಲ್ಲೂ ರಾಮನಗರ ಹಾಗೂ ಇತರ ಭಾಗದ ಶಾಸಕರು ಡಿ.ಕೆ.ಶಿವಕುಮಾರ್ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರು, ಶಾಸಕರು, ಕ್ಷೇತ್ರ ಅಭಿವೃದ್ಧಿ ಮತ್ತು ಸರ್ಕಾರದ ಪರವಾಗಿ ಮಾತ್ರ ಮಾತನಾಡಬೇಕು. ಅನಗತ್ಯವಾಗಿ ವಿವಾದ ಸೃಷ್ಟಿಸುವ ಹೇಳಿಕೆ ನೀಡಬಾರದು ಎಂದು ಕಟ್ಟಪ್ಪಣೆ ಮಾಡಿದ್ದರು.ಮತ್ತೊಂದು ಹೆಜ್ಜೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಅವರು, ಗೊಂದಲದ ಹೇಳಿಕೆ ನೀಡುವ ಶಾಸಕರಿಗೆ ನೋಟಿಸ್ ನೀಡುವುದಾಗಿ ಎಚ್ಚರಿಸಿದರು. ಆದರೆ ಇದ್ಯಾವುದೂ ಫಲ ನೀಡಿದಂತೆ ಕಾಣುತ್ತಿಲ್ಲ. ಹೀಗಾಗಿ ಖುದ್ದು ಸಿದ್ದರಾಮಯ್ಯನವರೇ ಅಖಾಡಕ್ಕಿಳಿದಿದ್ದಾರೆ. +ಉಪಹಾರದ ನೆಪದಲ್ಲಿ ಸಚಿವರ ಜೊತೆ ಸಭೆ ನಡೆಸಿ ಎಲ್ಲ ಗೊಂದಲಗಳಿಗೂ ತೆರೆ ಎಳೆಯಲು ಮುಂದಾಗಿದ್ದಾರೆ. ಅಕಾರ ಹಂಚಿಕೆ, ಸಚಿವ ಸಂಪುಟ ಪುನಾರಚನೆ, ನಿಗಮಮಂಡಳಿಗಳ ನೇಮಕಾತಿ, ಲೋಕಸಭೆ ಚುನಾವಣೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆಗಳಾಗಿವೆ. +ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಸಚಿವರ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಲಾಗಿದೆ. ಆದರೆ ಬಹಳಷ್ಟು ಮಂದಿ ಈವರೆಗೂ ಕ್ಷೇತ್ರಗಳಿಗೆ ತೆರಳಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವ ಮತ್ತು ಪಕ್ಷಕ್ಕೆ ವರದಿ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿಲ್ಲ. +ಈ ಕುರಿತಂತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೊಂದಿಗಿನ ಸಭೆಯಲ್ಲಿ ಚರ್ಚಿಸಲಾಗಿತ್ತು. +ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರು ಒಟ್ಟಾಗಿ ಕುಳಿತು ಚರ್ಚೆ ನಡೆಸುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಇಂದು ಉಪಹಾರಕೂಟ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಅಧಿಕಾರಿಗಳ ವರ್ಗಾವಣೆ, ಆಡಳಿತದ ವಿಚಾರಗಳು, ಬರ ನಿರ್ವಹಣೆ ಹಾಗೂ ಚುನಾವಣೆ ತಯಾರಿಗೆ ಸಂಬಂಧಪಟ್ಟಂತೆ ಮಹತ್ವದ ಚರ್ಚೆಗಳಾಗಿದ್ದು, ಸಚಿವರು ಕೂಡ ಸಲಹೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. +ಮುಂದಿನ ದಿನಗಳಲ್ಲಿ ಎಲ್ಲ ಗೊಂದಲಗಳನ್ನು ಬದಿಗಿಟ್ಟು, ಚುನಾವಣೆಯತ್ತ ಗಮನಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಸಚಿವರು ಸೌಹಾರ್ದಯುತ ವಾತಾವರಣದಲ್ಲಿ ಚರ್ಚೆ ನಡೆಸಿದ್ದಾರೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗುನಗುತ್ತಾ ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡಿದ್ದು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. \ No newline at end of file diff --git a/eesanje/url_46_319_4.txt b/eesanje/url_46_319_4.txt new file mode 100644 index 0000000000000000000000000000000000000000..8fd8e4ff1e9eb556fe0828c00d8994cb6f0ebe12 --- /dev/null +++ b/eesanje/url_46_319_4.txt @@ -0,0 +1,13 @@ +30ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಮಾತುಕತೆ +ಬೆಂಗಳೂರು, ನ.4- ಅಮೆರಿಕದ ಮಾಂಟ್ಗೊಮೆರಿ ಪ್ರಾಂತ್ಯದಿಂದ ಆಗಮಿಸಿರುವ 30ಕ್ಕೂ ಹೆಚ್ಚು ಪ್ರಮುಖ ಕಂಪನಿಗಳ ಸಿಇಒಗಳೊಂದಿಗೆ ಬಂಡವಾಳ ಹೂಡಿಕೆ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ನೇತೃತ್ವದಲ್ಲಿ ರಾಜ್ಯ ಸಚಿವರ ತಂಡ ಮಹತ್ವದ ಮಾತುಕತೆ ನಡೆಸಿದೆ. +ಸಚಿವರ ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರಿದ್ದರು. ಅಮೆರಿಕದ ಉದ್ಯಮಿಗಳ ನಿಯೋಗದ ನೇತೃತ್ವವನ್ನು ಮಾಂಟ್ಗೊಮೆರಿ ಪ್ರಾಂತ್ಯದ ಆಡಳಿತ ಮುಖ್ಯಸ್ಥ ಎಲ್ರಿಚ್ ಮಾರ್ಕ್ ವಹಿಸಿದ್ದರು. ನಗರದ ಪಂಚತಾರಾ ಹೋಟೆಲ್ ನಲ್ಲಿ ಸಭೆ ನಡೆಯಿತು ಎಂದು ತಿಳಿಸಲಾಗಿದೆ. +ಎಂ.ಬಿ.ಪಾಟೀಲ ಅವರು ಅಮೆರಿಕದ ಕಂಪನಿಗಳಿಂದ ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಇತ್ತೀಚೆಗೆ ಆ ದೇಶಕ್ಕೆ ಅಧಿಕೃತ ಪ್ರವಾಸ ಕೈಗೊಂಡಿದ್ದಾಗ ಅಲ್ಲಿನ ಅಮೆರಿಕ-ಭಾರತ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೌನ್ಸಿಲ್ ಜತೆಗೂ ವಿಚಾರ ವಿನಿಮಯ ನಡೆಸಿದ್ದರು. ಜೊತೆಗೆ, ರಾಜ್ಯದಲ್ಲಿರುವ ಹೂಡಿಕೆ, ರಫ್ತು, ಉತ್ತೇಜನಾ ನೀತಿಗಳನ್ನು ಅರಿಯಲು ಕರ್ನಾಟಕಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು. +ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ +ಈ ಸಂದರ್ಭದಲ್ಲಿ ಮಾತನಾಡಿದ ಎಂ.ಬಿ.ಪಾಟೀಲ, ರಾಜ್ಯದಲ್ಲಿ ಅಮೆರಿಕದ ಎರಡು ಸಾವಿರಕ್ಕೂ ಹೆಚ್ಚು ಕಂಪನಿಗಳಿದ್ದು, 2025ರ ಹೊತ್ತಿಗೆ ಇವುಗಳ ವಾರ್ಷಿಕ ವಹಿವಾಟು 230 ಬಿಲಿಯನ್ ಡಾಲರ್ ಮೀರುವ ನಿರೀಕ್ಷೆ ಇದೆ. ಈ ಕಂಪನಿಗಳು 13 ಲಕ್ಷ ಜನರಿಗೆ ಉದ್ಯೋಗ ನೀಡಿದ್ದು, ಕಳೆದ ಎರಡು ದಶಕಗಳಲ್ಲಿ ಭಾರತ ಮತ್ತು ಅಮೆರಿಕದ ವಾಣಿಜ್ಯ ವಹಿವಾಟು ಏಳು ಪಟ್ಟಿಗಿಂತ ಹೆಚ್ಚು ಬೆಳೆದಿದೆ. ಮುಂಬರುವ ದಿನಗಳಲ್ಲಿ ಅಮೆರಿಕದ ಕಂಪನಿಗಳ ಹೂಡಿಕೆ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಬೇಕು ಎಂದು ಅಭಿಪ್ರಾಯಪಟ್ಟರು. +ರಾಜ್ಯದಲ್ಲಿ ಹೂಡಿಕೆಗೆ ಪ್ರಶಸ್ತ ವಾತಾವರಣವಿದ್ದು, ಐಟಿ-ಬಿಟಿ, ಆರೋಗ್ಯ, ಶಿಕ್ಷಣ ವಿದ್ಯುನ್ಮಾನ, ವಿದ್ಯುತ್ ಚಾಲಿತ ವಾಹನ ತಯಾರಿಕೆ, ಸೆಮಿ ಕಂಡಕ್ಟರ್, ಹಸಿರು ಇಂಧನ, ನವೋದ್ಯಮ, ಡಾಟಾ ಸೈನ್ಸ್, ವೈಮಾಂತರಿಕ್ಷ ಮತ್ತು ರಕ್ಷಣೆ ಮುಂತಾದ ವಿಭಾಗಗಳಲ್ಲಿ ಅತ್ಯುತ್ತಮ ನೀತಿಗಳನ್ನು ಹೊಂದಿದೆ. ವಿದೇಶಿ ನೇರ ಹೂಡಿಕೆ, ಸಂಶೋಧನೆ ಮತ್ತು ಅಭಿವೃದ್ಧಿ, ನಾವೀನ್ಯತೆಗಳಲ್ಲಿ ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದೆ. ಅಮೆರಿಕದ ಕಂಪನಿಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಅಗತ್ಯವಿರುವ ಎಲ್ಲ ಅನುಕೂಲಗಳನ್ನೂ ರಾಜ್ಯ ಸರಕಾರವು ತ್ವರಿತವಾಗಿ ಒದಗಿಸಿ ಕೊಡಲಿದೆ ಎಂದು ಅವರು ಭರವಸೆ ನೀಡಿದರು. +ಕರ್ನಾಟಕವು ಹಿಂದಿನಿಂದಲೂ ಕೈಗಾರಿಕೆ ಮತ್ತು ಬಂಡವಾಳ ಹೂಡಿಕೆ ಸ್ನೇಹಿ ರಾಜ್ಯವಾಗಿದ್ದು, ನಮ್ಮ ಜಿಡಿಪಿ 280 ಬಿಲಿಯನ್ ಡಾಲರುಗಳಷ್ಟಿದೆ. ಜೊತೆಗೆ ರಫ್ತು ವಹಿವಾಟಿನಲ್ಲೂ ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದ್ದೇವೆ. ಅಲ್ಲದೆ, ಬೆಂಗಳೂರು ನಗರವು ಉದ್ಯಮಗಳ ದೃಷ್ಟಿಯಿಂದ ಜಾಗತಿಕ ಮಟ್ಟದ ಅಗ್ರ 25 ನಗರಗಳಲ್ಲಿ ಒಂದಾಗಿದೆ ಎಂದು ಸಚಿವರು ನಿಯೋಗಕ್ಕೆ ವಿವರಿಸಿದರು. +ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಮಾತನಾಡಿ, ಐಟಿ ಕ್ಷೇತ್ರದಲ್ಲಿ ಇವತ್ತು ಕರ್ನಾಟಕ ಮುಂಚೂಣಿಯಲ್ಲಿ ಇರುವುದಕ್ಕೆ ಪ್ರಮುಖ ಕಾರಣವೇ ಉನ್ನತ ಶಿಕ್ಷಣ ಇಲಾಖೆ. ಅಮೆರಿಕಾ ದ ಮಾಂಟಗೊಮೇರಿ ಸೇರಿದಂತೆ ಇತರ ವಿವಿಗಳ ಜತೆಗೂ ಸಹಭಾಗಿತ್ವ ಸಾಧಿಸಲು ಆಸಕ್ತಿ ಹೊಂದಿರುವುದಾಗಿ ಹೇಳಿದರು. +ಇದಲ್ಲದೆ ರಾಜ್ಯದಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಂಸ್ಥೆಗಳಿವೆ. ಉದ್ಯಮ ವಲಯವು ಇವುಗಳೊಂದಿಗೆ ಸಹಭಾಗಿತ್ವ ಹೊಂದಿದ್ದು, ಈ ವಲಯಕ್ಕೆ ಬೇಕಾಗುವ ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಸಾಮಥ್ರ್ಯವಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನಲ್ಲಿ 400ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳ ಆರ್ ಡಿ ಕೇಂದ್ರಗಳು ಸಕ್ರಿಯವಾಗಿವೆ. ಇವುಗಳ ಲಾಭವನ್ನು ಅಮೆರಿಕದ ಕಂಪನಿಗಳು ಪಡೆದುಕೊಳ್ಳಬೇಕು ಎಂದು ಸುಧಾಕರ್ ನುಡಿದರು. +ಮಧ್ಯಪ್ರದೇಶದಲ್ಲಿ 39 ಕಾಂಗ್ರೆಸ್ ನಾಯಕರ ಉಚ್ಚಾಟನೆ +ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಮಾಂಟಗೊಮೇರಿ ಒಳ್ಳೆಯ ಕೆಲಸ ಮಾಡುತ್ತಿದ್ದು, ರಾಜ್ಯವೂ ಅದರ ಜತೆ ಕೆಲಸ ಮಾಡಲು ಉತ್ಸುಕವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಚಿವರಾದ ಸುಧಾಕರ ಮತ್ತು ದಿನೇಶ ಗುಂಡೂರಾವ್ ಅವರಿಗೆ ಮಾಂಟಗೊಮೇರಿ ಕೌಂಟಿ ಸರ್ಕಾರದ ಮೆಡಲ್ ನೀಡಿ ನಿಯೋಗ ಗೌರವಿಸಿತು. +ಅಮೆರಿಕದ ನಿಯೋಗದಲ್ಲಿ ಮಾಂಟ್ಗೊಮೆರಿ ಕೌಂಟಿ ಕೌನ್ಸಿಲ್ ಅಧ್ಯಕ್ಷ ಇವಾನ್ ಗ್ಲಾಸ್, ಅಲ್ಲಿನ ಆರ್ಥಿಕ ಅಭಿವೃದ್ಧಿ ನಿಗಮದ ಸಿಇಒ ಟಾಂಪ್ಕಿನ್ಸ್ ಬಿಲ್, ವಿಶೇಷ ಯೋಜನಾ ವ್ಯವಸ್ಥಾಪಕ ಕಾಸ್ಟೆಲ್ಲೋ ಜೂಡಿ, ಲಾ ಮ್ನಾಗ್ನೋಲಿಯಾ ಕಂಪನಿಯ ಸಂಸ್ಥಾಪಕ ಕೂಂಬಾ ಗ್ರೇವ್ಸ್, ಟಾಂಜನೈಟ್ ಫ್ರೈಟ್ ಲಾಜಿಸ್ಟಿಕ್ಸ್ ಸಿಇಒ ಮ್ಯಾಕ್ನೆಸ್ಟರ್ ಎಕ್ಸವೆರಿ ಮುಂತಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_319_5.txt b/eesanje/url_46_319_5.txt new file mode 100644 index 0000000000000000000000000000000000000000..29706e271ba2071f7842429ed41d8879e18e8170 --- /dev/null +++ b/eesanje/url_46_319_5.txt @@ -0,0 +1,9 @@ +ನನ್ನ ಮುಖ್ಯಮಂತ್ರಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ : ಪ್ರಿಯಾಂಕ್ ಖರ್ಗೆ +ಬೆಂಗಳೂರು, ನ.4- ಹೈಕಮಾಂಡ್ ನೀವೆ ಮುಖ್ಯಮಂತ್ರಿ ಎಂದರೆ ನಾನು ರೆಡಿ ಎಂದು ಮೈಸೂರಿನಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. +ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸ್ಪಷ್ಟ ಮಾಹಿತಿ ನೀಡಿರುವ ಅವರು, ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನು ನೀಡಿರುವ ಹೇಳಿಕೆಯು ತಪ್ಪಾಗಿ ಅರ್ಥೈಸಿ ವರದಿಯಾಗುತ್ತಿರುವುದು ಈಗಷ್ಟೇ ನನ್ನ ಗಮನಕ್ಕೆ ಬಂದಿರುವ ಕಾರಣ ಗೊಂದಲ ನಿವಾರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದಾರೆ. +ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ +ವರದಿಗಾರರು ಸಿಎಂ ಹೇಳಿದ್ದು ಸ್ವಂತ ಹೇಳಿಕೆನಾ? ಏನು? ಎಂದು ಕೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ನಾನು, ಅದು ಸಿಎಂ ಅವರೇ ಹೇಳಿದಾರೆ. ನಾನೂ ಹೇಳಿದ್ದೀನಲ್ಲಾ ಸರ್, ನಾಲ್ಕು ಜನ ಕುಳಿತುಕೊಂಡು ಚರ್ಚೆ ಮಾಡಿದಾರೆ ದೆಹಲಿಯಲ್ಲಿ, ಆ ನಾಲ್ಕು ಜನ ಹೊರತುಪಡಿಸಿ ಬೇರೆ ಯಾರೇ ಮಾತಾಡಿದರೂ ಅದಕ್ಕೆ ಬೆಲೆಯಿಲ್ಲ. ಹೈಕಮಾಂಡ್ ಹೇಳಬೇಕಲ್ವಾ? ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ ಎಂದಿದ್ದೆ. ಅದಕ್ಕೆ ವರದಿಗಾರರೊಬ್ಬರು ಯು ಆರ್ ಆಲ್ಸೋ ರೆಡಿ ? ಎಂದು ಕೇಳಿದರು. ಯು ಆರ್ ಆಲ್ಸೋ ರೆಡಿ, ಇಫ್ ಯು ಆರ್ ರೆಡಿ, ಐ ಆಮ್ ಆಲ್ಸೋ ರೆಡಿ ಎಂದಿದ್ದೇನೆ. +ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಎಂದು ಹೇಳಿದರೆ, ನಾನು ಕೂಡ ಯೆಸ್ ಅಂತೀನಿ ಎನ್ನುವುದರ ಅರ್ಥ, ಇಲ್ಲಿ ಹೈಕಮಾಂಡ್ ವರದಿಗಾರರನನ್ನೆ ಮುಖ್ಯಮಂತ್ರಿ ಎಂದು ಹೇಳಿದರೆ, ನನ್ನ ಅಭ್ಯಂತರ ಇಲ್ಲ. ಅದನ್ನು ಒಪ್ಪಿಕೊಳ್ಳುತ್ತೇನೆ ಎಂಬುದಾಗಿತ್ತು. ಈ ಮಾತು ಹೇಳುವಾಗ ನಾನು ವರದಿಗಾರರತ್ತ ಕೈ ಸನ್ನೆ ಮಾಡಿ, ಅವರ ಕೈ ಮುಟ್ಟಿ ಹೇಳಿದ್ದೇನೆ. ನಾನು ಎಲ್ಲಿಯೂ ನನಗೆ ಹೈಕಮಾಂಡ್ ಮುಖ್ಯಮಂತ್ರಿಯಾಗು ಎಂದು ಹೇಳಿದರೆ ನಾನು ಸಿದ್ದ ಎಂದು ಹೇಳಿದ್ದಲ್ಲ. ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟ ಪಡಿಸಿದ್ದಾರೆ. ನೀವೇ ಎಂಬುದು ಆ ವರದಿಗಾರನ ಕುರಿತಾಗಿ ಹೇಳಿದ್ದೇ ಹೊರತು ಪ್ರಿಯಾಂಕ್ ಖರ್ಗೆಯ ಕುರಿತಾಗಿ ಅಲ್ಲ ಎಂದು ಪುನರುಚ್ಚರಿಸಿದ್ದಾರೆ. +ನಾನು ನನಗೆ ನೀಡಿದ ಇಲಾಖೆಗಳ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ, ಶ್ರದ್ದಾಪೂರ್ವಕವಾಗಿ ನಿರ್ವಹಿಸುವುದರ ಬಗ್ಗೆ ಗಮನಿಸುತ್ತಿದ್ದೇನೆಯೇ ಹೊರತು ಇನ್ಯಾವುದೇ ಹುದ್ದೆಗಳ ಮೇಲೆ ನನ್ನ ಗಮನವಿಲ್ಲ, ಯೋಜನೆಗಳ ಮೂಲಕ ಜನರನ್ನು ತಲುಪುವುದು, ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನದ ಮೇಲೆ ಸದಾ ನನ್ನ ಗಮನವನ್ನು ಕೇಂದ್ರೀಕರಿಸಿರುತ್ತೇನೆ. ಯಾವುದೇ ಹುದ್ದೆಗಳನ್ನು ಜನರ ಅಪೇಕ್ಷೆ, ಆಶೀರ್ವಾದದಿಂದ ಪಡೆಯಬಹುದು ಹೊರತು ಲಾಭಿಯಿಂದ ಪಡೆಯಲಾಗದು, ನಮ್ಮ ರಾಜಕೀಯ ಬೆಳವಣಿಗೆ ಜನರ ನಂಬಿಕೆಯ ಮೇಲೆ ನಿಂತಿದೆ ಎಂದು ನಂಬಿಕೊಂಡು ಕೆಲಸ ಮಾಡುತ್ತಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. +ಮಹಾರಾಷ್ಟ್ರ : ಔಷಧ ಕಂಪನಿಯಲ್ಲಿ ಬೆಂಕಿ, ಏಳು ಮಂದಿ ನಾಪತ್ತೆ +ಈ ಘಟನೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡುತ್ತಿರುವುದು, ಸುದ್ದಿಯನ್ನು ಪರಿಶೀಲಿಸದೇ ತಿರುಚಿ ವರದಿ ಮಾಡುತ್ತಿರುವುದು. ಘಟನೆಯನ್ನು ಘಟನೆ ಎಂದು ವರದಿ ಮಾಡುವುದರ ಬದಲು, ನಾನು ಹೇಳಿಲ್ಲದ ಪದಗಳನ್ನೂ ಸೇರಿಸಿ ನಾಳೆ ನಾನೇ ಸಿಎಂ ಎಂಬ ಶೀರ್ಷಿಕೆಯಲ್ಲಾ ಸೇರಿಸಿ ವರದಿ ಮಾಡಲಾಗುತ್ತಿದೆ, ಇವೆಲ್ಲಾ ಕನ್ನಡ ಪತ್ರಿಕೋದ್ಯಮಕ್ಕೆ ಒಳ್ಳೆಯ ನಿದರ್ಶನವಲ್ಲಾ ಎಂಬುದು ನನ್ನ ನಂಬಿಕೆಯಾಗಿದೆ ಎಂದು ತಿಳಿಸಲು ಬಯಸುತ್ತೇನೆ ಎಂದು ಸಚಿವರು ಅಸಮಧಾನ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_319_6.txt b/eesanje/url_46_319_6.txt new file mode 100644 index 0000000000000000000000000000000000000000..d79b1a7a8f9fae400aca1c7976f08162fe990bba --- /dev/null +++ b/eesanje/url_46_319_6.txt @@ -0,0 +1,13 @@ +ಇದ್ದಕ್ಕಿದ್ದಂತೆ ಫುಲ್ ಆಕ್ಟಿವ್ : ಚರ್ಚೆಗೆ ಗ್ರಾಸವಾಯ್ತು ಬಿಎಸ್‍ವೈ ನಡೆ +ಬೆಂಗಳೂರು,ನ.3- ಮುಖ್ಯಮಂತ್ರಿ ಸ್ಥಾನ ದಿಂದ ಕೆಳಗಿಳಿದ ನಂತರ ವಿಧಾನಸಭೆ ಚುನಾವಣೆ ವೇಳೆಯೂ ಅಷ್ಟೊಂದು ಸಕ್ರಿಯವಾಗದೆ ತೆರೆಮರೆಯಲ್ಲಿ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದ್ದಕ್ಕಿದ್ದಂತೆ ಮತ್ತೆ ಪುಟಿದೆದ್ದಿರುವುದು ಚರ್ಚೆಗೆ ಗ್ರಾಸವಾಗಿದೆ. +ಸರಿಸುಮಾರು ಕಳೆದ ಎರಡು ವರ್ಷಗಳಿಂದ ರಾಜಕಾರಣದಲ್ಲಿ ಇದ್ದರೂ ಕೂಡ ಇಲ್ಲದಂತೆ ತೆರೆಮರೆಯಲ್ಲಿದ್ದ ಬಿಎಸ್‍ವೈ ಇದೀಗ ಮತ್ತೆ ಬರ ಅಧ್ಯಯನ ನೆಪದಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದು ಸ್ವತಃ ಬಿಜೆಪಿಯಲ್ಲೇ ದಂಗು ಬಡಿಸಿದೆ. +ತಮ್ಮ ರಾಜಕೀಯ ಜೀವನದುದ್ದಕ್ಕೂ ದಿನದ 24 ಗಂಟೆಯೂ ಜನರ ಮಧ್ಯೆಯೇ ಬೆಳೆದು ಬಂದಿದ್ದ ಅಭಿಮಾನಿಗಳ ಪಾಲಿನ ರಾಜಾ ಹುಲಿ ಎಂದೇ ಕರೆಸಿಕೊಳ್ಳುವ ಯಡಿಯೂರಪ್ಪ ಸರ್ಕಾರದ ವಿರುದ್ಧ ಮೊದಲ ಬಾರಿಗೆ ತೊಡೆ ತಟ್ಟಿ ಅಖಾಡಕ್ಕಿಳಿದಿರುವುದು ಬಿಜೆಪಿಯಲ್ಲಿ ಹೊಸ ಹುಮ್ಮಸ್ಸು ಹುಟ್ಟಿಸಿದೆ. +ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡದೆ ತಟಸ್ಥವಾಗಿದ್ದ, ಬಿಜೆಪಿ ಬೆಳವಣಿಗೆ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದೆ ಎಲ್ಲವನ್ನೂ ತೆರೆಮರೆಯಲ್ಲೇ ನೋಡುತ್ತಿದ್ದ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಅವರು ಸರ್ಕಾರದ ವಿರುದ್ಧ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಆರೋಪಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಪ್ರವಾಸಕ್ಕೆ ಸಜ್ಜಾಗಿದ್ದಾರೆ. +ಬಿಜೆಪಿಯಲ್ಲಿ ಎಲ್ಲರೂ ಸರಿಯಿಲ್ಲ ಎಂದು ಪ್ರತಿಪಕ್ಷಗಳು ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆ ಆರಂಭವಾಗಿರುವ ಸಂದರ್ಭದಲ್ಲಿ ಯಡಿಯೂರಪ್ಪ ಪಕ್ಷದೊಳಗೆ ಸಕ್ರಿಯವಾಗುತ್ತಿರುವುದು ಅವರ ವಿರೋಧಿ ಬಣವನ್ನು ಸಹ ನಿದ್ದೆಗೆಡುವಂತೆ ಮಾಡಿದೆ. +ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ +ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾಯಕತ್ವ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಒಮ್ಮತದ ನಾಯಕ ಯಾರೂ ಕಾಣಿಸುತ್ತಿಲ್ಲ. ಚುನಾವಣೆಗೂ ಮುನ್ನ ವಯಸ್ಸಿನ ಕಾರಣ ನೀಡಿ ಯಡಿಯೂರಪ್ಪನವರನ್ನು ಸಿಎಂ ಗಾದಿಯಿಂದ ಕೆಳಗಿಳಿಸಲಾಗಿತ್ತು. ಬಳಿಕ ಪಕ್ಷದಲ್ಲೂ ಯಾವುದೇ ಜವಾಬ್ದಾರಿ ನೀಡಿರಲಿಲ್ಲ. +ಪಕ್ಷದ ಹಲವು ಸಭೆಗಳಿಗೂ ಬಿಎಸ್‍ವೈ ಗೈರಾಗಿದ್ದರು. ಬಿಜೆಪಿ ರಾಜ್ಯದ ಪ್ರಶ್ನಾತೀತ ನಾಯಕನಾಗಿದ್ದ ಯಡಿಯೂರಪ್ಪ ಸೈಡ್‍ಲೈನ್ ಆಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಪಕ್ಷದ ಆಂತರಿಕ ವಲಯದಲ್ಲಿ ಇದು ಭಾರೀ ಚರ್ಚೆಯನ್ನು ಹುಟ್ಟುಹಾಕಿತ್ತು. +ಬಿಎಸ್‍ವೈ ಕಣ್ಣೊರೆಸಲು ಕೇಂದ್ರ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದರೂ, ಅದು ದೊಡ್ಡ ಮಟ್ಟದಲ್ಲಿ ಫಲಪ್ರದವಾಗಿರಲಿಲ್ಲ. ಈ ನಡುವೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತು. ಚುನಾವಣೆಯ ಸೋಲಿನ ಬಳಿಕ ಬಿಜೆಪಿಯನ್ನು ಬಲಗೊಳಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಆದರೆ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನೂ ಆಗಿಲ್ಲ. ರಾಜ್ಯಾಧ್ಯಕ್ಷನ ಬದಲಾವಣೆಯೂ ನಡೆದಿಲ್ಲ. +ಈ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಕಾರಣದಿಂದಾಗಿ ವಿಶ್ರಾಂತಿಯಲ್ಲಿದ್ದಾರೆ. ಅದರ ಹೊರತಾಗಿ ಇತರ ನಾಯಕರು ಗಮನ ಸೆಳೆಯುವ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಬಿಎಸ್‍ವೈ ಅಖಾಡಕ್ಕಿಳಿದಿದ್ದಾರೆ. ಬರ ಪರಿಸ್ಥಿತಿಯ ಬಗ್ಗೆ ಸರ್ಕಾರದ ವಿರುದ್ಧ ನೇರ ಹೋರಾಟಕ್ಕೆ ಇಳಿಯುವ ಎಚ್ಚರಿಕೆಯನ್ನು ನೀಡಿದ್ದಾರೆ. +ಹೀನಾಯ ಸ್ಥಿತಿಗೆ ತಲುಪಿದ ದೆಹಲಿಗಾಳಿ ಗುಣಮಟ್ಟ, ಜೀವನ ದುಸ್ತರ +ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಎಸ್‍ವೈ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ನೇರವಾಗಿಯೇ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸಿದ ಹೋರಾಟದ ಸಂದರ್ಭದಲ್ಲೂ ಬಿಎಸ್‍ವೈಗೆ ಆದ್ಯತೆ ನೀಡಲಾಗುತ್ತಿದೆ. ಇತರ ನಾಯಕರಿಗಿಂತ ಯಡಿಯೂರಪ್ಪ ಮಾತನಾಡಿದರೆ ಅದಕ್ಕೆ ಹೆಚ್ಚಿನ ಆದ್ಯತೆ ಸಿಗುತ್ತದೆ ಎಂಬ ಮಾತನ್ನು ಬಿಜೆಪಿಯ ಕೆಲವು ನಾಯಕರು ಹೇಳುತ್ತಿದ್ದಾರೆ. ಹೀಗಾಗಿ ಸೈಲೆಂಟಾಗಿದ್ದ ಯಡಿಯೂರಪ್ಪ ಮತ್ತೆ ಮಾತನಾಡಲು ಶುರುಮಾಡಿದ್ದಾರೆ. \ No newline at end of file diff --git a/eesanje/url_46_319_7.txt b/eesanje/url_46_319_7.txt new file mode 100644 index 0000000000000000000000000000000000000000..71dc1590de63abe18bf56ff371978ee8e54afd6d --- /dev/null +++ b/eesanje/url_46_319_7.txt @@ -0,0 +1,7 @@ +ಸಿಎಂ ಆಗಲು ನಾನೂ ರೆಡಿ : ಸಚಿವ ಪ್ರಿಯಾಂಕ್ ಖರ್ಗೆ +ಮೈಸೂರು,ನ.3- ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು ಎಂಬ ವಿಚಾರ ಇದು ಅವರ ವೈಯಕ್ತಿಕ ಹೇಳಿಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ನಿರ್ಧರಿಸುತ್ತೆ ಎಂದರು.ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ದನಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. +ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಿಂದ ಹಿಡಿದು ಶಾಸಕರವರೆಗೂ ತಮ್ಮ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ, ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಪ್ರಿಯಾಂಕ ಖರ್ಗೆ ಮಾರ್ಮಿಕವಾಗಿ ನುಡಿದರು. +ಅಕ್ರಮವಾಗಿ ಅಮೆರಿಕ ಪ್ರವೇಶಿಸುತ್ತಿದ್ದಾಗ ಸಿಕ್ಕಿಬಿದ್ದ 96 ಸಾವಿರ ಭಾರತೀಯರು +ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? :ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ಅವರು ನುಡಿದರು. +ನಮಗೆ ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು. +ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಇದನ್ನು ಖುದ್ದು ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯವರು ತಮ್ಮದನ್ನು ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ ಎಂದು ಖಡಕ್ಕಾಗಿ ನುಡಿದರು. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವುದಾಗಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_319_8.txt b/eesanje/url_46_319_8.txt new file mode 100644 index 0000000000000000000000000000000000000000..b2c807c38785f66af50dfd85e8bed2b703bd08b7 --- /dev/null +++ b/eesanje/url_46_319_8.txt @@ -0,0 +1,8 @@ +ಅಂಗಾಂಗ ದಾನ ಮಾಡುವವರಿಗೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ +ಬೆಂಗಳೂರು,ನ.3- ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. +ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. +ಬಂಡೆಗೆ ಉಂಡೆ ನಾಮ ಗ್ಯಾರಂಟಿ : ಯತ್ನಾಳ್ ವ್ಯಂಗ್ಯ +ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ. +ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ. ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ. +ಹೀನಾಯ ಸ್ಥಿತಿಗೆ ತಲುಪಿದ ದೆಹಲಿಗಾಳಿ ಗುಣಮಟ್ಟ, ಜೀವನ ದುಸ್ತರ +ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_319_9.txt b/eesanje/url_46_319_9.txt new file mode 100644 index 0000000000000000000000000000000000000000..26edc5a32b149b779369f7f0ee48980d05cab04e --- /dev/null +++ b/eesanje/url_46_319_9.txt @@ -0,0 +1,9 @@ +ಒಳಬೇಗುದಿ ಮುಚ್ಚಿಡಲು ಡಿಕೆಶಿ ಯತ್ನ +ಹುಬ್ಬಳ್ಳಿ,ನ.3- ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಪರೋಕ್ಷವಾಗಿ ಹೇಳಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಳ ಬೇಗುದಿಯನ್ನು ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗಳಿಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಎಲ್ಲಿದೆ ಎಂದು ಮರುಪ್ರಶ್ನಿಸಿದ್ದಾರೆ. ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಅವರು ಪ್ರಥಮ ಬಾರಿಗೆ ಘೋಷಿಸಿದ ಬಳಿಕ ಮೊದಲ ಪ್ರತಿಕ್ರಿಯೆಯಲ್ಲೇ ಡಿ.ಕೆ.ಶಿವಕುಮಾರ್ ನುಣುಚಿಕೊಳ್ಳುವ ಯತ್ನ ಮಾಡಿದ್ದಾರೆ. +ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ? ಎಂದು ತಿಳಿಸಿದರು. +ಒಕ್ಕಲಿಗ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕೆಂಬ ಹಕ್ಕೊತ್ತಾಯಗಳ ಬಗ್ಗೆ ಪ್ರತಿಕ್ರಿಯಿಸದೆ ನಿರ್ಗಮಿಸಿದ್ದಾರೆ. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಚಾಲ್ತಿಯಲ್ಲಿವೆ. ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೇ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮೂರ್ನಾಲ್ಕು ದಿನಗಳಲ್ಲಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ ಎಂದು ತಿಳಿಸಿದರು. +ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ +ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕ್ಷೇತ್ರದಲ್ಲಿ ಸ್ಥಳೀಯ ವರ್ಚಸ್ಸು, ಜನಪ್ರಿಯತೆ, ವಾಕ್‍ಚಾತುರ್ಯ, ಪಕ್ಷ ನಿಷ್ಠೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದರು. +ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ ಎಂದು ತಿಳಿಸಿದರು. +ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ ಎಂದು ತಿಳಿಸಿದರು. +ಮುಂದುವರೆದು ಮಾತನಾಡಿದ ಅವರು, ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶವಿದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ. ಕನ್ನಡ ಜ್ಯೋತಿಗೆ ನಿನ್ನೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದರು. \ No newline at end of file diff --git a/eesanje/url_46_31_1.txt b/eesanje/url_46_31_1.txt new file mode 100644 index 0000000000000000000000000000000000000000..9dcd0d7e3eea8d2f8c0b0e22658cb5e82e765482 --- /dev/null +++ b/eesanje/url_46_31_1.txt @@ -0,0 +1,7 @@ +ಹಾಸ್ಯ ನಟ ಚಿಕ್ಕಣ್ಣಗೆ ಮತ್ತೆ ಪೊಲೀಸರಿಂದ ಗ್ರಿಲ್ + : +ಬೆಂಗಳೂರು,ಆ.29– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಯಾಗಿ ಪರಿಗಣಿಸಿರುವ ನಟ ಚಿಕ್ಕಣ್ಣ ಅವರು ಇಂದು ತನಿಖಾಧಿಕಾರಿ ಮುಂದೆ 2ನೇ ಬಾರಿ ವಿಚಾರಣೆಗೆ ಹಾಜರಾದರು. ಬಸವೇಶ್ವರನಗರ ಠಾಣೆಯ ಕಟ್ಟಡದಲ್ಲಿರುವ ವಿಜಯನಗರದ ಎಸಿಪಿ ಚಂದನ್ ಅವರ ಕಛೇರಿಯಲ್ಲಿ ಇಂದು ಬೆಳಗ್ಗೆ ನಟ ಚಿಕ್ಕಣ್ಣ ಅವರು ಹಾಜರಾಗಿ ವಿಚಾರಣೆಗೆ ಸಹಕರಿಸಿದ್ದಾರೆ. +ರೇಣುಕಾಸ್ವಾಮಿ ಕೊಲೆಗೂ ಮುನ್ನ ಸ್ಟೋನಿಬ್ರೋಕ್ ರೆಸ್ಟೋರೆಂಟ್ನಲ್ಲಿ ಡಿ.ಗ್ಯಾಂಗ್ನೊಂದಿಗೆ ಪಾರ್ಟಿಯಲ್ಲಿ ಚಿಕ್ಕಣ್ಣ ಭಾಗಿಯಾಗಿದ್ದರು. ಹಾಗಾಗಿ ಚಿಕ್ಕಣ್ಣ ಅವರನ್ನು ವಿಚಾರಣೆಗೊಳಪಡಿಸಿ ತನಿಖಾಧಿಕಾರಿ ಮಾಹಿತಿ ಪಡೆದುಕೊಂಡು ಸಾಕ್ಷಿಯಾಗಿ ಪರಿಗಣಿಸಿದ್ದಾರೆ. +ಇತ್ತೀಚೆಗೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ದರ್ಶನ್ ಅವರನ್ನು ಚಿಕ್ಕಣ್ಣ ಭೇಟಿ ಮಾಡಿಬಂದಿದ್ದರು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.’ +ಇಂದು ಚಿಕ್ಕಣ್ಣ ವಿಚಾರಣೆಗೆ ಹಾಜರಾದಾಗ ಜೈಲಿನಲ್ಲಿ ದರ್ಶನ್ನನ್ನು ಯಾವ ಉದ್ದೇಶದಿಂದ, ಯಾಕೆ ಭೇಟಿ ಮಾಡಿದ್ದೀರಿ? ಅದರ ಅವಶ್ಯಕತೆ ಏನಿತ್ತು? ಎಂಬಿತ್ಯಾದಿ ಪ್ರಶ್ನೆಗಳನ್ನು ತನಿಖಾಧಿಕಾರಿ ಚಂದನ್ ಕೇಳಿ ಮಾಹಿತಿ ಪಡೆದುಕೊಂಡರು. +ವಿಚಾರಣೆ ನಂತರ ಠಾಣೆಯಿಂದ ಹೊರಬಂದ ಬಳಿಕ ತಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನನ್ನು ಸಾಕ್ಷಿಯಾಗಿ ಮಾಡಿದ್ದಾರೆ. ಪೊಲೀಸರ ಪ್ರಶ್ನೆಗೆ ಉತ್ತರಿಸಿದ್ದೇನೆ. ಹಾಗಾಗಿ ಹೆಚ್ಚಾಗಿ ಏನೂ ಹೇಳುವಂತಿಲ್ಲ. ನಿನ್ನೆ ನನಗೆ ನೋಟಿಸ್ ಬಂದಿತ್ತು. ಹಾಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೆ ಎಂದಷ್ಟೇ ಹೇಳಿ ತೆರಳಿದರು. \ No newline at end of file diff --git a/eesanje/url_46_31_10.txt b/eesanje/url_46_31_10.txt new file mode 100644 index 0000000000000000000000000000000000000000..fb735636fbbac05ed084714a05ab9c4e5e3b5913 --- /dev/null +++ b/eesanje/url_46_31_10.txt @@ -0,0 +1,7 @@ +ಘಟಪ್ರಭಾ ನದಿಯಿಂದುಂಟಾಗುವ ಪ್ರವಾಹಕ್ಕೆ ಶಾಶ್ವತ ಪರಿಹಾರ : ಸಿಎಂ ಭರವಸೆ + : +ಬೆಂಗಳೂರು, ಆ.28– ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. +ಕೃಷ್ಣಾದಲ್ಲಿ ತಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದ ಅವರು, ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಶೀಘ್ರ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. +ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್, 2021ರಲ್ಲಿ 7051 ಹೆಕ್ಟೇರ್ ಮತ್ತು 2024 ರಲ್ಲಿ 12500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು. +ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ. +ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು. ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ಅಬಕಾರಿ ಸಚಿವ ಆರ್. ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_31_11.txt b/eesanje/url_46_31_11.txt new file mode 100644 index 0000000000000000000000000000000000000000..83c844d26d1fa667344aca7193e19069fccf6c09 --- /dev/null +++ b/eesanje/url_46_31_11.txt @@ -0,0 +1,10 @@ +ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳುವಂತೆ ಜೆಡಿಎಸ್-ಬಿಜೆಪಿಗೆ ಕಾಂಗ್ರೆಸ್ ಆಗ್ರಹ + - +ಬೆಂಗಳೂರು,ಆ.28– ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ ಜೆಡಿಎಸ್-ಬಿಜೆಪಿ ಪಕ್ಷಗಳಿಗೆ ತಮ್ಮ ತಪ್ಪಿನ ಅರಿವಾಗಿದ್ದರೆ ಸಚಿವ ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. +ಗಣಪತಿ ಅವರ ಆತಹತ್ಯೆ ಪ್ರಕರಣ ಮರುತನಿಖೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಹೂಡಿದ್ದ ದಾವೆ ವಜಾ ಆಗಿರುವ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಸಚಿವ ಕೆ.ಜೆ.ಜಾರ್ಜ್ ಅವರ ವ್ಯಕ್ತಿತ್ವಕ್ಕೆ ಮತ್ತು ನಾಯಕತ್ವಕ್ಕೆ ಮಸಿ ಬಳೆಯಲು ಪ್ರಯತ್ನಿಸಿದ ಬಿಜೆಪಿ-ಜೆಡಿಎಸ್ ಪಕ್ಷಗಳು ಕೆ.ಜೆ.ಜಾರ್ಜ್ ಅವರ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ. +ಸಾರ್ವಜನಿಕ ಜೀವನದಲ್ಲಿ ಸುಳ್ಳುಗಳನ್ನೇ ಹೇಳಿಕೊಂಡು ಇನ್ನೊಬ್ಬರ ಚಾರಿತ್ರ್ಯವಧೆ ಮಾಡುವ ಕಾರ್ಯ ಒಳ್ಳೆಯ ಸಂಪ್ರದಾಯವಲ್ಲ. ಕರ್ನಾಟಕದಲ್ಲಿ ಸಭ್ಯ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡು ಸುಳ್ಳು ಕೇಸುಗಳನ್ನು ಸೃಷ್ಟಿಸಿದ ಖ್ಯಾತಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಸಲ್ಲುತ್ತದೆ ಎಂದು ಅವರು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ. +ಎಂದು ಹಿಂದಿನ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್ ಅವರನ್ನು ಡಿವೈಎಸ್ಪಿ ಗಣಪತಿ ಆತಹತ್ಯೆ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ವೈಯಕ್ತಿಕ ಕಾರಣಕ್ಕೆ ಆತಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರವರನ್ನು ಸಿಲುಕಿಸಲು ಅನೇಕ ತಂತ್ರಗಳನ್ನು ಹೆಣೆದ ವಿರೋಧ ಪಕ್ಷಗಳು, ಗಣಪತಿ ಅವರ ಪತ್ನಿ ಹೆಸರಿನಲ್ಲಿ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿದ್ದರು. +ಪ್ರಕರಣದ ಮರುತನಿಖೆಗೆ ಆಧಾರ ಇಲ್ಲದ ಕಾರಣ ಸುಪ್ರೀಂಕೋರ್ಟ್ ಆ ಪ್ರಕರಣವನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಕ್ಲೀನ್ ಚಿಟ್ ಅನ್ನು ಎತ್ತಿ ಹಿಡಿದಿದೆ ಎಂದು ಪ್ರಸ್ತಾಪಿಸಿದ್ದಾರೆ. +ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದೆ ಕೆ.ಜೆ.ಜಾರ್ಜ್ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ಹಲವಾರು ಸಂದರ್ಭಗಳಲ್ಲಿ ಅವರ ಮೇಲೆ ಸುಳ್ಳು ಆರೋಪ ಮಾಡಿಕೊಂಡು ಬಂದಿದೆ. ತಮ ಮೇಲಿನ ಆರೋಪ ಸುಳ್ಳು ಎಂದು ದಾಖಲೆ ಸಮೇತ ಕೆ.ಜೆ.ಜಾರ್ಜ್ ಉತ್ತರ ನೀಡಿದರೂ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒತ್ತಾಯಪೂರ್ವಕಾಗಿ ಪಾರದರ್ಶಕ ತನಿಖೆಯ ಹೆಸರಿನಲ್ಲಿ ಅವರ ರಾಜೀನಾಮೆ ಕೊಡಿಸಿದ್ದರು ಎಂದು ದೂರಿದ್ದಾರೆ. +ತದನಂತರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ದಿವಂಗತ ಗಣಪತಿ ಅವರ ಮನೆಗೆ ಹೋಗಿ ಒತ್ತಾಯಪೂರ್ವಕವಾಗಿ ಅವರ ಹೆಂಡತಿಯ ಮೂಲಕ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿಸಿದ್ದರು. ಕೆಲವು ಸಂದರ್ಭಗಳಲ್ಲಿ ಕುಮಾರಸ್ವಾಮಿ ಅವರು ಮಾತಿನಂತೆ ಪ್ರಕರಣ ನಡೆಸಲು ತಮಗೆ ಸಹಾಯ ಮಾಡಲಿಲ್ಲವೆಂದು ಡಿವೈಎಸ್ಪಿ ಗಣಪತಿ ಅವರ ಹೆಂಡತಿ ಹೇಳಿದ್ದಾರೆ. ಅಂತಿಮವಾಗಿ ನ್ಯಾಯಾಲಯ ಈ ಪ್ರಕರಣವನ್ನು ವಜಾಗೊಳಿಸಿದೆ ಎಂದು ತಿಳಿಸಿದ್ದಾರೆ. +ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಚಿವ ಜಾರ್ಜ್ ಅವರ ಮೇಲೆ ಕೊಲೆ ಆರೋಪ ಹೊರಿಸಿ ಸದನದ ಒಳಗೆ ಮತ್ತು ಹೊರಗೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿ ರಾಜೀನಾಮೆ ನೀಡುವಂತೆ ಮಾಡಿದ್ದರು. ತನಿಖೆಯ ಮುಖಾಂತರ ಆರೋಪ ಮುಕ್ತಾರಾದ ಕೆ.ಜೆ.ಜಾರ್ಜ್ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಮತ್ತೆ ಸಚಿವರಾಗಿ ಸೇರ್ಪಡೆಗೊಂಡಿದ್ದರು ಎಂದು ಸರಿಸಿದರು. \ No newline at end of file diff --git a/eesanje/url_46_31_12.txt b/eesanje/url_46_31_12.txt new file mode 100644 index 0000000000000000000000000000000000000000..6795e884976ec7dff42039ef2ef76e937765cd65 --- /dev/null +++ b/eesanje/url_46_31_12.txt @@ -0,0 +1,11 @@ +ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಯತ್ನಾಳ್ ಅಹೋರಾತ್ರಿ ಧರಣಿ + +ಬೆಂಗಳೂರು,ಆ.28-ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್‌ ಬೆಂಗಳೂರಿನ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದಾರೆ. +ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನಲ್ಲಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದನೆಗೆ ಸಂಬಂಧಪಟ್ಟ ಪರವಾನಗಿ ನವೀಕರಣವಾಗಿಲ್ಲ ಎಂಬ ಕಾರಣಕ್ಕಾಗಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಕಾರ್ಖಾನೆಗೆ ಬೀಗ ಹಾಕಿತ್ತು. ಇದನ್ನು ಪ್ರಶ್ನಿಸಿ ಯತ್ನಾಳ್‌ ಹೈಕೋರ್ಟ್‌ ಮೊರೆ ಹೋಗಿದ್ದರು. +ಕಳೆದ 21 ರಂದು ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆದು ಸಹಮತಿಯ ಮೇರೆಗೆ ಕಾರ್ಯಾಚರಣೆ ಪದ್ಧತಿಯಲ್ಲಿ ಕಾರ್ಖಾನೆ ಪುನರಾರಂಭಕ್ಕೆ ಅವಕಾಶ ಮಾಡಿಕೊಡುವಂತೆ ಆದೇಶಿಸಲಾಗಿದೆ.ಆದರೆ ನ್ಯಾಯಾಲಯದ ತೀರ್ಪಿನ ಪ್ರತಿ ತಮ ಕೈ ಸೇರಿಲ್ಲ ಎಂದು ನೆಪವೊಡ್ಡಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದರು. +15 ವರ್ಷಗಳ ಮೇಲೆ ಚಿಂಚೋಳಿಯಲ್ಲಿ ಕಾಂಗ್ರೆಸ್‌‍ ನಾಯಕ ಪಿ.ಚಿದಂಬರಂ ಸಕ್ಕರೆ ಕಾರ್ಖಾನೆ ತೆರೆಯಲು ಮುಂದಾಗಿದ್ದರು. ಅದು ದೊಡ್ಡ ಹಗರಣವಾಗಿ ಸಿಬಿಐ ತನಿಖೆಯೂ ಆಗಿತ್ತು. ಹಳೆಯ ಕಾರ್ಖಾನೆಯನ್ನು ಪುನರ್‌ ಆರಂಭಿಸಲು 11 ಸಲ ಟೆಂಡರ್‌ ಕರೆದರೂ ಯಾರೂ ಮುಂದೆ ಬಂದಿರಲಿಲ್ಲ. +ರೈತರ ಅನುಕೂಲಕ್ಕಾಗಿ ಹಾಗೂ 38 ಕೋಟಿ ರೂ. ಟೆಂಡರ್‌ ಒಪ್ಪಿಕೊಂಡು ಕಾರ್ಖಾನೆ ಆರಂಭಿಸಿದ್ದು, ಎಥೆನಾಲ್‌ ಉತ್ಪಾದನೆ ಮಾಡುತ್ತಿದ್ದೇನೆ ಎಂದು ವಿವರಿಸಿದರು.ಕಾಂಗ್ರೆಸ್‌‍ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಕಾರ್ಖಾನೆಗೆ ಬೀಗ ಹಾಕಿದೆ. ತಮಿಳುನಾಡಿನಲ್ಲಿ ಖಾಸಗಿ ಕಂಪನಿಯಲ್ಲಿ ನಿಯಮ ಉಲ್ಲಂಘಿಸಿದ್ದರೂ ಅವರಿಂದ ಕೋಟ್ಯಂತರ ರೂ. ಲಂಚ ಪಡೆದು ವ್ಯವಹಾರ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ನಮಗೆ ಸತಾಯಿಸುತ್ತಿದ್ದಾರೆ. ಹಿಂದುಳಿದ ಜಿಲ್ಲೆಯಲ್ಲಿ ಕಾರ್ಖಾನೆ ಮಾಡಿ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದು, ರೈತರ ಕಬ್ಬು ಅರೆಯಲು ದುರುದ್ದೇಶಪೂರಕವಾಗಿ ಅಡ್ಡಿಪಡಿಸಲಾಗುತ್ತಿದೆ ಎಂದು ದೂರಿದರು. +ನಿನ್ನೆ ತಡರಾತ್ರಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಸ್ಥಳಕ್ಕೆ ತೆರಳಿ ಬಸನಗೌಡ ಪಾಟೀಲ್‌ ಯತ್ನಾಳ್‌ರಿಗೆ ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದರು.ದ್ವೇಷದ ರಾಜಕಾರಣಕ್ಕಾಗಿ ಬಸನಗೌಡ ಪಾಟೀಲ್‌ರವರಿಗೆ ತೊಂದರೆ ನೀಡಲಾಗುತ್ತಿದೆ. ಶೀಘ್ರವೇ ಹೈಕೋರ್ಟ್‌ ಆದೇಶವನ್ನು ಮಾನ್ಯ ಮಾಡದೇ ಇದ್ದರೆ ಸರ್ಕಾರದ ವಿರುದ್ಧ ನಮ ಪಕ್ಷದ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಒಟ್ಟಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದೇವೆ. ನಾಡಿದ್ದು ರೈತರೊಡಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. +ನ್ಯಾಯಾಲಯದ ಆದೇಶ ತಲುಪಿಲ್ಲ ಎಂದು ನೆಪ ಹೇಳಲಾಗುತ್ತಿದೆ. ಈ ಪ್ರಕರಣದಲ್ಲಿ ರಾಜ್ಯಸರ್ಕಾರದ ಅಡ್ವಕೇಟ್‌ ಜನರಲ್‌ರವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾದ ವಕೀಲರು ಹಾಜರಿದ್ದರು. ಅವರ ಎದುರೇ ತೀರ್ಪು ಪ್ರಕಟವಾಗಿದೆ. +ಬಸನಗೌಡ ಪಾಟೀಲ್‌ ಯತ್ನಾಳ್‌ರವರಿಗೆ ನ್ಯಾಯಾಲಯದ ಪ್ರತಿ ಸಿಕ್ಕಿದೆ. ಆದರೆ ಮಾಲಿನ್ಯ ನಿಯಂತ್ರಣಾಧಿಕಾರಿಗಳು ದೃಢೀಕೃತ ಪ್ರತಿ ಬೇಕು ಎಂದು ಕಾಲಾಹರಣ ಮಾಡುತ್ತಿದ್ದಾರೆ. ಜೊತೆಗೆ ಕಾರ್ಯದರ್ಶಿಯವರು ಮುಖ್ಯ ಕಾರ್ಯದರ್ಶಿ, ಸಚಿವರ ಮೇಲೆ ಒಬ್ಬರ ಮೇಲೆ ಒಬ್ಬರು ಬೊಟ್ಟು ಮಾಡುತ್ತಾ ಸತಾಯಿಸಲಾಗುತ್ತಿದೆ ಎಂದು ಕಿಡಿಕಾರಿದರು. +ಇಂದು ಬೆಳಿಗ್ಗೆ ಕೂಡ ಅಶೋಕ್‌ರವರು ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ತೆರಳಿ ಯತ್ನಾಳ್‌ರವರಿಗೆ ಬೆಂಬಲ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_31_2.txt b/eesanje/url_46_31_2.txt new file mode 100644 index 0000000000000000000000000000000000000000..02f1c9802255bf3f4b0b53f929ba0d19b6ff54ec --- /dev/null +++ b/eesanje/url_46_31_2.txt @@ -0,0 +1,13 @@ +ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರಣೆಯತ್ತ ಎಲ್ಲರ ಚಿತ್ತ + +ಬೆಂಗಳೂರು,ಆ.29-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ತನಿಖೆ ಹಾಗೂ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಹೈಕೋರ್ಟ್ನಲ್ಲಿ ನಡೆಯಲಿದೆ. +ಕಳೆದ ಆ.19 ರಂದು ನಡೆದಿದ್ದ ವಿಚಾರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದಿಷ್ಟು ರಿಯಾಯಿತಿಗಳು ದೊರೆತಿದ್ದವು. ಮುಂದಿನ ವಿಚಾರಣೆಯ ದಿನಾಂಕ ನಿಗದಿಯಾಗಿರುವಂತೆ ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ನ ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. +ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ಪ್ರೊ.ರವಿವರ್ಮ ಕುಮಾರ್ ಹಾಗೂ ಇತರ ವಕೀಲರು ವಾದ ಮಂಡಿಸಲಿದ್ದಾರೆ. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್.ಪೊನ್ನಣ್ಣ ಪ್ರಕರಣದ ನಿಗಾವಣೆ ವಹಿಸಿದ್ದಾರೆ. ರಾಜ್ಯಪಾಲರು ಪೂರ್ವಾನುಮತಿ ನೀಡಿರುವ ಹಲವು ಪ್ರಕರಣಗಳ ತೀರ್ಪುಗಳನ್ನು ಇಂದು ಉಲ್ಲೇಖಿಸಲು ಸಿದ್ಧತೆ ನಡೆಸಿಕೊಳ್ಳಲಾಗಿದೆ. +ರಾಜ್ಯಪಾಲರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಹಾಗೂ ಭಾರತೀಯ ನ್ಯಾಯ ಸಂಹಿತೆ 218 ರಡಿ ಪೂರ್ವಾನುಮತಿ ನೀಡಿದ್ದರು. ಈ ಹಿಂದಿನ ವಿಚಾರಣೆಯಲ್ಲಿ ಪ್ರತಿವಾದಿಗಳಿಗೆ ನೋಟೀಸ್ ನೀಡಿತ್ತು. ಅದರ ಅನುಸಾರ ಪ್ರತಿವಾದಿಗಳಾದ ಟಿ.ಜೆ.ಅಬ್ರಹಾಂ, ಪ್ರದೀಪ್ ಕುಮಾರ್ ಅವರು ತಮ ಉತ್ತರವನ್ನು ಸಲ್ಲಿಸಿದ್ದಾರೆ. +5ನೇ ಪ್ರತಿವಾದಿಯಾಗಿರುವ ಸ್ನೇಹಮಯಿ ಕೃಷ್ಣ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉತ್ತರ ನೀಡಿಲ್ಲ ಎಂದು ಹೇಳಲಾಗಿದೆ. ಸಾಂವಿಧಾನಿಕ ಹುದ್ದೆ ಹೊಂದಿರುವ ರಾಜ್ಯಪಾಲರು ಹೈಕೋರ್ಟ್ ನೋಟೀಸ್ಗೆ ಉತ್ತರ ನೀಡಬೇಕೇ? ಬೇಡವೇ ಎಂಬ ಜಿಜ್ಞಾಸೆ ಕೂಡ ಮೂಡಿದೆ. +ಪ್ರತಿವಾದಿಗಳ ಉತ್ತರದ ಆಧಾರದ ಮೇಲೆ ಸಿದ್ದರಾಮಯ್ಯ ಅವರ ಪರ ವಕೀಲರು ರಿಜಾಯಿಂಡರ್ ಸಲ್ಲಿಸಲು ತಯಾರಿ ನಡೆಸಿವೆ.ಅಭಿಷೇಕ್ ಮನುಷಿಂಘ್ವಿಯವರು ಇಂದಿನ ವಿಚಾರಣೆಯಲ್ಲಿ ಪ್ರಕರಣದ ವಾಸ್ತವಾಂಶಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ. +ಮುಖ್ಯಮಂತ್ರಿಯವರು ಯಾವುದೇ ತಪ್ಪು ಮಾಡಿಲ್ಲ, ನಿವೇಶನ ಹಂಚಿಕೆಯಲ್ಲಿ ಪ್ರಭಾವ ಬೀರಿಲ್ಲ, ಹಾಗಿದ್ದರೂ ರಾಜಕೀಯ ದುರುದ್ದೇಶದಿಂದ ಆರೋಪ ಮಾಡಲಾಗುತ್ತಿದೆ ಮತ್ತು ರಾಜಕೀಯ ದ್ವೇಷಕ್ಕಾಗಿ ತನಿಖೆಗೆ ಪೂರ್ವಾನುಮತಿ ನೀಡಲಾಗಿದೆ ಎಂದು ವಾದಿಸುವ ಸಾಧ್ಯತೆಯಿದೆ. +ಅಧಿಕಾರದಲ್ಲಿದ್ದಾಗ ಅದನ್ನು ದುರುಪಯೋಗಪಡಿಸಿಕೊಂಡು ನಿರ್ಣಯ ಕೈಗೊಂಡಿದ್ದರೆ ಅದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಅಡಿ ತನಿಖೆಗೆ ಸೂಕ್ತವಾಗಿದೆ. ಆದರೆ ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಆದರೂ ರಾಜ್ಯಪಾಲರು ವಿಚಾರಣೆಗೆ ಪೂರ್ವಾನುಮತಿ ನೀಡಿದ್ದಾರೆ ಎಂದು ಆಕ್ಷೇಪಿಸುವ ತಯಾರಿಗಳು ನಡೆದಿವೆ. +ಮುಖ್ಯಮಂತ್ರಿಯವರ ವಿರುದ್ಧ 17ಎ ಅಡಿ ಅನುಮತಿ ಕೋರಲುೆೆ ಪೊಲೀಸ್ ಅಧಿಕಾರಿಗಳಿಗೆ ಮಾತ್ರ ಅವಕಾಶವಿದೆ. ಸಾರ್ವಜನಿಕರಿಗೆ ಪೂರ್ವಾನುಮತಿ ನೀಡಲು ಅವಕಾಶವಿಲ್ಲ. ಭಾರತೀಯ ನ್ಯಾಯ ಸಂಹಿತೆ ಕಲಂ 218 ರಡಿ ಅನುಮತಿ ನೀಡಿರುವುದು ಕೂಡ ಕಾನೂನು ಬಾಹಿರ ಎಂದು ವಾದಿಸಲಾಗುತ್ತದೆ. +ಈ ಹಿಂದೆ ನಡೆದ ವಿಚಾರಣೆಯಲ್ಲಿ ರಾಜ್ಯಪಾಲರ ಪೂರ್ವಾನುಮತಿ ಆಧರಿಸಿ ಯಾವುದೇ ಬಲವಂತದ ಕ್ರಮಗಳನ್ನು ಅನುಸರಿಸುವಂತಿಲ್ಲ ಎಂಬ ನಿರ್ದೇಶನಗನ್ನು ಹೈ ಕೋರ್ಟ್ ನೀಡಿತ್ತು ಹಾಗೂ ಕೆಳಹಂತದ ನ್ಯಾಯಾಲಯದಲ್ಲಿ ಆ.21 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಮುಂದೂಡಲು ಸೂಚನೆ ನೀಡಿತ್ತು. +ಇಂದಿನ ವಿಚಾರಣೆಯಲ್ಲಿ ಈ ಮೊದಲು ನೀಡಿದ್ದ ನಿರ್ದೇಶನಗಳೇ ಮುಂದುವರೆಯಲಿದೆಯೇ? ಅಥವಾ ಹೊಸದಾದ ಆದೇಶಗಳು ಜಾರಿಯಾಗಲಿವೆಯೇ? ಎಂಬ ಕುತೂಹಲ ಕೆರಳಿದೆ.ಒಂದು ವೇಳೆ ನ್ಯಾಯಾಲಯ ರಾಜ್ಯಪಾಲರ ಪೂರ್ವಾನುಮತಿಯ ಕ್ರಮವನ್ನು ಎತ್ತಿಹಿಡಿದರೆ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಲಿದೆ. ಅಂತಹ ಸಂದರ್ಭದಲ್ಲಿ ರಾಜಕೀಯವಾಗಿ ಸಾಕಷ್ಟು ಏರುಪೇರುಗಳಾಗುವ ಸಾಧ್ಯತೆಯಿದೆ. \ No newline at end of file diff --git a/eesanje/url_46_31_3.txt b/eesanje/url_46_31_3.txt new file mode 100644 index 0000000000000000000000000000000000000000..1ac47a94391aa2b88edb92939158a44d237b5a2a --- /dev/null +++ b/eesanje/url_46_31_3.txt @@ -0,0 +1,12 @@ +ಸಿನಿಮಾ ಸ್ಟೈಲ್‌ನಲ್ಲೇ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ + +ಬೆಂಗಳೂರು,ಆ.29-ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಖ್ಯಾತ ಚಿತ್ರ ನಟ ಡಿ ಬಾಸ್‌‍ ದರ್ಶನ್‌ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಅವರ ಅಭಿಮಾನಿಗಳು ಮತ್ತು ಪತ್ರಕರ್ತರ ಕಣ್ತಪ್ಪಿಸಿ ಪರಪ್ಪನ ಅಗ್ರಹಾರ ಬಂಧಿಖಾನೆಯಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. +ಜೈಲಿನಲ್ಲಿ ದರ್ಶನ್‌ ರೌಡಿ ಗ್ಯಾಂಗ್‌ನೊಂದಿಗೆ ನಡೆಸುತ್ತಿದ್ದ ಮೋಜು ಮಸ್ತಿಯ ವಿಷಯ ಬಹಿರಂಗವಾಗುತ್ತಿದ್ದಂತೆ ಸರ್ಕಾರ ನ್ಯಾಯಲಯದ ಅನುಮತಿ ಪಡೆದು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಜೈಲು ವರ್ಗಾವಣೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕರೂ ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಸ್ವಲ್ಪ ಹೆಚ್ಚು ಕಮಿಯಾದರೂ ಮತ್ತೆ ಪೊಲೀಸರೇ ಅದಕ್ಕೆ ಹೊಣೆಗಾರರಾಗಬೇಕಿತ್ತು. +ಹೀಗಾಗಿ ಯಾರಿಗೂ ತಿಳಿಯದಂತೆ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಮಾಸ್ಟರ್‌ ಪ್ಲಾನ್‌ ಒಂದನ್ನು ಸಿದ್ದಪಡಿಸಿಕೊಂಡು ಕೊಲೆ ಪ್ರಕರಣದಲ್ಲಿ ಖಳನಾಯಕನಾಗಿರುವ ದರ್ಶನ್‌ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಬಳ್ಳಾರಿಗೆ ಸ್ಥಳಾಂತರಿಸುವ ಪ್ಲಾನ್‌ ರೂಪಿಸಿದರು. +ಏನದು ಮಾಸ್ಟರ್‌ ಪ್ಲಾನ್‌: ದರ್ಶನ್‌ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿ ಅವರ ಊರು ಚಿತ್ರದುರ್ಗ ಹೀಗಾಗಿ ದರ್ಶನ್‌ ಅವರನ್ನು ಅದೇ ಮಾರ್ಗವಾಗಿ ಬಳ್ಳಾರಿಗೆ ಕರೆದೊಯ್ದರೆ ಏನಾದರೂ ಅನಾಹುತ ಸಂಭವಿಸಬಹುದು ಎಂಬ ದೂರಾಲೋಚನೆ ಮಾಡಿದ ಖಾಕಿ ಪಡೆ ಅದಕ್ಕಾಗಿಯೇ ಒಂದು ಮಾಸ್ಟರ್‌ ಪ್ಲಾನ್‌ ಸಿದ್ದಪಡಿಸಿತು. +ಹಲಸೂರು ಉಪವಿಭಾಗದ ಎಸಿಪಿ ರಂಗಪ್ಪ ನೇತೃತ್ವದ ಒಂದು ತಂಡ ದರ್ಶನ್‌ ಅವರನ್ನು ತುಮಕೂರು-ಶಿರಾ-ಚಿತ್ರದುರ್ಗದ ಮಾರ್ಗದಲ್ಲಿ ದರ್ಶನ್‌ ಅವರನ್ನು ಬಳ್ಳಾರಿಗೆ ಕರೆದೊಯ್ಯಲು ತೀರ್ಮಾನಿಸಲಾಯಿತು.ಅದೇ ಸಂದರ್ಭದಲ್ಲಿ ಎಸಿಪಿ ಸದಾನಂದ ತಿಪ್ಪಣವರ್‌ ನೇತೃತ್ವದ ಮತ್ತೊಂದು ಪೊಲೀಸ್‌‍ ತಂಡವೂ ಬಿಗಿ ಭದ್ರತೆಯಲ್ಲಿ ಚಿಕ್ಕಬಳ್ಳಾಪುರ-ಆನಂತಪುರ-ಮೋಕಾ ಮಾರ್ಗವಾಗಿ ಬಳ್ಳಾರಿಗೆ ಪ್ರಯಾಣ ಬೆಳೆಸಿತು. +ಈ ಎರಡು ಪೊಲೀಸ್‌‍ ತಂಡದಲ್ಲಿ ದರ್ಶನ್‌ ಅವರನ್ನು ಯಾವ ತಂಡದ ಜೊತೆ ಬಳ್ಳಾರಿಗೆ ಕರೆದೊಯ್ಯಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ಬಿಟ್ಟರೆ ಬೇರೆ ಯಾರಿಗೂ ತಿಳಿದಿರಲಿಲ್ಲ. +ಇಬ್ಬರು ಎಸಿಪಿಗಳ ನೇತೃತ್ವದ ತಂಡಗಳು ಸಿನಿಮಾ ಸ್ಟೈಲ್‌ನಂತೆ ಮಧ್ಯ ದರ್ಶನ್‌ ಇರುವ ಪೊಲೀಸ್‌‍ ವ್ಯಾನ್‌ ಅದರ ರಕ್ಷಣೆಗಾಗಿ ಮುಂದೆ ಎರಡು ಜೀಪ್‌ ಹಾಗೂ ಹಿಂದೆ ಎರಡು ಜೀಪ್‌ಗಳಲ್ಲಿ ತಮ ಪ್ರಯಾಣ ಆರಂಭಿಸಿದವು. ಎರಡು ಮಾರ್ಗದ ಪ್ರಯಾಣ ಒಂದೇ ಸಮಯದಲ್ಲಿ ಆರಂಭವಾದರೂ ಬಳ್ಳಾರಿ ತಲುಪುವ ಸಮಯದಲ್ಲಿ ವ್ಯತ್ಯಾಸವಿತ್ತು. +ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಸಂಚರಿಸಿದ ಟೀಮ್‌ ಬೆಳಿಗ್ಗೆ 3.45ರ ಸುಮಾರಿಗೆ ಬಳ್ಳಾರಿ ತಲುಪಿದರೆ ತುಮಕೂರು ಮಾರ್ಗದ ತಂಡ 4.30ರ ಸುಮಾರಿಗೆ ಬಳ್ಳಾರಿ ತಲುಪಿತ್ತು. ಆದರೆ ಈ ಎರಡು ವಾಹನಗಳಲ್ಲಿ ದರ್ಶನ್‌ ಅವರನ್ನು ಯಾವ ಮಾರ್ಗದಲ್ಲಿ ಬಳ್ಳಾರಿಗೆ ಕರೆದುಕೊಂಡು ಬರಲಾಯಿತು ಎಂಬುದು ಮಾತ್ರ ಯಾರಿಗೂ ಗೊತ್ತಿರಲಿಲ್ಲ. +ಚಿತ್ರದುರ್ಗದ ಮಾರ್ಗವಾಗಿ ಕರೆದುಕೊಂಡು ಬಂದರೆ ಒಂದು ವೇಳೆ ಅಲ್ಲಿ ಏನಾದರೂ ಅಪತ್ತು ಎದುರಾದರೆ ಕಷ್ಟ ಎಂಬುದನ್ನು ಮನಗಂಡ ಪೊಲೀಸರು ಚಿಕ್ಕಬಳ್ಳಾಪುರದ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪೊಲೀಸ್‌‍ ಟೀಮ್‌ನೊಂದಿಗೆ ದರ್ಶನ್‌ ಅವರನ್ನು ಸುರಕ್ಷಿತವಾಗಿ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದೆ. +ದರ್ಶನ್‌ ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂದೆ ಜಮಾಯಿಸಿ ತಮ ನಾಯಕನ ಪರ ಘೋಷಣೆ ಕೂಗುವ ಮುನ್ನವೇ ಡಿ ಬಾಸ್‌‍ ಅವರನ್ನು ಸಿನಿಮಾ ಸ್ಟೈಲ್‌ನಲ್ಲೇ ಬಳ್ಳಾರಿ ಜೈಲು ಮುಟ್ಟಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರ ಕಾರ್ಯಚರಣೆಯನ್ನು ಹಿರಿಯ ಪೊಲೀಸ್‌‍ ಅಧಿಕಾರಿಗಳು ಹಾಗೂ ಪ್ರಜ್ಞಾವಂತ ನಾಗರೀಕರು ಶ್ಲಾಘಿಸಿದ್ದಾರೆ. \ No newline at end of file diff --git a/eesanje/url_46_31_4.txt b/eesanje/url_46_31_4.txt new file mode 100644 index 0000000000000000000000000000000000000000..92102d3f279b6e53a0eb30a6dcf3d2d15be07790 --- /dev/null +++ b/eesanje/url_46_31_4.txt @@ -0,0 +1,11 @@ +ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್‌ ಶಿಫ್ಟ್, ಇಲ್ಲಿದೆ ಡೀಟೇಲ್ಸ್ + +ಬೆಂಗಳೂರ,ಆ.29-ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಅವರ ಅಭಿಮಾನಿಗಳ ಕಣ್ತಪ್ಪಿಸಿ ಇಂದು ಮುಂಜಾನೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಪೊಲೀಸ್‌‍ ಬಿಗಿಬಂದೋಬಸ್ತ್‌ನಲ್ಲಿ ಸ್ಥಳಾಂತರಿಸಲಾಯಿತು. +ಮುಂಜಾನೆ 4.30ರ ಸುಮಾರಿಗೆ ಪರಪ್ಪನ ಅಗ್ರಹಾರದಿಂದ ಪೊಲೀಸ್‌‍ ವಾಹನದಲ್ಲಿ ದರ್ಶನ್‌ ಅವರನ್ನು ತುಮಕೂರು, ಚಿತ್ರದುರ್ಗ ಮೂಲಕ ಕರೆದೊಯ್ದು ಬೆಳಗ್ಗೆ 10.30ರ ಸುಮಾರಿಗೆ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. +ಅಭಿಮಾನಿಗಳ ಕಣ್ತಪ್ಪಿಸಿ ದರ್ಶನ್‌ನನ್ನು ಬಳ್ಳಾರಿಗೆ ಕರೆದೊಯ್ಯುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರವಾಗುತ್ತಿರುವ ವಿಷಯ ತಿಳಿದು ಇಂದು ಮುಂಜಾನೆಯಿಂದಲೇ ಅವರ ನೂರಾರು ಅಭಿಮಾನಿಗಳು ಬಳ್ಳಾರಿ ಕಾರಾಗೃಹ ಬಳಿ ಜಮಾಯಿಸಿದ್ದರು. +ಅಭಿಮಾನಿಗಳನ್ನು ನಿಯಂತ್ರಿಸಲು ಕಾರಾಗೃಹದ ಸುತ್ತ ಪೊಲೀಸ್‌‍ ಬಿಗಿಬಂದೋಬಸ್ತ್‌ ಮಾಡಲಾಗಿತ್ತು. ಕಾರಾಗೃಹದ ಬಳಿ ದರ್ಶನ್‌ನನ್ನು ಕರೆತರುತ್ತಿದ್ದಂತೆ ಅಭಿಮಾನಿಗಳು ಡಿ ಬಾಸ್‌‍ ಡಿ ಬಾಸ್‌‍ ಎಂದು ಜೈಕಾರ ಕೂಗಿ ತಮ ಅಭಿಮಾನ ಮೆರೆದರು. +ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಫೋಟೋ ವೈರಲ್ಲಾಗುತ್ತಿದ್ದಂತೆ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿ ಬಳ್ಳಾರಿ ಕಾರಾಗೃಹಕ್ಕೆ ಜೈಲಾಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆ. +ನಿನ್ನೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಸ್ಥಳಾಂತರಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ಆದರೆ ಪ್ರಕ್ರಿಯೆ ಮುಗಿಸಲು ತಡವಾದ ಕಾರಣ ಇಂದು ಮುಂಜಾನೆ ದರ್ಶನ್‌ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಕರೆತರಲಾಗಿದೆ. +ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ ಕಾಫಿ ಕುಡಿಯುತ್ತಾ, ಒಂದು ಕೈಯಲ್ಲಿ ಸಿಗರೇಟ್‌ ಇರುವ ಫೋಟೋ ವೈರಲ್ಲಾಗಿದ್ದರ ಜೊತೆಗೆ ತಮ ಸೆಲ್‌ನಿಂದಲೇ ವಿಡಿಯೋ ಕಾಲ್‌ನಲ್ಲಿ ರೌಡಿಯ ಮಗನೊಂದಿಗೆ ಮಾತನಾಡಿರುವುದು ಕೂಡ ದರ್ಶನ್‌ಗೆ ಕಂಟಕವಾಗಿ ಪರಿಣಮಿಸಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಒಂಬತ್ತು ಮಂದಿಯ ತಲೆದಂಡವೂ ಆಗಿದೆ. +ದರ್ಶನ್‌ ಗಾಂಗ್‌ ಛಿದ್ರ:ರೇಣಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸಹಚರರಿಗೂ ಸಂಕಷ್ಟ ಎದುರಾಗಿದ್ದು, ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಆದೇಶಿಸಿದೆ. ಮೂವರು ಆರೋಪಿಗಳು ಈಗಾಗಲೇ ತುಮಕೂರು ಜೈಲಿನಲ್ಲಿದ್ದು, ಮತ್ತೆ ಮೂವರನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ನಡೆಯುತ್ತಿದೆ. +ಮೈಸೂರು ಕಾರಾಗೃಹದಲ್ಲಿ 20 ಬ್ಯಾರೆಕ್‌ಗಳಿದ್ದು ಒಟ್ಟು 850 ಕೈದಿಗಳಿದ್ದಾರೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೆಲವು ಆರೋಪಿಗಳು ಮೈಸೂರಿಗೆ ಸ್ಥಳಾಂತರವಾಗುತ್ತಿರುವುದರಿಂದ ಜೈಲಿನ ಅಧಿಕಾರಿಗಳು ಸಿಸಿಟಿವಿ ಕಣ್ಗಾವಲು ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಪ್ರಕರಣದ ಮೊದಲನೇ ಆರೋಪಿ ಪವಿತ್ರಗೌಡ ಮಾತ್ರ ಇದೀಗ ಪರಪ್ಪನ ಅಗ್ರಹಾರ ಕಾರಾಗೃಹದಲ್ಲೇ ಉಳಿದುಕೊಂಡಿದ್ದಾರೆ. \ No newline at end of file diff --git a/eesanje/url_46_31_5.txt b/eesanje/url_46_31_5.txt new file mode 100644 index 0000000000000000000000000000000000000000..06225620d6a9a5c23544ae01c1e0d66c44c066c2 --- /dev/null +++ b/eesanje/url_46_31_5.txt @@ -0,0 +1,12 @@ +ಸಿಎಂ-ಸಚಿವರ ಜೊತೆ 16ನೇ ಹಣಕಾಸು ಆಯೋಗದ ಮಹತ್ವದ ಸಭೆ + 16th - +ಬೆಂಗಳೂರು,ಆ.29-ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ. +ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು, ಯೋಜನಾ ಆಯೋಗ, ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆದಿದೆ. +ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಗಳನ್ನು ಮಂಡಿಸಲು ಹಲವು ತಿಂಗಳುಗಳಿಂದಲೂ ತಯಾರಿ ನಡೆಸಿತ್ತು. ಪ್ರತಿಯೊಂದು ಇಲಾಖೆಯಿಂದಲೂ ಖರ್ಚು ವೆಚ್ಚಗಳ ಹಾಗೂ ಆಸ್ತಿ ಸೃಜನೆಗೆ ಸಂಬಂಧಪಟ್ಟಂತ ಮಾಹಿತಿಗಳನ್ನು ದೃಢೀಕರಿಸಲಾಗಿತ್ತು. ಕಳೆದ ವಾರವೇ 16ನೇ ಹಣಕಾಸು ಆಯೋಗಕ್ಕೆ ರಾಜ್ಯಸರ್ಕಾರದ ಪ್ರಸ್ತಾವನೆಗಳನ್ನು ಸಲ್ಲಿಕೆ ಮಾಡಲಾಗಿದ್ದು, ಕಳೆದೆರಡು ದಿನಗಳಿಂದ ನಡೆಯುತ್ತಿರುವ ಸರಣಿ ಸಭೆಯಲ್ಲಿ ವಿಸ್ತೃತವಾದ ಚರ್ಚೆಗಳು ನಡೆದಿವೆ. +ಮುಖ್ಯಮಂತ್ರಿಯವರು ರಾಜ್ಯಸರ್ಕಾರದ ಪ್ರತಿಪಾದನೆಗಳನ್ನು ಆಯೋಗದ ಮುಂದೆ ಪ್ರಬಲವಾಗಿ ಮಂಡಿಸಿದ್ದಾರೆ.ಈ ಹಿಂದೆ15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ರಾಜ್ಯಕ್ಕೆ ಸುಮಾರು 1.50 ಲಕ್ಷ ಕೋಟಿ ರೂ.ಗಳು ನಷ್ಟವಾಗಿತ್ತು. ಮಧ್ಯಂತರ ಶಿಫಾರಸ್ಸಿನಲ್ಲಿ ಕರ್ನಾಟಕ ಕುರಿತಂತೆ ವ್ಯಕ್ತವಾಗಿದ್ದ ಅನುಕಂಪ ಅಂತಿಮ ವರದಿಯಲ್ಲಿ ಇರಲಿಲ್ಲ. ಹೀಗಾಗಿ ಮೇಲ್ನೋಟಕ್ಕೆ 11,500 ಕೋಟಿ ರೂ.ಗಳು ಖೋತಾ ಆಗಿತ್ತು. +ಕೇಂದ್ರ ಸರ್ಕಾರ ಜಿಎಸ್‌‍ಟಿ ಸೇರಿದಂತೆ ಇತರೆ ತೆರಿಗೆಯ ಸಂಪನೂಲಗಳನ್ನು ಹಂಚಿಕೆ ಮಾಡಲು ಅನುಸರಿಸುತ್ತಿರುವ ಮಾನದಂಡಗಳ ಕುರಿತಾಗಿಯೇ ಒಂದಿಷ್ಟು ಆಕ್ಷೇಪಗಳು ವ್ಯಕ್ತವಾಗಿವೆ. +ದಕ್ಷಿಣ ಭಾರತದಲ್ಲಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಪ್ರಗತಿಪರ ರಾಜ್ಯಗಳು ಜನಸಂಖ್ಯೆ ನಿಯಂತ್ರಣ, ಸಂಪನೂಲ ಕ್ರೂಢೀಕರಣಗಳ ವಿಚಾರದಲ್ಲಿ ಮುಂದಿವೆ. ಅಭಿವೃದ್ಧಿ ವಿಚಾರದಲ್ಲಿಯೂ ರಾಜ್ಯ ಮುಂಚೂಣಿ ಸ್ಥಾನದಲ್ಲಿದೆ. +15ನೇ ಹಣಕಾಸು ಆಯೋಗ ಒಕ್ಕೂಟ ವ್ಯವಸ್ಥೆಯಲ್ಲಿ ಹಿಂದುಳಿದ ರಾಜ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಒತ್ತಿ ಹೇಳಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ದೊರೆಯುತ್ತಿದ್ದ ತೆರಿಗೆಯ ಪಾಲು 10, 11ನೇ ಸ್ಥಾನದಲ್ಲಿತ್ತು. ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಆದರೆ ಸಂಪನೂಲ ಮರುಗಳಿಕೆಯ ವಿಷಯದಲ್ಲಿ 12ನೇ ಸ್ಥಾನದಲ್ಲಿತ್ತು. ಹೀಗಾಗಿ 16ನೇ ಹಣಕಾಸು ಆಯೋಗದ ಶಿಫಾರಸ್ಸಿನಲ್ಲಿ ಹಿಂದಿನ ಅನ್ಯಾಯಗಳು ಮರುಕಳಿಸಬಾರದು ಎಂಬ ಕಾರಣಕ್ಕೆ ಸಿದ್ದರಾಮಯ್ಯನವರ ಸರ್ಕಾರ ಕಟ್ಟೆಚ್ಚರ ವಹಿಸಿದೆ. +ರಾಜ್ಯದ ಪರಿಸ್ಥಿತಿ ಅಧ್ಯಯನಕ್ಕಾಗಿ ಆಗಮಿಸಿರುವ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅವರ ಕುಟುಂಬದವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಟುಂಬದ ಸದಸ್ಯರಿಗೆ ಪ್ರೇಕ್ಷಣೀಯ ಸ್ಥಳಗಳ ಪ್ರವಾಸ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶತಾಯಗತಾಯ 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಹೆಚ್ಚಿನ ಅನುಕೂಲ ಪಡೆದುಕೊಳ್ಳುವ ಇರಾದೆಯನ್ನು ಸಿದ್ದರಾಮಯ್ಯನವರ ಸರ್ಕಾರ ಹೊಂದಿದೆ. +ಪಂಚಖಾತ್ರಿ ಯೋಜನೆಗಳ ಜಾರಿಯಿಂದ ಆರ್ಥಿಕ ಒತ್ತಡಕ್ಕೆ ಸಿಲುಕಿರುವ ಸರ್ಕಾರಕ್ಕೆ ಕೇಂದ್ರದ ನೆರವು ಅತ್ಯಗತ್ಯ ಎಂಬ ಪರಿಸ್ಥಿತಿ ಇದೆ. ಆದರೆ ಈವರೆಗಿನ ಹಲವು ಬೆಳವಣಿಗೆಗಳಿಂದ ಕೇಂದ್ರಸರ್ಕಾರ ಸಮರ್ಪಕ ಅನುದಾನ ಬಿಡುಗಡೆ ಮಾಡದೆ ಸತಾಯಿಸುತ್ತಿದೆ. +ಬರ ಪರಿಹಾರಕ್ಕಾಗಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕಾದ ಪರಿಸ್ಥಿತಿ ಬಂದಿತ್ತು. ಇತ್ತೀಚೆಗೆ ನೆರೆ ಪರಿಸ್ಥಿತಿಯಿಂದಾಗಿ ಒಂದಷ್ಟು ಹಾನಿಯಾಗಿದೆ. ಅದರ ಪರಿಹಾರ ಬಿಡುಗಡೆಗೂ ಈವರೆಗೂ ಯಾವುದೇ ಪ್ರಕ್ರಿಯೆಗಳು ಕಂಡುಬಂದಿಲ್ಲ.ಹೀಗಾಗಿ 16ನೇ ಹಣಕಾಸು ಆಯೋಗದ ಸಹಾನುಭೂತಿಯನ್ನು ಗಿಟ್ಟಿಸಲು ರಾಜ್ಯಸರ್ಕಾರ ಇನ್ನಿಲ್ಲದ ಸರ್ಕಸ್‌‍ ನಡೆಸುತ್ತಿದೆ. \ No newline at end of file diff --git a/eesanje/url_46_31_6.txt b/eesanje/url_46_31_6.txt new file mode 100644 index 0000000000000000000000000000000000000000..c8d0d9882e78f1791ad71303eb936de2e2aeaa32 --- /dev/null +++ b/eesanje/url_46_31_6.txt @@ -0,0 +1,9 @@ +ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ + : +ಬೆಂಗಳೂರು, ಆ.28– ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತಾವು ಬದ್ಧರಾಗಿದ್ದು, ಹೈಕಮಾಂಡ್‌ ಜೊತೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. +ತಮ ನಿವಾಸ ಕಾವೇರಿಯಲ್ಲಿಂದು ಮಾದಿಗ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅವರು, ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಅನುಸಾರ ನಡೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. +ರಾಜ್ಯದಲ್ಲಿ ಒಳಮೀಸಲಾತಿ ವಿಚಾರವಾಗಿ ಹಲವು ದಿನಗಳಿಂದಲೂ ವಾದ-ವಿವಾದಗಳು ತೀವ್ರಗೊಂಡಿವೆ. ಈ ಹಿಂದೆ ಎಸ್‌‍.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದರು. ಸಮಿತಿ ಚರ್ಚೆ ನಡೆಸಿ ವರದಿ ನೀಡಿತ್ತು. ಆದರೆ ಅದು ಅವೈಜ್ಞಾನಿಕ ಎಂಬ ಕಾರಣಕ್ಕೆ ಪ.ಜಾತಿಯಲ್ಲಿರುವ ಕೆಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿದ್ದವು. +ಸದಾಶಿವ ಆಯೋಗದ ವರದಿ ಯನ್ನು ಜಾರಿಗೊಳಿಸಬೇಕೆಂದು ಮಾದಿಗ ಸಮುದಾಯ ಮೊದಲಿನಿಂದಲೂ ಪಟ್ಟು ಹಿಡಿದಿದೆ. ಕೆಲವು ಸಮುದಾಯಗಳು ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದಾಗಿ ಎರಡು ದಶಕದಿಂದಲೂ ವಿವಾದ ನೆನೆಗುದಿಗೆ ಬಿದ್ದಿದೆ. +ಈ ಹಿಂದೆ ಬಿಜೆಪಿಯ ಬಸವರಾಜ ಬೊಮಾಯಿ ನೇತೃತ್ವದ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ತಿರಸ್ಕಾರ ಮಾಡಿತ್ತು.ಆದರೆ ಅದರಲ್ಲಿನ ಶಿಫಾರಸ್ಸುಗಳನ್ನು ಪರಿಗಣಿಸಿ ಪರಿಶಿಷ್ಟ ಜಾತಿಯಲ್ಲಿರುವ ಎಡಗೈ ಸಮುದಾಯ, ಬಲಗೈ ಸಮುದಾಯ, ಬೋವಿ, ಲಂಬಾಣಿ ಹಾಗೂ ಇತರ ಜಾತಿಗಳಿಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಿತ್ತು. ಇದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ಸಂವಿಧಾನ ತಿದ್ದುಪಡಿ ಮಾಡುವಂತೆಯೂ ಮನವಿ ಮಾಡಲಾಗಿತ್ತು. +ಈ ನಡುವೆ ವಿವಿಧ ರಾಜ್ಯಗಳಲ್ಲಿ ಇದೇ ರೀತಿಯ ಒಳಮೀಸಲಾತಿ ಬೇಡಿಕೆಗಳು ಕೇಳಿಬಂದಿದ್ದರಿಂದಾಗಿ ಪ್ರಕರಣ ಸುಪ್ರೀಂಕೋರ್ಟ್‌ನ ಅಂಗಳದಲ್ಲಿ ಇದೇ ತಿಂಗಳ ಆರಂಭದಲ್ಲಿ ತೀರ್ಪು ನೀಡಿರುವ ನ್ಯಾಯಾಲಯ ಒಳಮೀಸಲಾತಿ ನೀಡುವುದು ರಾಜ್ಯಸರ್ಕಾರದ ಬಾಧ್ಯತೆ ಎಂದು ಸ್ಪಷ್ಟಪಡಿಸಿದೆ. +ಈ ಹಿನ್ನೆಲೆಯಲ್ಲಿ ಮತ್ತೊಮೆ ವಿವಾದ ಮುನ್ನೆಲೆಗೆ ಬಂದಿದೆ. ಎಡಗೈ ಸಮುದಾಯದ ಮುಖಂಡರೂ ಆಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ, ಅಬಕಾರಿ ಸಚಿವ ಆರ್‌.ಬಿ.ತಿಮಾಪುರ್‌, ಮಾಜಿ ಸಚಿವ ಎಚ್.ಆಂಜನೇಯ, ರಾಜ್ಯಸಭೆಯ ಮಾಜಿ ಸದಸ್ಯ ಎಲ್‌.ಹನುಮಂತಯ್ಯ, ಶಾಸಕರಾದ ಶ್ರೀನಿವಾಸ್‌‍, ಬಸವಂತಪ್ಪ, ಡಾ.ತಿಮಯ್ಯ, ಮಾಜಿ ಸಂಸದ ಶಿವಣ್ಣ ಸೇರಿದಂತೆ ಹಲವು ಪ್ರಮುಖ ಮುಖಂಡರ ಜೊತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು. ಸಂಪುಟದಲ್ಲಿ ಚರ್ಚೆ ಮಾಡಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳುವ ಭರವಸೆ ನೀಡಿದರು. \ No newline at end of file diff --git a/eesanje/url_46_31_7.txt b/eesanje/url_46_31_7.txt new file mode 100644 index 0000000000000000000000000000000000000000..88c2efd34d07234ce1177d9e324e5aa65986a53e --- /dev/null +++ b/eesanje/url_46_31_7.txt @@ -0,0 +1,8 @@ +ವಾಯುಭಾರ ಕುಸಿತ, ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ + +ಬೆಂಗಳೂರು, ಆ.28-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ.ನಾಳೆಯಿಂದ ರಾಜ್ಯದ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಉಳಿದಂತೆ ರಾಜ್ಯದ ಹಲವೆಡೆ ಹಗುರ ಮಳೆ ಬಿದ್ದಿದೆ. +ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಮೇಲೆ ಯಾವುದೇ ನೇರ ಪರಿಣಾಮ ಉಂಟಾಗುವುದಿಲ್ಲ. ಇದರ ಪ್ರಭಾವದಿಂದ ಮೋಡ ಹೆಚ್ಚಾಗಲಿದ್ದು, ಆಗಸ್ಟ್‌ ತಿಂಗಳ ಅಂತ್ಯದವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕೇರಳ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಅರಬ್ಬೀ ಸಮುದ್ರದಲ್ಲಿ ಸಮುದ್ರದ ಮೇಲುಬ್ಬರ(ಟ್ರಫ್‌) ಉಂಟಾಗಿದೆ. ಅಲ್ಲದೆ, ಗುಜರಾತ್‌ ಕರಾವಳಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಎರಡೂ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ. +ವಾತಾವರಣದಲ್ಲಿ ಉಂಟಾಗಿರುವ ಈ ರೀತಿಯ ಬದಲಾವಣೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಆದರೆ, ಒಳನಾಡಿನಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ ಎಂದು ತಜ್ಞರು ಹೇಳಿದ್ದಾರೆ. +ಮಲೆನಾಡು ಭಾಗದ ಕೆಲವೆಡೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಜಲಾಶಯದಿಂದ 39 ಸಾವಿರ ಕ್ಯುಸೆಕ್‌್ಸಗೂ ಹೆಚ್ಚು ನೀರನ್ನು ಶರಾವತಿ ನದಿಗೆ ಬಿಡಲಾಗುತ್ತಿದೆ. ಒಳಹರಿವು 22 ಸಾವಿರ ಕ್ಯುಸೆಕ್‌್ಸನಷ್ಟಿದೆ. 151.75 ಟಿಎಂಸಿ ಅಡಿ ಸಾಮರ್ಥ್ಯದ ಲಿಂಗನಮಕ್ಕಿ ಜಲಾಶಯದಲ್ಲಿ ಪ್ರಸ್ತುತ 145.75 ಟಿಎಂಸಿ ನೀರಿದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ. +ಅದೇ ರೀತಿ ಸೂಪ ಜಲಾಶಯವು ಶೇ.89 ರಷ್ಟು ಭರ್ತಿಯಾಗಿದ್ದು, ಕಾಳಿನದಿಗೆ 8 ಸಾವಿರ ಕ್ಯುಸೆಕ್್ಸಗೂ ಹೆಚ್ಚಿನ ನೀರು ಬಿಡಲಾಗುತ್ತಿದೆ. 23 ಸಾವಿರ ಕ್ಯುಸೆಕ್್ಸಗೂ ಹೆಚ್ಚಿನ ಒಳಹರಿವು ಇದೆ. ಜಲಾನಯನ ಭಾಗದಲ್ಲಿ ಮಳೆ ಹೆಚ್ಚಾಗಿರುವುದರಿಂದ ಭರ್ತಿಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. \ No newline at end of file diff --git a/eesanje/url_46_31_8.txt b/eesanje/url_46_31_8.txt new file mode 100644 index 0000000000000000000000000000000000000000..16c42207075ebb0e50cff2aaee4847cb082e950e --- /dev/null +++ b/eesanje/url_46_31_8.txt @@ -0,0 +1,8 @@ +ದರ್ಶನ್‌ಗೆ ಜೈಲಲ್ಲಿ ರಾಜಾತಿಥ್ಯ ನೀಡಲು ಸೂಚಿಸಿದ್ದ ಪ್ರಭಾವಿ ಸಚಿವ ಯಾರು..? + +ಬೆಂಗಳೂರು,ಆ.28-ಪ್ರಭಾವಿ ಸಚಿವರ ಸೂಚನೆ ಮೇರೆಗೆ ನಟ ದರ್ಶನ್ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ರಾಜಾತಿಥ್ಯ ನೀಡಿದ್ದಾರೆಂದು ತಿಳಿದುಬಂದಿದೆ. ಈ ಪ್ರಭಾವಿ ಸಚಿವರು ದರ್ಶನ್ನನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೇ ಮೌಖಿಕವಾಗಿ ತಿಳಿಸಿದ್ದರೆಂದು ಗೊತ್ತಾಗಿದೆ. ಈ ಹಿನ್ನಲೆಯಲ್ಲಿ ದರ್ಶನ್ಗೆ ಹೆಚ್ಚಿನ ಸವಲತ್ತುಗಳನ್ನು ಜೈಲು ಅಧಿಕಾರಿಗಳು ಹಾಗೂ ಸಿಬ್ಬಂದಿ ನೀಡಿರುವುದು ಇದೀಗ ಬಹಿರಂಗಗೊಂಡಿದೆ. +ಜೈಲಿನ ಒಳಗಡೆ ಖೈದಿಗಳಿಗೆ ಹಾಗೂ ವಿಚಾರಣಾಧೀನ ಖೈದಿಗಳಿಗೆ ಯಾವುದೇ ವಸ್ತು ನೀಡಬೇಕಾದರೂ ಜೈಲಿನ ಉನ್ನತ ಅಧಿಕಾರಿಗಳ ಅನುಮತಿ ಬೇಕು. ಚೇರು, ಟಿಪಾಯಿ, ಹಾಸಿಗೆ, ಮಂಚ ಈ ರೀತಿಯ ಯಾವುದೇ ವಸ್ತುಗಳನ್ನು ನೀಡಬೇಕಾದರೂ ಅನುಮತಿ ಅಗತ್ಯ. ವೈದ್ಯರು ಸೂಚಿಸಿದರೆ ಮಾತ್ರ ಅವುಗಳನ್ನು ಕೊಡಬೇಕಾಗುತ್ತದೆ. ಇಲ್ಲದಿದ್ದರೆ ಮಾರ್ಗಸೂಚಿ ಪ್ರಕಾರವೇ ವಿಚಾರಣಾಧೀನ ಕೈದಿಗಳಿಗೆ ಸೌಲಭ್ಯ ಒದಗಿಸಬೇಕು. +ದರ್ಶನ್ಗೆ ರಾಜಾತಿಥ್ಯ ನೀಡಿದ ಫೋಟೋ ವೈರಲ್ಲಾಗುತ್ತಿದ್ದಂತೆ ಈಗಾಗಲೇ ಜೈಲಿನ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ 9 ಮಂದಿಯ ತಲೆದಂಡವೂ ಆಗಿದೆ. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ತನಿಖೆ ನಡೆಸಿ ನಟ ದರ್ಶನ್ನನ್ನು ಬಂಧಿಸಿದ ಸಂದರ್ಭದಲ್ಲೇ ಈ ಪ್ರಭಾವಿ ಸಚಿವರು ಈ ಪ್ರಕರಣದಿಂದ ದರ್ಶನ್ನನ್ನು ಪಾರು ಮಾಡಲು ಇನ್ನಿಲ್ಲದ ಪ್ರಯತ್ನ ಮಾಡಿದ್ದರು. +ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಈ ಸಚಿವರು ಪ್ರಕರಣದಿಂದ ದರ್ಶನ್ ಅವರನ್ನು ಕೈಬಿಡುವಂತೆ ಒತ್ತಡ ಹಾಕಿದ್ದರು. ಕೊನೆಗೆ ಈ ಸಚಿವರು ಮುಖ್ಯಮಂತ್ರಿ ಹಾಗೂ ಗೃಹಸಚಿವರ ಮನೆಗೆ ಹೋಗಿ ಪರಿ ಪರಿಯಾಗಿ ಬೇಡಿಕೊಂಡಿದ್ದರು. ಆದರೆ ಅವರಿಗೆ ಸಿಎಂ ಹಾಗೂ ಗೃಹಸಚಿವರು ಬುದ್ದಿವಾದ ಹೇಳಿ ಕಳುಹಿಸಿದ್ದರು. +ತನ್ನ ಹಠ ಬಿಡದ ಸಚಿವರು ಜೈಲು ಅಧಿಕಾರಿಗಳಿಗೆ ಒತ್ತಡ ಹಾಕಿ ದರ್ಶನ್ಗೆ ರಾಜಾತಿಥ್ಯ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಈ ಪ್ರಕರಣ ಬೆಳಕಿಗೆ ಬಂದ ನಂತರ ಇದೀಗ ಈ ಸಚಿವರು ಪೇಚಿಗೆ ಸಿಲುಕಿದ್ದಾರೆ. \ No newline at end of file diff --git a/eesanje/url_46_31_9.txt b/eesanje/url_46_31_9.txt new file mode 100644 index 0000000000000000000000000000000000000000..a15cbe5ef6b26a8e4ec2bec1129894ac2ef3dc31 --- /dev/null +++ b/eesanje/url_46_31_9.txt @@ -0,0 +1,12 @@ +ಖರ್ಗೆ ಕುಟುಂಬದ ಟ್ರಸ್ಟ್‌ಗೆ ಜಮೀನು ಮಂಜೂರಾಗಿರುವ ಕುರಿತು ತನಿಖೆಗೆ ಸಿದ್ಧ : ಪರಮೇಶ್ವರ್ + +ಬೆಂಗಳೂರು,ಆ.28-ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಟ್ರಸ್ಟಿಯಾಗಿರುವ ಸಂಸ್ಥೆಗೆ ದೇವನಹಳ್ಳಿ ಬಳಿ ಜಮೀನು ಮಂಜೂರು ಮಾಡಿರುವ ಪ್ರಕರಣದಲ್ಲಿ ರಾಜಕೀಯ ಪ್ರಭಾವಗಳಿದ್ದರೆ ಅದನ್ನು ರಾಜ್ಯಪಾಲರು ಪರಿಶೀಲನೆ ನಡೆಸಲಿ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸರ್ಕಾರಗಳಿದ್ದರೂ ಆರೋಪ ಬರುವುದು ಸಹಜ. ಬಿಜೆಪಿ ಸರ್ಕಾರಗಳ ಮೇಲೂ ಆರೋಪ ಬಂದಿವೆ, ಕೇಂದ್ರ ಸರ್ಕಾರದ ವಿರುದ್ಧವೂ ಭ್ರಷ್ಟಾಚಾರದ ಆರೋಪಗಳಿವೆ. ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಕ್ಕೆ ಸೇರಿದ ಟ್ರಸ್ಟ್ನ ಸಂಸ್ಥೆಗೆ ಜಮೀನು ನೀಡಿರುವ ಬಗ್ಗೆ ಚರ್ಚೆಗಳಾಗುತ್ತಿವೆ. +ಆರೋಪಗಳು ನಿರಾಧಾರ ಎಂದು ಹೇಳಿದರು. ಆರೋಪಗಳು ಕೇಳಿಬರುವುದು ಸಾಮಾನ್ಯ. ಅದು ಸುಳ್ಳು ಎಂದು ಸಾಭೀತುಪಡಿಸುವುದು ನಮ ಜವಾಬ್ದಾರಿ.ನಾವು ಅದನ್ನು ಯಶಸ್ವಿಯಾಗಿ ಮಾಡುತ್ತೇವೆ. ರಾಜ್ಯಪಾಲರಿಗೆ ಈ ಕುರಿತು ದೂರು ನೀಡಿರುವುದನ್ನು ಪರಿಶೀಲನೆ ಮಾಡಲಿ, ಪ್ರಭಾವ ಬಳಕೆಯಾಗಿದ್ದರೆ ಅದನ್ನು ತನಿಖೆ ಮಾಡಲು ಯಾರ ಅಭ್ಯಂತರವೂ ಇಲ್ಲ ಎಂದರು. +ಉದ್ಯಮ ಆರಂಭಿಸುತ್ತೇವೆ ಎಂದು ಯಾರೇ ಅರ್ಜಿ ಸಲ್ಲಿಸಿದರೂ ಅವರಿಗೆ ಜಮೀನು ಮಂಜೂರು ಮಾಡುವುದು ಸಾಮಾನ್ಯ ಪ್ರಕ್ರಿಯೆ. ಅದೇ ರೀತಿ ಶ್ರೀ ಸಿದ್ದಾರ್ಥ ಟ್ರಸ್ಟ್ಗೂ ಜಮೀನು ನೀಡಲಾಗಿದೆ. ಅದಕ್ಕೆ ಪ್ರತಿಯಾಗಿ ಮಾರ್ಗಸೂಚಿ ದರವನ್ನು ಪಡೆಯಲಾಗುವುದು ಎಂದು ಹೇಳಿದರು. +ನಾಯಕತ್ವ ಬದಲಾವಣೆ :ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯದ ವಿಚಾರಣೆ ನಾಳೆ ಹೈಕೋರ್ಟ್ನಲ್ಲಿ ನಡೆಯಲಿದ್ದು, ಒಂದು ವೇಳೆ ವ್ಯತಿರಿಕ್ತ ತೀರ್ಪು ಬಂದರೆ ನಾಯಕತ್ವ ಬದಲಾವಣೆಯಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಸದ್ಯಕ್ಕೆ ಆ ರೀತಿಯ ಚರ್ಚೆಗಳಿಲ್ಲ. ಮೊದಲು ನ್ಯಾಯಾಲಯದ ತೀರ್ಪು ಬರಲಿ ಎಂದು ಹೇಳಿದರು. +ಇತ್ತೀಚೆಗೆ ತಾವು ದೆಹಲಿಗೆ ತೆರಳಿದಾಗ ಹೈಕಮಾಂಡ್ ನಾಯಕರು ತಮೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ಗಾಂಧಿ ಕೂಡ ಸಮಾಲೋಚನೆ ನಡೆಸಿದ್ದಾರೆ. ಅವರು ಏನು ಹೇಳಬೇಕೋ, ಅದನ್ನು ಹೇಳಿದ್ದಾರೆ. ಅದನ್ನೆಲ್ಲಾ ಬಹಿರಂಗವಾಗಿ ತಿಳಿಸಲು ಸಾಧ್ಯವಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಈವರೆಗೂ ವಹಿಸಿದ ಎಲ್ಲಾ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಹಾಗೆಂದ ಮಾತ್ರಕ್ಕೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಅಭಪ್ರಾಯ ತಿಳಿಸಲು ಬಯಸುವುದಿಲ್ಲ ಎಂದು ಹೇಳಿದರು. +ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಹಂತಹಂತವಾದ ಹೋರಾಟಗಳನ್ನು ನಡೆಸಲಿದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಇದೇ 31 ರಂದು ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಜೊತೆಯಾಗಿ ರಾಜಭವನ ಚಲೋ ನಡೆಸಲಿದ್ದೇವೆ. ಅನಂತರ ರಾಷ್ಟ್ರಪತಿಯವರನ್ನೂ ಭೇಟಿ ಮಾಡಲಾಗುವುದು ಎಂದು ಹೇಳಿದರು. +ಬಿಜೆಪಿಯವರು ರಾಷ್ಟ್ರಮಟ್ಟದಲ್ಲಿ ಈ ಕುರಿತು ಹೋರಾಟ ರೂಪಿಸಿದರೆ ಕಾಂಗ್ರೆಸ್ ಕೂಡ ಈ ರೀತಿ ಯೋಚಿಸಲಿದೆ. ನಮ ಪಕ್ಷ ಏಕಾಂಗಿಯಾಗಿ ಹೋರಾಟ ನಡೆಸಬೇಕೇ ಅಥವಾ ಇಂಡಿಯಾ ಮೈತ್ರಿಕೂಟದ ಜೊತೆಗೆ ಪ್ರತಿಭಟಿಸಬೇಕೆ ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದರು. +11 ಮಸೂದೆಗಳಿಗೆ ಸಹಮತ ವ್ಯಕ್ತಪಡಿಸದೆ ರಾಜ್ಯಪಾಲರು ವಾಪಸ್ ಕಳುಹಿಸಿರುವುದನ್ನು ಪುನರ್ ಪರಿಶೀಲಿಸಲಾಗುತ್ತದೆ. ಅಗತ್ಯ ಸ್ಪಷ್ಟನೆಗಳನ್ನು ನೀಡಿ ಮತ್ತೊಮೆ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಆಗಲೂ ಒಪ್ಪದೇ ಇದ್ದರೆ ರಾಷ್ಟ್ರಪತಿ ಅಂಗಳಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದರು. +ನಟ ದರ್ಶನ್ ಅವರ ಸ್ಥಳಾಂತರದ ಬಗ್ಗೆ ಜೈಲಿನ ಪ್ರಾಧಿಕಾರದ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾವು ಅದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದ ಪರಮೇಶ್ವರ್, ಜಮೀರ್ ಅಹಮದ್ ಖಾನ್ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದರಿಂದ ಅಲ್ಲಿಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಪ್ರಶ್ನೆ ಎದುರಾಗುತ್ತಿದ್ದಂತೆ ಒಂದು ವಾರದಿಂದಲೂ ಇದೇ ವಿಚಾರವನ್ನು ಚರ್ಚಿಸಲಾಗುತ್ತಿದೆ, ಬೇರೆ ಸುದ್ದಿಗಳಿಲ್ಲವೇ?, ಬೇರೆ ಯಾವುದಾದರೂ ಪ್ರಶ್ನೆಗಳನ್ನು ಕೇಳಿ ಎಂದು ಜಾರಿಕೊಂಡರು. \ No newline at end of file diff --git a/eesanje/url_46_320_1.txt b/eesanje/url_46_320_1.txt new file mode 100644 index 0000000000000000000000000000000000000000..0dfbfb1295a1fb485bb209ee9886c88dd134164c --- /dev/null +++ b/eesanje/url_46_320_1.txt @@ -0,0 +1,7 @@ +ಝೀಕಾ ವೈರಸ್ ಗೈಡ್‍ಲೈನ್ಸ್ ಪಾಲಿಸುವಂತೆ ಆರೋಗ್ಯ ಇಲಾಖೆ ಕರೆ +ಬೆಂಗಳೂರು,ನ.3- ಝೀಕಾ ವೈರಸ್‍ನಿಂದ ಪಾರಾಗಲು ಜನ ಕೆಲ ಗೈಡ್‍ಲೈನ್ಸ್‍ಗಳನ್ನು ಫಾಲೋ ಮಾಡುವಂತೆ ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. ವೈರಸ್ ಬಗ್ಗೆ ಸ್ವಲ್ಪ ಯಾಮಾರಿದರೂ ಪ್ರಾಣಕ್ಕೆ ಸಂಚಕಾರ ಎದುರಾಗುವ ಸಾಧ್ಯತೆ ಇರುವುದರಿಂದ ಜನ ರೋಗ ಲಕ್ಷಣ ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. +ಕಣ್ಣು ಕೆಂಪಾಗುವಿಕೆ, ತಲೆ ನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು ಹಾಗೂ ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸೋಂಕಿನ ಲಕ್ಷಣವಾಗಿದ್ದು, ಇಂತಹ ಲಕ್ಷಣಗಳು ಕಾಣಿಸಿಕೊಂಡವರು ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಲಾಗಿದೆ. +ಝೀಕಾ ವೈರಸ್ ತಡೆಗಟ್ಟಲು ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು ಎಂದು ಸಲಹೆ ನೀಡಲಾಗಿದೆ. +ಮೂವರು ಮುಖ್ಯನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು +ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ. ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ. +ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ಸಂಪರ್ಕ ಮಾಡಲು ಆರೋಗ್ಯ ಇಲಾಖೆ ಮನವಿ ಮಾಡಿಕೊಂಡಿದೆ. \ No newline at end of file diff --git a/eesanje/url_46_320_10.txt b/eesanje/url_46_320_10.txt new file mode 100644 index 0000000000000000000000000000000000000000..b8d7cd49489fa0a9c5a1d06e777877c6c05654bb --- /dev/null +++ b/eesanje/url_46_320_10.txt @@ -0,0 +1,4 @@ +ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ +ಕೊಪ್ಪಳ: ಬಿಜೆಪಿಯವರು ಬರ ಅಧ್ಯಯನ ಮಾಡುತ್ತಿರುವುದು ನಾಟಕ ಕಂಪನಿ, ಅವರು ಮೊದಲು ಕೇಂದ್ರದ ಮೇಲೆ ಒತ್ತಡ ಮಾಡಲಿ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಕೊಪ್ಪಳದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಬಂದಿದೆ. ಬರ ತಂಡ ಬಂದು ಹೋಗಿದೆ. ನಮ್ಮ ರಾಜ್ಯದ ನಾಲ್ಕು ಸಚಿವರು ಇದ್ದಾರೆ. +ಕೇಂದ್ರದಿಂದ ಸಹಕಾರ ನಮಗೆ ಸಿಗುತ್ತಿಲ್ಲ. ಕೇಂದ್ರ ಸರಕಾರದವರು ನಮ್ಮ ಪರ ಇಲ್ಲ. ನಮ್ಮ ಸಿಎಂ ಪತ್ರ ಬರೆದರೂ ಕೇಂದ್ರ ಸರಕಾರ ಸ್ಪಂದಿಸಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಸಿಎಂ ಸೀಟು ಖಾಲಿ ಇಲ್ಲ. ಹೈಕಮಾಂಡ್‌ ಈ ಕುರಿತು ನಿರ್ಧಾರ ಮಾಡಲಿದೆ, ರಮೇಶ್‌ ಜಾರಕಿಹೊಳಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದರು. ಮರಳು ಮಾಫಿಯಾ ತಡೆಯುತ್ತೇನೆ.‌ +192 ಕೋಟಿ ರೂಪಾಯಿ ಕುಡಿವ ನೀರು ಯೋಜನೆಯಲ್ಲಿ ಆಗಿರುವ ವ್ಯವಾಹಾರ ತನಿಖೆ ಮಾಡಿಸಲಾಗಿದೆ ಎಂದರು. ದುಬೈಗೆ ಕಾಂಗ್ರೆಸ್ ಶಾಸಕರು ಹೋಗುತ್ತಿರುವುದು ವೈಯಕ್ತಿಕವಾಗಿ ಹೋಗುತ್ತಿದ್ದಾರೆ. ಅವರನ್ನು ಸರಕಾರದಿಂದ ಕಳುಹಿಸುತ್ತಿಲ್ಲ. ರಾಜ್ಯದ ಕಾಂಗ್ರೆಸ್‌ನಲ್ಲಿ ಅತೃಪ್ತಿ ಇಲ್ಲ. ಅತೃಪ್ತಿ ಎಂಬುವುದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. \ No newline at end of file diff --git a/eesanje/url_46_320_11.txt b/eesanje/url_46_320_11.txt new file mode 100644 index 0000000000000000000000000000000000000000..b986a029952600eebdd38fa9251cb9c99cdc98fa --- /dev/null +++ b/eesanje/url_46_320_11.txt @@ -0,0 +1,9 @@ +“ಪಾಪ ಸಿದ್ದರಾಮಯ್ಯನವರನ್ನು ನೋಡಿದರೆ ಅಯ್ಯೋ ಅನ್ನಿಸುತ್ತಿದೆ” +ಬೆಂಗಳೂರು,ನ.2- ಹಿಂದುಳಿದ ವರ್ಗಗಳ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದು, ಅವರ ವಿರುದ್ದ ಕಾಂಗ್ರೆಸ್ ಗುಂಪುಗಾರಿಕೆ ನೋಡಿದರೆ ಲೋಕಸಭೆಯ ನಂತರ ಅವರ ಕುರ್ಚಿಗೆ ಕಂಟಕವೆಂದು ತೋರುತ್ತಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. +ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಪಾಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವರ ಸರ್ಕಾರದಲ್ಲೇ ನಡೆಯುತ್ತಿರುವ ಷಡ್ಯಂತ್ರವನ್ನು ನೋಡಿದರೆ ನಮಗೆ ಅಯ್ಯೋ ಅನ್ನಿಸುತ್ತಿದೆ. ಸಿದ್ದರಾಮಯ್ಯನವರು ಹಿಂದಿವಾಲಾ ಸುರ್ಜೆವಾಲಾ ಅವರನ್ನು ಸಮಸ್ಯೆ ಬಗೆಹರಿಸಲು ಕರ್ನಾಟಕಕ್ಕೆ ಸ್ವಾಗತಿಸಿರುವುದು ಅವರ ಅಸಹಾಯಕತೆಯನ್ನು ತೋರುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. +ಮೊದಲು ಇದ್ದ ಎರಡು ಗುಂಪುಗಳು ಈಗ 5 ಆಗಿದ್ದು, ಎಲ್ಲಾ ಗುಂಪಿನ ನಾಯಕರು ಬೇರೆ ಬೇರೆ ರಾಜ್ಯಗಳಲ್ಲಿ ರೆಸಾರ್ಟ್ ಬುಕ್ ಮಾಡಿ ಕಾಯುತ್ತಿರುವಂತೆ ಇದೆ ಎಂದು ಟೀಕಿಸಿದ್ದಾರೆ. ರಾಜ್ಯದ ಜನರಿಗೆ ಇವರ ಅಗ್ರಿಮೆಂಟ್ ಎಷ್ಟು ವರ್ಷಕ್ಕೆ ಎಂದು ಕಾಂಗ್ರೆಸ್ ಪಕ್ಷ ಹಾಗು ಸಿದ್ದರಾಮಯ್ಯನವರು ಸ್ಪಷ್ಟಪಡಿಸಲಿ, ಒಂದು ವರ್ಷವೋ, ಎರಡೋ ! ನಂತರ ಯಾರು? ಈ ಮಂತ್ರಿ ಮಂಡಲ ಒಂದು ವರ್ಷಕ್ಕೋ , ಎರಡೋ ಅಥವಾ ಮೂರೋ! ಈ ಸರ್ಕಾರ ಒಂದು ವರ್ಷಕ್ಕೋ , ಎರಡೂ ಅಥವಾ ಮೂರೋ ಎಂದು ಕುಹುಕವಾಡಿದ್ದಾರೆ. +ಮಸೂದೆಗೆ ಅಂಗೀಕಾರ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ದೂರು +ಕಾಂಗ್ರೆಸ್ ಕಚೇರಿಯಲ್ಲಿ 3 ಗಂಟೆ ನಡೆದ ರಾಜಿಸಂಧಾನ ವಿಫಲವಾಗಿರುವುದರ ಹಿಂದೆ ಯಾರು ಕೊಟ್ಟಿರುವ ಉಡುಗೊರೆಗಳು ಕಾರಣ ಎಂದು ಕಾಂಗ್ರೆಸ್ ಕಚೇರಿಯ ಗೋಡೆಗಳೂ ಕೂಗುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. +ಚುನಾವಣೆಯ ಸಂಧರ್ಭದಲ್ಲಿ ಪಿಎಸ್‍ಐ ಸ್ಕ್ಯಾಮ್ ಬಗ್ಗೆ ಬಾಯಿ ಬಡಿದುಕೊಂಡಿದ್ದ ಕಾಂಗ್ರೆಸ್ ನಾಯಕರು, ಈಗ ಅವರ ತನಿಖೆ ಎಲ್ಲಿಗೆ ಬಂದಿದೆ ಎಂದು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರು ಬೇಷರತ್ ಕ್ಷಮೆಯಾಚಿಸಬೇಕು. ಎಷ್ಟು ಜನರನ್ನು ಬಂಧಿಸಲಾಗಿದೆ? ಇವರ ತನಿಖೆಯಿಂದ ಯಾರ ಹೆಸರು ಈ ಹಗರಣದಲ್ಲಿ ಬೆಳಕಿಗೆ ಬಂದಿದೆ? ಇವೆಲ್ಲವನ್ನೂ ಬಹಿರಂಗಪಡಿಸಲಿ. ದಿನಕ್ಕೊಂದು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ನಾಯಕರು ಈಗ ಎಲ್ಲಿ ತಪ್ಪಿಸಿಕೊಂಡು ತಿರುಗಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. +ಮತ್ತೊಂದು ಟ್ವೀಟ್‍ನಲ್ಲಿ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ರಾಜ್ಯದ 200ಕ್ಕೂ ಅಧಿಕ ತಾಲ್ಲೂಕುಗಳು ಬರದ ಬೇಗೆಯಲ್ಲಿ ನಲುಗುತ್ತಿದೆ, ಬರ ಪರಿಹಾರ ಕೊಡಿ ಅಂದರೆ ಸರಕಾರದಲ್ಲಿ ಹಣ ಇಲ್ಲ. ರಾಜ್ಯ ವಿದ್ಯುಚ್ಛಕ್ತಿ ಕೊರತೆಯಿಂದ ನರಳುತ್ತಿದೆ , ವಿದ್ಯುತ್ ಕೊಂಡುಕೊಳ್ಳಲು ಸರಕಾರದಲ್ಲಿ ಹಣ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ. +ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರೆಸಿ ಎಂದರೆ, ಅಭಿವೃದ್ಧಿ ಕಾಮಗಾರಿಗೆ ಸರಕಾರದಲ್ಲಿ ಹಣ ಇಲ್ಲ. ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಹಾಲು ಮೊಟ್ಟೆ ಕಡಿತ, ಯಾಕೆಂದರೆ ಮೊಟ್ಟೆ ನೀಡಲು ಸರಕಾರದಲ್ಲಿ ಹಣವಿಲ್ಲ ಎಂದು ಕಿಡಿಕಾರಿದ್ದಾರೆ. ಹೇಳುವುದಕ್ಕೆ ಸಮಾಜವಾದಿ, ಆದರೆ ಸ್ವ – ಮಜಾವಾದಿ !! ಎಂದು ಲೇವಡಿ ಮಾಡಿದ್ದಾರೆ. \ No newline at end of file diff --git a/eesanje/url_46_320_12.txt b/eesanje/url_46_320_12.txt new file mode 100644 index 0000000000000000000000000000000000000000..c8f6eed8d12e966624b860c0034428320c4a136f --- /dev/null +++ b/eesanje/url_46_320_12.txt @@ -0,0 +1,9 @@ +ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ : ಬಿಎಸ್‌ವೈ +ಬೆಂಗಳೂರು,ನ.2- ಎಐಸಿಸಿ ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗೆ ಎಂಬುದು ಇಡೀ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಮೇಲೆ ಅನಗತ್ಯವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇವರ ಆಂತರಿಕ ಕಚ್ಚಾಟದಿಂದಾಗಿ ಅಭಿವೃದ್ದಿ ಕಾಮಗಾರಿಗಳು ನಿಂತುಹೋಗಿವೆ ಎಂದು ಆರೋಪಿಸಿದರು. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸುರ್ಜೆವಾಲ ಮತ್ತು ಕೆ.ಸಿ.ವೇಣುಗೋಪಾಲ್ ಕರ್ನಾಟಕಕ್ಕೆ ಏಕಾಏಕಿ ಬಂದಿದ್ದು ಏಕೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಚಿವರು ಮತ್ತು ಶಾಸಕರು ನಾಯಿನರಿಗಳ ತರ ಕಿತ್ತಾಡಿಕೊಳುತ್ತಿದ್ದಾರೆ. ಉಸ್ತುವಾರಿಗಳು ರಾಜ್ಯಕ್ಕೆ ಬರುವುದು ವಸೂಲಿಗೆ ಎಂಬುದು ಬಾಯ್ಬಿಟ್ಟು ಹೇಳಬೇಕೆ ಎಂದು ಪ್ರಶ್ನೆ ಮಾಡಿದರು. +ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದು ಆರು ತಿಂಗಳಾಗಿದೆ. ಆದರೆ ಸರ್ಕಾರ ಮಾತ್ರ ಗಾಳಿಯಿಲ್ಲದೇ ಮುಂದೆ ಹೋಗುತ್ತಿಲ್ಲ. ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಚಿತ್ರ ಪರಿಸ್ಥಿತಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು. ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತವಾಗಿವೆ. +ವಿದ್ಯುತ್ ದರದಲ್ಲಿ ಭಾರಿ ಹೆಚ್ಚಳ ಮಾಡಿದ್ದಾರೆ. ಬರ ಪೀಡಿತ ಪ್ರದೇಶಕ್ಕೆ ಸಿಎಂ ಸೇರಿ ಒಬ್ಬ ಮಂತ್ರಿ ಕೂಡ ಹೋಗಿಲ್ಲ. ಸರ್ಕಾರ ಯಾವ ರೀತಿ ದಿವಾಳಿ ಯಾಗಿದೆ ಎಂದರೆ ಶಾಸಕರ ಅನುದಾನ 2 ಕೋಟಿ ಬದಲು 50 ಲಕ್ಷ ಮಾತ್ರ ಬಿಡುಗಡೆ ಮಾಡಿದ್ದಾರೆ. ಅನುದಾನವನ್ನು ಸಹ ಸರಿಯಾಗಿ ಬಿಡುಗಡೆ ಮಾಡಿಲ್ಲ ಎಂದು ದೂರಿದರು. +ತಾಂಡಾ, ಬೋವಿ, ಅಂಬೇಡ್ಕರ್ ನಿಗಮಗಳಿಗೆ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ. ರೈತ ಬರಗಾಲದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಪಂಪ್‍ಸೆಟ್‍ಗೆ ಉಚಿತ ವಿದ್ಯುತ್ ನೀಡಲಾಗುತಿತ್ತು. ಮುಂದೆ ವಿದ್ಯುತ್ ಶುಲ್ಕ ರೈತನೇ ಭರಿಸುವ ಕೆಲಸ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯನವರು ಅನಗತ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವ ಚಾಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇರಬಹುದು. ಕೇಂದ್ರ ಸರ್ಕಾರ ಅಭಿವೃದ್ಧಿಗೆ ಸಾಕಷ್ಟು ಹಣ ಬಿಡುಗಡೆ ಮಾಡಿದೆ ಎಂದು ಸಮರ್ಥಿಸಿಕೊಂಡರು. +ಎನ್‍ಡಿಆರ್‍ಎಫ್‍ನಿಂದ 12,784 ಕೋಟಿ, ಎಸ್‍ಡಿಆರ್‍ಎಫ್‍ನಿಂದಲೂ ಹಣ ಬಿಡುಗಡೆಯಾಗಿದೆ. 5.23 ಲಕ್ಷ ಕೋಟಿ ಕೇಂದ್ರದ ಯೋಜನೆ ಹೊರತುಪಡಿಸಿ ಕೊಟ್ಟಿದ್ದಾರೆ. 37 ಲಕ್ಷ ಕೋಟಿ ರಸ್ತೆ ಕಾಮಗಾರಿಗೆ ನೀಡಲಾಗಿದೆ. ಹೆದ್ದಾರಿ ಕಾಮಗಾರಿಗೆ 47,200 ಕೋಟಿ, ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಜೊತೆಗೆ ಚೆನೈ-ಬೆಂಗಳೂರು ಎಕ್ಸ್ಪ್ರೆಸ್ ವೇ ನಿರ್ಮಾಣವಾಗುತ್ತಿದೆ ಎಂದರು. +ಕಿಸಾನ್ ಯೋಜನೆಗೆ ನಮ್ಮ ಸರ್ಕಾರ 4 ಸಾವಿರ ಕೊಡುತ್ತಿತ್ತು. ಈಗ ಸಿದ್ದರಾಮಯ್ಯನವರು ಅದನ್ನೂ ನಿಲ್ಲಿಸಿದ್ದಾರೆ. ಭದ್ರಾ ಯೋಜನೆಗೆ ನೀಡಲಾಗಿದೆ. ರಾಜ್ಯದ ರೈಲು ಯೋಜನೆಗೆ 800 ಕೋಟಿ ನೀಡಿದರೆ ಈಗ 3,700 ಕೋಟಿ ಕೊಡಲಾಗುತ್ತಿದೆ. ಬೆಂಗಳೂರು ಉಪರೈಲು ಯೋಜನೆಗೆ 400 ಕೋಟಿ ನೀಡಲಾಗಿದೆ. ಬೆಂಗಳೂರು ಮೆಟ್ರೋ ರೈಲು ಎರಡು, ಮೂರನೇ ಯೋಜನೆಗೆ ಹಣ ಬಿಡುಗಡೆ ಮಾಡಿದೆ. ಮೋದಿ ಅವರು ರಾಜಕೀಯ ಮಾಡದೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. +ನಾವು ಆರು ತಿಂಗಳು ಅವಕಾಶ ನೀಡಿದೆವು. ಆದರೆ ಆರು ತಿಂಗಳಲ್ಲಿ ಯಾವುದೇ ಸುಧಾರಣೆ ಆಗಲಿಲ್ಲ. ಹಾಗಾಗಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗಲಿದೆ. ಹೊಸ ಪಂಪ್‍ಸೆಟ್‍ಗೆ ರೈತ ಎರಡು ಲಕ್ಷ ಕೊಡಬೇಕಿದೆ ಎಂದು ಎಚ್ಚರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ರಘು, ಎಸ್.ಆರ್.ವಿಶ್ವನಾಥ್, ವಿಧಾನಪರಿಷತ್ ಸದಸ್ಯ ರವಿಕುಮಾರ್, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಮಾಜಿ ಸಚಿವ ಗೋವಿಂದ ಕಾರಜೋಳ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_320_2.txt b/eesanje/url_46_320_2.txt new file mode 100644 index 0000000000000000000000000000000000000000..7d97fdcd8dc8a1d6d07aa8eb728d3c994a51c0cf --- /dev/null +++ b/eesanje/url_46_320_2.txt @@ -0,0 +1,10 @@ +ಕಾಂತರಾಜು ವರದಿ ತಿರಸ್ಕಾರಕ್ಕೆ ಒತ್ತಾಯ +ಬೆಂಗಳೂರು, ನ.3- ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ ಅನುಷ್ಠಾನಗೊಳಿಸಬಾರದು. ಒಂದು ವೇಳೆ ಸಮೀಕ್ಷೆಯ ಅಗತ್ಯವಿದ್ದರೆ ಮತ್ತೊಮ್ಮೆ ವೈಜ್ಞಾನಿಕ ಸಮೀಕ್ಷೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವನ್ನು ಒಕ್ಕಲಿಗರ ಸಮುದಾಯ ಮಾಡಿದೆ. +ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಚಿಂತನ-ಮಂಥನ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಸುದೀರ್ಘ ಚರ್ಚೆ ನಡೆಸಿ ಕಾಂತರಾಜು ವರದಿಯನ್ನು ತಿರಸ್ಕರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ತೀರ್ಮಾನಿಸಲಾಗಿದೆ.ವರದಿಯೂ ಅವೈಜ್ಞಾನಿಕವಾಗಿದ್ದು, ದೋಷ ಪೂರಿತವಾಗಿದೆ. ವರದಿ ಅನುಷ್ಠಾನವಾದರೆ ಕೇವಲ ಒಕ್ಕಲಿಗ ಸಮುದಾಯ ಅಷ್ಟೇ ಅಲ್ಲ, ಇತರೆ ಸಮುದಾಯಗಳಿಗೂ ತೊಂದರೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. +ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಸಟಿಕಪುರಿ ಮಹಾಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಚಿಂತನ-ಮಂಥನ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. +ಅಲ್ಲದೆ, ಮೀಸಲಾತಿಯಿಂದ ಸಮುದಾಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಘ- ಸಂಸ್ಥೆಗಳ ಜತೆಗೂಡಿ ಪಕ್ಷಾತೀತವಾಗಿ ಒಟ್ಟಾಗಿ ಒಕ್ಕಲಿಗ ಸಮುದಾಯದ ಹಿತರಕ್ಷಣೆಗೆ ಶ್ರಮಿಸಲು ನಿರ್ಧರಿಸಲಾಗಿದೆ. +ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಚುಂಬಿಸಿ ಪರಾರಿಯಾದ ಕಿಡಿಗೇಡಿಗಳು +ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ನಿರ್ಮಲಾನಂಥನಾಥ ಸ್ವಾಮೀಜಿ ಅವರು ಕಾಂತರಾಜು ಅಧ್ಯಕ್ಷರಾಗಿದ್ದ ಅವಯಲ್ಲಿ ತಯಾರಿಸಿದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿಯೂ ದೋಷಪೂರಿತವಾಗಿದೆ. ಈ ವರದಿಯನ್ನು ಸರ್ಕಾರ ಸ್ವೀಕರಿಸಬಾರದು, ಸ್ವೀಕರಿಸಿದರೂ ಅನುಷ್ಠಾನಗೊಳಿಸಬಾರದು. 8 ವರ್ಷಗಳ ಹಿಂದೆ ತಯಾರಿಸಿದ ವರದಿ ಅವೈಜ್ಞಾನಿಕವಾಗಿದೆ. ಒಂದು ವೇಳೆ ವರದಿ ಅನುಷ್ಠಾನಗೊಳಿಸಬೇಕೆಂದಾದರೆ, ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವರದಿ ಪಡೆಯಲಿ. ಅಲ್ಲದೆ, ಮೀಸಲಾತಿ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನಿಲುವು ತಳೆಯಬೇಕು. ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸೌಜನ್ಯವಾಗಿ ಮನವಿ ಮಾಡಲು ತೀರ್ಮಾನಿಸಲಾಗಿದೆ ಎಂದರು. +ಶ್ರೀ ನಂಜಾವಧೂತ ಸ್ವಾಮೀಜಿ ಅವರು ಮಾತನಾಡಿ, ಕಾಂತರಾಜು ವರದಿ ಅವೈಜ್ಞಾನಿಕವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಒಪ್ಪಬಾರದು. ಒಕ್ಕಲಿಗ ಸಮುದಾಯಕ್ಕಿರುವ ಮೀಸಲಾತಿ ಪ್ರಮಾಣವನ್ನು ಶೇ.4ರಿಂದ ಶೇ.16ಕ್ಕೆ ಹೆಚ್ಚಿಸಬೇಕು. ಹಿಂದಿನ ಸರ್ಕಾರದ ಅವಯಲ್ಲಿ ಪರಿಷ್ಕರಿಸಲಾಗಿದ್ದ ಮೀಸಲಾತಿ ವಿಚಾರದಲ್ಲಿ ಸ್ಪಷ್ಟ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡು ನಮ್ಮ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಹೇಳಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಮಾಜಿ ಸಚಿವರಾದ ಎಂ.ಕೃಷ್ಣಪ್ಪ, ಎಸ್.ಟಿ.ಸೋಮಶೇಖರ್, ಆರಗಜ್ಞಾನೇಂದ್ರ, ಶಾಸಕರಾದ ರವಿಕುಮಾರ( ಗಣಿಗ), ಶರತ್ ಬಚ್ಚೇಗೌಡ, ಡಾ.ರಂಗನಾಥ, ಡಾ.ಮಂತರ್ ಗೌಡ, ಹೆಚ್.ಟಿ.ಮಂಜು, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಅ.ದೇವೇಗೌಡ, ದಿನೇಶ್ ಗೂಳಿಗೌಡ, ವೈ.ಎ.ನಾರಾಯಣಸ್ವಾಮಿ, ಕೆ.ಗೋವಿಂದರಾಜು, +ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡರು, ಉಪಾಧ್ಯಕ್ಷರಾದ ಸಿ.ದೇವರಾಜು, ಎಲ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ಜಯಮುತ್ತು, ಸಹಾಯಕ ಕಾರ್ಯದರ್ಶಿ ವೆಂಕಟರಾಮೇಗೌಡರು, ಖಜಾಂಚಿ ಸಿ.ಎಂ.ಮಾರೇಗೌಡರು ಸೇರಿದಂತೆ ಸಂಘದ ನಿರ್ದೇಶಕರು, ಗಣ್ಯರು ಚಿಂತನ-ಮಂಥನ ಸಭೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_320_3.txt b/eesanje/url_46_320_3.txt new file mode 100644 index 0000000000000000000000000000000000000000..318e9d3ca6555464d6ec3e327e7fbc52413f7281 --- /dev/null +++ b/eesanje/url_46_320_3.txt @@ -0,0 +1,17 @@ +ಶಾಸಕರಿಗೆ 50 ಕೋಟಿ ಆಫರ್ : ಸಿಒಡಿ ಆಂತರಿಕ ವಿಚಾರಣೆ +ಮೈಸೂರು, ನ.2- ಕಾಂಗ್ರೆಸ್‍ನ ನಾಲ್ವರು ಶಾಸಕರಿಗೆ ತಲಾ ಐವತ್ತು ಕೋಟಿ ಆಮಿಷವೊಡ್ಡಿ, ಸರ್ಕಾರವನ್ನು ಪತನಗೊಳಿಸಲು ನಡೆಸಿದ ಆಪರೇಷನ್ ಕಮಲ ಪ್ರಯತ್ನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದು. ಸಿಒಡಿಯಿಂದ ಆಂತರಿಕ ವಿಚಾರಣೆಯಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್‍ನ 11ಶಾಸಕರನ್ನು ಸಂಪರ್ಕಿಸುವ ಯತ್ನ ನಡೆಸಿದ್ದಾರೆ. ಆ ಪಟ್ಟಿಸಿಒಡಿ ಕೈನಲ್ಲಿದೆ. ಅದರಲ್ಲಿ ನಾಲ್ವರನ್ನು ಬಿಜೆಪಿಯವರು ಭೇಟಿ ಮಾಡಿ ಮಾತುಕತೆ ನಡೆಸಿರುವ ಮಾಹಿತಿಯನ್ನು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಬಹಿರಂಗ ಪಡಿಸಿದ್ದಾರೆ. ಆ ಕುರಿತು ಮುಖ್ಯಮಂತ್ರಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು. +ಬಿಜೆಪಿಯವರು ಏನೇ ಪ್ರಯತ್ನ ಮಾಡಿದರು ಐದು ವರ್ಷ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ. ಕಳೆದ ಒಂಬತ್ತುವರೆ ವರ್ಷದಲ್ಲಿ 10 ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರಗಳನ್ನು ಬೀಳಿಸಿದೆ. ರಾಜ್ಯದಲ್ಲೂ ಆ ಪ್ರಯತ್ನಗಳು ನಡೆದಿವೆ. ಶಾಸಕರ ಪಕ್ಷಾಂತರದ ಆಪರೇಷನ್ ಫಲಿತಾಂಶದ ಬಗ್ಗೆ 10 ದಿನ ಕಾದು ನೋಡಿ. ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಗೋತ್ತಾಗಲಿದೆ. ನಾವಂತೂ ಬೇರೆ ಪಕ್ಷಗಳ ಶಾಸಕರನ್ನು ಸೆಳೆಯುವುದಿಲ್ಲ. ಅಲ್ಲಿನ ಪರಿಸ್ಥಿತಿಯಿಂದ ಅಸಮಾಧಾನಗೊಂಡು ಬರುವವರ ಸಂಖ್ಯೆ ಹೆಚ್ಚಿದೆ ಎಂದರು. +ಬಿಜೆಪಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿ ಪ್ರಾಮುಖ್ಯತೆ ಕಳೆದುಕೊಂಡು ಜೋಕರ್ ಆಗಿದ್ದಾರೆ. ಆಪರೇಷನ್ ಕಮಲದ ನೇತೃತ್ವ ವಹಿಸಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬೀಳಿಸಿದ ಅವರನ್ನೇ ಬಿಜೆಪಿಯವರು ಒಂದು ವರ್ಷದಲ್ಲಿ ಸಂಪುಟದಿಂದ ಕಿತ್ತು ಹಾಕಿದರು. ಅದು ಯಾವ ಕಾರಣಕ್ಕೆ ಎಂದು ರಮೇಶ್ ಜಾರಕಿಹೊಳಿಯವರು ಹೇಳಬೇಕು. ಇಂತಹ ನಗೆಪಾಟಿಲಿಗೀಡಾಗುವ ವ್ಯಕ್ತಿಗಳಿಗೆ ನಮ್ಮ ನಾಯಕರು ಪ್ರತಿಕ್ರಿಯಿಸಬಾರದು ಎಂದ ಅವರು, ಮಾಜಿ ಸಚಿವ ಹೆಚ್.ವಿಶ್ವನಾಥ್ ಬಾಂಬೆ ಡೇ ಪುಸ್ತಕ ಬರೆಯುತ್ತಿದ್ದು, ಅದರಲ್ಲಿ ಯಾರು ಕೈನಲ್ಲಿ ಬೀರ್ ಬಾಟಲ್ ಹಿಡಿದುಕೊಂಡಿದ್ದರು. ಏನೇನು ಮಾಡುತ್ತಿದ್ದರು ಎಂದು ಪುಸ್ತಕದಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದರು. +ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ +ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ನಾಲ್ಕುವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ಆದಾಯ ರವಾನೆಯಾಗುತ್ತಿದೆ. ಅಲ್ಲಿಂದ ವಾಪಾಸ್ ಬರುತ್ತಿರುವುದು 50 ಸಾವಿರ ಕೋಟಿ ರೂಪಾಯಿ ಮಾತ್ರ. ನೀತಿ ಆಯೋಗದ ನಿಯಮದ ಪ್ರಕಾರ ರಾಜ್ಯಗಳಿಗೆ ಶೇ. 42ರಷ್ಟು ತೆರಿಗೆ ಪಾಲು ನೀಡಬೇಕು. ಬಿಜೆಪಿಯವರ ಮೆಹರರ್ಬಾನಿ ಬೇಕಿಲ್ಲ. ನಮ್ಮ ಪಾಲು ನಮಗೆ ಕೊಡಿ ಎಂದು ಆಗ್ರಹಿಸಿದರು.ಸಂಸದ ಪ್ರತಾಪ್ ಸಿಂಹ್ ಮಹಿಷ ದಸರಾ ಹೆಸರಿನಲ್ಲಿ 15ದಿನ ಗಲಾಟೆ ಮಾಡಿದರು. +ಬಸ್ ನಿಲ್ದಾಣದ ಮೇಲೆ ಗುಂಬಸ್ ನಿರ್ಮಾಣವಾಗಿದೆ ಎಂದು ಒಂದು ತಿಂಗಳು ಗಲಾಟೆ ನಡೆಸಿದರು. ಹಿಜಾಬ್, ಹಲಾಲ್ ಎಂಬ ಕಿಡಿ ಹೊತ್ತಿಸುವ ಗಲಾಟೆಗಳನ್ನಷ್ಟೆ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಏನು ಚರ್ಚೆ ಮಾಡಿದ್ದಾರೆ ತೋರಿಸಲಿ. ಅವರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹುಣಸೂರು, ಚಾಮುಂಡೇಶ್ವರಿ ಸೇರಿ ಹಲವು ಕ್ಷೇತ್ರಗಲ್ಲಿ ಬರ ಇದೆ. ಇದಕ್ಕೆ ಸ್ಪಂದಿಸಲು ಪ್ರತಾಪ್ ಸಿಂಹರ ಪ್ರಯತ್ನವೇನು. ಕನಿಷ್ಠ ಕೇಂದ್ರ ಸರ್ಕಾರಕ್ಕೆ ಒಂದು ಪತ್ರವನ್ನಾದರೂ ಬರೆದಿದ್ದಾರೆಯೇ ಎಂದು ಪ್ರಶ್ನಿಸಿದರು. ನಾವು ಅವರ ಕಚೇರಿಗೆ ಹೋಗಿ ಕೇಂದ್ರಕ್ಕೆ ಪತ್ರ ಬರೆಸಲು ಯತ್ನಿಸುತ್ತೇವೆ ಎಂದು ಹೇಳಿದರು. +ಬಿಜೆಪಿಯಲ್ಲಿ ಈವರೆಗೂ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆಯಾಗಿಲ್ಲ. ಕೆಲವು ದಿನ ಅಶ್ವಥ್‍ನಾರಾಯಣ, ಅಶೋಕ್, ಶೋಭಾ ಕರಂದ್ಲಾಜೆ ಹೆಸರುಗಳು ಕೇಳಿ ಬಂದವು. ಬಸವನಗೌಡ ಯತ್ನಾಳ್ ತಲೆಯ ಮೇಲೆ ಏನೇನನ್ನೋ ಸುರಿದುಕೊಂಡರೂ ಪ್ರಯೋಜನವಾಗಲಿಲ್ಲ. ರಾಷ್ಟ್ರೀಯ ಪಕ್ಷ ಎನ್ನುತ್ತಾರೆ. ಈವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಿಲ್ಲ. ಈ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆಯೇ ಹೊರತು, ಬಿಜೆಪಿಯವರು ಏಕೆ ಮೌನವಾಗಿದ್ದಾರೆ ಎಂದು ಪಶ್ನಿಸಿದರು. +ಏರ್ಖಾಂಡ್‍ನಲ್ಲಿ ನಾಲ್ಕು ವರ್ಷ ವಿರೋಧ ಪಕ್ಷದ ನಾಯಕನ್ನೇ ನೇಮಕ ಮಾಡಿರಲಿಲ್ಲ. ರಾಜ್ಯದಲ್ಲೂ ಅಂತಹ ನಿರ್ಲಕ್ಷ್ಯವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆಯೇ. ರಾಜ್ಯದಲ್ಲಿ ಈಗಾಗಲೇ ಯಡಿಯೂರಪ್ಪ ಹಾಗೂ ಈಶ್ವರಪ್ಪ ಕತೆ ಮುಗಿಸಿದ್ದಾರೆ. ರಾಜ್ಯ ನಾಯಕತ್ವವನ್ನು ಸಂಪೂರ್ಣ ಮೂಲೆ ಗುಂಪು ಮಾಡಲಾಗಿದೆ ಎಂದು ಹೇಳಿದರು. +ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿ ವಿದ್ಯುತ್ ಖರೀದಿಯಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ಖರೀದಿಸುತ್ತಿರುವುದು ಕೇಂದ್ರ ಗ್ರೀಡ್‍ನಿಂದ ಕೇಂದ್ರ ಸಚಿವರು ಕಮಿಷನ್ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು. +ರಾಜ್ಯದಲ್ಲಿ 28,471 ಮೇಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿದ್ದರೂ, ಹಾಲಿ ಉತ್ಪಾದನೆಯಾಗುತ್ತಿರುವುದು 15 ಸಾವಿರ ಮಾತ್ರ. ಮಳೆ ಕೊರತೆಯಿಂದ ಜಲ ವಿದ್ಯುತ್ ಇಲ್ಲ. ಉಷ್ಣವಿದ್ಯುತ್ ಉತ್ಪಾದನೆಯಲ್ಲೂ ಹಿನ್ನೆಡೆಯಾಗಿದೆ. ಕೇಂದ್ರ ಸರ್ಕಾರ 4415 ಮೇಗಾವ್ಯಾಟ್ ಬದಲು, ಒಂದು ಸಾವಿರ ಮೇಗಾವ್ಯಾಟ್ ಮಾತ್ರ ಪೂರೈಸುತ್ತಿದೆ. ಇನ್ನೂ 3400 ಮೇಗಾವ್ಯಾಟ್ ಬರುತ್ತಿಲ್ಲ. ರಾಜ್ಯಕ್ಕೆ ಪ್ರತಿದಿನ 18 ಸಾವಿರ ಮೇಗಾವ್ಯಾಟ್ ಬೇಡಿಕೆ ಇದೆ. ಕೊರತೆ ಇರುವ ಮೂರು ಸಾವಿರ ಮೇಗಾವ್ಯಾಟ್ ನಿರ್ವಹಣೆ ಮಾಡುತ್ತಿದ್ದೇವೆ. +ಕೇಂದ್ರ ಗ್ರೀಡ್‍ನಿಂದ ಒಂದು ಸಾವಿರ ಮೇಗಾವ್ಯಾಟ್ ಖರೀದಿಸುತ್ತಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಮತ್ತು ಅಲ್ಲಿನ ಸಚಿವರು ಕಮಿಷನ್ ಕೊಡುತ್ತಾರೆಯೇ, ವಿರೋಧ ಪಕ್ಷಗಳು ಮಾತನಾಡುವಾಗ ಸಾಮಾನ್ಯ ಜ್ಞಾನ ಬೇಡವೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಖಾಸಗಿಯಿಂದ ವಿದ್ಯುತ್ ಖರೀದಿ ಮಾಡುತ್ತಿಲ್ಲ. ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು. +ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಉತ್ಪಾದನೆ-ಪೂರೈಕೆ ನಡುವೆ ಐದು ಸಾವಿರ ಮೇಗಾವ್ಯಾಟ್ ವ್ಯತ್ಯಾಸವಿದೆ. ರಾಜ್ಯ ಸರ್ಕಾರ ಉಚಿತವಾಗಿ ವಿದ್ಯುತ್ ನೀಡುತ್ತಿರುವುದರಿಂದ ಬಹಳಷ್ಟು ಮಂದಿ ಹೆಚ್ಚು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು. +ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್ +ಕೇಂದ್ರ ಸರ್ಕಾರದ ಅಕಾರಿಗಳು ಅಧ್ಯಕ್ಷತೆಯಲ್ಲಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ನಿರ್ವವಣಾ ಪ್ರಾಕಾರಗಳು ತಮಿಳುನಾಡು ಸರ್ಕಾರ ನೀಡುವ ಮನವಿ ಆಧರಿಸಿ ಪದೇ ಪದೇ ನೀರು ಬಿಡುವಂತೆ ಆದೇಶಿಸುತ್ತಿದೆ. ರಾಜ್ಯದಲ್ಲಿರುವ ನೀರಿನ ಕೊರತೆಯನ್ನು ಅಧ್ಯಯನ ನಡೆಸಲು ತಜ್ಞರ ತಂಡ ಕಳುಹಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದರು. ಕೇಂದ್ರ ಜಲಶಕ್ತಿ ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಇದರ ಹಿಂದೆ ರಾಜ್ಯದಲ್ಲಿ ಗಲಾಟೆಯಾಗಲಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿ ಎಂಬ ದುರುದ್ದೇಶ ಇದೆ ಎಂದರು. +ತಮಿಳುನಾಡಿನಲ್ಲಿ ಅಕಾರದಲ್ಲಿರುವ ಡಿಎಂಕೆ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿ ಎಂದು ಬಿಜೆಪಿಯವರು ಬಾಲಿಶವಾಗಿ ಹೇಳುತ್ತಿದ್ದಾರೆ. ಏನು ಚರ್ಚೆ ಮಾಡಬೇಕು, ನೀವು ನೀರು ಕೇಳಬೇಕು ಎಂದು ಡಿಎಂಕೆಯನ್ನು ಮನವೋಲಿಸಬೇಕೆ. 120 ವರ್ಷಗಳ ಸಮಸ್ಯೆ ಈ ರೀತಿ ಮನವೋಲಿಕೆಯಿಂದ ಬಗೆಹರಿಯುತ್ತದೆಯೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_320_4.txt b/eesanje/url_46_320_4.txt new file mode 100644 index 0000000000000000000000000000000000000000..7da221afe29d574eb7743b0c4898945fa04aa70b --- /dev/null +++ b/eesanje/url_46_320_4.txt @@ -0,0 +1,10 @@ +ನಾವು 5 ವರ್ಷ ಆಡಳಿತ ನಡೆಸುತ್ತೇವೆ : ಸಿದ್ದರಾಮಯ್ಯ +ಕೊಪ್ಪಳ, ನ.2- ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದೆ, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ. +ಕೊಪ್ಪಳದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು. +ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು. +ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ +ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು. +ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು. +ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು. +ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು. +ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು. \ No newline at end of file diff --git a/eesanje/url_46_320_5.txt b/eesanje/url_46_320_5.txt new file mode 100644 index 0000000000000000000000000000000000000000..609f2afe4f8524eb660981dd72d60391bffd463c --- /dev/null +++ b/eesanje/url_46_320_5.txt @@ -0,0 +1,7 @@ +ಶನಿವಾರ ದುಬೈನಿಂದ ಎಚ್‍ಡಿಕೆ ವಾಪಸ್ +ಬೆಂಗಳೂರು,ನ.2- ಕಳೆದ ಐದಾರು ದಿನಗಳಿಂದ ದುಬೈ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನ.4 ರಂದು ನಗರಕ್ಕೆ ವಾಪಸ್ಸಾಗಲಿದ್ದಾರೆ. +ಯುಎಇ ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಅವರು ದುಬೈ ಪ್ರವಾಸ ಕೈಗೊಂಡಿದ್ದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್ ಮೊದಲಾದವರು ಸಹ ದುಬೈನಲ್ಲಿ ನಡೆದ ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು. +ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್ +ದುಬೈನಲ್ಲಿರುವ ಕನ್ನಡಿಗರೊಂದಿಗೆ ಕುಮಾರಸ್ವಾಮಿ ನಿನ್ನೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ನಾಳೆಯವರೆಗೆ ದುಬೈನಲ್ಲಿ ಉಳಿಯಲಿರುವ ಕುಮಾರಸ್ವಾಮಿ ಶನಿವಾರ ಬೆಳಗಿನ ಜಾವ ನಗರಕ್ಕೆ ಆಗಮಿಸುವರು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಕುಮಾರಸ್ವಾಮಿ ಮರಳಿದ ಬಳಿಕ ಪ್ರಚಲಿತ ರಾಜಕೀಯ ವಿದ್ಯಾಮಾನ, ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುವ ಕುರಿತಂತೆ ಸಭೆ ನಡೆಸಲಿದ್ದಾರೆ. +ಈ ಸಂಬಂಧ ನ.4ರಂದು ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಸಭೆ ಕರೆಯಲಾಗಿದ್ದು, ಅಷ್ಟರಲ್ಲಿ ಕುಮಾರಸ್ವಾಮಿ ರಾಜ್ಯಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_320_6.txt b/eesanje/url_46_320_6.txt new file mode 100644 index 0000000000000000000000000000000000000000..a169abdd5146a9a25881b5e20d0fc74cbadf532a --- /dev/null +++ b/eesanje/url_46_320_6.txt @@ -0,0 +1,13 @@ +ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳ್ಳತನ, ಕಾರು ಚಾಲಕ ಸೇರಿ ನಾಲ್ವರ ಬಂಧನ +ಬೆಂಗಳೂರು, ನ.2- ಚಿತ್ರದುರ್ಗದ ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ ಒಂದು ಕೋಟಿ ಹಣ ಕಳ್ಳತನ ಮಾಡಿದ್ದ ಕಾರಿನ ಚಾಲಕ ಸೇರಿದಂತೆ ನಾಲ್ವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ 90.19 ಲಕ್ಷ ರೂ. ನಗದು, ಕಳ್ಳತನ ಮಾಡಿದ ಹಣದಲ್ಲಿ ಖರೀದಿಸಿದ ಮೊಬೈಲ್‍ಗಳು, ವಾಚ್‍ಗಳು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. +ಕಾರು ಚಾಲಕ ಮೂಲತಃ ಚಿತ್ರದುರ್ಗ ಜಿಲ್ಲೆ ಹೋಳಲಕೆರೆ ತಾಲ್ಲೂಕಿನ ತಾಳ್ಯ ಗ್ರಾಮದ ಸ್ವಾಮಿ (34), ಈತನ ಸ್ನೇಹಿತೆ ನಗರದ ಮಹದೇವಪುರದ ನಿವಾಸಿ ಅನುಪಮ (38) ಈಕೆಯ ಸ್ನೇಹಿತ ಚಿತ್ರದುರ್ಗದ ಜಜಲರ ಹಟ್ಟಿ ನಿವಾಸಿ ಪವನ್ (30) ಹಾಗೂ ಹಾಸನ ಜಿಲ್ಲೆ ಸಕಲೇಶಪುರದ ಮಹೇಶ್ವರಿ ನಗರ ನಿವಾಸಿ ಕಾರ್ತಿಕ್ (27) ಬಂಧಿತ ಆರೋಪಿಗಳು. +ಅಂತರ್‍ರಾಜ್ಯ ಅಡಿಕೆ ವ್ಯಾಪಾರಿ, ಚಿತ್ರದುರ್ಗದ ಭೀಮಸಮುದ್ರ ನಿವಾಸಿ ಉಮೇಶ್ ಎಂಬುವವರು ವಿವಿಧ ರಾಜ್ಯಗಳಿಗೆ ತೆರಳಿ ಅಡಿಕೆಯನ್ನು ಖರೀದಿಸುತ್ತಾರೆ. ಅದರಂತೆ ಅಕ್ಟೋಬರ್ 20ರಂದುಅಡಿಕೆ ಖರೀದಿಸಲು ಒಂದು ಕೋಟಿ ಹಣವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಕಾರಿನಲ್ಲಿ ಚಾಲಕ ಸ್ವಾಮಿ ಜೊತೆ ಹೋಗಿದ್ದು, ಮೊದಲು ಚಿತ್ರದುರ್ಗದಲ್ಲೇ ಖರೀದಿಗೆ ಹೋದಾಗ ವ್ಯಾಪಾರ ಕುದುರಿಲ್ಲ. +ಹಾಗಾಗಿ ವಾಪಸ್ಸು ಅಲ್ಲಿಂದ ಶಿರಾಕ್ಕೆ ಬಂದಿದ್ದಾರೆ. ಶಿರಾದಲ್ಲೂ ಅಡಿಕೆ ವ್ಯಾಪಾರ ಸರಿಬರಲಿಲ್ಲ. ನಂತರ ತುಮಕೂರಿಗೆ ಹೋಗಿದ್ದಾರೆ ಅಲ್ಲಿಯೂ ಅಡಿಕೆ ತೆಗೆದುಕೊಂಡಿಲ್ಲ. ವಾಪಸ್ಸು ಊರಿಗೆ ಹೋಗುವ ಮುನ್ನ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಹಾಗೂ ಸ್ನೇಹಿತನ ಮಕ್ಕಳನ್ನು ಮಾತನಾಡಿಸಿಕೊಂಡು ಹೋಗೋಣವೆಂದು ನಿರ್ಧರಿಸಿ ಬೆಂಗಳೂರಿಗೆ ಬಂದಿದ್ದಾರೆ. +ಮೊದಲು ನಗರದ ಗಾಂನಗರಕ್ಕೆ ಬಂದು ಹೋಟೆಲ್‍ವೊಂದರ ಮುಂಭಾಗ ಕಾರ್ ಪಾರ್ಕಿಂಗ್ ಮಾಡಿ ಊಟ ಮುಗಿಸಿಕೊಂಡು ಚಂದ್ರಲೇಔಟ್‍ನ ಪಿಜಿಗೆ ಹೋಗಿ ಮಕ್ಕಳನ್ನು ಮಾತನಾಡಿಸಿಕೊಂಡು ನಂತರ ವಾಪಸ್ಸು ಭೀಮಸಮುದ್ರಕ್ಕೆ ಹಿಂದಿರುಗಿದ್ದಾರೆ. +ರಾತ್ರಿ ಮನೆಗೆ ಹೋದ ಉಮೇಶ್ ಅವರು ಹಣವಿದ್ದ ಬ್ಯಾಗ್ ತೆಗೆದುಕೊಳ್ಳಲು ಕಾರಿನ ಡಿಕ್ಕಿ ತೆಗೆದು ನೋಡಿದಾಗ ಒಂದು ಕೋಟಿ ಹಣವಿದ್ದ ಬ್ಯಾಗ್ ಇರಲಿಲ್ಲ. ಇದರಿಂದ ಗಾಬರಿಯಾದ ಉಮೇಶ್ ಅವರು ಏನು ಮಾಡಬೇಕೆಂದು ತೋಚದೆ, ಹಣ ಎಲ್ಲಿ ಕಳ್ಳತನವಾಗಿದೆ ಎಂದು ತಿಳಿಯದೇ ಅ.21ರಂದು ವಾಪಸ್ಸು ಬೆಂಗಳೂರಿಗೆ ಬಂದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ತಮ್ಮ ಕಾರಿನ ಚಾಲಕ ಸ್ವಾಮಿ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ. +ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರುಕಾರು ಚಾಲಕ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಸ್ನೇಹಿತರು ಸೇರಿ ಒಂದು ಕೋಟಿ ಹಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಉಮೇಶ್ ಅವರ ಬಳಿ ಸ್ವಾಮಿ ಹದಿನೈದು ವರ್ಷದಿಂದ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಉಮೇಶ್ ಅವರು ಅಡಿಕೆ ವ್ಯಾಪಾರಕ್ಕೆ ಹೋಗುವಾಗ ಕೋಟಿ ಕೋಟಿ ಹಣ ತೆಗೆದುಕೊಂಡು ಹೋಗುತ್ತಾರೆಂಬ ವಿಷಯವನ್ನು ಸ್ನೇಹಿತೆ ಅನುಪಮಾಗೆ ತಿಳಿಸಿದ್ದನು. +ಅಡಿಕೆ ವ್ಯಾಪಾರಿ ಬಳಿ ಕೋಟಿ ಕೋಟಿ ಹಣ ಇರುವುದನ್ನು ತಿಳಿದುಕೊಂಡ ಅನುಪಮಾ, ಸ್ವಾಮಿಯ ಸಹಾಯದಿಂದ ಕಾರಿನ ನಕಲಿ ಕೀ ಮಾಡಿಸಿಕೊಂಡು, ಮತ್ತೆ ಯಾವಾಗ ಬೆಂಗಳೂರಿಗೆ ಬರುತ್ತೀರೆಂದು ಸ್ವಾಮಿಯನ್ನು ವಿಚಾರಿಸಿ ಸ್ನೇಹಿತ ಪವನ್‍ಗೆ ತಿಳಿಸಿದ್ದಾಳೆ. ಅದರಂತೆ ಪವನ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಗಾಂನಗರಕ್ಕೆ ಹೋಗಿದ್ದು, ವ್ಯಾಪಾರಿ ಉಮೇಶ್ ಅವರ ಕಾರು ಹೋಟೆಲ್ ಮುಂದೆ ನಿಂತಿದ್ದಾಗ ನಕಲಿ ಕೀ ಬಳಸಿ ಡಿಕ್ಕಿಯಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ವಿಚಾರ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. +ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್ +ಆರೋಪಿಗಳಿಂದ ಕಳ್ಳತನ ಮಾಡಿದ್ದ ಒಂದು ಕೋಟಿ ಹಣದ ಪೈಕಿ 90, 19, 500 ರೂ. ನಗದು, ಕಳ್ಳತನ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 6.49 ಲಕ್ಷ ರೂ. ಮೌಲ್ಯದ 2 ಆ್ಯಪಲ್ ಕಂಪನಿಯ ಐಫೆÇೀನ್‍ಗಳು, ಒಂದು ಜೊತೆ ಹಿಯರ್ ಫೋನ್, 2 ಫಾಸಿಲ್ ಕಂಪನಿಯ ವಾಚ್‍ಗಳು, ಒಂದು ಆ್ಯಪಲ್ ಕಂಪನಿಯ ಐ ವಾಚ್, 61.670 ಗ್ರಾಂ ತೂಕದ ಚಿನ್ನಾಭರಣಗಳು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ 4 ಮೊಬೈಲ್ ಫೆÇೀನ್‍ಗಳು, ಒಂದು ಮಾರುತಿ ಸಿಯಾಜ್ ಡೆಲ್ಟಾ ಕಾರ್, ಒಂದು ಫೋಲೋ ಕಾರ್ ಮತ್ತು ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ. +ಈ ಕಾರ್ಯಾಚರಣೆಯಲ್ಲಿ ಪಶ್ಚಿಮ ವಿಭಾಗದ ಉಪ-ಫೋಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಫೋಲೀಸ್ ಆಯುಕ್ತ ರಮೇಶ್, ಇನ್ಸ್‍ಪೆಕ್ಟರ್ ಮಾರುತಿ ಮತ್ತು ಸಿಬ್ಬಂದಿ ತಂಡ ಅವಿರತವಾಗಿ ಶ್ರಮಿಸಿ ನಾಲ್ವರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗದೆ. \ No newline at end of file diff --git a/eesanje/url_46_320_7.txt b/eesanje/url_46_320_7.txt new file mode 100644 index 0000000000000000000000000000000000000000..a430599a9a9e948686ed6a51e539a8c2c985c54d --- /dev/null +++ b/eesanje/url_46_320_7.txt @@ -0,0 +1,13 @@ +ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ +ಬೆಂಗಳೂರು,ನ.2-ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರಂಭಿಕ ಹಂತದಲ್ಲೇ ಮಾರಕ ವೈರಸ್‍ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. +ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ. +ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಓದಿ ನಗೆಪಾಟಲಿಗೀಡಾದ ಸಚಿವ ತಂಗಡಗಿ +ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳ ಪರೀಕ್ಷೆ ನಡೆಸಿದ್ದರು. ಜಿಲ್ಲೆಯ 6 ಕಡೆಗಳಲ್ಲೂ ಸೊಳ್ಳೆಗಳ ಪರೀಕ್ಷೆ ನಡೆದಿತ್ತು. ತಲಕಾಯಲ ಬೆಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬೆಟ್ಟ ವ್ಯಾಪ್ತಿಯ 5 ಕಿ.ಮೀ. ಸುತ್ತ ಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. +ತಲಕಾಯಲಬೆಟ್ಟದಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ದೃಢಪಡಿಸಿದ ಬೆನ್ನಲ್ಲೇ ವಿಶೇಷ ಸಭೆ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಟ್ಟೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 30 ಮಂದಿ ಗರ್ಭಿಣಿಯರು ಮತ್ತು ಜ್ವರ ಪೀಡಿತ 7 ಮಂದಿ ರಕ್ತವನ್ನು ಪಡೆದು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ. +ಮಾರಕ ಝಿಕಾ ವೈರಸ್ ಗರ್ಭಿಣಿಯರಿಗೆ ಹರಡುವ ಸೋಂಕು. ಇದು ಮುಖ್ಯವಾಗಿ ಸೊಳ್ಳೆಗಳಿಂದ ಹರಡುವ ಕಾಯಿಲೆ. ಪ್ರಾರಂಭದಲ್ಲಿ ಸೌಮ್ಯ ಲಕ್ಷಣ ಇರಲಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಣಾಂತಿಕ ರೋಗವಾಗಿ ಬದಲಾಗುತ್ತದೆ. ಝಿಕಾ ಸ್ವತಃ ಮಾರಣಾಂತಿಕ ಅಲ್ಲದಿದ್ದರೂ ಅಪಾಯ ತಂದೊಡ್ಡಲಿದೆ. ಈ ರೋಗದ ಲಕ್ಷಣಗಳು ಒಂದು ವಾರದೊಳಗೆ ಕಣ್ಮರೆಯಾಗುತ್ತವೆ. ಗರ್ಭಿಣಿ ಸೋಂಕಿಗೆ ಒಳಗಾದಾಗ ಈ ರೋಗವು ಹುಟ್ಟಲಿರುವ ಮಗುವಿನ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತದೆ. +ಎಗಿಫ್ಟಿ ಮತ್ತು ಈಡಿಯಸ್ ಅಲ್ಲೋ ಪಿಕ್ಸಸ್ ಸೊಳ್ಳೆಗಳಿಂದ ಝಿಕಾ ವೈರಸ್ ಮನುಷ್ಯನಿಗೆ ಹರಡುತ್ತದೆ. ಸೊಳ್ಳೆಯು ಸೋಂಕಿತ ವ್ಯಕ್ತಿಯನ್ನು ಕಚ್ಚಿದ ನಂತರ, ಕಾ ವೈರಸ್ ಸೊಳ್ಳೆಯ ವ್ಯವಸ್ಥೆ ಪ್ರವೇಶಿಸುತ್ತದೆ. ಅದರ ದೇಹದಲ್ಲಿ ಪುನರಾವರ್ತಿಸುತ್ತದೆ ಮತ್ತು ಅದರ ಲಾಲಾರಸ ಗ್ರಂಥಿ ಗಳಿಗೆ ಹರಡುತ್ತದೆ. ಈ ವೈರಸ್ ಸೊಳ್ಳೆಯಲ್ಲಿ ಎಂಟರಿಂದ ಹತ್ತು ದಿನಗಳವರೆಗೆ ಕಾವು ಕೊಡುತ್ತದೆ. ಅಂತಹ ಸೊಳ್ಳೆ. ಕಚ್ಚಿದಾಗ ವೈರಸ್ ವ್ಯಕ್ತಿಗೆ ಹರಡುತ್ತದೆ. ಸೊಳ್ಳೆ ಕಚ್ಚಿದ ನಂತರ ವ್ಯಕ್ತಿಯಲ್ಲಿ ಕಾ ವೈರಸ್‍ನ ಕಾವು ಕಾಲಾವಧಿ ಮೂರರಿಂದ 12 ದಿನಗಳವರೆಗೆ ಇರುತ್ತದೆ. +ಝಿಕಾ ವೈರಸ್ ಲಕ್ಷಣಗಳು ಝಿಕಾ ವೈರಸ್ ಒಳಗಾದವರು ಸಾಮಾನ್ಯವಾಗಿ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವಿನ ರೋಗದ ಲಕ್ಷಣ ಗಳನ್ನು ಅನುಭವಿಸುತ್ತಾರೆ ಅಥವಾ ತುಂಬಾ ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಾರೆ. ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಂತೆ ಇರುತ್ತದೆ. ಜ್ವರ, ದದ್ದು, ತಲೆನೋವು, ಕೀಲುನೊವು, ಆಯಾಸ, ಕೆನ್ನೆಗಳ ಊತ, ಬೆವರುವುದು, ತಣ್ಣಗಾಗುವುದು, ವಾಂತಿ, ರಕ್ತಸಿಕ್ತ ಕಣ್ಣುಗಳು ಲಕ್ಷಣಗಳು ಗೋಚರಿಸುತ್ತವೆ. +ರಾಜಸ್ಥಾನ : ಇಡಿ ಅಧಿಕಾರಿಗಳನ್ನೇ ಬಂಧಿಸಿದ ಎಸಿಬಿ +ಝಿಕಾ ಬರದಂತೆ ತಡೆಗೆಟ್ಟುವುದು ಹೇಗೆ?:ಸೋಂಕು ಬಂದ ಮೇಲೆ ಪರದಾಡುವುದಕ್ಕಿಂತ ಸೋಂಕು ಬಾರದಂತೆ ತಡೆಯುವುದು ಅತೀ ಅಗತ್ಯ. ಇದಕ್ಕಾಗಿ ಕೆಲವು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. +ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲರೂ ಸೊಳ್ಳೆಗಳ ಕಾಟ ತಡೆಗೆ ಕ್ರಮಕೈಗೊಳ್ಳಬೇಕು. ಪ್ರಸ್ತುತ ಝಿಕಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ವಿಜ್ಞಾನಿಗಳು ದೀರ್ಘ ಕಾಲದವರೆಗೆ ವೈರಸ್ ಹಾನಿಕರವಲ್ಲ ಅಂತ ಭಾವಿಸಿದ್ದರು. ಸದ್ಯ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದ್ದರಿಂದ ವೈದ್ಯರು ಜ್ವರ ಕಡಿಮೆ ಮಾಡುವ ಔಷಧಿ ನೀಡುತ್ತಾರೆ. ವಾಂತಿ ಮತ್ತು ದದ್ದುಗಳಿಗೆ ಔಷಧಗಳನ್ನು ಸೂಚಿಸಬಹುದು. +ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ. \ No newline at end of file diff --git a/eesanje/url_46_320_8.txt b/eesanje/url_46_320_8.txt new file mode 100644 index 0000000000000000000000000000000000000000..7c126d2cd34600d47666a7f019a2d4aec971998a --- /dev/null +++ b/eesanje/url_46_320_8.txt @@ -0,0 +1,9 @@ +ಝೆಡ್-ಕೆಟಗರಿ ಭದ್ರತೆ ಪಡೆಯದ ಯಡಿಯೂರಪ್ಪ +ಬೆಂಗಳೂರು,ನ.2- ರಾಜ್ಯ ಬಿಜೆಪಿಯ ಸರ್ವೋಚ್ಛ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಸಚಿವಾಲಯವು ವಾರದ ಹಿಂದೆ ಝೆಡ್-ಕೆಟಗರಿ ಭದ್ರತೆಯನ್ನು ನೀಡಿತ್ತು, ಆದರೆ ಯಡಿಯೂರಪ್ಪನವರು ಇನ್ನೂ ಭದ್ರತೆಯನ್ನು ತೆಗೆದುಕೊಂಡಿಲ್ಲ. +ಯಡಿಯೂರಪ್ಪನವರು ಬಿಜೆಪಿಯಲ್ಲಿ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷಿಯಲ್ಲ. ಮೇಲ್ ಅಥವಾ ಫೋನ್ ಮೂಲಕವೂ ಅವರಿಗೆ ಯಾವುದೇ ಬೆದರಿಕೆಗಳು ಬಂದಿಲ್ಲ. ಹಾಗಿರುವಾಗ ಕೇಂದ್ರ ಸರ್ಕಾರ ಅವರಿಗೆ ಈ ಮಟ್ಟದ ಭದ್ರತೆಯನ್ನು ಏಕೆ ನೀಡುತ್ತಿದೆ ಎಂಬ ಪ್ರಶ್ನೆ ಉದ್ಭವವಾಗಿದೆ. +ಎಲ್ಲಾ ಸಮಯದಲ್ಲೂ ನಾಯಕನ ಚಲನವಲನಗಳ ಮೇಲೆ ನಿಗಾ ಇರಿಸಿಕೊಳ್ಳಲು - ಮಟ್ಟದ ಭದ್ರತೆ ನೀಡಲಾಗುತ್ತದೆ. ಪ್ರಬಲ ಲಿಂಗಾಯತ ವಲಯಗಳಲ್ಲಿನ ಅನೇಕರು ಕೇಂದ್ರ ಗೃಹ ಸಚಿವಾಲಯವು ಮಾಜಿ ಸಿಎಂಗೆ ಅಂತಹ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆ ಮಾಡುತ್ತಿರುವ ಬೆದರಿಕೆಯ ಗ್ರಹಿಕೆ ಏನೆಂದು ಯೋಚಿಸುತ್ತಿದ್ದಾರೆ. +ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಅವರ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೇ ಎಂಬ ಸಂದೇಹ ವ್ಯಕ್ತವಾಗಿದೆ. ಕೆಲವು ಸಿಆರ್‍ಪಿಎಫ್ ಅಧಿಕಾರಿಗಳು ಮೊನ್ನೆ ಮಂಗಳವಾರ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಯಡಿಯೂರಪ್ಪ ಅವರ ಆಪ್ತ ವಲಯದ ಮೂಲಗಳು, ಝಡ್ ಮಟ್ಟದ ಭದ್ರತೆಯನ್ನು ಒಪ್ಪಿಕೊಳ್ಳುವುದು-ಬಿಡುವುದು ಅವರಿಗೆ ಬಿಟ್ಟಿದ್ದು ಎನ್ನುತ್ತಾರೆ. +ಗೃಹ ಸಚಿವಾಲಯದ ಭದ್ರತೆ ವಿಷಯ ನಗೆಪಾಟಲಿಗೀಡಾಗಬಾರದು. ಯಡಿಯೂರಪ್ಪ ಗಾಂಧಿ ಬಜಾರ್‍ನಲ್ಲಿ ನಿಂತು ಯಾವುದೇ ಬೆದರಿಕೆಯಿಲ್ಲದೆ ಚಾಟ್ ತಿನ್ನುವ ರಾಜಕಾರಣಿ. ಅವರು ಎಲ್ಲರಿಗೂ ಒಪ್ಪಿಗೆಯಾಗುವ ಬಹು ಪ್ರೀತಿಯ ನಾಯಕ. ಬಹುಶಃ ಅವರು ಕರ್ನಾಟಕದ ಅತ್ಯಂತ ಜಾತ್ಯತೀತ ಬಿಜೆಪಿ ನಾಯಕರಾಗಿದ್ದಾರೆ. ಭದ್ರತೆ ಅವರಿಗೆ ಏಕೆ ಬೇಕು, ಅವರಿಗೆ ಯಾವುದಾದರೂ ಬೆದರಿಕೆಗಳು ಅಥವಾ ಎಚ್ಚರಿಕೆ ಪತ್ರಗಳು ಬಂದಿವೆಯೇ ಏನೂ ಇಲ್ಲವಲ್ಲ ಎನ್ನುತ್ತಾರೆ ಅವರ ಆಪ್ತ ವಲಯಗಳು. +ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ : ಬಿಎಸ್‌ವೈ +ಕರ್ನಾಟಕ ಉತ್ತರ ಪ್ರದೇಶವೇ ಅಥವಾ ಮಧ್ಯಪ್ರದೇಶವೇ? ದೆಹಲಿಯಲ್ಲಿ ಯಾರೋ ತಮ್ಮ ಲೆಕ್ಕಾಚಾರವನ್ನು ತಪ್ಪಾಗಿ ಗ್ರಹಿಸಿದ್ದಾರೆಂದು ತೋರುತ್ತಿದೆ. ಬಿಜೆಪಿಯ ಮಾಜಿ ಪದಾಕಾರಿಯೊಬ್ಬರು, ಬಹುಶಃ ಇದು ಕೇಂದ್ರದ ಗೌರವದ ವಿಧಾನವಾಗಿದೆ ಎಂದು ಹೇಳಿದರು. ಯಡಿಯೂರಪ್ಪನವರಿಗೆ ಯಾವುದೇ ಬೆದರಿಕೆಗಳ ಕುರಿತು ಅವರು, ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಕೋಮು ಘಟನೆಯ ನಂತರ, ಯಾವುದನ್ನೂ ತಳ್ಳಿಹಾಕಲು ಸಾಧ್ಯವಿಲ್ಲ. ಅದು ಅವರ ಭದ್ರತೆಯನ್ನು ಮೇಲ್ದರ್ಜೆಗೇರಿಸಲು ಕಾರಣವಾಗಿರಬಹುದು. +ಕೆಲವು ಬೆದರಿಕೆ ಗ್ರಹಿಕೆ ಅಥವಾ ಕೆಲವು ಗುಪ್ತಚರ ಮಾಹಿತಿಗಳು ಇದ್ದಾಗ, ಕೇಂದ್ರ ಗೃಹ ಸಚಿವಾಲಯವು ಅಂತಹ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಮುಖಂಡರು ಹೇಳುತ್ತಾರೆ. \ No newline at end of file diff --git a/eesanje/url_46_320_9.txt b/eesanje/url_46_320_9.txt new file mode 100644 index 0000000000000000000000000000000000000000..2c0e41e18abafe255b1237e0159798d2dcae028f --- /dev/null +++ b/eesanje/url_46_320_9.txt @@ -0,0 +1,13 @@ +ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್ +ಬೆಂಗಳೂರು, ನ.2- ರಾಜ್ಯದಲ್ಲಿನ ಬರ ಪರಿಹಾರ ಹಣ ನೀಡಬೇಕಾದ ಕೇಂದ್ರ ಸರ್ಕಾರ, ಅಧಿಕಾರಿಗಳ ತಂಡದಿಂದ ಕಾಟಾಚಾರದ ಅಧ್ಯಯನ ನಡೆಸಿದ್ದು, ಈವರೆಗೂ ರಾಜ್ಯಕ್ಕೆ ನಯಾ ಪೈಸೆ ಅನುದಾನ ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ನಿಂತು ಮೂರು ತಿಂಗಳಾಗಿದೆ, ಆಗಿನಿಂದಲೇ ಬರ ಪರಿಸ್ಥಿತಿ ಇದೆ. ಬಿಜೆಪಿಯವರು ಇಷ್ಟು ದಿನ ಏಕೆ ಸುಮ್ಮನ್ನಿದ್ದರು. ಈಗ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. +ರಾಜ್ಯ ಸರ್ಕಾರ 200ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಸುಮಾರು 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ, ಬಿಜೆಪಿಯವರು ಮೊದಲು ಹಣ ಕೊಡಿಸಲಿ ಎಂದು ಆಗ್ರಹಿಸಿದರು. +ಕೇಂದ್ರ ಸರ್ಕಾರದಿಂದ ಈವರೆಗೂ ಒಂದು ಪೈಸೆ ಬಿಡುಗಡೆಯಾಗಿಲ್ಲ. ಕೇಂದ್ರದಿಂದ ಆಗಮಿಸಿದ ಬರ ಅಧ್ಯಯನ ತಂಡ ತಾವು ನೋಡಿದ ಕಡೆ ಹಸಿರು ಇದೆ ಎಂದು ವರದಿ ನೀಡಿದೆ. ತಂಡ ಬರುವ ಮುನ್ನಾ ಎರಡು ಮೂರು ದಿನ ರಾಜ್ಯದಲ್ಲಿ ಮಳೆಯಾಗಿತ್ತು, ಹಾಗಾಗಿ ಹಸಿರು ಕಾಣಿಸಿದೆ. ಅಂದ ಮಾತ್ರಕ್ಕೆ ಬೆಳೆಯಾಗಿದೆ ಎಂದು ಅರ್ಥವೇ. ಕೂಲಂಕುಶವಾಗಿ ಪರಿಶೀಲನೆ ನಡೆಸಬೇಕಿತ್ತಲ್ಲವೇ ? ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕೆ ಹಣ ನೀಡಬೇಕು ಎಂಬ ಕಾಳಜಿ ಇದ್ದರೆ ಕೇಂದ್ರ ತಂಡ ರಾಜ್ಯದ ಅಕಾರಿಗಳು, ಸಚಿವರು, ಮುಖ್ಯಮಂತ್ರಿಯವರ ಜೊತೆ ಕುಲಂಕುಶವಾಗಿ ಚರ್ಚೆ ಮಾಡಬೇಕಿತ್ತು. ನೆಪ ಮಾತ್ರಕ್ಕೆ ಕಾಟಾಚಾರಕ್ಕೆ ಅಧ್ಯಯನ ಮಾಡಿದ್ದಾರೆ ಎಂದು ಆರೋಪಿಸಿದರು. +ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆ ಆಧಾರಿಸಿ ಎನ್‍ಡಿಆರ್‍ಎಫ್ ಅಡಿ ನೀಡಬೇಕಾದ ಹಣವನ್ನಾದರೂ ಮುಂಗಡವಾಗಿ ನೀಡಬೇಕಿತ್ತು ಅಥವಾ ವಿಶೇಷ ಅನುದಾನವನ್ನಾದರೂ ನೀಡಬೇಕು. ಹಿಂದೆಲ್ಲಾ ಕಾಂಗ್ರೆಸ್ ಸರ್ಕಾರದಲ್ಲಿ ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ವಿಶೇಷ ಅನುದಾನವನ್ನಾಗಿ 2 ಸಾವಿರ ಕೋಟಿ ರೂಪಾಯಿ ನೀಡಲಾಗಿತ್ತು. ಈಗಲೂ ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು. +ರಾಜ್ಯದಲ್ಲಿ ಬರ ಪರಿಸ್ಥಿತಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಸರ್ವ ಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಲಾಗುವುದು. ಸಾಧ್ಯವಾಗದಿದ್ದರೆ ರಾಜ್ಯ ಸರ್ಕಾರದ ಎಲ್ಲಾ ಸಚಿವರು ದೆಹಲಿಗೆ ಹೋಗಿ ಪ್ರಯತ್ನಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು. +ಭಾರತಕ್ಕೆ ಬರುತ್ತಿದ್ದಾರೆ ಅಮೆರಿಕ ವಿದೇಶಾಂಗ, ರಕ್ಷಣಾ ಕಾರ್ಯದರ್ಶಿಗಳು +ಬಿಜೆಪಿಯವರು ವಸೂಲಿಗೆ ಬರುತ್ತಿದ್ದರೆ ?ಕಾಂಗ್ರೆಸ್‍ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರಿಗೆ ಬಂದು ಸಭೆ ನಡೆಸಿದಾಕ್ಷಣ ಪಂಚರಾಜ್ಯಗಳ ಚುನಾವಣೆಗೆ ಹಣ ವಸೂಲಿ ಮಾಡಲು ಬಂದಿದ್ದರು ಎಂದು ಬಿಜೆಪಿಯವರು ಆಧಾರ ರಹಿತ ಟೀಕೆ ಮಾಡುತ್ತಿದ್ದಾರೆ. ಅದನ್ನು ಬಿಟ್ಟು ಅವರು ಬೇರೆ ಏನನ್ನು ಹೇಳಲು ಸಾಧ್ಯ. ಕಾಂಗ್ರೆಸ್‍ನ ನಾಯಕರು ಹಣವನ್ನು ಬ್ಯಾಗಿನಲ್ಲಿ ತುಂಬಿಕೊಂಡು ಹೆಗಲೆ ಮೇಲೆ ಹಾಕಿಕೊಂಡು ಹೋಗಿದ್ದಾರೆಯೇ ? ಸುಮ್ಮನ್ನೆ ಬಾಯಿಗೆ ಬಂದಂತೆ ಮಾತನಾಡಬಾರದು ಎಂದರು ತಿರುಗೇಟು ನೀಡದರು. +ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಕಾರದಲ್ಲಿದ್ದಾಗ ಅವರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಪದೇ ಪದೇ ಬೆಂಗಳೂರಿಗೆ ಬರುತ್ತಿದ್ದರು. ಆಗಲೂ ವಸೂಲಿಗೆ ಬರುತ್ತಿದ್ದರೂ ಎಂದು ಭಾವಿಸಬೇಕಲ್ಲವೇ ಎಂದು ತಿರುಗೇಟು ನೀಡಿದರು. +ಕಾಂಗ್ರೆಸ್‍ನಲ್ಲಿ ಶಾಸಕರು, ಸಚಿವರು, ನಾಯಕರ ಪೈಕಿ ಸರ್ಕಾರದ ಪರವಾಗಿ ಮಾತನಾಡುವವರಿಗೆ ಅಡ್ಡಿ ಇಲ್ಲ. ಪಕ್ಷ ಅಥವಾ ಸರ್ಕಾರದ ವಿರುದ್ಧ ಮಾತನಾಡಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ನಮಗೆ ಹೆಚ್ಚಿನ ಮಾಹಿತಿ ಇಲ್ಲ. ನಮ್ಮನ್ನು ಕರೆಸಿ ಯಾವುದೇ ಚರ್ಚೆ ಮಾಡಿಲ್ಲ, ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತ್ರ ಚರ್ಚೆ ಮಾಡಿದ್ದಾರೆ. ನಿಗಮ ಮಂಡಳಿಯ ನೇಮಕಾತಿ ಬಗ್ಗೆ ಚರ್ಚೆ ನಡೆದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು. +ಕನ್ನಡ ಬಾವುಟಕ್ಕೆ ಅಧಿಕೃತ ಸ್ಥಾನ ಮಾನ ದೊರೆಯಬೇಕಿದೆ. ನಿನ್ನೆ ಕೂಡ ಅದು ಚರ್ಚೆಯಾಗುತ್ತಿತ್ತು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಾನ್ಯತೆ ನೀಡುವಂತೆ ಮತ್ತೊಮ್ಮೆ ಪತ್ರ ಬರೆದು ಒತ್ತಡ ಹೇರಲಾಗುವುದು. ಅದನ್ನು ಬಿಟ್ಟು ತಲೆಯ ಮೇಲೆ ಕಲ್ಲು ಇಡಲಾಗುವುದಿಲ್ಲ ಎಂದರು. +ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಇತ್ತೀಚೆಗೆ ಆಯೋಜಿಸಲಾಗಿದ್ದ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪೆÇಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಹಿಂದಿನ ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಆರ್.ಡಿ.ಪಾಟೀಲ್‍ಗೂ ಕೆಇಎ ಪರೀಕ್ಷೆಯ ಅಕ್ರಮದಲ್ಲಿ ಸಂಪರ್ಕ ಇದೆ ಎಂದು ಹೇಳಲಾಗುತ್ತಿದೆ. ಅದು ನಿಜವಾಗಿದ್ದರೆ ತನಿಖೆಗೆ ಮತ್ತಷ್ಟು ಸಾಕ್ಷ್ಯ ದೊರೆತು ಬೆಂಬಲವಾಗಲಿದೆ. ಮರು ಪರೀಕ್ಷೆ ನಡೆಸಬೇಕು ಎಂಬುದು ಗೃಹ ಇಲಾಖೆ ವ್ಯಾಪ್ತಿಯಲ್ಲಿಲ್ಲ. ಸಂಬಂಸಿದವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು. \ No newline at end of file diff --git a/eesanje/url_46_321_1.txt b/eesanje/url_46_321_1.txt new file mode 100644 index 0000000000000000000000000000000000000000..bb060a7c8aa29000eca7f0d73f3a6fe9f743169b --- /dev/null +++ b/eesanje/url_46_321_1.txt @@ -0,0 +1,7 @@ +ವಿಶ್ವಕಪ್‌ನಿಂದ ಪಾಂಡ್ಯ ಔಟ್..? +ಮುಂಬೈ, ನ.1- ಪಾದದ ಗಾಯದಿಂದ ಚೇತರಿಸಿಕೊಂಡಿರುವ ಭಾರತದ ಸ್ಟಾರ್ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಅವರು ನವೆಂಬರ್ 12 ರಂದು ನೆದಲ್ರ್ಯಾಂಡ್ಸ್ ವಿರುದ್ಧದ ವಿಶ್ವಕಪ್‍ನ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಕಣಕ್ಕೆ ಮರಳುವ ಸಾಧ್ಯತೆಯಿಲ್ಲ. +ಅಕ್ಟೋಬರ್ 19 ರಂದು ಪುಣೆಯಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಅವರು ಬೌಲಿಂಗ್‍ನಲ್ಲಿ ಚಂಡನ್ನು ತಡೆಯುವಾಗ ಎಡ ಪಾದಕ್ಕೆ ಗಾಯವಾಗಿತ್ತು. ನಂತರ ನಡೆದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಆಡಲಿಲ್ಲ ನಾಳೆ ಶ್ರೀಲಂಕಾ ಮತ್ತು ನ.5 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. +ನವೆಂಬರ್ 12 ರಂದು ಬೆಂಗಳೂರಿನಲ್ಲಿ ನೆದಲ್ರ್ಯಾಂಡ್ಸ್ ವಿರುದ್ಧ ಭಾರತ ಆಡಲಿರುವ ಕೊನೆಯ ಲೀಗ್ ಪಂದ್ಯಕ್ಕೆ ಪಾಂಡ್ಯ ಲಬ್ಯವಾಗಬಹುದು,ಪ್ರಸ್ತುತ ಅವರು ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ ನೇರವಾಗಿ ಸೆಮಿಫೈನಲ್ ಪಂದ್ಯ ಆಡುವ ಸಾಧ್ಯತೆಯೂ ಇದೆ. ಈಗಾಗಲೆ ಆರು ಪಂದ್ಯಗಳಲ್ಲಿ ಗೆಲುವು ಪಡೆದು ಭಾರತ ಸೆಮಿಫೈನಲ್‍ಗೆ ಅರ್ಹತೆ ಪಡೆಯುವುದು ನಿಶ್ಛಿತವಾಗಿದೆ. +ವಾಣಿಜ್ಯ ಸಿಲಿಂಡರ್ ಬೆಲೆ 101 ರೂ. ಏರಿಕೆ +ಪಾಂಡ್ಯ ಅನುಪಸ್ಥಿತಿಯಲ್ಲಿ, ಭಾರತ ತಂಡ ಐವರು ಬೌಲರ್‍ಗಳೊಂದಿಗೆ ಆಡುತ್ತಿದ್ದು, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ. ಪಾಂಡ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‍ಸಿಎ) ಚೇತರಿಸಿಕೊಳ್ಳುತ್ತಿದ್ದು.ವೈದ್ಯಕೀಯ ತಂಡವು ಪರಿಶೀಲಿಸುತ್ತಿದೆ ನಾವು ಕೂಡ ಎನ್‍ಸಿಎ ಜೊತೆಗೆ ಸಂಪರ್ಕದಲ್ಲಿದ್ದೇವೆ ಒಂದೆರಡು ದಿನಗಳಲ್ಲಿ ಸದ್ಯದ ಪರಿಸ್ಥಿತಿ ಪಡೆಯುವ ನಿರೀಕ್ಷೆಯಲ್ಲಿದ್ದೇವೆ ಎಂದು ಬೌಲಿಂಗ್ ಕೋಚ್ ಮಾಂಬ್ರೆ ಹೇಳಿದ್ದಾರೆ. +ಬಿಸಿಸಿಐ ಮಾಧ್ಯಮ ಬಿಡುಗಡೆಯ ಪ್ರಕಾರ, ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಪಾಂಡ್ಯ ಲಕ್ನೋದಲ್ಲಿ ತಂಡವನ್ನು ಸೇರಿಕೊಳ್ಳಬೇಕಿತ್ತು ಆದರೆ ಅವರು ತಂಡದಲ್ಲಿ ಇರಲಿಲ್ಲ. \ No newline at end of file diff --git a/eesanje/url_46_321_10.txt b/eesanje/url_46_321_10.txt new file mode 100644 index 0000000000000000000000000000000000000000..e4906bd28509b79b9399de69ee3f778526226454 --- /dev/null +++ b/eesanje/url_46_321_10.txt @@ -0,0 +1,15 @@ +ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ +ಬೆಂಗಳೂರು, ನ.1- ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. +ಕನ್ನಡ ಶಾಲೆಗಳ ಸೌಲಭ್ಯ ಸುಧಾರಣೆಗೆ ತಮ್ಮ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಇಲಾಖೆಯ ಪ್ರಸ್ತಾವನೆ ಆಧರಿಸಿ ಇಂದಿನಿಂದ ಉಚಿತ ವಿದ್ಯುತ್, ನೀರಿನ ಸೌಲಭ್ಯ ಕಲ್ಪಿಸುವುದಾಗಿ ಹೇಳಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. +ದೇವರಾಜು ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಅದರ ಪ್ರಯುಕ್ತ ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ ಎಂಬ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ವರ್ಷ ಪೂರ್ತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಬಜೆಟ್‍ನಲ್ಲೂ ಕಾರ್ಯಕ್ರಮ ಘೋಷಣೆ ಮಾಡಿ ಅನುದಾನವನ್ನೂ ಮೀಸಲಿಡಲಾಗಿದೆ. ಹಿಂದಿನ ವರ್ಷವೇ ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ಆಗಿನ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದರು. +ಈ ದಿನದಿಂದ ನಾವು ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ಮಾಡಬೇಕಿದೆ. ಈ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸಬೇಕು. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು. ನೆರೆ ರಾಜ್ಯದಷ್ಟು ನಾವು ಭಾಷಾಭಿಮಾನಿಗಳಲ್ಲ, ಆದರೆ ಹೆಚ್ಚು ಧಾರಾಳತನ ಅನಗತ್ಯ. ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಸ್ಥಳೀಯ ಅಕೃತ ಭಾಷೆ ಮಾತನಾಡದೆ ಬದುಕಲಾಗಲ್ಲ ಎಂಬ ವಾತಾವಣ ಇದೆ. ಆದರೆ ಕರ್ನಾಟಕದಲ್ಲಿ ಕನ್ನಡ ಮಾತನಾಡದೆ ಬದುಕು ನಡೆಸಬಹುದಾದ ಪರಿಸ್ಥಿತಿ ನಮ್ಮಲ್ಲಿದೆ. ಯಾವ ಭಾಷೆ ಬೇಕಾದರೂ ಕಲಿಯಿತು. ಆದರೆ ನಮ್ಮ ಸಾರ್ವಭೌಮ ಕನ್ನಡ ಭಾಷೆಯನ್ನು ಮಾತನಾಡಿ. +ಸರ್ಕಾರದಲ್ಲಿ ನಡೆಯುವ ಆಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಇಲ್ಲಿ ಕೆಲಸ ಮಾಡುವವರು ಕನ್ನಡದಲ್ಲೇ ವ್ಯವಹರಿಸಬೇಕಾಗುತ್ತದೆ. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಆಗ ಮಾತ್ರ ಸುಗಮ ಆಡಳಿತ ಸಾಧ್ಯವಾಗಲಿದೆ ಎಂದು ಸೂಚಿಸಿದರು. +ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದರು. +ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಿಸಿದರು. ಇಂಗ್ಲಿಷ್‍ನಲ್ಲಿ ಕಲಿತರೆ ಮಾತ್ರ ಜ್ಞಾನ ಸಂಪಾದನೆ ಎಂಬ ನಂಬಿಕೆ ಸರಿಯಲ್ಲ. +ಮಹತ್ವದ ಮಾಹಿತಿ : ನಿಮ್ಮ ಆಧಾರ್ ಬಯೋಮೆಟ್ರಿಕ್ ಲಾಕ್ ಮಾಡೋದು ಹೇಗೆ..? +ಕನ್ನಡ ಶಾಲೆಯಲ್ಲಿ ಓದುವ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಸೇರಿಸುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದ ಅವರು, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ. ಕನ್ನಡ ಶಾಲೆಗಳಲ್ಲಿ ಉತ್ತಮ ಕಲಿಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕನಿಷ್ಠ ಎಸ್‍ಎಸ್‍ಎಲ್‍ಸಿವರೆಗಾದರೂ ಕನ್ನಡ ಮಾಧ್ಯಮದಲ್ಲಿ ಕಲಿಸಬೇಕು. ಕನ್ನಡದಲ್ಲಿ ಓದಿದ ಅನೇಕರು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಜ್ಞಾನಿಗಳಾಗಿದ್ದಾರೆ ಎಂದರು. +ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದರು. +ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚಖಾತ್ರಿ ಯೋಜನೆಗಳ ಪೈಕಿ ನಾಲ್ಕು ಯಶಸ್ವಿಯಾಗಿ ಜಾರಿಗೆ ತಂದಿದೆ. ಕನ್ನಡಿಗರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ. ಕನ್ನಡಿಗರು ಸ್ವಾಭಿಮಾನದಿಂದ ಬದುಕುವ ವಾತಾವರಣ ನಿರ್ಮಿಸಲು ಅಗತ್ಯ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು. +ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಆರ್.ವಿ.ದೇಶಪಾಂಡೆ, ರಿಜ್ವಾನ್ ಹರ್ಷದ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. +ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿದೆ 8 ಅಡಿ ಉದ್ದದ ಚಿನ್ನಲೇಪಿತ ರಾಮಲಲ್ಲಾ ವಿಗ್ರಹ +ವೇದಿಕೆಯ ಸಮೀಪದಲ್ಲೇ ಪ್ರತಿಷ್ಠಾಪಿಸಿದ್ದ ಕನ್ನಡಾಂಬೆಯ ಪ್ರತಿಮೆಗೆ ಪುಷ್ಟ ನಮನ ಸಲ್ಲಿಸಿದ ಮುಖ್ಯಮಂತ್ರಿಯವರು, ವಿದ್ಯಾರ್ಥಿಗಳ ಪಥ ಸಂಚಲನದ ಗೌರವ ರಕ್ಷೆಯನ್ನು ಸ್ವೀಕರಿಸಿದರು. ಬಳಿಕ ರಾಷ್ಟ್ರ ಹಾಗೂ ಕನ್ನಡ ಧ್ವಜಾರೋಹಣ ನೇರವೇರಿಸಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು. \ No newline at end of file diff --git a/eesanje/url_46_321_11.txt b/eesanje/url_46_321_11.txt new file mode 100644 index 0000000000000000000000000000000000000000..de12de39b8df21a5ef3aac59ecae512c53b00186 --- /dev/null +++ b/eesanje/url_46_321_11.txt @@ -0,0 +1,5 @@ +ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ +ಬೆಂಗಳೂರು, ಅ.31- ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಬೇಕೆಂದು ಕೋರಿ ಚಾಮರಾಜಪೇಟೆ ನಾಗರಿಕ ಒಕ್ಕೂಟಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮೈದಾನದಲ್ಲಿ ನಾಡಧ್ವಜ ಹಾರಾಟಕ್ಕೆ ಹಸಿರು ನಿಶಾನೆ ತೋರಿ ಮೂರು ದಿನಗಳ ಸಾಂಸ್ಕøತಿಕ ಕಾರ್ಯಕ್ರಮ ನಡೆಸಲು ಅವಕಾಶ ಕಲ್ಪಿಸಿದ್ದಾರೆ. +ಗಡಿ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಬೆಂಗಳೂರು, ಅ.31- ರಾಜ್ಯದ ಗಡಿ ಹಾಗೂ ನೆರೆಯ ರಾಜ್ಯಗಳಲ್ಲಿರುವ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಕೆಎಸ್‍ಆರ್‍ಟಿಸಿ ಬಸ್ಸ್‍ಗೆ ಬೆಂಕಿ ಹಚ್ಚಿರುವುದು ತಪ್ಪು. ಯಾರೇ ಆಗಲಿ ಅಂತಹ ಕೆಲಸ ಮಾಡಬಾರದು. ರಾಜ್ಯದ ಹಿತ ಕಾಪಾಡಲು ನಾವು ಬದ್ಧವಾಗಿದ್ದೇವೆ. +ರಾಜ್ಯದ ಒಳಗಡೆ ಮತ್ತು ನೆರೆಯ ರಾಜ್ಯಗಳಲ್ಲಿ ಕನ್ನಡಿಗರ ರಕ್ಷಣೆಗೆ ಅಗತ್ಯ ಇರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಪೆÇಲೀಸ್ ಅಕಾರಿಗಳ ಜೊತೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಆದೇಶಿಸಲಾಗಿದೆ ಎಂದರು. +ಬಿಜೆಪಿ ಬರ ಅಧ್ಯಯನ ಮಾಡಲಿ:ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ, ಬರ ಪರಿಸ್ಥಿತಿಯನ್ನು ನೋಡಿದ ಬಳಿಕವಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದುಡ್ಡು ಕೊಡಿಸಲಿ ಎಂದು ಆಗ್ರಹಿಸಿದರು.ಕೇಂದ್ರ ಸರ್ಕಾರಕ್ಕೆ ನಮ್ಮ ಕೃಷಿ ಮತ್ತು ಕಂದಾಯ ಸಚಿವರು ಮನವಿ ನೀಡಿದಂತೆ ಪರಿಹಾರ ಕೊಡಿಸಲಿ. ರಾಜ್ಯ ಸರ್ಕಾರ ಮಾನದಂಡಗಳ ಆಧಾರದ ಮೇಲೆಯೇ ಬರ ಪೀಡಿತ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ತಂಡವೂ ರಾಜ್ಯಕ್ಕೆ ಆಗಮಿಸಿ ಅಧ್ಯಯನ ವರದಿ ನೀಡಿದೆ. ಕೇಂದ್ರ ಸರ್ಕಾರ ಸ್ವಲ್ಪ ಲಿಬರಲ್ ಆಗಿ ಪರಿಹಾರ ನೀಡಲಿ. ಬಿಜೆಪಿಯವರು ಬರ ಅಧ್ಯಯನ ಬಳಿಕವಾದರೂ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು. \ No newline at end of file diff --git a/eesanje/url_46_321_12.txt b/eesanje/url_46_321_12.txt new file mode 100644 index 0000000000000000000000000000000000000000..8b08b4732dc7f00bd91dbdc7e2fd3b5350f79541 --- /dev/null +++ b/eesanje/url_46_321_12.txt @@ -0,0 +1,10 @@ +ಬಿಜೆಪಿ ಹೇಳಿದ ತಕ್ಷಣ ಸರ್ಕಾರ ಬೀಳಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಅ.31- ಬಿಜೆಪಿಯವರು ಹೇಳಿದ ತಕ್ಷಣ ನಮ್ಮ ಸರ್ಕಾರ ಬಿದ್ದು ಹೋಗುವುದಿಲ್ಲ. ಸ್ಥಿರತೆಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. +ಬಿಜೆಪಿಯ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮುಂದಿನ ಮೂರು ತಿಂಗಳಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿಯಾಗಲಿದ್ದಾರೆ ಎಂದು ಹೇಳಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಹಳಷ್ಟು ಮಂದಿ ಸಚಿವರು, ನಾಯಕರು ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. +ಈ ಹಿಂದೆ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಸೇರಿ ಅನೇಕ ಪಕ್ಷಗಳು ಒಗ್ಗೂಡಿ ಮಹಾವಿಕಾಸ ಅಘಾಡಿ ಸರ್ಕಾರವನ್ನು ರಚಿಸಿದ್ದವು. ಶಿವಸೇನೆಯನ್ನು ಇಬ್ಬಾಗಿಸಿದ ಬಿಜೆಪಿ ಅದರ ನಾಯಕ ಏಕನಾಥ್‍ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿತ್ತು. ಮುಂದುವರೆದ ಭಾಗದಲ್ಲಿ ಎನ್‍ಸಿಪಿಯ ಅಜಿತ್ ಪವಾರ್ ಕೂಡ ಪಕ್ಷದಿಂದ ಹೊರ ಹೋಗಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿದ್ದಾರೆ. ಸರ್ಕಾರ ಪತನವಷ್ಟೆ ಅಲ್ಲ ಮಹಾರಾಷ್ಟ್ರದ ಎರಡು ಪ್ರಬಲ ಪ್ರಾದೇಶಿಕ ಪಕ್ಷಗಳಾದ ಶಿವಸೇನೆ, ಎನ್‍ಸಿಪಿಗಳೇ ಇಬ್ಬಾಗವಾಗಿವೆ. +ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡ ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ಭಾರೀ ಬಹುಮತವಿದ್ದರೂ ಅದನ್ನು ಕದಲಿಸಲು ಒಳಗೊಳಗೆ ಸಂಚುಗಳು ನಡೆಯುತ್ತಿವೆ ಎಂಬ ವದ್ಧಂತಿಗಳು ವ್ಯಾಪಕವಾಗಿವೆ. +ನನ್ನ ಶಕ್ತಿಯ ಮೂಲ ನನ್ನ ಅಜ್ಜಿ : ರಾಹುಲ್‍ ಗಾಂಧಿ +ಇತ್ತೀಚೆಗೆ ಕಾಂಗ್ರೆಸ್‍ನ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ರವಿ ದಾವಣಗೆರೆಯಲ್ಲಿ ಹೇಳಿಕೆ ನೀಡಿ ಬಿಜೆಪಿಯವರು ಕಾಂಗ್ರೆಸ್‍ನ ನಾಲ್ವರು ಶಾಸಕರನ್ನು ಭೇಟಿ ಮಾಡಿ 50 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನ ನೀಡುವ ಆಮಿಷವೊಡ್ಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದ್ದರು. ಮೂಲಗಳ ಪ್ರಕಾರ ಕಾಂಗ್ರೆಸ್‍ನಲ್ಲಿ ಸಚಿವ ಸ್ಥಾನ ಸಿಗದೆ ಅತೃಪ್ತಗೊಂಡ 66 ಶಾಸಕರ ಪಟ್ಟಿಯನ್ನು ಬಿಜೆಪಿ ನಾಯಕರು ತಯಾರು ಮಾಡಿಕೊಂಡಿದ್ದು, ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂಬ ಆರೋಪಗಳಿವೆ. +ಇದಕ್ಕೆ ಪೂರಕವಾಗಿ ಬಿಜೆಪಿಯ ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎನ್ನುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‍ನ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಶೀಘ್ರವೇ ಪತವಾಗಲಿದೆ ಎಂದಿದ್ದರು. ತಮ್ಮ ಸರ್ಕಾರವನ್ನು ಪತನಗೊಳಿಸುವ ಸಂಚು ನಡೆದಿರುವುದನ್ನು ಖುದ್ದು ಮುಖ್ಯಮಂತ್ರಿಯವರೂ ಒಪ್ಪಿಕೊಂಡಿದ್ದರು. +ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ +ಇಂದು ಮಾಜಿ ಉಪಪ್ರಧಾನಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದಲ್ಲಿ ಪ್ರತಿಜ್ಞಾವಿ ಬೋಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿಯವರು, ಬಿಜೆಪಿಯವರ ಹೇಳಿಕೆಗಳಿಗೆ ಉಪ್ಪು ಖಾರ ಹಾಕಲಾಗುತ್ತಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಸ್ಥಿರತೆಯಿಂದ ಕೂಡಿದೆ. ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬಿದ್ದು ಹೋಗಲು ಸಾಧ್ಯವಿಲ್ಲ ಎಂದು ದೃಢವಾಗಿ ಹೇಳಿದರು. \ No newline at end of file diff --git a/eesanje/url_46_321_2.txt b/eesanje/url_46_321_2.txt new file mode 100644 index 0000000000000000000000000000000000000000..60464a7472cedd04422258c89f29a3acaa1c1a43 --- /dev/null +++ b/eesanje/url_46_321_2.txt @@ -0,0 +1,10 @@ +ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಗಣ್ಯರಿಂದ ಶುಭಾಶಯ +ಬೆಂಗಳೂರು,ನ.1- ಕನ್ನಡ ಭಾಷಿಕರು, ಪ್ರದೇಶ ಏಕೀಕರಣವಾದ ರಾಜ್ಯೋತ್ಸವ ಸಡಗರ ಹಾಗೂ ಕರ್ನಾಟಕ ಎಂಬ ಮರು ನಾಮಕರಣವಾಗಿ 50ನೇ ವರ್ಷಕ್ಕೆ ಪದಾರ್ಪಣೆ ಮಾಡಿದ ಸುವರ್ಣ ಸಂಭ್ರಮ ರಾಜ್ಯಾದ್ಯಂತ ಮನೆ ಮಾಡಿದೆ. +ಕನ್ನಡಿಗರ ಅಸ್ತಿತ್ವ ಮತ್ತು ಆಸ್ಮಿತೆಯ ಸಂಕೇತವಾಗಿರುವ ಹಳದಿ-ಕೆಂಪು ಬಾವುಟ ಇಂದು ರಾಜ್ಯದೆಲ್ಲೆಡೆ ಹಾರಾಡುತ್ತಿದ್ದು, ಎಲ್ಲೆಡೆ ಕನ್ನಡ ಡಿಂಡಿಮ ಮೊಳಗಲಿದೆ. ಈ ಸುದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಗಣ್ಯರು ಸಾಮಾಜಿಕ ಜಾಲತಾಣ ಮೂಲಕ ರಾಜ್ಯದ ಜನತೆಗೆ ಶುಭ ಹಾರೈಸಿದ್ದಾರೆ. +ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದಿರುವ ಸಿಎಂ ಸಿದ್ದರಾಮಯ್ಯ, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. +ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ +1973ರ ನವೆಂಬರ್ 1ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡ ಭಾಷೆಯಷ್ಟೇ ಸೀಮಿತ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದಿದ್ದಾರೆ.ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಹೀಗೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಭಕೋರಿದರು. +ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ಕರ್ನಾಟಕವೆಂದು ಹೆಸರಾಗಿ ಇಂದಿಗೆ 50 ವರ್ಷ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆ ಯನ್ನು ಮುಗಿಲೆತ್ತರಕ್ಕೆ ಹಾರೈಸೋಣ. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿ ಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶುಭ ಹಾರೈಸಿದ್ದಾರೆ. +ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ +ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ನಾಡಿನ ಏಕೀಕರಣಕ್ಕೆ ಹೋರಾಡಿದ ಎಲ್ಲ ಮಹನೀಯರ ಸಂಸ್ಮರಣೆಗಳ ಜೊತೆಗೆ ಕನ್ನಡ ಉಳಿಸುವ, ಬೆಳೆಸುವ ದೃಢಸಂಕಲ್ಪ ಸದಾ ನಮ್ಮದಾಗಿರಲಿ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಅಭಿಮಾನಪೂರ್ವಕ ಶುಭಾಶಯಗಳು ಎಂದು ಶುಭಾಶಯ ಕೋರಿದ್ದಾರೆ. +ವಿಶ್ವದ ಸಮಸ್ತ ಕನ್ನಡಿಗರಿಗೆ 68ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಕರ್ನಾಟಕ..! ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು. ಜಗದಗಲ ಹಬ್ಬಲಿ ಕರ್ನಾಟಕ ಸಂಭ್ರಮ, ಮೊಳಗಲಿ ಕನ್ನಡ ಡಿಂಡಿಮ. ವಿಶ್ವದಾದ್ಯಂತ ನೆಲೆಸಿರುವ ಸಮಸ್ತ ಹೆಮ್ಮೆಯ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂದು ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. \ No newline at end of file diff --git a/eesanje/url_46_321_3.txt b/eesanje/url_46_321_3.txt new file mode 100644 index 0000000000000000000000000000000000000000..2bea8620b109eea47bee243fad26f3293c8d7895 --- /dev/null +++ b/eesanje/url_46_321_3.txt @@ -0,0 +1,7 @@ +ಕನ್ನಡಿಗರಿಗೆ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ಮೋದಿ +ನವದೆಹಲಿ, ನ.1- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರುನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. +ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. ಕರ್ನಾಟಕ ಮತ್ತಷ್ಟು… +ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಮೋದಿ ಅವರು, ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ. +ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ +ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಪೋರ್ತಿಯಾಗಲಿ ಎಂದು ಹಾರೈಸಿದ್ದಾರೆ. +ಕನ್ನಡಿಗರು ಫಿದಾ:ಕರ್ನಾಟಕ ರಚನೆಯಾಗಿ 50ನೆ ವರ್ಷದ ಸುವರ್ಣ ಮಹೋತ್ಸವಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲೇ ಬಂದಿರುವ ಈ ಬಾರಿಯ ಕನ್ನಡ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ಕೋರಿರುವುದಕ್ಕೆ ನಾಡಿನ ಜನ ಫಿದಾ ಆಗಿದ್ದಾರೆ. \ No newline at end of file diff --git a/eesanje/url_46_321_4.txt b/eesanje/url_46_321_4.txt new file mode 100644 index 0000000000000000000000000000000000000000..1324b19d607daf97b4cee556479075113cffcc25 --- /dev/null +++ b/eesanje/url_46_321_4.txt @@ -0,0 +1,9 @@ +ಕರಾಳ ದಿನಾಚರಣೆ ಮಾಡುವವರಿಗೆ ತಾಯಿನೆಲದ ತಿಳುವಳಿಕೆ ಬೇಕು : ಸತೀಶ್ ಜಾರಕಿಹೊಳಿ +ಬೆಂಗಳೂರು, ನ.1- ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. +ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಂಘಟನೆಯವರು ಸರ್ಕಾರದ ಅನುಮತಿ ಇಲ್ಲದೆಯೂ ಕರಾಳ ದಿನಾಚರಣೆ ಮಾಡುತ್ತಾರೆ. ಇಲ್ಲಿಯೇ ವಾಸ ಮಾಡುವ ಅವರಿಗೆ ತಿಳುವಳಿಕೆ ಬರಬೇಕು. ಹಕ್ಕುಗಳಿಗಾಗಿ ಭಾಷಣ ಮಾಡಲಿ, ಆದರೆ ಸರ್ಕಾರವನ್ನು ವಿರೋಧ ಮಾಡುವುದು ಸರಿಯಲ್ಲ ಎಂದರು. +ಯಾವುದೇ ಕಾರ್ಯಕ್ರಮವಾದರೂ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿ. ಒಂದು ವೇಳೆ ರಕ್ಷಣೆ ನೀಡದೆ ಇದ್ದರೆ ಗಲಾಟೆಯಾದರೆ ಯಾರು ಹೊಣೆ ಅದಕ್ಕಾಗಿ ರಕ್ಷಣಾ ವ್ಯವಸ್ಥೆ ಮಾಡಲಾಗುತ್ತದೆ. ಅದನ್ನು ಎಂಇಎಸ್‍ಗೆ ರಕ್ಷಣೆ ಎಂದು ಬಿಂಬಿಸಬೇಕಿಲ್ಲ ಎಂದರು. +ಸರ್ಕಾರ ನಾಡ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುತ್ತದೆ. ಆದರೆ ಪ್ರಕರಣ ನ್ಯಾಯಾಲಯಕ್ಕೆ ಹೋದ ಮೇಲೆ ನಾವು ಏನು ಮಾಡಲಾಗುವುದಿಲ್ಲ. ನ್ಯಾಯಾಲಯದಲ್ಲಿ ಜಾಮೀನು ದೊರೆಯುತ್ತದೆ, ಕೆಲವೊಮ್ಮೆ ಪ್ರಕರಣವು ವಜಾಗೊಳ್ಳುತ್ತದೆ ಎಂದರು. +ಸರ್ಕಾರಿ ಶಾಲೆಗಳಿಗೆ ನೀರು-ವಿದ್ಯುತ್ ಉಚಿತ : ಸಿಎಂ ಘೋಷಣೆ +ಈ ಬಾರಿ ಮುನ್ನೆಚ್ಚರಿಕೆಯಾಗಿ 35 ಜನರನ್ನು ಬಂಧಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿದ್ದ ಪೊಲೀಸ್ ಅಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು. ಮುಂದುವರೆದ ಸಚಿವ ಸತೀಶ್ ಜಾರಕಿಹೊಳಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಎಂಬುದು ಎಲ್ಲಾ ಕಡೆಯಿಂದ ಪಕ್ಷಾತೀತವಾಗಿ ಬೇಡಿಕೆಯಾಗಿದೆ. ಆದರೆ ಅದಕ್ಕೂ ಮಹೂರ್ತ ಕೂಡಿ ಬರಬೇಕು, ಹಣಕಾಸು ಲಭ್ಯತೆ ನೋಡಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು. +ಜಿಲ್ಲಾ ವಿಭಜನೆಗೂ ಮೊದಲು ಬೆಳಗಾವಿ ತಾಲ್ಲೂಕು ವಿಭಜನೆಯಾಗಬೇಕಿದೆ. ಪ್ರಸ್ತುತ ತಾಲ್ಲೂಕಿನಲ್ಲಿ ಎಂಟುವರೆ ಲಕ್ಷ ಮತದಾರರಿದ್ದಾರೆ. 11 ಲಕ್ಷ ಜನಸಂಖ್ಯೆ ಇದೆ. ನಿಗದಿತ ಪ್ರಮಾಣಕ್ಕಿಂತಲೂ ಶೇ.20ರಷ್ಟು ಹೆಚ್ಚು ಜನಸಂಖ್ಯೆ ಇದೆ. ಉಡುಪಿ ಜಿಲ್ಲೆಯಲ್ಲಿ ಎಂಟು ಲಕ್ಷ ಜನಸಂಖ್ಯೆ ಇದ್ದರೇ ಅದಕ್ಕಿಂತಲೂ ಹೆಚ್ಚು ಜನ ಬೆಳಗಾವಿ ತಾಲ್ಲೂಕಿನಲ್ಲಿ ವಾಸಿಸುತ್ತಿದ್ದಾರೆ. ಆದಷ್ಟು ಶೀಘ್ರ ತಾಲ್ಲೂಕು ವಿಭಜನೆ ಮಾಡಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಚಿವ ಸಂಪುಟ ಸಭೆಯಲ್ಲಿ ಮನವಿ ಮಾಡಿದ್ದಾರೆ ಎಂದರು. +ಬೆಳಗಾವಿ ನಗರ ಒಂದು ತಾಲ್ಲೂಕು ಆಗಲಿದೆ, ಬೆಳಗಾವಿ ಗ್ರಾಮೀಣ ಪ್ರತ್ಯೇಕ ತಾಲ್ಲೂಕು ಆಗಲಿದೆ. ಬೆಳಗಾವಿ ಮಹಾನಗರ ಪಾಲಿಕೆಗೆ 12 ಗ್ರಾಮ ಪಂಚಾಯತ್‍ಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು. \ No newline at end of file diff --git a/eesanje/url_46_321_5.txt b/eesanje/url_46_321_5.txt new file mode 100644 index 0000000000000000000000000000000000000000..11bdce598ad983495af70030121f45878ecf3785 --- /dev/null +++ b/eesanje/url_46_321_5.txt @@ -0,0 +1,11 @@ +ಮುಂದಿನ ಅಧಿವೇಶನಕ್ಕೆ ಬಿಜೆಪಿ ಶಾಸಕಾರು ಗೈರು..? +ಬೆಂಗಳೂರು,ನ.1- ಕೂಡಲೇ ವಿಧಾನಸಭೆ ಹಾಗೂ ವಿಧಾನಪರಿಷತ್‍ನ ಪ್ರತಿಪಕ್ಷದ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡದಿದ್ದರೆ ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗುವುದಾಗಿ ಬಿಜೆಪಿ ಶಾಸಕರು ಬೆದರಿಕೆ ಹಾಕಿದ್ದಾರೆ. ಮಂಗಳವಾರ ಸಂಜೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುತೇಕ ಶಾಸಕರು ಬೆಳಗಾವಿ ಅಧಿವೇಶನ ಆರಂಭವಾಗುವುದರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಸದನಕ್ಕೆ ಹೋಗುವುದೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. +ನಾವು ವರಿಷ್ಠರ ವಿರುದ್ಧವಾಗಿ ನಡೆದುಕೊಳ್ಳುತ್ತಿಲ್ಲ. ಆದರೆ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಆರು ತಿಂಗಳು ಮುಗಿಯುತ್ತಾ ಬಂದಿದೆ. ಈವರೆಗೂ ವಿಧಾನಸಭೆ ಹಾಗೂ ವಿಧಾನಪರಿಷತ್‍ಗೆ ಪ್ರತಿಪಕ್ಷದ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಿಲ್ಲ ಎಂದರೆ ಸದನದಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾದರೂ ಹೇಗೆ ಎಂದು ಬಿಎಸ್‍ವೈ ಬಳಿ ಅನೇಕ ಶಾಸಕರು ಅಳಲು ತೋಡಿಕೊಂಡಿದ್ದಾರೆ. +ಆಡಳಿತ ಪಕ್ಷದವರು ಪ್ರತಿ ಹಂತದಲ್ಲೂ ನಮ್ಮನ್ನು ಸದನದ ಒಳಗೆ ಮತ್ತು ಹೊರಗೂ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಎಂದು ಟೀಕಿಸುತ್ತಾರೆ. ಒಂದೊಂದು ವೈಫಲ್ಯವನ್ನು ಮುಂದಿಡಲು ಮುಂದಾಗುತ್ತಿದ್ದಂತೆ ಈ ಪ್ರಶ್ನೆಯನ್ನೇ ಮುಂದಿಟ್ಟು ನಮ್ಮ ಬಾಯಿ ಮುಚ್ಚಿಸುತ್ತಾರೆ ಎಂದು ಶಾಸಕರು ಹೇಳಿಕೊಂಡಿದ್ದಾರೆ. +ಶಾಸಕರ ನೋವಿಗೆ ದನಿಗೂಡಿಸಿರುವ ಯಡಿಯೂರಪ್ಪ , ಹಿಂದೆ ನಾನು ದೆಹಲಿಗೆ ಭೇಟಿ ನೀಡಿದ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಕ್ಷಣವೇ ವಿಧಾನಸಭೆ ಹಾಗೂ ಪ್ರತಿಪರಿಷತ್‍ಗೆ ಸೂಕ್ತರಾದವರನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದ್ದೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಆಯ್ಕೆ ಮಾಡುವ ಆಶ್ವಾಸನೆ ಕೊಟ್ಟಿದ್ದರು. ಆದರೂ ಈಗಲೂ ಮಾಡದಿರುವುದು ವೈಯಕ್ತಿಕವಾಗಿ ನನಗೂ ಬೇಸರ ತಂದಿದೆ ಎಂದು ಹೇಳಿದ್ದಾರೆ. +ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಅಧಿಕಾರ ಅವಧಿ ಮುಗಿದು ಹಲವು ತಿಂಗಳೇ ಕಳೆದಿದೆ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಅರ್ಹರನ್ನೇ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಮನವಿ ಮಾಡಲಾಗಿತ್ತು. ಇದರ ಬಗ್ಗೆಯೂ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.ಸರ್ಕಾರವನ್ನು ಪ್ರಶ್ನಿಸಲು ಅನೇಕ ಹಗರಣಗಳಿವೆ. ಸದನದಲ್ಲಿ ನಾವು ಇದರ ಬಗ್ಗೆ ಗಟ್ಟಿಯಾಗಿ ದನಿ ಎತ್ತಬೇಕು. ಆದರೆ ನಮ್ಮಲ್ಲಿ ಪ್ರತಿಪಕ್ಷದ ನಾಯಕ ಇಲ್ಲದಿರುವಾಗ ನಾವು ಯಾರ ಸಾರಥ್ಯದಲ್ಲಿ ಸದನದೊಳಗೆ ಹೋರಾಟ ನಡೆಸಬೇಕು ಎಂಬುದೇ ಗೊತ್ತಾಗುತ್ತಿಲ್ಲ. +ಜೈಲಿನಿಂದ ಬಿಡುಗಡೆಯಾಗಿ ಮನೆ ಸೇರಿದ ಚಂದ್ರಬಾಬು ನಾಯ್ಡು +ಎಷ್ಟು ದಿನ ನಾವು ಸದನದಲ್ಲಿ ಸರ್ಕಾರದಿಂದ ಕುಹುಕ, ವ್ಯಂಗ್ಯ ಮಾತುಗಳನ್ನು ಕೇಳಬೇಕು, ಸದನದಲ್ಲಿ ಸ್ವಾಭಿಮಾನ ಬಿಟ್ಟು ಕೂರಬೇಕೆ ಎಂದು ಬಿಎಸ್‍ವೈ ಬಳಿ ಬೆಂಗಳೂರಿನ ಹಿರಿಯ ಶಾಸಕರೊಬ್ಬರು ನೋವು ಹೊರಹಾಕಿದ್ದಾರೆ. +ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ಅವೇಶನ ಮುಗಿದಿದೆ. ಅಧಿಕೃತ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ ಬೆಳಗಾವಿ ಅವೇಶನಕ್ಕೆ ಹೋಗುವುದರಲ್ಲಿ ಅರ್ಥವೇ ಇಲ್ಲ. ತಕ್ಷಣವೇ ದೆಹಲಿ ನಾಯಕರ ಬಳಿ ಚರ್ಚಿಸಿ ಇದಕ್ಕೊಂದು ಅಂತ್ಯ ಹಾಡಬೇಕೆಂದು ಶಾಸಕರು ಕೇಳಿಕೊಂಡಿದ್ದಾರೆ. +ನವೆಂಬರ್ ತಿಂಗಳ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯದಿದ್ದರೆ ಬೆಳಗಾವಿ ಅಧಿವೇಶನಕ್ಕೆ ನಾವು ಹೋಗುವುದೇ ಇಲ್ಲ. ನಮ್ಮನ್ನು ಮುಜುಗರ ಮಾಡಬೇಕೆಂಬ ಉದ್ದೇಶ ರಾಷ್ಟ್ರೀಯ ನಾಯಕರಿಗಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. +ಶಾಸಕರು ಇದರ ಬಗ್ಗೆ ಬಹಿರಂಗ ಹೇಳಿಕೆ ಕೊಡುವ ಅಗತ್ಯವಿಲ್ಲ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಕಾರಣ ರಾಷ್ಟ್ರೀಯ ನಾಯಕರು ಪ್ರಚಾರದಲ್ಲಿ ತೊಡಗಿದ್ದಾರೆ. ನಾನೇ ದೆಹಲಿಗೆ ತೆರಳಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಬಿಎಸ್‍ವೈ ಶಾಸಕರಿಗೆ ಆಶ್ವಾಸನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_321_6.txt b/eesanje/url_46_321_6.txt new file mode 100644 index 0000000000000000000000000000000000000000..4f56a4f0a38428bcb06edddaaeb1217b661b5171 --- /dev/null +++ b/eesanje/url_46_321_6.txt @@ -0,0 +1,7 @@ +ಕೊನೆಗೂ ಸೆರೆಸಿಕ್ಕ ಚಿರತೆ, ನಿಟ್ಟುಸಿರುಬಿಟ್ಟ ನಾಗರಿಕರು +ಬೆಂಗಳೂರು,ನ.1- ನಗರದ ಹೊರವಲಯದಲ್ಲಿ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದು, ಸುತ್ತಮುತ್ತಲ ನಾಗರಿಕರು ನಿಟ್ಟುಸಿರು ಬಿಟ್ಟಿದ್ದಾರೆ.ಸೆರೆಸಿಕ್ಕ ಚಿರತೆಯನ್ನು ಅರಣ್ಯಾಧಿಕಾರಿಗಳು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಿದ್ದಾರೆ. ಇಂದು ಮುಂಜಾನೆಯಿಂದಲೇ ಈ ಚಿರತೆಯ ಸೆರೆಗಾಗಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. +ಅರವಳಿಕೆ ಚುಚ್ಚುಮದ್ದು ನೀಡಲು ಪಶು ವೈದ್ಯಾಧಿಕಾರಿ ಮುಂದಾಗುತ್ತಿದ್ದಂತೆ ಚಿರತೆ ಇವರ ಮೇಲೆ ದಾಳಿ ಮಾಡಿದೆ. ಇವರ ಕುತ್ತಿಗೆ ಭಾಗದಲ್ಲಿ ಗಾಯವಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದಾದ ಕೆಲವೇ ನಿಮಿಷಗಳ ನಂತರ ಚಿರತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಪ್ರೇ ಮಾಡಲು ಮುಂದಾದಾಗ ಅವರ ಮೇಲೂ ಚಿರತೆ ದಾಳಿ ಮಾಡಿದ್ದು, ಗಾಯಗೊಂಡಿರುವ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. +ಕಳೆದ ಶನಿವಾರ ಬೊಮ್ಮನಹಳ್ಳಿಯ ಕೂಡ್ಲುಗೇಟ್ ಸಮೀಪದ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದ ಪಾಳು ಮನೆಯೊಂದರಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡಿದ್ದ ಸ್ಥಳೀಯ ಜನತೆ ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. +ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ +ಚಿರತೆ ಇದ್ದ ಪಾಳು ಮನೆ ಸುತ್ತಮುತ್ತ ಎರಡು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಪೊದೆ ಬೆಳೆದುಕೊಂಡಿದ್ದರಿಂದ ಅದನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಚಿರತೆ ಓಡಾಡುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಚಿರತೆ ಬಹಿರಂಗವಾಗಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಬೇಟೆಗಾಗಿ ಹರಸಾಹಸ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. +ಹೀಗಾಗಿ ಚಿರತೆ ಹುಡುಕಾಟಕ್ಕಾಗಿ ಮೈಸೂರು ಅರಣ್ಯ ಇಲಾಖೆಯ ವಿಶೇಷ ತಂಡವನ್ನು ಕರೆಸಿಕೊಳ್ಳಲಾಗಿತ್ತು. ಅರಣ್ಯ ವಿಭಾಗದ ಎಲ್ಲ ತಂಡಗಳು ಸತತ ಕಾರ್ಯಾಚರಣೆ ನಡೆಸಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿವೆ. \ No newline at end of file diff --git a/eesanje/url_46_321_7.txt b/eesanje/url_46_321_7.txt new file mode 100644 index 0000000000000000000000000000000000000000..4282d34e96c2001d2163ad7445d56d1d91a4c536 --- /dev/null +++ b/eesanje/url_46_321_7.txt @@ -0,0 +1,7 @@ +ಶಾಸಕರಿಗೆ 50 ಕೋಟಿ ಆಮಿಷವೊಡ್ಡಿದ್ದು ಯಾರೆಂದು ಬಹಿರಂಗಪಡಿಸಿ : ಯತ್ನಾಳ್ ಸವಾಲ್ +ವಿಜಾಪುರ,ನ.1- ನಮ್ಮ ಪಕ್ಷದ ಯಾರೊಬ್ಬರೂ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸೇರುವಂತೆ 50 ಕೋಟಿ ಹಣದ ಆಮಿಷವೊಡ್ಡಿರುವ ಆಡಿಯೋ ಇಲ್ಲವೆ ವಿಡಿಯೋಗಳಿದ್ದರೆ ಕೂಡಲೇ ಸಾರ್ವಜನಿಕವಾಗಿ ಬಹಿರಂಗಪಡಿಸಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರಿಗೆ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದಾರೆ. ಆಡಳಿತ ನಡೆಸಲು ಆಗದವರು ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆಪರೇಷನ್ ಕಮಲದ ಹುಸಿ ಸುದ್ದಿಯನ್ನು ತೇಲಿಬಿಟ್ಟಿದ್ದಾರೆ. ಒಂದು ವೇಳೆ ಶಾಸಕರಿಗೆ ಹಣದ ಆಮಿಷವೊಡ್ಡಿರುವ ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಹಿಂದೇಟು ಏಕೆ ಎಂದು ಪ್ರಶ್ನೆ ಮಾಡಿದರು. +100, 50 ಕೋಟಿ ಎಂದು ಹೇಳುತ್ತಿರುವವರು ಮಾರುಕಟ್ಟೆಯಲ್ಲಿ ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ. ಯಾರಾದರೂ ಕರೆಯಲಿ ಎಂದು ಇವರೇ ಹಣದ ಅಂತೆಕಂತೆಗಳನ್ನು ಸೃಷ್ಟಿಸುತ್ತಿದ್ದಾರೆ. ದಾಖಲೆಗಳಿದ್ದರೆ ಬಿಡುಗಡೆ ಮಾಡಲು ಹಿಂದೇಟು ಏಕೆ? ಇನ್ನು ಯಾವುದಾದರೂ ಮುಹೂರ್ತ ಕೂಡಿಬರಬೇಕೇ ಎಂದು ಪರೋಕ್ಷವಾಗಿ ಶಾಸಕ ರವಿ ಗಾಣಿಗ ವಿರುದ್ಧವೂ ವಾಗ್ದಾಳಿ ನಡೆಸಿದರು. +ಇಟಲಿಯಿಂದ ಪಂಜಾಬ್‍ಗೆ ಬಂದು ಪತ್ನಿ ಕೊಂದ ಅನಿವಾಸಿ ಭಾರತೀಯ +ಯಾವುದೇ ಕಾರಣಕ್ಕೂ ನಾವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುವುದಿಲ್ಲ. ಈಗಾಗಲೇ 5 ತಿಂಗಳಲ್ಲಿ ಸರ್ಕಾರದ ಹಣೆಬರಹ ಏನೆಂಬುದು ಜನತೆಗೆ ಗೊತ್ತಾಗಿದೆ. ನನ್ನ ರಾಜಕೀಯ ಅನುಭವದಲ್ಲಿ ಹೇಳುವುದಾದರೆ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗದ ಮಹಾನ್ ನಾಯಕರೊಬ್ಬರು ಮಧ್ಯವರ್ತಿಗಳನ್ನು ಮುಂದಿಟ್ಟುಕೊಂಡು ಸಿ.ಡಿ ನಾಟಕ ಮಾಡಿದರು. +ಕಾಂಗ್ರೆಸ್ ಪಕ್ಷದಲ್ಲಿ ಸಿ.ಡಿ ತಯಾರಿಸುವ ಕಂಪನಿಯೇ ಇದೆ. ಇದಕ್ಕೆ ಪ್ರಮುಖ ನಾಯಕರೊಬ್ಬರು ಮುಖ್ಯಸ್ಥರೆಂದು ಆರೋಪಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆಡಳಿತ ನಡೆಸಲು ಅವಕಾಶ ನೀಡದ ಕೆಲವರು ಹೇಗಾದರೂ ಮಾಡಿ ಮುಖ್ಯಮಂತ್ರಿಯಾಗಬೇಕೆಂದು ಹವಣಿಸುತ್ತಿದ್ದಾರೆ. ಕುರ್ಚಿ ಸಿಗುವುದಿಲ್ಲ ಎಂಬುದು ಗೊತ್ತಾಗುತ್ತಿದ್ದಂತೆ ತಮ್ಮ ಬೆಂಬಲಿಗರ ಮೂಲಕ ಆಪರೇಷನ್ ಕಮಲ ಕೃಪಾಪೊಷಿತ ನಾಟಕವನ್ನು ಮಾಧ್ಯಮದ ಮುಂದೆ ಬಿಡುತ್ತಾರೆ. ಎಲ್ಲವೂ ಸದ್ಯದಲ್ಲೇ ಬಹಿರಂಗವಾಗಲಿದೆ. ಕಾದು ನೋಡಿ ಎಂದು ಯತ್ನಾಳ್ ಹೇಳಿದರು. \ No newline at end of file diff --git a/eesanje/url_46_321_8.txt b/eesanje/url_46_321_8.txt new file mode 100644 index 0000000000000000000000000000000000000000..714f4e00e2b51624558338708ca82a4757b9924f --- /dev/null +++ b/eesanje/url_46_321_8.txt @@ -0,0 +1,14 @@ +ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ : ಡಿಸಿಎಂ +ಬೆಂಗಳೂರು, ನ.1- ಬಸ್ ಗೆ ಬೆಂಕಿ ಹಚ್ಚುವುದರಲ್ಲಿ ಭಾಷೆ ಅಭಿಮಾನ ಇರುವುದಿಲ್ಲ. ರೈಲಿಗೆ ಬೆಂಕಿ ಹಚ್ಚುವುದರಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ. ಈ ದೇಶದ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬುದನ್ನು ಅರಿಯಬೇಕು. ಕನ್ನಡಾಭಿಮಾನ ನವೆಂಬರ್ ಒಂದಕ್ಕೆ ಸೀಮಿತವಾಗದಿರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. +ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಸರಾಯಿತು ಕರ್ನಾಟಕ ಉಸಿರಾಯಿತುಕನ್ನಡ, ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ತುಂಬಿದ ಸಂದರ್ಭದಲ್ಲಿ ಕನ್ನಡಿಗರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದರು. +ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲಿ ಚೂಡಾಮಣಿ ಆಗು, ಕನ್ನಡ ಜ್ಯೋತಿ ಬೆಳಗು ಜಗಕೆಲ್ಲ ಎಂಬ ಕವಿವಾಣಿಯನ್ನು ಸ್ಮರಿಸಿಕೊಂಡ ಅವರು, ಕನ್ನಡ.. ಕನ್ನಡಿಗ..ಕರ್ನಾಟಕ… ಈ ಮೂರಕ್ಕೂ ನವೆಂಬರ್ 1 ಕ್ಕೂ ಬಿಡಿಸಲಾರದ ನಂಟು. ಆದರೆ ಕನ್ನಡದ ಅಭಿಮಾನ ಬರೀ ನವೆಂಬರ್ 1 ಕ್ಕೆ ಸೀಮಿತ ಆಗದಿರಲಿ. ಕನ್ನಡ ಹೃದಯದ ಭಾಷೆಯಾಗಲಿ, ಕನ್ನಡ ಮನಸ್ಸಿನ ಭಾಷೆಯಾಗಲಿ ಎಂದರು. +ಅನೇಕ ಹಿರಿಯರು ಕನ್ನಡದ ಬಗ್ಗೆ ವಿವಿಧ ರೀತಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಅಂಕುಶದಿಂದ ಚುಚ್ಚಿದರೂ ನಾನು ಹುಟ್ಟಿದ ಊರನ್ನು ಮರೆಯುವುದಿಲ್ಲ ಎಂದು ಪಂಪ ಹೇಳಿದ್ದಾರೆ. ಕುರಾನಿನಲ್ಲಿ ಹೇಳುತ್ತಾರೆ, ಸ್ವರ್ಗವು ತಂದೆ-ತಾಯಿಯ ಪಾದದ ಕೆಳಗೆ ಇದೆ ಎಂದು. ಅಂದರೆ ತಂದೆ-ತಾಯಿ ಸ್ಪರ್ಶಿಸಿದ ನೆಲವೇ ಸ್ವರ್ಗ ಎಂದು. ನಮಗೆ ಆ ಸ್ವರ್ಗ ಕರ್ನಾಟಕ. ತುಂಗಾ, ಭದ್ರಾ, ಕೃಷ್ಣ, ಕಾವೇರಿ ಹರಿಯುವ ಈ ತಾಯಿ ನೆಲವೇ ನಮಗೆ ಸ್ವರ್ಗ ಎಂದರು. +ಕನ್ನಡದಲ್ಲಿ ಬೇಡಿಕೊಂಡರೆ ಹರಿ ವರಗಳ ಮಳೆ ಗರೆಯುತ್ತಾನೆ. ಹರ ಮುನಿಯದೆ ಪೊರೆಯುತ್ತಾನೆ ಎಂದು ಕುವೆಂಪು ಹೇಳುತ್ತಾರೆ. ಕರ್ನಾಟಕದ ಏಕೀಕರಣಕ್ಕೆ ಹೋರಾಡಿದ ಲಕ್ಷಾಂತರ ಜನರನ್ನ ನೆನೆಯೋಣ ಎಂದು ಕರೆ ನೀಡಿದ ಅವರು, 2000 ವರ್ಷಗಳ ಇತಿಹಾಸ ಇರುವ ಕನ್ನಡ ಮರೆತರೆ ತಾಯಿಯನ್ನು ಮರೆತಂತೆ ಎಂದು ನಾವು ಅರಿಯಬೇಕಿದೆ ಎಂದರು. +ನಾವು ಕೋಮು ದ್ವೇಷಕ್ಕೆ ಸಿಲುಕದೆ, ಕರ್ನಾಟಕದ ಮನಸ್ಸುಗಳನ್ನು ಒಡೆಯದೇ ಯಾವ ಹೊರಗಿನ ಶಕ್ತಿಗೂ ಹೆದರದೆ ಒಂದಾಗಿ ಬದುಕುತ್ತೇವೆ. ಸರ್ವಜನಾಂಗದ ಶಾಂತಿಯ ತೋಟ ಮರಳಿ ನಿರ್ಮಿಸುತ್ತೇವೆ ಎಂಬ ದೀಕ್ಷೆ ತೊಡೋಣ. ಬಹಳಷ್ಟು ಮಂದಿಯ ತ್ಯಾಗ ಮತ್ತು ಬಲಿದಾನದ ಫಲವೇ ಅಖಂಡ ಕರ್ನಾಟಕ. ಇದನ್ನು ಜೋಪಾನವಾಗಿ ಕಾಪಾಡಬೇಕು ಎಂದರು. +ನಾವು ಹುಟ್ಟಿದ ನಂತರ ಮಾತು ಕಲಿಯಲು ಎರಡು ವರ್ಷ ಬೇಕು. ಆದರೆ ಯಾವುದನ್ನು ಆಡಬಾರದು ಎಂಬುದನ್ನು ಕಲಿಯಲು ಇಡೀ ಜೀವಮಾನ ಸಾಲದು. ಕುವೆಂಪು ಅವರು ಹೇಳಿದಂತೆ ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ, ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು. ಛಿದ್ರ ಮಾಡುವವರು ಈಗಲೂ ನಮ್ಮ ಸುತ್ತ ಇದ್ದಾರೆ. ಅವರಿಗೆ ಕುವೆಂಪು ಅವರ ಈ ಹಾಡನ್ನು ಕೇಳಿಸಬೇಕು ಎಂದರು. +ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕರ್ನಾಟಕ ನೆಲ, ಜಲ, ಭಾಷೆಯಿಂದ ಸಂವೃದ್ಧಗೊಂಡಿದೆ. ವ್ಯಾಪಕ ಉದ್ಯೋಗ ಅವಕಾಶಗಳಿವೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 13 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಉಳಿದ ಅಗತ್ಯ ಇರುವ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಲಾಗುವುದು. 8311 ಹೊಸ ಕೊಠಡಿಗಳನ್ನು ಬಜೆಟ್‍ನಲ್ಲಿ ಘೋಷಿಸಲಾಗಿದೆ. 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಯೋಜಿಸಲಾಗಿದೆ. 2024-25ನೇ ಸಾಲಿನಲ್ಲಿ 600 ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂದರು. +ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೇಸ್ತಾನ್ ಧ್ವಜ ಪ್ರದರ್ಶಿಸಿದ ನಾಲ್ವರು ಅರೆಸ್ಟ್ +ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಭಾರಿ ಪರೀಕ್ಷೆ ನಡೆಸಿ, ಸಾಧನೆ ಉತ್ತಮ ಪಡಿಸಲಾಗಿದೆ. ಅಪೌಷ್ಠಿಕತೆ ನಿವಾರಣೆಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೂರಕ ಆಹಾರವಾಗಿ ಮೊಟ್ಟೆ, ಚಿಕ್ಕಿ, ಬಾಳೆ ಹಣ್ಣು ವಿತರಿಸಲಾಗುತ್ತಿದೆ. ಈ ವರ್ಷದಿಂದ 9 ಮತ್ತು 10ನೇ ತರಗತಿಯ ಮಕ್ಕಳಿಗೂ ಪೂರಕ ಆಹಾರ ನೀಡಲಾಗುತ್ತಿದೆ. ಸ್ವಯಂ ಸೇವಾ ಸಂಘಗಳ ಸಹಯೋಗದಲ್ಲಿ ಹಾಲಿನೊಂದಿಗೆ ಹೆಚ್ಚಿನ ಪೋಷಕಾಂಶಗಳನ್ನು ನೀಡಲು ಈ ತಿಂಗಳಿನಿಂದಲೇ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ ಎಂದರು. +ಅರಣ್ಯ ಇಲಾಖೆ ಸಹಯೋಗದಲ್ಲಿ ಸಸ್ಯಶಾಮಲ ಯೋಜನೆಯಡಿ 50 ಲಕ್ಷ ಸಸಿ ನಡೆಸಲಾಗುತ್ತಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಸಲಾಗುತ್ತಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಬ್ಯಾಗ್ ಹೊರೆಯನ್ನು ಶೇ.50ರಷ್ಟು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. +ಮಲೆನಾಡಿನ ಗಾಂಧಿ ಎಂದು ಹೆಸರಾಗಿರುವ ಹೆಚ್.ಜಿ.ಗೋವಿಂದೇಗೌಡರ ಹೆಸರಿನಲ್ಲಿ ಉತ್ತಮ ಸರ್ಕಾರಿ ಶಾಲೆಗಳಿಗೆ ನೀಡಲಾಗುವ ಪ್ರಶಸ್ತಿಗಳು ಮೂರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದವು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಅವನ್ನು ಪುನರಾರಂಭಿಸಲಾಗಿದ್ದು, ನಗದು ಪುರಸ್ಕಾರವನ್ನು ಹೆಚ್ಚಿಸಲಾಗಿದೆ. ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಿಎಸ್‍ಆರ್ ನಿ ಬಳಕೆ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. +ಶಾಸಕ ರಿಜ್ಞಾನ್ ಅರ್ಷದ್ ಮಾತನಾಡಿ, ಕನ್ನಡ ನಾಡಿಗೆ ಅಕೃತವಾದ ಧ್ವಜ ಬೇಕಿದೆ. ಆರು ವರ್ಷದ ಹಿಂದೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮಾಡಿರುವ ಶಿಫಾರಸ್ಸನ್ನು ಆಧರಿಸಿ ನಾಡಿನ ಧ್ವಜಕ್ಕೆ ಮಾನ್ಯತೆ ದೊರೆಯಬೇಕು ಎಂದರು. \ No newline at end of file diff --git a/eesanje/url_46_321_9.txt b/eesanje/url_46_321_9.txt new file mode 100644 index 0000000000000000000000000000000000000000..c281f4310ce29e58b6a3959572a3c6a508909362 --- /dev/null +++ b/eesanje/url_46_321_9.txt @@ -0,0 +1,16 @@ +ಹಾಸನಾಂಬ ದರ್ಶನಕ್ಕೆ ಕ್ಷಣಗಣನೆ +ಹಾಸನ, ನ.1- ನಾಳೆಯಿಂದ ನ.15ರವರೆಗೆ ನಡೆಯುವ ಹಾಸನಾಂಬ ದರ್ಶನೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇವಸ್ಥಾನದ ಸುತ್ತಮುತ್ತ ಬ್ಯಾರಿಕೇಡ್ ನಿರ್ಮಾಣ ವಿದ್ಯುತ್ ಅಲಂಕಾರ , ಹೂವಿನ ಅಲಂಕಾರ ಸೇರಿದಂತೆ ಭಕ್ತರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ತಯಾರಿಗಳು ಮುಕ್ತಾಯದ ಹಂತದಲ್ಲಿ ಇದೆ. +ದೇವಸ್ಥಾನದ ಸುತ್ತಮುತ್ತ ಸೇರಿದಂತೆ ನಗರಸಭೆ ಎದುರು ರಸ್ತೆಯಿಂದ ದೇವಾಲಯದವರೆಗೆ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು ಹಾಗೂ ನೆಲಹಾಸು (ಮ್ಯಾಟ)ನ್ನು ಹಾಕಲಾಗಿದ್ದು ಅಲ್ಲಲ್ಲಿ ಫ್ಯಾನ್ ವ್ಯವಸ್ಥೆಯನ್ನು ಸಹ ಈ ಬಾರಿ ವಿಶೇಷವಾಗಿ ಮಾಡಲಾಗಿದೆ. +ಬ್ರಾಹ್ಮಣರ ಬೀದಿ ಸೇರಿದಂತೆ ಸಂತೆಪೇಟೆಯಿಂದ ಬರುವ ರಸ್ತೆ ಪಕ್ಕದಲ್ಲಿಯೂ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಇಲ್ಲಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ. ದೇವಾಲಯದ ಗೋಪುರದ ಬಲ ಭಾಗದಲ್ಲಿ ಒಂದು ಸಾವಿರದ ಟಿಕೆಟ್ ಹಾಗೂ ವಿವಿಐಪಿ ಪಾಸ್ ಗಳಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದ್ದು ಇಲ್ಲಿಯೇ ಟಿಕೆಟ್ ಕೌಂಟರ್ ಗಳನ್ನುತೆರೆಯಲಾಗಿದೆ. +ದೇವಾಲಯದ ಬಲಭಾಗದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ಬ್ಯಾರಿಕೆಡ್ ನಿರ್ಮಾಣ ಮಾಡಲಾಗಿದ್ದು ಜರ್ಮನ್ ಟೆಂಟ್ ಅನ್ನು ಸಹ ಹಾಕಲಾಗಿದೆ. ವೃದ್ಧರಿಗೆ ಪ್ರತ್ಯೇಕ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವುದು ಈ ಬಾರಿಯ ವಿಶೇಷವಾಗಿದೆ. +ನಗರಸಭೆ ಎದುರಿನ ಪ್ರವೇಶ ದ್ವಾರದಿಂದ ಅಂಗವಿಕಲರಿಗೆ ದರ್ಶನಕ್ಕೆ ಆಗಮಿಸಲು ವೀಲ್ಚೇರಿಗಳ ವ್ಯವಸ್ಥೆಯನ್ನು ಮಾಡಲಾಗಿದ್ದು ಪ್ರಮುಖ ಪ್ರವೇಶ ದ್ವಾರ ಹಾಗೂ ಇತರೆಡೇ ಪೊಲೀಸ್ ಹಾಗೂ ಹೋಂ ಗಾಡ್ರ್ಸ್‍ಗಳನ್ನು ನಿಯೋಜನೆ ಮಾಡಿ ಸುಲಲಿತ ಹಾಗೂ ತಡೆರಹಿತ ಭಕ್ತರ ಸಾಲು ಸಾಗಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. +ಸಿಸಿ ಕ್ಯಾಮರಾ ಕಣ್ಗಾವಲು:ಆಯಕಟ್ಟು ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೂ ಬಸ್ತ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಹಾಸನಾಂಬ ದೇವಾಲಯ ಗರ್ಭಗುಡಿಯ ಎಡಭಾಗದಲ್ಲಿ ಈ ಬಾರಿ ಕಂಟ್ರೋಲ್ ರೂಂ ತೆರೆಯಲಾಗಿದ್ದು, ಇಲ್ಲಿ ದೇವಾಲಯದ ಸುತ್ತಮುತ್ತ ಹಾಗೂ ಆಯಕಟ್ಟು ಪ್ರದೇಶದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ದಾಖಲಾಗುವ ಸಾರ್ವಜನಿಕರ ಚಲನ ವಲನ ನಿಗ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. +ಶಕ್ತಿ ಯೋಜನೆ : ಲಕ್ಷ ಲಕ್ಷ ಮಹಿಳಾ ಭಕ್ತರ ನಿರೀಕ್ಷೆ: ಶಕ್ತಿ ಯೋಜನೆ ಜಾರಿಯಲ್ಲಿ ಇರುವುದರಿಂದ ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಮಹಿಳಾ ಭಕ್ತರು ಈ ಬಾರಿ ಹಾಸನಾಂಬ ದರ್ಶನೋತ್ಸವಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿದ್ದು ಮಹಿಳೆಯರಿಗೆ ಶೌಚಾಲಯ, ಕುಡಿಯುವ ನೀರು, ಮಜ್ಜಿಗೆ ಸೇರಿದಂತೆ ಮಹಿಳಾ ಪೊಲೀಸ್ ನಿಯೋಜನೆ ಹೆಚ್ಚಿಸಿದೆ. ದೇವಾಲಯಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ಈ ಬಾರಿ ದೊನ್ನೆ ಪ್ರಸಾದ ವಿತರಣೆಯನ್ನು ದೇವಿ ದರ್ಶನದ ಬಳಿಕ ನೀಡಲಾಗುವುದು ಎಂದು ದೇವಸ್ಥಾನ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಮಾರುತಿ ಮಾಹಿತಿ ನೀಡಿದ್ದಾರೆ. +ಅಧಿಕಾರಿಗಳಿಂದ ಪರಿಶೀಲನೆ:ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜಿತಾ, ದೇವಸ್ಥಾನ ಆಡಳಿತ ಅಧಿಕಾರಿ ಮಾರುತಿ ಸೇರಿದಂತೆ ಇತರೆ ಕಂದಾಯ ಅಧಿಕಾರಿಗಳು ದೇವಾಲಯದ ಸುತ್ತಮುತ್ತ ಕೈಗೊಂಡಿರುವ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದು ದರ್ಶನೋತ್ಸವ ಯಶಸ್ವಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. +ಪಾಕ್-ಬಾಂಗ್ಲಾ ಪಂದ್ಯದ ವೇಳೆ ಪ್ಯಾಲೇಸ್ತಾನ್ ಧ್ವಜ ಪ್ರದರ್ಶಿಸಿದ ನಾಲ್ವರು ಅರೆಸ್ಟ್ +ದಸರಾ ಮಾದರಿ ದೀಪಲಂಕಾರ:ಈಗಾಗಲೇ ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಮಾದರಿ ದೀಪಲಂಕಾರ ಮಾಡಲಾಗಿದ್ದು ಡೈರಿ ವೃತ್ತ, ಸಂತೆಪೇಟೆ ಸರ್ಕಲ್, ಸುಭಾಷ್ ವೃತ್ತ, ಎನ್‍ಆರ್ ಸರ್ಕಲ್, ಹೇಮಾವತಿ ಪ್ರತಿಮೆ ಎದುರು, ಮಹಾವೀರ ಸರ್ಕಲ್, ಸಹ್ಯಾದ್ರಿ ವೃತ್ತ, ಸಾಲಗಾಮೆ ರಸ್ತೆ, ರೈಲು ನಿಲ್ದಾಣದ ಎದುರು ಸರ್ಕಲ್ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ದೀಪಲಂಕಾರ ಹಾಗೂ ಆರ್ಚ್ ಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.ರಾತ್ರಿ ವೇಳೆ ರಸ್ತೆ ಹಾಗೂ ಸರ್ಕಾರಿ- ಖಾಸಗಿ ಕಟ್ಟಡಗಳು ವಿದ್ಯುತ್ ಅಲಂಕಾರದಿಂದ ಕಂಗೊಳಿಸುತ್ತಿದ್ದು ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. +ದರ್ಶನೋತ್ಸವ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮಹಿಳೆಯರಿಗೆ ಹೆಚ್ಚಿನ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಮಹಿಳಾ ಪೊಲೀಸರನ್ನು ನಿಯೋಜನೆ ಮಾಡುವ ಸಂಬಂಧ ಜಿಲ್ಲಾ ಪೊಲೀಸ್ ವರಿಧಿಷ್ಠಾಕಾರಿ ಮೊಹಮ್ಮದ್ ಸುಜಿತಾ ಅವರು ಮಾಹಿತಿ ನೀಡಿದ್ದು 1200 ಪೊಲೀಸ್ ಸಿಬ್ಬಂದಿಯೊಂದಿಗೆ ಹೋಂ ಗಾಡ್ರ್ಸ್ ಗಳನ್ನು ಸಹ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. +ಅಲ್ಲದೆ ಇತ್ತೀಚಿಗೆ ದೇವಾಲಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಹಾಗೂ ಬಂದೂಬಸ್ತ್ ಕುರಿತು ಮಾಹಿತಿ ಐಜಿಪಿ ಬೋರಲಿಂಗಯ್ಯ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ. +ತುಲಾಭಾರ ವ್ಯವಸ್ಥೆ :ಇದೇ ಪ್ರಥಮ ಬಾರಿಗೆ ಭಕ್ತಾದಿಗಳಿಗೆ ತುಲಾಭಾರ ವ್ಯವಸ್ಥೆಯನ್ನು ಮಾಡಲಾಗಿದ್ದು ಹಣ್ಣು , ತರಕಾರಿ , ಧನ ಧಾನ್ಯ ಸೇರಿದಂತೆ ಇತರೆ ವಸ್ತುಗಳ ಮೂಲಕ ತುಲಾಭಾರವನ್ನು ಮಾಡುವ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ತುಲಾಭಾರ ದಲ್ಲಿಯೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. +ಟ್ರಂಪ್ ಅಧ್ಯಕ್ಷ ಚುನಾವಣೆಗೆ ಭಾರಿ ಬೆಂಬಲ +ಇ-ಹುಂಡಿ ವ್ಯವಸ್ಥೆ :ದೇವಾಲಯ ಗರ್ಭಗುಡಿ ಹಾಗೂ ಸುತ್ತಮುತ್ತ ಈಗಾಗಲೇ ದೇವಾಲಯ ಆಡಳಿತ ಮಂಡಳಿಯಿಂದ ಹಣ ಆಭರಣ ಕಾಣಿಕೆ ಹುಂಡಿಯನ್ನು ಇಡಲಾಗಿದ್ದು ಇದರೊಂದಿಗೆ ಇದೇ ಪ್ರಥಮ ಬಾರಿ ಇ- ಪೇಮೆಂಟ್ ಕ್ಯೂಆರ್ ಕೋಡ್ ಬ್ಯಾನರ್ ವ್ಯವಸ್ಥೆಯನ್ನು ಮಾಡಲಾಗಿದೆ. \ No newline at end of file diff --git a/eesanje/url_46_322_1.txt b/eesanje/url_46_322_1.txt new file mode 100644 index 0000000000000000000000000000000000000000..e8e064626394556f09be372c903061fd0822279a --- /dev/null +++ b/eesanje/url_46_322_1.txt @@ -0,0 +1,7 @@ +ಕಾವೇರಿ ವೆಬ್‍ಸೈಟ್‍ನಿಂದ ದಾಖಲೆ ಕದ್ದು ಬ್ಯಾಂಕ್ ಖಾತೆಗಳಿಂದ ಹಣ ಲೂಟಿ +ಬೆಂಗಳೂರು,ಅ.31-ಕರ್ನಾಟಕ ಸರ್ಕಾರದ ನೊಂದಣಿ ಮತ್ತು ಮುಂದ್ರಾಂಕ ಇಲಾಖೆಯ ಅಧಿಕೃತ ಕಾವೇರಿ ವೆಬ್‍ಸೈಟ್ ಮುಖಾಂತರ ದಾಖಲೆ ಕದ್ದು ಎ.ಇ.ಪಿ.ಎಸ್ ಸಾಧನವನ್ನು ಬಳಸಿ ಸಾರ್ವಜನಿಕರ ಗಮನಕ್ಕೆ ಬಾರದಂತೆ ಅವರ ಬ್ಯಾಂಕ್ ಖಾತೆಗಳಿಂದ ಹಣ ಲಪಟಾಯಿಸುತ್ತಿದ್ದ ಇಬ್ಬರನ್ನು ಯಲಹಂಕ ಸೆನ್ ಠಾಣೆ ಪೊಲೀಸರು ಬಂಧಿಸಿ 1.5ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ ಎರಡು ಲ್ಯಾಪ್‍ಟ್ಯಾಪ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. +ಬಿಹಾರ ಮೂಲದ ದೀಪಕ್ ಕುಮಾರ್ (33) ಮತ್ತು ನಿವೇದಿತ್ ಕುಮಾರ್ (26) ಬಂಧಿತ ಆರೋಪಿಗಳುಪಿರ್ಯಾದುದಾರರ ಬ್ಯಾಂಕ್ ಖಾತೆಗಳಿಂದ ಅವರ ಗಮನಕ್ಕೆ ಬಾರದೇ, ಹಂತ ಹಂತವಾಗಿ ಒಟ್ಟು 38ಸಾವಿರ ಮತ್ತು 10 ಸಾವಿರ ಕಡಿತವಾಗಿದ್ದರ ಬಗ್ಗೆ ಅವರಿಗೆ ಯಾವುದೇ ಬ್ಯಾಂಕ್ ಮಾಹಿತಿಯಾಗಲಿ, ಓಟಿಪಿಯಾಗಲಿ, ಯಾರೊಂದಿಗೂ ಶೇರ್ ಮಾಡಿಕೊಂಡಿರುವುದಿಲ್ಲ. +ಯಾವುದೇ ಅಪರಿಚಿತ ಲಿಂಕ್ ಕ್ಲಿಕ್ ಮಾಡದೇ ಇದ್ದರೂ ಕೂಡ ಖಾತೆಗಳಿಂದ ಹಣ ವರ್ಗಾವಣೆಯಾಗಿರುವುದರ ಬಗ್ಗೆ ಯಲಹಂಕ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಎರಡು ವಂಚನೆ ಪ್ರಕರಣಗಳು ದಾಖಲಾಗಿತ್ತು. +ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವುಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಸರ್ಕಾರಿ ವೆಬ್ ಸೈಟ್‍ಗಳಿಂದ ಸಾರ್ವಜನಿಕರ ನೊಂದಣಿ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಂಡು ಆಧಾರ್ ಕಾರ್ಡ್ ಮಾಹಿತಿ ಮತ್ತು ಬೆರಳಚ್ಚು ಗಳನ್ನು ನಕಲು ಮಾಡಿಕೊಂಡು ಪಿರ್ಯಾದುದಾರರ ಗಮನಕ್ಕೆ ಬಾರದಂತೆ ಆಧಾರ್ ಕಾರ್ಡ್‍ಗೆ ಲಿಂಕ್ ಆದಂತಹ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿಕೊಂಡು ವಂಚಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬಂಸಿದ್ದಾರೆ. +ಆರೋಪಿಗಳನ್ನು ವಿಚಾರಣೆಗೊಳಪಡಿಸಿ 1.5 ಲಕ್ಷ ರೂ. ನಗದು ಕೃತ್ಯಕ್ಕೆ ಬಳಸಿದ್ದ ಎರಡು ಲ್ಯಾಪ್ ಟಾಪ್, ಎರಡು ಮೊಬೈಲ್ ಫೆÇೀನ್ ಮತ್ತು ಮೂರು ಬೆರಳಚ್ಚು ಸಾಧನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. +ಮತ್ತೊಬ್ಬ ಅರೋಪಿಯು ತಲೆ ಮರೆಸಿಕೊಂಡಿದ್ದು ಈತನ ಶೋಧ ಕಾರ್ಯ ಮುಂದುವರಿದಿದೆ.ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಈಶಾನ್ಯ ವಿಭಾಗದ ಯಲಹಂಕ ಸೆನ್ ಪೊಲೀಸ್ ಠಾಣೆ ಇನ್ಸಪೆಕ್ಟರ್ ಮಲ್ಲಿಕಾರ್ಜುನ ಹಾಗೂ ಪಿ.ಎಸ್.ಐ ರಮಣ್‍ಗೌಡ ಅವರ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_322_10.txt b/eesanje/url_46_322_10.txt new file mode 100644 index 0000000000000000000000000000000000000000..fef11ccc6be9811996be10535526fe99fea54340 --- /dev/null +++ b/eesanje/url_46_322_10.txt @@ -0,0 +1,11 @@ +ಕನ್ನಡಿಗರ ನೆಲದ ಪ್ರೀತಿಗೆ ಹೃದಯ ತುಂಬಿ ಬಂದಿದೆ : ಎಚ್‍ಡಿಕೆ +ದುಬೈ,ಅ.30- ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕøತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. +ಯುಎಇ ಒಕ್ಕಲಿಗರ ಸಂಘ ಇಂದು ದುಬೈನಲ್ಲಿನ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕøತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. +ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೇ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೆ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು. +ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದರೋ ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಅವರು ನುಡಿದರು. +ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು +ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು. +ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು: ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು ಎಂದು ಅವರು ಕಳವಳ ವ್ಯಕ್ತಪಡಿಸಿದರು. +ಇಂದು ತಾಂತ್ರಿಕವಾಗಿ ನಾವು ಬಹಳಷ್ಟು ಸಾಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ, ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೇ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. +ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದುಬೈ ಕನ್ನಡಿಗರು, ಅದರಲ್ಲಿಯೂ ಮಕ್ಕಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. +ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಮಂಜುನಾಥ್, ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_322_11.txt b/eesanje/url_46_322_11.txt new file mode 100644 index 0000000000000000000000000000000000000000..7bfee2cb9b492ae3ac8ac17a8ada7a3a9a133fad --- /dev/null +++ b/eesanje/url_46_322_11.txt @@ -0,0 +1,16 @@ +ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ +ಬೆಂಗಳೂರು, ಅ.30-ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಸರ್ಕಾರಿ ಭ್ರಷ್ಠ ಅಧಿಕಾರಿಗಳ ಬಂಡವಾಳ ಬಯಲಿಗೆಳೆದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆಗಳು , ಕಚೇರಿ, ತೋಟದ ಮನೆ ಹಾಗೂ ವಿವಿದೆಡೆ ಇಂದು ಏಕಾಕಾಲಕ್ಕೆ ರಾಜ್ಯಾದ್ಯಂತ ಚಿತ್ರದುರ್ಗ, ತುಮಕೂರು,ಹಾಸನ, ಕಲಬುರಗಿ, ದಾವಣಗೆರೆ ,ಬೆಂಗಳೂರು ,ಬೆಳಗಾವಿ ,ಬೀದರ್, ಕಲಬುರಗಿ ಸೇರಿದಂತೆ ಸುಮಾರು 15 ಜಿಲ್ಲೆಗಳಲ್ಲಿ 95ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. +ಹಾಸನ: ಹಾಸನದಲ್ಲಿ ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ನಾರಾಯಣ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ದೆಯಿಂದ ಏಳುವ ಮುಂಚೆಯೇ ಲೋಕಾಯುಕ್ತ ಎಸ್‍ಪಿ ಮಲ್ಲಿಕ್ ನೇತೃತ್ವದ ಅಕಾರಿಗಳ ತಂಡ ಮನೆಯ ಬಾಗಿಲು ತಟ್ಟಿದೆ. ಡಿವೈಎಸ್‍ಪಿ ತಿರುಮಲೇಶ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ಅವರ ನಿವಾಸದಲ್ಲಿ ಚಿನ್ನಾಭರಣ, ಆಸ್ತಿ ದಾಖಲೆ ಹಾಗೂ ಗೊರೂರಿನಲ್ಲಿರುವ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. +ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್‍ನಲ್ಲಿ ಪರಿಶೀಲನೆ ನಡೆಸಿದ್ದಾರೆ. +ಇನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಹಾಗು ಕಛೇರಿ, ಸಂಬಂಧಿಕರ ಮನೆಯಲ್ಲೂ ಶೋಧಕಾರ್ಯ ನಡೆದಿದೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು ಹಣ ,ಚಿನ್ನಾಭರಣ ಆಸ್ತಿ ಪತ್ರದ ದಾಖಲೆಗಳು ಪತ್ತೆಯಾಗಿದ್ದು, ಅವುಗಳನ್ನು ಪರಿಶೀಲಿಸುತ್ತಿದ್ದಾರೆ. +ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು +ಹಾವೇರಿ: ಹಾವೇರಿ ಜಿಲ್ಲೆಯಲ್ಲಿ 9 ಕಡೆ ದಾಳಿ ನಡೆದಿದ್ದು ಹಾವೇರಿ ಪ್ರಾದೇಶಿಕ ಅರಣ್ಯಾಕಾರಿ (ಆರ್‍ಎಫ್‍ಓ) ಅಪರ ಮೇಶಪ್ಪ ಪೇರಲನವರ್ ಹಾಗು ನ್ಯಾಮತಿ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‍ಎಫ್‍ಓ) ಮಾಲತೇಶ್‍ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅವರ ಮನೆ ,ಕಚೇರಿ ಮೇಲೆ 20ಕ್ಕೂ ಹೆಚ್ಚು ಸಿಬ್ಭಂದಿ ದಾಳಿ ಮಾಡಿದ್ದಾರೆ. +ಭಾನುವಾರದ ರಜೆಯ ಮಜಾ ಮಾಡಿ ಮಲಗಿದ್ದವರು ಬೆಳಿಗ್ಗೆ ದಿಢೀರ್ ಎಂಟ್ರೀ ಕೊಟ್ಟ ಲೋಕಾಯುಕ್ತ ಪೊಲೀಸರನ್ನು ಕಂಡು ಅಧಿಕಾರಿ ಮನೆಯವರು ದಂಗಾಗಿದ್ದಾರೆ. ಮನೆಯಲ್ಲಿದ್ದ ನಗದು, ವಿವಿದೆಡೆ ಅಕ್ರಮವಾಗಿ ಸಂಪಾದಿಸಿದ ಆಸ್ತಿ ಪತ್ತೆ ಮಾಡಲಾಗಿದೆ. +ಬೀದರ್: ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಮತ್ತು ದೇವದುರ್ಗದ ಕೃಷ್ಣ ಜಲಾನಯನ ಇಲಾಖೆಯ ಕಾರ್ಯಪಾಲಕ ಅಭಿಯಂತರ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಕಲಬುರಗಿ ಪಾಲಿಕೆಯ ಟೌನ್ ಪ್ಲ್ಯಾನರ್ ಅಧಿಕಾರಿ ಅಪ್ಪಾಸಾಹೇಬ್ ಕಾಂಬಳೆ ಅವರ ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಹೊಂದಿರುವ ಕಾರ್ಖಾನೆ ಮೇಲೆ ದಾಳಿ ಮಾಡಿರುವ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. +ಬೆಂಗಳೂರು: ಬೆಂಗಳೂರಿನ ಪಾಲಿಕೆ ಅಧಿಕಾರಿ ವಲಯಕ್ಕೂ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಗ್ಗನಹಳ್ಳಿ ವಾರ್ಡ್ ಎಆರ್‍ಓ ಚಂದ್ರಪ್ಪ ಬಿರಜ್ಜನವರ್ ಅವರ ಮನೆ, ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಈ ಹಿಂದೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದ ಎಆರ್ ಓ ಚಂದ್ರಪ್ಪ ಲೋಕಾಯುಕ್ತ ಟ್ರ್ಯಾಪ್ ಗೆ ಒಳಗಾಗಿದ್ದರು. ಅದರ ಮುಂದುವರಿದ ಭಾಗವಾಗಿ ದಾಳಿ ಮುಂದುವರಿಸಿರೋ ಲೋಕಾಯುಕ್ತ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. +ದಾವಣಗೆರೆ: ದಾವಣಗೆರೆಯಲ್ಲಿ ಕೈಗಾರಿಕೆ ಮತ್ತು ಸುರಕ್ಷತಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಮನೆ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಹಾಗೂ ಅವರ ಸ್ವಂತ ಊರಾದ ಕೊಳ್ಳೆಗಾಲ ಸೇರಿದಂತೆ ಒಟ್ಟು ಮೂರು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿರುವ ಅಧಿಕಾರಿಗಳು. ಬೆಂಗಳೂರಿನ ಉಪಕಾರ್ ಲೇಔಟ್, ಆಂಧ್ರಹಳ್ಳಿ , ಕೊಳ್ಳೆಗಾಲ ಮನೆಯಲ್ಲಿ ಶೋಧ ನಡೆಸಲಾಗಿದೆ. +ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ +ಬ್ಯಾಡರಹಳ್ಳಿ ತಂದೆಯ ಮನೆ, ಬಿಇಎಲ್, ವಿನಾಯಕ ನಗರ ಸೇರಿದಂತೆ ವಿವಿದೆಢೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯಲ್ಲಿ 8 ಲಕ್ಷ ನಗದು ಹಣ, ಹತ್ತು ದುಬಾರಿ ಬೆಲೆಯ ವಾಚ್‍ಗಳು, ಎಂಟು ಕೂಲಿಂಗ್ ಸನ್ ಗ್ಲಾಸ್ ಗಳು, ಚಿನ್ನ ಬೆಳ್ಳಿ ವಸ್ತುಗಳು, ಎರಡು ಕಾರು, ಆಸ್ತಿ ಪತ್ರಗಳು ಪತ್ತೆಯಾಗಿದೆ. +ಬೆಳಗಾವಿ: ಬೆಳಗಾವಿಯ ಪಂಚಾಯತ್ ರಾಜ್ ಇಲಾಖೆ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ನಡೆಸಿದ್ದಾರೆ.ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್‍ಮೆಂಟ್‍ನಲ್ಲಿರುವ ಅವರ ನಿವಾಸ, ಬೆಳಗಾವಿ ನಿವಾಸ, ಕಿತ್ತೂರು, ಖಾನಾಪುರದಲ್ಲಿ ಇರೋ ನಿವಾಸದ ಮೇಲೂ ಏಕಕಾಲಕ್ಕೆ ದಾಳಿ ನಡೆಸಿರುವ ಪೊಲೀಸರು ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ. +ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನೀಯರ್ ನಾಗೇಂದ್ರಪ್ಪ ಅವರ ಮನೆ, ಕಚೇರಿ ಸೇರಿ ವಿವಿದೆಡೆ ಲೋಕಾಯುಕ್ತ ಡಿಎಸ್ಪಿ ಮಂಜುನಾಥ್. ಡಿಎಸ್ಪಿ.ಹರೀಶ್. ನೇತೃತ್ವದಲ್ಲಿ ದಾಳಿ ನಡೆದಿದೆ. +ಇನ್ಪೆಕ್ಟರ್ ಶಿವರುದ್ರಪ್ಪ ಮೇಟಿ,ಸತ್ಯನಾರಾಯಣ, ಸಲೀಂ ನೇತೃತ್ವದ ತಂಡ ತುಮಕೂರು ನಗರದ ಬಟವಾಡಿಯಲ್ಲಿರುವ ಮನೆ ಹಾಗೂ ಶಿರಾ ತಾಲ್ಲೂಕಿನ ಮದ್ದೇರಹಳ್ಳಿ, ರಾಗಲಹಳ್ಳಿಯಲ್ಲಿರುವ ನಿವಾಸ , ಫಾರಂ ಹೌಸ್ ಮೇಲೂ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮುಂದುವರೆದಿದೆ. \ No newline at end of file diff --git a/eesanje/url_46_322_12.txt b/eesanje/url_46_322_12.txt new file mode 100644 index 0000000000000000000000000000000000000000..e6ecaa46721caaf4adb0fed92b3faa8470b48087 --- /dev/null +++ b/eesanje/url_46_322_12.txt @@ -0,0 +1,7 @@ +ಮತ್ತೆ ಬಾಲ ಬಿಚ್ಚಿದ ಎಂಇಎಸ್, ಕನ್ನಡಿಗರ ಆಕ್ರೋಶ +ಬೆಂಗಳೂರು, ಅ.30- ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೆ ಬಾಲಬಿಚ್ಚಲಾರಂಭಿಸಿದೆ. ಅತ್ತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರಾಳ ದಿನಾಚರಣೆಗೆ ನಮ್ಮ ಪ್ರತಿನಿಧಿ ಬರುತ್ತಾರೆ ಎಂದು ಹೇಳುವ ಮೂಲಕ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. +ನಾಡದ್ರೋಹಿ ಎಂಇಎಸ್ ಪದೇ ಪದೇ ಮುಖಭಂಗ ಅನುಭವಿಸಿದರೂ ಮತ್ತದೆ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನಾಚರಣೆಗೆ ಮುಂದಾಗಿದೆ. ಕರಾಳ ದಿನಾಚಣೆಗೆ ಅನುಮತಿ ಕೇಳಿದ್ದ ನಾಡದ್ರೋಹಿಗಳಿಗೆ ಮುಖಭಂಗವಾಗಿದೆ. +ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕರಾಳ ದಿನಾಚಣೆಗೆ ಅನುಮತಿ ನಿರಾಕರಿಸಿದ್ದು, ನಾಡದ್ರೋಹಿಗಳ ನಿದ್ದೆಗೆಡಿಸಿದೆ. ಆದರೂ ಶತಾಯ ಗತಾಯ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡಲು ನಾಡದ್ರೋಹಿಗಳು ತೆರೆ ಮರೆಯಲ್ಲಿ ಕಸರತ್ತು ನಡೆಸಿದ್ದು, ಈ ಹಿನ್ನೆಲೆ ಸಭೆ ಕರೆದು ಕರಾಳ ದಿನಾಚರಣೆ ಕುರಿತು ಚರ್ಚೆ ನಡೆಸಿದ ಎಂಇಎಸ್ ಮುಖಂಡರು, ಸಭೆಯಲ್ಲಿ ಮಹಾರಾಷ್ಟ್ರದ ನಾಯಕರನ್ನು ಕರೆತರಲು ಮುಂದಾಗಿದ್ದಾರೆ ಎನ್ನಲಾಗಿದೆ. +ಭೌಗೋಳಿಕ ರಾಜಕೀಯ ಉದ್ವಿಗ್ನತೆಗೆ ಅಮೆರಿಕ ಕಾರಣ ; ರಷ್ಯಾ +ಇನ್ನು ಕರ್ನಾಟಕ ರಾಜ್ಯೋತ್ಸವ ಹೊಸ್ತಿಲ್ಲಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗಡಿ ಖ್ಯಾತೆ ತೆಗೆದಿದ್ದಾರೆ. ಗಡಿ ವಿವಾದ ಕೆದಕಿದ ಮಹಾ ಸಿಎಂ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಇದರಿಂದ ಬೆಳಗಾವಿಯ ಎಂಇಎಸ್ ಪುಂಡರಿಗೆ ಆನೆ ಬಲ ಬಂದಂತಾಗಿದೆ. +ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಮಹಾರಾಷ್ಟ್ರ ಸರ್ಕಾರದ ಬೆಂಬಲವಿದೆ. ನ.1ರಂದು ಎಂಇಎಸ್‍ನಿಂದ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲಾಗ್ತಿದೆ. ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಪ್ರತಿನಿ ಕಳುಹಿಸುವೆ ಎಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸಿಎಂ ಏಕನಾಥ ಸಿಂಧೆ ಹೇಳಿಕೆ ನೀಡಿದ್ದಾರೆ. \ No newline at end of file diff --git a/eesanje/url_46_322_2.txt b/eesanje/url_46_322_2.txt new file mode 100644 index 0000000000000000000000000000000000000000..06c06a754363f38b75ebae7e01625089b90392e7 --- /dev/null +++ b/eesanje/url_46_322_2.txt @@ -0,0 +1,8 @@ +ಮಲೆನಾಡನ್ನು ವಿಶೇಷ ಕೃಷಿ ವಲಯವೆಂದು ಘೋಷಿಸಲು ಹಕ್ಕೊತ್ತಾಯ +ಬೆಂಗಳೂರು, ಅ.31- ಮಲೆನಾಡನ್ನು ವಿಶೇಷ ಕೃಷಿ ವಲಯವೆಂದು ಘೋಷಿಸಬೇಕು. ಅರಣ್ಯ ಕಾಯ್ದೆ ಬಗ್ಗೆ ಪುನರ್ ಮನನವಾಗಬೇಕು. ನೆಲವಾಸಿಗಳನ್ನು ಎತ್ತಂಗಡಿ ಮಾಡಬಾರದು. ಮಲೆನಾಡು-ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಮಂಜೂರು ಮಾಡಬೇಕು ಎಂಬ ಹಕ್ಕೊತ್ತಾಯವನ್ನು ಇಂದು ನಡೆದ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಾಡಲಾಯಿತು. +ವಿಜಯನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಲೆನಾಡು-ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ ಪರಿಹಾರದ ಮಾರ್ಗೋಪಾಯಗಳ ಬಗ್ಗೆಯೂ ಪ್ರಸ್ತಾಪಿಸಲಾಯಿತು. +ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ರೋಗಗಳು ಕಾಣಿಸಿಕೊಂಡಿದ್ದು, ಪರಿಹಾರ ದೊರೆಯಬೇಕು. ಅರಣ್ಯ ಹಕ್ಕು ಕಾಯ್ದೆಗೆ ಸೂಕ್ತ ತಿದ್ದುಪಡಿ ತಂದು ಜನಪರವಾಗಿ ಕಾಯ್ದೆಗಳನ್ನು ಸರಳೀಕರಣಗೊಳಿಸಬೇಕು. ಮಡಿಕೇರಿ, ಚಿಕ್ಕಮಗಳೂರು, ಹಾಸನ ಪ್ರದೇಶದ ಕಾಫಿ, ಟೀ ಕಂಪೆನಿಯಲ್ಲಿನ ಕಾರ್ಮಿಕರ ಬವಣೆಗೆ ಸೂಕ್ತ ಪರಿಹಾರ ಸಿಗಬೇಕು. ಸ್ಥಳೀಯವಾಗಿಯೇ ಉದ್ಯೋಗಾವಕಾಶಗಳು ದೊರೆಯಲು ತಾಲ್ಲೂಕಿಗೊಂದು ಕೈಗಾರಿಕಾ ಪ್ರದೇಶ ನಿರ್ಮಾಣವಾಗಬೇಕು. ಕುಂದಾಪುರ ಕನ್ನಡ ಮತ್ತು ಹವ್ಯಕ ಕನ್ನಡ ಭಾಷೆಗಳಿಗೆ ಪ್ರತ್ಯೇಕ ಅಕಾಡೆಮಿ ರಚನೆಯಾಗಬೇಕು ಎಂಬ ಒತ್ತಾಯ ಮಾಡಲಾಯಿತು. +ಕಂದಾಯ, ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಎದುರಾಗಿರುವ ತೊಡಕುಗಳನ್ನು ನಿವಾರಿಸಬೇಕು. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮೆಡಿಕಲ್, ಐಐಟಿ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆ ರೂಪಿಸಬೇಕು. ಬಗರ್‍ಹುಕುಂ ಹಾಗೂ ಜೀವನಾಧಾರಿತ ಒತ್ತುವರಿ ಕೃಷಿ ಜಮೀನಿನಲ್ಲಿ ಎದುರಿಸುತ್ತಿರುವ ಸಾಮಾನ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಮೀನುಗಾರಿಕೆಗೆ ಆಧುನಿಕ ಸ್ಪರ್ಶ ನೀಡಬೇಕು. ಕುದುರೆ ಮುಖ ನಿರಾಶ್ರಿತರಿಗೆ ಸೂರು ಕಲ್ಪಿಸಬೇಕು. ಮೀನುಗಾರಿಕೆಗೆ ಆಧುನಿಕ ಸ್ಪರ್ಶ ನೀಡಬೇಕು. ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಬೇಕು. ಗೋರಖ್‍ಸಿಂಗ್ ವರದಿ ಜಾರಿ ಮಾಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಭೆಯಲ್ಲಿ ಮಾಡಲಾಯಿತು. +ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು +ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎದುರಿಸುತ್ತಿರುವ ಹತ್ತು-ಹಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ, ದೇವರಾಜು, ಲೋಹಿತ್ ನಾಯ್ಕರ್, ಜ್ಯೋತಿ ಪಾಟೀಲ್, ಮಲೆನಾಡು-ಕರಾವಳಿ ಜನಪರ ಒಕ್ಕೂಟದ ಸಂಚಾಲಕ ಸುನಿಲ್‍ಕುಮಾರ್ ಮುರೊಳ್ಳಿ ಮತ್ತಿತರರು ಮಾತನಾಡಿ, ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. +ವಿಧಾನ ಪರಿಷತ್ ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ವಿನಯ್‍ಕುಮಾರ್ ಸೊರಕೆ, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಸುಕುಮಾರ್ ಶೆಟ್ಟಿ, ರೈತ ಮುಖಂಡ ಕೆ.ಟಿ.ಗಂಗಾಧರ್, ನಾರಾಯಣಗುರು ಹೋರಾಟ ಸಮಿತಿಯ ಸತ್ಯಜಿತ್ ಸೂರತ್‍ಕಲ್, ಹೋರಾಟಗಾರಾದ ರಾಧಾ ಸುಂದರೇಶ್, ಒಕ್ಕೂಟದ ಸಂಚಾಲಕ ಅನಿಲ್ ಹೊಸಕೊಪ್ಪ ಸೇರಿದಂತೆ ಹಲವು ಮುಖಂಡರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_322_3.txt b/eesanje/url_46_322_3.txt new file mode 100644 index 0000000000000000000000000000000000000000..f5a037285125110f44b007f7a077d7b37b639622 --- /dev/null +++ b/eesanje/url_46_322_3.txt @@ -0,0 +1,13 @@ +ಮಹಾರಾಷ್ಟ್ರ ನಾಯಕರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ +ಬೆಂಗಳೂರು,ಅ.31- ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ಗಲಭೆಗಳು ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಂಭವನೀಯ ಗಲಭೆಯ ಕುರಿತು ಎಚ್ಚರಿಕೆವಹಿಸುವಂತೆ ಗಡಿ ಭಾಗದ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಮಹಾರಾಷ್ಟ್ರದ ನಾಯಕರು ಬಂದು ತಂಟೆ ಮಾಡಿದರೆ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಯಾದ ಬೆಳಗಾವಿ, ಬೀದರ್‍ನಲ್ಲಿನ ಪೊಲೀಸರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಎಲ್ಲಿ ಹೆಚ್ಚು ಗಲಾಟೆಯಾಗಬಹುದು ಎಂಬ ಮಾಹಿತಿ ಇರುವ ಭಾಗಗಳಿಗೆ ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಿದ್ದೇವೆ. ಬೆಳಗಾವಿಯಲ್ಲಿ ಎಂಇಎಸ್ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ವೇಳೆ ಕರಾಳ ದಿನಾಚರಣೆ ಮಾಡುತ್ತಾರೆ. ಅದಕ್ಕೆ ಮಹಾರಾಷ್ಟ್ರದಿಂದ ಸಚಿವರು, ನಾಯಕರು ಬಂದು ಪ್ರಚೋದಿತ ಹೇಳಿಕೆ ನೀಡುವ ಪ್ರಯತ್ನಗಳು ನಡೆದಿವೆ. ಅದನ್ನು ಪ್ರತಿವರ್ಷವೂ ನಿಯಂತ್ರಣ ಮಾಡುತ್ತೇವೆ ಎಂದರು. +ಮಹಾರಾಷ್ಟ್ರದ ಸಚಿವರಾಗಲಿ, ನಾಯಕರಗಲಿ ನಮ್ಮ ಗಡಿ ಪ್ರದೇಶ ಒಳಗೆ ಬಂದು ಕರ್ನಾಟಕ, ಕನ್ನಡ, ನಮ್ಮ ನೆಲ, ಜಲದ ಬಗ್ಗೆ ಗಲಾಟೆ ಮಾಡಿದರೆ ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. +ಮಹಾರಾಷ್ಟ್ರದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಪತನವಾಗಲಿದೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹಸಚಿವರು, ಪ್ರತಿಯೊಬ್ಬ ಬಿಜೆಪಿ ಮುಖಂಡರು ಕಾಂಗ್ರೆಸ್ ಬಗ್ಗೆಯೇ ಮಾತನಾಡುತ್ತಾರೆ ವಿನಃ, ಅವರ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ. ಅವರಿಗೆ ನಮ್ಮ ಪಕ್ಷದ ಬಗ್ಗೆ ಆಸಕ್ತಿ ಹೆಚ್ಚಿದೆ. ಬಹುಶಃ ಕಾಂಗ್ರೆಸ್ ಕಡೆಗೆ ಬರಲು ಆಸಕ್ತಿ ತೋರಿಸುತ್ತಿದ್ದಾರೆನೋ ಗೋತ್ತಿಲ್ಲ. ಇಲ್ಲವಾದರೆ ನಮ್ಮ ಪಕ್ಷದ ಬಗ್ಗೆ ಅವರಿಗೆ ಅಷ್ಟೊಂದು ಆಸಕ್ತಿ ಏಕೆ. ಕಾಂಗ್ರೆಸ್‍ಗೆ ಬರುವವರಿದ್ದರೆ ಮೊದಲು ಹೇಳಲಿ. ನಂತರ ಅವರನ್ನು ಸೇರಿಸಿಕೊಳ್ಳಬೇಕೆ ಬೇಡವೇ ಎಂದು ಪರಿಶೀಲನೆ ನಡೆಸುತ್ತೇವೆ ಎಂದರು. +ಶಾಸಕರಾದಿಯಾಗಿ ಯಾರು ಅನವಶ್ಯಕವಾಗಿ ಹೇಳಿಕೆ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಹೈಕಮಾಂಡ್ ನಾಯಕರು ಪದೇ ಪದೇ ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಅದರ ಹೊರತಾಗಿಯೂ ಕೆಲವರು ಮಾತನಾಡುತ್ತಾರೆ. ಇಂತಹದ್ದನ್ನು ನೋಡಿಕೊಳ್ಳಲು ಎಐಸಿಸಿ ಶಿಸ್ತು ಸಮಿತಿಯಿದೆ, ತಾವು ಅದರಲ್ಲಿ ಸದಸ್ಯರಾಗಿದ್ದು, ರಾಜ್ಯದಲ್ಲೂ ಕೆಪಿಸಿಸಿ ಶಿಸ್ತು ಸಮಿತಿಯಿದೆ. ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ಕೆಪಿಸಿಸಿಗೆ ಸೂಚನೆ ನೀಡಿರಬಹುದು. ಅದರ ಹಿನ್ನೆಲೆಯಲ್ಲಿ ಕೆ.ಬಿ.ಕೋಳಿವಾಡ ನೇತೃತ್ವದ ಸಮಿತಿ ಎಚ್ಚರಿಕೆ ನೀಡಿರಬಹುದು ಎಂದರು. ಎಐಸಿಸಿಯ ಶಿಸ್ತು ಸಮಿತಿ ಸಭೆಯಲ್ಲೂ ಈ ರೀತಿಯ ಬೆಳವಣಿಗೆಗಳ ಬಗ್ಗೆ ಅನೇಕ ಬಾರಿ ಚರ್ಚೆಯಾಗಳಾಗಿವೆ ಎಂದರು. +ರಾಜಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ಹೈದರಾಬಾದ್‍ನಲ್ಲಿ ಅರೆಸ್ಟ್ +ನಮ್ಮ ಸಮುದಾಯದ ನಾಯಕರಿಗೆ ಸರ್ಕಾರ ಬದಲಾಯಿಸುವ ಶಕ್ತಿ ಇದೆ ಎಂದು ಮಾಜಿ ಶಾಸಕ ರಾಜವೆಂಟಕಪ್ಪ ನಾಯಕ ನೀಡಿರುವ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷರು ಗಮನಿಸುತ್ತಾರೆ. ಅಂತಹವನ್ನೇಲ್ಲಾ ನಿಯಂತ್ರಣ ಮಾಡುವ ಶಕ್ತಿ, ಸಾಮಥ್ರ್ಯ ಡಿ.ಕೆ.ಶಿವಕುಮಾರ್ ಅವರಿಗೆ ಇದೆ ಎಂದರು. +ಮೂವರು ಉಪಮುಖ್ಯಮಂತ್ರಿ ಮಾಡುವ ವಿಚಾರ ಹೈಕಮಾಂಡ್ ಬಿಟ್ಟದ್ದು. ವರಿಷ್ಠರು ಸಂದರ್ಭಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ವೇಳೆ ಅರ್ಹರು ಹಾಗೂ ಸಮುದಾಯಗಳಿಗೆ ಅವಕಾಶ ಸಿಗಬಹುದು ಎಂದರು.ದೀಪಾವಳಿಯ ನಂತರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮೂವತ್ತು ಮಂದಿ ಶಾಸಕರು ದುಬೈ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿಯವರು ಮಾತ್ರ ಪ್ರವಾಸಕ್ಕೆ ಹೋಗುತ್ತಾರೆ ಎಂದರೆ ನಮಗೆ ಸಂಬಂಧವಿಲ್ಲ. ನಮ್ಮ ಪಕ್ಷದ ಶಾಸಕರು ಹೋಗುತ್ತಿದ್ದಾರೆ ಎಂದರೆ ಯಾವ ಕಾರಣಕ್ಕೆ ಹೋಗುತ್ತಿದ್ದಾರೆ. ಸುಮ್ಮನೆ ಆಹ್ಲಾದಕರ ಪ್ರವಾಸವೇ ಅಥವಾ ನಿಜವಾಗಿ ಏನಾದರೂ ವಿಷಯಗಳಿವೆಯೇ ಎಂಬುದನ್ನು ನೋಡಬೇಕಾಗುತ್ತದೆ. ದುಬೈನಲ್ಲಿ ಹಲವು ಕನ್ನಡ ಪರ ಸಂಘಟನೆಗಳಿವೆ, ಅಲ್ಲಿಂದ ಏನಾದರೂ ಆಹ್ವಾನ ಇದೆಯೇ ಎಂದು ಕೂಡ ಗಮಿಸಬೇಕಾಗುತ್ತದೆ. ಮೊದಲು ಅವರೆಲ್ಲಾ ಪ್ರವಾಸ ಹೊರಡಲಿ ನಂತರ ಪ್ರತಿಕ್ರಿಯಿಸುವುದು ಸೂಕ್ತ ಎಂದರು. +ರಾಜೀನಾಮೆ ನೀಡಲು ಸಿದ್ಧ:ಹೊಸಬರಿಗೆ ಅವಕಾಶ ನೀಡಲು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ಹೈಕಮಾಂಡ್ ಸೂಚನೆ ನೀಡಿದರೆ ತಾವು ಯಾವುದೇ ಕ್ಷಣದಲ್ಲಾದರೂ ರಾಜೀನಾಮೆ ನೀಡಲು ಸಿದ್ಧ ಎಂದು ಪರಮೇಶ್ವರ್ ಹೇಳಿದ್ದಾರೆ.ಎಲ್ಲರೂ ಸಚಿವರಾಗುವುದು ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗಬೇಕು ಎಂಬುದಕ್ಕೆ ನಮ್ಮ ಬೆಂಬಲವಿದೆ. ಆದರೆ ಸಚಿವರನ್ನು ಇಲ್ಲಿನ ನಾವ್ಯಾರು ಮಾಡುವುದಿಲ್ಲ. ಎಲ್ಲವೂ ದೆಹಲಿಯವರೆ ನಿರ್ಧಾರ ಮಾಡುತ್ತಾರೆ. +ಅಂತಹ ಸಂದರ್ಭ ಬಂದು ಸೂಚನೆ ನೀಡಿದರೆ ನಾನು ಸಿದ್ಧನಿದ್ದೇನೆ. ಈ ಹಿಂದೆ ಗೃಹ ಸಚಿವನಾಗಿದ್ದನು ಅಕಾರ ಬಿಟ್ಟು ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೋಗಿದ್ದೆ. ಈಗಲೂ ಅಂತಹ ಸಂದರ್ಭ ಬಂದರೆ ನಾನು ಸಿದ್ಧ ಎಂದರು. ತಾವು ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಿಲ್ಲ, ಸಚಿವ ಸ್ಥಾನವನ್ನು ಬಿಟ್ಟುಕೊಟ್ಟಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಅಂಬಾನಿಗೆ ಮತ್ತೆ ಜೀವ ಬೆದರಿಕೆ : 20 ಆಯ್ತು, 200 ಆಯ್ತು ಇದೀಗ 400 ಕೋಟಿಗೆ ಬೇಡಿಕೆ +ಬಿಜೆಪಿ ಆಪರೇಷನ್ ಕಮಲ ನಡೆಸಿಲ್ಲ, ನಾವೇ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದೇವು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಅವರು ಹೇಳಿದ್ದಕ್ಕೆಲ್ಲಾ ಉತ್ತರಿಸುತ್ತಾ ಕುಳಿತರೆ ಅದಕ್ಕೆ ಕೊನೆಯೇ ಇರಲ್ಲ ಎಂದರು. \ No newline at end of file diff --git a/eesanje/url_46_322_4.txt b/eesanje/url_46_322_4.txt new file mode 100644 index 0000000000000000000000000000000000000000..7f0f4d23ffae3d442441d76fb78eb54ee3aefd31 --- /dev/null +++ b/eesanje/url_46_322_4.txt @@ -0,0 +1,7 @@ +ಮಹತ್ವದ ಮಾಹಿತಿ : ಸಾಮಾನ್ಯ ವರ್ಗದ ಹುದ್ದೆಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಲ್ಲ +ಬೆಂಗಳೂರು, ಅ.31- ಮೀಸಲಾತಿ ಕೋರಿ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದರೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. +ರಾಜ್ಯದ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೀಸಲಾತಿಯಿಂದಯಾವುದೇ ರಿಯಾಯಿತಿ ಪಡೆಯದೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. +ರಾಜ್ಯದ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ. +ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು +ಆದರೆ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೇಲಿನಂತೆ ನಿರ್ದೇಶನ ನೀಡಿದ್ದಾರೆ. +ಅಂತಿಮ ಆಯ್ಕೆ ಪಟ್ಟಿಯಲ್ಲಿ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆಯಾಗುವುದನ್ನು ತಪ್ಪಿಸಲು ಸಿಂಧುತ್ವ ಕಡ್ಡಾಯಗೊಳಿಸದಂತೆ ಅವರು ಸೂಚಿಸಿದ್ದಾರೆ. \ No newline at end of file diff --git a/eesanje/url_46_322_5.txt b/eesanje/url_46_322_5.txt new file mode 100644 index 0000000000000000000000000000000000000000..5221618e5d460e4370692a864b4fdc2527ed111e --- /dev/null +++ b/eesanje/url_46_322_5.txt @@ -0,0 +1,6 @@ + : 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ +ಬೆಂಗಳೂರು,ಅ.31- ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಸಾಹಿತಿ ಪ್ರೊ.ಸಿ.ನಾಗಣ್ಣ, ಖ್ಯಾತ ವೈದ್ಯ ಡಾ.ಸಿ.ರಾಮಚಂದ್ರ, ಪತ್ರಕರ್ತರಾದ ದಿನೇಶ್ ಅಮೀನ್‍ಮಟ್ಟು, ಜವರಪ್ಪ ಹಾಗೂ 10 ಸಂಘ ಸಂಸ್ಥೆಗಳಿಗೆ ಈ ಬಾರಿಯ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. +ನಾಡು-ನುಡಿ,ಇತಿಹಾಸ, ಕ್ರೀಡೆ, ವಿಜ್ಞಾನ, ವೈದ್ಯಕೀಯ, ರಂಗಭೂಮಿ, ಯಕ್ಷಗಾನ, ಆಡಳಿತ, ಜಾನಪದ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ. +ಅದರಂತೆ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳಿಸುತ್ತಿರುವ ಶುಭ ಸಂದರ್ಭದಲ್ಲಿ ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಇದೇ ಮೊದಲ ಬಾರಿಗೆ 10 ಸಂಘ ಸಂಸ್ಥೆಗಳಿಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. +ನಾಳೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಪ್ರಶಸ್ತಿಯು 5 ಲಕ್ಷ ನಗದು, 25 ಗ್ರಾಂ ಬಂಗಾರ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. +ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಕೆಳಕಂಡಂತಿದೆ : \ No newline at end of file diff --git a/eesanje/url_46_322_6.txt b/eesanje/url_46_322_6.txt new file mode 100644 index 0000000000000000000000000000000000000000..7e1235671c69b41216f8d1536cce64ce7d8d6222 --- /dev/null +++ b/eesanje/url_46_322_6.txt @@ -0,0 +1,5 @@ +ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ : ಬಿಜೆಪಿ ವ್ಯಂಗ್ಯ +ಬೆಂಗಳೂರು,ಅ.31- ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನ ದಿಂದ ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ. +ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಸತೀಶ್ ಜಾರಕಿಹೊಳಿಯವರು ಅಲುಗಾಡಿಸಿದ್ದಾರೆ. ಮತ್ತೊಂದು ಕಡೆ, ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಇತರ ಸನ್ಮಿತ್ರರು ಸಜ್ಜಾಗಿದ್ದಾರೆ ಎಂದು ಬಿಜೆಪಿ ಜಾಲತಾನ ಎಕ್ಸ್‍ನಲ್ಲಿ ಬರೆದುಕೊಂಡಿದೆ. +ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ +ಅವರ ಪಕ್ಷದಲ್ಲಿ ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ ಆಯ್ದ ಆಮಂತ್ರಿತರ ಡಿನ್ನರ್ ಆಯೋಜಿಸಲಾಗುತ್ತದೆ. ಹಣಕಾಸಿನ ಲೆಕ್ಕಾಚಾರಗಳಿರುವಾಗ ಈ ರೀತಿ ಭಿನ್ನಾಭಿಪ್ರಾಯಗಳು ಸಹಜವಾಗಿ ಇರುತ್ತದೆ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು, ಹೊರ ರಾಜ್ಯಗಳ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈಕಮಾಂಡ್‍ಗೆ ತಿಳಿಸಿದರೆ ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. \ No newline at end of file diff --git a/eesanje/url_46_322_7.txt b/eesanje/url_46_322_7.txt new file mode 100644 index 0000000000000000000000000000000000000000..b58da4160af3e38c46ef4b57693bbc3dfb052427 --- /dev/null +++ b/eesanje/url_46_322_7.txt @@ -0,0 +1,9 @@ +ನಮ್ಮ ಭೋಜನ ಕೂಟದ ಬಗ್ಗೆ ನಿಮಗೇಕೆ ಚಿಂತೆ..? : ಪರಮೇಶ್ವರ್ +ಬೆಂಗಳೂರು,ಅ.30- ನಮ್ಮ ಮನೆಯ ಬೋಜನಕೂಟದಲ್ಲಿ ನಡೆದ ಚರ್ಚೆಗಳ ಬಗ್ಗೆ ಬಿಜೆಪಿಯವರಿಗೇಕೆ ಚಿಂತೆ ಎಂದು ಗೃಹ ಸಚಿವ ಪರಮೇಶ್ವರ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೋಜನಕೂಟ ಕುರಿತು ಬಿಜೆಪಿಯವರು ಅನೇಕ ವ್ಯಾಖ್ಯಾನಗಳ ಮೂಲಕ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ಒಡೆದ ಬಾಗಿಲು, ಮೂರು, ನಾಲ್ಕು ಬಾಗಿಲು ಎಂದು ಹೇಳುತ್ತಾರೆ. +ನಮ್ಮ ಪಕ್ಷದ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಬಣಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಆದರೆ ನಾವು ಬಿಜೆಪಿಯವರು ಮಾತುಗಳಿಗೆ ಪ್ರಾಮುಖ್ಯತೆ ಕೊಡುವುದಿಲ್ಲ. ನಮ್ಮ ಮನೆಯ ಬೋಜನಕೂಟದಲ್ಲಿ ಏನಾದರೂ ಚರ್ಚೆಯಾಗಲಿ, ಅದು ಬಿಜೆಪಿಯವರಿಗೆ ಏಕೆ ಬೇಕು. ಯಡಿಯೂರಪ್ಪ ಮನೆಯಲ್ಲಿ ಏನಾಗುತ್ತೆ, ಬೊಮ್ಮಾಯಿ ಮನೆಯಲ್ಲಿ ಏನಾಗುತ್ತದೆ ಎಂದು ನಾವು ಕೇಳ್ಳುತ್ತೇವೆಯೇ. ನಾವು ಸುಮ್ಮನಿದ್ದೇವೆ ಎಂದು ಏನು ಬೇಕಾದರೂ ತಿರುಗಳಿಲ್ಲದಂತೆ ಮಾತನಾಡಿದರೆ ಜನ ಸಹಿಸುವುದಿಲ್ಲ ಎಂದು ತಿರುಗೇಟು ನೀಡಿದರು. +ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಬೇಸರವಾಗಿದ್ದಾರೆ ಎಂಬುದು ಆಧಾರ ರಹಿತ, ಯಾವ ರೀತಿಯ ಅಸಮಾಧಾನಗಳು ಇಲ್ಲ. ಒಂದಿಬ್ಬರೆ ಸಚಿವರಿಗೆ ಆದ್ಯತೆ ಇದೆ ಎಂಬುದು ಸರಿಯಲ್ಲ, ಸಂಪುಟದಲ್ಲಿ 33 ಮಂದಿ ಸಚಿವರಿದ್ದಾರೆ, ಎಲ್ಲರು ಜಿಲ್ಲೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ಸಮಾನತೆ ಇದೆ ಎಂದರು. +ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿ ಬದಲಾವಣೆ ತರುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಗಮ-ಮಂಡಳಿಗಳ ನೇಮಕಾತಿ ಬಗ್ಗೆ ಮುಖ್ಯಮಂತ್ರಿಯವರು ಹೇಳಿದ್ದಾರೆ. ಇಲ್ಲಿ ಯಾರನ್ನೂ ನಿರ್ಲಕ್ಷ್ಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಮುಂದಿನ ದಿನಗಳಲ್ಲಿ ನಿಗಮ ಮಂಡಳಿಗಳ ಮೂಲಕ ಅವರನ್ನು ಸರ್ಕಾರದ ಭಾಗವಾಗಿ ಮಾಡಿಕೊಳ್ಳುತ್ತೇವೆ. ಪಕ್ಷಕ್ಕಾಗಿ ದುಡಿದವರು, ಹತ್ತಾರು ವರ್ಷ ಕೆಲಸ ಮಾಡಿದವರನ್ನು ಪರಿಗಣಿಸಲಾಗುವುದು. ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ನೇಮಕಗಳ್ಳುವವರ ಮಾಹಿತಿ ಪಡೆಯಲಾಗುತ್ತಿದೆ ಎಂದರು. +ಸಚಿವರ ಮಕ್ಕಳೇ ಸಚಿವರಾಗ್ತಾರೆಂದು ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಲು ಗೃಹ ಸಚಿವರು ನಿರಾಕರಿಸಿದರು.ಗಂ ಭೀರ ಸಮಸ್ಯೆಗಳ ಗಮನವನ್ನು ಬೇರೆಡೆಗೆ ತಿರುಗಿಸಲು ಹುಲಿ ಉಗುರು ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಡಳಿತ ವ್ಯವಸ್ಥೆಯಲ್ಲಿ ಪ್ರತಿದಿನ ಒಂದೊಂದು ಸಮಸ್ಯೆಗಳು ಕಂಡು ಬರುತ್ತವೆ. ಅರಣ್ಯ ಅಥವಾ ಪೊಲೀಸ್ ಅಧಿಕಾರಿಗಳು ಅವನ್ನು ಸರಿ ಪಡಿಸುತ್ತಾರೆ ಎಂದರು. +ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ +ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡ್ತೇವೆ, ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ದೂರು ನಿರ್ದಿಷ್ಟವಾಗಿರಬೇಕು. ಅಜೆಂಡ ಇಟ್ಕೊಂಡು ಯಾರು ಮಾಡೋದಿಲ್ಲ, ಇಲಾಖೆಯ ತಪ್ಪು ಕಂಡಾಗ ಸರಿಪಡಿಸಲಾಗುತ್ತೆ .ಅದಕ್ಕೆ ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಾರೆ. ಕೆಲಸ ಇಲ್ಲದ ಬಿಜೆಪಿಯವರು ಅನಗತ್ಯವಾಗಿ ವ್ಯಾಖ್ಯಾನ ಮಾಡುತ್ತಾರೆ ಎಂದರು. +ಬಿಜೆಪಿಯವರು ಟೀಕೆ ಮಾಡಿಕೊಂಡು ಇರಲಿ, ನಾವು ನಮ್ಮ ಆಡಳಿತ ನಾವು ಮಾಡುತ್ತೇವೆ, ಜನ ಸಂತೋಷವಾಗಿದ್ದಾರೆ. ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಜನ ಎಲ್ಲಾದರೂ ಪ್ರತಿಭಟನೆ ಮಾಡ್ತಿದ್ದಾರಾ? ಬಿಜೆಪಿಯವರೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೊದಲು ಅವರಲ್ಲಿ ಇರುವ ಒಳ ಜಗಳವನ್ನು ಸರಿ ಮಾಡಿಕೊಳ್ಳಲಿ. ರಾಜ್ಯಧ್ಯಕ್ಷರನ್ನ ಮೊದಲು ಆಯ್ಕೆ ಮಾಡಲಿ. ವಿರೋಧ ಪಕ್ಷ ನಾಯಕನನ್ನ ಆಯ್ಕೆ ಮಾಡಲಿ ಎಂದು ಲೇವಡಿ ಮಾಡಿದರು. \ No newline at end of file diff --git a/eesanje/url_46_322_8.txt b/eesanje/url_46_322_8.txt new file mode 100644 index 0000000000000000000000000000000000000000..b5c0051346b64891d2120d34428f0c78df898269 --- /dev/null +++ b/eesanje/url_46_322_8.txt @@ -0,0 +1,8 @@ +ಸಂತೋಷ್ ಹೆಗಡೆ, ಸಂದೇಶ್ ನಾಗರಾಜ್ ಸೇರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ..? +ಬೆಂಗಳೂರು, ಅ.30- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ನಿರ್ಮಾಪಕ ಸಂದೇಶ್ ನಾಗರಾಜ್ ಸೇರಿದಂತೆ ಹಲವು ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುವ ಸಾಧ್ಯತೆ ಇದೆ. +ಕಳೆದ 15 ದಿನಗಳಿಂದಲೂ ನಿರಂತರವಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಅಥವಾ ನಾಳೆ ಪ್ರಶಸ್ತಿ ಪ್ರಕಟಗೊಳ್ಳಲಿದೆ. 68ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 68 ಮಂದಿ ಸಾಧಕರು ಹಾಗೂ 10 ಮಂದಿ ಪ್ರಮುಖ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡುವ ಸಾಧ್ಯತೆಗಳಿವೆ. +ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲಿಸಬೇಕಾದ ಮಾನದಂಡಗಳ ಕುರಿತು ಸಮಾಲೋಚನೆ ನಡೆದಿತ್ತು. ಅದರಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು. ಅನಂತರ ಆಯ್ಕೆ ಸಮಿತಿ ಸರಣಿ ಸಭೆಗಳನ್ನು ನಡೆಸಿದ್ದು, ಸಾಧಕರ ಆಯ್ಕೆಯನ್ನು ತುಲನಾತ್ಮಕವಾಗಿ ಪರಿಶೀಲಿಸಿದೆ. +ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳೂ ಆಗಿರುವ ಸಂತೋಷ್ ಹೆಗಡೆ ಅವರು ಲೋಕಾಯುಕ್ತರಾಗಿದ್ದಾಗ ಉತ್ತಮ ಕೆಲಸಗಳ ಮೂಲಕ ಜನಮನ್ನಣೆ ಪಡೆದಿದ್ದರು. ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. +ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ +ಮೂಲಗಳ ಪ್ರಕಾರ, ಸಾಹಿತ್ಯದಲ್ಲಿ ಕರಿಗೌಡ ಬೀಚನಹಳ್ಳಿ , ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‍ಮಟ್ಟು, ಮಾಯಾಶರ್ಮ, ರಂಗಭೂಮಿಯಲ್ಲಿ ಕೆ.ವಿ.ನಾಗರಾಜ್‍ಮೂರ್ತಿ, ಗಂಗಾಧರಸ್ವಾಮಿ, ಚಿದಂಬರ ಜಂಬೆ, ಶೇಕ್ ಮಾಸ್ಟರ್, ಸುಜಾತಮ್ಮ, ಜಾನಪದದಲ್ಲಿ ಚಂದ್ರು ಕಾಳೇನಹಳ್ಳಿ, ಚಲನಚಿತ್ರ ಕ್ಷೇತ್ರದಿಂದ ನಿರ್ಮಾಪಕ ಸಂದೇಶ್ ನಾಗರಾಜ್, ಜಾನಪದದಲ್ಲಿ ಸೋಬಾನೆ ರಾಮಣ್ಣ, ಹುಸೇನಾಬಿ ಬುಡನ್‍ಸಾಬ್, ತಿಮ್ಮಣ್ಣ ರಾಮವಾಡಗಿ, +ಸಿರಿಗಂಧ ಶ್ರೀನಿವಾಸಮೂರ್ತಿ, ಕಿರುತೆರೆಯಲ್ಲಿ ಹುಲಿ ಚಂದ್ರಶೇಖರ್, ಬಯಲಾಟದ ನಾರಾಯಣಪ್ಪ, ಕಲಾ ವಿಮರ್ಶೆಯಲ್ಲಿ ಜಿ.ಎಂ.ಹೆಗಡೆ, ಚಿತ್ರಕಲೆಯಲ್ಲಿ ಮಾರ್ಥಾ ಜಾಕಿ ಮಾರ್ವಿಚ್, ಚಿತ್ರಕಲೆಯಲ್ಲಿ ಎಚ್.ಸಿ.ಪಾಟೀಲ್, ಕಾಳಪ್ಪ ವಿಶ್ವಕರ್ಮ, ಜನಪದದಲ್ಲಿ ಸಿದ್ಧರಾಮಪ್ಪ ವಾಲಿ, ವಿಭೂತಿ ಗುಂಡಪ್ಪ ಸೇರಿದಂತೆ ಹಲವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_322_9.txt b/eesanje/url_46_322_9.txt new file mode 100644 index 0000000000000000000000000000000000000000..816ef3ec3a46f3aacc06a76d2a82935473fbe220 --- /dev/null +++ b/eesanje/url_46_322_9.txt @@ -0,0 +1,9 @@ +ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ +ಬೆಳ್ತಂಗಡಿ,ಅ.30- ಧರ್ಮಸ್ಥಳದಲ್ಲಿ ಬಸದಿಯಲ್ಲಿರುವ ಮೂಲ ಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ದೇವಸ್ಥಾನದಲ್ಲಿ ಮುಖ್ಯ ಆರಾಧ್ಯ ದೇವರಾದ ಶ್ರೀ ಮಂಜುನಾಥ ಸ್ವಾಮಿ ಶಾಂತಿ, ತಾಳ್ಮೆಯ ಸಾಕಾರ ಮೂರ್ತಿಗಳಾಗಿದ್ದು, ಇಲ್ಲಿ ಯಾವಾಗಲೂ ಶಾಂತಿ, ನೆಮ್ಮದಿ, ಸಾಮರಸ್ಯ ನೆಲೆಸಿರುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ. ತಾನು ಮತ್ತು ಕುಟುಂಬದವರು ಎಲ್ಲರೂ ಶಾಂತಚಿತ್ತರಾಗಿದ್ದೇವೆ. ಇಲ್ಲಿ ಶ್ರದ್ಧಾ-ಭಕ್ತಿಯಿಂದ ಬರುವ ಎಲ್ಲಾ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. +ಧರ್ಮಸ್ಥಳಕ್ಕೆ ಉಭಯ ಧರ್ಮಸಂರಕ್ಷಣಾ ರಥಗಳು ಭವ್ಯ ಮೆರವಣಿಗೆಯಲ್ಲಿ ಬಂದಾಗ ಹಾಗೂ ಉಜಿರೆಯಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಬಂದ ಸಂದರ್ಭದಲ್ಲಿ ಅವರು ಮಾತನಾಡಿದರು. +ಶ್ರೀ ಮಂಜುನಾಥ ಸ್ವಾಮಿ ವಿಷಕಂಠನಾಗಿದ್ದು, ವಿಷವನ್ನು ಕಂಠದಲ್ಲಿಟ್ಟುಕೊಂಡು ಲೋಕಕಲ್ಯಾಣ ಮಾಡುವ ದೇವರು ದುಶ್ಟಶಕ್ತಿಗಳನ್ನು ನಾಶಮಾಡಿ ಶಿಷ್ಟರ ರಕ್ಷಣೆ ಮಾಡುತ್ತಾರೆ. ಧರ್ಮಸ್ಥಳದ ಅಭಿಮಾನಿ ಭಕ್ತರೆ ಸ್ವಯಂ-ಪ್ರೇರಣೆಯಿಂದ ಕ್ಷೇತ್ರದ ರಕ್ಷಣೆಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಮಾಡಿರುವ ಸೇವೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. +ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್ +ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕøತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಯೊಂದಿಗೆ ಅಪಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ. ತಮ್ಮ ಮನ, ವಚನ, ಕಾಯ ಪವಿತ್ರವಾಗಿದೆ. ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆ ಸನ್ನಿಯಲ್ಲಿ ಪ್ರತಿ ತಿಂಗಳು ಸಂಕ್ರಾಂತಿಯಂದು ತಾನು ವರದಿ ಒಪ್ಪಿಸಬೇಕು. ಅವರ ಅಭಯ, ಅನುಗ್ರಹ ತಾನು ಮಾಡುವ ಎಲ್ಲಾ ಸೇವಾಕಾರ್ಯಗಳಿಗೆ ಇದೆ ಎಂದು ಹೇಳಿದರು. +ಪ್ರಬಲ ಇಚ್ಛಾಶಕ್ತಿ, ನೈತಿಕ ಬಲ, ದೃಢ ಸಂಕಲ್ಪ ಹಾಗೂ ಭಕ್ತರು ಮತ್ತು ಅಭಿಮಾನಿಗಳ ಬೆಂಬಲದಿಂದ ನಮ್ಮ ಸೇವಾಕಾರ್ಯಗಳು ಮುಂದೆ ಇನ್ನಷ್ಟು ದುಪ್ಪಟ್ಟಾಗಲಿವೆ. ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವ ತನಗೆ ವಜ್ರಕವಚವಾಗಿ ರಕ್ಷಣೆ ನೀಡುತ್ತದೆ ಎಂದು ಹೆಗ್ಗಡೆ ಅವರು ವಿಶ್ವಾಸ ವ್ಯಕ್ತಪಡಿಸಿದರು. +ಸಭೆಯ ಆರಂಭದಲ್ಲಿ ಹೆಗ್ಗಡೆಯವರು ವೇದಿಕೆಯ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲಾ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು. +ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ಫಲಿಮಾರು ಮಠದ ಶ್ರೀ ವಿದ್ಯಾೀಶ ಸ್ವಾಮೀಜಿ ಸೇರಿದಂತೆ 15 ಮಂದಿ ಮಠಾೀಶರು ಉಪಸ್ಥಿತರಿದ್ದರು. ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ಇದ್ದರು. \ No newline at end of file diff --git a/eesanje/url_46_323_1.txt b/eesanje/url_46_323_1.txt new file mode 100644 index 0000000000000000000000000000000000000000..fd8990d4f497fe05ee85641e33a19d41b8e77bb0 --- /dev/null +++ b/eesanje/url_46_323_1.txt @@ -0,0 +1,12 @@ +ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್ +ನವದೆಹಲಿ, ಅ.30- ಸತ್ಯದ ಗೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು ಎಂದು ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟೀಕಾ ಪ್ರಹಾರ ನಡೆಸಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗಜೇಂದ್ರ ಸಿಂಗ್ ಶೇಖಾವತ್, ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ವಿಷಾದಿಸಿದ್ದಾರೆ. +ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ. ಮೊದಲನೆಯದಾಗಿ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ ಎಂದು ಗಜೇಂದ್ರ ಸಿಂಗ್ ಶೇಖಾವತ್ ಸಮರ್ಥಿಸಿಕೊಂಡಿದ್ದಾರೆ. +ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ ಭಾರತೀಯರ ರಕ್ಷಣೆಗೆ ಕ್ರಮ : ಜೈಶಂಕರ್ +ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‍ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ಎಂದು ಪ್ರಶ್ನೆಸಿದ್ದಾರೆ. +2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – ತ್ವರಿತ ನೀರಾವರಿ ಕಾರ್ಯಕ್ರಮದಡಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. + .@, & . ’ . – , , …../Kqwgi30Bxp +ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ಎಂದು ಅಂಕಿ-ಅಂಶಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ. ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ ಎಂದು ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. +ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು ಎಂದು ಪೋಸ್ಟ್ ಹಾಕಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ ಮೋದಿ ಮುಖ ನೋಡಿ ಮತ ನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು?. +ಸಾಲು ಸಾಲು ರೈಲು ದುರಂತ : ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ +ಕೇಂದ್ರ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಆನ್ಸರ ಮಾಡಿ ಮೋದಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_323_10.txt b/eesanje/url_46_323_10.txt new file mode 100644 index 0000000000000000000000000000000000000000..662e8c3efff97ca84481a5b972693656c62b84e3 --- /dev/null +++ b/eesanje/url_46_323_10.txt @@ -0,0 +1,5 @@ +ರಾಜಸ್ಥಾನ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು +ಜೈಪುರ, ಅ.29-ರಾಜಸ್ಥಾನದ ಹನುಮಾನ್‍ಗಢ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. +ಕುಟುಂಬ ಸಮೇತರಾಗಿ ಕಾರ್ಯಕ್ರಮವೊಂದಲ್ಲಿ ಬಾಗಿಯಾಗಿ ಮನೆಗೆ ಮರಳುತ್ತಿದ್ದಾಗ ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಪರಮ್‍ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‍ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವೇದ್ ಪಾಲ್ ತಿಳಿಸಿದ್ದಾರೆ. +“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ” +ಗಂಭೀರವಾಗಿ ಗಾಯಗೊಂಡಿರುವ ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ನನ್ನು ಬಿಕಾನೇರ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು diff --git a/eesanje/url_46_323_11.txt b/eesanje/url_46_323_11.txt new file mode 100644 index 0000000000000000000000000000000000000000..b55d51d8deae90ace528f7328b31ce61f15e81cb --- /dev/null +++ b/eesanje/url_46_323_11.txt @@ -0,0 +1,9 @@ +- ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ +ಬೆಂಗಳೂರು, ಅ.28- ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳಿಗೆ ಇದುವರೆಗೂ ಪ್ರತ್ಯೇಕ ಸಚಿವಾಲಯ ಇರಲಿಲ್ಲ ಎಂದರು. +ಸಚಿವಾಲಯ ಸ್ಥಾಪಿಸಿರುವುದರಿಂದ ಆ ವರ್ಗದ ಅಭಿವೃದ್ಧಿ ಸಾಧ್ಯವಾಗಲಿದೆ. ಎಸ್‍ಇಪಿ ಟಿಎಸ್‍ಪಿ ಹಣ ಆ ಸಮುದಾಯದ ಅಭಿವೃದ್ಧಿಗೆ ಖರ್ಚು ಆಗಬೇಕು. ಆರೇಳು ಸಾವಿರ ಇದ್ದ ಅನುದಾನವು ನಾನು ಮೊದಲ ಬಾರಿ ಅಧಿಕಾರದಿಂದ ಕೆಳಗಿಳಿಯುವ ವೇಳೆ 30 ಸಾವಿರ ಕೋಟಿ ರೂ. ಆಗಿತ್ತು. ಈಗ 34 ಸಾವಿರ ಕೋಟಿ ಹಣ ಅನುದಾನ ಇದೆ ಎಂದು ಹೇಳಿದರು. +ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ ಕಡ್ಡಾಯ +ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನುದಾನ ಹೆಚ್ಚು ಆಗಲಿಲ್ಲ. ಶೇ. 24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆ ಇದ್ದಾರೆ, ಜನಸಂಖ್ಯೆಗೆ ಅನುಗುಣವಾಗಿ ಹಣ ಇಡಲಾಗುತ್ತದೆ ಎಂದರು. +ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದಲ್ಲೇ ಹೆಚ್ಚು ಹಣ ಈ ವರ್ಗಗಳಿಗೆ ನೀಡಲಾಗಿದೆ. ಯಾವುದೇ ಸರ್ಕಾರ ಬಂದರೂ ಕಾನೂನು ಬದಲಾವಣೆ ಇಲ್ಲ. ನಾವು 88 ಸಾವಿರ ಕೋಟಿ ರೂ. ಈ ವರ್ಗಗಳಿಗೆ ಖರ್ಚು ಮಾಡಿದ್ದೇವೆ. ಇದಕ್ಕೆ ನೀವು ಅರ್ಹರು ಹಾಗಾಗಿ ಖರ್ಚು ಮಾಡಿದ್ದೇವೆ ಎಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕøತರ ಪ್ರತಿ ಸಾಧಕರಿಗೆ ರೂ. 5 ಲಕ್ಷ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು. +ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿಯನ್ನು ಉದ್ಘಾಟಿಸಿದರು. +2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್ +ಕಾರ್ಯಕ್ರಮದಲ್ಲಿ ರಾಜನಹಳ್ಳಿಯ ಮಹರ್ಷಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿ.ಎಸ್. ಉಗ್ರಪ್ಪ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_323_12.txt b/eesanje/url_46_323_12.txt new file mode 100644 index 0000000000000000000000000000000000000000..ff5fbfc63f997166f93f4ca3ada6a6aef5f853ed --- /dev/null +++ b/eesanje/url_46_323_12.txt @@ -0,0 +1,9 @@ +“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ” +ಬೆಂಗಳೂರು, ಅ.28- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್‍ನಲ್ಲಿನ 70 ಶಾಸಕರ ಬೆಂಬಲ ಇದೆ ಎಂದು ಪುನರುಚ್ಚರಿಸಿರುವ ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್, ಈ ಐದು ವರ್ಷದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದಿದ್ದಾರೆ. +ಅಧಿಕಾರ ಹಂಚಿಕೆ, ಪಕ್ಷ ಹಾಗೂ ಸರ್ಕಾರದ ಕುರಿತಂತೆ ಶಾಸಕರು ಹಾಗೂ ನಾಯಕರು ಬಹಿರಂಗ ಹೇಳಿಕೆ ನೀಡಬಾರದು ಎಂದು ಇಂದು ಬೆಳಗ್ಗೆಯಷ್ಟೆ ಕಟ್ಟಪ್ಪಣೆ ಮಾಡಿದರು. ಅದರ ಹೊರತಾಗಿಯೂ ಮತ್ತೆ ಶಿವಗಂಗಾ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಹೇಳಿದ್ದಾರೆ. +ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ +ನಾನು ಮತ್ತು ನಮ್ಮ ಸ್ನೇಹಿತರು ಬಣ ರಾಜಕೀಯದ ಬಗ್ಗೆ ಮಾತನಾಡಿಲ್ಲ. ನಾವು ಹೇಳಿರುವುದು ಒಂದೇ ಬಣ, ಕಾಂಗ್ರೆಸ್ ಬಣ. 60ರಿಂದ 70 ಶಾಸಕರು ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಇದ್ದೇವೆ ಎಂದು ನಾನು ಸಹಜವಾಗಿ ಹೇಳಿದ್ದೇನೆ. ಉಳಿದವರ ಬೆಂಬಲ ಇಲ್ಲ ಎಂದಲ್ಲ. 135 ಶಾಸಕರು ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಇದ್ದಾರೆ. ಇದರಲ್ಲಿ ಹಿರಿಯರು, ಕಿರಿಯರು ಎಂಬುದಿಲ್ಲ ಎಂದರು. +ಪ್ರಮುಖವಾಗಿ ನಮ್ಮ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿ ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಅವರ ಪರವಾಗಿ 70 ಶಾಸಕರಿದ್ದೇವೆ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಪರ-ವಿರೋಧ ಎಂದು ಹೇಳಲು ನಾವು ಬಯಸುವುದಿಲ್ಲ. ನಾವು ಡಿ.ಕೆ.ಶಿವಕುಮಾರ್ ಪರವಾಗಿದ್ದೇವೆ ಎಂದು ಹೇಳಿದ್ದೇವೆಯೇ ಹೊರತು ಮತ್ತೊಬ್ಬರಿಗೆ ವಿರುದ್ಧವಾಗಿದ್ದೇವೆ ಎಂದು ಹೇಳಿಲ್ಲ. ನಾವು ಎಲ್ಲರೂ ಒಂದು ಎಂದರು. +ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ನಾನು ಮೊದಲೇ ಈ ಬಗ್ಗೆ ಹೇಳಿದ್ದೇನೆ. ಚುನಾವಣೆ ಫಲಿತಾಂಶದ ಬಳಿಕ ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿಯಾಗುವ ವಾಡಿಕೆ ಕಾಂಗ್ರೆಸ್‍ನಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಸಿದ್ದರಾಮಯ್ಯಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. +ಕೊನೆಯ ಅವಕಾಶ ಎಂದು ಮತ್ತು ಹಿಂದಿನ ಐದು ವರ್ಷ ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂಬ ಕಾರಣಕ್ಕೆ ಎಲ್ಲಾ ಶಾಸಕರು ಗೌರವಯುತವಾಗಿ ಬೆಂಬಲ ನೀಡಿದ್ದರು. ಅದನ್ನು ಪರಿಗಣಿಸಿ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ತದನಂತರ ಡಿ.ಕೆ.ಶಿವಕುಮಾರ್ ಅವರನ್ನು ನಾವೇಲ್ಲಾ ಸೇರಿ ನೂರಕ್ಕೆ ನೂರು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದರು. +ಸಹಜವಾಗಿ ಅಧಿಕಾರದ ಅವಧಿಯನ್ನು ಎರಡು ಭಾಗವಾಗಿ ವಿಂಗಡಿಸುತ್ತೇವೆ. ಐದು ವರ್ಷ ಇದ್ದರೆ ಅದರಲ್ಲಿ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗುವ ಸಾಧ್ಯತೆ ಇರುತ್ತದೆ. ಆ ಹಿನ್ನೆಲೆಯಲ್ಲಿ ಈ ಐದು ವರ್ಷದ ಒಳಗೆ ಡಿ.ಕೆ.ಶಿವಕುಮಾರ್‍ರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಿ ಡಿ.ಕೆ.ಶಿವಕುಮಾರ್ ನಮ್ಮನ್ನು ಗೆಲ್ಲಿಸಿದ್ದಾರೆ ಎಂಬ ಭಾವನೆ ಇರುವ ಎಲ್ಲರೂ ಅವರಿಗೆ ಬೆಂಬಲವಾಗಿದ್ದಾರೆ ಎಂದಿದ್ದಾರೆ. \ No newline at end of file diff --git a/eesanje/url_46_323_2.txt b/eesanje/url_46_323_2.txt new file mode 100644 index 0000000000000000000000000000000000000000..cf358515baaa959cc89f479ed57305e26565db50 --- /dev/null +++ b/eesanje/url_46_323_2.txt @@ -0,0 +1,9 @@ +ಖರ್ಗೆ ತವರಲ್ಲೇ ಪರೀಕ್ಷಾ ಅಕ್ರಮ ನಡೆದದ್ದೇ ಹೇಗೆ..? : ಜೋಶಿ +ಹುಬ್ಬಳ್ಳಿ,ಅ.29- ನಮ್ಮ ಸರ್ಕಾರದಲ್ಲಿ ಪಿಎಸ್‍ಐ ಹಗರಣ ಹೊರಬಂತು. ನಾವು ಐಜಿ ಅವರನ್ನೆ ಜೈಲಿಗೆ ಕಳುಹಿಸಿದೆವು. ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನ ಬಂದಿದೆ. ಆದರೆ, ಯಾಕೆ ಹೀಗೆ ಆಯಿತು. ಅದು ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಯಾಕೆ ಈ ಸ್ಕ್ಯಾಮ್ ಆಗುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು. +ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳು ಕಲಬುರಗಿಯಲ್ಲೇ ಯಾಕೆ ಆಗುತ್ತಿದೆ ಎಂಬುವುದನ್ನು ತಿಳಸಬೇಕು ಎಂದರು. ಕಾಂಗ್ರೆಸ್ ಪಾರ್ಟಿ ಗೊಂದಲದಿಂದ ರಾಜ್ಯದ ಜನ ಅಂತಂತ್ರ ವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ . ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ. ಉಪ ಮುಖ್ಯಮಂತ್ರಿ ಶಿವಕುಮಾರ್ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮಾ ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ ಅಧಿಕಾರಕ್ಕಾಗಿ ಒಳ ಜಗಳ ನಡೆಯುತ್ತಿದ್ದು ಇದನ್ನು ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಎಂದು ಟಾಂಗ್ ನೀಡಿದರು. +ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು +ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾವಾಗಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಗಳ ತಾರಕ್ಕೇರಿದೆ ಇದನ್ನು ಡೈವರ್ಟ್ ಮಾಡಲು ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. +ಈ ಸರ್ಕಾರವನ್ನು ತೆಗೆಯಲು ಬಿಜೆಪಿ ಯಾವುದೇ ಚಿಂತನೆ ಮಾಡಿಲ್ಲ. ಜನ ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟಿದ್ದಾರೆ ಐದು ವರ್ಷ ನಡೆಸಲಿ. ಆದರೆ, ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದು ಬಿಡಬೇಕು. ಐದಾರು ಸ್ಥಾನಗಳು ಕಡಿಮೆ ಇದ್ದರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು. ಆದ್ರೆ 70 ಶಾಸಕರನ್ನು ಕರೆದುಕೊಂಡು ಯಾರು ಸರ್ಕಾರ ರಚನೆ ಮಾಡಲು ಯೋಚನೆ ಮಾಡುತ್ತಿದ್ದಾರೆ. +ಇದು ಸಾಧ್ಯನಾ ಎಂದ ಅವರು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ ನಡೆಸಿದ್ದಾರೆ. ಇನ್ನೂ ಎರಡುವರೆ ವರ್ಷಕ್ಕೆ ಮತ್ತು ಲೋಕಸಭಾ ಚುನಾವಣೆಗೆ ಬಳಿ ಉಪ ಮುಖ್ಯಮಂತ್ರಿ ಡಿಕೆಶಿಗೆ ಅಕಾರ ಬಿಟ್ಟುಕೊಡಬೇಕು ಅಂತ ಸಿದ್ದರಾಮಯ್ಯ ಈ ನಾಟಕ ನಡೆಸಿದ್ದಾರೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಭಿಮಾನ ಕರ್ನಾಟಕ ಅಂತ ಮಾತನಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ . ಕೇಂದ್ರ ಜಲ ಸಂಪನ್ಮೂಲಗಳ ವಿಚಾರದಲ್ಲಿ ಅವರು ಸಹಕಾರ ಕೊಟ್ಟಿಲ್ಲ ಇದನ್ನು ಅವರು ಎದೆ ಮುಟ್ಟಿಕೊಂಡು ಹೇಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸ್ಪಷ್ಟನೆ ಕೇಳಿದರು. +ಕುಚ್ವಿತ ಬುದ್ಧಿ ಇರಬಾರದು:ಮಾಜಿ ಸಿಎಂ ಬೊಮ್ಮಾಯಿ ಅನಾರೋಗ್ಯದ ಬಗ್ಗೆ ಶಾಸಕ ಎನ್ ಎಚ್ ಕೋನರೆಡ್ಡಿ ಅಪಹಾಸ್ಯ ವಿಚಾರ ಕುರಿತು ಸಹ ಪ್ರತಿಕ್ರಿಯೆ ನೀಡಿದ ಅವರು, ಅನಾರೋಗ್ಯ ಮತ್ತು ಸಾವಿನ ವಿಚಾರದಲ್ಲಿ ವ್ಯಕ್ತಿ ಯಾರೇ ಇರಲಿ ಈ ರೀತಿಯಾಗಿ ಕೆಳಮಟ್ಟದಲ್ಲಿ ಮಾತನಾಡ ಬಾರದು. ಈ ರೀತಿಯ ಕುಚ್ವಿತ ಬುದ್ದಿ ಮಾಡಬಾರದು. ಇದು ಅವರ ಸಂಸ್ಕೃತಿ ಸಂಸ್ಕಾರವನ್ನು ತೋರಿಸುತ್ತದೆ. ರಾಜಕಾರಣಿಗಳು ಆಗಿದ್ದರು ನಾವು ಮನುಷ್ಯರು ಇದನ್ನು ನೆನಪಿಟ್ಟುಕೊಳ್ಳಬೇಕು. ಜನ ನಮ್ಮನ್ನು ನೋಡುತ್ತಿರುತ್ತಾರೆ ಎಂದರು. \ No newline at end of file diff --git a/eesanje/url_46_323_3.txt b/eesanje/url_46_323_3.txt new file mode 100644 index 0000000000000000000000000000000000000000..b23932b5fd2dccd4e38deb9eb42d4c47e5c4b138 --- /dev/null +++ b/eesanje/url_46_323_3.txt @@ -0,0 +1,11 @@ +ಹಿಂದುಳಿದ ವರ್ಗ ಆಯೋಗದ ವರದಿ ಸ್ವೀಕರಿಸುತ್ತೇವೆ : ಸಿದ್ದರಾಮಯ್ಯ +ಬೆಂಗಳೂರು ಅ.29- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಲಾಗಿರುವ ಸಮೀಕ್ಷಾ ವರದಿಯನ್ನು ಪಡೆದುಕೊಂಡು, ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. +ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದಿದ್ದಾರೆ. +ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ +ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು. ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಸಲು ಸಾಧ್ಯವಿಲ್ಲ ಎಂದರು. +ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಸಲಾಗಿತ್ತು. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು. +ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು. +ನಾನು ಬಿಎಸ್ಸಿ ಓದುವಾಗ ಹೋಟೆಲ್‍ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು. +ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿವಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. +ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ +ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ನಡೆಯಿತು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾಪೆರ್ರ್ಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_323_4.txt b/eesanje/url_46_323_4.txt new file mode 100644 index 0000000000000000000000000000000000000000..5c88caac4c108247affadc9f6a608a083df4881c --- /dev/null +++ b/eesanje/url_46_323_4.txt @@ -0,0 +1,7 @@ +ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು +ಯಾದಗಿರಿ/ಕಲಬುರಗಿ,ಅ.29-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ. +ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ. +ನಗರದ ನ್ಯೂ ಕನ್ನಡ ಪಿಯು ಕಾಲೇಜ್, ಸಬಾ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್, ಎಲ್‍ಕೆಇಟಿ ಬಾಲಕೀಯರ ಪಿಯು ಕಾಲೇಜ್ ಹಾಗೂ ಮಹಾತ್ಮಗಾಂ ಪಿಯು ಕಾಲೇಜ್‍ಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಬ್ಲೂಟೂತ್ ಬಳಸಿರುವುದು ದೃಢಪಟ್ಟಿದೆ, ಈದೇ ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ 1 ಪ್ರಕರಣ ದಾಖಲಾಗಿದ್ದು, ಅಲ್ಲಿ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ. +ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ +ಕಲಬುರಗಿ ನಗರ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 5 ಜನರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ಶನಿವಾರ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪರಿಶೀಲನೆ ಮಾಡುವ ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಿಲ್ಲ, ಪರಿಣಾಮ ಅಕ್ರಮಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಪುಟ್ಟು ಎಂದು ಹೇಳಲಾಗುತ್ತಿದ್ದು, ಈತನ ಜೊತೆ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದ ಒಬ್ಬ ಸಾಥ್ ನೀಡಿದ್ದಾನೆ ಎಂದು ತಿಳಿದುಬಂದಿದೆ. +ಬ್ಲೂಟೂತ್ ಉಪಕರಣ ಬಳಕೆ, 9 ಜನ ಬಂಧನ:ಈ ಹಿಂದೆ ರಾಜ್ಯದಲ್ಲಿ ನಡೆದ 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕಲಬುರಗಿಯಲ್ಲಿ. ಈ ಪ್ರಕರಣ ಮಾಸುವ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಎಫ್‍ಡಿಎ ಹುದ್ದೆಗಳಿಗಾಗಿ ಶನಿವಾರ ನಡೆದ ಪ್ರವೇಶ ಪರೀಕ್ಷೆಯಲ್ಲಿ 3 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅತ್ಯಾಧುನಿಕ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ 22 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_323_5.txt b/eesanje/url_46_323_5.txt new file mode 100644 index 0000000000000000000000000000000000000000..8a4d8897aaf8795677627899487a145ce7a73a8f --- /dev/null +++ b/eesanje/url_46_323_5.txt @@ -0,0 +1,5 @@ +ಕೇರಳ ಬ್ಲಾಸ್ಟ್ : ರಾಜ್ಯದಲ್ಲೂ ಕಟ್ಟೆಚ್ಚರವಹಿಸಲು ಪೊಲೀಸರಿಗೆ ಪರಮೇಶ್ವರ್ ಸೂಚನೆ +ಮಂಗಳೂರು ಅ.29- ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ. +ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮುಂದುವರೆದ ಭಾಗವಾಗಿ ಈಗ ಬಾಂಬ್ ಸೋಟದ ಬಳಿಕ ಮತಷ್ಟು ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ. +ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ +ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವುದು ಕಳವಳಕಾರಿ. ಅದನ್ನು ನಿಗ್ರಹಿಸಲು ಸಾಕಷ್ಟು ಆಧುನಿಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣದ ಬಳಿಕ ರಾಜ್ಯದ ಪೊಲೀಸರು ಕೂಡ ರಾಷ್ಟ್ರೀಯ ಅಂತರಾಷ್ಟ್ರೀಯ ಗುಣಮಟ್ಟದ ಸಾಫ್ಟ್‍ವೇರ್ ಬಳಸುತ್ತಿದ್ದಾರೆಂದು ತಿಳಿಸಿದರು. \ No newline at end of file diff --git a/eesanje/url_46_323_6.txt b/eesanje/url_46_323_6.txt new file mode 100644 index 0000000000000000000000000000000000000000..3e9c2a022c9553ef3bae018978fdb1b2e025b79a --- /dev/null +++ b/eesanje/url_46_323_6.txt @@ -0,0 +1,7 @@ +ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ +ಬೆಂಗಳೂರು, ಅ. 29- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ ಅಂತಿಮವಾಗುವುದು ಅನುಮಾನವಾಗಿದೆ. ದಸರಾ ಉತ್ಸವದ ನಂತರ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ರಾಜ್ಯದಲ್ಲಿನ ಲೋಕಸಭಾ ಕ್ಷೇತ್ರಗಳ ಹಂಚಿಕೆ ಬಗ್ಗೆ ನಿರ್ಧಾರ ಕೈಗೊಂಡು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಪಂಚರಾಜ್ಯ ಚುನಾವಣಾ ಕಾರ್ಯದಲ್ಲಿ ಬಿಜೆಪಿ ನಾಯಕರು ನಿರತರಾಗಿರುವ ಹಿನ್ನೆಲೆಯಲ್ಲಿ ಮಾತುಕತೆ ಮುಂದಕ್ಕೆ ಹೋಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಪಸ್ ಬಂದ ನಂತರ ಮಾತುಕತೆಯಾಗಬಹುದು. ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುವವರೆಗೂ ಎರಡೂ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ವಿರಳ ಎಂದು ಹೇಳಿವೆ. ನವೆಂಬರ್ ಮೊದಲ ವಾರದಲ್ಲಿ ದೆಹಲಿಗೆ ತೆರಳಲಿದ್ದು, ಆ ಸಂದರ್ಭದಲ್ಲಿ ಕ್ಷೇತ್ರ ಹಂಚಿಕೆ ಮಾತುಕತೆ ನಡೆಸುವ ಬಗ್ಗೆ ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು. + : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ +ಬಿಜೆಪಿ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಸುವ ಆಸಕ್ತಿ ತೋರಿದೆ. ರಾಜ್ಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯನ್ನು ಜೆಡಿಎಸ್ ಕೋರಿದೆ. ಕೋಲಾರ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಸಂಸದರಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಗಂಭೀರ ಚರ್ಚೆ ನಡೆದು ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. +ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್, ಜಂಟಿಯಾಗಿ ಚುನಾವಣೆ ಎದುರಿಸಲು ಸಿದ್ಧವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಸಿರುವ ಕಾಂಗ್ರೆಸ್‍ಗೆ ಕಡಿವಾಣ ಹಾಕಲು ಬಿಜೆಪಿ ಜತೆ ಸೇರಿದೆ. ಮೈತ್ರಿ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಉಂಟಾಗಿರುವ ಕೆಲವು ಗೊಂದಲಗಳು ಸೀಟು ಹಂಚಿಕೆಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_323_7.txt b/eesanje/url_46_323_7.txt new file mode 100644 index 0000000000000000000000000000000000000000..9e0abb6947ee244695ef987a7a4d169e26c5094a --- /dev/null +++ b/eesanje/url_46_323_7.txt @@ -0,0 +1,9 @@ +ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ +ಬೆಂಗಳೂರು, ಅ.29-ಹಿಂಗಾರು ಸ್ವಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಮೂರು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. +ಅಕ್ಟೋಬರ್ ಒಂದರಿಂದ ಈತನಕ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರೆದಿದೆ. ಕೆಲವು ಕಡೆ ಚದುರಿದಂತೆ ಮಳೆಯಾಗಿದ್ದರೂ ಕೂಡ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ. ಹಿಂಗಾರು ಮಳೆ ಕೂಡ ವಿಳಂಬವಾಗಿ ಆರಂಭಗೊಂಡಿದೆ. ಅಲ್ಲದೆ, ಮುಂಗಾರಿನಂತೆ ಹಿಂಗಾರು ಕೂಡ ದುರ್ಬಲವಾಗಿದೆ. +ಮಂಗಳವಾರದವರೆಗೆ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ರಾಜ್ಯದ ಕರಾವಳಿ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಂಗಳವಾರದವರೆಗೆ 5ರಿಂದ 15 ಮಿ.ಮೀ.ವರೆಗೂ ಸಾಧಾರಣಾ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಅವರು ಹೇಳಿದರು. + : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ +ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಮಳೆಯಾದರೂ ಅತ್ಯಲ್ಪ ಪ್ರಮಾಣದಲ್ಲಾಗಬಹುದು ಅಷ್ಟೇ. ಆಗಸ್ಟ್‍ನಿಂದ ಈತನಕ ಸತತ ಮಳೆ ಕೊರತೆಯನ್ನು ರಾಜ್ಯ ಎದುರಿಸುತ್ತಿದೆ. ತೀವ್ರಬರದ ಛಾಯೆ ಆವರಿಸಿದ್ದು, ಮುಂದಿನ ಮಳೆಗಾಲದವರೆಗೂ ರಾಜ್ಯವು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಒಣಗಿವೆ ಎಂದರು. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ನಿನ್ನೆಯವರೆಗಿನ ಮಾಹಿತಿ ನೋಡಿದರೂ ರಾಜ್ಯದಲ್ಲಿ ವಾಡಿಕೆಗಿಂತ ಶೇ. 25ರಷ್ಟು ಕೊರತೆ ಉಂಟಾಗಿರುವುದು ಕಂಡುಬರುತ್ತದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಮಳೆಯೇ ಆಗಿಲ್ಲ. ಹೀಗಾಗಿ ಶೇ.97ರಷ್ಟು ಮಳೆ ಕೊರತೆಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ಮಳೆ ಕೊರತೆಯೇ ಹೆಚ್ಚಾಗಿದೆ. ಅಂದರೆ, ವಾಡಿಕೆಗಿಂತ ಶೇ.67ರಷ್ಟು ಮಳೆ ಕೊರತೆ ದಾಖಲಾಗಿದೆ. +ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ದಿನದಿಂದ ದಿನಕ್ಕೆ ಜಲಾಶಯಗಳ ಒಳ ಹರಿವು ಕ್ಷೀಣಿಸುತ್ತಿದೆ. ಈಗಾಗಲೇ ಕೆಲವು ಜಲಾಶಯಗಳ ಒಳಹರಿವು ನಿಂತು ಹೋಗಿದೆ. ಹೀಗಾಗಿ ಲಭ್ಯವಿರುವ ನೀರನ್ನೇ ಬೆಳೆ ಹಾಗೂ ಕುಡಿಯುವ ನೀರಿಗೆ ಮಿತವಾಗಿ ಲೆಕ್ಕಾಚಾರದ ಮೇಲೆ ಬಳಕೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. \ No newline at end of file diff --git a/eesanje/url_46_323_8.txt b/eesanje/url_46_323_8.txt new file mode 100644 index 0000000000000000000000000000000000000000..5c0e5baa76b7f0eece3931a6dec4ab29e1d7a920 --- /dev/null +++ b/eesanje/url_46_323_8.txt @@ -0,0 +1,8 @@ +ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ +ಬೆಂಗಳೂರು, ಅ.29- ವಿಧಾನ ಪರಿಷತ್‍ನ ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಅವರಿಗೆ ಟಿಕೇಟ್ ನೀಡಲಾಗಿದೆ. +ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಸಲುವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಬಿಜೆಪಿಯಿಂದ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿದರು. +ವಿಧಾನ ಚುನಾವಣೆಯಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಈಗ ಮರಳಿ ಅದೇ ವಿಧಾನ ಪರಿಷತ್ ಕ್ಷೇತ್ರದಲ್ಲಿ ಸ್ರ್ಪಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ರಾಮೋಜಿ ಗೌಡ ಬೆಂಗಳೂರು ಪದವಿಧರರ ಕ್ಷೇತ್ರದಲ್ಲಿ ಈ ಮೊದಲು ಸ್ರ್ಪಧಿಸಿ ಹಿನ್ನೆಡೆ ಅನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವಕಾಶ ಪಡೆದಿದ್ದಾರೆ. + : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ +ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸ್ರ್ಪಧಿಸಲು ಕೆ.ಕೆ. ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯ ಕೆಲವು ಭಾಗಗಳ ವ್ಯಾಪ್ತಿಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ರ್ಪಧಿಸಿದ ಡಿ.ಟಿ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. +ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ತಮ್ಮ ಪತಿ ಶ್ರೀನಿವಾಸ್ ಅವರೊಂದಿಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ತಿಂಗಳ ಒಳಗಾಗಿಯೇ ಕಾಂಗ್ರೆಸ್ ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. +ಬೀದರ್, ಕಲಬುರಗಿ, ಯಾದಗಿರ್, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲಾ ವ್ಯಾಪ್ತಿಗಳನ್ನೊಳಗೊಂಡ ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಚಂದ್ರಶೇಖರ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. \ No newline at end of file diff --git a/eesanje/url_46_323_9.txt b/eesanje/url_46_323_9.txt new file mode 100644 index 0000000000000000000000000000000000000000..5cff654c572f0cf388ab274703395cb935ec6e59 --- /dev/null +++ b/eesanje/url_46_323_9.txt @@ -0,0 +1,9 @@ +ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ +ಬೆಂಗಳೂರು, ಅ.29- ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಆಗ್ರಹಿಸಿದ್ದಾರೆ. +ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಲಿ ಉಗುರು ಪೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ರಾಜ್ಯದ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯ ಭೀತರಾಗಿದ್ದಾರೆ ಎಂದರು. +ಈಗಾಗಲೇ ಸರ್ಕಾರ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಅರಣ್ಯ ಇಲಾಖೆ ಹುಲಿ ಉಗುರಿನ ಪೆಂಡೆಂಟ್ ವಿಚಾರದ ಹಿನ್ನೆಲೆಯಲ್ಲಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಆರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್ ದಾಳಿ ನಡೆಸಲಾಗುತ್ತಿದೆ ಎಂದು ದೂರಿದರು. +ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಆಭರಣ ಮಾಲೀಕರಿಗೆ ನೋಟಿಸ್ ನೀಡದೆ ಏಕಾಏಕಿ ದಾಳಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೋಟಿಸ್ ನೀಡದೆ ಅರಣ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಬಾರದು. ಪೆಂಡೆಂಟ್ ವಿಚಾರದಲ್ಲಿ ವಜಾಭರಣ ಅಂಗಡಿಗಳ ಮಾಲೀಕರಿಗೆ ಮಾನಸಿಕ ಕಿರುಕುಳ ನೀಡಿದರೆ. ರಾಜ್ಯವ್ಯಾಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ಕೊಡಬೇಕಾದಿತು ಎಂದು ಎಚ್ಚರಿಸಿದರು. +ಕಾನೂನು ಎಲ್ಲರಿಗೂ ಸಮಾನ ಎಂದು ಹೇಳುತ್ತಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಲಿ. ಅರಣ್ಯ ಉತ್ಪನ್ನ ಹೊಂದಿರುವ ವ್ಯಕ್ತಿಗಳು ತಾವಾಗಿಯೇ ಅದನ್ನು ಸರ್ಕಾರಕ್ಕೆ ವಾಪಸ್ ನೀಡಲು ಒಂದು ಗಡುವು ನೀಡಲಿ. ಜನರಿಗೆ ತಿಳುವಳಿಕೆ ನೀಡದೆ ಸಾರ್ವಜನಿಕರ ಮೇಲೆ ದಾಳಿ ನಡೆಸಿ, ಮೊಕದ್ದಮೆ ಹೂಡಲು ಹೊರಟಿರುವುದು ಸರಿಯಲ್ಲ. +ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ +ಹುಲಿ ಉಗುರು ಸೇರಿದಂತೆ ಕೆಲ ವನ್ಯಜೀವಿ ಉತ್ಪನ್ನಗಳಿಗೆ ಬಂಗಾರದ ಅಲಂಕಾರಿಕ ವಿನ್ಯಾಸ ಮಾಡುವ ಸಂಪ್ರದಾಯವಿದೆ. ಇದನ್ನು ಬಂಗಾರದ ಕವಚದಿಂದಲೂ ಅಲಂಕಾರ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಚಿನ್ನಾಭರಣ ಮಾರಾಟಗಾರರ ಮೇಲೆ ಕ್ರಮ ಜರುಗಿಸಲು ಹೊರಟಿರುವುದು ಸರಿಯಲ್ಲ ಎಂದರು. +ಇಂಡಿಯನ್ ಜ್ಯೂವೆಲರಿ ಅಸೋಸಿಯೇಷನ್ ಉಪಾಧ್ಯಕ್ಷ ಚೇತನ್ ಕುಮಾರ್ ಮೆಹ್ತಾ, ಬೆಂಗಳೂರು ಜ್ಯೂವೆಲರಿ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಗನ್ನಾ, ಸುಮೇಶ್ ವಡೇರಾ ಮತ್ತತಿರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_324_1.txt b/eesanje/url_46_324_1.txt new file mode 100644 index 0000000000000000000000000000000000000000..48d46f8f9869dc1022d1ae3f7e10b9f91a674454 --- /dev/null +++ b/eesanje/url_46_324_1.txt @@ -0,0 +1,9 @@ +ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಲೆ +ಬೆಂಗಳೂರು, ಅ.28- ಟೊಮ್ಯಾಟೋ ಬಳಿಕ ಈಗ ಈರುಳ್ಳಿ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. 20-30ರೂ. ಆಸುಪಾಸಿನಲ್ಲಿದ್ದ ಈರುಳ್ಳಿ ಕೆಜಿಗೆ 60-70ರೂ.ಗೆ ತಲುಪಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳತೊಡಗಿದೆ. ಕಳೆದ ತಿಂಗಳಷ್ಟೇ ಟೊಮ್ಯಾಟೋ ಬೆಲೆ ಗಗನಕ್ಕೇರಿದ್ದು ಕೆಜಿಗೆ 200ರೂ. ತಲುಪಿತ್ತು. ಗ್ರಾಂ ಲೆಕ್ಕದಲ್ಲಿ ಜನರು ಟೊಮ್ಯಾಟೋ ಕೊಳ್ಳುವ ಪರಿಸ್ಥಿತಿ ಬಂದಿತ್ತು. ಈಗ ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿದೆ. +ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಲೆ ಏರಿಕೆಯಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ನವದೆಹಲಿ, ಬೆಂಗಳೂರು, ಕೋಲ್ಕತ್ತಾ, ಮುಂಬೈ, ಚೆನ್ನೈ ಸೇರಿದಂತೆ ಬಹುತೇಕ ಎಲ್ಲ ನಗರಗಳಲ್ಲೂ ಕೂಡ ಈರುಳ್ಳಿ ಬೆಲೆ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ದೇಶದೆಲ್ಲೆಡೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು, ಬೆಲೆ ಏರಿಕೆಯಿಂದ ಜನ ತತ್ತರಿಸತೊಡಗಿದ್ದಾರೆ. +ಕಳೆದ ಸಾಲಿನಲ್ಲಿ ಇದೇ ಸಮಯದಲ್ಲಿ ಕೆಜಿಗೆ 25 ರಿಂದ 30ರೂ. ಇತ್ತು. ಆದರೆ, ಈಗ 50 ರಿಂದ 60ರೂ. ತಲುಪಿದೆ. ದೆಹಲಿಯಲ್ಲಿ 50ರೂ., ಬೆಂಗಳೂರಿನಲ್ಲಿ 55ರೂ., ತೆಲಂಗಾಣದಲ್ಲಿ 60ರೂ. ಆಗಿದೆ. ಕೆಲವೆಡೆ ಅತಿವೃಷ್ಟಿಯಿಂದ ಬೆಳೆ ಹಾನಿಯಾದರೆ ಮತ್ತೆ ಕೆಲವೆಡೆ ಅನಾವೃಷ್ಠಿಯಿಂದ ಬೆಳೆ ಇಲ್ಲದೆ ಈರುಳ್ಳಿ ಕೊರತೆ ಕಂಡುಬಂದಿದೆ. +ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್ +ಹೀಗಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ದೇಶಾದ್ಯಂತ ಈರುಳ್ಳಿ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ ಈರುಳ್ಳಿ ದರ ಭಾರೀ ಏರಿಕೆ ಕಂಡಿದೆಯೋ ಅಲ್ಲೆಲ್ಲ ಕೇಂದ್ರದ ಬಳಿ ಇರುವ ದಾಸ್ತಾನಿನಿಂದ ಈರುಳ್ಳಿ ಸರಬರಾಜು ಮಾಡಿ ರಿಯಾಯಿತಿ ದರದಲ್ಲಿ ಅಂದರೆ ಕೆಜಿಗೆ 25ರೂ.ನಂತೆ ಮಾರಾಟ ಮಾಡಲು ನಿರ್ಧರಿಸಲಾಗಿದೆ. +ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನ ತತ್ತರಿಸಿದ್ದಾರೆ. ಒಂದೆಡೆ ಬರಗಾಲ, ಮತ್ತೊಂದೆಡೆ ಬೆಲೆ ಏರಿಕೆ, ಬಸ್ ದರ, ವಿದ್ಯುತ್ ದರ, ಆಹಾರ ಪದಾರ್ಥಗಳ ದರದ ಜತೆಗೆ ಹಣ್ಣು-ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಈಗ ಈರುಳ್ಳಿ ಬೆಲೆ ಕೂಡ ಗಗನಕ್ಕೇರುತ್ತಿದ್ದು, ಜನ ತತ್ತರಿಸಿಹೋಗಿದ್ದಾರೆ. +ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೇಳುವ ಸಾಧ್ಯತೆ +ಕಳೆದ ಬಾರಿ ರಾಜ್ಯದಲ್ಲಿ ಭಾರೀ ಮಳೆಯಿಂದ ಈರುಳ್ಳಿ ಬೆಳೆ ಹಾಳಾಗಿತ್ತಾದರೂ ಈರುಳ್ಳಿ ಬೆಲೆ ಏರಿಕೆಯಾಗಿರಲಿಲ್ಲ. ಆದರೆ, ಈ ಬಾರಿ ಮಳೆ ಇಲ್ಲದೆ ಬೆಳೆ ಇಲ್ಲದೆ ಜನಸಾಮಾನ್ಯರಿಗೆ ಈರುಳ್ಳಿ ಕೈಗೆಟಕುತ್ತಿಲ್ಲ. ಪ್ರತಿದಿನ ಜನಸಾಮಾನ್ಯರಿಗೆ ಅಗತ್ಯವಾಗಿರುವ ಈರುಳ್ಳಿ, ಆಲೂಗಡ್ಡೆ, ಟೊಮ್ಯಾಟೋ ಬೆಲೆ ಏರಿಕೆಯಾದರೆ ಜೀವನ ನಡೆಸುವುದು ಕಷ್ಟಸಾಧ್ಯ. ಸರ್ಕಾರ ಮಧ್ಯ ಪ್ರವೇಶಿಸಿ ದಿನವಹಿ ವಸ್ತುಗಳು ಕೈಗೆಟಕುವ ದರದಲ್ಲಿ ಜನಸಾಮಾನ್ಯರಿಗೆ ಸಿಗುವಂತೆ ನೋಡಿಕೊಳ್ಳಬೇಕಾಗಿದೆ. \ No newline at end of file diff --git a/eesanje/url_46_324_10.txt b/eesanje/url_46_324_10.txt new file mode 100644 index 0000000000000000000000000000000000000000..38bfaf3593b981a6e57ec5d2c48424a7cb12229e --- /dev/null +++ b/eesanje/url_46_324_10.txt @@ -0,0 +1,7 @@ +ಲೂಟಿ ಹೊಡೆಯಲು ಬೆಂಗಳೂರಿನಲ್ಲಿ ಸುರಂಗ ಮಾರ್ಗ : ಬಿಜೆಪಿ ಆರೋಪ +ಬೆಂಗಳೂರು,ಅ.26- ಲೂಟಿ ಹೊಡೆಯುವ ಉದ್ದೇಶದಿಂದ ಬೆಂಗಳೂರಿನಲ್ಲಿ ಸುರಂಗ ಮಾರ್ಗ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ಮಾಡಿದೆ. ಈ ಕುರಿತಾಗಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ( ಟ್ವಿಟ್ಟರ್) ನಲ್ಲಿ ಬಿಡುಗಡೆ ಮಾಡಿರುವ ಬಿಜೆಪಿ, ಇಸ್ರೇಲ್ ನಿರ್ನಾಮ ಮಾಡಲು ಹಮಾಸ್ ಗಾಜಾದಲ್ಲಿ 500 ಕಿ.ಮೀ ಸುರಂಗ ನಿರ್ಮಾಣ ಮಾಡಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟವನ್ನು ದೋಚಲು ಸುರಂಗ ತೋಡುವ ಕೆಲಸಕ್ಕೆ ಕೈಹಾಕುತ್ತಿದೆ ಎಂದು ಆರೋಪಿಸಿದೆ. +ಕರ್ನಾಟಕವನ್ನು ಕೊಳ್ಳೆ ಹೊಡೆಯೋಕೆ ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ಹಾಗು ಕಾಂಗ್ರೆಸ್ ಶಾಸಕರು ನಿತ್ಯವೂ ಹೊಸ ಸ್ಕೀಂ ಹಾಕುತ್ತಿದ್ದಾರೆ. ಹಾಲಿ ಯೋಜನೆಗಳಿಗೇ ದುಡ್ಡಿಲ್ಲದಿರುವಾಗ ಗುತ್ತಿಗೆದಾರರಿಂದ ಕಿಕ್‌ ಬ್ಯಾಕ್‌ ಪಡೆಯಲು ಹೊಸದಾಗಿ ಮಾಡಿರುವ ಹುನ್ನಾರವೇ ಬೆಂಗಳೂರಿನ ಸುರಂಗ ಮಾರ್ಗ.ಆದರೆ ಕಮಿಷನ್‌ಗಾಗಿ@DKShivakumarಹಾಗೂ…../ +ಅಷ್ಟೇ ಅಲ್ಲದೆ ಈ ಸುರಂಗ ಮಾರ್ಗದಲ್ಲಿ ಯಾರಿಗೆ ಎಷ್ಟು ಪಾಲು ಎಂಬ ನಿಟ್ಟಿನಲ್ಲಿ ಜಂಗೀಕುಸ್ತಿ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪ ಮಾಡಿದೆ. +ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ +ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ತಿಕ್ಕಾಟಕ್ಕೆ ಪ್ರಮುಖ ಕಾರಣವಾಗಿರುವುದು ಭ್ರಷ್ಟಾಚಾರ ಮಾಡಲು ಬೆಂಗಳೂರು ನಗರದಲ್ಲಿ ತೋಡಲು ಹೊರಟಿರುವ ಸರಂಗ ಮಾರ್ಗವಾಗಿದೆ ಎಂದು ವಿಡಿಯೋದಲ್ಲಿ ಆರೋಪ ಮಾಡಲಾಗಿದೆ. +ಕಿ. ಮೀಟರ್‍ಗೆ 450 ಕೋಟಿ ಖರ್ಚು ಮಾಡಿ 190 ಕಿ. ಮೀಗೆ ಲಕ್ಷ ಕೋಟಿ ರೂಪಾಯಿ ಖರ್ಚು ಆಗುತ್ತದೆ. ಈಗಾಗಲೇ 65 ಕಿ.ಮೀ ಸುರಂಗ ಕೊರೆಯಲು ಆದಷ್ಟು ಬೇಗ ಟೆಂಡರ್ ಕರೆದು ತಮ್ಮ ಜೇಬು ತುಂಬಿಸಿಕೊಳ್ಳುವ ಉದ್ದೇಶವನ್ನು ಡಿಕೆಶಿ ಹಾಗೂ ಸತೀಶ್ ಜಾರಕಿಹೊಳಿ ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. \ No newline at end of file diff --git a/eesanje/url_46_324_11.txt b/eesanje/url_46_324_11.txt new file mode 100644 index 0000000000000000000000000000000000000000..cdfa9172aea7de5cf06c1fb3c377edea55bd47e4 --- /dev/null +++ b/eesanje/url_46_324_11.txt @@ -0,0 +1,9 @@ +ಚಳಿಗಾಲಕ್ಕೂ ಮುನ್ನವೇ ಮಂಜು ಮುಸುಕಿದ ವಾತಾವರಣ +ಬೆಂಗಳೂರು, ಅ.26- ಚಳಿಗಾಲ ದಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ಮಂಜು ಕವಿಯುವ ವಾತಾವರಣ ಅಕ್ಟೋಬರ್‍ನಲ್ಲೇ ಕೆಲವೆಡೆ ಗೋಚರಿಸುತ್ತಿದೆ. ರಾಜ್ಯದ ಹಲವೆಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾ ವರಣವಿದ್ದು, ಮಳೆ ಬರುವ ಸಾಧ್ಯತೆ ತೀರಾ ವಿರಳ. ಹವಾಮಾನದಲ್ಲಿ ಉಂಟಾಗಿರುವ ಬದಲಾವಣೆಯ ಪರಿಣಾಮದಿಂದ ಹಿಂಗಾರು ಮಳೆ ಆರಂಭವಾಗಬೇಕಿದ್ದ ಸಂದರ್ಭ ದಲ್ಲೇ ಮಂಜು ಮುಸುಕಿದ ವಾತಾವರಣವಿದೆ. +ಹಿಂಗಾರು ಮಳೆಗಾಲ ಮುಗಿದು ತೀವ್ರ ಚಳಿಯಿದ್ದ ಸಮಯದಲ್ಲಿ ಬೆಳಗಿನ ಜಾವ ಮಂಜು ಕವಿಯು ವುದು ಸಹಜ. ಕೆಲವೆಡೆ ದಟ್ಟ ಮಂಜು ಆವರಿಸುವುದು ಉಂಟು. ಅಕ್ಟೋಬರ್ ಮೊದಲ ವಾರದಲ್ಲಿ ಆರಂಭವಾಗಬೇಕಿದ್ದ ಹಿಂಗಾರು ಎರಡು ವಾರಗಳಷ್ಟು ವಿಳಂಬವಾಗಿದೆ. ಮುಂಗಾರಿನ ನಿರ್ಗಮನವು ಕೂಡ ವಿಳಂಬ ವಾಗಿದೆ. ಹಿಂಗಾರು ಆರಂಭವಾಗಿ ವಾರ ಕಳೆದರೂ ಎಲ್ಲೂ ಕೂಡ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಒಣ ಹವೆ ಇದ್ದು ಹಗಲಿನ ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದೆ. +“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ” +ರಾತ್ರಿ ವೇಳೆ ತಂಪಾದ ವಾತಾ ವರಣ ಕಂಡುಬರುತ್ತದೆ. ಅ.1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.64ರಷ್ಟು ಕಡಿಮೆ ಮಳೆಯಾಗಿದೆ. ಅಂದರೆ ಬಹುತೇಕ ಒಣಹವೆಯೇ ಮುಂದುವರೆದಿದೆ.ಜುಲೈ ಹೊರತುಪಡಿಸಿದರೆ ಆನಂತರದ ಮೂರು ತಿಂಗಳು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಮುಂದಿನ ಒಂದು ವಾರದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳು ಇಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಅಕ್ಟೋಬರ್ ಕೊನೆಯ ವಾರದಲ್ಲಿ ಬೆಳಗಿನ ಜಾವ ಕೆಲವೆಡೆ ಮಂಜು ಕವಿಯುವುದು, ಇಬ್ಬನಿ ಬೀಳುವುದು ಸಾಮಾನ್ಯ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಬೆಂಕಿ ಹಚ್ಚಿ ಹೆತ್ತ ತಾಯಿಯನ್ನೇ ಕೊಂದ ಮಗ +ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಅಕ್ಟೋಬರ್ ನಲ್ಲೇ ಮಂಜು ಕವಿಯುವುದು ಸರ್ವೆ ಸಾಮಾನ್ಯ. ಮಂಜು ಕವಿಯು ವುದರಿಂದ ತಂಪಾದ ವಾತಾವರಣ ಬೆಳಗಿನ ಜಾವ ಕಂಡುಬರುತ್ತದೆ. ಡಿಸೆಂಬರ್ ಅಂತ್ಯದವರೆಗೂ ಆಗಾಗ್ಗೆ ಕೆಲವೆಡೆ ಮಂಜು ಕವಿಯು ವುದು ಕಂಡುಬರಲಿದೆ ಎಂದು ಹೇಳಿದರು. +ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಸದ್ಯಕ್ಕೆ ಮಳೆ ಬರುವಂತಹ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಮಂಜು ಕವಿಯುವ ಸಂದರ್ಭದಲ್ಲಿ ಮಳೆ ಬರುವ ಸಾಧ್ಯತೆಗಳು ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_324_12.txt b/eesanje/url_46_324_12.txt new file mode 100644 index 0000000000000000000000000000000000000000..eb65349e8bffe89e2ac872d60119be81c865df36 --- /dev/null +++ b/eesanje/url_46_324_12.txt @@ -0,0 +1,10 @@ +ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕುರಿತು ಸಿಎಂ ಸಭೆ +ಬೆಂಗಳೂರು, ಅ.26- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಮಿತಿ ಉನ್ನತ ಮಟ್ಟದ ಸಭೆ ಇಂದು ಗೃಹ ಕಚೇರಿ ಕೃಷ್ಣದಲ್ಲಿಂದು ನಡೆಯಿತು. +ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ. ಜಿ.ಪರಮೇಶ್ವರ್, ಡಾ. ಹೆಚ್.ಸಿ.ಮಹದೇವಪ್ಪ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, +ಡಾ. ಎಚ್.ಎಲ್.ಪುಷ್ಪ, ಡಾ.ವೀರಣ್ಣ ದಂಡೆ, ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ.ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್, ಡಾ.ವಿಠಲ್ ಐ.ಬೆಣಗಿ ಕೃಷಿ, ಡಾ.ಸಣ್ಣರಾಮು, ವೆಂಕಟರಾಮಯ್ಯ, ಡಾ.ಎಂ.ಎಸ್.ಮೂರ್ತಿ, ಡಾ.ಗೀತಾ ಶಿವಮೊಗ್ಗ , ಡಾ.ಜಯದೇವಿ ಜಂಗಮ ಶೆಟ್ಟಿ , ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್, ಫಯಾಜ್ ಖಾನ್, ಹೃಷಿಕೇಶ್ ಬಹದ್ದೂರ್ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್.ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್ ಚಂದ್ರಗುಪ್ತ , ಜೆ.ಲೋಕೇಶ್ ಉಪಸ್ಥಿತರಿದ್ದರು. +“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ” +ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣ ವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನು ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟರು. +ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಅರ್ಜಿ ಕೊಡುವವವರು ಹೆಚ್ಚಿದ್ದ ಕಾರಣ, ಅದಕ್ಕೆ ಕಡಿವಾಣ ಹಾಕಲು ಏಕೀಕರಣ ಆಗಿ ಎಷ್ಟು ವರ್ಷಗಳಾಯಿತೋ, ಅಷ್ಟು ಪ್ರಶಸ್ತಿ ಗಳನ್ನು ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು. +ಈ ಬಾರಿ 68ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 68 ಮಂದಿಗೆ ಪ್ರಶಸ್ತಿ ನೀಡಬೇಕಿತ್ತು. ಅದಕ್ಕೆ ಸಾಧಕರನ್ನು ಗುರುತಿಸಲು ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪುರಷ್ಕøತರ ವಯೋಮಿತಿಯನ್ನು 60 ವರ್ಷಕ್ಕಿಂತ ಕಡಿಮೆ ಮಾಡುವ ಹಾಗೂ ನಗದು ಪುರಸ್ಕಾರವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸುವ ನಿರ್ಧಾರ ಪ್ರಕಟಿಸಿದ್ದರು. +ಕಾವಲುಗಾರನ ಸಮಯಪ್ರಜ್ಞೆಯಿಂದ ತಪ್ಪಿದ ರೈಲು ದುರಂತ +ಈ ಮೊದಲು ರಾಜಕೀಯ ಒತ್ತಡಕ್ಕೆ ಮಣಿದು ಮಿತಿ ಇಲ್ಲದಂತೆ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿತ್ತು. ಸಿದ್ದರಾಮಯ್ಯ ಅವರು ಮೊದಲ ಅವಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ವರ್ಷಾಚರಣೆಗೆ ಅನುಗುಣವಾಗಿ ಪ್ರಶಸ್ತಿಗಳ ಸಂಖ್ಯೆಯನ್ನು ನಿಗದಿ ಮಾಡಿದರು. ಅಂದಿನಿಂದಲೂ ಪ್ರತಿವರ್ಷ ಒಂದೊಂದೆ ಪ್ರಶಸ್ತಿಯ ಸಂಖ್ಯೆ ಹೆಚ್ಚಾಗುತ್ತಿದೆ. ಕಲೆ, ಸಾಹಿತ್ಯ, ಜಾನಪದ, ವೈದ್ಯಕೀಯ, ಕ್ರೀಡೆ, ಸಾಮಾಜಿಕ ಸೇವೆ, ಪತ್ರಿಕೋದ್ಯಮ, ಉದ್ಯಮ, ಅನಿವಾಸಿ ಭಾರತೀಯರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಗಣ್ಯ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. \ No newline at end of file diff --git a/eesanje/url_46_324_2.txt b/eesanje/url_46_324_2.txt new file mode 100644 index 0000000000000000000000000000000000000000..188be9812ecc4dd1d8ef2fa1860f92c62cd8cc43 --- /dev/null +++ b/eesanje/url_46_324_2.txt @@ -0,0 +1,8 @@ +ಡಿಕೆಶಿಗೆ ಸಿಎಂ ಪಟ್ಟ ಖಚಿತ +ಬೆಂಗಳೂರು, ಅ.27- ಹಲವು ದಿನಗಳಿಂದ ತೆರೆ ಮರೆಯಲ್ಲೇ ನಡೆಯುತ್ತಿದ್ದ ಅಧಿಕಾರ ಹಸ್ತಾಂತರದ ಚರ್ಚೆಗೆ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ರವಿ ಮಹತ್ವದ ಹೇಳಿಕೆ ನೀಡಿದ್ದು, ಎರಡುವರೆ ವರ್ಷದ ಬಳಿಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದಿದ್ದಾರೆ. +ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಿ ಅಧಿಕಾರ ಹಿಡಿದ ಬೆನ್ನಲ್ಲೆ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ದೆಹಲಿಯಲ್ಲಿ ಐದು ದಿನಗಳ ಕಾಲ ಭಾರೀ ಕಸರತ್ತು ನಡೆದಿತ್ತು. ಅಳೆದು ತೂಗಿ ನಿರ್ಣಯ ಕೈಗೊಂಡ ಹೈಕಮಾಂಡ್ ಕೊನೆಗೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಿತ್ತು. +ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಜೊತೆಗೆ ಲೋಕಸಭೆ ಚುನಾವಣೆಯವರೆಗೂ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರೆಸಿದೆ. ಈ ನಿರ್ಣಯಗಳನ್ನು ಅಧಿಕೃತವಾಗಿ ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕಾರ ಹಂಚಿಕೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. +ಅನಂತರ ಈ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹಲವಾರು ಮಂದಿ ಅಧಿಕಾರ ಹಂಚಿಕೆಯ ಸೂತ್ರ ದೆಹಲಿ ಮಟ್ಟದಲ್ಲಿ ನಿರ್ಣಯವಾಗಿದೆ. ಎರಡುವರೆ ವರ್ಷದ ಬಳಿಕ ಸಿದ್ದರಾಮಯ್ಯ ಅವರು, ಅಧಿಕಾರ ಬಿಟ್ಟುಕೊಡಲಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದ್ಧಂತಿಗಳು ವ್ಯಾಪಕವಾಗಿವೆ. ಆದರೆ ಎಲ್ಲಿಯೂ ಅಧಿಕೃತವಾಗಿ ಪ್ರಕಟಗೊಂಡಿಲ್ಲ. +ಈ ನಡುವೆ ಅಕಾರ ಹಂಚಿಕೆಯಾಗಿಲ್ಲ. ಸಿದ್ದರಾಮಯ್ಯ ಅವರೇ ಅವಧಿ ಪೂರೈಸಲಿದ್ದಾರೆ ಎಂದು ಹಲವಾರು ಮಂದಿ ಹೇಳಿಕೆ ನೀಡಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್, ಕೆ.ಎನ್.ರಾಜಣ್ಣ. ಶಾಸಕರಾದ ಬಸವರಾಜ ರಾಯರೆಡ್ಡಿ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಅತ್ತ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಕುಣಿಗಲ್ ರಂಗನಾಥ್, ಹೆಚ್.ಸಿ.ಬಾಲಕೃಷ್ಣ ಸೇರಿದಂತೆ ಅನೇಕರು ಡಿ.ಕೆ.ಶಿವಕುಮಾರ್ ಪರವಾಗಿ ಮಾತನಾಡಿದ್ದಾರೆ. +ಇದೇ ಮೊದಲ ಬಾರಿಗೆ ಮಂಡ್ಯ ಕ್ಷೇತ್ರದ ಶಾಸಕ ಗಣಿಗ ರವಿ ಅಕಾರ ಹಂಚಿಕೆಯಾಗಲಿದೆ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮಲ್ಲಿ ಯಾವುದೇ ಬಣಗಳಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಕಾರಣಕ್ಕೆ ಆತಂಕಗೊಂಡು ಬಿಜೆಪಿ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ.ಪ್ರಸ್ತುತ ಅಧಿಕಾರ ಹಂಚಿಕೆಯ ಕುರಿತು ಚರ್ಚೆ ಅನಗತ್ಯ ಎಂದು ಹೇಳುತ್ತಲೇ ಗಣಿಗ ರವಿ, ಅಧಿಕಾರ ಹಂಚಿಕೆ ಹೈಕಮಾಂಡ್‍ಗೆ ಬಿಟ್ಟ ವಿಚಾರ, ಆದರೆ ಎರಡುವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಸ್ಪಷ್ಟ ಎಂದಿದ್ದಾರೆ. +ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾಗಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಆದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಅವರು ಪಕ್ಷಕ್ಕೆ ದುಡಿದಿದ್ದಾರೆ. ಹಾಲಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮೊದಲ ಬಾರಿಗೆ ಖಾತ್ರಿ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಜನಪರ ಕಲ್ಯಾಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದೆ. ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಕಾರ ಹಂಚಿಕೆಯ ಚರ್ಚೆ ಈಗ ಅಪ್ರಸ್ತುತ, ಕಾಲ ಬಂದಾಗ ಎಲ್ಲವೂ ನಿರ್ಣಯವಾಗುತ್ತದೆ ಎಂದಿದ್ದಾರೆ. \ No newline at end of file diff --git a/eesanje/url_46_324_3.txt b/eesanje/url_46_324_3.txt new file mode 100644 index 0000000000000000000000000000000000000000..5f6d3bd03e1a048c337c410d9fb401116d6770fd --- /dev/null +++ b/eesanje/url_46_324_3.txt @@ -0,0 +1,11 @@ +ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ +ಬೆಂಗಳೂರು, ಅ.27- ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ ಎಂದು ಟೀಕಿಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಗಳು ಎಂಬ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. +ಸಾಮಾಜಿಕ ಜಾಲತಾಣಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ 216 ತಾಲ್ಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. 33770 ಕೋಟಿ ರೂಪಾಯಿ ನಷ್ಟವಾಗಿದೆ. ರಾಜ್ಯ ಸರ್ಕಾರ 17,901 ಕೋಟಿ ರೂಪಾಯಿಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿದೆ. +ಕೇಂದ್ರದಿಂದ ಬರ ಅಧ್ಯಯನ ತಂಡಕ್ಕೂ ರಾಜ್ಯದ ಪರಿಸ್ಥಿತಿ ಮನವರಿಕೆಯಾಗಿದೆ. ಆದರೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿರುವ ಅವರು, ಬರ ನಿಭಾಯಿಸಲು ಈವರೆಗೂ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ. +ಪ್ರಧಾನಿ ನರೇಂದ್ರ ಮೋದಿಯವರೇ ಜಗತ್ತಿನಲ್ಲಿ ಕಷ್ಟ-ದುಃಖಕ್ಕೆ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ. ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂಬುದು ನನ್ನೊಬ್ಬನ ಪ್ರಶ್ನೆಯಲ್ಲ, ನಾಡಿನ ಆರುವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂದಿದ್ದಾರೆ. +ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮನೆಯ ಮೇಲೆ ಅರಣ್ಯ ಅಧಿಕಾರಿಗಳ ದಾಳಿ +ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‍ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. +ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ ಲಕ್ಷಾಂತರ ಯುವ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲು ಪ್ರಯತ್ನಿಸಿ ಕನ್ನಡಿಗರ ಸ್ವಾಭಿಮಾನವನ್ನು ಕೆಣಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ. +ನಾಡಿನ ರೈತರ ಜೀವನಾಧಾರವಾಗಿರುವ ಕಾವೇರಿ, ಮಹದಾಯಿ, ಕೃಷ್ಣಾ, ಭದ್ರಾಮೇಲ್ದಂಡೆ ಮೊದಲಾದ ನದಿಗಳ ನೀರಾವರಿ ಯೋಜನೆಗಳಿಗೆ ಬೆಂಬಲ ನೀಡದೆ, ಅನ್ನದಾತನನ್ನು ಸಂಕಷ್ಟಕ್ಕೆ ನೂಕಲಾಗಿದೆ. ಕನ್ನಡಿಗರೇ ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದ ಕರ್ನಾಟಕದ ಹೆಮ್ಮೆಯ ವಿಜಯಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಕಾಪೆರ್ರೇಷನ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮೊದಲಾದ ಲಾಭದಲ್ಲಿದ್ದ ಬ್ಯಾಂಕುಗಳನ್ನು ನಷ್ಟದಲ್ಲಿದ್ದ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಹೀಗೆ ಕರ್ನಾಟಕದ ವಿರುದ್ಧ ಕೇಂದ್ರದ ಬಿಜೆಪಿ ಸರ್ಕಾರ ನಡೆಸುತ್ತಿರುವ ಅನ್ಯಾಯದ ಸರಮಾಲೆ ಮುಂದುವರೆದಿದೆ, ನಿರಂತರವಾಗಿ ಸ್ವಾಭಿಮಾನಿ ಕನ್ನಡಿಗರನ್ನು ನಿರ್ಲಕ್ಷಿಸಿ ಅವಮಾನಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. +ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್‍ಗೆ ಜಾಮೀನು +ಕೇಂದ್ರ ಬಿಜೆಪಿ ಸರ್ಕಾರದ ಈ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಕ್ಕೆ ವಿರುದ್ಧವಾಗಿರುವುದರಿಂದ ಅದರ ವಿರುದ್ಧ ಧ್ವನಿಯೆತ್ತುವುದು ಅನಿವಾರ್ಯವೆಂದು ಭಾವಿಸಿ, ಇಂದಿನಿಂದ ಸ್ವಾಭಿಮಾನಿ…ಕನ್ನಡಿಗರಪ್ರಶ್ನೆ ಎಂಬ ಹ್ಯಾಷ್‍ಟ್ಯಾಗ್ ಅಡಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. \ No newline at end of file diff --git a/eesanje/url_46_324_4.txt b/eesanje/url_46_324_4.txt new file mode 100644 index 0000000000000000000000000000000000000000..36331742c7ec3631e5c5d56b5f9fee42b13f8ad3 --- /dev/null +++ b/eesanje/url_46_324_4.txt @@ -0,0 +1,15 @@ +ರಾಜ್ಯದಲ್ಲಿ 5.33 ಕೋಟಿ ಮತದಾರರು, ಮಹಿಳೆಯರೇ ಹೆಚ್ಚು..! +ಬೆಂಗಳೂರು,ಅ.27- ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳು ಹಾಗೂ ಈ ವ್ಯಾಪ್ತಿಗೆ ಒಳಪಡುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ಅಲ್ಲದೆ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯು ಆರಂಭಗೊಂಡಿದೆ. +ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರು, 2024ರ ಕರಡು ಮತದಾರರ ಪಟ್ಟಿ ಪ್ರಕಾರ , ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,33,77,162 ಮಂದಿ ಇದ್ದಾರೆ. ಇದರಲ್ಲಿ 2,68,02,838 ಪುರುಷ ಮತದಾರ, 2,65,69,428 ಮಹಿಳಾ ಮತದಾರರು ಇದ್ದಾರೆ. 4,896 ಇತರೆ ಮತದಾರರು ಹಾಗೂ 47,172 ಸೇವಾ ಮತದಾರರು ಇದ್ದಾರೆ. 2023ರ ಅಂತಿಮ ಮತದಾರರ ಪಟ್ಟಿ ಪ್ರಕಾರ 5,08,53,84 ಮತದಾರರು ಇದ್ದರು ಎಂದು ಹೇಳಿದರು. +ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ 7,06,207 ಮತದಾರರು ಇದ್ದು ಅತಿ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ. ಶೃಂಗೇರಿ ಕ್ಷೇತ್ರದಲ್ಲಿ ಅತಿ ಕಡಿಮೆ 1,66,907 ಮತದಾರರು ಇದ್ದಾರೆ. ಶೇ.100ರಷ್ಟು ಭಾವಚಿತ್ರ ಮತ್ತು ಮತದಾರರ ಗುರುತಿನ ಚೀಟಿಯನ್ನು ಡೌನ್‍ಲೋಡ್ ಮಾಡಲಾಗಿದೆ ಎಂದು ಹೇಳಿದರು. +ವಿಶೇಷ ಸಂಕ್ಷಿಪ್ತ ಪರಿಷ್ಕರಣೆ:ಇಂದಿನಿಂದ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭಿಸಲಾಗಿದ್ದು, ಡಿಸೆಂಬರ್ 9ರವರೆಗೆ ಮತದಾರರ ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಬಹುದು. ಅಲ್ಲದೆ ನವೆಂಬರ್ 18, 19 ಹಾಗೂ ಡಿಸೆಂಬರ್ 2 ಮತ್ತು 3ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು. ಡಿಸೆಂಬರ್ 26ರಂದು ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲಾಗಿದ್ದು, 2024ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ತಿಳಿಸಿದರು. +ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ನಮೂನೆ 6, ಆಕ್ಷೇಪಣೆ ಸಲ್ಲಿಸಲು ನಮೂನೆ 7, ತಿದ್ದುಪಡಿಗಾಗಿ ನಮೂನೆ 8ನ್ನು ಸಲ್ಲಿಸಬಹುದು. ಆನ್‍ಲೈನ್‍ನಲ್ಲೂ ಸಲ್ಲಿಸಲೂ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನು ಕೈಗೊಳ್ಳಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಮಹಿಳಾ ಮತದಾರರೇ ಹೆಚ್ಚು:224 ವಿಧಾನಸಭಾ ಕ್ಷೇತ್ರಗಳ ಪೈಕಿ 115 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚಿದ್ದರೆ, ಮಹದೇವಪುರ ಕ್ಷೇತ್ರದಲ್ಲಿ ಅತೀ ಕಡಿಮೆ(859) ಮತದಾರರು ಇದ್ದಾರೆ. ಇಪಿ ಮತದಾರರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅತಿಹೆಚ್ಚು ಅಂದರೆ ಶೇ.93.9ರಷ್ಟು , ಬಿಟಿಎಂ ಲೇಔಟ್ ಕ್ಷೇತ್ರದಲ್ಲಿ ಶೇ.47.45ರಷ್ಟು ಕಡಿಮೆ ಇದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು ಮತದಾರರು ಇದ್ದರೆ, ಕೊಡಗು ಜಿಲ್ಲೆಯಲ್ಲಿ ಅತಿ ಕಡಿಮೆ ಮತದಾರರು ಇದ್ದಾರೆ ಎಂದರು. +ಮತದಾರರು ತಮ್ಮ ಆಧಾರ್ ಜೋಡಣೆ ನೀಡುವುದು ಕಡ್ಡಾಯವಲ್ಲ ಅದು ಐಚ್ಛಿಕ ಎಂದು ಸ್ಪಷ್ಪಪಡಿಸಿದರು.18- 19 ವರ್ಷದ ಯುವ ಮತದಾರರು 13,45,707 ಮಂದಿ ಇದ್ದು, ತೃತೀಯ ಲಿಂಗಿ ಮತದಾರರು 4,896 ಇದ್ದಾರೆ. ಸಾಗರೋತ್ತರ ಮತದಾರರು 3055, ವಿಕಲಚೇತನ ಮತದಾರರು 5,66,777 ಇದ್ದು, 80 ವರ್ಷ ಮೇಲ್ಪಟ್ಟ ಮತದಾರರು 11,76,093ರಷ್ಟಿದ್ದಾರೆ ಎಂದು ಹೇಳಿದರು. + : ಧರ್ಮದ ಹೆಸರಲ್ಲಿ 2ನೇ ಮದುವೆಗೆ ನಿರ್ಬಂಧ +ಲಿಂಗಾನುಪಾತವು ಒಂದು ಸಾವಿರ ಪುರುಷರಿಗೆ 2011ರ ಜನಗಣತಿ ಪ್ರಕಾರ 973 ಇದೆ. ಮತದಾರರ ಪಟ್ಟಿಯ ಪ್ರಕಾರ ಲಿಂಗಾನುಪಾತ 991 ಇದೆ. ಮತದಾರರ ಮತ್ತು ಜನಸಂಖ್ಯೆಯ ಅನುಪಾತದ ಪ್ರಕಾರ ಶೇ.68.02 ರಷ್ಟಿದೆ. ಮತದಾರರ ಪಟ್ಟಿಯ ಪ್ರಕಾರ ಶೇ.69.21ರಷ್ಟಿದೆ. +58,834 ಮತದಾನ ಕೇಂದ್ರಗಳಿದ್ದು 845 ಮತಕಟ್ಟೆಗಳನ್ನು ಸೇರಿಸಲಾಗಿದೆ. 293 ಮತಗಟ್ಟೆಗಳನ್ನು ವಿಲೀನಗೊಳಿಸಲಾಗಿದೆ. 552 ಮತಗಟ್ಟೆಗಳು ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ ಎಂದು ಅವರು ಮಾಹಿತಿ ನೀಡಿದರು. +18,88,243 ಅರ್ಜಿಗಳನ್ನು ಸ್ವೀಕರಿಸಿದ್ದು, 16,31, 547 ಅರ್ಜಿಗಳನ್ನು ಅನುಮೋದಿಸಲಾಗಿದೆ. 1,71,964 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ತಿಳಿಸಿದರು. +ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಮಟ್ಟದ ಏಜೆಂಟರ್‍ನ್ನು ನೇಮಿಸಲು ಮತ್ತು ಎಲ್ಲಾ ಅರ್ಹಮತದಾರರನ್ನು ನೋಂದಾಯಿಸಲು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಕೋರಿದರು. +ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡರು, ವಿಷಯ ಏನು ಗೊತ್ತೇ..? +ದೋಷಮುಕ್ತ ಮತದಾರರ ಪಟ್ಟಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ. ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಮಯದಲ್ಲಿ ಸಂಬಂತ ನಮೂನೆಗಳ ಮೂಲಕ ಸಲ್ಲಿಸಿ ಪರಿಷ್ಕರಣೆ ಮಾಡಿಕೊಳ್ಳಬಹುದು ಎಂದರು.ಸುದ್ದಿಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಕಾರಿಗಳಾದ ಆರ್.ವೆಂಕಟೇಶ್‍ಕುಮಾರ್, ಎಂ.ಕೂರ್ಮಾ ರಾವ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_324_5.txt b/eesanje/url_46_324_5.txt new file mode 100644 index 0000000000000000000000000000000000000000..71583e31da9ec5ce81270a55f6b74c5d7e028a77 --- /dev/null +++ b/eesanje/url_46_324_5.txt @@ -0,0 +1,5 @@ +ಹುಲಿ ಉಗುರು ಪ್ರಕರಣದಲ್ಲಿ ವರ್ತೂರು ಸಂತೋಷ್‍ಗೆ ಜಾಮೀನು +ಬೆಂಗಳೂರು, ಅ.27- ಹುಲಿ ಉಗುರು ಧರಿಸಿದ್ದಾರೆಂಬ ಆರೋಪದ ಮೇರೆಗೆ ಅರಣ್ಯಾಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಬಿಗ್‍ಬಾಸ್ ಸ್ರ್ಪಧಿ ವರ್ತೂರು ಸಂತೋಷ್ ಹಳ್ಳಿಕಾರ್‍ಗೆ ಜಾಮೀನು ಮಂಜೂರಾಗಿದೆ. 4 ಸಾವಿರ ರೂ. ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ಒದಗಿಸುವಂತೆ ಬೆಂಗಳೂರಿನ ಎರಡನೆ ಎಸಿಜೆಎಂ ನ್ಯಾಯಾಲಯ ಆದೇಶಿಸಿ ಜಾಮೀನು ಮಂಜೂರು ಮಾಡಿದೆ. +ಬಿಗ್‍ಬಾಸ್ ಸ್ರ್ಪಧಿಯಾಗಿ ವರ್ತೂರು ಸಂತೋಷ್ ಭಾಗವಹಿಸಿದ್ದರು. ಸಂತೋಷ್ ಹುಲಿ ಉಗುರು ಪೆಂಡೆಂಟ್ ಹೊಂದಿರುವ ಸರ ಧರಿಸಿದ್ದಾರೆಂದು ಅರಣ್ಯಾಧಿಕಾರಿಗಳು ಬಿಗ್‍ಬಾಸ್ ಮನೆಯಿಂದಲೇ ಸಂತೋಷ್ ಅವರನ್ನು ಬಂಧಿಸಿ ಕರೆದೊಯ್ದಿದ್ದರು. +ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡರು, ವಿಷಯ ಏನು ಗೊತ್ತೇ..? +ಇದೀಗ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_324_6.txt b/eesanje/url_46_324_6.txt new file mode 100644 index 0000000000000000000000000000000000000000..428fdc23dcb95bdd58609865c721aeefe611e77e --- /dev/null +++ b/eesanje/url_46_324_6.txt @@ -0,0 +1,9 @@ +ಬ್ರೇಕಿಂಗ್ : ಹುಲಿ ಉಗುರು ಪ್ರಕರಣದ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ರಾಜ್ಯ ಸರ್ಕಾರ + +ಬೆಂಗಳೂರು,ಅ.27- ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹುಲಿ ಉಗುರು ಪ್ರಸಂಗಗಳ ಕುರಿತಂತೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು, ಜನತೆಗೆ ಸಮಸ್ಯೆಯಾಗದಂತೆ ತಿಳಿ ಹೇಳೀ ಕಾನೂನು ಕ್ರಮದಿಂದ ಪಾರಾಗಲು ಹೊಸ ಆಲೋಚನೆ ಮಾಡಿದೆ. +ರಾಜ್ಯಾದ್ಯಂತ ಹಲವು ದೇವಾಲಯಗಳು, ಧಾರ್ಮಿಕ ಕ್ಷೇತ್ರಗಳು, ಚಿತ್ರರಂಗದ ತಾರೆಯರು, ರಾಜಕಾರಣಿಗಳಿಗೆ ಹೊಸ ಫಜೀತಿಯಾಗಿರುವ ಇದನ್ನು ಸರಿಮಾಡಲು ಅರಣ್ಯ ಸಚಿವಾಲಯ ವನ್ಯಪ್ರಾಣಿಗಳ ಪರಿಕರಗಳನ್ನು ಸರ್ಕಾರಕ್ಕೆ ವಾಪಸ್ ನೀಡಲು ಸಮಯ ಅವಕಾಶ ನೀಡುವ ಯೋಜನೆಯನ್ನು ರೂಪಿಸುತ್ತಿದೆ. +ಸ್ವಾತಂತ್ರ್ಯ ಪೂರ್ವದಲ್ಲಿಯೇ ಕೆಲವರು ಹುಲಿ ಉಗುರು, ಜಿಂಕೆ ಕೊಂಬು, ಕೆಲವು ವನ್ಯಪ್ರಾಣಿಗಳ ಚರ್ಮಗಳನ್ನು ಬಳಸುತ್ತಿದ್ದರು. ಕಾಲ ಕಳೆದಂತೆ ವನ್ಯಪ್ರಾಣಿಗಳ ಸಂರಕ್ಷಣೆ ಹಾಗೂ ಪರಿಸರ ಸಮತೋಲನಕ್ಕಾಗಿ ಕಠಿಣ ಕಾನೂನನ್ನು ಜಾರಿಗೆ ತಂದಿದೆ. ಆದರೆ ಇದರ ಬಗ್ಗೆ ಯಾರಿಗೂ ಅಷ್ಟಾಗಿ ತಿಳಿದಿಲ್ಲ ಮತ್ತು ಜಾಗೃತಿ ಮೂಡಿಸುವ ಕಾರ್ಯಗಳು ಕೂಡ ಅಷ್ಟಾಗಿ ನಡೆದಿಲ್ಲ. +ಪ್ರಸ್ತುತ ಪ್ರಗತಿಪರ ರೈತ ವರ್ತೂರ್ ಸಂತೋಷ್ ಬಂಧನದ ನಂತರ ರಾಜ್ಯಾದ್ಯಂತ ಸಂಚಲ ಸೃಷ್ಟಿಯಾಗಿದ್ದು, ಈಗಾಗಲೇ ಹಲವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಸರ್ಕಾರ ಹಾಗೂ ಅರಣ್ಯ ಇಲಾಖೆ ವಿರುದ್ಧ ಆಕ್ರೋಶಗಳು ಕೂಡ ಸೃಷ್ಟಿಯಾಗುತ್ತಿದೆ.ಇದೆಲ್ಲದರ ಮನಗಂಡು ಸರ್ಕಾರ ಸದ್ಯಯಾರನ್ನು ಬಂಸುವುದು ಬೇಡ. ಅವರಿಗೆ ತಿಳುವಳಿಕೆ ಹೇಳಿ ಎಚ್ಚರಿಕೆ ನೀಡುವ ಕ್ರಮಕ್ಕೆ ಮುಂದಾಗಿದೆ. +ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕೂಡ ಈಗ ಯಾರನ್ನು ಬಂಸಬೇಕೆಂಬುದು, ಕಾನೂನು ಕ್ರಮ ಕೈಗೊಳ್ಳುವುದು ತನಿಖಾಕಾಧಿರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸುವ ಮೂಲಕ ಇದಕ್ಕೆ ಪುಷ್ಟಿ ನೀಡುವಂತೆ ಮಾತನಾಡಿದರು. +ಹಲವು ಸಚಿವರು ಹಾಗೂ ಶಾಸಕರ ಮನವಿಯಂತೆ ಸರ್ಕಾರ ಹೊಸದಾಗಿ ಅಭಿಯಾನ ಆರಂಭಿಸಿ ಯಾರ್ಯಾರ ಬಳಿ ಹುಲಿ ಉಗುರಾಗಲಿ, ಇತರೆ ಕಾನೂನು ವಿರೋ ವಸ್ತುಗಳನ್ನು ಸರ್ಕಾರಕ್ಕೆ ಒಪ್ಪಿಸುವ ಅವಕಾಶವನ್ನು ನೀಡುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಸಾರ್ವಜನಿಕರಿಗೆ ನಿಗದಿತ ಸಮಯ ಹಾಗೂ ಯಾವ ಕಚೇರಿಗಳಲ್ಲಿ ಇದನ್ನು ಒಪ್ಪಿಸಬೇಕು ಎಂಬುದರ ಬಗ್ಗೆಯೂ ರೂಪುರೇಷೆ ಸಿದ್ದಪಡಿಸಲು ಅಧಿಕಾರಿ ವಲಯದಲ್ಲಿ ಕೂಡ ಚರ್ಚೆ ನಡೆಯುತ್ತಿದೆ. ಸಾರ್ವಜನಿಕರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಮತ್ತು ಸರ್ಕಾರ ಯಾವ ಯಾವ ನಿಯಮಗಳನ್ನು ಮುಂದಿಡುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. \ No newline at end of file diff --git a/eesanje/url_46_324_7.txt b/eesanje/url_46_324_7.txt new file mode 100644 index 0000000000000000000000000000000000000000..f3b80a6035e8d3b104d8764fadc49b3c3f2c1a02 --- /dev/null +++ b/eesanje/url_46_324_7.txt @@ -0,0 +1,12 @@ +ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮನೆಯ ಮೇಲೆ ಅರಣ್ಯ ಅಧಿಕಾರಿಗಳ ದಾಳಿ +ಬೆಳಗಾವಿ,ಅ.27- ಹುಲಿ ಉಗುರಿನ ಪ್ರಕರಣಗಳು ದಿನಕ್ಕೊಂದರಂತೆ ಹೊರ ಬರುತ್ತಿದ್ದು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮನೆಯ ಮೇಲೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. +ಸಚಿವೆಯ ಪುತ್ರ ಮೃಣಾಲ್ ಪುತ್ರ ಹುಲಿಉಗುರಿನ ಮಾದರಿಯ ಪೆಂಟೆಂಡ್ ಸರವನ್ನು ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಕುರಿತು ಇಂದು ಬೆಳಗ್ಗೆ ಅರಣ್ಯ ಇಲಾಖೆಯ ಡಿಎಫ್‍ಓ ಶಂಕರ್ ಕಲ್ಲೋಳಿಕರ್, ಎಸಿಎಫ್ ಸುರೇಶ್ ತೇಲಿ ಸೇರಿ, 15 ರಿಂದ 20 ಅಧಿಕಾರಿಗಳು ಬೆಳಗಾವಿಯ ಕುವೆಂಪು ನಗರದಲ್ಲಿರುವ ಮೃಣಾಲ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ದೂರವಾಣಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪರಿಶೀಲನೆ ನಡೆಸಿ ನ್ಯಾಯ ರೀತಿ ಕ್ರಮಗಳನ್ನು ಮುಂದುವರೆಸುವಂತೆ ಸಲಹೆ ನೀಡಿದರು ಎನ್ನಲಾಗಿದೆ. +ಆ ಹಿನ್ನೆಲೆಯಲ್ಲಿ ಹುಲಿ ಪೆಂಡೆಂಟ್ ಎಲ್ಲಿಂದ ಬಂತು, ಯಾರು ನೀಡಿದ್ದಾರೆಂದು ಅರಣ್ಯ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಎಷ್ಟು ವರ್ಷದಿಂದ ಪೆಂಡೆಂಟ್ ಧರಿಸಿದ್ದೀರಿ ಎಂಬೆಲ್ಲಾ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಇದಕ್ಕೆ ಉತ್ತರಿಸಿರುವ ಮೃಣಾಲ್ ನನ್ನ ಮದುವೆಯಲ್ಲಿ ಸಂಬಂಧಿಕರು ಉಡುಗೊರೆ ನೀಡಿದ್ದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಪ್ಲಾಸ್ಟಿಕ್‍ದು ಎಂಬ ಕಾರಣಕ್ಕೆ ಹಾಕಿಕೊಳ್ತಿದ್ದೆ ಎಂದಿದ್ದಾರೆ ಎಂದು ತಿಳಿಸಲಾಗಿದೆ. +ಟಿಎಂಸಿ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಬಂಧನ +ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಅಧಿಕಾರಿ, ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಮೃಣಾಲ್ ಧರಿಸಿರುವ ಪೆಟೆಂಟ್ ಅನ್ನು ಪರಿಶೀಲಿಸಿದ್ದೇವೆ. ಅದರ ಉದ್ದ, ಅಗಲ, ತೂಕ ಲೆಕ್ಕ ಹಾಕಲಾಗಿದೆ. ಅದರೊಂದಿಗಿನ ಬಂಗಾರದ ಸರವನ್ನು ಬೇರ್ಪಡಿಸಿದ ಬಳಿಕ ಎಫ್‍ಎಸ್‍ಎಲ್ ಗೆ ಕಳುಹಿಸುತ್ತೇವೆ. ಅಲ್ಲಿಂದ ವರದಿ ನಂತ ಅಧಿಕೃತ ಪ್ರತಿಕ್ರಿಯೆ ನೀಡಲಾಗುವುದು ಎಂದಿದ್ದಾರೆ. +ನಿನ್ನೆ ಮಾಧ್ಯಮದಲ್ಲಿ ತೋರಿಸಿರುವ ಪೆಟೆಂಟ್ ಮೃಣಾಳ್ ಅವರ ತೋಳಿನಲ್ಲಿರುವುದು ಗಮನಕ್ಕೆ ಬಂದಿದೆ. ಅದರ ಬಗ್ಗೆ ಹೇಳಿಕೆ ಪಡೆದಿದ್ದೇವೆ. ಸಚಿವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ಹೇಳಿದ್ದಾರೆ. ಯಾವ ರೀತಿಯ ತನಿಖೆ ಅಗತ್ಯವೂ ಅದನ್ನು ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ಇಂದು ಸಚಿವರು ಮನೆಯಲ್ಲಿ ಇಲ್ಲ. ವಿಚಾರಣೆಗೆ ಪುತ್ರನೊಂದಿಗೆ ಆಗಮಿಸುವುದಾಗಿ ತಿಳಿಸಿದ್ದಾರೆ ಎಂದರು. +ಈ ನಡುವೆ ಬೇರೆ ಕಡೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೃಣಾಲ್ ಬಳಿ ಇರುವುದು ನಿಜವಾದ ಹುಲಿ ಉಗುರಲ್ಲ. ಮದುವೆ ಸಂದರ್ಭದಲ್ಲಿ ಸಂದರ್ಭದಲ್ಲಿ ಸಂಬಂಧಿಕರು ಆ ಡಾಲರ್ ಅನ್ನು ಉಡುಗೊರೆ ನೀಡಿದ್ದರು. ಅದು ಪ್ಲಾಸ್ಟಿಕ್‍ನದು ಎಂದರು. +ನಾನು ಶುದ್ಧ ಸಸ್ಯಹಾರಿ, ಪ್ರಾಣಿ ಹತ್ಯೆಯನ್ನು ವಿರೋಧಿಸುತ್ತೇನೆ. ಇನ್ನೂ ಹುಲಿ ಉಗುರು ಧರಿಸುವುದನ್ನು ಹೇಗೆ ಸಹಿಸಲಿ. ಇಷ್ಟಕ್ಕೂ ಈಗಿನ ಕಾಲದಲ್ಲಿ ನಿಜವಾದ ಹುಲಿ ಉಗುರು ಎಲ್ಲಿ ದೊರೆಯುತ್ತದೆ ಎಂದು ಪ್ರಶ್ನಿಸಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು. +ಈ ಮಧ್ಯೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಳಿಯನೂ ಆಗಿರುವ ಹುಬ್ಬಳ್ಳಿಯ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೂಡ ಮೃಣಾಲ್ ಮಾದರಿಯ ಪೆಟೆಂಟ್ ಧರಿಸಿದ್ದಾರೆ ಎಂದು ವರದಿಯಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ರಜತ್, ಮದುವೆ ಸಂದರ್ಭದಲ್ಲಿ ಫೋಟೋ ಶೂಟ್‍ಗಾಗಿ ಸಂಸ್ಥೆಯೊಂದಕ್ಕೆ ಜವಾಬ್ದಾರಿ ನೀಡಲಾಗಿತ್ತು. ಅವರು ಕಾಸ್ಟೊಮ್ ವಿನ್ಯಾಸಗೊಳಿಸುವಾಗ ಸಿಂಥೆಟಿಕ್‍ನ ಹುಲಿ ಉಗುರಿನ ಮಾದರಿಯನ್ನು ನೀಡಿದ್ದರು. ಅದು ಈಗಲೂ ನನ್ನ ಬಳಿ ಇದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಹಾಜರು ಪಡಿಸುತ್ತೇನೆ ಎಂದರು. +ಮಲ್ಲಿಕಾರ್ಜುನ ಖರ್ಗೆ ಗುಣಗಾನ ಮಾಡಿದ ಕಾಂಗ್ರೆಸ್ +ನನ್ನ ಮತ್ತು ಮೃಣಾಲ್ ಅವರ ಮದುವೆ 10 ರಿಂದ 12 ದಿನಗಳ ಅಂತರದಲ್ಲಿ ನಡೆದಿತ್ತು. ಇಬ್ಬರಿಗೂ ಒಂದೇ ಸಂಸ್ಥೆಯವರು ಆ ಸರ ನೀಡಿದ್ದರು. ಬಹುಶಃ ಮೃಣಾಲ್ ಬಳಿ ಇರುವುದು ಸಿಂಥೆಟಿಕ್ ಸ್ವರೂಪದ್ದಾಗಿರಬಹುದು. ವನ್ಯ ಜೀವಿ ಕಾಯ್ದೆ 1972ರಲ್ಲಿ ಬಂದಿದೆ. ಆಗಿನನ್ನೂ ನಾವು ಹುಟ್ಟೆ ಇರಲಿಲ್ಲ. ನಮಗೆ ಪ್ರಾಣಿಗಳ ಮೇಲೆ ಪ್ರೀತಿ ಇದೆ. ಗೋತ್ತಿದ್ದೋ ಗೋತ್ತಿಲ್ಲದೆಯೋ ಹುಲಿ ಉಗುರಿನ ಮಾದರಿಯನ್ನು ಧರಿಸಿ ತಪ್ಪು ಮಾಡಿದ್ದೇವೆ. ಅರಣ್ಯ ಇಲಾಖೆ ಅಕಾರಿಗಳು ಸೂಚನೆ ನೀಡಿದರೆ ಅದನ್ನು ಹಾಜರು ಪಡಿಸುತ್ತೇವೆ. ರಾಜಕೀಯ ಕಾರಣಕ್ಕೆ ಇತ್ತೀಚೆಗೆ ಇದು ವ್ಯಾಪಕ ಚರ್ಚೆಯಾಗುತ್ತಿದೆ ಎಂದರು. \ No newline at end of file diff --git a/eesanje/url_46_324_8.txt b/eesanje/url_46_324_8.txt new file mode 100644 index 0000000000000000000000000000000000000000..405020f1a0eff8e0de6a684445bdb6c8e01fb33c --- /dev/null +++ b/eesanje/url_46_324_8.txt @@ -0,0 +1,6 @@ +ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡರು, ವಿಷಯ ಏನು ಗೊತ್ತೇ..? +ಬೆಂಗಳೂರು, ಅ.27- ಪಿಎಚ್‍ಡಿ ಪದವಿ ಪಡೆಯದ ಎಲ್ಲಾ ಅರ್ಹ ಸಹಾಯಕ ಪ್ರಾಧ್ಯಾಪಕರು ಅಸೋಸಿಯೇಟ್ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ಪಡೆಯಲು ಅನುಕೂಲವಾಗುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ನಿಯಮಗಳಿಗೆ ಅಗತ್ಯ ತಿದ್ದುಪಡಿ ತರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದೆರೆ. +ಈ ಸಂಬಂಧ ಪ್ರಧಾನಿ ಅವರಿಗೆ ಪತ್ರ ಬರೆದಿರುವ ಗೌಡರು, ಡಿಸೆಂಬರ್ 31ರ ವರೆಗೆ ಪಿಎಚ್‍ಡಿ ಪದವಿ ಪಡೆಯದ ಅರ್ಹರಾಗಿರುವ ಎಲ್ಲಾ ಸಹಾಯಕ ಪ್ರಾಧ್ಯಾಪಕರಿಗೂ ಅಸೋಸಿಯೇಟ್ ಪ್ರಾಧ್ಯಾಪಕರ ಹುದ್ದೆಗೆ ಪದೋನ್ನತಿ ಪಡೆಯಲು ಪರಿಗಣಿಸಬೇಕು ಎಂದು ಕೋರಿದ್ದಾರೆ. +ಇದಕ್ಕಾಗಿ ಭಾರತ ಸರ್ಕಾರ ಜುಲೈ 31ರಂದು ಹೊರಡಿಸಿರುವ ಗೆಜೆಟ್‍ನಲ್ಲಿನ ಪಾಯಿಂಟ್ ಸಂಖ್ಯೆ 6.3ರಲ್ಲಿ ಮುಂಬಡ್ತಿ ಪಡೆಯಲು ವಿನಾಯಿತಿ ನೀಡಲಾಗಿದೆ. ಆದರೆ, 2019ರ ಜುಲೈ 17ರಂದು ಹೊರಡಿಸಿರುವ ಷರತ್ತುಗಳು ಅನ್ವಯಿಸಿರುವುದು ಪದೋನ್ನತಿ ಪಡೆಯಲು ಅಡ್ಡಿಯಾಗುತ್ತಿದೆ. ಅಲ್ಲದೆ, ಅಸ್ಪಷ್ಟತೆಯಿಂದ ಕೂಡಿದೆ. ಆರು ತಿಂಗಳ ಅವಗೆ ಮಾತ್ರ ಎಂಬ ಷರತ್ತು ಅನ್ವಯವಾಗುವುದರಿಂದ ಬಹಳಷ್ಟು ಅರ್ಹ ಬೋಧಕ ವರ್ಗಕ್ಕೆ ಪದೋನ್ನತಿ ಪಡೆಯುವ ಅವಕಾಶ ತಪ್ಪುತ್ತದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿಲ್ಲಾರೆ. +ಚೀನಾ 2ನೇ ಮಹಾನಾಯಕನ ಸಾವಿಗೆ ದಿಗ್ಬ್ರಮೆ +ಪದೋನ್ನತಿ ಪಡೆಯುವ ಅವಯನ್ನು ಡಿ.31ರವರೆಗೆ ಈಗಾಗಲೇ ವಿಸ್ತರಿಸಿರುವುದರಿಂದ ಅಧಿಸೂಚನೆಯಲ್ಲಿ ವಿಧಿಸಿರುವ ಷರತ್ತುಗಳನ್ನು ಸಡಿಲಿಕೆ ಮಾಡಿ ಯುಜಿಸಿ ನಿಯಮಗಳಿಗೆ ಸೂಕ್ತ ಮಾರ್ಪಾಡು ಮಾಡಬೇಕು. ಈ ರೀತಿ ಮಾಡುವುದರಿಂದ ಶೈಕ್ಷಣಿಕವಾಗಿ ಎಲ್ಲಾ ಅರ್ಹ ಬೋಧಕವರ್ಗದವರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_324_9.txt b/eesanje/url_46_324_9.txt new file mode 100644 index 0000000000000000000000000000000000000000..7125bd127de534e4d7b0bcd61f1deb47c1815f87 --- /dev/null +++ b/eesanje/url_46_324_9.txt @@ -0,0 +1,9 @@ +ಕನಕಪುರವನ್ನು ಬೆಂಗಳೂರಿಗೆ ವಿಚಾರ ಖಂಡಿಸಿದ ಅಶ್ವಥ್ ನಾರಾಯಣ್ +ಬೆಂಗಳೂರು, ಅ.26- ಬೆಂಗಳೂರಿಗೆ ಕನಕಪುರವನ್ನು ಸೇರಿಸುವ ಡಿ.ಕೆ.ಶಿವಕುಮಾರ್ ಚಿಂತನೆಯನ್ನು ಮಾಜಿ ಸಚಿವ ಸಿಎನ್ ಅಶ್ವಥ್ ನಾರಾಯಣ್ ಖಂಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಬೆಂಗಳೂರಿಗೂ ತಮಗೂ ಏನು ಸಂಬಂಧ ಎಂದು ಕೇಳಿದಾಗಲೆಲ್ಲ ಉತ್ತರಿಸಲಾಗದೇ ತಡಬಡಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಜೊತೆ ಸಂಬಂಧ ಕಲ್ಪಿಸಿಕೊಳ್ಳಲು ಶಾರ್ಟ್‍ಕಟ್ ಮಾರ್ಗ ಅನುಸರಿಸಿದಂತಿದೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ತಾವು ಬೆಂಗಳೂರಿನವರು ಎಂದು ಹೇಳಿಕೊಳ್ಳಬಹುದು ಎನ್ನುವ ಆಲೋಚನೆ ಅವರದ್ದಾಗಿರಬಹುದು ಎಂದು ಟಾಂಗ್ ನೀಡಿದ್ದಾರೆ. +ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ +ಕನಕಪುರವನ್ನು ಬೆಂಗಳೂರಿಗೆ ಸೇರಿಸಿದರೆ ಆಸ್ತಿಯ ಮೌಲ್ಯ ಹತ್ತುಪಟ್ಟು ಹೆಚ್ಚಾಗಲಿದೆ ಎನ್ನುವ ಮೂಲಕ ನಿಮ್ಮ ಕೃಷಿ ಭೂಮಿಯನ್ನು ಮಾರಿಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ರೈತರಿಗೆ ಕರೆ ನೀಡಿದ್ದಾರೆ. ಕನಕಪುರವನ್ನು ಕನಕಪುರವಾಗಿ ಅಭಿವೃದ್ಧಿಪಡಿಸಲಾಗದ ಅವರಿಗೆ ಈ ಆಲೋಚನೆ ಬಂದಿರುವುದು ಹಾಸ್ಯಾಸ್ಪದ ಎಂದಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬೆಂಗಳೂರಿಂದ ಕನಕಪುರ ಮಾರ್ಗವಾಗಿ ದಿಂಡಿಗಲ್ಲಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಿತ್ತಿದ್ದು, ಕನಕಪುರದ ಆರ್ಥಿಕ ಚಟುವಟಿಕೆಗೆ ವೇಗ ಸಿಗಲಿದೆ. ಜಲ ಜೀವನ್ ಮಿಷನ್ ಅಡಿ ರಾಮನಗರದ ಮನೆ ಮನೆಗೂ ಕುಡಿಯುವ ನೀರು ಸೌಲಭ್ಯ ಕಲ್ಪಿಸಿದ್ದೇವೆ ಎಂದು ಹೇಳಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಬೆಂಗಳೂರು ಸ್ಯಾಟಲೈಟ್ ಟೌನ್‍ಶಿಪ್ ರಿಂಗ್ ರೋಡ್ ನಿರ್ಮಾಣವಾಗುತ್ತಿದೆ, ಸಬ್ ಅರ್ಬನ್ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕನಕಪುರದ ಜನತೆಯ ಜೀವನ ಮಟ್ಟ ಸುಧಾರಿಸಲು ಅಭಿವೃದ್ಧಿಯ ಮಾರ್ಗ ಹಿಡಿಯುವುದನ್ನು ಬಿಟ್ಟು ಈ ರೀತಿಯ ಅಡ್ಡ ಮಾರ್ಗ ಹಿಡಿದರೆ ಕಬ್ಬಾಳಮ್ಮ ಮೆಚ್ಚುವಳೇ? ಎಂದು ಪ್ರಶ್ನಿಸಿದ್ದಾರೆ. +ನಮ್ಮ ಸರ್ಕಾರದ ಅವಯಲ್ಲಿ ಜಿಲ್ಲೆಯ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸುಧಾರಣೆಗೆ ಆದ್ಯತೆ ನೀಡಿದ್ದೇವೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದರಿಂದ ಭೂಮಿಯ ಮೌಲ್ಯ ಹೆಚ್ಚಾಗುತ್ತದೆ ಎಂಬ ಕಪೋಲ ಕಲ್ಪಿತ ಆಲೋಚನೆಯನ್ನು ಮುಗ್ಧ ಜನರ ತಲೆಯಲ್ಲಿ ತುಂಬಿ ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ಬದಲಾಗಿ ಜಿಲ್ಲೆಯ ಅಭಿವೃದ್ಧಿಗೆ ಆದ್ಯತೆ ನೀಡಿ ಎಂದು ಸಲಹೆ ನೀಡಿದ್ದಾರೆ. +“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ” +ಕೆಂಗಲ್ ಹನುಮಂತಯ್ಯ, ಶಿವಕುಮಾರ ಸ್ವಾಮೀಜಿಗಳು, ಬಾಲಗಂಗಾಧರನಾಥ ಸ್ವಾಮೀಜಿಯವರು ಜನಿಸಿದ ಪುಣ್ಯ ಭೂಮಿಯಲ್ಲಿ ಸೇವೆ ಮಾಡುವ ಸದವಕಾಶವನ್ನು ಈ ಭಾಗದ ಜನತೆ ತಮಗೆ ಕಲ್ಪಿಸಿದ್ದಾರೆ. ಆದರೆ, ನಾವು ರಾಮನಗರದವರೇ ಅಲ್ಲ ಎನ್ನುವ ನಿಮ್ಮ ಮಾತನ್ನು ರಾಮದೇವರ ಬೆಟ್ಟದ ಮೇಲಿರುವ ಆ ಶ್ರೀರಾಮಚಂದ್ರ ಮೆಚ್ಚುವನೇ? ಎಂದು ಪ್ರಶ್ನೆ ಹಾಕಿದ್ದಾರೆ. \ No newline at end of file diff --git a/eesanje/url_46_325_1.txt b/eesanje/url_46_325_1.txt new file mode 100644 index 0000000000000000000000000000000000000000..ab842520a269edecab442ceb8f08cbeed54ec3f6 --- /dev/null +++ b/eesanje/url_46_325_1.txt @@ -0,0 +1,7 @@ +ವನ್ಯಜೀವಿ ಸಂರಕ್ಷಣಾ ಕಾಯ್ದೆ ವಿಷಯದಲ್ಲಿ ಒತ್ತಡಕ್ಕೆ ಮಣಿಯುವುದಿಲ್ಲ : ಖಂಡ್ರೆ +ಬೆಂಗಳೂರು, ಅ.26- ವನ್ಯಜೀವ ಸಂರಕ್ಷಣಾ ಕಾಯ್ದೆ ಜಾರಿಯ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೇ ನೆಲದ ಕಾನೂನನ್ನು ಸಮರ್ಥವಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ರಕ್ಷಣಾ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. +ವಿಧಾನಸೌಧದಲ್ಲಿಂದು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕಾಯ್ದೆ ಜಾರಿಗೆ ಬಂದ ಬಳಿಕ ದಾಖಲಿಸಲಾದ ಪ್ರಕರಣಗಳು, ಈವರೆಗೂ ಎಷ್ಟು ಮಂದಿ ತಮ್ಮ ಬಳಿ ವನ್ಯಜೀವಿಗಳ ಅವಶೇಷಗಳಿವೆ ಎಂದು ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪರಿಶೀಲನೆಗ ರಚಿಸಲಾಗಿರುವ ಹಿರಿಯ ಅಧಿಕಾರಿಗಳ ಉನ್ನತಾಧಿಕಾರಿಗಳ ಸಮಿತಿ ಶೀಘ್ರವೇ ವರದಿ ನೀಡಬೇಕು ಎಂದು ಸೂಚನೆ ನೀಡಿದರು. +ಖ್ಯಾತನಾಮರಷ್ಟೆ ಅಲ್ಲ, ಯಾವುದೇ ಪ್ರಭಾವಿ ವ್ಯಕ್ತಿ ಕಾಯ್ದೆಯನ್ನು ಉಲ್ಲಂಘಿಸಿದರು ಕರ್ನಾಟಕ ಅರಣ್ಯ ಕಾಯ್ದೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು. ನಿನ್ನೆ ನಡೆದ ದಾಳಿ ಪ್ರಕರಣದಲ್ಲಿ ವಶ ಪಡಿಸಿಕೊಂಡ ವಸ್ತುಗಳನ್ನು ವೈಜ್ಞಾನಿಕ ಪರೀಕ್ಷೆ ಒಳಪಡಿಸಬೇಕು. ವಸ್ತು ಸ್ಥಿತಿಯ ವರದಿ ಆಧಾರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. +ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ +ಕೆಲವರ ಮೇಲಷ್ಟೆ ಕ್ರಮ ಕೈಗೊಂಡು ಪ್ರಭಾವಿಗಳನ್ನು ಕೈ ಬಿಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ತಪ್ಪು ಯಾರೇ ಮಾಡಿದರೂ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ಅರಣ್ಯಸಂರಕ್ಷಣಾಧಿಕಾರಿಗಳ ಕಚೇರಿಗೆ ನೀಡಿರುವ ಪೊಲೀಸ್ ಅಧಿಕಾರವನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳಿ. ಮಾಹಿತಿ ತಿಳಿದ ತಕ್ಷಣ ಶೋಧ ಕಾರ್ಯಾಚರಣೆ ನಡೆಸಿ, ಕ್ರಮ ಜರುಗಿಸಿ. ಪ್ರಭಾವಿಗಳನ್ನು ರಕ್ಷಣೆ ಮಾಡಲು ಯತ್ನಿಸಿದರೆ ಮುಂದಿನ ದಿನಗಳಲ್ಲಿ ಯಾರಾದರೂ ಕಾನೂನಿನ ಮೊರೆ ಹೋಗಬಹುದು. ಆ ವೇಳೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ. +ಇದು ಈಗ ಸಾರ್ವಜನಿಕ ವಿಷಯವಾಗಿರುವುದರಿಂದ ಮುಚ್ಚಿಟ್ಟುಕೊಳ್ಳುವ ಅಥವಾ ತೆರೆಮರೆಯಲ್ಲಿ ಕ್ರಮ ಜರುಗಿಸಲು ಸಾಧ್ಯವಿಲ್ಲ. ಪಾರದರ್ಶಕತೆ ಹಾಗೂ ಕಾನೂನು ಬದ್ಧವಾಗಿ ನಡೆದುಕೊಳ್ಳಿ. ಪ್ರತಿ ಹಂತದಲ್ಲೂ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿ ಎಂದು ಸೂಚಿಸಿದರು. \ No newline at end of file diff --git a/eesanje/url_46_325_10.txt b/eesanje/url_46_325_10.txt new file mode 100644 index 0000000000000000000000000000000000000000..4809be5150bfa099d2a4c7f51495024e7831d265 --- /dev/null +++ b/eesanje/url_46_325_10.txt @@ -0,0 +1,13 @@ +7 ಜನ್ಮವೆತ್ತಿದರೂ ರಾಮನಗರ ಛಿದ್ರ ಮಾಡಲು ಸಾಧ್ಯವಿಲ್ಲ ; ಎಚ್‍ಡಿಕೆ ಆಕ್ರೋಶ +ಬೆಂಗಳೂರು,ಅ.25- ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಇದನ್ನು ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಿಳಿಸಿದ್ದಾರೆ. +ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ ಎಂದು ಪ್ರಶ್ನಿಸಿದ್ದಾರೆ. +ಈ ದೇಶಕ್ಕೆ ವಿದ್ಯಾವಂತರು, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ದರ್ಪದ ಮಾತು ಹೇಳಿದ್ದಾರೆ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ ಎಂದು ಟೀಕಿಸಿದ್ದಾರೆ. +ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ದುಷ್ಟಪ್ರಜ್ಞ, ಅತಿ ಬುದ್ಧಿವಂತಿಕೆ, ಅಸಾಮಾನ್ಯ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ. +ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ. ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ, ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ. ಎಲ್ಲವೂ ನಿಗೂಢ ಎಂದು ಆರೋಪಿಸಿದ್ದಾರೆ. +ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ, ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ, ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ, ಇನ್ನೆಷ್ಟನ್ನು ಕೂಡಿ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ. +ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ವಿಳಂಬ +ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ, 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು, ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್ ಸಂಪರ್ಕ ಇರಲಿಲ್ಲ, ರಸ್ತೆ, ಚರಂಡಿ ಇರಲಿಲ್ಲ, ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದ್ದರು. ಆ ದುಸ್ಥಿತಿಯನ್ನು ಬದಲಿಸಿದರು ಎಂದು ಹೇಳಿದ್ದಾರೆ. +ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‍ರವರೇ? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ, ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ. +ನಾಡಪ್ರಭು ಕೆಂಪೇಗೌಡ, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. +ನೋಂದಣಿ ಮಾಡಿಸಿಕೊಳ್ಳದ ಮದರಸಾಗಳಿಗೆ ನೋಟಿಸ್, ದಿನಕ್ಕೆ 10,000 ರೂ. ದಂಡ +ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ರಿಯಲ್ ಎಸ್ಟೇಟ್ ಪಾಪಕುಂಡವನ್ನಾಗಿ ಮಾಡಿದ್ದು ಯಾರಪ್ಪ, ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ, ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ ಎಂದು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_325_11.txt b/eesanje/url_46_325_11.txt new file mode 100644 index 0000000000000000000000000000000000000000..8fef868dc5f8b282af7b3f6232c5b897da52d8d1 --- /dev/null +++ b/eesanje/url_46_325_11.txt @@ -0,0 +1,9 @@ +ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ವಿಳಂಬ +ಬೆಂಗಳೂರು,ಅ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ನಡುವಿನ ಕ್ಷೇತ್ರಗಳ ಹಂಚಿಕೆ ವಿಳಂಬವಾಗುವ ಸಾಧ್ಯತೆಗಳಿವೆ. ದಸರಾ ಮಹೋತ್ಸವ ಮುಗಿದ ಬಳಿಕ ಜೆಡಿಎಸ್ ನಾಯಕರು ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಹಂಚಿಕೆ ವಿಚಾರವನ್ನು ಅಂತಿಮಗೊಳಿಸುವ ಉದ್ದೇಶವಿತ್ತು. +ಪಂಚರಾಜ್ಯ ಚುನಾವಣೆ ಸಿದ್ಧತೆಯಲ್ಲಿ ಬಿಜೆಪಿ ನಾಯಕರು ನಿರತರಾಗಿರುವುದರಿಂದ ಜೆಡಿಎಸ್ ನಾಯಕರೊಂದಿಗೆ ನಡೆಸಬೇಕಿರುವ ಮಾತುಕತೆ ಮತ್ತಷ್ಟು ವಿಳಂಬವಾಗಲಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದಸರಾ ಹಬ್ಬದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿ ಕ್ಷೇತ್ರ ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಿದ್ದರು. ಬಿಜೆಪಿ ನಾಯಕರ ಭೇಟಿಗೆ ಇನ್ನೂ ಸಮಯಾವಕಾಶ ನಿಗದಿಯಾಗದಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ನಡುವಿನ ಕ್ಷೇತ್ರ ಹಂಚಿಕೆ ಮತ್ತಷ್ಟು ವಿಳಂಬವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಪಂಚರಾಜ್ಯ ಚುನಾವಣೆಗಳ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಜೆಡಿಎಸ್ ನಾಯಕರೊಂದಿಗಿನ ಮಾತುಕತೆಗೆ ಮುಹೂರ್ತ ನಿಗದಿಪಡಿಸಿಲ್ಲ. ಯಾವುದೇ ಸಂದರ್ಭದಲ್ಲಿ ಉಭಯ ಪಕ್ಷಗಳ ನಾಯಕರ ನಡುವೆ ಮಾತುಕತೆ ನಡೆದು ಸೀಟು ಹಂಚಿಕೆಯಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ನೋಂದಣಿ ಮಾಡಿಸಿಕೊಳ್ಳದ ಮದರಸಾಗಳಿಗೆ ನೋಟಿಸ್, ದಿನಕ್ಕೆ 10,000 ರೂ. ದಂಡ +ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಚಿಂಥನ-ಮಂಥನ ಸಭೆ ನಡೆಸಿ ಮೈತ್ರಿ ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು. ಅಲ್ಲದೆ, ತಾವು ಒರ್ಜಿನಲ್ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಮೈತ್ರಿ ವಿರೋಧವಿದೆ ಎಂದು ಹೇಳಿದ್ದರು. ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿತು. +ಇಬ್ರಾಹಿಂ ಅವರ ಈ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ರಾಜ್ಯಘಟಕವನ್ನು ದೇವೇಗೌಡರು ವಿಸರ್ಜನೆ ಮಾಡುವ ಮೂಲಕ ಇಬ್ರಾಹಿಂ ಅವರಿಗೆ ಅಕಾರ ಇಲ್ಲದಂತೆ ಮಾಡಿದ್ದಾರೆ. ಜೆಡಿಎಸ್‍ನಲ್ಲಿ ನಡೆದ ಈ ರೀತಿಯ ಘಟನೆ ಲೋಕಸಭಾ ಸೀಟು ಹಂಚಿಕೆಗೆ ಹಿನ್ನಡೆಯಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. +ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ ನಾಲ್ಕು ಕ್ಷೇತ್ರಗಳನ್ನು ಮಾತ್ರ ಸ್ಪರ್ಧೆ ಮಾಡಲು ಇಚ್ಛಿಸಿದೆ. ಹಾಸನ, ತುಮಕೂರು, ಮಂಡ್ಯ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಉಳಿದ 24 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡುವ ಉದ್ದೇಶ ಹೊಂದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. +ಕುಮಾರಸ್ವಾಮಿಯವರು ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿ ಎನ್‍ಡಿಎ ಮೈತ್ರಿಕೂಟ ಸೇರುವುದಾಗಿ ಘೋಷಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಒಟ್ಟಾಗಿ ಎದುರಿಸಲಿವೆ. ಚುನಾವಣೆ ಪ್ರಚಾರವನ್ನು ಒಟ್ಟಾಗಿಯೇ ಮಾಡುವುದಲ್ಲದೆ, ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಶ್ರಮಿಸುತ್ತೇವೆ. ಚುನಾವಣಾ ಪೂರ್ವ ಕ್ಷೇತ್ರಗಳನ್ನು ಹೊಂದಾಣಿಕೆ ಮಾಡಿಕೊಂಡು ಚುನಾವಣಾ ಅಖಾಡಕ್ಕೆ ಇಳಿಯುವುದಾಗಿ ಪ್ರಕಟಿಸಿದ್ದರು. \ No newline at end of file diff --git a/eesanje/url_46_325_12.txt b/eesanje/url_46_325_12.txt new file mode 100644 index 0000000000000000000000000000000000000000..4e0b6b6b1b315f86874caff05fed4082fdd8cdd2 --- /dev/null +++ b/eesanje/url_46_325_12.txt @@ -0,0 +1,13 @@ +ಸೆಲೆಬ್ರೆಟಿಗಳಿಗೆ ಸಂಕಷ್ಟ ತಂದಿಟ್ಟ ಹುಲಿ ಉಗುರು +ಬೆಂಗಳೂರು,ಅ.25- ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ತೀವ್ರವಾಗಿದ್ದು, ಹುಲಿ, ಜಿಂಕೆ, ಕರಡಿಗಳಂತಹ ಪ್ರಾಣಿಗಳ ಚರ್ಮ ಹಾಗೂ ಇತರ ಅವಶೇಷಗಳ ಬಳಕೆದಾರರಿಗೆ ಸಂಕಷ್ಟ ಎದುರಾಗಿದೆ.ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಸ್ರ್ಪಧಿಯಾಗಿದ್ದ ವರ್ತೂರು ಸಂತೋಷ್ ವಿರುದ್ಧ ಅರಣ್ಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅನುಷ್ಠಾನದ ಕುರಿತು ಚರ್ಚೆಗಳು ವ್ಯಾಪಕಗೊಳ್ಳುತ್ತಿದೆ. +ವಿಧಾನಪರಿಷತ್‍ನ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಪಿ.ಆರ್.ರಮೇಶ್ ಅವರು, ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಅರಣ್ಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಜಾವೇದ್ ಅಖ್ತರ್‍ರವರಿಗೆ ದೂರು ನೀಡಿದ್ದು, ಹುಲಿ ಉಗುರಿನ ಡಾಲರ್ ಹೊಂದಿರುವ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. +ಜಾವೇದ್ ಅಖ್ತರ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅರಣ್ಯಾಧಿಕಾರಿಗಳ ವ್ಯಾಪ್ತಿಗೆ ದೂರನ್ನು ರವಾನೆ ಮಾಡಿರುವುದಾಗಿ ರಮೇಶ್ ಅವರಿಗೆ ತಿಳಿಸಿದ್ದಾರೆ. ಇದರ ಜೊತೆಯಲ್ಲಿ ನಟರಾದ ದರ್ಶನ್, ನಿಖಿಲ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಗೌರಿಗದ್ದೆಯ ವಿನಯ್ ಗುರೂಜಿ, ತುಮಕೂರು ಜಿಲ್ಲೆಯ ಬಿದನಗೆರೆ ಗ್ರಾಮದ ಶನಿಮಹಾತ್ಮ ದೇವಸ್ಥಾನದ ಧರ್ಮದರ್ಶಿ ಧನಂಜಯ ಗುರೂಜಿ ಸೇರಿದಂತೆ ಹಲವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಡಗಳು ಹೆಚ್ಚಾಗುತ್ತಿವೆ. +ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ವನ್ಯಜೀವಿಗಳ ಅಂಗಾಂಗ ಮತ್ತು ಅವಶೇಷಗಳ ಮಾರಾಟ, ಬಳಕೆ ಸಂಪೂರ್ಣ ನಿಷಿದ್ಧವಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಆದರೂ ಹಲವಾರು ಮಂದಿ ಅದೃಷ್ಟ ಹಾಗೂ ಶುಭಸೂಚಕ ಎಂಬ ನಂಬಿಕೆಯ ಮೇಲೆ ಹುಲಿ ಉಗುರಿನ ಪದಕಗಳು, ಆನೆಬಾಲದ ಕೂದಲಿನ ಉಂಗುರ ಧರಿಸುವುದು ಸೇರಿದಂತೆ ಹಲವಾರು ಉಲ್ಲಂಘನೆಗಳನ್ನು ಮಾಡುತ್ತಿದ್ದಾರೆ. ಇದು ನಂಬಿಕೆಗೆ ಸಂಬಂಧಪಟ್ಟ ವಿಚಾರವಾಗಿರುವುದರಿಂದ ಈವರೆಗೂ ಯಾರೂ ಗಂಭೀರವಾಗಿ ಪರಿಗಣಿಸಿರಲಿಲ್ಲ. +ಆದರೆ ವರ್ತೂರು ಸಂತೋಷ್ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಂತೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಮುನ್ನಲೆಗೆ ಬಂದಿದೆ. ಬಿಗ್‍ಬಾಸ್ ಸ್ರ್ಪಧಿಯ ವಿರುದ್ಧ ಕ್ರಮ ಕೈಗೊಂಡಂತೆ ಪ್ರಭಾವಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂಬ ಒತ್ತಡಗಳು ಹೆಚ್ಚಾಗಿವೆ. +ವನ್ಯಜೀವಿಗಳ ಅಂಗಾಂಗಳನ್ನು ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದರೆ ಸಾವಿರಾರು ಮಂದಿಯನ್ನು ಜೈಲಿಗೆ ಕಳುಹಿಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಈ ಪ್ರಕರಣ ಮೇಲ್ನೋಟಕ್ಕೆ ಸಾಧಾರಣ ಎನಿಸಿದರೂ ಒಮ್ಮೆ ದಾಖಲಾದರೆ ಅದರ ಗಂಭೀರತೆ ಬೇರೆಯದಾಗಿರುತ್ತದೆ. ತಪ್ಪಿತಸ್ಥರ ಬಳಿ ಇರುವ ವಸ್ತುಗಳನ್ನು ಜಪ್ತಿ ಮಾಡಬೇಕು. ಅದನ್ನು ಎಫ್‍ಎಸ್‍ಎಲ್ ಪರೀಕ್ಷೆಗೆ ಒಳಪಡಿಸಬೇಕು. ಅದು ಆರೋಪಿಗಳ ಬಳಿ ಬಂದ ರೀತಿ ಹೇಗೆ ಎಂಬುದನ್ನು ಪತ್ತೆ ಹಚ್ಚಬೇಕು. ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸುವ ಮೂಲಕ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸುವುದು ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಒಳಗೊಂಡಿದೆ. +ನವಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಇಸ್ರೋ ಅಧ್ಯಕ್ಷ ಸೋಮನಾಥ್ ಆತ್ಮಚರಿತ್ರೆ +1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿದ್ದು, 2002 ರ ಬಳಿಕ ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕರು ಹೊಂದಿರುವ ವನ್ಯಜೀವಿಗಳ ಅವಶೇಷಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಅವಕಾಶ ನೀಡಲಾಗಿತ್ತು. ಬಹಳಷ್ಟು ಮಂದಿ ಇದನ್ನು ಸರಿಯಾಗಿ ಉಪಯೋಗಿಸಿಕೊಂಡಿಲ್ಲ. ಆ ಬಳಿಕ ಕೇಂದ್ರ ಸರ್ಕಾರದ ನಿರ್ದೇಶನದನ್ವಯ ಎಲ್ಲಾ ರಾಜ್ಯಸರ್ಕಾರಗಳು ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿವೆ. +ಹೀಗಾಗಿ ವನ್ಯಜೀವಿಗಳನ್ನು ಬಳಕೆ ಮಾಡುವ ಎಲ್ಲಾ ಸರ್ಕಸ್‍ಗಳು ಮುಚ್ಚಿಹೋಗಿವೆ. ವನ್ಯಜೀವಿಗಳ ಬೇಟೆ ಕೊಲೆಯಷ್ಟೇ ಗಂಭೀರ ಸ್ವರೂಪದ ಅಪರಾಧ ಎಂದು ಪರಿಗಣಿಸಲ್ಪಡುತ್ತದೆ. ಇತ್ತೀಚೆಗೆ ದಾವಣಗೆರೆಯಲ್ಲಿ ಪ್ರಭಾವಿ ರಾಜಕಾರಣಿ ಎಸ್.ಎಸ್.ಮಲ್ಲಿಕಾರ್ಜುನ್ ಅವರ ತೋಟದ ಮನೆಯಲ್ಲಿ ಕೆಲವು ವನ್ಯಜೀವಿಗಳು ಪತ್ತೆಯಾಗಿದ್ದವು. ಈ ಸಂಬಂಧಪಟ್ಟಂತೆ ಕೆಲಸಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಅನಂತರ ಕನ್ನಡದ ಪ್ರಖ್ಯಾತ ನಟರೊಬ್ಬರ ಫಾರ್ಮ್‍ಹೌಸ್‍ನಲ್ಲಿದ್ದ ವನ್ಯಜೀವಿಗಳನ್ನೂ ಕೂಡ ಸಂರಕ್ಷಿಸಿ ನಟನಿಗೆ ತಿಳುವಳಿಕೆ ನೀಡಲಾಯಿತು. +ವರ್ತೂರು ಸಂತೋಷ್‍ರ ಹುಲಿ ಉಗುರಿನ ಪ್ರಕರಣ ರಾಜ್ಯದಲ್ಲಷ್ಟೇ ಅಲ್ಲ, ದೇಶದಲ್ಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಕುರಿತು ಚರ್ಚೆಗೆ ಹೊಸ ವ್ಯಾಖ್ಯಾನ ನೀಡಿದೆ. ಈ ಹಿಂದಿನಿಂದಲೂ ವಂಶಪಾರಂಪರ್ಯವಾಗಿ ಬಳಕೆಯಲ್ಲಿರುವ ಅವಶೇಷಗಳ ಕುರಿತು ಪ್ರಶ್ನೆಗಳು ಎದ್ದಿವೆ. +ಇಸ್ರೇಲ್ ಮತ್ತು ಗಾಜಾಪಟ್ಟಿಯಲ್ಲಿ ಗೂಗಲ್ ಲೈವ್ ಬಂದ್ +ಪ್ರಸ್ತುತ ಸನ್ನಿವೇಶದಲ್ಲಿ ವನ್ಯಜೀವಿಗಳ ಅವಶೇಷಗಳನ್ನು ಹೊಂದಿರುವವರಿಗೆ ಆತಂಕ ಶುರುವಾಗಿದ್ದು, ಅರಣ್ಯಾಧಿಕಾರಿಗಳ ಹಿಡಿತದಿಂದ ಪಾರಾಗಲು ವಕೀಲರ ಮೊರೆ ಹೋಗುತ್ತಿರುವುದು ಕಂಡುಬಂದಿದೆ. \ No newline at end of file diff --git a/eesanje/url_46_325_2.txt b/eesanje/url_46_325_2.txt new file mode 100644 index 0000000000000000000000000000000000000000..bee4e69bd30c68035a52894be823215f2a8d433a --- /dev/null +++ b/eesanje/url_46_325_2.txt @@ -0,0 +1,6 @@ +ಚರ್ಚೆ ಮಾಡೋಣ, ಸಮಯ ನಿಗದಿ ಮಾಡಿ : ಡಿಸಿಎಂ +ಬೆಂಗಳೂರು, ಅ.26- ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಬಹಿರಂಗ ಚರ್ಚೆ ಮಾಡೋಣ. ಅವರು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. +ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಬಿಚ್ಚಿ ಮಾತನಾಡೋಣ. ಬಹಿರಂಗ ಚರ್ಚೆ ಮಾಡಲು ನಾನೂ ಸಿದ್ಧ. ಮೂರು ದಿನಗಳ ನಂತರ ಯಾವಾಗ ಬೇಕಾದರೂ ಸಮಯ ನಿಗದಿ ಮಾಡಿ ಎಂದು ತಿಳಿಸಿದರು. +“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ” +ವಿಧಾನಸೌಧ ಕಚೇರಿ ನವೀಕರಣ ಅಗತ್ಯತೆ ಬಗ್ಗೆ ಬಿಜೆಪಿ ಮಾಡಿರುವ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಗೆ ಸಾಮಾನ್ಯ ಜ್ಞಾನ ಇಲ್ಲ. ಅದು ನನ್ನ ಕಚೇರಿ. ನಾನು ಅಲ್ಲಿ ಅನೇಕ ಜನರು, ಗಣ್ಯರನ್ನು ಭೇಟಿ ಮಾಡಬೇಕಾಗುತ್ತದೆ. ನೆದರ್ ಲ್ಯಾಂಡ್ ಪ್ರಧಾನಮಂತ್ರಿಗಳು ವಿಧಾನಸೌಧಕ್ಕೆ ಬಂದಾಗ ನಾನು ಎಂ.ಬಿ. ಪಾಟೀಲ್ ಅವರ ಕೊಠಡಿಗೆ ಹೋಗಿ ಅವರನ್ನು ಭೇಟಿ ಮಾಡಬೇಕಾಯಿತು. +ಗಣ್ಯರು ಭೇಟಿಗೆ ಬಂದಾಗ ಅವರಿಗೆ ಗೌರವ ನೀಡಲು ಅಚ್ಚುಕಟ್ಟಾದ ಕೊಠಡಿ, ಸೂಕ್ತ ಸ್ಥಳಾವಕಾಶ ಇರಬೇಕು. ನಾವು ನಮ್ಮ ಮಣ್ಣಿನ ಸಂಸ್ಕೃತಿ ಪಾಲಿಸಬೇಕು. ನಾವು ಬೆಂಗಳೂರು ಹಾಗೂ ಇಂಡಿಯಾವನ್ನು ಉತ್ತಮವಾಗಿ ಬಿಂಬಿಸಬೇಕು. ಅದಕ್ಕಾಗಿ ಮಾಡುತ್ತಿದ್ದೇವೆ. ಬಿಜೆಪಿ ಅವರಿಗೆ ಈ ಬಗ್ಗೆ ಕಾಮನ್ ಸೆನ್ಸ್ ಇಲ್ಲ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_325_3.txt b/eesanje/url_46_325_3.txt new file mode 100644 index 0000000000000000000000000000000000000000..394dadc989450eb0aab59da56b2915ea005bc55c --- /dev/null +++ b/eesanje/url_46_325_3.txt @@ -0,0 +1,6 @@ +ಶೀಘ್ರದಲ್ಲೇ ಮನೆ ಬಾಗಿಲಿಗೆ ಬರಲಿದೆ ಪಡಿತರ +ಬೆಂಗಳೂರು, ಅ.26- ರಾಜ್ಯಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ರೇಷನ್ ಡೋರ್ ಡೆಲಿವರಿಗೆ ದಿನಗಣನೆ ಆರಂಭವಾಗಿದ್ದು, ನವೆಂಬರ್‍ನಿಂದ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಪಡಿತರ ಭಾಗ್ಯ ದೊರೆಯಲಿದೆ. +ಆಹಾರ ಇಲಾಖೆಯು ಈ ನೂತನ ಇಲಾಖೆ ಯೋಜನೆಗೆ ಈಗಾಗಲೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮನೆ ಬಾಗಿಲಿಗೆ ಪಡಿತರ ಸರಬರಾಜು ಮಾಡಲು ದರ ಕೂಡ ನಿಗದಿ ಮಾಡಿದೆ. ಹಿರಿಯ ನಾಗರಿಕರಿಗೆ ನವೆಂಬರ್ ತಿಂಗಳಿನಿಂದ ಅಧಿಕೃತವಾಗಿ ಪಡಿತರ ಮನೆ ಬಾಗಿಲಿಗೆ ತಲುಪಲಿದೆ. 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಡಿತರ ಚೀಟಿಯಲ್ಲಿ ಅವರ ಒಬ್ಬರದ್ದೇ ಹೆಸರಿದ್ದರೆ ಈ ಯೋಜನೆ ದೊರೆಯಲಿದೆ. +ರಾಜ್ಯದಲ್ಲಿ 7 ಸಾವಿರ ಫಲಾನುಭವಿಗಳನ್ನು ಆಹಾರ ಇಲಾಖೆ ಗುರುತಿಸಿದ್ದು, ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಪೈಲೇಟ್ ಪ್ರಾಜೆಕ್ಟ್ ಪ್ರಾರಂಭ ಕೂಡ ಮಾಡುತ್ತಿದೆ. ಸದ್ಯ ಪಡಿತರ ಕೇಂದ್ರಗಳಲ್ಲಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದು, ಪ್ರತಿ ಮನೆ ಬಾಗಿಲಿಗೆ ತಲುಪಿಸಲು 50 ರೂ. ಡೆಲವರಿ ಚಾರ್ಜ್ ನಿಗದಿ ಮಾಡಲಾಗುತ್ತದೆ. +“ಬಿಜೆಪಿ ನಾಯಕರಿಗೆ ಮಾಡೋಕೆ ಕೆಲಸ ಇಲ್ಲ, ಬಾಯಿ ಚಟಕ್ಕೆ ಮಾತಾಡ್ತಾರೆ” +ನವೆಂಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳು ಡೋರ್ ಡೆಲವರಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದರಿಂದ ವೃದ್ಧರು ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದ್ದು, ಇದರಿಂದ ಸಮಯವು ಉಳಿತಾಯವಾಗಲಿದೆ. ಈ ಯೋಜನೆಯಿಂದ ವೃದ್ಧರಿಗೆ ಅನುಕೂಲವಾಗಲಿದೆ ಎಂದು ಹಿರಿಯ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_325_4.txt b/eesanje/url_46_325_4.txt new file mode 100644 index 0000000000000000000000000000000000000000..70f21fd5c688b4f627ba7d280cec67ed4c102cda --- /dev/null +++ b/eesanje/url_46_325_4.txt @@ -0,0 +1,13 @@ +ರಾಮನಗರಕ್ಕಾಗಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡ್ತೀನಿ : ಹೆಚ್‌ಡಿಕೆ +ಬೆಂಗಳೂರು,ಅ.26- ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಿದರೆ ಜೀವ ಪಣಕ್ಕಿಟ್ಟು ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವರ್ಗಾವಣೆ ವಿಚಾರದಲ್ಲಿ ಹಣ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಚಾಮುಂಡಿ ಬೆಟ್ಟ ಇಲ್ಲವೇ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಬೇಕೆಂಬ ಸವಾಲನ್ನು ಸ್ವೀಕರಿಸುವುದಾಗಿ ಹೇಳಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನಗರಕ್ಕೊ ನನಗೂ ಭಾವನಾತ್ಮಕ ಸಂಬಂಧವಿದೆ, ವ್ಯವಹಾರಿಕರ ಸಂಬಂಧವಿಲ್ಲ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಮನಗರದ ಹೆಸರು ಬದಲಾಯಿಸಿದರೆ ಅಮರಣಾಂತ ಉಪವಾಸ ಮಾಡುತ್ತೇನೆ ಎಂದರು. ರಾಮನಗರದ ಹೆಸರು ಬದಲಾಯಿಸಿದರೆ ನನ್ನ ಆರೋಗ್ಯದ ಬಗ್ಗೆ ಚಿಂತಿಸದೆ, ಕೊನೆಕ್ಷಣದವರೆಗೂ ನಾನು ಉಪವಾಸ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದರು. ನನ್ನ ಹೋರಾಟಕ್ಕೆ ರಾಮನಗರ ಜಿಲ್ಲೆಯ ಜನರ ಸಹಾಯ ಕೋರುತ್ತೇನೆ. ನಾನು ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದರೂ, ನನ್ನ ಜೀವನದ ಅಂತ್ಯ ರಾಮನಗರದಲ್ಲೇ ಎಂದರು. +ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಮಾಡಿದ ರಸ್ತೆ, ಸೇತುವೆ ಮುಂತಾದ ಯೋಜನೆಗಳ ವಿವರವನ್ನು ನೀಡಿದ ಅವರು, ಡಿ.ಕೆ.ಶಿವಕುಮಾರ್ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಹಳೆಯ ಸ್ನೇಹಿತರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡುವ ಸವಾಲು ಹಾಕಿದ್ದಾರೆ. ವರ್ಗಾವಣೆ ವಿಚಾರಣದಲ್ಲಿ ಒಂದು ರೂಪಾಯಿ ಪಡೆದಿಲ್ಲ ಎಂದು ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಲು ಸಿದ್ದ ಎಂದರು. +ಚಿಕ್ಕಬಳ್ಳಾಪುರ : ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ , 13 ಮಂದಿ ದುರ್ಮರಣ +ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ 30 ಸಚಿವರನ್ನು ಕರೆದುಕೊಂಡು ಬರಲಿ. ಐದು ತಿಂಗಳ ಆಡಳಿತದ ಅವಧಿಯಲ್ಲಿ ಅಧಿಕಾರಿಗಳ ವರ್ಗಾವಣೆ ಹಾಗೂ ಹುದ್ದೆ ನೀಡಿಕೆಯಲ್ಲಿ ಒಂದು ರೂ. ಪಡೆದಿಲ್ಲ ಎಂದು ಅವರೂ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು. ಮಿಸ್ಟರ್ ಡಿ.ಕೆ.ಶಿವಕುಮಾರ್ ಅವರೇ ಅಧಿಕಾರ ಯಾರಿಗೂ ಶಾಶ್ವತವಲ್ಲ. ಚಕ್ರ ತಿರಗುತ್ತಿರುತ್ತದೆ. ಹುಟ್ಟಿನಿಂದ ನಾನು ಲಕ್ಷಾಪತಿಯಲ್ಲ. ಚುನಾವಣೆಗೆ ಕೆಲವು ಸ್ನೇಹಿತರು ಪ್ರೀತಿಯಿಂದ ದೇಣಿಗೆ ನೀಡಿದ್ದಾರೆ ಎಂದರು. +ಲೋಕೋಪಯೋಗಿ ಇಲಾಖೆಯ 600 ಕೋಟಿ ರೂ. ಕಾಮಗಾರಿಯ ತುಂಡು ಗುತ್ತಿಗೆಯಲ್ಲಿ ಅವ್ಯವಹಾರವಾಗಿದೆ ಎಂಬ ಆರೋಪ ಏಕೆ ಮುಚ್ಚಿ ಹಾಕಿದಿರಿ ಎಂದು ಪ್ರಶ್ನಿಸಿದರು. ಹಾರೋಹಳ್ಳಿ ಬಳಿ ಹಾಲಿನ ಪುಡಿ ತಯಾರಿಕಾ ಘಟಕಕ್ಕೆ ಸ್ವಾೀಧಿನಪಡಿಸಿಕೊಂಡ ಭೂಮಿಯ ರೈತರಿಗೆ 50 ಸಾವಿರದಿಂದ ಒಂದು ಲಕ್ಷ ನೀಡಿ ಜಿಪಿಎ ಮಾಡಿಸಿಕೊಂಡಿದ್ದ ನಿಮ್ಮ ಪಟಾಲಯಂ 50 ಲಕ್ಷ ರೂ.ವರೆಗೂ ಲಪಟಾಯಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಆರೋಪಿಸಿದರು. +ರಾಮನಗರ ಜಿಲ್ಲೆ ತಲವಾರು ಆದಾಯದಲ್ಲಿ ಮೊದಲ ಸ್ಥಾನದಲ್ಲಿದೆ. ಇಗ್ಗಲೂರು ಜಲಾಶಯ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳಾಗಿವೆ. ಕೇವಲ ಮೂರು ಕಟ್ಟಡಗಳನ್ನು ನಿರ್ಮಿಸಿಲ್ಲ ಎಂದು ತಿರುಗೇಟು ನೀಡಿದರು. ಹೊಸಕೆರೆ ಹಳ್ಳಿ ಬಳಿಯ 8 ಎಕರೆ ಜಮೀನನ್ನು ಬಿಎಂಐಸಿ ಕಾರಿಡಾರ್‍ಗೆ ಅಧಿಸೂಚನೆ ಹೊರಡಿಸಿ ಆ ಜಮೀನಿನ ಭೂ ಪರಿವರ್ತನೆಯನ್ನು ಡಿ.ಕೆ.ಸುರೇಶ್ ಹೆಸರಿಗೆ ಮಾಡಿಸಲಾಗಿದೆ. +ಭೂ ಪರಿವರ್ತನೆಯ ದಾಖಲೆ ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ. ಈ ಜಮೀನು ಭಾಗ್ಯಲಕ್ಷ್ಮಿ ಅಮಾವಸೆ ಗೌಡ ಎಂಬುವರಿಗೆ ಸೇರಿದ್ದೆಂಬ ಉಲ್ಲೇಖವಿದೆ. ರಾಮನಗರ ಜಿಲ್ಲೆ ತೆಗೆದು ಬ್ರಾಂಡ್ ಬೆಂಗಳೂರು ಮಾಡುತ್ತಿರುವ ಉದ್ದೇಶವಿದೆಯೇ? ಅಲ್ಲಿ ರಸ್ತೆ ಮಾಡುತ್ತಿಲ್ಲ, ರಿಯಲ್ ಎಸ್ಟೇಟ್ ಮಾಡುತ್ತಾರೆ. ಆ ಕಾರಣಕ್ಕಾಗಿ ನೈಸ್ ರಸ್ತೆ ಯೋಜನೆಯನ್ನು ರದ್ದುಪಡಿಸಿ ಎಂದು ಆಗ್ರಹಿಸಿರುವುದು ಎಂದು ಹೇಳಿದರು. +ತಾವರೆಕೆರೆ ಬಳಿ ಡಿಎಲ್‍ಎಫ್‍ಗೆ ಸೇರಿದ ಜಮೀನಿನಲ್ಲಿ 300 ಎಕರೆ ಯಾರ ಹೆಸರಿನಲ್ಲಿದೆ. ಇಂದಿರಾನಗರದಲ್ಲಿರುವ ಡಿಎಲ್‍ಎಫ್ ಶಾಖಾ ಕಚೇರಿಯಲ್ಲಿ ಕೆಐಎಡಿಬಿ ವ್ಯವಹಾರಗಳು ಸಭೆಗಳು ನಡೆಯುತ್ತಿವೆ. ಅದಕ್ಕೆ ಕಾಂಗ್ರೆಸ್‍ನ ಪ್ರಭಾವಿ ನಾಯಕರ ಸೂಚನೆ ಮೇರೆಗೆ ನಡೆಯುತ್ತಿವೆ ಎಂದು ಆಪಾದಿಸಿದರು. ಬ್ರಾಂಡ್ ಬೆಂಗಳೂರು ಹೆಸರು ಹೇಳಿಕೊಂಡು ಬೆಂಗಳೂರು ದಕ್ಷಿಣ ಜಿಲ್ಲೆ ಎನ್ನುತ್ತಿದ್ದಾರೆ. ಯಾರಿಗೆ ದಕ್ಷಿಣೆ ಕೊಡಲು ದಕ್ಷಿಣೆ ಜಿಲ್ಲೆ ಎನ್ನುತ್ತಾರೆ ಎಂದು ಪ್ರಶ್ನಿಸಿದರು. + : ಮಾಜಿ ಸಿಎಂ ಯಡಿಯೂರಪ್ಪಗೆ ಕೆಟಗರಿ ಭದ್ರತೆ +ಕೆರೆಗಳನ್ನು ನುಂಗಿದ್ದು, ನಾಡಪ್ರಭು ಕೆಂಪೇಗೌಡರ ಹೆಸರು ಹೇಳಲು ಯಾವ ನೈತಿಕತೆ ಇದೆ. ರಾಮನಗರ ಹೆಸರಿದ್ದರೆ ಜಮೀನನ್ನು ಅಡಿ ಲೆಕ್ಕದಲ್ಲಿ ಮಾರಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದರು. ಬೆಂಗಳೂರು ಎಂಬುದು ಕೇವಲ ರಾಮನಗರಕ್ಕೆ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಅನ್ವಯ. ಇಲ್ಲಿನ ಆರ್ಥಿಕ ಶಕ್ತಿಯಿಂದ ರಾಜ್ಯದ ಮೆರವಣಿಗೆಯಾಗುತ್ತಿದೆ ಎಂದರು. +ಮುಖ್ಯಮಂತ್ರಿ ಸ್ಥಾನ ಯಾರ ಅಪ್ಪನ ಆಸ್ತಿಯೂ ಅಲ್ಲ. ಈ ಸ್ಥಾನ ಶಾಶ್ವತವೂ ಅಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಟಿಯಲ್ಲಿ ಜೆಡಿಎಸ್ ಕಾನೂನು ಘಟಕದ ಎ.ಪಿ.ರಂಗನಾಥ್, ಮಾಜಿ ಶಾಸಕ ಎ.ಮಂಜು, ರಾಜ್ಯ ಒಕ್ಕಲಿಗರ ಸಂಘದ ಕಾರ್ಯದರ್ಶಿ ಎಚ್.ಸಿ.ಜಯಮುತ್ತು ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_325_5.txt b/eesanje/url_46_325_5.txt new file mode 100644 index 0000000000000000000000000000000000000000..fcfbf18dec816dcc03fafbe2d3e1b4ca95e495c8 --- /dev/null +++ b/eesanje/url_46_325_5.txt @@ -0,0 +1,24 @@ +ಹಿಮಾಚಲಪ್ರದೇಶದಿಂದ ವಿದ್ಯುತ್ ಖರೀದಿ : ಸಚಿವ ಕೆ.ಜೆ.ಜಾರ್ಜ್ +ನವದೆಹಲಿ, ಅ.26- ರಾಜ್ಯದಲ್ಲಿ ಕೊರತೆಯಾಗಿರುವ ವಿದ್ಯುತ್ ಪರಿಸ್ಥಿತಿಯನ್ನು ನಿಭಾಯಿಸಲು ಹಿಮಾಚಲಪ್ರದೇಶ ಹಾಗೂ ಇತರ ರಾಜ್ಯಗಳಿಂದ ವಿದ್ಯುತ್ ಖರೀದಿಸಲಾಗುತ್ತಿದ್ದು, ಜೊತೆಯಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. +ದೆಹಲಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ವಿದ್ಯುತ್ ಕೊರತೆಗೆ ಗೃಹಜ್ಯೋತಿ ಯೋಜನೆ ಕಾರಣವಲ್ಲ. ಈ ಯೋಜನೆ ಸೌಲಭ್ಯ ಪಡೆಯಲು ಗರಿಷ್ಠ 200 ಯೂನಿಟ್ ಅಥವಾ ಬಳಕೆಯ ಮಿತಿಯಲ್ಲೇ ಇರಬೇಕಿರುವುದರಿಂದ ಜನ ಬಳಕೆಯಲ್ಲೇ ಉಳಿತಾಯ ನೀತಿಯನ್ನು ಪಾಲನೆ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದ ಈ ಬಾರಿ ಕೃಷಿ ಪಂಪ್‍ಸೆಟ್ ಹಾಗೂ ಕೈಗಾರಿಕೆಗಳಿಂದ ಬೇಡಿಕೆ ಹೆಚ್ಚಾಗಿದೆ ಎಂದು ವಿವರಿಸಿದರು. +ಇಂಧನ ಇಲಾಖೆ ಅಧಿಕಾರಿಗಳು ಪರಿಸ್ಥಿತಿ ನಿಭಾಯಿಸಲು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಶೇ.10ರಷ್ಟು ವಿದೇಶಿ ಕಲ್ಲಿದ್ದಲ್ಲನ್ನು ದೇಶಿಯ ಕಲ್ಲಿದ್ದಲಿಗೆ ಮಿಶ್ರಣ ಮಾಡಿದರೆ ವಿದ್ಯುತ್ ಉತ್ಪಾದನೆ ಹೆಚ್ಚಾಗಲಿದೆ. ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 2 ಮೆಗಾಟನ್ ಕಲ್ಲಿದ್ದಲ್ಲನ್ನು ಮಂಜೂರು ಮಾಡಿದೆ. ದೇಶಿಯ ಕಲ್ಲಿದ್ದಲಿನಲ್ಲಿ ಬೂದಿ ಹೆಚ್ಚಿದೆ ಅದನ್ನು ತೊಳೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. +ಕೃತಕ ಅಭಾವ ಸೃಷ್ಟಿಸಿ ವಿದ್ಯುತ್ ಖರೀದಿಯಲ್ಲಿ ಹಣ ಮಾಡಲು ಯತ್ನಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಆಧಾರ ರಹಿತ ಆರೋಪ ಮಾಡಿದ್ದಾರೆ. ಆತ್ಮಸಾಕ್ಷಿ ಇರುವ ಯಾವ ರಾಜಕಾರಣಿಯೂ ಕೃತಕ ಅಭಾವ ಸೃಷ್ಟಿಸಲ್ಲ, ಆ ರೀತಿ ಮಾಡಲು ಸಾಧ್ಯವಿಲ್ಲ. ಮುಖ್ಯಮಂತ್ರಿಯಾದಿಯಾಗಿ ನಾವು ಪ್ರತಿದಿನ ಪರಿಸ್ಥಿತಿ ಪರಿಶೀಲನೆ ಮಾಡುತ್ತೇವೆ. +ರಾಜ್ಯ ಸರ್ಕಾರ ವಿದ್ಯುತ್ ಖರೀದಿಸುವುದು ಕೇಂದ್ರ ಗ್ರಿಡ್‍ನಿಂದ. ನಮ್ಮ ಅಧಿಕಾರಿಗಳು ಮುನ್ನಾ ದಿನ ಗ್ರಿಡ್‍ಗೆ ಹೋಗಿ ಬಿಡ್‍ನಲ್ಲಿ ಭಾಗವಹಿಸುತ್ತಾರೆ. ಆ ದಿನದ ದರಕ್ಕೆ ತಕ್ಕಂಗೆ ಹರಾಜು ಕೂಗಿ ವಿದ್ಯುತ್ ಖರೀದಿಸುತ್ತೇವೆ. ಕುಮಾರಸ್ವಾಮಿ ಬಯಸಿದರೆ ಗ್ರಿಡ್‍ನಲ್ಲಿ ನಡೆಯುವ ಖರೀದಿ ಪ್ರಕ್ರಿಯೆಯನ್ನು ತೋರಿಸಲು ಕರೆದುಕೊಂಡು ಹೋಗಲು ಸಿದ್ದರಿದ್ದೇವೆ. ಸುಳ್ಳು ಆರೋಪ ಮಾಡಿ ಜನರಲ್ಲಿ ಅನುಮಾನ ಬರುವಂತೆ ಮಾಡುವುದು ಸರಿಯಲ್ಲ ಎಂದರು. +ಕೂಡಗಿ ಸ್ಥಾವರದ ಐದು ಸ್ಥಾವರದಲ್ಲಿ ಮೂರಲ್ಲಿ ಮಾತ್ರ ಉತ್ಪಾದನೆಯಾಗುತ್ತಿದೆ ಎಂದಿದ್ದಾರೆ. ಅವು ಕೇಂದ್ರ ಸರ್ಕಾರ ನಿಯಂತ್ರಣದಲ್ಲಿವೆ, ರಾಜ್ಯ ಸರ್ಕಾರಕ್ಕೆ ಸಂಬಂಧಿಸಿಲ್ಲ. ಅಲ್ಲಿ ಉತ್ಪಾದನೆಯಾಗುವ 2400 ಮೆಗಾವ್ಯಾಟ್‍ನಲ್ಲಿ ರಾಜ್ಯಕ್ಕೆ 1250 ಮೇಗಾವ್ಯಾಟ್ ಮಂಜೂರಾಗಿದೆ. ಕಳೆದ ವರ್ಷ ಕೇಂದ್ರ ಸರ್ಕಾರ 150 ಮೆಗಾವ್ಯಾಟ್ ವಿದ್ಯುತ್ ನೀಡಲು ಮುಂದಾಗಿತ್ತು. ಅದನ್ನು ಆಗಿನ ಸರ್ಕಾರ ಖರೀದಿಸದೆ, ದೆಹಲಿಗೆ ಬಿಟ್ಟುಕೊಟ್ಟಿದೆ. ಆ ಒಪ್ಪಂದ ಅಕ್ಟೋಬರ್ 31ವರೆಗೂ ಚಾಲ್ತಿಯಲ್ಲಿದೆ, ಅನಂತರ 150 ಮೆಗಾವ್ಯಾಟ್ ರಾಜ್ಯಕ್ಕೆ ದೊರೆಯಲಿದೆ ಎಂದರು. +ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ವಸ್ತು ಸ್ಥಿತಿ ಅರಿವಿಲ್ಲದೆ ಅವರು ಆರೋಪ ಮಾಡಿದ್ದಾರೆ. ನಾನು ಯಾರ ಮೇಲೂ ದೋಷಾರೋಪಣೆ ಮಾಡುವುದಿಲ್ಲ. ಎಲ್ಲರಿಗೂ ಮನವರಿಕೆ ಮಾಡಿಕೊಡುತ್ತೇನೆ ಎಂದರು. ನಮ್ಮಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ಈ ಮೊದಲು ಕೃಷಿಗೆ ಏಳು ಗಂಟೆ ವಿದ್ಯುತ್ ನೀಡಲಾಗುತ್ತಿತ್ತು. ಕೊರತೆ ಹೆಚ್ಚಾಗಿದ್ದರಿಂದ ಐದು ಗಂಟೆಗೆ ಇಳಿಸಿದ್ದೇವೆ. ಜಿಲ್ಲಾ ಮಟ್ಟದ ಸಮಿತಿಗಳು ಬೇಡಿಕೆ, ಪೂರೈಕೆಯನ್ನು ನಿಭಾಯಿಸುತ್ತವೆ ಎಂದರು. +ಸಕ್ಕರೆ ಕಾರ್ಖಾನೆಗಳ ಉಪ ಉತ್ಪನ್ನದಿಂದ 600 ಮೇಗಾವ್ಯಾಟ್ ವಿದ್ಯುತ್ ದೊರೆಯುವ ನಿರೀಕ್ಷೆ ಇದೆ. ಹಿಮಾಚಲ ಪ್ರದೇಶದ ಸರ್ಕಾರದಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಅಲ್ಲಿ ಜಲವಿದ್ಯುತ್ ಉತ್ಪಾದನೆ ಹೆಚ್ಚಿದೆ. ನಮಗೆ 200 ಮೆಗಾವ್ಯಾಟ್ ಅನ್ನು ಪಿಕ್ ಅವರ್‍ನಲ್ಲಿ ಈಗಾಗಲೇ ಪೂರೈಕೆಯಾಗುತ್ತಿದೆ. ಖಾಸಗಿ ಅಥವಾ ಮಧ್ಯವರ್ತಿಗಳಿಂದ ನಾವು ವಿದ್ಯುತ್ ಖರೀದಿ ಮಾಡುತ್ತಿಲ್ಲ ಎಂದು ಹೇಳಿದರು. + : ಮಾಜಿ ಸಿಎಂ ಯಡಿಯೂರಪ್ಪಗೆ ಕೆಟಗರಿ ಭದ್ರತೆ +ಇತ್ತೀಚೆಗೆ ಪವನ ಹಾಗೂ ಸೌರ ಶಕ್ತಿ ಹೆಚ್ಚಾಗುತ್ತಿದೆ. ಬೇಸಿಗೆಯಲ್ಲಿ ಮತ್ತಷ್ಟು ಸೌರ ಶಕ್ತಿ ವೃದ್ಧಿಸುವ ನಿರೀಕ್ಷೆಗಳಿವೆ ಎಂದರು. ಮುಂದಿನ ವರ್ಷ ಎಲ್ಲಾ ಉಪಸ್ಥಾವರಗಳಿಗೆ ಸೌರ ಶಕ್ತಿ ಅಳವಡಿಕೆಗೆ ಪ್ರತಿ ಯೂನಿಟ್‍ಗೆ 3.20 ರೂಪಾಯಿನಂತೆ ಟೆಂಡರ್ ಕರೆಯಲಾಗಿತ್ತು, ಅದರ ಅವ ನಿನ್ನೆ ಮುಗಿದಿದೆ. +ರಾಜ್ಯದಲ್ಲಿ 900 ಸಾವಿರ ಉಪಸ್ಥಾವರಗಳಿವೆ, ಅವುಗಳಲ್ಲಿ 200 ಉಪಸ್ಥಾವಗಳಿಗೆ ಕೇಂದ್ರ ಸರ್ಕಾರದ ಕುಸುಮ್-ಬಿ ಯೋಜನೆಯಲ್ಲಿ ಸೌರಶಕ್ತಿ ಉತ್ಪಾದನೆ ಮಾಡಿ, ಪೂರೈಕೆ ಮಾಡಲು ಕ್ರಮ ಕೈಗೊಳ್ಳುತ್ತಿದ್ದೇವೆ. ಕೃಷಿ ಪಂಪ್‍ಸೆಟ್‍ಗಳಿಗೆ ಸೌರಶಕ್ತಿ ವಿದ್ಯುತ್ ಘಟಕ ಅಳವಡಿಸುವ ಯೋಜನೆ ಎಂಟತ್ತು ತಿಂಗಳಲ್ಲಿ ಮುಗಿಯಲಿದೆ ಎಂದರು. +ಪಾವಗಡದಲ್ಲಿ ಈಗಾಗಲೇ 10 ಸಾವಿರ ಎಕರೆ ಪ್ರದೇಶದಲ್ಲಿ 2300 ಮೇಗಾವ್ಯಾಟ್ ಸೌರ ಶಕ್ತಿ ವಿದ್ಯುತ್ ಉತ್ಪಾದಿಸುತ್ತಿದ್ದೇವೆ. ಅಲ್ಲಿನ ರೈತರು ಇನ್ನೂ ಹತ್ತು ಸಾವಿರ ಎಕರೆಯನ್ನು ಭೋಗ್ಯದ ಆಧಾರದ ಮೇಲೆ ನೀಡಲು ಮುಂದೆ ಬಂದಿದ್ದಾರೆ. ಈಗಾಗಲೇ ಆರು ಸಾವಿರ ಎಕರೆಗೆ ಒಪ್ಪಂದವಾಗಿದೆ. ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ಉತ್ಪಾದನೆಯಾಗಲಿದೆ ಎಂದರು. +ಜೊತೆಗೆ ಗದಗ, ಕಲಬುರಗಿ, ರಾಯಚೂರಿನಲ್ಲೂ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲಾಗುತ್ತಿದೆ. ಪವನ ಶಕ್ತಿ ಉತ್ಪಾದನೆಗೂ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ಪಂಪ್ ಸ್ಟೋರೆಜ್‍ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಚತ್ತಿಸ್‍ಗಡದಲ್ಲಿ ವಿದ್ಯುತ್ ಘಟಕ ಸ್ಥಾಪನೆಗೆ 500 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಉತ್ಪಾದನೆಯಾಗುತ್ತಿಲ್ಲ, ವಿದ್ಯುತ್ ಸಿಗುತ್ತಿಲ್ಲ , ಚುನಾವಣೆ ಬಳಿಕ ಅಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಯಲಹಂಕದಲ್ಲಿನ ಡಿಸೇಲ್ ಘಟಕವನ್ನು ಅನಿಲ ಆಧಾರಿತವಾಗಿ ಘಟಕವನ್ನಾಗಿ ಪರಿವರ್ತಿಸಲಾಗಿದೆ. ಅಲ್ಲಿ 375 ಮೇಗಾ ವ್ಯಾಟ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. +ಶರಾವತಿ ಸೇರಿದಂತೆ ಜಲವಿದ್ಯುತ್ ಉತ್ಪಾದನೆ ಶೇ.50ರಷ್ಟು ಕಡಿಮೆಯಾಗಿದೆ. ಮೋಡ ಮುಸುಕಿದ ವಾತಾವರಣದಿಂದ ಸೌರ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಉಷ್ಣ ವಿದ್ಯುತ್ ಸ್ಥಾವರಕ್ಕೆ ಹೆಚ್ಚುವರಿ ಕಲ್ಲಿದ್ದಲು ಪೂರೈಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹಿಮಾಚಲ ಪ್ರದೇಶ. ಪಂಜಾಬ್, ಉತ್ತರ ಪ್ರದೇಶದಿಂದ ವಿನಿಮಯ ದರದ ಮೇಲೆ ವಿದ್ಯುತ್ ಖರೀದಿಸುತ್ತೇವೆ. ಭವಿಷ್ಯದ ಬೇಡಿಕೆಯನ್ನು ನಿಭಾಯಿಸುತ್ತಿದ್ದೇವೆ. ಹಂಚಿಕೆಯಾಗದೆ ಇರುವ ವಿದ್ಯುತ್‍ನಲ್ಲಿ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು. +ಬಡವರು ಮತ್ತು ಮಧ್ಯಮ ವರ್ಗ ಆದಾಯ ಕಡಿತವಾಗಿತ್ತು. ಅವರ ಕೈ ಬಲ ಪಡಿಸಲು ಪಂಚಖಾತ್ರಿಗಳನ್ನು ಜಾರಿಗೆ ತರಲಾಗಿದ್ದು ಗೃಹಜ್ಯೋತಿ ರೂಪಿಸಲಾಯಿತು. ರಾಜ್ಯದಲ್ಲಿ 2.14 ಲಕ್ಷ ಸಂಪರ್ಕಗಳಿವೆ 1.51 ಕೋಟಿ ಫಲಾನುಭವಿಗಳು ನೋಂದಣಿಯಾಗಿ ಪ್ರಯೋಜನ ಪಡೆಯುತ್ತಿದ್ದಾರೆ. ತಿಂಗಳಿಗೆ 750 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಎಸ್ಕಾಂಗಳಿಗೆ ಪಾವತಿಸುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ದಿನ 43 ಮಿಲಿಯನ್ ಯೂನಿಟ್ ಬಳಕೆಯಾಗುತ್ತಿದೆ. ಮುಖ್ಯಮಂತ್ರಿಯವರು ಗೃಹಜ್ಯೋತಿಗೆ ಮುಂಗಡವಾಗಿಯೇ ಹಣ ಪಾವತಿ ಮಾಡುತ್ತಿದ್ದಾರೆ ಎಂದರು. +ಇಂಧನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ ಗುಪ್ತ ಮಾತನಾಡಿ, ರಾಜ್ಯದಲ್ಲಿ ಇನ್ಸಾಟಾಲ್ ಕೆಪಾಸಿಟಿಗೆ ತಕ್ಕಂತೆ ವಿದ್ಯುತ್ ಉತ್ಪಾದಿಸಿ ಪೂರೈಸುತ್ತಿದ್ದೇವೆ. ನಾಲ್ಕೈದು ವರ್ಷಗಳಿಂದ ಬೇಡಿಕೆ ಹೆಚ್ಚಾಗಿರಲಿಲ್ಲ. ಈ ಬಾರಿ ಮಳೆ ಕೊರತೆಯಿಂದ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಷ್ಟೆ ಅಲ್ಲ, ನೆರೆಯ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರಗಳಲ್ಲೂ ಬೇಡಿಕೆ ಹೆಚ್ಚಾಗಿದೆ. +ಜಲಾಶಯಗಳಲ್ಲಿ ನೀರು ಕಡಿಮೆಯಾಗಿದೆ, ಮುಂಗಾರಿನಲ್ಲಿ ಮಾತ್ರ ಪವನ ವಿದ್ಯುತ್ ಹೆಚ್ಚಾಗುತ್ತದೆ ಅನಂತರ ತಗ್ಗಿದೆ. ಮಳೆ ಕೊರತೆಯಿಂದಾಗಿ ನೀರಾವರಿ ಪಂಪ್‍ಸೆಟ್ ಗಳಿಗೆ ಹೆಚ್ಚಿನ ವಿದ್ಯುತ್ ಬಳಕೆಯಾಗುತ್ತಿದೆ. ಕಳೆದ ವರ್ಷಕ್ಕಿಂತ ಶೇ.50ರಿಂದ 80ರಷ್ಟು ಹೆಚ್ಚಾಗಿದೆ. ಅದಕ್ಕೆ ಅನುಗುಣವಾಗಿ ನಾವು ನಮ್ಮ ಉತ್ಪಾದನೆಯನ್ನು ಶೇ.40ರಿಂದ 50ರಷ್ಟು ಹೆಚ್ಚಿಸಿದ್ದೇವೆ ಎಂದರು. +ದುರ್ಗಾಪೂಜೆ ವೇಳೆ ಪಾಕ್ ಪರ ಘೋಷಣೆ : ಅಪ್ರಾಪ್ತ ಬಾಲಕಿ ಸೇರಿ 6 ಜನರ ಅರೆಸ್ಟ್ +ಕಳೆದ ವರ್ಷ ಅಕ್ಟೋಬರ್ 24ರಂದು 7,647 ಮೆಗಾವ್ಯಾಟ್ ವಿದ್ಯುತ್ ಖರ್ಚಾಗಿತ್ತು, ಈ ವರ್ಷ ಅದೇ ದಿನ 13,812 ಮೇಗಾವ್ಯಾಟ್ ಬಳಕೆಯಾಗಿದೆ. ಶೇ,80ರಷ್ಟು ಬೇಡಿಕೆ ಹೆಚ್ಚಾಗಿದೆ. ಬೇರೆ ರಾಜ್ಯದಲ್ಲೂ ಶೇ.30ರಿಂದ 40ರಷ್ಟು ಬೇಡಿಕೆ ಹೆಚ್ಚಾಗಿದೆ ಎಂದು ವಿವರಿಸಿದರು. +2022ರ ಸೆಪ್ಟಂಬರ್ ತಿಂಗಳಿನಲ್ಲಿ ಗೃಹಬಳಕೆಗೆ 1236 ಮಿಲಿಯನ್ ಯೂನಿಟ್ ಇದ್ದರೆ, ಈ ವರ್ಷ ಅದೇ ತಿಂಗಳಿನಲ್ಲಿ 1287 ಯೂನಿಟ್ ಬಳಕೆಯಾಗಿದೆ, ಶೇ.4ರಷ್ಟು ಮಾತ್ರ ಹೆಚ್ಚಾಗಿದೆ. ಕೈಗಾರಿಕೆಗಳಿಗೆ ಕಳೆದ ವರ್ಷ 958 ಮಿಲಿಯನ್ ಯೂನಿಟ್ ಬಳಕೆಯಾಗಿದ್ದರೆ, 1041 ಯೂನಿಟ್ ಸೇರಿ ಶೇ.8ರಷ್ಟು ಹೆಚ್ಚಾಗಿದೆ. ವಾಣಿಜ್ಯ ಉದ್ದೇಶಕ್ಕೆ 572 ರ ಬದಲು 668 ಮಿಲಿಯನ್ ಯೂನಿಟ್ ಸೇರಿ ಶೇ.16ರಷ್ಟು ಹೆಚ್ಚಿದೆ. ನೀರಾವರಿ ಪಂಪ್ ಸೆಟ್‍ಗೆ 958 ಎದುರಾಗಿ 2426 ಮಿಲಿಯನ್ ಯೂನಿಟ್ ಅಂದರೆ ಶೇ.150 ರಷ್ಟು ಬೇಡಿಕೆ ಹೆಚ್ಚಾಗಿದೆ ಎಂದು ವಿವರಿಸಿದರು. +ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲಾಗುತ್ತಿದೆ. ನೀರಾವರಿಗೆ ತ್ರಿಪೇಸ್ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಉತ್ಪಾದನೆ ಹೆಚ್ಚಿಸಲು, ಬೇರೆ ರಾಜ್ಯಗಳಿಂದ ವಿನಿಮಯದ ಆಧಾರದ ಮೇಲೆ ವಿದ್ಯುತ್ ಖರೀದಿ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ನಿನ್ನೆ ಹೊರಡಿಸಿರುವ ಆದೇಶದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿರುವುದನ್ನು ಪರಿಶೀಲನೆ ಮಾಡಿದೆ. +ಚಿಕ್ಕಬಳ್ಳಾಪುರ : ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ , 13 ಮಂದಿ ದುರ್ಮರಣ +ಮಳೆಕೊರತೆಯಿಂದ ಶೇ.11ರಷ್ಟು ಜಲವಿದ್ಯುತ್ ಕಡಿತವಾಗಿದೆ. 2 ಗಿಗಾ ವ್ಯಾಟ್‍ನಷ್ಟು ಕಡಿಮೆಯಾಗಿದೆ. ಆದಾಗ್ಯೂ ತಡೆ ರಹಿತ ವಿದ್ಯುತ್ ಉತ್ಪಾದನೆಗೆ ವಿದೇಶಿ ಕಲ್ಲಿದ್ದಲನ್ನು ಆಮುದು ಮಾಡಿಕೊಂಡು ದೇಶಿಯ ಕಲ್ಲಿದ್ದಲಿನ ಜೊತೆಗೆ ಮಾರ್ಚ್ ವರೆಗೂ ಶೇ.6ರಷ್ಟು ಬ್ಲೆಂಡ್ ಮಾಡಲು ಸೂಚಿಸಲಾಗಿದೆ ಎಂದರು. \ No newline at end of file diff --git a/eesanje/url_46_325_6.txt b/eesanje/url_46_325_6.txt new file mode 100644 index 0000000000000000000000000000000000000000..3aa899514887f1d765d8b3dd76ffe1160ac807f1 --- /dev/null +++ b/eesanje/url_46_325_6.txt @@ -0,0 +1,12 @@ +ಚಿಕ್ಕಬಳ್ಳಾಪುರ : ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ , 13 ಮಂದಿ ದುರ್ಮರಣ +ಚಿಕ್ಕಬಳ್ಳಾಪುರ, ಅ.26- ಕುಟುಂಬದವರೊಂದಿಗೆ ಖುಷಿ ಖುಷಿಯಿಂದ ಹಬ್ಬ ಮುಗಿಸಿಕೊಂಡು ಕಾಯಕಕ್ಕೆ ಮರಳುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದು ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಹಿಂದಿನಿಂದ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ 13 ಮಂದಿಯನ್ನು ಬಲಿತೆಗೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಚಿತ್ರಾವತಿ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. +ಅಪಘಾತದಲ್ಲಿ 8 ಮಂದಿ ಪುರುಷರು, ನಾಲ್ವರು ಮಹಿಳೆಯರು ಹಾಗೂ ಒಂದು ಗಂಡು ಮಗು ಮೃತಪಟ್ಟಿದ್ದು,ಕೆಲವರ ಹೆಸರು, ವಿಳಾಸ ಸದ್ಯಕ್ಕೆ ತಿಳಿದು ಬಂದಿಲ್ಲ. ಮೃತರ ಪೈಕಿ ದೊಡ್ಡಬಳ್ಳಾಪುರದ ಅರುಣಾ (40) ಇವರ ಮಗ ಹೃತ್ವಿಕ್ ಯತಿನ್ (6), ಬೆಂಗಳೂರಿನ ಬಸವೇಶ್ವರ ನಗರದ ಸುಬ್ಬಮ್ಮ, ಆಂಧ್ರದ ಕೊತ್ತಚೆರಮ ನಿವಾಸಿ ಪೆರುಮಾಳ್, ಕಾವಲ್ ಬೈರಸಂದ್ರದ ನರಸಿಂಹಮೂರ್ತಿ, ಚಾಲಕ ನರಸಿಂಹಪ್ಪ ಎಂದು ಗುರುತಿಸಲಾಗಿದ್ದು, ಉಳಿದವರ ಹೆಸರು, ವಿಳಾಸಕ್ಕಾಗಿ ಪೊಲೀಸರು ಮಾಹತಿ ಕಲೆ ಹಾಕುತ್ತಿದ್ದಾರೆ. +ಆಯುಧ ಪೂಜೆ ಹಿನ್ನಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಿದ್ದ ಕಾರ್ಮಿಕರು ಸಂಭ್ರಮದಿಂದ ಕುಟುಂಬದವರೊಂದಿಗೆ ಹಬ್ಬ ಮಾಡಿಕೊಂಡು ರಾತ್ರಿ ಬೆಂಗಳೂರಿಗೆ ಮರಳಲು ಆಂಧ್ರದ ಕಡೆಯಿಂದ ಬರುತಿದ್ದ ಟಾಟಾಸುಮೋ ಹತ್ತಿದ್ದಾರೆ. ಆಂಧ್ರ ನೊಂದಣಿಯ ಟಾಟಾ ಸುಮೋ ಚಾಲಕ ಮಾರ್ಗಮಧ್ಯೆ ಬೇರೆ ಬೇರೆ ಊರಿನಲ್ಲಿ ಬೆಂಗಳೂರಿಗೆ ತೆರಳಲು ವಾಹನಕ್ಕಾಗಿ ರಸ್ತೆ ಬದಿ ಕಾಯುತ್ತಿದ್ದ ಜನರನ್ನು ಹತ್ತಿಸಿಕೊಂಡು ಒಟ್ಟು 13 ಮಂದಿಯನ್ನು ಕರೆದುಕೊಂಡು ಬಾಗೇಪಲ್ಲಿ -ಚಿಕ್ಕಬಳ್ಳಾಪುರ ಮಾರ್ಗವಾಗಿ ಬೆಂಗಳೂರಿಗೆ ಅತೀ ವೇಗವಾಗಿ ಬರುತ್ತಿದ್ದನು. +ಇಂದು ಬೆಳಗ್ಗೆ 7 ಗಂಟೆ ಸುಮಾರಿನಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ರಾವತಿಯ ಬಳಿ ಬರುತ್ತಿದ್ದಂತೆ ರಸ್ತೆ ಬದಿ ಯಾವುದೇ ಸೂಚನಾ ದೀಪ (ಬ್ಲಿಕಿಂಗ್ ಲೈಟ್) ಹಾಕದೆ ಸಿಮೆಂಟ್ ಬಲ್ಕರ್ ಲಾರಿ ನಿಲ್ಲಿಸಿರುವುದು ಚಾಲಕನ ಗಮನಕ್ಕೆ ಬಾರದೆ ವೇಗವಾಗಿ ಟಾಟಾ ಸುಮೋ ಚಲಾಯಿಸಿಕೊಂಡು ಬಂದು ಹಿಂದಿನಿಂದ ಡಿಕ್ಕಿಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. +ಅಪಘಾತ ಸಂಭವಿಸುತ್ತದ್ದಂತೆ ಸುತ್ತಮುತ್ತಲಿನ ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಟಾಟಾ ಸುಮೋ ವಾಹನದ ಬಾಗಿಲುಗಳನ್ನು ತೆಗೆದು ಸಂತ್ರಸ್ಥರನ್ನು ರಕ್ಷಿಸಲು ಮುಂದಾದರು. ಪೊಲೀಸರಿಗೂ ವಿಷಯ ತಿಳಿಸಿದ್ದಾರೆ.ಟಾಟಾ ಸುಮೋ ವಾಹನದೊಳಗೆ ಗಂಭೀರ ಗಾಯಗೊಂಡು ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ 7 ಮಂದಿ ಮೃತಪಟ್ಟಿದ್ದಾರೆ.ಆಸ್ಪತ್ರೆಗೆ ದಾಖಲಿಸಿದ್ದ ಉಳಿದಿದ್ದ ಒಬ್ಬ ಮಹಿಳೆಯೂ ಚಿಕಿತ್ಸೆ ಫಲಿಸದೆ 10 ಗಂಟೆ ಸುಮಾರಿನಲ್ಲಿ ಮೃತಪಟ್ಟಿದ್ದಾರೆ. +ಮಂಜು ಕವಿದ ವಾತಾವರಣಬೆಳ್ಳಂಬೆಳಗ್ಗೆ ವಿಪರಿತ ಮಂಜು ಕವಿದಿದ್ದು ಟಾಟಾಸುಮೋ ಚಾಲಕನಿಗೆ ರಸ್ತೆ ಕಾಣದೆ ಲಾರಿಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿಹೊಡೆದ ರಭಸಕ್ಕೆ ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದ್ದು ವಾಹನದೊಳಗೆಸಿಕ್ಕಿಕೊಂಡು ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. + : ಮಾಜಿ ಸಿಎಂ ಯಡಿಯೂರಪ್ಪಗೆ ಕೆಟಗರಿ ಭದ್ರತೆ +ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸುದ್ದಿತಿಳಿದ ಕೂಡಲೆ ಜಿಲ್ಲಾಪೊಲೀಸ್ ವರಿಷ್ಟಾಕಾರಿ ನಾಗೇಶ್ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ. +ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‍ಪಿ ನಾಗೇಶ್, ದಟ್ಟ ಮಂಜಿನಿಂದಾಗಿ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿರುವುದು ಮೋಲ್ನೋಟಕ್ಕೆ ಕಂಡು ಬಂದಿದೆ. ರಸ್ತೆ ಬದಿ ವಾಹನಗಳನ್ನು ನಿಲ್ಲಿಸದಂತೆ ಸೂಚಿಸಿದ್ದರೂ ರಾತ್ರಿ ವೇಳೆ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಚಾಲಕರು ನಿದ್ರೆ ಮಾಡುತ್ತಾರೆ. ಹಾಗಾಗಿ ಇಂತಹ ಅಚಾತುರ್ಯಗಳು ನಡೆಯುತ್ತಿವೆ. ಈ ಬಗ್ಗೆ ಲಾರಿ ಚಾಲಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿ ರವೀಂದ್ರ ಅವರು ಸ್ಥಳಕ್ಕೆ ಆಗಮಿಸಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡರು. +ಕುಟುಂಬಸ್ಥರ ಆಕ್ರಂದನ:ಹಬ್ಬ ಮುಗಿಸಿಕೊಂಡು ವಾಪಸ್ಸು ತಮ್ಮ ಮನೆಗಳಿಗೆ ತೆರಳಲು ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಹೋಗಿದ್ದವರು ಮಾರ್ಗಮಧ್ಯೆಯೇ ಅಪಘಾತದಲ್ಲಿ ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರ ಜೇಬು, ಬ್ಯಾಗ್‍ಗಳಲ್ಲಿದ್ದ ಐಡಿ ಕಾರ್ಡ್, ಮೊಬೈಲ್‍ಗಳಿಂದ ಅವರ ವಾರಸುದಾರರಿಗೆ ಪೊಲೀಸರು ವಿಷಯ ತಿಳಿಸಿದ್ದಾರೆ. +ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರು ಊರುಗಳಿಂದ ಬಂದು ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯ ಶವಾಗಾರದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. \ No newline at end of file diff --git a/eesanje/url_46_325_7.txt b/eesanje/url_46_325_7.txt new file mode 100644 index 0000000000000000000000000000000000000000..22e408ea1d27405eb32deebbc10273d7043aa67a --- /dev/null +++ b/eesanje/url_46_325_7.txt @@ -0,0 +1,13 @@ +ನಕಲಿ ಆಧಾರ್, ಡಿಎಲ್, ಮತದಾರರ ಗುರುತಿನ ಚೀಟಿ ಪ್ರಕರಣ : ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ +ಬೆಂಗಳೂರು,ಅ.25- ನಗರದ ಹೆಬ್ಬಾಳ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿರುವ ನಕಲಿ ಮತದಾರರ ಗುರಿತಿನ ಚೀಟಿ, ಡಿಎಲ್, ಆಧಾರ್ ಪ್ರಿಂಟ್ ಪ್ರಕರಣವನ್ನು ರಾಜ್ಯಸರ್ಕಾರ ಕೂಡಲೇ ಸಿಬಿಐ ಇಲ್ಲವೇ ಎನ್‍ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವರಾದ ಎಸ್.ಸುರೇಶ್‍ಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹಾಗೂ ಮುಖಂಡ ವಿವೇಕ್ ರೆಡ್ಡಿ ಅವರು, ಇದು ಅತ್ಯಂತ ಗಂಭೀರವಾದ ಪ್ರಕರಣವಾಗಿರುವುದರಿಂದ ನಿಷ್ಟಕ್ಷಪಾತ ತನಿಖೆಯಾಗಬೇಕಾದರೆ ಸಿಬಿಐ ಇಲ್ಲವೇ ಎನ್‍ಐಎ ಗೆ ವಹಿಸುವಂತೆ ಆಗ್ರಹಿಸಿದರು. +ಮಾಜಿ ಸಚಿವ ಎಸ್.ಸುರೇಶ್‍ಕುಮಾರ್ ಮಾತನಾಡಿ, ಹೆಬ್ಬಾಳ ಕ್ಷೇತ್ರ ವ್ಯಾಪ್ತಿಯಲ್ಲಿ ನಕಲಿ ಮತದಾರರ ಗುರುತಿನ ಚೀಟಿ, ಚಾಲನವಾ ಪರವಾನಗಿ ಹಾಗೂ ಆಧಾರ್‍ಕಾರ್ಡ್ ಪ್ರಿಂಟ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಆರೋಪಿಗಳೆಲ್ಲರೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಆಪ್ತರು ಎಂದು ದೂರಿದರು. +ರಾಷ್ಟ್ರೀಯ ಭದ್ರತಾ ವಿರುದ್ಧವಾಗಿ ಗುರುತಿನ ಚೀಟಿಗಳನ್ನು ಪ್ರಿಂಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉದ್ದೇಶಪೂರಕವಾಗಿಯೇ ಮತದಾರರನ್ನು ಹೆಚ್ಚಿಸಿಕೊಳ್ಳಲು ನಡೆಸಿರುವ ಹುನ್ನಾರವಾಗಿದೆ. ಈ ಹಿಂದೆ ಹೆಬ್ಬಾಳದ ಬಿಜೆಪಿ ಮುಖಂಡ ಕಟ್ಟಾ ಜಗದೀಶ್ ಆರೋಪ ಮಾಡಿದ್ದರು ಎಂದರು. +7 ಜನ್ಮವೆತ್ತಿದರೂ ರಾಮನಗರ ಛಿದ್ರ ಮಾಡಲು ಸಾಧ್ಯವಿಲ್ಲ ; ಎಚ್‍ಡಿಕೆ ಆಕ್ರೋಶ +ವಿಧಾನಸಭೆ ಚುನಾವಣೆಗೂ ಮುನ್ನವೇ ನಾವು ನಕಲಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ದೂರಿದ್ದೆವು. ಆಗ ಸಾಕ್ಷಿ ಎಲ್ಲಿ ಎಂದು ಕೆಲವರು ಕೇಳಿದ್ದರು. ಈಗ ಸಚಿವ ಭೈರತಿ ಸುರೇಶ್ ಆಪ್ತರೇ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಇನ್ನೇನು ಬೇಕು ಎಂದು ಸುರೇಶ್ ಕುಮಾರ್ ಪ್ರಶ್ನೆ ಮಾಡಿದರು. +ಇದು ರಾಷ್ಟ್ರೀಯ ಆಂತರಿಕ ಭದ್ರತೆಗೆ ಸಂಬಂಧಪಟ್ಟ ಪ್ರಕರಣವಾಗಿದೆ. ಒಂದು ಕಡೆ ಭೈರತಿ ಸುರೇಶ್ ಆಪ್ತರು ನೇರ ಭಾಗಿಯಾಗಿದ್ದಾರೆ. ಮತ್ತೊಂದು ಕಡೆ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಮಾಪ್ತರು. ಇದು ರಾಜ್ಯ ಪೊಲೀಸರಿಂದ ನಿಷ್ಪಕ್ಷಪಾತವಾದ ತನಿಖೆ ನಡೆಯಲು ಸಾಧ್ಯವಿಲ್ಲ. ಆದರೆ ಸಿಬಿಐ ಇಲ್ಲವೇ ಎನ್‍ಐಎ ಗೆ ವಹಿಸಬೇಕೆಂದು ಮನವಿ ಮಾಡಿದರು. +ಪ್ರಕರಣವನ್ನು ನಾವು ಇಲ್ಲಿಗೇ ಬಿಡುವುದಿಲ್ಲ. ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಮುಖ್ಯಮಂತ್ರಿಗಳು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ತನ್ನ ನಂಟ, ಭಂಟ ಎನ್ನುವುದನ್ನು ಬಿಟ್ಟು ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಪೊಲೀಸರು ಭೈರತಿ ಸುರೇಶ್ ಅವರನ್ನು ವಿಚಾರಣೆಗೆ ಒಳಪಡಿಸಲಿ ಎಂದು ಆಗ್ರಹಿಸಿದರು. +ಸ್ಕೂಟರ್ ಹತ್ತಿಕೊಂಡು ಅವರ ಜೊತೆ ಕ್ಷೇತ್ರದಲ್ಲಿ ತಿರುಗಾಡುತ್ತಾರೆ ಎಂದು ಸಿಸಿಬಿಗೆ ಸಿಕ್ಕಿಬಿದ್ದಿರುವ ಆರೋಪಿಗಳಿ ಭೈರತಿ ಸುರೇಶ್ ಕಡೆಯವರೇ. ಪ್ರಕರಣ ಹೊರಬರುತ್ತಿದ್ದಂತೆ ಈಗ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಮಗೆ ಪರಿಚಯವಿಲ್ಲ ಎಂದು ಹೇಳುತ್ತಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ತನಿಖೆಯಾಗಬೇಕು ಎಂದು ಹೇಳಿದರು. +ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ವಿಳಂಬ +ಬಿಜೆಪಿ ಕಾನೂನು ಘಟಕದ ಮುಖ್ಯಸ್ಥ ವಿವೇಕ್ ರೆಡ್ಡಿ ಮಾತನಾಡಿ, ಇದೊಂದು ರಾಷ್ಟ್ರೀಯ ಅಪರಾಧ. ಆಧಾರ್‍ಕಾರ್ಡ್ ಮೂಲಕ ಮತದಾರರ ಗುರುತಿನ ಚೀಟಿ ನೀಡುವುದು ಶಿಕ್ಷಾರ್ಹ ಅಪರಾಧ. ಪೊಲೀಸರು ಬಹಳ ಲಘುವಾಗಿ ತೆಗೆದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. +ಇದರ ಮೂಲಜಾಲ ಹೊರಗೆಳೆಯಬೇಕು. ಕೇವಲ ಆರೋಪಿಗಳಿಗೆ ನೋಟಿಸ್ ಕೊಟ್ಟು ಬಿಟ್ಟುಕಳುಹಿಸಿದ್ದಾರೆ. ಮೇಲ್ನೋಟಕ್ಕೆ ಸಚಿವರ ಪ್ರಭಾವದಿಂದ ಪ್ರಕರಣವನ್ನು ಮುಚ್ಚಿಹಾಕಲು ಷಡ್ಯಂತರ ನಡೆದಿದೆ. ಈ ಜಾಲದ ಹಿಂದೆ ಇರುವವರನ್ನು ಕೂಡಲೇ ಬಂಧಿಸಬೇಕೆಂದು ವಿವೇಕ್ ರೆಡ್ಡಿ ಆಗ್ರಹಿಸಿದರು. \ No newline at end of file diff --git a/eesanje/url_46_325_8.txt b/eesanje/url_46_325_8.txt new file mode 100644 index 0000000000000000000000000000000000000000..0509b0e5a168d75fd909174ae88fd2fe3198f87b --- /dev/null +++ b/eesanje/url_46_325_8.txt @@ -0,0 +1,7 @@ +ಹುಲಿ ಉಗುರಿನ ವಿಚಾರದಲ್ಲಿ ಎಲ್ಲರ ವಿರುದ್ಧವೂ ಕ್ರಮ ಜರುಗಿಸುತ್ತೇವೆ : ಖಂಡ್ರೆ +ಕಲ್ಬುರ್ಗಿ,ಅ.25- ವನ್ಯಜೀವಿ ಸಂರಕ್ಷಣಾ ಕಾಯ್ದೆ ಎಲ್ಲರಿಗೂ ಒಂದೇ ಆಗಿದ್ದು, ಪ್ರಭಾವಿಗಳಿರಲಿ, ಜನಸಾಮಾನ್ಯರಿರಲಿ ಎಲ್ಲರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಂರಕ್ಷಣಾ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. +ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1972 ರಲ್ಲಿ ಜಾರಿಗೆ ಬಂದಿರುವ ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ 2002 ರಲ್ಲಿ ಮತ್ತು 2022 ರಲ್ಲಿ ತಿದ್ದುಪಡಿಗಳಾಗಿವೆ. ಅದರ ಪ್ರಕಾರ ಯಾವುದೇ ವನ್ಯಜೀವಿಗಳ ಉಗುರು, ಚರ್ಮ, ದಂತ, ಕೊಂಬುಗಳನ್ನು ಸಂಗ್ರಹಣೆ ಮಾಡುವುದು, ಮಾರಾಟ, ಸಾಗಾಣಿಕೆ ಮಾಡುವುದು ಅಥವಾ ಸ್ವಂತ ಬಳಕೆಗೆ ಇಟ್ಟುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದಿದ್ದಾರೆ. +ಏಷ್ಯನ್ ಪ್ಯಾರಾಗೇಮ್ಸ್ : ಜಾವೆಲಿನ್‍ನಲ್ಲಿ ಭಾರತಕ್ಕೆ ಚಿನ್ನ +ಕಾಯ್ದೆ ತೋರ್ಪಡಿಕೆಗಾಗಿ ಇಲ್ಲ. ಅದು ಕಠಿಣ ರೀತಿಯಲ್ಲಿ ಜಾರಿಗೆ ಬಂದಿದೆ. ನೆಲದ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು. ಸೆಲೆಬ್ರಿಟಿಗಳು ಸೇರಿದಂತೆ ಯಾರೇ ಆದರೂ ಹುಲಿ ಉಗುರು, ಚರ್ಮ, ದಂತ, ಕೊಂಬುಗಳನ್ನು ಬಳಕೆ ಮಾಡುತ್ತಿದ್ದರೆ ಅವುಗಳನ್ನು ಪರಿಶೀಲಿಸಿ ಕ್ರಮ ಜರುಗಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. +ತಾವು ಯಾರ ಹೆಸರನ್ನೂ ವೈಯಕ್ತಿಕವಾಗಿ ಉಲ್ಲೇಖಿಸಲು ಬಯಸುವುದಿಲ್ಲ ಎಂದು ತಿಳಿಸಿದರು.ಅರಣ್ಯ ಮತ್ತು ವನ್ಯಸಂಪತ್ತನ್ನು ಸಂರಕ್ಷಿಸುವುದು ಎಲ್ಲರ ಆದ್ಯಕರ್ತವ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು, ಕಾನೂನನ್ನು ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ. +ಕೆಲವರು ಹುಲಿ ಉಗುರನ್ನು ಕೊರಳಿಗೆ ಹಾಕಿಕೊಂಡಿದ್ದಾರೆ. ಇನ್ನೂ ಕೆಲವರು ಹುಲಿ ಚರ್ಮವನ್ನು ತಮ್ಮ ಮನೆಯಲ್ಲಿ ಬಳಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ಅದನ್ನು ಪರಿಶೀಲಿಸಿ ಅಕಾರಿಗಳು ಕ್ರಮ ಜರುಗಿಸುತ್ತಾರೆ ಎಂದರು. \ No newline at end of file diff --git a/eesanje/url_46_325_9.txt b/eesanje/url_46_325_9.txt new file mode 100644 index 0000000000000000000000000000000000000000..0ab9862967307eb10e8a0997da4d8bf12963a8b0 --- /dev/null +++ b/eesanje/url_46_325_9.txt @@ -0,0 +1,5 @@ +ನಟ ದರ್ಶನ್ ವಿರುದ್ಧ ದೂರು +ಬೆಂಗಳೂರು,ಅ.25- ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಖ್ಯಾತ ಚಿತ್ರ ನಟ ದರ್ಶನ್ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಅವರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡಿರುವ ಬಗ್ಗೆ ಜನತಾ ಪಕ್ಷ ಅರಣ್ಯ ಇಲಾಖೆಗೆ ಫೋಟೋ ಸಮೇತ ದೂರು ನೀಡಿತ್ತು. +ಹೀಗಾಗಿ ದರ್ಶನ್ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಈಗಾಗಲೇ ಹುಲಿ ಉಗುರಿನ ಪೆಂಡೆಂಟ್ ಬಳಕೆ ಮಾಡಿರುವ ಬಗ್ಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಜಗ್ಗೇಶ್, ಅವಧೂತ ವಿನಯ್ ಗುರೂಜಿ, ಧನಂಜಯ್ ಗುರೂಜಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. +ಸೆಲೆಬ್ರೆಟಿಗಳಿಗೆ ಸಂಕಷ್ಟ ತಂದಿಟ್ಟ ಹುಲಿ ಉಗುರು +ಖಾಸಗಿ ಚಾನಲ್ ನಡೆಸಿಕೊಡುತ್ತಿರುವ ಬಿಗ್‍ಬಾಸ್ ರೀಯಾಲಿಟಿ ಶೋನ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆಂಟ್ ಬಳಕೆ ಮಾಡಿರುವ ಆರೋಪದ ಮೇಲೆ ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಯಾರ್ಯಾರು ಹುಲಿ ಉಗುರು ಬಳಸಿದ್ದರೋ ಅಂತವರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. \ No newline at end of file diff --git a/eesanje/url_46_326_1.txt b/eesanje/url_46_326_1.txt new file mode 100644 index 0000000000000000000000000000000000000000..7669e9e4d8f6d5d879be45cc751cd2fc84abee7b --- /dev/null +++ b/eesanje/url_46_326_1.txt @@ -0,0 +1,6 @@ +ಭೂಗತ ಪಾತಕಿ ರವಿಪೂಜಾರಿ ಸಹಚರ ಶಾರ್ಪ್ ಶೂಟರ್ ಮುನ್ನಾ ಅರೆಸ್ಟ್ +ಮಂಗಳೂರು, ಅ.25- ಪೊಲೀಸರಿಗೆ ಬೇಕಾಗಿದ್ದ ಖರತ್ನಾಕ್ ಶಾರ್ಪ್ ಶೂಟರ್ ಮಹಮ್ಮದ್ ಹನೀಫ್ ಅಲಿಯಾಸ್ ಮುನ್ನನನ್ನು ಮಂಗಳೂರಿನ ಕೋಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಂಜೇಶ್ವರ ಪೈವಳಿಕೆ ಗ್ರಾಮದ ಮುನ್ನಾ ಮೇಲೆ ಹಲವಾರು ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಈತ ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಎಂದು ಪೊಲೀಸರು ತಿಳಿಸಿದ್ದಾರೆ. +ದರೋಡೆ, ಬೆದರಿಕೆ, ಶೂಟೌಟ್ ಸೇರಿದಂತೆ ಹಲವಾರು ಪ್ರಕರಣಗಳು ಈತನ ಮೇಲೆ ದಾಖಲಾಗಿದ್ದು, ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಈತ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. +ನವಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಇಸ್ರೋ ಅಧ್ಯಕ್ಷ ಸೋಮನಾಥ್ ಆತ್ಮಚರಿತ್ರೆ +ಕಳೆದ 2010-13ರ ನಡುವೆ ಕಾಸರಗೋಡಿನ ಬೇವಿಂಜಾದಲ್ಲಿ ಗುತ್ತಿಗೆದಾರನನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಮಂಜೇಶ್ವರದಲ್ಲಿ ಹಲವಾರು ದರೋಡೆ ಹಾಗೂ ಸುಲಿಗೆ ಪ್ರಕರಣ, ಶೂಟೌಟ್‍ಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿತ್ತು. +ಆರೋಪಿಯನ್ನು ಕೇರಳದಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಕೋಣಾಜಿ ಪೊಲೀಸರ ವಿಶೇಷ ತಂಡ ಬಂಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_46_326_10.txt b/eesanje/url_46_326_10.txt new file mode 100644 index 0000000000000000000000000000000000000000..510a0505abc8681c1e4d48486887c5bcd26cd56e --- /dev/null +++ b/eesanje/url_46_326_10.txt @@ -0,0 +1,13 @@ +ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..! +ನವದೆಹಲಿ,ಅ.22- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೇಲೆ ಉಗ್ರರ ಕರಿನೆರಳು ಆವರಿಸಿದ್ದು, ತತ್‍ಕ್ಷಣವೇ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿಭದ್ರತೆ ಕೈಗೊಳ್ಳುವಂತೆ ಕೇಂದ್ರ ಗುಪ್ತಚರ ವಿಭಾಗ ಸೂಚನೆ ಕೊಟ್ಟಿದೆ. +ಪಾಕಿಸ್ತಾನ ಹಾಗೂ ಐಸಿಸ್ ಉಗ್ರಗಾಮಿ ಸಂಘಟನೆಯ 70 ಉಗ್ರರು ನಕಲಿ ಪಾಸ್‍ ಪೋರ್ಟ್ ಪಡೆದು ಭಾರತದೊಳಗೆ ನುಸುಳಿದ್ದು, ನವರಾತ್ರಿ ಸಂದರ್ಭದಲ್ಲಿ ಕರ್ನಾಟಕದ ಮೈಸೂರು, ಪಶ್ಚಿಮ ಬಂಗಾಳದ ಕೋಲ್ಕತ್ತಾ ಹಾಗೂ ಗುಜರಾತ್‍ನ ಅಹದಾಬಾದ್ ನಗರಗಳ ಮೇಲೆ ಉಗ್ರರು ಕಣ್ಣಿಟ್ಟಿದ್ದಾರೆಂದು ಎಚ್ಚರಿಕೆ ಕೊಟ್ಟಿದೆ. +ವಿಶ್ವವಿಖ್ಯಾತ ಮೈಸೂರಿನ ದಸರಾದಂತೆ ಪಶ್ಚಿಮ ಬಂಗಾಳದ ಕಾಳಿ ಉತ್ಸವ ಹಾಗೂ ಗುಜರಾತ್‍ನ ನವರಾತ್ರಿ ಉತ್ಸವದ ಸಂದರ್ಭದಲ್ಲಿ ರಕ್ತದೋಕುಳಿ ನಡೆಸಲು ಪಾಕ್ ಹಾಗೂ ಐಸಿಸ್‍ನ 70 ಉಗ್ರರು ನಕಲಿ ಪಾಸ್‍ ಪೋರ್ಟ್ ಪಡೆದು ಒಳನುಸುಳಿರುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿದೆ. +ಈ ಹಿನ್ನಲೆಯಲ್ಲಿ ಕೇಂದ್ರ ಗುಪ್ತಚರ ವಿಭಾಗದ ಮುಖ್ಯಸ್ಥರು ಕರ್ನಾಟಕದ ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಗುಪ್ತಚರ ವಿಭಾಗದ ಮುಖ್ಯಸ್ಥರು ಮತ್ತು ಪೊಲೀಸ್ ಮಹಾನಿರ್ದೇಶಕರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಮೈಸೂರು ಮತ್ತು ಮಂಗಳೂರಿನಲ್ಲಿ ಭದ್ರತೆ ಹೆಚ್ಚಳ ಮಾಡಬೇಕೆಂದು ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. +ಈ ಹಿನ್ನಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಮೈಸೂರು ಹಾಗೂ ಮಂಗಳೂರಿನಲ್ಲಿ ದಸರಾ ಹಬ್ಬದ ಕೊನೆಯ ದಿನದವರೆಗೂ ಎಲ್ಲೆಡೆ ಬಿಗಿಭದ್ರತೆ ಕೈಗೊಂಡು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಬೇಕೆಂದು ತಾಕೀತು ಮಾಡಿದ್ದಾರೆ. +ದಸರಾ ವೀಕ್ಷಣೆಗೆ ದೇಶ-ವಿದೇಶದಿಂದ ಲಕ್ಷಾಂತರ ಸಂಖ್ಯೆ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಣ್ಣದೊಂದು ಅಹಿತಕರ ಘಟನೆ ನಡೆಯದಂತೆ ಭದ್ರತೆ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. +ಸಿಎಂ ಸೂಚನೆ ಹಿನ್ನಲೆಯಲ್ಲಿ ಮೈಸೂರು, ಕೆಎಸ್‍ಆರ್ ಅಣೆಕಟ್ಟು, ಎಲ್ಲೆಡೆ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರಕ್ಕೆ ಆಗಮಿಸುವ ಹೊರರಾಜ್ಯದ ವಿದೇಶಿ ಪ್ರವಾಸಿಗರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮೈಸೂರಿನ ಲಾಡ್ಜ್ , ಹೋಂ ಸ್ಟೇ, ಹೋಟೆಲ್‍ಗಳು, ಐಬಿ ಸೇರಿದಂತೆ ಮತ್ತಿತರ ಕಡೆ ಕಳೆದ ರಾತ್ರಿಯಿಂದಲೇ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಶಂಕಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. +ಕಠ್ಮಂಡು ಕಣಿವೆಯಲ್ಲಿ 6.1 ತೀವ್ರತೆಯ ಭೂಕಂಪ +ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತಿತರ ಕಡೆ ನಗರಕ್ಕೆ ಬರುವವರ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿಯೊಂದನ್ನು ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ ಈಗಾಗಲೇ ಲಾಡ್ಜ್ ಹೋಂ ಸ್ಟೇ ಮತ್ತಿತರ ಕಡೆ ಉಳಿದುಕೊಂಡಿರುವವರ ಮಾಹಿತಿಯನ್ನು ಕಲೆ ಹಾಕಲಾಗಿದೆ. +ಉಗ್ರರು ಸ್ಥಳೀಯರ ರೂಪದಲ್ಲಿ ಹೊಂಚು ಹಾಕಿ ದಾಳಿ ಮಾಡಬಹುದೆಂಬ ಹಿನ್ನಲೆಯಲ್ಲಿ ಭದ್ರತೆಗಾಗಿ ಮೂರುವರೆ ಸಾವಿರ ಪೊಲೀಸರು, ಕೆಎಸ್‍ಆರ್‍ಪಿ, ಆರ್‍ಎಎಫ್, ಗುಪ್ತಚರ ವಿಭಾಗದವರು ದಸರಾ ಹಬ್ಬ ಮುಗಿಯುವವರೆಗೂ ಕರ್ತವ್ಯದಲ್ಲಿರಬೇಕೆಂದು ಸೂಚನೆ ಕೊಡಲಾಗಿದೆ.ಮೈಸೂರು ಮಾತ್ರವಲ್ಲದೆ ಶ್ರೀರಂಗಪಟ್ಟಣ, ಮಡಿಕೇರಿ, ಕೆಆರ್‍ಎಸ್ ಅಣೆಕಟ್ಟಿನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮೂಲಗಳ ಪ್ರಕಾರ ಕೇಂದ್ರದಿಂದಲೂ ಮೈಸೂರಿಗೆ ಕ್ಷಿಪ್ರ ಕಾರ್ಯಪಡೆಯ ಒಂದು ತಂಡ ಆಗಮಿಸಿದೆ ಎಂದು ಹೇಳಲಾಗುತ್ತಿದೆ. +ಉಗ್ರರ ಹಿಟ್ ಲಿಸ್ಟ್‍ನಲ್ಲಿ ಮೈಸೂರು ಇರುವ ಕಾರಣ ಸಂಭಾವ್ಯ ದಾಳಿಯನ್ನು ತಡೆಯಲು ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ನುರಿತ ತಂಡವನ್ನು ಕಳುಹಿಸಿಕೊಡಲಾಗಿದೆ.ದಸರಾ ಹಬ್ಬದ ಜೊತೆಗೆ ಪ್ರಸ್ತುತ ದೇಶದಲ್ಲಿ ಐಸಿಸಿ ವಿಶ್ವಕಪ್ ಪಂದ್ಯ ನಡೆಯುತ್ತಿರುವುದರಿಂದ ಪಂದ್ಯವನ್ನು ವೀಕ್ಷಿಸಲು ವಿದೇಶಗಳಿಂದ ಭಾರತಕ್ಕೆ ಆಗಮಿಸಿದ್ದಾರೆ. +ಕೆಲ ಉಗ್ರರು ಪ್ರೇಕ್ಷಕರ ಸೋಗಿನಲ್ಲಿ ನಕಲಿ ಪಾಸ್‍ ಪೋರ್ಟ್ ಪಡೆದು ಭಾರತದೊಳಗೆ ಒಳನಸುಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿಯೇ ಕೇಂದ್ರ ಗುಪ್ತಚರ ವಿಭಾಗ ಕರ್ನಾಟಕ ಸರ್ಕಾರಕ್ಕೆ ನಾಡಹಬ್ಬ ಮೈಸೂರು ದಸರಾಕ್ಕೆ ಯಾವುದೇ ರೀತಿಯ ಸಣ್ಣ ಚ್ಯುತಿಯೂ ಬಾರತದಂತೆ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. \ No newline at end of file diff --git a/eesanje/url_46_326_11.txt b/eesanje/url_46_326_11.txt new file mode 100644 index 0000000000000000000000000000000000000000..48880421cb2cb74010837b3ecd54661b99e80037 --- /dev/null +++ b/eesanje/url_46_326_11.txt @@ -0,0 +1,6 @@ +ಪರಶುರಾಮ ಪ್ರತಿಮೆ ಹುಡುಕಿಕೊಟ್ಟವರಿಗೆ ಬಹುಮಾನ : ಕಾಂಗ್ರೆಸ್ +ಬೆಂಗಳೂರು,ಅ.21-ಬಿಜೆಪಿ ಸರ್ಕಾರ ಕಾರ್ಕಳದಲ್ಲಿ ನಿರ್ಮಿಸಿದ್ದ ಪರಶುರಾಮನ ಕಂಚಿನ ಪ್ರತಿಮೆಯನ್ನು ಹುಡುಕಿಕೊಟ್ಟವರಿಗೆ ಬಹುಮಾನ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ವಿರುದ್ಧ ನಿರಂತರವಾಗಿ ಕೇಳಿಬರುತ್ತಿದ್ದ ಆರೋಪಗಳಿಗೆ ತಿರುಗೇಟು ನೀಡಲಾಗುತ್ತಿದ್ದು, ಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ ಬಿಜೆಪಿ ಸರ್ಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ! ಕಂಚಿನ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಪೈಬರ್ ಪ್ರತಿಮೆ ತೋರಿಸಿ ಕಂಚಿನ ಪ್ರತಿಮೆ ಎಂದು ಒಪ್ಪಲಾಗದು ಎಂದು ತಿರುಗೇಟು ನೀಡಿದೆ. +ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಆಖಿಲೇಶ್ ಯಾದವ್ +ಭ್ರಷ್ಟ ಜನತಾ ಪಾರ್ಟಿಯ ಹಿಂದುತ್ವ ಜಪದ ಹಿಂದಿರುವುದು ಭ್ರಷ್ಟಾಚಾರದ ಉದ್ದೇಶವೇ ಹೊರತು ಅಸಲಿ ದೈವಭಕ್ತಿಯಲ್ಲ. ಪರಶುರಾಮನ ಮೂರ್ತಿ ಕಂಚಿನದ್ದು ಎಂದು ಸರ್ಕಾರದ 14 ಕೋಟಿ ಹಣಕ್ಕೆ ಬಿಜೆಪಿ ಉಂಡೆ ನಾಮ ತಿಕ್ಕಿದೆ. ಬಿಜೆಪಿಯ ನಕಲಿ ಹಿಂದುತ್ವದ ಅಸಲಿತನ ಬಯಲಾಗಿದೆ, ದೇವರು, ಪುರಾಣ ಪುರುಷರನ್ನೂ ಬಿಡದೆ ಲೂಟಿ ಹೊಡೆಯುವಷ್ಟು ಬಿಜೆಪಿ ಬರಗೆಟ್ಟ ಪರಿಸ್ಥಿತಿ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. +ಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ@BJP4Karnatakaಸರ್ಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ!“ಕಂಚಿನ“ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು!../gXMRFp2kxe +ಬಿಜೆಪಿಯ ಈ ಮಹಾಮೋಸದ ಹಗರಣವನ್ನು ತನಿಖೆಗೆ ವಹಿಸಿ, ತಿಂದು ತೆಗಿದ ಜನರ ಹಣವನ್ನು ಹೊರಗೆ ಕಕ್ಕಿಸುವುದು ನಿಶ್ಚಿತ. ಸತ್ಯ ಹರಿಶ್ಚಂದ್ರದ ವಂಶಸ್ಥನಂತೆ ಮಾತನಾಡುವ ಶಾಸಕ ಸುನೀಲ್‍ಕುಮಾರ್ ಅವರೇ ಫೈಬರ್‍ಗೆ ಬಂಗಾರದ ಬಣ್ಣ ಬಳಿದು ಕಂಚು ಎಂದು ಇಡೀ ರಾಜ್ಯಕ್ಕೆ ಮಂಕುಬೂದಿ ಎರಚಿದ್ದೀರಿ, ಈಗ ನಿಮ್ಮ ಹಾಗೂ ನಿಮ್ಮ ಪ್ರತಿಮೆಯ ಬಣ್ಣ ಬಯಲಾಗಿದೆ. ಲೂಟಿ ಮಾಡಿ ತಿಂದಿದ್ದನ್ನು ಹೊರಗೆ ಕಕ್ಕಲು ಸಿದ್ದರಾಗಿರಿ ಎಂದು ಕಾಂಗ್ರೆಸ್ ಸವಾಲು ಹಾಕಿದೆ. \ No newline at end of file diff --git a/eesanje/url_46_326_12.txt b/eesanje/url_46_326_12.txt new file mode 100644 index 0000000000000000000000000000000000000000..3550019fa9def60d3963292cb8321e4ca422cffe --- /dev/null +++ b/eesanje/url_46_326_12.txt @@ -0,0 +1,5 @@ +ಕಾರ್ಯಕರ್ತರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ : ಡಿಕೆಶಿ +ಬೆಂಗಳೂರು,ಅ.21- ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‍ ತಿಳಿಸಿದರು. ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು. +ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ.ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ ಎಂದರು. +ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ +ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಚೀಫ್ ವಿಪ್ ಅಶೋಕ್ ಪಟ್ಟಣ ಹೇಳಿದ್ದಾರೆ ಎಂದು ಕೇಳಿದಾಗ, ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_326_2.txt b/eesanje/url_46_326_2.txt new file mode 100644 index 0000000000000000000000000000000000000000..cc9ca44b8b301ba55c6c757d6e2add012517e42e --- /dev/null +++ b/eesanje/url_46_326_2.txt @@ -0,0 +1,13 @@ +ನೋಂದಣಿ ಮಾಡಿಸಿಕೊಳ್ಳದ ಮದರಸಾಗಳಿಗೆ ನೋಟಿಸ್, ದಿನಕ್ಕೆ 10,000 ರೂ. ದಂಡ +ಲಖನೌ,ಅ.25- ರಾಜ್ಯ ಸರ್ಕಾರದಿಂದ ಅನುಮತಿ ಇಲ್ಲವೇ, ನೋಂದಣಿ ಮಾಡಿಸಿಕೊಳ್ಳದೆ ಕಾರ್ಯಾಚರಣೆ ಮಾಡುತ್ತಿರುವ ಮದರಸಾಗಳ ವಿರುದ್ಧ ಕಾನೂನು ಸಮರ ಸಾರಿರುವ ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದ್ದು, ದಿನಕ್ಕೆ 10,000 ರೂ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಿ ಮೂಲ ಶಿಕ್ಷಣ ಇಲಾಖೆ ನೋಟಿಸ್ ಜಾರಿ ಮಾಡಿದೆ. +ಸರಿಯಾದ ದಾಖಲಾತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ 10ಕ್ಕೂ ಹೆಚ್ಚು ಮದರಸಾಗಳಿಗೆ ಮೂಲ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ನೋಟಿಸ್ ಜಾರಿ ಮಾಡಿದ್ದು, ಸೂಕ್ತ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದಲ್ಲಿ ಸುಮಾರು 24,000 ಮದರಸಾಗಳಿವೆ. ಅವುಗಳಲ್ಲಿ 16,000 ಮದರಸಾಗಳು ಮಾನ್ಯತೆ ಪಡೆದಿದ್ದು, 8,000 ಮದರಸಾಗಳು ಮಾನ್ಯತೆ ಪಡೆದಿಲ್ಲ ಎಂದು ತಿಳಿಸಿದ್ದಾರೆ. +ರಾಜ್ಯದಲ್ಲಿರುವ ಮದರಸಾಗಳಿಗೆ ವಿದೇಶಿ ಹಣ ತಲುಪುತ್ತಿರುವ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಿದ ಬೆನ್ನಲ್ಲೇ ಈ ಹೊಸ ಆದೇಶ ಹೊರಬಿದ್ದಿದೆ. ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲೆಯಲ್ಲಿರುವ ಮದರಸಾಗಳು ತನಿಖಾ ವ್ಯಾಪ್ತಿಯಲ್ಲಿವೆ. ಈ ಜಿಲ್ಲೆಯಲ್ಲಿ ನೂರಾರು ಮದರಸಾಗಳು ಸರ್ಕಾರದ ಅನುಮತಿಯಿಲ್ಲದೆ ಕಾರ್ಯಾಚರಣೆ ಮಾಡುತ್ತಿವೆ. ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಮದರಸಾಗಳ ಮ್ಯಾನೇಜರ್ಗಳಿಗೆ ನೋಟಿಸ್ ಹೊರಡಿಸಲಾಗಿದೆ. +ನೋಟಿಸ್ ನೀಡಿರುವ ಮದರಸಾಗಳಿಗೆ ಆದೇಶ ಬಂದ ಮೂರು ದಿನಗಳೊಳಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮದರಸಾಗಳು ಮಾನ್ಯತೆ ಇಲ್ಲದೇ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದರೆ ದಿನಕ್ಕೆ 10,000 ರೂ. ದಂಡ ವಿಧಿಸಲಾಗುವುದು ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ. +ಇಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ಮದರಸಾಗಳು ಜಿಲ್ಲೆಯಲ್ಲಿ ನೋಂದಣಿ ಅಥವಾ ಮಾನ್ಯತೆ ಹೊಂದಿಲ್ಲ ಮತ್ತು ನಿಯಮಾವಳಿಗೆ ವಿರುದ್ಧವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ತಮ್ಮ ಕಚೇರಿಗೆ ಮಾಹಿತಿ ನೀಡಿದೆ ಎಂದು ಮುಜಾಫರ್‍ನಗರ ಮೂಲ ಶಿಕ್ಷಾ ಅಧಿಕಾರಿ ಶುಭಂ ಶುಕ್ಲಾ ಹೇಳಿದರು. +ಮದರಸಾಗಳಿಗೆ ನೀಡಿದ ನೋಟಿಸ್‍ಗೆ ಸಂಬಂಧಿಸಿದಂತೆ ಭಾರತೀಯ ಮುಸ್ಲಿಂ ಸಂಘಟನೆಯಾದ ಜಮಿಯತ್ ಉಲಾಮಾ-ಇ-ಹಿಂದ್, ಶಿಕ್ಷಣ ಇಲಾಖೆಯ ಆದೇಶವನ್ನು ಕಾನೂನುಬಾಹಿರ ಎಂದು ಕರೆದಿದೆ. ಮದರಸಾಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ದಿನಕ್ಕೆ 10,000 ರೂ. ದಂಡವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದೆ. +ಬಿಜೆಪಿ ಯೋಜನೆಗಳು ರಾಮ ರಾಜ್ಯದ ಅಡಿಪಾಯದ ಮೇಲೆ ರೂಪುಗೊಂಡಿವೆ ; ಯೋಗಿ +ಲಕ್ನೋದ ಹಿರಿಯ ಅಧಿಕಾರಿಯ ಪ್ರಕಾರ, ರಾಜ್ಯದ ಸುಮಾರು 4,000 ಮದರಸಾಗಳು ವಿದೇಶಿ ಹಣವನ್ನು ಸ್ವೀಕರಿಸುವ ಸ್ಕ್ಯಾಧಿನರ್‍ಅಡಿಯಲ್ಲಿವೆ. ಈ 4,000 ಮದರಸಾಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರವು ಮೂರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಅವುಗಳಲ್ಲಿ ಹೆಚ್ಚಿನವು ಇಂಡೋ-ನೇಪಾಳ ಗಡಿಯಲ್ಲಿ ನಡೆಯುತ್ತಿವೆ. ಅವುಗಳು ವಿದೇಶದಿಂದ ಹಣವನ್ನು ಪಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಮದರಸಾಗಳು ಪಡೆದ ಹಣವನ್ನು ಭಯೋತ್ಪಾದನೆ ಅಥವಾ ಬಲವಂತದ ಧಾರ್ಮಿಕ ಮತಾಂತರದಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿದೆಯೇ ಎಂದು ಎಸ್ ಐಟಿ ಪರಿಶೀಲಿಸುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ಇದೇ ಸಂದರ್ಭದಲ್ಲಿ ಮದರಸಾ ಸಂಬಂಧಿತ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಶಿಕ್ಷಣ ಇಲಾಖೆಗೆ ಯಾವುದೇ ಹಕ್ಕಿಲ್ಲ ಎಂದು ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಇಫ್ತಿಕರ್ ಅಹ್ಮದ್ ಜಾವೇದ್ ಹೇಳಿದ್ದಾರೆ. +ಅಲ್ಪಸಂಖ್ಯಾತ ಇಲಾಖೆಗೆ ಮಾತ್ರ ಇದರ ಅಧಿಕಾರವಿದೆ ಎಂದಿರುವ ಜಾವೇದ್, ಮದರಸಾಗಳು ಸಾಮಾನ್ಯ ಶಾಲೆಗಳಂತಲ್ಲ. ಆದ್ದರಿಂದ, ಶಾಲೆಗಳ ನಿಯಮಗಳು, ದಂಡ ಇತ್ಯಾದಿಗಳು ಮದರಸಾಗಳಿಗೆ ಅನ್ವಯಿಸುವುದಿಲ್ಲ. 1995ರಲ್ಲಿ ಶಾಲೆಗಳ ನಿಯಮಗಳು ಮತ್ತು ನಿಬಂಧನೆಗಳಿಂದ ಮದರಸಾಗಳನ್ನು ಪ್ರತ್ಯೇಕಿಸಲಾಯಿತು ಎಂದು ಇಫ್ತಿಕಾರ್ ಅಹ್ಮದ್ ಜಾವೇದ್ ಸ್ಪಷ್ಟಪಡಿಸಿದ್ದಾರೆ. +ಕೆಲವು ವಿಭಾಗಗಳನ್ನು ಗುರಿಯಾಗಿಸಿಕೊಂಡು ಮುಜಾಫರ್‍ನಗರದ ಮದರಸಾಗಳಿಗೆ ನೋಟಿಸ್‍ಗಳನ್ನು ನೀಡಲಾಗಿದೆ ಎಂದು ಜಮಿಯತ್ ಉಲೇಮಾ-ಇ-ಹಿಂದ್ ಉತ್ತರ ಪ್ರದೇಶದ ಕಾರ್ಯದರ್ಶಿ ಖಾರಿ ಜಾರ್ಕಿ ಹುಸೇನ್ ಆರೋಪಿಸಿದ್ದಾರೆ. ಮೂರರಿಂದ ಐದು ದಿನಗಳಲ್ಲಿ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಲಾಗಿದೆ. ತಪ್ಪಿದಲ್ಲಿ ದಿನಕ್ಕೆ 10,000 ರೂಪಾಯಿ ದಂಡ ತೆರಬೇಕಾಗುತ್ತದೆ. ಇಷ್ಟು ಕಡಿಮೆ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಲು ಹೇಗೆ ಸಾಧ್ಯ ಎಂದು ಖಾರಿ ಜಾರ್ಕಿ ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_326_3.txt b/eesanje/url_46_326_3.txt new file mode 100644 index 0000000000000000000000000000000000000000..a8da8c3af991acbba7321d87c20982848cca1f11 --- /dev/null +++ b/eesanje/url_46_326_3.txt @@ -0,0 +1,13 @@ +ಬೆಳಗಾವಿಯ ಬೆಂಕಿ ತಣಿಸಲು ಹೈಕಮಾಂಡ್ ಮೊರೆ +ಬೆಂಗಳೂರು,ಅ.23-ರಾಜ್ಯದ ರಾಜಕಾರಣದಲ್ಲಿ ಸಣ್ಣದಾಗಿ ಹೊಗೆಯಾಡಲಾರಂಭಿಸಿರುವ ಬೆಳಗಾವಿಯ ಬೆಂಕಿ ರಾಜಕಾರಣವನ್ನು ಆರಂಭದಲ್ಲೇ ತಣಿಸಲು ಹೈಕಮಾಂಡ್ ಮಧ್ಯಪ್ರವೇಶ ಮಾಡಬೇಕೆಂದು ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ. ಕಳೆದ ಒಂದು ವಾರದಿಂದೀಚೆಗೆ ಹೊಗೆಯಾಡುತ್ತಿರುವ ಬೆಳಗಾವಿಯ ಬೇಗುದಿ ರಾಜ್ಯಾದ್ಯಂತ ವ್ಯಾಪಿಸಿ ಸಮಸ್ಯೆ ಸೃಷ್ಟಿಸುವ ಮೊದಲೇ ಎಚ್ಚೆತ್ತುಕೊಳ್ಳಬೇಕು. ಜಿಲ್ಲಾ ರಾಜಕಾರಣದಲ್ಲಿ ಗೊಂದಲ ಸೃಷ್ಟಿಸುತ್ತಿರುವವರಿಗೆ ಕಡಿವಾಣ ಹಾಕಬೇಕೆಂದು ಹಲವು ನಾಯಕರು ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಬೆಳಗಾವಿಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ನಡುವೆ ಅಸಮಾಧಾನಗಳು ತಲೆ ಎತ್ತಿವೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆಯಿಂದ ಆರಂಭಗೊಂಡು ಅಧಿಕಾರಿಗಳ ವರ್ಗಾವಣೆ, ವಿವಿಧ ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಚಾರಣೆಗಳಿಗೆ ಪರಸ್ಪರ ಅಸಹಕಾರಗಳು ಕಂಡುಬಂದಿವೆ. +ಇಬ್ಬರು ತಮ್ಮ ಮೌನ ದೌರ್ಬಲ್ಯವಲ್ಲ ಎಂಬ ಸಂದೇಶದ ಮೂಲಕ ಸಂಘರ್ಷದ ರಾಜಕಾರಣಕ್ಕೆ ಮುನ್ನುಡಿ ಬರೆದಿದ್ದಾರೆ. ಇದಕ್ಕೆ ತುಪ್ಪ ಸುರಿಯುವಂತೆ ಕೆ.ಎನ್.ರಾಜಣ್ಣ, ಬಸವರಾಜರಾಯರೆಡ್ಡಿ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ನಾಯಕರು ಒಡಕಿನ ಧ್ವನಿಯೆತ್ತಿದ್ದಾರೆ. +ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು +ಪರಿಸ್ಥಿತಿ ಕೈಮೀರುತ್ತಿರುವುದನ್ನು ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ನಾಯಕರುಗಳ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿದ್ದಾರೆ. ಅದರ ಹೊರತಾಗಿಯೂ ಸಚಿವ ಸ್ಥಾನದ ಆಕಾಂಕ್ಷಿಗಳು ಪದೇಪದೇ ಮಾತನಾಡುತ್ತಲೇ ಇರುವುದು ಮುಜುಗರ ಉಂಟುಮಾಡಿದೆ. +ಡಿ.ಕೆ.ಶಿವಕುಮಾರ್ ಅವರ ಬೆಳಗಾವಿ ಪ್ರವಾಸ ಉದ್ದೇಶಪೂರ್ವಕವಾಗಿಯೇ ಇದ್ದು, ಜಾರಕಿಹೊಳಿ ಸಹೋದರರ ಕುಟುಂಬಕ್ಕೆ ಸವಾಲೆಸೆದಿದೆ ಎಂದು ಪರಿಭಾವಿಸಲಾಗಿದೆ. ಈ ಹಿಂದೆ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪದಿಂದಾಗಿಯೇ ಜೆಡಿಎಸ್, ಕಾಂಗ್ರೆಸ್ ಸರ್ಕಾರ ಪತನವಾಗಿತ್ತು. ಅನಂತರ ತಪ್ಪನ್ನು ತಿದ್ದಿಕೊಂಡಿದ್ದ ಕಾಂಗ್ರೆಸ್ ನಾಯಕರು ಜಿಲ್ಲೆಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಹಂತದಲ್ಲೂ ನಿರ್ಣಯ ಕೈಗೊಳ್ಳುತ್ತಾ ಬಂದರು. +ಪರಿಸ್ಥಿತಿ ಸುಧಾರಿಸುತ್ತಿರುವ ಹಂತದಲ್ಲೇ ಲಕ್ಷ್ಮಿ ಹೆಬ್ಬಾಳ್ಕರ್‍ರವರು ಹಿರಿಯ ನಾಯಕ ಜಾರಕಿಹೊಳಿ ಸೆಡ್ಡು ಹೊಡೆಯುವ ಪ್ರಯತ್ನ ಮಾಡಿದ್ದಾರೆ. ಅದಕ್ಕೆ ಡಿ.ಕೆ.ಶಿವಕುಮಾರ್‍ರವರ ಬೆಂಬಲವಿದೆ ಎಂಬುದು ಬಹಳಷ್ಟು ನಾಯಕರನ್ನು ಕೆರಳಿಸಿದೆ. ಹೀಗಾಗಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುವ ಸತೀಶ್ ಜಾರಕಿಹೊಳಿಯವರು ಪಕ್ಷಕ್ಕೆ ತಾವು ಸಾಕಷ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದರು. ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮೀರಿ ನಾವು ಬೆಳೆದಿದ್ದೇವೆ, ಅವರು ನಮಗೆ ಸ್ರ್ಪಧಿ ಅಲ್ಲ ಎಂಬ ಉದಾಸೀನದ ಮಾತುಗಳನ್ನಾಡಿದ್ದಾರೆ. +ಇದಕ್ಕೆ ಪ್ರತ್ಯುತ್ತರಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಮೌನ ಕೂಡ ದೌರ್ಬಲ್ಯ ಅಲ್ಲ ಎಂದು ತಿರುಗೇಟು ನೀಡಿರುವುದು ಕುತೂಹಲಕಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ ವೇಳೆ ಸ್ಥಳೀಯ ಶಾಸಕರೊಬ್ಬರೂ ಕೂಡ ಅವರ ಜೊತೆಗಿಲ್ಲದಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿತ್ತು. ಆದರೆ ಎಲ್ಲಾ ಶಾಸಕರು ದಸರಾ ಹಬ್ಬದ ಸಂಭ್ರಮದಲ್ಲಿದ್ದು, ಅಧ್ಯಕ್ಷರ ಭೇಟಿ ದಿಢೀರ್ ನಿಗದಿಯಾದ್ದರಿಂದ ಅವರನ್ನು ಬರಮಾಡಿಕೊಳ್ಳಲು ಯಾರೂ ಹೋಗಿರಲಿಲ್ಲ ಎಂಬ ಸಬೂಬು ಹೇಳಲಾಗಿದೆ. +ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ +ವಾಸ್ತವವಾಗಿ ಡಿ.ಕೆ.ಶಿವಕುಮಾರ್‍ರ ಬೆಳಗಾವಿಯಲ್ಲನ ಕಾರ್ಯಕ್ರಮ ಸುಮಾರು 15 ದಿನಗಳ ಹಿಂದೆಯೇ ನಿಗದಿಯಾಗಿತ್ತು. ಕೊನೆ ಹಂತದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅವರ ನಡುವಿನ ಮುಸುಕಿನ ಗುದ್ದಾಟ ತೀವ್ರವಾಗಿದ್ದರಿಂದ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಬಾರದು ಎಂಬ ಸಂದೇಶವನ್ನು ಸತೀಶ್ ಜಾರಕಿಹೊಳಿ ರವಾನಿಸಿದ್ದರು ಎನ್ನಲಾಗಿದೆ. +ಅದನ್ನು ಮೀರಿ ಆಗಮಿಸಿದ್ದರಿಂದಾಗಿ ಸ್ಥಳೀಯ ಶಾಸಕರನ್ನು ಡಿ.ಕೆ.ಶಿವಕುಮಾರ್ ಅವರ ಭೇಟಿಯಿಂದ ದೂರ ಇರುವಂತೆ ಸತೀಶ್ ಜಾರಕಿಹೊಳಿ ನೋಡಿಕೊಂಡರು ಎಂದು ಹೇಳಲಾಗಿದೆ. ಈ ಸಂಘರ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಂಡೂ ಕಾಣದಂತೆ ಜಾಣ ಮೌನಕ್ಕೆ ಶರಣಾಗಿದ್ದಾರೆ. +ಇತ್ತ ಕೆಲವು ಶಾಸಕರು ಡಿ.ಕೆ.ಶಿವಕುಮಾರ್‍ರಿಗೆ 70 ಕ್ಕೂ ಅಕ ಶಾಸಕರ ಬೆಂಬಲವಿದೆ ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದಿನೇದಿನೇ ಬೆಳಗಾವಿಯ ರಾಜಕಾರಣದ ಕಿಚ್ಚು ಹೆಚ್ಚುತ್ತಿದ್ದು, ಇದನ್ನು ಆರಂಭದಲ್ಲೇ ತಣಿಸಲು ಹೈಕಮಾಡ್ ಮಧ್ಯಪ್ರವೇಶ ಅನಿವಾರ್ಯ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. \ No newline at end of file diff --git a/eesanje/url_46_326_4.txt b/eesanje/url_46_326_4.txt new file mode 100644 index 0000000000000000000000000000000000000000..173aa3a6fbe1c1b6a8d95632946552797899a3a2 --- /dev/null +++ b/eesanje/url_46_326_4.txt @@ -0,0 +1,6 @@ +ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ +ಬೆಂಗಳೂರು,ಅ.23- ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭಾರೀ ಸದ್ದು ಮಾಡಿದ್ದ ಹಿಜಾಬ್ ಮತ್ತೆ ಮುನ್ನೆಲೆಗೆ ಬಂದಿದೆ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಭಾಗವಹಿಸುವುದನ್ನು ಅನುಮತಿಸಿರುವುದಕ್ಕೆ ಕೆಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುತ್ತಿವೆ. +ಈ ಹಿಂದೆ ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ವಿರೋಧಿಸಿ ಭಾರೀ ಪ್ರಮಾಣದ ಪ್ರತಿಭಟನೆಗಳಾಗಿದ್ದವು. ಇದು ಹಂತಹಂತವಾಗಿ ಬೆಳೆದು ಹಲವು ರೀತಿಯ ಕೋಮು ಸ್ವರೂಪಗಳನ್ನು ಪಡೆದುಕೊಂಡಿತ್ತು. ಸರ್ಕಾರ ಬದಲಾದ ಬಳಿಕ ಒಂದಷ್ಟು ದಿನ ಈ ರೀತಿಯ ಗದ್ದಲಗಳಿಗೆ ಕಡಿವಾಣ ಬಿದ್ದಿತ್ತು. ಆದರೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಟ್ ಪರೀಕ್ಷೆಯಲ್ಲಿ ಭಾಗವಹಿಸುವುದಕ್ಕೆ ಹಿಜಾಬ್ ಧರಿಸಲು ಅವಕಾಶ ನೀಡಿದೆ ಎಂಬ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ಮತ್ತೆ ಮುನ್ನೆಲೆಗೆ ಬರುತ್ತಿವೆ. +ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು +ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರತಿಭಟನೆ ಮಾಡುತ್ತಿರುವವರು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಪರಿಶೀಲನೆ ಮಾಡಬೇಕು. ಇದನ್ನು ಏಕೆ ವಿವಾದ ಮಾಡಲಾಗುತ್ತಿದೆ ಎಂದು ಗೊತ್ತಿಲ್ಲ. ನೀಟ್ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವಿದೆ. ನೀಟ್ ಪರೀಕ್ಷೆಯಲ್ಲಿರುವ ಮಾರ್ಗಸೂಚಿಗಳನ್ನೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಸರಣೆ ಮಾಡುತ್ತಿದೆ. ನಾವು ವಿಶೇಷವಾದ ಯಾವುದೇ ನಿಯಮಾವಳಿಗಳನ್ನೂ ರೂಪಿಸಿಲ್ಲ ಮತ್ತು ಯಾವುದೇ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. +ಪ್ರತಿಭಟನೆ ಮಾಡುವವರು ಮೊದಲು ನೀಟ್ ಪರೀಕ್ಷೆಯ ನಿಯಮಾವಳಿಗಳನ್ನು ಅಧ್ಯಯನ ಮಾಡಲಿ, ನಂತರ ಅವರು ಏಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿಸಲಿ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_326_5.txt b/eesanje/url_46_326_5.txt new file mode 100644 index 0000000000000000000000000000000000000000..a7ea0c12ed18f122b1d11b6eabac99f99014a4ac --- /dev/null +++ b/eesanje/url_46_326_5.txt @@ -0,0 +1,11 @@ +ವಿಶ್ವವಿಖ್ಯಾತ ಜಂಬೂ ಸವಾರಿಗೆ ಸಾಂಸ್ಕೃತಿಕ ನಗರಿ ಸಜ್ಜು +ಮೈಸೂರು, ಅ. 23- ಜಗದ್ವಿಖ್ಯಾತ ಜಂಬೂ ಸವಾರಿ ಕ್ಷಣಗಣನೆ ಆರಂಭವಾಗಿದ್ದು, ಸಾಂಸ್ಕøತಿಕ ನಗರಿ ಸಜ್ಜಾಗಿದ್ದು, ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ನಾಳೆ ಮಧ್ಯಾಹ್ನ 1:46 ರಿಂದ 2.08 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜ ಪೂಜೆಯನ್ನು ಅರಮನೆಯ ಬಲದ್ವಾರದ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೆರವೇರಿಸಲಿದ್ದಾರೆ. ನಂತರ ಅರಮನೆಯ ಆವರಣದಲ್ಲಿ ಸಂಜೆ 4:40 ರಿಂದ ಐದರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. +750 ಕೆ ಜಿ ತೂಕದ ಚಿನ್ನದ ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ನಾಡು ಅದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಬನ್ನಿಮಂಟಪದ ಪಂಜಿನ ಕವಾಯತು ಮೈದಾನ ತಲುಪಲಿದೆ. ಈ ಅದ್ಭುತ ಮೆರವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ಅತಿಥಿಗಳಾಗಿ ಮೈಸೂರು ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಚಿವರುಗಳಾದ ಮಹದೇವಪ್ಪ, ವೆಂಕಟೇಶ್, ಶಿವರಾಜ್ ತಂಗಡಗಿ ಮತ್ತಿತರ ಗಣ್ಯರು ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಶ್ರೀವತ್ಸ ಅವರು ವಹಿಸಲಿದ್ದಾರೆ. +ಸಂಜೆ ಮೈಸೂರಿನ ಬನ್ನಿಮಂಟಪದಲ್ಲಿ ಮೈನವಿರೇಳಿಸುವ ಪಂಜಿನ ಕವಾಯತು ನಡೆಯಲಿದೆ. ಸಂಜೆ 7:30ಕ್ಕೆ ನಡೆಯುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್‍ಚಂದ್ ಗೆಹ್ಲೋಟ್ ಅವರು ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. +ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು +ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವರಾ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ತನ್ರ್ವೀ ಸೇಟ್ ವಹಿಸಲಿದ್ದಾರೆ. +ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ಯುನೆಸ್ಕೋ ದಿಂದ ಗುರುತಿಸಲ್ಪಟ್ಟ ವಿಶ್ವ ಪಾರಂಪರಿಕ ಹೊಯ್ಸಳ ದೇವಸ್ಥಾನ, ಬೇಲೂರು, ಹಳೇಬೀಡು, ಮತ್ತು ಸೋಮನಾಥಪುರ ದೇವಾಲಯ ಮಾದರಿ ಸೇರಿದಂತೆ 49 ಸ್ತಬ್ಧಚಿತ್ರಗಳು ಸಾಗಿ ಬರಲಿವೆ. +ಸ್ತಬ್ಧ ಚಿತ್ರದೊಂದಿಗೆ ಗೊರವರ ಕುಣಿತ, ಪಟ್ಟದಕುಣಿತ, ಕರಡಿ ಕುಣಿತ, ಗಾರುಡಿ ಗೊಂಬೆ ಸೇರಿದಂತೆ 10 ಹಲವು ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಿ ಜನಮನ ಸೂರೆಗೊಳ್ಳಲಿವೆ. ಈ ಬಾರಿಯ ಜಂಬೂಸವಾರಿಯ ಮೆಳವಣಿಗೆಯಲ್ಲಿ ರಾಜರ ಕಾಲದ ಗತವೈಭವ ಮರುಕಳಿಸಲಿದೆ. ಅಂಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಸುತ್ತ ರಾಜ ಪೋಷಾಕು ಧರಿಸಿದ 200 ಮಂದಿ ಮೆರವಣಿಗೆಯಲ್ಲಿ ಸಾಗಿ ಬರಲಿದ್ದಾರೆ. +ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ +ರಾಜರ ಕಾಲದ ಸೈನಿಕರು ವಿವಿಧ ಲಾಂಛನ ಹಿಡಿದು ಬರುತ್ತಿದ್ದ ಹಾಗೆ ಈ ಬಾರಿಯ ದಸರಾ ಮೆರವಣಿಗೆಯಲ್ಲಿ ವಿವಿಧ ಲಾಂಛನಗಳನ್ನು ನೋಡುವ ಭಾಗ್ಯ ನಮ್ಮದಾಗಲಿದೆ. ಮೆರವಣಿಗೆಯಲ್ಲಿ ಸಾಗಲು ಸೂರ್ಯ, ನೀರು, ವರಹ ಚಂದ್ರ ಮಂಡಲ ಗರುಡ, ಮಾರುತಿ ತ್ರಿಶೂಲ ಸೇರಿದಂತೆ ಇನ್ನೂ ಹತ್ತು ಹಲವು ಲಾಂಛನಗಳನ್ನು ಸಿದ್ಧಪಡಿಸಲಾಗಿದೆ. ಇವುಗಳನ್ನು ಹಿಡಿದು ರಾಜರ ಕಾಲದಲ್ಲಿ ಹೊತ್ತು ಬರುವ ಮಾದರಿಯಲ್ಲಿ ಈ ಬಾರಿ ಮೆರವಣಿಗೆಯಲ್ಲಿ ಸಾಗಿ ಬರುವುದು ವಿಶೇಷವಾಗಿದೆ ಗತಕಾಲದ ದಸರಾ ಮೆರವಣಿಗೆಯನ್ನು ನೆನಪಿಸಲಿದೆ. +ಈ ಬಾರಿಯ ದಸರಾ ಉತ್ಸವವನ್ನು ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಮುಂಜಾಗ್ರತ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. \ No newline at end of file diff --git a/eesanje/url_46_326_6.txt b/eesanje/url_46_326_6.txt new file mode 100644 index 0000000000000000000000000000000000000000..24b6782dc3a55360d41b13547ca6cbef1e1dcd50 --- /dev/null +++ b/eesanje/url_46_326_6.txt @@ -0,0 +1,7 @@ +ಸಾಂಸ್ಕೃತಿಕ ನಗರಿಗೆ ಹರಿದುಬಂದ ಪ್ರವಾಸಿಗರ ಸಾಗರ +ಮೈಸೂರು,ಅ.23- ನಾಡಹಬ್ಬ ಮೈಸೂರು ದಸರಾ ಹಾಗೂ ಸಾಲು ಸಾಲು ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಮಧುವಣಗಿತ್ತಿಯಂತೆ ಸಾಂಸ್ಕøತಿಕ ನಗರಿ ಶೃಂಗಾರಗೊಂಡಿದೆ. ಶನಿವಾರದಿಂದಲೇ ನಗರಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ಹೋಟೆಲ್, ವಸತಿಗೃಹಗಳು, ಪರಿವೀಕ್ಷಣ ಮಂದಿರಗಳು ಭರ್ತಿಯಾಗಿವೆ. +ಈ ಬಾರಿ ಹೊರರಾಜ್ಯಗಳ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡಿರುವ ಹಿನ್ನಲೆಯಲ್ಲಿ ತಮಿಳುನಾಡು, ಕೇರಳದಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. ಅದರಲ್ಲೂ ವಿದ್ಯುತ್ ದೀಪಾಲಂಕಾರ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಕುಪ್ಪಣ್ಣ ಪಾರ್ಕ್‍ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಬಾರಿ ಹೂವಿನಲ್ಲಿ ಪಂಚಖಾತ್ರಿ ಯೋಜನೆಗಳ ಅನಾವರಣಗೊಂಡಿರುವುದು ವಿಶೇಷ. +ಮಣಿಪುರದಲ್ಲಿ ಸ್ಪೋಟಕಗಳೊಂದಿಗೆ ಉಗ್ರನ ಬಂಧನ +ಚಾಮರಾಜೇಂದ್ರ ಮೃಗಾಲಯ, ಕೆಆರ್‍ಎಸ್, ಚಾಮುಂಡಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಭೇಟಿ ನೀಡಿದ್ದಾರೆ. +ಭರ್ಜರಿ ವ್ಯಾಪಾರ:ದಸರಾ ಹಿನ್ನಲೆಯಲ್ಲಿ ವಸ್ತುಪ್ರದರ್ಶನದ ಆವರಣ ಸೇರಿದಂತೆ ನಗರದೆಲ್ಲೆಡೆ ಗೃಹಾಲಂಕಾರ, ಮಕ್ಕಳ ಆಟಿಕೆ ಸಾಮಗ್ರಿಗಳ ಅಂಗಡಿಗಳು ತೆರೆದಿದ್ದು, ವ್ಯಾಪಾರ ಕೂಡ ಜೋರಾಗಿ ನಡೆದಿದೆ. ಹೋಟೆಲ್‍ಗಳಲ್ಲಿ ವಿವಿಧ ಬಗೆಯ ಖಾದ್ಯಗಳಿಗೆ ಭಾರೀ ಬೇಡಿಕೆ ಹೆಚ್ಚಿದೆ. ಒಟ್ಟಿನಲ್ಲಿ ಸರಣಿ ರಜೆ ಹಿನ್ನಲೆಯಲ್ಲಿ ಸಾಂಸ್ಕøತಿಕ ನಗರಿ ಈ ಬಾರಿ ಜನಸ್ತೋಮದಿಂದ ತುಂಬಿ ತುಳುಕುತ್ತಿದೆ. +ಟ್ರಾಫಿಕ್‍ಜಾಮ್:ರಾಜ್ಯದ ವಿವಿಧ ಜಿಲ್ಲೆ, ತಾಲ್ಲೂಕು ಕೇಂದ್ರ ಹಾಗೂ ಹೊರರಾಜ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಹಿನ್ನಲೆಯಲ್ಲಿ ನಗರದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರಾಜಧಾನಿ ಬೆಂಗಳೂರಿನಿಂದ ಮೈಸೂರಿಗೆ ಕೆಎಸ್‍ಆರ್‍ಟಿಸಿ ಹೆಚ್ಚಿನ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಎಲ್ಲ ಬಸ್ಸುಗಳು ಸಹ ತುಂಬಿ ತುಳುಕುತ್ತಿವೆ. ಇಂದು ಮತ್ತಷ್ಟು ಜನಜಂಗುಳಿ ಹೆಚ್ಚಾಗಲಿದೆ. \ No newline at end of file diff --git a/eesanje/url_46_326_7.txt b/eesanje/url_46_326_7.txt new file mode 100644 index 0000000000000000000000000000000000000000..d05999fb21df79ccc5bf170edc69767462af81d8 --- /dev/null +++ b/eesanje/url_46_326_7.txt @@ -0,0 +1,17 @@ +ಸಂಸದೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷೆ ಪಟ್ಟ..? +ಬೆಂಗಳೂರು,ಅ.23- ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಫೈರ್ ಬ್ರಾಂಡ್ ನಾಯಕಿ ಎಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಲಿ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಪಕ್ಷದ ಹೈಕಮಾಂಡ್ ಒಲವು ತೋರಿದೆ. +ಶೋಭಾ ಕರಂದ್ಲಾಜೆ ನೇಮಕವಾದರೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಅಧಿಕಾರ ವಹಿಸಿಕೊಂಡಂತಾಗುತ್ತದೆ. 2 ದಿನಗಳೊಳಗಾಗಿ ನೇಮಕಾತಿ ಆಗಬಹುದು ಎಂಬ ನಿರೀಕ್ಷೆಯನ್ನು ರಾಜ್ಯ ಬಿಜೆಪಿ ನಾಯಕರು ಹೊಂದಿದ್ದಾರೆ. ಶೀಘ್ರವೇ ಘೋಷಣೆ ಆಗಬಹುದು ಎಂಬ ನಿರೀಕ್ಷೆಯನ್ನೂ ಇರಿಸಿಕೊಂಡಿದ್ದಾರೆ. +ಬಿಜೆಪಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಮುನ್ನೆಲೆಯಲ್ಲಿದ್ರೂ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತ್ರ, ಆ ಬಗ್ಗೆ ಗೊತ್ತೇ ಇಲ್ಲ ಎಂದೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. +ಈ ಸಂಬಂಧ ಮಾಜಿ ಸಿಎಂ .ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು,ಪಕ್ಷ ಸಂಘಟನೆ ದೃಷ್ಟಿಯಿಂದ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ಪರಿಗಣಿಸುವಂತೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಬಿಜೆಪಿಯ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿರುವುದರಿಂದ ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆ ನೇಮಿಸಿದರೆ ಹೆಚ್ಚಿನ ವಿರೋಧ ಇರುವುದಿಲ್ಲ ಎನ್ನುವ ಲೆಕ್ಕಾಚಾರಕ್ಕೆ ಬಂದಿದೆ. ಬಿಎಸ್‍ವೈ ಕೂಡ ಶೋಭಾ ಅವರ ನೇಮಕಕ್ಕೆ ಒಮ್ಮತ ಮೂಡಬಹುದು ಎನ್ನಲಾಗಿದೆ. +ಇನ್ನು ನೇರವಾಗಿ ದೆಹಲಿಯಿಂದಲೇ ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. ಆದರೆ, ರಾಜ್ಯ ಬಿಜೆಪಿ ನಾಯಕರಿಗೆ ಈ ನೇಮಕಾತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲದಷ್ಟು, ವರಿಷ್ಠರು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಬರುತ್ತಿದ್ದಂತೆಯೇ ಒಕ್ಕಲಿಗ ಕೋಟಾವೇ ಮಾನದಂಡವಾದರೆ ನಾವ್ಯಾಕೆ ಆಗಬಾರದು ಎಂಬ ಪ್ರಶ್ನೆಯನ್ನು ಪಕ್ಷದ ಒಕ್ಕಲಿಗ ನಾಯಕರು ಹೊಂದಿದ್ದಾರೆ. +ಇಸ್ರೇಲ್ ವೈಮಾನಿಕ ದಾಳಿಯಲ್ಲಿ 30 ಮಂದಿ ಪ್ಯಾಲೆಸ್ತೇನಿಯರ ಸಾವು +ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಹಲವು ನಾಯಕರ ಕಣ್ಣು ಹಾಕಿದ್ದರು. ರಾಜ್ಯಾಧ್ಯಕ್ಷ ರೇಸ್ನಲ್ಲಿ ಸಿ.ಟಿ.ರವಿ, ಬಿ.ವೈ.ವಿಜಯೇಂದ್ರ, ಬಸನಗೌಡ ಪಾಟೀಲ್ ಯತ್ನಾಳ್, ಅಶ್ವತ್ಥ್ ನಾರಾಯಣ, ವಿ.ಸೋಮಣ್ಣದಿಂದಲೂ ಸರ್ವಪ್ರಯತ್ನ ನಡೆದಿದೆ. ಈ ಈ ಹಿನ್ನಲೆಯಲ್ಲಿ ನಾಯಕರ ನಡುವೆ ಪಕ್ಷದ ಅಧ್ಯಕ್ಷಗಿರಿಗಾಗಿ ತೀವ್ರ ಪೈಪೋಟಿ ನಡೆದಿದ್ದು, ನಾಯಕರ ಮಧ್ಯೆ ಬಣ ನಿರ್ಮಾಣವಾಗಿದೆ. ಹೀಗಾಗಿ ಮಹಿಳಾ ಅಧ್ಯಕ್ಷೆ ಮೂಲಕ ಬಣ ಬಡಿದಾಟಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ರೂಪಿಸಿದೆ. ಇನ್ನೂ ಬಹುಮುಖ್ಯವಾಗಿ ಶೋಭಾ ಕರಂದ್ಲಾಜೆ ಹೆಸರಿಗೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧಿಸಲ್ಲ ಎನ್ನುವುದು ವರಿಷ್ಠರ ತಂತ್ರವಾಗಿದೆ. +ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಬಿಎಸ್‍ವೈ ಅವರ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್‍ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು ಎಂದು ಹೇಳಲಾಗಿತ್ತು. +ಶೋಭಾ ನಿಯೋಜನೆ ಸಂಬಂಧದಲ್ಲಿ ಬಿಎಸ್‍ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿದ್ದಾರೆ. ಇವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಒಕ್ಕಲಿಗ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದವು. +ಅದೇ ಒಕ್ಕಲಿಗ ಸಮುದಾಯಕ್ಕೆ ಸೇರಿದ ಕೇಂದ್ರ ಸಚಿವೆ ಶೋಭಾ ಅವರನ್ನು ಕರ್ನಾಟಕ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಕ್ಕಲಿಗರ ಮತಗಳು ಸಿಗಬಹುದು ಎನ್ನುವ ಲೆಕ್ಕಾಚಾರ ಹೈಕಮಾಂಡ್‍ದ್ದಾಗಿದೆ ಎಂದು ಹೇಳಲಾಗಿದೆ. ಜೆಡಿಎಸ್ ಕೂಡ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಒಕ್ಕಲಿಗರ ಮತಗಳನ್ನು ಸೆಳೆಯುವುದು ಸುಲಭವಾಗಲಿದೆ ಎಂದು ಹೇಳಲಾಗಿದೆ. +1980 ರಿಂದ ಇಲ್ಲಿಯವರೆಗೆ ಹಳೇ ಮೈಸೂರು ಭಾಗದ ಒಕ್ಕಲಿಗರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಈ ಸಂಬಂಧ ಕೇಂದ್ರ ಬಿಜೆಪಿಯ ವರಿಷ್ಠರು ರಾಜ್ಯ ಬಿಜೆಪಿಯಿಂದ ವರದಿ ಪಡೆದಿದ್ದಾರೆ. ಈವರೆಗೆ ಸಮುದಾಯದ ಆಧಾರವಾಗಿ ನೋಡುವುದಾದರೆ ಒಕ್ಕಲಿಗ ಸಮುದಾಯದಿಂದ ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಒಬ್ಬರೇ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. +ಕೊಡವ ಸಮುದಾಯದ ಎ.ಕೆ.ಸುಬ್ಬಯ್ಯ ಅವರು ಬಿಜೆಪಿಯ ಮೊದಲ ಅಧ್ಯಕ್ಷರಾಗಿದ್ದವರು. ನಂತರ ವೀರಶೈವ ಲಿಂಗಾಯತ ಸಮುದಾಯದ ಬಿ.ಎಸ್. ಯಡಿಯೂರಪ್ಪ 3 ಬಾರಿ ಅಧ್ಯಕ್ಷರಾಗಿದ್ದಾರೆ. ಅದೇ ಸಮುದಾಯದ ಬಿ.ಬಿ. ಶಿವಪ್ಪ, ಬಸವರಾಜ ಪಾಟೀಲ್ ಸೇಡಂ, ಜಗದೀಶ ಶೆಟ್ಟರ್ ಅಧ್ಯಕ್ಷರಾಗಿದ್ದಾರೆ. ಕುರುಬ ಸಮುದಾಯದ ಕೆ.ಎಸ್. ಈಶ್ವರಪ್ಪ ಎರಡು ಬಾರಿ ಅಧ್ಯಕ್ಷರಾಗಿದ್ದರು. ಬ್ರಾಹ್ಮಣ ಸಮುದಾಯದ ಅನಂತಕುಮಾರ್, ಪ್ರಲ್ಹಾದ ಜೋಶಿ ತಲಾ ಒಂದು ಬಾರಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು. +ಒಕ್ಕಲಿಗರು ಬಿಜೆಪಿಗೆ ಮತ ನೀಡುವುದಿಲ್ಲ ಎಂದು ನಿರ್ಧರಿಸಿದ್ದ ಬಿಜೆಪಿ ಆ ಸಮುದಾಯವನ್ನು ಅಧ್ಯಕ್ಷ ಪಟ್ಟಕ್ಕೆ ಹೆಚ್ಚು ಪರಿಗಣಿಸುತ್ತಿರಲಿಲ್ಲ. ಆದರೆ, ಈ ವಿಧಾನಸಭೆ ಚುನಾವಣೆಯಲ್ಲಿ ಆಶಾಕಿರಣ ಕಂಡುಬಂದಿದೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಬಿಜೆಪಿ ಗಣನೀಯ ಸಾಧನೆ ಮಾಡಿದೆ. ಹೆಚ್ಚಿನ ಮತವನ್ನು ಗಳಿಕೆ ಮಾಡಿದೆ. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರದಲ್ಲೂ ಸಾಕಷ್ಟು ಮತಗಳು ಲಭಿಸಿವೆ. +ಗೆಲ್ಲುವಷ್ಟು ಮತ ಸಿಕ್ಕಿಲ್ಲವಾದರೂ ಒಕ್ಕಲಿಗ ಮತವನ್ನು ಬಿಜೆಪಿ ಪಡೆದಿದ್ದರಿಂದ ಜೆಡಿಎಸ್ ಸೋತಿದೆ. ಅಲ್ಲಿನ ಮತದಾರರ ವಿಶ್ವಾಸವನ್ನು ಉಳಿಸಿಕೊಂಡರೆ ಮುಂದಿನ ಚುನಾವಣೆಗಳಲ್ಲಿ ಲಾಭ ಕಟ್ಟಿಟ್ಟ ಬುತ್ತಿ ಎಂಬ ತೀರ್ಮಾನಕ್ಕೆ ಕಮಲ ಪಕ್ಷ ಬಂದಿದೆ. ಹೀಗಾಗಿ ಒಕ್ಕಲಿಗರನ್ನೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಚರ್ಚೆ ನಡೆಯುತ್ತಿದೆ. +ಗೋವಾದ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಚಿನ್ನ, ಐಫೋನ್ ವಶ +ಈಗಾಗಲೇ ಜತೆಗಿರುವ ವೀರಶೈವ ಲಿಂಗಾಯತ ಸಮುದಾಯವನ್ನು ಕಡೆಗಣಿಸಬಾರದು ಎಂಬ ಎಚ್ಚರಿಕೆ ಸಹ ವರಿಷ್ಠರಲ್ಲಿ ಮೂಡಿದೆ. ಲಿಂಗಾಯತ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಜಿಸುವ ಚಿಂತನೆ ಸಹ ನಡೆದಿದೆ. ಒಂದು ವೇಳೆ ಅದೂ ಆಗದಿದ್ದರೆ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಹೆಚ್ಚಿನ ಆದ್ಯತೆ ನೀಡುವ ತೀರ್ಮಾನಕ್ಕೆ ಬರಲಾಗಿದೆ. \ No newline at end of file diff --git a/eesanje/url_46_326_8.txt b/eesanje/url_46_326_8.txt new file mode 100644 index 0000000000000000000000000000000000000000..ab1b960e705bf32bab81c80acbcd3aac6d9d05a8 --- /dev/null +++ b/eesanje/url_46_326_8.txt @@ -0,0 +1,8 @@ +ಶೇ.25ರಷ್ಟು ಮುಂಗಾರು ಮಳೆ ಕೊರತೆ, ಹಿಂಗಾರು ಕೂಡ ದುರ್ಬಲ +ಬೆಂಗಳೂರು, ಅ.22- ನೈರುತ್ಯ ಮುಂಗಾರು ಅವ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ಆದರೆ, ಮುಂಗಾರಿನಂತೆ ಹಿಂಗಾರು ಮಳೆಯು ಕೈಕೊಟ್ಟಿದೆ. ಮುಂಗಾರು ಅವಯಲ್ಲಿ ರಾಜ್ಯದಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯವರೆಗೆ ರಾಜ್ಯದಲ್ಲಿ 852 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 642 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. +ಇದರಿಂದ ರಾಜ್ಯ ತೀವ್ರ ಸ್ವರೂಪದ ಬರಕ್ಕೆ ತುತ್ತಾಗಿದೆ. 216 ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತವೆಂದು ಘೋಷಣೆ ಮಾಡಿದೆ. ಮುಂಗಾರು ಹಂಗಾಮಿನಲ್ಲಿ ಬಿತ್ತಿದ್ದ ಬಹುತೇಕ ಬೆಳೆಗಳು ಹಾನಿಗೀಡಾಗಿವೆ. ಆಗಸ್ಟ್ ನಿಂದ ನಿರಂತರ ಮಳೆ ಕೊರತೆ ರಾಜ್ಯದಲ್ಲಿ ಕಂಡುಬಂದಿದೆ. ರೈತರು ಕಂಗಾಲಾಗಿದ್ದಾರೆ. +ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಮುಂಗಾರು ನಿರ್ಗಮನವಾಗಿದ್ದು, ಹಿಂಗಾರು ಮಳೆ ಆರಂಭವಾಗಿದೆ. ಅಂದರೆ ಮುಂಗಾರಿನಂತೆ ಹಿಂಗಾರು ಮಳೆಯೂ ಕೂಡ ವಾಡಿಕೆಗಿಂತ ಎರಡು ವಾರ ವಿಳಂಬವಾಗಿದೆ. ಹಿಂಗಾರಿನ ಆರಂಭವೂ ದುರ್ಬಲವಾಗಿರುವುದರಿಂದ ವಾಡಿಕೆ ಪ್ರಮಾಣದ ಮಳೆಯಾಗದೆ ಒಣ ಹವೆ ಮುಂದುವರೆದಿದೆ. +ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..! +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ ಅಂತ್ಯದವರೆಗೆ ದಕ್ಷಿಣ ಒಳನಾಡಿನಲ್ಲಿ ಶೇ.26ರಷ್ಟು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಶೇ.19ರಷ್ಟು ಹಾಗೂ ಅತಿ ಹೆಚ್ಚು ಮಳೆಯಾಗುತ್ತಿದ್ದ ಮಲೆನಾಡಿನಲ್ಲಿ ಶೇ.39ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜನವರಿ ಒಂದರಿಂದ ನಿನ್ನೆವರೆಗಿನ ಮಾಹಿತಿ ಪರಿಗಣಿಸಿದರೂ ಶೇ.25ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ. +ಕಳೆದ ಒಂದು ವಾರದಲ್ಲಿ ಶೇ.87ರಷ್ಟು ಮಳೆ ಕೊರತೆ ರಾಜ್ಯದಲ್ಲಿದ್ದು, ಅಲ್ಪ-ಸ್ವಲ್ಪ ಉಳಿದಿರುವ ಬೆಳೆಯೂ ರೈತರ ಕೈಸೇರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇನ್ನು ಅಕ್ಟೋಬರ್ ಒಂದರಿಂದ ನಿನ್ನೆವರೆಗೆ ಮಾಹಿತಿ ಪರಿಗಣಿಸಿದರೂ 100 ಮಿ.ಮೀ.ನಷ್ಟು ವಾಡಿಕೆ ಮಳೆ ಇದ್ದು, ಕೇವಲ 40ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ಇದರಿಂದ ಶೇ.60ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. +ಈ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.55ರಷ್ಟು, ಉತ್ತರ ಒಳನಾಡಿನಲ್ಲಿ ಶೇ.89ರಷ್ಟು, ಮಲೆನಾಡಿನಲ್ಲಿ ಶೇ.36ರಷ್ಟು ಹಾಗೂ ಕರಾವಳಿಯಲ್ಲಿ ಶೇ.12ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ಒಂದು ವಾರ ಕಾಲ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲ. ಚದುರಿದಂತೆ ಅಲ್ಲಲ್ಲಿ ಹಗರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_326_9.txt b/eesanje/url_46_326_9.txt new file mode 100644 index 0000000000000000000000000000000000000000..878e167ff31b241ca9d41b8c7478573a8822410c --- /dev/null +++ b/eesanje/url_46_326_9.txt @@ -0,0 +1,5 @@ +ಕರೆಮಾಡಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ +ಬೆಂಗಳೂರು, ಅ.22- ಶಸ್ತ್ರಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. +ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಭ ಅಷ್ಟಮಿ ದಿನ, ನನಗೆ ಅಷ್ಟೆ ೈಶ್ವರ್ಯ ಒಲಿದ ಸಂಭ್ರಮ ಎಂದು ತಿಳಿಸಿದ್ದಾರೆ. +ಬ್ರೇಕಿಂಗ್ : ಮೈಸೂರು ದಸರಾ ಮೇಲೆ ಉಗ್ರರ ಕಣ್ಣು, ಹೈಅಲರ್ಟ್ ಘೋಷಣೆ..! +ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಈ ಸಂದರ್ಭದಲ್ಲಿ ನನಗೆ ದೂರವಾಣಿ ಕರೆ ಮಾಡಿ ನನ್ನ ಆರೋಗ್ಯ ಕುಶಲೋಪರಿ ವಿಚಾರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭ ಹಾರೈಕೆ ನನ್ನ ಆತ್ಮಸ್ಥೆ ೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_327_1.txt b/eesanje/url_46_327_1.txt new file mode 100644 index 0000000000000000000000000000000000000000..2c02f114547850ca0d8ff63894ed39bba2da4634 --- /dev/null +++ b/eesanje/url_46_327_1.txt @@ -0,0 +1,7 @@ +ಬಿಟ್ ಕಾಯಿನ್ ನೆಪದಲ್ಲಿ ಕೋಟ್ಯಾಂತರ ರೂ. ದೋಖಾ : ಅಪ್ಪ-ಮಗ ಸೇರಿ ಮೂವರ ಬಂಧನ +ಬೆಂಗಳೂರು, ಅ.21- ಬಿಟ್ ಕಾಯಿನ್ ನೆಪದಲ್ಲಿ ಹಣ ದ್ವಿಗುಣ ಮಾಡಿಕೊಡುತ್ತೇವೆಂದು ಜನರಿಂದ ಕೋಟ್ಯಾಂತರ ಹಣ ಪಡೆದು ಮೋಸ ಮಾಡುತ್ತಿದ್ದ ಅಪ್ಪ- ಮಗ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಹಾಗೂ ಮಗ ಶ್ರೀಕಾಂತ್ ಮತ್ತು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ದೀಪಕ್ ಬಂಧಿತ ವಂಚಕರು. +ಆರೋಪಿಗಳಿಂದ ಆರು ಕಂಪ್ಯೂಟರ್‍ಗಳು, ನಾಲ್ಕು ಮೊಬೈಲ್, ಎರಡು ಲ್ಯಾಪ್‍ಟಾಪ್ ಹಾಗೂ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಗಾಂ ಬಜಾರ್, ಅವೆನ್ಯೂ ರಸ್ತೆ, ಬಳೇಪೇಟೆ ಹಾಗೂ ಬಸವನಗುಡಿಯಲ್ಲಿರುವ ಸೊಸೈಟಿಯಲ್ಲಿ ಸತೀಶ್‍ದಾರರಾಗಿದ್ದಾರೆ. +ಬಿಟ್ ಕಾಯಿನ್ ನೆಪದಲ್ಲಿ ಸಾರ್ವಜನಿಕರಿಗೆ ಆಮಿಷವೊಡ್ಡಿ ನಿಮ್ಮ ಹಣ ಡಬಲ್ ಮಾಡುತ್ತೇವೆಂದು ಆಸೆ ತೋರಿಸಿ 5.50 ಕೋಟಿ ಹಣ ಪಡೆದು ವಂಚಿಸಿದ್ದಾರೆಂಬುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. 2020-22ರಲ್ಲಿ ಜಿಜಿಗೇಮಿಂಗ್ ಆ್ಯಪ್ ತರುತ್ತೇವೆಂದು ನಂಬಿಸಿದ್ದ ವಂಚಕರು, ಈ ಆ್ಯಪ್ ಮೂಲಕ ಜನರಿಗೆ ಬಿಟ್ ಕಾಯಿನ್ ಆಸೆ ತೋರಿಸಿ ಜನರಿಗೆ ದಿನಕ್ಕೆ 10 ಸಾವಿರ ರೂ. ಹೂಡಿಕೆ ಮಾಡಿದರೆ ತಿಂಗಳಲ್ಲಿ 45 ಸಾವಿರ ಲಾಭ ಬರುತ್ತದೆ ಎಂದು ಹೇಳಿ ನಂಬಿಸುತ್ತಿದ್ದರು. +ಛತ್ತೀಸ್‍ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ +ಸಾರ್ವಜನಿಕರ ನಂಬಿಕೆ ಗಳಿಸಲು ಪ್ರತಿಷ್ಠಿತ ಹೊಟೇಲ್‍ಗೆ ಶ್ರೀಕಾಂತ್ ಹೂಡಿಕೆದಾರರನ್ನು ಕರೆಸಿ ಮೋಸ ಮಾಡುತ್ತಿದ್ದ ಆರೋಪ ಸಹ ಕೇಳಿ ಬಂದಿದೆ. ಇವರಿಂದ ಮೋಸಕ್ಕೊಳಗಾಗಿ ದ್ದವರು ಹಾಗೂ ಬ್ಯಾಂಕ್ ವಂಚನೆ ಸಂಬಂಧ ವಂಚನೆಗೊಳಗಾದವರು ಪೊಲೀಸರಿಗೆ ದೂರು ನೀಡಿದ್ದರು. +ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಅಪ್ಪ- ಮಗ ಸೇರಿದಂತೆ ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_327_10.txt b/eesanje/url_46_327_10.txt new file mode 100644 index 0000000000000000000000000000000000000000..912a0e3248dd67837e81b7e0e1f72901e47ac463 --- /dev/null +++ b/eesanje/url_46_327_10.txt @@ -0,0 +1,9 @@ +ಮೈಸೂರಿಗೂ ಮೆಟ್ರೋ ರೈಲು : ಪ್ರಧಾನಿ ಮೋದಿ ಘೋಷಣೆ +ನವದೆಹಲಿ,ಅ.20- ಸಾಂಸ್ಕøತಿಕ ನಗರಿ ಮೈಸೂರಿಗೂ ಮೆಟ್ರೋ ರೈಲು ಯೋಜನೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಘೋಷಣೆ ಮಾಡಿದ್ದಾರೆ. ನಮ್ಮ ಮೆಟ್ರೊದ ನೇರಳೆ ಮಾರ್ಗಗಳಾದ ಬೈಯಪ್ಪನಹಳ್ಳಿ – ಕೃಷ್ಣರಾಜಪುರ ಹಾಗೂ ಕೆಂಗೇರಿ-ಚಲ್ಲಘಟ್ಟ ನಡುವಿನ ಮೆಟ್ರೊ ಮಾರ್ಗಗಳನ್ನು ವಿಡಿಯೋ ಕಾನರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. +ದೇಶದಲ್ಲಿ ಮೆಟ್ರೊ ಮತ್ತು ನಮೋ ರೈಲುಗಳು ಕ್ರಾಂತಿಯನ್ನು ಉಂಟು ಮಾಡಲಿವೆ. ನೋಯ್ಡಾ, ಗಾಜಿಯಾಬಾದ್, ಮೀರತ್, ಲಖ್ನೋ, ಆಗ್ರಾ, ಕಾನ್ಪುರದಂತಹ ನಗರಗಳಲ್ಲಿ ಮೆಟ್ರೊ ಸಂಚರಿಸಲಿವೆ. ಇದೇ ರೀತಿ ಬೆಂಗಳೂರು ಮತ್ತು ಮೈಸೂರನ್ನು ಮೆಟ್ರೊ ನಗರಗಳನ್ನಾಗಿ ಪರಿವರ್ತಿಸುವುದಾಗಿ ಪ್ರಕಟಿಸಿದರು. ದೇಶದ ಅನೇಕ ಕಡೆ ಸುಗಮ ಸಂಚಾರಕ್ಕಾಗಿ ಮೆಟ್ರೊ ರೈಲು ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಈಗ 2ನೇ ಹಂತದ ನಗರಗಳಲ್ಲೂ ಇದರ ಅವಶ್ಯಕತೆ ಕಂಡುಬರುತ್ತಿದೆ ಎಂದು ಹೇಳಿದರು. +ಭಾರತ ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಯಲ್ಲಿ ಹೊಸ ದಿಕ್ಕಿನತ್ತ ಮುಖ ಮಾಡಿದೆ. ಚಂದ್ರಯಾನದ ಮೂಲಕ ಚಂದ್ರನನ್ನು ತಲುಪಿದೆ. ವಿಶ್ವದಲ್ಲಿ ನಮ್ಮ ದೇಶ ಪ್ರಕಾಶಿಸುತ್ತಿದೆ. ಜಿ-20 ಶೃಂಗಸಭೆಯನ್ನು ವ್ಯವಸ್ಥಿತವಾಗಿ ಆಯೋಜನೆ ಮಾಡಿ ಜಗತ್ತಿನ ಗಮನ ಸೆಳೆದಿದ್ದೇವೆ. ಏಷ್ಯನ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು 107 ಪದಕಗಳನ್ನು ಗೆದ್ದಿದ್ದಾರೆಂದು ದೇಶದ ಸಾಧನೆಯನ್ನು ಕೊಂಡಾಡಿದರು. +ಕಮಿಷನ್ ಹೊಡೆಯುವುದರಲ್ಲಿ ಸಿಎಂ-ಡಿಸಿಎಂ ಪೈಪೋಟಿ : ಡಿವಿಎಸ್ ಆರೋಪ +ಪ್ಲಾಟ್‍ಫಾರಂನಲ್ಲಿ ಸ್ಕ್ರೀನ್‍ವಿಂಡೋವನ್ನು ಮೆಡ್ ಇಂಡಿಯಾ ಯೋಜನೆಯಲ್ಲೇ ರೂಪಿಸಲಾಗಿದೆ. ನಮೋ ಭಾರತ್ ರೈಲಿನಲ್ಲಿ ಗಾಳಿಗಿಂತಲೂ ಕಡಿಮೆ ಶಬ್ದ ಇದೆ. ಸುಖಕರ ಪ್ರಯಾಣಕ್ಕೆ ಪೂರಕವಾಗಿದೆ. ಮೊದಲ ಹಂತದಲ್ಲಿ ದೆಹಲಿ, ಉತ್ತರಪ್ರದೇಶ, ಹರಿಯಾಣ ಹಾಗೂ ರಾಜಸ್ಥಾನಗಳನ್ನು ನಮೋ ಭಾರತ್ ರೈಲು ಸಂಪರ್ಕಿಸಲಿದೆ ಎಂದು ತಿಳಿಸಿದರು. +ಮೂರನೇ ದಶಕದಲ್ಲಿ ಭಾರತೀಯ ರೈಲ್ವೆಗೆ ಕಾಯಕಲ್ಪ ನೀಡುವ ಅಗತ್ಯವಿದೆ. ಚಿಕ್ಕಕನಸು ಕಾಣಲು ನನಗೆ ಸಾಧ್ಯವಿಲ್ಲ. ಸಾಯುತ್ತ ತೆಳಲುವುದಿಲ್ಲ. ಈ ದಶಕದ ಕೊನೆಯಲ್ಲಿ ಭಾರತದ ರೈಲ್ವೆ ವಿಶ್ವದ ಯಾವುದೇ ರೈಲು ವ್ಯವಸ್ಥೆಗಿಂತಲೂ ಕಡಿಮೆ ಇರುವುದಿಲ್ಲ ಎಂದು ಭರವಸೆ ನೀಡಿದರು. +ದೇಶದ ಮೊದಲ ರ‍್ಯಾಪಿಡ್-​ಎಕ್ಸ್ ಪ್ರೆಸ್​ ರೈಲಿಗೆ ಮೋದಿ ಚಾಲನೆ +ನಮೋ ಭಾರತ್ ಶುರುವಾಗಿದೆ. ಇದಕ್ಕೂ ಮೊದಲು ವಂದೇ ಭಾರತ್ ಯೋಜನೆಯಡಿ ಆಧುನಿಕ ಸೌಲಭ್ಯ ಒದಗಿಸಲಾಗಿದೆ. ಅಮೃತ್ ಭಾರತ್, ಒಂದೇ ಭಾರತ್ ಸೇರಿದಂತೆ ಹಲವು ಯೋಜನೆಗಳ ಮೂಲಕ ಸಂಪರ್ಕ ಯೋಜನೆಗಳು ಸುಧಾರಿಸಲಾಗುತ್ತಿದೆ. ಬಹುಮಾದರಿ ಸೌಲಭ್ಯಗಳ ಮೂಲಕ ಸಂಪರ್ಕವನ್ನು ಹೆಚ್ಚಿಸಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_327_11.txt b/eesanje/url_46_327_11.txt new file mode 100644 index 0000000000000000000000000000000000000000..d5ba0d85308bca488bb53312b8d13837618a5ca8 --- /dev/null +++ b/eesanje/url_46_327_11.txt @@ -0,0 +1,12 @@ +ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯ ಸಚಿವ ಸಂಪುಟ ಪುನಾರಚನೆ..? +ಬೆಂಗಳೂರು,ಅ.20- ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ತೆರೆಮೆರೆಯಲ್ಲಿ ಚಟುವಟಿಕೆಗಳು ನಡೆಯುತ್ತಿವೆ ಎಂಬ ವದಂತಿಯ ನಡುವೆ ಆಡಳಿತರೂಢ ಪಕ್ಷದ ಶಾಸಕರನ್ನು ಭದ್ರಪಡಿಸಿಕೊಳ್ಳಲು ಸಚಿವ ಸಂಪುಟ ಪುನಾರಚನೆಯ ತುಪ್ಪವನ್ನು ಮೂಗಿಗೆ ಸವರುವಂತಹ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. +ಇತ್ತೀಚೆಗೆ ಬೆಂಗಳೂರಿಗೆ ದಿಢೀರ್ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. +ನಿಗಮಮಂಡಳಿ ನೇಮಕಾತಿ, ಸಚಿವ ಸಂಪುಟ ಪುನಾರಚನೆ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆದಿದೆ ಎಂದು ಹೇಳಲಾಗಿದೆ. ಅದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಕೆಲವು ಶಾಸಕರನ್ನು ಸಂಪರ್ಕಿಸಿದ್ದು ಮುಂದಿನ ಸಚಿವ ಸಂಪುಟ ಪುನಾರಚನೆ ವೇಳೆ ನಿಮಗೆ ಅವಕಾಶ ಸಿಗಲಿದೆ ಎಂದು ಹೇಳಿರುವ ಮಾಹಿತಿಗಳಿವೆ. +ನಿಜ್ಜರ್ ಹತ್ಯೆ ಹೇಳಿಕೆ ಮುನ್ನ ಭಾರತದೊಂದಿಗೆ ಚರ್ಚೆ ನಡೆಸಿದ್ದೇವೆ ; ಕೆನಡಾ +ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾದ ಬೆನ್ನಲ್ಲೇ ಸರ್ಕಾರದ ವಿರುದ್ಧ ಹೋರಾಟ ಮತ್ತು ಚಟುವಟಿಕೆಗಳು ತೀವ್ರಗೊಂಡಿದೆ ಈಗಾಗಲೇ ಹಲವು ಬಾರಿ ಡಿ.ಕೆ.ಶಿವಕುಮಾರ್ ಅವರು ಬಹಿರಂಗ ಹೇಳಿಕೆ ನೀಡಿ ಸರ್ಕಾರ ಪತನಗೊಳಿಸುವ ಸಂಚು ನಡೆದಿದೆ ಎಂದು ಆರೋಪಿಸಿದರು. +ಬಿಜೆಪಿಯ ಒಂದು ತಂಡ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿ ಆಮಿಷವೊಡ್ಡುವ ಕೆಲಸ ಮಾಡುತ್ತಿದೆ. ನಮ್ಮ ಶಾಸಕರು ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಿದ್ದಾರೆ. ಸಮಯ ಬಂದಾಗ ಎಲ್ಲವನ್ನು ಬಹಿರಂಗಪಡಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ರಾಜ್ಯ ಮಟ್ಟದಲ್ಲಿ ನಾಯಕರುಗಳು ಶಾಸಕರನ್ನು ಸಂಪರ್ಕಿಸಿ ಅಭಿಪ್ರಾಯ ಕ್ರೂಢೀಕರಿಸುವ ಪ್ರಯತ್ನ ಮಾಡಿದ್ದಾರೆ. ಈಗಾಗಲೇ ಒಂದು ಸುತ್ತು ಜಿಲ್ಲಾ ಮಟ್ಟದಲ್ಲಿ ಶಾಸಕರು ಮತ್ತು ಸಚಿವರ ಸಭೆ ನಡೆಸಲಾಗಿದೆ. ಅದರ ಹೊರತಾಗಿಯೂ ಕೆಲವರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂಬ ಹೇಳಿಕೆಗಳನ್ನು ಬಹಿರಂಗವಾಗಿ ನೀಡಿ ಆಕ್ಷೇಪಿಸುತ್ತಿದ್ದಾರೆ. +ಇದು ಮುಜುಗರದ ಸನ್ನಿವೇಶವಾಗಿದೆ. ಮತ್ತೊಂದೆಡೆ ಸರ್ಕಾರ ಪತನಗೊಳಿಸಲು ತೆರೆಮರೆಯಲ್ಲಿ ಸದ್ದಿಲ್ಲದೆ ನಡೆಯುತ್ತಿರುವ ಆಪರೇಷನ್ ಕಮಲದ ಕಸರತ್ತು ಕಾಂಗ್ರೆಸಿಗರ ನಿದ್ದೆಗೆಡಿಸಿದೆ. ದೇಶದಲ್ಲೇ ಅದರಲ್ಲೂ ದಕ್ಷಿಣ ಭಾರತದಲ್ಲಿ ಪ್ರಮುಖ ರಾಜ್ಯವಾಗಿರುವ ಕರ್ನಾಟಕದಲ್ಲಿ ಆಡಳಿತದಲ್ಲಿರುವುದು ಕಾಂಗ್ರೆಸ್‍ಗೆ ಜೀವ ಕಣವಾಗಿದೆ. ಇಲ್ಲಿಯ ಸರ್ಕಾರವನ್ನು ಕಳೆದುಕೊಂಡರೆ ಕಾಂಗ್ರೆಸ್ ಅಸ್ತಿತ್ವವೇ ಪ್ರಶ್ನಾರ್ಹವಾಗುವ ಆತಂಕವಿದೆ. +ಈ ಹಿನ್ನಲೆಯಲ್ಲಿ ಪ್ರತಿ ಬೆಳವಣಿಗೆಯ ಮೇಲೂ ಕಟ್ಟೆಚ್ಚರ ವಹಿಸಬೇಕು. ಯಾವುದೇ ಸಂದರ್ಭದಲ್ಲೂ ಸರ್ಕಾರವನ್ನು ಬಿಟ್ಟುಕೊಡಬಾರದು. ಆಪರೇಷನ್ ಕಮಲ ಸೇರಿದಂತೆ ಎಂಥದ್ದೇ ಚಟುವಟಿಕೆಗಳಿದ್ದರೂ ತಿರುಗೇಟು ನೀಡಬೇಕೆಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚಿಸಿದೆ ಎಂದು ಹೇಳಲಾಗಿದೆ. ಇದು ಸಾಲದು ಎಂಬಂತೆ ಕೆಲವು ಶಾಸಕರನ್ನು ಸಂಪರ್ಕಿಸಿ ಸಚಿವ ಸಂಪುಟ ಪುನಾರಚನೆ ವೇಳೆ ಅವಕಾಶ ನೀಡಲಾಗುವುದು. ಬಿಜೆಪಿ ಮತ್ತು ಜೆಡಿಎಸ್‍ನ ಯಾವುದೇ ಆಮಿಷಗಳಿಗೆ ಒಳಗಾಗಬೇಡಿ ಎಂದು ಹೈಕಮಾಂಡ್ ನಾಯಕರು ಮನವೊಲಿಸುತ್ತಿದ್ದಾರೆ ಎಂದು ಹೇಳಲಾಗಿದೆ. +ಮಧ್ಯಪ್ರದೇಶ ಚುನಾವಣೆ : ಫೈನಲ್ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ +ಈ ಬಗ್ಗೆ ಕೆಲವು ಶಾಸಕರು ತಮ್ಮ ಅಭಿಪ್ರಾಯಗಳನ್ನು ಹೇಳಿಕೊಂಡಿದ್ದು, ಸಚಿವ ಸಂಪುಟ ಪುನಾರಚನೆ ನಿಗದಿಯಂತೆ ಸರ್ಕಾರದ ಎರಡೂವರೆ ವರ್ಷಗಳ ಬಳಿಕ ನಡೆಯಲಿದೆ. ಈ ನಡುವೆ ಕ್ಷಿಪ್ರ ಬೆಳವಣಿಗಳಾದರೆ ಹೈಕಮಾಂಡ್ ಯಾವ ರೀತಿಯ ನಿರ್ಧಾರವನ್ನಾದರೂ ತೆಗೆದುಕೊಳ್ಳಬಹುದು. ಲೋಕಸಭೆ ಚುನಾವಣೆಗೂ ಮುನ್ನವೇ ಸಂಪುಟ ಪುನಾರಚನೆಯಾದರೆ ಅಚ್ಚರಿಪಡಬೇಕಿಲ್ಲ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_327_12.txt b/eesanje/url_46_327_12.txt new file mode 100644 index 0000000000000000000000000000000000000000..fe46ffecca6ad43d716d1e6acebfb029a43a3215 --- /dev/null +++ b/eesanje/url_46_327_12.txt @@ -0,0 +1,7 @@ +ವಿಜಯದಶಮಿ ನಂತರ ಜೆಡಿಎಸ್ ಪುನರ್ ಸಂಘಟನೆ : ಕುಮಾರಸ್ವಾಮಿ +ಬೆಂಗಳೂರು,ಅ.19- ವಿಜಯದಶಮಿ ಮುಗಿದ ನಂತರ ಪಕ್ಷದ ಮತ್ತೊಂದು ಸಭೆ ನಡೆಸಿ ಪಕ್ಷದ ಪುನರ್ ಸಂಘಟನೆ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಹಂಗಾಮಿ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಹಲವು ನಿರ್ಣಯಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ ವಿಜಯದಶಮಿ ನಂತರ ಮತ್ತೊಂದು ಸಭೆ ಮಾಡಲಾಗುವುದು ಎಂದರು. +ರಾಜ್ಯ ಸರ್ಕಾರದ ಲೋಪ ದೋಷಗಳ ಬಗ್ಗೆ ಪ್ರಸ್ತಾಪ ಮಾಡಿ ಜನಪರ ಹೋರಾಟ ಮಾಡುವುದು, ಅಧಿವೇಶನದಲ್ಲಿ ಮಾತನಾಡಲು ಅವಕಾಶ ಸಿಕ್ಕಿರಲಿಲ್ಲ. ಯಾವ ಇಲಾಖೆಯಡಿ ಏನೇನು ಲೂಟಿಯಾಗಿದೆ ಎಲ್ಲ ಅಂಶಗಳನ್ನು ಬಹಿರಂಗಪಡಿಸುವುದಾಗಿ ಹೇಳಿದರು. +ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ +ವಿಧಾನಸಭೆ ಚುನಾವಣೆ ನಂತರ ಕೆಲವು ರಾಜಕೀಯ ಘಟನೆಗಳು ನಡೆದಿರುವ ಹಿನ್ನಲೆಯಲ್ಲಿ ಹಳೆಯ ರಾಜ್ಯ ಘಟಕವನ್ನು ವಿಸರ್ಜನೆ ಮಾಡಿ ಇಂದು ಹಡಹಾಕ್ ಸಮಿತಿ ರಚನೆ ಮಾಡಲಾಗುತ್ತಿದ್ದು, ಆ ಮೂಲಕ ಪಕ್ಷ ಪುನಶ್ಚೇತನ ಮಾಡಲಾಗುತ್ತದೆ ಎಂದು ತಿಳಿಸಿದರು. +ಹಂಗಾಮಿ ಅಧ್ಯಕ್ಷರ ಜವಾಬ್ದಾರಿಯನ್ನು ನನಗೆ ನೀಡಿದ್ದು, ಎಲ್ಲರ ಜೊತೆಗೂಡಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು. ಸಭೆಯಲ್ಲಿ 30 ಜಿಲ್ಲೆಯ ಪಕ್ಷದ ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_327_2.txt b/eesanje/url_46_327_2.txt new file mode 100644 index 0000000000000000000000000000000000000000..e0467dc9dc13508b688004949f95a3596725774d --- /dev/null +++ b/eesanje/url_46_327_2.txt @@ -0,0 +1,6 @@ +ಸಿದ್ದರಾಮಯ್ಯನವರು ಪಾಕಿಸ್ತಾನ ಟೀಮ್ ಬೆಂಬಲಿಸಲು ಹೋಗಿದ್ರಾ..? : ಎಚ್‍ಡಿಕೆ ವ್ಯಂಗ್ಯ +ಬೆಂಗಳೂರು,ಅ.21- ರಾಜ್ಯದಲ್ಲಿ ಬರ ಪರಿಸ್ಥಿತಿ, ವಿದ್ಯುತ್ ಅಭಾವ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದರೂ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಕಾರ್ಯದರ್ಶಿಗಳು ನಿನ್ನೆ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಭಾರತ- ಪಾಕಿಸ್ತಾನ ನೋಡಲಿ ಎನ್ನಬಹುದಿತ್ತು. ಆದರೆ ಪಂದ್ಯವಿದ್ದದು ಪಾಕಿಸ್ತಾನ, ಆಸ್ಟ್ರೇಲಿಯ ನಡುವೆ. ಯಾರಿಗೆ ಬೆಂಬಲ ವ್ಯಕ್ತಪಡಿಸಿ ಹೋಗಿದ್ದರು ಎಂದು ಪ್ರಶ್ನಿಸಿದರು. ತಾವು ಕ್ರೀಡೆಗಳ ವಿರೋಯಲ್ಲ. ನಮ್ಮ ಬೆಂಬಲವೂ ಇದೆ. ಆದರೆ ಬರಗಾಲ, ವಿದ್ಯುತ್ ಅಭಾವದ ಸಂದರ್ಭದಲ್ಲಿ ಸಮಯ ಅವಕಾಶ ಮಾಡಿಕೊಂಡು 8 ಗಂಟೆ ಪಂದ್ಯ ವೀಕ್ಷಿಸಿದ್ದಾರೆ ಎಂದರು. +ಟೀಕೆ ಮಾಡುವುದಿಲ್ಲ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ದೊಡ್ಡ ಹಡಗಿಗೆ ಯಾರು ಯಾರನ್ನು ತುಂಬಿಸಿಕೊಳ್ಳುತ್ತಾರೋ ತುಂಬಿಸಿಕೊಳ್ಳಲಿ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು. ನಾವು ರಾಜ್ಯದ ಜನತೆಯ ಸಮಸ್ಯೆಗಳ ಪರಿಹಾರದ ಬಗ್ಗೆ ಗಮನಹರಿಸುತ್ತೇವೆ. ಮುಂದೆ ಏನಾಗುತ್ತೋ ಗೊತ್ತಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು. +ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ +ಬೇಗ ಬಿಚ್ಚಡಲಿ:ಉಪಮುಖ್ಯಮಂತ್ರಿಗಳು ಯಾರ್ಯಾರದೋ ಏನೇನೋ ಬಿಚ್ಚಿಡುವುದಾಗಿ ಹೇಳಿದ್ದಾರೆ . ಆದಷ್ಟು ಬೇಗ ಬಿಚ್ಚಿಡಲಿ. ನಮಗೆ ಭಯವಿಲ್ಲ. ಬಿಚ್ಚಿಡುವ ಮುನ್ನ ಇನ್ನೇನಾದರೂ ಆದರೆ ಏನು ಮಾಡುವುದು? ಬೇಗ ಬಿಚ್ಚಿಡಲಿ ಎಂದು ಮಾರ್ಮಿಕವಾಗಿ ಹೇಳಿದರು. ನಾನು ನಕಲಿ ಸ್ವಾಮಿ ಅಲ್ಲ. ಮಾಹಿತಿ ಇಲ್ಲದೆ ಇಂಧನ ಇಲಾಖೆ ವಿಚಾರ ಪ್ರಸ್ತಾಪಿಸಿಲ್ಲ. ಅಂಕಿ ಅಂಶಗಳ ಆಧಾರದ ಮೇಲೆ ಪ್ರಸ್ತಾಪಿಸಿದ್ದೇನೆ. +ಬಟ್ಟೆ ಹರಿದುಕೊಂಡು ಓಡಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಮುಂದೆ ಯಾರು ಆ ರೀತಿ ಓಡಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದರು. ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಮಾಜಿ ಶಾಸಕರಾದ ಸುರೇಶ್ ಗೌಡ, ಕೋನರೆಡ್ಡಿ ತೂಪಲ್ಲಿ, ರಮೇಶ್ ಗೌಡ ಹಾಗೂ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಜೆಡಿಎಸ್ ಕಚೇರಿ ಜೆಪಿಭವನದಲ್ಲಿ ಹಮ್ಮಿಕೊಂಡಿದ್ದ ಆಯ್ದ ಪೂಜೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾಗಿಯಾಗಿದ್ದರು. \ No newline at end of file diff --git a/eesanje/url_46_327_3.txt b/eesanje/url_46_327_3.txt new file mode 100644 index 0000000000000000000000000000000000000000..2d2abe0d5c158b2f5b5e581cc987015db3456c7e --- /dev/null +++ b/eesanje/url_46_327_3.txt @@ -0,0 +1,6 @@ +ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳ ಭರ್ತಿಗೆ ಸಿಎಂಗೆ ಖರ್ಗೆ ಪತ್ರ +ಬೆಂಗಳೂರು,ಅ.21- ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬ ಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲಾ ಸಚಿವರಿಗೆ ಹಾಗೂ ಮುಖ್ಯಮಂತ್ರಿಯವರು ಹೊಂದಿರುವ ಖಾತೆಗಳಿಗೆ ಸಂಬಂಧಿಸಿದಂತೆ ಸಚಿವಾಲಯ ಮುಖ್ಯಸ್ಥರಿಗೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. +ಭಾರತ ಸಂವಿಧಾನ ಅನುಚ್ಚೇದ 371(ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಉಪ ಸಮಿತಿ ವತಿಯಿಂದ ಸಚಿವರ ಗಮನ ಸೆಳೆಯಲಾಗಿದೆ. 2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. +ಛತ್ತೀಸ್‍ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ +ಭಾರತ ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ ಎಂದು ವಿವರಿಸಿದ್ದಾರೆ. +ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬ ಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್ ಖರ್ಗೆಸಂಪುಟದ ಎಲ್ಲಾ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರಲ್ಲದೆ, ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕೆಂದೂ ತಿಳಿಸಿದ್ದಾರೆ. \ No newline at end of file diff --git a/eesanje/url_46_327_4.txt b/eesanje/url_46_327_4.txt new file mode 100644 index 0000000000000000000000000000000000000000..248fabc6add2833091a419926aa0a05b483f8df2 --- /dev/null +++ b/eesanje/url_46_327_4.txt @@ -0,0 +1,6 @@ +ವಿಧಾನಸೌಧ-ವಿಕಾಸಸೌಧದಲ್ಲಿ ಆಯುಧ ಪೂಜೆಯ ಸಂಭ್ರಮ +ಬೆಂಗಳೂರು,ಅ.21- ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ ಸೇರಿದಂತೆ ಬಹುತೇಕ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆಯನ್ನು ನೆರವೇರಿಸಲಾಯಿತು. +ಸರ್ಕಾರಿ ಕಚೇರಿಗಳಲ್ಲಿ ಇಂದು ಬೆಳಗ್ಗೆಯಿಂದಲೇ ಆಯುಧ ಪೂಜೆಯ ಸಂಭ್ರಮ ಮನೆ ಮಾಡಿತ್ತು. ಸಿಬ್ಬಂದಿಗಳು ಪೂಜಾ ಕೈಂಕರ್ಯದಲ್ಲಿ ತೊಡಗಿದ್ದರು. ತಮ್ಮ ತಮ್ಮ ಕಚೇರಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ಪೂಜೆ ನೆರವೇರಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. +ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ +ನಿನ್ನೆಯಿಂದಲೇ ಕಚೇರಿಗಳನ್ನು ಶುಚಿಗೊಳಿಸಿ ಸಿಂಗರಿಸುವ ಕಾರ್ಯದಲ್ಲಿ ಸಿಬ್ಬಂದಿಗಳು ತೊಡಗಿದ್ದರು. ಸಚಿವರ ಕಚೇರಿಗಳು, ವಾಹನಗಳು ಸೇರಿದಂತೆ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿನ ಕೆಲವು ಕಚೇರಿಗಳಲ್ಲಿ ನಿನ್ನೆಯೇ ಆಯುಧ ಪೂಜೆ ನೆರವೇರಿಸಲಾಗಿತ್ತು. +ಸೋಮವಾರ ಆಯುಧ ಪೂಜೆ ಮಾಡಬೇಕಿದೆ. ಆದರೆ ನಾಳೆ ಭಾನುವಾರ ಹಾಗೂ ಸೋಮವಾರ ಆಯುಧ ಪೂಜೆ ರಜೆ ಇರುವುದರಿಂದ ಇಂದೇ ಆಡಳಿತದ ಶಕ್ತಿ ಕೇಂದ್ರಗಳಲ್ಲಿ ಪೂಜೆಗಳನ್ನು ನೆರವೇರಿಸಿದ್ದು ಕಂಡುಬಂದಿತು. \ No newline at end of file diff --git a/eesanje/url_46_327_5.txt b/eesanje/url_46_327_5.txt new file mode 100644 index 0000000000000000000000000000000000000000..7bd23eed458cd9f577994687b80d8a8faee1e34e --- /dev/null +++ b/eesanje/url_46_327_5.txt @@ -0,0 +1,9 @@ +ವಿದ್ಯುತ್ ಕೃತಕ ಅಭಾವ ಸೃಷ್ಟಿಸಿ ಕಮಿಷನ್‍ ಹೊಡೆಯಲು ಮುಂದಾದ ಸರ್ಕಾರ : ಹೆಚ್ಡಿಕೆ +ಬೆಂಗಳೂರು,ಅ.21- ವಿದ್ಯುತ್ ಉತ್ಪಾದನೆ ಮಾಡುವ ಸಾಮಥ್ರ್ಯ ಇದ್ದರೂ ರಾಜ್ಯ ಸರ್ಕಾರ ಕೃತಕ ವಿದ್ಯುತ್ ಅಭಾವ ಸೃಷ್ಟಿಸುವ ಮೂಲಕ ದುಬಾರಿ ದರದಲ್ಲಿ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮರ್ಪಕವಾಗಿ ವಿದ್ಯುತ್ ಉತ್ಪಾದನೆ ಮಾಡಿದರೆ ಉಳಿತಾಯವಾಗುವಷ್ಟು ವಿದ್ಯುತ್ ಉತ್ಪಾದಿಸಬಹುದು. ಆದರೆ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಹರಣ ಮಾಡಿದೆ. ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಉಂಟಾಗಿದೆ ಎಂದು ಹೇಳಿ ವಿದ್ಯುತ್ ಖರೀದಿ ಮಾಡಲು ಮುಂದಾಗುತ್ತಿದೆ ಎಂದು ಆರೋಪಿಸಿದರು. +1500 ಮೆಗಾವ್ಯಾಟ್ ವಿದ್ಯುತ್ ಖರೀದಿಸುವ ಬಗ್ಗೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಸರ್ಕಾರವೇ ಹೇಳಿರುವ ಮಾಹಿತಿ ಪ್ರಕಾರ ಪ್ರತಿದಿನ 40 ಕೋಟಿ ವಿದ್ಯುತ್ ಖರೀದಿಗೆ ಬೇಕಾಗುತ್ತದೆ ಎಂದರು. +ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಆಖಿಲೇಶ್ ಯಾದವ್ +ರಾಜ್ಯದಲ್ಲಿ 32,912.52 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಜಲವಿದ್ಯುತ್‍ನಲ್ಲಿ ಶೇ.50ರಷ್ಟು ಅಂದರೂ 1953.3 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಶಾಖೋತ್ಪನ್ನ ವಿದ್ಯುತ್ ಘಟಕಗಳಿಂದ 9947.56 ಮೆ.ವ್ಯಾ ಉತ್ಪಾದಿಸಬಹುದು. ಕೂಡ್ಲಗಿಯಲ್ಲಿ ಇನ್ನೆರು ಶಾಖೋತ್ಪನ್ನ ಘಟಕ ಆರಂಭಿಸಿದರೆ 4000 ಮೆ.ವ್ಯಾ ವಿದ್ಯುತ್ ಉತ್ಪಾದಿಸಬಹುದು. ಹೀಗೆ ರಾಜ್ಯದಲ್ಲಿ ಸರಾಸರಿ 16 ಸಾವಿರದಿಂದ 18 ಸಾವಿರ ಮೆ.ವ್ಯಾಟ್‍ವರೆಗೂ ವಿದ್ಯುತ್ ಉತ್ಪಾದಿಸಬಹುದು ಎಂದು ಹೇಳಿದರು. +ಇಂಧನ ಸಚಿವ ಕೆ.ಜೆ.ಜಾರ್ಜ್ ಅವರಿಗೆ ದುಡ್ಡಿನ ಅಗತ್ಯವಿಲ್ಲ ಎಂದು ಭಾವಿಸುತ್ತೇನೆ. ಆದರೂ ಸರ್ಕಾರ ವಿದ್ಯುತ್ ಖರೀದಿ ಮಾಡಿ ಕಮಿಷನ್ ಪಡೆಯಲು ಹೊರಟಿದೆ. ಸರ್ಕಾರದ ಲೋಪದೋಷಗಳನ್ನು ಹೇಳಿದ್ದು, ಯಾವ ರೀತಿ ಪರೀಕ್ಷಿಸಿಕೊಳ್ಳಬಹುದು ಎಂಬುದನ್ನು ಹೇಳಿದ್ದೇನೆ. ಸತ್ಯ ಹರಿಶ್ಚಂದ್ರ ಸರ್ಕಾರ ಐದು ತಿಂಗಳಲ್ಲಿ ಮಾಡಿದ್ದು ಸಾಕು, ಕಮಿಷನ್ ನಿಲ್ಲಿಸಿ ಜನರ ಸಮಸ್ಯೆ ಪರಿಹರಿಸಿ ಎಂದರು. +ಯಶಸ್ವಿಯಾಗಿ ಗಗನಯಾನ ಪರೀಕ್ಷಾ ಹಾರಾಟ ನಡೆಸಿದ ಇಸ್ರೋ +ಬರಗಾಲದಿಂದಾಗಿ ಆಹಾರಧಾನ್ಯ ಉತ್ಪಾದನೆ ಸಾಕಷ್ಟು ಕಡಿಮೆಯಾಗಲಿದ್ದು, ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಬಹುದು. ಅದಕ್ಕೆ ಯಾವ ಸಿದ್ದತೆ ಮಾಡಿಕೊಂಡಿದ್ದೀರಿ? ಎಂದು ಪ್ರಶ್ನಿಸಿದರು. ಮಾಹಿತಿ ಇಲ್ಲದೆ ಆರೋಪ ಮಾಡುತ್ತಿಲ್ಲ. 25-35 ವರ್ಷಗಳಿಂದ ಮಾಡಿಕೊಂಡು ಬಂದಿರುವುದು ಸಾಕು. ಇನ್ನಾದರೂ ಜನರ ಸಮಸ್ಯೆ ಬಗೆಹರಿಸಲು ಗಮನ ನೀಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಹೇಳದೆ ಪ್ರಸ್ತಾಪಿಸಿದರು. \ No newline at end of file diff --git a/eesanje/url_46_327_6.txt b/eesanje/url_46_327_6.txt new file mode 100644 index 0000000000000000000000000000000000000000..3431d7cd92629e589d399d952a9d6b3ef6b55bc6 --- /dev/null +++ b/eesanje/url_46_327_6.txt @@ -0,0 +1,14 @@ +ಹುತಾತ್ಮ ಪೊಲೀಸ್ ವಿಮಾ ಮೊತ್ತ 50 ಲಕ್ಷಕ್ಕೆ ಹೆಚ್ಚಳ +ಬೆಂಗಳೂರು ಅ.21- ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. +ಇಂದು ಪೊಲೀಸ್ ಸಂಸ್ಮರಣ ದಿನದ ಅಂಗವಾಗಿ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿ ಮಾತನಾಡಿದರು. ಪೊಲೀಸ್ ವ್ಯವಸ್ಥೆ ರಾಜ್ಯದ , ಸರ್ಕಾರದ ಘನತೆಯನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತದೆ. ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆಗೆ ನೇರ ಸಂಬಂಧವಿದೆ. ಯಾವ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿರುತ್ತದೋ ಅಲ್ಲಿಗೆ ಬಂಡವಾಳ ಹೆಚ್ಚಾಗಿ ಬರುತ್ತದೆ. +ಇದರಿಂದ ಉದ್ಯೋಗ ಸೃಷ್ಟಿ ಹೆಚ್ಚಾಗಿ, ಅಭಿವೃದ್ಧಿ ವೇಗ ಪಡೆದುಕೊಳ್ಳುತ್ತದೆ. ಇದರ ಪರಿಣಾಮ ನಾಡಿನ ಜನರ ತಲಾ ಆದಾಯದ ಪ್ರಮಾಣವೂ ಹೆಚ್ಚಾಗುತ್ತದೆ. ಆದ್ದರಿಂದ ನಾಡಿನ ಕಾನೂನು ಸುವ್ಯವಸ್ಥೆಯನ್ನು ಪೊಲೀಸ್ ಇಲಾಖೆ ಕಟ್ಟು ನಿಟ್ಟಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು. +ಛತ್ತೀಸ್‍ಗಢದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ +ತಂತ್ರಜ್ಞಾನ ಬೆಳೆದಂತೆ ಪೊಲೀಸ್ ವ್ಯವಸ್ಥೆ ಹೊಸ ಹೊಸ ಸವಾಲುಗಳಿಗೆ ಮುಖಾಮುಖಿ ಆಗುತ್ತದೆ. ಸೈಬರ್ ತಂತ್ರಜ್ಞಾನದ ಜತೆಗೇ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆ ಹಿಡಿಯಬೇಕು ಎನ್ನುವ ಸೂಚನೆ ನೀಡಿದರು. +ಸುಳ್ಳು ಸುದ್ದಿಗಳು, ಅಶಾಂತಿ ಸೃಷ್ಟಿಸುವ ಸುಳ್ಳುಗಳನ್ನು, ದ್ವೇಷ ಹರಡುವ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆ ಮೇಲಿದೆ ಎಂದರು. +ಆದ್ದರಿಂದ ಸುಳ್ಳು ಸುದ್ದಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಸುಳ್ಳು ಮತ್ತು ದ್ವೇಷದ ಸುದ್ದಿಗಳು ನಾಡಿನ ಜಿಡಿಪಿಗೆ ಮಾರಕ. ಅಶಾಂತಿಯ ಪರಿಣಾಮವಾಗಿ ಜನರ ತಲಾ ಆದಾಯಕ್ಕೂ ಧಕ್ಕೆಯಾಗುತ್ತದೆ. ಆದ್ದರಿಂದ ಸುಳ್ಳು ಸುದ್ದಿ ಹರಡುವ ಜಾಲ ತಾಣಗಳು ಮತ್ತು ಅವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. +ಮಹಿಳೆ, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ರಕ್ಷಣೆ ಕೊಡುವ ಅಗತ್ಯವಿದೆ. ಸುಗಮ ಸಂಚಾರ ವ್ಯವಸ್ಥೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಹೀಗಾಗಿ ಹೆಚ್ಚುವರಿ ಪೊಲೀಸ್ ಹುದ್ದೆ ಸೃಷ್ಟಿಸಿದ್ದೇವೆ. ಹೆಚ್ಚುವರಿ ಮಹಿಳಾ ಮತ್ತು ಸಂಚಾರ ಠಾಣೆಗಳನ್ನು ಆರಂಭಿಸಿದ್ದೇವೆ. ಹೊಸ ವಾಹನ ಖರೀದಿಗೆ 100 ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದರು. +2125 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು 450 ಕೋಟಿ ನೀಡಲಾಗುವುದು. ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಆರೋಗ್ಯ ಭಾಗ್ಯಕ್ಕಾಗಿ 100 ಕೋಟಿ ರೂ ಒದಗಿಸಲಾಗಿದೆ. ನಿವೃತ್ತ ಸಿಬ್ಬಂದಿಯ ಆರೋಗ್ಯ, ಚಿಕಿತ್ಸೆಗಾಗಿ ನಿಶ್ಚಿತ ಠೇವಣಿ ಇಡಲಾಗಿದೆ. ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕಾಗಿ 7 ಜಿಲ್ಲೆಗಳಲ್ಲಿ 7 ಪೊಲೀಸ್ ಪಬ್ಲಿಕ್ ಶಾಲೆ ಆರಂಭಿಸಲಾಗುತ್ತಿದೆ. ಇವುಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಪೊಲೀಸ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗುತ್ತಿದೆ ಎಂದರು. +ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದರು. +ಕರ್ನಾಟಕದಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ನಿಂದ ಈ ವರ್ಷದ ಆಗಸ್ಟ್ ವರೆಗೆ 16 ಜನ ಹಾಗೂ ದೇಶದಲ್ಲಿ 180 ಜನ ರಕ್ಷಣಾ ಸಿಬ್ಬಂದಿ ಹುತ್ಮಾತರಾಗಿದ್ದು, ಅವರೆಲ್ಲರನ್ನು ಸ್ಮರಿಸಿ ನಮನ ಸಲ್ಲಿಸಲಾಗಿದೆ. ಹುತಾತ್ಮರಾದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ತಿಳಿಸಿದರು. +ಇಸ್ರೇಲ್ ಪೊಲೀಸರಿಗೆ ಸಮವಸ್ತ್ರ ಸರಬರಾಜು ಸ್ಥಗಿತಗೊಳಿಸಿದ ಕೇರಳ +ಗೃಹ ಮಂತ್ರಿ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಮತ್ತು ಪೊಲೀಸ್ ಇಲಾಖೆಯ ನಾನಾ ವಿಭಾಗಗಳ ಮುಖ್ಯಸ್ಥರು ಪುಷ್ಪ ನಮನ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ ಹುತಾತ್ಮರಾದ ಎಲ್ಲಾ ರಕ್ಷಣಾ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಸ್ಮರಿಸಿ ನಮನ ಸಲ್ಲಿಸಲಾಯಿತು. \ No newline at end of file diff --git a/eesanje/url_46_327_7.txt b/eesanje/url_46_327_7.txt new file mode 100644 index 0000000000000000000000000000000000000000..30e67d9c2e06d6c516c22cce3c993b19711128a5 --- /dev/null +++ b/eesanje/url_46_327_7.txt @@ -0,0 +1,9 @@ +“ಶಿವಕುಮಾರ್ ಪೂಜಾರಿ ಆತ್ಮಹತ್ಯೆಗೂ ನನಗೂ ಸಂಬಂಧ ಇಲ್ಲ” +ಕಲಬುರಗಿ, ಅ.20- ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷ ಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಸೋಲಿನಿಂದ ಹತಾಶರಾಗಿರುವ ಬಿಜೆಪಿಯವರು ನನ್ನ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಜೊತೆ ನಾನು ಯಾವತ್ತು ಮಾತನಾಡಿಲ್ಲ. ಆ ವ್ಯಕ್ತಿಯನ್ನು ನೋಡೆ ಇಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂದು ಕುಟುಂಬದ ಸದಸ್ಯರೇ ಪೊಲೀಸರಿಗೆ ದೂರು ಕೊಟ್ಟು, ಹೇಳಿಕೆ ನೀಡಿದ್ದಾರೆ. ಘಟನೆಯ ಬಳಿಕ ಮಾಧ್ಯಮದವರು ಶಿವಕುಮಾರ್ ಅವರ ಊರಿಗೆ ಹೋಗಿ ಹೇಳಿಕೆ ಪಡೆದಿದ್ದಾರೆ. ಅಲ್ಲಿಯೂ ಕುಟುಂಬದ ಸದಸ್ಯರು ಸತ್ಯ ಹೇಳಿದ್ದಾರೆ. ವಾಸ್ತವ ಏನು ಎಂದು ಎಲ್ಲರಿಗೂ ಗೋತ್ತಿದೆ ಎಂದರು. +ಆತ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನಾ ಮಾತನಾಡಿರುವ ಆಡಿಯೋವನ್ನು ನಾನು ಕೇಳಿದ್ದೇನೆ. ಆದರಲ್ಲಿ ಜನರಲ್ ಆಗಿ ಮಾತನಾಡಿ ದ್ದಾರೆ. ಆಡಿಯೋ ಯಾರು ಕಳುಹಿಸಿದ್ದಾರೆ, ಹೇಗೆ ಬಂದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾನೂನು ತನ್ನದೆ ಆದ ಕ್ರಮ ಕೈಗೊಳ್ಳುತ್ತದೆ. ಈ ಹಿಂದೆ ಬಿಜೆಪಿ ಈಶ್ವರಪ್ಪ ಸೇರಿದಂತೆ ಹಲವರ ಮೇಲೆ ನಿರ್ದಿಷ್ಟ ಆರೋಪಗಳಿದ್ದವು, ಈಗ ನನ್ನ ಮೇಲೆ ಇರುವ ಆರೋಪಗಳೇನು? ಯಾವ ಕಾರಣಕ್ಕೆ ನಾನು ರಾಜಿನಾಮೆ ನೀಡಬೇಕು ಎಂದು ಪ್ರಶ್ನಿಸಿದರು. +ಸತೀಶ್ ಜಾರಕಿಹೊಳಿ ಅಸಮಾಧಾನದಿಂದ ಪಕ್ಷಕ್ಕೆ ನಷ್ಟವಿಲ್ಲ : ಸಚಿವ ರಾಜಣ್ಣ +ಸೇಡಂ ವಿಧಾನಸಭಾ ಕ್ಷೇತ್ರದಲ್ಲಿ ಈ ಮೊದಲು ಭಯದ ವಾತಾವರಣ ಇತ್ತು. ಬಿಜೆಪಿ ಕಾರ್ಯಕರ್ತರು ತಮ್ಮಲ್ಲೆ ಹಲ್ಲೆ ಮಾಡಿಕೊಂಡು ಜನರಲ್ಲಿ ಆತಂಕ ಮೂಡಿಸಿದ್ದರು. ಈಗ ಅಂತಹ ವಾತಾವರಣ ಇಲ್ಲವಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಪಾಲನೆ ಮಾಡಲಾಗಿದೆ ಎಂದರು. +ಶಿವಕುಮಾರ್‍ನ ಆತ್ಮಹತ್ಯೆ ಬಗ್ಗೆ ಸ್ಥಳೀಯರು ನನಗೆ ಮಾಹಿತಿ ನೀಡಿದ್ದರು. ಆರೋಪ ಮಾಡಿರು ವುದೇಕೆ ಎಂದು ಗೋತ್ತಿಲ್ಲ. ಕಾಂಗ್ರೆಸ್ ನವರು ಮನೆ ಮನೆ ಗಳಲ್ಲಿ ಜಗಳ ತಂದಿಡುತ್ತಾರೆ ಎಂದು ಸಾರ್ವತ್ರಿಕವಾಗಿ ಆರೋಪ ಮಾಡಿರುವುದು ಕಂಡು ಬಂದಿದೆ. ನನ್ನ ಮೇಲೆ ನಿರ್ದಿಷ್ಟ ಆರೋಪಗಳಿಲ್ಲ. ಬಿಜೆಪಿಯವರು ದೊಡ್ಡ ಪ್ರಮಾಣದಲ್ಲಿ ಸೋಲು ಕಂಡ ಬಳಿಕ ಹತಾಶರಾಗಿದ್ದು, ಆರೋಪ ಮಾಡುತ್ತಿದ್ದಾರೆ. ಸಂತೋಷ ಪೂಜಾರಿ ಆರೋಪದ ಬಗ್ಗೆ ಊರಿನವರಿಗೆ ಮಾಹಿತಿ ಇಲ್ಲ. ಆತ್ಮಹತ್ಯೆ ಮಾಡಿಕೊಂಡಿ ರುವುದಂತೂ ನಿಜ, ಅದಕ್ಕೆ ಕಾರಣಗಳೇನು ಎಂದು ಪೊಲೀಸರು ತನಿಖೆ ನಡೆಸುತ್ತಾರೆ ಎಂದರು. +ಗ್ಯಾರಂಟಿ ಸರ್ಕಾರದ ಕಲೆಕ್ಷನ್ ವಂಶಾವಳಿ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ +ಆತನನ್ನು ನಾನು ನೋಡಿಲ್ಲ, ಮಾತನಾಡಿಸಿಲ್ಲ. ಕರೆ ಮಾಡಿಲ್ಲ, ಭೇಟಿಯಾಗಿಲ್ಲ, ಅವರ ಕುಟುಂಬದ ಸದಸ್ಯರೊಂದಿಗೂ ಮಾತನಾಡಿಲ್ಲ. ಆದರೂ ನನ್ನ ಹೆಸರು ಏಕೆ ಪ್ರಸ್ತಾಪ ಮಾಡಲಾಗಿದೆ ಎಂದು ಗೋತ್ತಿಲ್ಲ. ಪ್ರಕರಣದಲ್ಲಿ ನಾನು ಯಾರ ಮೇಲೂ ಒತ್ತಡ ಹೇರಿಲ್ಲ, ಅದರ ಅಗತ್ಯವೂ ನನಗೆ ಇಲ್ಲ. ನಾನು ಏನು ಎಂದು ಜಿಲ್ಲೆಯ ಜನರಿಗೆ ಗೊತ್ತಿದೆ. 2004ರಿಂದಲೂ ಶಾಸಕನಾಗಿ ಕೆಲಸ ಮಾಡಿದ್ದೇನೆ. ಅಭಿವೃದ್ಧಿ ಹೊರತು ಪಡಿಸಿ ದೌರ್ಜನ್ಯದ ರಾಜಕಾರಣವನ್ನು ನಾನು ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು. \ No newline at end of file diff --git a/eesanje/url_46_327_8.txt b/eesanje/url_46_327_8.txt new file mode 100644 index 0000000000000000000000000000000000000000..482e1b146f0e9ef6d7466615f805d3d1672e3d89 --- /dev/null +++ b/eesanje/url_46_327_8.txt @@ -0,0 +1,14 @@ +317 ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಕ್ರಮ : ಸಿಎಂ +ಬೆಂಗಳೂರು,ಅ.20- ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಬೆಂಗಳೂರಿನಲ್ಲಿ 2031ರ ವೇಳೆಗೆ 317 ಕಿ.ಮೀ.ಗಳ ಮೆಟ್ರೋ ಮಾರ್ಗಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಎರಡು ರೈಲು ಮಾರ್ಗಗಳನ್ನು ಪ್ರಧಾನಿಯವರು ವಿಡಿಯೋ ಕಾನರೆನ್ಸ್ ಮೂಲಕ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ವರ್ಚುವಲ್ ಮಾದರಿಯಲ್ಲಿ ಹಾಜರಿದ್ದು ಮುಖ್ಯಮಂತ್ರಿಯವರು ಮಾತನಾಡಿದರು. +ಸಿಎಂಪಿ ಪ್ಲಾನ್‍ನಲ್ಲಿ ಅನುಮೋದಿಸಿದೆ. ಈಗಾಗಲೇ 257 ಕಿ.ಮೀ.ಗಳ ಮಾರ್ಗವು ಕಾರ್ಯಾಚರಣೆ, ನಿರ್ಮಾಣ ಮತ್ತು ಯೋಜನೆ ಹಂತದಲ್ಲಿದೆ. ಇನ್ನುಳಿದ 60 ಕಿ.ಮೀ.ಗಳ ಮೆಟ್ರೊ ಮಾರ್ಗಗಳ ಕಾರ್ಯಸಾಧ್ಯತೆಯ ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು. +ಪ್ರಧಾನಮಂತ್ರಿಯವರು ವಿಡಿಯೋ ಕಾನರೆನ್ಸ್ ಮೂಲಕ ಎರಡು ಮೆಟ್ರೋ ಮಾರ್ಗಗಳನ್ನು ಉದ್ಘಾಟಿಸಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಅತ್ಯಕವಾಗಿದೆ. ಅದನ್ನು ನಿವಾರಣೆ ಮಾಡಲು ಮೆಟ್ರೋ ಯೋಜನೆ ಸಹಕಾರಿಯಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜಂಟಿ ಪ್ರಯತ್ನದಿಂದ ಪ್ರಮುಖ ಎರಡು ಮಾರ್ಗಗಳಾದ ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ನಡುವಿನ 2.10 ಕಿ.ಮೀ.ಗಳ ಉದ್ದ ಮತ್ತು ಕೆಂಗೇರಿಯಿಂದ ಚಲ್ಲಘಟ್ಟವರೆಗಿನ 2.05 ಕಿ.ಮೀ.ಗಳ ಉದ್ದದ ಮಾರ್ಗವನ್ನು ಇದೇ ತಿಂಗಳ 9ರಂದು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. +ಈ ಎರಡು ಪ್ರಮುಖ ಮಾರ್ಗಗಳನ್ನು ತೆರೆಯುವುದರೊಂದಿಗೆ, ನಗರವು ಪೂರ್ವದಿಂದ ಪಶ್ಚಿಮಕ್ಕೆ ತಡೆರಹಿತ ಸಂಪರ್ಕ ಹೊಂದಿದೆ ಮತ್ತು ಮೆಟ್ರೋ ಜಾಲ 74 ಕಿ.ಮೀ.ಗಳಿಗೆ ವಿಸ್ತರಿಸಿದೆ ಎಂದರು.ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-1ರ 42.3 ಕಿ.ಮೀ.ಗಳ ಉದ್ದದ ಮಾರ್ಗವನ್ನು ರೂ. 14,133 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ನಮ್ಮ ಸರ್ಕಾರದ ಹಿಂದಿನ ಅವಯಲ್ಲಿ ರಾಷ್ಟ್ರಪತಿಗಳಾಗಿದ್ದ ಪ್ರಣಬ್ ಮುಖರ್ಜಿ ಉದ್ಘಾಟಿಸಿದರು. ಈ ಯೋಜನೆಗಾಗಿ ರಾಜ್ಯ ಸರ್ಕಾರವು ರೂ. 5630 ಕೋಟಿಗಳಷ್ಟು ವೆಚ್ಚ ಮಾಡಿದೆ. +ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-2ರಲ್ಲಿ 75.06 ಕಿ.ಮೀ.ಗಳ ಉದ್ದದ ಮಾರ್ಗ ಹೊಂದಿದ್ದು, ಸದರಿ ಯೋಜನೆಗೆ ರೂ. 30,695 ಕೋಟಿಗಳ ವೆಚ್ಚವಾಗಲಿದೆ. ಈಗಾಗಲೇ ಕಾಮಗಾರಿಗಳು ಭರದಿಂದ ನಿರ್ಮಾಣವಾಗುತ್ತಿದ್ದು, 32 ಕಿ.ಮೀ.ಗಳ ಉದ್ದದ ಮಾರ್ಗವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. ಪ್ರಸ್ತುತ ಬೆಂಗಳೂರು ಮೆಟ್ರೋ ಜಾಲದ ಕಾರ್ಯಾಚರಣೆಯು 74 ಕಿ.ಮೀ.ಗಳಿಗೆ ಏರಿಕೆಯಾಗಿದೆ ಎಂದರು. +ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ ಕೊಟ್ಟ ಜೆಡಿಯು-ಎಸ್‍ಪಿ +ನಾಗಸಂದ್ರದಿಂದ ಮಾದವಾರದವರೆಗಿನ ಉತ್ತರ ವಿಸ್ತರಣೆ 3.14 ಕಿ.ಮೀ.ಗಳ ಉದ್ದದ ಮಾರ್ಗವು ಮತ್ತು ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ 19.15 ಕಿ.ಮೀ.ಗಳ ಉದ್ದದ ಹೊಸ ಮಾರ್ಗಗಳು ಮುಕ್ತಾಯದ ಹಂತದಲ್ಲಿದ್ದು, 2024ರ ಏಪ್ರಿಲ್ ವೇಳೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ 21.26 ಕಿ.ಮೀ.ಗಳ ಉದ್ದದ ಹೊಸ ಮಾರ್ಗವನ್ನು 2025ರ ಮಾರ್ಚ್ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. +ಈ ಮಾರ್ಗಗಳನ್ನು ಪೂರ್ಣಗೊಳಿಸುವು ದರೊಂದಿಗೆ, ಕಾರ್ಯಾಚರಣೆಯ ಜಾಲವು 117 ಕಿ.ಮೀ.ಗಳಿಗೆ ವಿಸ್ತಾರಗೊಳ್ಳುತ್ತದೆ ಮತ್ತು 12 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿದೆ. ಹಂತ-2 ಯೋಜನೆಗಾಗಿ, ಕರ್ನಾಟಕ ಸರ್ಕಾರವು ರೂ. 11583.08 ಕೋಟಿಗಳನ್ನು ಬಿಡುಗಡೆ ಮಾಡಿದೆ. +ಓಆರ್‍ಆರ್-ಏರ್‍ಪೊರ್ಟ್ ಮೆಟ್ರೋ ಎಂದು ಕರೆಯಲ್ಪಡುವ 58 ಕಿ.ಮೀ.ಗಳ ಉದ್ದದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‍ನಿಂದ ಹೆಬ್ಬಾಳ ಜಂಕ್ಷನ್ ಮೂಲಕ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಂತ 2ಎ ಮತ್ತು 2ಬಿ ಯೋಜನೆಯನ್ನು ಅಂದಾಜು ರೂ. 14788.1 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, 2026ರ ವೇಳೆಗೆ ಪೂರ್ಣಗೊಳಿಸಲು ಯೋಜಿಸಲಾಗಿದೆ. ಕರ್ನಾಟಕ ಸರ್ಕಾರವು ಇದುವರೆಗೆ ರೂ. 4775.36 ಕೋಟಿ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯು ಪೂರ್ಣಗೊಂಡ ನಂತರ, ಮೆಟ್ರೋ ಜಾಲವು 176 ಕಿ.ಮೀ.ಗಳು ಆಗಲಿದೆ ಮತ್ತು ಪ್ರತಿದಿನ ಸುಮಾರು 20 ಲಕ್ಷ ಪ್ರಯಾಣಿಕರು ಸಂಚರಿಸಲಿದ್ದಾರೆ. +ದೇಶದ ಮೊದಲ ರ‍್ಯಾಪಿಡ್-​ಎಕ್ಸ್ ಪ್ರೆಸ್​ ರೈಲಿಗೆ ಮೋದಿ ಚಾಲನೆ +ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಬೆಂಗಳೂರು ಮೆಟ್ರೊ ರೈಲು ಯೋಜನೆಯ 3ನೇ ಹಂತದಲ್ಲಿ 45 ಕಿ.ಮೀ.ಗಳ ಉದ್ದದ ಮಾರ್ಗವನ್ನು ಅಂದಾಜು ರೂ. 15,611 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್)ನ್ನು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡುವಂತೆ ಪ್ರಧಾನಮಂತ್ರಿಯವರಲ್ಲಿ ಒತ್ತಾಯಿಸಿದರು. +ಸರ್ಜಾಪುರದಿಂದ ಹೆಬ್ಬಾಳದವರೆಗಿನ 37 ಕಿ.ಮೀ.ಗಳ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಹಂತ-3ಎಗೆ ಡಿಪಿಆರ್ ತಯಾರಿಸಲಾಗುತ್ತಿದೆ. ಮೆಟ್ರೋ ಯೋಜನೆಯನ್ನು ಸಾಕಾರಗೊಳಿಸಿದ ಪ್ರಧಾನಿಯವರಿಗೆ, ಕೇಂದ್ರ ಸಚಿವರಿಗೆ, ಸಾಧಾರಣ ಬಡ್ಡಿದರಗಳೊಂದಿಗೆ ದೀರ್ಘಾವ ಸಾಲವನ್ನು ಒದಗಿಸುವ ಮೂಲಕ ಮೆಟ್ರೋ ರೈಲು ಯೋಜನೆಗೆ ಬೆಂಬಲ ನೀಡಿದ ಎಲ್ಲಾ ವಿದೇಶೀ ಹಣಕಾಸು ಸಂಸ್ಥೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು. +ಈ ಯೋಜನೆಯಲ್ಲಿ ಕೆಲಸ ಮಾಡಿದ ಎಲ್ಲಾ ಗುತ್ತಿಗೆದಾರರಿಗೆ ಹಾಗೂ ಈ ಯೋಜನೆಗಳಲ್ಲಿ ತೊಡಗಿರುವ 14 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು. \ No newline at end of file diff --git a/eesanje/url_46_327_9.txt b/eesanje/url_46_327_9.txt new file mode 100644 index 0000000000000000000000000000000000000000..a1ded581d13b94e50f92b6191d556d4a768b023a --- /dev/null +++ b/eesanje/url_46_327_9.txt @@ -0,0 +1,8 @@ +ಕರಾವಳಿ-ಮಲೆನಾಡಿಗರ ಬವಣೆ ನಿವಾರಣೆಗೆ ಸಮಾಲೋಚನೆ +ಬೆಂಗಳೂರು,ಅ.20- ಮಲೆನಾಡು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ಏಳು ಜಿಲ್ಲಾಗಳ ಸಮಸ್ಯೆಗಳನ್ನು ಸಮಾಲೋಚಿಸಿ ಪರಿಹಾರ ಹುಡುಕಲು ಮತ್ತು ನಮ್ಮ ವಿವಿಧ ಹಕ್ಕುಗಳ ಹಕ್ಕೊತ್ತಾಯವನ್ನು ಮಾಡಲು ಅ.31ರಂದು ಬೆಳಗ್ಗೆ 10 ಗಂಟೆಗೆ ನಗರದ ವಿಜಯನಗರ ಆದಿಚುಂಚನಗಿರಿ ಮಠದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಲು ಮಲೆನಾಡು ಕರಾವಳಿ ಜನಪರ ಒಕ್ಕೂಟ ತೀರ್ಮಾನಿಸಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುಧೀರ್ ಕುಮಾರ್ ಮುರೋಳಿ ತಿಳಿಸಿದರು. +ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಲೆನಾಡು ಕರಾವಳಿ ಜನಪರ ಒಕ್ಕೂಟ ಅನೇಕ ವರ್ಷಗಳಿಂದ ಮಲೆನಾಡು ಕರಾವಳಿ ಭಾಗದ ಜಿಲ್ಲೆಗಳ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತುಕೊಟ್ಟು ಹೋರಾಟ ಮಾಡುತ್ತಾ ಬಂದಿದೆ. ಸ್ಥಳೀಯ ಸಮಸ್ಯೆಗಳ ವಿರುದ್ಧ ಧ್ವನಿಯೆತ್ತಿ ಪರಿಹಾರಗಳನ್ನು ಹುಡುಕಿಕೊಳ್ಳುವಲ್ಲಿ ಶ್ರಮಿಸುತ್ತಿದೆ. +ಇಲ್ಲಿನ ಭಾಗದಲ್ಲಿ ರೈತಾಪಿ ವರ್ಗ, ಮೀನುಗಾರರು ಸೇರಿದಂತೆ ಅನೇಕರು ಬದುಕು ಕಟ್ಟಿಕೊಂಡಿದ್ದಾರೆ. ಈ ಭಾಗದಿಂದ ಸಂಸ್ಕøತಿ, ಭಾಷೆ, ರಾಜಕೀಯ, ಸಾಹಿತ್ಯ, ಕಲೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅಪಾರವಾದ ಕೊಡುಗೆ ಇದೆ. ಆದರೆ, ಈ ಭಾಗದ ಜನ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದರು. +ಇಂಡಿಯಾ ಮೈತ್ರಿಕೂಟಕ್ಕೆ ಮರ್ಮಾಘಾತ ಕೊಟ್ಟ ಜೆಡಿಯು-ಎಸ್‍ಪಿ +ಕರಾವಳಿ ಮತ್ತು ಕಾಡು ಇಲ್ಲಿನ ಜನರಿಗೆ ಹೆಚ್ಚು ಉದ್ಯೋಗವನ್ನು ಒದಗಿಸಿ ಕೊಟ್ಟಿದ್ದು, ಸರ್ಕಾರಗಳಿಂದ ಸೂಕ್ತ ಮಾನ್ಯತೆ ಸಿಕ್ಕಿಲ್ಲ. ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಜನಪರ ಕಾಯ್ದೆಗಳು ಇಲ್ಲದಿರುವುದು ಇಲ್ಲಿನ ಸಾಮಾನ್ಯ ಜನರಿಗೆ ಅನಾನುಕೂಲವಾಗಿದೆ. ಮಲೆನಾಡು ಕರಾವಳಿ ಭಾಗಕ್ಕೆ ಮೆಡಿಕಲ್ ಕಾಲೇಜು, ಐಐಟಿ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗುವ ಯೋಜನೆಗಳನ್ನು ರೂಪಿಸಬೇಕು ಎಂದು ಹೇಳಿದರು. +ಚಿಕ್ಕಮಗಳೂರಿನ ಕಾಫಿ ಬೆಳೆಗಾರರು, ಮೀನುಗಾರರ ಸಮಸ್ಯೆ, ಅರಣ್ಯ ಹೊತ್ತುವರಿ ಪರಿಹಾರ, ಕಸ್ತೂರಿ ರಂಗನ್ ವರದಿಗಾಗಿ ಹೊಸ ಸೂತ್ರ ರಚನೆ, ಹೊಸ ತಾಲೂಕುಗಳ ಅಭಿವೃದ್ಧಿ, ಉಡುಪಿ ಆಗುಂಬೆ ಹೆದ್ದಾರಿ ನವೀಕರಣ, ನದಿ ಮೂಲಗಳ ರಕ್ಷಣೆ, ಪ್ರಕೃತಿ ಸಹಜ ನದಿ ಜೋಡಣೆಗೆ ಮಹತ್ವ, ಚಿಕ್ಕಮಗಳೂರು-ಮಡಿಕೇರಿ ಹಾಗೂ ಸೂಕ್ತ ಪ್ರದೇಶಕ್ಕೆ ರೈಲ್ವೆ ಪಥ ವಿಸ್ತರಣೆ, ಜಾತಿ ಮತ ಭೇದ ಇಲ್ಲದೆ ಅಸ್ಪೃಶ್ಯತೆ ವಿರುದ್ಧ ಸಂಘಟನೆ ಮಾಡುತ್ತಾ ಶೋಷಿತರ ಕೂಗಾಗಿದ್ದ ಕ್ರಾಂತಿಕಾರಿ ಸಾಮಾಜಿಕ ಸಮಾನತೆಯ ಹರಿಕಾರ ನಾರಾಯಣ ಗುರುಗಳ ಹೆಸರಲ್ಲಿ ವಿಶ್ವವಿದ್ಯಾನಿಲಯ ನಿರ್ಮಾಣ ಆಗಬೇಕು ಎಂಬ ಇನ್ನಿತರ ಅನೇಕ ವಿಷಯಗಳನ್ನು ಇದೇ ವೇಳೆ ಸರ್ಕಾರದ ಮುಂದಿಟ್ಟರು. +ಒಕ್ಕೂಟದ ಸಂಚಾಲಕರಾದ ಅನಿಲ್ ಹೊಸಕೊಪ್ಪ ಮಾತನಾಡಿ, ಜನಪರ ಒಕ್ಕೂಟದ ಮೂಲಕ ಏಳು ಜಿಲ್ಲೆಗಳನ್ನು ಒಳಗೊಂಡ ಮಲೆನಾಡು ಕರಾವಳಿ ಪ್ರದೇಶದ ಸಮಸ್ಯೆಗಳನ್ನು ಹೋರಾಟಗಳ ಮೂಲಕ ಸರ್ಕಾರದ ಮುಂದಿಡುವುದು ನಮ್ಮ ಮುಖ್ಯ ಉದ್ದೇಶ ವಾಗಿದೆ. ಕರಾವಳಿ ಮಲೆನಾಡು ಪಶ್ಚಿಮ ಘಟ್ಟದಲ್ಲಿ ರೈತರು, ಸಾರ್ವಜನಿಕರು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮತ್ತಷ್ಟು ಸದೃಢರಾಗಬೇಕಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಗಳ ಕಣ್ಣು ತೆರೆಸುಲು ನಾವು ಶ್ರಮಿಸುತ್ತಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ತೇಜ್ ಶೆಟ್ಟಿ, ಮಹೇಶ್ ಶಿರಸಿ, ಸಂತೋಷ್ ಶೆಟ್ಟಿ, ಅಬ್ಬಾಸ್ ಕೆಗ್ಗ, ಅಬ್ಬಾಸ್ ಧರ್ಮಸ್ಥಳ, ನವೀನ್ ಮಾವಿನಕಟ್ಟೆ, ಕಿರಣ್ ಮಲ್ನಾಡ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_328_1.txt b/eesanje/url_46_328_1.txt new file mode 100644 index 0000000000000000000000000000000000000000..c3db4737dcb430084c29f53f76acc67e624eb860 --- /dev/null +++ b/eesanje/url_46_328_1.txt @@ -0,0 +1,14 @@ +ಶೋಭಾಗೆ ಬಿಜೆಪಿ ಅಧ್ಯಕ್ಷ ಪಟ್ಟ, ಕಮಲಪಾಳಯದಲ್ಲಿ ಗರಿಗೆದರಿದ ಚಟುವಟಿಕೆ +ಬೆಂಗಳೂರು,ಅ.19- ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಲಿಂಗಾಯತ ಮತ್ತು ಒಕ್ಕಲಿಗ ಜೊತೆ ಹಿಂದುಳಿದ ವರ್ಗಗಳ ಸಮೀಕರಣದೊಂದಿಗೆ ಆಯಕಟ್ಟಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂಬ ಮಾತುಗಳು ಬಿಜೆಪಿ ಪಡಸಾಲೆಯಲ್ಲಿ ಕೇಳಿಬರುತ್ತಿದೆ. +ಇದರ ಮೊದಲ ಭಾಗವಾಗಿ ಲೋಕಸಭಾ ಚುನಾವಣೆ ಸೇರಿದಂತೆ ಸಾಲು ಸಾಲು ಚುನಾವಣೆ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಎದುರಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆಗೆ ಮುಂದಾಗಿದ್ದು, ಜಾತಿ ಲೆಕ್ಕಾಚಾರವನ್ನು ಹಾಕಿಕೊಂಡಿದೆ. +ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಕರಂದ್ಲಾಜೆ ಅವರನ್ನು ನೇಮಿಸಲು ಪಕ್ಷದ ಹೈಕಮಾಂಡ್ ಆಸಕ್ತಿ ತೋರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್‍ವೈ ಆಸೆಯಾಗಿತ್ತು. +ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್‍ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು. +ಪಕ್ಷ ಸಂಘಟನೆ ದೃಷ್ಟಿಯಿಂದ ಈ ಹುದ್ದೆಗೆ ವಿಜಯೇಂದ್ರ ಹೆಸರನ್ನೇ ಪರಿಗಣಿಸಿ ಎಂದು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಬಿಎಸ್‍ವೈ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ನಾನಾ ಆಯಾಮಗಳಿಂದ ಪರಾಮರ್ಶೆ ನಡೆಸಿದ ಹೈಕಮಾಂಡ್, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್‍ವೈ ಬೆಂಬಲಿಸುತ್ತಾರೆ. +ಇತರ ನಾಯಕರೂ ನಿರಾಕರಣೆ ಮಾಡುವುದಿಲ್ಲ ಎಂಬ ಅಂಶವನ್ನು ಹೈಕಮಾಂಡ್ ಕಂಡುಕೊಂಡಿದೆ. ಈ ನಡುವೆ ಶೋಭಾ ಕರಂದ್ಲಾಜೆ ನಿಯೋಜನೆ ಸಂಬಂಧದಲ್ಲಿ ಬಿಎಸ್‍ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. +ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಭವಿಷ್ಯತ್ತಿನಲ್ಲಿ ಆದರೂ ಪ್ರತಿಪಕ್ಷದ ನಾಯಕನ ಆಯ್ಕೆಗೆ ವಿಳಂಬವಾಗಲಿದೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಚೇತರಿಸಿಕೊಂಡ ಬಳಿಕ ಈ ನಿಟ್ಟಿನಲ್ಲಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. +ಸಾಕಲಾಗದೆ ಕಂದನನ್ನು ಕೆರೆಗೆ ಎಸೆದ ಕರುಣೆಯಿಲ್ಲದ ತಂದೆ +ಜಾತಿ ಸಮೀಕರಣ: ಪ್ರತಿ ಬಾರಿಯೂ ಬಿಜೆಪಿಯಲ್ಲಿ ಜಾತಿ ರಾಜಕಾರಣವೂ ಮುಖ್ಯವಾಗುತ್ತದೆ. ಈ ಬಾರಿಯೂ ಸಹ ಪ್ರಬಲ ಸಮುದಾಯ ಲಿಂಗಾಯತರಿಗೆ ಒಂದು ಹುದ್ದೆಯನ್ನು ನೀಡಲೇಬೇಕು. ಇನ್ನೊಂದು ಹುದ್ದೆಯನ್ನುಒಕ್ಕಲಿಗರಿಗೆ ನೀಡುವ ಚಿಂತನೆ ನಡೆದಿದೆ. ರಾಜ್ಯದಲ್ಲಿ ನಾಲ್ಕು ಜನ ಕೇಂದ್ರ ಸಚಿವರಿದ್ದು, ಆ ಪೈಕಿ ಒಕ್ಕಲಿಗ ಸಮುದಾಯದ ಮಹಿಳಾ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡುವ ಯೋಜನೆಗೆ ಪಕ್ಷ ಮುಂದಾಗಿದೆ ಎಂದು ಹೇಳಲಾಗಿದೆ. +ಇನ್ನೂ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಮತ್ತು ಚಾಮರಾಜನಗರದಲ್ಲಿ ಸ್ಪರ್ಧೆ ಮಾಡುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಸವಾಲಿಗೆ ತೆಗೆದು ಕೊಂಡಿದದ್ದ ವಿ.ಸೋಮಣ್ಣ, ಚುನಾವಣಾ ಸೋಲಿನ ಬಳಿಕ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಹೈಕಮಾಂಡ್ ಮುಂದೆ ತಮ್ಮ ಇಂಗಿತ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೋಮಣ್ಣ ಹೆಸರು ಕೂಡ ಪ್ರಬಲವಾಗಿ ಕೇಳಿಬರುತ್ತಿದೆ. +ವಿಧಾನಸಭೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಆರ್.ಅಶೋಕ್ ಹೆಸರುಗಳು ಕೇಳಿಬಂದಿವೆ. ಆದರೆ ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡುವ ನಿರ್ಧಾರವಾಗಿರುವ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯಗ್ನಾಳ್‍ಗೆ ಅವಕಾಶ ಸಿಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. +ಹಿಂದುತ್ವದ ಫೈರ್ ಬ್ರ್ಯಾಂಡ್ ಆಗಿರುವ ಯತ್ನಾಳ್ ಸದನದಲ್ಲಿ ಗಟ್ಟಿಯಾಗಿ ಸರ್ಕಾರವನ್ನು ಟೀಕಿಸಿ ವಾಗ್ದಾಳಿ ನಡೆಸುವ ಸಾಮಥ್ರ್ಯ ಹೊಂದಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರನ್ನು ಪರಿಗಣಿಸಲಾಗಿದೆ. ಆದರೆ ಅದಕ್ಕೆ ಯಡಿಯೂರಪ್ಪ ಒಪ್ಪದೆ ಇದ್ದಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ತಾತ್ಕಾಲಿಕವಾಗಿ ಚುನಾವಣೆ ಮುಗಿಯುವವರೆಗೂ ನೇಮಕ ಮಾಡಲಾಗುತ್ತದೆ ಅಥವಾ ಬೇರೆ ಸಮುದಾಯದ ನಾಯಕರಿಗೂ ಅವಕಾಶ ನೀಡುವ ಸಾಧ್ಯತೆ ಇದೆ. +ಲಿಂಗಾಯತ ಸಮುದಾಯಕ್ಕೆ ಕೈತಪ್ಪಿದರೆ ಶಾಸಕ ಸುನೀಲ್ ಕುಮಾರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಒಕ್ಕಲಿಗರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ ನಂತರ ಪ್ರತಿಪಕ್ಷ ನಾಯಕನ ಸ್ಥಾನವನ್ನೂ ಅದೇ ಸಮುದಾಯಕ್ಕೆ ನೀಡುವ ಸಾಧ್ಯತೆ ಕಡಿಮೆ. ಆದರೆ ದೆಹಲಿಯಲ್ಲಿ ನಡೆಯುವ ವಿದ್ಯಮಾನಗಳ ಮೇಲೆ ಇದೆಲ್ಲಾ ನಿರ್ಧಾರವಾಗಬೇಕಿರುವುದರಿಂದ ನೇಮಕವಾಗುವವರೆಗೂ ಬಿಜೆಪಿ ನಾಯಕರಿಗೆ ಕಾದುನೋಡದೆ ಬೇರೆ ಮಾರ್ಗವಿಲ್ಲದಂತಾಗಿದೆ. \ No newline at end of file diff --git a/eesanje/url_46_328_10.txt b/eesanje/url_46_328_10.txt new file mode 100644 index 0000000000000000000000000000000000000000..689659251bce627f7c9cf1fd09848207e6393094 --- /dev/null +++ b/eesanje/url_46_328_10.txt @@ -0,0 +1,7 @@ +ಸಿಬಿಐ ತನಿಖೆ ಅಗತ್ಯತೆ ಕುರಿತು ಐಟಿ ಅಧಿಕಾರಿಗಳೇ ನಿರ್ಧರಿಸುತ್ತಾರೆ : ಪರಮೇಶ್ವರ್ +ಬೆಂಗಳೂರು, ಅ.18- ಶೋಧ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಹಣ ಅಥವಾ ಇನ್ಯಾವುದೇ ಮಾಹಿತಿಯ ಬಗ್ಗೆ ಸಿಬಿಐ ತನಿಖೆ ಅಗತ್ಯವಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ನಿರ್ಧರಿಸುತ್ತಾರೆ. ಯಾರನ್ನೂ ಹೇಳಿ-ಕೇಳಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆದಾಯ ತೆರಿಗೆ ಅಧಿಕಾರಿಗಳು ಹಣ ಯಾರಿಗೆ ಸಂಬಂಧಪಟ್ಟಿದೆ ಎಂಬುದನ್ನು ಅಗತ್ಯ ಸಂದರ್ಭದಲ್ಲಿ ಬಹಿರಂಗ ಮಾಡುತ್ತಾರೆ. ಬಹುಶಃ ಸದ್ಯದಲ್ಲಿ ತನಿಖೆ ನಡೆಯುತ್ತಿರುವುದರಿಂದ ಈವರೆಗೂ ಮಾಹಿತಿ ಹೊರ ಬಂದಿಲ್ಲ ಇರಬಹುದು ಎಂದರು. ಹಲವಾರು ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಅಗತ್ಯ ಮಾಹಿತಿ ನೀಡುತ್ತಾರೆ. ಅಧಿಕೃತ ಮಾಹಿತಿ ಪ್ರಕಟವಾಗದ ಹೊರತು ಹಣ ಅವರಿಗೆ ಸೇರಿದೆ, ಇವರಿಗೆ ಸೇರಿದೆ ಎಂದು ಊಹೆ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. +ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ನಿರಾಧಾರ, ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೂ ಈ ರೀತಿಯ ಬೆಳವಣಿಗೆಗಳಾಗಿರಲಿಲ್ಲವೇ ಎಂದು ಪ್ರಶ್ನಿಸಿದರು. +ಪ್ರಕರಣದಲ್ಲಿ ಗಂಭೀರತೆ ಇದೆ ಎಂದಾದರೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಸಿಬಿಐ ಸೇರಿದಂತೆ ಅಗತ್ಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಯಾರನ್ನೂ ಹೇಳಿ-ಕೇಳಿ ಮಾಡುವುದಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್-ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯ ಬಗ್ಗೆ ತಮಗೆ ಮಾಹಿತಿ ಇಲ್ಲ. ವಿದೇಶ ಪ್ರವಾಸಕ್ಕೆ ತೆರಳಿದ್ದ ತಾವು ನಿನ್ನೆ ರಾತ್ರಿಯಷ್ಟೆ ಬಂದಿದ್ದೇನೆ. ಯಾವ ವಿಚಾರಗಳು ಗೊತ್ತಿಲ್ಲ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ನಾಯಕರು ಭೇಟಿ ಮಾಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಸ್ಪಷ್ಟಪಡಿಸಿದರು. +ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..? +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇರಬೇಕು. ಒಂದು ವೇಳೆ ಆಪರೇಷ್ ಕಮಲ ನಡೆಯುತ್ತಿದ್ದರೆ ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಜೊತೆಗೆ ಅಗತ್ಯ ಕ್ರಮ ಕೈಗೊಳ್ಳತ್ತೇವೆ ಎಂದಿದ್ದಾರೆ. ಹಲವಾರು ಸಂದರ್ಭದಲ್ಲಿ ಶಾಸಕ ಸ್ನೇಹಿತರು ಸಿಂಗಪೂರ್, ಮಲೇಶಿಯಾ ಸೇರಿದಂತೆ ವಿವಿಧ ಕಡೆ ಪ್ರವಾಸಕ್ಕೆ ಹೋಗಿದ್ದನ್ನು ನೋಡಿದ್ದೇವೆ. ಅದೇ ರೀತಿಯ ಪ್ರವಾಸವನ್ನು ಸತೀಶ್ ಜಾರಕಿಹೊಳಿ ಮತ್ತು ಸ್ನೇಹಿತರು ಪ್ರವಾಸಕ್ಕೆ ಹೋಗಬಹುದು. ಅದಕ್ಕೆ ವಿಶೇಷ ಅರ್ಥ ಕಲ್ಪಸಬೇಕಿಲ್ಲ ಎಂದರು. \ No newline at end of file diff --git a/eesanje/url_46_328_11.txt b/eesanje/url_46_328_11.txt new file mode 100644 index 0000000000000000000000000000000000000000..17789d775c48fc1c66f6975ae0b40279d1f2309b --- /dev/null +++ b/eesanje/url_46_328_11.txt @@ -0,0 +1,7 @@ +ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವ ಎಂ.ಬಿ.ಪಾಟೀಲ್ +ಬೆಂಗಳೂರು,ಅ.18- ಇಲ್ಲಿನ ಕೆಂಗೇರಿ ಸಮೀಪದ ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್‍ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. +ಈ ಬಗ್ಗೆ ಮಾತನಾಡಿದ ಸಚಿವರು, ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. ಆದರೆ, ಬೆಂಗಳೂರಿನಲ್ಲಿ ನಮ್ಮ ಮನೆಗೆ ಹತ್ತಿರದಲ್ಲಿ ಇನ್ನೂ ಮೆಟ್ರೋ ಬಂದಿಲ್ಲ. ಹೀಗಾಗಿ, ನಮ್ಮ ರಾಜಧಾನಿಯಲ್ಲಿ ಈವರೆಗೆ ಮೆಟ್ರೋದಲ್ಲಿ ಸಂಚರಿಸುವ ಅವಕಾಶ ಸಿಕ್ಕಿರಲಿಲ್ಲ. ಇವತ್ತು ವಾರದ ದಿನವಾದ್ದರಿಂದ ಸಂಚಾರ ದಟ್ಟಣೆ ಇರುತ್ತದೆ ಎನ್ನುವುದು ಗೊತ್ತಿತ್ತು. ಹೀಗಾಗಿ, ಮೊದಲೇ ನಮ್ಮ ಮೆಟ್ರೋದಲ್ಲಿ ಸಂಚರಿಸಲು ನಿರ್ಧರಿಸಿದ್ದೆ. ಇದರಂತೆ ವಿಧಾನಸೌಧದಿಂದ ಮೈಲಸಂದ್ರಕ್ಕೆ ಕೇವಲ 30 ನಿಮಿಷಗಳಲ್ಲಿ ತಲುಪಿದೆ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಗರದ ಜೀವನಾಡಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. +ಪ್ರಯಾಣದುದ್ದಕ್ಕೂ ಸಹ ಪ್ರಯಾಣಿಕರ ಜೊತೆ ಮಾತನಾಡಿಕೊಂಡು, ನಮ್ಮ ಮೆಟ್ರೋದ ಬಗ್ಗೆ ಕೇಳಿಕೊಂಡು ಬಂದೆ. ಪ್ರತಿಯೊಬ್ಬರೂ ಇದರಿಂದ ಸುಗಮ ಸಂಚಾರ ಸಾಧ್ಯವಾಗಿದೆ ಎಂದು ಹೇಳಿದರು. ಸಂಚಾರ ದಟ್ಟಣೆಯ ಸಮಸ್ಯೆ ಆಧುನಿಕ ನಗರಗಳ ಭಾಗವಾಗಿ ಬಿಟ್ಟಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ. +ಶಹನವಾಜ್ ಹುಸೇನ್ ವಿರುದ್ಧದ ಸಮನ್ಸ್ ಗೆ ವಿಶೇಷ ಕೋರ್ಟ್ ತಡೆ +ಇದರಿಂದ ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಜೊತೆಗೆ ಇದು ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಅಲ್ಲದೆ, ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದು ಪಾಟೀಲ ವಿವರಿಸಿದರು. +ಕೆಂಗೇರಿಯಲ್ಲಿ ಇಳಿದ ಅವರು, ಅಲ್ಲಿಂದ ಮುಂದಕ್ಕೆ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯ ಕಾರ್ಯಕ್ರಮಕ್ಕೆ ತೆರಳಿದರು. \ No newline at end of file diff --git a/eesanje/url_46_328_12.txt b/eesanje/url_46_328_12.txt new file mode 100644 index 0000000000000000000000000000000000000000..14155335dbd826b67bbe3e20af4d92eb065428b4 --- /dev/null +++ b/eesanje/url_46_328_12.txt @@ -0,0 +1,6 @@ +“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ” +ಬೆಂಗಳೂರು,ಅ.18-ಕಾಂಗ್ರೆಸ್ ಬಂದಿದೆ ಕಲೆಕ್ಷನ್ ಮಾಡಿದೆ. ಕಾಂಗ್ರೆಸ್ ಬಂದಿದೆ ಕಮಿಷನ್ ತಿಂದಿದೆ. ಕಾಂಗ್ರೆಸ್ ಬಂದಿದೆ ಲೂಟಿ ಜೋರಾಗಿದೆ. ಕಾಂಗ್ರೆಸ್ ಬಂದಿದೆ ಹೈಕಮಾಂಡ್ ಜೇಬು ತುಂಬಿದೆ. ಕಾಂಗ್ರೆಸ್ ಬಂದಿದೆ ಕರ್ನಾಟಕ ದಿವಾಳಿ ಆಗಿದೆ ಎಂದು ಪ್ರತಿಪಕ್ಷ ಬಿಜೆಪಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕರನ್ನು ಕೆಣಕಿದೆ. +ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಜ್ಯದ ಜನತೆಯ ಕಿವಿ ಮೇಲೆ ಕಲರ್ ಕಲರ್ ಹೂವಿಟ್ಟು, ನಂಗೂ ಫ್ರೀ, ನಿಂಗೂ ಫ್ರೀ ಎಂದು ಬೊಗಳೆ ಬಿಟ್ಟಿದ್ದ ಸಿದ್ದರಾಮಯ್ಯ ಅವರೇ ಇಲ್ಲಿ ನೋಡಿ, ನಿಮ್ಮ ಸರ್ಕಾರದ ಅಸಲಿ ತಾಕತ್ತು ಏನೆಂಬುದು ತಿಳಿಯುತ್ತದೆ. +ನೇಕಾರರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆಯನ್ನು ವಾಪಸ್ ಪಡೆದಿದ್ದೀರಿ, ಈಗ ನೇಕಾರರಿಗೆ ಉಚಿತ ವಿದ್ಯುತ್ ಹಾಗಿರಲಿ, ಕನಿಷ್ಟ ಒಂದು ತಾಸು ವಿದ್ಯುತ್ ನೀಡಲು ನಿಮ್ಮ ಸರ್ಕಾರಕ್ಕೆ ಯೋಗ್ಯತೆಯೂ ಇಲ್ಲ, ಸಾಮಥ್ರ್ಯವೂ ಇಲ್ಲ. ಅಂತಹ ಅಸಮರ್ಥ ಸರ್ಕಾರ ನಿಮ್ಮದು ಎಂದು ಆರೋಪ ಮಾಡಿದೆ. +ಮಲಮಗನನ್ನು ಕೊಂದು ಶವವನ್ನು ತೊಟ್ಟಿಯಲ್ಲಿ ಬಚ್ಚಿಟ್ಟಿದ್ದ ಮಲತಾಯಿ +ಒಟ್ಟಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿರುವ ಕಿರಿಕ್ ದೊಡ್ಡದಾಗುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಗೆ ಇದೇ ಅಸ್ತ್ರವನ್ನು ದೊಡ್ಡದಾಗಿ ಬಳಸಿಕೊಳ್ಳಲು ಬಿಜೆಪಿ ರಾಜ್ಯ ನಾಯಕರು ಪ್ಲ್ಯಾನ್ ಮಾಡಿದಂತೆ ತೋರುತ್ತಿದೆ. ಹೀಗೆ ಕಾಂಗ್ರೆಸ್ ಬಿಜೆಪಿ ನಡುವೆ ನಡೆಯುತ್ತಿರುವ ಐಟಿ ಜಟಾಪಟಿ ಸದ್ಯಕ್ಕೆ ಮುಗಿಯುವ ಯಾವುದೇ ಸಾಧ್ಯತೆ ಇಲ್ಲ. ಅಷ್ಟೇ ಅಲ್ಲ ಗ್ಯಾರಂಟಿ ವಾರ್ ಕೂಡ ಮುಂದುವರಿಯುವುದು ಗ್ಯಾರಂಟಿಯಾಗಿದೆ. \ No newline at end of file diff --git a/eesanje/url_46_328_2.txt b/eesanje/url_46_328_2.txt new file mode 100644 index 0000000000000000000000000000000000000000..992d0bf25b24c1727fe2566c7575e259da4686be --- /dev/null +++ b/eesanje/url_46_328_2.txt @@ -0,0 +1,18 @@ +ಸಿಎಂ ಹುದ್ದೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ : +ಬೆಳಗಾವಿ, ಅ.19- ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಕ್ಯೂಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಕಕ್ಕೆ ಜನ ಐದು ವರ್ಷ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದಾರೆ. +ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಬಹಷ್ಟು ಜನರಿಗೆ ಬಯಕೆಗಳಿರುತ್ತವೆ. ಅವರ ಆಸೆ, ವಿಚಾರಗಳು ಇರುತ್ತವೆ. ಆದರೆ ನಮ್ಮ ಆದ್ಯತೆ ಉತ್ತಮ ಆಡಳಿತ ನೀಡುವತ್ತ ಇದೆ. ಅಧಿಕಾರದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ, ಆ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. +ಈ ವರ್ಷ ಮಳೆಯ ಕೊರತೆಯಾಗಿದೆ. ಒಂದು ದಿನದ ಮಳೆ ಕೊರತೆಯಿಂದ ಸರ್ಕಾರಕ್ಕೆ ಒಂದು ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತದೆ. ಈ ವರ್ಷ 60-70 ದಿನಗಳು ಮಾತ್ರ ಮಳೆಯಾಗಿದೆ. ವಿದ್ಯುತ್ ಅನ್ನು 6ರಿಂದ 7 ರೂಪಾಯಿವರೆಗೂ ಖರೀದಿ ಮಾಡಿ, ರೈತರಿಗೆ ವಿನಾಯಿತಿ ರೂಪದಲ್ಲಿ ಪೂರೈಕೆ ಮಾಡಲಾಗುತ್ತಿದೆ. ರೈತರು ಬಳಸಿದ ವಿದ್ಯುತ್‍ಗೆ ಸರ್ಕಾರವೇ ಶುಲ್ಕ ಭರಿಸುತ್ತಿದೆ ಎಂದರು. +ಹಿಂದೆ ನಾವು ಅಧಿಕಾರದಲ್ಲಿದ್ದಾಗ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ವಿದ್ಯುತ್ ಉತ್ಪಾದನೆಯನ್ನು ನಿರ್ಲಕ್ಷ್ಯಿಸಿತ್ತು. ಹಾಗಾಗಿ ಸಮಸ್ಯೆ ಶುರುವಾಗಿದೆ. ನಾವು ಹಿಂದಿನ ಸರ್ಕಾರವನ್ನು ಟೀಕಿಸುತ್ತಾ ಕುಳಿತುಕೊಳ್ಳುವುದಿಲ್ಲ. ಸರ್ಕಾರ ರಚನೆಯಾದ ದಿನದಿಂದಲೇ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಜೊತೆ ಪಾವಗಡದ ಸೌರಶಕ್ತಿ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೊಸದಾಗಿ ವಿದ್ಯುತ್ ಉತ್ಪಾದನೆ ಕುರಿತು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು. +ರೈತರಿಗೆ ಆರು ಗಂಟೆ ವಿದ್ಯುತ್ ನೀಡುತ್ತಿದ್ದೇವೆ, ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಏಳು ಗಂಟೆ ಸಬರಾಜು ಮಾಡಲಾಗುತ್ತಿತ್ತು. ಪ್ರಸ್ತುತ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಗೆ ವ್ಯತ್ಯಾಸವಾಗಿದೆ ಎಂದರು. ನೀರಾವರಿ ಪ್ರದೇಶದಲ್ಲಿ ಕೊನೆಭಾಗಕ್ಕೂ ನೀರು ತಲುಪಿಸಲು ಜಾಗೃತಿ ಮೂಡಿಸಬೇಕಿದೆ. ಕೆಲವು ಭಾಗಗಳಲ್ಲಿ ಪೈಪ್ ಹಾಕಿಕೊಂಡು 10-20 ಕಿಲೋಮೀಟರ್ ವರೆಗೂ ನೀರು ಹರಿಸಿಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಭಾರವಾಗುತ್ತಿದೆ ಎಂದರು. +ತಾವು ನಿನ್ನೆ ನೀರಾವರಿ ಬಳಕೆದಾರರ ಸಂಘಗಳ ಹಾಗೂ ಸಹಕಾರ ಸಂಘಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಅವುಗಳನ್ನು ಮತ್ತೆ ಸಕ್ರಿಯಗೊಳಿಸುವ ಪ್ರಯತ್ನ ನಡೆಸಲಾಗಿದೆ ಎಂದರು. ಎತ್ತಿನಹೊಳೆ ಯೋಜನೆಯಲ್ಲಿ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರಮ ಕೋಲಾರದವರೆಗೂ ನೀರು ಹರಿಸಬೇಕಿದೆ. ಮಧ್ಯದಲ್ಲಿ ಪಂಪ್‍ಸೆಟ್ ಹಾಕಿಕೊಂಡು ನೀರು ಎಳೆದುಕೊಂಡರೆ ಕೊನೆಭಾಗಕ್ಕೆ ನೀರು ಹೋಗುವುದಿಲ್ಲ. ಅದಕ್ಕಾಗಿ ಕಾಲುವೆ ಮಧ್ಯದಲ್ಲಿ ನೀರು ತೆಗೆಯದಂತೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದರು. +ನೀರು ಬಳಕೆದಾರರ ಹಾಗೂ ಸಹಕಾರ ಸಂಘಗಳ ಪದಾಧಿಕಾರಿಗಳು, ರೈತರಿಗೆ, ಇಂಜಿನಿಯರ್‍ಗಳಿಗೆ ಧಾರವಾಡದ ವಾಲ್ಮಿ ಸಂಸ್ಥೆಯಿಂದ ತರಬೇತಿ ಕೊಡಿಸಲು ನಿರ್ಧರಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳು ಜಿಲ್ಲೆಗಳಿಗೆ ಭೇಟಿ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು. ಬೆಳಗಾವಿಯಲ್ಲಿ ಉತ್ತಮ, ರೈತ ಪರ ಕಾಳಜಿ, ಬದ್ಧತೆ ಇರುವ ಅಧಿಕಾರಿಗಳಿದ್ದಾರೆ. ಏನು ಸಮಸ್ಯೆ ಇಲ್ಲ ಎಂದರು. +ಕಾಲುವೆ ಮಧ್ಯದಲ್ಲಿ ನೀರು ಪಂಪ್ ಮಾಡುವುದಕ್ಕೆ ಶುಲ್ಕ ನಿಗದಿ ಮಾಡುವ ಪದ್ಧತಿಯನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೊಳಿಸಿದೆ. ಅದನ್ನೂ ಅಧ್ಯಯನ ನಡೆಸಲಾಗುತ್ತಿದೆ. ನೀರಾವರಿ ಯೋಜನೆಗೆ ಬಳಕೆ ಮಾಡುವ ವಿದ್ಯುತ್‍ಗೆ ಸಾವಿರಾರು ಕೋಟಿ ರೂಪಾಯಿ ಶುಲ್ಕ ಪಾವತಿಸಬೇಕಿದೆ. ಪಂಪಿಂಗ್ ಮೂಲಕ ನೀರು ತುಂಬಿಸುವ ಕೆರೆಗಳಲ್ಲಿ ಮೀನು ಸಾಗಾಣಿಕೆ ಮಾಡುವಂತೆ ಸಂಬಂಧ ಪಟ್ಟ ಸಚಿವರಿಗೆ ಸೂಚಿಸಿದ್ದೇನೆ. ಮೀನು ಸಾಗಾಣಿಕೆಯಿಂದ ಬರುವ ಆದಾಯವನ್ನು ಸರ್ಕಾರಕ್ಕೆ ಪಾವತಿಸಬೇಕು, ಅದರಿಂದ ವಿದ್ಯುತ್ ಶುಲ್ಕ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. +ಬೆಳಗಾವಿ ಜಿಲ್ಲೆಯೊಂದರಲ್ಲೇ ಎರಡು ಸಾವಿರ ಕೋಟಿ ರೂಪಾಯಿ ವಿದ್ಯುತ್ ಶುಲ್ಕ ಬಾಕಿ ಇದೆ. ಇದು ಪಾವತಿಯಾಗದಿದ್ದರೆ ಕಷ್ಟವಾಗುತ್ತದೆ. ಏಳು ರೂಪಾಯಿಗೆ ವಿದ್ಯುತ್ ಖರೀದಿಸಿ, ಎರಡು-ಮೂರು ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ನಷ್ಟವನ್ನು ಭರಿಸಲು ಮೀನುಗಾರಿಕೆ ಆದಾಯವನ್ನು ಆಶ್ರಯಿಸಲಾಗುವುದು. ಮಹಾರಾಷ್ಟ್ರ ಮಾದರಿಯನ್ನು ಅಧ್ಯಯನ ನಡೆಸಲಾಗುತ್ತಿದೆ, ವರದಿ ನೀಡಲು ಸೂಚಿಸಿದ್ದೇನೆ. ಒಳ್ಳೆಯ ಅಭ್ಯಾಸಗಳನ್ನು ಜಾರಿಗೆ ತರುವುದರಲ್ಲಿ ತಪ್ಪೇನು ಎಂದರು. +ಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು +ಕಿತ್ತೂರು ಕರ್ನಾಟಕ ಭಾಗದ ಅದೃಷ್ಟ ಚೆನ್ನಾಗಿದೆ. ಮಲ್ಲಪ್ರಭಾ ಹೊರತು ಪಡಿಸಿ ಉಳಿದ ಎಲ್ಲಾ ಅಣೆಕಟ್ಟೆಗಳು, ಕೆರೆ-ಕುಂಟೆಗಳು ತುಂಬಿವೆ. ಮಳೆ ಇರಲಿ, ಇಲ್ಲದಿರಲಿ ಈಭಾಗದಲ್ಲಿ ಸಮಸ್ಯೆಗಳಿಲ್ಲ. ಹಳೆ ಮೈಸೂರು ಭಾಗವನ್ನೂ ದೇವರೆ ಕಾಪಾಡಬೇಕು ಎಂದರು. +ಮಹಾರಾಷ್ಟ್ರ ಚಂದಗಡದಲ್ಲಿ ಕಚೇರಿ ತೆರೆದು ಗಡಿ ಭಾಗದ ಮರಾಠಿಗರಿಗೆ ಆರೋಗ್ಯ ಯೋಜನೆ ಜಾರಿಗೆ ತರಲು ನೆರೆಯ ಸರ್ಕಾರ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಸೂಕ್ಷ್ಮ ವಿಚಾರ. ವೈಯಕ್ತಿಕವಾಗಿ ಪ್ರತಿಕ್ರಿಯಿಸುವುದಿಲ್ಲ. ಅನಗತ್ಯ ವಿವಾದಗಳು ಸೃಷ್ಟಿಯಾಗಬಾರದು. ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ ಬಳಿಕ ಸರ್ಕಾರ ತನ್ನ ನಿಲುವು ಪ್ರಕಟಿಸಲಿದೆ ಎಂದರು. +ತಮ್ಮ ವಿರುದ್ಧ ಸಿಬಿಐ ತನಿಖೆಗೆ ಆದೇಶಿರುವ ಪ್ರಕರಣದ ವಿಚಾರಣೆಯಲ್ಲಿ ಏನಾಗಿದೆ ಎಂದು ತಮಗೆ ಗೋತ್ತಿಲ್ಲ. ಎಫ್‍ಐಆರ್ ಹಾಕಿದ್ದು ಸರಿಯಿಲ್ಲ, ತನಿಖೆ ಮಾಡಬಾರದು. ಎಫ್‍ಐಆರ್‍ನಲ್ಲಿ ಲೋಪಗಳಿವೆ ಎಂದು ನಮ್ಮ ವಕೀಲರು ಅರ್ಜಿ ಹಾಕಿದ್ದರು. ಅದೇನಾಗಿಯೇ ಮಾಹಿತಿ ಇಲ್ಲ ಎಂದರು. +ಹೊಸೂರಿನಿಂದ ಬೆಂಗಳೂರಿನ ಬೊಮ್ಮಸಂದ್ರದವರೆಗೂ ಮೇಟ್ರೋ ಯೋಜನೆ ಅನುಷ್ಠಾನಗೊಳಿಸಲು ತಮಿಳುನಾಡು ಸರ್ಕಾರ ಟೆಂಡರ್ ಕರೆದಿಲ್ಲ. ಎರಡು ರಾಜ್ಯಗಳ ನಡುವಿನ ಗಡಿಭಾಗದಲ್ಲಿ ಹೆಚ್ಚು ಬೆಳವಣಿಗೆಗಳಾಗಿವೆ. ನಾನೇ ಬಿಬಿಎಂಪಿ ಸಚಿವನಿದ್ದೇನೆ, ಟೆಂಡರ್ ಕರೆದಿಲ್ಲ. ಆದರೆ ಮೇಟ್ರೋ ಯೋಜನೆಗೆ ಕಾರ್ಯಸಾಧುತ್ವದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಮದರು. +ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚಾಲೆಂಜ್ +ಕರ್ನಾಟಕದ ಜನ, ಹೂಸೂರಿಗೆ ಹೋಗಿ, ಅಲ್ಲಿನವರು ಇಲ್ಲಿಗೆ ಬಂದು ಕೆಲ ಮಾಡುತ್ತಾರೆ. ಜನರಿಗೆ ಅನುಕೂಲವಾಗುವಂತೆ ಮೆಟ್ರೋ ಯೋಜನೆ ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮನವಿ ಮಾಡಿತ್ತು. ಯೋಜನೆ ಜಾರಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಕೇಂದ್ರ ಸರ್ಕಾರ ಮೇಟ್ರೋ ಯೋಜನೆಗೆ ಶೇ.50ರಷ್ಟು ಅನುದಾನ ನೀಡುತ್ತಿದೆ ಎಂದ ಅವರು, ಮಹಾರಾಷ್ಟ್ರದ ಬಸ್‍ಗಳು ಕರ್ನಾಟಕಕ್ಕೆ ಬರಬಾರದು ಎಂದು ಹೇಳಲು ಸಾಧ್ಯವೇ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ರೈಲು ಸಂಪರ್ಕಗಳಿಲ್ಲವೇ ಎಂದು ಪ್ರಶ್ನಿಸಿದರು. +ಮಹಾರಾಷ್ಟ್ರ ಸರ್ಕಾರ ಕುಡಿಯುವ ನೀರು ಪೂರೈಸಲು ದೂದ್‍ಗಂಗಾ ನದಿ ತಿರುವ ಯೋಜನೆ ಕೈಗೆತ್ತಿಕೊಂಡಿದು ಗೋತ್ತಿಲ್ಲ. ಬೆಳಗಾವಿ ಭಾಗಕ್ಕೆ ನೀರೆ ಬರುತ್ತಿಲ್ಲ ಎಂಬ ವರದಿಯ ಬಗ್ಗೆ ತಂತ್ರಜ್ಞರ ಜೊತೆ ಚರ್ಚೆ ಮಾಡಿ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_328_3.txt b/eesanje/url_46_328_3.txt new file mode 100644 index 0000000000000000000000000000000000000000..142269347db85b40f2fb7907fe7ac66d01fdfc60 --- /dev/null +++ b/eesanje/url_46_328_3.txt @@ -0,0 +1,11 @@ +ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಆಯ್ಕೆ +ಬೆಂಗಳೂರು,ಅ.19- ಜೆಡಿಎಸ್ ರಾಜ್ಯ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹಂಗಾಮಿ ರಾಜ್ಯಾಧ್ಯಕ್ಷರಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜೆಪಿಭವನದಲ್ಲಿಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರು, ಸದಸ್ಯರು, ಶಾಸಕರು ಒಳಗೊಂಡಂತೆ ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ನಡೆದ ಮಹತ್ವದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. +ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನೊಳಗೊಂಡಂತೆ ರಾಜ್ಯ ಘಟಕವನ್ನು ವಿಸರ್ಜನೆ ಮಾಡಲಾಗಿದೆ. +ಪಕ್ಷದ ಕಾರ್ಯ ಚಟುವಟಿಕೆಗಳನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಹಾಗೂ ಮುಂದಿನ ಚುನಾವಣೆವರೆಗೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಹಂಗಾಮಿ (ಅಡಹಾಕ್) ರಾಜ್ಯಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದರು. +ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕಾರ್ಯ ನಿರ್ವಹಿಸಲಿದ್ದಾರೆ. ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿ ಅವರೊಂದಿಗೆ ಕಾರ್ಯ ನಿರ್ವಹಿಸಲು ಇನ್ನು ಮೂರು ದಿನದಲ್ಲಿ ಕೆಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ಮಾಡಿ ಪದಾಧಿಕಾರಿಗಳನ್ನು ನೇಮಕ ಮಾಡುವುದಾಗಿ ಗೌಡರು ತಿಳಿಸಿದರು. +ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ಬಗ್ಗೆ ಯಾವ ತೀರ್ಮಾನ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ರಿಮೂವ್ ಮಾಡಲಾಗಿದೆ. ನೀವು ರಾಜ್ಯ ಘಟಕ ವಿಸರ್ಜನೆ ಮಾಡಲಾಗಿದೆ ಎಂದು ಭಾವಿಸಬಹುದು ಎಂದು ಹೇಳಿದರು. +ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಒಕ್ಕಲಿಗರೇ ಆಗಿದ್ದಾರೆ ಎಂದು ನೀವು ಪ್ರಶ್ನಿಸಬಹುದು. ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ರಾಷ್ಟ್ರ ಮಟ್ಟದಲ್ಲಿ ಮಾನ್ಯತೆ ಇದೆ. ಅವರ ನಾಯಕತ್ವವನ್ನು ಗುರುತಿಸಲಾಗಿದೆ. ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿದ ರೈತರ ಸಾಲಮನ್ನಾ, ಜನಪ್ರಿಯ ಕಾರ್ಯಕ್ರಮಗಳು, ಚುನಾವಣಾ ಪೂರ್ವದಲ್ಲಿ ನಡೆದ ಜನತಾ ಜಲಧಾರೆ, ಪಂಚರತ್ನ ಕಾರ್ಯಕ್ರಮಗಳಿಂದ ಅವರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದಾರೆ. ಹೀಗಾಗಿ ಪಕ್ಷದ ಎಲ್ಲ ನಾಯಕರು, ಮುಖಂಡರು ಒಟ್ಟಾಗಿ ತೀರ್ಮಾನಿಸಿ ಕುಮಾರಸ್ವಾಮಿ ಅವರೇ ಅಧ್ಯಕ್ಷರಾಗಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು. +ರಾಜ್ಯ ಘಟಕ, ರಾಷ್ಟ್ರ ಘಟಕ ಬೇರೆ. ಬೇರೆ ಬೇರೆ ರಾಜ್ಯ ಘಟಕಗಳು ಬೇರೆ. ತಮಿಳುನಾಡಿನ ಘಟಕ ಪಕ್ಷ ಕೈಗೊಳ್ಳುತ್ತಿರುವ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದೆ. ತಮಿಳುನಾಡು ಘಟಕ ಅಲ್ಲಿನ ಸರ್ಕಾರಲ್ಲಿ ಭಾಗಿಯಾಗಿದೆ ಎಂದು ಹೇಳಿದರು. ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿದ್ದ ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರುಖ್ ಸೇರಿದಂತೆ ಹಲವು ಮುಖಂಡರು ಪಕ್ಷದಲ್ಲಿ ಇದ್ದಾರೆ. ನಮಗೆ ಅಲ್ಪಸಂಖ್ಯಾತ ಮುಖಂಡರ ಕೊರತೆ ಇಲ್ಲ. ಒಂದೊಂದು ರಾಜ್ಯದಲ್ಲಿ ಒಂದೊಂದು ವಿಧವಾದ ಬೆಳವಣಿಗೆಗಳಿವೆ. ಪಶ್ಚಿಮ ಬಂಗಾಳವೇ ಬೇರೆ, ತ್ರಿಪುರವೇ ಬೇರೆ, ಕರ್ನಾಟಕವೇ ಬೇರೆ ಎಂದು ಅವರು ವಿಶ್ಲೇಷಿಸಿದರು. +ವಿಧಾನಸಭೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಪಕ್ಷದಲ್ಲಿನ ವಿವಿಧ ಘಟಕಗಳ ಜವಾಬ್ದಾರಿ, ಸ್ಥಾನಮಾನ ಮಾರ್ಪಡು ಮಾಡಿರಲಿಲ್ಲ. ರಾಜ್ಯ ಘಟಕದ ಅಧ್ಯಕ್ಷರಾಗಿದ್ದವರು ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. +ಹಮಾಸ್ ಉಗ್ರರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಇಸ್ರೇಲಿ ಮಹಿಳೆ ಭೇಟಿಯಾದ ಬಿಡೆನ್ +ಬಿಜೆಪಿ ಜೊತೆ ರಾಜ್ಯದಲ್ಲಿ ಹೋಗಬೇಕಾದ ಸನ್ನಿವೇಶವನ್ನು ಮನವರಿಕೆ ಮಾಡಿಕೊಟ್ಟ ನಂತರ ಕೇರಳ ಭಾಗವು ಅಲ್ಲಿನ ಎಡಪಂಥೀಯ ಪಕ್ಷದ ಜೊತೆ ಕೆಲಸ ಮಾಡಿರುವ ಶಾಸಕರ ಒಪ್ಪಿಗೆಯೂ ದೊರೆತಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಕೋರ್‍ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ, ಹಲ್‍ಕೋಡ್ ಹನುಮಂತಪ್ಪ, ವೆಂಕಟರಾವ್ ನಾಡಗೌಡ, ಕೋರ್ ಕಮಿಟಿ ಸದಸ್ಯರಾದ ವೈ.ಎಸ್.ವಿ.ದತ್ತ, ಮಾಜಿ ಸಚಿವರಾದ ಎ.ಮಂಜು, ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಹಲವು ಉಪಸ್ಥಿತರಿದ್ದರು. \ No newline at end of file diff --git a/eesanje/url_46_328_4.txt b/eesanje/url_46_328_4.txt new file mode 100644 index 0000000000000000000000000000000000000000..393248b9b28d0a2523d65e86b2216b2856fae94a --- /dev/null +++ b/eesanje/url_46_328_4.txt @@ -0,0 +1,8 @@ +ಅರಿಶಿನ-ಕುಂಕುಮ ಆದೇಶಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ +ಬೆಂಗಳೂರು, ಅ.19- ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಹೊಸದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. +ವಿಧಾನಸೌಧ ಮತ್ತು ವಿಕಾಸಸೌಧ ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯಲಿದೆ. ಈ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ, ಇದು ಹೊಸತೇನಲ್ಲ ಎಂದಿದ್ದಾರೆ. +ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. ಜೊತೆಯಲ್ಲಿ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 2021ರ ಅಕ್ಟೋಬರ್ 12ರಂದು ಹೊರಡಿಸಿದ್ದ ಸುತ್ತೋಕೆ ಹಾಗೂ ಸೆಪ್ಟಂಬರ್ 30ರಂದು ಹೊರಡಿಸಲಾಗಿರುವ ಸುತ್ತೋಲೆ ಎರಡನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. +ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ…../5QguMBgWg0 +ಕಾಂಗ್ರೆಸ್ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಹೆಣ್ಣುಮಕ್ಕಳು ಬಳೆ ತೊಡಬಾರದು ಎಂದು ಆದೇಶ ಹೊರಡಿಸಿದೆ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ, ಹಿಂದು ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗುತ್ತಿದೆ ಎಂದು ಪ್ರಚಾರ ಮಾಡಲಾಯಿತು. ಆ ದೇಶ ಕೂಡ ಕೇಂದ್ರ ಸರ್ಕಾರದ ಸುತ್ತೋಲೆ ಆಧಾರಿತವಾಗಿತ್ತು ಎಂದು ಸ್ಪಷ್ಟನೆ ದೊರೆತ ಬಳಿ ಟೀಕಾಕಾರರು ತಣ್ಣಗಾದರು. +ರಾಹುಲ್ ಅಣತಿಯಂತೆ ಹಮಾಸ್‍ಗೆ ಕಾಂಗ್ರೆಸ್ ಬೆಂಬಲಿಸಿದೆ ; ಹಿಮಂತ್ ಬಿಸ್ವಾ +ಈ ಮತ್ತೊಮ್ಮೆ ದಸರಾ-ಆಯುಧ ಪೂಜೆ ಸಂದರ್ಭದಲ್ಲಿ ಕುಂಕುಮ, ಹರಿಶಿನ ಬಳಸಬಾರದು ಎಂಬ ಆದೇಶವನ್ನು ಕಾಂಗ್ರೆಸ್ ಸರ್ಕಾರವೇ ಹೊರಡಿಸಿದೆ ಎಂದು ಪ್ರಚಾರ ಮಾಡಲಾಗಿದೆ. ಅದಕ್ಕೂ ಹಿಂದಿನ ಸರ್ಕಾರದ ಆದೇಶವನ್ನು ಬಯಲುಗೊಳಿಸುವ ಮೂಲಕ ಮುಖ್ಯಮಂತ್ರಿ ಬಿಜೆಪಿ ಟಾಂಗ್ ನೀಡಿದ್ದಾರೆ. \ No newline at end of file diff --git a/eesanje/url_46_328_5.txt b/eesanje/url_46_328_5.txt new file mode 100644 index 0000000000000000000000000000000000000000..0a60e159bad8391f8f7ea7db2ed9dec6f7490ef1 --- /dev/null +++ b/eesanje/url_46_328_5.txt @@ -0,0 +1,6 @@ +ಆದಾಯ ಮೀರಿ ಆಸ್ತಿ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು, ಡಿಕೆಶಿಗೆ ಟ್ರಬಲ್ ಶುರು +ಬೆಂಗಳೂರು,ಅ.19: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರದ್ದು ಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. +ಇದರ ನಡುವೆಯೇ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ತನಿಖೆ ಮುಂದುವರಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ. ಕಳೆದ 2014 ಮತ್ತು 2018ರ ನಡುವೆ ತಮ್ಮ ಆದಾಯಕ್ಕಿಂತ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2018ರಲ್ಲಿ ಸಿಬಿಐ ಪ್ರಕರಣ ದಾಖಲಿಸಿತ್ತುಇದಲ್ಲದೆ 2023ರಲ್ಲೂ ಪ್ರತ್ಯೇಕ ಪ್ರಕರಣವನ್ನು ದಾಖಲಿಸಲಾಗಿತ್ತು. +ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2023ರಲ್ಲಿ ಸಿಬಿಐ ತನಿಖೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆಗ ಅವರಿಗೆ ಮಧ್ಯಂತರ ತಡೆ ನೀಡಲಾಗಿತ್ತು. ಇದೀಗ ಹೈಕೋರ್ಟ್ ಈಗ ಪುನಃ ತನಿಖೆ ಪುನಾರಂಭಿಸುವಂತೆ ಆದೇಶ ಹೊರಡಿಸಿರುವುದರಿಮದ ಮತ್ತೆ ಡಿ.ಕೆ. ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ. +ಆಸ್ಪತ್ರೆ ಮೇಲಿನ ದಾಳಿಯಲ್ಲಿ ಇಸ್ರೇಲ್ ಪಾತ್ರವಿಲ್ಲ : ಅಮೆರಿಕ ಸ್ಪಷ್ಟನೆ +ತನಿಖೆ ವೇಳೆ ಸಿಬಿಐ 200 ಕೋಟಿ ರೂ. ಅಧಿಕ ಅಕ್ರಮ ಆಸ್ತಿ ಪತ್ತೆ ಯಾಗಿದೆ ಎಂದು ಸಿಬಿಐ ವಾದ ಮಂಡಿಸಿತ್ತು, ತಡೆಯಾಜ್ಞೆ ತೆರವಿಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಅದನ್ನು ಮಾನ್ಯ ಮಾಡಿ ನ್ಯಾಯಾಲಯ ತನಿಖೆ ಮುಂದುವರೆಸುವಂತೆ ಸೂಚಿಸಿದೆ. ಸದ್ಯದಲ್ಲೆ ಸಿಬಿಐ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದ್ದು ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. diff --git a/eesanje/url_46_328_6.txt b/eesanje/url_46_328_6.txt new file mode 100644 index 0000000000000000000000000000000000000000..630f5fcfb81732b3af82ea1a2e2fe58e91ef2ff0 --- /dev/null +++ b/eesanje/url_46_328_6.txt @@ -0,0 +1,10 @@ +ಕ್ರೀಡಾಪಟುಗಳಿಗೆ ಸರ್ಕಾರೀ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ : ಸಿಎಂ +ಬೆಂಗಳೂರು, ಅ.18- ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಳುಗಳಿಗೆ ಶೇ.2ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರದಲ್ಲಿ 19 ಏಷಿಯನ್ ಗೇಮ್ಸ್‍ನಲ್ಲಿ ವಿಜೇತರಾದ ಎಂಟು ಮಂದಿ ಕ್ರೀಡಾಪಟುಗಳು ಹಾಗೂ ಮೂವರು ಕೋಚ್‍ಗಳನ್ನು ಸನ್ಮಾನಿಸಿದರು. +ಚೀನಾ ಹಾಂಗ್‍ಝೌನಲ್ಲಿ ಸೆಪ್ಟಂಬರ್ .23ರಿಂದ ಅಕ್ಟೋಬರ್ 8ರವರೆಗೂ ನಡೆದ ಏಷ್ಯನ್ ಗೇಮ್ಸ್‍ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ, 41 ಕಂಚಿನ ಪದಕ ಸೇರಿ ಭಾರತೀಯ ಕ್ರೀಡಾಳುಗಳು 107 ಪದಕ ಗೆದ್ದರಿಂದ ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಪಡೆಯುವಂತೆ ಮಾಡಿದ್ದಾರೆ. ಕರ್ನಾಟಕದ ಕೀಡಾಪಟುಗಳ ಪೈಕಿ ನಾಲ್ಕು ಚಿನ್ನ, ನಾಲ್ಕು ಬೆಳ್ಳಿ ಗೆದ್ದಿದ್ದಾರೆ ಎಂದು ಹೇಳಿದರು. +ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸ್ಪರ್ಧೆ ಇರುತ್ತದೆ. ಅಲ್ಲಿ ಚಿನ್ನ, ಬೆಳ್ಳಿ ಪದಕ ಗೆಲ್ಲುವುದು ಸಾಧನೆಯಲ್ಲ. ನಿಮ್ಮ ಪರಿಶ್ರಮದ ಫಲ ಇದೆ. ಮುಂದಿನ ಒಲಿಂಪಿಕ್‍ನಲ್ಲೂ ಭಾಗವಹಿಸಿ ಇನ್ನಷ್ಟು ಪದಕಗಳನ್ನು ಗೆದ್ದು ನಾಡಿನ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿ ಎಂದು ಹಾರೈಸಿದರು. +ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3 ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. +ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಕ್ರೀಡಾಪಟುಗಳು ಅಧಿತ್ಯಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‍ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. +ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ತಾವು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು ಎಂದು ಅವರು ವಿವರಿಸಿದರು. +ಪದಕ ವಿಜೇತರು:ಕ್ರಿಕೆಟ್‍ನಲ್ಲಿ ಚಿನ್ನ ಗೆದ್ದ ರಾಜೇಶ್ವರಿ ಗಾಯಕ್ವಾಡ್ ಪರವಾಗಿ ಅವರ ಸಹೋದರಿ ಭುವನೇಶ್ವರಿ ಗಾಯಕ್ ವಾಡ್ ಸನ್ಮಾನ ಸ್ವೀಕರಿಸಿದರು. ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಅಥ್ಲೇಟಿಕ್ಸ್ ಪುರುಷರ 4400 ಮೀಟರ್ ರಿಲೆಯಲ್ಲಿ ಮಿಜೋ ಚಾಕೋ ಕುರಿಯನ್, ನಿಹಾಲ್‍ಜೋಯಲ್ ಚಿನ್ನದ ಪದಕ ಗೆದ್ದಿದ್ದಾರೆ. ಬ್ಯಾಡ್ಮಿಂಟನ್‍ನಲ್ಲಿ ಮಿಥುನ್ ಮಂಜುನಾಥ್, ಸಾಯಿ ಪ್ರತೀಕ್, ಗಾಲನಲ್ಲಿ ಅದಿತಿ ಅಶೋಕ್ ಬೆಳ್ಳಿ ಪದಕ ಗೆದ್ದಿದ್ದಾರೆ. ಕುಮಾರಿ ದಿವ್ಯ ಶೂಟಿಂಗ್ ಎರಡು ಬೆಳ್ಳಿ ಪದಕ ಪಡೆದಿದ್ದಾರೆ. ತಲಾ ಒಂದು ಪದಕಕ್ಕೆ 15 ಲಕ್ಷದಂತೆ 30 ಲಕ್ಷ ರೂಪಾಯಿಯ ಚೆಕ್ ವಿತರಿಸಲಾಯಿತು. +“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ” +ತರಬೇತುದಾರರಾದ ಕಬ್ಬಡಿ ಕ್ರೀಡೆಯ ವಿ.ತೇಜಸ್ವಿನಿ, ಹಾಕಿ ತರಬೇತುದಾರರಾದ ಬಿ.ಎಸ್.ಅಂಕಿತ, ಬಾಕ್ಸಿಂಗ್ ತರಬೇತುದಾರರಾದ ಸಿ.ಎ.ಕುಟ್ಟಪ್ಪ ಅವರಿಗೂ 5 ಲಕ್ಷ ರೂಪಾಯಿ ನಗದು ಪುರಷ್ಕಾರ ನೀಡಿ ಸನ್ಮಾನಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ಕೃಷಿ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_328_7.txt b/eesanje/url_46_328_7.txt new file mode 100644 index 0000000000000000000000000000000000000000..0b93e802373b0dea3aef1982d5a43fdc3975ca44 --- /dev/null +++ b/eesanje/url_46_328_7.txt @@ -0,0 +1,9 @@ +ವಿದ್ಯುತ್ ಚಾಲಿತ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ +ಬೆಂಗಳೂರು, ಅ.18- ರಾಜ್ಯದಲ್ಲಿ ಸದ್ಯಕ್ಕೆ 2 ಲಕ್ಷ ವಿದ್ಯುತ್ ಚಾಲಿತ ವಾಹನಗಳು ನೋಂದಣಿಯಾಗಿದ್ದು, ದೇಶಕ್ಕೆ ಮೂರನೇ ಸ್ಥಾನದಲ್ಲಿದ್ದೇವೆ. ಮುಂಬರುವ ದಿನಗಳಲ್ಲಿ ಇ.ವಿ.ವಾಹನಗಳು ಮತ್ತಷ್ಟು ಜನಪ್ರಿಯವಾಗಲಿದ್ದು, ಸುಗಮ, ತ್ವರಿತ, ಸುರಕ್ಷಿತ ಮತ್ತು ಮಾಲಿನ್ಯರಹಿತ ಸಂಚಾರವನ್ನು ಸಾಧ್ಯವಾಗಿಸಲಿವೆ. ಇನ್ನು ಒಂದು ದಶಕದಲ್ಲಿ ಸಾಂಪ್ರದಾಯಿಕ ಇಂಧನದ ವಾಹನಗಳು ನೇಪಥ್ಯಕ್ಕೆ ಸರಿಯಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ವಿವರಿಸಿದರು. +ಕೆಂಗೇರಿ ಸಮೀಪದ ಮೈಲಸಸಂದ್ರದಲ್ಲಿರುವ ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿ ಸ್ಥಾಪಿಸಿರುವ ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನಗಳ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವನ್ನು ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಸದ್ಯಕ್ಕೆ 7 ಒಇಎಂ, ಬಿಡಿಭಾಗಗಳನ್ನು ತಯಾರಿಸುವ 50 ಕಂಪನಿಗಳು, 45 ನವೋದ್ಯಮಗಳು, ಅತ್ಯಕ ಆರ್. ಡಿ.ಕೇಂದ್ರಗಳು ಇವೆ. ಈ ಕ್ಷೇತ್ರವು ಸಾವಿರಾರು ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುವ ಸಾಮಥ್ರ್ಯ ಹೊಂದಿದ್ದು, ಇದಕ್ಕೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸುವ ಉಪಕ್ರಮವನ್ನು ಶಿಕ್ಷಣ ಕ್ರಮದಲ್ಲೇ ಅಳವಡಿಸಿಕೊಳ್ಳಲಾಗಿದೆ ಎಂದು ಹೇಳಿದರು. +ವಿದ್ಯುತ್ ಚಾಲಿತ ವಾಹನಗಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಸಮರ್ಪಕ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಈಗ ಈ ಕ್ಷೇತ್ರದಲ್ಲಿ ರಾಜ್ಯವು ಈಗಾಗಲೇ 25 ಸಾವಿರ ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸಿದೆ. ಮುಂಬರುವ ದಿನಗಳಲ್ಲಿ ಇನ್ನೂ 15 ಸಾವಿರ ಕೂಟಿ ರೂ. ಹೂಡಿಕೆ ಇಲ್ಲಿ ಸಾಧ್ಯವಾಗಲಿದೆ ಎಂದರು. +“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ” +ಮೊದಲಿಗೆ ನಮ್ಮಲ್ಲಿ 2017ರಲ್ಲಿ ವಿದ್ಯುತ್ ಚಾಲಿತ ವಾಹನಗಳ ನೀತಿಯನ್ನು ಜಾರಿಗೆ ತರಲಾಯಿತು. 2021ರಲ್ಲಿ ಇದನ್ನು ಜಾಗತಿಕ ಮಟ್ಟಕ್ಕೆ ತಕ್ಕಂತೆ ಪರಿಷ್ಕರಿಸಲಾಯಿತು. ರಾಜ್ಯದ ನೀತಿಯು ಇ.ವಿ.ಬ್ಯಾಟರಿ ಮತ್ತು ಕೋಶಗಳ ಉತ್ಪಾದನೆ, ಬಿಡಿಭಾಗಗಳ ತಯಾರಿಕೆ, ಒಇಎಂ (ಒರಿಜನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್ಸ್), ಚಾರ್ಜಿಂಗ್ ಮತ್ತು ಪರೀಕ್ಷಾರ್ಥ ಮೂಲಸೌಲಭ್ಯ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೂಡಿಕೆಯ ಸಮಗ್ರ ಮೌಲ್ಯ ಸರಪಳಿಯನ್ನು ಒಳಗೊಂಡಿದೆ. ಹೀಗಾಗಿ, ಇ.ವಿ. ಕ್ಷೇತ್ರದಲ್ಲಿ ರಾಜ್ಯವು ದೇಶಕ್ಕೇ ಪ್ರಥಮ ಸ್ಥಾನದಲ್ಲಿದೆ ಎಂದು ನುಡಿದರು. +ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಉತ್ಕೃಷ್ಟತಾ ಮತ್ತು ನಾವೀನ್ಯತಾ ಕೇಂದ್ರವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಇದು ತರಬೇತಿ, ಸಂಶೋಧನೆ, ಕೌಶಲಾಭಿವೃದ್ಧಿ, ಸಹಭಾಗಿತ್ವ ಮತ್ತು ಪರಿಪೋಷಣೆಗಳಿಗೆ ಉತ್ತಮ ವೇದಿಕೆಯಾಗಿ ಒದಗಿ ಬರಲಿದೆ. ಇದು ಅಂತಿಮವಾಗಿ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಸಾಧಿಸಲು ಚಿಮ್ಮುಹಲಗೆಯಾಗಿ ಕೆಲಸ ಮಾಡಲಿದೆ ಎಂದು ಪಾಟೀಲ ಭರವಸೆ ವ್ಯಕ್ತಪಡಿಸಿದರು. +ಕಾರ್ಯಕ್ರಮಕ್ಕೂ ಮೊದಲು ಸಚಿವರು ಉತ್ಕೃಷ್ಟತಾ ಕೇಂದ್ರದಲ್ಲಿರುವ 3ಡಿ ಎಕ್ಸಪೀರಿಯನ್ಸ್ ಲ್ಯಾಬ್, ಸರ್ವೀಸ್ ಲ್ಯಾಬ್, ಬಿಡಿಭಾಗಗಳ ಲ್ಯಾಬ್ ಸೇರಿದಂತೆ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ, ಅಲ್ಲಿನ ಸಾಧನ-ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವೀಕ್ಷಿಸಿ, ವಿವರಣೆ ಪಡೆದುಕೊಂಡರು. +ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಂಸದ ಡಿ.ವಿ.ಸದಾನಂದ ಗೌಡ, ಶಾಸಕ ಎಸ್ ಟಿ ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_328_8.txt b/eesanje/url_46_328_8.txt new file mode 100644 index 0000000000000000000000000000000000000000..5f3dc1e3d7a4cc244703ef7366e763c4aebcd06e --- /dev/null +++ b/eesanje/url_46_328_8.txt @@ -0,0 +1,7 @@ +ಬಿಜೆಪಿ ಮತ್ತು ಭ್ರಷ್ಟಚಾರಕ್ಕೆ ಜನ್ಮಜನ್ಮದ ನಂಟಿದೆ : ಕಾಂಗ್ರೆಸ್ +ಬೆಂಗಳೂರು, ಅ.18- ಆದಾಯ ತೆರಿಗೆ ದಾಳಿಯನ್ನು ನೆಪ ಮಾಡಿಕೊಂಡು ಕಾಂಗ್ರೆಸ್ ನಾಯಕರ ವಿರುದ್ಧ ಪೋಸ್ಟರ್ ವಾರ್ ಶುರು ಮಾಡಿದ್ದ ಬಿಜೆಪಿಗೆ, ತೀರುಗೇಟು ನೀಡಲಾಗಿದ್ದು, ಬಿಜೆಪಿ ಮತ್ತು ಭ್ರಷ್ಟಚಾರ.. ಇದು ಜನ್ಮಜನ್ಮದ ನಂಟು ಎಂದು ಆರೋಪಿಸಲಾಗಿದೆ. +ಕಾಂಗ್ರೆಸ್ ನಾಯಕರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಸ್ಟರ್‍ನಲ್ಲಿ ಹಗರಣಗಳಲ್ಲಿ ಸಿಲುಕಿದ ಬಿಜೆಪಿಯವರ ಹೆಸರು ಮತ್ತು ಭಾವಚಿತ್ರವನ್ನು ಹಾಕಲಾಗಿದೆ. ಬಿಜೆಪಿ ನಾಯಕರೇ ನಿಮಗೆ ಆತ್ಮಸಾಕ್ಷಿ ಇದ್ದರೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತವಾಗಿ ಇಷ್ಟೊತ್ತಿಗೆ ಪಕ್ಷ ವಿಸರ್ಜನೆ ಮಾಡಬೇಕಿತ್ತು ಎಂದು ಟಾಂಗ್ ನೀಡಲಾಗಿದೆ. +ಜೈಲು ಪಾಲಾದ ಬಿಜೆಪಿ ನಾಯಕರು ಎಂಬ ತಲೆಬಹರದಡಿ ಮಾಜಿಮುಖ್ಯಮಂತ್ರಿ ಯಡಿಯೂರಪ್ಪ. ಜನಾರ್ದನ ರೆಡ್ಡಿ, ಕಟ್ಟಾಸುಬ್ರಮಣ್ಯನಾಯ್ಡು, ಕೃಷ್ಣಯ್ಯ ಶೆಟ್ಟಿ ಹೆಸರು ಮತ್ತು ಪೋಟೋ ಹಾಕಲಾಗಿದೆ. +“ಕಾಂಗ್ರೆಸ್ ಬಂದಿದೆ, ಲೂಟಿ ಜೋರಾಗಿದೆ, ಹೈಕಮಾಂಡ್ ಜೇಬು ತುಂಬಿದೆ” +ಶೇ.40ರಷ್ಟು ಕಮಿಷನ್ ಆರೋಪದಲ್ಲಿ ಈಶ್ವರಪ್ಪ, ಮುನಿರತ್ನ, ಡಾ.ಕೆ.ಸುಧಾಕರ್, ಬಿ.ಸಿ.ಪಾಟೀಲ್, ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಡಾ.ಸಿ.ಎನ್.ಅಶ್ವಥ್‍ನಾರಾಯಣ್, ಬಿ.ವೈ.ವಿಜಯೇಂದ್ರ, ಅರಗಜ್ಞಾನೇಂದ್ರ ಅವರ ಹೆಸರುಗಳು, ಬಿಟ್‍ಕಾಯಿನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ರಾಯರೆಡ್ಡಿ, ನಳೀನ್‍ಕುಮಾರ್ ಕಟೀಲ್, ಲಂಚ ಸ್ವಿಕರಿಸುವಾಗ ಸಿಕ್ಕಿ ಬಿದ್ದವರ ಸಾಲಿನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗ ಪ್ರಶಾಂತ್ ಮಾಡಾಳ್ ಹೆಸರು ಕೇಳಿ ಬಂದಿದೆ ಎಂದು ಪೋಸ್ಟರ್‍ನಲ್ಲಿ ವಿವರಿಸಲಾಗಿದೆ. +ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಧಿಸಲು ಹಣ ಪಡೆದು ವಂಚಿಸಿದ್ದ ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಬಿ.ಎಲ್.ಸಂತೋಶ್, ಸುನೀಲ್ ಕುಮಾರ್, ಸಿ.ಟಿ.ರವಿ ಹೆಸರು ಹೇಳಿ ಬಂದಿದೆ ಎಂದು ದೂರಲಾಗಿದೆ. \ No newline at end of file diff --git a/eesanje/url_46_328_9.txt b/eesanje/url_46_328_9.txt new file mode 100644 index 0000000000000000000000000000000000000000..e7c52543487aaca3495b06a8978c422da5730c9d --- /dev/null +++ b/eesanje/url_46_328_9.txt @@ -0,0 +1,10 @@ +ಹಿಂಗಾರು ಮಳೆ ಮತ್ತಷ್ಟು ವಿಳಂಬ +ಬೆಂಗಳೂರು, ಅ.18- ಮುಂಗಾರು ಮಳೆಯಂತೆ ಹಿಂಗಾರು ಮಳೆಯ ಆರಂಭವೂ ವಿಳಂಬವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಕಳೆದ ಎರಡು ವಾರದಲ್ಲಿ ಒಣಹವೆ ಹೆಚ್ಚಾಗಿದ್ದು, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಇದರಿಂದ ಹಿಂಗಾರು ಹಂಗಾಮಿನ ಬಿತ್ತನೆಯೂ ವಾಡಿಕೆಯಂತೆ ಆಗುತ್ತಿಲ್ಲ. +ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಟೋಬರ್ ಆರಂಭದಿಂದಲೂ ಸಾಕಷ್ಟು ಮಳೆಯಾಗಿಲ್ಲ. ಒಳನಾಡಿನ ಹಲವೆಡೆ ಮಳೆಯಾಗಿದ್ದರೂ ವಾಡಿಕೆ ಪ್ರಮಾಣದಲ್ಲಿ ಆಗುತ್ತಿಲ್ಲ. ಈ ನಡುವೆ ಬಂಗಾಳಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆಯೇ ಎಂಬುದು ಸದ್ಯಕ್ಕೆ ಗೊಚರವಾಗುತ್ತಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು. +ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..? +ಹವಾಮಾನದಲ್ಲಿ ಉಂಟಾಗಿರುವ ವೈಪರಿತ್ಯದಿಂದ ನೈರುತ್ಯ ಮುಂಗಾರು ಮಳೆಯಲ್ಲೂ ವ್ಯತ್ಯಯವಾಗಿ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಈಶಾನ್ಯ ಹಿಂಗಾರು ಹಂಗಾಮಿನಲ್ಲೂ ಹವಾಮಾನದ ವೈಪರಿತ್ಯ ಮುಂದುವರೆಯಲಿದೆ. ಅಂದರೆ ಮುಂದಿನ ಜನವರಿವರೆಗೂ ಹೆಚ್ಚುಕಡಿಮೆ ಹವಾಮಾನ ವೈಪರಿತ್ಯದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದರು. +ಸಾಮಾನ್ಯವಾಗಿ ಸೆಪ್ಟೆಂಬರ್ ಅಂತ್ಯಕ್ಕೆ ಮುಂಗಾರು ಮುಕ್ತಾಯಗೊಂಡು ಅಕ್ಟೋಬರ್ ಮೊದಲ ವಾರದಲ್ಲಿ ಹಿಂಗಾರು ಆರಂಭವಾಗಬೇಕಿತ್ತು. ಆದರೆ, ಹವಾಮಾನ ವೈಪರಿತ್ಯದಿಂದ ಇನ್ನೂ ಮುಂಗಾರು ಮಳೆ ಮುಕ್ತಾಯಗೊಂಡಿಲ್ಲ. ಮುಂಗಾರು ಮಾರುತಗಳ ಮರಳುವಿಕೆ ಆರಂಭಗೊಂಡಿದೆ. ಇನ್ನೆರಡು ದಿನದಲ್ಲಿ ಮುಂಗಾರು ಮರಳುವಿಕೆ ಪೂರ್ಣಗೊಳ್ಳಲಿದೆ. +ವಾಯುಭಾರ ಕುಸಿತಗಳು ಉಂಟಾಗಿರುವುದರಿಂದ ಮುಂಗಾರು ಮುಗಿಯುತ್ತಿದ್ದಂತೆ ಈ ಶಾನ್ಯ ಹಿಂಗಾರು ಆರಂಭಗೊಳ್ಳಬಹುದು. ವಾಯುಭಾರ ಕುಸಿತದಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆಯೆ ಅಥವಾ ಇಲ್ಲವೆ ಎಂಬುದು ನಾಳೆ ಸ್ಪಷ್ಟವಾಗಲಿದೆ ಎಂದು ಅವರು ಹೇಳಿದರು. +ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಂದರೆ ಶೇ.50ಕ್ಕಿಂತಲೂ ಹೆಚ್ಚು ಮಳೆ ಕೊರತೆ ರಾಜ್ಯದಲ್ಲಿ ಕಂಡುಬರುತ್ತಿದೆ. ಹೀಗಾಗಿ ಹಿಂಗಾರು ಹಂಗಾಮಿನ ಬೆಳೆಗಳ ಬಿತ್ತನೆಗೆ ತೊಂದರೆಯಾಗಿದೆ. ಮುಂಗಾರು ಹಂಗಾಮಿನ ಬೆಳೆಗಳು ಸಹ ತೇವಾಂಶ ಕೊರತೆಯಿಂದ ಒಣಗುತ್ತಿವೆ. +ಇಂಧನವಿಲ್ಲದ ಕಾರಣ 48 ವಿಮಾನ ಹಾರಾಟ ರದ್ದು ಮಾಡಿದ ಪಾಕಿಸ್ತಾನ +ಮಳೆಗಾಲ ಮುಕ್ತಾಯಗೊಂಡು ಚಳಿಗಾಲ ಆರಂಭವಾಗುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಬೇಸಿಗೆಯ ವಾತಾವರಣ ಕಂಡುಬರುತ್ತಿದೆ. ಭಾಗಶಃ ಮೋಡ ಕವಿದಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಎಲ್ಲೆಡೆ ಒಣ ಹವೆಯೇ ಮುಂದುವರೆದಿದೆ. ಮಳೆ ಕೊರತೆಯಿಂದಾಗಿ ಜಲಾಶಯಗಳ ಒಳ ಹರಿವು ಕ್ಷೀಣಿಸಿದ್ದು, ಮುಂದಿನ ದಿನಗಳು ಇನ್ನಷ್ಟು ಕಷ್ಟದಾಯಕವಾಗಲಿವೆ. \ No newline at end of file diff --git a/eesanje/url_46_329_1.txt b/eesanje/url_46_329_1.txt new file mode 100644 index 0000000000000000000000000000000000000000..f99f0fa2f607456edafccaea53d5cda051492118 --- /dev/null +++ b/eesanje/url_46_329_1.txt @@ -0,0 +1,13 @@ +ಕರ್ನಾಟಕ ರಾಜ್ಯಕ್ಕೆ 50 ವರ್ಷದ ಸಂಭ್ರಮ : ಲಾಂಛನ ಬಿಡುಗಡೆ +ಬೆಂಗಳೂರು,ಅ.17- ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿಂದು ಬಿಡುಗಡೆ ಮಾಡಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದೇವರಾಜ್ ಅರಸ್ ಅವರು 50 ವರ್ಷಗಳ ಹಿಂದೆ ಕರ್ನಾಟಕ ಎಂದು ನಾಮಕರಣ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ತಾಯಿ ಜನ್ಮ ನೀಡಿದರೆ, ದೇವರು ಬುದ್ದಿ ಕೊಡುತ್ತಾರೆ, ಗುರುಗಳು ವಿದ್ಯೆ ಕೊಡುತ್ತಾರೆ. ಕನ್ನಡ ನಾಡಿನಲ್ಲಿ ಹುಟ್ಟಿರುವುದೇ ನಮ್ಮ ಪುಣ್ಯ ಎಂದರು. +ಇತಿಹಾಸ ಮರೆತವರಿಂದ ಇತಿಹಾಸ ಸೃಷ್ಟಿಸಲು ಸಾಧ್ಯವಾಗುವುದಿಲ್ಲ. ನಮ್ಮ ಭಾಷೆ ನಮ್ಮ ಹೆಮ್ಮೆ ಎಂದು ಅವರು ಹೇಳಿದರು. ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಚರಿಸುವ ಅವಕಾಶ ದೊರೆತಿರುವುದು ನಮ್ಮ ಪುಣ್ಯ ಎಂದು ಕುವೆಂಪು ಅವರ ಕವನಗಳನ್ನು ಉಪಮುಖ್ಯಮಂತ್ರಿ ವಾಚಿಸಿದರು. ಕನ್ನಡಿಗನಾಗು, ಭಾರತೀಯನಾಗು ವಿಶ್ವ ಮಾನವನಾಗು ಎಂಬ ಕುವೆಂಪು ಅವರ ಸಂದೇಶವನ್ನು ಸಾರುವುದು ಸೇರಿದಂತೆ ವರ್ಷವಿಡೀ ಕರ್ನಾಟಕ ಸಂಭ್ರಮವನ್ನು ಆಚರಿಸುವುದಾಗಿ ಅವರು ಹೇಳಿದರು. +ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ +ಇದು ಸರ್ಕಾರದ ಕಾರ್ಯಕ್ರಮವಾಗಬಾರದು. ಜನರ ಕಾರ್ಯಕ್ರಮವಾಗಬೇಕು. ಬೀದರ್‍ನಿಂದ ಚಾಮರಾಜನಗರ ದವರೆಗೂ, ಮಂಗಳೂರಿನಿಂದ ಕೋಲಾರದವರೆಗೂ ಎಲ್ಲ ಮೂಲೆ ಮೂಲೆಗಳಲ್ಲೂ ಸಂಭ್ರಮಾಚರಣೆ ನಡೆಯಲಿದೆ. ಮನೆಗಳ ಮುಂದೆ ರಂಗೋಲಿ ಇಟ್ಟು ಕನ್ನಡ ಜ್ಯೋತಿಯನ್ನು ಬರಮಾಡಿಕೊಂಡಿದ್ದಾರೆ ಎಂದು ಶ್ಲಾಘಿಸಿದರು. +ಲಾಂಛನ ಸೃಷ್ಟಿಸುವ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಕನ್ನಡ ಸಂಸ್ಕøತಿ ಇಲಾಖೆಯಿಂದ 25 ಸಾವಿರ ರೂ. ಬಹುಮಾನ ನೀಡಲಾಗಿದೆ. ಬಿಬಿಎಂಪಿಯಿಂದ ಒಂದು ಲಕ್ಷ ರೂ. ಬಹುಮಾನ ನೀಡಲು ತೀರ್ಮಾನಿಸಲಾಗಿದೆ. ನಾಡಿನ ಸಂಸ್ಕøತಿ, ಕಲೆಗಳ ಅರಿವು ಮೂಡಿಸಲು ಪ್ರೋತ್ಸಾಹ ನೀಡಬೇಕಿದೆ ಎಂದರು. +ಕನ್ನಡ ಮಾತನಾಡುವ ಅನಿವಾರ್ಯತೆ ಸೃಷ್ಟಿಸಿಬೆಂಗಳೂರು,ಅ.17- ನಾಡಿನಲ್ಲಿ ವಾಸಿಸುತ್ತಿರುವ ಪ್ರತಿಯೊಬ್ಬರು ಕನ್ನಡಿಗರೇ. ಅವರೆಲ್ಲರೂ ಕನ್ನಡ ಮಾತನಾಡುವುದನ್ನು ಕಲಿಯಬೇಕು ಅಂತಹ ವಾತಾವರಣ ಮತ್ತು ಅನಿವಾರ್ಯತೆ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿರುವ ಹಿನ್ನಲೆಯಲ್ಲಿ ಆಚರಿಸಲಾಗುತ್ತಿರುವ ಕರ್ನಾಟಕ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಿ ಅವರು ಮಾತನಾಡಿದರು. +ಕರ್ನಾಟಕ ಏಕೀಕರಣವಾದಾಗ ಬೇರೆ ಬೇರೆ ಭಾಷೆ ಮಾತನಾಡುವ ಜನ ಇದ್ದರು. ಅವರ ಮಾತೃ ಭಾಷೆ ತಮಿಳು, ತೆಲುಗು, ಮರಾಠಿ, ಹಿಂದಿ ಮಾತನಾಡುತ್ತಾರೆ. ಕೆಲವರಿಗೆ ಕನ್ನಡ ಮಾತನಾಡಲು ಬರುವುದಿಲ್ಲ. ರಾಜ್ಯದಲ್ಲಿ ಇರುವವರೆಲ್ಲ ಕನ್ನಡ ಮಾತನಾಡುವ ಅನಿವಾರ್ಯವನ್ನು ನಾವು ಸೃಷ್ಟಿಸಬೇಕು ಎಂದರು. +ಸಿಎಂ ಇಬ್ರಾಹಿಂಗೆ ಟಾಂಗ್ ಕೊಟ್ಟ ಶರವಣ +ತಮಿಳುನಾಡಿನಲ್ಲಿ ತಮಿಳು, ಉತ್ತರಪ್ರದೇಶದಲ್ಲಿ ಹಿಂದಿ, ಆಂಧ್ರದಲ್ಲಿ ತೆಲುಗು ಮಾತನಾಡಲು ಬರದಿದ್ದರೆ ಅಲ್ಲಿ ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡವೇ ಬರದೇ ಬದುಕುವವರು ಇದ್ದಾರೆ. ಇದೇ ನಮ್ಮ ಮತ್ತು ಪಕ್ಕದ ರಾಜ್ಯಗಳಿರುವ ವ್ಯತ್ಯಾಸ. ನಾವು ಉದಾರವಾದಿಗಳು ಎಂದರು. ಬೇರೆ ಭಾಷೆಯನ್ನು ಕಲಿಯುವುದು ಬೇಡ ಎನ್ನುವುದಿಲ್ಲ. ಕರ್ನಾಟಕದಲ್ಲಿ ಕನ್ನಡಿಗರು ಕನ್ನಡವನ್ನು ಮಾತನಾಡುವ ಪ್ರವೃತ್ತಿ ಬೆಳೆಸಿಕೊಂಡು ಬೇರೆಯವರೂ ಕನ್ನಡ ಮಾತನಾಡುವ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದರು. \ No newline at end of file diff --git a/eesanje/url_46_329_10.txt b/eesanje/url_46_329_10.txt new file mode 100644 index 0000000000000000000000000000000000000000..cb5bf9dbf94eca8ae8b623f24048e125409cab04 --- /dev/null +++ b/eesanje/url_46_329_10.txt @@ -0,0 +1,5 @@ +ವಿದ್ಯುತ್ ದರ ಏರಿಕೆ ಕುರಿತು ಸ್ಪಷ್ಟನೆ ಕೊಟ್ಟ ಬೆಸ್ಕಾಂ +ಬೆಂಗಳೂರು, ಅ.16- ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದಲ್ಲಿ ಮೊದಲಿಗಿಂತಲೂ ಶೇ. 14 ಪೈಸೆಯಷ್ಟು ಕಡಿತವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಮೊದಲು ಆಗಸ್ಟ್‍ನಲ್ಲಿ ಪ್ರತಿ ಯುನಿಟ್‍ಗೆ 1.15 ರೂಪಾಯಿ ವಿದ್ಯುತ್ ಮತ್ತು ಇಂಧನ ಖರೀದಿ ಹೊಂದಾಣಿಕೆ ವೆಚ್ಚ ನಿಗದಿಯಾಗಿತ್ತು. ಸೆಪ್ಟೆಂಬರ್‍ನಲ್ಲಿ ಅದನ್ನು ಕೆಇಆರ್‌ಸಿ ಪರಿಷ್ಕರಣೆ ಮಾಡಿದ್ದು, 14 ಪೈಸೆ ಕಡಿಮೆ ಮಾಡಿದೆ. ಹೀಗಾಗಿ ಪ್ರತಿ ಯುನಿಟ್‍ಗೆ ಪ್ರಸ್ತುತ 1.1 ಪೈಸೆ ನಿಗದಿಯಾಗಿದೆ. ಇದರ ಲಾಭವನ್ನು ಬೆಸ್ಕಾಂಗಳು ಗ್ರಾಹಕರಿಗೆ ತಲುಪಿಸುತ್ತಿವೆ. +ಪ್ರತಿಯೊಂದು ಬಿಲ್‍ನಲ್ಲೂ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದ ಮೇಲೆ ಶುಲ್ಕ ನಿಗದಿಯಾಗುತ್ತದೆ. ಇದನ್ನು ಗ್ರಾಹಕರಿಂದಲೇ ಸಂಗ್ರಹಿಸಬೇಕೆಂಬುದು ಕೇಂದ್ರ ಸರ್ಕಾರದ ಅಧಿಸೂಚನೆಯಾಗಿದೆ.ಇತ್ತೀಚೆಗೆ ಕಲ್ಲಿದ್ದಲ ಸಾಗಾಣಿಕೆ ಹಾಗೂ ಇತರ ವೆಚ್ಚಗಳು ತಗ್ಗಿದ್ದರಿಂದಾಗಿ ವಿದ್ಯುತ್ ಖರೀದಿ ದರ ಕಡಿಮೆಯಾಗಿದೆ. ಇದನ್ನು ಪರಿಗಣಿಸಿರುವ ಕೆಇಆರ್‍ಸಿ ಹೊಂದಾಣಿಕೆ ದರವನ್ನೂ ಕಡಿಮೆಗೊಳಿಸುವಂತೆ ಆದೇಶಸಿದೆ. +ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ +ಇದರ ಲಾಭ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಯಾವುದೇ ರೀತಿಯ ವಿದ್ಯುತ್ ಶುಲ್ಕ ಏರಿಕೆಯಾಗಿಲ್ಲ ಎಂದು ಬೆಸ್ಕಾಂ ಮೂಲಗಳು ಸ್ಪಷ್ಟಪಡಿಸಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಮತ್ತು ವಿದ್ಯುತ್ ಖರೀದಿ ಹೊಂದಾಣಿಕೆ ಶುಲ್ಕ ಪರಿಷ್ಕರಣೆಯಾಗುತ್ತದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿಗದಿಯಾಗಿರುವ 1.1 ರೂ.ಗಳ ದರ ಮುಂದಿನ ಜನವರಿಯ ವೇಳೆ ಮತ್ತೊಮ್ಮೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ. \ No newline at end of file diff --git a/eesanje/url_46_329_11.txt b/eesanje/url_46_329_11.txt new file mode 100644 index 0000000000000000000000000000000000000000..f1f9b58cc7dff0ead194fd2264bf24c285492d36 --- /dev/null +++ b/eesanje/url_46_329_11.txt @@ -0,0 +1,8 @@ +ಜೆಡಿಎಸ್ ಸಮಾನಮನಸ್ಕರ ಸಭೆಯ ಬ್ಯಾನರ್‌ನಲ್ಲಿ ಹೆಚ್‌ಡಿಕೆ ಫೋಟೋಗೆ ಕೊಕ್ +ಬೆಂಗಳೂರು,ಅ.16- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ್ ಪಾಲ್ಗೊಂಡಿದ್ದರು. ಮಹಿಮ ಪಾಟೀಲ್ ಪಾಲ್ಗೊಂಡಿರುವುದರಿಂದ ಇಬ್ರಾಹಿಂ ಮುಂದಿನ ನಡೆ ಏನು ಎಂಬುದು ತೀವ್ರ ಕುತೂಹಲ ಕೆರಳಿಸಿದೆ. +ಬಿಜೆಪಿಯೊಂದಿಗಿನ ಮೈತ್ರಿಯ ಬಗ್ಗೆ ಅಸಮಾಧನ ವ್ಯಕ್ತಪಡಿಸಿ ಸಮಾನ ಮನಸ್ಕರ ಅಭಿಪ್ರಾಯ ಸಂಗ್ರಹಿಸಲು ಇಬ್ರಾಹಿಂ ಚಿಂತನ-ಮಂಥನ ಸಭೆ ಕರೆದಿದ್ದರು. ಸಭೆಯ ಬ್ಯಾನರ್‍ನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಸಿ.ಎಂ.ಇಬ್ರಾಹಿಂ ಫೋಟೋ ಮಾತ್ರ ಇತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬೇರೆ ಯಾವ ನಾಯಕರ ಫೋಟೋವು ಕೂಡ ಇರಲಿಲ್ಲ. +ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ +ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಯದ್ ಸಬಿವುಲ್ಲಾ ಸಾಹೇಬ್ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು. ಮಹಿಮ ಪಟೇಲ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ, ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಬಿಜೆಪಿಗೆ ಸೇರಿದ್ದರು. ಆಗ ಫರ್ನಾಂಡಿಸ್ ಅವರು ಪ್ರಧಾನಿಯಾಗಲಿದ್ದಾರೆ ಸಹಕಾರ ಕೊಡಿ ಎಂದು ನಮ್ಮ ತಂದೆ ಜೆ.ಎಚ್.ಪಟೇಲ್ ಅವರು ಸಮ್ಮತಿಸಿದ್ದರು ಎಂದರು. +ಸಿದ್ದಾಂತದ ಮೂಲಕ ಮತ ಯಾಚಿಸಬೇಕೇ ಹೊರತು ಹಣ, ಜಾತಿ ಆಧಾರದ ಮೇಲೆ ಕೇಳಿದರೆ ಅದು ದಂಧೆಯಾಗಲಿದೆ. ಈಗಾಗಲೇ ರಾಜಕಾರಣಿಗಳ ಬಗ್ಗೆ ಗೌರವ ಕಡಿಮೆಯಾಗಿದೆ. 2004ರಲ್ಲಿ ಜೆಡಿಎಸ್‍ನಿಂದ ಚೆನ್ನಗಿರಿ ಕ್ಷೇತ್ರದಿಂದ ಚುನಾಯಿತನಾಗಿದ್ದೆ. ಆಗ ಇಬ್ರಾಹಿಂ ಹಾಗೂ ಸಿದ್ದರಾಮಯ್ಯನವರು ನಾವು ಯಾರ ಜೊತೆಯೂ ಹೋಗುವುದಿಲ್ಲ ಎಂದಿದ್ದರು. ನಮ್ಮ ಅಭಿಪ್ರಾಯವನ್ನು ಯಾರೂ ಕೇಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್ +ಅಮೆರಿಕ ಪ್ರವಾಸದಲ್ಲಿದ್ದಾಗ ದೇವೇಗೌಡರು ಫೋನ್ ಮಾಡಿ ಮಾನ ಮರ್ಯಾದೆ ಹೋಗಿದೆ ಎಂದರು. ಅಲ್ಲಿಂದ ಬರುವಷ್ಟರಲ್ಲಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದರು.ಹೊಸ ಹಾದಿಯ ಬಗ್ಗೆ ಇಬ್ರಾಹಿಂ ಹಾಗೂ ನಾಡಗೌಡರು ಯೋಚಿಸುತ್ತಿದ್ದಾರೆ. ಮತ್ತೆ ಜನತಾದಳದವರು ಸೇರುವ ಸಮಯ ಬಂದಿದೆ. ಇಬ್ರಾಹಿಂ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಮುಂದಿನ ವಿಧಾನಸಭೆ ಚುನಾವಣೆ ನೇತೃತ್ವವನ್ನು ಇಬ್ರಾಹಿಂ ಅವರೇ ವಹಿಸಬೇಕು ಎಂದರು. diff --git a/eesanje/url_46_329_12.txt b/eesanje/url_46_329_12.txt new file mode 100644 index 0000000000000000000000000000000000000000..4d4ba416f9079beaca37c21a33929121c66dd7c0 --- /dev/null +++ b/eesanje/url_46_329_12.txt @@ -0,0 +1,13 @@ +ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನಾಳೆ ಗೌರವ ಡಾಕ್ಟರೇಟ್ ಪ್ರದಾನ +ಬೆಂಗಳೂರು,ಅ.16-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಸ್ರೋ ಅಧ್ಯಕ್ಷ ಹಾಗೂ ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಸೋಮನಾಥ್.ಎಸ್ ಅವರಿಗೆ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವವು ನಾಳೆ ಬೆಳಗ್ಗೆ 10.30ಕ್ಕೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದ್ದು, ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. +ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಜಯಕರ.ಎಚ್.ಎಂ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. +204 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಿದ್ದು, ಚಿನ್ನದ ಪದಕಗಳನ್ನು 25 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‍ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಲಾಗಿದೆ. ಚಿನ್ನಪದಕ ವಿಜೇತ ವಿದ್ಯಾರ್ಥಿಗಳಿಗೆ ಈ ಪದಕಗಳನ್ನು ಈ ಬಾರಿ ನೀಡಲಾಗುವುದು ಎಂದರು. +ಘಟಿಕೋತ್ಸವದಲ್ಲಿ 28,881 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13,707 ವಿದ್ಯಾರ್ಥಿಗಳು ಹಾಗೂ 15,164 ವಿದ್ಯಾರ್ಥಿನಿಯರಿದ್ದಾರೆ ಎಂದು ಹೇಳಿದರು. ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಉದ್ಯಮಿ ಘೆರಾದ ಸಂಸ್ಥೆಯ ಸಹಸಂಸ್ಥಾಪಕ ನಿಖಿಲ್ ಕಾಮತ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು. +ರಾಜ್ಯದ ಕರಾವಳಿ, ಒಳನಾಡಿನಲ್ಲಿ 2 ದಿನ ಮಳೆ ಸಾಧ್ಯತೆ +ವಿನೂತರಿಗೆ 8 ಚಿನ್ನದ ಪದಕ:ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನೂತ.ಕೆ 8 ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನ ಪಡೆಯಲಿದ್ದಾರೆ. ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ. +ಬೆಂಗಳೂರು ವಿವಿಯ ಭೌತಶಾಸ್ತ್ರ ವಿಭಾಗದ ಅಸೀನಬಾನು.ಡಬ್ಲ್ಯು, ಗಣಿತ ಶಾಸ್ತ್ರ ವಿಭಾಗದ ದಿವ್ಯಾ.ಟಿ.ಎಂ, ಪ್ರಾಣಿಶಾಸ್ತ್ರ ಶಾಸ್ತ್ರ ವಿಭಾಗದ ನರ್ಮತಾ.ಎ, ಸಂಸ್ಕøತ ಶಾಸ್ತ್ರ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು. +ಸ್ನಾತಕ ವಿಭಾಗದಲ್ಲಿ ಎಎಸ್‍ಪಿ ಪದವಿ ಕಾಲೇಜಿನ ದೀಕ್ಷಿತ.ಆರ್ ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ.ಎಸ್.ಎಂ, ಯುವಿಸಿಯ ಮೆಕಾನಿಕಲ್ ಇಂಜಿನಿಯರ್ ವಿಭಾಗದ ಯೋಗೇಶ್ವರನ್ ಪಡೆದುಕೊಂಡಿದ್ದಾರೆ. +ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ.ಎಸ್, ಬೆಂಗಳೂರು ವಿವಿ ಗಣಿತ ಶಾಸ್ತ್ರ ವಿಭಾಗದ ದಿವ್ಯಾ.ಟಿ.ಎಂ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ. +ಈ ಬಾರಿ ಪದವಿ ಪ್ರಮಾಣಪತ್ರವನ್ನು ವಿದ್ಯಾರ್ಥಿಗಳು ಡಿಜಿ ಲಾಕರ್ ಮತ್ತು ಮ್ಯಾಡ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ವಿವಿಯು ಸಂಪೂರ್ಣ ಡಿಜಟಲೀಕರಣಗೊಂಡಿದ್ದು, ಪರೀಕ್ಷೆ ಮುಗಿದ ಒಂದು ವಾರದೊಳಗೆ ಫಲಿತಾಂಶ ನೀಡಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕುಲಪತಿ ಹೇಳಿದರು. 26,056 ಪ್ರಥಮ ಶ್ರೇಣಿ, 4807 ಪ್ರಥರ್ಮ ದರ್ಜೆ, 874 ದ್ವಿತೀಯ ದರ್ಜೆ ಹಾಗೂ 137 ಪದವಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. +ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್ +ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಶೇಖ್ ಲತೀಫ್, ಪ್ರೊ.ಸಿ.ಶ್ರೀನಿವಾಸ್ (ಮೌಲ್ಯಮಾಪನ), ವಿತ್ತಾಕಾರಿ ಡಾ.ಎಂ.ಸುನಿತ ಉಪಸ್ಥಿತರಿದ್ದರು. \ No newline at end of file diff --git a/eesanje/url_46_329_2.txt b/eesanje/url_46_329_2.txt new file mode 100644 index 0000000000000000000000000000000000000000..f0cf5c62fd94e5f480917ad53221eb57609d117f --- /dev/null +++ b/eesanje/url_46_329_2.txt @@ -0,0 +1,5 @@ +ಇಬ್ರಾಹಿಂ ಹೇಳಿಕೆ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ : ಹೆಚ್ಡಿಕೆ +ಬೆಂಗಳೂರು, ಅ.17- ನಮ್ಮ ಪಕ್ಷದಲ್ಲಿರುವ ಹಿರಿಯರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. +ಎಲ್ಲವನ್ನು ಸರಿ ಮಾಡುತ್ತೇವೆ ಎಂದರು. ಇಬ್ರಾಹಿಂ ಅವರೇ ಒರ್ಜಿನಲ್ ಜೆಡಿಎಸ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅದು ಅವರಿಗೆ ಬಿಟ್ಟ ವಿಚಾರ. ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಬೇಡಿ. ಅವರು ಫ್ರೀ ಇದ್ದಾರೆ. ಅವರ ಜೊತೆ ಮಾತನಾಡಿಕೊಳ್ಳಿ ಎಂದು ಸುದ್ದಿಗಾರರಿಗೆ ತಿಳಿಸಿದರು. +ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ +ನಿನ್ನೆ ಇಬ್ರಾಹಿಂ ಅವರು ಪಕ್ಷದ ಚಿಂತನ-ಮಂಥನ ಸಭೆ ನಡೆಸಿ ನಾನೇ ಪಕ್ಷದ ರಾಜ್ಯಾಧ್ಯಕ್ಷ. ನಮ್ಮದೇ ಒರ್ಜಿನಲ್. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ತೀವ್ರ ವಿರೋದ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷದಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗದೆ ಕುಮಾರಸ್ವಾಮಿ ಅವರು ಎನ್‍ಡಿಎ ಮೈತ್ರಿಕೂಟ ಸೇರುವ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_46_329_3.txt b/eesanje/url_46_329_3.txt new file mode 100644 index 0000000000000000000000000000000000000000..742c91bf57c74cf2c20dae65f9088903dedafb58 --- /dev/null +++ b/eesanje/url_46_329_3.txt @@ -0,0 +1,6 @@ +478 ಕೋಟಿ ಬಾಕಿ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪತ್ರ +ಬೆಂಗಳೂರು,ಅ.17- ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ರಾಜ್ಯಕ್ಕೆ ಬಾಕಿ ಇರುವ 478.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. +ರಾಜ್ಯದಲ್ಲಿ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಅವುಗಳಲ್ಲಿ 161 ತಾಲ್ಲೂಕುಗಳಲ್ಲಿ ತೀವ್ರ ಬರವಿದ್ದು, 34 ತಾಲ್ಲೂಕುಗಳಲ್ಲಿ ಸಾಧಾರಣ ಪರಿಸ್ಥಿತಿ ಇದೆ. ಮನ್ರೇಗಾ ಯೋಜನೆಯ ಮೂಲ ಉದ್ದೇಶವೇ ಗ್ರಾಮೀಣ ಜಾಗದಲ್ಲಿ ದುಡಿಯುವ ಜನರಿಗೆ ಉದ್ಯೋಗ ಕಲ್ಪಿಸಿ ನಗರದತ್ತ ವಲಸೆ ಬರುವುದನ್ನು ತಪ್ಪಿಸಬಹುದಾಗಿದೆ. +ದೇಶದೊಂದಿಗೆ ಪಾಲುದಾರರಾಗಲು ಹೂಡಿಕೆದಾರರಿಗೆ ಮೋದಿ ಕರೆ +ಬರದ ಸನ್ನಿವೇಶದಲ್ಲಿ ಗ್ರಾಮೀಣ ಭಾಗದವರು ನಗರದತ್ತ ವಲಸೆ ಹೋಗುವುದನ್ನು ತಪ್ಪಿಸಲು ಉದ್ಯೋಗ ಖಾತ್ರಿಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಆ.30ರಂದು ಅನುದಾನ ಬಳಕೆಯ ಪ್ರಮಾಣ ಪತ್ರವನ್ನು ಹಾಗೂ ಸೆ.22ರಂದು ವಾರ್ಷಿಕ ಲೆಕ್ಕಪತ್ರಗಳ ವರದಿಯನ್ನು ಕೇಂದ್ರ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. +ಕಳೆದ ಸೆಪ್ಟೆಂಬರ್ 24ರಂದು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿಗೆ ಸಂಬಂಧಿಸಿದಂತೆ 1.55 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಆ.29ರಿಂದಲೂ ಈವರೆಗೂ ಮನ್ರೇಗಾ ಯೋಜನೆಯಡಿ 478.46 ಕೋಟಿ ರೂ.ಗಳ ಬಾಕಿ ಇದ್ದು, ಅದನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_329_4.txt b/eesanje/url_46_329_4.txt new file mode 100644 index 0000000000000000000000000000000000000000..b0db4a284ae0c5c73ac0bad917185c2d27a8648b --- /dev/null +++ b/eesanje/url_46_329_4.txt @@ -0,0 +1,11 @@ +ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ +ಬೆಂಗಳೂರು, ಅ.17- ವಿದ್ಯೆ ಹಣ ಗಳಿಕೆಯ ಸಾಧನವಾಗದೆ ವ್ಯಕ್ತಿತ್ವ ರೂಪಿಸುವ ಸಾಧನವಾದಾಗ ಮಾತ್ರ ಬದುಕಿನಲ್ಲಿ ಸುಖ, ಶಾಂತಿ, ನೆಮ್ಮದಿ ಸಿಗಲು ಸಾಧ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೊತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯೆ ಕೇವಲ ಕಾಗದದ ಸರ್ಟಿಫಿಕೇಟ್ ಆಗಿರಬಾರದು. ಅದು ಸಂಸ್ಕಾರವನ್ನು ಸಹ ಒಳಗೊಂಡಿರಬೇಕು ಎಂದರು. +ಪ್ರಸ್ತುತ ಎಲ್ಲಾ ವಿದ್ಯಾರ್ಥಿಗಳಿಗೂ ಗುಣಮಟ್ಟದ ಹಾಗೂ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ. ಅಂತಹ ಶಿಕ್ಷಣವನ್ನು ಬೆಂಗಳೂರು ವಿಶ್ವವಿದ್ಯಾಲಯ ನೀಡುತ್ತಿದೆ ಎಂದು ಹೇಳಿದರು. ವಿದ್ಯೆ ಮತ್ತು ಸಂಸ್ಕಾರ ಬದುಕಿನ ಬೇರುಗಳಿದ್ದಂತೆ. ಈ ಎರಡೂ ಒಟ್ಟಿಗೆ ಬೆಳೆದಾಗ ಮಾತ್ರ ಬದುಕಿಗೊಂದು ಸಾರ್ಥಕತೆ ಸಿಗುತ್ತದೆ. ಶಿಕ್ಷಣ ಅಂದರೆ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರವಲ್ಲ ಮನಸ್ಸಿಗೆ ಸಂಸ್ಕಾರವನ್ನು ಕೊಡುವುದೂ ಸಹ ಶಿಕ್ಷಣದ ಭಾಗ, ಬುದ್ದಿಯ ವಿಕಾಸದೊಂದಿಗೆ ಹೃದಯವಂತಿಕೆಯನ್ನೂ ಬೆಳೆಸಬೇಕು ಎಂದು ತಿಳಿಹೇಳಿದರು. +ವಿದ್ಯೆ ವಿನಯವನ್ನು ನೀಡುತ್ತದೆ. ವಿನಯದಿಂದ ಮನಷ್ಯನ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆ ವ್ಯಕ್ತಿಯಿಂದ ಹಣ ಸಂಪಾದನೆ ಆಗುತ್ತದೆ. ಸಂಪಾದಿಸಿದ ಹಣದಿಂದ ಧರ್ಮ ಕಾರ್ಯಗಳನ್ನು ನಡೆಸಿದಾಗ ಮಾತ್ರ ಮನಸ್ಸಿಗೆ ತೃಪ್ತಿ ಸಿಗುತ್ತದೆ ಎಂದರು. +ವಿದ್ಯಾರ್ಥಿ ಜೀವನ ಒಂದು ತಪಸ್ಸು ಇದ್ದಂತೆ. ಪ್ರತಿ ವಿದ್ಯಾರ್ಥಿಯ ಜೀವನ ಕ್ರಮ ಶಿಸ್ತಿಗೆ ಒಳಪಡಬೇಕು. ವಿದ್ಯೆ ಕೇವಲ ಒಬ್ಬನ ಜೀವನವನ್ನು ಕಟ್ಟಿಕೊಡುವುದಷ್ಟೇ ಅಲ್ಲ ಒಂದು ದೇಶದ ಬೆಳವಣಿಗೆಯನ್ನೂ, ದೇಶದ ಸಂಸ್ಕೃತಿಯನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯುತ್ತದೆ. ಒಟ್ಟಾರೆ ಹೇಳಬೇಕೆಂದರೆ ವಿದ್ಯೆ ಸಂಪತ್ತು ಹೌದು, ಸಂಸ್ಕಾರವೂ ಹೌದು ಎಂದು ಎಂದರು. +ಬೆಂಗಳೂರು ವಿಶ್ವವಿದ್ಯಾಲಯ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನಭಂಡಾರ, ವಿದ್ಯಾರ್ಥಿಗಳಿಗೆ ನೈತಿಕ ಹಾಗೂ ಗುಣಮಟ್ಟದ ಶಿಕ್ಷಣವನ್ನು ಧಾರೆ ಎರೆಯುತ್ತಿರುವ ಜ್ಞಾನಾಲಯ, ಉನ್ನತ ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಸುತ್ತಿರುವ ವಿಶ್ವವಿದ್ಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು. +ಈ ಸಂಧರ್ಭದಲ್ಲಿ ಇಸ್ರೋದ ಅಧ್ಯಕ್ಷರಾದ ಎಸ್ ಸೋಮನಾಥ್ ಅವರಿಗೆ ನಾನು ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಯಶಸ್ವಿ ಚಂದ್ರಯಾನ-3ರ ರೂವಾರಿ ಆಗಿರುವ ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವುದು ನನಗೆ ಬಹಳ ಸಂತೋಷ ತಂದಿದೆ. ಇಸ್ರೋ ಸಂಸ್ಥೆ ಇವತ್ತು ನಮ್ಮ ಭಾರತ ದೇಶವನ್ನು ಬಾಹ್ಯಾಕಾಶದ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ನಮಗೆಲ್ಲಾ ಹೆಮ್ಮೆ ತಂದಿದೆ. ಈ ಸಂದರ್ಭದಲ್ಲಿ ಎಲ್ಲಾ ವಿಜ್ಞಾನಿಗಳು ಅಭಿನಂದಿಸುತ್ತೇನೆ ಎಂದರು. +ಹೊರ ರಾಜ್ಯದ ವಾಹನಗಳಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ +ಬೆಂಗಳೂರು ವಿಶ್ವವಿದ್ಯಾನಿಲಯ ನನಗೆ ನೀಡಿರುವ ಗೌರವ ಡಾಕ್ಟರೇಟ್‍ನ್ನು ತುಂಬಾ ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಗೌಡರು ಹೇಳಿದರು. ಇಸ್ರೋದ ಅಧ್ಯಕ್ಷರಾದ ಎಸ್. ಸೋಮನಾಥ್ ಮಾತನಾಡಿ, ಬಾಹ್ಯಾಕಾಶ ಸಂಸ್ಥೆಯ ಪ್ರತಿನಿಯಾಗಿ ನನಗೆ ಲಭಿಸಿರೋ ಈ ಗೌರವ ಅತೀವ ಸಂತಸ ತಂದಿದೆ. ನೂತನ ತಂತ್ರಜ್ಞಾನಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ವೇದಿಕೆಯಾಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ದೇವೇಗೌಡರು ಹಿರಿಯ ರಾಜಕಾರಣಿ, ರಾಜಕೀಯ ವಿಶ್ಲೇಷಕ ಮಾತ್ರವಲ್ಲದೇ ಜನರ ಪ್ರಧಾನಿಯಾಗಿದ್ದವರು. ನನಗೆ ನೀಡಿದ ಗೌರವ ಡಾಕ್ಟರೇಟ್‍ಅನ್ನು ಚಂದ್ರಯಾನದ ಪ್ರತಿಯೊಬ್ಬ ವಿಜ್ಞಾನಿ ಹಾಗು ತಂತ್ರಜ್ಞಾನಿಗೂ ಅರ್ಪಿಸುತ್ತೇನೆ ಎಂದರು. +ನಾವು ಅನೇಕ ಬಾಹ್ಯಾಕಾಶ ವಿಚಾರದಲ್ಲಿ ಇಂದಿಗೂ ಅನ್ವೇಷಣೆ ನಡೆಸುತ್ತಲೇ ಇದ್ದೇವೆ. ಭಾರತದ ಶಕ್ತಿಯನ್ನು ಮತ್ತೊಮ್ಮೆ ಚಂದ್ರಯಾನ ಮುಖಾಂತರ ಸಾಬೀತು ಮಾಡಿದ್ದೇವೆ ಎಂದು ಅವರು ಹೇಳಿದರು. ಸೋಮನಾಥ್ ಅವರ ಅನುಪಸ್ಥಿತಿಯಲ್ಲಿ ಅವರ ಸಂದೇಶದ ವಿಡಿಯೋವನ್ನು ಘಟಿಕೋತ್ಸವದಲ್ಲಿ ಪ್ರದರ್ಶಿಸಲಾಯಿತು. +ಬೆಂಗಳೂರು ವಿಶ್ವ ವಿದ್ಯಾಲಯದ ಕುಲಾಪತಿಗಳಾದ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ ಸುಧಾಕರ್, ಝರೋದಾ ಸಹ ಪ್ರಾಧ್ಯಾಕರಾದ ನಿಖಿಲ್ ಕಾಮತ್, ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಜಯಕರ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಯಿತು. 204 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಗಿದೆ. \ No newline at end of file diff --git a/eesanje/url_46_329_5.txt b/eesanje/url_46_329_5.txt new file mode 100644 index 0000000000000000000000000000000000000000..3dbd12e2bae8499b7d5108e56a03ecc45855b75f --- /dev/null +++ b/eesanje/url_46_329_5.txt @@ -0,0 +1,8 @@ +ಸಿಎಂ ಇಬ್ರಾಹಿಂಗೆ ಟಾಂಗ್ ಕೊಟ್ಟ ಶರವಣ +ಬೆಂಗಳೂರು, ಅ.17-ಸಮಾನ ಮನಸ್ಕರ ಚಿಂತನ-ಮಂಥನ ಸಭೆಯನ್ನು ಜೆಡಿಎಸ್ ರಾಜ್ಯಾಧ್ಯಕ್ಷರು ನಡೆಸಿದ್ದು, ಅದು ಸಮಾನ ದುಖಃಸ್ಥರ ಸಭೆ ಎಂದೆನಿಸತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂತನ- ಮಂಥನ ಸಭೆಯಲ್ಲಿ ಪಕ್ಷದ ವರಿಷ್ಠರು ಇರಬೇಕಾಗಿತ್ತು. ಇದನ್ನು ಪಕ್ಷದ ವೇದಿಕೆ ಎಂದು ಕರೆಯಬಹುದೆ ಎಂದು ಪ್ರಶ್ನಿಸಿದರು. +ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ..ದೇವೇಗೌಡರು ಚಿಂತನ- ಮಂಥನ ಸಭೆಗೆ ಅನುಮತಿ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು. ದೇವೇಗೌಡರ ಕಣ್ಮುಂದೆ ಇರುವು ಪಕ್ಷ ಅಧಿಕಾರಕ್ಕೆ ಬರಬೇಕು ಎಂಬುದು. ಕಷ್ಟದ ಸಮಯದಲ್ಲಿ ನಾವು ಜೊತೆಯಲ್ಲಿ ಇದ್ದೇವೆ. ಮುಂಬರುವ ಲೋಕಸಭಾ ಚುನಾವಣೆಗೆ ಏನು ಮಾಡಬೇಕು ಎಂಬ ಚರ್ಚೆಯಲ್ಲಿ ಇದ್ದೇವೆ ಎಂದು ಹೇಳಿದರು. +ರಾಜ್ಯಾಧ್ಯಕ್ಷರು ನಡೆಸಿರುವ ಸಭೆ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ಪಕ್ಷದ ವರಿಷ್ಠರು ಮೈತ್ರಿಗೂ ಮುನ್ನ ಸಭೆ ಕರೆದು ಚರ್ಚಿಸಿದ್ದಾರೆ. ಮೈತ್ರಿ ಬಗ್ಗೆ ಏಕ ಪಕ್ಷೀಯ ನಿರ್ಧಾರ ತೆಗೆದುಕೊಂಡಿಲ್ಲ. ನಾವೆಲ್ಲಾ ಒಪ್ಪಿದ ಮೇಲೆಯೇ ಅವರು ಮುಂದುವರೆದಿದ್ದು. ಒಳಗೊಂದು ಹೊರಗೊಂದು ಮಾತಾಡೋದು ಸರಿಯಲ್ಲ. ಅವರು ಕೂಡ ಹಿರಿಯರಿದ್ದಾರೆ ಎಂದು ಅವರು ಹೇಳಿದರು. +ಟ್ರಕ್‍ಗೆ ಬೆಂಕಿ, ನಾಲ್ವರ ಸಜೀವ ದಹನ +ನಿನ್ನ ನಡೆದ ಘಟನೆ ನಮಗೂ ನೋವಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಗೆ ದೇವೇಗೌಡರ ಅನುಮತಿ ಪಡೆದೇ ಹೋಗಿದ್ದರು. ಶಾಸಕಾಂಗ ಸಭೆ ಕರೆದಾಗ ಎಲ್ಲರೂ ಬಂದಿದ್ದರು. ವರಿಷ್ಠರು ಏನೇ ನಿರ್ಧಾರ ತೆಗೆದುಕೊಂಡರೆ ಜೊತೆಗೆ ಇರುತ್ತೇವೆ ಅಂದಿದ್ದಾರೆ. ಶಾಸಕರು ಸಂಪರ್ಕದಲ್ಲಿ ಇದ್ದಾರೆ ಎಂಬುದು ಗಾಳಿಯಲ್ಲಿ ಗುಂಡು ಅಷ್ಟೆ ಎಂದರು. +ದೇವೇಗೌಡರಿಗೆ ಇನ್ನೂ ನೋವು ಕೊಡಬೇಡಿ. ನನಗೂ ಸೇರಿ ಪಕ್ಷದ ಪ್ರಮುಖರಿಗೆ ಕರೆ ಮಾಡಿದ್ದರು.ಆದರೆ ನಾವ್ಯಾರೂ ಸಭೆಗೆ ಹೋಗಿಲ್ಲ. ನೋವಿನಿಂದ ಆ ಸಭೆ ಮಾಡಿದ್ದಾರೆ ಅಷ್ಟೆ. ಇಲ್ಲಿ ಬ್ಲಾಕ್ ಮೇಲ್ ಏನೂ ಬರೋದಿಲ್ಲ ಎಂದು ಅವರು ಹೇಳಿದರು. +ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದು, ಇಬ್ರಾಹಿಂ ದೊಡ್ಡವರು. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಕೊಟ್ಟಿರು ಹೇಳಿಕೆಯನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಯಾರ್ಯಾರನ್ನ ಕರೆಸಬೇಕು ಅನ್ನೋದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು. \ No newline at end of file diff --git a/eesanje/url_46_329_6.txt b/eesanje/url_46_329_6.txt new file mode 100644 index 0000000000000000000000000000000000000000..623df0febf61cb22aa8194458d7c9eda43cc66d1 --- /dev/null +++ b/eesanje/url_46_329_6.txt @@ -0,0 +1,9 @@ +ಹೊರ ರಾಜ್ಯದ ವಾಹನಗಳಿಗೆ ವಿನಾಯತಿ ನೀಡಿದ ಕರ್ನಾಟಕ ಸರ್ಕಾರ +ಬೆಂಗಳೂರು,ಅ.17- ಒಂಬತ್ತು ದಿನಗಳ ಕಾಲ ನಡೆಯುವ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ವಿಶೇಷವಾಗಿ ಹೊರ ರಾಜ್ಯದಿಂದ ಬರುವ ವಾಹನಗಳಿಗೆ ಪ್ರವೇಶ ಶುಲ್ಕದಿಂದ ವಿನಾಯಿತಿ ನೀಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಇತರೆ ರಾಜ್ಯಗಳಿಂದ ಮೈಸೂರು ಮತ್ತು ಕೃಷ್ಣರಾಜ ಸಾಗರಕ್ಕೆ (ಕೆಆರೆಸ್) ತೆರಳುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಮತ್ತು ಪ್ರವಾಸೋದ್ಯಮಕ್ಕೆ ಬೆಂಬಲ ನೀಡಲು ಈ ಆದೇಶ ನೀಡಲಾಗಿದೆ. +ಇತರೆ ರಾಜ್ಯಗಳಲ್ಲಿ ನೋಂದಣಿಯಾಗಿರುವ ಪ್ರವಾಸಿ ವಾಹನಗಳು ಮತ್ತು ಆ ರಾಜ್ಯಗಳಲ್ಲಿ ರಸ್ತೆ ತೆರಿಗೆ ಪಾವತಿಸುವ ವಾಹನಗಳಿಗೆ ಅಕ್ಟೋಬರ್ 16 ಮತ್ತು 24ರ ನಡುವೆ ಕರ್ನಾಟಕದಲ್ಲಿ ಪ್ರವೇಶ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ. +ಬೆಲ್ಜಿಯಂನಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಇಬ್ಬರು ಬಲಿ +ದಸರಾ ಮಹೋತ್ಸವದ ಒಂಬತ್ತು ದಿನಗಳ ಅವಧಿಯಲ್ಲಿ ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‍ಎಸ್ ಅಣೆಕಟ್ಟೆಗೆ ತೆರಳುವ ವಾಹನಗಳು ಮಾತ್ರ ಶುಲ್ಕ ವಿನಾಯಿತಿ ಪಡೆಯಲು ಅರ್ಹವಾಗಿರುತ್ತವೆ. ತೆರಿಗೆ ವಿನಾಯಿತಿಗಳಿಗೆ ಅರ್ಹರಾಗಲು ಅವರು ವಿಶೇಷ ಪರವಾನಗಿ ಪಡೆಯಬೇಕಾಗುತ್ತದೆ ಎಂದು ಇಲಾಖೆ ಹೇಳಿದೆ. ಕೇರಳ ಮತ್ತು ತಮಿಳುನಾಡಿನಿಂದ ಮ್ಯಾಕ್ಸಿ ಕ್ಯಾಬ್‍ಗಳು, ಟ್ಯಾಕ್ಸಿಗಳು ಮತ್ತು ಪ್ರವಾಸಿ ಬಸ್‍ಗಳು ತೆರಿಗೆ ವಿನಾಯಿತಿಯಿಂದ ಹೆಚ್ಚಿನ ಪ್ರಯೋಜನ ಪಡೆಯಲಿವೆ. +ದಸರಾ ಸಂದರ್ಭದಲ್ಲಿ ಪ್ರತಿದಿನ 2,000 ಟ್ಯಾಕ್ಸಿಗಳು, 1,000 ಮ್ಯಾಕ್ಸಿ ಕ್ಯಾಬ್‍ಗಳು ಮತ್ತು 300 ಪ್ರವಾಸಿ ಬಸ್‍ಗಳು ಮೈಸೂರು ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಬರುತ್ತವೆ. ಪ್ರವೇಶ ಶುಲ್ಕ ಟ್ಯಾಕ್ಸಿಗಳಿಗೆ 300 ರೂ. ಮ್ಯಾಕ್ಸಿ ಕ್ಯಾಬ್‍ಗಳಿಗೆ 1,800-2,000 ರೂ. ಮತ್ತು ಬಸ್‍ಗಳಿಗೆ ಅವುಗಳ ಆಸನ ಸಾಮಥ್ರ್ಯದ ಆಧಾರದ ಮೇಲೆ 15,000 ರೂ.ವರೆಗೆ ಇರುತ್ತದೆ. ಪ್ರತಿ ಪ್ರವೇಶಕ್ಕೆ ಶುಲ್ಕ ವಿಧಿಸಲಾಗುತ್ತದೆ ಅದು ಏಳು ದಿನಗಳವರೆಗೆ ಮಾನ್ಯವಾಗಿರುತ್ತದೆ. +ಸ್ಥಳೀಯ ಆರ್ಥಿಕತೆ ಸುಧಾರಣೆ ತೆರಿಗೆ ವಿನಾಯಿತಿ ಇರುವುದರಿಂದ ದಸರಾ ಸಮಯದಲ್ಲಿ ಮೈಸೂರು ಮತ್ತು ಕೆಆರ್‍ಎಸ್‍ಗೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಹೋಟೆಲ್ ಉದ್ಯಮದ ಜೊತೆ ಸ್ಥಳೀಯ ಆರ್ಥಿಕತೆ ಸುಧಾರಣೆಗೆ ಇದು ಅನುಕೂಲವಾಗಲಿದೆ. ಮೈಸೂರು ದಸರಾದಂತೆ ಮಂಗಳೂರು ದಸರಾ ಕೂಡ ವಿಶೇಷವಾಗಿರುವುದರಿಂದ ಇಲ್ಲಿಗೂ ಕೂಡ ತೆರಿಗೆ ವಿನಾಯಿತಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. +ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ರಾಹುಲ್ ಪ್ರಧಾನಿ : ತರೂರ್ +32 ಒಕ್ಕೂಟಗಳನ್ನು ಪ್ರತಿನಿಧಿಸುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಿಂದ ನಷ್ಟವಾಗಿರುವುದರಿಂದ ಸರ್ಕಾರ ಈ ವರ್ಷ ತೆರಿಗೆ ವಿನಾಯಿತಿಯನ್ನು ಘೋಷಿಸುವುದಿಲ್ಲ ಎಂದು ಆತಂಕದಲ್ಲಿತ್ತು. \ No newline at end of file diff --git a/eesanje/url_46_329_7.txt b/eesanje/url_46_329_7.txt new file mode 100644 index 0000000000000000000000000000000000000000..19e06a2580bfe789d5bc6d151c3a80978ea4bb26 --- /dev/null +++ b/eesanje/url_46_329_7.txt @@ -0,0 +1,6 @@ +ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ +ಮಡಿಕೇರಿ,ಅ.17-ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಕಲಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ರಾತ್ರಿ 1.27ಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ಮಾತೆ ತೀರ್ಥರೂಪದಲ್ಲಿ ಪ್ರತ್ಯಕ್ಷವಾಗಲಿದ್ದು, ಈ ಅದ್ಭುತ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. +ಈಗಾಗಲೇ ಜಿಲ್ಲಾಡಳಿತ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೇಳೆ ದೇವಾಲಯದ ಸುತ್ತಮುತ್ತ ನೂಕುನುಗ್ಗಲು ಬ್ಯಾರಿಕೇಡ್ ಹಾಗೂ ಲೈಟ್‍ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. +ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವು +ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದು, ಪಾರ್ಕಿಂಗ್, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಅಂತಿಮ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದೆ. ನಾಳೆ ಸಂಜೆವರೆಗೂ ಸಾರ್ವಜನಿಕರಿಗೆ ತೀರ್ಥ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 5.30ಕ್ಕೆ ಸಾರ್ವಜನಿಕ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ನಂತರ ರಾತ್ರಿ 10.30ಕ್ಕೆ ತೀರ್ಥ ಸ್ನಾನ, ಪವಿತ್ರ ಪಠಣಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ. +ತೀರ್ಥೋದ್ಭವದ ಕ್ಷಣವನ್ನು ವೀಕ್ಷಿಸಲು ಎಲ್‍ಇಡಿ ಪರದೆ ವ್ಯವಸ್ಥೆ ಕೂಡ ಮಾಡಲಾಗಿದೆ. ಶ್ರೀ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ. \ No newline at end of file diff --git a/eesanje/url_46_329_8.txt b/eesanje/url_46_329_8.txt new file mode 100644 index 0000000000000000000000000000000000000000..a6f6fcc3ad1884d3cdd2c418abdc010e42596b35 --- /dev/null +++ b/eesanje/url_46_329_8.txt @@ -0,0 +1,8 @@ +ಮಾಜಿ ಸಿಎಂ ಬೊಮ್ಮಾಯಿ ಆಸ್ಪತ್ರೆಗೆ ದಾಖಲು +ಬೆಂಗಳೂರು,ಅ.17-ಮೊಣಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಹಲವು ದಿನಗಳಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದು, ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. +ಸದ್ಯ ವೈದ್ಯರು ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದು, ಅವರನ್ನು ವೈದ್ಯರು ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಕೆಲ ವರ್ಷಗಳಿಂದ ಬೊಮ್ಮಾಯಿಯವರು ತೀವ್ರ ಮಂಡಿ ನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. +ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವು +ಒಂದು ವೇಳೆ ಆಪರೇಷನ್ ಮಾಡಿಸಿಕೊಂಡರೇ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತದೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಬದಲಿಗೆ ಬಸವರಾಜ ಬೊಮ್ಮಾಯಿ ಮಂಡಿ ನೋವಿಗೆ ಮೈಸೂರಿನ ಮೂಲದ ಖ್ಯಾತ ನಾಟಿ ವೈದ್ಯ ಲೋಕೇಶ್ ಟೇಕ್ ಅವರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. +ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸರ್ಕಾರದ ಚುಕ್ಕಾಣಿ ಹಿಡಿದ ವೇಳೆ ಮಂಡಿ ನೋವು ಉಲ್ಬಣಿಸಿತ್ತು. ಉಪಚುನಾವಣಾ ಪ್ರಚಾರದ ವೇಳೆ ವಿಶ್ರಾಂತಿ ರಹಿತ ಪ್ರವಾಸದ ಕಾರಣದಿಂದ ಮಂಡಿ ನೋವು ಮತ್ತಷ್ಟು ಹೆಚ್ಚಾಗಿ ಅಕ್ಷರಶಃ ಕುಂಟುತ್ತಾ ನಡೆಯುವಂತಾಗಿತ್ತು. +ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಷ್ಟು ಸಮಯವೂ ಮಂಡಿ ಚಿಕಿತ್ಸೆಗೆ ಮುಂದಾಗಿರಲಿಲ್ಲ. ಒಂದು ವೇಳೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತದೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಕುಂಟುತ್ತಲೇ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೀಗ ಮಂಡಿ ಶಸ್ತ್ರಚಿಕಿತ್ಸೆ ಆಗಲೇಬೇಕು ಎಂದು ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. +ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಶೀಘ್ರಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_46_329_9.txt b/eesanje/url_46_329_9.txt new file mode 100644 index 0000000000000000000000000000000000000000..3598b5a772d24f20bbc59296d8d524ca40ed1312 --- /dev/null +++ b/eesanje/url_46_329_9.txt @@ -0,0 +1,5 @@ +20 ಶಾಸಕರ ಜೊತೆ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಪ್ಲಾನ್! +ಬೆಂಗಳೂರು, ಅ.16- ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಾಸಕರ ಹಾಗೂ ಆಪ್ತಬಣದ ಪ್ರವಾಸ ಆಯೋಜನೆ ಮಾಡಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ. +ಈ ಮೊದಲು ಸತೀಶ್ ಜಾರಕಿಹೊಳಿ ಅವರು ಮೈಸೂರು ದಸರಾ ನೋಡಲು 20 ಕ್ಕೂ ಹೆಚ್ಚು ಮಂದಿ ಶಾಸಕರನ್ನು ಗುಂಪು ಕಟ್ಟಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅದು ತಪ್ಪಿದೆ. ಆಪ್ತ ಶಾಸಕರ ಜೊತೆ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು ವಿವಿಧ ಪಕ್ಷಗಳ ಶಾಸಕರುಗಳು ಹಲವು ಕಡೆ ಪ್ರವಾಸ ಮಾಡಿದ್ದಾರೆ. ಈ ಬಗ್ಗೆ ನಮ್ಮ ಶಾಸಕರು ಕೂಡ ಪದೇಪದೇ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಿದರು. +ವಿರಾಟ್‍ಕೊಹ್ಲಿ ವಿಶ್ವದಲ್ಲೇ ಅತ್ಯಂತ ಉತ್ತಮ ಆಟಗಾರ +ಇದು ಬಣ ರಾಜಕೀಯವಲ್ಲ. ಕಾಂಗ್ರೆಸ್‍ನ ಶಾಸಕರು ಮಾತ್ರವೇ ಹೋಗುತ್ತೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಯೇ ಪ್ರವಾಸ ಮಾಡುತ್ತೇವೆ. ಮೈಸೂರು ದಸರಾ ನೋಡಲು ಬನ್ನಿ ಎಂದು ಆ ಭಾಗದ ಶಾಸಕರು ಆಹ್ವಾನ ನೀಡಿದ್ದರು. ಅದರಂತೆ ನಮ್ಮ ಆಪ್ತರು, ನಮ್ಮ ಭಾಗದ ಶಾಸಕರು, ಸಮಾನ ಮನಸ್ಕರು ಹೋಗಲು ನಿರ್ಧರಿಸಿದ್ದೆವು. ಆದರೆ ಅದಕ್ಕೆ ಸಮಯ ಸಿಗಲಿಲ್ಲ. ನಮ್ಮ ಭಾಗದಲ್ಲೇ ಕೆಲವು ಹಬ್ಬಗಳಿರುವುದರಿಂದ ಎಲ್ಲರಿಗೂ ಸಮಯ ಆಗಲಿಲ್ಲ. ಆದರೆ ಮುಂದೊಂದು ದಿನ ಸಮಯ ನಿಗದಿ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದರು. \ No newline at end of file diff --git a/eesanje/url_46_32_1.txt b/eesanje/url_46_32_1.txt new file mode 100644 index 0000000000000000000000000000000000000000..dcb57b1f9fabac2d390454e756673a3585da82b7 --- /dev/null +++ b/eesanje/url_46_32_1.txt @@ -0,0 +1,9 @@ +ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ + +ಬೆಂಗಳೂರು,ಆ.28-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುವ ಮೂಲಕ ವಿವಾದಕ್ಕೀಡಾಗಿರುವ ದರ್ಶನ್‌ ಮತ್ತು ಆತನ ಸಂಗಡಿಗರನ್ನು ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲಾಗುತ್ತಿದೆ. +24ನೇ ಎಸಿಎಂಎಂ ನ್ಯಾಯಾಲಯದ ಅನುಮತಿ ಪಡೆದು ದರ್ಶನ್‌ರನ್ನು ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗಳು ಚಾಲನೆಯಲ್ಲಿವೆ.ಈ ನಡುವೆ ಜೈಲಿನಲ್ಲಿ ರಾಜಾತಿಥ್ಯ ಪಡೆದು ಕಾನೂನು ಉಲ್ಲಂಘಿಸಿದ ಕಾರಣಕ್ಕಾಗಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಎರಡು ಪ್ರಕರಣಗಳಲ್ಲಿ ದರ್ಶನ್‌ ಆರೋಪಿಯಾಗಿದ್ದಾರೆ. +ತನಿಖಾಧಿಕಾರಿಗಳು ನಿನ್ನೆ ದರ್ಶನ್‌ರನ್ನು ಪ್ರಾಥಮಿಕ ತನಿಖೆಗೆ ಒಳಪಡಿಸಿದ್ದು, ಇಂದು ಹೆಚ್ಚಿನ ತನಿಖೆ ನಡೆಸುವ ನಿರೀಕ್ಷೆಗಳಿವೆ. ಇದಕ್ಕಾಗಿ ನಿನ್ನೆಯೇ ಸ್ಥಳಾಂತರಗೊಳ್ಳಬೇಕಿದ್ದ ದರ್ಶನ್‌ರನ್ನು ಬೆಂಗಳೂರಿನ ಜೈಲಿನಲ್ಲೇ ಉಳಿಸಲಾಗಿದ್ದು, ಇಂದು ಮಧ್ಯಾಹ್ನ ಬಿಗಿಭದ್ರತೆಯಲ್ಲಿ ಕರೆದೊಯ್ಯುವ ಸಾಧ್ಯತೆಯಿದೆ. ಇದಕ್ಕಾಗಿ ದಾರಿಯುದ್ದಕ್ಕೂ ಪೊಲೀಸ್‌‍ ಪಹರೆಯನ್ನು ನಿಯೋಜಿಸಲಾಗಿದೆ. +ಇತ್ತ ಬಳ್ಳಾರಿ ಕಾರಾಗೃಹದಲ್ಲಿ ರಾಜಾತಿಥ್ಯದಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜೈಲಿನ ಕೊಠಡಿಗಳು ಸೇರಿದಂತೆ ಎಲ್ಲವನ್ನೂ ಪರಿಶೀಲನೆ ನಡೆಸಲಾಗಿದೆ. ಸಿಬ್ಬಂದಿಗಳನ್ನು ಬದಲಾವಣೆ ಮಾಡಿ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ. ದರ್ಶನ್‌ ಭದ್ರತೆಗೆ ಪ್ರತ್ಯೇಕವಾಗಿ ಇಬ್ಬರು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. +1824 ರಲ್ಲಿ ಬ್ರಿಟಿಷರು ನಿರ್ಮಿಸಿದ ಬಳ್ಳಾರಿಯ ಜೈಲಿನಲ್ಲಿ 385 ಖೈದಿಗಳಿದ್ದಾರೆ. ಅದರಲ್ಲಿ ಕೆಲವು ನಟೋರಿಯಸ್‌‍ ಹಾಗೂ ಕುಖ್ಯಾತಿ ಗಳಿಸಿದವರಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಭದ್ರತೆ ಹೆಚ್ಚಿಸಲು ನಿರ್ಧರಿಸಲಾಗಿದೆ. +ಬೆಂಗಳೂರು ಜೈಲಿನಲ್ಲಿ ಆರಾಮಾಗಿ ಅಡ್ಡಾಡಿಕೊಂಡು, ಚೇರು, ಟೇಬಲ್ಲು, ಕಾಫಿ ಮತ್ತು ಬೆಡ್ಡು, ಮೊಬೈಲು ಎಲ್ಲಾ ಸೌಲಭ್ಯಗಳನ್ನೂ ಪಡೆದುಕೊಂಡು ಸುಖಾಸೀನ ಸೌಲಭ್ಯ ನಡೆಸುತ್ತಿದ್ದ ದರ್ಶನ್‌ಗೆ ಕೆಲವು ರೌಡಿಗಳು ಆತಿಥ್ಯ ಸೌಲಭ್ಯಗಳನ್ನು ಕಲ್ಪಿಸುತ್ತಿದ್ದರು. ಕೊಲೆ ಪ್ರಕರಣದಲ್ಲಿ ಜೈಲಿಗೆ ಬಂದ ಆರೋಪಿಯನ್ನು ಬಂಧೀಖಾನೆಯ ಮಾರ್ಗಸೂಚಿಯ ಅನುಸಾರ ನಡೆಸಿಕೊಳ್ಳುವ ಬದಲಾಗಿ ರಾಜಾತಿಥ್ಯ ನೀಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಯಿತು. +ಜೈಲಿನಲ್ಲಿ ರೌಡಿಗಳ ಜೊತೆ ದರ್ಶನ್‌ ಲಾನ್‌ನಲ್ಲಿ ಕುಳಿತು ಟೀ, ಸಿಗರೇಟ್‌ನೊಂದಿಗೆ ಚರ್ಚೆ ನಡೆಸುತ್ತಿರುವುದು ಜೈಲಿನ ಲೋಪದೋಷಗಳನ್ನು ಅನಾವರಣಗೊಳಿಸಿದ್ದವು. ಹೀಗಾಗಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವವರನ್ನು ಶಿವಮೊಗ್ಗ, ಮೈಸೂರು, ಧಾರವಾಡ, ಬಳ್ಳಾರಿ ಹಾಗೂ ಬೆಳಗಾವಿ ಜೈಲುಗಳಿಗೆ ಸ್ಥಳಾಂತರಿಸಲಾಗುವುದು. \ No newline at end of file diff --git a/eesanje/url_46_32_10.txt b/eesanje/url_46_32_10.txt new file mode 100644 index 0000000000000000000000000000000000000000..7ac3b93fe5affa681101246f55a0b036e4e37fdf --- /dev/null +++ b/eesanje/url_46_32_10.txt @@ -0,0 +1,11 @@ +ಜೈಲು ಸುಧಾರಣೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ + +ಬೆಂಗಳೂರು,ಆ.27-ನಟ ದರ್ಶನ್ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೇರಿ ದಂತೆ ಹಲವರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಹಿನ್ನಲೆಯಲ್ಲಿ ಜೈಲಿನ ಸಮಗ್ರ ಸುಧಾರಣೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಾಗಿ ಗೃಹಸಚಿವ ಪರಮೇಶ್ವರ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡುಮೂರು ದಿನಗಳ ಒಳಗಾಗಿ ಈ ಕುರಿತು ಸಮಿತಿಯೊಂದನ್ನು ಪ್ರಕಟಿಸಲಾಗುವುದು. ಜೊತೆಗೆ ಈ ಹಿಂದೆ ಸಚಿವ ಎಚ್.ಕೆ.ಪಾಟೀಲ್ ಅವರ ಸಮಿತಿ ಜೈಲಿನ ಸುಧಾರಣೆಗೆ ನೀಡಿದ್ದ ವರದಿಯನ್ನು ಪರಿಗಣಿಸಲಾಗುವುದು. +ಈವರೆಗೂ ಅದು ತಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳಿದರು. ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ ಹಾಗೂ ಇತರ ಕೈದಿಗಳನ್ನು ಒಂದು ಬ್ಯಾರೆಕ್ನಿಂದ ಮತ್ತೊಂದು ಬ್ಯಾರೆಕ್ಗೆ ಸುಲಭವಾಗಿ ತಿರುಗಾಡಲು ಅವಕಾಶ ಮಾಡಿಕೊಟ್ಟಿದ್ದು ಸಿಸಿಟಿವಿಯಲ್ಲಿ ದಾಖಲಾಗಿದೆ. +ಇದು ಒಂದು ಜೈಲಿನ ವಿಚಾರವಲ್ಲ. ಬೆಳಗಾವಿ ಹಿಂಡಲಗ ಸೇರಿದಂತೆ ರಾಜ್ಯಾದ್ಯಂತ ಜೈಲುಗಳಲ್ಲಿ ಲೋಪಗಳು ಕಂಡುಬಂದಿವೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ, ದರ್ಶನ್ ಗುಂಪಿಗೆ ಸಹಾಯ ಮಾಡಿದವರ ವಿರುದ್ಧ ತನಿಖೆ ನಡೆಸಲಾಗುವುದು. ಈಗಾಗಲೇ 9 ಮಂದಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದರು. +ಜೈಲಿನ ಸುಧಾರಣೆಗೆ ರಾಷ್ಟ್ರ ಮಟ್ಟದಲ್ಲೂ ಮನಮೋಹನ್ ಸಿಂಗ್ ಕಾಲದಲ್ಲಿ ವರದಿಯೊಂದು ಮಂಡನೆಯಾಗಿರುವ ಬಗ್ಗೆ ಮಾಹಿತಿ ಇದೆ. ಅದನ್ನು ಪರಿಶೀಲಿಸಲಾಗುವುದು. ದರ್ಶನ್ ವಿಚಾರ ಒಂದೇ ಅಲ್ಲ ಒಟ್ಟಾರೆ ಜೈಲಿನ ವ್ಯವಸ್ಥೆಗಳನ್ನೇ ಪುನರ್ ಪರಿಶೀಲಿಸಿ ಸರಿಪಡಿಸಲಾಗುವುದು ಎಂದು ಹೇಳಿದರು. +ಪರಪ್ಪನ ಅಗ್ರಹಾರ ಕಾರಾಗೃಹವನ್ನು ಮೂರು ವಿಭಾಗಗಳನ್ನಾಗಿ ಮಾಡಲು ಅವಕಾಶವಿಲ್ಲ. ಆಂತರಿಕವಾಗಿ ಸಣ್ಣಪುಟ್ಟ ಹೊಂದಾಣಿಕೆಗಳನ್ನು ಮಾಡಿಕೊಳ್ಳಬಹುದು. ಶಿಕ್ಷಾಧೀನ ಕೈದಿಗಳು, ವಿಚಾರಣಾಧೀನ ಕೈದಿಗಳು, ಮಹಿಳಾ ಕೈದಿಗಳು ಎಂದು ಪ್ರತ್ಯೇಕ ಮಾಡಬಹುದು. ಆದರೆ ಅದರ ಹೊರತಾಗಿ ಘಟಕಗಳವಾರು ವಿಭಜಿಸಲು ಸಾಧ್ಯವಿಲ್ಲ ಎಂದರು. +ಶಿವಮೊಗ್ಗ, ಬಳ್ಳಾರಿ, ಮಂಗಳೂರು ಸೇರಿದಂತೆ ಹಲವು ಜೈಲುಗಳ ವ್ಯವಸ್ಥೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.ದರ್ಶನ್ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆದುಕೊಳ್ಳುವ ಅಗತ್ಯವಿಲ್ಲ. ಇದರಲ್ಲಿ ನಾವು ಯಾವುದನ್ನೂ ಮುಚ್ಚಿಡುತ್ತಿಲ್ಲ. ಸಾಕ್ಷಿಗಳನ್ನು ಬೆದರಿಸುವ ಅಗತ್ಯವೂ ನಮಗಿಲ್ಲ ಎಂದರು. +ದರ್ಶನ್ ಅವರನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡುವ ಬಗ್ಗೆ ಬಂಧೀಖಾನೆಯ ಅಧಿಕಾರಿಗಳ ಸಮಿತಿ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು ನಂತರ ಕ್ರಮ ಕೈಗೊಳ್ಳಬಹುದು. ಈ ವಿಚಾರದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. +ಜೈಲಿನ ಅಧಿಕಾರಿಗಳೇ ಎರಡುಮೂರು ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಹೇಳಿದರು.ರಾಜಭವನ ಚಲೋ ನಡೆಸುತ್ತಿರುವ ವಿವಿಧ ಸಂಘಟನೆಗಳು ಶಾಂತಿ ಪಾಲನೆ ಮಾಡಬೇಕು. ಮೆರವಣಿಗೆ ಹಾಗೂ ಇತರ ವಿಚಾರಗಳ ಬಗ್ಗೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು ಎಂದರು. \ No newline at end of file diff --git a/eesanje/url_46_32_11.txt b/eesanje/url_46_32_11.txt new file mode 100644 index 0000000000000000000000000000000000000000..6f68d5a790465fc73f6bfe399161ec3861159478 --- /dev/null +++ b/eesanje/url_46_32_11.txt @@ -0,0 +1,10 @@ +ಜೈಲಲ್ಲಿ ರಾಜೋಪಚಾರ ವಿಚಾರ : ಸಚಿವರ ಸಿಎಂ ಮಾತುಕತೆ, ಬೇರೆ ಜೈಲಿಗೆ ದರ್ಶನ್ ಶಿಫ್ಟ್..? + +ಬೆಂಗಳೂರು,ಆ.27-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ರುವ ನಟ ದರ್ಶನ್, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ರಾಜೋಪಚಾರ ಮಾಡಿದ ಪ್ರಕರಣ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. +ಇಂದು ಬೆಳಗ್ಗೆ ಗೃಹಸಚಿವ ಡಾ.ಜಿ.ಪರ ಮೇಶ್ವರ್ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜೈಲಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ವರದಿ ನೀಡಿದ್ದಾರೆ. ಲೋಪದೋಷಗಳ ಬಗ್ಗೆ ಮಾಹಿತಿ ಒದಗಿಸಿದ್ದಾರೆ. +ಈಗಾಗಲೇ ಹಿರಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಜೊತೆಗೆ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ಈ ವೇಳೆ ನ್ಯಾಯಾಲಯದ ಪೂರ್ವಾನುಮತಿ ಪಡೆದು ದರ್ಶನ್ನನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. +ನ್ಯಾಯಾಲಯದ ಪ್ರಕ್ರಿಯೆಗಳು ಮುಗಿದ ನಂತರ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹ ಅಥವಾ ಬೆಳಗಾಂನ ಹಿಂಡಲಗ ಜೈಲಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.ಪರಪ್ಪನ ಅಗ್ರಹಾರ ಅಷ್ಟೇ ಅಲ್ಲದೆ ಹಲವು ಜೈಲುಗಳಲ್ಲಿ ವಿವಿಐಪಿ ಹಾಗೂ ಪ್ರಭಾವಿ ಕೈದಿಗಳಿಗೆ ರಾಜೋಪಚಾರ ನೀಡುತ್ತಿರುವುದು , ಮೊಬೈಲ್ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಂಡುಬಂದಿದೆ. +ಈ ಹಿನ್ನಲೆಯಲ್ಲಿ ಬಂಧಿಖಾನೆಗಳ ಸಮಗ್ರ ಸುಧಾರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಪರಮೇಶ್ವರ್ ಅವರನೊಂದಿಗಿನ ಚರ್ಚೆಯ ಬಳಿಕ ಸಿದ್ದರಾಮಯ್ಯ, ಸಚಿವ ಎಚ್.ಕೆ.ಪಾಟೀಲ್ ಅವರೊಂದಿಗೂ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. +ಈ ಹಿಂದೆ ಜೈಲಿನ ವ್ಯವಸ್ಥೆಗಳ ಸುಧಾರಣೆಗಾಗಿ ಎಚ್.ಕೆ.ಪಾಟೀಲ್ನೇತೃತ್ವದ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಿತ್ತು. ಅದರ ಕುರಿತು ಮುಖ್ಯಮಂತ್ರಿ ಇಂದು ವರದಿ ಪಡೆದಿದ್ದು, ಬಂಧಿಖಾನೆಯ ಲೋಪದೋಷಗಳನ್ನು ಸರಿಪಡಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. +ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ದರ್ಶನ್ಗೆ ಆತಿಥ್ಯ ನೀಡುತ್ತಿದ್ದು ಜೈಲಿನ ಅಧಿಕಾರಿಗಳನ್ನು ನಿಯಂತ್ರಿಸುತ್ತಿದ್ದಾನೆ. ನಾಗ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ದರ್ಶನ್ ಜೊತೆ ಇರುವ ಫೋಟೋಗಳನ್ನು ಉದ್ದೇಶಪೂರ್ವಕವಾಗಿ ತನ್ನ ಹಿಂಬಾಲಕರ ಮೂಲಕ ಬಹಿರಂಗಪಡಿಸಬಹುದು ಎಂಬ ಶಂಕೆ ಇದೆ. +ಮತ್ತೊಂದು ಮಾಹಿತಿಯ ಪ್ರಕಾರ, ದರ್ಶನ್ಗೆ ನಾಗ ಹತ್ತಿರವಾಗಿರುವುದನ್ನು ಸಹಿಸಲಾಗದೆ ರಘು ಎಂಬ ಮತ್ತೊಬ್ಬ ರೌಡಿಯ ಗುಂಪು ಜೈಲಿನಲ್ಲಿ ದೊರೆಯುತ್ತಿರುವ ರಾಜಾತಿಥ್ಯದ ಮಾಹಿತಿಯನ್ನು ಹೊರಜಗತ್ತಿಗೆ ವಿವರಿಸಿ ಚರ್ಚೆಗೆ ಎಡೆಮಾಡಿಕೊಟ್ಟಿದೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_32_12.txt b/eesanje/url_46_32_12.txt new file mode 100644 index 0000000000000000000000000000000000000000..1ca753534c0f42ef22c3c5aac7fd9050e4aa5a91 --- /dev/null +++ b/eesanje/url_46_32_12.txt @@ -0,0 +1,10 @@ +ಬಿಗಿ ಭದ್ರತೆ ನಡುವೆ ನಡೆದ ಗೆಜೆಟೆಡ್ ಪ್ರಬೇಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ + +ಬೆಂಗಳೂರು,ಆ.27-ಕರ್ನಾಟಕ ಲೋಕಸೇವಾ ಆಯೋಗದ 384 ಗೆಜೆಟೆಡ್ ಪ್ರೊಬೆಷನರ್ರಸ ಹುದ್ದೆಗಳ ನೇಮಕಾತಿಗಾಗಿ ಇಂದು ರಾಜ್ಯಾದ್ಯಂತ ಏಕಕಾಲಕ್ಕೆ ಪರೀಕ್ಷೆ ನಡೆದಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವ್ಯಾಪಕ ತಪಾಸಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲೂ ಈ ಮೊದಲು ಪಿಎಸ್ಐ ಹುದ್ದೆಗಳ ನೇಮಕಾತಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕುಖ್ಯಾತವಾಗಿರುವ ಕಲಬುರಗಿ ಹಾಗೂ ಇತರ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. +ಪರೀಕ್ಷಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗಿದ್ದು, ನೊಂದಾಯಿತ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಲೋಹ ಪರಿಶೋಧಕ ಅಳವಡಿಸಲಾಗಿದ್ದು, ಸಂಬಂಧಪಟ್ಟ ಸಲಕರಣೆಗಳಿಂದ ತೀವ್ರ ತಪಾಸಣೆ ನಡೆಸಲಾಗಿದೆ. +ಎಲೆಕ್ಟ್ರಾನಿಕ್ಸ್ ಉಪಕರಣಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಸೂಕ್ಷ್ಮ ಬ್ಲೂಟೂತ್ನಂತಹ ಡಿವೈಸ್ಗಳನ್ನು ಬಳಸಿ ಅಕ್ರಮ ನಡೆಸಬಹುದೆಂಬ ಕಾರಣಕ್ಕೆ ಪ್ರತಿಯೊಬ್ಬ ಅಭ್ಯರ್ಥಿಯ ಎರಡೂ ಕಿವಿಗಳನ್ನು ಬ್ಯಾಟರಿಯ ಬೆಳಕಿನಲ್ಲಿ ತಪಾಸಣೆ ನಡೆಸಲಾಯಿತು. +ಹೆಣ್ಣು ಮಕ್ಕಳಿಗೆ ಕಿವಿಯೊಲೆ, ಮೂಗುತಿ ಹಾಗೂ ಚಿನ್ನದ ಸರ ಧರಿಸದಂತೆ ಪರೀಕ್ಷಾ ಕೇಂದ್ರದ ಬಳಿ ಇದ್ದ ಧ್ವನಿವರ್ಧಕಗಳ ಮೂಲಕ ಸೂಚನೆ ನೀಡಲಾಗಿತ್ತು. ಕೆಲವರು ಬಹಳ ದಿನಗಳಿಂದ ಧರಿಸಿದ್ದ ಮೂಗುತಿ ಹಾಗೂ ಕಿವಿಯೋಲೆಗಳು ತಕ್ಷಣಕ್ಕೆ ಬಿಚ್ಚಲಾಗದೆ ಪರದಾಡಿದರು. ಅವುಗಳನ್ನು ಕತ್ತರಿಸಿ ತೆಗೆದಿರುವ ಉದಾಹರಣೆಗಳು ಇವೆ. ಕೆಲವರಿಗೆ ಈ ಸಂದರ್ಭದಲ್ಲಿ ಸಣ್ಣ ಪ್ರಮಾಣದ ರಕ್ತ ಜಿನಿಗಿದ್ದು, ನೋವಿನಿಂದ ಅಳತ್ತಿರುವ ದೃಶ್ಯಗಳು ಕಂಡುಬಂದಿವೆ. +ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಓಎಂಆರ್ ಶೀಟ್ ಅದಲು ಬದಲು ಗೊಂಡಿದ್ದರಿಂದ ಗೊಂದಲ ಉಂಟಾಯಿತು. ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಅನುಮಾನ ವ್ಯಕ್ತಪಡಿಸಿ ಕೆಲವರು ಪ್ರತಿಭಟನೆ ನಡೆಸಿದರು.ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಮೊಹಮದ್ ಮೋಸಿನ್, ಓಎಂಆರ್ ಶೀಟ್ನಲ್ಲಿ ಅದಲು ಬದಲು ಆಗಿರುವ ಗೊಂದಲವನ್ನು ಬಗೆಹರಿಸಿದರು. ಒಂದು ಗಂಟೆ ತಡವಾಗಿ ಪರೀಕ್ಷೆ ಆರಂಭವಾಯಿತು. ತಮಗೆ ಪರೀಕ್ಷೆ ಬರೆಯಲು ಹೆಚ್ಚುವರಿ ಸಮಯ ನೀಡಬೇಕೆಂದು ಅಭ್ಯರ್ಥಿಗಳು ಆಗ್ರಹಿಸಿದರು. +2017-18ರಲ್ಲಿ ಕೆಎಎಸ್ ಪರೀಕ್ಷೆ ನಡೆಸಲಾಗಿತ್ತು. ಆನಂತರ ಏಳು ವರ್ಷಗಳ ಬಳಿಕ 2024-25ನೇ ಸಾಲಿನ ಅಧಿಸೂಚನೆ ಹೊರಡಿಸಲಾಗಿದೆ. ಈ ಮೊದಲು ಲೋಕಸಭೆ ಚುನಾವಣೆ ಹಾಗೂ ಇತರೆ ಕಾರಣಗಳಿಂದಾಗಿ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. +ಕಳೆದ ಜುಲೈನಲ್ಲಿ ಅಧಿಸೂಚನೆ ಹೊರಡಿಸಿ ಆ.27ಕ್ಕೆ ದಿನಾಂಕ ನಿಗದಿಪಡಿಸಿದಾಗ ಕೆಲವು ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದರು. 21ಕ್ಕೂ ಹೆಚ್ಚಿನ ವಿಷಯಗಳನ್ನು ಅಧ್ಯಯನ ಮಾಡಬೇಕಿದೆ. ಹೀಗಾಗಿ ಒಂದು ತಿಂಗಳ ಕಾಲಾವಕಾಶ ಸಾಲುವುದಿಲ್ಲ. ಕನಿಷ್ಟ ಮೂರು ತಿಂಗಳಿಗೆ ಪರೀಕ್ಷೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೊಪ್ಪು ಹಾಕಲಿಲ್ಲ. +ಅಭ್ಯರ್ಥಿಗಳು ನಡೆಸಿದ ಹೋರಾಟಗಳಿಗೆ ತಿರುಗೇಟು ಕೊಟ್ಟ ಮುಖ್ಯಮಂತ್ರಿ ಸಚಿವಾಲಯ 2.5 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ತಯಾರಿ ಮಾಡಿಕೊಂಡಿದ್ದಾರೆ. ಕೆಲವೇ ಕೆಲವರು ಮುಂದೂಡಿಕೆ ಬೇಡಿಕೆಯನ್ನಿಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಲಾಗಿತ್ತು. ಕೊನೆಗೆ ಯಾವುದೇ ಒತ್ತಾಯಕ್ಕೆ ಮಣಿಯದೆ ನಿಗದಿತ ಸಮಯದಲ್ಲೇ ಇಂದು ಕೆಎಎಸ್ ಪರೀಕ್ಷೆ ನಡೆದಿದೆ. \ No newline at end of file diff --git a/eesanje/url_46_32_2.txt b/eesanje/url_46_32_2.txt new file mode 100644 index 0000000000000000000000000000000000000000..c286264396f18e698f564e3e893de136d20a7d4c --- /dev/null +++ b/eesanje/url_46_32_2.txt @@ -0,0 +1,10 @@ +10 ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ ಸದಸ್ಯರ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ + 10 +ಬೆಂಗಳೂರು,ಆ.28– ಕನ್ನಡ ವಿಶ್ವವಿದ್ಯಾಲಯ, ಜಾನಪದ ವಿವಿ, ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ ಸೇರಿದಂತೆ ಹತ್ತು ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ. +ಮೂರು ವರ್ಷಗಳ ಅವಧಿಗೆ ಸಿಂಡಿಕೇಟ್‌ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ನಾಮನಿರ್ದೇಶನ ಸದಸ್ಯರ ನೇಮಕದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದೆ. +ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ಡಾ.ಬಿ.ಯು.ಸುಮ, ಸೋಮಶೇಖರ ಬಣ್ಣದಮನೆ, ಡಾ.ಎಸ್‌‍.ಎಂ.ಮುತ್ತಯ್ಯ, ಎನ್‌.ಎ.ಮೊಹಮದ್‌, ಇಸಾಯಿಲ್‌, ಡಾ.ಬಂಜಗೆರೆ ಜಯಪ್ರಕಾಶ್‌, ಡಾ.ಪಣಿರಾಜ್‌, ಡಾ.ನಟರಾಜ್‌ ಹುಳಿಯಾರ್‌, ಬಿ.ಆರ್‌.ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದೆ. +ಬೆಂಗಳೂರು ವಿವಿ ಸಿಂಡಿಕೇಟ್‌ಗೆ ಡಾ.ಜಯಶ್ರೀ ಹೆಗಡೆ, ಎಂ.ಎ.ಮಹದೇವ ನಾಯ್ಕ, ಡಾ.ಕೆ.ಷರೀಫಾ, ಡಿ.ವಿ.ಗಂಗರಾಜು, ದಂಡಕೆರೆ ನಾಗರಾಜ್‌, ರಮೇಶ್‌ ಬಾಬು ಅವರನ್ನು ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಲಾಗಿದೆ. +ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಆಯೇಷ, ಫರ್ಜಾನಾ, ಡಾ.ಎಚ್‌.ಕೃಷ್ಣರಾಮ್‌, ಡಾ.ಫ್ರಾನ್ಸಿಸ್‌‍ ಅಸ್ಸಿಸಿ ಅಲೇದ, ವಿ.ಶಿವಕುಮಾರ್‌, ಕೆ.ಪಿ.ಪಾಟೀಲ್‌, ಡಾ.ಬೀರಪ್ಪ.ಎಚ್‌ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಸಹನ.ಎಸ್‌‍.ಆರ್‌, ಜಯದೀಪ್‌, ಅರ್ಬಾಜ್‌ ಪಾಷ, ಎಂ.ಗೋಪಾಲಗೌಡ, ನಿರೂಪ್‌, ಕೆ.ಬಸವರಾಜ್‌ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. +ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಪ್ರೊ.ಸಾಕಮ.ಬಿ, ಶಿವಕುಮಾರ್‌.ಎಂ, ಮುಸಾವಿರ್‌ ಬಾಷಾ.ಎಂ, ಲಕ್ಷ್ಮಿಕಾಂತ ಚಿಮನೂರು, ಕೆ.ಪಿ.ಸಿ.ಪಾಲ್‌, ಎಚ್‌.ಜಿ.ಅರವಿಂದ, ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಡಾ.ಶ್ರೀದೇವಿ.ಎಸ್‌‍ ಕಟ್ಟಿಮನಿ, ಸಿದ್ದಪ್ಪ ಸುಳ್ಳದ್‌, ಡಾ.ಬೀರ್‌ಜಾದ ಪಹೀ ಮುದ್ದೀನ್‌, ಮಲ್ಲಣ್ಣ.ಎಸ್‌‍ ಮಡಿವಾಳ, ಉದಯ್‌ ಕಾಂತ್‌, ಸಿದ್ದಪ್ಪ ಮೂಲಗೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. +ರಾಯಚೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಡಾ.ಮೀನಾಕ್ಷಿ ಖಂಡಿಮಠ, ಡಿ.ಆರ್‌.ಚಿನ್ನ, ಜೀಶಾನ್‌ ಆಖಿಲ್‌ ಸಿದ್ದಖಿ, ಶಿವಣ್ಣ, ಚನ್ನಬಸವ, ಕೆ.ಪ್ರತಿಮಾ, ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಜಯಲಕ್ಷ್ಮಿ ನಾಯಕ್‌, ಡಾ.ವೈ.ಆರ್ತೋಬ ನಾಯ್ಕ, ಬಿ.ಪೀರ್‌ಬಾಷಾ, ಶಿವಕುಮಾರ್‌.ಕೆ, ಡಾ.ಅಮರೇಶ ನಿಗಡೋಣಿ ಹಾಗೂ ಚ.ಹ.ರಘುನಾಥ್‌ ಅವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. +ಜಾನಪದ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಡಾ.ಜ್ಯೋತಿಲಕ್ಷ್ಮಿ .ಡಿ.ಪಿ, ರಾಮಪ್ಪ ಮಾನಪ್ಪ ಲಂಬಾಣಿ, ಸಹನ ಪಿಂಜಾರ, ಮೋಹನ್‌ಕುಮಾರ್‌.ಎನ್‌, ಗೋರೆವಾಲೆ ಚಂದ್ರಶೇಖರ್‌, ಡಾ.ಮೊಗುಳಿ ಗಣೇಶ್‌, ಸಂಸ್ಕೃತಿ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಡಾ.ಬಂಗಾರಮ.ಕೆ, ಡಾ.ಶಿವಲಿಂಗಯ್ಯ, ಡಾ.ಮುನೀರ್‌ ಅಹಮದ್‌, ಬಸಪ್ಪ ಡೊಂಕಬಳ್ಳಿ, ಹನುಮಂತನಾಥ ಹಾಗೂ ನಾರಾಯಣ ಯಾಜಿ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ. \ No newline at end of file diff --git a/eesanje/url_46_32_3.txt b/eesanje/url_46_32_3.txt new file mode 100644 index 0000000000000000000000000000000000000000..0ab8bea582995d41afc487fb929ed7e68d30187b --- /dev/null +++ b/eesanje/url_46_32_3.txt @@ -0,0 +1,11 @@ +ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲಿಕತ್ವ ಬದಲಾಗಲ್ಲ : ಹೈಕೋರ್ಟ್ ಮಹತ್ವದ ತೀರ್ಪು + +ಬೆಂಗಳೂರು:ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ ದಾಖಲೆಗಳಲ್ಲಿ ಅವರ ಹೆಸರು ತೆಗೆದು ವಕ್ಫ್ ಬೋರ್ಡ್‌ ಹೆಸರು ಸೇರ್ಪಡೆ ಮಾಡಿದ್ದ ಕಂದಾಯ ಇಲಾಖೆ ಅಧಿಕಾರಿಗಳಿಗೆ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ನಿರ್ದೇಶಿಸಿದೆ. +ರಾಯಚೂರಿನ ರೈತ ಮಹಿಳೆ ಚೆನ್ನಮ್ಮ ಹಿರೇಮಠ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅರ್ಜಿದಾರರ ಹೆಸರಿಗೆ 60 ದಿನಗಳಲ್ಲಿ ದಾಖಲೆಗಳನ್ನು ಸರಿಪಡಿಸಿಕೊಡುವಂತೆ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ. +ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಪ್ರಾದೇಶಿಕ ಆಯುಕ್ತರು ಹೊರಡಿಸಿರುವ ಆದೇಶಗಳನ್ನು ತಹಶೀಲ್ದಾರ್‌ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಒಂದು ಆಸ್ತಿ ವಕ್ಫ್​ ಮಂಡಳಿಗೆ ಸೇರಿದ್ದರೆ ಅಂತಹ ಸಂದರ್ಭದಲ್ಲಿ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಿ, ನಂತರ ದಾಖಲೆಗಳಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಆದರೆ, ಈ ಪ್ರಕರಣದಲ್ಲಿ ಯಾವುದೇ ಪರಿಶೀಲನೆ ನಡೆಸದೆ, ಏಕಾಏಕಿ ಹೆಸರು ಬದಲಾವಣೆ ಮಾಡಲಾಗಿದೆ ಎಂದು ನ್ಯಾಯಾಲಯ ಹೇಳಿದೆ. +ಅಲ್ಲದೇ, ಈ ಹಿಂದೆ ಹೈಕೋರ್ಟ್ ಅರ್ಜಿದಾರರ ಮನವಿ ಪರಿಗಣಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದ್ದರೂ ಸೂಕ್ತ ಕ್ರಮ ಕೈಗೊಂಡಿಲ್ಲ. ಉಪವಿಭಾಗಾಧಿಕಾರಿ ಈ ವಿಚಾರದಲ್ಲಿ ತಮಗೆ ಯಾವುದೇ ಅಧಿಕಾರವಿಲ್ಲ, ಆಸ್ತಿಗೆ ಸಂಬಂಧಿಸಿದಂತೆ ವ್ಯಾಜ್ಯವಿದ್ದರೆ ವಕ್ಫ್ ಕಾಯ್ದೆಯ ಸೆಕ್ಷನ್ 83ರ ಅಡಿ ವಕ್ಫ್​ ನ್ಯಾಯಮಂಡಳಿ ಮೊರೆ ಹೋಗಿ ಎಂದು ಹೇಳಿದ್ದಾರೆ. ಆದರೆ, ದಾಖಲೆಗಳ ಪ್ರಕಾರ ಅರ್ಜಿದಾರರು ಆಸ್ತಿಯ ಮಾಲಿಕರಾಗಿದ್ದಾರೆ. ಆಸ್ತಿ ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂದು ಹೇಳಲು ದಾಖಲೆಗಳಿಲ್ಲ. ಹೀಗಾಗಿ ಅವರು ತಮ್ಮ ಆಸ್ತಿಗಾಗಿ ವಕ್ಫ್​ ಟ್ರಿಬ್ಯುನಲ್‌ ಮೊರೆ ಹೋಗಬೇಕಾಗಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. +ಅಂತಿಮವಾಗಿ ಆಸ್ತಿಯ ಹಕ್ಕುಸ್ವಾಮ್ಯದ ಕುರಿತಂತೆ ವಿವಾದಗಳಿದ್ದಲ್ಲಿ ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರ್ ಗೆ ಸ್ವಾತಂತ್ರವಿದೆ ಎಂದಿರುವ ಹೈಕೋರ್ಟ್, ಅಂತಹ ಕ್ರಮ ಕೈಗೊಳ್ಳುವುದಿದ್ದಲ್ಲಿ, ಅರ್ಜಿದಾರರಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ನಂತರ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಹೈಕೋರ್ಟ್ ಕಂದಾಯ ಅಧಿಕಾರಿಗಳಿಗೆ ನಿರ್ದೇಶಿಸಿದೆ. +ಪ್ರಕರಣದ ಹಿನ್ನೆಲೆ: ಅರ್ಜಿದಾರರಾದ ಚೆನ್ನಮ್ಮ ಹಿರೇಮಠ ಅವರು2012ರಲ್ಲಿ ಕ್ರಯಪತ್ರದ ಮೂಲಕ 39 ಗುಂಟೆ ಜಮೀನು ಖರೀದಿಸಿದ್ದರು. ಈ ಜಮೀನು ಪೂರ್ವದಲ್ಲಿ ಹಸನ್ ಖಾನ್ ಹಾಗೂ ಹಕೀಮ್ ಖಾನ್ ಎಂಬುವರಿಗೆ ಮಂಜೂರಾದ ಇನಾಂ ಜಮೀನಾಗಿತ್ತು. ಆ ನಂತರದಲ್ಲಿ ಒಬ್ಬರಿಂದೊಬ್ಬರಿಗೆ ಮಾರಾಟವಾಗಿ, ಕೊನೆಯದಾಗಿ ಚೆನ್ನಮ್ಮ 2012 ರಲ್ಲಿ ಶಿವಾನಂದ್ ಎಂಬುವರಿಂದ ಜಮೀನು ಖರೀದಿಸಿದ್ದರು. +2017ರಲ್ಲಿ ವಕ್ಪ್ ಬೋರ್ಡ್ ಗೆ ಸಂಬಂಧಿಸಿದ ಆಸ್ತಿಗಳ ಬಗ್ಗೆ ಪರಿಶೀಲನೆ ನಡೆಸಿ, ಒಂದು ವೇಳೆ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾವಣೆ ಆಗಿದ್ದರೆ ಅವುಗಳನ್ನು ತೆಗೆದು, ಕಂದಾಯ ದಾಖಲೆಗಳ ಕಾಲಂ ನಂ 9 ಮತ್ತು 11 ರಲ್ಲಿ ವಕ್ಫ್ ಬೋರ್ಡ್ ಹೆಸರು ದಾಖಲಿಸಲು ಕ್ರಮ ಕೈಗೊಳ್ಳುವಂತೆ ಪ್ರಾದೇಶಿಕ ಆಯುಕ್ತರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ದಾಖಲೆಗಳಲ್ಲಿ ವಕ್ಫ್​ ಹೆಸರನ್ನು ನಮೂದಿಸುವಂತೆ ತಹಶೀಲ್ದಾರ್ ಗಳಿಗೆ ಆದೇಶಿಸಿದ್ದರು. ತಹಶೀಲ್ದಾರ್ 2018-19ರಲ್ಲಿ ಚೆನ್ನಮ್ಮ ಅವರಿಗೆ ಸೇರಿದ ಆಸ್ತಿಯ ಕಂದಾಯ ದಾಖಲೆಗಳಲ್ಲಿ ವಕ್ಫ್​ ಮಂಡಳಿಯ ಹೆಸರು ಸೇರಿಸಿದ್ದರು. +ಈ ವಿಚಾರ ತಿಳಿದ ನಂತರ ಅರ್ಜಿದಾರೆ ಚೆನ್ನಮ್ಮ, ದಾಖಲೆಗಳಲ್ಲಿ ತಮ್ಮ ಹೆಸರು ನಮೂದಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ, ಅದನ್ನು ಅಧಿಕಾರಿಗಳು ಪುರಸ್ಕರಿಸದೇ ಇದ್ದಾಗ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅವರ ಮನವಿ ಪರಿಗಣಿಸುವಂತೆ ಸೂಚಿಸಿತ್ತು. ಆದರೆ, ಉಪವಿಭಾಗಾಧಿಕಾರಿಯು ಅರ್ಜಿದಾರರ ಮನವಿ ತಿರಸ್ಕರಿಸಿ, ವಕ್ಫ್​ ಕಾಯ್ದೆ ಸೆಕ್ಷನ್‌ 83ರ ಪ್ರಕಾರ ವಕ್ಫ್​ ಟ್ರಿಬ್ಯುನಲ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದರು. ಎಸಿ ಆದೇಶ ಪ್ರಶ್ನಿಸಿ ಅರ್ಜಿದಾರರು ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದರು. +‘ \ No newline at end of file diff --git a/eesanje/url_46_32_4.txt b/eesanje/url_46_32_4.txt new file mode 100644 index 0000000000000000000000000000000000000000..05da201eead803fb41722714092f581a31af7b7a --- /dev/null +++ b/eesanje/url_46_32_4.txt @@ -0,0 +1,8 @@ +ದರ್ಶನ್‌ ಸ್ವಾತಂತ್ರ್ಯಹೋರಾಟಗಾರನಲ್ಲ, ಕೊಲೆ ಮಾಡಿ ಬಂದ ಕ್ರಿಮಿನಲ್‌ : ವಿಶ್ವನಾಥ್‌ ಆಕ್ರೋಶ + +ಬೆಂಗಳೂರು,ಆ.27– ನಟ ದರ್ಶನ್‌ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಬಂದ ಕ್ರಿಮಿನಲ್‌. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದರ್ಶನ್‌ ಪ್ರಕರಣದ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು. +ದರ್ಶನ್‌ ಸ್ವಾತಂತ್ರ್ಯ ಹೋರಾಟ ಗಾರನಲ್ಲ. ಹಿ ಇಸ್‌‍ ಎ ಕ್ರಿಮಿನಲ್‌. ಒಬ್ಬನನ್ನು ಕೊಲೆ ಮಾಡಿ ಬಂದವನು. ಆತನಿಗೆ ಜೈಲಿನಲ್ಲಿ ರಾಜೋಪಚಾರ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೃಹಸಚಿವ ಪರಮೇಶ್ವರ್‌ ಈ ವಿಚಾರವಾಗಿ ಏಕೆ ಸುಮನಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಮೈಸೂರು ನಗರಾ ಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂದ ಪಟ್ಟಂತೆ ಪ್ರತಿಕ್ರಿಯಿಸಿದ ವಿಶ್ವನಾಥ್‌, ಈ ವಿಚಾರವಾಗಿ ನಾನು ಮೌನವಾಗಿಲ್ಲ. ಹಾಗೆಂದು ಪ್ರತಿದಿನ ಮಾತನಾಡಲು ಸಾಧ್ಯವಿಲ್ಲ ಎಂದರು. +ಮುಡಾದಿಂದ ಪಡೆದಿರುವ ನಿವೇಶನಗಳನ್ನು ವಾಪಸ್‌‍ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾನು ಮೊದಲೇ ಸಲಹೆ ನೀಡಿದ್ದೆ. ಅದ್ಯಾಕೊ ಅವರು ಸುಮನಾಗಿದ್ದರು. ಸಿದ್ದರಾಮಯ್ಯ ಅವರಿಂದಲೂ ಮುಡಾವನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಎಂದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಬಡವರಿಗೆ ನಿವೇಶನ ಹಂಚಲಿಲ್ಲ. ಮುಡಾದಲ್ಲಿನ ಹಗರಣಗಳನ್ನು ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದರು.ಮುಡಾ ಹಗರಣದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರ ಪಾತ್ರವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆತನನ್ನು ಹತ್ತಿರ ಬಿಟ್ಟುಕೊಂಡಿದ್ದೇ ತಪ್ಪು. ಮೊದಲು ಭೈರತಿಯನ್ನು ಹೊರಗೆ ಹಾಕಬೇಕು. +ಹಾಗೆಯೇ ಮುಡಾದ ಆಯುಕ್ತ ನಟೇಶ್‌ನನ್ನು ಹೊರ ಹಾಕಬೇಕೆಂದು ಸಲಹೆ ನೀಡಿದರು. ನಟೇಶ್‌ ಸರ್ಕಾರದ ಆಸ್ತಿಯನ್ನು ಲೂಟಿ ಮಾಡಿದ್ದಾರೆ. ಅಂತಹ ವ್ಯಕ್ತಿಯ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದ ಮೇಲೆ ಯಾವ ರೀತಿಯ ಆಡಳಿತ ಇದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಸಚಿವ ಭೈರತಿ ಸುರೇಶ್‌ ದುರಾಹಂಕಾರಿ. ಧುರ್ಯೋದನ, ದುಶ್ಯಾಸನ ಇದ್ದಂತೆ. ಸಿದ್ದರಾಮಯ್ಯ ಅವರನ್ನು ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. \ No newline at end of file diff --git a/eesanje/url_46_32_5.txt b/eesanje/url_46_32_5.txt new file mode 100644 index 0000000000000000000000000000000000000000..1fd8841f7b7ec4ab6311bfa50bf560c3595ae863 --- /dev/null +++ b/eesanje/url_46_32_5.txt @@ -0,0 +1,10 @@ +ಪ್ರಿಯಾಂಕ್‌ ಖರ್ಗೆಯನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ದೂರು + +ಬೆಂಗಳೂರು,ಆ.27-ನಿಯಮ ಉಲ್ಲಂಘಿಸಿ ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಮೇಲೆ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಮೂಲಕ ಜಮೀನು ಪಡೆದಿರುವ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. +ವಿಧಾನಸಭೆಯ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿಯಾಗಿ ದೂರು ನೀಡಿದ್ದಾರೆ. +ಸ್ವಜನ ಪಕ್ಷಪಾತ ಅಧಿಕಾರ ದುರುಪಯೋಗ ಮತ್ತು ಹಿತಾಸಕ್ತಿ ಸಂಘರ್ಷದ ಮೂಲಕ 5 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಪಡೆದಿರುವ ಪ್ರಿಯಾಂಕ ಖರ್ಗೆಯನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಮುಖ್ಯಮಂತ್ರಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ. +ಕೆಐಎಡಿಬಿಯಿಂದ ಹೈಟೆಕ್‌ ಡಿಫೆನ್ಸ್ ಏರೋಸ್ಪೇಸ್‌‍ ಪಾರ್ಕ್‌ಗಾಗಿ ಮೀಸಲಿಟ್ಟ 45.9 ಎಕರೆ ಜಮೀನಿನಲ್ಲಿ ಪ್ರಿಯಾಂಕ್‌ ಖರ್ಗೆ ಅವರಿಗೆ 5 ಎಕರೆ ಜಮೀನು ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಕುಟುಂಬದವರು ನಡೆಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಪರಿಶಿಷ್ಟ ಕೋಟಾದಡಿ 5 ಎಕರೆ ಜಮೀನು ನೀಡಲಾಗಿದೆ. ಈ ಟ್ರಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ, ರಾಹುಲ್‌ ಖರ್ಗೆ, ಸಂಸದ ಹಾಗೂ ಅಳಿಯ ರಾಧಾಕೃಷ್ಣ ಅವರುಗಳು ಸದಸ್ಯರಾಗಿದ್ದಾರೆ. ಇದು ನಿಯಮ ಉಲ್ಲಂಘನೆಯಾಗಿದೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದಾರೆ. +ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಜಮೀನು ನೀಡಿರುವುದನ್ನು ಸಮರ್ಥಿಸಿಕೊಂಡಿದ್ದು, ರಾಹುಲ್‌ ಖರ್ಗೆ ಜಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿರುವುದು ಅಧಿಕಾರ ದುರುಪಯೋಗ ಎಂದು ಆರೋಪಿಸಿದ್ದಾರೆ. +ಇದೇ ವೇಳೆ ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್‌ ಮಾಳವಿಯಾ ಟ್ವೀಟ್‌ ಮಾಡಿ, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ ಆರೋಪ ಬಂದ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆ ಸಹೋದರನಿಗೆ ಕಾನೂನು ಬಾಹಿರವಾಗಿ ಜಮೀನು ನೀಡಿದ್ದಾರೆ. +2024ರ ಮಾರ್ಚ್‌ನಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರು ಈ ಹಂಚಿಕೆಗೆ ಹೇಗೆ ಸಮತಿ ಸೂಚಿಸಿದರು? ಖರ್ಗೆ ಕುಟುಂಬ ಕೆಐಎಡಿಬಿ ಭೂಮಿಗೆ ಅರ್ಹತೆ ಪಡೆಯಲು ಯಾವಾಗ ಏರೋಸ್ಪೇಸ್‌‍ ಉದ್ಯಮಿಯಾದರು? ಈ ಅಕ್ರಮ ಹಂಚಿಕೆಯ ವಿಷಯವು ರಾಜ್ಯಪಾಲರ ಕಚೇರಿಗೆ ತಲುಪಿದೆ ಎಂದು ಪ್ರಶ್ನಿಸಿದ್ದಾರೆ. +ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಭಾಯಿ ಖರ್ಗೆ ಕೂಡ ಸಿದ್ಧಾರ್ಥ ವಿಹಾರ್‌ ಟ್ರಸ್ಟ್‌ನ ಸದಸ್ಯರಾಗಿರುವುದು ದಾಖಲೆಗಳಿಂದ ಸಾಬೀತಾಗಿದೆ ಎಂದಿದ್ದಾರೆ. \ No newline at end of file diff --git a/eesanje/url_46_32_6.txt b/eesanje/url_46_32_6.txt new file mode 100644 index 0000000000000000000000000000000000000000..10bc12d019ad555661d99e037a8d417b8bb7ecf8 --- /dev/null +++ b/eesanje/url_46_32_6.txt @@ -0,0 +1,8 @@ +ಗೃಹಲಕ್ಷ್ಮಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಬಹುದು : ಲಕ್ಷ್ಮಿ ಹೆಬ್ಬಾಳ್ಕರ್‌ + : +ಬೆಂಗಳೂರು, ಆ.27-ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಜುಲೈ ಮತ್ತು ಆಗಸ್ಟ್‌ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ ಎಂದರು. +ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. ಬಹುತೇಕ ಅವರಲ್ಲಿ ಜಿಎಸ್‌‍ಟಿ ಹಾಗೂ ಆದಾಯ ತೆರಿಗೆ ಪಾವತಿದಾರರು ಇರಬಹುದು ಅಥವಾ ಯೋಜನೆಯ ಸೌಲಭ್ಯ ತಮಗೆ ಬೇಡ ಎಂದು ನಿರಾಕರಿಸಿರಲೂ ಬಹುದು ಎಂದು ಹೇಳಿದರು. +ಈಗಲೂ ವೆಬ್‌ಸೈಟ್‌ ಮುಕ್ತವಾಗಿದ್ದು, ಆದಾಯ ತೆರಿಗೆ ಜಿಎಸ್‌‍ಟಿ ಪಾವತಿ ಮಾಡದೇ ಇರುವವರು ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು. ಜಿಎಸ್‌‍ಟಿ ಮತ್ತು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೆ ಅರ್ಜಿಯೇ ಸ್ವೀಕಾರವಾಗುವುದಿಲ್ಲ. +ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಆಧಾರ್‌ ಸಂಖ್ಯೆಯನ್ನು ನಮೂದಿಸುತ್ತಿದ್ದಂತೆ ಸ್ಪಷ್ಟ ಮಾಹಿತಿಗಳು ಲಭ್ಯವಾಗುತ್ತವೆ. ಈ ಮೊದಲು ಈ ರೀತಿಯ 15 ಸಾವಿರ ಜನ ಜಿಎಸ್‌‍ಟಿ ಮತ್ತು ಆದಾಯ ತೆರಿಗೆ ಪಾವತಿದಾರರು ಅರ್ಜಿ ಸಲ್ಲಿಸಿದ್ದರು. ಅದನ್ನು ಆರಂಭದಲ್ಲೇ ಪೋರ್ಟಲ್‌ ತಿರಸ್ಕರಿಸಿದೆ ಎಂದು ಹೇಳಿದರು. +ಗೃಹಲಕ್ಷ್ಮಿಯರಿಗೆ ಜೂನ್‌ ತಿಂಗಳ ಕಂತನ್ನು ಪಾವತಿ ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ವಾರದೊಳಗಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರ ಜೊತೆ ನಡೆಸಲಾಗಿದೆ. ಅರ್ಜಿ ಸಲ್ಲಿಸಿದವರ ಪೈಕಿ 80 ಸಾವಿರ ಜನರಿಗೆ ತಾಂತ್ರಿಕ ಕಾರಣಗಳಿಗಾಗಿ ಹಣ ತಲುಪುತ್ತಿರಲಿಲ್ಲ. ಅದನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_32_7.txt b/eesanje/url_46_32_7.txt new file mode 100644 index 0000000000000000000000000000000000000000..414b2a3b44588c8d409421c7b2cb168ffb41f19f --- /dev/null +++ b/eesanje/url_46_32_7.txt @@ -0,0 +1,10 @@ +ನಿಮ್ಮ ಸೋನಿಯಾ ಗಾಂಧಿ ಇಟಲಿಯಿಂದ ಬಂದವರು : ಪ್ರಿಯಾಂಕ್‌ ಖರ್ಗೆಗೆ ಲೆಹರ್‌ಸಿಂಗ್‌ ತಿರುಗೇಟು + +ಬೆಂಗಳೂರು,ಆ.27– ನಾನು ರಾಜಸ್ಥಾನದಿಂದ ಬಂದವನಾಗಿದ್ದರೆ ನಿಮ್ಮ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಇಟಲಿಯಿಂದ ಬಂದವರು. ಅವರು ಕೂಡ ನಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ರಾಜ್ಯಸಭೆ ಸದಸ್ಯ ಲೆಹರ್‌ ಸಿಂಗ್‌ ತಿರುಗೇಟು ನೀಡಿದ್ದಾರೆ. +ಕೆಐಎಡಿಬಿ ಭೂ ವ್ಯವಹಾರವನ್ನು ಪ್ರಶ್ನಿಸಿದ್ದಕ್ಕಾಗಿ ಖರ್ಗೆ ಜೂನಿಯರ್‌ ಮತ್ತವರ ಸ್ನೇಹಿತರು ರಾಜಸ್ಥಾನಿ ಎಂದು ನನ್ನ ಮೇಲೆ ಆರೋಪ ಮಾಡಿದ್ದಾರೆ. ನಾನು ಕೇಳಲು ಬಯಸುತ್ತೇನೆ ಸೋನಿಯಾ ಗಾಂಧಿ ಅವರು ರಾಜಸ್ಥಾನ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಇಟಲಿಯ ಜುಂಜುನುದಲ್ಲಿ ಜನಿಸಿದವರು. +ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಸಿಕಾರ್‌ನಲ್ಲಿ ಹಾಗೂ ರಣದೀಪ್‌ ಸಿಂಗ್‌ ಸುರ್ಜೆವಾಲ ಚುರುದಲ್ಲಿ ಜನಿಸಿದವರು. ಅವರು ಯಾವ ರಾಜ್ಯದಿಂದ ರಾಜಸಭೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ. +ರಾಜಸ್ಥಾನಿಯಾಗಿರುವುದು ಅಪರಾಧವೇ? ರಾಜಸ್ಥಾನವು ಪಾಕಿಸ್ತಾನದಲ್ಲಿಲ್ಲ ಎಂದು ಈ ಫೆಲೋಗಳಿಗೆ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಅಂದಹಾಗೆ, ನೆಹರೂ ಕುಟುಂಬ ಉತ್ತರ ಪ್ರದೇಶದಿಂದ ಬಂದಿದೆಯೇ ಅಥವಾ ಕಾಶೀರದಿಂದ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ. +ನಾನು 59 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿದ್ದೇನೆ ಮತ್ತು ಕೆಲಸ ಮಾಡಿದ್ದೇನೆ. ನಾನು ಕನ್ನಡ ಮಾತನಾಡುತ್ತೇನೆ, ಓದುತ್ತೇನೆ ಮತ್ತು ಬರೆಯುತ್ತೇನೆ. ನಾನು ಕರ್ನಾಟಕ ಬಿಜೆಪಿಯ ಖಜಾಂಚಿಯಾಗಿದ್ದೆ ಮತ್ತು ನಾನು ನನ್ನ ಪಕ್ಷದ ಎಂಎಲ್ಸಿ ಮತ್ತು ಸಂಸದನಾಗಿ ಸೇವೆ ಸಲ್ಲಿಸಿದ್ದೇನೆ. +ನಾನು ಶ್ರೀಗಳಂತಹ ರಾಜಕೀಯ ವಂಶದಿಂದ ಬಂದವನಲ್ಲ. ರಾಹುಲ್‌ ಗಾಂಧಿ ಅಥವಾ ಖರ್ಗೆ ಜೂನಿಯರ್‌.. ನಾನು ಯಾರೂ ಅಲ್ಲ ಎಂದು ಹೆಮೆಪಡುತ್ತೇನೆ. ಅದೇ ನಿಜವಾದ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್‌‍ ಪಕ್ಷ ಸಮರ್ಥಿಸಿಕೊಳ್ಳುವಂತೆ ನಟಿಸುತ್ತಿದೆ ಎಂದು ಕಿಡಿಕಾರಿದ್ದಾರೆ. +ಕಲ್ಲೆಸೆಯುವ ಮುನ್ನ ಖರ್ಗೆ ಜೂನಿಯರ್‌ ಅವರು ಗಾಜಿನ ಮನೆಯಲ್ಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು. ನಾನು ಅವನ ತಂದೆಗಿಂತ ಕೇವಲ 06 ವರ್ಷ ಚಿಕ್ಕವನು ಮತ್ತು ಅವನಿಗಿಂತ ಹೆಚ್ಚು ಕಾಲ ಇದ್ದೇನೆ ಎಂದು ಅವನಿಗೆ ತಿಳಿದಿರಬೇಕು. ಅವರ ಪ್ರತಿಪಾದಿಸಿದ ಶಿಕ್ಷಣಕ್ಕಿಂತ ನನ್ನ ಅನುಭವ ನನಗೆ ಕಲಿಸಿದೆ ಎಂದು ಹೇಳಿದ್ದಾರೆ. +ಹೇಗಾದರೂ ಕೆಐಎಡಿಬಿ ಭೂ ಹಂಚಿಕೆ ಪ್ರಕರಣವು ಕರ್ನಾಟಕದ ರಾಜ್ಯಪಾಲರನ್ನು ತಲುಪಿದೆ ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ. ಖರ್ಗೆ ಕುಟುಂಬದವರಾಗಲಿ ಅಥವಾ ಸಂಬಂಧಪಟ್ಟ ಸಚಿವರಾಗಲಿ ಭೂ ಮಂಜೂರಾತಿಯನ್ನು ನಿರಾಕರಿಸದೆ ಸಮರ್ಥಿಸಿಕೊಂಡಿರುವುದು ನನಗೆ ಖುಷಿ ತಂದಿದೆ. ಜನರು ಬುದ್ಧಿವಂತರು, ಇದನ್ನು ಹೇಗೆ ನಿರ್ಣಯಿಸುವುದು ಎಂದು ಅವರಿಗೆ ತಿಳಿದಿದೆ ಎಂದು ಲೆಹರ್‌ ಸಿಂಗ್‌ ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_32_8.txt b/eesanje/url_46_32_8.txt new file mode 100644 index 0000000000000000000000000000000000000000..f209fa9207b231267e262db6bb1ad2e69394438e --- /dev/null +++ b/eesanje/url_46_32_8.txt @@ -0,0 +1,7 @@ +ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಹಿಂದುಳಿದ ಸಂಘಟನೆಗಳ ರಾಜಭವನ ಚಲೋ + +ಬೆಂಗಳೂರು,ಆ.27-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಶೋಷಿತ ಹಿಂದುಳಿದ ಸಂಘಟನೆಗಳ ಒಕ್ಕೂಟ ನಗರದಲ್ಲಿಂದು ರಾಜಭವನ ಚಲೋ ನಡೆಸಿದವು. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಜನರಿಂದ ಚುನಾಯಿತವಾದ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಕುತಂತ್ರ ಮಾಡುತ್ತಿವೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು. +ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌, ಬಿಜೆಪಿಯ ಹಾಗೂ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ದ ಬಾಕಿ ಇರುವ ಪ್ರಕರಣವನ್ನು ಕಡೆಗಣಿಸಲಾಗಿದೆ. +ಬಿಜೆಪಿಯ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ ಅವರುಗಳ ವಿರುದ್ಧದ ಪ್ರಕರಣಗಳಲ್ಲಿ ತೀರ್ಮಾನ ತೆಗೆದುಕೊಳ್ಳಲು ವಿಳಂಬ ಮಾಡಲಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಕರಣದಲ್ಲಿ 10 ಗಂಟೆಗಳಲ್ಲೇ ಪ್ರಕ್ರಿಯೆಗಳು ಆರಂಭವಾಗಿದೆ. +ಇದು ದುರದ್ದೇಶಪೂರಿತ ಕ್ರಮ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಫ್ರೀಡಂಪಾರ್ಕ್‌ನಿಂದ ರಾಜಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪೊಲೀಸರು ಅರ್ಧ ದಾರಿಯಲ್ಲಿ ಪ್ರತಿಭಟನಾಕಾರರನ್ನು ತಡೆಹಿಡಿದರು. \ No newline at end of file diff --git a/eesanje/url_46_32_9.txt b/eesanje/url_46_32_9.txt new file mode 100644 index 0000000000000000000000000000000000000000..9ca2586ee25eb2f78116f7d6b00c5f2740a521f6 --- /dev/null +++ b/eesanje/url_46_32_9.txt @@ -0,0 +1,7 @@ +ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ + +ಬೆಂಗಳೂರು,ಆ.27– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. +ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ. +ಈ ಹಿಂದೆ ಮುಡಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳ ಹಿಂದಿನ ಪ್ರಕರಣವನ್ನು ಎಚ್.ವಿಶ್ವನಾಥ್ ಕೆದಕಿದರು. ಲೋಕಸಭೆ ಚುನಾವಣೆಗೂ ಮುನ್ನ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರ ವಿರುದ್ಧವೇ ಕೆಂಡಕಾರಿ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿದ್ದವು. +ಆದರೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಇದ್ದಕ್ಕಿದ್ದಂಗೆ ಕಾಂಗ್ರೆಸ್ ನಾಯಕರ ವಿರುದ್ಧವೇ ವಿಶ್ವನಾಥ್ ತಿರುಗಿ ಬಿದ್ದಿದ್ದರು. ಮುಡಾದಲ್ಲಿ ನಿವೇಶನ ಹಂಚಿಕೆಯ ಸಂಬಂಧಪಟ್ಟಂತೆ ಅಕ್ರಮಗಳಾಗಿವೆ ಎಂದು ದೂರಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಟೀಕೆ ಮಾಡಿದ್ದರು. +ಆನಂತರ ಇದು ಕಾವೇರಿದ ಚರ್ಚೆಗೆ ಗ್ರಾಸವಾಗಿದ್ದಲ್ಲದೆ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದವು. ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ಮತ್ತಷ್ಟು ಉಲ್ಭಣ ವಾತಾವರಣ ನಿರ್ಮಾಣವಾಗಿತ್ತು. \ No newline at end of file diff --git a/eesanje/url_46_330_1.txt b/eesanje/url_46_330_1.txt new file mode 100644 index 0000000000000000000000000000000000000000..ed503ce9aa705fe788419e92cea57178ab2fa736 --- /dev/null +++ b/eesanje/url_46_330_1.txt @@ -0,0 +1,11 @@ +ಖರ್ಗೆ-ವೇಣುಗೋಪಾಲ್ ಜೊತೆ ಡಿಕೆಶಿ ಮಹತ್ವದ ಮಾತುಕತೆ +ಬೆಂಗಳೂರು, ಅ.16- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲಿಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. +ವೇಣುಗೋಪಾಲ್ ಅವರು ಬೆಂಗಳೂರಿಗೆ ದಿಢೀರ್ ಆಗಮಿಸಿದ್ದು, ಡಿ.ಕೆ.ಶಿವಕುಮಾರ್ ಅವರೊಂದಿಗೆ ಹೋಗಿ ಚರ್ಚೆ ನಡೆಸಿರುವುದು ಹಲವು ಕುತೂಹಲಗಳನ್ನು ಕೆರಳಿಸಿದೆ. ಮಲ್ಲಿಕಾರ್ಜುನಖರ್ಗೆಯವರು ಬೆಂಗಳೂರಿನಲ್ಲೇ ಇದ್ದಿದ್ದರಿಂದ ಕೆ.ಸಿ.ವೇಣುಗೋಪಾಲ್ ದೆಹಲಿಯಿಂದ ಆಗಮಿಸಿದ್ದಾರೆ. ನಿನ್ನೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಆತುರಾತುರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. +ದಿಢೀರ್ ಭೇಟಿ ಸಮಾಲೋಚನೆಗಳು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ನಿರಂತರವಾಗಿ ಆದಾಯ ತೆರಿಗೆ ದಾಳಿಗಳಾಗುತ್ತಿದ್ದು, ನೂರಾರು ಕೋಟಿ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಕಾಕತಾಳೀಯ ಎಂಬಂತೆ ದಾಳಿಗೊಳಗಾದವರು ಮತ್ತು ಕಾಂಗ್ರೆಸ್‍ನ ಪ್ರಭಾವಿ ನಾಯಕರ ನಡುವಿನ ಸಂಪರ್ಕಗಳು ಸ್ಪಷ್ಟವಾಗುತ್ತಿದೆ. ಲೋಕಸಭೆ ಚುನಾವಣೆ, ಪಂಚರಾಜ್ಯಗಳ ಚುನಾವಣೆಗಳ ನಡುವೆ ಈ ದಾಳಿಗಳು ರಾಜಕೀಯ ಪ್ರೇರಿತ ಎಂಬ ಆರೋಪಗಳು ವ್ಯಾಪಕವಾಗಿವೆ. +ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ +ದಾಳಿಯಲ್ಲಿ ಸಿಕ್ಕಿದೆ ಎಂದು ಹೇಳಲಾದ ಹಣಕಾಸಿನ ಕುರಿತು ವಿರೋಧಪಕ್ಷಗಳು ಹಲವು ರೀತಿಯ ವ್ಯಾಖ್ಯಾನಗಳನ್ನು ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿಗಿಳಿದಿದೆ, ಗುತ್ತಿಗೆದಾರರ ಬಾಕಿ ಬಿಲ್‍ಗಳ ಪಾವತಿಯಲ್ಲಿ ಕಮಿಷನ್ ಪಡೆಯುತ್ತಿದೆ ಎಂಬೆಲ್ಲಾ ಟೀಕೆಗಳು ಕೇಳಿಬಂದಿವೆ. +ಈ ನಡುವೆ ಕೆ.ಸಿ.ವೇಣುಗೋಪಾಲ್‍ರವರು ಬೆಂಗಳೂರಿಗೆ ಆಗಮಿಸಿ ಎಐಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಲೋಕಸಭೆ ಅಧ್ಯಕ್ಷರ ಆಯ್ಕೆ, ಪಕ್ಷ ಸಂಘಟನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬ ವ್ಯಾಖ್ಯಾನಗಳಿವೆ. +ಮಾಮೂಲಿ ಎಂಬಂತೆ ಇದೊಂದು ಸೌಜನ್ಯದ ಭೇಟಿ, ವಿಶೇಷತೆ ಇಲ್ಲ ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಆದರೆ ಕೆ.ಸಿ. ವೇಣುಗೋಪಾಲ್ ಅವರ ದಿಢೀರ್ ಭೇಟಿ, ಆತುರಾತುರವಾಗಿ ನಡೆದ ಸಮಾಲೋಚನೆಗಳು ಹಲವು ರೀತಿಯ ಚರ್ಚೆಗಳಿಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮದಲ್ಲಿ ಮೈಸೂರಿನಲ್ಲಿರುವುದರಿಂದ ಸಮಾಲೋಚನಾ ಸಭೆಯಿಂದ ಹೊರಗುಳಿದಿದ್ದರು. +ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಈ ಕುರಿತು ಚರ್ಚೆಗಳಾಗಿವೆ ಎಂದು ಹೇಳಲಾಗಿದೆ. ದಸರಾ ಹಬ್ಬಕ್ಕೂ ಮುನ್ನವೇ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಶಾಸಕರಿಗೆ ಶೇ. 50 ರಷ್ಟು, ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಶೇ. 50 ರ ಅನುಪಾತದಲ್ಲಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಲಾಗುತ್ತದೆ ಎಂಬ ವದಂತಿಗಳಿವೆ. +ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್ +ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಹಾಗೆ ನಿಗಮಮಂಡಳಿಗಳ ನೇಮಕಾತಿಗೆ ಚಾಲನೆ ದೊರೆಯಲಿದೆ ಎಂಬ ನಿರೀಕ್ಷೆಗಳಿವೆ. \ No newline at end of file diff --git a/eesanje/url_46_330_10.txt b/eesanje/url_46_330_10.txt new file mode 100644 index 0000000000000000000000000000000000000000..674a245e6f64994a7bda6a6016934a76729327ce --- /dev/null +++ b/eesanje/url_46_330_10.txt @@ -0,0 +1,10 @@ +ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಿ : ದಸರಾ ಮಹೋತ್ಸವಕ್ಕೆ ಹಂಸಲೇಖ ಚಾಲನೆ +ಮೈಸೂರು,ಅ.15- ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಬೇಕು ಎಂದು ನಾದಬ್ರಹ್ಮ, ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ ಕರೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿಂದು ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕನ್ನಡವನ್ನು ಪ್ರಪಂಚದ ವೇದಿಕೆಯಲ್ಲಿ ಪ್ರತಿಷ್ಠಾಪಿಸಬೇಕು. ಆಗ ಕನ್ನಡ ಜಗತ್ತಿನ ಭಾಷೆಯಾಗಿ ಬೆಳೆಯಲು ಸಾಧ್ಯವಿದೆ. ಅಭಿವೃದ್ಧಿ ಮತ್ತು ಶಾಂತಿ ಸಂವೃದ್ದಿ ಕನ್ನಡಿಗರ ಒಂದು ಅಂಶ ಕಾರ್ಯಸೂಚಿಯಾಗಬೇಕು ಎಂದರು. +ಪೂಜ್ಯ ಕನ್ನಡ – ಕನ್ನಡಿಗರಿಗೆ ನನ್ನ ನಮನ ಎಂದು ಭಾಷಣ ಆರಂಭಿಸಿದ ಅವರು, ಈ ಬಾರಿಯ ದಸರಾ ಮಹೋತ್ಸವವನ್ನು ಕರ್ನಾಟಕ ಐದಶ ಎಂದು ಕರೆಯೋಣ, ಕರ್ನಾಟಕದ ಏಕೀಕರಣವಾಗಿ 50 ವರ್ಷಗಳಾಗಿದೆ ಹಾಗೆಯೇ ನನ್ನ ಕಲಾ ಸೇವೆಯು ಆರಂಭವಾಗಿ 50 ವರ್ಷಗಳು ತುಂಬಿದೆ .ಹಾಗಾಗಿ ಈ ಬಾರಿಯ ದಸರಾ ಮಹೋತ್ಸವವನ್ನು ಕರ್ನಾಟಕ ಐದಶ ಎಂದು ಕರೆಯೋಣ. ನನ್ನ ಐವತ್ತು ವರ್ಷಗಳ ಸೇವೆಗೆ ಸಿಕ್ಕಿರುವ ಇದು ಬಹಳ ದೊಡ್ಡ ಬೆಲೆ ಬಾಳುವಂತದು ಎಂದರು. +ಈ ದೇವಾಲಯ, ಈ ಬೆಟ್ಟ, ಈ ದೇವಿ, ಹಬ್ಬ, ಈ ದಿಬ್ಬ, ಈ ದೀಪ ಹಚ್ಚೋದು, ನನ್ನ ಸೌಭಾಗ್ಯ. ದೈವಸಮಾನಾವಾದ ಈ ನುಡಿಗೆ , ಕನ್ನಡ ನಾಡಿಗೆ , ಈ ದೇವಾಲಯಕ್ಕೆ , ಈ ಪ್ರೇಮಾಯಣಕ್ಕೆ ಸಾವಿರದ ಶರಣುಗಳು ಎಂದು ಹೇಳಿದರು.ಈ ಅವಕಾಶಕ್ಕಾಗಿ ಯಾರನ್ನು ನೆನೆಯಬೇಕು, ಅಪ್ಪ ಗೋವಿಂದರಾಜು, ಅವ್ವ ರಾಜವ್ವ, ಗುರು ನೀಲಕಂಠನನ್ನೇ, ರಕ್ತದೊಳಗಿನ ನಾದವನ್ನೇ, ಚಂದನವನವನ್ನೇ, ಸರ್ಕಾರವನ್ನೇ , ಸಂವಿಧಾನವನ್ನೇಎಂದು ಬಣ್ಣಿಸಿದರು. +ಚಾಮುಂಡಿ ಬೆಟ್ಟಕ್ಕೆ ಸಾವಿರ ಮೆಟ್ಟಿಲುಗಳಿವೆ. ದಸರಾ ಸಮಾರಂಭದಲ್ಲಿ ಭಾಗವಹಿಸಲು ನಾನು ಸಾವಿರ ಮೆಟ್ಟಿಲುಗಳನ್ನು ಹತ್ತಿ ಬಂದಿದ್ದೇನೆ. ಈ ಅವಕಾಶಕ್ಕಾಗಿ ನಿರಾಯಾಸವಾಗಿ ಬಂದಿಲ್ಲ , ನಾನು ಸಹ ಸಾವಿರ ಮೆಟ್ಟಿಲುಗಳನ್ನು ಜೀವನದಲ್ಲಿ ಹತ್ತಿ ಇಂದು ಇಂತಹ ಒಂದು ದೊಡ್ಡ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದೇನೆ ಎಂದು ಸಂತಸಪಟ್ಟರು. +ಪಾರ್ಟಿಯಲ್ಲಿ ಶೂಟೌಟ್ ಮೂವರ ಸಾವು +ಸಮೀಕ್ಷೆ ನಡೆಯಬೇಕು: ಕರ್ನಾಟಕದಲ್ಲಿ ಕನ್ನಡ ಮಾತನಾಡುವವರ ಕುರಿತು ಒಂದು ಸಮೀಕ್ಷೆ ನಡೆಯಬೇಕು ಕರ್ನಾಟಕದಲ್ಲಿ ಎಷ್ಟು ಮಂದಿಗೆ ಕನ್ನಡ ಬರುತ್ತದೆ. ಕನ್ನಡ ಬರೆಯಲು ಬರುತ್ತದೆ. ಕನ್ನಡ ಓದಲು ಬರುತ್ತದೆ ಎಂಬ ಎಲ್ಲಾ ವಿಷಯ ಕುರಿತು ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆಯನ್ನು ನಡೆಸಬೇಕು ಎಂದು ಅವರು ಹೇಳಿದರು. +ಇದೊಂದು ಡೇಟಾ ಆಗಬೇಕು. ಈ ಮಾಹಿತಿ ನಮ್ಮಲ್ಲಿ ಇರಬೇಕು ಎಂದು ಸರ್ಕಾರಕ್ಕೆ ಇದೇ ವೇಳೆ ಹಂಸಲೇಖ ಅವರು ಮನವಿ ಮಾಡಿದರು. ಸರ್ಕಾರ ಹಾಗೂ ಸಾರ್ವಜನಿಕರ ಒತ್ತಾಸೆ ಮೇರೆಗೆ ಇದನ್ನು ಮಾಡಬೇಕು. ಕನ್ನಡ ಕಲಿಯಬೇಕು ಎಂದು ಮುಂದೆ ಬರುವವರಿಗೆ ಕರ್ನಾಟಕದಲ್ಲಿ 30 ದಿನಗಳೊಳಗೆ ಕನ್ನಡವನ್ನು ಕಲಿಸಬೇಕು. ಅವರು ಕನ್ನಡ ಕಲಿತ ಮೇಲೆ ಅವರಿಗೆ ಕನ್ನಡ ಪಟ್ಟ ನೀಡಬೇಕು. ಕನ್ನಡ ಪಟ್ಟ ಎಂದರೆ ಇದೊಂದು ದಾಖಲೆಯಾಗಿರುತ್ತದೆ ಎಂದರು. +ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು +ಎಪಿಎಲ್ , ಬಿಪಿಎಲ್ ಕಾರ್ಡ್ ಇಲ್ಲದಿದ್ದರೂ ಈ ಕನ್ನಡ ಪಟ್ಟ ಹೊಂದಿರುವವರಿಗೆ ಕರ್ನಾಟಕದಲ್ಲಿ ಕೆಲಸ ಸಿಗುವಂತಾಗಬೇಕು ಎಂದವರು ಈ ಸಂದರ್ಭದಲ್ಲಿ ಅವರು ಒತ್ತಾಯಿಸಿದರು. ಇಂದಿನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ.ಜೆ.ಜಾರ್ಜ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಶ್ರೀವತ್ಸ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್ ಸೇರಿದಂತೆ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_330_11.txt b/eesanje/url_46_330_11.txt new file mode 100644 index 0000000000000000000000000000000000000000..d9a740c06e2548a7c547a4a0905a9e9a50544c37 --- /dev/null +++ b/eesanje/url_46_330_11.txt @@ -0,0 +1,9 @@ +ಕಿಯೊನಿಕ್ಸ್ ನಲ್ಲಿ ಮುಕ್ತ ಟೆಂಡರ್ ವ್ಯವಸ್ಥೆಗೆ ಚಾಲನೆ +ಬೆಂಗಳೂರು,ಅ.14- ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸಂಪನ್ಮೂಲವನ್ನು ರಕ್ಷಿಸುವ ಸಲುವಾಗ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. +ಆಡಿಟ್ ಜನರಲ್ ಕಚೇರಿ ಇತ್ತೀಚೆಗೆ ಕಿಯೊನಿಕ್ಸ್ ಸಂಸ್ಥೆಯ ಲೆಕ್ಕ ಪರಿಶೋಧನಾ ವರದಿಯನ್ನು ಸಲ್ಲಿಸಿದ್ದು, ಅದರಲ್ಲಿ ಹಲವು ಲೋಪಗಳನ್ನು ಗುರುತಿಸಿದೆ. ಅವುಗಳನ್ನು ಗಮನಿಸಲಾಗಿದ್ದು, ಭವಿಷ್ಯದಲ್ಲಿ ಸುಸ್ಥಿರತೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. +ಈ ಹಿಂದೆ ಕಿಯೊನಿಕ್ಸ್ ಸಂಸ್ಥೆಯು ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಒದಗಿಸಿದ ಹೆಚ್ಚಿನ ಸರಕುಗಳು ಮತ್ತು ಸೇವೆಗಳಿಗೆ ಮೂರನೇ ವ್ಯಕ್ತಿಯ ತಪಾಸಣೆ ನಡೆಸದೆ ಬಿಲ್ ಪಾವತಿಸಲಾಗಿತ್ತು. ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿ ಅಕ್ರಮ ಪಾವತಿಗಳು, ಕೆಲವು ಒಪ್ಪಂದಗಳಲ್ಲಿ ಮೂಲ ದರವನ್ನು ತಪ್ಪಾಗಿ ಅಳವಡಿಸುವುದು, ಎಂಪ್ಯಾನಲ್ಮೆಂಟ್ ಉಲ್ಲಂಘನೆಗಳು, ಬಿಲ್ಡರ್‍ಗಳು ಸಲ್ಲಿಸಿದ್ದ ಆಸಕ್ತಿಯ ಅಭಿವ್ಯಕ್ತಿಯ ಮೌಲ್ಯಮಾಪನಕ್ಕೆ ಸಮಿತಿಗಳನ್ನು ರಚಿಸದಿರುವುದು, ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಮಾಹಿತಿ ತಂತ್ರಜ್ಞಾನ ಸಂಬಂಧಿಸಿದ ಸರಬರಾಜುಗಳ ಸಂಗ್ರಹಣೆ, ಪ್ರಮಾಣಿತ ಟೆಂಡರ್ ದಾಖಲೆಗಳನ್ನು ಅಳವಡಿಸಿಕೊಳ್ಳದಿರುವುದು, ಟೆಂಡರ್ ವಿಭಜನೆ, ಒಪ್ಪಂದಗಳಲ್ಲಿ ಕಾರ್ಯಕ್ಷಮತೆಯ ಭದ್ರತೆಯನ್ನು ಗಮನಿಸಿದಿರುವುದು, ಬಿಲ್ಡರ್ಸ್‍ಗಳಿಂದ ಇಎಂಡಿ ಸಂಗ್ರಹ ಸೇರಿದಂತೆ ಹಲವು ಲೋಪಗಳು ನಡೆದಿವೆ ಎಂದು ವಿವರಿಸಲಾಗಿದೆ. +ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ +ಕಿಯೊನಿಕ್ಸ್‍ನಲ್ಲಿ ಬಾಕಿ ಇರುವ ಬಿಲ್‍ಗಳಿಗಾಗಿ ವೆಂಡರ್‍ಗಳು ಮತ್ತು ಭಾದ್ಯಸ್ಥರು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ಆದ್ಯತೆ ಮತ್ತು ಲೆಕ್ಕಪರಿಶೋಧನೆಗಳ ಅವಲೋಕನಗಳ ಆಧಾರದ ಮೇಲೆ ಪರಿಶೀಲಿಸಲಾಗುವುದು. ಹಣಕಾಸು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಣೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. +ಸುಗಮ ವ್ಯವಹಾರಕ್ಕಾಗಿ ಜಿಎಸ್‍ಟಿ ಪುರಾವೆಯನ್ನು ಸಮರ್ಪಕವಾಗಿ ಪರಿಶೀಲಿಸಲಾಗುತ್ತಿದೆ. ಆಡಿಟ್ ವರದಿಯಲ್ಲಿನ ಅಂಶಗಳು ಮರುಪರಿಶೀಲನೆಗೆ ಒಳಪಡಿಸಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಕರ್ನಾಟಕ ಪಾರದರ್ಶಕ ಕಾಯ್ದೆ ನಿಬಂಧನೆಗಳನ್ನು ಅನುಸರಿಸಲಾಗುವುದು. +ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು +2023 ರ ಅಕ್ಟೋಬರ್ 11 ರಂದು ನಡೆದ ಟೆಂಡರ್ ಪರಿಶೀಲನಾ ಸಂಸ್ಥೆಯ ಮೊದಲ ಸಭೆಯಲ್ಲಿ ಟೆಂಡರ್ ಪ್ರಸ್ತಾವನೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿದೆ ಎಂದು ವಿವರಿಸಿದ್ದಾರೆ. 4 ಜಿ ವಿನಾಯಿತಿಯಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಅವುಗಳನ್ನು ಸರಿಪಡಿಸಲು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಮುಕ್ತ ಟೆಂಡರ್ ವ್ಯವಸ್ಥೆಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ. \ No newline at end of file diff --git a/eesanje/url_46_330_12.txt b/eesanje/url_46_330_12.txt new file mode 100644 index 0000000000000000000000000000000000000000..2245c4ac4db060ccb63ef63b27eb3a4a213a9522 --- /dev/null +++ b/eesanje/url_46_330_12.txt @@ -0,0 +1,9 @@ +ಪ್ರಭಾವಿಗಳಿಗೆ ನೋಟಿಸ್ ನೀಡಲು ಆದಾಯ ತೆರಿಗೆ ಇಲಾಖೆ ಸಜ್ಜು +ಬೆಂಗಳೂರು,ಅ.14- ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದಲ್ಲಿ ಸಿಕ್ಕಿಬಿದ್ದಿದ್ದ 42 ಕೋಟಿ ನಗದು ಹಾಗೂ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಭಾವಿಗಳಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ಸಂಬಂಧಿಕರ ಮೇಲೆ ಐಟಿ ಅಧಿಕಾರಿಗಳು ಸತತವಾಗಿ ಮೂರು ದಿನ ಶೋಧ ನಡೆಸಿದ್ದರು. +ಅದಾದ ನಂತರ ರಾಜ್ಯದಲ್ಲಿ ನಡೆದಿರುವ ಅತಿದೊಡ್ಡ ಐಟಿ ದಾಳಿ ಇದಾಗಿದ್ದು, 42 ಕೋಟಿ ನಗದು, ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣಗಳು ಸಿಕ್ಕಿಬಿದ್ದಿರುವುದರ ಹಿಂದೆ ನಿಜವಾದ ನಾಯಕನನ್ನು ಪತ್ತೆ ಹಚ್ಚಲು ಐಟಿ ಮುಂದಾಗಿದೆ. ಗುರುವಾರ ಸಂಜೆ 6 ಗಂಟೆಯಿಂದ ಸತತ 40 ಗಂಟೆಗೂ ಅಧಿಕ ಕಾಲ ಅಂಬಿಕಾಪತಿ ಮನೆ, ಸಂಬಂಧಿಕರ ನಿವಾಸ, ಕಚೇರಿ ಸೇರಿದಂತೆ ಇಂಚಿಂಚು ಮಾಹಿತಿಯನ್ನು ಹೊರತೆಗೆಯುತ್ತಿರುವ ಐಟಿ ಅಧಿಕಾರಿಗಳಿಗೆ ಇದರ ಹಿಂದೆ ಕಾಣದ ಪ್ರಭಾವಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮಾನ್ಯತಾಟೆಕ್ ಪಾರ್ಕ್‍ನಲ್ಲಿ ಅಂಬಿಕಾಪತಿ ಒಡೆತನಕ್ಕೆ ಸೇರಿದ ಮನೆಯ ಲಾಕರ್‍ನೊಳಗೆ ಸಿಕ್ಕಿರುವ ಸೂಟ್‍ಕೇಸ್ ಹಲವರಿಗೆ ಕಂಟಕವಾಗುವ ಸಾಧ್ಯತೆ ಇದೆ. +ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು +ಏಕೆಂದರೆ ಇದರಲ್ಲಿ ಉಮಾಪತಿ ಕೆಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಪ್ರಾರಂಭದಲ್ಲಿ ಇದನ್ನು ತೆಗೆಯಲು ಹಿಂದೇಟು ಹಾಕಿದಾಗಲೇ ಐಟಿ ಅಕಾರಿಗಳಿಗೆ ಮತ್ತಷ್ಟು ಅನುಮಾನ ಮೂಡಿಬಂದು ಬಲವಂತವಾಗಿ ತೆರೆಸಿದರು. ಆಗ ಸೂಟ್‍ಕೇಸ್‍ನಲ್ಲಿದ್ದ ಕೆಲವು ದಾಖಲೆಗಳು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ. +ಈ ಹಣ ಎಲ್ಲಿಂದ ಬಂತು? ಯಾರಿಗೆ ಕೊಡಬೇಕಿತ್ತು? ಯಾರಿಂದ ಸಂಗ್ರಹಿಸಲಾಗಿತ್ತು? ಎಂಬುದರ ಬಗ್ಗೆ ದಾಖಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ. ಹಣವನ್ನು ಬೆಂಗಳೂರಿನಿಂದ ಚೆನ್ನೈಗೆ ತೆಗೆದುಕೊಂಡು ಹೋಗಿ ಯಾರಿಗೆ ತಲುಪಿಸಬೇಕು, ಅಲ್ಲಿಂದ ಎಲ್ಲಿಗೆ ಹೋಗಬೇಕು ಹೀಗೆ ಪ್ರತಿಯೊಂದು ವಿವರಗಳನ್ನು ನಮೂದಿಸಲಾಗಿದೆ ಎಂದು ತಿಳಿದುಬಂದಿದೆ. +ಈ ದಾಖಲೆಗಳನ್ನೇ ಆಧಾರವಾಗಿಟ್ಟುಕೊಂಡಿರುವ ಐಟಿ ಅಧಿಕಾರಿಗಳು ಕೆಲವು ಪ್ರಭಾವಿ ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು, ಗುತ್ತಿಗೆದಾರರು, ಮಧ್ಯವರ್ತಿಗಳು ಹೀಗೆ ಹಲವರು ಶಾಮೀಲಾಗಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ಕೈಗೆತ್ತಿಕೊಳ್ಳಲು ಐಟಿ ಮುಂದಾಗಿದೆ. +ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ +ಪ್ರಭಾವಿಗಳಿಗೆ ನಡುಕ:ಗುತ್ತಿಗೆದಾರನ ಬಳಿ ಐದು ಕೋಟಿಗೂ ಹೆಚ್ಚು ಹಣ ಸಿಕ್ಕಿಬಿದ್ದಿರುವುದರಿಂದ ಇದೀಗ ಪ್ರಭಾವಿ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ನಡುಕ ಆರಂಭವಾಗಿದೆ. ಮೂಲಗಳ ಪ್ರಕಾರ ಸದ್ಯದಲ್ಲೇ ಹಲವರಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿರುವುದರಿಂದ ಯಾರ ಕೊರಳಿಗೆ ಹುರುಳಾಗಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. \ No newline at end of file diff --git a/eesanje/url_46_330_2.txt b/eesanje/url_46_330_2.txt new file mode 100644 index 0000000000000000000000000000000000000000..92fc1f1539c2c806a23f2d8e75b7e1b24a61c9b0 --- /dev/null +++ b/eesanje/url_46_330_2.txt @@ -0,0 +1,9 @@ +ರಾಜ್ಯದ ಕರಾವಳಿ, ಒಳನಾಡಿನಲ್ಲಿ 2 ದಿನ ಮಳೆ ಸಾಧ್ಯತೆ +ಬೆಂಗಳೂರು, ಅ.16-ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ನೈರುತ್ಯ ಮುಂಗಾರು ಮುಕ್ತಾಯದ ಅವಧಿಯಾಗಿರುವುದರಿಂದ ಸಹಜವಾಗಿ ಉತ್ತಮ ಮಳೆಯಾಗಬೇಕು. ಆದರೆ, ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ. +ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಆದರೆ, ಈಶಾನ್ಯ ಹಿಂಗಾರು ಮಳೆ ಪ್ರಾರಂಭವಾಗುವ ಸ್ಪಷ್ಟ ಲಕ್ಷಣಗಳು ಈತನಕ ಗೋಚರಿಸುತ್ತಿಲ್ಲ. ಮುಂಗಾರು ಅವ ಮುಗಿಯುತ್ತಿದ್ದಂತೆ ಹಿಂಗಾರು ಆರಂಭಗೊಳ್ಳುವುದು ವಾಡಿಕೆ. ಈ ಬಾರಿ ಅಂತಹ ಯಾವ ಸುಳಿವು ಇದುವರೆಗೆ ಕಂಡುಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ. +ಕಾಂಗ್ರೆಸ್ ಕೇವಲ ‘ಲೂಟಿ ಗ್ಯಾರಂಟಿ’ ಮಾತ್ರ ನೀಡಬಲ್ಲದು : ನಡ್ಡಾ +ಅರಬ್ಬೀ ಸಮುದ್ರದ ಲಕ್ಷ ದ್ವೀಪದ ಬಳಿ ವಾಯುಭಾರ ಕುಸಿತವಾಗಿದ್ದು, ಅದರಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಉಂಟಾಗುವುದಿಲ್ಲ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗರದಿಂದ ಸಾಧಾರಣ ಮಳೆ ನಿರೀಕ್ಷಿಸಬಹುದಾಗಿದೆ. +ಇನ್ನೆರಡು ದಿನ ಕರಾವಳಿ ಹಾಗೂ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ. ಕಳೆದ ಎರಡು ವಾರದಲ್ಲೂ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. ಬಹಳಷ್ಟು ಕಡೆಗಳಲ್ಲಿ ಒಣಹವೆ ಮುಂದುವರೆದಿದ್ದು, ತೇವಾಂಶ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. +ಮುಂಗಾರು ಮಳೆಯ ಮರಳುವಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಇನ್ನೆರಡು ದಿನಗಳಲ್ಲಿ ಮುಗಿಯುವ ಸಾಧ್ಯತೆಗಳಿವೆ. ಮುಂಗಾರು ಮುಗಿಯುತ್ತಿದ್ದಂತೆ ಹಿಂಗಾರು ಮಳೆ ಆರಂಭವಾಗಬೇಕು. ಆದರೆ, ಅಂತಹ ಯಾವ ಸುಳಿವು ಈಗ ಕಂಡುಬರುತ್ತಿಲ್ಲ. ಹಿಂಗಾರು ಮಳೆ ಆರಂಭಗ್ಳೊಳ್ಳುವ ಮುನ್ನ ತಂಪಾದ ಮೇಲ್ಮೈ ಗಾಳಿ ಬೀಸಬೇಕು. ಇದರ ಬಲಿಗೆ ಒಣ ಹವೆ ಇದ್ದು, ಕೆಲವೆಡೆ ಪ್ರಖರ ಬಿಸಿಲಿರುವುದು ಕಂಡುಬರುತ್ತಿದೆ. +ಇಸ್ಲಾಮಿಕ್ ರಾಷ್ಟ್ರಗಳ ವಿರುದ್ಧ ಹರಿಹಾಯ್ದ ನಿಕ್ಕಿ ಹ್ಯಾಲೆ +ಇದರಿಂದ ಹಿಂಗಾರು ಪ್ರಾರಂಭವೂ ವಿಳಂಬವಾಗುವುದನ್ನು ಅಲ್ಲಗಳೆಯಲಾಗದು ಎನ್ನುತ್ತಾರೆ ಹವಾಮಾನ ತಜ್ಞರು. ಮುಂಗಾರು ಮಳೆಯ ಆರಂಭವೂ ವಿಳಂಬವಾಗಿತ್ತು. ಜುಲೈ ತಿಂಗಳನ್ನು ಹೊರತುಪಡಿಸಿದರೆ, ಜೂನ್, ಆಗಸ್ಟ್, ಸೆಪ್ಟೆಂಬರ್‍ನಲ್ಲೂ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅಕ್ಟೋಬರ್‍ನಲ್ಲೂ ಅದೇ ಪರಿಸ್ಥಿತಿ ಮುಂದುವರೆಯುತ್ತಿದೆ. ಹೀಗಾಗಿ ರೈತರು ಮಳೆಗಾಗಿ ಆಕಾಶದತ್ತ ಮುಖಮಾಡುವಂತಾಗಿದೆ. \ No newline at end of file diff --git a/eesanje/url_46_330_3.txt b/eesanje/url_46_330_3.txt new file mode 100644 index 0000000000000000000000000000000000000000..28fe0773e60855db0c8e8ab4a6a5853b7cc4bc7e --- /dev/null +++ b/eesanje/url_46_330_3.txt @@ -0,0 +1,10 @@ +ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ! : ಹೆಚ್‌ಡಿಕೆ +ಬೆಂಗಳೂರು, ಅ.15-ಬ್ರ್ಯಾಂಡ್ ಹೆಸರಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಹಣ ಕೊಳ್ಳೆ ಹೊಡೆಯಲು ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್‍ಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. +ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಹೆಚ್‍ಡಿಕೆ ಪ್ರಶ್ನಿಸಿದ್ದಾರೆ. ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ಪರ್ಸಂಟೇಜ್ ಪಟಾಲಂ ಈಗ ಕಸಕ್ಕೂ ಬಾಯಿ ಹಾಕಿದೆ. ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ. ಅದರ ಒಳಗುಟ್ಟು ರಟ್ಟಾಗಿದೆ ಎಂದು ಅವರು ಟೀಕಿಸಿದ್ದಾರೆ. +ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. +ಪಾಕಿಸ್ತಾನ ಹೋರಾಟದ ಪ್ರವೃತ್ತಿ ತೋರಿಸಿಲ್ಲ : ರಮೀಜ್ ರಾಜಾ +ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ಕಸದ ತೊಟ್ಟಿಗಳನ್ನಾಗಿ ಮಾಡಿ ಸಾವಿನ ದಿಬ್ಬಗಳನ್ನು ನಿರ್ಮಿಸಲು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ ಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಆರೋಪಿಸಿದ್ದಾರೆ. +ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ ಎಂದಿದ್ದಾರೆ. +ರೋಹಿತ್ ಶರ್ಮಾ ಒನ್ ಮ್ಯಾನ್ ಆರ್ಮಿ : ಅಖ್ತರ್ ಬಣ್ಣನೆ +ನೂರು ಎಕರೆ ಸರ್ಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಸಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರ್ಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಬೀದಿಗಿಳಿಯುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_330_4.txt b/eesanje/url_46_330_4.txt new file mode 100644 index 0000000000000000000000000000000000000000..1db02c3cd2ee283674ce20eaa94c34744aefc1c6 --- /dev/null +++ b/eesanje/url_46_330_4.txt @@ -0,0 +1,5 @@ +ವಿಮಾನದಲ್ಲಿ ಪಾಸ್ತಾ ಮಷೀನ್‍ನಲ್ಲಿ ಚಿನ್ನ ಸಾಗಾಟ : ಪ್ರಯಾಣಿಕನ ಬಂಧನ +ಬೆಂಗಳೂರು,ಅ.15- ದುಬೈ ವಿಮಾನದ ಮೂಲಕ ಪಾಸ್ತಾ ಮಾಡುವ ಮಷೀನ್‍ನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ನಗರಕ್ಕೆ ಬಂದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 35.37 ಲಕ್ಷ ಮËಲ್ಯದ 598 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. +ಬೆಂಗಳೂರು ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದ ಪ್ರಯಾಣಿಕನೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪಾಸ್ತಾ ಮಾಡುವ ಮಷೀನ್ ಪತ್ತೆಯಾಗಿದೆ. ಆ ಮಷೀನ್‍ನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿದಾಗ ಮಷೀನ್ ಮೂಲಕ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವುದು ತಿಳಿದು ಮಷೀನ್‍ಗೆ ಅಳವಡಿಸಿದ್ದ ಬೋಲ್ಟ್ ಮತ್ತು ಸ್ಕ್ರೂ ಕೂಲಂಕುಷವಾಗಿ ಪರಿಶೀಲಿಸಿದಾಗ ಚಿನ್ನದಲ್ಲಿ ಅವುಗಳನ್ನು ಮಾಡಿಸಿ ಸಿಲ್ವರ್ ಕೋಟ್ ಮಾಡಿರುವುದು ಕಂಡುಬಂದಿದೆ. +ಪಾಕಿಸ್ತಾನ ಹೋರಾಟದ ಪ್ರವೃತ್ತಿ ತೋರಿಸಿಲ್ಲ : ರಮೀಜ್ ರಾಜಾ +ಕೂಡಲೆ ಆ ಮಷೀನ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ತೆರೆದು ಬರೊಬ್ಬರಿ 35,37,768 ರು. ಮೌಲ್ಯದ 598 ಗ್ರಾಂ ಚಿನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಪ್ರಯಾಣಿಕನನ್ನು ಕೂಲಂಕುಷವಾಗಿ ವಿಚಾರಣೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_330_5.txt b/eesanje/url_46_330_5.txt new file mode 100644 index 0000000000000000000000000000000000000000..bd20a0da4f9b9e3354f6b4875e6bbb9b02738c53 --- /dev/null +++ b/eesanje/url_46_330_5.txt @@ -0,0 +1,5 @@ +ಆಹಾರ ತಜ್ಞ ಕೆ.ಸಿ.ರಘು ಅನಾರೋಗ್ಯದಿಂದ ನಿಧನ +ಬೆಂಗಳೂರು- ವಿಜ್ಞಾನ ಲೋಕ, ರಘು ಬುಕ್ಸ್ , ಜ್ಞಾನ, ತತ್ವಶಾಸ್ತ್ರ ಮತ್ತು ಧರ್ಮ ಎಂಬ ಹೊಸ ಪರಿಕಲ್ಪನೆಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸುತ್ತಿದ್ದ ನಾಡಿನ ಹೆಸರಾಂತ ಆಹಾರ ತಜ್ಞ, ಅಂಕಣಕಾರ ಕೆ.ಸಿ. ರಘು ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. +ಕೆ.ಸಿ. ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವಲ್ರ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ. ಅವರು ಸ್ಥಾಪಿಸಿದ ಪ್ರಿಸ್ಟೀನ್ ಆಗ್ರ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. +ಶಾಹೀನ್ ಶಾ ಆಫ್ರಿದಿಗೆ ರವಿಶಾಸ್ತ್ರಿ ಹಿಗ್ಗಾಮುಗ್ಗಾ ಕ್ಲಾಸ್ +ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಇದಾಗಿತ್ತು. ಕೆ.ಸಿ.ರಘು, ಅನೇಕ ವಿಷಯಗಳ ಆಳವಾದ ಆಸಕ್ತಿ ಮತ್ತು ಜ್ಞಾನವನ್ನು ಉಳ್ಳವರಾಗಿ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿರುತ್ತಾರೆ. ಕೆ.ಸಿ. ರಘು, ಲೇಖಕರಾಗಿ ಆಹಾರಕ್ಕೆ ಸಂಬಂಧಪಟ್ಟ ಆಹಾರ ರಾಜಕೀಯ ಮತ್ತು ತುತ್ತು ತತ್ವ ಪುಸ್ತಕಗಳನ್ನು ಪ್ರಕಟಿಸಿದ್ದರು. \ No newline at end of file diff --git a/eesanje/url_46_330_6.txt b/eesanje/url_46_330_6.txt new file mode 100644 index 0000000000000000000000000000000000000000..3092d9d47c223068fc2b58a783ffb2d882888250 --- /dev/null +++ b/eesanje/url_46_330_6.txt @@ -0,0 +1,3 @@ +ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭ +ಮೈಸೂರು, ಅ.15- ದಸರಾ ಮಹೋತ್ಸವದ ಅಂಗವಾಗಿ ಇಂದು ಮೈಸೂರು ಅರಮನೆಯಲ್ಲಿ ರಾಜ ಮನೆತನದಿಂದ ಖಾಸಗಿ ದರ್ಬಾರ್ ನಡೆಯಿತು. ಮೈಸೂರು ಅರಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ಬಹಳ ವಿಶೇಷವಾಗಿತ್ತು. ಇಂದು ಬೆಳಿಗ್ಗೆಯಿಂದಲೇ ಅರಮನೆ ಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. +ಆನಂತರ ಅರಮನೆಯ ದರ್ಬಾರ್ ಹಾಲಿನಲ್ಲಿ ಇರಿಸಲಾಗಿರುವ ಸಿಂಹಾಸನಕ್ಕೆ ಯದುವೀರ್ ಅವರು ಮೊದಲು ಪೂಜೆ ಸಲ್ಲಿಸಿದರು. ಆನಂತರ ಸಿಂಹಾಸನ ರೂಢರಾಗಿ ಖಾಸಗಿ ದರ್ಬಾರ್ ನಡೆಸಿದರು. ಇದಕ್ಕೂ ಮುನ್ನ ಗಣಪತಿ ಪೂಜೆ, ಕಳಸ ಪೂಜೆ ನೆರವೇರಿಸಲಾಯಿತು. \ No newline at end of file diff --git a/eesanje/url_46_330_7.txt b/eesanje/url_46_330_7.txt new file mode 100644 index 0000000000000000000000000000000000000000..72d9b1c6d6e2556964be7fb084a961431bc8b2df --- /dev/null +++ b/eesanje/url_46_330_7.txt @@ -0,0 +1,14 @@ +ಕಾಂಗ್ರೆಸ್ ಸರ್ಕಾರದಿಂದ ದಸರಾಗೂ ಕಳಂಕ : ಸಿ.ಟಿ.ರವಿ +ಬೆಂಗಳೂರು, ಅ.15- ಹಿರಿಯ ಕಲಾವಿದರ ಬಳಿಯೇ ಕಮಿಷನ್ ಕೇಳುತ್ತಿರುವ ಕಾಂಗ್ರೆಸ್ ಶೇ.60ರಷ್ಟು ಸರ್ಕಾರವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗುತ್ತಿಗೆದಾರರ ಬಳಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿರುವ ಪ್ರಕರಣವನ್ನು ಸಿಬಿಐ ತನಿಖಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ. +ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ.60 ಲಂಚ ಕೇಳಿದಂತಾಗಿದೆ. ಹಿರಿಯ ಕಲಾವಿದರ ಬಳಿಯೇ ಶೇ.60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಪ್ರಶ್ನಿಸಿದರು. +ಗಾಜಾದಲ್ಲಿ ಆಹಾರ, ನೀರು ಇಲ್ಲದೆ 2.3 ಮಿಲಿಯನ್ ಜನರ ನರಳಾಟ +ಕಾಂಗ್ರೆಸ್ ಸರಕಾರದ ಕಮಿಷನ್ ದಂಧೆ ಕೇವಲ ಗುತ್ತಿಗೆದಾರರಿಗೆ, ಸರಕಾರಿ ಯೋಜನೆಗಳಿಗೆ ಸೀಮಿತವಾಗಿಲ್ಲ. ಅದು ಕಲಾವಿದರ ಗೌರವಧನದ ವರೆಗೂ ಕೈಚಾಚಿಬಿಟ್ಟಿದೆ. ಇದು ದುರಂತದ ಸಂಗತಿ ಮಾತ್ರವಲ್ಲ. ಸಾಂಸ್ಕøತಿಕ ಅಧಃಪತನದತ್ತ ಇವರು ರಾಜ್ಯವನ್ನು ಒಯ್ಯುತ್ತಿದ್ದಾರೆ ಎಂದು ಆಕ್ಷೇಪಿಸಿದರು. +ಮುಖ್ಯಮಂತ್ರಿಗಳು ನಮ್ಮದು ಭ್ರಷ್ಟಾಚಾರರಹಿತ ಆಡಳಿತ ಎನ್ನುತ್ತಾರೆ. ಅಬ್ಬರಿಸಿ ಬೊಬ್ಬಿರಿವ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಅವರ ಮೂಗಿನ ಕೆಳಗೇ ಇದು ನಡೆಯುತ್ತಿದೆ. ಬೇರೆ ಜಿಲ್ಲೆಗಳಲ್ಲಿ ಇನ್ನು ಪರಿಸ್ಥಿತಿ ಹೇಗಿರಬಹುದು ಎಂಬ ಪ್ರಶ್ನೆ ಕಾಡುತ್ತಿದೆ. ಒತ್ತಡದ ಮೂಲಕ ಪ್ರಕರಣ ಮುಚ್ಚಿಹಾಕಲು ಮುಂದಾದುದು ಇನ್ನಷ್ಟು ನಾಚಿಕೆಗೇಡಿನ ಸಂಗತಿ ಎಂದರು. +ಕೆಪಿಸಿಸಿ ಎಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾಗಿದೆ. ಹಿಂದೆ ನಮ್ಮ ಸರಕಾರದ ಮೇಲೆ ಆರೋಪ ಮಾಡುತ್ತಿದ್ದರು. ಈಗ ಗುತ್ತಿಗೆದಾರ ಅಂಬಿಕಾಪತಿ ಕರೋಡ್‍ಪತಿಯಾಗಿದ್ದಾರೆ. ಅವರ ಮನೆಯಲ್ಲಿ 42 ಕೋಟಿ, ಇನ್ನೊಬ್ಬ ಬಿಲ್ಡರ್ ಕೇತಮಾರನಹಳ್ಳಿ ಸಂತೋಷ್ ಕೃಷ್ಣಪ್ಪ ಮನೆಯಲ್ಲಿ 40 ಕೋಟಿ, ಹೀಗೆ ಕೋಟಿ ಕೋಟಿ ಹೊರಕ್ಕೆ ಬರುತ್ತಿದೆ. ಇವರಿಬ್ಬರೂ ರಾಜ್ಯದ ನಂಬರ್ 1, ನಂಬರ್ 2 ಅವರ ಬೇನಾಮಿಗಳು ಎಂಬ ಮಾಹಿತಿ ನಮಗಿದೆ ಎಂದು ವಿವರ ನೀಡಿದರು. ಇದರ ಸಿಬಿಐ ತನಿಖೆ ಮಾಡಿ ಎಂದು ಆಗ್ರಹಿಸಿದರು. +ನಂಬರ್ 1, ನಂಬರ್ 2 ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ನೂರಾರು ಬೇನಾಮಿಗಳನ್ನು ನೇಮಿಸಿದ್ದಾರೆ. ಇಬ್ಬರು ಬೇನಾಮಿಗಳು ಮಾತ್ರ ಸಿಕ್ಕಿದ್ದಾರೆ. ಈ ಹಣವೇ ಬೇನಾಮಿಗಳ ನೇಮಕಕ್ಕೆ ಸಾಕ್ಷಿ. ಕರ್ನಾಟಕವನ್ನು ಇವರು ಎಟಿಎಂ ಮಾಡಿಕೊಂಡಿದ್ದಾರೆ. ಹಿಂದೆ ಗೋವಿಂದರಾಜು ಅವರ ಡೈರಿ ಇದಕ್ಕೆ ಸಾಕ್ಷಿ ಆಗಿತ್ತು. ಆರ್‍ಜಿ ಯಾರು, ಎಸ್‍ಜಿ ಯಾರು, ಎಷ್ಟೆಷ್ಟು ಕೊಟ್ಟಿದ್ದಾಗಿ ಡೈರಿ ಸಾಕ್ಷಿ ಕೊಟ್ಟಿತ್ತು ಎಂದು ಅವರು ತಿಳಿಸಿದರು. +ಸಿಎಂ ಕುರ್ಚಿಗೆ ಟವೆಲ್ ಹಾಕಿದವರೊಬ್ಬರು ಚುನಾವಣೆ ಖರ್ಚಿಗೆ 2 ಸಾವಿರ ಕೋಟಿ ಕೊಡುವುದಾಗಿ ಹೇಳಿದ ಮಾಹಿತಿ ಇದೆ. ಹಾಲಿ ಮುಖ್ಯಮಂತ್ರಿಗಳು ಕಷ್ಟಪಟ್ಟು ಅದರ ಅರ್ಧ ವ್ಯವಸ್ಥೆ ಮಾಡುವುದಾಗಿ ಹೇಳಿದ ಮಾಹಿತಿ ಸಿಕ್ಕಿದೆ. ಇದು ಒಳಗಿನ ಸುದ್ದಿ. ಸತ್ಯವನ್ನು ಅವರೇ ಹೇಳಬೇಕು. ಇದನ್ನು ನೋಡಿದರೆ ಬ್ರ್ಯಾಂಡ್ ಬೆಂಗಳೂರು ಎಂದರೆ ಭ್ರಷ್ಟ ಬೆಂಗಳೂರು ಎಂದು ಅರ್ಥವಾಗುತ್ತದೆ ಎಂದರು. +ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ, ಮತ್ತೆ 45 ಕೋಟಿ ರೂ. ಪತ್ತೆ! +ತನಿಖೆ ಆದರೆ ಸಂಗ್ರಹಿತ ಮೊತ್ತ, ನಂಬರ್ 1ರಿಂದ ಆದ ಸಂಗ್ರಹ, ನಂಬರ್ 2 ಸಂಗ್ರಹಿಸಿದ ಮೊತ್ತದ ವಿವರ ಹೊರಬರುತ್ತದೆ. ಅಂತರರಾಜ್ಯ ವಿಷಯವಾದ ಕಾರಣ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ಅವರು ಪ್ರಶ್ನೆಗಳಿಗೆ ಉತ್ತರ ನೀಡಿದರು. +ಐಟಿ ದಾಳಿ ಹಿಂದೆ ರಾಜಕೀಯ ಇರುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರೆ, ಎಲ್ಲ ಖಾತೆ ತಮ್ಮ ಕೈಯಲ್ಲಿ ಇರುವಂತೆ ವರ್ತಿಸುವ ಪ್ರಿಯಾಂಕ್ ಖರ್ಗೆಯವರು ದಾಳಿ ವಿರುದ್ಧ ಅಣಿಮುತ್ತು ಉದುರಿಸುತ್ತಾರೆ ಎಂದು ಟೀಕಿಸಿದರು. ಏಕ್ ತರಫ್ ಸೆ ಆಲೂ ಡಾಲ್‍ನ, ದೂಸ್‍ರಾ ತರಫ್ ಸೆ ಸೋನಾ ನಿಕಾಲ್‍ನ ಎಂಬಂತೆ ದುಡ್ಡು ತೆಗೆದಿದ್ದಾರಾ ಎಂದು ವ್ಯಂಗ್ಯವಾಡಿದರು. +ಅಬಕಾರಿ ಸುಂಕ, ವಿದ್ಯುತ್ ದರ, ಸ್ಟ್ಯಾಂಪ್ ಶುಲ್ಕ ಹೀಗೆ ಎಲ್ಲ ಬೆಲೆ ಏರಿಸಿದ ಬಳಿಕ ಬಾಕಿ ಬಿಲ್ ನೀಡಲು ನೀವು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದೀರಿ. ಬಹುಶಃ ಪಂಜಾಬ್ ಬಳಿಕ ಕರ್ನಾಟಕದ ಸಿಎಂ ಕೂಡ ತನ್ನ ರಾಜ್ಯ ದಿವಾಳಿ ಆಗುತ್ತಿದೆ ಎಂದು ಮುನ್ಸೂಚನೆ ಕೊಟ್ಟಿದ್ದಾರೆ. ಇಷ್ಟಾದರೂ ಇವರು ನುಡಿದಂತೆ ನಡೆದಿದ್ದೇವೆ ಎಂದು ಜಾಹೀರಾತು ಕೊಡುವುದನ್ನು ನಿಲ್ಲಿಸಿಲ್ಲ ಎಂದು ಟೀಕಿಸಿದರು. +ಈ ಸರಕಾರ ವಸೂಲಿ ಸರಕಾರ ಎಂದು ಟ್ಯಾಗ್‍ಲೈನ್ ಕೊಟ್ಟರೆ ತಪ್ಪಾಗದು. ಹಾಗಾಗಿ ವಸೂಲಿಗೆ ಸಂಬಂಸಿ ಸಿಬಿಐ ತನಿಖೆಗೆ ಆಗ್ರಹಿಸುವುದಾಗಿ ತಿಳಿಸಿದರು. ದೇಶ ಮತ್ತು ನಾಡಿನ ಜನತೆಗೆ ಅವರು ನಾಡಹಬ್ಬ ದಸರಾ ಶುಭಾಶಯ ಕೋರಿದರು. ವಿಧಾನ ಪರಿಷತ್ ಸದಸ್ಯ ಮತ್ತು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_330_8.txt b/eesanje/url_46_330_8.txt new file mode 100644 index 0000000000000000000000000000000000000000..421d2c4f68d4ee91868528fb699c28a3fb376585 --- /dev/null +++ b/eesanje/url_46_330_8.txt @@ -0,0 +1,18 @@ +ಬರಗಾಲವಿದ್ದರೂ ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಆಚರಣೆ : ಸಿಎಂ +ಮೈಸೂರು,ಅ.15- ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿ ಮಾತನಾಡಿದರು. ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ಜಗತ್ತಿಗೆ ಸಾರುವ ಕೆಲಸವನ್ನು ನಾವು ಮಾಡುತ್ತೇವೆ. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು. ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು. +ಮುಂಗಾರು ಮಳೆ ಕೊರತೆಯಿಂದ 42 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು 30 ಸಾವಿರ ಕೋಟಿ ರೂಪಾಯಿಗಳ ಬೆಳೆ ನಷ್ಟವಾಗಿದೆ. ಮಾನದಂಡಗಳ ಪ್ರಕಾರ 4850 ಕೋಟಿ ರೂಪಾಯಿ ಬೆಳೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. 116 ತಾಲ್ಲೂಕುಗಳಲ್ಲಿ ತೀವ್ರ ಬರ ಪೀಡಿತವಾಗಿವೆ. +ಹಿಂಗಾರು ಮಳೆ ಉತ್ತಮವಾಗಿ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥನೆ ಮಾಡಿದ್ದೇವೆ. ಮಳೆ ಇಲ್ಲದೆ ನಾಡಿನ ರೈತ ಕುಲ, ನಾಡಿನ ಜನತೆ ಕಷ್ಟದಲ್ಲಿದ್ದಾರೆ. ಆದ್ದರಿಂದ ಅದ್ದೂರಿ ಇಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದರು. +ಮೈಸೂರು ಅರಸರ ಕಾಲದಿಂದಲೂ ಅತ್ಯಂತ ವೈಭವದಿಂದ ಆಚರಿಸಲ್ಪಡುತ್ತಿರುವ ದಸರಾವನ್ನು ನಾನು ತಂದೆಯ ಹೆಗಲ ಮೇಲೆ ಕುಳಿತು ನೋಡುತ್ತಿದ್ದೆ . ರಾಜರ ಕಾಲ ಮುಗಿದು ಪ್ರಜಾರಾಜ್ಯ ಬಂದ ಬಳಿಕ ರಾಜ್ಯ ಸರ್ಕಾರ ನಾಡಹಬ್ಬವಾಗಿ ದಸರಾವನ್ನು ಆಚರಿಸಲಾಗುತ್ತಿದೆ. 10 ನೆಯ ದಿನ ಜಂಬೂ ಸವಾರಿ ನಡೆಯುತ್ತದೆ. +ದಸರಾ ಹಬ್ಬ ವಿಜಯನಗರ ಸಾಮ್ರಾಜ್ಯದ ಆಚರಣೆಯಾಗಿತ್ತು. ವಿಜಯನಗರ ಸಾಮ್ರಾಜ್ಯ ವೈಭವ ಯುತವಾಗಿತ್ತು. ಈ ಸಾಮ್ರಾಜ್ಯದಲ್ಲಿ ಮುತ್ತು ರತ್ನಗಳನ್ನು ಸೇರು ಬಳ್ಳ ಗಳಲ್ಲಿ ಅಳೆದು ಮಾರಾಟ ಮಾಡುತ್ತಿದ್ದರು. ಮೈಸೂರು ಅರಸರು ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜರಾಗಿದ್ದರು. ವಿಜಯನಗರ ಸಾಮ್ರಾಜ್ಯದ ಪತನ ನಂತರ ಮೈಸೂರು ಅರಸರು ದಸರಾ ಹಬ್ಬವನ್ನು ಆಚರಣೆ ಮಾಡಲು ಪ್ರಾರಂಭಿಸಿದರು. ಈಗ ರಾಜ್ಯ ಸರ್ಕಾರ ಆಚರಣೆ ಮಾಡುತ್ತಿದೆ ಎಂದು ಮಾಹಿತಿ ನೀಡಿದರು. +ಸರ್ವರಿಗೂ ಸಮಾನ ಅವಕಾಶ ಕಲ್ಪಿಸುವುದೇ ಸಾಮಾಜಿಕ ನ್ಯಾಯ. ಇದು ನಮ್ಮ ಸಂವಿಧಾನದ ಮತ್ತು ನಮ್ಮ ಸರ್ಕಾರದ ಆಶಯ. ಕೇವಲ ರಾಜಕೀಯ ಸ್ವಾತಂತ್ರ್ಯ ಸಾಲದು. ನಮ್ಮ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಒರಬೇಕು ಎಂದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದರು. ನಾವು ಎಲ್ಲಾ ಜನರಿಗೆ ಸ್ಥಿರ ಆದಾಯವನ್ನು ಬರುವಂತೆ ಮಾಡಿ, ಕೊಂಡುಕೊಳ್ಳುವ ಶಕ್ತಿ ಬರುವಂತೆ ಮಾಡಲು 5 ಗ್ಯಾರೆಂಟಿ ಗಳನ್ನು ಘೋಷಣೆ ಮಾಡಿ 4 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ. 5 ನೇಯ ಗ್ಯಾರೆಂಟಿ ಯನ್ನು ಮುಂದಿನ ಜನವರಿಯಲ್ಲಿ ಜಾರಿಗೆ ತರುತ್ತೇವೆ ಎಂದರು. +ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ನಮ್ಮ ಕನ್ನಡ ಸಂಸ್ಕತಿಯನ್ನು ಬಿಂಬಿಸುವ ಆಚರಣೆ ದಸರಾ. ಭೂಮಿಯನ್ನು ಭಾಷೆಯನ್ನು ತಾಯಿಯ ಹೆಸರಿನಲ್ಲಿ ಕರೆಯುತ್ತೇವೆ. ನಮ್ಮ ನಾಡಿನ ಅಗ್ರ ದೇವತೆ ಚಾಮುಂಡಿತಾಯಿ. ಪ್ರಯತ್ನ ಮಾಡಿ ಸೋಲಬಹುದು ಆದರೆ ಪ್ರಾರ್ಥಿಸಿ ಸೋತಿಲ್ಲ ಎಂಬ ನಂಬಿಕೆ ಇಟ್ಟು ನಾಡಿಗೆ ಒಳ್ಳೆ ಮಳೆ ಬೆಳೆ ನೀಡುವಂತೆ ಪ್ರಾರ್ಥಿಸಲು ಇಲ್ಲಿ ಬಂದಿದ್ದೇವೆ ಎಂದರು. +ನಾವು ಚುನಾವಣೆಗೆ ಮುಂಚೆ ನಾನು ಮತ್ತು ಮುಖ್ಯಮಂತ್ರಿಗಳು ತಾಯಿ ಚಾಮುಂಡಿ ದೇವಿಗೆ 5 ಗ್ಯಾರೆಂಟಿ ಗಳನ್ನು ಜಾರಿಗೆ ತರಲು ಶಕ್ತಿ ನೀಡುವಂತೆ ಪ್ರಾರ್ಥನೆ ಮಾಡಿದ್ದೆವು. ಅದರಂತೆ ನಾವು ನುಡಿದಂತೆ ನಡೆದು 4 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು. +ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವವನ್ನು ನೆನಪಿಸುತ್ತಾ, ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ ಆಡಳಿತ ಮೇಲೆ ಬೆಳಕು ಚೆಲ್ಲುವುದು ಮೈಸೂರು ದಸರಾ. ಮೈಸೂರು ದಸರಾ ನಾಡಿನ ಕಲೆ ಸಂಸೃತಿ, ಪರಂಪರೆಯನ್ನು ತಿಳಿಸುತ್ತದೆ. ನಾಲ್ವಡಿ ಕೃಷ್ಣರಾಜ ಒಡೆಯರ ಜನಪರ ಆಡಳಿತ, ಕಾಳಜಿ, ಬದ್ದತೆ ಮೈಸೂರು ದಸರಾದ ಪ್ರತೀಕ. ಮೈಸೂರಿನ ಜನರು ಶಾಂತಿಪ್ರಿಯರು ಎಂದು ತಿಳಿಸಿದರು. +ಕನ್ನಡದ ಶಾಂತಿ ಮಂತ್ರ ವಿಶ್ವಕ್ಕೆ ಪಸರಿಸಿ : ದಸರಾ ಮಹೋತ್ಸವಕ್ಕೆ ಹಂಸಲೇಖ ಚಾಲನೆ +ಸೆಪ್ಟೆಂಬರ್ 15 ರಂದು ಸಂವಿಧಾನ ಪೀಠಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳು ಓದಿ, ಎಲ್ಲಾ ಕಚೇರಿಗಳು ಹಾಗೂ ಶಾಲಾ ಕಾಲೇಜುಗಳಲ್ಲಿ ಏಕ ಕಾಲಕ್ಕೆ ಓದಲಾಯಿತು. ಚಾಮುಂಡಿ ಅಭಿವೃದ್ಧಿ ಪ್ರಾಕಾರವನ್ನು ಮಾಡಿ ಚಾಮುಂಡಿ ಬೆಟ್ಟ ವನ್ನು ಅಭಿವೃದ್ಧಿ ಮಾಡಲು ಸರ್ಕಾರ ಕ್ರಮವಹಿಸಲಾಗಿದೆ. ಈ ಬಾರಿ ಮಳೆ ಕೊರತೆ ಆಗಿರುವುದರಿಂದ ಸಾಂಪ್ರದಾಯಿಕ ದಸರಾ ಆಚರಿಸುತ್ತಿದ್ದು, ಶಾಂತಿ ಸೌಹಾರ್ದತೆ ಯಿಂದ ಎಲ್ಲರೂ 9 ದಿನಗಳ ಕಾಲ ದಸರಾ ಆಚರಿಸೋಣ ಎಂದು ಮನವಿ ಮಾಡಿದರು. +ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಟಿ ದೇವೇಗೌಡ ಅವರು ಮಾತನಾಡಿ ವಿಜಯ ದಶಮಿ ವಿಜಯದ ಒಂದು ಸಂಕೇತ. ಎಲ್ಲಾ ಶಕ್ತಿಯನ್ನು ಹೊಂದಿರುವ ತಾಯಿ ಚಾಮುಂಡೇಶ್ವರಿ ರಾಕ್ಷಸರನ್ನು ಸಂಹಾರ ಮಾಡಿದಳು. ಇಂದು ನಮ್ಮಲ್ಲಿಯೇ ರಾಕ್ಷಸ ಗುಣಗಳು ಇವೆ. ಇವನ್ನು ಬಿಟ್ಟು ಎಲ್ಲರೂ ಶಾಂತಿ ಸೌಹಾರ್ದತೆ ಯಿಂದ ನಡೆದುಕೊಂಡು ಹೋಗಬೇಕು ಎಂದು ಅವರು ಹೇಳಿದರು. +ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು +ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಸರಾಗೆ ಸೇರುತ್ತಾರೆ. 9 ದಿನಗಳ ಕಾಲ ನಡೆಯುವ ದಸರಾ ಆಚರಣೆಯಲ್ಲಿ ಎಲ್ಲರೂ ಭಾಗಿಗಳಾಗಿ ಎಂದರು.ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು.ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. +ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, +ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಕಾರಿ ದಸರಾ ವಿಶೇಷಾಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿ.ಪಂ. ಸಿಇಓ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು. \ No newline at end of file diff --git a/eesanje/url_46_330_9.txt b/eesanje/url_46_330_9.txt new file mode 100644 index 0000000000000000000000000000000000000000..3e4768c286f0bf71afdc4f61cbea643d581cc510 --- /dev/null +++ b/eesanje/url_46_330_9.txt @@ -0,0 +1,10 @@ +ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ, ಮತ್ತೆ 45 ಕೋಟಿ ರೂ. ಪತ್ತೆ! +ಬೆಂಗಳೂರು, ಅ.13- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿ ಮತ್ತೊಬ್ಬ ಗುತ್ತಿಗೆದಾರರ ಮನೆಯ ಮೇಲೆ ದಾಳಿ ನಡೆಸಿದ್ದು, ಮತ್ತೆ 45 ಕೋಟಿ ರೂಪಾಯಿ ಪತ್ತೆ ಹಚ್ಚಿದ್ದಾರೆ. ಪಂಚರಾಜ್ಯಗಳ ವಿಧಾನಸಭೆ ಹಾಗೂ ಮುಂದಿನ ವರ್ಷದ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದ ರಾಜ್ಯದ ಬೆಂಗಳೂರು ಸೇರಿದಂತೆ ಹಲವು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದಾರೆ. ಅಕ್ಟೋಬರ್ 12ರಂದು ಬೆಂಗಳೂರಿನ ಆರ್.ಟಿ.ನಗರ ಸೇರಿದಂತೆ ಇತರ ಭಾಗಗಳಲ್ಲಿ ತಪಾಸಣೆ ನಡೆಸಿ ನಲವತ್ತು ಕೋಟಿ ರೂಪಾಯಿಗಳಿಗೂ ಹೆಚ್ಚು ಹಣವನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಲಾಗಿತ್ತು. +ಮತ್ತೊಂದು ಕಾರ್ಯಾಚರಣೆಯಲ್ಲಿ ಬೆಂಗಳೂರಿನ ರಾಜಾಜಿನಗರದ ಕೇತಮಾರನಹಳ್ಳಿಯಲ್ಲಿರುವ ಪ್ಲಾಟ್‍ವೊಂದರ ಮೇಲೆ ನಿನ್ನೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಗುತ್ತಿಗೆದಾರ ಸಂತೋಷ್ ಅವರಿಗೆ ಸೇರಿದ ಈ ಪ್ಲಾಟ್‍ನಲ್ಲಿ 45 ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. +ಪಾರ್ಟಿಯಲ್ಲಿ ಶೂಟೌಟ್ ಮೂವರ ಸಾವು +ಆರಂಭದಲ್ಲಿ ಐದು ಮಂದಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಹಣ ಪತ್ತೆಯಾದ ಬಳಿಕ ಮತ್ತಷ್ಟು ಮಂದಿಯನ್ನು ಕರೆಸಿಕೊಂಡಿದ್ದಾರೆ. ಮೂರು ಟ್ರಂಕ್, ಮೂರು ಬ್ಯಾಗ್ ಹಾಗೂ ಎರಡು ಸೂಟ್‍ಕೇಸ್‍ನಲ್ಲಿ ಹಣವನ್ನು ಬಚ್ಚಿಡಲಾಗಿತ್ತು ಎಂಬ ಮಾಹಿತಿಗಳು ಹರಿದಾಡುತ್ತಿವೆ. ಒಟ್ಟು 15 ಮಂದಿ ಅಧಿಕಾರಿಗಳು ತಡ ರಾತ್ರಿವರೆಗೂ ತಪಾಸಣೆ ನಡೆಸಿ 32 ಬಾಕ್ಸ್‍ಗಳಲ್ಲಿ ಹಣವನ್ನು ತುಂಬಿಕೊಂಡು ಹೋಗಿದ್ದು, ಹಣದ ಬಗ್ಗೆ ಮಾಹಿತಿ ನೀಡುವಂತೆ ಸಂತೋಷ್‍ಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ. +ಬಿಬಿಎಂಪಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿಗಳಿಗೆ ಬಾಕಿ ಇದ್ದ ಬಿಲ್ ಪಾವತಿಗೆ ಕಮಿಷನ್ ಪಡೆಯಲಾಗುತ್ತಿದೆ. ಅದರಿಂದ ಸಂಗ್ರಹಿಸಿದ ಹಣವನ್ನು ಬೇರೆ ಬೇರೆ ಕಡೆ ಇರಿಸಲಾಗಿದ್ದು, ಅದರ ಜಾಡು ಹಿಡಿದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎನ್ನಲಾಗಿದೆ. +ಆರ್.ಟಿ.ನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಡೆಸಿದ ವಿಚಾರಣೆಯ ಮಾಹಿತಿ ಆಧಾರಿಸಿ ಆದಾಯ ತೆರಿಗೆ ಅಧಿಕಾರಿಗಳು ಮತ್ತಷ್ಟು ಮಂದಿಯ ಮೇಲೆ ಕಣ್ಣಿಟ್ಟಿದ್ದರು. ಎರಡು ಕಾರ್ಯಾಚರಣೆಯಲ್ಲಿ ಒಟ್ಟು 80 ಕೋಟಿ ರೂಪಾಯಿಗೂ ಅಕ ಮೊತ್ತದ ಹಣ ಪತ್ತೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. +ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿಯಾಗಿ 12 ಮಂದಿ ಸಾವು +ವಿಚಾರಣೆಯ ವೇಳೆ ಈ ಹಣ ವಿಧಾನಪರಿಷತ್‍ನ ಮಾಜಿ ಸದಸ್ಯ ಕಾಂತರಾಜು ಅವರಿಗೆ ಸೇರಿದೆ ಎಂದು ಸಂತೋಷ್ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದಕ್ಕೆ ಸ್ಪಷ್ಟನೆ ನೀಡಿದ ಕಾಂತರಾಜು ಅವರು ಸಂತೋಷ್ ಯಾರು ಎಂದು ತಮಗೆ ಗೋತ್ತೆ ಇಲ್ಲ, ನಾನು ಆತನನ್ನು ನೋಡಿಯೇ ಇಲ್ಲ. ಆದಾಯ ತೆರಿಗೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕ ಹಣಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. +ನಾನು ನೆಲಮಂಗಲದ ನನ್ನ ಮನೆಯಲ್ಲೇ ಇದ್ದೇನೆ, ಆದಾಯ ತೆರಿಗೆ ದಾಳಿಗೆ ಸಂಬಂಧಪಟ್ಟಂತೆ ನನಗೆ ಯಾವ ನೋಟಿಸ್ ಬಂದಿಲ್ಲ. ನನಗೆ ಯಾವ ಸಹೋದರರು ಇಲ್ಲ, ಹೀಗಾಗಿ ನನ್ನ ಸಹೋದರರನ್ನು ವಿಚಾರಣೆ ನಡೆಸುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_331_1.txt b/eesanje/url_46_331_1.txt new file mode 100644 index 0000000000000000000000000000000000000000..082cb3780ecb54b48511e20f9ce25dafc8704077 --- /dev/null +++ b/eesanje/url_46_331_1.txt @@ -0,0 +1,11 @@ +ಹಿಂಗಾರು ಕೂಡ ಕೈಕೊಡಲಿದೆ, ಅಕ್ಟೋಬರ್‌ನಲ್ಲೂ  ಮಳೆ ಕೊರತೆ +ಬೆಂಗಳೂರು, ಅ.14- ನೈರುತ್ಯ ಮುಂಗಾರು ಹಂಗಾಮು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಮಳೆ ಕೊರತೆ ಮಾತ್ರ ನಿವಾರಣೆಯಾಗಿಲ್ಲ. ಆಗಸ್ಟ್, ಸೆಪ್ಟೆಂಬರ್ ನಂತೆಯೇಅಕ್ಟೋಬರ್‌ನಲ್ಲೂಮಳೆ ಕೊರತೆ ಮುಂದುವರೆದಿದೆ. ಈಶಾನ್ಯ ಹಿಂಗಾರಿನ ಆರಂಭವೂ ಆಶಾದಾಯಕವಾಗಿಲ್ಲ. +ಜೂನ್‍ನಲ್ಲಿ ಮುಂಗಾರು ದುರ್ಬಲಗೊಂಡಂತೆ ಹಿಂಗಾರಿನ ಆರಂಭವೂ ದುರ್ಬಲವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಮಳೆ ಯ ಅವಧಿ ಮುಗಿಯುತ್ತಿದ್ದು, ಹಿಂಗಾರು ಮಳೆ ಆರಂಭವಾಗುವ ಪರ್ವ ಕಾಲದಲ್ಲಿ ಮಳೆಯಾಗುವುದು ವಾಡಿಕೆ. ಆದರೂ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. +ಕಳೆದ ಎರಡು ವಾರಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು , ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದ್ದರೂ ವ್ಯಾಪಕ ಪ್ರಮಾಣದ ವಾಡಿಕೆ ಮಳೆಯಾಗಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಭಾಗ ಬರದ ಕರಾಳ ಛಾಯೆಗೆ ಸಿಲುಕಿದೆ. ರಾಜ್ಯ ಸರ್ಕಾರವೂ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ. +ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್ +ಕಾವೇರಿ ಕೊಳ್ಳದ ಜಲಾಶಯಗಳಿಗೆ ಕಳೆದ ಎರಡು ವಾರದಲ್ಲಿ ಸ್ವಲ್ಪ ಪ್ರಮಾಣದ ಒಳ ಹರಿವು ಹೆಚ್ಚಾಗಿದೆ. ಆದರೆ, ನೀರಿನ ಬಿಕ್ಕಟ್ಟು ಪರಿಹಾರವಾಗುವಷ್ಟು ಮಳೆಯಾಗಿಲ್ಲ; ಜಲಾಶಯಗಳಿಗೆ ಒಳ ಹರಿವು ಸಹ ಹೆಚ್ಚಾಗಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ 642 ಮಿ.ಮೀ. ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 852 ಮಿ.ಮೀ. ಆಗಿದೆ. ಅಂದರೆ, ವಾಡಿಕೆಗಿಂತ ಶೇ.25ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಯಾವ ಭಾಗದಲ್ಲೂ ಈ ಅವಧಿಯಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ. +ಕಳೆದ ಒಂದು ವಾರದಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಶೇ.42 ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆ ವರೆಗಿನ ಮಳೆ ಪ್ರಮಾಣ ಗಮನಿಸಿದರೆ ವಾಡಿಕೆಗಿಂತ ಶೆ.54 ರಷ್ಟು ಕೊರತೆ ಇದೆ. ಅಂದರೆ ಕಳೆದ ಎರಡು ವಾರದಲ್ಲಿ ಮಳೆ ಕೊರತೆ ತೀವ್ರವಾಗಿದೆ. ಈ ಅವಧಿಯಲ್ಲಿ 71 ಮಿ.ಮೀ. ವಾಡಿಕೆ ಮಳೆಯಿದ್ದು, ಕೇವಲ 33 ಮಿ. ಮೀ.ನಷ್ಟು ಮಾತ್ರ ಮಳೆಯಾದ ವರದಿಯಾಗಿದೆ. +ಕಳೆದ ಜೂನ್‍ನಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 923 ಮಿ.ಮೀ.ನಷ್ಟಿದ್ದು, 674 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ. 27ರಷ್ಟು ಕೊರತೆಯಾಗಿದೆ. ಜನವರಿ ಒಂದರಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 1042 ಮಿ.ಮೀ. ಇದ್ದು, 791 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.24 ರಷ್ಟು ಮಳೆಯಾಗಿದೆ. +ಪೂರ್ವ ಮುಂಗಾರಿನ ಅವಧಿಯ ಏಪ್ರಿಲ್ ಒಂದರಿಂದ ನಿನ್ನೆವರೆಗೆ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. 1029 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 781ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. +ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ +ಇದುವರೆಗಿನ ರಾಜ್ಯದ ಮಳೆಯ ವಾಸ್ತವ ಸ್ಥಿತಿ ಈ ರೀತಿ ಇದ್ದು, ಹಿಂಗಾರು ಮಳೆಯೂ ಮುಂಗಾರಿನಂತೆ ಕೈಕೊಟ್ಟರೆ, ಅಲ್ಪಸ್ವಲ್ಪ ಬೆಳೆಯೂ ರೈತರ ಕೈ ಸೇರುವುದು ಕಷ್ಟ. ಹೀಗಾಗಿ ರೈತರು ಹಿಂಗಾರು ಮಳೆಯಾಗುವುದನ್ನೇ ಎದುರು ನೋಡುತ್ತಿದ್ದಾರೆ. \ No newline at end of file diff --git a/eesanje/url_46_331_10.txt b/eesanje/url_46_331_10.txt new file mode 100644 index 0000000000000000000000000000000000000000..e3670ed11b8f46f512e119267526ed4359b185d4 --- /dev/null +++ b/eesanje/url_46_331_10.txt @@ -0,0 +1,6 @@ +ಐಟಿ ದಾಳಿ ರಾಜಕೀಯ ಪ್ರೇರಿತ : ಡಿಸಿಎಂ ಡಿಕೆಶಿ +ಬೆಂಗಳೂರು, ಅ.13- ರಾಜಕಾರಣ ಇಲ್ಲದೆ ಆದಾಯ ತೆರಿಗೆಯವರು ದಾಳಿ ಮಾಡುವುದೇ ಇಲ್ಲ. ನಮಗೆ ಆ ಬಗ್ಗೆ ಸ್ಪಷ್ಟ ತಿಳುವಳಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ತೆರಿಗೆ ದಾಳಿಯಲ್ಲಿ ರಾಜಕೀಯ ಇದ್ದೇ ಇದೆ. ಚತ್ತಿಸ್‍ಗಡ ಸೇರಿದಂತೆ ಎಲ್ಲಾ ರಾಜ್ಯಗಳಲ್ಲೂ ಈ ರೀತಿಯ ದಾಳಿಗಳಾಗುತ್ತಿವೆ. ರಾಜಕೀಯ ಇಲ್ಲದೆ ಇದ್ದರೆ ಆದಾಯ ತೆರಿಗೆ ಅಧಿಕಾರಿಗಳು ಬರುವುದೇ ಇಲ್ಲ. ಇದರ ಬಗ್ಗೆ ನಮಗೆ ಗೋತ್ತಿದೆ ಎಂದರು. +ಪಂಚರಾಜ್ಯಗಳ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸಲಾಗುತ್ತಿತ್ತು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಆರೋಪಕ್ಕೆ ಉತ್ತರ ನೀಡಲು ಡಿ.ಕೆ.ಶಿವಕುಮಾರ್ ನಿರಾಕರಿಸಿದರು. ಕೆಲವು ರಾಜಕೀಯ ಇದ್ದಿದ್ದೆ, ಇವರಿಗೆಲ್ಲಾ ಉತ್ತರ ಕೊಡುವ ಅಗತ್ಯ ಇಲ್ಲ. ರಸ್ತೆಯಲ್ಲಿ, ಬೀದಿಗೆ ಮಾತನಾಡುವವರಿಗೆಲ್ಲಾ ಪ್ರತಿಕ್ರಿಯಿಸಲ್ಲ ಎಂದರು. ಬಿಬಿಎಂಪಿಯಲ್ಲಿ ಬಿಡುಗಡೆ ಮಾಡಿದ್ದ ಗುತ್ತಿಗೆ ಬಿಲ್‍ನ ಬಾಕಿಯಲ್ಲಿ ಕಮಿಷನ್ ಪಡೆದು ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು ಎಂಬ ಆರೋಪದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್ +ರಾಜ್ಯದಲ್ಲಿನ ವಿದ್ಯುತ್ ಕೊರತೆ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಜೆ ಸಭೆ ನಡೆಸಲಿದ್ದಾರೆ. ಯಾರ್ಯಾರ ಕಾಲದಲ್ಲಿ ಎಷ್ಟೆಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿತ್ತು. ತಾವು ಇಂಧನ ಸಚಿವರಾಗಿದ್ದಾಗ ಎಷ್ಟು ವಿದ್ಯುತ್ ಹೆಚ್ಚುವರಿಯಾಗಿತ್ತು ಎಂಬ ಮಾಹಿತಿ ಇದೆ. ಮುಖ್ಯಮಂತ್ರಿಯವರ ನೇತೃತ್ವದ ಸಭೆ ಮುಗಿಯಲಿ, ನಂತರ ನಾನು ಮಾತನಾಡುತ್ತೇನೆ ಎಂದರು. +ಬಾಕಿ ಬಿಲ್ ಬಿಡುಗಡೆಗೆ ಸಂಬಂಸಿದಂತೆ ಗುತ್ತಿಗೆದಾರರ ಸಂಘದ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಿಚಾರಣೆ ಬಾಕಿ ಇದ್ದಾಗಲೂ ಬಹುತೇಕ ಶೇ.65-70ರಷ್ಟು ಬಾಕಿ ಬಿಲ್‍ಗಳನ್ನು ಬಿಡುಗಡೆ ಮಾಡಿದ್ದೇವೆ. ವಿಚಾರಣಾ ವರದಿ ಬರದೆ ಇದ್ದರೂ ಗುತ್ತಿಗೆದಾರರು, ಅದರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದರು ಎಂಬ ಕಾರಣಕ್ಕೆ ಆದ್ಯತೆ ಮೇರೆಗೆ ಹಣ ನೀಡಿದ್ದೇವೆ. ಕೆಂಪಣ್ಣ ಅವರು ಆತಂಕ ಪಡುವ ಅಗತ್ಯ ಇಲ್ಲ. ಯಾವುದಾದರೂ ಬಾಕಿ ಇದ್ದರೆ ಅದನ್ನು ಪರಿಶೀಲಿಸಿ ನ್ಯಾಯ ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_46_331_11.txt b/eesanje/url_46_331_11.txt new file mode 100644 index 0000000000000000000000000000000000000000..b85e09be2fe1f30bcbc13c3429e8fc2bbf7fd5b1 --- /dev/null +++ b/eesanje/url_46_331_11.txt @@ -0,0 +1,8 @@ +ನಾವು ಯಾವ ರಾಜ್ಯಗಳಿಗೂ ಹಣ ಕಳಿಸಿಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಅ.13- ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ರವಾನೆಗುತ್ತಿದೆ ಎಂಬುದು ಆಧಾರ ರಹಿತವಾದ ಆರೋಪವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪ ಮಾಡಿದವರು ನಾವು ಹಣ ಕಳುಹಿಸಿದ್ದನ್ನು ನೋಡಿದ್ದಾರೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ನಾವು ಯಾವ ರಾಜ್ಯಗಳಿಗೂ ಹಣ ಕಳುಹಿಸುವುದಿಲ್ಲ. ಅವರು ನಮ್ಮ ಬಳಿ ಕೇಳುವುದು ಇಲ್ಲ. ಬಿಜೆಪಿಯವರು ಆಧಾರ ರಹಿತವಾಗಿ ಆರೋಪ ಮಾಡುತ್ತಾರೆ ಎಂದು ಸಿಡಿಮಿಡಿಗೊಂಡರು. ಬೆಂಗಳೂರಿನಲ್ಲಿ ಆದಾಯ ತೆರಿಗೆ ದಾಳಿಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ನಿರಾಕರಿಸಿದರು. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವ ಕುರಿತು ಎಂದು ಚರ್ಚಿಸಲು ಇಂದು ಸಭೆ ಕರೆಯಲಾಗಿದೆ ಎಂದರು. +ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲ : ಸಚಿವ ಕೆ.ಜೆ.ಜಾರ್ಜ್ +ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ಸೆಕ್ಷನ್ 11ರನ್ವಯ ನಿನ್ನೆ ಅದೇಶ ಹೊರಡಿಸಲಾಗಿದೆ. ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ. ರಾಜ್ಯದಲ್ಲಿ ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್‍ಗೆ ಬೇಡಿಕೆ ಹೆಚ್ಚಾಗಿರುವುದರಿಂದ ತೊಂದರೆಯಾಗಿದೆ ಎಂದರು. +ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್ +ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು. \ No newline at end of file diff --git a/eesanje/url_46_331_12.txt b/eesanje/url_46_331_12.txt new file mode 100644 index 0000000000000000000000000000000000000000..b8b40c852c8038ff689e87913169f34712f70327 --- /dev/null +++ b/eesanje/url_46_331_12.txt @@ -0,0 +1,12 @@ +ಬಾಕಿ ಬಿಲ್ ಪಾವತಿಗೆ ಒಂದು ತಿಂಗಳು ಡೆಡ್‍ಲೈನ್ ನೀಡಿದ ಕೆಂಪಣ್ಣ +ಬೆಂಗಳೂರು,ಅ.13- ಒಂದು ತಿಂಗಳೊಳಗೆ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಗುತ್ತಿಗೆದಾರರ ಸಮಸ್ಯೆಗಳು ಬಗೆಹರಿಯುವುದಕ್ಕಿಂತ ಮತ್ತಷ್ಟು ಸಮಸ್ಯೆಗಳು ಸೇರ್ಪಡೆಯಾಗಿವೆ. +ಈಗಾಗಲೇ ಹಲವು ವರ್ಷಗಳಿಂದ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ ಜಿಎಸ್‍ಟಿ ಗೊಂದಲ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗ ಗುತ್ತಿಗೆದಾರರಿಗೂ ಬಾಕಿಗಳನ್ನು ಕರುಣಿಸಲಾಗುತ್ತದೆ ಎಂದು ನಿರೀಕ್ಷೆ ಮಾಡಿದ್ದೇವು, ಆದರೆ ಹಳೆ ಸಮಸ್ಯೆಗಳ ಜೊತೆಗೆ ಹೊಸ ಸಮಸ್ಯೆಗಳು ಸೇರ್ಪಡೆಯಾಗಿವೆ. ತಮಗೆ ಬೇಕಾದ ಕೆಲ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಕೇಳಿದರೆ ನಮಗೆ ಗೊತ್ತಿಲ್ಲ ಎಂದು ಎಂಜಿನಿಯರ್‍ಗಳು ಹೇಳುತ್ತಿದ್ದಾರೆ. ಕೆಲ ಗುತ್ತಿಗೆದಾರರು ಶಿಫಾರಸು ತಂದರೆ ಕಮಿಷನ್ ಪಡೆದು ರಾತ್ರೋರಾತ್ರಿ ಚೆಕ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು. +ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು +ಗುತ್ತಿಗೆದಾರರು ಸಾಲಸೋಲ ಮಾಡಿ ಕಾಮಗಾರಿ ಮಾಡಿದ್ದು, ಮಾಡಿರುವ ಸಾಲ ಕಟ್ಟಲಾಗದೆ ಕೆಲವರು ಊರು ಬಿಡುತ್ತಿದ್ದಾರೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಒಬ್ಬರು ವಿಷ ಸೇವಿಸಿದ್ದಾರೆ. ಪ್ರತಿ ಬಾರಿ ಸರ್ಕಾರಗಳು ಹಿಂದಿನ ಸರ್ಕಾರಗಳ ಮೇಲೆ ಬೆರಳು ಮಾಡುತ್ತಿವೆ. ನಾವು ಕಷ್ಟದಲ್ಲಿದ್ದೇವೆ, ನಮ್ಮ ಪರಿಸ್ಥಿತಿಯಂತೂ ಅಯೋಮಯವಾಗಿದೆ. ಜೀವನವೇ ಕಷ್ಟವಾಗಿದೆ. ಇನ್ನು ಜಿಎಸ್‍ಟಿ ಎಲ್ಲಿಂದ ಕಟ್ಟೋಣ. ಪಾಲಿಕೆಯ ಪರಿಸ್ಥಿತಿಯಂತೂ ಹೇಳುವುದಕ್ಕೇ ಆಗಲ್ಲ. ನಮ್ಮ ಅಕೌಂಟ್‍ಗಳು ಈಗಾಗಲೇ ಫ್ರೀಜ್ ಆಗಿವೆ. +ರಾಜ್ಯದ ಬಹುತೇಕ ಕೆಲಸಗಳನ್ನು ಆಂಧ್ರದವರು ಮಾಡುತ್ತಿದ್ದಾರೆ. ನಾವು ಅರ್ಹರಾಗಿದ್ದರೂ ಕೂಡ ಇಲ್ಲದಂತಾಗಿದ್ದೇವೆ ಎಂದರು.ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಹಲವು ಬಾರಿ ಮುಖ್ಯಮಂತ್ರಿಗಳ ಗಮನಕ್ಕೆ ಕೂಡ ತರಲಾಗಿತ್ತು. ವಿವಿಧ ಇಲಾಖೆಗಳಿಂದ ಸುಮಾರು 20 ಸಾವಿರ ಕೋಟಿ ರೂ.ಗಳಿಗಿಂತಲೂ ಅಕ ಮೊತ್ತವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಈ ಮೊತ್ತವನ್ನು ಒಂದೇ ಬಾರಿ ಅಲ್ಲದಿದ್ದರೂ, ಹಂತ-ಹಂತವಾಗಿ ಬಿಡುಗಡೆ ಮಾಡಿ ಸರ್ಕಾರ ಪ್ರಾಮಾಣಿಕತೆಯನ್ನು ತೋರಬೇಕಾಗಿತ್ತು, ಆದರೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ. +ಪ್ರಮುಖವಾಗಿ ಗುತ್ತಿಗೆದಾರರು ಕೆಲಸ ನಿರ್ವಹಿಸುವ ಜಲಸಂಪನ್ಮೂಲ, ಸಣ್ಣ ನೀರಾವರಿ ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗಳಲ್ಲೂ ಸಹ ಹೊಸ ಸಮಸ್ಯೆಗಳು ಸೃಷ್ಠಿಯಾಗಿದೆ ಎಂದರು.ವಿವಿಧ ಕಾಮಗಾರಿಗಳನ್ನು ವರ್ಗಿಕರಿಸಿ ಅನುದಾನವನ್ನು ಬಿಡುಗಡೆ ಮಾಡುವ ಬಿಬಿಎಂಪಿ ಹೊಸ ಸಂಪ್ರದಾಯವನ್ನು ಹುಟ್ಟು ಹಾಕಿದೆ. ಈ ಸಂಬಂಧ ಉಪಮುಖ್ಯಮಂತ್ರಿಗಳು, ಬಿಬಿಎಂಪಿ ಆಯುಕ್ತರು ಮತ್ತು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರೂ ಪ್ರಯೋಜನವಾಗಲಿಲ್ಲ. +ಕೆಲವು ವರ್ಗಗಳಿಗೆ ಕಾಮಗಾರಿ ಮುಗಿದ ಕೂಡಲೇ ಅನುದಾನ ಲಭ್ಯವಾದರೆ ಇನ್ನೂ ಕೆಲವು ವರ್ಗಗಳಲ್ಲಿ ವರ್ಷಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದು ತಾರತಮ್ಯಕ್ಕೆ ಕಾರಣವಾಗಿದೆ.ಪ್ರಭಾವಿ ಮತ್ತು ಪಟ್ಟಭದ್ರ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಈ ನಿಯಮಗಳನ್ನು ರೂಪಿಸಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. +ಬಾಕಿ ಮೊತ್ತವನ್ನು ಹಿರಿತನದ ಆಧಾರದಲ್ಲಿಯೇ ಬಿಡುಗಡೆ ಮಾಡಬೇಕೆಂದು ಹೈಕೋರ್ಟ್ ತೀರ್ಪು ನೀಡುತ್ತದೆ. ಯಾವುದೇ ವರ್ಗವಾದರೂ, ಎಲ್ಲವೂ ಕಾಮಗಾರಿಗಳ ಪಟ್ಟಿಯ ಅಡಿಯಲ್ಲೇ ಬರುತ್ತದೆ. ಆದರೂ ತಾರತಮ್ಯ ಮತ್ತು ಆರ್ಥಿಕ ಅಸಮಾನತೆಯನ್ನು ಏಕೆ ಜಾರಿಗೊಳಿಸುತ್ತೀರಿ ಎಂದು ಪ್ರಶ್ನಿಸಿದರು. +ಇನ್ನೊಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಬಾಕಿ ಉಳಿಸಿಕೊಂಡಿರುವ ಶೇ. 50ರಷ್ಟು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲೇಬೇಕು. ಯಾವುದೇ ಸಬೂಬು ಹೇಳದೆ ತನಿಖೆ ಆಯೋಗದ ಹೆಸರಿನಲ್ಲಿ ಮುಂದೂಡಬಾರದು, ಇಲ್ಲವಾದಲ್ಲಿ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದ್ದಾರೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್ +ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದ ಮೇಲೆ ಐಟಿ ದಾಳಿ ವಿಚಾರ ಕುರಿತಂತೆ ಮಾತನಾಡಿದ ಅವರು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಕೃಷಿ, ಜಲ್ಲಿ ಕ್ರಷರ್ ಸೇರಿದಂತೆ ಹಲವು ವ್ಯಾಪಾರಗಳಿವೆ. ಈಗಾಗಲೇ ಕಂಟ್ರಾಕ್ಟರ್ ಕೆಲಸವನ್ನು ಸಹ ಬಿಟ್ಟಿದ್ದಾರೆ. ಐಟಿ ದಾಳಿ ವಿಚಾರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಸರ್ಕಾರ ಇದೆ, ಐಟಿ ಅಕಾರಿಗಳಿದ್ದಾರೆ, ಅವರು ತನಿಖೆ ಮಾಡಲಿದ್ದಾರೆ ಎಂದರು. \ No newline at end of file diff --git a/eesanje/url_46_331_2.txt b/eesanje/url_46_331_2.txt new file mode 100644 index 0000000000000000000000000000000000000000..c7525965e862d32795684e1cd428db55dc9ea908 --- /dev/null +++ b/eesanje/url_46_331_2.txt @@ -0,0 +1,13 @@ +ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್ +ಬೆಂಗಳೂರು,ಅ.14- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆರಂಭದಲ್ಲಿ ಒಂದಷ್ಟು ದಿನ ಸಹನೆಯಿಂದಿದ್ದ ಕೇಸರಿ ಬೆಂಬಲಿತ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಇತ್ತೀಚೆಗೆ ರೊಚ್ಚಿಗೆದ್ದಿದ್ದು, ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರಮಣಕಾರಿಯಾಗಿ ಮುಗಿಬಿದ್ದಿದ್ದಾರೆ. ಈ ಹಿಂದಿಗಿಂತಲೂ ಹೆಚ್ಚು ತೀವ್ರವಾಗಿ ಮತ್ತು ನಿಂದನಾತ್ಮಕ ಭಾಷೆಗಳ ಮೂಲಕವೇ ಪ್ರತಿದಾಳಿ ನಡೆಸುತ್ತಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿದೆ. +ರಾಜ್ಯಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡುವುದಾಗಿ ಘೋಷಿಸಿತ್ತು. ಇದರ ಭಾಗವಾಗಿ ಸತ್ಯ ಶೋಧನಾ ತಂಡವನ್ನೂ ಕೂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವ ಮತ್ತು ಶಾಂತಿಗೆ ಭಂಗ ಉಂಟುಮಾಡುವಂತ ಮಾಹಿತಿಗಳನ್ನು ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. +ಉದ್ದೇಶಪೂರಕವಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕೋಮು ಪ್ರಚೋದಿತ ಪ್ರಕರಣಗಳಲ್ಲಿ ಕಾನೂನು ಕ್ರಮ ಎದುರಿಸುವ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡಗಳನ್ನು ರಚಿಸಿದೆ. ಇದರ ಜೊತೆಯಲ್ಲೇ ರಾಜ್ಯಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿದೆ ಎಂಬ ದೊಡ್ಡ ಮಟ್ಟದ ಕೂಗು ಕೂಡ ಕೇಳಿಬಂದಿತ್ತು. +ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..! +ಹಂತಹಂತವಾಗಿ ಚೇತರಿಸಿಕೊಂಡಿರುವ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಇತ್ತೀಚೆಗೆ ತೀವ್ರ ಸ್ವರೂಪದ ಪ್ರತಿಕ್ರಿಯೆಗಳಿಗೆ ಮುಂದಾಗಿದ್ದಾರೆ. ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳ ಜಾರಿಯ ಯಶಸ್ಸಿನಲ್ಲೇ ತೇಲುತ್ತಿದ್ದು, ಇದರ ಗುಂಗಿನಲ್ಲೇ ಲೋಕಸಭೆ ಚುನಾವಣೆಯನ್ನು ಗೆದ್ದು ಬೀಗುವ ಕನಸು ಕಾಣುತ್ತಿದೆ. ಆದರೆ ತೆರೆಮರೆಯಲ್ಲಿ ಪಂಚಖಾತ್ರಿ ಯೋಜನೆಗಳು ಒಂದು ವರ್ಗಕ್ಕೆ ಮಾತ್ರ ಲಾಭವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ತೆರಿಗೆಯ ದುಡ್ಡನ್ನು ತನ್ನ ಓಟ್‍ಬ್ಯಾಂಕ್ ರಾಜಕಾರಣಕ್ಕೆ ಬಳಸುತ್ತಿದೆ. +ಓಲೈಕೆಯ ರಾಜಕಾಣರಕ್ಕಾಗಿಯೇ ಸೀಮಿತವಾಗಿದೆ ಎಂಬ ವ್ಯಾಪಕ ಪ್ರಚಾರಗಳು ನಡೆದಿವೆ. ಗೃಹಜ್ಯೋತಿ, ಶಕ್ತಿಯಂತಹ ಯೋಜನೆಗಳ ಸೌಲಭ್ಯ ಪಡೆಯುವವರೂ ಕೂಡ ಅವುಗಳ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡುವ ಬದಲಿಗೆ, ರಾಜ್ಯಸರ್ಕಾರ ಒಂದು ವರ್ಗಕ್ಕೆ ಮಾತ್ರ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಸಿಡಿಮಿಡಿಗೊಳ್ಳುವುದು ಕಂಡುಬರುತ್ತಿದೆ. +ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ನಡೆದಿರುವ ನಿರಂತರವಾದ ಪ್ರಚಾರ ಕಾರಣವಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮೊದಲಿನಿಂದಲೂ ಅತ್ಯಂತ ಬಲಿಷ್ಠವಾಗಿದೆ. ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಒಂದಿಷ್ಟು ಚುರುಕಾಗಿದ್ದುದನ್ನು ಹೊರತುಪಡಿಸಿದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಮೈಮರೆತು ಮಲಗಿದೆ. ಜೊತೆಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂಬ ಉದ್ಧಟತನದ ಮಾತುಗಳ ಮೂಲಕ ಸರ್ವಾಧಿಕಾರಿ ಧೋರಣೆಗಳನ್ನು ಅನುಸರಿಸುತ್ತಿದೆ. +ಬಿಜೆಪಿ ವಿಧಾನಸಭೆ ಚುನಾವಣೆ ಸೋಲಿನಿಂದ ಎಚ್ಚೆತ್ತುಕೊಂಡು ಮತ್ತೊಮ್ಮೆ ಸಾಮಾಜಿಕ ಜಾಲತಾಣವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಕೆ ಮಾಡಿಕೊಂಡಿದೆ. ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ನಾಯಕರ ವಿರುದ್ಧ ಕೇಳಿಬಂದ ಭ್ರಷ್ಟಾಚಾರಗಳಿಗೆ ಉತ್ತರ ಹೇಳಲಾಗದೆ ಮುಜುಗರಕ್ಕೊಳಗಾಗಿದ್ದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ರಾಜ್ಯಸರ್ಕಾರದ ಪಂಚಖಾತ್ರಿ ಯೋಜನೆಗಳು ಹಾಗೂ ಅಭಿವೃದ್ಧಿಯ ಕುರಿತಂತೆ ಮೈಕೊಡವಿ ನಿಂತಿದ್ದಾರೆ. +ಕಾಂಗ್ರೆಸ್‍ನ ಪ್ರತಿಯೊಂದು ನಡೆಯಲ್ಲೂ ಉಗ್ರ ಸ್ವರೂಪದಲ್ಲಿ ಟೀಕಿಸಲಾಗುತ್ತಿದೆ. ಜನಸಾಮಾನ್ಯರ ಮನಮುಟ್ಟುವಂತ ಪ್ರಚಾರ ಮಾಡಲಾಗುತ್ತಿದೆ. ಕೆಲವೊಮ್ಮೆ ಇದಕ್ಕೆ ಪ್ರತಿಯಾಗಿ ಸತ್ಯ ಹೇಳುವವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವ ಮೂಲಕ 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಈ ರೀತಿಯ ಪ್ರವೃತ್ತಿಗಳು ಕಂಡುಬಂದಿದ್ದವು. ಈಗ ಮತ್ತೊಮ್ಮೆ 2024 ರ ಚುನಾವಣೆ ವೇಳೆಯಲ್ಲೂ ಇದು ಪುನರಾವರ್ತನೆಯಾಗಿದೆ. +ಅವಾಚ್ಯ ಶಬ್ದಗಳನ್ನು ಬಳಸಿದವರ ವಿರುದ್ಧ ದೂರು ನೀಡಿದರೆ ಅಥವಾ ಕ್ರಮ ಕೈಗೊಂಡರೆ ಅದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬೊಬ್ಬೆ ಹಾಕಲಾಗುತ್ತಿದೆ. ಈ ಮೊದಲು ಹಿಂದೂ ಭಾವನೆಗಳನ್ನು ಆಧರಿಸಿ ಹೆಚ್ಚು ಆಕ್ರಮಣಕಾರಿಯಾಗಿದ್ದ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ. +ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು +ಧಾರ್ಮಿಕ ಭಾವನೆಗಳು ಒಂದು ಕಡೆಯಾದರೆ, ಮತ್ತೊಂದೆಡೆ ಸರ್ಕಾರದ ಪ್ರತಿಯೊಂದು ನಡೆಯನ್ನು ವೈಫಲ್ಯವೆಂದೇ ಬಿಂಬಿಸಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಕ್ಷ ಬಿಜೆಪಿಯ ಆಕ್ರಮಣದ ಮುಂದೆ ಸಪ್ಪೆಯಾಗಿದ್ದು, ಮೌನಕ್ಕೆ ಶರಣಾಗುವ ಅನಿವಾರ್ಯತೆಗೆ ಸಿಲುಕಿದೆ. \ No newline at end of file diff --git a/eesanje/url_46_331_3.txt b/eesanje/url_46_331_3.txt new file mode 100644 index 0000000000000000000000000000000000000000..0ad043e1d64bd4bb2dab558264d092c0ab80e95d --- /dev/null +++ b/eesanje/url_46_331_3.txt @@ -0,0 +1,6 @@ +ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ +ಮೈಸೂರು, ಅ. 14- ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ. +ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು. +ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..! +ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಲಿದ್ದಾರೆ. ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. +ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮಗಳು ನೆರವೇರಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. \ No newline at end of file diff --git a/eesanje/url_46_331_4.txt b/eesanje/url_46_331_4.txt new file mode 100644 index 0000000000000000000000000000000000000000..f8e3141bfd0032adfac69962e5bc077dec59283e --- /dev/null +++ b/eesanje/url_46_331_4.txt @@ -0,0 +1,9 @@ +ಬಾಕಿ ಬಿಲ್ ಕುರಿತು ಸಿಎಂ ಜೊತೆ ಗುತ್ತಿಗೆದಾರರ ಸಮಾಲೋಚನೆ +ಬೆಂಗಳೂರು,ಅ.14- ವಿವಿಧ ಕಾಮಗಾರಿಗಳ ಬಾಕಿ ಬಿಲ್ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆದಾರರ ಸಂಘದ ಪ್ರತಿನಿಗಳ ಜೊತೆ ಸಮಾಲೋಚನೆ ನಡೆಸಿದರು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ನಿಯೋಗ ಇಂದು ಮುಖ್ಯಮಂತ್ರಿಯವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದೆ. +ಬಾಕಿ ಬಿಲ್‍ಗಳ ಸಂಬಂಧಪಟ್ಟಂತೆ ನವೆಂಬರ್‍ವರೆಗೂ ಗಡುವು ನೀಡಿರುವ ಗುತ್ತಿಗೆದಾರರು ರಾಜ್ಯಸರ್ಕಾರ ಸ್ಪಂದಿಸದೇ ಇದ್ದರೆ ಉಗ್ರಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕೋಪಯೋಗಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ, ಸಮಾಜ ಕಲ್ಯಾಣ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಕೋಟಿ ರೂ.ಗಳ ಕಾಮಗಾರಿಗಳು ನಡೆದಿವೆ. +ಲಾಹೋಸ್ ಕಾರ್ಖಾನೆಯಲ್ಲಿ ಬಂಧಿಯಾಗಿದ್ದಾರೆ ಒಡಿಶಾದ 35 ಕಾರ್ಮಿಕರು +ಒಂದು ಅಂದಾಜಿನ ಪ್ರಕಾರ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್‍ಗಳು ಬಾಕಿ ಉಳಿದಿವೆ ಎಂದು ಹೇಳಲಾಗಿದೆ. ಈ ಕುರಿತು ಗುತ್ತಿಗೆದಾರರ ಸಂಘ ಪದೇಪದೇ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದೆ. ಈ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ನೀಡುವಾಗ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ, ಸಾಕಷ್ಟು ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಅವುಗಳ ತನಿಖೆಗೆ ರಾಜ್ಯಸರ್ಕಾರ ಆದೇಶಿಸಿದೆ. +ಇದರ ಹೊರತಾಗಿಯೂ ಶೇ. 70 ರಷ್ಟು ಬಿಲ್‍ಗಳನ್ನು ಪಾವತಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ ರಾಜ್ಯಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಾಕಿ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂಬುದು ಸಂಘದ ಪ್ರಮುಖ ಆರೋಪಿ. +ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ರಷ್ಟು ಕಮಿಷನ್‍ನ ಆರೋಪವನ್ನು ಗುತ್ತಿಗೆದಾರರ ಸಂಘ ಮಾಡಿತ್ತು. ಕಾಂಗ್ರೆಸ್ ಅದನ್ನೇ ಚುನಾವಣೆ ಅಸ್ತ್ರವನ್ನಾಗಿ ಬಳಸಿಕೊಂಡು ಗೆಲುವು ಕಂಡಿತ್ತು. ಅಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಗುತ್ತಿಗೆದಾರರಿಗೆ ನೆರವಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆದಾರರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ. +ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..! +ಇಂದು ಕೆಂಪಣ್ಣ ಅವರ ನಿಯೋಗ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು, ಹಲವಾರು ಸಮಸ್ಯೆಗಳನ್ನು ವಿವರಿಸಿದೆ. ಗುತ್ತಿಗೆದಾರರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಮತ್ತು ಹಣಕಾಸು ಲಭ್ಯತೆ ಆಧರಿಸಿ ಬಾಕಿ ಬಿಲ್‍ಗಳನ್ನು ಪಾವತಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಪದಾಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_331_5.txt b/eesanje/url_46_331_5.txt new file mode 100644 index 0000000000000000000000000000000000000000..0e67e060547bc111f547e4d3236c11d6b3905f59 --- /dev/null +++ b/eesanje/url_46_331_5.txt @@ -0,0 +1,6 @@ +ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ +ರಾಮನಗರ,ಅ.14- ಬೆಂಗಳೂರು- ಮೈಸೂರು ಎಕ್ಸ್‍ಪ್ರೆಸ್ ವೇನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ನಗರದ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ. +ಪೀಣ್ಯ 2ನೇ ಹಂತದ ನಿವಾಸಿ ಆಟೋ ಚಾಲಕರಾದ ರಾಜೇಶ್(45), ಇವರ ಪತ್ನಿ ಉಮಾ ಸ್ಥಳದಲ್ಲೇ ಮೃತಪಟ್ಟರೆ, ಸಂಬಂಧಿ ಲಕ್ಕಮ್ಮ(65) ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಬೆಂಗಳೂರಿನಿಂದ ಏಳು ಮಂದಿ ಓಮ್ನಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದಾಗ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಬಳಿ ಲಾರಿಯನ್ನು ಓವರ್‍ಟೇಕ್ ಮಾಡಲು ಹೋಗಿ ಇವರಿದ್ದ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು. +ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ +ಸಂಚಾರ ದಟ್ಟಣೆ:ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್‍ಪ್ರೆಸ್ ವೇ ನಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಇಂದು ಮಹಾಲಯ ಅಮಾವಾಸ್ಯೆಯಾಗಿದ್ದು, ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೈಸೂರಿನತ್ತ ತೆರಳುತ್ತಿದ್ದು, ವಾಹನಗಳು ಕಿಲೊಮೀಟರ್‍ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ನಂತರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. \ No newline at end of file diff --git a/eesanje/url_46_331_6.txt b/eesanje/url_46_331_6.txt new file mode 100644 index 0000000000000000000000000000000000000000..59b75926569fd8e58083b6b8f36ac8b3945a4091 --- /dev/null +++ b/eesanje/url_46_331_6.txt @@ -0,0 +1,13 @@ +ದಸರಾ ರಜೆಗಳ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ +ಬೆಂಗಳೂರು, ಅ.14- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಆಗಮಿಸುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಿದೆ. +ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್(ಮಲ್ಟಿ ಆಕ್ಸಲ್), ಇ. ಪವರ್ ಪ್ಲಸ್, ಅಂಬಾರಿ ಕ್ಲಬ್‍ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. +ದಸರಾ ರಜೆಗಳ ಪ್ರಯುಕ್ತ ಕೆಎಸ್ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅ. 20ಂದ ಅ.26ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ಹೆಚ್ಚು ಬಸ್‍ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. +ಹೆಚ್ಚುವರಿ ಬಸ್‍ಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ತೆರಳಲಿವೆ. ನಂತರ ರಾಜ್ಯದ ಮತ್ತು ಅಂತರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.24 ರಿಂದ ಅ.29ರವರೆಗೆ ಪ್ರಯಾಣಿಕರು ಮರಳಿ ಬರಲು ಅನುಕೂಲವಾಗುವತೆ ವಿಶೇಷ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುವುದು. +ಹಮಾಸ್ ನೆರವಿಗೆ ನಿಂತ ಇರಾನ್ ಬೆಂಬಲಿತ ಹಿಜ್ಬುಲ್ಲಾ +ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‍ಗಳ ವ್ಯವಸ್ಥೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ. +600 ವಿಶೇಷ ಬಸ್ ವ್ಯವಸ್ಥೆ: ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250ಹೆಚ್ಚುವರಿ ಬಸ್‍ಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತ ಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‍ಗಳು ಸೇರಿದಂತೆ ಒಟ್ಟಾರೆ 600ದಸರಾ ವಿಶೇಷ ಬಸ್‍ಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ. +ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿರುತ್ತದೆ. ಇ-ಟಿಕೇಟ್ ಬುಕಿಂಗ್ ಅನ್ನು ನಿಗಮದ ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿ ತಿಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು ಎಂದು ತಿಳಿಸಿದೆ. +ಮಧ್ಯರಾತ್ರಿ ಬಂದು ಹಣ್ಣು ಕದ್ದ ಕಳ್ಳ +ಸಾರ್ವಜನಿಕ ಪ್ರಯಾಣಿಕರುಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತುಳುನಾಡು, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳಲ್ಲಿರುವ ಒಟ್ಟು703ಗಣಕೀಕೃತ ಮುಂಗಡ ಆಸನಗಳನ್ನು ಕಾ್ದುರಿಸುವ ಕೌಂಟರ್‍ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾ್ದುರಿಸಬಹುದಾಗಿದೆ. +ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರುಒಟ್ಟಾಗಿ ಮುಂಗಡಟಿಕೇಟ್ ಕಾ್ದುರಿಸಿದಲ್ಲಿ ಶೇಕಡ5 ರಷ್ಟುರಿಯಾುತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದಟಿಕೇಟ್‍ನ್ನುಒಟ್ಟಿಗೆ ಕಾ್ದುರಿಸಿದಾಗ ಬರುವ ಪ್ರಯಾಣದರದಲ್ಲಿಶೇಕಡ 10 ರಷ್ಟುರಿಯಾುತಿ ನೀಡಲಾಗುವುದು. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾ್ದುರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. +ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡವಾಗಿಕಾ್ದುರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‍ಅಪ್ ಪಾುಂಟ್‍ನ ಹೆಸರನ್ನು ಗಮನಿಸುವಂತೆಕೋರಲಾಗಿದೆ. ಅಲ್ಲದೇ, ನಿಗಮದಕಾರ್ಯಾಚರಣೆ ವ್ಯಾಪ್ತಿಯಲ್ಲಿನಎಲ್ಲಾತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರಒತ್ತಡಕ್ಕನುಗುಣವಾಗಿ ಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು. \ No newline at end of file diff --git a/eesanje/url_46_331_7.txt b/eesanje/url_46_331_7.txt new file mode 100644 index 0000000000000000000000000000000000000000..b3f933e019aaf29dfdb5fc5822b19d1c90bba533 --- /dev/null +++ b/eesanje/url_46_331_7.txt @@ -0,0 +1,7 @@ +ಹಲವು ಅನುಮಾನಗಳನ್ನು ಹುಟ್ಟುಹಾಕಿದೆ ಅಂಬಿಕಾಪತಿಯ ಮಂಚದ ಖಜಾನೆ +ಬೆಂಗಳೂರು,ಅ.13- ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಸಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು 40% ಕಮೀಷನ್ ಆರೋಪ ಮಾಡಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಐಟಿ ಖೆಡ್ಡಾಕ್ಕೆ ಬಿದ್ದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. +ಮಾಜಿ ಮುಖ್ಯಮಂತ್ರಿ ಯಡಿ ಯೂರಪ್ಪ ಸರ್ಕಾರದಲ್ಲಿ ವಿವಿಧ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಲು ಸಚಿವರು ಮತ್ತು ಶಾಸಕರು 40% ಕಮೀಷನ್‍ಗೆ ಬೇಡಿಕೆ ಇಟ್ಟಿದ್ದಾರೆಂಬ ಗಂಭೀರ ಆರೋಪ ಮಾಡಿದ್ದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಅಂಬಿಕಾಪತಿ ಮಾಡಿದ್ದ ಈ ಆರೋಪ ಬಿಜೆಪಿ ಸರ್ಕಾರದ ಅಸ್ತಿತ್ವವನ್ನೇ ಅಲುಗಾಡಿಸಿತ್ತು. +ಪ್ರಧಾನಿ ನರೇಂದ್ರಮೋದಿಯವರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘ, ನಿಮ್ಮದೇ ಸರ್ಕಾರ ಇರುವ ಕರ್ನಾಟಕದಲ್ಲಿ ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆದಿರುವ ಕಾಮಗಾರಿಗಳ ಹಣ ಬಿಡುಗಡೆಗೆ 40% ಕಮೀಷನ್ ಕೇಳುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದರು. +ಬಾಕಿ ಬಿಲ್ ಪಾವತಿಗೆ ಒಂದು ತಿಂಗಳು ಡೆಡ್‍ಲೈನ್ ನೀಡಿದ ಕೆಂಪಣ್ಣ +ಈ ಪ್ರಕರಣವು ರಾಜ್ಯ ರಾಜಕಾರಣದಲ್ಲಿ ಅಲೋಲ್ಲ ಕಲ್ಲೋಲವನ್ನೇ ಸೃಷ್ಟಿಸಿ ಪ್ರತಿಪಕ್ಷ ಕಾಂಗ್ರೆಸ್ 40% ಕಮೀಷನ್ ಆರೋಪವನ್ನೇ ಚುನಾವಣಾ ಸಂದರ್ಭದಲ್ಲಿ ಪ್ರಮುಖ ಅಸ್ತ್ರ ಮಾಡಿಕೊಂಡಿತ್ತು. ಮಾಜಿ ಸಚಿವ ಮುನಿರತ್ನ ಅವರು ಇಂದು ಐಟಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿರುವ ಅಂಬಿಕಾಪತಿ ವಿರುದ್ಧ ಕಾವಲ್‍ಬೈರಸಂದ್ರ ಠಾಣೆಗೆ ದೂರು ನೀಡಿದ್ದರು. +ಇದೀಗ 42 ಕೋಟಿ ನಗದು ಸಮೇತ ಐಟಿ ಖೆಡ್ಡಾದಲ್ಲಿ ಬಿದ್ದಿರುವ ಅಂಬಿಕಾಪತಿ ಕುಟುಂಬಕ್ಕೆ ಬರುವ ದಿನಗಳಲ್ಲಿ ಕಾನೂನಿನ ಸಂಕಷ್ಟಗಳು ಎದುರಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. \ No newline at end of file diff --git a/eesanje/url_46_331_8.txt b/eesanje/url_46_331_8.txt new file mode 100644 index 0000000000000000000000000000000000000000..c0467353c5da27e95f6c355ec549fae6b5aa0fa4 --- /dev/null +++ b/eesanje/url_46_331_8.txt @@ -0,0 +1,8 @@ +ಸ್ವಾಭಿಮಾನಿ ಹೋರಾಟಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಸ್ಪೂರ್ತಿ : ಸಿಎಂ ಸಿದ್ದರಾಮಯ್ಯ +ಬೆಂಗಳೂರು ಅ.13- ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಳಗಾವಿ ಜಿಲ್ಲಾಡಳಿತ ಚನ್ನಮ್ಮನ ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ. +ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತ್ಸೋವವನ್ನು ಆರಂಭಿಸಿದೆ ಎಂದು ವಿವರಿಸಿದರು. +ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ; ಸರ್ಕಾರ ಘೋಷಣೆ +ಅಕ್ಟೋಬರ್ 23ರಿಂದ ಮೂರು ದಿನಗಳ ಕಾಲ ಕಿತ್ತೂರಿನಲ್ಲಿ ಕಿತ್ತೂರು ಉತ್ಸವ ನಡೆಯುತ್ತಿದೆ. ಅದರ ಪ್ರಯುಕ್ತ ವಿಜಯ ಜ್ಯೋತಿ ಬೆಂಗಳೂರಿನ ವಿಧಾನಸೌಧದಿಂದ ಪ್ರಾರಂಭವಾಗುತ್ತಿದ್ದು, ರಾಜ್ಯದ ಅನೇಕ ಪ್ರದೇಶಗಳಿಗೆ ಭೇಟಿ ನೀಡಿ, ಅ.23ರಂದು ಕಿತ್ತೂರಿಗೆ ತಲುಪಲಿದೆ. ಆ ದಿನ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ, ಮೊದಲ ಯುದ್ಧದಲ್ಲಿ ಜಯ ಗಳಿಸಿದ ದಿನವೇ ಅ.23 ಎಂದರು. +ಯುದ್ಧದ ವೇಳೆ ಸಂಗೊಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮರ ಬಲಗೈ ಬಂಟನಾಗಿದ್ದ. ಅನೇಕ ರಾಜರೂ ಬ್ರಿಟಿಷರಿಗೆ ಶರಣಾಗಿದ್ದ ಕಾಲದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಶರಣಾಗಲಿಲ್ಲ. ಝಾನ್ಸಿರಾಣಿ, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದರು. ಅವರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು. ಬಲಾಢ್ಯರಾಗಿದ್ದ ಬ್ರಿಟಿಷರ ವಿರುದ್ಧ ಹೋರಾಟ ಮಾಡಬೇಕಾದರೆ ಧೈರ್ಯ ಇರಬೇಕಿತ್ತು ಎಂದರು. +ಕಿತ್ತೂರು ರಾಣಿ ಕುರಿತು ಸಿನಿಮಾ ಒಂದು ಬಂದಿತ್ತು, ಅದರಲ್ಲಿ ಆಕೆಯ ಧೈರ್ಯ ಸಾಹಸ ಸ್ಪಷ್ಟವಾಗಿ ಕಾಣುತ್ತದೆ. ಹೊರಗಿನಿಂದ ಬಂದ ನಿಮಗೆ ಏಕೆ ಕಪ್ಪ ಕೊಡಬೇಕು ಎಂದು ಕಿತ್ತೂರು ರಾಣಿ ಪ್ರಶ್ನಿಸಿದರು. ನಾಡನ್ನು ಪ್ರತಿಯೊಬ್ಬರು ಪ್ರೀತಿಸಬೇಕು, ಸ್ವಾಭಿಮಾನ, ದೇಶ ಪ್ರೇಮ ಇದ್ದವರಿಗೆ ಮಾತ್ರ ದೇಶದ ಬಗ್ಗೆ ಪ್ರೀತಿ, ಗೌರವ ಇರುತ್ತದೆ. ಹತ್ತೊಂಬತ್ತನೆ ಶತಮಾನದಲ್ಲೇ ಕಿತ್ತೂರು ರಾಣಿ ಚೆನ್ನಮ್ಮ ಅದನ್ನು ಸಾಬೀತು ಮಾಡಿದ್ದಾರೆ ಎಂದರು.ಕಿತ್ತೂರು ರಾಣಿ ಚೆನ್ನಮ್ಮ ದೇಶದ ಆಸ್ತಿ. ತಾವು ಮುಖ್ಯಮಂತ್ರಿಯಾಗುವವರೆಗೂ ಯಾರು ಅವರ ಜಯಂತ್ಯೋತ್ಸವ ಆಚರಣೆ ಮಾಡಿರಲಿಲ್ಲ. ಅವರ ಬಗ್ಗೆ ಮಾತನಾಡುವುದರಿಂದ ದೇಶ ಪ್ರೇಮ ಹೆಚ್ಚಾಗುತ್ತದೆ. ನಾವು ನಮ್ಮ ತಾಯ್ನಾಡನ್ನು ಪ್ರೀತಿಸಲೇಬೇಕು ಎಂದರು. +ಲೋಕೋಪಯೋಗಿ ಸಚಿವ ಸತೀಶ್ ಜಾರಕಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ್, ಧಾರವಾಡ ಗ್ರಾಮೀಣ ಶಾಸಕರಾದ ವಿನಯ್ ಕುಲಕರ್ಣಿ, ಬೈಲಹೊಂಗಲ ಶಾಸಕರಾದ ಮಹಂತೇಶ ಕೌಜಲಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. \ No newline at end of file diff --git a/eesanje/url_46_331_9.txt b/eesanje/url_46_331_9.txt new file mode 100644 index 0000000000000000000000000000000000000000..803309b91ee2a98b651f4c99b8ac9220d45e78ae --- /dev/null +++ b/eesanje/url_46_331_9.txt @@ -0,0 +1,8 @@ +ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿ ಕಲೆಕ್ಷನ್ ಹಣದ ಆದಿಪುರುಷ ಯಾರು.. ? : ಹೆಚ್ಡಿಕೆ ಪ್ರಶ್ನೆ +ಬೆಂಗಳೂರು: ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿರುವ 42 ಕೋಟಿ ರೂಪಾಯಿ ಕಂತೆ ಕಂತೆ ಹಣದ ಮೂಲವನ್ನು ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ಬೆಂಗಳೂರು ನಗದು ಅಭಿವೃದ್ಧಿ ಇಲಾಖೆಯ ಕೈ ಕರಾಮತ್ತು ಎಂದು ಕಾಂಗ್ರೆಸ್ ಪಕ್ಷಕ್ಕೆ ಕಾಲೆಳೆದಿದ್ದಾರೆ. +ಈ ಬಗ್ಗೆ ಖಾರವಾದ ಪ್ರತಿಕ್ರಿಯೆ ನೀಡಿರುವ ಅವರು; ಪಂಚರಾಜ್ಯ ಚುನಾವಣೆ ಘೋಷಣೆ ಆಗಿದ್ದೇ ತಡ, ರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ. ಅದೂ ಮಂಚದ ಕೆಳಗೆ ಐಟಿದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಹಣ ಯಾರದ್ದು? ಯಾರ ಹೆಣದ ಮೇಲೆ ಸಂಗ್ರಹಿಸಿದ ಪಾಪದ ಹಣವಿದು? ಈ ಪ್ರಶ್ನೆಗಳಿಗೆ ಉತ್ತರ ಬೇಕಿದೆ ಎಂದು ಹೇಳಿದ್ದಾರೆ. +ಆಯ್ದ ಗುತ್ತಿಗೆದಾರರಿಗೆ ಬಿಬಿಎಂಪಿಯಿಂದ 650 ಕೋಟಿ ರೂ. ಬಿಡುಗಡೆಯಾದ ಬೆನ್ನಲ್ಲೇ ಈ 42 ಕೋಟಿ ರೂ. ಐಟಿ ಅಧಿಕಾರಿಗಳಿಗೆ ಸಿಕ್ಕಿಬೀಳುತ್ತದೆ. ಅಲ್ಲಿಗೆ ಕಲೆಕ್ಷನ್ ನಿಜ ಎಂದಾಯಿತು. ಅದು ಎಷ್ಟು ಪರ್ಸಂಟೇಜ್? ಅದರ ಹಿಂದೆ ಅಡಗಿ ಕೂತಿರುವ ಆದಿಪುರುಷರು ಯಾರು? ಎಂದು ಅವರು ಪ್ರಶ್ನಿಸಿದ್ದಾರೆ. +ಐಟಿ ದಾಳಿ ರಾಜಕೀಯ ಪ್ರೇರಿತ : ಡಿಸಿಎಂ ಡಿಕೆಶಿ +23 ಬಾಕ್ಸ್ ಗಳಲ್ಲಿ ತುಂಬಿಡಲಾಗಿದ್ದ ಈ ಇಡಗಂಟು ಪಕ್ಕದ ತೆಲಂಗಾಣಕ್ಕೆ ಹೊರಟು ನಿಂತಿತ್ತು ಎನ್ನುವುದು ಮಾಹಿತಿ. ಅಲ್ಲಿಗೆ ಚುನಾವಣೆಗಾಗಿ ಈ ಹಣವನ್ನು ಸಂಗ್ರಹ ಮಾಡಲಾಗಿತ್ತು ಎನ್ನುವುದು ಸತ್ಯ. ಈ ಕನಕ ಮಹಾಲಕ್ಷ್ಮಿಯ ಕಲೆಕ್ಷನ್ ಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆಯ ಕೈ ಕರಾಮತ್ತು ಅಂತ ಇನ್ನೊಂದು ಮಾಹಿತಿ. ಅಷ್ಟರಲ್ಲಿ ಐಟಿ ಇಲಾಖೆ ಮುಗಿಬಿದ್ದ ಪರಿಣಾಮ, ಗುಟ್ಟು ರಟ್ಟಾಗಿದೆ. ಅಲ್ಲಿಗೆ ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪರ್ಸಂಟೇಜ್ ಪಾರಮ್ಯ ಅವ್ಯಾಹತ ಎಂದಾಯಿತು? ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ. +ಈಗ ಹೇಳಿ ಸಿದ್ದರಾಮಯ್ಯನವರೇ 42 ಕೋಟಿ ರೂ. ಬಗ್ಗೆ ಯಾವ ತನಿಖೆ ಮಾಡಿಸುತ್ತೀರಿ? ಸಿಬಿಐ, ಈಡಿ, ಹಾಲಿ ನ್ಯಾಯಾಧೀಶರು, ನಿವೃತ್ತ ನ್ಯಾಯಾಧೀಶರು.. ದಯಮಾಡಿ ಹೇಳಿ. ರೈತರು ಬರ, ವಿದ್ಯುತ್ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದಾರೆ. ಗುತ್ತಿಗೆದಾರರು ಅಯೋಮಯ ಸ್ಥಿತಿಯಲ್ಲಿದ್ದಾರೆ. ಆದರೂ ಕಲೆಕ್ಷನ್ ಕೈ ಚಳಕ ಜೋರಾಗಿದೆ. ಪಂಚರಾಜ್ಯಗಳ ಪಾಲಿಕೆ ಕರ್ನಾಟಕ ಸಮೃದ್ಧ ಎಟಿಎಮ್ ಕಾವೇರಿ ನೀರು  ತಮಿಳುನಾಡಿಗೆ ನಿರಂತರ ಹರಿಯುತ್ತಿದ್ದರೆ, ಕನ್ನಡಿಗರ ತೆರಿಗೆಲಕ್ಷ್ಮೀ ಎಲೆಕ್ಷನ್ ರಾಜ್ಯಗಳ ಪಾಲಾಗುತ್ತಿದ್ದಾಳೆ ಎಂದು ಕಾಂಗ್ರೆಸ್ ಪಕ್ಷದ ಕಾಲೆಳೆದಿದ್ದಾರೆ. +ಆದಿಯಿಂದಲೂ ಇದೇ ಕಥೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಗೆ ಹಬ್ಬ. ಈಗಲೂ ಅದೇ ಆಗುತ್ತಿದೆ. ಪಂಚರಾಜ್ಯಗಳ ಚುನಾವಣೆಗಾಗಿ ಕರ್ನಾಟಕಕ್ಕೆ ಕನ್ನ ಹೊಡೆಯಲಾಗಿದೆ. ವೋಟು ಕೊಟ್ಟ ತಪ್ಪಿಗೆ ಕಾಂಗ್ರೆಸ್ ಉಂಡು ಹೋಗುತ್ತಿದೆ, ಕೊಂಡು ಹೋಗುತ್ತಿದೆ. ಇದು ಕನ್ನಡಿಗರ ಕರ್ಮ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ \ No newline at end of file diff --git a/eesanje/url_46_332_1.txt b/eesanje/url_46_332_1.txt new file mode 100644 index 0000000000000000000000000000000000000000..79a7dcb6d568b7d2f3ffb67e92b8654267fdcfb5 --- /dev/null +++ b/eesanje/url_46_332_1.txt @@ -0,0 +1,5 @@ +ಪೋಕ್ಸೋ ಪ್ರಕರಣ : ಪರಮಶಿವಯ್ಯಗೆ ಹೈಕೋರ್ಟ್ ಜಾಮೀನು +ಬೆಂಗಳೂರು,ಅ.13- ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ. ಚಿತ್ರದುರ್ಗದ ಮುರುಘಾಶ್ರೀ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ ಪರ ವಕೀಲ ಕೆ.ಬಿ.ಕೆ.ಸ್ವಾಮಿ ವಾದ ಮಂಡಿಸಿದ್ದು, ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿರುವ ಇವರು ಇದೇ 17ರಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಗಳಿವೆ. +ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಎಸ್‍ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಮೂರನೇ ಆರೋಪಿಯಾಗಿದ್ದು, ಇವರನ್ನು 2022ರ ಅಕ್ಟೋಬರ್ 28ರಂದು ಬಂಧಿಸಲಾಗಿತ್ತು. +ತೆರಿಗೆ ಪಾವತಿಸದೆ ಸಂಚಾರಿಸುತಿದ್ದ ಬಸ್‍ಗಳ ಜಪ್ತಿ +ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆಗಸ್ಟ್ 28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪರಮಶಿವಯ್ಯ ಅವರನ್ನು ಎರಡು ತಿಂಗಳ ನಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. \ No newline at end of file diff --git a/eesanje/url_46_332_10.txt b/eesanje/url_46_332_10.txt new file mode 100644 index 0000000000000000000000000000000000000000..e9f4db355f49c89ae1400e084714f0ed3356da98 --- /dev/null +++ b/eesanje/url_46_332_10.txt @@ -0,0 +1,6 @@ +ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು +ಬೆಂಗಳೂರು,ಅ.12- ಗುತ್ತಿಗೆದಾರರ ಬಾಕಿ ಬಿಲ್‍ಗೆ ಸಂಬಂಧಪಟ್ಟಂತೆ ರಾಜ್ಯಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಹೋರಾಟಕ್ಕೆ ಮುಂದಾಗಿದೆ. ರಾಜ್ಯಸರ್ಕಾರ ರಚನೆಯಾಗಿ 5 ತಿಂಗಳು ಕಳೆದಿದ್ದರೂ ಬಾಕಿ ಬಿಲ್ ಪಾವತಿಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ತನಿಖೆಯ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. +ದ್ದೇಶಪೂರ್ವಕವಾಗಿಯೇ ಕಾಮಗಾರಿಗಳ ಬಿಲ್ ಅನ್ನು ತಡೆಹಿಡಿಯಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಹಿಂದೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರಿಕಾಗೋಷ್ಠಿ ನಡೆಸಿ ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದರು. ಅದರ ನಂತರ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದಿಷ್ಟು ಬಾಕಿ ಬಿಲ್ ಪಾವತಿಯಾಗಿದ್ದವು. ಅದರ ಹೊರತಾಗಿಯೂ ಇನ್ನೂ ಸಾವಿರಾರು ಕೋಟಿ ರೂ.ಗಳು ಬಿಡುಗಡೆಯಾಗಬೇಕಿದೆ. +ಇಸ್ರೇಲ್‍ನಲ್ಲಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭ +ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ಮೇಲೆ ಒತ್ತಡ ಹೇರಲು ಗುತ್ತಿಗೆದಾರರ ಸಂಘ ಮುಂದಾಗಿದೆ. ನಾಳೆ ಬೆಳಿಗ್ಗೆ ಸಂಘದ ಸಭೆ ಕರೆಯಲಾಗಿದ್ದು, ಅಲ್ಲಿ ಮುಂದಿನ ಹೋರಾಟಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ. +ರಾಜ್ಯಸರ್ಕಾರ ಲೋಕೋಪಯೋಗಿ, ಸಮಾಜ ಕಲ್ಯಾಣ, ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಬಾಕಿ ಇರುವ ಬಿಲ್‍ಗಳನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಡ ಹೇರಲಾಗಿದೆ. \ No newline at end of file diff --git a/eesanje/url_46_332_11.txt b/eesanje/url_46_332_11.txt new file mode 100644 index 0000000000000000000000000000000000000000..91fac42aad59d20b0787d69d6ff49b7828c05c06 --- /dev/null +++ b/eesanje/url_46_332_11.txt @@ -0,0 +1,12 @@ +ಈರುಳ್ಳಿ ಬೆಲೆ ಮತ್ತೆ ಗಗನಕ್ಕೇರುವ ಸಾಧ್ಯತೆ +ಬೆಂಗಳೂರು,ಅ.12- ಮಳೆ ಅಭಾವದಿಂದಾಗಿ ರಾಜ್ಯ ಹಾಗೂ ದೇಶದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಬೆಳೆ ಇಳುವರಿ ಕಡಿಮೆಯಾಗಿರುವುದರಿಂದ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ. ದೇಶಾದ್ಯಂತ ಮಳೆಯ ಅನಿಶ್ಚಿತ ಕೃಷಿ ವಲಯದ ಮೇಲೆ ಭಾರೀ ಪರಿಣಾಮ ಬೀರಿದೆ. ಮಳೆ ಆಧಾರಿತ ಬೆಳೆಗಳ ಉತ್ಪಾದನೆ ತೀವ್ರವಾಗಿ ಕುಂಠಿತವಾಗಿದ್ದು, ಪೂರೈಕೆಯಲ್ಲಿ ವ್ಯತ್ಯಾಸ ಉಂಟು ಮಾಡಲಿದೆ. +ಅಕ್ಕಿ, ಬೇಳೆ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಈರುಳ್ಳಿ ಕೂಡ ಇದೇ ಸಾಲಿನಲ್ಲಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳು ಬರಕ್ಕೆ ತುತ್ತಾಗಿವೆ. ಅದರಲ್ಲೂ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬೆಳೆಯುವ ಪ್ರದೇಶಗಳಾದ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಗದಗ, ವಿಜಯಪುರ ಮತ್ತು ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ ಕಾಡುತ್ತಿರುವ ಕಾರಣ ಈರುಳ್ಳಿ ಇಳುವರಿ ಕಡಿಮೆಯಾಗಿರುವುದರಿಂದ ಈ ಪ್ರದೇಶಗಳಲ್ಲೂ ಈರುಳ್ಳಿ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗಿದೆ. +ರಾಜ್ಯದಲ್ಲಿ ಹೊಸ ಈರುಳ್ಳಿ ಬೆಳೆಯ ಒಟ್ಟು ಇಳುವರಿ ಕೇವಲ ಶೇ.40ರಷ್ಟಿದ್ದು, ಈಗಾಗಲೇ ಶೇ.25ರಷ್ಟು ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ರಾಜ್ಯದಲ್ಲಿ ಬೆಳೆಯುವ ಈರುಳ್ಳಿ ಬೆಳೆ ಹೊರತುಪಡಿಸಿ, ಇಡೀ ಈರುಳ್ಳಿ ಮಾರುಕಟ್ಟೆ ನಾಸಿಕ್ ಮತ್ತು ಮಹಾರಾಷ್ಟ್ರದ ಇತರ ಈರುಳ್ಳಿ ಬೆಳೆಯುವ ಪ್ರದೇಶಗಳನ್ನು ಅವಲಂಬಿಸಿದೆ. +ಕಳೆದ 15 ದಿನಗಳಿಂದ ಶಿವಮೊಗ್ಗ ಸಗಟು ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಸುಮಾರು 25ರಿಂದ 30 ರೂ.ಗಳಿದ್ದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 30ರಿಂದ 35 ರೂ.ಗೆ ಮಾರಾಟವಾಗುತ್ತಿತ್ತು. ಸದ್ಯಕ್ಕೆ ಶಿವಮೊಗ್ಗದ ಸಗಟು ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ 32ರಿಂದ 35 ರೂ.ಗೆ ಏರಿಕೆಯಾಗಿದೆ. ಈರುಳ್ಳಿ ರಫ್ತಿನ ಮೇಲೆ ಕೇಂದ್ರ ಸರ್ಕಾರ ಶೇ 40ರಷ್ಟು ತೆರಿಗೆ ವಿಸಿದೆ. ಈ ಕ್ರಮವು ಮಹಾರಾಷ್ಟ್ರದ ಪ್ರಮುಖ ಮಾರಾಟಗಾರರು ರಫ್ತು ಮಾಡಲು ಕಡಿವಾಣ ಹಾಕಿದ್ದಾರೆ ಎಂದು ವ್ಯಾಪಾರಿಗಳು ಆಳಲು ತೊಡಿಕೊಂಡಿದ್ದಾರೆ. +ಕೇಂದ್ರ ಸರ್ಕಾರವು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟದ (ಎನ್ಸಿಸಿಎಫ್) ಬೆಂಬಲದೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದಿಂದ ಈರುಳ್ಳಿಯನ್ನು ಖರೀದಿಸುವ ಮೂಲಕ ಬೆಲೆಯನ್ನು ನಿಯಂತ್ರಿಸುತ್ತಿದೆ. ನವೆಂಬರ್‌ನಿಂದ ಈರುಳ್ಳಿ ಬೆಲೆ ಸ್ಥಿರವಾದ ಏರಿಕೆಗೆ ಸಾಕ್ಷಿಯಾಗಬಹುದು ಮತ್ತು ಮಹಾರಾಷ್ಟ್ರದಿಂದ ಪೂರೈಕೆಯ ಆಧಾರದ ಮೇಲೆ ಬೆಲೆ ಏರಿಕೆ ನಿರ್ಧಾರವಾಗಲಿದೆ. +ವಿಶ್ವಸಂಸ್ಥೆಯಲ್ಲಿ ವಸುದೈವ ಕುಟುಂಬಕಂ ನಾಮಫಲಕ ಅನಾವರಣ +ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ ಈರುಳ್ಳಿ ಬೆಲೆ ಹೆಚ್ಚಳವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರ ಈರುಳ್ಳಿ ದಾಸ್ತಾನು ಮಾಡಿದ್ದು, ಬೆಲೆ ಹೆಚ್ಚಳವಾಗುವಾಗ ಮಾರುಕಟ್ಟೆಗೆ ಈರುಳ್ಳಿ ಬಿಡುಗಡೆ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ನಿಯಂತ್ರಿಸುತ್ತಿದೆ. +ಕುಸಿದ ಟೊಮೊಟೊ ಬೆಲೆ:ತಿಂಗಳ ಹಿಂದೆ ಟೊಮೆಟೊ ಕಾಯಲು ಹಲವರು ಇರುತ್ತಿದ್ದರು ಆದರೆ ಈಗ ಟೊಮೆಟೊ ಕೇಳುವವರೆ ಇಲ್ಲ ಎನ್ನುವಂತಾಗಿದೆ. ಟೊಮೆಟೊ ಬೆಳೆದಿದ್ದ ರೈತರು ಈಗ ಕಂಗಾಲಾಗಿದ್ದು, ಮಾರುಕಟ್ಟೆಗೆ ತಂದ ಟೊಮೆಟೊಗೆ ಬೆಲೆ ಸಿಗದ ಕಾರಣ ರಸ್ತೆಬದಿಯಲ್ಲೇ ಸುರಿದು ಹೋಗುತ್ತಿದ್ದಾರೆ. +ಜೈಲಿನಲ್ಲಿ ಚಂದ್ರಬಾಬು ನಾಯ್ಡು ಅವರಿಗೆ ಜೀವಭಯವಿದೆ : ನಾರಾ ಲೋಕೇಶ್ +ರಾಜ್ಯದ ಸಗಟು ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ 8 ರಿಂದ 10 ರೂ.ಗೆ ತರಕಾರಿ ಮಾರಾಟವಾಗುತ್ತಿದೆ. ಚಳ್ಳಕೆರೆ ಮಾರುಕಟ್ಟೆಯಲ್ಲಿ ಮಂಗಳವಾರ ಮತ್ತು ಬುಧವಾರದಂದು ಟೊಮೆಟೊ ಕೆಜಿಗೆ 2 ರೂ.ಗೆ ಕುಸಿದಿದೆ. +ತಿಂಗಳ ಹಿಂದೆ 2,000 ರಿಂದ 2,500 ರೂ.ಗೆ ಮಾರಾಟವಾಗುತ್ತಿದ್ದ 15 ಕೆಜಿ ಟೊಮೇಟೊ ಕ್ರೇಟ್ ಈಗ 20-30 ರೂ.ಗೆ ಸಿಗುತ್ತಿಲ್ಲ, ಇದು ರೈತರನ್ನು ತೀವ್ರವಾಗಿ ಬಾಸುತ್ತಿದೆ. ಈ ಬೆಲೆಯಲ್ಲಿ ಟೊಮೆಟೊ ಮಾರಿದರೆ ಮಾರುಕಟ್ಟೆಗೆ ತರುವ ಬಾಡಿಗೆ ಸಹ ಸಿಗುವುದಿಲ್ಲ. \ No newline at end of file diff --git a/eesanje/url_46_332_12.txt b/eesanje/url_46_332_12.txt new file mode 100644 index 0000000000000000000000000000000000000000..42eac3fa7556ad1022eaeda2898d14052dd93e9a --- /dev/null +++ b/eesanje/url_46_332_12.txt @@ -0,0 +1,8 @@ +ಬೆಂಗಳೂರು ಕಂಬಳಕ್ಕೆ ಗುದ್ದಲಿ ಪೂಜೆ +ಬೆಂಗಳೂರು,ಅ.11- ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯುವ ಬೆಂಗಳೂರು ಕಂಬಳ, ನಮ್ಮ ಕಂಬಳ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ರಾಜಕೀಯವಾಗಿ ಆರೋಪ, ಪ್ರತ್ಯಾರೋಪಗಳಿಂದ ಹೆಚ್ಚು ಚರ್ಚೆಗೆ ಒಳ ಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. +ಮಾಜಿ ಮುಖ್ಯಮಂತ್ರಿ ಹಾಗೂ ಸಚಿವರೂ ಆಗಿರುವ ಡಿ.ವಿ.ಸದಾನಂದಗೌಡ, ಶಾಸಕರಾದ ಎನ್.ಎ.ಹ್ಯಾರಿಸ್, ರಿಜ್ವಾನ್ ಹರ್ಷದ್, ಸಂಗೀತ ನಿರ್ದೇಶಕ ಗುರುಕಿರಣ್, ಕರಾವಳಿ ಸಂಘಟನೆಗಳ ಮುಖ್ಯಸ್ಥರಾದ ಅಶೋಕ್ ರೈ, ಪ್ರಕಾಶ್, ಗುರುರಂಜನ್ ಶೆಟ್ಟಿ, ರಾಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು. +ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕರಾವಳಿ ಸಂಸ್ಕøತಿ, ವೈವಿಧ್ಯತೆ ನಾಡಿಗೆ ಹೆಮ್ಮೆ. ಇಂದು ಬೆಂಗಳೂರಿನ ಕಂಬಳಕ್ಕೆ ಚಾಲನೆ ನೀಡಲಾಗಿದೆ. ತುಳು ನಾಡಿನ ಆಚರಣೆಗಳು ಬೆಂಗಳೂರಿನಲ್ಲಿ ನಡೆಯಲಿವೆ. ಇದಕ್ಕಾಗಿ ಚಿಕ್ಕ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು. ಕರಾವಳಿಯವರು ತಮ್ಮ ಆಚರಣೆ, ಸಂಸ್ಕøತಿಯನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲ ಇದೆ. ಬೆಂಗಳೂರಿನಲ್ಲಿ ಕರಾವಳಿ ಭಾಗದ ಸಂಘಟನೆ ಕಚೇರಿಗೆ ಅಗತ್ಯವಾದ ಸ್ಥಳಾವಕಾಶ ಮಾಡಿಕೊಡಲು ಬಿಬಿಎಂಪಿಗೆ ಸೂಚನೆ ನೀಡುವುದಾಗಿ ತಿಳಿಸಿದರು. +ಈ ಹಿಂದೆ ಡಿ.ವಿ.ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಕಂಬಳಕ್ಕೆ 10 ಲಕ್ಷ ನೀಡಿದ್ದರು. ತಮ್ಮ ಸರ್ಕಾರ ಪ್ರತಿ ಕಂಬಳಕ್ಕೆ ಐದು ಲಕ್ಷದಂತೆ 20 ಕಂಬಳಕ್ಕೆ ಹಣ ನೀಡುತ್ತೇವೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಕಂಬಳಕ್ಕೆ ಗರಿಷ್ಠ ಪ್ರಮಾಣದ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯ ಯುವಕರು ಬೆಂಗಳೂರಿನಲ್ಲಿ ಕಂಬಳ ಮಾಡಲು ಮುಂದಾಗಿದ್ದಾರೆ. ಇದು ಶ್ಲಾಘನೀಯ. ಯಾವುದೇ ತೊಂದರೆ ಬಂದರೂ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಯಲ್ಲಿದೆ ಎಂದು ಭರವಸೆ ನೀಡಿದರು. +ಡಿ.ವಿ.ಸದಾನಂದಗೌಡ ಮಾತನಾಡಿ, ಕಂಬಳ ನಡೆಸುವುದು ಕಷ್ಟ. ಅದನ್ನು ನಿಲ್ಲಿಸಬೇಕು ಎನ್ನುವ ಹಂತದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದೆ. ಒಂದು ಕಂಬಳಕ್ಕೆ 10 ಲಕ್ಷ ರೂ.ಗಳಂತೆ 10 ಕಂಬಳಗಳಿಗೆ 1 ಕೋಟಿ ರೂ. ಅನುದಾನ ನಿಗದಿ ಮಾಡಿ ತಮಿಳುನಾಡಿನಲ್ಲಿ ಜಲ್ಲಿಕಟ್ಟಿನಂತೆ ಕಂಬಳವನ್ನು ರಾಜ್ಯ ಕ್ರೀಡೆ ಯಾಗಿ ಪರಿವರ್ತನೆ ಮಾಡಿದ ತೃಪ್ತಿ ತಮಗಿದೆ ಎಂದರು. ಕಂಬಳದ ಬಗ್ಗೆ ನ್ಯಾಯಾಲಯದಲ್ಲಿ ಸಾಕಷ್ಟು ವಾದ-ವಿವಾದ ನಡೆದವು. ಹೈಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸಿ ನಾವು ಕಂಬಳ ಉಳಿಸಿಕೊಂಡಿದ್ದೇವೆ ಎಂದರು. +ನಾವು ನಿನ್ನೆ ಕಂಬಳದ ಬಗ್ಗೆ ಚರ್ಚೆ ನಡೆಯುವಾಗ ಮಳೆ ಬಂದಿತು. ಇದರಿಂದಾಗಿ ಉಪಮುಖ್ಯಮಂತ್ರಿಯವರಿಗೆ ತಲೆಬಿಸಿ ಕಡಿಮೆಯಾಗಿದೆ. ಇಲ್ಲವಾದರೆ ಕಂಬಳ ನಡೆಸಲು ಬಳಸುವ ನೀರಿನ ಬಗ್ಗೆ ಕೆಲ ಬುದ್ಧಿಜೀವಿಗಳು ತಗಾದೆ ತೆಗೆಯುತ್ತಾರೆ. ಅದಕ್ಕೂ ಪೂರ್ವಸಿದ್ಧರಾಗಿರಬೇಕು. ಕೆಲವರಿಗೆ ತಲೆಯಲ್ಲಿ ಮೆದುಳಿಲ್ಲ, ಮೆದುಳನ್ನು ಬ್ಯಾಗಿನಲ್ಲೇ ಇಟ್ಟುಕೊಂಡಿದ್ದಾರೆ ಎಂದು ಸದಾನಂದಗೌಡ ಕಿಡಿಕಾರಿದರು. +ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, 44 ಎಕರೆಯಲ್ಲಿ ಕಂಬಳಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಕಂಬಳ ಮತ್ತು ಅದರ ಮೈದಾನ ಒಂದು ಭಾಗವಾದರೆ, ಮತ್ತೊಂದು ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಹಳೆ ಮಿನಿ ಮಂಗಳೂರಿನ ಮಾದರಿಯನ್ನು ನಿರ್ಮಿಸಲಾಗುವುದು. ತುಳುನಾಡಿನ ಜನಪದ ಆಚರಣೆಗಳಾದ ಯಕ್ಷಗಾನ, ಹುಲಿವೇಷ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳು, ಕರಾವಳಿ ಭಾಗದ ತಿಂಡಿ ಭಕ್ಷ್ಯಗಳನ್ನು ಬೆಂಗಳೂರಿನವರಿಗೆ ಪರಿಚಯಿಸುವ ಉದ್ದೇಶವಿದೆ ಎಂದು ವಿವರಿಸಿದರು. \ No newline at end of file diff --git a/eesanje/url_46_332_2.txt b/eesanje/url_46_332_2.txt new file mode 100644 index 0000000000000000000000000000000000000000..213b8df03ccfccdf7b8d9c63f67ac0c6efb2ec82 --- /dev/null +++ b/eesanje/url_46_332_2.txt @@ -0,0 +1,9 @@ +ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ; ಸರ್ಕಾರ ಘೋಷಣೆ +ಬೆಂಗಳೂರು,ಅ.13- ಹೆಚ್ಚುವರಿಯಾಗಿ 21 ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿವೆ. 189 ತೀವ್ರ ಬರಪೀಡಿತ ತಾಲ್ಲೂಕು 17 ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಗೆ ನೀಡಿರುವ ಬೆಳೆ ಹಾನಿ ಸಮೀಕ್ಷೆಯ ವರದಿ ಆಧರಿಸಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. +ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ 17 ತಾಲ್ಲೂಕು ತೀವ್ರ ಬರಪೀಡಿತವಾಗಿದ್ದು, 4 ತಾಲ್ಲೂಕು ಸಾಧಾರಣ ಬರಪೀಡಿತವಾಗಿವೆ. ಈ ಹಿಂದೆ ಘೋಷಣೆ ಮಾಡಿದ್ದ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳು ಬರಪೀಡಿತವಾಗಿದ್ದವು. ಸಾಧಾರಣ ಬರಪೀಡಿತವೆಂದು ಗುರುತಿಸಲಾಗಿದ್ದ 34 ತಾಲ್ಲೂಕುಗಳ ಪೈಕಿ 22 ತಾಲ್ಲೂಕುಗಳ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿರುವ ವರದಿ ಆಧರಿಸಿ 11 ತಾಲ್ಲೂಕುಗಳು ತೀವ್ರ ಬರ ಹಾಗೂ 11 ಸಾಧಾರಣ ಬರ ಎಂದು ಘೋಷಿಸುವ ಅರ್ಹತೆ ಪಡೆದಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್ +ಸೆಪ್ಟೆಂಬರ್ ಅಂತ್ಯದವರಿಗೆ ಬರ ಪರಿಸ್ಥಿತಿ ಕಂಡು ಬಂದ 28 ತಾಲ್ಲೂಕುಗಳ ಪೈಕಿ 18 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 4 ಸಾಧಾರಣ ಬರಪೀಡಿತ ಎಂದು ಗುರುತಿಸಲಾಗಿದೆ. ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ ಬೆಳಗಾವಿ, ಖಾನಾಪುರ, ಚಾಮರಾಜನಗರ, ಅಳ್ನಾವರ, ಅಣ್ಣೀಗೇರಿ, ಕಲಘಟಗಿ, ಮುಂಡರಗಿ, ಆಲೂರು, ಅರಸೀಕೆರೆ, ಹಾಸನ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಪೊನ್ನಂಪೇಟೆ, ಕೆಆರ್ ನಗರ, ಹೆಬ್ರಿ ಹಾಗೂ ದಾಂಡೇಲಿ ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. +ಯಳಂದೂರು, ಮೂಡಿಗೆರೆ, ತರೀಕೆರೆ, ಸಿದ್ದಾಪುರ ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಸೆಪ್ಟೆಂಬರ್‍ನಲ್ಲಿ 34 ಸಾಧಾರಣ ಬರಪೀಡಿತವೆಂದು ಘೋಷಿಸಲಾಗಿತ್ತು. ಆ ತಾಲ್ಲೂಕುಗಳಲ್ಲಿ ಮರುಬೆಳೆ ಸಮೀಕ್ಷೆ ಅನ್ವಯ 11 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಅವುಗಳೆಂದರೆ ಬೆಂಗಳೂರು ಉತ್ತರ, ಗುಂಡ್ಲುಪೇಟೆ, ಹನೂರು, ಬೇಲೂರು, ಚನ್ನರಾಯಪಟ್ಟಣ, ಹೊಳೇನರಸೀಪುರ, ಸೋಮವಾರಪೇಟೆ, ಮಾಲೂರು, ದೇವದುರ್ಗ, ಮಸ್ಕಿ, ತುಮಕೂರು. +ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದರೆ ಕೊಳ್ಳೇಗಾಲ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮಂಗಳೂರು, ಮೂಡಬಿದ್ರೆ, ಸಕಲೇಶಪುರ, ಚನ್ನಪಟ್ಟಣ, ಮಾಗಡಿ, ಬ್ರಹ್ಮಾವರ ಹಾಗೂ ಕಾರವಾರ ತಾಲ್ಲೂಕುಗಳು. ಮುಂಗಾರು ಹಂಗಾಮಿನಲ್ಲಿ ಬರಪೀಡಿತವಾಗಿರುವ 216 ತಾಲ್ಲೂಕುಗಳಲ್ಲಿ ಬರ ನಿರ್ವಹಣೆ ಕಾರ್ಯಕ್ರಮವನ್ನು ಜಿಲ್ಲಾಕಾರಿಗಳು ಮುಂದಿನ 6 ತಿಂಗಳವರೆಗೆ ಕೈಗೊಳ್ಳಬೇಕಾಗಿದೆ. +ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು +ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಬರ ಪರಿಹಾರ ಮಾರ್ಗಸೂಚಿ ಅನ್ವಯ ಬರಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ. \ No newline at end of file diff --git a/eesanje/url_46_332_3.txt b/eesanje/url_46_332_3.txt new file mode 100644 index 0000000000000000000000000000000000000000..205ab9405ef41aec9ddcf6f8d690540bddc003cf --- /dev/null +++ b/eesanje/url_46_332_3.txt @@ -0,0 +1,5 @@ +ತೆರಿಗೆ ಪಾವತಿಸದೆ ಸಂಚಾರಿಸುತಿದ್ದ ಬಸ್‍ಗಳ ಜಪ್ತಿ +ಬೆಂಗಳೂರು, ಅ.13- ತೆರಿಗೆ ಪಾವತಿಸದೆ ಸಂಚಾರ ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಸಾರಿಗೆ ಇಲಾಖೆ ಅಕಾರಿಗಳು ಹಲವು ಬಸ್‍ಗಳನ್ನು ಜಪ್ತಿ ಮಾಡಿ ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ. +ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾದ ಮಲ್ಲಿಕಾರ್ಜುನ, ಜಂಟಿ ಆಯುಕ್ತರಾದ ಶೋಭಾ ಅವರ ಮಾರ್ಗದರ್ಶನದಲ್ಲಿ ಕಸ್ತೂರಿನಗರದ ಸಾರಿಗೆ ಪೂರ್ವ ಕಚೇರಿಯ ಆರ್‍ಟಿಒ ಶ್ರೀನಿವಾಸ ಪ್ರಸಾದ್ ಅವರು ಕಾರ್ಯಾಚರಣೆ ನಡೆಸಿದ್ದು, ಅಖಿಲ ಭಾರತ ರಹದಾರಿ ಹೊಂದಿದ್ದ ಖಾಸಗಿ ಐಶರಾಮಿ ಬಸ್‍ನ್ನು ಜಪ್ತಿ ಮಾಡಿದ್ದಾರೆ. +ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್. +30 ಸೀಟುಗಳ ಈ ಸ್ಲಿಪರ್ ಕೋಚ್‍ಗೆ ಜುಲೈ 1ನಿಂದ ಎರಡು ತ್ರೈಮಾಸಿಕದಲ್ಲಿ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ. ದಂಡ ಮತ್ತು ತೆರಿಗೆ ಹಿಂಬಾಕಿ ಸೇರಿ 2,19,780 ರೂಪಾಯಿ ಪಾವತಿಸುವಂತೆ ಸಾರಿಗೆ ಇಲಾಖೆ ಬಸ್ ಮಾಲೀಕರಿಗೆ ನೋಟಿಸ್ ನೀಡಿದೆ. ಇದಲ್ಲದೆ ರಹದಾರಿ ನಿಯಮಾವಳಿಗಳನ್ನು ಉಲ್ಲಂಘಿಸಿದ್ದ ಎಂಟು ಬಸ್ ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. \ No newline at end of file diff --git a/eesanje/url_46_332_4.txt b/eesanje/url_46_332_4.txt new file mode 100644 index 0000000000000000000000000000000000000000..0772acb3afc32cd2d7a5c3dd56d6e77fa0f51435 --- /dev/null +++ b/eesanje/url_46_332_4.txt @@ -0,0 +1,5 @@ +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್ +ಬೆಂಗಳೂರು,ಅ.13- ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ. ಮಹದೇವಪ್ಪನ ದುಡ್ಡು , ಕಾಕ ಪಾಟೀಲನ ದುಡ್ಡು , ದಯಾನಂದನ ದುಡ್ಡು ಎಂದು ಯತ್ನಾಳ್ ಕುಹುಕವಾಡಿದ್ದಾರೆ. +ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ!ಮಹದೇವಪ್ಪನ ದುಡ್ಡು,ಕಾಕಪಾಟಿಲನ ದುಡ್ಡು,ದಯಾನಂದನ ದುಡ್ಡು,1/4ರಷ್ಟು ರಾಜಸ್ಥಾನಕ್ಕೆ,1/4ರಷ್ಟು ಮಧ್ಯಪ್ರದೇಶಕ್ಕೆ,1/4ರಷ್ಟು ತೆಲಂಗಾಣಕ್ಕೆ,1/4 ರಷ್ಟು ಛತ್ತೀಸಘಡಕ್ಕೆ!!ಅವರಿಗೆ ವಿಧಾನಸೌಧ,ಜನರಿಗೆ ಲಾಲಬಾಗ್! +ಸಿಕ್ಕಿಬಿದ್ದಿರುವ 42 ಕೋಟಿ ನಗದಿನಲ್ಲಿ 4ನೇ 1ರಷ್ಟು ರಾಜಸ್ಥಾನಕ್ಕೆ, 4ನೇ 1ರಷ್ಟು ಮಧ್ಯಪ್ರದೇಶಕ್ಕೆ, 4ನೇ 1ರಷ್ಟು ತೆಲಂಗಾಣಕ್ಕೆ ಹಾಗೂ 4ನೇ 1ರಷ್ಟು ಛತ್ತೀಸ್‍ಘಡಕ್ಕೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಮಾಜಿ ಕಾಪೆರ್ರೇಟರ್ ಅಶ್ವಥಮ್ಮ ಅವರ ಪತಿ ಅಂಬಿಕಾಪತಿಯ ಮಗಳ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ 42 ಕೋಟಿ ಹಣ! ಈತ ಯಾರ ಚಿರಂಜೀವಿಯವರ ಪರವಾಗಿ ಹಣ ಸಂಗ್ರಹ ಮಾಡುತ್ತಿದ್ದ ಎಂದು ಗುತ್ತಿಗೆದಾರರು ಕೇಳಿದರೆ ನಿಜ ಹೊರಬರಬಹುದು ಎಂದು ಹೇಳಿದ್ದಾರೆ. +ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನೇ ಸರ್ಕಾರದ ಪರವಾಗಿ ವಸೂಲಿಗಿಳಿದರೆ ಗುತ್ತಿಗೆದಾರರನ್ನು ಕಾಪಾಡುವವರು ಯಾರು? ಈ ಹಣ ಯಾರದ್ದು ಎಂಬುದರ ಬಗ್ಗೆ ತನಿಖೆಯಾಗಲಿ ಎಂದು ಯತ್ನಾಳ್ ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_332_5.txt b/eesanje/url_46_332_5.txt new file mode 100644 index 0000000000000000000000000000000000000000..4002300c6b7fbb18cb5d5b88fe5b4b3f82aabc0f --- /dev/null +++ b/eesanje/url_46_332_5.txt @@ -0,0 +1,7 @@ +ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್..! +ಬೆಂಗಳೂರು,ಅ.13- ಖಚಿತ ಮಾಹಿತಿ ಮೇರೆಗೆ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಮಾಜಿ ಕಾಪೊರೇಟರ್ ಪತಿ ಮನೆ ಮೇಲೆ ಮಿಂಚಿನ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 42 ಕೋಟಿ ನಗದು ಪತ್ತೆಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲೇ ಇದು ಐಟಿಯ ಅತಿದೊಡ್ಡ ದಾಳಿ ಇದಾಗಿದ್ದು , ದಾಳಿಯ ವೇಳೆ ಸಿಕ್ಕಿರುವ ಕಂತೆ ಕಂತೆ ನೋಟುಗಳನ್ನು ಕಂಡು ಸ್ವತಃ ಅಧಿಕಾರಿಗಳೇ ದಂಗಾಗಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಬಿಬಿಎಂಪಿ ಮಾಜಿ ಸದಸ್ಯೆ ಅಶ್ವಥಮ್ಮ ಅವರ ಮನೆ ಮೇಲೆ ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. +ಇದೇ ಸಂದರ್ಭದಲ್ಲಿ ಆರ್‍ಟಿನಗರದ ಆತ್ಮಾನಂದ ಫ್ಲಾಟ್ ಮೇಲೆ ಅಶ್ವಥಮ್ಮ ಅವರ ಬಾಮೈದ ಪ್ರದೀಪ್‍ಗೆ ಸೇರಿದ ಫ್ಲಾಟ್‍ನಲ್ಲಿ ದಾಳಿ ನಡೆಸಿದ ವೇಳೆ ಮಂಚದ ಕೆಳಗೆ 23 ಬಾಕ್ಸ್‍ನಲ್ಲಿ ಸಂಗ್ರಹಿಸಿಟ್ಟಿದ್ದ 500 ರೂ. ಮುಖಬೆಲೆಯ ಒಟ್ಟು 42 ಕೋಟಿ ನಗದನ್ನು ಪತ್ತೆ ಮಾಡಿದ್ದಾರೆ. ಅಂಬಿಕಾಪತಿಯ ಪುತ್ರಿಯ ಆರ್‍ಟಿನಗರದಲ್ಲಿರುವ ವೈಟ್‍ಹೌಸ್ ಫ್ಲಾಟ್ ಮೇಲೂ ಐಟಿ ದಾಳಿ ನಡೆಸಿದೆ. ಮತ್ತೊಂದು ಪ್ರಕರಣದಲ್ಲಿ ಗುತ್ತಿಗೆದಾರ ಹೇಮಂತ್ ಅವರ ಬನಶಂಕರಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ. +ಸದ್ಯಕ್ಕೆ ಪತ್ತೆಯಾಗಿರುವ ಕೋಟ್ಯಂತರ ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಫ್ಲಾಟ್ ಯಾರ ಒಡೆತನಕ್ಕೆ ಸೇರಿದೆ, ಹಣದ ಮೂಲ ಯಾವುದು, ಎಲ್ಲಿಗೆ ಸಂಗ್ರಹಿಸಲಾಗುತಿತ್ತು ಎಂಬುದರ ಬಗ್ಗೆ ಯಾವ ಗುಟ್ಟನ್ನು ಐಟಿ ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಇಷ್ಟು ದೊಡ್ಡ ಮೊತ್ತದ ಹಣವನ್ನು ಕಾರಿನ ಮೂಲಕ ಚೆನ್ನೈನಿಂದ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗುತ್ತಿತ್ತು. +ಇಸ್ರೇಲ್-ಹಮಾಸ್ ಯುದ್ಧ, ದೆಹಲಿಯಲ್ಲಿ ಬಿಗಿ ಬಂದೋಬಸ್ತ್ +ಐಟಿ ಅಧಿಕಾರಿಗಳು ದಾಳಿ ನಡೆಸುವ ಒಂದು ಗಂಟೆಗೂ ಮುನ್ನ ಇದೇ ಫ್ಲಾಟ್‍ನಿಂದ 15 ಕೋಟಿ ಹಣವನ್ನು ಸಾಗಿಸಲಾಗಿತ್ತು. ಇನ್ನು ಒಂದೇ ಒಂದು ಗಂಟೆ ತಡವಾಗಿದ್ದರೂ ಈಗ ಪತ್ತೆಯಾಗಿರುವ ನಗದು ಕೂಡ ಅಲ್ಲಿಂದ ಬೇರೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗಿತ್ತು. ಇದೀಗ ಐಟಿ ಅಧಿಕಾರಿಗಳು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯೆ ಅಶ್ವಥಮ್ಮ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. +ಬ್ಯಾಂಕ್ ಖಾತೆಗಳು, ಚಿರ-ಚರಾಸ್ತಿಗಳು ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ದಾಳಿ ನಡೆಸಿದ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿತ್ತು. ಒಂದೇ ಒಂದು ಸಣ್ಣ ಸುಳಿವನ್ನೂ ಸಹ ನೀಡದೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.ದಾ ಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಬಳಕೆಯಾಗದ 2000 ಮುಖ ಬೆಲೆಯ ನೋಟುಗಳು ಸಹ ಪತ್ತೆಯಾಗಿದೆ. \ No newline at end of file diff --git a/eesanje/url_46_332_6.txt b/eesanje/url_46_332_6.txt new file mode 100644 index 0000000000000000000000000000000000000000..4926964d7885bbcad3018058aaaf378e5b48d0f6 --- /dev/null +++ b/eesanje/url_46_332_6.txt @@ -0,0 +1,6 @@ +ಪಂಚ ಗ್ಯಾರಂಟಿಗಳಿಂದ 1 ಕೋಟಿ ಜನ ಮೇಲ್ದರ್ಜೆಗೆ : ಸಚಿವ ಹೆಚ್.ಕೆ.ಪಾಟೀಲ್ +ಬೆಂಗಳೂರು,ಅ.12- ರಾಜ್ಯದಲ್ಲಿ ಒಂದು ಕೋಟಿ ಜನ ಬಡತನ ರೇಖೆಗಿಂತ ಮೇಲ್ಮಟ್ಟಕ್ಕೆ ಪರಿವರ್ತನೆಯಾಗಿದ್ದು, ಇದು ವಿಶ್ವದಲ್ಲೇ ಹಿಂದೆಂದೂ ಇಲ್ಲದಂತಹ ಐತಿಹಾಸಿಕ ದಾಖಲೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. +ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಂಚಖಾತ್ರಿಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿರುವುದರಿಂದ ಶೇ.90ರಷ್ಟು ಜನರಿಗೆ ಸೌಲಭ್ಯಗಳು ತಲುಪಿವೆ. ಒಂದು ಕೋಟಿ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬಂದು ಮಧ್ಯಮ ವರ್ಗದ ಪಟ್ಟಿಗೆ ಸೇರುತ್ತಿವೆ. ಇದು ರಾಜ್ಯ, ದೇಶದಲ್ಲಷ್ಟೆ ಅಲ್ಲ ವಿಶ್ವದಲ್ಲೇ ಐತಿಹಾಸಿಕ ದಾಖಲೆಯಾಗಿದೆ. ರಾಜ್ಯ ಸರ್ಕಾರದ ಒಂದು ನಿರ್ಣಯದಿಂದ ಮಹತ್ವದ ಬದಲಾವಣೆಯಾಗಲಿದೆ ಎಂದರು. +ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ +ಕಾಂಗ್ರೆಸ್‍ನ ಈ ಯಶಸ್ಸನ್ನು ಸಹಿಸಿಕೊಳ್ಳಲಾಗದೆ ವಿರೋಧ ಪಕ್ಷಗಳು ಅಪಪ್ರಚಾರದಲ್ಲಿ ತೊಡಗಿವೆ. ಸರ್ಕಾರ ಆರು ತಿಂಗಳಿನಲ್ಲೇ ಬಿದ್ದು ಹೋಗಲಿದೆ ಎಂದು ಹತಾಶ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. +ಜನಾಭಿಪ್ರಾಯಕ್ಕೆ ಬೆಲೆ ಕೊಟ್ಟು ಬಹಳಷ್ಟು ಅನ್ಯಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಹೊಸಬರ ಸೇರ್ಪಡೆಗೆ ಕಾಂಗ್ರೆಸ್‍ನಲ್ಲಿ ಒಮ್ಮತದ ಬೆಂಬಲ ವ್ಯಕ್ತವಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾಲ ಸನ್ನಿತವಾಗುತ್ತಿದೆ. ಕಾಂಗ್ರೆಸ್‍ನ ಯಶಸ್ಸು ಏರುತ್ತಿದೆ ಎಂದರು. \ No newline at end of file diff --git a/eesanje/url_46_332_7.txt b/eesanje/url_46_332_7.txt new file mode 100644 index 0000000000000000000000000000000000000000..972fad4f6ce6957874d69b786fb0e679de6cd955 --- /dev/null +++ b/eesanje/url_46_332_7.txt @@ -0,0 +1,6 @@ +ಕೃಷಿ ಇಲಾಖೆಯಲ್ಲಿ 1 ಸಾವಿರ ಹುದ್ದೆ ಭರ್ತಿಗೆ ಕ್ರಮ : ಸಚಿವ ಚೆಲುವರಾಯಸ್ವಾಮಿ +ಬೆಂಗಳೂರು,ಅ.12- ಮೊದಲ ಹಂತದಲ್ಲಿ ಒಂದು ಸಾವಿರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ವಿಧಾನಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಮತ್ತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಅವರು ಮಾತನಾಡಿದರು. +ಕೃಷಿ ಇಲಾಖೆಯಲ್ಲಿ ಶೇ.57ರಷ್ಟು ವಿವಿಧ ಹುದ್ದೆಗಳು ಖಾಲಿ ಇವೆ. ಅಂದರೆ ಸುಮಾರು 2,500 ಹುದ್ದೆಗಳು ಖಾಲಿ ಇದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದು, ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಆದಷ್ಟು ಬೇಗ ನೇಮಕಾತಿ ಮಾಡಲಾಗುವುದು. ಇದರಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಕಾರಿಗಳ ಹುದ್ದೆಗಳು ಸೇರಿವೆ ಎಂದರು. +ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕೃಷಿ ಅಧಿಕಾರಿಗಳಿದ್ದಾರೆ. ಆದರೆ ಕ್ಷೇತ್ರ ಮಟ್ಟದಲ್ಲಿ ಇಲ್ಲ. ಹೋಬಳಿ, ತಾಲ್ಲೂಕು ಮಟ್ಟದಲ್ಲೂ ಕೃಷಿ ಅಧಿಕಾರಿಗಳು ರೈತರ ಸಂಪರ್ಕಕ್ಕೆ ಸಿಗಬೇಕೆಂಬುದು ನಮ್ಮ ಉದ್ದೇಶ. ಖಾಲಿ ಇರುವ ಹುದ್ದೇಶಗಳಲ್ಲಿ ಶೇ.50ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. +ಕಳೆದ ಐದು ವರ್ಷಗಳಲ್ಲಿ ಕೃಷಿ ಇಲಾಖೆಯಲ್ಲಿ ನೇಮಕಾತಿಯನ್ನೇ ಮಾಡಿಲ್ಲ. ನಾವು ನಾಲ್ಕೂವರೆ ತಿಂಗಳಲ್ಲೇ ನೇಮಕಾತಿಗೆ ಕ್ರಮ ಕೈಗೊಂಡಿದ್ದೇವೆ ಎಂದರು. ಅಲ್ಲದೆ 360 ಕೃಷಿ ಸಹಾಯಕ ಅಧಿಕಾರಿಗಳ ಹುದ್ದೆಗಳು ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ 113 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವರ್ಷ 22 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಲು ಸರ್ಕಾರ ಕೆಲಸ ಮಾಡುತ್ತಿದೆ. ರೈತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು. +ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇರುವುದನ್ನು ಮುಖ್ಯಮಂತ್ರಿಗಳು ಗಮನಿಸಿದ್ದು, ಆದಷ್ಟು ಬೇಗ ಪರಿಹರಿಸಲಾಗುವುದು ಎಂದರು. ರಾಜ್ಯದಲ್ಲಿನ ಬರಪೀಡಿತ ಪ್ರದೇಶಗಳ ಅಧ್ಯಯನವನ್ನು ಕೇಂದ್ರ ತಂಡ ಮಾಡಿದ್ದು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದೆ. ಆ ವರದಿ ಆಧರಿಸಿ ಕೇಂದ್ರ ಸರ್ಕಾರ ನೀಡುವ ಪರಿಹಾರ ಧನ ನೋಡಿಕೊಂಡು ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ. 195 ತಾಲ್ಲೂಕುಗಳ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ್ದು, ಸುಮಾರು 5 ಸಾವಿರ ಕೋಟಿ ರೂ. ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು. \ No newline at end of file diff --git a/eesanje/url_46_332_8.txt b/eesanje/url_46_332_8.txt new file mode 100644 index 0000000000000000000000000000000000000000..8bbad43f81bd8f5ff251058caef5fd55992c7b15 --- /dev/null +++ b/eesanje/url_46_332_8.txt @@ -0,0 +1,11 @@ +25 ಸಾವಿರ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ : ಸಚಿವ ಎಂ.ಬಿ.ಪಾಟೀಲ್ +ಬೆಂಗಳೂರು, ಅ.12- ಅಮೆರಿಕದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ಕೈಗೊಂಡಿದ್ದ ಪ್ರವಾಸದಿಂದ ರಾಜ್ಯದಲ್ಲಿ ಸುಮಾರು 25 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 25ರಿಂದ ಅ. 6ರವರೆಗೆ 12 ದಿನಗಳ ಕಾಲ ಅಮೆರಿಕಾದ ವಿವಿಧ ನಗರಗಳಲ್ಲಿ ಪ್ರವಾಸ ಕೈಗೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ವಿಶ್ವದ ಅತ್ಯುತ್ತಮ ಕಂಪೆನಿಗಳ, ಉದ್ಯಮಿಗಳ, ಹೂಡಿಕೆದಾರರ ಜೊತೆ ಸಭೆಗಳನ್ನು ನಡೆಸಿ ಕರ್ನಾಟಕದಲ್ಲಿ ಹೂಡಿಕೆಗಿರುವ ಅವಕಾಶಗಳ ಬಗ್ಗೆ ಚರ್ಚೆ ಮಾಡಿದ್ದೇವೆ. +ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ಅಮೆರಿಕಾದ ವಿವಿಧ ಸ್ಥಳಗಳಲ್ಲಿ ವಿವಿಧ ಕಂಪೆನಿಗಳ ಉನ್ನತ ಅಧಿಕಾರಿಗಳ ಜೊತೆ ವಿಸ್ತೃತವಾದ ವಿಚಾರ ವಿನಿಮಯ ನಡೆಸಲಾಯಿತು. ಕರ್ನಾಟಕದಲ್ಲಿರುವ ಹೂಡಿಕೆ ಸ್ನೇಹಿ ನೀತಿ, ಪರಿಸರ ಉತ್ತೇಜನ ಎಲ್ಲವನ್ನೂ ಮನವರಿಕೆ ಮಾಡಿಕೊಟ್ಟಿದ್ದು, ಅಮೆರಿಕ ಪ್ರವಾಸ ಯಶಸ್ವಿ ಭೇಟಿಯಾದಂತಾಗಿದೆ ಎಂದರು. ವೇಗವಾಗಿ ಬದಲಾಗುತ್ತಿರುವ ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕಾ ಬೇಟಿ ಅಗತ್ಯವಿದ್ದು, ಹೆಚ್ಚಿನ ಸಂಖ್ಯೆಯ ಜಾಗತೀಕ ಹೂಡಿಕೆದಾರರು ಭಾರತದ ಹೂಡಿಕೆಯನ್ನು ಆಕರ್ಷಕ ಹಾಗೂ ಹೂಡಿಕೆಗೆ ಸುರಕ್ಷಿತ ತಾಣ ಎಂದು ಭಾವಿಸಿದ್ದಾರೆ. +ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು +ಎಲ್ಲ ಉದ್ಯಮ ಸ್ನೇಹಿ ನೀತಿಗಳು ಲಾಭ ದಾಯಕ ಪ್ರೋತ್ಸಾಹಗಳು, ತಾಂತ್ರಿಕ ಅರ್ಹತೆ, ನುರಿತ ಉದ್ಯೋಗಿಗಳ ಲಭ್ಯತೆಯೊಂದಿಗೆ ವಿದೇಶಿ ಹೂಡಿಕೆಗೆ ಕರ್ನಾಟಕವೂ ಪ್ರಸಕ್ತ ತಾಣವಾಗಿದೆ ಎಂಬುದನ್ನು ಈ ಪ್ರವಾಸದ ಸಂದರ್ಭದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. 12 ದಿನಗಳಲ್ಲಿ ಈ ನಿಯೋಗವು ವಿವಿಧ ವಲಯಗಳ ಕಂಪೆನಿ ಪ್ರತಿನಿಧಿಗಳೊಂದಿಗೆ 27 ಮುಖಾಮುಖಿ ಸಭೆಗಳು 9 ಸಂವಾದ ಕಾರ್ಯಕ್ರಮಗಳನ್ನು ನಡೆಸಲಾಯಿತು. +ಅದರಲ್ಲಿ ಮುಖ್ಯವಾಗಿ ಎಲೆಕ್ಟ್ರಾನಿಕ್, ಸೆಮಿ ಕಂಡಕ್ಟರ್, ಏರೋಸ್ಪೇಸ್, ರಕ್ಷಣೆ, ಆಟೋ ಮೊಬೈಲ್, ಇವಿ, ಮತ್ತಿತರ ವಲಯ ಗಳಲ್ಲಿ ಹೂಡಿಕೆಗೆ ಅವಕಾಶಗಳನ್ನು ಶೋಸಲಾಯಿತು. ಇದರಿಂದ ಪೂರೈಕೆದಾರರ ನೆಲೆ ವಿಸ್ತರಣೆ ಈ ಅಸ್ತಿತ್ವದಲ್ಲಿರುವ ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆ ಬಲಪಡಿಸುವುದು ರಾಜ್ಯ ಸರ್ಕಾರದ ಸಹಯೋಗ ದೊಂದಿಗೆ ಉತ್ಕøಷ್ಠ ಕೇಂದ್ರಗಳ ಸ್ಥಾಪನೆ ಕುರಿತು ಉದ್ಯಮಿಗಳೊಂದಿಗೆ ಚರ್ಚೆ ನಡೆಸಲಾಯಿತು. +ರಾಜ್ಯದಲ್ಲಿ ಸದೃಡ ಕೈಗಾರಿಕ ಪರಿಸರ, ವಿಶ್ವ ದರ್ಜೆ ಮೂಲಸೌಕರ್ಯ, ಸುಗಮ ವ್ಯಾಪಾರ, ಕಾರ್ಯಾಚರಣೆ, ನುರಿತ ಹಾಗೂ ತರಬೇತಿ ಪಡೆದ ಕಾರ್ಮಿಕ ಶಕ್ತಿಜೊತೆಗೆ ಉದ್ಯಮಶೀಲ ರಾಜ್ಯವಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದೆ. ಪರಿಸರ ಸ್ನೇಹಿ ವಾತಾವರಣವನ್ನು ಕರ್ನಾಟಕದಲ್ಲಿದೆ ಎಂದು ಹೇಳಿದ್ದೇವೆ. +ಹಮಾಸ್ ಸರ್ವನಾಶದ ಶಪಥ ಮಾಡಿದ ಇಸ್ರೇಲ್ +ತಯಾರಿಕಾ ವಲಯಕ್ಕೆ ಒತ್ತು:ಐಟಿ- ಬಿಟಿ ಪ್ರಿಯಾಂಕ ಖರ್ಗೆ ಮಾತನಾಡಿ, ತಯಾರಿಕಾ ವಲಯದಲ್ಲಿ ಹೆಚ್ಚಿನ ಒತ್ತು ನೀಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಬಯೋಟೆಕ್ನಾಲಜಿಯಲ್ಲಿ ಶಾಮ್‍ಫರ್ಡ್ ವಿಶ್ವವಿದ್ಯಾಲಯ ಜೊತೆ ನವೋದ್ಯಮ ಹೆಚ್ಚಿಸಲು ಪಾಲುದಾರಿಕೆಗೆ ಮಾಡಿಕೊಳ್ಳಲು ಚರ್ಚಿಸಲಾಗಿದೆ ಅದಕ್ಕೆ ಅವರು ಒಪ್ಪಿದ್ದಾರೆ. +ಅವಿಷ್ಕಾರದಲ್ಲಿ 18ನೇ ಸ್ಥಾನದಲ್ಲಿದ್ದು, ಅದನ್ನು 10ರೊಳಗೆ ತರಲು ಬೇರೆ ಬೇರೆ ದೇಶಗಳೊಂದಿಗೆ ಒಪ್ಪಂದ ಅನಿವಾರ್ಯವಾಗಲಿದೆ. ರಾಜ್ಯದಲ್ಲಿ ಸುಮಾರು 28 ಸಾವಿರ ನವೋದ್ಯಮಗಳಿವೆ. ಹೊಸ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ಕೊಡುವ ಪ್ರಯತ್ನದ ಬಗ್ಗೆ ಮಾಡಿದ್ದೇವೆ. ವಿದೇಶಿಗಳಷ್ಟೇ ಅಲ್ಲ ಬೇರೆ ಬೇರೆ ರಾಜ್ಯಗಳು ಕೂಡ ನಮಗೆ ಸ್ರ್ಪಧಿಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ಹೂಡಿಕೆ ಬಗ್ಗೆ ಗಂಭೀರ ಪ್ರಯತ್ನ ಮಾಡುತ್ತಿದೆ. +ಹೂಡಿಕೆದಾರರು ಕೌಶಲ್ಯಾ ಧರಿತ ಮಾನವ ಸಂಪನ್ಮೂಲ ಉದ್ಯಮಶೀಲತೆ ಬಗ್ಗೆ ಅಪೇಕ್ಷಿತರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಲ್. ಸೆಲ್ವ ಕುಮಾರ್ ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಟಿ-ಬಿಟಿ ವಿಜ್ಞಾನ- ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಏಕರೂಪ್ ಕೌರ್ ಉಪಸ್ಥಿತರಿದ್ದರು. \ No newline at end of file diff --git a/eesanje/url_46_332_9.txt b/eesanje/url_46_332_9.txt new file mode 100644 index 0000000000000000000000000000000000000000..299227d9719b8ab82e7b3474339cfe299d6bb550 --- /dev/null +++ b/eesanje/url_46_332_9.txt @@ -0,0 +1,7 @@ +ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ +ಬೆಂಗಳೂರು,ಅ.12- ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಬಿಜೆಪಿಯ ಮಾಜಿ ಶಾಸಕ ಶಿರಹಟ್ಟಿ ಕ್ಷೇತ್ರದ ರಾಮಪ್ಪ ಲಮಾಣಿ ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. +ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್, ಬಿ.ಎನ್.ಚಂದ್ರಪ್ಪ, ಗದಗ್‍ನ ಜಿಲ್ಲಾಧ್ಯಕ್ಷರೂ ಆಗಿರುವ ಶಾಸಕ ಜಿ.ಎಸ್.ಪಾಟೀಲ್, ಶಾಸಕರಾದ ವಿನಯ್ ಕುಲಕರ್ಣಿ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. +ಈ ವೇಳೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಪರಿಣಾಮ ಬೀರಿದೆ. ಐದು ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಎಲ್ಲರೂ ಹೇಳುತ್ತಿದ್ದರೂ, ನಿರೀಕ್ಷೆ ಮೀರಿ ಸರ್ಕಾರ ಭರವಸೆಗಳನ್ನು ಈಡೇರಿಸಿದೆ. ಇದು ರಾಷ್ಟ್ರಕ್ಕೆ ಮಾದರಿ. ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಭರವಸೆಗಳಂತಹ ಕಾರ್ಯಕ್ರಮಗಳ ಜಾರಿಗೆ ಒತ್ತಡ ಹೆಚ್ಚಿದೆ. ಜೊತೆಯಲ್ಲಿ ಕಾಂಗ್ರೆಸ್ ಮೇಲೆ ಭರವಸೆ ಹೆಚ್ಚುತ್ತಿದೆ ಎಂದು ಹೇಳಿದರು. +ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಗುತ್ತಿಗೆದಾರರು +ದೇಶದಲ್ಲಿ ರಾಜಕೀಯ ದ್ರುವೀಕರಣವಾಗುತ್ತಿದೆ. ಸದ್ಯಕ್ಕೆ ಘೋಷಣೆಯಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಸೆಮಿಫೈನಲ್ ಆಗಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಮರಳಲಿದೆ ಎಂದರು. +ರಾಮಣ್ಣ ಲಮಾಣಿ ಬಿಜೆಪಿಯಿಂದ ಎರಡು ಬಾರಿ ಎಂಎಲ್‍ಎ ಆಗಿದ್ದರು, ಒಮ್ಮೆ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು, ಕಾಂಗ್ರೆಸ್ ತತ್ವಕ್ಕೆ ಬದ್ಧರಾಗಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿದರು. ಇದೇ ವೇಳೆ ರಾಮಣ್ಣ ಲಮಾಣಿ ಮಾತನಾಡಿ, ಬಿಜೆಪಿ ಅಧೋಗತಿಗೆ ಹೋಗುತ್ತಿದೆ. ಅಲ್ಲಿ ಹೆಚ್ಚು ಅನುಭವಸ್ಥರು ಇಲ್ಲ, ರಾಜ್ಯಾದ್ಯಂತ 15 ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲು ಸಿದ್ಧರಾಗಿದ್ದಾರೆ. ಇದೇ 20 ರಂದು ಮತ್ತಷ್ಟು ಮಂದಿ ಕಾಂಗ್ರೆಸ್‍ಗೆ ಬರಲಿದ್ದಾರೆ ಎಂದರು. \ No newline at end of file diff --git a/eesanje/url_46_333_1.txt b/eesanje/url_46_333_1.txt new file mode 100644 index 0000000000000000000000000000000000000000..e6dd6ab1465bdd70502f7a920d5fae246517b7eb --- /dev/null +++ b/eesanje/url_46_333_1.txt @@ -0,0 +1,17 @@ +ಇಂಧನ ಇಲಾಖೆಯಿಂದ ಅಭಾವ ನಿವಾರಣೆಗೆ ವಿದ್ಯುತ್ ಪಡಿತರ ವ್ಯವಸ್ಥೆ ಜಾರಿ +ಬೆಂಗಳೂರು,ಅ.11- ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗೆ ಅಸಾಧಾರಣ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನಲೆ ವಿದ್ಯುತ್ ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸಲು ಇಂಧನ ಇಲಾಖೆ ಮುಂದಾಗಿದೆ.ಈ ಉದ್ದೇಶಕ್ಕಾಗಿ ಇಂಧನ ಇಲಾಖೆಯು ಶೀಘ್ರದಲ್ಲೇ ಆದ್ಯತೆ ಮತ್ತು ಆದ್ಯತೆಯೇತರ ಗ್ರಾಹಕರ ಪಟ್ಟಿಯನ್ನು ಸಿದ್ದಪಡಿಸಲಿದೆ. ಜೊತೆಗೆ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಬೇರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಮುಂದಾಗಿದೆ. +ಕಳೆದ ವರ್ಷ ಅಕ್ಟೋಬರ್ ತಿಂಗಳ ಅವಧಿಯಲ್ಲಿ 12,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಇದೇ ತಿಂಗಳ ಅವಧಿಯಲ್ಲಿ 15000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಇರುವುದರಿಂದ ಈ ಕೊರತೆಯನ್ನು ನೀಗಿಸಲು ಇಂಧನ ಇಲಾಖೆ ಪರ್ಯಾಯ ಮಾರ್ಗವನ್ನು ಹುಡುಕುತ್ತಿದೆ. +ಒಂದು ಮೂಲದ ಪ್ರಕಾರ ಪ್ರತಿದಿನ 1500-2000 ಮೆಗಾವ್ಯಾಟ್ ಉತ್ಪಾದನೆಯಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಪರ್ಯಾಯ ಇಂಧನ ಮೂಲಗಳಿಂದ ಬೇಡಿಕೆಯನ್ನು ಸರಿದೂಗಿಸಲು ಹೊರರಾಜ್ಯಗಳಿಂದ ವಿದ್ಯುತ್ ಖರೀದಿ ಹಾಗೂ ಪಡಿತರ ವ್ಯವಸ್ಥೆ ಜಾರಿ ಮಾಡುವ ಸಂಭವವಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ. +ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ +ನಿರಂತರ ಜ್ಯೋತಿ ಯೋಜನೆಯಡಿ ಗ್ರಾಹಕರ ವಿದ್ಯುತ್ ಪೂರೈಕೆಗೆ ಕೆಲ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಕೈಗಾರಿಕೆಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದಾಗ್ಯೂ ಪರಿಸ್ಥಿತಿ ಈ ಬಾರಿ ಭಿನ್ನವಾಗಿರುವುದರಿಂದ ವಿದ್ಯುತ್ ಕಡಿತ ಮಾಡದೆ ಅನ್ಯ ಮಾರ್ಗವಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. +ಬಿಕ್ಕಟ್ಟನ್ನು ತಗ್ಗಿಸಲು ನಾವು ಈಗಾಗಲೇ ಹಲವಾರು ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ಮುಖ್ಯವಾಗಿ ಹೊರರಾಜ್ಯದಿಂದ ವಿದ್ಯುತ್ ಖರೀದಿ, ಪರ್ಯಾಯ ಇಂಧನ ಮೂಲಗಳು ಇದರಲ್ಲಿ ಸೇರಿವೆ. ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. +ಬೇಡಿಕೆಯನ್ನು ಪೂರೈಸಲು ರಾಜ್ಯವು ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಆಲೋಚಿಸಿದೆ. ಪ್ರಸ್ತುತ ಅಕ್ಟೋಬರ್‌ನಿಂದ ಮೇ 2024ರವರೆಗೆ ಪೂರ್ವ ಸೌರ ಮತ್ತು ನಂತರದ ಸಮಯದಲ್ಲಿ ಉತ್ತರ ಪ್ರದೇಶದೊಂದಿಗೆ 300ರಿಂದ 600 ಮೆಗಾವಾಟ್ ವಿದ್ಯುತ್ ಖರೀದಿಗೆ ಮಾತುಕತೆ ನಡೆಸಲಾಗಿದೆ. +ನವೆಂಬರ್‌ನಿಂದ ಮೇ 2024ರವರೆಗೆ 500 ಮೆ.ವ್ಯಾ ಪೂರೈಕೆಗಾಗಿ ಪಂಜಾಬ್ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದೆ. ರಾಜ್ಯಕ್ಕೆ ವಿದ್ಯುತ್ ಪೂರೈಸಲು ಅಲ್ಲಿನ ಸರ್ಕಾರಗಳು ಮೌಖಿಕ ಸಮ್ಮತಿ ನೀಡಿವೆ. ಕಳೆದ ಆಗಸ್ಟ್‍ನಲ್ಲಿ ರಾಜ್ಯವು 17,000 ಮೆಗಾವ್ಯಾಟ್ ಬೇಡಿಕೆಯನ್ನು ದಾಖಲಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಬೇಡಿಕೆ ಪ್ರಮಾಣ ತುಸು ಕಡಿಮೆಯಾಗಿತ್ತು. +ಈಗ ಪುನಃ ಮಳೆ ಬಾರದ ಕಾರಣ ರೈತರಿಂದ ಬೇಡಿಕೆ ಹೆಚ್ಚಾಗುತ್ತಿದ್ದು, ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಗಮನವನ್ನು ಇಲಾಖೆ ಹರಿಸಿದೆ. ಮಳೆ ಕಡಿಮೆಯಾಗಿರುವುದರಿಂದ ಪಾವಗಡ ಸೋಲಾರ್ ಪಾರ್ಕ್‍ನಲ್ಲಿ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುಸಿದಿದೆ. ಪವನ ಯೋಜನೆಗಳಿಂದ ವಿದ್ಯುತ್ ಉತ್ಪಾದನೆಯು ಸಾಮಾನ್ಯ 2000 ಮೆಗಾವ್ಯಾಟ್‍ನಿಂದ 400 ಮೆಗಾವ್ಯಾಟ್‍ಗೆ ಇಳಿದಿದೆ. 2000 ಮೆಗಾವ್ಯಾಟ್ ನವೀಕರಿಸಬಹುದಾದ ಮೂಲಗಳ ಕೊರತೆಯಿದೆ. +ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಪ್ರಸ್ತುತ, ರಾಜ್ಯವು ಉಷ್ಣ ಯೋಜನೆಗಳಿಂದ ಮತ್ತು ವಿದ್ಯುತ್ ಖರೀದಿಯ ಮೂಲಕ 7000 ಮೆಗಾವ್ಯಾಟ್ ಪಡೆಯುತ್ತದೆ. ರಾಜ್ಯವು ತನ್ನ ಮೂರು ಶಾಖೋತ್ಪನ್ನ ಯೋಜನೆಗಳಿಂದ 1953w ಉತ್ಪಾದಿಸುತ್ತದೆ. +ಜುಲೈ 2022ರಲ್ಲಿ ಕೃಷಿ ಕ್ಷೇತ್ರಕ್ಕೆ 1,425 ಮೆ.ವ್ಯಾಟ್ ಬಳಕೆಯಾಗಿದ್ದರೆ, ಜುಲೈ 2023 ರಲ್ಲಿ ಇದು 2,209 ಮೆಗಾ ವ್ಯಾಟ್ಗೆ ಏರಿಕೆಯಾಗಿದೆ. ಲಿಂಗನಮಕ್ಕಿ, ಸೂಫಾ ಮತ್ತು ವಾರಾಹಿ ಜಲಾಶಯದ ಜಲ ವಿದ್ಯುತ್ ಉತ್ಪಾದನೆ ಶೇ 50ರಷ್ಟು ಕಡಿಮೆಯಾಗಿದೆ. ಇನ್ನು ಅಕ್ಟೋಬರ್ 1 ರಂದು ಗಾಳಿಯಿಂದ ವಿದ್ಯುತ್ ಉತ್ಪಾದನೆ 53.63 ಮೆ.ವಾ. ಆಗಿದ್ದರೆ, ಅಕ್ಟೋಬರ್ 9 ರಂದು 4.76 ಮೆಗಾವ್ಯಾಟ್‍ಗೆ ಇಳಿದಿದೆ. ಇನ್ನೊಂದೆಡೆ ವಿದ್ಯುತ್ ಸ್ಥಾವರಗಳು ಆಗಾಗ್ಗೆ ಸ್ಥಗಿತಗೊಳ್ಳುತ್ತಿವೆ. +ವಿದ್ಯುತ್ ಸಮಸ್ಯೆಗೆ ಮಳೆ ಕೊರತೆ ಮಾತ್ರವಲ್ಲ, ಹಿಂದಿನ ಹಾಗೂ ಈಗಿನ ಸರ್ಕಾರದ ನಿರ್ಲಕ್ಷ್ಯವೂ ವಿದ್ಯುತ್ ಅಭಾವ ಸೃಷ್ಟಿಗೆ ಕಾರಣ ಎನ್ನಲಾಗಿದೆ. ಸಾರ್ವಜನಿಕ ಸ್ವಾಮ್ಯದ ಕೆಪಿಸಿಎಲ್ ನಿರ್ಲಕ್ಷ್ಯಕ್ಕೊಳಗಾಗಿದ್ದು, ವಿದ್ಯುತ್ ಜಾಲಕ್ಕೆ ಹೊಸದಾಗಿ ಒಂದೇ ಒಂದು ಯುನಿಟ್ ಸೇರಿಸಲು ಸಾಧ್ಯವಾಗಿಲ್ಲ. ಕಲ್ಲಿದ್ದಲು ಖರೀದಿ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗದ ಕಾರಣ ಒಂದು ವಾರಕ್ಕೆ ಬೇಕಾಗುವಷ್ಟು ದಾಸ್ತಾನಿಡಲು ಸಾಧ್ಯವಾಗಿಲ್ಲ. ಇದು ಶಾಖೋತ್ಪನ್ನ ಸ್ಥಾವರದ ಪೂರ್ಣ ಸಾಮಥ್ರ್ಯದ ವಿದ್ಯುತ್ ಉತ್ಪಾದನೆಗೆ ಅಡ್ಡಗಾಲು ಹಾಕಿದೆ ಎಂದು ಮೂಲಗಳು ಸ್ಪಷ್ಟಪಡಿಸುತ್ತಿವೆ. +ಚೆನ್ನೈನಿಂದ ಅಹಮದಾಬಾದ್‍ಗೆ ಶುಭ್‍ಮನ್ ಗಿಲ್ ಶಿಫ್ಟ್ +ವಿದ್ಯುತ್ ಸಮಸ್ಯೆ ಈಗ ಸೃಷ್ಟಿಯಾಗಿರುವುದಲ್ಲ. ಮಳೆ ವೈಫಲ್ಯವೂ ಒಂದು ಕಾರಣವಾಗಿರಬಹುದು. ಇದರೊಂದಿಗೆ ಇನ್ನೂ ಹಲವು ಕಾರಣಗಳು ಸೇರಿರಬಹುದು. ಪವನ ವಿದ್ಯುತ್ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆ ತೀವ್ರವಾಗಿ ಕುಸಿದಿರುವ ಪರಿಣಾಮ ವಿದ್ಯುತ್ ಸಮಸ್ಯೆ ತಲೆದೋರಿದೆ. ರೈತರಿಗೆ 7 ಗಂಟೆ ವಿದ್ಯುತ್ ಬದಲಿಗೆ 2 ಗಂಟೆ ಕಡಿತ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ವಿದ್ಯುತ್ ವ್ಯತ್ಯಯ ಮಾಡಲಾಗುತ್ತಿದೆ ಎಂದು ಅಕೃತ ಮೂಲಗಳು ಹೇಳುತ್ತವೆ. +ಇಂಧನ ಸಚಿವ ಕೆಜೆ ಜಾರ್ಜ್ ಅವರು ವಿದ್ಯುತ್ ಕೊರತೆ ಇಲ್ಲ. ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಹೇಳುತ್ತಲ್ಲೇ ಇದ್ದಾರೆ. ಆದರೆ ರಾಜ್ಯಾದ್ಯಂತ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಿದ್ಯುತ್ ವ್ಯತ್ಯಯ, ಕೃಷಿ ಪಂಪ್ಸೆಟ್‍ಗಳಿಗೆ ವಿದ್ಯುತ್ ಕಡಿತ ಮುಂದುವರೆದಿದೆ. ಇದರಿಂದ ರೈತರು ಕಂಗಾಲಾಗಿದ್ದು, ಇಂಧನ ಇಲಾಖೆ ವಿರುದ್ಧ ಸಿಡಿದೆದ್ದಿದ್ದಾರೆ. +ಒಂದೆಡೆ ಉಚಿತ ವಿದ್ಯುತ್(ಗೃಹ ಜ್ಯೋತಿ) ಭಾಗ್ಯದ ಮಧ್ಯೆ ಬೇಡಿಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದೆ. ಇದರಿಂದ ರಾಜ್ಯ ಸರ್ಕಾರ ಸಂಕಷ್ಟ ಎದುರಾಗಿದ್ದು, ಇದನ್ನು ಹೇಗೆ ನಿಭಾಯಿಸಲಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. \ No newline at end of file diff --git a/eesanje/url_46_333_10.txt b/eesanje/url_46_333_10.txt new file mode 100644 index 0000000000000000000000000000000000000000..9de32fd0ed7d52d7d0fd6222b6cec594912180fb --- /dev/null +++ b/eesanje/url_46_333_10.txt @@ -0,0 +1,7 @@ +ಅರಣ್ಯ ಅಕ್ರಮ ಒತ್ತುವರಿ ತೆರವು ಅನಿವಾರ್ಯ : ಈಶ್ವರ್ ಖಂಡ್ರೆ +ಬೆಂಗಳೂರು,ಅ.10- ಅರಣ್ಯ ಇಲಾಖೆಯಿಂದ ಸಕ್ರಮ ವಾಗಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ, ಅಕ್ರಮ ಒತ್ತುವರಿಗಳನ್ನು ತೆರವು ಮಾಡುವುದು ಅನಿವಾರ್ಯ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಅಲ್ಲಿಯೇ ನೆಲೆಸಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರಮಬದ್ಧವಾಗಿ, ನಿಯಮಬದ್ಧವಾಗಿ, ಕಾನೂನಾತ್ಮಕವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶಾಸಕರು ಮತ್ತು ಸಾರ್ವಜನಿಕರು ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. +1978 ರ ಪೂರ್ವದಲ್ಲಿ ವಾಸಿಸುತ್ತಿರುವವರು ಮತ್ತು ಅರಣ್ಯದಂಚಿನಲ್ಲಿ ವಾಸ ಮಾಡುತ್ತಿರುವವರನ್ನು ಗುರುತಿಸಿ ಪಟ್ಟಿ ಮಾಡಲು ಸೂಚಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಪ್ರಕರಣವನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಪಡಿಸಲು ನಿರ್ಧರಿಸಿದ್ದೇವೆ. ಸಾವಿರಾರು ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಇದರಿಂದ ಬಡವರಿಗೆ, ರೈತರಿಗೆ, ಬುಡಕಟ್ಟು ಸಮುದಾಯದವರಿಗೆ ಅನುಕೂಲವಾಗಲಿದೆ ಎಂದರು. +ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ +ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ತೆರವು ಮಾಡಲಾಗುವುದು. ನಮ್ಮ ಸರ್ಕಾರ ಮೊದಲಿನಿಂದಲೂ ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಕ್ಕುಗಳ ವಿಷಯದಲ್ಲಿ ಸಕಾರಾತ್ಮಕವಾಗಿದೆ. ಸಣ್ಣ ಪ್ರಮಾಣದ ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಮತ್ತು ನಿವಾಸಿಗಳಿಗೆ ತೊಂದರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಸೇರಿ ಶ್ರೀಶೈಲ ಜಗದ್ಗುರುಗಳನ್ನು ನಿನ್ನೆ ಭೇಟಿ ಮಾಡಿದ್ದೇವೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ನಾಯಕರು ಇದ್ದರು. ಶ್ರೀಗಳ ಜೊತೆ ರಾಜಕೀಯ ಹೊರತಾಗಿ ಹಲವಾರು ವಿಚಾರಗಳನ್ನು ಚರ್ಚಿಸಿದ್ದೇವೆ ಎಂದರು. \ No newline at end of file diff --git a/eesanje/url_46_333_11.txt b/eesanje/url_46_333_11.txt new file mode 100644 index 0000000000000000000000000000000000000000..240ee3b18bc90f4971bb03a4e5f4c3110247f9d6 --- /dev/null +++ b/eesanje/url_46_333_11.txt @@ -0,0 +1,13 @@ +ಪಟಾಕಿ ದುರಂತ : ತಹಸೀಲ್ದಾರ್, ಇನ್‌ಸ್ಪೆಕ್ಟರ್‌ ಸೇರಿ ಮೂವರು ಅಮಾನತು +ಬೆಂಗಳೂರು,ಅ.10-ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ತಹಸೀಲ್ದಾರ್, ಇನ್ಸ್‍ಪೆಕ್ಟರ್ ಮತ್ತು ರೀಸನಲ್ ಫೈಯರ್ ಆಫೀಸರ್ ಅವರ ಅಮಾನತಿಗೆ ಸೂಚನೆ ನೀಡಿದ್ದಾರೆ. +ಪಟಾಕಿ ದುರಂತ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಪರವಾನಗಿದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‍ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚೆಕ್‍ಬಂಧಿ ನಿಗದಿ ಮಾಡಿ ವರದಿ ಸಲ್ಲಿಸಲಾಗಿದೆ. +ಪೊಲೀಸ್ ಅೀಧಿಕ್ಷಕರು ಜಿಲ್ಲಾಧಿಕಾರಿಗಳಿಗೆ ಘಟನೆ ಸಂಬಂಧ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರ್‍ ರಿಂದಲೂ ವರದಿ ಪಡೆದಿದ್ದಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು. +ಎಕ್ಸ್‍ಫ್ಲೋಸೀವ್ ಆಕ್ಟ್‌ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. 14 ಜನರ ಜೀವಕ್ಕೆ ಹೊಣೆ ಯಾರು. ಕಾಯ್ದೆಯಲ್ಲಿರುವ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಸಲ್ಲಿಸಿದ ವರದಿ ಸರಿ ಇದೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ತಾಕೀತು ಮಾಡಿದರು. +ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡನ್‍ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೆಯ ಗಮನಕ್ಕೆ ತರಲಾಯಿತು. +ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ +ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ ಸುರಕ್ಷತಾ ಕ್ರಮ ಕೈಗೊಳ್ಳದ ಗೋಡನ್ ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವುದಲ್ಲದೆ, ಅವುಗಳ ಪರವಾನಗಿಗಳನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ನಿರಪೇಕ್ಷಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ. +5 ವರ್ಷಕ್ಕೊಮ್ಮೆ ನವೀಕರಣಕ್ಕೆ ನಿರಪೇಕ್ಷಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಪೋಟಕದ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಗಳ ತಿದ್ದುಪಡಿ ಅಗತ್ಯವಿದೆ ಎಂದ ಅವರು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚನೆ ನೀಡಿದರು.ಅತ್ತಿಬೆಲೆಯಲ್ಲಿ ನಿಗದಿಯಾದ ಮಾನದಂಡ ಪೂರೈಸದಿದ್ದರೂ ತಪಾಸಣಾ ವರದಿ ನೀಡಿ, ಶಿಫಾರಸ್ಸು ಮಾಡಿದ ಸರ್ಕಲ್ ಇನ್ಸ್‍ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು. +ಅತ್ತಿಬೆಲೆ ಹೊಸೂರು ಗಡಿಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕೆಂದು ಹೇಳಿದ ಅವರು, ಈ ಕುರಿತು ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನು ಖಾತರಿಪಡಿಸಿಕೊಳ್ಳಬೇಕೆಂದು ಹೇಳಿದರು. +ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜಕೀಯ ಸಮಾವೇಶ ಹಾಗೂ ವಿವಾಹ ಸಂದರ್ಭಗಳಲ್ಲಿ ಸುರಕ್ಷಿತ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ಮಾಡಿದರು. +ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..? +ಸಭೆಯಲ್ಲಿ ಮುಖ್ಯಕಾರ್ಯದರ್ಶಿ ವಂದಿತಾಶರ್ಮಾ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಎಂ ಅವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಘೋಯೆಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಕಾರಿ ಕೆ.ಎ.ದಯಾನಂದ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_333_12.txt b/eesanje/url_46_333_12.txt new file mode 100644 index 0000000000000000000000000000000000000000..d83f712a17004ddee6e4e947039d508f1dfa3728 --- /dev/null +++ b/eesanje/url_46_333_12.txt @@ -0,0 +1,5 @@ +ಮಳೆ ನಡುವೆಯೇ ಅಂಬಾರಿ ತಾಲೀಮು +ಮೈಸೂರು,,ಅ.10- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಈ ಬಾರಿ ಅಂಬಾರಿ ಹೊರಲಿರುವ ಆನೆಗಳ ತಾಲೀಮು ಭರದಿಂದ ಸಾಗಿದ್ದು, ಮಳೆಯ ನಡುವೆಯೂ ಕ್ಯಾಪ್ಟನ್ ಅಭಿಮನ್ಯು ಮರದ ಅಂಬಾರಿ ಹೊತ್ತು ಹೆಜ್ಜೆ ಹಾಕಿದೆ. +ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಮರದ ಅಂಬಾರಿ ಕಟ್ಟಿ ನಗರದ ವಿವಿಧೆಡೆ ತಾಲೀಮುಗಾಗಿ ಅರ್ಚಕರಾದ ಪ್ರಹ್ಲಾದ್‍ರಾವ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಬೇಕೆನ್ನುವಷ್ಟರಲ್ಲಿ ವರುಣನ ಸಿಂಚನವಾಗಿದ್ದು, ಇದೊಂದು ಶುಭ ಸಂಕೇತವೆಂದು ಮಳೆಯ ನಡುವೆಯೇ ಗಜಪಡೆ ತಾಲೀಮು ನಡೆಸಿದವು. +ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..! +ಅಭಿಮನ್ಯುವಿನ ಬಲ ಹಾಗೂ ಎಡ ಭಾಗದಲ್ಲಿ ಹೆಣ್ಣು ಆನೆಗಳು ಸಾಥ್ ನೀಡಿದರೆ ಹಿಂದೆ ಹನ್ನೊಂದು ಆನೆಗಳು ಹೆಜ್ಜೆ ಹಾಕುತ್ತಾ ನಗರದ ಕೆಆರ್ ವೃತ್ತ, ಸಯ್ಯಾಜಿರಾವ್ ರಸ್ತೆ ಮೂಲಕ ಸಾಗಿ ಬನ್ನಿಮಂಟಪಕ್ಕೆ ಯಶಸ್ವಿಯಾಗಿ ತಲುಪಿದವು. ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಮಾವುತರು ಸಹ ಆನೆಗಳೊಂದಿಗೆ ಸಾಗಿದರು. \ No newline at end of file diff --git a/eesanje/url_46_333_2.txt b/eesanje/url_46_333_2.txt new file mode 100644 index 0000000000000000000000000000000000000000..46f51dee2f788e03de11d209f0b36aa9dfb4d97e --- /dev/null +++ b/eesanje/url_46_333_2.txt @@ -0,0 +1,13 @@ +ನವೆಂಬರ್‌ನಲ್ಲಿ ಜಾತಿಗಣತಿ ವರದಿ ಬಹಿರಂಗ..!? +ಬೆಂಗಳೂರು,ಅ.11- ಬಿಹಾರದ ನಂತರ ಕರ್ನಾಟಕದಲ್ಲಿ ನವೆಂಬರ್ ವೇಳೆಗೆ ಜಾತಿ ಜನಗಣತಿಯ ವರದಿಯನ್ನು ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ. +ಪ್ರಸ್ತುತ ಸನ್ನಿವೇಶದಲ್ಲಿ ವರದಿ ಬಿಡುಗಡೆಯ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದು, ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಯಥಾವತ್ತು ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ. +ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿ ತಯಾರಿಸಿದ ವರದಿಗೆ ಆಗಿನ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ. ಅದರ ಹೊರತಾಗಿಯೂ ವರದಿಯನ್ನು ಕಾಂತರಾಜು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ನೀಡಿದ್ದರು. ಅದು ಊರ್ಜಿತವಲ್ಲ ಎಂಬ ತಾಂತ್ರಿಕ ಅಂಶಗಳು ಎದುರಾಗಿವೆ. ಕಾರ್ಯದರ್ಶಿಯವರ ಸಹಿಯನ್ನೊಳಗೊಂಡ ಕ್ರಮಬದ್ಧವಾದ ವರದಿಯನ್ನು ಮತ್ತೊಮ್ಮೆ ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. +ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ +ನವೆಂಬರ್‍ವರೆಗೂ ಕಾಲಾವಕಾಶ ನೀಡುವಂತೆ ಆಯೋಗದ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಸರಿಪಡಿಸಿದ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ ಎಂಟು ವರ್ಷಗಳ ಹಿಂದೆ ನಡೆದಿದ್ದ ಸಮೀಕ್ಷೆ ವರದಿಯನ್ನು ಪ್ರಸ್ತುತ ಅಂಗೀಕರಿಸಲು ಸಾಧ್ಯವೇ ಎಂಬ ಗೊಂದಲಗಳು ತಲೆ ಎತ್ತಿವೆ. +ಕಾಂತರಾಜು ಅವರ ಆಯೋಗದಲ್ಲಿ ಕೆಲವು ಜಾತಿಗಳ ಸಂಖ್ಯಾವಾರು ಪ್ರಮಾಣದ ಬಗ್ಗೆ ಆಕ್ಷೇಪಗಳೆವೆ. ಕೆಲವು ಸಮುದಾಯಗಳು ಇದನ್ನು ತೀವ್ರವಾಗಿ ವಿರೋಧಿಸಿಯೂ ಇವೆ. ಮನೆ ಮನೆ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಸಮೀಕ್ಷಾ ವರದಿಯಲ್ಲಿ ಕೆಲವು ಮಾಹಿತಿಗಳನ್ನು ಆ ವೇಳೆ ತಿರುಚಲಾಗಿದೆ ಎಂಬ ಆರೋಪಗಳಿವೆ. ಹಲವು ಗಂಭೀರ ಆರೋಪಗಳಿಂದ ಕೂಡಿರುವ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದು ಸರಿಯಲ್ಲ ಎಂಬ ವಾದಗಳು ಕೇಳಿಬಂದಿವೆ. +ರಾಜ್ಯಸರ್ಕಾರ ಸಮೀಕ್ಷೆ ನಡೆಸುವಾಗ ಆರ್ಥಿಕ, ಸಾಮಾಜಿಕ ಮಾಹಿತಿ ಸಂಗ್ರಹ ಎಂದು ಹೇಳಿತ್ತು. ವರದಿ ಸಿದ್ಧಗೊಂಡ ಬಳಿಕ ಅದನ್ನು ಜಾತಿ ಜನಗಣತಿ ಎಂದು ಪ್ರತಿಪಾದಿಸಲಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸೌಲಭ್ಯಗಳ ಹಂಚಿಕೆ ಹಾಗೂ ಸಾಮಾಜಿಕ ನ್ಯಾಯಗಳ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾತಿ ಜನಸಂಖ್ಯೆಯ ಮಾಹಿತಿಗಳು ಅಗತ್ಯ. ಆದರೆ ಅದನ್ನು ಕ್ರೂಢೀಕರಿಸಲು ಕರಾರುವಕ್ಕಾದ ಸಮೀಕ್ಷೆಗಳು ನಡೆಯಬೇಕು. ದೇಶದಲ್ಲಿ ಜನಗಣತಿಗೆ ಭಾರತೀಯ ಗಣತಿ ಆಯೋಗಕ್ಕೆ ಮಾತ್ರ ಅಕಾರ ಇದೆ ಎಂದು ಸುಪ್ರೀಂಕೋರ್ಟ್ ತೀಪೆರ್ದರಲ್ಲಿ ಸ್ಪಷ್ಟಪಡಿಸಿದೆ. +ಹೀಗಿರುವಾಗ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆದಿದೆ ಎಂದು ಹೇಳಲಾದ ಸಮೀಕ್ಷಾ ವರದಿ ಕಾನೂನಾತ್ಮಕವಾಗಿ ಊರ್ಜಿತವೇ ಎಂಬುದು ಪ್ರಶ್ನಾರ್ಹವಾಗಿದೆ. ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಲು ಮುಂದಾದರೆ ಮತ್ತಷ್ಟು ಪ್ರತಿಭಟನೆಗಳು ಎದುರಾಗುವ ಸಾಧ್ಯತೆಯಿದೆ. +ಜೆಡಿಎಸ್, ಬಿಜೆಪಿ ಅಕಾರ ನಡೆಸಿದ ಸಂದರ್ಭದಲ್ಲಿ ವರದಿಯ ತಂಟೆಗೆ ಹೋಗಿರಲಿಲ್ಲ. ಸಿದ್ಧರಾಮಯ್ಯ ಅದನ್ನೇ ಗುರಿಯಾಗಿಟ್ಟುಕೊಂಡು ಹಲವು ಬಾರಿ ತಗಾದೆ ತೆಗೆದಿದ್ದರು. ಈಗ ಸಿದ್ದರಾಮಯ್ಯನವರೇ ಅಧಿಕಾರದಲ್ಲಿರುವುದರಿಂದ ವರದಿಯ ಅಂಗೀಕಾರದ ಅನಿವಾರ್ಯತೆ ಎದುರಾಗಿದೆ. +ಇದಕ್ಕೆ ಪೂರಕವಾಗಿ ಎಐಸಿಸಿ ಕೂಡ ದೇಶಾದ್ಯಂತ ಜಾತಿ ಜನಗಣತಿ ನಡೆಯಬೇಕು ಎಂದು ಪ್ರತಿಪಾದಿಸಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಈ ರೀತಿಯ ಸಮೀಕ್ಷೆ ನಡೆಯಲಿದೆ ಮತ್ತು ಅವು ಅಂಗೀಕಾರಗೊಳ್ಳಲಿವೆ ಎಂದು ರಾಹುಲ್‍ಗಾಂಧಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅದಕ್ಕೆ ದನಿಗೂಡಿಸಿದ್ದಾರೆ. +ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ +ಆದರೆ ಕಾನೂನಾತ್ಮಕವಾಗಿ ಸಾಕಷ್ಟು ತೊಂದರೆಗಳು, ಗೊಂದಲಗಳು ಇರುವುದರಿಂದ ರಾಜ್ಯಸರ್ಕಾರ ವರದಿ ಅಂಗೀಕರಿಸಿದರೆ ನ್ಯಾಯಾಲಯದಲ್ಲಿ ಅದು ಮೇಲುಗೈ ಸಾಧಿಸಲಿದೆಯೇ ಎಂಬುದು ಚರ್ಚೆಗೊಳಗಾಗುತ್ತಿದೆ. ಒಂದು ವೇಳೆ ಸರ್ಕಾರ ಹಿಂದಿನ ವರದಿಯನ್ನು ಅಂಗೀಕರಿಸಿ ಲೋಪದೋಷಗಳ ಪರಿಷ್ಕರಣೆಗೆ ಮತ್ತೊಂದು ಸಮೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆಯೂ ಸಮಾಲೋಚನೆ ನಡೆದಿವೆ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_46_333_3.txt b/eesanje/url_46_333_3.txt new file mode 100644 index 0000000000000000000000000000000000000000..250c344976ec66cbd097eef2d1bdfa994f73f8a6 --- /dev/null +++ b/eesanje/url_46_333_3.txt @@ -0,0 +1,9 @@ +ಯುವ ದಸರಾ, ಏರ್ ಶೋ : ಕಂಗೊಳಿಸಲಿದೆ ಸಾಂಸ್ಕೃತಿಕ ನಗರಿ +ಮೈಸೂರು, ಅ. 11- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಅ. 18ರಿಂದ ಯುವ ದಸರಾ ನಡೆಯಲಿದ್ದು ಅ. 23ರಂದು ಏರ್ ಶೋ ಹಮ್ಮಿಕೊಳ್ಳಲಾಗಿದೆ. ದಸರಾ ಸಿದ್ಧತೆ ಕುರಿತು ಅರಮನೆ ಮಂಡಳಿ ಕಚೇರಿಯಲ್ಲಿ ಜಿಲ್ಲಾಕಾರಿ ಡಾ. ಕೆ. ವಿ. ರಾಜೇಂದ್ರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. +ಐದು ವರ್ಷಗಳ ಬಳಿಕ ದಸರಾ ಮಹೋತ್ಸವದಲ್ಲಿ ಏರ್ ಶೋ ಆಯೋಜಿಸಲಾಗಿದೆ. ಅ. 22ರಂದು ಏರ್ ಶೋ ರಿಹರ್ಸಲ್ ಹಾಗೂ ಅ.23ರಂದು ಪೂರ್ಣಪ್ರಮಾಣದ ಏರ್ ಶೋ ಆಯೋಜನೆ ಮಾಡಲಾಗಿದೆ ಎಂದು ಅವರು ವಿವರಿಸಿದರು. ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಸಂಜೆ 4 ಗಂಟೆಗೆ ಏರ್ ಶೋ ಆರಂಭವಾಗಲಿದ್ದು, ಒಟ್ಟು 45 ನಿಮಿಷ ಏರ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು. +ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ +ಈ ಬಾರಿ ಬರದ ಪರಿಣಾಮ ಸರ್ಕಾರದ ಮಾರ್ಗಸೂಚಿಯನ್ವಯ ಸಾಂಪ್ರದಾಯಿಕ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಲು ಸಿದ್ದತೆ ಮಾಡಲಾಗುತ್ತಿದೆ, ದಸರಾಗೆ ಜನರನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು. ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿಗರ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಚಿಂತನೆಯಿದೆ ಎಂದು ಡಿಸಿ ರಾಜೇಂದ್ರ ಹೇಳಿದರು. +ಎಸ್‍ಪಿ ಸೀಮಾ ಲಾಟ್ಕರ್ ಮಾತನಾಡಿ, ಅ. 18 ರಿಂದ 21ರವರೆಗೆ ಯುವ ದಸರಾ ಆಯೋಜನೆ ಮಾಡಲಾಗಿದ್ದು ಉದ್ಘಾಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ಕನ್ನಡ ಹಿನ್ನೆಲೆ ಗಾಯಕ ಸಂಚಿತ್ ಹೆಗ್ಡೆ ಮತ್ತು ಅವರ ತಂಡ ಯುವ ದಸರಾದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದರು. +ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಸಂಭ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಸಂಜೆ 6.30 ರಿಂದ ರಾತ್ರಿ 10.30 ರವರಿಗೆ ಯುವ ದಸರಾ ನಡೆಯಲಿದೆ ಎಂದು ಹೇಳಿದರು. +ಪಾಕ್‌ನಲ್ಲಿ ಭಾರತದ ಮತ್ತೊಬ್ಬ ಮೋಸ್ಟ್ ವಾಂಟೆಡ್ ಉಗ್ರನನ್ನ ಹತ್ಯೆಮಾಡಿದ ‘ಅಪರಿಚಿತರು’ +ಮೊದಲ ದಿನ ಹಾಸ್ಯನಟ ಹಾಗೂ ಸಂಗೀತ ನಿರ್ದೇಶಕರಾದ ಸಾಧು ಕೋಕಿಲ ಮತ್ತು ತಂಡದಿಂದ ಸಂಗೀತ ಸಂಜೆ, ಕನ್ನಡದಾಲ್ ಒಕೆ ತಂಡದಿಂದ ಸಂಗೀತ ಕಾರ್ಯಕ್ರಮ, ಬಾಲಿವುಡ್ ಹಾಡುಗಾರರು ಕೂಡ ಈ ಬಾರಿ ಯುವ ದಸರಾದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ಸ್ಥಳೀಯ ಪ್ರತಿಭೆಗಳಿಗೂ ಯುವ ದಸರಾ ಸಂಭ್ರಮದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಸೀಮಾ ಲಾಟ್ಕರ್ ತಿಳಿಸಿದರು. \ No newline at end of file diff --git a/eesanje/url_46_333_4.txt b/eesanje/url_46_333_4.txt new file mode 100644 index 0000000000000000000000000000000000000000..0a4dc30408f0fa394e214a4ae399ab7f04673633 --- /dev/null +++ b/eesanje/url_46_333_4.txt @@ -0,0 +1,6 @@ +ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ +ಬೆಂಗಳೂರು,ಅ.11- ಅತ್ತಿಬೆಲೆ ಪಟಾಕಿ ಬೆಂಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಸೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. +ಬೆಂಗಳೂರು ನಗರ ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಸೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. +ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..? +ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನ ಆಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.ಹಸಿರು ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಕಾರಣರಾದ ಮತ್ತು ಅಸಮರ್ಪಕ ವರದಿ ಸಲ್ಲಿಸಲು ಕಾರಣರಾದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ಜಂಟಿ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಸೇವಾ ನಿಯಮಗಳ ಅನ್ವಯ ಅಮಾನತುಗೊಳಿಸಲಾಗಿದೆ. +ಅ.7ರಂದು ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಮಂದಿ ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಮೇಲಿನ ಅಧಿಕಾರಿಗಳೇ ಕಾರಣ ಎಂದು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. \ No newline at end of file diff --git a/eesanje/url_46_333_5.txt b/eesanje/url_46_333_5.txt new file mode 100644 index 0000000000000000000000000000000000000000..41450cd0c23222e6df59ef792b0ff641ee12f67d --- /dev/null +++ b/eesanje/url_46_333_5.txt @@ -0,0 +1,8 @@ +ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..? +ಬೆಂಗಳೂರು,ಅ.11- ಬಡವರ ಪಾಲಿನ ಅನ್ನಪೂರ್ಣೇಶ್ವರಿ ಎಂದೆ ಪ್ರಸಿದ್ಧಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸಾದ ಇಂದಿರಾ ಕ್ಯಾಂಟಿನ್‍ಗಳಿಗೆ ಇನ್ನು ಓಪನಿಂಗ್ ಭಾಗ್ಯ ಸಿಕ್ಕಿಲ್ಲ.ಇದನ್ನು ಗಮನಿಸಿದರೆ ಬಿಬಿಎಂಪಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸಿಗೆ ಎಳ್ಳು ನೀರು ಬಿಟ್ರ ಎಂಬ ಅನುಮಾನ ಕಾಡತೊಡಗಿದೆ. +ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬರ್ತಿದಂಗೆ ಇಂದಿರಾ ಕ್ಯಾಂಟೀನ್ ಅನ್ನೂ ಮರು ಓಪನ್ ಮಾಡ್ತಿವಿ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರೂ ಆದರೆ, ಇದುವರೆಗೂ ಇಂದಿರಾ ಕ್ಯಾಂಟಿನ್‍ಗಳು ಓಪನ್ ಆಗದಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. +ಚೀನಾಗೆ ನೆರವು ನೀಡಿದ್ದನ್ನು ಒಪ್ಪಿಕೊಂಡ ಅಮೆರಿಕನ್ ನಾವಿಕ +ಕಳೆದ ಬಿಜೆಪಿ ಸರ್ಕಾರದಲ್ಲಿ ಬೆಂಗಳೂರಿನ ಕೇಲವು ಕಡೆ ಇಂದಿರಾ ಕ್ಯಾಂಟೀನ್ ಗಳನ್ನ ಬಂದ್ ಮಾಡಲಾಗಿತ್ತು. ಆದರೆ, ರಾಜ್ಯದಲ್ಲಿ ಮತ್ತೆ ಕಾಂಗ್ರೇಸ್ ಸರ್ಕಾರ ಬರ್ತಿದಂಗೆ ಬಾಗಿಲು ಮುಚ್ಚಿದ ಕ್ಯಾಂಟೀನ್ ಗಳನ್ನೂ ರೀ ಓಪನ್ ಮಾಡ್ತಿವಿ ಅಂತ ಸಿಎಂ ಹೇಳಿಕೆ ನೀಡಿದ್ರು. +ನಗರದ ಕಾಲೇಜು, ಬಸ್ ಸ್ಟಾಪ್ , ವಿಧಾನಸೌಧ, ಏರ್‍ಪೆಪೋರ್ಟ್‍ಗಳಲ್ಲೂ ಕೂಡ ಕ್ಯಾಂಟೀನ್ ಓಪನ್ ಮಾಡ್ತಿವಿ ಅಂತ ಭರವಸೆ ನೀಡಿದ್ದರು. ಇದರ ಜತೆಗೆ ಊಟದಲ್ಲೂ ವಿಶೇಷತೆ ಇರಲಿದೆ ಎಂದು ಹೇಳಿ ನಾಲ್ಕು ತಿಂಗಳು ಕಳೆದರೂ ಕ್ಯಾಂಟಿನ್‍ಗಳು ಮಾತ್ರ ಓಪನ್ ಆಗುತ್ತಿಲ್ಲ. +ಹರಿದಾಡುತ್ತಿದೆ ಇಸ್ರೇಲ್-ಹಮಾಸ್ ಯುದ್ಧದ ನಕಲಿ ವಿಡಿಯೋಗಳು +ಹಾಗಾದ್ರೆ ಇಂದಿರಾ ಕ್ಯಾಂಟೀನ್ ಓಪನ್ ಮಾಡೋದಕ್ಕೆ ಸರ್ಕಾರಕ್ಕೆ ಮನಸು ಇಲ್ವ,,? ಅಥವಾ ಗ್ಯಾರಂಟಿ ಯೋಜನೆ ಜಾರಿಯಿಂದ ಕ್ಯಾಂಟೀನ್ ಗೆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲವೋ ಎನ್ನೋದು ಆರ್ಥವಾಗುತ್ತಿಲ್ಲ. ಸದ್ಯ ಬಿಬಿಎಂಪಿ ವ್ಯಾಪ್ತಿಯಲ್ಲಿ 176 ಕ್ಯಾಂಟೀನ್ ಗಳು ಇವೇ ಆದರೆ, ಈಗ 30 ಕ್ಯಾಂಟೀನ್ ಗಳು ಬಾಗಿಲು ಬಂದ್ ಅಗಿವೇ,, ಅ„ಕಾರಕ್ಕೆ ಬರ್ತಿದಂಗೆ ಬಡವರ ಹಸಿವು ನಿಗಿಸೋ ಕ್ಯಾಂಟೀನ್ ರೀ ಓಪನ್ ಮಾಡ್ತಿನಿ ಅಂದ ಸರ್ಕಾರ ಈಗ ಯಾಕೆ ಓಪನ್ ಮಾಡ್ತಿಲ್ಲ,, ಸಿದ್ದರಾಮಯ್ಯ ಕನಸಿನ ಕೂಸಿಗೆ ತಣ್ಣಿರು ಎರಚಿತ ಗ್ಯಾರಂಟಿ ಯೋಜನೆಗಳು ಎಂಬ ಅನುಮಾನ ಕಾಡತೊಡಗಿದೆ. \ No newline at end of file diff --git a/eesanje/url_46_333_6.txt b/eesanje/url_46_333_6.txt new file mode 100644 index 0000000000000000000000000000000000000000..96d9a6510b9582bf02de156854723f61f5beaf0d --- /dev/null +++ b/eesanje/url_46_333_6.txt @@ -0,0 +1,5 @@ +ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ನಾಲ್ವರ ಬಂಧನ, 14 ಕೆಜಿ ಬೆಳ್ಳಿ ಆಭರಣ ವಶ +ಬೆಂಗಳೂರು,ಅ.10- ಜೈನ ಮಂದಿರದಲ್ಲಿ ಕನ್ನಕಳವು ಮಾಡಿದ್ದ ನಾಲ್ವರು ಅಂತರಾಜ್ಯ ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 9.75 ಲಕ್ಷ ರೂ. ಮೌಲ್ಯದ 14 ಕೆ.ಜಿ. ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಆದಿನಾಥ ಜೈನ ಮಂದಿರದಲ್ಲಿ ಸೆ.9ರಂದು ರಾತ್ರಿ ಕಳ್ಳರು ದೇವಾಲಯದ ಒಳಗೆ ನುಗ್ಗಿ ಬೆಳ್ಳಿ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಮಾಲು ಪತ್ತೆ ಮಾಡಲು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಒಂದು ವಿಶೇಷ ತಂಡವನ್ನು ರಚಿಸಿದ್ದರು. +ಈ ತಂಡವು ಆರೋಪಿಗಳ ಬಗ್ಗೆ ಹಲವು ಮಾಹಿತಿಗಳನ್ನು ಸಂಗ್ರಹಿಸಿ, ರಾಜಸ್ತಾನ ರಾಜ್ಯದ ಪಾಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ , ಒಟವಾಟೋ ಕಿ ಪಾಲಿ ಎಂಬ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಕಳವು ಮಾಡಿದ್ದ 14 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 9.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. +ಒಂದೇ ಮಳೆಗೆ ನಲುಗಿದ ಬೆಂಗಳೂರು, 50 ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳ +ಈ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್ ಮತ್ತು ಕಬ್ಬನ್ ಪಾರ್ಕ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಅವರ ಮಾರ್ಗದರ್ಶನ ಲ್ಲಿ ಇನ್ಸ್‍ಪೆಕ್ಟರ್ ರವಿ ಅವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ತಂಡದ ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ. \ No newline at end of file diff --git a/eesanje/url_46_333_7.txt b/eesanje/url_46_333_7.txt new file mode 100644 index 0000000000000000000000000000000000000000..83695b8580fef525a27ca3db551417c6b8a864d4 --- /dev/null +++ b/eesanje/url_46_333_7.txt @@ -0,0 +1,11 @@ +ಘನತ್ಯಾಜ್ಯ ವಿಲೇವಾರಿಗೆ 100 ಎಕರೆ ಜಾಗ +ಬೆಂಗಳೂರು,ಅ.10- ಬೆಂಗಳೂರಿನ ನಾಲ್ಕು ಮೂಲೆಗಳನ್ನು ಘನತ್ಯಾಜ್ಯ ವಿಲೇವಾರಿಗೆ ತಲಾ 100 ಎಕರೆ ಜಾಗ ಗುರುತಿಸಲಾಗುವುದೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ತಿಪ್ಪೇಗೊಂಡನಹಳ್ಳಿ ಜಲಾಶಯ ವ್ಯಾಪ್ತಿಯ ವಿವಿಧ ವಲಯಗಳ ಬಫರ್ ಅಂತರ ಕಡಿಮೆ ಮಾಡುವುದು ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. +ಘನತ್ಯಾಜ್ಯ ವಿಲೇವಾರಿಗೆ ಗುರುತಿಸಲಾದ ಅರಣ್ಯ ಭೂಮಿಯಾಗಿದ್ದರೆ ಪರ್ಯಾಯ ಜಾಗವನ್ನು ಅರಣ್ಯ ಇಲಾಖೆಗೆ ನೀಡಲಾಗುವುದು, ಇಲ್ಲವೇ ಹಣ ನೀಡಲಾಗುವುದು ಎಂದರು. ಆನೇಕಲ್, ದಾಸರಹಳ್ಳಿ ಸೇರಿದಂತೆ ಕೆಲವೆಡೆ ಊರಿನ ಬಳಿಯೇ ಕಸ ವಿಲೇವಾರಿ ಘಟಕಗಳಿವೆ. ಅವುಗಳನ್ನು ಸ್ಥಳಾಂತರ ಮಾಡಲು ಸಿದ್ದತೆ ಮಾಡಲಾಗಿದೆ, ಕಲ್ಲುಗುಡ್ಡೆಗಳಿಂದ ಕೂಡಿದ ಪ್ರದೇಶ ವಾಸನೆ ಬರದಂತಹ ಜಾಗವನ್ನು ಗುರುತಿಸಲು ಸೂಚಿಸಲಾಗಿದೆ ಎಂದರು. ಬೆಂಗಳೂರು ಸುತ್ತಮುತ್ತಲಿನ ಅರಣ್ಯ ಮತ್ತು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಇಂದಿನ ಸಭೆ ನಡೆಸಲಾಗಿತ್ತು. +ಬಿಡಿಎ ಮತ್ತು ಬೆಂಗಳೂರು ಜಲಮಂಡಳಿ ಅರಣ್ಯ ಇಲಾಖೆಯಿಂದ ತೊಂದರೆಯಾಗುತ್ತಿದ್ದು, ಬಫರ್ ವಲಯಗಳಲ್ಲಿ ಮರಗಳಿಲ್ಲದಿದ್ದರೆ ಆಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೌಖಿಕವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. 2003ರಲ್ಲಿ ಸುಮಾರು ಒಂದು ಸಾವಿರ ನಿವೇಶನಗಳನ್ನು ಬಿಡಿಎಯಿಂದ ಹಂಚಿಕೆ ಮಾಡಲಾಗಿದೆ. ಅಂತಹ ನಿವೇಶನಗಳಲ್ಲಿ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ ಆಗುತ್ತಿತ್ತು. ಮರಗಳಿಲ್ಲದಿದ್ದರೆ ಆಕ್ಷೇಪ ಮಾಡುವುದಿಲ್ಲ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದೆ ಎಂದರು. +ತಿಪ್ಪೆಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲವು ಕಾನೂನು ಬಾಹಿರ ಕಟ್ಟಡಗಳು ತಲೆ ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ತಿಪ್ಪೆಗೊಂಡನಹಳ್ಳಿ ಜಲಾಶಯದ ಮಾಲಿನ್ಯವಾಗದಂತೆ ನೆಲಮಂಗಲ, ಡಾಬಸ್‍ಪೇಟೆ, ಶಿವಗಂಗೆ ಪ್ರದೇಶದಲ್ಲಿ ಕೆಂಪು ವಲಯಗಳ ಕೈಗಾರಿಕೆಗಳನ್ನು ಮಾಡಬಾರದು ಹಾಗೂ ರಾಜಕಾಲುವೆಯ 500 ಮೀ. ಅಂತರದಲ್ಲಿ ಯೋಜನೆಗೆ ಅನುಮೋದನೆ ನೀಡಬಾರದೆಂಬ ನಿಯಮವಿದೆ, ಇಲ್ಲಿನ ಜನರ ಸಮಸ್ಯೆಗಳಿಗೆ ಖಾಯಂ ಪರಿಹಾರ ರೂಪಿಸಲು ಕಾನೂನು ನಗರಾಭಿವೃದ್ಧಿ ಇಲಾಖೆ, ಅರಣ್ಯ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕ್ರಮ ಕೈಗೊಳ್ಳಲಿದೆ ಎಂದರು. +ಸೋಲಾರ್ ವಿದ್ಯುತ್ತಿಪ್ಪೆಗೊಂಡನಹಳ್ಳಿ ಹಾಗೂ ಹೆಸರಘಟ್ಟ ಜಲಾಶಯದ ಬಳಿ ಬೆಂಗಳೂರು ಜಲಮಂಡಳಿಯ ಜಮೀನು ಇದ್ದು ಆ ಜಮೀನಿನಲ್ಲಿ ಮಂಡಳಿಯ ಬಳಕೆಗಾಗಿ ಸೋಲಾರ್ ವಿದ್ಯುತ್ ಉತ್ಪಾದಿಸಲು ತೀರ್ಮಾನಿಸಲಾಗಿದೆ ಎಂದರು. ಜಲಮಂಡಳಿಯು ಒಂದು ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸುತ್ತಿದೆ. ಪ್ರತಿ ಯುನಿಟ್‍ಗೆ 6 ರೂ. ವೆಚ್ಚ ತಗುಲುತ್ತಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆಯಾದರೆ ಪ್ರತಿ ಯುನಿಟ್‍ಗೆ 4 ರೂ. ವೆಚ್ಚವಾಗಲಿದೆ. ಉತ್ಪಾದಿತ ಸೌರ ವಿದ್ಯುತನ್ನು ಜಲಮಂಡಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು. +ಮೇಕೆದಾಟು ಜಲಾಶಯದಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ರಾಮನಗರ, ಮಂಗಳೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ನೀಡಲಾಗುವುದು. ಬೆಂಗಳೂರು ಸುತ್ತಮುತ್ತ ಆನೆ, ಚಿರತೆ ಹಾವಳಿ ತಡೆಗೆ ರಕ್ಷಣೆ ಒದಗಿಸುವಂತೆ ಅರಣ್ಯ ಇಲಾಖೆ ಕೋರಿದ್ದು, ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು. +470 ಕೋಟಿ ರೂ. ಸೈಬರ್ ವಂಚನೆ ಪತ್ತೆ, 27.68 ಕೋಟಿ ರೂ.ವಾರಸುದಾರರಿಗೆ ಹಸ್ತಾಂತರ +ಪ್ರತಿಕ್ರಿಯೆ ಇಲ್ಲತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಣಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ನಮ್ಮ ರೈತರ ಹಿತವನ್ನು ಕಾಪಾಡಿದ್ದೇವೆ. ರಾಜ್ಯದಲ್ಲಿರುವ ಬರ ಪರಿಸ್ಥಿತಿ ಕೃತಕವೋ ವಾಸ್ತವವೋ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರದ ತಂಡ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದೆ ಎಂದರು. ಬಿಜೆಪಿಯವರು ಮಾರ್ಗದರ್ಶನ ಮಾಡಿದ್ದಂತೆ ನಾವು ಆರ್ ಆರ್ ನಗರದ ವಿಧಾನ ಸೌಧ ಕ್ಷೇತ್ರದಲ್ಲಿ ಅನುದಾನದ ವಿಚಾರದಲ್ಲಿ ಕ್ರಮಕೈಗೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಐಸಿಸಿ ಪ್ರಶಸ್ತಿಗಾಗಿ ಗಿಲ್-ಸಿರಾಜ್ ಫೈಟ್ +ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಂಸದರಾದ ಡಿವಿ ಸದಾನಂದ, ಡಿಕೆ ಸುರೇಶ್, ಶಾಸಕರಾದ ಎಸ್‍ಟಿ ಸೋಮಶೇಖರ್, ಶ್ರೀನಿವಾಸ್, ಎಸ್ ರವಿ, ಶಶಿ ಕಿರಣ್ ಶೆಟ್ಟಿ, ಜಲಸಂಪನ್ಮೂಲ ಇಲಾಖೆ ಅಪರಮುಖಿ ಕಾರ್ಯದರ್ಶಿ ರಾಕೇಶ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್ ಮತ್ತಿತರರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_333_8.txt b/eesanje/url_46_333_8.txt new file mode 100644 index 0000000000000000000000000000000000000000..2dcea37afe9d3d8c8767746939bc52354a0b2b7b --- /dev/null +++ b/eesanje/url_46_333_8.txt @@ -0,0 +1,8 @@ +ಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ +ಬೆಂಗಳೂರು, ಅ. 10- ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. +ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು. +ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ +ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯ ದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಕಾರಿಗಳು ಮಾಹಿತಿ ನೀಡಿದರು. +ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೂಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದ ರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು. +ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..? +ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_333_9.txt b/eesanje/url_46_333_9.txt new file mode 100644 index 0000000000000000000000000000000000000000..261a29e0aaf86a203607f90c0b392e5877c6799b --- /dev/null +++ b/eesanje/url_46_333_9.txt @@ -0,0 +1,10 @@ +ನಿಗಮ ಮಂಡಳಿಗಳಿಗೆ 30 ಶಾಸಕರ ಪಟ್ಟಿ ಹೈಕಮಾಂಡ್‍ಗೆ ಸಲ್ಲಿಕೆ +ಬೆಂಗಳೂರು,ಅ.10- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆಯುತ್ತಾ ಬಂದಿದ್ದು, ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡದಿರುವ ಕುರಿತು ಅಸಮಾಧಾನ ಹೊಗೆಯಾಡುತ್ತಿರುವ ನಡುವೆಯೇ, 30 ಮಂದಿ ಶಾಸಕರನ್ನು ಪ್ರಮುಖ ನಿಗಮಗಳಿಗೆ ಅಧ್ಯಕ್ಷರನ್ನಾಗಿ ಮಾಡುವ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಲ್ಲಿಸಿದ್ದಾರೆ. +ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದು, ಶೇ. 50-50 ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. +ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ 70 ಕ್ಕೂ ಹೆಚ್ಚು ನಿಗಮಗಳಿಗೆ ಏಕಕಾಲಕ್ಕೆ ತಲಾ 30 ತಿಂಗಳ ಅವಧಿಯಂತೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ನೇಮಿಸಲು ಚಿಂತನೆ ನಡೆದಿದೆ. ಇದನ್ನು ಮೂರು ಭಾಗಗಳಾಗಿ ವಿಂಗಡಿಸಿ 24 ತಿಂಗಳುಗಳಿಗೆ ಸೀಮಿತಗೊಳಿಸಿದರೆ ಇನ್ನಷ್ಟು ಮಂದಿಗೆ ಅಧಿಕಾರ ಹಂಚಿಕೆ ಮಾಡಬಹುದು. ಆಗ ಎಲ್ಲರಿಗೂ ಆದ್ಯತೆ ನೀಡಲು ಸಾಧ್ಯವಾಗಲಿದೆ ಎಂಬ ವಾದಗಳು ಕೇಳಿಬಂದಿದೆ. +ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ +ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಶಾಸಕರನ್ನು ಓಲೈಸಲು ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿಗಮಮಂಡಳಿಗಳಲ್ಲಿ ಕಾರ್ಯಕರ್ತರಿಗೆ, ಮುಖಂಡರಿಗೆ ಹೆಚ್ಚಿನ ಅವಕಾಶ ನೀಡಬೇಕು. ಅಕಾರ ಅವಕಾಶ ವಂಚಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. +ಶಾಸಕರಿಗೆ ಆದ್ಯತೆ ನೀಡುತ್ತಾ ಹೋದರೆ ಕಾಂಗ್ರೆಸ್‍ನ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಳ್ಳುತ್ತಾರೆ. ಲೋಕಸಭೆ, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇದು ಅಡ್ಡಪರಿಣಾಮ ಬೀರಲಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಒತ್ತು ನೀಡಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ಆಗ್ರಹವಾಗಿದೆ. +ಆದರೆ ಇದರ ಹೊರತಾಗಿಯೂ ಮುಖ್ಯಮಂತ್ರಿಯವರು 30 ಮಂದಿ ಶಾಸಕರ ಪಟ್ಟಿಯನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದು, ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೈಕಮಾಂಡ್ ಹೇಳಿದೆ ಎಂದು ಮೂಲಗಳು ತಿಳಿಸಿವೆ. +ಶತಕ ಸಿಡಿಸಿ ವಿಶಿಷ್ಟ ದಾಖಲೆ ಬರೆದ ಡೇವಿಡ್ ಮಲಾನ್ +ಈ ಹಿಂದೆ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಸದಸ್ಯರ ಆಯ್ಕೆ ವೇಳೆಯಲ್ಲೂ ರಾಜ್ಯ ಕಾಂಗ್ರೆಸಿಗರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪಗಳಿದ್ದವು. ಕೆಲವು ಸಚಿವರ ವಿರೋಧವನ್ನೂ ಲೆಕ್ಕಿಸದೆ ಮೂರು ಸದಸ್ಯರನ್ನು ವಿಧಾನಪರಿಷತ್‍ಗೆ ಚುನಾಯಿಸಲಾಗಿತ್ತು. ಈಗ ನಿಗಮಮಂಡಳಿ ನೇಮಕಾತಿ ವಿಷಯದಲ್ಲೂ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಿದೆಯೇ, ಇಲ್ಲವೇ ಎಂಬುದು ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_334_1.txt b/eesanje/url_46_334_1.txt new file mode 100644 index 0000000000000000000000000000000000000000..9a7f5ff30503ac02791f1737a80be12b246d74be --- /dev/null +++ b/eesanje/url_46_334_1.txt @@ -0,0 +1,9 @@ +ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..? +ಬೆಂಗಳೂರು,ಅ.10-ಬಿಗ್‍ಬಾಸ್‍ಗೆ ನಾನು ಸ್ರ್ಪಧಿಯಾಗಿ ಹೋಗಿರಲಿಲ್ಲ. ಖಾಸಗಿ ಚಾನೆಲ್‍ನ ಸ್ನೇಹಿತರು ಆಹ್ವಾನಿಸಿದ್ದಕ್ಕಾಗಿ ಎರಡು ಮೂರು ಗಂಟೆ ಭಾಗವಹಿಸಿದ್ದೆ. ಆದರೆ ನಾನೇ ಸ್ರ್ಪಧಿ ಎಂದು ಉದ್ದೇಶಪೂರ್ವಕವಾಗಿಯೇ ಫ್ರಾಂಕ್ ಮಾಡಲಾಗಿತ್ತು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. +ಮಾಜಿ ಸಚಿವ ಡಾ. ಸುಧಾಕರ್ ಅವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ಶಾಸಕರು ಬಿಗ್‍ಬಾಸ್‍ಗೆ ಹೋಗಿದ್ದರಿಂದಾಗಿ ನಗೆಪಾಟಲಿನ ವಾತಾವರಣ ನಿರ್ಮಾಣವಾಗಿದೆ ಎಂದು ಟೀಕೆ ಮಾಡಿದರು. ಇದಕ್ಕೆ ತಿರುಗೇಟು ನೀಡಿದ ಪ್ರದೀಪ್ ಈಶ್ವರ್, ಈ ಹಿಂದೆ ಚಿಕ್ಕಬಳ್ಳಾಪುರ ಉತ್ಸವ ಮಾಡಿ ದೊಡ್ಡ ದೊಡ್ಡ ಸ್ಟಾರ್‌ಗಳನ್ನೇ ಕರೆಸಿದ್ದಸುಧಾಕರ್‌ರವರುಸೋಲು ಕಂಡಿದ್ದಾರೆ. ಈಗ ನಾನು ಬಿಗ್‍ಬಾಸ್‍ಗೆ ಹೋಗಿದ್ದಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಕನಿಷ್ಠ ಸರಿಯಾಗಿ ವಿಮರ್ಶೆ ಮಾಡಲು ಅವರಿಗೆ ಬರುತ್ತಿಲ್ಲ ಎಂದರು. +ಟೀಕೆ ಮಾಡುವುದು ವಿರೋಧಪಕ್ಷದವರ ಹಕ್ಕು. ಒಂದು ವೇಳೆ ನಾನೇ ಸುಧಾಕರ್ ಅವರ ಸ್ಥಾನದಲ್ಲಿದ್ದರೆ ಆಟವೇ ಬೇರೆಯಾಗಿರುತ್ತಿತ್ತು. ನನ್ನ ಪ್ರಕಾರ ಸುಧಾಕರ್ ಅವರು ಬೆಳಿಗ್ಗೆಯಿಂದ ಸಂಜೆವರೆಗೂ ಚಾನಲ್‍ನಲ್ಲೇ ಕುಳಿತುಕೊಂಡಿರಬೇಕಿತ್ತು. ಬಿಗ್‍ಬಾಸ್‍ಗೆ ಹೋಗಿರುವುದು ನಗೆಪಾಟಲು ಎಂದಿದ್ದಾರೆ. ಅದೊಂದು ದೊಡ್ಡ ವೇದಿಕೆ. ಕೋಟ್ಯಂತರ ಜನ ನೋಡುತ್ತಾರೆ. ನಾನು ಯುವಜನರಿಗೆ ಒಂದಷ್ಟು ಸಕಾರಾತ್ಮಕ ಸಂದೇಶಗಳನ್ನು ನೀಡಬೇಕಿತ್ತು. ಈಗಾಗಲೇ ಹಲವಾರು ಮಾಧ್ಯಮಗಳಲ್ಲಿ, ವೇದಿಕೆಗಳಲ್ಲಿ ನನ್ನ ಅನಿಸಿಕೆಗಳನ್ನು ಹಂಚಿಕೊಂಡಿದ್ದೇನೆ. ಬಿಗ್‍ಬಾಸ್ ಕೂಡ ದೊಡ್ಡ ವೇದಿಕೆಯಾದ್ದರಿಂದ ಅದರಲ್ಲಿ ಭಾಗವಹಿಸಿದ್ದೆ ಎಂದರು. +ಪುರಾತನ ದೇವರ ವಿಗ್ರಹ ಕದ್ದಿದ್ದ ಕಳ್ಳನ ಬಂಧನ +ಶೋ ನಡೆಸುವ ಖಾಸಗಿ ಚಾನಲ್‍ನಲ್ಲಿ ನನ್ನ ಸ್ನೇಹಿತರಿದ್ದಾರೆ. ಅವರ ಮನವಿ ಮೇರೆಗೆ ಸೌಜನ್ಯದಿಂದ ನಾನು ಬಿಗ್‍ಬಾಸ್‍ಗೆ ಹೋಗಿದ್ದೆ. ಬೆಳಿಗ್ಗೆಯಿಂದ ಕ್ಷೇತ್ರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿದ್ದೆ. ಸಂಜೆ ಬೆಂಗಳೂರಿಗೆ ಬಂದು 8.30 ರ ವೇಳೆಗೆ ಶೋಗೆ ಹೋದೆ. 11.30 ರ ವೇಳೆಗೆ ವಾಪಸ್ ಬಂದೆ. ಚಾನಲ್‍ನವರು ಮಾರುಕಟ್ಟೆ ದೃಷ್ಟಿಯಿಂದ ನನ್ನನ್ನು ಸ್ರ್ಪಧಿ ಎಂದು ಫ್ರಾಂಕ್ ಮಾಡುವುದಾಗಿ ಹೇಳಿದರು. ಅನುಕೂಲವಾಗುವುದಾದರೆ ಆಗಲಿ ಎಂದು ನಾನು ಸುಮ್ಮನಿದ್ದೆ ಎಂದು ಹೇಳಿದರು. +ನಾನು ಬಿಗ್‍ಬಾಸ್‍ಗೆ ಅತಿಥಿಯಾಗಿ ಹೋಗಿದ್ದೇನೆ ಹೊರತು ಸ್ರ್ಪಧಿಯಲ್ಲ. ಅಲ್ಲಿರುವ ಸ್ರ್ಪಧಿಗಳು 100 ದಿನ ಮನೆಯವರಿಂದ ದೂರ ಇರುತ್ತಾರೆ. ಅವರನ್ನು ಪ್ರೇರೇಪಿಸುವ ಸಂದೇಶ ನೀಡುವುದು ನನ್ನ ಉದ್ದೇಶವಾಗಿತ್ತು. ನಾನು ಬಿಗ್‍ಬಾಸ್‍ಗೆ ಹೋಗಿದ್ದು ಏಕೆ ಎಂದು ಮಾಜಿ ಶಾಸಕರಿಗೆ ಅರ್ಥವಾಗಿಲ್ಲ. ಹೋಗಲಿ ಅವರು ಅಂದುಕೊಂಡತೆಯಾದರೂ ಸರಿಯಾಗಿ ಟೀಕೆ ಮಾಡಿಲ್ಲ. ಇನ್ನು ಕೆಲವು ಸಂಘಟನೆಗಳು ನನ್ನ ವಿರುದ್ಧ ವಿಧಾನಸಭಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಇದು ಅವರ ಅಸ್ತಿತ್ವದ ಪ್ರಶ್ನೆ. ನನ್ನ ಆಕ್ಷೇಪವೇನಿಲ್ಲ. ಟೀಕೆಗಳನ್ನು ಎದುರಿಸಲು ಸಿದ್ಧವಾಗಿಯೇ ರಾಜಕಾರಣಕ್ಕೆ ಬಂದಿದ್ದೇನೆ. ಇಂತವರಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು. +ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..! +ಬಿಗ್‍ಬಾಸ್‍ಗೆ ತೆರಳುವ ಮುನ್ನ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದ್ದೆ. ಪ್ರತಿಯೊಂದಕ್ಕೂ ಸರ್ಕಾರದ ಅನುಮತಿ ಕೇಳುವ ಅಗತ್ಯವಿಲ್ಲ. ನಮಗೂ ವೈಯಕ್ತಿಕ ಸ್ವಾತಂತ್ರವಿದೆ. ಕ್ಷೇತ್ರ ಬಿಟ್ಟು ಬಿಗ್‍ಬಾಸ್‍ನಲ್ಲಿ ಕುಳಿತುಕೊಳ್ಳಬೇಕೇ, ಬೇಡವೇ ಎಂಬುದರ ಅರಿವಿದೆ ಎಂದು ಹೇಳಿದರು. \ No newline at end of file diff --git a/eesanje/url_46_334_10.txt b/eesanje/url_46_334_10.txt new file mode 100644 index 0000000000000000000000000000000000000000..09b08d5fcda2e8abdce2225bc0e9cb94844350b6 --- /dev/null +++ b/eesanje/url_46_334_10.txt @@ -0,0 +1,9 @@ +ಪಟಾಕಿ ದುರಂತ : ನರಹತ್ಯೆ ಸೇರಿ ಗಂಭೀರ ಸೆಕ್ಷನ್‍ಗಳಡಿ ಕಾನೂನು ಕ್ರಮ +ಬೆಂಗಳೂರು, ಅ.8- ಅತ್ತಿಬೆಲೆ ಪಟಾಕಿ ದುರಂತದ ಪ್ರಕರಣದಲ್ಲಿ ಮೃತಪಟ್ಟ 12 ಮಂದಿಯ ಗುರುತನ್ನು ಪತ್ತೆ ಹಚ್ಚಲಾಗಿದ್ದು, ಶವವನ್ನು ಸಂಬಂಧಿತರಿಗೆ ಹಸ್ತಾಂತರಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನರಹತ್ಯೆ ಸೇರಿದಂತೆ ಕಠಿಣ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದ್ದಾರೆ. +ಅತ್ತಿಬೆಲೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟಾಕಿ ಮಾರಾಟದ ಮಳಿಗೆ ಮತ್ತು ಗೋಡನ್‍ಗಳಲ್ಲಿ ಅಗ್ನಿನಂದಕ ಸಲಕರಣೆಗಳನ್ನು ಇಟ್ಟಿರಲಿಲ್ಲ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ. +ಗೋಡನ್‍ನ ಮಾಲಿಕರು, ಆತನ ಪುತ್ರ, ಮ್ಯಾನೇಜರ್ ಸೇರಿದಂತೆ ಐವರ ವಿರುದ್ಧ ಸ್ಪೋಟಕ ಕಾನೂನು, ಕೊಲೆಯಲ್ಲದ ನರಹತ್ಯೆ ಆರೋಪ ಸೇರಿದಂತೆ ಕಠಿಣ ಕಾನೂನುಗಳಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಎಫ್‍ಎಸ್‍ಎಲ್, ಅಗ್ನಿಶಾಮಕ ಮತ್ತು ಸೀನಫ್ ಕ್ರೈಂ ತಜ್ಞರು ವರದಿ ನೀಡಲಿದ್ದಾರೆ. ಅದರ ನಂತರ ತನಿಖೆ ಮುಂದುವರೆಯಲಿದೆ ಎಂದು ಹೇಳಿದರು. +ಲೋಕಸಭೆ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಹೈಕಮಾಂಡ್‍ಗೆ ರವಾನೆ +ಈವರೆಗೂ 14 ಮೃತದೇಹಗಳು ಪತ್ತೆಯಾಗಿವೆ. ಅದರಲ್ಲಿ 12 ಮಂದಿಯ ಪಾರ್ಥೀವ ಶರೀರಗಳನ್ನು ಗುರುತಿಸಲಾಗಿದೆ. ಸಂಬಂಕರ ಮಾಹಿತಿ ಆಧರಿಸಿ ಶವಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.ಮುನ್ನೆಚ್ಚರಿಕೆ ಕ್ರಮವಾಗಿ ಪಟಾಕಿ ದಾಸ್ತಾನು ಮತ್ತು ಮಾರಾಟ ಮಳಿಗೆಗಳಲ್ಲಿ ಏನೆಲ್ಲಾ ಇರಬೇಕು, ಏನೆಲ್ಲಾ ಇಲ್ಲ ಎಂಬುದನ್ನು ತನಿಖೆ ನಡೆಸಲು ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಸೂಚನೆ ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳುತ್ತೇವೆ. ಎಲ್ಲವೂ ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು. +ಕಠಿಣ ಕಾನೂನಿನಡಿ ಪ್ರಕರಣ :ಘಟನೆ ಕುರಿತಂತೆ ಸ್ಥಳೀಯ ಕಾರ್ಮಿಕ ಲೋಗೇಶ್ವರನ್ ನೀಡಿರುವ ದೂರು ಆಧರಿಸಿ, ಅತ್ತಿಬೆಲೆಯ ಶ್ರೀ ಬಾಲಾಜಿ ಟ್ರೇಡರ್ಸ್‍ನ ಮಾಲಿಕ ರಾಮಸ್ವಾಮಿ ರೆಡ್ಡಿ, ಇವರ ಪುತ್ರ ನವೀನ್‍ರೆಡ್ಡಿ, ಸಂಸ್ಥೆ ವ್ಯವಸ್ಥಾಪಕ ಲೋಕೇಶ್, ಗೋಧಾಮಿಗೆ ಕಟ್ಟಡ ಬಾಡಿಗೆ ನೀಡಿದ ಶ್ರೀಮತಿ ಜಯಮ್ಮ ಹಾಗೂ ಟ್ರೇಡರ್ಸ್‍ನ ಅನಿಲ್‍ರೆಡ್ಡಿ ಯವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. +ಪಶ್ಚಿಮ ಬಂಗಾಳದ ನಗರಾಭಿವೃದ್ಧಿ ಸಚಿವ ನಿವಾಸದ ಮೇಲೆ ಸಿಬಿಐ ದಾಳಿ +ಎಫ್‍ಐಆರ್‍ನಲ್ಲಿ ಸೋಟಕ ನಿರ್ವಹಣಾ ಕಾಯಿದೆ ಸೆಕ್ಷನ್ 9 ಬಿ, ಭಾರತೀಯ ದಂಡ ಸಂಹಿತೆ 427 (ದುರ್ನಡತೆಯಿಂದ ನಷ್ಟ ಉಂಟು ಮಾಡುವುದು), 285 (ಉದಾಸೀನತೆಯಿಂದ ಬೆಂಕಿ ಅನಾಹುತಕ್ಕೆ ಕಾರಣವಾಗುವುದು), 286 (ಸೋಟಕಗಳ ನಿರ್ಲಕ್ಷತೆ ನಿರ್ವಹಣೆ), 304 (ಕೊಲೆಯಲ್ಲದ ನರಹತ್ಯೆ), 337 (ಉದಾಸೀನತೆಯಿಂದ ಮಾನವ ಜೀವಕ್ಕೆ ಅಪಾಯ ತಂದೊಡ್ಡುವುದು), 338 (ಜೀವ ಭದ್ರತೆಗೆ ಧಕ್ಕೆಯಾಗುವಂತ ಘಾಸಿ ಮಾಡುವುದು ಮತ್ತು ಇತರ ಸುರಕ್ಷತೆಯನ್ನು ನಿರ್ಲಕ್ಷಿಸುವುದು) ಸೇರಿದಂತೆ ಪ್ರಮುಖ ಕಾಯಿದೆಗಳಡಿ ಪ್ರಕರಣ ದಾಖಲಿಸಲಾಗಿದೆ. \ No newline at end of file diff --git a/eesanje/url_46_334_11.txt b/eesanje/url_46_334_11.txt new file mode 100644 index 0000000000000000000000000000000000000000..6d612f1b1096c15d77f34036ddb00804010d1340 --- /dev/null +++ b/eesanje/url_46_334_11.txt @@ -0,0 +1,10 @@ +ಅತ್ತಿಬೆಲೆ ಪಟಾಕಿ ದುರಂತ ಸಿಐಡಿ ತನಿಖೆ : ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಅ.8- ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿರುವು ದಲ್ಲದೆ, ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವುದಾಗಿ ಘೋಷಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಂ.ಸಿ.ಸುಧಾಕರ್, ರಾಮಲಿಂಗಾರೆಡ್ಡಿ, ಭೈರತಿ ಸುರೇಶ್, ಶಾಸಕರಾದ ಶಿವಣ್ಣ, ಎಸ್.ಟಿ.ಸೋಮಶೇಖರ್, ತಮಿಳುನಾಡಿನಕಾಂಗ್ರೆಸ್ ನಾಯಕ ಚಲ್ಲಕುಮಾರ್ ಸೇರಿದಂತೆ ಮತ್ತಿತರರು ಜತೆಗಿದ್ದರು. +ಅಗ್ನಿಶಾಮಕ ದಳದ ಡಿಜಿಪಿ ಕಮಲ್‍ಪಂಥ್, ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು, ಮುಖ್ಯಮಂತ್ರಿಯವರಿಗೆ ಘಟನೆ ಬಗ್ಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು. +ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ನಿನ್ನೆ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು. +ಪ್ಯಾಲೆಸ್ತೇನ್‍ನ ಉಗ್ರರ ನೆರವಿಗೆ ಬಂದ ಇರಾನ್ ಸೇನೆ +ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ. +ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ. +ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು. +ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಸಿಗ್ತಿಲ್ಲ ಉದ್ಯೋಗ +ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು. \ No newline at end of file diff --git a/eesanje/url_46_334_12.txt b/eesanje/url_46_334_12.txt new file mode 100644 index 0000000000000000000000000000000000000000..b2399e87c55e6dfc413d269e51e1899b14678681 --- /dev/null +++ b/eesanje/url_46_334_12.txt @@ -0,0 +1,12 @@ +ಹೊಸ ಮದ್ಯದಂಗಡಿಗೆ ಅನುಮತಿ ನೀಡುವಂತೆ ಸಿಎಂ ಮೇಲೆ ಶಾಸಕರ ಒತ್ತಡ +ಬೆಂಗಳೂರು,ಅ.8- ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ಕೊಡಲು ಅನುಮತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆಡಳಿತಾರೂಢ ಪಕ್ಷದ ಶಾಸಕರು ಭಾರೀ ಒತ್ತಡ ಹೇರಲಾರಂಭಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಬಹುತೇಕ ಸಚಿವರು, ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದಲ್ಲಿರುವ ಕೆಲವು ಶಾಸಕರೂ ಕೂಡ ಹೊಸ ಮದ್ಯದಂಗಡಿಗಳಿಗೆ ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿಯವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. +ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಈ ವಿಷಯದಲ್ಲಿ ಭಿನ್ನ ಅಭಿಪ್ರಾಯಗಳು ಕೇಳಿಬಂದಿವೆ. ಕಳೆದ 30 ವರ್ಷಗಳಿಂದಲೂ ಹೊಸ ಮದ್ಯ ಮಾರಾಟದ ಸನ್ನದ್ಧುಗಳನ್ನು ನೀಡಿಲ್ಲ. ಈಗಿರುವ ಪರವಾನಗಿಗಳನ್ನೇ ನಾಲ್ಕರಿಂದ ಐದು ಕೋಟಿ ರೂ.ಗಳಿಗೆ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಹೊಸ ಸನ್ನದ್ಧುಗಳನ್ನು ನೀಡಬೇಕು, ಇದರಿಂದ ಉದ್ಯೋಗವಕಾಶಗಳು ಹೆಚ್ಚುತ್ತವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ಆದರೆ ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಾಸಗಟಾಗಿ ತಳ್ಳಿಹಾಕಿದ್ದು, ನನ್ನ ಪ್ರಕಾರ ಹೊಸ ಮದ್ಯ ಮಾರಾಟಕ್ಕೆ ಪರವಾನಗಿಗಳನ್ನು ನೀಡುವ ಅಗತ್ಯ ಇಲ್ಲ ಎಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಲವಾರು ಜನಪರ ಭರವಸೆಗಳನ್ನು ನೀಡಿದ್ದಂತೆ ಬಂಡವಾಳಿಶಾಹಿಗಳಿಗೂ ಕೆಲವು ಆಶ್ವಾಸನೆಗಳನ್ನು ಕೊಟ್ಟಿತ್ತು. ಸಂಪನ್ಮೂಲ ಕ್ರೂಢೀಕರಣ, ಪಕ್ಷ ಸಂಘಟನೆ ದೃಷ್ಟಿಯಿಂದಾಗಿ ಕಾಲಕಾಲಕ್ಕೆ ಕೆಲವು ಭರವಸೆಗಳನ್ನು ನೀಡಲಾಗಿದೆ. ಅವುಗಳ ಈಡೇರಿಕೆಗೆ ಸಂಪುಟದಲ್ಲಿ ಸದಸ್ಯರಾಗಿರುವವರು ಹರಸಾಹಸ ನಡೆಸುತ್ತಿದ್ದಾರೆ. +ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್ +ಒಂದು ವೇಳೆ ಹೊಸ ಪರವಾನಗಿಗಳನ್ನು ನೀಡಲು ಮುಂದಾದರೆ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆಯುವ ಆತಂಕ ಇದೆ. ಇದು ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಅಸ್ತ್ರವಾಗಲಿದೆ ಎಂದು ಗುಪ್ತಚರ ಇಲಾಖೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. +ಇತ್ತೀಚೆಗೆ ಕಲ್ಬುರ್ಗಿ, ಬಿಜಾಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟವನ್ನು ವಿರೋಸಿ ಸ್ತ್ರೀಶಕ್ತಿ ಸಂಘಗಳ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಅದಕ್ಕೆ ಬೆಂಬಲವಾಗಿ ಆಡಳಿತಾರೂಢ ಕಾಂಗ್ರೆಸ್‍ನ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಮದ್ಯ ಮಾರಾಟ ಮಾಡಿದ ಪಾಪದ ಹಣದಲ್ಲಿ ಸರ್ಕಾರ ನಡೆಸಬಾರದು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. +ಅಬಕಾರಿ ಸಚಿವರು ಗ್ರಾಮ ಪಂಚಾಯಿತಿಗೊಂದರಂತೆ ಮದ್ಯ ಮಾರಾಟ ಪರವಾನಗಿ ನೀಡುವ ಚಿಂತನೆ ನಡೆಸಿದ್ದಾರೆ. ಇದು ಒಳ್ಳೆಯದಲ್ಲ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮದ್ಯ ಮಾರಾಟದ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ನಮಗೆ ಉಚಿತ ಅಕ್ಕಿ ಬೇಡ, ಗೃಹಲಕ್ಷ್ಮಿ ಹಣವೂ ಬೇಡ, ಮದ್ಯ ಮಾರಾಟವನ್ನು ನಿಲ್ಲಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಅನಕೃತವಾದ ಮದ್ಯ ಮಾರಾಟದಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ, ಸಂಸಾರಗಳು ಬೀದಿಪಾಲಾಗುತ್ತಿವೆ. ಹೀಗಾಗಿ ಹೆಚ್ಚುವರಿ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಬಿ.ಆರ್.ಪಾಟೀಲ್ ಒತ್ತಾಯಿಸಿದರು. +ಶಾಸಕರ ವಲಯದಲ್ಲಿ ವಿರೋಧ ವ್ಯಕ್ತಪಡಿಸುವ ಒಂದು ವರ್ಗವಿದ್ದರೆ, ಪರವಾನಗಿ ನೀಡಲೇಬೇಕು ಎಂದು ಹಠ ಹಿಡಿಯುತ್ತಿರುವ ಮತ್ತಷ್ಟು ಶಾಸಕರು ವಾದ, ವಿವಾದಗಳಿಗೆ ತಲೆ ಕೆಡಿಸಿಕೊಳ್ಳದೆ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. +ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ +ಪಂಚಖಾತ್ರಿಗಳನ್ನು ಜಾರಿಗೊಳಿಸಿರುವ ರಾಜ್ಯಸರ್ಕಾರ ಅದಕ್ಕೆ ಅಗತ್ಯವಾದ ಹಣಕಾಸು ಕ್ರೂಢೀಕರಣಕ್ಕೆ ವಿವಿಧ ರೀತಿಯ ಮೂಲಗಳನ್ನು ಆಶ್ರಯಿಸಿದೆ. ಅದರಲ್ಲಿ ಪ್ರಮುಖವಾಗಿ ಅಬಕಾರಿ ತೆರಿಗೆಯೂ ಸೇರಿದೆ.ಪ್ರತಿ ತಾಲೂಕಿನಲ್ಲೂ ಶೇ. 30 ರಷ್ಟು ಹೆಚ್ಚು ಮದ್ಯ ಮಾರಾಟ ಮಾಡಬೇಕು ಎಂಬ ಗುರಿ ನಿಗದಿ ಪಡಿಸಲಾಗಿದೆ. ಹೀಗಾಗಿ ಸರ್ಕಾರದ ಅಧಿಕೃತ ಸಂಸ್ಥೆ ಎಂಎಸ್‍ಐಎಲ್‍ಗಳೂ ಸೇರಿದಂತೆ ಹಲವಾರು ಕಡೆ ಗ್ರಾಮೀಣ ಭಾಗದ ಅನಧಿಕೃತ ಮಾರಾಟಕ್ಕೆ ಮದ್ಯ ಪೂರೈಕೆ ಮಾಡಲಾಗುತ್ತಿದೆ. +ಅನಧಿಕೃತವಾದ ಮದ್ಯ ಮಾರಾಟದಿಂದ ಸರ್ಕಾರಕ್ಕೂ ಆದಾಯ ಬರುವುದಿಲ್ಲ. ಸಮಾಜದ ಸ್ವಾಸ್ಥ್ಯವೂ ಪಾಲನೆ ಆಗುವುದಿಲ್ಲ. ಹೀಗಾಗಿ ನೇರವಾಗಿ ಪರವಾನಗಿ ನೀಡುವುದೇ ಸೂಕ್ತ ಎಂಬ ವಾದಗಳು ಇವೆ. ವಾದ ವಿವಾದ ಏನೇ ಇದ್ದರೂ ಒಂದು ಕಾಲದಲ್ಲಿ ಸರ್ಕಾರವನ್ನೆ ಅಲುಗಾಡಿಸುತ್ತಿದ್ದ ಅಬಕಾರಿ ಲಾಬಿ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ನಡುವೆಯೇ ಭಿನ್ನಾಭಿಪ್ರಾಯ ಸೃಷ್ಟಿಸುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_334_2.txt b/eesanje/url_46_334_2.txt new file mode 100644 index 0000000000000000000000000000000000000000..47b584d2f5b79d9ad1ecff5ee9938f535304c4f9 --- /dev/null +++ b/eesanje/url_46_334_2.txt @@ -0,0 +1,13 @@ +ವಿದ್ಯುತ್ ಸಮಸ್ಯೆ ಕುರಿತು ಶ್ವೇತಪತ್ರಕ್ಕೆ ಹೆಚ್‍ಡಿಕೆ ಆಗ್ರಹ +ಬೆಂಗಳೂರು, ಅ.10- ಅಡ್ಡದಾರಿಯಲ್ಲಿ ಅಧಿಕಾರ ಪಡೆಯಲು 5 ಗ್ಯಾರಂಟಿ ಕೊಟ್ಟ ಕಾಂಗ್ರೆಸ್, 6ನೇ ಗ್ಯಾರಂಟಿ ಕತ್ತಲೆಭಾಗ್ಯವನ್ನು ನವರಾತ್ರಿಗೆ ಮೊದಲೇ ಖಾತರಿಪಡಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಹೊಸ ಭಾಗ್ಯ ಡಿಸೆಂಬರಿಗೋ, ಜನವರಿಗೋ ಎಂದಷ್ಟೇ ತೀರ್ಮಾನ ಆಗಬೇಕಿದೆ. +ಕೂಡಲೇ ವಿದ್ಯುತ್ ದುಸ್ಥಿತಿಯ ಬಗ್ಗೆ ರಾಜ್ಯಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ. ಶೀಘ್ರವೇ 6ನೇ ಗ್ಯಾರಂಟಿ ಕೊಡಲು ಸಿದ್ಧತೆ ನಡೆಸಿದೆ. ಅದರ ಹೆಸರು ಕತ್ತಲೆಭಾಗ್ಯ ಎಂದು ಅವರು ಟೀಕಿಸಿದ್ದಾರೆ. +ಡಿಸೆಂಬರ್ ತಿಂಗಳ ಹೊತ್ತಿಗೆ ಕರ್ನಾಟಕ ಈ ಕತ್ತಲೆಭಾಗ್ಯದ ಕೂಪಕ್ಕೆ ಬೀಳುವುದು ಖಚಿತ. 2024ರ ಹೊಸ ವರ್ಷಕ್ಕೆ ತಾನು ಕೊಟ್ಟ ಗೃಹಜ್ಯೋತಿಗೆ ಎಳ್ಳುನೀರು ಬಿಟ್ಟು ಕಗ್ಗತ್ತಲ ಕರ್ನಾಟಕದ ಉದಯ ಮಾಡಿಸುವುದು ಗ್ಯಾರಂಟಿ. ಇದು ಸತ್ಯ ಎಂದಿದ್ದಾರೆ. ಕಾವೇರಿ ಬಗ್ಗೆ ಸರ್ಕಾರ ಕಳ್ಳಾಟ ಆಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯದ ವಿರುದ್ಧ ನಿಲುವಳಿ ಸೂಚನೆ ಅಂಗೀಕಾರವಾಗಿದೆ. ಎಮ್ಮೆ ಚರ್ಮದ ಸರ್ಕಾರಕ್ಕೆ ಕಾವೇರಿ ಒಡಲಾಳದ ಬೇಗುದಿ ಬಗ್ಗೆ ಜಾಣ ಕುರುಡು ಪ್ರದರ್ಶಿಸಿದೆ. +ಸರ್ಕಾರ ರಾಜ್ಯದ ಉದ್ದಗಲಕ್ಕೂ ಅನಧಿಕೃತ ಲೋಡ್ ಶೆಡ್ಡಿಂಗ್ ಹೇರಿ ದಿನಕ್ಕೆ 2 ಗಂಟೆ ವಿದ್ಯುತ್ತಿಗೂ ದಿಕ್ಕಿಲ್ಲದ ದುಸ್ಥಿತಿ ನಿರ್ಮಾಣ ಮಾಡಿದೆ. ನಮ್ಮ ರೈತರಿಗೆ ಲೋಡ್ ಶೆಡ್ಡಿಂಗ್, ತಮಿಳುನಾಡಿಗೆ ಸಮೃದ್ಧ ನೀರು ಎಂದು ವಾಗ್ದಾಳಿ ನಡೆಸಿದ್ದಾರೆ. +ಹ್ಯಾಟ್ರಿಕ್ ಗೆಲುವಿನೊಂದಿಗೆ ಮತ್ತೆ ಕೆಸಿಆರ್ ಅಧಿಕಾರಕ್ಕೆ : ಕೆಟಿಆರ್ ವಿಶ್ವಾಸ +ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿದ್ಯುತ್ ಅಭಾವದಿಂದ ನೀರು ಹರಿಸಲಾಗದೇ ಬೆಳೆಗಳು ಒಣಗುತ್ತಿವೆ. ನಾಲೆಗಳಲ್ಲೂ ನೀರಿಲ್ಲ, ಬೋರ್‍ವೆಲ್‍ಗಳಿಂದ ಪಂಪ್ ಮಾಡಲು ವಿದ್ಯುತ್ತೂ ಇಲ್ಲ. ಮೊದಲೇ ಕಷ್ಟದಲ್ಲಿರುವ ರೈತನ ಬೆನ್ನಿನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಅವರು ಆರೋಪಿಸಿದ್ದಾರೆ. ವಿದ್ಯುತ್ ಕ್ಷಾಮಕ್ಕೆ ಮೊದಲೇ ಕರ್ನಾಟಕ ವಿದ್ಯುತ್‍ಉತ್ಪಾದನೆಯಲ್ಲಿ ಕೊರತೆಯಾಗಿದೆ. ಉತ್ಪಾದನೆಗೆ ಅಗತ್ಯವಾದ ಮೂಲಗಳ ಕ್ಷಾಮಕ್ಕೆ ತುತ್ತಾಗಿ, ಪರರಾಜ್ಯಗಳ ಮುಂದೆ ದೈನೇಸಿಯಾಗಿ ನಿಂತು ವಿದ್ಯುತ್ ಸಾಲಕ್ಕೆ ಅರ್ಜಿ ಹಾಕಿಕೊಳ್ಳುತ್ತಿದೆ. +ಜಲ, ಪವನ, ಸೌರ ವಿದ್ಯುತ್ ಉತ್ಪಾದನೆ ಕುಸಿತವಾಗಿದೆ. ಇದು ದೂರದೃಷ್ಟಿಯ ಕೊರತೆ ಹಾಗೂ ನಿರ್ವಹಣೆಯ ವೈಫಲ್ಯ ಎಂದು ಟೀಕಿಸಿದ್ದಾರೆ. ಜಲಾಶಯಗಳು ಖಾಲಿಯಾಗಿದ್ದು, ವಿದ್ಯುತ್ ಉತ್ಪಾದನೆ ಮಿತವಾಗಿ ಮಾಡುವಂತೆ ಸರ್ಕಾರವೇ ಆದೇಶಿಸಿದೆ. ಇನ್ನೊಂದೆಡೆ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲು ಬವಣೆಯಿಂದ ಅಲ್ಪಸ್ವಲ್ಪ ಉತ್ಪಾದಿಸುತ್ತಿವೆ ಎಂದು ಅವರು ಹೇಳಿದ್ದಾರೆ. +ರಾಜ್ಯದ ಒಟ್ಟಾರೆ ಬೇಡಿಕೆಯಲ್ಲಿ ಶೇ.20ರಷ್ಟು ವಿದ್ಯುತ್ತನ್ನು ಸರ್ಕಾರ ಹೊರಗಿನಿಂದಲೇ ಪಡೆಯುತ್ತಿದೆ. ರಾಜ್ಯವನ್ನು ವಿದ್ಯುತ್ ಸಾಲಕ್ಕೆ ತಳ್ಳಿ, ಕರುನಾಡನ್ನು ಬರ್ಬಾದ್ ಮಾಡಲಿದೆ ಕಾಂಗ್ರೆಸ್ ಸರ್ಕಾರ.ಆದರೆ, ವಿದ್ಯುತ್ ಸಾಲ ನೀಡುವ ಸ್ಥಿತಿಯಲ್ಲಿ ಇತರೆ ರಾಜ್ಯಗಳೂ ಇಲ್ಲ. ಹಾಗಾದರೆ ಮುಂದೇನು? ಸಂಬಂಧಪಟ್ಟ ಸಚಿವರು ಮೌನವ್ರತ ಮಾಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. +ನಿರ್ವಹಣೆ, ರಿಪೇರಿ ನೆಪದಲ್ಲಿ ಇಡೀ ದಿನ ವಿದ್ಯುತ್ ಕಡಿತ ಮಾಡುತ್ತಿರುವ ಸರ್ಕಾರದ ಸದಾರಮೆ ಆಟ ಈಗಷ್ಟೇ ಗೊತ್ತಾಗುತ್ತಿದೆ. ಹಿಂದೆ ಬರದಂತಹ ಕ್ಲಿಷ್ಟ ಸ್ಥಿತಿ ಇದ್ದರೂ ವಿದ್ಯುತ್ ಖರೀದಿಗೆ ಹಣ ಇರುತ್ತಿತ್ತು. ಈಗ ಖಜಾನೆ ಖಾಲಿಯಂತೆ ಎಂದು ಟೀಕಿಸಿದ್ದಾರೆ. +ಉದ್ಯಮಿಗೆ 5.39 ಕೋಟಿ ಪಂಗನಾಮ : ಹೆಚ್ಚು ಲಾಭಕ್ಕಾಗಿ ಹೂಡಿಕೆ ಮಾಡುವ ಮುನ್ನ ಹುಷಾರ್..! +ಲೋಕಸಭೆ ಚುನಾವಣೆವರೆಗೂ ಜನರನ್ನು ಗ್ಯಾರಂಟಿಗಳ ಅಮಲಿನಲ್ಲಿ ತೇಲಿಸಿ, ಆಮೇಲೆ ಕೈ ಎತ್ತಿಬಿಡುವ ದುಷ್ಟ ಹುನ್ನಾರ ಸರ್ಕಾರದ್ದು. ಆ ಕಾರಣಕ್ಕಾಗಿಯೇ ಸರ್ಕಾರ ಸತ್ಯ ಮರೆಮಾಚಿ ಮೊಸಳೆ ಕಣ್ಣೀರು ಹಾಕುತ್ತಿದೆ.ಆದರೆ, ಕತ್ತಲೆಭಾಗ್ಯ ಕರುಣಿಸುವ ಮುನ್ನ ಜನತೆಗೆ ಸತ್ಯವನ್ನೇ ಹೇಳಲಿ. ಬೇಡ ಎಂದವರು ಯಾರು? ವಿದ್ಯುತ್ ಸಾಲಕ್ಕೂ ದಿಕ್ಕಿಲ್ಲದ ಸರ್ಕಾರವು, ಖಾಸಗಿ ವಿದ್ಯುತ್ ಪೂರೈಕೆದಾರರಿಗೆ ಕಳೆದ ಆರೇಳು ತಿಂಗಳಿಂದ ಬಾಕಿ ಹಣ ನೀಡಿಲ್ಲ ಎನ್ನುವ ಮಾಹಿತಿ ಇದೆ. ಕೆಲ ಕಂಪನಿಗಳಿಗೆ 11 ತಿಂಗಳಿಂದ ಬಿಡಿಗಾಸು ಕೊಟ್ಟಿಲ್ಲವಂತೆ ಎಂದು ವ್ಯಂಗ್ಯವಾಡಿದ್ದಾರೆ. +ಇದು ಹೌದು ಎಂದಾದರೆ, ರಾಜ್ಯದ ಭವಿಷ್ಯದ ಗತಿ ಏನು? ಕೃಷಿ, ಕೈಗಾರಿಕೆಗಳ ಪಾಡೇನು? ಬೇಕಾಬಿಟ್ಟಿ ಬೆಲೆ ಏರಿಕೆ ಬರೆ ಎಳೆಸಿಕೊಂಡು ಏದುಸಿರು ಬಿಡುತ್ತಿರುವ ಜನರಿಗೆ ಸರ್ಕಾರದ ಉತ್ತರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಕೃತಕ ಕತ್ತಲು ಸೃಷ್ಟಿಸಿ ಕಬ್ಬೆಕ್ಕಿನಂತೆ ಕದ್ದು ಹಾಲು ಕುಡಿಯುತ್ತೇವೆ ಎಂದರೆ ಆಗುವುದಿಲ್ಲ. ಜನರಿಗೂ ಕಳ್ಳಬೆಕ್ಕಿನ ಕಣ್ಣಾಮುಚ್ಚಾಲೆ ಈಗೀಗ ಚೆನ್ನಾಗಿ ಅರ್ಥವಾಗುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ. \ No newline at end of file diff --git a/eesanje/url_46_334_3.txt b/eesanje/url_46_334_3.txt new file mode 100644 index 0000000000000000000000000000000000000000..3149fb2e213d54c8920ec67e9e537118c6905d6e --- /dev/null +++ b/eesanje/url_46_334_3.txt @@ -0,0 +1,6 @@ +ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತ್ಯೆ +ಶ್ರೀನಗರ, ಅ.10-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ. +ಇದರಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. +ಈ ವರ್ಷದ ಆರಂಭದಲ್ಲಿ ಬ್ಯಾಂಕ್ ಗಾರ್ಡ್ ಸಂಜಯ್ ಶರ್ಮಾನನ್ನು ಇದೇ ಎಲ್‍ಇಟಿ ಉಗ್ರರು ಹತ್ಯೆ ಮಾಡಿದ್ದರು ಎಂದು ಹೇಳಿದ್ದಾರೆ. ಹತರಾದ ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ. +ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ +ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ತಿಳಿಸಿದ್ದಾರೆ. \ No newline at end of file diff --git a/eesanje/url_46_334_4.txt b/eesanje/url_46_334_4.txt new file mode 100644 index 0000000000000000000000000000000000000000..540fb2a513f2b117accbc61be87c9fb42877e1d8 --- /dev/null +++ b/eesanje/url_46_334_4.txt @@ -0,0 +1,11 @@ +70ನೇ ಸಹಕಾರ ಸಪ್ತಾಹ ಸರಳ ಆಚರಣೆ : ಕೆ.ಎನ್.ರಾಜಣ್ಣ +ಬೆಂಗಳೂರು, ಅ.9- ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದರಿಂದ 70ನೆ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಸಹಕಾರ ಸಪ್ತಾಹದ ಪೂರ್ವಸಿದ್ಧತಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗದು. +ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರಿ ಸಪ್ತಾಹ ಆಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು. +ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ +ಒಂದು ತಿಂಗಳಲ್ಲಿ ವರದಿ:ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರ ಹಾಗೂ ಠೇವಣಿದಾರರ ಹಿತ ಕಾಪಾಡುವ ಉದ್ದೇಶದಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಇನ್ನೊಂದು ಇನ್ನೊಂದು ತಿಂಗಳಲ್ಲಿ ವರದಿ ಕೊಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ರಾಜಣ್ಣ ತಿಳಿಸಿದರು. +ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರ ಹಾಗೂ ಠೇವಣಿದಾರರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರಿಗೆ ಅನ್ಯಾಯ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬುದು ಸರ್ಕಾರದ ಉದ್ದೇಶ. ಬಹಳಷ್ಟು ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. +ಸರ್ಕಾರಿ ವಲಯದಲ್ಲಿ ಡಿಜಿಟಲೀಕರಣ ಮಾಡುವುದರಿಂದ ಪಾರದರ್ಶಕತೆ ತರಬಹುದು, ದುರ್ಬಳಕೆ ತಡೆಯಬಹುದು. ಹೀಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇವೆ ಎಂದರು. ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ಮಾತನಾಡಿ, ನವೆಂಬರ್ 14 ರಿಂದ 20ರ ವರೆಗೆ 70ನೆ ಅಖಿಲ ಭಾರತ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು. +ಸಪ್ತಾಹದ ಮುಖ್ಯ ಧ್ಯೇಯ 5 ಟ್ರಿಲಿಯನ್ ಡಾಲರ್. ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಎಂಬುದಾಗಿ ಘೋಷಿಸಲಾಗಿದೆ. ಪ್ರತಿದಿನವೂ ಒಂದೊಂದು ಶೀರ್ಷಿಕೆಯಡಿ ಏಳು ದಿನವೂ ರಾಜ್ಯದ ವಿವಿಧೆಡೆ ಸಪ್ತಾಹ ಆಚರಿಸಲಾಗುವುದು. ನವೆಂಬರ್ 14ರಂದು ಸಹಕಾರ ಸಂಘಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು, ನವೆಂಬರ್ 15ರಂದು ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ನ.16ರಂದು ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ ವಿಚಾರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು. +ಟಾಸ್ ಗೆದ್ದು ಬ್ಯಾಟ್ ಮಾಡಿದ್ದೇ ಆಸ್ಟ್ರೇಲಿಯಾ ಸೋಲಿಗೆ ಕಾರಣ +ನ.17ರಂದು ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು, ನ.18ರಂದು ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು, ನ.19ರಂದು ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ನ.20ರಂದು ಸಹಕಾರ ಶಿಕ್ಷಣ ಮತ್ತು ತರಬೇತಿಯ ಪರಿಷ್ಕರಣೆ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು. +ಸಹಕಾರ ಸಪ್ತಾಹದಲ್ಲಿ ಎಲ್ಲ ಸಹಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು. ಸಹಕಾರ ಸಪ್ತಾಹದ ಉದ್ಘಾಟನೆ, ಸಮಾರೋಪ ಹಾಗೂ ವಿವಿಧ ಕಾರ್ಯಕ್ರಮಗಳ ಸ್ಥಳವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_46_334_5.txt b/eesanje/url_46_334_5.txt new file mode 100644 index 0000000000000000000000000000000000000000..595e7cd9e0d448db79e0267f6e50bbda44785096 --- /dev/null +++ b/eesanje/url_46_334_5.txt @@ -0,0 +1,9 @@ +ಕೋವಿಡ್ ಹಗರಣದ ಬೆನ್ನುಬಿದ್ದ ಕುನ್ಹಾ +ಬೆಂಗಳೂರು,ಅ.9- ಬಿಜೆಪಿ ಸರ್ಕಾರ ಅವಧಿಯ ಮತ್ತೊಂದು ಹಗರಣದ ಬೆನ್ನು ಬಿದ್ದಿದೆ ಕಾಂಗ್ರೆಸ್ ಸರ್ಕಾರ. ಕೊರೊನಾ ಟೈಮ್ ನಲ್ಲಿ ನೂರಾರೂ ಕೋಟಿ ಹಗರಣವಾಗಿದೆ ಅಂತ ದೂರು ಬಂದ ಹಿನ್ನೇಲೆಯಲ್ಲಿ ಹಗರಣದ ತನಿಖೆ ನಡೆಸಲಾಗುತ್ತಿದೆ. ಹಗರಣದಲ್ಲಿ ಮಾಜಿ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಅರೋಪ ಕೇಳಿಬಂದಿರುವುದರಿಂದ ತನಿಖಾ ಸಮಿತಿ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ವಿಚಾರಣೆ ತೀವ್ರಗೊಳಿಸಿದ್ದಾರೆ. +ಸಮಿತಿ ಅಧ್ಯಕ್ಷ ನಿವೃತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ಹಗರಣದ ಇಂಚಿಂಚು ಮಾಹಿತಿ ಸಂಗ್ರಹ ಮಾಡುತ್ತಿರುವುದರಿಂದ ತಪ್ಪಿತಸ್ಥರಲ್ಲಿ ನಡುಕ ಆರಂಭವಾಗಿದೆ. ಕಳೆದ ಮೂರು ದಿನಗಳಿಂದ ಪಾಲಿಕೆ ಅಯುಕ್ತರ ವಿಚಾರಣೆ ನಡೆಸ್ತಿರೋ ತನಿಖಾ ಸಮಿತಿ ಕೋವಿಡ್ ಟೈಮ್ ನಲ್ಲಿ ಬಿಬಿಎಂಪಿ ಮಾಡಿರುವ ಖರ್ಚು, ವೆಚ್ಚಗಳ ಬಗ್ಗೆ ದಾಖಲೆ ನೀಡುವಂತೆ ಸೂಚನೆ ನೀಡಿದೆ. 2019 ರಿಂದ 2022 ರವೆಗೆ ಪಾಲಿಕೆಯಲ್ಲಿ ಖರ್ಚು ಮಾಡಿರೋ ಪೈಲ್ ಗಳನ್ನೂ ನೀಡುವಂತೆಯೂ ಆದೇಶಿಸಿದ್ದಾರೆ. +ಬ್ರಾಂಡ್ ಬೆಂಗಳೂರಿಗೆ ಸಾರ್ವಜನಿಕ ಸಹಭಾಗಿತ್ವಕ್ಕಾಗಿ ಮಹತ್ವದ ಸುಧಾರಣೆಗಳ ಜಾರಿ : ಡಿಸಿಎಂ +ಈ ಅದೇಶದ ಹಿನ್ನೆಲೆಯಲ್ಲಿ ದಾಖಲೆಗಳ ಪಟ್ಟಿ ಮಾಡಿ ತನಿಖಾ ಸಂಸ್ಥೆಗೆ ಬಿಬಿಎಂಪಿ ಅರೋಗ್ಯ ಇಲಾಖೆ ಅಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಪಾಲಿಕೆ ಅಯುಕ್ತರಿಗೆ ಸಮಿತಿ ಅಧ್ಯಕ್ಷರಿಂದ ಪ್ರಶ್ನೇಗಳ ಸುರಿಮಳೆ ಸುರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +2019 ರಿಂದ 2022 ರವರೆಗೆ ಕೋವಿಡ್ ಟೈಮ್ ನಲ್ಲಿ ಪಾಲಿಕೆಯಿಂದ ಎಷ್ಟು ಖರ್ಚು ಮಾಡಲಾಗಿದೆ, ಯಾವ,ಯಾವ ಕೋವಿಡ್ ಉಪಕರಣಗಳನ್ನೂ ಪರ್ಚೆಸ್ ಮಾಡಿದಿರಿ, ಅದಕ್ಕೆ ಸಂಬಂಧಿಸಿದ ಬಿಲ್ ಗಳನ್ನೂ ಸಲ್ಲಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಎಷ್ಟು ಅಂಬುಲೆನ್ಸ್ ಗಳನ್ನೂ ಬಾಡಿಗೆಗೆ ಪಡೆದಿದ್ರಿ,ಅವುಗಳ ಲಾಗ್ ಬುಕ್ ಹಾಗೂ ಬಾಡಿಗೆ ನೀಡಿರೋ ದಾಖಲೆ ನೀಡಿ. +ಸ್ಯಾನಿಟೈಸರ್ , ಮಾಸ್ಕ್, ಸಿಲಿಂಡರ್, ಹಾಸಿಗೆ, ಸೇರಿದಂತೆ ಇತರೆ ವಸ್ತುಗಳ ಖರೀದಿ ಬಿಲ್ ಗಳನ್ನೂ ನೀಡಿ, ಕೋವಿಡ್ ಟೈಮ್ ನಲ್ಲಿ ಅಸ್ಪತ್ರೆಗಳಿಗೆ , ಕೋವಿಡ್ ವಾರಿಯರ್ಸ್ ಗಳಿಗೆ ಹಾಗೂ ಅನಾಥರಿಗೆ ನೀಡಿದ ಊಟದ ಲೆಕ್ಕ ನೀಡಿ, ಇನ್ನೂ ಕೋರೋನಾ ಸೊಂಕಿತರಿಗೆ ಖಾಸಗಿ ಅಸ್ಪತ್ರೆಯಲ್ಲಿ ಎಷ್ಟು ಜನಕ್ಕೆ ಚಿಕಿತ್ಸೆ ನೀಡಿದ್ದೀರಾ ಹಾಗೂ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಕೇಳಲಾಗಿದೆಯಂತೆ. + : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ +ಇದರ ಜತೆಗೆ ಖಾಸಗಿ ಅಸ್ಪತ್ರೆಗೆ ನೀಡಿರೋ ಬಿಲ್ ಗಳ ದಾಖಲೆ ನೀಡಿ,,ಹೀಗೆ ಹತ್ತು ಹಲವು ಪ್ರಶ್ನೇಗಳನ್ನೂ ಕೇಳಿ, ಒಂದು ವಾರದೋಳಗೆ ಕೇಳಿರೋ ಎಲ್ಲಾ ದಾಖಲೆಗಳನ್ನೂ ನೀಡುವಂತೆ ಸೂಚನೆ ನೀಡಿರುವುದರಿಂದ ಪಾಲಿಕೆ ಅರೋಗ್ಯ ಅಧಿಕಾರಿಗಳು ಬಿಲ್‍ಗಳ ಹುಡುಕಾಟ ನಡೆಸಿ ಹಲವು ಬಿಲ್ ಗಳ ಪಟ್ಟಿ ರೆಡಿ ಮಾಡಿದ್ದಾರಂತೆ. \ No newline at end of file diff --git a/eesanje/url_46_334_6.txt b/eesanje/url_46_334_6.txt new file mode 100644 index 0000000000000000000000000000000000000000..4e09ea55a2f86d8c8a26be3bc0e5184656b4322d --- /dev/null +++ b/eesanje/url_46_334_6.txt @@ -0,0 +1,11 @@ +ರಾಜ್ಯ ಸರ್ಕಾರ ತನ್ನ ವೈಫಲ್ಯತೆಯನ್ನು ಪ್ರಧಾನಿ ಮೇಲೆ ಹೇರುತ್ತಿದೆ : ಸುಮಲತಾ +ಬೆಂಗಳೂರು,ಅ.9- ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ವಾಸ್ತವ ಪರಿಸ್ಥಿತಿಯನ್ನು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಿಗೆ ವಿವರಿಸಿರುವುದಾಗಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂಬುದು ರಾಜ್ಯಸರ್ಕಾರದ ಅಸಹಾಯಕತೆಯ ವಾದ. ಇವರ ವೈಫಲ್ಯವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ನೀರು ನಿರ್ವಹಣಾ ಪ್ರಾಧಿಕಾರ ಆದೇಶಗಳೇ ಅಂತಿಮ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹೀಗಿರುವಾಗ ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲು ಹೇಗೆ ಸಾಧ್ಯ. ದೇಶದ ಪ್ರಧಾನಿಯವರು ಯಾವುದೋ ಒಂದು ರಾಜ್ಯದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದರು. +ಈ ಹಿಂದೆ ತಾವು ಪ್ರಧಾನಮಂತ್ರಿ ಮತ್ತು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದ್ದೆ. ಆ ವೇಳೆ ಅವರು ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎರಡೂ ಪಕ್ಷಗಳ ನಡುವೆ ಉತ್ತಮ ರಾಜಕೀಯ ಹೊಂದಾಣಿಕೆ ಇದೆ. ಹೀಗಾಗಿ ಅವರು ಕುಳಿತು ಮಾತುಕತೆ ನಡೆಸಿ ಸೌಹಾರ್ದಯುತ ಪರಿಹಾರ ತೆಗೆದುಕೊಳ್ಳುವುದಾದರೆ ನಮ್ಮ ಅಭ್ಯಂತರ ಇಲ್ಲ. ಆದರೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತಮಿಳುನಾಡಿನ ಜೊತೆ ಮಾತುಕತೆಗೆ ಮುಂದಾಗಬೇಕು ಎಂದರು. + : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ +ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಾಳೆ ನಡೆಯಲಿದೆ. ಅಲ್ಲಿ ನೀರು ಬಿಡಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಸಹಜವಾಗಿಯೇ ನೀರು ಬಿಡಿ ಎಂದೇ ಆದೇಶ ಬರುತ್ತದೆ. ರಾಜ್ಯಸರ್ಕಾರ ವಾಸ್ತವಾಂಶಗಳನ್ನು ಪ್ರಬಲವಾಗಿ ಮನವರಿಕೆ ಮಾಡಿಕೊಡುವ ವಾದ ಮಂಡಿಸುವಲ್ಲಿ ವೈಫಲ್ಯ ಅನುಭವಿಸಿವೆ. ಮೊದಲು ಎಲ್ಲಿ ಲೋಪಗಳಾಗಿವೆ ಎಂಬುದನ್ನು ಗುರುತಿಸಿ ಸರಿಪಡಿಸಬೇಕಿದೆ ಎಂದರು. +ಕಾವೇರಿ ವಿಷಯದಲ್ಲಿ ವಿಧಾನಸಭೆ ಅಧಿವೇಶನ ಕರೆದು ನಿರ್ಣಯ ಕೈಗೊಳ್ಳಬೇಕೆಂಬ ದೊಡ್ಡ ದೊಡ್ಡ ವಿಚಾರಗಳ ಬಗ್ಗೆ ತಾವು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು. +ಬಿಜೆಪಿ, ಜೆಡಿಎಸ್ ಮೈತ್ರಿಯ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿ ಪಕ್ಷದಿಂದ ಮೈತ್ರಿಯ ಬಗ್ಗೆ ಈವರೆಗೂ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವ ಕಾರಣಕ್ಕೆ ಮೈತ್ರಿಯಾಗಿದೆ ಎಂಬುದು ತಮಗೆ ಗೊತ್ತಿಲ್ಲ. ಮೈತ್ರಿ ಬಳಿಕ ಸ್ಪರ್ಧೆಯ ಕುರಿತು ನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ಯಾವುದೇ ಆತುರವಿಲ್ಲ ಎಂದರು. +ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ +ಬೆಂಗಳೂರು, ಮೈಸೂರು ಎಕ್ಸ್‍ಪ್ರೆಸ್ ಹೆದ್ದಾರಿಯ ಮಾರ್ಗಗಳ ಮಧ್ಯೆ ವಿವಿಧ ನಗರಗಳನ್ನು ಸಂಪರ್ಕಿಸುವ ತಾತ್ಕಾಲಿಕ ದ್ವಾರಗಳನ್ನು ಬಂದ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು ಈ ಮೊದಲೇ ಹೇಳಿದಂತೆ ಹೆದ್ದಾರಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ತಾತ್ಕಾಲಿಕವಾಗಿ ಮಾತ್ರ ನಿರ್ಮಿಸಲಾಗಿತ್ತು. ಈಗ ಅವನ್ನು ಬಂದ್ ಮಾಡುವುದರಿಂದ ಹೆಚ್ಚಿನ ಪರಿಣಾಮ ಏನೂ ಆಗುವುದಿಲ್ಲ. ಹೆದ್ದಾರಿ ಸಮಸ್ಯೆ ಕುರಿತಂತೆ ತಾವು ಅಧಿಕಾರಿಗಳ ಜೊತೆ ಚರ್ಚಿಸಿ ಸರಿಪಡಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_334_7.txt b/eesanje/url_46_334_7.txt new file mode 100644 index 0000000000000000000000000000000000000000..b4c04e0ad42e119e69eeb4f851da1d2433e28994 --- /dev/null +++ b/eesanje/url_46_334_7.txt @@ -0,0 +1,9 @@ +ಇನ್ನೊಂದು ವಾರದಲ್ಲಿ ಬರ ಅಧ್ಯಯನ ವರದಿ ಕೇಂದ್ರಕ್ಕೆ ಸಲ್ಲಿಕೆ +ಬೆಂಗಳೂರು, ಅ.9- ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಅಧ್ಯಯನ ತಂಡವು ಕೇಂದ್ರ ಸರ್ಕಾರಕ್ಕೆ ಇನ್ನೊಂದು ವಾರದಲ್ಲಿ ಬರ ಅಧ್ಯಯನ ಕುರಿತ ವರದಿ ಸಲ್ಲಿಸುವುದಾಗಿ ಹೇಳಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡಗಳೊಂದಿಗೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಷ್ಟು ಪರಿಹಾರ ಕೊಡುತ್ತಾರೆ ಎಂಬುದನ್ನು ನೋಡಬೇಕು ಎಂದರು. +ಕೇಂದ್ರದ ಮೂರು ತಂಡಗಳು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಮೇವು, ಬೆಳೆ ಪರಿಸ್ಥಿತಿ ಅವಲೋಕನ ಮಾಡಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 4800 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು.ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿಗೆ ಅಧ್ಯಯನ ತಂಡ ವರದಿ ಸಲ್ಲಿಸಿದರೆ, ನಂತರ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬಹುದು. ಕೇಂದ್ರ ಗೃಹ ಮತ್ತು ಕೃಷಿ ಸಚಿವರ ಭೇಟಿಗೆ ಸಮಯ ಕೇಳಿ ಪತ್ರ ಬರೆಯುತ್ತೇವೆ. ಸಮಯ ನೀಡಿದರೆ ಸಂಪುಟ ಉಪ ಸಮಿತಿಯ ಸದಸ್ಯರು ಭೇಟಿ ರಾಜ್ಯದ ಎದುರಿಸುತ್ತಿರುವ ಬರದ ಸಮಸ್ಯೆ ಮನವರಿಕೆ ಮಾಡುತ್ತೇವೆ ಎಂದು ಅವರು ತಿಳಿಸಿದರು. + : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ +ರಾಜ್ಯದಲ್ಲಿನ ಬರ ಪರಿಸ್ಥಿತಿಯ ಮನವಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾವು.ಬಳಿಕ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದ್ದೆವು, ಸಿಕ್ಕಿಲ್ಲ ಎಂದರು. ಮನವಿ ಸಲ್ಲಿಕೆ ನಂತರ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿ ಪರಿಶೀಲಿಸಿದೆ. ಮನವಿ ವಸ್ತು ಸ್ಥಿತಿಯಿಂದ ಕೂಡಿದ್ದು, ಸಾಕಷ್ಟು ರೈತರಿಗೆ ಬೆಳೆ ಹಾನಿಯಿಂದ ತೊಂದರೆ ಆಗಿದೆ. +ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿಗೂ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರ ಅಂಕಿ- ಅಂಶ ಕೇಳಿದ್ದು, ಅದನ್ನು ಒದಗಿಸಿಕೊಡುತ್ತೇವೆ. ವಾರದ ಒಳಗಡೆ ಕೇಂದ್ರಕ್ಕೆ ವರದಿ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ ಎಂದರು. +ಈಗ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಳೆ ಸ್ಥಿತಿಗತಿಗಳ ಬಗ್ಗೆ ಸ್ಪಷ್ಟತೆ ಇಲ್ಲದ ವಾತಾವರಣ ಇದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿಯಲ್ಲಿ ಕೂಲಿ ಪಾವತಿ ಆಗಿಲ್ಲ 475 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಬೇಕು.ಕೂಲಿ ಹಣ ಬಾಕಿಯಿಂದ ಬಡವರು ಮತ್ತಷ್ಟು ಸಂಕಷ್ಟದಲ್ಲಿದ್ದಾರೆ ಎಂದರು. +ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ +ಫಸಲು ಭೀಮಾ ಯೋಜನೆ ರೈತರಿಗೆ ಪರಿಣಾಮಕಾರಿ ಅನುಕೂಲ ಆಗುತ್ತಿಲ್ಲ. ಇದನ್ನು ಕೇಂದ್ರದ ಅಧಿಕಾರಿಗಳ ಗಮನಕ್ಕೆ ತರುವಂತೆ ಹೇಳಿದ್ದೇವೆ. ಪರಿಹಾರದ ಬಗ್ಗೆ ನಾವು ಒತ್ತಡ ಹಾಕಬಹುದು, ಆದರೆ ಅಂತಿಮ ನಿರ್ಧಾರ ಅವರದ್ದೇ ಎಂದು ಸಚಿವರು ತಿಳಿಸಿದರು. \ No newline at end of file diff --git a/eesanje/url_46_334_8.txt b/eesanje/url_46_334_8.txt new file mode 100644 index 0000000000000000000000000000000000000000..e1531f30a9e7ce5fba45d4b5ddd662962959b34f --- /dev/null +++ b/eesanje/url_46_334_8.txt @@ -0,0 +1,9 @@ +ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ +ಬೆಂಗಳೂರು,ಅ. 9- ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎರಡೂವರೆ ವರ್ಷ ಮುಖ್ಯಮಂತ್ರಿಯಾಗುತ್ತೇನೆಂದು ಹೇಳುವ ಎದೆಗಾರಿಕೆ ತೋರುತ್ತಿಲ್ಲ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ. ದೇವೇಗೌಡರು ಇಂದಿಲ್ಲಿ ಟೀಕಿಸಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರು ಉತ್ತರನ ಪೌರುಷವಿದ್ದಂತೆ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗುವ ಹೇಳಿಕೆಯ ಧೈರ್ಯವೂ ತೋರಲಿಲ್ಲ ಎಂದು ವ್ಯಂಗ್ಯವಾಡಿದರು. +ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ದೇವೇಗೌಡರು, ಎಸ್‍ಎಂ ಕೃಷ್ಣ, ಡಿವಿ ಸದಾನಂದ ಗೌಡ, ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ ಒಮ್ಮೆ ಅವಕಾಶ ಕೊಡಿ ನಾನು ಸಿಎಂ ಆಗುತ್ತೇನೆ ಎಂದು ಕೋರಿದ್ದರು. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಉಪಮುಖ್ಯಮಂತ್ರಿ ಆಗಿದ್ದಾರೆ, ಆದರೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಾವೇ ಮುಖ್ಯಮಂತ್ರಿ ಎನ್ನುತ್ತಾರೆ. ಕೆಎನ್ ರಾಜಣ್ಣ ಮೂವರು ಉಪಮುಖ್ಯಮಂತ್ರಿಗಳಾಬೇಕು ಎಂದರೆ, ಮಾಜಿ ಸಚಿವ ಬಸವರಾಜರಾಯರೆಡ್ಡಿ 6 ಮಂದಿ ಉಪಮುಖ್ಯಮಂತ್ರಿಗಳಾಗಲಿ ಎಂದು ಹೇಳಿಕೆ ನೀಡಿದ್ದಾರೆ. +ಫೈಟರ್ ಮನಮೋಹಕ, ಗೆದ್ದ ನಿರ್ಮಾಪಕ +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬರ ಸಮಾವೇಶದಲ್ಲಿ ಕಾವೇರಿಯಿಂದ ಕನ್ಯಾಕುಮಾರಿಯವರೆಗೂ ಕುರುಬ ಸಮುದಾಯವಿದೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದ್ದಾರೆ.ಆದರೆ ಐದು ವರ್ಷ ಅಧಿಕಾರದಲ್ಲಿ ಮುಂದುವರಿಯುವುದಾಗಿ ಸಂದರ್ಶನದಲ್ಲಿ ಹೇಳಿದ್ದಾರೆ. ಆದರೆ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಎಲ್ಲಿ ಸಿಗುತ್ತದೆ ಎಂದು ಪ್ರಶ್ನಿಸಿದರು. ಪರಿಹಾರ ಸಿಕ್ಕಿಲ್ಲ ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರಗಾಲವಿದ್ದು, 40 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಬೆಳೆನಷ್ಟ ಪರಿಹಾರ ನೀಡಿಲ್ಲ. +ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿ ರೈತರಿಗೆ, ಜನರಿಗೆ ಧೈರ್ಯ ತುಂಬಿಲ್ಲ. ರೈತರ ಸ್ಥಿತಿ ರಾಜ್ಯದಲ್ಲಿ ಜೀವನ್ಮರಣದ ಪರಿಸ್ಥಿತಿ ಉಂಟಾಗಿದೆ. ಕೃಷಿ ಪಂಪ್ ಸೆಟ್‍ಗಳಿಗೆ 7 ಗಂಟೆ ಬದಲಿಗೆ 2 ಗಂಟೆ ಮಾತ್ರ ವಿದ್ಯುತ್ ನೀಡುತ್ತಿದ್ದಾರೆ. 10 ಸಾವಿರ ರೂ. ಕಟ್ಟಿದರೆ ಕೃಷಿ ಪಂಪ್ ಸೆಟ್‍ಗೆ ವಿದ್ಯುತ್ ಸಂಪರ್ಕ ದೊರಕುತ್ತಿತ್ತು. +ಈಗ ನಾಲ್ಕರಿಂದ 5 ಲಕ್ಷ ರೂ. ಕಟ್ಟಬೇಕಾಗಿದೆ. ರೈತರು ಸ್ವಂತ ಜಮೀನಿನಲ್ಲಿ ಮನೆ ಕಟ್ಟಿಕೊಂಡರೆ ನಿರಂತರ ಜ್ಯೋತಿ ನೀಡುವುದಿಲ್ಲ. ಇಂತಹ ಸರ್ಕಾರ ಇರಬೇಕೇ ಎಂದು ಪ್ರಶ್ನಿಸಿದರು. ಆಸ್ಪತ್ರೆ, ಶಾಲೆ, ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ, ಮದ್ಯದ ಪಾಪದ ಹಣದಿಂದ ಸರ್ಕಾರ ನಡೆಸಬೇಕೇ ಎಂದು ಕಾಂಗ್ರೆಸ್ ಮುಖಂಡರೇ ಹೇಳಿದ್ದಾರೆ. +ಲಡಾಕ್ ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು +ಮೈಸೂರಿನಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗೆ ಬಸವಣ್ಣ ಪ್ರೇರಣೆ ಎಂದಿದ್ದಾರೆ. ಬಸವಣ್ಣನವರು ಕಾಯಕ ಮಾಡಿ ಬದುಕಬೇಕು ಎಂದು ಹೇಳಿದ್ದರೆ ಹೊರತು ಬಿಟ್ಟಿಭಾಗ್ಯದಿಂದಲ್ಲ ಎಂದರು. \ No newline at end of file diff --git a/eesanje/url_46_334_9.txt b/eesanje/url_46_334_9.txt new file mode 100644 index 0000000000000000000000000000000000000000..e6c993ffee5a8a59a948f5d30a517a6565a8d7ee --- /dev/null +++ b/eesanje/url_46_334_9.txt @@ -0,0 +1,6 @@ +ರಾಜ್ಯದಲ್ಲಿ ಒಂದು ವಾರ ಮಳೆ ಸಾಧ್ಯತೆ +ಬೆಂಗಳೂರು, ಅ.9- ರಾಜ್ಯಾದ್ಯಂತ ಅಕ್ಟೋಬರ್ ಮೊದಲ ವಾರದಿಂದ ಹಿಂಗಾರು ಮಳೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಮಂದವಾಗಿದ್ದ ಮಳೆ ಚುರುಕುಗೊಂಡಿದ್ದು, ನಿನ್ನೆ ಸಂಜೆಯಿಂದ ರಾಜಧಾನಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗುತ್ತಿದ್ದು, ವಾತಾವರಣ ತಂಪಾಗಿದೆ. +ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆಯಿಂದ ಪ್ರಾರಂಭವಾದ ಜಿಟಿಜಿಟಿ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣವಿದೆ. ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ರಾಜ್ಯದ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿದ್ದು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಮಂಡ್ಯ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. +ನಟ ಶಾರುಖ್​ ಖಾನ್​ಗೆ ವೈ ಪ್ಲಸ್ ಭದ್ರತೆ +ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸುತ್ತಮುತ್ತ ನಿನ್ನೆ ಸಂಜೆ ಗುಡುಗು ಸಿಡಿಲು ಸಮೇತ ಉತ್ತಮ ಮಳೆಯಾಗಿದೆ.ಕೆಲದಿನಗಳಿಂದ ಬಿಸಿಲಿನ ತಾಪದಿಂದ ಬಳಲಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ. \ No newline at end of file diff --git a/eesanje/url_46_335_1.txt b/eesanje/url_46_335_1.txt new file mode 100644 index 0000000000000000000000000000000000000000..1589a2ff6a76ded1e8ac450af5ab6553345d7515 --- /dev/null +++ b/eesanje/url_46_335_1.txt @@ -0,0 +1,9 @@ +ಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ +ಬೆಂಗಳೂರು, ಅ.8- ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ 12 ಶವಗಳನ್ನು ಗೋದಾಮಿನಿಂದ ಹೊರತೆಗೆಯಲಾಗಿದ್ದು, ತಡರಾತ್ರಿ ಇನ್ನೆರಡು ಶವಗಳು ಸಿಕ್ಕಿವೆ. ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. +ಇದರಲ್ಲಿ ಇನ್ನೂ ಕೆಲವರ ಗುರುತು ಸಿಕ್ಕಿಲ್ಲ. ಅವರುಗಳ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ದುರಂತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಸೆಂಟ್‍ಜಾನ್ ಮತ್ತು ಆಕ್ಸ್‍ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಮಸ್ವಾಮಿ ರೆಡ್ಡಿ ಮತ್ತು ನವೀನ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ವಿವರಿಸಿದರು. +ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್ +ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ನಮ್ಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ಮಧ್ಯಾಹ್ನ 3.30ರ ಸಂದರ್ಭದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿ ಸತತ ಪ್ರಯತ್ನ ನಡೆಸಿ ತಡರಾತ್ರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೂ 14 ಜೀವಗಳು ಬಲಿಯಾಗಿದ್ದು, ಕೆಲವು ಶವಗಳು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿವೆ. +ಭೇಟಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ತಮಿಳುನಾಡಿನ ಸಚಿವರು, ಶಾಸಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. +ಮುನ್ನೆಚ್ಚರಿಕೆ ಕ್ರಮ ವಹಿಸದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಲವರು ತಮಿಳುನಾಡಿನ ಹೊಸೂರು, ಶಿವಕಾಶಿ ಸೇರಿದಂತೆ ಹಲವೆಡೆ ಪಟಾಕಿ ಖರೀದಿಸಲು ತೆರಳುತ್ತಾರೆ. ಅದನ್ನು ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಸಂಗ್ರಹಿಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ಕೆಲವರು ಗೋದಾಮುಗಳಲ್ಲಿ ಇದನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. +ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ +ಅಕ್ಕಪಕ್ಕದಲ್ಲಿರುವುದರಿಂದ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ ಸಂಭವಿಸಿದ ಈ ಘೋರ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಮೃತರಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ. \ No newline at end of file diff --git a/eesanje/url_46_335_10.txt b/eesanje/url_46_335_10.txt new file mode 100644 index 0000000000000000000000000000000000000000..e8100818560822d8b9bd7a51b8a57428487e01fc --- /dev/null +++ b/eesanje/url_46_335_10.txt @@ -0,0 +1,9 @@ +ಕಾವಾಡಿಗರ ಹಟ್ಟಿಗೆ 4 ಕೋಟಿ ರೂ. ನೆರವು : ಸಿಎಂ ಸಿದ್ದರಾಮಯ್ಯ +ಚಿತ್ರದುರ್ಗ, ಅ.6- ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ, 4 ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತನಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು. +ಸಂತ್ರಸ್ತ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು. ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು. +ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ +ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅvಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು. +123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು ಎನ್‍ಡಿಆರ್‍ಎಫ್ ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು. +ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ +ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು. +ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು. ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_335_11.txt b/eesanje/url_46_335_11.txt new file mode 100644 index 0000000000000000000000000000000000000000..cf76e632c7e6c8047d597264bcd5e0f08f01d8ea --- /dev/null +++ b/eesanje/url_46_335_11.txt @@ -0,0 +1,7 @@ +ಶಿವಮೊಗ್ಗ ಗಲಭೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ : ಡಿಸಿಎಂ +ಬೆಂಗಳೂರು,ಅ.6- ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಕಾನೂನು ಕೈಗೆತ್ತಿಕೊಂಡಿರುವ ಎಲ್ಲರ ವಿರುದ್ಧವೂ ಸರ್ಕಾರ ನಿರ್ದಾಕ್ಷಿಣ್ಯವಾದ ಕಾನೂನು ಕ್ರಮ ಜರುಗಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ತಪ್ಪು ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟಪಡಿಸಿದರು. +ಬಿಜೆಪಿಯವರ ಸತ್ಯ ಶೋಧನಾ ಸಮಿತಿ ಏನು ಬೇಕಾದರೂ ಮಾಡಿಕೊಳ್ಳಲಿ. ಅವರು ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಕಬ್ಬಿಣದಲ್ಲಿ ಎರಡು ಕೆಲಸಗಳನ್ನು ಮಾಡಬಹುದು. ಒಂದು ಸೂಜಿಯನ್ನಾಗಿ ಬದಲಾಯಿಸಿ ಸಮಾಜವನ್ನು ಹೊಲಿಯಬಹುದು. ಮತ್ತೊಂದು ಕತ್ತರಿ ತಯಾರಿಸಿ ಸಮಾಜವನ್ನು ಕತ್ತರಿಸಬಹುದು. ನಾವು ಸೂಜಿಯನ್ನು ತಯಾರಿಸಿ ಸಮಾಜವನ್ನು ಹೊಲೆಯುವ ಕೆಲಸ ಮಾಡುತ್ತಿದ್ದೇವೆ. +ಅವರು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ನಮಗೂ ಮತ್ತು ಬಿಜೆಪಿಯವರಿಗೂ ಇರುವ ವ್ಯತ್ಯಾಸ ಎಂದು ತಿರುಗೇಟು ನೀಡಿದರು. +ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ +ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭೇಟಿ ನೀಡಿದ್ದರು. ಅಲ್ಲಿ ಹಿಂದೂ, ಮುಸ್ಲಿಂ ಎಂಬ ಬೇಧವಿಲ್ಲದೆ ಎಲ್ಲಾ ಸಮುದಾಯದವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ಬಿಜೆಪಿಯವರು ಒಂದು ಸಮುದಾಯದವರನ್ನು ಮಾತ್ರ ಭೇಟಿ ಮಾಡಿದ್ದಾರೆ. ಇದರಲ್ಲೇ ಅವರು ಸಮಾಜವನ್ನು ವಿಭಜಿಸುವ ಸಂಚು ಸ್ಪಷ್ಟವಾಗುತ್ತದೆ ಎಂದರು. +ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಇಲ್ಲ. ಕಾನೂನನ್ನು ಕೆಣಕಿದರೆ ಅದರ ಪರಿಣಾಮ ಏನು ಎಂಬುದು ತಪ್ಪಿತಸ್ಥರಿಗೆ ಅರಿವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಎಸ್.ಎಂ.ಕೃಷ್ಣ ಅವರ ಕಾಲದಲ್ಲೇ ಕುವೆಂಪು ಅವರ ಪದ್ಯ ಬಳಸಿಕೊಂಡು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪರಿಕಲ್ಪನೆಯನ್ನು ಆರಂಭಿಸಿತ್ತು. ನಮ್ಮ ನಾಡಗೀತೆಯಲ್ಲೇ ಸರ್ವ ಜನರನ್ನು ಒಳಗೊಂಡ ಮೂಲ ಉದ್ದೇಶಗಳಿವೆ ಎಂದರು. \ No newline at end of file diff --git a/eesanje/url_46_335_12.txt b/eesanje/url_46_335_12.txt new file mode 100644 index 0000000000000000000000000000000000000000..3e89606b507d56f4a271cb0f118dd8f3d58a04b1 --- /dev/null +++ b/eesanje/url_46_335_12.txt @@ -0,0 +1,14 @@ +ಬೆಂಗಳೂರಿನಲ್ಲಿ 6.05 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು +ಬೆಂಗಳೂರು, ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ. +ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ. +ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು. +ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ +ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. +ಒತ್ತುವರಿದಾರರ ವಿವರ: +* ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. +* ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. +* ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. +ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ +* ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. +* ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪ ರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. +* ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ. \ No newline at end of file diff --git a/eesanje/url_46_335_2.txt b/eesanje/url_46_335_2.txt new file mode 100644 index 0000000000000000000000000000000000000000..4f550993dc854789243a038f5d4daec06e46d206 --- /dev/null +++ b/eesanje/url_46_335_2.txt @@ -0,0 +1,8 @@ +ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್ +ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು. +ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023) +ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು. +ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು. +ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ +ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_335_3.txt b/eesanje/url_46_335_3.txt new file mode 100644 index 0000000000000000000000000000000000000000..a5021c54370e0390d02322a33bd0cbb58dbd289f --- /dev/null +++ b/eesanje/url_46_335_3.txt @@ -0,0 +1,6 @@ +ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ +ಬೆಂಗಳೂರು, ಅ.8-ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ. +ದುರಂತದಿಂದ ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದುದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ. +ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ +ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತದ ಸಾವು ಕಂಡಿರುವ ಘಟನೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಅವರು ಹೇಳಿದ್ದಾರೆ. +ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_335_4.txt b/eesanje/url_46_335_4.txt new file mode 100644 index 0000000000000000000000000000000000000000..4858bd896710a0eed48d01ed2bbdfde1d77c085c --- /dev/null +++ b/eesanje/url_46_335_4.txt @@ -0,0 +1,18 @@ +ಬಸ್ ಪ್ರಯಾಣ ದರ ಹೆಚ್ಚಳದ ಮುನ್ಸೂಚನೆ ನೀಡಿದ ಡಿಸಿಎಂ +ಬೆಂಗಳೂರು,ಅ.7- ಸರ್ಕಾರದ ಸಾರಿಗೆ ಸಂಸ್ಥೆಗಳನ್ನು ವ್ಯವಹಾರಿಕ ಮಾದರಿಯಲ್ಲಿ ಸ್ಥಾಪಿಸಲಾಗಿದ್ದು, ಅವುಗಳ ಉಳಿವಿಗಾಗಿ ರಾಜಕೀಯ ಹಿತಾಸಕ್ತಿ ಪ್ರದರ್ಶನ ಅಗತ್ಯವಿದೆ, ಕಳೆದ ಏಳೆಂಟು ವರ್ಷಗಳಿಂದಲೂ ಪ್ರಯಾಣ ದರ ಪರಿಷ್ಕರಣೆಯಾಗಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್ ಪ್ರಯಾಣ ದರದ ಏರಿಕೆಯ ಮುನ್ಸೂಚನೆ ನೀಡಿದ್ದಾರೆ. +ವಿಧಾನಸೌಧದ ಮುಂಭಾಗದಲ್ಲಿ 100 ನೂತನ ಕರ್ನಾಟಕ ಸಾರಿಗೆ ಮತ್ತು 40 ಹವಾನಿಯಂತ್ರಣರಹಿತ ಸ್ಲೀಪರ್ ಬಸ್‍ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಗೀರ್ ಅಹಮ್ಮದ್‍ಸಾರಿಗೆ ಸಚಿವರಾಗಿದ್ದಾಗ ಡೀಸೆಲ್ ಬೆಲೆ ಏರಿಕೆಗನುಗುಣವಾಗಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. +ಕಳೆದ ಏಳೆಂಟು ವರ್ಷಗಳಿಂದಲೂ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗಿಲ್ಲ ಎಂದು ಹೇಳಿದರು.ಸಾರಿಗೆ ಸಂಸ್ಥೆಗಳ ಉದ್ದೇಶ ಕೇವಲ ಲಾಭ ಮಾಡುವುದಷ್ಟೇ ಅಲ್ಲ, ಜನರಿಗೆ ಸೇವೆ ಮಾಡಬೇಕು, ಅದೇ ಸಮಯದಲ್ಲಿ ಲಾಭದಾಯಕವಾಗಿಯೂ ಅವು ನಡೆಯಬೇಕು ಎಂದು ಅಭಿಪ್ರಾಯಪಟ್ಟರು. +ದೇಶದಲ್ಲಿ ಎಲ್ಲೂ ಇಲ್ಲದಂತಹ ವಿಮಾ ಸೌಲಭ್ಯವನ್ನು ನಮ್ಮ ಸಾರಿಗೆ ನಿಗಮಗಳು ಅಳವಡಿಸಿಕೊಂಡಿವೆ. ಅಪಘಾತದಲ್ಲಿ ಸಿಬ್ಬಂದಿಗಳು ಮೃತಪಟ್ಟ ಸಂದರ್ಭದಲ್ಲಿ 1 ಕೋಟಿ ರೂ. ಪರಿಹಾರ ನೀಡುವ ವಿಮಾ ಸೌಲಭ್ಯ ಕೆಎಸ್‍ಆರ್‍ಟಿಸಿಯಲ್ಲಿದ್ದು, ಉಳಿದಂತೆ ವಿವಿಧ ನಿಗಮಗಳಿಗೂ ಅದನ್ನು ಹಂತಹಂತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದರು. +ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ +ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಈವರೆಗೂ 72 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದು ಸರ್ಕಾರಕ್ಕೆ ಹೊರೆಯಾಗಿದೆ. ನಿಗಮಗಳಿಗೆ ಸರ್ಕಾರದಿಂದ ಹಣ ಭರಿಸುವುದು ಕಷ್ಟವಾಗುತ್ತಿದೆ. ಈ ಯೋಜನೆ ಪ್ರಸ್ತಾಪಿಸಿದ್ದಕ್ಕಾಗಿ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ. ಸಾರಿಗೆ ನಿಗಮಗಳ ಆಡಳಿತ ಮಂಡಳಿಯವರು ಶಕ್ತಿ ಯೋಜನೆಯಿಂದ ನಿಗಮ ನಡೆಸುವುದು ಕಷ್ಟ ಎಂದು ಚರ್ಚೆ ಮಾಡಿದ್ದಾರೆ. ಎಲ್ಲವೂ ಗೊತ್ತಿದೆ ಎಂದರು. +ಆದರೆ ಹೆಣ್ಣುಮಕ್ಕಳು ಉಚಿತವಾಗಿ ಪ್ರಯಾಣಿಸಬೇಕು ಎಂಬ ನಮ್ಮ ಬದ್ಧತೆ ಈಡೇರಿದೆ. ಇಂದು ಬೆಳಿಗ್ಗೆ ತಾವು ಮನೆಯಿಂದ ಹೊರಡುವಾಗ ಸಾರಿಗೆ ಬಸ್‍ಗಳ ಉದ್ಘಾಟನೆಗಾಗಿ ಹೋಗುತ್ತಿರುವುದಾಗಿ ಪತ್ನಿಗೆ ತಿಳಿಸಿದ್ದು, ಇಲ್ಲಿಂದ ಮೈಸೂರಿಗೆ ಒಮ್ಮೆ ಸಾರಿಗೆ ಬಸ್‍ನಲ್ಲಿ ಪ್ರಯಾಣಿಸುವಂತೆ ಸಲಹೆ ನೀಡಿದ್ದೇನೆ ಎಂದರು. +ಇಂದು ಉದ್ಘಾಟನೆಗೊಂಡ ಬಸ್‍ಗಳಿಗೆ ಪಲ್ಲಕ್ಕಿ ಎಂದು ಉತ್ತಮವಾದ ಹೆಸರಿಟ್ಟವರಿಗೆ ಪ್ರಶಸ್ತಿ ಕೊಡಬೇಕು ಎಂದ ಡಿ.ಕೆ.ಶಿವಕುಮಾರ್, ಹೆಸರು ಸೂಚಿಸಿದವರು ಯಾರು ಎಂದು ಸಾರಿಗೆ ಸಚಿವರಲ್ಲಿ ಕೇಳಿದರು. ಅಧಿಕಾರಿಗಳು ಸಚಿವ ರಾಮಲಿಂಗಾರೆಡ್ಡಿ ಅವರೇ ಹೆಸರಿಟ್ಟಿದ್ದಾರೆ ಎಂದಾಗ ಅವರಿಗೆ ಪ್ರಮಾಣಪತ್ರ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಹೇಳಿದರು. +ರಾಜ, ಮಹಾರಾಜರನ್ನು ಹೊರುತ್ತಿದ್ದ ಪಲ್ಲಕ್ಕಿಯ ಹೆಸರನ್ನು ನಮ್ಮ ಸಾರಿಗೆ ಸಂಸ್ಥೆಗಳ ಬಸ್‍ಗಳಿಗೆ ಇಡಲಾಗಿದೆ. ಅವು ಹೆಣ್ಣುಮಕ್ಕಳ ಪ್ರಯಾಣಕ್ಕೆ ಲಭ್ಯವಾಗಿರುವುದು ಸಂತೋಷ. ತಾವು ಪಲ್ಲಕ್ಕಿ ಬಸ್‍ಗಳನ್ನು ಪರಿಶೀಲಿಸಿದ್ದು, ಆರಾಮದಾಯಕವಾಗಿವೆ. ಆರು ಅಡಿ ಸೀಟುಗಳಿದ್ದು, ಪ್ರಯಾಣಕ್ಕೆ ಅನುಕೂಲವಾಗಿವೆ ಎಂದರು. +ಶಾಸಕರಿಗೆ ಸಾರಿಗೆ ಬಸ್‍ಗಳಲ್ಲಿ ತಲಾ ಸೀಟುಗಳನ್ನು ಮೀಸಲಿಡಲಾಗಿದೆ. ಇದನ್ನು ಉತ್ತರ ಕರ್ನಾಟಕದಲ್ಲಿರುವವರು ಬಳಕೆ ಮಾಡಿಕೊಳ್ಳಬಹುದು. ಆದರೆ ಬಹುತೇಕ ಶಾಸಕರು ಆರ್ಥಿಕವಾಗಿ ಪ್ರಬಲವಾಗಿದ್ದು, ಬಸ್‍ನಲ್ಲಿ ಪ್ರಯಾಣಿಸುತ್ತಿಲ್ಲ ಎಂದು ಹೇಳಿದರು. +ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲಾ ಸಾರಿಗೆ ನಿಗಮಗಳಲ್ಲಿ 24 ಸಾವಿರ ಬಸ್‍ಗಳಿದ್ದು, 1.58 ಲಕ್ಷ ಟ್ರಿಪ್‍ಗಳು ಸಂಚರಿಸುತ್ತಿವೆ. ಪ್ರತಿವರ್ಷ ಶೇ.10 ರಷ್ಟು ಬಸ್‍ಗಳನ್ನು ಸ್ಕ್ರಾಪ್ ಮಾಡಲಾಗುತ್ತಿದೆ. ಪ್ರತಿವರ್ಷ ಹೊಸ ಬಸ್‍ಗಳನ್ನು ಖರೀದಿಸಬೇಕು ಮತ್ತು ನಿವೃತ್ತರಾಗುವ ಶೇ.10 ರಷ್ಟು ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿದೆ. 2016 ರ ನಂತರ ಸಾರಿಗೆ ನಿಗಮಗಳಲ್ಲಿ ನೇಮಕವಾಗಿಲ್ಲ, 4 ವರ್ಷಗಳಿಂದಲೂ ಹೊಸ ಬಸ್‍ಗಳನ್ನೂ ಖರೀದಿಸಿಲ್ಲ ಎಂದು ತಿಳಿಸಿದರು. +ಮನರೇಗಾ ಯೋಜನೆ ಡಿಜಿಟಲಿಕರಣದ ಹಿಂದೆ ದುರುದ್ದೇಶ : ಜೈರಾಮ್ ರಮೇಶ್ +ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, 1,300 ಬಸ್‍ಗಳನ್ನು ಖರೀದಿಸಲಾಗುವುದು. ಮುಂದಿನ ನಾಲ್ಕೈದು ತಿಂಗಳಿನಲ್ಲಿ ಸಾರಿಗೆ ನಿಗಮಗಳಲ್ಲಿ 4,500 ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. 13,000 ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೆಲ್ಲವೂ ಸಾಧ್ಯವಾದ ಬಳಿಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಹಾಗೂ ರಾಜ್ಯದ ಪ್ರತಿಯೊಂದೂ ಕೊನೆ ಭಾಗಕ್ಕೂ ಸಾರಿಗೆ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂದರು. +ಕರೊನ ಕಾಲದಲ್ಲಿ 2,800 ಸಂಚಾರ ಅವಧಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮರು ಆರಂಭಿಸಬೇಕಿದೆ. 300 ರಿಂದ 400 ಕಿ.ಮೀ. ದೂರ ರಾತ್ರಿ ಪ್ರಯಾಣಿಸುವವರು ನಾನ್ ಎಸಿ ಬಸ್‍ಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ ಅಗತ್ಯಕ್ಕನುಗುಣವಾಗಿ ಅವುಗಳನ್ನು ಖರೀದಿಸಲಾಗುವುದು. ಎಕ್ಸ್‍ಪ್ರೆಸ್ ಬಸ್‍ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು. +ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ +ರಾಜ್ಯದ ಸಾರಿಗೆ ಸಂಸ್ಥೆಗಳು ಉತ್ತಮ ಹೆಸರು ಗಳಿಸಿವೆ. ಇದುವರೆಗೂ ಕೆಎಸ್‍ಆರ್‍ಟಿಸಿಗೆ 300, ಬಿಎಂಟಿಸಿಗೆ 145 ಪ್ರಶಸ್ತಿಗಳು ಬಂದಿವೆ. ಬೇರೆ ಯಾವುದೇ ರಾಜ್ಯದ ಸಾರಿಗೆ ನಿಗಮಗಳಿಗೆ ಇಷ್ಟು ಪ್ರಶಸ್ತಿಗಳು ಬಂದಿಲ್ಲ. ಶಕ್ತಿ ಯೋಜನೆ ಆರಂಭಿಸುವಾಗ ಹಲವು ಕೊರತೆಗಳಿದ್ದವು. ಆದರೂ ಧೈರ್ಯ ಮಾಡಿ ಯೋಜನೆ ಜಾರಿಗೊಳಿಸಿದ್ದು, ಸಾಧನೆಗಳಿಗೆ ಉತ್ತಮ ಉದಾಹರಣೆಯಾಗಿದೆ. ವಿರೋಧಪಕ್ಷದವರು ಈ ವಿಷಯದಲ್ಲಿ ಮಾಡಿದ ಟೀಕೆಗಳೆಲ್ಲವೂ ಸುಳ್ಳಾಗಿವೆ ಎಂದು ಹೇಳಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಬಸ್‍ಗಳನ್ನು ಉದ್ಘಾಟಿಸಿದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_335_5.txt b/eesanje/url_46_335_5.txt new file mode 100644 index 0000000000000000000000000000000000000000..d70e3f38ef9107297c5aaa5eea302c6b7541d7f0 --- /dev/null +++ b/eesanje/url_46_335_5.txt @@ -0,0 +1,8 @@ +ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ +ಮೈಸೂರು, ಅ. 7- ರಾಜ್ಯ ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಗಳಿಗೆ ಆರ್ಥಿಕ ಸಮಸ್ಯೆ ಇಲ್ಲ. ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ. ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು. +ರಾಜ್ಯಾದ್ಯಂತ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಬೆಳೆ ನಾಶ ಆಗಿದೆ. ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ. ತಂಡದ ಸದಸ್ಯರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಲಿದೆ ಎಂದವರು ತಿಳಿಸಿದರು. +ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ +ಕಳೆದ 70 ವರ್ಷಗಳಿಂದಲೂ ಹಿಂದುಳಿದಿರುವವರನ್ನು ಜಾತಿ ಜನಗಣತಿ ಆಧಾರದಲ್ಲಿ ಗುರುತಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾತಿ ಆಧಾರಿತ ಗಣತಿಯನ್ನು ನಡೆಸಲಾಗುವುದು ಎಂದವರು ತಿಳಿಸಿದರು.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗಲೇ ಕಾಂತ ರಾಜು ಅವರು ಕರ್ನಾಟಕದಲ್ಲಿನ ಜಾತಿ ಗಣತಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ. ನಾನು ಅವರಿಗೆ ಹೇಳಿದ್ದೇನೆ. ಆದಷ್ಟು ಬೇಗ ಕಾಂತರಾಜು ನೀಡಿದಂತೆ ವರದಿ ನೀಡುವಂತೆ ತಿಳಿಸಿದ್ದೇನೆ. ಅವರು ನವೆಂಬರ್‍ನಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ ಎಂದರು. +ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮದ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಹೇಗಿದೆಯೋ ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತವೆ. ಒಟ್ಟಿನಲ್ಲಿ ಸದ್ಯದಲ್ಲಿ ಯಾವುದೇ ಲಿಕ್ಕರ್ ಅಂಗಡಿಗಳನ್ನು ತಡೆಯಲು ರಹದಾರಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ +ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೆಯೂ ಮಹಿಷ ದಸರಾ ಮಾಡಿದ್ದರು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_335_6.txt b/eesanje/url_46_335_6.txt new file mode 100644 index 0000000000000000000000000000000000000000..9a9cae24407ef2c7e84edd072d8a963dbfaaa766 --- /dev/null +++ b/eesanje/url_46_335_6.txt @@ -0,0 +1,7 @@ +ಇ ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ : ಐವರ ಮನೆ ಮೇಲೆ ದಾಳಿ +ಬೆಂಗಳೂರು,ಅ.7- ಸರ್ಕಾರದ ಇ- ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ಮತ್ತಿಬ್ಬರನ್ನು ಬಂಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಸಾಕ್ಷ್ಯಗಳ ಸಂಗ್ರಹಕ್ಕಾಗಿ ನಗರದ ಐದು ಮಂದಿ ಪ್ರಮುಖ ವ್ಯಕ್ತಿಗಳ ಮನೆಗಳು ಸೇರಿದಂತೆ 7 ಕಡೆ ದಾಳಿ ಮಾಡಿ ಶೋಧ ಕಾರ್ಯಾ ಚರಣೆ ನಡೆಸಿದ್ದಾರೆ. +2019 ರಲ್ಲಿ ಬೆಳಕಿಗೆ ಬಂದಿದ್ದ ಇ-ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ ದಿನೇದಿನೇ ಕುತೂಹಲ ಕೆರಳಿಸುತ್ತಿದೆ. ಪ್ರಮುಖ ಆರೋಪಿ ಶ್ರೀಕಿ ನೀಡಿದ ಮಾಹಿತಿ ಆಧರಿಸಿ ಆರಂಭದಲ್ಲೇ 18 ಮಂದಿಯನ್ನು ಬಂಧಿಸಲಾಗಿತ್ತು. ಆದರೆ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಕೆಲಸ ಮಾಡಿದ ಪ್ರಮುಖ ಆರೋಪಿಗಳು ಹಾಗೂ ಮಧ್ಯವರ್ತಿಗಳು ಪ್ರಕರಣದಿಂದ ನುಣುಚಿಕೊಂಡಿದ್ದರು. ಕೆಲವರು ತಲೆಮರೆಸಿಕೊಂಡಿದ್ದರು. +ಕಾಂಗ್ರೆಸ್ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ಹ್ಯಾಕಿಂಗ್‍ನಿಂದ ಅಕ್ರಮವಾಗಿ ಗಳಿಸಿದ ಹಣವನ್ನು ವರ್ಗಾವಣೆ ಹಾಗೂ ಪಡೆದುಕೊಂಡವರ ಬೆನ್ನು ಬಿದ್ದಿದೆ. ತನಿಖೆಯ ಪ್ರಗತಿಯಲ್ಲಿ ನಾಗ್ಪುರದ ನಿತಿನ್ ಮಿಶ್ರಾ ಮತ್ತು ದರ್ಶಿತ್ ಪಟೇಲ್ ಎಂಬಿಬ್ಬರನ್ನು ಬಂಧಿಸಲಾಗಿದೆ. +ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ +ಈ ಆರೋಪಿಗಳು 10.5 ಕೋಟಿ ರೂ. ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ಪಂಜಾಬ್‍ನ ಲೂದಿಯಾನದಲ್ಲಿ ಪ್ರಮುಖ ಆರೋಪಿ ಅರವಿಂದ್ ಸಿಂಗ್‍ನನ್ನು ಬಂಧಿಸಲಾಗಿತ್ತು. ಈವರೆಗೂ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. ಆರೋಪಿ ಶ್ರೀಕಿ ಇ-ಪ್ರಕ್ಯೂರ್ಮೆಂಟ್, ಪೋಕರ್ ಗೇಮಿಂಗ್ ಸೇರಿದಂತೆ ವಿವಿಧ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ. ಹಣ ಲಪಟಾಯಿಸಿದ್ದ ಆರೋಪಗಳಿವೆ. ಅವುಗಳನ್ನು ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ತನಿಖೆಗಳು ನಡೆಯುತ್ತಿವೆ. +ಬಿಟ್‍ಕಾಯಿನ್ ಹಾಗೂ ವೆಬ್‍ಸೈಟ್ ಹ್ಯಾಕಿಂಗ್ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳ ಮನೆ ಮೇಲೆ 7 ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಶೋಧ ಕಾರ್ಯಾಚರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಪೊಲೀಸರು 5 ಮಂದಿಯ ಮನೆ ಹಾಗೂ ಕಚೇರಿಗಳಲ್ಲಿ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದ್ದಾರೆ. \ No newline at end of file diff --git a/eesanje/url_46_335_7.txt b/eesanje/url_46_335_7.txt new file mode 100644 index 0000000000000000000000000000000000000000..800a151f3d511420ee9aa72ac0deac8d6f19c29b --- /dev/null +++ b/eesanje/url_46_335_7.txt @@ -0,0 +1,12 @@ +ಐಷಾರಾಮಿ ಪಲ್ಲಕ್ಕಿ ಸಾರಿಗೆ ಸೇವೆ ಆರಂಭ +ಬೆಂಗಳೂರು,ಅ.7- ಸಾರಿಗೆ ನಿಗಮಗಳಲ್ಲಿ ದೂರದ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಟೆಕ್ ಸ್ಲೀಪರ್‍ಕೋಚ್ ಬಸ್‍ಗಳ ಸೇವೆಯನ್ನು ಆರಂಭಿಸಲಾಗಿದ್ದು, ಕಡಿಮೆ ಪ್ರಯಾಣ ದರದಲ್ಲಿ ಆರಾಮದಾಯಕ ಸೌಲಭ್ಯ ಒದಗಿಸಲಾಗುತ್ತಿದೆ. ಜೊತೆಗೆ ಪಲ್ಲಕ್ಕಿ ಹೆಸರಿನಲ್ಲಿ ಹೊಸ ಬ್ರಾಂಡಿಂಗ್ ಸೇವೆಯನ್ನು ಸಾರಿಗೆ ನಿಗಮಗಳು ಆರಂಭಿಸಿವೆ. +ಮುಖ್ಯಮಂತ್ರಿಸಿದ್ದರಾಮಯ್ಯನವರು ವಿಧಾನ ಸೌಧದ ಗ್ರಾಂಡ್ ಸ್ಟೆಪ್‍ಗಳಲ್ಲಿ 40 ನಾನ್ ಎಸಿ ಸ್ಲೀಪರ್‍ಕೋಚ್ ಮತ್ತು 100 ಸಾಮಾನ್ಯ ಬಸ್‍ಗಳ ಪ್ರಯಾಣಕ್ಕೆ ಚಾಲನೆ ನೀಡಿದರು. ಇವುಗಳಲ್ಲಿ 13.5 ಮೀಟರ್ ಉದ್ದದ 8 ಬಸ್‍ಗಳಿದ್ದು, ಅವುಗಳಲ್ಲಿ 4 ನಾನ್ ಎಸಿ, ಉಳಿದ 4 ಎಸಿ ಬಸ್‍ಗಳಾಗಿವೆ. ಅತ್ಯಾಧುನಿಕವಾದ ಈ ಬಸ್‍ಗಳು ಐಶಾರಾಮಿ ಸೌಲಭ್ಯ ಹೊಂದಿವೆ. ಪ್ರಮುಖವಾಗಿ ದೂರದ ಬೆಳಗಾವಿ, ಮಂಗಳೂರುನÀಂತಹ ಪ್ರದೇಶಗಳಿಂದ ರಾಜಧಾನಿ ಗೆ ಪ್ರಯಾಣಿಸುತ್ತಿವೆ. ಮುಂದಿನ ಹಂತದಲ್ಲಿ ವಿವಿಧ ಭಾಗಗಳಿಗೂ ಸಂಪರ್ಕ ಕಲ್ಪಿಸುವ ಸಾಧ್ಯತೆ ಇದೆ. +ಸ್ಲೀಪರ್‍ಕೋಚ್‍ನ ಪ್ರತಿಯೊಂದು ಬಸ್‍ನಲ್ಲೂ 36 ಸೀಟುಗಳನ್ನು ವ್ಯವಸ್ಥೆ ಮಾಡಲಾಗಿದೆ. 6 ಅಡಿ ಉದ್ದದ ಸೀಟುಗಳಲ್ಲಿ ಆರಾಮದಾಯಕವಾಗಿ ಮಲಗಬಹುದು. ಜೊತೆಗೆ ಕುಳಿತುಕೊಳ್ಳಲೂ ಅವಕಾಶವಿದೆ. ಪ್ರತ್ಯೇಕವಾದ ಲೈಟಿಂಗ್, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಶೂ ಅಥವಾ ಚಪ್ಪಲಿ ಇಡಲು ಸ್ಥಳಾವಕಾಶ, ಲಗೇಜ್ ಬ್ಯಾಗ್‍ಗಳಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಡಿಜಿಟಲ್ ವಾಚ್ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳು ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಲಭ್ಯವಾಗುತ್ತಿವೆ. +ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ +ಪ್ರಾಯೋಗಿಕವಾಗಿ ಆರಂಭವಾಗಿರುವ 13.5 ಅಡಿ ಉದ್ದದ ಈ ಬಸ್‍ಗಳಲ್ಲಿ ಉತ್ತಮವಾದ ಸಸ್ಪೆನ್ಷನ್, ಶಬ್ಧ ನಿಯಂತ್ರಣ, ಚಾಲಕರಿಗೆ ಅಗತ್ಯ ಸೌಲಭ್ಯಗಳಿವೆ. ಪ್ರಯಾಣಿಕರ ಅನುಭವಗಳನ್ನು ಆಧರಿಸಿ ಮುಂದೆ ಇವುಗಳನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ಇದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. +ಈವರೆಗೂ ಸಾರಿಗೆ ನಿಗಮಗಳಲ್ಲಿ 15 ಮತ್ತು 12 ಮೀಟರ್ ಉದ್ದದ ಬಸ್‍ಗಳು ಸಂಚರಿಸುತ್ತಿದ್ದವು. ಕಿರಿದಾದ ಮತ್ತು ಗುಡ್ಡಗಾಡು, ಅರಣ್ಯ ಪ್ರದೇಶಗಳ ರಸ್ತೆಗಳ ತಿರುವುಗಳಲ್ಲಿ ಉದ್ದದ ಬಸ್‍ಗಳ ಸಂಚಾರ ಕಷ್ಟವಾಗುತ್ತಿತ್ತು. ಈಗ 13.5 ಮೀಟರ್ ಉದ್ದದ 8 ಹೊಸ ಬಸ್‍ಗಳನ್ನು ಸೇವೆಗೆ ಸಮರ್ಪಿಸಲಾಗಿವೆ. ಇವು ಕಿರಿದಾದ ಮಾರ್ಗಗಳಲ್ಲೂ ಸುಗಮ ಸಂಚಾರ ಮಾಡಲಿವೆ. +ಇನ್ನು ದೂರದ ಪ್ರಯಾಣಕ್ಕಾಗಿರುವ ಎಕ್ಸ್‍ಪ್ರೆಸ್ ಬಸ್‍ಗಳಲ್ಲೂ ಸೀಟುಗಳ ವಿನ್ಯಾಸವನ್ನು ಪರಿಷ್ಕರಿಸಲಾಗಿದೆ. 54 ರ ಬದಲಾಗಿ 51 ಕ್ಕೆ ಸೀಟು ಸಂಖ್ಯೆಯನ್ನು ಇಳಿಸಲಾಗಿದ್ದು, ಆರಾಮದಾಯಕವಾಗಿ ಕಾಲು ಚಾಚಿಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಬಸ್‍ನ ಎತ್ತರವನ್ನು 2 ಅಡಿ ಹೆಚ್ಚಿಸಿರುವುದರಿಂದ ಗಾಳಿ, ಬೆಳಕು ಸಂಚಾರ ಇನ್ನಷ್ಟು ಸುಧಾರಣೆಗೊಂಡು ಪ್ರಯಾಣಿಕರಿಗೆ ಮಲ್ಟಿ ಆಕ್ಸೆಲ್ ಅನುಭವ ಹಿತ ನೀಡಲಿದೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ತಿಳಿಸಿದ್ದಾರೆ. ಡಿಜಿಟಲ್ ನೇಮ್ ಬೋರ್ಡ್, ನಿರಂತರವಾಗಿ ರೆಕಾರ್ಡ್ ಆಗುವ ರಿವರ್ಸ್ ಕ್ಯಾಮರಾ, ಬೆಂಕಿ ನಂದಿಸುವ ಸಲಕರಣೆಗಳು ಮತ್ತು ಎಚ್ಚರಿಕೆಯ ಗಂಟೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. +ಪಲ್ಲಕ್ಕಿ ಬ್ರಾಂಡಿಂಗ್ :ಕೆಎಸ್‍ಆರ್‍ಟಿಸಿಯಲ್ಲಿ ಐರಾವತ, ಬಿಎಂಟಿಸಿಯಲ್ಲಿ ವಜ್ರ ಎಂಬ ಬ್ರಾಂಡಿಂಗ್ ಸಾರಿಗೆ ಸೇವೆಗಳು ಇದಾಗಲೇ ಚಾಲ್ತಿಯಲ್ಲಿವೆ. ಅವುಗಳ ಸಾಲಿಗೆ ಹೊಸದಾಗಿ ಸಾರಿಗೆ ನಿಗಮಗಳು ಪಲ್ಲಕ್ಕಿ ಎಂಬ ಹೊಸ ಬ್ರಾಂಡ್‍ಗೆ ಚಾಲನೆ ನೀಡಿದೆ. ಸಂತೋಷ ಪ್ರಯಾಣದಲ್ಲಿದೆ ಎಂಬ ಅಡಿಬರಹದಡಿ ಪಲ್ಲಕ್ಕಿ ಸೇವೆಗಳು ಲೋಕಾರ್ಪಣೆಗೊಂಡಿವೆ. ಶಕ್ತಿ ಯೋಜನೆಯ ಉಚಿತ ಪ್ರಯಾಣ ಸ್ಲೀಪರ್ ಕೋಚ್ ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಎಕ್ಸ್‍ಪ್ರೆಸ್ ಸಾರಿಗೆ ಸೇವೆಯಲ್ಲೂ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ +ದೂರದ ಪ್ರಯಾಣಗಳಿಗೆ ಕೆಎಸ್‍ಆರ್‍ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್‍ಕೋಚ್‍ಗಳ ಬಸ್‍ಗಳು ಕಡಿಮೆ ಇದ್ದವು. ಅದರ ಬೇಡಿಕೆಯನ್ನು ಪರಿಗಣಿಸಿ ಹೊಸ ಬಸ್‍ಗಳನ್ನು ನಿಯೋಜಿಸಲಾಗಿದೆ. ನೂತನ ಬಸ್‍ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್‍ನ ಒಳ ವಿನ್ಯಾಸಗಳನ್ನು ಪರಿಶೀಲಿಸಿದರು. ರೈಲು ಸೇವೆಯಲ್ಲಿರುವಂತೆಯೇ ಆರಾಮದಾಯಕ ವ್ಯವಸ್ಥೆಗಳಿವೆ. ನಾನು ಕೂತು, ಮಲಗಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. +6 ಗಂಟೆ ದೂರದ ಪ್ರಯಾಣ ಇರುವವರಿಗೆ ಇವು ಅನುಕೂಲವಾಗಿವೆ. ಪ್ರತಿ ಕಿ.ಮೀ.ಗೆ 2 ರೂ. ಪ್ರಯಾಣದರವನ್ನು ನಿಗದಿ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೀಟುಗಳನ್ನು ಪರಿಶೀಲಿಸಿದ್ದು, ಚೆನ್ನಾಗಿವೆ, ಪತಿ-ಪತ್ನಿ ಇಬ್ಬರೂ ಪ್ರಯಾಣಿಸಬಹುದು ಎಂದು ಹೇಳಿದರು. \ No newline at end of file diff --git a/eesanje/url_46_335_8.txt b/eesanje/url_46_335_8.txt new file mode 100644 index 0000000000000000000000000000000000000000..ba11ccaa95a857e7abee5d63b0752f1831603b7d --- /dev/null +++ b/eesanje/url_46_335_8.txt @@ -0,0 +1,6 @@ +ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು,ಅ.7-ರಾಹುಲ್‍ಗಾಂಧಿಯವರನ್ನು ರಾವಣನಿಗೆ ಹೋಲಿಕೆ ಮಾಡಿದ ಬಿಜೆಪಿಯ ವಿವಾದಿತ ಪೋಸ್ಟರ್ ಅನ್ನು ಖಂಡಿಸಿ ಕಾಂಗ್ರೆಸ್ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೆಂಗಳೂರಿನ ಎಲ್ಲಾ ಕಾಂಗ್ರೆಸ್ ಘಟಕಗಳೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಹಿರಿಯ ನಾಯಕರಾದ ಎಚ್.ಎಂ.ರೇವಣ್ಣ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು. +ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಬಿಜೆಪಿಯವರಿಗೆ ರಾಹುಲ್‍ಗಾಂಧಿಯವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆಕ್ಷೇಪಾರ್ಹ ಪೋಸ್ಟರ್‍ಗಳನ್ನು ಪ್ರಕಟಿಸಿ ಅವಹೇಳನ ಮಾಡುವ ಪ್ರಯತ್ನ ಮಾಡಿದೆ. ಇದು ರಾಹುಲ್‍ ಗಾಂಧಿಯವರ ಜನಪ್ರಿಯತೆ ತಗ್ಗಿಸಲು ಸಾಧ್ಯವಿಲ್ಲ. +ಈ ಹಿಂದೆ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನ ನೀಡಿದ ಬಿಜೆಪಿಯವರು ಕಪ್ಪುಹಣವನ್ನು ವಿದೇಶದಿಂದ ತಂದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕಿರುವುದಾಗಿ ಹೇಳಿದರು. +ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಸೆಂಚುರಿ ಭಾರಿಸಿದ ಭಾರತ, ಪ್ರಧಾನಿ ಅಭಿನಂದನೆ +ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಯುವಕರಲ್ಲಿ ಆಸೆ ಹುಟ್ಟಿಸಿದರು. ಅದ್ಯಾವುದೂ ಈಡೇರಿಲ್ಲ. ಕಳೆದ 9 ವರ್ಷಗಳಲ್ಲಿ ದೇಶದ ಅಭಿವೃದ್ಧಿಯನ್ನು ಹಿಮ್ಮುಖವಾಗಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಮರೆಮಾಚಲು ವಿವಾದಿತ ಕಾನೂನುಗಳನ್ನು ಜಾರಿಗೆ ತರುತ್ತಾರೆ. ಭಾವನಾತ್ಮಕ ರಾಜಕಾರಣದ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ಈಗ ವಿವಾದಿತ ಪೋಸ್ಟರ್‍ಗಳ ಮೂಲಕ ಅವಹೇಳನ ಮಾಡುವ ಪ್ರವೃತ್ತಿಗೆ ಕೈ ಹಾಕಿದ್ದಾರೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು. \ No newline at end of file diff --git a/eesanje/url_46_335_9.txt b/eesanje/url_46_335_9.txt new file mode 100644 index 0000000000000000000000000000000000000000..73ebd36104c68fc61bf639cd8afad6b1ba1004a7 --- /dev/null +++ b/eesanje/url_46_335_9.txt @@ -0,0 +1,9 @@ +ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಡಿಸಿಎಂ ಮುಂದೆ ಪೌರಕಾರ್ಮಿಕ ಮಹಿಳೆ ಅಳಲು +ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಅನುದಾನ ಬರುತ್ತಿಲ್ಲ ಎಂದು ಪೌರಕಾರ್ಮಿಕ ಮಹಿಳೆ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಅಸಮಾಧಾನ ತೋಡಿಕೊಂಡ ಘಟನೆ ನಡೆದಿದೆ. ಬಿಬಿಎಂಪಿಯಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಪೌರಕಾರ್ಮಿಕರ ನಿಯೋಗ ಇಂದು ಡಿ.ಕೆ.ಶಿವಕುಮಾರ್ ಅವರ ಮನೆಗೆ ಬಂದಿತ್ತು. +ಈ ವೇಳೆ ಇದೇ 12 ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು. ನೀವು ಕಾರ್ಯಕ್ರಮ ಏರ್ಪಡಿಸುವಾಗ ನನ್ನ ಸಮಯ ನೋಡಿಕೊಂಡು ನಿಗದಿ ಮಾಡಬೇಕು. ನಿಮ್ಮಷ್ಟಕ್ಕೆ ನೀವೇ ದಿನಾಂಕ ನಿಗದಿ ಮಾಡಿದರೆ ನಮಗೆ ಬಿಡುವಿರುವುದಿಲ್ಲ. ಬರದೇ ಇದ್ದರೆ ನಿಮಗೆ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ +ಈ ವೇಳೆ ನಿಯೋಗದ ಮುಖಂಡರು ಮುಂದಿನ ಬಾರಿ ನಿಮ್ಮ ಸಮಯ ನೋಡಿಕೊಂಡೇ ಸಮಯ ನಿಗದಿ ಮಾಡುತ್ತೇವೆ. ಈ ಬಾರಿ ಬಂದು ಹೋಗಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮುಂದುವರೆದ ನಿಯೋಗದ ಸದಸ್ಯರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಖಾಯಂ ಮಾಡಿ ಎಂದು ಬೇಡಿಕೆ ಮುಂದಿಟ್ಟರು. +ಈ ಹಂತದಲ್ಲಿ ಪ್ರತಿಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಸೇರಿದಂತೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸ ಲಾಗುತ್ತಿದೆ. ಹೀಗಾಗಿ ಸ್ವಲ್ಪ ತಾಳ್ಮೆಯಿಂದಿರಿ. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು. +ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ +ಈ ವೇಳೆ ನಿಯೋಗದಲ್ಲಿದ್ದ ಮಹಿಳೆಯೊಬ್ಬರು, ಎಲ್ಲಿ ಸ್ವಾಮಿ ನಮಗೆ ಹಣ ಬರುತ್ತಿಲ್ಲ ಎಂದು ಹೇಳಿದರು. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್, ಎಲ್ಲರಿಗೂ ಹಣ ಬರುತ್ತಿದೆ. ಯಾರು ದಾಖಲೆಗಳನ್ನು ಸರಿಯಾಗಿ ಕೊಟ್ಟಿಲ್ಲವೋ ಅವರಿಗೆ ಬಂದಿಲ್ಲ. ನೀವು ಮೊದಲು ದಾಖಲೆಗಳನ್ನು ಸರಿಪಡಿಸಿಕೊಳ್ಳಿ ಎಂದು ಖಾರವಾಗಿ ಹೇಳಿದ್ದಲ್ಲದೆ, ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್‍ನಲ್ಲಿ ಓಡಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು. +ಪೌರ ಕಾರ್ಮಿಕರ ದಿನಾಚರಣೆಗೂ ಮುನ್ನ 10 ಅಥವಾ 12 ರಂದು ಯಾರಾದರೂ ಬಂದು ನನಗೆ ನೆನಪಿಸಿ ಎಂದು ನಿಯೋಗದ ಸದಸ್ಯರಿಗೆ ಹೇಳಿ ಡಿ.ಕೆ.ಶಿವಕುಮಾರ್ ನಿರ್ಗಮಿಸಿದರು. \ No newline at end of file diff --git a/eesanje/url_46_336_1.txt b/eesanje/url_46_336_1.txt new file mode 100644 index 0000000000000000000000000000000000000000..7233fd61b09b732f712fee7dccf6a9c9fe6ae701 --- /dev/null +++ b/eesanje/url_46_336_1.txt @@ -0,0 +1,10 @@ +ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ +ಬೆಂಗಳೂರು,ಅ.6- ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ಕೇಂದ್ರ ಸರ್ಕಾರದ ಮೂರು ತಂಡಗಳು ಇಂದು ಆರಂಭಿಸಿವೆ. ಇಂದಿನಿಂದ ಮೂರು ದಿನಗಳ ಕಾಲ ಬರಪೀಡಿತ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಜಿಲ್ಲಾಧಿಕಾರಿಗಳು, ತಹಸೀಲ್ದಾರ್, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿವೆ. +ಬರಪೀಡಿತ ತಾಲೂಕುಗಳ ಜಮೀನುಗಳಿಗೆ ಭೇಟಿ ನೀಡಿ ಮಳೆ, ಬೆಳೆ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸುತ್ತಿವೆ. 10 ಸದಸ್ಯರನ್ನೊಳಗೊಂಡ ಮೂರು ತಂಡ ರಾಜ್ಯಕ್ಕೆ ಆಗಮಿಸಿ ನಿನ್ನೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಂದ ಬರಪರಿಸ್ಥಿತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡಿದ್ದರು. +ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿ, ವಿಜಯಪುರ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ನಾಳೆ (ಅ.7) ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ. +ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಿ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿಯನ್ನು ಪರಿಶೀಲಿಸಿತು. +ಭಾರೀ ಚರ್ಚೆಗೆ ಕಾರಣವಾಯ್ತು ರಾವಣನಿಗೆ ರಾಹುಲ್ ಗಾಂಧಿ ಹೋಲಿಕೆ +ನಾಳೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ. ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ಇಂದು ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಬರಕ್ಕೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿತು. ನಾಳೆ ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ. +ವಿವಿಧ ಜಿಲ್ಲೆಗಳ ಬರಪೀಡಿತ ಪ್ರದೇಶಗಳಿಗೆ ಈ ಮೂರು ತಂಡಗಳು ಭೇಟಿ ನೀಡಿ ಅಧ್ಯಯನ ನಡೆಸಿ, ಮಾಹಿತಿ ಸಂಗ್ರಹಿಸಿದ ಬಳಿಕ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗಳೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ. +ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು +ರಾಜ್ಯದಲ್ಲಿ ಬರಪೀಡಿತ ಪ್ರದೇಶಗಳಲ್ಲಿನ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಿ ಮತ್ತು ರಾಜ್ಯಸರ್ಕಾರ ನೀಡಿದ ಮನವಿ ಪತ್ರದಲ್ಲಿನ ಅಂಶಗಳನ್ನು ಪರಿಶೀಲಿಸಿ ಕೇಂದ್ರಸರ್ಕಾರಕ್ಕೆ ಈ ತಂಡ ವರದಿಯನ್ನು ಸಲ್ಲಿಸಲಿದೆ. ವರದಿಯನ್ನಾಧರಿಸಿ ಕೇಂದ್ರ ಸರ್ಕಾರ ಪರಿಹಾರ ಧನವನ್ನು ರಾಜ್ಯಕ್ಕೆ ಮಂಜೂರು ಮಾಡಲಿದೆ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ಮಾರ್ಗಸೂಚಿ ಪ್ರಕಾರ 4,800 ಕೋಟಿ ರೂ. ಪರಿಹಾರ ನೀಡುವಂತೆ ರಾಜ್ಯಸರ್ಕಾರ ಮನವಿ ಸಲ್ಲಿಸಿದೆ. \ No newline at end of file diff --git a/eesanje/url_46_336_10.txt b/eesanje/url_46_336_10.txt new file mode 100644 index 0000000000000000000000000000000000000000..ee76d183cbf43e94caace11c1c682a82c1368a89 --- /dev/null +++ b/eesanje/url_46_336_10.txt @@ -0,0 +1,6 @@ +ಶಿವಮೊಗ್ಗ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಅಲೋಕ್ ಮೋಹನ್ +ಬೆಂಗಳೂರು,ಅ.4- ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ತಿಳಿಸಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ವಿಮರ್ಶಾ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. +ಅಂದಿನ ಘಟನೆ ಸಂದರ್ಭದಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಇದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು. +ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು +ರಾಜ್ಯದಲ್ಲಿ ಇಂತಹ ಘಟನೆಗಳು ಮುಂದೆಂದೂ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಪ್ರಸ್ತುತ ಪರಿಸ್ಥಿತಿಶಾಂತವಾಗಿದೆ. ಗಲಭೆ ಸಂಬಂಧ ಈವರೆಗೆ 27 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ 64 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. +ಶಿವಮೊಗ್ಗದಲ್ಲಿ ಕೆಎಸ್‍ಆರ್‍ಪಿ ಮತ್ತು ಡಿಎಆರ್ ಪ್ಲಟೂನ್ ಗಳನ್ನು ನಿಯೋಜಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದರು. \ No newline at end of file diff --git a/eesanje/url_46_336_11.txt b/eesanje/url_46_336_11.txt new file mode 100644 index 0000000000000000000000000000000000000000..6dcd7dfbf8cdcd6ccf369dc8419125fd5c4a606e --- /dev/null +++ b/eesanje/url_46_336_11.txt @@ -0,0 +1,9 @@ +ಜಾತ್ಯತೀತ ಸಿದ್ಧಾಂತ ಬಿಟ್ಟುಕೊಡಲು ಸಾಧ್ಯವಾಗುತ್ತಿಲ್ಲ : ಸಿ.ಎಂ.ಇಬ್ರಾಹಿಂ +ಬೆಂಗಳೂರು,ಅ.4-ಬಿಜೆಪಿ ಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ನಮ್ಮ ಪಕ್ಷದ ಚಿಹ್ನೆ ಉಳಿಯಲಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೂ ನಾವು ಜಾತ್ಯತೀತ ಸಿದ್ದಾಂತ ಬಿಟ್ಟುಕೊಡಲು ಆಗುವುದಿಲ್ಲ ಎಂದರು. +ಜೆಡಿಎಸ್ ಸಿದ್ದಾಂತವನ್ನು ಮೆಚ್ಚಿ ಬಿಜೆಪಿಯವರು ಬಂದಿದ್ದಾರೆಯೇ ಅಥವಾ ಬಿಜೆಪಿ ಸಿದ್ದಾಂತವನ್ನು ಮೆಚ್ಚಿ ಜೆಡಿಎಸ್‍ನವರು ಹೋಗಿದ್ದಾರಾ? ಎಂಬ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಎಲ್ಲ ಕಡೆ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಕ್ಟೋಬರ್ 16ರಂದು ಮೈತ್ರಿ ಕುರಿತಂತೆ ಸವಿಸ್ತಾರವಾಗಿ ಚರ್ಚೆ ಮಾಡುತ್ತೇವೆ. ಎಲ್ಲರೂ ಸಲಹೆ ಕೊಡಲು ಕಾತುರದಿಂದ ಕಾಯುತ್ತಿದ್ದಾರೆ. ಆ ಸಭೆಯ ನಂತರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುವುದಾಗಿ ಹೇಳಿದರು. +ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು +ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯಾದ ಬಳಿಕ ನಾನು ಪಕ್ಷದಲ್ಲಿ ಕಾಣಿಸುತ್ತಿಲ್ಲ ಎಂಬುದು ತಪ್ಪು. ಎಲ್ಲ ಜಿಲ್ಲೆಯವರು ನಮ್ಮ ಸಂಪರ್ಕದಲ್ಲಿದ್ದಾರೆ. ನಾನು ಕೂಡ ಎಲ್ಲ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಈ ಮೈತ್ರಿ ಕಾಂಗ್ರೆಸಿಗೆ ಬೇಕು, ಬಿಜೆಪಿಗೆ ಬೇಕೊ ಎಂಬುದು ಗೊತ್ತಿಲ್ಲ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ.20ರಷ್ಟು ಮತಗಳು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬಂದಿದೆ. ಇದನ್ನು ಶಾಸಕರು ಒಪ್ಪಿದ್ದಾರೆ. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹೆಚ್ಚು ಮತಗಳು ಬರಲಿಲ್ಲ, ಏಕೆ ಬರಲಿಲ್ಲ ಎಂಬುದರ ಕಾರಣ ಹುಡುಕಬೇಕಿದೆ ಎಂದರು. +ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿ ಏನು ಅಡುಗೆ ಮಾಡಬೇಕೊ ಅದನ್ನು ಮಾಡಿದ್ದೇನೆ. ಬಿರಿಯಾನಿಯನ್ನೇ ಯಾಕೆ ಮಾಡಿಲ್ಲ ಎಂದರೆ ಅದು ನನಗೆ ಗೊತ್ತಿಲ್ಲ. ಮೈತ್ರಿ ಬಗ್ಗೆ ಕೆಲವರಿಗೆ ಅಸಮಾಧಾನವಿದೆ. ಆದರೆ ಅವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದರು. +ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ +ವಿಧಾನಪರಿಷತ್ ಸದಸ್ಯ ಸ್ಥಾನವನ್ನೇ ಬಿಟ್ಟು ಬಂದಿದ್ದೇನೆ. ನಾನು ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿದವನಲ್ಲ ನಾಡಿನ ಜನರ ಹೃದಯದಲ್ಲಿದ್ದೇನೆ ಎಂದು ರಾಯಭಾರ ಹುದ್ದೆಯ ಬೇಡಿಕೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. +ರಾಜ್ಯ ಸರ್ಕಾರದ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ನೀಡಿದ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಶಿವಾಜಿ, ಮಹಾತ್ಮ ಗಾಂೀಧಿಜಿ, ಟಿಪ್ಪು ಸುಲ್ತಾನ್ ಕಟೌಟ್‍ಗಳನ್ನು ಹಾಕಿದರೆ ತಪ್ಪೇ? ಟಿಪ್ಪು, ಔರಂಗಜೇಬ್ ಯಾರು ಎಂದು ಗೊತ್ತೆ? ಔರಂಗಜೇಬ್ ಹಿಂದೂಸ್ಥಾನದ ದೊರೆಯಾಗಿದ್ದರು. ಅವರ ಕಟೌಟ್ ಹಾಕಿದರೆ ತಪ್ಪೇನು ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು. \ No newline at end of file diff --git a/eesanje/url_46_336_12.txt b/eesanje/url_46_336_12.txt new file mode 100644 index 0000000000000000000000000000000000000000..5634c583298c585e5e3ba6b069d3a6673b83556d --- /dev/null +++ b/eesanje/url_46_336_12.txt @@ -0,0 +1,10 @@ +ಆಭರಣ ಮಳಿಗೆ, ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ದಾಳಿ +ಬೆಂಗಳೂರು,ಅ.4-ತೆರಿಗೆ ಕಟ್ಟದೆ ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಗರದ 50 ಕಡೆ ಏಕಕಾಲಕ್ಕೆ ಆಭರಣ ಮಾಲೀಕರ ಅಂಗಡಿ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ, ವ್ಯಾಪಾರಿಗಳು, ವರ್ತಕರು, ದಂತ ವೈದ್ಯರು, ಮಾಲೀಕರು, ಖಾಸಗಿ ಕಂಪನಿಗಳು, ಮನೆ ಮತ್ತು ಕಚೇರಿಗಳ ಮೇಲೆ 15 ಕ್ಕೂ ಹೆಚ್ಚು ಅಧಿಕಾರಿಗಳು ದಿಢೀರ್ ದಾಳಿ ಮಾಡಿ ತೆರಿಗೆ ವಂಚನೆ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. +ದಾಳಿಗೆ ಒಳಗಾಗಿರುವ ಆಭರಣ ಅಂಗಡಿ ಮಾಲೀಕರು, ದಂತ ವೈದ್ಯರು, ಖಾಸಗಿ ವ್ಯಕ್ತಿಗಳಿಗೆ ಸದ್ಯದಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಐಟಿ ಮುಂದಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ವಿಜಯನಗರ, ಬಿಟಿಎಂ ಲೇಔಟ್, ಸದಾಶಿವನಗರ, ಹುಳಿಮಾವು ಸೇರಿದಂತೆ ಮತ್ತಿತರ ಕಡೆ ಒಟ್ಟು 50 ಅಧಿಕಾರಿಗಳ ತಂಡ ಚಿನ್ನದ ಅಂಗಡಿಗಳು, ಮೆಡಿಕಲ್ ಶಾಪ್‍ಗಳು, ಖಾಸಗಿ ಆಸ್ಪತ್ರೆಗಳ ಮಾಲಕರ ಮನೆ, ಉದ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಚಿರ, ಚರಾಸ್ತಿ ಪತ್ತೆ ಮಾಡಿದ್ದಾರೆ. +ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್ +ಗೋವಾ ಮತ್ತು ಚೆನ್ನೈನಿಂದ ಆಗಮಿಸಿದ್ದ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣದೊಂದು ಮಾಹಿತಿಯನ್ನೂ ನೀಡದೆ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ವಿಜಯನಗರ ಮತ್ತು ಶಾಂತಿನಗರದಲ್ಲಿ ವೈದ್ಯೆಯರ ಮನೆ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೆರಿಗೆ ವಂಚನೆಗೆ ಸಂಬಂಧಿಸಿದ ದಾಖಲೆಗಳನ್ನು ಪತ್ತೆ ಮಾಡಿದ್ದಾರೆ. +ಮೇಕ್ರಿ ಸರ್ಕಲ್ ಬಳಿಯ ಗಜರಾಜ ಜ್ಯುವೆಲರ್ಸ್ ಮೇಲೂ ದಾಳಿ ನಡೆಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ತೆರಿಗೆ ಕಟ್ಟಿರಲಿಲ್ಲ ಎಂದು ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಅಂಗಡಿಯ ಬಾಗಿಲು ಹಾಕಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ಪ್ರತಿರೋಧ ತೋರಿದರೂ ಐಟಿ ಅಧಿಕಾರಿಗಳು ಯಾವುದಕ್ಕೂ ಜಗ್ಗಲಿಲ್ಲ. +ಪ್ರಭಾವಿ ರಾಜಕಾರಣಿ ಸಂಬಂಧಿಕರ ಆಭರಣ ಅಂಗಡಿ ಮತ್ತು ಕಚೇರಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ. ಸದಾಶಿವನಗರದ ಸ್ಯಾಂಕಿಟ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮಿಲಾಲ ಜೈನ್‍ಗಣೇಶ್ ಆಭರಣದ ಅಂಗಡಿಗಳ ಮೇಲೂ ದಾಳಿ ನಡೆಸಲಾಗಿದೆ. ಎರಡು ಖಾಸಗಿ ಇನ್ನೋವ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಸುಮಾರು 3 ಗಂಟೆಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದಿದ್ದಾರೆ. +ತಿಂಗಳಾಂತ್ಯಕ್ಕೆ ಪಂಚರಾಜ್ಯ ಚುನಾವಣೆ ಘೋಷಣೆ ಸಾಧ್ಯತೆ +ವಿಜಯನಗರದ ಖ್ಯಾತ ದಂತ ವೈದ್ಯೆ ಸಂಧ್ಯಾ ಪಾಟೀಲ್ ಅವರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಪ್ರಶಾಂತನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಶಾಂತಿನಗರದಲ್ಲಿ ನವೀನ್ ಎಂಬುವರಿಗೆ ಸೇರಿದ ಕಚೇರಿ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಗಿ ಭದ್ರತೆ ನಡುವೆ ಎರಡು ಇನ್ನೋವಾ ಕಾರಿನಲ್ಲಿ 10 ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ನವೀನ್‍ರಿಗೆ ಸೇರಿದ ಬ್ಯಾಂಕ್ ಖಾತೆಗಳು, ಚಿರ, ಚರಾಸ್ತಿಗಳ ಬಗ್ಗೆ ಪರಿಶೀಲನೆ ಮಾಡಿ, ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. +ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಒಂದು ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_336_2.txt b/eesanje/url_46_336_2.txt new file mode 100644 index 0000000000000000000000000000000000000000..6f0b56fb2ff87e0c91e0f32cd89437034286bac0 --- /dev/null +++ b/eesanje/url_46_336_2.txt @@ -0,0 +1,15 @@ +ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ +ಬೆಂಗಳೂರು,ಅ.6-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಸೋಲಿಸಲು ಭಿನ್ನಾಭಿಪ್ರಾಯ ಮರೆತು ಒಗ್ಗೂಡಲು ಮುಂದಾಗಿದ್ದ ಬಿಜೆಪಿ , ಜೆಡಿಎಸ್ ಮೈತ್ರಿಗೆ ಅಪಸ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎರಡು ಪಕ್ಷಗಳ ನಡುವೆ ಕಂದಕ ಇನ್ನಷ್ಟು ಸೃಷ್ಟಿಯಾಗುವ ಸಾಧ್ಯತೆ ಹೆಚ್ಚಳವಾಗಿದೆ. +ಸೈದ್ಧಾಂತಿಕವಾಗಿ ಉತ್ತರ ಧೃವ ಮತ್ತು ದಕ್ಷಿಣ ಧೃವ ಎಂಬಂತಿದ್ದ ಬಿಜೆಪಿ, ಜೆಡಿಎಸ್ ಮೈತ್ರಿ ಮೇಲ್ನೋಟಕ್ಕೆ ಮೊದಲ ಹಂತದ ನಾಯಕರ ನಡುವೆ ಆಗಿದೆ. ಆದರೆ ಎರಡನೇ ಮತ್ತು ಮೂರನೇ ಹಂತದ ನಾಯಕರು ಈ ಕ್ಷಣಕ್ಕೂ ಮೈತ್ರಿಯನ್ನು ವಿರೋಧಿಸುತ್ತಲೇ ಇದ್ದಾರೆ. +ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವುದು ಒಂದು ನೆಪಮಾತ್ರ. ಬರುವ ದಿನಗಳಲ್ಲಿ ಈ ಧ್ವನಿಗೆ ಇನ್ನಷ್ಟು ಶಕ್ತಿ ಬರಲಿದ್ದು, ಜೆಡಿಎಸ್ ಜೊತೆ ಹೊಂದಾಣಿಕೆ ಬೇಡವೇ ಬೇಡ ಎಂಬ ಕೂಗು ಹೆಚ್ಚಾಗಲಿದೆ. +ಮಾಜಿ ಶಾಸಕ ಪ್ರೀತಂಗೌಡ ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿಗೆ ವಿರೋಧ ವ್ಯಕ್ತಪಡಿಸುವುದರ ಜೊತೆಗೆ ಹಾಸನ ಕ್ಷೇತ್ರವನ್ನು ಜೆಡಿಎಸ್‍ನವರು ನಮಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ. ಇನ್ನು ಇದೇ ರೀತಿ ಅನೇಕ ಶಾಸಕರು ಒಳಗೊಳಗೇ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಬಹಿರಂಗವಾಗಿ ಯಾರೂ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಏಕೆಂದರೆ ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿ ವಿರೋಧ ವ್ಯಕ್ತವಾದರೆ ತಮ್ಮ ರಾಜಕೀಯ ಭವಿಷ್ಯಕ್ಕೆ ಕಲ್ಲು ಬೀಳಬಹುದು ಎಂಬ ಆತಂಕ ಕಾಡುತ್ತಿದೆ. +ವಿವೇಕ್ ರಾಮಸ್ವಾಮಿಗೆ ಮಧ್ಯದ ಬೆರಳು ತೋರಿಸಿದ ಪ್ರತಿಭಟನಾಕಾರರು +ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಬಹುತೇಕ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ವೇಳೆಗೆ ಶಾಸಕ ಸ್ಥಾನಕ್ಕೆ ಇಬ್ಬರು ರಾಜೀನಾಮೆಯನ್ನು ನೀಡಬಹುದು. ಹೀಗಾಗಿಯೇ ಅವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಪಕ್ಷದ ವಲಯದಲ್ಲಿ ಕೇಳಿಬಂದಿದೆ. +ಅಲ್ಲದೆ ಎಸ್.ಟಿ.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಂಘಟನೆಯಲ್ಲಿ ಪ್ರಬಲವಾಗಿದ್ದು, ಉಪಚುನಾವಣೆ ಎದುರಾದರೆ ಗೆದ್ದು ಬರುವುದು ಅಷ್ಟು ಸರಳವಾಗಿಲ್ಲ ಎಂಬುದು ಅವರಿಗೂ ಗೊತ್ತಾಗಿದೆ. ಹೀಗಾಗಿಯೇ ಜೆಡಿಎಸ್ ಜೊತೆ ಹೊಂದಾಣಿಕೆಗೆ ವಿರೋಧವನ್ನು ಹೊರಹಾಕಿದ್ದಾರೆ. ಸದ್ಯ ಶಿವರಾಂ ಹೆಬ್ಬಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲವಾದರೂ ಸೋಮಶೇಖರ್ ಅಭಿಪ್ರಾಯಕ್ಕೆ ಅವರ ಸಹಮತ ಇದ್ದೇ ಇರುತ್ತದೆ ಎಂದು ಹೇಳಲಾಗಿದೆ. +ಉಳಿದಂತೆ ಹಳೆ ಮೈಸೂರು ಭಾಗವಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಗೆ ಎರಡು ಮತ್ತು ಮೂರನೇ ಹಂತದ ನಾಯಕರು ಸುತಾರಾಂ ಒಪ್ಪುತ್ತಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಉಂಟಾಗಿರಬಹುದು. ಆದರೆ ಇದೇ ಪರಿಸ್ಥಿತಿ ಲೋಕಸಭೆ ಚುನಾವಣೆಯಲ್ಲಿ ಇರುತ್ತದೆ ಎಂದು ಭಾವಿಸಬೇಕಿಲ್ಲ. +ವಿಧಾನಸಭಾ ಚುನಾವಣೆ ಸ್ಥಳೀಯ ರಾಜಕೀಯ ಪರಿಸ್ಥಿತಿಗನುಗುಣವಾಗಿ ನಡೆಯುತ್ತದೆ. ಇದೇ ಫಲಿತಾಂಶವನ್ನು ಲೋಕಸಭೆ ಚುನಾವಣೆಗೂ ಅನ್ವಯಿಸಿಕೊಳ್ಳಬೇಕಾಗಿಲ್ಲ. ಎರಡು ಚುನಾವಣೆಗಳ ಪರಿಸ್ಥಿತಿ ವಿಭಿನ್ನವಾಗಿರುತ್ತದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಇತ್ತು. ಒಂದು ಕಡೆ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ, ಸಂಘಟನೆಯ ಚತುರ ಡಿ.ಕೆ.ಶಿವಕುಮಾರ್‍ರಂತಹ ಘಟಾನುಘಟಿಗಳು ಇದ್ದಾಗಲೇ ನಾವು 25 ಸ್ಥಾನಗಳನ್ನು ಗೆದ್ದಿದ್ದೆವು ಇದೇ ರೀತಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಡದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗಲೂ ಬಿಜೆಪಿ ಕ್ಲೀನ್‍ಸ್ವೀಪ್ ಮಾಡಿತ್ತು. +ಈಗ ಪಂಚಖಾತ್ರಿ ಯೋಜನೆಗಳು ಸರ್ಕಾರದ ಜನಪ್ರಿಯತೆ ಅಂದುಕೊಂಡರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಕನಿಷ್ಠ ಎಂದರೂ 28 ರ ಪೈಕಿ 14 ರಿಂದ 15 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಒಂದಿಷ್ಟು ಶ್ರಮ ಹಾಕಿದರೆ 18 ರಿಂದ 20 ಸ್ಥಾನಗಳು ನಮಗೆ ಲಭಿಸಲಿವೆ. +ಹೈಸ್ಪೀಡ್ ರೈಲು ಸಂಚರಿಸುವ ಸುರಂಗ ಮಾರ್ಗ ಪೂರ್ಣ +1999 ರಿಂದ ಈವರೆಗೂ ರಾಜ್ಯದಲ್ಲಿ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನಿಚ್ಛಳವಾಗಿ ಮುನ್ನಡೆ ಸಾಧಿಸಿಕೊಂಡು ಬಂದಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ನಮಗೆ ಲಾಭಕ್ಕಿಂತ ನಷ್ಟವೇ ಹೆಚ್ಚು. ನಮ್ಮ ಪರಿಶ್ರಮದಲ್ಲಿ ಜೆಡಿಎಸ್ ಮೂರರಿಂದ ನಾಲ್ಕು ಸ್ಥಾನಗಳನ್ನು ಗೆದ್ದುಕೊಳ್ಳಬಹುದು. ಬದಲಿಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಹಿಂದೆ ಸರಿಯುವುದೇ ಲೇಸು ಎನ್ನುವುದು ಬಹುತೇಕ ನಾಯಕರ ಒತ್ತಾಸೆಯಾಗಿದೆ. +ಹಾವು ಮುಂಗಸಿಯಂತಿದ್ದ ನಾವು ಏಕಾಏಕಿ ಪರಸ್ಪರ ಹಸ್ತಲಾಘವ ಮಾಡುವುದು ಅಷ್ಟು ಸುಲಭವಲ್ಲ. ಜೆಡಿಎಸ್‍ನ ಭದ್ರಕೋಟೆ ಎನಿಸಿದ ಹಾಸನದಲ್ಲೇ ಎರಡು ಸ್ಥಾನಗಳನ್ನು ಗೆದ್ದಿದ್ದೇವೆ. ಅಲ್ಲದೆ ಸ್ವತಃ ಹಾಸನ ಕ್ಷೇತ್ರದಲ್ಲೇ ನಮ್ಮ ಸಂಘಟನೆ ಈಗಲೂ ಪ್ರಬಲವಾಗಿದೆ. ಈ ಬಾರಿ ಬಿಜೆಪಿ ಗೆಲ್ಲುವ ವಾತಾವರಣವಿದ್ದು, ನಾವೇಕೆ ಜೆಡಿಎಸ್‍ಗೆ ಬಿಟ್ಟುಕೊಡಬೇಕೆಂದು ಪ್ರೀತಂಗೌಡ ರಾಜ್ಯನಾಯಕರಿಗೆ ಒತ್ತಡ ಹಾಕಿದ್ದಾರೆ. +ಹೀಗೆ ಎಲ್ಲಾ ಹಂತದಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ವಿರೋಧ ವ್ಯಕ್ತವಾಗುತ್ತಿರುವುದರಿಂದ ಬಿಜೆಪಿಗೆ ಮತ್ತೊಂದು ತಲೆನೋವು ಎದುರಾಗಿದೆ. \ No newline at end of file diff --git a/eesanje/url_46_336_3.txt b/eesanje/url_46_336_3.txt new file mode 100644 index 0000000000000000000000000000000000000000..263d57edbb4c5df28d3b0b1ce8f0884d0d26f11e --- /dev/null +++ b/eesanje/url_46_336_3.txt @@ -0,0 +1,6 @@ +ಸಿಎಂ ಜನತಾದರ್ಶನ ಮುಂದೂಡಿಕೆ +ಬೆಂಗಳೂರು,ಅ.5- ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರ ಜನತಾದರ್ಶನ ಮುಂದೂಡಿಕೆಯಾಗಿದೆ. ಅ.9 ರಂದು ಗೃಹಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 10.30ರಿಂದ ಜನತಾದರ್ಶನ ನಡೆಸಲು ನಿರ್ಧರಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿತ್ತು. +ಆದರೆ ಅದೇ ದಿನ ದೆಹಲಿಯಲ್ಲಿ ಅಖಿಲ ಭಾರತ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮುಖ್ಯಮಂತ್ರಿಯವರು ದೆಹಲಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. +ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಮೊದಲ ಅವಯ ಮುಖ್ಯಮಂತ್ರಿಯಾಗಿದಾಗಲೇ ಸಿದ್ದರಾಮಯ್ಯ ಜನತಾದರ್ಶನಕ್ಕೆ ಒತ್ತು ನೀಡಿದ್ದರು. ಎರಡನೇ ಅವಯಲ್ಲಿ ಜಿಲ್ಲಾ ಹಾಗೂ ಇಲಾಖಾವಾರು ಜನತಾದರ್ಶನಗಳಿಗೆ ಸೂಚನೆ ನೀಡಿದ್ದರು. ಅದರಂತೆ ಕಳೆದ ತಿಂಗಳು 25 ರಿಂದ 2 ದಿನಗಳ ಕಾಲ ನಡೆದ ಜಿಲ್ಲಾ ಜನತಾದರ್ಶನದಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿತ್ತು. ಅವುಗಳನ್ನು ಬಹುತೇಕ ಇತ್ಯರ್ಥಗೊಂಡಿದ್ದು, ಬಾಕಿ ಅರ್ಜಿಗಳನ್ನು ಇಲಾಖಾವಾರು ಪರಿಶೀಲನೆ ನಡೆಸಲಾಗುತ್ತಿದೆ. +ವಿಶ್ವವಿಖ್ಯಾತ ದಸರಾಕ್ಕೆ ಬರದ ಸಿದ್ಧತೆ, ವೇಳಾಪಟ್ಟಿ ಬಿಡುಗಡೆ +ಈ ಮೊದಲು ಮುಖ್ಯಮಂತ್ರಿಯವರ ನೇರ ಜನತಾದರ್ಶನದಲ್ಲಿ ಸಾವಿರಾರು ಅರ್ಜಿಗಳು ಬರುತ್ತಿದ್ದವು. ಸಿದ್ದರಾಮಯ್ಯನವರ ಬಳಿಕ ಈ ರೀತಿಯ ಜನತಾದರ್ಶನಗಳು ಸ್ಥಗಿತಗೊಂಡಿದ್ದವು. ಅದಕ್ಕೆ ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಜನತಾದರ್ಶನದ ದಿನಾಂಕವನ್ನು ಪ್ರಕಟಿಸುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. \ No newline at end of file diff --git a/eesanje/url_46_336_4.txt b/eesanje/url_46_336_4.txt new file mode 100644 index 0000000000000000000000000000000000000000..d3a23c7c6bf8a6154bbbcd57524e64d4ad9c2c7e --- /dev/null +++ b/eesanje/url_46_336_4.txt @@ -0,0 +1,10 @@ +ಕೇಂದ್ರ ತಂಡದಿಂದ ರಾಜ್ಯದಲ್ಲಿ ಬರ ಅಧ್ಯಯನ +ಬೆಂಗಳೂರು,ಅ.5- ರಾಜ್ಯದ ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಗತಿ ಅಧ್ಯಯನವನ್ನು ನಾಲ್ಕು ದಿನಗಳ ಕಾಲ ಕೇಂದ್ರ ಸರ್ಕಾರದ ಮೂರು ತಂಡಗಳು ನಡೆಸಲಿವೆ. 10 ಸದಸ್ಯರನ್ನೊಳಗೊಂಡ ಕೇಂದ್ರ ಸರ್ಕಾರದ ಮೂರು ತಂಡ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯಿಂದ ಬರಪೀಡಿತ ಜಿಲ್ಲೆಗಳಲ್ಲಿ ಪರಿಸ್ಥಿತಿಯ ಅಧ್ಯಯನ ಮಾಡಲಿವೆ. +ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರಕ್ಕೆ ಭೇಟಿ ನೀಡಿ ಬರಪರಿಸ್ಥಿತಿ ಕುರಿತ ಮಾಹಿತಿಯನ್ನು ಅಧಿಕಾರಿಗಳಿಂದ ಕೇಂದ್ರದ ತಂಡಗಳು ಪಡೆದುಕೊಂಡಿವೆ. ಇಂದು ಮಧ್ಯಾಹ್ನ ಬರಪರಿಸ್ಥಿತಿಯ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳಿಂದ ಪಡೆದುಕೊಂಡಿವೆ. ಮೂರು ತಂಡಗಳು ಇಂದೇ ವಿವಿಧ ಜಿಲ್ಲೆಗಳಿಗೆ ತೆರಳಲಿದ್ದು, ನಾಳೆಯಿಂದ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಂಡು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಿವೆ. +ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿರುವ ರಾಜ್ಯಸರ್ಕಾರ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ರಾಜ್ಯಸರ್ಕಾರದ ಮನವಿ ಮೇರೆಗೆ ಅಧ್ಯಯನ ತಂಡಗಳನ್ನು ಕೇಂದ್ರಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ಅವರ ನೇತೃತ್ವದ ಮೊದಲ ತಂಡವು ಇಂದು ಬೆಳಗಾವಿಗೆ ತೆರಳಲಿದೆ. ನಾಳೆ ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳ ಬರಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಲಿದೆ. +ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ +ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ.ರಾಜಶೇಖರ್ ನೇತೃತ್ವದ ಎರಡನೇ ತಂಡವು ಇಂದು ಹುಬ್ಬಳ್ಳಿಗೆ ತೆರಳಲಿದೆ. ನಾಳೆ ಗದಗ, ಕೊಪ್ಪಳ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಅ.7 ರಂದು ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಬರಪರಿಸ್ಥಿತಿಯ ಅಧ್ಯಯನ ಕೈಗೊಳ್ಳಲಿದೆ. +ಕೇಂದ್ರ ಜಲ ಆಯೋಗದ ನಿರ್ದೇಶಕರಾದ ವಿ.ಅಶೋಕ್‍ಕುಮಾರ್ ನೇತೃತ್ವದ ಮೂರನೇ ತಂಡವು ನಾಳೆ ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಸಂಗ್ರಹಿಸಲಿದೆ. ಅ.7 ರಂದು ಚಿತ್ರದುರ್ಗ, ದಾವಣಗೆರೆ ಹಾಗೂ ಅ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುಸ್ಥಿತಿ ಅಧ್ಯಯನ ಮಾಡಲಿದೆ. +ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ +ಈ ಮೂರು ತಂಡಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಮಾಹಿತಿ ಸಂಗ್ರಹಿಸಿ ಅ.8 ರಂದು ಬೆಂಗಳೂರಿಗೆ ಮರಳಲಿವೆ. ಅ.9 ರಂದು ಬೆಂಗಳೂರಿನಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಂದ ಮತ್ತೊಮ್ಮೆ ಸಂಕ್ಷಿಪ್ತ ವಿವರಣೆ ಪಡೆದು ದೆಹಲಿಗೆ ಮರಳುವ ಕಾರ್ಯಕ್ರಮವಿದೆ. +ಈ ನಡುವೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಬರಪೀಡಿತ ಪ್ರದೇಶಗಳ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರಸರ್ಕಾರದ ಅಧ್ಯಯನದ ತಂಡಗಳಿಗೆ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುಂಗಾರು ಹಂಗಾಮಿನ ಮಳೆಯ ವಾಸ್ತವ ಪರಿಸ್ಥಿತಿ, ಬೆಳೆಹಾನಿ, ಇಳುವರಿ ಕುಸಿತವಾಗುವುದು ಸೇರಿದಂತೆ ಮಳೆ ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವಂತೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_336_5.txt b/eesanje/url_46_336_5.txt new file mode 100644 index 0000000000000000000000000000000000000000..471c90bc5de01f89f980f2988892d44fe58180fe --- /dev/null +++ b/eesanje/url_46_336_5.txt @@ -0,0 +1,11 @@ +ವಿಶ್ವವಿಖ್ಯಾತ ದಸರಾಕ್ಕೆ ಬರದ ಸಿದ್ಧತೆ, ವೇಳಾಪಟ್ಟಿ ಬಿಡುಗಡೆ +ಬೆಂಗಳೂರು,ಅ.5- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶರನ್ನಾವರಾತ್ರಿ ಪ್ರಯುಕ್ತ ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅ.9ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. +ಅ.15ರಂದು 6 ಗಂಟೆಯಿಂದ 6:25 ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. +ನಂತರ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ, ಬಳಿಕ ಬೆಳಗ್ಗೆ 11:30ರಿಂದ 11:50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಅಂದು ಮಧ್ಯಾಹ್ನ 1:45ರಿಂದ 02:05ರ ಅವಧಿಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಾಗುತ್ತದೆ. +ಅ.20ರಂದು 10:05ರಿಂದ 10:25ಕ್ಕೆ ಸರಸ್ವತಿ ಪೂಜೆ, ಅ.21ರಂದು ಕಾಳರಾತ್ರಿ ಪೂಜೆ, ಅ.22ರಂದು ಮತ್ತು ಅ.23ರಂದು ದುರ್ಗಾಷ್ಠಮಿ ಪೂಜೆ ನಡೆಯಲಿದೆ. ಅದೇ ದಿನ ಬೆಳಗ್ಗೆ 5:30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಆ ಸಮಯದಲ್ಲಿ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. +ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೇಸರಿ ಬಣ್ಣ ಏಕೆ..? +ಬಳಿಕ ಬೆಳಗ್ಗೆ 6:05ರಿಂದ 06:15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಆಗಲಿವೆ. ಬೆಳಗ್ಗೆ 07:15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ತರಲಾಗುತ್ತದೆ. ಬೆಳಗ್ಗೆ 9:30ಕ್ಕೆ ಚಂಡಿಹೋಮ ಪೂರ್ಣಾಹುತಿ ನಡೆಯಲಿದೆ. +ಬೆಳಗ್ಗೆ 11:45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಬರಲಿವೆ. ಬಳಿಕ ಮಧ್ಯಾಹ್ನ 12:20ಕ್ಕೆ ಆಯುಧಪೂಜೆ ಆರಂಭವಾಗಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನಡೆಯಲಿದೆ. +ಬಳಿಕ ಸಂಜೆ ಖಾಸಗಿ ದರ್ಬಾರ್ ಇರಲಿದೆ. ನಂತರ ಸಿಂಹ ವಿಸರ್ಜನೆ, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಆಗಲಿದೆ. ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ಮಾಡಿ, ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮಲದೇವಿ ದರ್ಶನ ಪಡೆಯಲಿದ್ದಾರೆ. +ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ +ಅ.24ರಂದು ವಿಜಯದಶಮಿ ಆಚರಣೆ ನಡೆಯಲಿದೆ. ಬೆಳಗ್ಗೆ 9:45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 11 ರಿಂದ 11:40ರ ವೇಳೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ನಡೆಯಲಿದೆ. ಬಳಿಕ ಭುವನೇಶ್ವರಿ ದೇಗುಲದಲ್ಲಿ ಶಮಿ ಪೂಜೆಯನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೆರವೇರಿಸಲಿದ್ದಾರೆ. \ No newline at end of file diff --git a/eesanje/url_46_336_6.txt b/eesanje/url_46_336_6.txt new file mode 100644 index 0000000000000000000000000000000000000000..c4713a3ad0bd6ba7775a019428841f68ce003635 --- /dev/null +++ b/eesanje/url_46_336_6.txt @@ -0,0 +1,12 @@ +ಸರ್ಕಾರೀ ವೆಬ್‍ಸೈಟ್ ಹ್ಯಾಕ್ : ಆರೋಪಿಯನ್ನು ಬಂಧಿಸಿದ ಎಸ್‍ಐಟಿ +ಬೆಂಗಳೂರು,ಅ.5- ಬಿಟ್‍ಕಾಯಿನ್ ಹಗರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ದಳ, ಕರ್ನಾಟಕ ಸರ್ಕಾರದ ಇ -ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕ್ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಸಾಧಿಸಿದ್ದು, ಹಣ ವರ್ಗಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪಿಯನ್ನು ಪಂಜಾಬ್‍ನ ಲೂದಿಯಾನದಲ್ಲಿ ಬಂಧಿಸಿದ್ದಾರೆ. +ಅಂತರಾಷ್ಟ್ರೀಯ ಕುಖ್ಯಾತಿಯ ಶ್ರೀಕಿ ನಡೆಸಿದ ಹ್ಯಾಕರ್ ಕೃತ್ಯದಿಂದ ಸಂಪಾದಿಸಿದ ಹಣವನ್ನು ಸುರಕ್ಷಿತ ಖಾತೆಗಳಿಗೆ ವರ್ಗಾವಣೆ ಮಾಡಿರುವ ಮೂಲಗಳ ಬೆನ್ನು ಬಿದ್ದಿರುವ ಎಸ್‍ಐಟಿ ತಂಡ ಲೂದಿಯಾನದಲ್ಲಿ ಆರೋಪಿ ಅರವಿಂದರ್ ಸಿಂಗ್‍ನನ್ನು ಬಂಧಿಸಿದೆ. ಸಂಕೀರ್ಣವಾದ ಈ ಪ್ರಕರಣದಲ್ಲಿ ಜಾಲದ ಜಾಡು ಹಿಡಿದು ಹೋದಂತೆ ಒಂದೊಂದೇ ಕೊಂಡಿಗಳು ತೆರೆದುಕೊಳ್ಳುತ್ತಿವೆ. ಅದರ ಭಾಗವಾಗಿ ಅರವಿಂದರ್ ಸಿಂಗ್ ಎಸ್‍ಐಟಿ ಬಲೆಗೆ ಬಿದ್ದಿದ್ದಾನೆ. +ಶ್ರೀಕಿ ಇ-ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕ್ ಮಾಡಿದ ವೇಳೆ 1.5 ಕೋಟಿ ರೂ.ಗಳನ್ನು ದೆಹಲಿಯ ವ್ಯಕ್ತಿಗಳಿಗೆ ಹಾಗೂ ಮತ್ತೊಂದು ಚಹಂತದಲ್ಲಿ ಮಹಾರಾಷ್ಟ್ರದ ನಾಗ್ಪುರದ ವ್ಯಕ್ತಿಗಳಿಗೆ 10.5 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. +ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ +ಅಕ್ರಮವಾದ ಹ್ಯಾಕಿಂಗ್ ಮೂಲಕ ಶ್ರೀಕಿ ಹಣ ಸಂಪಾದಿಸುತ್ತಿದ್ದರೆ ಅದನ್ನು ಬೇರೆ ಬೇರೆಯಾದ ಸುರಕ್ಷಿತ ಖಾತೆಗಳಿಗೆ ವರ್ಗಾವಣೆ ಮಾಡಲು ದೊಡ್ಡ ಜಾಲವೇ ಕೆಲಸ ಮಾಡುತ್ತಿತ್ತು. ಹಣ ಆನ್‍ಲೈನ್ ನಲ್ಲಿ ವರ್ಗಾವಣೆಯಾಗಿರುವುದರಿಂದ ಸಿಕ್ಕಿಹಾಕಿಕೊಳ್ಳುವುದಿಲ್ಲ ಎಂಬ ಧೈರ್ಯದ ಮೇಲೆ ಬಹಳಷ್ಟು ಅಕ್ರಮಗಳು ನಡೆದಿವೆ ಎಂದು ಹೇಳಲಾಗಿದೆ. +ಮನಿಲ್ಯಾಂಡ್ರಿಂಗ್ ಕಾಯ್ದೆಯನ್ನು ಉಲ್ಲಂಘಿಸಿ ಕೋಟ್ಯಂತರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿರುವುದು ಪ್ರಕರಣದಲ್ಲಿ ಸ್ಪಷ್ಟವಾಗಿದೆ. ಬಿಟ್‍ಕಾಯಿನ್ ಮತ್ತು ಇ-ಪ್ರಕ್ಯೂರ್ಮೆಂಟ್ ಹಗರಣದಲ್ಲಿ ಹಣ ಯಾರಿಗೆಲ್ಲಾ ತಲುಪಿದೆ ಎಂಬುದು ಮೊದಲಿನಿಂದಲೂ ಕುತೂಹಲದ ಪ್ರಶ್ನೆಯಾಗಿತ್ತು. ಅದಕ್ಕೆ ಉತ್ತರ ಕಂಡುಕೊಳ್ಳಲು ಎಸ್‍ಐಟಿ ಮಹತ್ವದ ಹೆಜ್ಜೆ ಇಟ್ಟಿದೆ. +ಈ ಮೊದಲು ಬಂಧಿತರಾಗಿದ್ದ ಆರೋಪಿಗಳ ವಿಚಾರಣೆ ಹಾಗೂ ತಾಂತ್ರಿಕ ಮಾಹಿತಿಯನ್ನು ಆಧರಿಸಿ ಎಸ್‍ಐಟಿ ತಂಡದ ತನಿಖಾಕಾಧಿರಿಗಳು ಅತ್ಯಂತ ಚಾಣಾಕ್ಷತನ ಹಾಗೂ ಬುದ್ಧಿವಂತಿಕೆಯಿಂದ ಜಾಲದ ಸಿಕ್ಕುಗಳನ್ನು ಒಂದೊಂದಾಗಿ ಬಿಡಿಸಲಾರಂಭಿಸಿದ್ದಾರೆ. ದೆಹಲಿ ಮತ್ತು ನಾಗ್ಪುರದಲ್ಲಿ ಹಣ ಸ್ವೀಕರಿಸಿದ ವ್ಯಕ್ತಿಗಳು ಮತ್ತು ಅವರಿಂದ ಮುಂದುವರೆದು ಯಾರಿಗೆಲ್ಲಾ ನಗದು ರವಾನೆಯಾಗಿದೆ ಎಂಬುದರ ಕುರಿತು ವಿಚಾರಣೆ ಮುಂದುವರೆಯುವ ಸಾಧ್ಯತೆ ಇದೆ. +ಅಂತರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ 2019 ರಲ್ಲಿ ಮಾದಕ ವ್ಯಸನ ಪ್ರಕರಣವೊಂದರಲ್ಲಿ ಸಿಲುಕಿದ್ದ. ವಿಚಾರಣೆ ವೇಳೆ ಆತ ರಾಜ್ಯಸರ್ಕಾರದ ಇ-ಪ್ರಕ್ಯೂರ್ಮೆಂಟ್ ಅನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ.ಗಳನ್ನು ಲಪಟಾಯಿಸಿರುವುದಾಗಿ ಬಾಯ್ಬಿಟ್ಟಿದ್ದ. ಅದೇ ರೀತಿ ಪೋಕರ್ ಸೇರಿದಂತೆ ವಿವಿಧ ಆನ್‍ಲೈನ್ ಗೇಮ್‍ಗಳ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿರುವುದಾಗಿ ಹೇಳಿದ್ದ. ಅದು ಮುಂದುವರೆದು ಬಿಟ್‍ಕಾಯಿನ್ ಹಗರಣಕ್ಕೂ ಸಂಪರ್ಕಗೊಂಡಿತ್ತು. +ಅ.11ರಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ 3 ದಿನ ಜೆಡಿಎಸ್‍ನ ಕೋರ್ ಕಮಿಟಿ ಪ್ರವಾಸ +ಆರಂಭದಲ್ಲಿ ತನಿಖೆ ನಡೆಸಿದ್ದ ಸಿಸಿಬಿ ಪೋಲೀಸರು ಶ್ರೀಕಿ ಸೇರಿದಂತೆ 11 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ಆದರೆ ಹಣ ವರ್ಗಾವಣೆಯಾದ ಮೂಲಗಳ ಕುರಿತು ತನಿಖೆ ನಡೆಸಿರುವ ಸಾಧ್ಯತೆಗಳು ಕ್ಷೀಣವಾಗಿವೆ. ಹಗರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಆ ವೇಳೆ ವಿರೋಧಪಕ್ಷದಲ್ಲಿದ್ದ ಕಾಂಗ್ರೆಸ್ ಬಿಟ್‍ಕಾಯಿನ್ ಹಗರಣದಲ್ಲಿ ಪ್ರಭಾವಿಗಳ ಪಾತ್ರ ಇದೆ ಎಂಬ ಗಂಭೀರ ಆರೋಪ ಮಾಡಿತ್ತು. +ರಾಜ್ಯದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಗರಣವನ್ನು ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ಎಸ್‍ಐಟಿ ತನಿಖೆಗೆ ವಹಿಸಿದೆ. ತನಿಖೆ ನಡೆಸುತ್ತಿರುವ ತಂಡಕ್ಕೆ ಮಹತ್ವದ ಸುಳಿವುಗಳು ದೊರೆತಿದ್ದು, ವಿಚಾರಣೆ ಮುಂದುವರೆದಿದೆ. \ No newline at end of file diff --git a/eesanje/url_46_336_7.txt b/eesanje/url_46_336_7.txt new file mode 100644 index 0000000000000000000000000000000000000000..4d8070c6b55a9541051b4740b0e25e0bdb0278ea --- /dev/null +++ b/eesanje/url_46_336_7.txt @@ -0,0 +1,12 @@ +ಕಾವೇರಿ ವಿವಾದ ಇತ್ಯರ್ಥಕ್ಕೆ ಕೇಂದ್ರ ಮಧ್ಯಪ್ರವೇಶಿಸಬೇಕು : ಸಚಿವ ಚಲುವರಾಯಸ್ವಾಮಿ +ಮಂಡ್ಯ,ಅ.5- ಜೆಡಿಎಸ್, ಬಿಜೆಪಿ ನಾಯಕರು ಕಾವೇರಿ ನದಿ ನೀರಿನ ವಿಚಾರದಲ್ಲಿ ಪ್ರಚಾರಕ್ಕಾಗಿ ಪ್ರತಿಭಟನೆ ಮಾಡುವುದನ್ನು ಬಿಟ್ಟು ಪ್ರಧಾನಿ ಮಧ್ಯಸ್ಥಿಕೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಹಾಗೂ ಕನ್ನಡಪರ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಾರೆ. ಬೆಳೆ ಹಾಗೂ ನೀರಿನ ರಕ್ಷಣೆ ವಿಷಯದಲ್ಲಿ ಅವರ ಕಾಳಜಿಗಳು ಸ್ತುತ್ಯಾರ್ಹ ಎಂದು ಹೇಳಿದರು. +ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್‍ನ ತೀರ್ಪು ಹಾಗೂ ಕೇಂದ್ರ ಸರ್ಕಾರದ 2 ತಾಂತ್ರಿಕ ಸಮಿತಿಗಳ ಆದೇಶ ಪ್ರಮುಖವಾಗಿದೆ. ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ಬಿಜೆಪಿಯವರಿಗೆ ರಾಜ್ಯದ ಜನರ ವಿಷಯದಲ್ಲಿ ಕನಿಷ್ಠ ಕೃತಜ್ಞತೆ ಇಲ್ಲ. 25 ಜನ ಸಂಸದರು ಗೆದ್ದಿದ್ದಾರೆ. ಕಾವೇರಿ ವಿಷಯದಲ್ಲಿ ಅವರ ಪಾತ್ರ ಏನು. ಮಂಡ್ಯದಲ್ಲಿ ಬಂದು ಮಾದ್ಯಮದ ಎದುರು ಪ್ರತಿಭಟನೆ ಮಾಡಿ ಪ್ರಚಾರ ಮಾಡುವುದಕ್ಕಷ್ಟೇ ಸೀಮಿತವೇ ಎಂದು ಪ್ರಶ್ನಿಸಿದರು. +ರಾಜಕಾರಣಕ್ಕಾಗಿ ಪ್ರಧಾನಿಯವರನ್ನು ಭೇಟಿ ಮಾಡುವ ನಾಯಕರು ಕಾವೇರಿ ವಿಷಯದಲ್ಲಿ ಪ್ರಧಾನಿಯವರ ಜೊತೆ ಏಕೆ ಚರ್ಚೆ ಮಾಡುತ್ತಿಲ್ಲ. ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಏನು ಮಾಡುತ್ತಿದ್ದಾರೆ. ಕಾವೇರಿ ನದಿ ಪಾತ್ರದ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಮಧ್ಯ ಪ್ರವೇಶ ಮಾಡಬೇಕು ಎಂದರು. +ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತನ್ನ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಎರಡು ಬಾರಿ ಸರ್ವಪಕ್ಷ ಸಭೆ ನಡೆಸಿದೆ. ಕೇಂದ್ರದಲ್ಲಿ ಸರ್ವಪಕ್ಷ ಸಂಸದರ ಜೊತೆಯೂ ಚರ್ಚೆ ನಡೆಸಲಾಗಿದೆ. ಮೂರು ದಿನ ದೆಹಲಿಯಲ್ಲೇ ಉಳಿದು ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ವಾಸ್ತವತೆಯನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ. ಪ್ರಧಾನಿಯವರ ಭೇಟಿಗೆ ಎಷ್ಟೇ ಪ್ರಯತ್ನ ನಡೆಸಿದ್ದರೂ ಪ್ರಯೋಜನವಾಗಲಿಲ್ಲ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಹಾಗೂ ಇತರರು ಸಹಾಯ ಮಾಡಲಿಲ್ಲ. +ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ +ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲಾಗುವುದಿಲ್ಲ ಎಂದು ರಾಜ್ಯದ ಬಿಜೆಪಿ ನಾಯಕರೇ ಹೇಳುತ್ತಿರುವುದು ಸರಿಯಲ್ಲ. ಈ ಹಿಂದೆ ವಾಜಪೇಯಿ ಕೂಡ ಅಂತರಾಜ್ಯ ನದಿ ವಿವಾದದಲ್ಲಿ ಮಧ್ಯಪ್ರವೇಶ ಮಾಡಿದ್ದರು. ಬಿಜೆಪಿಯವರು ಪ್ರಧಾನಿಯವರ ಬಳಿ ಚರ್ಚೆ ಮಾಡದೇ ತಾವಾಗಿಯೇ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಘೋಷಿಸುತ್ತಿದ್ದಾರೆ. ಹಾಗಿದ್ದ ಮೇಲೆ ರಾಜಕಾರಣ ಮಾಡುವುದನ್ನು ಬಿಟ್ಟು ಮನೆಯಲ್ಲಿರಲಿ ಎಂದು ಕಿಡಿಕಾರಿದರು. +ಇಂಡಿಯಾ ಘಟಬಂದನ್‍ಗಾಗಿ ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಆರೋಪ ಆಧಾರರಹಿತ. ರಾಜ್ಯ ಹಿತಾಸಕ್ತಿ ವಿಷಯದಲ್ಲಿ ಎರಡೂ ರಾಜ್ಯಗಳು ತಮ್ಮದೇ ಆದ ನಿಟ್ಟಿನಲ್ಲಿ ಕೆಲಸ ಮಾಡುತ್ತವೆ. ರಾಜಕೀಯವೇ ಬೇರೆ, ರಾಜ್ಯದ ಹಿತಾಸಕ್ತಿಯೇ ಬೇರೆ. ರಾಜ್ಯಸರ್ಕಾರ ಹೇಳದೇ, ಕೇಳದೆ ತಮಿಳುನಾಡಿಗೆ ನೀರು ಬಿಟ್ಟಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ತಾಂತ್ರಿಕ ಸಮಿತಿಗಳ ಆದೇಶವನ್ನು ಎಲ್ಲಾ ಕಾಲದಲ್ಲೂ ಸರ್ಕಾರಗಳು ಪಾಲನೆ ಮಾಡಿವೆ. ಸಂಕಷ್ಟದ ಸಂದರ್ಭದಲ್ಲಿ ಆದೇಶ ಪಾಲನೆ ಮಾಡಲಾಗದ ಬಗ್ಗೆ ನಾವು ಸಾಕಷ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. +ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಮಧ್ಯಪ್ರದೇಶ ಸರ್ಕಾರ +ಈ ಪ್ರಯತ್ನದ ಹಂತದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ರಾಜ್ಯಸರ್ಕಾರಕ್ಕೆ ಸಹಕಾರ ನೀಡಿಲ್ಲ. ಹೀಗಾಗಿ ಕಾವೇರಿ ವಿಷಯದಲ್ಲಿನ ಹೊಣೆಗಾರಿಕೆ ಬಿಜೆಪಿಯವರದ್ದೇ. ನಾಟಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆಯೇ ಹೊರತು ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. +ಕಾವೇರಿ ನೀರು ನಿಯಂತ್ರಣಾ ಸಮಿತಿ ಇದೇ 12 ರಂದು ಮತ್ತೆ ಸಭೆ ನಡೆಸಲಿದ್ದು, ಅಂದು ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸುತ್ತಿವೆ ಎಂದರು. ರಾಜ್ಯದಲ್ಲಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಅದರ ಕುರಿತು ಸಚಿವ ಸಂಪುಟ ಹಾಗೂ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರದ ಅಕಾರಿಗಳ ಮೂರು ತಂಡಗಳು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ನಾಲ್ಕು ದಿನಗಳ ಕಾಲ ಬರ ಅಧ್ಯಯನ ನಡೆಸಲಿವೆ ಎಂದು ಹೇಳಿದರು. \ No newline at end of file diff --git a/eesanje/url_46_336_8.txt b/eesanje/url_46_336_8.txt new file mode 100644 index 0000000000000000000000000000000000000000..e2e4382db9ff015ec34c00393cc5fd8688801c70 --- /dev/null +++ b/eesanje/url_46_336_8.txt @@ -0,0 +1,8 @@ +ಬರ ಅಧ್ಯಯನಕ್ಕೆ ನಾಳೆ ಕೇಂದ್ರ ತಂಡ ಆಗಮನ +ಬೆಂಗಳೂರು,ಅ.4-ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ಬರಗಾಲ ಆವರಿಸಿರುವುದರಿಂದ ಕೇಂದ್ರ ಉನ್ನತ ಅಧಿಕಾರಿಗಳ ಬರ ಅಧ್ಯಯನ ತಂಡ ರಾಜ್ಯಕ್ಕೆ ನಾಳೆ ಆಗಮಿಸಿದೆ. ಒಟ್ಟು ಮೂರು ತಂಡಗಳಲ್ಲಿ ಆಗಮಿಸುವ ತಂಡವು ಬರಪೀಡಿತ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಭೇಟಿ ಕೊಟ್ಟು ಅಧ್ಯಯನ ನಡೆಸಲಿದೆ. +ಬರ ಅಧ್ಯಯನಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ತಂಡವು ಅಗತ್ಯವಾದ ಮಾಹಿತಿಯನ್ನು ಪಡೆಯಲಿದೆ. ಬಳಿಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಂಡು ನಂತರ ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. +ಲಿಕ್ಕರ್ ನೀತಿ ಹಗರಣ : ಎಎಪಿ ರಾಜ್ಯಸಭೆ ಸಂಸದ ಸಂಜಯ್ ಸಿಂಗ್ ನಿವಾಸದ ಮೇಲೆ ಇ.ಡಿ ದಾಳಿ +ಮೂರು ಅಧಿಕಾರಿಗಳ ತಂಡವು ಮೊದಲ ದಿನ ಒಟ್ಟು 12 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ತಂಡದಲ್ಲಿ ಕೃಷಿ, ಎಣ್ಣೆ ಬೀಜಗಳು, ನೀತಿ ಆಯೋಗ ಸೇರಿದಂತೆ ವಿವಿಧ ಕೇಂದ್ರ ಇಲಾಖೆಯ ಅಧಿಕಾರಿಗಳು ಆಗಮಿಸಲಿದ್ದಾರೆ. ಈ ಅಧಿಕಾರಿಗಳಿಗೆ ರಾಜ್ಯದ ಕೃಷಿ, ಕಂದಾಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಆಯಾ ಜಿಲ್ಲಾಧಿಕಾರಿಗಳು, ಸಿಇಒಗಳು, ಕೆಎಸ್‍ಎಂಡಿ ಎಂಸಿ, ತಹಸೀಲ್ದಾರ್ ಸೇರಿದಂತೆ ಮತ್ತಿತರರು ಅಗತ್ಯ ಮಾಹಿತಿಯನ್ನು ಒದಗಿಸಲಿದ್ದಾರೆ. +2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್ +ಗುರುವಾರದಿಂದ ಇದೇ 9ರವರೆಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿರುವ ತಂಡ ಕೆಲವು ಕಡೆ ರೈತರಿಂದಲೂ ಮಾಹಿತಿ ಪಡೆಯಲಿದೆ. ರೈತರ ಜಮೀನುಗಳಿಗೆ ಖುದ್ದು ಭೇಟಿ ಕೊಡಬೇಕೆಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. +ತಂಡ 1: ಅಜಿತ್‍ಕುಮಾರ್ ಸುಹು, ಡಾ.ಕೆ.ಪೊನ್ನುಸ್ವಾಮಿಮಹೇಂದ್ರ ಚಾಂಡಿಲಿಯ, ಶಿವಚಂದನ್ ಮೀನಾ, ವೈ.ಎಸ್.ಪಾಟೀಲ್ಭೇಟಿ ಕೊಡುವ ಸ್ಥಳ- ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ2ನೇ ತಂಡ:ಡಿ.ರಾಜಶೇಖರ್, ವಿ.ಆರ್.ಠಾಕ್ರೆ, ಮೋಟಿ ರಾಮ್,ಕರೆಗೌಡಭೇಟಿ ಕೊಡುವ ಸ್ಥಳ : ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ3ನೇ ತಂಡ: ಅಶೋಕ್ ಕುಮಾರ್, ಕರಣ್ ಚೌಧರಿ, ಸಂಗೀತ್ ಕುಮಾರ್, ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿಭೇಟಿ ಕೊಡುವ ಸ್ಥಳ: ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆ, ಬೆಂಗಳೂರು ಗ್ರಾಮಾಂತರ \ No newline at end of file diff --git a/eesanje/url_46_336_9.txt b/eesanje/url_46_336_9.txt new file mode 100644 index 0000000000000000000000000000000000000000..211c726857b8a9c524cfcdefbc5135bcc4c43c22 --- /dev/null +++ b/eesanje/url_46_336_9.txt @@ -0,0 +1,14 @@ +ಶಾಮನೂರು ಹೇಳಿಕೆಗೆ ಪೂರಕವಾಗಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಂದ ದೂರು +ಬೆಂಗಳೂರು,ಅ.4- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಆರೋಪಕ್ಕೆ ಪೂರಕವಾಗಿ ಕೆಲವರಿಗೆ ಉದ್ದೇಶಪೂರಕವಾದ ಕಿರುಕುಳ ನೀಡುತ್ತಿರುವ ದೂರುಗಳು ಕೇಳಿಬಂದಿವೆ. ಪಕ್ಷದ ಹಿರಿಯ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಸಮುದಾಯದ ಅಧಿಕಾರಿಗಳದ್ದು ನಾಯಿ ಪಾಡಾಗಿದೆ ಎಂದು ಬಹಿರಂಗ ಆರೋಪ ಮಾಡಿದರು. +ಇದಕ್ಕೂ ಮೊದಲು ಸಮುದಾಯದ ಹಲವಾರು ಪ್ರಮುಖ ಅಧಿಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದೆ ಎಂದು ಹೇಳಲಾಗಿದೆ.ಐಎಎಸ್, ಕೆಎಎಸ್ ಹಾಗೂ ಪತ್ರಾಂಕಿತ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಉದ್ದೇಶಪೂರಕವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಕೆಲವರು ಕೆಎಟಿ ಹಾಗೂ ಸಿಎಟಿ ಯಂತಹ ನ್ಯಾಯಾಕರಣಗಳಿಂದ ತಡೆಯಾಜ್ಞೆ ತಂದಿದ್ದಾರೆ. ಇದನ್ನೇ ಗುರಿಯಾಗಿಸಿಕೊಂಡು ಸದರಿ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳಿವೆ. +ಈ ಹಿಂದೆ ಸದರಿ ಅಧಿಕಾರಿಗಳು ಕೆಲಸ ಮಾಡಿದ ಅವಧಿಯಲ್ಲಿ ಮಾಡಿರಬಹುದಾದಂತಹ ಲೋಪಗಳನ್ನು ಬೆನ್ನಟ್ಟಿ ತನಿಖೆ ಮಾಡಲು ಸೂಚಿಸಲಾಗಿದೆ. ಕೆಎಟಿ ಮೆಟ್ಟಿಲೇರಿದ ಬಹಳಷ್ಟು ಅಧಿಕಾರಿಗಳಿಗೆ ಈ ರೀತಿಯ ತನಿಖೆ ಹಾಗೂ ವಿಚಾರಣೆಯ ಬಿಸಿ ತಟ್ಟಿದೆ. ಇದರಿಂದಾಗಿ ಕಂಗಾಲಾದ ಅಧಿಕಾರಿಗಳು ಸಮುದಾಯದ ಸಚಿವರನ್ನು ಭೇಟಿ ಮಾಡಲು ಯತ್ನಿಸಿದರು. ಆದರೆ ತಾವು ಅಸಹಾಯಕರು ಎಂದು ಸಚಿವರು ಕೈಚೆಲ್ಲಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಅಕಾರಿಗಳ ನಿಯೋಗ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ತಮ್ಮ ಸಂಕಷ್ಟಗಳನ್ನು ಹೇಳಿಕೊಂಡಿದೆ ಎನ್ನಲಾಗಿದೆ. +ಲಾಲೂಪ್ರಸಾದ್ ಯಾದವ್ ಕುಟುಂಬಕ್ಕೆ ಬಿಗ್ ರಿಲೀಫ್ +ಅಧಿಕಾರಿಗಳ ಮೇಲಾಗುತ್ತಿರುವ ಕಿರುಕುಳದ ಮಾಹಿತಿ ಪಡೆದುಕೊಂಡ ಬಳಿಕ ವ್ಯಘ್ರರಾದ ಶ್ಯಾಮನೂರು ಶಿವಶಂಕರಪ್ಪ ಸಮುದಾಯದ ಕೆಲ ಸಚಿವರಿಗೆ ವಿಷಯ ತಿಳಿಸಿ ಲೋಪಗಳನ್ನು ಸರಿಪಡಿಸುವಂತೆ ಸಲಹೆ ನೀಡಿದ್ದರು ಎನ್ನಲಾಗಿದೆ. ಆದರೆ ಈ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡಲು ಧೈರ್ಯ ತೋರಿಸದೆ ಹಿಂದೇಟು ಹಾಕಿದ್ದರು ಎಂಬ ಮಾಹಿತಿ ಇದೆ. +ಈ ಹಿನ್ನೆಲೆಯಲ್ಲಿ ಖುದ್ದು ಶ್ಯಾಮನೂರು ಶಿವಶಂಕರಪ್ಪನವರೇ ಅಖಾಡಕ್ಕೆ ಇಳಿದಿರುವುದಾಗಿ ತಿಳಿದುಬಂದಿದೆ. ಇದರ ಹಿಂದೆ ಒಂದಿಷ್ಟು ರಾಜಕೀಯ ಲೆಕ್ಕಾಚಾರ ಕೂಡ ಕೇಳಿಬಂದಿವೆ. ಸಿದ್ದರಾಮಯ್ಯನವರು ಈ ಹಿಂದೆ ಜೆಡಿಎಸ್‍ನಿಂದ ಉಪಮುಖ್ಯಮಂತ್ರಿಯಾಗಿದ್ದಾಗ ನೇರವಾಗಿಯೇ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದರು. ಅದನ್ನು ಪಕ್ಷದ ವೇದಿಕೆಯಿಂದಲೇ ಮಾಡುವಂತೆ ಆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದರು. +ಆದರೆ ಅದಕ್ಕೆ ಸಿದ್ದರಾಮಯ್ಯ ಕಿವಿ ಕೊಟ್ಟಿರಲಿಲ್ಲ. ಪರಿಣಾಮ ರಾಜಕೀಯವಾಗಿ ಕ್ಷಿಪ್ರ ಬೆಳವಣಿಗೆಗಳಾದವು.ಇತ್ತೀಚೆಗೆ ಸಿದ್ದರಾಮಯ್ಯ ಅವರ ಆಪ್ತ ಬಳಗ, ಕೆಲ ನಾಯಕರು ಅಖಿಲ ಭಾರತ ಕುರುಬರ ಸಮಾವೇಶವನ್ನು ಸಂಯೋಜಿಸಿದ್ದರು. ಪಕ್ಷಾತೀತವಾಗಿ ನಡೆದ ಈ ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್‍ನ ಹಲವು ನಾಯಕರು ಭಾಗಿಯಾಗಿದ್ದರು. ಮೂಲ ಕಾಂಗ್ರೆಸಿಗರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿತ್ತು. +ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪಕ್ಷದ ವೇದಿಕೆಯಿಂದಲೇ ಈ ರೀತಿಯ ಸಮಾವೇಶಗಳನ್ನು ನಡೆಸಬಹುದಿತ್ತು. ಸರ್ಕಾರದ ಸಂಪನ್ಮೂಲ ಮತ್ತೂ ಪ್ರಭಾವಗೊಳಿಸಿ ಸಿದ್ದರಾಮಯ್ಯ ತಮ್ಮ ವೈಯಕ್ತಿಕ ವರ್ಚಸ್ಸು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ತೊಂದರೆಯಾಗಬಹುದು ಎಂಬ ಆತಂಕ ಕಾಂಗ್ರೆಸಿಗರನ್ನು ಕಾಡುತ್ತಿದೆ. +2024ರ ವೇಳೆಗೆ ಅತ್ಯಾಕರ್ಷಕ ಸ್ಲೀಪರ್ ಕೋಚ್ ವಂದೇ ಭಾರತ್ +ಲೋಕಸಭೆ ಚುನಾವಣೆ ಬಳಿಕ ಸ್ಥಾನ ಪಲ್ಲಟಗಳಾಗಲಿವೆ ಎಂಬ ವದಂತಿಗಳ ನಡುವೆಯೇ ನಡೆಯುತ್ತಿರುವ ಜಾತಿವಾರು ಸಮಾವೇಶಗಳು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಅದರ ಜೊತೆಯಲ್ಲಿ ಕೆಲವು ಸಮುದಾಯದ ಅಧಿಕಾರಿಗಳ ಮೇಲೆ ಉದ್ದೇಶಪೂರಕವಾದ ಹಗೆತನ ಸಾಧಿಸಲಾಗುತ್ತಿದೆ ಎಂಬ ಅಸಮಾಧಾನಗಳು ಶ್ಯಾಮನೂರು ಶಿವಶಂಕರಪ್ಪ ಅವರ ಸಿಟ್ಟು ಸೋಟಗೊಳ್ಳಲು ಕಾರಣ ಎನ್ನಲಾಗುತ್ತಿದೆ. +ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ಸಮುದಾಯಗಳ ವಿಷಯವಾಗಿ ಹೇಳಿಕೆ ನೀಡಿ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರು. ಅದರ ಬೆನ್ನಲ್ಲೇ ಶ್ಯಾಮನೂರು ಅವರ ಟೀಕೆ ಕಾಂಗ್ರೆಸ್‍ಗೆ ದುಬಾರಿಯಾಗಿ ಪರಿಣಮಿಸಿದೆ. +ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಜೊತೆಗೆ ಲಿಂಗಾಯತ ಸಮುದಾಯವೂ ಕಾಂಗ್ರೆಸ್ ಬೆನ್ನಿಗೆ ನಿಂತಿದ್ದರಿಂದಾಗಿಯೇ 135 ಸ್ಥಾನಗಳ ಅಭೂತಪೂರ್ವ ಯಶಸ್ಸು ಗಳಿಸಲು ಸಾಧ್ಯವಾಗಿತ್ತು. ಈಗ ಲೋಕಸಭೆ ಚುನಾವಣಾ ವೇಳೆ ಲಿಂಗಾಯತ ಸಮುದಾಯದ ಕ್ರೋಧಾಗ್ನಿ ಪಕ್ಷಕ್ಕೆ ಹಾನಿಯುಂಟು ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ. +ಹೇಳಿಕೆ ನೀಡಿದ ಶ್ಯಾಮನೂರು ಶಿವಶಂಕರಪ್ಪ ಅವರ ಜೊತೆ ತಾವು ಚರ್ಚೆ ಮಾಡುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಮೂರು ದಿನ ಕಳೆದಿದ್ದು, ಹೇಳಿಕೆಗಳ ಮೇಲೆ ಹೇಳಿಕೆಗಳು ಹೊರಬರುತ್ತಲೇ ಇವೆ. ದಿನೇ ದಿನೇ ಸಮುದಾಯದಲ್ಲಿ ಅಸಮಾಧಾನ ಮಡುಗಟ್ಟುತ್ತಿದ್ದು, ನಕಾರಾತ್ಮಕವಾದ ಸಂದೇಶಗಳು ರವಾನೆಯಾಗುತ್ತಿವೆ. \ No newline at end of file diff --git a/eesanje/url_46_337_1.txt b/eesanje/url_46_337_1.txt new file mode 100644 index 0000000000000000000000000000000000000000..8dfab38a3df39d7f846e21b44a0fb534744cea10 --- /dev/null +++ b/eesanje/url_46_337_1.txt @@ -0,0 +1,8 @@ +ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಪ್ರತಿಪಕ್ಷದ ಹಾಲಿ, ಮಾಜಿ ಶಾಸಕರು +ಬೆಂಗಳೂರು,ಅ.4- ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳಿಗೆ ಪೂರಕವಾಗಿ ಮತ್ತಷ್ಟು ಪ್ರಮುಖ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ. ಹನೂರಿನ ಶಾಸಕ ಮಂಜುನಾಥ್ ಅವರು ಸಿಎಂ ಸಿದ್ದರಾಮಯ್ಯನವರ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ. +ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‍ರೊಂದಿಗೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿರುವ ಜೆಡಿಎಸ್‍ನ ಶಾಸಕರು ರಾಜಕೀಯ ಆಗುಹೋಗುಗಳ ಕುರಿತು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದೆಡೆ ಬಿಜೆಪಿಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರನ್ನು ಭೇಟಿ ಮಾಡಿದ್ದಾರೆ. +ಕಾಂಗ್ರೆಸಿಗರು ಹಾಲಿ ಶಾಸಕರನ್ನು ಪಕ್ಷಕ್ಕೆ ಸೆಳೆದುಕೊಳ್ಳುವ ಬದಲಾಗಿ ಮಾಜಿ ಶಾಸಕರು, ಪ್ರಭಾವಿ ಮುಖಂಡರನ್ನು ಕೇಂದ್ರೀಕರಿಸಿದ್ದಾರೆ. ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಜೆಡಿಎಸ್‍ನಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅತೃಪ್ತ ಪ್ರಮುಖ ನಾಯಕರು ಕಾಂಗ್ರೆಸ್‍ನತ್ತ ಮುಖ ಮಾಡಿದ್ದಾರೆ. +ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್ +ಈಗಾಗಲೇ ಬಿಬಿಎಂಪಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ನಾಯಕರುಗಳು ಹಂತ ಹಂತವಾಗಿ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಕೆಲವು ಪ್ರಭಾವಿ ನಾಯಕರುಗಳನ್ನು ವರಿಷ್ಠ ನಾಯಕರು ಕೆಪಿಸಿಸಿಯಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಂಡರೆ ಕೆಳ ಹಂತದ ನಾಯಕರನ್ನು ಜಿಲ್ಲಾ ಮಟ್ಟದಲ್ಲೇ ಕರೆದುಕೊಳ್ಳಲಾಗುತ್ತಿದೆ. +ಹನೂರಿನ ಹಾಲಿ ಶಾಸಕ ಮಂಜುನಾಥ್ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದರ ಹಿಂದೆ ರಾಜಕೀಯ ಉದ್ದೇಶವಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ್ದಾರೆ ಎಂಬ ಅಭಿಪ್ರಾಯಗಳು ಕೇಳಿಬಂದಿವೆ. ಆದರೆ ಸಚಿವ ಭೈರತಿ ಸುರೇಶ್ ಜೊತೆಗೆ ಹೋದ ಶಾಸಕರು ಮುಖ್ಯಮಂತ್ರಿಯವರ ರಹಸ್ಯ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. +ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಸಿದ್ದರಾಮಯ್ಯ ತೆರೆಮರೆಯ ಕಾರ್ಯತಂತ್ರವನ್ನು ರೂಪಿಸಿದ್ದಾರೆಯೇ ಎಂಬ ಅನುಮಾನ ರಹಸ್ಯ ಮಾತುಕತೆ ಹುಟ್ಟುಹಾಕಿದೆ. \ No newline at end of file diff --git a/eesanje/url_46_337_10.txt b/eesanje/url_46_337_10.txt new file mode 100644 index 0000000000000000000000000000000000000000..04c3ac9b9db5f9422d4a52b94b62e72fbcf982ca --- /dev/null +++ b/eesanje/url_46_337_10.txt @@ -0,0 +1,10 @@ +ರಾಜ್ಯದಲ್ಲಿ ಮತ್ತೆ ಮಳೆ ಬರುವ ಸಾಧ್ಯತೆ ವಿರಳ +ಬೆಂಗಳೂರು,ಅ.3- ರಾಜ್ಯದಲ್ಲಿ ಇನ್ನೊಂದು ವಾರ ಕಾಲ ಒಣಹವೆ ಮುಂದುವರೆಯಲಿದ್ದು, ಮಳೆ ಬರುವ ಸಾಧ್ಯತೆಗಳು ಕಡಿಮೆ. ಕಳೆದ ಒಂದು ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗುವ ಆಶಾಭಾವನೆ ಮೂಡಿಸಿತ್ತು. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸದ್ಯಕ್ಕೆ ಮಳೆ ಬರುವಂತಹ ಯಾವುದೇ ರೀತಿಯ ಬದಲಾವಣೆಗಳು ಕಂಡುಬರುತ್ತಿಲ್ಲ. ಹೀಗಾಗಿ ಇನ್ನು ಒಂದು ವಾರ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ತೀರ ವಿರಳ ಎಂದು ಹವಾಮಾನ ತಜ್ಞರು ತಿಳಿಸಿದರು. +ವಾರದ ನಂತರ ಒಂದೆರಡು ದಿನ ಮಳೆಯಾಗುವ ಮುನ್ಸೂಚನೆಗಳಿವೆ. ಸದ್ಯಕ್ಕೆ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಒಂದೆರಡು ಕಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಆಗಸ್ಟ್, ಸೆಪ್ಟೆಂಬರ್‍ನಂತೆ ಅಕ್ಟೋಬರ್‍ನಲ್ಲೂ ಮಳೆ ಕೊರತೆ ಮುಂದುವರೆಯುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಅವರು ಹೇಳಿದ್ದಾರೆ. +ಭೀಕರ ಅಪಘಾತ : ತಾಯಿ-ಮಗು ಸಜೀವ ದಹನ +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆ.26ರಿಂದ ನಿನ್ನೆಯವರೆಗೆ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.65, ಉತ್ತರ ಒಳನಾಡಿನಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದ್ದರೆ, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಹಾಗೂ ಕರಾವಳಿಯಲ್ಲಿ ಶೇ.130ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದಲ್ಲಿ ಈ ಅವಧಿಯಲ್ಲಿ ವಾಡಿಕೆಗಿಂತ ಶೇ.17ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಮಲೆನಾಡು ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾದ ಹಿನ್ನಲೆಯಲ್ಲಿ ಪ್ರಮುಖ ಜಲಾಶಯಗಳ ಒಳಹರಿವು ಸ್ವಲ್ಪ ಹೆಚ್ಚಳವಾಗಿತ್ತು. +ನಿನ್ನೆಯ ಮಾಹಿತಿ ಪ್ರಕಾರ ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ ಹಾಗೂ ಸೂಪಾ ಜಲಾಶಯಗಳಿಗೆ ಒಟ್ಟಾರೆ 22933 ಕ್ಯೂಸೆಕ್ಸ್‍ನಷ್ಟು ಒಳಹರಿವಿತ್ತು. ಕಾವೇರಿ ಕೊಳ್ಳದ ಹಾರಂಗಿ-3000, ಹೇಮಾವತಿ-8900, ಕೆಆರ್‍ಎಸ್- 5800 ಹಾಗೂ ಕಬಿನಿ ಜಲಾಶಯಕ್ಕೆ 8000 ಕ್ಯೂಸೆಕ್‍ಗೂ ಹೆಚ್ಚು ಒಳಹರಿವು ಇತ್ತು. +ತಮಿಳುನಾಡಿಗೆ ಕಾವೇರಿಕೊಳ್ಳದಿಂದ ನೀರು ಹರಿಸಿದ ಪರಿಣಾಮ ಈ ನಾಲ್ಕು ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರಿನ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿತ್ತು. ಒಟ್ಟಾರೆ ಶೇ.54ರಷ್ಟು ಮಾತ್ರ ನಾಲ್ಕು ಜಲಾಶಯಗಳಲ್ಲಿ ನೀರು ಸಂಗ್ರಹವಾಗಿದೆ. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ಈ ನಾಲ್ಕು ಜಲಾಶಯಗಳ ಒಟ್ಟು ಸಾಮಥ್ರ್ಯ 114.57 ಟಿಎಂಸಿ ಅಡಿ ಆಗಿದ್ದು, ಪ್ರಸ್ತುತ 62.38 ಟಿಎಂಸಿ ಅಡಿ ಮಾತ್ರ ಇದೆ. ಕಳೆದ ವರ್ಷ ಇದೇ ಅವಯಲ್ಲಿ 110.09 ಟಿಎಂಸಿ ಅಡಿ ನೀರಿತ್ತು. ರಾಜ್ಯದ ಪ್ರಮುಖ ಜಲಾಶಯಗಳ ಪೈಕಿ ವರಾಹಿಯನ್ನು ಹೊರತುಪಡಿಸಿದರೆ ಅತಿ ಕಡಿಮೆ ನೀರು ಸಂಗ್ರಹವಾಗಿರುವ ಜಲಾಶಯ ಕೆಆರ್‍ಎಸ್. ಈ ಜಲಾಶಯದಲ್ಲಿ ಕೇವಲ ಶೇ44ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. +ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಒಳಹರಿವು ಮಳೆ ಕಡಿಮೆಯಾಗಿರುವುದರಿಂದ ಇಳಿಕೆಯಾಗಲಿದೆ. ಸದ್ಯಕ್ಕೆ ಉತ್ತಮ ಮಳೆಯಾಗುವ ಮುನ್ಸೂಚನೆಗಳು ಇಲ್ಲದಿರುವುದರಿಂದ ಜಲಾಶಯಗಳ ಒಳಹರಿವು ಹೆಚ್ಚಾಗುವ ಸಾಧ್ಯತೆಗಳು ಇಲ್ಲ ಎನ್ನಬಹುದಾಗಿದೆ. \ No newline at end of file diff --git a/eesanje/url_46_337_11.txt b/eesanje/url_46_337_11.txt new file mode 100644 index 0000000000000000000000000000000000000000..b54eb08fdc6aeaf9a37532e76a6af9420d2e8dbb --- /dev/null +++ b/eesanje/url_46_337_11.txt @@ -0,0 +1,12 @@ +ಹುಬ್ಬಳ್ಳಿ – ಧಾರವಾಡದಲ್ಲಿ ಉಗ್ರರ ಕ್ಯಾಂಪ್..! +ಹುಬ್ಬಳ್ಳಿ,ಅ.3- ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚ ರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್‍ಐಎ) ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಹಾಗೂ ಪಶ್ಚಿಮಘಟ್ಟದಲ್ಲಿ ಉಗ್ರರ ಕ್ಯಾಂಪ್ ಸ್ಥಾಪಿಸುವ ಉದ್ದೇಶ ಹೊಂದಿದ್ದರು ಎಂಬ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ. +ಬಂಧಿತರನ್ನು ಶಹನವಾಜ್, ಮೊಹಮ್ಮದ್ ರಿಜ್ಜಾನ್ ಮತ್ತು ಮೊಹಮ್ಮದ್ ಅರ್ಷದ್ ವಾರ್ಸಿ ಎಂದು ಗುರುತಿಸಲಾಗಿದೆ. ಈ ಪೈಕಿ ಶಹನವಾಜ್‍ನನ್ನು 2 ದಿನದ ಹಿಂದೆಯೇ ಬಂಧಿಸಲಾಗಿತ್ತಾದರೂ ಅಧಿಕೃತವಾಗಿ ಬಂಧನವನ್ನು ಘೋಷಿಸಿರಲಿಲ್ಲ. ನಿನ್ನೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. +ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಸ್ಥಳೀಯರು ಇದರಲ್ಲಿ ಶಾಮೀಲಾದ ಮಾಹಿತಿ ಈವರೆಗೂ ಸಿಕ್ಕಿಲ್ಲ. ಬಂಧಿತರ ಬಗ್ಗೆ ದೆಹಲಿ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ನಮ್ಮ ವ್ಯಾಪ್ತಿಯಲ್ಲಿ ಅಂತಹ ಕೃತ್ಯಗಳು ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. +ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..? +ಇವರೆಲ್ಲ ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಘಟ್ಟ ಪ್ರದೇಶದಲ್ಲಿ ತಮ್ಮ ನೆಲೆ ಸ್ಥಾಪಿಸಿ, ಬಳಿಕ ದೇಶದಲ್ಲಿ ಐಸಿಸ್ ಉಗ್ರರ ನೆಲೆ ವಿಸ್ತರಿಸಿ ಭಯೋತ್ಪಾದಕ ದಾಳಿ ನಡೆಸಲು ಹಾಗೂ ಅಶಾಂತಿ ಸೃಷ್ಟಿಸಲು ಸಂಚು ರೂಪಿಸಿದ್ದರು. ಈ ಸಂಬಂಧ ದೇಶದ ಪಶ್ಚಿಮ ಮತ್ತು ದಕ್ಷಿಣದ ಭಾಗಗಳನ್ನು ಪರಿಶೀಲನೆ ಮಾಡಿದ್ದರು ಎಂದು ದಿಲ್ಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿ ಧಾಲಿವಾಲ್ ಹೇಳಿದ್ದಾರೆ. +ಈತನ ಸ್ನೇಹಿತರು ಪುಣೆ ಉಗ್ರ ಪ್ರಕರಣದಲ್ಲಿ ಕೆಲ ತಿಂಗಳ ಹಿಂದೆ ಬಂಯಾಗಿದ್ದರು. ಅವರು ಬೆಳಗಾವಿ ಸಮೀಪದ ಮಹಾರಾಷ್ಟ್ರದ ಅಂಬೋಲಿ ಅರಣ್ಯದಲ್ಲಿ ಉಗ್ರ ತರಬೇತಿ ಶಿಬಿರ ನಡೆಸಿದ್ದರು ಎಂದು ಬೆಳಕಿಗೆ ಬಂದಿದೆ. ವಿಶೇಷವೆಂದರೆ ಎಲ್ಲ ಶಂಕಿತ ಉಗ್ರರೂ ಎಂಜಿನಿಯರ್‍ಗಳಾಗಿದ್ದು, ಈ ಪೈಕಿ ವಾರ್ಸಿ ಎಂಬಾತ ಪಿಎಚ್‍ಡಿ ಕೂಡ ಮಾಡುತ್ತಿದ್ದ. ಇವರೆಲ್ಲ ಬಾಂಬ್ ತಯಾರಿಯಲ್ಲಿ ಪರಿಣತರಾಗಿದ್ದರು ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಮಾಹಿತಿ ನೀಡಿದೆ.ದೆಹಲಿ ಪೊಲೀಸ್ ವಿಶೇಷ ಸೆಲ್ ಹಲವಾರು ರಾಜ್ಯಗಳಲ್ಲಿನ ಭಯೋತ್ಪಾದಕ ಜಾಲಗಳನ್ನು ಭೇದಿಸಲು ಎನ್‍ಐಎಯೊಂದಿಗೆ ಕೆಲಸ ಮಾಡುವ ಹಲವಾರು ಏಜೆನ್ಸಿಗಳಲ್ಲಿ ಒಂದಾಗಿದೆ. +ಪುಣೆ ಐಸಿಸ್ ಕೇಸಿನಲ್ಲಿ ಬೇಕಾಗಿದ್ದ ಶಹನವಾಜ್:ವೃತ್ತಿಯಲ್ಲಿ ಮೈನಿಂಗ್ ಇಂಜಿನಿಯರ್ ಆಗಿರುವ ಶಹನವಾಜ್ ಐಸಿಸ್ ಪುಣೆ ಮಾಡ್ಯೂಲ್ ಪ್ರಕರಣದಲ್ಲಿ ಬೇಕಾಗಿದ್ದ. ಮೂಲಗಳ ಪ್ರಕಾರ, ಶಹನವಾಜ್ ಮೂಲತಃ ದೆಹಲಿಯವನಾದರೂ ಪುಣೆಗೆ ತೆರಳಿದ್ದ. ಜುಲೈನಲ್ಲಿ ಪುಣೆಯಲ್ಲಿ ನಡೆದ ದಾಳಿಯ ವೇಳೆ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿತ್ತು. ಶಹನವಾಜ್ ಪರಾರಿಯಾಗಿ, ದೆಹಲಿಗೆ ಮರಳಿದ್ದ. ಅಂದಿನಿಂದ ಅಡಗುದಾಣದಲ್ಲಿ ಆತ ವಾಸಿಸುತ್ತಿದ್ದ. ಈತ ತನ್ನ ಹೆಂಡತಿ ಬಸಂತಿಯನ್ನು ಇಸ್ಲಾಂಗೆ ಮತಾಂತರಿಸಿದ್ದ ಎಂದು ಮೂಲಗಳು ಹೇಳಿವೆ. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ಈ ತಿಂಗಳ ಆರಂಭದಲ್ಲಿ ಶಹನವಾಜ್ ಮತ್ತು ಇತರ ಮೂವರು ಭಯೋತ್ಪಾದಕ ಶಂಕಿತರಾದ ರಿಜ್ಜಾನ್ ಅಬ್ದುಲ್ ಹಾಜಿ ಅಲಿ, ಅಬ್ದುಲ್ಲಾ ಫಯಾಜ್ ಶೇಖ್ ಅಲಿಯಾಸ್ ಡಯಾಪರ್ವಾಲಾ ಮತ್ತು ತಲ್ಹಾ ಲಿಯಾಕತ್ ಖಾನ್ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ 3 ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು . ಈ ಪೈಕಿ ಡಯಪರ್ವಾಲಾ ಹಾಗೂ ತಲ್ಹಾ ಇನ್ನೂ ಸಿಕ್ಕಿಲ್ಲ. ಅವರಿಗಾಗಿ ಬಲೆ ಬೀಸಲಾಗಿದೆ. +ಶಹನವಾಜ್, ಅಬ್ದುಲ್ಲಾ ಮತ್ತು ರಿಜ್ಜಾನ್ ಅವರು ಐಸಿಸ್ ಸಂಬಂಧಿ ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಬ್ರೇನ್‍ವಾಶ್ ಆಗಿ ಭಯೋತ್ಪಾದಕರಾಗಿದ್ದರು. ಮಹಾರಾಷ್ಟ್ರದ ಪುಣೆಯಲ್ಲಿರುವ ಐಸಿಸ್ ಮಾಡ್ಯೂಲ್‍ನೊಂದಿಗೆ ಇವರಿಬ್ಬರೂ ನಂಟು ಹೊಂದಿದ್ದರು. ಅವರು ದೇಶಾದ್ಯಂತ ಹಿಂಸಾಚಾರ ಮತ್ತು ಭಯೋತ್ಪಾದನೆಯನ್ನು ಪ್ರಚುರಪಡಿಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. +ಮೂಲಗಳ ಪ್ರಕಾರ, ಅಬ್ದುಲ್ಲಾ ಡಯಾಪರ್ವಾಲಾ ಪುಣೆಯಲ್ಲಿ ಡಯಾಪರ್ ಅಂಗಡಿಯನ್ನು ನಡೆಸುತ್ತಿದ್ದ. ಅದನ್ನು ಸ್ಪೋಟಕ ಸಾಧನಗಳನ್ನು ಜೋಡಿಸಲು ಬಳಸಲಾಗುತ್ತಿತ್ತು. ಬಂಧಿತರಿಂದ ಪ್ಲಾಸ್ಟಿಕ್ ಟ್ಯೂಬ್, ಕಬ್ಬಿಣದ ಪೈಪ್, ವಿವಿಧ ರೀತಿಯ ರಾಸಾಯನಿಕ, ಟೈಮಿಂಗ್ ಉಪಕರಣ ಮೊದಲಾದ ವಸ್ತುಗಳನ್ನು ವಶಪಡಿ ಸಿಕೊಳ್ಳಲಾಗಿದೆ. ಇವೆಲ್ಲವೂ ಸುಧಾರಿತ ಸೋಟಕ ತಯಾರಿಸಲು ಬಳಸುವ ವಸ್ತುಗಳಾಗಿರುವ ಕಾರಣ, ಇವರೆಲ್ಲಾ ದೊಡ್ಡ ದುಷ್ಕೃತ್ಯ ನಡೆಸಲು ಸಜ್ಜಾಗಿದ್ದರು ಎಂಬುದು ಖಚಿತಪಟ್ಟಿದೆ. \ No newline at end of file diff --git a/eesanje/url_46_337_12.txt b/eesanje/url_46_337_12.txt new file mode 100644 index 0000000000000000000000000000000000000000..01a762ac13150d911f0ef4ae666a191fa58f74a5 --- /dev/null +++ b/eesanje/url_46_337_12.txt @@ -0,0 +1,12 @@ +2 ತಿಂಗಳಲ್ಲಿ 4 ಸಾವಿರ ಎಕರೆ ಅರಣ್ಯ ಹೆಚ್ಚಳ : ಸಚಿವ ಈಶ್ವರ್‌ ಖಂಡ್ರೆ +ಬೆಂಗಳೂರು,ಅ.2- ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯಾದ್ಯಂತ ನಾಲ್ಕು ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಹೆಚ್ಚಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. 69ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಜಾಗತಿಕವಾಗಿ ಪರಿಸರ ಜೀವವೈವಿಧ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದೆ. ಜಗತ್ತು ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಿಂದ ನಾನಾ ವಿಧದ ಸಮಸ್ಯೆಯನ್ನು ಎದುರಿಸುತ್ತಿದೆ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ಹಸಿರು ಹೊದಿಕೆಯನ್ನು ಹೆಚ್ಚಿಸುವುದಾಗಿದೆ ಎಂದರು. +ತಾವು ಅರಣ್ಯ ಸಚಿವರಾದ ಬಳಿಕ 5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿದ್ದು, ಈವರೆಗೆ 4.75 ಲಕ್ಷ ಸಸಿ ನೆಡಲಾಗಿದೆ. ಇದರಲ್ಲಿ ಎಷ್ಟು ಬದುಕಿ ಉಳಿಯುತ್ತದೆ ಎಂದು ತಿಳಿಯಲು ಜಿಯೋ ಟ್ಯಾಗ್ ಮಾಡಲಾಗಿದೆ ಮತ್ತು ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ಆಡಿಟ್ ಮಾಡಿಸಲಾಗುತ್ತಿದೆ ಎಂದು ಹೇಳಿದರು. +ಇದರ ಜೊತೆಗೆ ರಾಜ್ಯದ 5 ನಗರಗಳನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದು, ಮೈಸೂರು, ಬೀದರ್, ಗುಲ್ಬರ್ಗಾ, ಧರ್ಮಸ್ಥಳ ಮತ್ತು ತುಮಕೂರು ನಗರವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಎಂದು ಘೋಷಿಸಲಾಗಿದೆ. ಪ್ರಜ್ಞಾವಂತರಾದ ನೀವೆಲ್ಲರೂ ಪ್ಲಾಸ್ಟಿಕ್ ಅದರಲ್ಲೂ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ಜಾಗೃತಿ ಮೂಡಿಸಬೇಕು ಎಂದು ಮನವಿ ಮಾಡಿದರು. +ರಾಜ್ಯಾದ್ಯಂತ ಒತ್ತುವಾರಿಯಾಗಿದ್ದ 2 ಸಾವಿರ ಎಕರೆ ಅರಣ್ಯ ಭೂಮಿಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಜೊತೆಗೆ 4 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಅರಣ್ಯ ಎಂದು ಘೋಷಿಸಲಾಗಿದೆ ಎಂದು ಹೇಳಿದರು. +ಭೂಮಿ ಸಾಫ್ಟ್ ವೇರ್ ಮಾದರಿಯಲ್ಲಿ ಗ್ರಾ.ಪಂಗಳ ಅಸ್ತಿ ಸಂರಕ್ಷಣೆಗೆ ಕ್ರಮ : ಡಿಸಿಎಂ +ಇಷ್ಟು ದಿನ ರಾಸಾಯನಿಕ ಬಣ್ಣ ಲೇಪಿತ ಪಿಓಪಿ ಗಣಪತಿ ಮೂರ್ತಿಗಳನ್ನು ವಿಸರ್ಜಿಸಿ ಜಲ ಮೂಲ ನಾಶ ಮಾಡದಂತೆ ಸುತ್ತೋಲೆ ಹೊರಡಿಸಿ ಮನವಿ ಮಾಡಲಾಗುತ್ತಿತ್ತು. ಈಗ ಈ ಸಂಬಂಧ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು. +ಅರಣ್ಯ ವ್ಯಾಪ್ತಿ ಕ್ಷೀಣಿಸಿದರೆ, ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ಇತ್ತೀಚೆಗೆ ಹಲವಾರು ಆನೆಗಳ ದಾಳಿಯಿಂದ ಮೃತಪಟ್ಟಿದ್ದಾರೆ. ಹೀಗಾಗಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗುತ್ತಿದೆ. ರಾಜ್ಯದಲ್ಲಿ 312 ಕಿ.ಮೀಟರ್ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, ಇನ್ನೂ 300 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಸಿದರೆ ಆನೆ ನಾಡಿಗೆ ಬಾರದಂತೆ ತಡೆಯಬಹುದು ಎಂದರು. +ವನ್ಯಜೀವಿಯಾಗಿರಲಿ, ಕೀಟವೇ ಆಗಿರಲಿ, ಪಕ್ಷಿಯೇ ಆಗಿರಲಿ ಅಥವಾ ಸಸ್ಯ ಸಂಕುಲವೇ ಆಗಿರಲಿ ಎಲ್ಲ ಜೀವಿ, ಸಸ್ಯಗಳಿಗೂ ಬದುಕುವ ಹಕ್ಕಿದೆ. ಆದರೆ ಇಂದು ಹಲವು ವನ್ಯ ಜೀವಿಗಳು ಅಳಿವಿನ ಅಂಚಿನಲ್ಲಿವೆ. ಕೆಲವು ನಶಿಸಿಹೋಗಿವೆ. ಹೀಗಾಗಿ ಜನರಲ್ಲಿ ಅರಣ್ಯದ ಬಗ್ಗೆ ವನ್ಯ ಜೀವಿಗಳ ಬಗ್ಗೆ ಜಾಗೃತಿ ಮೂಡಿಸಲು ವನ್ಯಜೀವಿ ಸಪ್ತಾಹ ವನ್ನು ಆಚರಿಸಲಾಗುತ್ತದೆ ಎಂದರು. +ಗೃಹ ಸಚಿವ ಪರಮೇಶ್ವರ್ ವಿರುದ್ಧ ಈಶ್ವರಪ್ಪ ಹಿಗ್ಗಾಮುಗ್ಗಾ ವಾಗ್ದಾಳಿ +ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅರಣ್ಯ ಇಲಾಖೆ ಉತ್ತಮ ಕಾರ್ಯ ಮಾಡುತ್ತಿದೆ. ಶಾಲಾ ಮಕ್ಕಳಿಗೆ ಬಾಲ್ಯದಿಂದಲೇ ಅರಣ್ಯದ ಬಗ್ಗೆ ಅರಿವು ಮೂಡಿಸಿದರೆ ಅವರು ದೊಡ್ಡವರಾದ ಬಳಿಕವೂ ಪ್ರಕೃತಿ, ಪರಿಸರ ಕಾಪಾಡುತ್ತಾರೆ. ಅದಕ್ಕೆ ಕೇವಲ ಪಠ್ಯದಲ್ಲಿ ವಿಷಯ ಇದ್ದರೆ ಸಾಲದು, ಅವರಿಗೆ ಸಾಕ್ಷಾತ್ ಅರಣ್ಯ ದರ್ಶನ ಮಾಡಿಸಿದಾಗ ಹೆಚ್ಚಿನ ಅರಿವು ಮೂಡುತ್ತದೆ. ಅದಕ್ಕಾಗಿಯೇ ನಮ್ಮ ಇಲಾಖೆ ಚಿಣ್ಣರ ವನ ದರ್ಶನ ಎಂಬ ಕಾರ್ಯಕ್ರಮವನ್ನೇ ಹಮ್ಮಿಕೊಂಡಿದೆ ಎಂದರು. +ಈ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ಉಪಯುಕ್ತವಾದ ಪರಿಸರ, ಅರಣ್ಯ, ವನ್ಯಜೀವಿಗಳ ಪುಸ್ತಕ ನೀಡಲಾಗುತ್ತದೆ. ಅರಣ್ಯಪ್ರದೇಶಕ್ಕೆ ಕರೆದುಕೊಂಡು ಹೋಗಿ ತೋರಿಸಲಾಗುತ್ತದೆ. ಈ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_337_2.txt b/eesanje/url_46_337_2.txt new file mode 100644 index 0000000000000000000000000000000000000000..b8dc26c6483576fabc1e64d5954773ab1714ca65 --- /dev/null +++ b/eesanje/url_46_337_2.txt @@ -0,0 +1,7 @@ +ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ +ಮೈಸೂರು, ಅ. 4- ಮೈಸೂರು ದಸರಾ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮ ಅ. 6ರಿಂದ 13ರವರೆಗೆ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ತಿಳಿಸಿದರು. ನಗರದ ಎಸ್ಪಿ ಕಚೇರಿಯಲ್ಲಿಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಯುವ ಸಂಭ್ರಮ ಕುರಿತ ಮಾಹಿತಿ ನೀಡಿದರು. +ಅ. 6ರಿಂದ 13ರವರೆಗೆ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭ ಅ.6ರಂದು ಸಂಜೆ ನಡೆಯಲಿದ್ದು, ಈ ಸಮಾರಂಭವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು. ಉದ್ಘಾಟನೆಯ ದಿನದಂದು ಚಿತ್ರ ನಟ ವಶಿಷ್ಟ ಸಿಂಹ ಹಾಗೂ ಹರಿಪ್ರಿಯ ತಾರಾ ಮೆರಗು ನೀಡಲಿದ್ದಾರೆ ಎಂದವರು ತಿಳಿಸಿದರು. +ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್ +ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧಡೆಯಿಂದ 400ಕ್ಕೂ ಹೆಚ್ಚು ಅರ್ಜಿಗಳು ಬಂದಿದೆ. ರಾಜ್ಯದಲ್ಲಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಎಂದವರು ತಿಳಿಸಿದರು. +ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ +ಈ ಬಾರಿ ಚಂದ್ರಯಾನ, ರಾಷ್ಟ್ರೀಯ ಭಾವೈಕ್ಯತೆ, ನಾಡು ನುಡಿಗಾಗಿ ಹೋರಾಡಿದವರು ಸೇರಿದಂತೆ 20 ವಿಷಯ ಕುರಿತು ನೃತ್ಯ ಪ್ರದರ್ಶನ ನೀಡಲು ಕಾಲೇಜು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು. ಪ್ರತಿ ಕಾಲೇಜಿಗೆ 5 ನಿಮಿಷ ಕಾಲಾವಕಾಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಈ ಸಮಾರಂಭ ನಡೆಯಲಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. \ No newline at end of file diff --git a/eesanje/url_46_337_3.txt b/eesanje/url_46_337_3.txt new file mode 100644 index 0000000000000000000000000000000000000000..51c6b9aa6d7c412e9d3cfc7a2f8e35f593fbc5d8 --- /dev/null +++ b/eesanje/url_46_337_3.txt @@ -0,0 +1,12 @@ +ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್ +ಬೆಂಗಳೂರು,ಅ.4- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿಯನ್ನು ಶೀಘ್ರವೇ ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದ್ದಾರೆ. ವರದಿ ಸಲ್ಲಿಕೆಯಾದ ಬಳಿಕ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಸದುದ್ದೇಶದಿಂದಲೇ ಸಮೀಕ್ಷೆ ನಡೆಸಿದೆ. ಸರ್ಕಾರದ ಹಣ ಫೋಲು ಮಾಡುವ ಸಲುವಾಗಿ ಯಾವುದೇ ಸರ್ಕಾರ ಸಮೀಕ್ಷೆ ಮಾಡುವುದಿಲ್ಲ ಎಂದರು. +ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಅನೇಕ ವರ್ಷಗಳಿಂದ ಬೇಡಿಕೆಗಳಿವೆ. ತಮಿಳುನಾಡಿನಲ್ಲಿ ಶೇ.69 ರಷ್ಟು ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ರಾಜ್ಯದಲ್ಲೂ ಮೀಸಲಾತಿ ಪರಿಷ್ಕರಣೆಗೆ ಬೇಡಿಕೆ ಕೇಳಿಬಂದಿದೆ. ಅನೇಕ ಸಮುದಾಯಗಳು ಮೀಸಲಾತಿ ವ್ಯಾಪ್ತಿಗೆ ಒಳಪಡಲು ಪ್ರಯತ್ನಿಸುತ್ತಿದೆ. ಇದೆಲ್ಲದಕ್ಕೂ ಸಮೀಕ್ಷಾ ವರದಿ ಅನುಕೂಲವಾಗಲಿದೆ. ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದರ ಬಗ್ಗೆಯೂ ವಿಶ್ಲೇಷಣೆ ನಡೆಯಲಿದೆ ಎಂದರು. +ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ +ಈ ಹಿಂದೆ ಕಾಂಗ್ರೆಸ್ ತನ್ನ ಚುನಾವಣಾ ಪ್ರನಾಳಿಕೆಯಲ್ಲಿ ಸಮೀಕ್ಷಾ ವರದಿಯನ್ನು ಬಹಿರಂಗಪಡಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ನಾವು ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ ಎಂದು ತಿಳಿಸಿದರು. +ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಎಲ್ಲಾ ಕಾಲಘಟ್ಟದಲ್ಲೂ ಕ್ರಮ ವಹಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಎಷ್ಟು ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಮಾಹಿತಿ ತಮ್ಮ ಬಳಿ ಇದೆ. ಅಗತ್ಯ ಬಿದ್ದರೆ ಅದನ್ನು ಬಹಿರಂಗಪಡಿಸಲು ಸಿದ್ಧರಿದ್ದೇವೆ ಎಂದು ಹೇಳಿದರು. +ಜನಸಾಮಾನ್ಯರು ಪ್ರಕರಣ ಹಿಂಪಡೆಯುವಂತೆ ಶಾಸಕರಿಗೆ, ಸಂಸದರಿಗೆ, ಸಚಿವರಿಗೆ, ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸುವುದು ಸಹಜ. ಅಂತಹ ವೇಳೆ ಅವುಗಳು ಗೃಹ ಇಲಾಖೆಗೆ ರವಾನೆಯಾಗುತ್ತವೆ. ಈ ಅರ್ಜಿಗಳನ್ನು ಸಚಿವ ಸಂಪುಟದ ಉಪಸಮಿತಿಯ ಮುಂದೆ ಮಂಡಿಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಅವುಗಳನ್ನು ತೆಗೆಯಬಹುದಾ, ತೆಗೆಯಬಾರದ ಎಂಬೆಲ್ಲಾ ವಿಚಾರ ವಿನಿಮಯ ನಡೆಸಲಾಗುವುದು. +ಅಮಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದಾದರೆ ಅವುಗಳನ್ನು ಹಿಂಪಡೆಯುವಂತೆ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ಮಂಡಿಸಲಾಗುವುದು. ಸಂಪುಟದಲ್ಲೂ ಅದು ಚರ್ಚೆಯಾಗಲಿದೆ. +ಇಡಿ,ಐಟಿ ಅಧಿಕಾರಿಗಳು ಬೀದಿ ನಾಯಿ, ಬೆಕ್ಕುಗಳಂತೆ ತಿರುಗುತ್ತಿದ್ದಾರೆ ; ಬಘೇಲ್ +ಉಪ ಸಮಿತಿಯ ವರದಿಯನ್ನು ಒಪ್ಪಲೇಬೇಕೆಂಬ ನಿಯಮವಿಲ್ಲ. ಸಂಪುಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ ಅವು ವಾಪಸ್ ಬರಲಿವೆ. ಇಷ್ಟೆಲ್ಲಾ ಪ್ರಕ್ರಿಯೆಗಳಿರುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದರು ಎಂಬ ಕಾರಣಕ್ಕೆ ಬೊಬ್ಬೆ ಹೊಡೆಯುವುದು ಸರಿಯಲ್ಲ ಎಂದು ಹೇಳಿದರು. +ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಪಟ್ಟಂತೆ ಚುನಾವಣೆಗೆ ಮೊದಲು ನಡೆದಿದೆ ಎಂದು ಹೇಳಲಾದ ಚಿಲುಮೆ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮತದಾರರ ಪಟ್ಟಿಯಲ್ಲಿ ಲೋಪಗಳಾಗಿವೆ ಎಂಬ ಶಂಕೆಯನ್ನು ವ್ಯಕ್ತಪಡಿಸಿ ಆರೋಪ ಮಾಡಿತ್ತು. ಅದರ ಕುರಿತು ಚುನಾವಣಾ ಆಯೋಗ ತನಿಖೆಗೆ ಆದೇಶಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. +ಬಿಬಿಎಂಪಿಯ ಆಯುಕ್ತ ತುಷಾರ್ ಗಿರಿನಾಥ್ ಅದರಲ್ಲಿ ಭಾಗಿಯಾಗಿರುವ ಕುರಿತು ಮತ್ತು ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಣೆ ಮಾಡಿದ್ದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿದೆ ಎಂಬ ಮಾಹಿತಿ ತಮಗಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_337_4.txt b/eesanje/url_46_337_4.txt new file mode 100644 index 0000000000000000000000000000000000000000..8b1865257a84f4d9b68444482e6e982fcf9932ef --- /dev/null +++ b/eesanje/url_46_337_4.txt @@ -0,0 +1,13 @@ +ಶ್ಯಾಮನೂರು ಶಿವಶಂಕರಪ್ಪನವರ ಹೇಳಿಕೆ ಆಡಳಿತದ ಮೇಲೆ ಪರಿಣಾಮ ಬೀರಲಿದೆ : ರಾಯರೆಡ್ಡಿ +ಬೆಂಗಳೂರು,ಅ.3- ಸರ್ಕಾರಿ ಅಧಿಕಾರಿಗಳ ಬಗ್ಗೆ ಜಾತಿ ಆಧಾರದ ಮೇಲೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪನವರು ಮಾತನಾಡಿರುವುದು ತಪ್ಪು. ಇದು ಆಡಳಿತದ ಮೇಲೆ ಪರಿಣಾಮ ಬೀರಲಿದೆ ಎಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಇಂದಿಲ್ಲಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಶ್ಯಾಮನೂರು ಶಿವಶಂಕರಪ್ಪ ಅವರು ಮಾಹಿತಿ ಕೊರತೆಯಿಂದ ಲಿಂಗಾಯಿತ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗೆ ಹುದ್ದೆಗೆ ನಿಯೋಜಿಸಿಲ್ಲ. ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ. ಲಿಂಗಾಯಿತ ಅಧಿಕಾರಿಗಳಿಗೆ ಮಹತ್ವವಿಲ್ಲ ಎಂದು ಹೇಳಿಕೆ ನೀಡಿರುವುದು ಸರಿಯಲ್ಲ. +ಜಾತಿ ಆಧಾರದ ಮೇಲೆ ಹುದ್ದೆ ಕೊಡಲಾಗುವುದಿಲ್ಲ. ಎಲ್ಲ ಜಾತಿಯಲ್ಲೂ ಅರ್ಹರು, ಅನರ್ಹರು ಇರುತ್ತಾರೆ. ಅರ್ಹತೆ ಆಧಾರದ ಮೇಲೆ ಅಧಿಕಾರಿಗಳಿಗೆ ಹುದ್ದೆ ನೀಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಲಿಂಗಾಯಿತರಿಗೆ ಅನ್ಯಾಯ ಮಾಡಿದೆ ಎಂಬುದನ್ನು ಒಪ್ಪುವುದಿಲ್ಲ ಎಂದು ಹೇಳಿದರು. +ಸಾಮಾಜಿಕ ನ್ಯಾಯದ ಮೇಲೆ ಬಸವ ತತ್ವ ಅವಲಂಬಿತವಾಗಿರುವುದರಿಂದ ಸಿದ್ದರಾಮಯ್ಯ ಅವರು ಬಸವ ತತ್ವದ ಅನುಯಾಯಿ ಆಗಿದ್ದಾರೆ. ತಮ್ಮ ಸಂಪುಟದಲ್ಲಿ ಏಳು ಲಿಂಗಾಯಿತರಿಗೆ ಸಚಿವ ಸ್ಥಾನ ನೀಡಿದ್ದಾರೆ. ಲಿಂಗಾಯಿತ ಸಮುದಾಯದ ಮೂವರು ಜಿಲ್ಲಾಕಾರಿಗಳು, 7 ಎಸ್ಪಿಗಳು, 13 ವಿಶ್ವವಿದ್ಯಾನಿಲಯದ ಕುಲಪತಿಗಳು, ನಾಲ್ವರು ಸಿಇಒಗಳು ಹಾಗೂ ಮುಖ್ಯ ಇಂಜಿನಿಯರ್‍ಗಳು ಇದ್ದಾರೆ ಎಂದು ಅಂಕಿ ಅಂಶಗಳ ಸಹಿತ ಮಾಹಿತಿ ನೀಡಿದರು. +ಗುಜರಿ ಅಂಗಡಿ ಮಾಲೀಕನ ಮನೆಯಲ್ಲಿ ಚಿನ್ನ-ಹಣ ದೋಚಿದ್ದ ಆರೋಪಿ ಸೆರೆ +ಅಧಿಕಾರಿಗಳನ್ನು ಜಾತಿಯ ದೃಷ್ಟಿಯಿಂದ ನೋಡಬಾರದು. ಅದರ ಬಗ್ಗೆ ಮಾತನಾಡುವುದು ಸರಿಯಲ್ಲ ಎನ್ನುತ್ತಲೇ ಈ ಅಂಕಿಅಂಶಗಳನ್ನು ನೀಡಿದರು. ಮೊದಲ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋವನ್ನು ಸರ್ಕಾರಿ ಕಚೇರಿಗಳಲ್ಲಿ ಹಾಕಲು ಆದೇಶ ನೀಡಿದರು. ಹಿಂದೆ ಮುಖ್ಯಮಂತ್ರಿಯಾಗಿದ್ದ ಲಿಂಗಾಯಿತ ಸಮುದಾಯದವ ರಾರು ಕೂಡ ಈ ಕಾರ್ಯ ಮಾಡಿರಲಿಲ್ಲ. ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕ ಮಹಾದೇವಿ ಹೆಸರನ್ನು ನಾಮಕರಣ ಮಾಡಲಾಗಿದೆ. +ಕಲ್ಬುರ್ಗಿ ವಿವಿಗೆ ಬಸವೇಶ್ವರರ ಹೆಸರನ್ನು ಇಡಬೇಕೆಂಬ ಪ್ರಯತ್ನ ಮಾಡಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದನ್ನು ಕಾರ್ಯಗತ ಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ಅವರು ಲಿಂಗಾಯಿತ ವಿರೋಧಿಯಾಗಿದ್ದರೆ ಇವೆಲ್ಲ ಮಾಡಲು ಸಾಧ್ಯವಾದೀತೆ? ತುಳಿತಕ್ಕೊಳಗಾದವರ ಬಗ್ಗೆ ಅವರಲ್ಲಿ ಮೃದು ಧೋರಣೆಯಿದೆ. ಅಧಿಕಾರಿಗಳನ್ನು ಜಾತಿ ಆಧಾರದ ಮೇಲೆ ಗುರುತಿಸುವ, ಹುದ್ದೆ ನೀಡುವ ಕಾರ್ಯ ಸರಿಯಲ್ಲ. ಇದು ಅವರ ನೈತಿಕತೆ ಕುಗ್ಗಿಸುವ ಜೊತೆಗೆ ಆಡಳಿತದ ಮೇಲೂ ಪರಿಣಾಮ ಉಂಟಾಗುತ್ತದೆ ಎಂದು ಒತ್ತಿ ಹೇಳಿದರು. +ಅಸಮಾಧಾನವಿಲ್ಲ:ಸರ್ಕಾರದ ಬಗ್ಗೆ ಲಿಂಗಾಯಿತ ಶಾಸಕರಲ್ಲಿ ಅಸಮಾಧಾನವಿಲ್ಲ. ವಿರೋಧ ಪಕ್ಷದವರು ಹೇಳಿದಂತೆ ಬಹುಮತವುಳ್ಳ ನಮ್ಮ ಸರ್ಕಾರ ಏನೂ ಆಗುವುದಿಲ್ಲ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆ ಗೊಂದಲವಿಲ್ಲ. ಆಂತರಿಕ ಪ್ರಜಾಪ್ರಭುತ್ವ ಪಕ್ಷದಲ್ಲಿ ಜಾಸ್ತಿ ಇರುವುದರಿಂದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅವರು ಮುಖ್ಯಮಂತ್ರಿ ಪರವಾಗಿ ಆಗಲಿ ಅಥವಾ ಶ್ಯಾಮನೂರು ಶಿವಶಂಕರಪ್ಪ ಅವರ ವಿರುದ್ದವಾಗಿ ಮಾತನಾಡುತ್ತಿಲ್ಲ. ಶಾಸಕನಾಗಿ ಜಾತಿ ಆಧಾರದ ಮೇಲೆ ಮಾತನಾಡಬಾರದು ಎಂದರು. +ಮಾಜಿ ಸಿಎಂ ಯಡಿಯೂರಪ್ಪ ಅವರ ಹೇಳಿಕೆಯನ್ನು ಒಪ್ಪಲಾಗದು. ಲಿಂಗಾಯಿತ ಅಧಿಕಾರಿಗಳನ್ನು ಕಡೆಗಣಿಸಲಾಗಿದೆ ಎಂಬ ಹೇಳಿಕೆ ನೀಡಿರುವ ಶ್ಯಾಮನೂರು ಶಿವಶಂಕರಪ್ಪ ಅವರು ಕ್ಷಮೆ ಕೋರುವಂತೆ ಆಗ್ರಹಿಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಜಾತಿಜನಗಣತಿ ಬಿಡುಗಡೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ +ಜಾತಿ ಗಣತಿ ಬಿಡುಗಡೆ ಮಾಡಲಿ:ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರ ಅವಧಿಯಲ್ಲಿ ಸಿದ್ದಪಡಿಸಲಾದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ಸರ್ಕಾರ ಸ್ವೀಕರಿಸಿ ಬಿಡುಗಡೆ ಮಾಡಬೇಕು. ಬಿಹಾರದಲ್ಲಿ ಜಾತಿ ಗಣತಿಯನ್ನು ಬಿಡುಗಡೆ ಮಾಡಲಾಗಿದೆ. ಜಾತಿಗಣತಿ ಬಿಡುಗಡೆ ಮಾಡುವುದರಿಂದ ದುರ್ಬಲ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದರು. +ಡಿಸಿಎಂ ಹುದ್ದೆ ಸಂವಿಧಾನದಲ್ಲಿಲ್ಲ:ಉಪಮುಖ್ಯಮಂತ್ರಿ ಹುದ್ದೆ ಸಂವಿಧಾನದಲ್ಲಿ ಇಲ್ಲ. ಅದೊಂದು ಗೌರವದ ಹುದ್ದೆ. ಮತ್ತೆ ಮೂರು ಉಪಮುಖ್ಯಮಂತ್ರಿ ಮಾಡಬೇಕೆಂಬ ವಿಚಾರ ಬಂದಾಗ ಮೂರು ಏಕೆ ಆರು ಮಾಡಿ ಎಂದು ಹೇಳಿದ್ದು ನಿಜ. ಉಪಮುಖ್ಯಮಂತ್ರಿಗಳ ಸಂಖ್ಯೆ ಹೆಚ್ಚಾದಾಗ ಪ್ರಧಾನ ಉಪಮುಖ್ಯಮಂತ್ರಿಯನ್ನು ಮಾಡಬೇಕೆ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_337_5.txt b/eesanje/url_46_337_5.txt new file mode 100644 index 0000000000000000000000000000000000000000..e29873a18b37f29f9a636453aef6194f0f4765d1 --- /dev/null +++ b/eesanje/url_46_337_5.txt @@ -0,0 +1,10 @@ +ಹೆದ್ದಾರಿಗಳಲ್ಲಿ ಎಚ್ಚರ ತಪ್ಪಿದರೆ ಪ್ರಾಣಕ್ಕೆ ಕಂಟಕ +ಬೆಂಗಳೂರು, ಅ.3- ಹೆದ್ದಾರಿ ಹಾಗೂ ಎಕ್ಸ್‍ಪ್ರೆಸ್ ಹೈವೇಗಳಲ್ಲಿ ಪ್ರಯಾಣಿಸುವಾಗ ಒಂದು ಕ್ಷಣ ಎಚ್ಚರ ತಪ್ಪಿದರೂ ಪ್ರಾಣ ಕಂಟಕವಾಗಲಿದೆ ಎಂಬುದಕ್ಕೆ ಬೆಂಗಳೂರಿನ ಹೊರವಲಯದ ಸೋಂಪುರದ ಬಳಿಯ ನೈಸ್‍ರಸ್ತೆಯಲ್ಲಿ ನಡೆದ ಅಪಘಾತ ಸ್ಪಷ್ಟ ಉದಾಹರಣೆಯಾಗಿದೆ. +ಟಾಟಾ ನೆಕ್ಸಾನ್ ಕಾರಿನಲ್ಲಿ ಮುಂಜಾನೆ 2.30ರ ಸುಮಾರಿಗೆ ಕುಟುಂಬ ಸಮೇತ ಪ್ರಯಾಣಿಸುತ್ತಿದ್ದ ಸಾಫ್ಟ್‍ವೇರ್ ಇಂಜಿನಿಯರ್ ಮಹೇಂದ್ರನ್ ರವರು ನೈಸ್ ರಸ್ತೆಯಲ್ಲಿರುವಾಗ ನೀರು ಕುಡಿಯಲು ಬಾಟಲ್ ತೆಗೆದುಕೊಂಡಿದ್ದಾರೆ. +ನಾಂದೇಡ್ : ಔಷಧಿ ಕೊರತೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 31ಕ್ಕೆ ಏರಿಕೆ +ಕೆಲವೇ ಕ್ಷಣಗಳಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ.ಅಪಘಾತದ ರಭಸಕ್ಕೆ ಕಾರಿನಲ್ಲಿದ್ದವರು ಆಘಾತಕ್ಕೊಳಗಾಗಿದ್ದಾರೆ. ಒಳಗಿದ್ದವರನ್ನು ರಕ್ಷಿಸಲು ಏರ್‍ಬ್ಯಾಗ್ ಅದೇ ವೇಳೆ ತೆರೆದುಕೊಂಡಿದೆ. ಅಪಘಾತದ ತಕ್ಷಣವೇ ಕಾರಿನ ಡೀಸೆಲ್ ಟ್ಯಾಂಕ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದ್ದು, ಸೋಟಗೊಂಡಿದೆ. ಘಟನೆಯಿಂದ ಆಘಾತಕ್ಕೊಳಗಾದವರು ಏರ್‍ಬ್ಯಾಗ್ ಅನ್ನು ಸಡಿಲಿಸಿ ಹೊರಬರುವುದರೊಳಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದ್ದು, ಕಾರಿನಲ್ಲಿದ್ದ ನಾಲ್ವರ ಪೈಕಿ ತಾಯಿ ಮತ್ತು ಮಗಳು ಸಜೀವ ದಹನವಾಗಿದ್ದಾರೆ. +ಆಧುನಿಕತೆ ಮತ್ತು ತಂತ್ರಜ್ಞಾನ ಜೀವರಕ್ಷಣೆಗಾಗಿ ನಾನಾ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿದೆ. ಆದರೆ ಕೆಲವೊಮ್ಮೆ ಅದೂ ಕೂಡ ಅಪಾಯಕಾರಿಯಾಗಲಿದೆ ಎಂಬುದಕ್ಕೆ ಈ ಅಪಘಾತ ಉದಾಹರಣೆಯಾಗಿದೆ. +ಎಕ್ಸ್‍ಪ್ರೆಸ್ ಹೈವೇಗಳಲ್ಲಿ ಕಾರು ಚಾಲನೆ ಮಾಡುವವರು ಕನಿಷ್ಟ 70 ರಿಂದ 80 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿರುತ್ತಾರೆ. ಕೆಲವೊಮ್ಮೆ ಅದು 120 ಕಿಲೋ ಮೀಟರ್ ಹೋಗುವ ಸಾಧ್ಯತೆ ಇದೆ. ಅದರಲ್ಲೂ ಮಧ್ಯರಾತ್ರಿ ಎಂದರೆ ರಸ್ತೆ ಖಾಲಿ ಇರುವುದರಿಂದ ವೇಗವೂ ಕೂಡ ಇಮ್ಮಡಿಗೊಂಡಿರುತ್ತದೆ. ನಿದ್ದೆಯ ಮಂಪರು ಕೂಡ ಸಾಮಾನ್ಯವಾಗಿರುತ್ತದೆ. +ಬಿಬಿಎಂಪಿ ಆಯುಕ್ತರ ವಿರುದ್ಧ ತನಿಖೆಗೆ ಸೂಚನೆ +ಈ ಸಂದರ್ಭದಲ್ಲಿ ಒಂದೇ ಒಂದು ಕ್ಷಣ ಎಚ್ಚರ ತಪ್ಪಿದರೂ ಅಪಾಯ ಎದುರಾಗಲಿದೆ. ಸಾಮಾನ್ಯವಾಗಿ ಚಾಲನೆಯಲ್ಲಿರುವಾಗಲೇ ನೀರು ಕುಡಿಯುವುದು, ಮೊಬೈಲ್ ಬಳಸುವುದು, ಅಕ್ಕಪಕ್ಕದಲ್ಲಿದ್ದವರ ಜೊತೆ ಅನಗತ್ಯವಾದ ಸಂವಹನ, ಮದ್ಯಪಾನ ಮಾಡಿ ಚಾಲನೆ ಮಾಡುವುದು, ಧೂಮಪಾನ ಮಾಡುವುದು ಪ್ರಾಣ ಕಂಟಕಗಳಾಗುತ್ತವೆ. +ಸಂಚಾರ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಇಲಾಖೆಗಳು ಎಷ್ಟೇ ಜಾಗೃತಿ ಮೂಡಿಸಿದರೂ ಮೋಜಿನ ಪ್ರವಾಸದ ಭರದಲ್ಲಿ ವಾಹನ ಚಾಲಕರು ಎಚ್ಚರ ತಪ್ಪಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ವರದಿಗಳು ಹೆಚ್ಚಾಗಿ ಕಂಡುಬರುತ್ತಿವೆ. \ No newline at end of file diff --git a/eesanje/url_46_337_6.txt b/eesanje/url_46_337_6.txt new file mode 100644 index 0000000000000000000000000000000000000000..2ef8f516bdb3053600bcc0edb2861d5dbe9380eb --- /dev/null +++ b/eesanje/url_46_337_6.txt @@ -0,0 +1,12 @@ +ಶೈಕ್ಷಣಿಕ-ಸಾಮಾಜಿಕ ವರದಿ ಬಹಿರಂಗಕ್ಕೆ ಹರಿಪ್ರಸಾದ್ ಒತ್ತಾಯ +ನವದೆಹಲಿ, ಅ.3- ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯಸರ್ಕಾರ ಮೊದಲು ಬಹಿರಂಗಪಡಿಸಬೇಕು. ಅದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನಡೆಸಿರುವುದು ಸರ್ಕಾರದಿಂದ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ತಾವು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡುವುದಿಲ್ಲ. ನೇರವಾಗಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು. +ಕಾಂಗ್ರೆಸ್‍ನ ವರಿಷ್ಠ ನಾಯಕ ರಾಹುಲ್‍ಗಾಂಧಿ ದೇಶ ಮತ್ತು ರಾಜ್ಯಗಳಲ್ಲಿ ಜಾತಿ ಜನಗಣತಿ ಆಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆ ನಡೆಸಿದೆ. ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವೋ, ಇಲ್ಲವೋ ಅದು ಬೇರೆ ವಿಚಾರ. ಆದರೆ ಮೊದಲು ಅದು ಬಹಿರಂಗಗೊಳಿಸಬೇಕಿದೆ ಎಂದು ಹೇಳಿದರು. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ಜಾತಿ ಜನಗಣತಿ ವರದಿ ಬಿಡುಗಡೆಯಾಗದೇ ಇರುವುದಕ್ಕೆ ಹಲವು ಕಾರಣಗಳಿರಬಹುದು. ಬಿಡುಗಡೆಯಾದ ತಕ್ಷಣವೇ ಅನುಷ್ಠಾನಕ್ಕೆ ಬರುತ್ತದೆ ಎಂದೇನಿಲ್ಲ. ಮೊದಲು ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ಅಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಹೇಳಿದರು. +ರಾಜ್ಯದಲ್ಲಿ ಮೊದಲಿನಿಂದಲೂ ಆವನೂರು ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಸೇರಿದಂತೆ ಹಲವು ವರದಿಗಳಿವೆ. ಬಿಜೆಪಿ ಸರ್ಕಾರದಲ್ಲೂ ಒಂದು ವರದಿಯಿದೆ. ಎಲ್ಲವನ್ನೂ ಸೇರಿಸಿ ವರದಿಯನ್ನು ಬಹಿರಂಗ ಪಡಿಸಲಿ. ಕೆಲವು ಸಮುದಾಯಗಳು ಹೆಚ್ಚಿವೆ, ಕೆಲವು ಕಡಿಮೆ ಇವೆ ಎಂಬ ಚರ್ಚೆಗಳಿವೆ. ಅದನ್ನು ನಂತರ ಸರಿಪಡಿಸಬಹುದು. ವಿಧಾನಸಭೆ, ವಿಧಾನಪರಿಷತ್‍ನಲ್ಲಿ ಚರ್ಚೆಯಾದ ಬಳಿಕವೇ ಇದು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು. +ಈ ಹಿಂದೆ ಸಮೀಕ್ಷೆ ನಡೆಸಿರುವುದು ರಾಜ್ಯಸರ್ಕಾರ. ಅದರ ಕುರಿತು ಏನೆಲ್ಲಾ ಚರ್ಚೆ ನಡೆದಿದೆ. ಸಂಪುಟದಲ್ಲಿ ಏನೆಲ್ಲಾ ವಿಶ್ಲೇಷಣೆಗಳಾಗಿವೆ ಎಂಬ ಮಾಹಿತಿ ತಮಗಿಲ್ಲ. ಈ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಬೇಕು. ಆದರೆ ಪಕ್ಷದ ಸದಸ್ಯನಾಗಿ ಈ ಬಗ್ಗೆ ಪ್ರಸ್ತಾಪಿಸುವ ಅಧಿಕಾರ ತಮಗಿದೆ ಎಂದು ತಿಳಿಸಿದರು. +ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..? +ಲಿಂಗಾಯತ ಸಮುದಾಯಕ್ಕೆ ಸರಿಯಾದ ಆದ್ಯತೆ ಸಿಗುತ್ತಿಲ್ಲ ಎಂದು ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಹಲವು ನಾಯಕರುಗಳು ಚರ್ಚೆ ಮಾಡಿದ್ದಾರೆ. ಆದರೆ ಈ ಬಗ್ಗೆ ತಾವು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಟೀಕೆ ಮಾಡಿದವರೇ ಸ್ಪಷ್ಟನೆ ನೀಡಬೇಕು ಎಂದು ಹೇಳಿದರು. +ಜಾತಿ ಪ್ರಾತಿನಿಧ್ಯಗಳ ಬಗ್ಗೆ ಈಗಾಗಲೇ ತಾವು ತಮ್ಮ ಅನಿಸಿಕೆಯನ್ನು ಹೇಳಿಯಾಗಿದೆ. ತಮ್ಮ ಹೇಳಿಕೆಗೆ ಕಾಂಗ್ರೆಸ್ ನೋಟಿಸ್ ನೀಡಿದೆ. ಶ್ಯಾಮನೂರು ಶಿವಶಂಕರಪ್ಪ ಅವರಿಗೆ ನೋಟಿಸ್ ನೀಡಿಲ್ಲ ಎಂಬ ಚರ್ಚೆಯನ್ನು ಮಾಡಲು ನಾವು ಬಯಸುವುದಿಲ್ಲ. ನನ್ನ ಮೇಲೆ ಕೆಲವರಿಗೆ ಪ್ರೀತಿ ಜಾಸ್ತಿ. ಹೀಗಾಗಿ ನೋಟಿಸ್ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. +ದೆಹಲಿ ಭೇಟಿಗೆ ವಿಶೇಷ ಅರ್ಥ ಇಲ್ಲ. 30 ವರ್ಷ ಇಲ್ಲಿ ವಾಸ ಮಾಡಿದ್ದೆ. ಬಹಳಷ್ಟು ಸ್ನೇಹಿತರು ನನಗೆ ದೆಹಲಿಯಲ್ಲಿದ್ದಾರೆ. ಅವರನ್ನು ಭೇಟಿ ಮಾಡಲು ಆಗಮಿಸಿದ್ದೇನೆ. ಹೈಕಮಾಂಡ್ ನಾಯಕರು ಈಗ ರಾಜ್ಯದವರೇ ಆಗಿದ್ದಾರೆ. ಹೀಗಾಗಿ ವರಿಷ್ಠರನ್ನು ಭೇಟಿ ಮಾಡುವ ಬಗ್ಗೆ ವಿಶೇಷ ಏನಿಲ್ಲ ಎಂದರು. \ No newline at end of file diff --git a/eesanje/url_46_337_7.txt b/eesanje/url_46_337_7.txt new file mode 100644 index 0000000000000000000000000000000000000000..8085f1235a8b77932e04fbd6e23c7cdedb544f64 --- /dev/null +++ b/eesanje/url_46_337_7.txt @@ -0,0 +1,14 @@ +ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಿಡುಗಡೆಗೆ ತೀವ್ರಗೊಂಡ ಒತ್ತಡ +ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಲಿದೆ ಎಂದೇ ಹೇಳಲಾಗುತ್ತಿರುವ ಜಾತಿ ಜನಗಣತಿ ವರದಿ ಬಿಡುಗಡೆಗೆ ಒತ್ತಡ ಕೇಳಿಬರುತ್ತಿದೆ. ಜಾತಿ ಜನಗಣತಿ ವರದಿಗೆ ಆದಷ್ಟು ಬೇಗ ಸಮ್ಮತಿ ಸೂಚಿಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಕೂಡಾ ಈ ಪ್ರಕ್ರಿಯೆ ಕೊಂಚ ತಡವಾಗುವ ಸಾಧ್ಯತೆಗಳಿವೆ. ಕಾಂತರಾಜ್ ಆಯೋಗ ಸಿದ್ದಪಡಿಸಿದ್ದ ಸಾಮಾಜಿಕ ಹಾಗೂ ಆರ್ಥಿಕ ಜಾತಿ ಸರ್ವೆ ವರದಿ ಸಿದ್ದಗೊಂಡು ಈಗಾಗಲೇ 5 ವರ್ಷದ ಮೇಲಾಗಿದೆ. ಸದ್ಯ ಈ ವರದಿ ಇನ್ನೂ ಬಹಿರಂಗವಾಗದೆ ಕಡತಗಳು ಧೂಳು ತಿನ್ನುತ್ತಿವೆ. +ಪ್ರಬಲ ಸಮುದಾಯಗಳು ಈ ವರದಿ ಬಿಡುಗಡೆಗೆ ತೀವ್ರವಾಗಿ ವಿರೋಧವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿರುವುದರಿಂದ ಜೇನುಗೂಡಿನಂತಿರುವ ಜಾತಿ ಜನಗಣತಿ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈ ಹಾಕಲಿದ್ದಾರೆಯೇ ಎಂಬ ಯಕ್ಷಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಅತ್ತ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಜಾತಿ ಜನಗಣತಿ ವರದಿಯನ್ನು ಬಿಡುಗಡೆ ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿದ್ದ ವರದಿ ಬಿಡುಗಡೆಗೆ ಸಿದ್ಧವಾಗಿ ಹಲವಾರು ವರ್ಷಗಳೇ ಆಗಿದ್ದರೂ ರಾಜಕೀಯ ಕಾರಣಗಳಿಗಾಗಿ ನೆನೆಗುದಿಗೆ ಬಿದ್ದಿದೆ. +ವಾಸ್ತವವಾಗಿ ಈ ವರದಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 2013 ರಲ್ಲಿ ವಿಶೇಷ ಆಸಕ್ತಿ ವಹಿಸಿ ಅಂದಾಜು 162 ಕೋಟಿ ರೂ.ಗಳ ವೆಚ್ಚದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆಯನ್ನು ನಡೆಸಿದ್ದರು. +2016 ರ ವೇಳೆಗೆ ಬಹುತೇಕ ವರದಿ ಪೂರ್ಣಗೊಂಡು ಅಂದು ಸರ್ಕಾರ ಜನರ ನಾಡಿಮಿಡಿತವನ್ನು ಅರಿಯಲು ವರದಿಯನ್ನು ಸೋರಿಕೆ ಮಾಡಿತ್ತು. ಅದೇ ಸಂದರ್ಭದಲ್ಲಿ ವೀರಶೈವ ಲಿಂಗಾಯಿತ ಪ್ರತ್ಯೇಕ ಧರ್ಮ ಮುನ್ನಲೆಗೆ ಬಂದಿತ್ತು.ಇಂತಹ ಸಂದರ್ಭದಲ್ಲಿ ವರದಿಯನ್ನು ಬಿಡುಗಡೆ ಮಾಡಿದರೆ ಸರ್ಕಾರಕ್ಕೆ ತಿರುಗುಬಾಣವಾಗಬಹುದು ಎಂಬ ಆತಂಕದಿಂದ ಸಿದ್ದರಾಮಯ್ಯನವರು ದುಸ್ಸಾಹಸಕ್ಕೆ ಕೈ ಹಾಕಿರಲಿಲ್ಲ. ತದನಂತರ ಬಂದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಕೂಡ ವರದಿಯನ್ನು ಕಣ್ಣೆತ್ತಿಯೂ ನೋಡದೆ ಅಕಾರ ಮುಗಿಸಿದ್ದು ಇತಿಹಾಸ. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ವಿಧಾನಸಭೆ ಚುನಾವಣೆ ವೇಳೆ ಸಿದ್ದರಾಮಯ್ಯನವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ಕಾಂಗ್ರೆಸ್ ಅಭೂತಪೂರ್ವ ಬಹುಮತವನ್ನು ಪಡೆದು ಅಧಿಕಾರಕ್ಕೆ ಬಂದಿದ್ದೂ ಆಗಿದೆ, ಸಿದ್ದರಾಮಯ್ಯನವರು ಸಿಎಂ ಆಗಿದ್ದೂ ಆಗಿದೆ. ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿರುವ ಈ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿ ತದನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂಗೀಕರಿಸುವುದಷ್ಟೇ ಬಾಕಿ ಉಳಿದಿದೆ. +ತಲೆಕೆಳಗಾದ ಲೆಕ್ಕಾಚಾರ: ಇದುವರೆಗೂ ರಾಜ್ಯದಲ್ಲಿ ಲಿಂಗಾಯಿತರು, ತದನಂತರ ಒಕ್ಕಲಿಗರು, ಕುರುಬರು, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತರು, ಪರಿಶಿಷ್ಟ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂದು ಭಾವಿಸಲಾಗಿತ್ತು. +ಆದರೆ ಸರ್ಕಾರ ನಡೆಸಿರುವ ಅಧಿಕೃತ ವರದಿ ಪ್ರಕಾರ, ರಾಜ್ಯದಲ್ಲಿ ದಲಿತರೇ ಹೆಚ್ಚಾಗಿದ್ದು, ಕುರುಬ ಜನಾಂಗವೇ ಅತಿ ಹಿಂದುಳಿದ ಸಮುದಾಯವಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ಮತ್ತು ಜಾತಿ ಮರುವಿಂಗಡಣೆ ವರದಿ ಸಿದ್ಧವಾಗಿದ್ದು. ಇನ್ನೇನು ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. +ಈ ವರದಿಗೆ ಸರ್ಕಾರ ಸಮ್ಮತಿ ಸೂಚಿಸದೆ ಇರಲು ಹಲವಾರು ಕಾರಣಗಳಿವೆ. ವಿಳಂಬ ಧೋರಣೆ ಅನುಸರಿಸಲು ಕಾನೂನಾತ್ಮಕ ಹಾಗೂ ರಾಜಕೀಯ ಕಾರಣಗಳೂ ಇವೆ. 2024ರ ಲೋಕಸಭಾ ಚುನಾವಣೆವರೆಗೂ ಈ ವರದಿಗೆ ಸಮ್ಮತಿ ಸೂಚಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಡೆ ಹಿಡಿಯುವ ಸಾಧ್ಯತೆಗಳಿವೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಲಿದೆ. ಮುಂದಿನ ವರ್ಷ ಏಪ್ರಿಲ್ – ಮೇ ವೇಳೆಗೆ ಚುನಾಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ವರದಿ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. +ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ +ಕಾಂತರಾಜ್ ಸಮಿತಿಯು ಜಾತ್ಯಾಧಾರಿತ ಜನ ಗಣತಿ ರೂಪಿಸುವಾಗ ತಪ್ಪು ಲೆಕ್ಕ ಹಾಕಿದೆ ಎನ್ನುವ ಕೆಲವು ಸಮುದಾಯಗಳ ವಾದವಾಗಿತ್ತು. ಈ ಜಾತಿ ಗಣತಿ ವರದಿ ಮಾಧ್ಯಮಗಳಿಗೆ ಸೋರಿಕೆ ಕೂಡಾ ಆಗಿತ್ತು. ಈ ವರದಿಗಳ ಪ್ರಕಾರ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಲಿಂಗಾಯತ ಸಮುದಾಯ ಕೇವಲ ಶೇ. 14 ಹಾಗೂ ಒಕ್ಕಲಿಗ ಸಮುದಾಯ ಕೇವಲ ಶೇ. 11ರಷ್ಟು ಪ್ರತಿನಿಸುತ್ತದೆ ಎಂಬ ಮಾಹಿತಿ ಇದೆ ಎನ್ನಲಾಗಿದೆ. +ಇದೇ ವಿಚಾರವಾಗಿ ಕೆಲವು ಸಮುದಾಯಗಳ ನಾಯಕರು ಹೈಕೋರ್ಟ್ ಮೊರೆ ಹೋಗಿದ್ದರು. ಜಾತಿ ಗಣತಿ ನಡೆಸೋದು ಕೇಂದ್ರ ಸರ್ಕಾರದ ವಿಶೇಷಾಕಾರ. ಈ ಅಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದವು. ಇನ್ನೊಂದೆಡೆ ಒಬಿಸಿ ಸಮುದಾಯಗಳ ಕಾರ್ಯಕರ್ತರೂ ನ್ಯಾಯಾಲಯದ ಮೊರೆ ಹೋಗಿದ್ದರು. ಸರ್ಕಾರವು ವರದಿಯನ್ನು ಒಪ್ಪಿ ಅದರ ಶಿಫಾರಸ್ಸುಗಳನ್ನು ಜಾರಿ ಮಾಡಬೇಕೆಂದು ಆಗ್ರಹಿಸಿದ್ದರು. ಸದ್ಯ ಎರಡೂ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ಬಾಕಿ ಇದೆ. +ಜಾತಿವಾರು ಜನಸಂಖ್ಯೆ \ No newline at end of file diff --git a/eesanje/url_46_337_8.txt b/eesanje/url_46_337_8.txt new file mode 100644 index 0000000000000000000000000000000000000000..245ade7652a9a11acb538ea86351c435a9bc5506 --- /dev/null +++ b/eesanje/url_46_337_8.txt @@ -0,0 +1,5 @@ +ಜಾತಿಜನಗಣತಿ ಬಿಡುಗಡೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ +ಬೆಳಗಾವಿ, ಅ.3- ಜಾತಿಜನಗಣತಿ ವರದಿ ನಮ್ಮಲ್ಲಿ ಸಿದ್ಧವಾಗಿದ್ದು, ಅದು ಶೀಘ್ರವಾಗಿ ಬಿಡುಗಡೆಯಾಗಿ ಜಾರಿಗೆ ಬರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಆಡಳಿತದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 162 ಕೋಟಿ ರೂ.ಗಳಿಗೂ ಹೆಚ್ಚು ಅನುದಾನ ಖರ್ಚು ಮಾಡಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿತ್ತು. ಅದು ಸಿದ್ಧವಾಗಿದೆ. ಅದನ್ನು ಅನುಷ್ಠಾನಕ್ಕೆ ತರಬೇಕು ಎಂದು ನಮ್ಮಲ್ಲೂ ವ್ಯಾಪಕ ಒತ್ತಾಯಗಳಿವೆ ಎಂದರು. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ರಾಜ್ಯಸರ್ಕಾರ ಕೂಡ ಈ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿದೆ. ವರದಿ ಜಾರಿಯ ನಂತರ ಜನಸಂಖ್ಯೆಗನುಗುಣವಾಗಿ ಸಮುದಾಯಗಳಿಗೆ ಆದ್ಯತೆ ನೀಡುವುದು, ಬಜೆಟ್‍ನಲ್ಲಿ ಅನುದಾನ ಮೀಸಲಿಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಸಹಾಯವಾಗುತ್ತದೆ. ಹೀಗಾಗಿ ವರದಿ ಅನುಷ್ಠಾನದಿಂದ ಲಾಭವಾಗಲಿದೆ ಎಂದು ಹೇಳಿದರು. +ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರ ಜಾತಿ ಆಧಾರಿತ ಸಮೀಕ್ಷಾ ವರದಿಯನ್ನು ಅನುಷ್ಠಾನಕ್ಕೆ ತಂದಿರುವುದು ಉತ್ತಮ ಬೆಳವಣಿಗೆ ಎಂದರು. \ No newline at end of file diff --git a/eesanje/url_46_337_9.txt b/eesanje/url_46_337_9.txt new file mode 100644 index 0000000000000000000000000000000000000000..95d9a9a75bf8df7c0edfdae8b1ea6b392bff3d6a --- /dev/null +++ b/eesanje/url_46_337_9.txt @@ -0,0 +1,8 @@ +ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ : ಸಿಎಂ ಸಿದ್ದರಾಮಯ್ಯ +ಬೆಳಗಾವಿ, ಅ.3- ಪ್ರತಿಪಕ್ಷ ಬಿಜೆಪಿಯವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ. ಶಿವಮೊಗ್ಗದಲ್ಲಿ ಕಲ್ಲು ತೂರಾಟವಾಗಿರುವ ಪ್ರಕರಣ ವರದಿಯಾಗಿದ್ದು, ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರದಲ್ಲಿ ಕೋಮುಗಲಭೆಗಳು ನಡೆಯಲು ಅವಕಾಶವಿಲ್ಲ. ಯಾವುದೇ ಗೊಂದಲವಾದರೂ ತಕ್ಷಣ ಹತ್ತಿಕ್ಕುತ್ತೇವೆ ಎಂದು ಹೇಳಿದರು. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೆ ಕೆಲಸ ಇಲ್ಲ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಯಾಗಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು. +ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ +ಕೋಲಾರ ಸೇರಿದಂತೆ ವಿವಿಧೆಡೆ ಬಿಜೆಪಿಯ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶಗಳಿವೆ. ಆದರೆ ಅದಕ್ಕೆ ಸಕಾರಣಗಳಿರಬೇಕು ಎಂದು ಹೇಳಿದರು. ತಮ್ಮ ಸರ್ಕಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಿಲ್ಲ, ಅನ್ಯಾಯ ಆಗಲು ಬಿಡುವುದೂ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ಜೊತೆ ತಾವು ಚರ್ಚೆ ಮಾಡುತ್ತೇವೆ ಎಂದರು. +ರಾಜ್ಯದಲ್ಲಿ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಒಕ್ಕಲಿಗರ ಹೋರಾಟ ಸಮಿತಿಯವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಅದನ್ನು ಆಧರಿಸಿ ಡಿ.ಕೆ.ಶಿವಕುಮಾರ್ ತಮಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ತಾವು ಅದನ್ನು ನೋಡಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. +ಕುರುಬ ಸಮುದಾಯದಿಂದ ನಾಯಕರಾದ ರೇವಣ್ಣ, ವಿಶ್ವನಾಥ್ ಸೇರಿದಂತೆ ಅನೇಕರು ಇಂದು ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಿದ್ದಾರೆ. ತಮ್ಮನ್ನೂ ಹಾಗೂ ಹರಿಯಾಣದ ರಾಜ್ಯಪಾಲರನ್ನೂ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಈ ಸಮಾವೇಶಕ್ಕೆ ಪ್ರತಿಯಾಗಿ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ವಾದ ಸರಿಯಲ್ಲ ಎಂದರು. ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು. +ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ diff --git a/eesanje/url_46_338_1.txt b/eesanje/url_46_338_1.txt new file mode 100644 index 0000000000000000000000000000000000000000..92850ce12b07979da820b2a30acb1fdd557b11ce --- /dev/null +++ b/eesanje/url_46_338_1.txt @@ -0,0 +1,15 @@ +ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಡಿಕೆಶಿ ಗುಡುಗು +ಬೆಂಗಳೂರು, ಅ.2- ನಾಯಕ ರಾಗಲು ತಮ್ಮ ವೈಯಕ್ತಿಕ ಲಾಭಗಳಿಗೆ ಎಲ್ಲಿ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಅವರನ್ನು ನಂಬಿದ್ದ ಕಾರ್ಯಕರ್ತರು, ಮುಖಂಡರ ಗತಿ ಏನು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ ಹಾಗೂ ಮತ್ತಿತರರು ಕಾಂಗ್ರೆಸ್ ಸೇರ್ಪಡೆ ವೇಳೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. +5 ವರ್ಷದಲ್ಲಿ ರಾಜ್ಯದ ಸಮಸ್ಯೆಯನ್ನು ಬಗೆಹರಿಸದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ದಂಡನಾಯಕರು ಈ ರೀತಿ ಹೇಳಿದರೆ ಪಕ್ಷ, ಅದರ ಮುಖಂಡರು, ಕಾರ್ಯಕರ್ತರ ಗತಿ ಏನಾಗಬೇಕು, ಯಾರನ್ನು ನಂಬಿಕೊಂಡು ರಾಜಕಾರಣ ಮಾಡಬೇಕು ಎಂದು ಪ್ರಶ್ನಿಸಿದರು. +ತಮ್ಮ ಅನುಕೂಲಕ್ಕಾಗಿ ಒಂದೇ ದಿನದಲ್ಲಿ ಯಾರ ಜೊತೆ ಬೇಕಾದರೂ ಮೈತ್ರಿ ಮಾಡಿಕೊಳ್ಳಬಹುದು. ಸಿದ್ಧಾಂತ ನಂಬಿಕೊಂಡು ರಾಜಕಾರಣ ಮಾಡುವವರು ಏನಾಗಬೇಕು, ಕಾಂಗ್ರೆಸ್ ಪಕ್ಷದಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ರಾಜಿನಾಮೆ ಕೊಟ್ಟು ಜೆಡಿಎಸ್ ಸೇರಿದ್ದರು. ನೀವು ಈ ಮೊದಲು ಅವರಿಗೆ ಕೊಟ್ಟ ಮಾತು ಏನಾಯಿತು. ಮೈತ್ರಿ ವಿಷಯ ಇಬ್ರಾಹಿಂಗೆ ಮಾಹಿತಿ ಇಲ್ಲವಂತೆ ಎಂದು ಲೇವಡಿ ಮಾಡಿದರು. +ಇಬ್ರಾಹಿಂ ಸೇರ್ಪಡೆಯಾಗುವಾಗ ಮಿಸ್ಟರ್ ಶಿವಕುಮಾರ್ ಎಂದು ನನ್ನನ್ನು ಹಂಗಿಸಿದರು. ನಾನು ಪಕ್ಷದ ಅಧ್ಯಕ್ಷನಾಗಿದ್ದಾಗ ನಮ್ಮ ಪಕ್ಷದ ನಾಯಕನನ್ನು ಸೇರ್ಪಡೆ ಮಾಡಿಸಿಕೊಂಡಿದ್ದು ರಾಜಕೀಯ ಚದುರಂಗದಾಟವಲ್ಲವೆ, ಹಾವು- ಏಣಿ ಆಟ ಅಲ್ಲವೇ, ಫುಟ್ಬಾಲ್ ಆಟ ಅಲ್ಲವೇ, ಈಗ ಜೆಡಿಎಸ್ ನಲ್ಲಿರುವವರು ಸಾಗರೋಪಾದಿ ಯಲ್ಲಿ ಕಾಂಗ್ರೆಸ್‍ನತ್ತ ಬರುತ್ತಿದ್ದಾರೆ. ನಾವು ಯಾರನ್ನೂ ಕರೆಯಬೇಕಿಲ್ಲ. ಬರುವವರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದು ಹೇಳಿದರು. +ಮುಂದಿನ ದಿನಗಳಲ್ಲಿ ಬೀದರ್‍ನಿಂದ ಚಾಮರಾಜನಗರದವರೆಗೂ ಎಲ್ಲಾ ಜಿಲ್ಲೆಗಳಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ನಮ್ಮ ಪಕ್ಷ ಸಿದ್ಧಾಂತದ ಮೇಲೆ ನಿಂತಿದೆಯೇ ಹೊರತು ವ್ಯಕ್ತಿಯ ಮೇಲೆ ನಿಂತಿಲ್ಲ. ನಾನಿಲ್ಲದೇ ಹೋದರೂ ಪಕ್ಷ ನಿಮ್ಮನ್ನು ರಕ್ಷಣೆ ಮಾಡಲಿದೆ ಎಂದು ತಿಳಿಸಿದರು. +ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ +ಮುಂದಿನ ದಿನಗಳಲ್ಲಿ ಚನ್ನಪಟ್ಟಣದಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಇನ್ನಷ್ಟು ಕಾರ್ಯಕರ್ತರು ಹಾಗೂ ಮುಖಂಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುವುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಿಸ್ಟರ್ ಶಿವಕುಮಾರ್ ನಿಮ್ಮ ಆಟ ನಡೆಯುವುದಿಲ್ಲ ಎಂದು ನನಗೆ ಎಚ್ಚರಿಕೆ ನೀಡಿದ್ದಾರೆ. ಹಿರಿಯರ ಮಾತುಗಳನ್ನು ಆಶೀರ್ವಾದ ಎಂದು ಭಾವಿಸುತ್ತೇನೆ. ಆದರೆ ದೇವೇಗೌಡರ ಪುತ್ರರು ಜನತಾದಳವನ್ನು ವಿಸರ್ಜನೆ ಮಾಡುತ್ತೇನೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಾದರೆ ಕಾರ್ಯಕರ್ತರು ಎಲ್ಲಿ ಹೋಗಬೇಕು, ಬಿಜೆಪಿ ಜೊತೆ ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಈ ಮೊದಲು ಹೇಳಿದ್ದವರು ಈಗ ಮಾಡಿದ್ದೇನು, ರಾಜ್ಯದ ಜನರಿಗೆ ನಿಮ್ಮಿಂದ ಯಾವ ಸಂದೇಶ ರವಾನೆಯಾಗಿದೆ ಎಂದು ಪ್ರಶ್ನಿಸಿದರು. +ಪ್ರತಿಯೊಂದು ಮನೆಯಿಂದಲೂ ಒಬ್ಬೊಬ್ಬ ಕಾರ್ಯಕರ್ತರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ. ಆ ಕೆಲಸವನ್ನು ನಮ್ರತೆಯಿಂದ ಮಾಡುತ್ತೇನೆ. ಕುಮಾರಸ್ವಾಮಿಯವರನ್ನು ಬೆಳೆಸಿದ ಜನರೇ ಇಂದು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಎಷ್ಟೇ ಬೆದರಿಸಿ, ಹೆದರಿಸಿದರೂ, ಬುಲೆಟ್‍ನ ಮಾತುಗಳನ್ನಾಡಿದರು. ಅದನ್ನು ಮೀರಿ ಕಾಂಗ್ರೆಸ್ ಸೇರಿದ್ದಾರೆ ಎಂದು ಹೇಳಿದರು. +ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್ ನಾಯಕರು ಕ್ಷೇತ್ರಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಅನ್ನು ಸಂಘಟಿಸಬೇಕು ಎಂದು ಸಲಹೆ ನೀಡಿದರು. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಜೆಪಿ, ಜೆಡಿಎಸ್ ಪಕ್ಷಗಳ ಸಿದ್ಧಾಂತಗಳೇ ಬೇರೆ. ಅದನ್ನು ಮರೆತು ಮೈತ್ರಿ ಮಾಡಿಕೊಂಡಿದ್ದಾರೆ. ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಎರಡು ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಪಾಠ ಕಲಿಯಲಿವೆ ಎಂದು ಎಚ್ಚರಿಸಿದರು. +ಸಚಿವ ಜಮೀರ್ ಅಹಮ್ಮದ್ ಖಾನ್, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಯವರು 60-70 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿಲ್ಲ. ಕೇವಲ 12 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಗೆಲುವಿಗೆ ಮುಸಲ್ಮಾನರ ಮತಗಳೇ ಕಾರಣ. ಈಗ ಮುಸಲ್ಮಾನರು ನನಗೆ ಅನಿವಾರ್ಯವಾಗಿ ಮತ ನೀಡಿದ್ದಾರೆ ಎಂಬ ಹೇಳಿಕೆಗಳು ತೀವ್ರ ನೋವುಂಟು ಮಾಡಿವೆ ಎಂದರು. +ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್ +ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ರಾಜ್ಯಾದ್ಯಂತ 50 ರಿಂದ 70 ಜನ ಪಾಲಿಕೆ ಸದಸ್ಯರು, ಮಾಜಿ ಶಾಸಕರು, ಪ್ರಮುಖ ನಾಯಕರು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ದೇವೇಗೌಡರು ಜಾತ್ಯತೀತರು ಎಂದು ಈಗಲೂ ನಾನು ನಂಬುತ್ತೇನೆ. ಆದರೆ ಕುಮಾರಸ್ವಾಮಿ ಪ್ಯಾಂಟ್ ಒಳಗೆ ಖಾಕಿ ಚಡ್ಡಿ ಹಾಕಿಕೊಂಡು ರಾಜಕಾರಣ ಮಾಡಿದವರು. ಈಗ ತಮ್ಮ ಅಸಲಿ ಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಹೇಳಿದರು. +ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಅಶ್ವತ್ಥ ನಾರಾಯಣ ಮಾತನಾಡಿ, ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದಾಗಿ ಬೇಸರವಾಗಿ ಹಾಗೂ ಸಂಸದ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರು. +ಅಲ್ಪಸಂಖ್ಯಾತ ಮುಖಂಡ ಜಬಿವುಲ್ಲಾಖಾನ್ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರನ್ನು ಸೋಲಿಸಬೇಕೆಂದು ಕಾಂಗ್ರೆಸ್‍ನವರ ಕೈ, ಕಾಲನ್ನು ಹಿಡಿದು ಕುಮಾರಸ್ವಾಮಿಯವರಿಗೆ ಮತ ಹಾಕಿಸಿದ್ದೆವು. ಈಗ ಅಲ್ಪಸಂಖ್ಯಾತರ ಕುರಿತು ಹಗುರವಾಗಿ ಮಾತನಾಡುತ್ತಿರುವುದನ್ನು ಕೇಳಿದರೆ ಮನಸ್ಸಿಗೆ ನೋವಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_338_10.txt b/eesanje/url_46_338_10.txt new file mode 100644 index 0000000000000000000000000000000000000000..64f0fd407b23a65084e85c8456e875df7efc0c24 --- /dev/null +++ b/eesanje/url_46_338_10.txt @@ -0,0 +1,6 @@ +ಕಾವೇರಿ ವಿವಾದ ಪರಿಹಾರಕ್ಕೆ ಸಂಕಷ್ಟ ಸೂತ್ರ ಅಗತ್ಯ : ಎಸ್.ಎಂ.ಕೃಷ್ಣ +ಬೆಂಗಳೂರು,ಅ.1- ಕಾವೇರಿ ನದಿನೀರು ಹಂಚಿಕೆ ವಿಚಾರದಲ್ಲಿ ಸಂಕಷ್ಟ ಸೂತ್ರವನ್ನು ರೂಪಿಸುವುದು ಅಗತ್ಯ ಎಂದು ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸೂತ್ರ ರೂಪಿಸುವ ಮೂಲಕ ಕಾವೇರಿ ವಿವಾದಕ್ಕೆ ತೆರೆ ಎಳೆಯಬೇಕು. ಕಾವೇರಿ ನದಿಪಾತ್ರದ ನಾಲ್ಕೂ ರಾಜ್ಯಗಳು ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸಿ ಆನಂತರ ಸಂಕಷ್ಟ ಸೂತ್ರದ ಚೌಕಟ್ಟಿನಲ್ಲಿ ನದಿ ನೀರು ನಿರ್ವಹಣೆ ಬಗ್ಗೆ ಸೂಕ್ತ ತೀರ್ಮಾನವನ್ನು ಮಾಡಬೇಕು ಎಂದು ಸಲಹೆ ಮಾಡಿದರು. +ತಾವು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಕಾವೇರಿ ವಿಚಾರದಲ್ಲಿ ಇಂಥದ್ದೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಂಧಾನ ಮಾಡಲು ಯತ್ನ ಮಾಡಿದರೂ ಸಫಲವಾಗಲಿಲ್ಲ. ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಬೇಕಾಯಿತು ಎಂದು ಹೇಳಿದರು. ಆಗ ಸುಪ್ರೀಂಕೋರ್ಟ್‍ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವೆಂಕಟಾಚಲ ಅವರಂತಹ ಕಾನೂನು ಪರಿಣಿತರ ಸಲಹೆ ಪಡೆದು ಮುಂದಿನ ಹೆಜ್ಜೆ ಇಡಲಾಗುತ್ತಿತ್ತು. ಅದೇ ರೀತಿ ಈ ಸರ್ಕಾರವು ಮುಂದುವರೆಯಬೇಕು ಎಂದು ಅವರು ಸಲಹೆ ನೀಡಿದರು. +ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ +ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಕಡಿಮೆಯಾದಾಗ ಕಾವೇರಿ ವಿಚಾರ ಸದ್ದು ಮಾಡುತ್ತದೆ. ಮಳೆಗಾಲ ಕ್ಷೀಣಿಸಿದಾಗ ನೀರಿಗಾಗಿ ಒತ್ತಡ ಉಂಟಾಗಲಿದೆ. ತಮಿಳುನಾಡಿನ ಹೇಳಿಕೆಗಳು ಬಹಳ ಮಟ್ಟಿಗೆ ವಸ್ತುಸ್ಥಿತಿಗೆ ನಾಚಿಸುವಂತಿವೆ. ಕಾವೇರಿ ವಿಚಾರದಲ್ಲಿ ಕರ್ನಾಟಕ ತೆಗೆದುಕೊಂಡ ನಿಲುವನ್ನು ಸಮರ್ಥಿಸುವುದಾಗಿ ಹೇಳಿದರು. +ರಾಜಕಾರಣ ಮಾತನಾಡು ವುದಿಲ್ಲ:ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಸ್.ಎಂ.ಕೃಷ್ಣಾ ಅವರು ನಾನೀಗ ರಾಜಕಾರಣದಲ್ಲಿ ಇಲ್ಲ. ಹೀಗಾಗಿ ಮೈತ್ರಿ ವಿಚಾರದಲ್ಲಿ ನನ್ನ ನಿಲುವು ಅಪ್ರಸ್ತುತ ಎಂದರು. \ No newline at end of file diff --git a/eesanje/url_46_338_11.txt b/eesanje/url_46_338_11.txt new file mode 100644 index 0000000000000000000000000000000000000000..f713c025e87d17ff4f825ed1311e556907b02266 --- /dev/null +++ b/eesanje/url_46_338_11.txt @@ -0,0 +1,6 @@ +ಕನ್ನಡದ ಬಗ್ಗೆ ಅವಹೇಳನ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳ ಯುವಕನ ಬಂಧನ +ಬೆಂಗಳೂರು, ಅ.1- ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಕರ್ನಾಟಕ, ಬೆಂಗಳೂರು ಜನರು ಹಾಗೂ ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಪಶ್ಚಿಮ ಬಂಗಾಳದ ಯುವಕನನ್ನು ಕೊಡಿಗೆ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‍ಟಿ ನಗರದಲ್ಲಿ ವಾಸವಾಗಿದ್ದ ನಿಲಯ್ ಮಂಡಲ್ (23) ಬಂಧಿತ ಯುವಕ. ಈತ ಕೊಡಿಗೆಹಳ್ಳಿಯಲ್ಲಿರುವ ಕಂಪೆನಿಯೊಂದರ ಉದ್ಯೋಗಿ. +ನಗರದಲ್ಲಿ ವಾಸವಾಗಿದ್ದುಕೊಂಡು ಈ ಯುವಕ ಕರ್ನಾಟಕದ ಬಗ್ಗೆ ಕೆಟ್ಟದಾಗಿ ಅವಹೇಳನ ಮಾಡಿದ್ದಲ್ಲದೆ, ಉತ್ತರ ಭಾರತದವರು ಬೆಂಗಳೂರಿನಿಂದ ಹೊರಟು ಹೋದರೆ ಬೆಂಗಳೂರಿಗರು ಕಾಡು ಜನರಿಗೆ ಸಮವಾಗುತ್ತಾರೆ ಎಂದು ಅತಿರೇಕವಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾನೆ. +ರಾಜ್ಯ, ಜನ, ಕನ್ನಡ ಭಾಷೆ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಬರಹದಿಂದ ರಾಜ್ಯದ ಜನರ ನಡುವೆ ಗೊಂದಲ ಸೃಷ್ಟಿಸಿ ಭಾಷೆ ಮತ್ತು ವಾಸ ಮಾಡುವ ಸ್ಥಳ, ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನುಂಟು ಮಾಡುವ ಮತ್ತು ಸೌಹಾರ್ದತೆಗೆ ಬಾಧಕವಾಗುವ ರೀತಿ ಸಾಮಾಜಿಕ ಜಾಲತಾಣ ಇನ್‍ಸ್ಟ್ರಾಗ್ರಾಮ್‍ನಲ್ಲಿ ಸಂದೇಶವನ್ನು ಫೋಸ್ಟ್ ಮಾಡಿದ್ದನು. +ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ +ಈ ಬಗ್ಗೆ ಅನೇಕ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ, ಕೆಲಸ ಮಾಡುತ್ತಿದ್ದ ಕಂಪೆನಿ ಹಾಗೂ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಕೀಳು ಅಭಿಪ್ರಾಯದ ವಿರುದ್ಧ ಕಂಪೆನಿ ಸಹ ಆತನ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿತ್ತು. ಈ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಕೊಡಿಗೆಹಳ್ಳಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. \ No newline at end of file diff --git a/eesanje/url_46_338_12.txt b/eesanje/url_46_338_12.txt new file mode 100644 index 0000000000000000000000000000000000000000..e65e934b229a2191f82c7cb1393c3d7714e50220 --- /dev/null +++ b/eesanje/url_46_338_12.txt @@ -0,0 +1,15 @@ +ಎಸ್.ಎಂ.ಕೃಷ್ಣ ಅಭಿವೃದ್ಧಿ ಹರಿಕಾರ-ಆದರ್ಶ ನಾಯಕ : ಡಿಕೆಶಿ ಬಣ್ಣನೆ +ಬೆಂಗಳೂರು,ಅ.1- ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು ಮೆಟ್ರೋ ಯೋಜನೆಯಂತಹ ದೂರದೃಷ್ಟಿಯುಳ್ಳ ಮಹತ್ವದ ಯೋಜನೆಗಳನ್ನು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದು ಬೆಂಗಳೂರಿಗೆ ಅಂತಾರಾಷ್ಟ್ರೀಯ ಮನ್ನಣೆಯನ್ನು ತಂದುಕೊಟ್ಟವರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. +ಚಿತ್ರಕಲಾ ಪರಿಷತ್‍ನಲ್ಲಿಂದು ಹಮ್ಮಿಕೊಂಡಿದ್ದ ಸ್ವಪ್ನ ಬುಕ್‍ಹೌಸ್ ಪ್ರಕಾಶನದಿಂದ ಪ್ರಕಟಗೊಂಡ ಡಾ.ಎನ್.ಜಗದೀಶ್ ಕೊಪ್ಪ ಅವರು ರಚಿಸಿರುವ ಎಸ್.ಎಂ.ಕೃಷ್ಣ ಅವರ ಜೀವನಗಾಥೆ ಆಧರಿಸಿದ ನೆಲದ ಸಿರಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಡಿನ ಹಿತಕ್ಕಾಗಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಲು ಮುಂದಾಗಿದ್ದರು ಎಂದು ಹೇಳಿದರು. +ಅವರ ರಾಜಕೀಯ ಜೀವನದಲ್ಲಿ ಸಾಕಷ್ಟು ಜನರಿಗೆ ಒಳ್ಳೆಯದನ್ನು ಮಾಡಿರುವುದು ಬಿಟ್ಟರೆ ಬೇರೆಯವರಿಗೆ ತೊಂದರೆ ಕೊಡಲಿಲ್ಲ. ರಾಜಕೀಯವಾಗಿ ನನ್ನಂತಹ ಹತ್ತಾರು ನಾಯಕರನ್ನು ಎಲ್ಲ ಸಮುದಾಯದಲ್ಲೂ ಬೆಳೆಸಿದ್ದಾರೆ ಎಂದರು. +ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ +ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷದ ಆಡಳಿತಾವಧಿಯಲ್ಲಿ ಎಸ್.ಎಂ.ಕೃಷ್ಣ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರು ಏನನ್ನು ತೆಗೆದುಕೊಂಡು ಹೋಗಲಿಲ್ಲ. ಅವರ ಆದರ್ಶ, ನಾಯಕತ್ವವನ್ನು ನೀಡಿದ್ದಾರೆ. ನನಗೆ ರಾಜಕೀಯ ಮರುಜನ್ಮ ನೀಡಿದವರು ಎಂದು ಹೇಳಿದರು. +ಅವರ ಆಡಳಿತ ಅವಧಿಯಲ್ಲಿ ರಾಜ್ಯವು ತೀವ್ರ ಬರ, ಕಾವೇರಿ ನೀರಿನ ಹಂಚಿಕೆ ಸಮಸ್ಯೆ, ವರನಟ ಡಾ.ರಾಜ್‍ಕುಮಾರ್ ಅಪಹರಣ, ಆರ್ಥಿಕ ಸಂಕಷ್ಟ ಇದ್ದರೂ ರಾಜ್ಯವು ಯಶಸ್ಸನ್ನು ಕಂಡಿತ್ತು. ಕೃಷ್ಣ ಅವರ ಕಾಲ ಎಂದು ಬಿಂಬಿಸುವಂತಾಯಿತು ಎಂದರು. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ವಿಕಾಸಸೌಧ, ಉದ್ಯೋಗಸೌಧ ಹಾಗೂ ಬೆಂಗಳೂರು ಮೆಟ್ರೊ ಯೋಜನೆ ಅವರ ಆಡಳಿತಾವಯ ಕೊಡುಗೆಗಳು ಎಂದು ಬಣ್ಣಿಸಿದರು. +ಶಾಲೆ ಬಿಡುವ ಮಕ್ಕಳನ್ನು ಮರಳಿ ಶಾಲೆಗೆ ತರಲು ದೇಶದಲ್ಲಿಯೇ ಮೊದಲ ಬಾರಿಗೆ ಮಧ್ಯಾಹ್ನ ಬಿಸಿಯೂಟ ಯೋಜನೆ ಜಾರಿಗೆ ತಂದರು. ಅದು ಈಗಲೂ ಮುಂದುವರೆದಿದೆ. ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕಾಗಿ ಸ್ತ್ರೀ ಶಕ್ತಿ ಸಂಘಗಳ ಕಾರ್ಯಕ್ರಮಗಳನ್ನು ಜಾರಿಗೆ ತರಲಾಯಿತು. ಸುಮಾರು ನಾಲ್ಕೂವರೆ ಕೋಟಿ ಮಹಿಳೆಯರು ವಿವಿಧ ಸಂಘಗಳ ಸದಸ್ಯರಾಗಿದ್ದು, ಶೇ.95ರಷ್ಟು ಹಣ ಮರುಪಾವತಿಯಾಗುತ್ತಿದೆ. +ಗ್ರಾಮೀಣ ಹಾಗೂ ಬಡಜನರ ಆರೋಗ್ಯಕ್ಕಾಗಿ ಯಶಸ್ವಿನಿಧಿ ಯೋಜನೆಯನ್ನು ಜಾರಿಗೆ ತರಲಾಯಿತು. ಮೊದಲ ಬಾರಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು ಎಂದರು.ವಿಮಾನ ನಿಲ್ದಾಣದ ಉದ್ಘಾಟನೆಗೆ ಬಂದಿದ್ದ ಆಗಿನ ಪ್ರಧಾನಿ ವಾಜಪೇಯಿ ಅವರು ಕೃಷ್ಣ ಅವರ ಆಡಳಿತದಿಂದಾಗಿ ವಿಶ್ವದ ನಾಯಕರು ಬೆಂಗಳೂರಿನತ್ತ ಗಮನಹರಿಸುವಂತಾಗಿದೆ ಎಂದು ಬಣ್ಣಿಸಿದ್ದರೆಂದು ಡಿ.ಕೆ.ಶಿವಕುಮಾರ್ ಸ್ಮರಿಸಿದರು. ಭೂಮಿ ಯೋಜನೆ , ಪಾನೀಯ ನಿಗಮ ಅವರ ಕಾಲದಲ್ಲೇ ಸ್ಥಾಪನೆಯಾಯಿತು. ಅವರಿಗೆ ರಾಜ್ಯದ ಹಿತ ಮುಖ್ಯವಾಗಿತ್ತೇ ಹೊರತು ಬೇರೆನೂ ಇಲ್ಲ ಎಂದು ಹಲವು ನಿದರ್ಶನಗಳನ್ನು ನೀಡಿ ವಿಶ್ಲೇಷಿಸಿದರು. +ಅವರನ್ನು ಕುರಿತಾದ ನೆಲದಸಿರಿ ಪುಸ್ತಕ ಮುಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ. ಅವರು ತಮ್ಮದೇ ಆದ ಇತಿಹಾಸವನ್ನು ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿದರು. +ಪಕ್ಷಾತೀತ ವ್ಯಕ್ತಿ:ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜಾಗತಿಕ ನೆಲೆಯಲ್ಲಿ ಗುರುತಿಸಿಕೊಳ್ಳಬೇಕಾದ ಮಾದರಿ ರಾಜಕಾರಣಿ. ಅಷ್ಟೇ ಅಲ್ಲ ಪಕ್ಷಾತೀತ ವ್ಯಕ್ತಿ. ಅವರು ಕನ್ನಡಿಗರ ಹೆಮ್ಮೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಬಣ್ಣಿಸಿದರು. +ನೆಲದ ಸಿರಿ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾಹಿತ್ಯದ ಸಂಪರ್ಕ ಅಗತ್ಯ. ಮಹಾತ್ಮ ಗಾಂ, ಜವಾಹರ್‍ಲಾಲ್ ನೆಹರು ಸೇರಿದಂತೆ ಶ್ರೇಷ್ಠ ರಾಜಕೀಯ ಚಿಂತಕರು ಸ್ವತಃ ಸಾಹಿತಿಗಳಾಗಿದ್ದರು ಇಲ್ಲವೇ ಸಾಹಿತ್ಯದ ಸಂಪರ್ಕವುಳ್ಳವರಾಗಿ ದ್ದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಲೋಹಿಯ ಕೂಡ ಸಾಹಿತ್ಯದ ನಿಕಟ ಸಂಪರ್ಕ ಹೊಂದಿದ್ದರು ಎಂದರು ಹೇಳಿದರು. +ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ +ಎಸ್.ಎಂ.ಕೃಷ್ಣ ಅವರು ಸಾಹಿತ್ಯ, ಸಂಗೀತ, ಕ್ರೀಡೆ ಬಗ್ಗೆ ಆಸಕ್ತಿಯುಳ್ಳ ಸಂವೇದನಾಶೀಲ ವ್ಯಕ್ತಿ. ಚಿತ್ರಕಲಾ ಪರಿಷತ್ ಸಾಂಸ್ಕøತಿಕ ಕೇಂದ್ರವಾಗಲು ಇವರ ಕೊಡುಗೆ ಕಾರಣ. ನೆಲದ ಸಿರಿ ಕೃತಿ ಕೇವಲ ಕೃಷ್ಣಾ ಅವರ ಜೀವನಗಾಥೆಯಲ್ಲ. ಭಾರತದ ಒಂದು ಕಾಲಘಟ್ಟದ ರಾಜಕೀಯ ಸಾಂಸ್ಕøತಿಕ ಮಹತ್ವವನ್ನು ಬಿಂಬಿಸುವ ಚರಿತ್ರೆ. ರಾಜಕೀಯ, ಸಾಮಾಜಿಕ, ಸಾಂಸ್ಕøತಿಕ ಪಠ್ಯವಾಗಿ ಈ ಕೃತಿಯನ್ನು ಅಧ್ಯಯನ ಮಾಡಬೇಕು. ಜಗದೀಶ್ ಕೊಪ್ಪ ಅವರು ವಸ್ತುನಿಷ್ಠವಾಗಿ, ಮುಕ್ತ ಮನಸ್ಸಿನಿಂದ ನೆಲದ ಸಿರಿಯನ್ನು ವಿಶ್ಲೇಷಣೆ ಮಾಡಿ ರಚಿಸಿದ್ದು, ಓದಿಸಿಕೊಂಡು ಹೋಗುವಂತಹ ಕೃತಿಯಾಗಿದೆ ಎಂದು ವಿಶ್ಲೇಷಿಸಿದರು. +ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಹಿರಿಯ ಸಾಹಿತಿ ಡಾ.ಹಂಪಾನಾಗರಾಜಯ್ಯ, ಕೃತಿಕಾರ ಎನ್.ಜಗದೀಶ್ ಕೊಪ್ಪ, ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಮಾಜಿ ಸಚಿವರಾದ ಡಾ.ಕೆ.ಸುಧಾಕರ್, ನಫೀಜ ಫಜಲ್, ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ದಿನೇಶ್ ಗೂಳಿಗೌಡ, ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ, ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಕೃಷ್ಣ ಮತ್ತಿತರರು ಇದ್ದರು. \ No newline at end of file diff --git a/eesanje/url_46_338_2.txt b/eesanje/url_46_338_2.txt new file mode 100644 index 0000000000000000000000000000000000000000..0226bcef87b253eea4fe282d46d27843883b2a6b --- /dev/null +++ b/eesanje/url_46_338_2.txt @@ -0,0 +1,7 @@ +ಭೂಮಿ ಸಾಫ್ಟ್ ವೇರ್ ಮಾದರಿಯಲ್ಲಿ ಗ್ರಾ.ಪಂಗಳ ಅಸ್ತಿ ಸಂರಕ್ಷಣೆಗೆ ಕ್ರಮ : ಡಿಸಿಎಂ +ಬೆಂಗಳೂರು,ಅ.2- ಭೂಮಿ ಸಾಫ್ಟ್‍ವೇರ್ ಮಾದರಿಯಲ್ಲಿ ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸಿ ದುರುಪಯೋಗವನ್ನು ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು. +ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲೂ ನಮ್ಮ ಸ್ವತ್ತು ಎಂಬ ವ್ಯವಸ್ಥೆಯ ಮೂಲಕ ಆಸ್ತಿ ದಾಖಲಾತಿಗಳ ದುರುಪಯೋಗವನ್ನು ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಗ್ರಾಮ ಪಂಚಾಯಿತಿಗಳು ಸ್ವಾವಲಂಬಿ ಆರ್ಥಿಕತೆಯನ್ನು ರೂಢಿಸಿಕೊಳ್ಳಬೇಕು. ತೆರಿಗೆಯನ್ನು ಹೆಚ್ಚು ವಸೂಲಿ ಮಾಡಬೇಕು. ಗ್ರಾಮ ಪಂಚಾಯಿತಿ ಸದಸ್ಯರು, ಗುತ್ತಿಗೆದಾರರು ಹಾಗೂ ಕಮಿಷನ್‍ಗೆ ಆದ್ಯತೆ ನೀಡದೆ, ಉತ್ತಮ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು. +ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ +ನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಶಾಶ್ವತ ಆಸ್ತಿಗಳು ನಿರ್ಮಾಣಗೊಳ್ಳುತ್ತಿವೆ, ಆರ್ಥಿಕ ಸಬಲೀಕರಣ ಹೆಚ್ಚಾಗಿದೆ, ಪ್ರತಿ ಪಂಚಾಯಿತಿಯಲ್ಲೂ ಸುಮಾರು 5 ಕೋಟಿ ರೂ.ವರೆಗೂ ಕೆಲಸಗಳಾಗುತ್ತಿವೆ. ಸ್ಥಳೀಯವಾಗಿ ಕೆಲಸಗಳನ್ನು ಮಾಡಲು ಯಾರ ಅನುಮತಿಯ ಅಗತ್ಯವೂ ಇಲ್ಲ ಎಂದು ಹೇಳಿದರು. +ಇದೇ ವೇಳೆ ಮುಖ್ಯಮಂತ್ರಿಯವರು ಬಾಪೂಜಿ ಸೇವಾಕೇಂದ್ರಗಳಲ್ಲಿ 44 ಸೇವೆಗಳನ್ನು ಪೂರೈಸುವುದಕ್ಕೆ ಚಾಲನೆ ನೀಡಿದರು. 800 ಪಂಚಾಯಿತಿಗಳಿಗೆ ಸ್ಮಾರ್ಟ್‍ಫೋನ್ ಮತ್ತು ಲ್ಯಾಪ್‍ಟಾಪ್‍ಗಳನ್ನು ವಿತರಿಸಿದರು. \ No newline at end of file diff --git a/eesanje/url_46_338_3.txt b/eesanje/url_46_338_3.txt new file mode 100644 index 0000000000000000000000000000000000000000..458780b0badf68b98b3f21966e0114f17baf83ca --- /dev/null +++ b/eesanje/url_46_338_3.txt @@ -0,0 +1,6 @@ +ಗ್ರಾಮಮಟ್ಟದ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಸಹಾಯವಾಣಿ +ಬೆಂಗಳೂರು, ಅ.2-ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಎಂಬ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕೆ ಮಾಹಿತಿ ತಂತ್ರಜ್ಞಾನ ವಲಯದಂತೆ ಪಂಚಾಯಿತಿಗಳಲ್ಲೂ ಸುಗಮ ಆಡಳಿತಕ್ಕಾಗಿ ನೂತನ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. +ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿಯನ್ನು ಪಾರದರ್ಶಕವಾಗಿ ಜಾರಿಗೊಳಿಸಲಾಗುವುದು. ಪಿಡಿಒ ಗಳನ್ನು ಹೆಚ್ಚು ಉತ್ತರದಾಯಿ ಹಾಗೂ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಜಿಪಿಎಸ್ ಪೆನ್ಸಿಂಗ್ ಅಳವಡಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿ ಎಲ್ಲಿ ತಿರುಗಾಡುತ್ತಿದ್ದಾರೆ, ಎಷ್ಟು ದಿನ ಕೆಲಸಕ್ಕೆ ಹಾಜರಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯ, ಅಧಿಕಾರಿ ಕೆಲಸ ಮಾಡಿದ ದಿನಕ್ಕಷ್ಟೆ ವೇತನ ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು. +ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್ +ಗ್ರಾಮಮಟ್ಟದಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಪಂಚಮಿತ್ರ ಎಂಬ ಸಹಾಯವಾಣಿಯನ್ನು ಇನ್ನೆರಡು ತಿಂಗಳಲ್ಲಿ ಆರಂಭಿಸಲಾಗುವುದು. ಇದು ರಾಜ್ಯಾದ್ಯಂತ ಎಲ್ಲಾ ಪಂಚಾಯಿತಿಗಳ ವ್ಯವಸ್ಥೆಗೂ ಅನ್ವಯವಾಗಲಿದೆ. ಪಂಚತಂತ್ರ-2 ಸಾಫ್ಟ್ವೇರ್ ಮೂಲಕ ಮುಂದಿನ ದಿನಗಳಲ್ಲಿ 2 ರಿಂದ 3 ಸಾವಿರ ಕೋಟಿ ತೆರಿಗೆ ಸಂಗ್ರಹಿಸಲು ಸಾಧ್ಯವಾಗಲಿದೆ. +ಪಂಚಾಯಿತಿ ಸಭೆಗಳ ಮಾಹಿತಿ ಕೂಡ ಇದರಲ್ಲಿ ದಾಖಲಾಗಲಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ 70 ಸಾವಿರ ಸಭೆಗಳು ನಡೆದಿವೆ. ಪಿಡಿಒ ಗಳ ಹಾಜರಾತಿ ಮೇಲೆ ಇದೇ ವ್ಯವಸ್ಥೆಯಲ್ಲಿ ನಿಗಾ ವಹಿಸಲಾಗುವುದು ಎಂದು ಹೇಳಿದರು. ಪಂಚಾಯಿತಿ ವ್ಯವಸ್ಥೆಗಳನ್ನು ಮತ್ತಷ್ಟು ಪ್ರಜಾಪ್ರಭುತ್ವ ಹಾಗೂ ಆರ್ಥಿಕ ಸಬಲೀಕರಣ ಮಾಡಲು ನಿರಂತರವಾಗಿ ಚರ್ಚೆ ನಡೆಸಲಾಗುತ್ತಿದೆ. ಈವರೆಗೂ ನೂರಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_338_4.txt b/eesanje/url_46_338_4.txt new file mode 100644 index 0000000000000000000000000000000000000000..6e98de1f5d40e08128581950818cb4d74ee387ce --- /dev/null +++ b/eesanje/url_46_338_4.txt @@ -0,0 +1,10 @@ +ಗಾಂಧೀಜಿ, ಶಾಸ್ತ್ರಿರವರ ಮೌಲ್ಯಗಳು ನಮಗೆ ದಾರಿದೀಪ : ಸಿಎಂ +ಬೆಂಗಳೂರು,ಅ.2- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಬದುಕು ಹಾಗೂ ಮೌಲ್ಯಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾತ್ಮ ಗಾಂಧೀಜಿ ಯವರ 154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 119 ನೇ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. +ದೇಶಾದ್ಯಂತ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹಾತ್ಮ ಗಾಂಧೀಜಿ ಯವರಿಗೆ ನಾವು ನಮನ ಸಲ್ಲಿಸಿದ್ದೇವೆ. ಅವರ ಹೋರಾಟದ ಬದುಕು ನಮ್ಮೆಲ್ಲರಿಗೂ ಸ್ಪೋರ್ತಿಯಾಗಲಿ ಎಂದು ಹಾರೈಸಿದರು. +ಕೇವಲ 14 ನಿಮಿಷದಲ್ಲೇ ಸ್ವಚ್ಛವಾಗುತ್ತೆ ವಂದೇ ಭಾರತ್ ರೈಲು +ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ. ಜೀವನದ್ದುದ್ದಕ್ಕೂ ಪ್ರಾಮಾಣಿಕವಾಗಿ ಬದುಕಿದವರು. ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಮೌಲ್ಯ ನಮ್ಮೆಲ್ಲರಿಗೂ ದಾರಿದೀಪ. ಗಾಂಧೀಜಿ ಯವರು ಸರಳ ಜೀವನ ನಡೆಸಿದವರು. ಅಹಿಂಸಾ ಮಾರ್ಗ ಅನುಸರಿಸಿ, ಅಹಿಂಸಾತ್ಮಕ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಯಂತೆ ಸರಳವಾಗಿ ಬದುಕಲು ಪ್ರಯತ್ನಿಸಿದರು ಎಂದರು. +ಮೂರನೇ ದರ್ಜೆ ಬೋಗಿಯಲ್ಲಿ ಯಾವಾಗಲೂ ಪ್ರಯಾಣಿಸುತ್ತಿದ್ದರು. ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ, 3 ನೇ ದರ್ಜೆಗಿಂತಲೂ ಕೆಳ ದರ್ಜೆಯ ಬೋಗಿ ಇಲ್ಲವಾದ್ದರಿಂದ ನಾನು 3 ನೇ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದೇನೆ ಎಂದು ಉತ್ತರಿಸಿದರು. ಅಷ್ಟರ ಮಟ್ಟಿಗೆ ಸರಳವಾಗಿ ಬದುಕಿದ ಅವರು ತಮ್ಮ ಜೀವನದುದ್ದಕ್ಕೂ ಸತ್ಯ, ಅಹಿಂಸೆಯನ್ನು ಅಳವಡಿಸಿಕೊಂಡವರು ಎಂದು ಹೇಳಿದರು. +ದಕ್ಷಿಣ ಆಫ್ರಿಕಾದಲ್ಲಿದ್ದಾಗಲೂ ಸೆರೆಮನೆ ವಾಸ ಅನುಭವಿಸಿದ್ದರು. ಭಾರತದಲ್ಲಿಯೂ ಸೆರೆಮನೆಯ ವಾಸ ಅನುಭವಿಸಿ ದೇಶಕ್ಕೆ ಮಾದರಿಯಾಗಿದ್ದರು. ಅವರ ನೇತೃತ್ವದಲ್ಲಿ ಅನೇಕ ಜನರು ತ್ಯಾಗ, ಬಲಿದಾನಗಳನ್ನು ಅರ್ಪಿಸಿದರು. ಅಂತಿಮವಾಗಿ ಮತಾಂಧ ನಾಥೂರಾಮ್ ಗೋಡ್ಸೆ ಗುಂಡಿಗೆ ಬಲಿಯಾದರು ಎಂದು ಸ್ಮರಿಸಿದರು. +ವಿಶ್ವನಾಯಕ ಗಾಂಧಿ :ಸಮಾಜದಲ್ಲಿ ಎಲ್ಲ ಜನರೂ ಶಾಂತಿ, ನೆಮ್ಮದಿಯಿಂದ ಇರಬೇಕು. ಜಾತಿ, ಧರ್ಮ ಎಂದು ಹೊಡೆದಾಡಬಾರದು. ದೇಶ ಇಬ್ಭಾಗವಾಗಬಾರದು ಎಂದು ಹೋರಾಡಿದರು. ಜವಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ನಂತರ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಕಲ್ಕತ್ತಾದಲ್ಲಿ ಸತ್ಯಾಗ್ರಹ ಮಾಡುತ್ತಿದ್ದರು. ಅಷ್ಟು ಹೊತ್ತಿಗೆ ದೇಶ ವಿಭಜನೆಯಾಗಿ ಜನರ ಸಂಘರ್ಷದಿಂದ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಬಗೆಹರಿಸಲು ಸತ್ಯಾಗ್ರಹ ಮಾಡಿದರು. ಜಗತ್ತಿನ 148 ದೇಶಗಳಲ್ಲಿ ಅವರ ಪ್ರತಿಮೆಗಳಿವೆ. +ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ +ಅವರು ಕೇವಲ ಭಾರತದ ನಾಯಕರಾಗಿರಲಿಲ್ಲ. ಜಗತ್ತಿನಲ್ಲಿಯೇ ಗೌರವಕ್ಕೆ ಪ್ರಾತ್ರರಾದ ವಿಶ್ವನಾಯಕರು. ಅಂಥವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಹೋರಾಟ, ಸತ್ಯ, ಧರ್ಮನಿಷ್ಠೆ ಎಲ್ಲವೂ ನಮಗೆ ದಾರಿದೀಪವಾಗಲಿ ಹಾಗೂ ಸೂರ್ತಿ ನೀಡಲಿ ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು. \ No newline at end of file diff --git a/eesanje/url_46_338_5.txt b/eesanje/url_46_338_5.txt new file mode 100644 index 0000000000000000000000000000000000000000..138cb17672159a6f476c5c71f4309aab17000746 --- /dev/null +++ b/eesanje/url_46_338_5.txt @@ -0,0 +1,7 @@ +ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ : ಬೊಮ್ಮಾಯಿ +ಬೆಂಗಳೂರು,ಅ.2- ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಈಗ ಪ್ರಕ್ಷುಬ್ಧ ವಾತಾವರಣವಿರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂಥ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. +ಶಿವಮೊಗ್ಗದ ಮೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂಥ ಘಟನೆಗಳು ನಡೆಯುತ್ತದೆ. ಇಂತಹ ಸ್ಟೇಷನ್‍ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿಯನ್ನು ಹಾಕಬೇಕು. ಸ್ವಹಿತಾಸಕ್ತಿಗಳಿಗೆ ಬಲಿಯಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದರೆ, ಅವರು ಕಾನೂನು ಕಾಪಾಡುವ ಬದಲು ಬೇರೆ ಕೆಲಸದಲ್ಲಿಯೇ ಮಗ್ನರಾಗುತ್ತಾರೆ. ಇದರಿಂದ ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ಸಿಗುತ್ತದೆ. ಇದರ ಮೂಲ ಪ್ರತಿ ಡಿಸ್ಟಿಕ್‍ನಲ್ಲಿ ಕ್ಲಬ್, ರಿಯಲ್ ಎಸ್ಟೇಟ್ ಮಾಫಿಯಾ ಶುರುವಾಗಿದೆ ಎಂದರು. +ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ +ಇದನ್ನು ಸಮಗ್ರವಾಗಿ ನಿಭಾಯಿಸಬೇಕು, ಶಾಂತಿ ಕಾಪಾಡಬೇಕು. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು, ಸರ್ಕಾರದಿಂದ ಪೊಲೀಸರಿಗೆ ಒಂದು ಸ್ಪಷ್ಟ ನಿರ್ದೇಶನ ಹೋಗಬೇಕು ಎಂದು ಹೇಳಿದರು. +ಮಾತಲ್ಲಿ ಮಾತ್ರ ಗಾಂಧಿ: ಗಾಂಧಿ ಕಂಡ ಕನಸು ಕರ್ನಾಟಕದಲ್ಲಿ ನನಸು ಅಂತ ಸರ್ಕಾರ ಜಾಹೀರಾತು ನೀಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಇವರು ಮಾಡುವುದೆಲ್ಲಾ ಗಾಂಧಿ ವಿರೋಧಿ ನೀತಿ. ಸುಳ್ಳು ಹೇಳುವುದರಿಂದ ಗಾಂಧಿ ವಿರೋಧಿ ನೀತಿ ಪ್ರಾರಂಭ ಆಗುತ್ತದೆ. ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವುದು ಎಂದರು. +ಸಿಕ್ಕಲ್ಲೆಲ್ಲಾ ಮದ್ಯದಂಗಡಿ ಶುರು ಮಾಡಿದ್ದಾರೆ. ಪ್ರತೀ ಗ್ರಾಮ ಪಂಚಾಯತಿಯಲ್ಲಿ ಮದ್ಯದಂಗಡಿ ತೆರಯುತ್ತಿದ್ದಾರೆ. ಹೇಳಲು ಮಾತ್ರ ಗಾಂಧಿ ಶಾಂತಿ ಮಂತ್ರ ಮಾಡುವುದೆಲ್ಲಾ ಗಾಂಧಿ ವಿರೋಧಿ ಕೆಲಸಗಳೇ ಎಂದು ಹೇಳಿದರು. \ No newline at end of file diff --git a/eesanje/url_46_338_6.txt b/eesanje/url_46_338_6.txt new file mode 100644 index 0000000000000000000000000000000000000000..e9a7dd49556609e3ceaa0ff3f3f4869369505cd0 --- /dev/null +++ b/eesanje/url_46_338_6.txt @@ -0,0 +1,6 @@ +ಶಿವಮೊಗ್ಗದಲ್ಲಿ ಪೊಲೀಸರ ಕ್ರಮದಿಂದ ದೊಡ್ಡ ಅನಾಹುತ ತಪ್ಪಿದೆ : ಗೃಹಸಚಿವ ಪರಮೇಶ್ವರ್ +ಬೆಂಗಳೂರು,ಅ.2- ಶಿವಮೊಗ್ಗ ಸೂಕ್ಷ್ಮ ಪ್ರದೇಶವಾಗಿದ್ದು ಅಲ್ಲಿ ಗಲಭೆ ನಡೆಯುವ ಮುನ್ಸೂಚನೆ ಇದ್ದ ಹಿನ್ನೆಲೆಯಲ್ಲಿ ಬಿಗಿ ಬಂದೊಬಸ್ತ್ ಮಾಡಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಅಹಿತಕರ ಘಟನೆಯನ್ನು ಪೊಲೀಸರು ನಿಯಂತ್ರಿಸಿದ್ದಾರೆ. ಎರಡು ಗುಂಪುಗಳಿಂದಲೂ ತಲಾ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು. +ಘಟನೆಯ ಬಗ್ಗೆ ಹೆಚ್ಚಿನ ವಿವರಗಳಿವೆ. ಬಂಧನದ ಬಗ್ಗೆಯೂ ಮಾಹಿತಿ ಇದೆ. ಆದರೆ ಅದನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳುವುದಿಲ್ಲ. ಈ ರೀತಿ ಹಂಚಿಕೊಳ್ಳಲು ಕಾನೂನಾತ್ಮಕವಾಗಿ ಅವಕಾಶವಿಲ್ಲ ಎಂದರು. +ಮಿಸ್ಟರ್ ಡಿ.ಕೆ.ಶಿವಕುಮಾರ್, ನಿಮ್ಮ ಕಸನು ಈಡೇರುವುದಿಲ್ಲ : ಎಚ್‍ಡಿಡಿ ವಾಗ್ದಾಳಿ +ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಮರ್ಥರಿದ್ದಾರೆ. ಇದು ಹೊಸದೇನಲ್ಲ. ಶಿವಮೊಗ್ಗದಲ್ಲಿ ಮೊದಲಿನಿಂದಲೂ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ. ಈದ್‍ಮಿಲಾದ್ ಮೆರವಣಿಗೆ ನಡೆಯುವ ವೇಳೆ ಏನು ಬೇಕಾದರೂ ನಡೆಯಬಹುದು ಎಂಬ ಮುನ್ಸೂಚನೆ ಮೊದಲೇ ಇತ್ತು. ಹೀಗಾಗಿ ಅಗತ್ಯವಾದ ಪೊಲೀಸ್ ಬಂದೊಬಸ್ತ್ ಏರ್ಪಡಿಸಿದ್ದೆವು. ನಂತರ ಗಲಾಟೆಯನ್ನು ನಿಯಂತ್ರಿಸಲಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು. \ No newline at end of file diff --git a/eesanje/url_46_338_7.txt b/eesanje/url_46_338_7.txt new file mode 100644 index 0000000000000000000000000000000000000000..db8e9f5f46f8f7c019b9a787ebb8fbaac4cb58c6 --- /dev/null +++ b/eesanje/url_46_338_7.txt @@ -0,0 +1,5 @@ +ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ +ಬೆಂಗಳೂರು,ಅ.2- ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ತಹಬದಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್‍ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಈ ಪ್ರದೇಶ ಶಿವಮೊಗ್ಗದ ಹೊರವಲಯದಲ್ಲಿದೆ. +ಪೊಲೀಸರ ಮೇಲೂ ಕಲ್ಲುತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರವಾದ ಕೃತ್ಯ. ಇಂತಹುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. +ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ +ಸದ್ಯಕ್ಕೆ ಶಿವಮೊಗ್ಗದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೆಚ್ಚಿನ ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_338_8.txt b/eesanje/url_46_338_8.txt new file mode 100644 index 0000000000000000000000000000000000000000..cca1ed6bc3b6b15f4ee03eff7f9f9f661218f02d --- /dev/null +++ b/eesanje/url_46_338_8.txt @@ -0,0 +1,14 @@ +ಬೂದಿ ಮುಚ್ಚಿದ ಕೆಂಡವಾದ ಶಿವಮೊಗ್ಗ +ಶಿವಮೊಗ್ಗ, ಅ.2- ನಗರದ ಹೊರವಲಯದ ರಾಗಿಗುಡ್ಡದಲ್ಲಿ ಈದ್‍ಮಿಲಾದ್ ಮೆರವಣಿಗೆಯ ವೇಳೆ ಕಲ್ಲು ತೂರಾಟ, ಲಾಠಿ ಚಾರ್ಜ್ ನಡೆದಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ನಿನ್ನೆ ಈದ್‍ಮಿಲಾದ್ ಪ್ರಯುಕ್ತವಾಗಿ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಅಳವಡಿಸಲಾಗಿದ್ದ ಕಟೌಟ್ ಕುರಿತಂತೆ ಅಸಮಾಧಾನಗೊಂಡಿದ್ದ ಕೆಲವರು ಆಯೋಜಕರ ಜೊತೆ ವಾಗ್ವಾದ ನಡೆಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. +ಕೆಲವು ಕಿಡಿಗೇಡಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ನಂತರ ಉಭಯ ಗುಂಪುಗಳ ನಡುವೆ ಕಲ್ಲು ತೂರಾಟ ಹೆಚ್ಚಾಗಿದ್ದು, 7 ಕ್ಕೂ ಹೆಚ್ಚು ಕಾರುಗಳು, ಹಲವು ಮನೆಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವರ ಮನೆಗಳಿಗೆ ನುಗ್ಗಿ ದಾಳಿ ಮಾಡುವ ಪ್ರಯತ್ನ ನಡೆಸಿದ್ದಾರೆ. +ಪೊಲೀಸರು ಮಧ್ಯಪ್ರವೇಶ ಮಾಡಿ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನಿನ್ನೆ ಮೆರವಣಿಗೆಯ ಸಂದರ್ಭದಲ್ಲಿ ಜಿಲ್ಲಾ ಎಸ್ಪಿ ಮಿಥುನ್‍ಕುಮಾರ್‍ರವರು ಇದ್ದರು. ರಾಗಿಗುಡ್ಡದಲ್ಲಿ ಗಲಭೆ ನಡೆಯುತ್ತಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ನಾಲ್ಕು ಮಂದಿ ಸಿಬ್ಬಂದಿಗಳೊಂದಿಗೆ ಖುದ್ದು ಭೇಟಿ ನೀಡಿದ ಎಸ್‍ಪಿ ಅವರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ವೇಳೆ ನಡೆದ ಗುಂಪು ಸಂಘರ್ಷದಲ್ಲಿ ಎಸ್‍ಪಿಯವರ ಗನ್‍ಮ್ಯಾನ್ ಸಿಲುಕಿಕೊಂಡಿದ್ದರು. +ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ +ಪೊಲೀಸರ ಮೇಲೂ ಭಾರೀ ಗಾತ್ರದ ಕಲ್ಲುತೂರಾಟ ನಡೆಸಲಾಗಿದೆ. ಮನೆಗಳ ಮೇಲೂ ಬೃಹತ್ ಗಾತ್ರದ ಕಲ್ಲುಗಳು ಬಿದ್ದಿವೆ. ಸ್ಥಳದಿಂದ ತಪ್ಪಿಸಿಕೊಂಡ ಇಬ್ಬರು ಹುಡುಗರು 200 ಮೀಟರ್ ದೂರದಲ್ಲಿ ಮನೆಯೊಂದರ ಮುಂದೆ ಕುಳಿತಿದ್ದರು. ಅವರನ್ನು ಬೆನ್ನಟ್ಟಿ ಬಂದ ಗುಂಪೊಂದು ಎಳೆದುಕೊಂಡು ಹೋಗುವಾಗ ತಳ್ಳಾಟ, ನೂಕಾಟ ನಡೆದಿದೆ. ಸಂಘರ್ಷದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಅದರಲ್ಲಿ 5 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ 50 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ. ಹೆಚ್ಚಿನ ಪೊಲೀಸ್ ಬಂದೊಬಸ್ತ್ ಆಯೋಜಿಸಲಾಗಿದೆ. +ಆರ್‍ಎಎಫ್, ಕೆಎಸ್‍ಆರ್‍ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಲಾಗಿದೆ. ಅದರಲ್ಲೂ ರಾಗಿಗುಡ್ಡ ಪ್ರದೇಶವನ್ನೊಳಗೊಂಡ ಶಾಂತಿನಗರಕ್ಕೆ ಸಂಚರಿಸುವ ಪ್ರತಿ ವಾಹನವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮತ್ತು ಹೊರಗಿನವರು ಎಂದು ಭಾವಿಸಲಾದ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. +ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳು ಮುಚ್ಚಿರುವುದರಿಂದ ಪ್ರದೇಶದಲ್ಲಿ ಅಘೋಷಿತ ಬಂದ್‍ನ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಗಲಾಟೆಯ ಬಳಿಕ ಸ್ಥಳೀಯ ಮಹಿಳೆಯರು ಆತಂಕ ವ್ಯಕ್ತಪಡಿಸಿ ತೋಡಿಕೊಂಡ ಅಳಲಿನ ಧ್ವನಿಗಳು ವ್ಯಾಪಕ ವೈರಲ್ ಆಗಿವೆ. ಆಕ್ಷೇಪಾರ್ಹ ಕಟೌಟ್‍ನ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಕೋಲಾರದಲ್ಲಿ ಇದೇ ರೀತಿಯ ಕಟೌಟ್ ಕಂಡುಬಂದಿತ್ತು. +ಶಿವಮೊಗ್ಗದಲ್ಲಿ ಶಾಂತಿಯುತವಾಗಿ ಆಚರಣೆಯಾಗಬೇಕಾಗಿದ್ದ ಈದ್‍ಮಿಲಾದ್ ಹಬ್ಬದ ವೇಳೆ ಅಹಿತಕರ ಘಟನೆಗಳು ನಡೆಯುವ ಮೂಲಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಎಸ್ಪಿ ಮಿಥುನ್‍ಕುಮಾರ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಮೆರವಣಿಗೆ ವೇಳೆ ದಾಂಧಲೆ ಮಾಡಲು ಕೆಲವರು ತಯಾರಿ ಮಾಡಿಕೊಂಡಿದ್ದರು. ಅದನ್ನು ನಿಯಂತ್ರಿಸಲು ನಾವು ಬಲಪ್ರಯೋಗ ಮಾಡಬೇಕಾಯಿತು. ತಕ್ಷಣವೇ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದೇವೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರು ಮತ್ತು ಆಸ್ತಿ ನಷ್ಟಕ್ಕೊಳಗಾದವರು ದೂರು ನೀಡಲು ಸೂಚಿಸಿದ್ದೇವೆ. +ಜಾಗತಿಕ ಅಧಿಕಾರ ಹಂಚಿಕೆ ರಚನೆಯಲ್ಲಿ ಹಿಂದೂಗಳು ಪ್ರಮುಖ ಪಾತ್ರ ನಿರ್ವಹಿಸಲು ಕರೆ +ಘಟನೆಯನ್ನು ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಡ್ರೋನ್ ಮೂಲಕವೂ ಚಿತ್ರೀಕರಿಸಿರುವುದರಿಂದ ಆರೋಪಿಗಳನ್ನು ಗುರುತಿಸಿ ಬಂಧಿಸಲಾಗುತ್ತಿದೆ. ಎಷ್ಟು ಜನರನ್ನು ಬಂಧಿಸಲಾಗಿದೆ ಎಂಬ ಬಗ್ಗೆ ನಂತರ ವಿವರಣೆ ನೀಡಲಾಗುವುದಾಗಿ ಎಸ್ಪಿಯವರು ಸುದ್ದಿಗಾರರಿಗೆ ತಿಳಿಸಿದ್ದಾರೆ. +ಸ್ಥಳೀಯ ಬಿಜೆಪಿ ಶಾಸಕ ಎಸ್.ಎನ್.ಚನ್ನಬಸಪ್ಪ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂತಹ ಘಟನೆಗಳಲ್ಲಿ ಶಾಂತಿ ಬಯಸುವವರು ಮುಕ್ತ ಮನಸ್ಸಿನಿಂದ ಯೋಚಿಸಬೇಕು. ಯಾವುದೇ ವಿಕೃತಗಳಿಗೆ ಅವಕಾಶ ನೀಡಬಾರದು. ಹೊರಗಿನಿಂದ ಬಂದವರು ಈ ರೀತಿಯ ಕೃತ್ಯಗಳನ್ನು ಮಾಡುತ್ತಾರೆಂದು ಹೇಳಲಾಗುತ್ತಿದೆ. +ಅವರಿಗೆ ಸ್ಥಳೀಯರು ಸಹಕಾರ ನೀಡುತ್ತಿರುವುದು ರಹಸ್ಯವೇನಲ್ಲ, ಹೊರಗಿನಿಂದ ಬಂದವರು ಎಂಥವರು, ಯಾವ ಉದ್ದೇಶಕ್ಕೆ ಬರುತ್ತಿದ್ದಾರೆಂದು ಅರಿತುಕೊಂಡು ಎಚ್ಚೆತ್ತುಕೊಳ್ಳದಿದ್ದರೆ ಶಾಂತಿಪಾಲನೆ ಕಷ್ಟಸಾಧ್ಯವಾಗುತ್ತದೆ. ಈ ಬಗ್ಗೆ ಸಮುದಾಯ ಸ್ವಯಂ ಕಾಳಜಿ ವಹಿಸಬೇಕೆಂದು ಕರೆ ನೀಡಿದ್ದಾರೆ. \ No newline at end of file diff --git a/eesanje/url_46_338_9.txt b/eesanje/url_46_338_9.txt new file mode 100644 index 0000000000000000000000000000000000000000..f690b7e06690d47f577229034caae9b14c7878eb --- /dev/null +++ b/eesanje/url_46_338_9.txt @@ -0,0 +1,9 @@ +ಕೇವಲ 14 ನಿಮಿಷದಲ್ಲೇ ಸ್ವಚ್ಛವಾಗುತ್ತೆ ವಂದೇ ಭಾರತ್ ರೈಲು +ಮೈಸೂರು,ಅ.2- ರೈಲ್ವೆ ಸಚಿವಾಲಯದ ನಿರ್ದೇಶನದಂತೆ ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಚೆನ್ನೈ-ಮೈಸೂರು – ಚೆನ್ನೈ ವಂದೇ ಭಾರತ್ ರೈಲಿಗೆ 14 ನಿಮಿಷಗಳ ಶುಚಿಗೊಳಿಸುವ ಹೊಸ ಪ್ರಕ್ರಿಯೆಯನ್ನು ಪರಿಚಯಿಸಿದೆ. ಅಂದರೆ ಇದುವರೆಗೆ ವಂದೇ ಭಾರತ್ ರೈಲಿನ 16 ಕೋಚ್ ಗಳನ್ನು ಸ್ವಚ್ಛಗೊಳಿಸಲು ಸುಮಾರು 45 ನಿಮಿಷಗಳು ಬೇಕಾಗುತ್ತಿತ್ತು.ಈಗ ಈ 14 ನಿಮಿಷಗಳ ಪ್ರಕ್ರಿಯೆಯಿಂದ ಅತಿ ವೇಗವಾಗಿ ರೈಲನ್ನು ಸಚ್ಛಗೊಳಿಸಿ ಹೊರಡಲು ಅಣಿಗೊಳಿಸಬಹುದಾಗಿದೆ. +14 ನಿಮಿಷಗಳ ಪವಾಡ ಕಾರ್ಯಕ್ರಮವನ್ನು ವಂದೇ ಭಾರತ್ ರೈಲುಗಳು ವಿವಿಧ ಗಮ್ಯ ಸ್ಥಾನಗಳಿಗೆ ಆಗಮಿಸಿದ ನಂತರ ಅವುಗಳನ್ನು ಶುಚಿಗೊಳಿಸುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿದೆ. ಭಾರತೀಯ ರೈಲ್ವೆ ಅಭಿವೃದ್ಧಿಪಡಿಸಿರುವ ಈ ವಿಧಾನದಿಂದ ಕೇವಲ 14 ನಿಮಿಷಗಳಲ್ಲಿ ಸಂಪೂರ್ಣವಾಗಿ ಸಮಗ್ರವಾಗಿ ಶುಚಿಗೊಳಿಸುವಿಕೆಯನ್ನು ಪೂರ್ಣ ಗೊಳಿಸಲು ದಾಧ್ಯವಾಗಿದೆ. +ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ +ಒಟ್ಟು 48 ಸಿಬ್ಬಂದಿ ಮತ್ತು 3 ಮೇಲ್ವಿಚಾರಕರು, ಪ್ರತಿಯೊಂದು ಬೋಗಿಗೂ ತರಬೇತಿ ಪಡೆದ 3 ಸಿಬ್ಬಂದಿ ಸದಸ್ಯರನ್ನು ನಿಯೋಜಿಸಲಾಗುತ್ತದೆ. ಮೊದಲನೆ ಸಿಬ್ಬಂದಿ ಕಸವನ್ನು ಸಂಗ್ರಹಿಸುತ್ತಾರೆ, ಒಣ ಒರಸುವಿಕೆಯನ್ನು ನಿರ್ವಹಿಸುತ್ತಾರೆ ಮತ್ತು ಹೊರಗಿನ ಕಿಟಕಿ ಗಾಜನ್ನು ಸ್ವಚ್ಛಗೊಳಿಸುತ್ತಾರೆ. +ಎರಡನೆಯ ಸಿಬ್ಬಂದಿ ಉಪಹಾರ ಮೇಜು ಮತ್ತು ಆಸನಗಳನ್ನು ಶುಚಿಗೊಳಿಸುತ್ತಾರೆ ಮತ್ತು ನೀರಿನಿಂದ ಒರೆಸುತ್ತಾರೆ. ಮೂರನೆಯ ಸಿಬ್ಬಂದಿ ಕಸದಬುಟ್ಟಿಗಳನ್ನು ಶೌಚಾಲಯಗಳನ್ನು ಕನ್ನಡಿಗಳನ್ನು ದ್ವಾರದ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಈ ಪ್ರದೇಶಗಳನ್ನು ಸೂಕ್ಷ್ಮವಾಗಿ ಒರೆಸುತ್ತಾರೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರು ಈ ಕೆಲಸದಲ್ಲಿ ತೊಡಗಿರುವ ಎಲ್ಲಾ ಸಿಬ್ಬಂದಿಗಳ ಕಾರ್ಯವನನ್ನು ಮೆಚ್ಚಿದರು. +14 ನಿಮಿಷಗಳ ಪವಾಡ ಕಾರ್ಯಕ್ರಮವು ವಂದೇ ಭಾರತ್ ರೈಲುಗಳಲ್ಲಿ ಶುಚಿಗೊಳಿಸುವ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸಲು ಮತ್ತು ನಿಖರವಾಗಿ ಹೊಂದಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಪ್ರಕ್ರಿಯೆಯು ಹೆಚ್ಚು ಪರಿಣಾಮಕಾರಿಯಾಗಿದ್ದೂ ನಿಖರವಾದ ಸಮಯದ ಚೌಕಟ್ಟಿನೊಳಗೆ ರೈಲು ಹಿಂದಿರುಗಿ ಹೊರಡಲು ಸಿದ್ಧಮಾಡುತ್ತದೆ ಎಂದು ತಿಳಿಸಿದರು. +ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಉಗ್ರ ಅರೆಸ್ಟ್ +ಭಾನುವಾರ ಮುಂಜಾನೆ, ಮೈಸೂರು ರೈಲು ನಿಲ್ದಾಣದಲ್ಲಿ ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್ ಎಂಬ ಶೀರ್ಷಿಕೆಯಡಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರು, ಇತರ ಹಿರಿಯ ಅಧಿಕಾರಿಗಳು, ವಿಭಾಗದ ಸಿಬ್ಬಂದಿ ಮತ್ತು ಬ್ರಹ್ಮಕುಮಾರಿ ಮತ್ತು ಇತರ ಸಂಸ್ಥೆಗಳ ಸ್ವಯಂಸೇವಕರ ಜೊತೆ ಈ ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿದೆ. \ No newline at end of file diff --git a/eesanje/url_46_339_1.txt b/eesanje/url_46_339_1.txt new file mode 100644 index 0000000000000000000000000000000000000000..6ce616c8b278d12947c434ac0cec1c8ab61fa9fa --- /dev/null +++ b/eesanje/url_46_339_1.txt @@ -0,0 +1,11 @@ +ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಅ.1- ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನವನ್ನು ಹೆಚ್ಚಿಸಿ ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಹಿಳೆಯರ ಮಕ್ಕಳ ಹಾಗೂ ಹಿರಿಯ ಹಿರಿಯ ನಾಗರಿಕರ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದರು. +ಮುಂದಿನ ವರ್ಷದ ಫೆಬ್ರವರಿಯಲ್ಲಿ ತಾವು ಬಜೆಟ್ ಮಂಡಿಸುತ್ತಿದ್ದು, ಆ ವೇಳೆ ಮಾಸಿಕವಾಗಿ ನೀಡಲಾಗುತ್ತಿರುವ 1,200 ರೂ.ಗಳ ವೃದ್ಧಾಪ್ಯ ವೇತನವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಆದರೆ ಎಷ್ಟು ಹೆಚ್ಚಿಸಲಾಗುತ್ತದೆ ಎಂದು ಈಗಲೇ ಸ್ಪಷ್ಟಪಡಿಸುವುದಿಲ್ಲ ಎಂದರು. +ಹಿರಿಯರ ಚೈತನ್ಯ, ಮಾರ್ಗದರ್ಶನಗಳು ಸಮಾಜಕ್ಕೆ ಅಗತ್ಯವಾಗಿವೆ. ಇಂದಿನ ಕಾರ್ಯಕ್ರಮದಲ್ಲಿ ಸನ್ಮಾನಿತರಾದವರು ಸಮಾಜಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದಾರೆ. ಸೂರ್ತಿದಾಯಕ ಕೆಲಸ ಮಾಡಿದ್ದಾರೆ. ಅವರನ್ನು ಗೌರವಿಸುವುದು ನಮ್ಮನ್ನು ನಾವೇ ಗೌರವಿಸಿಕೊಂಡಂತೆ. ಭವಿಷ್ಯದಲ್ಲೂ ಹೆಚ್ಚಿನ ಆರೋಗ್ಯ, ಆಯುಷ್ಯದೊಂದಿಗೆ ಹಿರಿಯರು ಜೀವಿಸಲಿ ಎಂದು ಹಾರೈಸಿದರು. +ಗೋದಾಮಿನಲ್ಲಿ ಬೆಂಕಿ : ಅಪಾರ ಪ್ರಮಾಣದ ಸುಗಂಧದ್ರವ್ಯಗಳು ನಾಶ +ಹಣ್ಣಿನ ವ್ಯಾಪಾರ ಮಾಡಿ ಬಂದ ಎಲ್ಲಾ ದುಡ್ಡನ್ನು ಶೈಕ್ಷಣಿಕ ಅಭಿವೃದ್ಧಿಗಾಗಿ ಖರ್ಚು ಮಾಡಿದ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ ಅವರಿಂದ ಸಮಾಜಕ್ಕೆ ಇನ್ನಷ್ಟು ಸೇವೆ ಸಂದಾಯವಾಗಲಿ ಎಂದು ಹೇಳಿದರು. ಪ್ರತಿಯೊಂದು ಮಗುವೂ ವಿಶ್ವಮಾನವನಾಗಿಯೇ ಭೂಮಿಗೆ ಬರುತ್ತದೆ. ಆದರೆ ಸಾಯುವಾಗ ಸಮಾಜದಿಂದ ಪ್ರಭಾವಿತವಾಗಿ ಬದಲಾವಣೆ ಕಾಣುವುದು ನೋವಿನ ಸಂಗತಿ. ಇಂತಹುದೇ ಧರ್ಮದಲ್ಲಿ ಹುಟ್ಟಬೇಕು ಎಂದು ನಾವ್ಯಾರು ಬಯಸುವುದಿಲ್ಲ. ಧರ್ಮ, ಜಾತಿ ಇರುವುದಕ್ಕಾಗಿ ಅದರಲ್ಲಿ ಹುಟ್ಟುತ್ತೇವೆ, ಅಲ್ಲಿನ ಪದ್ಧತಿಗಳನ್ನು ಆಚರಣೆ ಮಾಡುತ್ತೇವೆ. ನಮ್ಮ ಧರ್ಮಗಳನ್ನು ಪ್ರೀತಿಸುವುದು ಒಳ್ಳೆಯದು. ಹಾಗೆಯೇ ಮತ್ತೊಂದು ಧರ್ಮವನ್ನೂ ಗೌರವಿಸಬೇಕು. ಸಹಿಷ್ಣುತೆ, ಸಾಮರಸ್ಯದಲ್ಲಿ ಬದುಕಿದಾಗ ಮಾತ್ರ ಜೀವನ ಸಾರ್ಥಕ ಎಂದು ಹೇಳಿದರು. +ಹಿರಿಯ ನಾಗರಿಕ ಕಲ್ಯಾಣ ಇಲಾಖೆಯಿಂದ ಸಾಂಸ್ಕøತಿಕ ಚಟುವಟಿಕೆ ಹಾಗೂ ಹಿರಿಯರ ಸಕ್ರಿಯತೆಗೆ ಹಲವು ಚಟುವಟಿಕೆಗಳನ್ನು ಆಯೋಜನೆಗೊಂಡಿರುವುದು ಸ್ವಾಗತಾರ್ಹ. ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಿಸಲು ಮತ್ತು ಅಲ್ಲಿನ ಪರಿಸ್ಥಿತಿ ಸುಧಾರಿಸುವಲ್ಲಿ ನಮ್ಮ ಸರ್ಕಾರ ಆದ್ಯತೆ ನೀಡಲಿದೆ ಎಂದು ಹೇಳಿದರು. +ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ರಾಜ್ಯದಲ್ಲಿ 59 ಲಕ್ಷ ಹಿರಿಯ ನಾಗರಿಕರಿದ್ದಾರೆ. ಅವರಲ್ಲಿ 49 ಲಕ್ಷ ಮಂದಿಗೆ ಮಾಸಿಕ 1,200 ರೂ. ವೃದ್ಧಾಪ್ಯ ವೇತನ ನೀಡುತ್ತಿದ್ದೇವೆ. ಪ್ರಸ್ತುತ ದಿನಮಾನದಲ್ಲಿ ಮಹಿಳಾ ಸಬಲೀಕರಣ ಸೇರಿದಂತೆ ಪಂಚಖಾತ್ರಿ ಯೋಜನೆಗಳ ಮೂಲಕ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಮುಖ್ಯಮಂತ್ರಿಯವರು ಹಿರಿಯ ನಾಗರಿಕರಿಗೆ ಮಾಸಾಶನವನ್ನು 2,000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಮನವಿ ಮಾಡಿದರು. +ಸಾಂಸ್ಕøತಿಕ, ಕ್ರೀಡೆ, ಆರೋಗ್ಯ, ಆರೈಕೆ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನೂ ಒಂದೇ ಸೂರಿನಡಿ ಕಲ್ಪಿಸಿ, ಜಿಲ್ಲೆಗೊಂದರಂತೆ ಹಿರಿಯರ ಕಲ್ಯಾಣ ಕೇಂದ್ರಗಳನ್ನು ಸ್ಥಾಪಿಸಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಕೇಂದ್ರದಿಂದ ಶೇ. 60 ರಷ್ಟು, ರಾಜ್ಯಸರ್ಕಾರ ಶೇ.40 ರಷ್ಟು ಅನುದಾನ ಬಳಸಿಕೊಳ್ಳಲಾಗುವುದು. ವೃದ್ಧಾಶ್ರಮಗಳಲ್ಲಿ ಸಾಕಷ್ಟು ನ್ಯೂನತೆಗಳಿರುವುದನ್ನು ತಾವು ಗಮನಿಸಿದ್ದು, ಅವುಗಳನ್ನು ಸರಿಪಡಿಸಲು ಹಂತಹಂತವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. +“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ” +ಕಾರ್ಯಕ್ರಮಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ನಾಗರಿಕರ ಜೊತೆ ಸಮಾಲೋಚನೆ ನಡೆಸಿದರು. ಸಂಚಾರಿ ಆರೋಗ್ಯ ತಪಾಸಣಾ ಘಟಕದಲ್ಲಿ ತಮ್ಮ ರಕ್ತದೊತ್ತಡ ಹಾಗೂ ಇತರ ಪರೀಕ್ಷೆಗಳನ್ನು ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಹರೇಕಳ ಹಾಜಪ್ಪ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲï, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಅವರನ್ನು ಸನ್ಮಾನಿಸಲಾಯಿತು. \ No newline at end of file diff --git a/eesanje/url_46_339_10.txt b/eesanje/url_46_339_10.txt new file mode 100644 index 0000000000000000000000000000000000000000..8e0e317042e6069ebf1e650eaaa8fded23b5f859 --- /dev/null +++ b/eesanje/url_46_339_10.txt @@ -0,0 +1,9 @@ +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-09-2023) +ನಿತ್ಯ ನೀತಿ :ಮಾನವ ಜೀವನ ಯಾತ್ರೆಗೆ ನಂದಾ ದೀವಿಗೆಯಾಗಿ ಬೆಳಕು ನೀಡಬಲ್ಲ ಸಾಮಥ್ರ್ಯವನ್ನು ಹೊಂದಿರುವುದೇ ಸನಾತನ ಧರ್ಮ. +ಪಂಚಾಂಗ : ಶನಿವಾರ, 30-09-2023ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷತಿಥಿ: ಪ್ರತಿಪದ್ / ನಕ್ಷತ್ರ: ರೇವತಿ / ಯೋಗ: ಧ್ರುವ / ಕರಣ: ತೈತಿಲ +ಸೂರ್ಯೋದಯ : ಬೆ.06.09ಸೂರ್ಯಾಸ್ತ : 06.11ರಾಹುಕಾಲ : 9.00-10.30ಯಮಗಂಡ ಕಾಲ : 1.30-3.00ಗುಳಿಕ ಕಾಲ : 6.00-7.30 +ಇಂದಿನ ರಾಶಿಭವಿಷ್ಯ +ಮೇಷ: ದೂರ ಪ್ರಯಾಣದಿಂದ ತೊಂದರೆ. ಅನಗತ್ಯ ಸಮಸ್ಯೆಗಳು ಎದುರಾಗಬಹುದು.ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.ಮಿಥುನ: ಭೂಮಿ ವಿಚಾರದಲ್ಲಿ ನಷ್ಟ ಅನುಭವಿಸುವಿರಿ. ನಂಬಿಕಸ್ಥ ರಿಂದ ದ್ರೋಹವಾಗಲಿದೆ. +ಕಟಕ: ಆರೋಗ್ಯ ಕಾಪಾಡಿ ಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಿ. ಬಂಧುಗಳೊಂದಿಗೆ ಅನಗತ್ಯ ವಿವಾದ ಬೇಡ.ಸಿಂಹ: ಸಹೋದರರೊಂದಿಗೆ ಮನಸ್ತಾಪವಾಗಲಿದೆ. ಮನಸ್ಸಿನಲ್ಲಿ ಗೊಂದಲ.ಕನ್ಯಾ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಕುಲದೇವರನ್ನು ಪ್ರಾರ್ಥಿಸಿ. +ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ತೋರಿಸುವರು. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.ವೃಶ್ಚಿಕ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ.ಧನುಸ್ಸು: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ. +ಮಕರ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.ಕುಂಭ: ಸ್ವಸಾಮಥ್ರ್ಯದಿಂದ ಪ್ರಗತಿ ಸಾಸುವಿರಿ. ಧಾರ್ಮಿಕ ಆಚರಣೆಗಳಿಂದ ತೃಪ್ತಿ ಸಿಗಲಿದೆ.ಮೀನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ. \ No newline at end of file diff --git a/eesanje/url_46_339_11.txt b/eesanje/url_46_339_11.txt new file mode 100644 index 0000000000000000000000000000000000000000..761424951f48ca41b5861edc9a0ca11f8cba8f38 --- /dev/null +++ b/eesanje/url_46_339_11.txt @@ -0,0 +1,7 @@ +ಸಂಕಷ್ಟ ಸೂತ್ರ ರಚನೆಗೆ ಬಗ್ಗೆ ಚರ್ಚೆ : ಡಿಸಿಎಂ ಡಿಕೆಶಿ +ಬೆಂಗಳೂರು, ಸೆ.29- ಸಂಕಷ್ಟ ಸೂತ್ರ ರಚನೆಯ ಬಗ್ಗೆ ರಾಜ್ಯ ಸರ್ಕಾರ ತನ್ನ ಪಾಲಿನ ಸೂತ್ರಗಳನ್ನು ರೂಪಿಸಲು ಇಂದು ನಡೆಯುವ ಮಹತ್ವದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸೂತ್ರವನ್ನು ಕೇಂದ್ರ ಸರ್ಕಾರ ರಚನೆ ಮಾಡಬೇಕಿದೆ. ಬೇರೆ ಪಕ್ಷದವರು ಹೇಳಿದಂತೆ ನಾನು ಮಾತನಾಡಲು ಸಾಧ್ಯವಿಲ್ಲ. ಸಚಿವನಾಗಿ ಜವಾಬ್ದಾರಿಯುತವಾಗಿ ಮಾತನಾಡಬೇಕಿದೆ. ಸಂಕಷ್ಟ ಸೂತ್ರಕ್ಕೆ ಮೊದಲು ನಮ್ಮ ಸಮಸ್ಯೆ ಬಗ್ಗೆ ಮಾರ್ಗಸೂಚಿ ಸಿದ್ದ ಪಡಿಸಿಕೊಳ್ಳ ಬೇಕಿದೆ. ಅದಕ್ಕಾಗಿ ಇಂದು ಮಹತ್ವದ ಸಭೆ ನಡೆಸಲಾಗುತ್ತಿದೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಿವೃತ್ತ ನ್ಯಾಯಾೀಶರು, ಮಾಜಿ ಅಡ್ವೋಕೆಟ್ ಜನರಲ್ಗಳು ಹಾಗೂ ಹಿರಿಯ ವಕೀಲರ ತಂಡದ ಜೊತೆ ಚರ್ಚೆ ನಡೆಸಲಾಗುತ್ತಿದೆ ಎಂದರು. ಇಂದು ಕಾವೇರಿ ನೀರು ನಿರ್ವಹಣಾ ಪ್ರಾಕಾರದ ಸಭೆ ನಡೆಯುತ್ತಿದೆ. +15 ವರ್ಷ ಹಳೆಯ 5 ಸಾವಿರ ಸರ್ಕಾರಿ ವಾಹನಗಳನ್ನು ನಾಶಪಡಿಸಲು ಅನುಮತಿ +ಅಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯ ಆದೇಶವನ್ನು ಪ್ರಶ್ನೆ ಮಾಡಿದ್ದೇವೆ. ಸದ್ಯಕ್ಕೆ ಮಳೆಯಿಲ್ಲ. ಹಾಗಾಗಿ ಸಮಿತಿಯ ಆದೇಶದಂತೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಪ್ರತಿಪಾದಿಸಿದ್ದೇವೆ ಎಂದು ಹೇಳಿದರು. +ಕಾವೇರಿ ವಿಷಯದಲ್ಲಿ ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ. ಕೆಲ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಆದರೆ ಸರ್ಕಾರ ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿದೆ. ಎಲ್ಲೆಡೆ ಸಂಚಾರ ಎಂದಿನಂತಿದೆ. ಅಂಗಡಿ, ವ್ಯಾಪಾರ ವಹಿವಾಟುಗಳು ಮುಂದುವರೆದಿದೆ. ಶಾಂತಿಯುತ ವಾತಾವರಣವನ್ನು ಜನ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. \ No newline at end of file diff --git a/eesanje/url_46_339_12.txt b/eesanje/url_46_339_12.txt new file mode 100644 index 0000000000000000000000000000000000000000..0cd25520f0a1ce0c43b82618abddb2395f9c9462 --- /dev/null +++ b/eesanje/url_46_339_12.txt @@ -0,0 +1,8 @@ +15 ವರ್ಷ ಹಳೆಯ 5 ಸಾವಿರ ಸರ್ಕಾರಿ ವಾಹನಗಳನ್ನು ನಾಶಪಡಿಸಲು ಅನುಮತಿ +ಬೆಂಗಳೂರು, ಸೆ.29- ಹದಿನೈದು ವರ್ಷಗಳನ್ನು ಪೂರೈಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳು, ನಿಗಮ, ಮಂಡಳಿಗಳು, ಸ್ಥಳೀಯ ಸಂಸ್ಥೆಗಳಲ್ಲಿನ ಐದು ಸಾವಿರ ವಾಹನಗಳನ್ನು ನಾಶಪಡಿಸಲು ಸರ್ಕಾರ ಅನುಮೋದನೆ ನೀಡಿದೆ. +ರಾಜ್ಯದಲ್ಲಿನ ಹಳೆಯ ವಾಹನಗಳನ್ನು ನಾಶಪಡಿಸಲು ನೊಂದಾಯಿತ ವಾಹನಗಳ ಸ್ಕ್ರಾಪಿಂಗ್ ಪಾಲಿಸಿ 2022ರ ಅಡಿಯಲ್ಲಿ 15 ವರ್ಷ ಪೂರೈಸಿರುವ ಸರ್ಕಾರಿ ಸ್ವಾಮ್ಯದ ವಾಹನಗಳನ್ನು ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ ಹಂತ-ಹಂತವಾಗಿ ನಾಶಪಡಿಸಲು ಸಾರಿಗೆ ಇಲಾಖೆ ಅನುಮೋದನೆ ನೀಡಿ ಆದೇಶಿಸಿದೆ. +ಅತೀ ಹೆಚ್ಚು ವರ್ಷಗಳನ್ನು ಪೂರೈಸಿರುವ ವಾಹನಗಳನ್ನು ಮೊದಲು ನಾಶ ಪಡಿಸಲು ಆದ್ಯತೆ ನೀಡಬೇಕು ಎಂದು ಸಾರಿಗೆ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ನಾಶಪಡಿಸಲು ಉದ್ದೇಶಿಸಿರುವ ವಾಹನದ ಮೇಲಿನ ಕೊನೆಯ ಒಂದು ವರ್ಷದಲ್ಲಿ ಸಾರಿಗೆ ಇಲಾಖೆಯ ಶಾಸನದ ಕ್ರಮದಡಿಯಲ್ಲಿ ದಾಖಲಾದ ಪ್ರಕರಣದ ದಂಡಗಳು ಮತ್ತು ಪೊಲೀಸ್ ಇಲಾಖೆಯ ಸಂಚಾರ ನಿಯಮ ಉಲ್ಲಂಘಟನೆಯಡಿ ದಾಖಲಾದ ಪ್ರಕರಣಗಳಿಗೆ ಸೀಮಿತಗೊಳಿಸಿ ದಂಡಗಳ ವಸೂಲಾತಿಗಳಿಂದ ವಿನಾಯಿತಿ ನೀಡಲಾಗಿದೆ. +ಕರ್ನಾಟಕ ಬಂದ್ : ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಕಂಪ್ಲೀಟ್ ಚಿತ್ರಣ +ಈ ವಿನಾಯಿತಿಯೂ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಮಾತ್ರ ಅನ್ವಯವಾಗುವಂತೆ ವಿನಾಯಿತಿ ನೀಡಲಾಗಿದೆ. ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. 15 ವರ್ಷ ಮೀರಿದ ಸರ್ಕಾರಿ ವಾಹನಗಳ ನೊಂದಾಯಿತ ಪ್ರಮಾಣಪತ್ರವನ್ನು ನವೀಕರಿಸಲು ನಿಷೇಸಲಾಗಿದ್ದು, ಅಂತಹ ವಾಹನಗಳನ್ನು ಕಡ್ಡಾಯವಾಗಿ ಕೇಂದ್ರ ಮೋಟಾರು ವಾಹನಗಳ ನಿಯಮದ ಪ್ರಕಾರ ನಾಶಪಡಿಸಬೇಕಾಗಿದೆ. +ನಾಶಪಡಿಸಲಾದ ವಾಹನಗಳ ಮೇಲಿನ ಬಾಕಿ ಇರುವ ಹೊಣೆಗಾರಿಕೆಗಳನ್ನು ಒಂದು ಬಾರಿಗೆ ಅನ್ವಯವಾಗುವಂತೆ ಒಂದು ವರ್ಷದ ಅವಗೆ ಸೀಮಿತವಾಗಿ ಮನ್ನಾ ಮಾಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ದೇಶಿಸಿದೆ. ಅಲ್ಲದೆ, ಹಳೆಯ ವಾಹನಗಳನ್ನು ನಾಶಮಾಡಲು ಕೇಂದ್ರ ಸರ್ಕಾರ 200 ಕೋಟಿ ರೂ.ಗಳನ್ನು ಪೊ್ರೀತ್ಸಾಹವನ್ನು ನಿಗದಿಪಡಿಸಿದೆ. +ಮೂರು ಮೈಸ್ಟೋನ್ಗಳ ಗುರಿಗಳನ್ನು ಪೊ್ರೀತ್ಸಾಹ ಧನ ಪಡೆಯಲು ನಿಗದಿಪಡಿಸಿದೆ. ಅದರಂತೆ ರಾಜ್ಯ ಸರ್ಕಾರವೂ ಮೊದಲ ಮೈನ್ಸ್ ಸ್ಟೋರ್ನಲ್ಲಿ ನಿಗದಿ ಪಡಿಸಿರುವ ಗುರಿಗಳನ್ನು ಪೂರ್ಣಗೊಳಿಸಿದರೆ ಕೇಂದ್ರ ಸರ್ಕಾರದ ನೂರು ಕೋಟಿ ಪೊ್ರೀತ್ಸಾಹಕ ಅನುದಾನ ಲಭ್ಯವಾಗಲಿದೆ. \ No newline at end of file diff --git a/eesanje/url_46_339_2.txt b/eesanje/url_46_339_2.txt new file mode 100644 index 0000000000000000000000000000000000000000..0458852fb0b311cffaa40bd3a4bbfb9927bc63c2 --- /dev/null +++ b/eesanje/url_46_339_2.txt @@ -0,0 +1,10 @@ +ಬಿಜೆಪಿ ಅಧಿಕಾರದಲ್ಲಿದ್ದಾಗ ಪೊಲೀಸ್ ಠಾಣೆಗೆ ಕೂಡ ರಕ್ಷಣೆ ಇರಲಿಲ್ಲ : ಸಚಿವ ಖರ್ಗೆ +ಬೆಂಗಳೂರು,ಅ.1- ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದು ಬೆಳಿಗ್ಗೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಮುಖಂಡರೂ ಆಗಿರುವ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್ ಈ ಸಂದರ್ಭದಲ್ಲಿ ಹಾಜರಿದ್ದರು. ಹೆಚ್ಚುವರಿ ಉಪಮುಖ್ಯಮಂತ್ರಿಗಳ ಬೇಡಿಕೆ ವಿವಾದದ ನಡುವೆಯೇ ನಡೆದಿರುವ ಈ ಸಭೆ ಕುತೂಹಲ ಕೆರಳಿಸಿದೆ. +ಬಿಜೆಪಿ ಟೀಕೆ ಅಪ್ರಸ್ತುತ:ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಬೆಂಗಳೂರಿನ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ಕುರಿತು ಬಿಜೆಪಿ ನಾಯಕರು ಟೀಕೆ ಮಾಡುತ್ತಿರುವುದು ಅಪ್ರಸ್ತುತ. ಗಲಾಟೆ ನಡೆದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಗೃಹ ಸಚಿವರಾಗಿದ್ದವರ್ಯಾರು, ಮುಖ್ಯಮಂತ್ರಿಯಾಗಿದ್ದವರ್ಯಾರು ಎಂದು ಪ್ರಶ್ನಿಸಿದರು. +“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ” +ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಶಾಸಕರ ಮನೆಯಷ್ಟೇ ಅಲ್ಲ, ಕನಿಷ್ಠ ಪೊಲೀಸ್ ಠಾಣೆಯನ್ನೂ ರಕ್ಷಣೆ ಮಾಡಲಾಗಲಿಲ್ಲ. ಗಲಭೆಕೋರರು ಠಾಣೆಗೆ ಬೆಂಕಿ ಹಚ್ಚಿದ್ದರು. ಆ ಎಲ್ಲಾ ಘಟನೆಗಳು ನಮ್ಮ ಕಣ್ಣೆದುರಿಗೇ ಇವೆ. ಬಿಜೆಪಿಯವರು ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು. +ಈಗಷ್ಟೇ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಬಂದಿದೆ. ಅದರಲ್ಲಿ ಯಾವೆಲ್ಲಾ ಅಂಶಗಳನ್ನು ಪರಿಗಣಿಸಬೇಕು ಎಂಬ ವಿಚಾರಗಳನ್ನು ಸರ್ಕಾರ ಪರಿಶೀಲಿಸಲಿದೆ. ಪ್ರಕರಣ ನಡೆದಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂಬುದಕ್ಕೆ ಮೊದಲು ಉತ್ತರ ಕೊಡಲಿ ಎಂದು ಸವಾಲು ಹಾಕಿದರು. +ಗಲಭೆ ಕುರಿತು ಬಿಜೆಪಿಯವರು ತನಿಖೆ ಮಾಡಿ ವರದಿ ನೀಡಿಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆಗಿದೆ. ಪ್ರತಿಯೊಂದಕ್ಕೂ ಬಿಜೆಪಿಯವರು ಹೇಳಿದಾಕ್ಷಣವೇ ನಾವು ಪ್ರತಿಕ್ರಿಯಿಸಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಜೆಡಿಎಸ್ ನಾಯಕರು ವೈಯಕ್ತಿಕ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಮೈತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವವರ ವಿರುದ್ಧ ಕುಮಾರಸ್ವಾಮಿ ಉಡಾಫೆಯಿಂದ ಮಾತನಾಡುತ್ತಿದ್ದಾರೆ. ಇದರ ಅರ್ಥ ಕುಮಾರಸ್ವಾಮಿಯವರಿಗೆ ಜನರೂ ಬೇಕಾಗಿಲ್ಲ, ಜಾತ್ಯತೀತ ತತ್ವ ಮತ್ತು ಸಂವಿಧಾನವೂ ಬೇಕಾಗಿಲ್ಲ ಎಂಬುದಾಗಿದೆ ಎಂದರು. +ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ +ಜಾತ್ಯತೀತ ಜನತಾದಳದಲ್ಲಿ ಈಗ ಜಾತ್ಯತೀತ ಜನರೂ ಇಲ್ಲ, ಜಾತ್ಯತೀತ ತತ್ವವೂ ಇಲ್ಲ. ನಾಯಕರ ವಲಸೆ ಹೆಚ್ಚಾಗುತ್ತಿರುವುದರಿಂದ ಮುಂದೆ ದಳವೂ ಉಳಿಯುವುದಿಲ್ಲ. ಅಲ್ಪಸಂಖ್ಯಾತರಷ್ಟೇ ಅಲ್ಲ, ತತ್ವ ಸಿದ್ಧಾಂತವನ್ನು ನಂಬಿ ಜೆಡಿಎಸ್‍ನಲ್ಲಿದ್ದ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. +ರಾಜಕೀಯದಲ್ಲಿರುವವರು ಕುಟುಂಬ ಅಥವಾ ವ್ಯಕ್ತಿಯನ್ನಷ್ಟೇ ನಂಬಿ ಪಕ್ಷದಲ್ಲಿರುವುದಿಲ್ಲ, ಸಿದ್ಧಾಂತವನ್ನು ನಂಬಿರುತ್ತಾರೆ. ಅದಕ್ಕೆ ಧಕ್ಕೆಯಾದಾಗ ಸಹಜವಾಗಿಯೇ ಅಲ್ಲಿಂದ ಹೊರಬರುವುದು ಸಾಮಾನ್ಯ. ಜೆಡಿಎಸ್‍ನಿಂದ ಹೊರಬಂದವರು ಕಾಂಗ್ರೆಸ್ ಸಿದ್ಧಾಂತ ನಂಬಿ ನಮ್ಮ ಪಕ್ಷ ಸೇರುವುದಾದರೆ ಸ್ವಾಗತಿಸುತ್ತೇವೆ ಎಂದರು. \ No newline at end of file diff --git a/eesanje/url_46_339_3.txt b/eesanje/url_46_339_3.txt new file mode 100644 index 0000000000000000000000000000000000000000..a3d7a78d08f69ce59c3354afe352e8aced465775 --- /dev/null +++ b/eesanje/url_46_339_3.txt @@ -0,0 +1,8 @@ +ಶೆಟ್ಟರ್‌ಗೆ ಡಿಸಿಎಂ ಸ್ಥಾನ ನೀಡುವಂತೆ ಸಿಎಂಗೆ ಪತ್ರ +ಬೆಂಗಳೂರು,ಅ.1- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪದ ನಡುವೆಯೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ. +ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವೀರಶೈವ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಕಾಂಗ್ರೆಸ್‍ನಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಚರ್ಚೆಗಳು ನಡೆದ ವೇಳೆಯಲ್ಲಿ ಪ್ರಭಾವಿ ಮುಖಂಡರಾಗಿರುವ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರು ಮುಂಚೂಣಿಗೆ ಬಂದಿತ್ತು. ಸಿದ್ದರಾಮಯ್ಯ ಅವರ ಆಪ್ತರಾಗಿರುವ ಎಂ.ಬಿ.ಪಾಟೀಲ್‍ಗೆ ಪೈಪೋಟಿ ನೀಡುವಂತೆ ಜಗದೀಶ್ ಶೆಟ್ಟರ್ ಅವರ ಹೆಸರು ಕೇಳಿಬಂದಿದೆ. +ಶ್ಯಾಮನೂರು ಶಿವಶಂಕರಪ್ಪ ಅವರು ಸಮುದಾಯಕ್ಕೆ ಉಪಮುಖ್ಯಮಂತ್ರಿ ಹುದ್ದೆ ಅಗತ್ಯವಿಲ್ಲ. ನಮಗೇನಿದ್ದರೂ ಮುಖ್ಯಮಂತ್ರಿ ಸ್ಥಾನವೇ ಬೇಕು ಎಂದು ಹೇಳಿಕೆ ನೀಡಿದ್ದರು. ಅದರ ಹೊರತಾಗಿಯೂ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜಾತಿವಾರು ಆದ್ಯತೆ ನೀಡಬೇಕು. 5 ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಚರ್ಚೆಗಳಾಗುತ್ತಿವೆ. +ಮಂಗೋಲಿಯಾದಲ್ಲಿ 648 ಮಿಲಿಯನ್ ಡಾಲರ್ ಗುತ್ತಿಗೆ ಪಡೆದ ಎಂಇಐಎಲ್ +ಈ ಹಂತದಲ್ಲಿ ಜಗದೀಶ್ ಶೆಟ್ಟರ್‍ರನ್ನು ಲಿಂಗಾಯಿತ ಸಮುದಾಯದಿಂದ ಪರಿಗಣಿಸಬೇಕು ಎಂಬ ಬೇಡಿಕೆ ಸಂಚಲನ ಮೂಡಿಸಿದೆ. ವಿಧಾನಸಭೆ ಚುನಾವಣಾ ವೇಳೆ ಬಿಜೆಪಿಯಿಂದ ಕಾಂಗ್ರೆಸ್‍ಗೆ ವಲಸೆ ಬಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಅವರನ್ನು ಕಾಂಗ್ರೆಸ್ ಗೌರವಯುತವಾಗಿ ನಡೆಸಿಕೊಳ್ಳುವ ಸಲುವಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದೆ. +ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆ 209 ರೂ. ಏರಿಕೆ +ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಗದೀಶ್ ಶೆಟ್ಟರ್ ಅವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಚರ್ಚೆಗಳಿವೆ. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡು ಪಕ್ಷಾಂತರ ಮಾಡುತ್ತಿರುವ ಹಲವು ನಾಯಕರನ್ನು ಸೆಳೆಯಲು ಜಗದೀಶ್ ಶೆಟ್ಟರ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಉಪಮುಖ್ಯಮಂತ್ರಿ ಹುದ್ದೆ ಚರ್ಚೆಯಾದ ಹೊತ್ತಿನಲ್ಲಿ ಅವರ ಹೆಸರು ಕೇಳಿಬಂದಿರುವುದು ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_339_4.txt b/eesanje/url_46_339_4.txt new file mode 100644 index 0000000000000000000000000000000000000000..dd73b1c1a29fad5dd4753413a8674d2aeb2878be --- /dev/null +++ b/eesanje/url_46_339_4.txt @@ -0,0 +1,10 @@ +ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಳಗಾವಿಯಲ್ಲಿ ವೇದಿಕೆ ಸಿದ್ದ +ಬೆಂಗಳೂರು,ಅ.1- ಕುರುಬ ಸಮುದಾಯದಲ್ಲೇ ದೇಶಾದ್ಯಂತ ಪ್ರಭಾವಿ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ವಿರೋಧಿಗಳಿಗೆ ಅಕ್ಟೋಬರ್ 3 ರಂದು ನಡೆಯಲಿರುವ ರಾಷ್ಟ್ರೀಯ ಸಮಾವೇಶದಲ್ಲಿ ಪ್ರತ್ಯುತ್ತರ ನೀಡಲಿದ್ದಾರೆ. +ಬೆಳಗಾವಿಯಲ್ಲಿ ಅಕ್ಟೋಬರ್ 3 ರಂದು ನಡೆಯುವ ರಾಷ್ಟ್ರೀಯ ಮಟ್ಟದ ಕುರುಬರ ಸಮಾವೇಶ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶನದ ವೇದಿಕೆಯಾಗಿ ಮಾರ್ಪಡುತ್ತಿದೆ. ಸುಮಾರು 2 ಲಕ್ಷ ಜನರಿಗೂ ಮೇಲ್ಪಟ್ಟ ಪ್ರತಿನಿಧಿಗಳು ಭಾಗವಹಿಸುವ ಈ ಸಮಾವೇಶದಲ್ಲಿ ವಿವಿಧ ರಾಜ್ಯಗಳ ನೂರಾರು ಪ್ರಮುಖರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. +ಕಾಂಗ್ರೆಸ್‍ನಲ್ಲಿ ಒಳಬೇಗುದಿಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ನಡೆಯುತ್ತಿರುವ ಅಖಿಲ ಭಾರತೀಯ ರಾಷ್ಟ್ರೀಯ ಕುರುಬ ಸಮಾವೇಶ ಮತ್ತು 9ನೇ ವಾರ್ಷಿಕ ರಾಷ್ಟ್ರೀಯ ಪ್ರತಿನಿಧಿಗಳ ಮಹಾ ಸಮಾವೇಶ ಹಾಗೂ ರಾಷ್ಟ್ರೀಯ ಸನ್ಮಾನ ಕಾರ್ಯಕ್ರಮಗಳು ಕುತೂಹಲ ಕೆರಳಿಸಿದೆ. ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳಿಗೆ ಇದು ಪ್ರತ್ಯುತ್ತರವಾಗಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ. +ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ +ಇತ್ತೀಚೆಗೆ ಕಾಂಗ್ರೆಸ್‍ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‍ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ, ಅಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಸರ್ಕಾರದಲ್ಲಿ ಕೆಲವರಿಗೆ ಮಾತ್ರ ಆದ್ಯತೆ ಸಿಗುತ್ತಿದೆ. ಒಂದು ಸಮುದಾಯಕ್ಕೆ ಎಲ್ಲಾ ಅವಕಾಶಗಳೂ ಲಭ್ಯವಾಗುತ್ತಿವೆ. ಸಣ್ಣಪುಟ್ಟ ಹಾಗೂ ಹಿಂದುಳಿದ ವರ್ಗಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನ ಹೊರಹಾಕಿದರು. +ಅದರ ಬೆನ್ನಲ್ಲೇ ಇತ್ತೀಚೆಗೆ ಹಿರಿಯ ಕಾಂಗ್ರೆಸ್ ನಾಯಕ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯಿತರನ್ನು ಕಡೆಗಣಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಗೊಂದಲಗಳಿಗೆ ಸಮಾವೇಶದಲ್ಲಿ ಸಿದ್ದರಾಮಯ್ಯ ತಕ್ಕ ಉತ್ತರ ನೀಡುವ ಸಾಧ್ಯತೆಯಿದೆ. ಕರ್ನಾಟಕದಲ್ಲಷ್ಟೇ ಅಲ್ಲದೆ ದಕ್ಷಿಣ ಭಾರತದ ರಾಜ್ಯಗಳಲ್ಲೂ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರಾಗಿರುವ ಸಿದ್ದರಾಮಯ್ಯ ಕುರುಬ ಸಮುದಾಯದಲ್ಲಿ ಏಕಮೇವಾದ್ವಿತೀಯರಾಗಿದ್ದಾರೆ. +ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ರಾಜ್ಯ ರಾಜಕಾರಣದಲ್ಲಿ ತಮಗೆ ಆಸಕ್ತಿ ಎಂದು ಪದೇಪದೇ ಹೇಳುವ ಸಿದ್ದರಾಮಯ್ಯ, ಸಮುದಾಯದ ಸಂಘಟನೆ ವಿಷಯ ಬಂದಾಗ ಬದ್ಧತೆಯ ರಾಜಕಾರಣಿಯಾಗಿ ನಡೆದುಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ವೈಭವೀಕರಿಸಲು ಈ ಸಮಾವೇಶದಲ್ಲಿ ವೇದಿಕೆ ಸಜ್ಜುಗೊಂಡಿದೆ. +ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು +ಈ ಹಿಂದೆ ದಾವಣಗೆರೆಯಲ್ಲಿ ನಡೆದ ಸಿದ್ಧರಾಮೋತ್ಸವ ಶಕ್ತಿ ಪ್ರದರ್ಶನದ ವೇದಿಕೆಯಾಗಿತ್ತು. ಅದು ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಹೆಚ್ಚು ಬಲ ತಂದುಕೊಟ್ಟಿತ್ತು. ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿದಿರುವ ಸಿದ್ದರಾಮಯ್ಯ ಅವರನ್ನು ಬೆಳಗಾವಿ ಸಮಾವೇಶ ಮತ್ತಷ್ಟು ಗಟ್ಟಿಗೊಳಿಸಲಿದೆ ಎಂಬ ಲೆಕ್ಕಾಚಾರಗಳಿವೆ. \ No newline at end of file diff --git a/eesanje/url_46_339_5.txt b/eesanje/url_46_339_5.txt new file mode 100644 index 0000000000000000000000000000000000000000..7d930afa2f68af7351ff1d9feefa3590432938fb --- /dev/null +++ b/eesanje/url_46_339_5.txt @@ -0,0 +1,7 @@ +“ಪಕ್ಷ ತೊರೆಯುತ್ತಿರುವವರ ಸಮಾಧಾನಕ್ಕೆ ಹೆಚ್ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ” +ರಾಯಚೂರು,ಅ.1- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದಂತೆ 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ, 5 ವರ್ಷ ಅಧಿಕಾರವ ಪೂರ್ಣಗೊಳಿಸಲಿದೆ ಎಂದು ಸಣ್ಣ ನೀರಾವರಿ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜ್ ಸ್ಪಷ್ಟಪಡಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಿಂದ ಅಸಮಾಧಾನಗೊಂಡು ಜೆಡಿಎಸ್‍ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರಿಗೆ ಧೈರ್ಯ ಹೇಳುವ ಸಲುವಾಗಿ ಕುಮಾರಸ್ವಾಮಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು ಲೇವಡಿ ಮಾಡಿದರು. +ಈ ಹಿಂದೆ ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಅದನ್ನು ಉಳಿಸಿಕೊಳ್ಳಲಾಗಲಿಲ್ಲ. ಕಾಂಗ್ರೆಸ್‍ನ ಎಲ್ಲರೂ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದ್ದರು. ಶಕ್ತಿ ಇದ್ದರೆ ಅವರು ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಬಹುದಿತ್ತು. ಆದರೆ ಕುಮಾರಸ್ವಾಮಿಯವರಿಂದ ಅದು ಸಾಧ್ಯವಾಗಲಿಲ್ಲ ಎಂದರು. +ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ, ತಾಯಿ ಸೇರಿ ಮೂವರೂ ನೀರುಪಾಲು +ಕುಮಾರಸ್ವಾಮಿ ಅವರಿಗೆ ಪಕ್ಷ ಉಳಿಸಿಕೊಳ್ಳಬೇಕಿದೆ. ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಕಾರ್ಯಕರ್ತರಿಗೆ ಧೈರ್ಯ ಹೇಳಲು ಅರ್ಥವಿಲ್ಲದ ಮಾತುಗಳನ್ನಾಡುತ್ತಿದ್ದಾರೆ. ಅದಕ್ಕೆ ಒತ್ತು ನೀಡಬೇಕಿಲ್ಲ. ಪ್ರತಿಯೊಂದರಲ್ಲೂ ಹಿಟ್ ಅಂಡ್ ರನ್ ಧೋರಣೆ ಅನುಸರಿಸುತ್ತಾರೆ ಎಂದು ತಿರುಗೇಟು ನೀಡಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರರನ್ನು ವರುಣ ಕ್ಷೇತ್ರದ ಶಾಸಕ ಎಂದು ಎಲ್ಲಿಯೂ ಹೇಳಿಲ್ಲ. ಸಹಜವಾಗಿ ರಾಜಕಾರಣಿಗಳು ಕ್ಷೇತ್ರದ ಜನ ಬಂದಾಗ ಈ ರೀತಿ ಮಾತನಾಡುವುದು ಸರ್ವೆ ಸಾಮಾನ್ಯ. ಈ ಹಿಂದೆ ದೇವೇಗೌಡರು ಪ್ರಧಾನಿಯಾಗಿದ್ದಾಗ ಕುಮಾರಸ್ವಾಮಿ ಹೇಗೆಲ್ಲಾ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_339_6.txt b/eesanje/url_46_339_6.txt new file mode 100644 index 0000000000000000000000000000000000000000..39d4b48772ff25ef1085a12331c72b2dfb2b9186 --- /dev/null +++ b/eesanje/url_46_339_6.txt @@ -0,0 +1,7 @@ +ಅರಣ್ಯ ಇಲಾಖೆಯ ಕಾರ್ಯಕ್ಕೆ ರಾಜ್ಯಪಾಲರ ಮೆಚ್ಚುಗೆ +ಬೆಂಗಳೂರು, ಅ.1- ರಾಜ್ಯದ ಹಸಿರು ಹೊದಿಕೆ ಹೆಚ್ಚಿಸಲು ಅರಣ್ಯ ಇಲಾಖೆ ಮಾಡುತ್ತಿರುವ ಕಾರ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜಭವನದಲ್ಲಿಂದು ಅರಣ್ಯ ಇಲಾಖೆ 69ನೇ ವನ್ಯಜೀವಿ ಸಪ್ತಾಹದ ಬಗ್ಗೆ ಜನಜಾಗೃತಿ ಮೂಡಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಂಟೇಜ್ ವಾಹನ ಯಾನಕ್ಕೆ ಹಸಿರು ನಿಶಾನೆ ನೀಡುವ ಮೂಲಕ ಮಾತನಾಡಿದ ಅವರು, ತಾವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರ ಸಂಗ್ರಾಹಾಲಯದಲ್ಲಿ ಹಳೆಯ ವಾಹನಗಳನ್ನು ನೋಡಿದ್ದೆ. +ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ವನ್ಯಜೀವಿ ಸಂರಕ್ಷಣೆಯ ಅರಿವು ಮೂಡಿಸಲು ಹಳೆಯ ವಾಹನ ಯಾನ ಆಯೋಜಿಸಿರುವುದಕ್ಕೆ ಸಂತಸ ತಂದಿದೆ ಎಂದರು.ಪ್ರಕೃತಿ ಪರಿಸರ ಉಳಿಸುವ ಅಗತ್ಯವನ್ನು ರಾಜ್ಯಪಾಲರು ಪ್ರತಿಪಾದಿಸಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ರಾಜ್ಯ ಮಾದರಿಯಾಗಿದೆ. 6395 ಆನೆಗಳು ರಾಜ್ಯದಲ್ಲಿದ್ದು, ದೇಶದಲ್ಲೇ ನಾವು ಗಜ ಗಣತಿಯಲ್ಲಿ ಮೊದಲಿಗರಾಗಿದ್ದೇವೆ ಎಂದರು. +ಸಿಖ್ ಸಮುದಾಯ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ : ಜೈಶಂಕರ್ +ಅದೇ ರೀತಿ ಹುಲಿ ಗಣತಿಯಲ್ಲೂ ರಾಜ್ಯ ನಂ.2 ಸ್ಥಾನ ಪಡೆದಿದೆ. ಇಲಾಖೆಯ ಹಸಿರು ಹೊದಿಕೆ ವ್ಯಾಪ್ತಿಯನ್ನು ಹೆಚ್ಚಿಸಲು ಮತ್ತು ನಗರ ಪ್ರದೇಶಗಳಲ್ಲಿ ಕೂಡ ಜನರು ನೆಮ್ಮದಿಯಿಂದ ಉಸಿರಾಡಲು ಸಾಮಾಜಿಕ ಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. +ಕಳೆದ ಜುಲೈ 1ರಿಂದ ಇಲ್ಲಿಯವರೆಗೆ 4 ಕೋಟಿ 75 ಲಕ್ಷ ಸಸಿಗಳನ್ನು ನೆಡಲಾಗಿದೆ. ಮುಂದಿನ ಒಂದು ವಾರದಲ್ಲಿ ಉಳಿದ 25 ಲಕ್ಷ ಸಸಿ ನೆಟ್ಟು ಈ ವರ್ಷ 5 ಕೋಟಿ ಗಿಡ ನೆಡಬೇಕು ಎಂಬ ಗುರಿಯನ್ನು ಪೂರೈಸಲಾಗುವುದು ಎಂದರು. +ಹಳೆಯ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟು, ಅವುಗಳನ್ನು ಸಂಚಾರ ಯೋಗ್ಯವಾಗಿರುವಂತೆ ನಿರ್ವಹಣೆ ಮಾಡುತ್ತಿರುವ ಹಳೆಯ ವಾಹನಗಳ ಮಾಲೀಕರಿಗೆ ಅವರು ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು. \ No newline at end of file diff --git a/eesanje/url_46_339_7.txt b/eesanje/url_46_339_7.txt new file mode 100644 index 0000000000000000000000000000000000000000..02f8f39504340fea0b984a243710d20e3b5e73eb --- /dev/null +++ b/eesanje/url_46_339_7.txt @@ -0,0 +1,8 @@ +ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್ +ಬೆಂಗಳೂರು,ಸೆ.30- ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ +ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು. +ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು. +ಶೀಘ್ರದಲ್ಲೇ ಪತನವಾಗಲಿದೆ ಗ್ಯಾರಂಟಿ ಸರ್ಕಾರ : ಕುತೂಹಲ ಕೆರಳಿಸಿದ ಹೆಚ್ಡಿಕೆ ಹೇಳಿಕೆ +ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆ ಯಲ್ಲಿ ಬಂಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ. +7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ. +ಆರೋಪಿಯ ಕೃತ್ಯಕ್ಕೆ ಯಾರು ಸಹಕಾರ ನೀಡಿದ್ದಾರೆ, ಇವರ ಯೋಜನೆಯೇನು, ಇದಕ್ಕಾಗಿ ಅವರು ಮಾಡಿಕೊಂಡಿರುವ ಸಿದ್ಧತೆಗಳೇನು ಹಾಗೂ ಇತರ ರೂಪುರೇಷೆಗಳ ಬಗ್ಗೆ ವಿಚಾರಣೆ ನಡೆಸುವ ಸಲುವಾಗಿ ಶಿವಾಜಿರಾವ್ನನ್ನು 13 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. \ No newline at end of file diff --git a/eesanje/url_46_339_8.txt b/eesanje/url_46_339_8.txt new file mode 100644 index 0000000000000000000000000000000000000000..f5cd37b58e9e072b91e3fd38e4c9ebd660251717 --- /dev/null +++ b/eesanje/url_46_339_8.txt @@ -0,0 +1,9 @@ +ಕಾವೇರಿ ಆದೇಶದ ಕುರಿತು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ : ಸಚಿವ ಎಚ್.ಕೆ.ಪಾಟೀಲ್ + +ಹುಬ್ಬಳ್ಳಿ,ಸೆ.30- ತಮಿಳುನಾಡಿಗೆ ಕಾವೇರಿ ಮ್ಯಾನೇಜ್ಮೆಂಟ್ ಪ್ರಾಧಿಕಾರ ಮತ್ತೇ ನೀರು ಬಿಡಬೇಕು ಎಂಬ ಆದೇಶ ಕುರಿತು ನಾವು ಸುಪ್ರೀಂ ಕೋರ್ಟ್ ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು. +ಈ ಕುರಿತು ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ ಬಹಳ ನೋವು ತಂದಿದ್ದು ಮತ್ತೇ ಕಾವೇರಿ ನಿರ್ವಹಣ ಅಭಿವೃದ್ಧಿ ಪ್ರಾಕಾರ ಮತ್ತೇ ನೀರು ಬಿಡಸಲು ಆದೇಶ ಮಾಡಿದ್ದು ನಿಜ. ಆದರೆ ಇದರಿಂದ ನಮಗೂ ಸಮಸ್ಯೆ ಎದುರಾಗಿದೆ ಎಂದರು. +ಈ ಕುರಿತು ನಿನ್ನೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ವೆಂಕಟಾಚಲ, ಶಿವರಾಜ್ ಪಾಟೀಲ್, ರವೀಂದ್ರ, ಶೆಟ್ಟಿ ಅವರ ಜೊತೆ ಚರ್ಚೆ ಮಾಡಲಾಗಿದ್ದು ಅವರ ಸಲಹೆ ಸೂಚನೆಗಳನ್ನು ಪಡೆಯಲಾಗಿದೆ. +ಮಕ್ಕಳ ಜೊತೆ ಸೇರಿ ಪತ್ನಿಯ ತಲೆ ಕಡಿದ ಪತಿ..! +ಏನೆಲ್ಲಾ ಕಾನೂನು ತೊಡಕು ಇವೆ ಆ ಬಗ್ಗೆ ಮಾಹಿತಿ ಪಡೆಯಲಾಗಿದೆ ಸರಿಯಾಗಿ ಮತ್ತು ಮನವರಿಕೆ ಆಗುವಂತೆ ನಮ್ಮ ಸಮಸ್ಯೆಗೆ ಏನು ಪರಿಹಾರ ಆ ಬಗ್ಗೆ ಸಹ ಮಾಹಿತಿ ಪಡೆಯಲಾಗಿದೆ ಎಂದ ಅವರು ರಾಜ್ಯದ ಹಿತಾಸಕ್ತಿಗೋಸ್ಕರ ಮಾಡುತ್ತೇವೆ ಆದರೆ ಕೇಂದ್ರ ಸರ್ಕಾರ ಮೌನ ಸರಿಯಲ್ಲ ಸಂಕಷ್ಟ ಸೋತ್ರ ಕಂಡು ಹಿಡಿಯಬೇಕಾಗಿದೆ , ಈಗಲಾದರು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಯಿಸಿದರು. ಕೆಆರ್‍ಎಸ್ ಹಾಗು ಕವೇರಿ ಜಲಾನಯನ ಭಾಗದ ಜಲಾಶಯದಲ್ಲಿ ನೀರು ಕಡಿಮೆ ಇದೆ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು ಸಂಕಷ್ಟ ಸೋತ್ರವೇ ಇದಕ್ಕೆ ಪರಿಹಾರ ಆದ್ದರಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ಬರಬೇಕು ಎಂದರು. +ದೇಶದಲ್ಲಿ ಏಕಕಾಲದಲ್ಲಿ ಚುನಾವಣೆಗೆ ಕೇಂದ್ರ ಕಾನೂನು ಆಯೋಗದ ಚಿಂತನೆ ಇನ್ನು ಕೇಂದ್ರ ಸರ್ಕಾರ ಹಾಗೂ ಕಾನೂನು ಆಯೋಗದೇಶದಲ್ಲಿ ಏಕಕಾಲದಲ್ಲಿ ಚಿಂತನೆ ಮಾಡಿದ್ದು ಸರಿಯಲ್ಲಲೋಕಸಭಾ ಚುನಾವಣೆ ಮುಂದೂಡಲು ಈ ಹುನ್ನಾರ ಎಂದು ಗಂಭೀರ ಸ್ವರೂಪದ ಆರೋಪ ಮಾಡಿದರು. +ಲೋಕಸಭೆ ಅವ ಸಹ ಮುಂದೂಡುವ ಷಡ್ಯಂತ್ರ ಮಾಡಿದೆ ಎಂದ ಅವರು ನಾಲ್ಕು ವರ್ಷಗಳ ಏನು ಮಾಡಿದರಿ ಈಗ ಚುನಾವಣೆ ಬಂದಾಗ ಏಕೆ ಕೇಂದ್ರದ ಈ ನಿರ್ಧಾರ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣಾ ಆಯೋಗ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಸಹ ಅವರು ಸಲಹೆ ನೀಡಿದರು. ಮುಖಂಡರಾದ ಮಹೇಂದ್ರ ಸಿಂಘಿ, ವಸಂತ ಲದ್ವಾ ಮುಂತಾದವರು ಇದ್ದರು. \ No newline at end of file diff --git a/eesanje/url_46_339_9.txt b/eesanje/url_46_339_9.txt new file mode 100644 index 0000000000000000000000000000000000000000..179b4a4da981c163c2f9edebb26626b5c0aadf75 --- /dev/null +++ b/eesanje/url_46_339_9.txt @@ -0,0 +1,6 @@ +ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ +ಹುಬ್ಬಳ್ಳಿ,ಸೆ.30- ಜಿಲ್ಲಾ ಪಂಚಾಯತ ಸದಸ್ಯ ಹಾಗೂ ಬಿಜೆಪಿ ನಾಯಕರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾಡ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸಂಕಷ್ಟ ಎದುರಾಗಿದೆ. ಪ್ರಕರಣದ ಸಾಕ್ಷಿಯಾಗಿದ್ದ ಗುರುನಾಥಗೌಡರಿಗೆ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಸುವಂತೆ ಆದೇಶಿಸಿದೆ. +ಅಸಮರ್ಪಕ ತನಿಖೆ ನಡೆಸಿದ ಧಾರವಾಡ ಉಪನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ತನಿಖೆ ಮುಂದುವರಿಸುವಂತೆ ಸೂಚಿಸಿದೆ. ದೂರುದಾರ ಗುರುನಾಥಗೌಡ ಸಾಕ್ಷ್ಯವಾಗಿ ಸಿಡಿ ನೀಡಿದ್ದರೂ ಪೊಲೀಸರು ಪರಿಗಣಿಸಿಲ್ಲ ಎಂಬುದನ್ನು ಕೋರ್ಟ್ ಬೊಟ್ಟು ಮಾಡಿದೆ.ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪಡಿಸದೇ ಬೇಜವಾಬ್ದಾರಿ ತೋರಿದ್ದಾರೆ. +ಮಕ್ಕಳ ಜೊತೆ ಸೇರಿ ಪತ್ನಿಯ ತಲೆ ಕಡಿದ ಪತಿ..! +ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ. ತನಿಖಾಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ. ಹೀಗಾಗಿ ಪ್ರಕರಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶಾದ ಜೆ.ಪ್ರೀತ್ ಅವರ ಫೀಠ ಆದೇಶ ಹೊರಡಿಸಿದೆ.ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊಳಿಸುವ ಸಾಧ್ಯತೆ ಹಿನ್ನೆಲೆ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ. ಹಲವು ಬಾರಿ ಪ್ರವೇಶ ಕೋರಿ ಕೋರ್ಟ್‍ಗೆ ಮನವಿ ಸಲ್ಲಿಸಿದ್ದ ಕುಲಕರ್ಣಿಗೆ ಅನುಮತಿ ಸಿಗುತ್ತಿಲ್ಲ ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. +ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ. ಚುನಾವಣೆ ವೇಳೆಯೂ ಕ್ಷೇತ್ರ ಭೇಟಿಗೆ ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಗುರುತರ ಆರೋಪ ಶಾಸಕ ವಿನಯ್ ಕುಲಕರ್ಣಿ ಮೇಲಿದ್ದು, ಪ್ರಮುಖ ಸಾಕ್ಷಿಗಳ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಆದ್ದರಿಂದ ಬಿ ವರದಿ ಸಲ್ಲಿಕೆ ಸೂಕ್ತ ಸಮಯವಲ್ಲ ಎಂದು ನ್ಯಾಯಾಲಯ ಹೇಳಿದೆ. \ No newline at end of file diff --git a/eesanje/url_46_33_1.txt b/eesanje/url_46_33_1.txt new file mode 100644 index 0000000000000000000000000000000000000000..6a66c72412a7af4460cdd4712584d1b081123752 --- /dev/null +++ b/eesanje/url_46_33_1.txt @@ -0,0 +1,6 @@ +ದಸರಾ ಆನೆಗಳ ಪಾದ ಪರಿಶೀಲನೆ + +ಮೈಸೂರು, ಆ.27-ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿಯಲ್ಲಿ ಪಾಲ್ಗೊಳ್ಳುವ ಗಜ ಪಡೆಗೆ ತಾಲೀಮು ಬಿರುಸುನಿಂದ ನಡೆಯುತ್ತಿದ್ದು, ಆನೆಗಳ ಪಾದಗಳನ್ನು ಇಂದು ಅರಣ್ಯ ಇಲಾಖೆ ಹಾಗೂ ಮೆಟಲ್ಡಿಟೆಕ್ಟಿವ್ ಪರಿಶೀಲನೆ ನಡೆಸಲಾಯಿತು. +ವೀರನಹೊಸಳ್ಳಿ ಆನೆ ಕ್ಯಾಂಪ್ನಿಂದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ನಗರಕ್ಕೆ ಆಗಮಿಸಿದ್ದು, ಈಗಾಗಲೇ ಪ್ರತಿನಿತ್ಯ ತಾಲೀಮು ನಡೆಸಲಾಗುತ್ತಿದೆ.ಕಾಡಿನಲ್ಲಿ ಹಾಗೂ ನಗರದಲ್ಲಿ ಆನೆಗಳು ಸಂಚರಿಸುವಾಗ ಕಾಲುಗಳಿಗೆ ಕಬ್ಬಿಣದ ಮೊಳೆ ಹಾಗೂ ಮುಳ್ಳುಗಳು ನಾಟಿ ಪಾದಗಳ ಒಳಗೆ ಸಿಲುಕಿಕೊಂಡಿದ್ದರೆ ತಾಲೀಮಿಗೆ ತೊಂದರೆಯಾಗುತ್ತದೆ. +ಜೊತೆಗೆ ಅಂಬಾರಿ ಸಮಯದಲ್ಲಿ ಹೆಜ್ಜೆ ಹಾಕಲು ಅಳುಕುತ್ತವೆ ಎಂಬ ಉದ್ದೇಶದಿಂದ ಇಂದು ಎಲ್ಲಾ ಆನೆಗಳ ಕಾಲುಗಳ ಪಾದಗಳನ್ನು ಮೆಟಲ್ಡಿಟೆಕ್ಟಿವ್ ಉಪಕರಣದ ಮೂಲಕ ಪರಿಶೀಲನೆ ನಡೆಸಲಾಯಿತು. +ಪ್ರತಿದಿನ ತಾಲೀಮು ಮುಗಿಸಿದ ನಂತರ ಆನೆಗಳ ಪಾದಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಇಲ್ಲಿಯವರೆಗೆ ಯಾವುದೇ ರೀತಿಯ ಕಬ್ಬಿಣದ ಮೊಳೆ ಅಥವಾ ಚೂರುಗಳು ಕಂಡು ಬಂದಿಲ್ಲ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_33_10.txt b/eesanje/url_46_33_10.txt new file mode 100644 index 0000000000000000000000000000000000000000..9022c3869f2dfa641ee93aa73b495e63e47378b2 --- /dev/null +++ b/eesanje/url_46_33_10.txt @@ -0,0 +1,7 @@ +ದರ್ಶನ್ ಜೈಲಿನಲ್ಲಿದ್ದಾರೋ.. ? ರೆಸಾರ್ಟ್‌ನಲ್ಲಿದ್ದಾರೋ..? ಎಂಬ ಅನುಮಾನ ಮೂಡುತ್ತಿದೆ : ರೇಣುಕಾಸ್ವಾಮಿ ತಂದೆ + +ಚಿತ್ರದುರ್ಗ,ಆ.26-ತಮ್ಮ ಪುತ್ರ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಜೈಲಿನಲ್ಲಿದ್ದಾರೋ ಅಥವಾ ರೆಸಾರ್ಟ್ನಲ್ಲಿದ್ದಾರೋ ಎಂಬ ಅನುಮಾನ ಮೂಡುತ್ತಿದೆ. ಜೈಲಿನಲ್ಲಿನ ವಾತಾವರಣದ ಬಗ್ಗೆ ಬಹಿರಂಗಗೊಂಡಿರುವ ಫೋಟೋ ಹಾಗೂ ವಿಡಿಯೋಗಳನ್ನು ನೋಡಿದರೆ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕಾಶಿನಾಥಯ್ಯ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ತಮ ಪುತ್ರ ರೇಣುಕಾಸ್ವಾಮಿ ಕೊಲೆಗೆ ಸರ್ಕಾರ ಹಾಗೂ ನ್ಯಾಯಾಂಗದಿಂದ ನ್ಯಾಯ ಸಿಗಬಹುದೆಂಬ ನಂಬಿಕೆ ಇತ್ತು. ಈಗ ಬಿಡುಗಡೆಯಾಗಿರುವ ಪೋಟೋ, ವಿಡಿಯೋ ನೋಡಿದರೆ ಆಘಾತವಾಗಿದೆ. ಜೈಲಿನಲ್ಲಿ ಆರೋಪಿಗಳಿಗೆ ರಾಜ್ಯಾತಿಥ್ಯ ದೊರೆಯುತ್ತಿದೆ. ಆರೋಪಿಗಳು ಚರ್ಚೆ ಮಾಡಲು ಕುರ್ಚಿ ಟೇಬಲ್ಗಳನ್ನು ಹಾಕಲಾಗಿದೆ. ಟೀ ಕಪ್, ಸಿಗರೇಟ್ಗಳನ್ನು ಹಿಡಿದಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದರು. +ಪೊಲೀಸ್ ಅಧಿಕಾರಿಗಳ ತನಿಖೆಯ ಬಗ್ಗೆ ನಮಗೆ ನಂಬಿಕೆ ಇತ್ತು. ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದರೆ ಜೈಲಿನ ವಾತಾವರಣ ಗಾಬರಿಯಾಗುವಂತಿದೆ. ಕೈದಿಗಳಲ್ಲಿ ಶ್ರೀಮಂತ, ಬಡವ, ಸಾಹಿತಿ, ರಾಜಕಾರಣಿ ಎಂಬ ಬೇಧಭಾವ ಇರಬಾರದು. ಆದರೆ ದರ್ಶನ್ ಪ್ರಕರಣದಲ್ಲಿ ಲೋಪವಾಗಿದೆ. ಮುಖ್ಯಮಂತ್ರಿಯವರು ಕೂಡಲೇ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಹೇಳಿದರು. +ಜೈಲು ಅಧಿಕಾರಿಗಳ ಮೇಲೆ ಯಾವ ರೀತಿ ಒತ್ತಡ ಬಂದಿರಬಹು ದೆಂಬ ಅನುಮಾನ ಕಾಡುತ್ತಿದೆ. ದರ್ಶನ್ರಲ್ಲಿ ಪಶ್ಚಾತ್ತಾಪದ ಭಾವನೆ ಕಂಡುಬರುತ್ತಿಲ್ಲ. ನಗುತಾ ಆರಾಮಾಗಿದ್ದಾರೆ. ದರ್ಶನ್ ಅವರ ಹಿನ್ನಲೆ, ಜೈಲಿನ ವಾತಾವರಣ ಕುರಿತು ಸಮಗ್ರ ವಿಚಾರಣೆಯಾಗಬೇಕು. ಅದರಲ್ಲೂ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದಲೇ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದರು. +ತಮ ಪುತ್ರ ಕೈಮುಗಿದು ಬೇಡಿಕೊಂಡಾಗಲೂ ಕರುಣೆ ತೋರದೆ ಕೊಲೆ ಮಾಡಿದ ಆರೋಪಿಗಳಿಗೆ ಈಗ ಜೈಲಿನಲ್ಲಿ ಸುಖಾಸೀನ ಸೌಲಭ್ಯಗಳು ದೊರೆಯುತ್ತಿದೆ. ಇದನ್ನು ನೋಡಿದರೆ ತಮ ಪುತ್ರನ ಕೊಲೆಗೆ ನ್ಯಾಯ ದೊರೆಯುವುದೇ ಎಂಬ ಅನುಮಾನ ಕಾಡುತ್ತಿದೆ ಎಂದರು ಹೇಳಿದರು. \ No newline at end of file diff --git a/eesanje/url_46_33_11.txt b/eesanje/url_46_33_11.txt new file mode 100644 index 0000000000000000000000000000000000000000..c4f6896ec1dc3d6668e3ba0186d5a5cd0750fe41 --- /dev/null +++ b/eesanje/url_46_33_11.txt @@ -0,0 +1,12 @@ +ಭಾರೀ ಸಂಚಲನ ಸೃಷ್ಟಿಸಿರುವ ದರ್ಶನ್ ರಾಜಾತಿಥ್ಯ ಫೋಟೋ, ವಿಡಿಯೋ +ಬೆಂಗಳೂರು,ಆ.26-ಜೈಲಿನಲ್ಲಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ಸಂಬಂಧ ಬಿಡುಗಡೆಯಾಗಿರುವ ಫೋಟೋಗಳು, ವಿಡಿಯೋಗಳು ಭಾರೀ ಸಂಚಲನ ಸೃಷ್ಟಿಸಿವೆ. +ಎರಡು ಫೋಟೋಗಳು, ಒಂದು ವಿಡಿಯೋ ಬಹಿರಂಗವಾಗಿವೆ. ಒಂದು ಫೋಟೋದಲ್ಲಿ ದರ್ಶನ್ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ, ಮತ್ತೊಬ್ಬ ರೌಡಿಶೀಟರ್ ಕುಳ್ಳ ಸೀನ, ಈ ಹಿಂದೆ ತಮ ಮ್ಯಾನೇಜರ್ ಆಗಿದ್ದ ನಾಗರಾಜ್ ಅವರೊಂದಿಗೆ, ಗಾರ್ಡನ್ನಲ್ಲಿ ಮೇಜು ಕುರ್ಚಿಗಳನ್ನು ಹಾಕಿಕೊಂಡು ಲೋಕಾಭಿರಾಮವಾಗಿ ಮಾತನಾಡುತ್ತಾ, ಸಿಗರೇಟ್ ಸೇದುತ್ತಾ ಮಗ್ನಲ್ಲಿ ಕಾಫಿ ಕುಡಿಯುತ್ತಿರುವುದು ಕಂಡುಬಂದಿದೆ. +ಮತ್ತೊಂದು ಫೋಟೋದಲ್ಲಿ ಜೈಲಿನ ಕೋಣೆಯ ಒಳಗೆ ದರ್ಶನ್ಗೆ ಬೆಡ್ನ ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿ ಸಹ ಕೈದಿಯೊಂದಿಗೆ ದರ್ಶನ್ ಮಾತನಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಜೈಲಿನಲ್ಲಿರುವ ರೌಡಿಶೀಟರ್ವೊಬ್ಬ ಹೊರಗಿರುವ ತಮ ಪುತ್ರನಿಗೆ ವಿಡಿಯೋ ಕಾಲ್ ಮಾಡಿದ್ದು, ಅದರಲ್ಲಿ ದರ್ಶನ್ ಮಾತನಾಡಿರುವುದು ಕಂಡುಬಂದಿದೆ. +ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಿನ್ನೆ ಮಧ್ಯಾಹ್ನದಿಂದ ಇಡೀ ರಾತ್ರಿ ಗೃಹ ಇಲಾಖೆ ಹಾಗೂ ಕಾರಾಗೃಹ ಇಲಾಖೆಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಗೃಹಸಚಿವರನ್ನು ಭೇಟಿ ಮಾಡಿ, ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯ ಮಾಹಿತಿಯನ್ನು ನೀಡಿದ್ದಾರೆ. ಇದೇ ವೇಳೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. +ಇತ್ತ ಪೊಲೀಸ್ ಅಧಿಕಾರಿಗಳು ಜೈಲಿಗೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ. ಕಳೆದ ವಾರ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಜೈಲಿಗೆ, ಬುಲೆಟ್, ಗನ್, ಗಾಂಜಾ ಹಾಗೂ ಮೊಬೈಲ್ ಎಗ್ಗಿಲ್ಲದೆ ರವಾನೆಯಾಗುತ್ತಿದೆ ಎಂಬ ಮಾಹಿತಿ ಚರ್ಚೆಯಾಗಿತ್ತು. ಅದರ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆದರೆ ಯಾವುದೇ ಆಕ್ಷೇಪಾರ್ಹ ವಸ್ತುಗಳು ಕಂಡುಬರಲಿಲ್ಲ ಎಂಬ ಮಾಹಿತಿ ಇತ್ತು. +ಅದಾದ ಬಳಿಕ ಜೈಲಿನಲ್ಲಿ ದರ್ಶನ್ ಅವರ ಐಷರಾಮಿ ಫೋಟೋಗಳು ಬಹಿರಂಗಗೊಂಡಿರುವುದು ಕೆಳಮಟ್ಟದಿಂದ ಮೇಲ್ಪಟ್ಟದವರೆಗೂ ಅಧಿಕಾರಿಗಳು ಶಾಮೀಲಾಗಿರುವ ಆರೋಪಗಳಿಗೆ ಪುಷ್ಟಿ ನೀಡಿವೆ. +ಸುಧಾರಣೆಗೊಳ್ಳದ ದರ್ಶನ್:ಕಾರಾಗೃಹ ಮತ್ತು ಸುಧಾರಣಾ ಸೇವೆಗಳು ಎಂಬ ಇಲಾಖೆ ಖೈದಿಗಳನ್ನು ಸುಧಾರಣೆ ಮಾಡುವ ಬದಲಾಗಿ ಮತ್ತಷ್ಟು ಖೂಳರನ್ನಾಗಿ ಮಾಡುತ್ತಿರುವುದು ಕಂಡುಬಂದಿದೆ. +ನಟರಾಗಿ ತಮದೇ ಆದ ಅಭಿಮಾನಿ ಬಳಗ ಹೊಂದಿರುವ ದರ್ಶನ್ ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗನಂತಹ ರೌಡಿಶೀಟರ್ ಜೊತೆ ಆತೀಯವಾಗಿ ಮಾತನಾಡುತ್ತಿರುವುದು ಸುಧಾರಣೆಯ ಬದಲಾಗಿ ಮತ್ತಷ್ಟು ಅನಾಹುತಗಳಿಗೆ ಅವಕಾಶ ಮಾಡಿಕೊಡಬಹುದೇ ಎಂಬ ಆತಂಕ ಸೃಷ್ಟಿಸಿದೆ. +ಸುಧಾರಣಾ ಇಲಾಖೆಯಲ್ಲಿ ಸುಧಾರಣೆ ಸೇವೆಗಳ ಬದಲಿಗೆ ಜೈಲಿನಲ್ಲಿ ಅಸಾಧಾರಣ ಸೇವೆಗಳನ್ನು ನೀಡುವ ಮೂಲಕ ಕೈದಿಗಳಿಗೆ ಮತ್ತಷ್ಟು ಸಮಾಜಘಾತುಕರನ್ನಾಗಿಸಲು ಕುಮುಕ್ಕು ನೀಡಿದಂತೆ ಕಾಣುತ್ತಿದೆ. ಯಾವುದಾದರೂ ಗಂಭೀರ ಆರೋಪಗಳು ಕೇಳಿಬಂದಾಗ ದಾಳಿ, ತಪಾಸಣೆಯಂತಹ ಹೈಡ್ರಾಮಗಳು ನಡೆಯುತ್ತವೆ. +ಬಳಿಕ ಎಂದಿನಂತೆ ಅಕ್ರಮಗಳು, ಅನೈತಿಕ ಚಟುವಟಿಕೆಗಳಿಗೆ ಜೈಲು ತಾಣವಾಗುತ್ತಿದೆ. ಜೈಲಿನಿಂದಲೇ ಕೊಲೆಗೆ ಸುಫಾರಿ ನೀಡಿರುವಂತಹ ಉದಾರಹಣೆ ಇದೆ ಎಂದು ಹೈಕೋರ್ಟ್ ಮುಂದೆ ವಕೀಲರು ಪ್ರಸ್ತಾಪಿಸಿರುವುದು ಆಘಾತಕಾರಿಯಾಗಿತ್ತು. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಳಿಕ ನಟ ದರ್ಶನ್ ಪಶ್ಚಾತ್ತಾಪಕ್ಕೀಡಾಗಿ ಪರಿವರ್ತನೆಗೊಳ್ಳಬಹುದು. ಸುಧಾರಣೆಯಾಗಬಹುದು ಎಂಬ ಅಂದಾಜುಗಳಿದ್ದವು. ಆದರೆ ಅದಕ್ಕೆ ತದ್ವಿರುದ್ಧವಾಗಿ ಕುಳ್ಳ ಸೀನ, ವಿಲ್ಸನ್ಗಾರ್ಡನ್ ನಾಗನಂತಹ ರೌಡಿಶೀಟರ್ಗಳೊಂದಿಗೆ ಕಾಣಿಸಿಕೊಂಡಿರುವುದು ಗಂಭೀರ ಚರ್ಚೆಯನ್ನು ಹುಟ್ಟು ಹಾಕಿದೆ. \ No newline at end of file diff --git a/eesanje/url_46_33_12.txt b/eesanje/url_46_33_12.txt new file mode 100644 index 0000000000000000000000000000000000000000..3346dec227198a1aa7b891676b72be7a567e718c --- /dev/null +++ b/eesanje/url_46_33_12.txt @@ -0,0 +1,13 @@ +ಹೈಕೋರ್ಟ್ ದಾರಿ ತಪ್ಪಿಸಿದರೇ ಜೈಲು ಅಧಿಕಾರಿಗಳು..? + +ಬೆಂಗಳೂರು,ಆ.26-ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಪ್ರಕರಣದಲ್ಲಿ ಬಂಧಿಖಾನೆ ಹಾಗೂ ಸುಧಾರಣಾ ಇಲಾಖೆಯ ಅಧಿಕಾರಿಗಳು ರಾಜ್ಯ ಹೈಕೋರ್ಟ್ ದಿಕ್ಕು ತಪ್ಪಿಸಿರುವ ಕುರಿತು ಚರ್ಚೆಗಳಾಗುತ್ತಿವೆ. ದಶನ್ ಅವರು ಜೈಲಿನಲ್ಲಿ ತಮಗೆ ಅಗತ್ಯ ಪೌಷ್ಟಿಕಾಂಶ ಇರುವ ಆಹಾರಗಳು ದೊರೆಯುತ್ತಿಲ್ಲ. ಹೀಗಾಗಿ ಮನೆಯೂಟಕ್ಕೆ ಅವಕಾಶ ಮಾಡಿಕೊಡಬೇಕು. ಬೆಡ್, ಚಮಚ ಹಾಗೂ ಇತರ ಸಣ್ಣಪುಟ್ಟ ಸೌಲಭ್ಯಗಳಿಗಾಗಿ 24ನೇ ಅಡಿಷನಲ್ ಛೀಫ್ ಜುಡಿಶಿಯಲ್ ಮ್ಯಾಜಿಸ್ಟ್ರೇಟ್ ಅವರ ಮುಂದೆ ಅರ್ಜಿ ಸಲ್ಲಿಸಿದ್ದರು. +ವಿಚಾರಣೆ ನಡೆಸಿದ ನ್ಯಾಯಾಧೀಶರು 2024ರ ಜುಲೈ 25ರಂದು ದರ್ಶನ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಜುಲೈ 31ರಂದು ನಡೆದಿದ್ದ ವಿಚಾರಣೆಯಲ್ಲಿ ದರ್ಶನ್ ಪರ ವಕೀಲರು ಅರ್ಜಿಯನ್ನು ಹಿಂಪಡೆದುಕೊಂಡಿದ್ದರು. +ಆನಂತರ ದರ್ಶನ್ ಸಲ್ಲಿಸಿದ್ದ ಲಿಖಿತ ಮನವಿಯನ್ನು ಜೈಲಿನ ಸೂಪರಿಡೆಂಟ್ಗಳು ಆ.14ರಂದು ತಿರಸ್ಕರಿಸಿದ್ದಾರೆ ಎಂದು ಆ.20ರಂದು ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದ ಎದುರು ನಡೆದ ವಿಚಾರಣೆಯಲ್ಲಿ ಸರ್ಕಾರದ ವಿಶೇಷ ಅಭಿಯೋಜಕರು ತಿಳಿಸಿದರು. +ದರ್ಶನ್ ಅವರ ಅರ್ಜಿಯನ್ನು ತಿರಸ್ಕರಿಸಿರುವ ಆದೇಶವನ್ನು ಅದೇ ದಿನ ಅರ್ಜಿದಾರರಿಗೆ ತಲುಪಿಸಿರುವುದಾಗಿಯೂ ಹೇಳಿಕೆ ನೀಡಿದ್ದರು. ಈ ವೇಳೆ ಮತ್ತೊಂದು ಪ್ರಕರಣದಲ್ಲಿನ ಮಾಹಿತಿಯನ್ನು ಪ್ರಸ್ತಾಪಿಸಿದ ಬೇರೊಬ್ಬ ವಕೀಲರು ಜೈಲಿನ ಒಳಗೆ ಗಾಂಜಾ, ಬುಲೆಟ್ ಮತ್ತು ಬಂದೂಕುಗಳು ಬರುತ್ತಿವೆ. ಜೈಲಿನಲ್ಲೇ ಸುಫಾರಿ ಚರ್ಚೆಗಳು ನಡೆಯುತ್ತಿವೆ ಎಂದು ನ್ಯಾಯಾಧೀಶರ ಗಮನ ಸೆಳೆದಿದ್ದರು. +ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಆಹಾರದ ವ್ಯಾಪ್ತಿಯನ್ನು ನೀವು ವಿಸ್ತರಣೆ ಮಾಡಿದ್ದೀರಾ ಎಂದು ಬೇರೊಬ್ಬ ವಕೀಲರಿಗೆ ಲಘು ಹಾಸ್ಯ ಮಿಶ್ರಿತ ದಾಟಿಯಲ್ಲಿ ಹೇಳಿದ್ದರು. +ಈ ವಿಚಾರಣೆ ವೇಳೆ ಜೈಲಿನ ಅಧಿಕಾರಿಗಳು ದರ್ಶನ್ರ ಅರ್ಜಿಯನ್ನು ತಿರಸ್ಕರಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಸದರಿ ಆದೇಶವನ್ನು ತಾವು ಪರಿಶೀಲಿಸಲು ಸಮಯ ಬೇಕು ಎಂದು ದರ್ಶನ್ ಪರ ವಕೀಲ ಸಂಜೀವಿನಿ ಪ್ರಭುಲಿಂಗ ನಾವಡಗಿ ಹೇಳಿಕೆ ನೀಡಿದ್ದರು. +ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿಗಳು ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಸೆ.5ಕ್ಕೆ ಮುಂದೂಡಿದರು. ಹೈಕೋರ್ಟ್ ಮುಂದೆ ದರ್ಶನ್ರವರ ಅರ್ಜಿಯನ್ನು ತಿರಸ್ಕರಿಸಲಾಗಿದೆ, ಯಾವುದೇ ಹೆಚ್ಚುವರಿ ಸೌಲಭ್ಯ ನೀಡಿಲ್ಲ ಎಂದು ಹೇಳಿಕೆ ನೀಡಿದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಅಧಿಕಾರಿಗಳು ಅನಧಿಕೃತವಾಗಿ ದರ್ಶನ್ಗೆ ರಾಜ್ಯಾತಿಥ್ಯ ನೀಡುತ್ತಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ. +ವಿಚಾರಣೆಯ ಹಂತದಲ್ಲೇ ನ್ಯಾಯಮೂರ್ತಿಗಳು, ಅರ್ಜಿದಾರರು ಆಹಾರ ಕೇಳಿದರೆ ನೀಡುತ್ತಿಲ್ಲ. ಆದರೆ ಗಾಂಜಾ, ಬುಲೆಟ್, ಗನ್ಗಳು ಸರಬರಾಜಾಗುತ್ತಿವೆ ಎಂಬ ಆರೋಪಗಳಿವೆ. ಇದು ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು. +ದರ್ಶನ್ ಅವರಿಗೆ ಬಿರಿಯಾನಿ ಸೇರಿದಂತೆ ಪೌಷ್ಟಿಕ ಆಹಾರ ನೀಡಬೇಕಾದರೆ ವೈದ್ಯರ ಸಲಹೆ ಶಿಫಾರಸ್ಸುಗಳ ಅಗತ್ಯವಿದೆ ಎಂದು ಸರ್ಕಾರದ ಪರ ವಕೀಲರು ಹೇಳಿದರು. ನ್ಯಾಯಾಲಯ ಕೂಡ ಜೈಲು ಬಂಧಿಗಳಿಗೂ ಅಗತ್ಯ ಪೋಷ್ಟಿಕಾಂಶದ ಅಗತ್ಯವಿದೆ. ಅದಕ್ಕೆ ಪೂರಕವಾದ ಆಹಾರವನ್ನು ಎಲ್ಲರಿಗೂ ಪೂರೈಸಬೇಕು ಎಂದು ಹೈಕೋರ್ಟ್ನ ನ್ಯಾಯಮೂರ್ತಿಗಳು ಹೇಳಿದ್ದರು. +ಈಗ ಬಿಡುಗಡೆಯಾಗಿರುವ ಫೋಟೋ ಹಾಗೂ ವಿಡಿಯೋಗಳಲ್ಲಿ ದರ್ಶನ್ ರೌಡಿಶೀಟರ್ಗಳಾದ ವಿಲ್ಸನ್ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ತಮ ಆಪ್ತ ಸಹಾಯಕ ನಾಗರಾಜು ಅವರೊಂದಿಗೆ ಚೇರಿನಲ್ಲಿ ಕುಳಿತು ಮಗ್ನಲ್ಲಿ ಟೀ ಕುಡಿಯುತ್ತಾ, ಸಿಗರೇಟ್ ಕೈಯಲ್ಲಿ ಹಿಡಿದುಕೊಂಡು ಲೋಕಾಭಿರಾಮವಾಗಿ ಮಾತನಾಡುತ್ತಿರುವುದು ಕಂಡುಬಂದಿದೆ. +ಜೊತೆಗೆ ಜೈಲಿನಲ್ಲಿರುವ ರೌಡಿಶೀಟರ್ವೊಬ್ಬ ಹೊರಗಿರುವ ತಮ ಪುತ್ರನಿಗೆ ವಿಡಿಯೋ ಕಾಲ್ ಮಾಡಿದ್ದು, ಅದರಲ್ಲಿ ದರ್ಶನ್ ತಮ ಮುಖ ತೋರಿಸಿ ವಿಶ್ ಮಾಡಿರುವುದು ಕಂಡುಬಂದಿದೆ. ದರ್ಶನ್ ಜೈಲಿನಲ್ಲಿ ಏಕಾಂಗಿಯಾಗಿದ್ದಾರೆ, ಪೌಷ್ಟಿಕ ಆಹಾರವಿಲ್ಲದೆ ಸೊರಗಿ ಸಣ್ಣಗಾಗಿದ್ದಾರೆ ಎಂದೆಲ್ಲ ವದಂತಿಗಳನ್ನು ಹರಿಯಬಿಡಲಾಗಿತ್ತು. ಈಗ ಬಿಡುಗಡೆಯಾಗಿರುವ ಫೋಟೋಗಳು ಅದೆಲ್ಲವನ್ನೂ ಸುಳ್ಳು ಎಂದು ತೋರಿಸಿದಂತಿದೆ. \ No newline at end of file diff --git a/eesanje/url_46_33_2.txt b/eesanje/url_46_33_2.txt new file mode 100644 index 0000000000000000000000000000000000000000..d0e1eead70b92c25814bae17ea243dfd9f606003 --- /dev/null +++ b/eesanje/url_46_33_2.txt @@ -0,0 +1,11 @@ +ಜೈಲಲ್ಲಿ ರಾಜಾತೀಥ್ಯ ಪ್ರಕರಣ : 3 ಪ್ರಕರಣಗಳ ತನಿಖೆಗಾಗಿ 5 ವಿಶೇಷ ತಂಡ ರಚನೆ +3 , 9 +ಬೆಂಗಳೂರು, ಆ.27-ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಟ ದರ್ಶನ್‌ ಹಾಗೂ ಕುಖ್ಯಾತ ರೌಡಿ ವಿಲ್ಸನ್‌ಗಾರ್ಡನ್‌ ನಾಗ ಮತ್ತು ಇತರರಿಗೆ ರಾಜಾತೀಥ್ಯ ನೀಡಿರುವ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಗಾಗಿ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. +ಈ ಐದು ತಂಡಗಳು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಅವರ ನೇತೃತ್ವದಲ್ಲಿ ಈಗಾಗಲೇ ತನಿಖೆ ಆರಂಭಿಸಿವೆ.ಒಂದನೇ ಪ್ರಕರಣದಲ್ಲಿ ದರ್ಶನ್‌, ನಾಗರಾಜ ಹಾಗೂ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಕುಳ್ಳ ಸೀನನ ಮೇಲೆ ಎಫ್‌ಐಆರ್‌ ದಾಖಲಾಗಿದೆ. +ಈ ಪ್ರಕರಣದ ತನಿಖೆಯನ್ನು ಬೇಗೂರು ಠಾಣೆ ಇನ್ಸ್ ಪೆಕ್ಟರ್‌ ನೇತೃತ್ವದಲ್ಲಿ ನಡೆಸುತ್ತಿದ್ದು, ಜೈಲಿನ ಲಾನ್‌ನಲ್ಲಿ ಕುಳಿತು ಸಿಗರೇಟ್‌ ಸೇವನೆ, ನಟ ದರ್ಶನ್‌ಗೆ ರೌಡಿಗಳ ಜೊತೆ ಸಂಪರ್ಕ ಹೇಗೆ ಆಯ್ತು, ಲಾನ್‌ನಲ್ಲಿ ಒಟ್ಟಿಗೆ ಕುಳಿತುಕೊಳ್ಳಲು ಇವರಿಗೆ ಚೇರ್‌, ಟೀಪಾಯಿ ವ್ಯವಸ್ಥೆ ಮಾಡಿದವರ್ಯಾರು, ಕಾಫಿ ತಂದು ಕೊಟ್ಟವರ್ಯಾರು, ಜೈಲಿನಲ್ಲಿ ಸಿಗರೇಟ್‌ ನಿಷೇಧವಿದ್ದರೂ ಒಳಗೆ ಹೇಗೆ ಬಂತು ಎಂಬಿತ್ಯಾದಿ ಬಗ್ಗೆ ಮಾಹಿತಿಗಳನ್ನು ತನಿಖಾ ತಂಡ ಕಲೆಹಾಕುತ್ತಿದೆ. +ಎರಡನೇ ಪ್ರಕರಣದಲ್ಲಿ ದರ್ಶನ್‌, ಧರ್ಮ ಮತ್ತು ಸತ್ಯನ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಹುಳಿಮಾವು ಠಾಣೆ ಇನ್ಸ್ ಪೆಕ್ಟರ್‌ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮೊಬೈಲ್‌ ಫೋನ್‌ನಲ್ಲಿ ದರ್ಶನ್‌ ರೌಡಿಯ ಮಗನಿಗೆ ವಿಡಿಯೋ ಕಾಲ್‌ ಮಾಡಿರುವ ಬಗ್ಗೆ, ಅದು ವೈರಲ್‌ ಆಗಿರುವ ಫೋಟೋ ತೆಗೆದವರ್ಯಾರು, ಜೈಲಿನಲ್ಲಿ ಮೊಬೈಲ್‌ ನಿಷೇಧವಿದ್ದರೂ ಆರೋಪಿಗಳ ಕೈಗೆ ಮೊಬೈಲ್‌ ಸಿಕ್ಕಿದ್ದಾದರೂ ಹೇಗೆ, ಅದನ್ನು ಒದಗಿಸಿದವರ್ಯಾರು, ಜೈಲಿನ ಸುತ್ತ ಜಾಮರ್‌ ಅಳವಡಿಸಿದ್ದರೂ ಇಂಟರ್‌ನೆಟ್‌ ಕನೆಕ್ಷನ್‌ ಸಿಕ್ಕಿದ್ದಾದರೂ ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. +ಮೂರನೇ ಪ್ರಕರಣದಲ್ಲಿ ಜೈಲಿನ ನಾಲ್ಕು ಮಂದಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕರ್ತವ್ಯ ಲೋಪದ ವಿರುದ್ಧ ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಎಸಿಪಿ ಅವರು ತನಿಖೆ ನಡೆಸುತ್ತಿದ್ದಾರೆ. +ಉಳಿದ ಎರಡು ತಂಡಗಳಲ್ಲಿ ಒಂದು ತಂಡ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಅವರನ್ನು ಯಾರ್ಯಾರು ಇದುವರೆಗೂ ಭೇಟಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಉಳಿದ ಆರೋಪಿಗಳನ್ನು ಯಾರು ಭೇಟಿ ಮಾಡಿದ್ದಾರೆಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. +ಐದನೇ ತಂಡ ಜೈಲಿನ ಒಳಗಡೆ ಹಾಗೂ ಹೊರಗಡೆ ಅಳವಡಿಸಿರುವ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದೆ. ಒಟ್ಟಾರೆ ಈ ಪ್ರಕರಣದಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳ ತನಿಖೆಗಾಗಿ ಐದು ತಂಡಗಳು ಕಾರ್ಯಾಚರಣೆಗಿಳಿದಿದ್ದು, ಮತ್ತಷ್ಟು ಮಾಹಿತಿಗಳನ್ನು ಕಲೆಹಾಕಿ ವರದಿ ನೀಡಲಿವೆ. +ಜೈಲಿನೊಳಗೆ ಸಿಗರೇಟ್‌ ಇನ್ನಿತರ ವಸ್ತುಗಳನ್ನು ಸರಬರಾಜು ಮಾಡಿದವರ್ಯಾರು ಹಾಗೂ ವಿಲ್ಸನ್‌ಗಾರ್ಡನ್‌ ನಾಗನಿಗೆ ರಾಜಾತೀಥ್ಯ ವ್ಯವಸ್ಥೆ ಮಾಡಿಕೊಟ್ಟವರ್ಯಾರು ಎಂಬ ಬಗ್ಗೆಯೂ ಹೆಚ್ಚಿನ ಮಾಹಿತಿಗಳನ್ನು ತನಿಖಾ ತಂಡಗಳು ಸಂಗ್ರಹಿಸುತ್ತಿದ್ದು, ತನಿಖೆ ವೇಳೆ ಎಲ್ಲಿ ಕರ್ತವ್ಯ ಲೋಪವಾಗಿದೆ ಎಂಬುವುದು ಗೊತ್ತಾಗಲಿವೆ. +ನಟ ದರ್ಶನ್‌ ಜೈಲಿನೊಳಗೆ ಇನ್ನಿತರರೊಂದಿಗೆ ಒಟ್ಟಿಗೆ ಕುಳಿತು ಕಾಫಿ ಹಾಗೂ ಸಿಗರೇಟ್‌ ಹಿಡಿದುಕೊಂಡಿರುವ ಫೋಟೋ ವೈರಲ್‌ ಆಗುತ್ತಿದ್ದಂತೆ ಜೈಲಿನ ಒಂಭತ್ತು ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತಲೆದಂಡವಾಗಿದ್ದು, ಉಳಿದ ಜೈಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಭಯ ಶುರುವಾಗಿದೆ. \ No newline at end of file diff --git a/eesanje/url_46_33_3.txt b/eesanje/url_46_33_3.txt new file mode 100644 index 0000000000000000000000000000000000000000..1d0c235d0487bba4055634ec7dee964fd33d8b9a --- /dev/null +++ b/eesanje/url_46_33_3.txt @@ -0,0 +1,8 @@ +ಹೈಟೆಕ್ ಸರ್ಕಾವೆಂದರೆ ಇದೇ ಇರಬೇಕು : ಎಚ್ಡಿಕೆ ವ್ಯಂಗ್ಯ + +ಬೆಂಗಳೂರು, ಆ.26-ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಕೊಡುತ್ತಿರುವುದೇ ಹೈಟೆಕ್ ಸರ್ಕಾರದ ಆಡಳಿತ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ದಿಶಾ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮದು ಹೈಟೆಕ್ ಸರ್ಕಾರ ಎಂದು ಕಾಂಗ್ರೆಸ್ನವರು ಹೇಳುತ್ತಾರೆ. +ಹೈಟೆಕ್ ಸರ್ಕಾವೆಂದರೆ ಇದೇ ಇರಬೇಕು ಎಂದು ಟೀಕಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ನಟ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಅಷ್ಟೆ. ಸರ್ಕಾರ ಆ ಖೈದಿಗಳನ್ನು ಬೇರೆ ಕಡೆಗೆ ವರ್ಗಾಯಿಸಬೇಕು ಎಂದು ತೀರ್ಮಾನ ಮಾಡುತ್ತಿದೆಯಂತೆ. ಈ ಸರ್ಕಾರದ ಬಗ್ಗೆ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ. +ರಾಜ್ಯ ಸರ್ಕಾರ ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳಲು ಡೈವರ್ಟ್ ಮಾಡುತ್ತಿದ್ದಾರೆ. ಕೆಲವು ವಿಷಯಗಳನ್ನು ಮುನ್ನೆಲೆಗೆ ತಂದು ಜನರನ್ನು ಯಾಮಾರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. +ಅಧಿಕಾರಿಗಳಿಂದ ನ್ಯಾಯ ದೊರಕುವುದಿಲ್ಲ. ನ್ಯಾಯಾಲಯದಿಂದ ಮಾತ್ರ ನ್ಯಾಯ ದೊರಬೇಕು. ಇದಕ್ಕೆ ಸರ್ಕಾರವೇ ಹೊಣೆ ಆಗಬೇಕು ಎಂದು ಆಗ್ರಹಿಸಿರು ಅವರು, ಜೈಲಿನ ವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಿದೆ. ಈ ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ತನಿಖೆ ನಡೆಯಬೇಕು ಎಂದು ದೊಡ್ಡ ಗಲಾಟೆ ಆಗಿತ್ತು ಎಂದು ಅವರು ಹೇಳಿದ್ದಾರೆ. +ರಾಜ್ಯದಲ್ಲಿ ಸರ್ಕಾರವೇ ಇಲ್ಲ.ರಾಜ್ಯದಲ್ಲಿ ಆಡಳಿತ ಎನ್ನುವ ನಡವಳಿಕೆ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಮಾತಾಡಿಕೊಂಡು ಇರುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಮಂತ್ರಿಗಳಿಗೆ ಕೆಲಸವಿಲ್ಲ. ಮುಖ್ಯಮಂತ್ರಿಗೆ ಅವರ ಹಗರಣ ಬಗ್ಗೆ ಮಾತಾಡಲು ಸಮಯ ಸಾಕಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. +ದುಡ್ಡು ಇದ್ದವರು ಏನು ಬೇಕಾದರೂ ಕೊಂಡುಕೊಳ್ಳಬಹುದು. ಮೃತ ರೇಣುಕಾಸ್ವಾಮಿ ಕುಟುಂಬಸ್ಥರು ಅವರ ನೋವು ಹೇಳಿಕೊಳ್ಳುತ್ತಾರೆ. ಗೃಹ ಸಚಿವ ಡಾ. ಪರಮೇಶ್ವರ ಅವರು ಪ್ರತಿ ದಿನ ಒಂದೊಂದು ಕಥೆ ಹೇಳುತ್ತಾರೆ. ಪಾರದರ್ಶಕವಾದ ಸರ್ಕಾರ ಮಾಡುತ್ತಿದ್ದೇವೆ ಎನ್ನುತ್ತಾರೆ. ಆದರೆ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ. \ No newline at end of file diff --git a/eesanje/url_46_33_4.txt b/eesanje/url_46_33_4.txt new file mode 100644 index 0000000000000000000000000000000000000000..7317be12f685b7b1bdb8cc70375c96abb15f42eb --- /dev/null +++ b/eesanje/url_46_33_4.txt @@ -0,0 +1,9 @@ +ಪರಪ್ಪನ ಅಗ್ರಹಾರ ಜೈಲಿಗೆ ಜಾಮರ್, ಸುತ್ತ ಮುತ್ತಲಿನ ನಿವಾಸಿಗಳಿಗೆ ಕಿರಿಕಿರಿ + +ಬೆಂಗಳೂರು,ಆ.26-ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್ನಿಂದಾಗಿ ಸುತ್ತಮುತ್ತಲಿನ ನಿವಾಸಿಗಳಿಗೆ ಮೊಬೈಲ್ ಸಂಪರ್ಕಗಳೇ ದುಸ್ತರವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯ ನಿವಾಸಿ ಲಕ್ಷ್ಮಣ್ ಎಂಬುವರು, ಜೈಲಿನ ಒಳಗೆ ಮೊಬೈಲ್ಗಳು ಬಳಕೆಯಾಗುತ್ತಿವೆ. ದರ್ಶನ್ ಅವರು ವಿಡಿಯೋ ಕಾಲ್ ಮೂಲಕ ಹೊರಗಿನವರೊಂದಿಗೆ ಮಾತನಾಡಿದ್ದಾರೆ. ಆದರೆ ಸುತ್ತಮುತ್ತಲಿನವರಿಗೆ ಮೊಬೈಲ್ ಸಂಪರ್ಕವೇ ಸಿಗದೆ ಸಮಸ್ಯೆಯಾಗುತ್ತಿದೆ ಎಂದರು. +ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ ಗೆ ಕರೆ ಮಾಡಲಾಗುತ್ತಿಲ್ಲ, ಕ್ಯಾಬ್ ಬುಕ್ ಮಾಡಲಾಗುತ್ತಿಲ್ಲ, ಮಕ್ಕಳು ಶಾಲೆಯಿಂದ ಬಂದರೋ, ಇಲ್ಲವೋ ಎಂಬುದನ್ನು ತಿಳಿದು ಕೊಳ್ಳಲೂ ಮೊಬೈಲ್ ಸಂಪರ್ಕವಿಲ್ಲದೆ ಕಷ್ಟವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದರು. +ಜೈಲಿನಲ್ಲಿ ಅಳವಡಿಸಲಾಗಿರುವ ಜಾಮರ್ ಫ್ರೀಕ್ವೆನ್ಸಿಯನ್ನು ಕಡಿಮೆ ಮಾಡುವಂತೆ ಮೂರ್ನಾಲ್ಕು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಹಿರಿಯ ಅಧಿಕಾರಿಗಳಿಗೆ, ಜೈಲಿನ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದ್ದೇವೆ. ಆದರೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. +ಜಾಮರ್ನಿಂದಾಗಿ ಸುತ್ತಮುತ್ತಲಿನ ಜನರಿಗೆ ತೀವ್ರ ತೊಂದರೆಯಾಗುತ್ತಿದೆ. ಆದರೆ ಜೈಲಿನ ಒಳಗಿರುವ ದರ್ಶನ್ಗೆ ವಿಡಿಯೋ ಕಾಲ್ ಸೇರಿದಂತೆ ಎಲ್ಲ ಸಂಪರ್ಕಗಳು ಸುಲಲಿತವಾಗಿದೆ. ಇದು ಜೈಲಿನ ಅಧಿಕಾರಿಗಳ ಕಳ್ಳಾಟಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದರು. +ಸ್ಥಳೀಯರ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ. ಗೃಹಸಚಿವರು, ಮುಖ್ಯಮಂತ್ರಿ ಯವರು ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು. ದುಡ್ಡಿದ್ದರೆ ಜೈಲಿನಲ್ಲಿ ರೆಸಾರ್ಟ್ನಲ್ಲಿದ್ದಂತೆ ಆರಾಮಾಗಿ ಇರಬಹುದು. +ಇದು ಎಲ್ಲರಿಗೂ ಗೊತ್ತು ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರಿದರು. ಜೈಲಿನ ಹೊರಗೆ ಜಾಮರ್ ಹಾಕಿ ಜನರನ್ನು ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜೈಲಿನ ಒಳಗೆ ಯಾವುದೇ ಅಡೆತಡೆ ಇಲ್ಲದಂತೆ ಮೊಬೈಲ್ ಬಳಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕಿಡಿಕಾರಿದರು. \ No newline at end of file diff --git a/eesanje/url_46_33_5.txt b/eesanje/url_46_33_5.txt new file mode 100644 index 0000000000000000000000000000000000000000..00aa58c59c75d3fd7486da91d4813d14e7f5813c --- /dev/null +++ b/eesanje/url_46_33_5.txt @@ -0,0 +1,6 @@ +ಪರಪ್ಪನ ಅಗ್ರಹಾರ ಜೈಲಿಂದ ವಿಲ್ಸನ್ ಗಾರ್ಡನ್ ನಾಗನ ಸ್ಥಳಾಂತರಕ್ಕೆ ಪತ್ರ : ದಯಾನಂದ + +ಬೆಂಗಳೂರು,ಆ.26-ರೌಡಿ ವಿಲ್ಸನ್ಗಾರ್ಡನ್ ನಾಗನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಈಗಾಗಲೇ ಕಾರಾಗೃಹಗಳ ಡಿಜಿಪಿಯವರಿಗೆ ಪತ್ರ ಬರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು. +ಈ ಸಂಜೆಯೊಂದಿಗೆ ಮಾತನಾಡಿದ ಅವರು, ವಿಲ್ಸನ್ಗಾರ್ಡನ್ ನಾಗ ಹಾಗೂ ಆತನ ಸಹಚರರ ಚಲನವಲನಗಳ ಬಗ್ಗೆ ನಾವು ನಿಗಾ ವಹಿಸುತ್ತಿದ್ದೇವೆ. ದರ್ಶನ್ ಜೊತೆ ವಿಲ್ಸನ್ಗಾರ್ಡನ್ ನಾಗನ ಸ್ನೇಹ ಹೇಗೆ ಬೆಳೆಯಿತು? ಈ ರೀತಿ ರಾಜಾತಿಥ್ಯ ನೀಡಿದವರ್ಯಾರು? ಎಂಬುದನ್ನು ಕಾರಾಗೃಹ ಗಳ ಇಲಾಖೆ ಈಗಾಗಲೇ ತನಿಖೆ ಆರಂಭಿಸಿದೆ ಎಂದರು. +ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಕಳೆದ ಶನಿವಾರವಷ್ಟೇ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆ ಸಂದರ್ಭದಲ್ಲಿ ಮೊಬೈಲಾಗಲೀ, ಮಾದಕ ವಸ್ತುವಾಗಲೀ ಏನೂ ಸಿಕ್ಕಿರಲಿಲ್ಲ. +ನಮ ಪೊಲೀಸರು ಆಗಾಗ್ಗೆ ಈ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿರುತ್ತಾರೆ. ಮುಂದಿನ ದಿನಗಳಲ್ಲೂ ಅನಿರೀಕ್ಷಿತ ದಾಳಿ ನಡೆಯಲಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_33_6.txt b/eesanje/url_46_33_6.txt new file mode 100644 index 0000000000000000000000000000000000000000..e29fa94e9c60c459448a40e7043257faf16e8521 --- /dev/null +++ b/eesanje/url_46_33_6.txt @@ -0,0 +1,5 @@ +ವಿಡಿಯೋ ಕಾಲ್‌ನಲ್ಲಿ ದರ್ಶನ್ ಜೊತೆ ಮಾತಾಡಿದ್ದು ರೌಡಿಯ ಮಗ + +ಬೆಂಗಳೂರು,ಆ.26-ಜೈಲಿನಿಂದ ದರ್ಶನ್ ವಿಡಿಯೊ ಕಾಲ್ ಮಾಡಿ ಮಾತನಾಡಿರುವ ವ್ಯಕ್ತಿ ನಗರದ ಹೊರವಲಯದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ, ರೌಡಿಶೀಟರ್ ಮಗ ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. +ರೌಡಿಶೀಟರ್ ಮಗನಿಗೆ ವಿಡಿಯೊ ಕಾಲ್ ಮಾಡಿರುವ ದರ್ಶನ್, ಹಾಯ್ ಚಿನ್ನ, ಊಟ ಆಯ್ತಾ ಎಂದು ಕುಶಲೋಪರಿ ವಿಚಾರಿಸಿ ಮಾತನಾಡಿರುವ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ.ಇದನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. +ರೌಡಿಯ ಮಗನಿಗೆ ವಿಡಿಯೊ ಕಾಲ್ ಮಾಡಲು ದರ್ಶನ್ಗೆ ಸಾರ್ಟ್ಫೋನ್ ಕೊಟ್ಟವರ್ಯಾರು? ಎಂಬುದನ್ನು ಪತ್ತೆ ಹಚ್ಚುತ್ತಿದ್ದಾರೆ. ರೌಡಿ ಮಗನಿಗೂ, ದರ್ಶನ್ಗೂ ಯಾವ ರೀತಿಯ ಸಂಬಂಧವಿದೆ ಎಂಬುದನ್ನು ಪೊಲೀಸರು ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_33_7.txt b/eesanje/url_46_33_7.txt new file mode 100644 index 0000000000000000000000000000000000000000..b0e2b8739ffb600ac32e58f36ffcbb9cd8e307f0 --- /dev/null +++ b/eesanje/url_46_33_7.txt @@ -0,0 +1,7 @@ +ಕಾರಾಗೃಹ ಅಧಿಕಾರಿ, ಸಿಬ್ಬಂದಿಗೆ ಡಿಜಿಪಿ ತರಾಟೆ +ಬೆಂಗಳೂರು,ಆ.26-ಕೊಲೆ ಆರೋಪಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತರಾಟೆಗೆ ತೆಗೆದುಕೊಂಡಿದ್ದಾರೆ. +ಇಂದು ಬೆಳಿಗ್ಗೆ ಕಾರಾಗೃಹಕ್ಕೆ ಭೇಟಿ ನೀಡಿದ ಅವರು, ನೀವು ಮಾಡುವಂತಹ ಇಂತಹ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸಬೇಕಾಗುತ್ತದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. +ಈ ಘಟನೆಯಲ್ಲದೆ ಬೇರೆ ಖೆೈದಿ ಅಥವಾ ವಿಚಾರಣಾ ಖೆೈದಿಗಳಿಗೆ ಈ ರೀತಿಯ ರಾಜಾತಿಥ್ಯ ನೀಡಲಾಗಿದೆಯೇ?, ಬೇರೆ ಇನ್ನೇನಾದರೂ ಸವಲತ್ತು ಒದಗಿಸಲಾಗಿದೆಯೇ?, ಒಂದು ವೇಳೆ ಆ ರೀತಿಯ ಸೌಲಭ್ಯಗಳನ್ನು ಕೊಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಇಲ್ಲದಿದ್ದರೆ ನಿಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. +ಪ್ರತಿ ಸಭೆಯಲ್ಲೂ ಸಹ ನಾವು ಪದೇಪದೇ ಜೈಲಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿಗಳಿಗೆ ತಿಳಿಸಿದ್ದೇವೆ. ಆದರೂ ಸಹ ಇಂತಹ ಕೆಲಸ ಮಾಡುತ್ತೀರಿ. ಯಾರು, ಎಷ್ಟೇ ದೊಡ್ಡವರಾದರೂ ಅವರಿಗೆ ಯಾವುದೇ ರೀತಿಯ ಹೆಚ್ಚಿನ ಸವಲತ್ತು ನೀಡಬಾರದು. ಜೈಲಿನ ನಿಯಮಾವಳಿ ಪ್ರಕಾರವೇ ಅವರಿಗೆ ಸೌಲಭ್ಯ ಒದಗಿಸಬೇಕು. ಅದಕ್ಕಿಂತ ಹೆಚ್ಚಿಗೆ ಒದಗಿಸಬಾರದು. ಅದು ಕಾನೂನು ಬಾಹಿರ ಎಂದರು. +ದರ್ಶನ್ಗೆ ಈ ವ್ಯವಸ್ಥೆ ಮಾಡಿಕೊಟ್ಟವರ್ಯಾರು? ಕುಖ್ಯಾತ ರೌಡಿಗಳ ಸಂಪರ್ಕ ದರ್ಶನ್ಗೆ ಕಲ್ಪಿಸಿದವರ್ಯಾರು? ದರ್ಶನ್ ಜೊತೆಯಲ್ಲಿ ಕುಳಿತುಕೊಳ್ಳಲು ಹಾಗೂ ಅವರಿಗೆ ಚೇರು, ಟೀಫಾಯಿ ವ್ಯವಸ್ಥೆ ಮಾಡಿದವರ್ಯಾರು? ಇದು ಎಷ್ಟು ದಿನದಿಂದ ನಡೆಯುತ್ತಿದೆ? ಇದರ ಹಿಂದೆ ಯಾರ್ಯಾರಿರಿದ್ದಾರೆ? ಇದಕ್ಕಾಗಿ ಎಷ್ಟು ಹಣ ಪಡೆದುಕೊಂಡಿದ್ದೀರಿ? ಬೇಗ ತಿಳಿಸಿ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಡಿಜಿಪಿಯವರು ತರಾಟೆಗೆ ತೆಗೆದುಕೊಂಡರು. +ಇದಕ್ಕೂ ಮುನ್ನ ಡಿಜಿಪಿಯವರು ಜೈಲಿನ ಎಲ್ಲಾ ಬ್ಯಾರಕ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಎಐಜಿಪಿ ಆನಂದರೆಡ್ಡಿ, ಡಿಐಜಿ ಸೋಮಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು. \ No newline at end of file diff --git a/eesanje/url_46_33_8.txt b/eesanje/url_46_33_8.txt new file mode 100644 index 0000000000000000000000000000000000000000..460799d6d95a20684525fdda4a0399dc31db6d19 --- /dev/null +++ b/eesanje/url_46_33_8.txt @@ -0,0 +1,9 @@ +ನಟ ದರ್ಶನ್ ಸ್ಥಳಾಂತರ ಕುರಿತು ಪರಿಶೀಲನೆ : ಸಿಎಂ + , +ಬೆಳಗಾವಿ,ಆ.26– ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರನ್ನು ಬೆಳಗಾವಿ ಅಥವಾ ಬೇರೆ ಜೈಲಿಗೆ ಸ್ಥಳಾಂತರಿಸುವ ಕುರಿತು ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣದಲ್ಲಿ ಪರ-ವಿರೋಧ ಎಂಬ ಚರ್ಚೆಯಿಲ್ಲ. ಅಧಿಕಾರಿಗಳ ಕಡೆಯಿಂದ ಲೋಪಗಳಾಗಿವೆ. ಏಳು ಜನರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ ಎಂದರು. +ಗೃಹಸಚಿವರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದಕ್ಕೆ ಅವಕಾಶ ಮಾಡಿಕೊಟ್ಟಿರುವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮತ್ತಷ್ಟು ಅಧಿಕಾರಿಗಳನ್ನು ಅಮಾನತುಗೊಳಿಸಲಾಗುವುದು ಎಂದು ಹೇಳಿದರು. +ದರ್ಶನ್ನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಚಿಂತನೆ ಇದೆ. ಅಧಿಕಾರಿಗಳು ಹಣ ಪಡೆದು ಸೌಲಭ್ಯ ಒದಗಿಸಿದ್ದಾರೋ ಏನೋ ಎಂಬ ಬಗ್ಗೆ ಮಾಹಿತಿ ಇಲ್ಲ. ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರೆ ಅವರನ್ನೂ ಅಮಾನತುಗೊಳಿಸಲು ಗೃಹಸಚಿವರು ವರದಿ ಪಡೆಯುತ್ತಿದ್ದಾರೆ. +ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ರಾಜ್ಯ ಸರ್ಕಾರದ ವಿರುದ್ಧ ಟೀಕೆ ಮಾಡುವ ನೈತಿಕತೆ ಹೊಂದಿಲ್ಲ. ಅವರು ಬಡವರ ಪರವಾಗಿದ್ದಾರೋ, ಶ್ರೀಮಂತರ ಪರವಾಗಿದ್ದಾರೋ ಎಂಬುದನ್ನು ಸ್ಪಷ್ಟಪಡಿಸಬೇಕು. ನಮ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರ ಪರವಾಗಿದೆ. ಪ್ರಹ್ಲಾದ್ ಜೋಷಿ ಬಡವರ ಪರವಾಗಿ ಏನು ಕಾರ್ಯಕ್ರಮ ರೂಪಿಸಿದ್ದಾರೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಎಂದು ಇದೇ ವೇಳೆ ಸವಾಲು ಹಾಕಿದರು. +ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಗೃಹಸಚಿವರು ಇಂದು ಜೈಲಿಗೆ ಭೇಟಿ ನೀಡುತ್ತಿದ್ದಾರೆ. ಅಲ್ಲಿಂದ ಅವರು ಪಡೆಯುವ ವರದಿ ಆಧರಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು. +ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆಯ ಬದಲಾಗಿ ಹಳೇ ಪಿಂಚಣಿಯನ್ನೇ ಮರುಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಕುರಿತಂತೆ ಸ್ಥಳೀಯ ಶಾಸಕರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು. \ No newline at end of file diff --git a/eesanje/url_46_33_9.txt b/eesanje/url_46_33_9.txt new file mode 100644 index 0000000000000000000000000000000000000000..30fd4da146e7e7764ee259fa0f6c5966b365e0db --- /dev/null +++ b/eesanje/url_46_33_9.txt @@ -0,0 +1,7 @@ +100 ಕೋಟಿ ರೂ. ಆಫರ್ ಹೇಳಿಕೆ : ಗಣಿಗ ರವಿ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ +100 . : +ಬೆಂಗಳೂರು,ಆ.26– ಬಿಜೆಪಿ ಸೇರಲು ಶಾಸಕರಿಗೆ 100 ಕೋಟಿ ರೂ. ಆಫರ್ ನೀಡಿದ್ದಾರೆ ಎಂಬ ಮಂಡ್ಯ ಶಾಸಕ ಗಣಿಗ ರವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ದೂರು ನೀಡಿದೆ. +ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ದೂರು ನೀಡಿದ ಜಿಲ್ಲಾ ಘಟಕ ಪಕ್ಷದ ವಿರುದ್ಧ ಮಾನಹಾನಿ ಹೇಳಿಕೆ ನೀಡಿರುವ ಶಾಸಕ ಗಣಿಗಾ ರವಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದೆ. +ಗಣಿಗಾ ರವಿ ಅವರನ್ನು ಯಾರು? ಎಲ್ಲಿ? ಯಾವಾಗ? ಭೇಟಿ ಮಾಡಿದರು. ಅವರಿಗೆ 100 ಕೋಟಿ ರೂ. ಆಫರ್ ನೀಡಿರುವುದಕ್ಕೆ ದಾಖಲೆಯಿದೆಯೇ?, ಇದ್ದರೆ ಅದನ್ನು ಏಕೆ ಬಿಡುಗಡೆ ಮಾಡಬಾರದು?, ಸುಳ್ಳು ಆರೋಪ ಮಾಡಿರುವ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ. +ಈ ಹಿಂದೆಯೂ ಇದೇ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಾ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿರುವ ಅವರ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ ಬಂಧಿಸಬೇಕು. ಈ ಹೇಳಿಕೆಯಿಂದ ಬಿಜೆಪಿಗೆ ಸಾಕಷ್ಟು ಮುಜುಗರವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ. +ಕೇವಲ ಪ್ರಚಾರಕ್ಕೋಸ್ಕರ ಸುಳ್ಳು ಆರೋಪಗಳನ್ನು ಮಾಡಿರುವ ಗಣಿಗಾ ರವಿ ಕೂಡಲೇ ಕ್ಷಮಾಪಣೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದರು. \ No newline at end of file diff --git a/eesanje/url_46_340_1.txt b/eesanje/url_46_340_1.txt new file mode 100644 index 0000000000000000000000000000000000000000..667e69ca153f7dc8489ab1996ff96a42b7f63063 --- /dev/null +++ b/eesanje/url_46_340_1.txt @@ -0,0 +1,10 @@ +ಕಾವೇರಿ ವಿಚಾರದಲ್ಲಿ ಸರ್ಕಾರಗಳು ಸೌಹಾರ್ದಯುತ ಪರಿಹಾರ ಕಂಡುಕೊಳ್ಳಬೇಕು : ಶಿವಣ್ಣ +ಬೆಂಗಳೂರು, ಸೆ.29- ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಚರ್ಚೆ ಮಾಡಿ ಕಾವೇರಿ ನದಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹೇಳಿದರು. +ಕರ್ನಾಟಕ ಬಂದ್ ಪ್ರಯುಕ್ತ ಕನ್ನಡ ಚಲನಚಿತ್ರವಾಣಿಜ್ಯ ಮಂಡಳಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾವೇರಿ ತಾಯಿ ಇಲ್ಲಿಯೂ ಇರಬೇಕು, ಅಲ್ಲಿಗೂ ಹೋಗಬೇಕು. ಅದಕ್ಕೆ ತಾಯಿಯನ್ನು ದೇವರು ಎನ್ನುತ್ತೇವೆ. ಆಕೆ ಎಲ್ಲ ನೋವನ್ನು ತಡೆದುಕೊಳ್ಳುತ್ತಾಳೆ. ಆ ಶಕ್ತಿ ಆಕೆಗಿದೆ ಎಂದರು. +ಕಾವೇರಿ ಹೋರಾಟಕ್ಕೆ ಚಿತ್ರರಂಗದ ಕಲಾವಿದರು ಬಂದಿಲ್ಲ ಎಂದು ಪ್ರಶ್ನೆ ಮಾಡಲಾಗುತ್ತಿದೆ. ನಾವು ಬಂದು ಏನು ಮಾಡುವುದು. ನಾವು ನಿಮ್ಮಂತೆ ಮನುಷ್ಯರು, ಪ್ರತಿಭಟನೆಗೆ ಬಂದು ನಿಂತುಕೊಳ್ಳಬಹುದಷ್ಟೆ. ನಮಗೆ ಸ್ಟಾರ್ಡಂ ಕೊಟ್ಟಿರುವುದೇ ನೀವು, ಬೇಕಿದ್ದರೆ ಅದನ್ನು ವಾಪಾಸ್ ಕಿತ್ತುಕೊಳ್ಳಿ ಎಂದು ಪರೋಕ್ಷ ಅಸಮಧಾನ ವ್ಯಕ್ತಪಡಿಸಿದರು. +ಅಲ್ಲಿ ಮತ್ತು ಇಲ್ಲಿ ಇರುವ ಎರಡೂ ಸರ್ಕಾರಗಳು ಕುಳಿತು ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇದಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಅಲ್ಲಿ ಮತ್ತು ಇಲ್ಲಿನ ರೈತರು ಒಂದೇ, ಸಮಸ್ಯೆ ಯಾರಿಗೆ ಆದರೂ ಅದು ನೋವೆ ತಾನೆ. ಚುನಾಯಿತ ಸರ್ಕಾರಗಳು ಕುಳಿತು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. +ಕಾವೇರಿಗಾಗಿ ಕೆರಳಿದ ಚಿತ್ರರಂಗ, ಒಂದಾಗಿ ಹೋರಾಟಕ್ಕಿಳಿದ ತಾರೆಯರು +ಮೊನ್ನೆ ತಮಿಳುನಾಡಿನ ನಟ ಸಿದ್ಧಾರ್ಥ್ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವುದಕ್ಕೆ ಕೆಲವರು ಅಡ್ಡಿ ಪಡಿಸಿದ್ದಾರೆ, ಅದು ಯಾರು ಎಂದು ಗೋತ್ತಿಲ್ಲ. ಆದರೆ ಅವರು ಮಾಡಿದ್ದು ತಪ್ಪು. ನಟ ಸಿದ್ಧಾರ್ಥ್ಗೆ ಇದು ನೋವುಂಟು ಮಾಡಿದೆ, ದಯವಿಟ್ಟು ಕ್ಷಮಿಸಿ ಎಂದು ನಾವು ಅವರ ಕ್ಷಮೆ ಕೇಳುತ್ತೇವೆ. ಕನ್ನಡಿಗರು ಸಮಸ್ಯೆಯನ್ನು ನುಂಗಿ ಬದುಕುತ್ತಾರೆ. ಸಮಸ್ಯೆಯನ್ನು ನಾವು ಸಹಿಸಿಕೊಳ್ಳಬೇಕು, ಅದನ್ನು ಬಗೆಹರಿಸಲು ಯೋಚಿಸಬೇಕು. ಕನ್ನಡಿಗರು ಎಲ್ಲಾ ಭಾಷೆಯ ಚಿತ್ರಗಳನ್ನು ನೋಡುತ್ತಾರೆ ಎಂದರು. +ಹೋರಾಟ ಮಾಡಬೇಕು, ಏನು ಹೋರಾಟ ಮಾಡುವುದು. ಯಾರೇ ಆದರೂ ಪರಿಸ್ಥಿತಿ ನೋಡಿ ಅನುಕೂಲ ಪಡೆದುಕೊಳ್ಳಬಾರದು. ಅದು ಹೋರಾಟದ ಉದ್ದೇಶವಲ್ಲ. ಕಲ್ಲು ಹೊಡೆದರೆ ಅದು ಹೋರಾಟವೇ ಎಂದು ಪ್ರಶ್ನಿಸಿದರು.ಕನ್ನಡಿಗರಿಗೆ ವಿಶ್ವಾದ್ಯಂತ ಗೌರವ ಇದೆ. ಟ್ವಿಟ್ ಮಾಡಿದಾಕ್ಷಣ ಕಾವೇರಿ ಬಗ್ಗೆ ಪ್ರೀತಿ ಇದೆ, ಇಲ್ಲವಾದರೆ ಇಲ್ಲ ಎಂದಲ್ಲ. +ನಾನು ಹೃದಯದಿಂದ ಮಾತನಾಡುತ್ತೇನೆ. ಮೈಂಡ್ನಿಂದ ಮಾತನಾಡುವುದಿಲ್ಲ. ಚಿತ್ರರಂಗದ ಯಾರನ್ನೂ ಬ್ಲೆಮ್ ಮಾಡಬೇಡಿ. ಅವರು ಬಂದಿಲ್ಲ, ಇವರು ಬಂದಿಲ್ಲ ಎಂದು ದೂಷಿಸಬೇಡಿ. ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡಿ, ನಾವು ಇರುವುದರಿಂದ ಎಲ್ಲರೂ ಬಂದಂತೆ. ತಮಿಳುನಾಡು ಎಲ್ಲಿದೆ ಪಕ್ಕದಲ್ಲೇ ಇದೆ ತಾನೇ. ಇಲ್ಲಿಗೆ ಬರದಿದ್ದರೆ ಎಂದರೆ ಅವರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಇಷ್ಟ ಇಲ್ಲ ಎಂದಲ್ಲ. ಕೆಲವರು ನಮ್ಮ ಮುಖ ನೋಡಲು ಬರುತ್ತಾರೆ, ಇನ್ನೂ ಕೆಲವರು ಸೆಲಿ ತೆಗೆದುಕೊಳ್ಳಲು ಬರುತ್ತಾರೆ. ನಮಗೂ ಸ್ವಲ್ಪ ಕಾಲಾವಕಾಶ ಕೊಡಿ ಎಂದರು. +ತಮಿಳುನಾಡು ಸರ್ಕಾರದ ಜೊತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರವೂ ಮಧ್ಯ ಪ್ರವೇಶ ಮಾಡಲಿ. ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆ ಹರಿಸಿ. ವಾರದಲ್ಲಿ ಮಳೆ ಬಂದರೆ ಸಮಸ್ಯೆ ತನ್ನಷ್ಟಕ್ಕೆ ಬಗೆ ಹರಿಯುತ್ತದೆ. ಇದಕ್ಕೆ ಪರಸ್ಪರ ನಂಬಿಕೆ ವಿಶ್ವಾಸ ಬೇಕು ಎಂದು ಹೇಳಿದರು. \ No newline at end of file diff --git a/eesanje/url_46_340_10.txt b/eesanje/url_46_340_10.txt new file mode 100644 index 0000000000000000000000000000000000000000..b7cf7a7fcea460a2897dc6b76d521e327c6fe981 --- /dev/null +++ b/eesanje/url_46_340_10.txt @@ -0,0 +1,12 @@ +ಕರ್ನಾಟಕ ಬಂದ್ : ರೈಲು, ಹೆದ್ದಾರಿ ತಡೆಗೆ ಸಿದ್ಧತೆ, ಪರೀಕ್ಷೆಗಳು ಮುಂದೂಡಿಕೆ +ಬೆಂಗಳೂರು,ಸೆ.28- ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯದಲ್ಲಿ ನಾಳೆ ಎರಡನೇ ಬಂದ್ ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ಸಂಘಟನೆ ಗಳು ಬೆಂಬಲ ನೀಡಿರುವುದರಿಂದ ಜಿಲ್ಲೆ, ತಾಲೂಕು ಮಟ್ಟದಲ್ಲೂ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ. +ಬೆಂಗಳೂರಿನಲ್ಲಿ ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಏಕಕಾಲಕ್ಕೆ ಜಿಲ್ಲೆಗಳಲ್ಲಿ, ತಾಲೂಕು ಮಟ್ಟಗಳಲ್ಲಿ ಬಂದ್ ಆಚರಣೆಯಾಗಲಿದ್ದು, ಪ್ರತಿಭಟನೆ ನಡೆಸಲು ಚರ್ಚೆಗಳು ನಡೆದಿವೆ. ಜೀವನಾವಶ್ಯಕವಾದ ಆಸ್ಪತ್ರೆ, ಔಷಧಾಲಯಗಳು, ಹಾಲು, ಹಣ್ಣು, ತರಕಾರಿ ಯಂತಹ ಅಗತ್ಯ ಸರಕು ಮತ್ತು ಸೇವೆ ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಚಟು ವಟಿಕೆಗಳು ಸ್ತಬ್ಧಗೊಳ್ಳಲಿವೆ ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ. +ವಾಟಾಳ್ ನಾಗರಾಜ್ ಅವರ ಪ್ರಕಾರ 1900 ಕ್ಕೂ ಹೆಚ್ಚು ಸಂಘಟನೆಗಳು ರಾಜ್ಯಾದ್ಯಂತ ಬಂದ್‍ಗೆ ಕೈಜೋಡಿಸಿವೆ. ಚಾಮರಾಜನಗರದಿಂದ ಬೀದರ್‍ವರೆಗೂ, ಮಂಗಳೂರಿನಿಂದ ಕೋಲಾರದವರೆಗೂ ಅಖಂಡ ಕರ್ನಾಟಕ ಕಾವೇರಿಯ ಅನ್ಯಾಯಕ್ಕೆ ಧ್ವನಿ ಎತ್ತಲಿದೆ ಎಂದಿದ್ದಾರೆ. ಒಂದೇ ವಾರದಲ್ಲಿ ಎರಡು ಬಂದ್‍ಗಳು ನಡೆಯುತ್ತಿರುವುದು ರಾಜ್ಯ ಹಾಗೂ ಬೆಂಗಳೂರಿನ ಜನರಿಗೆ ದುಬಾರಿ ಎನಿಸಿದರೂ ಜೀವನದಿಯ ರಕ್ಷಣೆಗಾಗಿ ಪ್ರತಿಭಟನೆಗಳು ನಿರಂತರವಾಗಿ ಮುಂದುವರೆದಿವೆ. +ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ +ಮೊನ್ನೆ ಕಬ್ಬು ಬೆಳೆಗಾರರ ಸಂಘ, ಅಮ್ ಆದ್ಮಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ನಡೆಸಿದ್ದವು. ನಾಳೆ ನಡೆಯಲಿರುವ ಬಂದ್‍ನಲ್ಲಿ ರೈಲು ಸಂಚಾರ, ಹೆದ್ದಾರಿ ತಡೆ ಮಾಡುವುದರ ಜೊತೆಗೆ ಅಂಚೆ ಸೇರಿದಂತೆ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ. +ಸಾರಿಗೆ ವಲಯದ ಖಾಸಗಿ ವಾಹನಗಳ ಮಾಲೀಕರು, ಸರ್ಕಾರದ ನಿಗಮಗಳ ನೌಕರ ಸಂಘಟನೆಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿರುವುದರಿಂದ ಸಂಚಾರ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ಇದೆ. ಬಂದ್ ಯಶಸ್ವಿಗಾಗಿ ಕನ್ನಡಪರ ಸಂಘಟನೆಗಳು ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿವೆ. ಕನ್ನಡ ಚಲನಚಿತ್ರೋದ್ಯಮ ತನ್ನೆಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ಬಂದ್‍ಗೆ ಕೈಜೋಡಿಸಲಿದೆ ಎಂದು ಹೇಳಲಾಗುತ್ತಿದೆ. +ಕರವೇಯ ನಾರಾಯಣ ಗೌಡ ಅವರ ಬಣ ಬಂದ್‍ಗೆ ಬೆಂಬಲ ನೀಡುವುದಿಲ್ಲ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿವೆ. ಆದರೆ ಅದೇ ದಿನ ಕಾವೇರಿಗಾಗಿ ಪ್ರತಿಭಟನೆ ನಡೆಸಲಿದೆ. ಕರವೇಯ ಪ್ರವೀಣ್ ಶೆಟ್ಟಿ ಬಣ ಬಂದ್‍ನ ನೇತೃತ್ವ ವಹಿಸಿದ್ದು, ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆ. ಉಳಿದಂತೆ ಕನ್ನಡ ಸೇನೆ ಹಾಗೂ ನೂರಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಲಾಗುತ್ತಿದೆ. +ಕರ್ನಾಟಕ ಬಂದ್ ವಿಷಯದಲ್ಲಿ ಸಿಡಿಮಿಡಿ ವ್ಯಕ್ತಪಡಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎರಡೆರಡು ಬಂದ್ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಬಂದ್, ಪ್ರತಿಭಟನಾ ಮೆರವಣಿಗೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕ ಆಸ್ತಿ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಬರದಂತೆ ಪ್ರತಿಭಟನೆ ನಡೆಸಲು ತಮ್ಮ ಆಕ್ಷೇಪವಿಲ್ಲ ಎಂದಿದ್ದಾರೆ. +ಗೃಹಸಚಿವ ಡಾ.ಜಿ.ಪರಮೇಶ್ವರ್ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಬಂದ್ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರು ಬಂದ್ ವೇಳೆ ಪೊಲೀಸರು ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ಕಾವೇರಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ರಾಜ್ಯಸರ್ಕಾರ 50 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದೆ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದರು. ಬಲ ಪ್ರಯೋಗದ ಮೂಲಕ ಹೋರಾಟಗಾರರನ್ನು ಬಂಧಿಸಲಾಗುತ್ತಿದೆ. +ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ +ಪ್ರತಿಭಟನೆಗಳನ್ನು ನಿಯಂತ್ರಿಸಲು ಪೊಲೀಸ್ ರಾಜ್ಯ ನಿರ್ಮಾಣ ಮಾಡಲಾಗಿದೆ. ಇದೇ ಧೋರಣೆಯನ್ನು ಮುಂದುವರೆಸಿದರೆ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ. \ No newline at end of file diff --git a/eesanje/url_46_340_11.txt b/eesanje/url_46_340_11.txt new file mode 100644 index 0000000000000000000000000000000000000000..a40ea6f26141114436dc8606659523c3f01b0733 --- /dev/null +++ b/eesanje/url_46_340_11.txt @@ -0,0 +1,10 @@ +ಹರಿಪ್ರಸಾದ್ ಜತೆ ಡಿಸಿಎಂ ಸಮಾಲೋಚನೆ : ಹೈಕಮಾಂಡ್ ಸಂದೇಶ ರವಾನೆ +ಬೆಂಗಳೂರು, ಸೆ.28- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ ಕಾಂಗ್ರೆಸ್‍ನಲ್ಲಿ ಸಂಚಲನ ಮೂಡಿಸಿದ್ದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸಮಾಲೋಚನೆ ನಡೆಸಿದ್ದಾರೆ. +ಬಿ.ಕೆ.ಹರಿಪ್ರಸಾದ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡ ಡಿ.ಕೆ.ಶಿವಕುಮಾರ್ ಅವರು, ಪಕ್ಷ ಸಂಘಟನೆ, ಲೋಕಸಭೆ ಚುನಾವಣೆ ಹಾಗೂ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಮೂಲಗಳ ಪ್ರಕಾರ, ಹೈಕಮಾಂಡ್ ಕಳುಹಿಸಿರುವ ಸಂದೇಶವನ್ನು ಡಿ.ಕೆ.ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ರವಾನಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಮೂಡಿಸದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. +ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್‍ನ ಹಿರಿಯ ನಾಯಕರಾಗಿದ್ದು, ಎಐಸಿಸಿಯಲ್ಲಿ ಸುದೀರ್ಘ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತವಾಗಿ ರಾಜ್ಯದಲ್ಲಿ ಅವರನ್ನು ವಿಧಾನಪರಿಷತ್‍ನ ಸದಸ್ಯರನ್ನಾಗಿ ನಿಯೋಜಿಸಲಾಗಿದೆ. +ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ +ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹರಿಪ್ರಸಾದ್ ವಿಧಾನಪರಿಷತ್‍ನ ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ ಹರಿಪ್ರಸಾದ್ ಅವರನ್ನು ಕಡೆಗಣಿಸಿ ಮಧು ಬಂಗಾರಪ್ಪ ಅವರಿಗೆ ಮಣೆ ಹಾಕಲಾಗಿದೆ ಎಂಬ ಆರೋಪಗಳಿವೆ. +ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಹರಿಪ್ರಸಾದ್ ಅವರು ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅಷ್ಟಕ್ಕೆ ಸುಮ್ಮನಾಗದೆ ಹಲವಾರು ಬಾರಿ ತಮ್ಮ ಹೇಳಿಕೆಗಳನ್ನು ಅವರ ವಿರುದ್ಧ ಪುನರ್ ಉಚ್ಛರಿಸಿದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು. +ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ +ಹೈಕಮಾಂಡ್ ಬಿ.ಕೆ.ಹರಿಪ್ರಸಾದ್ ಅವರಿಗೆ ನೋಟಿಸ್ ನೀಡಿ ಹತ್ತು ದಿನಗಳಲ್ಲಿ ಉತ್ತರಿಸುವಂತೆ ಸೂಚಿಸಿತ್ತು. ಅದಕ್ಕೆ ಹರಿಪ್ರಸಾದ್ ಉತ್ತರ ನೀಡಿದ್ದಾರೆ ಎನ್ನಲಾಗಿದೆ. ಮತ್ತೊಂದು ವದಂತಿಯ ಪ್ರಕಾರ ಬಿ.ಕೆ.ಹರಿಪ್ರಸಾದ್ ಉದ್ದೇಶಪೂರಕವಾಗಿಯೇ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯ ಬಳಿಕ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಈ ತಯಾರಿಗಳು ನಡೆಯುತ್ತಿವೆ ಎಂಬ ಚರ್ಚೆಗಳಿದ್ದವು. +ನೋಟಿಸ್ ಬಳಿಕ ಹರಿಪ್ರಸಾದ್ ಅವರು ಮೌನಕ್ಕೆ ಶರಣಾಗಿದ್ದಾರೆ. ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದು ಹಲವಾರು ಕುತೂಹಲಗಳಿಗೆ ಕಾರಣವಾಗಿದೆ. \ No newline at end of file diff --git a/eesanje/url_46_340_12.txt b/eesanje/url_46_340_12.txt new file mode 100644 index 0000000000000000000000000000000000000000..01a4d555342fce9c1233cf19adf24780aff3d0b9 --- /dev/null +++ b/eesanje/url_46_340_12.txt @@ -0,0 +1,8 @@ +ಬೆಂಗಳೂರಿನಲ್ಲಿ ಇಂದು ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ +ಬೆಂಗಳೂರು, ಸೆ.28- ನಾಳೆಯ ಕರ್ನಾಟಕ ಬಂದ್‍ಗೆ ನಗರ ಸೇರಿದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇಂದು ರಾತ್ರಿ 12 ಗಂಟೆಯಿಂದ ನಾಳೆ ರಾತ್ರಿ 12 ಗಂಟೆ ವರೆಗೆ ನಗರದಾದ್ಯಂತ ಸಿಆರ್‍ಪಿಸಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜತೆಗೆ ಎರಡು ಕಂಪೆನಿ ಆರ್‍ಎಎಫ್,ಕೆಎಸ್‍ಆರ್‍ಪಿಯ 60, ಸಿಎಆರ್‍ನ 40 ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ. ಎಲ್ಲ ಠಾಣೆಗಳ ಇನ್ಸ್‍ಪೆಕ್ಟರ್‍ಗಳು, ಉಪ ವಿಭಾಗದ ಎಸಿಪಿಗಳು, ಎಲ್ಲ ವಿಭಾಗಗಳ ಡಿಸಿಪಿಗಳು, ಜಂಟಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಪೊಲೀಸ್ ಆಯುಕ್ತರುಗಳು ನಾಳೆ ಗಸ್ತಿನಲ್ಲಿರುತ್ತಾರೆ. +ಯಾವುದೇ ರೀತಿಯ ಸಣ್ಣಪುಟ್ಟ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಆಯುಕ್ತರು ಹೇಳಿದರು. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಬಂದ್ ನಡೆಸುವುದು ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳಿಗೆ ವಿರುದ್ಧವಾಗಿದೆ. ಆದ್ದರಿಂದ ನಗರದಲ್ಲಿ ಯಾವುದೇ ರೀತಿಯ ಬಂದ್ ಮಾಡದಂತೆ ಸಂಘಟನೆಗಳಿಗೆ ಕೋರಲಾಗಿದೆ ಎಂದರು. +ಪ್ರತಿಭಟನೆ ನಡೆಸಲು ಫ್ರೀಡಂಪಾರ್ಕ್‍ನಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಯಾವುದೇ ಸಂಘಟನೆಗಳಿಗೆ ರ್ಯಾಲಿ, ಮೆರವಣಿಗೆ ನಡೆಸಲು ಅನುಮತಿ ನೀಡಿಲ್ಲ. ಒತ್ತಾಯಪೂರ್ವಕವಾಗಿ ಅಂಗಡಿ-ಮುಂಗಟ್ಟು ಮುಚ್ಚಿಸುವುದು ಮತ್ತು ಸಾರ್ವಜನಿಕರಿಗೆ ತೊಂದರೆ ಕೊಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. +ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್:ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯ ಪೊಲೀಸರ ಜೊತೆಗೆ 5 ಕಂಪನಿ ಆರ್‍ಎಎಫ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. +ಈ ಸಂಜೆಯೊಂದಿಗೆ ಮಾತನಾಡಿದ ಅವರು, ಆರ್‍ಎಎಫ್ ಪಡೆಯನ್ನು ಮಂಡ್ಯ, ಮೈಸೂರು, ಮಂಗಳೂರು, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ನಿಯೋಜಿಸಲಾಗಿದೆ ಎಂದು ವಿವರಿಸಿದರು. ನಾಳೆ ಎಲ್ಲಾ ಜಿಲ್ಲಾ ಎಸ್‍ಪಿಗಳು, ವಲಯದ ಐಜಿಗಳು, ನಗರಗಳ ಆಯುಕ್ತರು ಗಸ್ತಿನಲ್ಲಿರುತ್ತಾರೆ. ಇಲಾಖೆಯ ಪ್ರತಿಯೊಬ್ಬರೂ ನಾಳೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದೇವೆ. ಹಾಗಾಗಿ ಎಲ್ಲಾ ಸಿಬ್ಬಂದಿ ಕರ್ತವ್ಯದಲ್ಲಿರುತ್ತಾರೆ ಎಂದರು. +ಸ್ಥಳೀಯ ಪೊಲೀಸರ ಜೊತೆಗೆ 5 ಕಂಪನಿ ಆರ್‍ಎಎಫ್, 250 ತುಕಡಿ ಕೆಎಸ್‍ಆರ್‍ಪಿ ಜೊತೆಗೆ ಡಿಎಆರ್ ಫ್ಲಟೂನ್ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. ಗಡಿಗಳಲ್ಲಿ ಹೆಚ್ಚಿನ ಭದ್ರತೆ: ರಾಜ್ಯದ ಗಡಿಗಳಲ್ಲಿಯೂ ಸಹ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. ಅದರಲ್ಲೂ ತಮಿಳುನಾಡಿನ ಗಡಿಯಲ್ಲಿ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದೇವೆ. ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_340_2.txt b/eesanje/url_46_340_2.txt new file mode 100644 index 0000000000000000000000000000000000000000..fbd9320e3cdac202638449209b4ff27359a99bd4 --- /dev/null +++ b/eesanje/url_46_340_2.txt @@ -0,0 +1,31 @@ +ಕರ್ನಾಟಕ ಬಂದ್ : ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಕಂಪ್ಲೀಟ್ ಚಿತ್ರಣ +ಬೆಂಗಳೂರು, ಸೆ.29- ತೀವ್ರ ಬರದ ಸಂಕಷ್ಟದಲ್ಲೂ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಸಿ ಕನ್ನಡ ಹಾಗೂ ರೈತಪರ ಸಂಘಟನೆಗಳು ಕರೆ ಕೊಟ್ಟಿದ್ದ ಅಖಂಡ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಕನ್ನಡಿಗರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಕೇಂದ್ರ ಸರ್ಕಾರಕ್ಕೆ ರವಾನಿಸಲಾಯಿತು. +ಬೆಂಗಳೂರು ಬಂದ್ ನಂತರ ನಡೆದ  ಕರ್ನಾಟಕ ಬಂದ್‍ಗೆ ಪಕ್ಷಭೇದ ಮರೆತು ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರುಗಳು, ಬೆಂಬಲ ಸೂಚಿಸಿದರು. ಕಾವೇರಿ ಸೇರಿದಂತೆ ನಾಡು, ನುಡಿ, ಜಲದ ವಿಷಯದಲ್ಲಿ ಅನ್ಯಾಯವಾದರೆ ಕನ್ನಡಿಗರು  ಕೈಕಟ್ಟಿ ಕೂರುವುದಿಲ್ಲ ಎಂಬ ಎಚ್ಚರಿಕೆಯನ್ನು ಕೊಡಲಾಯಿತು. +ಕರ್ನಾಟಕ ಬಂದ್‍ಗೆ ಬೆಂಗಳೂರು, ಹಳೆ ಮೈಸೂರು ಭಾಗದ, ತುಮಕೂರು, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗಿತ್ತು. ಆದರೆ ಮಧ್ಯ ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿತು. +ಆಸ್ಪತ್ರೆ, ಔಷಧ ಅಂಗಡಿಗಳು, ಹಾಲಿನ ಬೂತ್, ಅಂಬ್ಯುಲೆನ್ಸ್, ಪೆಟ್ರೋಲ್ ಬಂಕ್, ಗ್ಯಾಸ್ ಅಂಗಡಿ ಮತ್ತಿತರ ಅಗತ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯ ಕಂಡುಬರಲಿಲ್ಲ. ಉಳಿದಂತೆ ಆಟೋ, ಕ್ಯಾಬ್, ಸರಕು ವಾಹನಗಳು, ಖಾಸಗಿ ಬಸ್‍ಗಳು, ಥಿಯೇಟರ್, ಮಾಲ್‍ಗಳು, ಸೂಪರ್ ಮಾರ್ಕೆಟ್, ಬೀದಿ ಬದಿ ಅಂಗಡಿಗಳು, ಆಭರಣ ಅಂಗಡಿಗಳು, ಕೈಗಾರಿಕೆಗಳು ಮತ್ತಿತರ ಸಂಘಟನೆಗಳು ಬೆಂಬಲ ಕೊಟ್ಟಿದ್ದವು. ಕೆಲವು ಭಾಗಗಳಲ್ಲಿ ಹೊಟೇಲ್‍ಗಳು ಬೆಳಗಿನಿಂದಲೇ ಮುಚ್ಚಿದ್ದವು. ಉಳಿದ ಕಡೆ ಎಂದಿನಂತೆ ಕಾರ್ಯನಿರ್ವಹಿಸಿದ ದೃಶ್ಯ ಕಂಡು ಬಂದಿತು. +ಶಕ್ತಿ ಕೇಂದ್ರದಲ್ಲೂ ಜನರಿಲ್ಲ: +ಆಡಳಿತದ ಶಕ್ತಿ ಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ, ಉದ್ಯೋಗ ಸೌಧ ಸೇರಿದಂತೆ ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಖ್ಯೆ ತೀರ ವಿರಳವಾಗಿತ್ತು. ಇಲಾಖೆಗಳ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಬಂದ್‍ಗೆ ನೈತಿಕ ಬೆಂಬಲ ಕೊಡಲಾಗಿತ್ತಾದರೂ ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲೇ ಇತ್ತು. +ಬೆಂಗಳೂರು ಸ್ತಬ್ಧ: +ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಬಂದ್‍ಗೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಯಿತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಆಟೋ, ಟ್ಯಾಕ್ಸಿ, ಓಲಾ, ಊಬರ್ ಸಂಚಾರ ವಿರಳವಾಗಿತ್ತು. ಸದಾ ಜನ ಸಂದಣಿಯಿಂದ ಕೂಡಿದ್ದ ಕೆಂಪೇಗೌಡ ಬಸ್ ನಿಲ್ದಾಣ, ಕೆಆರ್ ಮಾರುಕಟ್ಟೆ, ಶಾಂತಿ ನಗರ ಬಸ್ ನಿಲ್ದಾಣ ಮತ್ತಿತರ ಕಡೆ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.ತಮಿಳುನಾಡಿನ ಅತ್ತಿಬೆಲೆ ಮತ್ತು ಹೊಸೂರಿನಿಂದ ಬರುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಬಸ್‍ಗಳನ್ನು ಮಾರ್ಗಮಧ್ಯೆ ತಡೆ ಹಿಡಿಯಲಾಯಿತು. +ಹೋರಾಟಗಾರರು ಪೊಲೀಸರು ವಶಕ್ಕೆ: +ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದರಾದರೂ ಪೊಲೀಸರು ತಕ್ಷಣವೇ ಅವರನ್ನು ವಶಕ್ಕೆ ಪಡೆದಿದ್ದಾರೆ.ವಿಮಾನ ನಿಲ್ದಾಣದ ಪ್ರಯಾಣಿಕರ ಆಗಮನದ ಗೇಟ್ ಬಳಿ ಕನ್ನಡದ ಬಾವುಟಗಳನ್ನು ಹಿಡಿದು ಕೇಂದ್ರ ಸರ್ಕಾರ ಮತ್ತು ತಮಿಳುನಾಡಿನ ವಿರುದ್ಧ ಘೋಷಣೆಗಳನ್ನು ಕೂಗಿದರು. +ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಸೇರಿದಂತೆ ಹಲವರು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದಂತೆ ಪೊಲೀಸರು ಮಾರ್ಗಮಧ್ಯೆ ತಡೆದು ಅವರನ್ನು ವಶಕ್ಕೆ ಪಡೆದುಕೊಂಡರು. +ಚಿತ್ರರಂಗದ ಬೆಂಬಲ: +ಕನ್ನಡ ಚಿತ್ರರಂಗದ ದಿಗ್ಗಜರು ಕೂಡ ಪ್ರತಿಭಟನೆ ನಡೆಸುವ ಮೂಲಕ ಹೋರಾಟಗಾರರಿಗೆ ನೈತಿಕ ಬೆಂಬಲ ಸೂಚಿಸಿದರು. ನಗರದ ಗುರುರಾಜ ಕಲ್ಯಾಣ ಮಂಟಪದ ಬಳಿ ನಡೆದ ಪ್ರತಿಭಟನೆಯಲ್ಲಿ ನಟರಾದ ಶಿವರಾಜ್‍ಕುಮಾರ್, ದರ್ಶನ್, ಶ್ರೀಮುರುಳಿ, ವಿಜಯರಾಘವೇಂದ್ರ, ಉಪೇಂದ್ರ, ಉಮಾಶ್ರೀ, ಶೃತಿ, ದುನಿಯಾ ವಿಜಿ, ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ಹಲವರು ಭಾಗಿಯಾಗಿ ಕಾವೇರಿ ಹೋರಾಟಕ್ಕೆ ಚಿತ್ರರಂಗ ಯಾವಾಗಲೂ ಸಿದ್ದವಾಗಿರುತ್ತದೆ ಎಂಬ ಅಭಯ ನೀಡಿದರು. +ಇನ್ನು ಬಂದ್ ವೇಳೆ ಅಲ್ಲಲ್ಲಿ ಕೆಲವು ಘಟನೆಗಳು ಕೂಡ ಜರುಗಿವೆ. ಟೌನ್‍ಹಾಲ್ ಬಳಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದ ಗೆಜ್ಜಲಗೆರೆ ಬಳಿ ಕನ್ನಡಪರ ಹೋರಾಟಗಾರರು ಮೈಸೂರಿನಿಂದ ಬರುತ್ತಿದ್ದ ರೈಲನ್ನು ತಡೆಯಲು ಟ್ರ್ಯಾಕ್ ಬಳಿ ಧರಣಿ ಕುಳಿತರು. ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾ ನಿರತರನ್ನು ವಶಪಡಿಸಿಕೊಂಡರು. +ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರು ಕಣ್ಣಿಗೆ ಬಟ್ಟೆ ಕಟ್ಟಿಕೊಂಡಿದ್ದು, ಎಲ್ಲರ ಗಮನ ಸೆಳೆಯಿತು. ನ್ಯಾಯದೇವತೆಯ ಕಣ್ಣು ಕಟ್ಟಿದ್ದಂತೆ ಕನ್ನಡಪರ ಹೋರಾಟಗಾರರ ಕಣ್ಣಿಗೂ ಬಟ್ಟೆ ಕಟ್ಟಲಾಗಿದೆ. ನಮಗೆ ನ್ಯಾಯ ಸಿಗುತ್ತಿಲ್ಲ. ನಾವು ಯಾರ ವಿರುದ್ಧವೂ ಪ್ರತಿಭಟನೆ ನಡೆಸುತ್ತಿಲ್ಲ. ಇದು ನಮ್ಮ ಸಾತ್ವಿಕ ಸಿಟ್ಟು ಎಂದು ಹೇಳಿದರು. ಮತ್ತೊಂದು ವಿಶೇಷವೆಂದರೆ ದಾವಣಗೆರೆಯಲ್ಲಿ ಐದು ವರ್ಷದ ಬಾಲಕನೊಬ್ಬ ಪ್ರತಿಭಟನೆಯಲ್ಲಿ ಭಾಗಿಯಾಗಿ ಎಲ್ಲರ ಗಮನ ಸೆಳೆದ. ಮೋಹಿತ್ ಎಂಬ ಬಾಲಕ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದನು. +ರೈತನ ಏಕಾಂಗಿ ಪ್ರತಿಭಟನೆ: +ಧಾರವಾಡದ ಜುಬಿಲಿ ಸರ್ಕಲ್‍ನಲ್ಲಿ ರೈತನೊಬ್ಬ ವಾಹನಗಳನ್ನು ತಡೆದು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರೆ, ಚಿತ್ರದುರ್ಗದಲ್ಲಿ ಕರವೇ ಕಾರ್ಯಕರ್ತರು ಸಂಸದರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಿರತರು ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದರೆ, ತುಮಕೂರು ಮತ್ತಿತರ ಕಡೆಯೂ ಬಂದ್‍ಗೆ ಬೆಂಬಲವನ್ನು ಸೂಚಿಸಲಾಗಿತ್ತು. +ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಎಂಟು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬಹುತೇಕ ಕಡೆ ಸ್ವಯಂ ಪ್ರೇರಿತವಾಗಿ ಬಂದು ಬಂದ್‍ಗೆ ಬೆಂಬಲವನ್ನು ಸೂಚಿಸಿದ್ದರು. ಬಂದ್ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ನಾಳೆಗೆ ಮುಂದೂಡಲಾಗಿತ್ತು.ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬಹುತೇಕ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಲ್ಲಲ್ಲಿ ತಡೆವೊಡ್ಡಿದಿರುವ ಘಟನೆಗಳು ನಡೆದಿವೆ. +ಹೈದರಾಬಾದ್‍ನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಲ ಬಸ್‍ಗಳನ್ನು ದೊಡ್ಡಬಳ್ಳಾಪುರ, ಮಹಾರಾಷ್ಟ್ರದಿಂದ ಆಗಮಿಸುತ್ತಿದ್ದ ಬಸ್‍ಗಳನ್ನು ಬೆಳಗಾವಿ ಬಳಿ, ಕೆರಳದಿಂದ ಬರುತ್ತಿದ್ದ ವಾಹನಗಳನ್ನು ಗುಂಡ್ಲುಪೇಟೆ ಹಾಗೂ ತಮಿಳುನಾಡಿನಿಂದ ಬರುತ್ತಿದ್ದ ವಾಹನಗಳನ್ನು ಅತ್ತಿಬೆಲೆ ಮತ್ತು ಹೊಸೂರು ಚೆಕ್ ಪೋಸ್ಟ್ ಬಳಿ ತಡೆ ಹಿಡಿಯಲಾಯಿತು. +ಈ ನಡುವೆ ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಡೆ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ವಿಶೇಷವಾಗಿ ತಮಿಳು ಭಾಷಿಗರು ಹೆಚ್ಚಾಗಿ ವಾಸ ಮಾಡುವ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿತ್ತು. +ಒಟ್ಟಾರೆ ಬಂದ್ ಶಾಂತಿಯುತವಾಗಿ, ಯಶಸ್ವಿಯಾಗಿ ಜರುಗಿದ್ದು, ಕಾವೇರಿಗಾಗಿ ನಾಡಿನ ವಿವಿಧ ಸಂಘಟನೆಗಳು ಒಗ್ಗಟಿನ ಹೋರಾಟವಾಗಿ ನಡೆಸುವ ಮೂಲಕ ಅನ್ಯಾಯವನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ನೀಡಿದವು. +ಮಡಿಕೇರಿಯಲ್ಲಿ ನೀರಸ :ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಸಿ ಅಖಂಡ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದರೆ, ಕಾವೇರಿ ಹುಟ್ಟುವ ಕೊಡಗಿನಲ್ಲೇ ಬಂದ್ಗೆ ಬೆಂಬಲ ವ್ಯಕ್ತವಾಗಿಲ್ಲ.ಕೊಡಗು ಜಿಲ್ಲಾ ಕೇಂದ್ರವಾದ ಮಡಿಕೇರಿ ವಿರಾಜಪೇಟೆ ಶನಿವಾರಸಂತೆ ಮತ್ತಿತರ ಕಡೆ ಕರ್ನಾಟಕ ಬಂದ್ಗೆ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. +ಜಿಲ್ಲೆಯಾದ್ಯಂತ ಯಾವುದೇ ಸಂಘಟನೆಗಳಿಗೆ ಬೆಂಬಲವನ್ನು ಸಾರ್ವಜನಿಕರು ನೀಡಿರಲಿಲ್ಲ. ಹೀಗಾಗಿ ದೈನಂದಿನ ಜನಜೀವನ ಸಹಜವಾಗಿತ್ತು.ಶಾಲಾ-ಕಾಲೇಜುಗಳು , ಸರ್ಕಾರಿ ಹಾಗೂ ಖಾಸಗಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೆ, ಬಸ್, ಆಟೋ ಸಂಚಾರ ಎಲ್ಲೆಡೆ ಸಹಜ ಸ್ಥಿತಿಯಲ್ಲಿದ್ದವು. +ಇಂದು ನಡೆದ ಬಂದ್ಗೆ ಬೆಂಬಲ ನೀಡಬೇಕೆಂದು ಕಳೆದ 2-3 ದಿನಗಳಿಂದಲೂ ವಿವಿಧ ಸಂಘಟನೆಗಳು ಜಿಲ್ಲೆಯ ಅನೇಕ ಕಡೆ ಅಭಿಯಾನ ನಡೆಸಿದ್ದವು. ಆದರೆ, ಜಿಲ್ಲೆಯ ಜನತೆ ಕರ್ನಾಟಕ ಬಂದ್ಗೆ ಬೆಂಬಲವನ್ನೇ ನೀಡಿಲ್ಲ. ಕಾವೇರಿ ಹುಟ್ಟುವ ಜಿಲ್ಲೆಯಲ್ಲೇ ಬಂದ್ಗೆ ಬೆಂಬಲ ಸಿಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. +ಸಾಂಸ್ಕøತಿಕ ನಗರಿ ಸ್ತಬ್ಧಮೈಸೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕøತಿಕ ನಗರಿಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ನಗರದ ವಿವಿಧ ಕನ್ನಡಪರ ಸಂಘಟನೆಗಳು ಕೆಲವು ಪ್ರಮುಖ ವೃತ್ತಗಳಲ್ಲಿ ಪ್ರತಿಭಟನೆ ನಡೆಸಿ ಕಾವೇರಿ ನಮ್ಮದು, ಕಾವೇರಿ ನೀರು ರಕ್ಷಿಸುವುದು ನಮ್ಮ ಹೊಣೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ನಡೆಸಿದರು. +ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನಗರದಲ್ಲಿ ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.ಕಾವೇರಿ ನೀರಿಗಾಗಿ ನಗರ ಮತ್ತು ಜಿಲ್ಲೆಯಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಹೊರರಾಜ್ಯಗಳಿಂದ ನಗರಕ್ಕೆ ಇಂದು ಬರಬೇಕಾಗಿದ್ದ ಯಾವುದೇ ತರಕಾರಿ ವಾಹನಗಳು ಬಂದಿಲ್ಲ. ಎಪಿಎಂಸಿ ಮಾರುಕಟ್ಟೆ ಸಿಬ್ಬಂದಿ ಸಹ ಸಂಪೂರ್ಣ ಮುಚ್ಚಿ ಬಂದ್ಗೆ ಸಹಕರಿಸಿದ್ದು, ಎಪಿಎಂಸಿ ಖಾಲಿಖಾಲಿಯಾಗಿತ್ತು. +ನಗರದಲ್ಲಿನ ಮಾಲ್ಗಳು, ವ್ಯವಹಾರ ಕೇಂದ್ರವಾಗಿರುವ ದೇವರಾಜ ರಸ್ತೆ, ಅಶೋಕ ರಸ್ತೆ, ಸೈಯಾಜಿ ರಾವ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ಅಂಗಡಿಗಳು ಬಂದ್ ಆಗಿದ್ದವು.ಪ್ರತಿ ಬಾರಿ ಬಂದ್ ವೇಳೆ ಎನ್ಆರ್ ಮೊಹಲ್ಲಾದಲ್ಲಿ ಅಷ್ಟಾಗಿ ಅಂಗಡಿಗಳನ್ನು ಮುಚ್ಚುತ್ತಿರಲಿಲ್ಲ. ಆದರೆ ಈ ಬಾರಿ ಸ್ವಯಂ ಪ್ರೇರಿತವಾಗಿ ಮುಚ್ಚಿದ್ದರಿಂದ ಮೊಹಲ್ಲಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. +ನಗರದ ಚಿಕ್ಕಮಾರುಕಟ್ಟೆ, ದೇವರಾಜ ಮಾರುಕಟ್ಟೆ ಸಂಪೂರ್ಣ ಬಂದ್ ಮಾಡಲಾಗಿತ್ತು. ಬೆಳಗಿನ ಜಾವದಿಂದಲೂ ಯಾವುದೇ ವ್ಯಾಪಾರ ವಹಿವಾಟುಗಳು ನಡೆದಿಲ್ಲ.ಪೆಟ್ರೋಲ್ ಬಂಕ್ ಮಾಲೀಕರೂ ಸಹ ಬಂಕ್ಗಳನ್ನು ಮುಚ್ಚಿ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದರಿಂದ ನಗರದಾದ್ಯಂತ ಎಲ್ಲಾ ಪೆಟ್ರೋಲ್ ಬಂಕ್ಗಳಿಗೆ ಬೀಗ ಹಾಕಲಾಗಿತ್ತು. +ಸರ್ಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದ್ದು ಕಂಡು ಬಂತು. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನಗರದಾದ್ಯಂತ ಯಾವುದೇ ಬಸ್ ಸಂಚಾರ ಇರಲಿಲ್ಲ. ಖಾಸಗಿ ಬಸ್ಗಳವರು ಸಹ ಬಂದ್ಗೆ ಬೆಂಬಲ ವ್ಯಕ್ತಪಡಿಸಿವೆ. ಸರ್ಕಾರಿ ಬಸ್ಗಳು ವಿರಳವಾಗಿತ್ತಾದರೂ ಪ್ರಯಾಣಿಕ ರಿಲ್ಲದೆ ಬಣಗೂಡುತ್ತಿದ್ದವು. +ಅದೇ ರೀತಿ ಜಿಲ್ಲೆ ಹಾಗೂ ಹೊರರಾಜ್ಯಕ್ಕೆ ತೆರಳುವ ಬಸ್ ನಿಲ್ದಾಣವಾದ ಸಬರ್ಬನ್ ಬಸ್ ನಿಲ್ದಾಣದಲ್ಲಿ ವಿವಿಧೆಡೆಗಳಿಂದ ಆಗಮಿಸಿದ ಪ್ರಯಾಣಿಕರು ತಮ್ಮ ಮನೆಗಳಿಗೆ ತೆರಳಲಾರದೇ ಪರದಾಡುವಂತಾಯಿತು. ಅಲ್ಲದೆ ಬೇರೆಡೆ ಹೋಗಲು ಬಂದಿದ್ದ ಕೆಲವರು ಬಸ್ ಸಿಗದೇ ವಾಪಸ್ ಆದ ದೃಶ್ಯ ಸಹ ಕಂಡು ಬಂತು. \ No newline at end of file diff --git a/eesanje/url_46_340_3.txt b/eesanje/url_46_340_3.txt new file mode 100644 index 0000000000000000000000000000000000000000..0467e62feda493772f5479d3033b4721bd1b36e6 --- /dev/null +++ b/eesanje/url_46_340_3.txt @@ -0,0 +1,8 @@ +ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಇನ್ನೂ 3 ದಿನ ಮಳೆ +ಬೆಂಗಳೂರು, ಸೆ.29- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೇರಿದಂತೆ ವಾತಾವರಣದಲ್ಲಿ ಹಲವು ರೀತಿಯ ಬದಲಾವಣೆಗಳಾಗಿದ್ದು, ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಮಳೆಯಾಗಲಿದೆ. ಕಳೆದ ಎಂಟತ್ತು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರ್ನಾಲ್ಕು ದಿನಗಳ ಕಾಲ ಚದುರಿದಂತೆ ಮಳೆಯಾಗಲಿದೆ. ನೈಋತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದೆ. ಅಲ್ಲದೆ, ಈಶಾನ್ಯ ಹಿಂಗಾರು ಆರಂಭದ ಪ್ರಕ್ರಿಯೆಗಳು ಶುರುವಾಗಿವೆ. ಈ ಪರ್ವ ಕಾಲದಲ್ಲಿ ಮಳೆಯಾಗುವುದು ಸಹಜ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದರು. +ರಾಜಸ್ತಾನದಿಂದ ಮುಂಗಾರು ಮಳೆ ಮರಳುವಿಕೆ ಆರಂಭಿಸಿದ್ದು, ಇನ್ನೊಂದು ವಾರದಲ್ಲಿ ಮುಂಗಾರು ನಿರ್ಗಮಿಸಲಿದೆ. ಆ ನಂತರ ಹಿಂಗಾರು ಮಳೆ ಆರಂಭವಾಗಲಿದೆ. ಆಗಸ್ಟ್‍ನಂತೆ ಸೆಪ್ಟೆಂಬರ್‍ನಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಆದರೆ ಮಳೆಯ ಕೊರತೆ ಪ್ರಮಾಣ ಆಗಸ್ಟ್‍ಗೆ ಹೋಲಿಸಿದರೆ ಸೆಪ್ಟೆಂಬರ್‍ನಲ್ಲಿ ಕಡಿಮೆಯಾಗಿದೆ. +ಬೆಂಗಳೂರು : ಚಾಕುವಿನಿಂದ ಇರಿದು ರೌಡಿ ಪಪ್ಪಾಯಿ ಸುಹೇಲ್ ಕೊಲೆ +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಶೇ. 5ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 20ರಷ್ಟು ಉತ್ತರ ಒಳನಾಡಿನಲ್ಲಿ ಶೇ. 6ರಷ್ಟು, ಮಲೆನಾಡಿನಲ್ಲಿ ಶೇ. 34 ಹಾಗೂ ಕರಾವಳಿಯಲ್ಲಿ ಶೇ. 52ರಷ್ಟು ವಾಡಿಕೆಗಳಿಗಿಂತ ಕಡಿಮೆ ಮಳೆ ಕಳೆದ ಒಂದು ವಾರದಲ್ಲಿ ಬಿದಿದ್ದೆ. +ಸೆ. 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ಶೇ. 10ರಷ್ಟು ವಾಡಿಕೆಗಿಂತ ಕಡಿಮೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಶೇ. 17, ಉತ್ತರ ಒಳನಾಡಿನಲ್ಲಿ ಶೇ. 18, ಮಲೆನಾಡಿನಲ್ಲಿ ಶೇ. 16 ಹಾಗೂ ಕರಾವಳಿ ಶೇ. 23ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾದ ವರದಿಯಾಗಿದೆ.ಜೂನ್ 1ರಿಂದ ನಿನ್ನೆಯವರೆಗೆ ರಾಜ್ಯದಲ್ಲಿ 631 ಮಿ.ಮೀಟರ್‍ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ. 25ರಷ್ಟು ಮಳೆ ಕೊರತೆ ಉಂಟಾಗಿದೆ. +ಈ ಅವಯ ವಾಡಿಕೆ ಮಳೆ ಪ್ರಮಾಣ 839 ಮಿ.ಮೀಟರ್ ಆಗಿದೆ. ಮಳೆ ಕೊರತೆ ಮುಂದುವರೆಯುತ್ತಿರುವುದರಿಂದ ರಾಜ್ಯದಲ್ಲಿ ಉಂಟಾಗಿರುವ ಬರದ ಪರಿಸ್ಥಿತಿ ದೂರವಾಗುವ ಲಕ್ಷಣಗಳು ಸದ್ಯಕ್ಕೆ ಗೋಚರಿಸುತ್ತಿಲ್ಲ. \ No newline at end of file diff --git a/eesanje/url_46_340_4.txt b/eesanje/url_46_340_4.txt new file mode 100644 index 0000000000000000000000000000000000000000..c8d5c7b33a22aa8d19f041983eed22cff9d43077 --- /dev/null +++ b/eesanje/url_46_340_4.txt @@ -0,0 +1,6 @@ +ಕರ್ನಾಟಕ ಬಂದ್ : ಸಿಎಂ ನಿವಾಸಕ್ಕೆ ಬಿಗಿ ಭದ್ರತೆ +ಬೆಂಗಳೂರು, ಸೆ.29- ಕಾವೇರಿ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮುಖ್ಯಮಂತ್ರಿ ಕಚೇರಿ ಹಾಗೂ ನಿವಾಸದ ಎದುರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸಲಾಗಿತ್ತು. +ನಾಲ್ಕಕ್ಕೂ ಹೆಚ್ಚು ಬಿಎಂಟಿಸಿ ಬಸ್‍ಗಳು ಹಾಗೂ ಪೊಲೀಸ್ ವ್ಯಾನ್‍ಗಳನ್ನು ಮುಖ್ಯಮಂತ್ರಿ ಮನೆ ಎದುರು ಕಾಯ್ದಿರಿಸಲಾಗಿತ್ತು. ಅನಿರೀಕ್ಷಿತವಾಗಿ ನುಗ್ಗುವ ಕಾರ್ಯಕರ್ತರನ್ನು ನಿರ್ಬಂಧಿಸಲು ಮತ್ತು ಅವರನ್ನು ವಶಕ್ಕೆ ತೆಗೆದುಕೊಳ್ಳಲು ಅನುಕೂಲವಾಗುವಂತೆ ಅಗತ್ಯ ಪೊಲೀಸ್ ಸಿಬ್ಬಂದಿ ಮತ್ತು ವಾಹನ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳಲಾತ್ತು. +ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ, ಸಿಎಂ ಮನೆ ಮೇಲೆ ದಾಳಿಗೆ ಯತ್ನ +ಈ ಮೊದಲು ಸೆ.26ರಂದು ಬೆಂಗಳೂರು ಬಂದ್ ನಡೆಸಿದ್ದ ಕಬ್ಬುಬೆಳೆಗಾರರ ಸಂಘ ಹಾಗೂ ಇತರ ಕೆಲ ಸಂಘಟನೆಗಳ ಮುಖಂಡರು ತಮ್ಮ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡಿದ್ದವು. +ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಸಬೇಕು ಎಂಬ ಪ್ರಮುಖ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಂಘಟನೆಗಳು ಇಂದು ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿವೆ. ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿತ್ತು. ಮುಖ್ಯಮಂತ್ರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ನಿಯೋಗದ ಜೊತೆಗೆ ಮುಖ್ಯಮಂತ್ರಿ ಮಧ್ಯಾಹ್ನ ಮಾತುಕತೆ ನಡೆಸಲಿದ್ದಾರೆ. \ No newline at end of file diff --git a/eesanje/url_46_340_5.txt b/eesanje/url_46_340_5.txt new file mode 100644 index 0000000000000000000000000000000000000000..a2fdf294639a6b3802b48db0359953f3cb59f977 --- /dev/null +++ b/eesanje/url_46_340_5.txt @@ -0,0 +1,7 @@ +ತಮಿಳುನಾಡಿಗೆ ಕದ್ದು ಮುಚ್ಚಿ ಕಾವೇರಿ ಹರಿಸುತ್ತಿರುವ ಸರ್ಕಾರದ ವಿರುಧ್ದ ವಾಟಾಳ್ ಕೆಂಡ +ಬೆಂಗಳೂರು,ಸೆ.29- ರಾಜ್ಯ ಸರ್ಕಾರ ಜನರನ್ನು ಕತ್ತಲಿಟ್ಟು ಕದ್ದು ಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.ಕರ್ನಾಟಕ ಬಂದ್ ಬಂದ್ ಸಂದರ್ಭದಲ್ಲಿ ಬುರ್ಕಾ ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು, ರಾಜ್ಯ ಸರ್ಕಾರದ ಅಸಹಕಾರ, ಪೊಲೀಸರ ವಿರೋಧದ ನಡುವೆಯೂ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಯಶಸ್ವಿಯಾಗಿದೆ. ದೇಶಕ್ಕೆ ನಮ್ಮ ಶಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದರು. +ಬೆಂಗಳೂರಿನಲ್ಲಿ 50 ಸಾವಿರ, ರಾಜ್ಯಾದ್ಯಂತ ಲಕ್ಷಾಂತರ ಪೊಲೀಸರನ್ನು ನಿಯೋಜಿಸಿ ರಾಜ್ಯ ಸರ್ಕಾರ ಹೋರಾಟಗಾರರನ್ನು ಬಂದ್ ಮಾಡಿದೆ. ನಾವು ಕಾವೇರಿಗಾಗಿ ಕರ್ನಾಟಕ ಬಂದ್ ಮಾಡಿದ್ದೇವೆ. ಸರ್ಕಾರ ನಮ್ಮನ್ನೆ ಬಂದ್ ಮಾಡಿದೆ. ತಮಿಳುನಾಡಿನಲ್ಲಿ ಪೊಲೀಸರು ರಸ್ತೆ ತಡೆ ಅವರ ರಾಜ್ಯ ಪರವಾಗಿ ನಿಂತಿದ್ದಾರೆ. ಕರ್ನಾಟಕದಲ್ಲಿ ಪೊಲೀಸರು ಹೋರಾಟಗಾರರನ್ನೇ ಬಂಸುತ್ತಿದ್ದಾರೆ. ಇದು ನೋವಿನ ಸಂಗತಿ. ಹೋರಾಟದ ಹಿನ್ನೆಲೆಯಲ್ಲಿ ಇರುವ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ ಸೇರಿದಂತೆ ಅನೇಕರನ್ನು ಕಾರಣ ಇಲ್ಲದೆ ಬಂಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. +ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ +ಕನ್ನಡ ಪರ ಸಂಘಟನೆಗಳು ಟೌನ್ ಹಾಲ್‍ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ್ದರೆ ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಾಗುತ್ತಿತ್ತು. ಆದರೆ ನಿಷೇಧಾಜ್ಞೆ ಜಾರಿಗೆ ತಂದು ಅಡ್ಡಿ ಪಡಿಸಲಾಗಿದೆ. ಟೌನ್‍ಹಾಲ್‍ನಿಂದ ಶಾಂತಿಯುತವಾಗಿ ಮೆರವಣಿಗೆ ನಡೆಸಿದ್ದರೆ ಸರ್ಕಾರದ ಮಡಿ ಹಾಳಾಗುತ್ತಿತ್ತೆ. ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಿದರೆ ಮೈಲಿಗೆಯಾಗುವುದಿಲ್ಲವೇ. ಈ ದ್ವಿಮುಖ ನೀತಿ ಏಕೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಏನು ಬೇಕಾದರೂ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶ್ವಸಂಸ್ಥೆ ಪರವಾನಗಿ ನೀಡಿದೆಯೇ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ರಾಜ್ಯ ಸರ್ಕಾರದ ಸಚಿವರು ಪಾಳೇಗಾರರಂತೆ ವರ್ತಿಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ಯಾವತ್ತೂ ಹೋರಾಟ ಮಾಡಿಲ್ಲ. ಅವರಿಗೆ ಪ್ರತಿಭಟನೆಗಳ ಹಿನ್ನೆಲೆ ಗೋತ್ತಿಲ್ಲ. ಅದಕ್ಕಾಗಿ ಬಂದ್‍ಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಮತ್ತೊಂದೆಡೆ ಶಿವನ ಪುತ್ರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಕರುಣೆ ತೋರಿಸಲಿಲ್ಲ. ಕನಿಷ್ಠ ಸಿದ್ದರಾಮೇಶ್ವರನೂ ದಾರಿ ತೋರಿಸಲಿಲ್ಲ. ಸಿದ್ಧರಾಮೇಶ್ವರ ನಿಮ್ಮನ್ನು ನಾವು ಎಷ್ಟು ನೆನಪಿಸಿಕೊಳ್ಳುತ್ತೇವೆ. ನಿಮ್ಮ ಕಣ್ಣಿಗೆ ನಾವು ಬೀಳಲೇ ಇಲ್ಲವೇ ಎಂದು ನಾಟಕೀಯವಾಗಿ ಆಕ್ಷೇಪ ವ್ಯಕ್ತಪಡಿಸಿದರು. +ಮುಸ್ಲಿಂ ಮಹಿಳೆಯರು ಧರಿಸುವ ಬುರ್ಕಾ ಧರಿಸಿ ಇಂದು ತಾವು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಇದು ಮಹಿಳೆಯರ ಪಾಲ್ಗೋಳ್ಳುವಿಕೆ ಮತ್ತು ನ್ಯಾಯದ ಸಂದೇಶ ಸಂದೇಶವಾಗಿದೆ. ಮಹಿಳೆಯರಿಗೆ ಶಾಸನ ಸಭೆಯಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ಕಾಯ್ದೆ ಸಂಸತ್‍ನಲ್ಲಿ ಅಂಗೀಕಾರಗೊಂಡಿದೆ. ಅದಕ್ಕಾಗಿ ಮಹಿಳೆಯರಿಗೆ ಆದ್ಯತೆ ನೀಡುವ ಅಗತ್ಯವಿದೆ. ರಾಜ್ಯ ಸರ್ಕಾರ ಕನ್ನಡಿಗರನ್ನು ಕತ್ತಲಿನಲ್ಲಿಟ್ಟು ತಮಿಳುನಾಡಿಗೆ ನೀರು ಬೀಡುತ್ತಿದೆ ಎಂಬುದರ ಆಕ್ರೋಶವೂ ಇದರಲ್ಲಿ ಅಡಗಿದೆ ಎಂದರು. \ No newline at end of file diff --git a/eesanje/url_46_340_6.txt b/eesanje/url_46_340_6.txt new file mode 100644 index 0000000000000000000000000000000000000000..9e905472d26788453bfcd0f3c21c400948d1c942 --- /dev/null +++ b/eesanje/url_46_340_6.txt @@ -0,0 +1,6 @@ +ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ +ಬೆಂಗಳೂರು,ಸೆ.29-ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವುದನ್ನು ವಿರೋಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದ ಆಖಂಡ ಕರ್ನಾಟಕ ಬಂದ್‍ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಿಸಿ ತಟ್ಟಿದೆ. ಪ್ರಯಾಣಿಕರು ಇಲ್ಲದ ಕಾರಣ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ಒಟ್ಟು 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ. +ದೆಹಲಿ, ಮುಂಬೈ, ಕೊಲ್ಕತ್ತಾ ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿಧೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದವು. +ಮನೆಯಲ್ಲಿ ಪಾಕ್ ಧ್ವಜ ಹಾರಿಸಿದ ತಂದೆ-ಮಗ ಅಂದರ್ +ಇನ್ನು ಬೇರೆ ಬೇರೆ ಕಡೆಗಳಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಸಹ ರದ್ದಾಗಿದ್ದವು. ಕರ್ನಾಟಕ ಬಂದ್ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರೆ, ಅಲ್ಲಿಂದ ಬೇರೆ ಕಡೆ ಹೋಗಲು ಯಾವುದೇ ವಾಹನಗಳು ಇರುವುದಿಲ್ಲ ಎಂಬುದನ್ನು ಅರಿತ ಪ್ರಯಾಣಿಕರು ಬೆಂಗಳೂರು ಪ್ರವಾಸವನ್ನೂ ಸಹ ರದ್ದುಗೊಳಿಸಿದ್ದಾರೆ. ಇದರಿಂದ ಪ್ರಯಾಣಿಕರಿಲ್ಲದೇ ಒಟ್ಟು 44 ವಿಮಾನಗಳು ರದ್ದುಗೊಂಡಿವೆ. +ಬಂದ್‍ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ವಿಮಾನದ ಟಿಕೆಟ್ ಬುಕ್ ಮಡಿಕೊಂಡಿರಲಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಕೊನೆ ಕ್ಷಣದಲ್ಲಿ ವಿಮಾನದ ಟಿಕೆಟ್ ರದ್ದು ಮಾಡಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_46_340_7.txt b/eesanje/url_46_340_7.txt new file mode 100644 index 0000000000000000000000000000000000000000..8071cd94fe5b83d0fbbe109349c6065e573c7263 --- /dev/null +++ b/eesanje/url_46_340_7.txt @@ -0,0 +1,6 @@ +ಕರ್ನಾಟಕ ಬಂದ್ : - ಬಸ್‍ಗಳಿದ್ದರೂ ಪ್ರಯಾಣಿಕರೇ ಇಲ್ಲ +ಬೆಂಗಳೂರು, ಸೆ.29- ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ಬೆರಳೆಣಿಕೆಯಷ್ಟು ಇದದ್ದು ಕಂಡು ಬಂದಿತು. ಕೆಂಪೇಗೌಡ ಬಸ್ ನಿಲ್ದಾಣ, ವಿಜಯನಗರ, ಜಯನಗರ, ಶಿವಾಜಿ ನಗರ, ಕಲಾಸಿಪಾಳ್ಯ, ಕೆಆರ್ ಮಾರುಕಟ್ಟೆ ಸೇರಿದಂತೆ ವಿವಿಧ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿರಳವಾಗಿರುವುದು ಎದ್ದು ಕಾಣುತ್ತಿತ್ತು. +ಸದಾ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಿಎಂಟಿಸಿ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಆಸನೆಗಳೇ ಭರ್ತಿಯಾಗದಷ್ಟು ಪ್ರಯಾಣಿಕರಿದ್ದರು. ಬಂದ್ ಇದ್ದರೂ ಎಂದಿನಂತೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್‍ಗಳ ಸೇವೆಯನ್ನು ಒದಗಿಸಲಾಗಿತ್ತು. ಶಾಲಾ- ಕಾಲೇಜುಗಳಿಗೆ ರಜೆ ನೀಡಿರುವುದು, ವಿವಿಧ ವಾಣಿಜ್ಯ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ಮುಚ್ಚಿರುವುದರಿಂದ ಸಹಜವಾಗಿಯೇ ಪ್ರಯಾಣಿಕರ ಹೋರಾಟ ಕಡಿಮೆಯಾಗಿದೆ. +ವಾಹನಗಳ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದ ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ ಕೆಲವು ಖಾಸಗಿ ವಾಹನಗಳು ಮಾತ್ರ ವಿರಳವಾಗಿ ಸಂಚರಿಸುತ್ತಿದ್ದು, ಎಲ್ಲೂ ಕೂಡ ಟ್ರಾಫಿಕ್ ಜಾಮ್ ಆದ ವರದಿಯಾಗಿಲ್ಲ. +6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ +ದೈನಂದಿನ ಬಸ್ ಸೇವೆಯಲ್ಲಿ ಯಾವುದೇ ರೀತಿಯ ಕಡಿತ ಮಾಡಿಲ್ಲ. ಎಂದಿನಂತೆ ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ ಎಂದು ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ.ಇಂದು ಬೆಳಗ್ಗೆ 9 ಗಂಟೆ ವೇಳೆಗೆ ಕೆಎಸ್‍ಆರ್‍ಟಿಸಿಯ 82 ಘಟಕಗಳಿಂದ 1948 ಕಾರ್ಯಾಚರಣೆ ಮಾಡಲಾಗಿತ್ತು. ಶೇ. 60ರಷ್ಟು ಬಸ್ ಸಂಚಾರ ಎಂದಿನಂತೆ ಇದೆ ಎಂದು ಕೆಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_340_8.txt b/eesanje/url_46_340_8.txt new file mode 100644 index 0000000000000000000000000000000000000000..65fbfb5959298e392d08cb3f5a6511f452d6d1fc --- /dev/null +++ b/eesanje/url_46_340_8.txt @@ -0,0 +1,6 @@ +ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು : ಎಚ್‍ಡಿಕೆ +ಬೆಂಗಳೂರು, ಸೆ.29-ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದ್ದು, ಕರ್ನಾಟಕ ಬಂದ್‍ಗೆ ಎಲ್ಲೆಡೆಯಿಂದ ಉತ್ತಮ ಪ್ರಿತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ರಾಜ್ಯದ ಕಾಂಗ್ರೆಸ್ ಸರ್ಕಾರವು ಕನ್ನಡಿಗರ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ. +6 ಮಂದಿ ನಿಫಾ ಸೋಂಕಿತರಲ್ಲಿ ಇಬ್ಬರ ಸಾವು, ನಾಲ್ವರು ಗುಣಮುಖ +ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆಯ ರಾಜ್ಯಗಳಿಗೆ ಎಚ್ಚರಿಕೆ ಗಂಟೆಯಾಗಬೇಕು. ಕಾವೇರಿ ನಮ್ಮದು ಎಂದು ಅವರು ತಿಳಿಸಿದ್ದಾರೆ. +ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಪರ ಸಂಘಟನೆಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿದ್ದ ಇಂದಿನ ಕರ್ನಾಟಕ ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು. \ No newline at end of file diff --git a/eesanje/url_46_340_9.txt b/eesanje/url_46_340_9.txt new file mode 100644 index 0000000000000000000000000000000000000000..1fe92f2d2894de18ec70246c4afbd5433cbfb0a8 --- /dev/null +++ b/eesanje/url_46_340_9.txt @@ -0,0 +1,6 @@ +ಕಾವೇರಿ ಸಮಸ್ಯೆಗೆ ಎಲ್ಲಾ ರಾಜಕೀಯ ಪಕ್ಷಗಳು ಕಾರಣ : ವಿನೋದ್ ರಾಜ್ +ಆರ್ಟಿಕಲ್ 262 ಪ್ರಕಾರ ಎರಡು ರಾಜ್ಯಗಳ ನಡುವಿನ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೊರ್ಟ ನೀಡುವ ತೀರ್ಪು ಅಂತಿಮವಲ್ಲ. ಮೇಲ್ಮನೆ ಸಲ್ಲಿಸುವ ಅಧಿಕಾರವಿದೆ.ಇದನ್ನ ಗಮನಿಸಿ ಸರ್ಕಾರ ಕೂಡಲೆ ಸುಪ್ರೀಮ್ ಕೋರ್ಟಗೆ ಮೇಲ್ಮನೆ ಸಲ್ಲಿಸಬೇಕು ಎಂದು ನಟ ವಿನೋದ್ ರಾಜ್ ಆಗ್ರಹಿಸಿದರು. +ನೆಲಮಂಗಲದಲ್ಲಿ ಕಾವೇರಿ ಕುರಿತ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಇವರು, ನಮ್ಮನ್ನ ಆಳಿದ ಎಲ್ಲ ಸರ್ಕಾರಗಳ ವೈಫಲ್ಲದಿಂದ ಕಾವೇರಿ ನೀರಿನ ವಿಷಯದಲ್ಲಿ ಅನ್ಯಾಯವಾಗುತ್ತಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-09-2023) +ನಮಗೆ ಕೇವಲ 34 ಭಾಗ ತಮಿಳುನಾಡಿಗೆ ಉಳಿದ ಭಾಗವೆಂದರೆ ಅದು ನಮಗೆ ಮಾಡಿದ ಅನ್ಯಾಯ.ಇನೇನು ಉಳಿದಿದೆ ನಮಗೆ, ಸಾಯಬೇಕಷ್ಟೆ.ಇಲ್ಲಿಯ ತನಕ ಕರ್ನಾಟಕದ ಪರ ವಾದ ಮಾಡಿದ ವಕೀಲರ ವೈಫಲ್ಯ ಎದ್ದು ಕಾಣುತ್ತಿದೆ. +ಸರ್ಕಾರ ಕಾನೂನಿನ ತಿದ್ದುಪಡಿ ತರಬೇಕು.ನೀರಿನ ವಿಷಯ ಬಂದಾಗ ಎಲ್ಲಾ ಪಕ್ಷಗಳು ಒಂದಾಗಬೇಕು.ಸರ್ವಪಕ್ಷ ಕರೆದು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಸಂಸದರು ಮಾತನಾಡಬೇಕು ಎಂದು ಕರೆ ನೀಡಿದರು. \ No newline at end of file diff --git a/eesanje/url_46_341_1.txt b/eesanje/url_46_341_1.txt new file mode 100644 index 0000000000000000000000000000000000000000..70dff92715099295ff48d73d33f9c7996e52dbd0 --- /dev/null +++ b/eesanje/url_46_341_1.txt @@ -0,0 +1,12 @@ +ಕರ್ನಾಟಕ ಬಂದ್‍ಗೆ ಅನುಮತಿ ಇಲ್ಲ : ಗೃಹಸಚಿವ ಪರಮೇಶ್ವರ್ +ಬೆಂಗಳೂರು, ಸೆ.28- ಕಾವೇರಿ ನದಿ ನೀರಿನ ಹಂಚಿಕೆ ವಿಷಯವಾಗಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‍ಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಹಿತಾಸಕ್ತಿ ವಿಷಯವಾಗಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅಧಿಕಾರ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದೇವೆ. ಆದರೆ ಬಂದ್‍ಗೆ ಅನುಮತಿ ಇಲ್ಲ ಎಂದಿದ್ದಾರೆ. +ಮೊನ್ನೆ ಬೆಂಗಳೂರು ಬಂದ್ ನಡೆದಾಗ ಹೈಕೋರ್ಟ್ ರಾಜ್ಯಸರ್ಕಾರಕ್ಕೆ ಕಟ್ಟೆಚ್ಚರಿಕೆ ನೀಡಿದೆ. ಸುಪ್ರೀಂಕೋರ್ಟಿನ ತೀರ್ಪಿನ ಅನುಸಾರ ಪ್ರತಿಭಟನಾ ಮೆರವಣಿಗೆ ಹಾಗೂ ಬಂದ್‍ಗಳಿಗೆ ಅವಕಾಶ ಇಲ್ಲ. ಅಂತಹ ಯಾವುದೇ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಹೈಕೋರ್ಟ್ ತಾಕೀತು ಮಾಡಿದೆ. +ಈ ಹಿನ್ನೆಲೆಯಲ್ಲಿ ನಾಳೆ ಕರ್ನಾಟಕ ಬಂದ್‍ಗೆ ಅವಕಾಶ ಇಲ್ಲ. ಪೊಲೀಸರು ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ ಅಗತ್ಯ ಇರುವ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ. ಬಲವಂತದ ಬಂದ್ ಮಾಡಲು ಮುಂದಾದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು. ಬಂದ್ ಮಾಡುವುದಾಗಿ 20-30 ಸಂಘಟನೆಗಳು ಹೇಳಿಕೆ ನೀಡಿವೆ. ಕೆಲವರು ತೆರೆದ ವಾಹನದಲ್ಲಿ ಬಂದ್‍ಗೆ ಬೆಂಬಲ ಕೋರಿ ಪ್ರಚಾರ ಮಾಡುತ್ತಿದ್ದಾರೆ. ಪೊಲೀಸರು ಅಂತಹ ಸಂಘಟನೆಗಳಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದು, ಬಂದ್ ಮಾಡದಂತೆ ಸೂಚಿಸಿದ್ದಾರೆ ಎಂದರು. +ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಕೃಷಿ ಚಟುವಟಿಕೆಗಳು ಕುಸಿತ ಕಂಡಿವೆ. ಕೃಷಿ ಆದಾಯ ಶೇ. 50 ರಷ್ಟು ಕಡಿಮೆಯಾಗಿದೆ. ಬರಪರಿಸ್ಥಿತಿಯಿಂದಾಗಿ 20 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರ ಎನ್‍ಡಿಆರ್‍ಎಸ್ ಅಡಿ ಅಲ್ಪಸ್ವಲ್ಪ ನೆರವು ನೀಡಬಹುದು. ಆದರೆ ಪೂರ್ಣ ಪ್ರಮಾಣದ ನಷ್ಟ ಭರಿಸಲು ಸಾಧ್ಯವಿಲ್ಲ. ಈ ಹಂತದಲ್ಲಿ ಪದೇಪದೇ ಬಂದ್‍ಗಳು ನಡೆಯುವುದರಿಂದ ಆರ್ಥಿಕ ನಷ್ಟವಾಗತ್ತದೆ. ಬೆಂಗಳೂರು ಬಂದ್ ದಿನ ಒಂದೂವರೆ ಸಾವಿರ ಕೋಟಿ ರೂ.ಗಳ ನಷ್ಟ ವಾಗಿದೆ. ಇಂದು ರಜೆ, ನಾಳೆ ಮತ್ತೆ ಬಂದ್ ನಡೆದರೆ ವ್ಯಾಪಾರೋದ್ಯಮಗಳು ಬಹಳ ನಷ್ಟ ಅನುಭವಿಸುತ್ತವೆ ಎಂದು ಹೇಳಿದರು. +ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ +ಬಂದ್‍ಗಳು ನಡೆದಾಕ್ಷಣ ಏನೂ ಪ್ರಯೋಜನವಾಗುವುದಿಲ್ಲ. ಕಾವೇರಿ ನೀರು ನಿಯಂತ್ರಣಾ ಸಮಿತಿ ಅಥವಾ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳು ತಮ್ಮ ಆದೇಶವನ್ನು ಬದಲಾವಣೆ ಮಾಡುವುದಿಲ್ಲ. ರಾಜ್ಯಸರ್ಕಾರ ತನ್ನ ಪಾಲಿನ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ. ನ್ಯಾಯಾಲಯಗಳು ಹಾಗೂ ಸಮಿತಿಗಳ ಮುಂದೆ ಪ್ರಬಲ ವಾದ ಮಂಡಿಸಿದ್ದೇವೆ. ಅದರ ಜೊತೆಗೆ ಸುಪ್ರೀಂಕೋರ್ಟ್ ಮೆಟ್ಟಿಲೇರುವ ತಯಾರಿಗಲು ನಡೆದಿವೆ. ಇದರಲ್ಲಿ ಯಾವುದೇ ವೈಫಲ್ಯವಾಗಿಲ್ಲ ಎಂದರು. +ರಾಜಕೀಯಕ್ಕಾಗಿ ಹೊಸದಾಗಿ ಮದುವೆಯಾಗಿರುವ ಜೆಡಿಎಸ್, ಬಿಜೆಪಿ ಪಕ್ಷಗಳು ವಾಸ್ತವವನ್ನು ಮರೆಮಾಚಿ ಟೀಕೆ ಮಾಡುತ್ತಿವೆ. ನಾವು ಕಾವೇರಿ ವಿವಾದಲ್ಲಿ ಯಾವುದನ್ನೂ ಮುಚ್ಚಿಟ್ಟಿಲ್ಲ. ಎರಡು ಬಾರಿ ಸರ್ವ ಪಕ್ಷಗಳ ಸಭೆ ನಡೆಸಿದ್ದೇವೆ. ಪ್ರತಿ ಹಂತದಲ್ಲೂ ರಾಜ್ಯದ ಜನರಿಗೆ ಮಾಹಿತಿ ನೀಡುತ್ತಿದ್ದೇವೆ. ಈ ಹಿಂದೆ ಆ ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ನಾಡಿನ ಹಿತಾಸಕ್ತಿಗನುಗುಣವಾಗಿ ಕೆಲಸ ಮಾಡಿವೆ. ನಾವೂ ಕೂಡ ಅದೇ ರೀತಿಯೇ ಕೆಲಸ ಮಾಡುತ್ತಿದ್ದೇವೆ. ರಾಜಕೀಯಕ್ಕಾಗಿಯೇ ಟೀಕೆ ಮಾಡುವುದು ಸರಿಯಲ್ಲ ಮುಂದೆ ಒಂದು ವೇಳೆ ಅವರು ಅಧಿಕಾರಕ್ಕೆ ಬಂದರೆ ಆಗ ನಾವು ಟೀಕೆ ಮಾಡುತ್ತೇವೆ ಎಂದು ಹೇಳಿದರು. +ಕರ್ನಾಟಕ ಕಾಂಗ್ರೆಸ್‍ಗೆ ತಮಿಳುನಾಡಿನ ಡಿಎಂಕೆ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯ ಇಲ್ಲ. ನಾಡಿನ ಹಿತಾಸಕ್ತಿಗೆ ಸಂಬಂಧಪಟ್ಟಂತೆ ಎಲ್ಲಾ ಪಕ್ಷಗಳೂ ಬದ್ಧವಾಗಿವೆ. ಇದರಲ್ಲಿ ರಾಜಕಾರಣ ಬೆರೆಸುವುದು ಬೇಡ ಎಂದರು. +ಬಿಜೆಪಿ, ಜೆಡಿಎಸ್ ಮೈತ್ರಿಯ ಬಳಿಕ ಆ ಪಕ್ಷಗಳಲ್ಲಿ ಅಸಮಾಧಾನಗೊಂಡ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವುದು ಹೆಚ್ಚಾಗುತ್ತಿದೆ. ಪ್ರಸ್ತುತ ಸಂದರ್ಭದಲ್ಲಿ ಯಾರೂ ಸೈದ್ಧಾಂತಿಕ ರಾಜಕಾರಣ ಮಾಡುತ್ತಿಲ್ಲ. ಎಲ್ಲರೂ ಅನುಕೂಲ ಸಿಂಧು ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸೇರಿಸಿಕೊಳ್ಳುತ್ತೇವೆ. ನಮ್ಮ ತುಮಕೂರು ಜಿಲ್ಲೆಯಲ್ಲೂ ಅನೇಕ ಮಂದಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಿದರು. +ಲಾಲೂ ಭೇಟಿಯಾದ ರಾಜಾ, ಬಿಜೆಪಿ ಮಣಿಸಲು ಕಾರ್ಯತಂತ್ರ +ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯವಾಗಿದೆ. ಸಿ.ಎಂ.ಇಬ್ರಾಹಿಂ ಸದ್ಯಕ್ಕೆ ಜೆಡಿಎಸ್‍ನ ರಾಜ್ಯಾಧ್ಯಕ್ಷರಾಗಿದ್ದಾರೆ. ಪ್ರಸ್ತುತ ಬೆಳವಣಿಗೆಯ ಬಗ್ಗೆ ಅವರು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಜೆಡಿಎಸ್ ಬಿಡುತ್ತೇನೆ ಅಥವಾ ರಾಜ್ಯಾಧ್ಯಕ್ಷ ಹುದ್ದೆ ತೊರೆಯುತ್ತೇನೆ ಎಂದಾಗಲಿ ಹೇಳಿಲ್ಲ. ಹೀಗಾಗಿ ಅವರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು. \ No newline at end of file diff --git a/eesanje/url_46_341_10.txt b/eesanje/url_46_341_10.txt new file mode 100644 index 0000000000000000000000000000000000000000..79bbc0636f47a8cf16e6615acfe046a0f8f3ed0c --- /dev/null +++ b/eesanje/url_46_341_10.txt @@ -0,0 +1,8 @@ +ತಮಿಳುನಾಡು ಕೇಳಿದಷ್ಟು ನೀರು ಬಿಡಲು ಸಾಧ್ಯವಿಲ್ಲ : ಡಿಕೆಶಿ +ಬೆಂಗಳೂರು, ಸೆ.26- ತಮಿಳುನಾಡು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ, ತಮಿಳುನಾಡು ಕೇಳಿದಷ್ಟು ನೀರನ್ನು ಬಿಡಲು ಆಗುವುದಿಲ್ಲ, ನೀರನ್ನು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಮದಿಗೆ ಮಾಡಿನಾಡಿರುವ ಅವರು, ಇಂದು ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ ಮುಂದೆ ತಮಿಳುನಾಡು ಕೆಆರ್‍ಎಸ್‍ನ ಒಳಹರಿವು ಹೆಚ್ಚಾಗಿದೆ ಎಂಬ ವಾದ ಮಂಡಿಸಿ ಇದರ ಆಧಾರದ ಮೇಲೆ ತಮಿಳುನಾಡಿಗೆ ಪ್ರತಿದಿನ 12,500 ಕ್ಯೂಸೆಕ್ ನೀರು ಬಿಡಬೇಕೆಂಬ ವಾದ ಮಂಡಿಸಿದೆ. +5,000 ಕ್ಯೂಸೆಕ್ ಬಿಡಲು ನಮ್ಮ ಬಳಿ ನೀರಿಲ್ಲ. ಇನ್ನು 12,500 ಕ್ಯೂಸೆಕ್ ಬಿಡಲು ಹೇಗೆ ಸಾಧ್ಯ, ಅವರು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿದಿನ ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಎಷ್ಟು ನೀರು ಬರುತ್ತದೆ ಮತ್ತು ಹೊರ ಹೋಗುತ್ತದೆ ಎನ್ನುವ ಮಾಹಿತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ತಾವು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಒಳಹರಿವಿನ ಮೇಲೆ ನಿಗಾ ವಹಿಸಿದ್ದು, 8 ರಿಂದ 10 ಸಾವಿರ ಕ್ಯೂಸೆಕ್ ಹರಿವು ಹೆಚ್ಚಾಗಿದೆ. ಅದೇ ಸಂದರ್ಭದಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತ ಬಿದ್ದ ಮಳೆಯಿಂದಾಗಿ ಸಹಜವಾಗಿಯೇ ತಮಿಳುನಾಡಿಗೆ ನೀರು ಹರಿಯುತ್ತಿರುವ ಪ್ರಮಾಣವೂ ಹೆಚ್ಚಾಗಿದೆ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ. ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿದ್ದಾರೆ ಎಂದು ಹೇಳಿದರು. +ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ +ಜಲಾಶಯಗಳಿಗೆ ನೀರಿನ ಒಳಹರಿವು ಮತ್ತು ಹೊರಹರಿವಿನ ಮೇಲೆ ನೀರು ನಿಯಂತ್ರಣಾ ಸಮಿತಿ ನಿಗಾ ಇಟ್ಟಿದೆ. ಆದ ಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು. +ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತಾವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ ಎಂದರು. ರಾಜ್ಯದಲ್ಲಿ ಕನ್ನಡಿಗರ ಸರ್ಕಾರವಿಲ್ಲ, ಸ್ಟಾಲಿನ್ ಸರ್ಕಾರವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು, ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ ಎಂದು ತಿಳಿಸಿದರು. +ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ +ಇಂದು ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯಿದ್ದು ರಾಜ್ಯದ ಅಧಿಕಾರಿಗಳು ವಾಸ್ತವಾಂಶವನ್ನು ಸಮಿತಿಯ ಮುಂಡಿಡಲಿದ್ದಾರೆ. ರಾಜ್ಯದ ಹಿತವೇ ನಮ್ಮ ಮೊದಲ ಆದ್ಯತೆ, ಇಂದು ಅಥವಾ ನಾಳೆ ನಾನು ಮತ್ತು ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ, ಕಾವೇರಿ ನೀರಿನ ವಿಚಾರವಾಗಿ ಬಂದ್‍ಗೆ ಸಹಕಾರ ನೀಡಿದ ಬೆಂಗಳೂರಿನ ನಾಗರಿಕರಿಗೆ ಅಭಿನಂದನೆಗಳು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಎಲ್ಲಾ ಸಂಘಟನೆಯವರಿಗೆ ಮಾಧ್ಯಮಗಳ ಮೂಲಕ ಧನ್ಯವಾದ ಎಂದು ತಿಳಿಸಿದರು. \ No newline at end of file diff --git a/eesanje/url_46_341_11.txt b/eesanje/url_46_341_11.txt new file mode 100644 index 0000000000000000000000000000000000000000..cd54b0a3f33ece978cb30df9955aea8b8cc77ce4 --- /dev/null +++ b/eesanje/url_46_341_11.txt @@ -0,0 +1,16 @@ +ಬೆಂಗಳೂರು ಬಂದ್‌ಗೆ ಉತ್ತಮ ಪ್ರತಿಕ್ರಿಯೆ +ಬೆಂಗಳೂರು, ಸೆ.26- ನಾಡಿನ ಜೀವನದಿ ಕಾವೇರಿಗಾಗಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಕರೆ ನೀಡಲಾಗಿದ್ದ ಬೆಂಗಳೂರು ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಸುಮಾರು 150 ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿದ್ದ ಬೆಂಗಳೂರು ಬಂದ್‍ಗೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಭಾರೀ ಬೆಂಬಲ ನೀಡಿದ್ದಾರೆ. +ನಗರದ ಪ್ರಮುಖ ರಸ್ತೆಗಳ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಖಾಸಗಿ ಬಸ್‍ಗಳ ಸಂಚಾರ ವಿರಳವಾಗಿತ್ತು. ಆಟೋ, ಕ್ಯಾಬ್‍ಗಳು ಬೆರಳೆಣಿಕೆಯಷ್ಟು ಓಡಾಡುತ್ತಿದ್ದವು. ಕೆಲವರು ಇದರ ದುರುಪಯೋಗ ಪಡೆದುಕೊಂಡು ಪ್ರಯಾಣಿಕರನ್ನು ಸುಲಿಗೆ ಮಾಡುವ ಯತ್ನವನ್ನೂ ನಡೆಸಿದರು.ಪೊಲೀಸರು ಮುಂಜಾಗ್ರತವಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಎಲ್ಲೆಡೆ ವ್ಯಾಪಕ ಬಿಗಿ ಬಂದೋಬಸ್ತ್ ಆಯೋಜಿಸಿತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಖಾಕಿ ಸರ್ಪಗಾವಲು ಹಾಕಲಾಗಿತ್ತು. +ಬಂದ್‍ಗೆ ಕರೆ ನೀಡಿದ್ದ ಸಂಘಟನೆಗಳ ಪ್ರಮುಖ ನಾಯಕ ಕುರುಬೂರು ಶಾಂತಕುಮಾರ್, ಇಂದು ಬೆಳಿಗ್ಗೆ ಮೈಸೂರು ಬ್ಯಾಂಕ್ ರಸ್ತೆಯ ಮಧ್ಯಭಾಗದಲ್ಲಿ ರೈತರೊಂದಿಗೆ ಕುಳಿತು ಉಪಹಾರ ಸೇವಿಸಲು ಮುಂದಾದರು. ಅವರನ್ನು ಅಲ್ಲಿಂದ ಫ್ರೀಡಂ ಪಾರ್ಕ್‍ಗೆ ಪೊಲೀಸರು ಕರೆತಂದರು. ಅಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಸಮಾವೇಶಗೊಂಡಿದ್ದವು. ಅಮ್ ಆದ್ಮಿ ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡರು.ಫ್ರೀಡಂಪಾರ್ಕ್‍ನಲ್ಲಿ ರೈತರು ಖಾಲಿ ಬಿಂದಿಗೆಗಳನ್ನು ಹಿಡಿದು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. +ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ : ಮುಖ್ಯಮಂತ್ರಿ ಚಂದ್ರು +ಈ ಸಂದರ್ಭದಲ್ಲಿ ಹೂವುಗಳನ್ನು ಹಂಚಿರುವ ಕಾರ್ಯಕರ್ತರು ಹೂವು ಕೊಡುತ್ತೇವೆ, ನೀರು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರು ಅಸ್ವಸ್ಥರಾಗಿ ಕುಸಿದುಬಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. +ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್‍ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳು, ಓಲಾ, ಊಬರ್, ಹೋಟೆಲ್ ಮಾಲಿಕರ ಸಂಘಟನೆಗಳು, ಆಟೋ ಚಾಲಕರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ನೂರಾರು ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿದ್ದವು. ಹೀಗಾಗಿ ಬಂದ್ ಯಶಸ್ಸು ಕಂಡಿದೆ. +ನಗರದೆಲ್ಲೆಡೆ ಅಂಗಡಿಗಳು ಹಾಗೂ ವ್ಯಾಪಾರೋದ್ಯಮಗಳು ಮುಚ್ಚಲ್ಪಟ್ಟು ವಾತಾವರಣ ಬಿಕೋ ಎನ್ನುತ್ತಿತ್ತು. ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದರು. ಕೆಲವು ಪ್ರಮುಖ ಕೇಂದ್ರ ಸ್ಥಾನಗಳಲ್ಲಿ ಪ್ರತಿಭಟನೆಗಳು ನಡೆದಿರುವ ವರದಿಯಾಗಿವೆ. +ಶಾಲಾ-ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿತ್ತು. ಕೆಲವು ಖಾಸಗಿ ಶಾಲೆಗಳು ತರಗತಿಗಳನ್ನು ನಡೆಸಿದರಾದರೂ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿತ್ತು. ಕೆಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಿವೆ. +ಕಳೆದ ಮೂರು ದಿನಗಳಿಂದಲೂ ಬಂದ್ ಬಗ್ಗೆ ವ್ಯಾಪಕ ಚರ್ಚೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಪ್ರವಾಸ ಅಥವಾ ಓಡಾಟವನ್ನು ನಿಯಂತ್ರಿಸಿಕೊಂಡಿದ್ದರು. ಹೀಗಾಗಿ ಬೆಂಗಳೂರಿನ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಶಾಂತಿನಗರ, ಕಲಾಸಿಪಾಳ್ಯ, ಯಶವಂತಪುರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಬಸ್‍ಗಳು ಸಾಲುಗಟ್ಟಿ ನಿಂತಿದ್ದವು. ಬಂದ್‍ನ ನಡುವೆಯೂ ಅನಿವಾರ್ಯವಾಗಿ ಓಡಾಡಲೇಬೇಕಾದ ಪ್ರಯಾಣಿಕರು ರಸ್ತೆಯಲ್ಲಿ ಕಾದುನಿಂತು ಬಸವಳಿದಿದ್ದರು. +ಆಟೋ ಮತ್ತು ಕ್ಯಾಬ್‍ಗಳ ಪ್ರಯಾಣದರ ದುಪ್ಪಟ್ಟಾಗಿತ್ತು. ಹಾಲು, ಮೊಸರು, ಔಷ, ತರಕಾರಿಯಂತಹ ಅಗತ್ಯ ವಸ್ತುಗಳ ವಹಿವಾಟು ಎಂದಿನಂತೆ ನಡೆದಿತ್ತು. ಆಸ್ಪತ್ರೆಗಳು ಕಾರ್ಯನಿರ್ವಹಿಸಿದವು. ಬಂದ್ ಪ್ರಯುಕ್ತ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ತಮಿಳುನಾಡು, ಕರ್ನಾಟಕದ ರಾಜ್ಯಸರ್ಕಾರಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. +ಫ್ರೀಡಂಪಾರ್ಕ್‍ನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಅಣಕು ತಿಥಿ ನಡೆಸಲಾಗಿದೆ. ರಾಜ್ಯಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವ ಮೂಲಕ ನಾಡಿನ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದ ಸಂಸದರು, ಅಂತರಾಜ್ಯ ನದಿ ವಿವಾದಕ್ಕೆ ಸಂಬಂಧಪಟ್ಟಂತೆ ಸಂಸತ್‍ನಲ್ಲಿ ಬಾಯಿ ಬಿಡದೆ ಮೌನಕ್ಕೆ ಶರಣಾಗುವ ಮೂಲಕ ಹೇಡಿತನ ಪ್ರದರ್ಶಿಸಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡದೇ ಉದ್ದೇಶಪೂರ್ವಕವಾಗಿ ನುಣುಚಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿಬಂದವು. +ಇಂಡೋ ಪೆಸಿಫಿಕ್ ರಾಷ್ಟ್ರಗಳ ಸಮಗ್ರತೆಗೆ ಒತ್ತು : ಮನೋಜ್‍ ಪಾಂಡೆ +ಟೌನ್‍ಹಾಲ್, ಫ್ರೀಡಂಪಾರ್ಕ್ ಹಾಗೂ ಮೈಸೂರು ಬ್ಯಾಂಕ್ ಬಳಿ ಪ್ರತಿಭಟನೆಯಲ್ಲಿ ತೊಡಗಿದ್ದ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಸರ್ಕಾರ ತಾನು ಮಾಡಬೇಕಾದ ಜವಾಬ್ದಾರಿಯನ್ನು ಮರೆತು ಕನ್ನಡಪರ ಸಂಘಟನೆಗಳನ್ನು ಬಂಸುವ ಮೂಲಕ ನಾಡ ವಿರೋಧಿತನ ಅನುಸರಿಸುತ್ತಿದೆ ಎಂಬ ಆಕ್ರೋಶಗಳು ಕೇಳಿಬಂದವು. +ಬೆಂಗಳೂರು ಬಂದ್ ವಿಷಯವಾಗಿ ಕನ್ನಡ ಸಂಘಟನೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನಡುವೆ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಅದರ ಹೊರತಾಗಿಯೂ ಕಾವೇರಿ ವಿಷಯವಾಗಿ ಬೆಂಗಳೂರು ಜನ ಸ್ವಯಂಪ್ರೇರಿತರಾಗಿ ಬಂದ್‍ಗೆ ಬೆಂಬಲ ನೀಡಿದ್ದಾರೆ. +ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯಸರ್ಕಾರ ತಮಿಳುನಾಡಿನ ಏಜೆಂಟ್‍ನಂತೆ ವರ್ತಿಸುತ್ತಿದೆ. ನಿರಂತರವಾಗಿ ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಅದನ್ನು ತಡೆಯುವಂತೆ ನಾವು ಪ್ರತಿಭಟನೆ ನಡೆಸುತ್ತಿದ್ದರೆ, ನಮ್ಮನ್ನು ಬಂಧಿಸಿ ಚಳುವಳಿಗೂ ಅಡ್ಡಿಪಡಿಸುತ್ತಿದೆ. ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚು ಮುಖಂಡರನ್ನು ಬಂಧಿಸಿದ್ದಾರೆ. ಚಳುವಳಿಯನ್ನು ಹತ್ತಿಕ್ಕುವ ಯತ್ನ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_341_12.txt b/eesanje/url_46_341_12.txt new file mode 100644 index 0000000000000000000000000000000000000000..fa6709fa87e59a2b479b19ef64847625eea602cc --- /dev/null +++ b/eesanje/url_46_341_12.txt @@ -0,0 +1,12 @@ +ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ +ಬೆಂಗಳೂರು, ಸೆ.26- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಾಟಾಳ್ ನಾಗ ರಾಜ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟ ಇಂದು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿತು. ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ಕೆ.ಆರ್.ಕುಮಾರ್ ಅನೇಕರು ಭಾಗ ವಹಿಸಿದ್ದರು. +ರಾಜಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ನಾಯಕರನ್ನು ಪೊಲೀಸರು ಅರ್ಧದಲ್ಲೇ ತಡೆದು ವಶಕ್ಕೆ ತೆಗೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸೆ.29 ರಂದು ಕರೆದಿರುವ ಕರ್ನಾಟಕ ಬಂದ್ ನಡೆಯಲಿದೆ. ಈ ನಿಟ್ಟಿನಲ್ಲಿ ಹಲವು ಸುತ್ತಿನ ಚರ್ಚೆಗಳಾಗಿದ್ದು, ರಾಜ್ಯಾದ್ಯಂತ ಸುಮಾರು 2 ಸಾವಿರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿವೆ ಎಂದು ಹೇಳಿದರು. +ಕರ್ನಾಟಕ ಬಂದ್‍ನಲ್ಲಿ ಸಾರಿಗೆ ಸೇರಿದಂತೆ ಎಲ್ಲಾ ಚಟುವಟಿಕೆಗಳೂ ಸ್ಥಗಿತಗೊಳ್ಳಲಿವೆ. ಸುಮಾರು ಒಂದು ಲಕ್ಷ ಜನ ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ರಾಜ್ಯಸರ್ಕಾರ ಯಾವುದೇ ಒತ್ತಡ ಹಾಕಿದ್ದರೂ ನಾವು ಹೋರಾಟ ಮಾಡುವುದನ್ನು ಕೈಬಿಡುವುದಿಲ್ಲ. ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿ ಪ್ರತಿಭಟನೆ ಹತ್ತಿಕ್ಕಲು ಯತ್ನಿಸುತ್ತಿದೆ. ಇದನ್ನು ಖಂಡಿಸುತ್ತೇವೆ ಎಂದರು. +ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ +ಯಡಿಯೂರಪ್ಪ, ಕುಮಾರಸ್ವಾಮಿ ಅವರು ಬಂದ್‍ಗೆ ಬೆಂಬಲ ಎಂದು ಘೋಷಿಸಿದ್ದಾರೆ. ಸುಮ್ಮನೆ ಏಕೆ ಬೆಂಬಲ ಕೊಡುತ್ತೀರಾ, ಬೀದಿಗೆ ಬಂದು ಪ್ರತಿಭಟನೆ ಮಾಡಿ ಎಂದು ಸವಾಲು ಹಾಕಿದರು. ಹಿಂದಿನ ಅವಧಿಯಲ್ಲಿ ಎಲ್ಲಾ ಸರ್ಕಾರಗಳು ಸಂಘಟನೆಗಳ ಜೊತೆ ಚರ್ಚೆ ಮಾಡಿ ನೀರು ಬಿಡುತ್ತಿದ್ದವು. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗಲೂ ಚರ್ಚೆ ಮಾಡಿಯೇ ನೀರು ಬಿಡಲಾಗಿತ್ತು. ಆಗಲೂ ಹೋರಾಟ ನಡೆದಿತ್ತು. ಆದರೆ ಈಗ ಯಾರನ್ನೂ ಹೇಳದೇ, ಕೇಳದೆ ನೀರು ಹರಿಸಿದ್ದಾರೆ ಎಂದು ಆರೋಪಿಸಿದರು. +ರಾಜ್ಯಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಹೇರಿರುವುದು, ವ್ಯಾಪಕ ಬಂದೊಬಸ್ತ್ ಅನ್ನು ನೋಡಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನಗುತ್ತಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕಿ ನಮಗೆ ನೀರು ಬಿಡುತ್ತಿದ್ದಾರೆ, ಶಹಬ್ಬಾಸ್ ಎಂದು ಸ್ಟಾಲಿನ್ ಹೇಳುತ್ತಿದ್ದಾರೆ ಎಂದು ಆರೋಪಿಸಿದರು. +ನಮ್ಮ ಕರ್ನಾಟಕ ಸರ್ಕಾರ ಮತ್ತು ತಮಿಳುನಾಡಿಗೆ ಅದೇನು ನಂಟಸ್ತನ ಇದೆಯೋ ಗೊತ್ತಿಲ್ಲ, ರಾಜ್ಯವನ್ನು ಅವರಿಗೆ ಒಪ್ಪಿಸಿಬಿಟ್ಟಂತೆ ಕಾಣುತ್ತಿದೆ. ನಮ್ಮವರು ಸ್ಟಾಲಿನ್ ಹೇಳಿದಂತೆ ಕೇಳುತ್ತಿದ್ದಾರೆ. ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ನಮ್ಮ ಸಂಸದರು ಕಾವೇರಿ ವಿಷಯದಲ್ಲಿ ಸಂಸತ್‍ನಲ್ಲಿ ಧ್ವನಿಯೆತ್ತುತ್ತಿಲ್ಲ. ಉಳಿದ ವಿಷಯಗಳಲ್ಲಿ ನಾಜೂಕಾಗಿ ಮಾತನಾಡುತ್ತಾರೆ. ಮಾತನಾಡುವ ಮೊದಲು ತುಟಿಗೆ ಲಿಫ್ಟಿಕ್ ಹಚ್ಚಿಕೊಳ್ಳುತ್ತಾರೆ. ಈ ಮೊದಲು ಹೆಣ್ಣು ಮಕ್ಕಳು ಹಾಕಿಕೊಳ್ಳುತ್ತಿದ್ದರು. ಈಗ ಅದನ್ನು ನಮ್ಮ ಸಂಸದರೂ ಹಚ್ಚಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಂಸದರು ಹುಡುಗಾಟ ಆಡುತ್ತಿದ್ದಾರೆಯೇ, ಲಿಫ್ಟಿಕ್ ಹಾಕಿಕೊಂಡು ಸಂಸತ್‍ಗೆ ಹೋಗುತ್ತಿದ್ದಾರೆ. ಇವರಿಗೆ ಯೋಗ್ಯತೆ ಇದೆಯೇ, ಮೊದಲು ಸಂಸತ್ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಆಗ್ರಹಿಸಿದರು. +ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್ +ಕರ್ನಾಟಕ ಬಂದ್‍ನಿಂದ ತಮಿಳುನಾಡಿಗೆ ತಕ್ಕ ಉತ್ತರ ನೀಡುತ್ತೇವೆ. ಕನ್ನಡ ಚಿತ್ರರಂಗ ಸೇರಿದಂತೆ ಎಲ್ಲವೂ ಸ್ತಬ್ಧಗೊಳ್ಳುತ್ತವೆ. ಬೆಂಗಳೂರು ಬಂದ್ ಮಾಡುವವರಿಗೆ ಒಟ್ಟಾಗಿ ಹೋರಾಟ ಮಾಡುವಂತೆ ಸಲಹೆ ನೀಡಿದ್ದೆ. ಆದರೆ ಅವರು ಪ್ರತಿಷ್ಠೆಗೆ ಅಂಟಿಕೊಂಡು ಬೆಂಗಳೂರು ಬಂದ್ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. +ಚಳುವಳಿ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಈಗ ಹೋರಾಟ ಮಾಡುತ್ತಿರುವ ಯಾರೂ ಹುಟ್ಟೇ ಇರಲಿಲ್ಲ, ಆಗಿನಿಂದಲೂ ಇಲ್ಲಿಯವರೆಗೂ 12 ಸಾವಿರ ಹೋರಾಟಗಳನ್ನು ಮಾಡಿದ್ದೇನೆ. ಇಂದು ನಡೆಸಿರುವ ಬೆಂಗಳೂರು ಬಂದ್‍ನಲ್ಲಿ ಹೋರಾಟಗಾರರನ್ನು ಸಿಕ್ಕಸಿಕ್ಕಲ್ಲಿ ಬಂಸಲಾಗುತ್ತಿದೆ. ಏಕೆ, ಅವರೇನು ಕಳ್ಳರೇ. 50 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದು ಪೊಲೀಸ್ ರಾಜ್ಯವೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_341_2.txt b/eesanje/url_46_341_2.txt new file mode 100644 index 0000000000000000000000000000000000000000..bb2a7c91e0e9d5a378d75960409d0db264dab16b --- /dev/null +++ b/eesanje/url_46_341_2.txt @@ -0,0 +1,8 @@ +ಸಾಲುಸಾಲು ರಜೆ, ಪ್ರವಾಸಿ ತಾಣಗಳತ್ತ ಜನಸಾಗರ +ಬೆಂಗಳೂರು,ಸೆ.28- ಇಂದು ಈದ್ ಮಿಲಾದ್, ನಾಳೆ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಸಾಲು ಸಾಲು ರಜೆ ಬಂದಿದ್ದು ನಗರ ನಿವಾಸಿಗಳು ಊರುಗಳತ್ತ ತೆರಳುತ್ತಿದ್ದು ರಾತ್ರಿಯಂದಲೇ ಸಾರಿಗೆ ಹಾಗೂ ಖಾಸಗಿ ಬಸ್‍ಗಳಲ್ಲಿ ಜನ ಪ್ರಯಾಣಿಸಿದ್ದು ಸಂಚಾರ ದಟ್ಟಣೆ ಉಂಟಾಗಿತ್ತು. ನಾಳಿನ ಕರ್ನಾಟಕ ಬಂದ್‍ಗೆ ಸರ್ಕಾರಿ ರಜೆ ಇಲ್ಲದಿದ್ದರೂ ಖಾಸಗಿ ಕಂಪನಿ, ಕೈಗಾರಿಕೆಗಳಿಗೆ ರಜೆ ಇರಲಿದೆ. ಶನಿವಾರ ಕೆಲವರಿಗೆ ರಜೆ, ಭಾನುವಾರ ವಾರದ ರಜೆ ಹಾಗೂ ಸೋಮವಾರ ಗಾಂಧಿ ಜಯಂತಿ ಹಿನ್ನಲೆಯಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ನಗರ ನಿವಾಸಿಗಳು ಪುಲ್ ಖುಷಿಯಾಗಿದ್ದು, ಊರುಗಳತ್ತ ತೆರಳುತ್ತಿದ್ದಾರೆ. +ರಾತ್ರಿಯಿಂದಲೇ ಪ್ರಯಾಣ ಆರಂಭಿಸಿದ್ದು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿತ್ತು. ಇನ್ನೂ ಕೆಲವರು ಖಾಸಗಿ ಟ್ರಾವಲ್ಸ್‍ಗಳಲ್ಲಿ ಬುಕ್ಕಿಂಗ್ ಮಾಡಿದ್ದು ಆನಂದ್ ರಾವ್ ವೃತ್ತ, ಕೆಆರ್ ಮಾರುಕಟ್ಟೆ, ಗೋರಗುಂಟೆಪಾಳ್ಯ, ನವರಂಗ್ ಬಳಿ ಇರುವ ಖಾಸಗಿ ಬಸ್‍ಗಳ ಬುಕ್ಕಿಂಗ್ ಸೆಂಟರ್ ಗಳ ಮುಂದೆ ಪ್ರಯಾಣಿಕರು ಹೆಚ್ಚಾಗಿದ್ದ ದೃಶ್ಯಗಳು ಕಂಡು ಬಂದವು. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಸಹ ಹೆಚ್ಚಾಗಿದೆ. +ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ +ಕಳೆದ ವಾರವಷ್ಟೆ ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗಿ ಬಂದಿದ್ದೆವೆ ಎಂದು ಕೆಲವರು ಊರುಗಳಿಗೆ ತೆರಳದ ಕೆಲವರು ಟ್ರಿಪ್ ಪ್ಲಾನ್ ಮಾಡಿಕೊಂಡು ಪ್ರವಾಸಿ ತಾಣ, ಪುಣ್ಯ ಕ್ಷೇತ್ರಗಳತ್ತ ತೆರಳುತ್ತಿದ್ದಾರೆ. ಇಂದು ಈದ್‍ಮಿಲಾದ್ ಹಿನ್ನಲೆಯಲ್ಲಿ ರಜೆ ಇದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟ, ಇಶಾಫೌಂಡೇಷನ್, ಶಿವಗಂಗೆ, ರಾಮನಗರದ ರಾಮದೇವರ ಬೆಟ್ಟ, ತುಮಕೂರು ಜಿಲ್ಲೆಯ ದೇವರಾಯನ ದುರ್ಗ, ಗೋರವನಹಳ್ಳಿ, ಮಾದೇಶ್ವರ ಬೆಟ್ಟ, ಮೈಸೂರಿನ ಚಾಮುಂಡಿ ಬೆಟ್ಟ, ಸೇರಿದಂತೆ ಮತ್ತಿತರ ಕಡೆ ಇಂದು ಮುಂಜಾನೆ ಯಿಂದಲೆ ಸ್ವಂತ ವಾಹನ ಹಾಗೂ ಸಾರಿಗೆ ಬಸ್ ಗಳಲ್ಲಿ ಜನರು ತೆರಳಿದ್ದು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. +ಗೋರಗುಂಟೆಪಾಳ್ಯ, ನೆಲಮಂಗಲ ಟೋಲ್, ನೈಸ್ ಟೋಲ್, ಅತ್ತಿಬೆಲೆ, ಆನೆಕಲ್, ಮೈಸೂರು ರಸ್ತೆ, ದೇವನಹಳ್ಳಿ ರಸ್ತೆಯಲ್ಲಿ ರಾತ್ರಿಯಿಂದಲೆ ವಾಹನ ಸಂಚಾರ ಹೆಚ್ಚಾಗಿದ್ದು ಇಂದು ಬೆಳಗ್ಗೆ ಟ್ರಾಫಿಕ್ ಸಮಸ್ಥೆ ಉಂಟಾಗಿತ್ತು. ಇನ್ನೂ ಚಿಕ್ಕಬಳ್ಳಾಪುರದ ನಂದಿಬೆಟ್ಟದ ಪ್ರಕೃತಿ ಸೌಂದರ್ಯ ಸವಿಯಲು ಪ್ರವಾಸಿಗರ ದಂಡೆ ಹರಿದು ಬಂದಿದ್ದರಿಂದ ಬೆಟ್ಟದ ನಂದಿ ಗಿರಿ ದಾಮ ಸುತ್ತಮುತ್ತ ಸಂಚಾರ ದಟ್ಟಣೆ ಕಂಡುಬಂತು. +ಛತ್ತೀಸ್‍ಗಢದಲ್ಲಿ ಸಿಡಿಲಿಗೆ ಮೂವರು ಮಹಿಳೆಯರ ಬಲಿ +ಒಟ್ಟಿನಲ್ಲಿ ಸಾಲು ಸಾಲು ರಜೆ ಬಂದರೆ ಸಾಕು ನಗರ ನಿವಾಸಿಗಳು ದಿನಿತ್ಯದ ಟ್ರಾಫಿಕ್ ಕಿರಿಕಿರಿ ಕೆಲಸದ ಒತ್ತಡ ದಿಂದ ಮುಕ್ತಿ ಪಡೆದು ಮನ ಥಣಿಸಿಕೊಂಡು ರಿಲ್ಯಾಕ್ಸ್‍ಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗಿದ್ದು ರಜೆ ಸಿಕ್ಕರೆ ಸಾಕು ಪ್ರಕೃತಿ ಮಡಿಲಿಗೆ ಲಗ್ಗೆ ಇಡುತ್ತಿದ್ದಾರೆ. \ No newline at end of file diff --git a/eesanje/url_46_341_3.txt b/eesanje/url_46_341_3.txt new file mode 100644 index 0000000000000000000000000000000000000000..d99b5b323db821bf3b7d3de43f578d9a09652c22 --- /dev/null +++ b/eesanje/url_46_341_3.txt @@ -0,0 +1,18 @@ +ಜೆಡಿಎಸ್, ಬಿಜೆಪಿಯ ಕೆಳ ಹಂತದ ನಾಯಕರಿಗೆ ಕಾಂಗ್ರೆಸ್ ಗಾಳ +ಬೆಂಗಳೂರು,ಸೆ.28- ಜೆಡಿಎಸ್, ಬಿಜೆಪಿಯ ಮೈತ್ರಿಯಿಂದ ಅಸಮಾಧಾನಗೊಂಡಿರುವ ಜೆಡಿಎಸ್‍ನ ಹಲವು ನಾಯಕರು ಕಾಂಗ್ರೆಸ್ ಸಂಪರ್ಕಕ್ಕೆ ಬಂದಿದ್ದು, ಪಕ್ಷ ಸೇರ್ಪಡೆ ಕಾರ್ಯಕ್ರಮಗಳು ಜೋರಾಗಿ ನಡೆಯುತ್ತಿವೆ. ಅದೇ ವೇಳೆ ಪಕ್ಷನಿಷ್ಠರು ಮುಂದಿನ ಭವಿಷ್ಯದ ವಿಷಯದಲ್ಲಿ ಗೊಂದಲಕ್ಕೊಳಗಾಗಿ ವರಿಷ್ಠರ ನಿರ್ಧಾರಗಳ ವಿರುದ್ಧ ಸಿಡಿಮಿಡಿಗೊಳ್ಳುತ್ತಿದ್ದಾರೆ. +ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಗೊಳಿಸಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದೊಡ್ಡ ದೊಡ್ಡ ನಾಯಕರುಗಳಿಗಿಂತಲೂ ಕೆಳಹಂತದ ಕಾರ್ಯಕರ್ತರಿಗೆ ಮಣೆ ಹಾಕಬೇಕು. ಬ್ಲಾಕ್ ಮತ್ತು ಜಿಲ್ಲಾಮಟ್ಟದಲ್ಲೇ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ಫರ್ಮಾನು ಹೊರಡಿಸಿದ್ದಾರೆ. +ಆದರೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್, ಜೆಡಿಎಸ್ ದಶಕಗಳಿಂದಲೂ ವೈರುಧ್ಯ ರಾಜಕಾರಣಕ್ಕೆ ಹೆಸರುವಾಸಿಯಾಗಿದೆ. ಜೆಡಿಎಸ್, ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ವೇಳೆಯಲ್ಲೂ ಮೇಲ್ಮಟ್ಟದಲ್ಲಿ ಹೊಂದಾಣಿಕೆಯಾಗಿತ್ತೇ ಹೊರತು ಕೆಳಹಂತದಲ್ಲಿ ಕಾರ್ಯಕರ್ತರು ಜಿದ್ದಾಜಿದ್ದಿಗೆ ಬಿದ್ದಿದ್ದರು. ಅದರ ಪರಿಣಾಮವೇ ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳೂ ಹೀನಾಯವಾಗಿ ನೆಲಕಚ್ಚಿದ್ದವು.ಈಗ ಜೆಡಿಎಸ್ ಮತ್ತು ಬಿಜೆಪಿ ಪುನರ್ ಮಿಲನವಾಗಿದೆ. +ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ +ರಾಜ್ಯದಲ್ಲಿ ಕೋಮುಸೂಕ್ಷ್ಮ ವಾತಾವರಣ ಹಿಂದೆಂದಿಗಿಂತಲೂ ಹೆಚ್ಚು ಸಂಕೀರ್ಣಗೊಂಡಿವೆ. ಈ ಸಂದರ್ಭದಲ್ಲಿ ಜೆಡಿಎಸ್‍ನಲ್ಲಿರುವ ಅಲ್ಪಸಂಖ್ಯಾತ, ಜಾತ್ಯತೀತ ಮತ್ತು ಪ್ರಗತಿಪರ ನಾಯಕರು ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗುತ್ತಿದೆ ಎಂಬ ನೆಪ ಹೇಳಿ ಕಾಂಗ್ರೆಸ್‍ನತ್ತ ಮುಖ ಮಾಡುತ್ತಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್ ಮುಂದಿನ 5 ವರ್ಷ ಆಡಳಿತ ನಡೆಸುವ ನಿರೀಕ್ಷೆಗಳನ್ನು ಹುಟ್ಟಿಸಿದೆ. ಹೀಗಾಗಿ ಅಧಿಕಾರ ಹಾಗೂ ಅವಕಾಶಗಳಿಗಾಗಿ ಹಾತೊರೆಯುತ್ತಿದ್ದವರು ಆಡಳಿತಾರೂಢ ಪಕ್ಷದತ್ತ ವಲಸೆ ಆರಂಭಿಸಿದ್ದಾರೆ. ಇದಕ್ಕೆ ಸೈದ್ಧಾಂತಿಕ ಸನ್ನಿವೇಶವೂ ಕೂಡ ಪೂರಕವಾಗಿರುವುದು ಪಕ್ಷಾಂತರ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ. +ಬಿಜೆಪಿ ಮತ್ತು ಜೆಡಿಎಸ್‍ನಲ್ಲಿರುವ ಕೆಲವು ಶಾಸಕರುಗಳು ಕಾಂಗ್ರೆಸ್ ಸೇರುವ ವದಂತಿಗಳು ಹರಡಿದ್ದವು. ಆದರೆ ಆಪರೇಷನ್ ಹಸ್ತ ಎಂಬ ಅಪಕೀರ್ತಿಗೆ ಹೆದರಿದ ಕಾಂಗ್ರೆಸಿಗರು ಶಾಸಕರನ್ನು ಸೆಳೆಯಲು ಹಿಂದೇಟು ಹಾಕಿದರು. ಅದೇ ವೇಳೆ ಆಯಾ ಪಕ್ಷಗಳ ವರಿಷ್ಠರು ಅತೃಪ್ತರನ್ನು ಸಮಾಧಾನಪಡಿಸಿ ವಾತಾವರಣವನ್ನು ತಹಬದಿಗೆ ತಂದಿದ್ದಾರೆ. +ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಮಗೆ ಶಾಸಕರ ಅಗತ್ಯವಿಲ್ಲ. ಆದರೆ ಪಕ್ಷದ ಮತಗಳಿಕೆಯನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಕೆಳಹಂತದಲ್ಲಿ ವರ್ಚಸ್ವಿ ನಾಯಕರು ಸೇರ್ಪಡೆಯಾಗುವುದಾದರೆ ಸ್ವಾಗತಿಸುತ್ತೇವೆ ಎಂದಿದ್ದಾರೆ. +ಕೆಲವು ಮಾಜಿ ಶಾಸಕರು, ಮಾಜಿ ಸಚಿವರು ಕಾಂಗ್ರೆಸ್‍ನ ಪ್ರಮುಖ ನಾಯಕರನ್ನು ಸಂಪರ್ಕಿಸಿದ್ದು, ಪಕ್ಷ ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿರುವುದು ತಿಳಿದುಬಂದಿದೆ. ಇನ್ನೂ ಕೆಲವು ಪ್ರಭಾವಿಗಳಿಗೆ ಕಾಂಗ್ರೆಸ್ ಪಕ್ಷವೇ ಗಾಳ ಹಾಕಿದೆ. +ಸದ್ಯದ ಸನ್ನಿವೇಶದಲ್ಲಿ ಬರುವವರನ್ನೆಲ್ಲಾ ಪಕ್ಷಕ್ಕೆ ಸೇರಿಸಿಕೊಂಡರೆ ಮುಂದಿನ ದಿನಗಳಲ್ಲಿ ಗೊಂದಲಗಳಾಗುವ ಆತಂಕ ಕೇಳಿಬರುತ್ತಿದೆ. ಈಗಿರುವ ಪಕ್ಷದಲ್ಲೇ ಅಕಾರ ಇಲ್ಲ ಎಂಬ ಕಾರಣಕ್ಕಾಗಿ ಪಕ್ಷಾಂತರ ಮಾಡುತ್ತಿರುವವರು ನಾಳೆ ಇಲ್ಲಿಯೂ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಚುನಾವಣೆಯಂತಹ ಬಿಗುವಿನ ಸಮಯದಲ್ಲಿ ಗೊಂದಲ ಮೂಡಿಸಿ ಬೇರೆ ಪಕ್ಷದತ್ತ ಹೆಜ್ಜೆ ಹಾಕಿದರೆ ಕಾಂಗ್ರೆಸ್‍ಗೆ ನಷ್ಟವಾಗಲಿದೆ. ಹೀಗಾಗಿ ವಲಸಿಗ ನಾಯಕರನ್ನು ಅಳೆದು ತೂಗಿ ಸೇರ್ಪಡೆ ಮಾಡಿಕೊಳ್ಳಬೇಕು. +ವಿಧಾನಸಭೆ ಚುನಾವಣೆಗೂ ಮೊದಲೇ ಇದ್ದಂತಹ ವ್ಯವಸ್ಥೆಯನ್ನು ಚಾಚೂತಪ್ಪದೇ ಪಾಲಿಸಬೇಕು. ಕಾಂಗ್ರೆಸ್ ಸೇರ್ಪಡೆಯಾಗಲು ಇಚ್ಛೆ ವ್ಯಕ್ತಪಡಿಸುವ ನಾಯಕರ ಮಾಹಿತಿಗಳನ್ನು ಕ್ಷೇತ್ರ ಹಾಗೂ ಜಿಲ್ಲಾ ಸಮಿತಿಗಳೊಂದಿಗೆ ಹಂಚಿಕೊಳ್ಳಬೇಕು. ಅಲ್ಲಿಂದ ಅಭಿಪ್ರಾಯ ಪಡೆದ ಬಳಿಕ ಕೆಪಿಸಿಸಿಯ ಅಲ್ಲಮ ವೀರಭದ್ರಪ್ಪ ಸಮಿತಿ ಹಸಿರು ನಿಶಾನೆ ನೀಡಿದ ಬಳಿಕವೇ ವಲಸಿಗರಿಗೆ ಸದಸ್ಯತ್ವ ನೀಡಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ. +ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬಿಬಿಎಂಪಿ, ವಿವಿಧ ಪಾಲಿಕೆಗಳು ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳು ನಡೆಯಲಿವೆ. ಅಲ್ಲಿ ಕಾಂಗ್ರೆಸಿಗರು ಆಕಾಂಕ್ಷಿಗಳಾಗಿ ಈಗಾಗಲೇ ತಯಾರಿ ಆರಂಭಿಸಿದ್ದಾರೆ. +ವಲಸಿಗ ನಾಯಕರು ಅದರಲ್ಲೂ ಮಾಜಿಗಳು ಪಕ್ಷಕ್ಕೆ ಬಂದಾಗ ಸಹಜವಾಗಿ ಅವರೂ ಟಿಕೆಟ್ ಆಕಾಂಕ್ಷಿಗಳಾಗಿರುತ್ತಾರೆ. ಈ ಹಂತದಲ್ಲಿ ಗೊಂದಲಗಳಾಗುತ್ತವೆ. ಅವಕಾಶ ದೊರೆಯದೇ ಇದ್ದರೆ ವಲಸಿಗರು ಕಾಂಗ್ರೆಸ್ ನಾಯಕರ ವಿರುದ್ಧವೇ ಮುಗಿಬೀಳುತ್ತಾರೆ. ಇದು ಭಿನ್ನಮತಕ್ಕೂ ದಾರಿಯಾಗಬಹುದು ಎಂಬ ಎಚ್ಚರಿಕೆಯ ಮಾತುಗಳನ್ನು ನಾಯಕರು ಹೇಳುತ್ತಿದ್ದಾರೆ ಎನ್ನಲಾಗಿದೆ. +ವಿಶ್ವದ ಕಿರಿಯ ಸಂಗೀತ ನಿರ್ದೇಶಕರಾಗಿ ವೆಂಕಟೇಶ್ ಇತಿಹಾಸ +ಸರ್ಕಾರದ ಮಟ್ಟದಲ್ಲಿ ವಿವಿಧ ನಿಗಮ-ಮಂಡಳಿಗಳು, ಪ್ರಾಕಾರ, ಆಯೋಗ ಹಾಗೂ ಇತರ ಸಮಿತಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಿರ್ದೇಶಕರುಗಳ ನೇಮಕಾತಿ ನಡೆಯಬೇಕಿದೆ. ಬಹುತೇಕ ವಲಸಿಗರು ಇಂತಹ ಸ್ಥಾನಗಳ ಮೇಲೆ ಕಣ್ಣಿಟ್ಟುಕೊಂಡೇ ಬರುತ್ತಿದ್ದಾರೆ. ಅದರಲ್ಲೂ ಕೆಲವು ಬಲಾಢ್ಯರು ತಮ್ಮ ಹಣ ಹಾಗೂ ಪ್ರಭಾವ ಬಳಸಿ ಅವಕಾಶ ಗಿಟ್ಟಿಸುವ ದೂರಾಲೋಚನೆಯಿಂದ ಕಾಂಗ್ರೆಸ್ ಸೇರುತ್ತಿದ್ದಾರೆ. +ಪಕ್ಷ ಒಂದು ವೇಳೆ ಇಂತವರಿಗೆ ಮಣೆ ಹಾಕಿದರೆ ಸಂಕಷ್ಟ ಕಾಲದಲ್ಲೂ ಪಕ್ಷದ ಬೆನ್ನಿಗೆ ನಿಂತು ಸಂಘಟನೆ ಮಾಡಿ ಅಕಾರಕ್ಕೆ ತಂದ ನಿಷ್ಠಾವಂತ ಕಾರ್ಯಕರ್ತರಿಗೆ ಅನ್ಯಾಯವಾಗುತ್ತದೆ. ಸಹಜವಾಗಿ ಈ ಬೆಳವಣಿಗೆ ಪಕ್ಷನಿಷ್ಠರ ಉತ್ಸಾಹವನ್ನು ಕುಗ್ಗಿಸಲಿದೆ. ಮುಂದಿನ ದಿನಗಳಲ್ಲಿ ಅದು ಪಕ್ಷದ ಅವನತಿಗೂ ಅವಕಾಶ ಮಾಡಿಕೊಡಬಹುದು ಎಂಬ ವಿಶ್ಲೇಷಣೆಯನ್ನು ಕಾಂಗ್ರೆಸ್‍ನ ಚಿಂತಕರ ಛಾವಡಿ ನಡೆಸಿದೆ. +ಆದರೆ ಪಕ್ಷ ಸಂಘಟನೆ ಎಂಬ ಉಮೇದಿಗೆ ಬಿದ್ದ ವರಿಷ್ಠ ನಾಯಕರು ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ನಿಮ್ಮ ವೈಯಕ್ತಿಕ ಭಿನ್ನಾಭಿಪ್ರಾಯ ಮತ್ತು ಹಿತಾಸಕ್ತಿಗಳನ್ನು ಪಕ್ಕಕ್ಕಿರಿಸಿ ಪಕ್ಷ ಸಂಘಟನೆ ಮಾಡಿ, ವಲಸಿಗರನ್ನು ಸೇರಿಸಿಕೊಳ್ಳಿ ಎಂದು ಕಟ್ಟಪ್ಪಣೆ ಮಾಡುತ್ತಿದ್ದಾರೆ. ಇದು ಮೂಲ ಕಾಂಗ್ರೆಸಿಗರಿಗೆ ನುಂಗಲಾರದ ಬಿಸಿತುಪ್ಪವಾಗಿದೆ. \ No newline at end of file diff --git a/eesanje/url_46_341_4.txt b/eesanje/url_46_341_4.txt new file mode 100644 index 0000000000000000000000000000000000000000..51f98918107364374fd9ed75822fef124c25206f --- /dev/null +++ b/eesanje/url_46_341_4.txt @@ -0,0 +1,8 @@ +ರಾಷ್ಟ್ರಪತಿ ಭವನದ ಹೆಸರನ್ನು ಬದಲಾಹಿಸಿದ ಸಿಎಂ ಸಿದ್ದರಾಮಯ್ಯ +ಹನೂರು, ಸೆ.28- ಮಲೈ ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಇನ್ನು ಮುಂದೆ ತಪೋಭವನ ಎಂದು ಪರಿವರ್ತನೆ ಆಗಲಿದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ತಾಲ್ಲೂಕಿನ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ 37 ಜೋಡಿ ಉಚಿತ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಉಚಿತ ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕು ಎಂದರು. +ಅಲ್ಲದೆ ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿಯಾಗಿರುತ್ತದೆ ಹಲವರು ವ್ಯವಸಾಯ ಕ್ಕೆಂದು ಸಾಲ ಮಾಡಿ ಆಡಂಬರದ ಮದುವೆ ಮಾಡುವುದನ್ನು ನಿಲ್ಲಿಸಬೇಕು. ಅದೇ ಹಣದಲ್ಲಿ ಮಕ್ಕಳ ಭವಿಷ್ಯ ರೂಪಿಸುವ ಆಲೋಚನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. +ಗುಜರಿ ವ್ಯಾಪಾರಿಯ ಮನೆಯಲ್ಲಿದ್ದ 2.50 ಕೋಟಿ ಮೌಲ್ಯದ ಚಿನ್ನ-ಹಣ ಲೂಟಿ +ಚಿತ್ರಣ ಬದಲಾಗಲಿದೆ: ಮುಂದಿನ ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಲೈ ಮಹದೇಶ್ವರ ಶ್ರೀ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸ್ತೀವಿ ಎಂದು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿಗಳು ಕುಡಿಯುವ ನೀರು ಶೌಚಾಲಯ ರಸ್ತೆ ಮತ್ತು ಶುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಿ ಎಂದು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. +ಮ.ಬೆಟ್ಟವು ಮಹದೇಶ್ವರರು ತಪಸ್ಸು ಮಾಡಿದ ಶಕ್ತಿ ಕೇಂದ್ರ ಆಗಿದ್ದು ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ರಾಷ್ಟ್ರಪತಿ ಭವನವನ್ನು ಇನ್ನೂ ಮುಂದೆ ತಪೋಭವನ ಎಂದು ಬದಲಾಯಿಸಿದ್ದೇವೆ ಎಂದರು. +ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಪಟ್ಟದ ಗುರುಸ್ವಾಮಿಗಳು, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ಕಾರ್ಯಕ್ರಮದ ವಹಿಸಿ ಮಾತನಾಡಿದರು. +ಜಿಲ್ಲಾ ಉಸ್ತುವಾರಿ ಮತ್ತು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪ್ರಾಕಾರದ ಕಾರ್ಯದರ್ಶಿ ಸರಸ್ವತಿ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಗಣೇಶ್, ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ಮರಿತಿಬ್ಬೇಗೌಡ, ಮಾಜಿ ಶಾಸಕರಾದ ಕೊಳ್ಳೇಗಾಲ ನಂಜುಂಡಸ್ವಾಮಿ, ಆರ್.ನರೇಂದ್ರ, ಮ.ಬೆಟ್ಟ ಗ್ರಾ.ಪಂ. ಅಧ್ಯಕ್ಷೆ ಅರ್ಚನಾ ಇನ್ನಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_341_5.txt b/eesanje/url_46_341_5.txt new file mode 100644 index 0000000000000000000000000000000000000000..00128e0f2ac810974734c58e931203d5e0955262 --- /dev/null +++ b/eesanje/url_46_341_5.txt @@ -0,0 +1,10 @@ +ಕರ್ನಾಟಕ ಬಂದ್ ಬಳಿಕ ನಾಡಿನಾದ್ಯಂತ ಉಗ್ರ ಹೋರಾಟ : ವಾಟಾಳ್ +ಬೆಂಗಳೂರು,ಸೆ.27- ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಸದೇ ಇದ್ದರೆ ಕರ್ನಾಟಕ ಬಂದ್ ಬಳಿಕ ನಾಡಿನಾದ್ಯಂತ 15 ದಿನಗಳ ಕಾಲ ಉಗ್ರ ಹೋರಾಟ ರೂಪಿಸುವುದಾಗಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆ.29 ರಂದು ಕರ್ನಾಟಕ ಬಂದ್ ನಡೆಯಲಿದೆ. ಅದಕ್ಕೆ ಬೆಂಬಲ ಕೇಳಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಬಂದಿದ್ದೇವೆ. ಬಂದ್ ದಿನ ಚಿತ್ರೋದ್ಯಮ ಸಂಪೂರ್ಣ ಸ್ಥಗಿತಗೊಳ್ಳಬೇಕು. ಬಂದ್ನಲ್ಲಿ ನಟ-ನಟಿಯರು ಪಾಲ್ಗೊಳ್ಳಬೇಕು ಎಂದು ಆಗ್ರಹಿಸಿದರು.ಸೂಪರ್ ಸ್ಟಾರ್ ರಜನಿಕಾಂತ್ ಅವರು ಕರ್ನಾಟಕದಲ್ಲೇ ಹುಟ್ಟಿ ಇಲ್ಲಿನ ನೀರು ಕುಡಿದು ಬೆಳೆದಿದ್ದಾರೆ. ಕಾವೇರಿ ವಿಷಯವಾಗಿ ಅವರು ಕರ್ನಾಟಕದ ಪರ ಮಾತನಾಡಬೇಕು. ಇಲ್ಲವಾದರೆ ಅವರ ಚಿತ್ರಗಳು ಇಲ್ಲಿ ಪ್ರದರ್ಶನಗೊಳ್ಳಲು ಅವಕಾಶ ನೀಡುವುದಿಲ್ಲ. ರಜನಿಕಾಂತ್ ಬೆಂಗಳೂರಿಗೆ ಬರಲು ಬಿಡುವುದಿಲ್ಲ ಎಂದು ಹೇಳಿದರು. +ಸೆ. 29 ರಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಚಿತ್ರೋದ್ಯಮವನ್ನು ಬಂದ್ ಮಾಡುವುದಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. 2018 ರಲ್ಲಿ ವಿಧಾನಸಭೆಯಲ್ಲಿ ಕಟುಶಬ್ಧಗಳಲ್ಲಿ ನಿಂದಿಸಿಕೊಂಡಿದ್ದ ಜೆಡಿಎಸ್, ಬಿಜೆಪಿ ನಾಯಕರು ಇಂದು ವಿಧಾನಸೌಧದ ಮುಂದೆ ಒಂದಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಬೆರೆಸುವುದಿಲ್ಲ. ಆದರೆ ಚಳುವಳಿಗಾರರ ಬಗ್ಗೆ ಯಾರೂ ಹಗುರವಾಗಿ ಮಾತನಾಡುವುದನ್ನು ಸಹಿಸುವುದಿಲ್ಲ ಎಂದರು. +ಐಟಿ ಕಂಪನಿಗಳ ಜೊತೆ ಸೇರಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರ ಸ್ಥಾಪನೆ +ತಾವು ಈವರೆಗೂ ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿಲ್ಲ. ಆದರೆ ಕರ್ನಾಟಕ ಬಂದ್ ವಿಷಯದಲ್ಲಿ ಅವರು ಅಂತರಾತ್ಮಕವಾಗಿ ಮಾತನಾಡಿದ್ದಾರೆ. ಒಂದೇ ಬಂದ್ ಸಾಕು ಎಂದಿದ್ದಾರೆ. ನೀರು ಬಿಡಲು ಅವರು ಕಾರಣ. ಈಗ ಸರ್ವಾಧಿಕಾರಿಯಂತೆ ಮಾತನಾಡುತ್ತಿದ್ದಾರೆ. ಇದನ್ನು ನಿಂದಿಸದೇ ಇದ್ದರೆ ನಾವು ರಾಜ್ಯಾದ್ಯಂತ ಡಿ.ಕೆ.ಶಿವಕುಮಾರ್ ರಾಜಿನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್ಚರಿಕೆಯಿಂದ ಮಾತನಾಡುತ್ತಿದ್ದಾರೆ. ಈ ರೀತಿಯ ನಡವಳಿಕೆಯನ್ನು ಡಿ.ಕೆ.ಶಿವಕುಮಾರ್ ಕೂಡ ಪಾಲಿಸಬೇಕು. ಏನೇ ಆದರೂ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ. ಕೂಡಲೇ ನೀರು ನಿಲ್ಲಿಸಬೇಕು. ಇಲ್ಲವಾದರೆ ನಾವು ರಾಜ್ಯಾದ್ಯಂತ ಹೆದ್ದಾರಿ ಮತ್ತು ರೈಲು ತಡೆ, ಜೈಲ್ಬರೊ ಹೋರಾಟಗಳನ್ನು ಮುಂದಿನ 15 ದಿನದವರೆಗೂ ನಡೆಸುವುದಾಗಿ ತಿಳಿಸಿದರು. +ಆಸ್ಕರ್ ಪ್ರಶಸ್ತಿಗೆ ಪ್ರವೇಶ ಪಡೆದ ‘2018’ ಸಿನಿಮಾ +ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸಬಾರದು. ಪೊಲೀಸ್ ಬಲ ಪ್ರದರ್ಶಿಸಿ ದರ್ಪ ತೋರಿಸಿದರೆ ನಾವು ಸಹಿಸುವುದಿಲ್ಲ. ಹೋರಾಟಗಾರರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕೆಂದು ಆಗ್ರಹಿಸಿದರು.ತಮಿಳುನಾಡಿನಲ್ಲಿ ಅಲ್ಲಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಬಂದ್ ನಡೆಸಿದರೆ ಸರ್ಕಾರವೇ ಬೆಂಬಲ ಕೊಡುತ್ತದೆ. ಇಲ್ಲಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಲಾಗುತ್ತಿದೆ. ಮೇಕೆದಾಟುವಿಗಾಗಿ ಪಂಚತಾರಾ ಹೋಟೆಲ್ ಮಾದರಿಯಲ್ಲಿ ಪಾದಯಾತ್ರೆ ಮಾಡಿದವರು ಇಂದು ಮೇಕೆದಾಟು ಯೋಜನೆಯಲ್ಲಿ ಹುಡುಗಾಟ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು. +ಕಾವೇರಿ ನೀರು ಹರಿಸುತ್ತಿರುವುದರ ವಿರುದ್ಧ ವಾಟಾಳ್ ನಾಗರಾಜ್ ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದರು. \ No newline at end of file diff --git a/eesanje/url_46_341_6.txt b/eesanje/url_46_341_6.txt new file mode 100644 index 0000000000000000000000000000000000000000..4a04e554fba5b8fc109838cffaf74d04d1b9c358 --- /dev/null +++ b/eesanje/url_46_341_6.txt @@ -0,0 +1,14 @@ +ಕಾಂಗ್ರೆಸ್ ವಿರುದ್ಧ ದೇವೇಗೌಡರು ಕಿಡಿ +ಬೆಂಗಳೂರು,ಸೆ.27- ನಾವು ಎಲ್ಲೇ ಇದ್ದರೂ ನಮ್ಮ ಪಕ್ಷದ ಜಾತ್ಯತೀತ ನಿಲುವನ್ನು ಬಿಟ್ಟುಕೊಟ್ಟಿಲ್ಲ. ಅಲ್ಪಸಂಖ್ಯಾತರನ್ನು ರಕ್ಷಣೆ ಮಾಡುತ್ತಾ ಬಂದಿದ್ದೇವೆ. ಮುಂದೆಯೂ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಅಲ್ಪಸಂಖ್ಯಾತರನ್ನು ಕೈಬಿಟ್ಟಿಲ್ಲ. ಮುಂದೆಯೂ ಕೈ ಬಿಡುವುದಿಲ್ಲ. ಅವರನ್ನು ರಕ್ಷಣೆ ಮಾಡುತ್ತೇವೆ. ಪಕ್ಷದ ಜಾತ್ಯತೀತ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. +ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಒಂದು ಹಂತದ ಮಾತುಕತೆ ನಡೆದಿದ್ದು, ಇನ್ನು ಪ್ರಧಾನಿ ಅವರೊಂದಿಗೆ ಚರ್ಚೆ ಮಾಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಇನ್ನು ಚರ್ಚೆಯಾಗಿಲ್ಲ. ಎರಡೂ ಪಕ್ಷಗಳ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚೆಯಾಗಿ ಆನಂತರ ಸೀಟು ಹಂಚಿಕೆ ಮತ್ತು ಮುಂದಿನ ಮೈತ್ರಿ ಸ್ವರೂಪದ ಬಗ್ಗೆ ನಿರ್ಧಾರವಾಗಲಿದೆ ಎಂದರು. +ಕಳೆದ 60 ವರ್ಷದ ರಾಜಕೀಯ ಜೀವನದಲ್ಲಿ ಜಾತ್ಯತೀತ ನಿಲುವಿಗೆ ಬದ್ದವಾಗಿ ರಾಜಕೀಯ ಮಾಡಿದ್ದು, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಲು ಬಿಟ್ಟಿಲ್ಲ ಎಂದು ಹೇಳಿದರು. ಅವಕಾಶವಾದಿ ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಜಾತ್ಯತೀತೆ ಬಗ್ಗೆ ಪಾಠ ಹೇಳುವ ಕಾಂಗ್ರೆಸ್ನವರು ರಾಜ್ಯ ಮತ್ತು ರಾಷ್ಟ್ರದಲ್ಲಿ ಜಾತ್ಯತೀತ ಶಕ್ತಿಗಳನ್ನು ದುರ್ಬಲಗೊಳಿಸಲು ಮಾಡಿರುವ ಪ್ರಯತ್ನಗಳ ಬಗ್ಗೆ ಹತ್ತು ಹಲವು ನಿದರ್ಶನಗಳನ್ನು ನೀಡಬಲ್ಲೆ ಎಂದು ಹೇಳಿದರು. +ಟಿ-20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ನೇಪಾಳ ಆಟಗಾರರು +ಜಾತ್ಯತೀತ ನಿಲುವಿನಲ್ಲಿ ಕಿಂಚಿತ್ತೂ ರಾಜೀ ಮಾಡಿಕೊಂಡಿಲ್ಲ. ಮುಂದೆ ಮಾಡಿಕೊಳ್ಳುವುದೂ ಇಲ್ಲ. ಬಿಜೆಪಿಯೊಂದಿಗಿನ ಮೈತ್ರಿ ವಿಚಾರದ ಬಗ್ಗೆ ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಜೊತೆ ಮಾತನಾಡಿದ್ದೇನೆ. ಕದ್ದುಮುಚ್ಚಿ ಮಾತನಾಡಿಲ್ಲ. ಆ ವಿಚಾರವನ್ನು ಬಹಿರಂಗಪಡಿಸಲಾಗಿದೆ. +ಆನಂತರವೇ ಕುಮಾರಸ್ವಾಮಿಯವರು ಬಿಜೆಪಿ ನಾಯಕರೊಂದಿಗೆ ಮಾತನಾಡಿದ್ದಾರೆ ಎಂದ ಅವರು,ಬಿಜೆಪಿಯೊಂದಿಗಿನ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿಗೆ ಯಾರು ಹೊಣೆ? ಏಕೆ ಹೀಗಾಯ್ತು ಎಂದು ಪ್ರಶ್ನಿಸಿದರು. ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಆಡಳಿತ ನಡೆಸುವಾಗ 17 ಶಾಸಕರನ್ನು ಮುಂಬೈಗೆ ಕಳುಹಿಸಿ ಸರ್ಕಾರದ ಪತನಕ್ಕೆ ಕಾರಣರಾದವರು ಯಾರು? ಬಿಜೆಪಿ ಸರ್ಕಾರ ರಚನೆಗೆ ಯಾರು ಅವಕಾಶ ಮಾಡಿಕೊಟ್ಟರು ಎಂಬುದು ಚರ್ಚೆಯಾಗಲಿ. ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರೇ ನಮ್ಮನ್ನು ಒತ್ತಾಯಿಸಿದ್ದರು. ನಾವು ಬೇಡ ಎಂದು ಅವರು ಬಲವಂತ ಮಾಡಿ ಕುಮಾರಸ್ವಾಮಿಯವರನ್ನೇ ಮುಖ್ಯಮಂತ್ರಿ ಮಾಡಿದರು. ನಂತರ ಅವರೇ ಸರ್ಕಾರವನ್ನು ತೆಗೆದರು ಎಂದು ಆರೋಪಿಸಿದರು. +ನಮ್ಮ ಪಕ್ಷದ ಎಲ್ಲ ವಿಧಾನಸಭೆ, ವಿಧಾನಪರಿಷತ್ನ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಿ ಮೈತ್ರಿ ಮಾತುಕತೆ ನಡೆಸಲಾಗಿದೆ ಎಂದ ಅವರು, ಜಾತ್ಯತೀತ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಎಷ್ಟರ ಮಟ್ಟಿಗೆ ರಾಷ್ಟ್ರದಲ್ಲಿ ಉಳಿಸಿದೆ ಎಂದು ಅವರು ಪ್ರಶ್ನಿಸಿದರು. ರಾಜಕೀಯ ಪಕ್ಷದ ಮಡಿವಂತಿಕೆಯಿಂದ ಹೊರಬಂದು ನೇರ ಇಲ್ಲವೇ ಪರೋಕ್ಷವಾಗಿ ಬಿಜೆಪಿ ಸಂಬಂಧವಿಲ್ಲದೆ ಸ್ವಚ್ಛವಾಗಿದ್ದೇವೆ ಎಂಬ ಒಂದು ರಾಜಕೀಯ ಪಕ್ಷವಿದ್ದರೆ ಯಾರು ಬೇಕಾದರೂ ಪ್ರಶ್ನಿಸಬಹುದು. +ಪಶ್ಚಿ ಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಲು ಎಡಪಕ್ಷಗಳ ಕೆಲವು ಮುಖಂಡರು ಬಿಜೆಪಿ ಜೊತೆ ಕೆಲಸ ಮಾಡಿರುವುದು ಬಹಿರಂಗವಾಗಿಲ್ಲವೇ? ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಅವರು ರಾಜ್ಯಸಭೆಗೆ ಸ್ರ್ಪಧಿಸಿದ್ದಾಗ 8 ಮಂದಿ ಪಕ್ಷಾಂತರ ಮಾಡಿ ಅವರನ್ನು ಸೋಲಿಸಲಿಲ್ಲವೇ? ಆಗ ಕಾಂಗ್ರೆಸ್ನ ಜಾತ್ಯತೀತ ನಿಲುವು ಎಲ್ಲಿ ಹೋಗಿತ್ತು? ಪ್ರಾದೇಶಿಕ ಪಕ್ಷವನ್ನು ಉಳಿಸಲು ಹೋರಾಟ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು. +ಫಾರೂಕ್ ಅಬ್ದುಲ್ಲಾ ಸರ್ಕಾರವನ್ನು ತೆಗೆದವರು ಯಾರು ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ಹಿಂದೆ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಸರ್ಕಾರ ಮಾಡಿದಾಗ ಮಂಗಳೂರಿನಲ್ಲಿ ಇಬ್ಬರು ಮುಸ್ಲಿಂ ಮುಖಂಡರ ಹತ್ಯೆಯಾಗಿತ್ತು. ಅಲ್ಲಿಗೆ ಕುಮಾರಸ್ವಾಮಿ ಭೇಟಿ ನೀಡಿದ್ದರು. ಆ ಹಂತಕರಿಗೆ ಜೀವಾವ ಶಿಕ್ಷೆಯಾಯಿತು. ಹೀಗೆ ನಾವು ಎಲ್ಲೇ ಇದ್ದರೂ ಅಲ್ಪಸಂಖ್ಯಾತರನ್ನು ಕೈಬಿಟ್ಟಿಲ್ಲ ಎಂದು ಗೌಡರು ಸಮರ್ಥಿಸಿಕೊಂಡರು. +ಮೈತ್ರಿ ವಿಚಾರವನ್ನು ಸಿ.ಎ.ಇಬ್ರಾಹಿಂ ಅವರಿಂದ ಮುಚ್ಚಿಟ್ಟಿಲ್ಲ : ಹೆಚ್ಡಿಕೆ ಸ್ಪಷ್ಟನೆ +ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ಧ:ಕೇರಳದ ನಮ್ಮ ಪಕ್ಷದ ಸ್ನೇಹಿತರು ಕರ್ನಾಟಕದಲ್ಲಿ ಪಕ್ಷವನ್ನು ಉಳಿಸಿ-ಬೆಳೆಸುವುದಾದರೆ ಅವರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವೆ. ಸಂಕಷ್ಟ ಪರಿಸ್ಥಿತಿಯಲ್ಲಿ ಪಕ್ಷವನ್ನು ಉಳಿಸಿ ಬೆಳೆಸಬೇಕಿದೆ. ನಮ್ಮ ಪಕ್ಷದ ಶಾಸಕರಾದ ಕರ್ರೆಮ್ಮ ಅವರು ಪಕ್ಷ ಬಿಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಎಲ್ಲಿದೆ ನಾಗಾಲೋಟ:ರಾಜ್ಯದಲ್ಲಿ ಕಾಂಗ್ರೆಸ್ನ ನಾಗಾಲೋಟ ಎಲ್ಲಿದೆ ಎಂದು ಪ್ರಶ್ನಿಸಿದ ಗೌಡರು, ಕಾವೇರಿ ನೀರು ಓಡುತ್ತಿದೆ… ಓಡುತ್ತಿದೆ ಎಂದು ಹೇಳಿದರು. ಕಾವೇರಿ ನದಿನೀರು ನಿರ್ವಹಣಾ ಸಮಿತಿ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಾಡಿರುವ ಶಿಫಾರಸು ಖುಷಿ ತಂದಿದೆ ಎಂದು ಜಲಸಂಪನ್ಮೂಲ ಖಾತೆ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಮಿತಿಯ ಶಿಫಾರಸ್ಸನ್ನು ಸ್ವಾಗತಿಸಿದ್ದಾರೆ. ನೀರನ್ನು ಉಳಿಸಿ ರಾಜ್ಯದ ಹಿತ ಕಾಪಾಡಲು ಹೋರಾಟ ನಡೆಸಿದೆ. ಆದರೆ ಅವರಿಗೆ ತಮಿಳುನಾಡಿನ ಸ್ಟಾಲಿನ್ ಅವರು ಗೆಲ್ಲಬೇಕಿದೆ ಎಂದು ಟೀಕಿಸಿದರು. +ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಎಂ.ಟಿ.ಕೃಷ್ಣಪ್ಪ, ಮಂಜುನಾಥ್, ಟಿ.ಎ.ಶರವಣ, ಬಿ.ಎಂ.ಫಾರೂಖ್, ಮಂಜೇಗೌಡ, ವಿಧಾನಪರಿಷತ್ ಮಾಜಿ ಸದಸ್ಯರಾದ ರಮೇಶ್ ಗೌಡ, ಕೆ.ಪಿ.ಶ್ರೀಕಂಠೇಗೌಡ, ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_341_7.txt b/eesanje/url_46_341_7.txt new file mode 100644 index 0000000000000000000000000000000000000000..2e44c12105c71fab5bc638b2faa8cf0d21b373bf --- /dev/null +++ b/eesanje/url_46_341_7.txt @@ -0,0 +1,12 @@ +ಐಟಿ ಕಂಪನಿಗಳ ಜೊತೆ ಸೇರಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರ ಸ್ಥಾಪನೆ +ಬೆಂಗಳೂರು,ಸೆ.27- ಆಂತರಿಕ ಭದ್ರತೆ, ಸಂಶೋಧನೆ ಹಾಗೂ ನಾವಿನ್ಯ ಸವಾಲುಗಳನ್ನು ಎದುರಿಸಲು ಪೂರಕವಾಗಿ ಬೆಂಗಳೂರಿನಲ್ಲಿ ಸೈಬರ್ ಸ್ಪೇರ್ ಸೆಂಟರ್ ಆಫ್ ಎಕ್ಸಲೆನ್ಸಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. +ನಗರದಲ್ಲಿಂದು ಟೆಕ್ ಪ್ಯೂಶನ್ ಸನ್ ರೈಸ್ ಸಮ್ಮಿಟ್ 2023 ಅಂಗವಾಗಿ ಐಟಿ ಸಂಸ್ಥೆಗಳ ಜೊತೆ ಸಂವಾದ ನಡೆಸಿದ ಅವರು, ಆಧುನಿಕ ತಂತ್ರಜ್ಞಾನದಲ್ಲಿ ಎದುರಾಗುತ್ತಿರುವ ಸೈಬರ್ ಸವಾಲುಗಳನ್ನು ನಿಭಾಯಿಸಲು ಗೃಹ ಇಲಾಖೆ ಮತ್ತು ಮಾಹಿತಿ ತಂತ್ರಜ್ಞಾನ ಕಂಪನಿಗಳ ಸಹಭಾಗಿತ್ವದಲ್ಲಿ ಬೆಂಗಳೂರು ಸೈಬರ್ ಸ್ಪೇರ್ ಜೇಷ್ಠತಾ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದರು. +ನಮ್ಮ ಬಳಿ ಇರುವ ಜ್ಞಾನ ಹಾಗೂ ಐಟಿಬಿಟಿ ಕಂಪನಿಗಳ ತಂತ್ರಜ್ಞಾನ ಬಳಸಿಕೊಂಡು ಖಾಸಗಿ ಸಹಭಾಗಿತ್ವದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಹಾಗೂ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಈಗಾಗಲೇ ಠಾಣೆಗಳಲ್ಲಿ ಎಫ್‍ಐಆರ್ ದಾಖಲು ಸೇರಿದಂತೆ ಅನೇಕ ತಂತ್ರಜ್ಞಾನವನ್ನು ಬಳಸುತ್ತಿದ್ದೇವೆ, ಜೇಷ್ಠತಾ ಕೇಂದ್ರದಿಂದ ಮುಂದಿನ 5 ವರ್ಷಗಳಲ್ಲಿ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೂ ಅಗತ್ಯ ತರಬೇತಿ ಕೊಡಿಸುವುದಾಗಿ ಹೇಳಿದರು. +ಸಂವಾದದಲ್ಲಿ ಸುಮಾರು 50ಕ್ಕೂ ಹೆಚ್ಚು ಐಟಿಬಿಟಿ ಕಂಪೆನಿಗಳು ಭಾಗವಹಿಸಿದ್ದವು. ಎಲ್ಲರ ಸಲಹೆ, ಸೂಚನೆಗಳನ್ನು ಪಡೆಯಲಾಗಿದೆ. ಟ್ರಾಫಿಕ್ ಸಮಸ್ಯೆ, ಭದ್ರತೆ ಕುರಿತಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುವುದು. +ಆತಂಕ ಸೃಷ್ಟಿಸಿದ ಬೆಂಗಳೂರು ವಿಮಾನ ನಿಲ್ದಾಣದ ಬಳಿ ಡ್ರೋಣ್ ಹಾರಾಟ +ಸೈಬರ್ ಸಂಶೋಧನಾ ಪ್ರಯೋಗಾಲಯ ಸ್ಥಾಪನೆ, ಕಾನೂನು ಜಾರಿ ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಕೊನೆ ಹಂತಕ್ಕೆ ತಂತ್ರಜ್ಞಾನದ ಸೌಲಭ್ಯ ಕಲ್ಪಿಸುವುದು, ಜ್ಞಾನದ ವಿನಿಮಯ, ಕೌಶಲ್ಯಾಭಿವೃದ್ಧಿ, ಸಮುದಾಯದ ಸಹಭಾಗಿತ್ವ, ಸೈಬರ್ ಸುರಕ್ಷತೆಗೆ ತಾಂತ್ರಿಕ ಸಂಶೋಧನೆ, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಣೆ ಸೇರಿದಂತೆ ಅನೇಕ ಉದ್ದೇಶಗಳಿಗೆ ಈ ಕೇಂದ್ರ ನೆರವು ನೀಡಲಿದೆ ಎಂದರು. +ಖಾಸಗಿ ಕಂಪನಿಗಳು ತಮ್ಮ ಸಂಪನ್ಮೂಲ ವ್ಯಕ್ತಿಗಳನ್ನು ಇಲಾಖೆಯ ಜೊತೆ ಕೈ ಜೋಡಿಸಲು ಕಳುಹಿಸಿಕೊಡಬೇಕು, ಇದರಿಂದ ಅತ್ಯಾಧುನಿಕವಾದ ಅಪರಾಧಗಳು ಮತ್ತು ಅವುಗಳ ಬೆಳವಣಿಗೆಗಳ ಮೇಲೆ ಕಣ್ಣಿಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. +ಭಾರತದ ಆರ್ಥಿಕತೆಗೆ ಬೆಂಗಳೂರು ತಂತ್ರಜ್ಞಾನ ಕ್ಷೇತ್ರ ಶೇ.34 ರಷ್ಟು ಪಾಲು ನೀಡಿದೆ. ವಿಶ್ವದ ಅತ್ಯಂತ ವೇಗದ ಬೆಳವಣಿಗೆಯ ನಗರಗಳಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನವಿದೆ. ಇದಕ್ಕೆ ಐಟಿಬಿಟಿ ಕ್ಷೇತ್ರದ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. +ಕಾಂಗ್ರೆಸ್ ಬಂದ ಮೇಲೆ ಏನೇನೆಲ್ಲಾ ಹೋಯ್ತು ಎಂಬುದನ್ನು ಪಟ್ಟಿ ಮಾಡಿದ ಬಿಜೆಪಿ +ಭಾರತವು ವಿಶ್ವದ 3 ನೇ ಆರ್ಥಿಕ ಶಕ್ತಿಯಾಗಲು ಮುನ್ನುಗ್ಗುತ್ತಿದೆ. ಇದಕ್ಕೆ ಪೂರಕವಾಗಿ ಬೆಟರ್ ಬೆಂಗಳೂರು, ಬೆಟರ್ ಕರ್ನಾಟಕ, ಬೆಟರ್ ಇಂಡಿಯಾ ಎಂಬ ಧ್ಯೇಯದೊಂದಿಗೆ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಉದ್ಯಮಿ ಸ್ನೇಹಿಯಾಗಿದ್ದು, ವಿಶ್ವದ ಉದ್ಯಮಿಗಳನ್ನು ಆಕರ್ಷಿಸಲು ಬಂಡವಾಳ ಹೂಡಿಕೆ ಸಮಾವೇಶಗಳನ್ನು ನಡೆಸುತ್ತಿದ್ದೇವೆ. ಬೆಂಗಳೂರು ಸೇರಿದಂತೆ ಮಂಗಳೂರು, ಬೆಳಗಾಂ, ಹುಬ್ಬಳ್ಳಿ, ಧಾರವಾಡ, ಮೈಸೂರು ಕಡೆಗಳಲ್ಲಿ ಉದ್ಯಮಿಗಳನ್ನು ಹೂಡಿಕೆ ಮಾಡುವಂತೆ ಬೆಂಬಲಿಸಲಾಗುತ್ತಿದೆ ಎಂದರು. +ಭಾರತದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಅತ್ಯಂತ ಪ್ರಾಮುಖ್ಯವಾದುದು. ಮಹಿಳೆಯರನ್ನು ಸ್ವಾವಲಂಬಿಗೊಳಿಸಲು ನಮ್ಮ ಸರ್ಕಾರ ಗ್ರಾಮೀಣ ಭಾಗದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.ಗಳ ಯೋಜನೆಯನ್ನು ಜಾರಿಗೊಳಿಸಿದೆ. ರಾಜ್ಯಸರ್ಕಾರದ ಪಂಚಖಾತ್ರಿಗಳ ಮೂಲಕ ಪ್ರತಿ ಕುಟುಂಬಕ್ಕೆ ವಾರ್ಷಿಕ 24 ಸಾವಿರ ರೂ.ಗಳಿಗೂ ಅಕ ನೆರವು ದೊರೆಯುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_341_8.txt b/eesanje/url_46_341_8.txt new file mode 100644 index 0000000000000000000000000000000000000000..0a679b10238a16396849b579d945f1e57c7e710d --- /dev/null +++ b/eesanje/url_46_341_8.txt @@ -0,0 +1,7 @@ +3 ಸಾವಿರ ಕ್ಯೂಸೆಕ್ ನೀರು ಬಿಡುವ ಶಿಫಾರಸ್ಸನ್ನು ಸುಪ್ರೀಂನಲ್ಲಿ ಪ್ರಶ್ನಿಸುತ್ತೇವೆ : ಸಿಎಂ +ಚಾಮರಾಜನಗರ,ಸೆ.27- ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ನೀಡಿರುವ ಶಿಫಾರಸ್ಸನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿಯ ಆದೇಶದಿಂದಾಗಿ ತಾವು ವಕೀಲರ ಜೊತೆ ಚರ್ಚೆ ನಡೆಸಿದ್ದು, ಅದನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಬಹುದು ಎಂದು ಸಲಹೆ ನೀಡಿದ್ದಾರೆ. ಅದರಂತೆ ಮೇಲ್ಮನವಿ ಸಲ್ಲಿಸಿದ್ದೇವೆ. ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರೇ ಇಲ್ಲ ಎಂದು ಹೇಳಿದರು. +ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸೆ.29 ರಂದು ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಣೆ ನೀಡಿವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ಬಂದ್, ಪ್ರತಿಭಟನಾ ಮೆರವಣಿಗೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು. +ಇಯರ್-ಫೋನ್ ವಿಚಾರಕ್ಕೆ ಸ್ನೇಹಿತನನ್ನೆ ಕೊಂದ 9ನೇ ತರಗತಿ ವಿದ್ಯಾರ್ಥಿಗಳು +ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಈಗ ಇಲ್ಲವಾಗಿದೆ. ನಾನು ಮೊದಲ ಅವಯಲ್ಲಿ ಮುಖ್ಯಯಾದ ಬಳಿಕ ಚಾಮರಾಜನಗರಕ್ಕೆ ಭೇಟಿ ನೀಡಿದ್ದೆ. ಆ ಬಳಿಕವೂ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದೆ. ಮೌಢ್ಯ, ಮೂಢನಂಬಿಕೆ, ಕಂದಾಚಾರದ ಮೇಲೆ ನನಗೆ ನಂಬಿಕೆಯಿಲ್ಲ. ಹಾಗಾಗಿ 12 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ ಎಂದರು. +ಮಲೈಮಹದೇಶ್ವರ ದೇವಸ್ಥಾನ ಪ್ರಾಕಾರದ ಸಭೆಗಾಗಿ ತಾವಿಂದು ಇಲ್ಲಿಗೆ ಭೇಟಿ ನೀಡಿದ್ದು, ಮಹದೇಶ್ವರನ ದರ್ಶನ ಪಡೆದು, ರಾಜ್ಯದಲ್ಲಿ ಉತ್ತಮ ಮಳೆಯಾಗಲಿ, ಜನರು ಮತ್ತು ರೈತರು ಸೌಖ್ಯವಾಗಿರಲಿ ಎಂದು ಪ್ರಾರ್ಥಿಸಿದ್ದೇನೆ.ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಹೀಗಾಗಿ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. +ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಸ್ಥಳೀಯ ಶಾಸಕರು, ಜನಪ್ರತಿನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಮಹದೇಶ್ವರನ ಮುಂದೆ ಭಕ್ತಿ ಭಾವ ಪರವಶರಾಗಿ ಪೂಜೆ ಸಲ್ಲಿಸಿದ ನಂತರ ಪ್ರಾಕಾರದ ಸಭೆ ನಡೆಸಿದ್ದು, ಮಹದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳ ಕುರಿತು ಚರ್ಚೆ ನಡೆಸಲಾಗಿದೆ.ದೇವಸ್ಥಾನದ ಆಡಳಿತ ಮಂಡಳಿ ಮುಖ್ಯಮಂತ್ರಿ ಹಾಗೂ ಗಣ್ಯರಿಗೆ ಪೂರ್ಣ ಕುಂಭ ಸ್ವಾಗತ ಕೋರಿದರು. \ No newline at end of file diff --git a/eesanje/url_46_341_9.txt b/eesanje/url_46_341_9.txt new file mode 100644 index 0000000000000000000000000000000000000000..082c595a592b3cf325223616f9049b52d46abfcc --- /dev/null +++ b/eesanje/url_46_341_9.txt @@ -0,0 +1,12 @@ +ಪ್ರತಿಪಕ್ಷಗಳ ಹೋರಾಟದಲ್ಲಿ ಜನರ ಹಿತಾಸಕ್ತಿ ಇಲ್ಲ : ಸಿದ್ದರಾಮಯ್ಯ +ಮೈಸೂರು, ಸೆ.26- ಕಾವೇರಿ ವಿವಾದವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಹೋರಾಟದ ಹಿನ್ನೆಲೆಯಲ್ಲಿ ಜನ ಕಲ್ಯಾಣ ಅಥವಾ ನಾಡಿನ ಹಿತಾಸಕ್ತಿ ಉದ್ದೇಶ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ, ಬಂದ್ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ಇದೆ. ಅದರ ಹೊರತಾಗಿಯೂ ರಾಜ್ಯಸರ್ಕಾರ ಕಾವೇರಿ ವಿಷಯವಾಗಿ ಕರೆ ನೀಡಿರುವ ಬಂದ್‍ಗಳಿಗೆ ಅಡ್ಡಿಪಡಿಸುವುದಿಲ್ಲ ಎಂದರು. +ಹೋರಾಟ ಮಾಡುವುದು ಪ್ರಜಾಪ್ರಭುತ್ವದಲ್ಲಿ ಮೂಲಭೂತ ಹಕ್ಕಾಗಿದೆ. ಅದೇ ವೇಳೆ ಬೇರೆಯವರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಈ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. +ಬಿಜೆಪಿಯವರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ಮಾಡಿದ್ದಾರೆ. ಅವರನ್ನು ಚಡ್ಡಿಗಳು ಎಂದೇ ಕರೆಯುತ್ತಿದ್ದೆವು. ಪ್ರತಿಭಟನೆ ಮಾಡಲಿ, ಅದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ರಾಜಕೀಯ ಲಾಭಕ್ಕಾಗಿ ವಿವಾದವನ್ನು ದುರುಪಯೋಗಪಡಿಸಿಕೊಳ್ಳುವುದು ನಾಡಿನ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇಲ್ಲಿ ಪ್ರತಿಭಟನೆ ಮಾಡುವ ಬದಲು ಬಿಜೆಪಿಯ 25 ಮಂದಿ ಸಂಸದರು ಪ್ರಧಾನಮಂತ್ರಿಯ ಮೇಲೆ ಒತ್ತಡ ಹಾಕಿ, ಮಧ್ಯಪ್ರವೇಶ ಮಾಡುವಂತೆ ಮಾಡಲಿ ಎಂದು ಸವಾಲು ಹಾಕಿದರು. +ಕಾವೇರಿ ನದಿ ಪಾತ್ರದ ವಾಸ್ತವಾಂಶಗಳ ಅಧ್ಯಯನಕ್ಕೆ ತಜ್ಞರ ತಂಡ ಕಳುಹಿಸಬೇಕು. ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ನಾನು ಎರಡು ಬಾರಿ ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ, ದೆಹಲಿಗೆ ಹೋಗಿ ಪ್ರಧಾನಿಯವರ ಭೇಟಿಗೂ ಪ್ರಯತ್ನಿಸಿದ್ದೇನೆ. ಆದರೆ ಯಾವುದಕ್ಕೂ ಅವರಿಂದ ಸ್ಪಂದನೆ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ +ಈಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ, ಅದನ್ನು ಸ್ವಾಗತಿಸುತ್ತೇನೆ. ಆದರೆ ಅದರಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ ಎಂಬ ಆಕ್ಷೇಪ ಮಾಡಿರುವುದರ ಹಿಂದೆ ರಾಜಕಾರಣ ಅಡಗಿದೆ. ನನ್ನ ಪತ್ರಕ್ಕೆ ಪ್ರಧಾನಿಯವರು ಸ್ಪಂದಿಸಿಲ್ಲ. ಈಗ ದೇವೇಗೌಡರು ಬಿಜೆಪಿಯ ಜೊತೆ ಹೊಸ ಸ್ನೇಹ ಮಾಡಿಕೊಂಡಿದ್ದಾರೆ. ಅದಕ್ಕಾದರೂ ಕೇಂದ್ರಸರ್ಕಾರ ಸ್ಪಂದಿಸಬಹುದೇನೋ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದರು. +ಕಾಂಗ್ರೆಸ್ ಡಿಎಂಕೆಯ ಬಿ ಟೀಂ ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಡಿಎಂಕೆ ತಮಿಳುನಾಡಿನ ಪಕ್ಷ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಮಾತನಾಡಬಾರದು. ಮೊನ್ನೆಯವರೆಗೂ ಬಿಜೆಪಿ ತಮಿಳುನಾಡಿನ ಎಐಡಿಎಂಕೆ ಪಕ್ಷದ ಜೊತೆ ಮೈತ್ರಿಯಲ್ಲಿತ್ತಲ್ಲಾ ಅದಕ್ಕೆ ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು. +ರಾಜ್ಯಸರ್ಕಾರ ನಾಡಿನ ಮತ್ತು ರೈತರ ಹಿತಾಸಕ್ತಿ ವಿಷಯದಲ್ಲಿ ಹಿಂದೆ ಬಿದ್ದಿಲ್ಲ, ಹಿಂದೆ ಬೀಳುವುದೂ ಇಲ್ಲ. ನಮಗೆ ಅಧಿಕಾರ ಮುಖ್ಯ ಅಲ್ಲ, ರಾಜ್ಯದ ಜನರ ಹಿತ ಮುಖ್ಯ ಎಂಬ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು. +ಕಾವೇರಿ ನದಿ ವಿವಾದದಲ್ಲಿ ನ್ಯಾಯಾಧಿಕರಣ ಸಾಮಾನ್ಯ ವರ್ಷದಲ್ಲಿ 172.25 ಟಿಎಂಸಿ ನೀರು ಬಿಡಬೇಕು ಎಂದು ತೀರ್ಪು ನೀಡಿದೆ. ಆದರೆ ಸಂಕಷ್ಟ ಸಂದರ್ಭದಲ್ಲಿ ಪಾಲಿಸಬೇಕಾದ ಸೂತ್ರ ರಚನೆಯಾಗಿಲ್ಲ. ಇದು ಎರಡೂ ರಾಜ್ಯಗಳಿಗೂ ಅನ್ವಯವಾಗುತ್ತಿದೆ. ಹೀಗಾಗಿ ಸಂಕಷ್ಟ ಸೂತ್ರ ತುರ್ತು ಅಗತ್ಯವಿದೆ. ನದಿ ನೀರಿನ ಹಂಚಿಕೆ ವಿವಾದಕ್ಕೆ ಮತ್ತೊಂದು ಪರಿಹಾರ ಎಂದರೆ ಮೇಕೆದಾಟು ಸಮತೋಲಿತ ಅಣೆಕಟ್ಟು ನಿರ್ಮಾಣವಾಗಿದೆ. ಇದರಿಂದ 67 ಟಿಎಂಸಿ ಮಳೆ ನೀರನ್ನು ಸಂಗ್ರಹಿಸಿ ಸಂಕಷ್ಟ ಸಂದರ್ಭದಲ್ಲಿ ಹಂಚಿಕೊಳ್ಳಲು ಅನುಕೂಲವಾಗುತ್ತದೆ ಎಂದರು. +ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಪೋಸ್ಟ್ ಮಾಡಿದ ಸುದೀಪ್ +ಕಾವೇರಿ ಪ್ರಕರಣದಲ್ಲಿ ರಾಜ್ಯಸರ್ಕಾರ ಸಮರ್ಥವಾದ ವಾದ ಮಂಡಿಸಿದೆ. ದೇವೇಗೌಡರ ಕಾಲದಿಂದಲೂ ಅಸ್ತಿತ್ವದಲ್ಲಿರುವ ಕಾನೂನು ತಂಡವೇ ನ್ಯಾಯಾಲಯಗಳಿಗೆ ವಾಸ್ತವಾಂಶವನ್ನು ಮನವರಿಕೆ ಮಾಡಿಕೊಡುತ್ತಿವೆ. ನೀರು ನಿಯಂತ್ರಣಾ ಸಮಿತಿ ಮುಂದೆ ಬಲವಾದ ವಾದ ಮಂಡಿಸಿದ್ದರೂ ಕೂಡ 5 ಸಾವಿರ ಕ್ಯೂಸೆಕ್ ನೀರು ಬಿಡಬೇಕು ಎಂಬ ತೀರ್ಪು ನೀಡಲಾಗಿದೆ. ಇಂದು ಮತ್ತೆ ನಿಯಂತ್ರಣಾ ಸಮಿತಿಯ ಸಭೆ ನಡೆಯುತ್ತಿದ್ದು, ಅಲ್ಲಿಯೂ ಪ್ರಬಲವಾದ ವಾದ ಮಂಡಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_342_1.txt b/eesanje/url_46_342_1.txt new file mode 100644 index 0000000000000000000000000000000000000000..53502f99d3d18842c20e1f8e942b16199f64e144 --- /dev/null +++ b/eesanje/url_46_342_1.txt @@ -0,0 +1,8 @@ +ಶಾಕಿಂಗ್ : ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ +ಬೆಂಗಳೂರು, ಸೆ.26- ರೈತ ಹಾಗೂ ಕನ್ನಡ ಪರ ಸಂಘಟನೆಗಳ ತೀವ್ರ ಪ್ರತಿಭಟನೆ ನಡುವೆಯೂ ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಮತ್ತೆ ಕರ್ನಾಟಕಕ್ಕೆ ವ್ಯತಿರಿಕ್ತವಾದ ತೀರ್ಪು ಹೊರ ಬಿದ್ದಿದೆ. 150 ವರ್ಷಗಳ ಹಳೆಯದಾದ ಅಂತಾರಾಜ್ಯ ವಿವಾದದಲ್ಲಿ ನ್ಯಾಯಾಧೀಕರಣದ ತೀರ್ಪಿನ ಬಳಿಕ, ನೀರಿನ ಹಂಚಿಕೆಯಲ್ಲಿ ಆದ್ಯ ಪಾತ್ರ ವಹಿಸುತ್ತಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಮಹತ್ವದ ಸಭೆ ನಡೆಸಿದೆ. ಅಲ್ಲಿ ತಮಿಳುನಾಡು, ಕರ್ನಾಟಕ ಸೇರಿದಂತೆ ಕಾವೇರಿ ನದಿ ಪಾತ್ರದ ನೀರಿನಲ್ಲಿ ಹಕ್ಕು ಸಾಮ್ಯತೆ ಹೊಂದಿರುವ ಕೇರಳ, ಪಾಂಡಿಚೇರಿ ರಾಜ್ಯಗಳ ನೀರಾವರಿ ಇಲಾಖೆ ಅಧಿಕಾರಿಗಳು, ವಕೀಲರು ಭಾಗವಹಿಸಿದ್ದರು. +ಕರ್ನಾಟಕ ತನ್ನಲ್ಲಿ ನೀರಿಲ್ಲ. ಹಾಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಕೆಆರ್ಎಸ್, ಕಬಿನಿ, ಹಾರಂಗಿ, ಹೇಮಾವತಿ ಸೇರಿ ನಾಲ್ಕು ಜಲಾಶಯಗಳಲ್ಲಿ 53.04 ಟಿಎಂಸಿಯಷ್ಟು ಮಾತ್ರ ನೀರು ಸಂಗ್ರಹವಿದೆ. ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಹಲವಾರು ನಗರ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಈಗಾಗಲೇ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ರಾಜ್ಯಕ್ಕೆ 106 ಟಿಎಂಸಿ ನೀರಿನ ಅಗತ್ಯ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಕರ್ನಾಟಕ ವಾದಿಸಿತ್ತು. +ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್ +ರಾಜ್ಯದಲ್ಲಿ 195 ತಾಲ್ಲೂಕುಗಳು ಬರಪೀಡಿತವಾಗಿವೆ. ಮುಂದೆ ಮಳೆಯಾಗುವ ನಿರೀಕ್ಷೆಗಳು ಇಲ್ಲ. ಸಂಕಷ್ಟ ಸಂದರ್ಭದಲ್ಲಿ ಪಾಲಿಸಬೇಕಾದ ಸೂತ್ರ ರಚನೆಯಾಗಿಲ್ಲ. ಹಾಗಾಗಿ ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದಿಸಿತ್ತು. ಇದಕ್ಕೆ ಪ್ರತಿಯಾಗಿ ತಮಿಳುನಾಡು ಸರ್ಕಾರ ತನ್ನ ವಾದ ಮಂಡಿಸಿದ್ದಲ್ಲದೆ. ಇತ್ತಿಚೆಗೆ ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗಿದೆ. +ಹೀಗಾಗಿ ತಮಿಳುನಾಡಿಗೆ 12500 ಕ್ಯೂಸೆಕ್ ನೀರು ಹರಿಸಬೇಕು ಎಂದಿತ್ತು. ಕರ್ನಾಟಕ ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್ನ ಆದೇಶಗಳನ್ನು ಪಾಲನೇ ಮಾಡುತ್ತಿಲ್ಲ. ನ್ಯಾಯಾಧಿಕರಣದ ತೀರ್ಪಿನ ಅನುಸಾರ ನೀರು ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ಷೇಪಿಸಿತ್ತು. +ಫೆನ್ಸಿಂಗ್‍ನಲ್ಲಿ ಭಾರತದ ಚೊಚ್ಚಲ ಏಷ್ಯನ್ ಗೇಮ್ಸ್ ಪದಕದ ಭರವಸೆ +ವಾದ, ಪ್ರತಿವಾದಗಳನ್ನು ಆಲಿಸಿದ ನೀರು ನಿರ್ವಹಣಾ ಮಂಡಳಿ ಸೆಪ್ಟಂಬರ್ 28ರಿಂದ ಅಕ್ಟೋಬರ್ 15ರವರೆಗೆ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಶಿಫಾರಸ್ಸು ನೀಡಿದೆ. ಮಂಗಳವಾರ ಬೆಳಗ್ಗೆ 8ಗಂಟೆಯಿಂದ ಆರಂಭಗೊಳ್ಳುವ ಲೆಕ್ಕದಲ್ಲಿ ತಮಿಳುನಾಡಿನ ಬಿಳಿಗುಂಡ್ಲು ಜಲಾಶಯಕ್ಕೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಯಬೇಕು ಎಂದು ಸೂಚಿಸಲಾಗಿದೆ \ No newline at end of file diff --git a/eesanje/url_46_342_10.txt b/eesanje/url_46_342_10.txt new file mode 100644 index 0000000000000000000000000000000000000000..f944965b41f42f4b49977b4517a187fa42c6e376 --- /dev/null +++ b/eesanje/url_46_342_10.txt @@ -0,0 +1,14 @@ + ಸದ್ಯದ ಚಿತ್ರ ತೋರಿಸಿ ಕಣ್ಣೀರಿಟ್ಟ ದೇವೇಗೌಡರು +ಬೆಂಗಳೂರು, ಸೆ.25- ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು ಪರಿಹಾರಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿನ ವಾಸ್ತವಾಂಶ ಗಳನ್ನು ಅರಿಯಲು ತಜ್ಞರ ಸಮಿತಿ ಕಳುಹಿಸುವ ಬಗ್ಗೆ ಕೇಂದ್ರ ಜಲಶಕ್ತಿ ಇಲಾಖೆಯಿಂದ ಸುಪ್ರಿಂಕೋರ್ಟ್‍ಗೆ ಅರ್ಜಿ ಸಲ್ಲಿಸಿ ಮನವಿ ಮಾಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ಸಂಕಷ್ಟಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ವಾಸ್ತವಾಂಶಗಳನ್ನು ಆಧರಿಸಿದ 5 ಪುಟಗಳ ಪತ್ರವನ್ನು ಬರೆದಿದ್ದು, ಅದರಲ್ಲಿ ಸಂಕಷ್ಟ ಪರಿಹಾರಕ್ಕೆ ಸಲಹೆಗಳನ್ನು ನೀಡಿ, ಪರಿಗಣಿಸುವಂತೆ ಮನವಿ ಮಾಡಿದ್ದಾರೆ. +ಕೆಆರ್‍ಎಸ್ ಜಲಾಶಯದಲ್ಲಿ ನೀರಿಲ್ಲದಿರುವ ಫೋಟೋವನ್ನು ಪ್ರದ ರ್ಶಿಸಿ ಭಾವುಕರಾಗಿ ಮಾತನಾಡಿದ ದೇವೇಗೌಡರು, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಮುಂದಿನ ಬೇಸಿಗೆಯವರೆಗೆ ಕುಡಿಯುವ ನೀರು ಮತ್ತು ಬೆಳೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ಆಧರಿಸಿ ಸಂಕಷ್ಟ ಸೂತ್ರ ರೂಪಿಸಬೇಕು. ಇದಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯವನ್ನು ಹೊರತುಪಡಿಸಿದ ಐವರು ಪರಿಣಿತರ ತಂಡವನ್ನು ಉಭಯ ರಾಜ್ಯಗಳಿಗೆ ಕಳುಹಿಸಿ ವಾಸ್ತವಾಂಶದ ವರದಿ ಪಡೆದು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು. ಈಗ ಆಗಿರುವಂತೆ ಮುಂದೆ ತೊಂದರೆ ಉಂಟಾಗದಂತೆ ಪರಿಹಾರ ರೂಪಿಸಬೇಕು ಎಂದು ಹೇಳಿದರು. +ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್ +9 ಅಂಶಗಳ ಸಲಹೆಗಳನ್ನು ಪ್ರಧಾನಿಯವರಿಗೆ ಪತ್ರದಲ್ಲಿ ನೀಡಲಾಗಿದೆ. ತಜ್ಞರ ಸಮಿತಿ ನೀಡಿರುವ ವರದಿಯನ್ನು ಆಧಾರಿಸಿ ಸಂಕಷ್ಟ ಸೂತ್ರವನ್ನು ರೂಪಿಸಬೇಕು ಇದು ಮಧ್ಯಂತರ ಪರಿಹಾರವಾಗಲಿದೆ ಎಂದು ಹೇಳಿದರು. ಎಲ್ಲಾ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ, ಅಗತ್ಯ ಇರುವ ನೀರಿನ ಪ್ರಮಾಣ ಸೇರಿದಂತೆ ವಾಸ್ತವ ಸಂಗತಿಗಳನ್ನು ಸ್ವತಂತ್ರವಾದ ಬಾಹ್ಯ ಏಜೆನ್ಸಿ ನೇಮಿಸುವ ಮೂಲಕ ಕೇಂದ್ರ ಸರ್ಕಾರ ವರದಿ ಪಡೆಯಬೇಕು. ಆ ವರದಿ ಆಧರಿಸಿ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಕ್ತ ನಿರ್ದೇಶನ ನೀಡಬೇಕು. +15 ದಿನಗಳಿಗೊಮ್ಮೆ ನಿರ್ವಹಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ಜಲಾನಯನ ಭಾಗದ ಜಲಾಶಯಗಳಿಗೆ ಭೇಟಿ ನೀಡಿ ವಾಸ್ತವ ಸಂಗತಿಗಳನ್ನು ಆಧರಿಸಿ ನಿರ್ಣಯ ಕೈಗೊಳ್ಳಬೇಕು. ಜಲಶಕ್ತಿ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದರು. +ಕಾವೇರಿ ವಿಷಯದಲ್ಲಿ ಜನರು ಸಂಕಷ್ಟಕ್ಕೀಡಾಗಿರುವ ಬಗ್ಗೆ ಕುಮಾರಸ್ವಾಮಿಯವರು ಮಾಹಿತಿ ಸಂಗ್ರಹಿಸಿದ್ದಾರೆ. ಅದರ ಮಾಹಿತಿಯನ್ನು ಪ್ರಧಾನಿಗೆ ತಲುಪಿಸಿದ್ದೇವೆ. ತಮಿಳುನಾಡಿನ ಸಹೋದರರು ಕರ್ನಾಟಕದಲ್ಲಿ ನೀರಿಲ್ಲದಿರುವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಅವರು ಬದುಕಬೇಕು ನಮ್ಮನ್ನು ಬದುಕಿಸಬೇಕು ಎಂದರು. +ಉಭಯ ರಾಷ್ಟ್ರದಲ್ಲಿರುವ ವಾಸ್ತವ ಸ್ಥಿತಿಗತಿ ಅರಿಯಲು ತಜ್ಞರ ತಂಡವನ್ನು ಕಳುಹಿಸಲು ಕೋರಿ ರಾಜ್ಯಸಭೆಯಲ್ಲಿ ಮನವಿ ಮಾಡಿದ್ದೆ. ರಾಜ್ಯಸಭೆಯ ಅಧ್ಯಕ್ಷರು ಮನವಿಯನ್ನು ತಳ್ಳಿಹಾಕಿದರು. ನಾಳಿನ ಬಂದ್ ವಿಚಾರದಲ್ಲಿ ಯಾರ್ಯಾರು ಏನೇನು ಮಾತನಾಡುತ್ತಾರೆ ಎಂಬ ಬಗ್ಗೆ ನಾನು ಚರ್ಚಿಸುವುದಿಲ್ಲ ಎಂದರು. +ಕಳೆದ 60 ವರ್ಷದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳ ನಿಲುವನ್ನು ನೋಡಿದ್ದೇನೆ. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನು ಬಳಸಿಕೊಂಡಿಲ್ಲ. 2 ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ನಾಡಿನ ಸಂಕಷ್ಟ ಪರಿಹಾರಕ್ಕಾಗಿ ಹೋರಾಟ ಮಾಡಿದ್ದೇನೆ. ತಮಿಳುನಾಡಿನ 40 ಸಂಸದರು ಒಗ್ಗಟ್ಟಾಗಿ ಹೋರಾಟ ಮಾಡುತ್ತಾರೆ. ನಮ್ಮಲ್ಲಿ 28 ಸಂಸದರು ಇದ್ದರೂ ಮೂಲೆಗುಂಪುಗಳಾಗುತ್ತಾರೆ ಒಗ್ಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ಮನಮೋಹನ್‍ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಡುಗುತ್ತಿದ್ದ ಕೈಯಲ್ಲಿ ಒಂದು ಲೋಟ ಹಿಡಿದು ಕಾವೇರಿ ವಿಚಾರ ಪ್ರಸ್ತಾಪವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದೆ. ಆಗ ರಾಜ್ಯ ಪ್ರತಿನಿಧಿಸುವ ನಾಲ್ವರು ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವಿರಪ್ಪ ಮೋಯ್ಲಿ, ಎಸ್.ಎಂ ಕೃಷ್ಣ. ಕೆ.ಎಚ್. ಮುನಿಯಪ್ಪ ಅವರು ಯಾರು ಕೂಡ ಮಾತನಾಡಲಿಲ್ಲ. ಆಗಿನ ಸಂಸದರಾಗಿದ್ದ ಅನಂತ್‍ಕುಮಾರ್ ಅವರ ಸಹಕಾರವನ್ನು ಕೋರಿದ್ದೆ. ಅವರು ಪಕ್ಷದ ತೀರ್ಮಾನ ಪಡೆದು ನಾಳೆ ಹೇಳುವುದಾಗಿ ಹೇಳಿದ್ದರು. ಆದರೆ ಮರುದಿನ ಬರಲೇ ಇಲ್ಲ ಸ್ಮರಿಸಿದರು. ಅಧಿಕಾರಕ್ಕಾಗಿ ನಮ್ಮ ಪಕ್ಷ ಹೋರಾಡುತ್ತಿಲ್ಲ. ಸ್ವಾಭಿಮಾನದಿಂದ ಜನರ ಹಿತ ಕಾಪಾಡಲು ಹೋರಾಡುತ್ತಿದೆ ಎಂದು ಹೇಳಿದರು. +ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿ ನಾಯಕರ ಕಾಲಿಗೆ ಬಿದ್ದಿದ್ದಾರೆ : ಪ್ರಿಯಾಂಕ್ ಖರ್ಗೆ +ಬಂದ್‍ಗೆ ಬೆಂಬಲ:ನಾಳೆ ನೀಡಿರುವ ಬೆಂಗಳೂರು ಬಂದ್‍ಗೆ ಕುಮಾರಸ್ವಾಮಿ ಅವರು ಬೆಂಬಲ ಘೋಷಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕೆಂದು ಗೌಡರು ಸಲಹೆ ಮಾಡಿದರು.ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ವಿಚಾರವನ್ನು ಇಂದು ಪ್ರಸ್ತಾಪಿಸುವುದಿಲ್ಲ. ಮೈತ್ರಿ ಕುರಿತಂತೆ ರಾಜಕೀಯಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರ ಬುಧವಾರ ತಿಳಿಸುವುದಾಗಿ ಹೇಳಿದರು. +ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮರಾಸ್ವಾಮಿ, ಮಾಜಿ ಸಂಸದ ಕುಪೇಂದ್ರರೆಡ್ಡಿ, ಬಿಎಂ ಪಾರುಕ್, ತಿಪ್ಪೆಸ್ವಾಮಿ, ಮಾಜಿ ಸದಸ್ಯ ರಮೇಶ್ ಗೌಡ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಉಪಸ್ಥಿತರಿದ್ದರು. \ No newline at end of file diff --git a/eesanje/url_46_342_11.txt b/eesanje/url_46_342_11.txt new file mode 100644 index 0000000000000000000000000000000000000000..0ce83ed3a1d3f69ac74f56a176fcf363f8a8fb32 --- /dev/null +++ b/eesanje/url_46_342_11.txt @@ -0,0 +1,6 @@ +ಪ್ರತಿಭಟನೆ ವೇಳೆ ಶಾಂತಿ ಕದಡಿದರೆ ಹುಷಾರ್ : ಸಿಎಂ ಎಚ್ಚರಿಕೆ +ಬೆಂಗಳೂರು, ಸೆ.25- ಕಾವೇರಿ ನದಿ ನೀರಿನ ವಿಚಾರವಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬೆಂಗಳೂರು ಬಂದ್ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಆಸ್ತಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿಯವರು ಬಂದ್‍ಗೆ ಸರ್ಕಾರ ಅಡ್ಡಿಪಡಿಸುವುದಿಲ್ಲ. +ಆದರೆ ಸಾರ್ವಜನಿಕ ಆಸ್ತಿ, ನೆಮ್ಮದಿಗೆ ಭಂಗ ಬರಬಾರದು. ಹೀಗಾಗಿ ಅಗತ್ಯ ಇರುವ ಕಡೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ತಾಕೀತು ನೀಡಿದ್ದಾರೆ. ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಕಾವೇರಿ ವಿಷಯದಲ್ಲಿ ಸರ್ಕಾರ ಜನಪರವಾದ ನಿಲುವನ್ನು ಹೊಂದಿದೆ. +ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ +ಹೀಗಾಗಿ ಬಂದ್ ಮಾಡಬೇಡಿ ಎಂದು ಮನವಿ ಮಾಡಿದೆ. ಅದರ ಹೊರತಾಗಿಯೂ ಕನ್ನಡ ಸಂಘಟನೆಗಳು ಬಂದ್ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಅಗತ್ಯವಿರುವ ಕಡೆ ವ್ಯಾಪಕ ಬಂದೋಬಸ್ತ್ ಆಯೋಜನೆ ಮಾಡಿದೆ ಎಂದರು. +ಬಂದ್ ಮಾಡುವವರು ಸಾರ್ವಜನಿಕ ಆಸ್ತಿಗಳಿಗೆ ತೊಂದರೆ ಮಾಡಬಾರದು, ಕಾನೂನನ್ನು ಕೈಗೆತ್ತಿಕೊಳ್ಳಬಾರದು, ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು, ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. \ No newline at end of file diff --git a/eesanje/url_46_342_12.txt b/eesanje/url_46_342_12.txt new file mode 100644 index 0000000000000000000000000000000000000000..120469c6849b02af79077a9da1df5c57ce3dbdb1 --- /dev/null +++ b/eesanje/url_46_342_12.txt @@ -0,0 +1,9 @@ +ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ, ಸ್ಥಳದಲ್ಲೇ ಪರಿಹಾರ +ಬೆಂಗಳೂರು,ಸೆ.25- ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ಸದಾಶಯದೊಂದಿಗೆ ಇಂದು ಜಿಲ್ಲಾಮಟ್ಟದಲ್ಲಿ ಜನತಾದರ್ಶನ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲೆಯಾದ್ಯಂತ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಎಸ್ಪಿಗಳ ಸಮ್ಮುಖದಲ್ಲಿ ಜನತಾದರ್ಶನ ನಡೆಯಿತು. +ತಾಂತ್ರಿಕ ಹಾಗೂ ಕಾನೂನಾತ್ಮಕ ಅಡಚಣೆಗಳಿಲ್ಲದ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಗಿದೆ. ಗಂಭೀರ ಸ್ವರೂಪದ ಅಡಚಣೆಗಳಿರುವ ಅರ್ಜಿಗಳನ್ನು ಸ್ವೀಕರಿಸಿ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ (ಐಪಿಜಿಆರ್‍ಎಸ್) ತಂತ್ರಾಂಶದಲ್ಲಿ ದಾಖಲಿಸಲಾಗಿದೆ. +ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿ ನಾಯಕರ ಕಾಲಿಗೆ ಬಿದ್ದಿದ್ದಾರೆ : ಪ್ರಿಯಾಂಕ್ ಖರ್ಗೆ +ಸದರಿ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಕಾಲಮಿತಿಯಲ್ಲಿ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆನೆಕಲ್ ತಾಲೂಕಿನ ಹೊಸ ಮಾಧ್ಯಮಿಕ ಪಾಠಶಾಲೆ ಆಟದ ಮೈದಾನದಲ್ಲಿ ನಡೆಯುವ ಜನತಾದರ್ಶನದಲ್ಲಿ ಭಾಗವಹಿಸಿದ್ದರು. ಉಳಿದಂತೆ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆದ ಜನತಾದರ್ಶನದಲ್ಲಿ ಭಾಗವಹಿಸಿದ್ದರು. +ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಣ್ಣಪುಟ್ಟ ಸಮಸ್ಯೆಗಳಿಗೂ ಪ್ರತಿದಿನ ಸಾವಿರಾರು ಸಾರ್ವಜನಿಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರುಗಳ ಬಳಿಗೆ ಅರ್ಜಿ ನೀಡಲು ಬರುವುದು ಸಾಮಾನ್ಯವಾಗಿದೆ. ದೂರದೂರುಗಳಿಂದಲೂ ಬೆಂಗಳೂರಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರ ಕಷ್ಟಗಳಿಗೆ ಸ್ಥಳೀಯವಾಗಿಯೇ ಸ್ಪಂದಿಸಲು ಜನತಾದರ್ಶನ ಆಯೋಜಿಸಲಾಗಿತ್ತು. +ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್ +ಈ ಮೊದಲು ಮೊದಲ ಅವಧಿಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು ಖುದ್ದಾಗಿ ತಾವೇ ಗೃಹಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸುತ್ತಿದ್ದರು. ಅದರಲ್ಲಿ ಸಾವಿರಾರು ಮಂದಿ ಭಾಗವಹಿಸುತ್ತಿದ್ದರು. ಎರಡನೇ ಹಂತದಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಮತ್ತೆ ಜನತಾದರ್ಶನ ನಡೆಸಲಿದ್ದಾರೆ ಎಂಬ ಚರ್ಚೆಗಳಿದ್ದವು. ಆದರೆ ಅಧಿಕಾರ ವಿಕೇಂದ್ರಿಕರಣದ ಮಾದರಿಯಲ್ಲೇ ಜನತಾದರ್ಶನವನ್ನು ಸ್ಥಳೀಯ ಮಟ್ಟಕ್ಕೆ ವಿಕೇಂದ್ರಿಕರಿಸಲಾಗಿದೆ. +ಮೊದಲ ಹಂತದಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ನಡೆದರೆ ನಂತರ ಜಿಲ್ಲಾಧಿಕಾರಿಗಳು ಪ್ರತಿದಿನ 15 ದಿನಕ್ಕೆ ತಾಲೂಕು ಮಟ್ಟದಲ್ಲಿ ಜನತಾದರ್ಶನ ನಡೆಸಲು ಸೂಚಿಸಲಾಗಿದೆ. \ No newline at end of file diff --git a/eesanje/url_46_342_2.txt b/eesanje/url_46_342_2.txt new file mode 100644 index 0000000000000000000000000000000000000000..265b004013c150146f119e7c5bbbbd5881e5a66d --- /dev/null +++ b/eesanje/url_46_342_2.txt @@ -0,0 +1,6 @@ +ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ +ಬೆಂಗಳೂರು, ಸೆ.26- ನಮ್ಮ ನೋವು ಅರ್ಥ ಮಾಡಿಕೊಂಡು ನಮ್ಮ ಪಕ್ಕದ ರಾಜ್ಯದ ಅಣ್ಣ ತಮ್ಮಂದಿರು ಸ್ವಲ್ಪವಾದರೂ ಬದಲಾವಣೆ ಮಾಡಿಕೊಳ್ಳಿ ಎಂಬ ಸಂದೇಶ ಕೊಡಲು ಬೆಂಗಳೂರು ಬಂದ್ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನೋವನ್ನು ತಿಳಿಸಲು ನಮ್ಮ ಜನರು ಬಂದ್ ಮಾಡಿದ್ದಾರೆ. ಇದನ್ನು ಪಕ್ಕದ ರಾಜ್ಯದವರೂ ಅರ್ಥ ಮಾಡಿಕೊಳ್ಳಬೇಕು ಎಂದರು. +ಶಾಂತಿಯುತವಾಗಿ ಬಂದ್ ಮಾಡಬೇಕು. ಯಾವುದೇ ಸಂಘರ್ಷ ಮಾಡಬಾರದು ಹಾಗೂ ಯಾವುದೇ ಆಸ್ತಿ- ಪಾಸ್ತಿಗೆ ಹಾನಿ ಮಾಡಬಾರದು ಎಂದು ಅವರು ಹೇಳಿದ್ದಾರೆ. ಬಂದ್ ಶಾಂತಿಯುತವಾಗಿ ನಡೆಯಲಿ ಎಂಬ ಉದ್ದೇಶದಿಂದ ಸರ್ಕಾರ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿರುತ್ತದೆ ಎಂದು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. +ನಮ್ಮ ಮನಸಿನ ನೋವು ಶಾಂತಿಯುತವಾಗಿ ಮಾಡಿ ನಮ್ಮ ಪಕ್ಕದ ರಾಜ್ಯಕ್ಕೆ ಸಂದೇಶ ಕಳುಹಿಸಬೇಕೇ ಹೊರತು ಮುತ್ತಿಗೆ ಹಾಕುವುದು ಮೊದಲಾದ ಅಹಿತಕರ ಘಟನೆಗಳನ್ನು ಮಾಡಬಾರದು. ತಮಿಳುನಾಡು ರೈತರು ಸಹ ನಮ್ಮ ನೋವು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ. +ಜಮ್ಮುವಿನಲ್ಲಿ ಶಂಕಿತ ಉಗ್ರರ ಮನೆ ಮೇಲೆ ದಾಳಿ +ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಬೆಂಬಲ ಕೊಟ್ಟಿದ್ದಾರೆ. ಪ್ರತಿಭಟನೆ ಮಾಡುತ್ತಿರುವ ನಮ್ಮ ರಾಜ್ಯದ ಜನರ ನೋವು ನಮ್ಮ ಪಕ್ಕದ ರಾಜ್ಯದ ಅಣ್ಣ ತಮ್ಮಂದಿರಿಗೆ ಅರ್ಥ ಆಗಬೇಕು. ನಮ್ಮ ಪಕ್ಕದ ರಾಜ್ಯದ ರಾಜಕೀಯ ಮುಖಂಡರು ಯಾವ ನಿಲುವು ತೆಗೆದುಕೊಂಡಿದ್ದಾರೆ ಎಂಬುದನ್ನು ಗಮನಿಸಬೇಕು. \ No newline at end of file diff --git a/eesanje/url_46_342_3.txt b/eesanje/url_46_342_3.txt new file mode 100644 index 0000000000000000000000000000000000000000..8cb2831c62d276c430f5d206c00d6784f5d269cc --- /dev/null +++ b/eesanje/url_46_342_3.txt @@ -0,0 +1,5 @@ +ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರ ಪ್ರತಿಭಟನೆ ಹತ್ತಿಕ್ಕುತ್ತಿದೆ : ಕುರುಬೂರು ಶಾಂತಕುಮಾರ್ +ಬೆಂಗಳೂರು, ಸೆ.26- ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರತಿಭಟನೆಯನ್ನು ಹತ್ತಿಕ್ಕುವ ಯತ್ನ ನಡೆಸಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪಿಸಿದ್ದಾರೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಕಾನೂನು ಹೋರಾಟದಲ್ಲಿ ಹಿನ್ನಡೆ ಅನುಭವಿಸಿದೆ. ಈ ವೈಫಲ್ಯಗಳನ್ನು ಮರೆಮಾಚಿಕೊಳ್ಳಲು ಪ್ರತಿಭಟನೆಯನ್ನು ತಡೆಯಲು ನಾನಾ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸುತ್ತಿದೆ ಎಂದು ಕಿಡಿಕಾರಿದರು. +ಬಂದ್ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ಸೆ.23 ಕ್ಕೆ ನಾವು ಬಂದ್ ಘೋಷಿಸಿದ್ದೆವು. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದು ವಾಟಾಳ್ ನಾಗರಾಜ್ ಮತ್ತು ಅವರ ಸಂಗಡಿಗರು ಸ್ಪಷ್ಟಪಡಿಸಿದ್ದರು. ಬೆಂಗಳೂರು ಬಂದ್‍ಗೆ ಬೆಂಬಲ ನೀಡುವ ಕುರಿತಂತೆ ಸೆ. 25 ರಂದು ನಡೆಯುವ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದೆವು. ನಾವೂ ಕೂಡ ಆ ಸಭೆಯಲ್ಲಿ ಭಾಗವಹಿಸಿ ಒಗ್ಗಟ್ಟಿನ ಹೋರಾಟಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದೆವು. ಅದರ ಹೊರತಾಗಿಯೂ ಬಂದ್‍ಗೆ ಬೆಂಬಲ ಇಲ್ಲ ಎಂದು ನಿನ್ನೆ ಘೋಷಣೆ ಮಾಡಿದ್ದಾರೆ. ಇದು ನಾಡಿನ ಹಿತಾಸಕ್ತಿಯ ದೃಷ್ಟಿಯಿಂದ ಸರಿಯಲ್ಲ ಎಂದರು. +ಜಮ್ಮುವಿನಲ್ಲಿ ಶಂಕಿತ ಉಗ್ರರ ಮನೆ ಮೇಲೆ ದಾಳಿ +ವಾಟಾಳ್ ನಾಗರಾಜ್ ಮತ್ತು ಅವರ ಸಂಗಡಿಗರು ಸೆ. 29 ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ನೀಡಬೇಕೆ, ಬೇಡವೇ ಎಂದು ನಾವೂ ಕೂಡ ನಮ್ಮ ಸಂಘಟನೆಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಇಂದು ಬೆಳಿಗ್ಗೆಯಿಂದಲೂ ಪೊಲೀಸ್ ಬಲವನ್ನು ಬಳಸಿ ಹೋರಾಟಗಾರರನ್ನು ಅಲ್ಲಲ್ಲಿ ಬಂಧಿಸಲಾಗುತ್ತಿದೆ. ಪ್ರತಿಭಟನೆಗೂ ಅವಕಾಶ ನೀಡುತ್ತಿಲ್ಲ. ಇದು ಸರಿಯಲ್ಲ ಎಂದು ಕಿಡಿಕಾರಿದರು. \ No newline at end of file diff --git a/eesanje/url_46_342_4.txt b/eesanje/url_46_342_4.txt new file mode 100644 index 0000000000000000000000000000000000000000..3d420a648a5428ab9272fcbe5818e6aaa46144d4 --- /dev/null +++ b/eesanje/url_46_342_4.txt @@ -0,0 +1,8 @@ +ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ವಿಫಲವಾಗಿದೆ : ಮುಖ್ಯಮಂತ್ರಿ ಚಂದ್ರು +ಬೆಂಗಳೂರು, ಸೆ.26- ರಾಜ್ಯಸರ್ಕಾರ ಸಮಗ್ರತೆ ಚರ್ಚೆ ನಡೆಸುವ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ತಿರಸ್ಕರಿಸುವಂತಹ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಅಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ. +ಬೆಂಗಳೂರು ಬಂದ್ ವೇಳೆ ಮಾತನಾಡಿರುವ ಅವರು, ಕಾವೇರಿ ನದಿ ವಿವಾದದಲ್ಲಿ ತಮಿಳುನಾಡು ತನ್ನ ಪಾಲಿನ ಹಕ್ಕನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ನಮ್ಮ ರಾಜ್ಯಸರ್ಕಾರ ವೈಫಲ್ಯ ಅನುಭವಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದ ಹೊರಗೆ ವಿವಾದವನ್ನು ಇತ್ಯರ್ಥಗೊಳಿಸಲು ಮಧ್ಯಪ್ರವೇಶ ಮಾಡಬೇಕಿತ್ತು. ಆದರೆ ಪ್ರಧಾನಿ ಹಾಗೂ ಕೇಂದ್ರ ಸರ್ಕಾರ ಕಂಡೂ ಕಾಣದಂತೆ ಜಾರಿಗೊಳ್ಳುತ್ತಿದೆ ಎಂದು ಆರೋಪಿಸಿದರು. +ಕಾವೇರಿ ನದಿ ನೀರನ್ನು ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಹರಿಸಲಾಗುತ್ತಿದೆ. ಮಂಡ್ಯ ಭಾಗದ ಜನ ಇದನ್ನು ವಿರೋಧಿಸಿ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಬೆಂಗಳೂರಿಗೆ ಕುಡಿಯುವ ನೀರು ಇಲ್ಲವಾಗುತ್ತದೆ. ಇಂತಹ ಸಂಕಷ್ಟದಲ್ಲಿ ಪ್ರತಿಭಟನೆ ಬಿಟ್ಟು ಬೇರೆ ಮಾರ್ಗ ಏನಿದೆ ಎಂದು ಪ್ರಶ್ನಿಸಿದರು. +ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಮಧ್ಯಪ್ರದೇಶ ಅನಾರೋಗ್ಯ ರಾಜ್ಯವಾಗಿತ್ತು : ಚೌಹಾಣ್ ವಾಗ್ದಾಳಿ +ಕಾಂಗ್ರೆಸ್ ಸರ್ಕಾರ ಗಂಭೀರ ಸಮಸ್ಯೆಯನ್ನು ಕಡೆಗಣಿಸಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ಜಂಜಾಟದಲ್ಲಿ ಮುಳುಗಿದೆ. ಬೆಂಗಳೂರು ಬಂದ್ ಪಕ್ಷಾತೀತವಾದ ಹೋರಾಟ. ಇದರಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗಲಿದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಸರಿಯಲ್ಲ. ಸರ್ಕಾರ ಜನರ ಕಷ್ಟಕ್ಕೆ ಸ್ಪಂಧಿಸಬೇಕು. ಬ್ರಾಂಡ್‍ಗೋಸ್ಕರ ಸಮಸ್ಯೆಗಳನ್ನು ಕಡೆಗಣಿಸಬಾರದು ಎಂದು ಎಚ್ಚರಿಸಿದರು. +ಕಾಂಗ್ರೆಸ್ ಅಧಿಕಾರಕ್ಕಾಗಿ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಅಧಿಕಾರಕ್ಕೆ ಬಂದು ಮೂರು ತಿಂಗಳಾದರೂ ಅಣೆಕಟ್ಟು ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಗಿಲ್ಲ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ವಿಶೇಷ ಅಧಿವೇಶನ ಕರೆದು ನೀರು ಬಿಡದೇ ಇರುವ ನಿರ್ಣಯ ಕೈಗೊಳ್ಳಬೇಕು. ನೀರಿಲ್ಲ ಎಂದರೂ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡುತ್ತಿರುವ ಕಾವೇರಿ ನೀರು ನಿಯಂತ್ರಣಾ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳನ್ನು ತಿರಸ್ಕಾರ ಮಾಡಬೇಕು. +ನ್ಯಾಯಾಲಯದ ಮುಂದೆ ವಾದ ಮಂಡಿಸಲು ಸಮರ್ಥ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು. ಸೆ.29 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೂ ನಮಗೂ ಸಂಬಂಧವಿಲ್ಲ. ನಾವು ಮೊದಲಿಗೆ ಬೆಂಗಳೂರು ಬಂದ್‍ಗೆ ಕರೆ ನೀಡಿದ್ದೆವು. ಅದನ್ನು ಇಂದು ಆಚರಿಸಿದ್ದೇವೆ ಎಂದರು. \ No newline at end of file diff --git a/eesanje/url_46_342_5.txt b/eesanje/url_46_342_5.txt new file mode 100644 index 0000000000000000000000000000000000000000..1d3b7cd5b39003167669b8dfe3031574f6c64e72 --- /dev/null +++ b/eesanje/url_46_342_5.txt @@ -0,0 +1,6 @@ +ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ +ಬೆಂಗಳೂರು,ಸೆ.26- ವಯೋ ಸಹಜದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತ ಶಾರದಾ ಪಾಟೀಲ ಅವರು, ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಿದ್ದಾರೆ. +ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. +ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ +ಸಂತಾಪ :ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ. ಬಸವರಾಜ್ ಬೊಮ್ಮಯಿ, ಸೇರಿದಂತೆ ಮತ್ತಿತರ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. +ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟವರಲ್ಲಿ ಪ್ರಮುಖರು. ಹಠಾತ್ತನೆ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡಿದ್ದ ಅವರು 1997 ಮಾರ್ಚ್ 14 ರಂದು ಆನಾರೋಗ್ಯದ ಕಾರಣ ನಿಧನರಾಗಿದ್ದರು. \ No newline at end of file diff --git a/eesanje/url_46_342_6.txt b/eesanje/url_46_342_6.txt new file mode 100644 index 0000000000000000000000000000000000000000..48ce5ec90e7b3b8243e65030fb0cc572e463c072 --- /dev/null +++ b/eesanje/url_46_342_6.txt @@ -0,0 +1,5 @@ +ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ +ಬೆಂಗಳೂರು, ಸೆ. 26- ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‍ಗೆ ಜೆಡಿಎಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಬಂದ್‍ನಲ್ಲಿ ಜೆಡಿಎಸ್ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್‍ಗೆ ನನ್ನ ಪೂರ್ಣ ಬೆಂಬಲವಿದೆ. ಹೋರಾಟಗಾರರು ಶಾಂತಿಯುತವಾಗಿ ವರ್ತಿಸಬೇಕು. ಬಂದ್ ಯಶಸ್ವಿಯಾಗಲು ಜೆಡಿಎಸ್ ಕಾರ್ಯಕರ್ತರು ಕೂಡ ಸಹಕಾರ ನೀಡಲಿದ್ದಾರೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ತಿಳಿಸಿದ್ದಾರೆ. +ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ +ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು. \ No newline at end of file diff --git a/eesanje/url_46_342_7.txt b/eesanje/url_46_342_7.txt new file mode 100644 index 0000000000000000000000000000000000000000..472972202e47a5eaf2537109bba07ec8c3a73261 --- /dev/null +++ b/eesanje/url_46_342_7.txt @@ -0,0 +1,11 @@ +ಸೆ.29 ರಂದು ಕರ್ನಾಟಕ ಬಂದ್ ಫಿಕ್ಸ್ +ಬೆಂಗಳೂರು,ಸೆ.25- ಕನ್ನಡಪರ ಸಂಘಟನೆಗಳ ನಡುವೆಯೇ ಗೊಂದಲಕ್ಕೆ ಕಾರಣವಾಗಿದ್ದ ಕರ್ನಾಟಕ ಬಂದ್ ಇದೇ 29ರಂದು ನಡೆಯುವುದು ಖಚಿತವಾಗಿದ್ದು, ಒಂದೇ ವಾರದಲ್ಲಿ ಎರಡೆರಡು ಬಂದ್ ಎದುರಿಸುವ ಪರಿಸ್ಥಿತಿ ಎದುರಾಗಿದೆ. ಮಂಗಳವಾರ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಹಾಗೂ ಜಲಶಕ್ತಿ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‍ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಇದೇ 29ರಂದು ಕರ್ನಾಟಕ ಬಂದ್‍ಗೂ ಕರೆ ಕೊಟ್ಟಿವೆ. +ಕನ್ನಡ ಚಳುವಳಿ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಹಾಗೂ ಕನ್ನಡ ಒಕ್ಕೂಟ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಿ 29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿಂತೆಗೆದುಕೊಳ್ಳಬಾರದು ಎಂಬ ಒಮ್ಮತದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. +ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ನಾಳೆ ನಡೆಯಲಿರುವ ಬೆಂಗಳೂರು ಬಂದ್‍ಗೆ ನಮ್ಮ ಬೆಂಬಲವಿಲ್ಲ. ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಮಾಡುತ್ತೇವೆ. ರಾಜಭವನವನ್ನು ಮುತ್ತಿಗೆ ಹಾಕುತ್ತೇವೆ ಎಂದು ಘೋಷಣೆ ಮಾಡಿದರು. ಶುಕ್ರವಾರ ನಡೆಯುವ ಅಖಂಡ ಕರ್ನಾಟಕ ಬಂದ್ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳವಳಿ ನಡೆಸುವ ಬಗ್ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಮಹತ್ತರವಾದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದರು. +ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್ +ಬಂದ್ ಎಂದರೆ ಕನ್ನಡ ಒಕ್ಕೂಟ, ಎಲ್ಲಾ ಕನ್ನಡ ಪರ ಸಂಘಟನೆಗಳು ಸೆ.29ಕ್ಕೆ ಬಂದ್ ನಡೆಸಲು ತೀರ್ಮಾನಿಸಿರುವ ಸಂದರ್ಭದಲ್ಲಿ ಇದನ್ನು ತಿಳಿದು ಆಮ್ ಆದ್ವಿ ಪಕ್ಷ ಮತ್ತು ರೈತ ಸಂಘಟನೆಯೊಂದು ನಾಳೆ ಬೆಂಗಳೂರು ಬಂದ್ ಕರೆಕೊಟ್ಟು ರಾಜಕೀಯ ಮಾಡುತ್ತಿವೆ. ನಾವೆಲ್ಲಾ ಸಂಘಟನೆಗಳು ನಾಳೆ ಬಂದ್ ಬೇಡ ಎಂದು ಕೈ ಮುಗಿದು ಕೇಳಿಕೊಂಡರು ಅವರು ಒಪ್ಪಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. +ಕೇವಲ ಬೆಂಗಳೂರು ಮಾತ್ರ ಕರ್ನಾಟಕವಲ್ಲ ಅಖಂಡ ಕರ್ನಾಟಕ ಸೇರಿ ಕರ್ನಾಟಕವಾಗಿದೆ. ಆದ್ದರಿಂದ ನಮ್ಮ ಕೂಗು, ದೇಶದ ಪ್ರಧಾನಿಗಳಿಗೆ ಮುಟ್ಟಬೇಕು ದೆಹಲಿಯಲ್ಲಿ ನಮ್ಮ ಹೋರಾಟದ ಕಿಚ್ಚು ಹೆಚ್ಚಾಗಬೇಕು ಎಂದರು. ರಾಜ್ಯದ ಸುಮಾರು 12 -16 ಸಂಘಟನೆಗಳು ನಮಗೆ ಬೆಂಬಲ ನೀಡವೆ. ಇದೇ 29ರಂದು ಕರೆ ಕೊಟ್ಟಿರುವ ಅಖಂಡ ಕರ್ನಾಟಕ ಬಂಧಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಅಂದು ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಯಾವುದೇ ಚಲನಚಿತ್ರಗಳು ಪ್ರದರ್ಶನವಾಗುವುದಿಲ್ಲ ಹಾಗೆಯೇ ರಾಷ್ಟ್ರೀಯ ಹೆದ್ದಾರಿಗಳು ಕೂಡ ಬಂದ್ ಆಗಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲೂ ಬಂದ್ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. +ಡಾಕ್ಟರ್ ರಾಜಕುಮಾರ್ ಅಭಿಮಾನಿಗಳ ಸಂಘ ಅಧ್ಯಕ್ಷ ಸಾರಾ ಗೋವಿಂದ್ ಮಾತನಾಡಿ, ಕುಡಿಯು ನೀರಿಗೆ ಮೇಕೆದಾಟು ಅಣೆಕಟ್ಟು ಕಟ್ಟಲು ತೊಂದರೆ ಕೊಡುತ್ತಿರುವ ತಮಿಳು ನಾಡಿಗೆ ಕಾವೇರಿ ನೀರಿನ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಇವತ್ತು ಅಧಿಕಾರದಲ್ಲಿ ಇಲ್ಲದೇ ಇರುವವರು ಹೋರಾಟಕ್ಕೆ ಬೆಂಬಲ ಕೊಡುತ್ತೇವೆಂದು ಹೇಳುತ್ತಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ನೀರನ್ನು ತಮಿಳುನಾಡಿಗೆ ನೀರು ಹರಿಸಿ ದ್ರೋಹವೆಸಗಿದ್ದಾರೆ ಅವರಿಗೆ ಮಾತನಾಡುವ ಹಕ್ಕಿಲ್ಲ. ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕನ್ನಡಪರ ಸಂಘಟನೆಗಳಿಗೆ ಮಾತ್ರ ನೈತಿಕ ಹಕ್ಕಿದೆ ಎಂದು ಪರೋಕ್ಷವಾಗಿ ಬಿಜೆಪಿ ಪಕ್ಷವನ್ನು ದೂರಿದರು. ಅಷ್ಟೇ ಅಲ್ಲದೆ ನಾಳೆ ನಡೆಯುವ ಬಂದ್ ಗೆ ಬೆಂಬಲವಾಗಿ ನಿಂತಿರುವ ಆಮ್ ಆದ್ಮಿ ಪಕ್ಷದ ನಿರ್ಣಯವನ್ನು ಖಂಡಿಸಿದರು. +ಕಾವೇರಿ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ : ಸಿಎಂ +ಸಭೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ಎನ್.ಮೂರ್ತಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್, ಹಾಗೂ ಹೆಚ್.ವಿ. ಗಿರೀಶ್ ಗೌಡ ಹಾಗೂ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು, ಹೋರಾಟಗಾರರು ಸೇರಿದಂತೆ ಮತ್ತಿತರರು ಇದ್ದರು. \ No newline at end of file diff --git a/eesanje/url_46_342_8.txt b/eesanje/url_46_342_8.txt new file mode 100644 index 0000000000000000000000000000000000000000..d21e297aec035a60560eb8a5c9dbddf2b3e5ec71 --- /dev/null +++ b/eesanje/url_46_342_8.txt @@ -0,0 +1,12 @@ +ನಗರ ಪ್ರದೇಶದಲ್ಲಿ ನೀರಿನ ಬಳಕೆ ಮಿತಿಗೊಳಿಸಲು ತಜ್ಞರ ಸಲಹೆ +ಬೆಂಗಳೂರು, ಸೆ.25- ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರಾಜ್ಯದ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟದ ಮೇಲೆ ಪರಿಣಾಮ ಬೀರುತ್ತಿದ್ದು, ಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. +ಜಲಸಂಪನ್ಮೂಲ ಇಲಾಖೆ ಮತ್ತು ಅಂತರ್ಜಲ ಮಂಡಳಿಯ ಅಧಿಕಾರಿಗಳ ಪ್ರಕಾರ, ಮೇಲ್ಮೈಯಲ್ಲಿನ ನೀರನ್ನು ಮಾತ್ರ ಅತ್ಯುತ್ತಮವಾಗಿ ಹಿಡಿದಿಡಲಾಗುತ್ತದೆ. ಅಣೆಕಟ್ಟಿನ ಸುತ್ತಲ ಪ್ರದೇಶಗಳಲ್ಲಿ ಅಂತರ್ಜಲ ವನ್ನು ಹಿಡಿದಿಟ್ಟುಕೊಳ್ಳಲು ವ್ಯವಸ್ಥೆ ಮಾಡಿ ಅವುಗಳನ್ನು ನೀರಿನ ಕೊರತೆಯ ಸಮಯದಲ್ಲಿ ಬಳಸಿಕೊಳ್ಳುವಂತೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಮತ್ತು ನೀರಾವರಿಗೆ ದಿನನಿತ್ಯ ಸಹಜವಾಗಿ ನೀರು ಪೂರೈಕೆ ಮಾಡು ವುದಕ್ಕಿಂತ ಕಡಿಮೆ ಮಿತಿಯಲ್ಲಿ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಬೇಕು. +ಸರ್ಕಾರವು ನೀರಾವರಿ, ಕೈಗಾರಿಕೆ ಗಳಿಗೆ ಮತ್ತು ನಗರ ಪ್ರದೇಶಗಳಿಗೆ ತಕ್ಷಣವೇ ಶೇಕಡಾ 20 ರಿಂದ 30 ರಷ್ಟು ನೀರು ಸರಬರಾಜನ್ನು ಕಡಿಮೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಈಶಾನ್ಯ ಮುಂಗಾರು ವಿಫಲವಾದರೆ ಈ ನೀರನ್ನು ಬೇಸಿಗೆಯಲ್ಲಿ ಸಂಗ್ರಹಿಸಿ ಬಳಸಬೇಕೆಂಬ ಸಲಹೆ ಕೊಟ್ಟಿದ್ದಾರೆ. +ನಾಳೆ ಬೆಂಗಳೂರು ಬಂದ್ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ +ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತೀಯ ಮಾನದಂಡಗಳ ಬ್ಯೂರೋ ಮಾರ್ಗಸೂಚಿಗಳ ಪ್ರಕಾರ, ನಾಲ್ಕು ಜನರ ಕುಟುಂಬಕ್ಕೆ ಮಾಸಿಕವಾಗಿ 12,000-15,000 ಲೀಟರ್ ನೀರು ಬೇಕಾಗುತ್ತದೆ, ಆದರೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಒಂದು ಕುಟುಂಬವು ತಿಂಗಳಿಗೆ 20,000-40,000 ಲೀಟರ್ ನೀರನ್ನು ಬಳಸುತ್ತದೆ. ನಗರ ನೀರು ಬಳಕೆಯ ಕುರಿತು ಯೋಜನೆಯ ಕೊರತೆ ಇದೆ ಎಂದು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. +ಅಣೆಕಟ್ಟು ಸುತ್ತಲ ಪ್ರದೇಶಗಳಲ್ಲಿ ಕೃಷಿ ಮಾಡಲು ಅಂತರ್ಜಲದತ್ತ ಗಮನಹರಿಸಬೇಕು. ಸಮಸ್ಯೆ ಹೆಚ್ಚು ರಾಜಕೀಯವಾಗುತ್ತಿದೆ ಎಂದು ಅವರು ಹೇಳಿದರು. ಕಾವೇರಿಯಿಂದ ಕರ್ನಾಟಕದ ನೀರಿನ ಪಾಲು ಕೇವಲ ಶೇ.25ರಷ್ಟಿದೆ ಆದರೆ ಇತರ ಮೂಲಗಳಿಂದ ಅದರ ನೀರಿನ ಬಳಕೆ ಹೆಚ್ಚಾಗಿದೆ. +ಕಳೆದ 32 ವರ್ಷಗಳಲ್ಲಿ, ಕರ್ನಾಟಕವು ತಮಿಳುನಾಡಿನೊಂದಿಗೆ ಆರು ಬಾರಿ ಬರ ಮತ್ತು ನೀರಿನ ಹೋರಾಟವನ್ನು ಎದುರಿಸಿತು. ಸರ್ಕಾರಗಳ ಕಡೆಯಿಂದ ಯೋಜನೆ ಮತ್ತು ಸಿದ್ಧತೆಯ ಕೊರತೆ ಇತ್ತು, ಅದು ಈಗ ಪ್ರತಿಫಲಿಸಿದೆ ಎಂದಿದ್ದಾರೆ. +ಜಲಾನಯನ ಪ್ರದೇಶದ ಎಲ್ಲಾ ನಾಲ್ಕು ಜಲಾಶಯಗಳಲ್ಲಿ 51 ಟಿಎಂಸಿ ಅಡಿ ನೀರು ಇದೆ. ಬೆಳೆದ ಬೆಳೆಗಳಿಗೆ 70 ಟಿಎಂಸಿ, ಕುಡಿಯಲು 33 ಟಿಎಂಸಿ ನೀರು, ಕೈಗಾರಿಕೆಗಳಿಗೆ 3 ಟಿಎಂಸಿ ಅಡಿ ನೀರು ಬೇಕು. ರೈತರು ಬಿತ್ತನೆ ಕೈಗೊಂಡಿದ್ದರಿಂದ ನೀರಾವರಿಗೆ ಹೊಡೆತ ಬೀಳಲಿದೆ. ಎರಡೂ ರಾಜ್ಯಗಳ ರೈತರಿಗೆ ಈಗಲೇ ಮನವರಿಕೆ ಮಾಡಿಕೊಡಬೇಕಿದೆ. +ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.50ರಷ್ಟು ಮಳೆ ಕೊರತೆಯಾಗಿರುವುದು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಐಐಎಸ್‍ಸಿಯ ತಜ್ಞರು ಹೇಳಿದ್ದಾರೆ. ನೀರಾವರಿಗಾಗಿ ಉತ್ತಮ ನೀರಿನ ನಿರ್ವಹಣೆಯನ್ನು ರೈತರು ಅರ್ಥಮಾಡಿಕೊಳ್ಳಬೇಕು. ಕೃಷಿ ವಿಶ್ವವಿದ್ಯಾಲಯಗಳ ಪಾತ್ರ ಇಲ್ಲಿ ಬಳಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. +ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್ +ವೈಕ್ತಿಗತವಾಗಿ ದೈನಂದಿನ ನೀರಿನ ಬಳಕೆ3-4 ಲೀಟರ್ ಕುಡಿಯಲು ಬೇಕು8 ಲೀಟರ್ ಅಡುಗೆಗಾಗಿ ಕಾದಿರಿಸಬೇಕು20 ಲೀಟರ್ ಸ್ನಾನ, ಬಟ್ಟೆ, ಪಾತ್ರೆ ತೊಳೆಯಲು ಬೇಕು25-30 ಲೀಟರ್ ಫ್ಲಶ್, ಶೌಚಾಲಯದ ಅವಶ್ಯಕತೆ8-10 ಲೀಟರ್ ಇತರ ಉಪಯುಕ್ತತೆಗಾಗಿ ಬೇಕು \ No newline at end of file diff --git a/eesanje/url_46_342_9.txt b/eesanje/url_46_342_9.txt new file mode 100644 index 0000000000000000000000000000000000000000..d70702da4b7269f205f344d6a61780866f9c26e4 --- /dev/null +++ b/eesanje/url_46_342_9.txt @@ -0,0 +1,8 @@ +ಯಶವಂತಪುರ-ಕಾಚೀಗುಡ ವಂದೇ ಭಾರತ್ ರೈಲಿಗೆ ಚಾಲನೆ +ಬೆಂಗಳೂರು, ಸೆ.25- ಪ್ರಯಾಣಿಕರ ಅನುಕೂಲಕ್ಕಾಗಿ ಕಾಚೀಗುಡ-ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಪ್ರಾರಂಭಿಸಲಾಗಿದ್ದು, ವಿಡಿಯೋ ಲಿಂಕ್ ಮೂಲಕ ನಿನ್ನೆ ಪ್ರಧಾನಿ ಚಾಲನೆ ನೀಡಿದ ನಂತರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಯಲಹಂಕ ರೈಲ್ವೆ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ವಿಧಾನ ಪರಿಷತ್ ಸದಸ್ಯ ಅ.ದೇವೇಗೌಡ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್ ಸೇರಿದಂತೆ ರೈಲ್ವೆ ಅಕಾರಿಗಳು ಪಾಲ್ಗೊಂಡಿದ್ದರು. +ಇಂದು ಅಕೃತವಾಗಿ ಯಶವಂತಪುರದಿಂದ ಕಾಚೀಗುಡಕ್ಕೆ ರೈಲು 20704 ಹೊರಟಿದೆ. ಬುಧವಾರ ಬಿಟ್ಟು ಉಳಿದ ವಾರದ ಆರು ದಿನಗಳು ಈ ರೈಲು ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. +ರೈಲು ಸಂಖ್ಯೆ 20703 ಕಾಚೀಗುಡ-ಯಶವಂತಪುರ ವಂದೇ ಭಾರತ್ ಎಕ್ಸ್‍ಪ್ರೆಸ್ ಕಾಚಿಗುಡದಿಂದ ಬೆಳಿಗ್ಗೆ 05:30 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 02:00 ಗಂಟೆಗೆ ಯಶವಂತಪುರವನ್ನು ತಲುಪುತ್ತದೆ. ಮಾರ್ಗದಲ್ಲಿ, ಈ ರೈಲು ಮೆಹಬೂಬ್ ನಗರ (06:49/06:50 ಅI) ಕರ್ನೂಲ್ ನಗರ (08:24/08:25 ಅI) ಅನಂತಪುರ (10:44/10:45 ಅI) ಮತ್ತು ಧರ್ಮಾವರಂ (11:14/11: 15 ಅI) ಮಾರ್ಗದಲ್ಲಿ ಸಂಚರಿಸುತ್ತದೆ. + ಸದ್ಯದ ಚಿತ್ರ ತೋರಿಸಿ ಕಣ್ಣೀರಿಟ್ಟ ದೇವೇಗೌಡರು +ರೈಲು ಸಂಖ್ಯೆ 20704 ಯಶವಂತಪುರ-ಕಾಚೀಗುಡ ವಂದೇ ಭಾರತ್ ಎಕ್ಸ್‍ಪ್ರೆಸ್ ಯಶವಂತಪುರದಿಂದ ಮಧ್ಯಾಹ್ನ 02:45 ಕ್ಕೆ ಹೊರಟು ಅದೇ ದಿನ ರಾತ್ರಿ 11:15ಕ್ಕೆ ಕಾಚೀಗುಡ ತಲುಪುತ್ತದೆ. ಈ ರೈಲು ಧರ್ಮಾವರಂನಲ್ಲಿ ಸಂಜೆ 04:59/05:00ಕ್ಕೆ, ಅನಂತಪುರದಲ್ಲಿ ಸಂಜೆ 05:29/05:30ಕ್ಕೆ, ಕರ್ನೂಲ್ ಸಿಟಿ 07:50/07:51ಕ್ಕೆ ಮತ್ತು ಮಹಬೂಬ್ ನಗರದಲ್ಲಿ 09:34/09:35 PIಗೆ ನಿಲ್ಲುತ್ತದೆ. +ಕಾಚೀಗುಡ-ಯಶವಂತಪುರ ದರಸಿಸಿ ವರ್ಗ ರೂ. 1600ಇಸಿ ವರ್ಗ ರೂ. 2915ಇಸಿ ವರ್ಗ ರೂ. 2865 +ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿನಲ್ಲಿ 2 ಡಿಟಿಸಿ (ಡ್ರೈವಿಂಗ್ ಟ್ರೈಲರ್ ಕೋಚ್‍ಗಳು), 4 ಎಂಸಿ (ಮೋಟಾರ್ ಕೋಚ್‍ಗಳು), ಮತ್ತು 2 ಟಿಸಿ (ಟ್ರೇಲರ್ ಕೋಚ್‍ಗಳು) ಸೇರಿದಂತೆ ಒಟ್ಟು 8 ಕೋಚ್‍ಗಳನ್ನು ಒಳಗೊಂಡಿರುತ್ತದೆ ಎಂದು ಸಾರ್ವಜನಿಕ ಸಂಪರ್ಕಾಕಾರಿ ತ್ರಿನೇತ್ರ ತಿಳಿಸಿದ್ದಾರೆ. \ No newline at end of file diff --git a/eesanje/url_46_343_1.txt b/eesanje/url_46_343_1.txt new file mode 100644 index 0000000000000000000000000000000000000000..9c96da6837f73fe917489570aca8d15822ff0395 --- /dev/null +++ b/eesanje/url_46_343_1.txt @@ -0,0 +1,7 @@ +ನಿಗದಿತ ಸಮಯದೊಳಗೆ ಜನರ ಸಮಸ್ಯೆಗಳನ್ನು ಪರಿಹರಿಸಿ : ಸಚಿವ ಗುಂಡೂರಾವ್ +ಬೆಂಗಳೂರು, ಸೆ.25- ಜನತಾ ದರ್ಶನಕ್ಕೆ ಬರುವ ಜನರ ಕೆಲಸಗಳನ್ನು ನಿಗದಿತ ಸಮಯದೊಳಗೆ ಪರಿಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತಾದರ್ಶನಕ್ಕೆ ಚಾಲನೆ ನೀಡಿದ ಅವರು, ಅರ್ಜಿ ಹಿಡಿದುಕೊಂಡು ಬರುವ ಜನಸಾಮಾನ್ಯರಿಗೆ ಸ್ಪಷ್ಟತೆ ಕೊಡಬೇಕು. +ಕೇವಲ ಅರ್ಜಿಗಳನ್ನು ಸ್ವೀಕರಿಸಿದರೆ ಪ್ರಯೋಜನವಿಲ್ಲ. ಸ್ಥಳದಲ್ಲೇ ಅವರಿಗೆ ಪರಿಹಾರ ಒದಗಿಸುವಂತ ವ್ಯವಸ್ಥೆ ಜಾರಿಗೆ ಬರಬೇಕು ಎಂದರು.ಜನರು ಕೇಳುವ ಕೆಲಸ ಕಾರ್ಯಗಳು ಆಗೋತ್ತದೆಯೋ, ಇಲ್ಲವೋ ಎಂಬ ಸ್ಪಷ್ಟತೆಯನ್ನು ಜನರಿಗೆ ನೀಡಿ. ನೋಡೊಣ, ಮಾಡೊಣ ಎಂದು ಹೇಳಿ ಜನರನ್ನು ಅಲೆದಾಡಿಸುವ ಪರಿಸ್ಥಿತಿಗೆ ತರಬೇಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. +ಯಾವ ಕಾರ್ಯಗಳು ಈಡೇರಿಸಲು ಸಾಧ್ಯ ಅವುಗಳನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ಮಾಡಿಕೊಡಿ. ಯಾವ ಕೆಲಸಗಳು ಮಾಡಲು ಸಾಧ್ಯವಿಲ್ಲ ಆ ಬಗ್ಗೆ ಜನರಿಗೆ ನೇರವಾಗಿ ನೈಜ ಪರಿಸ್ಥಿತಿಯನ್ನು ತಿಳಿಸಿ ಎಂದರು. +ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ +ತಾಲೂಕು ಮಟ್ಟದಲ್ಲೂ ಜನತಾ ದರ್ಶನ :ಜಿಲ್ಲಾ ಕೇಂದ್ರದಲ್ಲಿ ಅಷ್ಟೇ ಅಲ್ಲ ತಾಲೂಕು ಮಟ್ಟದಲ್ಲೂ ಜನತಾ ದರ್ಶನಗಳನ್ನು ನಡೆಸುವಂತೆ ಇದೇ ವೇಳೆ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಜಿಲ್ಲಾಡಳಿತ ಜನರ ಬಳಿಗೆ ಹೋಗಬೇಕು. ಗ್ರಾಮೀಣ ಪ್ರದೇಶದ ಹಲವು ಜನರಿಗೆ ಜಿಲ್ಲಾ ಕೇಂದ್ರಗಳಿಗೆ ಬರಲು ಕಷ್ಟವಾಗಿರುತ್ತದೆ. ಹೀಗಾಗಿ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದರೆ, ಹಳ್ಳಿಗಾಡಿನ ಜನರಿಗೆ ತಮ್ಮ ಸಮಸ್ಯಗಳನ್ನ ಪರಿಹರಿಸಿಕೊಳ್ಳಲು ಅನುಕೂಲವಾಗಲಿದೆ. +ಮುಂದಿನ ಜನತಾ ದರ್ಶನಗಳನ್ನು ತಾಲೂಕುಗಳಲ್ಲಿ ಆಯೋಜಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಜಿಲ್ಲಾಯಲ್ಲಿ ಇರುವ 9 ತಾಲೂಕುಗಳಲ್ಲೂ ಹಂತ ಹಂತವಾಗಿ ಜನತಾ ದರ್ಶನಗಳನ್ನು ಆಯೋಜಿಸಲಾಗುವುದು ಎಂದು ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. \ No newline at end of file diff --git a/eesanje/url_46_343_10.txt b/eesanje/url_46_343_10.txt new file mode 100644 index 0000000000000000000000000000000000000000..8268671ef5680028de1c5b0a14e34da5f4d7f986 --- /dev/null +++ b/eesanje/url_46_343_10.txt @@ -0,0 +1,7 @@ +ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್ +ದಾಬಸ್‍ಪೇಟೆ,ಸೆ.25- ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದು ಖಂಡನೀಯ. ಯಾವ ಸರ್ಕಾರಗಳು ರೈತರಪರ ನಿಲ್ಲುವುದಿಲ್ಲ. ನೀರಿನ ವಿಷಯ ಬಂದಾಗ ದೂರವೇ ಉಳಿಯುತ್ತವೆ. ಅನ್ಯಾಯದ ವಿರುದ್ದ ನಾವೆಲ್ಲರೂ ಪ್ರಾಮಾಣಿಕವಾಗಿ ಹೋರಾಟ ಮಾಡಬೇಕಿದೆ ಎಂದು ರಾಜ್ಯ ರೈತ ಸಂಘಗಳ ಒಕ್ಕೂಟದ ರಾಜ್ಯಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. +ರಾಜ್ಯ ಪಟ್ಟಣದಲ್ಲಿ ರೈತ ಸಂಘಟನೆಗಳ ಓಕ್ಕೂಟ, ರಾಜ್ಯ ಕಬ್ಬು ಬೇಳೇಗಾರರ ಸಂಘ ಕರ್ನಾಟಕದಿಂದ ನೆಲಮಂಗಲ ತಾಲೂಕು ಘಟಕ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ನಾಳೆ ಬೆಂಗಳೂರು ಬಂದ್ ಮಾಡುತ್ತಿದ್ದೇವೆ. ಹಲವಾರು ಕನ್ನಡಪರ ಸಂಘಟನೆಗಳು ಒಗ್ಗೂಡಿ ಟೌನ್‍ಹಾಲಿನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೂ ಶಾಂತಿಯುತ ಬಂದ್ ಮಾಡುತ್ತಿದ್ದೇವೆ ಎಂದರು. +ಕೆನಡಾ ಬಿಟ್ಟು ಬೇರೆ ದೇಶಗಳತ್ತ ಮುಖಮಾಡಿದ ಭಾರತೀಯ ವಿದ್ಯಾರ್ಥಿಗಳು +ಕರ್ನಾಟಕ ಕೈಗಾರಿಕಾ ಪ್ರದೇಶದವರೂ ನಿಮ್ಮ ಭೂಮಿಯನ್ನು ಸ್ವಾೀಧಿನ ಮಾಡಿ ಅದಕ್ಕೆ ತಕ್ಕದಾದ ಬೆಲೆಯನ್ನು ನೀಡಬೇಕು ಇಲ್ಲಾವಾದರೆ ಅದರ ಬಗ್ಗೆ ನಮ್ಮ ತಾಲೂಕು ಘಟಕ ಉಗ್ರವಾಗಿ ಹೋರಾಡುತ್ತದೆ, ಸೋಂಪುರ ಹೋಬಳಿಯಲ್ಲಿ ಅಕ್ರಮ ಕ್ಷೇಷರ್ ನಿಂದ, ರಿಯಲ್ ಏಸ್ಟೆಟ್ ನಿಂದ ಮಾಫಿಯಾ ಹೆಚ್ಚಾಗಿದೆ ಎಂದರು. +ಕಾವೇರಿ ನೀರು ಬಿಡುತ್ತಿರುವುದರಿಂದ ಕಾವೇರಿ ನ್ಯಾಯಾೀಧಿಕರಣ ಹಾಗೂ ಸುಪ್ರೀಂಕೋರ್ಟ್ ತಿರ್ಪೀನಿಂದ 26ನೇ ತಾರಿಖು ಬೆಂಗಳೂರು ಬಂದ್ ಮಾಡುತ್ತಿದ್ದೇವೆ ಇದಕ್ಕೇ ಹಲವಾರು ಕನ್ನಡ ಪರ ಸಂಘಟನೆಗಳು, ಎಲ್ಲರೂ ಬಂದ ಮಾಡಲು ತೀರ್ಮಾನಿಸಿದ್ದು ಅಂದು ನಾವು ಟೋನ್ ಹಾಲಿನಿಂದ ಮೈಸೂರು ಭ್ಯಾಂಕ್ ನವರೆವಿಗೂ ಶಾಂತಿಯುತ ಬಂದ್ ಮಾಡಿ ಯಶಸ್ವಿಗೊಳಿಸುತ್ತೇವೆ ಎಂದರು. +ಅಧ್ಯಕ್ಷತೆಯನ್ನು ಭಾಬಾ ಸಾಹೇಬ್ ಜನಾರಾಳಕರನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯದೀಶರು, ಮುಖ್ಯ ಅಥೀತಿಗಳಾದ ಟಿ.ಎನ್.ಶ್ರೀನಿವಾಸಯ್ಯ, ಕಾನೂನು ಸಲಹಗಾರರಾದ ಡಾ.ಕಿಶನ್ ರಾವ್ ಉಪಸ್ತೀತರಿದ್ದರು.ನೂತನ ಪದಾದಿಕಾರಿಗಳಾದ ನೆಲಮಂಗಳ ತಾಲೂಕು ಅಧ್ಯಕ್ಷ ಶ್ರೀಪತಿಹಳ್ಳಿ ರಾಜೇಶ್, ಪ್ರಧಾನ ಕಾರ್ಯಧರ್ಶಿ ಹಳೇನಿಜಗಲ್ ಗುರುಮೂರ್ತಿ , ಉಪಾಧ್ಯಕ್ಷರಾದ ಎನ್.ಶಿವಕುಮಾರ, ಎಂ.ಸಿ.ನೀಲಕಂಟಯ್ಯ, ಎಚ್.ಪಿ.ಸುರೇಶ, ದಾಬಸ್‍ಪೇಟೆ ಪಂಚಾಕ್ಷರಿ ಸಂಘಟನಾ ಕಾರ್ಯಧರ್ಶಿ ಶಿವಶಂಕರಯ್ಯ, ದಾಬಸ್ ಪೇಟೆ ಜಗದೀಶ್, ಕಾಂತರಾಜು, ಗೌರಾಪುರ ಲೋಕೇಶ್ ಇದ್ದರು. \ No newline at end of file diff --git a/eesanje/url_46_343_11.txt b/eesanje/url_46_343_11.txt new file mode 100644 index 0000000000000000000000000000000000000000..83ddd3ef91d40743452ef7273702baf94dcec721 --- /dev/null +++ b/eesanje/url_46_343_11.txt @@ -0,0 +1,8 @@ +ಕಾವೇರಿಗಾಗಿ ಕರೆನೀಡಿರುವ ಬಂದ್‍ ವಿರೋಧಿಸುವಂತೆ ಸಚಿವರಿಗೆ ಸಿಎಂ ಸಂದೇಶ +ಬೆಂಗಳೂರು,ಸೆ.24- ಕಾವೇರಿ ನೀರಿಗಾಗಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ವಿರೋಧ ವ್ಯಕ್ತಪಡಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಸಂದೇಶ ರವಾನಿಸಿದ್ದಾರೆ. ಕಾವೇರಿ ನಾಡಿನ ಅಸ್ಮಿತೆಯಾಗಿದ್ದು, ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದು ಕನ್ನಡಿಯಷ್ಟೇ ಸತ್ಯವಾಗಿದೆ. +ಒಂದೆಡೆ ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕಾದ ಅನಿವಾರ್ಯತೆ ಇದೆ. ಮತ್ತೊಂದೆಡೆ ಜಲಾಶಯಗಳಲ್ಲಿ ನೀರು ಬರಿದಾಗುತ್ತಿರುವುದರಿಂದ ನಮ್ಮ ಬೆಳೆ ಹಾಗೂ ಕುಡಿಯುವ ನೀರಿನ ಸಂಕಷ್ಟಗಳು ಹೆಚ್ಚಾಗುತ್ತಿದೆ. ಎಷ್ಟು ಬಾರಿ ಮನವಿ ಮಾಡಿದರೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿಲ್ಲ. ಪ್ರಧಾನಮಂತ್ರಿಯವರಿಗೆ ಸಮಯ ಕೇಳಿದರೂ ಸ್ಪಂದಿಸಿಲ್ಲ. +ಈ ವಿಷಯದಲ್ಲಿ ರಾಜ್ಯಸರ್ಕಾರ ಅಸಹಾಯಕವಾಗಿದೆ. ನ್ಯಾಯಾಲಯಗಳಿಗೆ, ನೀರು ಹಂಚಿಕೆಯ ಸಮಿತಿಗಳಿಗೆ ವಾಸ್ತವತೆಯನ್ನು ಮನವರಿಕೆ ಮಾಡಿಕೊಡಬೇಕು. ಇದಕ್ಕೆ ಪೂರಕವಾಗಿ ಜನಾಂದೋಲನ ನಡೆಯುತ್ತಿದೆ. ಇದನ್ನು ನಾವು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಬಂದ್ ಸೇರಿದಂತೆ ಯಾವುದೇ ಹೋರಾಟಗಳಿಗೆ ವಿರೋಧ ವ್ಯಕ್ತಪಡಿಸುವುದು ಬೇಡ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ. + : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್ +ಪ್ರತಿಭಟನಾಕಾರರು ಸಹಜವಾಗಿ ಕೇಂದ್ರದ ಜೊತೆ ರಾಜ್ಯಸರ್ಕಾರವನ್ನು ಟೀಕೆ ಮಾಡುತ್ತಾರೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳಿಗೆ ನಾವು ಒಗ್ಗಿಕೊಳ್ಳಬೇಕು, ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವುದು, ಲೇವಡಿ ಮಾಡುವುದು, ಬೆದರಿಸುವುದು ಖಂಡಿಸುವಂತಹ ಪ್ರವೃತ್ತಿಗಳು ಬೇಡ. ಪ್ರಜಾಸತ್ತಾತ್ಮಕವಾಗಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡುವವರಿಗೆ ಮುಕ್ತ ಸ್ವಾತಂತ್ರ್ಯವಿದೆ. ನಾವು ಅದನ್ನು ಗೌರವಿಸೋಣ ಎಂಬ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಬಂದ್‍ನಿಂದ ಬ್ರಾಂಡ್ ಬೆಂಗಳೂರಿಗೆ ಧಕ್ಕೆಯಾಗುತ್ತದೆ ಎಂಬ ಅಸಮಾಧಾನವನ್ನು ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಕರವೇಯ ಪ್ರವೀಣ್‍ಶೆಟ್ಟಿ, ಕೆಲವು ಸಂಘಟನೆಗಳು ಬೆಂಗಳೂರು ಬಂದ್‍ಗೆ ಬಹಿರಂಗ ವಿರೋಧ ವ್ಯಕ್ತಪಡಿಸಿದರು. ಅದರ ಬೆನ್ನಲ್ಲೇ ಹಿರಿಯರಾದ ವಾಟಾಳ್ ನಾಗರಾಜ್ ಹಾಗೂ ಮತ್ತಿತರರು ಸೆ.29 ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ. +ಹೀಗಾಗಿ ಬೆಂಗಳೂರು ಬಂದ್ ವಿಷಯದಲ್ಲೂ ಗೊಂದಲಗಳು ಸೃಷ್ಟಿಯಾಗಲಾರಂಭಿಸಿವೆ. ಕಾವೇರಿ ವಿಷಯದಲ್ಲಿ ಪ್ರತಿಭಟನೆ ನಡೆಯುತ್ತಿರುವುದರ ಬಗ್ಗೆ ಸರ್ಕಾರದಲ್ಲಿರುವ ಕೆಲವರು ಅಸಮಾಧಾನಗೊಂಡರೆ, ಪ್ರತಿಭಟನೆಗಳಿಂದ ರಾಜ್ಯಸರ್ಕಾರಕ್ಕೆ ಸಹಾಯವಾಗುತ್ತಿದೆ ಎಂಬ ಪ್ರತಿಪಾದನೆಯನ್ನು ಕೆಲವರು ಮಾಡುತ್ತಿದ್ದಾರೆ. ಈಗ ಬಂದ್‍ಗಳಲ್ಲೂ ಬೆಂಗಳೂರು, ಕರ್ನಾಟಕ ಎಂಬ ಗೊಂದಲಗಳು ಸೃಷ್ಟಿಯಾಗಿವೆ. \ No newline at end of file diff --git a/eesanje/url_46_343_12.txt b/eesanje/url_46_343_12.txt new file mode 100644 index 0000000000000000000000000000000000000000..5ed94f4daaf138d2ad02177fe36771f85c0ffcf1 --- /dev/null +++ b/eesanje/url_46_343_12.txt @@ -0,0 +1,6 @@ + : ಸೆ.29 ರಂದು ‘ಕರ್ನಾಟಕ ಬಂದ್’ಗೆ ಕರೆಕೊಟ್ಟ ವಾಟಾಳ್ +ಬೆಂಗಳೂರು,ಸೆ.24- ಕಾವೇರಿ ಉಳಿವಿಗಾಗಿ ರೈತಪರ ಸಂಘಟನೆಗಳು, ವಿವಿಧ ಸಂಘಟನೆಗಳು ಬೆಂಗಳೂರು ಬಂದ್‍ಗೆ ಸೆಪ್ಟೆಂಬರ್ 26 ರಂದು ರಾಜಧಾನಿ ಬೆಂಗಳೂರಿಗೆ ಕರೆ ಕೊಟ್ಟ ಬೆನ್ನಲ್ಲೇ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಸೆ. 29 ರಂದು ಕರ್ನಾಟಕ ಬಂದ್ ಮಾಡಲು ಮುಂದಾಗಿದ್ದಾರೆ. +ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕನ್ನಡ ಸೇನೆ ಕುಮಾರ್, ಕರವೇ ಅಧ್ಯಕ್ಷ ಪ್ರವೀಣ್‍ಶೆಟ್ಟಿ, ಕನ್ನಡ ಜಾಗೃತಿ ವೇದಿಕೆ ಅಧ್ಯಕ್ಷ ಮಂಜುನಾಥ್ ದೇವ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಹೋರಾಟವನ್ನು ರಾಜ್ಯಾದ್ಯಂತ ಮಾಡಬೇಕಾಗಿದೆ. ಅದಕ್ಕಾಗಿ ನಾವು ಕರ್ನಾಟಕ ಬಂದ್ ಮಾಡಿ ಸರ್ಕಾರದ ಗಮನ ಸೆಳೆಯಬೇಕು. ಹೀಗಾಗಿ ಬಂದ್ ಮಾಡಲು ನಿರ್ಧರಿಸಿದ್ದೇವೆ. ನಾಳೆ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದರು. +ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ +ಕಾವೇರಿ ವಿವಾದದಲ್ಲಿ ನಮಗೆ ನಿರಂತರ ಅನ್ಯಾಯವಾಗುತ್ತಿದೆ. ಇದಕ್ಕಾಗಿ ನಾವೂ ಕೂಡ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ನಿನ್ನೆ ಹಲವು ಸಂಘಟನೆಗಳು ಬೆಂಗಳೂರು ಬಂದ್ ಮಾಡಲು ನಿರ್ಧರಿಸಿದ್ದಾರೆ. ಹೋರಾಟ ಬೆಂಗಳೂರಿಗೆ ಸೀಮಿತವಾಗಬಾರದು. ಈ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ಸಂಘಟನೆಗಳೊಂದಿಗೆ ಚರ್ಚಿಸಿ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. +ಸೆ. 29 ಕ್ಕೆ ರಾಜ್ಯ ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೊದಲಿನಿಂದಲೂ ಕಾವೇರಿ ವಿವಾದದಲ್ಲಿ ಅನ್ಯಾಯವಾಗುತ್ತಿದೆ, ಹೋರಾಟ ಕೂಡ ಅನಿವಾರ್ಯವಾಗಿದೆ. ಕನ್ನಡ ನಾಡು, ನುಡಿ, ಜಲದ ವಿಷಯದಲ್ಲಿ ಕನ್ನಡಪರ ಸಂಘಟನೆಗಳು ಹೋರಾಟ ಮಾಡಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಾವು ಬಂದ್‍ಗೆ ಮುಂದಾಗಿದ್ದೇವೆ ಎಂದು ಸಾ.ರಾ.ಗೋವಿಂದ್ ತಿಳಿಸಿದರು. \ No newline at end of file diff --git a/eesanje/url_46_343_2.txt b/eesanje/url_46_343_2.txt new file mode 100644 index 0000000000000000000000000000000000000000..370421cc0899d7337771951fad737ccead29c392 --- /dev/null +++ b/eesanje/url_46_343_2.txt @@ -0,0 +1,6 @@ +ಇದು ‘ಸಾರಾಯಿ ಗ್ಯಾರಂಟಿ’ ಸರ್ಕಾರ : ಬಸವರಾಜ ಬೊಮ್ಮಾಯಿ +ಬೆಂಗಳೂರು,ಸೆ.25- ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರೆಂಟಿ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಪಂಚಾಯಿತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ. +ಒಂದೆಡೆ ಗ್ಯಾರೆಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ ಎಂದು ಕಿಡಿಕಾರಿದ್ದಾರೆ. +ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಡಗಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು? ಎಂದು ಪ್ರಶ್ನಿಸಿದ್ದಾರೆ. +ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ +ಗ್ಯಾರೆಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_343_3.txt b/eesanje/url_46_343_3.txt new file mode 100644 index 0000000000000000000000000000000000000000..54ee21f6c7d0a5f12ce19229592fb63de266f13a --- /dev/null +++ b/eesanje/url_46_343_3.txt @@ -0,0 +1,5 @@ +ಕಾವೇರಿ ವಿವಾದದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ : ಸಿಎಂ +ಬೆಂಗಳೂರು, ಸೆ.25- ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶ ಇದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಒಳಗೊಂಡತೆ ಕಾವೇರಿ ವಿವಾದದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿತ್ತು. ಅಲ್ಲಿ ಚರ್ಚೆ ನಡೆಸಲಾಗಿದೆ. ಆ ವೇಳೆ ವಿರೋಧಪಕ್ಷಗಳು ತಮ್ಮ ರಾಜೀನಾಮೆ ಕೇಳಿರಲಿಲ್ಲ. ಈಗ ರಾಜಕೀಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ರಾಜ್ಯಸರ್ಕಾರ ಕಾವೇರಿ ವಿಷಯದಲ್ಲಿ ನಾಡಿನ ಹಿತರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದೆ. ಆದರೂ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಸಂಸ್ಥೆಗಳು ನೀಡಿದ್ದ ಆದೇಶಗಳನ್ನು ಪ್ರಶ್ನಿಸಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಅದನ್ನು ತಿರಸ್ಕರಿಸಲಾಗಿದೆ. ಅದೇ ರೀತಿ ತಮಿಳುನಾಡು 24 ಸಾವಿರ ಮತ್ತು 7,200 ಕ್ಯೂಸೆಕ್ಸ್ ನೀರು ಬಿಡುವಂತೆ ಮೇಲ್ಮನವಿ ಸಲ್ಲಿಸಿದ್ದರು. ಅದನ್ನೂ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. +ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್ +ಸೆ. 26 ರಂದು ಸುಪ್ರೀಂಕೋರ್ಟ್‍ನಲ್ಲಿ ಮತ್ತೊಮ್ಮೆ ಕಾವೇರಿ ವಿಚಾರ ಚರ್ಚೆಗೆ ಬರಲಿದೆ. ಅಲ್ಲಿ ನಾವು ಪ್ರಬಲವಾದ ವಾದ ಮಂಡಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶ ಇದೆ. ನಾವು ಅದನ್ನು ಹತ್ತಿಕ್ಕಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಲಾಯಿತು. diff --git a/eesanje/url_46_343_4.txt b/eesanje/url_46_343_4.txt new file mode 100644 index 0000000000000000000000000000000000000000..ab50320ad48ce2c4d784d54de6de492bbcaa7c88 --- /dev/null +++ b/eesanje/url_46_343_4.txt @@ -0,0 +1,6 @@ +ಬಂದ್‍ಗೆ ಬೆಂಬಲಿಸುವುದು ಸಾರಿಗೆ ಒಕ್ಕೂಟಗಳಿಗೆ ಬಿಟ್ಟಿದ್ದು : ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು, ಸೆ.25- ನಾಡಿನ ನೆಲ, ಜಲ, ಭಾಷೆ ವಿಷಯ ಬಂದಾಗ ಸಂಘಸಂಸ್ಥೆಗಳು ಬಂದ್ ಮಾಡುವುದು ಸಹಜ ಪ್ರಕ್ರಿಯೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಬಂದ್‍ಗೆ ಬೆಂಬಲ ನೀಡುವುದು ಅಥವಾ ನೀಡದೇ ಇರುವ ಬಗ್ಗೆ ಸಾರಿಗೆ ನಿಗಮಗಳ ಒಕ್ಕೂಟಗಳು ನಿರ್ಧಾರ ತೆಗೆದುಕೊಳ್ಳಲಿವೆ. ಈ ವಿಷಯದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು. +ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಸತ್ಯಾಂಶ ಗೊತ್ತಿದ್ದರೂ ಟೀಕೆ ಮಾಡುತ್ತಿದ್ದಾರೆ. ಮಳೆ ಬರದೇ ಇರುವುದು ಪ್ರಕೃತಿಯ ವಿಕೋಪ. ಅದಕ್ಕೂ, ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಕಾವೇರಿ ನ್ಯಾಯಾೀಧಿಕರಣದ ತೀರ್ಪಿನ ಪ್ರಕಾರ, ತಮಿಳುನಾಡಿಗೆ 100 ಟಿಎಂಸಿ ಗೂ ಹೆಚ್ಚು ನೀರನ್ನು ಹರಿಸಬಹುದಿತ್ತು. ಆದರೆ ಮಳೆ ಕೊರತೆಯಿಂದಾಗಿ ನೀರು ಬಿಡಲಾಗಿಲ್ಲ. +ನಮ್ಮ ಜಲಾಶಯಗಳಲ್ಲಿ ನೀರಿಲ್ಲ ಎಂಬುದು ಕಾವೇರಿ ನೀರು ನಿಯಂತ್ರಣಾ ಸಮಿತಿ, ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ಇದ್ದರೂ ತಮಿಳುನಾಡಿಗೆ ನೀರು ಬಿಡಿ ಎಂದು ತೀರ್ಪು ನೀಡುತ್ತಿವೆ. ಸುಪ್ರೀಂಕೋರ್ಟ್ ಕೂಡ ಇದೇ ತೀರ್ಪನ್ನು ಅನುಮೋದಿಸುತ್ತದೆ. +ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಸಂಧಾನ ಸಭೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_343_5.txt b/eesanje/url_46_343_5.txt new file mode 100644 index 0000000000000000000000000000000000000000..205b987705d73ee24f79a321c3fcc4489da74a25 --- /dev/null +++ b/eesanje/url_46_343_5.txt @@ -0,0 +1,5 @@ +ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ +ಮಂಡ್ಯ, ಸೆ.25- ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಗಳು ಜೋರಾಗಿದ್ದು, ಇಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಯಲಾಗಿದೆ. ನೂರಾರು ಮಂದಿ ರೈತರು ಏಕಾಏಕಿ ಸಂಜಯ್ ವೃತ್ತದಲ್ಲಿ ಜಮಾಯಿಸಿ ಹೆದ್ದಾರಿಯಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದು, ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ನೀರು ಹರಿಸುವುದನ್ನು ನಿಲ್ಲಿಸಿ ದಿಟ್ಟ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು. +ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಗೆ ಇಳಿದು ಅರೆಬೆತ್ತಲೆ ಪ್ರತಿಭಟನೆ ನಡೆದರೆ, ಮದ್ದೂರು, ಮಳವಳ್ಳಿ ಸೇರಿದಂತೆ ವಿವಿಧೆಡೆ ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ಬೆಂಗಳೂರು-ಮೈಸೂರು ರಸ್ತೆ ತಡೆದಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ರೈತರನ್ನು ಸಮಾಧಾನಪಡಿಸಲು ಹರಸಾಹಸಪಟ್ಟರು. +ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ +ರೈತರ ಭಾವನೆ ಕಡೆಗಣಿಸಿ ಕೆಣಕಲಾಗುತ್ತಿದೆ. ಇದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮಂಡ್ಯ ರೈತರು ಬೆಂಬಲ ನೀಡಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಫಲತೆಯಿಂದ ಈ ಸಂಕಷ್ಟ ಎದುರಾಗಿದೆ ಎಂದು ದೂರಿದ್ದಾರೆ. \ No newline at end of file diff --git a/eesanje/url_46_343_6.txt b/eesanje/url_46_343_6.txt new file mode 100644 index 0000000000000000000000000000000000000000..6b72b180afd01028f6237c652c19ddb4e8b9ee7a --- /dev/null +++ b/eesanje/url_46_343_6.txt @@ -0,0 +1,12 @@ +ಮೋಡ ಬಿತ್ತನೆ ಕುರಿತಂತೆ ಚರ್ಚೆ : ಡಿಸಿಎಂ ಡಿಕೆಶಿ +ಬೆಂಗಳೂರು,ಸೆ.25- ಮಳೆ ಕೊರತೆಯಿಂದಾಗಿ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಆತಂಕದ ಪರಿಸ್ಥಿತಿಯನ್ನು ಮನಗಂಡು ಮೋಡ ಬಿತ್ತನೆ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದಾಗಿ ಸಾಕಷ್ಟು ಸಮಸ್ಯೆಗಳಾಗಿವೆ. ಕಾಲ ಮೀರಿದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮವಾಗಬಹುದು. ಈ ನಿಟ್ಟಿನಲ್ಲಿ ಮೋಡ ಬಿತ್ತನೆ ಬಗ್ಗೆ ಚರ್ಚೆಗಳು ನಡೆದಿವೆ. +ಈಗಾಗಲೇ ಎರಡು-ಮೂರು ಕಡೆ ಸ್ಥಳ ಗುರುತಿಸಲಾಗಿದೆ. ಮೋಡ ಬಿತ್ತನೆಯ ಬಗ್ಗೆ ನಾನಾ ರೀತಿಯ ಅಭಿಪ್ರಾಯಗಳು ಕೂಡ ಕೇಳಿಬಂದಿವೆ. ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ಕಾವೇರಿಯ ನದಿ ವಿವಾದ ತೀವ್ರವಾಗಿದೆ. ನಿನ್ನೆ ಮತ್ತು ಇಂದು ಬೆಂಗಳೂರು ಸುತ್ತಮುತ್ತ ಆಗಿರುವ ಮಳೆಯ ನೀರು ತಮಿಳುನಾಡಿನತ್ತ ಹರಿದುಹೋಗಿದೆ. ಕಾವೇರಿ ನದಿಪಾತ್ರದಲ್ಲಿನ ಜಲಾಶಯಗಳಿಗೆ ಒಳಹರಿವು ಸುಧಾರಣೆಗೊಂಡಿದೆ. +ಬಂದ್‍ಗೆ ಆಕ್ಷೇಪಣೆಯಿಲ್ಲ :ಕಾವೇರಿ ನದಿ ವಿಷಯದಲ್ಲಿ ಪ್ರತಿಭಟನೆ ನಡೆಸಲು, ಬಂದ್ ಮಾಡಲು ನಮ್ಮ ಆಕ್ಷೇಪಣೆಗಳಿಲ್ಲ. ನಾಡಿನ ಹಿತಾಸಕ್ತಿ ವಿಷಯವಾಗಿ ನಾವು ಎಲ್ಲಾ ರೀತಿಯ ಸಹಕಾರ ಕೊಡುತ್ತೇವೆ. ನೆಲ, ಜಲ, ಭಾಷೆ ವಿಷಯವಾಗಿ ಪಕ್ಷಾತೀತವಾಗಿ ನಾವು ಒಟ್ಟಾಗಬೇಕಿದೆ. ಹೀಗಾಗಿ ನಾವು ಹೋರಾಟಕ್ಕೆ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಶಾಂತಿ ಕಾಪಾಡಿಕೊಳ್ಳಬೇಕಿದೆ. ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. +ಯಾವುದೇ ಪಕ್ಷವಾದರೂ ಹೋರಾಟ ಮಾಡಲಿ, ನಾವು ಬೇಡ ಎನ್ನುವುದಿಲ್ಲ. ನಮ್ಮ ಪಕ್ಷದಲ್ಲಿ ಕೆಲವರು ಕರೆ ಮಾಡಿ ಹೋರಾಟ ಮಾಡುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದಕ್ಕೂ ಬೇಡ ಎನ್ನುವುದಿಲ್ಲ. ಆದರೆ ಕಾವೇರಿ ವಿವಾದ ಕುರಿತಂತೆ ಹೈಕೋರ್ಟ್, ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಇದೆ. ನಮ್ಮ ಹೋರಾಟದಿಂದ ತೀರ್ಪಿಗೆ ತೊಂದರೆಯಾಗಬಾರದು. ಪ್ರಚಾರಕ್ಕಾಗಿ ಹೋರಾಟ ಮಾಡುವುದು ಸರಿಯಲ್ಲ ಎಂದು ತಿಳಿಸಿದರು. +ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ +ಹೋರಾಟಗಳಿಂದ ಕಾನೂನಾತ್ಮಕವಾಗಿ ತೊಂದರೆಯಾಗಲಿದೆಯೇ ಎಂಬ ಬಗ್ಗೆ ನಾನು ಪ್ರತಿಕ್ರಿಯಿಸಲಾಗುವುದಿಲ್ಲ. ಇತ್ತ ಮಂತ್ರಿಯಾಗಿ ಕಾನೂನಿಗೂ ಗೌರವ ಕೊಡಬೇಕು, ಜನರನ್ನೂ ಉಳಿಸಿಕೊಳ್ಳಬೇಕು. ಇದು ನನ್ನ ಮತ್ತು ಸರ್ಕಾರದ ಪರಿಸ್ಥಿತಿಯಾಗಿದೆ. ಏನೇ ಆದರೂ ರಾಜ್ಯದ ಹಿತಾಸಕ್ತಿ ಕಾಪಾಡಿಕೊಳ್ಳಬೇಕಿದೆ ಎಂದರು. ಸರ್ಕಾರ ಜನರ ಜೊತೆಗಿದೆ. ಬಂದ್‍ಗೆ ಜನ ಸಹಕಾರ ಕೊಡದೇ ಇದ್ದರೆ ಮರ್ಯಾದೆ ಹೋಗುತ್ತದೆ. ಸಂಘಟನೆಗಳ ನಡುವೆಯೇ ಹಲವಾರು ಭಿನ್ನಾಭಿಪ್ರಾಯಗಳು ಕಂಡುಬರುತ್ತಿವೆ ಎಂದು ಪ್ರತಿಕ್ರಿಯಿಸಿದರು. +ಜೆಡಿಎಸ್ ನಿಂದ ಹಲವರ ವಲಸೆ :ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಯ ವಿವಾದಗಳ ಬಗ್ಗೆ ನಾನು ಚರ್ಚೆ ಮಾಡಲು ಹೋಗುವುದಿಲ್ಲ. ಅದರೆ ಜೆಡಿಎಸ್, ಬಿಜೆಪಿಯ ಮೈತ್ರಿಯ ಬಳಿಕ ಜೆಡಿಎಸ್‍ನಲ್ಲಿರುವ ಅಲ್ಪಸಂಖ್ಯಾತರು ಸೇರಿದಂತೆ ಹಲವಾರು ನಾಯಕರು ಅಸಮಾಧಾನಗೊಂಡಿದ್ದಾರೆ. ನಮ್ಮ ಜೊತೆ ಚರ್ಚೆ ಮಾಡುತ್ತಿದ್ದಾರೆ. +ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಬರುವ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಲ್ಲಿ ಸೇರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಚುನಾವಣೆಯಲ್ಲಿ ಸ್ರ್ಪಧಿಸಿ ಸೋತವರು, ಗೆದ್ದವರನ್ನು ಸೇರಿಸಿಕೊಳ್ಳಲು ಉನ್ನತ ಮಟ್ಟದಲ್ಲಿ ಚರ್ಚೆಗಳಾಗುತ್ತಿವೆ. ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಅಡ್ಡಿಯಾಗುವ ಬಗ್ಗೆಯೂ ನಮಗೆ ಅರಿವಿದೆ. ಮುಖ್ಯಮಂತ್ರಿ ಹಾಗೂ ಸಂಪುಟದ ಸಹದ್ಯೋಗಿಗಳ ಜೊತೆಗೆ ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಹೇಳಿದರು. +ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ +ಜನವರಿಗೂ ಮೊದಲೇ ಪಟ್ಟಿ ಬಿಡುಗಡೆ :ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆಗೆ ಅಭಿಪ್ರಾಯ ಕ್ರೂಢೀಕರಿಸಿ, ವರದಿ ನೀಡಲು ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಎಂ.ಬಿ.ಪಾಟೀಲ್ ವಿದೇಶದಲ್ಲಿದ್ದಾರೆ. ಕೆ.ಜೆ.ಜಾರ್ಜ್ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿದ್ದಾರೆ. ಈ ರೀತಿ ತಾಂತ್ರಿಕ ಸಮಸ್ಯೆಯಿರುವ ಎರಡು-ಮೂರು ಮಂದಿ ಸಚಿವರನ್ನು ಹೊರತುಪಡಿಸಿದರೆ ಉಳಿದ ಎಲ್ಲರನ್ನೂ ವೀಕ್ಷಕರನ್ನಾಗಿ ನೇಮಿಸಲಾಗಿದೆ. +ಅವರು ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸಿ ಚುನಾವಣೆಯಲ್ಲಿ ಸ್ರ್ಪಧಿಸಲು ಆಕಾಂಕ್ಷಿಗಳಾಗಿರುವ ಎರಡು-ಮೂರು ಮಂದಿಯ ಹೆಸರುಗಳನ್ನು ಎಂಟು-ಹತ್ತು ದಿನಗಳಲ್ಲಿ ಕೆಪಿಸಿಸಿಗೆ ವರದಿ ನೀಡಲಿದ್ದಾರೆ. ಹತ್ತು ದಿನಗಳೊಳಗಾಗಿ ಇದನ್ನು ಕ್ರೂಢೀಕರಿಸಿ ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಜನವರಿಗೂ ಮೊದಲೇ ಲೋಕಸಭೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಘೋಷಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_343_7.txt b/eesanje/url_46_343_7.txt new file mode 100644 index 0000000000000000000000000000000000000000..29ecb9b800cee3f8d16fac603ca9f9ad911fcd5d --- /dev/null +++ b/eesanje/url_46_343_7.txt @@ -0,0 +1,7 @@ +ಬೆಂಗಳೂರು ಬಂದ್‌ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಫೆಡರೇಷನ್ ಬೆಂಬಲ +ಬೆಂಗಳೂರು,ಸೆ.25- ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ನಾಳೆ ನೀಡಿರುವ ಬೆಂಗಳೂರು ಬಂದ್ ಕರೆಗೆ ಕೆಎಸ್ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. +ಆದರೆ, ದೈನಂದಿನ ಬಸ್ ಸೌಲಭ್ಯದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಂದಿನಂತೆ ನಾಳೆಯೂ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು ರಾಮನಗರ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುವುದಿಲ್ಲ. ಯಥಾರೀತಿ ಬಸ್ ಸೌಲಭ್ಯವನ್ನು ಪ್ರಯಾಣಿಕರಿಗೆ ಕಲ್ಪಿಸುವುದಾಗಿ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಮೂಲಗಳು ತಿಳಿಸಿವೆ. +ಅನ್ಯಾಯದ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ : ಕುರುಬೂರು ಶಾಂತಕುಮಾರ್ +ಆದರೆ ಫೆಡರೇಶನ್ ಅಧ್ಯಕ್ಷ ಎಚ್.ವಿ.ಅನಂತಸುಬ್ಬರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಭಾಸ್ಕರ್ ಡಿ.ಎ. ಅವರು ಪತ್ರಿಕಾ ಪ್ರಕಟಣೆ ನೀಡಿ, ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಎಂಟಿಸಿಯ ಎಲ್ಲಾ ಘಟಕಗಳಲ್ಲಿಯೂ ಯಾವುದೇ ಬಸ್‍ಗಳನ್ನು ಘಟಕದಿಂದ ಹೊರತೆಗೆಯದೆ ಬಂದ್‍ಗೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ನೌಕರರಿಗೂ ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ. +ನಮ್ಮ ರಾಜ್ಯದ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗೆ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಈಗಾಗಲೇ ವಿವಿಧ ಸಂಘಟನೆಗಳು ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿವೆ. +ಹೀಗಾಗಿ ಬಂದ್ ಹಿನ್ನೆಲೆಯಲ್ಲಿ ನಾಳೆ ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಾಸವಾದರೂ ಅಚ್ಚರಿಪಡಬೇಕಿಲ್ಲ. \ No newline at end of file diff --git a/eesanje/url_46_343_8.txt b/eesanje/url_46_343_8.txt new file mode 100644 index 0000000000000000000000000000000000000000..687c18eaa0b3746cd70f0f8be1534e66ad3e9e9a --- /dev/null +++ b/eesanje/url_46_343_8.txt @@ -0,0 +1,5 @@ +ಕರ್ನಾಟಕ ಬಂದ್‍ಗೆ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ : ಶರವಣ +ಬೆಂಗಳೂರು, ಸೆ.25- ಕಾವೇರಿ ವಿವಾದದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಬೆಂಬಲ ನೀಡಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷರ ಮತ್ತು ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ ತಿಳಿಸಿದ್ದಾರೆ. +ವ್ಯಕ್ತಿಗತವಾಗಿ ತಾವು ಹಾಗೂ ತಮ್ಮ ಸಂಘಟನೆ ಜನರ ಪರವಾಗಿದ್ದು, ರಾಜ್ಯಕ್ಕೆ ಆಗಿರುವ ಅನ್ಯಾಯ ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. +ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ +ಜ್ಯುವೆಲೇರಿ ಅಸೋಸಿಯೇಶನ್ ನಾಡಿನ ಹಿತವನ್ನೆ ಬಯಸುತ್ತದೆ. ನಾಡು, ನುಡಿಗೆ ಬದ್ಧವಾಗಿದೆ. ನೆಲ ಜಲಕ್ಕೆ ಸಂಕಷ್ಟ ಎದುರಾದಾಗ ಜನರ ಪರ ದನಿಗೂಡಿಸುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_343_9.txt b/eesanje/url_46_343_9.txt new file mode 100644 index 0000000000000000000000000000000000000000..0eff2fbd392b957d90e732c130b384accb3864c4 --- /dev/null +++ b/eesanje/url_46_343_9.txt @@ -0,0 +1,8 @@ +ಪಿಯುಸಿ ಪರೀಕ್ಷೆಗಳ ಮೌಲ್ಯಮಾಪಕರ ಸಂಭಾವನೆ ಬಿಡುಗಡೆಗೆ ಆಗ್ರಹ +ಬೆಂಗಳೂರು, ಸೆ.25- ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಪೂರಕ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆಗಳನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯನ್ನು ಶಿಕ್ಷಕರ ಮತ್ತು ಆಡಳಿತ ಮಂಡಳಿ ಫೋರಂ ಕರ್ನಾಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಒತ್ತಾಯಿಸಿದ್ದಾರೆ. +ಈ ಸಂಬಂಧ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಉಪನ್ಯಾಸಕರ ಸಂಭಾವನೆ ಹಾಗೂ ಭತ್ಯೆ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸಿದರೆ ಅಕ್ಟೋಬರ್ 3ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಮುಂದೆ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ. +ಕಳೆದ ಮಾರ್ಚ್ – ಏಪ್ರಿಲ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್‍ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್‍ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. +ಮಹಿಳಾ ಮೀಸಲಾತಿ ಲೋಪದ ವಿರುದ್ಧ ಕಾಂಗ್ರೆಸ್‍ನಿಂದ ಸರಣಿ ಪತ್ರಿಕಾಗೋಷ್ಠಿ +ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಮಂಡಲಿಯ ಹಿರಿಮೆ ಮತ್ತು ಯಶಸ್ಸಿಗೆ ಕಾರಣೀಭೂತರಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳ ಶೀಘ್ರ ಬಿಡುಗಡೆಗೂ ಇದೇ ಇಚ್ಛಾಶಕ್ತಿ ಪ್ರದರ್ಶಿಸಬೇಕಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ. +ಕೆಲವು ವರ್ಷಗಳ ಹಿಂದೆ ಮೌಲ್ಯಮಾಪನದ ಕಡೆಯ ದಿನದಂದೆ ಚೆಕ್ ಮೂಲಕ ಉಪನ್ಯಾಸಕರಿಗೆ ಸಂಭಾವನೆ ಮತ್ತು ಭತ್ಯೆಗಳನ್ನು ವಿತರಿಸಲಾಗುತ್ತಿತ್ತು. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಪರೀಕ್ಷಾ ಶುಲ್ಕವನ್ನು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ ಉಪನ್ಯಾಸಕರಿಗೆ ವಿತರಿಸಲು ಏಕೆ ವಿಳಂಬ ಧೋರಣೆ ಎಂದಿದ್ದಾರೆ. +ವಿಶೇಷವಾಗಿ ಖಾಸಗಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರು ಮೌಲ್ಯಮಾಪನದ ಸಂಭಾವನೆ ಮತ್ತು ಭತ್ಯೆಗಳಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಅನೇಕರು ನನ್ನ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಇದು ಅವರ ಜೀವನ ನಿರ್ವಹಣೆಯ ಪ್ರಶ್ನೆಯೂ ಆಗಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_46_344_1.txt b/eesanje/url_46_344_1.txt new file mode 100644 index 0000000000000000000000000000000000000000..25834caa0f9eda311cce8e217e5c42072137e1dd --- /dev/null +++ b/eesanje/url_46_344_1.txt @@ -0,0 +1,11 @@ +ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 5 ದಿನ ಮಳೆ +ಬೆಂಗಳೂರು, ಸೆ.24- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ನೈರುತ್ಯ ಮುಂಗಾರು ಚೇತರಿಕೆಯಾಗಿರುವುದರಿಂದ ಈ ತಿಂಗಳ ಅಂತ್ಯದವರೆಗೂ ಮಳೆ ನಿರೀಕ್ಷಿಸಬಹುದು. +ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದರ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆ ಬರುವ ಸಂಭವಿದೆ. ವಾಯುಭಾರ ಕುಸಿತ ಪರಿಣಾಮದಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ತುಂತುರು ಇಲ್ಲವೆ, ಸಾಧಾರಣ ಮಳೆ ಆಗಾಗ್ಗೆ ಬರುವ ನಿರೀಕ್ಷೆ ಇದೆ. ಮಂಗಳವಾರದ ನಂತರ ದಕ್ಷಿಣ ಒಳನಾಡಿನಲ್ಲೂ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳಿದ್ದಾರೆ. +ಭಾರತೀಯ ಹವಾಮಾನ ಇಲಾಖೆಯೂ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯದ ಒಳನಾಡಿನಲ್ಲಿ ಭಾಗಶಃ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. +ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ +ನೀಗದ ಮಳೆ ಕೊರತೆ:ಆದರೂ ನೈರುತ್ಯ ಮುಂಗಾರಿನ ಅವ ಮುಗಿಯುತ್ತಾ ಬಂದಿದ್ದರೂ ರಾಜ್ಯದಲ್ಲಿ ಮಳೆ ಕೊರತೆಯು ಈತನಕ ನಿವಾರಣೆಯಾಗಿಲ್ಲ. ಆಗಸ್ಟ್ ನಲ್ಲಿ ಪ್ರಾರಂಭವಾದ ಮಳೆ ಕೊರತೆ ಸೆಪ್ಟೆಂಬರ್‍ನಲ್ಲೂ ಮುಂದುವರೆದಿದ್ದು, ಬರದ ತೀವ್ರತೆ ಹೆಚ್ಚತೊಡಗಿದೆ. ಇದರಿಂದ ಬಿತ್ತಿದ ಬೆಳೆ ಹಾನಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. +ರಾಜ್ಯದ ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ರಾಜ್ಯಾದ್ಯಂತ ವಾಡಿಕೆ ಪ್ರಮಾಣದ ಮಳೆಯಾಗುತ್ತಿಲ್ಲ. ಹೀಗಾಗಿ ಜಲಾಶಯಗಳಲ್ಲಿನ ಒಳಹರಿವು ಏರಿಕೆಯಾಗುತ್ತಿಲ್ಲ. ಕಳೆದ ವರ್ಷ ಅತಿವೃಷ್ಟಿಯಾಗಿದ್ದರೆ, ಈ ವರ್ಷ ಬರಪರಿಸ್ಥಿತಿ ಎದುರಿಸುವಂತಾಗಿದೆ. +ತಡವಾಗಿ ಆರಂಭವಾದ ಮುಂಗಾರು ಮಳೆಯು ಜೂನ್‍ನಲ್ಲಿ ಕೈಕೊಟ್ಟಿತ್ತು. ಆದರೆ, ಜುಲೈ ಸುಧಾರಿಸಿ ವಾಡಿಕೆಗಿಂತ ಹೆಚ್ಚು ಮಳೆಯಾಗಿ ನಿಟ್ಟುಸಿರು ಬಿಡುವಂತಾಗಿತ್ತು. ಆದರೆ, ಮತ್ತೆ ಆಗಸ್ಟ್‍ನಲ್ಲಿ ಮುಂಗಾರು ಮಳೆ ಕೈಕೊಟ್ಟು ಶತಮಾನದ ದಾಖಲೆ ಮುರಿಯುವಷ್ಟು ಮಳೆ ಕೊರತೆಯಾಗಿದೆ. ಇದರಿಂದ ರಾಜ್ಯ ಬೀಕರ ಬರಗಾಲ ಎದುರಿಸುವಂತಾಗಿದೆ. ಸೆಪ್ಟೆಂಬರ್‍ನಲ್ಲಿ ಮಳೆ ಚೇತರಿಸಿಕೊಳ್ಳಬಹುದೆಂಬ ನಿರೀಕ್ಷೆ ಹುಸಿಯಾಗಿದೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದ ಒಂದು ವಾರದಲ್ಲಿ ಮಳೆ ಕೊರತೆ ಪ್ರಮಾಣ ಹೆಚ್ಚಾಗಿದೆ. ವಾಡಿಕೆ ಪ್ರಮಾಣಕ್ಕಿಂತ ಶೇ.36ರಷ್ಟು ರಾಜ್ಯದಲ್ಲಿ ಮಳೆ ಕಡಿಮೆಯಾಗಿದೆ. ಅದೇ ರೀತಿ ಸೆಪ್ಟೆಂಬರ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.11 ಕಡಿಮೆ ಮಳೆಯಾಗಿದೆ. ಕೆಲವೆಡೆ ಕೊರತೆ ಪ್ರಮಾಣ ಇನ್ನೂ ಹೆಚ್ಚಿದೆ. +ಮುಂಗಾರು ಹಂಗಾಮಿನ ಅವಯ ಜೂನ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ಶೇ.26ರಷ್ಟು ಮಳೆ ಕೊರತೆ ಇದೆ. ಜನವರಿಯಿಂದ ನಿನ್ನೆವರೆಗೆ ಮಳೆ ಪ್ರಮಾಣದಲ್ಲೂ ವಾಡಿಕೆಗಿಂತ ಶೇ. 26ರಷ್ಟು ಕೊರತೆ ಕಂಡುಬಂದಿದೆ. ಅಕ್ಟೋಬರ್‍ನಿಂದ ಹಿಂಗಾರು ಮಳೆ ಆರಂಭವಾಗುವುದು ರೂಢಿ. ನೈರುತ್ಯ ಮುಂಗಾರು ಮಾರುತಗಳು ಮರಳಿದ ಬಳಿಕ ಈಶಾನ್ಯ ಹಿಂಗಾರಿನ ಮಾರುತಗಳು ಪ್ರಾರಂಭವಾಗುತ್ತವೆ. ಹಿಂಗಾರಿನ ಆರಂಭದ ಮುನ್ಸೂಚನೆಯೂ ಅಶಾದಾಯಕವಾಗಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. \ No newline at end of file diff --git a/eesanje/url_46_344_2.txt b/eesanje/url_46_344_2.txt new file mode 100644 index 0000000000000000000000000000000000000000..9027422bbcba01819baabb0e4c933c0f45baeeb0 --- /dev/null +++ b/eesanje/url_46_344_2.txt @@ -0,0 +1,10 @@ +ಯಡಿಯೂರಪ್ಪನವರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ +ಬೆಂಗಳೂರು,ಸೆ.24- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಹಾಗೂ ನಟ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ನಿಖಿಲ್ ಕುಮಾರಸ್ವಾಮಿ ಅವರು ಸೌಹಾರ್ದಯುತ ಭೇಟಿ ಮಾಡಿದರು. +ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತವೆ ಎಂದರು. +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುತ್ತವೆ. ಮಂಡ್ಯ ಲೋಕಸಭಾ ಚುನಾವಣೆ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯವಲ್ಲ. ಅಲ್ಲಿರುವ ಮಾಜಿ ಶಾಸಕರು, ನಾಯಕರು ತೀರ್ಮಾನ ಮಾಡುತ್ತಾರೆ. ಮಂಡ್ಯದಲ್ಲಿ ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಕೊರತೆಯಿಲ್ಲ. ಅನೇಕ ನಾಯಕರುಗಳಿದ್ದಾರೆ ಎಂದು ಅವರು ತಿಳಿಸಿದರು. +ಮದ್ಯಭಾಗ್ಯ ನೀಡಿ ಕರ್ನಾಟಕವನ್ನು ‘ಕುಡುಕರ ತೋಟ’ ಮಾಡುತ್ತಿದೆ ಧನಪಿಶಾಚಿ ಸರ್ಕಾರ : ಹೆಚ್ಡಿಕೆ ಆಕ್ರೋಶ +ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯದ ಹಿತ ಕಾಪಾಡುವ ದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿಯ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರ ಕೊಡುಗೆ ರಾಜ್ಯಕ್ಕೆ ಸಾಕಷ್ಟಿದೆ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕøತಿ. ಹಾಗಾಗಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರುವುದಾಗಿ ಅವರು ಹೇಳಿದರು. +ಬಿಜೆಪಿ ಪಕ್ಷವು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪಕ್ಷ ಎಂದು ಭಾವಿಸಿದ್ದೇನೆ. ರಾಜ್ಯದ ಬಿಜೆಪಿ ನಾಯಕರನ್ನು ಕಡೆಗಣಿಸುವುದಿಲ್ಲ ಎಂಬ ವಿಶ್ವಾಸವಿದೆ. ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು. +ಜೆಡಿಎಸ್ ಪ್ರಾದೇಶಿಕ ಪಕ್ಷವನ್ನು ಅನೇಕರು ಶ್ರಮವಹಿಸಿ ಕಟ್ಟಿದ್ದಾರೆ. ನಮ್ಮ ನಾಯಕರು ಪಕ್ಷ ಮುನ್ನಡೆಸಿದ್ದಾರೆ. ಯುವಕರು ಪಕ್ಷದ ಜವಾಬ್ದಾರಿ ತೆಗೆದುಕೊಂಡು ಇನ್ನಷ್ಟು ಸಂಘಟನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ ಎಂದು ಅವರು ಹೇಳಿದರು +ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಹೊಳೆನರಸೀಪುರದಲ್ಲಿ ಕಾರ್ಯಕ್ರಮವಿದ್ದ ಹಿನ್ನೆಲೆಯಲ್ಲಿ ಅವರು ದೆಹಲಿಯಿಂದ ಮುಂಚಿತವಾಗಿ ರಾಜ್ಯಕ್ಕೆ ಮರಳಿದರು. ಆದರೆ, ಮೊದಲ ದಿನದ ಉಭಯ ಪಕ್ಷಗಳ ನಾಯಕರ ಮಾತುಕತೆಯ ಸಂದರ್ಭದಲ್ಲಿ ರೇವಣ್ಣ ಕೂಡ ಇದ್ದರು. ಎಲ್ಲರ ಸಮ್ಮುಖದಲ್ಲೆ ಮೈತ್ರಿಯ ಮುಂದಿನ ತೀರ್ಮಾನಗಳ ಬಗ್ಗೆ ಚರ್ಚೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. +ಬೆಂಗಳೂರು ಬಂದ್ ಗೆ ನಮ್ಮ ಬೆಂಬಲವಿರಲಿದೆ. ನಿನ್ನೆ ಮಂಡ್ಯ ಬಂದ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ರೈತ ಬಂಧುಗಳಿಗೆ ನ್ಯಾಯ ಒದಗಿಸಿ ಕೊಡುವುದರಲ್ಲಿ ನಾವು ಯಾವಾಗಲೂ ಜೊತೆಗಿರುತ್ತೇವೆ ಎಂದು ಅವರು ಹೇಳಿದರು. ಅಲ್ಪಸಂಖ್ಯಾತ ನಾಯಕರು ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. \ No newline at end of file diff --git a/eesanje/url_46_344_3.txt b/eesanje/url_46_344_3.txt new file mode 100644 index 0000000000000000000000000000000000000000..ed594baa6ddda903ceccfa726fd66afcdff24836 --- /dev/null +++ b/eesanje/url_46_344_3.txt @@ -0,0 +1,6 @@ +ವಿಮಾನ ನಿಲ್ದಾಣ ಮಾದರಿಯಲ್ಲಿ ವಿಶ್ವದರ್ಜೆಯ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಭಿವೃದ್ಧಿ : ಜೋಶಿ +ಹುಬ್ಬಳ್ಳಿ, ಸೆ.24- ನಗರದ ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣವನ್ನು ವಿಶ್ವದರ್ಜೆಯ ರೈಲ್ವೆ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. +ಶ್ರೀಸಿದ್ಧಾರೂಢ ಸ್ವಾಮಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ 2.08 ಕೋಟಿ ರೂ. ವೆಚ್ಚದಲ್ಲಿ ಅಳವಡಿಸಿದ ಎರಡು ಎಸ್ಕಲೇಟರ್‍ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಕೆಲವು ವರ್ಷಗಳ ಹಿಂದೆ ಇಲ್ಲಿ ಎರಡು ಪ್ಲಾಟ್ ಫಾರಂ ಇದ್ದವು. ಇಂದು 8 ಪ್ಲಾಟ್ ಫಾರಂಗಳನ್ನು ಕಲ್ಪಿಸಲಾಗಿದೆ ಎಂದರು. +ಬಿಜೆಪಿ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಉನ್ನತೀಕರಣಕ್ಕೆ ನಿರಂತರವಾಗಿ ಪ್ರಯತ್ನಿಸಿದ ಪರಿಣಾಮ ಪ್ರಯಾಣಿಕರಿಗೆ ಸಾಕಷ್ಟು ಸೌಲಭ್ಯಗಳು ಕಲ್ಪಿಸಿದಂತಾಗಿದೆ ಎಂದು ಹೇಳಿದರು. +ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಭೇಟೆ ಆರಂಭ, ಏರ್ ರೈಫಲ್ ಶೂಟಿಂಗ್‍ನಲ್ಲಿ ಬೆಳ್ಳಿ +ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮೇಯರ್ ವೀಣಾ ಬರದ್ವಾಡ, ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ರಾಜಣ್ಣ ಕೊರವಿ, ಶಿವು ಮೆಣಸಿನಕಾಯಿ, ಬಿಜೆಪಿ ಮುಖಂಡ ಪ್ರಭು ನವಲಗುಂದಮಠ, ರಂಗಾಬದ್ದಿ, ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಸಂತೋಷ ಹೆಗಡೆ, ಹರಿತಾ ಎಸ್, ಇತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_344_4.txt b/eesanje/url_46_344_4.txt new file mode 100644 index 0000000000000000000000000000000000000000..82e8c8ac5ecec418383be97c574e4fbc792f9286 --- /dev/null +++ b/eesanje/url_46_344_4.txt @@ -0,0 +1,8 @@ +ಸಂಶಯಕ್ಕೆ ಎಡೆ ಮಾಡಿಕೊಟ್ಟ ತೇಜಸ್ವಿನಿ ಅನಂತಕುಮಾರ್ ಹೇಳಿಕೆ +ಬೆಂಗಳೂರು,ಸೆ.23- ಕರ್ನಾಟಕದಲ್ಲಿ ಬಿಜೆಪಿ ಕಟ್ಟಿರುವ ಕ್ರೆಡಿಟ್ನ್ನು ಪೂರ್ತಿ ಅನಂತಕುಮಾರ್ ಅವರಿಗೆ ನೀಡಿದ್ದಾರೆ. ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಬಾಗಿಲು ತೆರೆದಿದ್ದು ಅನಂತಕುಮಾರ್ ಎಂದು ತೇಜಸ್ವಿನಿ ಅನಂತ್ಕುಮಾರ್ ಹೇಳಿರುವುದು ಸಾಕಷ್ಟು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. +ಬಿಜೆಪಿ ಹಿರಿಯ ನಾಯಕ ಕೇಂದ್ರ ಮಾಜಿ ಸಚಿವ ದಿ.ಅನಂತಕುಮಾರ್ ಜನ್ಮದಿನದ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲನ್ನು ತೆರೆದಿದ್ದು ಅನಂತಕುಮಾರ್, ಬಿಜೆಪಿಯ ಸಿದ್ಧಾಂತವನ್ನು ಕರ್ನಾಟಕದಾದ್ಯಂತ ಪಸರಿಸಿದ್ದು ಅನಂತಕುಮಾರ್ ಎಂದಿದ್ದಾರೆ. +ಅವರ ನಾಯಕತ್ವದಲ್ಲಿ ಪಕ್ಷದ ಮತ ಹಂಚಿಕೆ ಪ್ರಮಾಣ ಶೇ.2ರಿಂದ ಶೇ.25ಕ್ಕೆ ಏರಿತು. ಜೊತೆಗೆ ಬಿಜೆಪಿ ಶಾಸಕರ ಸಂಖ್ಯೆ ಒಂದರಿಂದ 40ಕ್ಕೆ ಏರಿತು. ಮತ್ತು ಕೇವಲ 5 ವರ್ಷಗಳಲ್ಲಿ 4 ಬಿಜೆಪಿ ಸಂಸದರು ರಾಜ್ಯದಿಂದ ಆಯ್ಕೆಯಾದರು. ಇದರಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ.ಅಡ್ವಾಣಿ ಅವರು ಅನಂತಕುಮಾರ್ ಅವರನ್ನು ಡೈನಾಮಿಕ್ ನಾಯಕರೆಂದು ಗುರುತಿಸಿದರು ಎಂದು ಹೇಳಿದ್ದಾರೆ. +ಈ ಮೂಲಕ ಕರ್ನಾಟಕ ಬಿಜೆಪಿ ಕಟ್ಟುವಲ್ಲಿ ಅನಂತಕುಮಾರ್ ಅವರ ಪಾತ್ರವನ್ನು ಬಿಜೆಪಿ ನಾಯಕರಿಗೆ ತೇಜಸ್ವಿನಿ ಅನಂತಕುಮಾರ್ ನೆನಪಿಸಿದ್ದಾರೆ. ಅದಲ್ಲದೇ ತಮ್ಮ ಟ್ವಿಟರ್ನಲ್ಲಿ ಅನಂತಕುಮಾರ್ ಅವರ ಎರಡು ಹಳೇ ಪೊಟೋಗಳನ್ನು ಹಂಚಿಕೊಂಡಿದ್ದು, ಅದರಲ್ಲಿ ಒಂದು ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರೆ, ಮತ್ತೊಂದರಲ್ಲಿ ಬಿಎಸ್ ಯಡಿಯೂರಪ್ಪ ಜೊತೆ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿರುವ ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. +ಈ ಹಿಂದೆಯೂ ಅನಂತಕುಮಾರ್ ಅವರ ಪುತ್ರಿ ವಿಜೇತ ಅನಂತಕುಮಾರ್ ಕೂಡ ಟ್ವೀಟ್ ಮಾಡಿ ತಮ್ಮ ತಂದೆಯನ್ನು ಮರೆತ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದರು. ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. +ಚುನಾವಣೆ ಹತ್ತಿರವಾದಂತೆಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ಸೇರಿ ಅನೇಕ ನಾಯಕರು ಉದ್ಘಾಟಿಸುತ್ತಿದ್ದಾರೆ. ಆದರೆ, ಯಾವುದೇ ಯೋಜನೆಗೆ ಅನಂತಕುಮಾರ್ ಹೆಸರನ್ನು ನಾಮಕರಣ ಮಾಡುವುದಾಗಲಿ ಮಾಡಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನು ಪ್ರಸ್ತಾಪ ಮಾಡಿ ಕೇಂದ್ರದ ಒಪ್ಪಿಗೆ ಪಡೆದವರು ಅನಂತಕುಮಾರ್. +ಆದರೂ ಆ ಕಾರ್ಯಕ್ರಮದಲ್ಲಿಯೂ ಅವರನ್ನು ಸ್ಮರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಬೆಂಗಳೂರಿನ ಮೆಟ್ರೋ ಯೋಜನೆಗೆ ಅನಂತಕುಮಾರ್ ಅವರ ಕೊಡುಗೆ ಅಪಾರವಾಗಿದ್ದರೂ ಮೆಟ್ರೋ ಉದ್ಘಾಟನೆಯಾಗಲಿ ಅಥವಾ ಬೆಂಗಳೂರು ಸಂಬಂತ ಯಾವುದೇ ಕಾರ್ಯಕ್ರಮದಲ್ಲಿ ಅನಂತಕುಮಾರ್ ಅವರನ್ನು ಸ್ಮರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. \ No newline at end of file diff --git a/eesanje/url_46_344_5.txt b/eesanje/url_46_344_5.txt new file mode 100644 index 0000000000000000000000000000000000000000..559e82f50b4f5c3b8f158977c38f7fe347156173 --- /dev/null +++ b/eesanje/url_46_344_5.txt @@ -0,0 +1,7 @@ +ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ದೀರ್ಘಾವಧಿವರೆಗೆ ಮುಂದುವರೆಯಲಿದೆ : ಹೆಚ್ಡಿಕೆ +ಬೆಂಗಳೂರು,ಸೆ.23- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಕೇವಲ ಲೋಕಸಭೆ ಚುನಾವಣೆಗೆ ಸೀಮಿತವಾಗದೆ ಧೀರ್ಘಾವಧಿವರೆಗೆ ಮುಂದುವರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನವದೆಹಲಿಯಿಂದ ಆಗಮಿಸಿದ ಅವರು ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದಲ್ಲಿ ಸೌಹಾರ್ದಯುತವಾಗಿ ಚರ್ಚೆ ಮಾಡಿದ್ದೇವೆ. ಉಭಯ ಪಕ್ಷಗಳ ಮೈತ್ರಿಯನ್ನು ದೀರ್ಘಾವವರೆಗೆ ಮುಂದುವರೆಸುವ ಬಗ್ಗೆ ಹಲವು ಸಂಗತಿಗಳನ್ನು ಚರ್ಚೆ ಮಾಡಿದ್ದೇವೆ ಎಂದರು. +ನಿನ್ನೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ , ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು. ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರಗಳ ಹೊಂದಾಣಿಕೆ ಕುರಿತಂತೆ ಚರ್ಚಿಸಿದ್ದು, ಯಾವುದೇ ಭಿನ್ನಾಭಿಪ್ರಾಯಗಳು ಉಭಯ ಪಕ್ಷಗಳ ನಡುವೆ ಇಲ್ಲ ಎಂದು ಹೇಳಿದರು. +ನಾಡಿನ ಜನತೆಯ ಹಿತದೃಷ್ಟಿಯಿಂದ ಕೆಲವು ವಿಚಾರಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚೆ ಮಾಡಿದ್ದು, ಅವುಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ನಮ್ಮ ನಾಡಿಗೆ ಉಂಟಾಗಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರದ ಬಗ್ಗೆ ಚಿಂತನೆಯನ್ನು ಮಾಡಲಾಗಿದೆ.ನಾಡಿನ ಸಮಸ್ಯೆಗಳ ಪರಿಹಾರಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮುಂದುವರೆ ಸಬೇಕಿದ್ದು, ಈ ವಿಚಾರದಲ್ಲಿ ಯಾವುದೇ ರೀತಿಯ ಪ್ರತಿಷ್ಟೆ ಇಲ್ಲ ಎಂದು ತಿಳಿಸಿದರು. + +ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲವು ಸಭೆಗಳನ್ನು ನಡೆಸಲು ಮನವಿ ಮಾಡಿದ್ದು, ದಸರಾ ಹಬ್ಬದ ನಂತರ ಮೈತ್ರಿ ನಿರ್ಧಾರವನ್ನು ಅಕೃತವಾಗಿ ಪ್ರಕಟಿಸುತ್ತೇವೆ. ಉಭಯ ಪಕ್ಷಗಳ ನಡುವೆ ಈ ವಿಚಾರದಲ್ಲಿ ಗೊಂದಲವಿಲ್ಲ. +ನಾಡಿನ, ರಾಷ್ಟ್ರದ ಅಭಿವೃದ್ಧಿಗಾಗಿ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದರು. ಕಾವೇರಿ ನದಿನೀರು ವಿವಾದ ಕುರಿತಂತೆ ಅಮಿತ್ ಷಾ ಅವರ ಜೊತೆ ಚರ್ಚಿಸಿದ್ದು, ನಮಗೆ ಆಗಿರುವ ಅನ್ಯಾಯದ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ನಾಡಿನ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. \ No newline at end of file diff --git a/eesanje/url_46_34_1.txt b/eesanje/url_46_34_1.txt new file mode 100644 index 0000000000000000000000000000000000000000..4ed6420a03c2539e90a93e4e3a06a25052336f9b --- /dev/null +++ b/eesanje/url_46_34_1.txt @@ -0,0 +1,11 @@ +ತೀವ್ರ ವಿರೋಧದ ನಡುವೆಯೂ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಾಳೆ ಪರೀಕ್ಷೆ + +ಬೆಂಗಳೂರು,ಆ.26– ತೀವ್ರ ವಿರೋಧದ ನಡುವೆಯೂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಬಿ ವೃಂದದ 344 ಹುದ್ದೆಗಳಿಗೆ ನಾಳೆ ಭಾರಿ ಬಿಗಿ ಭದ್ರತೆ ನಡುವೆ ಪೂರ್ವಭಾವಿ ಪರೀಕ್ಷೆ (ಪ್ರಿಲಿಮನರಿ ಎಕ್ಸಾಂ) ನಡೆಯಲಿದೆ. +ಪರೀಕ್ಷೆಯನ್ನು ಮುಂದೂಡಬೇಕೆಂದು ಕೆಲ ವಿದ್ಯಾರ್ಥಿಗಳು ರಾಜ್ಯಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸೊಪ್ಪು ಹಾಕದ ಸರ್ಕಾರ ಈಗಾಗಲೇ ನಿಗದಿಯಾಗಿರುವಂತೆ ನಾಳೆ ರಾಜ್ಯದ ಒಟ್ಟು 700 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ. +ಕೆಪಿಎಸ್ಸಿಯ 384 ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಒಟ್ಟು 2,10,541 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸುತ್ತಿದ್ದು, ಯಾವುದೇ ರೀತಿಯ ನಕಲು, ಅಹಿತಕರ ಘಟನೆ ನಡೆಯಂದತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. +ಪರೀಕ್ಷೆಯು ಬೆಳಿಗ್ಗೆ 10 ರಿಂದ 12 ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು 2 ಗಂಟೆ ಮುಂಚಿತವಾಗಿಯೇ ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. +ಅಂದರೆ ಮೊದಲ ಪ್ರಶ್ನೆ ಪತ್ರಿಕೆ 10 ಗಂಟೆಗೆ ಆರಂಭವಾದರೆ, 8 ಗಂಟೆಯೊಳಗೆ ಅಭ್ಯರ್ಥಿಗಳು ಕೇಂದ್ರದೊಳಗೆ ಬರಬೇಕು.ಬೆಳಗಿನ ಅವಧಿಗೆ 9.50 ಮತ್ತು ಮಧ್ಯಾಹ್ನ ನಡೆಯುವ ಎರಡನೇ ಪ್ರಶ್ನೆಪತ್ರಿಕೆಗೆ 1.50 ರ ನಂತರ ಬರುವ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಆಯೋಗ ಕಟ್ಟುನಿಟ್ಟಿನ ಸಂದೇಶವನ್ನು ರವಾನಿಸಿದೆ. +ಬಿಗಿ ಭದ್ರತೆ :ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳು ಹಾಗೂ ಮತ್ತಿತರ ಕಡೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಹಿಂದೆಂದಿಗಿಂತಲೂ ಬಿಗಿ ಭದ್ರತೆಯನ್ನು ತೆಗೆದುಕೊಳ್ಳಲಾಗಿದೆ. ಈ ಹಿಂದೆ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ನಡೆದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಆಯೋಗ ಮುಂಚಿತವಾಗಿಯೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. +ಪರೀಕ್ಷಾ ಕೇಂದ್ರದ ಒಂದು ಕಿ.ಮೀ. ಸುತ್ತಮುತ್ತ 144 ಸೆಕ್ಷನ್ ಹಾಕಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಅನಗತ್ಯವಾಗಿ ತಿರುಗಾಟ ನಡೆಸುವುದು, ಅನುಮಾನಸ್ಪದವಾಗಿ ಓಡಾಡುವಂತಿಲ್ಲ. ಒಂದು ವೇಳೆ ಅನುಮಾನ ಕಂಡುಬಂದರೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ಅನುಮತಿ ನೀಡಲಾಗಿದೆ. +ಪರೀಕ್ಷಾ ಕೇಂದ್ರದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮಂಗಳವಾರ ಯಾವುದೇ ಜೆರಾಕ್‌್ಸ ಅಂಗಡಿಗಳು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ತೆರೆದರೆ ತಕ್ಷಣವೇ ಮುಚ್ಚಬೇಕು. ಇಲ್ಲವೇ ಬಲವಂತವಾಗಿ ಮುಚ್ಚಿಸಬೇಕು ಜೊತೆಗೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. +ದಾಖಲೆಗಳು :ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅಗತ್ಯವಿರುವ ಪ್ರವೇಶಪತ್ರ, ಪಾಸ್ಪೋರ್ಟ್, ಪ್ಯಾನ್ಕಾರ್ಡ್, ಮತಚೀಟಿ, ಆಧಾರ್ಕಾರ್ಡ್, ಗುರುತಿನ ಚೀಟಿ, ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು, ವಿಕಲ ಚೇತನ ವಿದ್ಯಾರ್ಥಿಗಳು ಪ್ರಮಾಣಪತ್ರ ತರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ಹಾಜರಾಗಿ ಪರೀಕ್ಷೆಯು ಸುಸೂತ್ರವಾಗಿ ನಡೆಯಲು ಸಹಕಾರ ನೀಡಬೇಕೆಂದು ಆಯೋಗ ಮನವಿ ಮಾಡಿದೆ. \ No newline at end of file diff --git a/eesanje/url_46_34_10.txt b/eesanje/url_46_34_10.txt new file mode 100644 index 0000000000000000000000000000000000000000..8a52e55154bb252618610b81a1e74d154f6bc312 --- /dev/null +++ b/eesanje/url_46_34_10.txt @@ -0,0 +1,10 @@ +ಕುಮಾರಸ್ವಾಮಿಯವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಫಲ ನೀಡಲ್ಲ । ನಿಖಿಲ್ +ಬೆಂಗಳೂರು,ಆ.25-ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿಯವರನ್ನು ಇಳಿಸಬೇಕೆಂಬ ಕಾಂಗ್ರೆಸ್ ಮಾಡುವ ಪ್ರಯತ್ನ ಫಲ ನೀಡುವುದಿಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿಯವರನ್ನು ಯಾವ ರೀತಿ ಕಟ್ಟಿ ಹಾಕಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ಆರೋಪಿಸಿದರು. +ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ಇದೆ. ಆದರೂ ಕಾಂಗ್ರೆಸ್ನವರು ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ನವರು ಮಾಡುತ್ತಿರುವ ಆರೋಪದಲ್ಲಿ ಸತ್ಯಾಂಶವಿದ್ದರೆ 2018 ರ ವಿಧಾನಸಭಾ ಚುನಾವಣೆಯ ನಂತರ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಏಕೆ ಬಂದಿದ್ದರು ಎಂದು ಪ್ರಶ್ನಿಸಿದರು. +ಗಣಿಗಾರಿಕೆಗೆ ಅನುಮತಿ ನೀಡಿ ಕುಮಾರಸ್ವಾಮಿ ಸಹಿ ಹಾಕಿಲ್ಲ. ಆದರೂ ಎಸ್ಐಟಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದೆ. ಇದು ಮುಡಾ ಹಗರಣವನ್ನು ಮುಚ್ಚಿ ಹಾಕಲು ಮಾಡಿರುವ ಯೋಜನೆಯಷ್ಟೇ ಎಂದು ಟೀಕಿಸಿದ ಅವರು, ಈ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ನವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ದೇಶಾದ್ಯಂತ ಮುಡಾ ಹಗರಣ ವಿಚಾರ ಚರ್ಚೆಯಾಗುತ್ತಿದ್ದು, ಪ್ರತಿನಿತ್ಯ ಒಂದಲ್ಲಾ ಒಂದು ದಾಖಲೆ ಹೊರಬರುತ್ತಿದೆ. ಆದರೂ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ ಎಂದು ಹೇಳಿದರು.ಲೋಕಸಭಾ ಚುನಾವಣೆ ಬಳಿಕ ಹಳೆ ಮೈಸೂರು ಭಾಗದಲ್ಲಿ ಮಾತ್ರವಲ್ಲದೆ, ಉತ್ತರ ಕರ್ನಾಟಕದಲ್ಲೂ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಶಕ್ತಿ ಹೆಚ್ಚಾಗಿದೆ. ಹೀಗಾಗಿ ಕಾಂಗ್ರೆಸ್ನವರು ಕಂಗಾಲಾಗಿದ್ದಾರೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಪತ್ನಿ ಪಾರ್ವತಮನವರು ನಿವೇಶನ ಕೋರಿ ಬರೆದಿರುವ ಪತ್ರ ಬಹಿರಂಗವಾಗಿದೆ. ಆ ಪತ್ರದಲ್ಲಿ 40:60 ಅನುಪಾತದ ನಿವೇಶನ ನಮಗೆ ಬೇಡ. ಇಂತಹ ಜಾಗವೇ ಬೇಕೆಂದು ಕೋರಿದ್ದಾರೆ. ಅದನ್ನು ವೈಟ್ನರ್ ಹಾಕಿ ಅಳಿಸಿದ್ದಾರೆ. ಅದರಲ್ಲಿ ಏನು ಬರೆದಿದ್ದರು? ಎಂದು ಪ್ರಶ್ನಿಸಿದ ಅವರು, ವಿಜಯನಗರದಲ್ಲಿ ನಿವೇಶನ ಕೇಳಿದ್ದರು ಎಂಬ ಮಾಹಿತಿ ನಮಗಿದೆ ಎಂದು ಹೇಳಿದರು. +ಚನ್ನಪಟ್ಟಣದಲ್ಲಿ ಕಾಂಗ್ರೆಸ್ಗೆ ನೆಲೆ ಇಲ್ಲ :ಆಡಳಿತಾರೂಢ ಕಾಂಗ್ರೆಸ್ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಚನ್ನಪಟ್ಟಣ ಕ್ಷೇತ್ರದ ಇತಿಹಾಸದಲ್ಲಿ ಆ ಪಕ್ಷ ಗಳಿಸಿರುವ ಮತಗಳು ಹಾಗೂ ಜೆಡಿಎಸ್ ಪಕ್ಷ ಗಳಿಸಿರುವ ಮತಗಳನ್ನು ಅವಲೋಕಿಸಿದಾಗ ಇದು ತಿಳಿಯುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. +ಜೆಡಿಎಸ್ಗೆ 60 ಸಾವಿರದಷ್ಟು ಸಾಂಪ್ರದಾಯಿಕ ಮತಗಳಿಗೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ಗೂ ವೈಯಕ್ತಿಕ ವರ್ಚಸ್ಸಿದೆ. ಈ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಗೆಲ್ಲಬೇಕು ಎಂಬುದೇ ಎರಡೂ ಪಕ್ಷಗಳ ನಾಯಕರ ಉದ್ದೇಶ. +ದೆಹಲಿ ಮಟ್ಟದ ಬಿಜೆಪಿ ನಾಯಕರು, ನಮ ನಾಯಕರು ಸಮಾಲೋಚನೆ ನಡೆಸಿ ಉಪಚುನಾವಣೆಯ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ. ಚುನಾವಣೆ ಸಂಬಂಧದ ವರದಿ ಈಗಾಗಲೇ ಹೈಕಮಾಂಡ್ ಕೈ ಸೇರಿದ್ದು, ಸದ್ಯದಲ್ಲೇ ಎನ್ಡಿಎ ಅಭ್ಯರ್ಥಿ ಯಾರೆಂಬುದನ್ನು ಘೋಷಣೆ ಮಾಡುತ್ತಾರೆ ಎಂದರು. \ No newline at end of file diff --git a/eesanje/url_46_34_11.txt b/eesanje/url_46_34_11.txt new file mode 100644 index 0000000000000000000000000000000000000000..9b9f953e97a6deb73561ec74c5d49847ad714891 --- /dev/null +++ b/eesanje/url_46_34_11.txt @@ -0,0 +1,22 @@ +ಆ.27ರಂದೇ ಕೆಎಎಸ್ ಪರೀಕ್ಷೆ : ಹಠಕ್ಕೆ ಬಿದ್ದ ಸರ್ಕಾರ + 27: +ಬೆಂಗಳೂರು,ಆ.25-ಕರ್ನಾಟಕ ಗೆಜಿಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನಿಗದಿಯಾಗಿರುವ ಪರೀಕ್ಷೆಯ ವಿಚಾರದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು, ಪ್ರತಿಭಟನೆಗಳಿಗೆ ಜಗ್ಗದೆ ಆ.27ರಂದೇ ಪ್ರಿಲಿಮ್ಸ್ ಪರೀಕ್ಷೆ ನಡೆಸುವುದಾಗಿ ಕೆಪಿಎಸ್ಸಿ ಹಾಗೂ ಸರ್ಕಾರ ಹಠಕ್ಕೆ ಬಿದ್ದಿವೆ. +ನಗರದ ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಕೆಲವರು ಕೆಎಎಸ್ ಪರೀಕ್ಷೆಗೆ ಪೂರ್ವ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕು. ಕನಿಷ್ಠ ಮೂರು ತಿಂಗಳ ಕಾಲ ಪರೀಕ್ಷೆಯನ್ನು ಮುಂದೂಡಬೇಕೆಂದು ಪಟ್ಟು ಹಿಡಿದಿದ್ದಾರೆ. +ಪ್ರತಿಭಟನೆಯ ಜೊತೆಗೆ ರಾಜ್ಯ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ನಿರಂತರವಾಗಿ ಕರೆ ಮಾಡಿ ವಾಟ್ಸಪ್ ಸಂದೇಶಗಳನ್ನು ಕರೆಸಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ. ಸಾವಿರಾರು ಆಕಾಂಕ್ಷಿಗಳು ಸಚಿವರ, ಅಧಿಕಾರಿಗಳ ಮೊಬೈಲ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡು ಏಕಕಾಲಕ್ಕೆ ಸಂದೇಶ ರವಾನಿಸಿದ್ದಾರೆ. +ಇದರಿಂದ ನಿದ್ದೆ ಮಾಡಲು ಆಗದೆ ಬಹಳಷ್ಟು ಮಂದಿ ಸಚಿವರು, ಅಧಿಕಾರಿಗಳು ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. +ಇನ್ನು ಕೆಲವರು ಲ್ಯಾಂಡ್ಲೈನ್ಗಳ ನಂಬರ್ಗಳಿಗೂ ನಿರಂತರವಾಗಿ ಕರೆ ಮಾಡಿದ್ದಾರೆ. ಏಕಾಏಕಿ ಈ ರೀತಿಯ ದೂರವಾಣಿ ಕರೆಗಳನ್ನು ಸಹಿಸಲಾಗದೆ ಅಧಿಕಾರಿಗಳು, ಸಚಿವರು ಹೈರಾಣರಾಗಿದ್ದಾರೆ.ಪರೀಕ್ಷೆ ಮುಂದೂಡಬೇಕೆಂಬುದು ಆಕಾಂಕ್ಷಿಗಳ ಒತ್ತಾಯವಾಗಿದ್ದರೆ ಅದಕ್ಕೆ ಕ್ಯಾರೆ ಎನ್ನದೆ ನಿಗದಿತ ಅವಧಿಯಲ್ಲೇ ಪರೀಕ್ಷೆ ನಡೆಸಲಿದೆ ಎಂದು ಸರ್ಕಾರ ಸಡ್ಡು ಹೊಡೆದಿದೆ. +ಲೋಕಸೇವಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಸರ್ಕಾರದ ಸಲಹೆ ಆಧರಿಸಿ ಪರೀಕ್ಷಾ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ಹಿಂದೆ ಹಲವಾರು ಪರೀಕ್ಷೆಗಳಲ್ಲಿ ಹಗರಣಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಸ್ವಜನ ಪಕ್ಷಪಾತ ಸೇರಿ ನಾನಾ ಅದ್ವಾನಗಳು ನಡೆದಿದ್ದವು. ಪಿಎಸ್ಐ ಪರೀಕ್ಷೆಯಂತೂ ಒಂದು ಸರ್ಕಾರದ ಭವಿಷ್ಯವನ್ನೇ ನಿರ್ಧಾರ ಮಾಡುವಷ್ಟು ಸದ್ದು ಮಾಡಿತ್ತು. ಅದಕ್ಕೂ ಮೊದಲು ಕೆಎಎಸ್ ಪರೀಕ್ಷೆಗಳು ಗೊಂದಲಕ್ಕೊಳಗಾಗಿ ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯ ತೂಗುಯ್ಯಾಲೆಯಾಗಿತ್ತು. +ಇತ್ತೀಚಿನ ದಿನಗಳಲ್ಲಿ ಸಂಸತ್ ಹಾಗೂ ರಾಜ್ಯ ವಿಧಾನಮಂಡಲದಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಮಸೂದೆಗಳನ್ನು ರೂಪಿಸಲಾಗಿದೆ. ಹೀಗಾಗಿ ಯಾವುದೇ ಅಕ್ರಮಗಳು ನಡೆದರೂ ಕಠಿಣ ಶಿಕ್ಷೆ ವಿಧಿಸುವ ನಿಯಮಾವಳಿಗಳು ಚಾಲ್ತಿಯಲ್ಲಿವೆ. +ಕೆಎಎಸ್ ಪರೀಕ್ಷೆ ಪಾರದರ್ಶಕವಾಗಿ ನಡೆಯಲಿದೆ ಎಂದು ಸರ್ಕಾರ ಮತ್ತು ಕೆಪಿಎಸ್ಸಿ ಪದೇ ಪದೇ ಪ್ರತಿಪಾದಿಸುತ್ತಿದೆ. ಆದರೆ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳು ಎರಡು ತಿಂಗಳ ಮೊದಲೇ ಕೆಎಎಸ್ಗೆ ಪ್ರಶ್ನೆ ಪತ್ರಿಕೆ ಸಿದ್ದಗೊಳಿಸಲಾಗಿದೆ. ಬಹುಶಃ ಅದು ಸೋರಿಕೆಯಾಗಿರಬಹುದು ಅಥವಾ ತಮ ಕಡೆಯವರಿಗೆ ಪತ್ರಿಕೆಯನ್ನು ಸಂಬಂಧಪಟ್ಟವರು ತಲುಪಿಸಿರಬಹುದು ಎಂದು ದೂರುಗಳು ಕೇಳಿಬಂದಿವೆ. +ಈ ಹಿನ್ನಲೆಯಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಸರ್ಕಾರ ಮತ್ತು ಅಭ್ಯರ್ಥಿಗಳ ನಡುವೆ ಸಂಘರ್ಷಮಯ ವಾತಾವರಣ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ಅಭ್ಯರ್ಥಿಗಳ ಒತ್ತಡಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಲಾಗಿತ್ತು. ರಾಜ್ಯದಲ್ಲೂ ಅದೇ ರೀತಿಯ ನಿರ್ಧಾರಗಳಾಗಬಹುದು ಎಂಬ ಅಂದಾಜು ತಲೆಕೆಳಗಾಗಿದೆ. +ಪ್ರತಿಭಟನೆಗೆ ಮಣಿದು ಕೃಷ್ಣ ಜನಾಷ್ಟಮಿಯಂದು ನಡೆಯುವ ಒಂದು ವಿಷಯದ ಪರೀಕ್ಷೆಗೆ ಮಾತ್ರ ಬೇರೆ ದಿನ ಸಮಯ ನಿಗದಿಪಡಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ, ಉಳಿದಂತೆ ಪರೀಕ್ಷೆಗಳು ಯಥಾರೀತಿಯಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಇದು ಸರ್ಕಾರದ ವಿರುದ್ಧ ಪ್ರತಿಭಟನಾಕಾರರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. +ಕೆಎಎಸ್‌‍ ಪರೀಕ್ಷೆಗೆ ಅನಗತ್ಯ ಗೊಂದಲ : ಅತೀಕ್‌ ಬೇಸರಬೆಂಗಳೂರು,ಆ.25-ಕೆಎಎಸ್‌‍ ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆದಿದ್ದು, ಕೆಲವೇ ಕೆಲವು ಅಭ್ಯರ್ಥಿಗಳ ಗುಂಪು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. +ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಪರೀಕ್ಷೆಯ ಆಕಾಂಕ್ಷಿಗಳ ಸಣ್ಣ ಗುಂಪು ಆ.27ಕ್ಕೆ ನಿಗದಿಯಾಗಿರುವ ಪರೀಕ್ಷೆಯನ್ನು ಮುಂದೂಡಿಸುವ ಲಾಬಿ ನಡೆಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ. +ಈ ವಿಚಾರವಾಗಿ ಒತ್ತಡದ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದೆ. ಕೆಪಿಎಸ್‌‍ಸಿಯ ಮುಖ್ಯ ಅಧಿಕಾರಿಗಳು, ಡಿಪಿಎಆರ್‌ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ನಿರಂತರವಾಗಿ ಕರೆ ಮಾಡಿ ವಾಟ್ಸಪ್‌ ಸಂದೇಶಗಳ ಸುರಿಮಳೆಗೈಯ್ಯಲಾಗಿದೆ. +ಅಸಂಖ್ಯ ಪ್ರಮಾಣದ ಸಂದೇಶಗಳು ಹರಿದುಬಂದಿದ್ದರಿಂದಾಗಿ ಅನಿವಾರ್ಯವಾಗಿ ನಾನು ನನ್ನ ಮೊಬೈಲ್‌ನ್ನು ಏರ್‌ಪ್ಲೇನ್‌ ಮೋಡ್‌ಗೆ ಹಾಕುವಂತಹ ಪರಿಸ್ಥಿತಿ ಬಂದಿತ್ತು ಎಂದು ವಿವರಿಸಿದ್ದಾರೆ. ಪರೀಕ್ಷೆ ಮುಂದೂಡಿಸಬೇಕೆಂದು ಪ್ರಯತ್ನಿಸುತ್ತಿರುವ ಗುಂಪು ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಹಗರಣ ನಡೆದಿದೆ ಎಂದು ತಪ್ಪು ಮಾಹಿತಿ ಹರಡುವ ಪ್ರಯತ್ನ ಮಾಡುತ್ತಿದ್ದಾರೆ. +ರಾಜ್ಯ ಸರ್ಕಾರ ಅಥವಾ ಕೆಪಿಎಸ್‌‍ಸಿ ಸರಿಸುಮಾರು ಒಂದೂವರೆ ಸಾವಿದಷ್ಟಿರುವ ಈ ಗುಂಪಿನ ಲಾಬಿಗೆ ಮಣಿದರೆ, ನಿರಂತರವಾಗಿ ಪರಿಶ್ರಮಪಟ್ಟು ನ್ಯಾಯಾಯಕ್ಕಾಗಿ ಎದುರು ನೋಡುತ್ತಿರುವ ಎರಡೂವರೆ ಲಕ್ಷ ಆಕಾಂಕ್ಷಿಗಳಿಗೆ ಅನ್ಯಾಯವಾಗಲಿದೆ ಎಂದು ವಿವರಿಸಿದ್ದಾರೆ. +ಪರೀಕ್ಷೆ ಬರೆಯಲು ನೈಜವಾಗಿ ತಯಾರಿ ನಡೆಸಿದವರು ಈಗಾಗಲೇ ಕೇಂದ್ರಗಳಿಗೆ ತೆರಳಲು ಟಿಕೆಟ್‌ ಬುಕ್‌ ಮಾಡಿಕೊಂಡು ಸಜ್ಜುಗೊಂಡಿದ್ದಾರೆ. ವಯೋಮಿತಿ ಸಡಿಲಿಕೆಯಿಂದಾಗಿ ಹೆಚ್ಚುವರಿ ಅವಕಾಶ ಪಡೆದಿರುವವರು ಪರೀಕ್ಷೆ ಮುಂದೂಡಿಕೆಯಾದರೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಎಲ್‌.ಕೆ.ಅತೀಕ್‌ ಆತಂಕ ವ್ಯಕ್ತಪಡಿಸಿದ್ದಾರೆ. +ಜೊತೆಯಲ್ಲಿ ಪರೀಕ್ಷೆಗಳು ಪದೇ ಪದೇ ಮುಂದೂಡಿಕೆ ಆಗುತ್ತಿರುವುದರ ವಾಸ್ತಾಂಶಗಳನ್ನು ವಿವರಿಸಿದ್ದಾರೆ. ಈ ಮೊದಲು ಫೆ.26ರಂದು ಪ್ರಿಲಿಮ್ಸೌ ಪರೀಕ್ಷೆಯನ್ನು ಮೇ 5ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಬಳಿಕ ಲೋಕಸಭೆ ಚುನಾವಣೆ ಘೋಷಣೆಯಾಗಿದ್ದರಿಂದ 2ನೇ ಬಾರಿಗೆ ಜು.7ಕ್ಕೆ ನಿಗದಿಯಾಯಿತು. +ಆ ವೇಳೆಗೆ ಯುಪಿಎಸ್‌‍ಸಿ ಪರೀಕ್ಷೆ ಎದುರಾಗಿದ್ದರಿಂದ ಜು.21ಕ್ಕೆ ದಿನಾಂಕವನ್ನು ಮರುಪರಿಷ್ಕರಿಸಲಾಯಿತು. ಈ ಕುರಿತು ಜೂ.21ಕ್ಕೆ ದಿನಾಂಕ ಘೋಷಿಸಿದಾಗ 2017-18ರ ಸಾಲಿನ ಅಭ್ಯರ್ಥಿಗಳು ಹೆಚ್ಚುವರಿ ಅವಕಾಶ ಪಡೆಯಲು ವಯೋಮಿತಿಯ ಗರಿಷ್ಠ ಸಡಿಲಿಕೆಯನ್ನು ಕಳೆದುಕೊಂಡಿದ್ದರು. +ಅವರಿಗೆ ಅನುಕೂಲ ಮಾಡಿಕೊಡಲು ಸಾಫ್ಟ್ ವೇರ್‌ನಲ್ಲಿ ಸಣ್ಣ ಪ್ರಮಾಣದ ಬದಲಾವಣೆ ಮಾಡಬೇಕಾಯಿತು. ಜುಲೈ 6ಕ್ಕೆ ಇದು ಪೂರ್ಣಗೊಂಡಿದ್ದು, ಜು.21ಕ್ಕೆ 1560 ಅರ್ಜಿಗಳು ಸ್ವೀಕರಿಸಲ್ಪಟ್ಟಿದ್ದವು. ಇದರಿಂದಾಗಿ ಆ.25ಕ್ಕೆ ಮೂರನೇ ಬಾರಿಗೆ ದಿನಾಂಕ ನಿಗದಿಪಡಿಸಲಾಗಿತ್ತು. ಈ ನಡುವೆ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ಸಂಬಂಧಪಟ್ಟ ಐಬಿಪಿಎಸ್‌‍ ಪರೀಕ್ಷೆಗಳಿಗೆ ಜು.1ರಂದು ದಿನಾಂಕ ಘೋಷಣೆಯಾಗಿತ್ತು. ಆದರೆ ಅದರ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿರಲಿಲ್ಲ. ಆನ್‌ಲೈನ್ನಲ್ಲೂ ಲಭ್ಯವಿರಲಿಲ್ಲ, ಪರಿಣಾಮ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಆ.25ರ ಬದಲಾಗಿ 27ರಂದು ಪರೀಕ್ಷೆ ನಡೆಸಲು ಆ.3ರಂದು ಹೊಸ ದಿನಾಂಕವನ್ನು ಘೋಷಿಸಲಾಯಿತು ಎಂದು ಹೇಳಿದ್ದಾರೆ. +ಮುಂದಿನ ಎರಡು ತಿಂಗಳ ಅವಧಿಯಲ್ಲಿ ಭಾನುವಾರಗಳಂದು ಬಿಡುವಿಲ್ಲದ ಕಾರಣ ವಾರದ ಕೆಲಸದ ದಿನವೇ ಪರೀಕ್ಷೆ ನಡೆಸಲಾಗುತ್ತಿದೆ. ಎರಡೂವರೆ ಲಕ್ಷ ವಿದ್ಯಾರ್ಥಿಗಳು ಇದಕ್ಕೆ ತಯರಾಗಿದ್ದಾರೆ. ಕಾಗದಪತ್ರಗಳ ಮುದ್ರಣಕ್ಕೆ ನಾಲ್ಕರಿಂದ 5 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಸುದೀರ್ಘ ಕಾಲದವರೆಗೂ ಮುದ್ರಿತ ದಸ್ತವೇಜುಗಳನ್ನು ರಕ್ಷಿಸುವುದು ಸೂಕ್ತವಲ್ಲ. ಪ್ರಶ್ನೆಪತ್ರಿಕೆ ಬಹಿರಂಗದಂತಹ ಅಪಾಯಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ವಾರದ ರಜಾ ದಿನವೇ ಪರೀಕ್ಷೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_34_12.txt b/eesanje/url_46_34_12.txt new file mode 100644 index 0000000000000000000000000000000000000000..65d86fc7b0c3dd6441e0a8b84229d6006b6a0279 --- /dev/null +++ b/eesanje/url_46_34_12.txt @@ -0,0 +1,8 @@ +ಕೆಎಎಸ್‌‍ ಪೂರ್ವಭಾವಿ ಪರೀಕ್ಷೆ ಮುಂದೂಡಲು ಆಗ್ರಹಿಸಿ ಪ್ರತಿಭಟನೆ + +ಬೆಂಗಳೂರು,ಆ.25-ಆಗಸ್ಟ್‌ 27ಕ್ಕೆ ನಿಗದಿಯಾಗಿರುವ ಕೆಎಎಸ್‌‍ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿ ಫ್ರೀಡಂಪಾರ್ಕ್‌ನಲ್ಲಿ 50ಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. +ಒಂದು ತಿಂಗಳು ಮೊದಲೇ ಪ್ರಶ್ನೆ ಪತ್ರಿಕೆ ಮುದ್ರಣವಾಗಿರುವ ಹಿನ್ನೆಲೆಯಲ್ಲಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗಿದೆ. ಇನ್ನು ವಾರದ ದಿನದಲ್ಲಿ (ಮಂಗಳವಾರ) ಪರೀಕ್ಷೆ ನಿಗದಿಯಾಗಿರುವುದರಿಂದ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ತೊಂದರೆಯಾಗಿದೆ. +ಹೀಗಾಗಿ ರಾಜ್ಯ ಸರ್ಕಾರವು ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾಮರಣಕ್ಕೆ ಅನುಮತಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. +ಪ್ರತಿಭಟನಾನಿರತ ಅಭ್ಯರ್ಥಿ ಕಾಂತಕುಮಾರ್‌ ಪ್ರತಿಕ್ರಿಯಿಸಿ, ಆಗಸ್ಟ್‌ 27 ಕ್ಕೆ ಪರೀಕ್ಷೆ ನಿಗದಿಯಾಗಿದೆ. ವಾರದ ದಿನದಲ್ಲಿ ಪರೀಕ್ಷೆ ನಡೆಯುತ್ತಿದೆ. ಒಂದು ತಿಂಗಳಿಗಿಂತ ಮುಂಚಿತವಾಗಿ ಪ್ರಶ್ನೆಪತ್ರಿಕೆ ಮುದ್ರಿಸಿದ್ದಾರೆ. ತರಾತುರಿಯಲ್ಲಿ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಸಿಎಂಗೆ ಸುಳ್ಳು ಸುದ್ದಿ ನೀಡಿ ದಾರಿ ತಪ್ಪಿಸಲಾಗುತ್ತಿದೆ. ಸಿದ್ದರಾಮಯ್ಯ ಅವರು ಪ್ರಶ್ನೆ ಪತ್ರಿಕೆ ಮರು ಮುದ್ರಣ ಮಾಡಿಸಿ, ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. +ಒಂದು ತಿಂಗಳ ಮುಂಚೆಯೇ ಪ್ರಶ್ನೆ ಪತ್ರಿಕೆ ಮುದ್ರಿಸಿದ್ದಾರೆ. ಇದು ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಿದೆ. ಪರೀಕ್ಷೆ ಮುಂದೂಡಿ ಇಲ್ಲವೇ ನಮನ್ನ ಜೈಲಿಗೆ ಹಾಕಿ ಅಥವಾ ದಯಾಮರಣ ಕೊಡಿ ಎಂದು ಅಲವತ್ತುಕೊಂಡಿದ್ದಾರೆ.ಅಭ್ಯರ್ಥಿ ತೇಜಸ್‌‍ ಮಾತನಾಡಿ, ನಾವು ಅನುಮತಿ ಕೇಳಿದ್ದಾಗ ಬೇರೆ ಕಾರ್ಯಕ್ರಮ ಇದೆ ಎಂದಿದ್ದರು. 10ರಿಂದ 2 ಗಂಟೆವರೆಗೆ ಅವಕಾಶ ನೀಡಿದರು. ಆದರೆ ಇಲ್ಲಿ ಯಾವುದೇ ಪ್ರತಿಭಟನೆ ಕೂಡ ಇಲ್ಲ. ಪ್ರತಿಭಟನಾಕಾರರಿಗಿಂತ ಹೆಚ್ಚಾಗಿ ಪೊಲೀಸರ ನಿಯೋಜನೆಯಾಗಿದೆ ಎಂದು ಹೇಳಿದ್ದಾರೆ. +ಸರ್ಕಾರದ ಪರವಾಗಿ ಇಲ್ಲಿ ಯಾರೂ ಬಂದಿಲ್ಲ. ಪರೀಕ್ಷೆಗೆ ಸಾಕಷ್ಟು ಸಮಯ ಇಲ್ಲ, ಮಾನಸಿಕವಾಗಿ ಸಾಕಷ್ಟು ಕಷ್ಟವಾಗುತ್ತಿದೆ ಎಂದು ಅಭ್ಯರ್ಥಿ ಯಮುನಾ ಅಳಲು ತೋಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕು, ಇಲ್ಲವೇ ನಮಗೆ ದಯಾ ಮರಣಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದರಿಂದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. \ No newline at end of file diff --git a/eesanje/url_46_34_2.txt b/eesanje/url_46_34_2.txt new file mode 100644 index 0000000000000000000000000000000000000000..15afcc4b18891ead085de99441869be666a1067f --- /dev/null +++ b/eesanje/url_46_34_2.txt @@ -0,0 +1,8 @@ +ಖರ್ಗೆ ಕುಟುಂಬದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಕೆಐಎಡಿಬಿ ಜಮೀನು ಮಂಜೂರು ಮಾಡಿರುವುದಕ್ಕೆ ಬಿಜೆಪಿ ವಿರೋಧ + - +ಬೆಂಗಳೂರು,ಆ.26-ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ನಡೆಸುತ್ತಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಕೆಐಎಡಿಬಿ ಜಮೀನು ಮಾಡಿರುವುದಕ್ಕೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ಸಿಂಗ್ ಸಿರೋಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. +ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಹಂಚಿಕೆ ಮಾಡಿದ್ದ 45.94 ಎಕರೆ ಪೈಕಿ ಐದು ಎಕರೆ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಈ ಟ್ರಸ್ಟ್ಗೆ ಮಂಜೂರು ಮಾಡಲಾಗಿದೆ. +ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದ ತಮ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಹರ್ಸಿಂಗ್ ಸಿರೋಯ ಅವರು, ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ. +ಬೆಂಗಳೂರು ಸಮೀಪದ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್ನಲ್ಲಿ ನಾಗರಿಕ ಸೌಲಭ್ಯಗಳಿಗೆ ಕಾದಿಟ್ಟ ಈ ಜಮೀನನ್ನು ಪರಿಶಿಷ್ಟ ಜಾತಿ ಕೋಟಾದಲ್ಲಿ ಮಂಜೂರು ಮಾಡಲಾಗಿದೆ. ಕುತೂಹಲಕಾರಿ ಅಂಶವೆಂದರೆ, ಟ್ರಸ್ಟ್ನಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ರಾಧಾಬಾಯಿ ಖರ್ಗೆ, ಅಳಿಯ ರಾಧಾಕೃಷ್ಣ, ಅವರ ಮಗ ಹಾಗೂ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ, ಮತ್ತೊಬ್ಬ ಪುತ್ರ ರಾಹುಲ್ ಖರ್ಗೆ ಟ್ರಸ್ಟಿಗಳಾಗಿದ್ದಾರೆ. ಇದು ಸ್ವಹಿತಾಸಕಿ ಸಂಘರ್ಷ, ಸ್ವಜನಪಕ್ಷಪಾತ, ಅಧಿಕಾರದ ದುರ್ಬಬಳಕೆ ಅಲ್ಲವೆ? ಎಂಬ ಪ್ರಶ್ನೆಗಳನ್ನು ಹುಟ್ಟಿಹಾಕಿದೆ. +ಸಚಿವ ಎಂ.ಬಿ.ಪಾಟೀಲ ಈ ಭೂಮಿ ಮಂಜೂರು ಮಾಡಲು ಒಪ್ಪಿಗೆ ನೀಡಿದ್ದಾದರೂ ಹೇಗೆ? ಖರ್ಗೆ ಕುಟುಂಬ ಯಾವಾಗ ಏರೋಸ್ಪೇಸ್ ಉದ್ಯಮಿಗಳಾದರು? ಈ ಅಕ್ರಮ ಹಂಚಿಕೆ ವಿಷಯ ಆರ್ಟಿಐ ಕಾರ್ಯಕರ್ತನ ಮೂಲಕ ರಾಜ್ಯಪಾಲರ ಕಚೇರಿಗೂ ತಲುಪಿದೆ ಎಂದು ಹೇಳಿದ್ದಾರೆ. +ಮೈಸೂರಿನ ವಿವಾದಿತ ಮುಡಾ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯನವರು ಬಿಟ್ಟುಕೊಡುವಂತಹ ಪರಿಸ್ಥಿತಿ ತಲೆದೋರಿದೆ. ಅದೇ ರೀತಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬ ಅಂತಿಮವಾಗಿ ಈ ಜಮೀನು ಬಿಟ್ಟು ಕೊಡಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_34_3.txt b/eesanje/url_46_34_3.txt new file mode 100644 index 0000000000000000000000000000000000000000..e2c478e168930437605df593a1b24abe9db74cd2 --- /dev/null +++ b/eesanje/url_46_34_3.txt @@ -0,0 +1,5 @@ +ಸ್ತ್ರೀ ಕುಲಕ್ಕೆ ರಕ್ಷಣೆ ಕೊಡದ ಸರ್ಕಾರ ಇದ್ದರೂ ಸತ್ತಂತೆ : ವಿಜಯೇಂದ್ರ ವಾಗ್ದಳಿ + , +ಬೆಂಗಳೂರು,ಆ.26- ಸ್ತ್ರೀಕುಲಕ್ಕೆ ರಕ್ಷಣೆ ಕೊಡಲಾಗದ ಸರ್ಕಾರ ಇದ್ದರೂ ಸತ್ತಂತೆ, ಇದನ್ನು ಕಾಂಗ್ರೆಸ್ ಸರ್ಕಾರ ಆತವಿಮರ್ಶೆ ಮಾಡಿಕೊಳ್ಳಲಿ, ಅರಿಸಿನ ಕುಂಕುಮದ ಬಣ್ಣವನ್ನೇ ಧ್ವಜವಾಗಿಸಿಕೊಂಡಿರುವ ಕನ್ನಡನಾಡಿನಲ್ಲಿ ಈ ಪರಿಯ ಮಹಿಳಾ ಪೀಡನೆ ನಡೆದಿರುವುದು ಇಡೀ ರಾಜ್ಯವೇ ತಲೆತಗ್ಗಿಸುವ ಸಂಗತಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಭ್ರಷ್ಟಾಚಾರ, ಸ್ವಜನ ಪಕ್ಷಪಾತದಲ್ಲೇ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಳೆದ 7 ತಿಂಗಳಲ್ಲೇ 340 ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಿಡಿಕಾರಿದ್ದಾರೆ. +ಕರ್ನಾಟಕ ಅತ್ಯಾಚಾರಿಗಳ ರಾಜ್ಯ, ಹೆಣ್ಣುಮಕ್ಕಳ ಪಾಲಿಗೆ ಅಸುರಕ್ಷಿತ ತಾಣ ಎಂಬ ಕೆಟ್ಟ ಹೆಸರು ಬರುತ್ತಿದೆ. ಇದು ಮಹಾ ಶಿವಶರಣೆ ಅಕ್ಕಮಹಾದೇವಿ ನಡೆದಾಡಿದ ಕ್ಷೇತ್ರ, ಕಿತ್ತೂರು ಚೆನ್ನಮನ ನಾಡು, ಒನಕೆ ಓಬವ್ವಳ ಛಲ ಮೆರೆದ ನೆಲ, ಕೆಳದಿ ಚೆನ್ನಮ, ಬೆಳವಡಿ ಮಲ್ಲಮ, ರಾಣಿ ಅಬ್ಬಕ್ಕ ಮೊದಲಾದ ವೀರನಾರಿಯರು ಶೌರ್ಯ ಮೆರೆದ ಹೆಮೆಯ ಬೀಡು ಎಂದು ಹೇಳಿಕೊಳ್ಳಲು ಹಿಂಜರಿಯುವಷ್ಟು ನಾರಿ ಕುಲಕ್ಕೆ ರಕ್ಷಣೆ ನೀಡಲಾಗದ ಪರಿಸ್ಥಿತಿ ರಾಜ್ಯದಲ್ಲಿ ಉದ್ಭವವಾಗಿದೆ ಎಂದು ಸರ್ಕಾರವನ್ನು ವಿಜಯೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ. \ No newline at end of file diff --git a/eesanje/url_46_34_4.txt b/eesanje/url_46_34_4.txt new file mode 100644 index 0000000000000000000000000000000000000000..7e0196f04b5e72a29b4503645cce332b494ab578 --- /dev/null +++ b/eesanje/url_46_34_4.txt @@ -0,0 +1,7 @@ +ಜೋಗ ಜಲಪಾತ ವೀಕ್ಷಣೆಗೆ ದುಬಾರಿ ಶುಲ್ಕ, ಸ್ಥಳೀಯರು ಹಾಗೂ ಪ್ರವಾಸಿಗರಿಂದ ಆಕ್ರೋಶ +ಬೆಂಗಳೂರು,ಆ.26– ವಿಶ್ವವಿಖ್ಯಾತ ಜೋಗ ಜಲಪಾತ ಪ್ರವಾಸಿಗರಿಗೆ ವೀಕ್ಷಣೆಗೆ ಬಲು ದುಬಾರಿಯಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಜಲಪಾತ ವೀಕ್ಷಣೆಗೆ ಹೆಚ್ಚಿನ ಶುಲ್ಕ ವಿಧಿಸಿದೆ. ಪ್ರವಾಸಿಗರ ವೀಕ್ಷಣೆಗೆ ಹೆಚ್ಚಿಸಿರುವ ದರಕ್ಕೆ ಪ್ರವಾಸಿಗರು ಹಾಗೂ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. +ಜೋಗವನ್ನು ಅಭಿವೃದ್ಧಿ ಪಡಿಸುವ ವೇಳೆ ಜಲಪಾತದ ವೀಕ್ಷಣೆಯ ದರ ಏರಿಕೆ ಯಾವ ಕಾರಣಕ್ಕೆ ಮಾಡಿದರು ಎಂಬ ಪ್ರಶ್ನೆಯನ್ನು ಸ್ಥಳೀಯರು ಮಾಡುತ್ತಿದ್ದಾರೆ. ಜೋಗ ಜಲಪಾತದ ಪ್ರವೇಶ ದರ, ಪಾರ್ಕಿಂಗ್ ದರವನ್ನು ಏರಿಕೆ ಮಾಡಲಾಗಿದೆ. ಅಲ್ಲದೇ ಜಲಪಾತದ ವೀಕ್ಷಣೆಯನ್ನು ಪ್ರವಾಸಿಗರಿಗೆ ಕೇವಲ ಎರಡು ಗಂಟೆಗೆ ಸೀಮಿತ ಮಾಡಲಾಗಿದೆ. +ಜೋಗದಲ್ಲಿ ಹಿಂದೆ ಇದ್ದ ದರಕ್ಕಿಂತ ಶೇ 30 ರಿಂದ ಶೇ 50 ರಷ್ಟು ಏರಿಕೆ ಮಾಡಲಾಗಿದೆ. ಹಿಂದೆ ಬಸ್ಗೆ 150 ರೂ. ಇತ್ತು. ಈಗ ಅದನ್ನು 200ಕ್ಕೆ ಏರಿಕೆ ಮಾಡಲಾಗಿದೆ. ಅದೇ ರೀತಿ ಕಾರಿಗೆ 50 ರೂ. ಇದ್ದು ಅದನ್ನು 80 ರೂ. ಏರಿಕೆ ಮಾಡಲಾಗಿದೆ. ಒಬ್ಬ ಪ್ರವಾಸಿಗನಿಗೆ 10 ರೂ. ಇದ್ದ ಶುಲ್ಕ 20 ರೂ. ಗೆ ಏರಿಕೆ ಮಾಡಲಾಗಿದೆ. ಶುಲ್ಕ ಏರಿಕೆ ಮಾಡಿ ಜೋಗ ನಿರ್ವಹಣಾ ಪ್ರಾಧಿಕಾರ ಈಗಾಗಲೇ ಲಕವನ್ನು ಅಳವಡಿಸಿದೆ. ಪ್ರಕೃತಿ ದತ್ತವಾಗಿರುವ ಜಲಪಾತ ವೀಕ್ಷಣೆಗೆ ಏಕೆ ದುಬಾರಿ ಶುಲ್ಕ ಎಂಬುದು ಎಲ್ಲರ ಕೆಂಗಣ್ಣಿಗೆ ಕಾರಣವಾಗಿದೆ. +ಜೋಗ ವೀಕ್ಷಣೆ 2 ಗಂಟೆಗೆ ಸೀಮಿತ :ಪ್ರವಾಸಿಗರು ಶರಾವತಿ ನದಿ ಮೇಲಿಂದ ಬೀಳುವ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಗಂಟೆ ಗಟ್ಟಲೆ ನಿಂತು ಎಲ್ಲ ಆಯಾಮಗಳಿಂದಲೂ ನೋಡಿ,ಫೋಟೋ, ವಿಡಿಯೋ ತೆಗೆದುಕೊಂಡು ಖುಷಿ ಪಡುತ್ತಿದ್ದರು. +ಆದರೆ, ಇನುಂದೆ ನೀವು ಜೋಗಕ್ಕೆ ಟಿಕೆಟ್ ನೀಡಿ ಬಂದಿದ್ದೀರಿ ಅಂದರೆ ಜೋಗವನ್ನು ಕೇವಲ ಎರಡು ಗಂಟೆಗಳ ಕಾಲ ಮಾತ್ರ ವೀಕ್ಷಿಸಲು ಸಾಧ್ಯ. ಜೋಗ ಜಲಪಾತವನ್ನು ಮಳೆಗಾಲದಲ್ಲಿ ನೋಡುವುದೇ ಒಂದು ಅದ್ಭುತ. ಆದರೆ, ಮಳೆಗಾಲದಲ್ಲಿ ಮೇಲಿಂದ ಕೆಳಕ್ಕೆ ಬೀಳುವ ನೀರಿನಿಂದ ಮಂಜು ಎದ್ದೇಳುತ್ತದೆ. +ಇದರಿಂದ ಜಲಪಾತವನ್ನು ಸರಿಯಾಗಿ ನೋಡಲು ಆಗುವುದಿಲ್ಲ. ಜೋರಾಗಿ ಗಾಳಿ ಬಂದಾಗ ಮಾತ್ರ ಜೋಗದ ಸೌಂದರ್ಯವನ್ನು ಸವಿಯಲು ಸಾಧ್ಯವಾಗುತ್ತದೆ. ಆದರೆ, ಇವುಗಳಿಗೆ ಕೂಡ ಬ್ರೇಕ್ ಬೀಳುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_34_5.txt b/eesanje/url_46_34_5.txt new file mode 100644 index 0000000000000000000000000000000000000000..dd4ed44c8568653add73cf77bf96b7c8b272f41a --- /dev/null +++ b/eesanje/url_46_34_5.txt @@ -0,0 +1,15 @@ +ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜ್ಯಾತಿಥ್ಯ, ಜೈಲರ್ ಸೇರಿ 7 ಅಧಿಕಾರಿಗಳು ಅಮಾನತು + ' : 7 +ಬೆಂಗಳೂರು,ಆ.26- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ರಾಜ್ಯಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿನ ಏಳು ಮಂದಿಯನ್ನು ಅಮಾನತುಗೊಳಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದರೆ ಅವರನ್ನೂ ಅಮಾನತುಗೊಳಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋಟೋ, ವಿಡಿಯೋಗಳು ಬಹಿರಂಗಗೊಂಡ ಬೆನ್ನಲ್ಲೇ ದರ್ಶನ್‌ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು. +ನಿನ್ನೆ ಸಂಜೆ 4.30ರ ವೇಳೆಗೆ ತಮಗೆ ಈ ಬಗ್ಗೆ ಮಾಹಿತಿ ಬಂತು. ತಕ್ಷಣವೇ ಬಂಧಿಖಾನೆಯ ಡಿಜಿಪಿ ಅವರೊಂದಿಗೆ ಸಮಾಲೋಚನೆ ನಡೆಸಿ ರಾತ್ರಿ 1.30ರವರೆಗೂ ಪರಿಶೀಲನೆ ನಡೆಸಿದ್ದೇವೆ. ನಂತರ ಜೈಲರ್‌ಗಳಾದ ಶರಣಬಸವ, ಅಮೀನ್‌ಗಢ, ಪ್ರಭು.ಎಸ್‌‍ ಕಂದೇವಾಡ್‌, ಸಹಾಯಕ ಜೈಲಾಧಿಕಾರಿಗಳಾದ ಎಲ್‌.ಎಸ್‌‍ತಿಪ್ಪೇಸ್ವಾಮಿ, ಶ್ರೀಕಾಂತ್‌ ತಳ್ವಾರ್‌, ಹೆಡ್‌ ವಾರ್ಡನ್‌ಗಳಾದ ವೆಂಕಪ್ಪ, ಸಂಪತ್‌ಕುಮಾರ್‌ ಕಡಪಟ್ಟಿ, ವಾರ್ಡನ್‌ ಬಸಪ್ಪ ತೇಲಿ ಅವರನ್ನು ಅಮಾನತುಗೊಳಿಸಲಾಗಿದೆ. + +ದರ್ಶನ್‌ಗೆ ನಿಯಮ ಮೀರಿ ಆತಿಥ್ಯ ನೀಡಿದ ಬಗ್ಗೆ ವರದಿ ಕೇಳಲಾಗಿದೆ. ಡಿಜಿಪಿಯವರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕರ್ತವ್ಯ ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ವರ್ಗಾವಣೆ ಮಾಡಲಾಗಿದೆ. ಪರಪ್ಪನ ಅಗ್ರಹಾರ ಮಾತ್ರವಲ್ಲ ರಾಜ್ಯದ ಯಾವುದೇ ಜೈಲಿನಲ್ಲೂ ಈ ರೀತಿಯ ಘಟನೆಗಳು ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು. +ಜೈಲಿನಲ್ಲಿರುವ ದರ್ಶನ್‌ಗೆ ಜೈಲಿನ ನಿಯಮಾವಳಿಗಳ ಪ್ರಕಾರವೇ ಸೌಲಭ್ಯಗಳನ್ನು ಒದಗಿಸಬೇಕು. ಅದನ್ನು ಹೊರತುಪಡಿಸಿ ಹೆಚ್ಚುವರಿ ಸೌಲಭ್ಯ ನೀಡಬಾರದೆಂದು ಈ ಮೊದಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಅದರ ಹೊರತಾಗಿಯೂ ಈಗ ದರ್ಶನ್‌ ಜೈಲಿನಲ್ಲೇ ಸಿಗರೇಟ್‌ ಸೇದುತ್ತಿರುವ ಹಾಗೂ ಟೀ ಕುಡಿಯುತ್ತಿರುವ ಫೋಟೋಗಳು ಬಹಿರಂಗಗೊಂಡಿವೆ. ಅದೇ ರೀತಿ ವಿಡಿಯೋ ಕಾಲ್‌ ಮಾಡಿರುವ ವಿಡಿಯೋ ಕೂಡ ಹರಿದಾಡುತ್ತಿದೆ. ಈ ನಿಟ್ಟಿನಲ್ಲಿ ತನಿಖೆಗೆ ಆದೇಶಿಸಲಾಗಿದೆ ಎಂದರು. +ಘಟನೆಯನ್ನು ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ದರ್ಶನ್‌ ಪ್ರಕರಣದಲ್ಲಿ ತಮ ಮೇಲೆ ಯಾವ ಒತ್ತಡವೂ ಇಲ್ಲ. ನನ್ನ ಮಟ್ಟದವರೆಗೂ ತಲುಪಲು ಯಾರಿಗೂ ಸಾಧ್ಯವಿಲ್ಲ. ಯಾರ ಒತ್ತಡಗಳಿಗೂ ತಾವು ಮಣಿಯುವುದಿಲ್ಲ. ಸರ್ಕಾರಕ್ಕೆ ಯಾವ ಮುಜುಗರ ಇಲ್ಲ. ಆಗಿರುವ ಲೋಪಗಳನ್ನು ಸರಿಪಡಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದರು.ಜೈಲಿನಲ್ಲಿ ದಿನದ 24 ಗಂಟೆ ಹಾಗೂ ವಾರಪೂರ್ತಿ ನಿಗಾವಹಿಸಲಾಗುತ್ತಿದೆ. +ಅದರ ನಡುವೆಯೂ ಈ ರೀತಿಯ ಘಟನೆಗಳು ನಡೆದಿವೆ ಎಂದಾದರೆ ಅದನ್ನು ಹಿರಿಯ ಅಧಿಕಾರಿಗಳು ಗಮನಿಸಬೇಕಿತ್ತು. ಅಲ್ಲಿ ಲೋಪವಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಹಿರಿಯ ಅಧಿಕಾರಿಗಳ ಪಾತ್ರ ಇದ್ದರೆ ಅವರನ್ನು ಅಮಾನತುಗೊಳಿಸಲಾಗುವುದು ಎಂದು ತಿಳಿಸಿದರು. +ಹಿರಿಯ ಅಧಿಕಾರಿಗಳನ್ನು ರಕ್ಷಿಸಿ ಕಿರಿಯರನ್ನು ಶಿಕ್ಷಿಸುವ ಸಂದರ್ಭಗಳಿಲ್ಲ. ಈ ಮೊದಲು ದರ್ಶನ್‌ಗೆ ಚಿಕನ್‌ ಬಿರಿಯಾನಿ ಕೊಟ್ಟಿದ್ದಾರೆ ಎಂಬ ಆರೋಪಗಳು ಬಂದವು. ಆಗ ನಾವು ಪರಿಶೀಲನೆ ನಡೆಸಿದಾಗ ಅಂತಹ ಯಾವುದೇ ಘಟನೆಗಳು ನಡೆದಿರಲಿಲ್ಲ. ಆ ವೇಳೆಯಲ್ಲೇ ಜೈಲಿನ ಮ್ಯಾನ್ಯುಲ್‌ ಹೊರತುಪಡಿಸಿ ಹೆಚ್ಚುವರಿ ಸೌಲಭ್ಯ ನೀಡಬಾರದೆಂದು ಸೂಚಿಸಿದ್ದೆವು ಎಂದು ಹೇಳಿದರು. +ಜೈಲಿನಲ್ಲಿ ಮೊಬೈಲ್‌ ಬಳಕೆ ಮಾಡಿ ವಿಡಿಯೋ ಕಾಲ್‌ ಮಾಡಿದ್ದು ಯಾರು?, ಫೋಟೋ ತೆಗೆದಿದ್ದು ಯಾರು? ಫೋಟೋಗಳು ಹೇಗೆ ಹೊರಗೆ ಬಂದವು? ಮೊಬೈಲ್‌ ಒಳಗೆ ಹೋಗಿದ್ದು ಹೇಗೆ ಎಂಬೆಲ್ಲ ವಿಚಾರಗಳು ತನಿಖೆಯಾಗಲಿವೆ. ಈಗ ಘಟನೆಯಂತೂ ಆಗಿದೆ. ಈ ಮೊದಲು ಅಲ್ಲಿ ಹೈ ಫ್ರೀಕ್ವೆನ್ಸಿ ಜಾಮರ್‌ ಅಳವಡಿಸಲಾಗಿತ್ತು. ಆದರೆ ಅದರಿಂದ ಅಕ್ಕಪಕ್ಕದವರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಜಾಮರ್‌ನ ಫ್ರೀಕ್ವೆನ್ಸಿಯನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು. +ಜೈಲಿನ ಒಳಗೆ ಎಲ್ಲರಿಗೂ ಹೋಗಲು ಅವಕಾಶ ನೀಡುವುದಿಲ್ಲ. ದರ್ಶನ್‌ ಭೇಟಿಗೂ ಮಾರ್ಗಸೂಚಿಗಳ ಅನ್ವಯ ನಿರ್ಬಂಧಗಳಿವೆ. ಈ ಮೊದಲು ಜೈಲಿನಲ್ಲಿ ಕೆಲವು ಆಕ್ಷೇಪಾರ್ಹ ವಸ್ತುಗಳು ದೊರೆಯುತ್ತಿವೆ ಎಂದು ಆರೋಪಗಳು ಬಂದಾಗ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಆಗ ಏನೂ ಸಿಕ್ಕಿರಲಿಲ್ಲ. ಇದರ ಬಗ್ಗೆ ಕೂಡ ತನಿಖೆ ನಡೆಸುತ್ತೇವೆ. ಜೈಲಿನಲ್ಲಿ ಮೂರು ದಿನಗಳ ಹಿಂದಿನವರೆಗೂ ಸಿಸಿಟಿವಿಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ. ಮಾಹಿತಿ ಸೋರಿಕೆ ಆಗಿತ್ತೇ? ಆಕ್ಷೇಪಾರ್ಹ ವಸ್ತುಗಳನ್ನು ಅಲ್ಲಿಂದ ಸ್ಥಳಾಂತರ ಮಾಡಲಾಗಿತ್ತೇ ಎಂಬೆಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಯಲಿದೆ ಎಂದರು. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಡಿಲಗೊಳ್ಳಲು ಬಿಡುವುದಿಲ್ಲ. ಜೈಲಿನಲ್ಲಿ ಮುಂದೆ ಈ ರೀತಿಯ ಬೆಳವಣಿಗೆಗಳಾಗದಂತೆ ಎಚ್ಚರಿಕೆ ವಹಿಸುತ್ತೇವೆ. ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯ ಬಗ್ಗೆ ಯಾವುದೇ ಅನುಮಾನ ಇಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಅವರು ಹೇಳಿದರು. +ಈ ಹಿಂದೆ ಹಳೆಯ ಪ್ರಕರಣದಲ್ಲಿ ದರ್ಶನ್‌ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಪರಿಶೀಲನೆ ನಡೆಯಲಿದೆ. ಅಗತ್ಯ ಬಿದ್ದರೆ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ದರ್ಶನ್‌ ಅವರನ್ನು ಆತಿಥ್ಯ ಸಿಗದೇ ಇರುವ ಕಡೆಗೆ ಸ್ಥಳಾಂತರದ ಕುರಿತು ಪರಿಶೀಲನೆ ನಡೆಸಲಾಗುವುದು. ಪ್ರಕರಣದಲ್ಲಿ ಯಾವುದನ್ನು ಮರೆಮಾಚುವ ಅಥವಾ ಸುಳ್ಳು ಮಾಹಿತಿ ನೀಡುವ ಅಗತ್ಯ ತಮಗಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟನೆ ನೀಡಿದರು. \ No newline at end of file diff --git a/eesanje/url_46_34_6.txt b/eesanje/url_46_34_6.txt new file mode 100644 index 0000000000000000000000000000000000000000..8fde6cd81ed298021dc29d6903b222a9e876079e --- /dev/null +++ b/eesanje/url_46_34_6.txt @@ -0,0 +1,6 @@ +ರಾಜ್ಯದೆಲ್ಲೆಡೆ ಜನಾಷ್ಟಮಿ ಸಂಭ್ರಮ : ಮನೆ-ಮನಗಳಲ್ಲಿ ಕೃಷ್ಣನಾಮ ಜಪ + +ಬೆಂಗಳೂರು,ಆ.26-ಶ್ರೀ ಕೃಷ್ಣ ಜನಾಷ್ಟಮಿ ಅಂಗವಾಗಿ ರಾಷ್ಟ್ರದೆಲ್ಲೆಡೆ ಇಂದು ಹರೇ ರಾಮ ಹರೇ ಕೃಷ್ಣ ಕೃಷ್ಣ ಹರೇ ರಾಮ ಎಂದು ಭಜಿಸಿ ಪರಮಾತನ ನಾಮಸರಣೆ ಘೋಷ ಎಲ್ಲೆಡೆ ಮೊಳಗಿತು. ಭಾರತದಲ್ಲಿ ಶ್ರೀಕೃಷ್ಣ ಜನಾಷ್ಟಮಿ ತನ್ನದೇ ಆದ ವಿಶೇಷತೆಗಳನ್ನು ಹೊಂದಿದ್ದು, ಮನೆಮನೆಗಳಲ್ಲಿ ಪುಟ್ಟ ಪುಟ್ಟ ಕಂದಮಗಳು ಕೃಷ್ಣ-ರಾಧೆಯರ ವೇಷಭೂಷಣ ತೊಟ್ಟು ಸಂಭ್ರಮಿಸುತ್ತಾರೆ. ಇನ್ನೂ ಕೆಲವೆಡೆ ಮಡಿಕೆ ಕಟ್ಟಿ ಹೊಡೆದು, ಬೆಣ್ಣೆ ಕದ್ದು ತಿನ್ನುವ ಸಂದರ್ಭವನ್ನು ಸರಿಸಿದ್ದಾರೆ. +ದೇವಸ್ಥಾನಗಳಲ್ಲಂತೂ ಇಂದು ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಅದರಲ್ಲೂ ಭಗವಾನ್‌ ಶ್ರೀ ಕೃಷ್ಣ ಜನಸ್ಥಳವಾದ ಮಥುರಾದಲ್ಲಿ ಶ್ರೀಕೃಷ್ಣನ ಜನಾಷ್ಟಮಿ ಸಂಭ್ರಮ ಜೋರಾಗಿತ್ತು.ರಾಜಧಾನಿ ಬೆಂಗಳೂರಿನ ಇಸ್ಕಾನ್‌ ದೇವಾಲಯದಲ್ಲಂತೂ ಸ್ವರ್ಗವೇ ಭೂಲೋಕಕ್ಕೆ ಬಂದಂತೆ ಭಾಸವಾಗುತ್ತಿತ್ತು. ಇಡೀ ದೇವಾಲಯ ಹೂವಿನ ಅಲಂಕಾರದಿಂದ ಅಲಂಕೃತಗೊಂಡಿತ್ತು. +ನಗರ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ತಾಲ್ಲೂಕು ಯಾದವ ಸಂಘದ ವತಿಯಿಂದ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಶ್ರೀಕೃಷ್ಣ ಜನಾಷ್ಟಮಿ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿತ್ತು. +ಶ್ರೀ ವೇಣುಗೋಪಾಲ ಸ್ವಾಮಿಯನ್ನು ಮುತ್ತಿನ ಪಲ್ಲಕ್ಕಿಯಲ್ಲಿ ಅಲಂಕರಿಸಿ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.ಶಾಲೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ ಮಕ್ಕಳಿಗೆ ರಾಧ-ಕೃಷ್ಣ ವೇಷಗಳನ್ನು ಹಾಕಿಸಿ ಪೋಷಕರು ಸಂಭ್ರಮಿಸಿದರು. \ No newline at end of file diff --git a/eesanje/url_46_34_7.txt b/eesanje/url_46_34_7.txt new file mode 100644 index 0000000000000000000000000000000000000000..9a6396a4a52486fb07bb59043aa64e1214b6183a --- /dev/null +++ b/eesanje/url_46_34_7.txt @@ -0,0 +1,16 @@ +ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. ಆಫರ್, ಆಪರೇಷನ್ ಕಮಲದ ಯತ್ನ +100 +ಬೆಂಗಳೂರು,ಆ.25-ಆಪರೇಷನ್ ಕಮಲದ ಪ್ರಯತ್ನಗಳು ನಡೆಯುತ್ತಿ ರುವ ಬಗ್ಗೆ ಕಾಂಗ್ರೆಸ್ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿತ್ತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ನ ಮಧ್ಯವರ್ತಿಗಳು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ 100 ಕೋಟಿ ರೂ. ಆಮೀಷವೊಡ್ಡುತ್ತಿರುವ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸತ್ಯ ಎಂದರು. +ನಮ ಶಾಸಕರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ ಎಂದ ಮೇಲೆ ಅದರಲ್ಲಿ ವಾಸ್ತಾವಂಶ ಇದೆ ಎಂದು ಶಾಸಕ ಗಣಿಗ ರವಿಕುಮಾರ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರ ಪ್ರಸ್ತಾಪಿಸಿದರು. +ಬಿಜೆಪಿ ಹಲವು ದಿನಗಳಿಂದಲೂ ಪ್ರಯತ್ನ ಮಾಡುತ್ತಿದೆ. ಈಗಲೂ ಪ್ರಯತ್ನಗಳು ಮುಂದುವರೆಸಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವ ಮೂಲಕ ರಾಜ್ಯ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಹೊಂದಿದೆ. ನಮ ಯಾವ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು. +ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಲೋಪಗಳೇನು ಎಂದು ಯಾರು ಹೇಳುತ್ತಿಲ್ಲ. ಸ್ವಂತ ಜಾಗವನ್ನು ಕಳೆದುಕೊಂಡರೆ 50:50ರ ಅನುಪಾತದಲ್ಲಿ ನಿವೇಶನ ನೀಡುವುದು ಎಲ್ಲ ನಗರಾಭಿವೃದ್ದಿ ಪ್ರಾಧಿಕಾರಗಳಲ್ಲೂ ಚಾಲ್ತಿಯಲ್ಲಿದೆ. +ಕಲಬುರಗಿ ಸೇರಿದಂತೆ ರಾಜ್ಯದ ಹಲವು ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಭೂಮಿ ಕಳೆದುಕೊಂಡವರಿಗೆ ನಿವೇಶನ ನೀಡಿದಂತೆ ಮೈಸೂರಿನಲ್ಲೂ ನೀಡಲಾಗಿದೆ. ಇದನ್ನು ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿ ಹಗರಣ ಎಂಬಂತೆ ಬಿಂಬಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರದ ಹಿಂದೆ ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಕೈವಾಡವಿದೆ ಎಂದರು. +ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 17ರಡಿ ಅನುಮತಿ ನೀಡಬೇಕಾದರೆ ಅನುಸರಿಸಬೇಕಾದ ಕಾರ್ಯ ವಿಧಾನಗಳ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಬಿಜೆಪಿಯಿಂದ ಶಾಸಕರ ಖರೀದಿ ಯತ್ನ: ಗಣಿಗ ರವಿಕುಮಾರ್ಬೆಂಗಳೂರು,ಆ.25- ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು , ಶಾಸಕರ ಖರೀದಿಗೆ 50 ಕೋಟಿ ರೂ.ಗಳಷ್ಟಿದ್ದ ಮೌಲ್ಯವನ್ನು 100 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಕಾಂಗ್ರೆಸ್‌‍ ಶಾಸಕ ಗಣಿಗ ರವಿಕುಮಾರ್‌ ಆರೋಪಿಸಿದ್ದಾರೆ. +ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಬಿಜೆಪಿಯ ಬ್ರೋಕರ್‌ ಒಬ್ಬರು ಕರೆ ಮಾಡಿ 100 ಕೋಟಿ ರೂ.ನೀಡುವುದಾಗಿ ಹೇಳಿದ್ದರು. ಇದಕ್ಕೆ ಸಂಬಂಧಪಟ್ಟ ಆಡಿಯೋ ನಮ ಬಳಿ ಇದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ. +ಈ ಮೊದಲು ಆಪರೇಷನ್‌ ಕಮಲಕ್ಕೆ 50 ಕೋಟಿ ರೂ. ಹೇಳುತ್ತಿದ್ದರು. ಈಗ 100 ಕೋಟಿಗೆ ಹೆಚ್ಚಿಸಿದ್ದಾರೆ. 50 ಮಂದಿ ಶಾಸಕರು ಯಾರು ಬರುತ್ತೀರೋ ಬನ್ನಿ ಎಂದು ಖರೀದಿಸುವುದಾಗಿ ತಿಳಿಸುತ್ತಿದ್ದಾರೆ. ಇವರ ಬಗ್ಗೆ ಇ.ಡಿ, ಸಿಬಿಐ ಏಕೆ ಗಮನಿಸುತ್ತಿಲ್ಲವೋ ಗೊತ್ತಿಲ್ಲ ಎಂದು ಹೇಳಿದರು. +ಬಿಜೆಪಿಯ ಸಂತೋಷ್‌ ಜೀ, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಷಿ, ಎಚ್‌.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರಿಗೆ ಭರವಸೆ ನೀಡಿದ್ದಾರೆ. ಅದಕ್ಕಾಗಿ ಹಗಲುರಾತ್ರಿ ಪ್ರಯತ್ನಿಸುತ್ತಿದ್ದಾರೆ. ಆದರೆ 136 ಶಾಸಕರ ಬೆಂಬಲ ಇರುವ ಕಾಂಗ್ರೆಸ್‌‍ ಸರ್ಕಾರ ಸದೃಢವಾಗಿದೆ ಎಂದರು. +ಬಿಜೆಪಿಯವರು ಎಷ್ಟೇ ಪ್ರಯತ್ನಪಟ್ಟರೂ ನಮ ಒಬ್ಬ ಶಾಸಕರನ್ನೂ ಖರೀದಿಸಲು ಸಾಧ್ಯವಿಲ್ಲ. ಈ ಮುಂದಿನ ದಿನಗಳಲ್ಲಿ 100 ಕೋಟಿ ಎಂದು ಹೇಳಿಕೊಂಡು ಬೇರೆ ಯಾರಾದರೂ ಬಂದರೆ ಅವರ ವಿಡಿಯೋ ಮಾಡಿಕೊಂಡು ಬಹಿರಂಗ ಮಾಡುತ್ತೇವೆ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್‌‍ ಸರ್ಕಾರ ಬಂಡೆಯಂತೆ 5 ವರ್ಷ ಗಟ್ಟಿಯಾಗಿರಲಿದೆ ಎಂದು ಅವರು ಹೇಳಿದರು. +ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಬಿಜೆಪಿಯ ಏಜೆಂಟರಂತೆ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದ ಅವರು, ಯಾರು ಏನೇ ಪ್ರಯತ್ನ ಮಾಡಿದರೂ ಕಾಂಗ್ರೆಸ್‌‍ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು. +ಮಂಡ್ಯ ನಗರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ 13 ಮತಗಳು ಲಭ್ಯವಿದ್ದು, ಬಿಜೆಪಿ-ಜೆಡಿಎಸ್‌‍ನವರು 20ಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌‍ನವರು ಅಧಿಕಾರ ಹಿಡಿಯುವ ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿದರು. +ಶಾಸಕ ಗಣಿಗ ರವಿಕುಮಾರ್‌ ಆಪರೇಷನ್‌ ಕಮಲದ ವಿಚಾರವನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದು, ಸರ್ಕಾರವು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಪ್ರತಿಯೊಬ್ಬ ಶಾಸಕರ ಖರೀದಿಗೆ 100 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿರುವುದರಿಂದ ಇದೇ ಸಂದರ್ಭವನ್ನು ಬಳಸಿಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವನ್ನು ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_46_34_8.txt b/eesanje/url_46_34_8.txt new file mode 100644 index 0000000000000000000000000000000000000000..52a56270d8be5423dc29111847d33da0984ecbb6 --- /dev/null +++ b/eesanje/url_46_34_8.txt @@ -0,0 +1,9 @@ +ಯಾವುದೇ ಹಂತದಲ್ಲೂ ಸಿಎಂ ರಾಜೀನಾಮೆ ನೀಡಲ್ಲ : ಎಚ್.ಸಿ.ಮಹದೇವಪ್ಪ +ಬೆಂಗಳೂರು,ಆ.25-ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ನಲ್ಲಿ ಎತ್ತಿ ಹಿಡಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕತೆ ಹಿನ್ನಲೆಯಲ್ಲಿ ರಾಜೀನಾಮೆ ನೀಡುವ ಪರಿಸ್ಥಿತಿ ಬರುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಪಾದಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಯಾವುದೇ ಹಂತದಲ್ಲೂ ಭಾಗಿಯಾಗಿಲ್ಲ. ಸ್ವಜನಪಕ್ಷಪಾತ, ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಇದರಲ್ಲಿ ನೈತಿಕತೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಮರ್ಥಿಸಿಕೊಂಡರು. +ದೆಹಲಿಯಲ್ಲಿ ನಡೆದಿರುವ ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಮುಡಾ ಪ್ರಕರಣದ ಬಗ್ಗೆ ಚರ್ಚೆಯಾಗಿದೆ. ಆದರೆ ನಾಯಕತ್ವ ಬದಲಾವಣೆ ಕುರಿತು ಯಾವುದೇ ಪ್ರಸ್ತಾಪ ಇಲ್ಲ. ಹೈಕಮಾಂಡ್, ಕಾಂಗ್ರೆಸ್ನ ಶಾಸಕರು, ಸಚಿವರು ಮುಖ್ಯಮಂತ್ರಿಯೊಂದಿಗೆ ಗಟ್ಟಿಯಾಗಿ ನಿಂತಿದ್ದಾರೆ. ಈ ಹಂತದಲ್ಲಿ ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ ಎಂದರು. +ಆಪರೇಷನ್ ಕಮಲ ಹೊಸದಲ್ಲ. ಬಿಜೆಪಿ-ಜೆಡಿಎಸ್ನವರು ಜನರಿಂದ ಮತ ಪಡೆದು ನೇರವಾಗಿ ಆಯ್ಕೆಯಾಗಿ ಸರ್ಕಾರ ರಚಿಸಲು ಯಶಸ್ವಿಯಾಗಿಲ್ಲ. ಹೀಗಾಗಿ ಹಿಂಬಾಗಿಲ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸತತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇದು ಯಶಸ್ವಿಯಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. +ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿಯ ನಾಯಕರು, ಜೆಡಿಎಸ್ ಮುಖಂಡರು ಹತ್ತು ತಿಂಗಳಲ್ಲೇ ಸರ್ಕಾರ ಬದಲಾಗಲಿದೆ ಎಂದು ಹೇಳಿದ್ದಾರೆ. ಸಂಖ್ಯಾ ಬಲದ ಕೊರತೆ ಇದ್ದಾಗಲೂ ಸರ್ಕಾರ ರಚಿಸುತ್ತೇವೆ ಎಂದು ಯಾವ ಆಧಾರದ ಮೇಲೆ ಹೇಳಲು ಸಾಧ್ಯ? ಅದರ ಅರ್ಥ ಬಿಜೆಪಿಯವರು ತಮ ಹಳೆಯ ಛಾಳಿಯನ್ನೇ ಮುಂದುವರೆಸಿದ್ದಾರೆ. ಆಪರೇಷನ್ ಕಮಲಕ್ಕೆ ಕೈಹಾಕಿದ್ದಾರೆಂದೇ ಅರ್ಥವಲ್ಲವೇ ಎಂದು ಪ್ರಶ್ನಿಸಿದರು. +ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳನ್ನು ರೂಪಿಸುತ್ತಿದೆ. ಇದನ್ನು ಸಹಿಸಲು ವಿಪಕ್ಷಗಳಿಗೆ ಆಗುತ್ತಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಅತ್ಯಂತ ಪ್ರಾಮಾಣಿಕ ವ್ಯಕ್ತಿ. 1999ರಲ್ಲಿ ಸೋಲು ಕಂಡಿದ್ದರು. ಡಾಲರ್ರಸ ಕಾಲೋನಿಯ ಮನೆಯಲ್ಲಿ ಬಾಡಿಗೆ ಮನೆಯಲ್ಲಿದ್ದರು. ಮನೆಯ ಖರ್ಚಿಗೆ ಕಷ್ಟಪಟ್ಟು ಹೇಗೋ ಹೊಂದಿಸಿ 50 ಸಾವಿರ ನೀಡುತ್ತಿದ್ದರು. ಹಬ್ಬ ಹಾಗೂ ಇತರ ಸಂದರ್ಭಗಳು ಬಂದಾಗ ಖರ್ಚುಗಳು ಹೆಚ್ಚಾಗಿ ಮತ್ತಷ್ಟು ಹಣ ಕೇಳಿದರೆ, ಮನೆಯ ಖರ್ಚಿಗೆ ಇನ್ನು ಎಷ್ಟು ಹಣ ಬೇಕೆಂದು ಜಗಳ ಮಾಡಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹಳೆಯ ಘಟನೆಯನ್ನು ಸರಿಸಿಕೊಂಡರು. +ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲಗಳಿಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿಯಾಗಲು ಯಾರೂ ಕಾಯುತ್ತಿಲ್ಲ. ಬಿಜೆಪಿ ಜೆಡಿಎಸ್ನಲ್ಲಿ ಗೊಂದಲಗಳಿವೆ. ನಮ ಸರ್ಕಾರವನ್ನು ಅಸ್ಥಿರಗೊಳಿಸಲು ಅವರು ಸತತ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. +ದಲಿತ ಮುಖ್ಯಮಂತ್ರಿ ವಿಚಾರ ಸದ್ಯಕ್ಕಿಲ್ಲ. ಎಲ್ಲಾ ಸಮುದಾಯಗಳಿಗೂ ಅವಕಾಶ ಸಿಗಬೇಕೆಂಬುದು ಕಾಂಗ್ರೆಸ್ನ ಉದ್ದೇಶ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ತಾವು ಸದಾಕಾಲ ಸಿದ್ದರಾಮಯ್ಯನವರ ಜೊತೆಗಿರುವುದಾಗಿ ಮಹದೇವಪ್ಪ ತಿಳಿಸಿದರು. \ No newline at end of file diff --git a/eesanje/url_46_34_9.txt b/eesanje/url_46_34_9.txt new file mode 100644 index 0000000000000000000000000000000000000000..8819b79983105d472a0a487f09cab1446bbc70fb --- /dev/null +++ b/eesanje/url_46_34_9.txt @@ -0,0 +1,11 @@ +ಮಾಜಿ ಸಿಎಂ ಒಬ್ಬರ ಲೈಂಗಿಕ ಹಗರಣ : ಸುಪ್ರೀಂ ಮೆಟ್ಟಿಲೇರಲು ಮುಂದಾದ ವಕೀಲ ಜಗದೀಶ್ + +ಬೆಂಗಳೂರು,ಆ.25-ಮಾಜಿ ಸಚಿವ ರಮೇಶ್ ಜಾರಕಿಹೊಳಿಅವರ ಸಿ.ಡಿ ಪ್ರಕರಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ವಕೀಲ ಜಗದೀಶ್, ಇದೀಗ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಲೈಂಗಿಕ ಹಗರಣದ ವಿಚಾರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ. +ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರು ನಂದಿಬೆಟ್ಟಕ್ಕೆ ಹೋಗಿ ಕೆಲವು ಅಧಿಕಾರಿಗಳು, ಅಂದಿನ ಸಚಿವರು ಹಾಗೂ ಮಧ್ಯವರ್ತಿಗಳ ಸಹಾಯದಿಂದ ಹೆಣ್ಣುಮಕ್ಕಳ ಸಂಘದಲ್ಲಿ ಮೈಮರೆತು ನಿಯಮ ಬಾಹಿರ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದಾರೆ ಎಂದು ಆರೋಪ ಮಾಡಿರುವ ವಕೀಲರು, ಈ ಹಗರಣವನ್ನು ಸುಪ್ರೀಂಕೋರ್ಟ್ ನಿಗಾವಣೆಯಲ್ಲಿ ತನಿಖೆಯಾಗಬೇಕೆಂದು ಮನವಿ ಮಾಡುವುದಾಗಿ ಹೇಳಿದ್ದಾರೆ. +ಹಲವು ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷವಾಗಿರುವ ವಕೀಲ ಜಗದೀಶ್ ಇದ್ದಕ್ಕಿದ್ದಂತೆ ಮಾಜಿ ಮುಖ್ಯಮಂತ್ರಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಮಾಹಿತಿ ನೀಡಿದ್ದಾರೆ. +ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಜಿ ಮುಖ್ಯಮಂತ್ರಿಯಿಂದ ಆಗಿನ ಸಚಿವರು, ಅಧಿಕಾರಿಗಳು ಕೋಟ್ಯಂತರ ರೂ. ಲಾಭ ಮಾಡಿಕೊಂಡಿದ್ದಾರೆ. ಅಕ್ರಮ ಮಾಡಿದವರು, ಅಕ್ರಮವಾಗಿ ಹಣ ಸಂಪಾದನೆ ಮಾಡಿದವರು ಪ್ರಕರಣಗಳಿಂದ ರಕ್ಷಣೆ ಪಡೆದಿದ್ದಾರೆ. ಮುಖ್ಯಮಂತ್ರಿ ಜೊತೆಗೆ ಆಗಿನ ಇನ್ನಿಬ್ಬರು ಸಚಿವರು ಈ ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದು, ಅವರಲ್ಲಿ ಒಬ್ಬರು ಈಗ ಸಂಸದರಾಗಿದ್ದಾರೆ ಎಂದು ಸುಳಿವು ನೀಡಿದ್ದಾರೆ. +ಈ ಹಗರಣದ ಕುರಿತು ನಾವು ದಾಖಲೆಗಳನ್ನು ಸಂಗ್ರಹಿಸಿದ್ದೇವೆ. ಅದರ ಪ್ರಕಾರ ಮೇಲ್ನೋಟಕ್ಕೆ ಆರೋಪಗಳು ಸಾಬೀತಾಗುವಂತಿವೆ. ಮಾಜಿ ಮುಖ್ಯಮಂತ್ರಿಯನ್ನು ಲೈಂಗಿಕ ಹಗರಣದಲ್ಲಿ ತೊಡಗಿಸಿ ಇಬ್ಬರು ಸಚಿವರು ಹಾಗೂ 15ರಿಂದ 20 ಅಧಿಕಾರಿಗಳು ಹಲವು ರೀತಿಯ ಲಾಭಗಳನ್ನು ಪಡೆದುಕೊಂಡಿದ್ದಾರೆ ಎಂದು ಜಗದೀಶ್ ದೂರಿದ್ದಾರೆ. +ಈ ಹಗರಣದಲ್ಲಿ ಆಂಧ್ರಪ್ರದೇಶದಿಂದ ನಟಿಯರನ್ನು ಹಾಗೂ ಹೆಣ್ಣುಮಕ್ಕಳನ್ನು ಕರೆಸಿಕೊಳ್ಳಲಾಗಿದೆ. ಒಬ್ಬರಿಗಿಂತಲೂ ಹೆಚ್ಚು ಜನರನ್ನು ಏಕಕಾಲಕ್ಕೆ ಬಳಕೆ ಮಾಡಲಾಗಿದೆ. ಅದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದರಲ್ಲಿ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದಾಗಲಿ ಅಥವಾ ಹಾಸನದ ಮಾದರಿಯಲ್ಲಿ ಸಿ.ಡಿ ಬಿಡುಗಡೆ ಮಾಡಿಸುವುದಾಗಲಿ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. +ಬಹುತೇಕವಾಗಿ ಹೆಣ್ಣು ಮಕ್ಕಳು ಸಹಮತಿಯ ಮೇರೆಗೆ ಇತರ ಲಾಲಸೆಗಳಿಗೆ ಒಳಗಾಗಿಯೇ ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಹೀಗಾಗಿ ದೂರು ಕೊಡಿಸುವುದು ಅರ್ಥಹೀನವಾಗುತ್ತದೆ. ಅಧಿಕಾರದಲ್ಲಿದ್ದಾಗ ಈ ರೀತಿಯ ಜಾಲಕ್ಕೆ ಸಿಲುಕಿ ಯಾವೆಲ್ಲ ಕಡತಗಳಿಗೆ ಸಹಿ ಮಾಡಿದ್ದಾರೆ. ಆಡಳಿತಾತಕವಾಗಿ ಹಾಗೂ ಬೊಕ್ಕಸಕ್ಕೆ ಆಗಿರುವ ನಷ್ಟವೇನು ಎಂಬುದರ ಬಗ್ಗೆ ಮಾತ್ರ ನಾವು ಗಮನಹರಿಸುತ್ತಿದ್ದೇವೆ. ಈ ಬಗ್ಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಲು ದೆಹಲಿಯಲ್ಲಿ ವಕೀಲರ ತಂಡ ಕಡತಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಹೇಳಿದ್ದಾರೆ. +ಆಗಿನ ಮುಖ್ಯಮಂತ್ರಿಯನ್ನು ನಂದಿಬೆಟ್ಟ ಹಾಗೂ ಇತರ ಜಾಗಗಳಿಗೆ ಕರೆದುಕೊಂಡು ಹೋಗಿದ್ದವರೇ ವಿಡಿಯೋಗಳನ್ನು ಚಿತ್ರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರು ಎಂಬ ಮಾಹಿತಿ ಇದೆ. ಇದರಲ್ಲಿ ಆರೋಪಿಗಳು ಹಾಗೂ ಮಧ್ಯವರ್ತಿಗಳು ಪ್ರಮುಖ ಸ್ಥಾನದಲ್ಲಿರುವುದರಿಂದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾಹಿತಿ ನೀಡುತ್ತೇವೆ. +ಬಳಿಕ ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆಯಾಗಬೇಕು. ವಿಡಿಯೋದಲ್ಲಿರುವ ವ್ಯಕ್ತಿಯ ಬಗ್ಗೆ ಕರಾರುವಕ್ಕಾದ ಮಾಹಿತಿಸಾರ್ವಜನಿಕವಾಗಿ ಬಹಿರಂಗಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸುವುದಾಗಿ ಜಗದೀಶ್ ತಿಳಿಸಿದ್ದಾರೆ. \ No newline at end of file diff --git a/eesanje/url_46_35_1.txt b/eesanje/url_46_35_1.txt new file mode 100644 index 0000000000000000000000000000000000000000..3e8fcb639ccb597f330000c43afcedc5affd6f81 --- /dev/null +++ b/eesanje/url_46_35_1.txt @@ -0,0 +1,6 @@ +ಡಿಸಿಇಟಿ-2024ಗೆ ಪ್ರವೇಶ ಪಡೆಯಲು ಆ.27ರ ಗಡುವು + 27 -2024 +ಬೆಂಗಳೂರು,ಆ.25-ಕರ್ನಾಟಕ ಪ್ರದೇಶ ಪ್ರಾಧಿಕಾರವು ಡಿಸಿಇಟಿ-2024ಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಆ.27ರ ಗಡುವು ನಿಗದಿಪಡಿಸಿದೆ. +ಅಂದು ಸಂಜೆ 5.30 ಗಂಟೆಯೊಳಗೆ ಸಂಬಂಧಿಸಿದ ಕಾಲೇಜಿನಲ್ಲಿ ಅಭ್ಯರ್ಥಿಗಳು ಪ್ರವೇಶ ಪಡೆಯಬೇಕಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಆ.20 ರಂದು ಪ್ರಕಟಿಸಿದೆ. +ಕೆಲವು ಅಭ್ಯರ್ಥಿಗಳು ದಿನಾಂಕ ವಿಸ್ತರಣೆ ಕೋರಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ನಂತರದ ಪ್ರಕ್ರಿಯೆಗಳಿಗೆ ಕೆಇಎ ಮತ್ತೊಮೆ ದಿನಾಂಕವನ್ನು ವಿಸ್ತರಿಸಿ ವೇಳಾಪಟ್ಟಿಯನ್ನು ಮರುನಿಗದಿ ಮಾಡಿದೆ. +ಅಭ್ಯರ್ಥಿಗಳು ಚಲನ್ ಡೌನ್ಲೌಡ್ ಮಾಡಿಕೊಳ್ಳಲು ನಾಳೆ ಸಂಜೆ 4 ಗಂಟೆಯವರೆಗೆ ಅವಕಾಶವಿದೆ. ಶುಲ್ಕ ಪಾವತಿ ಮಾಡಲು ನಾಳೆಯಿಂದ ಆ.27 ರವರೆಗೆ ಕಾಲಾವಕಾಶ ನೀಡಲಾಗಿದೆ.ಶುಲ್ಕ ಪಾವತಿಯ ನಂತರ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಆ.27 ರ ಸಂಜೆ 4 ಗಂಟೆಯವರೆಗೆ ಅವಕಾಶವನ್ನು ಕೆಇಎ ನೀಡಲಾಗಿದೆ. \ No newline at end of file diff --git a/eesanje/url_46_35_10.txt b/eesanje/url_46_35_10.txt new file mode 100644 index 0000000000000000000000000000000000000000..dd73325d7e2e8a07461183ee5c211dc90b9ffe7e --- /dev/null +++ b/eesanje/url_46_35_10.txt @@ -0,0 +1,10 @@ +ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಚಿವ ರಾಮಲಿಂಗಾರೆಡ್ಡಿ + +ಬೆಂಗಳೂರು, ಆ.24– ಪೆಟ್ರೋಲ್‌-ಡೀಸೆಲ್‌, ಹಾಲು ಸೇರಿದಂತೆ ದಿನಕ್ಕೊಂದು ದರ ಏರಿಕೆಯಾಗುತ್ತಿರುವ ಪಟ್ಟಿಯಲ್ಲಿ ನೀರಿನ ದರ ಮತ್ತು ಬಸ್‌‍ ಪ್ರಯಾಣ ದರವೂ ಸೇರ್ಪಡೆಯಾಗುತ್ತಿರುವುದು ಮಧ್ಯಮ ವರ್ಗದವರ ದುಗುಡವನ್ನು ಹೆಚ್ಚಿಸಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರೋಧಪಕ್ಷದ ನಾಯಕರಿಗೆ ಉತ್ತರಿಸುವ ಭರದಲ್ಲಿ ಪ್ರಯಾಣದರ ಏರಿಕೆಯ ಸುಳಿವು ನೀಡಿದ್ದಾರೆ. +ವಿರೋಧಪಕ್ಷದ ನಾಯಕ ಆರ್‌.ಅಶೋಕ್‌, ಬಸ್‌‍ ಪ್ರಯಾಣ ದರ ಏರಿಕೆಗೆ ಹೊಸ ಆಯೋಗ ರಚನೆ ಮಾಡುವ ಮೂಲಕ ರಾಜ್ಯಸರ್ಕಾರ ಜನರ ಜೇಬುಗಳ್ಳತನ ಮಾಡಲು ಮುಂದಾಗಿದೆ ಎಂದು ಟೀಕಿಸಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಾಮಲಿಂಗಾರೆಡ್ಡಿಯವರು, ಅಶೋಕ್‌ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿರುವುದು ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ. +2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್‌‍ ಪ್ರಯಾಣ ದರ ಶೇ.10.5 ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? ಎಂದು ಪ್ರಶ್ನಿಸಲಾಗಿದ್ದು, 2020 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಬಸ್‌‍ ಪ್ರಯಾಣ ದರ ಶೇ.12 ಹೆಚ್ಚಳ ಮಾಡಲಾಗಿತ್ತು. ಆಗ ಅಶೋಕ್‌ ಸಂಪುಟದ ಸಚಿವರಾಗಿದ್ದು, ಏಕೆ ವಿರೋಧ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. +ನಿವೃತ್ತ ಐಎಎಸ್‌‍ ಅಧಿಕಾರಿ ಎಂ.ಆರ್‌.ಶ್ರೀನಿವಾಸ್‌‍ಮೂರ್ತಿ ಅವರ ಅಧ್ಯಕ್ಷತೆಯ ಏಕ ಸದಸ್ಯತ್ವ ಸಮಿತಿಯನ್ನು ಬಿ.ಜೆ.ಪಿ ಸರ್ಕಾರವೇ 2021 ರ ನವೆಂಬರ್‌ 15 ರಂದು ರಚಿಸಿತ್ತು. ಆ ಸಮಿತಿ ಅನೇಕ ಶಿಾರಸು ನೀಡಿದ್ದು, ಪ್ರಮುಖವಾಗಿ ಬಸ್‌‍ ಪ್ರಯಾಣ ದರ ಪರಿಷ್ಕರಣೆಗೆ ಕೆಇಆರ್‌ಸಿ ಮಾದರಿಯಲ್ಲಿ ಸಾಂಸ್ಥಿಕ ವ್ಯವಸ್ಥಾಪನಾ ಸಮಿತಿ ಅಗತ್ಯ ಎಂದು ಸಲಹೆ ನೀಡಿದೆ. +ಇನ್‌ಸ್ಟ್ಟೂಷನಲ್‌ ಅರೇಂಜ್‌ಮೆಂಟ್‌ ಫಾರ್‌ ರಿವಿಜನ್‌ ಆಫ್‌ ಬಸ್‌‍ ಪೇರ್‌ ಶೀರ್ಷಿಕೆಯಡಿ ಆಂತರಿಕ ಸಂಸ್ಥೆಯನ್ನು ರಚಿಸಬೇಕು ಮತ್ತು ಕಾಲಕಾಲಕ್ಕೆ ಬಸ್ ದರವನ್ನು ಹೆಚ್ಚಿಸಬೇಕು. ಆಗಷ್ಟೇ ಸಾರಿಗೆ ಸಂಸ್ಥೆಗಳು ಉಳಿಯಲು ಸಾಧ್ಯವೆಂದು ವರದಿ ನೀಡಲಾಗಿದೆ.ಅಶೋಕ್‌ ಅವರು ಸಚಿವರಾಗಿದ್ದಾಗ ಈ ವರದಿಯನ್ನು ಏಕೆ ತಿರಸ್ಕರಿಸಲಿಲ್ಲ. ಅವರದೇ ಸರ್ಕಾರ ಅಂಗೀಕರಿಸಿದ ವರದಿಯನ್ನು ಈಗ ಸರಿಯಿಲ್ಲವೆಂದು ಹೇಳುತ್ತಿರುವುದು ಅಚ್ಚರಿಯಾಗಿದೆ ಎಂದು ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. +ಕರ್ನಾಟಕ ಸರ್ಕಾರ 2000ರ ಸೆಪ್ಟೆಂಬರ್‌ 30ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್ಟಿಡಿ/85/ಟಿಆರ್‌ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್‌ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು ನೌಕರರಿಗೆ ನೀಡುವ ತುಟ್ಟಿಭತ್ಯೆ ದರಗಳಲ್ಲಿ ಹೆಚ್ಚಳವಾದಾಗ ಪ್ರಯಾಣ ದರಗಳನ್ನು ಸ್ವಯಂಚಾಲಿತ ದರ ಹೊಂದಾಣಿಕೆ ನೀತಿಯಂತೆ ಪರಿಷ್ಕರಿಸಲು ಅನುಮತಿ ನೀಡಿರುತ್ತದೆ ಎಂಬ ಮಾಹಿತಿಯೇ ತಮಗೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ. +ಅವರದೇ ಬಿ.ಜೆ.ಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ನಷ್ಟದಲ್ಲಿಟ್ಟು ಹೋಗಿದ್ದು, ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ? ಎಂಬುದಕ್ಕೆ ಅಶೋಕ್‌ರವರು ಉತ್ತರಿಸಲು ಸಾಧ್ಯವೇ ಎಂದಿರುವ ಅವರು, ನನಗೆ ರಾಜಕೀಯವೇ ಮುಖ್ಯ. ಸಾರಿಗೆ ಸಂಸ್ಥೆಗಳು ಉಳಿದರೇನು? ಮುಳುಗಿದರೆ ನನಗೇನು? ಅನ್ನುವ ಮನಸ್ಥಿತಿಯೇ ತಿಳಿಯದಾಗಿದೆ ಎಂದು ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ. +ಅಶೋಕ್‌ ಅವರು ಸರ್ಕಾರದ ಭಾಗವಾಗಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ಇಂದು ಮರೆಮಾಚಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಎಷ್ಟು ಸಮಂಜಸ? ಎಂದು ಕಿಡಿಕಾಡಿರುವ ರಾಮಲಿಂಗಾರೆಡ್ಡಿ ವಿರೋಧಪಕ್ಷದ ನಾಯಕರು ತಮ ಹೇಳಿಕೆಯ ಬಗ್ಗೆ ಆತಾವಲೋಕನ ಮಾಡಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_35_11.txt b/eesanje/url_46_35_11.txt new file mode 100644 index 0000000000000000000000000000000000000000..69817b22f64ae815a9c3c04a51cc4cf62f169a9c --- /dev/null +++ b/eesanje/url_46_35_11.txt @@ -0,0 +1,9 @@ +ಕಾರ್ಕಳ ಅತ್ಯಾಚಾರ ಪ್ರಕರಣ : ಸರ್ಕಾರದ ವಿರುದ್ಧ ಸುನೀಲ್‌ ಕುಮಾರ್‌ ಆಕ್ರೋಶ +ಬೆಂಗಳೂರು,ಆ.24-ಅನ್ಯಕೋಮಿನ ಯುವಕ ಹಿಂದೂ ಯುವತಿಯನ್ನು ಅಪಹರಿಸಿ ಮಧ್ಯದಲ್ಲಿ ಮತ್ತುಭರಿಸಿ ಅತ್ಯಾಚಾರ ನಡೆಸಿರುವುದು ಪೈಶಾಚಿಕ ಕೃತ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬದುಕಿದೆಯೇ ಎಂದು ಬಿಜೆಪಿ ಶಾಸಕ ಎಸ್‌‍.ಸುನೀಲ್‌ಕುಮಾರ್‌ ಪ್ರಶ್ನಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಲು ಬರುವ ಪದಾರ್ಥಗಳನ್ನು ನೀಡಿ ಅತ್ಯಾಚಾರ ಮಾಡುತ್ತಾರೆಂದರೆ ಇದು ಆತಂಕದ ವಿಷಯ. ಹುಬ್ಬಳ್ಳಿ ಘಟನೆ ಮರೆಯುವ ಮುನ್ನ ಮತ್ತೊಂದು ಘಟನೆ ಮರುಕಳಿಸಿದ್ದು, ರಾಜ್ಯದಲ್ಲಿ ಪೊಲೀಸರ ಬಗ್ಗೆ ಭಯ ಇಲ್ಲ. ಹೇಳುವವರು ಕೇಳುವರಿಲ್ಲ ಎಂದು ವಾಗ್ದಾಳಿ ನಡೆಸಿದರು. +ಕಾರ್ಕಳದಲ್ಲಿ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪೈಶಾಚಿಕ ಕೃತ್ಯ. ಯುವತಿಯನ್ನ ಅಮಲು ಬರಿಸಿ ಅತ್ಯಾಚಾರ ಮಾಡುವ ಮಾನಸಿಕತೆ ಇದೆ ಅಂದರೆ ಇದನ್ನು ನಂಬಲು ಸಾಧ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. ಪೊಲೀಸರು ದಿಟ್ಟತನದ ಕ್ರಮ ಕೈಗೊಂಡು ಎಲ್ಲಾ ಆರೋಪಿಗಳನ್ನುಸದೆಬಡೆಯಬೇಕು. ಇದೊಂದು ಲವ್‌ ಜಿಹಾದ್‌ ನ ಮುಂದುವರಿದ ಭಾಗವಾಗಿದೆ. ಪೂರ್ವ ಯೋಜಿತವಾಗಿ ಕೃತ್ಯ ನಡೆಸಲಾಗಿದೆ. ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಬೇಕು ಎಂದು ಮನವಿ ಮಾಡಿದರು. +ಸಂತ್ರಸ್ತ ಯುವತಿಯ ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಬೇಕು. ಇದರಲ್ಲಿ ಯಾವುದೇ ರಾಜಕೀಯ ಮೇಲಾಟ ನಡೆಯಬಾರದು. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೇ ಬಂಧಿಸಬೇಕು. ಯುವತಿಗೆ ರಕ್ಷಣೆ ನೀಡಬೇಕು ಎಂದರು.ಇನ್ನು ಮುಂದೆ ಯಾರು ಈ ರೀತಿಯ ಕೃತ್ಯ ಎಸಗಬಾರದು. ಅಂತಹ ಕಠಿಣ ಕ್ರಮ ಕೈಗೊಂಡು ಪೊಲೀಸರು ದಿಟ್ಟತನದಿಂದ ಕೆಲಸ ಮಾಡಬೇಕು ಎಂದು ಹೇಳಿದರು. +ಘಟನೆ ಸಂಬಂಧ ಸ್ಥಳೀಯ ಕಾರ್ಯಕರ್ತರ ಜೊತೆಗೆ ಸಂಪರ್ಕದಲ್ಲಿದ್ದೇನೆ. ನಾವು ಲವ್‌ ಜಿಹಾದ್‌ ಬಗ್ಗೆ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ. ಎರಡೂ ಜಿಲ್ಲೆಯ ಕೇಂದ್ರವಾಗಿಸಿಕೊಂಡು ದೊಡ್ಡ ಜನಜಾಗೃತಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದರು. +ಹಿಂದೂ ಹೆಣ್ಣುಮಕ್ಕಳನ್ನು ರಕ್ಷಿಸಬೇಕಿದೆ. ಅವರನ್ನು ಉಳಿಸಿಕೊಳ್ಳಬೇಕು. ಸಂತ್ರಸ್ತೆಯ ಪೋಷಕರ ಜೊತೆಗೆ ಮಾಡುತ್ತಿದ್ದೇನೆ. ಪೊಲೀಸರು ಹಾಗೂ ಅಧಿಕಾರಿಗಳ ಜೊತೆಗೆ ಬೆಳಗ್ಗೆಯಿಂದಲೇ ಸಂಪರ್ಕದಲ್ಲಿ ಇದ್ದೇನೆ ಎಂದು ಹೇಳಿದರು. ದೆಹಲಿಯಲ್ಲಿ ರಾಜ್ಯಪಾಲರ ವಿರುದ್ಧ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌‍ ತಮ ತಪ್ಪನ್ನ ಮುಚ್ಚಿಕೊಳ್ಳಲು ಪ್ರಯತ್ನ ಮಾಡುತ್ತಿದೆ. ಕೇಂದ್ರದ ಮೇಲೆ ರಾಜ್ಯಪಾಲರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು. +ಬಿಲ್‌ಗಳನ್ನ ವಾಪಸ್‌‍ ಕಳಿಸುವ ಪ್ರಕ್ರಿಯೆ ಇದೇ ಮೊದಲೇನು ನಡೆದಿಲ್ಲ. ಈ ಹಿಂದೆ ಅನೇಕ ಬಾರಿ ಈ ರೀತಿಯ ಘಟನೆ ನಡೆದಿದೆ. ಈ ಹಿಂದೆ ರಾಜ್ಯಪಾಲರಾದ ಹಂಸರಾಜ್‌ ಭಾರದ್ವಾಜ್‌ ಅನೇಕ ಬಿಲ್‌ ವಾಪಸ್‌‍ ಕಳಿಸಿದ್ದರು. ಹಂಸರಾಜ್‌ ಭಾರದ್ವಾಜ್‌ ಮಾಡಿದರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್‌ ಮಾಡಿದರೆ ತಪ್ಪೇ ಎಂದು ಪ್ರಶ್ನಿಸಿದರು. +ಕಾಂಗ್ರೆಸ್ ದ್ವಂದ್ವ ನೀತಿಯನ್ನು ಬಿಡಬೇಕು. ರಾಜ್ಯದಲ್ಲಿ ಒಬ್ಬ ಮಂತ್ರಿಇಲ್ಲ.ಎಲ್ಲರೂ ದೆಹಲಿಗೆ ಹೋಗಿ ಕುಳಿತಿದ್ದಾರೆ. ದೆಹಲಿಯಲ್ಲಿ ಆಡಳಿತ ನಡೆಸುವುದಲ್ಲ ಕರ್ನಾಟಕದಲ್ಲಿ ಆಡಳಿತ ನಡೆಸಿ ಎಂದು ಸರ್ಕಾರಕ್ಕೆ ಟಾಂಗ್‌ ನೀಡಿದರು. \ No newline at end of file diff --git a/eesanje/url_46_35_12.txt b/eesanje/url_46_35_12.txt new file mode 100644 index 0000000000000000000000000000000000000000..5d74461e33502a904023b04c28d1ff7a16f80db6 --- /dev/null +++ b/eesanje/url_46_35_12.txt @@ -0,0 +1,11 @@ +ಧರ್ಮ, ಜಾತಿ ಹೆಸರಲ್ಲಿ ಅಸಮಾನತೆ ಹೆಚ್ಚುತ್ತಿದೆ : ಸಿಎಂ ಸಿದ್ದರಾಮಯ್ಯ + , : +ಬೆಂಗಳೂರು,ಆ.24-ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 21ನೇ ಶತಮಾನಕ್ಕೆ ಮಹಾತಗಾಂಧೀಜಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. +ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತಗಾಂಧಿಯವರನ್ನು ಕೊಂದರು ಎಂದು ಆಕೋಶ ವ್ಯಕ್ತಪಡಿಸಿದರು. +ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ. ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೆತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮದಿಯಿಂದ ಇರಬಹುದು ಎಂದರು. +ಮನುಷ್ಯ ತನ್ನ ನೆಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದು ಹೇಳಿದರು. +ಪ್ರಕೃತಿ ನಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು. +ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. +ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ಧಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದರು. +ಮಹಾತಗಾಂಧಿಯವರು ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದು ತಿಳಿಸಿದರು. ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ. ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು. +ಗಾಂಧಿ ಸಾರಕ ನಿಧಿ ಅಧ್ಯಕ್ಷ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷ ವಿಶುಕುಮಾರ್, ನವದೆಹಲಿ ಸಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_35_2.txt b/eesanje/url_46_35_2.txt new file mode 100644 index 0000000000000000000000000000000000000000..3099c55efa773ee1d104e24817fbf1eef788c6b7 --- /dev/null +++ b/eesanje/url_46_35_2.txt @@ -0,0 +1,7 @@ +ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತ ಜಂಟಿ ಪರಿಶೀಲನಾ ಸಮಿತಿ ರಚನೆ +ಬೆಂಗಳೂರು,ಆ.25-ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕುರಿತ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದೆ, ಸಮಿತಿಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ರವರು 13 ಸದಸ್ಯರನ್ನು ನೇಮಕ ಮಾಡಿದ್ದು, ಇಬ್ಬರು ಸಚಿವರನ್ನು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ. +ವಿಧಾನಸಭಾಧ್ಯಕ್ಷರು ವಿಧಾನಪರಿಷತ್ನ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಹಮತಿಯೊಂದಿಗೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 250 ರ ಮೇರೆಗೆ ವಿಧಾನಸಭೆಯ 10 ಮತ್ತು ವಿಧಾನಪರಿಷತ್ನ ಮೂವರು ಸದಸ್ಯರನ್ನೊಳಗೊಂಡ ಜಂಟಿ ಪರಿಶೀಲನಾ ಸಮಿತಿಯನ್ನು ರಚನೆ ಮಾಡಿದ್ದಾರೆ. +ಜೊತೆಗೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 255 (2 ರ ಮೇರೆಗೆ) ವಿಧೇಯಕಕ್ಕೆ ಸಂಬಂಧಪಟ್ಟ ಇಲಾಖೆಯ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲರನ್ನು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. +2024 ನೇ ಸಾಲಿನ ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲು ಸಮಿತಿಗೆ ಮೂರು ತಿಂಗಳ ಕಾಲಾವಕಾಶ ನಿಗಧಿಪಡಿಸಲಾಗಿದೆ.ಆದರೆ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 260ರ ಪ್ರಕಾರ, ಜಂಟಿ ಪರಿಶೀಲನಾ ಸಮಿತಿಯು ತನ್ನ ಅಧ್ಯಕ್ಷನನ್ನು ತಾನೇ ಚುನಾಯಿಸಿಕೊಳ್ಳಬೇಕಿದೆ. +ಸಮಿತಿಯಲ್ಲಿ ವಿಧಾನಸಭಾ ಸದಸ್ಯರಾದ ರಿಜ್ವಾನ್ ಅರ್ಷದ್, ಎನ್.ಎ.ಹ್ಯಾರಿಸ್, ಬಿ.ಶಿವಣ್ಣ, ಎಸ್.ಟಿ.ಸೋಮಶೇಖರ್, ಪ್ರಿಯಕೃಷ್ಣ, ಎ.ಸಿ.ಶ್ರೀನಿವಾಸ್, ಎಸ್.ಸುರೇಶ್ಕುಮಾರ್, ಎಸ್.ಆರ್.ವಿಶ್ವನಾಥ್, ಎಸ್.ರಘು, ಜಿ.ಟಿ.ದೇವೇಗೌಡರು, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಯು.ಬಿ.ವೆಂಕಟೇಶ್, ಎಚ್.ಎಸ್.ಗೋಪಿನಾಥ್ ಅವರನ್ನು ಸಭಾಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಕ ಮಾಡಿದ್ದಾರೆ. +16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಜು.25 ರಂದು 2024ನೇ ಸಾಲಿನ ದಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಲ್ಪಟ್ಟ ಸಂದರ್ಭದಲ್ಲಿ ಹಲವು ಶಾಸಕರ ಕೋರಿಕೆ ಮೇರೆಗೆ ಈ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿಯನ್ನು ನೀಡಲು ಜಂಟಿ ಪರಿಶೀಲನಾ ಸಮಿತಿಗೆ ವಹಿಸಲಾಗಿತ್ತು. ಸದನದ ನಿರ್ಣಯದಂತೆ ಸಭಾಧ್ಯಕ್ಷರು ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ್ದಾರೆ.. \ No newline at end of file diff --git a/eesanje/url_46_35_3.txt b/eesanje/url_46_35_3.txt new file mode 100644 index 0000000000000000000000000000000000000000..b765ca241bcd6886c71fecdb67163ad3a1c041ff --- /dev/null +++ b/eesanje/url_46_35_3.txt @@ -0,0 +1,8 @@ +ಹೈಟೆಕ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ‘ದುಬಾರಿ ಬಿಲ್‌’ ಕಟ್ಟಿದ ಶಾಸಕರು, ಇಲ್ಲಿದೆ ಅನಾರೋಗ್ಯಕ್ಕೊಳಗಾದವರ ಪಟ್ಟಿ +ಬೆಂಗಳೂರು,ಆ.25-ಸರ್ಕಾರಿ ಹಣ ಎಂದರೆ ನನಗೂ ಇರಲಿ, ನನ್ನ ಮನೆಯವರಿಗೂ ಇರಲಿ ಎಂಬಂತೆ ಕೋಟಿ ಕೋಟಿ ತೂಕ ಬಾಳುವ ವಿಧಾನಪರಿಷತ್‌ ಸದಸ್ಯರು ಮತ್ತು ಶಾಸಕರು ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ಗಳನ್ನು ಸರ್ಕಾರದಿಂದ ಕ್ಲೈಮ್‌ ಮಾಡಿಕೊಂಡಿದ್ದಾರೆ. +ಬಿಜೆಪಿಯ ವಿಧಾನಪರಿಷತ್‌ ಸದಸ್ಯೆ ಭಾರತಿಶೆಟ್ಟಿ ಒಂದೇ ವರ್ಷದ ಅವಧಿಯಲ್ಲಿ ಅತೀ ಹೆಚ್ಚು ಅಂದರೆ 48.70 ಲಕ್ಷ ಹಣವನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಬಿಲ್‌ ಪಾವತಿಸಿಕೊಂಡಿದ್ದಾರೆ. +ಎರಡನೇ ಸ್ಥಾನದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್‌ 39.64 ಲಕ್ಷ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್‌ ಸಹೋದರ ಚನ್ನರಾಜ್‌ ಹಟ್ಟಿಹೊಳಿ 17.03 ಲಕ್ಷ ಹಣವನ್ನು ಒಂದೇ ವರ್ಷದಲ್ಲಿ ಪಡೆದುಕೊಂಡಿದ್ದಾರೆ.ಸಾಮಾಜಿಕ ಹೋರಾಟಗಾರ ವೆಂಕಟೇಶ್‌ ಎಂಬುವರು ಮಾಹಿತಿ ಹಕ್ಕು ಆಯೋಗದಿಂದ ಪಡೆದುಕೊಂಡಿರುವ ದಾಖಲೆಗಳಲ್ಲಿ ಇದು ಬಹಿರಂಗವಾಗಿದೆ. +ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಸರ್ಕಾರದ ವತಿಯಿಂದಲೇ ಹಣವನ್ನು ಕ್ಲೈಮ್‌ ಮಾಡಲಾಗುತ್ತದೆ. ನಿಯಮಗಳ ಪ್ರಕಾರ ಸರ್ಕಾರಿ ಆಸ್ಪತ್ರೆ ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. +ಆದರೆ ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಜನಪ್ರತಿನಿಧಿಗಳು ತಾವು ಮಾತ್ರ ಹೈಟೆಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂಬ ನೀತಿ ಬೋಧನೆ ಮಾಡುತ್ತಾರೆ.ವಿಶೇಷವೆಂದರೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಕೋಟಿಕೋಟಿ ಬಾಳುವ ಜನಪ್ರತಿನಿಧಿಗಳೇ ಈ ವರ್ಷ ಸರ್ಕಾರದ ಹಣದಿಂದಲೇ ಚಿಕಿತ್ಸೆ ಪಡೆದುಕೊಂಡಿದ್ದಾರೆ. +ಮೊದಲನೇ ಸ್ಥಾನ ಭಾರತಿಶೆಟ್ಟಿಗೆ ಸಲ್ಲಿದರೆ, ಸಿ.ಪಿ.ಯೋಗೇಶ್ವರ್‌, ಚೆನ್ನರಾಜ ಹಟ್ಟಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್‌ ಸವದಿ, ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. +ಹೆಚ್ಚು ವೈದ್ಯಕೀಯ ಬಿಲ್‌ ಕ್ಲೈಮ್‌ ಮಾಡಿದವರು :ಭಾರತಿಶೆಟ್ಟಿ – 48.70 ಲಕ್ಷಸಿ.ಪಿ.ಯೋಗೇಶ್ವರ್‌ – 39.64 ಲಕ್ಷಚನ್ನರಾಜ ಹಟ್ಟಿಹೊಳಿ – 17.03 ಲಕ್ಷಗೋವಿಂದ ರಾಜ್‌ – 7.26 ಲಕ್ಷಲಕ್ಷ್ಮಣ್‌ ಸವದಿ – 2.41 ಲಕ್ಷಟಿ.ಎ.ಶರವಣ – 2.14 ಲಕ್ಷಹರೀಶ್‌ ಕುಮಾರ್‌ – 2 ಲಕ್ಷ ರೂಪಾಯಿಮರಿತಿಬ್ಬೇಗೌಡ – 1,54,995 ರೂಪಾಯಿಎನ್‌‍. ವಾಯ್‌ ನಾರಾಯಣಸ್ವಾಮಿ – 3 ಲಕ್ಷ ರೂಪಾಯಿಅಬ್ದುಲ್‌ ಜಬ್ಬಾರ್‌- 1,1,345 ರೂಪಾಯಿಸುಧಾಮ್‌ ದಾಸ್‌‍ – 2,04,542 ರೂಪಾಯಿಸುನೀಲ್‌ ವಲ್ಯಾಪುರೆ – 2,75,000 ರೂಪಾಯಿಛಲವಾದಿ ನಾರಾಯಣಸ್ವಾಮಿ – 1,18,828 ರೂಪಾಯಿವೈ.ಎಂ.ಸತೀಶ್‌ – 2,77,559 ರೂಪಾಯಿಮಧು ಮಾದೇಗೌಡ – 2,46,233 ರೂಪಾಯಿಮಧು ಮಾದೇಗೌಡ – 2,46,233 ರೂಪಾಯಿರಘುನಾಥ್‌ ಮಲ್ಕಾಪುರೆ – 1,34,823 ರೂಪಾಯಿಎಂ.ಜಿ.ಮೂಳೆ – 2,24,282 ರೂಪಾಯಿ \ No newline at end of file diff --git a/eesanje/url_46_35_4.txt b/eesanje/url_46_35_4.txt new file mode 100644 index 0000000000000000000000000000000000000000..578103d165033a8a9b4a7a16a6577f49e05c3ff7 --- /dev/null +++ b/eesanje/url_46_35_4.txt @@ -0,0 +1,8 @@ +ಸ್ವಪಕ್ಷದವರಿಂದಲೇ ಸಿಎಂ ಕೆಳಗಿಳಿಸುವ ಪಿತೂರಿ : ಅಶೋಕ್ ಬಾಂಬ್‌ + : +ಬೆಂಗಳೂರು,ಆ.24-ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುವುದಿಲ್ಲ. ಆ ಪಕ್ಷದೊಳಗೇ ಮುಖ್ಯಮಂತ್ರಿಯನ್ನು ಕೆಳಗಿಳಿಸುವ ಪಿತೂರಿ ನಡೆಯುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಬಾಂಬ್‌ ಸಿಡಿಸಿದ್ದಾರೆ. +ಬಿಜೆಪಿ ಇಲ್ಲವೇ ಜೆಡಿಎಸ್‌‍ ಈ ಸರ್ಕಾರವನ್ನು ಕೆಡುವ ಪ್ರಯತ್ನ ಮಾಡುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಆಡಳಿತಾರೂಢ ಪಕ್ಷದಲ್ಲೇ ಇಕ್ಕಟ್ಟು ಬಿಕ್ಕಟ್ಟು ಎದ್ದು ಕಾಣುತ್ತಿದೆ. ತಾನಾಗೆ ಸರ್ಕಾರ ಅಸ್ಥಿರಗೊಂಡರೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. +ಸಿದ್ದರಾಮಯ್ಯ ನಂತರ ಯಾರನ್ನು ಸಿಎಂ ಮಾಡಬೇಕು ಎಂದು ಕಾಂಗ್ರೆಸ್‌‍ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಗೃಹಸಚಿವ ಪರಮೇಶ್ವರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಎಂ.ಬಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಸೇರಿದಂತೆ ಬಹಳಷ್ಟು ಜನ ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. +ಬಿಜೆಪಿ, ಜೆಡಿಎಸ್‌‍ನವರು ಸರ್ಕಾರ ಬೀಳಿಸುವುದಿಲ್ಲ.ನಾವು ಯಾವತ್ತೂ ಸರ್ಕಾರ ಬೀಳಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಯಾವುದೇ ಕಾಂಗ್ರೆಸ್‌‍ ಶಾಸಕರನ್ನೂ ಸಹ ಭೇಟಿಯಾಗಿಲ್ಲ. ಸಿಎಂ ಸೀಟ್‌ಗಾಗಿ ಅವರ ಪಕ್ಷದಲ್ಲೇ ಮ್ಯೂಸಿಕ್‌ ಅಂಡ್‌ ಚೇರ್‌ ನಡೆಯುತ್ತಿದೆ ಎಂದು ಟೀಕಿಸಿದರು. +ನೀರಿನ ಬಿಲ್‌ ದರ ಹೆಚ್ಚಿಸಲು ಮುಂದಾಗಿದ್ದಾರೆ. ಜನ ವಿರೋಧದ ನಡುವೆಯೂ ನೀರಿನ ಬಿಲ್‌ ದರ ಹೆಚ್ಚಿಸಲು ಮುಂದಾಗಿರುವುದು ಸಂವಿಧಾನ ವಿರೋಧ ತಾನೆ ಎಂದು ಪ್ರಶ್ನಿಸಿದರು. +ಸಾರ್ವಜನಿಕರನ್ನು ಹಿಯಾಳಿಸಿದರೆ ಕಾಂಗ್ರೆಸ್‌‍ಗೆ ತಕ್ಕ ಪಾಠ ಕಲಿಸುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್‌‍ಗೆ ಇಲ್ಲ. ನೀರು ಕೊಡುವುದು ಸರ್ಕಾರದ ಕರ್ತವ್ಯ ಈಗ ಏರಿಕೆ ಮಾಡಲು ಮುಂದಾಗಿರುವ ನಿಮಗೆ ನಾಚಿಕೆಯಾಗಬೇಕು ಎಂದು ತರಾಟೆಗೆ ತೆಗೆದುಕೊಂಡರು. ಕಾಂಗ್ರೆಸ್‌‍ನವರು ದಾರಿಯಲ್ಲಿ ರಾಜಪಾಲರ ಬಗ್ಗೆ ಏಕವಚದಲ್ಲಿ ಮಾತಾಡಿದ್ದಾರೆ. ಮಂತ್ರಿಗಳು ಅಗೌರವವಾಗಿ ಮಾತಾಡಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದರು. \ No newline at end of file diff --git a/eesanje/url_46_35_5.txt b/eesanje/url_46_35_5.txt new file mode 100644 index 0000000000000000000000000000000000000000..abca12ecbb1ec84316b086e1ee1ad8d2922f86cc --- /dev/null +++ b/eesanje/url_46_35_5.txt @@ -0,0 +1,7 @@ +ಡಿಕೆಶಿ ಯೋಜನೆ ಪ್ರಪಂಚದ 7ನೇ ಅದ್ಭುತ : ಮುನಿರತ್ನ ವ್ಯಂಗ್ಯ + 7th : +ಬೆಂಗಳೂರು,ಆ.24– ನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಟನಲ್‌ ರಸ್ತೆ ನಿರ್ಮಾಣ ಮಾಡಲು ಮುಂದಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕನಸಿನ ಯೋಜನೆ ಪ್ರಪಂಚದ 7ನೇ ಅದ್ಭುತಗಳಲ್ಲಿ ಒಂದು ಎಂದು ಮಾಜಿ ಸಚಿವ ಹಾಗೂ ಶಾಸಕ ಮುನಿರತ್ನ ವ್ಯಂಗ್ಯವಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿ ಮುಚ್ಚಲು ಒಂದು ವಾರ್ಡ್‌ಗೆ 15 ಲಕ್ಷ ರೂ. ಕೊಡುತ್ತಿದ್ದಾರೆ. 224 ಕಿಲೋ ಮೀಟರ್‌ಗೆ 15 ಲಕ್ಷ ರೂ. ಭಾಗ ಮಾಡಿದರೆ 4 ಗುಂಡಿಯನ್ನು ಮುಚ್ಚಲು ಆಗುವುದಿಲ್ಲ. ಇನ್ನು ಟನಲ್‌ ರಸ್ತೆ ಮಾಡಿದರೆ, ಏಳು ಅದ್ಭುತಗಳಲ್ಲಿ ಇದು ಏಂಟನೇ ಅದ್ಬುತವಾಗಲಿದೆ ಎಂದು ಟೀಕಿಸಿದರು. +ನೀರಿನ ಬೆಲೆ ಹೆಚ್ಚು ಮಾಡಿದ್ದಾರೆ. ನೀರು ಕೊಟ್ಟು ನೀರಿನ ಬೆಲೆ ಹೆಚ್ಚಿಸಿದರೆ ಪರವಾಗಿಲ್ಲ. ಕೊಳಾಯಿ ತಿರುಗಿಸಿದ ತಕ್ಷಣವೇ ಗಾಳಿ ಬರುತ್ತದೆ. ಗಾಳಿ ಬಂದ ತಕ್ಷಣ ಮೀಟರ್‌ ಓಡುತ್ತದೆ. ಆ ಗಾಳಿಗೂ ಸಹ ದುಡ್ಡು ಕೊಡಬೇಕು. ನೀರಿಗೂ ದುಡ್ಡು, ಗಾಳಿಗೂ ದುಡ್ಡು, ಕೊಡಬೇಕು ಎಂದು ಆಕ್ಷೇಪಿಸಿದರು. +ಕಾಂಗ್ರೆಸ್‌‍ನ ಪಂಚ ಗ್ಯಾರಂಟಿಗಳಿಗೆ ದುಡ್ಡಿಲ್ಲ. ಹಾಗಾಗಿ ನೀರಿನ ದರ ಏರಿಕೆ ಮಾಡುತ್ತಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಏನೊ ಮಾಡಬೇಕು ಅಂದುಕೊಂಡಿದ್ದರೋ ಅದೂ ಆಗಿಲ್ಲ ಎಂದು ವ್ಯಂಗ್ಯವಾಡಿದರು. +ಬೆಂಗಳೂರಿನ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ಬೆಂಗಳೂರಿಗರಿಗೆ ಕೃತಜ್ಞತೆ ಇಲ್ಲ. ಇವರಿಗೆ ಏನೂ ಮಾಡಬಾರದು ಕೃತಜ್ಞತೆ ಇಲ್ಲ ಎಂದಿದ್ದಾರೆ. ಇವರು ಏನ್‌ ಹೇಳಿದರೂ ಕೇಳ್ಬೇಕು, ನಾವು ಹೇಳಿದ್ದನ್ನೇ ಒಪ್ಪಿಕೊಳ್ಳಬೇಕು. ಹೇಳಿದಂತೆ ಕೇಳಿದರೆ ಇವರಿಗೆ ಒಳ್ಳೆಯವರು ಎಂದು ಮುನಿರತ್ನ ತಿರುಗೇಟು ಕೊಟ್ಟರು. \ No newline at end of file diff --git a/eesanje/url_46_35_6.txt b/eesanje/url_46_35_6.txt new file mode 100644 index 0000000000000000000000000000000000000000..a425f3afe7a58f5e9615387c357fdd3b80abaa9c --- /dev/null +++ b/eesanje/url_46_35_6.txt @@ -0,0 +1,6 @@ +ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ : ಶ್ರೇಯಸ್‌ ಪಟೇಲ್‌ ಎಚ್ಚರಿಕೆ +ಬೆಂಗಳೂರು,ಆ.24-ಅನಗತ್ಯವಾಗಿ ಸುಳ್ಳು ಆರೋಪ ಮಾಡಿ ನಮ್ಮ ಕುಟುಂಬವನ್ನು ಎಳೆದುತರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ಸೇರಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನದ ಸಂಸದ ಶ್ರೇಯಸ್‌‍ ಪಟೇಲ್‌ ಎಚ್ಚರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಹೈಕೋರ್ಟ್‌ನಿಂದ ಯಾವುದೇ ನೋಟೀಸ್‌‍ ಬಂದಿಲ್ಲ. ಬಿಜೆಪಿಯ ಮುಖಂಡ ದೇವರಾಜೇಗೌಡ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು. +ಒಬ್ಬ ಮನುಷ್ಯನಿಗೆ ಎಷ್ಟು ಕಿರುಕುಳ ನೀಡಲು ಸಾಧ್ಯ? ಉದ್ದೇಶಪೂರ್ವಕವಾಗಿ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನವೇ ನಾನಾ ರೀತಿಯ ಆರೋಪಗಳನ್ನು ಮಾಡಿದರು. ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಗಳು ಕಂಡುಬರುತ್ತಿದ್ದಂತೆ ಮತ್ತಷ್ಟು ಟೀಕೆಗಳು ಕೇಳಿಬಂದವು. ಯಾವುದೂ ಸಾಬೀತಾಗಿಲ್ಲ ಎಂದು ಹೇಳಿದರು. +ಯಾವುದೇ ಆರೋಪಗಳಿದ್ದರೂ ನೇರಾನೇರ ನನ್ನೊಂದಿಗೆ ಚರ್ಚೆಗೆ ಬರಬಹುದು. ತೆರಿಗೆ ಪಾವತಿಯ ರಶೀದಿ ತೋರಿಸಿ ತಪ್ಪು ಮಾಹಿತಿ ನೀಡಲಾಗುತ್ತಿದೆ. ಚುನಾವಣೆಯಲ್ಲಿ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚು ಖರ್ಚು ಮಾಡಿದ್ದರೆ ಆಯೋಗ ತಮ ವಿರುದ್ಧ ಕ್ರಮ ಕೈಗೊಳ್ಳುತ್ತಿತ್ತು. ಚುನಾವಣೆಯಲ್ಲಿ ಕೆಲಸ ಮಾಡಲು ಐಎಎಸ್‌‍, ಐಪಿಎಸ್‌‍, ಐಆರ್‌ಎಸ್‌‍ನಂತಹ ಉನ್ನತ ಅಧಿಕಾರಿಗಳನ್ನು ನಿಯೋಜಿಸಿರುತ್ತಾರೆ. ಅವರ್ಯಾರೂ ಕೈಕಟ್ಟಿ ಕೂರುವುದಿಲ್ಲ. ಪ್ರತಿಯೊಂದರ ಮೇಲೂ ನಿಗಾ ವಹಿಸುತ್ತಾರೆ ಎಂದರು. +ನ್ಯಾಯಾಲಯದಲ್ಲಿ ತಮಗೆ ನ್ಯಾಯ ಸಿಗಲಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದೇನೆ ಎಂದು ಹೇಳುತ್ತಿದ್ದಾರೆ. ನಾನು ನನ್ನ ಪತ್ನಿ ಹಾಗೂ ಮಕ್ಕಳಿಗೆ ಸೇರಿದ ಎಲ್ಲಾ ವಿವರಗಳನ್ನೂ ದಾಖಲಿಸಿದ್ದೇನೆ. ತಂಗಿಗೆ ನೀಡಿದ್ದ ಆಸ್ತಿಗಳ ಮಾಹಿತಿಯನ್ನು ತೋರಿಸಲು ಸಾಧ್ಯವೇ? ದುರುದ್ದೇಶಪೂರಿತವಾಗಿ ಕುಟುಂಬದ ಸದಸ್ಯರನ್ನು ಏಕೆ ಎಳೆದು ತರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಸಮೂಹ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌‍ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು ಕಾನೂನಿನಿಗಿಂತ ಯಾರೂ ದೊಡ್ಡವರಲ್ಲ, ಎಷ್ಟೇ ದೊಡ್ಡವರಾದರೂ ತಲೆ ಬಾಗಲೇಬೇಕು. ಈ ಬಗ್ಗೆ ತಾವು ಹೆಚ್ಚು ಚರ್ಚೆ ನಡೆಸಲು ಬಯಸುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_35_7.txt b/eesanje/url_46_35_7.txt new file mode 100644 index 0000000000000000000000000000000000000000..41532356ae87485c307c76d76344b07ce79d3b20 --- /dev/null +++ b/eesanje/url_46_35_7.txt @@ -0,0 +1,7 @@ +ಸಿಎಂ ವಿರುದ್ಧದ 73 ಹಗರಣಗಳನ್ನು ಸಿಬಿಐ ಅಥವಾ ಸಿಐಡಿ ತನಿಖೆಗೆ ವಹಿಸಲು ಆಗ್ರಹ + 73 +ಬೆಂಗಳೂರು,ಆ.24– ಅನ್ಯ ಪಕ್ಷದ ನಾಯಕರ ಹಗರಣಗಳನ್ನು ಎಸ್‌‍ಐಟಿ ತನಿಖೆಗೆ ವಹಿಸುವ ಮತ್ತು ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಬಗ್ಗೆ ರಾಜ್ಯಪಾಲರನ್ನು ಒತ್ತಾಯಿಸುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ ವಿರುದ್ಧ ದಾಖಲಾಗಿರುವ 73 ಬಹತ್‌ ಹಗರಣಗಳನ್ನು ಸಿಬಿಐ, ಸಿಐಡಿ ಇಲ್ಲವೇ ಲೋಕಾಯುಕ್ತ ತನಿಖೆಗೆ ವಹಿಸುವ ಬಗ್ಗೆ ಆದೇಶ ನೀಡಲು ಹಿಂಜರಿಯುತ್ತಿರುವುದು ಏಕೆ ಎಂದು ಬಿಜೆಪಿ ಮುಖಂಡ ಎನ್.ಆರ್‌.ರಮೇಶ್‌ ಪ್ರಶ್ನಿಸಿದ್ದಾರೆ. +2013 ರಿಂದ 2018 ರವರೆಗಿನ 5 ವರ್ಷಗಳ ಅವಧಿಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸಿರುವ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ 120 ಕ್ಕೂ ಹೆಚ್ಚು ಬಹತ್‌ ಹಗರಣಗಳು ನಡೆದಿದ್ದು, ಇವುಗಳ ಪೈಕಿ 73 ಬಹತ್‌ ಹಗರಣಗಳಲ್ಲಿ ಖುದ್ದಾಗಿ ಸಿದ್ಧರಾಮಯ್ಯನವರೇ ಭಾಗಿಯಾಗಿರುವ ಬಗ್ಗೆ ದಾಖಲೆಗಳ ಸಹಿತ ಮುಖ್ಯಮಂತ್ರಿಗಳ ಅಧಿಕತ ಕಛೇರಿಗೆ ದೂರುಗಳನ್ನು ಸಲ್ಲಿಸಲಾಗಿತ್ತು. ಅಲ್ಲದೇ, ಲೋಕಾಯುಕ್ತ, ಎಸಿಬಿ, ಬಿಎಂಟಿಎಫ್‌ನಂತಹ ತನಿಖಾ ಸಂಸ್ಥೆಗಳಲ್ಲಿಯೂ ಸಹ ದಾಖಲೆಗಳ ಸಹಿತ ದೂರುಗಳನ್ನು ಸಲ್ಲಿಸಲಾಗಿತ್ತು. +ಈ 73 ಹಗರಣಗಳಿಗೆ ಸಂಬಧಿಸಿದಂತೆ 1,17,236 ಪುಟಗಳ ಸಂಪೂರ್ಣ ದಾಖಲೆಗಳನ್ನು ಆಯಾ ಹಗರಣಗಳನ್ನು ಬಯಲಿಗೆಳೆದ ದಿನವೇ ಮುಖ್ಯಮಂತ್ರಿಗಳ ಅಧಿಕತ ಕಛೇರಿಗೆ ತಲುಪಿಸಿ ಸ್ವೀಕತಿ ಪತ್ರವನ್ನು ಪಡೆದಿರುತ್ತೇವೆ. +ಸಿದ್ಧರಾಮಯ್ಯನವರು ಭಾಗಿಯಾಗಿರುವ ಸದರಿ 73 ಬಹತ್‌ ಹಗರಣಗಳ ಪೈಕಿ ಅವರ ರಾಜಕೀಯ ಪ್ರಭಾವವನ್ನು ಬಳಸಿ ಅಥವಾ ಸಿದ್ಧರಾಮಯ್ಯನವರ ಅಧಿಕಾರದ ಪ್ರಭಾವಕ್ಕೆ ಒಳಗಾಗಿ ಲೋಕಾಯುಕ್ತ ಪೋಲೀಸರು ಬಿ ರಿಪೋರ್ಟ್‌ಅನ್ನು ಸಲ್ಲಿಸಿರುತ್ತಾರೆ ಹಾಗೂ 19 ಪ್ರಕರಣಗಳನ್ನು ಮುಕ್ತಾಯಗೊಳಿಸಿರುತ್ತಾರೆ. +ಇವುಗಳನ್ನು ಹೊರತುಪಡಿಸಿ ಇನ್ನುಳಿದ ಸಿದ್ಧರಾಮಯ್ಯನವರ ವಿರುದ್ಧದ 54 ಪ್ರಕರಣಗಳು ಲೋಕಾಯುಕ್ತದಲ್ಲಿ ಇನ್ನೂ ಚಾಲ್ತಿಯಲ್ಲಿರುತ್ತದೆ ಹಾಗೂ ನಿಜಕ್ಕೂ ಸಿದ್ಧರಾಮಯ್ಯನವರು ಮಾಧ್ಯಮಗಳ ಮುಂದೆ ನನ್ನದು ಅತ್ಯಂತ ಸ್ವಚ್ಛವಾದ ರಾಜಕಾರಣ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದು ಹೇಳಿರುವುದು ನಿಜಕ್ಕೂ ಅವರ ಮನಸ್ಸಾಕ್ಷಿಯಿಂದ ಬಂದ ಮಾತುಗಳೇ ಆಗಿದ್ದರೆ, ಅವರು ಈ ಕೂಡಲೇ 54 ಬಹತ್‌ ಹಗರಣಗಳ ತನಿಖೆಯನ್ನು ಸಿಬಿಐ, ಸಿಐಡಿ ಅಥವಾ ಲೋಕಾಯುಕ್ತಕ್ಕೆ ವಹಿಸುವ ಬಗ್ಗೆ ಆದೇಶ ನೀಡಬೇಕೆಂದು ರಮೇಶ್‌ ಸಿದ್ಧರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_35_8.txt b/eesanje/url_46_35_8.txt new file mode 100644 index 0000000000000000000000000000000000000000..cd288b85f51e8e38c585a8cc6cf592daa9425b6e --- /dev/null +++ b/eesanje/url_46_35_8.txt @@ -0,0 +1,12 @@ +“ಖರ್ಗೆ ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ” + : +ಬೆಂಗಳೂರು,ಆ.24-ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಮರಳುವುದಿಲ್ಲ, ದೆಹಲಿಯಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಯವರು ರಾಜ್ಯ ರಾಜ ಕಾರಣಕ್ಕೆ ಮರಳುವಂತಹ ಯಾವುದೇ ವಿಚಾರಗಳು ಚರ್ಚೆಯಾಗಿಲ್ಲ ಎಂದು ಪುನರುಚ್ಚರಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಬಾರದು ಎಂದು ಸಚಿವ ಸಂಪುಟ ಸಭೆ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ಸಲಹೆ ನೀಡಿತ್ತು. ಅದನ್ನು ಮೀರಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. +ಅದೇ ರೀತಿ ಜೆಡಿಎಸ್‌‍ನ ಮುಖಂಡರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯ ಮೂರ್ನಾಲ್ಕು ಶಾಸಕರ ವಿರುದ್ಧದ ಪ್ರಕರಣಗಳಿಗೆ ಅಭಿಯೋಜನೆಗೆ ಅನುಮತಿ ನೀಡಿಲ್ಲ. ಇದು ಪಕ್ಷಪಾತ ಎಂಬುದು ಸ್ಪಷ್ಟವಾಗಿದೆ. ಸಚಿವ ಸಂಪುಟದಲ್ಲಿ ಚರ್ಚೆಯೂ ಆಗಿದೆ ಎಂದರು. +ಆರೋಪಕ್ಕೆ ಗುರಿಯಾದ ಬಹಳಷ್ಟು ನಾಯಕರು ಬಿಜೆಪಿ ಸೇರಿದ್ದಾರೆ. ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌, ಎನ್‌ಸಿಪಿ ಪಡೆದು ಬಿಜೆಪಿ ಜೊತೆ ಸೇರಿಕೊಂಡ ಬಳಿಕ ಅವರ ಮೇಲಿನ ಆರೋಪಗಳು ಚರ್ಚೆಯಾಗುತ್ತಿಲ್ಲ. ವಾಷಿಂಗ್‌ ಪೌಡರ್‌ ನಿರ್ಮಾ ಹಾಕಿ ತೊಳೆದಂತಾಗಿದೆ ಎಂದು ಹೇಳಿದರು. +ಹಲವು ರಾಜ್ಯಗಳಲ್ಲಿ ಬಿಜೆಪಿಯವರ ಸರ್ಕಾರಗಳಿವೆ. ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ವಿರುದ್ಧ ಯಾರಾದರೂ ಅಭಿಯೋಜನೆಗೆ ಕೇಳಬಹುದು. ಮುಂದಿನ ದಿನಗಳಲ್ಲಿ ಬಿಜೆಪಿಯವರ ತಂತ್ರಗಾರಿಕೆಗಳೇ ತಿರುಗುಬಾಣವಾಗಲಿವೆ ಎಂದು ಎಚ್ಚರಿಸಿದರು. +ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಜೆಡಿಎಸ್‌‍ ಸಂಚು ರೂಪಿಸಿದ್ದು, ಬಿಜೆಪಿಯವರು ಅವರ ಜೊತೆ ಕೈಜೋಡಿಸುವುದು ಕಾಂಗ್ರೆಸ್‌‍ನ ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿದೆ. ನಮ ಪಕ್ಷದ ಶಾಸಕರು ಬಿಜೆಪಿ-ಜೆಡಿಎಸ್‌‍ನವರ ಆಮಿಷಗಳಿಗೆ ಒಳಗಾಗುವುದಿಲ್ಲ. ಎರಡು ಪಕ್ಷಗಳೂ ಸೇರಿ ಏನೇ ಹರಸಾಹಸ ನಡೆಸಿದರೂ ಅದು ಯಶಸ್ವಿಯಾಗುವುದಿಲ್ಲ ಎಂದರು.ಮುಂದಿನ ನಾಲ್ಕು ವರ್ಷಗಳ ಬಳಿಕ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ. +ಕಾಂಗ್ರೆಸ್‌‍ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ತೆರಳಿ ಕಾಂಗ್ರೆಸ್‌‍ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಕಳೆದ ಒಂದು ತಿಂಗಳಿನಿಂದ ನಡೆದ ಬೆಳವಣಿಗೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ರಾಜ್ಯಪಾಲರ ನಡವಳಿಕೆಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ ಎಂದರು. +ದೆಹಲಿ ಹಾಗೂ ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಪತನಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ರಾಜ್ಯಪಾಲರು ಒಳ್ಳೆಯವರು. ಆದರೆ ಅವರ ಮೇಲೆ ಬೇರೆ ರೀತಿಯ ಒತ್ತಡಗಳಿವೆ. ಹೀಗಾಗಿ ರಾಜ್ಯಪಾಲರ ಸ್ಥಾನಕ್ಕೆ ಚ್ಯುತಿ ತರುವಂತಹ ಕೆಲಸಗಳು ನಡೆಯುತ್ತಿವೆ ಎಂದರು. +ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಯಾವ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿ ಇಲ್ಲ. ಈ ಹಿಂದೆ ಅವರು ಕೇಂದ್ರದಲ್ಲಿ ಸಚಿವರಾಗಿದ್ದರು. ಬಿಜೆಪಿಯವರಿಗೆ ನೈಜ್ಯವಾಗಿ ಅವರ ಮೇಲೆ ಕಾಳಜಿ ಇದ್ದಿದ್ದರೆ ಅವರನ್ನು ಕೇಂದ್ರ ಸಂಪುಟದಲ್ಲೇ ಮುಂದುವರೆಸಬಹುದಿತ್ತು, ರಾಜ್ಯಪಾಲರನ್ನಾಗಿ ಮಾಡಿದ್ದೇಕೆ? ಆ ಬಳಿಕ ಸಂವಿಧಾನ ವಿರುದ್ಧವಾಗಿ ನಡೆದುಕೊಳ್ಳುವಂತೆ ಒತ್ತಡ ಹೇರುತ್ತಿರುವುದೇಕೆ? ಜನರೆದುರು ರಾಜ್ಯಪಾಲರನ್ನು ಕೆಟ್ಟವರಂತೆ ಬಿಜೆಪಿ ಬಿಂಬಿಸುತ್ತಿರುವುದೇಕೆ? ಎಂದು ಪ್ರಶ್ನಿಸಿದರು. +ಬಿಜೆಪಿಯವರ ಹಗರಣಗಳನ್ನು ತ್ವರಿತವಾಗಿ ಚರ್ಚೆ ನಡೆಸಲಾಗುತ್ತಿದೆ. ಕೆಲವು ಪ್ರಕರಣಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ಇದೆ. ಅವನ್ನು ತೆರವುಗೊಳಿಸಲು ಪ್ರಯತ್ನಿಸಲಾಗುವುದು. ಬಿಜೆಪಿಯವರು ಸತ್ಯ ಹರಿಶ್ಚಂದ್ರರಂತೆ ಆಡುತ್ತಿದ್ದಾರೆ. ಹಲವಾರು ಹಗರಣಗಳಲ್ಲಿ ಆರೋಪಿಗಳಾಗಿದ್ದಾರೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_35_9.txt b/eesanje/url_46_35_9.txt new file mode 100644 index 0000000000000000000000000000000000000000..1bace52c344499aed8bfa17b1632f0cf3731e875 --- /dev/null +++ b/eesanje/url_46_35_9.txt @@ -0,0 +1,11 @@ +ಕಾರ್ಕಳದಲ್ಲಿ ಮತ್ತುಬರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಅಲ್ತಾಫ್‌ ಅರೆಸ್ಟ್ +ಬೆಂಗಳೂರು,ಆ.24-ದೇಶದ್ಯಾಂತ ಭಾರೀ ಸದ್ದು ಮಾಡಿದ್ದ ಕೋಲ್ಕತ್ತಾದ ಆರ್‌ಜಿಕರ್‌ ಅಸ್ಪತ್ರೆಯ ತರಬೇತಿ ನಿರತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್ನಲ್ಲಿ ಮತ್ತುಭರಿಸುವ ಔಷಧ ಬೆರೆಸಿ ಅತ್ಯಾಚಾರ ಎಸಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದೆ. +ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್‌ ಬಂಧಿತ ಆರೋಪಿಯಾಗಿದ್ದಾನೆ. ಅರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್‌ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿಗೆ ಬಲೆ ಬೀಸಲಾಗಿದೆ. +ಕೃತ್ಯಕ್ಕೆ ಬಳಸಿದ ವಾಹನವನ್ನು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವತಿಗೆ ಯಾವುದೇ ರೀತಿಯ ಪ್ರಾಣಾಪಾಯ ಇಲ್ಲ ಎಂದು ತಿಳಿದುಬಂದಿದೆ. ಆಘಾತಕ್ಕೆ ಒಳಗಾಗಿರುವ ಯುವತಿ ನಿಧನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಕರಣ ಸಂಬಂಧ ಕಾರ್ಕಳ ನಗರ ಠಾಣೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. +ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎನ್ನಲಾಗಿದೆ. ಅಲ್ತಾಫ್‌ ಮತ್ತು ಇಬ್ಬರ ವಿರುದ್ಧ ಕಾರಿನಲ್ಲಿ ಯುವತಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಆತ್ಯಾಚಾರ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. + +ಇದು ಅತ್ಯಾಚಾರ ಪ್ರಕರಣವಲ್ಲ. ಸಾಮೂಹಿಕ ಅತ್ಯಾಚಾರ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಹಿಂದೂ ಸಂಘಟನೆಗಳು ಎಂದು ಆಗ್ರಹಿಸಿವೆ.ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ. ಪೋಷಕರ ಹೇಳಿಕೆಯಂತೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. +ಸಂತ್ರಸ್ತ ಯುವತಿಗೆ ಅಲ್ತಾಫ್‌ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಸ್ನೇಹಿತರ ಕರೆಸಿ ಬಿಯರ್‌ ಬಾಟಲಿ ತರಿಸಿದ್ದ. ಬಿಯರ್ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪವಾಗಿದೆ. +ಪ್ರಕರಣ ಆಚೆ ಬರುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂಡು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. +ಎಸ್‌‍ಪಿ ಹೇಳಿದ್ದೇನು?:ಕರ್ಕಾಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನ ಅಪಹರಿಸಿ ಅತ್ಯಾಚಾರ ಮಾಡಿರುವ ಬಗ್ಗೆ ದೂರು ಬಂದಿದೆ. ಯುವತಿಗೆ ಅರೋಪಿ ಮೂರು ತಿಂಗಳಿಂದ ಇನ್‌್ಸಟಗ್ರಾಮ್‌ ಮೂಲಕ ಪರಿಚಯವಿತ್ತು. ಶುಕ್ರವಾರ ಆರೋಪಿ ಅಲ್ತಾಫ್‌ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ ಆರೋಪಿ ಮದ್ಯದಲ್ಲಿ ಏನನ್ನೋ ಬೆರೆಸಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ. +ಸದ್ಯ ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್‌ ಬಾಟಲ್‌ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್‌ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್‌ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ್‌ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾ ಪೊಲೀಸ್‌‍ ವರಿಷ್ಟಧಿಕಾರಿ ಡಾ.ಅರುಣ್‌ ಕುಮಾರ್‌ ಹೇಳಿದ್ದಾರೆ. \ No newline at end of file diff --git a/eesanje/url_46_36_1.txt b/eesanje/url_46_36_1.txt new file mode 100644 index 0000000000000000000000000000000000000000..4e6291245571aa5cf3fa7089d3f0d2fdddc3ef04 --- /dev/null +++ b/eesanje/url_46_36_1.txt @@ -0,0 +1,8 @@ +ಗೆಜೆಟೆಡ್‌ ಪ್ರೊಫೆಷನ್ಸ್ ಹುದ್ದೆಗಳ ಪರೀಕ್ಷೆ ಮುಂದೂಡುವುದಿಲ್ಲ, ಒಂದು ವಿಷಯಕ್ಕೆ ಮಾತ್ರ ದಿನಾಂಕ ಬದಲಾವಣೆ : ಸಿಎಂ + : +ಬೆಂಗಳೂರು,ಆ.24-ಕೆಪಿಎಸ್‌‍ಸಿ ವತಿಯಿಂದ ಗೆಜೆಟೆಡ್‌ ಪ್ರೊಫೆಷನ್ಸ್ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಆದರೆ ಒಂದು ವಿಷಯಕ್ಕೆ ಸಂಬಂಧಪಟ್ಟ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಮುಂದೂಡಬೇಕು ಎಂದು ಹಲವರು ಹೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪರೀಕ್ಷೆ ಮುಂದೂಡಲು ಅವಕಾಶವಿಲ್ಲ. ಕೃಷ್ಣ ಜನಾಷ್ಟಮಿಯ ದಿನ ನಿಗದಿಯಾಗಿರುವ ವಿಷಯದ ಪರೀಕ್ಷಾ ದಿನವನ್ನು ಬದಲಾಯಿಸಲು ಪರಿಗಣಿಸುವುದಾಗಿ ಹೇಳಿದರು. +ನೀರಿನ ದರ ಇನ್ನೂ ಹೆಚ್ಚಳವಾಗಿಲ್ಲ :ಬೆಂಗಳೂರಿನಲ್ಲಿ ನೀರು ಸೇರಿದಂತೆ ಯಾವುದೇ ದರಗಳು ಹೆಚ್ಚಳವಾಗಿಲ್ಲ. ಮಾಧ್ಯಮಗಳಲ್ಲಿ ದರ ಹೆಚ್ಚಳ ಎಂಬ ಚರ್ಚೆಗಳು ನಡೆಯುತ್ತಿವೆ. ಬಹಳ ವರ್ಷಗಳಿಂದ ನೀರಿನ ದರ ಪರಿಷ್ಕರಣೆಯಾಗಿಲ್ಲ. ಪಿಡಬ್ಲ್ಯೂಎಸ್‌‍ಎಸ್‌‍ಬಿಯಲ್ಲಿ ಕಷ್ಟದ ಪರಿಸ್ಥಿತಿ ಇದೆ. ಅದಕ್ಕಾಗಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಮಾತನಾಡಿರಬಹುದು. ಆ ಕುರಿತು ಪ್ರಸ್ತಾವನೆ ಮತ್ತು ಆಲೋಚನೆಗಳಿವೆ. ಚರ್ಚೆ ಮಾಡಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು. +ಎಲ್ಲಾ ಅವಕಾಶಗಳು ಮುಕ್ತ :ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಣಯವನ್ನು ಸಚಿವ ಸಂಪುಟದಲ್ಲಿ ವಿರೋಧಿಸಲಾಗಿದೆ. ನ್ಯಾಯಾಲಯದಲ್ಲೂ ಪ್ರಶ್ನಿಸಲಾಗಿದೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವುದೂ ಸೇರಿದಂತೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದರು. +ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ವಿಧಾನಸಭಾ ಮತ್ತು ವಿಧಾನಪರಿಷತ್‌ನಲ್ಲಿ ಅಂಗೀಕಾರಗೊಂಡಿದ್ದ ಆರು ವಿಧೇಯಕಗಳನ್ನು ವಾಪಸ್‌‍ ಕಳುಹಿಸಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. +ಇದರಿಂದಾಗಿ ರಾಜಭವನ ಹಾಗೂ ಸರ್ಕಾರದ ನಡುವೆ ಸಂಘರ್ಷ ನಡೆಯುತ್ತಿದೆ ಎಂಬ ವಿಶ್ಲೇಷಣೆ ಸೂಕ್ತ ಅಲ್ಲ ಎಂದರು.ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಪರಮೇಶ್ವರ್‌, ಎಚ್‌.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌ ಸೇರಿದಂತೆ ಎಲ್ಲರೂ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಣಯಗಳನ್ನು ಹಾಗೂ ರಾಜಕೀಯ ಬೆಳವಣಿಗೆಗಳನ್ನು ವಿಸ್ತೃತವಾಗಿ ಚರ್ಚಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_36_10.txt b/eesanje/url_46_36_10.txt new file mode 100644 index 0000000000000000000000000000000000000000..87592395040577e7e09d6eb3ee68e364c2c9d26b --- /dev/null +++ b/eesanje/url_46_36_10.txt @@ -0,0 +1,12 @@ +ಸಿಎಂಗೆ ಶೋಕಾಸ್‌‍ ನೋಟೀಸ್‌‍ ನೀಡಿ ವಿಚಾರಣೆಗೆ ಖುದ್ದು ಹಾಜಾರಾಗಲು ಸೂಚಿಸುವಂತೆ ಕೋರ್ಟ್ ಆದೇಶ + +ಬೆಂಗಳೂರು,ಆ.23-ಸಿದ್ಧರಾಮಯ್ಯ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಲೋಕಾಯುಕ್ತ ಎಡಿಜಿಪಿ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕೂಡಲೇ ಶೋಕಾಸ್‌‍ ನೋಟೀಸ್‌‍ ಜಾರಿ ಮಾಡಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ಅವರು ಖುದ್ದು ಹಾಜಾರಾಗಲು ಸೂಚಿಸಬೇಕು ಎಂದು ಆದೇಶಿಸಿದೆ. +ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅತ್ಯಂತ ಆಪ್ತ ಸ್ನೇಹಿತ ವಿವೇಕಾನಂದ (ಕಿಂಗ್ಸ್ ಕೋರ್ಟ್‌ ವಿವೇಕ್‌‍) ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿ (1,30,000) ಗಳನ್ನು ಚೆಕ್‌ ರೂಪದಲ್ಲಿ ಪಡೆದು ಟರ್ಫ್‌ ಕ್ಲಬ್‌ನ ಅತ್ಯಂತ ಆಯಕಟ್ಟಿನ ಹುದ್ದೆಯಾದ ಸ್ಟಿವರ್ಡ್‌ ಹ್ದುೆಗೆ ನಿಯೋಜಿಸುವ ಮೂಲಕ ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದ ಆರೋಪಕ್ಕೆ ಗುರಿಯಾಗಿದ್ದರು. +ಹತ್ತಾರು ಸಾವಿರ ಕೋಟಿ ರೂಪಾಯಿ ವಹಿವಾಟನ್ನು ಹೊಂದಿರುವ ಟರ್ಫ್‌ ಕ್ಲಬ್‌ನ ಎಲ್ಲಾ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸುವ ಸ್ಟಿವರ್ಡ್‌ ಹ್ದುೆಗೆ ನಿಯೋಜನೆ ಮಾಡುವ ಮೂಲಕ ಸಿದ್ದರಾಮಯ್ಯ ತಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.’ +ಈ ಸಂಬಂಧ ಎನ್‌.ಆರ್‌ ರಮೇಶ್‌ 2022ರಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರಲ್ಲದೇ, ಜನಪ್ರತಿನಿಧಿಗಳ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರನ್ನೂ ಸಹ ದಾಖಲಿಸಿದ್ದರು.ಸದರಿ ಪ್ರಕರಣದ ತನಿಖೆಯನ್ನು ಏಕ ಪಕ್ಷೀಯವಾಗಿ ನಡೆಸಿದ್ದ ಲೋಕಾಯುಕ್ತರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ಧರಾಮಯ್ಯನವರ ಪ್ರಭಾವಕ್ಕೆ ಒಳಗಾಗಿ ಬಿ ರಿಪೋರ್ಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. +ಆದರೆ, ರಮೇಶ್‌ ರವರ ವಕೀಲರು ದಾಖಲೆಗಳ ಸಹಿತ ಮಂಡಿಸಿದ್ದ ವಾದವನ್ನು ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಸದರಿ ಪ್ರಕರಣದ ತನಿಖೆಯನ್ನು ಮೊದಲಿನಿಂದ ಹೊಸದಾಗಿ ಪ್ರಾರಂಭಿಸಿ ಆರು ತಿಂಗಳ ಒಳಗಾಗಿ ಸಮರ್ಪಕವಾದ ಹೊಸ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕಳೆದ ಫೆಬ್ರವರಿಯಲ್ಲಿ ಆದೇಶಿಸಿದ್ದರು. +ನ್ಯಾಯಾಧೀಶರು ವಿಧಿಸಿದ್ದ ಆರು ತಿಂಗಳ ಗಡುವು ಮೀರಿದ್ದರಿಂದ ನಿನ್ನೆ ವಿಚಾರಣೆಯನ್ನು ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ ಲೋಕಾಯುಕ್ತದ ಎಡಿಜಿಪಿ (ಅಪರ ಪೋಲೀಸ್‌‍ ಮಹಾ ನಿರ್ದೇಶಕ, ಲೋಕಾಯುಕ್ತ) ರವರು ಖುದ್ದು ಹಾಜರಿ ಇಲ್ಲದೇ ಇರುವುದನ್ನು ಮತ್ತು ಆರು ತಿಂಗಳ ಗಡುವು ಮುಗಿದರೂ ಹೊಸ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸದೇ ಇದ್ದುದರಿಂದ ಲೋಕಾಯುಕ್ತದ ಪರವಾದ ವಕೀಲರನ್ನು ನ್ಯಾಯಾಲಯದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡಿತು. +ಲೋಕಾಯುಕ್ತದ ವಕೀಲರು ನ್ಯಾಯಾಲಯವು ಮರು ತನಿಖೆಗೆ ಆದೇಶಿಸಿರುವ ವಿಷಯ ಲೋಕಾಯುಕ್ತದ ಎಡಿಜಿಪಿ ಅವರಿಗೆ ತಿಳಿದಿಲ್ಲದೇ ಇರುವುದರಿಂದ ಹೊಸದಾದ ತನಿಖೆ ಇನ್ನೂ ಪ್ರಾರಂಭವಾಗಿಲ್ಲ ಎಂಬ ಮಾತನ್ನು ಹೇಳುತ್ತಿದ್ದಂತೆ ಕೆಂಡಾಮಂಡಲರಾದ ನ್ಯಾಯಾಧೀಶರು ಈ ಪ್ರಕರಣದ ಮರು ತನಿಖೆಗೆ ನ್ಯಾಯಾಲಯವು ಆದೇಶಿಸಿ ಆರು ತಿಂಗಳು ಈಗಾಗಲೇ ಮುಗಿದಿದ್ದು, ಎಲ್ಲಾ ಮಾಧ್ಯಮಗಳಲ್ಲಿ ಈ ಸಂಬಂಧ ವರದಿಗಳು ಪ್ರಸಾರವಾಗಿರುತ್ತದೆ ಮತ್ತು ನ್ಯಾಯಾಲಯದಿಂದ ಲೋಕಾಯುಕ್ತ ಪೋಲೀಸರಿಗೆ ಅಧಿಕತ ಮಾಹಿತಿ ತಲುಪಿರುತ್ತದೆ. +ಹೀಗಿರುವಲ್ಲಿ – ನ್ಯಾಯಾಧೀಶರೇ ಖುದ್ದಾಗಿ ಲೋಕಾಯುಕ್ತ ಕಛೇರಿಗೆ ಬಂದು ಎಡಿಜಿಪಿ ಅವರಿಗೆ ಮರು ತನಿಖೆ ಮಾಡುವ ಬಗ್ಗೆ ಆದೇಶ ನೀಡಿರುವುದಾಗಿ ತಿಳಿಸಬೇಕೇ ಎಂದು ಖಾರವಾಗಿ ಲೋಕಾಯುಕ್ತ ವಕೀಲರನ್ನು ಪ್ರಶ್ನಿಸಿತು.ತಕ್ಷಣವೇ ಲೋಕಾಯುಕ್ತದ ಎಡಿಜಿಪಿ ಅವರಿಗೆ ಈ ಸಂಬಂಧ ಕಾರಣ ಕೇಳಿ ನೋಟೀಸ್‌‍ ಜಾರಿ ಮಾಡಿ ಈ ಕೂಡಲೇ ಅವರು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಆದೇಶವನ್ನು ನೀಡಿದರು. +ಆನಂತರ ಈ ಪ್ರಕರಣದ ತನಿಖಾಧಿಕಾರಿ ತಿಪ್ಪೇಸ್ವಾಮಿ ಅವರು ನ್ಯಾಯಾಲಯದಲ್ಲಿ ಹಾಜರಾಗಿ, ನ್ಯಾಯಾಲಯದ ಆದೇಶ ತಮ ಗಮನಕ್ಕೆ ಬಂದಿರಲಿಲ್ಲ ಮತ್ತು ಎರಡು ದಿನಗಳ ಹಿಂದಷ್ಟೇ ಹೊಸ ಎಡಿಜಿಪಿ ಅವರು ಲೋಕಾಯುಕ್ತಕ್ಕೆ ನಿಯೋಜನೆ ಆಗಿರುವ ಬಗ್ಗೆ ತಿಳಿಸಿದರು. +ಹೀಗಾಗಿ ಮುಂದಿನ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿ ಅಂದು ಎಡಿಜಿಪಿ ನ್ಯಾಯಲಯಕ್ಕೆ ಖುದ್ದು ಹಾಜರಾಗುವಂತೆ ನ್ಯಾಯಧೀಶರು ಸೂಚಿಸಿದ್ದಾರೆ ಎಂದು ದೂರುದಾರ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ. \ No newline at end of file diff --git a/eesanje/url_46_36_11.txt b/eesanje/url_46_36_11.txt new file mode 100644 index 0000000000000000000000000000000000000000..384bc8acca9007d117670d90d75c9c25456b9f28 --- /dev/null +++ b/eesanje/url_46_36_11.txt @@ -0,0 +1,8 @@ +ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ : ಡಿಕೆಶಿ + +ಬೆಂಗಳೂರು, ಆ.23-ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್‌‍ ಕಳುಹಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು ಎಂದರು. +ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದರೆ ಉತ್ತರ ನೀಡಬಹುದು. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು. +ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಯಾವ ಪ್ರಯತ್ನ ಮಾಡಿದರೂ ಪ್ರಯೋಜನ ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು. +ಜಿಂದಾಲ್‌ಗೆ ಭೂಮಿ ನೀಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್‌‍ ಅದೇ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ. +ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್‌ ಡೀಡ್‌ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ ಎಂದರು. +ಗೃಹ ಸಚಿವ ಪರಮೇಶ್ವರ್‌ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_36_12.txt b/eesanje/url_46_36_12.txt new file mode 100644 index 0000000000000000000000000000000000000000..0a81b97c262f5a007009a1df698b6a5e809cad6e --- /dev/null +++ b/eesanje/url_46_36_12.txt @@ -0,0 +1,9 @@ +ಜೈಲಿನಲ್ಲಿ ದರ್ಶನ್‌ ಭೇಟಿ ಮಾಡಿದವರಿಗೂ ಕಾದಿದೆಯಾ ಸಂಕಷ್ಟ..! + . +ಬೆಂಗಳೂರು, ಅ.23– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿದಾರರಾಗಿರುವವರು ಜೈಲಿನಲ್ಲಿರುವ ಆರೋಪಿ ನಟ ದರ್ಶನ್‌ರನ್ನು ಭೇಟಿ ಮಾಡುತ್ತಿರುವುದು ಪೊಲೀಸರ ಗಮನದಲ್ಲಿದ್ದು, ಈ ಕುರಿತು ಕಾನೂನಾತಕ ಅಂಶಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ತಿಳಿಸಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಎಫ್‌ಎಸ್‌‍ಎಲ್‌ನಿಂದ ಎಲ್ಲಾ ವರದಿಗಳು ಬಂದಿವೆ. ಮತ್ತಷ್ಟು ಪೂರಕ ಮಾಹಿತಿಗಳನ್ನು ಪಡೆಯುವ ವಿಚಾರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದರು. +ವಿದ್ಯುನಾನ (ಎಲೆಕ್ಟ್ರಾನಿಕ್‌್ಸ) ಸಲಕರಣೆಗಳನ್ನು ಹೈದರಾಬಾದ್‌ನ ಸಿಎಫ್‌ಎಸ್‌‍ಎಲ್‌ಗೆ ಕಳುಹಿಸಲಾಗಿತ್ತು. ಅವುಗಳ ಪರಿಶೀಲನೆ ಮುಗಿದಿದೆ ಎಂಬ ಮಾಹಿತಿ ಇದೆ. ಶೀಘ್ರವೇ ಆ ವರದಿ ನಮ ಕೈ ಸೇರಲಿದೆ. ಎರಡು ವರದಿಗಳನ್ನೂ ಕ್ರೋಢಿಕರಿಸಿ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗುವುದು ಎಂದರು. +ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು 90 ದಿನಗಳ ಕಾಲಾವಕಾಶ ಇರಲಿದೆ. ಆ ಕಾಲಮಿತಿಯಲ್ಲೇ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟ ಪಡಿಸಿದರು. +ಪ್ರಕರಣದಲ್ಲಿ ಸಾಕ್ಷಿಗಳಾಗಿ ಪರಿಗಣಿಸಿರುವ ಕೆಲವರು ಜೈಲಿಗೆ ಹೋಗಿ ದರ್ಶನ್‌ರನ್ನು ಭೇಟಿ ಮಾಡಿ ಬರುತ್ತಿದ್ದಾರೆ. ಇದು ನಮ ಗಮನದಲ್ಲಿದೆ. ಕಾನೂನಾತಕ ಕ್ರಮಗಳ ಪರಿಶೀಲನೆ ನಡೆಯುತ್ತಿದೆ. ಅವರಿಗೆ ಮತ್ತೆ ನೋಟಿಸ್‌‍ ಕೊಟ್ಟು ಕರೆಸುವುದು ಸೇರಿದಂತೆ ಇರುವ ಸಾಧ್ಯಾಸಾಧ್ಯತೆಗಳ ಬಗ್ಗೆ ಸದ್ಯಕ್ಕೆ ಬಹಿರಂಗವಾಗಿ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. +ಗೌರಿ ಗಣೇಶ ಹಬ್ಬದ ಪ್ರಯುಕ್ತ ಈಗಾಗಲೇ ಬಿಬಿಎಂಪಿ ಮತ್ತು ಪೊಲೀಸ್‌‍ ಇಲಾಖೆಯು ಸಮನ್ವತೆಯಿಂದ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಕಳೆದ ವಾರ ಈ ಕುರಿತು ಸಭೆಗಳನ್ನು ನಡೆಸಲಾಗಿದೆ. ಹಬ್ಬದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಶೀಘ್ರದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲೂ ಸಭೆ ನಡೆಯಲಿದೆ. ಶಾಂತಿ ಸೌಹಾರ್ಧತೆಯಲ್ಲಿ ಹಬ್ಬ ಆಚರಣೆಗೆ ಗಣೇಶ ಮಂಡಳಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಬಿಬಿಎಂಪಿ ಪ್ರತ್ಯೇಕ ಸಭೆ ನಡೆಸಿ ಸಣ್ಣಪುಟ್ಟ ವಿಚಾರಗಳನ್ನು ಬಗೆ ಹರಿಸಲಿದೆ. ಮುಂದಿನ ವಾರ ಹಬ್ಬಕ್ಕಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುವುದು ಎಂದರು. +ರಸ್ತೆಗಳಲ್ಲಿನ ಜಗಳದಲ್ಲಿ ಪದೇ ಪದೇ ಭಾಗಿಯಾಗುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗುವುದು. ರಸ್ತೆ ಜಗಳದ ನೆಪದಲ್ಲಿ ಸುಲಿಗೆ ಹಾಗೂ ಡಕಾಯಿತಿ ಮಾಡುವವರನ್ನು ನಿಯಂತ್ರಿಸಲು ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟ ಪಡಿಸಿದರು.ಯಲಹಂಕದಲ್ಲಿ ರೌಡಿಗಳ ನಡುವೆ ನಡೆದ ಗ್ಯಾಂಗ್‌ ವಾರ್‌ಗೆ ಸಂಬಂಧ ಪಟ್ಟಂತೆ ಕೆಲವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_36_2.txt b/eesanje/url_46_36_2.txt new file mode 100644 index 0000000000000000000000000000000000000000..a7305da9b9e60bc320fdab4df3fbf00a8598f569 --- /dev/null +++ b/eesanje/url_46_36_2.txt @@ -0,0 +1,7 @@ +ದಸರಾ ಗಜಪಡೆ ತೂಕ ಪರಿಶೀಲನೆ, 5560 ಕೆ.ಜಿ. ತೂಗಿದ ಕ್ಯಾಪ್ಟನ್‌ ಅಭಿಮನ್ಯು + . +ಮೈಸೂರು,ಆ.24-ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿರುವ ಗಜಪಡೆಗೆ ಇಂದು ತೂಕ ಪರಿಶೀಲನೆ ಮಾಡಲಾಗಿದ್ದು, ಕ್ಯಾಪ್ಟನ್‌ ಅಭಿಮನ್ಯು ಬಲುಭಾರ ಹೊಂದಿದ್ದಾನೆ. ದಸರಾ ಹಿನ್ನೆಲೆಯಲ್ಲಿ ಆ.21 ರಂದು ವೀರನಹೊಸಹಳ್ಳಿ ಕ್ಯಾಂಪ್‌ನಿಂದ ನಗರಕ್ಕೆ ಆಗಮಿಸಿದ ಗಜಪಡೆ ನಿನ್ನೆ ಅದ್ಧೂರಿಯಾಗಿ ಅರಮನೆ ಆವರಣ ಪ್ರವೇಶಿಸಿದ್ದು, ಇಂದು ಆನೆಗಳ ತೂಕ ಪರಿಶೀಲಿಸಲಾಯಿತು. +ಯಾವ ಆನೆ, ಎಷ್ಟೆಷ್ಟು ತೂಕ :ಅಭಿಮನ್ಯು 5,560 ಕೆ.ಜಿ., ಭೀಮ 4,945 ಕೆ.ಜಿ., ಏಕಲವ್ಯ 4,730 ಕೆ.ಜಿ., ಕಂಜನ್‌ 4,515 ಕೆ.ಜಿ., ಧನಂಜಯ 5,155 ಕೆ.ಜಿ., ಲಕ್ಷ್ಮಿ 2,480 ಕೆ.ಜಿ., ವರಲಕ್ಷ್ಮಿ 3,495 ಕೆ.ಜಿ., ರೋಹಿತ 3,625 ಕೆ.ಜಿ., ಗೋಪಿ 4,970 ಕೆ.ಜಿ. ಹೊಂದಿದ್ದು, ಇದರಲ್ಲಿ ಕ್ಯಾಪ್ಟನ್‌ ಅಭಿಮನ್ಯು ಬಲು ಭಾರ ಹೊಂದಿದ್ದಾನೆ. +ಆನೆಗಳ ಆರೋಗ್ಯದ ಮೇಲೆ ಗಮನ ಹರಿಸಲಾಗಿದ್ದು, ತೂಕದ ಮೇಲೆ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಎಲ್ಲಾ ಆನೆಗಳ ಆರೋಗ್ಯ ಉತ್ತಮವಾಗಿದ್ದು, ನಾಳೆಯಿಂದಲೇ ಗಜಪಡೆಗೆ ತಾಲೀಮು ಪ್ರಾರಂಭವಾಗಲಿದೆ ಎಂದು ಬಿಸಿಎಫ್‌ಒ ಡಾ.ಪ್ರಭುಗೌಡ ತಿಳಿಸಿದ್ದಾರೆ. +ಬೆಳಿಗ್ಗೆ ಮತ್ತು ಸಂಜೆ ಅರಮನೆಯಿಂದ ಬನ್ನಿಮಂಟಪದವರೆಗೆ ತಾಲೀಮು ನಡೆಯಲಿದ್ದು, ನಗರದ ಗದ್ದಲಗಳಿಗೆ ಬೆಚ್ಚಿ ಬೀಳದಂತೆ ತರಬೇತಿ ನೀಡುವುದೇ ತಾಲೀಮಿನ ಉದ್ದೇಶವಾಗಿದೆ. +ಮೊದಲ ಬಾರಿಗೆ ಏಕಲವ್ಯ ದಸರಾ ಉತ್ಸವದಲ್ಲಿ ಭಾಗಿಯಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ ಅಂಬಾರಿ ಹೊರುವ ಭಾರ ಅವನ ಹೆಗಲಿಗೆ ಬರುವುದರಿಂದ ಈಗಿನಿಂದಲೇ ತರಬೇತಿಯನ್ನು ಮಾವುತರು ಮತ್ತು ಕಾವಾಡಿಗರು ಆರಂಭಿಸಿದಂತಿದೆ. \ No newline at end of file diff --git a/eesanje/url_46_36_3.txt b/eesanje/url_46_36_3.txt new file mode 100644 index 0000000000000000000000000000000000000000..c8355851dd4005a57dc750b76431a52d82dcbaba --- /dev/null +++ b/eesanje/url_46_36_3.txt @@ -0,0 +1,15 @@ +ಸಿನಿಮಾ ಮೀರಿಸುವಂತಿದೆ ಖತರ್ನಾಕ್‌ ದಂಪತಿಯ “ಡೂಪ್ಲಿಕೇಟ್” ಮರ್ಡರ್ ಸ್ಟೋರಿ..! + +ಹಾಸನ,ಆ.24-ಜೀವವಿಮಾ ಸಂಸ್ಥೆಯಿಂದ ಒಂದು ಕೋಟಿ ರೂ. ಪರಿಹಾರದ ಹಣ ಪೀಕಲು ಗಂಡನ ತದ್ರೂಪಿಯಂತೇ ಇದ್ದ ಅಮಾಯಕನನ್ನು ಕೊಂದು ಅಪಘಾತದಲ್ಲಿ ಮೃತಪಟ್ಟಿರುವಂತೆ ತನಿಖೆಯ ಹಾದಿ ತಪ್ಪಿಸಿದ್ದ ಖತರ್ನಾಕ್‌ ಆರೋಪಿ ದಂಪತಿಯನ್ನು ಗಂಡಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ. +ಹೊಸಕೋಟೆ ತಾಲೂಕಿನ ಚಿಕ್ಕಕೋಲಿಗ ಗ್ರಾಮದ ಮುನಿಸ್ವಾಮಿಗೌಡ ಹಾಗೂ ಶಿಲ್ಪರಾಣಿ ಬಂಧಿತ ದಂಪತಿ.ಅಮಾಯಕನ ಹತ್ಯೆ ಘಟನೆ ನಡೆದ ಹತ್ತು ದಿನಗಳ ನಂತರ ಪ್ರಕರಣ ಬಯಲಾಗಿದ್ದು, ಕೊಲೆಯಾಗಿರುವ ವ್ಯಕ್ತಿ ಭಿಕ್ಷುಕ ಎನ್ನಲಾಗಿದ್ದು, ಆತನ ಗುರುತು ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. +ಘಟನೆ ವಿವರ :ಆ.12 ರಂದು ಅರಸೀಕೆರೆ ತಾಲ್ಲೂಕಿನ ಗೊಲ್ಲರಹೊಸಳ್ಳಿ ಗೇಟ್‌ ಬಳಿ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಅದೇ ಸ್ಥಳದಲ್ಲಿ ಪಂಕ್ಚರ್‌ ಆಗಿದ್ದ ಕಾರು ಹಾಗೂ ಒಂದು ಲಾರಿ ಸಿಕ್ಕಿದ್ದವು. ಮೇಲ್ನೋಟಕ್ಕೆ ಪಂಕ್ಚರ್‌ ಆಗಿದ್ದ ಕಾರಿನ ಟೈರ್‌ ಬದಲಿಸುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿದು ಮೃತಪಟ್ಟಿರುವಂತೆ ಕಾಣಿಸುತ್ತಿತ್ತು. +ಅಪರಿಚಿತ ಮೃತದೇಹವನ್ನು ಹಾಸನ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಗಂಡಸಿ ಠಾಣೆ ಪೊಲೀಸರು ಗುರುತು ಪತ್ತೆಗೆ ಮುಂದಾಗಿದ್ದರು. ಆ.13 ರಂದು ಜಿಲ್ಲಾಸ್ಪತ್ರೆಗೆ ಬಂದಿದ್ದ ಹೊಸಕೋಟೆಯ ಆರೋಪಿತೆ ಶಿಲ್ಪರಾಣಿ ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಗುರುತಿಸಿದ್ದಳು. +ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕೊಂಡೊಯ್ದಿದ್ದ ಆಕೆ ಅಂದೇ ಹೊಸಕೋಟೆ ತಾಲ್ಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದಳು. ಗಂಡಸಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮೃತ ವ್ಯಕ್ತಿಯ ಕುತ್ತಿಗೆಯಲ್ಲಿ ಗಾಯದ ಗುರುತು ಇದ್ದಿದ್ದರಿಂದ ಪ್ರಕರಣದ ಬಗ್ಗೆ ಅನುಮಾನಗೊಂಡು ತನಿಖೆ ಆರಂಭಿಸಿದ್ದರು. +ಪ್ರಕರಣದ ಬಗ್ಗೆ ಎಸ್ಪಿ ಮಹಮದ್‌ ಸುಜೀತಾಗೆ ಮಾಹಿತಿ ನೀಡಿದ್ದ ಗಂಡಸಿ ಠಾಣೆ ಪೊಲೀಸರು ಹಾಗೂ ಅರಸೀಕೆರೆ ವೃತ್ತ ನಿರೀಕ್ಷರಿಗೆ ತನಿಖೆ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿತ್ತು. +ಸತ್ತವನು ಮುನಿಸ್ವಾಮಿಗೌಡ ಅಲ್ಲ! :ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಟೈರ್‌ ಮಾರಾಟ ಮಳಿಗೆ ಹೊಂದಿರುವ ಮುನಿಸ್ವಾಮಿಗೌಡ ಸಾಲದಲ್ಲಿ ಮುಳುಗಿ ಹೋಗಿದ್ದ. ಇದರಿಂದ ಪಾರಾಗಲು ದಾರಿ ಕಾಣದೇ ಒದ್ದಾಡುತ್ತಿದ್ದ ಆತ ತನ್ನ ಮರಣಾನಂತರ ದೊರೆಯುವ ಜೀವವಿಮೆ ಹಣವನ್ನು ಬದುಕಿದ್ದಾಗಲೇ ಲಪಟಾಯಿಸಲು ಪತ್ನಿ ಜತೆಗೂಡಿ ತಂತ್ರ ರೂಪಿಸಿದ್ದ. +ಅದರಂತೆ ಭಿಕ್ಷುಕನೊಬ್ಬನನ್ನು ಮಾತನಾಡಿಸಿ ವಿಶ್ವಾಸಕ್ಕೆ ಪಡೆದಿದ್ದ ಮುನಿಸ್ವಾಮಿಗೌಡ ತನ್ನೊಂದಿಗೆ ಕಾರಿನಲ್ಲಿ ಭಿಕ್ಷುಕನನ್ನು ಕೂರಿಸಿಕೊಂಡು ಪ್ರಯಾಣ ಆರಂಭಿಸಿದ್ದ. ಮಾರ್ಗಮಧ್ಯ ಗೊಲ್ಲರ ಹೊಸಳ್ಳಿ ಗೇಟ್‌ ಬಳಿ ಕಾರಿನ ಚಕ್ರ ಪಂಕ್ಚರ್‌ ಆಗಿದ್ದು ಚಕ್ರ ಬದಲಿಸುವಂತೆ ಭಿಕ್ಷುಕನಿಗೆ ಹೇಳಿದ್ದ. +ಅದರಂತೆ ಆತ ಪಂಕ್ಚರ್‌ ಆದ ಚಕ್ರ ಬಿಚ್ಚಲು ಕುಳಿತಿದ್ದಾಗ ಆತನ ಕುತ್ತಿಗೆಗೆ ಚೈನ್‌ ಹಾಕಿ ಎಳೆದು ರಸ್ತೆಗೆ ಬೀಳಿಸಿದ್ದ. ಆಗ ಆತನ ಸಂಚಿನಂತೆ ಹಿಂಬಾಲಿಸಿಕೊಂಡು ಬಂದಿದ್ದ ಲಾರಿ ಚಾಲಕ ಲಾರಿಯನ್ನು ಭಿಕ್ಷುಕನ ಮೇಲೆ ಹರಿಸಿ ಕೊಲೆಗೈದಿದ್ದ. ನಂತರ ಲಾರಿ, ಕಾರುಗಳನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ಮುನಿಸ್ವಾಮಿಗೌಡ ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡಿದ್ದರು. +ಮುನಿಸ್ವಾಮಿಗೌಡನ ಸಂಬಂಧಿಕರಾದ ಶಿಡ್ಲಘಟ್ಟ ಸಿಪಿಐ ಶ್ರೀನಿವಾಸ್‌‍ ಕೂಡ ಆತ ಸತ್ತಿದ್ದಾನೆ ಎಂದು ಎಲ್ಲರಂತೆ ನಂಬಿ ಸಮಾಧಿಗೆ ಹೂವಿನ ಹಾರ ಹಾಕಿ ಬಂದಿದ್ದರು. ಆದರೆ ಅಜ್ಞಾತ ಸ್ಥಳದಲ್ಲಿದ್ದ ಮುನಿಸ್ವಾಮಿಗೌಡನಿಗೆ ಹೊರಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದೆ ಕಂಗಾಲಾಗಿದ್ದ. ಪಾಪಪ್ರಜ್ಞೆಯಿಂದ ಅಸ್ವಸ್ಥಗೊಂಡು ಒತ್ತಡ ತಡೆಯಲಾರದೇ ಸಂಬಂಧಿಕ ಸಿಪಿಐ ಶ್ರೀನಿವಾಸ್‌‍ ಎದುರು ಹಾಜರಾಗಿದ್ದಾನೆ. +ಮೃತಪಟ್ಟಿದ್ದ ಸಂಬಂಧಿ ಮುನಿಸ್ವಾಮಿಗೌಡ ಜೀವಂತವಾಗಿರುವುದನ್ನು ಕಂಡು ಸಿಪಿಐ ಅಚ್ಚರಿಗೊಂಡಿದ್ದಾರೆ. ಅವರಿಗೂ ಸುಳ್ಳು ಹೇಳಿದ ಆರೋಪಿ ತಾನು ಅಪಘಾತದಲ್ಲಿ ಕಾರು ಗುದ್ದಿಸ್ದೆಿ. ಆತ ಮೃತಪಟ್ಟಿದ್ದಾನೆ ಎಂದು ಹೇಳಿದ್ದ. ಆತನ ಮಾತಿನಿಂದ ಅನುಮಾನಗೊಂಡ ಅವರು ಆತನನ್ನು ಗಂಡಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದರು. +ಅತ್ತ ಪತಿಯ ಸಾವಿನ ದುಃಖದಲ್ಲಿರುವಂತೆ ನಟಿಸುತ್ತಿದ್ದ ಶಿಲ್ಪಾ ಅದುವರೆಗೂ ತನಿಖೆಗೆ ಸಹಕಾರ ನೀಡಿರಲಿಲ್ಲ. ಮುನಿಸ್ವಾಮಿಗೌಡ ತಮ ವಶಕ್ಕೆ ಸಿಕ್ಕಿರುವ ವಿಷಯ ತಿಳಿಸದೇ ಪೊಲೀಸರು ವಿಚಾರಣೆ ನಡೆಸಿದಾಗ ಆಕೆ ನಾಟಕ ಮುಂದುವರಿಸಿದ್ದಳು. ತಕ್ಷಣ ಪೊಲೀಸರು ಆಕೆಯ ಪತಿಯನ್ನು ಮುಂದೆ ನಿಲ್ಲಿಸಿದಾಗ ಕಕ್ಕಾಬಿಕ್ಕಿಯಾದ ಆಕೆ ಸತ್ಯ ಬಾಯ್ದಿಟ್ಟಿದ್ದಾಳೆ. +ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು ಈ ಖತರ್ನಾಕ್‌ ದಂಪತಿಯ ಸಂಚಿಗೆ ಬಲಿಯಾದ ಅಮಾಯಕನ ಗುರುತು ಇನ್ನೂ ಪತ್ತೆಯಾಗಬೇಕಾಗಿದೆ. ಲಾರಿ, ಕಾರು ವಶಕ್ಕೆ ಪಡೆದಿರುವ ಪೊಲೀಸರು ಲಾರಿ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. \ No newline at end of file diff --git a/eesanje/url_46_36_4.txt b/eesanje/url_46_36_4.txt new file mode 100644 index 0000000000000000000000000000000000000000..613e231c9f8cface1139ecd183a6c27a0dd5ae52 --- /dev/null +++ b/eesanje/url_46_36_4.txt @@ -0,0 +1,5 @@ +ದಸರಾಗೆ ದಿನಗಣನೆ ಶುರುವಾದ ಬೆನ್ನಲ್ಲೇ ಭಾರಿ ಸ್ಫೋಟಕಗಳು ಪತ್ತೆ, ಮೈಸೂರಿನಲ್ಲಿ ಆತಂಕ +ಮೈಸೂರು, ಆ.23:ನಾಡ ಹಬ್ಬ ದಸರಾ ಮಹೋತ್ಸವ ಕಳೆಗಟ್ಟಲಾರಂಭಿಸಿರುವಾಗಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಸಮೀಪದ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. +ದುಷ್ಕರ್ಮಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. +ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಧಾವಿಸಿ ಸ್ಫೋಟಕಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಫೋಟಕಗಳು ಹಾಗೂ ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. +ವಿಶ್ವ ವಿಖ್ಯಾತ ದಸರಾ ಮಹೋತ್ಸವ ಕಳೆಗಟ್ಟಲಾರಂಭವಾದ ಹೊತ್ತಲ್ಲೇ ಸ್ಫೋಟಕ ಪತ್ತೆಯಾಗಿರುವುದು ಮೈಸೂರಿಗರಲ್ಲಿ ಆತಂಕ ಸೃಷ್ಟಿಸಿದೆ. \ No newline at end of file diff --git a/eesanje/url_46_36_5.txt b/eesanje/url_46_36_5.txt new file mode 100644 index 0000000000000000000000000000000000000000..767a1f92a645e3b392d425d0c8713aea75f2563b --- /dev/null +++ b/eesanje/url_46_36_5.txt @@ -0,0 +1,5 @@ +ಅರಮನೆ ಅವರಣ ಪ್ರವೇಶಿಸಿದ ಗಜಪಡೆ +ಮೈಸೂರು, ಆ.23– ನಾಡಹಬ್ಬ ದಸರಾಗೆ ಭರದ ಸಿದ್ಧತೆ ನಡೆಯುತ್ತಿದ್ದು, ಪ್ರಯಾಣ ಮಾಡಿ ವಿಶ್ರಾಂತಿಯಲ್ಲಿದ್ದ ಗಜಪಡೆ ಇಂದು ಅದ್ಧೂರಿಯಾಗಿ ಅರಮನೆ ಪ್ರವೇಶಿಸಿದೆ. ಆನೆಗಳ ಆಗಮನದಿಂದ ದಸರಾ ವೈಭವ ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಶಾಸೋಕ್ತವಾಗಿ ಪೂಜೆ ಸಲ್ಲಿಸಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. +ವೀರನಹೊಸಳ್ಳಿ ಕ್ಯಾಂಪ್ನಿಂದ ಪ್ರಯಾಣ ಬೆಳೆಸಿ ನಗರದ ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದ್ದ ಆನೆಗಳಿಗೆ ಇಂದು ಅರಣ್ಯ ಇಲಾಖೆ ವತಿಯಿಂದ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. +ಅಲ್ಲಿಂದ ಕಾಲ್ನಡಿಗೆ ಮೂಲಕ ಗಜಪಡೆ ಅರಮನೆಯತ್ತ ಹೆಜ್ಜೆ ಹಾಕಿದವು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಏಕಲವ್ಯ, ಭೀಮ, ಕಂಜನ್, ಲಕ್ಷ್ಮಿ, ವರಲಕ್ಷ್ಮಿ, ರೋಹಿತ್, ಗೋಪಿ, ಧನಂಜಯ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಿರುವುದನ್ನು ಜನರು ಕಣ್ತುಂಬಿಕೊಂಡರು. +ಅರಮನೆಯ ಮಾರ್ತಾಂಡ ದ್ವಾರದ ಬಳಿ ಬೆಳಗ್ಗೆ 10.30ರಲ್ಲಿ ನಡೆದ ತುಲಾ ಲಗ್ನದಲ್ಲಿ ಗಜಪಡೆಯನ್ನು ಸ್ವಾಗತಿಸಲಾಯಿತು. ಇಂದಿನಿಂದ ಅ.12ರ ಜಂಬು ಸವಾರಿ ಮೆರವಣಿಗೆ ಮುಗಿಯುವವರೆಗೂ ಅರಮನೆಯಲ್ಲೇ ಆನೆಗಳು ವಾಸ್ತವ್ಯ ಹೂಡಲಿವೆ. ನಾಳೆ ಆನೆಗಳ ತೂಕ ಪರಿಶೀಲನೆ ನಡೆಸಿದ ನಂತರ ಅವುಗಳಿಗೆ ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ವಿಶೇಷ ಆಹಾರ ನೀಡಿ ತಾಲೀಮು ನಡೆಸುವ ಮೂಲಕ ಮೆರವಣಿಗೆಗೆ ಸಿದ್ಧತೆ ಮಾಡಲಾಗುತ್ತಿದೆ. \ No newline at end of file diff --git a/eesanje/url_46_36_6.txt b/eesanje/url_46_36_6.txt new file mode 100644 index 0000000000000000000000000000000000000000..9cf897ef5240fdae6046407db27967e3e9a5fd58 --- /dev/null +++ b/eesanje/url_46_36_6.txt @@ -0,0 +1,7 @@ +ಸಿಎಂ-ಡಿಸಿಎಂ ಜೊತೆ ಪರಮೇಶ್ವರ್‌ ದೆಹಲಿಗೆ ಪ್ರಯಾಣ, ಕುತೂಹಲ ಮೂಡಿಸಿದೆ ವರಿಷ್ಠರಿಗೆ ಭೇಟಿ +ಬೆಂಗಳೂರು,ಆ.23-ಮುಡಾ ಪ್ರಕರಣದ ಬಳಿಕ ತೀವ್ರಗೊಂಡಿರುವ ರಾಜಕೀಯ ಚಟುವಟಿಕೆಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕಾಂಗ್ರೆಸ್‌‍ ವರಿಷ್ಠರಿಗೆ ಮಾಹಿತಿ ನೀಡಿದ್ದಾರೆ. +ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಪ್ರಯಾಣಿಸಿದರು. ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. +ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ತೆರೆಮರೆಯಲ್ಲಿ ಸಿದ್ದಾರಾಮಯ್ಯ ಅವರನ್ನು ಪದಚ್ಯುತಿಗೊಳಿಸಲು ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಜೆಡಿಎಸ್‌‍ ಹಾಗೂ ಬಿಜೆಪಿ ಮುಖಂಡರು ಮಧ್ಯವರ್ತಿಗಳ ಮೂಲಕ ಕೆಲ ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ. +ಈ ನಡುವೆ ರಾಜ್ಯದಲ್ಲಿನ ಸಚಿವ ಸಂಪುಟ ಹಾಗೂ ಕಾಂಗ್ರೆಸ್‌‍ ಶಾಸಕರು ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವುದು ಸರಿಯಲ್ಲ ಎಂಬ ನಿಲುವಿಗೆ ಬಂದಿದೆ. ಇದಕ್ಕೂ ಮೊದಲು ನಡೆದಿದ್ದ ಅಧಿಕಾರ ಹಂಚಿಕೆ ಸೂತ್ರಗಳು ಹಾಗೂ ಚರ್ಚೆಗಳು ಗೌಪ್ಯವಾಗಿಯೇ ಉಳಿದಿವೆ. +ಒಂದು ವೇಳೆ ಆ.29ರಂದು ಹೈಕೋರ್ಟ್‌ ವಿಚಾರಣೆ ವೇಳೆ ಕಾನೂನು ಸಮರದಲ್ಲಿ ಹಿನ್ನಡೆಯಾಗಿ ಎಫ್‌ಐಆರ್‌ ದಾಖಲಾದರೆ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಪ್ರಶ್ನೆ ಎದುರಾಗುತ್ತದೆ. ಆ ಹಂತದಲ್ಲಿ ಉತ್ತರಾಧಿಕಾರಿ ಯಾರು ಎಂಬ ಚರ್ಚೆಗಳು ತೆರೆಮರೆಯಲ್ಲಿ ಪಿಸುಗುಡುತ್ತಿದ್ದು, ಹಲವರ ಹೆಸರುಗಳು ಬೇಕಾಬಿಟ್ಟಿ ಹರಿದಾಡುತ್ತಿವೆ. +ಇಂದು ಇದ್ದಕ್ಕಿದ್ದಂತೆ ಪರಮೇಶ್ವರ್‌ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಜೊತೆ ದೆಹಲಿಗೆ ತೆರಳಿರುವುದು ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ. \ No newline at end of file diff --git a/eesanje/url_46_36_7.txt b/eesanje/url_46_36_7.txt new file mode 100644 index 0000000000000000000000000000000000000000..00ea98fc0ec0cf7fc1658648047246d13a68b705 --- /dev/null +++ b/eesanje/url_46_36_7.txt @@ -0,0 +1,3 @@ +ರೇರಾ ಅಧ್ಯಕ್ಷರಾಗಿ ರಾಕೇಶ್‌ಸಿಂಗ್‌ ಅಧಿಕಾರ ಸ್ವೀಕಾರ +ಬೆಂಗಳೂರು, ಆ.23-ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರ (ರೇರಾ) ಅಧ್ಯಕ್ಷರಾಗಿ ನಿವೃತ್ತ ಐಎಎಸ್‌‍ ಅಧಿಕಾರಿ ರಾಕೇಶ್‌ಸಿಂಗ್‌ ಅಧಿಕಾರ ಸ್ವೀಕರಿಸಿದರು. +ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಲ್ಲೇ ಇದ್ದುಕೊಂಡು ಏಕಕಾಲದಲ್ಲಿ ವಿವಿಧ ಇಲಾಖೆಗಳ ಹುದ್ದೆಗಳನ್ನು ಸಮರ್ಪಕವಾಗಿ ನಿಭಾಯಿಸಿದ್ದ ರಾಕೇಶ್‌ಸಿಂಗ್‌ ಅವರ ಸೇವಾನುಭವವನ್ನು ಬಳಸಿಕೊಳ್ಳಲು ಸರ್ಕಾರ ತೀರ್ಮಾನಿಸಿ ರೇರಾ ಅಧ್ಯಕ್ಷರನ್ನಾಗಿ ನೇಮಿಸಿದೆ. \ No newline at end of file diff --git a/eesanje/url_46_36_8.txt b/eesanje/url_46_36_8.txt new file mode 100644 index 0000000000000000000000000000000000000000..b02c7dc088b5abee9e3814ab0f1965c94a5f1005 --- /dev/null +++ b/eesanje/url_46_36_8.txt @@ -0,0 +1,6 @@ +ಇಂದಿನಿಂದ ತುಮಕೂರಿನಲ್ಲಿ ವಂದೇ ಭಾರತ್‌ ರೈಲು ನಿಲುಗಡೆ + +ತುಮಕೂರು, ಆ.23- ಜಿಲ್ಲಾ ರೈಲ್ವೆ ಪ್ರಯಾಣಿಕರ ಒತ್ತಾಸೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚರಿಸುವ ಪ್ರತಿಷ್ಠಿತ ವಂದೇ ಭಾರತ್‌ ರೈಲು ಇಂದಿನಿಂದ ತುಮಕೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. +ತುಮಕೂರು ನಾಗರಿಕರ ಆಶಯದಂತೆ ವಂದೇ ಭಾರತ್‌ ರೈಲು ಆರಂಭದ ದಿನದಿಂದಲೇ ನಗರದಲ್ಲಿ ನಿಲುಗಡೆಗೆ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿದ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ತಮ ಕಾರ್ಯಬದ್ಧತೆಯಿಂದ ಈ ರೈಲು ನಿಲುಗಡೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಇಂದು ಸಂಜೆ ರೈಲು ನಿಲುಗಡೆಗೆ ಹಸಿರು ನಿಶಾನೆ ತೋರಲಿದ್ದಾರೆ. +ಬೆಂಗಳೂರು-ತುಮಕೂರು ನಡುವೆ ಹೊಸ ಮೆಮೋ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದು, ತಿಂಗಳಾಂತ್ಯಕ್ಕೆ ಹೊಸ ಮೆಮೋ ರೈಲು ಸಂಚಾರ ಆರಂಭವಾಗಲಿದೆ. ಇದರಿಂದ ಬೆಳಗ್ಗೆ 9ರ ನಂತರ ತುಮಕೂರಿನಿಂದ ಬೆಂಗಳೂರಿಗೆ ಮತ್ತು ಸಂಜೆ 5 ಗಂಟೆ ನಂತರ ಬೆಂಗಳೂರಿನಿಂದ ತುಮಕೂರಿಗೆ ಮತ್ತೊಂದು ಪ್ಯಾಸೆಂಜರ್‌ ರೈಲಿನ ಅನುಕೂಲವಾಗಲಿದೆ. +ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಸೋಮಣ್ಣ ಅವರು ಆರಂಭದಿಂದಲೇ ರೈಲ್ವೆ ಪ್ರಯಾಣಿಕರ ಅಗತ್ಯತೆಗಳಿಗೆ ಸ್ಪಂದಿಸುತ್ತಿದ್ದು, ಹಂತ ಹಂತವಾಗಿ ರೈಲ್ವೆ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದಾರೆ. ಸಚಿವರ ಕಾರ್ಯಕ್ಕೆ ತುಮಕೂರು ರೈಲ್ವೆ ಪ್ರಯಾಣಿಕರ ವೇದಿಕೆ ಅಭಿನಂದನೆ ಸಲ್ಲಿಸಿದೆ. \ No newline at end of file diff --git a/eesanje/url_46_36_9.txt b/eesanje/url_46_36_9.txt new file mode 100644 index 0000000000000000000000000000000000000000..ccb35f416fd672d03eee7fac36b2f057235c6e1b --- /dev/null +++ b/eesanje/url_46_36_9.txt @@ -0,0 +1,8 @@ +ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ : ಸಚಿವ ಖಂಡ್ರೆ + +ಬೆಂಗಳೂರು, ಆ.23-ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ. +ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ತೀವ್ರ ಹಾನಿ ಆಗುತ್ತಿದ್ದು, ಇದಕ್ಕೆ ಪರ್ಯಾಯವಾದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವಂತೆ ತಿಳಿಸಿದರು. +ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ಜಗತ್ತಿಗೇ ಸವಾಲಾಗಿದ್ದು, ಈ ಸಂದರ್ಭದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಕೈಗೊಳ್ಳುವ ಸಣ್ಣ ಪರಿಹಾರಗಳೂ ದೀರ್ಘ ಕಾಲದಲ್ಲಿ ದೊಡ್ಡ ಪರಿಣಾಮ ಬೀರುತ್ತವೆ ಎಂದರು. ಮಾಲಿನ್ಯ ನಿಯಂತ್ರಣಕ್ಕೆ ಸಾಂಪ್ರದಾಯಿಕ ವಿಧಾನಗಳ ಜೊತೆಗೆ ನಾವೀನ್ಯಪೂರ್ಣ ಮತ್ತು ಆಧುನಿಕ ತಂತ್ರಜ್ಞಾನ ಆಧಾರಿತ ಪರಿಹಾರ ಹುಡುಕುವ ನಿಟ್ಟಿನಲ್ಲಿ ಸಂಶೋಧನೆಗೂ ಉತ್ತೇಜನ ನೀಡಬೇಕು ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು. +ಏಕ ಬಳಕೆ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌, ಬಾಟಲಿ, ಚಮಚ, ತಟ್ಟೆ, ಲೋಟ ಇವೆಲ್ಲವೂ ಪರಿಸರಕ್ಕೆ ಶತ್ರುಗಳಾಗಿದ್ದು, ಇದಕ್ಕೆ ಪರ್ಯಾಯವಾಗಿ ಜೈವಿಕ ವಿಘಟನೀಯ ವಸ್ತುಗಳ ಬಳಕೆಗೆ ಶೀಘ್ರ ಆದೇಶ ಹೊರಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. +ಜೈವಿಕವಾಗಿ ವಿಘಟನೆಯಾಗುವ ಸಸ್ಯ ಜನ್ಯ ಪಾಲಿ ಲಿಕ್ವಿಡ್‌ ಆಸಿಡ್‌ ಪೋಲಿಮರ್‌ ಕೈಚೀಲ (ಕ್ಯಾರಿ ಬ್ಯಾಗ್‌)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ವಾಗುವಂತೆ ನಗರಾಭಿವೃದ್ಧಿ ಇಲಾಖೆಗೆ ಕಳಿಸಿರುವ ಪ್ರಸ್ತಾವನೆ ಕುರಿತು ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ತಿಳಿಸಿದರು. +ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾದ ಶರಣು ಮೋದಿ, ಮರಿಸ್ವಾಮಿ ಗೌಡ, ಡಾ.ಪ್ರದೀಪ್‌, ಮಂಡಳಿ ಅಧ್ಯಕ್ಷ ವಿಜಯ ಮೋಹನ್‌ ರಾಜ್‌‍, ಸದಸ್ಯ ಕಾರ್ಯದರ್ಶಿ ಬಾಲಚಂದ್ರ ಮತ್ತಿತರರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_37_1.txt b/eesanje/url_46_37_1.txt new file mode 100644 index 0000000000000000000000000000000000000000..205d2f64194e01ebcd235be9cdb8b6e1282944cd --- /dev/null +++ b/eesanje/url_46_37_1.txt @@ -0,0 +1,15 @@ +11 ಮಸೂದ ವಾಪಸ್‌‍ : ರಾಜ್ಯಪಾಲರಿಗೆ ಸರ್ಕಾರದ ಮೇಲೆ ವಿಶ್ವಾಸವಿಲ್ಲವೆ..? : ಪರಮೇಶ್ವರ್‌ + +ಬೆಂಗಳೂರು, ಆ.23-ವಿಧಾನಮಂಡಲದಲ್ಲಿ ಅಂಗೀಕಾರಗೊಂಡ 11 ಮಸೂದೆಗಳನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ರು ಸಾರಾಸಗಟಾಗಿ ವಾಪಾಸ್‌‍ ಕಳುಹಿಸಿರುವುದು, ರಾಜ್ಯ ಸರ್ಕಾರದೊಂದಿಗೆ ವಿಶ್ವಾಸವಿಲ್ಲ ಎಂಬುದರ ಸಂದೇಶವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ಮತ್ತು ಸರ್ಕಾರಕ್ಕೆ ಹೊಂದಾಣಿಕೆಯಾಗದೆ ಇದ್ದಾಗ ಸಂಘರ್ಷಗಳು ಸಾಮಾನ್ಯ. ಈವರೆಗೂ ಒಂದೋ ಎರಡೋ ಮಸೂದೆಗಳನ್ನು ಮತ್ತಷ್ಟು ವಿವರಣೆ ನೀಡುವಂತೆ ವಾಪಸ್‌‍ ಕಳುಹಿಸಲಾಗುತ್ತಿತ್ತು. ಸಾರಾಸಗಟಾಗಿ ಇದೇ ಮೊದಲ ಬಾರಿಗೆ 11 ಮಸೂದೆಗಳನ್ನು ಪೂರ್ಣವಾಗಿ ವಾಪಸ್‌‍ ಕಳುಹಿಸಲಾಗಿದೆ. ಇದರಿಂದ ರಾಜ್ಯಪಾಲರಿಗೆ ಸರ್ಕಾರದ ಮೇಲೆ ವಿಶ್ವಾಸ ಕಡಿಮೆಯಾಗಿದೆ ಎಂಬ ಸಂದೇಶ ರವಾನೆಯಾಗಿದೆ. ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುವ ಕಾರಣಕ್ಕೆ ಬಿಲ್‌ಗಳನ್ನು ವಾಪಸ್‌‍ ಕಳುಹಿಸುತ್ತಿರುವುದಾಗಿ ರಾಜ್ಯಪಾಲರು ಟಿಪ್ಪಣಿ ಬರೆದಿರುವುದು ತಮ ಗಮನಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ನಮ ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿದ್ದಾರೆ. ಅವರ ಜೊತೆ ನಾವು ಸ್ವಯಂ ಪ್ರೇರಿತವಾಗಿ ಹೋಗುತ್ತಿದ್ದೇವೆ. ನಮನ್ನು ಹೈಕಮಾಂಡ್‌ ಆಹ್ವಾನಿಸಿಲ್ಲ, ವೈಯಕ್ತಿಕವಾಗಿ ನನಗೆ ಇಲಾಖೆಯ ಕೆಲಸಗಳಿವೆ. ಅದಕ್ಕಾಗಿ ಹೋಗುತ್ತಿದ್ದೇನೆ ಎಂದು ಹೇಳಿದರು. +ಮುಡಾ ಪ್ರಕರಣದಲ್ಲಿ ಹೈಕಮಾಂಡ್‌ನ ನಾಯಕರು ಬೆಂಗಳೂರಿಗೆ ಬಂದಾಗ ಸಾಕ್ಷಷ್ಟು ವಿವರಣೆ ನೀಡಲಾಗಿದೆ. ದೆಹಲಿಯ ಸಭೆಯಲ್ಲಿ ಯಾವ ವಿಚಾರ ಚರ್ಚೆಯಾಗಿಲಿದೆ ಎಂಬ ಮಾಹಿತಿ ಇಲ್ಲ. ತಮಿಳುನಾಡು, ಕೇರಳ ಹಾಗೂ ಪಶ್ಚಿಮಬಂಗಾಳದಲ್ಲಿ ರಾಜ್ಯಪಾಲರ ನಡವಳಿಕೆಗಳು ಸಂಸಯಾಸ್ಪದವಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್‌‍ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ ರಾಷ್ಟ್ರಮಟ್ಟದಲ್ಲಿ ಪ್ರತಿಭಟನೆ ನಡೆಸುವ ಕುರಿತು ಚರ್ಚೆಯಾಗಬಹುದು ಎಂದರು. +ಜಿಂದಾಲ್‌ನ ಜೆಡ್ಲ್ಯೂಎಸ್‌‍ ಸಂಸ್ಥೆಗೆ ಸಾವಿರಾರು ಎಕರೆ ಜಮೀನನ್ನು ಮಂಜೂರು ಮಾಡಲು ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿರುವುದನ್ನು ಸಮರ್ಥಿಸಿಕೊಂಡ ಪರಮೇಶ್ವರ್‌, ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ಈ ರೀತಿ ಭೂಮಿ ನೀಡಲು ವಿರೋಧ ಮಾಡಿದ್ದೇವು. ಆಗ ಕೆಲ ಪ್ರಶ್ನೆಗಳಿದ್ದವು. ಈಗ ಅದಕ್ಕೆಲ್ಲಾ ಉತ್ತರ ಸಿಕ್ಕಿದೆ. ಜೊತೆಗೆ ನ್ಯಾಯಾಲಯವೂ ಆದೇಶ ಮಾಡಿದೆ. +ಕೋರ್ಟ್‌ ನಿರ್ದೇಶನದ ಮೇಲೆ ಮರು ಪರಿಶೀಲನೆ ಮಾಡಲಾಗಿದೆ. ಸ್ಥಳೀಯವಾಗಿ ಇರುವಂತೆ ಎಕರೆಗೆ ಒಂದು ಲಕ್ಷ, ಐವತ್ತು ಸಾವಿರ ದರ ನಿಗದಿ ಮಾಡಲಾಗಿದೆ. ಇದಾದ ಬಳಿಕ ಭೂಮಿ ಮಂಜೂರು ಮಾಡಿದ್ದೇವೆ ಎಂದರು. +ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಿದಾಗ ಉದ್ಯಮಿಗಳನ್ನು ಆಹ್ವಾನಿಸಿ, ರಾಜ್ಯದಲ್ಲಿ ರಿಯಾಯಿತಿ ದರದಲ್ಲಿ ಭೂಮಿ, ನೀರು, ವಿದ್ಯುತ್‌ ನೀಡುತ್ತೇವೆ ಎಂದು ಭರವಸೆ ನೀಡುತ್ತೇವೆ. ಜಿಂದಾಲ್‌ ಸಂಸ್ಥೆ ರಾಜ್ಯದಲ್ಲಿ ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಅಂತಹವರಿಗೆ ಒಂದಿಷ್ಟು ರಿಯಾಯಿತಿ ನೀಡಿ ಬೆಂಬಲಿಸಬೇಕಿದೆ. ಜಿಂದಾಲ್‌ನಿಂದ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ಸಿಕ್ಕಿದೆ ಎಂದರು. +ರಾಜ್ಯದಲ್ಲಿ ಈ ಹಿಂದೆ ಸಣ್ಣ ಘಟನೆ ನಡೆದಾಗ ಕೈಗಾರಿಕೆಗಳು ಕರ್ನಾಟಕ ಬಿಟ್ಟು ಹೋಗುತ್ತೇವೆ ಎಂದು ಬೆದರಿಕೆ ಹಾಕಿದ್ದವು. ಸ್ಪರ್ಧಾತಕ ಯುಗದಲ್ಲಿ ಕೆಲ ನಿರ್ಣಯ ಕೈಗೊಳ್ಳಬೇಕಿದೆ. ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ಉಚಿತವಾಗಿ ಭೂಮಿ ನೀಡಲಾಗುತ್ತಿದೆ. ಹಿಂದೆ ಬಿಜೆಪಿ ಆಡಳಿತ ಅವಧಿಯಲ್ಲಿ ಜಿಂದಾಲ್‌ ಸಂಸ್ಥೆಗೆ ಕೈಗಾರಿಕೆಗೆ ಅಭಿವೃದ್ಧಿಗೆ ಭೂಮಿ ನೀಡುತ್ತೇವೆ ಎಂದು ಹೇಳಿರಲಿಲ್ಲ. +ಕೈಗಾರಿಕೆಗೆ ಉತ್ತೇಜನಕ್ಕಾಗಿ ಭೂಮಿ ನೀಡುತ್ತಿದ್ದೇವೆ ಎಂದು ಮನವರಿಕೆ ಮಾಡಿಕೊಟ್ಟಿದ್ದರೆ ನಾವು ಸುಮನಾಗುತ್ತಿದ್ದೇವು. ಬಹುಶಃ ಬಿಜೆಪಿ ಕೈಗಾರಿಕೆ ಅಭಿವೃದ್ಧಿಗಾಗಿ ಭೂಮಿ ನೀಡುವ ಉದ್ದೇಶ ಇರಲಿಲ್ಲ ಎಂದರು. +ಬಿಜೆಪಿ ಸರ್ಕಾರದ ಹಗರಣಗಳನ್ನು ಒಂದೊಂದೇ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ. ನಿನ್ನೆ ಒಂದು ಪ್ರಕರಣದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಬೋವಿ ಅಭಿವೃದ್ಧಿ ನಿಗಮ, ದೇವರಾಜ್‌ ಅರಸ್‌‍ ಟ್ರಕ್‌ ಟರ್ಮಿನಲ್‌, ವಾಲೀಕಿ ಅಭಿವೃದ್ಧಿ ನಿಗಮ, ಜಂತಕಲ್‌ ಗಣಿ ಹಗರಣ ಸೇರಿ ಎಲ್ಲವನ್ನೂ ತಾರ್ಕಿಕ ಅಂತ್ಯ ಕಾಣಿಸಲಾಗುವುದು ಎಂದು ತಿಳಿಸಿದರು. +ಗೆಜೆಟೆಡೆ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯಾಗಿ ಒಂದು ವಾರದ ಒಳಗೆ ಪರೀಕ್ಷೆ ನಡೆಸಬೇಕು ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ಮೊದಲು ಎರಡು ಬಾರಿ ಕೆೆಎಎಸ್‌‍ ಪರೀಕ್ಷೆ ಮುಂದೂಡಲಾಗಿದೆ. ಮತ್ತೆ ಮುಂದೂಡುವ ಪ್ರಶ್ನೆಯಿಲ್ಲ. ಕೇಂದ್ರ ಲೋಕಸೇವಾ ಆಯೋಗವೂ ಪರೀಕ್ಷೆ ಮುಂದೂಡಬೇಕು ಎಂಬ ಚರ್ಚೆಯಿದೆ. ಅದಕ್ಕಾಗಿ ಕೆಪಿಸಿಸಿ ನಿಗದಿತ ಅವಧಿಯಲ್ಲೇ ಪರೀಕ್ಷೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು. +ಮುಡಾ ಪ್ರಕರಣದಲ್ಲಿ ದಾಖಲೆಗಳನ್ನು ತಿದ್ದಿದ್ದರೆ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ. ಸಹಿ ತಿದ್ದಿರುವ ಬಗ್ಗೆ ಎಫ್‌ಎಸ್‌‍ಎಲ್‌ನಿಂದ ಪರಿಶೀಲನೆಗೆ ಒಳಪಡಿಸಲಾಗುವುದು. ಆ ಕಡತದಲ್ಲಿ ಯಾರೆಲ್ಲಾ ಸಹಿ ಮಾಡಿದ್ದಾರೆ, ಬೇರೆ ಅಧಿಕಾರಿಗಳ ಶಿಫಾರಸುಗಳೇನು? ಕಡತ ಮುಖ್ಯಮಂತ್ರಿಗಳ ಹಂತಕ್ಕೆ ಬರುವ ವೇಳೆಗೆ ನಾಲ್ಕೈದು ಅಧಿಕಾರಿಗಳು ಶಿಫಾರಸ್ಸು ಮಾಡಬೇಕಿದೆ. ಅವರ ಶಿಫಾರಸುಗಳೇನು ? ಅಧಿಕಾರಿಗಳ ಸಲಹೆ ಮೀರಿ ಆದೇಶ ನೀಡಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಯಲಿದೆ. +ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ ಪತ್ನಿ ಬರೆದಿರುವ ಪತ್ರಗಳ ಎರಡು ಪುಟಗಳನ್ನು ಮಾತ್ರ ಲಗತ್ತಿಸಿದ್ದಾರೆ. ಉಳಿದ ಪುಟಗಳನ್ನು ಮರೆ ಮಾಚಿದ್ದಾರೆ ಎಂಬ ಆರೋಪ ಸೇರಿದಂತೆ ಯಾರಿಗೆ ಏನೆಲ್ಲಾ ಅನುಮಾನಗಳಿವೆಯೋ ಅವುಗಳನ್ನು ವಿಚಾರಣಾ ಆಯೋಗದ ಮುಂದೆ ಸಲ್ಲಿಸಲಿ ಎಂದು ಸಲಹೆ ನೀಡಿದರು. \ No newline at end of file diff --git a/eesanje/url_46_37_10.txt b/eesanje/url_46_37_10.txt new file mode 100644 index 0000000000000000000000000000000000000000..9ee33b72212339302d94455b99b747ee7af13de3 --- /dev/null +++ b/eesanje/url_46_37_10.txt @@ -0,0 +1,5 @@ +ಅಕ್ರಮ ಹಣ ಗಳಿಕೆ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಕೆಶಿ +ಬೆಂಗಳೂರು,ಆ.22-ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅರ್ಧದಲ್ಲೇ ಎದ್ದು ಹೊರಬಂದಿದ್ದು, ಲೋಕಾಯುಕ್ತ ಕಚೇರಿಗೆ ತೆರಳಿ ಹೇಳಿಕೆ ನೀಡಿದ್ದಾರೆ. +ಡಿವೈಎಸ್ಪಿ ಸತೀಶ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸಭೆ ಹಿಂಪಡೆದಿತ್ತು. +ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಆರೋಪವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಸಿಬಿಐ ರಾಜ್ಯಸರ್ಕಾರದ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈಗಾಗಲೇ ಶೇ.90 ರಷ್ಟು ತನಿಖೆ ಪೂರ್ಣಗೊಂಡಿದೆ. ಈ ಹಂತದಲ್ಲಿ ಅನುಮತಿ ಹಿಂಪಡೆದಿರುವುದು ಸೂಕ್ತವಲ್ಲ ಎಂಬುದು ಸಿಬಿಐ ವಾದವಾಗಿತ್ತು. ನ್ಯಾಯಾಲಯ ಯಾವುದೇ ನಿರ್ದೇಶನ ನೀಡಿರಲಿಲ್ಲ. +ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿದೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತದಲ್ಲಿ ತನಿಖೆ ಚುರುಕುಗೊಂಡಿದ್ದು, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ದಾಖಲು ಮಾಡಿಕೊಂಡಿರುವುದು ಮಹತ್ವದ ಬೆಳವಣಿಗೆಯಾಗಿದೆ. \ No newline at end of file diff --git a/eesanje/url_46_37_11.txt b/eesanje/url_46_37_11.txt new file mode 100644 index 0000000000000000000000000000000000000000..3e33400b7a201053aa41867bc5391b4c800fd2ed --- /dev/null +++ b/eesanje/url_46_37_11.txt @@ -0,0 +1,4 @@ +ಇಬ್ಬರು ಸಮುದಾಯ ಸಂಘಟನಾಧಿಕಾರಿಗಳ ವರ್ಗಾವಣೆ +ಬೆಂಗಳೂರು, ಆ.22-ಪೌರಾಡಳಿತ ಸೇವೆಗೆ ಸೇರಿದ ಇಬ್ಬರು ಸಮುದಾಯ ಸಂಘಟನಾಧಿಕಾರಿಗಳನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. +ಗದಗ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ಬಿ.ಪ್ರಸಾದ್‌ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಳವಳ್ಳಿ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ವರ್ಗಾಯಿಸಿರುವುದನ್ನು ಮಾರ್ಪಡಿಸಿ ವಿಜಯಲಕ್ಷ್ಮೀ ಹಿರೇಮಠ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪ್ರಸಾದ್‌ ವರ್ಗಾವಾಗಿದ್ದಾರೆ. +ನರಗುಂದ ಪುರಸಭೆಯಲ್ಲಿ ಖಾಲಿ ಇದ್ದ ಸಮುದಾಯ ಸಂಘಟನಾಧಿಕಾರಿ ಸ್ಥಾನಕ್ಕೆ ವಿಜಯಲಕ್ಷ್ಮೀ ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಗದಗ ನಗರಸಭೆಯ ಸಮುದಾಯ ಸಂಘಟನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. \ No newline at end of file diff --git a/eesanje/url_46_37_12.txt b/eesanje/url_46_37_12.txt new file mode 100644 index 0000000000000000000000000000000000000000..4b8d10acfd38b39a7d7ac62974ef70dafd70fd95 --- /dev/null +++ b/eesanje/url_46_37_12.txt @@ -0,0 +1,6 @@ +ಕೆಸೆಟ್‌-2024ಗೆ ಅರ್ಜಿ ಸಲ್ಲಿಸುವ ದಿನಾಂಕ ಆ.28ರವರೆಗೆ ವಿಸ್ತರಣೆ + -2024 28 +ಬೆಂಗಳೂರು, ಆ.22-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್‌-2024)ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.28ರವರೆಗೆ ವಿಸ್ತರಿಸಿದೆ. +ರಾಜ್ಯ ಸರ್ಕಾರದ ನಿರ್ದೇಶನದಂತೆ ಕೆಸೆಟ್‌ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಆ. 30 ಕಡೆಯ ದಿನವಾಗಿದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ. +ಜುಲೈ 7ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆ.22ಕ್ಕೆ ನಿಗದಿಗೊಳಿಸಲಾಗಿತ್ತು. ಕೊನೆಯ ದಿನಾಂಕ ವಿಸ್ತರಿಸಲು ಸರ್ಕಾರ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೆಇಎಯು ಆನ್‌ಲೈನ್‌ ಮೂಲಕ ಕೆಸೆಟ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಣೆ ಮಾಡಿದೆ. +ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳು ಅಧಿಸೂಚನೆಯಲ್ಲಿರುವಂತೆ ಅನ್ವಯವಾಗಲಿವೆ ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_46_37_2.txt b/eesanje/url_46_37_2.txt new file mode 100644 index 0000000000000000000000000000000000000000..b9fc0b9adaf50f30226f46e647054e1e4bacccf3 --- /dev/null +++ b/eesanje/url_46_37_2.txt @@ -0,0 +1,8 @@ +ರಾಜ್ಯ ಸರ್ಕಾರವನ್ನು ನಾವು ಅಸ್ಥಿರಗೊಳಿಸಲ್ಲ, ಆಂತರಿಕ ಕಚ್ಚಾಟದಿಂದ ಪತನವಾದರೆ ನಾವೇನು ಮಾಡಲು ಸಾಧ್ಯ : ಜೋಷಿ + , +ಬೆಂಗಳೂರು,ಆ.23-ಯಾವುದೇ ಕಾರಣಕ್ಕೂ ಬಹುತ ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ನಾವು ಅಸ್ಥಿರಗೊಳಿಸುವ ಪ್ರಯತ್ನ ಕೈ ಹಾಕುವುದಿಲ್ಲ. ಆದರೆ ಅವರ ಆಂತರಿಕ ಕಚ್ಚಾಟದಿಂದ ಅಸ್ಥಿರಗೊಂಡರೆ ನಾವೇನು ಮಾಡಲು ಸಾಧ್ಯವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ಗೆ ಐದು ವರ್ಷ ಆಡಳಿತ ನಡೆಸಲು 136 ಸ್ಥಾನಗಳನ್ನು ನೀಡಿದ್ದಾರೆ. ಬಹುಮತ ಹೊಂದಿರುವ ಸರ್ಕಾರವನ್ನು ಅಭದ್ರಗೊಳಿಸುವುದು ಅಷ್ಟು ಸುಲಭದ ಮಾತಲ್ಲ ಎಂದು ಹೇಳಿದರು.ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಯಾರೂ ಕೂಡ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. +ತಮ ತಪ್ಪುಗಳನ್ನು ಮುಚ್ಚಿ ಹಾಕಿಕೊಳ್ಳಲು ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಾಗೆ ನೋಡಿದರೆ ವಾಸ್ತವವಾಗಿ ಕುರ್ಚಿ ಕಳೆದುಕೊಳ್ಳುವ ಭೀತಿ ಸಿಎಂಗೆ ಎದುರಾಗಿದೆ. ಹೀಗಾಗಿ ತಮಗೆ ಬೆಂಬಲ ನೀಡಬೇಕೆಂದು ಶಾಸಕರಿಗೆ ಬಲವಂತವಾಗಿ ಒತ್ತಡ ಹಾಕುತ್ತಿದ್ದಾರೆ. ಇದು ವಾಸ್ತವವೂ ಹೌದು ಎಂದು ತಿಳಿಸಿದರು. +ನಿಮ ಮನೆಯನ್ನು ನೀವು ಮೊದಲು ಸರಿ ಮಾಡಿಕೊಳ್ಳಿ, ಬೇರೆಯವರ ಮೇಲೆ ಆರೋಪ ಬಿಡಿ. ಬಿಜೆಪಿ ಯಾವ ಕಾರಣಕ್ಕೂ ಈ ಸರ್ಕಾರ ತೆಗೆಯುವ ಉದ್ದೇಶ ಹೊಂದಿಲ್ಲ. ಸಿಎಂ ಮೇಲೆ ಆರೋಪ ಬಂದಿದೆ. ಅವರು ಶುದ್ಧರಾಗಿ ಹೊರಗೆ ಬರಲಿ. ಪಾರದರ್ಶಕ ತನಿಖೆ ನಡೆಯಲಿ ಎಂದರು. +ಸಿದ್ದರಾಮಯ್ಯ ಮೇಲೆ ನಮಗೇನೂ ಕೋಪ ಇಲ್ಲ. ಬಿಜೆಪಿ ಸರ್ಕಾರ ಅಸ್ಥಿರಗೊಳ್ಳುತ್ತಿಲ್ಲ. ಜನಾದೇಶ ನಮಗೆ ವಿರೋಧ ಪಕ್ಷದ ಸ್ಥಾನ ಕೊಟ್ಟಿದೆ. ಆ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. +ಕಾಂಗ್ರೆಸ್ 58 ವರ್ಷ ಕಾಲ ದೇಶದಲ್ಲಿ ಆಡಳಿತ ಮಾಡಿದ್ದು, 92 ಬಾರಿ ಗಟ್ಟಿಮುಟ್ಟಾದ ಚುನಾಯಿತ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಉರುಳಿಸಿದೆ. ಇಂಡಿಯಾ ಒಕ್ಕೂಟದಲ್ಲಿರುವ ಅನೇಕ ಪಕ್ಷಗಳ ಸರ್ಕಾರಗಳನ್ನು ಇವರೇ ತೆಗೆದಿದ್ದಾರೆ. ಇವರು ಈಗ ನಮಗೆ ರಾಜ್ಯಪಾಲರ ವಿಚಾರದಲ್ಲಿ ಬೋಧನೆ ಮಾಡುತ್ತಿರುವುದು ಬಹಳ ದೊಡ್ಡ ಆಶ್ಚರ್ಯ ಎಂದು ಅವರು ಠಕ್ಕರ್ ನೀಡಿದರು. \ No newline at end of file diff --git a/eesanje/url_46_37_3.txt b/eesanje/url_46_37_3.txt new file mode 100644 index 0000000000000000000000000000000000000000..4910a32ed73371f6b45433fdc55ec3750ee5aedb --- /dev/null +++ b/eesanje/url_46_37_3.txt @@ -0,0 +1,9 @@ +ಸಿದ್ದರಾಮಯ್ಯನವರೇ ತಾಕತ್ತಿದ್ರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣಮಾಡಿ : ರವಿಕುಮಾರ್ + +ಬೆಂಗಳೂರು,ಆ.22-ಮುಡಾ ಪ್ರಕರಣದಲ್ಲಿ ದಾಖಲೆಗಳನ್ನು ಮುಚ್ಚಿ ಹಾಕಲು ವೈಟ್ನರ್‌ ಹಾಕಿಲ್ಲ ಎನ್ನುವುದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಬಹಿರಂಗ ಸವಾಲು ಹಾಕಿದ್ದಾರೆ. +ಫ್ರೀಡಂ ಪಾರ್ಕ್‌ನಲ್ಲಿ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಈ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತವಾದ ಪಿತೂರಿ ನಡೆಸಿದ್ದಾರೆ. ಮೊದಲು ತಮ ಪತ್ನಿ ನಿರ್ದಿಷ್ಟ ಕಡೆ ನಿವೇಶನ ನೀಡುವಂತೆ ಪತ್ರ ಬರೆದಿಲ್ಲ ಎಂದು ಹೇಳುತ್ತಿದ್ದರು. +ಇದೀಗ ದಾಖಲಾತಿಗಳಲ್ಲಿ ಪಾರ್ವತಿಯವರು ಮೈಸೂರಿನ ವಿಜಯನಗರದ 2 ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂದು ಕೋರಿ ಮುಡಾ ಆಯುಕ್ತರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ. +ಇದನ್ನು ಮುಚ್ಚಿ ಹಾಕಲು ಅಧಿಕಾರಿ ಗಳು ವೈಟ್ನರ್‌ ಹಾಕಿರುವುದು ರುಜು ವಾತಾಗಿದೆ. ಇದು ಕಾನೂನು ಉಲ್ಲಂಘನೆ ಯಲ್ಲವೇ ಎಂದು ಪ್ರಶ್ನೆ ಮಾಡಿದರು.ನೀವು ಈ ಪ್ರಕರಣದಲ್ಲಿ ತಪ್ಪೇ ಮಾಡಿಲ್ಲ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಿ. ನೀವು ಈಗ ಶುದ್ಧರಾಮಯ್ಯನೂ ಅಲ್ಲ, ಸಿದ್ದರಾಮಯ್ಯನೂ ಅಲ್ಲ. ನೀವು ಮುಡಾ ಸೈಟ್‌ ರಾಮಯ್ಯ ಎಂದು ವ್ಯಂಗ್ಯವಾಡಿದರು. +ಶಾಸಕ ರಾಮಮೂರ್ತಿ ಮಾತನಾಡಿ, ರಾಜಭವನಕ್ಕೆ ನುಗ್ಗುತ್ತೇವೆ ಎಂದು ಹೇಳಿಕೆ ನೀಡಿರುವ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಅವರು ತಕ್ಷಣವೇ ಪೊಲೀಸರು ಬಂಧಿಸಬೇಕು. ಅವರ ವಿರುದ್ಧ ರಾಷ್ಟ್ರದ್ರೋಹಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು. +ವಿಧಾನಪರಿಷತ್‌ ಸದಸ್ಯರಾಗಿರುವ ಐವಾನ್‌ ಡಿಸೋಜಾಗೆ ಕನಿಷ್ಠ ಪಕ್ಷ ಸಾಮಾನ್ಯಜ್ಞಾನ ಇಲ್ಲವೇ? ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಎಂದು ಪ್ರಶ್ನಿಸಿದರು. +ಕೂಡಲೇ ಪೊಲೀಸರು ಅವರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಿ ಮುಲಾಜಿಲ್ಲದೆ ಬಂಧಿಸಬೇಕೆಂದು ಒತ್ತಾಯಿಸಿದರು.ರಾಜ್ಯಸರ್ಕಾರ ನೀರಿನ ದರ ಹೆಚ್ಚಳ ಮಾಡಲು ಮುಂದಾಗಿರುವುದು ಖಂಡನೀಯ. ಇದು ಲೂಟಿ ಸರ್ಕಾರ. ಗ್ಯಾರಂಟಿ ನೆಪದಲ್ಲಿ ಜನರನ್ನು ಕೊಳ್ಳೆ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_37_4.txt b/eesanje/url_46_37_4.txt new file mode 100644 index 0000000000000000000000000000000000000000..893947cf17f615dad89f82d17eccdcbf813bf3b9 --- /dev/null +++ b/eesanje/url_46_37_4.txt @@ -0,0 +1,9 @@ +ಸರ್ಕಾರದ ವಿರುದ್ಧ ಅಶ್ವತ್ಥ್ ನಾರಾಯಣ್‌ ವಾಗ್ದಾಳಿ +ಬೆಂಗಳೂರು,ಆ.22-ಭ್ರಷ್ಟಾಚಾರವನ್ನೇ ಉಂಡೆದ್ದು ಮಲಗುತ್ತಿರುವ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದರೆಷ್ಟು? ಬಿಟ್ಟರೆಷ್ಟು? ಮೊದಲು ಅಧಿಕಾರದಿಂದ ತೊಲಗಲಿ ಎಂದು ಮಾಜಿ ಸಚಿವ ಡಾ.ಅಶ್ವತ್ಥ ನಾರಾಯಣ ತೀವ್ರ ವಾಗ್ದಾಳಿ ನಡೆಸಿದರು. +ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಹಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತೇವೆ ಎಂದು ಜನತೆ ಮುಂದೆ ವಾಗ್ದಾನ ಮಾಡಿದ್ದ ಕಾಂಗ್ರೆಸ್‌‍ ಸರ್ಕಾರ ಭ್ರಷ್ಟಾಚಾರವನ್ನೇ ಒಂದಂಶದ ಕಾರ್ಯಕ್ರಮ ಮಾಡಿಕೊಂಡಿದೆ ಎಂದು ವ್ಯಂಗ್ಯವಾಡಿದರು. +ಎಷ್ಟು ಬೇಗ ಈ ಸರ್ಕಾರ ತೊಲಗುತ್ತದೆಯೋ ಎಂದು ರಾಜ್ಯದ ಜನತೆ ಎದುರು ನೋಡುತ್ತಿದ್ದಾರೆ. ಎಲ್ಲಿ ನೋಡಿದರೂ ಲಂಚ ಲಂಚ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ. ಇಂತಹ ದರಿದ್ರ ಸರ್ಕಾರ ಇದ್ದರೂ ಒಂದೇ, ಇಲ್ಲದಿದ್ದರೂ ಒಂದೇ ಎಂದು ಕೆಂಡ ಕಾರಿದರು. +ಕಾರ್ಯಾಂಗದ ಮುಖ್ಯಸ್ಥನಾಗಿರುವ ರಾಜ್ಯಪಾಲರು ದಾಖಲೆಗಳನ್ನು ಪರಿಶೀಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಕಾನೂನುಬದ್ಧವಾಗಿ ಅದನ್ನು ಎದುರಿಸಬೇಕೇ ವಿನಃ ಬೆಂಬಲಿಗರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಿಸುವುದು ಸಿದ್ದರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. +ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ನೀವು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿ. ನ್ಯಾಯಾಲಯವು ಪರಿಶೀಲನೆ ನಡೆಸಿ ಆದೇಶ ನೀಡುತ್ತದೆ. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧ ಮನಸೋ ಇಚ್ಛೆ ಟೀಕೆ ಮಾಡುವುದು ಕಾಂಗ್ರೆಸ್‌‍ ಪಕ್ಷಕ್ಕಾಗಲೀ, ಸಿದ್ದರಾಮಯ್ಯನವರಿಗಾಗಲೀ ಶೋಭೆ ತರದು ಎಂದರು. +ಇದು ಭಂಡಗೆಟ್ಟ, ಮಾನಗೆಟ್ಟ ಸರ್ಕಾರ ಎಂದು ಪ್ರತಿಪಕ್ಷದವರಿಗಿಂತ ಆಡಳಿತ ಪಕ್ಷದ ಶಾಸಕರೇ ಹಿಡಿಶಾಪ ಹಾಕುತ್ತಿದ್ದಾರೆ. ವರ್ಗಾವಣೆ ದಂಧೆ ಬಿಟ್ಟರೆ ಅಭಿವೃದ್ಧಿ ಶೂನ್ಯ. ಸರ್ಕಾರದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ. ಯಾವ ನೈತಿಕತೆ ಇಟ್ಟುಕೊಂಡು ಸರ್ಕಾರ ನಡೆಸುತ್ತಿದ್ದೀರಿ ಎಂದು ಅಶ್ವತ್ಥನಾರಾಯಣ ಪ್ರಶ್ನೆ ಮಾಡಿದರು. +ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ. ಸಾರ್ವಜನಿಕ ವೇದಿಕೆಯಲ್ಲಿ ಹೇಗೆ ಮಾತನಾಡಬೇಕೆಂಬ ಸಾಮಾನ್ಯ ಜ್ಞಾನವನ್ನು ಕಾಂಗ್ರೆಸ್‌‍ ಹೇಳಿಕೊಡಲಿರುವುದು ದುರಂತವೇ ಸರಿ ಎಂದು ವ್ಯಂಗ್ಯವಾಡಿದರು. +ಆಂಗ್ಲ ಮಾದರಿಯಲ್ಲಿ ರಾಜಭವನಕ್ಕೆ ನುಗ್ಗುತ್ತೇವೆ ಎನ್ನುತ್ತಿರುವ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿ ತತ್‌ ಕ್ಷಣವೇ ಬಂಧಿಸಬೇಕು. ಇಂತವರು ಸಮಾಜದಲ್ಲಿ ಇದ್ದರೆ ಅದು ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಶಾಸಕರಾದ ಕೆ.ಗೋಪಾಲಯ್ಯ, ವಿಧಾನಪರಿಷತ್‌ಸದಸ್ಯೆ ಭಾರತಿ ಶೆಟ್ಟಿ ಮತ್ತಿತರರು ಭಾಗಿಯಾಗಿದ್ದರು. \ No newline at end of file diff --git a/eesanje/url_46_37_5.txt b/eesanje/url_46_37_5.txt new file mode 100644 index 0000000000000000000000000000000000000000..e0ba76be3afead1c19d02fc4e821c6c8d21bea33 --- /dev/null +++ b/eesanje/url_46_37_5.txt @@ -0,0 +1,5 @@ +ಬಿಜೆಪಿ-ಜೆಡಿಎಸ್‌‍ ಕಿಡಿಗೇಡಿಗಳ ಕೃತ್ಯ ತಪ್ಪಿಸಲು ರಾಜ್ಯಪಾಲರಿಗೆ ಬುಲೆಟ್‌ಪ್ರೂಫ್‌ ಕಾರು : ಡಿಕೆಶಿ + - +ಬೆಂಗಳೂರು,ಆ.22-ರಾಜ್ಯಪಾಲರ ಕಾರಿಗೆ ಬಿಜೆಪಿ-ಜೆಡಿಎಸ್‌‍ನ ಕಿಡಿಗೇಡಿಗಳೇ ಕಲ್ಲು ಹೊಡೆದು ನಮ್ಮ ಮೇಲೆ ಆರೋಪ ಮಾಡುವ ಸಾಧ್ಯತೆ ಇದೆ. ಅದಕ್ಕಾಗಿ ಬುಲೆಟ್‌ಪ್ರೂಫ್‌ ಕಾರು ಒದಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್‌‍ನವರು ರಾಜ್ಯಪಾಲರನ್ನು ಬಳಸಿಕೊಂಡು ಕಾಂಗ್ರೆಸ್‌‍ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸುತ್ತಿದ್ದಾರೆ. ಜೊತೆಗೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ ಎಂದು ದೂರಿದರು. +ನಮಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಸೂಕ್ತ ರಕ್ಷಣೆ ನೀಡಲಾಗಿದೆ. ಪ್ರಜಾಪ್ರಭುತ್ವದಲ್ಲಿ ಯಾರನ್ನು ಬೇಕಾದರೂ ಟೀಕಿಸುವ ಅವಕಾಶವಿದೆ. ಘನತೆವ್ಯಕ್ತ ರಾಜ್ಯಪಾಲರಿಗೆ ಸೂಕ್ತ ಗೌರವ ನೀಡಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_37_6.txt b/eesanje/url_46_37_6.txt new file mode 100644 index 0000000000000000000000000000000000000000..8e708335b15dbcfde2467e01008ccdd6c658c60c --- /dev/null +++ b/eesanje/url_46_37_6.txt @@ -0,0 +1,12 @@ +ಚನ್ನಪಟ್ಟಣ ಉಪಚುನಾವಣೆ : ಜೆಡಿಎಸ್‌ನಿಂದ ಸ್ಥಳೀಯರಿಗೆ ಟಿಕೆಟ್, ಮುಂಚೂಣಿಯಲ್ಲಿ ಜಯಮುತ್ತು ಹೆಸರು + - +ಬೆಂಗಳೂರು, ಆ.22– ಚುನಾವಣೆ ಘೋಷಣೆಯಾಗುವ ಮುನ್ನವೇ ಕಾವೇರಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರನ್ನು ಕಣಕ್ಕಿಳಿಸುವ ಬಗ್ಗೆ ಜೆಡಿಎಸ್ ಗಂಭೀರ ಚಿಂತನೆ ನಡೆಸಿದೆ.ಈಗಾಗಲೇ ಜಿದ್ದಾಜಿದ್ದಿನ ಕ್ಷೇತ್ರವೆಂದು ಪರಿಗಣಿತವಾಗಿದ್ದು, ರಾಜ್ಯಾದ್ಯಂತ ಉಪ ಚುನಾವಣೆ ವಿಚಾರ ಸದ್ದು ಮಾಡುತ್ತಿದೆ. +ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಸದ್ಯದಲ್ಲಿಯೇ ಉಪ ಚುನಾವಣೆ ನಡೆಯಲಿದೆ. ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಹೆಚ್.ಸಿ.ಜಯಮುತ್ತುಅವರ ಹೆಸರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದೆ. +ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ದೇವರಾಜು(ಹಾಪ್ಕಾಮ್ಸೌ) ಅವರ ಹೆಸರು ಕೂಡ ಕೇಳಿಬರುತ್ತಿದೆ. ಇವರಿಬ್ಬರಲ್ಲಿ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಚಿಹ್ನೆಯಡಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸದಿದ್ದರೆ, ಸ್ಥಳೀಯರಿಗೆ ಮಣೆ ಹಾಕಲು ಜೆಡಿಎಸ್ ಮುಂದಾಗಿದೆ. +ಜೆಡಿಎಸ್ ಉನ್ನತ ಮೂಲಗಳ ಪ್ರಕಾರ ಚನ್ನಪಟ್ಟಣ ಜೆಡಿಎಸ್ ಪಕ್ಷ ಗೆದ್ದಿದ್ದ ಕ್ಷೇತ್ರವಾಗಿದ್ದು, ಯೋಗೇಶ್ವರ್ ಅವರನ್ನು ಬಿಜೆಪಿ ಬದಲು ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡುವಂತೆ ಸಲಹೆ ಮಾಡಲಾಗಿದೆ. ಆದರೆ, ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಿಜೆಪಿ ವರಿಷ್ಠರ ಮೇಲೆ ಒತ್ತಡ ತರುತ್ತಿದ್ದಾರೆ. +ಯೋಗೇಶ್ವರ್ ಅಭ್ಯರ್ಥಿಯಾಗಲು ಎರಡೂ ಪಕ್ಷಗಳಲ್ಲಿ ತಕರಾರಿಲ್ಲ. ಆದರೆ, ಯಾವ ಚಿಹ್ನೆಯ ಮೇಲೆ ಸ್ಪರ್ಧಿಸಬೇಕು ಎಂಬುದೇ ಗೊಂದಲಕ್ಕೆ ಕಾರಣವಾಗಿದೆ. ಉಪ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರೆಯಲಿದ್ದು, ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ. ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಮುಂದಾಗುತ್ತಿಲ್ಲ. ಬದಲಿಗೆ ಬಿಜೆಪಿಯಿಂದ ಟಿಕೆಟ್ ನೀಡುವಂತೆ ಆಗ್ರಹಿಸುತ್ತಿದ್ದಾರೆ. +ಒಂದು ವೇಳೆ ಟಿಕೆಟ್ ನೀಡದಿದ್ದರೆ, ಸ್ವತಂತ್ರ ಸ್ಪರ್ಧೆ ಮಾಡುವ ಬಗ್ಗೆಯೂ ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ. ಈ ನಡುವೆ ಮತ್ತೆ ಕಾಂಗ್ರೆಸ್ ಸೇರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.ಆದರೆ, ಇತ್ತೀಚೆಗೆ ದೆಹಲಿಗೆ ತೆರಳಿದ್ದ ಯೋಗೇಶ್ವರ್ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಪಕ್ಷದ ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ಇದೆ ಎಂಬ ಹೇಳಿಕೆಯನ್ನೂ ನೀಡಿದ್ದಾರೆ. +ಈ ಕ್ಷೇತ್ರವನ್ನು ತಮ ತೆಕ್ಕೆಗೆ ತೆಗೆದುಕೊಳ್ಳಲು ಮೂರು ಪಕ್ಷಗಳು ಕಾತರಿಸುತ್ತಿವೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಹೇಳಿಕೆ ನೀಡಿದ್ದಾರೆ. ಈಗಾಗಲೇ ಚುನಾವಣೆ ಸಿದ್ಧತೆಯನ್ನು ಕ್ಷೇತ್ರದಲ್ಲಿ ಆರಂಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಈಗಿನಿಂದಲೇ ತಂತ್ರಗಾರಿಕೆ ರೂಪಿಸುತ್ತಿದ್ದಾರೆ. +ಚುನಾವಣೆಯಲ್ಲಿ ಕಣಕ್ಕಿಳಿಯಲು ನಿರ್ಧರಿಸಿರುವ ಯೋಗೇಶ್ವರ್ ಕೂಡ ತಮದೇ ಆದ ರೀತಿಯಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವಂತೆ ಪಕ್ಷದಲ್ಲಿ ಒತ್ತಡವಿದೆ. ಆದರೆ, ಈಗಾಗಲೇ ಸ್ಪರ್ಧೆ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಸಾರಥ್ಯದಲ್ಲಿ ಜೆಡಿಎಸ್ ಚುನಾವಣೆ ಸಿದ್ಧತೆ ಆರಂಭಿಸಿದೆ. +ಕಳೆದ ಲೋಕಸಭಾ ಚುನಾವಣೆಯಲ್ಲಿ ಯೋಗೇಶ್ವರ ಸಾಧನೆಯ ಬಗ್ಗೆ ಜೆಡಿಎಸ್ಗೆ ಅಸಮಾಧಾನವಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಯೋಗೇಶ್ವರ್ ಬೆಂಬಲಿಸುವ ಬದಲು ಸ್ಥಳೀಯರನ್ನೇ ಕಣಕ್ಕಿಳಿಸಬೇಕು ಎಂಬ ಒತ್ತಡವನ್ನು ಜೆಡಿಎಸ್ ಕಾರ್ಯಕರ್ತರು ವರಿಷ್ಠರ ಮೇಲೆ ತರುತ್ತಿದ್ದಾರೆ. +ಜೆಡಿಎಸ್ನಲ್ಲಾಗುತ್ತಿರುವ ಬೆಳವಣಿಗೆಗಳು ಯೋಗೇಶ್ವರ್ಗೆ ನಿರಾಸೆಯನ್ನು ಉಂಟು ಮಾಡುತ್ತಿವೆ.ಉಪ ಚುನಾವಣೆಯಲ್ಲಿ ಗೆದ್ದು ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶ ಜೆಡಿಎಸ್ಗಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬ ಕುತೂಹಲ ಕ್ಷೇತ್ರದಲ್ಲಿ ಮಾತ್ರವಲ್ಲ. ರಾಜ್ಯ ರಾಜಕೀಯದಲ್ಲೂ ಹೆಚ್ಚಾಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_37_7.txt b/eesanje/url_46_37_7.txt new file mode 100644 index 0000000000000000000000000000000000000000..d78e6fc6e7e4e536434e77c09568194302400388 --- /dev/null +++ b/eesanje/url_46_37_7.txt @@ -0,0 +1,4 @@ +ಇಂದು ಮೂರು ಬಿಟ್ಟ ಜನ ಪೀಡಕ ಸರ್ಕಾರ : ಬಿಜೆಪಿ ಕೆಂಡಾಮಂಡಲ +ಬೆಂಗಳೂರು,ಆ.22-ಜನರ ಪೀಡಕರಂತೆ ವರ್ತಿಸುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತವರನ್ನು ನೋಡಿಯೇ ಮೂರು ಬಿಟ್ಟವರು ಊರಿಗೆ ದೊಡ್ಡವರು ಎನ್ನುವ ನಾಣ್ನುಡಿ ಬರೆದಂತೆ ತೋರುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ವಾಗ್ದಳಿ ನಡೆಸಿದೆ. +ಈ ಕುರಿತು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ ದರ್ಪದ ಮಾತುಗಳನ್ನು ಆಡುತ್ತಲೇ ಇದೀಗ ಕುಡಿಯುವ ನೀರಿನ ಬೆಲೆ ಏರಿಕೆ ಮಾಡಿ ಬೆಂಗಳೂರಿಗರ ಜೇಬಿಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದೆ. +ಬೆಂಗಳೂರಿಗೆ ಬದುಕು ಕಟ್ಟಿಕೊಳ್ಳಲು ಬಂದಿರುವ ಜನಸಾಮಾನ್ಯರು ಬೆಲೆ ಏರಿಕೆಯ ಭೂತವಾಗಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿಯುವ ಕಾಲ ದೂರವಿಲ್ಲ! ಎಂದು ಎಚ್ಚರಿಕೆ ಕೊಡಲಾಗಿದೆ. \ No newline at end of file diff --git a/eesanje/url_46_37_8.txt b/eesanje/url_46_37_8.txt new file mode 100644 index 0000000000000000000000000000000000000000..673c6e60a4b117c4f7efed241e778e157f3d6c9c --- /dev/null +++ b/eesanje/url_46_37_8.txt @@ -0,0 +1,7 @@ +ಸಿಎಂ ಸಿದ್ದರಾಮಯ್ಯ ಸಾಕ್ಷ್ಯ ನಾಶ ಮಾಡುತ್ತಿದ್ದಾರೆ : ಅಶೋಕ್ ಆಕ್ರೋಶ +ಬೆಂಗಳೂರು, ಆ.22– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿಕೊಂಡು ಮುಡಾಕ್ಕೆ ಪತ್ನಿ ಪಾರ್ವತಿ ಬರೆದಿರುವ ಪತ್ರವನ್ನು ತಿರುಚಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ ಅಡಗಿದೆ ಎಂಬ ಅನುಮಾನ ಈಗ ಮತ್ತಷ್ಟು ದಟ್ಟವಾಗಿದೆ. +ನಿವೇಶನ ಕೇಳಿ ಮುಖ್ಯಮಂತ್ರಿಗಳ ಪತ್ನಿ ಅವರು ಮೂಡಾಗೆ ಬರೆದಿರುವ ಪತ್ರವನ್ನು ತಿರುಚಿ, ಸಾಕ್ಷಿ ನಾಶ ಮಾಡಲು ಯತ್ನಿಸಿರುವ ಸಂದೇಹ ವ್ಯಕ್ತವಾಗುತ್ತಿದ್ದು, ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಬೇಕಾದರೆ, ಎಲ್ಲ ಅನುಮಾನಗಳು ಬಗೆಹರಿಯಬೇಕಾದರೆ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ, ಪಾರದರ್ಶಕ ತನಿಖೆಗೆ ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ. +ಇದಕ್ಕೂ ಮುನ್ನ ಮತ್ತೊಂದು ಪೋಸ್ಟ್ ಮಾಡಿದ್ದ ಅಶೋಕ್ ಅವರು, ದುಷನ್ ಕಹಾ ಹೈ ಅಂದ್ರೆ ಕಾಂಗ್ರೆಸ್ ಪಾರ್ಟಿ ತುಂಬಾ ಹೈ. ಸಿಎಂ ಸಿದ್ದರಾಮಯ್ಯ ಅವರಿಗೆ ನಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ. +ಸಿದ್ದರಾಮಯ್ಯ ಅವರೇ, ನಿಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತೃಗಳು ನಿಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದಿದ್ದರು. +ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ, ಭ್ರಷ್ಟಾತಿ ಭ್ರಷ್ಟ ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ ಇವೆ. ಇದರ ನಡುವೆ ಬಿಡುಗಡೆ ಆಗುತ್ತಿರುವ ದಾಖಲೆಗಳನ್ನು ಕುತಂತ್ರದ ಮೂಲಕ ಮುಚ್ಚಿ ಹಾಕಲಾಗುತ್ತಿದೆ. ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ವಿಜಯನಗರದಲ್ಲೇ ಸೈಟು ಕೊಡಿ ಎಂದು ಪತ್ರ ಬರೆದಿದ್ದು ಬೆಳಕಿಗೆ ಬಂದಿದೆ. ಆದರೆ, ಸಿದ್ದರಾಮಯ್ಯ ಅವರು ಹಾಕಿದ ಭ್ರಷ್ಟಾಚಾರದ ಗಂಜಿಗೆ ಮುಡಾ ಅಧಿಕಾರಿಗಳು ಸಿಎಂ ಪತ್ನಿ ಬರೆದ ಪತ್ರದಲ್ಲಿನ ಸಾಲುಗಳಿಗೆ ವೈಟ್ನರ್ ಹಾಕಿ ಹಗರಣ ಮುಚ್ಚಿ ಹಾಕಲು ಸಾಕ್ಷ್ಯ ನಾಶ ಮಾಡಿದ್ದಾರೆ. +ತಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ವಾಮಮಾರ್ಗ ಹಿಡಿದಿರುವ ಸಿದ್ದರಾಮಯ್ಯನವರು ಕೊತ್ವಾಲ್ ಶಿಷ್ಯಂದಿರನ್ನು ರಾಜ್ಯದ ತುಂಬಾ ಬಿಟ್ಟು ದೊಂಬಿ ಎಬ್ಬಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕೂಡಲೇ ರಾಜೀನಾಮೆ ನೀಡಬೇಕು. ಹಾಗಾದಾರೆ ಮಾತ್ರ ಭ್ರಷ್ಟಾಚಾರ ಹೊರ ಬರಲು ಸಾಧ್ಯ. ಇಲ್ಲದೆ ಹೋದರೆ ತಮಗೆ ತಾವೇ ಕ್ಲೀನ್ ಚಿಟ್ ಕೊಟ್ಟುಕೊಂಡು ಜಗತ್ತಿನ ಮುಂದೆ ನಾನು ಸತ್ಯಹರಿಶ್ಚಂದ್ರನ ತುಂಡು ಎಂದು ಲಜ್ಜೆಬಿಟ್ಟು ಬಿಂಬಿಸಿಕೊಂಡರೂ ಅಚ್ಚರಿ ಇಲ್ಲ ಎಂದು ಕಿಡಿಕಾರಿದೆ. diff --git a/eesanje/url_46_37_9.txt b/eesanje/url_46_37_9.txt new file mode 100644 index 0000000000000000000000000000000000000000..b01bee3e630ee2b9baf0b541602258d6ea11e2df --- /dev/null +++ b/eesanje/url_46_37_9.txt @@ -0,0 +1,12 @@ +ಬೆಂಗಳೂರಿಗರು ಉಪಕಾರ ಸ್ಮರಿಸಲ್ಲ, ನೀರಿನ ದರ ಏರಿಕೆ ಮಾಡೇ ತೀರುತ್ತೇವೆ : ಡಿಕೆಶಿ + +ಬೆಂಗಳೂರು,ಆ.22-ಯಾರು, ಎಷ್ಟೇ ಟೀಕೆ ಮಾಡಲಿ, ನಾನಂತೂ ಬೆಂಗಳೂರಿನಲ್ಲಿ ನೀರಿನ ದರವನ್ನು ಹೆಚ್ಚಿಸುವುದು ಶತಸಿದ್ಧ ಎಂದು ಬೆಂಗಳೂರು ನಗರಾ ಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ.ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆನೀರು ಕೊಯ್ಲು ಜಾಗೃತಿ ಅಭಿಯಾನ, ವರುಣಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿ ಮಾತನಾಡಿದ ಅವರು, ವಿರೋಧಪಕ್ಷಗಳಾಗಲೀ, ಮಾಧ್ಯಮದವರಾಗಲೀ ಯಾರೇ ಟೀಕೆ ಮಾಡಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಚರ್ಚೆ ಮಾಡಲಿ, ಧರಣಿ ಮಾಡಲಿ, ಪ್ರತಿಭಟನೆ ಮಾಡಲಿ, ಯಾವುದಕ್ಕೂ ಜಗ್ಗುವುದಿಲ್ಲ, ನೀರಿನ ದರ ಹೆಚ್ಚಿಸಲು ಬದ್ಧವಾಗಿದ್ದೇನೆ ಎಂದರು. +ನೀರಿನ ದರ ಹೆಚ್ಚಿಸದೇ ಇದ್ದರೆ ಬಿಡಬ್ಲ್ಯೂಎಸ್ಎಸ್ಬಿ ಉಳಿಯುವುದಿಲ್ಲ. ಕಳೆದ 14 ವರ್ಷಗಳಿಂದ ವಿದ್ಯುತ್ ದರ ತೀವ್ರವಾಗಿ ಹೆಚ್ಚಾಗಿದೆ. ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ, ಬಿಎಂಆರ್ಸಿಎಲ್ ಸೇರಿ ಒಂದು ಕಂಪನಿ ಮಾಡಿ ತಲಾ ಶೇ.26 ರಷ್ಟು ಶೇರು ಬಂಡವಾಳ ಹಾಕುವ ಮೂಲಕ ಕ್ಯಾಪ್ಟಿವ್ ಆಗಿ ಸ್ವಂತಕ್ಕೆ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗುತ್ತದೆ. ಸೌರಶಕ್ತಿ ಹಾಗೂ ಇತರ ವಿದ್ಯುತ್ ಉತ್ಪಾದನೆಗಾಗಿ ಈಗಾಗಲೇ ಕಂಪೆನಿ ರಚಿಸಲಾಗಿದೆ. ಈ ರೀತಿ ಮಾಡುವುದರಿಂದ ವಿದ್ಯುತ್ ಬಿಲ್ನಲ್ಲಿ ಒಂದೆರೆಡು ರೂಪಾಯಿ ಉಳಿತಾಯವಾಗಲಿದೆ ಎಂದು ಹೇಳಿದರು. +ವಿದ್ಯುತ್ ಸರಬರಾಜಿನಿಂದ ಆಗುತ್ತಿರುವ ಲಾಭ-ನಷ್ಟಗಳ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು. ಎಷ್ಟು ಜನ ಬಿಲ್ ಕಟ್ಟುತ್ತಿದ್ದಾರೆ? ಸೋರಿಕೆ ಎಷ್ಟು? ಬಿಡಬ್ಲ್ಯೂಎಸ್ಎಸ್ಬಿಗೆ ಆಗುತ್ತಿರುವ ನಷ್ಟ ಎಷ್ಟಿದೆ? ಎಂದು ವಿರೋಧಪಕ್ಷಗಳಿಗೆ, ಸಾರ್ವಜನಿಕರಿಗೆ ಮಾಹಿತಿ ನೀಡಲು ಜಾಹೀರಾತು ನೀಡುವಂತೆ ಡಿ.ಕೆ.ಶಿವಕುಮಾರ್ ಸೂಚಿಸಿದರು. +ಈ ಹಿಂದೆ ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವಾಗ ನನ್ನನ್ನು ನೋಡಿ ಇವನಿಗೆ ತಲೆಕೆಟ್ಟಿದೆ ಎಂದು ನಗುತ್ತಿದ್ದರು. ಆದರೆ ಕಾರ್ಯಾಚರಣೆ ಶುರುವಾದ ಬಳಿಕ ಮೂರುವರೆ ರೂಪಾಯಿಗೆ ಯೂನಿಟ್ ವಿದ್ಯುತ್ ದೊರೆಯುತ್ತಿದೆ. ಪ್ರತಿ ತಾಲ್ಲೂಕಿನಲ್ಲೂ 20ರಿಂದ 50 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಇದರಿಂದಾಗಿ ಸರಬರಾಜು ನಷ್ಟ ಬಹಳಷ್ಟು ತಗ್ಗಿದೆ ಎಂದರು. +ಇತ್ತೀಚೆಗೆ ಭೀಕರ ಬರಗಾಲ ಪರಿಸ್ಥಿತಿ ಎದುರಾದಾಗ ಬೆಂಗಳೂರಿನಲ್ಲಿ 7 ಸಾವಿರ ಬೋರ್ವೆಲ್ಗಳ ಬತ್ತಿ ಹೋಗಿದ್ದರೂ, ನೀರು ಸರಬರಾಜು ಮತ್ತು ಜಲಮಂಡಳಿ ಅಧಿಕಾರಿಗಳು ಹಗಲು-ರಾತ್ರಿ ಶ್ರಮ ವಹಿಸಿ ಜನರಿಗೆ ತೊಂದರೆಯಾಗದಂತೆ ಸೇವೆ ಸಲ್ಲಿಸಿದ್ದಾರೆ. ಆರಂಭದಲ್ಲಿ ಒಂದೆರೆಡು ದಿನ ಸಮಸ್ಯೆಗಳು ತೀವ್ರವಾಗಿ ಕಂಡುಬಂದವು. ಆನಂತರ ಪರಿಸ್ಥಿತಿಯನ್ನು ನಿಭಾಯಿಸಲಾಗಿದೆ ಎಂದು ಹೇಳಿದರು. +ಬೆಂಗಳೂರಿನ ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ. ನೀರು ಬಂದರೆ ಬಂತು. ಇಲ್ಲವಾದರೆ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸಿ ನಿಂದಿಸಲಾರಂಭಿಸುತ್ತಾರೆ. ಪರಿಸ್ಥಿತಿ ನಿಭಾಯಿಸುವುದು ಎಷ್ಟು ಕಷ್ಟವಿದೆ ಎಂದು ಅವರಿಗೆ ಅರ್ಥವಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಅಂತರ್ಜಲ ಹೆಚ್ಚಿಸಲು ಮಳೆಕೊಯ್ಲು ಪದ್ಧತಿಯನ್ನು ರಚಿಸಬೇಕು. ಅಧಿಕಾರಿಗಳು ಜನಜಾಗೃತಿ ಮೂಡಿಸಬೇಕು. ವ್ಯಾಪಕ ಪ್ರಚಾರ ಮಾಡಬೇಕು. ಕಾವೇರಿ ನದಿಯಿಂದ ತಮಿಳುನಾಡಿಗೆ 179 ಟಿಎಂಸಿ ಹರಿಸಲಾಗಿದೆ. 99 ಟಿಎಂಸಿ ಹೆಚ್ಚುವರಿಯಾಗಿ ಹರಿದಿದೆ. ಇದನ್ನು ಸಮತೋಲಿತ ಅಣೆಕಟ್ಟಿನಲ್ಲಿ ಸಂಗ್ರಹಿಸಲು ಮೇಕೆದಾಟು ಯೋಜನೆ ರೂಪಿಸಲಾಗಿದೆ. ನ್ಯಾಯಾಲಯದಲ್ಲಿ ನಮಗೆ ಜಯವಾಗುವ ನಿರೀಕ್ಷೆಯಿದೆ. ಅಲ್ಲಿಂದ ಬೆಂಗಳೂರಿಗೆ ನೀರು ತರಬೇಕಿದೆ ಎಂದರು. +ಕೆಆರ್ಎಸ್ನಿಂದ ಪೈಪ್ಲೈನ್ ಮೂಲಕ ನೇರವಾಗಿ ಬೆಂಗಳೂರಿಗೆ ನಿಗದಿಪಡಿಸಲಾಗಿರುವ ನೀರನ್ನು ಸರಬರಾಜು ಮಾಡುವ ಚರ್ಚೆಗಳು ನಡೆಯುತ್ತಿವೆ. ಐದನೇ ಹಂತದ ಕಾವೇರಿ ನೀರು ಪೂರೈಕೆ ವ್ಯವಸ್ಥೆಗೆ 2-3 ದಿನದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.ಶರಾವತಿ ನದಿಯಿಂದ ನೀರು ತರಲು ಪ್ರಸ್ತಾವಿತ ಯೋಜನೆ ಇದೆ. ಅಲ್ಲಿ ಸಾಮೂಹಿಕ ವಿರೋಧ ವ್ಯಕ್ತವಾಗಬಹುದು. ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ರಾಜಕೀಯ ಕಾರಣಕ್ಕಾಗಿ ಬೇರೆ ಬೇರೆ ಕೆರೆಗಳಿಗೆ ತಿರುವು ಪಡೆದುಕೊಂಡಿದೆ. ಈಗ ಅದು ಒಂದು ಹಂತಕ್ಕೆ ಬಂದಿದೆ ಎಂದು ಹೇಳಿದರು. +ಕುಡಿಯುವ ನೀರು, ಅಂತರ್ಜಲಕ್ಕೆ ನೀರು ಬಳಸುವುದು ತಪ್ಪಲ್ಲ. ಬರುವ ನೀರನ್ನು ಕೃಷಿಗೆ ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ. ಕಾಲುವೆಗಳಿಗೆ ಪೈಪ್ಗಳನ್ನು ಹಾಕಿ ನೀರು ಕದಿಯುವುದನ್ನು ತಡೆಯಲು ವಿಶೇಷ ಮಸೂದೆ ರೂಪಿಸಲಾಗಿದ್ದು, ಅದಕ್ಕೆ ರಾಜ್ಯಪಾಲರು ಅಂಗೀಕಾರ ನೀಡಿದ್ದಾರೆ. ಎತ್ತಿನಹೊಳೆಯಿಂದ ತಿಪ್ಪಗೊಂಡನಹಳ್ಳಿಗೆ ನೀರು ತರುವಾಗ ಈ ರೀತಿಯ ಸಮಸ್ಯೆಗಳು ಎದುರಾಗಲಿವೆ ಎಂದರು. +ಜಲಮಂಡಳಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರ್ಯಯೋಜನೆ ರೂಪಿಸಿ ನನ್ನನ್ನು ಭೇಟಿ ಮಾಡಿ. ಜಲಮಂಡಳಿಯ ಅಧ್ಯಕ್ಷರು ಬರುತ್ತಾರೆ, ಹೋಗುತ್ತಾರೆ. ಅವರನ್ನು ಬಿಡಿ. ನೀರು ಸರಬರಾಜು ಹಾಗೂ ಒಳಚರಂಡಿ ಸಮಸ್ಯೆಗಳು ನನಗೆ ಗೊತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ದೊರಕಿಸುವ ಅಗತ್ಯವಿದೆ ಎಂದು ಹೇಳಿದರು.ಬಿಡಿಎ ಆಯುಕ್ತ ಜಯರಾಂ, ಬಿಡಬ್ಲ್ಯೂಎಸ್ಎಸ್ಬಿ ವ್ಯವಸ್ಥಾಪಕ ನಿರ್ದೇಶಕ ರಾಮ್ಪ್ರಸಾದ್ ಮನೋಹರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_38_1.txt b/eesanje/url_46_38_1.txt new file mode 100644 index 0000000000000000000000000000000000000000..e76850110d426a853d19164976d1d1b798e39344 --- /dev/null +++ b/eesanje/url_46_38_1.txt @@ -0,0 +1,6 @@ +ದಸರಾ ಗಜಪಡೆಗೆ 2.50 ಕೋಟಿ ವಿಮೆ +2.50 +ಮೈಸೂರು,ಆ. 22-ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರಿಗೆ ಅಸಗಮಿಸುತ್ತಿರುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಮಾಡಿಸಲಾಗಿದೆ. ದಿ ನ್ಯೂ ಇಂಡಿಯಾ ಅಶ್ಯುರ್ಸೆ್‌ ಕಂಪನಿ ಲಿಮಿಟೆಡ್‌ ದಸರಾ ಗಜಪಡೆ ಹಾಗೂ ತಂಡಕ್ಕೆ 2.50 ಕೋಟಿ ರೂ. ವಿಮೆ ಸೌಲಭ್ಯ ಒದಗಿಸಲಿದೆ. +ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ತಲಾ 5 ಲಕ್ಷ ರೂ. ಹಾಗೂ ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಸೌಲಭ್ಯ ಸಿಗಲಿದೆ.ವಲಯ ಅರಣ್ಯಾಧಿಕಾರಿ, ಪಶು ವೈದ್ಯಾಧಿಕಾರಿ, ಸಹಾಯಕರು, ಸಿಬ್ಬಂದಿಗಳಿಗೂ ವಿಮೆ ಸೌಲಭ್ಯ ಮಾಡಿಸಲಾಗಿದೆ. +ಸಾರ್ವಜನಿಕ ಆಸ್ತಿ- ಪಾಸ್ತಿಗೆ 50 ಲಕ್ಷ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಗಜಪಡೆ ನಾಡಿಗೆ ಬಂದ ಸಂದರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂದರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವಾ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷದವರೆಗೆ ವಿಮೆ ಸೌಲಭ್ಯ ಜಾರಿಯಲ್ಲಿರುತ್ತದೆ. +ಈ ವಿಮೆಯು 15-8-2024 ರಿಂದ 18-10-2024 ರವರಗೆ ಜಾರಿಯಲ್ಲಿರಲಿದ್ದು, 75 ಸಾವಿರ ರೂ.ಗಳ ವಿಮೆ ಮೊತ್ತವನ್ನು ಅರಣ್ಯ ಇಲಾಖೆ ಪಾವತಿಸಿದೆ. \ No newline at end of file diff --git a/eesanje/url_46_38_10.txt b/eesanje/url_46_38_10.txt new file mode 100644 index 0000000000000000000000000000000000000000..597ff1cc93b956791e25d8b5594ed07ee00c9978 --- /dev/null +++ b/eesanje/url_46_38_10.txt @@ -0,0 +1,5 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆಪ್ಟೆಂಬರ್ ಮೊದಲ ವಾರದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆ.! +ಬೆಂಗಳೂರು, ಆ.21-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪಣ ಪಟ್ಟಿಯನ್ನು ಮುಂದಿನ ತಿಂಗಳ ಮೊದಲ ವಾರದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸಲ್ಲಿಸಲಿದ್ದಾರೆ.ವಿಜಯನಗರದ ಉಪ ವಿಭಾಗದ ಪೊಲೀಸರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಚಾರ್ಜ್​​ಶೀಟ್ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. +ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಈಗಾಗಲೇ ಶೇ.70ರಷ್ಟು ಸಾಂದರ್ಭಿಕ ಹಾಗೂ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. +ಬೆಂಗಳೂರಿನ ವಿಧಿ-ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದ ಸಾಕ್ಷ್ಯಗಳ ಪೈಕಿ ಶೇ.90ರಷ್ಟು ವರದಿ ಬಂದಿದೆ. ಅಲ್ಲದೆ, ಹೈದರಾಬಾದ್ಗೆ ಕಳುಹಿ ಸಿದ್ದ ವಸ್ತುಗಳಲ್ಲಿ ಶೇ.70ರಷ್ಟು ವರದಿಗಳು ಬಂದಿವೆ. ಉಳಿದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. +ಈಗಾಗಲೇ ಈ ಪ್ರಕರಣದ ವೈದ್ಯಕೀಯ ವರದಿ ಹಾಗೂ ಅದಕ್ಕೆ ಸಂಬಂಧಿಸಿದ ಕೆಲವು ಪೂರಕ ದಾಖಲೆಗಳನ್ನು ತನಿಖಾಧಿಕಾರಿಗಳು ಸಂಗ್ರಹಿಸಿ ದ್ದಾರೆ. ಅಲ್ಲದೆ, ಬಹಳಷ್ಟು ಮಂದಿ ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದುಕೊಂಡಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_46_38_11.txt b/eesanje/url_46_38_11.txt new file mode 100644 index 0000000000000000000000000000000000000000..f6ba771b8c474a48b6685551c4c337cd3941052d --- /dev/null +++ b/eesanje/url_46_38_11.txt @@ -0,0 +1,8 @@ +ಸಂದರ್ಭ ಬಂದರೆ ಮುಲಾಜಿಲ್ಲದೇ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ +ಕೊಪ್ಪಳ,ಆ.21-ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ಗಿಣಿಗೇರ ಏರ್ಸ್ಟ್ರಿಪ್ಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿಸಬೇಕಾದ ಸಂದರ್ಭ ಬಂದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಸದ್ಯಕ್ಕೆ ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಹೇಳಿದರು. ಕುಮಾರಸ್ವಾಮಿ ಭಯ ಬಿದ್ದಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ಕೊಟ್ಟುಬಿಡಬಹುದು ಎಂಬ ಆತಂಕವಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹಿಸಿ ನಂತರ ಅಭಿಯೋಜನೆಗೆ ಅನುಮತಿ ಕೇಳಿದೆ. +ಅದರ ಅರ್ಥ ಅವರ ವಿರುದ್ಧ ಸಾಕ್ಷ್ಯ ಇದೆ ಎಂದು. ಸಾಕ್ಷ್ಯ ಪುರಾವೆ ಇದ್ದರೂ ಅಂತಹ ಪ್ರಕರಣಗಳನ್ನು ಕೈಬಿಟ್ಟುಬಿಡಬೇಕೆ? ಎಂದು ಪ್ರಶ್ನಿಸಿದರು.ಗಣಿಗಾರಿಕೆಗೆ ಅನುಮತಿ ನೀಡಿದ ವಿಚಾರವಾಗಿ ತನಿಖೆಗೆ ಎಸ್ಐಟಿ ರಚಿಸಲಾಗಿತ್ತು. ಸದರಿ ತನಿಖಾ ಸಂಸ್ಥೆ ರಾಜ್ಯಪಾಲರಿಂದ ಅಭಿಯೋಜನೆಗೆ ಪೂರ್ವಾನುಮತಿ ಕೇಳಿದೆ. ನಾವಾಗಲೀ, ಖಾಸಗಿ ವ್ಯಕ್ತಿಯಾಗಲೀ ಅನುಮತಿ ಕೇಳಿಲ್ಲ. ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ. ಹಲವು ದಿನಗಳಿಂದಲೂ ಅರ್ಜಿ ಬಾಕಿ ಉಳಿದಿದೆ. ಸೋಮವಾರ ಲೋಕಾಯುಕ್ತ ಸಂಸ್ಥೆ ಎರಡನೇ ಪತ್ರ ಬರೆದಿದೆ ಎಂದು ಹೇಳಿದರು. +ಟಿ.ಜೆ.ಅಬ್ರಹಾಂ ದೂರು ಕೊಟ್ಟ ಕೆಲವೇ ಗಂಟೆಗಳಲ್ಲಿ ನನಗೆ ಶೋಕಾಸ್ ನೋಟೀಸ್ ನೀಡಿದ್ದರು. ಮೈಸೂರಿನ ಮುಡಾ ಪ್ರಕರಣದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಅಥವಾ ಲೋಕಾಯುಕ್ತ ಪೊಲೀಸರು ಅಭಿಯೋಜನೆಗೆ ಅನುಮತಿ ಕೇಳಿರಲಿಲ್ಲ. ಪ್ರಾಥಮಿಕ ತನಿಖೆಯೂ ಆಗಿರಲಿಲ್ಲ. ಆದರೂ ರಾಜ್ಯಪಾಲರು ಪೂರ್ವಾನುಮತಿ ನೀಡಿದ್ದಾರೆ. ಕುಮಾರಸ್ವಾಮಿ ಪ್ರಕರಣದಲ್ಲಿ ತನಿಖೆಯಾಗಿದ್ದರೂ ಅನುಮತಿ ಕೊಟ್ಟಿಲ್ಲ. ಇದು ತಾರತಮ್ಯ ಅಲ್ಲವೇ? ಎಂದು ಪ್ರಶ್ನಿಸಿದರು. +ಕುಮಾರಸ್ವಾಮಿ ಸುಳ್ಳು ಹೇಳುವ ಮೂಲಕ ತಮನ್ನು ತಾವು ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ನಾನು ಯಾವುದೇ ಪತ್ರ ಬರೆದಿಲ್ಲ. ಕುಮಾರಸ್ವಾಮಿ ಸುಳ್ಳು ದಾಖಲೆ ನೀಡಿರಬಹುದು. ಅಂತಹ ಯಾವುದೇ ಪತ್ರಗಳನ್ನು ನಾನು ಬರೆದಿಲ್ಲ. ಪಾದಯಾತ್ರೆ ಮಾಡಿದಾಗ ಈ ವಿಚಾರವನ್ನು ವಿರೋಧಪಕ್ಷಗಳು ಏಕೆ ಹೇಳಿರಲಿಲ್ಲ ಎಂದು ಪ್ರಶ್ನಿಸಿದರು. +ಕುಮಾರಸ್ವಾಮಿ ಸದಾಕಾಲ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಾರೆ. ಯಾವುದನ್ನೂ ತಾರ್ಕಿಕ ಹಂತಕ್ಕೆ ತೆಗೆದುಕೊಂಡು ಹೋಗಿಲ್ಲ. ತಮ ಬಳಿ ಪೆನ್ಡ್ರೈವ್ ಇದೆ ಎಂದು ಜೇಬಿಂದ ತೆಗೆದು ತೋರಿಸಿದ್ದರು. ಇವತ್ತಿನವರೆಗೂ ಅದನ್ನು ಬಿಡುಗಡೆ ಮಾಡಿಲ್ಲ. ಅವರ ಮಾತು ನಂಬುವಂತಿಲ್ಲ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. +ಕೊಪ್ಪಳದಲ್ಲಿ ವಿಮಾನ ಅಭಿವೃದ್ಧಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕೆಲಸದಲ್ಲಿ ನಾವು ರಾಜಕಾರಣ ಮಾಡುವುದಿಲ್ಲ. ಕೊಪ್ಪಳದ ಬಗ್ಗೆ ವಿಶೇಷ ಪ್ರೀತಿಯಿದೆ. ಜಿಲ್ಲೆಯ ಜನರಿಗೆ ಅನುಮಾನ ಕಾಡದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಹೆಸರುಕಾಳು ಬೆಲೆ ಕುಸಿದಿದ್ದು, ಅದನ್ನು ಬೆಂಬಲ ಬೆಲೆಯಡಿ ಖರೀದಿಸಲು ಶೀಘ್ರವೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_38_12.txt b/eesanje/url_46_38_12.txt new file mode 100644 index 0000000000000000000000000000000000000000..9645311a6d6ba0103a8db8f228a33af84412cbe3 --- /dev/null +++ b/eesanje/url_46_38_12.txt @@ -0,0 +1,14 @@ +ರಾಜ್ಯಪಾಲರ ವಿಚಾರದಲ್ಲಿ ಜಾತಿ ರಾಜಕಾರಣ ಸರಿಯಲ್ಲ : ಪರಮೇಶ್ವರ್‌ +ಬೆಂಗಳೂರು,ಆ.21– ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆ ನೀಡಿರುವ ಪ್ರಕರಣದಲ್ಲಿ ರಾಜ್ಯಪಾಲರ ವಿರುದ್ಧ ಆರೋಪಗಳಿಗೆ ಜಾತಿ ರಾಜಕಾರಣ ಬೆರೆಸುವುದು ಸರಿಯಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆಕ್ಷೇಪಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ವೈಯಕ್ತಿಕವಾಗಿ ಮನವಿ ಸಲ್ಲಿಸಿದ್ದ ಟಿ.ಜೆ.ಅಬ್ರಹಾಂ ಅವರ ಅರ್ಜಿಯನ್ನು ರಾಜ್ಯಪಾಲರು ಪರಿಗಣಿಸುವುದಾದರೆ ಲೋಕಾಯುಕ್ತ ಸಂಸ್ಥೆ ಕೇಳುವ ಅಭಿಯೋಜನೆಗೆ ಏಕೆ ಅನುಮತಿ ನೀಡುವುದಿಲ್ಲ? ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ಹೇಳಿದರು.ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಗೆ 550 ಎಕರೆ ಜಮೀನನ್ನು ಮಂಜೂರು ಮಾಡಿದ್ದಾರೆ. ಇದರಲ್ಲಿ ಅಕ್ರಮಗಳಾಗಿವೆ. ತನಿಖೆ ನಡೆದಿದೆ. +ದೋಷಾರೋಪಣ ಪಟ್ಟಿ ಸಲ್ಲಿಸಲು ಅನುಮತಿ ನೀಡಿ ಎಂದು 2023 ರಲ್ಲಿ ಅಭಿಯೋಜನೆಗೆ ಮನವಿ ಸಲ್ಲಿಸಲಾಗಿದೆ. ಅದೇ ರೀತಿ ಶಶಿಕಲ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ಧನರೆಡ್ಡಿ ಅವರ ಪ್ರಕರಣದಲ್ಲೂ ಅಭಿಯೋಜನೆಗೆ ಮನವಿ ಸಲ್ಲಿಸಲಾಗಿತ್ತು. ಅದ್ಯಾವುದಕ್ಕೂ ಸಹಮತಿಸದ ರಾಜ್ಯಪಾಲರು ಏಕಾಏಕಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ನಡೆದುಕೊಂಡ ರೀತಿ ಪ್ರಶ್ನಾರ್ಹವಾಗಿದೆ ಎಂದರು. +ಈ ಹಿಂದೆ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳದಲ್ಲಿ ರಾಜ್ಯಪಾಲರು ನಡೆದುಕೊಂಡಿರುವ ರೀತಿ ಚರ್ಚೆಗೆ ಗ್ರಾಸವಾಗಿದೆ. ಈಗ ಕರ್ನಾಟಕದಲ್ಲೂ ಶುರುವಾಗಿದೆ. ಬಿಜೆಪಿಯೇತರ ಸರ್ಕಾರಗಳನ್ನು ಅಸ್ತಿರಗೊಳಿಸಲು ದೇಶಾದ್ಯಂತ ಹುನ್ನಾರಗಳು ನಡೆದಿವೆ ಎಂದು ಟೀಕಿಸಿದರು. +ರಾಜ್ಯಪಾಲರು ನಡೆದುಕೊಂಡ ರೀತಿ ಜಗತ್ತಿಗೆ ಗೊತ್ತಿದೆ. ಕಾನೂನಿನಲ್ಲಿ ಅವಕಾಶ ಇಲ್ಲದೇ ಇದ್ದರೂ ಅಭಿಯೋಜನೆಗೆ ಅನುಮತಿ ನೀಡಲಾಗಿದೆ. ಈ ವೇಳೆ ಸಚಿವ ಸಂಪುಟದ ಸಲಹೆಯನ್ನು ಪರಿಗಣಿಸಿಲ್ಲ. ಸೂಕ್ತ ಪರಿಶೀಲನೆಗಳನ್ನು ನಡೆಸಿಲ್ಲ ಎಂಬುದು ನಮ ಆಕ್ಷೇಪ. ಸಚಿವ ಸಂಪುಟದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ನಮ ಸಲಹೆಯನ್ನು ತಿರಸ್ಕರಿಸಬಹುದಿತ್ತು. ಆದರೆ ಅದಕ್ಕೆ ಸೂಕ್ತ ಸಮರ್ಥನೆ ನೀಡಬೇಕಿತ್ತು ಎಂದರು. +ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಕಾತಿ ಮಾಡಿಲ್ಲ. ಬಿಜೆಪಿಯವರು ಇಲ್ಲಿ ಜಾತಿ ವಿಚಾರವನ್ನು ತರುವ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಐವಾನ್‌ ಡಿಸೋಜ ಅವರ ಆಕ್ಷೇಪಾರ್ಹ ಹೇಳಿಕೆಗಳನ್ನು ತಾವು ಸಮರ್ಥನೆ ಮಾಡುವುದಿಲ್ಲ ಎಂದು ಪರಮೇಶ್ವರ್‌ ಇದೇ ಸಂದರ್ಭದಲ್ಲಿ ತಿಳಿಸಿದರು. +ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಯಾವುದೇ ಪ್ರತಿಭಟನೆಗಳಾದರೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದೇವೆ. ದೊಡ್ಡ ಪ್ರಮಾಣದ ಹಿಂಸಾಚಾರ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. +ರಾಜ್ಯಪಾಲರು ಅನುಮೋದನೆ ನೀಡದೇ ಇದ್ದರೆ ಲೋಕಾಯುಕ್ತ ಸಂಸ್ಥೆಗೆ ನ್ಯಾಯಾಲಯದ ಮೊರೆ ಹೋಗುವುದೂ ಸೇರಿದಂತೆ ಹಲವು ಮಾರ್ಗಗಳಿವೆ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿರುವುದರಿಂದಾಗಿ ಅನುಮತಿ ನೀಡುವ ಜಿಜ್ಞಾಸೆ ಎದುರಾಗುವ ಅಗತ್ಯ ಇಲ್ಲ. ಕುಮಾರಸ್ವಾಮಿ ಇಲ್ಲಿಯವರು. ಘಟನೆ ನಡೆದಿದ್ದು ಇಲ್ಲಿ. ಕಂಪೆನಿ ನೊಂದಾವಣೆ ಆಗಿರುವುದು ಇಲ್ಲಿ. ಜಮೀನು ಕೊಟ್ಟಿರುವುದು ರಾಜ್ಯದಲ್ಲಿ. ಹೀಗಾಗಿ ಅದರ ವ್ಯಾಪ್ತಿ ಕೂಡ ಕರ್ನಾಟಕದಲ್ಲೇ ಇದೆ ಎಂದು ಹೇಳಿದರು. +ರಾಜ್ಯಪಾಲರು ಅನುಮತಿ ಕೊಟ್ಟ ಬಳಿಕ ನಡೆಯುವ ಪ್ರಕ್ರಿಯೆಗಳು ನೈತಿಕತೆ ಅಥವಾ ರಾಜಕೀಯ ಪ್ರಶ್ನೆಗಳಿಗೆ ಕಾರಣವಾಗಬಹುದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ಮಾಡಲು 29 ರಂದು ಕಾಲಾವಕಾಶ ನೀಡಿದ್ದಾರೆ ಎಂದು ಕಾಂಗ್ರೆಸ್‌‍ ಪಕ್ಷ ತನ್ನ ದೂರನ್ನು ದಾಖಲಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾಂಗ್ರೆಸ್‌‍ ಹೈಕಮಾಂಡ್‌ ಬೆಂಬಲ ವ್ಯಕ್ತಪಡಿಸಿದರು. ಇದರಲ್ಲಿ ಎರಡು ಮಾತಿಲ್ಲ. +ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರು ದೆಹಲಿಗೆ ಭೇಟಿ ನೀಡಿ ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್‌‍ ಹೈಕಮಾಂಡ್‌ಗೆ ಮಾಹಿತಿ ನೀಡಲಿದ್ದಾರೆ ಎಂದ ಅವರು, ಪ್ರತಿಭಟನೆಗೆ ನಮ ಆಕ್ಷೇಪವಿಲ್ಲ. ಆದರೆ ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳುವುದು ಪೊಲೀಸರ ಜವಾಬ್ದಾರಿ. +ಕೋವಿಡ್‌ ಕಾಲದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ಕುರಿತ ವರದಿ ಈ ತಿಂಗಳ ಅಂತ್ಯಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಅದರಲ್ಲಿ ಯಾವ ಅಂಶಗಳಿವೆ ಎಂಬುದು ತಮಗೆ ಗೊತ್ತಿಲ್ಲ. ವರದಿ ಬಂದ ಬಳಿಕ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. +ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಯಾರಿಗೆ ಅವಕಾಶ ಎಂಬ ಚರ್ಚೆಗಳಾಗುತ್ತವೆ. ಆದರೆ ಸದ್ಯಕ್ಕೆ ಎಲ್ಲಿಯೂ ಅಂತಹ ಚರ್ಚೆಗಳ ಸಂದರ್ಭ ಬಂದಿಲ್ಲ ಎಂದರು. +ಬಿಜೆಪಿ ಅಧಿಕಾರವಧಿಯಲ್ಲಿನ ಹಲವು ಹಗರಣಗಳು ತನಿಖೆ ಹಂತದಲ್ಲಿವೆ. ಕೆಲವು ಪ್ರಕರಣಗಳಲ್ಲಿ ತಾರ್ಕಿಕ ಅಂತ್ಯವಾಗಲಿದೆ. ಇಲ್ಲಿ ಹೊಂದಾಣಿಕೆ ರಾಜಕಾರಣ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. \ No newline at end of file diff --git a/eesanje/url_46_38_2.txt b/eesanje/url_46_38_2.txt new file mode 100644 index 0000000000000000000000000000000000000000..f692a2ab8704c5870ef7ec9790c6d0cd8ce480f8 --- /dev/null +++ b/eesanje/url_46_38_2.txt @@ -0,0 +1,12 @@ +ಸಿಎಂ ರಾಜಿನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ + +ಬೆಂಗಳೂರು,ಆ.22-ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. +ರಾಜಧಾನಿ ಬೆಂಗಳೂರು, ಮಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಯಿತು. +ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಬಿಜೆಪಿಯ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. +ಮುಡಾ ಪ್ರಕರಣದಲ್ಲಿ ಕಾನೂನು ಉಲ್ಲಂಘಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ನಿವೇಶನವನ್ನು ಪಡೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿರುವುದರಿಂದ ರಾಜ್ಯಪಾಲರು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. +ಅದನ್ನು ಕೊಟ್ಟಿದ್ದೇ ತಪ್ಪು ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆದುಕೊಂಡೇ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ನೀಡುವ ಮುನ್ನ ಸಾಕಷ್ಟು ಬಾರಿ ಕಾನೂನು ಅಭಿಪ್ರಾಯ ಪಡೆಯಲಾಗುತ್ತದೆ. +ಒಂದು ವೇಳೆ ರಾಜ್ಯಪಾಲರ ತೀರ್ಮಾನ ಸರಿ ಇಲ್ಲ ಎಂದು ಕಂಡುಬಂದರೆ ಸರ್ಕಾರ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಅದನ್ನು ಬಿಟ್ಟು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅವಮಾನಕಾರಿ ರೀತಿಯಲ್ಲಿ ಟೀಕೆ ಮಾಡುವುದು ಸರಿಯಲ್ಲ ಎಂದು ಪ್ರತಿಭಟನಾ ನಿರತರು ಕಿಡಿಕಾರಿದರು. +ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸಚಿವ ಜಮೀರ್‌ ಅಹಮದ್‌ ಹಾಗೂ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರು ನಾಲಗೆ ಹರಿಬಿಟ್ಟು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಲಾಯಿತು. +ಆರೋಪಿ ಸ್ಥಾನದಲ್ಲಿರುವ ಸ್ದಿರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಅಧಿಕಾರದಲ್ಲಿ ಮುಂದುವರೆದರೆ ನಿಸ್ಪಕ್ಷಪಾತ ಮತ್ತು ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಆರೋಪಿ ಸ್ಥಾನದಲ್ಲಿ ಇರುವವರೇ ಉನ್ನತ ಸ್ಥಾನದಲ್ಲಿರುವಾಗ ತನಿಖಾಧಿಕಾರಿಗಳು ಮುಕ್ತವಾಗಿ ತನಿಖೆ ನಡೆಸಲು ಹೇಗೆ ಸಾಧ್ಯ. ಮೊದಲು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. +ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕರ ಆಸ್ತಿಗಳನ್ನು ಹಾಳು ಮಾಡಲು ಅವಕಾಶವಿಲ್ಲ. ಬಸ್‌‍ಗಳಿಗೆ ಕಲ್ಲು ಎಸೆಯುವುದು, ಸಾರ್ವಜನಿಕ ಆಸ್ತಿಗಳನ್ನು ಹಾಳು ಮಾಡಿದರೆ ಅಂತವರಿಂದಲೇ ಹಣ ವಸೂಲಿ ಮಾಡಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಸಾರ್ವಜನಿಕರ ಆಸ್ತಿ-ಪಾಸ್ತಿಗಳನ್ನು ಹಾಳು ಮಾಡಿದರೆ ಹೊಣೆ ಯಾರು ಎಂದು ಪ್ರತಿಭಟನಾನಿರತರು ಪ್ರಶ್ನಿಸಿದರು. +ನಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಮುಂದುವರೆಯುತ್ತದೆ. ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ವಿರಮಿಸುವುದಿಲ್ಲ ಎಂದು ಎಚ್ಚರಿಸಿದರು. \ No newline at end of file diff --git a/eesanje/url_46_38_3.txt b/eesanje/url_46_38_3.txt new file mode 100644 index 0000000000000000000000000000000000000000..8be4359d3f72cfebfb954b8bb1bcd5d42ad44d27 --- /dev/null +++ b/eesanje/url_46_38_3.txt @@ -0,0 +1,8 @@ +ಸಂಜೆ ಶಾಸಕಾಂಗ ಸಭೆ, ಸಿಎಂಗೆ ನೈತಿಕ ಬೆಂಬಲ ನೀಡುವ ಅಭಿಪ್ರಾಯ ಸಂಗ್ರಹ +ಬೆಂಗಳೂರು,ಆ.22-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲು ನಿಗದಿಪಡಿಸಿರುವ ಶಾಸಕಾಂಗ ಸಭೆ ಸಂಜೆ ನಡೆಯಲಿದೆ. +ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟಿ ಪೂರ್ವಾನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ. +ಕಾಂಗ್ರೆಸ್‌‍ ಹೈಕಮಾಂಡ್‌ ಈಗಾಗಲೇ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ನೀಡಿದೆ. ಅದರ ನಡುವೆಯೂ ತೆರೆಮರೆಯಲ್ಲಿ ಕೆಲವು ಚಟುವಟಿಕೆಗಳು ನಡೆಯುತ್ತಿವೆ. ಜೆಡಿಎಸ್‌‍ ಮತ್ತು ಬಿಜೆಪಿ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಆಪರೇಷನ್‌ ಕಮಲಕ್ಕೆ ಮುಂದಾಗುವ ಸುಳಿವು ದೊರೆತಿದೆ. +ಸಿದ್ದರಾಮಯ್ಯ ಅವರನ್ನು ಪದಚ್ಯುತಗೊಳಿಸುವ ವಾತಾವರಣ ನಿರ್ಮಿಸಿ ತನೂಲಕ ಕಾಂಗ್ರೆಸ್‌‍ನಲ್ಲಿ ಸೃಷ್ಟಿಯಾಗುವ ರಾಜಕೀಯ ಗೊಂದಲಗಳ ಲಾಭ ಪಡೆಯುವ ಹವಣಿಕೆ ನಡೆಯುತ್ತಿವೆ ಎಂಬ ಆರೋಪಗಳಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. +ಈಗಾಗಲೇ ಎರಡು ಬಾರಿ ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರಿಗೆ ಸಲಹೆ ನೀಡಲಾಗಿತ್ತು. ಅದರ ಹೊರತಾಗಿಯೂ ಅಭಿಯೋಜನೆಗೆ ಅನುಮತಿ ನೀಡಿರುವುದರಿಂದಾಗಿ ಕಾಂಗ್ರೆಸ್‌‍ ಪಾಳೇಯ ರೊಚ್ಚಿಗೆದ್ದಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್‌ಗೆ ಪ್ರಕರಣದ ಸಮಗ್ರ ವಿವರಣೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಸಂಜೆ ಶಾಸಕಾಂಗ ಸಭೆ ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆಯಲಿದೆ. +ಈ ಸಂದರ್ಭದಲ್ಲಿ ಕೆಲ ಶಾಸಕರು ಬೇಜವಾಬ್ದಾರಿ ಹಾಗೂ ಸ್ಪಂದನಾ ರಹಿತ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಸಜ್ಜುಗೊಂಡಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_38_4.txt b/eesanje/url_46_38_4.txt new file mode 100644 index 0000000000000000000000000000000000000000..845b4c51bc6bf9301d82c0072757a9af15161490 --- /dev/null +++ b/eesanje/url_46_38_4.txt @@ -0,0 +1,7 @@ +ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ನಾಳೆ ಬಿಜೆಪಿ ರಾಜ್ಯಾದ್ಯಂತ ಹೋರಾಟ + ' +ಬೆಂಗಳೂರು,ಆ.21-ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ನಾಳೆ ರಾಜ್ಯಾದ್ಯಂತ ಹೋರಾಟ ನಡೆಸಲಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ಬಿಜೆಪಿಯ ಎಲ್ಲಾ ಮೋರ್ಚಗಳಿಗೆ ಕರೆ ನೀಡಲಾಗಿದೆ. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಸದರು, ಪದಾಧಿಕಾರಿಗಳು ಸೇರಿದಂತೆ ಬೃಹತ್‌ ಪ್ರಮಾಣದಲ್ಲಿ ಸೇರಬೇಕೆಂದು ಸೂಚಿಸಲಾಗಿದೆ. +ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಈಗ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಕಾಂಗ್ರೆಸ್‌‍ ರಾಜ್ಯಪಾಲರು ಅಭಿಯೋಜನೆಗೆ ನೀಡಿದ್ದನ್ನು ವಿರೋಧಿಸಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ನಾಳೆ ರಾಜ್ಯಾದ್ಯಂತ ಬೀದಿಗಿಳಿಯಲಿದೆ. +ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ನೇರವಾಗಿ ಫಲಾನುಭವಿಗಳಾಗಿದ್ದಾರೆ. ಅವರ ಮೇಲೆ ಸೂಕ್ತ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಕಾರ್ಯಾಲಯದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಪ್ರಾಸಿಕ್ಯೂಷನ್‌ ವಿಧಾನದ ಸಂವಿಧಾನದಡಿಯಲ್ಲೇ ಕಾನೂನುಬದ್ಧವಾಗಿ ಅನುಮತಿ ನೀಡಿದ್ದಾರೆ.ಆದರೆ ಕಾಂಗ್ರೆಸ್‌‍ ಇದನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡು ಆರೋಪ ಹೊತ್ತಿರುವ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವುದನ್ನು ಬಿಜೆಪಿ ವಿರೋಧಿಸಿದೆ. +ಅಲ್ಲದೆ, ಥಾವರ್‌ಚಂದ್‌ ಗೆಹ್ಲೋಟ್‌ ದಲಿತ ಸಮುದಾಯಕ್ಕೆ ಸೇರಿರುವುದರಿಂದ ಅರವನ್ನು ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ. ಸಚಿವ ಜಮೀರ್‌ ಅಹಮದ್‌, ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಸೇರಿದಂತೆ ಅನೇಕರು ಅವರ ವಿರುದ್ಧ ಮನಸ್ಸಿಗೆ ಬಂದಂತೆ ಟೀಕಿಸಿದ್ದಾರೆ. ಇದರ ವಿರುದ್ಧವೂ ಹೋರಾಟ ನಡೆಸಬೇಕೆಂದು ಬಿಜೆಪಿ ಘಟಕ ಸೂಚನೆ ನೀಡಿದೆ.ಪ್ರತಿಭಟನೆ ಸಂದರ್ಭದಲ್ಲಿ ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಶಾಂತಿಯುತವಾಗಿ ನಡೆಸಬೇಕೆಂದು ನಿರ್ದೇಶಿಸಲಾಗಿದೆ. \ No newline at end of file diff --git a/eesanje/url_46_38_5.txt b/eesanje/url_46_38_5.txt new file mode 100644 index 0000000000000000000000000000000000000000..26b633ebe0a82981c843c90e9a5366495c89e127 --- /dev/null +++ b/eesanje/url_46_38_5.txt @@ -0,0 +1,11 @@ +ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್‌ ಕಾರಿನ ಜೊತೆ ಹೆಚ್ಚಿನ ಭದ್ರತೆ +ಬೆಂಗಳೂರು,ಆ.21-ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮೇಲೆ ಕೆಲವು ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ತಕ್ಷಣವೇ ಅವರಿಗೆ ಬುಲೆಟ್‌ ಪ್ರೂಫ್‌(ಗುಂಡು ನಿರೋಧಕ) ಕಾರು ಒದಗಿಸುವಂತೆ ಕೇಂದ್ರ ಗುಪ್ತಚರ ವಿಭಾಗ ರಾಜ್ಯ ಗೃಹ ಇಲಾಖೆಗೆ ಸೂಚಿಸಿದೆ.ಈ ಹಿನ್ನೆಲೆಯಲ್ಲಿ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಇದೀಗ ಬುಲೆಟ್‌ಪ್ರೂಫ್‌ ಕಾರು ಒದಗಿಸಲಾಗಿದ್ದು, ಹೆಚ್ಚಿನ ಭದ್ರತೆಯನ್ನು ಸಹ ತತ್‌ಕ್ಷಣದಿಂದಲೇ ಜಾರಿ ಬರುವಂತೆ ನೀಡಲಾಗಿದೆ. +ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿಗೆ ಕೇಂದ್ರ ಗುಪ್ತಚರ ವಿಭಾಗದ ಮುಖ್ಯಸ್ಥರು ಪತ್ರ ಬರೆದಿದ್ದು, ರಾಜ್ಯಪಾಲರ ಮೇಲೆ ಕೆಲವು ಕಾರಣಗಳನ್ನಿಟ್ಟುಕೊಂಡು ಸಮಾಜಘಾತುಕ ಶಕ್ತಿಗಳು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ಕೊಟ್ಟಿದೆ. +ಆ. 20ರಂದು ಅವರು ಇಂದೋರ್‌ಗೆ ಕಾರ್ಯನಿಮಿತ್ತ ಹೋಗಿದ್ದ ಅವರು, ಆ. 21ರಂದು ಅಲ್ಲಿಂದ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅಲ್ಲಿಂದ ಬರುತ್ತಲೇ ಅವರು ಬುಲೆಟ್ ಪ್ರೂಫ್‌ ಕಾರನ್ನು ತರಿಸಿಕೊಂಡು ಅದರಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕರ್ನಾಟಕ ಪೊಲೀಸ್‌‍ ನ ಗುಪ್ತಚರ ಇಲಾಖೆಯಿಂದ ಅವರಿಗೆ ಬುಲೆಟ್‌ ಕಾರನ್ನು ನೀಡಲಾಗಿದೆ. +ಸಾಮಾನ್ಯವಾಗಿ ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್ ಕಾರಿನಲ್ಲಿ ಓಡಾಡಲು ಅವಕಾಶವಿರುತ್ತದೆ. ಅದನ್ನು ಗುಪ್ತಚರ ಇಲಾಖೆಯಿಂದ ಯಾವಾಗ ಬೇಕಾದರೂ ತರಿಸಿಕೊಂಡು ಅವರು ಅದರಲ್ಲಿ ಓಡಾಡಬಹುದು. ಆದರೆ, ಗೆಹ್ಲೋಟ್‌ ಅವರು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೀಗ, ಆ. 21ರಿಂದ ಬುಲೆಟ್‌ ಪೂ್‌ ಕಾರಿನಲ್ಲಿ ಓಡಾಡಲು ಆರಂಭಿಸಿದ್ದಾರೆ. ಇದು ಈಗ ಕುತೂಹಲಕ್ಕೆ ಕಾರಣವಾಗಿದೆ. +ಮುಡಾ ಹಗರಣದಡಿ ಸಿದ್ದರಾಮಯ್ಯನವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆ. 16ರಂದು ಆದೇಶವನ್ನು ರಾಜ್ಯಪಾಲರು ಹೊರಡಿಸಿದರು. ಅಂದಿನಿಂದಲೇ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರದಂದು (ಆ. 19) ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯನವರು ರಾಜ್ಯಪಾಲರ ಆದೇಶಕ್ಕೆ ಪ್ರತಿಯಾಗಿ ಎರಡು ರಿಟ್‌ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಅಂದಿನಿಂದ ಅವರ ಕಾನೂನು ಹೋರಾಟ ಆರಂಭವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರು ಮತ್ತಷ್ಟು ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದು, ಅದಾಗಿ ಎರಡು ದಿನವಾದರೂ ಪ್ರತಿಭಟನೆಗಳು ನಿಂತಿಲ್ಲ. +ಆ ಹಿನ್ನೆಲೆಯಲ್ಲಿ ರಾಜ್ಯಪಾಲರು ಗಾಬರಿಯಾಗಿದ್ದಾರೆಯೇ ಅಥವಾ ಅವರಿಗೆ ಯಾರಿಂದಾದರೂ ಪ್ರಾಣಭೀತಿ ಆವರಿಸಿದೆಯೇ ಎಂಬುದಿನ್ನೂ ಖಚಿತವಾಗಿಲ್ಲ. ಆದರೂ, ಆ. 21ರವರೆಗೆ ಸಾಮಾನ್ಯ ಕಾರಿನಲ್ಲಿ ಓಡಾಡುತ್ತಿದ್ದ ರಾಜ್ಯಪಾಲರು, ಈಗ ದಿಢೀರನೆ ಬುಲೆಟ್‌ ಪೂ್‌ ಕಾರಿನಲ್ಲಿ ಓಡಾಡುತ್ತಿರುವುದು ಅಚ್ಚರಿ ಮೂಡಿಸಿದೆ. +ರಾಜಭವನದ ಮೇಲೆ ದಾಳಿ ನಡೆಯುವ ಭೀತಿ :ರಾಜ್ಯಪಾಲರ ವಿರುದ್ಧ ರೊಚ್ಚಿಗೆದ್ದಿದ್ದ ಕಾಂಗ್ರೆಸ್‌‍ ನಾಯಕರು, ರಾಜಭವನಕ್ಕೆ ನುಗ್ಗುವುದಾಗಿ ಬೆದರಿಕೆ ಹಾಕಿದ್ದರು. ಅದನ್ನು ಬಿಜೆಪಿ ತೀವ್ರವಾಗಿ ಖಂಡಿಸಿತ್ತು. ರಾಜಭವನದ ಮೇಲೆ ದಾಳಿ ನಡೆಸುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ಸಿಗರದ್ದು ಎಂಥಾ ಮನಸ್ಥಿತಿ ಎಂಬುದನ್ನು ಈ ರಾಜ್ಯದ ಜನರು ನಿರ್ಧರಿಸುತ್ತಾರೆ ಎಂದು ಬಿಜೆಪಿ ನಾಯಕರು ಆಕೋಶ ವ್ಯಕ್ತಪಡಿಸಿದ್ದರು. ಈ ಕುರಿತಂತೆ ಟ್ವೀಟ್‌ ಮಾಡಿದ್ದ ಬಿಜೆಪಿ ಕರ್ನಾಟಕ, ಸಿಎಂ ಸಿದ್ದರಾಮಯ್ಯ ಮತ್ತವರ ಪಟಾಲಂ ಕಡು ದಲಿತ ವಿರೋಧಿ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಪ್ರಶ್ನಿಸಿತ್ತು. +ಅಪರೂಪದ ಸಂದರ್ಭದಲ್ಲಿ ಮಾತ್ರ ಅತಿ ಗಣ್ಯ ವ್ಯಕ್ತಿಗಳಿಗೆ ಬುಲೆಟ್‌ ಪ್ರೂಫ್‌ ಕಾರು ಒದಗಿಸಲಾಗುತ್ತಿದೆ. ರಾಜ್ಯಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ಸುಪ್ರಿಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಪ್ರಾಣ ಬೆದರಿಕೆ ಇರುವ ಗಣ್ಯರಿಗೆ ಮಾತ್ರ ಇದನ್ನು ನೀಡಲಾಗುತ್ತದೆ. ರಾಜ್ಯಪಾಲರ ವಿರುದ್ದ ಕೆಲವು ಸಂಘಟನೆಗಳು ತೀವ್ರ ಆಕ್ರೋಶಗೊಂಡಿರುವ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ. +ಕಾರ್ಯಕ್ರಮ ನಿಮಿತ್ತ ತಮ ತವರು ಜಿಲ್ಲೆ ಮಧ್ಯಪ್ರದೇಶದ ಇಂದೋರ್‌ಗೆ ತೆರಳಿದ ರಾಜ್ಯಪಾಲರು ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.ವಿಶ್ವವಿದ್ಯಾನಿಲಯಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ವಿಶ್ವವಿದ್ಯಾನಿಲಯಗಳ ಘಟಿಕೋತ್ಸವ, ಪ್ರಶಸ್ತಿ, ಪದವಿ ಪ್ರದಾನ ಕಾರ್ಯಕ್ರಮಗಳಿಗೆ ತೆರಳುತ್ತಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಬುಲೆಟ್‌ ಪ್ರೂಫ್‌ ಕಾರು ಒದಗಿಸಲಾಗಿದೆ. +ಇನ್ನು ರಾಜ್ಯಪಾಲರು ಯಾವುದಾದರೂ ಸಭೆ ಸಮಾರಂಭ, ಮತ್ತಿತರ ಕಾರ್ಯಕ್ರಮಗಳಿಗೆ ತೆರಳುವ ಸಂದರ್ಭದಲ್ಲಿ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆಯೂ ಸೂಚನೆ ನೀಡಲಾಗಿದೆ. ರಾಜ್ಯಪಾಲರಾಗಿ ಥಾವರ್‌ಚಂದ್‌ ಗೆಹ್ಲೋಟ್‌ ಅಧಿಕಾರ ವಹಿಸಿಕೊಂಡ ನಂತರ ಈವರೆಗೂ ಬುಲೆಟ್‌ ಪ್ರೂಫ್‌ ಕಾರು ಬಳಸುತ್ತಿರಲಿಲ್ಲ. ಇದೇ ಮೊದಲ ಬಾರಿಗೆ ಇದಕ್ಕೆ ಮೊರೆ ಹೋಗಿದ್ದಾರೆ. \ No newline at end of file diff --git a/eesanje/url_46_38_6.txt b/eesanje/url_46_38_6.txt new file mode 100644 index 0000000000000000000000000000000000000000..832d4534c41ece230ccb04e3c3199ba2c22205de --- /dev/null +++ b/eesanje/url_46_38_6.txt @@ -0,0 +1,18 @@ +ಮುಡಾ ಪ್ರಕರಣಕ್ಕೆ ಹೊಸ ಟ್ವಿಸ್ಟ್..? +ಬೆಂಗಳೂರು,ಆ.21– ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಈಗ ಮತ್ತೊಂದು ಹೊಸ ತಿರುವು ಪಡೆದುಕೊಂಡಿದೆ. +ಈಗಾಗಲೇ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ(ಪ್ರಾಸಿಕ್ಯೂಷನ್‌) ನಡೆಸಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವ ಬೆನ್ನಲ್ಲೇ ತಮಗೆ ಇಂತಹ ಕಡೆಗೆ ನಿವೇಶನ ನೀಡುವಂತೆ ಪಾರ್ವತಿ ಸಿದ್ದರಾಮಯ್ಯ ಮುಡಾ ಅಧಿಕಾರಿಗಳಿಗೆ ಪತ್ರ ಬರೆದಿರು ವುದು ಬೆಳಕಿಗೆ ಬಂದಿದೆ. +ವಿಶೇಷವೆಂದರೆ ಸಿದ್ದರಾಮಯ್ಯನವರು ಈ ಪ್ರಕರಣವನ್ನು ಬಲವಾಗಿ ಸಮರ್ಥಿಸಿಕೊಂಡು ನಾನಾಗಲಿ, ನನ್ನ ಧರ್ಮಪತ್ನಿಯಾಗಲಿ ಇಂತಹ ಕಡೆಯೇ ನಿವೇಶನ ನೀಡಬೇಕೆಂದು ಪತ್ರ ಬರೆದಿದ್ದೇವೆಯೇ? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದರು. +ಪತ್ರಿಕಾಗೋಷ್ಟಿ ಸೇರಿದಂತೆ ಅನೇಕ ಸಂದರ್ಭಗಳಲ್ಲಿ ನಾನಾಗಲಿ, ನನ್ನ ಕುಟುಂಬದ ಯಾವುದೇ ಸದಸ್ಯರು ನಿರ್ಧಿಷ್ಟ ಸ್ಥಳದಲ್ಲೇ ನಿವೇಶನ ಬೇಕೆಂದು ಪತ್ರ ಬರೆದಿಲ್ಲ. ಅವರು ಕೊಟ್ಟ ಕಡೆ ಕಾನೂನುಬದ್ಧವಾಗಿ ನಿವೇಶನ ಪಡೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು. +ಇದೀಗ ದಾಖಲೆಗಳ ಪ್ರಕಾರ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ಮೈಸೂರಿನ ವಿಜಯನಗರದ ಎರಡು ಮತ್ತು ಮೂರನೇ ಹಂತದಲ್ಲಿ ತಮ ಭೂಮಿಗೆ 50:50ರ ಅನುಪಾತದಲ್ಲಿ ಪರ್ಯಾಯ ನಿವೇಶನ ನೀಡಬೇಕೆಂದು ಅಂದಿನ ಮುಡಾ ಆಯುಕ್ತರಿಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ. +ಪಾರ್ವತಿಯವರು ಖುದ್ದು ಪತ್ರ ಬರೆದು ಅದರಲ್ಲಿ ಸಹಿ ಹಾಕಿ ನಮಗೆ ಮೈಸೂರಿನ ವಿಜಯನಗರ ಮತ್ತು 2ನೇ ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂದು ಕೋರಿ ಪತ್ರ ಬರೆದಿದ್ದು ಬಹಿರಂಗಗೊಂಡಿದೆ.ಮತ್ತೊಂದು ವಿಶೇಷವೆಂದರೆ ಈ ಪ್ರಕರಣ ಹೊರಬರುತ್ತಿದ್ದಂತೆ ಮುಡಾ ಅಧಿಕಾರಿಗಳು ನಡೆಸಿರುವ ಕರಾಮತ್ತು ಕೂಡ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿವೆ. +ಏಕೆಂದರೆ ನಿರ್ಧಿಷ್ಟ ಸ್ಥಳದಲ್ಲಿ ನಿವೇಶನ ನೀಡಬೇಕೆಂದು ಕೋರಿದ್ದ ಪತ್ರಕ್ಕೆ ಮುಡಾ ಅಧಿಕಾರಿಗಳು ವೈಟ್ನರ್‌ ಹಾಕಿ ಮುಚ್ಚುಹಾಕುವ ಪ್ರಯತ್ನ ನಡೆಸಿದ್ದಾರೆ ಎಂಬ ಶಂಕೆ ಕಾಡುತ್ತಿದೆ. +ಪ್ರಕರಣ ಹೊರಬರುತ್ತಿದ್ದಂತೆ ಅಧಿಕಾರಿಗಳು ವಿಜಯನಗರದ 2 ಮತ್ತು 3ನೇ ಹಂತದಲ್ಲಿ ನಿವೇಶನ ನೀಡಬೇಕೆಂಬ ಜಾಗಕ್ಕೆ ವೈಟ್ನರ್‌ ಹಾಕಿದ್ದಾರೆ. ಇದು ಸಹಜವಾಗಿ ಅನುಮಾನಗಳನ್ನು ಹುಟ್ಟುಹಾಕಿದೆ. +ಪ್ರಾಧಿಕಾರ ಬಡಾವಣೆ ನಿರ್ಮಿಸಿ ನಿವೇಶನ ಹಂಚಿದ ಮೇಲೆ ಆ ಜಮೀನನ್ನು ಸಿಎಂ ಪತ್ನಿಯ ಸಹೋದರ ಖರೀದಿಸಿದ್ದರೇ ಎಂಬ ಪ್ರಶ್ನೆಗೂ ಕಾರಣವಾಗಿದೆ. ಸಿಎಂ ಪತ್ನಿ ಪ್ರಾಽ ಕಾರಕ್ಕೆ ಬರೆದ ಪತ್ರದಲ್ಲಿ ಅದರ ಸ್ಪಷ್ಟ ಉಲ್ಲೇಖ. +ಪತ್ರದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಽ ಕಾರ 2001ರಲ್ಲೇ ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣ ಮಾಡಿ ನಿವೇಶನ ಹಂಚಿದೆ ಎಂದು ಪತ್ರದಲ್ಲಿ ನಮೂದಾಗಿದೆ. ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ವಾಽೕನ ಪಡಿಸಿಕೊಂಡಿತ್ತು. +ಆದರೆ ಈ ಜಮೀನನ್ನು ಸಿಎಂ ಪತ್ನಿ ಸಹೋದರ ಖರೀದಿ ಮಾಡಿರುವುದು 2004ರಲ್ಲಿ. ಹಾಗಾದರೆ ಸ್ವಾಽೕನ ಪಡಿಸಿಕೊಂಡು ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಹೇಗೆ ಖರೀದಿ ಮಾಡಿದರು ಎಂಬ ಪ್ರಶ್ನೆಯೂ ಉದ್ಭವಿಸಿದೆ. +ನೋಂಣಿ ಸಂಖ್ಯೆಯಲ್ಲಿ ವ್ಯತ್ಯಾಸ:ಮುಡಾದಿಂದ ಮಂಜೂರಾದ ನಿವೇಶನಗಳ ಸಂಖ್ಯೆಗೂ, ಮುಡಾ ಅಽ ಕಾರಿಗಳು ಸರಕಾರಕ್ಕೆ ನೀಡಿರುವ ನಿವೇಶನಗಳ ನೋಂದಣಿ ಸಂಖ್ಯೆಯಲ್ಲಿ ಭಾರಿ ವ್ಯತ್ಯಾಸ ಇರುವುದು ಕಂಡುಬಂದಿದೆ. +ನಾಲ್ಕು ವರ್ಷದಲ್ಲಿ 4,829 ನಿವೇಶನ ಮಂಜೂರಿ ಪತ್ರ ನೀಡಲಾಗಿದೆ. 2021ರ ಏಪ್ರಿಲ್‌ನಿಂದ 2024ರ ಜುಲೈ 3ರವರೆಗೆ ಮುಡಾದಲ್ಲಿ ಮಂಜೂರಾತಿ ಪತ್ರ ನೀಡಲು ಬಳಕೆ ಆಗಿರುವ ಸೆಕ್ಯೂರಿಟಿ ಬಾಂಡ್‌ ಶೀಟ್‌ ದಾಖಲೆಯು ಲಭ್ಯ ವಾಗಿದೆ. ಕೇವಲ 54 ದಿನಗಳಲ್ಲಿ ಅಂದರೆ, 2024ರ ಮೇ 9ರಿಂದ ಜುಲೈ 3ರವರೆಗೆ 1,200 ಮಂಜೂರಾತಿ ಪತ್ರ ಬಳಕೆ ಮಾಡಿಕೊಳ್ಳಲಾಗಿದೆ. +ಮುಡಾದಲ್ಲಿ ಬಾರ್‌ಕೋಡ್‌ ಇರುವ ವಿಶಿಷ್ಟ ಬಾಂಡ್‌ ಶೀಟ್‌ ಬಳಸಿ ಅಽ ಕೃತವಾಗಿ ಮಂಜೂರಾತಿ ಪತ್ರ ನೀಡಲಾಗುತ್ತದೆ. ಸೀಮಿತ ಸಂಖ್ಯೆಯಲ್ಲಿ ಪತ್ರಗಳನ್ನು ಮುದ್ರಿಸಿದ ಬಳಿಕ ಅವುಗಳನ್ನು ಎಂಜಿನಿಯರ್‌ ದರ್ಜೆಯ ಅಽ ಕಾರಿಯ ವಶಕ್ಕೆ ನೀಡಲಾಗುತ್ತದೆ. ಯಾರೇ ಅಂತಹ ಪತ್ರಗಳನ್ನು ಬಳಸಿದರೂ ರಿಜಿಸ್ಟರ್‌ನಲ್ಲಿ ಪ್ರತಿ ಪತ್ರದ ವಿವರ ನಮೂದಿಸಬೇಕು. ಅದರಲ್ಲಿ ನಿವೇಶನ ಮಂಜೂರಾತಿ ಆದೇಶವನ್ನು ಮುದ್ರಿಸಿದ ಬಳಿಕ, ಯಾರಿಗೆ ಯಾವ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಮಾಹಿತಿ ನೀಡಬೇಕು. ಆದರೆ, ಸಾಕಷ್ಟು ಪ್ರಕರಣಗಳಲ್ಲಿ ಮಾಹಿತಿಯನ್ನು ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. +ನಿಯಮಗಳ ಪ್ರಕಾರ, ಮುಡಾ ಆಯುಕ್ತರಿಗೆ ಮಾತ್ರ ಈ ಪತ್ರ ಬಳಸುವ, ಇಲ್ಲವೇ ಬಳಕೆಗೆ ಅನುಮತಿ ನೀಡುವ ಅಧಿಕಾರವಿದೆ. ಆಯುಕ್ತರ ಒಪ್ಪಿಗೆ ಪಡೆದು ಕಾರ್ಯದರ್ಶಿಗಳು ಇದನ್ನು ಬಳಸಬಹುದು. ಹಾಳೆ ಹರಿದರೂ ಅದನ್ನು ಸಂಬಂಧಿಸಿದ ವಿಭಾಗಕ್ಕೆ ಹಿಂದಿರುಗಿಸಿ ರಿಜಿಸ್ಟರ್‌ನಲ್ಲಿ ನಮೂದಿಸಬೇಕು. ಆದರೆ ನಿಯಮ ಮೀರಿ ಸಿಬ್ಬಂದಿಗೂ ಪತ್ರ ದೊರೆತು ದುರ್ಬಳಕೆಯಾಗಿದೆ ಎನ್ನುತ್ತಾರೆ ಮುಡಾ ಅಧಿಕಾರಿಯೊಬ್ಬರು. +ಇಂತಹ ಪತ್ರಗಳನ್ನು ಬಳಸಿ ಅನಧಿಕೃತವಾಗಿ ನಿವೇಶನಗಳನ್ನು ಅನ್ಯರ ಹೆಸರಿಗೆ ನೋಂದಣಿ ಮಾಡಿಕೊಟ್ಟಿರುವ ಸಾಧ್ಯತೆ ಹೆಚ್ಚಿದೆ. ಸಾವಿರಾರು ಸಂಖ್ಯೆಯಲ್ಲಿ ಪತ್ರಗಳ ಬಳಕೆ ಆಗಿದ್ದು, ಭಾರಿ ಪ್ರಮಾಣದ ಅಕ್ರಮ ನಡೆದಿದೆ. ಹೀಗಾಗಿ ಇಡೀ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು. ಈ ಹಿಂದಿನ ಆಯುಕ್ತರು, ಕಾರ್ಯದರ್ಶಿ, ವಿಶೇಷ ತಹಸೀಲ್ದಾರ್‌, ಆಯುಕ್ತರ ಆಪ್ತ ಸಹಾಯಕರನ್ನು ವಿಚಾರಣೆಗೆ ಒಳಪಡಿಸಬೇಕು ಎನ್ನುವ ಆಗ್ರಹ ಕೇಳಿಬಂದಿದೆ. +ಏನಿದು ಬಾಂಡ್‌ ಶೀಟ್?:ಮುಡಾದಲ್ಲಿ ಈ ಹಿಂದೆ ಅಧಿಕಾರಿಗಳ ಪತ್ರ, ಸಹಿ ನಕಲು ಮಾಡಿ ನಿವೇಶನಗಳ ಅಕ್ರಮ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸುತ್ತಿದ್ದ ಜಾಲ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ 2007ರಲ್ಲಿ ಮುಡಾದಲ್ಲಿ ವಿಶೇಷ ವಿನ್ಯಾಸದ ಸೆಕ್ಯುರಿಟಿ ಬಾಂಡ್‌ ಶೀಟ್‌ ರೂಪದ ಮಂಜೂರಾತಿ ಪತ್ರಗಳ ಬಳಕೆ ಆರಂಭವಾಯಿತು. ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳ ರೀತಿ ಇದನ್ನು ವಿನ್ಯಾಸಗೊಳಿಸಲಾಗಿದ್ದು, ನಕಲು ಮಾಡಲು ಆಗದು. ಪ್ರತಿ ಪತ್ರಕ್ಕೂ ಬಾರ್‌ ಕೋಡ್‌ ಆಧರಿತ ವಿಶಿಷ್ಟ ಸಂಖ್ಯೆ ಇದ್ದು, ಸ್ಕ್ಯಾನ್‌ ಮಾಡಿದಲ್ಲಿ ಅದರ ಆಸಲಿಯತ್ತು ಪತ್ತೆ ಮಾಡಬಹುದಾಗಿದೆ. \ No newline at end of file diff --git a/eesanje/url_46_38_7.txt b/eesanje/url_46_38_7.txt new file mode 100644 index 0000000000000000000000000000000000000000..85f6102176af4fa3ceb03e603511897e42b2f962 --- /dev/null +++ b/eesanje/url_46_38_7.txt @@ -0,0 +1,10 @@ +ಸಾಯಿ ವೆಂಕಟೇಶ್ವರ ಮಿನರಲ್ಸ್ ಕಡತದಲ್ಲಿರುವುದು ನನ್ನ ಹಸ್ತಾಕ್ಷರವಲ್ಲ : ಹೆಚ್ಡಿಕೆ +ಬೆಂಗಳೂರು,ಆ.21-ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿರುವ ಆದೇಶ ನನ್ನ ಸ್ವಹಸ್ತಾಕ್ಷರವಲ್ಲ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು. +ಜೆಪಿಭವನದಲ್ಲಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಗಿದ್ದಾಗ ನನ್ನ ಬಳಿ ಆ ಕಂಪನಿಯ ಕಡತ ಬಂದಿ ದೆಯೇ ಎಂಬುದು ಸಾಬೀತಾಗಬೇಕು. ಆ ಕಂಪನಿ ವಂಚಕ ಕಂಪನಿ ಎಂಬ ಆರೋಪವಿದೆ ಎಂದರು. +ಆಡಳಿತ ವ್ಯವಸ್ಥೆಯಲ್ಲಿ ಕೆಳಹಂತದಿಂದ ಅಧಿಕಾರಿಗಳು ಕಡತ ತಯಾರಿಸಿ ಸಿದ್ದಪಡಿಸುತ್ತಾರೆ. ಮುಖ್ಯಮಂತ್ರಿ ಮುಂದೆ ನೂರಾರು ಕಡತ ಬರುತ್ತವೆ. ಇದು ಬಂದಿತ್ತೇ ಇಲ್ಲವೇ ಎಂಬುದು ಸಾಬೀತಾಗಬೇಕು ಕಡತದಲ್ಲಿರುವುದು ನನ್ನ ಸ್ವಹಸ್ತಾಕ್ಷರದಲ್ಲ. ಎಫ್‌ಎಸ್‌‍ಎಲ್‌ ತನಿಖೆ ಬೇಕಾದರೂ ನಡೆಯಲಿ ಎಂದು ಹೇಳಿದರು. +ಕಳೆದ ವರ್ಷ ಮೇನಲ್ಲಿ ಸರ್ಕಾರ ರಚನೆಯಾದರೂ ಕಳೆದ ನವೆಂಬರ್‌ನಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯ ಪಾಲರ ಅನುಮತಿ ಕೋರಲಾಗಿದೆ. ಎರಡು ತಿಂಗಳ ಹಿಂದಷ್ಟೇ ಕೇಂದ್ರ ಸಚಿವನಾಗಿದ್ದೇನೆ ಎಂದರು. ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲು ಹೇಳಿತ್ತು. 2017ರಲ್ಲಿ ವಿಶೇಷ ತನಿಖಾ ತಂಡಕ್ಕೆ ತನಿಖೆ ನಡೆಸಿ ವರದಿ ಸಲ್ಲಿಸಲು ಹೇಳಲಾಗಿತ್ತು. ಇದುವರೆಗೂ ತನಿಖೆಯ ಪೂರ್ಣ ವರದಿಯನ್ನು ಎಸ್‌‍ಐಟಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಿಲ್ಲ. ಸುಪ್ರೀಂಕೋರ್ಟ್‌ ರಾಜ್ಯಪಾಲರ ಅನುಮತಿ ಕೋರಿ ಎಂದು ಹೇಳಿಲ್ಲ. ತನಿಖೆಗೆ ಅನುಮತಿಯನ್ನೇ ನೀಡಿತ್ತು ಎಂದರು. +ಕಾನೂನು ಹೋರಾಟ:ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿಯನ್ನು ಎಸ್‌‍ಐಟಿ ಕೋರಿದೆ. ಈ ಹಿನ್ನಲೆಯಲ್ಲಿ ಸಾಯಿ ವೆಂಕಟೇಶ್ವರ ಮಿನರಲ್‌್ಸಗೆ ಸಂಬಂಧಿಸಿದ ಆರೋಪದ ಬಗ್ಗೆ ಸಾಧ್ಯವಿರುವ ಕಾನೂನು ಹೋರಾಟವನ್ನು ನಡೆಸು ವುದು ಅನಿವಾರ್ಯವಾಗಿದೆ ಎಂದು ಹೇಳಿದರು. +2006ರಲ್ಲಿ ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರಕ್ಕೆ ಬೆಂಬಲ ನೀಡಿದ ಪಕ್ಷದ ಶಾಸಕರೊಬ್ಬರಿಂದ ಗಣಿ ಮಾಲೀಕರಿಂದ 150 ಕೋಟಿ ರೂ. ಪಡೆದ ಆರೋಪ ಮಾಡಲಾಗಿತ್ತು. ಅದರ ಬಗ್ಗೆ ನ್ಯಾಯಾಂಗ ತನಿಖೆಗೆ ಯಾರೂ ಅರ್ಜಿ ಸಲ್ಲಿಸಿರಲಿಲ್ಲ. ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಆ ತನಿಖಾ ವರದಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್‌‍.ಎಂ.ಕೃಷ್ಣ, ಧರ್ಮಸಿಂಗ್‌ ಹೆಸರು ಪ್ರಸ್ತಾಪವಾಗಿ ಯಾವುದೇ ರೀತಿಯ ಕ್ರಮಕ್ಕೆ ಶಿಫಾರಸ್ಸು ಮಾಡದೆ ಅಂದಿನ ಸರ್ಕಾರಕ್ಕೆ ಬಿಡಲಾಗಿತ್ತು ಎಂದರು. +ಜಂತ್ಕಲ್‌ ಕಂಪನಿ ಕಂಪನಿಗೆ ಸಂಬಂಧಿಸಿದ ನನ್ನ ಮೇಲಿನ ಆರೋಪ ಪ್ರಕರಣವನ್ನು ಹೈಕೋರ್ಟ್‌ ರದ್ದು ಮಾಡಿ ಸಾಯಿ ವೆಂಕಟೇಶ್ವರ ಕಂಪನಿಗೆ ಸಂಬಂಧಿಸಿದ ಪ್ರಕರಣವನ್ನು ಮುಂದುವರೆಸಲು ಆದೇಶ ನೀಡಿತ್ತು. ಎಸ್‌‍.ಎಂ.ಕೃಷ್ಣ ಅವರಿಗೆ ಸುಪ್ರೀಂಕೋರ್ಟ್‌ ರಿಲೀಫ್‌ ಕೊಟ್ಟಿದೆ. +2014ರಲ್ಲಿ ಸಾಯಿ ವೆಂಕಟೇಶ್ವರ ಪ್ರಕರಣಕ್ಕೆ ಸುಪ್ರೀಂಕೋರ್ಟ್‌ನ ಮೊರೆ ಹೋಗಿದ್ದೆ. ಆಗ ರಾಜ್ಯ ಸರ್ಕಾರ ಎಸ್‌‍ಐಟಿ ತನಿಖೆಗೆ ಅವಕಾಶವನ್ನು ಸುಪ್ರೀಂಕೋರ್ಟ್‌ನಲ್ಲಿ ಕೋರಿತ್ತು. 2017ರಲ್ಲಿ ಎಸ್‌‍ಐಟಿ ರಚನೆಯಾಗಿ ನನಗೆ ನೋಟಿಸ್‌‍ ನೀಡಿ ಹೇಳಿಕೆಯನ್ನು ದಾಖಲಿಸಿಕೊಂಡರು. +ಸುಪ್ರೀಂಕೋರ್ಟ್‌ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡಲು ನಿರ್ದೇಶನ ನೀಡಿತ್ತು ಎಂದು ಹೇಳಿದರು. ವಿಪರ್ಯಾಸವೆಂದರೆ 2018ರಲ್ಲಿ ಕಾಂಗ್ರೆಸ್‌‍ನವರೇ ನಮ ಜೊತೆಗೂಡಿ ಸರ್ಕಾರ ನಡೆಸಬೇಕಾಯಿತು ಎಂದರು. ಅಧಿಕಾರಿಯೊಬ್ಬರು ತಮ ಮಗನ ಖಾತೆಗೆ 20 ಲಕ್ಷ ರೂ. ಪಡೆದುಕೊಂಡಿದ್ದರು. ಅದನ್ನು ಬೆಳಕಿಗೆ ತಂದಿದ್ದು ನಾನೇ ಎಂದು ಹೇಳಿದರು. \ No newline at end of file diff --git a/eesanje/url_46_38_8.txt b/eesanje/url_46_38_8.txt new file mode 100644 index 0000000000000000000000000000000000000000..f665058446478a0408f95ea97f53c6348c14ac44 --- /dev/null +++ b/eesanje/url_46_38_8.txt @@ -0,0 +1,8 @@ +ನವಿಲೆ ಬಳಿ ಸಮತೋಲಿತ ಜಲಾಶಯ ನಿರ್ಮಾಣ : ಡಿಕೆಶಿ +ಕೊಪ್ಪಳ,ಆ.21– ತುಂಗಭದ್ರಾ ಅಣೆಕಟ್ಟಿಗೆ ಪರ್ಯಾಯವಾಗಿ ನೀರು ಸಂಗ್ರಹಿಸಲು ನವಿಲೆ ಬಳಿ ಸಮತೋಲಿತ ಜಲಾಶಯ ನಿರ್ಮಿಸಲು ಚರ್ಚೆ ನಡೆಸುವುದಾಗಿ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭರವಸೆ ನೀಡಿದ್ದಾರೆ. +ಗಿಣಿಗೇರ ಏರ್‌ಸ್ಟ್ರಿಪ್ಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಅಣೆಕಟ್ಟು ದುರಸ್ತಿ ಕಾರ್ಯದಲ್ಲಿ ಯಾರೂ ವಿಶ್ರಾಂತಿ ಪಡೆಯದೆ ಸಂಘಟನಾತಕವಾಗಿ ಕೆಲಸ ಮಾಡಿದ್ದಾರೆ. ಸಿಬ್ಬಂದಿಗಳು, ಸಚಿವರಾದಿಯಾಗಿ ಎಲ್ಲರೂ ಶ್ರಮಿಸಿದ್ದರಿಂದ ನಾಲ್ಕು ದಿನಗಳಲ್ಲಿ ಗೇಟ್‌ ಅಳವಡಿಕೆ ಯಶಸ್ವಿಯಾಗಿದೆ. ಅದೃಷ್ಟವಶಾತ್‌ ನಮ ಬಳಿಯೇ ಗೇಟ್‌ನ ವಿನ್ಯಾಸ ಇತ್ತು. ಖಾಸಗಿ ಕಂಪನಿಗಳು ಕಾಲಮಿತಿಯಲ್ಲಿ ಗೇಟ್‌ ಮಾಡಿಕೊಟ್ಟವು ಎಂದು ಹೇಳಿದರು. +ಕೇಂದ್ರ ಸರ್ಕಾರ ಸೇರಿದಂತೆ ಹಲವರ ಸಹಕಾರದೊಂದಿಗೆ ಕಾರ್ಯಾಚರಣೆ ಯಶಸ್ವಿಯಾಗಿದೆ. ಈಗ ಜಲಾಶಯದಲ್ಲಿ ನೀರು ತುಂಬುತ್ತಿದೆ. ಇಂದು ವಿಮಾನದಲ್ಲಿ ಬರುವಾಗ ವೀಕ್ಷಣೆ ನಡೆಸಿದ್ದೇವೆ. ಜಲಾಶಯದಲ್ಲಿ ನೀರು ಹೆಚ್ಚಾಗಿದೆ. ಶೀಘ್ರವೇ ಭರ್ತಿಯಾಗಲಿದೆ ಎಂದರು. +ಮುಖ್ಯಮಂತ್ರಿ ಜೊತೆಗೂಡಿ ಶೀಘ್ರವೇ ಬಂದು ಬಾಗಿನ ಅರ್ಪಿಸುತ್ತೇವೆ. ತುರ್ತು ಕಾರ್ಯಾಚರಣೆಯಿಂದ ರೈತರನ್ನು ಉಳಿಸಲಾಗಿದೆ. ಬಿಜೆಪಿಯ, ವಿರೋಧಪಕ್ಷಗಳ ಟೀಕೆಗಳು ನಶಿಸಿವೆ. ನಮ ಕೆಲಸಗಳು ಉಳಿದಿವೆ ಎಂದು ಹೇಳಿದರು. +ಜಲಾಶಯದಲ್ಲಿ ಹೂಳು ತುಂಬಿದೆ. ಹೀಗಾಗಿ ಪರ್ಯಾಯವಾಗಿ ನವಿಲೆ ಬಳಿ ಸಮತೋಲಿತ ಅಣೆಕಟ್ಟು ನಿರ್ಮಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಶೀಘ್ರವೇ ಈ ನಿಟ್ಟಿನಲ್ಲಿ ಪ್ರವಾಸ ಕೈಗೊಂಡು ಅಣೆಕಟ್ಟು ನಿರ್ಮಾಣದ ಚರ್ಚೆಯನ್ನು ಮುಂದುವರೆಸುತ್ತೇವೆ ಎಂದರು. +ಪ್ರತಿವರ್ಷ ಒಂದು ಟಿಎಂಸಿ ನೀರು ತಗ್ಗುವಷ್ಟು ಹೂಳು ತುಂಬುತ್ತದೆ ಎಂದು ಎಂ.ಬಿ.ಪಾಟೀಲ್‌ ಅವರು ಸಚಿವರಾಗಿದ್ದಾಗಲೇ ವರದಿ ಇತ್ತು. ಈ ಹಿನ್ನೆಲೆಯಲ್ಲಿ ಪರ್ಯಾಯ ಅಣೆಕಟ್ಟಿನ ಬಗ್ಗೆ ಚರ್ಚೆಗಳು ನಡೆದಿವೆ ಎಂದರು.ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಅದು ಈಗಾಗಲೇ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದು, ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. +ಇದೇ ವೇಳೆ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಅಣೆಕಟ್ಟಿನಲ್ಲಿ ಅರ್ಧ ಟಿಎಂಸಿ ನೀರನ್ನು ತಗ್ಗಿಸುವಷ್ಟು ಹೂಳು ಪ್ರತಿವರ್ಷ ತುಂಬುತ್ತದೆ. ತುಂಗಭದ್ರಾ ನಿರ್ಮಿಸಿ 75 ವರ್ಷ ಕಳೆದಿವೆ. 35 ಟಿಎಂಸಿ ನೀರು ನಿಲ್ಲುವಷ್ಟು ಜಾಗದಲ್ಲಿ ಹೂಳು ತುಂಬಿದೆ. ನಮ ಸರ್ಕಾರ ಈ ಬಗ್ಗೆ ಗಮನ ಹರಿಸಿ ಹೆಚ್ಚು ನೀರು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_38_9.txt b/eesanje/url_46_38_9.txt new file mode 100644 index 0000000000000000000000000000000000000000..04a120b6ab5212cc7c0eb479f497d1dc847245cb --- /dev/null +++ b/eesanje/url_46_38_9.txt @@ -0,0 +1,8 @@ +ಲ್ಯಾಟರಲ್‌ ಎಂಟ್ರಿ ಶಿಫಾರಸು ಸಮರ್ಪಕ ಜಾರಿಯಾಗುತ್ತಿಲ್ಲ : ವೀರಪ್ಪ ಮೊಯ್ಲಿ +ನವದೆಹಲಿ,ಆ.21– ನನ್ನ ನೇತತ್ವದ ಎರಡನೇ ಆಡಳಿತ ಸುಧಾರಣಾ ಆಯೋಗವು (ಎಆರ್‌ಸಿ) ಸರಕಾರಿ ಸೇವೆಗಳಿಗೆ ಲ್ಯಾಟರಲ್ ಎಂಟ್ರಿಗೆ ಶಿಫಾರಸು ಮಾಡಿತ್ತು ಎಂದು ಮಾಜಿ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ಒಪ್ಪಿಕೊಂಡಿದ್ದಾರೆ, ಆದರೆ ಪ್ರಸ್ತುತ ಎನ್‌ಡಿಎ ಸರ್ಕಾರ ನಮ ಮಾರ್ಗಸೂಚಿಯನ್ನು ಅನುಸರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. +ಪಕ್ಷಾತೀತ ಮತ್ತು ನಿಷ್ಪಕ್ಷಪಾತವಾಗಿ ಪರಿಣಿತ ಜನರನ್ನು ಉನ್ನತ ಸರ್ಕಾರಿ ಹ್ದುೆಗಳಿಗೆ ನೇಮಕ ಮಾಡಲು ಸರಿಯಾದ ಚೌಕಟ್ಟನ್ನು ಹಾಕುವುದು ಇದರ ಉದ್ದೇಶವಾಗಿದೆ ಎಂದು ಅವರು ಮಾಧ್ಯಮಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. +ಎಆರ್‌ಸಿ 15 ವರದಿಗಳನ್ನು ಸಿದ್ಧಪಡಿಸಿತ್ತು. ಲ್ಯಾಟರಲ್‌ ಎಂಟ್ರಿ ವರದಿಗಳಲ್ಲಿ ಒಂದಾಗಿತ್ತು, ಇದನ್ನು ರಿಫರ್ಬಿಶಿಂಗ್‌ ಪರ್ಸನಲ್‌ ಅಡಿನಿಸ್ಟ್ರೇಷನ್‌ ಎಂದು ಕರೆಯಲಾಯಿತು. ವರದಿಯು ಅಧಿಕಾರಶಾಹಿಯಲ್ಲಿ ಪಾರ್ಶ್ವ ಪ್ರವೇಶಕ್ಕೆ ಬಾಹ್ಯರೇಖೆಗಳು ಮತ್ತು ವಿಧಾನಗಳನ್ನು ಸೂಚಿಸಿದೆ. ಇದು ಹೊಸ ವಿಷಯವಲ್ಲ ಎಂದು ಅವರು ತಿಳಿಸಿದ್ದಾರೆ. +ಡಾ ಮನಮೋಹನ್‌ ಸಿಂಗ್‌ ಮತ್ತು ಮಾಂಟೆಕ್‌ ಸಿಂಗ್‌ ಅಹ್ಲುವಾಲಿಯಾ ಅವರಂತಹ ವ್ಯಕ್ತಿಗಳು ಲ್ಯಾಟರಲ್‌ ಎಂಟ್ರಿ ಮೂಲಕ ವ್ಯವಸ್ಥೆಗೆ ಬಂದರು. ಇನ್ನೂ ಅನೇಕ ಯಶಸ್ಸಿನ ಕಥೆಗಳೂ ಇವೆ. ಯಾವುದೇ ವ್ಯವಸ್ಥಿತ ವಿಧಾನವಿಲ್ಲದಿದ್ದರೂ, ಅದನ್ನು ಅರ್ಹತೆಯ ಮೇಲೆ ಮಾಡಲಾಗಿದೆ ಮತ್ತು ಫಲಿತಾಂಶಗಳು ಲಾಭದಾಯಕವಾಗಿವೆ. +ಆದಾಗ್ಯೂ, ಪ್ರಕ್ರಿಯೆಯನ್ನು ದಾಖಲೆಯಲ್ಲಿ ಹಾಕುವ ಅಗತ್ಯವಿತ್ತು. ಅದನ್ನು ಅಧ್ಯಯನ ಮಾಡುವ ಮತ್ತು ಲ್ಯಾಟರಲ್‌ ಎಂಟ್ರಿಗಾಗಿ ವ್ಯವಸ್ಥೆಯನ್ನು ವಿಕಸನಗೊಳಿಸುವ ಅವಶ್ಯಕತೆಯಿದೆ ಎಂದು ನಾವು ಭಾವಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಇಂತಹ ಏಕೀಕರಣವನ್ನು ಹೆಚ್ಚುವರಿ ಕಾರ್ಯದರ್ಶಿ ಮಟ್ಟದಲ್ಲಿ ಮಾಡಬೇಕು ಎಂದು ಆಡಳಿತ ಸುಧಾರಣಾ ಆಯೋಗವು ಯೋಚಿಸಿದೆ, ಏಕೆಂದರೆ ಇದು ಹೊಸ ನೇಮಕಾತಿಗಳನ್ನು ಅಪೇಕ್ಷಿಸಲು ಮತ್ತು ಕಾರ್ಯದರ್ಶಿ ಶ್ರೇಣಿಯನ್ನು ತಲುಪಲು ಅನುಕೂಲವಾಗುತ್ತದೆ. +ಯುಎಸ್‌‍, ಆಸ್ಟ್ರೇಲಿಯಾ, ಬ್ರಿಟನ್ ಮತ್ತು ಇತರ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ವಿವಿಧ ಮಾದರಿಗಳನ್ನು ಅಧ್ಯಯನ ಮಾಡಿದ ನಂತರ ನಾವು ಇದನ್ನು ಪ್ರಸ್ತಾಪಿಸಿದ್ದೇವೆ. ಭಾರತಕ್ಕೆ ಮಾದರಿಯನ್ನು ತೀರ್ಮಾನಿಸುವ ಮತ್ತು ವಿನ್ಯಾಸಗೊಳಿಸುವ ಮೊದಲು ನಾವು ಎಲ್ಲಾ ಮಾದರಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದೇವೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_39_1.txt b/eesanje/url_46_39_1.txt new file mode 100644 index 0000000000000000000000000000000000000000..decc5bea71e42c7961c29f84af6e4241350cec83 --- /dev/null +++ b/eesanje/url_46_39_1.txt @@ -0,0 +1,18 @@ +ನನ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ : ಹೆಚ್ಡಿಕೆ ಆರೋಪ +ಬೆಂಗಳೂರು,ಆ.21-ರಾಜ್ಯ ಕಾಂಗ್ರೆಸ್ ಸರ್ಕಾರದ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಧ್ವನಿಯೆತ್ತಿದ್ದಕ್ಕಾಗಿ ತಮ್ಮ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದ್ದು, ಅಭಿಯೋಜನೆಗೆ ಅನುಮತಿ ಪಡೆದುಕೊಳ್ಳುವ ಪ್ರಯತ್ನಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ದೂರಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ಆಗ ಬೆಂಬಲ ಕೊಟ್ಟಿದ್ದ ಬಿಜೆಪಿಯ ವಿಧಾನಪರಿಷತ್ ಸದಸ್ಯರೊಬ್ಬರು ತಮ್ಮ ವಿರುದ್ಧ ಗಣಿ ಹಗರಣದ ಆರೋಪ ಮಾಡಿದ್ದರು. ಅದರ ಕುರಿತು ತನಿಖೆ ನಡೆಸಿದ ಲೋಕಾಯುಕ್ತ ಸಂಸ್ಥೆ ಹಲವಾರು ಟ್ರಂಕ್ಗಳಲ್ಲಿ ದಾಖಲೆಗಳನ್ನು ತಂದಿದ್ದನ್ನು ಎಲ್ಲರೂ ಗಮನಿಸಿದ್ದೇವೆ ಎಂದರು. +ಜಂತಕಲ್ ಮೈನಿಂಗ್ ಮತ್ತು ಸಾಯಿ ವೆಂಕಟೇಶ್ವರ ಸಂಸ್ಥೆಗೆ ಗಣಿ ಪರವಾನಗಿ ನೀಡಿದ್ದು ಮತ್ತು ಒಂದೆರೆಡು ಡಿ ನೋಟಿಫಿಕೇಶನ್ ಪ್ರಕರಣಗಳ ಕುರಿತು ತನಿಖೆಗೆ ತಮ್ಮ ಕಾಲಾವಧಿಯಲ್ಲೇ ಆದೇಶ ಹೊರಡಿಸಲಾಗಿತ್ತು. ಇದ್ಯಾವುದೂ ಕಾಂಗ್ರೆಸ್ ಸರ್ಕಾರದ ಕಾಲದಲ್ಲಾದ ತನಿಖೆಗಳಲ್ಲ ಎಂದರು. +ಗಣಿ ಪ್ರಕರಣಗಳ ಕುರಿತು ಲೋಕಾಯುಕ್ತರು ನೀಡುವ ಮೂರು ಮಾಜಿ ಮುಖ್ಯಮಂತ್ರಿಗಳ ಹೆಸರುಗಳು ಇವೆ. ಹಳೆ ಪ್ರಕರಣವನ್ನು ಕೆದಕುವುದರ ಹಿಂದೆ ಕಾಂಗ್ರೆಸ್ನ ದ್ವೇಷದ ರಾಜಕಾರಣ ಅಡಗಿದೆ. +ಸರ್ಕಾರ ರಚನೆಯಾದ ಹೊಸದರಲ್ಲಿ ನಡೆಯುತ್ತಿದ್ದ ವರ್ಗಾವಣೆಯಲ್ಲಿನ ಭ್ರಷ್ಟಾಚಾರದ ವಿರುದ್ಧ ನಾನು ದೊಡ್ಡ ದನಿಯಲ್ಲಿ ಆರೋಪ ಮಾಡಿದ್ದೆ. ಈ ಹಿಂದೆ 2023 ರ ಸೆಪ್ಟೆಂಬರ್ನಲ್ಲಿ ಲೋಕಾಯುಕ್ತ ಎಸ್ಐಟಿ ಅಭಿಯೋಜನೆಗೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಈಗ ಮತ್ತೊಮೆ ಮನವಿ ಸಲ್ಲಿಸಲಾಗಿದೆ ಎಂದು ವಿವರಿಸಿದರು. +ತಮ್ಮ ವಿರುದ್ಧ ಕೇಳಿಬಂದಿದ್ದ 150 ಕೋಟಿ ರೂ.ಗಳ ಹಗರಣ ಹಾಗೂ ಜಂತಕಲ್ ಮೈನಿಂಗ್ಗೆ ಪರವಾನಗಿ ನೀಡಿದ್ದ ಎರಡು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸಾಯಿ ವೆಂಕಟೇಶ್ವರ ಸಂಸ್ಥೆಗೆ ಅನುಮತಿ ನೀಡಿದ್ದ ವಿಚಾರದ ತನಿಖೆಗೆ ಬಾಕಿ ಉಳಿದಿದೆ. 2014 ರಲ್ಲಿ ಇದನ್ನು ಸುಪ್ರೀಂಕೋರ್ಟ್ನಲ್ಲಿ ಮೇಲನವಿ ಸಲ್ಲಿಸಿದೆ. +ಆಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ವಿಶೇಷ ತನಿಖಾ ದಳ ರಚನೆಗೆ ಅವಕಾಶ ನೀಡುವಂತೆ ರಾಜ್ಯಸರ್ಕಾರ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಿದೆ. 2014ರ ಫೆ.3 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಎಸ್.ಎಂ.ಕೃಷ್ಣ ಅವರ ಪ್ರಕರಣದ ಜೊತೆ ಈ ಅರ್ಜಿಯನ್ನು ವಿಚಾರಣೆ ನಡೆಸುವಂತೆ ಆದೇಶಿಸಿತ್ತು ಎಂದರು. +ಇದೇ ಪ್ರಕರಣದಲ್ಲಿ ಎಸ್.ಎಂ.ಕೃಷ್ಣ ಸಲ್ಲಿಸಿದ್ದ ಮೇಲನವಿಯನ್ನು ಪರಿಗಣಿಸಿ ಸುಪ್ರೀಂಕೋರ್ಟ್ ವಿನಾಯಿತಿ ನೀಡಿದೆ. ಧರ್ಮಸಿಂಗ್ ವಿರುದ್ಧವೂ ಕೆಲ ಆರೋಪಗಳಿದ್ದವು ಎಂದು ಹೇಳಿದರು. ನನ್ನನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಬೇಕು ಎಂಬ ಕಾರಣಕ್ಕೆ 2017 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು ಎಂದು ವಿವರಿಸಿದರು. +ಈ ಪ್ರಕರಣದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ನೀಡಿದ್ದ ತಡೆಯಾಜ್ಞೆಯೇ ಮುಂದುವರೆದಿದೆ. ಈ ಪ್ರಕರಣದಲ್ಲಿ ತನಿಖೆಗೆ ಎಸ್ಐಟಿ ನನಗೆ ನೋಟೀಸ್ ನೀಡಿತ್ತು. ನಾನು ನೇರವಾಗಿ ಎಸ್ಐಟಿ ಮುಂದೆ ಹಾಜರಾಗಲು ನಿರ್ಧರಿಸಿದ್ದೆ. ಆದರೆ ತಮ ವಕೀಲರ ಸಲಹೆ ಮೇರೆಗೆ ಜಾಮೀನು ಪಡೆದು ಎಸ್ಐಟಿ ಮುಂದೆ ಹಾಜರಾದೆ. +ಆಗ ಎಸ್ಐಟಿ ಅಧಿಕಾರಿಗಳು ಹೇಳಿದ್ದ ವಿಚಾರ ಎಂದರೆ, ನೀವು ಜಾಮೀನು ಪಡೆಯುವ ಅಗತ್ಯವಿರಲಿಲ್ಲ. ನಾವು ಹೇಳಿಕೆ ಮಾತ್ರ ದಾಖಲಿಸುತ್ತಿದ್ದೆವು ಎಂದಿದ್ದರು. ಅಂದು ಹೇಳಿಕೆ ನೀಡಿ ನಾನು ವಾಪಸ್ ಬಂದೆ. ಅನಂತರ ತನಿಖೆಯ ಅಧಿಕಾರಿ ಕುಮಾರಸ್ವಾಮಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾಗಿ ಕಡತದಲ್ಲಿ ಉಲ್ಲೇಖಿಸಿದ್ದಾರೆ ಎಂದು ಕಿಡಿಕಾರಿದರು. +ಎಸ್ಐಟಿ ತನಿಖೆಗೆ ಅನುಮತಿ ನೀಡುವಾಗ ಸುಪ್ರೀಂಕೋರ್ಟ್ ಪ್ರಕರಣದ ವಿವರಗಳನ್ನು ಕಾಲಕಾಲಕ್ಕೆ ತನಗೆ ನೀಡಬೇಕು ಎಂದು ಸೂಚಿಸಿತ್ತು. ತನಿಖೆ ನಡೆಸಿದವರು ಸುಪ್ರೀಂಕೋರ್ಟ್ಗೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆಯೇ? ಏಕೆ ನೀಡಿಲ್ಲ? ರಾಜ್ಯಪಾಲರ ಮುಂದೆ ಅಭಿಯೋಜನೆಗೆ ಅರ್ಜಿ ಸಲ್ಲಿಸುವ ಅಗತ್ಯವೇನು? ಎಂದು ಪ್ರಶ್ನಿಸಿದರು. +ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಬೇಕು ಎಂದು ಈಗಿನಂತೆ ಆಗಲೂ ಸಂಚುಗಳು ನಡೆದಿದ್ದವು. ಆ ವೇಳೆ ಮುಖ್ಯಮಂತ್ರಿಯವರು ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸಲಹೆಗಾರರನ್ನಾಗಿ ಇಟ್ಟುಕೊಂಡಿದ್ದರು. ಈಗ ಕಾನೂನು ತಜ್ಞರನ್ನು ಜೊತೆಗಿಟ್ಟುಕೊಂಡಿದ್ದಾರೆ. ನನ್ನ ವಿರುದ್ಧ ಆರೋಪಗಳ ಜೊತೆಗೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. +2018 ರ ಜನವರಿಯಲ್ಲಿ ಎಸ್ಐಟಿ ಚಾರ್ಜ್ಶೀಟ್ ಹಾಕಿತ್ತು. ಅನಂತರ ನನ್ನನ್ನೇ ಮುಖ್ಯಮಂತ್ರಿ ಮಾಡಿ ನನ್ನ ಜೊತೆ ಸರ್ಕಾರ ಮಾಡಬೇಕಾದಂತಹ ಪರಿಸ್ಥಿತಿ ಕಾಂಗ್ರೆಸ್ನವರಿಗೆ ಎದುರಾಯಿತು ಎಂದು ಲೇವಡಿ ಮಾಡಿದರು. +ಸಿದ್ದರಾಮಯ್ಯನವರು ನನ್ನದು ತೆರೆದ ಪುಸ್ತಕ. ನಾನು ಮುಖ್ಯಮಂತ್ರಿಯಾಗಿರುವುದನ್ನು ವಿರೋಧಪಕ್ಷಗಳಿಗೆ ಸಹಿಸಲಾಗದೆ ಹೊಟ್ಟೆಕಿಚ್ಚಿನಿಂದ ಆರೋಪ ಮಾಡುತ್ತಿವೆ ಎಂದು ದಿನನಿತ್ಯ ಭಜನೆ ಮಾಡುತ್ತಿದ್ದಾರೆ. ನೀವು ಸರಿ ಇದ್ದರೆ ವಿರೋಧಪಕ್ಷದವರು ಏನು ಮಾಡುತ್ತಾರೆ. ಮುಖ್ಯಮಂತ್ರಿ ವಿರುದ್ಧ ಲೋಕಾಯುಕ್ತದಲ್ಲಿ 61 ಪ್ರಕರಣಗಳು ಭ್ರಷ್ಟಾಚಾರ, ಕರ್ತವ್ಯ ಲೋಪ ಸೇರಿ ವಿವಿಧ ಪ್ರಕರಣಗಳು ದಾಖಲಾಗಿವೆ. +ಅವುಗಳಲ್ಲಿ 50 ಪ್ರಕರಣಗಳಲ್ಲಿ ಇನ್ನೂ ತನಿಖೆಯೇ ಶುರುವಾಗಿಲ್ಲ. ತಮನ್ನು ತಾವು ಪ್ರಶ್ನೆ ಮಾಡಿಕೊಳ್ಳಲು ಲೋಕಾಯುಕ್ತದ ನರ ಕಿತ್ತು ಹಾಕಿ ಸಿದ್ದರಾಮಯ್ಯ ಅವರು ಎಸಿಬಿ ರಚನೆ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದ್ದರು. +2011-12ನೇ ಸಾಲಿನ ಪ್ರಕರಣವನ್ನು ಈಗ ಕೆದಕಿಕೊಂಡು ಕುಳಿತಿದ್ದಾರೆ. 2018 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಎರಡು ಸೆಕೆಂಡಿನಲ್ಲಿ ಮುಚ್ಚಿಹಾಕಿಸಬಹುದಿತ್ತು. ಸಿದ್ದರಾಮಯ್ಯ ಅವರಂತೆ ನಾನು ಸಂಖ್ಯಾಬಲವನ್ನು ಬಳಸಿಕೊಂಡು ರಕ್ಷಣೆ ಪಡೆಯುವ ಪ್ರಯತ್ನ ಮಾಡುವುದಿಲ್ಲ ಎಂದರು. +ಕಳೆದೆರಡು ದಿನಗಳಿಂದ ಮತ್ತೊಂದು ಹೊಸ ಪ್ರಕರಣವನ್ನು ತೆರೆಯಲು ಸಭೆಗಳಾಗಿವೆ. ಡಿವೈಎಸ್ಪಿ ಬಸವರಾಜು ಮುಗ್ಧಂ ಎಂಬುವರು ಇದನ್ನು ನನಗೆ ಬಿಟ್ಟುಕೊಡಿ, ನೋಟೀಸ್ ಕೊಟ್ಟು ಕುಮಾರಸ್ವಾಮಿಯವರನ್ನು ಕರೆಸಿ ಮುಜುಗರ ಉಂಟುಮಾಡುತ್ತೇನೆ ಎಂದಿದ್ದಾರೆ. ಇಂತಹುದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_39_10.txt b/eesanje/url_46_39_10.txt new file mode 100644 index 0000000000000000000000000000000000000000..0e8836a924388c631066a9007d5a4fa13351a9e3 --- /dev/null +++ b/eesanje/url_46_39_10.txt @@ -0,0 +1,5 @@ +ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದ ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ +ಬೆಂಗಳೂರು,ಆ.20- ಕೋರಮಂಗಲದ ಮಂಗಳ ಜಂಕ್ಷನ್‍ನಲ್ಲಿ ಕಳೆದ 17ರ ಮಧ್ಯರಾತ್ರಿ ಎರಡು ಆಟೋಗಳಿಗೆ ಹಾಗೂ ಬೈಕ್‍ಗೆ ಡಿಕ್ಕಿ ಹೊಡೆದು ಜಖಂಗೊಳಿಸಿದ್ದು ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆ ವಿದ್ಯಾರ್ಥಿನಿ ಚಾಲನೆ ಮಾಡುತ್ತಿದ್ದ ಕಾರು ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ. ಕಳೆದ ಶನಿವಾರ ಮಧ್ಯರಾತ್ರಿ ಕಾರೊಂದು ಯೂಟರ್ನ್ ಪಡೆದುಕೊಳ್ಳುವ ವೇಳೆ ಮಂಗಳ ಜಂಕ್ಷನ್‍ನಲ್ಲಿ ನಿಯಂತ್ರಣ ತಪ್ಪಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು, ಕಾರು ಚಾಲನೆ ಮಾಡುತ್ತಿದ್ದವರು ವಾಹನ ನಿಲ್ಲಿಸದೆ ಮುಂದೆ ಹೋಗುತ್ತಿದ್ದರು. +ತಕ್ಷಣ ಇದನ್ನು ಗಮನಿಸಿದ ಆಟೋ ಚಾಲಕ ಹಾಗೂ ಬೈಕ್ ಸವಾರ ಕಾರನ್ನು ಹಿಂಬಾಲಿಸಿಕೊಂಡು ಹೋಗಿ ತಡೆದು ನಿಲ್ಲಿಸಿದ್ದಾರೆ. ಆ ವೇಳೆ ಕಾರಿನಲ್ಲಿದ್ದ ಯುವಕ-ಯುವತಿ ಜೊತೆ ಆಟೋ ಚಾಲಕ ಜಗಳವಾಡಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಅದೇ ಸಂದರ್ಭದಲ್ಲಿ ಈ ರಸ್ತೆಯಲ್ಲಿ ಬಂದ ಹೊಯ್ಸಳ ಪೊಲೀಸರು ಗುಂಪು ಸೇರಿರುವುದು ಗಮನಿಸಿ ಸಮೀಪ ಹೋಗಿ ಇಬ್ಬರನ್ನು ಸಮಾಧಾನಪಡಿಸಿ ಕಳುಹಿಸುವಷ್ಟರಲ್ಲಿ ಇತ್ತ ಕಾರು ಚಾಲನೆ ಮಾಡುತ್ತಿದ್ದ ವಿದ್ಯಾರ್ಥಿನಿ ತಪ್ಪಿಸಿಕೊಳ್ಳಲು ಕಾರಿನಿಂದ ಇಳಿದು ಅದೇ ಮಾರ್ಗದಲ್ಲಿ ಬಂದ ಬೈಕ್ ಸವಾರನಿಗೆ ಡ್ರಾಪ್ ಕೇಳಿದ್ದಾಳೆ. +ನಂತರ ಡ್ರಾಪ್ ಕೊಡುವ ನೆಪದಲ್ಲಿ ಕೊರಿಯೊಗ್ರಾಫರ್ ಆಕೆಯನ್ನು ನಿರ್ಜನಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆಟೋ ಜಖಂಗೊಂಡ ಬಗ್ಗೆ ಆಟೋ ಚಾಲಕ ಅಂದೇ ಆಡಿಗೋಡಿ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರು ಯಾರದ್ದು? ಯಾರು ಕಾರು ಚಲಾಯಿಸುತ್ತಿದ್ದರು? ಎಂಬ ಬಗ್ಗೆ ತನಿಖೆ ಕೈಗೊಂಡಾಗ ಆ ಕಾರು ಸಂತ್ರಸ್ತೆಯ ಸ್ನೇಹಿತನದು. ಅಂದು ಕಾರನ್ನು ಆಕೆಯೇ ಚಾಲನೆ ಮಾಡುತ್ತಿದುದ್ದಾಗಿ ಗೊತ್ತಾಗಿದೆ. +ಕಾರಿನ ಮಾಲೀಕ ಹಾಗೂ ಸಂತ್ರಸ್ತೆ ಸ್ನೇಹಿತನಿಂದ ಹೇಳಿಕೆ ಪಡೆದುಕೊಂಡಿರುವ ಆಡುಗೋಡಿ ಸಂಚಾರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_39_11.txt b/eesanje/url_46_39_11.txt new file mode 100644 index 0000000000000000000000000000000000000000..210f4fcc141cccdaa72666cdb1ba90881215cd1b --- /dev/null +++ b/eesanje/url_46_39_11.txt @@ -0,0 +1,5 @@ +ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ +ಬೆಂಗಳೂರು,ಆ.20- ಶ್ರೀ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಪ್ರಯುಕ್ತ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಬೆಳಗಿನ ಜಾವ ಸುಪ್ರಭಾತ ನಾದಸ್ವರ ವಾದ್ಯದೊಂದಿಗೆ ಪ್ರಾರಂಭವಾಯಿತು.ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅರ್ಚಕರಿಂದ ವಿಶೇಷವಾಗಿ ಹಾಲು (ಮೊಸರು) ಮಜ್ಜಿಗೆ, ತುಪ್ಪ, ಜೇನುತುಪ್ಪ, ಸಕ್ಕರೆ ಎಳೆನೀರು, ಇತ್ಯಾದಿ ನಾನಾ ಬಗೆಯ ಫಲಗಳಿಂದ ಫಲ ಪಂಚಾಮೃತ ಅಭಿಷೇಕವನ್ನು ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣದೊಂದಿಗೆ ನೆರವೇರಿಸಲಾಯಿತು. +ನಂತರ ಶ್ರೀ ಮಠದ ವತಿಯಿಂದ ಆರ್.ಕೆ. ವಾದಿಂದ್ರಾಚಾರ್ಯರು, ಜಿ.ಕೆ. ಆಚಾರ್ಯರು ಮತ್ತು ಶ್ರೀ ನಂದಕಿಶೋರಾಚಾರ್ಯರು ಲೋಕ-ಕಲ್ಯಾಣಕ್ಕಾಗಿ ಗುರು ರಾಯರಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಸ್ವರ್ಣ ಸಿಂಹಾಸನದಲ್ಲಿ ಶ್ರೀ ರಾಯರಿಗೆ ಪಾದಪೂಜೆ ನೆರವೇರಿಸಿದರು.ಭಕ್ತರು ಕೂಡ ಸಾಮೂಹಿಕವಾಗಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಪಾದಪೂಜೆ ಫಲ ಸಮರ್ಪಣೆ ಸಮರ್ಪಿಸಿದರು, ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಸುಗಂಧ ದ್ರವ್ಯ ನಾನಾ ವಿಧವಾದ ಪುಷ್ಪಗಳಿಂದ ಅಲಂಕರಿಸಲಾಯಿತು. +ಶ್ರೀ ಮಠಕ್ಕೆ ಆಗಮಿಸುವ ಸಹಸ್ರಾರು ಭಕ್ತರಿಗೆ ಅನ್ನಸಂತರ್ಪಣೆಯು ನೆರವೇರಿತು. ಗುರು ರಾಯರ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಅಚ್ಚುಕಟ್ಟಾದ ಕ್ಯೂ ವ್ಯವಸ್ಥೆ, ಪ್ರಸಾದಕ್ಕೂ ಕ್ಯೂ ವ್ಯವಸ್ಥೆ, ಹಿರಿಯ ನಾಗರಿಕ ವಯೋವೃದ್ಧರಿಗೂ ಪ್ರತ್ಯೇಕ ಕ್ಯೂ ವ್ಯವಸ್ಥೆಯನ್ನು ಮಾಡಲಾಗಿತ್ತು. +ಈ ದಿನ ಸಂಜೆ ಪ್ರವಚನ ವಿಶೇಷವಾಗಿ ರಜತ – ಸ್ವರ್ಣ -ಲೇಪಿತ ಗಜವಾಹನ ಉತ್ಸವದೊಂದಿಗೆ ಸಂಜೆ 7 ಕ್ಕೆ ದಾಸ-ಲಹರಿ ವಿದ್ವಾನ್- ಪ್ರಾದೇಶಾಚಾರ್ಯ ವೃಂದದಿಂದ ಗಾಯನ ಕಾರ್ಯಕ್ರಮವು ಜರುಗಲಿದೆ. ಈ ಎ¯್ಲÁ ಕಾರ್ಯಕ್ರಮಗಳು ರಾಯರ ಅನುಗ್ರಹ ಮತ್ತು ಭಕ್ತರ, ಸ್ವಯಂ ಸೇವಕರ ಸಿಬ್ಬಂದಿಗಳ, ಸಹಕಾರ ಹಾಗೂ ಮಂತ್ರಾಲಯ ಶ್ರೀಗಳ ಆಶೀರ್ವಾದದಿಂದ, ಆರ್.ಕೆ.ವಾದಿಂದ್ರಾಚಾರ್ಯರ ನೇತೃತ್ವದಲ್ಲಿ ನೆರವೇರುತ್ತಿದೆ. \ No newline at end of file diff --git a/eesanje/url_46_39_12.txt b/eesanje/url_46_39_12.txt new file mode 100644 index 0000000000000000000000000000000000000000..16808fcd59b504f95019963ccdb358f0919d5649 --- /dev/null +++ b/eesanje/url_46_39_12.txt @@ -0,0 +1,8 @@ +ಇನ್ನು ಮೇಲೆ ಲಿಫ್ಟಿಕ್ ಹಾಕುವವರಿಗೆ ಟಿಕೆಟ್ ಕೊಡುವುದಿಲ್ಲ +ಬೆಂಗಳೂರು,ಆ.20- ನಾವು ಜನಪರ ವಾಗಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಇಲ್ಲಸಲ್ಲದ ಸುಳ್ಳು ಆರೋಪಗಳನ್ನು ಬಿಜೆಪಿ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ರಾಜೀವ್ ಗಾಂ„ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಇಬ್ಬರು ನಾಯಕರ ಕೊಡುಗೆಗಳನ್ನು ಸ್ಮರಿಸಿದರು. +ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಬಡವರ ವಿರೋಸಿದ್ದರಾಮಯ್ಯಯಾಗಿವೆ. ನಾವು ಸಮಾನತೆ ತರುವ ನಿಟ್ಟಿನಲ್ಲಿ ಹೋರಾಟ ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜೀವ್‍ಗಾಂಸಿದ್ದರಾಮಯ್ಯ ಪ್ರಧಾನಿಯಾಗಿದ್ದಾಗ ದೇಶದ ಭವಿಷ್ಯ ರೂಪಿಸುವ ಯುವಕ-ಯುವತಿಯರಿಗೆ ಹಕ್ಕು ನೀಡಿದರು. ಸಾಮಾಜಿಕ ನ್ಯಾಯದ ಪರವಾಗಿದ್ದು ಎಲ್ಲರಿಗೂ ಸಮಾನ ಅವಕಾಶ ದೊರಕಿಸಬೇಕು ಎಂಬುದು ಅವರ ಆಶಯವಾಗಿತ್ತು. ಯಾವುದೇ ಜಾತಿ, ಧರ್ಮ, ಪ್ರಾದೇಶಿಕತೆ ತಾರತಮ್ಯವಿಲ್ಲದೆ ಎಲ್ಲರೂ ಭಾರತೀಯರು ಎಂಬ ಒಗ್ಗಟ್ಟಿನ ಅಗತ್ಯವಿದೆ ಎಂಬುದು ರಾಜೀವ್‍ಗಾಂಸಿದ್ದರಾಮಯ್ಯ ಅವರ ಕನಸು. ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಜೊತೆಗೆ ಸಂವಿಧಾನ ತಿದ್ದುಪಡಿ ತರುವ ಮೂಲಕ ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿ ನೀಡಿದರು ಎಂದು ಹೇಳಿದರು. +ಬಡವರು, ದಲಿತರು ಹಾಗೂ ಅಲ್ಪಸಂಖ್ಯಾತರ ಪರವಾಗಿ ಬಿಜೆಪಿಯವರು ಈ ವರ್ಗಗಳ ವಿರುದ್ಧವಾಗಿದ್ದು, ಶೋಷಿತರು, ಅವಕಾಶವಂಚಿತರು ಯಥಾಸ್ಥಿತಿಯಲ್ಲಿ ಉಳಿಯಬೇಕು ಎಂಬ ಧೋರಣೆ ಹೊಂದಿದ್ದಾರೆ. ಬಾಯಿ ಮಾತಿಗೆ ಬಿಜೆಪಿಯವರು ಅವಕಾಶ ವಂಚಿತರ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಕ್ರಿಯೆಯಲ್ಲಿ ಅವಕಾಶ ವಂಚಿತರ ಪರವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.ದೇಶದಲ್ಲಿ ಇಂದು ಸಂಪರ್ಕ ಕ್ರಾಂತಿಯಾಗುತ್ತಿದೆ. ಅದಕ್ಕೆ ರಾಜೀವ್ ಗಾಂಸಿದ್ದರಾಮಯ್ಯಯವರು ಕಾರಣ. ಯುವಶಕ್ತಿಯ ಮೇಲೆ ಅವರಿಗೆ ಅಪಾರವಾದ ನಂಬಿಕೆಯಿತ್ತು ಎಂದರು. +ರಾಜೀವ್‍ಗಾಂಸಿದ್ದರಾಮಯ್ಯ ಐದು ವರ್ಷ ಮಾತ್ರ ಪ್ರಧಾನಿಯಾಗಿದ್ದರು. ಮತ್ತಷ್ಟು ದಿನ ಅವರು ಜೀವಂತವಾಗಿದ್ದು, ಅಸಿದ್ದರಾಮಯ್ಯಕಾರದಲ್ಲಿ ಮುಂದುವರೆದಿದ್ದರೆ ಮಹತ್ವದ ಬದಲಾವಣೆಗಳಾಗುತ್ತಿದ್ದವು. ಬಹಳ ಚಿಕ್ಕ ವಯಸ್ಸಿನಲ್ಲೇ ಅವರನ್ನು ಹತ್ಯೆ ಮಾಡಲಾಯಿತು ಎಂದು ವಿಷಾದಿಸಿದರು. +ದೇವರಾಜ ಅರಸು ಅವರನ್ನು ಸಾಮಾಜಿಕ ನ್ಯಾಯದ ಅ„ಕಾರ ಎಂದು ಕರೆಯಲಾಗುತ್ತದೆ. ಅವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಟ್ಟರು. ಸಮಾಜದ ಕಟ್ಟಕಡೆಯ ವರ್ಗಗಳಿಗೆ ಶಿಕ್ಷಣದ ಹಕ್ಕು ನೀಡಿದರು. ಅಶಕ್ತ ಸಮುದಾಯಗಳಿಗೆ ವಿಧಾನಸಭೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಮಾಡಿಕೊಟ್ಟರು. ದೇವರಾಜ ಅರಸು ಪಕ್ಷದ ಅಧ್ಯಕ್ಷರಾಗಿದ್ದಾಗ ಜಾ-Àರ್‍ಶರೀ-ï ಅವರಿಗೆ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದರು. ಆಗ ಕಾಂಗ್ರೆಸ್ ನಾಯಕಿ ನಾಗರತ್ನಮ್ಮ ಅವರು ಜಟಕಾ ಓಡಿಸುವವರಿಗೆ ಟಿಕೆಟ್ ಕೊಟ್ಟಿದ್ದೀರ ಎಂದು ಅರಸು ಅವರನ್ನು ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ದೇವರಾಜ ಅರಸು, ಇನ್ನು ಮೇಲೆ ಲಿಫ್ಟಿಕ್ ಹಾಕುವವರಿಗೆ ಟಿಕೆಟ್ ಕೊಡುವುದಿಲ್ಲ, ಜಟಕಾ ಓಡಿಸುವವರಿಗೆ, ಕ್ಷೌರ ಮಾಡುವವರಿಗೆ ಅವಕಾಶ ಕೊಡುತ್ತೇವೆ ಎಂದು ಹೇಳಿದ್ದು ವರದಿಯಾಗಿತ್ತು ಎಂದರು. +ಅರಸು ಕಾಲದಲ್ಲಿ ಉಳುವವನೇ ಭೂಮಿ ಒಡೆಯ, ಮಲ ಹೊರುವ ಪದ್ಧತಿ ನಿಷೇಧ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದರು ಎಂದು ಹೇಳಿದರು. ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿ, ಈ ಹಿಂದೆ ಬಿಜೆಪಿಗರು 2-ಜಿ ಹಗರಣವನ್ನು ಭಾರಿ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮಾಡಿದರು. ಈಗ 5-ಜಿ ಹರಾಜಿನಲ್ಲಿ ನಿಗದಿತ ಆದಾಯ ಬಂದಿಲ್ಲ. 60 ಸಾವಿರ ಕೋಟಿ ರೂ. ಕಿಕ್‍ಬ್ಯಾಕ್ ಹೋಗಿದೆ. ಇದರ ಬಗ್ಗೆ ಏಕೆ ತನಿಖೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. +ಮಾಜಿ ಸಚಿವೆ ಮೋಟಮ್ಮ, ಬಿಜೆಪಿಯವರು ತಾನು ಕಳ್ಳ, ಪರರನ್ನು ನಂಬ ಎಂಬಂತೆ ವರ್ತಿಸುತ್ತಿದ್ದಾರೆ. ಅವರ ಕಾಲಾವಧಿಯಲ್ಲಿ ಸಾಕಷ್ಟು ಹಗರಣಗಳು ನಡೆದಿದ್ದವು. ಅದನ್ನು ಮುಚ್ಚಿಕೊಳ್ಳಲು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ವಿಧಾನಪರಿಷತ್‍ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ್, ರಾಜೀವ್‍ಗಾಂಧಿಯವರಂತೆ ರಾಹುಲ್‍ಗಾಂಧಿ ಕೂಡ ಕಾರ್ಯಕರ್ತರ ಹಿತಚಿಂತನೆ ಮಾಡುತ್ತಾರೆ. ಮುಂದೊಂದು ದಿನ ಈ ದೇಶಕ್ಕೆ ರಾಹುಲ್‍ಗಾಂಧಿ ಪ್ರಧಾನಿಯಾಗಿಯೇ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವರಾದ ಈಶ್ವರ್‍ಖಂಡ್ರೆ, ಕೆ.ಜೆ.ಜಾರ್ಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_39_2.txt b/eesanje/url_46_39_2.txt new file mode 100644 index 0000000000000000000000000000000000000000..9b0f26de830bd12b33d63a488af801d9a98cee9b --- /dev/null +++ b/eesanje/url_46_39_2.txt @@ -0,0 +1,8 @@ +ಬಿಜೆಪಿ ಭಿನ್ನಮತ ಸರಿಪಡಿಸಿಕೊಳ್ಳಲು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದೆ : ಡಿಕೆಶಿ +ಬೆಂಗಳೂರು,ಆ.21-ಬಿಜೆಪಿಯವರು ತಮ್ಮ ಮೇಲಿನ ಭಿನ್ನಮತವನ್ನು ಸರಿಪಡಿಸಿಕೊಳ್ಳಲು ತಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆಯ ನೆಪ ಹೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಟ್ಟ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. +ಬಿಜೆಪಿಯವರ ಪ್ರತಿಭಟನೆಯಲ್ಲಿ ಹುರುಳಿಲ್ಲ. ಈ ಮೊದಲು ಅವರು ನಡೆಸಿದ ಪಾದಯಾತ್ರೆಗೆ ನಾವು ಸೂಕ್ತ ಉತ್ತರ ಕೊಟ್ಟಿದ್ದೇವೆ. ನಾಳೆಯೂ ಪ್ರತಿಭಟನೆ ಮಾಡಲಿ, ನಾವು ಬೇಡ ಎನ್ನುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಬಿರುಕುಗಳು ಹೆಚ್ಚಿವೆ. ಅದನ್ನು ಸರಿಪಡಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದರು. +ಉತ್ತರ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಆಲಮಟ್ಟಿ ತುಂಬಿ ತುಳುಕುತ್ತಿದೆ. ಇಂದು ಅಲ್ಲಿಗೆ ಮುಖ್ಯಮಂತ್ರಿಗಳೊಂದಿಗೆ ತೆರಳಿ ಬಾಗಿನ ಅರ್ಪಿಸಲಾಗುವುದು ಎಂದು ಹೇಳಿದರು.ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯ ಕೊರತೆಯಿದೆ. ಕೆರೆಗಳು ತುಂಬಿಲ್ಲ. ಬೇರೆ ಕಡೆ ಉತ್ತಮ ಮಳೆಯ ವಾತಾವರಣವಿದೆ ಎಂದರು. +ತುಂಗಭದ್ರಾ ಅಣೆಕಟ್ಟಿನಲ್ಲಿ 19ನೇ ಕ್ರಸ್ಟ್ಗೇಟ್ ಒಡೆದು ಹೋದಾಗ ವಿರೋಧಪಕ್ಷಗಳು ವ್ಯಾಪಕ ಟೀಕೆ ಮಾಡಿದ್ದವು. ನಾವು ಪ್ರತಿಕ್ರಿಯಿಸಲಿಲ್ಲ. ಹಗಲು-ರಾತ್ರಿ ಕಷ್ಟಪಟ್ಟು ಸಿಬ್ಬಂದಿಗಳು, ಅಧಿಕಾರಿಗಳು ಕೆಲಸ ಮಾಡಿ ಗೇಟ್ ದುರಸ್ತಿ ಮಾಡಿದ್ದಾರೆ. ಇಡೀ ದೇಶವೇ ಈ ಕೆಲಸವನ್ನು ಗಮನಿಸುತ್ತಿತ್ತು ಎಂದರು. +ತುಂಗಭದ್ರಾ ಅಣೆಕಟ್ಟು ಕೂಡ ತುಂಬುತ್ತದೆ. ಆ ಬಳಿಕ ನಾನು ಮತ್ತು ಮುಖ್ಯಮಂತ್ರಿಯವರು ಹೊಗಿ ಬಾಗಿನ ಅರ್ಪಿಸುತ್ತೇವೆ. ಗೇಟ್ ದುರಸ್ತಿಗೆ ಶ್ರಮಿಸಿದವರನ್ನು ಸನಾನಿಸುತ್ತೇವೆ ಎಂದು ಹೇಳಿದರು. +ಇದೇ ವೇಳೆ ರಾಜ್ಯದ ಎಲ್ಲಾ ಜಲಾಶಯಗಳ ಸುರಕ್ಷತೆ ಅಧ್ಯಯನಕ್ಕಾಗಿ ತಾಂತ್ರಿಕ ತಂಡವೊಂದನ್ನು ರಚಿಸಿ ಕಳುಹಿಸಲಾಗಿದೆ ಎಂದರು.ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರಿಗೆ ಲೋಕಾಯುಕ್ತ ಸಂಸ್ಥೆ ಮತ್ತೊಮೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಲು ಡಿ.ಕೆ.ಶಿವಕುಮಾರ್ ನಿರಾಕರಿಸಿ ನಿರ್ಗಮಿಸಿದರು. \ No newline at end of file diff --git a/eesanje/url_46_39_3.txt b/eesanje/url_46_39_3.txt new file mode 100644 index 0000000000000000000000000000000000000000..362878343a2911c89407eba4b09cce08c5f52076 --- /dev/null +++ b/eesanje/url_46_39_3.txt @@ -0,0 +1,5 @@ +ಬೀಗರ ಬಾಡೂಟ ಸೇವಿಸಿದ್ದ 24 ಜನ ವಾಂತಿ, ಭೇದಿಯಿಂದ ಅಸ್ವಸ್ಥ +ತುಮಕೂರು,ಆ,21:ಬೀಗರೂಟದಲ್ಲಿ ಬಾಡೂಟ ಸೇವಿಸಿ ಗ್ರಾಮಕ್ಕೆ ಮರಳಿದ್ದ ಸುಮಾರು 24 ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ.ಅಸ್ವಸ್ಥಗೊಂಡವರು ಬೆಂಗಳೂರು ಸೇರಿ ಪಾವಗಡ, ಹಿಂದೂಪುರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಕಳೆದ ಆ.14 ಮತ್ತು 15ರಂದು ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿತ್ತು. ಮರು ದಿನ ಆ.16ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಆಯೋಜಿಸಲಾಗಿತ್ತು. ಊಟ ಮಾಡಿ ವಾಪಸ್‌‍ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. +24 ಮಂದಿ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ಅಸ್ವಸ್ಥಗೊಂಡವರು ಹೊಟ್ಟೆ ನೋವು, ಭೇದಿಯಾಗಿ ಮರುದಿನ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ನಾಗೇನಹಳ್ಳಿ ತಾಂಡಾಗೆ ಉಪವಿಭಾಗಧಿಕಾರಿ ತಹಶೀಲ್ದಾರ್‌ , ಡಿಎಚ್‌ಓ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದದೆ. ಸದ್ಯ ಕಾರ್ಯಕ್ರಮದಲ್ಲಿ ನೀಡಿದ ನೀರು, ಊಟದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆದಿದೆ \ No newline at end of file diff --git a/eesanje/url_46_39_4.txt b/eesanje/url_46_39_4.txt new file mode 100644 index 0000000000000000000000000000000000000000..4913a5b750979f5c0edebc79fcf97bceec333332 --- /dev/null +++ b/eesanje/url_46_39_4.txt @@ -0,0 +1,5 @@ +“ದುಷ್ಮನ್ ಕಹಾ ಹೈ ಅಂದ್ರೆ, ಕಾಂಗ್ರೆಸ್ ಪಾರ್ಟಿ ತುಂಬಾ ಹೈ” : ಸಿದ್ದರಾಮಯ್ಯನವರೇ ಹುಷಾರು +ಬೆಂಗಳೂರು,ಆ.21-ದುಷ್ಮನ್ ಕಹಾ ಹೈ ಅಂದರೆ, ಕಾಂಗ್ರೆಸ್‌‍ ಪಾರ್ಟಿ ತುಂಬಾ ಹೈ ಎನ್ನುವ ಮೂಲಕ ನಿಮ ಪಕ್ಷದಲ್ಲೇ ನಿಮಗೆ ಹಿತಶತ್ರುಗಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಸಿದ್ದಾರೆ. +ಕಾಂಗ್ರೆಸ್‌‍ನಲ್ಲಿ ಮುಂದಿನ ಸಿಎಂ ಬಗ್ಗೆ ಕೆಲವರಿಂದ ಒಳ ಲೆಕ್ಕಾಚಾರ ಇದೆ ಎಂಬರ್ಥದಲ್ಲಿ ಎಕ್‌್ಸನಲ್ಲಿ ಪೋಸ್ಟ್‌ ಹಾಕಿರುವ ಅಶೋಕ್‌, ಸಿಎಂ ಸಿದ್ದರಾಮಯ್ಯ ಅವರಿಗೆ ನಮ ಸಂಪೂರ್ಣ ಬೆಂಬಲ ಇದೆ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್‌‍ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. +ದುಷ್ಮನ್ ಕಹಾ ಹೈ ಅಂದ್ರೆಕಾಂಗ್ರೆಸ್ ಪಾರ್ಟಿ ತುಂಬಾ ಹೈಸಿಎಂ@siddaramaiahನವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಅಂತ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ಬಹುತೇಕ ಕಾಂಗ್ರೆಸ್ ನಾಯಕರು ಅಂತರಂಗದಲ್ಲಿ ಬೇರೆಯದೇ ಲೆಕ್ಕಾಚಾರ ಹಾಕುತ್ತಿದ್ದಾರೆ.ಸಿಎಂ@siddaramaiahನವರೇ, ನಿಮ್ಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ…../HJgCdZQ1S8 +ಸಿಎಂ ಸಿದ್ದರಾಮಯ್ಯನವರೇ, ನಿಮ ಬೆನ್ನಿಗೆ ನಿಲ್ಲುತ್ತೇವೆ ಎನ್ನುತ್ತಲೇ ಬೆನ್ನಿಗೆ ಚೂರಿ ಹಾಕುವ ಹಿತಶತ್ರುಗಳು ನಿಮ ಪಕ್ಷದಲ್ಲೇ ಬಹಳ ಮಂದಿ ಇದ್ದಾರೆ. ಇಡೀ ರಾಜ್ಯ ತಮ ರಾಜೀನಾಮೆಗಾಗಿ ಕಾತುರದಿಂದ ಎದುರು ನೋಡುತ್ತಿದೆ. ಕನ್ನಡಿಗರ ತಾಳೆ ಪರೀಕ್ಷೆ ಮಾಡಬೇಡಿ. ಆದಷ್ಟು ಬೇಗ ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_39_5.txt b/eesanje/url_46_39_5.txt new file mode 100644 index 0000000000000000000000000000000000000000..9550de7f20b3a8e48d4ec8a5405607a06ea26629 --- /dev/null +++ b/eesanje/url_46_39_5.txt @@ -0,0 +1,4 @@ +ಚಾರ್ಮುಡಿ ಘಾಟಿಯಲ್ಲಿ ಧಾರಾಕಾರ ಮಳೆ, ಪ್ರಯಾಣಿಕರು ಕಂಗಾಲು +ಚಿಕ್ಕಮಗಳೂರು,ಆ.21– ಚಾರ್ಮುಡಿ ಘಾಟಿಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿಯುತ್ತಿದ್ದು, ರಸ್ತೆಗಳ ಮೇಲೆ ನೀರು ಹರಿಯುತ್ತಿದೆ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿಯಲ್ಲಿ ಮಳೆ ಬೀಳುತ್ತಿದ್ದು ಧಾರಾಕಾರ ಮಳೆ ಅಬ್ಬರಕ್ಕೆ ಪ್ರಯಾಣಿಕರು ಕಂಗಾಲಾಗಿದ್ದಾರೆ. +ಇತ್ತೀಚಿನ ವರ್ಷಗಳಲ್ಲಿ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಯಲ್ಲಿ ಕಾಣದಂತ ರಣ ಮಳೆಯಾಗಿದ್ದು ರಸ್ತೆಯಲ್ಲಿ 2 ಅಡಿ ನೀರು ಹರಿಯುತ್ತಿದೆ.ಮಳೆ ಹಾಗೂ ಮಳೆ ನೀರಿನ ಮಧ್ಯೆ ವಾಹನ ಚಲಾಯಿಸುವುದು ಚಾಲಕರಿಗೆ ಸವಾಲಾಗಿದೆ. +ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಕೆಸರು ಮಿಶ್ರಿತ ನೀರಿನಿಂದ ರಸ್ತೆಯೇ ಕಾಣದಂತಾಗಿದೆ.ಹೋಗಿ-ಬರುತ್ತಿರುವ ವಾಹನಗಳ ಚಾಲಕರು ಬೆಳ್ತಂಗಡಿ-ಕೊಟ್ಟಿಗೆಹಾರದಲ್ಲಿ ಚಾಲಕರಿಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. \ No newline at end of file diff --git a/eesanje/url_46_39_6.txt b/eesanje/url_46_39_6.txt new file mode 100644 index 0000000000000000000000000000000000000000..2b81a3df1844faba2d03b0dd7efb44478425a6fb --- /dev/null +++ b/eesanje/url_46_39_6.txt @@ -0,0 +1,8 @@ +ಅರಮನೆಯತ್ತ ದಸರಾ ಗಜಪಡೆಯ ಮೊದಲ ತಂಡ +ಹುಣಸೂರು, ಆ.21- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ಗಜಪಡೆ ಇಂದು ಮೈಸೂರಿನತ್ತ ಹೆಜ್ಜೆ ಹಾಕಿವೆ.ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಲ್ಲಿ ಇಂದು ಬೆಳಿಗ್ಗೆ ತುಲಾ ಲಗ್ನದಲ್ಲಿ ಅರಮನೆ ಪುರೋಹಿತರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್‌.ಸಿ. ಮಹದೇವಪ್ಪ, ಈಶ್ವರ್‌ಖಂಡ್ರೆ, ವೆಂಕಟೇಶ್‌, ಶಾಸಕರಾದ ಅನಿಲ್‌ಚಿಕ್ಕಮಾಧು, ಹರೀಶ್‌ಗೌಡ, ಮುಡಾ ಅಧ್ಯಕ್ಷ ಮರೀಗೌಡ, ರಾಜ್ಯ ಮಹಿಳೆ ಅಧ್ಯಕ್ಷೆ ಪುಷ್ಪಾ ಅಮರ್‌ನಾಥ್‌ ಅವರ ಸಮುಖದಲ್ಲಿ ಗಜಪಡೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಪಯಣಕ್ಕೆ ಚಾಲನೆ ನೀಡಿದರು. +ಗಜಪಡೆಯಲ್ಲಿ ಕ್ಯಾಪ್ಟನ್‌ ಅಭಿಮನ್ಯು(58), ವರಲಕ್ಷ್ಮಿ(67), ಧನಂಜಯ(43), ಗೋಪಿ(41), ಭೀಮ(24), ಲಕ್ಷ್ಮಿ(53), ಕಂಜನ್‌(25), ರೋಹಿಣಿ(22) ಹಾಗೂ ಏಕಲವ್ಯ(38) ಆನೆಗಳು ಇಂದು ಸಾಂಸ್ಕೃತಿಕ ನಗರಿಯತ್ತ ತೆರಳಿದವು.ವಿವಿಧ ಜನಪದ ಕಲಾತಂಡಗಳು, ಗಿರಿಜನರ ಸಾಂಸ್ಕೃತಿಕ ಕಾರ್ಯಕ್ರಮ ಹಾಡಿ ಮಕ್ಕಳ ನೃತ್ಯ ವೈಭವದೊಂದಿಗೆ ಬೀಳ್ಕೊಡಲಾಯಿತು. +ಇಂದು ಸಂಜೆ ಮೈಸೂರು ನಗರಕ್ಕೆ ಆನೆಗಳು ಬರಲಿದ್ದು, ಅಶೋಕಪುರಂನ ಅರಣ್ಯ ಭವನ ಆವರಣದ ಕಿರು ಅರಣ್ಯದಲ್ಲಿ ಉಳಿದುಕೊಂಡು 23 ರಂದು ಬೆಳಿಗ್ಗೆ ಅರಮನೆ ಆವರಣ ಪ್ರವೇಶಿಸಲಿದೆ. +ಮೊದಲ ಬಾರಿಗೆ ಏಕಲವ್ಯ ಭಾಗಿ:ದಸರಾದ ಪ್ರಮುಖ ಆಕರ್ಷಣೀಯವಾಗಿದ್ದ ಅರ್ಜುನ ಆನೆ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಏಕಲವ್ಯ ಆನೆ ಈ ಬಾರಿ ದಸರಾದಲ್ಲಿ ಭಾಗವಹಿಸಲಿದೆ. 2018ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡುಗೆರೆ ಬಳಿ ಏಕಲವ್ಯನನ್ನು ಸೆರೆ ಹಿಡಿದು ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿದೆ. + +ಮೊದಲ ತಂಡದಲ್ಲಿ ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಒಂಭತ್ತು ಆನೆಗಳು ತೆರಳಿದ್ದು, ಎರಡನೇ ಹಂತದಲ್ಲಿ ಪ್ರಶಾಂತ್‌, ಮಹೇಂದ್ರ, ಸುಗ್ರೀವಾ, ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ತೆರಳಲಿವೆ. ಹೆಚ್ಚುವರಿಯಾಗಿ ನಾಲ್ಕು ಆನೆಗಳನ್ನು ಅರಣ್ಯ ಇಲಾಖೆ ಸಿದ್ದಪಡಿಸಲಾಗಿದ್ದು, ಅವು ಕೂಡ ಭಾಗವಹಿಸಲಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ತಾಲೀಮು ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವಾದರೆ ಮುಂಜಾಗ್ರತಾ ದೃಷ್ಟಿಯಿಂದ 18 ಆನೆಗಳು, ಮಾವುತರು, ಕಾವಾಡಿ, ಅಧಿಕಾರಿ, ಸಿಬ್ಬಂದಿ ಸೇರಿ 2.33 ಕೋಟಿ ರೂ. ವಿಮೆ ಮಾಡಿಸಲಾಗಿದೆ. ಕಾವಾಡಿಗರ ಕುಟುಂಬ ಉಳಿದುಕೊಳ್ಳಲು ಅರಮನೆ ಆವರಣದಲ್ಲಿ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ. \ No newline at end of file diff --git a/eesanje/url_46_39_7.txt b/eesanje/url_46_39_7.txt new file mode 100644 index 0000000000000000000000000000000000000000..c8437b394fa92c20d55ccfd15897e053dcd354d0 --- /dev/null +++ b/eesanje/url_46_39_7.txt @@ -0,0 +1,4 @@ +ದರ್ಶನ್‌ಗೆ ಬಿಗ್ ಶಾಕ್ ಕೊಟ್ಟ ಸರ್ಕಾರ : ಮನೆ ಉಟ ಮನವಿ ತಿರಸ್ಕರ +ಬೆಂಗಳೂರು, ಆ.20-  ಮನೆ ಊಟ ಪಡೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ಜೈಲಿನಲ್ಲಿರುವ ನಟ ದರ್ಶನ್‌ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ ಗೆ ಮಾಹಿತಿ ನೀಡಿದೆ. ಅನಾರೋಗ್ಯ ಕಾರಣ ನೀಡಿ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. +ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಪೀಠಕ್ಕೆ ಮಾಹಿತಿ ನೀಡಿ, ದರ್ಶನ್‌ ಮನವಿಯನ್ನು ಆಗಸ್ಟ್‌ 14ರಂದೇ ತಿರಸ್ಕರಿಸಲಾಗಿದೆ. ಈ ವಿಚಾರವನ್ನು ಅದೇ ದಿನ ತಿಳಿಸಲಾಗಿದೆ ಎಂದು ವಿವರಿಸಿದರು. +ಈ ವೇಳೆ ದರ್ಶನ್‌ ಪರ ವಕೀಲರು ನ್ಯಾಯಪೀಠಕ್ಕೆ ಮನವಿ ಮಾಡಿ, ಪ್ರಕರಣವನ್ನು ಮೆರಿಟ್‌ ಮೇಲೆ ವಾದಿಸಲು ಕಾಲಾವಕಾಶ ನೀಡುವಂತೆ ಕೋರಿದರು. ಮನವಿ ಪುರಸ್ಕರಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್‌ 5ಕ್ಕೆ ಮುಂದೂಡಿತು. \ No newline at end of file diff --git a/eesanje/url_46_39_8.txt b/eesanje/url_46_39_8.txt new file mode 100644 index 0000000000000000000000000000000000000000..d9c54b88b177bba010674ca8c9f3cf1903c8540d --- /dev/null +++ b/eesanje/url_46_39_8.txt @@ -0,0 +1,6 @@ +ರಾಜ್ಯಪಾಲರ ವಿರುದ್ಧ ಕನ್ನಡ ಒಕ್ಕೂಟದ ಹೋರಾಟದ ಎಚ್ಚರಿಕೆ +ಬೆಂಗಳೂರು, ಆ.20- ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್‍ಅನ್ನು ಕೂಡಲೇ ವಾಪಸ್ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ನಡೆಸುವುದಾಗಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನೀಡಿರುವ ಪ್ರಾಸಿಕ್ಯೂಷನ್ ಹಿಂಪಡೆಯಬೇಕು. +ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕನ್ನಡ ಚಳವಳಿ ನಾಯಕರಾದ ಸಾ.ರಾ.ಗೋವಿಂದು ಮಾತನಾಡಿ, ಮುಖ್ಯಮಂತ್ರಿಗಳ ಮೇಲೆ ಗಂಭೀರ ಆರೋಪ ಮಾಡಬೇಕಾದರೆ, ಸಿಐಡಿ, ಲೋಕಾಯುಕ್ತ, ಈ ರೀತಿಯ ತಲಿಕಾ ಸಂಸ್ಥೆಗಳಲ್ಲಿ ದೂರು ದಾಖಲಾಗಿರಬೇಕು. ಆದರೆ ಏಕಾಏಕಿ ರಾಜ್ಯಪಾಲರು ದುರುದ್ದೇಶದಿಂದ ಯಾರೋ ಗೊತ್ತು ಗುರಿ ಇಲ್ಲದ ವ್ಯಕ್ತಿ ದೂರು ಕೊಟ್ಟಾಗ ಪ್ರಕರಣಕ್ಕೆ ಸ್ಪಂದಿಸಿ ತಮ್ಮ ಅ„ಕಾ ದುರುಪಯೋಗಪಡಿಸಿಕೊಂಡು, ಮುಖ್ಯಮಂತ್ರಿಗಳ ಮೇಲೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದು ಹುನ್ನಾರದ ಪ್ರತಿಬಿಂಬವಾಗಿದೆ ಎಂದು ಆಪಾದಿಸಿದರು. +ಇದು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಮುಖಂಡರ ಕುತಂತ್ರದ -Àಲವಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಳಂಕ ರಹಿತವಾಗಿ ಆಡಳಿತ ಕೊಟ್ಟಿ್ದÁರೆ. ಅವರನ್ನು ಅ„ಕಾರದಿಂದ ಕೆಳಗಿಳಿಸಬೇಕೆಂಬ ದುರುದ್ದೇಶವೇ ಹೊರತು ಬೇರೇನೂ ಇಲ್ಲ ಎಂದು ದೂರಿದರು. ನಾವು ಕನ್ನಡ ಪರ ಸಂಘಟನೆಗಳು ಬಹಳಷ್ಟು ಸಾರಿ ರಾಜಭವನದ ಮುಂದೆ ಭಾಷೆಗಾಗಿ ಕಾವೇರಿ ಹೋರಾಟ, ಮಹದಾಯಿ ಹೋರಾಟ ಹೀಗೆ ಅನೇಕ ಕನ್ನಡಪರ ಹೋರಾಟಗಳನ್ನು ಮಾಡಿದರೂ ನ್ಯಾಯ ಕೊಡದ ರಾಜ್ಯಪಾಲರು ಈಗ ಕೂಡಲೇ ಅಬ್ರಾಹಂ ಕೊಟ್ಟಿರುವ ದೂರಿಗೆ ಸ್ಪಂದಿಸಿ್ದÁರೆ. ಇದು ಏಕಪಕ್ಷೀಯವಾಗಿದೆ. ಅಬ್ರಾಹಂ ಒಬ್ಬ ಲಂಚಕೋರ. ಭ್ರಷ್ಟ ವ್ಯಕ್ತಿ ಈಗಾಗಲೇ ಅವರ ಮೇಲೆ ಲಂಚದ ಆರೋಪ ಇದೆ. ದಂಡ ವಿ„ಸಿಕೊಂಡಿ್ದÁರೆ. ಇಂತಹ ವ್ಯಕ್ತಿತ್ವವುಳ್ಳ ವ್ಯಕ್ತಿಗೆ ಇವರು ಮಣೆ ಹಾಕಿ್ದÁರೆ. ಇದನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ ಎಂದರು. +ರಾಜ್ಯಪಾಲರು ಮುಖ್ಯಮಂತ್ರಿಗೆ ನೋಟಿಸ್ ಕೊಡುವ ಅ„ಕಾರ ಇರಬಾರದು. ಈ ಬಗ್ಗೆ ಪ್ರಜಾಪ್ರಭುತ್ವ ಉಳಿಸಿಲು ರಾಜ್ಯಾದ್ಯಂತ ಚಳವಳಿ ನಡೆಸಲು ತೀರ್ಮಾನಿಸಿದ್ದೇವೆ. ಕೂಡಲೆ ರಾಜ್ಯಪಾಲರು ನಮ್ಮ ರಾಜ್ಯವನ್ನು ಬಿಟ್ಟು ಹೋಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. +ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಮಂಜುನಾಥ್ ದೇವ್, ಹೆಚ್.ವಿ.ಗಿರೀಶ್ ಗೌಡ ಹಾಗೂ ಅನೇಕ ಕನ್ನಡಪರ ಮುಖಂಡರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_39_9.txt b/eesanje/url_46_39_9.txt new file mode 100644 index 0000000000000000000000000000000000000000..3e8ec21e3313e6015476fba729598d1ac1f019a4 --- /dev/null +++ b/eesanje/url_46_39_9.txt @@ -0,0 +1,6 @@ +ಗೆಹ್ಲೋಟ್ ವಿರುದ್ಧ ಡಿಸಿಎಂ ಡಿಕೆಶಿ ಗರಂ +ಬೆಂಗಳೂರು,ಆ.20- ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರನ್ನುಬಿಜೆಪಿಯವರು ತಮ್ಮ ಏಜೆಂಟ ರಂತೆ ಪರಿವರ್ತಿಸಿಕೊಂಡಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ದಿ.ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ ಅಂಗವಾಗಿ ಶೇಷಾದ್ರಿಪುರಂ ವೃತ್ತದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪ್ರತಿಭಟನೆಗೆ ತಿರುಗೇಟು ನೀಡಿದರು. +ರಾಜ್ಯಪಾಲರನ್ನು ಬಿಜೆಪಿಯವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನ ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವ ಮಾರಕವಾಗುತ್ತಿದ್ದಾರೆ. ರಾಜ್ಯಪಾಲರನ್ನು ಪಕ್ಷದ ಏಜೆಂಟರನ್ನಾಗಿ ಮಾಡಿಕೊಂಡಿರುವುದಕ್ಕೆ ಇದೆಲ್ಲಾ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ತಕ್ಷಣವೇ ಅಭಿಯೋಜನೆಗೆ ಅನುಮೋದನೆ ನೀಡುವ ರಾಜ್ಯಪಾಲರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಪ್ರಕರಣದಲ್ಲಿ ಅದೇ ವೇಗದ ನಿರ್ಧಾರ ತೆಗೆದುಕೊಳ್ಳುತ್ತಾರೆಯೇ ಎಂಬ ಪ್ರಶ್ನೆಗಳು ಎದುರಾಗುತ್ತಿವೆ.ನಾನು ರಾಜ್ಯಪಾಲರಿಗಾಗಿ, ಲೋಕಾಯುಕ್ತಕ್ಕಾಗಿ ವಕ್ತಾರನಲ್ಲ. ಕಾಂಗ್ರೆಸ್ ಪಕ್ಷದ ವಕ್ತಾರ. ಪ್ರಕರಣದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು. +ಮಾಜಿ ಪ್ರಧಾನಿ ರಾಜೀವ್‍ಗಾಂಧಿಯವರು ದೇಶ ಕಂಡ ದೂರದರ್ಶಿ ನಾಯಕ. ಯುವಸಮುದಾಯದಲ್ಲಿ ನಾಯಕತ್ವವನ್ನು ಸೃಷ್ಟಿಸಿದವರು. ನಾನು ಬೆಂಗಳೂರು ಅಭಿವೃದ್ಧಿ ಸಚಿವನಾದ ಸಂದರ್ಭದಲ್ಲಿ ಪುತ್ಥಳಿಯನ್ನು ಪುನರುಜ್ಜೀವನಗೊಳಿಸಲು ನನ್ನ ವಿವೇಚನಾ ಅಧಿಕಾರವನ್ನು ಬಳಸಿಕೊಂಡು ಮೊದಲ ಕಡತಕ್ಕೆ ಸಹಿ ಹಾಕಿದ್ದೆ. ಜೊತೆಗೆ ಓಕಳಿಪುರಂನ ಸಿಗ್ನಲ್ ಫ್ರೀ ಕಾರಿಡಾರ್‍ಗೆ ರಾಜೀವ್‍ಗಾಂಧಿಯವರ ಹೆಸರನ್ನು ನಾಮಕರಣ ಮಾಡುತ್ತಿದ್ದೇವೆ ಎಂದರು. +ಪ್ರತಿವರ್ಷ ಬಿಬಿಎಂಪಿಯಿಂದ ರಾಜೀವ್‍ಗಾಂಧಿ ಜನ್ಮ ದಿನಾಚರಣೆಗಾಗಿ ಕಾರ್ಯಕ್ರಮ ಆಯೋಜಿಸಿ ಆದೇಶ ಹೊರಡಿಸುತ್ತಿದ್ದೇನೆ ಎಂದು ಹೇಳಿದರು. ರಾಜೀವ್‍ಗಾಂಧಿಯವರು ಹೊಸ ಪೀಳಿಗೆಗೆ ಮತದಾನದ ಹಕ್ಕು ನೀಡಿದರು. ಇಂದು ದೇಶದ ಪ್ರತಿಯೊಬ್ಬರ ಕೈಲಿ ಒಂದಕ್ಕಿಂತ ಹೆಚ್ಚು ಮೊಬೈಲ್‍ಗಳಿದ್ದರೆ ಆ ಕ್ರಾಂತಿಗೆ ರಾಜೀವ್ ಗಾಂಧಿ ಕಾರಣ. ಸಂವಿಧಾನಕ್ಕೆ ತಿದ್ದುಪಡಿ ತಂದು ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಿದ್ದು ರಾಜೀವ್‍ಗಾಂ„ಯವರು ಎಂದು ಹೇಳಿದರು. +ರಾಜೀವ್‍ಗಾಂಧಿ ಸೇರಿದಂತೆ ಅವರ ಕುಟುಂಬ ಈ ದೇಶಕ್ಕಾಗಿ ಮಾಡಿರುವ ತ್ಯಾಗ ಸ್ಮರಣೀಯ ಎಂದರು. ಸಚಿವರಾದ ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು. \ No newline at end of file diff --git a/eesanje/url_46_3_1.txt b/eesanje/url_46_3_1.txt new file mode 100644 index 0000000000000000000000000000000000000000..8c9ae000b50fbb7a4a5649d8694b61cf5a672fc6 --- /dev/null +++ b/eesanje/url_46_3_1.txt @@ -0,0 +1,6 @@ +ನನಗೆ ಚಾಮುಂಡೇಶ್ವರಿಯ ಆಶೀರ್ವಾದ ಇದೆ, ಐದು ವರ್ಷ ನಾನೇ ಸಿಎಂ : ಸಿದ್ದರಾಮಯ್ಯ + ' , : +ಮೈಸೂರು,ಅ.3– ರಾಜ್ಯದಲ್ಲಿ ದೇವರಾಜ ಅರಸು ಬಿಟ್ಟರೆ 5 ವರ್ಷ ಸಿಎಂ ಆಗಿದ್ದು ನಾನೇ, ಮುಂದಿನ 5 ವರ್ಷಗಳಲ್ಲೂ ಕೂಡ ನಾನೇ ಸಿಎಂ, ಈಗಲೂ ಎಷ್ಟೇ ತೊಡಕು ಬಂದರೂ ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ನನಗೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು. +ಜಿ.ಟಿ.ದೇವೇಗೌಡ, ನೀನೇ ಒಂದು ಸಲ ಸೋಲಿಸಿಬಿಟ್ಟೇ. ನಾನು ಮಂತ್ರಿಯಾಗಿ 40 ವರ್ಷಗ ಳಾಯಿತು. ನಾನು ಯಾವ ತಪ್ಪೂ ಮಾಡಿಲ್ಲ. ಮಾಡಿದ್ದರೆ ಸುದೀರ್ಘ ರಾಜಕೀಯದಲ್ಲಿ ಇರುತ್ತಿರಲಿಲ್ಲ. ನಾವು ಜಿ.ಟಿ.ದೇವೇಗೌಡರು ಒಂದೇ ತಾಲ್ಲೂಕಿನವರು. ಜಿ.ಟಿ .ದೇವೇಗೌಡ ಸತ್ಯಕ್ಕೆ ಜಯ ಸಿಗಬೇಕು ಎಂದಿರುವುದು ನನಗೆ ಮತ್ತಷ್ಟು ಬಲ ತಂದಿದೆ ಎಂದರು. ನಾನು ಡಿಕೆ ಇಬ್ಬರೂ ಒಟ್ಟಿಗೆ ಬೆಟ್ಟಕ್ಕೆ ಬಂದು ಚಾಮುಂಡಿ ತಾಯಿಯ ಪೂಜೆ ಮಾಡಿ 5 ಗ್ಯಾರಂಟಿಗೆ ಶಕ್ತಿ ಕೊಡಮ ಎಂದು ಕೇಳಿಕೊಂಡಿದ್ದೆವು. +ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಜಾರಿ ಮಾಡಿದ್ದೇವೆ. ಇದು ಚಾಮುಂಡಿಯ ಆಶೀರ್ವಾದ ಎಂದು ಹೇಳಿದರು.ದೇವರ ಹಾಗೂ ಜನರ ಆಶೀರ್ವಾದ ಇರುವವರೆಗೂ ನನ್ನನ್ನು ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ. ಏನಪ್ಪಾ ಜಿಟಿ, ನೀನೇ ನನ್ನ ಒಂದು ಬಾರಿ ಸೋಲಿಸಿದ್ದೆ ಎಂದು ನಗೆ ಚಾಟಿಕೆ ಹಾರಿಸಿದರು. +ಒಟ್ಟು 9 ಚುನಾವಣೆ ಗೆದ್ದಿದ್ದೇನೆ. 40 ವರ್ಷ ಮಂತ್ರಿಯೇ ಆಗಿದ್ದೇನೆ. ಚಾಮುಂಡಿ ಕೃಪೆಯಿಂದ ಇಲ್ಲಿವರೆಗೂ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಇಷ್ಟು ವರ್ಷ ದೀರ್ಘ ರಾಜಕಾರಣ ಮಾಡಲು ಆಗುತ್ತಿರಲಿಲ್ಲ. ನಾನು ಜಿ.ಟಿ.ದೇವೇಗೌಡರು ಒಂದೇ ತಾಲ್ಲೂಕಿನವರು, ಒಟ್ಟಿಗೆ ರಾಜಕಾರಣ ಮಾಡಿದ್ದೇವೆೆ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ಹಾಗಾಗಿ ಜಿ.ಟಿ.ದೇವೇಗೌಡರಿಗೆ ಧನ್ಯವಾದ ಹೇಳುತ್ತೇನೆ ಎಂದು ತಿಳಿಸಿದರು. \ No newline at end of file diff --git a/eesanje/url_46_3_10.txt b/eesanje/url_46_3_10.txt new file mode 100644 index 0000000000000000000000000000000000000000..ca3f08dcb1ec29366c3265a635f6ae2ceb21ca86 --- /dev/null +++ b/eesanje/url_46_3_10.txt @@ -0,0 +1,5 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ : ‘ಡಿ’ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ + +ತುಮಕೂರು,ಅ.2– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಇಂದು ತುಮಕೂರು ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿ ಕೇಶವಮೂರ್ತಿ, ಕಾರ್ತಿಕ್‌ ಹಾಗೂ ನಿಖಿಲ್‌ಗೆ ಜಾಮೀನು ಲಭಿಸಿದ್ದು, ಇಂದು ಕಾರಾಗೃಹದಿಂದ ಮನೆಗೆ ತೆರಳಲಿದ್ದಾರೆ. +ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಹಾಗೂ ಕಾರ್ತಿಕ್‌ ನಿಖಿಲ್‌ಗೆ 57ನೇ ಸಿಸಿಎಚ್‌ ನ್ಯಾಯಾಲಯದಿಂದ ಸೆ.23ರಂದು ಷರತ್ತುಬದ್ಧ ಜಾಮೀನು ಲಭಿಸಿತ್ತು. ಆದರೆ ಜಾಮೀನು ಶ್ಯೂರಿಟಿಗೆ 2 ಲಕ್ಷ ಹಣ ಹಾಗೂ ಇಬ್ಬರು ಶ್ಯೂರಿಟಿದಾರರನ್ನು ಹೊಂದಿಸಲು ಈ ಮೂವರ ಕುಟುಂಬಸ್ಥರಿಗೆ ಸಾಧ್ಯವಾಗಿರಲಿಲ್ಲ. +ಸತತ 9 ದಿನಗಳಿಂದ ಶ್ಯೂರಿಟಿದಾರರು ಸಿಗದೆ ಕುಟುಂಬಸ್ಥರು ಪರದಾಡಿದ್ದರು. ನಿನ್ನೆ ಜಾಮೀನು ಶ್ಯೂರಿಟಿ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾತ್ರಿ ತುಮಕೂರು ಜೈಲಾಧಿಕಾರಿಗಳಿಗೆ ಜಾಮೀನು ಆದೇಶದ ಪ್ರತಿ ಮೇಲ್‌ ಮೂಲಕ ತಲುಪಿದೆ.ಹಾಗಾಗಿ ಇಂದು ಬೆಳಗ್ಗೆ ಈ ಮೂವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. diff --git a/eesanje/url_46_3_11.txt b/eesanje/url_46_3_11.txt new file mode 100644 index 0000000000000000000000000000000000000000..445702db7998544b80b709fb43bb6614f642f58c --- /dev/null +++ b/eesanje/url_46_3_11.txt @@ -0,0 +1,18 @@ +ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍ + +ಬೆಂಗಳೂರು,ಅ.2-ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ. +ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. +ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ ಮೂಡಾ ಅಕ್ರಮಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳ ಸಮೇತ ಬರುವಂತೆ ಸೂಚನೆ ನೀಡಲಾಗಿದೆ. +ಕಳೆದ ಶನಿವಾರವಷ್ಟೇ ಸ್ನೇಹಮಯಿ ಕೃಷ್ಣ ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ವಿರುದ್ಧ ಇ.ಡಿಗೆ ದೂರು ನೀಡಿದ್ದರು. ಸೋಮವಾರ ಇ.ಡಿ ಇಸಿಐಆರ್‌ ದಾಖಲಿಸಿಕೊಂಡಿದೆ.ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಯಾದ ಜಾರಿನಿರ್ದೇಶನಾಲಯವು ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಸಿಐಆರ್‌ ದಾಖಲಿಸಿಕೊಂಡಿದೆ. +ಒಂದು ಕಡೆ ಲೋಕಾಯುಕ್ತ ಪೊಲೀಸರು ಈಗಾಗಲೇ ಅವರ ವಿರುದ್ದ ಎಫ್‌ಐಆರ್‌ ದಾಖಲಿಸಿದ್ದರೂ, ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ದ ಇಸಿಐಆರ್‌ ದಾಖಲಿಸಿಕೊಂಡಿದೆ. +ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಅವರ ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಮತ್ತು ಜಾಗವನ್ನು ಸಿಎಂ ಭಾವನಿಗೆ ಮಾರಾಟ ಮಾಡಿದ್ದ ದೇವರಾಜು ವಿರುದ್ದ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.ಇಡಿ ತನಿಖಾ ಸಂಸ್ಥೆಯು ತನ್ನ ಇಸಿಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪೊಲೀಸ್‌‍ ಎಫ್‌ಐಆರ್‌ಗೆ ಸಮಾನವಾದ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳನ್ನು ಹಾಕಿರುವುದು ಗಮನಿಸಬೇಕಾದ ವಿಚಾರವಾಗಿದೆ. +ಇ.ಡಿ ತನ್ನ ಕಾರ್ಯವಿಧಾನದ ಪ್ರಕಾರ, ಆರೋಪಿ ಸ್ಥಾನದಲ್ಲಿ ಇರುವವರನ್ನು ವಿಚಾರಣೆಗೆ ಕರೆಯಲು ಮತ್ತು ಅವಶ್ಯಕತೆ ಬಿದ್ದಲ್ಲಿ ಅವರ ಆಸ್ತಿಯನ್ನು ತನಿಖಾ ಅವಧಿಯಲ್ಲಿ ಮುಟ್ಟುಗೋಲು ಹಾಕಿಕೊಳ್ಳಲು ಇಸಿಐಆರ್‌, ಮೊದಲಿಗೆ ದಾಖಲಿಸಿಕೊಳ್ಳುತ್ತದೆ. +ಎನ್ಫೋರ್ಸ್‌ಮೆಂಟ್‌ ಕೇಸ್‌‍ ಇನ್ಫಾರ್ಮೇಶನ್‌ ರಿಪೋರ್ಟ್‌, ಇದು ಪೊಲೀಸ್‌‍ ಭಾಷೆಯಲ್ಲಿ ಎಫ್‌ಐಆರ್‌ ಇದ್ದ ಹಾಗೇ. ಜಾರಿ ನಿರ್ದೇಶನಾಲಯವು ಯಾರನ್ನಾದಾರೂ ವಿಚಾರಣೆಗೆ ಅಥವಾ ಬಂಧಿಸುವ ಮುನ್ನ ಅಥವಾ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು (ತನಿಖೆಯ ವೇಳೆ) ಹಾಕುವ ಮುನ್ನ ಇಸಿಐಆರ್‌ ಅನ್ನು ದಾಖಲಿಸಿಕೊಳ್ಳುತ್ತದೆ. +ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002ರ ಕಾಯ್ದೆಯಡಿ, ಇಸಿಐಆರ್‌ ಎನ್ನುವುದು ಶಾಸನಬದ್ಧವಲ್ಲದ ದಾಖಲೆ/ಕ್ರಮ ಎಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಈ ಕಾಯ್ದೆಯಲ್ಲಿ ಇದರ ನೋಂದಣಿಯ ಅಗತ್ಯವಿಲ್ಲ. ಇನ್ನೊಂದು ತನಿಖಾ ಸಂಸ್ಥೆಯು ಈಗಾಗಲೇ ಎಫ್‌ಐಆರ್‌ ದಾಖಲಿಸಿದ್ದರೂ, ಇಡಿ ತನ್ನ ಇಸಿಐಆರ್‌ ಅನ್ನು ರದ್ದುಗೊಳಿಸಬೇಕಾಗಿಲ್ಲ. +ಇಸಿಐಆರ್‌ ಎನ್ನುವುದು ಯಾವುದೇ ಆರೋಪಿಯನ್ನು ವಿಚಾರಣೆ/ಬಂಧನ ಮಾಡುವಲ್ಲಿನ ಮೊದಲ ಹೆಜ್ಜೆಯಾಗಿದೆ. ಪಿಎಂಎಲ್‌ಎ ಕಾಯ್ದೆಯಲ್ಲಿ ಇಸಿಐಆರ್‌ ಬಗ್ಗೆ ಉಲ್ಲೇಖವಿಲ್ಲದಿದ್ದರೂ, ಇಡಿ ಇದನ್ನು ದಾಖಲಿಸುವ ಪದ್ಧತಿಯನ್ನು ಪಾಲಿಸಿಕೊಂಡು ಬರುತ್ತಿದೆ. +ಇಸಿಆರ್‌ ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿದ್ದು, ಈ ಪೊಲೀಸರ ಎಫ್‌ಐಆರ್‌ಗೆ ಸರಿಸಮಾನವಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ತನಿಖೆ ಹಂತದಲ್ಲಿ ಆಸ್ತಿಗಳನ್ನು ಸೀಜ್‌ ಮಾಡುವ ಅಧಿಕಾರವಿದೆ. +ಈ ಸೆಕ್ಷನ್‌ ಅಡಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಇದಕ್ಕೆ ಯಾವುದೇ ನ್ಯಾಯಾಲಯದ ಅದೇಶ ಪಡೆಯಬೇಕು ಎಂಬ ನಿಯಮ ಕೂಡ ಇಲ್ಲ. ಸಂಬಂಧಪಟ್ಟ ಆಸ್ತಿಗಾಗಿ ಮನಿಲಾಂಡರಿಂಗ್‌ (ಹಣಕಾಸು ಅಕ್ರಮ ವರ್ಗಾವಣೆ) ನಡೆದಿದೆ ಎಂದು ತನಿಖಾಧಿಕಾರಿಗೆ ಅನಿಸಿದರೆ 180 ದಿನಗಳವರೆಗೂ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಳ್ಳಬಹುದಾಗಿದೆ. +ಹೀಗಾಗಿ ಒಂದು ವೇಳೆ ಸಿಎಂ ಪತ್ನಿ ಈ ಸೈಟ್‌ಗಳನ್ನು ವಾಪಸ್‌‍ ಕೊಡದೇ ಇದ್ದಲ್ಲಿ ಜಾರಿ ನಿರ್ದೇಶನಾಲಯ ಯಾವುದೇ ಕ್ಷಣದಲ್ಲಿ ಮುಟ್ಟಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಸೈಟ್‌ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡರೆ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಇದಕ್ಕಾಗಿಯೇ ಕೂಡಲೆ ಸೈಟ್‌ಗಳನ್ನು ವಾಪಸ್‌‍ ಕೊಡುವ ನಿರ್ಧಾರ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. +ಸುಪ್ರೀಂಕೋರ್ಟ್‌ ಆದೇಶ ಏನು?:ವಿಜಯ್‌ ಮದನ್‌ ಲಾಲ್‌ ಎನ್ನುವ ಪ್ರಕರಣವೊಂದರಲ್ಲಿ ಈಗಾಗಲೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ, ಕೇಂದ್ರ ತನಿಖಾ ಸಂಸ್ಥೆಗಳು ಆ ಎಫ್‌ಐಆರ್‌ ಅಡಿಯಲ್ಲೇ ತಮ ಕೇಸಿನ ವಿಚಾರಣೆ ನಡೆಸುವಂತಿಲ್ಲ, ಬದಲಿಗೆ ಹೊಸದಾಗಿ ಎಫ್‌ಐಆರ್‌ ದಾಖಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು. +ಜೊತೆಗೆ ಇಡಿಯು ಇಸಿಐಆರ್‌ ಮಾಹಿತಿಯನ್ನು ಆರೋಪಿಗೆ ನೀಡುವ / ಹಂಚಿಕೊಳ್ಳುವ ಅವಶ್ಯಕತೆಯಿಲ್ಲ ಮತ್ತು ಬಂಧನದ ನಂತರ ಮ್ಯಾಜಿಸ್ಟ್ರೇಟರ್‌ ಮುಂದೆ ಹಾಜರು ಪಡಿಸುವ ಅವಶ್ಯಕತೆಯಿಲ್ಲ. +ಇನ್ನೊಂದು ಆದೇಶದ ಪ್ರಕಾರ, ಇತರ ತನಿಖಾ ಸಂಸ್ಥೆಗಳು ಈಗಾಗಲೇ ಎಫ್‌ಐಆರ್‌ ದಾಖಲಿಸಿದ್ದ ಸಂದರ್ಭದಲ್ಲಿ ಮತ್ತೊಂದು ತನಿಖಾ ಸಂಸ್ಥೆ ಹೊಸದಾಗಿ ಮತ್ತೊಂದು ಎಫ್‌ಐಆರ್‌ ಗೆ ಸಮನಾದ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಮದ್ರಾಸ್‌‍ ಹೈಕೋರ್ಟ್‌ ನಲ್ಲಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಇದರ ವಾದ-ಪ್ರತಿವಾದದ ನಂತರ ನ್ಯಾಯಮೂರ್ತಿ ಎಸ್‌‍.ಎಂ.ಸುಬ್ರಹಣ್ಯಂ ಮತ್ತು ವಿ.ಶಿವಘಾನಂ ಅವರಿದ್ದ ದ್ವಿಸದಸ್ಯ ಪೀಠ ಇದಕ್ಕೆ ತಡೆ ನೀಡಲು ನಿರಾಕರಿಸಿತ್ತು. ಇದೇ ತಿಂಗಳ ಸೆಪ್ಟಂಬರ್‌ 11ಕ್ಕೆ ಈ ಆದೇಶ ಹೊರಬಿದ್ದಿತ್ತು. \ No newline at end of file diff --git a/eesanje/url_46_3_12.txt b/eesanje/url_46_3_12.txt new file mode 100644 index 0000000000000000000000000000000000000000..12a6b593965a5275a6d6bb9af2762ded83ed1ab0 --- /dev/null +++ b/eesanje/url_46_3_12.txt @@ -0,0 +1,10 @@ +ವಿಶ್ವವಿಖ್ಯಾತ ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ + 2024 +ಮೈಸೂರು,ಅ.2-ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ 9.15 ರಿಂದ 9.45 ರ ಒಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುವುದು. +ನಾಡೋಜ, ಖ್ಯಾತ ಸಾಹಿತಿ ಡಾ.ಹಂಪ ನಾಗರಾಜಯ್ಯ ಅವರು ಈ ಬಾರಿಯ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು, ರಾಜಕಾರಣಿಗಳು ಉಪಸ್ಥಿತರಿರಲಿದ್ದಾರೆ. +ಅದೇ ದಿನ ಸಂಜೆ 6ಕ್ಕೆ ಮೈಸೂರು ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಸಂಗೀತ ವಿದ್ವಾನ್‌ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. +ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಪ್ರಧಾನ ಉದ್ಘಾಟನಾ ಸಮಾರಂಭದ ನಂತರ ಚಲನಚಿತೋತ್ಸವ, ಆಹಾರಮೇಳ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ ಹಾಗೂ ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.ಅ.12ರಂದು ವಿಜಯದಶಮಿ ಕಾರ್ಯಕ್ರಮ ನಡೆಯಲಿದ್ದು, ಆ ದಿನ ಮೈಸೂರು ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ನಡೆಯಲಿದೆ. +ಹಾಗೆಯೇ ಸಂಜೆ 7ಕ್ಕೆ ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಮೆರವಣಿಗೆಯನ್ನು ಆಯೋಜಿಸಲಾಗಿದೆ.ಅ.3 ರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ವ್ಯಾಪಕ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ ಎಂದು ಮೈಸೂರು ಪೊಲೀಸ್‌‍ ಆಯುಕ್ತರಾದ ಸೀಮಾ ಲಟ್ಕರ್‌ ಅವರು ತಿಳಿಸಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. +ಈ ಬಾರಿ 5000ಕ್ಕೂ ಹೆಚ್ಚು ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.13,670 ಸಿಸಿ ಕ್ಯಾಮೆರಾ ಕಣ್ಗಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದ್ದು, ಪೊಲೀಸ್‌‍ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆರೆಯಲಾಗಿದೆ. ಹಾಗೆಯೇ ಪ್ರಮುಖ ಸ್ಥಳಗಳಲ್ಲಿ ವಾಚ್‌ ಟವರ್‌ಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಅವರು ವಿವರಿಸಿದರು. +ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ದಸರಾ ಸಂದರ್ಭದಲ್ಲಿ ಆಯೋಜಿಸಲಾಗಿದೆ ಎಂದರು.ದಸರಾ ಮಹೋತ್ಸವದ ಅಂಗವಾಗಿ ಅ. 3ರಿಂದ 12ರವರೆಗೆ ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. +ಅರಮನೆಯಲ್ಲಿ ನವರಾತ್ರಿ ವೇಳೆಯಲ್ಲಿ ಯದು ವಂಶಸ್ಥರಾದ ಯದುವೀರ್‌ ಅವರು ಖಾಸಗಿ ದರ್ಬಾರನ್ನು ನಡೆಸಲಿದ್ದಾರೆ. ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ಯದುವೀರ್‌ ಅವರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಖಾಸಗಿ ದರ್ಬಾರನ್ನು ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_3_2.txt b/eesanje/url_46_3_2.txt new file mode 100644 index 0000000000000000000000000000000000000000..0b036e74be34bf3ac0fefcb32b121bb64c8da6a6 --- /dev/null +++ b/eesanje/url_46_3_2.txt @@ -0,0 +1,14 @@ +ಮತ-ಧರ್ಮಗಳ ತಾರತಮ್ಯವಿಲ್ಲದೆ ದಸರಾ ಸರ್ವಜನಾಂಗದ ಹಬ್ಬವಾಗಬೇಕು : ನಾಡೋಜ ಹಂಪನಾಗ + - 2024 +ಮೈಸೂರು,ಅ.3-ದಸರಾ ಹಬ್ಬ ಮತಧರ್ಮಗಳ ತಾರತಮ್ಯವಿರದೆ ಇಡೀ ನಾಡು ಆಚರಿಸುವ ಸರ್ವಜನಾಂಗದ ಹಬ್ಬ ಎಂದು ಹಿರಿಯ ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಪ್ರತಿಪಾದಿಸಿದರು.ಸಾಮಾನ್ಯ ಪ್ರಜೆಯೊಬ್ಬರು ಈ ನಾಡ ಹಬ್ಬದ ಸಡಗರದ ಸರಣಿಯನ್ನು ಉದ್ಘಾಟಿಸುತ್ತಿರುವುದು ಆ ಪರಿಕಲ್ಪನೆಯ ಮುಂದುವರಿಕೆಯಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಪ್ರಭು ಎಂಬ ಸಿದ್ಧಾಂತವನ್ನು ಮಾನ್ಯ ಮಾಡಿದಂತೆ ಹಾಗೂ ಜನಮುಖಿ ಕಾಳಜಿಯನ್ನು ಎತ್ತಿ ಹಿಡಿದಂತೆ ಎಂದರು. +ಈ ಪವಿತ್ರ ದಸರಾ ಉತ್ಸವ ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು, ನಮ ನಾಡಿನ ಪ್ರಜೆಗಳ ಪರವಾಗಿ, ವಿನಯ ಮತ್ತು ಧನ್ಯತಾ ಭಾವದಿಂದ ನೆರವೇರಿಸುತ್ತಿದ್ದೇನೆ ಎಂದು ಅವರು ಹೇಳಿದರು. +ಪ್ರಭುತ್ವಗಳಲ್ಲಿ ಪ್ರಜಾಪ್ರಭುತ್ವ ಮುಡಿಯ ಮಾಣಿಕ್ಯ, ಕಳೆದ ತಿಂಗಳು ಸೆ. 15 ರಂದು ತೆಂಕಣದ ಚಾಮರಾಜನಗರದಿಂದ ಬಡಗಣದ ಬೀದರವರೆಗೆ ಪ್ರಜಾಪ್ರಭುತ್ವದ ಬೇರುಗಳನ್ನು ಗಟ್ಟಿಗೊಳಿಸುವ ಮತ್ತು ಬಹುತ್ವದ ಮಹತ್ವವನ್ನು ಮನಗಾಣಿಸುವ ವಿಶ್ವದಾಖಲೆಯ ಮಾನವ ಸರಪಳಿಯನ್ನು ಆಯೋಜಿಸಿದ್ದು ಸಮಯೋಚಿತವೂ ಅಭಿನಂದನಾರ್ಹವೂ ಆಗಿದೆ ಎಂದರು. +ಆಸ್ತಿಕತೆ, ನಾಸ್ತಿಕತೆ ಕುರಿತ ಚರ್ಚೆ ಇಲ್ಲಿ ಅಪ್ರಸ್ತುತ, ದೇವಾಲಯಕ್ಕೆ ಬಂದವರೆಲ್ಲಾ ಆಸ್ತಿಕರೆಂದಾಗಲಿ, ಒಳಗೆ ಬರದೆ ದೂರ ಉಳಿದವರೆಲ್ಲ ನಾಸ್ತಿಕರೆಂದಾಗಲಿ ಅಲ್ಲ. ಎಲ್ಲ ದೇಶ ಕಾಲಗಳಲ್ಲೂ ಸಮಾಜ ಮಾನ್ಯಮಾಡಿದ ಶಿಷ್ಟಪರಂಪರೆಯ ಸ್ರೋತವೊಂದು ಜೀವಂತವಾಗಿರುತ್ತದೆ. +ಪ್ರತಿವರ್ಷ ನವರಾತ್ರಿಯಲ್ಲಿ ನನ್ನ ತಾಯಿ ಜಾಕಾಯಿ ಪೆಟಾರಿಯಿಂದ ತನ್ನ ತವರುಮನೆಯ ಬಳುವಳಿಯಾಗಿ ತಂದಿದ್ದ ಎರಡು ಬಚ್ಚಣಿಗೆ ಬೊಂಬೆ ಮತ್ತಿತರ ಪ್ರದರ್ಶನ ವಸ್ತುಗಳನ್ನು ತೆಗೆದು ಕೊಡುತ್ತಿದ್ದರು. ನನ್ನ ತಮ್ಮತಂಗಿಯರೊಂದಿಗೆ ನೂರಾರು ಬೊಂಬೆಗಳನ್ನು ಅಲಂಕರಿಸಿ ಮೆಟ್ಟಿಲು ಮೆಟ್ಟಿಲಾಗಿ ಪೇರಿಸಿದ ಹಲಗೆಗಳ ಮೇಲೆ ಒಪ್ಪವಾಗಿ ಜೋಡಿಸುತ್ತಿದ್ದೆವು. +ಮರದಲ್ಲಿ ಮಾಡಿದ ಆ ಎರಡು ಬಚ್ಚಣಿಗೆ ಬೊಂಬೆಗಳನ್ನು ದೂರ ದೂರ ಇಟ್ಟರೆ ನನ್ನ ತಾಯಿ ಕೂಡಲೆ ಮಕ್ಕಳೇ ಅವು ಎರಡಿದ್ದರೂ ಒಂದೇನೆ. ಅವು ಜೋಡಿ, ಅವು ಶಾಶ್ವತ ದಂಪತಿಗಳು. ಅವನ್ನು ಅಗಲಿಸಬಾರದು. ಈ ಬೊಂಬೆಗಳಂತೆ ಅಗಲದೆ ಗಂಡಹೆಂಡತಿ ಬಾಳಿ ಎಂದು ನನ್ನ ತಾಯಿತಂದೆ ಹರಸಿ ಕೊಟ್ಟಿರುವರು. ಇವು ಬರೀ ಮರದ ಬೊಂಬೆಗಳಲ್ಲ, ಮನೆ ಬೆಳಗುವ ಜೋಡಿ. ನನ್ನಮ ಹೇಳಿದ ಮಾತುಗಳನ್ನು ಈಗಲೂ ಮೆಲಕು ಹಾಕುತ್ತೇನೆ ಎಂದು ಸರಿಸಿದರು. +ಸಹನೆ ಸೌಹಾರ್ದದಿಂದ ಬಾಳಿದರೆ, ನೆಮದಿ ಇದ್ದರೆ ಪ್ರತಿ ಮನೆಯೂ ಅರಮನೆಯೇ, ಎಲ್ಲರೂ ರಾಜರಾಣಿಯರೇ ಎಂದರು.ನವರಾತ್ರಿಯ ತೆಂಕಣಗಾಳಿಗೆ ಮೈಸೂರು ಮೈಕೊಡವಿ, ಪೊರೆಬಿಟ್ಟು, ಶೃಂಗಾರಗೊಂಡು, ಕಂಗೊಳಿಸುತ್ತದೆ. ಮೈಸೂರೆಂದರೆ ದಸರ, ಜಂಬೂಸವಾರಿ ಎಂಬ ಮಾತು ಲೋಕ ಪ್ರಸಿದ್ಧಿ ಪಡೆಯಿತು. ಪ್ರಜಾಪ್ರಭುತ್ವ ಬಂದಮೇಲೆ ಕೆಲವು ಬದಲಾವಣೆ ಆದುವು. ಈ ಬದಲಾವಣೆ ಸ್ವರೂಪದಲ್ಲೇ ಹೊರತು ಸತ್ವದಲ್ಲಿ ಅಲ್ಲ. +ಚುನಾಯಿತ ಸರಕಾರ ಈ ಹಬ್ಬವನ್ನು ಜನಮುಖಿಯಾಗಿಸಿದರು. ಇದು ಅರಮನೆಯ ಹಬ್ಬವಲ್ಲ, ಜನರು ಆರಿಸಿದ ಸರಕಾರ ನಡೆಸುವ ಉತ್ಸವವನ್ನಾಗಿಸಿ ಇನ್ನಷ್ಟು ಅರ್ಥಪೂರ್ಣವಾಗಿ ಹಿಂದಿನಂತೆಯೇ ಸಂಭ್ರಮದಿಂದ ನಡೆಸುತ್ತಿದ್ದಾರೆ. ಸರಕಾರ ಮತ್ತು ಜನರು ಒಟ್ಟಿಗೆ ಹೆಜ್ಜೆ ಹಾಕುವ ಈ ನಾಡ ಹಬ್ಬಕ್ಕೆ ಹೆಚ್ಚಿನ ಮಹತ್ವವಿದೆ ಎಂದುಪ್ರಾಯಶಃ ಇನ್ನು ಮುಂದಿನ ತಲೆಮಾರಿಗೆ ಸಿಗದೆ ಮರೆಯಾಗಬಹುದಾದ ಈ ಮಣ್ಣಿನ, ಈ ನೆಲದ ಘಮಲು, ದೇಸೀಯ ಸೊಗಡು ತುಂಬಿರುವ ಹಬ್ಬ ನಿಲ್ಲಬಾರದು. ಈ ಆಚರಣೆಯಿಂದ ಕರ್ನಾಟಕದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಕಿರು ಪರಿಚಯ ಇಂದಿನ ಹೊಸ ತಲೆಮಾರಿನವರಿಗೆ ಆಗುತ್ತದೆ. ದೇಸಿ ವಾದ್ಯ,ಮೇಳಗಳು, ಕಲೆ, ಕುಣಿತ, ಹಾಡು, ಸ್ತಬ್ಧಚಿತ್ರಗಳು, ಬಣ್ಣದ ವೇಷಗಳು, ಕುದುರೆಗಳ ಸಂಚಲನ, ಜಂಬೂ ಸವಾರಿ, ಮುಂತಾದವುಗಳ ಪರಿಚಯ ಶಾಲಾಕಾಲೇಜಲ್ಲಿ ಸಿಗುವುದಿಲ್ಲ. ಹೊಸ ತಲೆಮಾರಿಗೆ ನಮ್ಮ ನಾಡಿನ ಬಹುರೂಪಿ ಸಂಸ್ಕೃತಿಯ ಮತ್ತು ಅಸಿತೆಯ ಆಯಾಮ ಅನುಭವವಾಗುತ್ತದೆ ಎಂದು ತಿಳಿಸಿದರು. +ಅಭೀಷ್ಟವರಪ್ರದಾಯಿನಿ ಎಂದು ಭಕ್ತರು ಆರಾಧಿಸುವ ದೇವಿ ಚಾಮುಂಡಾಂಬಿಕೆಗೆ ಪೊಡಮಟ್ಟು ಐದು ಬೇಡಿಕೆಗಳನ್ನು ಈಡೇರಿಸಿಕೊಡಬೇಕೆಂದು ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಇಸ್ರೇಲ್‌‍-ಪ್ಯಾಲಸ್ಟೈನ್‌, ರಷಿಯಾ-ಉಕ್ರೈನ್‌ ಯುದ್ಧ ನಿಂತು, ನಿತ್ಯ ನಡೆಯುತ್ತಿರುವ ಅಮಾಯಕರ ಮಾರಣಹೋಮ ನಿಲ್ಲಲು ಆ ರಾಷ್ಟ್ರನಾಯಕರು ಕೂಡಲೇ ಜೀವಪರ ಕಾಳಜಿ ತೋರುವಂತೆ ಅವರಿಗೆ ಪ್ರೇರಣೆ ನೀಡಬೇಕೆಂದು ಬೇಡುತ್ತೇನೆ. +ಹೆಣ್ಣು ಭ್ರೂಣ ಹತ್ಯೆ ತಡೆಯಲೂ ಚಾಮುಂಡಾದೇವಿಯು ತಾಯಿತಂದೆಯರಿಗೆ ಸದ್ಭುದ್ಧಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ. ಬಹು ದೊಡ್ಡ ರಾಷ್ಟ್ರೀಯ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆ, ಯುವಜನರು ಹತಾಶರಾಗಿದ್ದಾರೆ. ನಿರುದ್ಯೋಗ ನಿವಾರಣೆಗೆ ಆದ್ಯತೆಯಿತ್ತು ಕೇಂದ್ರ ಸರಕಾರವು ಕ್ರಮ ಕೈಗೊಳ್ಳುವಂತೆ ಪ್ರೇರೇಪಿಸಬೇಕೆಂದು ಯುವಜನತೆಯ ಪರವಾಗಿ ದೇವಿಯನ್ನು ಪ್ರಾರ್ಥಿಸುತ್ತೇನೆ. +ಕನ್ನಡ ನಾಡು ನುಡಿ ನೆಲ ಜಲ ಕಲೆ ಸಂಸ್ಕೃತಿ ಸಂರಕ್ಷಣೆಗಾಗಿ ಹೋರಾಡುವವವರನ್ನು ಕೊಲೆಗಾರರಂತೆ ಕಾಣದೆ, ಪ್ರೀತಿ ಅಭಿಮಾನಗಳಿಂದ ಕಾಣುವಂತೆ ಆಡಳಿತಾಂಗಕ್ಕೆ ಪ್ರೇರಣೆ ಕೊಡುವಂತೆ ವಿನಂತಿಸುತ್ತೇನೆ. +ಸರ್ಕಾರಗಳನ್ನು ಉರುಳಿಸುವ ದುರಾಲೋಚನೆ ಬರದಂತೆ ತಡೆದು, ಚುನಾಯಿತ ಸರ್ಕಾರಗಳನ್ನು ಉಳಿಸುವ ಚಿಂತನೆಗಳನ್ನು ಲೋಕಾಂಬಿಕೆಯು ಮೂಡಿಸಲೆಂದು ಬೇಡುತ್ತೇನೆ ಎಂದು ಹೇಳಿ ಕೊನೆಯಲ್ಲಿ ಒಟ್ಟು 71 ವರ್ಷಗಳ ಸ್ನೇಹದ ಸುಖ ನೀಡಿದ್ದಲ್ಲದೆ ಆರು ವರ್ಷ ಸಹಪಾಠಿಯಾಗಿಯೂ 63 ವರ್ಷ ಮಡದಿಯಾಗಿಯೂ ನನ್ನನ್ನು ರೂಪಿಸಿದ ಮಹಾಶಿಲ್ಪಿ ನಾಡೋಜ ಪ್ರೊ ಕಮಲಾ ಹಂಪನಾ ಅವರ ದಿವ್ಯ ನೆನಪಿಗೆ ನನಗೆ ಸಂದಿರುವ ಈ ಗೌರವವನ್ನು ಸಮರ್ಪಿಸುತ್ತೇನೆ ಎಂದರು. diff --git a/eesanje/url_46_3_3.txt b/eesanje/url_46_3_3.txt new file mode 100644 index 0000000000000000000000000000000000000000..034be76187744622ea967277270a32a7ac60fdff --- /dev/null +++ b/eesanje/url_46_3_3.txt @@ -0,0 +1,15 @@ +ನಾಡಹಬ್ಬ ಮೈಸೂರು ದಸರಾಗೆ ಹಿರಿಯ ಸಾಹಿತಿ, ನಾಡೋಜ ಹಂಪನಾ ಅವರಿಂದ ಅದ್ದೂರಿ ಚಾಲನೆ + +ಮೈಸೂರು,ಅ.3-ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಮೂಲಕ ರಾಜ್ಯದೆಲ್ಲೆಡೆ ನವರಾತ್ರಿ ಹಬ್ಬ ಆರಂಭವಾಯಿತು.ಬೆಳಗ್ಗೆ 9.15 ರಿಂದ 9.45 ರವರೆಗಿನ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ ದಸರಾಗೆ ಚಾಲನೆ ನೀಡಲಾಯಿತು. +ಹಿರಿಯ ಸಾಹಿತಿ, ನಾಡೋಜ ಡಾ.ಹಂಪ ನಾಗರಾಜಯ್ಯನವರು ದಸರಾ ಮಹೋತ್ಸವವನ್ನು ಉದ್ಘಾಟಿಸುವ ಮೂಲಕ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಿ ವೈಭವದ ದಸರಾಗೆ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಹೆಚ್‌.ಸಿ.ಮಹದೇವಪ್ಪ, ಹೆಚ್‌.ಕೆ.ಪಾಟೀಲ್‌, ಶಿವರಾಜ್‌ ತಂಗಡಗಿ, ಕೆ.ವೆಂಕಟೇಶ್‌, ಕೆ.ಹೆಚ್‌.ಮುನಿಯಪ್ಪ, ಶಾಸಕ ಶ್ರೀವತ್ಸ ಸೇರಿದಂತೆ ಗಣ್ಯಾತಿಗಣ್ಯರು ಸಮಾರಂಭವನ್ನು ಸಾಕ್ಷೀಕರಿಸಿದರು. +ದಸರಾ ಉದ್ಘಾಟನೆಗೂ ಮುನ್ನ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸರ್ವಾಲಂಕೃತಳಾದ ಲೋಕಮಾತೆ ಚಾಮುಂಡಿ ದೇವಿಗೆ ಸರ್ವರೂ ನಮಿಸಿ ದಸರೆಯ ಯಶಸ್ಸಿಗೆ ಪ್ರಾರ್ಥಿಸಿದರು.ಇದಕ್ಕೂ ಮುನ್ನ ಗಣ್ಯರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು. ಗಣ್ಯರೆಲ್ಲರೂ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದು ಪುನೀತರಾದರು. ನಂತರ ವೇದಿಕೆಗೆ ಆಗಮಿಸಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. +ದಸರಾ ಚಲನಚಿತೋತ್ಸವ ಉದ್ಘಾಟನೆ:ದಸರಾ ನಿಮಿತ್ತ ಇಂದು ಬೆಳಗ್ಗೆ 11.30ಕ್ಕೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. +ದಸರಾ ಆಹಾರ ಮೇಳವನ್ನು ಬೆಳಗ್ಗೆ 11.30ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್‌. ಮುನಿಯಪ್ಪ ಉದ್ಘಾಟಿಸಿದರು. +ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಮತ್ತು ಸರ್ಕಾರದ ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳು ಪಾಲ್ಗೊಂಡರು. +ಫಲಪುಷ್ಪ ಪ್ರದರ್ಶನ :ಮಧ್ಯಾಹ್ನ 12.30 ಕ್ಕೆ ನಗರದ ಕುಪ್ಪಣ್ಣ ಪಾರ್ಕ್‌ (ನಿಶಾದ್‌ ಬಾಗ್‌)ನಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. +ಸಂಜೆ 4 ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರದಲ್ಲಿ ರಚಿಸಲಾದ ಕಲಾಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಉದ್ಘಾಟಿಸಿದರು. +ಸಂಜೆ 5 ಗಂಟೆಗೆ ನಗರದ ಭಾರತ್‌ ಸ್ಕೌಟ್ಸ್‌‍ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅವರು ಉದ್ಘಾಟಿಸಿದರು.ದಸರಾ ಸಿಎಂ ಕಪ್‌ ಕ್ರೀಡಾಕೂಟಕ್ಕೆ ಸಿಎಂ ಸಿದ್ದರಾಮಯ್ಯನವರು ಸಂಜೆ 4.30 ಕ್ಕೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು. +ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಆವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ದಸರಾ ಕುಸ್ತಿ ಪಂದ್ಯಾವಳಿಗೆ ಸಿಎಂ ಚಾಲನೆ ನೀಡಿದರು. +ದಸರಾ ನವರಾತ್ರಿ ಜಾನಪದ ರಂಗ ಉತ್ಸವ ಉದ್ಘಾಟನೆ:ಸಂಜೆ 5.30 ಗಂಟೆಗೆ ನಗರದ ಕಲಾಮಂದಿರದಲ್ಲಿನ ರಂಗಾಯಣದ ಭೂಮಿಗೀತದ ರಂಗ ಮಂದಿರದಲ್ಲಿ ನವರಾತ್ರಿ ಜಾನಪದ ರಂಗ ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಹ ಸಚಿವ ಶಿವರಾಜ್‌ ತಂಗಡಗಿ ಉದ್ಘಾಟಿಸಿದರು. +ದಸರಾ ದೀಪಾಲಂಕಾರಕ್ಕೆ ಚಾಲನೆ:ಸಂಜೆ 6.30ಕ್ಕೆ ನಗರದ ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಮಂಟಪದ ಬಳಿ ವಿದ್ಯುತ್‌ ದೀಪಾಲಂಕಾರ ಹಾಗೂ ದೀಪಾಲಂಕಾರಗೊಂಡಿರುವ ವಿದ್ಯುತ್‌ ರಥದ ಚಾಲನೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸಲಿದ್ದಾರೆ. +ರಾತ್ರಿ 7.30ಕ್ಕೆ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಲಾಗಿರುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ. \ No newline at end of file diff --git a/eesanje/url_46_3_4.txt b/eesanje/url_46_3_4.txt new file mode 100644 index 0000000000000000000000000000000000000000..e06de0b92eef5fef302e678d5373de87160b3d2e --- /dev/null +++ b/eesanje/url_46_3_4.txt @@ -0,0 +1,7 @@ +ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರೆಯಲಿದೆ ಮಳೆ + +ಬೆಂಗಳೂರು, ಅ.3-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. +ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್‌ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಒಳನಾಡಿನಲ್ಲೂ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. +ಅಂದರೆ, ಅಕ್ಟೋಬರ್‌ 6ರವರೆಗೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.ಅಕ್ಟೋಬರ್‌ ಆರಂಭದಲ್ಲಿ ಮಳೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆದರೆ, ಸೆಪ್ಟೆಂಬರ್‌ ಮಳೆ ಕೊರತೆ ಉಂಟಾಗಿ ಬೆಳೆಗಳಿಗೆ ತೊಂದರೆಯಾಗಿತ್ತು. ಈ ಮಳೆ ಎರಡು ವಾರ ಮುಂಚೆ ಬಿದ್ದಿದ್ದರೆ ಹೆಚ್ಚು ಬೆಳೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬುದು ತಜ್ಞರ ಅಭಿಪ್ರಾಯವಾಗಿದೆ. +ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_3_5.txt b/eesanje/url_46_3_5.txt new file mode 100644 index 0000000000000000000000000000000000000000..6b54750ab0f9c71cfb94c9341dfbb424ff8402bf --- /dev/null +++ b/eesanje/url_46_3_5.txt @@ -0,0 +1,6 @@ +“ಸಾರ್ವಕರ್‌ ಮಾಂಸ ತಿನ್ನುತ್ತಿದ್ದರು” : ವಿವಾದ ಸೃಷ್ಟಿಸಿದ ಸಚಿವ ಗುಂಡೂರಾವ್‌ ಹೇಳಿಕೆ +' - , ' ': +ಬೆಂಗಳೂರು,ಅ.3-ಆರ್‌ಎಸ್‌‍ಎಸ್‌‍ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಾಗೂ ಪ್ರಬಲ ಹಿಂದೂ ಧರ್ಮ ಪ್ರತಿಪಾದಕರಾಗಿದ್ದ ವೀರ್‌ ಸಾರ್ವಕರ್‌ ಕೂಡ ಮಾಂಸ ಸೇವನೆ ಮಾಡುತ್ತಿದ್ದರೆಂಬ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದೆ. ತಕ್ಷಣವೇ ದಿನೇಶ್‌ ಗುಂಡೂರಾವ್‌ ತಮ ಹೇಳಿಕೆಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಬಲಪಂಥೀಯ ಸಂಘಟನೆಗಳು ಎಚ್ಚರಿಕೆ ಕೊಟ್ಟಿವೆ. +ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರೂ ಆಗಿರುವ ದಿನೇಶ್‌ ಗುಂಡೂರಾವ್‌, ವೀರ್‌ ಸಾರ್ವಕರ್‌ ಬ್ರಾಹಣ ಸಮುದಾಯದವರು ಅವರು ಕೂಡ ಮಾಂಸಾಹಾರ ಸೇವಿಸುತ್ತಿದ್ದರು. ಈ ಮೂಲಕ ಅವರೊಬ್ಬ ಮಾರ್ಡನಿಸ್ಟ್‌ ಆಗಿದ್ದರು ಎಂಬ ವಿವಾದಾತಕ ಹೇಳಿಕೆ ಕೊಟ್ಟಿದ್ದರು.ವೀರ್‌ ಸಾರ್ವಕರ್‌ ಮೂಲಭೂತವಾದಿ ಆಗಿದ್ದರು. ವಿಶೇಷವೆಂದರೆ ಮೂಲಭೂತವಾದ ನಮ ದೇಶದ ಸಂಸ್ಕೃತಿಯಲ್ಲ. ವೀರ್‌ ಸಾರ್ವಕರ್‌ ಯುರೋಪ್‌ನಿಂದ ಪ್ರಭಾವಿತರಾಗಿದ್ದರೆಂದು ಹೇಳಿದ್ದರು. +ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸಸ್ಯಹಾರಿ ಆಗಿದ್ದರು. ನಮ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ನಂಬಿಕೆ ಇಟ್ಟುಕೊಂಡಿದ್ದರು. ದೇಶದಲ್ಲಿಂದು ದೊಡ್ಡ ಸಂಪ್ರದಾಯವಾದಿಗಳಿದ್ದಾರೆ. ಆದರೆ ಸಂಪ್ರದಾಯವಾದಿಗಳಲ್ಲ, ಮೂಲಭೂತವಾದಿಗಳೂ ಅಲ್ಲ. ಇದನ್ನು ನಾವು ಅರಿತುಕೊಳ್ಳಬೇಕಿದೆ ಎಂದು ವೀರ್‌ ಸಾರ್ವಕರ್‌ ಹಾಗೂ ಗಾಂಧಿ ಬಗ್ಗೆ ತುಲನೆ ಮಾಡಿದ್ದರು. +ಸಚಿವ ಈ ಹೇಳಿಕೆ ತೀವ್ರ ವಿವಾದವನ್ನು ಸೃಷ್ಟಿಸಿದೆ. ಹಿಂದೂ ಧರ್ಮದ ಐಕಾನ್‌ನಂತಿರುವ ವೀರ್‌ ಸಾರ್ವಕರ್‌ ಬಗ್ಗೆ ಲಘುವಾಗಿ ಮಾತನಾಡಿರುವ ದಿನೇಶ್‌ ಗುಂಡೂರಾವ್‌ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆಗಳು ಗುಂಡೂರಾವ್‌ಗೆ ಎಚ್ಚರಿಕೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_3_6.txt b/eesanje/url_46_3_6.txt new file mode 100644 index 0000000000000000000000000000000000000000..d7c886bc56c7e7c0703f34b5a2f9e75bfe8800ee --- /dev/null +++ b/eesanje/url_46_3_6.txt @@ -0,0 +1,11 @@ +ಜೀವಬೆದರಿಕೆ ಹಾಕಿದ್ರಾ ಕೇಂದ್ರ ಸಚಿವ ಹೆಚ್ಡಿಕೆ..? ಉದ್ಯಮಿಯಿಂದ ದೂರು ದಾಖಲು + , ₹50 +ಬೆಂಗಳೂರು,ಅ.3– ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್‌‍ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ. ಉದ್ಯಮಿ ವಿಜಯ್‌ ತಾತಾ ಎಂಬುವರು ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. +ಇದೇ ದೂರಿನಲ್ಲಿ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್‌ ಟಾಟಾ, ರಮೇಶ್‌ ಗೌಡ ಅವರೂ ಕೂಡ ತಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮನ್ನು ಹಾಗೂ ತಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. +ಅ.2ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕುಮಾರಸ್ವಾಮಿಯವರ ವಿರುದ್ಧ ಇದೇ ರೀತಿ ಆರೋಪ ಮಾಡಿದ್ದ ವಿಜಯ್‌ ಟಾಟಾ, ಅದೇ ದಿನ ಅಮೃತ ಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಹೇಳಲಾಗಿದೆ. +ಖಾಸಗಿ ಮಾಧ್ಯಮವೊಂದರಲ್ಲಿ ಪ್ರಸಾರವಾದ ವಿಜಯ್‌ ಟಾಟಾ ಅವರ ಸುದ್ದಿಗೋಷ್ಠಿಯ ವಿಡಿಯೋ ಕ್ಲಿಪ್‌ನಲ್ಲಿ, ವಿಜಯ್‌ ತಾತಾ ಅವರು ನೇರವಾಗಿ ರಮೇಶ್‌ ಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದಾರೆ. +ಆ. 24ರ ರಾತ್ರಿ ತಮ ಮನೆಗೆ ಬಂದಿದ್ದ ರಮೇಶ್‌ ಗೌಡ, ಚನ್ನಪಟ್ಟಣ ವಿಧಾನಸಭಾ ಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ನಿಖಿಲ್‌ ಕುಮಾರಸ್ವಾಮಿಗೆ ಚನ್ನಪಟ್ಟಣ ಟಿಕೆಟ್‌ ಫೈನಲ್‌ ಎಂದು ರಮೇಶ್‌ ಗೌಡ ಹೇಳಿದ್ದರು. ಉಪ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸೂಚನೆ ನೀಡಿದ್ದರು ಎಂದು ವಿಜಯ್‌ ತಾತಾ ಹೇಳಿದ್ದಾರೆ. +ಇದೇ ಸಂದರ್ಭದಲ್ಲಿ, ರಮೇಶ್‌ ಗೌಡರ ಮೊಬೈಲಿಗೆ ಕುಮಾರಸ್ವಾಮಿಯವರ ಫೋನ್‌ ಕಾಲ್‌ ಬಂತು. ಕೆಲ ಹೊತ್ತು ರಮೇಶ್‌ ಗೌಡರ ಜೊತೆಗೆ ಮಾತುಕತೆ ನಡೆಸಿದ ನಂತರ ತಮ ಜೊತೆಗೂ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಆಗ ಸಂದರ್ಭದಲ್ಲಿಯೇ ಹಣಕಾಸು ಬೇಡಿಕೆ ಬಂದಿದ್ದಾಗಿ ವಿಜಯ್‌ ತಾತಾ ಅವರು ಹೇಳಿರುವಂತೆ ಭಾಸವಾಗುತ್ತದೆ. +ಅದಾದ ಬಳಿಕ ನನಗೆ ಹಣಕ್ಕಾಗಿ ಒತ್ತಾಯ ಮಾಡಲಾಯಿತು. ಆದರೆ, ನಾನು ಅಷ್ಟೊಂದು ಹಣ ನನ್ನ ಕೈಯ್ಯಲ್ಲಿ ಕೊಡಲಾಗುವುದಿಲ್ಲ. ನಾನೂ ಸ್ವಲ್ಪ ಸಮಸ್ಯೆಯಲ್ಲಿದ್ದೇನೆ ಎಂದು ತಿಳಿಸಿದೆ. ಆದರೆ, ಅವರು ನನಗೆ ಪದೇ ಪದೇ ಹಣಕ್ಕಾಗಿ ಬೇಡಿಕೆಯಿಟ್ಟು , ಕಡೆಗೆ ಬೆದರಿಕೆ ಹಾಕಿದ್ದಾರೆ ಎಂದು ವಿಜಯ್‌ ತಾತಾ ಅವರು ಆರೋಪಿಸಿದ್ದಾರೆ. +ಜೆಡಿಎಸ್‌‍ ಮುಖಂಡ ರಮೇಶ್‌ ಗೌಡ ನಮ ಮನೆಗೆ ಬಂದಿದ್ದರು. ನಿಖಿಲ್‌ ಚನ್ನಪಟ್ಟಣ ಉಪ ಚುನಾವಣೆ ನಿಲ್ಲುತ್ತಿದ್ದಾರೆ ಎಂದಿದ್ದರು. ಅದೇ ವೇಳೆ, ಹೆಚ್ಡಿ ಕುಮಾರಸ್ವಾಮಿ ಕೂಡ ದೂರವಾಣಿ ಕರೆ ಮಾಡಿದ್ದರು. ಚುನಾವಣೆಗಾಗಿ 50 ಕೋಟಿ ರೂಪಾಯಿ ಹಣ ನೀಡುವಂತೆ ನನ್ನನ್ನು ಕೇಳಿದ್ದರು. ನಾನು ಹಣ ಕೊಡಲಾಗದು ಎಂದಿದ್ದಕ್ಕೆ ಕುಮಾರಸ್ವಾಮಿ ಕೋಪಿಸಿಕೊಂಡಿದ್ದರು. +ಹಣ ಕೊಡುವುದಿಲ್ಲ ಎಂದಿದ್ದಕ್ಕೆ, ನಿಮ ಪ್ರಾಜೆಕ್ಟ್‌ ಕಂಪ್ಲೀಟ್‌ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ದೇವಸ್ಥಾನ ಕಟ್ಟಲು ರಮೇಶ್‌ ಗೌಡ ಕೂಡ 5 ಕೋಟಿ ರೂಪಾಯಿ ಕೇಳಿದ್ದರು. ತುಂಬಾ ಕಷ್ಟವಿದೆ ಯಾವುದೇ ಕಾರಣಕ್ಕೂ ಹಣ ಕೊಡಲ್ಲ ಅಂದಿದ್ದೆ. 1 ವಾರದಿಂದ ರಮೇಶ್‌ ಗೌಡ ಕಾಲ್‌, ಮೆಸೇಜ್‌ ಮಾಡುತ್ತಿದ್ದರು. 2019ರ ಚುನಾವಣೆಯಲ್ಲೂ ಅವರಿಗಾಗಿ ತುಂಬಾ ಖರ್ಚು ಮಾಡಿದ್ದೆವು ಎಂದು ವಿಜಯ್‌ ಟಾಟ ಹೇಳಿದ್ದಾರೆ. \ No newline at end of file diff --git a/eesanje/url_46_3_7.txt b/eesanje/url_46_3_7.txt new file mode 100644 index 0000000000000000000000000000000000000000..5980517657c56548c464542bd948bc16ba6edcee --- /dev/null +++ b/eesanje/url_46_3_7.txt @@ -0,0 +1,10 @@ +ಮೂಡಾ ಹಗರಣದ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದೆ : ಎಚ್‌ಡಿಕೆ ಆರೋಪ + +ಬೆಂಗಳೂರು,ಅ.2-ಸಿಎಂ ಸಿದ್ದರಾಮಯ್ಯನವರ ಕುಟುಂಬಕ್ಕೆ ಮುಡಾದಿಂದ ನೀಡಿದ್ದ ನಿವೇಶನಗಳನ್ನು ಹಿಂಪಡೆಯುವ ಮೂಲಕ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡುವ ಪ್ರಯತ್ನ ನಡೆದಿದ್ದು, ಈ ಕಾರಣಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಲೋಕಾಯುಕ್ತ ಪೊಲೀಸರು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪತ್ರ ಬರೆದಾಕ್ಷಣ ಅದನ್ನು ಒಪ್ಪಿಕೊಂಡು ತರಾತುರಿಯಲ್ಲಿ ನಿವೇಶನ ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿದೆಯೇ? ಎಂದು ಪ್ರಶ್ನಿಸಿದರು. +ಕೆಸರೆ ಗ್ರಾಮದ ಜಮೀನು ತಮದು. ಇದಕ್ಕೆ ಬದಲಿಯಾಗಿ ವಿಜಯನಗರದಲ್ಲಿ ನೀಡಿರುವ 14 ನಿವೇಶನಗಳ ಮೌಲ್ಯ 62 ಕೋಟಿ ರೂ.ಗಳಷ್ಟಾಗುತ್ತದೆ. ಅಷ್ಟು ಹಣ ಕೊಟ್ಟು ನಿವೇಶನ ವಾಪಸ್‌‍ ಪಡೆಯಲಿ, ನಾವು ಕಾನೂನುಬದ್ಧವಾದ ಜಮೀನಿನ ಮಾಲೀಕರು ಎಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ವಾದಿಸಿದ್ದರು. +ಈಗ ಅದು ಹೇಗೆ ಏಕಾಏಕಿ ನಿವೇಶನಗಳನ್ನು ವಾಪಸ್‌‍ ಮುಡಾಗೆ ದಾನ ಮಾಡಿಬಿಟ್ಟರು? ಎಂದು ಕಿಡಿ ಕಾರಿದರು.ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಗೊಂಡಿದ್ದು, ಹಗರಣವನ್ನು ಲೋಕಾಯುಕ್ತದ ತನಿಖೆಗೆ ಆದೇಶಿಸಲಾಗಿದೆ. ಹೀಗಾಗಿ ಮುಡಾ ನಿವೇಶನಗಳು ಈಗ ನ್ಯಾಯಾಲಯದ ಆಸ್ತಿ. ಹಾಗಿದ್ದಾಗ ಯಾವ ಆಧಾರದ ಮೇಲೆ ಅವುಗಳನ್ನು ವಾಪಸ್‌‍ ನೀಡಲು ಸಾಧ್ಯ? ಎಂದರು. +ನಿವೇಶನಗಳ ಖಾತಾ ಬದಲಾವಣೆ ಮಾಡುವ ಮೂಲಕ ಸಾಕ್ಷ್ಯನಾಶ ಮಾಡಲು ಯತ್ನಿಸಲಾಗಿದೆ. ತನಿಖೆಯ ದಿಕ್ಕು ತಪ್ಪಿಸಲು ಮುಖ್ಯಮಂತ್ರಿಯವರು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಿವೇಶನಗಳನ್ನು ವಾಪಸ್ ತೆಗೆದುಕೊಳ್ಳಲು ಅಧಿಕಾರಿಗಳು ಎಲ್ಲಿ ಹೋಗಿ ಸಹಿ ಹಾಕಿಸಿಕೊಂಡಿದ್ದಾರೆ? ಕಚೇರಿಗೆ ಕರೆಸಿಕೊಂಡಿದ್ದಾರೆಯೇ ಅಥವಾ ಮನೆ ಬಾಗಿಲಿಗೆ ಹೋಗಿದ್ದಾರೆಯೇ? ನಿವೇಶನ ವಾಪಸ್‌‍ ಪಡೆಯುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದು ಯಾರು? ಮುಖ್ಯಮಂತ್ರಿಯವರೇ? ಅಥವಾ ನಗರಾಭಿವೃದ್ಧಿ ಸಚಿವರೇ? ಎಂಬುದೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. +ಸಾಕ್ಷ್ಯ ನಾಶ ಮಾಡುವ ಪ್ರಯತ್ನಗಳಾಗುತ್ತಿವೆ. ವಿಚಾರಣಾ ಹಂತದಲ್ಲೇ ನಿವೇಶನ ವಾಪಸ್‌‍ ನೀಡಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. ಈ ಕಾರಣಕ್ಕೆ ತನಿಖೆ ಪಾರದರ್ಶಕವಾಗಿದ್ದರೆ ಲೋಕಾಯುಕ್ತ ಪೊಲೀಸರು ತಕ್ಷಣವೇ ಮುಡಾ ಆಯುಕ್ತರನ್ನು ಬಂಧಿಸಬೇಕಿದೆ ಎಂದು ಹೇಳಿದರು. +ಈ ಪ್ರಕರಣವನ್ನು ಅಷ್ಟು ಸುಲಭವಾಗಿ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುತ್ತಿದ್ದಂತೆ ತರಾತುರಿಯಲ್ಲಿ ನಿವೇಶನ ಹಿಂಪಡೆಯಲಾಗಿದೆ. ಇದರಲ್ಲಿ ಹಣ ಅಕ್ರಮ ವರ್ಗಾವಣೆಯ ಪ್ರಸ್ತಾಪ ಬರುವುದಿಲ್ಲ ಎಂದು ವಾದಿಸುತ್ತಿದ್ದಾರೆ. ಮುಖ್ಯಮಂತ್ರಿಯವರೇ ನಿವೇಶನದ ಮೌಲ್ಯ 62 ಕೋಟಿ ರೂ. ಎಂದು ಹೇಳಿದ ಮೇಲೆ ಪಿಎಂಎಲ್‌ಎ ಕಾಯ್ದೆ ಆಕರ್ಷಿತವಾಗಲಿದೆ ಎಂದು ಪ್ರತಿಪಾದಿಸಿದರು. +ತಮ ಪತ್ನಿ ಪಾರ್ವತಿಯವರು ನಿವೇಶನ ವಾಪಸ್‌‍ ಪಡೆಯುವಂತೆ ಪತ್ರ ಬರೆದಿರುವುದೇ ನನಗೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಹಾಗಿದ್ದ ಮೇಲೆ ಮಗ ಯತೀಂದ್ರರ ಕೈಲಿ ಪತ್ರವನ್ನು ಏಕೆ ಕಳುಹಿಸಿದರು? ಈ ವಿಚಾರ ಮನೆಯಲ್ಲಿ ಚರ್ಚೆಯಾಗಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ನಾನೇಕೆ ರಾಜೀನಾಮೆ ಕೊಡಬೇಕು? ನನಗೆ ತಲೆ ಕೆಟ್ಟಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_3_8.txt b/eesanje/url_46_3_8.txt new file mode 100644 index 0000000000000000000000000000000000000000..eb0b935b32ac0e9664b4e1910fd0e02d1e753422 --- /dev/null +++ b/eesanje/url_46_3_8.txt @@ -0,0 +1,11 @@ +ಯಾವ ಆಧಾರದ ಮೇಲೆ ನಿವೇಶನ ರದ್ದು ಮಾಡಿದ್ದೀರಿ..? : ವಿಜಯೇಂದ್ರ ಪ್ರಶ್ನೆ + +ಬೆಂಗಳೂರು,ಅ.2-ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಪತ್ರ ನೀಡಿದ ಕೇವಲ 24 ಗಂಟೆಯೊಳಗೆ ಮುಡಾ ಆಯುಕ್ತರು ಮಂಜೂರು ಮಾಡಿದ್ದ ನಿವೇಶನಗಳನ್ನು ಯಾವ ಆಧಾರದ ಮೇಲೆ ರದ್ದುಪಡಿಸಿ ದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಆಯುಕ್ತರು ಇಷ್ಟು ತರಾತುರಿಯಲ್ಲಿ ನಿವೇಶನಗಳನ್ನು ರದ್ದುಪಡಿಸುವ ಅಗತ್ಯವಾದರೂ ಏನಿತ್ತು. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಿತ್ತಲ್ಲವೇ? ಬೇರೆಯವರಿಗೊಂದು ನ್ಯಾಯ. ಮುಖ್ಯಮಂತ್ರಿ ಕುಟುಂಬಕ್ಕೆ ಇನ್ನೊಂದು ನ್ಯಾಯವೇ ಎಂದು ತರಾಟೆಗೆ ತೆಗೆದುಕೊಂಡರು. +ನನಗಿರುವ ಮಾಹಿತಿ ಪ್ರಕಾರ ಮುಡಾ ಆಯುಕ್ತರ ನಿರ್ಧಾರ ನಿಜಕ್ಕೂ ಅಚ್ಚರಿ ತಂದಿದೆ. ಹೈಕೋರ್ಟ್ ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ಹೇಳಿದ್ದರೆ, ಕೆಳಹಂತದ ನ್ಯಾಯಾಲಯ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಹಾಗಾದರೆ ನ್ಯಾಯಾಲಯದ ಆದೇಶಕ್ಕೆ ಬೆಲೆ ಇಲ್ಲವೇ? ಎಂದು ಪ್ರಶ್ನೆ ಮಾಡಿದರು. +ಒಂದು ಕಡೆ ಲೋಕಾಯುಕ್ತ ಮತ್ತೊಂದು ಕಡೆ ಇ.ಡಿಯಲ್ಲಿ ದೂರು ದಾಖಲಾಗಿದೆ. ಮತ್ತೊಂದು ಕಡೆ ತನಿಖೆಯೂ ಪ್ರಾರಂಭವಾಗಿದೆ. ಈಗ ನಿವೇಶನ ವಾಪಸ್ ಕೊಟ್ಟರೆ ಪ್ರಕರಣ ಇತ್ಯರ್ಥವಾಗುತ್ತದೆಯೇ? ಕಾನೂನು ತಜ್ಞರು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರಿಗೆ ಪರಿಜ್ಞಾನ ಇಲ್ಲವೇ ಎಂದು ಪ್ರಶ್ನಿಸಿದರು. +ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಒಂದಾದ ಮೇಲೆ ಒಂದು ತಪ್ಪು ಮಾಡುತ್ತಿದ್ದಾರೆ. ಅವರು ಬಹಳ ಅನುಭವಿಗಳು! ಮುಡಾ ಪ್ರಕರಣವನ್ನು ಬಿಜೆಪಿ ಕೈಗೆತ್ತಿಕೊಂಡಾಗಲೇ ಎಚ್ಚೆತ್ತುಕೊಳ್ಳಬೇಕಿತ್ತು. ಹಿಂದೆಯೇ ಅವರು ಸೈಟ್ ವಾಪಸ್ ನೀಡಿದ್ದರೆ ನಾವು ಇಷ್ಟು ಹೋರಾಟ ಮಾಡಬೇಕಿರಲಿಲ್ಲ. ಆದರೆ ಅವರಿಗೆ ಯಾರು ಸಲಹೆ ನೀಡಿದರೋ ಗೊತ್ತಿಲ್ಲ? ಬಹುಶಃ ಡಿಕೆಶಿ ಅವರೇ ಸಲಹೆ ನೀಡುತ್ತಿರಬಹುದು ಎಂದು ವ್ಯಂಗ್ಯವಾಡಿದರು. +ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಾ ಅವರು ಇಡಿಯಲ್ಲೂ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪತ್ರ ಬರೆದ 24 ಗಂಟೆಯೊಳಗೆ ಸೈಟ್ ವಾಪಸ್ ಪಡೆದಿದ್ದಾರೆ. ಹಾಗಾಗಿ ಲೋಕಾಯುಕ್ತಾ ತನಿಖೆ ಬೇಡ ಅಂತಲೇ, ಸ್ನೇಹಮಯಿ ಕೃಷ್ಣಾ ಸಿಬಿಐ ತನಿಖೆ ಬೇಕು ಅನ್ನುತ್ತಿದ್ದಾರೆ. ಬಿಜೆಪಿ ಕೂಡ ಸಿಬಿಐ ತನಿಖೆಗೆ ಆಗ್ರಹಿಸುತ್ತಿದೆ ಎಂದರು. +ರಾಜ್ಯ ಸರ್ಕಾರ ಒನ್ ಮ್ಯಾನ್ ಕಮೀಷನ್ ತನಿಖೆಗೆ ನೀಡಿದೆ ಎಂದು ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಎಲ್ಲಾ ನಿರ್ಧಾರ ಒಂದರ ಮೇಲೆ, ಒಂದು ತಪ್ಪು ಹೊರಗೆ ಬರುತ್ತಿದೆ. ನಿವೇಶನ ವಾಪಸ್ ಪತ್ರ ಬರೆದಿದ್ದಾರೆ. ಮುಡಾ ಆಯುಕ್ತರು ಸಂಜೆಯೊಳಗೆ ಖಾತಾ ವಾಪಸ್ ಪಡೆದಿದ್ದಾರೆ. ಅಕ್ರಮ ಈಗಾಗಲೇ ಆಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು. +ಸಿದ್ದರಾಮಯ್ಯ ರಾಜೀನಾಮೆ ಕೊಟ್ಟೇ ಕೊಡುತ್ತಾರೆ. ಕೊಡಲೇ ಬೇಕು. ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಮಾತಾಡುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಬೆಳವಣಿಗೆ ನೋಡಿ. ಸಿದ್ದರಾಮಯ್ಯ ಅವರು ಯಾವ ಕ್ಷಣ, ಯಾವಾಗ ರಾಜೀನಾಮೆ ಕೊಡ್ತಾರೆ ಎಂದು ಗೊತ್ತಿಲ್ಲ. ಆದರೆ ರಾಜೀನಾಮೆ ಕೊಡುವುದಂತೂ ಸತ್ಯ ಎಂದರು. +ಸಿಎಂ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರನ್ನು ಕೇಳಿ ಹೇಳುತ್ತೇನೆ ಎಂದು ಹಾಸ್ಯ ಮಾಡಿದರು. \ No newline at end of file diff --git a/eesanje/url_46_3_9.txt b/eesanje/url_46_3_9.txt new file mode 100644 index 0000000000000000000000000000000000000000..edcb05c2f23e4c825bebcd55960f5759bd9db31d --- /dev/null +++ b/eesanje/url_46_3_9.txt @@ -0,0 +1,7 @@ +ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷ : ರಾಜ್ಯಾದ್ಯಂತ ಕಾಂಗ್ರೆಸ್ಸಿಗರ ಗಾಂಧಿ ನಡಿಗೆ + – 100 +ಬೆಂಗಳೂರು,ಅ.2- ಮಹಾತ್ಮ ಗಾಂಧೀಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಗಾಂಧಿನಡಿಗೆಯನ್ನು ಆಯೋಜಿಸಲಾಗಿತ್ತು.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು. +ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಹರ್ಷದ್, ಮುಖಂಡರಾದ ವಿ.ಎಸ್.ಉಗ್ರಪ್ಪ, ಗಾಂಧಿ ಪ್ರತಿಷ್ಠಾನದ ವೂಡೆ ಪಿ ಕೃಷ್ಣ ಸೇರಿದಂತೆ ಮತ್ತಿತರರು ಗಾಂಧಿಭವನದ ಬಳಿಯಿರುವ ಮಹಾತ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾಲ್ನಡಿಗೆ ಜಾಥಾ ಆರಂಭಿಸಿದರು. +ಅಲ್ಲಿಂದ ರೇಸ್ಕೋರ್ಸ್ ರಸ್ತೆ, ಚಾಲುಕ್ಯ ವೃತ್ತದ ಮೂಲಕ ವಿಧಾನಸೌಧದ ಬಳಿಯಿರುವ ಮಹಾತಗಾಂಧೀಜಿ ಪ್ರತಿಮೆವರೆಗೂ ಗಾಂಧಿ ನಡಿಗೆ ನಡೆಯಿತು. ಡಿ.ಕೆ.ಶಿವಕುಮಾರ್ರವರು ರಾಷ್ಟ್ರಧ್ವಜ ಹಿಡಿದು ಸಿದ್ದರಾಮಯ್ಯನವರೊಂದಿಗೆ ಹೆಜ್ಜೆ ಹಾಕಿದರು.ಆರಂಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಡಿ.ಕೆ.ಶಿವಕುಮಾರ್ ಗಾಂಧಿ ಟೋಪಿ ತೊಡಿಸಿದರು. ಬಿಬಿಎಂಪಿಯ ಹಿರಿಯ ಅಧಿಕಾರಿಗಳಿಗೂ ಗಾಂಧಿ ಟೋಪಿಯನ್ನು ತೊಡಿಸಲಾಯಿತು. +ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ರವರು ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇತೃತ್ವ ವಹಿಸಿದ್ದರು. ಅಲ್ಲಿಂದಲೇ ಸ್ವಾತಂತ್ರ್ಯ ಹೋರಾಟಕ್ಕೆ ಚಾಲನೆ ನೀಡಲಾಯಿತು. ಅಹಿಂಸಾ ಮಾರ್ಗವಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಡುವಲ್ಲಿ ಗಾಂಧೀಜಿ ಯಶಸ್ವಿಯಾದರು. 1924 ರಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದ ಶತಮಾನೋತ್ಸವ ನೆನಪಿಗಾಗಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು. +ಕಾಲ್ನಡಿಗೆ ಜಾಥಾದಲ್ಲಿ ಸಚಿವರು ತಮ ಉಸ್ತುವಾರಿ ಜಿಲ್ಲೆಗಳಲ್ಲಿ ಹಾಗೂ ಶಾಸಕರು ತಮ ಕ್ಷೇತ್ರಗಳಲ್ಲಿ ಭಾಗವಹಿಸಿದ್ದರು. ನಂತರ ಸ್ವಚ್ಛತಾ ಅಭಿಯಾನದಲ್ಲಿ ಕಾಂಗ್ರೆಸ್ ನಾಯಕರು ಪಾಲ್ಗೊಂಡರು. \ No newline at end of file diff --git a/eesanje/url_46_40_1.txt b/eesanje/url_46_40_1.txt new file mode 100644 index 0000000000000000000000000000000000000000..b46b7b1dbdf9a3c5b51b1adf29f5f0065fd2378b --- /dev/null +++ b/eesanje/url_46_40_1.txt @@ -0,0 +1,7 @@ +31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳ ವಶ +ಬೆಂಗಳೂರು,ಆ.20- ನಗರದ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ 31 ಲಕ್ಷ ಮೌಲ್ಯದ 45 ದ್ವಿಚಕ್ರ ವಾಹನಗಳು, ಮೊಬೈಲ್, ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಂಡಿದ್ದಾರೆ. +ಪೀಣ್ಯ: ನಾಗಸಂದ್ರ ಮೆಟ್ರೊ ನಿಲ್ದಾಣದ ಹತ್ತಿರ ದ್ವಿಚಕ್ರ ವಾಹನ ನಿಲ್ಲಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಬಂದು ನೋಡಿದಾಗ ವಾಹನ ಕಳವಾಗಿರುವ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿನಾಯಕನ ಗರದಲ್ಲಿ ಆರೋಪಿಯೊಬ್ಬನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಈ ಪ್ರಕರಣವಲ್ಲದೆ 20 ದ್ವಿಚಕ್ರ ವಾಹನ ಕಳವು ಮಾಡಿದ್ದಾಗಿ ತಿಳಿಸಿದ್ದಾನೆ.ಈ ಪೈಕಿ 7 ದ್ವಿಚಕ್ರ ವಾಹನಗಳನ್ನು ಚಿತ್ರದುರ್ಗದಲ್ಲಿ ಹಾಗೂ ಉಳಿದ ಏಳು ದ್ವಿಚಕ್ರ ವಾಹನಗಳನ್ನು ಇಬ್ಬರು ಸ್ನೇಹಿತರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ ಅವುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. +ಆರೋಪಿಯ ಬಂಧನದಿಂದ ಒಟ್ಟು 15 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಐದು ವಾಹನಗಳ ವಾರಸುದಾರರ ಪತ್ತೆ ಕಾರ್ಯ ಪ್ರಗತಿಯಲ್ಲಿದೆ. ಇನ್‍ಸ್ಪೆಕ್ಟರ್ ಅನಿಲ್‍ಕುಮಾರ್ ಹಾಗೂ ಸಿಬ್ಬಂದಿ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದೆ. +ವಿದ್ಯಾರಣ್ಯಾಪುರ: ರಾತ್ರಿ ವೇಳೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಎಂಜಿನ್ ಹಾಗೂ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರಿಂಗ್ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂ„ಸಿರುವ ವಿದ್ಯಾರಣ್ಯಾಪುರ ಠಾಣೆ ಪೊಲೀಸರು 26 ಲಕ್ಷ ಮೌಲ್ಯದ 25 ದ್ವಿಚಕ್ರ ವಾಹನಗಳು, 6 ಮೊಬೈಲ್, 2 ಲ್ಯಾಪ್‍ಟಾಪ್ ಹಾಗೂ ಕಲರ್ ಪ್ರಿಂಟ್ ವಶಪಡಿಸಿಕೊಂಡಿದ್ದಾರೆ.ಈ ವ್ಯಾಪ್ತಿಯಲ್ಲಿ ಹೆಚ್ಚಾಗಿ ದ್ವಿಚಕ್ರ ವಾಹನಗಳು ಕಳವಾಗುತ್ತಿದ್ದ ಬಗ್ಗೆ ದೂರು ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಇನ್‍ಸ್ಪೆಕ್ಟರ್ ಶಿವಸ್ವಾಮಿ ಅವರನ್ನೊಳಗೊಂಡ ಒಂದು ವಿಶೇಷ ತಂಡವನ್ನು ರಚಿಸಲಾಗಿತ್ತು. +ಈ ತಂಡವು ಹಲವಾರು ಆಯಾಮಗಳಲ್ಲಿ ಕಾರ್ಯಾಚರಣೆ ಕೈಗೊಂಡು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಂಧ್ರಪ್ರದೇಶದ ಕಡಪ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡಿಕೊಂಡು ತಾವು ವಾಸವಿರುವ ಹುಣಸಮಾರನಹಳ್ಳಿಯ ಮನೆಗೆ ತಂದು ಅವುಗಳ ಎಂಜಿನ್ ಚಾರ್ಸಿ ನಂಬರ್‍ಗಳನ್ನು ಟ್ಯಾಂಪರ್ ಮಾಡಿ ನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿ ಓಎಲ್‍ಎಕ್ಸ್‍ನಲ್ಲಿ ಮಾರಾಟ ಮಾಡುತ್ತಿದುದ್ದಾಗಿ ತಿಳಿಸಿದ್ದಾರೆ. +ಆರೋಪಿಗಳು ಕಳ್ಳತನ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 17 ದ್ವಿಚಕ್ರ ವಾಹನಗಳು ಹಾಗೂ ಮನೆ ಬಳಿ ಇದ್ದ ನಾಲ್ಕು ದ್ವಿಚಕ್ರ ವಾಹನ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. \ No newline at end of file diff --git a/eesanje/url_46_40_10.txt b/eesanje/url_46_40_10.txt new file mode 100644 index 0000000000000000000000000000000000000000..64fb47fff22b416c12bae459215d6dc7f7df515a --- /dev/null +++ b/eesanje/url_46_40_10.txt @@ -0,0 +1,6 @@ +ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿವೆ : ಸಂತೋಷ್‌ ಹೆಗ್ಡೆ ಕಳವಳ +ಬೆಂಗಳೂರು: ಆ.19:ಸಮಾಜದಲ್ಲಿ ಅದರಲ್ಲೂ ಮುಖ್ಯವಾಗಿ ಯುವ ಜನತೆಯಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗುತ್ತಿರುವುದಕ್ಕೆ ಕರ್ನಾಟಕ ಸರ್ಕಾರದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ. +ಪರಿಮಳ ಗೆಳೆಯರ ಬಳಗದ 49ನೇ ವಾರ್ಷಿಕೋತ್ಸವ ಮತ್ತು ಹರಿದಾಸ ಸಾಹಿತ್ಯ ಸಂಶೋಧಕ ಹಾಗೂ ಲೇಖಕ ಡಾ. ಎಸ್‌‍.ಜಯಸಿಂಹ ಅವರ ಶ್ರೀಧೀರೇಂದ್ರ ದರ್ಶನ ಪುಸ್ತಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನೈತಿಕತೆ ಮತ್ತು ಪ್ರಾಮಾಣಿಕತೆ ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಇವೆರಡರ ಅಭಾವ ಮನುಷ್ಯನನ್ನು ಪಶುವಿಗಿಂತಲೂ ಹೀನವಾಗಿ ವರ್ತಿಸುವಂತೆ ಪ್ರೇರೇಪಿಸುತ್ತವೆ. ಭ್ರಷ್ಟಾಚಾರ ವಿಲ್ಲದಯಾವುದೇ ಇಲಾಖೆಯನ್ನು ಮತ್ತುಅಧಿಕಾರಿಯನ್ನು ಈ ಸಂದರ್ಭದಲ್ಲೇ ನೋಡುವುದೇ ದುಸ್ಸಾಧ್ಯವಾಗಿದೆ ಎಂದರು. +ಜೈಲಿನಿಂದ ಬಂದವರನ್ನು ಹೀರೋಗಳಂತೆ ಸ್ವಾಗತಿಸಿ ಅವರನ್ನು ವೈಭವೀಕರಿಸುವ ಸಮಾಜದಲ್ಲಿ ನಾವಿಂದು ಬದುಕಿದ್ದೇವೆ, ಮನಸ್ಸಾಕ್ಷಿ ಮತ್ತು ಕೃತಿ ಮಾತುಗಳ ನಡುವೆ ಅಂತರವಿಲ್ಲದ ವ್ಯಕ್ತಿತ್ವ ಇಂದು ಮರೀಚಿಕೆಯಾಗಿದೆ ಎಂದು ಸಂತೋಷ್‌ ಹೆಗ್ಡೆ ಅವರು ಅಭಿಪ್ರಾಯಪಟ್ಟರು. +ಇದೇ ಸಂದರ್ಭದಲ್ಲಿ ನ್ಯಾಯಾಂಗ, ಚಲನಚಿತ್ರ ನಟನೆ, ಪೊಲೀಸ್‌‍ ಸೇವೆ, ಸಾಹಿತ್ಯ, ಶಿಕ್ಷಣ, ಪತ್ರಿಕೋದ್ಯಮ, ವಿಜ್ಞಾನಮುಂತಾದ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ವಿ. ಶ್ರೀಶಾನಂದ, ರಮೇಶ್‌ ಅರವಿಂದ್‌, ಎಂ. ಮುತ್ತೂರಾಯ, ಎಚ್‌. ಡುಂಡಿರಾಜ್‌, ಎಸ್‌‍. ಅಹಲ್ಯ, ಶ್ಯಾಮಸುಂದರ್‌ ವಟ್ಟಂ, ಸುಧೀಂದ್ರ ಬಿಂದಗಿ ಮೊದಲಾದ ಹದಿನಾರು ಸಾಧಕರಿಗೆ ಪರಿಮಳ ಪ್ರಶಸ್ತಿ ಪ್ರದಾನ ಮಾಡಲಾಯಿತು. +ಸಮಾರಂಭದಅಧ್ಯಕ್ಷತೆ ವಹಿಸಿದ್ದ ಸುವಿದ್ಯೇಂದ್ರತೀರ್ಥರು ಪುಸ್ತಕ ಬಿಡುಗಡೆ ಮಾಡಿದರು. ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥರು ಸಾನಿಧ್ಯ ವಹಿಸಿದ್ದರು. ಸನ್ಮಾನಿತರ ಪರವಾಗಿ ಚಿತ್ರನಟ ರಮೇಶ್‌ಅರವಿಂದ್‌ ಅವರು ಮಾತನಾಡಿ ಪ್ರಶಸ್ತಿಯ ಮೂಲಕ ರಾಯರ ಅನುಗ್ರಹ ಪ್ರಾಪ್ತವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ರಾಯಚೂರು ಶೇಷಗಿರಿದಾಸ್‌‍ ಮತ್ತುತಂಡದವರಿಂದ ಹರಿದಾಸ ಕೀರ್ತನೆಗಳ ಗಾಯನಕಾರ್ಯಕ್ರಮವೂ ನಡೆಯಿತು. \ No newline at end of file diff --git a/eesanje/url_46_40_11.txt b/eesanje/url_46_40_11.txt new file mode 100644 index 0000000000000000000000000000000000000000..4062d016369e0919e64ab03f205ca0e929c08ffe --- /dev/null +++ b/eesanje/url_46_40_11.txt @@ -0,0 +1,5 @@ +ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಲೋಕಾಯುಕ್ತಕ್ಕೆ ಎನ್‌.ಆರ್‌. ರಮೇಶ್‌ ಮನವಿ +ಬೆಂಗಳೂರು, ಆ.19-ಘನತೆವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಎನ್‌.ಆರ್‌. ರಮೇಶ್‌ ಅವರು ಲೋಕಾಯುಕ್ತ ಪೊಲೀಸರಿಗೆ ಮನವಿ ಮಾಡಿದ್ದಾರೆ. +ಸಿದ್ದರಾಮಯ್ಯ ಅವರು ಮೂಡಾದಲ್ಲಿ ತಮ ಧರ್ಮಪತ್ನಿ ಪಾರ್ವತಮ ಅವರ ಹೆಸರಿಗೆ 14 ಬದಲಿ ನಿವೇಶನಗಳನ್ನು ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಹಂಚಿಕೆ ಮಾಡಿ ಸರ್ಕಾರದ ಬೊಕ್ಕಸಕ್ಕೆ 60 ಕೋಟಿ ರೂ. ನಷ್ಟ ಉಂಟು ಮಾಡಿದ್ದಾರೆ ಎಂದು ನಾನು ಜು.20ರಂದು ಲೋಕಾಯುಕ್ತಕ್ಕೆ 408 ಪುಟಗಳ ದಾಖಲೆಗಳ ಸಮೇತ ದೂರು ದಾಖಲಿಸಿದ್ದೇನೆ. +ರಾಜ್ಯದ ರಾಜ್ಯಪಾಲರು ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಿರುವ ಕಾರಣ ಸದರಿ ಪ್ರಕರಣದಲ್ಲಿ ಪ್ರಮುಖರಾದ ಸಿದ್ಧರಾಮಯ್ಯ, ಪಾರ್ವತಮ, ಮಲ್ಲಿಕಾರ್ಜುನ ಸ್ವಾಮಿ, ಬಸವೇಗೌಡ, ರಾಜೀವ್‌, ನಟೇಶ್‌, ಮರಿಗೌಡ ಮತ್ತಿತರ ಭ್ರಷ್ಟ / ವಂಚಕ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಸ್ವತ್ತು ಕಬಳಿಕೆ ಸಂಚು ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೂಡಲೇ ಎಫ್‌ಐಆರ್‌ ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಲೋಕಾಯುಕ್ತ ಪೊಲೀಸರಿಗೆ ಪತ್ರ ಬರೆದಿದ್ದಾರೆ. +ಸಿಎಂ ಮತ್ತು ಅವರ ಬೆಂಬಲಿಗ ವಿರುದ್ಧ ಕ್ರಮ ಕೈಗೊಳ್ಳುವ ಮುಖೇನ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಆದೇಶಕ್ಕೆ ಕಾನೂನು ರೀತ್ಯಾ ಗೌರವ ನೀಡಬೇಕೆಂದು ಕರ್ನಾಟಕ ಲೋಕಾಯುಕ್ತದ ಪೋಲೀಸ್‌‍ ಅಧೀಕ್ಷಕರನ್ನು ಹಾಗೂ ಅಪರ ನಿಬಂಧಕರನ್ನು ರಮೇಶ್‌ ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_40_12.txt b/eesanje/url_46_40_12.txt new file mode 100644 index 0000000000000000000000000000000000000000..b2e0c74451f6c40575cb1aaa7414345b0584e26b --- /dev/null +++ b/eesanje/url_46_40_12.txt @@ -0,0 +1,6 @@ +ಗ್ಯಾಂಗ್‌ ವಾರ್ ಪ್ರಕರಣದ ಆರೋಪಿ ರೌಡಿಗೆ ಪೊಲೀಸರ ಗುಂಡೇಟು +ಹುಬ್ಬಳ್ಳಿ , ಆ.19-ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲ್‌ ಸದ್ದು ಮಾಡಿದೆ. ತಡರಾತ್ರಿ ಗ್ಯಾಂಗ್‌ವಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೆ ತೆರಳಿದ ಪೊಲೀಸ್‌‍ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿಶೀಟರ್‌ ಇನ್‌ಸ್ಪೆಕ್ಟರ್‌ ಹಾರಿಸಿದ ಗುಂಡೇಟು ತಗುಲಿ ಸಿಕ್ಕಿಬಿದ್ದಿದ್ದಾನೆ. +ರೌಡಿಶೀಟರ್‌ ಅಪ್ತಾಬ್‌ ಕರಡಿಗುಡ್ಡ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.ಕಳೆದ ರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗ್‌ವಾರ್‌ನಲ್ಲಿ ಜಾವೂರ್‌ ಎಂಬಾತ ಗಾಯಗೊಂಡಿದ್ದ. ಆತ ಕಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ದೂರು ಪಡೆದುಕೊಂಡು ಆರೋಪಿಗಳ ಬಂಧನಕ್ಕೆ ಕಸಬಾ ಠಾಣೆಯ ಪೊಲೀಸರು ಮುಂದಾಗಿದ್ದರು. +ಈ ವೇಳೆ ಬುಡರಸಿಂಗಿ ರಸ್ತೆಯಲ್ಲಿ ಆರೋಪಿ ಅಪ್ತಾಬ್‌ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ತಕ್ಷಣ ಅತನ ಬಂಧನಕ್ಕೆ ಇನ್ಸ್ ಪೆಕ್ಟರ್‌ ರಾಘವೇಂದ್ರ ಹಳ್ಳೂರು ತಂಡ ತೆರಳಿತ್ತು. ಆಗ ಆರೋಪಿ ಅಪ್ತಾಬ್‌ ಪೊಲೀಸ್‌‍ ಸಿಬ್ಬಂದಿಗಳಾದ ರಾಜು ರಾಠೋಡ್‌ ಮತ್ತು ಪಾಲಯ್ಯ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. +ಕೂಡಲೇ ಎಚ್ಚೆತ್ತುಕೊಂಡ ಇನ್‌್ಸಪೆಕ್ಟರ್‌ ರಾಘವೇಂದ್ರ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಮಾತನ್ನು ಲೆಕ್ಕಿಸದೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಇನ್‌ಸ್ಪೆಕ್ಟರ್ ಹಾರಿಸಿದ ಗುಂಡು ಅಪ್ತಾಬ್‌ ಕಾಲಿಗೆ ತಗುಲಿ ಕುಸಿದುಬಿದ್ದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸುತ್ತುವರೆದು ವಶಕ್ಕೆ ಪಡೆದು ಕಿಮ್ಸೌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. +ಕಿಮ್ಸೌ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಕಮಿಷನರ್‌ ಎನ್‌.ಶಶಿಕುಮಾರ್‌ ಅವರು ಭೇಟಿ ನೀಡಿ ಕಾರ್ಯಾಚರಣೆ ವೇಳೆ ಗಾಯಗೊಂಡ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು. ಈ ಭಾಗದಲ್ಲಿ ಬಡ್ಡಿ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮೀಟರ್‌ ಬಡ್ಡಿ ವಸೂಲಿ ಮಾಡಲು ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರನ್ನು ಬಳಸಿಕೊಳ್ಳಲಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ. ಯಾರು ಬಡ್ಡಿ ಕೊಡುತ್ತಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಶಶಿಕುಮಾರ್‌ ಅವರು ತಿಳಿಸಿದರು. \ No newline at end of file diff --git a/eesanje/url_46_40_2.txt b/eesanje/url_46_40_2.txt new file mode 100644 index 0000000000000000000000000000000000000000..c4ab4d5b101e53b4248f3ab2dd69446b94246367 --- /dev/null +++ b/eesanje/url_46_40_2.txt @@ -0,0 +1,7 @@ +ವೈದ್ಯರ ರಕ್ಷಣೆ ಮಸೂದೆಗೆ ಗವರ್ನರ್ ಅಂಕಿತ +ಬೆಂಗಳೂರು,ಆ.20- ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. +ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನ ಪರಿಷತ್‍ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಪ್ರಕಾರ ಉದ್ದೇಶ ಪೂರ್ವಕ ವಾಗಿ ವೈದರ ಮೇಲೆ ಹಲ್ಲೇ, ನಿಂದನೆ, ಅವಮಾನಿಸುವುದನ್ನು ನಿಷೇಸಲಾಗಿದೆ. ವೈದ್ಯರ ಮೇಲಿನ ಹಲ್ಲೇಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ. +ಇನ್ನು ವೈದ್ಯಕೀಯ ಪರಿಷತ್‍ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‍ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್ ಮತ್ತು ಉಪ ರಿಜಿಸ್ಟ್ರಾರ್ ನೇಮಕ ಮಾಡಲಾಗುತ್ತದೆ. +ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸ ಬೇಕಾದರೆ, ವೈದ್ಯಕೀಯ ಪರಿಷತ್ತಿ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರ ಬೇಕು. ಒಂದು ವೇಳೆ ನೋಂದಣಿ ಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸು ವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್ ಸ್ವಯಂ ಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ. +ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್ ಹಾಗೂ ಉಪ ರಿಜಿಸ್ಟರ್‍ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ. +ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿ ಯನ್ನು ಸಾಮಾಜಿಕ ಜಾಲತಾಣ ಗಳಲ್ಲಿ, ಆಡಿಯೊ- ವಿಡಿಯೊಗಳಲ್ಲಿ, ಆಸ್ಪತ್ರೆ ಗಳಲ್ಲೇಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳೂ ದಂಡನಾರ್ಹವಾಗಲಿವೆ. \ No newline at end of file diff --git a/eesanje/url_46_40_3.txt b/eesanje/url_46_40_3.txt new file mode 100644 index 0000000000000000000000000000000000000000..916c853cf1c2ee81ee4b7d621f6499f081b51883 --- /dev/null +++ b/eesanje/url_46_40_3.txt @@ -0,0 +1,5 @@ +ಬೆಂಗಳೂರಿನಲ್ಲಿ ಆ.22 ರಿಂದ ಭಾರತದ ಬೃಹತ್ ಕೃಷಿ ಮತ್ತು ಆಹಾರ ಉದ್ಯಮ ಮೇಳ +ಬೆಂಗಳೂರು, ಆ.20 ಮೀಡಿಯಾ ಟುಡೆ ಉಬುಂಟು ಕನ್ನೋರ್ಟಿಯಂ (ಒಕ್ಕೂಟ) ಮತ್ತು ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ ಸಹಯೋಗದೊಂದಿಗೆ, ಜಾಗತಿಕವಾಗಿ ಕೃಷಿ ಮತ್ತು ಆಹಾರ ಉದ್ಯಮದಲ್ಲಿ ಮುಂಚೂಣಿಯಲ್ಲಿರುವವರು ಪಾಲ್ಗೊಳ್ಳಲಿರುವ ಬೃಹತ್ ಮೇಳವನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುವುದರ್ಶನ ಕೇಂದ್ರದಲ್ಲಿ ಆ.22 ಗುರುವಾರ ಆರಂಭಗೊಳ್ಳಲಿದೆ ಎಂದು ಉಬುಂಟು ಕನ್ನೋರ್ಟಿಯಂ (ಒಕ್ಕೂಟ) ಫೌಂಡರ್ ಮತ್ತು ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ತಿಳಿಸಿದರು +ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, ದೇಶದ ಅತಿದೊಡ್ಡ ಕೃಷಿ ಮತ್ತು ಆಹಾರ ಉದ್ಯಮ ಮೇಳ ಇದಾಗಿದ್ದು, ಆಗ್ರಿಟೆಕ್ ಇಂಡಿಯಾ 2024 ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ಮೇಳವಾಗಿದ್ದು, ಆಗಸ್ಟ್ 22ರಂದು ಉದ್ಘಾಟನೆಗೊಳ್ಳಲಿದೆ. ಈ ಮೇಳಕ, ಮುಖ್ಯಮಂತ್ರಿಗಳು ಸೇರಿದಂತೆ ಸಂಬಂಧಿತ ಸಚಿವರನ್ನು ಕೂಡ ಆಹ್ವಾನಿಸಲಾಗಿದೆ ಎಂದರು +ಕೃಷಿ ಮತ್ತು ಆಹಾರ ಉದ್ಯಮ ಮೇಳವು 350ಕ್ಕೂ ಹೆಚ್ಚು ಪ್ರದರ್ಶಕರನ್ನು ಒಳಗೊಂಡಿರುತ್ತದೆ ಏರ್ಕಿ, ಚೀನಾ, ಜರ್ಮನಿ, ಥೈಲ್ಯಾಂಡ್, ಸ್ಪೇನ್, ನೆದರ್ಲ್ಯಾಂಡ್, ನೇಪಾಳ, ಶ್ರೀಲಂಕಾ, ಕುವೈತ್, ರಷ್ಮಾ ಶೈವಾನ್, ಫ್ರಾನ್ಸ್, ಇಟಲಿ, ಕೆನಡಾ. ಯುಎಇ ಇಂಡೋನೇಷ್ಯಾ ಬಹನ್, ಸಿಂಗಾಪುರ್ ಇರಾನ್, ಆಸ್ಟ್ರೇಲಿಯಾ ಸೇರಿದಂತೆ 25ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು, ಭೂತಾನ್, ಮಲೇಷಿಯಾ, ವಿಯಟ್ನಾಂ, ಮತ್ತು ನ್ಯೂಜಿಲ್ಯಾಂಡ್-ಉದ್ಯಮ ನಾಯಕರು, ನಾವೀನ್ಯಕಾರರು ಮತ್ತು ತಜ್ಞರು ಈ ಜಾಗತಿಕ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳವು ವ್ಯವಹಾರಗಳಿಗೆ ಸಂಪರ್ಕ ಸಾಧಿಸಲು ಮತ್ತು ಹೊಸ ಅವಕಾಶಗಳನ್ನು ಅನ್ವೇಷಿಸಲು, ವಲಯದಲ್ಲಿ ಬೆಳವಣಿಗೆ ಮತ್ತು ನಾವೀನ್ಯತೆಗೆ ಅತ್ಯುತ್ತಮ ವೇದಿಕೆಯನ್ನು ಒದಗಿಸಲಿದ್ದು ಮೇಳಕ್ಕೆ, ಅಂದಾಜು 25,000 ವ್ಯಾಪಾರ ಸಂದರ್ಶಕರು ಆಗಮಿಸುವ ನಿರೀಕ್ಷೆಯಿದೆ ಎಂದರು +‘ಅಗ್ರಿಟೆಕ್ ಇಂಡಿಯಾ 2024 ಕೃಷಿ ಮತ್ತು ಆಹಾರ ಪ್ರದರ್ಶನ ಮೇಳವು ಇಂಡಿಯಾ ಪುಡೆಕ್ಸ್ ಮತ್ತು ಗ್ರೀನ್ ಟೆಕ್ ಇಂಡಿಯಾ ಸಹಯೋಗದೊಂದಿಗೆ ನಡೆಯಲಿದ್ದು ಕೃಷಿ ಮತ್ತು ಆಹಾರ ಉದ್ಯಮದ ಮೌಲ್ಯವನ್ನು ಪ್ರತಿಬಿಂಬಿಸುತ್ತದೆ. ಈ ಪ್ರದರ್ಶನವು ಆಹಾರ ಉತ್ಪನ್ನಗಳು, ಫೋಜನ್ ಆಹಾರಗಳು, ತಿಂಡಿಗಳು, ಬೇಕರಿ ವಸ್ತುಗಳು: ಅನುಕೂಲಕರ ಆಹಾರಗಳು, ಸಾವಯವ ಉತ್ಪನ್ನಗಳು, ತಾಜಾ ಹಣ್ಣುಗಳು, ಆಹಾರ ಚಿಲ್ಲರೆ ವ್ಯಾಪಾರ ಡೈ ಉತ್ಪನ್ನಗಳು, ಚಹಾ, ಕಾಫಿ ಮತ್ತು ಹಣ್ಣು ಆಧಾರಿತ ಪಾನೀಯಗಳನ್ನು ಒಳಗೊಂಡಂತೆ ವೈವಿಧ್ಯಮಯ ಆಹಾರ ವಲಯದ ವಿಭಾಗಗಳು ಪ್ರದರ್ಶನದಲ್ಲಿ ಇರಲಿವೆ ಎಂದು ಮಾಹಿತಿ ನೀಡಿದರು \ No newline at end of file diff --git a/eesanje/url_46_40_4.txt b/eesanje/url_46_40_4.txt new file mode 100644 index 0000000000000000000000000000000000000000..70f156a7c81b093048162aa9d2539006ea8f8266 --- /dev/null +++ b/eesanje/url_46_40_4.txt @@ -0,0 +1,7 @@ +ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆ +ಬೆಂಗಳೂರು,ಆ.20- ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ವ್ಯಾಪಕ ಪ್ರಮಾಣದ ಮಳೆ ಬಿದ್ದಿದೆ.ತುಮಕೂರು, ರಾಯಚೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಗಾಣದಾನದಲ್ಲಿ 181 ಮಿಲಿ ಮೀಟರ್ ಅತ್ಯಧಿಕ ಪ್ರಮಾಣದ ಮಳೆ ಬಿದ್ದಿರುವುದು ದಾಖಲಾಗಿದೆ. +ರಾಜಧಾನಿ ಬೆಂಗಳೂರಿನ ಯಲಹಂಕದ ಕೊಡಿಗೇಹಳ್ಳಿಯಲ್ಲಿ 30 ಮಿ.ಮೀ. ನಷ್ಟು ಮಳೆಯಾಗಿದೆ. ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ಜಲಾಶಯಗಳ ಒಳಹರಿವು ಕೂಡ ಗಣನೀಯವಾಗಿ ಕುಸಿದಿದೆ. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ, ವರಾಹಿ ಜಲಾಶಯಗಳ ವ್ಯಾಪ್ತಿಯಲ್ಲಿ ಒಳಹರಿವು ಕೇವಲ 12 ಸಾವಿರ ಕ್ಯೂಸೆಕ್ಸ್‍ಗೆ ಇಳಿಕೆಯಾಗಿದೆ. ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ 18 ಸಾವಿರ ಕ್ಯೂಸೆಕ್ಸ್‍ಗೆ ಇಳಿಕೆಯಾಗಿದೆ. +ಕೃಷ್ಣ ಕೊಳ್ಳದ ಜಲಾಶಯಗಳಲ್ಲೂ ಗಣನೀಯವಾಗಿ ಒಳಹರಿವು ಇಳಿಕೆಯಾಗಿದ್ದು, ಒಟ್ಟಾರೆ 68 ಸಾವಿರದಷ್ಟು ಮಾತ್ರ ಒಳಹರಿವಿದೆ. ತುಂಗಭದ್ರಾ ಜಲಾಶಯಕ್ಕೂ ಒಳಹರಿವಿನ ಪ್ರಮಾಣ ಇಳಿಕೆಯಾಗಿದ್ದು, ಇಂದು 31 ಸಾವಿರ ಕ್ಯೂಸೆಕ್ಸ್‍ನಷ್ಟು ಒಳಹರಿವಿದ್ದು, 10 ಸಾವಿರ ಕ್ಯೂಸೆಕ್ಸ್‍ನಷ್ಟು ಹೊರಹರಿಯುವಿಕೆ, 105.79 ಟಿಎಂಸಿ ಸಾಮಥ್ರ್ಯದ ಈ ಜಲಾಶಯದಲ್ಲಿ ಪ್ರಸ್ತುತ 76.91 ಟಿಎಂಸಿ ಅಡಿಯಷ್ಟು ನೀರಿದ್ದು, ಶೇ.73 ರಷ್ಟು ಮಾತ್ರ ಸಂಗ್ರಹವಾಗಿದೆ. +ಹವಾಮುನ್ಸೂಚನೆ ಪ್ರಕಾರ, ನಾಳೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಆದರೂ ಚದುರಿದಂತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಪ್ರಮಾಣದ ವ್ಯಾಪಕ ಮಳೆಯಾಗಲಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. +ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆ.24 ರವರೆಗೂ ಸಾಧಾರಣ ಮಳೆ ಮುಂದುವರೆಯಲಿದ್ದು, ಆನಂತರ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆಗಳಿವೆ. ಜುಲೈನಲ್ಲಿ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಭಾರಿ ಮಳೆಯಾಗಿ ಅತಿವೃಷ್ಟಿ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. +ಆಗಸ್ಟ್‍ನಲ್ಲಿ ಮಳೆ ಪ್ರಮಾಣ ದಿನದಿಂದ ದಿನಕ್ಕೆ ಇಳಿಕೆಯಾಗಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೂ ಕೆಲವೆಡೆ ಮಳೆ ಕೊರತೆ ಉಂಟಾಗಿದೆ. ಜುಲೈನಲ್ಲಿ ಬಿದ್ದಂತೆ ಆಗಸ್ಟ್‍ನಲ್ಲಿ ರಾಜ್ಯದೆಲ್ಲೆಡೆ ವ್ಯಾಪಕ ಪ್ರಮಾಣದ ಮಳೆಯಾಗಿಲ್ಲ. ಒಂದೆಡೆ ಹೆಚ್ಚು ಮಳೆಯಾಗಿದ್ದರೆ, ಮತ್ತೊಂದೆಡೆ ಮಳೆಯ ಅಭಾವವಿರುವುದು ಕಂಡುಬಂದಿದೆ. \ No newline at end of file diff --git a/eesanje/url_46_40_5.txt b/eesanje/url_46_40_5.txt new file mode 100644 index 0000000000000000000000000000000000000000..f593dd2eb638debe944a69991a48b71c5b390f97 --- /dev/null +++ b/eesanje/url_46_40_5.txt @@ -0,0 +1,12 @@ +ಎಚ್‍ಡಿಕೆ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯಪಾಲರಿಗೆ ಎಸ್‍ಐಟಿ ಮನವಿ +ಬೆಂಗಳೂರು,ಆ.20- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿಬಂದ ಆರೋಪಗಳ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ದೊಡ್ಡ ಗಂಡಾಂತರ ಎದುರಾಗಿದೆ. +ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಕಾನೂನು ಬಾಹಿರವಾಗಿ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲೇ ಇಲ್ಲದ ಕಂಪನಿಗೆ ಗಣಿಗಾರಿಕೆ ನಡೆಸಲು ನಿಯಮ ಮೀರಿ ಜಮೀನು ನೀಡಿದ್ದರ ಆರೋಪ ಎದುರಿಸುತ್ತಿದ್ದಾರೆ. ಇದೀಗ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‍ಐಟಿ) ಕುಮಾರಸ್ವಾಮಿ ವಿರುದ್ದ ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಲು ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದೆ. +ಈ ಹಿಂದೆ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರಿಗೆ ಕೋರಿದ್ದ ಪ್ರಸ್ತಾವನೆಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅನುಮತಿ ನೀಡಿಲ್ಲ ಎಂಬ ಆರೋಪ ಎದುರಾಗಿತ್ತು. ಇದೀಗ ಎಸ್‍ಐಟಿ ಎಚ್‍ಡಿಕೆ ವಿರುದ್ದ ಚಾಜ್‍ಶೀಟ್ ಸಲ್ಲಿಸಲು ರಾಜ್ಯಪಾಲರ ಸಮ್ಮತಿ ಕೋರಿ ದಾಖಲೆಗಳ ಸಮೇತ ಪತ್ರ ಬರೆದಿರುವುದು ಹೊಸ ಬೆಳವಣಿಗೆಯಾಗಿದೆ. +ಏನಿದು ಪ್ರಕರಣ?:ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ, 1988ರಡಿ ಕಾನೂನು ಕ್ರಮಕ್ಕಾಗಿ, ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದ (ಎಸ್‍ಐಟಿ) ಎಡಿಜಿಪಿ ಚಂದ್ರಶೇಖರ್ ಖುದ್ದಾಗಿ ಪತ್ರವನ್ನು ರಾಜ್ಯಪಾಲರಿಗೆ ಬರೆದು ಅನುಮತಿ ನೀಡಲು ಕೋರಿದ್ದಾರೆ. ಕಳೆದ 2023, ನವೆಂಬರ್ 21ರಂದು ಅನುಮತಿ ಕೇಳಿತ್ತು. ಆದರೆ ರಾಜ್ಯಪಾಲರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಕ್ರಮ ಗಣಿಕಾರಿಗೆ ಸಂಬಂ„ಸಿದ ಘಟನೆ ಇದಾಗಿದ್ದು, ಕುಮಾರಸ್ವಾಮಿಯವರು ಈಗ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರಕಾರದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. +ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲಿಲ್ಲದ ಸಂಸ್ಥೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 6.10.2007ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪವಿದೆ. ಗುತ್ತಿಗೆ ನೀಡುವಾಗ ಮಿನರಲ್ಸ್ ಕನ್ಸಿಷನ್ ನಿಯಮಗಳ, ನಿಯಮ 59(2)ನ್ನು ಉಲ್ಲಂಸಿ ಮಂಜೂರು ಮಾಡಿದ್ದರು. +ಎಚ್.ಡಿ.ಕುಮಾರಸ್ವಾಮಿ ಅವರು ಎಂಸಿಆರ್ ನಿಯಮಾವಳಿಗಳನ್ನು ಉಲ್ಲಂಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅ„ಕಾರಿಗಳ ಜೊತೆಗೂಡಿ, ಸುಳ್ಳು ದಾಖಲೆ ಸೃಷ್ಟಿಸಿದ ವಿನೋದ್ ಗೋಯಲ್‍ಗೆ ಸಂಡೂರು ತಾಲ್ಲೂಕಿನ ಎನ್‍ಇಬಿ ರೇಂಜ್‍ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. +ಈ ಪ್ರಕರಣದಲ್ಲಿ ಎಸ್‍ಐಟಿ ಅ„ಕಾರಿಗಳು ವಿನೋದ್ ಗೋಯಲ್ ಅವರನ್ನು ಪ್ರಥಮ ಆರೋಪಿಯನ್ನಾಗಿ ಮಾಡಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರನ್ನು ಎರಡನೇ ಆರೋಪಿಯಾಗಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯ ದರ್ಶಿ ಕೆ.ಜಯಚಂದ್ರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ.ಟಿ.ಜವರೇಗೌಡ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. +ಈ ಅಕ್ರಮದ ಕುರಿತಾಗಿ ದಾಖಲಾಗಿ ಲೋಕಾಯುಕ್ತದ ಎಸ್‍ಐಟಿಯು ತನಿಖೆ ಕೈಗೆತ್ತಿಕೊಂಡಿತ್ತು. ತನಿಖೆ ನಂತರ ಕುಮಾರಸ್ವಾಮಿ ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಜ್‍ಶೀಟ್ ಹಾಕಲಾಗಿದೆ. ನಂತರ ಲೋಕಾಯುಕ್ತ ಎಡಿಜಿಪಿಯವರು ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‍ಗೆ ಅನುಮತಿ ಕೇಳಿದ್ದಾರೆ ಎನ್ನಲಾಗಿದೆ. +ಕುಮಾರಸ್ವಾಮಿ ಅವರನ್ನು ಪ್ರಾಸಿಕ್ಯೂಷನ್‍ಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಪ್ರಕರಣದಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್ ಆಗಿತ್ತು ಎಂಬುದನ್ನು ಎಸ್‍ಐಟಿ ಪತ್ತೆ ಹಚ್ಚಿದೆ. ಎಚ್.ಡಿ ಕುಮಾರಸ್ವಾಮಿಯವರು ಅಕ್ರಮವಾಗಿ ಸಹಾಯ ಮಾಡಿದ್ದಾರೆ ಎಂಬ ಆರೋಪ ಬಂದಿರುವುದು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಲಿಮಿಟೆಡ್ ಎಂಬ ಕಂಪೆನಿ. ಅದರ ಮಾಲೀಕ ಎಂದು ಹೇಳಿಕೊಂಡು ಸೋಮನಾಥ್.ವಿ ಸಕರೆ ಎಂಬ ವ್ಯಕ್ತಿ 2004ರ ಏ.17ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸುತ್ತಾರೆ. ತಮ್ಮ ಕಂಪನಿ ಗಣಿಗಾರಿಕೆ ಮತ್ತು ಉಕ್ಕು ಉತ್ಪಾದನೆಯಲ್ಲಿ ತೊಡಗಿರುವುದಾಗಿಯೂ ಅವರಿಗೆ ಸಂಡೂರು ತಾಲೂಕಿನ ಸದರಿ ಪ್ರದೇಶದಲ್ಲಿ 550 ಎಕರೆ ಭೂಮಿಯನ್ನು ಗಣಿಗಾರಿಕೆಗಾಗಿ ಮಂಜೂರು ಮಾಡಬೇಕೆಂದು ಅರ್ಜಿ ಸಲ್ಲಿಸಿದ್ದರು. +ಗಣಿಗಾರಿಕೆ ಹಗರಣದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ತನ್ನ ವರದಿಯಲ್ಲಿ ಈ ಅಂಶಗಳನ್ನು ವಿವರವಾಗಿ ಉಲ್ಲೇಖಿಸಿದೆ. ತನಿಖಾ„ಕಾರಿ ಡಾ. ಯು.ವಿ.ಸಿಂಗ್ ಎದುರು ಈ ಬೋಗಸ್ ಕಂಪನಿಯ ಮಾಲೀಕ ತಾನು ಗಣಿಗಾರಿಕೆ ಮತ್ತು ಉಕ್ಕು ಕೈಗಾರಿಕೆಯಲ್ಲಿರುವ ಉದ್ಯಮಿ ಅಲ್ಲವೆಂದೂ ಮಹಾರಾಷ್ಟ್ರದಲ್ಲಿ ಗುತ್ತಿಗೆದಾರನೆಂದೂ ತಪ್ಪೋಪ್ಪಿಕೊಂಡಿದ್ದ. +ಅನುಮತಿ ಏಕೆ ಅಗತ್ಯ?:ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988ಕ್ಕೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಅಲ್ಲಿಯವರೆಗೂ, ಹುದ್ದೆಯಿಂದ ನಿರ್ಗಮಿಸಿದ ಚುನಾಯಿತ ಪ್ರತಿನಿ„ಗಳು ಅಥವಾ ನಿವೃತ್ತ ಅ„ಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಆರೋಪಪಟ್ಟಿ ಸಲ್ಲಿಸಲು ಪೂರ್ವಾನುಮತಿ ಅಗತ್ಯವಿರಲಿಲ್ಲ. 2018ರ ತಿದ್ದುಪಡಿಯ ಪ್ರಕಾರ, ಅಪರಾಧ ಹಿಂದೆಯೇ ನಡೆದಿದ್ದರೂ ತಿದ್ದುಪಡಿಯ ಬಳಿಕ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಕ್ಷಮ ಪ್ರಾಧಿಕಾರದ ಅನುಮತಿ ಅಗತ್ಯ. ಈ ಕಾರಣಕ್ಕಾಗಿಯೇ ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. \ No newline at end of file diff --git a/eesanje/url_46_40_6.txt b/eesanje/url_46_40_6.txt new file mode 100644 index 0000000000000000000000000000000000000000..5980a12c2c0ed0116da8c8e46716e8cf5ab85087 --- /dev/null +++ b/eesanje/url_46_40_6.txt @@ -0,0 +1,6 @@ +ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯಾಧಿಕಾರಿಗಳು +ಬೆಂಗಳೂರು,ಆ.20- ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸುತ್ತಮುತ್ತ ಕಳೆದ ಹಲವು ತಿಂಗಳಿನಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಬಿದ್ದಿದೆ. ಕಳೆದ ರಾತ್ರಿ ಅರಕೆರೆ ಗ್ರಾಮ ಸಮೀಪದ ಜಮೀನಿನಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬೋನ್‍ಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಡಿ.ಎಚ್.ಮಂಜುನಾಥ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಚಿರತೆ ಎರಡು ದಿನಗಳ ಹಿಂದೆ ದಾಳಿ ನಡೆಸಿ ಹಸುವನ್ನು ತಿಂದುಹಾಕಿತ್ತು. ಇದರಿಂದ ಈ ಭಾಗದ ರೈತರು ಹಗಲಿನಲ್ಲೇ ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದರು. ಹಸುವನ್ನು ಕೊಂದಿದ್ದ ಚಿರತೆ ಪುನಃ ಸೋಮವಾರ ರಾತ್ರಿ ಅದೇ ಜಮೀನಿಗೆ ಆಗಮಿಸಿತ್ತು. ಇದರ ಸುಳಿವು ಅರಿತ ಅರಣ್ಯಾ„ಕಾರಿಗಳ ನುರಿತ ತಂಡ ಅದೇ ಜಾಗದಲ್ಲಿ ಬೋನ್ ಇರಿಸಿದ್ದರು. +ಹಸುವನ್ನು ಹುಡುಕಿಕೊಂಡು ಬಂದ ಚಿರತೆ ಕೊನೆಗೂ ಬೋನ್‍ಗೆ ಸಿಲುಕಿದ್ದು, ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ.ಅರಕೆರೆ, ನರಸಗೊಂಡನಹಳ್ಳಿ, ಎ.ಕೆ.ಕಾಲೋನಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ, ಕರಡಿ, ಹಂದಿಗಳ ಕಾಟದಿಂದ ರೈತರು ಬೇಸತ್ತು ಹೋಗಿದ್ದರು. ಅದರಲ್ಲೂ ಸಂಜೆ 5 ಗಂಟೆಯ ನಂತರ ಈ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ಗ್ರಾಮಗಳಿಗೆ ಆಗಮಿಸುತ್ತಿದುದು ಜನರಲ್ಲಿ ಆತಂಕ ಹುಟ್ಟಿಸಿತ್ತು. +ಜಾನುವಾರುಗಳ ಮೇಲೆ ದಾಳಿ, ನಾಯಿಗಳನ್ನು ಹೊತ್ತುಕೊಂಡು ಹೋದರೆ, ಹಂದಿಗಳು ಬೆಳೆದು ನಿಂತ ಫಸಲಿಗೆ ಹಾನಿ ಮಾಡುತ್ತಿದ್ದವು. ಬಾಳೆ, ಮೆಕ್ಕೆಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ಹಾಳು ಮಾಡುತ್ತಿದ್ದವು. +ಇದರಿಂದ ಕಾಡುಪ್ರಾಣಿಗಳನ್ನು ಸೆರೆ ಹಿಡಿಯಬೇಕೆಂದು ಅನೇಕ ಬಾರಿ ರೈತರು ಪ್ರತಿಭಟನೆ ನಡೆಸಿ ಅರಣ್ಯಾ„ಕಾರಿಗಳಿಗೆ ದೂರುಗಳನ್ನು ಕೊಟ್ಟಿದ್ದರು. ಚಿರತೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಅರಣ್ಯಾ„ಕಾರಿಗಳ ತಜ್ಞರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಹಿಡಿದಿರುವುದು ಸಾರ್ವಜನಿಕರಲ್ಲಿ ನೆಮ್ಮದಿಯ ನಿಟ್ಟುಸಿರು ತಂದಿದೆ. ಸೆರೆ ಹಿಡಿದಿರುವ ಚಿರತೆಯನ್ನು ಅರಣ್ಯಾ„ಕಾರಿಗಳು ದೂರದ ಅರಣ್ಯ ಪ್ರದೇಶಕ್ಕೆ ಬಿಡಲು ತೀರ್ಮಾನಿಸಿದ್ದಾರೆ. \ No newline at end of file diff --git a/eesanje/url_46_40_7.txt b/eesanje/url_46_40_7.txt new file mode 100644 index 0000000000000000000000000000000000000000..94f295d671cd88982f674265102659336ce07539 --- /dev/null +++ b/eesanje/url_46_40_7.txt @@ -0,0 +1,5 @@ +ನಕಲಿ ಪೊಲೀಸರ ಕೈಚಳಕ, ಮಹಿಳೆಯ ಮಾಂಗಲ್ಯ ಸರ ಅಪಹರಣ +ಗೌರಿಬಿದನೂರು, ಆ. 20- ಆಟೋಗಾಗಿ ಕಾಯುತ್ತಿದ್ದ ಮಹಿಳೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಪೊಲೀಸರು ಎಂದು ಜಾಗೃತಿ ನೀಡುವ ನೆಪದಲ್ಲಿ ಮಹಿಳೆಯ ಮಾಂಗಲ್ಯ ಸರವನ್ನು ಅಪಹರಿಸಿರುವ ಘಟನೆ ನಗರದ ಸಮೀಪದ ಕಲ್ಲೂಡಿ ಗ್ರಾಮದ ಕ್ರಾಸ್ ಬಳಿ ಜರುಗಿದೆ.ನಂಜಮ್ಮ ಕಲ್ಲೂಡಿ ಗ್ರಾಮದ ವಾಸಿ ಮಾಂಗಲ್ಯ ಸರವನ್ನು ನಕಲಿ ಪೊಲೀಸರಿಂದ ವಂಚಿತಳಾದ ಮಹಿಳೆ. +ಕಲ್ಲೂಡಿ ಗ್ರಾಮದ ವಾಸಿ ನಂಜಮ್ಮ ನಿನ್ನೆ ಕಲ್ಲೂಡಿಯ ಕಲೆಂತ್ರೇಶ್ವರ ದೇವಾಲಯಕ್ಕೆ ತೆರಳಲು ಆಟೋಗಾಗಿ ಕಲ್ಲೂಡಿ ಕ್ರಾಸ್ ಬಳಿ ಕಾದು ನಿಂತಿದ್ದ ಸಂದರ್ಭದಲ್ಲಿ ಹಿಂದೂಪುರ ರಸ್ತೆಯ ಕಡೆಯಿಂದ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಆಟೋಗಾಗಿ ಕಾಯುತ್ತಿದ್ದ ನಂಜಮ್ಮನ ಬಳಿ ಬೈಕ್ ನಿಲ್ಲಿಸಿ ನಾವು ಪೊಲೀಸರು ನೀವು ಈ ರೀತಿ ಮಾಂಗಲ್ಯ ಸರವನ್ನು ಹೊರಗಡೆ ಹಾಕಿಕೊಳ್ಳಬಾರದು, ಇತ್ತೀಚಿನ ದಿನಗಳಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ ಎಂದು ಹೇಳಿ ಚೈನ್ ನಿಮ್ಮ ಸೆರಗಿನಲ್ಲಿ ಕಟ್ಟಿಕೊಳ್ಳುವಂತೆ ತಿಳಿಸಿದ್ದಾರೆ. +ಅದರಂತೆ ನಂಜಮ್ಮ ತನ್ನ ಮಾಂಗಲ್ಯ ಸರವನ್ನು ಸೆರಗಿನಲ್ಲಿ ಕಟ್ಟಿಕೊಳ್ಳವ ಸಮಯದಲ್ಲಿ ಆಕೆ ಗಮನ ಬೇರೆಡೆಗೆ ಸೆಳೆದು ಸೆರಗಿನಲ್ಲಿದ್ದ ಸರವನ್ನು ತೆಗೆದುಕೊಂಡು ಕಲ್ಲುಗಳನ್ನು ಇಟ್ಟಿದ್ದಾರೆ, ನಂಜಮ್ಮ ಸೆರಗಿನಲ್ಲಿ ಕಲ್ಲುಗಳನ್ನು ಕಟ್ಟಿಕೊಂಡು ಆಟೋ ಹತ್ತಿ ದೇವಾಲಯದ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಸೆರಗು ಬಿಚ್ಚಿ ನೋಡಿದಾಗ ಸೆರಗಿನಲ್ಲಿ ಕಲ್ಲುಗಳು ಇರುವುದನ್ನು ಕಂಡು ನನ್ನ ಸರ ಕಳ್ಳತನವಾಗಿದ ಎಂದು ಚೀರಿಕೊಂಡಳು. ಆದರೆ ಅಷ್ಟೊತ್ತಿಗೆ ಕಳ್ಳರು ಚೈನು ಕಸಿದುಕೊಂಡು ಪರಾರಿಯಾಗಿದ್ದಾರೆ. +ಸುದ್ದಿ ತಿಳಿಯುತ್ತಿದ್ದಂತೆಯೇ ನಗರ ಠಾಣೆಯ ಎಸ್‍ಐ ಚಂದ್ರಕಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂಜಮ್ಮನ ಬಳಿ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಒಟ್ಟಾರೆ ಗೌರಿಬಿದನೂರು ನಗರದಲ್ಲಿ ದಿನೇ ದಿನೇ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಧ್ವನಿವರ್ಧಕಗಳ ಮೂಲಕ ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಸಾರ್ವಜನಿಕರು ಇಂತಹ ವಂಚನೆಗಳಿಗೆ ಒಳಗಾಗುತ್ತಿರುವುದರಿಂದ ಪ್ರಕರಣಗಳು ಮರುಕಳಿಸುತ್ತಿವೆ. \ No newline at end of file diff --git a/eesanje/url_46_40_8.txt b/eesanje/url_46_40_8.txt new file mode 100644 index 0000000000000000000000000000000000000000..9a4a33fa7cb981387a74fd9603879cb841a72d78 --- /dev/null +++ b/eesanje/url_46_40_8.txt @@ -0,0 +1,21 @@ +ಕೆಎಸ್‌‍ಐಸಿ ಮಳಿಗೆಯಲ್ಲಿ ಮುಗಿಬಿದ್ದು ಮೈಸೂರು ಸಿಲ್ಕ್ ಸೀರೆ ಖರೀದಿಸಿದ ಮಹಿಳೆಯರು +ಬೆಂಗಳೂರು, ಆ.19-ಮೈಸೂರು ಸಿಲ್ಕ್ ಸೀರೆಗಳು ಎಂದರೆ ಮಹಿಳೆಯರಿಗೆ ಅಚ್ಚು ಮೆಚ್ಚು. ಪ್ರತಿಶನಿವಾರ ಕೆಎಸ್‌‍ಐಸಿ ಮಾರಾಟ ಮಳಿಗೆಗಳನ್ನು ತೆರೆಯುವ ಮುನ್ನವೇ ನೂರಾರು ಮಂದಿ ಕಾದು ಕುಳಿತಿದ್ದು, ಅಂಗಡಿ ತೆರೆಯುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಸೀರೆಗಳನ್ನು ಪೈಪೋಟಿಗೆ ಬಿದ್ದು ಖರೀದಿ ಮಾಡುತ್ತಿದ್ದಾರೆ. ಗ್ರಾಹಕರ ಬೇಡಿಕೆಯನ್ನು ಈಡೇರಿಸಲಾಗದೆ ಕೆಎಸ್‌‍ಐಸಿ ದಿನನಿತ್ಯ ಪರದಾಡುತ್ತಿದೆ. +ವಿಶ್ವವಿಖ್ಯಾತ ಮೈಸೂರು ಸಿಲ್‌್ಕ ಸೀರೆಗೆ ಇನ್ನಿಲ್ಲದ ಬೇಡಿಕೆ ಇದೆ. ಮಾರ್ಡನ್‌ ಸ್ಟೈಲ್‌ ಉಡುಪುಗಳನ್ನು ಧರಿಸುವವರು ಕೂಡ ಕೆಎಸ್‌‍ಐಸಿ ಬ್ರಾಂಡ್‌ ನ ಸೀರೆಗಳನ್ನು ಉಡಲು ಖುಷಿ ಪಡುತ್ತಾರೆ. ಇವು ಗುಂಪಿನಲ್ಲೂ ಭಿನ್ನ ಆಕರ್ಷಣೆಯನ್ನು ತಂದುಕೊಡುತ್ತವೆ. ಸತತವಾಗಿ ಏಳನೇ ಬಾರಿ ಬಜೆಟ್‌ ಮಂಡಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಂ ಅಂದು ಮೈಸೂರು ಸಿಲ್‌್ಕ ಸೀರೆ ಧರಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. +ಸ್ವಾತಂತ್ರ್ಯ ಪೂರ್ವದ 1912ರಲ್ಲಿ ಆಗಿನ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮೈಸೂರು ಸಿಲ್‌್ಕ ಉದ್ಯಮವನ್ನು ಆರಂಭಿಸಿದರು. ಮೈಸೂರು ಮಹಾರಾಜರು ಸ್ಥಾಪಿಸಿದ ಕರ್ನಾಟಕ ಸೋಪ್‌್ಸ ಅಂಡ್‌ ಡಿಟರ್ಜಂಟ್‌ (ಕೆಎಸ್‌‍ಡಿಸಿಎಲ್‌) ಸೇರಿ ಅನೇಕ ಉದ್ಯಮಗಳು ಈಗಲೂ ಲಾಭದಾಯಕವಾಗಿ ನಡೆಯುತ್ತಿರುವುದಲ್ಲದೆ ಜಾಗತಿಕ ಮನ್ನಣೆ ಪಡೆದಿವೆ. ಮೈಸೂರು ಸಿಲ್‌್ಕಗೆ ದೇಶಿಯವಾಗಿ ಅಷ್ಟೆ ಅಲ್ಲ  ಅಮೇರಿಕಾ, ಆಸ್ಟ್ರೇಲಿಯದಂತಹ ದೇಶಗಳಿಂದಲೂ ಆನ್‌ಲೈನ್‌ನಲ್ಲಿ ಬೇಡಿಕೆ ಸಲ್ಲಿಕೆಯಾಗುತ್ತಿದೆ. +ಕರ್ನಾಟಕ ರೇಷೆ ಉದ್ಯಮಗಳ ನಿಗಮ ನಿಯಮಿತ ಬೆಂಗಳೂರಿನ ಎಂ.ಜಿ.ರಸ್ತೆಯ ಜುಬಿಲಿ ಶೋರೂಂ, ಬಸವೇಶ್ವರ ನಗರ, ಜಯನಗರ, ಕೆ.ಜಿ.ರಸ್ತೆ, ಗಾಂಧಿ ಬಜಾರ್‌, ಡಿ.ವಿ.ಜಿ.ರಸ್ತೆ, ಮಲ್ಲೇಶ್ವರಂ, ಮೈಸೂರಿನ ಯಾತ್ರಿ ನಿವಾಸ್‌‍, ಕೆ.ಆರ್‌.ವೃತ್ತ, ಮೃಗಾಲಯದ ಪಕ್ಕ, ಫ್ಯಾಕ್ಟರಿ ಶೋರೂಂ, ಚೆನ್ನಪಟ್ಟಣ, ದಾವಣಗೆರೆ, ಚೆನೈ, ಹೈದರಾಬಾದ್‌ ಸೇರಿ 17 ಮಾರಾಟ ಮಳಿಗೆಗಳನ್ನು ಹೊಂದಿದೆ. ಕಾಲ ಕಾಲಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ತಾತ್ಕಾಲಿಕ ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನು ಆಯೋಜನೆ ಮಾಡುತ್ತಿದೆ. ಆನ್‌ಲೈನ್‌ ಖರೀದಿಗೂ ಅವಕಾಶ ಕಲ್ಪಿಸಿದೆ. ಪಾರಂಪರಿಕ ಮೈಸೂರು ಸಿಲ್‌್ಕಗೆ ಸದಾ ಕಾಲ ಬೇಡಿಕೆ ಇದ್ದೇ ಇದೆ. +1962ರಲ್ಲಿ ನಮ ಅಜ್ಜಿ ಸೀರೆ ಖರೀದಿ ಮಾಡಿದ್ದರು ಅದನ್ನೂ ಈಗಲೂ ಇಟ್ಟಿದ್ದೇವೆ. ನಾನು ಖರೀದಿ ಮಾಡುತ್ತಿದ್ದೇನೆ, ನನ್ನ ಮಗಳು ಸಾಫ್ಟವೇರ್‌ ಇಂಜಿನಿಯರ್‌ ಆಕೆಯೂ ಕೆಎಸ್‌‍ಐಸಿಯ ಮೈಸೂರು ಸಿಲ್‌್ಕ ಸೀರೆಗಳನ್ನು ಖರೀದಿಸಿ, ಬಳಕೆ ಮಾಡುತ್ತಾರೆ ಎಂದು ಗ್ರಾಹಕ ಮಹಿಳೆಯೊಬ್ಬರು ಹೆಮೆಯಿಂದ ಹೇಳುತ್ತಾರೆ. +ಮೈಸೂರು ಸಿಲ್‌್ಕನ ನಾವೀನ್ಯತೆ, ಬಣ್ಣಗಳ ಸಂಯೋಜನೆ, ಗುಣಮಟ್ಟದ ಶುದ್ಧ ರೇಷೆ, ಶುದ್ಧ ಚಿನ್ನಲೇಪಿತ ಜರಿ, ಆಕರ್ಷಕ ವಿನ್ಯಾಸಗಳು ಸೀರೆಯ ಗುಣದರ್ಜೆಯನ್ನು ಉನ್ನತ ಸ್ಥಾನದಲ್ಲಿರಿಸಿವೆ. ಜೊತೆಗೆ ಬೇರೆ ಎಲ್ಲಾ ಸೀರೆಗಳಿಗಿಂತಲೂ ಮೈಸೂರು ಸಿಲ್‌್ಕ ಧರಿಸಲು ಸುಲಭ ಹಾಗೂ ಸರಳವಾಗಿರುತ್ತದೆ. ಹಾಗಾಗಿ ನಮಗೆ ಈ ಸೀರೆಗಳೆಂದರೆ ಪಂಚಪ್ರಾಣ ಎಂದು ಮತ್ತೊಬ್ಬ ಮಹಿಳೆ ಹೇಳುತ್ತಾರೆ. +ಸೀರೆ ಖರೀದಿಗೆ ನಾಲ್ಕು ತಿಂಗಳಿಂದ ಬರುತ್ತಲೇ ಇದ್ದೇನೆ. ಇದು ಐದನೇ ತಿಂಗಳಿನ ಭೇಟಿ. ಯಾವಾಗ ಬಂದರೂ ಸೀರೆಗಳು ಖಾಲಿಯಾಗಿರುತ್ತವೆ. ನಮಗೆ ಇಷ್ಟವಾದ ಸೀರೆಯನ್ನು ಆಯ್ಕೆ ಮಾಡಿ ಪಕ್ಕಕ್ಕೆ ಇಟ್ಟು ಮತ್ತೊಂದು ಸೀರೆ ನೋಡುವಷ್ಟು ವ್ಯವದಾನ ಇರುವುದಿಲ್ಲ. ಮತ್ತಿನ್ಯಾರೋ ಬಂದು ನಾವು ಆಯ್ಕೆ ಮಾಡಿಟ್ಟಿದ್ದ, ಸೀರೆಯನ್ನು ತಮಗೆ ಬೇಕು ಎಂದು ಎತ್ತಿಕೊಂಡಿರುತ್ತಾರೆ. ಈ ಕಾರಣಕ್ಕೆ ಅಂಗಡಿಯಲ್ಲಿ ಹಲವು ಬಾರಿ ಜಗಳಗಳಾಗಿವೆ ಎಂದು ಸರ್ಕಾರಿ ನೌಕರರಾದ ಮಹಿಳೆಯೊಬ್ಬರು ಹೇಳಿದ್ದಾರೆ. ಸೀರೆಗಳ ಬೇಡಿಕೆಗಳ ಬಗ್ಗೆ ಮಹಿಳೆಯರು ಬಹಳ ಅಸ್ಥೆಯಿಂದ ಮಾತನಾಡುತ್ತಾರೆ. +ಪ್ರತಿ ಶನಿವಾರ ಹೊಸ ಸೀರೆಗಳು ಬಂದಿರುತ್ತವೆ. ಅಂದು ಬೆಳಗ್ಗೆ ಅಂಗಡಿ ಬಾಗಿಲು ತೆಗೆಯುವ ಮುನ್ನವೇ ನೂರಾರು ಮಂದಿ ಕಾದು ಕುಳಿತಿದ್ದು ಖರೀದಿ ಮಾಡುತ್ತಾರೆ ಎಂದರೆ ಮೈಸೂರು ಸಿಲ್‌್ಕನ ಬೇಡಿಕೆಯನ್ನು ಅಂದಾಜಿಸಬಹುದು. ಜನ ಈ ರೀತಿ ಮುಗಿ ಬಿದ್ದು ಖರೀದಿ ಮಾಡುವ ಅಪರೂಪದ ವಸ್ತುಗಳಲ್ಲಿ , ಕೆಎಸ್‌‍ಐಸಿ ಸಿಲ್‌್ಕ ಸೀರೆಗಳು ಮುಂಚೂಣಿಯಲ್ಲಿವೆ. +ಚಿನ್ನ, ಬೆಳ್ಳಿ ಬೆಲೆಗಳನ್ನು ಆಧರಿಸಿ ಸೀರೆಗಳ ದರ ನಿಗದಿಯಾಗಲಿದೆ. ಕಳೆದ ಮೇ 25ರಂದು ಕೆಎಸ್‌‍ಐಸಿ ಶೇ.11ರಿಂದ 15ರಷ್ಟು ದರವನ್ನು ಹೆಚ್ಚಿಸಿದೆ. ಅದರ ಹಿಂದಿನ ದಿನ ಏಕಕಾಲಕ್ಕೆ 1.80 ಕೋಟಿ ರೂಪಾಯಿಯಷ್ಟು ದಾಖಲೆಯ ವ್ಯವಹಾರವನ್ನು ಕೆಎಸ್‌‍ಐಸಿ ನಡೆಸಿತ್ತು. ಬೆಲೆ ಹೆಚ್ಚಳದ ಹೊರತಾಗಿಯೂ ಬೇಡಿಕೆ ತಗ್ಗಿಲ್ಲ. ಬದಲಾಗಿ ಗ್ರಾಹಕರ ಸಾಲು ಮತ್ತಷ್ಟು ಉದ್ದವಾಗಿದೆ. ಇತ್ತೀಚೆಗೆ ಮುಗಿದ ವರ ಮಹಾಲಕ್ಷ್ಮಿ ಹಬ್ಬಕ್ಕೆ ಕೆಎಸ್‌‍ಐಸಿ ಸೀರೆ ಸಿಗದೆ ಅದಷ್ಟೋ ಮಹಿಳೆಯರು ಬಿಟ್ಟಿದ್ದಾರೆ. ಹಬ್ಬ ಹರಿದಿನಗಳಲ್ಲಂತೂ ಈ ಸೀರೆಗಳ ಬೇಡಿಕೆ ಎಲ್ಲೆ ಮೀರಿಸುತ್ತದೆ. ಸರ್ಕಾರಿ ಉತ್ಪನ್ನವೊಂದು ಇಷ್ಟು ಬೇಡಿಕೆ ಉಳಿಸಿಕೊಂಡಿದ್ದರೂ ಅದನ್ನೂ ಪೂರೈಸಲು ಮೀನಾಮೇಶ ಎಣಿಸುತ್ತಿರುವುದೇಕೆ ಎಂಬುದು ನಿಗೂಢ ಪ್ರಶ್ನೆಯಾಗಿದೆ. +ಆರಂಭದಲ್ಲಿ ಮೈಸೂರು ರಾಜಮನೆತನಕ್ಕೆ ರೇಷೆ ಬಟ್ಟೆಗಳನ್ನು ತಯಾರಿಸಿ ಪೂರೈಸುವ ಹಾಗೂ ಸೇನೆಗೆ ಸಮವಸ್ತ್ರವನ್ನು ಸಜ್ಜುಗೊಳಿಸುವ ಸಲುವಾಗಿ 10 ನೇಯ್ಗೆ ಯಂತ್ರಗಳೊಂದಿಗೆ ಆರಂಭಗೊಂಡ ಮೈಸೂರು ಸಿಲ್‌್ಕ ಈಗ 150ಕ್ಕೂ ಹೆಚ್ಚು ಮಗ್ಗಗಳನ್ನು ಹೊಂದಿದೆ. ಭಾರತದಲ್ಲೇ ಮೊದಲ ಬಾರಿಗೆ ಸ್ವಿಜರ್‌ಲ್ಯಾಂಡ್‌ನಿಂದ ಅತ್ಯಾಧುನಿಕ ಮಗ್ಗಗಳು ಹಾಗೂ ಬಟ್ಟೆ ತಯಾರಿಕಾ ಯಂತ್ರಗಳನ್ನು ಆಮದು ಮಾಡಿಕೊಂಡಿದ್ದು ಮೈಸೂರು ಸಿಲ್‌್ಕ ಸಂಸ್ಥೆಯ ಹೆಗ್ಗಳಿಕೆ. +ಸಂಸ್ಥೆಯ ರೂಪಾಂತರ: +ಸ್ವಾತಂತ್ರ್ಯದ ನಂತರ ಮೈಸೂರು ರಾಜ್ಯದ ರೇಷೆ ಇಲಾಖೆ ನೇಯ್ಗೆ ಕಾರ್ಖಾನೆಯನ್ನು ತನ್ನ ಅಧೀನಕ್ಕೆ ತೆಗೆದುಕೊಂಡಿತ್ತು. 1980ರಲ್ಲಿ ಕರ್ನಾಟಕ ಕೆಎಸ್‌‍ಐಸಿಗೆ ಹಸ್ತಾಂತರಗೊಂಡಿದೆ. ಹಳೆ ಮೈಸೂರು ಭಾಗದಲ್ಲಿನ ಮೊದಲ ದರ್ಜೆಯ ನೈಸರ್ಗಿಕ ರೇಷೆಯಿಂದ ನೆಯುವುದರಿಂದ ಆಕರ್ಷಕ ಹೊಳಪು ಮೂಡುತ್ತದೆ. ವೇಗವಾದ ತಿರುಚಿವಿಕೆ 26-28 ಡೆನಿಯರ್‌ ಬಳಕೆ ಮಾಡುವುದರಿಂದ ನೈಪುಣ್ಯ ತೆಳುವು ಹಾಗೂ ಹಗುರವಾದ ಸೀರೆ ತಯಾರಾಗುತ್ತದೆ. ಶುದ್ಧ ಚಿನ್ನದ ಜರಿಗಳು ಸೀರೆಯ ಮೌಲ್ಯವನ್ನು ವೃದ್ಧಿಸಿವೆ, ದೀರ್ಘಕಾಲಿಕ ಬಾಳಿಕೆಗೆ ಕಾರಣವಾಗಿವೆ. +ಕೆಎಸ್‌‍ಐಸಿ ಸೀರೆಗಳು ಜಿಯೋಗ್ರಾಫಿಕಲ್‌ ಐಡೆಂಡಿಫಿಕೆಷನ್‌ ನೋಂದಣಿ (ಜಿಐ-11 ಟ್ಯಾಗ್‌) ಪಡೆದುಕೊಂಡಿವೆ. ಜೊತೆಗೆ ಐಎಸ್‌‍ಒ ಮಾಪಕ, ಟಿಯುವಿ ರೆಹಿನ್‌ಲ್ಯಾಂಡ್‌ ಪ್ರಮಾಣ ಪತ್ರ ಹೊಂದಿವೆ. ಉತ್ತಮ ಮಾರುಕಟ್ಟೆಗಾಗಿ 2016-17ರಲ್ಲಿ ಮುಖ್ಯಮಂತ್ರಿಯವರ ರತ್ನ ಪ್ರಶಸ್ತಿಯನ್ನು ಕೆಎಸ್‌‍ಐಸಿ ಪಡೆದುಕೊಂಡಿದೆ. ಜರಿ ಕ್ರೇಪ್‌ ಸೀರೆ, ಜರಿ ಕ್ರೇಪ್‌ ಮುದ್ರಿತ ಸೀರೆ, ಕ್ರೇಪ್‌ ಪ್ರಿಂಟೆಡ್‌ ಸೀರೆ, ಸಿದ್ಧ ಉಡುಪು ವಸ್ತುಗಳು, ಸ್ಕಾರ್ಫ್‌ ಮತ್ತು ಟೈಗಳನ್ನು ಕೆಎಸ್‌‍ಐಸಿ ಉತ್ಪಾದಿಸುತ್ತದೆ. +ಸಿಬ್ಬಂದಿ ಕೊರತೆ: +ಮೈಸೂರಿನ ಹೃದಯ ಭಾಗದ ಮಾನಂದವಾಡಿಯಲ್ಲಿ ನೇಯ್ಗೆ ಕಾರ್ಖಾನೆಯಿದೆ. ಟಿ ನರಸೀಪುರದಲ್ಲಿ ನೂಲು ತೆಗೆಯುವ ಘಟಕ, ಚನ್ನಪಟ್ಟಣದಲ್ಲಿ ಜೂಟು ರೇಷೆ ಗಿರಣಿ ಆವರಣದಲ್ಲಿ ಮತ್ತೊಂದು ನೇಯ್ಗೆ ಘಟಕ ಇದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಮಾರಾಟ ಕೇಂದ್ರದಲ್ಲಿ 180 ಮಂದಿ, ಮೈಸೂರಿನ ನೇಯ್ಗೆ ಕೇಂದ್ರದಲ್ಲಿ 500, ಟಿ ನರಸೀಪುರದಲ್ಲಿ 200, ಚೆನ್ನಪಟ್ಟಣದಲ್ಲಿ 89 ಮಂದಿ ಕೆಲಸ ಮಾಡುತ್ತಿದ್ದಾರೆ. ನಿಗಮದಲ್ಲಿ ಕೆಲಸ ಮಾಡುವವರ ಪೈಕಿ ಬಹುತೇಕ ಮಂದಿ ಹೊರ ಗುತ್ತಿಗೆ ಆಧಾರದಲ್ಲಿದ್ದಾರೆ. ಸುದೀರ್ಘ ಕಾಲಾವಧಿಯಲ್ಲಿ ಸೇವೆ ಸಲ್ಲಿಸುವ ಅವರು ತಮನ್ನು ಖಾಯಂ ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ದಣಿದು ಹೋಗಿದ್ದಾರೆ. +ವ್ಯಾಪಕ ಬೇಡಿಕೆ ಇದ್ದಾಗಲೂ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸದೆ ಸರ್ಕಾರಿ ಉದ್ಯಮದ ಕತ್ತು ಹಿಚುಕಲಾಗುತ್ತಿದೆ. ಕೆಎಸ್‌‍ಐಸಿ ಪರಣಿತಿ ಪಡೆದ ನೇಕಾರರಿಂದಷ್ಟೆ ಸೀರೆ ಉತ್ಪಾದಿಸುತ್ತದೆ. ಸಿಬ್ಬಂದಿಗಳ ಕೊರತೆಯ ಜೊತೆಗೆ ಪರಿಣಿತಿ ಪಡೆದ ನೇಕಾರರ ಕೊರತೆ ವ್ಯಾಪಕವಾಗಿದೆ. ಹೀಗಾಗಿ ನಿಗಮ ಖರೀದಿಸಿದ ಬಹಳಷ್ಟು ಯಂತ್ರಗಳು ಈಗಲೂ ಬಳಕೆಯಾಗದೆ ದೂಳು ತಿನ್ನುತ್ತಿವೆ. ಮೈಸೂರು ಘಟಕದಲ್ಲಿ 159 ಮಗ್ಗಗಳಲ್ಲಿ 152 ಮಾತ್ರ ಕೆಲಸ ನಿರ್ವಹಿಸುತ್ತಿದ್ದು, ಇನ್ನೂ ಏಳು ಮಗ್ಗಗಳು ನೇಕಾರರಿಲ್ಲದೆ ಬಳಕೆಯೇ ಆಗಿಲ್ಲ. ಕಿನರಸೀಪುರದಲ್ಲಿನ ನೂಲು ತೆಗೆಯುವ ಘಟಕದಲ್ಲಿ 60ರಲ್ಲಿ ಐದು ಯಂತ್ರಗಳು ಉಪಯೋಗಿಸುತ್ತಿಲ್ಲ. ಚನ್ನಪಟ್ಟಣದಲ್ಲಿ 30 ಮಗ್ಗಗಳನ್ನು ಅಳವಡಿಸಲಾಗಿದೆ. 16 ಮಾತ್ರ ಕಾರ್ಯಚರಣೆಯಲ್ಲಿದ್ದು, ಉಳಿದ ಮಗ್ಗಗಳು ತುಕ್ಕು ಹಿಡಿಯುತ್ತಿವೆ. +ಇಚ್ಚಾಸಕ್ತಿಯ ಕೊರತೆ: +ರಾಜಕೀಯ ಪುನರ್ವಸತಿ ಕೇಂದ್ರಗಳನ್ನಾಗಿ ಬಳಕೆ ಮಾಡಲಾಗುವ ಅನೇಕ ನಿಗಮ ಮಂಡಳಿಗಳು ನಷ್ಟದಲ್ಲಿವೆ, ಸರ್ಕಾರ ಅನುದಾನ ಕೊಟ್ಟು ಬಿಳಿ ಆನೆಯಂತೆ ಸಾಕುತ್ತಿದೆ. ಆದರೆ ಜನರಿಗೆ ಉಪಯುಕ್ತವಾಗಿರುವ, ಉತ್ಪನ್ನಕ್ಕೆ ವ್ಯಾಪಕ ಬೇಡಿಕೆ ಹೊಂದಿರುವ ಮತ್ತು ಲಾಭದಾಯಕವಾದ ಕೆಎಸ್‌‍ಐಸಿಯಂತಹ ಸಂಸ್ಥೆಯ ಉನ್ನತೀಕರಣಕ್ಕೆ ರಾಜಕೀಯ ಹಿತಾಸಕ್ತಿಯೇ ಇಲ್ಲವಾಗಿದೆ. +ರೇಷೆ ಇಲಾಖೆ ಎಂದರೆ ಸಂಪುಟದಲ್ಲಿ ಅನುಪಯುಕ್ತ ಖಾತೆ ಎಂಬಂತಾಗಿದೆ. ಸಚಿವರಿಗೆ ಜವಾಬ್ದಾರಿ ವಹಿಸುವಾಗ ಪ್ರಮುಖ ಖಾತೆ ಕೊಟ್ಟು ಜೊತೆಯಲ್ಲಿ ಇದನ್ನು ಉಪಖಾತೆ ಎಂಬಂತೆ ನೀಡಲಾಗುತ್ತದೆ. ಹಾಗಾಗಿ ಯಾವ ಸಚಿವರು ಕೆಎಸ್‌‍ಐಸಿ ಪುನರುತ್ತಾನ ಅಥವಾ ಅಭಿವೃದ್ಧಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಿಗಮದ ಹೆಸರಿನಲ್ಲಿ ಖರೀದಿಯಾಗುವ ವಸ್ತುಗಳು ಹಾಗೂ ವಾಹನಗಳನ್ನು ಸಚಿವಾಲಯದ ಅಧಿಕಾರಿ ಸಿಬ್ಬಂದಿಗಳು ಬಳಕೆ ಮಾಡಿಕೊಂಡು ಮಜಾ ಮಾಡಲಷ್ಟೆ ಈ ನಿಗಮ ಸೀಮಿತವಾಗಿದೆ. +ನಿಗಮವೇ ದುಡಿಯುವ ಲಾಭಂಶವನ್ನು ಬಳಕೆ ಮಾಡಿ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವುದು, ಮತ್ತಷ್ಟು ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಮೂಲಕ ಕೆಎಸ್‌‍ಐಸಿ ಸೀರೆಗಳಿಗೆ ಇರುವ ಬೇಡಿಕೆಯನ್ನು ಪೂರೈಸಲು ವ್ಯಾಪಕ ಅವಕಾಶಗಳಿವೆ. ನಿಗಮಕ್ಕೆ ಐದು ಮಂದಿ ಐಎಎಸ್‌‍ ಅಧಿಕಾರಿಗಳು ಭಾಧ್ಯಸ್ಥರಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಸಂಸ್ಥೆಯ ಉನ್ನತೀಕರಣಕ್ಕೆ ಈವರೆಗೂ ಗಂಭೀರವಾದ ಚರ್ಚೆ ನಡೆಯದೇ ಇರುವುದು ವಿಪರ್ಯಾಸವೇ ಸರಿ. \ No newline at end of file diff --git a/eesanje/url_46_40_9.txt b/eesanje/url_46_40_9.txt new file mode 100644 index 0000000000000000000000000000000000000000..42f87fd53db87388875f55a88de2f7eba3f8883a --- /dev/null +++ b/eesanje/url_46_40_9.txt @@ -0,0 +1,10 @@ + : ಬೀಸೋ ದೊಣ್ಣೆಯಿಂದ ಪಾರಾದ ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮಹತ್ವದ ಆದೇಶ +ಬೆಂಗಳೂರು :ಮೂಡ ಪ್ರಕರಣದಲ್ಲಿ ಕಾನೂನಿನ ಸಂಕೋಲೆಗೆ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೀಸುವ ದೊಣ್ಣೆಯಿಂದ ಪಾರಾಗಿದ್ದಾರೆ. ಹೈಕೋರ್ಟ್ ನಲ್ಲಿ ಇಂದು ನಡೆದ ಸುದೀರ್ಘ ವಿಚಾರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆ.29ರವರೆಗೂ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಲಾಗಿದೆ. +ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಯಾವುದೇ ಸಂಸ್ಥೆಗಳು ಮುಖ್ಯಮಂತ್ರಿ ವಿರುದ್ಧ ದುರುದ್ದೇಶ ಪೊರಿತ ಕ್ರಮ ಕೈಗೊಳ್ಳಲು ಅವಕಾಶ ಇಲ್ಲ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಸುಚಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಇದೇ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಪ್ರಕರಣದಲ್ಲಿ ತನಿಖೆ ಮತ್ತು ಅಭಿ ಯೋಜನೆಗೆ ಪೂರ್ವಾನುಮತಿ ನೀಡಿದ್ದರು. +ಸಿದ್ದರಾಮಯ್ಯ ಅದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದರು. ಸಿದ್ದರಾಮಯ್ಯ ಅವರ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನುಸಿಂಗ್ವಿ, ರಾಜ್ಯಪಾಲರು ತಮ್ಮ ವಿವೇಚನಾ ಅಧಿಕಾರವನ್ನು ಬಳಕೆ ಮಾಡಿಲ್ಲ ಎಂದು ಆಕ್ಷೇಪಿಸಿದರು. +ಸಚಿವ ಸಂಪುಟ ಸಭೆ ನೀಡಿದ ಸಲಹೆಯನ್ನು ಪರಿಗಣಿಸಿಲ್ಲ. ಮೂಡಾ ನಿವೇಶನ ಹಂಚಿಕೆ ಸುಮಾರು 20 ವರ್ಷಗಳ ಸುದೀರ್ಘ ಕಾಲಮಾನವಾಗಿದ್ದು ಸಿದ್ದರಾಮಯ್ಯ ಅವರು ಅಧಿಕಾರರೂಢರಾಗಿ ಯಾವುದೇ ಕಡತಗಳಿಗೆ ಸಹಿ ಹಾಕಿಲ್ಲ. ರಾಜ್ಯಪಾಲರು ತೆಗೆದುಕೊಂಡಿರುವ ಕ್ರಮಗಳು ಸೂಕ್ತವಾಗಿಲ್ಲ ಎಂದು ವಾದಿಸಿದರು. +ರಾಜ್ಯಪಾಲರು ಎಲ್ಲಾ ದಾಖಲೆಗಳನ್ನು ಪರಿಶೀಲಿಸಿ ನಂತರ ಪೂರ್ವಾನುಮತಿ ನೀಡಿರುವುದಾಗಿ ಹೇಳಿದ್ದಾರೆ. ಆದರೆ ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡಲಾಗಿದೆ. ಹಲವು ಪ್ರಕರಣಗಳು ಅಭಿಯೋಜನೆಯ ಪೂರ್ವಾನುಮತಿಗೆ ಬಾಕಿ ಇರುವಾಗ ಸಿದ್ದರಾಮಯ್ಯ ಅವರ ಪ್ರಕರಣವನ್ನು ಮಾತ್ರ ಆಯ್ಕೆ ಮಾಡಿಕೊಂಡಿರುವುದು ಪ್ರಶ್ನಾರ್ಹ ಎಂದರು. +ಅದಕ್ಕೆ ಪ್ರತಿಯಾಗಿ ರಾಜ್ಯಪಾಲರ ಪರವಾಗಿ ವಾದಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಆಕ್ಷೇಪ ವ್ಯಕ್ತಪಡಿಸಿ, ಸಚಿವ ಸಂಪುಟ ಸಭೆಯ ಸಲಹೆಯನ್ನು ಪರಿಗಣಿಸುವ ಅಗತ್ಯ ಇಲ್ಲ ಎಂದು ಪ್ರಕರಣವೊಂದನ್ನು ಉಲ್ಲೇಖಿಸಿದರು. ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡುವ ಮತ್ತು ತನಿಖೆಗೆ ಪೂರ್ವಾನುಮತಿ ನೀಡುವ ಅಧಿಕಾರ ಹೊಂದಿದ್ದಾರೆ. ರಾಜ್ಯಪಾಲರ ಮುಂದೆ ಅಭಿಯೋಜನೆಗೆ ಪೂರ್ವಾನುಮತಿ ಕೇಳಿರುವ ಯಾವ ಅರ್ಜಿಗಳು ಬಾಕಿ ಉಳಿದಿಲ್ಲ ಎಂದರು. +ಅಭಿಷೇಕ್ ಮನುಸಿಂಗ್ವಿ, ವಾದ ಮುಂದುವರೆಸಿ ಟಿ ಜೆ ಅಬ್ರಾಹಿಂ ದೂರು ನೀಡಿದ ದಿನವೇ ರಾಜ್ಯಪಾಲರು ಮುಖ್ಯಮಂತ್ರಿಯವರಿಗೆ ಶೋಕಾಶ್ ನೋಟಿಸ್ ನೀಡಿದ್ದಾರೆ. ಪ್ರತಿವಾದಿಗಳಾದ ಪ್ರದೀಪ್ ಕುಮಾರ್ ಮತ್ತು ಸ್ನೇಹಮಯಿ ಷ್ಣ ಅವರ ದೂರುಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಲ್ಲ ಎಂದು ಆಕ್ಷೇಪಿಸಿದ್ರು.ದೂರುದಾರರ ಪರವಾಗಿ ಪ್ರಭುಲಿಂಗನಾವಡಗಿ, ಕೆ ಜಿ ರಾಘವನ್, ರಂಗನಾಥ್ ವಾದಿಸಿ ಯಾವುದೇ ತಡೆಯಾಜ್ಞೆ ನೀಡದಂತೆ ಮನವಿ ಮಾಡಿದರು. +ವಾದ ವಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಮೂರ್ತಿಗಳು, ಮುಂದಿನ ವಿಚಾರಣೆಯನ್ನು ಆಗಸ್ಟ್ 29ರ ಮಧ್ಯಾಹ್ನ 2:30ಕ್ಕೆ ಮುಂದೂಡುವುದಾಗಿ ತಿಳಿಸಿದರು. ಆವರೆಗೂ ಬೇರೆ ಯಾವ ಪ್ರಕ್ರಿಯೆಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯದಂತೆ ಆದೇಶಿಸ ಬೇಕು ಎಂದು ಅಭಿಷೇಕ್ ಮನು ಸಿಂಗ್ವಿ ಕೋರಿದರು. ಪೊಲೀಸ್ ಇನ್ಸ್ಪೆಕ್ಟರ್ ಬಂದು ಮುಖ್ಯಮಂತ್ರಿಯನ್ನು ಬಂಧಿಸಲು ಸಾಧ್ಯವೇ ? ಭಯ ಏಕೆ ಎಂದು ತುಷಾರ್ ಮೆಹ್ತಾ ಆಕ್ಷೇಪಿಸಿದರು. +ಸದ್ಯಕ್ಕೆ ಯಾವುದೇ ತಡೆಯಾಜ್ಞೆಗಳು ನೀಡುವುದಿಲ್ಲ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಆದೇಶ ನೀಡುವಂತಿಲ್ಲ ಮತ್ತು ಯಾವುದೇ ಪ್ರಕ್ರಿಯೆಗಳು ಮುಂದುವರಿಸುವಂತಿಲ್ಲ ಎಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದರು.ಹೈಕೋರ್ಟ್ ನ ಆದೇಶದಿಂದ ಸದಸ್ಯಕ್ಕೆ ಮುಖ್ಯಮಂತ್ರಿಯವರು 10 ದಿನಗಳ ಕಾಲ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ. \ No newline at end of file diff --git a/eesanje/url_46_41_1.txt b/eesanje/url_46_41_1.txt new file mode 100644 index 0000000000000000000000000000000000000000..479674bc4f75b9625db225b4a34930a12ce7575b --- /dev/null +++ b/eesanje/url_46_41_1.txt @@ -0,0 +1,14 @@ +ಸಿಎಸ್‌‍ಆರ್‌ ನಿಧಿಯಡಿಯಲ್ಲಿ 200 ಶಾಲೆಗಳ ಅಭಿವೃದ್ಧಿ : ಡಿಸಿಎಂ ಡಿಕೆಶಿ +ಬೆಂಗಳೂರು, ಅ.19-ರಾಜ್ಯದಲ್ಲಿ 2000 ಶಾಲೆಗಳನ್ನು ಸಿಎಸ್‌‍ಆರ್‌ ನಿಧಿಯಡಿ ಅಭಿವೃದ್ದಿಪಡಿಸಲು ಗುರುತಿಸಲಾಗಿದ್ದು, ಉದ್ಯಮಿಗಳು ಇವುಗಳಲ್ಲಿ ಯಾವುದೇ ಶಾಲೆಗಳಲ್ಲಿ ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರೆ ನೀಡಿದ್ದಾರೆ. +ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ ನಲ್ಲಿ ನಡೆದ ಸಿಎಸ್‌‍ಆರ್‌ ಎಜು ಕಾಂಕ್ಲೇವ್‌ ನಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ ಎಂದರು. ಜಗತ್ತಿನ ಯಾವುದೇ ಅಂತಾರಾಷ್ಟ್ರೀಯ ಕಂಪನಿಗಳ ಎರಡನೇ ಹುದ್ದೆ ಭಾರತೀಯರದ್ದೇ ಆಗಿದ್ದು, ಅಷ್ಟು ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನಮ್ಮ ಮಕ್ಕಳು ಜಗತ್ತಿನ ಪೈಪೋಟು ಎದುರಿಸಬೇಕು. ಇದರಿಂದ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯವಿದೆ. ಅದಕ್ಕಾಗಿಯೇ ನಾವು ಸಿಎಸ್‌‍ಆರ್‌ ನಿಧಿಯನ್ನು ಮೂರ್ನಾಲ್ಕು ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಅವರು ಹೇಳಿದರು. +ರಾಜ್ಯದಲ್ಲಿ 43 ದೊಡ್ಡ ಕಂಪನಿಗಳು 4 ಲಕ್ಷ ಕೋಟಿಗೂ ಹೆಚ್ಚಿನ ಲಾಭದಲ್ಲಿವೆ. ಲಾಭದಲ್ಲಿ 8063 ಕೋಟಿ ಸಿಎಸ್‌‍ಆರ್‌ ಫಂಡ್‌ ನೀಡುತ್ತಿವೆ,. ಅದರಲ್ಲಿ ಒಂದು ಪೈಸೆಯನ್ನೂ ನಮಗೆ ನೀಡದೇ ನೇರವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಹುದಾಗಿದೆ ಎಂದರು.ಗ್ರಾಮೀಣ ಭಾಗದಲ್ಲಿಯೂ ನಗರದಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸಿಗಬೇಕು. ನಾನೇ ಇದಕ್ಕೆ ಉತ್ತಮ ಉದಾಹರಣೆ. ನಾನು ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನಮ್ಮ ಆಸ್ತಿಯಲ್ಲೇ ಹತ್ತು ಎಕರೆ ಜಾಗ ಸರ್ಕಾರಿ ಶಾಲೆಗೆ ನೀಡಿದ್ದೇವೆ. ಬೇರೆಯವರಿಗೆ ಕೇಳುವ ಮೊದಲು ನಾವೇ ಆರಂಭಿಸಬೇಕು ಎಂದು ನಾನು ಜಾಗ ನೀಡಿದ್ದೇನೆ ಎಂದು ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಹಕಾರ ಕೋರುವ ನಿಲುವನ್ನು ಅರ್ಥಪೂರ್ಣವಾಗಿ ಅವರು ಸಮರ್ಥಿಸಿಕೊಂಡರು. +ನಿಮ್ಮ ಮಕ್ಕಳಂತೆ ನೀವು ಅಭಿವೃದ್ದಿಪಡಿಸುವ ಸರ್ಕಾರಿ ಶಾಲೆಗಳನ್ನು ಸಾಕಿ, ಶಾಲೆಗಳಲ್ಲಿ ನಿಮ್ಮ ಬ್ರ್ಯಾಂಡಿಂಗ್‌ ಮಾಡಿಕೊಳ್ಳಲು ಅಡ್ಡಿ ಇಲ್ಲ. ಜಿಲ್ಲೆ, ತಾಲ್ಲೂಕು ಕೇಂದ್ರ ಸೇರಿ ನಗರ ಪ್ರದೇಶದ ಯಾವುದೇ ಶಾಲೆ ಅಭಿವೃದ್ದಿಪಡಿಸಲು ಆಯ್ಕೆ ಮಾಡಿಕೊಳ್ಳುವುದು ಬೇಡ. ಈಗಾಗಲೇ ಅಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಗ್ರಾಮೀಣ ಭಾಗದ 2000 ಶಾಲೆ ಗುರುತಿಸಿದ್ದೇವೆ ಎಂದು ಅವರು ತಿಳಿಸಿದರು. +ಮೂರ್ನಾಲ್ಕು ವರ್ಷ ಸಿಎಸ್‌‍ಆರ್‌ ನಿಧಿ ಪ್ರಾಥಮಿಕ ಶಿಕ್ಷಣ ಇಲಾಖೆಗೇ ನೀಡಬೇಕು. ಮುಂದೆ ಆರೋಗ್ಯ ಸೇರಿ ಇತರ ಇಲಾಖೆಗೆ ಆಧ್ಯತೆ ನೀಡೋಣ. ಇದು ದೇಶಕ್ಕೆ ದೊಡ್ಡ ಮಾದರಿಯಾದ ವ್‌ಯವಸ್ಥೆ ಆಗಲಿದೆ. ಬಲಿಷ್ಠ ಸರ್ಕಾರ ರಚನೆಗೆ ನೀವೆಲ್ಲಾ ಅವಕಾಶ ನೀಡಿದ್ದೀರಿ. ನಾನು ಡಿಸಿಎಂ ಆಗಿ ಸರ್ಕಾರದ ಮಟ್ಟದಿಂದ ನಿಮ್ಮ ಯಾವುದೇ ಸಮಸ್ಯೆ ಪರಿಹರಿಸಿವ ಭರವಸೆ ನೀಡುತ್ತಿದ್ದೇನೆ.ಸಮಸ್ಯೆಗಳಿದ್ದರೆ ಹೇಳಿ ಎಂದು ಕಂಪನಿಗಳಿಗೆ ಭರವಸೆ ನೀಡಿದರು. +ಈಗ ಎಂಒಯು ಮಾಡಿಕೊಳ್ಳುವವರು ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಮೊದಲ ಹಂತದ 500 ಶಾಲೆ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು. ನಂತರ ಮುಂದಿನ ದಿನಗಳಲ್ಲಿ ಉಳಿದ ಕಡೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. +ಮಧು ಬಂಗಾರಪ್ಪಗೆ ಬೇರೆ ಇಲಾಖೆ ನೀಡಲಾಗಿತ್ತು ಆದರೆ, ನಾನೇ ಹೈಕಮಾಂಡ್‌ ಜೊತೆ ಮಾತನಾಡಿ ಶಿಕ್ಷಣ ಇಲಾಖೆ ಕೊಡಿಸಿದೆ.ನಮ್ಮ ನಿರೀಕ್ಷೆಯಂತೆ ಉತ್ತಮ ರೀತಿಯಲ್ಲಿ ಮಧು ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್‌ಯಕ್ತಪಡಿಸಿದರು. +ಒಂದೇ ಸೂರಿನಲ್ಲಿ 12 ನೇ ತರಗತಿವರೆಗೂ ಶಿಕ್ಷಣ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಯುಕೆಜಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು. +ಎಲ್ಕೆಜಿಯಿಂದ 12 ನೇ ತರಗತಿವರೆಗೂ ಒಂದೇ ಆವರಣದಲ್ಲಿ ಶಿಕ್ಷಣ ಸಿಗುವಂತೆ ಮಾಡುವ ಗುರಿಯೊಂದಿಗೆ ಪ್ರಾಥಮಿಕ ಶಿಕ್ಷಣ ಇಲಾಖೆಯಲ್ಲಿ ಸಿಎಸ್‌‍ಆರ್‌ ನಿಧಿ ಬಳಸಿಕೊಂಡು ಶಾಲೆಗಳ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು. +16 ತಿಂಗಳ ಹಿಂದೆ ಸಚಿವನಾದೆ. ಆಗ ನನಗೆ ಸವಾಲಿನ ಜವಾಬ್ದಾರಿ ನೀಡಲು ಸಿಎಂ ಸೂಚಿಸಿದ್ದರು. ಅದರಂತೆ ಈಗ ನಾನು 44 ಸಾವಿರ ಕೋಟಿ ವಾರ್ಷಿಕ ವಿನಿಯೋಗದ ಶಿಕ್ಷಣ ಇಲಾಖೆ ನಿರ್ವಹಣೆ ಮಾಡುತ್ತಿದ್ದೇನೆ,. 1-12 ನೇ ತರಗತಿವರೆಗೆ 56 ಲಕ್ಷ ವಿದ್ಯಾರ್ಥಿಗಳು ವ್‌ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ಒತ್ತು ನೀಡಲಾಗಿದೆ,. 56 ಸಾವಿರ ಶಿಕ್ಷಕರ ಕೊರತೆ ಇದೆ, 45 ಸಾವಿರ ಅತಿಥಿ ಶಿಕ್ಷಕರ ಬಳಸಿಕೊಂಡು ಶಿಕ್ಷಣ ನೀಡಲಾಗುತ್ತಿದೆ, ಈಗ 13 ಸಾವಿರ ಶಿಕ್ಷಕರ ನೇಮಕಾತಿಯಾಗುತ್ತಿದೆ. 5000 ಶಿಕ್ಷಕರ ನೇಮಕಾತಿಗೆ ಪ್ರಕ್ರಿಯೆ ಸಧ್ಯದಲ್ಲೇ ಆಗಲಿದೆ ಎಂದರು. +ವರ್ಷದ ಹಿಂದೆ ಸಿಎಸ್‌‍ಆರ್‌ ಕಾಂಕ್ಲೇವ್‌ ನಡೆಸಿದ್ದೆವು. ಶಿಕ್ಷಣಕ್ಕೆ ಸೀಮಿತವಾಗಿ ಸಿಎಸ್‌‍ಆರ್‌ ನಿಧಿ ಪೂರ್ಣಪ್ರಮಟಣದಲ್ಲಿ ಮುಂದಿನ ಎರಡು ಮೂರು ವರ್ಷ ವಿನಿಯೋಗಕ್ಕೆ ಡಿಸಿಎಂ ಸೂಚಿಸಿದ್ದರು. ಅದರಂತೆ ಪೂರ್ಣ ಪ್ರಮಾಣದಲ್ಲಿ ನಿಧಿ ಬಳಸಿಕೊಂಡು ಶಿಕ್ಷಣ ವ್‌ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ. ಈಗಾಗಲೇ ಎಲ್ಲಾ ಸರ್ಕಾರಿ ಶಾಲೆಗಳಿಗೂ ಸಂಪೂರ್ಣ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಗ್ರಾಮಗಳಲ್ಲಿ ವಿಶೇಷ ತರಗತಿ ಸಂಜೆ ವೇಳೆ ನಡೆಸಲಾಗುತ್ತಿದೆ ಎಂದು ಹೇಳಿದರು. ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ ಉಚಿತವಾಗಿ ನೀಡಲಾಗುತ್ತಿದೆ. ಈಗ ಅಜೀಂ ಪ್ರೇಂಜಿ ಫೌಂಡೇಷನ್‌ ಎಂಒಯು ಸಹಿ ಮಾಡಿದೆ. 1500 ಕೋಟಿ ಮೊತ್ತದಲ್ಲಿ ಮುಂದಿನ ಮೂರು ವರ್ಷ ಮೊಟ್ಟೆ ಕೊಡಲು ಒಡಂಬಡಿಕೆ ಮಾಡಲಾಗಿದೆ ಎಂದರು. +ಕಲ್ಯಾಣ ಕರ್ನಾಟಕದಲ್ಲಿ 1000 ಎಲ್ಕೆಜಿ ಯುಕೆಜಿ ತೆರೆದಿದ್ದೇವೆ. 38 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಮುಂದೆ ರಾಜ್ಯದ ಎಲ್ಲಾ ಕಡೆ ಎಲ್ಕೆಜಿ ಯುಕೆಜಿ ತೆರೆಯಲಿದ್ದೇವೆ. ಎಲ್ಕೆಜಿ ಯುಕೆಜಿಯಿಂದ 12 ನೇ ತರಗತಿವರೆಗೆ ಒಂದೇ ಆವರಣದಲ್ಲಿ ಮಕ್ಕಳು ವ್‌ಯಾಸಂಗ ಮಾಡುವ ವ್‌ಯವಸ್ಥೆ ಬರಬೇಕು ಎನ್ನುವ ಕನಸು ನಮ್ಮದು. ಇದೇ ವೇಳೆ ವಿವಿಧ ಕಂಪನಿಗಳು ಸರ್ಕಾರದ ಜತೆ ಶಾಲೆಗಳ ಅಭಿವೃದ್ಧಿ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಯಿತು. +ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌,ಹಿರಿಯ ಅಧಿಕಾರಿಗಳ:ಆದ ಉಮ ಮಹದೇವನ್‌,ಸೆಲ್ವಕುಮಾರ್‌ , ಕಾವೇರಿ, ರಾಜೇಂದ್ರ ಜೋಳನ್‌, ಅಜೆಯ್‌ ಸಿಂಗ್‌, ಉದ್ಯಮಿ ಪ್ರಕಾಶ್‌, ನಿತೀಶ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು . \ No newline at end of file diff --git a/eesanje/url_46_41_10.txt b/eesanje/url_46_41_10.txt new file mode 100644 index 0000000000000000000000000000000000000000..0d1a76a323dfe5303e65ebc521655ccd07934779 --- /dev/null +++ b/eesanje/url_46_41_10.txt @@ -0,0 +1,9 @@ +ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು, ಆ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. +ನಗರದಲ್ಲಿಂದು ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. +ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ನಾವು ಮಹಾತಗಾಂಧಿಜೀಯವರ ಅಹಿಂಸಾ ತತ್ವವನ್ನು ಪಾಲನೆ ಮಾಡುತ್ತೇವೆ. ಅದೇ ಮಾದರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಸಂದೇಶ ರವಾನಿಸಲು ಯತ್ನಿಸುತ್ತೇವೆ ಎಂದರು. +ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಇಲ್ಲದೆ ಇರುವ ವಿವಾದವನ್ನು ಸೃಷ್ಟಿಸಿ, ದೊಡ್ಡ ಸರ್ಕಾರವನ್ನು ಪತನಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಅಖಿಲ ಭಾರತ ಮಟ್ಟದಲ್ಲಿ ಇದೇ ವಿಚಾರವಾಗಿ ಪ್ರತಿಭಟನೆ ನಡೆಸುವ ಬಗ್ಗೆ ನಮಗೆ ಮಾಹಿತಿ ಇಲ್ಲ. ರಾಜ್ಯದ ಪಕ್ಷದ ವಿಚಾರವಾಗಿ ನಾನು ಮಾತನಾಡಬಲ್ಲೆ ಎಂದು ತಿಳಿಸಿದರು. +ಪ್ರಕರಣದ ಬೆಳವಣಿಗೆ ಹಾಗೂ ವಾಸ್ತವಾಂಶಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದು ನಮ ಜವಾಬ್ದಾರಿ. ಅದಕ್ಕಾಗಿ ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು. +ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ:ತುಂಗಾಭದ್ರಾ ಅಣೆಕಟ್ಟೆಯಲ್ಲಿ ಹೊಡೆದು ಹೋಗಿದ್ದ 19ನೇ ಕ್ರಸ್ಟ್ ಗೇಟ್ ಅಳವಡಿಕೆಯನ್ನು ಬಹಳ ಚೆನ್ನಾಗಿ ಮಾಡಿದ್ದಾರೆ. ಯಶಸ್ಸಿ ಕಾರ್ಯಾಚರಣೆ ನಡೆಸಿದ ಎಲ್ಲರನ್ನು ಕರೆಸಿ ಮುಂದಿನ ದಿನಗಳಲ್ಲಿ ನಾವು ಸನಾನ ಮಾಡುತ್ತೇವೆ ಎಂದು ತಿಳಿಸಿದರು. +ಬಿಜೆಪಿ-ಜೆಡಿಎಸ್ನವರು ಗೇಟ್ ವಿಚಾರವಾಗಿ ಮಾಡಿದ ಟೀಕೆಗಳಿಗೆ ಉತ್ತರವಾಗಿ ನಮ ಕೆಲಸ ಯಶಸ್ವಿಯಾಗಿದೆ. ವಿರೋಧ ಪಕ್ಷಗಳ ಮುಖಂಡರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಬಸವರಾಜ ಬೊಮಾಯಿ, ವಿಜಯೇಂದ್ರ, ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ ಟೀಕೆಗಳಿಗೆ ಸಾಕ್ಷಿಯಾಗಿ ಗೇಟ್ ಅಳವಡಿಕೆ ಕೆಲಸ ಯಶಸ್ವಿಯಾಗಿದೆ ಎಂದು ತಿರುಗೇಟು ನೀಡಿದರು. +ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದರು. \ No newline at end of file diff --git a/eesanje/url_46_41_11.txt b/eesanje/url_46_41_11.txt new file mode 100644 index 0000000000000000000000000000000000000000..6b9a2d5394ca5f4a4e28b5e241ccdc665a1923c1 --- /dev/null +++ b/eesanje/url_46_41_11.txt @@ -0,0 +1,10 @@ +ವ್ಯಕ್ತಿಗೆ ಆದರ್ಶ ಇಲ್ಲದಿದ್ದರೆ ವ್ಯಕ್ತಿತ್ವ ಬೆಳೆಯಲಾರದು : ನಿರ್ಮಲಾನಂದನಾಥ ಶ್ರೀ +ಗೌರಿಬಿದನೂರು, ಆ.18-ವ್ಯಕ್ತಿಗೆ ಆದರ್ಶ ಇಲ್ಲದೆ ಹೋದರೆ ವ್ಯಕ್ತಿತ್ವ ಬೆಳೆಯಲಾರದು. ಹಾಗೇ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿ ಇಲ್ಲದೆ ಹೋದರೆ ಸಮಾಜ ವಿಕಸಿತವಾಗದು. ಈ ನಿಟ್ಟಿನಲ್ಲಿ ಕೆಂಪೇಗೌಡ ಅವರಂತಹ ಆದರ್ಶ ವ್ಯಕ್ತಿಯ ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟಿದ್ದಾರೆ. +ನಗರದಲ್ಲಿ ಕೆಂಪೇಗೌಡ ಸಾಂಸ್ಕೃತಿ ವೇದಿಕೆ ಮತ್ತು ತಾಲೂಕು ಆಡಳಿತ ಸಂಯುಕ್ತಾಶ್ರಯ ದಲ್ಲಿ ಹಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಹಾಗೂ ನಾಡಪ್ರಭು ಕೆಂಪೇಗೌಡ ವೃತ್ತ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೆಂಪೇಗೌಡ ವೃತ್ತವನ್ನು ಲೋಕಾರ್ಪಣೆ ಮಾಡಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಕೆಂಪೇಗೌಡರ ವ್ಯಕ್ತಿತ್ವ ಸ್ವಾರ್ಥಕರ್ಮಕ್ಕೆ ಸೀಮಿತವಾಗದೆ, ಸಮಾಜದ ಅಭ್ಯುದಯಕ್ಕೆ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ಬಣ್ಣಿಸಿದರು. +ಕೆಂಪೇಗೌಡರು ಸಮಾಜದಲ್ಲಿ ಜಾತ್ಯಾತೀತ ವಾಗಿ ಎಲ್ಲ ವರ್ಗದ ಜನರಿಗೆ ಕರ್ಮದ ಮಾರ್ಗವನ್ನು ತೋರಿಸಿದ್ದರು ಎಂಬುದಕ್ಕೆ ಬೆಂಗಳೂರಿ ನಲ್ಲಿ ಕುರುಬರಪೇಟೆ, ತಿಗಳರಪೇಟೆ, ಚಿಕ್ಕಪೇಟೆ, ಬಳೆಪೇಟೆ ಹೀಗೆ ಹತ್ತು ಹಲವಾರು ಕೌಶಲ್ಯಾಧಾರಿತ ವಿದ್ಯೆಯ ಅಭಿವೃದ್ಧಿಗೆ ಕೆಂಪೇಗೌಡರು ಅಂದೇ ನಾಂದಿ ಹಾಡಿದ್ದರು ಎಂದು ಹೇಳಿದರು. +ಕೆಂಪೇಗೌಡರು ತಮ ಆಳ್ವಿಕೆಯಲ್ಲಿ ಜ್ಞಾನದ ದಾಸೋಹಕ್ಕೆ ಆದ್ಯತೆ ನೀಡಿದ್ದರು. ಪೋಷಕರು ಮಕ್ಕಳಿಗೆ ದೂರದೃಷ್ಟಿಯ ಜ್ಞಾನಕ್ಕೆ ಒತ್ತು ನೀಡಬೇಕು. ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಮಕ್ಕಳ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪೋಷಕರು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು. +ಶಿರಾ ತಾಲೂಕಿನ ಶ್ರೀ ಕ್ಷೇತ್ರ ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಮಾತನಾಡಿ, ಸಮಾಜದಲ್ಲಿ ಆದರ್ಶ ಪ್ರಾಯರ ಜಯಂತಿಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂಬ ನಿಟ್ಟಿನಲ್ಲಿ ಆದರ್ಶ ವ್ಯಕ್ತಿಗಳ ಜಯಂತಿ ಆಚರಣೆ ಮಾಡಲಾಗುತ್ತದೆ. ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಾಡನ್ನು ಕಟ್ಟಿ ಇಂದಿಗೆ 500 ವರ್ಷಗಳು ಕಳೆದಿವೆ. ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಬೆಂಗಳೂರು ತನ್ನದೇ ಆದ ಪ್ರಸಿದ್ಧಿ ಪಡೆದುಕೊಂಡಿದೆ. ಕೆಂಪೇಗೌಡರ ನಾಡ ಚಿಂತನೆ ಇಂದಿನ ರಾಜಕೀಯ ವ್ಯಕ್ತಿಗಳಿಗೆ ಆದರ್ಶಪ್ರಾಯವಾಗಿದೆ ಎಂದು ತಿಳಿಸಿದರು. +ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಮಾತನಾಡಿ, ಕೆಂಪೇಗೌಡರು ಒಂದು ವರ್ಗಕ್ಕೆ ಸೀಮಿತರಾದವರಲ್ಲ. ಸಮಾಜದ ಎಲ್ಲಾ ವರ್ಗಗಳಿಗೂ ಸೀಮಿತವಾದ ಆದರ್ಶ ವ್ಯಕ್ತಿಯಾಗಿ ದ್ದಾರೆ. ಈ ನಿಟ್ಟಿನಲ್ಲಿ ಇಂದು ನಗರದ ಬೈಪಾಸ್ ರಸ್ತೆಯ ವೃತ್ತದಲ್ಲಿ ನಾಡಪ್ರಭು ಕೆಂಪೇಗೌಡರ ವೃತ್ತವನ್ನು ಅನಾವರಣಗೊಳಿಸಲಾಗಿದೆ. ಕೆಂಪೇಗೌಡರು ಮುಂದಾಲೋಚನೆ ಯಿಂದ ಕಟ್ಟಿದ ಬೆಂಗಳೂರು ಇಂದು ಇಡೀ ರಾಜ್ಯದಲ್ಲೇ ಶೇ.60ರಷ್ಟು ತೆರಿಗೆ ಆದಾಯ ಹರಿದು ಬರುತ್ತಿದೆ ಎಂದರು. +ರಾಷ್ಟ್ರಕವಿ ಕುವೆಂಪು ಅವರು ತಿಳಿಸಿದಂತೆ ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು 500 ವರ್ಷಗಳ ಹಿಂದೆಯೇ ಕೆಂಪೇಗೌಡರು ಮನಗಂಡು, ಜಾತ್ಯಾತೀತವಾಗಿ ಎಲ್ಲಾ ವರ್ಗದ ಜನರಿಗೂ ಬದುಕನ್ನು ಕಟ್ಟಿಕೊಟ್ಟಿದ್ದಾರೆ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಬೇಕೆಂಬ ಉದ್ದೇಶದಿಂದ ಇಂದು ಕೆಂಪೇಗೌಡ ವೃತ್ತವನ್ನು ಶ್ರೀಗಳಿಂದ ಲೋಕಾರ್ಪಣೆ ಗೊಳಿಸಲಾಗಿದೆ ಎಂದರು. +ಕೆಂಪೇಗೌಡ ಪ್ರಶಸ್ತಿ ಪುರಸ್ಕಾರ:ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಪಕ್ಷಾತೀತವಾಗಿ ಗುರುತಿಸಿ ಕೆಂಪೇಗೌಡ ಸಾಂಸ್ಕೃತಿಕ ವೇದಿಕೆಯಿಂದ ಕೆಂಪೇಗೌಡ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. +ಬೆಂಗಳೂರು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಎಂ.ಕೃಷ್ಣಮೂರ್ತಿ, ತಹಸೀಲ್ದಾರ್ ಮಹೇಶ್ ಎಸ್.ಪತ್ರಿ, ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್, ಪೌರಾಯುಕ್ತರಾದ ಡಿ.ಎಂ.ಗೀತಾ, ಇಒ ಹೊನ್ನಯ್ಯ ಜಿ.ಕೆ., ಬಿಇಒ ಶ್ರೀನಿವಾಸಮೂರ್ತಿ, ಸಹಾಯಕ ಕೃಷಿ ನಿರ್ದೇಶಕ ಮೋಹನ್, ಕೆಂಪೇಗೌಡ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಆರ್.ಜಿ.ಜನಾರ್ಧನ್ ಮೂರ್ತಿ, ಉಪಾಧ್ಯಕ್ಷ ಅಶ್ವತ್ಥರೆಡ್ಡಿ, ಕಾರ್ಯದರ್ಶಿ ಪ್ರಭಾಕರರೆಡ್ಡಿ, ಖಜಾಂಚಿ ಲಕ್ಷ್ಮಿನರಸಮ, ಸಹ ಕಾರ್ಯದರ್ಶಿ ಬಿ.ಎಸ್.ಪರಮೇಶ್ವರರೆಡ್ಡಿ, ರಾಮಚಂದ್ರರೆಡ್ಡಿ, ಕಾನೂನು ಸಲಹೆಗಾರ ಮಲ್ಲಿಕಾರ್ಜುನ್, ಎಸ್.ಆರ್.ಮನೋಹರ್, ಮುಖಂಡರಾದ ಶ್ರೀನಿವಾಸಗೌಡ, ಎಂ.ನರಸಿಂಹಮೂರ್ತಿ, ಅಬ್ದುಲ್ಲಾ, ವಿವಿಧ ಇಲಾಖೆ ಅಧಿಕಾರಿಗಳು, ಕೆಎಚ್ಪಿ ಬಣದ ನಗರಸಭಾ ಸದಸ್ಯರು ಭಾಗವಹಿಸಿದ್ದರು. \ No newline at end of file diff --git a/eesanje/url_46_41_12.txt b/eesanje/url_46_41_12.txt new file mode 100644 index 0000000000000000000000000000000000000000..8fcba5a9f619581f4152511f28ba6c2f8ed9db41 --- /dev/null +++ b/eesanje/url_46_41_12.txt @@ -0,0 +1,11 @@ +ಸಿಎಂ ಸಿದ್ದರಾಮಯ್ಯನವರಿಗೆ ‘ಬಂಡೆ’ಯಿಂದಲೇ ಡೇಂಜರ್ : ಹೆಚ್ಡಿಕೆ ಮಾರ್ಮಿಕ ಹೇಳಿಕೆ +ಬೆಂಗಳೂರು, ಆ.18-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಹೇಳುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡುತ್ತಾರೆಂಬ ನಂಬಿಕೆಯೂ ಇಲ್ಲ ಎಂದು ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಡೇಂಜರ್. ಇತ್ತೀಚೆಗೆ ಮಳೆ ಬಂದು ಭೂ ಕುಸಿತವಾದಾಗಲ್ಲೂ ಬಂಡೆಗಳಿಂದಲ್ಲೇ ಡೇಂಜರ್ ಆಗಿದ್ದು ಎಂದು ಮಾರ್ಮಿಕವಾಗಿ ನುಡಿದರು. +ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ನಡೆಯಲಿದೆ. ಯಾವ ಹಂತದಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗಲಿದೆ ಎಂದರು. +ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಮಾಡಿರುವುದಕ್ಕೂ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೂ ಸಂಬಂಧವಿಲ್ಲ. ನಮ ಪಾದಯಾತ್ರೆಯಿಂದ ಇದೆಲ್ಲವೂ ಆಗಿದೆ ಎಂದು ಹೇಳುವುದಿಲ್ಲ. ನಾಡಿನ ಜನತೆಗೆ ರಾಜಕೀಯ ಸಂದೇಶ ಕೊಡಬೇಕಿತ್ತು. ಅದನ್ನು ಕೊಟ್ಟಿದ್ದೇವೆ ಎಂದು ಅವರು ಹೇಳಿದರು. +ಕುಮಾರಸ್ವಾಮಿ ಅವರ ಮೇಲೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ. 2006ರಲ್ಲಿ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಗಣಿಗಾರಿಕೆ ನಡೆಸುವ ಮಾಲೀಕರಿಂದ ಹಣ ಸಂಗ್ರಹ ಮಾಡಿದ ಆರೋಪ ಮಾಡಿದ್ದರು. ಅದರ ಬಗ್ಗೆ ಒಂದು ಸಿಡಿ ಮಾಡಲು ಸಿಡಿ ಶಿವು ಪ್ರಯತ್ನ ಮಾಡಿದ್ದರು ಎಂದು ಆರೋಪಿಸಿದರು. +ವಿಧಾನಸಭೆಯಲ್ಲಿ ಬಂದು ಆಪರೇಷನ್ ಸಕ್ಸಸ್ ಆಗಿದೆ ಅಂದರು. ಆಗ ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ ಎಂದಿದ್ದೆ. ನಿಮ ಹಾಗೆ ಕಾರ್ಯಕರ್ತರಿಗೆ ಬೀದಿಯಲ್ಲಿ ಬೆಂಕಿ ಹಾಕಿ ಅನ್ನಲಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. +ಜಂತಕಲ್ ಮೈನಿಂಗ್ ಬಗ್ಗೆ ಹೈಕೋರ್ಟ್ ಏನು ಆದೇಶ ಕೊಟ್ಟಿದೆ ಎಂಬುದನ್ನು ನೋಡಲಿ. ಸಾಯಿ ವೆಂಕಟೇಶ್ವರ ಹಗರಣ ತನಿಖೆ ಮಾಡಿ ಅಂದರು. ನೀವು ಬೇಕಾದರೆ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು. ಬೇಡವೆಂದವರು ಯಾರು? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು. +ನನ್ನನ್ನು ಹೆದರಿಸಲು ಮಾತನಾಡುತ್ತಿದ್ದೀರಾ? ಏಕೆ ಈ ನಾಟಕಗಳು? ರಾಜ್ಯಪಾಲರ ವಿರುದ್ಧ ಇದೇ ಮೊದಲ ಬಾರಿಗೆ ಪ್ರತಿಭಟನೆಗಳು ಅಗುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. +ಕಾಡುಗೊಲ್ಲರ ಮೀಸಲಾತಿ ವಿಚಾರದ ಬಗ್ಗೆ ಚರ್ಚೆ ಮಾಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಹೋಗಿದ್ದರು. ಅನಂತರ ನಮ ಮೇಲೆ ಕೆಂಡ ಕಾರುತ್ತಿದ್ದಾರೆ. ಜೈಲಿಗೆ ಕಳುಹಿಸಬೇಕೆಂದು ನೋಡುತ್ತಿದ್ದಾರೆ ಎಂದು ಆರೋಪಿಸಿದರು. +ಕಾಂಗ್ರೆಸ್ನಂತೆ ಕೀಳು ಮಟ್ಟದ ರಾಜಕಾರಣ ಮಾಡುವುದಿಲ್ಲ, ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಕಿಡಿ ಕಾರಿದರು.ಲೋಕಾಯುಕ್ತ ತನಿಖೆ ಬಂದಾಗ ಅದನ್ನು ಮುಚ್ಚಿ ಹಾಕಿ ಎಸಿಬಿ ರಚಿಸಿ ಅದರಿಂದಲ್ಲೆ ರಕ್ಷಣೆ ಪಡೆದುಕೊಂಡರು ಎಂದು ಅವರು ಟೀಕಿಸಿದರು. \ No newline at end of file diff --git a/eesanje/url_46_41_2.txt b/eesanje/url_46_41_2.txt new file mode 100644 index 0000000000000000000000000000000000000000..ec0b1b969c5a206d9ada87d00803c29324d4da4e --- /dev/null +++ b/eesanje/url_46_41_2.txt @@ -0,0 +1,8 @@ +ನಾನು ಯಾವುದೇ ತಪ್ಪು ಮಾಡಿಲ್ಲ, ಕಾನೂನು ಸಮರದಲ್ಲಿ ನ್ಯಾಯ ಸಿಗುತ್ತೆ : ಸಿಎಂ +ಬೆಂಗಳೂರು,ಆ.19– ಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ನ್ಯಾಯ ಸಿಗುವ ಉದ್ದೇಶವಿದೆ ಎಂದರು. +ಚಿತ್ರಕಲಾ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಜನರಿಗೆ ಗೊತ್ತಿದೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ-ಜೆಡಿಎಸ್‌‍ನವರು ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ನನ್ನ ಪ್ರಜ್ಞೆ ಸ್ಪಷ್ಟವಾಗಿದೆ. 1984 ರಿಂದ ಈವರೆಗೆ 40 ವರ್ಷಗಳಲ್ಲಿ ಸಚಿವನಾಗಿ, ಉಪಮುಖ್ಯಮಂತ್ರಿ ಯಾಗಿ, ಮುಖ್ಯಮಂತ್ರಿಯಾಗಿ ಹಲವು ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಜನರ ಸೇವೆ ಮಾಡುವುದನ್ನು ಹೊರತುಪಡಿಸಿ ಬೇರೆ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದರು. +ರಾಜಕೀಯ ಹೋರಾಟ ಮಾಡುವಾಗ ನನಗೆ ಇನ್ನೂ ಹೆಚ್ಚು ಉತ್ಸಾಹ ಬರುತ್ತದೆ. ಹೀಗಾಗಿ ಮಾನಸಿಕವಾಗಿ ಹಾಗೂ ನೈತಿಕವಾಗಿ ಕುಗ್ಗಿಲ್ಲ ಎಂದರು.ಮೊದಲಿನಿಂದಲೂ ಈ ರೀತಿಯ ರಾಜಕೀಯ ಸಂಘರ್ಷಗಳನ್ನು ಎದುರಿಸಿ ಅಭ್ಯಾಸವಿದೆ. ಹೋರಾಟ ಮಾಡುವಾಗ ಹೆಚ್ಚು ಜೋಶ್‌ ಬರುತ್ತದೆ. ಭೂತ, ಭವಿಷ್ಯ ಹಾಗೂ ವರ್ತಮಾನ ಎಲ್ಲಾ ಕಾಲದಲ್ಲೂ ರಾಜಕೀಯ ಹೋರಾಟ ಗಳನ್ನು ಮುಂದುವರೆಸಿ ದ್ದೇನೆ ಎಂದರು. +ತಾವು ಬಡವರ ಪರವಾಗಿರು ವುದರಿಂದ ವಿರೋಧಪಕ್ಷ ಗಳಿಗೆ ತಮನ್ನುಕಂಡರೆ ಭಯ. ಅದಕ್ಕಾಗಿ ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್‌‍ ಪಕ್ಷವನ್ನು ರಾಜಕೀಯವಾಗಿ ಮುಗಿಸಬಹುದು ಎಂಬ ಭ್ರಮೆ ವಿರೋಧಪಕ್ಷಗಳಲ್ಲಿವೆ ಎಂದು ಹೇಳಿದರು.ಬಿಜೆಪಿ-ಜೆಡಿಎಸ್‌‍ನವರು ರಾಜಕೀಯ ಪ್ರೇರಿತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಕೀಯವಾಗಿ ಉತ್ತರ ನೀಡುತ್ತೇವೆ. ಜೊತೆಗೆ ಕಾನೂನು ಸಮರವನ್ನು ಮುಂದುವರೆಸುತ್ತೇವೆ ಎಂದರು. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು. ಅವರೊಂದಿಗೆ ಚರ್ಚೆ ಮಾಡುವ ವೇಳೆ ದೆಹಲಿಗೆ ಬರುತ್ತೇನೆ ಎಂದು ಹೇಳಿದ್ದೇನೆ. ಹೀಗಾಗಿ ಇದೇ 23 ರಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ.ಗುರುವಾರ ಕಾಂಗ್ರೆಸ್‌‍ ಶಾಸಕಾಂಗ ಸಭೆ ಕರೆದಿದ್ದೇವೆ. ಅಲ್ಲಿನ ವಿಚಾರಗಳ ಚರ್ಚೆಯ ಬಗ್ಗೆ ಸದ್ಯಕ್ಕೆ ಮಾಹಿತಿ ನೀಡುವುದಿಲ್ಲ ಎಂದು ಹೇಳಿದರು. +ರಾಜ್ಯಪಾಲರು ಅಭಿಯೋಜನೆಗೆ ಪೂರ್ವಾನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್‌ ಪಿಟೀಶನ್‌ ಸಲ್ಲಿಸಲಾಗಿದೆ. ಅಲ್ಲಿ ರಾಜ್ಯಪಾಲರ ಆದೇಶವನ್ನು ರದ್ದುಗೊಳಿಸಬೇಕು ಹಾಗೂ ಮಧ್ಯಂತರ ತೀರ್ಪು ನೀಡಬೇಕು ಎಂದು ಮನವಿ ಮಾಡಲಾಗಿದೆ.ತಮ ಪರವಾಗಿ ವಾದಿಸಲು ಅಭಿಷೇಕ್‌ ಸಿಂಗ್‌ ಮನ್ವಿ ಹೊರಟಿದ್ದಾರೆ. ನ್ಯಾಯಾಲಯದಿಂದ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದರು. \ No newline at end of file diff --git a/eesanje/url_46_41_3.txt b/eesanje/url_46_41_3.txt new file mode 100644 index 0000000000000000000000000000000000000000..6facc0e3c4c88c238e98ae6aa929123fd98b237f --- /dev/null +++ b/eesanje/url_46_41_3.txt @@ -0,0 +1,8 @@ +ಸಿಎಂ ಸಿದ್ದರಾಮಯ್ಯ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಕೆವಿಯೇಟ್ +ನವದೆಹಲಿ,ಆ.19-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದವರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಅವರು, ಹೈಕೋರ್ಟ್‌ನಲ್ಲಿ ಕೆವಿಯೇಟ್‌ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಸುಪ್ರೀಂಕೋರ್ಟ್‌ನಲ್ಲೂ ಇಂದು ಅರ್ಜಿ ಸಲ್ಲಿಸಿದ್ದಾರೆ. +ಒಂದು ವೇಳೆ, ಸಿದ್ದರಾಮಯ್ಯನವರ ರಿಟ್‌ ಅರ್ಜಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ತಿರಸ್ಕೃತವಾದರೆ ಅವರ ಮುಂದಿನ ಆಯ್ಕೆ ಸುಪ್ರೀಂ ಕೋರ್ಟ್‌ ಆಗಿರಲಿದೆ. ಆಗ ಈ ಪ್ರಕರಣ ಸುಪ್ರೀಂಕೋರ್ಟ್‌ಗೆ ಬಂದರೆ, ಅಲ್ಲಿ ಸಿದ್ದರಾಮಯ್ಯ ನವರ ಅರ್ಜಿಗೂ ಮೊದಲೇ ತಮ ಅರ್ಜಿಯನ್ನು ಪರಿ ಗಣಿಸುವಂತಾಗಬೇಕು ಎಂದು ಕೇವಿಯಟ್‌ ಅರ್ಜಿ ಸಲ್ಲಿಸಲಾಗಿದೆ. +ಮುಡಾ ಹಗರಣದ ಮತ್ತೊಬ್ಬ ದೂರುದಾರ ಟಿ.ಜೆ.ಅಬ್ರಹಾಂ ಅವರು, ಸಿದ್ದರಾಮಯ್ಯ ಅವರ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಕೇವಿಯಟ್‌ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. +ಇದೇ ಪ್ರಕರಣ ಮತ್ತೊಬ್ಬ ದೂರುದಾರರಾದ ಪ್ರದೀಪ್‌ ಅವರು, ಆ. 16ರಂದೇ ಕರ್ನಾಟಕ ಹೈಕೋರ್ಟ್‌ಗೆ ಕೇವಿಯಟ್‌ ಅರ್ಜಿ ಸಲ್ಲಿಸಿದ್ದರು. ಈ ಮೂವರ ಕೇವಿಯಟ್‌ ಅರ್ಜಿಗಳಿಂದಾಗಿ ಸಿದ್ದರಾಮಯ್ಯನವರಿಗೆ ಕಾನೂನಾತಕವಾಗಿ ಮೂರು ತೊಡಕುಗಳು ಎದುರಾದಂತಾ ಗಿದೆ. +ಕೇವಿಯಟ್‌ ಅರ್ಜಿ ಎಂದನೇನು?:ಕೇವಿಯಟ್‌ ಅರ್ಜಿಯು ಒಂದು ನಿರ್ದಿಷ್ಟ ಪ್ರಕರಣದಲ್ಲಿ ಯಾವುದೇ ಆದೇಶಗಳು ಅಥವಾ ತೀರ್ಪುಗಳನ್ನು ಜಾರಿಗೊಳಿಸುವ ಮೊದಲು ಅವರಿಗೆ ನೋಟಿಸ್‌‍ ನೀಡುವಂತೆ ವಿನಂತಿಸಲು ನ್ಯಾಯಾಲಯದಲ್ಲಿ ವ್ಯಕ್ತಿ ಅಥವಾ ಪಕ್ಷವು ಸಲ್ಲಿಸಬಹುದಾದ ಕಾನೂನಾತಕ ಮನವಿ.ಯಾವುದೇ ಪ್ರಕರಣದಲ್ಲಿ ಪ್ರತಿವಾದಿಗಳು ಅರ್ಜಿಯನ್ನು ಸಲ್ಲಿಸಿ, ಆ ಅರ್ಜಿಯ ವಿಚಾರಣೆಯನ್ನು ಆರಂಭಿಸುವ ಮೊದಲು ತಮ ವಾದವನ್ನು ಆಲಿಸಬೇಕು ಎಂದು ಅದೇ ಪ್ರಕರಣದ ಮತ್ತೊಂದು ಕಕ್ಷಿದಾರರು ನ್ಯಾಯಾಲಯಕ್ಕೆ ಮನವಿ ಮಾಡುವಂಥದ್ದಾಗಿರುತ್ತದೆ. +ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್‌ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರದಂದೇ ಕರ್ನಾಟಕ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲು ಸಿದ್ದರಾಮಯ್ಯ ನಿರ್ಧರಿಸಿದ್ದರು. ಅಂದು ವರಮಹಾಲಕ್ಷಿ ಹಬ್ಬವಾಗಿದ್ದರಿಂದ ಹಾಗೂ ಆನಂತರ ಶನಿವಾರ, ಭಾನುವಾರ ಸಾಲು ಸಾಲು ರಜೆ ಇದ್ದಿದ್ದರಿಂದಾಗಿ ಸೋಮವಾರದಂದು ರಿಟ್‌ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು. +ಆದರೆ ಅದಕ್ಕೂ ಮೊದಲೇ ಶುಕ್ರವಾರದಂದು ದೂರುದಾರರಲ್ಲೊಬ್ಬರಾದ ಪ್ರದೀಪ್‌ ಅವರು, ಹೈಕೋರ್ಟ್‌ ಗೆ ಕೇವಿಯಟ್‌ ಅರ್ಜಿ ಸಲ್ಲಿಸಿ, ಸಿದ್ದರಾಮಯ್ಯನವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮೊದಲು ದೂರುದಾರರ ಆಕ್ಷೇಪಣೆಗಳನ್ನು ಆಲಿಸಬೇಕೆಂದು ಮನವಿ ಮಾಡಿ ಆ ಮೂಲಕ ಸಿದ್ದರಾಮಯ್ಯನವರಿಗೆ ಸೆಡ್ಡು ಹೊಡೆದಿದ್ದರು. ಈಗ ಸುಪ್ರೀಂಕೋರ್ಟ್‌ ನಲ್ಲೂ ಕೇವಿಯಟ್‌ ಅರ್ಜಿ ಸಲ್ಲಿಸಲಾಗಿದೆ. diff --git a/eesanje/url_46_41_4.txt b/eesanje/url_46_41_4.txt new file mode 100644 index 0000000000000000000000000000000000000000..9a1dda5b23a28bf05a78056db4536a13278d9be7 --- /dev/null +++ b/eesanje/url_46_41_4.txt @@ -0,0 +1,6 @@ +ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಚಿವ ಎಚ್.ಕೆ. ಪಾಟೀಲ್ +ಬೆಂಗಳೂರು, ಆ.19-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾದರೆ ಕಾನೂನು ಸಮರವನ್ನು ಮುಂದುವರೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ.22 ರಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಅದೇ ದಿನ ಸಚಿವ ಸಂಪುಟ ಸಭೆ ನಡೆಯಲಿದೆ. ಸಚಿವರು ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಒಟ್ಟಾಗಿ ನಿಂತಿದ್ದಾರೆ. ಅದೇ ರೀತಿ ಕಾಂಗ್ರೆಸ್ನ ಶಾಸಕರು ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿ ಕಾನೂನಿನ ಸಮರವನ್ನು ಮುಂದುವರೆಸುವಂತೆ ಸಲಹೆ ನೀಡಲಿದ್ದಾರೆ ಎಂದರು. +ಬಿಜೆಪಿ-ಜೆಡಿಎಸ್ ರಾಜಕೀಯ ಕುತಂತ್ರಕ್ಕಾಗಿ ಕೇಂದ್ರ ಸರ್ಕಾರದ ಷಡ್ಯಂತ್ರಕ್ಕೆ ರಾಜ್ಯಪಾಲರು ಮಾಡಿರುವ ಅನ್ಯಾಯದ ಆದೇಶಕ್ಕೆ ಮುಖ್ಯಮಂತ್ರಿಯವರು ರಾಜೀನಾಮೆ ಏಕೆ ನೀಡಬೇಕು? ಎಂದು ಎಚ್.ಕೆ.ಪಾಟೀಲ್ ಪ್ರಶ್ನಿಸಿದರು.ಪ್ರತಿ ತಾಲ್ಲೂಕು ಹಾಗೂ ಕ್ಷೇತ್ರದಲ್ಲಿ ಜನ ಪ್ರತಿಭಟನೆ ನಡೆಸಿ, ಸಿದ್ದರಾಮಯ್ಯ ಅವರ ಜೊತೆಗಿರುವುದಾಗಿ ಹೇಳುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಗಟ್ಟಿಯಾದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. +ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ತೀವ್ರ ಪ್ರಯತ್ನಗಳು ನಡೆಯುತ್ತಿವೆ, ರಾಜ್ಯಪಾಲರ ಮೇಲೆ ಒತ್ತಡ ಹೇರಲಾಗುತ್ತಿದೆ, ರಾಜ್ಯದ ಜನ ಇದಕ್ಕೆ ಸೊಪ್ಪು ಹಾಕುವುದಿಲ್ಲ, ಮೈಸೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯನ್ನು ಗಮನಿಸಿದ ಬಳಿಕವಾದರೂ ರಾಜ್ಯಪಾಲರು ತಮ ನಿಲುವನ್ನು ಬದಲಾಯಿಸಿಕೊಳ್ಳಬೇಕಿತ್ತು ಎಂದರು.ಶಶಿಕಲಾ ಜೊಲ್ಲೆ, ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನರೆಡ್ಡಿ ಅವರ ವಿರುದ್ಧ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಕರಣಗಳು ರಾಜ್ಯಪಾಲರಿಗೆ ಕಂಡಿಲ್ಲವೇ? ಎಂದು ಪ್ರಶ್ನಿಸಿದರು. +ಬಡವರ ಪರವಾಗಿ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸಿ ಒಂದು ಕೋಟಿ ಜನರನ್ನು ಬಿಪಿಎಲ್ ವ್ಯಾಪ್ತಿಯಿಂದ ಮೇಲೆತ್ತಲಾಗುತ್ತಿದೆ. ನಮ ತೆರಿಗೆ, ನಮ ಹಕ್ಕು ಎಂದು ದಿಟ್ಟವಾಗಿ ಪ್ರಶ್ನಿಸಲಾಗಿದೆ. ಇದನ್ನು ಬಿಜೆಪಿ-ಜೆಡಿಎಸ್ನವರಿಗೆ ಸಹಿಸಲಾಗುತ್ತಿಲ್ಲ. ರಾಜ್ಯದ ಜನ ಮತ ಹಾಕಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿರುವುದು ಅನ್ಯಾಯವೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_41_5.txt b/eesanje/url_46_41_5.txt new file mode 100644 index 0000000000000000000000000000000000000000..24ca9867b514fc15624023a39b8e1e435c5982ae --- /dev/null +++ b/eesanje/url_46_41_5.txt @@ -0,0 +1,11 @@ +ದೇವೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಖಾಸಗಿ ವಾಹಿನಿ ಮುಖ್ಯಸ್ಥನಿಗೆ ಒಕ್ಕಲಿಗರ ಸಂಘ ಎಚ್ಚರಿಕೆ + +ಬೆಂಗಳೂರು,ಆ.19-ಮುತ್ಸದ್ದಿ ರಾಜಕಾರಣಿ ನಮ ಸಮುದಾಯದ ಸರ್ವೋಚ್ಛ ನಾಯಕರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್‌ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ ಮಾಡುವುದನ್ನು ನಿಲ್ಲಿಸದಿದ್ದರೆ ಹೋರಾಟ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವಾಹಿನಿಯ ಮಾಲೀಕರು ದೇವೇಗೌಡರ ಬಗ್ಗೆ ಹಗುರವಾಗಿ ಪದೇಪದೇ ಮಾತನಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರೆಸಿದ್ದೇ ಆದರೆ ಸಮುದಾಯದ ವಿವಿಧ ಸಂಘಟನೆಗಳ ಜೊತೆ ದೊಡ್ಡ ಮಟ್ಟದ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದರು. +ದೇವೇಗೌಡರ ಬಗ್ಗೆ ಅವಹೇಳನಕಾರಿ ಸುದ್ದಿ ಬಿತ್ತರವಾಗಿರುವುದರ ಬಗ್ಗೆ ಒಕ್ಕಲಿಗ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮಿಜಿಯವರನ್ನು ಭೇಟಿ ಮಾಡಿ ಮಾರ್ಗದರ್ಶನವನ್ನು ಪಡೆಯಲಾಗುವುದು ಎಂದು ಹೇಳಿದರು. +ಕಾನೂನಿಗಿಂತ ಯಾರೂ ಕೂಡ ದೊಡ್ಡವರಲ್ಲ. ಯಾರೇ ತಪ್ಪು ಮಾಡಿದರೂ ನ್ಯಾಯಾಲಯದ ಮೊರೆ ಹೋಗಬಹುದು. ಇಲ್ಲವೇ ತನಿಖೆ ನಡೆಸುವಂತೆ ಸರ್ಕಾರವನ್ನು ಆಗ್ರಹಿಸಬಹುದಾಗಿದೆ. ಅದನ್ನು ಬಿಟ್ಟು ತೇಜೋವಧೆ ಮಾಡಬಾರದು. ವಾಹಿನಿಯಲ್ಲಿ ಪ್ರಸಾರವಾಗಿರುವ ಸುದ್ದಿ ತುಂಬಾ ನೋವುಂಟು ಮಾಡಿದೆ. ರಾಜ್ಯ, ರಾಷ್ಟ್ರಕ್ಕಾಗಿ ಆರು ದಶಕಗಳ ಕಾಲ ದೇವೇಗೌಡರು ಸಾಕಷ್ಟು ಹೋರಾಟ ನಡೆಸಿ ಸೇವೆಯನ್ನು ಸಲ್ಲಿಸಿದ್ದಾರೆ. ಅಂತವರ ಬಗ್ಗೆ ಅಗೌರವವಾಗಿ ಮಾತನಾಡುವುದು ಸರಿಯಲ್ಲ. ಯಾವುದೇ ಮಾಧ್ಯಮ ಇದುವರೆಗೂ ಅವರ ಬಗ್ಗೆ ಅಗೌರವವಾದ ಸುದ್ದಿ ಪ್ರಕಟಿಸಿಲ್ಲ. ರಾಷ್ಟ್ರಮಟ್ಟದಲ್ಲೂ ಅವರ ಸಾಧನೆ, ಸೇವೆಯ ಬಗ್ಗೆ ಮೆಚ್ಚುಗೆಯ ಸುದ್ದಿ ಪ್ರಸಾರವಾಗಿದೆ ಎಂದರು. +ಈಗಾಗಲೇ ಅವಹೇಳನಕಾರಿ ರೀತಿ ಹೇಳಿಕೆ ಹಾಗೂ ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಕ್ಷಮೆ ಯಾಚಿಸಬೇಕೆಂದು ಅವರು ಆಗ್ರಹಿಸಿದರು.ಸಂಘದ ಉಪಾಧ್ಯಕ್ಷ ಸ್ಟಾರ್‌ ಪ್ರಕಾಶ್‌ ಮಾತನಾಡಿ, ಒಕ್ಕಲಿಗರ ಸಂಘ ಖಾಸಗಿ ಸುದ್ದಿವಾಹಿನಿಯಲ್ಲಿ ದೇವೇಗೌಡರ ಬಗ್ಗೆ ಪ್ರಸಾರವಾಗಿರುವ ಸುದ್ದಿ ತುಂಬಾ ನೋವು ತಂದಿದೆ. ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಮುತ್ಸದ್ದಿ ಅವರು, ಪಂಜಾಬಿನಲ್ಲಿ ಗೌಡರ ಹೆಸರಿನ್ನು ಭತ್ತದ ಥಳಿಗೆ ಇಟ್ಟಿದ್ದಾರೆ. ಅಂತವರ ಬಗ್ಗೆ ಹಗುರವಾಗಿ ಸುದ್ದಿ ಪ್ರಸಾರ ಮಾಡಿ ಬ್ಲಾಕ್‌ಮೇಲ್‌ ಮಾಡುವುದು ಸರಿಯಲ್ಲ. ಇದನ್ನು ಮುಂದೆ ಸರಿಪಡಿಸಿಕೊಂಡು ಹೋಗದಿದ್ದರೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು. +ನಿರ್ದೇಶಕರಾದ ಕೆ.ವಿ.ಶ್ರೀಧರ್‌ ಮಾತನಾಡಿ, ದೇವೇಗೌಡರನ್ನು ಅವಮಾನಿಸುವುದು ನಾಡಿನ ಜನರನ್ನು ಅವಮಾನಿಸಿದಂತಾಗುತ್ತದೆ. ಟಿಆರ್‌ಪಿಗಾಗಿ ಅಗೌರವಯುತವಾದ ಸುದ್ದಿ ಪ್ರಸಾರ ಮಾಡಬಾರದು. ಅನ್ಯಾಯವಾಗಿದ್ದರೆ ಕಾನೂನು ಚೌಕಟ್ಟಿನಲ್ಲಿ ಹೋರಾಟ ನಡೆಸಲಿ ಎಂದರು. +ನಿರ್ದೇಶಕ ಡಾ.ಅಂಜನಪ್ಪ ಮಾತನಾಡಿ , ಖಾಸಗಿ ವಾಹಿನಿ ಜನರಿಗೆ ತಪ್ಪು ಸಂದೇಶ ನೀಡಬಾರದು. ಆಗಿರುವುದನ್ನು ಸರಿಪಡಿಸಿಕೊಂಡು ಮತ್ತೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು +ಕೆನಲಿ ಗೌಡ ಮಾತನಾಡಿ, ದೇವೇಗೌಡರು ಯುವಪೀಳೀಗೆಗೆ ಮಾದರಿಯಾಗುವ ವ್ಯಕ್ತಿತ್ವ ಹೊಂದಿರುವವರು. 92ರ ವಯಸ್ಸಿನಲ್ಲೂ ರಾಜ್ಯಸಭೆಯಲ್ಲಿ ರಾಜ್ಯ ಮತ್ತು ರಾಷ್ಟ್ರದ ಪರವಾಗಿ ದನಿಯೆತ್ತುತ್ತಿದ್ದಾರೆ. ಪಕ್ಷಾತೀತವಾಗಿ ಗೌರವಿಸುವ ಗೌಡರಿಗೆ ಮಾಡಿರುವ ಅವಮಾನ ಕನ್ನಡಿಗರಿಗೆ ಮಾಡಿರುವ ಅವಮಾನವಾಗಿದೆ. ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು. +ಪತ್ರಿಕಾಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ದೇವರಾಜು, ನಿರ್ದೇಶಕ ಲೋಕೇಶ್‌ ನಾಗರಾಜಯ್ಯ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_41_6.txt b/eesanje/url_46_41_6.txt new file mode 100644 index 0000000000000000000000000000000000000000..82c567019ec29eca3aa1ca23becbb9451b42cdfe --- /dev/null +++ b/eesanje/url_46_41_6.txt @@ -0,0 +1,5 @@ +ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್‌‍ ಪ್ರತಿಭಟನೆ +ಬೆಂಗಳೂರು,ಆ.19-ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದರೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಹರತಾಳಗಳು ನಡೆದಿವೆ. +ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. +ಜೊತೆಗೆ ಇ-ಮೇಲ್‌ ಮೂಲಕವೂ ದೂರುಗಳ ಸುರಿಮಳೆಗೈಯ್ಯಲಾಗಿದೆ. ರಾಜ್ಯಪಾಲರು ರಾಜಕೀಯ ಕೈಗೊಂಬೆಯಂತೆ ವರ್ತಿಸಿದ್ದು, ನಿಯಮಬಾಹಿರವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. +ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್‌‍ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರಕ್ಕೆ ರಾಜಭವನ ದುರ್ಬಳಕೆಯಾಗುತ್ತಿದೆ ಎಂದು ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_41_7.txt b/eesanje/url_46_41_7.txt new file mode 100644 index 0000000000000000000000000000000000000000..3a52d260db5dbaa27c1255c40d60f5845795079b --- /dev/null +++ b/eesanje/url_46_41_7.txt @@ -0,0 +1,10 @@ +ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ರಿಟ್‌ ಅರ್ಜಿ +ಬೆಂಗಳೂರು,ಆ.19– ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ತಡೆಯಾಜ್ಞೆ ಕೋರಿದ್ದಾರೆ. +ಮುಖ್ಯಮಂತ್ರಿಯವರ ಪರವಾಗಿ ಮಾಜಿ ಅಡ್ವಕೇಟ್‌ ಜನರಲ್‌ ಪ್ರೊ.ರವಿವರ್ಮ ಕುಮಾರ್‌ ವಾದ ಮಂಡಿಸಿದ್ದು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.ವಾದವನ್ನು ಪರಿಗಣಿಸಿದ ಹೇಮಂತ್‌ ಚಂದನ್‌ ಗೌಡರ್‌ ಅವರನ್ನೊಳಗೊಂಡ ಪೀಠ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್‌ ಅರ್ಜಿಯಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನೆಯ ಪೂರ್ವಾನುಮತಿಗೆ ತಡೆಯಾಜ್ಞೆ ನೀಡಲು ಹಾಗೂ ರದ್ದುಪಡಿಸಲು ಮನವಿ ಮಾಡಲಾಗಿದೆ. +ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅಭಿಯೋಜನೆಯ ಪೂರ್ವಾನುಮತಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ, ಜೆಡಿಎಸ್‌‍ನ ಕಾನೂನು ಘಟಕದ ಪ್ರದೀಪ್‌ ಕುಮಾರ್‌ ಹಾಗೂ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. +ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್‌-17, ಭಾರತೀಯ ದಂಡ ಸಂಹಿತೆ ಹಾಗೂ ಭಾರತೀಯ ನ್ಯಾಯ ಸಂಹಿತೆ ವಿವಿಧ ಕಲಂಗಳಡಿ ದೂರು ದಾಖಲಿಸಿ ವಿಚಾರಣೆ ನಡೆಸಲು ರಾಜ್ಯಪಾಲರು ಪೂರ್ವಾನುಮತಿ ನೀಡಿದ್ದಾರೆ. +ಆದರೆ ಪೂರ್ವಾನುಮತಿ ನೀಡುವ ಮುನ್ನ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ದಾಖಲಾತಿಗಳನ್ನು ರಾಜ್ಯಪಾಲರು ಪರಿಶೀಲನೆ ನಡೆಸಿಲ್ಲ. ಯಾವುದೇ ಪ್ರಾಥಮಿಕ ತನಿಖೆ ನಡೆದಿಲ್ಲ. ಆದರೂ ಪೂರ್ವಾನುಮತಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದು ರಿಟ್‌ ಅರ್ಜಿಯಲ್ಲಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. +ಪ್ರಾಥಮಿಕ ತನಿಖೆ ನಡೆದು ಅದು ಮೇಲ್ನೋಟಕ್ಕೆ ವಾಸ್ತವಾಂಶ ಕಂಡುಬಂದರೆ ಹೆಚ್ಚಿನ ವಿಚಾರಣೆಗೆ ಸಕ್ಷಮ ಅಧಿಕಾರಿಗಳು ಅಭಿಯೋಜನೆಗೆ ಅನುಮತಿ ಕೋರಬಹುದು. ಮುಖ್ಯಮಂತ್ರಿ ಹುದ್ದೆಯಲ್ಲಿರುವವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಬೇಕಾದರೆ ಪೊಲೀಸ್‌‍ ಮಹಾನಿರ್ದೇಶಕ ದರ್ಜೆಯ ಅಧಿಕಾರಿ ಅರ್ಜಿ ನೀಡಬೇಕು. ಆದರೆ ಇಲ್ಲಿ ಯಾವುದೇ ಅಂತಹ ನಿಯಮಗಳು ಪಾಲನೆಯಾಗಿಲ್ಲ ಎಂದು ವಾದಿಸಲಾಗಿದೆ. +ಜೊತೆಗೆ ಸಂವಿಧಾನದ 163 ಪರಿಚ್ಛೇದದನ್ವಯ ರಾಜ್ಯಪಾಲರು ಸಚಿವ ಸಂಪುಟ ಸಭೆಯ ಶಿಫಾರಸನ್ನು ತಿರಸ್ಕರಿಸುವಂತಿಲ್ಲ. ಈ ಹಿಂದೆ ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ಅಭಿಯೋಜನೆ ಪೂರ್ವಾನುಮತಿಗೆ ಸಲ್ಲಿಸಿರುವ ದೂರರ್ಜಿಗಳನ್ನು ತಿರಸ್ಕರಿಸಬೇಕು ಮತ್ತು ಅಭಿಯೋಜನೆಗೆ ಅನುಮತಿ ನೀಡಬಾರದು ಎಂದು ರಾಜ್ಯಪಾಲರಿಗೆ ಸಲಹೆ ನೀಡಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ಆಕ್ಷೇಪಿಸಲಾಗಿದೆ. +ಮುಡಾ ಪ್ರಕರಣದ ಅಭಿಯೋಜನೆ ಕೋರ್ಟ್‌ ಮೆಟ್ಟಿಲೇರಿವುದರಿಂದ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯದಲ್ಲಿ ತೀವ್ರ ಕುತೂಹಲ ಕೆರಳಿದೆ. \ No newline at end of file diff --git a/eesanje/url_46_41_8.txt b/eesanje/url_46_41_8.txt new file mode 100644 index 0000000000000000000000000000000000000000..97402c87eaa839279c8ebbda220f80845f88b158 --- /dev/null +++ b/eesanje/url_46_41_8.txt @@ -0,0 +1,14 @@ +ಕಾಂಗ್ರೆಸ್‌‍ನೊಳಗೇ ನಡೆಯುತ್ತಿದೆಯಾ ಸಿದ್ದರಾಮಯ್ಯನವರ ಸಿಎಂ ಕುರ್ಚಿಯ ಕಾಲೆಳೆಯುವ ಸಂಚು..? +ಬೆಂಗಳೂರು,ಆ.19-ಮುಡಾ ಪ್ರಕರಣದ ಚಕ್ರವ್ಯೂಹದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಲುಕುತ್ತಿದ್ದಂತೆ ಕಾಂಗ್ರೆಸ್‌‍ನಲ್ಲಿ ವಿರೋಧಿ ಪಡೆ ಸದ್ದಿಲ್ಲದೆ ಸಕ್ರಿಯವಾಗಿದ್ದು, ತೆರೆಮರೆಯಲ್ಲಿ ನಾಯಕತ್ವ ಬದಲಾವಣೆಯ ಸಂಚುಗಳು ಆರಂಭಗೊಂಡಿವೆ. +ಮೇಲ್ನೋಟಕ್ಕೆ ಸಂಪುಟದ ಎಲ್ಲಾ ಸಚಿವರು, ಶಾಸಕರು, ಹೈಕಮಾಂಡ್‌ ನಾಯಕರು, ಸಿದ್ದರಾಮಯ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.ಅಖಂಡವಾದ ಈ ಬೆಂಬಲದ ನಡುವೆಯೂ ರಹಸ್ಯ ಸಭೆಗಳು ರಾಜಕೀಯ ಚಟುವಟಿಕೆಗಳು ಗರಿಗೆದರಿಸಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಖಾಡ ಪ್ರವೇಶಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. +ನಿನ್ನೆ ಮಾಜಿ ಸಚಿವ ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಕೆಲ ಶಾಸಕರು ರಹಸ್ಯ ಸಭೆ ನಡೆಸಿದ್ದಾರೆ. ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಒಂದಷ್ಟು ಶಾಸಕರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. +ಸಿದ್ದರಾಮಯ್ಯ ಅವರ ವಿರುದ್ಧವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ದಿನವೇ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಿದ್ದರು. ಇದು ಪೂರ್ವನಿರ್ಧರಿತ ಕಾರ್ಯಕ್ರಮ ಎಂದು ಹೇಳಲಾಗಿದ್ದರೂ ರಾಜಕೀಯವಾಗಿ ನಾನಾ ಚರ್ಚೆಗಳನ್ನು ಹುಟ್ಟುಹಾಕಿದೆ. +ಕಾಂಗ್ರೆಸ್‌‍ನ ಕೆಲ ಶಾಸಕರು ಶ್ಯಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನು ಮನವೊಲಿಸಿ ರಾಜ್ಯರಾಜಕಾರಣಕ್ಕೆ ಮರಳುವಂತೆ ಹಾಗೂ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ. +ಇದಕ್ಕೆ ನಕಾರಾತಕ ಪ್ರತಿಕ್ರಿಯೆ ನೀಡಿರುವ ಖರ್ಗೆಯವರು ಸದ್ಯಕ್ಕೆ ಅಂತಹ ಚರ್ಚೆಗಳಿಲ್ಲ. ತಮಗೆ ರಾಜ್ಯ ರಾಜಕೀಯದ ಬಗ್ಗೆ ಆಸಕ್ತಿಯೇ ಇಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು. ಒಂದು ವೇಳೆ ಎಫ್‌ಐಆರ್‌ ದಾಖಲಾದ ಬಳಿಕ ರಾಜೀನಾಮೆ ನೀಡಲೇಬೇಕು ಎಂಬ ಪರಿಸ್ಥಿತಿ ಬಂದರೆ ಪರ್ಯಾಯ ನಾಯಕತ್ವಕ್ಕೆ ಮಲ್ಲಿಕಾರ್ಜುನ ಖರ್ಗೆಯವರೇ ಬರಬೇಕು. ಉಳಿದಂತೆ ಯಾರಿಗೂ ಅವಕಾಶ ನೀಡಬಾರದು ಎಂದು ಒಳಗೊಳಗೇ ಒತ್ತಡ ಹೆಚ್ಚುತ್ತಿದೆ. +ಈ ನಡುವೆ ಇದೇ 23 ರಂದು ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಬುಲಾವ್‌ ನೀಡಿರುವುದು ಮತ್ತಷ್ಟು ಬೆಳವಣಿಗೆಗಳಿಗೆ ಕಾರಣವಾಗಿದೆ.ಅಂದು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯನವರು ಸೋನಿಯಾಗಾಂಧಿ ಮತ್ತು ರಾಹುಲ್‌ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. +ಈ ಮೊದಲು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಎರಡು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ವಿವರಣೆ ನೀಡಿದ್ದರು.ಅದರ ಹೊರತಾಗಿಯೂ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ನಡೆಯುತ್ತಿರುವ ಬೆಳವಣಿಗೆಗಳು ಕಾಂಗ್ರೆಸ್‌‍ನ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವಂತಿದೆ. +ಹೀಗಾಗಿ ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್‌‍ ತನ್ನ ಸೈದ್ಧಾಂತಿಕ ನಿಲುವುಗಳಿಗೆ ಕಟಿಬದ್ಧರಾಗಲು ಎಫ್‌ಐಆರ್‌ ದಾಖಲಾದ ಬಳಿಕ ರಾಜೀನಾಮೆ ಅನಿವಾರ್ಯವಾಗಬಹುದು ಎಂಬ ಸಂದೇಶ ರವಾನೆಯಾಗಿದೆ. +ಈ ನಿಟ್ಟಿನಲ್ಲಿ ಚರ್ಚೆ ಮಾಡುವ ಸಲುವಾಗಿಯೇ ಸಿದ್ದರಾಮಯ್ಯನವರನ್ನು ದೆಹಲಿಗೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.ಇತ್ತ ರಾಜ್ಯಪಾಲರನ್ನು ಬಳಸಿಕೊಂಡು ಬಿಜೆಪಿ ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸುತ್ತಿದೆ ಎಂಬ ಟೀಕೆಗಳು ವ್ಯಾಪಕವಾಗಿವೆ. +ರಾಜಕೀಯವಾಗಿ ಪ್ರತಿಸಮರ ಏನೇ ಇದ್ದರೂ ಎಫ್‌ಐಆರ್‌ದಾಖಲಾದ ಬಳಿಕ ಅಧಿಕಾರದಲ್ಲಿ ಮುಂದುವರೆಯುವುದು ಕಷ್ಟವಾಗಬಹುದು. ಅದಕ್ಕಾಗಿಯೇ ಶಾಸಕಾಂಗ ಸಭೆ ಕರೆದು ಶಾಸಕರ ಅಭಿಪ್ರಾಯ ಸಂಗ್ರಹಿಸುವಂತೆ ಹೈಕಮಾಂಡ್‌ ಸೂಚಿಸಿದೆ ಎನ್ನಲಾಗಿದೆ. +ಈ ಮೊದಲಿನಂತೆ ಶಾಸಕರ ಬೆಂಬಲ ಸಿದ್ದರಾಮಯ್ಯ ಅವರಿಗೆ ಮುಂದುವರೆಯಲಿದೆಯೇ ಅಥವಾ ಪರಿಸ್ಥಿತಿ ಏರುಪೇರಾಗಲಿದೆಯೇ ಎಂಬ ಕುರಿತು ಹೈಕಮಾಂಡ್‌ ನಿಗಾ ವಹಿಸುತ್ತಿದೆ ಎನ್ನಲಾಗಿದೆ. +ಅಭಿಯೋಜನೆಗೆ ಅನುಮತಿ ನೀಡುವುದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ಕಾನೂನು ಸಮರವನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯುವ ಪ್ರಯತ್ನ ನಡೆಸುತ್ತಿದ್ದಾರೆ.ಇದರ ನಡುವೆ ತೆರೆಮರೆಯಲ್ಲಿ ಆಂತರಿಕ ವಿರೋಧಿಗಳು ಮಲ್ಲಿಕಾರ್ಜುನ ಖರ್ಗೆಯವರನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯನವರಿಗೆ ಖೆಡ್ಡ ತೋಡಲು ತಯಾರಿ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_41_9.txt b/eesanje/url_46_41_9.txt new file mode 100644 index 0000000000000000000000000000000000000000..7d612286c812e0b236d697c79d0a0a868a8e5ea9 --- /dev/null +++ b/eesanje/url_46_41_9.txt @@ -0,0 +1,7 @@ +ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ಮಿತಿಮೀರಿದೆ : ವಿಜಯೇಂದ್ರ +ಬೆಂಗಳೂರು,ಆ.19-ಬೆಂಗಳೂರಿನಲ್ಲಿ ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ. +ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಟೀಟ್‌ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣಿ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. +ಬೆಂಗಳೂರಿನ ಹೆಚ್‌ಎಸ್‌‍ಆರ್‌ಲೇ ಔಟ್‌ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. + , , & @, . , …../J9zJaRl2zI +ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ. ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ಸರ್ಕಾರವೇ ಸೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ. +ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_42_1.txt b/eesanje/url_46_42_1.txt new file mode 100644 index 0000000000000000000000000000000000000000..ecf698d03e0824d962bed549cc1d5fda8d1023d0 --- /dev/null +++ b/eesanje/url_46_42_1.txt @@ -0,0 +1,8 @@ +ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಆ.18-ರಾಜ್ಯಪಾಲರ ಅಭಿಯೋಜನೆ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆಯುವ ಮೂಲಕ ತಮ ಪಕ್ಷದ ಚುನಾಯಿತ ಪ್ರತಿನಿಧಿಗಳ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. +ಗುರುವಾರ ಸಂಜೆ 4 ಗಂಟೆಗೆ ವಿಧಾನಸೌಧದ ಸಮೇಳನ ಸಭಾಂ ಗಣದಲ್ಲಿ ಶಾಸಕಾಂಗ. ಸಭೆಯನ್ನು ಆಯೋಜಿಸಲಾಗಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆ ನಡೆಸುವ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. +ನ್ಯಾಯಾಲಯದಿಂದ ತನಿಖೆಗೆ ಆದೇಶವಾದರೆ ಎಫ್ಐಆರ್ ದಾಖಲಾಗಲಿದ್ದು, ಮುಂದಿನ ಕಾನೂನು ಕ್ರಮಗಳು ಜರುಗಲಿವೆ. ಅಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳು, ಮುಖ್ಯಮಂತ್ರಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಒತ್ತಡವನ್ನು ಹೆಚ್ಚಿಸಲಿದ್ದಾರೆ. +ಹೀಗಾಗಿ ಎಚ್ಚೆತ್ತುಕೊಂಡಿರುವ ಸಿದ್ದರಾಮಯ್ಯ ಪ್ರತಿ ಹಂತದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುತ್ತಿದ್ದಾರೆ. ಸಾಮಾನ್ಯವಾಗಿ ಅಧಿವೇಶನ ನಡೆಯುವ ವೇಳೆಗೆ ಶಾಸಕಾಂಗ ಸಭೆ ನಡೆಸುವುದು ರೂಢಿ. ಆದರೆ ರಾಜಕೀಯ ತುರ್ತು ಸಂದರ್ಭ ಎದುರಾಗಿರುವುದರಿಂದ ಅಕಾಲಿಕ ಸಭೆಯನ್ನು ಆಯೋಜಿಸಲಾಗಿದೆ. +ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸುತ್ತಿದ್ದಂತೆ ಸಚಿವ ಸಂಪುಟದ ವಿಶೇಷ ಸಭೆ ನಡೆಸಿ ಅಭಿಯೋಜನೆಯ ಪೂರ್ವಾನುಮತಿ ಬಯಸಿದ ದೂರದನ್ನು ತಿರಸ್ಕಾರ ಮಾಡಬೇಕು ಮತ್ತು ಅಭಿಯೋಜನೆಗೆ ಅನುಮತಿ ನೀಡಬಾರದೆಂಬ ಸಲಹೆ ರೂಪದ ನಿರ್ಣಯವನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಅದನ್ನೂ ಮೀರಿ ರಾಜ್ಯಪಾಲರು ಅನುಮತಿ ನೀಡಿದ್ದರಿಂದಾಗಿ ನಿನ್ನೆ ಮತ್ತೊಮೆ ತುರ್ತು ಸಚಿವ ಸಂಪುಟ ಸಭೆ ನಡೆಸಿ ರಾಜ್ಯಪಾಲರ ನಿರ್ಣಯವನ್ನು ಖಂಡಿಸಲಾಗಿದೆ. ಮುಖ್ಯಮಂತ್ರಿಗೆ ಸರ್ವಾನುಮತದ ಬೆಂಬಲ ಸಂಪುಟದಲ್ಲಿ ವ್ಯಕ್ತವಾಗಿದೆ. +ಮುಖ್ಯಮಂತ್ರಿಯವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಮಗೆ ಹೈಕಮಾಂಡ್, ಪಕ್ಷದ ಕಾರ್ಯಕರ್ತರ ಹಾಗೂ ಶಾಸಕರ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದರು. +ವಿರೋಧ ಪಕ್ಷಗಳ ಟೀಕೆಗಳ ನಡುವೆಯೂ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯನವರಿಗೆ ಒಗ್ಗಟ್ಟಿನ ಬೆಂಬಲ ಕಂಡುಬರುತ್ತಿದೆ. ಇದನ್ನು ಅಧಿಕೃತವಾಗಿ ಖಚಿತಪಡಿಸಿಕೊಳ್ಳಲು ಸಿದ್ದರಾಮಯ್ಯ ಶಾಸಕಾಂಗ ಸಭೆ ಕರೆದಿದ್ದಾರೆ. \ No newline at end of file diff --git a/eesanje/url_46_42_10.txt b/eesanje/url_46_42_10.txt new file mode 100644 index 0000000000000000000000000000000000000000..020bf415f3893e609a7b8265222088832fc64bf6 --- /dev/null +++ b/eesanje/url_46_42_10.txt @@ -0,0 +1,11 @@ +ಅಭಿಯೋಜನೆಗೆ ಅನುಮತಿ ಬೆನ್ನಲ್ಲೇ ವಿಶೇಷ ತುರ್ತು ಸಚಿವ ಸಂಪುಟ ಸಭೆ +ಬೆಂಗಳೂರು,ಆ.17-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ಅಭಿಯೋಜನೆಗೆ ಅನುಮತಿ ನೀಡಿರುವುದರ ವಿರುದ್ದ ಕಾನೂನು ಸಮರದ ಚರ್ಚೆ ನಡೆಸಲು ಸಚಿವ ಸಂಪುಟ ತುರ್ತು ಹಾಗೂ ವಿಶೇಷ ಸಭೆ ಕರೆಯಲಾಗಿದೆ. +ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಗೆ ಸಿದ್ದರಾಮಯ್ಯ ಗೈರು ಹಾಜರಾಗಿದ್ದರು. ತಮ ಮೇಲೆಯೇ ಆರೋಪ ಇರುವುದರಿಂದ ಸಚಿವ ಸಂಪುಟ ಸಭೆ ನನ್ನ ನೇತೃತ್ವದಲ್ಲಿ ನಡೆಯುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಅವರು ಹಿಂದೆ ಸರಿದಿದ್ದರು. +ಕೊನೆಗೆ ಮುಖ್ಯಮಂತ್ರಿಗಳ ಗೈರು ಹಾಜರಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅಭಿಯೋಜನೆಗೆ ಅನುಮತಿ ನೀಡುವಂತೆ ಸಲ್ಲಿಸಲಾಗಿರುವ ದೂರು ಅರ್ಜಿಗಳನ್ನು ತಿರಸ್ಕಾರ ಮಾಡಬೇಕು ಹಾಗೂ ಅಭಿಯೋಜನೆಗೆ ಅನುಮತಿ ನೀಡಬಾರದು ಎಂಬ ಸಲಹೆಯನ್ನು ರಾಜ್ಯಪಾಲರಿಗೆ ನೀಡಲಾಗಿತ್ತು. +ಅದನ್ನು ಬದಿಗಿರಿಸಿ ಕೊನೆಗೂ ರಾಜ್ಯಪಾಲರು ಪೂರ್ವಾನುಮತಿ ನೀಡುವ ಮೂಲಕ ರಾಜಕೀಯ ಹೈಡ್ರಾಮಕ್ಕೆ ಮಹತ್ವದ ತಿರುವು ನೀಡಿದ್ದಾರೆ. ಈಗಿರುವ ಪರಿಸ್ಥಿತಿಯಲ್ಲಿ ಮುಂದಿನ ಕಾನೂನು ಸಮರದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸಂಪುಟದಲ್ಲಿ ಅಭಿಯೋಜನೆಯ ವಿರುದ್ಧವಾಗಿ ಸರ್ಕಾರದ ವತಿಯಿಂದಲೇ ಹೈಕೋರ್ಟ್ಗೆ ಮೇಲನವಿ ಸಲ್ಲಿಸುವ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಗಳಿವೆ. +ಆದರೆ ಸರ್ಕಾರ ಎಂದರೆ ರಾಜ್ಯಪಾಲರು. ಸಾಂವಿಧಾನಿಕ ಮುಖ್ಯಸ್ಥರೂ ಆಗಿರುವ ರಾಜ್ಯಪಾಲರ ನಿರ್ಧಾರಗಳೇ ಅಂತಿಮವೇ ? ಅಥವಾ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸಂಪುಟದ ನಿರ್ಧಾರ ಮುಖ್ಯವೇ ಎಂಬ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. +ಸರ್ಕಾರದ ವತಿಯಿಂದ ಮುಖ್ಯಮಂತ್ರಿಗಳ ಪರವಾಗಿ ರಾಜ್ಯಪಾಲರ ನಿರ್ಣಯವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಿದರೆ, ಸರ್ಕಾರದ ವಿರುದ್ಧ ಸರ್ಕಾರವೇ ನಿಂತಂತಹ ಸನ್ನಿವೇಶ ಎದುರಾಗಲಿದೆ. ಹೀಗಾಗಿ ಸಾಂವಿಧಾನಿಕ ಬಿಕಟ್ಟು ಉಲ್ಬಣಗೊಳ್ಳುವ ಆತಂಕವಿದೆ.ಜೊತೆಗೆ ದೂರುದಾರರು ರಾಜ್ಯಪಾಲರಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಸಾಕಷ್ಟು ಕಾನೂನಿನ ತೊಡಕುಗಳಿವೆ. ಮುಡಾ ಪ್ರಕರಣದಲ್ಲಿ ಪರ್ಯಾಯ ನಿವೇಶನ ಪಡೆದುಕೊಂಡಿರುವುದು ಪಾರ್ವತಿ ಸಿದ್ದರಾಮಯ್ಯ ಅವರು. ಆದರೆ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ. +ನಿವೇಶನಗಳ ಹಂಚಿಕೆಯಾಗಿದ್ದ ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿಲ್ಲ. ಆದರೂ ಪ್ರಭಾವ ಬಳಕೆಯಾಗಿದೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದು ಗಂಭೀರ ಚರ್ಚೆಗೆ ಗ್ರಾಸವಾಗಿದೆ.ಬಿಜೆಪಿ ಸರ್ಕಾರದ ಅವಧಿಯಲ್ಲೇ ಅದರಲ್ಲೂ ಮುಡಾದಲ್ಲಿ ಬಿಜೆಪಿಯ ನಾಯಕರೇ ಅಧ್ಯಕ್ಷರಾಗಿದ್ದ ವೇಳೆ ನಿವೇಶನ ಹಂಚಿಕೆ ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯನವರಿಗೆ ಅಷ್ಟೇ ಅಲ್ಲದೆ ಹಲವಾರು ಮಂದಿಗೆ ಬದಲಿ ನಿವೇಶನಗಳನ್ನು ನೀಡಲಾಗಿದೆ. +ಪ್ರಕರಣವೊಂದರಲ್ಲಿ ಹೈಕೋರ್ಟ್ ಮುಡಾಗೆ ಛೀಮಾರಿ ಹಾಕಿ ಅರ್ಜಿದಾರರ ಪರವಾಗಿ ತೀರ್ಪು ನೀಡಿತ್ತು. ಆದರೆ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಭೂಮಿಯ ಪರಭಾರೆಯಿಂದ ಶುರುವಾಗಿ ಹಲವಾರು ಲೋಪಗಳನ್ನು ವಿರೋಧ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ.ಲೋಪಗಳು ನಡೆದಿರುವ ಕಾಲಾವಧಿ ಮತ್ತು ಸಿದ್ದರಾಮಯ್ಯ ಅಧಿಕಾರದಲ್ಲಿರುವ ಕಾಲಾವಧಿ ಎರಡೂ ಭಿನ್ನವಾಗಿವೆ. +ಸಿದ್ದರಾಮಯ್ಯ ಅವರು ಹೇಳಿರುವ ಪ್ರಕಾರ ತಾವು ಯಾವುದೇ ಪ್ರಭಾವ ಬೀರಿಲ್ಲ. ನಾನು ಸಹಿ ಮಾಡಿರುವ ಒಂದೇ ಒಂದು ಕಾಗದವನ್ನು ತೋರಿಸಿ ಎಂದು ಪದೇ ಪದೇ ಹೇಳುತ್ತಿದ್ದಾರೆ. ಹಾಗಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅದರಲ್ಲೂ ಹಿಂದಿನ ಐಪಿಸಿ ಸೆಕ್ಷನ್ಗಳು ಹಾಗೂ ಪ್ರಸ್ತುತ ಚಾಲ್ತಿಯಲ್ಲಿರುವ ಭಾರತೀಯ ನ್ಯಾಯಸಂಹಿತೆ ಜೊತೆಗೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಗಳ ಬಹುತೇಕ ಸೆಕ್ಷನ್ಗಳನ್ನು ಉಲ್ಲೇಖ ಮಾಡಲಾಗಿದೆ. +ಭೂಮಿ ಪರಭಾರೆ ಆಗಿರುವುದು, ನಿವೇಶನ ಹಂಚಿಕೆಯಾಗಿರುವುದು ಎಲ್ಲವೂ 2021ರ ಹಿಂದೆ. ಭಾರತೀಯ ನ್ಯಾಯ ಸಂಹಿತೆ ಅನುಸಾರ 2024ರ ಜುಲೈ 1ರ ನಂತರದ ಕೃತ್ಯಗಳನ್ನು ಹೊಸ ಕಾನೂನುಗಳಡಿ ದಾಖಲಿಸಲು ಅವಕಾಶವಿದೆ. ಈ ಹಿಂದೆ ನಡೆದಿರುವ ಪ್ರಕರಣಗಳನ್ನು ಹೊಸ ಕಾನೂನಿನಡಿ ದಾಖಲಿಸಲು ಅಭಿಯೋಜನೆಗೆ ಅನುಮತಿ ನೀಡಿರುವ ತಾಂತ್ರಿಕ ಅಂಶಗಳನ್ನು ಪ್ರಶ್ನಿಸಲು ಚರ್ಚಿಸಲಾಗಿದೆ. \ No newline at end of file diff --git a/eesanje/url_46_42_11.txt b/eesanje/url_46_42_11.txt new file mode 100644 index 0000000000000000000000000000000000000000..c990a730e8099efd523efa0b9aa369b6e5d3831a --- /dev/null +++ b/eesanje/url_46_42_11.txt @@ -0,0 +1,15 @@ +ಅತ್ಯಾಚಾರವೆಸಗಿ ವೈದ್ಯೆಯ ಹತ್ಯೆ ಖಂಡಿಸಿ ದೇಶಾದ್ಯಂತ ವೈದ್ಯರ ಪ್ರತಿಭಟನೆ, ರಾಜ್ಯದಲ್ಲೂ ರೋಗಿಗಳು ಪರದಾಟ +ನವದೆಹಲಿ/ಬೆಂಗಳೂರು,ಆ.17-ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಇಂದು ತಮ 24 ಗಂಟೆಗಳ ರಾಷ್ಟ್ರ ಹಾಗೂ ರಾಜ್ಯ ವ್ಯಾಪಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಹೊರರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಯಿತು. +ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಭೀಕರ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗಿ ರೋಗಿಗಳು ಪರದಾಡುವಂತಾಯಿತು. +ಇಂದು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುವ 24 ಗಂಟೆಗಳ ಕಾಲ ತುರ್ತು ರಹಿತ ಆರೋಗ್ಯ ಸೇವೆಗಳನ್ನು ರಾಷ್ಟ್ರವ್ಯಾಪಿ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಘೋಷಿಸಿದೆ. ಪ್ರತಿಭಟನೆಯ ನಡುವೆಯೂ ಎಲ್ಲಾ ಅಗತ್ಯ ಸೇವೆಗಳನ್ನು ಮತ್ತು ಗಾಯಾಳುಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದೆ. ಆರ್‌ಜಿ ಕರ್‌ ಘಟನೆಯು ಆಸ್ಪತ್ರೆಯಲ್ಲಿನ ಹಿಂಸಾಚಾರದ ಎರಡು ಆಯಾಮಗಳನ್ನು ಮುನ್ನೆಲೆಗೆ ತಂದಿದೆ: ಮಹಿಳೆಯರಿಗೆ ಸುರಕ್ಷಿತ ಸ್ಥಳಗಳ ಕೊರತೆಯಿಂದಾಗಿ ಅನಾಗರಿಕ ಪ್ರಮಾಣದ ಅಪರಾಧ ಮತ್ತು ಸಂಘಟಿತ ಭದ್ರತಾ ಪ್ರೋಟೋಕಾಲ್‌ ಕೊರತೆಯಿಂದಾಗಿ ಗೂಂಡಾಗಿರಿ ನಡೆದಿದೆ ಎಂದು ಐಎಂಎ ಹೇಳಿದೆ. +ಅಪರಾಧ ಮತ್ತು ವಿಧ್ವಂಸಕ ಕತ್ಯಗಳು ರಾಷ್ಟ್ರದ ಆತಸಾಕ್ಷಿಯನ್ನು ಆಘಾತಗೊಳಿಸಿವೆ. ಇಂದು ವೈದ್ಯಕೀಯ ಭ್ರಾತತ್ವ ಮತ್ತು ರಾಷ್ಟ್ರ ಎರಡೂ ಬಲಿಪಶುಗಳಾಗಿವೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧದ ಹಿಂಸಾಚಾರವನ್ನು ಪರಿಹರಿಸಲು ಇದು ಮಹತ್ವದ ನೀತಿಯನ್ನು ಬಯಸುತ್ತದೆ. +1897 ರ ಸಾಂಕ್ರಾಮಿಕ ರೋಗಗಳ ಕಾಯಿದೆಗೆ 2023 ರಲ್ಲಿ ಮಾಡಿದ ತಿದ್ದುಪಡಿಗಳನ್ನು 2019ರ ಪ್ರಸ್ತಾವಿತ ಆಸ್ಪತ್ರೆ ಸಂರಕ್ಷಣಾ ಮಸೂದೆಗೆ ಸೇರಿಸುವ ಕೇಂದ್ರ ಕಾಯಿದೆಗೆ ವೈದ್ಯರ ದೇಹವು ಒತ್ತಾಯಿಸುತ್ತಿದೆ. ಈ ಕ್ರಮವು 25 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಶಾಸನವನ್ನು ಬಲಪಡಿಸುತ್ತದೆ ಎಂದು ಅದು ಹೇಳಿದೆ. ಈ ಪರಿಸ್ಥಿತಿಯಲ್ಲಿ ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಜಾರಿಗೊಳಿಸಲಾದ ಸುಗ್ರೀವಾಜ್ಞೆಯಂತೆಯೇ ಸೂಕ್ತವೆಂದು ಐಎಂಎ ಸೂಚಿಸಿದೆ. +ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳೆಂದು ಘೋಷಿಸಬೇಕೆಂದು ಐಎಂಎ ಒತ್ತಾಯಿಸಿದೆ ಮತ್ತು ಮೊದಲ ಹಂತವು ಕಡ್ಡಾಯ ಭದ್ರತಾ ಅರ್ಹತೆಗಳನ್ನು ಹೊಂದಿದೆ. ಎಲ್ಲಾ ಆಸ್ಪತ್ರೆಗಳ ಭದ್ರತಾ ಪ್ರೋಟೋಕಾಲ್‌ಗಳು (ಅದಕ್ಕಿಂತ) ವಿಮಾನ ನಿಲ್ದಾಣಕ್ಕಿಂತ ಕಡಿಮೆಯಿರಬಾರದು. ಆಸ್ಪತ್ರೆಗಳನ್ನು ಕಡ್ಡಾಯ ಭದ್ರತಾ ಅರ್ಹತೆಗಳೊಂದಿಗೆ ಸುರಕ್ಷಿತ ವಲಯಗಳಾಗಿ ಘೋಷಿಸುವುದು ಮೊದಲ ಹಂತವಾಗಿದೆ. ಸಿಸಿಟಿವಿಗಳು, ಭದ್ರತಾ ಸಿಬ್ಬಂದಿಯ ನಿಯೋಜನೆ ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಬಹುದು ಎಂದು ಅದು ತಿಳಿಸಿದೆ. +ಸಂತ್ರಸ್ತೆ ಇದ್ದ 36 ಗಂಟೆಗಳ ಡ್ಯೂಟಿ ಶಿಫ್‌್ಟ ಮತ್ತು ವಿಶ್ರಾಂತಿ ಪಡೆಯಲು ಸುರಕ್ಷಿತ ಸ್ಥಳಗಳ ಕೊರತೆ ಸೇರಿದಂತೆ ನಿವಾಸಿ ವೈದ್ಯರ ಕೆಲಸದ ಮತ್ತು ಜೀವನ ಪರಿಸ್ಥಿತಿಗಳ ಸಂಪೂರ್ಣ ಕೂಲಂಕುಷ ಪರೀಕ್ಷೆಗೆ ಒತ್ತಾಯಿಸಿದೆ. +ಕೋಲ್ಕತ್ತಾದ ಭಯಾನಕತೆಯನ್ನು ನಿರ್ದಿಷ್ಟ ಸಮಯದ ಚೌಕಟ್ಟಿನಲ್ಲಿ ಸೂಕ್ಷ್ಮ ಮತ್ತು ವತ್ತಿಪರ ತನಿಖೆಗೆ ಕರೆ ನೀಡಿದೆ ಮತ್ತು ಆಸ್ಪತ್ರೆಯ ಆವರಣದ ವಿಧ್ವಂಸಕ ಕತ್ಯಗಳಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಮತ್ತು ದೇಶಕ್ಕೆ ಅನುಕರಣೀಯ ಶಿಕ್ಷೆಯನ್ನು ನೀಡುವುದರ ಜೊತೆಗೆ ನ್ಯಾಯ ದೊರಕಿಸಿಕೊಡಬೇಕು ಎನ್ನುವುದು ಮುಷ್ಕರ ನಿರತ ವೈದ್ಯರ ಬೇಡಿಕೆಯಾಗಿದೆ. +ಕರ್ನಾಟಕದಲ್ಲಿ ರೋಗಿಗಳ ಪರದಾಟ:ವೈದ್ಯರ ಪ್ರತಿಭಟನೆ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ರಾಜ್ಯಾದ್ಯಂತ ವಿವಿಧ ಆಸ್ಪತ್ರೆಗಳಿಗೆ ಆಗಮಿಸಿದ ರೋಗಿಗಳಿಗೆ ತುರ್ತು ಚಿಕಿತ್ಸೆ ಸಿಗದೆ ಪರದಾಡುವಂತಾಯಿತು.ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆ, ಇಎಸ್‌‍ಐ ಸೇರಿದಂತೆ ಮತ್ತಿತರ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್‌ ಆಗಿರುವುದರಿಂದ ತುರ್ತು ಚಿಕಿತ್ಸೆ ಅಗತ್ಯ ಇರುವ ರೋಗಿಗಳಿಗೆ ಮಾತ್ರ ತಪಾಸಣೆ ಮಾಡಲಾಯಿತು. +ನೆಲಮಂಗಲದಲ್ಲಿ ಸಂಪೂರ್ಣವಾಗಿ ಸಾರ್ವಜನಿಕ ಆಸ್ಪತ್ರೆ ಬಂದ್‌ ಆಗಿದ್ದರಿಂದ ಆಟೋದಲ್ಲಿ ಬಂದ ವೃದ್ಧ ದಂಪತಿ ಸೂಕ್ತ ಸಲಹೆ ಸಿಗದೆ ಆಸ್ಪತ್ರೆ ಆವರಣದಲ್ಲಿ ಕೆಲವು ಗಂಟೆಗಳ ಕಾಲ ವೈದರಿಗಾಗಿ ಕಾಯುತ್ತಿದ್ದ ದೃಶ್ಯ ಮನಕಲಕುವಂತಿತ್ತು. +ಕೆ.ಸಿ ಜನರಲ್‌ ಆಸ್ಪತ್ರೆಗೆ ಆಗಮಿಸಿದ ರೋಗಿಗಳು ತುರ್ತು ಚಿಕಿತ್ಸೆಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಸರದಿ ಸಾಲಿನಲ್ಲಿ ನಿಂತು ಕಾಯುವಂತಾಗಿತ್ತು. ಒಳರೋಗಿಗಳಿಗೆ ಮಾಮೂಲಿಯಂತೆ ಚಿಕಿತ್ಸೆ ನೀಡಲಾಯುತ್ತಿದ್ದು, ಹೊರರೋಗಿಗಳ ಚಿಕಿತ್ಸೆ ಬಂದ್‌ ಮಾಡಿದ್ದರಿಂದ ರೋಗಿಗಳು ತೊಂದರೆ ಅನುಭವಿಸುವಂತಾಯಿತು. +ಇನ್ನು ತುರ್ತು ಚಿಕಿತ್ಸೆ, ಅಪಘಾತ ಚಿಕಿತ್ಸೆಗಳು ಮಾಮೂಲಿಯಂತೆ ನಡೆದವು. ಬೆಂಗಳೂರು, ತುಮಕೂರು, ಮಂಡ್ಯ, ಮದ್ದೂರು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಮತ್ತಿತರ ಕೇಂದ್ರ ಸ್ಥಳಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಹೊರರೋಗಿಗಳ ಚಿಕಿತ್ಸೆಗೆ ತೊಂದರೆ ಉಂಟಾಗಿತ್ತು. +ರೋಗಿಗಳಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ವೈದ್ಯರಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದು, ವೈದ್ಯರು ತುರ್ತು ರೋಗಿಗಳಿಗೆ ಚಿಕಿತ್ಸೆ ನೀಡಿದರು. +ಪ್ರತಿಭಟನೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರಿಗೆ ರಜೆ ನೀಡಬಾರದೆಂದು ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದು, ಕರ್ತವ್ಯಕ್ಕೆ ಹಾಜರಾದ ವೈದ್ಯರು ಒಳರೋಗಿಗಳಿಗೆ ಹಾಗೂ ತುರ್ತು ರೋಗಿಗಳಿಗೆ ಚಿಕಿತ್ಸೆಗೆ ನೀಡಿದರು. \ No newline at end of file diff --git a/eesanje/url_46_42_12.txt b/eesanje/url_46_42_12.txt new file mode 100644 index 0000000000000000000000000000000000000000..a8e6a88c2b746c55c702b29012bc537c78a808ca --- /dev/null +++ b/eesanje/url_46_42_12.txt @@ -0,0 +1,8 @@ +ಕೇಂದ್ರ ಸಚಿವರ ವಿ.ಸೋಮಣ್ಣನವರ ಕಚೇರಿ ಹಿಂಪಡೆದ ರಾಜ್ಯ ಸರ್ಕಾರ, ಬಿಜೆಪಿ-ಜೆಡಿಎಸ್‌‍ ಶಾಸಕರ ಆಕ್ರೋಶ +ತುಮಕೂರು, ಆ.17-ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನಗರದ ರೈಲ್ವೆ ನಿಲ್ದಾಣ ಎದುರಿನ ಪರಿವೀಕ್ಷಣಾ ಕಟ್ಟಡ ನೀಡಿ, ಅನುಮೋದನೆ ಮಾಡಿದ್ದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಈಗ ಅನುಮೋದನೆ ಹಿಂಪಡೆದಿರುವ ಕ್ರಮವನ್ನು ಜಿಲ್ಲೆಯ ಎನ್‌ಡಿಎ ಮೈತ್ರಿ ಶಾಸಕರು ತೀವ್ರವಾಗಿ ಖಂಡಿಸಿದ್ದಾರೆ. +ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ ಶಾಸಕರು, ಯಾವುದೇ ಕಾರಣಕ್ಕೂ ಸಚಿವ ವಿ.ಸೋಮಣ್ಣ ಅವರ ಕಚೇರಿಗೆ ನೀಡಿರುವ ಕಟ್ಟಡವನ್ನು ವಾಪಸ್‌‍ ನೀಡುವುದಿಲ್ಲ ಎಂದು ಹೇಳಿದರು. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಜ್ಯೋತಿ ಗಣೇಶ್‌ ಮಾತನಾಡಿ, ನಗರದ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ತುಮಕೂರು ಲೋಕಸಭಾ ಸದಸ್ಯರೂ ಆದ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಕಚೇರಿ ಆರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಈ ತಿಂಗಳ 3ರಂದು ಅನುಮೋದನೆ ನೀಡಿತ್ತು. ಅಂದಿನಿಂದಲೇ ಸಚಿವರ ಕಚೇರಿ ಕೆಲಸ-ಕಾರ್ಯಗಳು ಇಲ್ಲಿ ಪ್ರಾರಂಭವಾಗಿವೆ. ಆದರೆ, ನಿನ್ನೆ ರಾಜ್ಯ ಸರ್ಕಾರ ಸಚಿವರ ಕಚೇರಿಗೆ ನೀಡಿದ್ದ ಕಟ್ಟಡದ ಅನುಮೋದನೆಯನ್ನು ಹಿಂಪಡೆದಿರುವುದು ಖಂಡನೀಯ ಎಂದರು. +ಸಾರ್ವಜನಿಕರ ಪರವಾದ ಕೆಲಸ-ಕಾರ್ಯಗಳಿಗೆ ಬಳಕೆಯಾಗುತ್ತಿರುವ ಸಚಿವರ ಈ ಕಚೇರಿ ಕಟ್ಟಡವನ್ನು ಹಿಂಪಡೆಯುವ ಪ್ರಯತ್ನದ ಮೂಲಕ ರಾಜ್ಯ ಸರ್ಕಾರ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ. ಈಗಾಗಲೇ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಈ ಕಚೇರಿಯಲ್ಲಿ ಇಲಾಖೆ ಕೆಲಸ, ಸಾರ್ವಜನಿಕರ ಕೆಲಸ-ಕಾರ್ಯಗಳು ಆರಂಭವಾಗಿದ್ದು, ಯಾವುದೇ ಕಾರಣಕ್ಕೂ ಕಚೇರಿಯನ್ನು ವಾಪಸ್‌‍ ನೀಡುವುದಿಲ್ಲ. ಸರ್ಕಾರ ಯಾವ ರೀತಿ ವಾಪಸ್‌‍ ಪಡೆಯುವುದೋ ನಾವು ನೋಡುತ್ತೇವೆ ಎಂದು ಶಾಸಕ ಜ್ಯೋತಿಗಣೇಶ್‌ ಸವಾಲು ಹಾಕಿದರು. +ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರೂ ಆದ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ.ಸುರೇಶ್‌ಬಾಬು ಮಾತನಾಡಿ, ಕೇಂದ್ರ ಸಚಿವರ ಕಚೇರಿಗೆಂದು ಕೊಟ್ಟ ಕಟ್ಟಡವನ್ನು ವಾಪಸ್‌‍ ಪಡೆಯಲು ರಾಜ್ಯ ಸರ್ಕಾರ ಹೊರಟಿದೆ. ಒಮೆ ಕೊಟ್ಟು ಮತ್ತೆ ವಾಪಸ್‌‍ ಪಡೆಯುವುದನ್ನು ಕಾಂಗ್ರೆಸ್‌‍ ಸರ್ಕಾರ ದಂಧೆ ಮಾಡಿಕೊಂಡಂತಿದೆ ಎಂದು ಟೀಕಿಸಿದರು. +ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡು ಮಾತನಾಡಿ, ಕೇಂದ್ರ ಸಚಿವ ವಿ.ಸೋಮಣ್ಣನವರ ಅಭಿವೃದ್ಧಿ ಕಾರ್ಯ, ಅವರ ಜನಪರ ಕೆಲಸಗಳ ವೇಗಕ್ಕೆ ಕಾಂಗ್ರೆಸ್‌‍ ನಾಯಕರಿಗೆ ನಡುಕು ಉಂಟಾಗಿದೆ. ಸಂಸದರ ವೇಗ ತಡೆಯಲು ಕಚೇರಿ ಹಿಂಪಡೆಯುವ ಕುತಂತ್ರ ಮಾಡುತ್ತಿದ್ದಾರೆ. ದಮ್‌ ಇದ್ದರೆ ಕಚೇರಿಯನ್ನು ಹಿಂಪಡೆಯಲಿ ನೋಡೋಣ. ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. +ಸಚಿವ ವಿ.ಸೋಮಣ್ಣ ಅವರು ನಾಳೆ ನಗರದ ಪ್ರವಾಸಿ ಮಂದಿರದ ತಮ ಕಚೇರಿಯಲ್ಲಿ ಸಾರ್ವಜನಿಕರು ಭೇಟಿ ಮಾಡಿ ಕುಂದು-ಕೊರತೆ, ಅಹವಾಲುಗಳನ್ನು ಸಲ್ಲಿಸಬಹುದು. ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸಚಿವ ವಿ.ಸೋಮಣ್ಣ ಕಚೇರಿಯಲ್ಲಿ ಹಾಜರಿರುತ್ತಾರೆ ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_42_2.txt b/eesanje/url_46_42_2.txt new file mode 100644 index 0000000000000000000000000000000000000000..09898802a2247b0b9cb1f607c12523aa26047d9f --- /dev/null +++ b/eesanje/url_46_42_2.txt @@ -0,0 +1,11 @@ +ಸರ್ಕಾರ ಪತನಗೊಳಿಸುವ ಸಂಚು ಮಾಡಿದ್ದಾರೆ : ಪರಮೇಶ್ವರ್ ಕಿಡಿ +ಬೆಂಗಳೂರು,ಆ.18-ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ಕಾನೂನಾತಕವಾಗಿ ಹಾಗೂ ರಾಜಕೀಯವಾಗಿ ಎದುರಿಸುವ ಜೊತೆಗೆ ನಮ ಪಾಡಿಗೆ ನಾವು ಆಡಳಿತ ನಡೆಸಿದ್ದೇವೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿ ದುರ್ಬಳಕೆ ಯಾಗುತ್ತಿದೆ. +ಹೀಗಾಗಿ ಕಾನೂನು ಹೋರಾಟ ನಡೆಸುವುದರ ಜೊತೆಗೆ ರಾಜಕೀಯವಾಗಿಯೂ ತಕ್ಕ ಉತ್ತರ ನೀಡುತ್ತೇವೆ. ನಾಳೆಯಿಂದ ನಮ ಪಕ್ಷದ ಕಾರ್ಯಕರ್ತರು ಬೀದಿಗಿಳಿಯಲಿದ್ದಾರೆ. ಈ ಬಗ್ಗೆ ಈಗಾಗಲೇ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಕಲ್ಲುತೂರಾಟ ಸೇರಿದಂತೆ ಯಾವುದೇ ಹಿಂಸಾತಕ ಕೃತ್ಯಗಳನ್ನು ನಡೆಸದೆ ಶಾಂತಿಯುತ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು. +ಬಿಜೆಪಿಯವರು ಪ್ರತಿಭಟನೆ ಮಾಡಲಿ. ಅದು ಅವರ ಹಕ್ಕು. ನಾವು ನಮ ಹಕ್ಕನ್ನು ಪ್ರತಿಪಾದಿಸುತ್ತೇವೆ. ರಾಜ್ಯಪಾಲರು ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿರುವುದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸಿರುವುದು, ಮುಖ್ಯಮಂತ್ರಿಯವರನ್ನು ಗುರಿಯಾಗಿಸಿ ಸರ್ಕಾರವನ್ನೇ ಪತನಗೊಳಿಸುವ ಸಂಚು ನಡೆದಿರುವುದು ಕಣ್ಣೆದುರಿಗೆ ಇದೆ ಎಂದರು. +ಬಿಜೆಪಿಯೇತರ ಆಡಳಿತ ಇರುವ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ವರ್ತನೆಗಳು ಆಕ್ಷೇಪಾರ್ಹ. ಈಗ ಕರ್ನಾಟಕದಲ್ಲೂ ಅಂಥದ್ದೇ ಪ್ರಯತ್ನ ನಡೆಯುತ್ತಿದೆ. ಇದರ ಕುರಿತಂತೆ ರಾಷ್ಟ್ರಮಟ್ಟದಲ್ಲಿಹೋರಾಟ ನಡೆಸುವ ಬಗ್ಗೆ ಹೈಕಮಾಂಡ್ ನಾಯಕರು ಇಂಡಿಯ ಮೈತ್ರಿಕೂಟದ ಸದಸ್ಯರ ಜೊತೆ ಚರ್ಚೆ ನಡೆಸಲಿದೆ ಎಂದು ತಿಳಿಸಿದರು. +ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಶಾಸಕ ಜನಾದರ್ನ ರೆಡ್ಡಿ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಮನವಿಗಳು ಬಾಕಿ ಇದ್ದರೂ ರಾಜ್ಯಪಾಲರು ಅವನ್ನು ಬದಿಗಿರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನುಮತಿ ನೀಡಿರುವುದು ಮೇಲ್ನೋಟಕ್ಕೆ ದುರುದ್ದೇಶಪೂರಿತವಾಗಿದೆ. ನಮಗೆ ಈ ನಾಲ್ವರ ವಿರುದ್ಧ ಅರ್ಜಿಗಳು ಬಾಕಿ ಇರುವುದು ಗೊತ್ತಿತ್ತು. ದ್ವೇಷದ ರಾಜಕೀಯ ಬೇಡ ಎಂದು ಸುಮನಿದ್ದೆವು ಎಂದು ಮುಗುಮಾಗಿ ಹೇಳಿದರು. +ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ಕೊಂಚ ಮಟ್ಟಿನ ಅಧೀರತೆ ಇದೆ. ಇಲ್ಲ ಎಂದು ನಾವು ಸುಳ್ಳು ಹೇಳಿ ಸಮರ್ಥಿಸಿಕೊಳ್ಳಲು ಹೋಗುವುದಿಲ್ಲ. ಆಡಳಿತದ ಮೇಲೂ ಪರಿಣಾಮವಾಗಲಿದೆ. ಆದರೆ ಇದನ್ನೆಲ್ಲ ಸಾವರಿಸಿಕೊಂಡು ಉತ್ತಮ ಆಡಳಿತ ನೀಡುವತ್ತ ಗಮನಿಹರಿಸುತ್ತೇವೆ ಎಂದರು. +ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಯಾವುದೇ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ. ಕಾನೂನು ಸಮರವನ್ನು ಮುಂದುವರೆಸುವ ಜೊತೆಗೆ ಉತ್ತಮ ಆಡಳಿತ ನಡೆಸುವ ಕುರಿತು ಅಭಿಪ್ರಾಯಗಳು ಕೇಳಿಬಂದಿವೆ. +ಕಾನೂನು ಸಮರಕ್ಕೆ ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ, ಕಪಿಲ್ ಸಿಬಾಲ್ ಅವರುಗಳು ಮುಖ್ಯಮಂತ್ರಿಗಳ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ಅಗತ್ಯಬಿದ್ದರೆ ಇನ್ನಷ್ಟು ಹಿರಿಯ ವಕೀಲರ ನೆರವು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. +ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡುವಾಗ ಪ್ರಮಾಣಿತ ಕಾರ್ಯ ನಿರ್ವಹಣಾ ಪ್ರಕ್ರಿಯೆ(ಎಸ್ಒಪಿ)ಗಳನ್ನು ಅನುಸರಿಸಿಲ್ಲ. 17ಎ ಅಡಿ ಅನುಮತಿ ನೀಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ಮಾರ್ಗಸೂಚಿ ರೂಪಿಸಿದೆ. ಮುಖ್ಯಮಂತ್ರಿಯವರಿಗೆ ಡಿಜಿಪಿ ಅಂತಹ ಅಧಿಕಾರಿ ಪ್ರಾಥಮಿಕ ವರ ನೀಡಬೇಕು. ಉಳಿದ ಶಾಸಕರಿಗೆ, ಸಚಿವರಿಗೆ ಯಾವ ಹಂತದ ಅಧಿಕಾರಿಗಳಿಂದ ವರದಿ ಪಡೆಯಬೇಕೆಂಬ ಬಗ್ಗೆ ಸ್ಪಷ್ಟ ಉಲ್ಲೇಖಗಳಿವೆ. ಅದಾವುದನ್ನೂ ರಾಜ್ಯಪಾಲರು ಪರಿಗಣಿಸಿಲ್ಲ. ಸಚಿವ ಸಂಪುಟ ಸಭೆ ನೀಡಿದ್ದ ಸಲಹೆಯನ್ನು ತಳ್ಳಿ ಹಾಕಿದ್ದಾರೆ ಎಂದು ಪರಮೇಶ್ವರ್ ಕಿಡಿಕಾರಿದರು. +ಅಭಿಯೋಜನೆಗೆ ಅನುಮತಿ ದೊರೆತ ನಂತರ ತನಿಖೆ ಮುಂದುವರೆಸಲು ಲೋಕಾಯುಕ್ತರಿಗೆ ಅವಕಾಶವಿದೆ. ಈಗಾಗಲೇ ಜೂ.18ರಂದು ಲೋಕಾಯುಕ್ತರ ಮುಂದೆ ದೂರು ದಾಖಲಾಗಿದೆ. ಬೇರೆ ಆಯ್ಕೆಗಳು ಇದ್ದಂತಿಲ್ಲ. ನ್ಯಾಯಾಲಯ ಅನುಮತಿಸಿದರೆ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಬಹುದು ಎಂದು ಹೇಳಿದರು. \ No newline at end of file diff --git a/eesanje/url_46_42_3.txt b/eesanje/url_46_42_3.txt new file mode 100644 index 0000000000000000000000000000000000000000..eed8a32b3c029b282677aa5e81c8b7d90a0d3bee --- /dev/null +++ b/eesanje/url_46_42_3.txt @@ -0,0 +1,6 @@ +ರಾಜ್ಯದ ಮುಖ್ಯಮಂತ್ರಿಗಳ ಸಾಮಾಜಿಕ ಜಾಲತಾಣ ಕಾಂಗ್ರೆಸ್ ಪಕ್ಷದ ಮುಖವಾಣಿಯೇ..? : ಸಿ.ಟಿ.ರವಿ ಪ್ರಶ್ನೆ +ಬೆಂಗಳೂರು,ಆ.18-ಸಿಎಂ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದ ಖಾತೆಯನ್ನು ವಾರ್ತಾ ಇಲಾಖೆಯ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೊ ಅಥವಾ ಕೆಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರೊ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ. +ಈ ಕುರಿತು ಎಕ್ಸ್ ನಲ್ಲಿ ಸರ್ಕಾರಕ್ಕೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿರುವ ಅವರು, ಪ್ರಧಾನಿ ನರೇಂದ್ರಮೋದಿ ಅವರನ್ನು ನಿಂದಿಸಲು ಹಾಗೂ ಘನತೆವೆತ್ತ ರಾಜ್ಯಪಾಲರನ್ನು ಟೀಕಿಸಲು ಈ ಖಾತೆಯನ್ನು ಬಳಸುತ್ತಿದ್ದಾರೆ. ಸಾಲದ್ದಕ್ಕೆ ಸಿಎಂ ಆಫ್ ಕರ್ನಾಟಕ ಎಂಬ ಖಾತೆಯನ್ನು ಸಿಎಂ ಸಿದ್ದರಾಮಯ್ಯ ಅವರ ವಂಧಿಮಾಗದರು ಕಾಂಗ್ರೆಸ್ ಮುಖವಾಣಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. +"@" ಎಂಬ ಸಾಮಾಜಿಕ ಜಾಲತಾಣದ ಖಾತೆ ಸಂವಿಧಾನತ್ಮಕವಾದುದು, ಮುಖ್ಯಮಂತ್ರಿಯಾದವರ ದೈನಂದಿನ ಸರಕಾರದ ಕಾರ್ಯ ಚಟುವಟಿಕೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂಬ ನಿಟ್ಟಿನಲ್ಲಿ ವಾರ್ತಾ ಇಲಾಖೆ ಸೃಷ್ಟಿಸಿದ ಖಾತೆ.ಆದರೆ ಈಗ ಏನಾಗುತ್ತಿದೆ ನೋಡಿ!!ಪ್ರಧಾನಿ@narendramodiಯವರನ್ನು ನಿಂದಿಸಲು ಹಾಗೂ ಘನತೆವೆತ್ತ…://./jWrkj3jr5o +ಸಿಎಂ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣವು ಸಂವಿಧಾನತಕವಾದುದು, ಮುಖ್ಯಮಂತ್ರಿಯಾದವರ ದೈನಂದಿನ ಸರಕಾರದ ಕಾರ್ಯ ಚಟುವಟಿಕೆಗಳು ಜನಸಾಮಾನ್ಯರಿಗೆ ನೇರವಾಗಿ ತಲುಪಬೇಕು ಎಂಬ ನಿಟ್ಟಿನಲ್ಲಿ ವಾರ್ತಾ ಇಲಾಖೆ ಸೃಷ್ಟಿಸಿದ ಖಾತೆ. +ಆದರೆ ಈಗ ಏನಾಗುತ್ತಿದೆ ನೋಡಿ!! ಉತ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಂದು ಒತ್ತಾಯಿಸಿರುವ ರವಿ, ಸರಕಾರದ ಮುಖ್ಯ ಕಾರ್ಯದರ್ಶಿಗಳು ಇದನ್ನು ಗಮನಿಸಬೇಕು ಎಂದು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_42_4.txt b/eesanje/url_46_42_4.txt new file mode 100644 index 0000000000000000000000000000000000000000..4b3ebe7c0f69e34299c3c9193f4d551c91ac433a --- /dev/null +++ b/eesanje/url_46_42_4.txt @@ -0,0 +1,9 @@ +ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ +ಬೆಂಗಳೂರು, ಆ.18-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ರಾಜ್ಯದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿದೆ. ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. +ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆರೆಂಜ್‌ ಅಲರ್ಟ್‌, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. +ಕಳೆದ ಎರಡು ವಾರದಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಭಾರಿ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಳ್ಳೆ ಮಳೆಯಾಗಿದೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಆ.19ರವರೆಗೂ ಮಳೆಯಾಗಲಿದೆ. ಕೆಲವೆಡೆ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಮತ್ತೆ ಕೆಲವೆಡೆ ಮಳೆ ಕಡಿಮೆಯಾಗಲಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಆ.21ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಈ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. +ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ವ್ಯಾಪಕ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.ಜುಲೈ ತಿಂಗಳಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಮಲೆನಾಡಿನಲ್ಲಿ ಶೇ.34ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. +ಕರಾವಳಿಯಲ್ಲಿ ಶೇ.11ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಶೇ.100 ಕ್ಕಿಂತ ಹೆಚ್ಚು ಮಳೆಯಾಗಿದೆ. ಆದರೂ ಕೆಲವೆಡೆ ಮಳೆ ಕೊರತೆ ಕಂಡುಬರುತ್ತಿದೆ. +ಜುಲೈನಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ವಾಡಿಕೆಗಿಂತ ಶೇ.51ರಷ್ಟು ಹೆಚ್ಚು ಮಳೆಯಾಗಿತ್ತು.ಒಳನಾಡಿನಲ್ಲಿ ಕಡಿಮೆ ಮಳೆಯಾಗಿದ್ದರೆ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿ ಅತಿವೃಷ್ಟಿ ಉಂಟಾಗಿತ್ತು. \ No newline at end of file diff --git a/eesanje/url_46_42_5.txt b/eesanje/url_46_42_5.txt new file mode 100644 index 0000000000000000000000000000000000000000..653d961d5b6f1fa9c184f0587c6a2b55b3c5ac71 --- /dev/null +++ b/eesanje/url_46_42_5.txt @@ -0,0 +1,12 @@ +ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ, ಕಾನೂನು ಹೋರಾಟಕ್ಕಿಳಿದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಆ.18-ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧರ ರಾಜ್ಯಪಾಲರು ಅಭಿಯೋಜನೆ(ಪ್ರಾಸಿಕ್ಯೂಷನ್‌) ಅನುಮತಿ ನೀಡಿರುವುದರಿಂದ ಕಾನೂನು ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯಪಾಲರ ಥಾವರ್‌ಚಂದ್‌ ಗೆಹ್ಲೋಟ್‌ ಅವರ ತೀರ್ಮಾನವನ್ನು ಪ್ರಶ್ನಿಸಿ ಸರ್ಕಾರ ಸೋಮವಾರ ಹೈಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಲಿದೆ. ದೂರುದಾರರು ಕೂಡ ಕೆವಿಯೆಟ್‌ ಸಲ್ಲಿಸಿದ್ದು, ವಾದಕ್ಕೆ ನುರಿತ ವಕೀಲರನ್ನೇ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. +ಹೈಕೋರ್ಟ್‌ನಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಕಪೀಲ್‌ ಸಿಬಾಲ್‌ ಹಾಗೂ ಅಭಿಷೇಕ್‌ ಮನುಸಿಂಗ್ವಿ ವಾದ ಮಂಡಿಸಲಿದ್ದಾರೆ. ಮೇಲನವಿ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಬೇಕೇ? ಇಲ್ಲವೇ ಹೈಕೋರ್ಟ್‌ನಲ್ಲಿ ಸಲ್ಲಿಸಬೇಕೆ ಎಂಬ ಗೊಂದಲ ಮುಂದುವರೆದಿದೆ.ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಮತ್ತು ವಕೀಲರ ತಂಡ ಸಿದ್ದತೆಯನ್ನು ನಡೆಸಿದ್ದು, ಸೋಮವಾರ ಏಕಸದಸ್ಯ ಪೀಠಕ್ಕೆ ಮೇಲನವಿ ಸಲ್ಲಿಸಿ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಿದ್ದಾರೆ. +ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಪ್ರದೀಪ್‌ ಎಂಬುವರು ತಮ ವಾದವನ್ನು ಆಲಿಸದೆ ಯಾವುದೇ ರೀತಿಯ ಆದೇಶ ನೀಡಬಾರದೆಂದು ಹೈಕೋರ್ಟ್‌ನಲ್ಲಿ ಈಗಾಗಲೇ ಕೆವಿಯೆಟ್‌ ಸಲ್ಲಿಸಿದ್ದಾರೆ. ಹೀಗಾಗಿ ನ್ಯಾಯಾಲಯ ಎರಡೂ ಕಡೆ ವಾದ-ವಿವಾದವನ್ನು ಆಲಿಸದೆ ಆದೇಶವನ್ನು ನೀಡಲು ಸಾಧ್ಯವಿಲ್ಲ. +ಈ ಬೆಳವಣಿಗೆಗಳ ನಡುವೆಯೇ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಮಂಗಳವಾರಕ್ಕೆ ತೀರ್ಪು ಕಾಯ್ದಿರಿಸಿದೆ. +ಇನ್ನೊಂದೆಡೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಕೂಡ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ಬುಧವಾರ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ. ಈ ಎರಡೂ ಅರ್ಜಿಯನ್ನು ಒಟ್ಟುಗೂಡಿಸಿ ವಿಚಾರಣೆ ನಡೆಸಬೇಕೆಂದು ಸರ್ಕಾರ ನ್ಯಾಯಾಧೀಶರಿಗೆ ಮನವಿ ಮಾಡುವ ಸಂಭವವಿದೆ ಎಂದು ಕಾನೂನು ತಜ್ಞರು ಹೇಳುತ್ತಾರೆ. +ಸಿಎಂ ವಿರುದ್ಧ ಅರ್ಜಿ ಸಲ್ಲಿಕೆ ಮಾಡಿರುವ ದೂರುದಾರರು ರಾಜ್ಯ ಸರ್ಕಾರದ ಅಡಿ ಬಾರದ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ವಿರೋಧ ಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. +ಆದರೆ ಸಿಎಂ ಪರ ನಿಂತಿರುವ ಸಚಿವರು ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ, ನಾವು ಕೂಡ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರುಗಳಿಗೆ ಈಗ ಪ್ರಾಸಿಕ್ಯೂಷಗೆ ಅನುಮತಿ ನೀಡಿರುವ ಬಲ ಸಿಕ್ಕಿದೆ. ಆದ್ದರಿಂದ ಈಗ ಪೊಲೀಸರು ತನಿಖೆಯನ್ನು ಕೈಗೊಳ್ಳಬಹುದು. ಆದರೆ ಸಿಬಿಐ ಅಥವ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದೆ. +ಮುಡಾ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟಗಳನ್ನು ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. +ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17ಎ ಹಾಗೂ ಭಾರತೀಯ ಸುರಕ್ಷಾ ಸಂಹಿತೆಯ 218ರಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮೋದಿಸಿದ್ದಾರೆ. ಪೂರ್ವಾನುಮತಿ ಹಿನ್ನೆಲೆ ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬಹುದು. ಇದಕ್ಕೂ ಮುನ್ನ ಪೂರ್ವಾನುಮತಿ ಪತ್ರ ಹಾಗೂ ಆರೋಪಕ್ಕೆ ಪುಷ್ಠಿ ನೀಡುವ ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಒದಗಿಸಬೇಕು. +ವಿಚಾರಣೆ ನಡೆಸುವ ನ್ಯಾಯಾಲಯವು ತನಿಖೆಗೆ ಆದೇಶಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಅಲ್ಲದೇ, ನ್ಯಾಯಾಲಯವು ನೇರವಾಗಿ ಕಾಗ್ನಿಝನ್‌್ಸ ದೂರು ದಾಖಲಿಸಿಕೊಂಡು ಸಿಎಂಗೆ ಸಮನ್‌್ಸ ಜಾರಿ ಮಾಡಬಹುದಾಗಿದೆ. ಸಮನ್‌್ಸ ಜಾರಿಯಾದರೆ ನ್ಯಾಯಾಲಯದ ಮುಂದೆ ಸಿದ್ದರಾಮಯ್ಯ ಅವರು ಹಾಜರಾಗುವ ಅನಿವಾರ್ಯತೆ ಎದುರಾಗಲಿದೆ. +ತನಿಖಾ ಸಂಸ್ಥೆಗೆ ತನಿಖೆ ನಡೆಸಲು ನ್ಯಾಯಾಲಯವು ಶಿಫಾರಸು ಮಾಡಲೂಬಹುದಾಗಿದೆ. ಒಂದು ವೇಳೆ ಶಿಫಾರಸು ಮಾಡಿದರೆ ಲೋಕಾಯುಕ್ತದಲ್ಲಿ ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಿಸಬಹುದು. ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಬಂಧಿಸಬಹುದಾಗಿದೆ.ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದರೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ. \ No newline at end of file diff --git a/eesanje/url_46_42_6.txt b/eesanje/url_46_42_6.txt new file mode 100644 index 0000000000000000000000000000000000000000..ee69750e2639c0cc9501f1964d2ed42b75eb280b --- /dev/null +++ b/eesanje/url_46_42_6.txt @@ -0,0 +1,5 @@ +ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಹೈಕಮಾಂಡ್ +ಬೆಂಗಳೂರು,ಆ.17-ಸಂಕಷ್ಟ ಸಮಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧ ಪಕ್ಷಗಳ ಮುಖಂಡರಿಗೆ ಮಹತ್ವದ ಸಂದೇಶ ನೀಡಿದೆ. +ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವುದರಿಂದ ಕಾಂಗ್ರೆಸ್ನಲ್ಲಿ ತಳಮಳ ಶುರುವಾಗಿದೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೆವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. +ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ದೈರ್ಯ ಹೇಳಿದ್ದಾರೆ. ಬಿಜೆಪಿಯ ಷಡ್ಯಂತ್ರಗಳನ್ನು ನಾವು ರಾಜಕೀಯವಾಗಿ ಎದುರಿಸಲು ಸಿದ್ದತೆ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ ಎನ್ನಲಾಗಿದೆ. +ಬೆಂಗಳೂರಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_42_7.txt b/eesanje/url_46_42_7.txt new file mode 100644 index 0000000000000000000000000000000000000000..e984df73597aab2b138a5cc54cb8a4bf0cbcbca5 --- /dev/null +++ b/eesanje/url_46_42_7.txt @@ -0,0 +1,4 @@ +ಸಚಿವರ ನಿಯೋಗದ ಭೇಟಿಗೆ ರಾಜ್ಯಪಾಲರ ನಿರಾಕರಣೆ +ಬೆಂಗಳೂರು,ಆ.17– ಸಚಿವ ಸಂಪುಟದ ಸದಸ್ಯರ ನಿಯೋಗವನ್ನು ಭೇಟಿ ಮಾಡಲು ರಾಜ್ಯಪಾಲರು ಅನುಮತಿ ನಿರಾಕರಿಸಿರುವ ಬೆಳವಣಿಗೆ ನಡೆದಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟದ ಸದಸ್ಯರ ನಿಯೋಗ ಭೇಟಿ ಮಾಡಿ ಮುಡಾ ಪ್ರಕರಣದಲ್ಲಿ ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯ ಬಗ್ಗೆ ಸಮಾಲೋಚನೆ ನಡೆಸಲು ಮುಂದಾಗಿತ್ತು. +ಆದರೆ ನಿಯೋಗಕ್ಕೆ ಸಮಯ ನೀಡಲು ರಾಜ್ಯಪಾಲರು ನಿರಾಕರಿಸಿದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಮಧ್ಯಾಹ್ನ ತುರ್ತು ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಪೂರ್ವಾನುಮತಿಯ ಸೂಚನೆಗಳು ಬಹಿರಂಗಗೊಳ್ಳುತ್ತಿದ್ದಂತೆ ಹೊರ ಜಿಲ್ಲೆಗಳಲ್ಲಿ ಪ್ರವಾಸದಲ್ಲಿದ್ದ ಸಚಿವರನ್ನು ಬೆಂಗಳೂರಿಗೆ ಆಗಮಿಸುವಂತೆ ತುರ್ತು ಸಂದೇಶ ರವಾನೆ ಮಾಡಲಾಗಿದೆ. ಹಬ್ಬದ ಸಲುವಾಗಿ ಊರಿಗೆ ತೆರಳಿದ್ದ ಸಚಿವರು ತುರ್ತು ಕರೆಯ ಮೇರೆಗೆ ಎದ್ದುಬಿದ್ದು ಬೆಂಗಳೂರಿನತ್ತ ಧಾವಿಸಿಬಂದರು. \ No newline at end of file diff --git a/eesanje/url_46_42_8.txt b/eesanje/url_46_42_8.txt new file mode 100644 index 0000000000000000000000000000000000000000..829bbc8ace006c1f2b1386bb41275dd69588495a --- /dev/null +++ b/eesanje/url_46_42_8.txt @@ -0,0 +1,8 @@ +ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್ +ಬೆಂಗಳೂರು,ಆ.17– ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗಳು ನಡೆದಿವೆ. ಬೆಂಗಳೂರಿನ ರಾಜಭವನದ ಎದುರು ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ನಡೆಸಬೇಕಾಯಿತು. +ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಕಾರ್ಯಕರ್ತರು ರಾಜಭವನದ ಬಳಿ ಬರುವುದನ್ನು ತಡೆದರು. +ಮೈಸೂರಿನಲ್ಲಿ ಭಾರೀ ಪ್ರತಿಭಟನೆ:ಮೈಸೂರಿನ ನ್ಯಾಯಾಲಯದ ಬಳಿ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಅಧ್ಯಕ್ಷ ಶಿವರಾಂ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಕಾಂಗ್ರೆಸ್ ನವರು ಪ್ರತಿಭಟನೆ ನಡೆಸಿದರು. ಮುಡಾ ಹಗರಣ ಕುರಿತು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ವಿರೋಧಿಸಿ ಭಾರೀ ಪ್ರತಿಭಟನೆ ಹಮಿಕೊಳ್ಳ ಲಾಗಿತ್ತು. ನ್ಯಾಯಾಲಯದ ಮುಂದೆ ಟೈರ್ ಗಳಿಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ರಾಜ್ಯಪಾಲರ ವಿರುಧ್ಧ ಘೋಷಣೆಗಳನ್ನು ಕೂಗಲಾಯಿತು. +ರಾಜ್ಯಪಾಲರು ಜೆಡಿಎಸ್,ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಅವರನ್ನು ಕೂಡಲೇ ಬೇರೆ ರಾಜ್ಯಕ್ಕೆ ವರ್ಗಾಯಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.ನ್ಯಾಯಾಲಯ, ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ, ಕೆ.ಆರ್.ವೃತ್ತ, ಚಾಮುಂಡಿ ಬೆಟ್ಟ ಸೇರೆದಂತೆ ಜನ ನಿಬಿಡ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. +ರಾಜ್ಯಪಾಲರ ಪೂರ್ವಾನುಮತಿ ಕುರಿತು ಮಾತನಾಡಿರುವ ವಿಧಾನಪರಿಷತ್ ಸದಸ್ಯ ಡಾ.ತಿಮಯ್ಯ, ಕೇಂದ್ರದ ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರ ಎಳ್ಳಷ್ಟೂ ಇಲ್ಲ. ಈ ಪ್ರಕರಣದಿಂದ ನಿರ್ದೋಷಿಗಳಾಗಿ ಹೊರ ಬರುವ ವಿಶ್ವಾಸ ಇದೆ. ಒಂದು ವೇಳೆ ಸಿಎಂ ಬಂಧನವೇನಾದರೂ ಆದರೆ, ರಾಜ್ಯದಲ್ಲಿ ರಕ್ತ ಕ್ರಾಂತಿ ನಡೆದುಹೋಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಪ್ರಕರಣದಲ್ಲಿ ಸಿಎಂ ಸಂಪೂರ್ಣ ನಿರ್ದೋಷಿಗಳು. ನಾವು ಕಾನೂನಾತಕ ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದರು. +ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ :ಬೆಂಗಳೂರು,ಆ.17- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರಿಂದ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಸೇರಿದಂತೆ ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ರಾಜಭವನ, ವಿಧಾನಸೌಧ, ವಿಕಾಸಸೌಧ, ಸಿಎಂ ಅವರ ಗೃಹಕಚೇರಿ ಕೃಷ್ಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿಎಆರ್ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಸ್ಥಳೀಯ ಪೊಲೀಸರ ಜೊತೆ ನಿಯೋಜಿಸಲಾಗಿದೆ. +ಮೈಸೂರು ನಗರದ ಮುಡಾ ಕಚೇರಿ, ಸಿಎಂ ಅವರ ಮನೆ, ಕಚೇರಿ, ಬಸ್ನಿಲ್ದಾಣ ಹಾಗೂ ಅಲ್ಲಿನ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ. ಅದೇ ರೀತಿ ಮಂಡ್ಯ, ರಾಮನಗರ, ಶಿವಮೊಗ್ಗ, ಹಾಸನ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.ಸ್ಥಳೀಯ ಪೊಲೀಸರ ಜೊತೆಗೆ ಡಿಎಆರ್ ಹಾಗೂ ಕೆಎಸ್ಆರ್ಪಿ ತುಕಡಿಗಳನ್ನು ಬಂದೊಬಸ್ತ್ಗಾಗಿ ನಿಯೋಜನೆ ಮಾಡಲಾಗಿದೆ. \ No newline at end of file diff --git a/eesanje/url_46_42_9.txt b/eesanje/url_46_42_9.txt new file mode 100644 index 0000000000000000000000000000000000000000..4b765205c64e6da1b2410a3c73b91695e121a13c --- /dev/null +++ b/eesanje/url_46_42_9.txt @@ -0,0 +1,5 @@ +ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ : ಹರಿಪ್ರಸಾದ್ +ಬೆಂಗಳೂರು,ಆ.17-ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮೂಲಕ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ಜನರೇ ಕಳೆದ ಲೋಕಸಭೆಯಲ್ಲೇ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ ಎಂದಿದ್ದಾರೆ. +ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣಕ್ಕೆ ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. +ಈ ಮೊದಲು ಬಿ.ಕೆ.ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗ ವಾಗ್ದಾಳಿಗಳನ್ನು ನಡೆಸಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಸಂಧಾನ ನಡೆದಿದ್ದು, ಹರಿಪ್ರಸಾದ್ ಮುಖ್ಯಮಂತ್ರಿಯವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈಗ ಅದೇ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಸೃಷ್ಟಿಸಿದೆ. \ No newline at end of file diff --git a/eesanje/url_46_43_1.txt b/eesanje/url_46_43_1.txt new file mode 100644 index 0000000000000000000000000000000000000000..0c7c185ca5a3edeb84e2461ea916846f4ede4180 --- /dev/null +++ b/eesanje/url_46_43_1.txt @@ -0,0 +1,5 @@ +ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡುಕೊಳ್ಳುತ್ತಿದೆ : ಲಕ್ಷ್ಮಿ ಹೆಬ್ಬಾಳ್ಕರ್ +ಬೆಳಗಾವಿ, ಆ.17– ಸಿಎಂ ಸಿದ್ದರಾಮಯ್ಯ ವಿರುದ್ಧ ಪಿತೂರಿ ಪ್ರೇರಿತ ಅಜೆಂಡಾ ರೂಪಿಸಿ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಕೊಡಿಸುವಲ್ಲಿ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದರು. +ನಗರದ ತಮ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪಿತೂರಿ ಭಾಗವಾಗಿ ಮಾಡಲಾದ ಕ್ರಮಗಳಿಗೆ ರಾಜೀನಾಮೆ ಕೊಡುವ ಪ್ರಮೇಯ ಸರಕಾರಕ್ಕೆ ಬರುವುದಿಲ್ಲ. ಅಂತಹ ಪಿತೂರಿ ರಾಜಕೀಯದ ವಿರುದ್ಧ ಹಾಗೂ ಕಾನೂನಾತಕವಾಗಿ ಮೆಟ್ಟಿ ನಿಲ್ಲುವ ಕ್ಷಮತೆ ಕಾಂಗ್ರೆಸ್ ಸರಕಾರ ಮತ್ತು ಪಕ್ಷಕ್ಕಿದೆ ಎಂದರು. +ಈಗಾಗಲೇ ನಿವೃತ್ತ ನ್ಯಾಯಾಧೀಶ ದೇಸಾಯಿ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬರುವ ಮುಂಚೆ ರಾಜಭವನ ದುರುಪಯೋಗ ಮಾಡುತ್ತಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವ ರಾಜ್ಯಪಾಲ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಇತರ ರಾಜ್ಯಗಳಲ್ಲಿ ಆಗಿರುವುದನ್ನು ಈಗಾಗಲೇ ಗಮನಿಸಬಹುದು. +ಬಿಜೆಪಿ ರಹಿತ ರಾಜ್ಯ ಸರಕಾರಗಳ ಮೇಲೆ ಇಡಿ, ಐಟಿ ಹಾಗೂ ರಾಜಭವನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಮೇಯ, ಅವಶ್ಯಕತೆ ಬರುವುದಿಲ್ಲ ಎಂದರು. \ No newline at end of file diff --git a/eesanje/url_46_43_10.txt b/eesanje/url_46_43_10.txt new file mode 100644 index 0000000000000000000000000000000000000000..7631887a500bbd5cbaf9dab93c81cc0fbb76240a --- /dev/null +++ b/eesanje/url_46_43_10.txt @@ -0,0 +1,13 @@ + : ಸಿಎಂ ಸಿದ್ದರಾಮಯ್ಯ ಸಂಕಷ್ಟ : ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ರಾಜ್ಯಪಾಲರು +ಬೆಂಗಳೂರು,ಆ.17-ಮಹತ್ವದ ಬೆಳವಣಿಗೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದಾರೆ. +ರಾಜ್ಯದ ಇತಿಹಾಸದಲ್ಲೇ ಹಾಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಸಮ್ಮತಿಸಿದ ಎರಡನೇ ಪ್ರಕರಣ ಇದಾಗಿದೆ.ಈ ಹಿಂದೆ ಅಕ್ರಮ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ 2011 ರಲ್ಲಿ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್‍ರವರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದರು. +ಸಿಎಂ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಮಿತಿ ಸೆಕ್ಷನ್ 218 ರಡಿ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಅವರು ಹೊರಡಿಸಿರುವ ನೋಟಿಸ್‍ನಲ್ಲಿ ತಿಳಿಸಿದ್ದಾರೆ. +ಇದೀಗ ರಾಜ್ಯಪಾಲ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ಸಿಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯಗೆ ಭಾರಿ ಕಾನೂನಿನ ಸಂಕಷ್ಟ ಎದುರಾಗಿದೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಂದಿನ ಕಾನೂನು ಹೊರಾಟ ನಡೆಸುವ ಕುರಿತು ತಮ್ಮ ಸಂಪುಟದ ಸಹದ್ಯೋಗಿಗಳು ಹಾಗೂ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಮತ್ತಿತರರ ಜೊತೆ ಸಿದ್ದರಾಮಯ್ಯನವರು ಸಭೆ ನಡೆಸಿದ್ದಾರೆ. +ಇದರ ಬೆನ್ನಲ್ಲೇ ಸಂಜೆ 5 ಗಂಟೆಗೆ ವಿಶೇಷ ಸಚಿವ ಸಂಪುಟ ಸಭೆ ಕರೆದಿರುವುದು ಕೂಡ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಇದೀಗ ಸರ್ಕಾರ ರಾಜಭವನದ ನಡುವೆ ಕಾನೂನಿನ ಸಂಘರ್ಷ ಏರ್ಪಟ್ಟಿದ್ದು, ರಾಜ್ಯಪಾಲರ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸರ್ಕಾರ ಸಜ್ಜಾಗಿದೆ. +ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್, ಎಸಿಎಸ್ ಅತೀಕ್‍ಗೆ ನೋಟಿಸ್ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‍ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿದ್ದಾರೆ. +ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಾಗುವ ಸಾಧ್ಯತೆಯಿದೆ.ಹೀಗಾದರೆ ರಾಜಕೀಯ ಮತ್ತು ಕಾನೂನಾತ್ಮಕವಾಗಿ ಸರ್ಕಾರ ಇದನ್ನು ಒಂದು ಕಡೆಯಲ್ಲಿ ಎದುರಿಸಲಿದೆ. ಅದರ ಜೊತೆಗೆ ನೈತಿಕವಾಗಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಪ್ರತಿಪಕ್ಷಗಳಿಂದ ಹೆಚ್ಚಾಗುತ್ತದೆ. ಹೀಗಾಗಿ ಮುಂದಿನ ರಾಜಕೀಯ ಬೆಳವಣಿಗೆಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತದೆ. +ಸಿದ್ದರಾಮಯ್ಯನವರು ಅ„ಕಾರ ದುರುಪಯೋಗಪಡಿಸಿಕೊಂಡು ಮುಡಾದಲ್ಲಿ ತಮ್ಮ ಪತ್ನಿ ಪಾರ್ವತಮ್ಮ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಎಂಬುವವರು ರಾಜ್ಯಪಾಲರಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಈ ದೂರುಗಳನ್ನು ಸುದೀರ್ಘವಾಗಿ ಪರಿಶೀಲಿಸಿ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ್ದಾರೆ. +ಸಿಎಂ ವಿರುದ್ಧ ದೂರು ನೀಡಿರುವ ಮೂವರಿಗೂ ರಾಜ್ಯಪಾಲರಿಂದ ದೂರವಾಣಿ ಕರೆ ಬಂದಿದ್ದು, ರಾಜಭವನಕ್ಕೆ ಬರುವಂತೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್‍ಗೆ ಸೂಚಿಸಲಾಗಿದೆ.ಸಿಎಂ ವಿರುದ್ಧ ನೀಡಿರುವ ಶೋಕಾಸ್ ನೋಟಿಸ್ ಅನ್ನು ಹಿಂಪಡೆಯಬೇಕೆಂದು ಸಚಿವ ಸಂಪುಟ ಸಭೆ ಒಂದು ಸಾಲಿನ ನಿರ್ಣಯವನ್ನು ಕೈಗೊಂಡು ರಾಜಭವನಕ್ಕೆ ಕಳುಹಿಸಿಕೊಟ್ಟಿತ್ತು. +ರಾಜ್ಯಪಾಲರು ನೀಡಿದ್ದ ಶೋಕಾಸ್ ನೋಟಿಸ್‍ಗೆ ಸುಮಾರು 60 ಪುಟಗಳ ಸುದೀರ್ಘ ಉತ್ತರವನ್ನು ಕಳುಹಿಸಿಕೊಡಲಾಗಿತ್ತು. ಆದರೆ ರಾಜ್ಯಪಾಲರು ಇದ್ಯಾವುದಕ್ಕೂ ಜಗ್ಗದೇ ಕಾನೂನಿನ ಪ್ರಕಾರವಾಗಿ ಸಿಎಂ ವಿರುದ್ಧ ತನಿಖೆಗೆ ಅಸ್ತು ಎಂದಿದ್ದಾರೆ.ಕಳೆದ ಆ.15ರ ಸ್ವತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಸಿಎಂ ಸಿದ್ದರಾಮಯ್ಯನವರು ರಾಜಭವನದಲ್ಲಿ ಚಹಾಕೂಟಕ್ಕೆ ತೆರಳಿದ್ದ ವೇಳೆಯೇ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಲಿದ್ದಾರೆ ಎಂಬ ಸುಳಿವನ್ನು ಅಂದಾಜಿಸಿದ್ದರು ಎಂದು ತಿಳಿದುಬಂದಿದೆ. +ಏನಿದು ಪ್ರಕರಣ?:ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ 50-50 ಅನುಪಾತದಲ್ಲಿ 14 ಮೂಡಾ ಸೈಟ್‍ಗಳನ್ನು ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಆರ್.ಟಿ.ಐ ಕಾರ್ಯಕರ್ತ ಗಂಗರಾಜು ಎಂಬುವವರು ಇದರಲ್ಲಿ ಅಕ್ರಮ ಮಂಜೂರಾತಿ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಸಿಎಂ ಪತ್ನಿಗೆ 14 ನಿವೇಶನ ಮಂಜೂರಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. +ದೇವನೂರು ಬಡಾವಣೆಯಲ್ಲಿ ಸಾವಿರಾರು ಸೈಟ್ ಇದ್ದರೂ ವಿಜಯನಗರದಲ್ಲಿ ಕೊಟ್ಟಿರುವುದು ಯಾಕೆ? ಇದು ಲಾಭದ ಉದ್ದೇಶ ಅಲ್ಲವೇ. ಈ ಹಿಂದಿನ ಮೂಡಾ ಆಯುಕ್ತ ನಟೇಶ್ ಈ ಆದೇಶ ಮಾಡಿದ್ದು, ಸಿಎಂ ಪತ್ನಿ ಆರ್ಥಿಕ ಲಾಭವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_46_43_11.txt b/eesanje/url_46_43_11.txt new file mode 100644 index 0000000000000000000000000000000000000000..ab633278cea4ad3503671003281449162f82ebd6 --- /dev/null +++ b/eesanje/url_46_43_11.txt @@ -0,0 +1,8 @@ +ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಆ.16-ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಇಂದು ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ. +ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಸರಾಸರಿ ಸಾಧಾರಣ ಮಳೆ ಮುಂದುವರೆಯಲಿದೆ. ಆದರೆ, ಇಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. +ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಆಧರಿಸಿ ಈ ಮಾಹಿತಿ ನೀಡಲಾಗಿದೆ. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಅದೇ ರೀತಿ ಉತ್ತರ ಒಳನಾಡಿನಲ್ಲೂ ವ್ಯಾಪಕವಾಗಿ ಮಳೆಯಾಗಲಿದೆ. ಆದರೆ, ಒಂದೆರಡು ಕಡೆ ಭಾರೀ ಮಳೆಯಾಗುವ ಲಕ್ಷಣಗಳಿವೆ. +ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ನದಿಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ಭದ್ರಾ, ಹಾರಂಗಿ, ಕೆಆರ್‌ಎಸ್‌‍, ಕಬಿನಿ, ಹೇಮಾವತಿ, ಲಿಂಗನಮಕ್ಕಿ ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ. +ಈ ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಒಳಹರಿವು ಹೆಚ್ಚಾದಂತೆ ಹೊರ ಹರಿವನ್ನು ಹೆಚ್ಚಿಸಲಾಗುತ್ತದೆ. ಹೀಗಾಗಿ ನದಿ ಪಾತ್ರ ಜನವಸತಿಗಳಲ್ಲಿರುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಜುಲೈನಲ್ಲಿ ಅಬ್ಬರಿಸಿದ ಮುಂಗಾರು ಮಳೆ ಆಗಸ್ಟ್‌ನಲ್ಲಿ ಕಡಿಮೆಯಾಗಿದೆ. ಈ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲೂ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. +ಆದರೆ, ರಾಜ್ಯದ ಒಳನಾಡಿನಲ್ಲಿ ಚೇತರಿಕೆ ಕಂಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚು ಮಳೆ ಕಳೆದ ಎರಡು ವಾರಗಳಲ್ಲಿ ಬಿದ್ದಿದೆ. ಆದರೆ, ಭಾರಿ ಮಳೆಯಾಗಿಲ್ಲ. ಹೀಗಾಗಿ ಸಣ್ಣ ಕೆರೆ-ಕಟ್ಟೆಗಳಿಗೆ ಸಾಕಷ್ಟು ನೀರು ಬಂದಿಲ್ಲ. \ No newline at end of file diff --git a/eesanje/url_46_43_12.txt b/eesanje/url_46_43_12.txt new file mode 100644 index 0000000000000000000000000000000000000000..8e1a7ead5d97d4d099bafda7239cd8422b5c7130 --- /dev/null +++ b/eesanje/url_46_43_12.txt @@ -0,0 +1,7 @@ +ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಜೆಡಿಎಸ್‌‍ ಸಿದ್ಧತೆ +ಬೆಂಗಳೂರು, ಆ.16-ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಚುನಾವಣೆ ಸಿದ್ಧತೆಯನ್ನು ಜೆಡಿಎಸ್‌‍ ಪ್ರಾರಂಭಿಸಿದೆ. ಲೋಕಸಭಾ ಚುನಾವಣೆಯ ನಂತರ ಹುಮಸ್ಸಿನಲ್ಲಿರುವ ಜೆಡಿಎಸ್‌‍ ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಲಿದೆ. +ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ತಯಾರಿ ನಡೆಸುವುದು, ಪಕ್ಷದ ಸದಸ್ಯತ್ವ ಅಭಿಯಾನ ಹಮಿಕೊಳ್ಳುವುದು ಹಾಗೂ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲು ಆ.18ರಂದು ಜೆಪಿ ಭವನದಲ್ಲಿ ಜೆಡಿಎಸ್‌‍ ಸಭೆಯನ್ನು ಕರೆಯಲಾಗಿದೆ. +ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿರವರ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಈ ಸಭೆಗೆ ಜೆಡಿಎಸ್‌‍ ಪಕ್ಷದ ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು, ತಾಲ್ಲೂಕು ಅಧ್ಯಕ್ಷರು, ರಾಜ್ಯ ಕೋರ್‌ ಕಮಿಟಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಾಜ್ಯ ಪದಾಧಿಕಾರಿಗಳು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರುಗಳು ತಪ್ಪದೆ ಹಾಜರಾಗುವಂತೆ , ಜೆಡಿಎಸ್‌‍ ರಾಜ್ಯ ಮಹಾ ಪ್ರಧಾನಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ ಅವರು ಕೋರಿದ್ದಾರೆ. +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌‍, ಮುಂಬರುವ ವಿಧಾನಸಭಾ ಉಪ ಚುನಾವಣೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಪೇಕ್ಷೆ ಹೊಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. +ಇತ್ತೀಚೆಗೆ ಬೆಂಗಳೂರಿನಿಂದ ಮೈಸೂರಿಗೆ ನಡೆದ ರಾಜ್ಯ ಸರ್ಕಾರದ ವಿರುದ್ಧದ ಪಾದಯಾತ್ರೆಯನ್ನು ಬಿಜೆಪಿ ಜತೆಗೂಡಿ ನಡೆಸಲಾಗಿತ್ತು. ಅಧಿವೇಶನದಲ್ಲೂ ಜಂಟಿ ಹೋರಾಟ ನಡೆಸಿದ್ದವು. ಮೈತ್ರಿಯಾದ ನಂತರ ಆಗಾಗ್ಗೆ ಕೆಲವೊಂದು ಭಿನ್ನಾಭಿಪ್ರಾಯಗಳು ಎರಡೂ ಪಕ್ಷಗಳ ನಡುವೆ ವ್ಯಕ್ತವಾಗಿ ಕಾರ್ಯಕರ್ತರ ನಡುವೆ ಅಸಮಾಧಾನವಾಗುತ್ತಿರುವುದು ಉಂಟು. +ಆದರೆ, ಉಭಯ ಪಕ್ಷಗಳ ನಾಯಕರ ನಡುವೆ ಮೈತ್ರಿ ವಿಚಾರದಲ್ಲಿ ಒಮತವಿದ್ದು, ಮುಂಬರುವ ವಿವಿಧ ಚುನಾವಣೆಗಳಲ್ಲೂ ಇದೇ ರೀತಿ ಮೈತ್ರಿ ಮುಂದುವರೆಯಲಿದೆ ಎಂದೂ ಎರಡೂ ಪಕ್ಷಗಳ ನಾಯಕರು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಅದೇ ರೀತಿ ಚುನಾವಣೆ ಪೂರ್ವ ಮೈತ್ರಿ ಸ್ಥಳೀಯ ಸಂಸ್ಥೆಗಳಲ್ಲೂ ಮುಂದುವರೆಸುವ ಸಾಧಕ-ಬಾಧಕಗಳ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_43_2.txt b/eesanje/url_46_43_2.txt new file mode 100644 index 0000000000000000000000000000000000000000..5ebd3b1a6ab32130c97a110eb2110f913bcbe839 --- /dev/null +++ b/eesanje/url_46_43_2.txt @@ -0,0 +1,5 @@ +ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ +ಬೆಂಗಳೂರು,ಆ.17– ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. +ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ.ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ. +ಇದೀಗ ರಾಜ್ಯಪಾಲರೂ ಕೂಡ ತನಿಖೆಗೆ ಅನುಮತಿ ನೀಡಿರುವುದರಿಂದ ಸಿದ್ದರಾಮಯ್ಯ ಮೇಲೆ ಎಫ್ಐಆರ್ ದಾಖಲಿಸುವುದು ಅನಿವಾರ್ಯವಾಗುತ್ತದೆ.ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ನಂತರ ಎಫ್ಐಆರ್ ದಾಖಲಿಸಿಕೊಂಡಿದ್ದರು. ಈ ಎಫ್ಐಆರ್ ರದ್ದುಪಡಿಸಬೇಕೆಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಮೇಲನವಿ ಅರ್ಜಿ ಸಲ್ಲಿಸಿದ್ದರು. +ಆದರೆ ನ್ಯಾಯಾಲಯ ಈ ಅರ್ಜಿಯನ್ನು ವಜಾಗೊಳಿಸಿ ಯಡಿಯೂರಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸಿದ್ದರಾಮಯ್ಯ ಕೂಡ ಪ್ರಭಾವಿ ಸ್ಥಾನದಲ್ಲಿರುವುದರಿಂದ ಸಾಕ್ಷ್ಯಗಳನ್ನು ನಾಶಪಡಿಸುವ ಇಲ್ಲವೇ, ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದು ಕಂಡುಬಂದಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಸಾಧ್ಯತೆಯಿದೆ. \ No newline at end of file diff --git a/eesanje/url_46_43_3.txt b/eesanje/url_46_43_3.txt new file mode 100644 index 0000000000000000000000000000000000000000..db4e5671beec2db23754b042ded41bb592ea4420 --- /dev/null +++ b/eesanje/url_46_43_3.txt @@ -0,0 +1,12 @@ +ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು +ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಲವು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ತಾವು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ನೀಡುತ್ತಿದ್ದೇನೆ ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ರಾಜ್ಯಪಾಲರು ಕೆಲವು ಮೂಲಭೂತ ಪ್ರಶ್ನೆಗಳನ್ನು ಸಹ ಹಾಕಿದ್ದಾರೆ. +ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, ಆ ಬಳಿಕ ಅರ್ಜಿ ಹಾಕಿದ್ದಾರೆ. +2010 ರಲ್ಲಿ ಪಾರ್ವತಿ ಜಮೀನು ಮಾಲೀಕರಾದರೂ ಪರಿಹಾರಕ್ಕೆ ಅರ್ಜಿ ಹಾಕಲು 4 ವರ್ಷ ಕಾಯುತ್ತಾರೆ. ಸಿದ್ದರಾಮಯ್ಯ ಸಿಎಂ ಆದ ಮೇಲೆ 40:60 ಸೈಟ್ ಪರಿಹಾರ ಅನುಪಾತ, 50:50 ಆಯ್ತು. ಪಾಲಿಸಿ ಬದಲಾವಣೆಗೆ ಆಗಿನ ಸಿದ್ದರಾಮಯ್ಯ ಕ್ಯಾಬಿನೆಟ್ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಪತ್ನಿ ಕೊಟ್ಟ ಅರ್ಜಿಯ ಆಧಾರದ ಮೇಲೆ ಪಾಲಿಸಿ ಬದಲಾವಣೆ ಮಾಡಿದರು. ಆ ನಂತರ ಪರಿಹಾರ ನೀಡುವ ಸಂಬಂಧ ನಡೆದ ಮುಡಾ ಸಭೆಯಲ್ಲಿ ಶಾಸಕರಾಗಿದ್ದ ಯತೀಂದ್ರ ಇದ್ದರು ಎಂದು ಪ್ರಭಾವದ ಬಗ್ಗೆ ಉಲ್ಲೇಖಿಸಲಾಗಿದೆ. +ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ತನಿಖೆಗೆ ಅನುಮತಿ ನೀಡಿರುವ ಆದೇಶದಲ್ಲಿ ಹೇಳಿದ್ದಾರೆ. +ಮುಖ್ಯಮಂತ್ರಿಯವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ., ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಆರು ಪುಟಗಳ ಆದೇಶವನ್ನು ರಾಜ್ಯಪಾಲರು ಹೊರಡಿಸಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವುದಾಗಿ ಶುಕ್ರವಾರ ಸಹಿ ಮಾಡಿರುವ ಆದೇಶದಲ್ಲಿ ತಿಳಿಸಿದ್ದಾರೆ. +ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರುಗಳು, ಕಾನೂನು ತಜ್ಞರ ಅಭಿಪ್ರಾಯ ಮತ್ತು ಸಂಪುಟದ ನಿರ್ಣಯವನ್ನು ಪರಿಶೀಲಿಸಲಾಗಿದೆ. ಮುಖ್ಯಮಂತ್ರಿಯವರ ವಿರುದ್ಧದ ಆರೋಪಗಳ ವಿಚಾರದಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ದೂರಿನಲ್ಲಿರುವ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳೂ ಇವೆ, ಆದ್ದರಿಂದ ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಅಗತ್ಯವಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. +ಮುಖ್ಯಮಂತ್ರಿಯವರ ವಿರುದ್ಧದ ವಿಚಾರಣೆಗೆ ಅನುಮತಿ ನೀಡುವಂತೆ ಕೋರಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಜುಲೈ 26ರಂದು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ವಿವರಣೆ ಕೇಳಲಾಗಿತ್ತು. ಆ.1ರಂದು ಸಂಪುಟದ ನಿರ್ಣಯವು ತಮ ಕಚೇರಿಗೆ ತಲುಪಿತು. ಆ.3ರಂದು ಮುಖ್ಯಮಂತ್ರಿಯವರ ಪ್ರತಿಕ್ರಿಯೆ ತಲುಪಿತು. ಅದರೊಂದಿಗೆ ಕೆಲವು ದಾಖಲೆಗಳನ್ನೂ ಸಲ್ಲಿಸಲಾಗಿತ್ತು ಎಂದು ರಾಜ್ಯಪಾಲರು ತಿಳಿಸಿದ್ದಾರೆ. +ಮುಡಾದಲ್ಲಿನ ಅಕ್ರಮಗಳ ಕುರಿತು ಐಎಎಸ್ ಅಧಿಕಾರಿ ವೆಂಕಟಾಚಲಪತಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆ ಬಳಿಕ ಏಕಸದಸ್ಯ ಆಯೋಗವನ್ನು ನೇಮಿಸಲಾಗಿದೆ, ಯಾರ ವಿರುದ್ಧ ಆರೋಪಗಳು ಕೇಳಿಬಂದಿವೆಯೋ ಅದೇ ವ್ಯಕ್ತಿ ತನಿಖೆ ಹೇಗಿರಬೇಕು ಎಂಬುದನ್ನು ನಿರ್ಧರಿಸುವುದು ಕಾನೂನು ಸಮತವಲ್ಲ. ಆದ್ದರಿಂದ ಸಂಪುಟದ ನಿರ್ಧಾರವು ಕಾನೂನುಬಾಹಿರ ಎಂದು ಗೆಹ್ಲೋಟ್ ಹೇಳಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮುಖ್ಯ ಕಾರ್ಯದರ್ಶಿಯವರು ಆ.1ರಂದು ಸಂಪುಟ ಸಭೆ ಕರೆದಿದ್ದರು. ಅಲ್ಲಿ ತಾವು ನೀಡಿದ್ದ ಶೋಕಾಸ್ ನೋಟೀಸ್ ಅನ್ನು ಮಂಡಿಸಿ ಚರ್ಚಿಸಲಾಗಿದೆ. ವಿಚಾರಣೆಗೆ ಅನುಮತಿ ಕೋರಿರುವ ಅರ್ಜಿಗಳನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರ ಸಲಹೆಯಂತೆ ರಚನೆಯಾದ ಸಂಪುಟವು ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ದೂರುಗಳನ್ನು ತಿರಸ್ಕರಿಸುವಂತೆ ಸಲಹೆ ನೀಡುವ ನಿರ್ಣಯ ಕೈಗೊಂಡಿದೆ. ಈ ನಿರ್ಣಯವು ವಿಶ್ವಾಸಾರ್ಹವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. +ಮಧ್ಯಪ್ರದೇಶ ವಿಶೇಷ ಪೊಲೀಸ್ ಘಟಕ ಮತ್ತು ಮಧ್ಯಪ್ರದೇಶ ಸರ್ಕಾರದ ನಡುವಿನ ವ್ಯಾಜ್ಯದಲ್ಲಿ ಸುಪ್ರೀಂ ಕೋರ್ಟ್ 2004ರಲ್ಲಿ ನೀಡಿದ್ದ ತೀರ್ಪನ್ನು ತಮ ಆದೇಶದಲ್ಲಿ ಉಲ್ಲೇಖಿಸಿರುವ ರಾಜ್ಯಪಾಲರು, ಕೆಲವು ವಿಶೇಷ ಸಂದರ್ಭಗಳಲ್ಲಿ ಸಂಪುಟದ ಸಲಹೆಯನ್ನು ಸ್ವೀಕರಿಸುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟದ್ದು ಎಂದಿದ್ದಾರೆ. +ಇಂತಹ ಪ್ರಕರಣಗಳಲ್ಲಿ ದಾಖಲೆಗಳು ಲಭ್ಯವಿದ್ದಾಗಲೂ ರಾಜ್ಯಪಾಲರು ವಿವೇಚನಾ ಅಧಿಕಾರ ಬಳಸಲು ಅವಕಾಶ ನೀಡದೆ ಸರ್ಕಾರಕ್ಕೆ ಅನುಮತಿ ನಿರಾಕರಿಸುವ ಅಧಿಕಾರ ನೀಡಿದಲ್ಲಿ ಕಾನೂನಿನ ಆಡಳಿತವು ಕುಸಿದುಬೀಳುತ್ತದೆ. ಅಧಿಕಾರದಲ್ಲಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮೇಲ್ನೋಟಕ್ಕೆ ಸಾಕ್ಷ್ಯಗಳು ಲಭ್ಯವಿದ್ದಾಗಲೂ ತನಿಖೆಗೆ ಅನುಮತಿ ನಿರಾಕರಿಸಿದರೆ ಅದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ತಮ ವಿರುದ್ಧ ತನಿಖೆ ನಡೆಸಲು ಅವಕಾಶವೇ ಇಲ್ಲ ಎಂಬ ಭಾವನೆಯಿಂದ ಅಧಿಕಾರದಲ್ಲಿರುವ ವ್ಯಕ್ತಿಗಳು ಕಾನೂನು ಉಲ್ಲಂಸಲು ಪ್ರೀರಣೆ ದೊರೆಯುತ್ತದೆ ಎಂದು ಸುಪ್ರೀಂ ಕೋರ್ಟ್ 2004ರ ತೀರ್ಪಿನಲ್ಲಿ ಹೇಳಿದ್ದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_46_43_4.txt b/eesanje/url_46_43_4.txt new file mode 100644 index 0000000000000000000000000000000000000000..46a9882e78d5b224c2b8afdaf7c79c6512080987 --- /dev/null +++ b/eesanje/url_46_43_4.txt @@ -0,0 +1,7 @@ +ಬಿಜೆಪಿ ಪಾದಯಾತ್ರೆಗೆ ಇಂದು ಯಶಸ್ಸು ಸಿಕ್ಕಿದೆ : ಆರ್‌.ಅಶೋಕ್‌ +ಬೆಂಗಳೂರು, ಆ.17-ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭಾವ ಬಳಕೆಯಾಗಿದೆ. ಇಷ್ಟೆಲ್ಲ ಆಗಿರುವಾಗ ಇದು ದೊಡ್ಡ ಹಗರಣ ಎಂಬುದು ಸಾಬೀತಾಗಿದೆ ಎಂದರು. +ಕಾಂಗ್ರೆಸ್‌‍ ಈಗ ದ್ವೇಷದ ರಾಜಕಾರಣ ಮಾಡಿದರೆ ಅರ್ಥವಿಲ್ಲ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಸಿಬಿಐ ತನಿಖೆಯಾಗಬೇಕು ಹಾಗೂ ಎಲ್ಲ ನಿವೇಶನಗಳನ್ನು ವಾಪಸ್‌‍ ಪಡೆಯಬೇಕೆಂಬುದು ನಮ ಬೇಡಿಕೆ. ನಿವೇಶನ ವಂಚಿತರಾದ ಜನರಿಗೆ ನ್ಯಾಯ ಸಿಗಬೇಕೆಂದು ನಮ ಆಗ್ರಹ ಎಂದು ತಿಳಿಸಿದರು. +ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌‍ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ. ರಾಜ್ಯಪಾಲರು ಸರ್ಕಾರದ ಭಾಗ. ಅವರ ವಿರುದ್ಧ ಕಾಂಗ್ರೆಸ್‌‍ ಪ್ರತಿಭಟಿಸಿದರೆ ಅವರು ಸಂವಿಧಾನಕ್ಕೆ ತೋರುವ ಅಗೌರವ ಎಂದರು. +ಕಾಂಗ್ರೆಸ್‌‍ ಅಭಿವೃದ್ಧಿ ಮಾಡದೆ ಹೈಕಮಾಂಡ್‌ಗೆ ಎಟಿಎಂ ಆಗಿ ಕೆಲಸ ಮಾಡುತ್ತಿದೆ. ತುಂಗಭದ್ರಾ ಜಲಾಶಯದ ಗೇಟ್‌ ದುರಸ್ತಿ ಮಾಡಲು ಕೂಡ ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು. ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿಲ್ಲ. ಕಾಂಗ್ರೆಸ್‌‍ ಪಕ್ಷದ ಶಾಸಕರೇ ತಿರುಗಿಬಿದ್ದರೆ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಅವರು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_43_5.txt b/eesanje/url_46_43_5.txt new file mode 100644 index 0000000000000000000000000000000000000000..b9bab36345abd02e52552ecb1538995d7082cce6 --- /dev/null +++ b/eesanje/url_46_43_5.txt @@ -0,0 +1,5 @@ +ಸಿಎಂ ಮೇಲ್ಮನವಿ ಸಲ್ಲಿಸಿದರೆ ಕೇವಿಯಟ್‌ ಹಾಕಲು ಮುಂದಾದ ದೂರುದಾರರು +ಬೆಂಗಳೂರು,ಆ.17-ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿದರೆ, ಕೇವಿಯಟ್‌ ಹಾಕಲು ದೂರುದಾರರು ಮುಂದಾಗಿದ್ದಾರೆ. +ದೂರುದಾರ ಪ್ರದೀಪ್‌ ಅವರು ಈಗಾಗಲೇ ಹೈಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಸಲು ಸಜ್ಜಾಗಿದ್ದು, ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಮೇಲನವಿ ಸಲ್ಲಿಸಿದರೆ ತಮ ವಾದವನ್ನು ಪರಿಗಣಿಸದೇ ನಿರ್ಧಾರ ಮಾಡದಂತೆ ಮನವಿ ಮಾಡಲಿದ್ದಾರೆ. +ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿಗೆ ತಡೆಯಾಜ್ಞೆ ತರಲು ಮೇಲನವಿ ಸಲ್ಲಿಸಿದಾಗ ಅದಕ್ಕೆ ಪ್ರತಿಯಾಗಿ ದೂರುದಾರರು ತಮ ಮನವಿಯನ್ನು ಸಹ ಪರಿಗಣಿಸಿ ನಂತರವೇ ನ್ಯಾಯಾಲಯ ತೀರ್ಪು ನೀಡಬೇಕೆಂದು ಸಲ್ಲಿಸುವ ಮೇಲನವಿ ಅರ್ಜಿಯೇ ಕೇವಿಯಟ್‌ ಆಗಿದೆ. +ಇದೀಗ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಲು ಮುಂದಾಗಿದ್ದಾರೆ.ಈ ಬೆಳವಣಿಗೆಗಳ ನಡುವೆಯೇ ದೂರುದಾರ ಪ್ರದೀಪ್‌ ಕೂಡ ಕೇವಿಯಟ್‌ ಮೂಲಕ ಕಾನೂನು ಹೋರಾಟ ನಡೆಸಲು ಸಜ್ಜಾಗಿದ್ದಾರೆ. \ No newline at end of file diff --git a/eesanje/url_46_43_6.txt b/eesanje/url_46_43_6.txt new file mode 100644 index 0000000000000000000000000000000000000000..947bef6eb5f89adfbf79be43cd94493ec7975574 --- /dev/null +++ b/eesanje/url_46_43_6.txt @@ -0,0 +1,5 @@ +ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜಕೀಯ ಸಂಚಲನ, ಕಾಂಗ್ರೆಸ್‌‍ನಲ್ಲಿ ತಳಮಳ +ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆ ಭಾರೀ ಸಂಚಲನ ಸೃಷ್ಟಿಯಾಗಿದ್ದು, ರಾಜಕೀಯವಾಗಿ ಕಾಂಗ್ರೆಸ್‌‍ನಲ್ಲಿ ತಳಮಳ ಕಂಡುಬಂದಿದೆ. ಇಂದು ಬೆಳಗ್ಗೆ ಪ್ರಾಸಿಕ್ಯೂಷನ್‌ನ ಅನುಮತಿ ನೀಡಿರುವ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಸಂಪುಟದ ಎಲ್ಲ ಸಚಿವರು ತಮ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. +ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೇಂದ್ರಸ ರ್ಕಾರ ಅದರಲ್ಲೂ ಬಿಜೆಪಿ ನಾಯಕರು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸಚಿವ ಸಂಪುಟ ಸಭೆಯ ಸಲಹೆ ಮೇರೆಗೆ ನಡೆದುಕೊಳ್ಳಬೇಕಿದ್ದ ರಾಜ್ಯಪಾಲರು ಸಂಪುಟದ ಸಲಹೆಯನ್ನು ಧಿಕ್ಕರಿಸಿ ಅನುಮತಿ ನೀಡಿದ್ದಾರೆ ಎಂಬ ಆಕ್ರೋಶಗಳು ಕೇಳಿಬಂದಿವೆ. ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕೆಂದು ಪ್ರತಿಪಾದಿಸಲಾಗುತ್ತಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಬೆಂಬಲ ವ್ಯಕ್ತಪಡಿಸಿರುವ ಸಂಪುಟದ ಎಲ್ಲಾ ಸಚಿವರು ಹಾಗೂ ಕಾಂಗ್ರೆಸ್‌‍ ನಾಯಕರು, ಬಿಜೆಪಿ ವಿರುದ್ಧ ಕೆಂಡ ಕಾರಲಾರಂಭಿಸಿದ್ದಾರೆ.ಸದ್ಯದ ಪರಿಸ್ಥಿತಿ ನೋಡಿದರೆ ಒಂದು ವೇಳೆ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾದರೂ ನಾಯಕತ್ವ ಬದಲಾವಣೆಯ ಚರ್ಚೆಗಳು ಅಪ್ರಸ್ತುತ ಎನ್ನುವ ಪರಿಸ್ಥಿತಿ ಇದೆ. +ಇಡೀ ಕಾಂಗ್ರೆಸ್‌‍ ಪಕ್ಷವೇ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಂತಿದ್ದು, ಬಿಜೆಪಿ ವಿರುದ್ಧ ರಾಜಕೀಯ ಪ್ರತಿ ಸಮರ ಆರಂಭಿಸುವ ಲಕ್ಷಣಗಳು ಕಂಡುಬರುತ್ತಿವೆ.ಆದರೂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ತನಿಖೆ ಆರಂಭವಾದರೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯ ಪ್ರಶ್ನೆಗಳು ಎದುರಾಗಲಿವೆ. ಹೀಗಾಗಿ ಸಿದ್ದರಾಮಯ್ಯ ಪಾಳೆಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಕಾಂಗ್ರೆಸ್‌‍ನಲ್ಲಿ ಕೆಲವರಿಗೆ ಒಳಗೊಳಗೆ ಖುಷಿಯಾದರೆ, ಇನ್ನು ಕೆಲವರಿಗೆ ರಾಜಕೀಯವಾಗಿ ಬಿಜೆಪಿ ಮುನ್ನಡೆ ಸಾಧಿಸುತ್ತದೆ ಎಂಬ ದುಗುಡ ಕಂಡುಬರುತ್ತಿದೆ. \ No newline at end of file diff --git a/eesanje/url_46_43_7.txt b/eesanje/url_46_43_7.txt new file mode 100644 index 0000000000000000000000000000000000000000..18772a210b2d1354bfd538ded8b5ddb878fb0ff2 --- /dev/null +++ b/eesanje/url_46_43_7.txt @@ -0,0 +1,5 @@ +ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಯತ್ನ : ಪ್ರಿಯಾಂಕ್‌ ಖರ್ಗೆ ಆರೋಪ +ಬೆಂಗಳೂರು,ಆ.17-ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ ನಡೆಸುತ್ತಿದ್ದು, ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಟೀಕಿಸಿದ್ದಾರೆ. +ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. \ No newline at end of file diff --git a/eesanje/url_46_43_8.txt b/eesanje/url_46_43_8.txt new file mode 100644 index 0000000000000000000000000000000000000000..61af93559fe9b9a79b07fcba6fa7563f2e55eddb --- /dev/null +++ b/eesanje/url_46_43_8.txt @@ -0,0 +1,5 @@ +ಸಿದ್ದರಾಮಯ್ಯ ಅಭಿಯೋಜನೆ : ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ಎಂದ ಟಿ.ಜೆ.ಅಬ್ರಹಾಂ +ಬೆಂಗಳೂರು,ಆ.17-ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದರಿಂದ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ದೂರುದಾರ ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅನುಮತಿ ನೀಡಿರುವುದನ್ನು ಮುಖ್ಯಮಂತ್ರಿಯವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದಾರೆ. ಅನುಮತಿ ಏಕೆ ಕೊಡಬಾರದು ಎಂದು ನಾನು ವಾದಿಸಲಿದ್ದೇನೆ. ಹೀಗಾಗಿ ಮುಂದಿನ ಯುದ್ಧ ಹೈಕೋರ್ಟ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು. +ನಾನು ಈಗಾಗಲೇ ಜನಪ್ರತಿನಿಧಿಗಳ ನ್ಯಾಯಾಲಯ ಸಂಖ್ಯೆ 82ರಲ್ಲಿ ಪ್ರಕರಣ ದಾಖಲಿಸಿದ್ದೇನೆ. ಅದರ ವಿಚಾರಣೆ ಈ ತಿಂಗಳ 21ರಂದು ನಡೆಯಲಿದ್ದು, ರಾಜ್ಯಪಾಲರು ಅನುಮತಿ ನೀಡಿರುವುದನ್ನು ನಾನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದೇನೆ ಎಂದು ಹೇಳಿದರು. +ಪ್ರಕರಣದ ತನಿಖೆಯಾಗಬೇಕು ಎಂದು ನ್ಯಾಯಾಲಯದ ಮುಂದೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನ್ಯಾಯಾಲಯ ಯಾವ ನಿರ್ದೇಶನ ನೀಡಲಿದೆ ಎಂದು ಕಾದುನೋಡಬೇಕಿದೆ. ಈ ಹಿಂದೆ ಯಡಿಯೂರಪ್ಪ ಪ್ರಕರಣದಲ್ಲಿ ಲೋಕಾಯುಕ್ತ ಮುಂದೆ ದೂರು ದಾಖಲಿಸಿದ ರೀತಿ ಬೇರೆ ಇತ್ತು. ಅದು ವಿಚಾರಣೆಯಾಗಬೇಕು ಎಂಬ ಕಾರಣಕ್ಕೆ ಸಲ್ಲಿಸಿದ್ದ ಅರ್ಜಿ. +ಈಗ ನಾನು ತನಿಖೆಗೆ ಮನವಿ ಮಾಡಿದ್ದೇನೆ. ಅದು ನ್ಯಾಯಾಲಯದ ಮುಂದಿದೆ. ರಾಜ್ಯಪಾಲರು ಅನುಮತಿ ನೀಡಿರುವುದರಿಂದ ನ್ಯಾಯಾಲಯದ ನಿರ್ದೇಶನಗಳು ಮಹತ್ವ ಪಡೆದುಕೊಳ್ಳುತ್ತವೆ ಎಂದರು. \ No newline at end of file diff --git a/eesanje/url_46_43_9.txt b/eesanje/url_46_43_9.txt new file mode 100644 index 0000000000000000000000000000000000000000..30b68b81e5a1182baaaadc371415d76d6c9d2088 --- /dev/null +++ b/eesanje/url_46_43_9.txt @@ -0,0 +1,7 @@ +ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..? +ಬೆಂಗಳೂರು,ಆ.17– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಏಕೆಂದರೆ ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ರವರು ಅಂದಿನ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. +ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.ಈ ಹಿಂದೆ 2011 ರಲ್ಲಿ ನಡೆದಿದ್ದ ಘಟನೆಯನ್ನು ಅವಲೋಕಿಸುವುದಾದರೆ, ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು. +ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್‌ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011 ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. +ಇದಾದ ಮೇಲೆ ಇಕ್ಕಟ್ಟಿಗೆ ಸಿಲುಕಿದ ಬಿಎಸ್‌‍ವೈ ತಮ ಹ್ದುೆಗೆ ರಾಜೀನಾಮೆ ನೀಡಬೇಕಾಯಿತು. ಯಾಕೆಂದರೆ ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದ ನಂತರ ವಕೀಲ ಸಿರಾಜಿನ್‌ ಬಾಷಾ ಯಡಿಯೂರಪ್ಪ ವಿರುದ್ಧ 5 ಖಾಸಗಿ ದೂರುಗಳನ್ನು ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಕೋರ್ಟ್‌ ಯಡಿಯೂರಪ್ಪಗೆ ಸಮನ್‌್ಸ ಜಾರಿಗೊಳಿಸಿತ್ತು. +ಕೋರ್ಟ್‌ಗೆ ಹಾಜರಾಗಿ ಬಿಎಸ್‌‍ವೈ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿ ತಿರಸ್ಕರಿಸಿದ ಲೋಕಾಯುಕ್ತ ವಿಶೇಷ ಕೋರ್ಟ್‌ ಯಡಿಯೂರಪ್ಪರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಇದಾದ ಬಳಿಕ ಮುಂದೆ ನಡೆದ್ದೆಿಲ್ಲ ಒಂದು ಇತಿಹಾಸ. ಇದೀಗ ಮತ್ತದೇ ಇತಿಹಾಸ ಮರುಕಳಿಸುತ್ತದೆಯಾ ಎಂಬ ಪ್ರಶ್ನೆ ಮೂಡಿದೆ. +ಕಳೆದ ಜುಲೈ 26 ರಂದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸುದೀರ್ಘವಾದ ದೂರೊಂದನ್ನು ಹಿಡಿದು ರಾಜ್ಯಪಾಲರ ಬಾಗಿಲು ತಟ್ಟಿದ್ದರು. ಸಿಎಂ ಸಿದ್ದರಾಮಯ್ಯ ವಿರುದ್ಧದ ಟಿ.ಜೆ.ಅಬ್ರಹಾಂರ ದೂರನ್ನು ಮುಂದಿಟ್ಟುಕೊಂಡು ರಾಜ್ಯಪಾಲರು ಸುದೀರ್ಘ ಒಂದೂವರೆ ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದರು. \ No newline at end of file diff --git a/eesanje/url_46_44_1.txt b/eesanje/url_46_44_1.txt new file mode 100644 index 0000000000000000000000000000000000000000..eefa68e2900168f1d1d1f1af86a345f8f408c9ad --- /dev/null +++ b/eesanje/url_46_44_1.txt @@ -0,0 +1,7 @@ +ಟಿಬಿ ಡ್ಯಾಂ 19ನೇ ಕ್ರಸ್ಟ್‌ಗೇಟ್‌ ದುರಸ್ತಿ ಕಾರ್ಯ ಮುಂದುವರಿಕೆ +ಕೊಪ್ಪಳ,ಆ.16-ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ದುರಸ್ತಿ ಕಾರ್ಯ ಎರಡನೇ ದಿನ ಮುಂದುವರೆದಿದೆ.ನಿನ್ನೆ ಜಿಂದಾಲ್‌ನಿಂದ ತರಲಾಗಿದ್ದ 65 ಟನ್‌ ತೂಕದ ಸ್ಟಾಪ್‌ಲಾಗ್‌ ಗೇಟನ್ನು ಅಳವಡಿಸುವ ಮೊದಲ ದಿನದ ಕಾರ್ಯಾಚರಣೆ ನಿನ್ನೆ ರಾತ್ರಿ ಸ್ಥಗಿತಗೊಂಡಿತ್ತು. ಜಿಂದಾಲ್‌ ಸಂಸ್ಥೆ ರೂಪಿಸಿದ್ದ ಗೇಟ್‌ನ ಅಳತೆ ದೊಡ್ಡದಾಗಿತ್ತು. ಅದನ್ನು ಕೆಳಗಿಳಿಸಿದಾಗ ಸರಿಯಾಗಿ ಜೋಡಣೆಯಾಗದ ಹಿನ್ನೆಲೆಯಲ್ಲಿ ಮತ್ತೆ ಮೇಲಕ್ಕೆ ಎತ್ತಿ ದೊಡ್ಡದಾಗಿದ್ದ ಗೇಟನ್ನು ಕತ್ತರಿಸಿ ನಿಗದಿತ ಅಳತೆಗೆ ಸರಿಪಡಿಸಿ ವೆಲ್ಡಿಂಗ್‌ ಮಾಡಲಾಗಿದೆ. +ಇಂದು ಬೆಳಿಗ್ಗೆ 6 ಗಂಟೆಯಿಂದ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಗೇಟ್‌ ಅಳವಡಿಕೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಯಾಚರಣೆಗೆ ಅಡ್ಡಲಾಗಿರುವ ಅಣೆಕಟ್ಟಿನ ಮೇಲಿನ ಕಬ್ಬಿಣದ ಕಂಬಿಗಳನ್ನು ಕತ್ತರಿಸಲಾಗಿದೆ. ಜಲಾಶಯದಲ್ಲಿನ ನೀರಿನ ರಭಸ ತೀವ್ರವಾಗಿದ್ದು, ಅದರ ನಡುವೆಯೂ ಗೇಟ್‌ ಅಳವಡಿಸಲು ಪ್ರಯತ್ನಿಸಲಾಗುತ್ತಿದೆ. +ಜಲಾಶಯದ ತಡೆಗೋಡೆ ಧಾರಣ ಸಾಮರ್ಥ್ಯ ಆಧರಿಸಿ ಎರಡು ಕ್ರೇನ್‌ಗಳನ್ನು ತಂದು ನಿಲ್ಲಿಸಲಾಗಿದೆ. ಈಗಾಗಲೇ ಹೆಚ್ಚೂ ಕಡಿಮೆ 35 ಟಿಎಂಸಿ ನೀರು ಖಾಲಿಯಾಗಿದೆ. 72 ಟಿಎಂಸಿ ಯಷ್ಟು ನೀರು ಬಾಕಿ ಉಳಿದಿದೆ. ಇರುವ ನೀರನ್ನು ಉಳಿಸಿಕೊಳ್ಳಲು ಐದು ಹಂತದಲ್ಲಿ ಸ್ಟಾಪ್‌ಗೇಟ್‌ಗಳನ್ನು ಅಳವಡಿಸಲು ಪ್ರಯತ್ನಿಸಲಾಗುತ್ತಿದೆ. +ಜಿಂದಾಲ್‌ ಸಂಸ್ಥೆ ನಿರ್ಮಿಸಿದ್ದ ಗೇಟನ್ನು ನಿಗದಿತ ಅಳತೆಗೆ ಸರಿಪಡಿಸಿಕೊಂಡು ಕೆಳಗಿಳಿಸುವ ಕೆಲಸ ನಡೆದಿದೆ. ಉಳಿದಂತೆ ಕೊಪ್ಪಳದ ಹೊಸಹಳ್ಳಿಯ ಹಿಂದೂಸ್ಥಾನ್‌ ಎಂಜಿನಿಯರಿಂಗ್‌್ಸ ಮತ್ತು ಹೊಸಪೇಟೆಯ ನಾರಾಯಣ ಎಂಜಿನಿಯರ್‌ರ‍ಸ ಸಂಸ್ಥೆಯಿಂದ ಸೇರಿ ಒಟ್ಟು 3 ಗೇಟುಗಳನ್ನು ತರಿಸಲಾಗುತ್ತಿದ್ದು, 19ನೇ ಕ್ರಸ್ಟ್‌ಗೇಟ್‌ಗೆ ಜೋಡಿಸುವ ಪ್ರಯತ್ನ ನಡೆಯುತ್ತಿದೆ. ಜಲಾಶಯ ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು, ಒಂದು ವೇಳೆ ಅನಾಹುತ ಸಂಭವಿಸಿದರೆ ರಕ್ಷಣಾ ಕಾರ್ಯ ಕೈಗೊಳ್ಳಲು ಎಸ್‌‍ಡಿಆರ್‌ಎಫ್‌ ತಂಡ ಕೂಡ ಸಿದ್ಧವಾಗಿದೆ. +ಎರಡು ದಿನಗಳೊಳಗಾಗಿ ಗೇಟ್‌ ಅಳವಡಿಸಿ ಸುಮಾರು 70 ಟಿಎಂಸಿ ನೀರನ್ನು ಉಳಿಸುವ ಗುರಿ ರಾಜ್ಯಸರ್ಕಾರದ್ದಾಗಿತ್ತು. ಆದರೆ ಕೊಚ್ಚಿಹೋಗಿರುವ ಗೇಟಿನಲ್ಲಿ ನಿರಂತರವಾಗಿ ನೀರು ಹರಿದು ಹೋಗುತ್ತಿರುವುದರಿಂದಾಗಿ ಈಗಾಗಲೇ 35 ಟಿಎಂಸಿ ನೀರು ಖಾಲಿಯಾಗಿದೆ. ಮತ್ತೆ ಮಳೆ ಬರುವ ನಿರೀಕ್ಷೆಯಿದ್ದು, ಆ ವೇಳೆಗೆ ಅಣೆಕಟ್ಟು ತುಂಬಿಕೊಳ್ಳಲಿದೆ. ಭರ್ತಿಯಾಗುವ ನೀರನ್ನು ಉಳಿಸಿಕೊಳ್ಳಲು ಗೇಟ್‌ ಅಳವಡಿಸಲು ಶ್ರಮಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ. +ಈ ನಡುವೆ ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ಕಾರ್ಯಾಚರಣೆ ಯಶಸ್ವಿಯಾದ ಬಳಿಕ ಭಾಗವಹಿಸಿದ್ದ ಎಲ್ಲಾ ಸಿಬ್ಬಂದಿಗೂ ತಲಾ 50 ಸಾವಿರ ರೂ. ಉಡುಗೊರೆ ನೀಡುವುದಾಗಿ ಘೋಷಿಸಿದ್ದಾರೆ. \ No newline at end of file diff --git a/eesanje/url_46_44_10.txt b/eesanje/url_46_44_10.txt new file mode 100644 index 0000000000000000000000000000000000000000..0740cc8888d306667d019a0932cb8c817d169c1c --- /dev/null +++ b/eesanje/url_46_44_10.txt @@ -0,0 +1,8 @@ +ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗುತ್ತೆ ಎಂದವರಿಗೆ ಆರ್ಥಿಕ ಬೆಳವಣಿ ಸಾಧಿಸಿ ಉತ್ತರ ನೀಡುತ್ತೇವೆ : ಸಿಎಂ +ಬೆಂಗಳೂರು,ಆ.15-ಪಂಚಖಾತ್ರಿ ಯೋಜನೆಗಳು ಅಬಾಧಿತವಾಗಿ ಮುಂದುವರೆಯಲಿವೆ. ಅವುಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ಉತ್ತರ ನೀಡಲಿದ್ದೇವೆ ಎಂದು ಸವಾಲು ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಫಲಾನುಭವಿಗಳನ್ನು ಸಂಘಟಿಸಿ ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸುವುದಾಗಿ ಘೋಷಿಸಿದ್ದಾರೆ. +78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಫೀಲ್ಡ್ ಮಾರ್ಷಲ್‌ ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಂಚಖಾತ್ರಿ ಯೋಜನೆಗಳಷ್ಟೇ ಅಲ್ಲದೆ ಕಲ್ಯಾಣ ಯೋಜನೆಗಳಿಗೆ 13 ಸಾವಿರ ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. +ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಪಡೆಯುತ್ತಿರುವ ಫಲಾನುಭವಿಗಳನ್ನು ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳನ್ನು ಸಂಘಟಿಸುವ ಮೂಲಕ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಿ ವರಮಾನ ತರುವ ಚಟುವಟಿಕೆಗಳಲ್ಲಿ ತೊಡಗಿಸಲಾಗುವುದು. ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದಾಗಿಹೇಳಿದ್ದಾರೆ. +ಶಕ್ತಿ ಯೋಜನೆಯಡಿ 270 ಕೋಟಿ ಉಚಿತ ಪ್ರಯಾಣ ಸೌಲಭ್ಯ ಪಡೆಯುವ ಮೂಲಕ ಮಹಿಳೆಯರು 6,541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚವನ್ನು ಉಳಿತಾಯ ಮಾಡಿದ್ದಾರೆ. 120 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 25,259 ಕೋಟಿ ರೂ.ಗಳನ್ನು ಅವರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ. +ಅನ್ನಭಾಗ್ಯ ಯೋಜನೆಯಡಿ 4.08 ಕೋಟಿ ಫಲಾನುಭವಿಗಳ 1.16 ಕೋಟಿ ಪಡಿತರ ಚೀಟಿಗಳಿಗೆ 7,763 ಕೋಟಿ ರೂ. ನಗದನ್ನು ಪಾವತಿಸಲಾಗಿದೆ. ಗೃಹಜ್ಯೋತಿಯಡಿ 8,844 ಕೋಟಿ ರೂ.ಗಳನ್ನು, ಯುವನಿಧಿ ಯೋಜನೆಯಡಿ 91 ಕೋಟಿ ರೂ.ಗಳನ್ನು ಭರಿಸಲಾಗಿದೆ ಎಂದು ವಿವರಿಸಿದರು. +ಸಾಮಾಜಿಕ ಭದ್ರತೆ ಯೋಜನೆಯಡಿ 13,027 ಕೋಟಿ ರೂ.ಗಳನ್ನು ವಿವಿಧ ಮಾಸಾಶನ ರೂಪದಲ್ಲಿ ನೀಡಲಾಗುತ್ತಿದೆ. ಹಾಲು ಉತ್ಪಾದಕರಿಗೆ 1822 ಕೋಟಿ ರೂ.ಗಳನ್ನು ಪ್ರೋತ್ಸಾಹ ಧನ, ಬೆಳೆಸಾಲ, ಸ್ವಸಹಾಯ ಸಂಘಗಳ ಸಾಲಗಳಿಗೆ 1642 ಕೋಟಿ ರೂ. ಬಡ್ಡಿ ಸಹಾಯ ಧನ, ಕೃಷಿ ಪಂಪ್‌ಸೆಟ್‌ಗಳಿಗೆ 20 ಸಾವಿರ ಕೋಟಿಗಳಷ್ಟು ಉಚಿತ ವಿದ್ಯುತ್‌ ಒದಗಿಸಲಾಗಿದೆ. +ಕೊಬ್ಬರಿಗೆ ಪ್ರೋತ್ಸಾಹ ಧನ, ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಮೋಟಾರು ಮತ್ತು ಇತರ ಸಂಬಂಧಿತ ಕಾರ್ಮಿಕರಿಗೆ ಚಲನಚಿತ್ರ ಕ್ಷೇತ್ರ, ಗಿಗ್‌ ಕಾರ್ಮಿಕರ ವಿಮಾ ಸೌಲಭ್ಯಗಳು, ಪತ್ರಿಕಾ ವಿತರಕರಿಗೆ ಅಪಘಾತ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಹೇಳಿದರು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ರೂಪಿಸಲಾದ ಯೋಜನೆಗಳ ಬಗ್ಗೆ ವಿವರಣೆ ನೀಡಿದ್ದಾರೆ. \ No newline at end of file diff --git a/eesanje/url_46_44_11.txt b/eesanje/url_46_44_11.txt new file mode 100644 index 0000000000000000000000000000000000000000..8e798ea5692d638b6c1b7129b94c67b47b2e36bf --- /dev/null +++ b/eesanje/url_46_44_11.txt @@ -0,0 +1,10 @@ +ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಡಿಕೆಶಿ ಆಕ್ರೋಶ +ಬೆಂಗಳೂರು,ಆ.15-ಭಾರತದ 78ನೇ ಸ್ವತಂತ್ರ್ಯ ದಿನಾಚರಣೆ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಪಕ್ಷದ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. +ನಂತರ ಮಾತನಾಡಿದ ಡಿ.ಕೆ.ಶಿವಕುಮಾರ್‌, ದೇಶದ ಸ್ವತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಕಾಂಗ್ರೆಸ್‌‍ ಪಕ್ಷವನ್ನು ಅನೇಕ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ಪ್ರಶ್ನಿಸುತ್ತಿವೆ. ಅಂದು ಬ್ರಿಟಿಷರ ಪರವಾಗಿ ನಿಂತು ಭಾರತೀಯರ ವಿರುದ್ಧ ಷಡ್ಯಂತ್ರ ರೂಪಿಸಿದವರನ್ನು ಇಂದು ಧಿಕ್ಕರಿಸಬೇಕಿದೆ. +ಶ್ಯಾಂಪ್ರಸಾದ್‌ ಮುಖರ್ಜಿ ಅವರ ಕ್ವಿಟ್‌ ಇಂಡಿಯಾ ಚಳವಳಿಯನ್ನು ಹತ್ತಿಕ್ಕುವಂತೆ ಬ್ರಿಟಿಷರಿಗೆ ಪತ್ರ ಬರೆದವರನ್ನೂ ಸ್ಮರಿಸಬೇಕಿದೆ. ಇಂತಹ ದೇಶದ್ರೋಹಿಗಳನ್ನು ಪೂಜಿಸುವವರು ಅಧಿಕಾರ ನಡೆಸುತ್ತಾ ನಮಗೆ ದೇಶಭಕ್ತಿಯ ಪಾಠ ಮಾಡುತ್ತಿರುವುದು ದೊಡ್ಡ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಿಂದೆ ಭಾರತ ಹೇಗಿತ್ತು, ಈಗ ಹೇಗಿದೆ ಎಂದು ಆತಾವಲೋಕನ ಮಾಡಿಕೊಳ್ಳಬೇಕಿದೆ. ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದರೆ ಸಾಲದು. ಇತಿಹಾಸವನ್ನು ತಿಳಿದು ಸ್ವಾತಂತ್ರ್ಯ ತಂದುಕೊಟ್ಟ ಎಲ್ಲಾ ಹಿರಿಯರ ಕೊಡುಗೆಗಳನ್ನು ಸರಿಸಬೇಕಿದೆ. ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಜೀವನದ ಉಸಿರು ಎಂದು ಮಹಾತ್ಮ ಗಾಂಧೀಜಿ ಹೇಳಿಕೆಯನ್ನು ಉಲ್ಲೇಖಿಸಿದ ಡಿ.ಕೆ.ಶಿವಕುಮಾರ್‌, ಕಾಂಗ್ರೆಸ್‌‍ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯಕ್ಕೆ ಹೋರಾಡಿ, ಪ್ರಜಾಪ್ರಭುತ್ವವನ್ನು ರಕ್ಷಿಸಿದ ಪಕ್ಷದ ಸದಸ್ಯರಾಗಿರುವುದೇ ನಮ ಭಾಗ್ಯ ಎಂದರು. +ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಮಹನೀಯರನ್ನು ಸರಿಸಿದ ಡಿ.ಕೆ.ಶಿವಕುಮಾರ್‌, ಸುಮಾರು 6.50 ಲಕ್ಷ ಜನ ಕಾಂಗ್ರೆಸಿಗರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ್ದಾರೆ. ಪ್ರತಿ ಹಂತದಲ್ಲೂ ನಾವು ಅವರನ್ನು ನೆನಪಿಸಿಕೊಳ್ಳಬೇಕು. ನಕಲಿ ದೇಶಭಕ್ತರು ಅಂದು ದೇಶ ಮಾರಾಟ ಮಾಡಲು ಯತ್ನಿಸಿದರೂ ಕಾಂಗ್ರೆಸಿಗರು ಅದಕ್ಕೆ ಅವಕಾಶ ನೀಡಲಿಲ್ಲ ಎಂದು ವಾಗ್ದಾಳಿ ನಡೆಸಿದರು. +ದೇಶಕ್ಕೆ ದೊಡ್ಡ ಇತಿಹಾಸವಿದೆ. ಐಕ್ಯತೆ ಮತ್ತು ಶಾಂತಿಗೆ ಒಟ್ಟಾಗಿ ಶ್ರಮಿಸಿದ್ದೇವೆ. ಅನೇಕ ಸಮಸ್ಯೆಗಳು ಬಂದಾಗ ದೇಶ ರಕ್ಷಣೆಗಾಗಿ ಸ್ವಾತಂತ್ರ್ಯ ರಕ್ಷಣೆಯ ಹೋರಾಟಗಳನ್ನು ಮೆಲುಕು ಹಾಕಿಕೊಂಡು ಯುವ ಪೀಳಿಗೆಯನ್ನು ಪ್ರೇರೇಪಿಸುತ್ತೇವೆ. ಸ್ವತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನ, ಕೊಡುಗೆಗಳನ್ನು ಮುಂದಿನ ಸಮುದಾಯಕ್ಕೆ ತಿಳಿಸಬೇಕಿದೆ ಎಂದರು. +ಸ್ವಾತಂತ್ರ್ಯ ಎಂದರೆ ಸಮಾಜದ ಎಲ್ಲಾ ವರ್ಗಗಳಿಗೂ ಹಸಿವು, ಬಡತನ, ಕತ್ತಲೆ, ಸಂಕೋಲೆ, ನಿರುದ್ಯೋಗದಿಂದ ಸ್ವತಂತ್ರ್ಯ ಸಿಕ್ಕಾಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆತಂತಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷವಾಕ್ಯ ನೀಡಿದ್ದಾರೆ. ರಾಜ್ಯಸರ್ಕಾರದ 5 ಗ್ಯಾರಂಟಿಗಳು ಇಂತಹ ಗಂಭೀರ ಸಮಸ್ಯೆಗಳ ನಿವಾರಣೆಗೆ ಸಹಾಯಕವಾಗಲಿವೆ ಎಂದು ಹೇಳಿದರು. +ಇಡೀ ದೇಶವೇ ಕರ್ನಾಟಕ ಕಾಂಗ್ರೆಸ್‌‍ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಗಮನಿಸುತ್ತಿದೆ. ಹಸಿವು ಮುಕ್ತ ಸಮಾಜ ನಿರ್ಮಾಣ ನಮ ಸರ್ಕಾರದ ಗುರಿ. ಕಾಂಗ್ರೆಸ್‌‍ ಸರ್ಕಾರ ಎಲ್ಲಾ ವರ್ಗದ ಜನರಿಗೂ ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಿದೆ. ಜವಹರಲಾಲ್‌ ನೆಹರೂ, ಇಂದಿರಾಗಾಂಧಿ, ಮನಮೋಹನ್‌ಸಿಂಗ್‌ ಸೇರಿದಂತೆ ಕಾಂಗ್ರೆಸ್‌‍ನ ಎಲ್ಲರ ಕಾಲಾವಧಿಯಲ್ಲೂ ಸಮಷ್ಟಿ ವರ್ಗದ ಹಿತದೃಷ್ಟಿಯನ್ನು ಗುರಿಯಾಗಿಸಿಕೊಂಡೇ ಯೋಜನೆಗಳನ್ನು ರೂಪಿಸಿದ್ದೇವೆ. ಬಡವರಿಗೆ ಭೂಮಿ, ಕಲಿಕೆ, ಪಂಚಾಯಿತಿಗಳ ಅಭಿವೃದ್ಧಿ, ನಿರುದ್ಯೋಗ ನಿವಾರಣೆ, ಮನ್ರೇಗಾ, ಬಿಸಿಯೂಟ, ಆಹಾರ ಭದ್ರತೆ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರೂ ಅದು ಎಲ್ಲಾ ವರ್ಗಗಳಿಗೂ ಅನುಕೂಲವಾಗಿತ್ತು. ಇಂತಹ ಕಾರ್ಯಕ್ರಮಗಳನ್ನು ಉಳಿಸಲು, ಮುಂದುವರೆಸಲು ಕಾಂಗ್ರೆಸ್‌‍ ಪಕ್ಷದಿಂದ ಮಾತ್ರ ಸಾಧ್ಯ ಎಂದರು. +ಯಾವುದೇ ಕಾರಣಕ್ಕೂ ಪಂಚಖಾತ್ರಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ದೇಶಕ್ಕೆ ಇಲ್ಲಿಂದಲೇ ಮಾದರಿಯ ಸಂದೇಶ ನೀಡಲಾಗುವುದು. ಮಹಾತಗಾಂಧೀಜಿಯವರು ಕಾಂಗ್ರೆಸ್‌‍ ಪಕ್ಷದ ಅಧ್ಯಕ್ಷರಾಗಿ 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಇಡೀ ವರ್ಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಎಲ್ಲರೂ ಅದರಲ್ಲಿ ಭಾಗವಹಿಸಬೇಕು ಎಂದು ಕರೆನೀಡಿದರು. \ No newline at end of file diff --git a/eesanje/url_46_44_12.txt b/eesanje/url_46_44_12.txt new file mode 100644 index 0000000000000000000000000000000000000000..07abf6799912ec57ab00a7bc89e8490f7eb838dd --- /dev/null +++ b/eesanje/url_46_44_12.txt @@ -0,0 +1,7 @@ +ಸದ್ಯಕ್ಕೆ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ : ಪರಮೇಶ್ವರ್‌ +ಬೆಂಗಳೂರು,ಆ.14-ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಅಲ್ಲಲ್ಲಿ ಶಾಸಕರು, ಸಚಿವರು ಸೇರಿದಾಗ ಅನೌಪಚಾರಿಕವಾಗಿ ಸಮಾಲೋಚನೆಗಳಾಗಿವೆ. ಆದರೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ, ಸದ್ಯಕ್ಕೆ ಈ ವರ್ಷ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಪ್ರಸ್ತಾಪ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. +ಸದಾಶಿವನಗರದ ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು. +ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು. +ಮೂಡಾ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನೂ ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ. ಸಿಎಂ ಅವರಿಗೆ ನೀಡಿರುವ ಷೋಕಾಸ್‌‍ ನೋಟಿಸ್‌‍ ವಾಪಸ್‌‍ ಪಡೆಯುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು. +ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್‌ ಹಂತದಲ್ಲಿ ಚರ್ಚೆಯಾಗಬೇಕು ಎಂದರು. +ಭೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರಾವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ. ಎಲ್ಲವನ್ನೂ ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಹೇಳಿದರು. \ No newline at end of file diff --git a/eesanje/url_46_44_2.txt b/eesanje/url_46_44_2.txt new file mode 100644 index 0000000000000000000000000000000000000000..d167d1d4aa50becf3d6d2241a61b7c6ea24a6abc --- /dev/null +++ b/eesanje/url_46_44_2.txt @@ -0,0 +1,13 @@ +3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ದೋಸ್ತಿಗಳ ತಯಾರಿ +ಬೆಂಗಳೂರು,ಆ.16-ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಗೊಂದಲದ ನಡುವೆಯೂ ಬಿಜೆಪಿ-ಜೆಡಿಎಸ್ ಎನ್ಡಿಎ ಮೈತ್ರಿಕೂಟ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.ಲೋಕಸಭಾ ಚುನಾವಣೆಯಲ್ಲೂ ಎರಡು ಪಕ್ಷಗಳ ಮುಖಂಡರ ನಡುವೆ ಸುಮಧುರ ಬಾಂಧವ್ಯವೇನೂ ಇರಲಿಲ್ಲ. ಹಲವು ಗೊಂದಲಗಳ ನಡುವೆಯೂ 28 ಲೋಕಸಭಾ ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳನ್ನು ಗೆದ್ದು ಬೀಗಿತ್ತು. +ಅಂದರೆ ರಾಜ್ಯದ ಜನತೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಒಪ್ಪಿಕೊಂಡಿರುವುದಕ್ಕೆ ಈ ಫಲಿತಾಂಶವೇ ಸಾಕ್ಷಿ ಎಂಬುದು ಉಭಯ ಪಕ್ಷಗಳ ಮುಖಂಡರ ವಾದವಾಗಿದೆ. ಈಗ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಒಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್ಗೆ ಹಿನ್ನಡೆ ಉಂಟು ಮಾಡುವ ಲೆಕ್ಕಾಚಾರದಲ್ಲಿ ಉಭಯಪಕ್ಷಗಳ ಮುಖಂಡರಿದ್ದಾರೆ. +ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮುರಿಯಲು ಅವಕಾಶ ಕೊಡುವುದಿಲ್ಲ ಎಂದು ಕೇಂದ್ರ ವರಿಷ್ಠರು ಸ್ಪಷ್ಟ ಸಂದೇಶವನ್ನು ರಾಜ್ಯಘಟಕಕ್ಕೆ ರವಾನಿಸಿದ್ದಾರೆ.ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ ನಡುವೆಯೂ ಕಾಂಗ್ರೆಸ್ಗೆ ಹಿನ್ನಡೆ ಉಂಟುಮಾಡಬೇಕಾದರೆ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಇದಕ್ಕಾಗಿ ಕೆಲವರು ತ್ಯಾಗ ಮಾಡಬೇಕೆಂದು ಸೂಚನೆಯನ್ನು ನೀಡಲಾಗಿದೆ. +ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಕ್ಷೇತ್ರವನ್ನು ಬಿಜೆಪಿಯಿಂದಲೇ ಜೆಡಿಎಸ್ಗೆ ಬಿಟ್ಟುಕೊಡುವುದರ ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಚರ್ಚಿಸಿ ಅಂತಿಮ ನಿರ್ಧಾರ ತಿಳಿಸುವುದಾಗಿ ವರಿಷ್ಠರು ಬಿಜೆಪಿ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೀಶ್ವರ್ ಅವರಿಗೆ ತಿಳಿಸಿದ್ದಾರೆ. +ಎರಡು ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಉಪಚುನಾವಣೆ ಎದುರಿಸೋಣ. ಇಬ್ಬರ ಜಗಳದಲ್ಲಿ ಮೂರನೆಯವರಿಗೆ ಅಂದರೆ ಕಾಂಗ್ರೆಸ್ಗೆ ಲಾಭವಾಗದಂತೆ ನೋಡಿಕೊಳ್ಳಬೇಕೆಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸಸ ಡಾ. ಸಿ.ಎನ್.ಮಂಜುನಾಥ್ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಚರ್ಚೆ ನಡೆಯುತ್ತಿದೆ. +ಕಾಂಗ್ರೆಸ್ನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಣಕ್ಕಿಳಿಯಲಿರುವ ಬಗ್ಗೆ ಚರ್ಚೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟದಲ್ಲಿ ರಾಜಕೀಯ ಲೆಕ್ಕಾಚಾರಗಳು ತೀವ್ರಗೊಂಡಿವೆ. ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. +ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. +ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ ಒಕ್ಕಲಿಗ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಅವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ. +ಚನ್ನಪಟ್ಟಣ ಕ್ಷೇತ್ರ; ಇನ್ನೊಂದೆಡೆ ಸಿ.ಪಿ.ಯೋಗೇಶ್ವರ್ ಸಹ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಜೊತೆಗೆ ಈಗಾಗಲೇ ಒಂದೆರಡು ಸುತ್ತಿನ ಮಾತುಕತೆ ನಡೆಸಿದ್ದಾರೆ. ಚನ್ನಪಟ್ಟಣ ಕ್ಷೇತ್ರಕ್ಕೆ ಈಗಾಗಲೇ ಕಾಲಿಟ್ಟಿರುವ ಡಿ.ಕೆ.ಶಿವಕುಮಾರ್ ಅವರು, ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಎಂಬ ಕಾರ್ಯಕ್ರಮದ ಮೂಲಕ ಜನರ ನಾಡಿಮಿಡಿತ ತಿಳಿಯಲು ಮುಂದಾಗಿದ್ದಾರೆ. ಇದೇ ವೇಳೆ ಅನ್ಯ ಪಕ್ಷಗಳಲ್ಲಿರುವ ಮುಖಂಡರನ್ನು ತಮ ಪಕ್ಷಕ್ಕೆ ಸೆಳೆಯುವ ಕೆಲಸವನ್ನೂ ಡಿಕೆಶಿ ಅವರು ಮಾಡುತ್ತಿದ್ದಾರೆ. +ಶಿಗ್ಗಾವಿ ಕ್ಷೇತ್ರ; ಇನ್ನು, ಮಾಜಿ ಮುಖ್ಯಮಂತ್ರಿ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್ ಬೊಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. ಕುಟುಂಬದವರಿಗೆ ಟಿಕೆಟ್ ಕೊಟ್ಟರೆ ಬೊಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ. +ಸಂಡೂರು ಕ್ಷೇತ್ರ; ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ್ ಬದಲಿಗೆ ತಮ ಆಪ್ತ ಕೆ.ಎಸ್. ದಿವಾಕರ್ ಬಾಬುಗೆ ಟಿಕೆಟ್ ಕೊಡಿಸಲು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ. +ಒಟ್ಟಾರೆ, ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇನ್ನೂ ಚುನಾವಣೆ ದಿನಾಂಕ ಘೋಷಣೆಯಾಗದಿದ್ದರೂ, ಮೂರು ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನಾಯಕರ ಲೆಕ್ಕಾಚಾರ ಮಾತ್ರ ನಿಗೂಢವಾಗಿದೆ. \ No newline at end of file diff --git a/eesanje/url_46_44_3.txt b/eesanje/url_46_44_3.txt new file mode 100644 index 0000000000000000000000000000000000000000..c7388313ae2ee71ba1f59312a3f5401ddce7a822 --- /dev/null +++ b/eesanje/url_46_44_3.txt @@ -0,0 +1,14 @@ +ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ದಿನಾಂಕ ಘೋಷಣೆ..? +ಬೆಂಗಳೂರು,ಆ.16-ಲೋಕಸಭೆ ಚುನಾವಣೆ ಕಾವು ಮುಗಿದ ಬೆನ್ನಲ್ಲೇ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಆಯೋಗ ಇಂದು ಸಮಯವನ್ನು ನಿಗದಿಪಡಿಸುವ ಸಾಧ್ಯತೆಯಿದೆ. +ಮೂಲಗಳ ಪ್ರಕಾರ ಸೆಪ್ಟಂಬರ್ ತಿಂಗಳ ಕೊನೆಯ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ರಾಮನಗರ ಜಿಲ್ಲೆ, ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ, ಬಳ್ಳಾರಿಯಿಂದ ತುಕಾರಾಂ ಮತ್ತು ಹಾವೇರಿಯಿಂದ ಬಸವರಾಜ ಬೊಮಾಯಿ ಆಯ್ಕೆಯಾಗಿದ್ದರು. +ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ (ಚನ್ನಪಟ್ಟಣ), ತುಕಾರಾಂ (ಸಂಡೂರು), ಬಸವರಾಜ ಬೊಮಾಯಿ (ಶಿಗ್ಗಾವಿ) ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು.ತೆರವಾಗಿರುವ ಈ ಮೂರು ಕ್ಷೇತ್ರಗಳಿಗೆ ದಿನಾಂಕವನ್ನು ಘೋಣೆ ಮಾಡುವ ಸಂಭವವಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಎನ್ಡಿಎ ನಡುವೆ ಮತ್ತೊಂದು ಸುತ್ತಿನ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ. +ಶಿಗ್ಗಾವಿ ಕ್ಷೇತ್ರವು ಬಿಜೆಪಿ ತೆಕ್ಕೆಯಲ್ಲಿದ್ದರೆ, ಚನ್ನಪಟ್ಟಣ ಜೆಡಿಎಸ್ ಹಾಗೂ ಸಂಡೂರು ಕಾಂಗ್ರೆಸ್ ಗೆಲುವು ಸಾಧಿಸಿತ್ತು.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ಗೆ ತೀವ್ರ ಹಿನ್ನಡೆ ಉಂಟು ಮಾಡಿತ್ತು. ಇದೀಗ ಮೂರು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದ್ದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಫಿನಿಕ್‌್ಸನಂತೆ ಪುಟಿದೇಳಲು ಸಜ್ಜಾಗಿದೆ. +ಲೋಕಸಭಾ ಚುನಾವಣೆ ನಂತರ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಸಾಕಷ್ಟು ರಾಜಕೀಯ ಏರುಪೇರುಗಳು ಉಂಟಾಗಿವೆ. ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರಕ್ಕೆ ಸಚಿವರಾಗಿದ್ದ ಬಿ.ನಾಗೇಂದ್ರ ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದ್ಯ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದ್ದು, ಜೈಲುಪಾಲಾಗಿದ್ದಾರೆ. +ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪ ಕೇಳಿಬಂದಿತ್ತು. ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿದ ಎನ್ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವಲ್ಲಿ ಯಶಸ್ವಿಯಾಯಿತು. +ಸೇರಿಗೆ ಸವ್ವಾ ಸೇರು ಎನ್ನುವಂತೆ ಕಾಂಗ್ರೆಸ್ ಕೂಡ ಪ್ರತಿಪಕ್ಷಗಳ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಿ ಮೈಸೂರಿನಲ್ಲಿ ಭರ್ಜರಿ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ರವಾನಿಸಿತ್ತು.ಮುಡಾ ಮತ್ತು ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಉಪಚುನಾವಣೆಯಲ್ಲಿ ಸಾಕಷ್ಟು ಪ್ರತಿಧ್ವನಿಸುವ ಸಾಧ್ಯತೆಯಿದೆ. +ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳನ್ನೇ ಮುಂದಿಟ್ಟುಕೊಂಡು ಪ್ರಚಾರಕ್ಕಿಳಿಯಲು ಮುಂದಾಗಿವೆ. ಇದರ ನಡುವೆ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಗೊಂದಲದ ಬಗ್ಗೆಯೂ ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. +ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳುತ್ತಿದ್ದರೂ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಆರ್ಥಿ ನೆರವು ನೀಡುವ ಗೃಹಲಕ್ಷ್ಮಿ, ಯುವನಿಧಿ ಯೋಜನೆಯಡಿ ಡಿಪ್ಲೊಮೊ ಮತ್ತು ಪದವಿ ವ್ಯಾಸಂಗ ಮುಗಿಸಿದ ಯುವಕರಿಗೆ ನೀಡುತ್ತಿರುವ ಆರ್ಥಿಕ ನೆರವು ಗೊಂದಲ ಸೃಷ್ಟಿಸಿದೆ. ಇದು ಚುನಾವಣೆಯಲ್ಲಿ ಸದ್ದು ಮಾಡುವ ಸಂಭವವೇ ಹೆಚ್ಚಾಗಿದೆ. +ಇನ್ನು ಪ್ರತಿಪಕ್ಷಗಳಿಗೂ ಠಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೆಸ್ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಪ್ರಚಾರ ನಡೆಸಲು ಮುಂದಾಗಿದೆ. +ಕೇಂದ್ರದ ಪುರಸ್ಕೃತ ಯೋಜನೆಗಳಿಗೆ ಹಣ ನೀಡದಿರುವುದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ, ತೆರಿಗೆ ಪಾವತಿ ವಿಳಂಬ, ನೀರಾವರಿ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಉಂಟಾಗಿರುವ ಅನ್ಯಾಯವನ್ನು ಜನತೆಯ ಮುಂದಿಡಲಿದೆ. +ಮುಡಾ ಅಕ್ರಮದಲ್ಲಿ ಸಿದ್ದರಾಮಯ್ಯ ತಲೆದಂಡಕ್ಕೆ ಪ್ರತಿಪಕ್ಷ ಹವಣಿಸುತ್ತಿದೆ. ಈ ಮೂರು ಕ್ಷೇತ್ರಗಳನ್ನು ಗೆದ್ದು ತಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಅನಿವಾರ್ಯತೆ ಅವರಿಗಿದ್ದರೆ, ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಥಾನವನ್ನು ಪಲ್ಲಟಗೊಳಿಸಲು ಯತ್ನಿಸುತ್ತಿರುವ ಮತ್ತೊಂದು ಬಣಕ್ಕೆ ಫಲಿತಾಂಶದ ಮೂಲಕ ಉತ್ತರ ನೀಡಲು ಅವರಿಗೆ ಇದು ಸೂಕ್ತ ವೇದಿಕೆಯಾಗಿದೆ. +ಇದೇ ರೀತಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಮತ್ತೊಂದು ಸುತ್ತಿನ ವಾಕ್ಸಮರಕ್ಕೂ ಉಪಚುನಾವಣೆ ವೇದಿಕೆಯಾಗುವುದರಲ್ಲಿ ಅನುಮಾನವೇ ಇಲ್ಲ. \ No newline at end of file diff --git a/eesanje/url_46_44_4.txt b/eesanje/url_46_44_4.txt new file mode 100644 index 0000000000000000000000000000000000000000..e240bbbdea07b8b4c9498e6d18e030dd96cd651f --- /dev/null +++ b/eesanje/url_46_44_4.txt @@ -0,0 +1,14 @@ +ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವ ರಾಜಣ್ಣ +ಹಾಸನ,ಆ.16-ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ, ಯಥಾಸ್ಥಿತಿಯಾಗಿ ಮುಂದುವರೆಯಲಿದೆ ಎಂದು ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. +ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಐದು ಗ್ಯಾರಂಟಿ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. +ಇತ್ತೀಚಿಗೆ ರಾಜ್ಯಕ್ಕೆ ಭೇಟಿ ನೀಡಿದ ಸುರ್ಜಿವಾಲ ಸೇರಿದಂತೆ ಇತರೆ ಹೈಕಮಾಂಡ್ ನಾಯಕರು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ್ದು ಗೊಂದಲ ಆಗದಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ನಿರ್ದೇಶನ ನೀಡಿದ್ದಾರೆ ಎಂದರು. +ಹೆಚ್ಚುವರಿಯಾಗಿ ಡಿಸಿಎಂ ಹ್ದುೆ ಸೃಷ್ಟಿ ಸಂಬಂಧ ಹೈಕಮಾಂಡ್ ಗಮನಕ್ಕೆ ತಂದಿದ್ದು ಅವರ ತೀರ್ಮಾನದಂತೆ ಕ್ರಮ ಆಗಲಿದೆ. ಮಹದೇವಪ್ಪ , ಸತೀಶ್ ಜಾರಕಿಹೊಳಿ, ಮುನಿಯಪ್ಪ ದೆಹಲಿ ಪ್ರವಾಸದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಹೆದ್ದಾರಿ ಯೋಜನೆಗಳ ಸಂಬಂಧ ಕೇಂದ್ರ ಸಚಿವ ಗಡ್ಕರಿ ಅವರೊಂದಿಗೆ ಮಾತುಕತೆ ನಡೆಸಲು ತೆರಳಿದ್ದು ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು. +ಜಿಲ್ಲೆಯಲ್ಲಿ ಈ ಬಾರಿ ಉತ್ತಮವಾಗಿ ಮಳೆಯಾಗಿದ್ದು ಜಲಾಶಯಗಳಿಗೆ ಜೀವಕಳೆ ಬಂದಿದ್ದು ಕೆರೆಕಟ್ಟೆಗಳು ಭರ್ತಿಯಾಗಿ ರೈತರೆಲ್ಲ ಸಂತಸದಿಂದ ಇದ್ದಾರೆ. ಆದರೆ ಕೆಲವೆಡೆ ವಿಪರೀತ ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದು, ರಸ್ತೆ ಸೇರಿದಂತೆ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾಗಿದೆ. ಇದುವರೆಗೂ 524 ಮನೆಗಳು ಹಾನಿಯಾಗಿದ್ದು ಎನ್ಡಿಆರ್ ಎಫ್ ಹಾಗೂ ಎಸ್ಡಿಆರ್ಎ್ ಮಾನದಂಡದಡಿ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುತ್ತಿದೆ. +ಅತಿವೃಷ್ಟಿ ಕಾರಣ ಮೂರು ಮಂದಿ ಸಾವಿಗೀಡಾಗಿದ್ದು ಅವರಿಗೆ ಪರಿಹಾರವನ್ನು ಒದಗಿಸಲಾಗಿದೆ. ಹಸು- ಕರು ಸಾವಿಗೀಡಾದ ಸಂದರ್ಭದಲ್ಲಿ ಮಾಲೀಕರಿಗೆ ಪರಿಹಾರವನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ರೈತರಿಗೆ ಯಾವುದೇ ಅನ್ಯಾಯ ಆಗದಂತೆ ಸರ್ಕಾರ ಎಲ್ಲಾ ರೀತಿಯ ಅನುಕೂಲ ಕಲ್ಪಿಸಲಿದೆ ಎಂದು ಭರವಸೆ ನೀಡಿದರು. +ಹೊಸ ಯೋಜನೆಗಳನ್ನು ತರುವ ಮುನ್ನ ಈಗಾಗಲೇ ಅನುಷ್ಠಾನದಲ್ಲಿ ಇರುವಂತಹ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಂದುವರೆಸಲು ಹಾಗೂ ಕಾರ್ಯಗತ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಹೆಚ್ಚುವರಿ ಭೂಮಿ ಬೇಕಾಗಿದೆ ಏರ್ ಬಸ್ ಲ್ಯಾಂಡ್ ಹಾಗೂ ಟೇಕ್ ಆ್ ಆಗಲು ಹೆಚ್ಚುವರಿ ರನ್ ವೇ ಬೇಕಾಗಿದ್ದು ಅಗತ್ಯ ಭೂಮಿ ಹಾಗೂ ಕಾಮಗಾರಿಕಾರಿಗೆ ಬೇಕಾದ ಅನುದಾನ ಒದಗಿಸಲಾಗುವುದು ಹೆಚ್ಚುವರಿ ಭೂಮಿ ಒದಗಿಸುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲಿಯೇ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹಾಜರಿದ್ದ ಜಿಲ್ಲಾಧಿಕಾ ರಿಗಳು ಹೇಳಿದರು. +ಹಾಸನ ನಗರದ ರೈಲ್ವೆ ಮೇಲ್ ಸೇತುವೆ ಕಾಮಗಾರಿಗೆ 60 ಕೋಟಿ ಹಣ ಬೇಕಾಗಿದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೂ ಮಾತನಾಡಿದ್ದು ಕೇಂದ್ರದ ಹಣದೊಂದಿಗೆ ರೈಲ್ವೆ ರಾಯಾಲ್ಟಿ ಹಣವನ್ನು ಕಾಮಗಾರಿಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಸಚಿವರೊಂದಿಗೆ ಮಾತುಕತೆ ನಡೆಸಿರುವುದಾಗಿ ರಾಜಣ್ಣ ತಿಳಿಸಿದರು. +ಹಾಸನ ನಗರಸಭೆಯನ್ನು ಕಾರ್ಪೊರೇಷನ್ ಆಗಿ ಮೇಲ್ದರ್ಜೆಗೇರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತ್ತೀಚೆಗೆ 25 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರ್ಪಡೆಗೊಳಿಸಿದ್ದು ಇಲ್ಲಿ ಇ.ಖಾತೆ ಪಡೆದಿರುವ ದಾಖಲೆಗಳನ್ನೇ ನಗರಸಭೆಯಲ್ಲಿಯೂ ಪರಿಗಣಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. +ಗೊರೂರಿನ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಬಾಗಿನ ಅರ್ಪಿಸುವ ಸಂಬಂಧ ಮಾತನಾಡಲಾಗಿದೆ. ಶೀಘ್ರದಲ್ಲಿಯೇ ಸಿಎಂ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ. ಜಲಾಶಯದ ಎದುರು ಕೆ ಆರ್ ಎಸಾದರಿ ಉದ್ಯಾನವನ ನಿರ್ಮಾಣಕ್ಕೆ ಎಚ್ ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸಿದ್ದು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. +ಮುಡಾ ಹಗರಣ ಸಂಬಂಧ ಸಿ.ಎಂ ವಿರುದ್ಧ ಆರೋಪಗಳನ್ನು ಮಾಡುತ್ತಿರುವವರು ಸಹ ನಿವೇಶನಗಳನ್ನು ಹೊಂದಿದ್ದಾರೆ. 15 ವರ್ಷಗಳ ಹಿಂದೆಯೇ ಬಿಜೆಪಿ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿವೇಶನ ನೀಡಲಾಗಿದ್ದು ಮುಖ್ಯಮಂತ್ರಿಗಳಿಗೆ ಕಪ್ಪು ಚುಕ್ಕೆ ತರಲು ಈ ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ, ರಾಜಕೀಯದಲ್ಲಿ ಯಾರು ಸತ್ಯ ಹರಿಶ್ಚಂದ್ರರು ಇಲ್ಲ ಎಂದು ಹೇಳಿದರು. +ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಭಕ್ತಾದಿಗಳ ಅನುಕೂಲಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಭಕ್ತರು ದರ್ಶನಕ್ಕೆ ಅವಕಾಶ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು. +ಈ ವೇಳೆ ಸಂಸದ ಶ್ರೇಯಸ್ ಪಟೇಲ್, ಶಾಸಕ ಸ್ವರೂಪ್ ಪ್ರಕಾಶ್, ಡಿಸಿ ಸಿ.ಸತ್ಯಭಾಮಾ, ಸಿಇಒ ಬಿ.ಆರ್.ಪೂರ್ಣಿಮಾ, ಎಸ್ಪಿ ಮೊಹಮದ್ ಸುಜೀತಾ, ಉಪವಿಭಾಗಾಧಿಕಾರಿ ಮಾರುತಿ ಇತರರು ಇದ್ದರು. \ No newline at end of file diff --git a/eesanje/url_46_44_5.txt b/eesanje/url_46_44_5.txt new file mode 100644 index 0000000000000000000000000000000000000000..cff330650d47837aaa81bdc0c00b44ae8a879ffb --- /dev/null +++ b/eesanje/url_46_44_5.txt @@ -0,0 +1,9 @@ +ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 15,428 ಹುದ್ದೆಗಳ ಭರ್ತಿಗೆ ಅನುಮೋದನೆ : ಸಿಎಂ +ಬೆಂಗಳೂರು,ಆ.15– ರಾಜ್ಯಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಒತ್ತು ನೀಡಲಾಗಿದ್ದು, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆಯಾಗಿ ಬಾಕಿ ಉಳಿದಿದ್ದ 670 ಹುದ್ದೆಗಳೂ ಸೇರಿದಂತೆ ಒಟ್ಟು 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದರು. +2023-24 ನೇ ಸಾಲಿನಲ್ಲಿ 54,427 ಕೋಟಿ ವಿದೇಶಿ ಬಂಡವಾಳ ಹೂಡಿಕೆ ಬಂದಿದ್ದು, ದೇಶದಲ್ಲೇ ರಾಜ್ಯ ಮೂರನೇ ಸ್ಥಾನದಲ್ಲಿದೆ. ವಿವಿಧ ಉದ್ಯಮ ಸಂಸ್ಥೆಗಳೊಡನೆ 13 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದ್ದು, 42,915 ಕೋಟಿ ರೂ. ಹೂಡಿಕೆಯಾಗಿ 22,600 ಹೊಸ ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ. +ಏಕಗವಾಕ್ಷಿ ಅನುಮೋದನಾ ಸಮಿತಿಗಳಲ್ಲಿ 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 84,232 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 1,56,986 ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ರಾಜ್ಯ 1,66,545 ಮಿಲಿಯನ್ ಅಮೆರಿಕನ್ ಡಾಲರ್ ಮೂಲಕ ರಫ್ತು ಮಾಡಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ.5.20 ರಷ್ಟು ಪ್ರಗತಿಯಾಗಿದೆ. +ಸಂಪೂರ್ಣ ಕ್ಲೀನ್ ಮೊಬಿಲಿಟಿ ವಾಹನ ಮೌಲ್ಯ ಸರಪಳಿಯಲ್ಲಿ 50 ಸಾವಿರ ಕೋಟಿ ಹೂಡಿಕೆ ಆಕರ್ಷಿಸುವ 1 ಲಕ್ಷ ಉದ್ಯೋಗ ಸೃಷ್ಟಿಸುವ ಹೊಸ ಕರಡು ನೀತಿಯನ್ನು ಸಿದ್ಧಪಡಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಷ್ಟಿಗಾಗಿ 40 ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲಾಗಿದೆ. +ಬೆಂಗಳೂರಿಗೆ ಆದ್ಯತೆ :ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ 46,686 ಕೋಟಿ ರೂ. ವೆಚ್ಚದಲ್ಲಿ ದೀರ್ಘಾವಧಿಯ ಮೂಲಸೌಕರ್ಯ ಯೋಜನೆಗಳನ್ನು ಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಪೆರಿಫೆರಿಲ್ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದರು.ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ.:ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371 – ಜೆ ಮಾನ್ಯತೆ ದೊರೆತು 10 ವರ್ಷವಾಗಿರುವ ಹಿನ್ನೆಲೆಯಲ್ಲಿ ದಶಮಾನೋತ್ಸವ ಸಂಭ್ರಮಾಚರಣೆಗೆ ನಿರ್ಧರಿಸಲಾಗಿದೆ. ಜೊತೆಗೆ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. +ಬಾಬಾ ಸಾಹೇಬ್ ಅಂಬೇಡ್ಕರ್ ಸ್ಥಾಪಿಸಿದ ಪರಿಷ್ಕೃತ ಹಿತಕಾರಣಿ ಸಭಾ ಹಾಗೂ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಚಾರಿತ್ರಿಕ ಅಧಿವೇಶನ – ಈ ಎರಡಕ್ಕೂ 100 ವರ್ಷ ತುಂಬಿದ್ದು, ಶತಮಾನೋತ್ಸವವನ್ನು ಸರಣೀಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು. +ಎತ್ತಿನಹೊಳೆ ಯೋಜನೆಗೆ ಈ ವರ್ಷ 855 ಕೋಟಿ ರೂ. ಖರ್ಚು ಮಾಡಲಾಗಿದೆ. ಮೇಕೆದಾಟು ಸಮತೋಲನಾ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಭೂಸ್ವಾದೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲು ಕಾವೇರಿ ನಿಗಮ ವ್ಯಾಪ್ತಿಯ ವಿಭಾಗ ಕಚೇರಿ ಮತ್ತು ಉಪವಿಭಾಗ ಕಚೇರಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_44_6.txt b/eesanje/url_46_44_6.txt new file mode 100644 index 0000000000000000000000000000000000000000..f38df7d1d3dc64dfab7c824dde54649034834da1 --- /dev/null +++ b/eesanje/url_46_44_6.txt @@ -0,0 +1,10 @@ +ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಯೋಗೇಶ್ವರ್- ಶಿವಕುಮಾರ್ +ಚನ್ನಪಟ್ಟಣ,ಆ.15– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿಂದು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಪೊಲೀಸರು, ಭದ್ರತಾ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಅನಂತರ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರನ್ನು ಸನಾನಿಸಲಾಯಿತು. +ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಸೇರಿದಂತೆ ವಿವಿಧ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು. +ಇತ್ತೀಚೆಗೆ ಪರಸ್ಪರ ರಾಜಕೀಯ ಪ್ರತಿಸ್ಪರ್ಧಿಗಳಾಗಿ ಗುರುತಿಸಿಕೊಂಡಿದ್ದ ಸಿ.ಪಿ.ಯೋಗೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಅಲ್ಲಿಂದ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ಬಿಜೆಪಿ ಟಿಕೆಟ್ ಗಿಟ್ಟಿಸಿ ಎನ್ಡಿಎ ಅಭ್ಯರ್ಥಿಯಾಗಲು ಲಾಬಿ ನಡೆಸಿದ್ದರು. +ಒಂದು ವೇಳೆ ಅದು ಸಾಧ್ಯವಾಗದೇ ಹೋದರೆ ಕಾಂಗ್ರೆಸ್ ಸೇರ್ಪಡೆಯಾಗಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ. +ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ನಡೆಸಿದ್ದರಿಂದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿಯವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. +ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 150 ಕೋಟಿ ರೂ.ಗಳ ಅನುದಾನಕ್ಕೆ ನಿನ್ನೆಯಷ್ಟೇ ಮಂಜೂರಾತಿ ನೀಡಿದ್ದಾರೆ. ಇದರಲ್ಲಿ ಕ್ಷೇತ್ರದ ಸಮಾಜದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗುವುದು. ಈ ಹಿಂದೆ ಪ್ರಗತಿಯಲ್ಲಿದ್ದ 105 ಕಾಮಗಾರಿಗಳನ್ನು ಮುಂದುವರೆಸಲಾಗುವುದು ಎಂದರು. +ತಾವು ನಡೆಸಿದ ಜನತಾದರ್ಶನದಲ್ಲಿ 22 ಸಾವಿರ ಅರ್ಜಿಗಳು ಸ್ವೀಕಾರವಾಗಿವೆ. ಅವುಗಳಿಗೆ ಪರಿಹಾರ ಒದಗಿಸಲಾಗುವುದು. ವನ್ಯಜೀವಿಗಳಿಗಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದ್ದು, ಅದನ್ನು ತಡೆಯಲು 65 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಮನೆ ಹಾಗೂ ನಿವೇಶನಕ್ಕಾಗಿ 7 ಸಾವಿರ ಅರ್ಜಿಗಳು ಬಂದಿದ್ದು, 117 ಎಕರೆ ಜಾಗ ಗುರಿತಿಸಿ 5 ಸಾವಿರ ನಿವೇಶನ ಹಂಚಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಜಿಲ್ಲೆಯ ಪ್ರತಿನಿಧಿಯಾಗಿ ಚನ್ನಪಟ್ಟಣದ ಮನೆಮಗನಾಗಿ ಇಲ್ಲಿಗೆ ಬಂದು ಧ್ವಜಾರೋಹಣ ಮಾಡಿದ್ದೇನೆ. ನಿಮ ಸಮಸ್ಯೆಗಳಿಗೆ ಪರಿಹಾರ ದೊರಕಿಸುವುದುನನ್ನ ಆದ್ಯತೆ. ಸ್ವತಂತ್ರ್ಯ ದಿನಾಚರಣೆಯಂದು ಬಂದು ಬಾವುಟ ಹಾರಿಸಿ ಅರ್ಧಕ್ಕೆ ಹೋಗುವುದು ಧ್ವಜಕ್ಕೆ ಮಾಡಿದ ಅಪಮಾನ. ಅದೇ ರೀತಿ ಮತ ಹಾಕಿ ಆಯ್ಕೆ ಮಾಡಿದ ಜನರನ್ನು ಅರ್ಧಕ್ಕೆ ಕೈ ಬಿಟ್ಟು ಹೋಗುವುದೂ ಕೂಡ ಜನರಿಗೆ ಮಾಡುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. +ನಾನು ಇಲ್ಲಿ ರಾಜಕಾರಣ ಮಾಡಲು ಬಂದಿಲ್ಲ. ಅಭಿವೃದ್ಧಿ ಏನು ಎಂದು ತಿಳಿಸಲು ಬಂದಿದ್ದೇನೆ. ಹಿಂದಿನ ಶಾಸಕರು ಏನು ಮಾಡಿದರು ಎಂದು ಚರ್ಚಿಸಲು ಬಯಸುವುದಿಲ್ಲ. ಜನರ ಬದುಕಿಗೆ ನೆರವಾಗುವುದು ನಮ ಆದ್ಯತೆ ಎಂದು ಹೇಳಿದರು. \ No newline at end of file diff --git a/eesanje/url_46_44_7.txt b/eesanje/url_46_44_7.txt new file mode 100644 index 0000000000000000000000000000000000000000..345216765436d6bb1332bbcbc53da2e9cd6bd8ba --- /dev/null +++ b/eesanje/url_46_44_7.txt @@ -0,0 +1,8 @@ +ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಸಚಿವ ಕೃಷ್ಣಭೈರೇಗೌಡ +ಬೆಂಗಳೂರು,ಆ.15-ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ವಿವರಿಸಿದರು. +ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಅವರು, ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ, 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದರು. +ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು ಸಶಾನಗಳ ಹೆಚ್ಚುವರಿ ಜವಾಬ್ದಾರಿ ತೆಗೆದುಕೊಂಡು, ಸಮೀಕ್ಷೆ ನಡೆಸಲಾಗಿದೆ. ಈಗಾಗಲೇ ಬಳ್ಳಾರಿ ಜಿಲ್ಲೆಯಲ್ಲಿ ಶೇ.80.27 ರಷ್ಟು ಅಂದರೆ 55.638 ಸರ್ಕಾರಿ ಜಮೀನುಗಳ ಪೈಕಿ 48,786 ಆಸ್ತಿಗಳನ್ನು ಲ್ಯಾಂಡ್ ಬೀಟ್ ತಂತ್ರಾಂಶಕ್ಕೆ ಒಳಪಡಿಸಲಾಗಿದೆ. ಆಗಸ್ಟ್ ತಿಂಗಳಿನಿಂದ ಸರ್ವೇಯರ್ ಲಭ್ಯತೆ ನೋಡಿಕೊಂಡು ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. +ಭೂ ಸುರಕ್ಷಾ ಕರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್‌್ಸ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈ ವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ, ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ ಎಂದರು. +ಜಮೀನು ಮಾರಾಟದಲ್ಲಿ ವಂಚನೆ ತಡೆಯಲು ಪಹಣಿ-ಆಧಾರ್ ಜೋಡಣೆ ಕೈಗೊಳ್ಳಲಾಗಿದೆ, ಒಬ್ಬರು ಮೂರ್ನಾಲ್ಕು ದಶಕಗಳಿಂದ ಜಮೀನು ಸಾಗುವಳಿ ಮಾಡುತ್ತಿದ್ದು, ಅದಕ್ಕೆ ಬೇರೆ ವ್ಯಕ್ತಿಗಳು ಭೂ ಮಂಜೂರಾತಿ ಮಾಡಿಸಿಕೊಳ್ಳುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಕ ವ್ಯಕ್ತಪಡಿಸಿದರು. +ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡುವಂತಹ ಕಾರ್ಯಗಳಲ್ಲಿ ದುಷ್ಠಶಕ್ತಿಗಳ ದಮನಕ್ಕೆ ಹಾಗೂ ರಾಷ್ಟದ ರಕ್ಷಣೆಗೆ, ದೇಶದ ಸಮಗ್ರತೆಗೆ ಎಲ್ಲರೂ ಒಟ್ಟಾಗಿ ಶ್ರಮಿಸುವುದು ನಮೆಲ್ಲರ ಕರ್ತವ್ಯವಾಗಿದೆ ಇಂದು ತಿಳಿಸುತ್ತಾ ಮತ್ತೊಮೆ ಸರ್ವರಿಗೂ 78ನೇ ಸ್ವಾತಂತೋತ್ಸವದ ಹರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದರು. +ರಾಜ್ಯ ಕಾಂಗ್ರೆಸ್ ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಮಾಜದ ಸಂಪತ್ತು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಕಟಿಬದ್ಧವಾಗಿದೆ. ಬಡವರು ದುಡಿದ ಹಣವನ್ನು ಶ್ರೀಮಂತರ ಜೇಬಿಗೆ ತುರಕದೆ ಅವರ ಹಣವನ್ನು ಅವರಿಗೇ ನೀಡುವ ಸಲುವಾಗಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ 5 ಗ್ಯಾರಂಟಿಗಳನು ಜಾರಿಗೆ ತಂದಿದೆ.ಹಸಿವು ಮುಕ್ತ ರ್ನಾಟಕ ಪ್ರತಿ ಲಾನುಭವಿಗೆ ಪ್ರತಿ ತಿಂಗಳು 10 ಕೆಜಿ. ಆಹಾರ ಧಾನ್ಯ ಉಚಿತ -5 ಕೆಜಿ. ಅಕ್ಕಿ ಬದಲಿಗೆ 170/- ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. \ No newline at end of file diff --git a/eesanje/url_46_44_8.txt b/eesanje/url_46_44_8.txt new file mode 100644 index 0000000000000000000000000000000000000000..a7d21ef88cd56b13b27d1145fb67b33320548e71 --- /dev/null +++ b/eesanje/url_46_44_8.txt @@ -0,0 +1,7 @@ +ಗ್ಯಾರಂಟಿಗಳನ್ನು ನಿಲ್ಲಿಸುವ ಬ್ಲಾಕ್‌ಮೇಲ್‌ ಮಾಡುತ್ತಿದೆ ಸರ್ಕಾರ : ನಿಖಿಲ್ ವಾಗ್ದಾಳಿ +ಬೆಂಗಳೂರು,ಆ.15-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಾಗಿ ಹೇಳಿದ್ದರು. ಈಗ ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮೂಲಕ ಜನರನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. +ಜೆಡಿಎಸ್ ಕಚೇರಿಯಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳಬೇಕು. ಇದು ಅದರ ಕರ್ತವ್ಯ ಕೂಡ ಎಂದರು. +ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಕ ಪಾಟೀಲ್ಗೂ ಫ್ರೀ, ಮಹದೇವಪ್ಪಗೂ ಫ್ರೀ ಅಂದಿದ್ರು. ಅವರಾಗಲೀ, ಜನರಾಗಲೀ ಉಚಿತ ಖಾತ್ರಿಗಳನ್ನು ನೀಡುವಂತೆ ಕೇಳಿರಲಿಲ್ಲ. ಆದರೂ 5 ಗ್ಯಾರಂಟಿಯ ಭರವಸೆ ಕೊಟ್ಟಿದ್ದರು. ಗ್ಯಾರಂಟಿ ಯೋಜನೆಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ ಎಂದು ಹೇಳಿದರು. +ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಸ್ತಿಗಳ ಮಾರ್ಗಸೂಚಿ ದರ ಶೇ.30ರಷ್ಟು ಹೆಚ್ಚಳ ಮಾಡಿದ್ದಲ್ಲದೆ, ಡೀಸೆಲ್, ಪೆಟ್ರೋಲ್ ಬೆಲೆ ಹೆಚ್ಚಳ ಮಾಡಲಾಯಿತು. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಸರಿಯಾಗಿ ನೀಡುತ್ತಿಲ್ಲ ಎಂದು ನಿಖಿಲ್ ವಾಗ್ದಾಳಿ ನಡೆಸಿದರು. +ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ಮಾಡಿ ಜನರ ಗಮನ ಸೆಳೆಯಲಾಯಿತು ಎಂದರು.ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಮುರಿದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ 27 ಟಿಎಂಸಿ ನೀರು ಜಲಾಶಯದಿಂದ ಹೊರಗೆ ಹೋಗಿದೆ. 63 ಟಿಎಂಸಿಯಷ್ಟು ನೀರು ಖಾಲಿಯಾದ ನಂತರ ಗೇಟ್ ನಿರ್ಮಾಣ ಮಾಡುವುದಾಗಿ ತಜ್ಞರು ಹೇಳಿದ್ದಾರೆ. ರಾಜ್ಯಸರ್ಕಾರ ರೈತರಿಗೆ ನಷ್ಟವಾಗದಂತೆ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು. +ಕಾರ್ಯಕ್ರಮದಲ್ಲಿ ಜೆಡಿಎಸ್ ನಗರ ಘಟಕಾಧ್ಯಕ್ಷ ರಮೇಶ್ಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಪಕ್ಷದ ಮುಖಂಡರಾದ ಆರ್.ಪ್ರಕಾಶ್, ನಾರಾಯಣರಾವ್ ಮತ್ತಿತರರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_44_9.txt b/eesanje/url_46_44_9.txt new file mode 100644 index 0000000000000000000000000000000000000000..1340f1ec84d4a6b090f2bc0ae0bff55016c04948 --- /dev/null +++ b/eesanje/url_46_44_9.txt @@ -0,0 +1,10 @@ +ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಹೇಗಿತ್ತು ನೋಡಿ +ಬೆಂಗಳೂರು,ಆ.15-ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿಂದು ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು. ಅಂಗಾಂಗ ದಾನ ಮಾಡಿರುವ 65 ಕುಟುಂಬದ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿಕೆ, ರಾಜ್ಯಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ, ಮೈ ನವಿರೇಳಿಸುವ ಸೇನಾ ಯೋಧರ ಸಾಹಸಮಯ ಬೈಕ್ ಪ್ರದರ್ಶನ, ಸ್ವಾತಂತ್ರ್ಯ ಹೋರಾಟ ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜಾರೋಹಣ ಮಾಡಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪೊಲೀಸ್ ತಂಡದವರಿಂದ ರಾಷ್ಟ್ರಗೀತೆ ನುಡಿಸಲಾಯಿತು.ತೆರೆದ ಜೀಪಿನಲ್ಲಿ ಮುಖ್ಯಮಂತ್ರಿ ಪರೇಡ್ ಪರಿವೀಕ್ಷಣೆ ಮತ್ತು ಗೌರವರಕ್ಷೆ ಸ್ವೀಕಾರದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ದಿನದ ಸಂದೇಶ ನೀಡಿದರು.ಬಳಿಕ ಮಂಜುನಾಥ್ ಮತ್ತು ತಂಡದವರು ರಾಷ್ಟ್ರಗೀತೆಯನ್ನು ಹಾಡಿದರು. ಆನಂತರ ಇದೇ ತಂಡದಿಂದ ನಾಡಗೀತೆ ಮತ್ತು ರೈತಗೀತೆಯನ್ನು ಹಾಡಲಾಯಿತು. +ಪೆರೇಡ್ ಕಮಾಂಡರ್ ಗೋಪಾಲರೆಡ್ಡಿ ಹಾಗೂ ಡೆಪ್ಯುಟಿ ಕಮಾಂಡರ್ ಹರೀಶ್ ಹೆಚ್.ಎನ್.ನೇತೃತ್ವದಲ್ಲಿ ಗಡಿ ಭದ್ರತಾ ಪಡೆ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಕೈಗಾರಿಕಾ ಭದ್ರತಾ ಪಡೆ, ಗೋವಾ ಪೊಲೀಸ್, ಶ್ವಾನದಳ, ಅಬಕಾರಿ, ಸಂಚಾರ ಪೊಲೀಸ್, ಅಗ್ನಿ ಶಾಮಕ ದಳ, ಗೃಹ ರಕ್ಷಕ ದಳ, ಎನ್ಸಿಸಿ, ರಾಷ್ಟ್ರೀಯ ಮಿಲಿಟರಿ ಶಾಲೆ, ಆಮಿರ್ ಪಬ್ಲಿಕ್ ಶಾಲೆ, ಪೊಲೀಸ್ ಪಬ್ಲಿಕ್ ಶಾಲೆ, ಸಮರ್ಥನಂ ಹಾಗೂ ರಮಣಶ್ರೀ ಸಂಸ್ಥೆಗಳ ವಿಕಲಚೇತನ ಮಕ್ಕಳು ಸೇರಿದಂತೆ ವಿವಿಧ ಶಾಲಾ ತುಕಡಿಗಳಿಂದ ಚಿತ್ತಾಕರ್ಷಕ ಪಥಸಂಚಲನ ನಡೆಯಿತು. +ಮನಸೆಳೆದ ಸಾಂಸ್ಕೃತಿಕ ಕಾರ್ಯಕ್ರಮಗಳು :ಸರ್ಕಾರದ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 400 ವಿದ್ಯಾರ್ಥಿಗಳು ನಂದಿಧ್ವಜ, ವೀರಗಾಸೆ, ಡೊಳ್ಳುಕುಣಿತ, ರಾಷ್ಟ್ರಧ್ವಜ, ನಾಡಧ್ವಜ ಹಿಡಿದು ವಿವಿಧ ವೇಷಭೂಷಣಗಳನ್ನು ತೊಟ್ಟು ಪ್ರದರ್ಶನ ನೀಡಿದರು.ಯಲಹಂಕದ ಸರ್ಕಾರಿ ಪ್ರೌಢಶಾಲೆಯ 750 ವಿದ್ಯಾರ್ಥಿಗಳು ಜಯ ಭಾರತಿ ಪ್ರದರ್ಶನವನ್ನು ಮನಸೂರೆಗೊಳ್ಳುವಂತೆ ಪ್ರದರ್ಶಿಸಿದರು. +ವಿವಿಧ ವೇಷಭೂಷಣ ತೊಟ್ಟು ಸ್ವಾತಂತ್ರ್ಯ ಹೋರಾಟಗಾರರ ಫಲಕ ಹಾಗೂ ರಾಷ್ಟ್ರಧ್ವಜವನ್ನು ಹಿಡಿದು ಕೋಟೆ ಮಾದರಿಯ ಜೊತೆಗೆ ನೀಡಿದಂತಹ ಪ್ರದರ್ಶನ ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವಂತಿತ್ತು. ಬಿಬಿಎಂಪಿ ಪಿಳ್ಳಣ್ಣ ಗಾರ್ಡನ್ ಸಂಯುಕ್ತ ಪ.ಪೂ.ಕಾಲೇಜಿನ 700 ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ದೇವಿ ಕುರಿತ ಸಮೂಹ ನೃತ್ಯಗಳು, ರೂಪಕಗಳು ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದವು. +ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ ಸೆಂಟರಿನ ಸಿಪಾಯಿಗಳು ನಡೆಸಿದ ಮಲ್ಲಕಂಬ ಪ್ರದರ್ಶನದ ವಿವಿಧ ಭಂಗಿಗಳು ರೋಮಾಂಚನಗೊಳಿಸಿದವು. ಅಲ್ಲದೆ, ಸೇನಾ ಯೋಧರು ಪ್ಯಾರಾ ಮೋಟರ್ನಲ್ಲಿ ಆಕಾಶದಲ್ಲಿ ಹಾರಾಡುತ್ತಾ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದರು. ಪ್ರೇಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದ ಶ್ವೇತ ಅಶ್ವ ಹೆಸರಿನ ಸೇನಾ ಯೋಧರ ಬೈಕ್ ಪ್ರದರ್ಶನ ನಿಬ್ಬೆರಗಾಗುವಂತೆ ಮಾಡಿತು. +ಮಿಲಿಟರಿ ಪೊಲೀಸ್ ಸೆಂಟರ್ ಮತ್ತು ಶಾಲೆಯವರಿಂದ ಮೈ ನವಿರೇಳಿಸುವ ಮೋಟಾರ್ ಸೈಕಲ್ ಪ್ರದರ್ಶನಗಳು ನೆರೆದ ಜನರಲ್ಲಿ ಸಂಚಲನ ಉಂಟು ಮಾಡಿದವು.ಚಲಿಸುವ ಬೈಕಿನ ಮೇಲೆ ವಿವಿಧ ಭಂಗಿಗಳಲ್ಲಿ ಶಿಸ್ತುಬದ್ಧವಾಗಿ ನೀಡಿದ ಸಾಹಸಮಯ ಪ್ರದರ್ಶನ ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. +ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿದರು. ಅನಂತರ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು. +ಸಮಾರಂಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. \ No newline at end of file diff --git a/eesanje/url_46_45_1.txt b/eesanje/url_46_45_1.txt new file mode 100644 index 0000000000000000000000000000000000000000..2ed84786294c4e2fed8594daaf181fa86005edb6 --- /dev/null +++ b/eesanje/url_46_45_1.txt @@ -0,0 +1,7 @@ +ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್ ಘೋಷಣೆ +ಬೆಂಗಳೂರು,ಆ.14-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿ ಸಹಿತ ಚದುರಿದಂತೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. +ಕೆಲವೆಡೆ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಲಾಗಿದೆ. +ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. +ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಅರ್ಕಾವತಿ, ಪಾಲಾರ್‌, ಪೊನ್ನಯ್ಯರ್‌, ಪೆನ್ನಾರ್‌ ಮೇಲ್ದಂಡೆ , ಶಿಂಷಾ, ವೇದಾವತಿ, ಕಾವೇರಿ ಹಾಗೂ ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಧೋನಿ ನದಿಯು ವಿಜಯಪುರ ಜಿಲ್ಲೆಯಲ್ಲಿ ಪ್ರವಾಹದ ಮಟ್ಟ ಮೀರಿ ಹರಿಯುವುದರಿಂದ ನದಿಗಳ ತೀರ ಪ್ರದೇಶದ ಜನವಸತಿಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. +ಆಗಸ್ಟ್‌ 16 ಮತ್ತು 17ರಂದು ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಅನಂತರ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಮತ್ತು ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ ಚದುರಿದಂತೆ ವ್ಯಾಪಕವಾದ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. +ಇಂದಿನಿಂದ ಮೂರು ದಿನಗಳ ಕಾಲ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರಿ ಮಳೆಯಾಗಬಹುದು ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_46_45_10.txt b/eesanje/url_46_45_10.txt new file mode 100644 index 0000000000000000000000000000000000000000..b85817538bdb9e67383802c367ba38dc59763eb1 --- /dev/null +++ b/eesanje/url_46_45_10.txt @@ -0,0 +1,9 @@ +ನ್ಯಾಯಾಲಯದಲ್ಲಿ ಇತ್ಯರ್ಥವಾಗಿರುವ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಸೂಚನೆ : ಖಂಡ್ರೆ +ಬೆಂಗಳೂರು,ಆ.14-ಅರಣ್ಯ ಭೂಮಿ ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವುಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಬಗ್ಗೆ ರೈತರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅರಣ್ಯ ಇಲಾಖಾ ಸಚಿವ ಈಶ್ವರ್‌ ಖಂಡ್ರೆ ಭರವಸೆ ನೀಡಿದ್ದಾರೆ. +ವಿಧಾನ ಸೌಧದಲ್ಲಿ ತಮನ್ನು ಭೇಟಿಯಾದ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ನೇತೃತ್ವದ ಜನಪ್ರತಿನಿಧಿಗಳ ಮತ್ತು ಮಲೆನಾಡು ಕರಾವಳಿ ಜನಪರ ಒಕ್ಕೂಟದ ಪ್ರತಿನಿಧಿಗಳ ನಿಯೋಗಕ್ಕೆ ಸಚಿವರು ಈ ಭರವಸೆ ನೀಡಿದ್ದಾರೆ. +ಒತ್ತುವರಿ ತೆರವುಗೊಳಿಸುವ ಕುರಿತು ಈಗಾಗಲೇ ಸ್ಪಷ್ಟವಾಗಿ ಆದೇಶ ಕೊಟ್ಟಿದ್ದೇನೆ. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿ ಇತ್ಯಾರ್ಥವಾಗಿದ್ದರೂ ತೆರವಾಗದೆ ಇರುವ ಬಗ್ಗೆ ನ್ಯಾಯಾಲಯ ಸಹ ಸರ್ಕಾರಕ್ಕೆ ನೋಟಿಸ್‌‍ ನೀಡುತ್ತಿದೆ. ಆದ್ದರಿಂದ ಇಂತಹ ಒತ್ತುವರಿಗಳನ್ನು ಹಾಗೂ 2015 ರ ನಂತರ ಅತಿಕ್ರಮಣವಾಗಿರುವುದನ್ನು ಮಾತ್ರ ತೆರವಿಗೆ ಸೂಚನೆ ನೀಡಲಾಗಿದೆ. ಉಳಿದಂತೆ 3 ಎಕರೆ ಒಳಗಿನ ಒತ್ತುವರಿ ಹಾಗೂ ಇತರೆ ಅರ್ಜಿಗಳು ವಿಲೇವಾರಿ ಆಗದೆ ಇರುವ ಒತ್ತುವರಿಗಳನ್ನು ಮುಟ್ಟ ಬಾರದು ಎಂದು ಸೂಚಿಸಿದ್ದೇನೆ ಎಂದು ಸಚಿವರು ನಿಯೋಗಕ್ಕೆ ತಿಳಿಸಿದ್ದಾರೆ. +ಒತ್ತುವರಿ ತೆರವುಗೊಳಿಸುವಂತೆ ಸಚಿವರು ನೀಡಿದ ಸೂಚನೆಗಳಿಂದಾಗಿ ಮಲೆನಾಡಿಗರಲ್ಲಿ ಆತಂಕವಿದ್ದು ಸಣ್ಣ ಹಾಗೂ ಅತೀ ಸಣ್ಣ ರೈತರು ಹಾಗೂ ಮನೆಗಳನ್ನು ಕಟ್ಟಿಕೊಂಡವರೆಲ್ಲ ಭಯಭೀತಾರಾಗಿದ್ದಾರೆ. ಇಲಾಖೆಯ ಈ ನಿಲುವಿನಿಂದಾಗಿ ಹಳ್ಳಿಗಳಲ್ಲಿ ಸಣ್ಣ ಪುಟ್ಟ ರೈತರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ. ಹಾಗಾಗಿ ನಿಮ ಸ್ಪಷ್ಟವಾದ ನಿಲುವನ್ನು ತಿಳಿಸಬೇಕು ಎಂದು ನಿಯೋಗವು ಮನವಿ ಮಾಡಿಕೊಂಡಿತ್ತು. ಅಲ್ಲದೆ, ನ್ಯಾಯಾಲಯದಲ್ಲಿ ಇತ್ಯಾರ್ಥ ವಾಗಿರುವ ಕೃಷಿ ಭೂಮಿಯನ್ನು ಸಹ ಮುಂದಿನ ಸಲು ಕುಯ್ಯುವವವರೆಗೆ ತೆರವು ಮಾಡಬಾರದು ಎಂದು ಮನವಿ ಮಾಡಿಕೊಂಡಿತ್ತು. +ಇದಕ್ಕೆ ಸಕಾರಾತಕವಾಗಿ ಸ್ಪಂದಿಸಿದ ಸಚಿವರು, ನಿಮೆಲ್ಲರ ಕೋರಿಕೆ ಮೇರೆಗೆ ಇನ್ನೊಂದು ಸ್ಪಷ್ಟವಾದ ಸೂಚನೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡುವುದಾಗಿ ಭರವಸೆ ಕೊಟ್ಟರು. ಯಾವುದನ್ನು ತೆರವು ಮಾಡಬೇಕು ಹಾಗೂ ಯಾವುದನ್ನು ತೆರವು ಮಾಡಬಾರದು ಮತ್ತು ಏತಕ್ಕಾಗಿ ಒತ್ತುವರಿ ತೆರವು ಮಾಡುತ್ತಿದ್ದೇವೆ ಎಂಬ ಸ್ಪಷ್ಟ ಮಾಹಿತಿಯನ್ನು ಅಧಿಕಾರಿಗಳು ಹಾಗೂ ಜನಸಾಮಾನ್ಯರಿಗೆ ತಲುಪುವಂತೆ ವ್ಯವಸ್ಥೆ ಮಾಡುತ್ತೇನೆ ಎಂಬ ಆಶ್ವಾಸನೆಯನ್ನೂ ನಿಯೋಗಕ್ಕೆ ನೀಡಿದರು. +ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಲ್ಲಿ, ಸಲನ್ನು ಪಡೆಯಲು ಅವಕಾಶ ಮಾಡಿಕೊಡಲು, ಸದ್ಯ ಜಾಗದ ಗಡಿ ಗುರುತಿಸಿ ಈಗ ಬಂದಿರುವ ಸಲನ್ನು ರೈತರು ಕೊಯ್ಲು ಮಾಡುವವರೆಗೂ ಕಾದು, ನಂತರ ಒತ್ತವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಸಚಿವರು ಹೇಳಿದರು. +ಪಾರಂಪರಿಕ ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಲು ವಿಧಾನಸಭೆಯಲ್ಲಿ ನಿರ್ಣಯ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿರುವುದಕ್ಕೆ ಈ ನಿಯೋಗವು ಸಚಿವರಿಗೆ ಕೃತಜ್ಞತೆ ಸಲ್ಲಿಸಿತು.ಈ ವಿಚಾರವಾಗಿ ಕೇಂದ್ರದ ಮೇಲೆ ಸರ್ಕಾರವು ಒತ್ತಡ ಹೇರಲು ನಿಯೋಗ ಕರೆದುಕೊಂಡು ಹೋಗುವಂತೆ ಸಹ ಮನವಿ ಮಾಡಿಕೊಂಡಿತು. +ಈ ನಿಯೋಗದಲ್ಲಿ ಶೃಂಗೇರಿಯ ಶಾಸಕ ಟಿ.ಡಿ.ರಾಜೇಗೌಡ, ತರಿಕೆರೆ ಶಾಸಕ ಶ್ರೀನಿವಾಸ್‌‍, ಮಾಜಿ ಸಚಿವ ಕಿಮನೆ ರತ್ನಾಕರ್‌, ಮಾಜಿ ಪರಿಷತ್‌ ಸದಸ್ಯ ಗೋಪಾಲ ಸ್ವಾಮಿ, ಗುಂಡ್ಲು ಪೇಟೆ ಶಾಸಕ ಗಣೇಶ್‌ ಹಾಗೂ ಮಲೆನಾಡು ಜನಪರ ಒಕ್ಕೂಟದ ಅನಿಲ್‌ ಹೊಸಕೊಪ್ಪ, ಸುಕೇಶ್‌ ದಾಸನಕೋಡಿಗೆ ಇದ್ದರು. \ No newline at end of file diff --git a/eesanje/url_46_45_11.txt b/eesanje/url_46_45_11.txt new file mode 100644 index 0000000000000000000000000000000000000000..78abd3363277796fb4ee49da12fc7d12035be4de --- /dev/null +++ b/eesanje/url_46_45_11.txt @@ -0,0 +1,6 @@ +ರಾಜ್ಯದಲ್ಲಿ ಜುಲೈನಲ್ಲಿ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹ +ಬೆಂಗಳೂರು, ಆ.14-ಕರ್ನಾಟಕ ರಾಜ್ಯದ ಜುಲೈ ತಿಂಗಳಿನ 7971.73 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಕಳೆದ ಜೂನ್‌ ತಿಂಗಳಿಗೆ ಹೋಲಿಸಿದರೆ 197.9 ಕೋಟಿ ರೂ. ಹೆಚ್ಚು ಸಂಗ್ರಹವಾಗಿದೆ. +ವಾಣಿಜ್ಯ ತೆರಿಗೆಗಳ ಇಲಾಖೆಯ ಮಾಹಿತಿ ಪ್ರಕಾರ ಜುಲೈ ತಿಂಗಳಿನಲ್ಲಿ 5990.38 ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ, 1893.31 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 88.04 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ. +ಜೂನ್‌ ತಿಂಗಳಿಗೆ ಹೋಲಿಸಿದರೆ, ವೃತ್ತಿ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸರಕು ಮತ್ತು ಸೇವಾ ತೆರಿಗೆ ಹಾಗೂ ಕರ್ನಾಟಕ ಮಾರಾಟ ತೆರಿಗೆಗಳ ಸಂಗ್ರಹದಲ್ಲಿ ಹೆಚ್ಚಳ ಕಂಡುಬಂದಿದೆ.ಈ ಮೂರು ತೆರಿಗೆಗಳಿಂದ ಏಪ್ರಿಲ್‌ ತಿಂಗಳಲ್ಲಿ 9664.63 ಕೋಟಿ ರೂ. ಸಂಗ್ರಹವಾಗಿತ್ತು. ಅನಂತರದ ಮೇ, ಜೂನ್‌ ಹಾಗೂ ಜುಲೈ ತಿಂಗಳುಗಳಲ್ಲಿ ಆ ಪ್ರಮಾಣದ ವಾಣಿಜ್ಯ ತೆರಿಗೆ ಸಂಗ್ರಹಣೆಯಾಗಿಲ್ಲ. +ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೂ ಈ ವರ್ಷದ ಜುಲೈ ತಿಂಗಳ ವಾಣಿಜ್ಯ ತೆರಿಗೆ ಸಂಗ್ರಹ 515.44 ಕೋಟಿ ರೂ.ನಷ್ಟು ಹೆಚ್ಚಳವಾಗಿದೆ. 2024-25 ನೇ ಹಣಕಾಸು ವರ್ಷದ ಅಂದರೆ, ಕಳೆದ ನಾಲ್ಕು ತಿಂಗಳಲ್ಲಿ 32834.50 ಕೋಟಿ ರೂ. ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. +ಇದರಲ್ಲಿ ಸರಕು ಮತ್ತು ಸೇವಾ ತೆರಿಗೆ 25033.82 ಕೋಟಿ ರೂ., ಕರ್ನಾಟಕ ಮಾರಾಟ ತೆರಿಗೆ 7321.76 ಕೋಟಿ ರೂ. ಹಾಗೂ ವೃತ್ತಿ ತೆರಿಗೆ 478.92 ಕೋಟಿ ರೂ. ಸಂಗ್ರಹವಾದಂತಾಗಿದೆ. 2023-24 ನೇ ಆರ್ಥಿಕ ಸಾಲಿನಲ್ಲಿ ರಾಜ್ಯದ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹ 94363.27 ಕೋಟಿ ರೂ.ನಷ್ಟಾಗಿತ್ತು. \ No newline at end of file diff --git a/eesanje/url_46_45_12.txt b/eesanje/url_46_45_12.txt new file mode 100644 index 0000000000000000000000000000000000000000..e9281d613524d2acded8528a691bca8e30ffe6c2 --- /dev/null +++ b/eesanje/url_46_45_12.txt @@ -0,0 +1,6 @@ +ರಾಮ್‌ರಹೀಂಗೆ 10ನೇ ಬಾರಿ ಪೆರೋಲ್ +ನವದೆಹಲಿ,ಆ.13-ಕೊಲೆ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್‌ ರಾಮ್‌ ರಹೀಮ್‌ ಮತ್ತೆ ಪೆರೋಲ್‌ ಮೇಲೆ ಹೊರಬಂದಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಇಪೆರೋಲ್‌ ಮೂಲಕ ಹೊರಬರುತ್ತಿರುವುದು ದು 10ನೇ ಬಾರಿ. +21 ದಿನಗಳ ಕಾಲ ರಿಲೀಫ್‌ ಪಡೆದಿರುವ ಗುರ್ಮೀತ್‌ ರಾಮ್‌ ರಹೀಮ್‌ ಇಂದು ಬೆಳಗ್ಗೆ 6:30ಕ್ಕೆ ಜೈಲಿನಿಂದ ಹೊರ ಬಂದಿದಿದ್ದು ಉತ್ತರಪ್ರದೇಶದ ಭಾಗ್‌ಪತ್‌ ಜಿಲ್ಲೆಯಲ್ಲಿರುವ ಡೇರಾ ಸಚ್ಚಾ ಸೌಧ ಆಶ್ರಮದಲ್ಲಿ ಅವರು ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. +56 ವರ್ಷದ ರಾಮ್‌ ರಹೀಮ್, ಪಂಜಾಬ್‌, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಗಮನಾರ್ಹ ಅನುಯಾಯಿಗಳನ್ನು ಹೊಂದಿದ್ದು, ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ಭೇಟಿ ಮಾಡಲು ಮನವಿ ಸೇರಿದಂತೆ ವಿವಿಧ ಕಾರಣಗಳಿಗಾಗಿ ಎಂಟು ಪ್ರತ್ಯೇಕ ಸಂದರ್ಭಗಳಲ್ಲಿ ಪೆರೋಲ್‌ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. +ಏನಿದು ಪೆರೋಲ್?:ಫರ್ಲೋ ಮತ್ತು ಪೆರೋಲ್‌ ನಡುವ ಸ್ವಲ್ಪ ವ್ಯತ್ಯಾಸ ಇದೆ. ಪೆರೋಲ್‌ ನೀಡಲೂಬಹುದು ಅಥವಾ ಅದನ್ನು ತಿರಸ್ಕರಿಸುವ ಅವಕಾಶ ಇದೆ. ಆದರೆ ಫರ್ಲೋ ಅಂದರೆ ಶಿಕ್ಷೆಯ ನಿಗದಿತ ಭಾಗವನ್ನು ಪೂರ್ಣಗೊಳಿಸಿದ ನಂತರ ಕೈದಿಯ ಕಿರು ಬಿಡುಗಡೆಯಾಗಿದೆ. ಇದು ಕೈದಿಯ ಅಧಿಕಾರವಾಗಿರುತ್ತದೆ. ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್ ಅವರಿಗೆ ತಾತ್ಕಾಲಿಕ ಬಿಡುಗಡೆಯ ಮಂಜೂರಾತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸಿದ ಬಳಿಕ ರಾಮ್‌ ರಹೀಮ್‌ಗೆ ಬಿಡುಗಡೆ ಭಾಗ್ಯ ದೊರೆತಿದೆ. +ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ರಾಮ್‌ ರಹೀಮ್‌ ಅವರನ್ನು ಅಕ್ಟೋಬರ್‌ 18, 2021 ರಂದು ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು. ನ್ಯಾಯಾಲಯ ರಾಮ್‌ ರಹೀಮ್‌ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. \ No newline at end of file diff --git a/eesanje/url_46_45_2.txt b/eesanje/url_46_45_2.txt new file mode 100644 index 0000000000000000000000000000000000000000..8e656a90f32967fac89aa34a24c61ff3f5ab786b --- /dev/null +++ b/eesanje/url_46_45_2.txt @@ -0,0 +1,11 @@ +ಜೆಡಿಎಸ್‌‍ ಸಾರಥ್ಯ ನಿಖಿಲ್‌ ಕುಮಾರಸ್ವಾಮಿ ಹೆಗಲಿಗೆ..? +ಬೆಂಗಳೂರು,ಆ.14-ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನವನ್ನು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ನೀಡಲು ಸಿದ್ಧತೆ ನಡೆದಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಿದ ಪಾದಯಾತ್ರೆಯ ಸಂದರ್ಭದಲ್ಲಿ ನಿಖಿಲ್‌ ಕುಮಾರಸ್ವಾಮಿ ಮುಂಚೂಣಿಯಲ್ಲಿದ್ದರು. ಪಾದಯಾತ್ರೆ ಸಂದರ್ಭದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಜತೆಗೆ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. +ರಾಜ್ಯಾಧ್ಯಕ್ಷ ಸ್ಥಾನ ನೀಡುವ ಉದ್ದೇಶದಿಂದಲೇ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಪಕ್ಷದ ಕಾರ್ಯಕ್ರಮಗಳಲ್ಲಿ ಇತರ ನಾಯಕರು ಮತ್ತು ಮುಖಂಡರಿಗಿಂತ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಈಗಾಗಲೇ ಪಕ್ಷದ ಜವಾಬ್ದಾರಿಯನ್ನು ನಿಖಿಲ್‌ ಕುಮಾರಸ್ವಾಮಿ ನಿಭಾಯಿಸತೊಡಗಿದ್ದಾರೆ. ಹೀಗಾಗಿ ಮುಂದಿನ ರಾಜ್ಯಾಧ್ಯಕ್ಷರಾಗುವುದರಲ್ಲಿ ಅನುಮಾನವಿಲ್ಲ. ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ ಕುಟುಂಬಕ್ಕೆ ದೊರೆತಂತಾಗುತ್ತದೆ. +ಸದ್ಯಕ್ಕೆ ಜೆಡಿಎಸ್‌‍ ರಾಜ್ಯಾಧ್ಯಕ್ಷರಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರೇ ಮುಂದುವರೆದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಕಳೆದ ಮೂರು ತಿಂಗಳಿನಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯನ್ನು ಲಿಂಗಾಯತ ಇಲ್ಲವೆ ಕುರುಬ ಸಮುದಾಯಕ್ಕೆ ನೀಡಿದರೆ ಪಕ್ಷ ಸಂಘಟನೆಗೆ ಹೆಚ್ಚು ಅನುಕೂಲವಾಗಲಿದೆ ಎಂಬ ಅಭಿಪ್ರಾಯವೂ ಇದೆ. +ಮಾಜಿ ಸಚಿವ ಹೆಚ್‌. ವಿಶ್ವನಾಥ್‌ ಅವರು ಪಕ್ಷ ತೊರೆದ ನಂತರ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನವನ್ನು ಹೆಚ್‌.ಕೆ.ಕುಮಾರಸ್ವಾಮಿ ಅವರಿಗೆ ನೀಡಲಾಗಿತ್ತು. ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷಕ್ಕೆ ಮರಳಿದ ನಂತರ ಕುಮಾರಸ್ವಾಮಿ ಅವರ ಬದಲಿಗೆ ಇಬ್ರಾಹಿಂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು. +ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ ಎನ್‌ಡಿಎ ಮೈತ್ರಿಕೂಟ ಸೇರುವುದನ್ನು ವಿರೋಧಿಸಿದ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಹೊರ ಹಾಕಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು.ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಕುರುಬ, ಪರಿಶಿಷ್ಟ ಜಾತಿ, ಅಲ್ಪಸಂಖ್ಯಾತ ಹಾಗೂ ಒಕ್ಕಲಿಗ ಸಮುದಾಯಕ್ಕೆ ದೊರೆತಿದೆ. +ಲಿಂಗಾಯತ ಸಮುದಾಯಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆ ಬಲಗೊಳ್ಳಲು ಆ ಭಾಗ ಲಿಂಗಾಯತರಿಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುವುದು ಸೂಕ್ತ ಎಂಬ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಕೇಳಿ ಬರುತ್ತಿದೆ. +ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳ ಹಾಗೂ ಬಿಬಿಎಂಪಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಇದು ಸಹಕಾರಿಯಾಗಲಿದೆ. ಈಗಾಗಲೇ ಅಲ್ಪಸಂಖ್ಯಾತ ಸಮುದಾಯದವರು ಪಕ್ಷದಿಂದ ದೂರ ಸರಿದಿದ್ದಾರೆ. ಬಿಜೆಪಿ ಮೈತ್ರಿ ಒಂದನ್ನೇ ನಂಬಿಕೊಂಡರೆ ಅನುಕೂಲ ಆಗುವುದಿಲ್ಲ. ಸಂಘಟನೆ ದೃಷ್ಟಿಯಿಂದ ಪಕ್ಷದಲ್ಲಿ ಎಲ್ಲಾ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂಬ ಅಭಿಪ್ರಾಯವಿದೆ. +ನಿರೀಕ್ಷೆಯಂತೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಸಾರಥ್ಯ ನೀಡಲಾಗುತ್ತದೆಯೇ ಅಥವಾ ಕೊನೆಯ ಕ್ಷಣದಲ್ಲಿ ಬದಲಾವಣೆ ಮಾಡಿ ಬೇರೆಯವರಿಗೆ ಜವಾಬ್ದಾರಿ ವಹಿಸಲಾಗುವುದೋ ಎಂಬುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_46_45_3.txt b/eesanje/url_46_45_3.txt new file mode 100644 index 0000000000000000000000000000000000000000..ec1f2b5cadf54c1e961d43a1494619856683d471 --- /dev/null +++ b/eesanje/url_46_45_3.txt @@ -0,0 +1,5 @@ +ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ +ಮಂಗಳೂರು,ಅ.14 (ಪಿಟಿಐ)ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತದಿಂದ ಹಾನಿಗೊಳಗಾದ ಹಳಿಯನ್ನು ಪುನರ್‌ ಸ್ಥಾಪಿಸಲಾಗಿದೆ.ಹೀಗಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ಸೆಕ್ಟರ್‌ನಲ್ಲಿ ಸೇವೆಯನ್ನು ಪುನರಾರಂಭಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ. +ಆಗಸ್ಟ್‌ 10 ರ ಮುಂಜಾನೆ ಮೈಸೂರು ವಿಭಾಗದ ಬಾಳುಪೇಟೆ ಮತ್ತು ಸಕಲೇಶಪುರ ನಡುವೆ ಭೂಕುಸಿತ ಸಂಭವಿಸಿದ ನಂತರ ಸೇವೆಗಳನ್ನು ರದ್ದುಗೊಳಿಸಲಾಗಿತ್ತು. +ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮಂಗಳೂರು ಹಾಗೂ ಕಾರವಾರ ಸೆಕ್ಟರ್‌ನಲ್ಲಿ ರಾತ್ರಿಯ ಮೂರು ರೈಲುಗಳನ್ನು ಅಲ್ಪಾವಧಿಗೆ ನಿಲ್ಲಿಸಲಾಗಿದೆ.ಅದೇ ಭಾಗದಲ್ಲಿ ಹೊಸದಾಗಿ ಭೂಕುಸಿತ ಸಂಭವಿಸಿದ್ದರಿಂದ ಟ್ರ್ಯಾಕ್‌ ಮರುಸ್ಥಾಪನೆ ಕಾರ್ಯಕ್ಕೆ ಸಾಕಷ್ಟು ಸಮಯ ಬೇಕಾಗಿತ್ತು. +ಜುಲೈ 26 ರಿಂದ ಆಗಸ್ಟ್‌ 9 ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ಘಾಟ್‌ ಮಾರ್ಗದಲ್ಲಿ ಯಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಭೂಕುಸಿತದಿಂದಾಗಿ ಈ ವಲಯದಲ್ಲಿ ಸೇವೆಗಳ ಮೇಲೆ ಪರಿಣಾಮ ಬೀರಿತು. ಸೇವೆಗಳನ್ನು ಪುನರಾರಂಭಿಸಿದ ಒಂದು ದಿನದೊಳಗೆ, ಹೊಸ ಭೂಕುಸಿತಗಳು ರೈಲು ಸೇವೆಗಳನ್ನು ತಡೆದಿದ್ದವು. \ No newline at end of file diff --git a/eesanje/url_46_45_4.txt b/eesanje/url_46_45_4.txt new file mode 100644 index 0000000000000000000000000000000000000000..380a99a81f9c2e34afcbe493ba974c58ad336492 --- /dev/null +++ b/eesanje/url_46_45_4.txt @@ -0,0 +1,8 @@ +ಚನ್ನಪಟ್ಟಣ ಉಪಚುನಾವಣೆ ‘ದೋಸ್ತಿ ಟಿಕೆಟ್’ ಯಾರಿಗೆ..? +ಬೆಂಗಳೂರು,ಆ.14-ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ಯಾರಿಗೆ ಎಂಬ ಕುತೂಹಲ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಟಿಕೆಟ್ಗಾಗಿ ಸಿಪಿ ಯೋಗೇಶ್ವರ್ ಹರ ಸಾಹಸ ಪಡುತ್ತಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡೆಯ ಮೇಲೆ ಯಾರಿಗೆ ಟಿಕೆಟ್ ಎಂಬ ಬಗ್ಗೆ ಅಂತಿಮ ನಿರ್ಧಾರವಾಗಲಿದೆ. +ಮಾಜಿ ಸಚಿವ ಸಿಪಿ ಯೋಗೇಶ್ವರ್ ಚನ್ನಪಟ್ಟಣದಿಂದ ಟಿಕೆಟ್ ಪಡೆದುಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿಯೂ ಕ್ಷೇತ್ರದಲ್ಲಿ ಯೋಗೇಶ್ವರ್ ತಮ್ಮದೇ ಆದ ರಾಜಕೀಯ ಶಕ್ತಿಯನ್ನು ಸಂಪಾದಿಸಿದ್ದಾರೆ. +ಸದ್ಯ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿರುವ ಅವರು, ಚನ್ನಪಟ್ಟಣದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಇದಕ್ಕೆ ತೊಡಕಾಗಿರುವುದು ಕೇಂದ್ರ ಸಚಿವರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ನಡೆ.ರಾಮನಗರ ಜಿಲ್ಲೆ ( ಬೆಂಗಳೂರು ದಕ್ಷಿಣ) ದಲ್ಲಿ ಕೇವಲ ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್ ಹೊಂದಿದೆ. ಉಳಿದವು ಕಾಂಗ್ರೆಸ್ ಪಾಲಾಗಿವೆ. ಹೀಗಿರುವಾಗ ಇದ್ದ ಒಂದು ಕ್ಷೇತ್ರವನ್ನು ತಮ ಬಳಿಯೇ ಉಳಿಸಿಕೊಳ್ಳುವುದು ದಳಪತಿಗಳಿಗೆ ಅನಿವಾರ್ಯವಾಗಿದೆ. +ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಲು ಸಿಪಿವೈ ಒಲವು :ಚನ್ನಪಟ್ಟಣದಲ್ಲಿ ಬಿಜೆಪಿ ಚಿಹ್ನೆ ಅಡಿಯಲ್ಲಿ ಸ್ಪರ್ಧಿಸಬೇಕು ಎಂಬುವುದು ಸಿಪಿ ಯೋಗೇಶ್ವರ್ ಒಲವಾಗಿದೆ. ಆದರೆ ಇದಕ್ಕೆ ಎಚ್ಡಿಕೆ ಒಪ್ಪಿಗೆ ಸೂಚಿಸುತ್ತಿಲ್ಲ. ಹೀಗಿರುವಾಗ ಹೈಕಮಾಂಡ್ ಬಳಿಯೂ ಯೋಗೇಶ್ವರ್ ಮಾತುಕತೆ ನಡೆಸಿದ್ದಾರೆ. ಆದರೆ ಪೂರಕವಾದ ಬೆಳವಣಿಗೆಗಳು ನಡೆದಿಲ್ಲ. ಸಹಜವಾಗಿ ಎಚ್ಡಿಕೆಗೆ ಚನ್ನಪಟ್ಟಣ ಅನಿವಾರ್ಯವಾಗಿದೆ. ಆ ಕ್ಷೇತ್ರವನ್ನು ಜೆಡಿಎಸ್ನಲ್ಲೇ ಉಳಿಸಿಕೊಳ್ಳಬೇಕು ಎಂಬುವುದು ಅವರ ತಂತ್ರಗಾರಿಕೆಯಾಗಿದೆ. ಆದರೆ ಅವರು ಯಾರನ್ನು ಕಣಕ್ಕಿಳಿಸುತ್ತಾರೆ? ಎಂಬುವುದು ಮಾತ್ರ ಕುತೂಹಲಕ್ಕೆ ಕಾರಣವಾಗಿದೆ. +ನಿಖಿಲ್ ಪರವಾಗಿ ಎಚ್ಡಿಕೆ ಒಲವು? :ಚನ್ನಪಟ್ಟಣದಲ್ಲಿ ತಮ ಪುತ್ರ ನಿಖಿಲ್ ಅವರನ್ನೇ ಕುಮಾರಸ್ವಾಮಿ ಕಣಕ್ಕಿಳಿಸುತ್ತಾರಾ? ಎಂಬ ಕುತೂಹಲವೂ ಕೆರಳಿದೆ. ಪಾದಯಾತ್ರೆಯ ಸಂದರ್ಭದಲ್ಲೂ ನಿಖಿಲ್ ಕುಮಾರಸ್ವಾಮಿ ಮತ್ತು ಎಚ್ಡಿಕೆ ನಡವಳಿಕೆಯೂ ಇದಕ್ಕೆ ಪೂರಕವಾಗಿತ್ತು. ಆದರೆ ಈ ಬಗ್ಗೆ ಎಲ್ಲೂ ಅಧಿಕೃತವಾಗಿ ಅವರು ಸುಳಿವನ್ನು ನೀಡಿಲ್ಲ. +ಸಿಪಿವೈ ಮುಂದಿನ ನಡೆ ಏನು? :ಹಾಗಾದರೆ ಸಿಪಿ ಯೋಗೇಶ್ವರ್ ಅವರ ಮುಂದಿನ ನಡೆ ಏನು ಎಂಬುವುದು ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಚನ್ನಪಟ್ಟಣದಲ್ಲಿ ಟಿಕೆಟ್ ಸಿಗದೆ ಇದ್ದಲ್ಲಿ ಪಕ್ಷೇತರರಾಗಿ ಅವರು ನಿಲ್ಲುವ ಸುಳಿವನ್ನು ನೀಡಿದ್ದಾರೆ. ಆದರೆ ಕಾಂಗ್ರೆಸ್ ನಾಯಕರ ಜೊತೆಗೂ ಸಂಪರ್ಕದಲ್ಲಿ ಇದ್ದಾರೆ ಎಂಬ ಮಾಹಿತಿಯೂ ಇದೆ. ಹೀಗಿರುವಾಗ ಸಿಪಿವೈ ಕಾಂಗ್ರೆಸ್ ಪಕ್ಷದ ಕದ ತಟ್ಟುತ್ತಾರಾ? ಅಥವಾ ಪಕ್ಷೇತರರಾಗಿ ನಿಲ್ಲುತ್ತಾರಾ? ಎಂಬುವುದು ಸದ್ಯ ಪ್ರಶ್ನೆಯಾಗಿ ಉಳಿದಿದೆ. +ಹೈಕಮಾಂಡ್ ನಡೆಯೂ ಕುತೂಹಲ :ಚನ್ನಪಟ್ಟಣ ವಿಚಾರವಾಗಿ ಬಿಜೆಪಿ ಹೈಕಮಾಂಡ್ ನಡೆ ಏನು ಎಂಬುವುದು ಇನ್ನೂ ಸ್ಪಷ್ಟಗೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ತೆರವಾದ 3 ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಈ ಪೈಕಿ ಎರಡು ಕ್ಷೇತ್ರ ಬಿಜೆಪಿಗೆ ಹಾಗೂ ಒಂದು ಕ್ಷೇತ್ರ ಜೆಡಿಎಸ್ಗೆ ಎಂಬ ಮಾತುಕತೆ ನಡೆದಿದೆ ಎನ್ನಲಾಗಿದೆ. ಆದರೆ ಚನ್ನಪಟ್ಟಣದಲ್ಲಿ ಸಿಪಿವೈ ಬಿಜೆಪಿ ಚಿಹ್ನೆಯಲ್ಲೇ ಸ್ಪರ್ಧೆಗೆ ಪಟ್ಟು ಹಿಡಿದಿದ್ದಾರೆ. ಹೀಗಿರುವಾಗ ಬಿಜೆಪಿ ಹೈಕಮಾಂಡ್ ಯಾವ ನಿಲುವು ಕೈಗೊಳ್ಳಲಿದೆ ಎಂಬುವುದನ್ನು ಕಾದುನೋಡಬೇಕಾಗಿದೆ. \ No newline at end of file diff --git a/eesanje/url_46_45_5.txt b/eesanje/url_46_45_5.txt new file mode 100644 index 0000000000000000000000000000000000000000..e636a354e9a875543a5e66f051f49bc2617e4fd6 --- /dev/null +++ b/eesanje/url_46_45_5.txt @@ -0,0 +1,6 @@ +ಹೊಸ ಪಡಿತರ ಚೀಟಿ ವಿತರಣೆ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ +ನವದೆಹಲಿ,ಆ.14-ಹೊಸ ಪಡಿತರಚೀಟಿಗಳನ್ನು ನೀಡುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ನಿಂದ ಆರಂಭಿಸುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ಗಾಗಿ 2.95 ಲಕ್ಷ ಅರ್ಜಿಗಳು ಬಂದಿದ್ದವು. ಅವುಗಳಲ್ಲಿ ಅರ್ಹರಿಗಾಗಿ ಪರಿಶೀಲನೆ ನಡೆಸಿದಾಗ ಸುಮಾರು 50 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಜಾಗೊಂಡಿವೆ. 2.40 ಲಕ್ಷ ಅರ್ಜಿಗಳನ್ನು ಪರಿಷ್ಕರಿಸಲಾಗಿದೆ ಎಂದರು. +ಇದೇ ರೀತಿ ಆಹಾರ ಇಲಾಖೆಯಲ್ಲಿ ಅರ್ಹರನ್ನು ಗುರುತಿಸುವ ಕೆಲಸ ಮಾಡುತ್ತಿದ್ದೇವೆ. ಹೊಸದಾಗಿ 90 ಸಾವಿರ ಕಾರ್ಡ್ಗಳಿಗೆ ಬೇಡಿಕೆ ಇದೆ. ಅವುಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಬಾಕಿ ಇರುವ ಅರ್ಜಿಗಳನ್ನು ಇತ್ಯರ್ಥಪಡಿಸಿದ ಬಳಿಕ ಸೆಪ್ಟೆಂಬರ್ನಲ್ಲಿ ಹೊಸ ಕಾರ್ಡ್ಗಳನ್ನು ನೀಡಲು ಆರಂಭಿಸಲಾಗುವುದು ಎಂದು ಹೇಳಿದರು. +ಹೊಸ ಕಾರ್ಡ್ಗಳು ಎಂದರೆ ಅವಿಭಕ್ತ ಕುಟುಂಬಗಳು ವಿಭಜನೆಯಾಗಿದ್ದರೆ, ಮಕ್ಕಳು, ತಂದೆ-ತಾಯಿಯಿಂದ ಬೇರೆ ವಾಸವಾಗಿದ್ದರೆ ಅವರಿಗೆ ಪ್ರತ್ಯೇಕ ಕಾರ್ಡ್ ನೀಡುವ ಕುರಿತು ತಹಸೀಲ್ದಾರ್ ಮತ್ತು ಆಹಾರ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುತ್ತಾರೆ. ಅನಂತರ ಅರ್ಹರಿಗೆ ಕಾರ್ಡ್ಗಳನ್ನು ನೀಡಲಾಗುವುದು ಎಂದರು. +ಸಮೀಕ್ಷೆಯ ವೇಳೆ ಅರ್ಹರು ಮತ್ತು ಅನರ್ಹರನ್ನು ಗುರುತಿಸಲಾಗುವುದು. ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿದರೆ, ಅನರ್ಹರಿಗೆ ಎಪಿಎಲ್ ಕಾರ್ಡ್ ನೀಡಲಾಗುತ್ತದೆ. ರಾಜ್ಯದಲ್ಲಿ 14 ಲಕ್ಷ ಎಪಿಎಲ್ ಕಾರ್ಡ್ಗಳಿದ್ದು, ಅವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡಲಾಗುವುದು. ಹೆಚ್ಚು ಜನ ಪಡಿತರ ಅಂಗಡಿಗಳಿಂದ ಅಕ್ಕಿ ಖರೀದಿಸುವುದಿಲ್ಲ. ಈ ರೀತಿ ಕಾರ್ಡ್ ಸೌಲಭ್ಯ ಪಡೆದುಕೊಳ್ಳುವವರ ಪ್ರಮಾಣ 1 ರಿಂದ 2 ಲಕ್ಷ ಮಾತ್ರ ಎಂದು ಹೇಳಿದರು. \ No newline at end of file diff --git a/eesanje/url_46_45_6.txt b/eesanje/url_46_45_6.txt new file mode 100644 index 0000000000000000000000000000000000000000..42d6da6c2e2dccd0b13efe85f813e48d53d0c2ca --- /dev/null +++ b/eesanje/url_46_45_6.txt @@ -0,0 +1,10 @@ +ಬಡವರಿಗೆ ಮಾತ್ರ ಗ್ಯಾರಂಟಿಗಳನ್ನು ಸೀಮಿತಗೊಳಿಸಲು ಚರ್ಚೆ ಜೋರು +ನವದೆಹಲಿ,ಆ.14-ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳು ಪರಿಷ್ಕರಣೆಯಾಗಬೇಕು ಎಂಬ ಬೇಡಿಕೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ದೆಹಲಿ ಪ್ರವಾಸದಲ್ಲಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಶ್ರೀಮಂತರಿಗೆ ಹಾಗೂ ಅಗತ್ಯ ಇಲ್ಲದಿರುವವರಿಗೆ ಪಂಚಖಾತ್ರಿ ಯೋಜನೆಗಳ ಸೌಲಭ್ಯ ನೀಡುವುದನ್ನು ಪರಿಷ್ಕರಣೆ ಮಾಡಬೇಕು. +ಎಲ್ಲರಿಗೂ ಸೌಲಭ್ಯ ನೀಡುತ್ತಿರುವುದರಿಂದಾಗಿ ಬೊಕ್ಕಸದ 59 ಸಾವಿರ ಕೋಟಿ ರೂ.ಗಳು ಖರ್ಚಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲದ ಕೊರತೆಯಾಗುತ್ತಿದೆ. ಶಾಸಕರು ಪ್ರತಿ ಕ್ಷೇತ್ರಕ್ಕೂ ವಿಶೇಷ ಅನುದಾನ ಕೇಳುತ್ತಿದ್ದು, ಅದನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಂಚಖಾತ್ರಿ ಯೋಜನೆಗಳನ್ನು ಬಡವರಿಗೆ ಮಾತ್ರ ಸೀಮಿತಗೊಳಿಸಲು ಅವಕಾಶ ನೀಡುವಂತೆ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದಾರೆ. +ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವರು ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿಯವರ ಅಭಿಪ್ರಾಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಭಾಗಶಃ ಸಹಮತ ಸೂಚಿಸಿದ್ದಾರೆ. +ದೆಹಲಿಯಲ್ಲಿ ಮಾತನಾಡಿದ ಇಬ್ಬರು ಸಚಿವರು, ಹೈಕಮಾಂಡ್ ನಾಯಕರ ಬಳಿಯೂ ತಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಎಚ್.ಸಿ.ಮಹದೇವಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸತೀಶ್ ಜಾರಕಿಹೊಳಿ ಏನು ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ. ಆದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ತನ್ನ ಪ್ರಣಾಳಿಕೆಗಾಗಿ ಪಂಚಖಾತ್ರಿಗಳ ಭರವಸೆ ನೀಡಿತ್ತು. ಚುನಾವಣೆ ಬಳಿಕ ಅದನ್ನು ಜಾರಿಗೆ ತಂದಿದ್ದೇವೆ. +ಯಾವುದೇ ಬದಲಾವಣೆ ಅಥವಾ ಪರಿಷ್ಕರಣೆಯಾಗಬೇಕಾದರೆ ಸರ್ಕಾರದ ಸಚಿವ ಸಂಪುಟದಲ್ಲಿ ಮತ್ತು ಪಕ್ಷದಲ್ಲಿ ನಿರ್ಧಾರಗಳಾಗಬೇಕು, ಸದ್ಯಕ್ಕೆ ನಮ ಮುಂದೆ ಅಂತಹ ಪ್ರಸ್ತಾಪಗಳಿಲ್ಲ ಎಂದರು.ಜನರ ನಿರೀಕ್ಷೆಗಳು ಬಹಳಷ್ಟಿವೆ. ಅವೆಲ್ಲವನ್ನೂ ಈಡೇರಿಸಲು ಸಂಪನೂಲ ಅಗತ್ಯವಿದೆ. ಇದಕ್ಕಾಗಿ ತೆರಿಗೆ ಸಂಗ್ರಹವನ್ನು ಪ್ರಾಮಾಣಿಕವಾಗಿ ಹೆಚ್ಚಿಸಬೇಕು. ಬೊಕ್ಕಸ ತುಂಬಿ ತುಳುಕಿದಾಗ ಏನು ಬೇಕಾದರೂ ಮಾಡಬಹುದು. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಅಗತ್ಯವಿದೆ. ಅವುಗಳನ್ನು ಬದಲಾವಣೆ ಮಾಡುವ ಸಾಧ್ಯತೆಗಳಿಲ್ಲ ಎಂದು ಹೇಳಿದರು. +ಇದೇ ಸಂದರ್ಭದಲ್ಲಿ ಮಾತನಾಡಿರುವ ಸಚಿವ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರಂಟಿ ಯೋಜನೆಗಳಲ್ಲಿ ಬದಲಾವಣೆಗಳಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ಸತೀಶ್ ಜಾರಕಿಹೊಳಿಯವರ ಅಭಿಪ್ರಾಯ ವೈಯಕ್ತಿಕವಾದದು. ಬಡವರು, ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಪಂಚಖಾತ್ರಿ ಯೋಜನೆಗಳ ಅಗತ್ಯವಿದೆ. ಬಹುತೇಕ ಯೋಜನೆಗಳನ್ನು ಬಿಪಿಎಲ್ ಕುಟುಂಬಕ್ಕೆ ಸೌಲಭ್ಯ ನೀಡುವ ದೃಷ್ಟಿಯಿಂದ ರೂಪಿಸಲಾಗಿದೆ. +ಒಂದು ವೇಳೆ ಅನರ್ಹರಿದ್ದರೆ ಅದನ್ನು ಪರಿಷ್ಕರಣೆ ಮಾಡುವುದರಲ್ಲಿ ತಪ್ಪಿಲ್ಲ ಎಂದರು. 200 ಯೂನಿಟ್ ಮೇಲ್ಪಟ್ಟು ವಿದ್ಯುತ್ ಬಳಕೆ ಮಾಡುವವರ ಸಂಖ್ಯೆ ರಾಜ್ಯದಲ್ಲಿ ಶೇ.5 ರಷ್ಟು ಮಾತ್ರ. ಹೀಗಾಗಿ ಗೃಹಜ್ಯೋತಿ ಎಲ್ಲರಿಗೂ ತಲುಪುತ್ತಿದೆ. ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಗಳು ಬಿಪಿಎಲ್ನವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾಗಿದೆ. ಅದರಲ್ಲಿ ಎಪಿಎಲ್ನವರಿದ್ದಾರೆ. ಅನರ್ಹರನ್ನು ಗುರುತಿಸಿ ಪರಿಷ್ಕರಣೆ ಮಾಡಲಾಗುವುದು ಎಂದು ಹೇಳಿದರು. +ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದವರ ಪೈಕಿ ಬಹಳಷ್ಟು ಮಂದಿಯನ್ನು ಅನರ್ಹಗೊಳಿಸಿ ಅರ್ಜಿ ವಜಾಗೊಳಿಸಲಾಗಿದೆ. ಇನ್ನು ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ ನೀಡುವ ಜೊತೆಗೆ ಔದ್ಯೋಗಿಕ ತರಬೇತಿ ನೀಡಿ ಖಾಯಂ ಕೆಲಸ ಪಡೆದುಕೊಳ್ಳಲು ನೆರವಾಗುವ ಸಂಕಲ್ಪವನ್ನು ಸರ್ಕಾರ ಕೈಗೊಂಡಿದೆ. ಶಕ್ತಿ ಯೋಜನೆ ಸಾರ್ವತ್ರಿಕವಾಗಿ ಬಳಕೆಯಾಗುತ್ತಿದೆ ಎಂದರು. +ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಬಗ್ಗೆ ಆ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಬಹುದು. ಅನ್ನಭಾಗ್ಯ ಯೋಜನೆಯಲ್ಲಿ ಅನರ್ಹರನ್ನು ಗುರುತಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_46_45_7.txt b/eesanje/url_46_45_7.txt new file mode 100644 index 0000000000000000000000000000000000000000..c22b03fddb6d837dbb3e91913547a14fdc02abed --- /dev/null +++ b/eesanje/url_46_45_7.txt @@ -0,0 +1,12 @@ +ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಕೇಶವಕೃಪದಲ್ಲಿ ‘ಸಂಘ’ ಸಂಧಾನ +ಬೆಂಗಳೂರು,ಆ.14-ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ. +ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್ಎಸ್ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಒಟ್ಟು 40 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿದೆ. +ವಿಜಯೇಂದ್ರ ಬಣದ 20 ಮಂದಿ ಹಾಗೂ ಯತ್ನಾಳ್ ಬಣದ 20 ಮಂದಿ ಮಾತ್ರ ಸಭೆಗೆ ಬರುವಂತೆ ಸಂಘ ಪರಿವಾರದ ನಾಯಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾರೂ ಕೂಡ ಬಲಾಬಲ ಪ್ರದರ್ಶನ ನಡೆಸುವಂತಿಲ್ಲ ಎಂದು ತಾಕೀತು ಮಾಡಿದೆ. +ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಮನವಿಯಂತೆ ಆರ್ಎಸ್ಎಸ್ ನಾಯಕರು ಸಂಧಾನ ಸಭೆಯನ್ನು ಏರ್ಪಡಿಸಿದ್ದಾರೆ. ಎರಡು ಬಣದವರನ್ನು ಒಟ್ಟಿಗೆ ಕೂರಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ. +ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪಕ್ಷದ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಎಲ್ಲರೂ ಕೂಡ ಪ್ರತಿಷ್ಠೆಗೆ ಬಿದ್ದವರಂತೆ ನಡೆದುಕೊಳ್ಳುತ್ತಿರುವುದರಿಂದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುವ ಮೊದಲೇ ಪ್ರಾರಂಭಿಕ ಹಂತದಲ್ಲೇ ಚಿವುಟಿ ಹಾಕಬೇಕೆಂದು ಕೇಂದ್ರದ ಸಚಿವರೊಬ್ಬರು ಆರ್ಎಸ್ಎಸ್ನ ಶಿವಮೊಗ್ಗ ಮೂಲದ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಆತೀಯರಾಗಿರುವ ಆರ್ಎಸ್ಎಸ್ನ ಈ ಪ್ರಭಾವಿ ನಾಯಕರು ಸಾಮಾನ್ಯವಾಗಿ ಬಿಜೆಪಿಯ ಚಟುವಟಿಕೆಗಳಲ್ಲಿ ಮಧ್ಯಪ್ರವೇಶ ಮಾಡುವುದು, ಇಲ್ಲವೇ ತಲೆ ಹಾಕುವುದು ತೀರಾ ವಿರಳ. +ವಿಜಯೇಂದ್ರ, ಬಿಎಸ್ವೈ ಹಾಗೂ ಕೇಂದ್ರ ಸಚಿವರ ಮನವಿ ಮೇರೆಗೆ ಸಭೆ ನಡೆಸುವಂತೆ ಮುಕುಂದ್ ಅವರಿಗೆ ಪ್ರಭಾವಿ ನಾಯಕರು ನಿರ್ದೇಶನ ನೀಡಿದ್ದಾರೆ.ಸಮಸ್ಯೆ ಉಂಟಾಗಲು ಕಾರಣಗಳೇನು ಎಂಬುದರ ಕುರಿತು ವಿಸ್ತೃತವಾಗಿ ವರದಿಯನ್ನು ತರಬೇಕೆಂದು ಎರಡು ಬಣದವರಿಗೆ ಸೂಚನೆ ಕೊಡಲಾಗಿದೆ. +ಮುಡಾ ಪಾದಯಾತ್ರೆ ಯಶಸ್ವಿಯಾಗಿದೆಯೇ? ಪಾದಯಾತ್ರೆ ಆರಂಭಕ್ಕೂ ಮುನ್ನ ಯಾರ್ಯಾರನ್ನು ಆಹ್ವಾನಿಸಲಾಗಿತ್ತು, ಕೆಲವರು ಗೈರು ಹಾಜರಾಗಲು ಕಾರಣಗಳೇನು? ಇತ್ಯಾದಿಗಳನ್ನು ಸವಿಸ್ತಾರವಾಗಿ ನೀಡಬೇಕೆಂದು ವಿಜಯೇಂದ್ರ ಬಣಕ್ಕೆ ಸೂಚನೆ ನೀಡಿದ್ದಾರೆ. +ಇದೇ ರೀತಿ ಯತ್ನಾಳ್ ಬಣಕ್ಕೂ ವಿಜಯೇಂದ್ರ ಮೇಲೆ ಮುನಿಸಿಕೊಳ್ಳಲು ಕಾರಣವೇನು? ಪ್ರತ್ಯೇಕ ಸಭೆ ನಡೆಸಿದ್ದರ ಔಚಿತ್ಯವಾದರೂ ಏನು? ಪಾದಯಾತ್ರೆಗೆ ಏಕೆ ಪಾಲ್ಗೊಳ್ಳಲಿಲ್ಲ? ಪಕ್ಷದ ಚಿಹ್ನೆಯಡಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುತ್ತೀರಾ? ಇದರಲ್ಲಿ ವಿಜಯೇಂದ್ರ ಭಾಗಿಯಾಗಬೇಕೇ? ಬೇಡವೇ? ಹೊಂದಾಣಿಕೆಯ ರಾಜಕಾರಣ ಪದೇ ಪದೇ ಕೇಳಿಬರುತ್ತಿರುವುದೇಕೆ? ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿರುವುದರ ಬಗ್ಗೆಯೂ ಉತ್ತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಇದೀಗ 21 ರಂದು ಉಭಯ ಬಣಗಳು ಮುಖಾಮುಖಿಯಾಗಲಿದ್ದು, ತಮತಮ ವಾದವನ್ನು ಮುಂದಿಡಲಿದ್ದಾರೆ. ರಾಜ್ಯಾಧ್ಯಕ್ಷನಾದ ಮೇಲೆ ಮಾಡಿರುವ ಸಂಘಟನೆ ಲೋಕಸಭಾ ಚುನಾವಣಾ ಫಲಿತಾಂಶ ದಾವಣಗೆರೆ, ಕಲಬುರಗಿ, ಬೀದರ್, ಚಿಕ್ಕೋಡಿ ಇತರೆ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣಗಳೇನು? ಎಂಬುದರ ಕುರಿತು ವಿಜಯೇಂದ್ರ ವರದಿ ನೀಡಲಿದ್ದಾರೆ.ನನ್ನ ಮೇಲೆ ಹೊಂದಾಣಿಕೆ ರಾಜಕಾರಣ ಆರೋಪ ಮಾಡುವವರು ಆಡಳಿತಾರೂಢ ಕಾಂಗ್ರೆಸ್ ನಾಯಕರ ಜೊತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬುದನ್ನು ಎಳೆಎಳೆಯಾಗಿ ಬಿಡಿಸಿಡಲಿದ್ದಾರೆ. +ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಂಘ ಪರಿವಾರದ ನಾಯಕರು ಎರಡೂ ಬಣದವರಿಗೆ ಸೂಚನೆ ಕೊಡಲಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_45_8.txt b/eesanje/url_46_45_8.txt new file mode 100644 index 0000000000000000000000000000000000000000..1768543293b73cfc13681d90af744ddeaa3e26a3 --- /dev/null +++ b/eesanje/url_46_45_8.txt @@ -0,0 +1,13 @@ +ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು +ಬೆಂಗಳೂರು,ಆ.14-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ರಾಜ್ಯಪಾಲರಿಗೆ ದೂರು ನೀಡಲಾಗಿದೆ. +ಕಳೆದ ಮೂರು ವಾರಗಳಿಂದ ಪ್ರಾಸಿಕ್ಯೂಷನ್ ಮುನ್ನಲೆಗೆ ಬಂದಿದ್ದು, ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದಾಖಲೆಗಳ ಸಮೇತ ದೂರು ಕೊಟ್ಟಿದ್ದಾರೆ.ಈಗಾಗಲೇ ದಾಖಲೆಗಳನ್ನು ನೀಡಿ ಹಲವು ದಿನಗಳು ಕಳೆದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇದಕ್ಕೆ ರಾಜ್ಯ ಸರ್ಕಾರವು ಸಮರ್ಪಕವಾದ ಉತ್ತರವನ್ನು ನೀಡಿರುವುದು ಹಳೆಯ ವಿಷಯ. +ಸದ್ಯ ಎಲ್ಲರ ಚಿತ್ತ ಕಾರ್ಯಾಂಗದ ಮುಖ್ಯಸ್ಥರೂ ಆಗಿರುವ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಿದ್ದಾರೆಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ. ಹಾಗಾದರೆ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಎಂದರೇನು? ಇದರಲ್ಲಿ ರಾಜ್ಯಪಾಲರ ಪಾತ್ರವೇನು? ಒಂದು ವೇಳೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ ಏನಾಗಲಿದೆ? +ಪ್ರಾಸಿಕ್ಯೂಷನ್ ಎಂದರೇನು? :ಪ್ಯಾಸಿಕ್ಯೂಷನ್ ಎಂದರೆ ಸಾಮಾನ್ಯವಾಗಿ ಕಾನೂನು ಕ್ರಮ ಎನ್ನಬಹುದು. ಅದರಲ್ಲೂ ಮುಖ್ಯಮಂತ್ರಿಯ ವಿರುದ್ಧ ಕಾನೂನು ಕ್ರಮ ಎನ್ನುವುದು ಭಾರತೀಯ ರಾಜ್ಯದಲ್ಲಿ ಸರ್ಕಾರದ ಮುಖ್ಯಸ್ಥರಾಗಿರುವ ಹಾಲಿ ಮುಖ್ಯಮಂತ್ರಿಯ ವಿರುದ್ಧ ಅಪರಾಧ ಚಟುವಟಿಕೆಗಳು ಅಥವಾ ಕಾನೂನಿನ ಉಲ್ಲಂಘನೆಗಾಗಿ ಕಾನೂನು ಪ್ರಕ್ರಿಯೆಗಳನ್ನು ಒಳಗೊಂಡಿರುತ್ತದೆ.ಸಿಎಂ ಸರ್ಕಾರದ ಮುಖ್ಯಸ್ಥನಾಗಿದ್ದು, ಸಂವಿಧಾನಾತಕವಾಗಿ, ಆಡಳಿತಾತಕವಾಗಿ ಉನ್ನತ ಶ್ರೇಣಿಯ ಸ್ಥಾನ ಮತ್ತು ಅವರಿಗೆ ನೀಡಲಾದ ಕಾನೂನು ರಕ್ಷಣೆಗಳಿಂದಾಗಿ ಈ ಪ್ರಕ್ರಿಯೆಯು ಸಾಮಾನ್ಯವಾಗಿ ಸಂಕೀರ್ಣವಾಗಿದೆ. +ಕಾನೂನು ವಿನಾಯಿತಿ ಇದೆಯಾ? :ಮುಖ್ಯಮಂತ್ರಿಗಳು ಇತರ ಸಾರ್ವಜನಿಕ ಅಧಿಕಾರಿಗಳಂತೆ, ಕಾನೂನು ಕ್ರಮದಿಂದ ಸಂಪೂರ್ಣ ವಿನಾಯಿತಿ ಹೊಂದಿಲ್ಲ. ಆದಾಗ್ಯೂ, ಕೆಲವು ರಕ್ಷಣೆಗಳಿವೆ. ಉದಾಹರಣೆಗೆ, ಕೆಲವು ಸಂದರ್ಭಗಳಲ್ಲಿ ಕಾನೂನು ಕ್ರಮವನ್ನು ಪ್ರಾರಂಭಿಸುವ ಮೊದಲು ರಾಜ್ಯದ ರಾಜ್ಯಪಾಲರ ಒಪ್ಪಿಗೆ ಅಗತ್ಯವಾಗಬಹುದು. +ಪ್ರಾಸಿಕ್ಯೂಷನ್ಗೆ ಅನುಮೋದನೆ :ಸಿಎಂ ಮೇಲಿರುವ ಆರೋಪವು ಮೇಲ್ನೋಟಕ್ಕೆ ಸತ್ಯ ಎಂದು ಕಂಡು ಬಂದರೆ ಕಾನೂನು ಪ್ರಕ್ರಿಯೆಗಳು ಪ್ರಾರಂಭವಾಗುವ ಮೊದಲು ರಾಜ್ಯಪಾಲರಂತಹ ಮೇಲಿನ ಶ್ರೀಣಿಯ ಅಧಿಕಾರಿಗಳಿಂದ ಅನುಮತಿ ಅಗತ್ಯವಾಗುತ್ತದೆ.ಕಾನೂನು ಕ್ರಮ ಕೈಗೊಳ್ಳುವ ನಿರ್ಧಾರವನ್ನು ಲಘುವಾಗಿ ತೆಗೆದುಕೊಳ್ಳಲಾಗುವುದಿಲ್ಲ ಮತ್ತು ವಸ್ತುನಿಷ್ಠ ಸಾಕ್ಷ್ಯವನ್ನು ಆಧರಿಸಿದೆ ಎಂದು ಖಚಿತಪಡಿಸಿಕೊಳ್ಳಬೇಕಾಗುತ್ತದೆ. +ತನಿಖೆ ನಡೆಸುವವರು ಯಾರು? :ಪ್ರಾಸಿಕ್ಯೂಷನ್ಗೆ ಮುನ್ನ, ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಯಂತಹ ಏಜೆನ್ಸಿಗಳು ಸಾಮಾನ್ಯವಾಗಿ ಸಂಪೂರ್ಣ ತನಿಖೆಯನ್ನು ನಡೆಸುತ್ತವೆ. ತನಿಖೆಯು ಆರೋಪಗಳನ್ನು ಬೆಂಬಲಿಸಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸಬೇಕು. +ನ್ಯಾಯಾಲಯದ ಪ್ರಕ್ರಿಯೆ ಹೇಗಿರುತ್ತವೆ? :ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮೋದಿಸಿದರೆ, ಪ್ರಕರಣವು ನ್ಯಾಯಾಲಯಕ್ಕೆ ಹೋಗುತ್ತದೆ. ಅಲ್ಲಿ ಮುಖ್ಯಮಂತ್ರಿಯನ್ನು ಇತರ ಆರೋಪಿಗಳಂತೆ ಪರಿಗಣಿಸಲಾಗುತ್ತದೆ. ನ್ಯಾಯಾಲಯದ ಪ್ರಕ್ರಿಯೆಯು ಆರೋಪಗಳನ್ನು ರಚಿಸುವುದು, ಸಾಕ್ಷ್ಯವನ್ನು ಪ್ರಸ್ತುತಪಡಿಸುವುದು ಮತ್ತು ವಿಚಾರಣೆಯನ್ನು ನಡೆಸುವುದು ಒಳಗೊಂಡಿರುತ್ತದೆ. +ರಾಜಕೀಯ ಪರಿಣಾಮಗಳೇನು? :ಮುಖ್ಯಮಂತ್ರಿಯ ವಿರುದ್ಧದ ಕಾನೂನು ಕ್ರಮವು ಸಾಮಾನ್ಯವಾಗಿ ಗಮನಾರ್ಹ ರಾಜಕೀಯ ಪರಿಣಾಮಗಳನ್ನು ಹೊಂದಿರುತ್ತದೆ, ಏಕೆಂದರೆ ಇದು ರಾಜೀನಾಮೆ ಬೇಡಿಕೆಗಳಿಗೆ ಕಾರಣವಾಗಬಹುದು, ರಾಜಕೀಯ ಅಸ್ಥಿರತೆ ಮತ್ತು ರಾಜ್ಯದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಮುಖ್ಯಮಂತ್ರಿಯ ವಿರುದ್ಧದ ಕಾನೂನು ಕ್ರಮವು ಕೆಲವು ಸಾಂವಿಧಾನಿಕ ಮತ್ತು ಕಾನೂನು ರಕ್ಷಣೆಗಳಿಂದ ಬದ್ಧವಾಗಿರುವ ಕಾನೂನು ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. +ಕಾನೂನು ಜಾರಿ ಸಂಸ್ಥೆಗಳು ಅಥವಾ ವಿಶೇಷ ತನಿಖಾ ತಂಡಗಳಿಂದ ತನಿಖೆ ನಡೆಯುತ್ತದೆ. ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಔಪಚಾರಿಕ ಆರೋಪಗಳನ್ನು ದಾಖಲಿಸಲಾಗುತ್ತದೆ. ಅಪರಾಧಿಯೋ ಅಥವಾ ನಿರಪರಾಧಿಯೋ ಅಂತ ನಿರ್ಧರಿಸಲು ನ್ಯಾಯಾಂಗ ಪ್ರಕ್ರಿಯೆ ನಡೆಸಲಾಗುತ್ತದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ, ಸಿಎಂ ಜೈಲುವಾಸ ಸೇರಿದಂತೆ ದಂಡವನ್ನು ಎದುರಿಸುವ ಸಾಧ್ಯತೆ ಇರುತ್ತದೆ. +ಯಾವ ಪ್ರಾಸಿಕ್ಯೂಷನ್ ನಡೆಯಬಹುದು? :ಭ್ರಷ್ಟಾಚಾರ: ದುರುಪಯೋಗ, ಲಂಚ, ಅಥವಾ ಸಾರ್ವಜನಿಕ ನಿಧಿಯ ದುರುಪಯೋಗ. ಕ್ರಿಮಿನಲ್ ದುಷ್ಕೃತ್ಯ: ವಂಚನೆ, ನಕಲಿ ಅಥವಾ ಹಿಂಸಾಚಾರದಂತಹ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. +ಅಧಿಕಾರದ ದುರುಪಯೋಗ:ವೈಯಕ್ತಿಕ ಲಾಭಕ್ಕಾಗಿ ಅಥವಾ ಇತರರಿಗೆ ಹಾನಿ ಮಾಡಲು ಅಧಿಕೃತ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು.ಚುನಾವಣಾ ಅಪರಾಧಗಳು: ಚುನಾವಣಾ ಕಾನೂನುಗಳ ಉಲ್ಲಂಘನೆ, ಪ್ರಚಾರದ ಹಣಕಾಸು ಅಕ್ರಮಗಳು ಅಥವಾ ಮತ-ಖರೀದಿ. \ No newline at end of file diff --git a/eesanje/url_46_45_9.txt b/eesanje/url_46_45_9.txt new file mode 100644 index 0000000000000000000000000000000000000000..be74fa2c055735f9c3cde6a0cb8aed5e2af5ef01 --- /dev/null +++ b/eesanje/url_46_45_9.txt @@ -0,0 +1,3 @@ +ರಾಜ್ಯದ 19 ಪೊಲೀಸ್‌‍ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್ +ಬೆಂಗಳೂರು, ಆ.14-ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪೊಲೀಸರಿಗೆ ನೀಡುವ ರಾಷ್ಟ್ರಪತಿಯವರ ವಿಶಿಷ್ಠ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ರಾಜ್ಯದ 19 ಮಂದಿ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. +ವಿಶಿಷ್ಟ ಸೇವಾ ಪದಕ ಪುರಸ್ಕೃತರು:ಎಂ.ಚಂದ್ರಶೇಖರ್‌- ಎಡಿಜಿಪಿ, ಐಎಸ್‌‍ಡಿಶ್ಲಾಘನೀಯ ಸೇವಾ ಪದಕ ಪುರಸ್ಕೃತರು:ಜೋಷಿ ಶ್ರೀನಾಥ್‌ ಮಹದೇವ- ಪೊಲೀಸ್‌‍ ಅಧೀಕ್ಷಕರು, ಲೋಕಾಯುಕ್ತಸಿ.ಕೆ.ಬಾಬ- ಪೊಲೀಸ್‌‍ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆರಾಮಗೊಂಡ ಬಿ.ಬಸರಗಿ- ಅಪರ ಪೊಲೀಸ್‌‍ ಅಧೀಕ್ಷಕರು, ಬಳ್ಳಾರಿ ಜಿಲ್ಲೆಎಂ.ಡಿ.ಶರತ್‌- ಪೊಲೀಸ್‌‍ ಅಧೀಕ್ಷಕರು, ಸಿಐಡಿ, ಬೆಂಗಳೂರುಗೋಪಾಲ್‌ ರೆಡ್ಡಿ- ಡಿಸಿಪಿ, ಸಿಎಆರ್‌ ಪಶ್ಚಿಮ, ಬೆಂಗಳೂರುಗಿರಿ ಕೃಷ್ಣಮೂರ್ತಿ- ಡಿವೈಎಸ್‌‍ಪಿ, ಚನ್ನಪಟ್ಟಣ ಉಪವಿಭಾಗ, ರಾಮನಗರ ಜಿಲ್ಲೆ,ಪಿ. ಮುರಳೀಧರ್‌- ಡಿವೈಎಸ್‌‍ಪಿ, ಚಿಂತಾಮಣಿ ಉಪವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆಬಸವೇಶ್ವರ- ಡಿವೈಎಸ್‌‍ಪಿ, ಪೊಲೀಸ್‌‍ ಪ್ರಧಾನ ಕಚೇರಿ, ಬೆಂಗಳೂರುಬಸವರಾಜು ಕೆ.- ಡಿವೈಎಸ್‌‍ಪಿ, ಐಎಸ್‌‍ಡಿ, ಕಲಬುರಗಿಎನ್‌.ಮಹೇಶ್‌- ಸಹಾಯಕ ನಿರ್ದೇಶಕರು, ರಾಜ್ಯಗುಪ್ತವಾರ್ತೆ, ಬೆಂಗಳೂರುರವೀಶ್‌ ಎಸ್‌‍.ನಾಯಕ್‌- ಎಸಿಪಿ, ಸಿಸಿಆರ್‌ಬಿ, ಮಂಗಳೂರು ನಗರಪ್ರಭಾಕರ್‌ ಜಿ.- ಎಸಿಪಿ, ಸಂಚಾರ ಯೋಜನೆ, ಬೆಂಗಳೂರುಹರೀಶ್‌ ಹೆಚ್‌.ಆರ್‌- ಸಹಾಯಕ ಕಮಾಂಡೆಂಟ್‌, 11ನೆ ಪಡೆ, ಕೆಎಸ್‌‍ಆರ್‌ಪಿ, ಹಾಸನಎಸ್‌‍.ಮಂಜುನಾಥ್‌- ಆರ್‌ಪಿಐ, 3ನೆ ಪಡೆ, ಕೆಎಸ್‌‍ಆರ್‌ಪಿ, ಬೆಂ.ಮಂಜುನಾಥ ಎಸ್‌‍. ಕಲ್ಲೆದೇವರ್‌- ಪೊಲೀಸ್‌‍ ಸಬ್‌ ಇನ್‌್ಸಪೆಕ್ಟರ್‌, ಎಫ್‌ಪಿಬಿ, ದಾವಣಗೆರೆಗೌರಮ- ಎಎಸ್‌‍ಐ, ಸಿಐಡಿ ಬೆಂ.ವಿಜಯ್‌ಕುಮಾರ್‌- ಸಿಎಚ್‌ಸಿ, ಡಿಸಿಆರ್‌ಬಿ, ಉಡುಪಿ ಜಿಲ್ಲೆಮಹಬೂಬ್‌ ಸಾಹೇಬ ಎನ್‌.ಮುಜಾವರ್‌- ಸಿಎಚ್‌ಸಿ, ಮನಗುಳಿ ಪೊಲೀಸ್‌‍ ಠಾಣೆ, ವಿಜಯಪುರ ಜಿಲ್ಲೆ \ No newline at end of file diff --git a/eesanje/url_46_46_1.txt b/eesanje/url_46_46_1.txt new file mode 100644 index 0000000000000000000000000000000000000000..4c3e94de9ddd896e2fbce0e8d315c5babc5861a7 --- /dev/null +++ b/eesanje/url_46_46_1.txt @@ -0,0 +1,9 @@ +ಬೆಂಗಳೂರು-ಬೆಳಗಾವಿಯಲ್ಲಿ 2 ಪ್ರತ್ಯೇಕ ಕುಕ್ಕರ್ ಸ್ಫೋಟ ಪ್ರಕರಣ, 8 ಮಂದಿಗೆ ಗಾಯ +ಬೆಂಗಳೂರು,ಆ.13-ರಾಜಧಾನಿ ಬೆಂಗಳೂರು ನಗರದ ಪುಟ್ಟೆನಹಳ್ಳಿ ಮತ್ತು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಕುಕ್ಕರ್‌ ಸ್ಪೋಟ ಪ್ರಕರಣದಲ್ಲಿ ಒಟ್ಟು 8 ಮಂದಿ ಗಾಯಗೊಂಡಿದ್ದಾರೆ. +ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೋಟೆಲ್‌ ರೂಮ್‌ನಲ್ಲಿ ಕುಕ್ಕರ್‌ ಸ್ಪೋಟಗೊಂಡು ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ. +ಸವದತ್ತಿಗೆ ಬಂದಿದ್ದ ಬೆಂಗಳೂರು ಮತ್ತು ಯಾದಗಿರಿ ಮೂಲದ ಭಕ್ತಾಧಿಗಳು ಹೋಟೆಲ್‌ನಲ್ಲಿ ರೂಮ್‌ಗಳನ್ನು ಮಾಡಿಕೊಂಡಿದ್ದು, ದೇವಿಗೆ ನೇವೈದ್ಯಕ್ಕಾಗಿ ಹೋಳಿಗೆ ತಯಾರಿಸಲು ಪ್ರೆಸರ್‌ ಕುಕ್ಕರ್‌ನಲ್ಲಿ ಅಡುಗೆ ಮಾಡುತ್ತಿದ್ದಾಗ ಏಕಾಏಕಿ ಸ್ಪೋಟಗೊಂಡಿದೆ. +ಪರಿಣಾಮ ರೂಮ್‌ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ.ಭೀಮಾಶಂಕರ ಗುಳೇದ ಹಾಗೂ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. +ಬೆಂಗಳೂರು ವರದಿ:ಅನ್ನ ಮಾಡಲು ಇಟ್ಟಿದ್ದ ಕುಕ್ಕರ್‌ ಏಕಾಏಕಿ ಸ್ಫೋಟಗೊಂಡು, ಶಾರ್ಟ್‌ ಸೆಕ್ಯೂಟ್‌ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಯುವಕರು ಗಾಯಗೊಂಡಿದ್ದಾರೆ.ದೆಹಲಿ ಮೂಲದ ಮೋಸಿನ್‌ ಮತ್ತು ಅದರ್‌ಖಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಈ ಇಬ್ಬರು ಯುವಕರು ಪುಟ್ಟೇನಹಳ್ಳಿಯ 24ನೇ ಮುಖ್ಯರಸ್ತೆಯಲ್ಲಿ ರೂಮ್‌ ಮಾಡಿಕೊಂಡು ವಾಸವಾಗಿದ್ದು, ಸೆಲ್ಯೂನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.ಇಂದು ಮಂಗಳವಾರವಾದ್ದರಿಂದ ರಜೆ ಇದ್ದ ಕಾರಣ ಬೆಳಗ್ಗೆ ತಡವಾಗಿ ಎದ್ದು 11.30ರ ಸುಮಾರಿನಲ್ಲಿ ತಿಂಡಿಗಾಗಿ ಕುಕ್ಕರ್‌ನಲ್ಲಿ ಅನ್ನ ಮಾಡಲು ಅಕ್ಕಿ ಇಟ್ಟಿದ್ದಾರೆ. +ಕೆಲವೇ ನಿಮಿಷಗಳಲ್ಲಿ ಕುಕ್ಕರ್‌ ಸ್ಫೋಟಗೊಂಡಿದೆ. ಆ ವೇಳೆ ಎಲೆಕ್ಟ್ರಿಕ್‌ ಶಾರ್ಟ್‌ ಸೆರ್ಕ್ಯೂಟ್‌ ಉಂಟಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಇಬ್ಬರು ಯುವಕರಿಗೆ ಸುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್‌ ರೂಮ್‌ನಲ್ಲಿದ್ದ ಗ್ಯಾಸ್‌‍ ಸಿಲಿಂಡರ್‌ ಹಾಗೆಯೇ ಇದೆ. +ಇವರ ರೂಮ್‌ನಿಂದ ಶಬ್ದ ಕೇಳಿ ನೆರೆಹೊರೆಯವರು ಬಂದು ನೋಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುದ್ದಿ ತಿಳಿದು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕುಕ್ಕರ್‌ ಸ್ಫೋಟ ಹಾಗೂ ಶಾರ್ಟ್‌ ಸೆರ್ಕ್ಯೂಟ್‌ಗೆ ಕಾರಣವೇನೆಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. \ No newline at end of file diff --git a/eesanje/url_46_46_10.txt b/eesanje/url_46_46_10.txt new file mode 100644 index 0000000000000000000000000000000000000000..e40200a227d92e78e2574ba578367f6198759504 --- /dev/null +++ b/eesanje/url_46_46_10.txt @@ -0,0 +1,9 @@ +ಕೊಚ್ಚಿ ಹೋದ ಟಿಬಿ ಡ್ಯಾಮ್ ಕ್ರಸ್ಟ್‌ಗೇಟ್‌ಗೆ ತಾತ್ಕಾಲಿಕ ಗೇಟ್‌ ಅಳವಡಿಕೆ ಕಾರ್ಯ ಆರಂಭ +ಬೆಂಗಳೂರು,ಆ.13-ತುಂಗಭದ್ರಾ ಅಣೆಕಟ್ಟಿನಲ್ಲಿ ಕೊಚ್ಚಿ ಹೋಗಿರುವ 19ನೇ ಕ್ರಸ್ಟ್‌ಗೇಟ್‌ಗೆ ತಾತ್ಕಾಲಿಕವಾದ ಗೇಟ್‌ ಅಳವಡಿಸಿ ನೀರನ್ನು ಸಂರಕ್ಷಿಸಲು ಪ್ರಯತ್ನಿಸಲಾಗುತ್ತಿದ್ದು, ಇಂದು ಸಂಜೆ ಕೆಲಸ ಆರಂಭಗೊಳ್ಳಲಿದೆ.ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜಲಾಶಯದಲ್ಲಿ 105 ಟಿಎಂಸಿಗೂ ಹೆಚ್ಚಿನ ನೀರು ಸಂಗ್ರಹವಾಗಿತ್ತು. ಒತ್ತಡ ಹಾಗೂ ನೀರಿನ ರಭಸಕ್ಕೆ 19ನೇ ಕ್ರಸ್ಟ್‌ಗೇಟ್‌ನ ಸಂಪರ್ಕ ಸರಪಳಿ ತುಂಡಾಗಿ ಕ್ರಸ್ಟ್‌ಗೇಟ್‌ ಕೊಚ್ಚಿಹೋಗಿದೆ. +ಹೀಗಾಗಿ ನಿರಂತರವಾಗಿ 35 ಸಾವಿರ ಕ್ಯೂಸೆಕ್‌ ನೀರು ಈ ಗೇಟ್‌ನಿಂದ ಹರಿದುಹೋಗುತ್ತಿದೆ. ಇತರ ಕ್ರಸ್ಟ್‌ಗೇಟ್‌ಗಳ ಮೇಲೆ ಒತ್ತಡ ಹೆಚ್ಚಾಗಿ ಅಣೆಕಟ್ಟೆಗೆ ಅಪಾಯವಾಗುವ ಸಾಧ್ಯತೆ ಇದ್ದಿದ್ದರಿಂದಾಗಿ ಉಳಿದ 22 ಗೇಟ್‌ಗಳನ್ನು ತೆರೆದು ಪ್ರತಿದಿನ 1.50 ಲಕ್ಷ ಟಿಎಂಸಿ ನೀರನ್ನು ಹೊರಗೆ ಹರಿಯಬಿಡಲಾಗುತ್ತಿದೆ. +ಕ್ರಸ್ಟ್‌ಗೇಟ್‌ ದುರಸ್ಥಿಗೆ ಸಂಬಂಧಪಟ್ಟಂತೆ ಎರಡು ರೀತಿಯ ಅಭಿಪ್ರಾಯಗಳು ಕೇಳಿಬಂದಿದ್ದವು. ಒಂದು ತಂಡ ಜಲಾಶಯದಲ್ಲಿ 60 ಟಿಎಂಸಿ ನೀರನ್ನು ಖಾಲಿ ಮಾಡಿದ ಬಳಿಕ ಗೇಟ್‌ ದುರಸ್ಥಿ ಕೆಲಸ ಆರಂಭಿಸಬಹುದು ಎಂದು ವರದಿ ನೀಡಿತ್ತು. ಈ ಮೊದಲು ಇದೇ ಜಲಾಶಯದಲ್ಲಿ ಉಸ್ತುವಾರಿ ಅಧಿಕಾರಿಯಾಗಿ ಕೆಲಸ ಮಾಡಿದ್ದ ಕನ್ನಯ್ಯ ನಾಯ್ಡು ನೇತೃತ್ವದ ತಂಡ ನೀರನ್ನು ಉಳಿಸಿಕೊಂಡೇ ತಾತ್ಕಾಲಿಕವಾಗಿ ಗೇಟ್‌ ಅಳವಡಿಸಬಹುದು ಎಂದು ಸಲಹೆ ನೀಡಿತ್ತು. +ಜಿಂದಾಲ್‌ ಸಂಸ್ಥೆಯ ತಂತ್ರಜ್ಞರ ಉಸ್ತುವಾರಿಯಲ್ಲಿ ಇಂದು ಸಂಜೆಯಿಂದಲೇ ತಾತ್ಕಾಲಿಕ ಗೇಟ್‌ ಅಳವಡಿಕೆಗೆ ಕೆಲಸ ಆರಂಭಿಸಲಾಗುತ್ತಿದೆ. ಈಗಾಗಲೇ ಹೊಸಪೇಟೆಯ ನಾರಾಯಣ್‌ ಇಂಜಿನಿಯರ್‌ರ‍ಸ ಮತ್ತು ಕೊಪ್ಪಳದ ಹೊಸಹಳ್ಳಿಯ ಹಮೀದ್‌ ಇಂಜಿನಿಯರ್‌ರ‍ಸ ಸಂಸ್ಥೆಗಳಲ್ಲಿ ಎರಡು ಪ್ರತ್ಯೇಕ ಗೇಟ್‌ಗಳನ್ನು ಸಿದ್ಧಪಡಿಸಲಾಗಿದೆ. ಕನ್ನಯ್ಯ ನಾಯ್ಡು ಅವರು ಮೂಲನಕ್ಷೆ ಆಧರಿಸಿ ಸಿದ್ದಪಡಿಸಿಕೊಟ್ಟಿರುವ ವಿನ್ಯಾಸದ ಆಧಾರದ ಮೇಲೆ 20 ಅಡಿ ಅಗಲ, 60 ಅಡಿ ಉದ್ದದ 48 ಟನ್‌ ತೂಕದ ಕ್ರಸ್ಟ್‌ಗೇಟ್‌ಗಳನ್ನು ರೂಪಿಸಲಾಗಿದೆ. +4×12 ಅಡಿ ಅಗಲದ ಹಲಗೆಗಳನ್ನು ಬಳಸಿ ಕ್ರಸ್ಟ್ಗೇಟ್ಗಳನ್ನು ಸಿದ್ದಪಡಿಸಲಾಗುತ್ತಿದ್ದು, ಅದನ್ನು ಅಣೆಕಟ್ಟು ಬಳಿ ತರಲಾಗಿದೆ. ಅಣೆಕಟ್ಟೆಯ ತಡೆಗೋಡೆಯ ಮೇಲೆ ಧಾರಣ ಸಾಮರ್ಥ್ಯದ ಕ್ರೇನ್ಗಳನ್ನು ನಿಲ್ಲಿಸಿ ಗೇಟ್ಗಳನ್ನು ಅಳವಡಿಸಲು ಪ್ರಯತ್ನಿಸಲಾಗುತ್ತಿದೆ. +4 ಅಡಿಯ ತಲಾ ಎರಡು ಶೆಟ್ಟರ್‌ಗಳನ್ನು ಕೂರಿಸಿ ಒಟ್ಟು 20 ಅಡಿ ಎತ್ತರಕ್ಕೆ 5 ಹಂತದ ಶೆಟ್ಟರ್‌ಗಳನ್ನು ಜೋಡಿಸಿ ತಾತ್ಕಾಲಿಕವಾಗಿ ನೀರು ಹೊರಹರಿಯವುದನ್ನು ತಡೆಯುವ ಹಾಗೂ ಮುಂದಿನ ದಿನಗಳಲ್ಲಿ ಶಾಶ್ವತವಾದ ಕ್ರಸ್ಟ್‌ಗೇಟ್‌ ಅಳವಡಿಸುವಂತೆ ನಿನ್ನೆ ನಡೆದ ತುಂಗಭದ್ರಾ ಜಲಾಶಯ ಉಸ್ತುವಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. +ಇನ್ನು ಮುಂದೆ ತುಂಗಭದ್ರಾ ಜಲಾಶಯಕ್ಕೆ ಕಂಪ್ಯೂಟರ್‌ ಆಧಾರಿತ ಕ್ರಸ್ಟ್‌ಗೇಟ್‌ ಚಾಲನಾ ವ್ಯವಸ್ಥೆ ಹಾಗೂ ರೂಟ್‌ ವೇ ಅಳವಡಿಸುವ ಬಗ್ಗೆ ಸಮಾಲೋಚನೆಗಳಾಗಿವೆ. ಪ್ರಸ್ತುತ ಅಣೆಕಟ್ಟೆಯಲ್ಲಿ ನೀರಿನ ರಭಸ ಎದೆ ಝಲ್ಲೆನುಸುವಂತಿದ್ದು, ಅದರ ನಡುವೆಯೇ ಕ್ರಸ್ಟ್‌ಗೇಟ್‌ ಅಳವಡಿಸಲು ಚಾಲನೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಣೆಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಕನ್ನಯ್ಯ ನಾಯ್ಡು ಅವರಿಂದ ಕ್ರಸ್ಟ್‌ಗೇಟ್‌ ಅಳವಡಿಕೆಯ ಕುರಿತು ಮಾಹಿತಿ ಪಡೆದಿದ್ದಾರೆ. +ರಾಜ್ಯ ಮತ್ತು ದೇಶದ ಇಂಜಿನಿಯರ್‌ಗಳ ಜೊತೆಯಲ್ಲಷ್ಟೇ ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದ ತಜ್ಞರೊಂದಿಗೂ ರಾಜ್ಯಸರ್ಕಾರ ಸಮಾಲೋಚನೆ ನಡೆಸಿದೆ.ತುಂಗಭದ್ರಾ ಅಣೆಕಟ್ಟೆ ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜೀವನದಿಯಾಗಿದ್ದು, ಸುಮಾರು 7.50 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಿದೆ. ಜೊತೆಗೆ ಬಯಲುಸೀಮೆಯ ತುಮಕೂರು ಜಿಲ್ಲೆಯ ಪಾವಗಡದವರೆಗೂ ಕುಡಿಯುವ ನೀರಿನ ಪೂರೈಕೆಗೆ ಇದೇ ಜಲಾಶಯವನ್ನು ಬಳಸಲಾಗುತ್ತಿದೆ. \ No newline at end of file diff --git a/eesanje/url_46_46_11.txt b/eesanje/url_46_46_11.txt new file mode 100644 index 0000000000000000000000000000000000000000..0d8ad893dd7a7ec6f721b154418e278eacef2846 --- /dev/null +++ b/eesanje/url_46_46_11.txt @@ -0,0 +1,13 @@ +ನಾಯಕರ ಒಡ್ಡೊಲಗದ ನಡುವೆ ಅನಾಥರಾದ ಕಾಂಗ್ರೆಸ್‌‍ ಕಾರ್ಯಕರ್ತರು +ಬೆಂಗಳೂರು, ಆ.13– ಕಾಂಗ್ರೆಸಿನ ಪ್ರಭಾವಿ ನಾಯಕರ ಅಬ್ಬರ, ಆರ್ಭಟ ಹಾಗೂ ರಾಜಕೀಯ ಸಮರಗಳ ನಡುವೆ ಕಾರ್ಯಕರ್ತರು ಅತಂತ್ರವಾಗಿದ್ದು, ಅವ ಅಧಿಕಾರದ ಅಭಿಲಾಷೆ ಮರಿಚಿಕೆಯಾಗಿಯೇ ಉಳಿದಿದೆ.ರಾಜ್ಯದ ನಿಗಮ-ಮಂಡಳಿಗಳಿಗೆ ಮೊದಲ ಹಂತದಲ್ಲಿ ಅಧ್ಯಕ್ಷರನ್ನು ನೇಮಿಸಲಾಗಿದೆ. ನಂತರದ ಹಂತದಲ್ಲಿ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಿಸಬೇಕಿತ್ತು. ಅದಕ್ಕಾಗಿ ರಚಿಸಲಾಗಿದ್ದ ಪರಮೇಶ್ವರ್‌ ನೇತೃತ್ವದ ಸಮಿತಿ ಅವಧಿ ಮುಗಿದಿದ್ದರೂ ಕೂಡ ವರದಿ ನೀಡದೆ, ಮತ್ತೆ ಒಂದು ತಿಂಗಳು ಕಾಲಾವಕಾಶ ಕೇಳಿರುವುದು ಕಾರ್ಯಕರ್ತರಲ್ಲಿ ಭಾರಿ ನಿರಾಶೆಯುಂಟು ಮಾಡಿದೆ. +ಚುನಾವಣೆಯ ಸಂದರ್ಭದಲ್ಲಿ ಕಾರ್ಯಕರ್ತರೇ ಪಕ್ಷದ ಆಸ್ತಿ, ಜೀವಾಳ ಎಂದೆಲ್ಲ ಪುಂಗಿ ಊದುವ ಪ್ರಭಾವಿ ನಾಯಕರು ಅಧಿಕಾರ ಸಿಗುತ್ತಿದ್ದಂತೆ ನಾವು ಮತ್ತು ನಮ್ಮ ಹಿಂಬಾಲಕು ಎಂಬ ಸ್ವಾರ್ಥಕ್ಕೆ ಸೀಮಿತಗೊಳ್ಳುವುದು ಪದೇ ಪದೇ ಸಾಬೀತುಕೊಳ್ಳುತ್ತಿದೆ. ಈ ಹಿಂದೆ ಕಾಂಗ್ರೆಸ್‌‍ ಕಾರ್ಯಕರ್ತರನ್ನು ಕಡೆಗಣಿಸಿದಾಗಲೆಲ್ಲಾ ಮೂಲೆಗುಂಪಾಗಿ ಹೋಗಿದೆ. ಪಕ್ಷ ಕುಸಿದಾಗ ಮುಂಚೂಣಿ ನಾಯಕರು ಮತ್ತೆ ಕಾರ್ಯಕರ್ತರ ಸಾಮರ್ಥ್ಯವನ್ನು ಜಪ ಮಾಡುತ್ತಾ ಉರಿದುಂಬಿಸಲು ಆರಂಭಿಸುತ್ತಾರೆ. ಮತ್ತೆ ನಾಯಕರ ಮಾತಗಳನ್ನು ನಂಬುವ ಕಹಿ ಮರೆತು ಹಗಲು ರಾತ್ರಿ ಶ್ರಮವರಿಯದೆ ದುಡಿಯುತ್ತಾರೆ. +ರಾಜಕೀಯ ಎದುರಾಳಿಗಳೊಂದಿಗೆ ಬಡಿದಾಡಿಕೊಂಡು, ಪ್ರಕರಣ ದಾಖಲಿಸಿಕೊಂಡು ಹೋರಾಟ ಮಾಡಿ ಜನರ ಮನವೋಲಿಸಿ ಮತ ಹಾಕಿಸಿ, ಹೆಚ್ಚು ಶಾಸಕರನ್ನು ಗೆಲ್ಲಿಸುವ ಮೂಲಕ ಸರ್ಕಾರ ರಚನೆಗೆ ಕಾರಣರಾಗುತ್ತಾರೆ. ಅಧಿಕಾರ ಕೈಗೆ ಸಿಗುತ್ತಿದ್ದಂತೆ ಪಕ್ಷದ ಮುಂಚೂಣಿ ನಾಯಕರು ಕಾರ್ಯಕರ್ತರನ್ನು ಮತ್ತೆ ಮರೆತು ನನ್ನಿಂದ ಪಕ್ಷ ಅಧಿಕಾರಕ್ಕೆ ಬಂತು, ನಾನೇ ಪ್ರಭಾವಿ ನಾಯಕ, ನಾನು ಇಲ್ಲದೆ ಇದ್ದರೆ ಕಾಂಗ್ರೆಸ್‌‍ ಪಕ್ಷವೇ ಇರುವುದಿಲ್ಲ ಎಂಬ ದಾಟಿಯಲ್ಲಿ ನಡೆದುಕೊಳ್ಳಲು ಆರಂಭಿಸುತ್ತಾರೆ. +ಕಾರ್ಯಕರ್ತರ ಶ್ರಮ, ಬದ್ಧತೆ ಮತ್ತು ಅರ್ಪಣಾ ಮನೋಭಾವ ನಗಣ್ಯವಾಗುತ್ತದೆ. ಶಾಸಕರಾದವರು ಸಚಿವರಾಗಲು, ಸಚಿವರಾದವರು ಉಪಮುಖ್ಯಮಂತ್ರಿಗಳಾಗಲು, ಉಪಮುಖ್ಯಮಂತ್ರಿಗಳಾದವರು ಮುಖ್ಯಮಂತ್ರಿಗಳಾಗಲು ಲಾಬಿಗಳು ಶುರುವಾಗುತ್ತವೆ. ಅಧಿಕಾರದ ಹಗ್ಗ ಜಗ್ಗಾಟದಲ್ಲಿ ಕಾರ್ಯಕರ್ತರು ಸಂಪೂರ್ಣ ಮೂಲೆಗುಂಪಾಗುತ್ತಾರೆ. +ಸರ್ಕಾರ ರಚನೆ ಆದರೆ ಬದುಕು ಹಸನಾಗುತ್ತದೆ, ಆಡಳಿತದಲ್ಲಿ ನಾವು ಪಾಲುದಾರರಾಗುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾರ್ಯಕರ್ತರಿಗೆ ಎಂದಿನಂತೆ ಭ್ರಮ ನಿರಸ ಕಟ್ಟಿಟ್ಟ ಬುತ್ತಿಯಾಗುತ್ತದೆ. ನಾಯಕರು ಎಂದಿನಂತೆ ತಾವೇ ಮೊದಲು, ತಮಿಂದಲೇ ಪಕ್ಷ, ಎಲ್ಲಾ ಪ್ರಾತಿನಿಧ್ಯಗಳು ತಮಗೆ ಸಿಗಬೇಕು ಎಂಬ ದೋರಣೆಯಲ್ಲಿ ವರ್ತಿಸುತ್ತಾರೆ. +2013 ರಿಂದ 2018ರ ನಡುವಿನ ಕಾಂಗ್ರೆಸ್‌‍ ಆಡಳಿತ ಅವಧಿಯಲ್ಲಿ ಎರಡುವರೆ ವರ್ಷಗಳ ಕಾಲ ನಿಗಮ ಮಂಡಳಿಗಳಿಗೆ ನೇಮಕಾತಿಯೇ ನಡೆದಿರಲಿಲ್ಲ. ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಕಾಲದಲ್ಲೂ ಕಾರ್ಯಕರ್ತರನ್ನು ಸಂಪೂರ್ಣ ಕಡೆಗಣಿಸಲಾಗಿದೆ. +ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂಬ ಕಾರಣಕ್ಕೆ ಶಾಸಕರಿಗೆ ಮಾತ್ರ ಆದ್ಯತೆಗಳು ದೊರೆಯುತ್ತಿವೆ. ಶಾಸಕರನ್ನು ನಿಗಮ-ಮಂಡಳಿಗಳಿಗೆ ನೇಮಿಸುವ ಮೂಲಕ, ಕಾರ್ಯಕರ್ತರನ್ನು ಅಧಿಕಾರದಿಂದ ವಂಚಿಸಲಾಗಿದೆ. ಜೊತೆಗೆ ಪ್ರಭಾವಿ ನಾಯಕರುಗಳ ಹಿಂಬಾಲಕರು ಹಾಗೂ ಆಪ್ತರಿಗೆ ಸಾಂವಿಧಾನಿಕವಲ್ಲದ ಹಾಗೂ ನಿಯಮಗಳನ್ನು ಮೀರಿ ಹುದ್ದೆಗಳನ್ನು ಸೃಷ್ಟಿಸಿ, ಅಧಿಕಾರ ನೀಡಲಾಗಿದೆ. +ಶಾಸಕರಿಗೆ ಶೇ.60ರಷ್ಟು ಹಾಗೂ ಕಾರ್ಯಕರ್ತರಿಗೆ ಶೇ.40ರಷ್ಟು ಅನುಪಾತದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆಯಾಯಿತು. ಈ ಹಂತದಲ್ಲಿ ಪ್ರಭಾವಿಗಳು ಮಾತ್ರ ಅವಕಾಶ ಪಡೆದುಕೊಂಡರು. ಕೆಪಿಸಿಸಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನಿಗಮ ಮಂಡಳಿಯ ನೇಮಕಾತಿ ವೇಳೆ, ತಮ ಅಭಿಪ್ರಾಯ ಸಂಗ್ರಹಿಸಿಲ್ಲ ಎಂಬ ಆಕ್ಷೇಪವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು. +ಈ ಕಾರಣಕ್ಕೆ ನಿಗಮ-ಮಂಡಳಿಯ ಸದಸ್ಯರು ಹಾಗೂ ನಿರ್ದೇಶಕರು ಆಯ್ಕೆ ಪ್ರಕ್ರಿಯೆಗೆ ಪಟ್ಟಿ ನೀಡುವಂತೆ ಪರಮೇಶ್ವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಆ ಸಮಿತಿ ಜುಲೈ 31ರ ಒಳಗೆ ವರದಿ ನೀಡಬೇಕಿತ್ತು. ಅವಧಿ ಮುಗಿದು 15 ದಿನ ಕಳೆದರೂ ಈವರೆಗೂ ವರದಿ ಸಲ್ಲಿಸಿಲ್ಲ. ಈ ನಡುವೆ ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಗಳು, ಕಾಂಗ್ರೆಸ್ಸಿನ ಜನಾಂಗೋಲನಗಳ ಅಬ್ಬರವೇ ಜೋರಾಗಿತ್ತು. ಕಾರ್ಯಕರ್ತರ ನೇಮಕಾತಿಯ ವಿಚಾರಗಳು ಮೂಲಗುಂಪಾಗಿ ಹೋಗಿವೆ. +ಮೂಲಗಳ ಪ್ರಕಾರ ಪರಮೇಶ್ವರ ನೇತೃತ್ವದ ಸಮಿತಿ ಆಗಸ್ಟ್ 31ರವರೆಗೂ ಕಾಲಾವಕಾಶ ಕೇಳಿದೆ ಎಂದು ಹೇಳಲಾಗಿದೆ. ಜಿಲ್ಲಾ ಸಚಿವರು ಸ್ಥಳೀಯ ಶಾಸಕರೊಂದಿಗೆ ಸಮಾಲೋಚನೆ ನಡೆಸಿ ಜಿಲ್ಲೆಗಳ ಘಟಕಗಳಿಂದ ವರದಿ ರವಾನಿಸಲಾಗಿದೆ. ಕೆಲವು ಜಿಲ್ಲೆಗಳ ವರದಿಗಳು ಬಾಕಿ ಉಳಿದಿವೆ. ಹೀಗಾಗಿ ಎಲ್ಲವನ್ನು ಕ್ರೂಢೀಕರಿಸಿದ ಬಳಿಕ ಅಂತಿಮ ವರದಿ ನೀಡುವುದಾಗಿ ಪರಮೇಶ್ವರ್‌ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಒಂದಲ್ಲ ಒಂದು ನೆಪ ಒಡ್ಡಿ ಕಾರ್ಯಕರ್ತರನ್ನು ಅಧಿಕಾರದಿಂದ ದೂರ ಇಡುವ ಪ್ರಕ್ರಿಯೆ ಸದಾ ಕಾಲ ನಡೆಯುತ್ತಲೇ ಇದೆ. ಪ್ರಭಾವಿಗಳಾಗಿದ್ದರೆ ಮುಂಚೂಣಿ ನಾಯಕರ ಹಿಂಬಾಲಕರಾಗಿದ್ದರೆ ಮಾತ್ರ ಯಾವುದೂ ಒಂದು ರೂಪದಲ್ಲಿ ಅಧಿಕಾರ ಗಿಟ್ಟಿಸಲು ಸಾಧ್ಯವಿದೆ. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪದೇ ಪದೇ ತಮ ಭಾಷಣದಲ್ಲಿ ಯಾರು ದೊಡ್ಡ ನಾಯಕರಾಗಿದ್ದರು ತಮ ಬೂತ್‌ಗಳಲ್ಲಿ ಕಾಂಗ್ರೆಸ್‌‍ ಗೆ ಲೀಡ್‌ ಕೊಡಿಸದಿದ್ದರೆ ಅಂಥವರನ್ನು ಯಾವುದೇ ಅವಕಾಶಗಳಿಗೆ ಪರಿಗಣಿಸುವುದಿಲ್ಲ ಎಂದು ಹೇಳುತ್ತಿರುತ್ತಾದೆ. ಆದರೆ ಇತ್ತೀಚಿಗೆ ನಡೆದಿರುವ ಕೆಲವು ನೇಮಕಾತಿಗಳಲ್ಲಿ ಬೂತ್‌ ಮಟ್ಟದಲ್ಲಿರಲಿ ತಮ ಮನೆಯ ಸುತ್ತಮುತ್ತಲಿನ ಜನರಿಗೆ ಪರಿಚಯ ಇಲ್ಲದಂತಹ ನಾಯಕರಿಗೂ ಪ್ರಭಾವಿಗಳ ಹಿಂಬಾಲಕರು ಎಂಬ ಕಾರಣಕ್ಕಾಗಿ ಮಣೆ ಹಾಕಲಾಗಿದೆ. ಪಕ್ಷಕ್ಕಾಗಿ ಹಗಲು ರಾತ್ರಿ ಬೆವರಿಳಿಸಿದ ಕಾರ್ಯಕರ್ತರು ಮಾತ್ರ ಈಗಲೂ ಅನಾಥ ಸ್ಥಿತಿಯಲ್ಲಿದ್ದಾರೆ. ಮತ್ತೊಂದು ಚುನಾವಣೆ ಎದುರಾಗುವವರೆಗೂ ಎದುರಾಗುವವರೆಗೂ ಮುಂಚೂಣಿ ನಾಯಕರುಗಳಿಗೆ ಕಾರ್ಯಕರ್ತರು ಪಕ್ಷದ ಆಸ್ತಿ ಎಂಬುದು ನೆನಪಾಗುವುದಿಲ್ಲ. \ No newline at end of file diff --git a/eesanje/url_46_46_12.txt b/eesanje/url_46_46_12.txt new file mode 100644 index 0000000000000000000000000000000000000000..7e45ce4866cbca91bcd2081797bd0fca63e8d8a6 --- /dev/null +++ b/eesanje/url_46_46_12.txt @@ -0,0 +1,10 @@ +ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ +ಬೆಂಗಳೂರು,ಆ.13-ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದರು. +ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್‌ ಆರ್ಗನ್‌ ಟಿಶ್ಯೂ ಟ್ರಾನ್ಸ್ ಸಪ್ಲಾಂಟ್‌ ಆರ್ಗನೈಸೇಷನ್‌ ಮಾಹಿತಿಯನ್ನಾಧರಿಸಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುತ್ತಿದೆ ಎಂದು ವಿವರಿಸಿದರು. +ಸ್ವಾತಂತ್ರ್ಯ ದಿನೋತ್ಸವದಂದು ಬೆಳಿಗ್ಗೆ 8.58 ಕ್ಕೆ ಮುಖ್ಯಮಂತ್ರಿಗಳು ಪೆರೇಡ್‌ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ.ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್‌ನಲ್ಲಿ ಪೆರೇಡ್‌ ವೀಕ್ಷಣೆ ಮಾಡಿ ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು. +ಸಿಎಂ ಗೌರವ ರಕ್ಷೆ ಸ್ವೀಕರಿಸುವ ತಾಲೀಮನ್ನು ಆ.11 ರಿಂದ ನಡೆಸಿಕೊಂಡು ಬರಲಾಗುತ್ತಿದೆ. ಗೌರವ ರಕ್ಷೆ ಕಾರ್ಯದಲ್ಲಿ ಕೆಎಸ್‌‍ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್‌‍ಎಫ್‌, ಸಿಎಆರ್‌, ಗೋವಾ ಪೊಲೀಸ್‌‍, ಕೆಎಸ್‌‍ಐಎಸ್‌‍ಎಫ್‌, ಟ್ರಾಫಿಕ್‌, ಮಹಿಳಾ ಪೊಲೀಸರು, ಹೋಂಗಾರ್ಡ್‌್ಸ, ಅಗ್ನಿಶಾಮಕ ದಳ, ಡಾಗ್‌ ಸ್ಕ್ವಾಡ್‌ ಮತ್ತು ಬ್ಯಾಂಡ್‌ನ 35 ತುಕಡಿಗಳಲ್ಲಿ 1150 ಮಂದಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು. +ನಾಡಗೀತೆ ಮತ್ತು ರೈತಗೀತೆಯನ್ನು ಮಂಜುನಾಥ್‌, ಸಿದ್ದರಾಜಯ್ಯ ಹಾಗೂ ಸಬ್ಬನಹಳ್ಳಿ ರಾಜು ಮತ್ತು ತಂಡದವರು ನಡೆಸಿಕೊಡಲಿದ್ದಾರೆ.ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ 750 ವಿದ್ಯಾರ್ಥಿಗಳು ಜಯಭಾರತಿ ಹಾಡು ಹಾಡಲಿದ್ದಾರೆ.ರಾಷ್ಟ್ರೀಯ ಸೇವಾ ಯೋಜನೆ, ಎನ್‌ಎಸ್‌‍ಎಸ್‌‍, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 400 ಮಕ್ಕಳು ಸರ್ಕಾರದ 5 ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. +ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 700 ಮಕ್ಕಳು ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕದೇವಿ ನೃತ್ಯ ನಾಟಕ ಪ್ರದರ್ಶಿಸಲಿದ್ದಾರೆ. ಅನಂತರ ಮಲ್ಲಕಂಬ, ಪ್ಯಾರಾಮೋಟಾರ್‌ ಪ್ರದರ್ಶನ ಹಾಗೂ ಮೋಟಾರ್‌ ಸೈಕಲ್‌ ಪ್ರದರ್ಶನಗಳನ್ನು ಹಮಿಕೊಳ್ಳಲಾಗಿದೆ. +ಬಿಗಿ ಬಂದೋಬಸ್ತ್:ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪೆರೇಡ್‌ ಮೈದಾನಕ್ಕೆ ಸೂಕ್ತ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಮೈದಾನದ ಸುತ್ತ 100 ಸಿಸಿ ಕ್ಯಾಮರಾ ಹಾಗೂ ಎರಡು ಬ್ಯಾಗೇಜ್‌ ಸ್ಕ್ಯಾನರ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತುಷಾರ್‌ ಗಿರಿನಾಥ್‌ ತಿಳಿಸಿದರು.ಸ್ಥಳದಲ್ಲಿ ಆಂಬುಲೆನ್ಸ್ ಸ ವ್ಯವಸ್ಥೆ, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಗಾಯಾಳುಗಳಿಗೆ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. +ಪ್ರವೇಶ ದ್ವಾರ :ಸ್ವಾತಂತ್ರ್ಯ ದಿನಾಚರಣೆ ವೀಕ್ಷಣೆಗೆ ಆಗಮಿಸುವ ಅತಿ ಗಣ್ಯ, ಗಣ್ಯ, ಇತರ ಆಹ್ವಾನಿತರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಲಾಗಿದೆ. ಅತಿ ಗಣ್ಯ, ಗಣ್ಯವ್ಯಕ್ತಿಗಳು ಹಾಗೂ ರಕ್ಷಣಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಜಿ-2 ಪ್ರವೇಶ ದ್ವಾರದ ಮೂಲಕ ಆಗಮಿಸಬೇಕಾಗಿದೆ. +ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಡಿಜಿ, ಐಜಿ, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಜಿ-3 ಪ್ರವೇಶ ದ್ವಾರದ ಮೂಲಕ ಆಗಮಿಸಬೇಕಿದೆ. ಸ್ವಾತಂತ್ರ್ಯ ಹೋರಾಟಗಾರರು, ಪತ್ರಿಕಾ ಪ್ರತಿನಿಧಿಗಳು ಹಾಗೂ ಇಲಾಖೆಯ ಇತರೆ ಅಧಿಕಾರಿಗಳಿಗೆ ಜಿ-4 ಮತ್ತು ಸಾರ್ವಜನಿಕರಿಗೆ ಜಿ-5 ಪ್ರವೇಶ ದ್ವಾರ ನಿಗದಿಪಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ್‌, ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_46_2.txt b/eesanje/url_46_46_2.txt new file mode 100644 index 0000000000000000000000000000000000000000..2dec230981577b60b7059b3e0d2d99195e444a27 --- /dev/null +++ b/eesanje/url_46_46_2.txt @@ -0,0 +1,11 @@ +ಮುಡಾ ಪ್ರಕರಣ : ರಾಜ್ಯಪಾಲರ ನಿರ್ಧಾರದ ನಿರೀಕ್ಷೆಯಲ್ಲಿದ್ದೇವೆ ಎಂದ ಪರಮೇಶ್ವರ್ +ಬೆಂಗಳೂರು,ಆ.13– ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನ್ಯಾಯಾಲಯದ ತೀರ್ಪು ಆಧರಿಸಿ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳಬಹುದು. ನಾವು ಅದನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಸಚಿವ ಸಂಪುಟ ಸಭೆ ಸಲಹೆ ನೀಡುವ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ರವಾನಿಸಲಾಗಿದೆ ಎಂದರು. +ಚಾಮುಂಡಿ ದೇವಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ರಾಜಮನೆತನದ ಪ್ರಮೋದಾ ದೇವಿಯವರು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೊಲೀಸ್ ದೃಷ್ಟಿಯಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಸಂದರ್ಭ ಬಂದಾಗ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. +ಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ಮಾಡಲು ನಿರ್ಧರಿಸಿದ್ದು ಸಮಗ್ರ ವ್ಯವಸ್ಥೆಯ ಸುಧಾರಣೆಗಾಗಿ. ಸವದತ್ತಿ ಹಾಗೂ ಉಳಿದ ಬಹಳಷ್ಟು ದೇವಸ್ಥಾನಗಳಲ್ಲಿ ಸಾಕಷ್ಟು ಹಣ ಸಂಗ್ರಹವಾಗುತ್ತಿದೆ, ಹೆಚ್ಚು ಜನ ಬರುತ್ತಾರೆ, ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸಲು ಪ್ರಾಧಿಕಾರಗಳನ್ನು ರಚಿಸಿ, ಸ್ಥಳೀಯ ಆಡಳಿತಕ್ಕೆ ಜವಾಬ್ದಾರಿ ನೀಡಲಾಗುತ್ತದೆ. ಅದೇ ರೀತಿ ಚಾಮುಂಡಿ ಬೆಟ್ಟಕ್ಕೂ ಕೂಡ ಪ್ರಾಧಿಕಾರ ಮಾಡಲಾಗಿತ್ತು. ಈಗ ಮೈಸೂರು ರಾಜವಂಶಸ್ಥರು ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದು ಹೇಳಿದರು. +ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಅರಮನೆ ಮೈದಾನದ ಜಾಗವನ್ನು ಬಳಸಿಕೊಂಡು ರಸ್ತೆ ಅಗಲೀಕರಣ ಮಾಡುವ ಪ್ರಸ್ತಾವದ ಕುರಿತು ತಮಗೆ ಮಾಹಿತಿ ಇಲ್ಲ. ಈ ಹಿಂದೆ ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದಾಗ ರಸ್ತೆ ಅಗಲೀಕರಣಕ್ಕೆ ಬಿಬಿಎಂಪಿ ಪ್ರಯತ್ನಿಸಿತ್ತು. ರಸ್ತೆ ಅಗಲೀಕರಣಕ್ಕೆ ಜಾಗವನ್ನು ಗುರುತಿಸಿ ಮೈದಾನದ ತಡೆಗೋಡೆಯನ್ನು ಒಳಭಾಗಕ್ಕೆ ಸ್ಥಳಾಂತರಿಸಲಾಗಿತ್ತು ಎಂದು ವಿವರಿಸಿದರು. +ಸಾರ್ವಜನಿಕರ ದೃಷ್ಟಿಯಿಂದ ರಸ್ತೆ ಅಗಲೀಕರಣ ಮಾಡುವ ಯತ್ನ ನಡೆದಿತ್ತು. ಹಾಗೆಂದು ರಾಜಮನೆತನದ ಆಸ್ತಿಯನ್ನು ವಶಪಡಿಸಿಕೊಳ್ಳುವ ಉದ್ದೇಶವಿರಲಿಲ್ಲ. ನ್ಯಾಯಾಲಯದಲ್ಲಿ ಈ ಬಗ್ಗೆ ಹಲವು ಪ್ರಕರಣಗಳು ಹಾಗೂ ನಿರ್ದೇಶನಗಳು ಇವೆ. ನ್ಯಾಯಾಲಯದಲ್ಲಿನ ತಗಾದೆ ಬಗೆಹರಿದು ಅದನ್ನು ರಾಜಮನೆತನದವರು ಒಪ್ಪಿಕೊಂಡರೆ ರಸ್ತೆ ಅಗಲೀಕರಣ ಸುಲಭವಾಗುತ್ತದೆ. ಸದ್ಯಕ್ಕೆ ಮಧ್ಯಂತರ ತೀರ್ಪು ಬಂದಿದ್ದು, ಅಂತಿಮ ತೀರ್ಪನ್ನು ಸರ್ಕಾರ ನಿರೀಕ್ಷಿಸುತ್ತಿದೆ ಎಂದು ತಿಳಿಸಿದರು. +ಎಐಸಿಸಿ ಎಲ್ಲಾ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರುಗಳ ಜೊತೆ ಸಮಾಲೋಚನೆಗೆ ಸಭೆ ಕರೆದಿದೆ. ಅಲ್ಲಿ ಯಾವ ರೀತಿಯ ಚರ್ಚೆಗಳಾಗುತ್ತವೆ ಎಂಬ ಮಾಹಿತಿ ಇಲ್ಲ ಎಂದರು.ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಒಳಮೀಸಲಾತಿ ವಿಚಾರವಾಗಿ ಒತ್ತಡಗಳು ಹೆಚ್ಚಿವೆ. ಆದಷ್ಟು ಬೇಗ ಇದನ್ನು ಇತ್ಯರ್ಥಪಡಿಸಬೇಕು ಎಂಬುದು ನಮ ಬೇಡಿಕೆ ಕೂಡ ಆಗಿದೆ ಎಂದು ಹೇಳಿದರು. +ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಕೆಲವು ಸೂಚನೆಗಳನ್ನು ನೀಡುತ್ತದೆ. ರಾಜ್ಯಸರ್ಕಾರವೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತದೆ. ನಿರ್ದಿಷ್ಟ ಎಚ್ಚರಿಕೆಗಳು ಬಂದರೆ ಸೂಕ್ತ ಕ್ರಮ ವಹಿಸಲಾಗುವುದು. ವಿಮಾನನಿಲ್ದಾಣದಲ್ಲಿ ರಾಷ್ಟ್ರೀಯ ಹಬ್ಬಗಳ ಮೊದಲ ಹಾಗೂ ಅನಂತರದ ಎರಡು ದಿನ ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಗಣೇಶ ಹಬ್ಬದ ಸಂದರ್ಭದಲ್ಲೂ ಶಾಂತಿ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಯಾವುದೇ ಅಹಿತಕರ ಘಟನೆ ನಡೆಯದಂತೆ ಯಶಸ್ವಿ ಬಂದೋಬಸ್ತ್ ಆಯೋಜಿಸಲಾಗಿತ್ತು. ಈ ವರ್ಷ ಅದೇ ರೀತಿ ಒಂದಷ್ಟು ಸೂಚನೆಗಳನ್ನು ನೀಡಲಾಗಿದೆ ಎಂದರು. +ಕೇಂದ್ರ ಸರ್ಕಾರದಿಂದ ಆರ್ಎಎಫ್ ತುಕಡಿಗಳನ್ನು ಬಳಸಿಕೊಂಡು ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಹೇಳಿದರು.ವಿಧಾನಪರಿಷತ್ನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಶಿಷ್ಟಾಚಾರದ ಪ್ರಕಾರ, ಅಗತ್ಯ ಭದ್ರತೆ ಒದಗಿಸಲಾಗುವುದು. ಒಂದು ವೇಳೆ ಅದು ಜಾರಿಯಾಗದೇ ಇದ್ದರೆ ನಾನು ಕೂಡ ಸೂಚನೆ ನೀಡುತ್ತೇನೆ ಎಂದರು. +ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಶೀಘ್ರವೇ ನಿರ್ಧಾರ ಮಾಡುವುದಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿಯಾಗಬೇಕಿದೆ. ನಾಲ್ಕು ಮಹಾನಗರ ಪಾಲಿಕೆಗಳಿಗೆ ಹಿಂದಿನ ಮೀಸಲಾತಿ ಹಾಗೂ ಕ್ಷೇತ್ರ ಪುನರ್ ವಿಂಗಡಣೆ ಆಧಾರದ ಮೇಲೆ ಚುನಾವಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ. ನಾಲ್ಕು ಪಾಲಿಕೆಗಳಿಗೂ ಅದೇ ಆಧಾರದ ಮೇಲೆ ಚುನಾವಣೆ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. \ No newline at end of file diff --git a/eesanje/url_46_46_3.txt b/eesanje/url_46_46_3.txt new file mode 100644 index 0000000000000000000000000000000000000000..f6a47661c78e38d0c3300fa1d58eb83c6c0e1898 --- /dev/null +++ b/eesanje/url_46_46_3.txt @@ -0,0 +1,7 @@ +ಕದ್ದುಮುಚ್ಚಿ ಹಿಂಬಾಗಿಲಿನಿಂದ ಬಂದು ಗೃಹಸಚಿವರನ್ನು ಭೇಟಿ ಮಾಡಿ ಹೋದ ಶಾಸಕ ಚೆನ್ನಾರೆಡ್ಡಿ +ಬೆಂಗಳೂರು,ಆ.13– ಯಾದಗಿರಿ ಪಿಎಸ್ಐ ಪರಶುರಾಮ್ ಅಸಹಜ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಇಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದರು. ಪರಮೇಶ್ವರ್ರವರ ಮನೆಗೆ ಹಿಂಬಾಗಿಲ ಮೂಲಕ ಬಂದ ಚೆನ್ನಾರೆಡ್ಡಿ ಮಾಧ್ಯಮಗಳ ಕಣ್ತಪ್ಪಿಸಿ ಹಿಂಬಾಗಿಲಿನಿಂದಲೇ ಹೊರಹೋದರು. +ಪರಶುರಾಮ್ ಆತಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಆಡಳಿತ ಪಕ್ಷದ ಶಾಸಕರೂ ಆಗಿರುವ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಪಂಪನಗೌಡ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಾಸಕರು ಮತ್ತು ಅವರ ಪುತ್ರ ಬಂಧನದ ಭೀತಿ ಎದುರಿಸುತ್ತಿದ್ದಾರೆ. +ಶಾಸಕರ ಭೇಟಿ ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್, ನನ್ನ ಹುಟ್ಟುಹಬ್ಬದ ದಿನ ಅವರಿಗೆ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಬಂದು ಭೇಟಿ ಮಾಡಿ ಶುಭ ಹಾರೈಸಿದ್ದಾರೆ. ಇದು ಸೌಜನ್ಯದ ಭೇಟಿಯಷ್ಟೇ. ಈಗಾಗಲೇ ದಾಖಲಾಗಿರುವ ಪ್ರಕರಣದ ತನಿಖೆ ನಡೆಯುತ್ತಿದೆ. ಆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ , ದೇರ್ ಈಸ್ ನೋ ನೀಡ್ ಟು ಬಿಟ್ವೀನ್ ದಿ ಲೈನ್ ಎಂದು ಹೇಳಿದರು. +ಚೆನ್ನಾರೆಡ್ಡಿ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹಲಂಚಕ್ಕೆ ಬೇಡಿಕೆಯಿಟ್ಟ ಹಿನ್ನಲೆ ಒತ್ತಡದಿಂದಲೇ ನಿಗೂಢವಾಗಿ ಸಾವನ್ನಪ್ಪಿರುವ ಪಿಎಸ್ಐ ಪರಶುರಾಮ್ ಪ್ರಕರಣದಲ್ಲಿ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಅವರನ್ನು ತಕ್ಷಣವೇ ಪೊಲೀಸರು ಬಂಧಿಸಬೇಕೆಂದು ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಒತ್ತಾಯಿಸಿದ್ದಾರೆ. +ಯಾದಗಿರಿ ಸುಭಾಷ್ ವೃತ್ತದಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಪಿಎಸ್ಐ ಪರಶುರಾಮ್ ನಿಗೂಢ ಸಾವು ಖಂಡಿಸಿ, ಪ್ರಕರಣ ಸಂಬಂಧ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಪಂಪಣ್ಣಗೌಡ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ್ಢರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಸರ್ಕಾರದ ಮೇಲೆ ಅವರು ಒತ್ತಡ ಹಾಕಿದರು. +ಪ್ರತಿಭಟನೆ ಮುನ್ನ ಮೃತ ಪಿಎಸ್ಐ ಪರಶುರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಎನ್.ಮಹೇಶ್,ರಾಜುಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು. \ No newline at end of file diff --git a/eesanje/url_46_46_4.txt b/eesanje/url_46_46_4.txt new file mode 100644 index 0000000000000000000000000000000000000000..d9199bccf2e00054383c1b04e33ce650745cc056 --- /dev/null +++ b/eesanje/url_46_46_4.txt @@ -0,0 +1,9 @@ +ಗೌರಿ-ಗಣೇಶ ಹಬ್ಬದ ಬಳಿಕ ಚನ್ನಪಟ್ಟಣ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ +ಬೆಂಗಳೂರು, ಆ.13– ಗೌರಿ-ಗಣೇಶ ಹಬ್ಬದ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್‌‍ ಅಭ್ಯರ್ಥಿ ಆಯ್ಕೆ ಮಾಡಲು ಉದ್ದೇಶಿಸಲಾಗಿದೆ. ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. +ಇನ್ನೂ ಚುನಾವಣಾ ವೇಳಾಪಟ್ಟಿ ಪ್ರಕಟವಾಗದಿದ್ದರೂ ಅಭ್ಯರ್ಥಿ ಆಯ್ಕೆ ಕುರಿತಂತೆ ಬಿಜೆಪಿ ಮತ್ತು ಜೆಡಿಎಸ್‌‍ನಲ್ಲಿ ಪದೇ ಪದೇ ಚರ್ಚೆಗಳಾಗುತ್ತಿವೆ. ಆದರೂ ಇದುವರೆಗೆ ಒಮತದ ಮೈತ್ರಿ ಅಭ್ಯರ್ಥಿ ಯಾರೆಂಬುದು ನಿರ್ಧಾರವಾಗದೇ ಉಳಿದಿದ್ದು, ಉಭಯ ಪಕ್ಷಗಳ ಕಾರ್ಯಕರ್ತರಲ್ಲಿ ಗೊಂದಲ ಮುಂದುವರೆದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಹಾಗೂ ಸಂಸದ ತುಕಾರಾಂ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರಗಳು ತೆರವಾಗಿದ್ದು, ಉಪ ಚುನಾವಣೆ ನಡೆಯಬೇಕಿದೆ. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಪೈಕಿ ಜೆಡಿಎಸ್‌‍, ಬಿಜೆಪಿ ಹಾಗೂ ಕಾಂಗ್ರೆಸ್‌‍ ತಲಾ ಒಂದು ಕ್ಷೇತ್ರದಲ್ಲಿ ಗೆದ್ದಿದ್ದವು. ಲೋಕಸಭಾ ಚುನಾವಣೆಯಂತೆ ಉಪ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್‌‍ ಮೈತ್ರಿ ಮುಂದುವರೆಯಲಿದೆ. ಮೂರು ಕ್ಷೇತ್ರಗಳಲ್ಲಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ಉಳಿಸಿಕೊಳ್ಳಲಿದ್ದು, ಉಳಿದೆರಡು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿದೆ. +ಆದರೂ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಪಟ್ಟು ಹಿಡಿದ್ದಾರೆ. ಜೆಡಿಎಸ್‌‍ ವರಿಷ್ಠರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿರುವುದಲ್ಲದೆ, ಟಿಕೆಟ್‌ ನೀಡುವಂತೆ ಬಿಜೆಪಿ ವರಿಷ್ಠರ ಮೇಲೆ ಒತ್ತಡವನ್ನೂ ತರುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಅವರ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್‌ ಇವರಿಬ್ಬರಲ್ಲಿ ಒಬ್ಬರು ಸ್ಪರ್ಧೆ ಮಾಡಿದರೂ ಚನ್ನಪಟ್ಟಣ ಹೈ ವೋಲ್ಟೇಜ್‌ ಕ್ಷೇತ್ರವಾಗಿ ಪರಿಣಮಿಸಲಿದೆ. +ಈಗಾಗಲೇ ಶಿವಕುಮಾರ್‌ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು, ರಾಜಕೀಯವಾಗಿ ಚರ್ಚೆಯೂ ಆಗಿದೆ. ಮೂರು ಪಕ್ಷಗಳಿಂದ ಉಪ ಚುನಾವಣೆ ಸಿದ್ಧತೆಗಳು ಸಾಗಿವೆ.ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌‍ ತನ್ನಲ್ಲೇ ಉಳಿಸಿಕೊಳ್ಳುವ ನಿರ್ಧಾರ ಮಾಡಿದ್ದು, ಯೋಗೇಶ್ವರ್‌ ಸ್ಪರ್ಧೆಗೆ ವಿರೋಧ ಮಾಡಿಲ್ಲ. ಆದರೆ, ಬಿಜೆಪಿ ಚಿಹ್ನೆಯ ಬದಲಾಗಿ ಜೆಡಿಎಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಎಂಬ ಸಂದೇಶವನ್ನು ಬಿಜೆಪಿಗೆ ರವಾನಿಸಲಾಗಿದೆ ಎಂದು ಜೆಡಿಎಸ್‌‍ ಉನ್ನತ ಮೂಲಗಳು ತಿಳಿಸಿವೆ. +ಆದರೆ, ಯೋಗೇಶ್ವರ್‌ ಅವರು ಪ್ರಸ್ತುತ ವಿಧಾನ ಪರಿಷತ್‌ ಸದಸ್ಯರಾಗಿರುವುದರಿಂದ ಜೆಡಿಎಸ್‌‍ ಚಿಹ್ನೆಯಡಿ ಸ್ಪರ್ಧಿಸಲು ಒಲವು ತೋರುತ್ತಿಲ್ಲ. ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಆಸಕ್ತಿ ತೋರಿದ್ದಾರೆ. ಒಂದು ವೇಳೆ ಬಿಜೆಪಿ ಟಿಕೆಟ್‌ ದೊರೆಯದಿದ್ದರೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಂದೇಶವನ್ನು ಯೋಗೇಶ್ವರ್‌ ರವಾನಿಸಿದ್ದಾರೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ವಿಚಾರ ಇನ್ನೂ ಗೊಂದಲದಲ್ಲಿದೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್‌. ಮಂಜುನಾಥ್‌ ಅವರು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಯೋಗೇಶ್ವರ್‌ ಅವರ ಸಾಧನೆ ಬಗ್ಗೆ ಜೆಡಿಎಸ್‌‍ಗೆ ಸಮಾಧಾನವಿಲ್ಲ ಎಂಬ ಅಭಿಪ್ರಾಯವಿದೆ. ಯೋಗೇಶ್ವರ್‌ ನಿಲುವಿನಲ್ಲಿ ಬದಲಾವಣೆಯಾಗದಿದ್ದರೆ, ಗಣೇಶ ಹಬ್ಬದ ನಂತರ ಜೆಡಿಎಸ್‌‍ ಬೇರೆ ಅಭ್ಯರ್ಥಿ ಆಯ್ಕೆ ಮಾಡಿ ಕಣಕ್ಕಿಳಿಸಲು ಉದ್ದೇಶಿಸಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಪರ್ಯಾಯ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಮುಂಚೂಣಿಯಲ್ಲಿದೆ. ಆದರೆ, ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವುದನ್ನು ಈಗಾಗಲೇ ತಳ್ಳಿ ಹಾಕಿದ್ದಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್, ಕುಟುಂಬದವರಿಗೆ ಮಣೆ ಹಾಕಿ ಸ್ಪರ್ಧೆಗಿಳಿಸಲಿದೆಯೋ ಅಥವಾ ಸ್ಥಳೀಯರಿಗೆ ಅವಕಾಶ ಮಾಡಿಕೊಡಲಿದೆಯೋ ಎಂಬುದನ್ನು ಕಾದು ನೋಡಬೇಕು. \ No newline at end of file diff --git a/eesanje/url_46_46_5.txt b/eesanje/url_46_46_5.txt new file mode 100644 index 0000000000000000000000000000000000000000..2bf24f7965f570f40d3b55485ed7415aba09ff72 --- /dev/null +++ b/eesanje/url_46_46_5.txt @@ -0,0 +1,14 @@ +ಪ್ರತ್ಯೇಕ ಪಾದಯಾತ್ರೆಗೆ ನನ್ನ ತಕರಾರು ಇಲ್ಲ : ವಿಜಯೇಂದ್ರ ಸ್ಪಷ್ಟನೆ +ಬೆಂಗಳೂರು,ಆ.13-ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವುದು ನನ್ನ ಕರ್ತವ್ಯ. ಆ ಕೆಲಸವನ್ನು ಸತತವಾಗಿ ಮಾಡ್ತಾ ಬಂದಿದ್ದೇನೆ. ಕೆಲವರು ಪ್ರತ್ಯೇಕ ಪಾದಯಾತ್ರೆ ನಡೆಸುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.ಇದಕ್ಕೆ ನನ್ನ ತಕರಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. +ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್‌ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್‌ ಘರ್‌ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಪಾದಯಾತ್ರೆ ನಡೆಸುವುದರಿಂದ ಪಕ್ಷಕ್ಕೆ ಶಕ್ತಿ ಸಿಗುತ್ತದೆ ಎಂದರೆ ವರಿಷ್ಠರು ಅದಕ್ಕೆ ಅನುಮತಿ ಕೊಡುತ್ತಾರೆ. ಕೇಂದ್ರದ ವರಿಷ್ಠರನ್ನು ಭೇಟಿ ಮಾಡುತ್ತೇವೆ ಅಂದಿದ್ದಾರೆ, ಭೇಟಿ ಮಾಡಲು ಎಲ್ಲರಿಗೂ ಸ್ವತಂತ್ರವಿದೆ. ಕೇಂದ್ರದ ನಾಯಕರು ಅನುಮತಿ ಕೊಟ್ಟರೆ ಮಾಡಲಿ. ಏನೇ ಮಾಡಿದರೂ ಅದು ಪಕ್ಷಕ್ಕೆ ಪೂರಕವಾಗಿರಬೇಕು, ಸದುದ್ದೇಶದಿಂದ ಇರಬೇಕು ಎಂದು ಹೇಳಿದರು. +ಇನ್ನು ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತಂತೆ ಸಿ.ಪಿಯೋಗೀಶ್ವರ್‌ ತಾವು ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ. ಇದು ತಪ್ಪು ಎಂದು ನಾವು ಹೇಳಲ್ಲ. ಅವರು ಕೂಡಾ ಕ್ಷೇತ್ರದಲ್ಲಿ ಅವರದ್ದೇ ಆದ ಹಿಡಿತ ಇಟ್ಕೊಂಡಿದ್ದಾರೆ ಎಂದರು. +ಸಿ.ಪಿ.ಯೋಗೇಶ್ವರ್‌ಗೆ ಅವರಿಗೆ ಬೆಂಬಲಿಗರಿದ್ದಾರೆ, ಕ್ಷೇತ್ರದಲ್ಲಿ ಅವರದ್ದೇ ಆದ ಶಕ್ತಿ ಇದೆ. ಆದರೆ ಎರಡೂ ಪಕ್ಷಗಳೂ ಒಟ್ಟಿಗೆ ಹೋಗಬೇಕು. ಈ ಸಂದರ್ಭದಲ್ಲಿ ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂದು ಎರಡೂ ಪಕ್ಷಗಳೂ ಒಟ್ಟಿಗೆ ಕೂತು ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು. +ಇಷ್ಟು ಮಾತ್ರ ಸತ್ಯ, ಚನ್ನಪಟ್ಟಣ ಕ್ಷೇತ್ರ ಎಚ್‌.ಡಿ.ಕುಮಾರಸ್ವಾಮಿ ಅವರು ಗೆದ್ದಂತಹ ಕ್ಷೇತ್ರ. ದೆಹಲಿಯಲ್ಲಿ ಎರಡೂ ಪಕ್ಷದ ವರಿಷ್ಠರು ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಅಲ್ಲೀವರೆಗೂ ಎಲ್ಲರೂ ಸಮಾಧಾನದಿಂದ ಇರಬೇಕು ಎಂದು ಮನವಿ ಮಾಡಿದರು. ಯಾರಿಗೆ ಟಿಕೆಟ್‌ ಎಂದು ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. +ಡಾ.ಅಶ್ವಥ್‌ನಾರಾಯಣ ನೇತೃತ್ವದ ಸಮಿತಿ ಅಭಿಪ್ರಾಯ ಪಡೆದುಕೊಂಡಿದ್ದಾರೆ. ವರದಿಯಲ್ಲಿ ಅವರು ಏನು ಕೊಟ್ಟಿದ್ದಾರೋ ಗೊತ್ತಿಲ್ಲ, ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಹೇಳಿದರು. +ಸಿಬಿಐಗೆ ವಹಿಸಿ:ಮುಡಾ ಪ್ರಕರಣವನ್ನು ರಾಜ್ಯ ಸರ್ಕಾರ ವಿಳಂಬ ಮಾಡದೆ ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು. +ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಟುಂಬದವರೇ ಭಾಗಿಯಾಗಿದ್ದಾರೆ ಎಂಬ ಆರೋಪವಿದೆ. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳು ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ನಿಷ್ಪಕ್ಷಪಾತ ತನಿಖೆ ಸಿಬಿಐನಿಂದ ಮಾತ್ರ ಸಾಧ್ಯ ಎಂದು ಅಭಿಪ್ರಾಯಪಟ್ಟರು. +ಸರ್ಕಾರದಿಂದ ಜನೌಷಧ ಕೇಂದ್ರಗಳಿಗೆ ಬ್ರೇಕ್ ಹಾಕುವ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಇದು ಖಂಡನೀಯ. ರಾಜ್ಯ ಸರ್ಕಾರ ಪ್ರತಿಯೊಂದು ವಿಚಾರದಲ್ಲೂ ಸಂಘರ್ಷದ ಹಾದಿ ತುಳಿಯುತ್ತಿದೆ, ಇದು ದುರಂತ ಬಡವರಿಗೆ ಕಡಿಮೆ ದರದಲ್ಲಿ ಕೇಂದ್ರದಿಂದ ಔಷಧಗಳು ಸಿಗುತ್ತಿವೆ. ಇದು ಪ್ರಧಾನಮಂತ್ರಿಗಳ ಕನಸಿನ ಯೋಜನೆಯಾಗಿದೆ ಎಂದರು. +ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು. +ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು, ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ ಎಂದರು. +ಸಂಸದ ಪಿ.ಸಿ.ಮೋಹನ್‌, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್‌ ಸಂಖ್ಯೆ 44ರ ಅಧ್ಯಕ್ಷ ಸಾಗರ್‌, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. +ಯುವಕರಿಂದ ಬೈಕ್‌ ರ್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು. ಈಗಾಗಲೇ ಆ.11ರಿಂದ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_46_6.txt b/eesanje/url_46_46_6.txt new file mode 100644 index 0000000000000000000000000000000000000000..dce1e97b35071e271624ceaf95abf9420a84c116 --- /dev/null +++ b/eesanje/url_46_46_6.txt @@ -0,0 +1,11 @@ +ಮನೆಯೊಂದು ಮೂರು ಬಾಗಿಲಂತಾದ ಕರ್ನಾಟಕ ಬಿಜೆಪಿ +ಬೆಂಗಳೂರು,ಆ.13-ಮನೆಯೊಂದು ಮೂರು ಬಾಗಿಲು! ಹೌದು, ಇದು ಸದ್ಯ ರಾಜ್ಯ ಬಿಜೆಪಿಯ ಪರಿಸ್ಥಿತಿ. ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ, ಹೋರಾಟದ ಉತ್ಸಾಹ ಕಮಲ ಪಾಳಯದಲ್ಲಿ ಮೇಲ್ನೋಟಕ್ಕೆ ಕಾಣಸಿಕ್ಕರೂ, ಆಂತರಿಕವಾಗಿ ಬಿಜೆಪಿ ಒಡೆದ ಮನೆಯಾಗಿದೆ. +ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಂ ಒಂದು ಕಡೆಯಾದರೆ, ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಮತ್ತೊಂದು ಕಡೆ. ಇದೆಲ್ಲವನ್ನೂ ಮೀರಿ ಸಂಘ ನಿಷ್ಠ ಅಥವಾ ಹೈಕಮಾಂಡ್‌ ನಿಷ್ಠ ಬಣ ಮಗದೊಂದು ಕಡೆ. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಯ್ಕೆ ಸಂದರ್ಭದಲ್ಲೇ ಭುಗಿಲೆದ್ದ ಅಸಮಾಧಾನ ಇನ್ನೂ ಆರಿಲ್ಲ. ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಬಹಿರಂಗವಾಗಿಯೇ ಗುಡುಗಿದ್ದರು. ಅವರಿಗೆ ಸಾಥ್‌ ನೀಡಿದವರು ವಲಸೆ ಶಾಸಕ ರಮೇಶ್‌ ಜಾರಕಿಹೊಳಿ. +ಸದ್ಯ ಈ ತಂಡ ವಿಸ್ತರಣೆಯಾಗುತ್ತಿದೆ. ಮಾಜಿ ಸಂಸದ ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ, ಶಾಸಕ ಬಿಪಿ ಹರೀಶ್‌ ಕೂಡಾ ಸೇರ್ಪಡೆಯಾಗಿದ್ದಾರೆ. ಈ ಭಿನ್ನ ರಾಗಕ್ಕೆ ವಿಧಾನಸಭೆ ಉಪ ನಾಯಕ ಅರವಿಂದ ಬೆಲ್ಲದ ಪರೋಕ್ಷ ಬೆಂಬಲ ನೀಡಿದ್ದಾರೆ. +ಸಿಎಂ ಸಿದ್ದರಾಮಯ್ಯ ವಿರುದ್ಧದ ಹೋರಾಟ ಹಾಗೂ ಪಾದಯಾತ್ರೆಯಲ್ಲಿ ಉತ್ಸಾಹದಲ್ಲಿದ್ದ ಬಿಜೆಪಿಗೆ ಒಳಬೇಗುದಿಯೇ ಬಹುದೊಡ್ಡ ಸವಾಲಾಗಿದೆ. ಪಾದಯಾತ್ರೆಯಲ್ಲಿ ಬಿ.ವೈ.ವಿಜಯೇಂದ್ರಗೆ ಒಂದಿಷ್ಟು ರಾಜಕೀಯ ಲಾಭವಾದರೂ ಅದನ್ನು ಗಟ್ಟಿಗೊಳಿಸಲು ಪಕ್ಷದಲ್ಲಿರುವ ಬಂಡಾಯಗಾರರು ಅವಕಾಶ ಕೊಡುತ್ತಿಲ್ಲ. +ಈ ಕಾರಣಕ್ಕಾಗಿಯೇ ಪಾದಯಾತ್ರೆಯ ಹಿಂದೆ ಡಿಕೆಶಿ ಸೂತ್ರಧಾರ ಎಂದೇ ಬಂಡಾಯ ಬಣ ಪ್ರಚಾರ ಮಾಡಿತ್ತು. ಇದನ್ನು ಅಲ್ಲಗಳೆಯುವುದು ವಿಜಯೇಂದ್ರಗೂ ಸವಾಲಾಗಿ ಮಾರ್ಪಟ್ಟಿತ್ತು. ಈ ನಡುವೆ ಯತ್ನಾಳ್‌ ನೇತೃತ್ವದ ಭಿನ್ನರ ಗುಂಪು ಬಳ್ಳಾರಿಗೆ ಪಾದಯಾತ್ರೆ ಹಮಿಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಆದರೆ ಇದಕ್ಕೆ ಹೈಕಮಾಂಡ್‌ ಅನುಮತಿ ಕೊಡುತ್ತಾ? ಇದರಲ್ಲಿ ಬಿ.ವೈ.ವಿಜಯೇಂದ್ರ ಬಣ ಭಾಗಿಯಾಗುತ್ತಾ? ಎಂಬುವುದು ಯಕ್ಷ ಪ್ರಶ್ನೆಯಾಗಿದೆ. +ಸದ್ಯ ರಾಜ್ಯ ಬಿಜೆಪಿಯಲ್ಲಿ ಕೇಳಿ ಬರುತ್ತಿರುವ ಒಂದು ಪದ ಹೊಂದಾಣಿಕೆ ರಾಜಕಾರಣ. ಹೌದು ಬಿವೈ ವಿಜಯೇಂದ್ರ ವಿರುದ್ಧ ಯತ್ನಾಳ್‌ ಬಣ ಈ ಆರೋಪವನ್ನು ಮಾಡುತ್ತಿದೆ. ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ವಿರುದ್ಧವೂ ಇದೇ ಆರೋಪವನ್ನು ಯತ್ನಾಳ್‌ ತಂಡ ಮಾಡುತ್ತಿದೆ. ಬಿವೈ ವಿಜಯೇಂದ್ರ ಅವರು ಡಿಸಿಎಂ ಡಿಕೆ ಶಿವಕುಮಾರ್‌ ಜೊತೆಗೆ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂಬುವುದು ಆರೋಪವಾಗಿದೆ. +ಸದನದಲ್ಲೂ ಬಿಜೆಪಿ ಅಹೋರಾತ್ರಿ ಧರಣಿ ಸಂದರ್ಭದಲ್ಲಿ ಇದೇ ಆರೋಪವನ್ನು ಯತ್ನಾಳ್‌ ಮಾಡಿದ್ದರು. ತಮ ಒತ್ತಡಕ್ಕೆ ಮಣಿದು ಪ್ರತಿಭಟನೆ ನಡೆಸಿದ್ದಾರೆ ಎಂಬ ಅರ್ಥದಲ್ಲೂ ಹೇಳಿಕೆ ನೀಡಿದ್ದರು. ಇವೆಲ್ಲವೂ ವಿಜಯೇಂದ್ರ ಬಣಕ್ಕೆ ಮುಜುಗರ ಉಂಟು ಮಾಡುತಿವೆ. +ಹೈಕಮಾಂಡ್‌ ನಡೆ ಏನು:ರಾಜ್ಯ ಬಿಜೆಪಿಯ ಒಳಬೇಗುದಿ ಬಿಜೆಪಿ ಹೈಕಮಾಂಡ್‌ಗೂ ತಲೆನೋವಾಗಿ ಮಾರ್ಪಟ್ಟಿದೆ. ಇದು ಹೀಗೆಯೇ ಮುಂದುವರಿದಲ್ಲಿ ಪಕ್ಷಕ್ಕೆ ದೊಡ್ಡ ರೀತಿಯಲ್ಲಿ ಡ್ಯಾಮೇಜ್‌ ಆಗಲಿದೆ. ರಾಜ್ಯದಲ್ಲಿ ಆಡಳಿತ ಸರ್ಕಾರದ ವಿರುದ್ಧ ಹೋರಾಟ ಮಾಡಲು ಬಿಜೆಪಿ ಬಳಿ ಸಾಕಷ್ಟು ಅಸ್ತ್ರಗಳಿವೆ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಹೈಕಮಾಂಡ್‌ ಮಧ್ಯಪ್ರವೇಶ ಮಾಡುತ್ತಾ? ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ. +ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರಲ್ಲಿ ಸಾಕಷ್ಟು ನಿರೀಕ್ಷೆಗಳು ಇದ್ದವು. ಆದರೆ ಎಲ್ಲರ ವಿಶ್ವಾಸ ಗಳಿಸುವಲ್ಲಿ ವಿಜಯೇಂದ್ರ ವಿಫಲವಾಗುತ್ತಿದ್ದಾರೆ. ಪಕ್ಷದಲ್ಲೇ ಕೆಲವರು ಬಹಿರಂಗವಾಗಿ ವಿಜಯೇಂದ್ರ ವಿರುದ್ಧ ಅಸಮಾಧಾನ ಹೊರಹಾಕಿದರೆ, ಮತ್ತೆ ಕೆಲವರು ಆಂತರಿಕವಾಗಿಯೇ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿಜಯೇಂದ್ರ ವಿರುದ್ಧವಾಗಿ ಅಭಿಪ್ರಾಯ ರೂಪಿಸುವಲ್ಲಿ ಅವರ ವಿರೋಧಿ ಬಣ ಸಕ್ರಿಯವಾದರೆ, ಅವರನ್ನು ಬಲವಾಗಿ ಸಮರ್ಥನೆ ಮಾಡುವವರು ಪಕ್ಷದಲ್ಲಿ ಇಲ್ಲ. ಇದು ಭವಿಷ್ಯದಲ್ಲಿ ವಿಜಯೇಂದ್ರಗೆ ಹಿನ್ನಡೆ ಆಗುವುದರಲ್ಲಿ ಸಂಶಯವಿಲ್ಲ. \ No newline at end of file diff --git a/eesanje/url_46_46_7.txt b/eesanje/url_46_46_7.txt new file mode 100644 index 0000000000000000000000000000000000000000..bc1b23ca36ae8d561146b519ba4af60244e71d9a --- /dev/null +++ b/eesanje/url_46_46_7.txt @@ -0,0 +1,13 @@ +ಸ್ವಾತಂತ್ರ್ಯೋತ್ಸವ ದಿನಾಚರಣೆ ಬಂದೋಬಸ್ತ್‌ಗೆ 1583 ಅಧಿಕಾರಿ-ಸಿಬ್ಬಂದಿ ನಿಯೋಜನೆ +ಬೆಂಗಳೂರು, ಆ.13– ಫೀಲ್ಡ್ ಮಾರ್ಷಲ್‌ ಮಾಣಿಕ್‌ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಸುಲಲಿತವಾಗಿ ನಡೆಯಲು ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳೂ ಸೇರಿದಂತೆ 1583 ಸಿಬ್ಬಂದಿಯನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್‌‍ ಆಯುಕ್ತ ಬಿ. ದಯಾನಂದ ಅವರು ತಿಳಿಸಿದರು. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್ಲಾ ವಿಭಾಗಗಳಿಂದ 10 ಮಂದಿ ಡಿಸಿಪಿಗಳು, 17 ಎಸಿಪಿಗಳು, 42 ಇನ್ಸ್ ಸಪೆಕ್ಟರ್‌ಗಳು, 112 ಮಂದಿ ಪಿಎಸ್‌‍ಐಗಳು, 62 ಎಎಸ್‌‍ಐಗಳು, 511 ಮಂದಿ ಕಾನ್‌ಸ್ಟೇಬಲ್‌ಗಳು, 72 ಮಹಿಳಾ ಸಿಬ್ಬಂದಿಗಳೊಂದಿಗೆ 129 ಮಂದಿ ಸಾದ ಉಡುಪಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ 27 ಮಂದಿ ಕ್ಯಾಮೆರಾ ಸಿಬ್ಬಂದಿಗಳನ್ನು ಬಂದೋಬಸ್ತ್‌ ಕರ್ತವ್ಯಕ್ಕೆ ನೇಮಿಸಲಾಗಿದೆ ಎಂದರು. +ಸಂಚಾರ ನಿರ್ವಹಣೆಗಾಗಿ 3 ಮಂದಿ ಡಿಸಿಪಿ, 6 ಎಸಿಪಿ, 19 ಇನ್ಸ್ ಸಪೆಕ್ಟರ್‌, 32 ಸಬ್‌ಇನ್ಸ್ ಸಪೆಕ್ಟರ್‌, 111 ಮಂದಿ ಎಎಸ್‌‍ಐ, 430 ಕಾನ್‌ಸ್ಟೇಬಲ್‌ಗಳು ನಿಗಾ ವಹಿಸಲಿದ್ದಾರೆ.ಅಲ್ಲದೆ, ಮೈದಾನದ ಬಂದೋಬಸ್ತ್‌ ಕರ್ತವ್ಯಕ್ಕೆ 10 ಕೆಎಸ್‌‍ಆರ್‌ಪಿ ಮತ್ತು ಸಿಆರ್‌ ತುಕಡಿಗಳನ್ನು, ಅಗ್ನಿಶಾಮಕ ವಾಹನಗಳು, 2 ಅಂಬುಲೆನ್ಸ್ ಸ ವಾಹನಗಳು, 4 ಖಾಲಿ ವಾಹನಗಳು, ಒಂದು ಕ್ಷಿಪ್ರ ಕಾರ್ಯಾಚರಣೆ ಪಡೆ, 1 ಡಿ-ಸ್ಪಾಟ್‌, 1 ಆರ್‌ಐವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಒಂದು ಗರುಡ ಫೋರ್ಸ್‌ ಕಾಯ್ದಿರಿಸಲಾಗಿದೆ. +ಮೈದಾನದ ಸುತ್ತ ಎಲ್ಲಾ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾ ವಹಿಸಲು 100 ಸಿಸಿ ಟಿವಿ, ಕ್ಯಾಮೆರಾಗಳನ್ನು ಮತ್ತು 4 ಬ್ಯಾಗೆಜ್‌ ಸ್ಕ್ಯಾನರ್‌, 20 ಡಿಎಫ್‌ಎಂಡಿ ಮತ್ತು 40 ಹೆಚ್‌ಹೆಚ್‌ ಎಂಡಿಗಳನ್ನು ಅಳವಡಿಸಲಾಗಿರುತ್ತದೆ.ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರ ಭದ್ರತೆಯ ದೃಷ್ಟಿಯಿಂದ ಆಹ್ವಾನಿತರಿಗೆ ಪಾಸ್‌‍ಗಳನ್ನು ವಿತರಿಸಲಾಗಿದೆ. +ಗೇಟ್‌-2ರಲ್ಲಿ ಪಿಂಕ್‌ ಬಣ್ಣದ ವಿವಿಐಪಿ ಪಾಸ್‌‍ ಹೊಂದಿರುವವರಿಗೆ ಪ್ರವೇಶಿಸಿ, ಬ್ಲಾಕ್‌ 1 ಮತ್ತು 1ಎನಲ್ಲಿ ಆಸಿನರಾಗುವುದು. ಪಿಂಕ್‌ ಬಣ್ಣದ ವಿಐಪಿ ಪಾಸ್‌‍ ಹೊಂದಿರುವವರು ಗೇಟ್‌ ನಂ 2ರಲ್ಲೇ ಪ್ರವೇಶಿಸಿ ಬ್ಲಾಕ್‌ ನಂ 2 ಮತ್ತು 3ರಲ್ಲಿ ಅಸಿನರಾಗುವುದು.ಗೇಟ್‌ ನಂ 4ರಲ್ಲಿ ಬಿಳಿ ಬಣ್ಣದ ಪಾಸ್‌‍ ಹೊಂದಿರುವವರಿಗೆ ಪ್ರವೇಶವಿದ್ದು, ಅವರು ಬ್ಲಾಕ್‌ 4,5 ಮತ್ತು 6ರಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರುತ್ತದೆ. +ಗೇಟ್‌ ನಂ 4ರಲ್ಲಿ ಮಾಧ್ಯಮದವರು ಪ್ರವೇಶಿಸಿ ಮೀಡಿಯಾ ಬಾಕ್ಸ್ಸಗೆ ತೆರೆಳುವುದು. ಗೇಟ್‌ ನಂ 5ರಲ್ಲಿ ಹಸಿರು ಬಣ್ಣದ ಪಾಸ್‌‍ ಹೊಂದಿರುವ ಸಾರ್ವಜನಿಕರಿಗೆ ಪ್ರವೇಶವಿದ್ದು, ಅವರು ಬ್ಲಾಕ್‌ ನಂ 7, 8,9ರಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.ಕಾರ್ಯಕ್ರಮದ ಭದ್ರತಾ ದೃಷ್ಟಿಯಿಂದ ಗೇಟ್‌ಗಳ ಬಳಿ ತಪಾಸಣೆಗೆ ಒಳಪಟ್ಟು ಪೊಲೀಸರೊಂದಿಗೆ ಸಹಕರಿಸುವಂತೆ ಬಿ. ದಯಾನಂದ ಅವರು ಮನವಿ ಮಾಡಿದ್ದಾರೆ. +ಸೂಚನೆ:ಸಮಾರಂಭಕ್ಕೆ ಆಗಮಿಸುವವರು ಬೆಳಗ್ಗೆ 8.30ರ ಒಳಗೆ ತಮ ಆಸನಗಳಲ್ಲಿ ಆಸೀನರಾಗತಕ್ಕದ್ದು. ಯಾವುದೇ ಕಾರಣಕ್ಕೂ ಮೈದಾನದೊಳಗೆ ಪ್ರವೇಶಿಸತಕ್ಕದ್ದಲ್ಲ. ಸಮಾರಂಭಕ್ಕೆ ಆಗಮಿಸುವ ಸಾರ್ವಜನಿಕರು ಮಣಿಪಾಲ್ ಸೆಂಟರ್‌ ಕಡೆಯಿಂದ ಕಬ್ಬನ್‌ ರಸ್ತೆ ಮೂಲಕ ಗೇಟ್‌ ನಂ. 4ಕ್ಕೆ ಆಗಮಿಸಲು ಸೂಚಿಸಲಾಗಿದೆ. +ಕಾರ್ಯಕ್ರಮಕ್ಕೆ ಆಗಮಿಸುವ ವ್ಯಕ್ತಿಯೊಬ್ಬರು ಅನಗತ್ಯ ಲಗೇಜು ಹಾಗೂ ಇತರೇ ವಸ್ತುಗಳನ್ನು ತರುವಂತಿಲ್ಲ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು ಹಾಗೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಸಮವಸ್ತ್ರದಲ್ಲಿರುವ ಪೊಲೀಸ್‌‍ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. +ನಿಷಿದ್ಧ ವಸ್ತುಗಳು:ಮೈದಾನದೊಳಗೆ ಸಿಗರೇಟ್‌, ಬೆಂಕಿ ಪೆಟ್ಟಿಗೆ, ಹರಿತವಾದ ವಸ್ತು ಹಾಗೂ ಚಾಕು- ಚೂರಿಗಳು, ಕರಪತ್ರಗಳು, ಕಪ್ಪು ಕರವಸ್ತ್ರಗಳು, ಬಣ್ಣದ ದ್ರಾವಣಗಳು, ತಿಂಡಿ- ತಿನಿಸುಗಳು, ವಿಡಿಯೋ ಮತ್ತು ಸ್ಟಿಲ್‌ ಕ್ಯಾಮೆರಾಗಳು, ಮದ್ಯದ ಬಾಟಲ್‌ಗಳು, ಮಾದಕ ವಸ್ತುಗಳು, ನೀರಿನ ಬಾಟಲ್‌ಗಳು ಹಾಗೂ ಕ್ಯಾನ್‌ಗಳು, ಕೊಡೆ(ಛತ್ರಿ), ಶಸಾ್ತ್ರಸ್ತ್ರಗಳು, ಪಟಾಕಿ ಮತ್ತು ಸ್ಫೋಟಕ ವಸ್ತುಗಳನ್ನು ತರುವಂತಿಲ್ಲ. +ವಾಹನಗಳ ನಿಲುಗಡೆ:ಕಾರ್‌ ಪಾಸುಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಪಾಸ್‌‍ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಂಡು ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್ , ಅಗ್ನಿಶಾಮಕದಳದ ವಾಹನಗಳು, ನೀರಿನ ಟ್ಯಾಂಕರ್‌, ಕೆಎಸ್‌‍ಆರ್‌ಪಿ, ಕ್ಯೂ.ಆರ್‌ಟಿ, ಬಿಬಿಎಂಪಿ ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2ರ ಮುಖಾಂತರ ಪರೇಡ್‌ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್‌ ವಾಲ್‌ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.ಕಾರ್ಯಕ್ರಮದಲ್ಲಿ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ. +ವಾಹನ ನಿಲುಗಡೆ ನಿಷಿದ್ಧ ರಸ್ತೆಗಳು:ಸೆಂಟ್ರಲ್‌ ಸ್ಟ್ರೀಟ್‌, ಅನಿಲ್‌ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್‌‍ ನಿಲ್ದಾಣದವರೆಗೆ ಮತ್ತು ಕಬ್ಬನ್‌ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್‌. ರಸ್ತೆ ಮತ್ತು ಕಬ್ಬನ್‌ ರಸ್ತೆ ಜಂಕ್ಷನ್‌ವರೆಗೆ ಹಾಗೂ ಎಂಜಿ ರಸ್ತೆ ಅನಿಲ್‌ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಸ ವೃತ್ತದವರೆಗೆ. +ಸಾರ್ವಜನಿಕರಲ್ಲಿ ಮನವಿ:ಮಾಣಿಕ್‌ ಷಾ ಪೆರೇಡ್‌ ಮೈದಾನ ಮತ್ತು ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಗಳನ್ನು ಬಳಸಲು ಕೋರಲಾಗಿದೆ.ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮೊಂದಿಗಿರಲಿದ್ದು, ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112ಗೆ ಕರೆ ಮಾಡಲು ಸೂಚಿಸಲಾಗಿದೆ. ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ ಸಹಕಾರ ಬಯಸುವುದಾಗಿ ನಗರ ಸಂಚಾರಿ ಪೊಲೀಸರು ಕೋರಿದ್ದಾರೆ. \ No newline at end of file diff --git a/eesanje/url_46_46_8.txt b/eesanje/url_46_46_8.txt new file mode 100644 index 0000000000000000000000000000000000000000..c519d20c71e49d94b73b04331b23e93bb86a0470 --- /dev/null +++ b/eesanje/url_46_46_8.txt @@ -0,0 +1,6 @@ +ವರಮಹಾಲಕ್ಷ್ಮಿಗೆ ಏರಿದ ಹೂವಿನ ಬೆಲೆ, ರೈತರಿಗೆ ಸಂತಸ..! +ಬೆಂಗಳೂರು, ಆ.13-ಶ್ರಾವಣ ಮಾಸ ಸಾಲು ಸಾಲು ಹಬ್ಬಗಳ ಮಾಸ… ವರಮಹಾಲಕ್ಷ್ಮಿಯನ್ನು ಬರಮಾಡಿಕೊಳ್ಳುಲು ತಯಾರಿ ಭರದಿಂದ ಸಾಗಿವೆ. ಆದರೆ ಹೂಗಳ ಬೆಲೆ ಏರಿದ್ದು, ಗ್ರಾಹಕರಿಗೆ ಸಂಕಷ್ಟವಾದರೆ, ರೈತರಿಗೆ ಸಂತಸ ತಂದಿದೆ.ಆಷಾಢ ಮಾಸದಲ್ಲಿ ಯಾವುದೆ ಹಬ್ಬ, ಶುಭ ಸಮಾರಂಭಗಳು ನಡೆಯುವುದಿಲ್ಲ. +ಕಳೆದ ಒಂದು ತಿಂಗಳಿನಿಂದ ಕಡಿಮೆಯಿದ್ದ ಹೂಗಳ ಬೆಲೆ ಕಳೆದ ಒಂದು ವಾರದಿಂದ ನಿಧಾನವಾಗಿ ಏರತೊಡಗಿದೆ. ಅದರಲ್ಲೂ ವರಾಮಹಾಲಕ್ಷಿಹಬ್ಬಕ್ಕೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಮಾರುಕಟ್ಟೆಗೆ ತರಹೇವಾರಿ ಹೂಗಳು ಬರುತ್ತಿವೆ. ಇಂದಿನಿಂದಲೇ ವ್ಯಾಪಾರಿಗಳು ಬೆಲೆಯನ್ನು ಹೆಚ್ಚಿಸಿ ಮಾರಾಟ ಮಾಡುತ್ತಿದ್ದಾರೆ. +ಕಳೆದ ಕೆಲ ದಿನಗಳ ಹಿಂದೆ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದ್ದ ಸುನಾಮಿ ರೋಜ್‌ 200 ರೂ. ತಲುಪಿದೆ. ಸೇವಂತಿಗೆ ಕೆಜಿಗೆ 250ರೂ., ಮಾರಿಗೋಲ್ಡ್ 250ರೂ. ಕನಕಾಂಬರ ಒಂದು ಸಾವಿರ ರೂ. ತಲುಪಿದೆ. +ರಾಜ್ಯದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಜಿಲ್ಲೆಗಳಲ್ಲಿ ಹೆಚ್ಚಾಗಿ ಕನಕಾಂಬರ, ಸೇವಂತಿಗೆ, ಚೆಂಡು ಹೂ, ಸುಗಂಧರಾಜ, ಕಾಕಡ ಹೂಗಳನ್ನು ಬೆಳೆಯಲಾಗುತ್ತಿದ್ದು, ಬಿರು ಬೇಸಿಗೆಯಿಂದ ನೀರಿಲ್ಲದೆ ಒಣಗಿದ್ದ ಹೂವಿನ ತೋಟ ಕಳೆದ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮತ್ತೆ ಚಿಗುರೊಡೆದ್ದು ಇಳುವರಿ ಚೆನ್ನಾಗಿ ಬಂದಿದೆ. +ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣಲ್ಲಿ ಹೂ ಬರುತ್ತಿದ್ದು, ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗಿದೆ. ಈಗಾಗಲೆ ಮನೆಗಳಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆಗೆ ಗೃಹಿಣಿಯರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂದವಾಗಿ ಅಲಂಕರಿಸಲು ಹೂಗಳು ಹೆಚ್ಚಾಗಿ ಬೇಕು. ಬೆಲೆ ಹೆಚ್ಚಾದರೂ ಸರಿಯೇ ಹಬ್ಬ ಮಾಡಬೇಕಲ್ಲ ಎಂದು ಮಹಿಳೆಯರು ಸಿದ್ಧತೆಯಲ್ಲಿದ್ದಾರೆ. \ No newline at end of file diff --git a/eesanje/url_46_46_9.txt b/eesanje/url_46_46_9.txt new file mode 100644 index 0000000000000000000000000000000000000000..0416f911c46149561076bc42acd2e8bb4faa65dc --- /dev/null +++ b/eesanje/url_46_46_9.txt @@ -0,0 +1,8 @@ +ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ಅದ್ಧೂರಿ ದಸರಾ +ಮೈಸೂರು, ಆ. 13-ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ 14 ಆನೆಗಳು ಭಾಗವಹಿಸಲಿವೆ. ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದಲ್ಲಿ ದಸರ ಉತ್ಸವ ನೆರವೇರಲಿದೆ.ಅಭಿಮನ್ಯು, ವರಲಕ್ಷಿ ಧನಂಜಯ, ಗೋಪಿ ,ಭೀಮ, ಲಕ್ಷಿ, ಕಂಜನ್‌, ರೋಹಿತ್‌, ಏಕಲವ್ಯ ಆನೆಗಳು ಮೊದಲ ತಂಡದಲ್ಲಿ ಆಗಮಿಸಲಿವೆ. ಎರಡನೇ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷಿ, ಹಿರಣ್ಯ ಆನೆಗಳು ಮೈಸೂರಿಗೆ ಆಗಮಿಸಲಿವೆ. +ಹೆಚ್ಚುವರಿಯಾಗಿ ಹರ್ಷ, ಅಯ್ಯಪ್ಪ, ಪಾರ್ಥ ಸಾರಥಿ ಹಾಗೂ ಮಾಲಾದೇವಿ ಆನೆಗಳು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿವೆ. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. +ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ -2024ರ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಬಾರಿ ಬರಗಾಲದ ಕಾರಣ ಅದ್ಧೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಹಾಗಾಗಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ. +ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂ. ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕೆಂದು ಸೂಚಿಸಲಾಗಿದೆ. +ಅ.3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ.ಆಗಸ್ಟ್‌‍ 21ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ನಡೆಯಲಿದೆ. +ಅಕ್ಟೋಬರ್‌ 3 ರಿಂದ ದಸರಾ ಮಹೋತ್ಸವ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ. +ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಮುಖ್ಯಮಂತ್ರಿಸಿದ್ದರಾಮಯ್ಯ ಸೂಚಿಸಿದ್ದಾರೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುದು ಇನ್ನೂ ನಿರ್ಧಾರವಾಗಿಲ್ಲ. \ No newline at end of file diff --git a/eesanje/url_46_47_1.txt b/eesanje/url_46_47_1.txt new file mode 100644 index 0000000000000000000000000000000000000000..b8c74edafe44b7b0d99333582ed0fc4341dfd693 --- /dev/null +++ b/eesanje/url_46_47_1.txt @@ -0,0 +1,4 @@ +6 ರಂಗಾಯಣಗಳಿಗೆ ನಿರ್ದೇಶಕರ ನೇಮಕ +ಬೆಂಗಳೂರು :ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. +ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. +ನಿರ್ದೇಶಕ ಪಟ್ಟಿ :1.ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,2.ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .3.ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.4.ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.5.ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.6.ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. \ No newline at end of file diff --git a/eesanje/url_46_47_10.txt b/eesanje/url_46_47_10.txt new file mode 100644 index 0000000000000000000000000000000000000000..dfa8b42fb412c0ec1b9b49a7584b66502f9cd03c --- /dev/null +++ b/eesanje/url_46_47_10.txt @@ -0,0 +1,6 @@ +ಗ್ರೇಟರ್‌ ಬೆಂಗಳೂರು ರಚನೆ ಬಿಟ್ಟು ಬಿಬಿಎಂಪಿ ಚುನಾವಣೆ ನಡೆಸುವಂತೆ ಸಿಎಂಗೆ ಪತ್ರ +ಬೆಂಗಳೂರು,ಆ.12-ಗ್ರೀಟರ್‌ ಬೆಂಗಳೂರು ರಚನೆ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆ ಯೋಚನೆ ಕೈಬಿಟ್ಟು ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ಹಕ್ಕು ಅಧ್ಯಯನ ಕೇಂದ್ರ ಪತ್ರ ಬರೆದಿದೆ. +ಗ್ರೇಟರ್‌ ಬೆಂಗಳೂರು ರಚನೆಯಲ್ಲಿ ಪ್ರಗತಿಪರ ಅಂಶಗಳಿಲ್ಲ ಎಂದು ನಾಗರಿಕರ ಅಭಿಪ್ರಾಯವಾಗಿದೆ. ಅಲ್ಲದೆ ಬ್ರಾಂಡ್‌ ಬೆಂಗಳೂರು ಸಮಿತಿ ನೀಡಿದ್ದ ಹಲವು ಅಪೇಕ್ಷಣೀಯ ಶಿಫಾರಸ್ಸುಗಳನ್ನು ಸರ್ಕಾರ ನಿರ್ಲಕ್ಷಿಸಿದೆ ಎಂಬ ಆರೋಪ ಕೇಳಿಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಅಮರೇಶ್‌ ಅವರು ಸಿಎಂಗೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. +ಮೆಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಧಾನ ಮಂಡಲದಲ್ಲಿ ಮಂಡಿಸಿರುವ ಗ್ರೀಟರ್‌ ಬೆಂಗಳೂರು ಆಡಳಿತ ಮಸೂದೆಗೆ ಜನಾಗ್ರಹ ಸಂಸ್ಥೆ ನಡೆಸಿದ ತುಲನಾತ್ಮಕ ವಿಶ್ಲೇಷಣೆಯಲ್ಲಿ 10 ಅಂಕಗಳಿಗೆ ಕೇವಲ 3.35 ಅಂಕಗಳು ಸಾರ್ವಜನಿಕರಿಂದ ಲಬಿಸಿರುವುದು ಬಿಬಿಜಿ ಜನಪ್ರಿಯ ಅಲ್ಲವೆಂದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ. +ಸುಪ್ರೀಂ ಕೋರ್ಟ್‌ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ಆದೇಶಿಸುವುದೋ ಎಂಬ ಭಯದಿಂದ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಕಾರಣಕ್ಕಾಗಿ ಸದರಿ ಜನಪ್ರಿಯವಲ್ಲದ ಜಿಬಿಜಿ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿದಂತೆ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ. +ಕಳೆದ 4 ವರ್ಷ ಕಳೆದರೂ ಚುನಾವಣೆ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ಆದ್ದರಿಂದ ತಕ್ಷಣವೇ ಜಿಬಿಜಿ ಮಸೂದೆಯನ್ನು ಕೈಬಿಟ್ಟು ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_46_47_11.txt b/eesanje/url_46_47_11.txt new file mode 100644 index 0000000000000000000000000000000000000000..7c65b9116c63e841639aacf41e7a3ba49a5e3f02 --- /dev/null +++ b/eesanje/url_46_47_11.txt @@ -0,0 +1,8 @@ +ಟಿಬಿ ಡ್ಯಾಮ್ ಡ್ಯಾಮೇಜ್ ಅಚಾನಕ್‌ ಆಗಿದ್ದಲ್ಲ : ಜನಾರ್ದನ ರೆಡ್ಡಿ ಆರೋಪ +ಕೊಪ್ಪಳ,ಆ.12-ತುಂಗಭದ್ರಾ ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಎಂದು ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. +ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ , ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್‌ ಆಗಿದೆ ಎಂದು ಹೇಳುತ್ತಾರೆ, ಇದನ್ನು ಒಪ್ಪುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ. +ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. +ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೆ ಯಾರಾದರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ ಭಾಗದ ರೈತರಿಗೆ ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದ್ದಾರೆ. +ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನು ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ! ಕರ್ನಾಟಕ ಕಾಂಗ್ರೆಸ್‌‍ ಸರ್ಕಾರ ಇದ್ಯಾವುದೇ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. +ಸರಿಯಾಗಿ ನಿರ್ವಹಣೆ ಮಾಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತೆ. ಇದು ಮೂರು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾದರೂ ಡ್ಯಾಂ ನಮ ಸುಪರ್ದಿಯಲ್ಲಿದೆ. ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಾತನಾಡುತ್ತಿಲ್ಲ. +ವಿಶ್ವದಲ್ಲಿ ಇರುವ ಎಲ್ಲಾ ರೀತಿಯ ಟೆಕ್ನಾಲಜಿ ಬಳಸಿ ಇದನ್ನು ಕೂಡಲೇ ನಿರ್ವಹಣೆ ಮಾಡಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡಿಕೆಶಿ ಹೇಳಿದಂತೆ ಅಚಾನಕ್‌ ಆಗಿ ಕಟ್‌ ಆಗಿದೆ ಎಂದರೆ ಸಣ್ಣ ಮಕ್ಕಳು ಕೂಡಾ ನಗುತ್ತಾರೆ. ಈ ವೈಫಲ್ಯದ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ತೆಗೆದುಕೊಳ್ಳಬೇಕು. ಇದು ತುಂಗಭದ್ರಾ ಡ್ಯಾಂ ಬೋರ್ಡ್‌ ಹಾಗೂ ಸರ್ಕಾರ ಎರಡರ ವೈಲ್ಯವೂ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_47_12.txt b/eesanje/url_46_47_12.txt new file mode 100644 index 0000000000000000000000000000000000000000..02f71126da3f450a57d581f608dff47490d6453f --- /dev/null +++ b/eesanje/url_46_47_12.txt @@ -0,0 +1,14 @@ +ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್‌ ತಡೆ : ರಾಜ್ಯಸರ್ಕಾರಕ್ಕೆ ಹಿನ್ನಡೆ +ಬೆಂಗಳೂರು,ಆ.12-ಇತಿಹಾಸ ಪ್ರಸಿದ್ಧ ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದ ರಾಜ್ಯಸರ್ಕಾರಕ್ಕೆ ನ್ಯಾಯಾಲಯದಲ್ಲಿ ತಾತ್ಕಾಲಿಕ ಹಿನ್ನಡೆ ಉಂಟಾಗಿದೆ.ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಮೈಸೂರಿನ ಅರಮನೆಯ ಪ್ರಮೋದಾ ದೇವಿ ಒಡೆಯರ್‌ ಅವರು ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. +ಅರ್ಜಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್‌ನ ಏಕಸದಸ್ಯ ಪೀಠ ಮುಂದಿನ ಆದೇಶದವರೆಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಚಟುವಟಿಕೆಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್‌‍.ಆರ್‌.ಕೃಷ್ಣಕುಮಾರ್‌ರವರು ತಡೆಯಾಜ್ಞೆ ನೀಡಿದ್ದು, ಮುಂದಿನ ಅರ್ಜಿ ವಿಚಾರಣೆಯನ್ನು ಇದೇ ತಿಂಗಳ 22 ಕ್ಕೆ ಮುಂದೂಡಿದ್ದಾರೆ. +ಅರ್ಜಿದಾರರ ಪರವಾಗಿ ವಕೀಲರಾದ ಮಾನಸಿ ಕುಮಾರ್‌ ಅವರು ವಾದ ಮಂಡಿಸಿದ್ದರು.ಕಳೆದ ಅಧಿವೇಶನದ ವೇಳೆ ವಿಧಾನಮಂಡಲದ ಉಭಯಸದನಗಳಲ್ಲಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆದರೆ ಈ ಕಾಯ್ದೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ರಾಜಮನೆತನವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಅರ್ಜಿದಾರರು ದೂರಿದ್ದರು. +ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಹೊಸ ಕಾಯ್ದೆಯ ಮೂಲಕ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದೇವಸ್ಥಾನ ಕಟ್ಟಿ ತಲೆ ತಲಾಂತರಗಳಿಂದ ಪೂಜಿಸಿಕೊಂಡು ಬಂದ ಒಡೆಯರ ರಾಜಮನೆತನಕ್ಕೆ ಅನ್ಯಾಯ ಮಾಡಲಾಗಿದೆ. +ಈ ಮೂಲಕ ಚಾಮುಂಡೇಶ್ವರಿ ದೇವಾಲಯಕ್ಕೂ ಹಾಗೂ ರಾಜಮನೆತನಕ್ಕೂ ಇರುವ ಸಂಬಂಧ ಕಡಿತಗೊಳಿಸಿ ಎಲ್ಲ ಆಸ್ತಿ, ಪೂಜೆ, ವಿಧಿ ವಿಧಾನ, ಕಾಯ್ದೆ ರಚನೆ ಎಲ್ಲವೂ ಪ್ರಾಧಿಕಾರದ ಪಾಲಾಗಲಿದೆ. ಇದನ್ನು ಮಹಾರಾಣಿ ಪ್ರಮೋದಾದೇವಿ ಅವರು ಹೈಕೋರ್ಟ್‌ ಮೂಲಕ ಪ್ರಶ್ನೆ ಮಾಡಿದ್ದರು. +ಸೆಕ್ಷನ್‌ 2(ಎ) : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಬೆಟ್ಟದ ಸಂಪೂರ್ಣ ಸೌಕರ್ಯಗಳ ಬಗ್ಗೆ ಸರ್ಕಾರದಿಂದ ತೀರ್ಮಾನ ರಸ್ತೆ, ಲೈಟ್ಸ್‌‍, ಕ್ಲೀನ್‌, ಅಂಗಡಿ, ಮಾರ್ಕೆಟ್‌, ಚರಂಡಿ, ಪೊಲೀಸ್‌‍, ಹಾಲಿನ ಅಂಗಡಿ, ಮನೋರಂಜನೆ ಕಾರ್ಯಕ್ರಮಗಳು ಸೇರಿ ಎಲ್ಲಾ ರಾಜ್ಯ ಸರ್ಕಾರದ ಅಧಿಸೂಚನೆ ಮೇಲೆ ನಡೆಸಲು ಅಧಿಕಾರ. (ಇದರಲ್ಲಿ ರಾಜಮನೆತನದ ಎಲ್ಲ ಅಧಿಕಾರ, ಮಧ್ಯಸ್ಥಿಕೆ ತೆರವು ಆಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು) +ಸೆಕ್ಷನ್‌ 3 ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ರಚನೆಯ ಅಧಿಕಾರ ಸರ್ಕಾರಕ್ಕೆ ಸೇರಿದ್ದು, ಅದರ ಅಧ್ಯಕ್ಷ ಸ್ಥಾನ ಸಿಎಂ ಎಂದು ಸರ್ಕಾರದ ಕಾಯ್ದೆಯಲ್ಲಿದೆ. ಪ್ರಾಧಿಕಾರದ ಪದಾಧಿಕಾರಿಗಳಲ್ಲಿ ರಾಜಮನೆತನವೇ ಇಲ್ಲ. ಬದಲಾಗಿ ಸ್ಥಳೀಯ, ಮಿನಿಸ್ಟರ್‌, ಶಾಸಕ, ಎಂಪಿ ಅಧಿಕಾರಿಗಳು ಆಗಿರುತ್ತಾರೆ. (ಇಲ್ಲಿ ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಮಾಡಲಾಗಿದೆ). +ಸೆಕ್ಷನ್‌ 12(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ನೌಕರರ ನೇಮಕ ಮಾಡುವ ವಿಚಾರ ಅರ್ಚಕರು ಸೇರಿ ನೌಕರರನ್ನು ನೇಮಿಸುವ ಅಧಿಕಾರ ಸರ್ಕಾರಕ್ಕೆ ನೀಡಲಾಗಿದೆ. (ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಆಗಿದೆ) +ಸೆಕ್ಷನ್‌ 14(3) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ಸಭೆಯ ತೀರ್ಮಾನಗಳ ಬಗ್ಗೆ ಸರ್ಕಾರಕ್ಕೆ ಅಧಿಕಾರ ನೀಡಲಾಗಿದೆ. ಯಾವುದೇ ತಿರ್ಮಾನ ಇದ್ದರೂ ಅದು ಸರ್ಕಾರದ ನಿರ್ಣಯ ಮಾತ್ರ ಆಗಿರುತ್ತದೆ. (ರಾಜಮನೆತನದ ಸಂಪೂರ್ಣ ಅಧಿಕಾರವನ್ನೇ ಮೊಟಕು ಆಗಿದೆ) +ಸೆಕ್ಷನ್‌ 14(4) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಅನ್ವಯ ಪ್ರಾಧಿಕಾರದ ತೀರ್ಮಾನಗಳನ್ನು ಜಾರಿ ಮಾಡುವಲ್ಲಿ ಕಾರ್ಯದರ್ಶಿಗೆ ಅಧಿಕಾರ ನೀಡಲಾಗಿದೆ. ಪ್ರಾಧಿಕಾರದ ಬಗ್ಗೆ ರಾಜ್ಯ ಸರ್ಕಾರದ ಆದೇಶಗಳನ್ನು ಜಾರಿ ಮಾಡುವ ಅಧಿಕಾರ ಹೊಂದಿದೆ. +(ರಾಜಮನೆತನದ ಸಂಪೂರ್ಣ ಅಧಿಕಾರವೇ ಮೊಟಕು ಆಗಿದೆ)ಸೆಕ್ಷನ್‌ 16(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ಪ್ರಾಧಿಕಾರದ ತಿರ್ಮಾನದ ಸುತ್ತೋಲೆಯೂ ಮುಖ್ಯಮಂತ್ರಿ ಅವರ ಸಹಿಯ ನಂತರವೇ ಬಿಡುಗಡೆ ಆಗಲಿದೆ. (ರಾಜಮನೆತನಕ್ಕೆ ಪ್ರಾಧಿಕಾರದ ಮಾಹಿತಿಯನ್ನು ನೀಡುವ ಅವಕಾಶದಿಂದ ವಂಚನೆ ಮಾಡಲಾಗಿದೆ) +ಸೆಕ್ಷನ್‌ 17(1) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024 ರ ಅನ್ವಯ ಮುಖ್ಯಮಂತ್ರಿಗೆ ತುರ್ತು ಯಾವುದೇ ನಿರ್ದಾರ ತೆಗದುಕೊಳ್ಳುವ ಅಧಿಕಾರ ನೀಡಲಾಗಿದೆ. ಜೊತೆಗೆ, ಸಿಎಂ ಪ್ರಾಧಿಕಾರದ ಅಧ್ಯಕ್ಷರಾಗಿರಲಿದ್ದು, ತಾವು ಭಾವಿಸಿದ ತಿರ್ಮಾನ ಮಾಡುವ ಅಧಿಕಾರ ಹೊಂದಿರುತ್ತಾರೆ. (ರಾಜಮನೆತನಕ್ಕೂ ದೇವಾಲಯದ ಪ್ರಾಧಿಕಾರಕ್ಕೆ ಅಧಿಕಾರವೇ ಕಡಿತ ಮಾಡಲಾಗಿದೆ) +ಸೆಕ್ಷನ್‌ 20(1)(ಒ) ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಅನ್ವಯ ಚಾಮುಂಡಿ ಪ್ರಾಧಿಕಾರದ ಸ್ವತ್ತಿನ ಮಾರಾಟದ ಅಧಿಕಾರ ನಿಗಮಕ್ಕೆ ಸೇರಿದೆ. ಯಾವುದೇ ಆಸ್ತಿಯನ್ನು ಮಾರಾಟ ಮಾಡುವ ಅಧಿಕಾರ, ಯಾವುದೇ ಆಸ್ತಿಯನ್ನು ಬಾಡಿಗೆಗೆ ನೀಡುವ ಅಧಿಕಾರ ಬೇಕಾದರೆ ಎಕ್‌್ಸಚೇಂಜ್‌ ಮಾಡಿಕೊಳ್ಳುವ ಅಧಿಕಾರ ನಿಗಮಕ್ಕೆ ನೀಡಲಾಗಿದೆ. ಅದರಲ್ಲಿಯೂ ನಿಗಮದ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಅವರೇ ಹೊಂದಿರುತ್ತಾರೆ (ರಾಜಮನೆತನದ ಚಾಮುಂಡಿ ಬೆಟ್ಟವನ್ನು ಕಸಿದುಕೊಂಡಿರುವ ಆರೋಪ) ಎಂದು ಅರ್ಜಿದಾರರು ವಾದ ಮಾಡಿದ್ದರು. \ No newline at end of file diff --git a/eesanje/url_46_47_2.txt b/eesanje/url_46_47_2.txt new file mode 100644 index 0000000000000000000000000000000000000000..c807ae5d2438b7f30e3d59339183d032ed3434d2 --- /dev/null +++ b/eesanje/url_46_47_2.txt @@ -0,0 +1,7 @@ +ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಒದಗಿಸಲು ಸೂಚನೆ +ಬೆಂಗಳೂರು, ಆ.12-ಪ್ರತಿ ಗ್ರಾಮದಲ್ಲೂ ಸ್ಮಶಾನಗಳಿಗೆ ಜಾಗ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.ವಿಕಾಸಸೌಧದಲ್ಲಿ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಪ್ರತಿ ಗ್ರಾಮದಲ್ಲೂ ಸಶಾನಗಳು ಇರುವ ಹಾಗೂ ಇಲ್ಲದಿರುವ ಬಗ್ಗೆ ಸರ್ವೆ ನಡೆಸಬೇಕು. ಸಶಾನಗಳು ಇಲ್ಲದಿರುವ ಗ್ರಾಮಗಳನ್ನು ಗುರುತಿಸಿ ಸಶಾನಕ್ಕೆ ಬೇಕಾದ ಸ್ಥಳಾವಕಾಶ ಕಲ್ಪಿಸಬೇಕು ಎಂದು ಸೂಚಿಸಿದ್ದಾರೆ. +ಅದೇ ರೀತಿ ಕೆರೆಗಳ ಒತ್ತುವರಿ ಬಗ್ಗೆಯೂ ಸರ್ವೆ ನಡೆಸಬೇಕು. ಕೆರೆಯ ಅಂಗಳ ಒತ್ತುವರಿಯಾಗಿರುವುದನ್ನು ಗುರುತಿಸಿ ತಕ್ಷಣವೇ ಒತ್ತುವರಿ ತೆರವಿಗೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ. +ಸಭೆಯಲ್ಲಿ ಆಯಾ ಜಿಲ್ಲಾ ಮತ್ತು ತಾಲ್ಲೂಕಿಗೆ ಸಂಬಂಧಿಸಿದಂತೆ ಸಶಾನಗಳ ಹಾಗೂ ಕೆರೆ ಒತ್ತುವರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಮೇಲಿನಂತೆ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಬಹಳ ವರ್ಷಗಳಿಂದ ರೈತರು ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಆದಷ್ಟು ಶೀಘ್ರವಾಗಿ ಬಗರ್ ಹುಕುಂನಡಿ ಸಲ್ಲಿಸಿರುವ ಅರ್ಜಿಗಳನ್ನು ಇತ್ಯರ್ಥಪಡಿಸಿ. ಅರ್ಹರಿಗೆ ಬಗರ್ ಹುಕುಂನಡಿ ಜಮೀನು ಮಂಜೂರು ಮಾಡುವಂತೆ ಇಲಾಖೆಯ ಅಧಿಕಾರಿಗಳಿಗೆ ಅವರು ತಾಕೀತು ಮಾಡಿದ್ದಾರೆ. +ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆಸಕ್ತಿ ತೋರದ ಅಧಿಕಾರಿಗಳನ್ನು ತರಾಟೆಗೆ ತೆಗೆದಕೊಂಡ ಸಚಿವರು, ಸಲ್ಲಿಸಿರುವ ಅರ್ಜಿ ನ್ಯಾಯಸಮತವಾಗಿದ್ದರೆ, ಫಲಾನುಭವಿಗಳಿಗೆ ಜಮೀನು ಮಂಜೂರು ಮಾಡಲು ಅಧಿಕಾರಿಗಳಿಗೆ ಏನು ಸಮಸ್ಯೆ? ಅಧಿಕಾರಿಗಳು ಮಾಡುವ ತಪ್ಪಿಗೆ ಜನಪ್ರತಿನಿಧಿಗಳು ತಲೆತಗ್ಗಿಸಬೇಕೆ? ಗೋಮಾಳ ಜಮೀನು ಮಂಜೂರಾತಿ ಬಗ್ಗೆ ಕಾನೂನು ಪುಸ್ತಕದಲ್ಲಿ ಸ್ಪಷ್ಟವಾಗಿದೆ.ಅದನ್ನು ಓದಿ ಪಾಲಿಸಲು ನಿಮಗೇನು ಸಮಸ್ಯೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. +40 ವರ್ಷಗಳ ಹಿಂದೆ ಮಂಜೂರಾದ ಜಮೀನಿಗೆ ಇನ್ನೂ ಹದ್ದುಬಸ್ತು ಮಾಡಿಕೊಡದೇ ರೈತರನ್ನು ಅನಗತ್ಯವಾಗಿ ಕಚೇರಿಗೆ ಅಲೆಸುತ್ತಿರುವ ವಿಚಾರದ ಬಗ್ಗೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಕಂದಾಯ ಇಲಾಖೆಯ ಆಯುಕ್ತ ವಿ.ಸುನೀಲ್ ಕುಮಾರ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಆದಿತ್ಯ ಬಿಸ್ವಾಸ್, ಸರ್ವೇ ಇಲಾಖೆಯ ಆಯುಕ್ತ ಮಂಜುನಾಥ್, ಕರ್ನಾಟಕ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತ ಶಿವಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_47_3.txt b/eesanje/url_46_47_3.txt new file mode 100644 index 0000000000000000000000000000000000000000..adced033a92e29f1cc0b605753054f3edf26cbec --- /dev/null +++ b/eesanje/url_46_47_3.txt @@ -0,0 +1,6 @@ +ರಾಜ್ಯದ ಒಳನಾಡಿನಲ್ಲಿ 5 ದಿನ ವ್ಯಾಪಕ ಮಳೆ ಮುನ್ಸೂಚನೆ +ಬೆಂಗಳೂರು, ಆ.12– ನೈರುತ್ಯ ಮುಂಗಾರು ಮಳೆ ಎರಡು ವಾರದ ನಂತರ ಮತ್ತೆ ಚುರುಕಾಗಿದ್ದು, ರಾಜ್ಯದ ಒಳನಾಡಿನಲ್ಲಿ ಇನ್ನೂ ಐದು ದಿನಗಳ ಕಾಲ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಇಂದಿನಿಂದ ಆಗಸ್್ಟ 16ರವರೆಗೆ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಿಂಚು, ಗುಡುಗು ಹಾಗೂ ಬಲವಾದ ಗಾಳಿ ಸಹಿತ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಲಿದ್ದು, ಹಲವೆಡೆ ಉಳಿದಂತೆ ಸಾಧಾರಣ ಮಳೆಯಾಗಲಿದೆ. +ಉತ್ತರ ಒಳನಾಡಿನಲ್ಲಿ ಇಂದಿನಿಂದ ಗುರುವಾರದವರೆಗೆ ವ್ಯಾಪಕ ಪ್ರಮಾಣದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೂ ಮುಂದಿನ ಐದು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. +ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನಜಾವ ಗುಡುಗು, ಮಿಂಚಿನ ಮಳೆಯಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು, ಅಂಡರ್ ಪಾಸ್ಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ತಗ್ಗು ಪ್ರದೇಶಗಳಿಗೂ ನೀರು ನುಗ್ಗಿದ್ದು ಜನರು ಸಾಕಷ್ಟು ತೊಂದರೆ ಅನುಭವಿಸಿದರು. +ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ.ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_47_4.txt b/eesanje/url_46_47_4.txt new file mode 100644 index 0000000000000000000000000000000000000000..582639afda1aa7e56e3042cdd353730e4eb0edf4 --- /dev/null +++ b/eesanje/url_46_47_4.txt @@ -0,0 +1,17 @@ +ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಆ.12-ರಾಜ್ಯದಲ್ಲಿ ಮಾನವ ಹಾಗೂ ವನ್ಯ ಜೀವಿ ಸಂಘರ್ಷವನ್ನು ಶೂನ್ಯ ಪ್ರಮಾಣಕ್ಕೆ ತಗ್ಗಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. +ನಗರದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಆನೆ ಮತ್ತು ಮಾನವ ಸಂಘರ್ಷ ನಿರ್ವಹಣೆಯ ಅಂತಾರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, 2017ರ ಗಣತಿಯ ಪ್ರಕಾರ ವಿಶ್ವಾದ್ಯಂತ 30 ಸಾವಿರಕ್ಕೂ ಹೆಚ್ಚು ಆನೆಗಳಿವೆ. ಅದರಲ್ಲಿ ಕರ್ನಾಟಕ 6,395 ಆನೆಗಳನ್ನು ಹೊಂದಿರುವ ಮೂಲಕ ಪ್ರಥಮ ಸ್ಥಾನದಲ್ಲಿದೆ. ಜಾಗತಿಕ ಆನೆಗಳ ಸಂಖ್ಯೆಯಲ್ಲಿ ಶೇ.25 ರಷ್ಟು ಪಾಲು ಹೊಂದಿದೆ. +2022 ರ ಅಖಿಲ ಭಾರತ ಹುಲಿ ಸಮೀಕ್ಷೆಯಲ್ಲಿ 563 ಹುಲಿಗಳನ್ನು ಹೊಂದುವ ಮೂಲಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ದೊಡ್ಡ ಸಸ್ತನಿಗಳು, ಉನ್ನತ ಪರಭಕ್ಷಕಗಳು, ಸಸ್ಯಾಹಾರಿಗಳು ಮತ್ತು ಅರಣ್ಯ ಸಂಪನೂಲಗಳ ಆರೋಗ್ಯಕರ ಜನಸಂಖ್ಯೆಯನ್ನು ಕರ್ನಾಟಕ ಹೊಂದಿದೆ. +ರಾಜ್ಯದಲ್ಲಿ ಮೈಸೂರು ಮತ್ತು ದಾಂಡೇಲಿಯಲ್ಲಿ ತಲಾ 10 ಸಾವಿರ ಚದರ ಕಿ.ಮೀ.ನಂತೆ ಎರಡು ಆನೆ ಮೀಸಲು ಪ್ರದೇಶಗಳನ್ನು ಹೊಂದಿದೆ. ಇವು ಆನೆಗಳ ಪಾಲನೆ ಪೋಷಣೆ ಮತ್ತು ಸಂರಕ್ಷಣೆಗೆ ನಿರ್ಣಾಯಕ ಪಾತ್ರ ವಹಿಸಿವೆ ಎಂದರು. +ಅಭಿವೃದ್ಧಿಯ ಒತ್ತಡಗಳು ಮತ್ತು ಅರಣ್ಯಪ್ರದೇಶಗಳ ವಿಘಟನೆಗಳಿಂದ ಇತ್ತೀಚಿನ ವರ್ಷಗಳಲ್ಲಿ ಮಾನವ ವನ್ಯ ಜೀವಿ ಸಂಘರ್ಷ ಹೆಚ್ಚಳವಾಗಿದೆ. ರಾಜ್ಯದಲ್ಲಿ 10 ವರ್ಷಗಳಿಂದೀಚೆಗೆ 2,500 ಕ್ಕೂ ಹೆಚ್ಚು ಆನೆ -ಮಾನವ ಸಂಘರ್ಷಗಳು ಘಟಿಸಿದ್ದು, 350 ಮಾನವ ಜೀವ ಹಾನಿಯಾಗಿದೆ. ಅಪಾರ ಪ್ರಮಾಣದ ಬೆಳೆನಷ್ಟ ಸಂಭವಿಸಿದೆ. +ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನಿರ್ವಹಣೆ ಮಾಡಲು ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಲಾಗಿದೆ. 150 ಕೋಟಿ ರೂ. ಹಣದಲ್ಲಿ 300 ಕಿ.ಮೀ.ಗಳಿಗಿಂತ ಹೆಚ್ಚಿನ ರೈಲ್ವೆ ಬ್ಯಾರಿಕೇಡ್ಗಳು, 800 ಕಿ.ಮೀ. ಸೌರ ಬೇಲಿಗಳನ್ನು ಅಳವಡಿಸಲಾಗಿದೆ. ಆನೆ ನಿರೋಧಕ ಕಂಕಗಳಂತಹ ಭೌತಿಕ ತಡೆಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಕಾಡುಪ್ರಾಣಿಗಳು ನಾಡಿನೊಳಗೆ ಪ್ರವೇಶಿಸುವುದನ್ನು ತಪ್ಪಿಸುವ ಪ್ರಯತ್ನ ನಡೆದಿದ್ದು, ಕೃಷಿಕರ ಬೆಳೆಗಳಿಗೆ ರಕ್ಷಣೆ ದೊರೆಯುತ್ತಿದೆ. +ರೈತರು ಸ್ವಯಂ ಸೌರ ಬೇಲಿಗಳನ್ನು ಅಳವಡಿಸಿಕೊಳ್ಳಲು ಸಹಾಯಧನ ನೀಡುತ್ತಿರುವುದರಿಂದ 50 ಸಾವಿರ ಹೆಕ್ಟೇರ್ಗೂ ಹೆಚ್ಚಿನ ಕೃಷಿ ಭೂಮಿ ಸಂರಕ್ಷಿಸಿದಂತಾಗಿದೆ. ರಾಜ್ಯದಲ್ಲಿ 8 ವಿಶೇಷ ಆನೆ ಕಾರ್ಯಪಡೆಗಳು, 9 ಕಡೆ ಆನೆ ಕಾರ್ಯಪಡೆ ತಂಡಗಳನ್ನು ಸ್ಥಾಪಿಸಲಾಗಿದೆ. ಇವು 1200 ಕ್ಕೂ ಹೆಚ್ಚು ಸಂಘರ್ಷಗಳನ್ನು ಒಂದು ವರ್ಷದಲ್ಲಿ ತಡೆದಿವೆ ಎಂದು ಹೇಳಿದರು. +ಅರಣ್ಯದಲ್ಲಿ ವನ್ಯಜೀವಿಗಳಿಗೆ ಸೂಕ್ತ ಆವಾಸ ಸ್ಥಾನ ಅಭಿವೃದ್ಧಿ, ಹುಲ್ಲುಗಾವಲು, ಬಿದಿರಿನ ಪುನರ್ ಉತ್ಪಾದನೆ, ಸೌರ ಪಂಪ್ಗಳ ಮೂಲಕ ನೀರಿನ ಸೌಲಭ್ಯ ಸೇರಿದಂತೆ ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. +ಸಾವಿರಾರು ವರ್ಷಗಳಿಂದಲೂ ಆನೆ ಮತ್ತು ಮನುಷ್ಯ ಸಹಬಾಳ್ವೆ ಮತ್ತು ಸಹಿಷ್ಣುತೆಯಿಂದ ಬದುಕು ನಡೆಸುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನಗರೀಕರಣ, ಕೃಷಿ ವಿಸ್ತರಣೆ, ಹೆದ್ದಾರಿ, ಗಣಿಗಾರಿಕೆ, ಕೈಗಾರಿಕಾ ಬೆಳವಣಿಗೆಗಳಿಂದಾಗಿ ಆನೆಗಳ ಆವಾಸ ಸ್ಥಾನ ತಗ್ಗಿದೆ. +ಕೃಷಿ ಪ್ರದೇಶಗಳು ವಿಸ್ತಾರಗೊಂಡಿದ್ದರಿಂದಾಗಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ. ಹೀಗಾಗಿ ಆನೆಗಳು ಮತ್ತು ವನ್ಯಜೀವಿಗಳು ನಾಡಿನತ್ತ ಬಂದು ಸಂಘರ್ಷ ಉಂಟಾಗುತ್ತಿದೆ. ಇದೊಂದು ಪರಿಸರ, ಸಾಮಾಜಿಕ ಮತ್ತು ಆರ್ಥಿಕ ಸವಾಲುಗಳನ್ನು ಹೊಂದಿರುವ ಸಂಕೀರ್ಣ ಸಮಸ್ಯೆ. +ತಾಪಮಾನ ಹೆಚ್ಚಳವೂ ಪರಿಣಾಮ ಬೀರುತ್ತದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮಾನವ ಹಾಗೂ ವನ್ಯಜೀವಿ ಸಂಘರ್ಷಕ್ಕೆ ತನ್ನದೇ ಆದ ಕಾರ್ಯತಂತ್ರಗಳನ್ನು ಅನ್ವೇಷಣೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಅದಕ್ಕೆ ಅಗತ್ಯ ಬೆಂಬಲ ನೀಡಲು ಸರ್ಕಾರ ಸಿದ್ಧವಿದೆ. +ಸಮುದಾಯದ ಸಹಭಾಗಿತ್ವವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಕೇವಲ ಅರಣ್ಯ ಸಿಬ್ಬಂದಿಗಳಷ್ಟೇ ಅರಣ್ಯ ರಕ್ಷಣೆ, ವನ್ಯಜೀವಿ ಸಂಘರ್ಷ ತಡೆಯಲು ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಮತ್ತು ಅರಣ್ಯದ ನೆರೆಹೊರೆಯ ಜನರ ಸಹಯೋಗವೂ ಅಗತ್ಯವಿದೆ ಎಂದರು. +ಅರಣ್ಯ ಸಚಿವ ಈಶ್ವರ್ಖಂಡ್ರೆ ಮಾತನಾಡಿ, ಆನೆ-ಮಾನವ ಸಂಘರ್ಷ ಒಂದು ರಾಜ್ಯದ ಸಮಸ್ಯೆಯಲ್ಲ. ಜಾಗತಿಕ ಸಂಕೀರ್ಣ ಸಮಸ್ಯೆಯಾಗಿದೆ. ರಾಜ್ಯದಲ್ಲಿ 43,282 ಚ.ಕಿ.ಮೀ. ಅರಣ್ಯಪ್ರದೇಶವಿದ್ದು, ಒಟ್ಟು ಭೌಗೋಳಿಕ ಭೂಭಾಗದ 22 ರಷ್ಟು ಮಾತ್ರ ಹಸಿರು ಹೊದಿಕೆಯಿದೆ ಎಂದು ವಿವರಿಸಿದದರು. +ರಾಜ್ಯದಲ್ಲಿ ಕಳ್ಳಬೇಟೆ ನಿಗ್ರಹಕ್ಕೆ ಕ್ರಮ ಕೈಗೊಂಡಿದ್ದರಿಂದಾಗಿ ವನ್ಯಮೃಗಗಳ ಸಂಖ್ಯೆ ಹೆಚ್ಚಾಗಿದೆ. ಇದು ಮಾನವ ಮತ್ತು ವನ್ಯಮೃಗಗಳ ಸಂಘರ್ಷಕ್ಕೂ ಕಾರಣವಾಗಿದ್ದು, ಪ್ರತಿವರ್ಷ ಸರಾಸರಿ 30 ಜನ ಆನೆದಾಳಿಯಿಂದ ಸಾವಿಗೀಡಾಗಿದ್ದಾರೆ. ಈ ವರ್ಷ ಜನವರಿಯಿಂದ 25 ಜನ ಮೃತಪಟ್ಟಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. +ವನ್ಯಜೀವಿಗಳ ಸಂಖ್ಯೆಗನುಗುಣವಾಗಿ ಅರಣ್ಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಕಳೆದ ವರ್ಷ 3995 ಹೆಕ್ಟೇರ್ ಅನ್ನು ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. 2500 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಲಾಗಿದೆ. ಅರಣ್ಯ ಅಪರಾಧ ತಡೆಯಲು ಆನ್ಲೈನ್ ಎಫ್ಐಆರ್ ದಾಖಲು ಮಾಡಲಾಗುತ್ತಿದೆ. ಕಾಡ್ಗಿಚ್ಚು ನಂದಿಸಲು ದೂರ ಸಂವೇದಿ ತಂತ್ರಜ್ಞಾನ ಉಪಗ್ರಹಗಳ ನೆರವಿನಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ವಿವರಿಸಿದರು. +ಕೇರಳದ ಅರಣ್ಯ ಸಚಿವ ಎ.ಕೆ.ಶಶಿಂದ್ರನ್, ತಮಿಳುನಾಡಿನ ಅರಣ್ಯ ಸಚಿವ ಮತಿವೆಂದನ್, ತೆಲಂಗಾಣದ ಅರಣ್ಯ ಸಚಿವೆ ಕೊಂಡಾ ಸುರೇಖ, ಜಾರ್ಖಂಡ್ನ ಅರಣ್ಯ ಸಚಿವ ಬೈದ್ಯನಾಥನ್, ಶಾಸಕ ಎ.ಎಸ್.ಪೊನ್ನಣ್ಣ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_47_5.txt b/eesanje/url_46_47_5.txt new file mode 100644 index 0000000000000000000000000000000000000000..fea7ab7cd882d90a07ab8e96594a3c0a16a357cd --- /dev/null +++ b/eesanje/url_46_47_5.txt @@ -0,0 +1,10 @@ +ರಾಜ್ಯದ ಅಣೆಕಟ್ಟೆಗಳ ಸುರಕ್ಷತೆಗೆ ತಜ್ಞರ ಸಮಿತಿ ರಚನೆ +ಬೆಂಗಳೂರು,ಆ.12-ತುಂಗಭದ್ರಾ ಅಣೆಕಟ್ಟೆಯ ಕ್ರಸ್ಟ್ಗೇಟ್ ಒಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟೆಗಳಲ್ಲೂ ಸುರಕ್ಷತಾ ಕ್ರಮಗಳ ಪರಿಶೀಲನೆಗಾಗಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಜಲಸಂಪನೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ಸಿಎಂ ಸಿದ್ದರಾಮಯ್ಯನವರು ನಾಳೆ ಡ್ಯಾಂ ಪರಿಶೀಲನೆಗೆ ಭೇಟಿ ನೀಡಲಿದ್ದಾರೆ ಎಂದರು.ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್ಗೇಟ್ ಒಡೆದುಹೋಗಿರುವ ಬಗ್ಗೆ ತುರ್ತು ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರ ಜೊತೆ ಚರ್ಚೆ ಮಾಡಿದ್ದೇವೆ. ವಿನ್ಯಾಸವನ್ನು ಕಳುಹಿಸಿಕೊಡಲಾಗಿದೆ. ನಾಲ್ಕೈದು ದಿನಗಳಲ್ಲೇ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. +50-60 ಟಿಎಂಸಿ ನೀರನ್ನು ಉಳಿಸಿ ರೈತರಿಗೆ ಒಂದು ಬೆಳೆಗೆ ನೀರು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ಅಧಿಕಾರಿಗಳ ಹಾಗೂ ತಂತ್ರಜ್ಞರ ಜೊತೆ ತಾವು ಚರ್ಚೆ ಮಾಡಿದ್ದು, ರೈತರು ಆತಂಕಗೊಳ್ಳುವ ಅಗತ್ಯವಿಲ್ಲ. ಆದರೆ ಅಣೆಕಟ್ಟಿ ಪರಿಸ್ಥಿತಿ ಅಪಾಯದಲ್ಲಂತೂ ಇತ್ತು ಎಂದರು. +ರಾಜ್ಯದ ಎಲ್ಲಾ ಡ್ಯಾಂಗಳನ್ನು ಖುದ್ದು ಪರಿಶೀಲಿಸಿ ವರದಿ ನೀಡಲು ಎರಡು ದಿನಗಳಲ್ಲಿ ತಂತ್ರಜ್ಞರ ಸಮಿತಿಯನ್ನು ರಚಿಸಲಾಗುವುದು. ಬಹುತೇಕ ಎಲ್ಲಾ ಡ್ಯಾಂಗಳಲ್ಲೂ ಎರಡು ಹಂತದ ಸುರಕ್ಷತಾ ಕ್ರಮಗಳಿರುತ್ತವೆ. +ತುಂಗಭದ್ರಾ ಡ್ಯಾಂನಲ್ಲಿ ಒಂದೇ ಹಂತದ ಸರಪಳಿ ಇದ್ದು, ಅದು ತುಂಡಾಗಿದೆ. ಅಲ್ಲಿನ ಪರಿಸ್ಥಿತಿ ನೋಡಿ, ಆಗ ನೀರಿನ ರಭಸ ಕಂಡು ನನಗೂ ಆತಂಕವಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಾದಷ್ಟು ನೀರನ್ನು ಉಳಿಸಿ ತುರ್ತು ದುರಸ್ತಿ ಕಾರ್ಯ ಕೈಗೊಳ್ಳಲು ಆದೇಶಿಸಲಾಗಿದೆ. +ಉತ್ತಮ ಗುಣಮಟ್ಟದ ಕಬ್ಬಿಣ ನೀಡಲು ಜೆಎಸ್ಡಬ್ಲ್ಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಈ ಮೊದಲು ಕ್ರಸ್ಟ್ಗೇಟ್ ಮಾಡಿದವರಿಗೆ ವಿನ್ಯಾಸ ಹಾಗೂ ಆದೇಶ ನೀಡಲಾಗಿದೆ. ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಪ ಮಾಡುವವರು, ಟೀಕೆ ಮಾಡುವವರು ಮಾಡುತ್ತಲೇ ಇರುತ್ತಾರೆ. +ತುಂಗಭದ್ರಾ ಅಣೆಕಟ್ಟು ರಾಜ್ಯಸರ್ಕಾರದ ನಿಯಂತ್ರಣದಲ್ಲಿಲ್ಲ. ನಾವು ನಿಯಂತ್ರಣ ಸಮಿತಿಯ ಸದಸ್ಯರಷ್ಟೇ. ಬೀಗ ಅವರ ಕೈಯಲ್ಲೇ ಇದೆ. ಆದರೂ ಡ್ಯಾಂ ನಮದೇ. ನೆರೆಯ ಆಂಧ್ರಪ್ರದೇಶಕ್ಕೆ ಮೂರು ಲಕ್ಷ ಹೆಕ್ಟೇರ್ಗೆ ಮಾತ್ರ ನೀರು ಪೂರೈಸಲಾಗುತ್ತಿದೆ. ಅತೀ ಹೆಚ್ಚು ನೀರಾವರಿಯನ್ನು ನಾವು ಬಳಸಿಕೊಳ್ಳುತ್ತೇವೆ. ಹೀಗಾಗಿ ತಮ ಜವಾಬ್ದಾರಿ ಇದೆ. ಕ್ರಸ್ಟ್ಗೇಟ್ ಅನ್ನು ದುರಸ್ತಿ ಮಾಡಿಸುತ್ತೇವೆ ಎಂದರು. +ಬಿಜೆಪಿಯ ಪ್ರತ್ಯೇಕ ಬಣ ನಡೆಸುವ ಪಾದಯಾತ್ರೆಗೆ ಯಶಸ್ಸು ದೊರೆಯಲಿ ಎಂದು ಡಿ.ಕೆ.ಶಿವಕುಮಾರ್ ಹಾರೈಸಿದರು.ಬೆಂಗಳೂರಿನಲ್ಲಿ ಕೆರೆಗಳು ತುಂಬಿಲ್ಲ. ಹೀಗಾಗಿ ಇನ್ನಷ್ಟು ಮಳೆ ಬರುವ ಅಗತ್ಯವಿದೆ. ಈಗ ಸುರಿಯುತ್ತಿರುವ ಮಳೆ ಸಾಲುವುದಿಲ್ಲ. +ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿದ್ದರೆ ಅದನ್ನು ಸರಿ ಮಾಡಬಹುದು. ಆದರೆ ಮತ್ತಷ್ಟು ಮಳೆ ಬರಬೇಕು, ಅಂತರ್ಜಲ ಹೆಚ್ಚಬೇಕು. ರಾಮನಗರ, ಚೆನ್ನಪಟ್ಟಣ, ಕನಕಪುರ, ಮಾಗಡಿ, ತುಮಕೂರು, ಕೋಲಾರ, ಕುಣಿಗಲ್ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿಲ್ಲ. ಅಣೆಕಟ್ಟು ಭಾಗದಲ್ಲಿ ಮಳೆಯಾಗಿದೆ. ಜಲಾಶಯಗಳಿಗೆ ನೀರು ಬಂದಿದೆ ಎಂದು ಹೇಳಿದರು. \ No newline at end of file diff --git a/eesanje/url_46_47_6.txt b/eesanje/url_46_47_6.txt new file mode 100644 index 0000000000000000000000000000000000000000..b7c532e6389cf7354a4bcbd0d74d6bfa4c544cf7 --- /dev/null +++ b/eesanje/url_46_47_6.txt @@ -0,0 +1,6 @@ +ಟಿಬಿ ಡ್ಯಾಮ್ ಡ್ಯಾಮೇಜ್ : ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಖಾಲಿ +ಕೊಪ್ಪಳ,ಆ.12-ಜಿಲ್ಲೆಯ ಮುನಿರಾಬಾದ್ ಸಮೀಪ ಇರುವ ತುಂಗಾಭದ್ರಾ ಜಲಾಶಯದ ಬಳಿಯಿರುವ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ನಿನ್ನೆಯಿಂದ ಇಲ್ಲಿಯವರೆಗೆ 13 ಟಿಎಂಸಿ ನೀರು ಡ್ಯಾಂನಿಂದ ಹರಿದು ಹೋಗಿದೆ. +ಡ್ಯಾಂನಿಂದ ಇಂದು ಕೂಡ ನದಿಗೆ 1.5 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. +ಕ್ರಸ್ಟ್ಗೇಟ್ ದುರಸ್ತಿ ಮಾಡಲು ಜಲಾಶಯದಲ್ಲಿರುವ ನೀರನ್ನು ಹಂತವಾಗಿ ಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತದೆ. ಹೀಗಾಗಿ ನದಿ ಪಾತ್ರದ ಜನ ಸುರಕ್ಷಿತವಾಗಿರುವಂತೆ ಡಂಗೂರ ಸಾರಿ ಎಚ್ಚರಿಕೆ ನೀಡಲಾಗುತ್ತಿದೆ. +ಯಾವುದೇ ಕಾರಣಕ್ಕೂ ನದಿ ಇಳಿಯದಂತೆ, ಮೀನುಗಾರಿಕೆ ಮಾಡದಂತೆ, ನದಿ ಸಮೀಪ ಮಕ್ಕಳನ್ನು ಕಳುಹಿಸದಂತೆ ಜಾನುವಾರುಗಳು ಹೋಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಲಾಗಿದೆ. ಟಿಬಿ ಡ್ಯಾಂ ಕೆಳಭಾಗದ ಕೊಪ್ಪಳ ತಾಲ್ಲೂಕು, ಗಂಗಾವತಿ ತಾಲ್ಲೂಕು, ಕಾರಟಗಿ ತಾಲ್ಲೂಕಿನ ಗ್ರಾಮಗಳಲ್ಲಿ ಡಂಗೂರ ಸಾರಿಸಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. +ಸಂಚಾರ ನಿಷೇಧಡ್ಯಾಂ ಸುತ್ತಮುತ್ತಲಿನ ಪ್ರದೇಶಕ್ಕೆ ಸಂಚಾರ ನಿಷೇಧ ಮಾಡಲಾಗಿದೆ. ತುಂಗಾಭದ್ರಾ ಸೇತುವೆ ನೋಡಲು ಅಪಾರ ಪ್ರಮಾಣದಲ್ಲಿ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಜನ ಬರುತ್ತಾರೆ. ಸೇತುವೆ ಮೇಲೆ ನಿಂತು ಹುಚ್ಚಾಟ ಮೆರೆಯುತ್ತಾರೆ. ಭಾರಿ ಪ್ರಮಾಣದಲ್ಲಿ ನೀಡನ್ನು ಹೊರಬಡುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಸುತ್ತಮುತ್ತ ಸಂಚಾರ ನಿಷೇಧ ವಿಧಿಸಲಾಗಿದೆ. \ No newline at end of file diff --git a/eesanje/url_46_47_7.txt b/eesanje/url_46_47_7.txt new file mode 100644 index 0000000000000000000000000000000000000000..bdf825f2e1c0f2b2e371996493a4b89c96c72ba7 --- /dev/null +++ b/eesanje/url_46_47_7.txt @@ -0,0 +1,6 @@ +ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ +ಬೆಂಗಳೂರು,ಆ.12-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಫ್ರೀಡಂಪಾರ್ಕ್‌ನಲ್ಲಿಂದು ಸಾವಿರಾರು ಶಿಕ್ಷಕರು ಪ್ರತಿಭಟನೆ ನಡೆಸಿದರು. ಶಿಕ್ಷಕರು ಶಾಲೆಗಳನ್ನು ತೊರೆದು ಪ್ರತಿಭಟನೆಗೆ ಆಗಮಿಸಿದ ಹಿನ್ನಲೆಯಲ್ಲಿ ಸರ್ಕಾರಿ ಶಾಲೆಗಳ ತರಗತಿಗಳಲ್ಲಿ ವ್ಯತ್ಯಯವಾಯಿತು. +ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ಸೇರಿದಂತೆ ರಾಜ್ಯಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತಃ 1ರಿಂದ 7 ಮತ್ತು 8ನೇ ತರಗತಿಗೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌‍ಟಿ ಎಂದು ಪದನಾಮ ಮಾಡಿ 1ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. +ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕೆಂದು ಪ್ರತಿಭಟನಾನಿರತ ಶಿಕ್ಷಕರು ಆಗ್ರಹಿಸಿದ್ದಾರೆ. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲಾ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜ್ಯೇಷ್ಠತೆಯೊಂದಿಗೆ ಪುನರ್‌ ಪದನಾಮಕರಣ ಮಾಡಬೇಕು. +ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿಎಡ್‌ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. +ಈ ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಅಖಂಡ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಗೆ ಇಳಿದಿದ್ದಾರೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜೊತೆ ಬೇಡಿಕೆಗಳ ಕುರಿತು ನಡೆಸಿದ ಸಭೆ ವಿಫಲವಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. \ No newline at end of file diff --git a/eesanje/url_46_47_8.txt b/eesanje/url_46_47_8.txt new file mode 100644 index 0000000000000000000000000000000000000000..76191b4cd5609592e6f5f370745c8904b4631037 --- /dev/null +++ b/eesanje/url_46_47_8.txt @@ -0,0 +1,5 @@ +ಮಳೆಗಾಲದಲ್ಲಿ ಫ್ಲೆಕ್ಸ್ ಅವಘಡಗಳಾಗದಂತೆ ನೋಡಿಕೊಳ್ಳಿ : ಹೈಕೋರ್ಟ್‌ ಸೂಚನೆ +ಬೆಂಗಳೂರು,ಆ.12-ಮಳೆಗಾಲದಲ್ಲಿ ಫ್ಲೆಕ್ಸ್ ನಿಂದ ಅವಘಡಗಳಾಗದಂತೆ ತಡಗಟ್ಟಬೇಕು, ಫುಟ್ಪಾತ್‌ ಹಾಗೂ ಜನಸಂದಣಿ ಇರುವೆಡೆ ಫ್ಲೆಕ್ಸ್ ಅಳವಡಿಸದಂತೆ ಎಚ್ಚರಿಕೆ ವಹಿಸಬೇಕೆಂದು ಹೈಕೋರ್ಟ್‌ ವಿಭಾಗೀಯ ಪೀಠ ಬಿಬಿಎಂಪಿ ಮತ್ತು ಪೊಲೀಸ್‌‍ ಇಲಾಖೆಗೆ ಸೂಚನೆ ನೀಡಿದೆ. +ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್ ಹಾವಳಿ ಹಿನ್ನಲೆಯಲ್ಲಿ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ನಡೆದ ಪಿಐಎಲ್‌ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ ವಿಭಾಗೀಯ ಪೀಠ, ಅಕ್ರಮ ಜಾಹಿರಾತು ಫಲಕಗಳು ಅಳವಡಿಸದಂತೆ ಅಧಿಕಾರಿಗಳು ನಿಗಾವಹಿಸಬೇಕು. ಈ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸ್‌‍ ಇಲಾಖೆಗೆ ಸೂಚನೆ ನೀಡಿದೆ. +ಮಳೆಗಾಲದ ಸಂದರ್ಭದಲ್ಲಿ ಫ್ಲೆಕ್ಸ್ ಗಳಿಂದ ಅವಘಡಗಳಾಗುವ ಸಂಭವವಿರುತ್ತದೆ. ಫುಟ್ಪಾತ್‌ ಮತ್ತು ಜನಸಂಚಾರ ಇರುವ ಕಡೆ ಫ್ಲೆಕ್‌್ಸ ಅಳವಡಿಸದಂತೆ ಹೈಕೋರ್ಟ್‌ ಸೂಚಿಸಿದೆ. +ಈ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿತು. ಮುಂದಿನ 15 ದಿನಗಳಲ್ಲಿ ಜಾಹಿರಾತು ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಹೈಕೋರ್ಟ್‌ಗೆ ಸರ್ಕಾರದ ಪರ ಎಎಜಿ ಪ್ರತಿಮಾ ಹೊನ್ನಾಪುರ್‌ ಅವರು ಮಾಹಿತಿ ನೀಡಿದರು. \ No newline at end of file diff --git a/eesanje/url_46_47_9.txt b/eesanje/url_46_47_9.txt new file mode 100644 index 0000000000000000000000000000000000000000..3664ac7ac032a660bed2c215ab45110a95ad0644 --- /dev/null +++ b/eesanje/url_46_47_9.txt @@ -0,0 +1,10 @@ +ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌ +ಬೆಂಗಳೂರು,ಆ.12-ಒಂದು ವೇಳೆ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆ ನೀಡಿದ್ದಾರೆ. +ಈ ಮೂಲಕ ಪಕ್ಷವು ಟಿಕೆಟ್‌ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆ ಕೊಟ್ಟಿದ್ದು, ಅವರ ನಡೆ ಬಿಜೆಪಿ ಹಾಗೂ ಜೆಡಿಎಸ್‌‍ಗೆ ದೊಡ್ಡ ತಲೆನೋವಾಗುವ ಸಂಭವವಿದೆ. +ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುತ್ತೇನೆ. ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ ಎಂದು ಸೂಚ್ಯವಾಗಿ ತಿಳಿಸಿದರು. +ನನ್ನ ತಾಲೂಕಿನ ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವುದೇ ಚಿನ್ಹೆಯ ಅಡಿ ನಿಂತರೂ ಗೆಲ್ಲಿಸುತ್ತಾರೆ. ಕ್ಷೇತ್ರದ ಸಮಾನ ಮನಸ್ಕ ವೇದಿಕೆಯಿಂದಲೂ ಸ್ಪರ್ಧೆಗೆ ಒತ್ತಾಯ ಇದೆ. ನಾನು ಕಾಂಗ್ರೆಸ್‌‍ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಎಂದು ಗೊತ್ತಿದೆ ಎಂದು ಹೇಳಿದರು. +ನನಗೂ ಕುಮಾರಸ್ವಾಮಿಯವರಿಗೂ ಭಿನ್ನಾಭಿಪ್ರಾಯ ಏನಿದೆ? ನಮ ಮಧ್ಯೆ ಬಿರುಕು ಮೂಡಿಸುವ ಪ್ರಯತ್ನವನ್ನು ಡಿಕೆಶಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರು ಮನಸ್ಸು ಬದಲಾಯಿಸಬಹುದು. ಕುಮಾರಸ್ವಾಮಿ ಒಪ್ಪದಿದ್ದರೆ ಮುಂದಿನ ದಾರಿ ನೋಡೋಣ ಎಂದು ತಿಳಿಸಿದರು. +ಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್‌‍ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್‌ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. +ಇದೇ ಕಾರಣಕ್ಕೆ ನಾನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ. ಆಗಸ್ಟ್‌ 16ರಂದು ಮತ್ತೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗುವ ಯೋಜನೆಯೂ ಇದೆ ಎಂದು ಯೋಗೇಶ್ವರ್‌ ತಿಳಿಸಿದ್ದಾರೆ. +ಈಗಾಗಲೇ ನಮ ರಾಜ್ಯ ನಾಯಕರು ಕೂಡ ನನ್ನ ಸ್ಪರ್ಧೆಯ ಬಗ್ಗೆ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಸ್ವಲ್ಪ ಮುಂಗೋಪ ಅಷ್ಟೇ. ಆದರೆ ಅಂತಿಮವಾಗಿ ಅವರ ಜತೆ ವರಿಷ್ಠರು ಮಾತಾಡಿದ ಬಳಿಕ ನನ್ನ ಸ್ಪರ್ಧೆಗೆ ಅವರೂ ಒಪ್ಪಿಗೆ ಸೂಚಿಸುವ ಭರವಸೆ ಇದೆ. +ಕಳೆದ ಬಾರಿ ಮೈತ್ರಿ ಮಾಡಿಕೊಳ್ಳುವಂತೆ ಹೇಳಿದವನೇ ನಾನು. ಬಿಜೆಪಿ ಮೈತ್ರಿ ಮಾಡಿಕೊಳ್ಳದಿದ್ದರೆ ನಮ ಭಾಗದಲ್ಲಿ ಜೆಡಿಎಸ್‌‍ ಕಥೆ ಏನಾಗುತ್ತಿತ್ತು? ಹೀಗಾಗಿ ಎರಡು ಪಕ್ಷಗಳ ಒಮತದ ಅಭ್ಯರ್ಥಿ ನಾನೇ ಆಗುವ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_48_1.txt b/eesanje/url_46_48_1.txt new file mode 100644 index 0000000000000000000000000000000000000000..026786eda0c55977360696b5944d13af370c5c84 --- /dev/null +++ b/eesanje/url_46_48_1.txt @@ -0,0 +1,8 @@ +ಕೇಂದ್ರ ಹಾಗೂ ರಾಜ್ಯಸರ್ಕಾರದ ನಡೆಯಿಂದ ಮಲೆನಾಡಿಗರು ಅತಂತ್ರ +ಶೃಂಗೇರಿ,ಆ.12-ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರನ್ನು ನಿದ್ದೆಗೆಡಿಸಿದೆ, ಮಲೆನಾಡಿನ ಜಿಲ್ಲೆಗಳ ಸಂಸದರು, ಶಾಸಕರು ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಬೇಕೆಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್‌ ಹೊಸಕೊಪ್ಪ ಒತ್ತಾಯಿಸಿದ್ದಾರೆ. +ಶೃಂಗೇರಿ ಪ್ರವಾಸಿ ಮಂದಿರದಲ್ಲಿ ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದವರು ನಿನ್ನೆ ಆಯೋಜಿಸಿದ್ದ ಮುಂದಿನ ಹೋರಟದ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಾರಕ ಅರಣ್ಯ ಕಾಯ್ದೆಯಿಂದ ಮಲೆನಾಡು ಹಾಗೂ ಕರಾವಳಿಯ ಕೃಷಿಕರು ಭಯದ ವಾತಾವರಣದಲ್ಲಿ ಬದುಕನ್ನು ನಡೆಸುತ್ತಿದ್ದರು. +ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.ಆದರೆ ಅತಿಯಾದ ಮಳೆಯಿಂದ ಆಗುವ ಅನಾಹುತಗಳಾಗುವುದಕ್ಕೆ ಮಲೆನಾಡಿಗರೇ ಕಾರಣ ಎಂದು ಹೇಳುವ ರಾಜ್ಯ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳ ಹೇಳಿಕೆಗಳ ಜೊತೆಗೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ದಪಡಿಸಿದ್ದು ಮತ್ತೆ ಮಲೆನಾಡಿಗರನ್ನು ಅತಂಕಕ್ಕೆ ಸಿಲುಕಿಸಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದರು. +ಅತಿಯಾದ ಮಳೆಯಿಂದ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಅವರ ಬದುಕಿಗಾಗಿ ಮಾಡಿಕೊಂಡ ಒತ್ತುವರಿಯಿಂದ ಭೂಕುಸಿತ ಉಂಟಾಗಿಲ್ಲ ಬದಲಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕವಾಗಿ ನಿರ್ಮಿಸಿದ ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳು, ಸೇತುವೆಗಳಿಂದ ಅತಿ ಹೆಚ್ಚು ಭೂಕುಸಿತ ಸಂಭವಿಸಿದೆ ವಿನಃ ಯಾವುದೇ ಕೃಷಿ ಚಟುವಟಿಕೆಗಳಿಂದ ಅಲ್ಲ. ಮೊದಲು ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳನ್ನ, ರಸ್ತೆ ಬದಿಯಲ್ಲಿರುವ ಪೈಪ್‌ಲೈನ್‌ಗಳನ್ನೂ ತೆರವು ಮಾಡಿ. ಅವುಗಳನ್ನು ತೆರವು ಮಾಡಲು ನಿಮಿಂದ ಸಾಧ್ಯವೇ? ಎಂದು ಪ್ರಶ್ನಿಸಿದರು. +ಕ್ಷೇತ್ರ ರೈತ ಸಂಘದ ಅಧ್ಯಕ್ಷ ನವೀನ್‌ ಕರುವಾನೆ ಮಾತನಾಡಿ, ಒತ್ತುವರಿ ತೆರವು ಮಾಡುತ್ತೇವೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ನೀಡಿರುವುದನ್ನು ಜಾರಿಗೆ ತರಲು ನಮ ಮಲೆನಾಡಿಗರು ಬಿಡುವುದಿಲ್ಲ. ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ. ಆದರಿಂದ ಈ ನಿರ್ಣಯವನ್ನು ನಮ ಮಲೆನಾಡಿನ 5 ಜನ ಸಂಸದರು ಬೆಂಬಲಿಸಿ ಮಲೆನಾಡಿಗರ ಬದುಕು ಉಳಿಸಿಕೊಡಬೇಕು. +ಇದುವರೆಗೂ ನಮ ಯಾವ ಸಂಸದರು ಅರಣ್ಯ ಹಕ್ಕಿನ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ನಮ ಸಂಸದರಾದ ಕೋಟಾ ಶ್ರೀನಿವಾಸ್‌‍ ಪೂಜಾರಿಯವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು. +ಸಭೆಯಲ್ಲಿ ಮೂಲ ಅರಣ್ಯ ಕಾಯ್ದೆಯನ್ನು ತಿದ್ದುಪಡಿ ಮಾಡಲು ಕೇಂದ್ರ ಹಾಗು ರಾಜ್ಯ ಸರ್ಕಾರಕ್ಕೆ ಒತ್ತಡ ತರುವ ವಿಚಾರದ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಪದಾಧಿಕಾರಿಗಳಾದ ಕಣದಮನೆ ಜಗದೀಶ್‌, ತ್ರಿಮೂರ್ತಿ, ಕಾಳ್ಯ ಸಂತೋಷ್‌, ಮಂಜುನಾಥ್‌ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್ಕುಮಾರ್‌ ಹೆಗ್ಡೆ, ಅವಿನಾಶ್‌, ಪ್ರಶಾಂತ್‌ ಬಂಡ್ಲಪುರ, ಆದೇಶ, ಚೇತನ್‌ ಹಿಂಬ್ರವಳ್ಳಿ, ಶುಭಕೃತ್‌ ಹೆಗ್ಡೆ, ಶಶಿಕ್‌ ಹೊಸಕೋಪ್ಪ , ಸುಬ್ರಮಣ್ಯ ಹರವರಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_48_10.txt b/eesanje/url_46_48_10.txt new file mode 100644 index 0000000000000000000000000000000000000000..8ce3211bc0e68ad32b2ed6a3f9d7de644ec59379 --- /dev/null +++ b/eesanje/url_46_48_10.txt @@ -0,0 +1,8 @@ +ಸಿಎಂ ಬದಲಾಗ್ತಾರೆ ಅಂತ ಯಾವ ಕಾಂಗ್ರೆಸ್‌‍ ನಾಯಕರೂ ಹೇಳಿಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಆ.11– ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆ ಎಂದು ಕಾಂಗ್ರೆಸ್‌‍ನ ಯಾವ ನಾಯಕರೂ ಹೇಳಿಲ್ಲ. ಆ ರೀತಿಯ ಚರ್ಚೆಗಳು ಅಪ್ರಸ್ತುತ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ಬದಲಾಗುವುದಿಲ್ಲ ಎಂಬ ವ್ಯಾಖ್ಯಾನಗಳ ಕುರಿತು ಪ್ರತಿಕ್ರಿಯಿಸಿದರು. +ನಮ ಪಕ್ಷದ ಯಾವ ನಾಯಕರೂ ಈ ಬಗ್ಗೆ ಹೇಳಿಕೆ ನೀಡಿಲ್ಲ. ಬಿಜೆಪಿ-ಜೆಡಿಎಸ್‌‍ನ ನಾಯಕರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆ ರೀತಿಯ ಚರ್ಚೆಗಳೇ ಅನಗತ್ಯ ಎಂದು ಹೇಳಿದರು.ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಬಾರದು. ಈ ಕುರಿತು ದಾಖಲಾಗಿರುವ ದೂರನ್ನು ತಿರಸ್ಕರಿಸಬೇಕು ಮತ್ತು ಶೋಕಾಸ್‌‍ ನೋಟೀಸ್‌‍ ಅನ್ನು ಹಿಂಪಡೆಯಬೇಕು ಎಂದು ಸಚಿವ ಸಂಪುಟ ಸಭೆ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಸಲಹೆ ನೀಡಿದೆ. +ಅದರ ಹೊರತಾಗಿಯೂ ಅವರು ಮುಂದುವರೆದರೆ ನಮಗೂ ಕಾನೂನು ಹೋರಾಟ ಅನಿವಾರ್ಯವಾಗಲಿದೆ. ಆದರೆ ರಾಜ್ಯಪಾಲರು ಕಾನೂನು ಬಿಟ್ಟು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಅನಿಸುವುದಿಲ್ಲ. ಕಾನೂನಿನ ಪ್ರಕಾರ ನಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. +ಸಂಸತ್‌ ಅಧಿವೇಶನ ಮುಗಿದ ಬಳಿಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡುತ್ತಾರೆ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್‌, ರಾಜ್ಯಪಾಲರು ಏನು ಮಾಡುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ನ್ಯಾಯಯುತವಾಗಿ ನಿರ್ಧಾರ ತೆಗೆದುಕೊಂಡರೆ ಒಪ್ಪಿಕೊಳ್ಳುತ್ತೇವೆ. ಇಲ್ಲದೇ ಹೋದರೆ ಕಾನೂನು ಹೋರಾಟ ಅನಿವಾರ್ಯವಾಗಲಿದೆ ಎಂದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಫೋಕ್ಸೊ ಪ್ರಕರಣಕ್ಕೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಅಭಿಯೋಜಕರು ಮೇಲನವಿ ಸಲ್ಲಿಸಿದ್ದಾರೆ. ಮುಂದಿನ ವಿಚಾರಣೆಯಲ್ಲಿ ಅಡ್ವಕೇಟ್‌ ಜನರಲ್‌ ಅಥವಾ ಯಾರು ಹಾಜರಾಗುತ್ತಾರೆ ಎಂಬುದನ್ನು ಆಧರಿಸಿ ರಾಜ್ಯಸರ್ಕಾರದ ಪರವಾಗಿ ಸಮರ್ಥ ವಾದ ಮಂಡಿಸಲಾಗುವುದು ಎಂದು ಹೇಳಿದರು. +ಫೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಿಗೆ ಸಾಮಾನ್ಯವಾಗಿ ಜಾಮೀನು ದೊರೆಯುವುದಿಲ್ಲ. ಆದರೆ ನ್ಯಾಯಾಧೀಶರು ಕೊಟ್ಟಿದ್ದಾರೆ. ರಾಜ್ಯಸರ್ಕಾರದ ಪರವಕೀಲರು ನ್ಯಾಯಾಲಯದ ಮುಂದೆ ಸತ್ಯಾಸತ್ಯತೆಗಳನ್ನು ವಿವರಿಸಲಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಲು ಪ್ರಯತ್ನಿಸಲಾಗುವುದು ಎಂದರು. +ಕೆನೆಪದರ ಮೀರಿದವರನ್ನು ಮೀಸಲಾತಿಯಿಂದ ಹೊರಗಿಡುವಂತಹ ನಿರ್ಣಯ ಮಾಡುವಂತೆ ಬಿಜೆಪಿ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನ್ನ ಅಭಿಪ್ರಾಯಗಳು ಏನೇ ಇದ್ದರೂ ಅದು ವೈಯಕ್ತಿಕ. ಎಐಸಿಸಿ ಚರ್ಚೆ ಮಾಡಿ ತೆಗೆದುಕೊಳ್ಳುವ ನಿರ್ಧಾರಗಳು ಅದರ ಆಧಾರದ ಮೇಲೆ ರಾಜ್ಯ ಘಟಕಕ್ಕೆ ನೀಡುವ ನಿರ್ದೇಶನಗಳು ಮುಖ್ಯವಾಗುತ್ತದೆ. ನಂತರ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_48_11.txt b/eesanje/url_46_48_11.txt new file mode 100644 index 0000000000000000000000000000000000000000..052b3a70e8fcae5aa249be596bf1a711123ae904 --- /dev/null +++ b/eesanje/url_46_48_11.txt @@ -0,0 +1,5 @@ +ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಅತೃಪ್ತರ ಗುಪ್ತ ಸಭೆ, ಪ್ರತ್ಯೇಕ ಹೋರಾಟಕ್ಕೆ ಪ್ಲಾನ್ +ಬೆಳಗಾವಿ,ಆ.11-ಕಾಂಗ್ರೆಸ್‌‍ ವಿರುದ್ಧ ಬಿಜೆಪಿ-ಜೆಡಿಎಸ್‌‍ ನಡೆಸಿದ ಪಾದಯಾತ್ರೆ ಬೆನ್ನಲ್ಲೇ ಪಾದಯಾತ್ರೆಯಲ್ಲಿ ಭಾಗವಹಿಸದ ಬಿಜೆಪಿಯ ಹಿರಿಯ ನಾಯಕರು ರಹಸ್ಯ ಸಭೆ ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ನಗರ ಖಾಸಗಿ ಹೋಟೆಲೊಂದರ ಅತೃಪ್ತರ ಗುಪ್ತ ಸಭೆ ನಡೆದಿದ್ದು, ಅಪ್ಪ-ಮಕ್ಕಳ ಪಕ್ಷದ ಹಿಡಿತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. +ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಅವರು ಬಿಜೆಪಿಯೊಳಗಿನ ಅತೃಪ್ತರನ್ನು ಈಗಾಗಲೇ ಒಟ್ಟುಗೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ.ಒಪ್ಪಂದದ ರಾಜಕೀಯ ಮಾಡುತ್ತಿರುವ ಬಿಎಸ್‌‍ವೈ, ಬಿ.ವೈ.ವಿಜಯೇಂದ್ರ ಹಾಗೂ ಅಶೋಕ್‌ರವರ ನಡೆ ಖಂಡಿಸಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳದೇ ಹಿಂದೆ ಸರಿದಿದ್ದರು. ಬೆಳಗಾವಿ ಜಿಲ್ಲೆಯ ಯಾವ ನಾಯಕರೂ ಸಹ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿರಲಿಲ್ಲ. ಬಾಲಚಂದ್ರ ಜಾರಕಿಹೊಳಿ ಸಹ ಅಂತರ ಕಾಯ್ದುಕೊಂಡಿದ್ದರು. +ಈಗ ಅತೃಪ್ತ ನಾಯಕರು ಸಭೆ ನಡೆಸಿದ್ದು, ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಲ್ಮೀಕಿ ಹಗರಣದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ. ಯತ್ನಾಳ್‌ ನೇತೃತ್ವದಲ್ಲಿ ಮತ್ತೊಂದು ತಂಡ ಸಕ್ರಿಯವಾಗುತ್ತಿದೆ ಎನ್ನಲಾಗಿದೆ. +ಬಿಜೆಪಿಯ ಬಲಾಢ್ಯ ನಾಯಕರಿಗೆ ಈ ಗುಂಪಿನ ಕಾರ್ಯಚಟುವಟಿಕೆಗಳು ನುಂಗಲಾರದ ತುತ್ತಾಗಿವೆ. ಉತ್ತರ ಕರ್ನಾಟಕದ ಪ್ರಮುಖ ನಾಯಕರು ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರೂ ಹಲವು ಜನ ನಾಯಕರು ಯತ್ನಾಳ್‌ ಅವರ ಹಿಂದೆ ಇರುವುದು ಸ್ಪಷ್ಟವಾಗಿದೆ.ನಿನ್ನೆ ಯತ್ನಾಳ್‌, ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. \ No newline at end of file diff --git a/eesanje/url_46_48_12.txt b/eesanje/url_46_48_12.txt new file mode 100644 index 0000000000000000000000000000000000000000..d53106c0160b4db09b853a7584d884ae7fc91627 --- /dev/null +++ b/eesanje/url_46_48_12.txt @@ -0,0 +1,9 @@ +ಜೆಡಿಎಸ್‌‍-ಬಿಜೆಪಿ ಪಾದಯಾತ್ರೆಯಿಂದ ಮತ್ತಷ್ಟು ಗಟ್ಟಿಯಾಯ್ತು ಸಿದ್ದರಾಮಯ್ಯ ಸಿಎಂ ಕುರ್ಚಿ +ಬೆಂಗಳೂರು,ಆ.11– ವಿಪಕ್ಷ ಜೆಡಿಎಸ್‌‍ ಮತ್ತು ಬಿಜೆಪಿ ಪಾದಯಾತ್ರೆ ಹೋರಾಟಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನು ಮತ್ತಷ್ಟು ಗಟ್ಟಿಗೊಳಿಸಿವೆ.ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಪ್ರಭಾವ ಬಳಸಿ ಲೋಪವೆಸಗಿದ್ದಾರೆ. ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸಿದ್ದವು. ಇದು ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರ ಉಂಟುಮಾಡಬಹುದು, ಸಿದ್ದರಾಮಯ್ಯನವರಿಗೆ ಕಂಟಕವಾಗಲಿದೆ ಎಂಬ ವ್ಯಾಖ್ಯಾನಗಳಿದ್ದವು. ಆದರೆ ಪರಿಣಾಮ ಸಂಪೂರ್ಣ ವ್ಯತಿರಿಕ್ತವಾಗಿದೆ. +ವಿಪಕ್ಷಗಳ ಹೋರಾಟಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ಉತ್ತರ ನೀಡಿದೆ. ಇಡೀ ಪಕ್ಷ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿರುವುದರಿಂದ ಕಾಂಗ್ರೆಸ್‌‍ ಒಳಗಿನ ಸಿದ್ದರಾಮಯ್ಯ ವಿರೋಧಿಗಳ ಬಾಯಿ ಕೂಡ ಬಂದ್‌ ಆದಂತಾಗಿದೆ. +ಪಾದಯಾತ್ರೆಗೆ ತಿರುಗೇಟು ನೀಡುವ ಸಲುವಾಗಿ ಕಾಂಗ್ರೆಸ್‌‍ ಒಂದು ದಿನ ಮೊದಲೇ ಐದು ಕಡೆ ಬೃಹತ್‌ ಸಮಾವೇಶಗಳನ್ನು ಆಯೋಜಿಸಿ ಆರಂಭದಿಂದ ಕೊನೆಯವರೆಗೂ ಇಂಚಿಂಚೂ ಬೆಳವಣಿಗೆಗಳನ್ನು ಜನರ ಮುಂದಿಟ್ಟಿರುವುದಲ್ಲದೆ, ಬಿಜೆಪಿ-ಜೆಡಿಎಸ್‌‍ ನಾಯಕರ ಭೂ ಹಗರಣಗಳನ್ನು ಬಯಲು ಮಾಡಿದೆ. +ಎಲ್ಲದಕ್ಕಿಂತಲೂ ಮುಖ್ಯವಾಗಿ ಕಾಂಗ್ರೆಸ್‌‍ ಪಕ್ಷದಲ್ಲಿ ಭರ್ಜರಿ ಒಗ್ಗಟ್ಟು ಪ್ರದರ್ಶನಗೊಂಡಿದ್ದು, ಸಿದ್ದರಾಮಯ್ಯ ಅವರ ಜೊತೆ ಎಲ್ಲಾ ನಾಯಕರೂ ದೃಢವಾಗಿ ಬೆಂಬಲಕ್ಕೆ ನಿಲ್ಲುವಂತ ಅನಿವಾರ್ಯತೆಯನ್ನು ಸೃಷ್ಟಿ ಮಾಡಿದೆ. +ಸಿದ್ದರಾಮಯ್ಯನವರು ಹೇಳಿಕೇಳಿ ಜನನಾಯಕರು. ಅವರಿಗೆ ಅವರದೇ ಆದಂತಹ ಮತಬ್ಯಾಂಕ್‌ ಇದೆ. ಕಾಂಗ್ರೆಸ್‌‍ ಹೊರತಾಗಿಯೂ ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆಲ್ಲಬಲ್ಲರು ಮತ್ತು ಬಯಸಿದವರನ್ನು ಸೋಲಿಸಬಲ್ಲರು ಎಂಬ ಅಭಿಪ್ರಾಯಗಳು ಸಾರ್ವತ್ರಿಕ. ಈ ಹಿಂದೆ ಅಷ್ಟೇನೂ ಪ್ರಭಾವಿಯಾಗಿರದ ಕಾಲದಲ್ಲಿಯೂ ಎಬಿಪಿಜೆಡಿ ಅನ್ನು ಸ್ಥಾಪಿಸಿ ಜನತಾದಳದ ಸೋಲಿಗೆ ಮುನ್ನುಡಿ ಬರೆದಿದ್ದರು. +ಕಾಂಗ್ರೆಸ್‌‍ಗೆ ಬಂದು ಮುಖ್ಯಮಂತ್ರಿಯಾದ ಬಳಿಕ ತಮದೇ ಆದ ಹಿಂಬಾಲಕರನ್ನು ಸೃಷ್ಟಿಸಿಕೊಂಡಿರುವುದಲ್ಲದೆ ಅಧಿಕಾರದಲ್ಲಿ ಜಾರಿಗೆ ತಂದ ಕಾರ್ಯಕ್ರಮಗಳಿಂದಾಗಿ ಮತಬ್ಯಾಂಕ್‌ ಅನ್ನು ಕ್ರೂಢೀಕರಿಸಿಕೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್‌‍ ಪಕ್ಷಕ್ಕೆ ಸಿದ್ದರಾಮಯ್ಯ ಅನಿವಾರ್ಯ ಎಂಬ ಪರಿಸ್ಥಿತಿ ಉದ್ಭವಿಸಿದೆ.ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಅವರನ್ನು ಅಸ್ತಿರಗೊಳಿಸಬಹುದು ಎಂಬ ಲೆಕ್ಕಾಚಾರಗಳು ಸಂಪೂರ್ಣ ತಲೆಕೆಳಗಾಗಿವೆ. +ಕಾಂಗ್ರೆಸ್‌‍ ಪಕ್ಷ ಸಂಪೂರ್ಣವಾಗಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದು, ಶಾಸಕರೂ ಕೂಡ ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಸರ್ವೋಚ್ಛ ನಾಯಕ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಹೀಗಾಗಿ ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆ ಖಾಲಿಕೊಡದಂತಾಗಿದೆ.ಇನ್ನೇನಿದ್ದರೂ ಕಾನೂನಾತಕ ಹೋರಾಟಗಳಷ್ಟೇ ಮುಡಾ ಪ್ರಕರಣದಲ್ಲಿ ಪರಿಣಾಮ ಉಂಟುಮಾಡಬಲ್ಲದೇ ಹೊರತು ಪಾದಯಾತ್ರೆ ಅಥವಾ ರಾಜಕೀಯ ಹೋರಾಟಗಳು ವ್ಯರ್ಥ ಪ್ರಯತ್ನಗಳು ಎಂಬುದು ಸ್ಪಷ್ಟವಾಗಿದೆ. +ಗಾಜಿನ ಮನೆಯಲ್ಲಿರುವವರು ಹೊರಗಡೆ ಇರುವವರಿಗೆ ಕಲ್ಲು ಹೊಡೆಯಬಾರದು ಎಂಬುದು ರಾಜಕೀಯದಲ್ಲಿ ಅಘೋಷಿತವಾದ ಸತ್ಯ. ಅದಕ್ಕೆ ತಕ್ಕ ಹಾಗೆ ಪಾದಯಾತ್ರೆಯ ನೀರಸ ಪರಿಣಾಮ ವಿಪಕ್ಷಗಳನ್ನು ಬೆಸ್ತು ಬೀಳುವಂತೆ ಮಾಡಿದೆ.ಕಾಂಗ್ರೆಸ್‌‍ ಹೈಕಮಾಂಡ್‌ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿರುವುದರಿಂದಾಗಿ ಮುಖ್ಯಮಂತ್ರಿ ಕುರ್ಚಿಯನ್ನು ಅಲುಗಾಡಿಸುವ ಪ್ರಯತ್ನ ವ್ಯರ್ಥವಾಗಿದೆ. \ No newline at end of file diff --git a/eesanje/url_46_48_2.txt b/eesanje/url_46_48_2.txt new file mode 100644 index 0000000000000000000000000000000000000000..3d2e9c8536b4972065ea741b0ab64355577afe82 --- /dev/null +++ b/eesanje/url_46_48_2.txt @@ -0,0 +1,5 @@ +“ದರಿದ್ರ ಕಾಂಗ್ರೆಸ್‌‍ ಸರ್ಕಾರ ಇರುವವರೆಗೂ ರೈತರಿಗೆ ನೆಮ್ಮದಿಯಿಲ್ಲ” : ಆರ್‌.ಅಶೋಕ್‌ +ಬೆಂಗಳೂರು,ಆ.12-ದರಿದ್ರ ಕಾಂಗ್ರೆಸ್‌‍ ನೇತೃತ್ವದ ಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಟೀಕಾಪ್ರಹಾರ ನಡೆಸಿದ್ದಾರೆ. +ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್‌ ಮಾಡಿರುವ ಅವರು, ಈ ವರ್ಷ ದೇವರ ದಯೆಯಿಂದ ಒಳ್ಳೆಯ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. +ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್‌‍ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ. ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ ಎಂದು ಅಶೋಕ್‌ ಆರೋಪಿಸಿದ್ದಾರೆ. +ರೈತರ ಈ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರ ದಿವ್ಯ ನಿರ್ಲಕ್ಷ್ಯವೇ ಕಾರಣ.❌ಕಳೆದ ವರ್ಷ ಬರಗಾಲದಲ್ಲಿ ಸಕಾಲಕ್ಕೆ ಪರಿಹಾರ ಕೊಡಲಿಲ್ಲ.❌ಈ ವರ್ಷ ದೇವರ ದಯೆಯಿಂದ ಒಳ್ಳೆ ಮಳೆ ಬಂದರೂ ಡ್ಯಾಂನಲ್ಲಿ ನೀರು ಉಳಿಸಿಕೊಳ್ಳಲು ಆಗಲಿಲ್ಲ.ಒಟ್ಟಿನಲ್ಲಿ ಈ ದರಿದ್ರ@INCKarnatakaಸರ್ಕಾರ ಇರುವವರೆಗೂ ನಾಡಿನ ರೈತರಿಗೆ ನೆಮ್ಮದಿ ಇಲ್ಲ.../2phKXo5c9Y \ No newline at end of file diff --git a/eesanje/url_46_48_3.txt b/eesanje/url_46_48_3.txt new file mode 100644 index 0000000000000000000000000000000000000000..4a4fa6c723d7f37053c4180fc1493699b9fa14e3 --- /dev/null +++ b/eesanje/url_46_48_3.txt @@ -0,0 +1,12 @@ +ಬಿಜೆಪಿಯಲ್ಲಿ ಬಣ ರಾಜಕೀಯ, ರೋಸಿಹೋದ ಕಾರ್ಯಕರ್ತರು, ವರಿಷ್ಠರ ದ್ವಂದ್ವ ನೀತಿಗೆ ಅಸಮಾಧಾನ +ಬೆಂಗಳೂರು,ಆ.12-ಒಂದು ಕಡೆ ತೊಟ್ಟಿಲನ್ನು ತೂಗುವ ಮತ್ತೊಂದೆಡೆ ಮಗುವನ್ನು ಚಿವುಟುವ ಬಿಜೆಪಿ ಕೇಂದ್ರ ವರಿಷ್ಠರ ದ್ವಂದ್ವ ನಿಲುವು ಕಾರ್ಯಕರ್ತರಲ್ಲಿ ಅಸಮಾಧಾನ ಮೂಡಿಸುತ್ತಿದ್ದು, ತಕ್ಷಣವೇ ಮಧ್ಯಪ್ರವೇಶ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ. +ಏಕೆಂದರೆ ಮುಡಾ ಹಾಗೂ ವಾಲೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೈಸೂರು ಚಲೊ ಪಾದಯಾತ್ರೆಯನ್ನು ಯಶಸ್ವಿಯಾಗಿ ನಡೆಸಲಾಯಿತು. +ಇದರ ಬೆನ್ನಲ್ಲೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಭಾನುವಾರ ಬೆಳಗಾವಿಯ ಹೊರವಲಯದಲ್ಲಿರುವ ರೆಸಾರ್ಟ್‌ವೊಂದರಲ್ಲಿ ಕೆಲವು ಪ್ರಮುಖರು ಸಭೆ ನಡೆಸಿ ಪರ್ಯಾಯ ಯಾತ್ರೆಗೆ ಸಜ್ಜಾಗುತ್ತಿದ್ದಾರೆ. +ಇದು ಪಕ್ಷದ ಕಾರ್ಯಕರ್ತರಲ್ಲೇ ಗೊಂದಲ ಮೂಡಿಸುತ್ತಿದ್ದು, ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಪಕ್ಷ ಇನ್ನಷ್ಟು ಅದೋಗತಿಗೆ ಇಳಿಯುತ್ತದೆ ಎಂಬ ಆತಂಕವನ್ನು ಹೊರಹಾಕಿದ್ದಾರೆ. +ರಾಜ್ಯಾಧ್ಯಕ್ಷರೇ ಇಲ್ಲದ ಮೇಲೆ ಪರ್ಯಾಯ ಯಾತ್ರೆಯನ್ನು ಯಾವ ಆಧಾರದ ಮೇಲೆ ನಡೆಸುತ್ತಾರೆ?, ಇದಕ್ಕೆ ಪಕ್ಷದ ವರಿಷ್ಠರು ಅನುಮತಿಯನ್ನು ನೀಡಲಿದ್ದಾರೆಯೇ?, ಪಕ್ಷದ ಚಿಹ್ನೆಯಡಿ ಪಾದಯಾತ್ರೆ ನಡೆಸುವುದಾದರೆ ಬಿ.ವೈ.ವಿಜಯೇಂದ್ರ ಇರಬೇಕಲ್ಲವೇ?, ಇಷ್ಟಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೆ ವರಿಷ್ಠರು ಮಾತ್ರ ಮೌನಕ್ಕೆ ಶರಣಾಗಿರುವ ಉದ್ದೇಶವಾದರೂ ಏನು ಎಂಬ ಮೂಲಭೂತ ಪ್ರಶ್ನೆಯನ್ನು ಎತ್ತಿದ್ದಾರೆ. +ನಾವು ಇತರ ಪಕ್ಷಗಳಿಗಿಂತಲೂ ಭಿನ್ನ ಎಂದು ಹೇಳುವ ಬಿಜೆಪಿಯಲ್ಲಿ ಸದ್ಯ ಮನೆಯೊಂದು ಮೂರು ಬಾಗಿಲು ಎನ್ನುವುದಕ್ಕಿಂತಲೂ ಒಂಭತ್ತು ಬಾಗಿಲು ಆಗಿದೆ ಎನ್ನುವುದೇ ಸೂಕ್ತ ಎಂಬುದು ನಿಷ್ಠಾವಂತ ಕಾರ್ಯಕರ್ತರ ಅಳಲು. +ಬೇರೆ ರಾಜ್ಯಗಳಲ್ಲಿ ಸಣ್ಣ ಭಿನ್ನಮತ ಕಿಡಿ ಹತ್ತಿದಾಗ ತಕ್ಷಣವೇ ಮಧ್ಯಪ್ರವೇಶಿಸಿ ಮುಲಾಮು ಹಚ್ಚುವ ವರಿಷ್ಠರಿಗೆ ಕರ್ನಾಟಕದಲ್ಲಿ ಬಣಗಳ ಬಡಿದಾಟ ಜೋರಾಗಿದ್ದರೂ ಏಕೆ ಕೈಕಟ್ಟಿ ಕುಳಿತಿದ್ದಾರೆ. ಅಷ್ಟೊಂದು ಅಸಹಾಯಕರಾಗಿದ್ದಾರೆಯೇ? ಇಲ್ಲವೇ ಎಲ್ಲವೂ ಮೇಲಿನವರ ಅಣತಿಯಂತೆಯೇ ನಡೆಯುತ್ತದೆಯೇ? ಎಂಬ ಗುಮಾನಿ ಕೇಳಿಬಂದಿದೆ. +ಇಷ್ಟ ಇರಲಿ, ಬಿಡಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಮೇಲೆ ಒಪ್ಪಿಕೊಳ್ಳಲೇಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಬೇಕಲ್ಲವೇ? ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡುವವರಿಗೆ ಕನಿಷ್ಠ ಪಕ್ಷ ಒಂದು ಸಣ್ಣ ನೋಟೀಸ್‌‍ ನೀಡಲಿಲ್ಲ ಎಂದರೆ ಪಕ್ಷದಲ್ಲಿ ಶಿಸ್ತು ಕಾಪಾಡಲು ಸಾಧ್ಯವೇ ಎಂದು ಕಾರ್ಯಕರ್ತರೇ ನೊಂದು ಹೇಳುತ್ತಿದ್ದಾರೆ.ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಜಿ.ಎಂ.ಸಿದ್ದೇಶ್‌, ಪ್ರತಾಪ್‌ ಸಿಂಹ, ಬಿ.ಪಿ.ಹರೀಶ್‌, ಕುಮಾರ್‌ ಬಂಗಾರಪ್ಪ ಇಂತಹ ಬೆರಳೆಣಿಕೆಯ ನಾಯಕರು ಸಭೆ ನಡೆಸಲು ಮುಂದಾದ ವೇಳೆ ಅದಕ್ಕೆ ಕಡಿವಾಣ ಹಾಕಬೇಕಿತ್ತು. +ವರಿಷ್ಠರಿಗೆ ಎಲ್ಲಾ ಮಾಹಿತಿ ಇದ್ದರೂ ಹಿಂದೇಟು ಹಾಕುತ್ತಿರುವುದಕ್ಕೆ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ.ಈ ಹಿಂದೆ ಕಾರ್ಯಕಾರಿಣಿ ಸಭೆ ನಡೆದಾಗ ಒಗ್ಗಟ್ಟಿನ ಮಂತ್ರ ಪಠಿಸಲಾಗಿತ್ತು. ಇನ್ನು ಮುಂದೆ ಪಕ್ಷದಲ್ಲಿ ಅಸಮಾಧಾನ ಸರಿಹೋಗಿ ಎಲ್ಲವೂ ಸುಸೂತ್ರವಾಗಿ ಮುನ್ನಡೆಯಲಿದೆ ಎಂಬ ಆಶಾಭಾವನೆ ಕೇಳಿಬಂದಾಗಲೇ ಮತ್ತೆ ಬಣ ಬಡಿದಾಟ ಮುನ್ನೆಲೆಗೆ ಬಂದಿರುವುದು ಬಿಜೆಪಿಯನ್ನು ಸಾಕ್ಷಾತ್‌ ಸೃಷ್ಟಿಕರ್ತ ಕೂಡ ಸರಿ ಮಾಡಲಾರ ಎಂಬ ಅಪವಾದ ಕೇಳಿಬರುತ್ತಿದೆ. +ಬಿಜೆಪಿ ವಿರೋಧಪಕ್ಷವಾಗಿ ಮತ್ತು ಸಂಘಟನಾತಕವಾಗಿಯೂ ವಿಫಲವಾಗಿದೆ ಎಂಬ ಆಪಾದನೆಗಳು ಕೇಳಿಬಂದಾಗ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಮೈಸೂರು ಚಲೊ ಯಾತ್ರೆ ಪಕ್ಷಕ್ಕೆ ಒಂದಿಷ್ಟು ಶಕ್ತಿ ತುಂಬಿತ್ತು. ಆದರೆ ಏಕಾಏಕಿ ಯತ್ನಾಳ್‌ ಮತ್ತು ಅವರ ತಂಡ ಭಿನ್ನಮತೀಯ ಚಟುವಟಿಕೆಗಳಿಗೆ ಮುನ್ನುಡಿ ಬರೆದಿರುವುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಸಾರಿ ಹೇಳಿದೆ. +ಸ್ವಪಕ್ಷೀಯರಿಂದಲೇ ಟೀಕೆ :ವಿರೋಧ ಪಕ್ಷವಾಗಿ ಬಿಜೆಪಿ ರಾಜ್ಯದಲ್ಲಿ ವಿವಾಗಿದೆ ಎಂಬ ಆರೋಪ ಇತ್ತು. ಇದನ್ನು ಸ್ವತಃ ಬಿಜೆಪಿ ಶಾಸಕರೇ ಮಾಡಿದ್ದರು. ಅದರಲ್ಲೂ ಬಸನಗೌಡ ಪಾಟೀಲ್‌ ಯತ್ನಾಳ್‌, ಮಾಜಿ ಸಂಸದ ಡಿ.ವಿ.ಸದಾನಂದ ಗೌಡ ಇಂತಹ ಗಂಭೀರ ಆರೋಪವನ್ನು ಮಾಡಿದ್ದರು. ಅಲ್ಲದೆ ಪಕ್ಷ ಸುಧಾರಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದ್ದರು. ಈ ನಡುವೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಬಗ್ಗೆಯೂ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲಿ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸ್ಥಾನ ವಿಲವಾಗಿದೆ ಎಂಬ ಆರೋಪ ಇದೆ. \ No newline at end of file diff --git a/eesanje/url_46_48_4.txt b/eesanje/url_46_48_4.txt new file mode 100644 index 0000000000000000000000000000000000000000..afbf9f27f1b6a6ba5e3bffa38db117f07a3f15e9 --- /dev/null +++ b/eesanje/url_46_48_4.txt @@ -0,0 +1,10 @@ +ಭಾರೀ ಕುತೂಹಲ ಕೆರಳಿಸಿದೆ ಸಿ.ಪಿ.ಯೋಗೇಶ್ವರ್‌ ದೆಹಲಿ ಭೇಟಿ +ಬೆಂಗಳೂರು,ಆ.11-ಯಾವುದೇ ಕ್ಷಣದಲ್ಲಿ ನಡೆಯಬಹುದಾದ ರಾಮನಗರ ಜಿಲ್ಲೆ ಚನ್ನಪಟ್ಟಣ ಉಪಚುನಾವಣೆ ಸಂಬಂಧ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟರು.ಮೂಲಗಳ ಪ್ರಕಾರ ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಿ.ಪಿ.ಯೋಗೇಶ್ವರ್‌ ಜೊತೆ ಮಾತುಕತೆ ನಡೆಸುವ ಸಂಭವವಿದೆ. +ಹೀಗಾಗಿಯೇ ಅವರನ್ನು ಪಕ್ಷದ ವರಿಷ್ಠರು ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದು, ಯೋಗೇಶ್ವರ್‌ ಅವರ ಮುಂದಿನ ರಾಜಕೀಯ ನಡೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.ದೆಹಲಿಯಲ್ಲಿ ನಡೆಯಲಿರುವ ಮಾತುಕತೆ ಸಂದರ್ಭದಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೇ ಇಲ್ಲವೇ? ಜೆಡಿಎಸ್‌‍ಗೆ ಕ್ಷೇತ್ರವನ್ನು ಬಿಟ್ಟುಕೊಡಬೇಕೇ? ಎಂಬ ಬಗ್ಗೆ ಚರ್ಚೆ ನಡೆಯಲಿದೆ ಎಂದು ಗೊತ್ತಾಗಲಿದೆ. +ಯಾವುದೇ ರೀತಿಯ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಅಭಿಮಾನಿಗಳ ಪಾಲಿನ ಸೈನಿಕನಿಗೆ ವರಿಷ್ಠರು ಕಿವಿಮಾತು ಹೇಳಲಿದ್ದಾರೆ. ಏಕೆಂದರೆ ಟಿಕೆಟ್‌ ಸಿಗದಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದರು. +ಇದಕ್ಕೆ ಪುಷ್ಟಿ ನೀಡುವಂತೆ ಯೋಗೇಶ್ವರ್‌ ಅಭಿಮಾನಿ ಬಳಗ ಮತ್ತು ಸಮಾನ ಮನಸ್ಕರ ವೇದಿಕೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಮ ಶಾಸಕ ನಮ ಹಕ್ಕು ಹೆಸರಿನಲ್ಲಿ ಸಮಾವೇಶ ನಡೆಸಿದೆ. ಉಪಚುನಾವಣೆಯಲ್ಲಿ ಟಿಕೆಟ್‌ ಸಿಗದಿದ್ದರೇ ಸ್ವತಂತ್ರ ಸ್ಪರ್ಧೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಮಾವೇಶ ನಡೆಸಲು ಮುಂದಾಗಿದ್ದ ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಸೂಚನೆ ನೀಡಿದೆ. +ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದ ಯೋಗೇಶ್ವರ್‌ಗೆ ಮೈತ್ರಿ ನಾಯಕರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಉದ್ದೇಶದಿಂದ ಬೃಹತ್‌ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರು. +ಸ್ವತಂತ್ರ ಸ್ಪರ್ಧೆಗೆ ಚಿಂತನೆ:ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಯಿಂದ ದೂರ ಉಳಿದು ಬಂಡಾಯದ ಬಾವುಟ ಹಾರಿಸಿದ್ದ ಯೋಗೇಶ್ವರ್‌, ಸದ್ಯದಲ್ಲೇ ಎದುರುಗಾವು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು.ಚನ್ನಪಟ್ಟಣ ಟಿಕೆಟ್‌ ತಮಗೇ ಸಿಗುತ್ತದೆ ಎಂಬ ಅದಮ್ಯ ವಿಶ್ವಾಸದಲ್ಲದ್ದ ಸಿ.ಪಿ.ಯೋಗೇಶ್ವರ್‌ ತಾವೇ ಮೈತ್ರಿ ಅಭ್ಯರ್ಥಿ ಎಂದು ಘೋಷಣೆ ಕೂಡ ಮಾಡಿಕೊಂಡಿದ್ದರು. ಆದರೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಆಸೆಗೆ ತಣ್ಣೀರು ಎರಚಿದ್ದರು. +ಮಗ ನಿಖಿಲ್‌ ಕುಮಾರಸ್ವಾಮಿಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಲು ಅವರು ಲಾಬಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಗೇಶ್ವರ್‌ ಅವರು ವಿರೋಧಿಗಳಿಗೆ ಸ್ಪಷ್ಟ ಸಂದೇಶ ಸಾರಲು ತಮ ರಾಜಕೀಯ ನಿರ್ಧಾರ ಘೋಷಿಸಲು ಮುಂದಾಗಿದ್ದರು. +ಇದಕ್ಕಾಗಿ ಸಿ.ಪಿ.ಯೋಗೇಶ್ವರ್‌ ಬೆಂಬಲಿಗರು ಚನ್ನಪಟ್ಟಣದಲ್ಲಿ ಬೃಹತ್‌ ಸಮಾವೇಶವನ್ನು ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದ ಮೂಲಕ ವಿರೋಧಿಗಳಿಗೆ ಪಾಠ ಕಲಿಸುವುದು ಸಿಪಿ ಯೇಗೇಶ್ವರ್‌ ಮಹದಾಸೆಯಾಗಿತ್ತು.ಆದರೆ ಪಕ್ಷದ ಕೇಂದ್ರ ನಾಯಕರು ಕರೆ ನೀಡಿದ್ದ ಬೆನ್ನಲ್ಲೇ ಸಮಾವೇಶ ರದ್ದಾಗಿದೆ. ಇದರಿಂದಾಗಿ ತಮ ರಾಜಕೀಯ ನಿರ್ಧಾರ ತೆಗೆದುಕೊಳ್ಳಲು ತರಾತುರಿಯಲ್ಲಿದ್ದ ಸಿಪಿ ಯೇಗೇಶ್ವರ್‌ ಅವರಿಗೆ ನಿರಾಸೆಯಾಗಿದೆ. +ನಾಳೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಬಹುಮತ ಟಿಕೆಟ್‌ ಯಾರಿಗೆ ಎನ್ನುವುದು ನಿರ್ಧಾರವಾಗಲಿದೆ. ಸಭೆ ಬಳಿಕ ಸಿ.ಪಿ.ಯೋಗೇಶ್ವರ್‌ ಅವರ ಮುಂದಿನ ನಿರ್ಧಾರ ಗೊತ್ತಾಗಲಿದೆ. ಹೀಗಾಗಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಭಾರೀ ಕುತೂಹಲ ಉಂಟು ಮಾಡಿದೆ. \ No newline at end of file diff --git a/eesanje/url_46_48_5.txt b/eesanje/url_46_48_5.txt new file mode 100644 index 0000000000000000000000000000000000000000..a3819f561d264de277c8bcd761e80ab7fcd1b736 --- /dev/null +++ b/eesanje/url_46_48_5.txt @@ -0,0 +1,5 @@ +ಹುತ್ತಕ್ಕೆ ಹಾಲೇರಿಯುವುದು ವೌಢ್ಯ +ಬೆಂಗಳೂರು, ಆ, 11– ಹುತ್ತಕ್ಕೆ ಹಾಲೆರೆಯುವುದು ಸೂಕ್ತವಲ್ಲ. ಇಂತಹ ಕಾರ್ಯಗಳಿಂದ ಹಾವು ಸೇರಿದಂತೆ ಇತರೆ ಜೀವಿಗಳಿಗೆ ಹಾನಿಯಾಗುತ್ತದೆ ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕಾರ್ಯದರ್ಶಿ ಇ ಬಸವರಾಜು ತಿಳಿಸಿದ್ದಾರೆ. +ವಿಧ್ಯಾರ್ಥಿ ಬಂಧುತ್ವ ವೇದಿಕೆ ಯಿಂದ ಗಾಂಧಿನಗರದ ವಿನೋಬಾ ಬಾವೆ ಅನಾಥ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ನಾಗರ ಪಂಚಮಿಯಿಂದ ಉಂಟಾ ಗುವ ಪರಿಸರ ಹಾನಿ ಮತ್ತು ಹಾಲನ್ನು ವ್ಯರ್ಥ ಮಾಡುತ್ತಿರುವ ಕುರಿತು ವಿದ್ಯಾರ್ಥಿಗಳಲ್ಲಿ ಇದೇ ಸಂದರ್ಭದಲ್ಲಿ ಅವರು ಅರಿವು ಮೂಡಿಸಿದರು. +ಹುತ್ತಕ್ಕೆ ಹಾಲೆರೆಯುವ ಬದಲು ವಿದ್ಯಾರ್ಥಿಗಳಿಗೆ ಹಾಲು ವಿತರಿಸುವ ಮೂಲಕ ಮೌಢ್ಯ ತೊರೆದು ಬಸವ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಪತ್ರಕರ್ತ ಆಲ್ಬೂರು ಶಿವರಾಜ ಮಾತನಾಡಿ, ಹಬ್ಬ ಹರಿದಿನಗಳ ಆಚರಣೆಗೆ ವಿರೋಧವಿಲ್ಲ. +ಆದರೆ ನಾಗರ ಪಂಚಮಿಯಿಂದ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ವೈಜ್ಞಾನಿಕ ಚಿಂತನೆಗಳನ್ನು ಅಳವಡಿಸಿಕೊಳ್ಳ ಬೇಕು ಎಂದರು.ಎಂ.ಬಿ.ವಿ ಜಿಲ್ಲಾ ಸಮಿತಿಯ ಡಿ ವೀರಣ್ಣ, ಸಂಚಾಲಕರಾದ ತೋರಣ್ ಕುಮಾರ್ ಹಾಗೂ ಆಶ್ರಮದ ಮುಖ್ಯಸ್ಥರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_48_6.txt b/eesanje/url_46_48_6.txt new file mode 100644 index 0000000000000000000000000000000000000000..9b32fb6a5235b5d4bdd3a65f8afefef0fbbca6ac --- /dev/null +++ b/eesanje/url_46_48_6.txt @@ -0,0 +1,8 @@ +ಸರ್ಕಾರದ ಬೇಜವಾಬ್ದಾರಿಯಿಂದ ತುಂಗಾಭದ್ರಾ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ : ವಿಪಕ್ಷಗಳ ಟೀಕೆ +ಬೆಂಗಳೂರು,ಆ.11-ತುಂಗಾಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್‌ನ ಸರಪಳಿ ತುಂಡಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪ-ಪ್ರತ್ಯಾರೋಪಗಳು ಮೇರೆ ಮೀರಿದ್ದು, ಸರ್ಕಾರ ಸದ್ಯಕ್ಕೆ ಡ್ಯಾಂನ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಹೇಳುತ್ತಿದೆ. ವಿರೋಧಪಕ್ಷಗಳು ಸರ್ಕಾರದ ಬೇಜವಾಬ್ದಾರಿಯಿಂದ ಅಣೆಕಟ್ಟು ಅಪಾಯಕ್ಕೆ ಸಿಲುಕಿದೆ ಎಂದು ಟೀಕಿಸುತ್ತಿವೆ. +ಗೃಹಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ತಜ್ಞರ ಸಲಹೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯ ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಡ್ಯಾಂನ ನೀರನ್ನು ಖಾಲಿ ಮಾಡಲು ಹೊರಹರಿವು ಹೆಚ್ಚಿಸುವುದರಿಂದ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರಿನ ಹರಿಯುವ ಭಾಗದಲ್ಲಿನ ಗ್ರಾಮಗಳ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದರು. +ಸದ್ಯಕ್ಕೆ ಅನಗತ್ಯವಾದ ಆತಂಕ ಬೇಡ. ಅಣೆಕಟ್ಟು ಸುರಕ್ಷಿತ ಎಂಬ ಅಭಿಪ್ರಾಯವಿದೆ. ತಾಂತ್ರಿಕ ತಂಡ ಸ್ಥಳ ಪರಿಶೀಲನೆ ಬಳಿಕ ವಾಸ್ತವಾಂಶ ತಿಳಿದುಬರಲಿದೆ ಎಂದರು.ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ಅಣೆಕಟ್ಟೆ ಮೂಲನಕ್ಷೆ ಇಂದು ಬೆಳಿಗ್ಗೆ ನಮಗೆ ತಲುಪಿದೆ. ಅಧಿಕಾರಿಗಳು ಹಾಗೂ ತಜ್ಞರ ತಂಡ ಸಭೆಗಳನ್ನು ನಡೆಸಿ ಸಮಾಲೋಚನೆ ಕೈಗೊಳ್ಳುತ್ತಿದೆ. 2-3 ದಿನದ ಒಳಗೆ ನೀರು ತಗ್ಗಿದ ನಂತರ ಕ್ರಸ್ಟ್‌ಗೇಟ್‌ ಅಳವಡಿಸುವ ದುರಸ್ಥಿ ಕಾರ್ಯ ಅಳವಡಿಸಲಾಗುವುದು. ರೈತರ ಹಿತ ಕಾಪಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. +ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ, ಕ್ರಸ್ಟ್‌ಗೇಟ್‌ ತುಂಡಾಗಲು ರಾಜ್ಯಸರ್ಕಾರದ ಬೇಜವಾಬ್ದಾರಿಯೂ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.ಡ್ಯಾಂನ ನಿಗಾವಣೆಗೆ ಇಂಜಿನಿಯರ್‌ಗಳೂ ಸೇರಿದಂತೆ ಅಧಿಕಾರಿಗಳ ತಂಡ ಇರುತ್ತದೆ. ಕಾಲಕಾಲಕ್ಕೆ ಅವರು ಪರಿಶೀಲನೆ ನಡೆಸಬೇಕು. ಜೊತೆಗೆ ಅಣೆಕಟ್ಟು ಉಸ್ತುವಾರಿ ಸಮಿತಿಯಲ್ಲಿ ಕೇಂದ್ರಸರ್ಕಾರದ ಅಧಿಕಾರಿಗಳಿರುತ್ತಾರೆ. ಅವರು ಪದೇಪದೇ ಸುರಕ್ಷತಾ ವಿಚಾರವಾಗಿ ಸಲಹೆಗಳನ್ನು ನೀಡಿರುತ್ತಾರೆ. ರಾಜ್ಯಸರ್ಕಾರ ಅದನ್ನು ಅತ್ಯಾದ್ಯತೆಯ ಮೇರೆಗೆ ಪಾಲನೆ ಮಾಡಬೇಕಿತ್ತು ಎಂದ್ದಿದ್ದಾರೆ. +ತುಂಗಭದ್ರ ಅಣೆಕಟ್ಟಿಗೆ ಪರ್ಯಾಯವಾಗಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ತಾವು ಅಧಿಕಾರದಲ್ಲಿದ್ದಾಗ ವಿಸ್ತೃತ ಯೋಜನಾ ವರದಿಯನ್ನು ಸಿದ್ಧಗೊಳಿಸಲು ಸೂಚಿಸಲಾಗಿದ್ದು, ಆ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಮಾಜಿ ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ತುಂಗಭದ್ರ ಡ್ಯಾಂನಲ್ಲಿ ದೊಡ್ಡ ಅನ್ಯಾಯವಾಗಿದೆ. ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೆ ಸಂಭವನೀಯ ಅನ್ಯಾಯವನ್ನು ತಪ್ಪಿಸಬಹುದಿತ್ತು. ರೈತರ ನೋವು-ನಲಿವುಗಳು ಅರ್ಥವಾಗದೇ ಇದ್ದವರು ಮಾತ್ರ ಈ ರೀತಿಯ ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಡ್ಯಾಂನ ಸುರಕ್ಷತಾ ಸಮಿತಿ ಅಧಿಕಾರಿ ಓಆರ್‌ಕೆ ರೆಡ್ಡಿ ಮಾತನಾಡಿ, 28 ಗೇಟ್‌ಗಳನ್ನು ತೆರದು ನೀರನ್ನು ಹೊರಗೆ ಹರಿಸಲಾಗುತ್ತಿದೆ. ಮುಖ್ಯಮಂತ್ರಿಯವರಿಗೆ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ವರದಿ ನೀಡಲಾಗಿದೆ. ಡ್ಯಾಂನ ಸುರಕ್ಷತೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. ವೆಲ್ಡಿಂಗ್‌ ಕಟ್‌ ಆಗಿದ್ದರಿಂದಾಗಿ 19ನೇ ಕ್ರಸ್ಟ್‌ಗೇಟ್‌ ತುಂಡಾಗಿದೆ. ಅದನ್ನು ಶೀಘ್ರವಾಗಿಯೇ ದುರಸ್ಥಿ ಮಾಡಲಾಗುವುದು ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_48_7.txt b/eesanje/url_46_48_7.txt new file mode 100644 index 0000000000000000000000000000000000000000..3608e8cc424816712c24c50ae22fe40820ac28f5 --- /dev/null +++ b/eesanje/url_46_48_7.txt @@ -0,0 +1,7 @@ +ತುಂಗಭದ್ರಾ ಅಣೆಕಟ್ಟಿನ ಗೇಟಿನ ದುರಸ್ತಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ : ಡಿಸಿಎಂ ಡಿಕೆಶಿ +ಬೆಂಗಳೂರು,ಆ.11– ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. +ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಥಳಕ್ಕೆ ತೆರಳುವ ಮುನ್ನ ಇಂದು ಬೆಳಿಗ್ಗೆ ಬೆಂಗಳೂರಿನ ತಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕೆ ನಮಗೆ ಡ್ಯಾಂನ ಸುರಕ್ಷತೆ ಮುಖ್ಯ. ನೀರನ್ನು ಉಳಿಸಿಕೊಂಡೇ ದುರಸ್ಥಿಗೆ ಪ್ರಯತ್ನ ನಡೆಸುತ್ತೇವೆ. ನಮ ಹಾಗೂ ರೈತರ ಅಭಿಪ್ರಾಯಗಳು ಏನೇ ಇದ್ದರೂ ತಜ್ಞರ ಅಭಿಪ್ರಾಯಗಳು ಮುಖ್ಯವಾಗುತ್ತವೆ. ಅದನ್ನು ಪಡೆದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಡ್ಯಾಂನಲ್ಲಿ ಕ್ರಸ್ಟ್‌ಗೇಟ್‌ಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಅಳವಡಿಸಬೇಕಿದೆ ಎಂದರು. +ನೀರನ್ನು ಹೊರಗೆ ಬಿಡದ ಹೊರತು ಗೇಟ್‌ ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಆದ ಕಾರಣ ತಂತ್ರಜ್ಞರ ವರದಿಯ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು. +ಅಣೆಕಟ್ಟಿನ 1 ರಿಂದ 16 ನೇ ಗೇಟುಗಳನ್ನು ಸಿಡಬ್ಲ್ಯೂಸಿ ನಿರ್ವಹಣೆ ಮಾಡುತ್ತದೆ. 17 ರಿಂದ 32 ರವರೆಗಿನ ಜವಾಬ್ದಾರಿ ಕರ್ನಾಟಕ ಸರ್ಕಾರದ್ದಾಗಿದೆ. ಕೇಂದ್ರ ಜಲ ಆಯೋಗದವರು ಸಹ ಒಂದಷ್ಟು ತಂತ್ರಜ್ಞರನ್ನು ಕಳುಹಿಸಿದ್ದಾರೆ. ನಾವು ಸಹ ನುರಿತ ತಂತ್ರಜ್ಞರನ್ನು ಕಳುಹಿಸಿದ್ದೇವೆ. ನಾನು ಸಹ ಶನಿವಾರ ರಾತ್ರಿಯಿಂದಲೇ ಅಧಿಕಾರಿಗಳ ಜೊತೆ ದೂರವಾಣಿ ಸಂಪರ್ಕದಲ್ಲಿದ್ದು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿದರು. +ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್‌ ಮುರಿದ ಕಾರಣ ಈ ತೊಂದರೆ ಉಂಟಾಗಿದೆ. ಭಾರಿ ಪ್ರಮಾಣದಲ್ಲಿ ನೀರು ಹೊರ ಹೋಗುತ್ತಿದ್ದು, ಅಣೆಕಟ್ಟಿನ ಭದ್ರತೆಯ ದೃಷ್ಟಿಯಿಂದ ಎಲ್ಲಾ ಗೇಟ್‌ ಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತಿದೆ. ಅಣೆಕಟ್ಟಿನ ಕೆಳಭಾಗದ ಹಾಗೂ ನದಿ ಪಾತ್ರದ ಎಲ್ಲಾ ಜನರಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. +ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗುತ್ತದೆಯೇ ಎಂದು ಪ್ರಶ್ನಿಸಿದಾಗ ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು. ಇದರಲ್ಲಿ ನಾನು ಯಾರ ಮಾತನ್ನು ಕೇಳುವುದಿಲ್ಲ. ಸ್ಥಳೀಯರು ಹಾಗೂ ರೈತರು ಒಂದಷ್ಟು ಅಭಿಪ್ರಾಯಗಳನ್ನು ಸೂಚಿಸುತ್ತಿದ್ದಾರೆ. ಎಲ್ಲರ ಅಭಿಪ್ರಾಯಗಳನ್ನು ಗೌರವಿಸಲಾಗುವುದು. ಆದರೆ ಅಂತಿಮವಾಗಿ ತಂತ್ರಜ್ಞರ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು. ನಮಗೆ ನಮ ರೈತರ ಹಿತ ಮುಖ್ಯ ಎಂದು ಹೇಳಿದರು. \ No newline at end of file diff --git a/eesanje/url_46_48_8.txt b/eesanje/url_46_48_8.txt new file mode 100644 index 0000000000000000000000000000000000000000..562531da3a9cdee2169d4560158e34ff4082c6e7 --- /dev/null +++ b/eesanje/url_46_48_8.txt @@ -0,0 +1,4 @@ +ತುಂಗಭದ್ರಾ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಆ.11-ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್‌ ಘಟನೆ ಕುರಿತಂತೆ ಜಲ ಸಂಪನೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. +ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ. +ಜಲ ಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು. \ No newline at end of file diff --git a/eesanje/url_46_48_9.txt b/eesanje/url_46_48_9.txt new file mode 100644 index 0000000000000000000000000000000000000000..e56fb9e3b5ce026cc3404443e3f9a81256930c52 --- /dev/null +++ b/eesanje/url_46_48_9.txt @@ -0,0 +1,13 @@ +ತುಂಗಭದ್ರಾ ಡ್ಯಾಮ್ ಸುರಕ್ಷತೆಗೆ ದೌಡಾಯಿಸಿದ ತಜ್ಞರು, ರೈತರಲ್ಲಿ ಹೆಚ್ಚಿದ ಆತಂಕ +ಕೊಪ್ಪಳ,ಆ.11-ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಸರಪಳಿ ಕೊಂಡಿ ತುಂಡಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣಗೊಂಡಿದ್ದು, ಜಲಾಶಯದ ಸುರಕ್ಷತೆಯ ಪ್ರಶ್ನೆ ಎದುರಾಗಿದೆ. +ನಿನ್ನೆ ರಾತ್ರಿ 9.30 ರಿಂದ 10 ಗಂಟೆ ಸಮಯದಲ್ಲಿ ಭಾರಿ ಶಬ್ದ ಕೇಳಿಬಂದಾಗ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, 19ನೇ ಕ್ರಸ್ಟ್‌ಗೇಟ್‌ನ ಸಂಪರ್ಕ ಕೊಂಡಿ ಕತ್ತರಿಸಿ, ನೀರಿನ ರಭಸಕ್ಕೆ ಗೇಟ್‌ ಕೊಚ್ಚಿ ಹೋಗಿ ನಾಪತ್ತೆಯಾಗಿದೆ. ಇದೊಂದೇ ಗೇಟ್‌ನಿಂದ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ರಭಸವಾಗಿ ಹೊರಹರಿಯುತ್ತಿದ್ದು, ಅದರ ಒತ್ತಡದ ಪರಿಣಾಮ ಅಕ್ಕಪಕ್ಕದ ಗೇಟ್‌ಗಳ ಮೇಲೂ ಉಂಟಾಗಿದೆ. ಇದರಿಂದಾಗಿ ಅಣೆಕಟ್ಟೆಯ ಸುರಕ್ಷತೆಯ ಆತಂಕ ಹೆಚ್ಚಾಗಿದೆ ಎಂದು ಹೇಳಲಾಗಿದೆ. +ರಾಜ್ಯಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಸುರಕ್ಷತೆಗೆ ಮೊದಲ ಆದ್ಯತೆ ನೀಡುತ್ತಿದ್ದು, ಅದೇ ಸಮಯದಲ್ಲಿ ರೈತರ ಬೆಳೆಗಳಿಗೆ ನೀರನ್ನು ಉಳಿಸಿಕೊಳ್ಳುವ ಹರಸಾಹಸವೂ ನಡೆಯುತ್ತಿದೆ. ರಾಜ್ಯದಿಂದಷ್ಟೇ ಅಲ್ಲ, ದೇಶವಿದೇಶದಿಂದಲೂ ಅಣೆಕಟ್ಟು ತಜ್ಞರನ್ನು ಕರೆಸಿಕೊಳ್ಳಲಾಗಿದೆ. +ಸ್ವತಂತ್ರ್ಯಪೂರ್ವದಲ್ಲಿ ನಿರ್ಮಾಣಗೊಂಡ ಅಣೆಕಟ್ಟೆಯ ಮೂಲ ನೀಲನಕ್ಷೆ ಹೈದ್ರಾಬಾದ್‌ನಲ್ಲಿದ್ದು, ನಿನ್ನೆ ರಾತ್ರಿಯೇ ಅಣೆಕಟ್ಟು ನಿರ್ಮಾಣದಲ್ಲಿ ಭಾಗಿಯಾಗಿದ್ದ ಇಂಜಿನಿಯರ್‌ಗಳನ್ನು ಸಂಪರ್ಕಿಸಿ, ಮಾಹಿತಿ ಪಡೆಯುವುದರ ಜೊತೆಗೆ ಮೂಲನಕ್ಷೆಯನ್ನೂ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಯಿತು. ಅದೃಷ್ಟವಶಾತ್‌ ಬೆಳಿಗ್ಗೆಯ ವೇಳೆಗೆ ಮೂಲನಕ್ಷೆಯನ್ನು ಜಲಾಶಯದ ಬಳಿಗೆ ತರಲಾಗಿದೆ. +ಜಲಾಶಯದಲ್ಲಿ 1,633 ಅಡಿ ನೀರು ನಿಂತಿದ್ದು, ಒಟ್ಟು ಸಂಗ್ರಹ 105 ಟಿಎಂಸಿ ಎಂದು ಹೇಳಲಾಗಿದೆ. ಕ್ರಸ್ಟ್‌ಗೇಟ್‌ಗಳನ್ನು ದುರಸ್ಥಿ ಮಾಡಲು ಕನಿಷ್ಟ 20 ಅಡಿ ನೀರು ಕೆಳಗೆ ಇಳಿಯಬೇಕಿದೆ. ಅದಕ್ಕಾಗಿ 60 ಟಿಎಂಸಿಯಷ್ಟು ಹೊರಗೆ ಹರಿಸಬೇಕು. 19ನೇ ಕ್ರಸ್ಟ್‌ಗೇಟ್‌ನಲ್ಲಿ 35 ಸಾವಿರ ಕ್ಯೂಸೆಕ್‌ ಹರಿಯುತ್ತಿದ್ದು, ಉಳಿದ 33 ಕ್ರಸ್ಟ್‌ಗೇಟ್‌ಗಳ ಪೈಕಿ 29 ಗೇಟ್‌ಗಳನ್ನು ತೆಗೆದು ಸರಿಸುಮಾರು 1.50 ಲಕ್ಷ ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. +ಸರಾಸರಿ 2.50 ಲಕ್ಷ ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಿದರೆ 2-3 ದಿನಗಳಲ್ಲಿ 60 ಟಿಎಂಸಿ ಖಾಲಿಯಾಗಿ ದುರಸ್ಥಿ ಕಾರ್ಯಕ್ಕೆ ಅವಕಾಶವಾಗಬಹುದು ಎಂಬ ಮಾಹಿತಿ ಇದೆ.ಇಷ್ಟೂ ನೀರನ್ನು ಹೊರಗೆ ಹರಿಸಿದರೆ ರೈತರಿಗೆ ಅನ್ಯಾಯವಾಗುತ್ತದೆ ಎಂಬ ಆತಂಕಕಗಳೂ ಕೇಳಿಬಂದಿವೆ. ಈ ಬಾರಿ ಉತ್ತಮ ಮಳೆಯಾಗಿದ್ದರಿಂದಾಗಿ ವಾಡಿಕೆಗಿಂತಲೂ ಮೊದಲೇ ಜುಲೈ ಎರಡನೇ ವಾರದಲ್ಲೇ ಜಲಾಶಯ ಭರ್ತಿಯಾಗಿತ್ತು. +ಎರಡು ಬೆಳೆಗಳನ್ನು ಬೆಳೆಯಬಹುದು ಎಂಬ ಸಂತಸದಲ್ಲಿ ರೈತರಿದ್ದರು. ರಾಜ್ಯದ 10 ಲಕ್ಷ ಹೆಕ್ಟೇರ್‌, ನೆರೆಯ ಆಂಧ್ರಪ್ರದೇಶದಲ್ಲಿ 6 ಲಕ್ಷ ಹೆಕ್ಟೇರ್‌ ಜಮೀನುಗಳ ರೈತರು ಬಂಪರ್‌ ಬೆಲೆಯ ನಿರೀಕ್ಷೆಯಲ್ಲಿದ್ದಾಗಲೇ ಕ್ರಸ್ಟ್‌ಗೇಟ್‌ ಛಿದ್ರಗೊಂಡಿರುವುದು ಕೃಷಿಕರ ಕನಸನ್ನು ಭಗ್ನಗೊಳಿಸಿದೆ.ಒಂದು ವೇಳೆ 60 ಟಿಎಂಸಿಯನ್ನು ಹೊರಗೆ ಹರಿಸಿದರೆ ಒಂದು ಬೆಳೆಗೂ ನೀರು ಸಾಲುವುದಿಲ್ಲ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯನ್ನು ನಿಭಾಯಿಸಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಆತಂಕವಿದೆ. +ರಾಜ್ಯಸರ್ಕಾರ ಜಲಾಶಯದಲ್ಲಿ ನೀರನ್ನು ಉಳಿಸಿಕೊಂಡು ಕ್ರಸ್ಟ್‌ಗೇಟ್‌ ದುರಸ್ಥಿ ಮಾಡುವ ಬಗ್ಗೆಯೂ ಪರಿಶೀಲನೆ ನಡೆಸುತ್ತಿದೆ. ಆದರೆ ನೀರಿನ ರಭಸ ಅಪಾಯಮಟ್ಟ ಮೀರಿದ್ದು, ಈ ಹಂತದಲ್ಲಿ ಕ್ರಸ್ಟ್‌ಗೇಟ್‌ ಬಳಿ ಧಾವಿಸುವುದು ಮಾರಣಾಂತಿಕ ಎಂದು ಹೇಳಲಾಗುತ್ತಿದೆ.ನೀರಿನ ಮಟ್ಟ ತಗ್ಗಿದರೆ ಕ್ರೇನ್‌ ಮುಖಾಂತರ ಎರಡು ಹಂತದಲ್ಲಿ ಕ್ರಸ್ಟ್‌ಗೇಟ್‌ಗಳನ್ನು ಜೋಡಿಸಿ ದುರಸ್ಥಿ ಮಾಡಲು ಸಾಧ್ಯ ಎಂದು ತಿಳಿದುಬಂದಿದೆ. +ಏಕಾಏಕಿ ಅಷ್ಟೂ ನೀರನ್ನು ಒಮೆಲೇ ಹೊರಗೆ ಹರಿಸಿದರೆ ನದಿಪಾತ್ರದ ಕಾಲುವೆಗಳ ಗ್ರಾಮಗಳು ಮುಳುಗಡೆಯಾಗುವ ಅಥವಾ ಕೊಚ್ಚಿಹೋಗುವ ಅಪಾಯವಿದೆ. ನೀರನ್ನು ಹೊರಗೆ ಬಿಡದೇ ಇದ್ದರೆ 69 ವರ್ಷಗಳ ಹಿಂದೆ ಅಳವಡಿಸಲಾಗಿರುವ ಹಳೆಯ ಸಂಪರ್ಕ ಸರಪಳಿಗಳು ಒತ್ತಡಕ್ಕೆ ಒಳಗಾಗಿ ತುಂಡಾಗುವ, ಇದರಿಂದ ಅಣೆಕಟ್ಟೆಗೆ ಅಪಾಯವಾಗುವ ಆತಂಕವೂ ಇದೆ. +ಈಗ ತುಂಡಾಗಿರುವ 19ನೇ ಕ್ರಸ್ಟ್‌ಗೇಟ್‌ 17 ವರ್ಷಗಳ ಹಿಂದೆ ಇದೇ ರೀತಿ ಅಪಾಯಕ್ಕೆ ಸಿಲುಕಿತ್ತು. ಆಗ ದುರಸ್ಥಿ ಮಾಡಿ ಗೇಟ್‌ ಅನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ನೀರನ್ನು ಹೊರಗೆ ಬಿಡಲು 19ನೇ ಕ್ರಸ್ಟ್‌ಗೇಟ್‌ ಅನ್ನು ಬಳಸುತ್ತಿರಲಿಲ್ಲ. ಆದರೆ 17 ವರ್ಷಗಳ ಹಿಂದಿನ ವೆಲ್ಡಿಂಗ್‌ ಏಕಾಏಕಿ ತುಂಡಾಗಿದೆ ಎಂದು ಹೇಳಲಾಗಿದೆ. +ಹೀಗಾಗಿ ರಾಜ್ಯಸರ್ಕಾರ ಅಡ್ಡಕತ್ತರಿಯಲ್ಲಿ ಸಿಲುಕಿದಂತಾಗಿದ್ದು, ದೇಶ-ವಿದೇಶಗಳ ತಜ್ಞರನ್ನು ಕರೆಸಿ ಅಭಿಪ್ರಾಯ ಸಂಗ್ರಹಿಸುತ್ತಿದೆ.ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಥಳಕ್ಕೆ ತೆರಳಿದ್ದಾರೆ. +ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವರಾಜ್‌ತಂಗಡಗಿ ಹಾಗೂ ಜನಪ್ರತಿನಿಧಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಜಲಸಂಪನೂಲ ಇಲಾಖೆಯ ಹಿರಿಯ ಅಧಿಕಾರಿಗಳು, ತಜ್ಞರು ಬೀಡುಬಿಟ್ಟಿದ್ದು ಅಣೆಕಟ್ಟೆಯ ಸುರಕ್ಷತೆಗೆ ಸಮರೋಪಾದಿಯ ಕಾರ್ಯಾಚರಣೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_49_1.txt b/eesanje/url_46_49_1.txt new file mode 100644 index 0000000000000000000000000000000000000000..07ee7a8b567adf5a68feccfab068c5c0783c1827 --- /dev/null +++ b/eesanje/url_46_49_1.txt @@ -0,0 +1,7 @@ +ನನಗೆ ಮನೆ ಇರಲಿಲ್ಲ ಎಂಬ ಸಿಎಂ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿ +ಬೆಂಗಳೂರು,ಆ.11-ನಾಲ್ಕು ದಶಕಗಳಿಂದ ರಾಜಕೀಯದಲ್ಲಿದ್ದರೂ ನನಗೆ ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿಕಾರಿದ್ದಾರೆ. +ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯ ಅಂತಹವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ. +ಈ ಬಗ್ಗೆ ಸಾಮಾಜಿಕ ಜಾಲತಾಣಲ್ಲಿ ಪ್ರತಿಕ್ರಿಯಿಸಿರುವ ಅವರು, 52 ಕೋಟಿ ಆಸ್ತಿ ಘೋಷಿಸಿದ್ದರೂ, ಸ್ವಂತ ಮನೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.ವಿಪರ್ಯಾಸವೆಂದರೆ, ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್‌‍, ಬಿಜೆಪಿ, ಜೆಡಿಎಸ್‌‍ನಲ್ಲಿನ ಅವರ ಬಂಡವಾಳಶಾಹಿ ಮಿತ್ರರು ಈಗಾಗಲೇ ಶ್ರೀಮಂತರಾಗಿರುವ ಸಿಎಂ ಸಿದ್ದರಾಮಯ್ಯನಂತವರಿಗೆ ಹೆಚ್ಚು ಸಂಪತ್ತು ಮತ್ತು ಭೂಮಿಯನ್ನು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತಿದ್ದಾರೆ. ನಮ ಸಮಾನತಾವಾದವು ಇಂತಹ ಉಳ್ಳವರ ಪರವಾದ ರಾಜಕೀಯವನ್ನು ಕಿತ್ತುಹಾಕಬೇಕು ಎಂದು ತಿಳಿಸಿದ್ದಾರೆ. +ಸಿಎಂ ಸಿದ್ದರಾಮಯ್ಯಗೆ ನ್ಯಾಯದ ಪರಿಕಲ್ಪನೆ ಇಲ್ಲ, ಎಸ್ಸಿಎಸ್ಪಿ, ಟಿ.ಎಸ್‌‍.ಪಿ. ಯೋಜನೆಯ ಮೀಸಲು ಹಣವನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರ ಸಾಮಾನ್ಯ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದರಿಂದ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಕುಂಠಿತವಾಗಿದೆ. +ಈ ಅಸಮಾನತೆಯ ವ್ಯವಸ್ಥೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮನುವಾದಿ, ಅಸಮಾನತಾವಾದಿ, ಶ್ರೀಮಂತರ ಪರವಾಗಿರುವ ಪಕ್ಷವಾಗಿದೆ. ಈ ಪಕ್ಷದಲ್ಲಿ ಬೆಳೆದಿರುವ ಸಚಿವ ಎಚ್‌.ಸಿ.ಮಹದೇವಪ್ಪ ಸೇರಿ ಹಲವರು, ದಲಿತರು, ಆದಿವಾಸಿಗಳಿಗೆ ಉದ್ದೇಶಪೂರ್ವಕವಾಗಿಯೇ ದೋಹ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. +ಎಸ್ಸಿಎಸ್ಸಿ, ಟಿಎಸ್ಪಿ ಅನುದಾನ ಇರುವುದು ಗುಡಿಸಿನಲ್ಲಿರುವವರಿಗೆ ಮನೆ, ಶಿಕ್ಷಣ ರಸ್ತೆ, ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ. ಆದರೆ ಕಳೆದ ವರ್ಷ 12,500 ಕೋಟಿ, ಈ ವರ್ಷ 14,500 ಸಾವಿರ ಕೋಟಿ ದಲಿತರು, ಆದಿವಾಸಿಗಳ ಹಣ ಕಿತ್ತುಕೊಂಡು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ, ಸಿಎಂಗೆ ನ್ಯಾಯದ ಪರಿಕಲ್ಪನೆ ಗೊತ್ತೇ ಇಲ್ಲ. ಪರಿವರ್ತನೆ ಮನಸ್ಥಿತಿ ಇಲ್ಲ ಎಂದು ಆಕೋಶ ಹೊರಹಾಕಿದ್ದಾರೆ. \ No newline at end of file diff --git a/eesanje/url_46_49_10.txt b/eesanje/url_46_49_10.txt new file mode 100644 index 0000000000000000000000000000000000000000..bc40c979f821c3a0b66d4f015ff9e1db1453ae0d --- /dev/null +++ b/eesanje/url_46_49_10.txt @@ -0,0 +1,7 @@ +ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಆತಹತ್ಯೆ +ಬೆಂಗಳೂರು,ಆ.10-ನಿವೃತ್ತ ಸಹಾಯಕ ಕೃಷಿ ಅಧಿಕಾರಿಯೊಬ್ಬರು ಆತಹತ್ಯೆಗೆ ಶರಣಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಜಿಬಿ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಬ್ದುಲ್‌ ರಷೀದ್‌(64) ಮೃತಪಟ್ಟ ನಿವೃತ್ತ ಅಧಿಕಾರಿ. +ಅಬ್ದುಲ್‌ ರಷೀದ್‌ ಅವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಮೇಲೆ ಪ್ರಕರಣವೊಂದು ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಹಾಗಾಗಿ ಅವರಿಗೆ ಇನ್ನು ನಿವೃತ್ತಿ ವೇತನ ಸಿಕ್ಕಿರಲಿಲ್ಲ. +ಆ ಹಣವನ್ನೇ ನಂಬಿಕೊಂಡಿದ್ದ ಅಬ್ದುಲ್‌ ಅವರು ಇದರಿಂದ ಮನನೊಂದಿದ್ದರು. ನಿನ್ನೆ ಪತ್ನಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಮಕ್ಕಳೂ ಇರಲಿಲ್ಲ. ಆ ಸಂದರ್ಭದಲ್ಲಿ ಡೆತ್‌ನೋಟ್‌ ಬರೆದಿಟ್ಟು, ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡು ಅಬ್ದುಲ್‌ ರಷೀದ್‌ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ. +ಮನೆ ಮಾಲೀಕರು ನೋಡಿ ತಕ್ಷಣ ಅವರ ಪತ್ನಿಗೆ ತಿಳಿಸಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿದು ರಾತ್ರಿ 11 ಗಂಟೆ ಸುಮಾರಿನಲ್ಲಿ ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ. +ನಾನು ಸೇವೆಯಿಂದ ನಿವೃತ್ತನಾಗಿ ನಾಲ್ಕು ವರ್ಷವಾದರೂ ನಿವೃತ್ತಿ ವೇತನ ಬಂದಿಲ್ಲ. ಹಾಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ. +ಡೆತ್‌ನೋಟ್‌ ವಶಕ್ಕೆ ಪಡೆದಿರುವ ಪೊಲೀಸರು ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_49_11.txt b/eesanje/url_46_49_11.txt new file mode 100644 index 0000000000000000000000000000000000000000..7d3a6c453e74ee0fafe132e127a1e6a91a83e77f --- /dev/null +++ b/eesanje/url_46_49_11.txt @@ -0,0 +1,11 @@ +ಮೈಸೂರಲ್ಲಿ ದೋಸ್ತಿಗಳ ಶಕ್ತಿಪ್ರದರ್ಶನ, ಕಾಂಗ್ರೆಸ್ಸಿಗರ ವಿರುದ್ಧ ಗರ್ಜನೆ +ಬೆಂಗಳೂರು,ಆ.10-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷವು ಬೃಹತ್ ಸಮಾವೇಶದಲ್ಲಿ ಶಕ್ತಿಪ್ರದರ್ಶಿಸಿ ಒಗ್ಗಟ್ಟಿನ ಮಂತ್ರದ ಮೂಲಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. +ನಮ ಹೋರಾಟ ಮೈಸೂರಿಗೆ ಮಾತ್ರ ಸೀಮಿತವಾಗು ವುದಿಲ್ಲ. ಸಿದ್ದರಾಮಯ್ಯನವರ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳನ್ನು ಮುಂದಿಟ್ಟುಕೊಂಡು ಬರುವ ದಿನಗಳಲ್ಲಿ ರಾಜ್ಯಾದ್ಯಂತ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂಬ ಶಪಥವನ್ನು ಉಭಯ ಪಕ್ಷಗಳ ಮುಖಂಡರು ಮಾಡಿದ್ದಾರೆ. +ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಸಮಾರೋಪ ಸಮಾರಂಭವು ಕಾಂಗ್ರೆಸ್ ಶುಕ್ರವಾರ ನಡೆಸಿದ್ದ ಸಮಾವೇಶಕ್ಕೆ ಭರ್ಜರಿ ತಿರುಗೇಟು ಎನ್ನುವಂತೆ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. +ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯಾದ್ಯಂತ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಜಮಾಯಿಸಿದ್ದರು. +ನಾಡಿನ ಮೂಲೆ ಮೂಲೆಗಳಿಂದಲೂ ಭಾರೀ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರಿಂದ ಮೈಸೂರು ಅಕ್ಷರಶಃ ಕೇಸರಿ ಹಾಗೂ ಹಸಿರುಮಯವಾಗಿತ್ತು. ವೇದಿಕೆಯಲ್ಲಿ ಮಾತನಾಡಿದ ಎರಡೂ ಪಕ್ಷಗಳ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಕಿ ಉಗುಳಿದರು. ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಅಶ್ವತ್‌್ಥ ನಾರಾಯಣ, ಬಿ.ಶ್ರೀರಾಮುಲು ಮತ್ತಿತರರು ಬಿಜೆಪಿ ಪರವಾಗಿ ಮಾತನಾಡಿದರು.ಜೆಡಿಎಸ್ ವತಿಯಿಂದ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಸುರೇಶ್ ಬಾಬು, ನಿಖಿಲ್ಕುಮಾರಸ್ವಾಮಿ ಮತ್ತಿತರರು ಸರ್ಕಾರದ ವಿರುದ್ಧ ಕೆಂಡಕಾರಿದರು. +ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಸರ್ಕಾರದ ಹಗರಣಗಳನ್ನೇ ಗುರಿಯಾಗಿಟ್ಟುಕೊಂಡು ದೋಸ್ತಿ ಪಕ್ಷಗಳ ಮುಖಂಡರು ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಜನರಿಗೆ ಸುಳ್ಳು ಭರವಸೆಯನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವ ಇವರನ್ನು ಮನೆ ಕಳುಹಿಸುವವರೆಗೂ ನಮ ಹೋರಾಟ ನಿಲ್ಲುವುದಿಲ್ಲ ಎಂದು ವಾಗ್ದಾನ ಮಾಡಿದರು.ಮಿಸ್ಟರ್ ಕ್ಲೀನ್ ಇಮೇಜ್ ಖ್ಯಾತಿಯ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಮೇಲೆ ಅಕ್ರಮ ಡಿನೋಟಿಫಿಕೇಷನ್ ಆರೋಪ ಕೇಳಿಬಂದಿದೆ. ಅವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ನಾವು ನಮ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. +ನಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರಬಹುದು. ಅದನ್ನು ಹೇಗೆ ಸರಿಪಡಿಸಿಕೊಳ್ಳಬೇಕೆಂಬುದು ನಮಗೆ ಗೊತ್ತು. ನಮ ಹೋರಾಟ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಹೊರತು ಯಾವುದೇ ಒಬ್ಬ ವ್ಯಕ್ತಿಯ ಮೇಲಲ್ಲ ಎಂದು ಸ್ಪಷ್ಟಪಡಿಸಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಅಧಿಕಾರ ಹಿಡಿದಿರುವ ಕಾಂಗ್ರೆಸ್ ಇಂದು ಎಲ್ಲಾ ರಾಜ್ಯಗಳಲ್ಲೂ ವಿಫಲವಾಗಿದೆ. ಲಂಚ ನೀಡದಿದ್ದರೆ ಯಾವ ಕೆಲಸವೂ ಆಗುವುದಿಲ್ಲ. ಸರ್ಕಾರ ಆದಷ್ಟು ಬೇಗ ತೊಲಗಿದರೆ ಸಾಕು ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಆರೋಪ ಮಾಡಿದರು. +ಅದರಲ್ಲೂ ಕುಮಾರಸ್ವಾಮಿಯವರು ತಮ ಭಾಷಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಯೊಂದು ಆರೋಪಗಳಿಗೆ ತಿರುಗೇಟು ನೀಡಿದರು. ಈ ವೇಳೆ ನೆರೆದಿದ್ದ ಕಾರ್ಯಕರ್ತರಿಂದ ಹರ್ಷೋದ್ಘಾರ ಮುಗಿಲುಮುಟ್ಟಿತು. +ಇದಕ್ಕೂ ಮುನ್ನ ಎಂಟು ದಿನಗಳ ಹಿಂದೆ ಕೆಂಗೇರಿಯಿಂದ ಆರಂಭವಾಗಿದ್ದ ಪಾದಯಾತ್ರೆ ಬೆಳಗ್ಗೆ ಮೈಸೂರಿನ ಕೊಲಂಬಿಯಾ ಏಷಿಯಾ ಜಂಕ್ಷನ್ನಿಂದ ಆರಂಭವಾಯಿತು. ಅಲ್ಲಿಂದ ಪ್ರಮುಖ ರಸ್ತೆಗಳಲ್ಲಿ ದೋಸ್ತಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಎರಡೂ ಪಕ್ಷಗಳ ನಾಯಕರಿಗೆ ಜೈಕಾರ ಹಾಕಿಕೊಂಡು ವೇದಿಕೆಗೆ ಆಗಮಿಸಿದರು. +ಪೊಲೀಸ್ ಬಿಗಿ ಭದ್ರತೆ:ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಹೆಚ್ಚಿನ ಜನ ಭಾಗವಹಿಸುವ ಹಿನ್ನೆಲೆಯಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಹಾಗೂ ಸುತ್ತಮುತ್ತ ನಾಲ್ಕು ಹಂತದ ಭದ್ರತೆ ಹಾಗೂ ಪ್ರಮುಖ ಸರ್ಕಲ್ಗಳಲ್ಲಿ ಭದ್ರತೆ ಒದಗಿಸಲಾಗಿತ್ತು.ವಾಹನ ನಿಲುಗಡೆ ಹಾಗೂ ಬದಲಿ ಸಂಚಾರ ಮಾರ್ಗಗಳ ವ್ಯವಸ್ಥೆಯನ್ನು ಮಾಡಲಾಗಿತ್ತು. ಮೈಸೂರು ಚಲೋ ಸಮಾವೇಶದ ಭದ್ರತೆಗೆ 4,500 ಮಂದಿ ಪೊಲೀಸರು, ಮೂವರು ಡಿವೈಎಸ್ಪಿ, 22 ಇನ್‌್ಸಪೆಕ್ಟರ್ಗಳು , 175 ಎಸ್ಐ, 100 ಜನ ಕಮಾಂಡೋಗಳು , 500 ಹೋಂ ಗಾರ್ಡ್‌್ಸಗಳು ಹಾಗೂ ಕೆಎಸ್ಆರ್ಪಿ ಜೊತೆಗೆ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು. \ No newline at end of file diff --git a/eesanje/url_46_49_12.txt b/eesanje/url_46_49_12.txt new file mode 100644 index 0000000000000000000000000000000000000000..51ca42ff0e1f152b82b9504f6f353ee7855ea7fa --- /dev/null +++ b/eesanje/url_46_49_12.txt @@ -0,0 +1,7 @@ +ಸೋಮವಾರದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಲಿದೆ ಮಳೆ +ಬೆಂಗಳೂರು, ಆ.10-ಕಳೆದ ಒಂದು ವಾರದಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಆಗಸ್ಟ್‌ 12ರಿಂದ ಚುರುಕಾಗುವ ಮುನ್ಸೂಚನೆಗಳಿವೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸೋಮವಾರದಿಂದ ಆ.15ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದೆ. +ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರೆದಿದೆ. ಆದರೆ, ಭಾರೀ ಮಳೆಯಾಗುತ್ತಿಲ್ಲ. ಭಾರೀ ಮಳೆಯಾಗಿ ಜನಜೀವನ ತತ್ತರಿಸುವಂತೆ ಮಾಡಿದ್ದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆಗಳಿವೆ. +ಉತ್ತರ ಒಳನಾಡಿನಲ್ಲೂ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ವ್ಯಾಪಕವಾದ ಮಳೆಯಾಗುತ್ತಿದ್ದು, ಇನ್ನೆರಡು ದಿನದ ನಂತರ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ. +ಆಗಸ್ಟ್‌ ಒಂದರಿಂದ ಇದುವರೆಗೆ ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆ ಮಳೆಯಾಗಿದೆ. ಕೆಲವೆಡೆ ಕೊರತೆ ಮತ್ತೆ ಕೆಲವೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆಯಾದಂತಾಗಿದೆ. +ಕೇರಳದ ವಯನಾಡು, ಕೊಡಗು ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕಪಿಲಾ, ಕಾವೇರಿ, ಹೇಮಾವತಿ, ತುಂಗಾ, ಭದ್ರಾ, ಶರಾವತಿ ನದಿಗಳ ಪ್ರವಾಹ ಇಳಿಕೆಯಾಗಿದೆ. ಪ್ರಮುಖ ಜಲಾಶಯಗಳ ಒಳ ಹರಿವು ಸಹ ಗಣನೀಯವಾಗಿ ಕಡಿಮೆಯಾಗಿದೆ. +ಅದೇ ರೀತಿ ನದಿಗೆ ಬಿಡಲಾಗುತ್ತಿದ್ದ ಹೊರ ಹರಿವು ಸಹ ಕಡಿಮೆಯಾಗಿದೆ. ಇದರಿಂದ ಆಯಾ ನದಿ ಪಾತ್ರದ ಜನರಿಗೆ ಉಂಟಾಗಿದ್ದ ಪ್ರವಾಹದ ಆತಂಕ ತಾತ್ಕಾಲಿಕವಾಗಿ ದೂರವಾಗಿದೆ. ಆದರೆ, ಕೃಷ್ಣಾ ಕೊಳ್ಳದ ತುಂಗಭದ್ರಾ, ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಇನ್ನೂ ಪ್ರವಾಹದ ಪರಿಸ್ಥಿತಿ ದೂರವಾಗಿಲ್ಲ. \ No newline at end of file diff --git a/eesanje/url_46_49_2.txt b/eesanje/url_46_49_2.txt new file mode 100644 index 0000000000000000000000000000000000000000..1a6051a3e4785ec9d060eb8774b7c9ba955c08e5 --- /dev/null +++ b/eesanje/url_46_49_2.txt @@ -0,0 +1,11 @@ +ತುಂಡಾದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಂಡಿ, ಆತಂಕದಲ್ಲಿ ಜನ +ಕೊಪ್ಪಳ,ಆ.11-ತಾಲ್ಲೂಕಿನ ಮುನಿರಾಬಾದ್‌ ಬಳಿಯಿರುವ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್‌ಗೇಟ್‌ ಕೊಂಡಿ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಹೋಗುತ್ತಿದ್ದು, ನದಿಪಾತ್ರದ ಜನರಲ್ಲಿ ಆತಂಕ ಹೆಚ್ಚಾಗಿದೆ.ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ತುಂಡಾದ ಪರಿಣಾಮ ಸುಮಾರು 35 ಸಾವಿರ ಕ್ಯೂಸೆಕ್‌ ನೀರು ಹರಿದುಹೋಗುತ್ತಿದ್ದು, ನದಿಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ. +ರಾತ್ರೋರಾತ್ರಿ ಕ್ರಸ್ಟ್‌ಗೇಟ್‌ ತುಂಡಾಗಿ ಭಾರಿ ಪ್ರಮಾಣದ ನೀರು ನದಿಗೆ ಹರಿದುಬರುತ್ತಿರುವ ಪರಿಣಾಮ ಹಂಪೆಯ ಸಾರಕಗಳು ಜಲಾವೃತಗೊಂಡಿವೆ.ನದಿಪಾತ್ರದಲ್ಲಿರುವ ಹೊಲಗದ್ದೆಗಳು ಜಲಮಯವಾಗಿವೆ. ನಿನ್ನೆ ರಾತ್ರಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ, ಶಾಸಕ ರಾಘವೇಂದ್ರ ಹಿಟ್ನಾಳ್‌ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. +ಈ ಸಂದರ್ಭದಲ್ಲಿ ಮಾತನಾಡಿದ ಅವರು, 19ನೇ ಗೇಟ್‌ನ ವಾಸ್ತವ ಪತ್ತೆ ಹಚ್ಚಲು ಮತ್ತು ದುರಸ್ಥಿ ಮಾಡಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ದುರಸ್ಥಿ ಮಾಡಬೇಕಾದರೆ ಜಲಾಶಯದ 65 ಟಿಎಂಸಿ ನೀರನ್ನು ಖಾಲಿ ಮಾಡಬೇಕಾಗುತ್ತದೆ. 120 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಅರ್ಧದಷ್ಟು ನೀರನ್ನು ಖಾಲಿ ಮಾಡಲೇಬೇಕಾದ ಅನಿವಾರ್ಯತೆ ಇದೆ. 1633 ಅಡಿ ನೀರಿನಲ್ಲಿ 20 ರಿಂದ 25 ಅಡಿಯಷ್ಟು ನೀರನ್ನು ಖಾಲಿ ಮಾಡಿ ಹೊರಗೆ ಬಿಡಬೇಕು. 19ನೇ ಗೇಟ್‌ನಲ್ಲಿ 35 ಕ್ಯೂಸೆಕ್‌ ನೀರು ಹೋಗುತ್ತಿದ್ದು, ಉಳಿದ 30 ಗೇಟ್‌ಗಳಿಂದ ಒಟ್ಟು ಒಂದು ಲಕ್ಷ ಕ್ಯೂಸೆಕ್‌ ನೀರು ಹೊರಗೆ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. +ಈ ಘಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ಅವರೂ ಕೂಡ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ತಕ್ಷಣವೇ ದುರಸ್ಥಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜಲಾಶಯದಿಂದ ಅಪಾರ ಪ್ರಮಾಣದ ನೀರು ಖಾಲಿ ಮಾಡುವುದರಿಂದ ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಎದುರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. +ದೊಡ್ಡ ಪ್ರಮಾಣದಲ್ಲಿ ನೀರು ಹೊರಹೋಗುತ್ತಿರುವುದರಿಂದ 20 ಅಡಿಯಷ್ಟು ನೀರು ಖಾಲಿಯಾದಾಗ ಮಾತ್ರ ಗೇಟ್‌ ಏನಾಗಿದೆ ಎಂದು ನೋಡಲು ಸಾಧ್ಯ. ಗೇಟ್‌ ಚೈನ್‌ ಲಿಂಕ್‌ ಪೂರ್ಣ ತುಂಡಾಗಿರುವುದರಿಂದ ಗೇಟ್‌ ಎಲ್ಲಿದೆ ಎಂಬುದು ಗೊತ್ತಾಗುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ಇಂಜಿನಿಯರ್‌ಗಳು ಜಲಾಶಯ ಕಟ್ಟುವಾಗ ಇದ್ದಂತಹ ವಿನ್ಯಾಸಗಾರರ ಹತ್ತಿರವೂ ಡ್ಯಾಂ ನೀಲನಕ್ಷೆ ತರಿಸುತ್ತಿದ್ದೇವೆ. ತಜ್ಞರು ಹಾಗೂ ಅಣೆಕಟ್ಟೆಯ ವಿನ್ಯಾಸದ ನೀಲನಕ್ಷೆ ಬಂದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. +ಒಂದೇ ಬಾರಿಗೆ ನೀರನ್ನು ಅಣೆಕಟ್ಟೆಯಿಂದ ಹೊರಬಿಟ್ಟರೆ ಅಕ್ಕಪಕ್ಕದ ಹಳ್ಳಿಗಳಿಗೆ ಸಮಸ್ಯೆಯಾಗುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ ಎಂದರು. +ಸದ್ಯ ಇರುವ ಮಾಹಿತಿ ಇರುವ ಪ್ರಕಾರ, 2.35 ಲಕ್ಷ ಕ್ಯೂಸೆಕ್‌ವರೆಗೆ ನೀರು ಬಿಡಬಹುದು. ಇದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಹಳ್ಳಿಗಳು ಮುಳುಗುವುದಿಲ್ಲ. ಸ್ವಲ್ಪ ಮಟ್ಟಿಗೆ ಬೆಳೆಹಾನಿ ಆಗಬಹುದು. ಅಧಿಕ ನೀರು ಬಿಡುಗಡೆಯಾದರೆ ಹಾನಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು. +ಬರದಿಂದ ತತ್ತರಿಸುತ್ತಿರುವ ಜನಕ್ಕೆ ಮಳೆ ಬಂದು ಸಂತಸವಾಗಿತ್ತು. ಜಲಾಶಯ ತುಂಬಿದ್ದರಿಂದ ಈ ಭಾಗದ ಜನ ಸಹಜವಾಗಿಯೇ ಖುಷಿಯಾಗಿದ್ದರು. ಬೆಳೆಗಳಿಗೆ, ಜನ-ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂಬ ನಿರೀಕ್ಷೆಯಿತ್ತು. +ಆದರೆ ರಾತ್ರೋರಾತ್ರಿ ಕ್ರಸ್ಟ್‌ಗೇಟ್‌ನ ಚೈನ್‌ಲಿಂಕ್‌ ತುಂಡಾಗಿ ನೀರು ಹರಿದುಹೋಗುತ್ತಿರುವುದು ಮತ್ತು ಇದನ್ನು ದುರಸ್ಥಿ ಮಾಡಲು ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವ ಅಪಾರ ಪ್ರಮಾಣದ ನೀರನ್ನು ಅನಗತ್ಯವಾಗಿ ಹೊರಬಿಡಬೇಕಾದ ಸನ್ನಿವೇಶ ಸೃಷ್ಟಿಯಾಗುವುದರಿಂದ ಮುಂದೆ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. +69 ವರ್ಷಗಳ ಹಿಂದೆ ನಿರ್ಮಿಸಲಾದ ಅಣೆಕಟ್ಟೆ ಚೈನ್‌ಲಿಂಕ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದಾಗಿ ತುಂಡಾಗಿದೆ. ಈ ಬಾರಿ ಉತ್ತಮ ಮಳೆಯಿಂದಾಗಿ ಜಲಾಶಯ ತುಂಬಿ ತುಳುಕುತ್ತಿದೆ. ಆದರೆ ಆ ನೀರನ್ನು ಹಿಡಿದಿಟ್ಟುಕೊಳ್ಳುವಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬ ಟೀಕೆಗಳು ಕೇಳಿಬಂದಿವೆ. \ No newline at end of file diff --git a/eesanje/url_46_49_3.txt b/eesanje/url_46_49_3.txt new file mode 100644 index 0000000000000000000000000000000000000000..b9bb97337201a213bec2c8facf8c58da4caed029 --- /dev/null +++ b/eesanje/url_46_49_3.txt @@ -0,0 +1,8 @@ +ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಗಗನಕ್ಕೇರಿದ ಬಾಳೆಹಣ್ಣಿನ ಬೆಲೆ +ಬೆಂಗಳೂರು, ಆ.11– ಶ್ರಾವಣ ಮಾಸದಲ್ಲಿ ಸರಣಿ ಹಬ್ಬಗಳು… ಶುಭ ಸಮಾರಂಭಗಳು ಹೆಚ್ಚಾಗಿ ನಡೆಯುತ್ತವೆ. ಪೂಜೆಗೆ ಅಗತ್ಯವಾಗಿ ಬೇಕಾಗಿರುವ ಬಾಳೆಹಣ್ಣಿನ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. +ಕಳೆದ ಕೆಲವು ತಿಂಗಳುಗಳ ಹಿಂದೆ ಕೆಜಿಗೆ 50ರಿಂದ 60ರೂ.ಗೆ ಮಾರಾಟವಾಗುತ್ತಿದ್ದ ಏಲಕ್ಕಿ ಬಾಳೆಹಣ್ಣು ಈಗ 120 ರಿಂದ 150ರೂ.ಗೆ ಮಾರಾಟವಾಗುತ್ತಿದೆ. ಇದರಿಂದ ರಸ್ತೆಬದಿಯಲ್ಲಿ ತಳ್ಳುವ ಗಾಡಿಯಲ್ಲಿ ಬಾಳೆಹಣ್ಣು ಮಾರುವವರು, ಹಣ್ಣಿನ ಮಾರಾಟವಾಗದೆ ಸಂಕಷ್ಟದಲ್ಲಿದ್ದಾರೆ. ಬಹಳಷ್ಟು ಬಾರಿ ಅವರು ಕೆಜಿಗೆ 100ರೂ. ಮುಟ್ಟಿದಾಗ ಬಾಳೆಹಣ್ಣು, ಮಾರಾಟ ಮಾಡಲಾಗದೆ, ಗಿರಾಕಿಗಳಿಗೂ ಸಹ ಉತ್ತರ ನೀಡಲಾರದೆ ಪರಿತಪಿಸುವಂತಾಗಿದೆ. +ರೈತರಿಂದ ನೇರವಾಗಿ ಖರೀದಿ ಮಾಡಿ, ಮನೆಯಲ್ಲಿ ಹಣ್ಣು ಹಾಕಿ, ಅವುಗಳನ್ನು ಸಂಗ್ರಹಿಸಿಟ್ಟುಕೊಂಡು, ಕಾಲಕ್ಕೆ ಸರಿಯಾಗಿ ಜನಸಾಮಾನ್ಯರಿಗೆ, ನಾಗರಿಕರಿಗೆ ತಲುಪಿಸುವಂತಹ ಕೆಲಸ ಮಾಡುತ್ತಿರುವ ಬಾಳೆಹಣ್ಣಿನ ವ್ಯಾಪಾರಿಗಳು ಸಹ ಈ ತುಟ್ಟಿಯಾದ ಬಾಳೆಹಣ್ಣಿನ ಬಗ್ಗೆ ನೊಂದು, ಅಸಹಾಯಕರಾಗಿದ್ದಾರೆ. +ಬಾಳೆಹಣ್ಣನ್ನು ಬಹಳ ದಿವಸ ಇಟ್ಟು ಮಾರಲಾಗುವುದಿಲ್ಲ. ಹಣ್ಣಾದ ಕೂಡಲೇ ಬೆಲೆ ಹೆಚ್ಚಾಗಿರಲಿ, ಕಡಿಮೆಯಾಗಿರಲಿ ಮಾರಾಟ ಮಾಡಲೇಬೇಕೆಂಬುದು ರೈತರು ಮತ್ತು ವ್ಯಾಪಾರಿಗಳ ಮಾತಾಗಿದೆ.ಬಾಳೆಹಣ್ಣು ಬೆಳಗಾರರಿಗೆ ಸಂಕಷ್ಟಗಳಿವೆ. ಬಾಳೆ ಬೆಳೆಗೆ ಹೆಚ್ಚಿನ ನೀರು, ಔಷಧಿ ಗಳ ಸಿಂಪಡಣೆ, ಕೂಲಿಕಾರ್ಮಿಕರ ಅಭಾವ, ಸಾಗಾಣಿಕೆ ವೆಚ್ಚ, ಸಂಗ್ರಹಿಸಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು, +ಮಳೆ ನೀರಿನ ಅಭಾವ, ರೋಗ-ರುಜಿನಗಳು, ಮಾರುಕಟ್ಟೆಯಲ್ಲಿ ನಿಗದಿಯಾದ ಬೆಲೆ ಸಿಗದಿರುವುದು, ಮಧ್ಯವರ್ತಿಗಳಿಂದ ಶೋಷಣೆ, ಸಾಗಾಣಿಕೆಯಲ್ಲಿ ಬಹಳಷ್ಟು ಹಣ್ಣಿನ ನಾಶ, ಹೀಗೆ ಬಹಳಷ್ಟು ಸಮಸ್ಯೆಗಳಿಂದ ರೈತರು ಬಳಲುತ್ತಿದ್ದು, ಮಾರುಕಟ್ಟೆಗೆ ಸಮ ಪ್ರಮಾಣದಲ್ಲಿ ಬಾಳೆಹಣ್ಣನ್ನು ಒದಗಿಸಲು ಸಾಧ್ಯವಾಗದೆ ಬೆಲೆ ಏರಿಕೆಯಾಗಿದೆ ಎಂದು ಕೃಷಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. +ರೈತರಿಂದ ಅರ್ಧ ಬೆಲೆಗೆ ಖರೀದಿ ಮಾಡಿ ತಂದು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಾರೆ. ಇಲ್ಲಿ ವ್ಯಾಪಾರಿಗಳಿಗೂ ಲಾಭವಿಲ್ಲ, ರೈತರಿಗೂ ಲಾಭವಿರುವುದಿಲ್ಲ. ಮಧ್ಯವರ್ತಿಗಳಿಗೆ ಮಾತ್ರ ಹೆಚ್ಚಿನ ಲಾಭವಾಗುತ್ತಿದೆ. +ವರಮಹಾಲಕ್ಷ್ಮಿ, ಶ್ರೀ ಕೃಷ್ಣ ಜನಾಷ್ಠಮಿ, ಶ್ರಾವಣ ಶನಿವಾರ, ಗೌರಿ-ಗಣೇಶ ಸೇರಿದಂತೆ ಹಲವಾರು ಹಬ್ಬಗಳು ಬರಲಿದ್ದು, ಯಾಲಕ್ಕಿ ಬಾಳೆ ಬೆಲೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೆಜಿಗೆ 20 ರಿಂದ 30ರೂ.ಗೆ ಮಾರಾಟವಾಗುತ್ತಿದ್ದ ಪಚ್ಚಬಾಳೆಹಣ್ಣಿನ ಬೆಲೆಯೂ ಸಹ ಹೆಚ್ಚಾಗಲಿದೆ. \ No newline at end of file diff --git a/eesanje/url_46_49_4.txt b/eesanje/url_46_49_4.txt new file mode 100644 index 0000000000000000000000000000000000000000..2a948aeff56521ecf1666f85b542fa9db927a3b0 --- /dev/null +++ b/eesanje/url_46_49_4.txt @@ -0,0 +1,8 @@ +ಖಾಸಗಿ ಕಾಲೇಜುಗಳ ಪದವಿ ತರಗತಿಗಳಿಗೂ ಸರ್ಕಾರಿ ಕೋಟಾದಡಿ ಸೀಟು +ಬೆಂಗಳೂರು,ಆ.10-ಇಂಜಿನಿಯರಿಂಗ್‌ ಹಾಗೂ ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಮಾದರಿಯಲ್ಲಿಯೇ ಬಿಎ, ಬಿಎಸ್ಸಿ, ಬಿಕಾಂ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳಿಗೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೀಟು ಹಂಚಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. +ಈ ಕ್ರಮದಿಂದ ಖಾಸಗಿ ಪದವಿ ಕಾಲೇಜುಗಳಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ಇನ್ನು ಮುಂದೆ ಪ್ರತಿಷ್ಠಿತ ಖಾಸಗಿ ಪದವಿ ಕಾಲೇಜುಗಳಲ್ಲಿಯೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ದೊರೆಯಲಿದೆ. +ಇಂಜಿನಿಯರಿಂಗ್‌ ಹಾಗೂ ವೈದ್ಯಕೀಯ ಸೀಟು ಹಂಚಿಕೆ ಮಾದರಿಯಲ್ಲಿ ಖಾಸಗಿ ಪದವಿ ಕಾಲೇಜುಗಳಲ್ಲಿ ಶೇ.40 ರಷ್ಟು ಸರ್ಕಾರಿ ಕೋಟಾದಡಿ ಯಲ್ಲಿ ಪದವಿ ಸೀಟುಗಳನ್ನು ಪಡೆಯಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. +ಹಾಗಾಗಿ ಶೇ.40 ರಷ್ಟು ಸರ್ಕಾರಿ ಸೀಟುಗಳನ್ನು ವಿದ್ಯಾರ್ಥಿಗಳು ಈ ವರ್ಷದಿಂದಲೇ ಪಡೆಯಬಹುದಾಗಿದೆ. ಖಾಸಗಿ ಕಾಲೇಜುಗಳಲ್ಲಿ ಪದವಿ ಪಡೆಯಲು ಉದ್ದೇಶಿಸಿದ್ದ ವಿದ್ಯಾರ್ಥಿಗಳಿಗೆ ಇದು ಖುಷಿ ವಿಷಯವಾಗಿದೆ. ಈ ಸೀಟುಗಳನ್ನು ಕೆಇಎ ಅಥವಾ ಕಾಮೆಡ್‌-ಕೆ ಮಾದರಿಯಲ್ಲಿ ಹಂಚಿಕೆ ಮಾಡಲು ಚಿಂತನೆ ನಡೆಸಿದೆ. +ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿರಲಿಲ್ಲ. ಅವರು ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಬೇಕಾಗಿತ್ತು. ಉಳ್ಳವರು ಮಾತ್ರ ಪ್ರತಿಷ್ಠಿತ ಕಾಲೇಜುಗಳಲ್ಲಿ ಪದವಿಗೆ ಪ್ರವೇಶ ಪಡೆಯುತ್ತಿದ್ದರು. +ಕೇಳಿದಷ್ಟು ಡೊನೇಷನ್‌ ನೀಡಿ ಪ್ರವೇಶ ಪಡೆದು ಉನ್ನತ ಹುದ್ದೆಗಳಿಗೆ ಹೋಗುತ್ತಿದ್ದರು. ಈಗ ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ಸರ್ಕಾರಿ ಸೀಟುಗಳ ಮೂಲಕ ಪ್ರವೇಶ ಪಡೆಯಬಹುದಾಗಿದೆ. +ಈ ಹಿಂದೆ ಖಾಸಗಿ ಪದವಿ ಕಾಲೇಜುಗಳು ಶೇ.100 ಕ್ಕೆ 100 ರಷ್ಟು ಮ್ಯಾನೇಜ್‌ಮೆಂಟ್‌ ಕೋಟಾದಡಿ ದಾಖಲಾತಿ ಮಾಡಿಕೊಳ್ಳುತ್ತಿದ್ದರು. ಖಾಸಗಿ ಕೋಟಾದಡಿಯೇ ದಾಖಲಾತಿ ನಡೆಯುತ್ತಿತ್ತು. ಹೀಗಾಗಿ ಪ್ರತಿಷ್ಠಿತ ಕಾಲೇಜುಗಳಲ್ಲಿ ಓದಲು ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಶುಲ್ಕ ಕಟ್ಟಲಾಗದೇ ಪರದಾಡುತ್ತಿದ್ದರು. ಸರ್ಕಾರದ ಈ ಕ್ರಮದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. \ No newline at end of file diff --git a/eesanje/url_46_49_5.txt b/eesanje/url_46_49_5.txt new file mode 100644 index 0000000000000000000000000000000000000000..c9f3126bfd973f906a471ec09424529ad5be622e --- /dev/null +++ b/eesanje/url_46_49_5.txt @@ -0,0 +1,6 @@ +ಭ್ರಷ್ಟ ಸರ್ಕಾರ ಪತನಗೊಳ್ಳುವವರೆಗೂ ಹೋರಾಟ : ಅಬ್ಬರಿಸಿದ ಹೆಚ್ಡಿಕೆ +ಮೈಸೂರು, ಆ.10-ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಈ ಸರ್ಕಾರ ಸರಿ ಹೋಗಬೇಕು. ಇಲ್ಲದಿದ್ದರೆ ಪತನಗೊಳಿಸುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು. +ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದರು.ಖಾಕಿ ಚಡ್ಡಿ ಹಾಕಿದ್ದಾರೆಂದು ನನ್ನ ಬಗ್ಗೆ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಡ್ಡಿ ಎಲ್ಲವೂ ಕಪ್ಪು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.. +ರಾಜ್ಯದಲ್ಲಿ 136 ಸ್ಥಾನ ಗೆದ್ದಿದ್ದು, ಸಿದ್ದರಾಮಯ್ಯ ಅವರಿಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದೇ ರೀತಿ ಈ ಹಿಂದೆ ನನಗೂ ಶಿವಕುಮಾರ್‌ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಗೆದ್ದಿದ್ದಾರೆ ಎಂದು ಹೇಳುತ್ತೇನೆ ಎಂದರು. +ನನ್ನ ಕಂಡರೆ ಹೊಟ್ಟೆಉರಿ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲವೆಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು. +ಕಾನೂನು ಬಾಹಿರವಾಗಿ ಸೈಟ್‌ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯಅವರಿಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಮುಖ್ಯಮಂತ್ರಿ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ನಿವೇಶನ ಮರಳಿಸಲು ಸಿದ್ಧ ಎಂದಿದ್ದಾರಂತೆ. ನಿವೇಶನ ಹಿಂದಿರುಗಿಸಿದರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವೆ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_49_6.txt b/eesanje/url_46_49_6.txt new file mode 100644 index 0000000000000000000000000000000000000000..3811f1254873dc1f71cc05039aa981e6c4cc096c --- /dev/null +++ b/eesanje/url_46_49_6.txt @@ -0,0 +1,6 @@ +2 ಮಕ್ಕಳ ತಾಯಿಗೆ ಬಾಳು ಕೊಡುವುದಾಗಿ ನಂಬಿಸಿ ಕೈ ಕೊಟ್ಟ ಕ್ಯಾಬ್‌ ಡ್ರೈವರ್ +ಬೆಂಗಳೂರು,ಆ.10-ಎರಡು ಮಕ್ಕಳ ತಾಯಿಯ ರೀಲ್ಸ್ ನೋಡಿ ಮೆಚ್ಚಿಕೊಂಡು ಆಕೆಗೆ ಬಾಳು ಕೊಡುವುದಾಗಿ ಮರುಳು ಮಾಡಿದ ಕ್ಯಾಬ್‌ ಚಾಲಕ ಇದೀಗ ಕೈಕೊಟ್ಟು ಹೋಗಿದ್ದು, ಆ ಮಹಿಳೆ ನ್ಯಾಯಕ್ಕಾಗಿ ಪೊಲೀಸ್‌‍ ಠಾಣೆ ಮೆಟ್ಟಿಲೇರಿದ್ದಾಳೆ.ಹದಿಮೂರು ವರ್ಷದ ಹಿಂದೆ ಈ ಮಹಿಳೆ ಮದುವೆಯಾಗಿದ್ದು, 12 ಹಾಗೂ 10 ವರ್ಷದ ಇಬ್ಬರು ಮಕ್ಕಳಿದ್ದಾರೆ. ಗಂಡ ಕುಡಿದು ಬಂದು ಕಿರುಕುಳ ನೀಡುತ್ತಿದ್ದರಿಂದ ಬೇಸತ್ತು ಆಕೆ ಗಂಡನನ್ನು ತೊರೆದು ಇಬ್ಬರು ಮಕ್ಕಳನ್ನು ಕರೆದುಕೊಂಡು ತವರು ಮನೆ ಸೇರಿದ್ದಾಳೆ. +ನಂತರದ ದಿನಗಳಲ್ಲಿ ವಿದ್ಯಾಭ್ಯಾಸಕ್ಕಾಗಿ ಮಗನನ್ನು ಹಾಸ್ಟೆಲ್‌ಗೆ ಸೇರಿಸಿ ಮಗಳನ್ನು ತವರುಮನೆಯಲ್ಲಿಯೇ ಬಿಟ್ಟು ಒಂದು ವರ್ಷದ ಹಿಂದೆ ನಗರಕ್ಕೆ ಬಂದ ಮಹಿಳೆ ಜೀವನೋಪಾಯಕ್ಕಾಗಿ ಪೆಟ್ರೋಲ್‌ಬಂಕ್‌ನಲ್ಲಿ ಕೆಲಸ ಮಾಡಿಕೊಂಡು ಕೆಂಗೇರಿಯಲ್ಲಿ ಸ್ನೇಹಿತೆಯರ ಜೊತೆ ರೂಂ ಮಾಡಿಕೊಂಡು ವಾಸಿಸುತ್ತಿದ್ದರು. +ಈ ನಡುವೆ ಆ ಮಹಿಳೆ ರೀಲ್‌್ಸ ಮಾಡುತ್ತಿದ್ದರು. ಈಕೆಯ ರೀಲ್ಸ್ ನೋಡುತ್ತಿದ್ದ ಕ್ಯಾಬ್‌ ಚಾಲಕನೊಬ್ಬ ಅದನ್ನು ಲೈಕ್‌ ಮಾಡಿ, ಬ್ಯೂಟಿಫುಲ್‌ ಎಂದು ಕಮೆಂಟ್‌ ಮಾಡಿದ್ದಾನೆ. ತದನಂತರದಲ್ಲಿ ಇವರಿಬ್ಬರೂ ಪರಿಚಯವಾಗಿ ಮೊಬೈಲ್‌ ನಂಬರ್‌ ಪಡೆದು ಆಗಾಗ್ಗೆ ಚಾಟಿಂಗ್‌ ಮಾಡುತ್ತಾ ಭೇಟಿ ಮಾಡಿ ಪರಸ್ಪರ ಮಾತುಕತೆ ನಡೆಸಿದ್ದಾರೆ. +ಆ ಸಂದರ್ಭದಲ್ಲಿ ಆ ಮಹಿಳೆ ತನಗೆ ಇಬ್ಬರು ಮಕ್ಕಳಿದ್ದಾರೆ ಎಂದು ತನ್ನ ಕುಟುಂಬದ ಬಗ್ಗೆ ಹೇಳಿಕೊಂಡಿದ್ದಾಳೆ. ಕ್ಯಾಬ್‌ ಚಾಲಕ ನಿನಗೆ ಬಾಳು ಕೊಡುವುದಾಗಿ ಹೇಳಿದ್ದಾನೆ. ರೂಂನ ಸ್ನೇಹಿತೆಯರು ಬೇರೆ ಮನೆ ಮಾಡಿಕೊಂಡು ಹೋಗಿದ್ದಾರೆ. ಕ್ಯಾಬ್‌ ಚಾಲಕ ನಂತರದ ದಿನಗಳಲ್ಲಿ ಆಕೆಯ ಜೊತೆ ಈ ಮನೆಯಲ್ಲಿ ನೆಲೆಸಿದ್ದು, ಇದೀಗ ಆತ ಆಕೆಯನ್ನು ಬಿಟ್ಟು ಹೋಗಿದ್ದಾನೆ. +ಇದೀಗ ಕ್ಯಾಬ್ ಚಾಲಕನ ವಿರುದ್ಧ ಆ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆಕೆಯ ದೂರನ್ನು ಆಲಿಸಿ ಕ್ಯಾಬ್ ಚಾಲಕನನ್ನು ಕರೆಸಿ ವಿಚಾರಿಸಿದಾಗ ಆಕೆ ಗಂಡನಿಂದ ವಿಚ್ಛೇದನ ಪಡೆದರೆ ನಾನು ಆಕೆಗೆ ಬಾಳು ಕೊಡುವುದಾಗಿ ಹೇಳಿದ್ದಾನೆ.ಈಗ ಆ ಮಹಿಳೆ ಗಂಡನಿಂದ ವಿಚ್ಛೇದನಕ್ಕಾಗಿ ದಾಖಲೆ ತರಲು ಹೋಗಿದ್ದಾರೆ. \ No newline at end of file diff --git a/eesanje/url_46_49_7.txt b/eesanje/url_46_49_7.txt new file mode 100644 index 0000000000000000000000000000000000000000..a81f97d8259a6dbbd1870e15d1e20c1b175e6881 --- /dev/null +++ b/eesanje/url_46_49_7.txt @@ -0,0 +1,5 @@ +ಹಿರಿಯ ಐಪಿಎಸ್‌‍ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣ ರದ್ದು +ಬೆಂಗಳೂರು,ಆ.10-ಹಿರಿಯ ಐಪಿಎಸ್‌‍ ಅಧಿಕಾರಿ ಅಲೋಕ್‌ ಕುಮಾರ್‌ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಮಮತಾ ಸಿಂಗ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಮೇರೆಗೆ ತನಿಖೆಗೆ ಅನುಮತಿ ನೀಡಿದ್ದ ವಿಚಾರಣಾ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹಾಗೂ ಅದನ್ನು ರದ್ದುಪಡಿಸುವಂತೆ ಕೋರಿ ಅಲೋಕ್ಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. +ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಗರದ 39 ನೇ ಎಸಿಎಂಎಂ ಕೋರ್ಟ್‌ ಅರ್ಜಿದಾರರ ವಿರುದ್ಧ ನಡೆಸುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ. +ವಿಚಾರಣಾ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಇಲ್ಲದೇ ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ದಂಡ ಪ್ರಕ್ರಿಯೆ ಸಂಹಿತೆಯ ಸೆಕ್ಷನ್‌ 195 ರ ಅಡಿ ಅವಕಾಶವಿಲ್ಲ. +ಇದರ ಹೊರತಾಗಿ ವಿಚಾರಣಾ ನ್ಯಾಯಾಲಯವು ಸಂಜ್ಞೆಯ ಅಪರಾಧವೆಂದು ಪರಿಗಣಿಸಿ ಪ್ರಾಸಿಕ್ಯೂಷನ್‌ ನಡೆಸಲು ಅನುಮತಿಸಿರುವುದು ಸೂಕ್ತವಲ್ಲ. ಇನ್ನು ದೂರುದಾರರಾದ ಮಮತಾ ಸಿಂಗ್‌ ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.ವಾದ ಪರಿಗಣಿಸಿದ ಹೈಕೋರ್ಟ್‌ ಅಲೋಕ್‌ ಕುಮಾರ್‌ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ. \ No newline at end of file diff --git a/eesanje/url_46_49_8.txt b/eesanje/url_46_49_8.txt new file mode 100644 index 0000000000000000000000000000000000000000..a275e6ff6dee4d9a2c5ebb16aeaa923e1e1b1a0c --- /dev/null +++ b/eesanje/url_46_49_8.txt @@ -0,0 +1,5 @@ +ಸ್ವಾತಂತ್ರ್ಯ ದಿನಾಚರಣೆಗೆ ಗದಗ್‌ನ ಇಬ್ಬರು ವಿದ್ಯಾರ್ಥಿಗಳಿಗೆ ಮೋದಿ ಆಹ್ವಾನ +ಗದಗ,ಆ.10-ಗದಗ್‌ನ ಇಬ್ಬರು ಎನ್‌ಎಸ್‌‍ಎಸ್‌‍ ವಿದ್ಯಾರ್ಥಿಗಳ ಕಾರ್ಯವೈಖರಿ ಮೆಚ್ಚಿ ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನ ನೀಡಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಎನ್‌ಎಸ್‌‍ಎಸ್‌‍ ಘಟಕದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರು ವಿದ್ಯಾರ್ಥಿಗಳ ಕಾರ್ಯವೈಖರಿಯನ್ನು ಮೆಚ್ಚಿದ ಪ್ರಧಾನಿ ನರೇಂದ್ರಮೋದಿಯವರು ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. +ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಯದಲ್ಲಿ ಮಹಾಗನಿ ಹಾಗೂ ತಬೀಗ್‌ರೋಸಾ ಜಾತಿಯ ಗಿಡಗಳನ್ನು ವಿದ್ಯಾರ್ಥಿಗಳು ನೆಟ್ಟು ಪಾಲನೆ, ಪೋಷಣೆ ಮಾಡಿದ್ದಾರೆ. ಈ ಪೈಕಿ ಗಿಡಗಳ ಪೋಷಣೆಯಲ್ಲಿ ತೊಡಗಿದ್ದ ಪಿಯುಸಿ ಓದುತ್ತಿರುವ ಸತೀಶ್‌ ಕನ್ನೇರ ಹಾಗೂ ಆದಿತ್ಯ ಕೊರವರ್‌ ಎನ್ನುವ ವದ್ಯಿರ್ಥಿಗಳಿಗೆ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ. +ಕೇಂದ್ರ ಸರ್ಕಾರದ ಮೇರಿ ಮುಟ್ಟಿ ಮೇರಾ ದೇಶ್‌ (ನನ್ನ ಮಣ್ಣು ನನ್ನ ದೇಶ) ಎನ್ನುವ ಕಾರ್ಯಕ್ರಮವನ್ನು ಕಾಲೇಜಿನ ಎನ್‌ಎಸ್‌‍ಎಸ್‌‍ ಘಟಕ ಯಶಸ್ವಿಯಾಗಿ ನಡೆಸಿದೆ. ಒಂದು ವರ್ಷದ ಪರ್ಯಂತ ಅಮೃತವಾಟಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದೆ. ಎನ್‌ಎಸ್‌‍ಎಸ್‌‍ ಘಟಕದ 100 ವಿದ್ಯಾರ್ಥಿಗಳು ಕಾಲೇಜು ಮುಂದೆ 50 ಗಿಡಗಳನ್ನು ನೆಟ್ಟು ಮಗುವಿನಂತೆ ಪಾಲನೆ, ಪೋಷಣೆ ಮಾಡಿದ್ದಾರೆ. ಈ ಗಿಡಗಳನ್ನು ಪೋಷಣೆ ಮಾಡಿದ್ದ ಕುರಿತು ಎಲ್ಲಾ ಮಾಹಿತಿಯನ್ನು ಕೇಂದ್ರ ಸರ್ಕಾರ ಹಾಗೂ ಎನ್‌ಎಸ್‌‍ಎಸ್‌‍ ಘಟಕದ ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡಲಾಗುತ್ತಿತ್ತು. +ಈ ನೂರು ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ಗಿಡಗಳನ್ನು ಅಚ್ಚುಕಟ್ಟಾಗಿ ಬೆಳೆಸಿದ್ದನ್ನು ಗಮನಿಸಿ ಅವರಿಗೆ ಪ್ರಧಾನಿ ಕಚೇರಿಯಿಂದ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ.ಇದು ನಮ ಕಾಲೇಜಿನ ಹೆಮೆ ಎಂದು ಕಾಲೇಜು ಉಪನ್ಯಾಸಕರು ಹೇಳಿದ್ದಾರೆ. \ No newline at end of file diff --git a/eesanje/url_46_49_9.txt b/eesanje/url_46_49_9.txt new file mode 100644 index 0000000000000000000000000000000000000000..52c9e059cc791a50a786d4e119ae4b61e1706329 --- /dev/null +++ b/eesanje/url_46_49_9.txt @@ -0,0 +1,5 @@ +ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತೆ : ವಿಜಯೇಂದ್ರ +ಮೈಸೂರು, ಆ.10-ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆಯೋ ಇಲ್ಲವೋ ಮುಂದಿನ ದಿನಗಳಲ್ಲಿ ತಿಳಿಯುತ್ತದೆ. +ಅವರು ರಾಜೀನಾಮೆ ನೀಡಲೇಬೇಕಾದ ಪರಿಸ್ಥಿತಿ ಬರುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿಂದು ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಾದಯಾತ್ರೆಯ ಪರಿಣಾಮದಿಂದ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲೇಬೇಕಾಗುತ್ತದೆ ಎಂದರು. +ಇಂದು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸಮಾವೇಶವನ್ನು ಹಮಿಕೊಳ್ಳಲಾಗಿದೆ. ಅದಕ್ಕಾಗಿ ನಾನು ಆಂಜನೇಯ ಸ್ವಾಮಿ ಪೂಜೆ ಸಲ್ಲಿಸಿದ್ದು ಪಾದಯಾತ್ರೆ ಮೂಲಕ ಮಹಾರಾಜ ಕಾಲೇಜಿಗೆ ತೆರಳಿ ಅಲ್ಲಿ ಸಮಾವೇಶ ನಡೆಸುತ್ತಿದ್ದೇ ವೆ ಎಂದು ಹೇಳಿದರು. +ಕಾಂಗ್ರೆಸ್‌‍ ಪಕ್ಷದಿಂದ ರಾಜ್ಯದ ಜನತೆಗೆ ಯಾವುದೇ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಭ್ರಷ್ಟ ಸರ್ಕಾರವನ್ನು ಕಿತ್ತೋಗೆಯಲು ಈ ಪಾದಯಾತ್ರೆ ಹಮಿಕೊಂಡಿದ್ದೆವು, ಅದು ಯಶಸ್ವಿಯಾಗಿದೆ. ಸಮಾವೇಶ ನಡೆಸುವ ಮೂಲಕ ನಾಡಿನ ಜನತೆಗೆ ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರ ಹಾಗೂ ಅವರು ನಡೆಸುತ್ತಿರುವ ದುರಾಡಳಿತ ಬಗ್ಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ನಾಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_4_1.txt b/eesanje/url_46_4_1.txt new file mode 100644 index 0000000000000000000000000000000000000000..af4803c1d4961ffeb13cba58abceec5225abebae --- /dev/null +++ b/eesanje/url_46_4_1.txt @@ -0,0 +1,11 @@ +ನಾಳೆ ಪಿಎಸ್‌‍ಐ ನೇಮಕಾತಿ ಪರೀಕ್ಷೆ , ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ + +ಬೆಂಗಳೂರು,ಅ.2– ಬಹುನಿರೀಕ್ಷಿತ ಪೊಲೀಸ್‌‍ ಸಬ್‌ಇನ್ಸ್ ಪೆಕ್ಟರ್‌ (402) ಹುದ್ದೆಗಳ (ಪಿಎಸ್‌‍ಐ ಪರೀಕ್ಷೆ) ನೇಮಕಾತಿಗೆ ನಾಳೆ ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿದ್ಧತೆಗಳನ್ನು ಮಾಡಿಕೊಂಡಿದೆ. +ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. +ಪರೀಕ್ಷಾ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಇರಬೇಕು. ಹೀಗಾಗಿ ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ. +ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್‌ ಕಾಸ್ಟಿಂಗ್‌ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ಕೇಂದ್ರದಲ್ಲೂ ಜಾಮರ್‌ ಅಳವಡಿಸಲು ಕ್ರಮ ತೆಗೆದುಕೊಂಡಿದ್ದು, ಆಸುಪಾಸಿನಲ್ಲಿ ಬ್ಲೂಟೂತ್‌ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ವಸ್ತುಗಳು ಕಾರ್ಯನಿರ್ವಹಿಸದಂತೆ ಮಾಡಲಾಗಿದೆ. +ಕಮಾಂಡ್‌ ಸೆಂಟರ್‌: ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್‌ ಸೆಂಟರ್‌ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯ ನಿರ್ವಹಿಸಲಿದೆ ಎಂದು ಅವರು ವಿವರಿಸಿದ್ದಾರೆ. +ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್‌ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್‌ ಕಾಸ್ಟಿಂಗ್‌ ಮಾಡಲಾಗುತ್ತದೆ. ಅಲ್ಲದೆ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್‌ ಲೈನ್‌ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. +ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದರು. ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ. +ಇಎನ್‌ಟಿ ವೈದ್ಯರ ನಿಯೋಜನೆ:ಹಿಂದೆಲ್ಲ ಪರೀಕ್ಷೆ ನಡೆದಾಗ ಕಿವಿಯೊಳಗೆ ಅತಿ ಸೂಕ್ಷ್ಮ ಎಲೆಕ್ಟ್ರಾನಿಕ್‌ ವಸ್ತುಗಳನ್ನು ಇಟ್ಟುಕೊಂಡು ಬಂದು ಪರೀಕ್ಷೆಯಲ್ಲಿ ಅಕ್ರಮ ಎಸಗಲು ಪ್ರಯತ್ನಿಸಿದ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಒಬ್ಬ ಇಎನ್‌ಟಿ ವೈದ್ಯರನ್ನು ನಿಯೋಜಿಸಿದ್ದು, ಅವರು ಕೂಡ ನಿಗಾ ಇಡಲಿದ್ದಾರೆ. +ವಿಡಿಯೋ ಕಾನ್ಫರೆನ್ಸ್ : ಪರೀಕ್ಷೆ ನಡೆಯುವ ಆರೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಬಿಗಿ ಕ್ರಮಗಳ ಬಗ್ಗೆ ವಿವರಿಸಲಾಗಿದೆ. \ No newline at end of file diff --git a/eesanje/url_46_4_11.txt b/eesanje/url_46_4_11.txt new file mode 100644 index 0000000000000000000000000000000000000000..90c517204d28db82bba678ac12488a474141324a --- /dev/null +++ b/eesanje/url_46_4_11.txt @@ -0,0 +1,13 @@ +ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದ ಡಿಕೆಶಿ – ಪರಂ ಮಾತುಕತೆ + +ಬೆಂಗಳೂರು,ಸೆ.30-ಗೃಹಸಚಿವ ಡಾ.ಜಿ.ಪರಮೇಶ್ವರ್‌ರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.ರಾಜಕೀಯ ಸೂಕ್ಷ್ಮ ಸನ್ನಿವೇಶದಲ್ಲಿ ಈ ಇಬ್ಬರೂ ನಾಯಕರ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. +ಖುದ್ದು ಡಿ.ಕೆ.ಶಿವಕುಮಾರ್‌ರವರೇ ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ರವರು, ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದೆ. ತುಮಕೂರು, ಬೆಂಗಳೂರು, ಮಂಡ್ಯಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಶುರುವಾಗಿದೆ. +ಎತ್ತಿನಹೊಳೆಯಿಂದ ನೀರನ್ನು ಹೊರಗೆ ತೆಗೆಯಲಾಗಿದೆ. ಬಾಕಿ ಕಾಮಗಾರಿ ಮುಂದುವರೆಸಲು ಅರಣ್ಯ ಭೂಮಿ ಅಡ್ಡ ಬಂದಿದೆ. ಅದಕ್ಕೆ ಪರ್ಯಾಯ ಜಾಗ ನೀಡಲು ತುಮಕೂರು ಮತ್ತು ಹಾಸನದಲ್ಲಿ ಜಿಲ್ಲಾಡಳಿತಗಳು ಸ್ಥಳ ಗುರುತಿಸಿವೆ. ಮುಂದಿನ ವರ್ಷದೊಳಗೆ ತುಮಕೂರಿಗೆ ನೀರು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ ಎಂದರು. +ಹಿಂದಿನ ಬಿಜೆಪಿ ಸರ್ಕಾರ ಬೈರಗೊಂಡ್ಲು ಜಲಾಶಯದ ಯೋಜನೆಯನ್ನು ಬದಲಾವಣೆ ಮಾಡಿದೆ. ದೊಡ್ಡಬಳ್ಳಾಪುರ ಮತ್ತು ತುಮಕೂರು ಜಿಲ್ಲೆಯ ಕೊರಟಗೆರೆ ಗಡಿಭಾಗವಾಗಿರುವುದರಿಂದ ಪರಿಹಾರ ವಿಚಾರವಾಗಿ ತಗಾದೆಗಳಿವೆ.ಪರಮೇಶ್ವರ್‌ ಮತ್ತು ತಾವು ಎತ್ತಿನಹೊಳೆಯಿಂದ ಯೋಜನೆಯುದ್ದಕ್ಕೂ ದಸರಾ ಮುಗಿದ ಬಳಿಕ ವೈಮಾನಿಕ ಸಮೀಕ್ಷೆ ನಡೆಸುತ್ತೇವೆ. ನಾನು ಬೈರಗೊಂಡ್ಲು ಜಲಾಶಯದ ಸ್ಥಳವನ್ನು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು. +ಈ ನಡುವೆ ಸಂಪರ್ಕ ಕಾಲುವೆಗಳ ಬಗ್ಗೆ ಸಮಿತಿ ರಚಿಸಲಾಗಿದೆ. ತಮ ಸರ್ಕಾರ ಕುಡಿಯುವ ನೀರು ಪೂರೈಸುವ ಭರವಸೆಯನ್ನು ಈಡೇರಿಸಲು ಬದ್ಧತೆ ತೋರಿಸುತ್ತೇವೆ ಎಂದರು. +ಈ ವೇಳೆ ರಾಜಕೀಯ ಕುರಿತು ಚರ್ಚೆಯಾಗಿದೆಯೇ ಎಂಬ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪತ್ರಕರ್ತರಿಗೆ ರಾಜಕೀಯ ಬಿಟ್ಟು ಬೇರೆ ಗೊತ್ತಿಲ್ಲವೇ?, ಜನ ನಮಗೆ ಅಧಿಕಾರ ನೀಡಿದ್ದಾರೆ. ಕೊಟ್ಟ ಭರವಸೆಗಳನ್ನು ಈಡೇರಿಸುವತ್ತ ಮತ್ತು ಪ್ರಣಾಳಿಕೆಯಲ್ಲಿನ ಆಶ್ವಾಸನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಆದ್ಯತೆ ನೀಡುತ್ತೇವೆ. +ಮುಂದಿನ ದಿನಗಳಲ್ಲಿ ಜನರಿಗೆ ನಾವು ಏನು ಮಾಡಿದ್ದೇವೆ ಎಂದು ಹೇಳಿಕೊಳ್ಳುವ ಅಗತ್ಯವಿದೆ. ಆದ್ದರಿಂದ ಅಭಿವೃದ್ಧಿ ವಿಚಾರವನ್ನು ಆಯ್ಕೆ ಮಾಡಿದ್ದೇವೆ. ರಾಜಕೀಯ ಕುರಿತು ಪ್ರತಿದಿನವೂ ಮಾತನಾಡುತ್ತಲೇ ಇರುತ್ತೇವೆ ಎಂದು ಹೇಳಿದರು.ಹಗಲು-ರಾತ್ರಿ ಸಮಯ ಓಡುತ್ತಿದೆ. ಅಭಿವೃದ್ಧಿಯ ಕುರಿತು ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದರು. +ನಾವಿಬ್ಬರೂ ಸಭೆ ನಡೆಸಿದ್ದು, ಅಧಿಕಾರಿಗಳಿಲ್ಲದೇ ಇರುವುದು ದೊಡ್ಡ ವಿಚಾರವಲ್ಲ. ಕಾಂಗ್ರೆಸ್‌‍ನಲ್ಲಿ 136 ಜನ ಶಾಸಕರು ಒಟ್ಟಾಗಿದ್ದೇವೆ. ಅಧಿಕಾರಕ್ಕಾಗಿ ಯಾವುದೇ ಸಂಧಾನವಿಲ್ಲ ಎಂದು ಹೇಳಿದರು.ನಾಯಕತ್ವ ಸದೃಢವಾಗಿದ್ದ ಮೇಲೆ ಅಧಿಕಾರಿಗಳ ಅಗತ್ಯವಿಲ್ಲ, ನಾವೇ ಚರ್ಚೆ ಮಾಡಬಹುದು. ಹೀಗಾಗಿ ಈ ಸಭೆಗೆ ಯಾವ ಅಧಿಕಾರಿಗಳನ್ನು ಕರೆದಿಲ್ಲ. ನಾವೇ ಆಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. +ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಉತ್ತಮ ಖಾತೆಯನ್ನು ನೀಡಿದ್ದಾರೆ. ಅನಗತ್ಯವಾದ ಚರ್ಚೆಗಳನ್ನು ಬಿಟ್ಟು ಲಕ್ಷ ಜನರಿಗೆ ಉದ್ಯೋಗ ನೀಡುವ ಯೋಜನೆಗಳನ್ನು ತರಲು ಪ್ರಯತ್ನ ಮಾಡಲಿ. ಹಾಸನ, ಮಂಡ್ಯ, ಬೆಂಗಳೂರು, ಬೀದರ್‌, ಗುಲ್ಬರ್ಗದಂತಹ ಜಿಲ್ಲೆಗಳಲ್ಲಿ ನೆನಪಿನಲ್ಲಿ ಉಳಿಯುವಂತಹ ಕೆಲಸಗಳನ್ನು ಮಾಡಲಿ. ನಮ ಸರ್ಕಾರ ಕೂಡ ಸಹಕಾರ ನೀಡಲಿದೆ. ರಾಜಕಾರಣ ಇದ್ದಿದ್ದೇ ಎಂದು ಸಲಹೆ ನೀಡಿದರು. +ಎಡಿಜಿಪಿ ಚಂದ್ರಶೇಖರ್‌ ಅವರು ಎಚ್‌.ಡಿ.ಕುಮಾರಸ್ವಾಮಿಯವರ ಕುರಿತು ಬರೆದಿರುವ ಪತ್ರ ಕೆಪಿಸಿಸಿ ಕಚೇರಿಯಲ್ಲಿ ತಯಾರಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಅದು ಅವರಿಬ್ಬರಿಗೂ ಸೇರಿದ ವಿಚಾರ. ತನಿಖೆ ಮಾಡುವವರು, ವರದಿ ನೀಡುವವರು ಚಂದ್ರಶೇಖರ್‌. ನಮಗೂ ಅದಕ್ಕೂ ಸಂಬಂಧವಿಲ್ಲ ಎಂದರು. +ರಾಜ್ಯಸರ್ಕಾರವನ್ನು ಪತನಗೊಳಿಸಲು 1,200 ಕೋಟಿ ರೂ. ಸಿದ್ಧವಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಇದನ್ನು ಕಾಂಗ್ರೆಸ್‌‍ ಗಂಭೀರವಾಗಿ ಪರಿಗಣಿಸಿದೆ. ಹೈಕಮಾಂಡ್‌ಗೂ ಈ ವಿಚಾರವನ್ನು ತಿಳಿಸಲಾಗಿದ್ದು, ಪಕ್ಷದ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿದ್ದೇವೆ. ಕಾನೂನು ಪ್ರಕಾರ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ಮಾಡಬೇಕಿದೆ ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_4_12.txt b/eesanje/url_46_4_12.txt new file mode 100644 index 0000000000000000000000000000000000000000..9dc7706213480164b928a3fe60dab89160d843f5 --- /dev/null +++ b/eesanje/url_46_4_12.txt @@ -0,0 +1,12 @@ +ಕಾನೂನು ಸಮರ ಕೈಬಿಟ್ಟು ತನಿಖೆ ಎದುರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ + +ಬೆಂಗಳೂರು,ಸೆ.30– ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯಸಮತವಾಗಿ ಎದುರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಾತಕವಾಗಿ ಹೋರಾಟವನ್ನು ಕೈಬಿಟ್ಟಿದ್ದಾರೆ.ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಮುಖ್ಯ ಮಂತ್ರಿ ವಿರುದ್ಧ ವಿಚಾರಣೆ ಹಾಗೂ ಅಭಿಯೋಜನೆಗೆ ಪೂರ್ವಾ ನುಮತಿ ನೀಡಿದ್ದರು. +ಇದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಿದ್ದರು. ನ್ಯಾ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ರಾಜ್ಯಪಾಲರ ಪೂರ್ವಾನುಮತಿಯನ್ನು ಎತ್ತಿಹಿಡಿದಿತ್ತು. ಆದರೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 218 ರಡಿ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶವನ್ನು ಅಮಾನ್ಯಗೊಳಿಸಿ, ಭ್ರಷ್ಟಾಚಾರ ತಡೆ ಕಾಯಿದೆ 17 ಎ ಅಡಿ ತನಿಖೆಗೆ ಅವಕಾಶ ನೀಡಿತ್ತು. +ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಿದ ಅನುಸಾರ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. +ಹೈಕೋರ್ಟ್‌ ಆದೇಶದ ವೇಳೆ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಮೇಲನವಿ ಸಲ್ಲಿಸುವುದಾಗಿ ಹೇಳಲಾಗಿತ್ತು. ಆದರೆ ಕಾನೂನು ಹೋರಾಟವನ್ನು ಕೈಬಿಟ್ಟಿರುವ ಸಿದ್ದರಾಮಯ್ಯನವರು ಲೋಕಾಯುಕ್ತ ತನಿಖೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಯಾವುದೇ ಮೇಲನವಿಗಳನ್ನು ಸಲ್ಲಿಸುವುದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. +ಹೈಕೋರ್ಟ್‌ನ ತೀರ್ಪಿನಲ್ಲಿ ತಮಗೆ ಮೇಲುಗೈ ಆಗಿದೆ ಎಂದು ಪರಿಭಾವಿಸಿರುವ ಸಿದ್ದರಾಮಯ್ಯ ಭ್ರಷ್ಟಾಚಾರ ನಿಗ್ರಹ ತಡೆ ಕಾಯಿದೆಯಡಿ ತನಿಖೆಗೆ ಆದೇಶಿಸಿರುವುದು ಸಾಮಾನ್ಯ ಬೆಳವಣಿಗೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ತನಿಖೆಗೆ ನೀಡಿದ್ದ ಅನುಮತಿಯನ್ನು ಅಮಾನ್ಯಗೊಳಿಸುವುದು ನ್ಯಾಯಾಂಗದಿಂದ ದೊರೆತ ಗೆಲುವು ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎನ್ನಲಾಗಿದೆ. +ಈ ಹಿನ್ನೆಲೆಯಲ್ಲಿ ಮೇಲನವಿಗಳನ್ನು ಸಲ್ಲಿಸಿ ಕಾಲಾಹರಣ ಮಾಡುವ ಬದಲಾಗಿ ತನಿಖೆಯನ್ನು ಎದುರಿಸಿ ನಿರ್ದೋಷಿಯಾಗಿ ಹೊರಬರುವುದು ಉತ್ತಮ ಎಂಬ ನಿಲುವನ್ನು ಸಿದ್ದರಾಮಯ್ಯ ಹೊಂದಿರುವುದಾಗಿ ತಿಳಿದುಬಂದಿದೆ. +ಮುಡಾ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ, ಜಮೀನಿನ ಮೂಲ ಮಾಲೀಕರಿಲ್ಲದೆ ನ್ಯಾಯೋಚಿತವಾಗಿ ಮಲ್ಲಿಕಾರ್ಜುನ ಸ್ವಾಮಿ ಭೂಮಿ ಖರೀದಿ ಮಾಡಿದ್ದಾರೆ. ಕಾನೂನು ಮೂಲಕವೇ ತಮ ಪತ್ನಿಗೆ ದಾನಪತ್ರ ನೀಡಲಾಗಿದೆ. ಜಮೀನನ್ನು ಮುಡಾ ನಿಯಮಬಾಹಿರವಾಗಿ ನಿವೇಶನ ಮಾಡಿ ಹಂಚಿಕೆ ಮಾಡಿದೆ. +ಭೂಮಿ ಕಳೆದುಕೊಂಡಿದ್ದಕ್ಕೆ ಪರಿಹಾರವಾಗಿ ನಿವೇಶನ ಪಡೆಯಲಾಗಿದೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ. ಜಮೀನಿನ ಪರಭಾರೆ ನಿಯಮಬಾಹಿರವಾಗಿದ್ದರೆ ಅದರ ಬಗ್ಗೆ ತನಿಖೆ ನಡೆಯಲಿ, ತಪ್ಪುಗಳಾಗಿದ್ದರೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಗಳಾಗಲಿ ಎಂದು ಕಾನೂನು ಸಲಹೆಗಾರರ ತಂಡಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. +ಲೋಕಾಯುಕ್ತರು ದಾಖಲಿಸಿರುವ ಎಫ್‌ಐಆರ್‌ಗೆ ತಡೆ ಪಡೆಯಲು ಸಿದ್ದರಾಮಯ್ಯ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಂತೆ ನಿಗದಿತ ಕಾಲಾವಧಿಯಲ್ಲಿ ತನಿಖೆ ನಡೆದು ವರದಿ ನೀಡುವ ಸಾಧ್ಯತೆಗಳಿವೆ. +ಸಿದ್ದರಾಮಯ್ಯ ಕಾನೂನು ಸಂಘರ್ಷವನ್ನು ಮುಂದುವರೆಸಲಿದ್ದಾರೆ. ತನಿಖೆಗೆ ತಡೆ ತರಬಹುದು. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮೇಲನವಿ ಸಲ್ಲಿಸಬಹುದು ಎಂಬೆಲ್ಲಾ ವ್ಯಾಖ್ಯಾನ ಮಾಡಿದವರು ಬೆಸ್ತು ಬೀಳುವಂತಾಗಿದೆ.ಸಿದ್ದರಾಮಯ್ಯ ತನಿಖೆಗೆ ಮುಖಾಮುಖಿಯಾಗುವ ಮೂಲಕ ರಾಜಕೀಯ ಎದುರಾಳಿಗಳಿಗೆ ಮತ್ತೊಂದು ಪಟ್ಟು ಹಾಕಿದ್ದಾರೆ. \ No newline at end of file diff --git a/eesanje/url_46_4_2.txt b/eesanje/url_46_4_2.txt new file mode 100644 index 0000000000000000000000000000000000000000..43c32a72b0a6e1a04fffca2e20cd44964e57806c --- /dev/null +++ b/eesanje/url_46_4_2.txt @@ -0,0 +1,7 @@ +ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ + +ಬೆಂಗಳೂರು,ಅ.2-ನಾಳೆಯಿಂದ ರಾಜ್ಯದ ಎಲ್ಲಾ ಶಾಲಾಗಳಿಗೆ ದಸರಾ ರಜೆ ಘೋಷಿಸಲಾಗಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ ಅಕ್ಟೋಬರ್‌ 3ರಿಂದ ಅಕ್ಟೋಬರ್‌ 20ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದ್ದು, ಒಟ್ಟು 17 ದಿನ ವಿದ್ಯಾರ್ಥಿಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. +2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್‌ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬರ್‌ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್‌ 10 ತನಕ ಶಾಲೆ ನಡೆಯಲಿದೆ. +2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.ಇನ್ನು, ಕ್ರಿಸ್‌‍ ಮಸ್‌‍ ರಜೆ ಬೇಡಿಕೆಯನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ ವ್ಯಾಪ್ತಿಯ ಜಿಲ್ಲಾ ಉಪ ನಿರ್ದೇಶಕರು ಅವರಿಗೆ ಸಲ್ಲಿಸಿದಲ್ಲಿ ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲು ಸೂಚನೆ ನೀಡಲಾಗಿದೆ. +ಡಿಸೆಂಬರ್‌ ತಿಂಗಳಿನಲ್ಲಿ ನೀಡುವ ಕ್ರಿಸ್‌‍ಮಸ್‌‍ ರಜಾ ಅವಧಿಯನ್ನು ಅಕ್ಟೋಬರ್‌ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.ಉಳಿದಂತೆ ನಿಗದಿತ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣ ದಿನ ಶಾಲೆಗಳನ್ನ ನಡೆಸಿ ಶಾಲಾ ಕರ್ತವ್ಯದ ದಿನಗಳನ್ನ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. +ದಸರಾ ರಜೆ ಹಿನ್ನೆಲೆಯಲ್ಲಿ ಪಟ್ಟಣ ಪ್ರದೇಶದಲ್ಲಿ ಇರುವವರು ರಜೆ ಅವಧಿಯನ್ನು ಕಳೆಯಲು ಗ್ರಾಮಗಳಿಗೆ ತೆರಳಿ ಕಳೆಯುವ ಸಾಮಾನ್ಯ ಸಂಗತಿಯಾಗಿದೆ. ಆದರೆ ರಾಜ್ಯದಲ್ಲಿ ದಸರಾ ರಜೆಗಳ ಬಳಿಕ ಮತ್ತೆ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್‌ನಲ್ಲಿ ಕ್ರಿಸ್‌‍ಮಸ್‌‍ ರಜೆ ಇರಲಿದ್ದು, ಆ ಬಳಿಕ ಜನವರಿಯಲ್ಲಿ ಸಂಕ್ರಾಂತಿ ರಜೆಗಳಿ ಸಿಗಲಿದೆ. ಇಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಲಾಗಿದ್ದು, ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್‌ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ. \ No newline at end of file diff --git a/eesanje/url_46_4_3.txt b/eesanje/url_46_4_3.txt new file mode 100644 index 0000000000000000000000000000000000000000..13295891178a3fdc08c11e7013062c783a494cad --- /dev/null +++ b/eesanje/url_46_4_3.txt @@ -0,0 +1,7 @@ +ಸಿಎಂ ಸಿದ್ದರಾಮಯ್ಯನವರ ಹಳೆಯ ವಿಡಿಯೋ ವೈರಲ್ : ಬಿಜೆಪಿ ಟಾಂಗ್ + +ಬೆಂಗಳೂರು,ಅ.1-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಯಡಿಯೂರಪ್ಪ ಪ್ರಕರಣದಲ್ಲಿ ಆಡಿದ್ದ ಮಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ಲಾಗುತ್ತಿದ್ದು, ನಿಮ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.2011ರಲ್ಲಿ ಪ್ರತಿಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ವಿರುದ್ಧ ಭೂ ಹಗರಣದ ಆರೋಪ ಕೇಳಿಬಂದಿತ್ತು. +ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಯಡಿಯೂರಪ್ಪ ನಿವೇಶನಗಳನ್ನು ವಾಪಸ್‌‍ ಪಡೆಯುವುದಾಗಿ ಹೇಳಿದ್ದರು. ಆಗ ಸಿದ್ದರಾಮಯ್ಯನವರು ಹೇಳಿದ್ದ ಮಾತು ವೈರಲ್ಲಾಗಿದೆ.ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಚೇರಿಯಲ್ಲಿ ಬಿಡುಗಡೆ ಮಾಡಿ, ಸಿದ್ದರಾಮಯ್ಯ ನವರೇ ನೀವು ಯಾವಾಗ ರಾಜೀನಾಮೆ ಕೊಡುತ್ತೀರಿ ಎಂದು ವಿಡಿಯೋ ಮೂಲಕ ಟಾಂಗ್‌ ನೀಡಿದ್ದಾರೆ. + , , , 2011 @, , .@ @. " ' ?" …../PWRkfJ62hH +ಸಿದ್ದರಾಮಯ್ಯನವರು ಮಕ್ಕಳಿಗೆ ನೀಡಿದ್ದ ನಿವೇಶನವನ್ನು ಯಡಿಯೂರಪ್ಪ ವಾಪಸ್‌‍ ಕೊಡುವುದಾಗಿ ಹೇಳಿದ್ದಾರೆ. ಹಣವನ್ನು ಪಡೆದುಕೊಂಡಿದ್ದಾರೆ. ಅವರು ತಪ್ಪು ಮಾಡಿಲ್ಲ ಎಂದರೆ ನಿವೇಶನವನ್ನು ಏಕೆ ವಾಪಸ್‌‍ ಕೊಡಬೇಕಿತ್ತು. ಇದು ಕಾನೂನು ಬಾಹಿರವಲ್ಲವೇ? ತಪ್ಪು ಮಾಡಿದ್ದರಿಂದಲೇ ಸೈಟ್‌ ವಾಪಸ್‌‍ ಕೊಟ್ಟಿದ್ದಾರೆ ಎಂದರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ. +ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಆಡಿರುವ ಮಾತು ವೈರಲ್‌ ಆಗಿ ನೀವು ನಿಮ ಮಾತಿಗೆ ಬದ್ಧರಾಗಿದ್ದರೆ ಮೊದಲು ಗೌರವಯುತವಾಗಿ ನಿಮ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. \ No newline at end of file diff --git a/eesanje/url_46_4_4.txt b/eesanje/url_46_4_4.txt new file mode 100644 index 0000000000000000000000000000000000000000..f6338364e9a95baffc2132df345836854220a626 --- /dev/null +++ b/eesanje/url_46_4_4.txt @@ -0,0 +1,12 @@ +ಸಿದ್ದರಾಮಯ್ಯನವರಿಗೆ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ : : ವಿಜಯೇಂದ್ರ ಭವಿಷ್ಯ + : : +ಬೆಂಗಳೂರು,ಅ.1– ಮುಡಾ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ಬಚಾವ್ ಆಗುವ ಯಾವುದೇ ಲಕ್ಷಣಗಳಿಲ್ಲ. ಬದಲಿಗೆ ಅವರು ಯಾವುದೇ ಕ್ಷಣದಲ್ಲೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. +ಕಳೆದ ಬಾರಿ ಹೂಬ್ಲೆಟ್ ವಾಚ್ ಪ್ರಕರಣದಲ್ಲಿ ಎಸಿಬಿ ಮೂಲಕ ಕ್ಲೀನ್ಚಿಟ್ ತೆಗೆದುಕೊಂಡಿದ್ದರು. ಆದರೆ ಈ ಬಾರಿ ಮುಡಾ ಪ್ರಕರಣದಲ್ಲಿ ಅವರೇ ಮೊದಲ ಆರೋಪಿಯಾಗಿದ್ದು, ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಜಾರಿನಿರ್ದೇಶನಾಲಯ ಇಸಿಐಆರ್ ದಾಖಲಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡದೆ ಬೇರೆ ಗತ್ಯಾಂತರವಿಲ್ಲ ಎಂದು ಹೇಳಿದರು. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಿದ್ದರಾಮಯ್ಯನವರು ಈ ಪ್ರಕರಣದಲ್ಲಿ ತಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಬಂಡನತ ತೋರದೆ ತಕ್ಷಣವೇ ರಾಜೀನಾಮೆ ನೀಡಬೇಕು. ಕಳೆದ ಬಾರಿ ನಾನು ಕೆಲವೇ ದಿನಗಳಲ್ಲಿ ರಾಜೀನಾಮೆ ಕೊಡುತ್ತಾರೆ ಎಂದಿದ್ದಾರೆ. ಪರಿಸ್ಥಿತಿ ಈಗ ಕೆಲವೇ ಸಮಯಕ್ಕೆ ಬಂದು ನಿಂತಿದೆ ಎಂದು ವ್ಯಂಗ್ಯವಾಡಿದರು. +ಕಳೆದ ರಾತ್ರಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಲವರ ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ಸಚಿವರು ಇಡಿ ಮಧ್ಯಪ್ರವೇಶ ಮಾಡಿದ ಮೇಲೆ ಎನಫ್ ಇಸ್ ಎನಫ್ ಎಂದು ಭವಿಷ್ಯವನ್ನು ನುಡಿದಿದ್ದಾರೆ. ಇಷ್ಟಾದರೂ ರಾಜೀನಾಮೆ ನೀಡದಿರುವುದು ಅವರ ಬಂಡತನಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. +ನೀವು ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದೀರಿ. 14 ನಿವೇಶನಗಳನ್ನು ವಾಪಸ್ ಕೊಟ್ಟರೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ನಿಮ ಹಾಗೂ ಕುಟುಂಬವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅದರಲ್ಲೂ ಮೊದಲ ಆರೋಪಿ ನೀವು. ಯಾವ ನೈತಿಕತೆ ಇಟ್ಟುಕೊಂಡು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತೀರಿ ಎಂದು ಪ್ರಶ್ನೆ ಮಾಡಿದರು. +ಕಾನೂನು ಬಾಹಿರವಾಗಿ ಸೈಟ್ಗಳನ್ನು ಪಡೆದುಕೊಂಡಿದ್ದರಿಂದ ವಿಧಿಯಿಲ್ಲದೆ ವಾಪಸ್ ಕೊಟ್ಟಿರಬಹುದು. ಆಗ ಮಾತ್ರಕ್ಕೆ ಪ್ರಕರಣ ಇತ್ಯರ್ಥವಾಗುವುದಿಲ್ಲ. ಆರೋಪಿ ಆರೋಪಿಯೇ ಎಂದು ಕಿಡಿಕಾರಿದರು. +ಹಿಂದೆ ವಾಲೀಕಿ ಪ್ರಕರಣದಲಲೂ ಏನೂ ನಡೆದಿಲ್ಲ ಎಂದು ತಿಪ್ಪೇ ಸವರುವ ಕೆಲಸ ಮಾಡಿದ್ದಿರಿ. ಕೊನೆಗೆ 82 ಕೋಟಿ ಅಕ್ರಮ ನಡೆದಿದೆ ಎಂದು ಸದನದಲ್ಲಿ ನೀವೇ ಒಪ್ಪಿಕೊಂಡಿದ್ದೀರಿ. ಈಗ ಮೂಡಾದಲ್ಲೂ ಅದೇ ರೀತಿ ಬಹುಕೋಟಿ ವಂಚನೆಯಾಗಿದೆ. ಅಧಿಕಾರದಲ್ಲಿ ನೀವು ಮುಂದುವರೆಯಲೇಬಾರದೆಂದು ಆಗ್ರಹ ಮಾಡಿದರು. +ಮುಡಾದಲ್ಲಿ ಪ್ರಮುಖವಾಗಿ ಎರಡು ಪ್ರಕರಣಗಳು ನಡೆದಿವೆ. ಪತ್ನಿ ಪಾರ್ವತಿ ಹೆಸರಿನಲ್ಲಿ 14 ನಿವೇಶನ ಪಡೆದಿರುವುದು ಒಂದು ಕಡೆ. ಮತ್ತೊಂದು ಕಡೆ ಸಿಎಂ ಅವರು ಅವರ ಹಿಂಬಾಲಕರಿಗೆ 5 ಸಾವಿರ ಕೋಟಿ ಬೆಲೆ ಬಾಳುವ ನಿವೇಶನಗಳನ್ನು ಹಂಚಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. +ಪ್ರಾರಂಭದಲ್ಲಿ ನಾವು ಹೇಳಿದಾಗ ನಾನೇಕೆ ಕೊಡಬೇಕು ಎಂದು ದುರಹಂಕಾರದ ಮಾತುಗಳನ್ನು ಸಿದ್ದರಾಮಯ್ಯ ಮಾತನಾಡಿದರು. ಕಳಂಕ ರಹಿತ ಮುಖ್ಯಮಂತ್ರಿಗಳಿಗೆ ಕಳಂಕ ಅಟ್ಟಿಕೊಳ್ಳಬಾರದು ಎಂಬುದು ನಮ ಮನವಿ. ಎಷ್ಟೇ ಆದರೂ ನೀವು 40 ವರ್ಷಗಳಲ್ಲಿ ಒಂದು ಕಪ್ಪುಚುಕ್ಕೆ ಇಲ್ಲದಂತೆ ಆಡಳಿತ ನಡೆಸಿದ್ದೇನೆ ಎಂದು ಹೇಳುತ್ತೀದ್ದೀರಿ ಎಂದು ಕುಹುಕ ವಾಡಿದರು. +ನಾವು ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ನಡೆಸಿದ ಪರಿಣಾಮ ಇಂದು ತನಿಖಾ ಹಂತಕ್ಕೆ ಬಂದಿದೆ. ಮುಂದಿನ ದಿನಗಳಲ್ಲೂ ನಮ ಸರ್ಕಾರದ ವಿರುದ್ದ ಹೋರಾಟ ಮುಂದುವರೆಯಲಿದೆ ಎಂದು ವಿಜಯೇಂದ್ರ ಎಚ್ಚರಿಸಿದರು. \ No newline at end of file diff --git a/eesanje/url_46_4_5.txt b/eesanje/url_46_4_5.txt new file mode 100644 index 0000000000000000000000000000000000000000..df17216b08faacf6a61b0e57360bbfca5970d18c --- /dev/null +++ b/eesanje/url_46_4_5.txt @@ -0,0 +1,7 @@ +ಮುಡಾ ಪ್ರಕರಣದಿಂದಾಗಿ ಸಿಎಂ ಪತ್ನಿ ತೀವ್ರವಾಗಿ ನೊಂದಿದ್ದಾರಂತೆ +' +ಬೆಂಗಳೂರು,ಅ.1-ಮುಡಾ ಪ್ರಕರಣದಿಂದಾಗಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ತೀವ್ರವಾಗಿ ನೊಂದಿದ್ದು, ದುರುದ್ದೇಶಪೂರಕವಾಗಿ ತೇಜೋವಧೆ ಮಾಡುವ ಪ್ರಯತ್ನಗಳಾಗುತ್ತಿವೆ ಎಂದು ಹೇಳಿಕೊಂಡಿದ್ದಾರೆ ಎಂದು ಕುಟುಂಬದ ಆಪ್ತಮೂಲಗಳು ತಿಳಿಸಿವೆ. +ರಾಜಕೀಯವಾಗಿ 40 ವರ್ಷಗಳಲ್ಲಿ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯಾರ ಮೇಲೂ ಪ್ರಭಾವ ಬೀರಲಿಲ್ಲ. ಎಷ್ಟೇ ತೆರೆಮರೆಯಲ್ಲಿದ್ದರೂ ಅನಗತ್ಯವಾಗಿ ತಮನ್ನು ಎಳೆದು ತರಲಾಗುತ್ತಿದೆ ಎಂದು ನೊಂದಿದ್ದಾರೆ ಎಂದು ಸಿದ್ದರಾಮಯ್ಯನವರ ಸಹೋದರ ಸಿದ್ದೇಗೌಡರ ಪುತ್ರ ಸಿದ್ದರಾಮು ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮ ದೊಡ್ಡಮ ಪಾರ್ವತಿ ಅವರೊಂದಿಗೆ ಎರಡು-ಮೂರು ಬಾರಿ ಮಾತನಾಡಿದ್ದು, ಇತ್ತೀಚಿನ ಬೆಳವಣಿಗೆಗಳಿಂದ ಅವರು ತೀವ್ರವಾಗಿ ನೊಂದಿದ್ದಾರೆ. ತಮಗೆ ಅರಿಶಿನ ಕುಂಕುಮಕ್ಕೆ ನೀಡಲಾಗಿದ್ದ ಜಮೀನನ್ನು ನೆಪ ಮಾಡಿಕೊಂಡು ರಾಜಕೀಯವಾಗಿ ಸಿದ್ದರಾಮಯ್ಯನವರ ವರ್ಚಸ್ಸನ್ನು ಹಾಳು ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು. +ತಮ ದೊಡ್ಡಮ ಅವರು ಯಾವುದೇ ತಪ್ಪು ಮಾಡಿಲ್ಲ. ನಿವೇಶನವನ್ನು ವಾಪಸ್ ನೀಡುವ ಅಗತ್ಯವಿರಲಿಲ್ಲ. ಆದರೆ ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಈಗಾಗಲೇ ನಿವೇಶನವನ್ನು ವಾಪಸ್ ನೀಡಿದ್ದಾರೆ. ಇದಾದ ಬಳಿಕ ತನಿಖೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು. +ಈ ಹಿಂದೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗಲೇ ನಿವೇಶನ ಕೊಟ್ಟಿದ್ದರು. ಅದೂ ಕೂಡ ಇವರ ಜಮೀನು ಇದ್ದಿದ್ದಕ್ಕಾಗಿಯೇ ನಿವೇಶನ ನೀಡಲಾಗಿದೆ. ಈಗ ಅದರಲ್ಲಿ ತಪ್ಪು ಹುಡುಕುತ್ತಿಲ್ಲ. ಜೆಡಿಎಸ್-ಬಿಜೆಪಿ ಎರಡೂ ಪಕ್ಷಗಳು ಸೇರಿ ಷಡ್ಯಂತ್ರ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_4_6.txt b/eesanje/url_46_4_6.txt new file mode 100644 index 0000000000000000000000000000000000000000..347174deecae0baaa8cd650c78e1c9df6c8fa9e0 --- /dev/null +++ b/eesanje/url_46_4_6.txt @@ -0,0 +1,14 @@ +ಇಷ್ಟೆಲ್ಲಾ ಕಸರತ್ತು ನಿಮಗೆ ಬೇಕಿತ್ತಾ..? : ಸಿಎಂ ವಿರುದ್ಧ ಎಚ್ಡಿಕೆ ವಾಗ್ದಾಳಿ + +ನವದೆಹಲಿ,ಅ.1-ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ ಬರೆದು ನಿವೇಶನ ಬೇಡ ಎಂದು ಹೇಳಿದ್ದಾರೆ. ಮನೆಯ ಚಿನ್ನ, ಒಡವೆ ಯಾವುದರ ಮೇಲೂ ಮಮತೆ ಇಲ್ಲ ಎಂದು ಹೇಳಿದ್ದಾರೆ. ಇದು ಸಿಎಂ ಗಮನಕ್ಕೆ ಬಾರದೇ ನಿವೇಶನವನ್ನು ವಾಪಸ್ ನೀಡುವುದಾಗಿ ಹೇಳಿದ್ದಾರೆಯೇ? ಎಂದು ಪ್ರಶ್ನಿಸಿದರು. +ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಮಾಡಿರುವುದಾಗಿ ಹೇಳಿಕೊಂಡಿದ್ದರು. ನನ್ನನ್ನು ಸುಳ್ಳುಗಾರ ಅಂತಾರೆ. ಇವರ ಮಾತು ಕೇಳಿಸಿಕೊಂಡರೆ ಸುಳ್ಳು ಎಲ್ಲಿ ಹುಟ್ಟಿದೆ ಎಂಬುದು ಗೊತ್ತಾಗುತ್ತದೆ. ನನ್ನನ್ನು ಹಿಟ್ ಅಂಡ್ ರನ್ ಎನ್ನುತ್ತಾರೆ. ಇವರೇನು ಯೂಟರ್ನೇ? , ಕಳ್ಳತನ ಮಾಡಿದ ಮೇಲೆ ತಪ್ಪಾಯಿತು ಎಂದರೆ ಬಿಡಲು ಸಾಧ್ಯವೇ? ಎಂದು ತರಾಟೆಗೆ ತೆಗೆದುಕೊಂಡರು. +ಮುಡಾ ನಿವೇಶನಗಳನ್ನು ಪಡೆದಿರುವುದಷ್ಟೇ ಅಲ್ಲ, ಈ ಹಿಂದೆ ಏನೆಲ್ಲಾ ಮಾಡಿದ್ದಾರೆ. ವೈಟ್ನರ್ ಹಾಕಿದ್ದು ಮುಗಿದ್ಹೋಯ್ತು. ಈಗ ಇಲ್ಲಿಗೆ ಬಂದಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಅವರು ಚುನಾವಣಾ ಸಾಲ ತೀರಿಸಲು ಒಂದು ಕೋಟಿ ರೂ.ಗೆ ಮಾರಾಟ ಮಾಡಿದ್ದ ನಿವೇಶನ ಎಲ್ಲಿಂದ ಬಂದಿತು. +ಬಡವರ ಮಕ್ಕಳಿಗೆ ವಸತಿ ಶಾಲೆ ನಿರ್ಮಾಣ ಮಾಡಲು ಭೂಮಿ ಡಿ ನೋಟಿಫಿಕೇಷನ್ ಮಾಡಿಸಿಕೊಂಡು ಅದನ್ನು ಸಿದ್ದರಾಮಯ್ಯ ಪಡೆದಿದ್ದಾರೆ. ಇದು 14 ನಿವೇಶನಗಳಿಗಿಂತ ದೊಡ್ಡ ಪ್ರಕರಣ ಎಂದು ಆರೋಪಿಸಿದರು.ಊರಿಗೇ ಬುದ್ಧಿ ಹೇಳುವವರು ಇಲ್ಲಿ ಏನು ಮಾಡಿದ್ದೀರಿ, ಸತ್ಯ ಹೇಳಿ, ಈಗ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಕುಂಕುಮ ಇಟ್ಟುಕೊಂಡು ರಕ್ಷಣೆ ಪಡೆಯುತ್ತಿದ್ದಾರೆ. ಇದರ ಜೊತೆಗೆ ಇನ್ನೂ ಎರಡು ಪ್ರಕರಣಗಳಿವೆ ಎಂದು ದೂರಿದರು. +ಸಚಿವ ಕೃಷ್ಣಭೈರೇಗೌಡರು ಮೇಧಾವಿಯಲ್ಲವೇ?, ಇದನ್ನೂ ಪರಿಶೀಲನೆ ಮಾಡಲಿ. ನಾನು ಇಂತಹ ಕೆಲಸ ಮಾಡಿಲ್ಲ. ತಾನೊಂದು ಬಗೆದರೆ, ದೈವ ಮತ್ತೊಂದು ಬಗೆಯುವುದು ಎನ್ನುವಂತಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ನಮನ್ನು ಮುಗಿಸುವ ಹುನ್ನಾರ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏನೋ ಹೇಳಿದ್ದಾರೆ ಎಂದ ಅವರು ಭ್ರಷ್ಟರ ದಾಖಲೆ ಬಿಡುಗಡೆ ಮಾಡುವ ಕಾಲ ಬರುತ್ತದೆ ಎಂದರು. +ತನಿಖೆಗೆ ಜಾಮೀನು ಪಡೆದಿಲ್ಲ :ನಾನು ಜಾಮೀನು ಪಡೆದಿರುವುದು ತನಿಖೆ ಮಾಡದಂತೆ ಅಲ್ಲ. ಈ ಸರ್ಕಾರದ ಕೆಟ್ಟ ಅಧಿಕಾರಿಗಳಿಂದ ಏನು ಬೇಕಾದರೂ ಮಾಡುತ್ತಾರೆ. ಜಾಮೀನು ತೆಗೆದುಕೊಳ್ಳಿ ಎಂದು ನಮ ವಕೀಲರು ಹೇಳಿದ್ದರಿಂದ ಜಾಮೀನು ತೆಗೆದುಕೊಂಡಿದ್ದೇನೆಯೇ ಹೊರತು ತನಿಖೆ ಮಾಡದಂತೆ ಜಾಮೀನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. +ಐಪಿಎಸ್ ಅಧಿಕಾರಿ ವಿರುದ್ಧ ನಾನು ಮಾತನಾಡಿದಾಗ ಅವರು ಎಲ್ಲಿ, ಯಾರ ಛೇಂಬರ್ನಲ್ಲಿ ಕುಳಿತು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ಒಂದು ದಿನವಾದರೂ ಕುಮಾರಸ್ವಾಮಿಯವರನ್ನು ಜೈಲಿಗೆ ಹಾಕಬೇಕೆಂಬ ಚರ್ಚೆ ಮಾಡಿದ್ದಾರೆ ಎಂದು ಹೇಳಿದರು. +80 ಕೋಟಿ ರೂ. ಗುಳುಂ ಮಾಡಿರುವ ಆರೋಪ ಪ್ರಕರಣದಲ್ಲಿ ಏನಾಯಿತು?, ಯಾರನ್ನು ಎಸ್ಐಟಿ ಬಂಧಿಸಿತ್ತು? ಎಂಬುದು ಗೊತ್ತಿಲ್ಲವೇ?, ನಾನು ಯಾವ ಅಧಿಕಾರಿಯನ್ನೂ ದುರ್ಬಳಕೆ ಮಾಡಿಕೊಂಡಿಲ್ಲ. ನಾನು ಅಧಿಕಾರಿಗೆ ಪ್ರಶ್ನೆ ಮಾಡಿದ್ದೂ ಕೂಡ ನನ್ನ ಪ್ರಕರಣಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯಪಾಲರ ಕಚೇರಿ ತನಿಖೆ ಮಾಡಲು ಅವಕಾಶ ಕೇಳಿ ಪತ್ರ ಬರೆದಿದ್ದು, ಅದನ್ನು ಸೋರಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಶ್ನಿಸಿದ್ದೇನೆ. ಅಧಿಕಾರಿಯ ಉದ್ಧಟತನದ ಬಗ್ಗೆ ಪ್ರಶ್ನೆ ಮಾಡಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಬೆಂಗಳೂರಿನ ಭೂ ಮಾಫಿಯಾ ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ಸಾಥ್ ನೀಡಲು ಐಪಿಎಸ್ ಸ್ಥಾನವನ್ನು ಆ ಅಧಿಕಾರಿಗೆ ಕೊಟ್ಟಿದ್ದೀರ. ಆ ಅಧಿಕಾರಿ ಕ್ರಿಮಿನಲ್ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದು, ಅವರು ಜಾಮೀನು ಪಡೆದುಕೊಂಡಿದ್ದಾರೆ ಎಂದರು. +ಮುಖ್ಯಮಂತ್ರಿ ಬಳಿ ಬಂದು ಕ್ರಿಮಿನಲ್ ಮುಖ್ಯಮಂತ್ರಿ ಎಂದು ಅಧಿಕಾರಿಗಳು ಹೇಳಿದರೆ ಏನು ಮಾಡುತ್ತೀರ?, ಶನಿವಾರ ಕಚೇರಿ ರಜೆ ಇದ್ದರೂ ಲೆಟರ್ಹೆಡ್ ಇಲ್ಲದೇ, ಸೀಲ್ ಇಲ್ಲದೇ, ಸಂಖ್ಯೆ ಇಲ್ಲದ ಪತ್ರ ಹೊರಗೆ ಬಂದಿದೆ. ಆ ಅಧಿಕಾರಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ನಾನು ಕೇವಲ ಜಾಮೀನು ಪಡೆದಿದ್ದೇನೆಯೇ ಹೊರತು ಅವರಂತೆ ತನಿಖೆಗೆ ತಡೆಯಾಜ್ಞೆ ಕೇಳಿಲ್ಲ ಎಂದು ವಾಗ್ದಾಳಿ ನಡೆಸಿದರು. +ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಶಬ್ದ ಪಂಡಿತರಾಗಿದ್ದು, ನನ್ನ ಹೆಸರನ್ನು ಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ. ಆದರೆ ಆ ಪತ್ರ ಹೇಗೆ ಹಂಚಲಾಯಿತು?, ನನ್ನ ವಿರುದ್ಧ ಮುಖ್ಯಮಂತ್ರಿ ಕಚೇರಿಯಿಂದ ನಿನ್ನೆ ರಾತ್ರಿ ಮತ್ತೊಂದು ಪತ್ರ ಹೋಗಿದೆ. ಪತ್ರದಲ್ಲಿ ಉಲ್ಲೇಖಿಸಿರುವ ಕಿಶೋರ್ಕುಮಾರ್ ಅವರನ್ನು ಎಲ್ಲಿಗೆ ಕರೆಸಿಕೊಂಡರು. ಹೆದರಿಸಿ ಹಣ ಪಡೆಯುವ ಚರ್ಚೆ ನಡೆದಿದೆಯಲ್ಲವೇ? ಎಂದು ಆರೋಪಿಸಿದರು. \ No newline at end of file diff --git a/eesanje/url_46_4_7.txt b/eesanje/url_46_4_7.txt new file mode 100644 index 0000000000000000000000000000000000000000..9450e223dce90b5549b1c140596a4435611a8fd6 --- /dev/null +++ b/eesanje/url_46_4_7.txt @@ -0,0 +1,13 @@ +ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು + : 18 +ಬೆಂಗಳೂರು,ಅ.1-ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್ಎ)ಯಡಿ ದೂರು ದಾಖಲಿಸಿತ್ತು. +ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅ„ಕಾರಿಗಳ ವಿರುದ್ಧ ಇಂಫೋರ್ಸ್ನಮೆಂಟ್ ಕೇಸ್ ಇನ್ಫರ್ಮೇಷನ್ ರಿಪೊರ್ಟ್ ದೂರು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ. +ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪವಿದೆ. ಇದಕ್ಕೆ ಸಂಬಂ„ಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. +ಈಗಾಗಲೇ ಪ್ರಕರಣಕ್ಕೆ ಸಂಬಂ„ಸಿದಂತೆ ಸೆ.9ರಂದು ಈ ಎಲ್ಲಾ 18 ಅ„ಕಾರಿಗಳಿಗೆ ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂ„ಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. +ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದಡಿ ತನಿಖೆ ನಡೆಸುವ ಸಾಧ್ಯತೆ ಇದೆ. +ಎರಡನೇ ಅಂಶವೆಂದರೆ, ಮುಡಾದಲ್ಲಿದ್ದ 387 ಕೋಟಿ ಹಣ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಕಾನೂನು ಬಾಹಿರವಾಗಿ ಮುಡಾ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇದ್ದು, ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ. +2023ರ ಅಕ್ಟೋಬರ್ನಲ್ಲಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಐಟಿ ದಾಳಿಯಾಗಿತ್ತು. ಆಗ ಉದ್ಯಮಿ ಹಾಗೂ ಗುತ್ತಿಗೆದಾರರ ಮನೆಗಳಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಸಿಕ್ಕಿತ್ತು. ಅದು ಸಚಿವರೊಬ್ಬರಿಗೆ ಸೇರಿದ್ದು ಎನ್ನಲಾಗಿತ್ತು. ಮುಡಾಗೆ ಸಂಬಂಧಿಸಿದ ಹಣ ಎಂಬ ಗುಮಾನಿಯೂ ಇತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ಅ„ಕಾರಿಗಳು ತನಿಖೆ ಮಾಡಬಹುದು. +ದಾಳಿ ಸಾಧ್ಯತೆ: ಮೂಲಗಳ ಪ್ರಕಾರ ಇ.ಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ಸಚಿವರೊಬ್ಬರ ಮೇಲೆ ದಾಳಿ ನಡೆಸಲು ಸಜ್ಜಾಗಿದೆ ಎಂದು ಗೊತ್ತಾಗಿದೆ. ಸಿಎಂ ಅವರಿಗೆ ಅತ್ಯಂತ ನಿಕಟ ವ್ಯಕ್ತಿಯಾಗಿರುವ ಈ ಸಚಿವರು ಪ್ರಬಲ ಇಲಾಖೆಯ ಮುಖ್ಯಸ್ಥರಾಗಿದ್ದು, ಮುಡಾ ಪ್ರಕರಣದ ಪ್ರಮುಖ ದಾಖಲೆಗಳು ಇವರ ಬಳಿ ಇರಬಹುದೆಂಬ ಶಂಕೆ ಇ.ಡಿಗಿದೆ. ಹೀಗಾಗಿ ಪ್ರಭಾವಿ ಸಚಿವರ ನಿವಾಸ, ಕಚೇರಿ, ಸಂಬಂಧಿಕರು ಸೇರಿದಂತೆ ಮತ್ತಿತರ ಮೇಲೆ ಯಾವುದೇ ದಾಳಿ ನಡೆಯುವ ಸಂಭವವಿದೆ. +ಈ ಹಿಂದೆ ಮುಡಾ ಪ್ರಕರಣ ಆಚೆ ಬರುತ್ತಿದ್ದಂತೆ ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಂಬ ಆರೋಪ ಕೇಳಿಬಂದಿತ್ತು.ಇವೆಲ್ಲವನ್ನೂ ಗಮನಿಸಿಯೇ ಇ.ಡಿ ಸಿಎಂ ಆಪ್ತ ಸಚಿವರನ್ನು ಭೇಟಿಯಾಗಲು ಸಜ್ಜಾಗಿದೆ. ಹೀಗಾಗಿಯೇ ಗೋವಾ ಮತ್ತು ಚೆನ್ನೈನಿಂದ ಒಂದು ತಂಡ ಈಗಾಗಲೇ ಬೆಂಗಳೂರಿಗೆ ಆಗಮಿಸಿ, ಸಚಿವರ ನಿವಾಸ, ಕಚೇರಿ, ಫ್ಲ್ಯಾಟ್, ಸಂಬಂಧಿಕರ ಮನೆಗಳ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ. +ಇನ್ನೊಂದೆಡೆ ಮೈಸೂರಿನಲ್ಲಿ ಈ ಹಿಂದೆ ಮುಡಾ ಅಧ್ಯಕ್ಷರಾಗಿದ್ದವರು, ಮುಡಾ ಆಯುಕ್ತರು, ಜನಪ್ರತಿನಿ„ಗಳು ಸೇರಿದಂತೆ ಮತ್ತಿತರರಿಗೂ ದಾಳಿಯ ಬಿಸಿ ತಟ್ಟುವ ಸಂಭವವಿದೆ.ಕೆಲವರು ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಇ.ಡಿ ಇನ್ನಷ್ಟು ಆಳಕ್ಕೆ ಇಳಿದು ತನಿಖೆ ನಡೆಸಲು ಮುಂದಾಗಿದೆ. +ಬರುವ ದಿನಗಳಲ್ಲಿ ಸಿದ್ದರಾಮಯ್ಯ ಅವರ ಆಪ್ತರಿಗೆ ಇ.ಡಿ ಗಾಳ ಹಾಕಲು ತೆರೆಮರೆಯಲ್ಲಿ ಕಾರ್ಯಾಚರಣೆಗೆ ಇಳಿದಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. \ No newline at end of file diff --git a/eesanje/url_46_4_8.txt b/eesanje/url_46_4_8.txt new file mode 100644 index 0000000000000000000000000000000000000000..87a5296fb32d869fb839c36603ef2fd14bcdbbd7 --- /dev/null +++ b/eesanje/url_46_4_8.txt @@ -0,0 +1,9 @@ +ಸಿಎಂ ಪತ್ನಿ ಪಡೆದಿದ್ದ ವಿವಾದಿತ 14 ನಿವೇಶನಗಳ ಸ್ಥಳ ಪರಿಶೀಲನೆ ನಡೆಸಿದ ಲೋಕಾಯುಕ್ತ ಪೊಲೀಸರು + 14 +ಮೈಸೂರು,ಅ.1-ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ವಾಪಸ್ ನೀಡುವುದಾಗಿ ಪತ್ರ ಬರೆದ ನಂತರವೂ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಇಂದು ಬೆಳಿಗ್ಗೆ ವಿವಾದಿತ ಜಮೀನಿನ ಸ್ಥಳ ಪರಿಶೀಲನೆ ನಡೆಸಿದ್ದಾರೆ. +ದೂರುದಾರರಾದ ಸ್ನೇಹಮಯಿ ಕೃಷ್ಣ ಅವರೊಂದಿಗೆ ಮುಡಾ ಅ„ಕಾರಿಗಳು ಲೋಕಾಯುಕ್ತದ ಪೊಲೀಸರು ಕೆಸರೆ ಗ್ರಾಮಕ್ಕೆ ತೆರಳಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿದ್ದರು ಎಂದು ಹೇಳಲಾದ ಭೂಮಿಯ ಪರಿಶೀಲನೆ ನಡೆಸಿದರು.ಈ ವೇಳೆ ಪೊಡಿ, ನಕ್ಷೆ ಹಾಗೂ ಇತರ ದಾಖಲಾತಿಗಳೊಂದಿಗೆ ಸ್ಥಳದಲ್ಲಿ ಮಹಜರು ನಡೆಸಲಾಯಿತು. +ಈ ವೇಳೆ ಪಾರ್ವತಿಯವರದು ಎಂದು ಹೇಳಲಾದ ಜಾಗವನ್ನು ಮುಡಾ ಅಭಿವೃದ್ಧಿಪಡಿಸಿ ನಿವೇಶನಗಳನ್ನಾಗಿ ವಿಂಗಡಿಸುವುದು, ನಿವೇಶನ ಸಂಖ್ಯೆಗಳ ಫಲಕಗಳನ್ನು ನೆಟ್ಟಿರುವುದು, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳು ಪೂರ್ಣಗೊಂಡಿರುವುದು ಕಂಡುಬಂದಿತ್ತು. ಈ ಸ್ಥಳದಲ್ಲಿ ಸುತ್ತಮುತ್ತ ಹಲವು ಬೃಹತ್ ಕಟ್ಟಡಗಳು ನಿರ್ಮಾಣಗೊಂಡಿರುವುದು ಕಾಣಸಿಗುತ್ತಿದೆ. +ಮಲ್ಲಿಕಾರ್ಜುನ ಸ್ವಾಮಿಯವರು ದೇವರಾಜು ಅವರಿಂದ ಜಮೀನನ್ನು ಖರೀದಿಸಿದ್ದರು. ಅನಂತರ ತಮ್ಮ ಸಹೋದರಿ ಆಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರಿಗೆ ಅರಿಶಿನ ಕುಂಕುಮಕ್ಕೆ ಭೂಮಿಯನ್ನು ಉಡುಗೊರೆ ನೀಡಿದ್ದರು ಎಂದು ಹೇಳಲಾಗಿದೆ.ಈ ಜಮೀನಿನ ಪರಭಾರೆಯೇ ಅಕ್ರಮ ಎಂಬುದು ಸ್ನೇಹಮಯಿ ಕೃಷ್ಣ ಅವರ ದೂರಾಗಿದೆ. ಹೀಗಾಗಿ ನ್ಯಾಯಾಲಯದ ಆದೇಶದ ಮೇರೆಗೆ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಪೊಲೀಸರು ಇಂದು ಪ್ರಥಮವಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. +ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ , ದಾಖಲೆಗಳಿಗೆ ಸಂಬಂ„ಸಿದ ಯಾವುದೇ ನೋಟಿಸ್ ಬಂದಿಲ್ಲ. ಆದರೆ, ವಿಚಾರಣೆಯಲ್ಲಿ ಯಾವುದೇ ದಾಖಲಾತಿ ಕೋರಿದ್ದರೆ ನಾನು ಕೊಡಲು ಸಿದ್ಧ ಎಂದರು. +ಮೊದಲು ದೂರು ನೀಡಿದ ಸಂದರ್ಭದಲ್ಲಿ ದಾಖಲಾತಿಗಳನ್ನು ಈಗಾಗಲೇ ಕೊಟ್ಟಿದ್ದೇನೆ. ಈಗ ಮತ್ತೆ ವಿಚಾರಣೆ ಸಂದರ್ಭದಲ್ಲಿ ದಾಖಲಾತಿಗಳನ್ನು ಕೇಳಿದರೆ ಕೊಡಲು ಸಿದ್ಧ. ಇದರ ಜೊತೆಗೆ ಮುಡಾದಲ್ಲಿ ನಡೆದ ಎಲ್ಲಾ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂಬುದು ನನ್ನ ಒತ್ತಾಯ ಎಂದರು. +ಹೋರಾಟಕ್ಕೆ ಸಿಕ್ಕ ಜಯ ಇಡಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಎಂ ಪತ್ನಿ ಪಾರ್ವತಿ 14 ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಸುಳ್ಳು ಆರೋಪ ಮಾಡುವುದಿಲ್ಲ. ಈವರೆಗಿನ ಎಲ್ಲಾ ಪ್ರಕರಣಗಳಲ್ಲೂ ಜಯ ಗಳಿಸಿದ್ದೇನೆ. ಅದೇ ರೀತಿ ಇಲ್ಲೂ ಜಯ ಗಳಿಸುವ ವಿಶ್ವಾಸವಿದೆ. ನನ್ನ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಹೇಳಿದರು. \ No newline at end of file diff --git a/eesanje/url_46_4_9.txt b/eesanje/url_46_4_9.txt new file mode 100644 index 0000000000000000000000000000000000000000..471150efc9918c332b7fa90fa7b0e61d3045fb29 --- /dev/null +++ b/eesanje/url_46_4_9.txt @@ -0,0 +1,14 @@ +ನಿವೇಶನಗಳನ್ನು ಹಿಂದಿರುಗಿಸಿದರೂ ಸಿಎಂ ಹಾಗೂ ಫ್ಯಾಮಿಲಿಗೆ ತಪ್ಪಲ್ಲ ಕಾನೂನು ಸಂಕಷ್ಟ + '' : '' ' +ಬೆಂಗಳೂರು,ಸೆ.1– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಮುಡಾ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಿಂತಿರುಗಿಸುವುದಾಗಿ ಹೇಳಿಕೊಂಡಿದ್ದರೂ ತನಿಖೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗುವುದಿಲ್ಲ ಎನ್ನುತ್ತಿದೆ ಕಾನೂನು. +ನಾವು ನಿವೇಶನಗಳನ್ನು ಹಿಂತಿರುಗಿಸುವುದಾಗಿ ಮುಡಾಗೆ ಅ„ಕೃತ ಪತ್ರ ಬರೆದಿದ್ದೇವೆ ಎಂದು ಆಯುಕ್ತರಿಗೆ ಪತ್ರ ಬರೆದಿದ್ದರೂ ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ಮೇಲ್ನೋಟಕ್ಕೆ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿರುವುದರಿಂದ ತನಿಖೆ ಅಗತ್ಯವಿದೆ ಎಂದು ಆದೇಶದಲ್ಲಿ ಹೇಳಿದೆ. +ಇತ್ತ ಜನಪ್ರತಿನಿ„ಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಎ-ïಐಆರ್ ದಾಖಲಿಸಿ 3 ತಿಂಗಳೊಳಗೆ ವರದಿ ನೀಡುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಬೇನಾಮಿ ವಹಿವಾಟು ಪ್ರಕರಣ ಸಂಬಂಧ ಇಸಿಐಆರ್ ದಾಖಲಿಸಿಕೊಂಡಿದೆ. +ಇನ್ನೊಂದೆಡೆ ಮೈಸೂರು ಲೋಕಾಯುಕ್ತ ಪೊಲೀಸರು ಮಂಗಳವಾರ ಕೆಸರೆ ಗ್ರಾಮದಲ್ಲಿ ಸ್ಥಳ ಮಹಜರು ನಡೆಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಕಾನೂನು ಪ್ರಕ್ರಿಯೆ ಈಗಾಗಲೇ ಸಾಕಷ್ಟು ದೂರ ಸಾಗಿರುವುದರಿಂದ ಇಂಥ ಸಂದರ್ಭದಲ್ಲಿ ಅರ್ಜಿದಾರರು ತಮ್ಮ ಪ್ರಕರಣವನ್ನು ಕೈಬಿಡುವಂತೆ ಮನವಿ ಮಾಡಿದರೂ ಊರ್ಜಿತವಾಗುವ ಸಾಧ್ಯತೆಗಳು ಕಡಿಮೆ ಎನ್ನುತ್ತಾರೆ ಕಾನೂನು ತಜ್ಞರು. +ಏಕೆಂದರೆ ಕಾನೂನಿನ ದೃಷ್ಟಿಯಲ್ಲಿ ತಪ್ಪು ಮಾಡಿದವನಿಗೆ ಶಿಕ್ಷೆಯಾಗಬೇಕು. ಇಲ್ಲಿ ನಿವೇಶನಗಳನ್ನು ಹಿಂತಿರುಗಿಸಿದ ತಕ್ಷಣ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವವರು ಮುಕ್ತರಾಗುವುದಿಲ್ಲ. ಪ್ರಕರಣ ನ್ಯಾಯಾಲಯದ ಮೆಟ್ಟಿಲೇರುವ ಮೊದಲೇ ಸ್ಥಳೀಯ ಮಟ್ಟದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಿತ್ತು. +ಈಗ ತನಿಖೆ ಪ್ರಾರಂಭವಾಗಿರುವುದರಿಂದ ನ್ಯಾಯಾಲಯ ಇಂಥ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡುವುದು ತೀರ ಕಡಿಮೆ ಎನ್ನಲಾಗುತ್ತಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯನವರೇ ಎ1 ಆರೋಪಿಯಾಗಿರುವುದರಿಂದ ಲೋಕಾಯುಕ್ತ ಪೊಲೀಸರು ಇಲ್ಲವೇ ಇ.ಡಿ ಅ„ಕಾರಿಗಳು ಯಾವುದೇ ಸಂದರ್ಭದಲ್ಲಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಡಬಹುದು. +ಒಂದು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಾಗ ನ್ಯಾಯಾಲಯವು ಮಧ್ಯಪ್ರವೇಶ ಮಾಡಲು ಅವಕಾಶ ಇರುವುದಿಲ್ಲ. ಹಾಗೊಂದು ವೇಳೆ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದರೆ ದೂರುದಾರರು ಸುಪ್ರೀಂಕೋರ್ಟ್ಗೆ ಹೋಗುವ ಸಾಧ್ಯತೆ ಇದೆ ಎಂದು ಕಾನೂನು ತಜ್ಞರು ಹೇಳುತ್ತಾರೆ. +ಈಗ ಸಿದ್ದರಾಮಯ್ಯನವರ ಮುಂದೆ ಹೆಚ್ಚಿನ ಆಯ್ಕೆಗಳಿಲ್ಲ. ಅವರು ಲೋಕಾಯುಕ್ತ ಮತ್ತು ಇ.ಡಿ ಯಾವುದೇ ಕ್ಷಣದಲ್ಲಿ ನೋಟಿಸ್ ನೀಡಿ ವಿಚಾರಣೆಗೆ ಕರೆಯಬಹುದು. ಇದರಲ್ಲಿ ಅಕ್ರಮ ಹಣದ ವಹಿವಾಟು ನಡೆದಿದೆ ಎಂದು ಇ.ಡಿ ಶಂಕಿಸಿರುವ ಕಾರಣ ನ್ಯಾಯಾಲಯ ಪ್ರಕರಣವನ್ನು ರದ್ದುಪಡಿಸುವ ಸಾಧ್ಯತೆ ತೀರಾ ಕಡಿಮೆ. +ಸಿಎಂ ಸಿದ್ದರಾಮಯ್ಯ ಮತ್ತವರ ಪತ್ನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ ದಾಖಲಿಸಿದ ನಂತರ ನಿನ್ನೆ ಸಂಜೆ ಮುಖ್ಯಮಂತ್ರಿಯವರು ಕಾನೂನು ತಜ್ಞರು ಮತ್ತು ಇಬ್ಬರು ಸಚಿವರನ್ನು ಭೇಟಿ ಮಾಡಿದ್ದರು. +ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮೈಸೂರು ನಗರಾಭಿವೃದ್ಧಿ ಪ್ರಾ„ಕಾರಕ್ಕೆ (ಮುಡಾ) ತಮ್ಮ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದರು.ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತು ಎಡಿಜಿಪಿ (ಗುಪ್ತಚರ) ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.ಸಭೆಯಲ್ಲಿ ಇಡಿ ತನಿಖೆಗೆ ತಡೆಯಾ್ಞÉ ಪಡೆಯಲು ಕೋರ್ಟ್ ಮೊರೆ ಹೋಗುವುದು ಸೇರಿದಂತೆ ವಿವಿಧ ಆಯ್ಕೆಗಳ ಬಗ್ಗೆ ಅವರು ಸಿಎಂ ಮುಂದೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಇದಕ್ಕೂ ಮುನ್ನ ಇಡಿ ಬೆಂಗಳೂರು ವಲಯ ಕಚೇರಿಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ವಾರಾಂತ್ಯದಲ್ಲಿ ಕರ್ನಾಟಕ ಲೋಕಾಯುಕ್ತದ ಮೈಸೂರು ಘಟಕವು ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಮತ್ತು ಮಾಜಿ ಭೂ ಮಾಲೀಕ ದೇವರಾಜ್ ವಿರುದ್ಧ ದಾಖಲಿಸಿದ ಎಫ್ ಐಆರ್ ಆಧರಿಸಿ ಇಸಿಐಆರ್ ದಾಖಲಿಸಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ. +ಭೂಮಾಲೀಕ – ದೇವರಾಜು – ಇವರಿಂದ ಸ್ವಾಮಿ ಜಮೀನು ಖರೀದಿಸಿ ಪಾರ್ವತಿಗೆ ಉಡುಗೊರೆಯಾಗಿ ನೀಡಿದ್ದರು. 2021ರಲ್ಲಿ ಮೈಸೂರು ನಗರ ವ್ಯಾಪ್ತಿಯ ಡೌನ್ಮಾರ್ಕೆಟ್ ಕೆಸರೆ ಪ್ರದೇಶದಲ್ಲಿ ಲೇಔಟ್ ರಚಿಸಲು 3 ಎಕರೆ 16 ಗುಂಟೆ ಜಾಗಕ್ಕೆ ಬದಲಾಗಿ 14 ನಿವೇಶನ ಹಂಚಿಕೆಗೆ ಸಂಬಂ„ಸಿದಂತೆ ಭ್ರಷ್ಟಾಚಾರ, ವಂಚನೆ ಮತ್ತು -ÉÇೀರ್ಜರಿ ಆರೋಪದ ಮೇಲೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. \ No newline at end of file diff --git a/eesanje/url_46_50_1.txt b/eesanje/url_46_50_1.txt new file mode 100644 index 0000000000000000000000000000000000000000..a419bc455b817d1edfa34c2034fb7009339ef27a --- /dev/null +++ b/eesanje/url_46_50_1.txt @@ -0,0 +1,6 @@ +ಬಿಜೆಪಿ-ಜೆಡಿಎಸ್‌‍ ಆಧಾರರಹಿತ ಆರೋಪಗಳ ವಿರುದ್ಧ ರಾಜಕೀಯವಾಗಿ, ಕಾನೂನಾತ್ಮಕವಾಗಿ ಎದುರಿಸುತ್ತೇನೆ : ಸಿಎಂ +ಬೆಂಗಳೂರು, ಆ.10-ಬಿಜೆಪಿ-ಜೆಡಿಎಸ್‌‍ ಮಾಡುತ್ತಿರುವ ಆಧಾರರಹಿತ ಆರೋಪಗಳ ವಿರುದ್ಧ ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯಬೇಕು ಎಂಬ ಉದ್ದೇಶದಿಂದ ಆಧಾರ ರಹಿತ ಆರೋಪ ಮಾಡಿ ಪಾದಯಾತ್ರೆ ಮಾಡಿದ್ದಾರೆ. +ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ ಎಂಬ ಕಾರಣಕ್ಕೆ ನಿನ್ನೆ ಜನಾಂದೋಲನ ಸಮಾವೇಶ ಮಾಡಲಾಯಿತು. ಸುಳ್ಳು ಆರೋಪ ಮಾಡುತ್ತಿರುವ ಅವರ ಹಗರಣಗಳು ಬೇಕಾದಷ್ಟು ಇವೆ. ಈಗಾಗಲೇ ಕೆಲವನ್ನು ಹೇಳಿದ್ದೇವೆ. ಕೆಲವು ಇನ್ನೂ ವಿಚಾರಣೆ ಹಂತದಲ್ಲಿವೆ. ವರದಿ ಬಂದ ನಂತರ ಅವುಗಳನ್ನು ಬಹಿರಂಗ ಪಡಿಸಲಾಗುವುದು ಎಂದು ಅವರು ಹೇಳಿದರು. +ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಸೇರಿದಂತೆ ಇದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು. +ಜನರ ಆಶೀರ್ವಾದದಿಂದ ನಡೆಯುತ್ತಿರುವ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಅದ್ಯಾವುದಕ್ಕೂ ನಾನು ಜಗ್ಗುವುದಿಲ್ಲ. ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದರೆ, ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ಅವರು ಭಾಾವಿಸಿದ್ದಾರೆ ಎಂದು ಮುಖ್ಯಮಂತ್ರಿ ಟೀಕಿಸಿದರು. \ No newline at end of file diff --git a/eesanje/url_46_50_10.txt b/eesanje/url_46_50_10.txt new file mode 100644 index 0000000000000000000000000000000000000000..2a9ece117ce736bc310ee088a351613b699a0113 --- /dev/null +++ b/eesanje/url_46_50_10.txt @@ -0,0 +1,15 @@ +ಮೈಸೂರಲ್ಲಿ ಜನಾಂದೋಲನ ಸಮಾವೇಶ : ಬಿಜೆಪಿ-ಜೆಡಿಎಸ್ ವಿರುದ್ಧ ಘರ್ಜಿಸಿದ ಕಾಂಗ್ರೆಸ್ ನಾಯಕರು +ಬೆಂಗಳೂರು, ಆ.9-ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ಪಾದಯಾತ್ರೆಗೆ ಸಡ್ಡು ಹೊಡೆದು ಆಡಳಿತಾ ರೂಢ ಕಾಂಗ್ರೆಸ್ ಪಕ್ಷ ಮೈಸೂರಿನಲ್ಲಿಂದು ಹಮಿ ಕೊಂಡಿದ್ದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಶಕ್ತಿ ಪ್ರದರ್ಶನ ಮಾಡುವ ಮೂಲಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಹಗರಣಗಳನ್ನು ಬಹಿರಂಗಗೊಳಿಸಿ ತಕ್ಕಶಾಸ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. +ದಾವಣಗೆರೆಯಲ್ಲಿ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ-75 ಮಾದರಿಯಲ್ಲೇ ಮೈಸೂರಿನಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಹಮಿಕೊಂಡಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು ಹಲವು ನಾಯಕರು ಹರಿಹಾಯ್ದರು. +ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧವೇ ಕೇಳಿ ಬಂದಿರುವ ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿವೆ.ನಾಳೆ ಮೈಸೂರಿನಲ್ಲಿ ಬೃಹತ್ ಸಮಾವೇಶ ಹಮಿಕೊಳ್ಳಲಾಗಿದೆ. ಇದಕ್ಕೆ ಪರ್ಯಾಯವಾಗಿ ಇಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಿತು. +ಸಿದ್ದರಾಮಯ್ಯ ಅವರು ತಮ ವಿರುದ್ಧದ ಗಂಭೀರ ಆರೋಪಗಳಿಗೆ ತಕ್ಕ ಉತ್ತರ ನೀಡುವ ಜೊತೆಗೆ ಬಿಜೆಪಿ ಜೆಡಿಎಸ್ ಅಧಿಕಾರಾವಧಿಯಲ್ಲಿನ ಹಗರಣಗಳನ್ನು ತೆರೆದಿಟ್ಟರು. ಮುಡಾ ಹಗರಣದಲ್ಲಿ ನನ್ನ ಯಾವ ಪಾತ್ರವೂ ಇಲ್ಲ. ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ನಾವು ಜಗ್ಗುವುದಿಲ್ಲ. ಜನ ಬೆಂಬಲದ ಹೋರಾಟದ ಜೊತೆಗೆ ಕಾನೂನು ಹೋರಾಟವನ್ನು ಮಾಡುತ್ತೇವೆ ಎಂದು ಗುಡುಗಿದರು. +ದೋಸ್ತಿ ಪಕ್ಷಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ವಿಪಕ್ಷಗಳು ಎಷ್ಟೇ ಹೋರಾಟ, ಪ್ರಯತ್ನ ಮಾಡಿದರೂ ನಮ ಸದೃಢ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ ಸಂಪೂರ್ಣ ಸಂಪುಟ ಸಿಎಂ ಸಿದ್ದು ಬೆಂಬಲಕ್ಕೆ ಬಂಡೆಯಂತೆ ನಿಲ್ಲುತ್ತದೆ ಎಂದು ಹೇಳಿದರು. +ಈ ಬಂಡೆ ಜೊತೆ 136 ಶಾಸಕರು ಇದ್ದಾರೆ. 1.8 ಕೋಟಿ ಮತದಾರರು ಇದ್ದಾರೆ. ಈ ಸರ್ಕಾರವನ್ನು ಹತ್ತು ತಿಂಗಳಲ್ಲಿ ಅಲುಗಾಡಿಸುತ್ತೇವೆ ಎಂಬ ಭ್ರಮೆಯಲ್ಲಿದ್ದೀರಿ. 10 ವರ್ಷವಾದರೂ ಅಲುಗಾಡಿಸಲು ಸಾಧ್ಯವಿಲ್ಲ. ನಿಮ ಪಾಪದ ಯಾತ್ರೆ ಪಾಪ ವಿಮೋಚನೆ ಯಾತ್ರೆಯಿಂದ ನಮಗೆ ಶಕ್ತಿ ಬಂದಿದೆ ಎಂದರು. +ಎಸ್.ಎಂ.ಕೃಷ್ಣ ಅವರು ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು. ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ನಡೆಸಿದ್ದೆವು. ರಾಹುಲ್ ಗಾಂಧಿ ಅವರು ಭಾರತ್ ಜೋಡೊ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಸಂಪತ್ತಿನ ಉಳಿವಿಗಾಗಿ ಸಿದ್ದರಾಮಯ್ಯನವರು ಬಳ್ಳಾರಿ ಉಳಿವಿಗಾಗಿ ನಡೆಸಿದ್ದರು. ನಿಮ ಪಾದಯಾತ್ರೆ ಏಕೆ ನಡೆಯುತ್ತಿದೆ ಎಂದು ಪ್ರಶ್ನಿಸಿದರು. +ಏನೂ ಆಗಿಲ್ಲದ ಮುಡಾ ಹಗರಣದಿಂದ ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿರುವ ನಿಮ ಆಟ ನಡೆಯುವುದಿಲ್ಲ ಎಂದು ಡಿ.ಕೆ ಗುಡುಗಿದರು.ಇದಕ್ಕೂ ಮುನ್ನ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಡಾ. ಎಸ್.ಸಿ.ಮಹದೇವಪ್ಪ ಸಂವಿಧಾನದ ಆಶಯಗಳು ಗೊತ್ತಿಲ್ಲದ ಬಿಜೆಪಿ-ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ರಾಜಕೀಯ ಷಡ್ಯಂತ್ರ ರೂಪಿಸಿದ್ದು, ಅದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. +ನಿಮ ಸರ್ಕಾರವಿದ್ದಾಗಲೇ ಜಮೀನಿಗೆ ಬದಲಾಗಿ ನಿವೇಶನವನ್ನು ನೀಡಲಾಗಿದೆ. ನಿವೇಶನ ನೀಡಿಕೆ ವಿಚಾರದಲ್ಲಿ ಮುಡಾ ತಪ್ಪು ಮಾಡಿರಬೇಕು ಇದರಲ್ಲಿ ಮುಖ್ಯಮಂತ್ರಿಯ ಯಾವ ತಪ್ಪು ಇಲ್ಲ. ಜನನಾಯಕರಾದ ಸಿದ್ದರಾಮಯ್ಯನವರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಮಾತನಾಡಿ, ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಜೆಡಿಎಸ್ ಆರೋಪ ಮಾಡುವ ಮೂಲಕ ಸರ್ಕಾರ ಕಾಂಗ್ರೆಸ್ ಪಕ್ಷ ಹಾಗೂ ಸಿದ್ದರಾಮಯ್ಯ ಅವರಿಗೆ ಶಕ್ತಿ ತುಂಬಿದ್ದಾರೆ. ಇಂದು ನಡೆದ ಈ ಸಮಾವೇಶ ಮತ್ತಷ್ಟು ಶಕ್ತಿ ತಂದು ಕೊಟ್ಟಿದೆ ಅನಾವಶ್ಯಕವಾಗಿ 20 ವರ್ಷದ ಹಳೆಯ ಪ್ರಕರಣವನ್ನು ಮುಂಚೂಣಿಗೆ ತಂದು ಆಡಳಿತ ನಡೆಸಲು ತೊಂದರೆ ಕೊಡಲಾಗುತ್ತಿದೆ. +ವಿರೋಧ ಪಕ್ಷದ ಸ್ಥಾನದ ಜವಾಬ್ಧಾರಿಯನ್ನು ಕೂಡ ನಿರ್ವಹಿಸುತ್ತಿಲ್ಲವೆಂದು ವಾಗ್ದಾಳಿ ನಡೆಸಿದರು. ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ನಿಷ್ಠಾವಂತ ಹಾಗೂ ಕಪ್ಪು ಚುಕ್ಕೆಯಿಲ್ಲದ ಆಡಳಿತ ಮಾಡುತ್ತಿರುವ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಸಹೋದರಿಗೆ ದಾನವಾಗಿ ಜಮೀನು ನೀಡಿರುವುದು ಯಾವ ರೀತಿ ಕಾನೂನುಬಾಹಿರವಾಗಿರುತ್ತದೆಂದು ಪ್ರಶ್ನಿಸಿದ್ದಾರೆ. +ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮಾತನಾಡಿ, ನಮ ಸರ್ಕಾರವನ್ನು ಪತನಗೊಳಿಸಲು ಷಡ್ಯಂತ್ರ ರೂಪಿಸುತ್ತಿವೆ. ಅದರ ವಿರುದ್ಧ ನಾವು ಒಗ್ಗಟ್ಟಿನ ಹೋರಾಟ ಮಾಡುತ್ತೇವೆ ಎಂದು ಹೇಳಿದರು.ಸಂಪುಟದ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ನಿಗಮಗಳ ಅಧ್ಯಕ್ಷರು ಸೇರಿದಂತೆ 300ಕ್ಕೂ ಹೆಚ್ಚು ಮುಖಂಡರು ವೇದಿಕೆಯಲ್ಲಿದ್ದರು. +ಇದೇ ಸಂದರ್ಭದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಅವರು ಬರೆದಿರುವ ಮುಖ್ಯಮಂತ್ರಿಗಳ ಮೇಲಿನ ಆರೋಪಗಳ ಕುರಿತ ಸತ್ಯ ಶೋಧನ ವರದಿ ಕೃತಿಯನ್ನು ಬಿಡುಗಡೆ ಮಾಡಲಾಯಿತು. +ಕೆಪಿಸಿಸಿಯಿಂದ ಹಮಿಕೊಂಡಿದ್ದ ಜನಾಂದೋಲನ ಈ ಸಮಾವೇಶಕ್ಕೆ ಮೈಸೂರು ಸುತ್ತಮುತ್ತಲ ಪ್ರದೇಶದ ಹಾಗೂ ರಾಜ್ಯದ ವಿವಿಧೆಡೆಯಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದರು. \ No newline at end of file diff --git a/eesanje/url_46_50_11.txt b/eesanje/url_46_50_11.txt new file mode 100644 index 0000000000000000000000000000000000000000..6b294e3449a291e7bd2d025d32978c01f7d5bd82 --- /dev/null +++ b/eesanje/url_46_50_11.txt @@ -0,0 +1,5 @@ +ಬೆಂಗಳೂರು-ಮಂಗಳೂರು ನಡುವೆ ರೈಲು ಸಂಚಾರ ಪುನಾರರಂಭ +ಬೆಂಗಳೂರು, ಆ.9-ಭೂ ಕುಸಿತದ ಹಿನ್ನೆಲೆಯಲ್ಲಿ ಎರಡು ವಾರಗಳಿಂದ ಬಂದ್‌ ಆಗಿದ್ದ ಬೆಂಗಳೂರು -ಮಂಗಳೂರು-ಕಣ್ಣೂರು ರೈಲುಗಳ ಸಂಚಾರ ಇಂದಿನಿಂದ ಆರಂಭಗೊಂಡಿದೆ. +ಭಾರಿ ಭೂ ಕುಸಿತದಿಂದ ಕಡಗರವಳ್ಳಿ-ಎಡಕುಮೇರಿ ಬಳಿ ರೈಲು ಹಳಿ ಹಾನಿಗೀಡಾಗಿತ್ತು, ದುರಸ್ತಿ ಕಾರ್ಯ ಪೂರ್ಣಗೊಂಡ ನಾಲ್ಕು ದಿನಗಳ ಬಳಿಕ ರೈಲು ಸಂಚಾರ ಪುನಾರರಂಭಗೊಳಿಸಲಾಗಿದೆ. +ಯಶವಂತಪುರ-ಮಂಗಳೂರು ಜಂಕ್ಷನ್‌ನಿಂದ ಸಂಚರಿಸುವ ಗೊಮಟೇಶ್ವರ ಎಕ್‌್ಸಪ್ರೆಸ್‌‍ ರೈಲು ದುರಸ್ತಿಗೊಂಡ ಹಳಿಯ ಮೇಲೆ ಇಂದು ಪ್ರಯಾಣ ಬೆಳೆಸಿತು. ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ಕೂಡ ಸ್ಥಳದಲ್ಲಿದ್ದು, ರೈಲಿನ ಓಡಾಟವನ್ನು ಗಮನಿಸಿದರು. +ಕಳೆದ ಜು.26ರಿಂದ ಈ ಮಾರ್ಗದಲ್ಲಿ ರೈಲು ಸಂಚಾರ ರದ್ದುಗೊಂಡಿತ್ತು ಅದರಂತೆ ಬೆಂಗಳೂರು-ಕಣ್ಣೂರು, ಬೆಂಗಳೂರು-ಕಾರಾವಾರ , ಕಣ್ಣೂರು-ಬೆಂಗಳೂರು, ಕಾರಾವಾರ -ಬೆಂಗಳೂರು, ಬೆಂಗಳೂರು- ಮುರುಡೇಶ್ವರ, ವಿಜಯಪುರ, ಮಂಗಳೂರು ಸೆಂಟ್ರಲ್‌ ಸೇರಿದಂತೆ 12 ರೈಲುಗಳನ್ನು ರದ್ದುಪಡಿಸಲಾಗಿತ್ತು. ಇಂದಿನಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭ ಆಗಿದೆ. \ No newline at end of file diff --git a/eesanje/url_46_50_12.txt b/eesanje/url_46_50_12.txt new file mode 100644 index 0000000000000000000000000000000000000000..fdcfdfc79865443e5b0a9e0c44394913d2f84a3e --- /dev/null +++ b/eesanje/url_46_50_12.txt @@ -0,0 +1,5 @@ +ಚನ್ನಪಟ್ಟಣ ತಹಸೀಲ್ದಾರ್‌ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ತರಾಟೆ +ಬೆಂಗಳೂರು, ಆ.9-ಚನ್ನಪಟ್ಟಣ ತಹಸೀಲ್ದಾರ್‌ ಕಚೇರಿಗೆ ದಿಢೀರ್‌ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ತಪ್ಪು ಮಾಹಿತಿ ನೀಡಿದ ತಹಸೀಲ್ದಾರ್‌ ಅವರನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. +ಚನ್ನಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ವರ್ಷ ಕಳೆದರೂ ಅನುಷ್ಠಾನಗೊಳ್ಳದ ಇ-ಆಫೀಸ್‌‍ ಬಗ್ಗೆ ಸಚಿವರು ಬೇಸರಗೊಂಡು ತಹಸೀಲ್ದಾರ್‌ ನರಸಿಂಹ ಮೂರ್ತಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. +ಇ-ಆಫೀಸ್‌‍ ಬದಲಿಗೆ ಲೆಡ್ಜರ್‌ ಪುಸ್ತಕದಲ್ಲೇ ಜನರ ಸಮಸ್ಯೆಗಳನ್ನು ದಾಖಲಿಸಲಾಗಿದೆ. ಸಾಮಾನ್ಯ ಜನರ ಸಮಸ್ಯೆಗಳ ಯಾವ ಮನವಿಗೂ ತಹಸೀಲ್ದಾರ್‌ ಕಚೇರಿಯಲ್ಲಿ ಪರಿಹಾರ ಸಿಗದಿರುವುದು ಬೆಳಕಿಗೆ ಬಂದಿದೆ. +ಆದರೂ ಇ-ಆಫೀಸ್‌‍ ಮೂಲಕ ಜನರ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ತಹಸೀಲ್ದಾರ್‌ ತಪ್ಪು ಮಾಹಿತಿ ನೀಡಿದ್ದಾರೆ. ಕೂಡಲೇ ಲೆಡ್ಜರ್‌ ಪರಿಶೀಲಿಸಿದ ಸಚಿವರು, ಇ-ಆಫೀಸ್‌‍ ಆರಂಭಿಸದಿರುವ ಬಗ್ಗೆ ಸ್ಥಳದಲ್ಲೇ ತಹಸೀಲ್ದಾರರಿಗೆ ಚಳಿ ಬಿಡಿಸಿದ್ದಾರೆ. \ No newline at end of file diff --git a/eesanje/url_46_50_2.txt b/eesanje/url_46_50_2.txt new file mode 100644 index 0000000000000000000000000000000000000000..47d143125d352e35a6fb77b90fb6d42779ce165f --- /dev/null +++ b/eesanje/url_46_50_2.txt @@ -0,0 +1,5 @@ +ಮಕ್ಕಳ ತಟ್ಟೆಯಿಂದ ಮೊಟ್ಟೆ ಕಿತ್ತುಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯ ಅಮಾನತು +ಬೆಂಗಳೂರು,ಆ.10-ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. +ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷೀ ಹಾಗೂ ಸಹಾಯಕಿ ಶಹನಾಜ್‌ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಸಚಿವೆ ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್‌ ಮಾಡುವಂತೆ ಸೂಚಿಸಿದ್ದಾರೆ. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ. +ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವೆ, ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲೆಂದು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ. +ಆದರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್‌ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ. ವಿಡೀಯೋ ನೋಡಿದರೆ ಕರುಳು ಚುರ್‌ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ವಜಾ ಮಾಡಲು ಸೂಚಿಸಿದ್ದೇನೆ. ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವತೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.ಅಲ್ಲದೆ, ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ. \ No newline at end of file diff --git a/eesanje/url_46_50_3.txt b/eesanje/url_46_50_3.txt new file mode 100644 index 0000000000000000000000000000000000000000..4c85c76307727bebaca909d50a309fd6b4e45f6d --- /dev/null +++ b/eesanje/url_46_50_3.txt @@ -0,0 +1,8 @@ +ವ್ಯಾಪಾರಿಗಳೇ ಹುಷಾರ್, ವಂಚನೆಗೆ ಇಳಿದಿದೆ ‘ಎಮರ್ಜೆನ್ಸಿ’ ಗ್ಯಾಂಗ್ +ಬೆಂಗಳೂರು,ಆ.10-ವ್ಯಾಪಾರಿಗಳನ್ನೇ ಟಾರ್ಗೆಟ್‌ ಮಾಡಿಕೊಂಡು ಮೆಡಿಕಲ್‌ ಎಮರ್ಜೆನ್ಸಿಯೊಂದು ನಂಬಿಸಿ ಅವರಿಂದ ಹಣ ಪಡೆದು ಮೊಬೈಲ್‌ಗೆ ಗೂಗಲ್‌ ಪೇ ಮಾಡುವುದಾಗಿ ಹೇಲಿ ಹಣ ಹಿಂದಿರುಗಿಸದೇ ವಂಚಿಸುತ್ತಿರುವ ಜಾಲವಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ. +ತಂತ್ರಜ್ಞಾನ ಮುಂದುವರೆದಂತೆ ಸೈಬರ್‌ ಖದೀಮರು ಹೆಚ್ಚಾಗುತ್ತಿದ್ದಾರೆ. ಡಿಜಿಟಲ್‌ ಇಂಡಿಯಾ ಎಂದು ಜನತೆ ತಮ ಬಳಿ ಹಣವಿಟ್ಟುಕೊಳ್ಳದೆ, ಫೋನ್‌ಪೇ ಎಂದು ಮೊಬೈಲ್‌ಗಳನ್ನು ಬಳಸುತ್ತಿರುವುದರಿಂದ ಇದನ್ನೇ ಬಂಡವಾಳವಾಗಿಸಿಕೊಳ್ಳುತ್ತಿರುವ ಖದೀಮರ ಮೋಸದ ಆಟಕ್ಕೆ ವ್ಯಾಪಾರಿಗಳು ದಾಳವಾಗುತ್ತಿರುವುದು ವಿಷಾದಕರ. +ತಮಗೆ ಮೆಡಿಕಲ್‌ ಎಮರ್ಜೆನ್ಸಿ ಇದೆ, ಕೂಡಲೇ ಹಣ ಬೇಕಾಗಿದೆ, ತಾವು ಹಣ ಕೊಟ್ಟರೆ ನಿಮ ಅಕೌಂಟ್‌ಗೆ ಗೂಗಲ್‌ ಪೇ ಅಥವಾ ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂದ್ರಹಳ್ಳಿಯ ಸೈಬರ್‌ ಸೆಂಟರ್‌ ಮಾಲೀಕನನ್ನು ವಂಚಿಸಿರುವುದು ಬೆಳಕಿಗೆ ಬಂದಿದೆ. +ಸೈಬರ್‌ ಸೆಂಟರ್‌ಗೆ ಹೋದ ಖದೀಮ ಮೆಡಿಕಲ್‌ ಎಮರ್ಜೆನ್ಸಿ ಇದೆ, ನೀವು 10 ಸಾವಿರ ಹಣ ಕೊಟ್ಟರೆ ನಿಮ ಅಕೌಂಟ್‌ಗೆ ಹಾಕುವುದಾಗಿ ಹೇಳಿದ್ದಾನೆ. ಅಷ್ಟು ಹಣವಿಲ್ಲದಿದ್ದರೆ 5 ಸಾವಿರವಾದರೂ ಕೊಡಿ ಎಂದು ಮಾಲೀಕನಿಗೆ ಮರಳು ಮಾಡಿದ್ದಾನೆ. +ಸೈಬರ್‌ ಮಾಲೀಕ ಹಣಕೊಟ್ಟ ನಂತರ ಅಂಗಡಿಯಲ್ಲಿದ್ದ ಸ್ಕ್ಯಾನರ್‌ ಅನ್ನು ಸ್ಕ್ಯಾನ್‌ ಮಾಡಿದ ರೀತಿ ನಟಿಸಿ ನಂತರ ನೆಟ್‌ ಆಫ್‌ ಮಾಡಿಕೊಂಡು, ಅದು ವರ್ಕ್‌ ಆಗ್ತಿಲ್ಲ, ನಿಮ ಮೊಬೈಲ್‌ ನಂಬರ್‌ಗೆ ಹಾಕುತ್ತೇನೆಂದು ಹೇಳಿ, ಮೊದಲೇ ಸ್ಕ್ರೀನ್‌ ಶಾಟ್‌ ಮಾಡಿಕೊಂಡಿದ್ದ ಫೇಕ್‌ ಆ್ಯಪ್‌ ಮುಖಾಂತರ ಪೇಮೆಂಟ್‌ ಸಕ್ಸಸ್‌‍ ಎಂಬ ಮೆಸೇಜ್‌ ತೋರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. +ಸೈಬರ್‌ ಸೆಂಟರ್‌ ಮಾಲೀಕ ತನ್ನ ಮೊಬೈಲ್‌ ಪರಿಶೀಲಿಸಿಕೊಂಡಾಗ ಖಾತೆಗೆ ಬಾರದಿರುವುದು ಗೊತ್ತಾಗಿದೆ. ತಕ್ಷಣ ಸಿಸಿಟಿವಿಯನ್ನು ಪರಿಶೀಲಿಸಿದಾಗ ವಂಚಕನ ಮೋಸದಾಟ ಸೆರೆಯಾಗಿರುವುದು ಗಮನಕ್ಕೆ ಬಂದು ಆ ವಿಡಿಯೋವನ್ನು ತನ್ನ ಎಕ್ಸ್ ಖಾತೆಯಲ್ಲಿ ಅಪ್ಲೋಡ್‌ ಮಾಡಿ, ಯಾರೂ ಸಹ ಈ ರೀತಿ ಮೋಸ ಹೋಗದಿರಿ ಎಂದು ಅವಲತ್ತುಕೊಂಡಿದ್ದಾರೆ. +ಈ ವಂಚಕ ಈ ಅಂಗಡಿಯಷ್ಟೇ ಅಲ್ಲದೆ, ಅಂದ್ರಹಳ್ಳಿ, ತಿಗಳರ ಪಾಲ್ಯ, ಡಿಗ್ರೂಪ್‌ ಸುತ್ತಮುತ್ತ ಅಂಗಡಿ ಮಾಲೀಕರಿಗೆ ವಂಚಿಸಿದ್ದಾನೆಂದು ಅವರು ತಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಂತಹ ಖದೀಮರು ಏನಾದರೂ ನಿಮ ಸುತ್ತಮುತ್ತವಿದ್ದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿರಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_50_4.txt b/eesanje/url_46_50_4.txt new file mode 100644 index 0000000000000000000000000000000000000000..4b1f6e2304ce46b5e156776b41322362b1990ef6 --- /dev/null +++ b/eesanje/url_46_50_4.txt @@ -0,0 +1,5 @@ +, ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯ ಅಂತಿಮ ಅಂಕಪಟ್ಟಿ ಪ್ರಕಟ +ಬೆಂಗಳೂರು, ಆ.10-ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಬಿಎಂಟಿಸಿ(ನಿರ್ವಾಹಕರು-ಕಲ್ಯಾಣ ಕರ್ನಾಟಕ), ಕೆಯುಡಬ್ಲ್ಯುಎಸ್‌‍ಡಿಬಿ (ಪ್ರಥಮದರ್ಜೆ ಸಹಾಯಕರು) ಮತ್ತು ಕೆಕೆಆರ್‌ಟಿಸಿ ಸಂಸ್ಥೆಗಳಲ್ಲಿನ ಖಾಲಿ ರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯ ಅಂತಿಮ ಅಂಕಟ್ಟಿಯನ್ನು ಪ್ರಕಟಿಸಲಾಗಿದೆ. +ಕೆಇಎ ವೆಬ್‌ಸೈಟಿನಲ್ಲಿ ಅಂತಿಮ ಅಂಕ ಪಟ್ಟಿ ಪ್ರಕಟಿಸಿದ್ದು, ಸಂಬಂಧಪಟ್ಟ ಸಂಸ್ಥೆಗಳಿಗೆ ಅಂತಿಮ ಅಂಕಪಟ್ಟಿ ಹಸ್ತಾಂತರಿಸಲಾಗುವುದು. ಆಯಾ ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಿವೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ. +ಈ ಮೂರು ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಸ್ಪರ್ಧಾತಕ ಪರೀಕ್ಷೆಯನ್ನು ಕೆಇಎ ಜುಲೈ 13 ಮತ್ತು 14ರಂದು ನಡೆಸಿ, ಜು.16ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿತ್ತು.ಜು.18ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿದ್ದು, +ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ಜು.24ರಂದು ಪ್ರಕಟಿಸಲಾಗಿತ್ತು. ತಾತ್ಕಾಲಿಕ ಅಂಕಪಟ್ಟಿಯ ಬಗ್ಗೆ ಆ.3ರವರೆಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಂಕಪಟ್ಟಿ ಪ್ರಕಟಿಸಿರುವುದಾಗಿ ಕೆಇಎ ತಿಳಿಸಿದೆ. \ No newline at end of file diff --git a/eesanje/url_46_50_5.txt b/eesanje/url_46_50_5.txt new file mode 100644 index 0000000000000000000000000000000000000000..1a8c05cf3581da7d8d955903d0ceeb4d98dda6f8 --- /dev/null +++ b/eesanje/url_46_50_5.txt @@ -0,0 +1,6 @@ +ಕಾಲಕಾಲಕ್ಕೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ +ಬೆಂಗಳೂರು,ಆ.10-ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ನಿಧನ, ನಿವೃತ್ತಿ ಮತ್ತಿತರ ಕಾರಣಗಳಿಂದ ಖಾಲಿಯಾಗುವ ಹುದ್ದೆಗಳನ್ನು ಕಾಲಕಾಲಕ್ಕೆ ಭರ್ತಿ ಮಾಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್‌ ನಿರ್ದೇಶನ ನೀಡಿದೆ.ಕೇಂದ್ರ ಸರ್ಕಾರದ ಅಧೀನದ ಎಲ್‌ಐಸಿ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌‍.ದೀಕ್ಷಿತ್‌ ಹಾಗೂ ನ್ಯಾಯಮೂರ್ತಿ ವಿಜಯಕುಮಾರ್‌ ಎ. ಪಾಟೀಲ್‌ ಅವರಿದ್ದ ಧಾರವಾಡ ವಿಭಾಗೀಯ ಪೀಠ ಈ ಆದೇಶ ನೀಡಿದೆ. +ಸಿಬ್ಬಂದಿಗಳ ನಿಧನ, ನಿವೃತ್ತಿ ಅಥವಾ ವಜಾಗೊಳಿಸಿದ ಪ್ರಕರಣಗಳಲ್ಲಿ ಹುದ್ದೆಗಳು ಖಾಲಿಯಾಗುತ್ತಿರುತ್ತವೆ. ಅವುಗಳನ್ನು ಅನಿರ್ಧಿಷ್ಟಾವಧಿಗೆ ಹಾಗೆಯೇ ಬಿಟ್ಟರೆ ಅದು ಸಾರ್ವಜನಿಕ ಆಡಳಿತದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಹಲವು ಅರ್ಹರು ಅನರ್ಹರಾಗಬೇಕಾಗುತ್ತದೆ. ಅವರ ವಯೋಮಿತಿ ಮೀರುತ್ತದೆ. +ಕಾಲಕಾಲಕ್ಕೆ ನೇಮಕಾತಿ ಪ್ರಕ್ರಿಯೆ ನಡೆಯದ ಹಿನ್ನೆಲೆಯಲ್ಲಿ ಉದ್ಯೋಗಕ್ಕೆ ಅರ್ಹರಾಗಿರುವ ಯುವಜನಾಂಗ ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆ ಮಾಡದಿರುವುದರಿಂದ ಸಂವಿಧಾನ ಖಾತ್ರಿ ಪಡಿಸಿರುವ ಸಾರ್ವಜನಿಕ ಉದ್ಯೋಗದ ಅವಕಾಶದಿಂದ ಬಹುದೊಡ್ಡ ಸಂಖ್ಯೆಯ ಯುವಜನತೆ ವಂಚಿತವಾಗಬೇಕಾಗುತ್ತದೆ ಎಂದು ತನ್ನ ಆದೇಶದಲ್ಲಿ ಹೇಳಿದೆ.ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇಡೀ ವ್ಯವಸ್ಥೆಯನ್ನು ಕಾಡುತ್ತಿದೆ. ಈ ಕಾಲಘಟ್ಟದಲ್ಲಿ ಖಾಲಿ ಹುದ್ದೆಗಳಿಗೆ ನಿಯಮಿತವಾಗಿ ಭರ್ತಿ ಮಾಡುವಂತಹ ಕೆಲಸ ಆಗಬೇಕು. +ಎಲ್‌ಐಸಿ ಸರ್ಕಾರಿ ಒಡೆತನದ ಸಂಸ್ಥೆಯಾಗಿದೆ. ಅದು ಮಾದರಿ ಉದ್ಯೋಗದಾತರಂತೆ ನಡೆದುಕೊಳ್ಳಬೇಕು. ಖಾಸಗಿ ಸಂಸ್ಥೆಗಳಂತೆ ನಿರ್ಲಕ್ಷದಿಂದ ವರ್ತಿಸಬಾರದು. ನಿಗದಿಯಂತೆ ನೇಮಕ ಪ್ರಕ್ರಿಯೆ ನಡೆಸಬೇಕೆಂದು ನ್ಯಾಯಾಲಯ ತಿಳಿಸಿದೆ. +ಪ್ರಕರಣದ ಹಿನ್ನೆಲೆ :ಎಲ್‌ಐಸಿಯಲ್ಲಿ 2020 ರ ಜ.14 ರಿಂದ 2022 ರ ಜ.14 ರ ಅವಧಿಯಲ್ಲಿ ಖಾಲಿಯಾಗಿದ್ದ ಹುದ್ದೆಗೆ ಧಾರವಾಡದ ಮಾಳಮಡ್ಡಿಯ ಸೌರಭ್‌ ಅವರನ್ನು ನೇಮಕ ಮಾಡುವಂತೆ ಹೈಕೋರ್ಟ್‌ ಏಕಸದಸ್ಯ ಪೀಠ 2024 ರ ಫೆ.14 ರಂದು ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲನವಿಯನ್ನು ಆಲಿಸಿದ್ದ ನ್ಯಾಯಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿದೆ. \ No newline at end of file diff --git a/eesanje/url_46_50_6.txt b/eesanje/url_46_50_6.txt new file mode 100644 index 0000000000000000000000000000000000000000..e7a39ac363536d2f05a834af3859e2006a85e87d --- /dev/null +++ b/eesanje/url_46_50_6.txt @@ -0,0 +1,7 @@ +ವಾಲ್ಮೀಕಿ ನಿಗಮ ಹಗರಣದ ಆರೋಪಿ ಸತ್ಯನಾರಾಯಣನನ್ನ ಇಡಿ ವಶಕ್ಕೆ ನೀಡಲು ಹೈಕೋರ್ಟ್‌ ಆದೇಶ +ಬೆಂಗಳೂರು,ಆ.10-ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸತ್ಯನಾರಾಯಣ ವರ್ಮ ಅವರನ್ನು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕೆಂದು ಎಸ್‌‍ಐಟಿಗೆ ಹೈಕೋರ್ಟ್‌ ಆದೇಶಿಸಿದೆ. +ಆ.2 ರಂದು ಸತ್ಯನಾರಾಯಣ ವರ್ಮ ಅವರನ್ನು ಎಸ್‌‍ಐಟಿ ಕಸ್ಟಡಿಗೆ ನೀಡಿರುವ ಆದೇಶ ರದ್ದುಪಡಿಸುವಂತೆ ಕೋರಿ ಇ.ಡಿ. ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ತನಿಖೆಗಾಗಿ ಆ.13 ರಂದು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡುವಂತೆ ಆದೇಶ ನೀಡಿದ್ದಾರೆ. +ಸತ್ಯನಾರಾಯಣವರ್ಮ ಅವರ ಎಸ್‌‍ಐಟಿ ಕಸ್ಟಡಿ ಆ.12 ರಂದು ಮುಗಿಯುತ್ತದೆ. 13 ರಂದು ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸುವ ಸಂಬಂಧ ತನಿಖಾಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ನ್ಯಾಯಪೀಠ ಸೂಚನೆ ನೀಡಿದೆ. +ಇ.ಡಿ. ಪರ ವಾದ ಮಂಡಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದ ಪ್ರಸನ್ನಕುಮಾರ್‌ರವರು ವರ್ಮ ವಿರುದ್ಧ ಇ.ಡಿ. ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿರುವುದು ಬಾಕಿ ಇರುವಾಗ ಅದನ್ನು ಈ ರೀತಿ ಮಾಡಲಾಗುವುದು. ವಿಶೇಷ ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿದೆ ಎಂದು ಪೀಠಕ್ಕೆ ವಿವರಣೆ ನೀಡಿದರು. +ಎಸ್‌‍ಐಟಿ ಪರವಾಗಿ ಹಾಜರಾಗಿದ್ದ ಸರ್ಕಾರಿ ವಿಶೇಷ ಅಭಿಯೋಜಕ ಬಿ.ಎನ್‌.ಜಗದೀಶ್‌ ಅವರು ವಾದ ಮಂಡಿಸಿ ಆ.22 ರಂದು ಇ.ಡಿ. ನ್ಯಾಯಾಲಯವು ಬಾಡಿ ವಾರಂಟ್‌ಗೆ ಆದೇಶ ಮಾಡಿದಾಗ ಇ.ಡಿ. ವಕೀಲರು ವರ್ಮ ಪೊಲೀಸ್‌‍ ಕಸ್ಟಡಿಯಲ್ಲಿದ್ದಾರೆಂದು ಸಂಬಂಧಿತ ನ್ಯಾಯಾಲಯಕ್ಕೆ ತಿಳಿಸಿಲ್ಲ. ಈಗ ವರ್ಮ ಅವರ ಕಸ್ಟಡಿ ಅವಧಿ ಆ.12 ಕ್ಕೆ ಮುಗಿಯುತ್ತದೆ. ಆನಂತರ ಇ.ಡಿ. ವಶಕ್ಕೆ ತೆಗೆದುಕೊಳ್ಳಬಹುದು ಎಂದರು. +ಉಳೆದೆಲ್ಲಾ ಆರೋಪಿಗಳನ್ನೂ ಅವರ ಕಸ್ಟಡಿಗೆ ಪಡೆದಿದ್ದಾರೆ. ಸದ್ಯ ಈ ಪ್ರಕರಣದಲ್ಲಿ 49 ಕೋಟಿ ರೂ. ಜಪ್ತಿ ಮಾಡಿದ್ದೇವೆ. ಇನ್ನೂ 30 ಕೋಟಿ ಜಪ್ತಿ ಮಾಡಬೇಕಾಗಿದೆ. ಸತ್ಯನಾರಾಯಣ ವರ್ಮ ಅವರೇ ಹಗರಣದ ಪ್ರಮುಖ ಆರೋಪಿಯೆಂದು ಹೇಳಿದರು. \ No newline at end of file diff --git a/eesanje/url_46_50_7.txt b/eesanje/url_46_50_7.txt new file mode 100644 index 0000000000000000000000000000000000000000..42e14fa9ce531b0f48a324c1589c6be6e739f152 --- /dev/null +++ b/eesanje/url_46_50_7.txt @@ -0,0 +1,7 @@ +ನಾಳೆ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ +ಬೆಂಗಳೂರು,ಆ.9-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡ ಬೇಕೆಂದು ಆಗ್ರಹಿಸಿ ಎನ್ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಳೆ ಮುಕ್ತಾಯವಾಗಲಿದೆ. +ಆ.3ರಂದು ಮುಡಾ ಹಗರಣ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನಿಂದ ಜಂಟಿ ಪಾದಯಾತ್ರೆಯನ್ನು ಬಿಜೆಪಿ ಜೆಡಿಎಸ್ ಆರಂಭಿಸಿದ್ದವು. +ಬೆಂಗಳೂರಿನಿಂದ ಶ್ರೀರಂಗಪಟ್ಟಣದವರೆಗೆ 100 ಕಿ.ಮೀ ಪಾದಯಾತ್ರೆಯನ್ನು ಮಿತ್ರ ಪಕ್ಷಗಳು ಪೂರ್ಣಗೊಳಿಸಿವೆ. ಇಂದು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಪಾದಯಾತ್ರೆ ತೆರಳಲಿದೆ. +ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪಾದ ಯಾತ್ರೆಯ ಅದ್ಧೂರಿ ಸಮಾರೋಪ ಸಮಾರಂಭ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಸೇರಿದಂತೆ ಉಭಯ ಪಕ್ಷಗಳ ನಾಯಕತ ನೇತೃತ್ವದಲ್ಲಿ ಪಾದಯಾತ್ರೆಯನ್ನು ಆರಂಭಿಸಲಾಗಿತ್ತು. +ಪಾದಯಾತ್ರೆಯುದ್ದಕ್ಕೂ ಎರಡು ಪಕ್ಷಗಳ ನಾಯಕರು, ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹಗರಣಗಳ ಆರೋಪದ ಲಕಗಳನ್ನು ಪ್ರದರ್ಶಿಸಿ ಸಾಗಿದರು. ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಉಭಯ ಪಕ್ಷಗಳ ನಾಯಕರು ಪ್ರತಿದಿನ ನಡೆದ ಬಹಿರಂಗ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಮುಖ್ಯಮಂತ್ರಿ ರಾಜೀನಾಮೆ ನೀಡುವಂತೆ ಪಟ್ಟು ಹಿಡಿದು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಪಾದಯಾತ್ರೆಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ಮೈಸೂರಿನಲ್ಲಿ ನಡೆಯುವ ಸಮಾರೋಪವನ್ನು ಬೃಹತ್ ಮಟ್ಟದಲ್ಲಿ ನಡೆಸಲು ಮಿತ್ರ ಪಕ್ಷಗಳು ಉದ್ದೇಶಿಸಿವೆ. \ No newline at end of file diff --git a/eesanje/url_46_50_8.txt b/eesanje/url_46_50_8.txt new file mode 100644 index 0000000000000000000000000000000000000000..bcb6191f1ead142ea6c4a5c0d4d8911acfb1de17 --- /dev/null +++ b/eesanje/url_46_50_8.txt @@ -0,0 +1,21 @@ +ನಾನು ಸುಮ್ಮನೆ ಕೂರುವವನಲ್ಲ : ಬಿಜೆಪಿ-ಜೆಡಿಎಸ್ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು +ಮೈಸೂರು ಆ 9:ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು. +ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು. +ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ , ಜೆಡಿಎಸ್ ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು. +ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ ಎಂದರು.ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. +ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು. +ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು. +ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು. +ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಘಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ ಎಂದರು. +ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ ಎಂದರು. +ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಯವರು ತನಿಖೆ ನಡೆಸಿದ್ದಾರೆ. ಆದರೂ ಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು ಎಂದು ಆಕ್ರೋಶ ವ್ಯಕ್ತಪಡಿಸಿದರು. +ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು. +ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ?ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು. +ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ಪ್ರಶ್ನಿಸಿದರು. +15 ಬಜೆಟ್ ಮಂಡಿಸಿದವನು ನಾನು. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ. ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. +ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮಬೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು. +ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ ಎಂದರು. +ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು. +ಹೇಳಿ, ಇದರಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನು ಹೇಳಿ? ನಾನು ತಪ್ಪು ಮಾಡಿದ್ದೀನಾ ಹೇಳಿ ಎಂದು ಪ್ರಶ್ನಿಸಿದರು. +ನಮ್ಮ ಜಮೀನು ಪಡೆದು ಸೈಟು, ಪಾರ್ಕು ಮಾಡಿ, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮೂಡಾ ಎನ್ನುತ್ತಾ ಮುಡಾ ಸೈಟು ಹಂಚಿಕೆಯಲ್ಲಿ ಮೂಡಾ ಮಾಡಿರುವ ಲೋಪಗಳನ್ನು ವಿವರಿಸಿದರು. diff --git a/eesanje/url_46_50_9.txt b/eesanje/url_46_50_9.txt new file mode 100644 index 0000000000000000000000000000000000000000..7309f908b8af28664f4f305d0de721b14521919b --- /dev/null +++ b/eesanje/url_46_50_9.txt @@ -0,0 +1,5 @@ +ಸಿಎಂ ಮನೆಗೆ ಹೋಗುವ ಕಾಲ ಹತ್ತಿರ : ಬಿಎಸ್ವೈ +ಮೈಸೂರು, ಆ.9-ಯಾರು ನಿವೃತ್ತಿಯಾಗ್ತಾರೆ, ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡಸಿದ್ದಾರೆ.ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಭಾಗಿಯಾಗಲು ಮೈಸೂರಿಗೆ ಆಗಮಿಸಿದ ಯಡಿಯೂರಪ್ಪ ಅವರು ಚಾಮುಂಡೇಶ್ವರಿ ದರ್ಶನ ಪಡೆದು ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. +ಸಿದ್ದರಾಮಯ್ಯ ಅವರು ನನ್ನ ನಿವೃತ್ತಿ ಮಾತನಾಡಿದ್ದಾರೆ ,ಯಾರು ಏನಾಗ್ತಾರೆ ಅಂತಾ ಮುಂದೆ ಗೊತ್ತಾಗುತ್ತದೆ. ಅವರು ನಿವೃತ್ತಿ ಪಡೆಯುವಾಗ ಇನ್ನೊಬ್ಬರ ಬಗ್ಗೆ ಹೇಳೋದು ಸ್ವಾಭಾವಿಕ. ಅರೀಗ ಮನಬಂದಂತೆ ಮಾತಾಡುತ್ತಿದ್ದಾರೆ, ಮಾತಾಡಲಿ ಎಂದು ಗುಡುಗಿದರು. +ನಾಳೆ ಮೂರು ಲಕ್ಷಕ್ಕೂ ಅಧಿಕ ಜನ ನಮ್ಮ ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಾರೆ. ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ತಾ ಇದೆ. ಭ್ರಷ್ಟ ಸರ್ಕಾರ ಕಿತ್ತೋಗೆಯಲು ಪಾದಯಾತ್ರೆ ಮಾಡ್ತಾ ಇದ್ದೀವಿ. ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು. +ಪೊಕ್ಸೋ ಕೇಸ್ನಲ್ಲಿ ನಾಳೆ ಕೋರ್ಟ್ನಲ್ಲಿ ತೀರ್ಮಾನ ಆದಾಗ ಎಲ್ಲಾ ಬಹಿರಂಗವಾಗುತ್ತೆ. ಅಲ್ಲಿಯವರೆಗೆ ನಾನು ಏನು ಮಾತಾಡಲ್ಲ. ಅದಾದ ಬಳಿಕ ಸಿದ್ದರಾಮಯ್ಯಗೆ ಉತ್ತರ ಸಿಗುತ್ತೆ. ಅವರು ಹತಾಶೆಯ ಮನೋಭಾವದಲ್ಲಿ ಇರೋದನ್ನು ಜನರೇ ತೀರ್ಮಾನ ಮಾಡ್ತಾರೆ ಎಂದರು.ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಆದರೆ ತಮ್ಮ ಪತ್ನಿಗೆ ಬೆಲೆ ಬಾಳುವ ಸೈಟ್ಗಳನ್ನು ಕೊಟ್ಟಿದ್ದಾರೆ ಎಂದರು. \ No newline at end of file diff --git a/eesanje/url_46_51_1.txt b/eesanje/url_46_51_1.txt new file mode 100644 index 0000000000000000000000000000000000000000..15bd9e13ec541e05b1587bd21790097e8a3998c8 --- /dev/null +++ b/eesanje/url_46_51_1.txt @@ -0,0 +1,5 @@ +ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿ ಕುರಿತು ಗಡ್ಕರಿ ಜೊತೆ ದೇವೇಗೌಡರ ಚರ್ಚೆ +ನವದೆಹಲಿ, ಅ.9-ಶಿರಾಡಿ ಘಾಟ್‌ ರಸ್ತೆ ಸೇರಿದಂತೆ ರಾಜ್ಯದ ಹೆದ್ದಾರಿ ಯೋಜನೆಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಕೇಂದ್ರದ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಜತೆ ಮಾತುಕತೆ ನಡೆಸಿದ್ದಾರೆ. +ಈ ವೇಳೆ ಮಾಜಿ ಪ್ರಧಾನಿಯ ಬೇಡಿಕೆಗೆ ಸಕಾರಾತಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಕರ್ನಾಟಕ ಸರ್ಕಾರ ಅಲ್ಪ ಪ್ರಮಾಣದ ಅರಣ್ಯ ಭೂಮಿ ನೀಡಿದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ. +ಈ ಯೋಜನೆಗೆ ಕೆಲವು ಸಾವಿರ ಕೋಟಿಗಳಷ್ಟು ಹಣ ಹೂಡಿಕೆ ಮಾಡಲು ತಮ ಇಲಾಖೆ ಪರಿಗಣಿಸುವುದು ಎಂದು ನಿತಿನ್‌ ಗಡ್ಕರಿ ಅವರು ದೇವೇಗೌಡರಿಗೆ ಭರವಸೆ ನೀಡಿದ್ದಾರೆ. +ಅಭಿವೃದ್ಧಿ ಯೋಜನೆಯು ಸುರಂಗ ತಂತ್ರಜ್ಞಾನ ಬಳಸುವುದನ್ನು ಒಳಗೊಂಡಿರುತ್ತದೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸ್ಪಂದಿಸಬೇಕು ಎಂದು ಸಚಿವರು ಹೇಳಿದ್ದಾರೆ. ಈ ಮಾಹಿತಿಯನ್ನು ಮಾಜಿ ಪ್ರಧಾನಿ ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. \ No newline at end of file diff --git a/eesanje/url_46_51_10.txt b/eesanje/url_46_51_10.txt new file mode 100644 index 0000000000000000000000000000000000000000..d7b332c465f1a1650310e11dd7fe7ce70cfba4d5 --- /dev/null +++ b/eesanje/url_46_51_10.txt @@ -0,0 +1,6 @@ +ಆಗಸ್ಟ್‌ನಲ್ಲಿ ತಗ್ಗಿದ ಮಳೆ ಪ್ರಮಾಣ : ನದಿಗಳ ಪ್ರವಾಹವೂ ಇಳಿಕೆ +ಬೆಂಗಳೂರು,ಆ.8- ಜುಲೈನಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಆಗಸ್ಟ್‍ನಲ್ಲಿ ಮಂಕಾಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನದಿಗಳ ಪ್ರವಾಹವು ಇಳಿಕೆಯಾಗಿದೆ. ತುಂಗಭದ್ರಾ, ಕೃಷ್ಣ ನದಿ ಹೊರತುಪಡಿಸಿ ಬಹುತೇಕ ನದಿಗಳ ಅಬ್ಬರ ತಗ್ಗಿದೆ. ಇದರಿಂದ ಪ್ರಮುಖ ಜಲಾಶಯಗಳ ಒಳಹರಿವು ಗಣನೀಯವಾಗಿ ಇಳಿಕೆಯಾಗಿದ್ದು, ಹೊರಹರಿವು ಕೂಡ ಕಡಿಮೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆ ಮುಂದುವರೆಯಲಿದೆ. ಆದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. +ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಒಂದೆರೆಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಆ.1 ರಿಂದ ಇಲ್ಲಿವರೆಗೆ ಮಳೆ ಪ್ರಮಾಣ ಇಲ್ಲಿಯವರೆಗೆ 76 ಮಿ.ಮೀ. ಮಳೆಯಾಗಿದೆ. +ಈ ಅವಧಿಯಲ್ಲಿ 67 ಮಿ.ಮೀ. ವಾಡಿಕೆ ಪ್ರಮಾಣದ ಮಳೆ ರಾಜ್ಯದಲ್ಲಿದ್ದು, ವಾಡಿಕೆಗಿಂತ ಶೇ. 15ರಷ್ಟು ಹೆಚ್ಚು ಮಳೆಯಾಗಿದೆ. ಜೂನ್‍ನಿಂದ ಇಲ್ಲಿವರೆಗೆ 537 ಮಿ.ಮೀ. ವಾಡಿಕೆ ಮಳೆ ಪ್ರಮಾಣವಿದ್ದು, 688 ಮಿ.ಮೀ.ನಷ್ಟು ಮಳೆಯಾಗಿದೆ. ಅಂದರೆ ವಾಡಿಕೆಗಿಂತ ಶೇ.28 ರಷ್ಟು ಹೆಚ್ಚು ಮಳೆಯಾಗಿದೆ. ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ತುಂಗಾ, ಭದ್ರಾ, ಶರಾವತಿ, ಕಾವೇರಿ, ಹೇಮಾವತಿ, ಕಬಿನಿ ನದಿಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಆತಂಕದ ಸ್ಥಿತಿ ದೂರವಾಗಿದೆ. +ಆರ್ಭಟಿಸುತ್ತಿದ್ದ ಮಳೆ ಕಳೆದ ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಶಾಂತವಾಗಿದೆ. ಚದುರಿದಂತೆ ಮಳೆಯಾಗುತ್ತಿದ್ದರೂ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷ್ಣ ನದಿಯ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಆಲಮಟ್ಟಿಗೆ 2.77 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ. ಅದೇ ರೀತಿ ನಾರಾಯಣಪುರ ಜಲಾಶಯಕ್ಕೂ 2 ಲಕ್ಷ ಕ್ಯೂಸೆಕ್ಸ್‍ಗೂ ಹೆಚ್ಚು ನೀರು ಹರಿದುಬರುತ್ತಿದೆ. ತುಂಗಭದ್ರಾ ಜಲಾಶಯಕ್ಕೂ 57 ಸಾವಿರ ಕ್ಯೂಸೆಕ್ಸ್ ಹೆಚ್ಚು ನೀರು ಹರಿದುಬರುತ್ತಿದೆ. +ಈಗಾಗಲೇ ಈ ಮೂರೂ ಜಲಾಶಯಗಳು ಭರ್ತಿಯ ಹಂತ ತಲುಪಿರುವುದರಿಂದ ಭಾರಿ ಪ್ರಮಾಣದಲ್ಲಿ ಜಲಾಶಯದಿಂದ ನದಿಗಳಿಗೆ ನೀರು ಬಿಡಲಾಗುತ್ತಿದೆ. ಇದರಿಂದ ಜಲಾನಯನ ಭಾಗದಲ್ಲಿ ಪ್ರವಾಹದ ಭೀತಿ ಮುಂದುವರೆದಿದೆ. \ No newline at end of file diff --git a/eesanje/url_46_51_11.txt b/eesanje/url_46_51_11.txt new file mode 100644 index 0000000000000000000000000000000000000000..f136f5aae2c38af93ee1dfa63ce7be13a2069e30 --- /dev/null +++ b/eesanje/url_46_51_11.txt @@ -0,0 +1,6 @@ +ಫ್ಯಾಸಿಸ್ಟ್ ಮನಃಸ್ಥಿತಿಯ ಎನ್‍ಡಿಎ ಸರ್ಕಾರ : ಸಿಎಂ ವಾಗ್ದಾಳಿ +ಬೆಂಗಳೂರು,ಆ.8- ಬಿಜೆಪಿ ನೇತೃತ್ವದ ಎನ್‍ಡಿಎ ಕೇಂದ್ರ ಸರ್ಕಾರ ಅಲ್ಪಸಂಖ್ಯಾತರ ವಿರೋ„ಯಾಗಿದ್ದು, ಫ್ಯಾಸಿಸ್ಟ್ ಮನಃಸ್ಥಿತಿಯನ್ನು ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ ಬೋರ್ಡ್‍ನ ಅಧಿಕಾರವನ್ನು ಮೊಟಕುಗೊಳಿಸುವ ಮಸೂದೆಯನ್ನು ಸಂಸತ್‍ನಲ್ಲಿ ಮಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದರು. +ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಲ್ಪಸಂಖ್ಯಾತರ ವಿರೋಧಿ ಎಂಬುದನ್ನು ಈ ಮಸೂದೆ ಸಾಬೀತುಪಡಿಸುತ್ತದೆ. ಎನ್‍ಡಿಎ ಜಾತ್ಯತೀತ ನಿಲುವಿಗೆ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅವರು ಕೋಮುವಾದಿಗಳು ಎಂದು ಮುಖ್ಯಮಂತ್ರಿ ವಾಗ್ದಾಳಿ ನಡೆಸಿದರು.ಬಿ.ಕೆ.ಹರಿಪ್ರಸಾದ್ ನಮ್ಮ ಪಕ್ಷದ ನಾಯಕರು. ಅವರು ಭೇಟಿಯಾಗುವುದರಲ್ಲಿ ವಿಶೇಷ ಏನೂ ಇಲ್ಲ. ಬಹಳ ದಿನದಿಂದ ನಾವು ಭೇಟಿಯಾಗಿರಲಿಲ್ಲ. ಹೀಗಾಗಿ ಸುಮ್ಮನೇ ಪರಸ್ಪರ ಉಭಯ ಕುಶಲೋಪರಿ ಚರ್ಚಿಸಿದ್ದೇವೆ ಎಂದು ಹೇಳಿದರು. +ಜನಾಂದೋಲನದ ವಿಚಾರದ ಬಗ್ಗೆ ನಾಳೆ ಮೈಸೂರಿನಲ್ಲೇ ಮಾತನಾಡುವುದಾಗಿ ತಿಳಿಸಿದರು. ಇದಕ್ಕೂ ಮುನ್ನ ವಿಧಾನಸೌಧದ ಮುಂಭಾಗದಲ್ಲಿರುವ ಎಸ್.ನಿಜಲಿಂಗಪ್ಪ ಅವರ ಪ್ರತಿಮೆಗೆ ಪುಣ್ಯಸ್ಮರಣೆ ಅಂಗವಾಗಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಅವರು ತಮ್ಮ ಅಧಿಕಾರಾವಧಿಯುದ್ದಕ್ಕೂ ಕೆಲವು ಮೌಲ್ಯಗಳನ್ನು ಅಳವಡಿಸಿಕೊಂಡು ರಾಜಕೀಯ ಜೀವನ ನಡೆಸಿದರು. +ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದರೆ ಅದಕ್ಕೆ ನಿಜಲಿಂಗಪ್ಪ ಅಡಿಗಲ್ಲು ಹಾಕಿದ್ದೇ ಕಾರಣ. ದೇಶ ಮತ್ತು ರಾಜ್ಯದಲ್ಲಿ ಹೆಚ್ಚು ನೀರಾವರಿಯಾಗಿದ್ದರೆ ಅದಕ್ಕೆ ನಿಜಲಿಂಗಪ್ಪನವರ ದೂರದೃಷ್ಟಿಯೇ ಕಾರಣ. ಅವರ ಮಾರ್ಗದರ್ಶನಗಳು ನಮಗೆ ಸದಾ ಅನುಕರಣೀಯ. ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದು ಎಂದು ಹೇಳಿದರು. +ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್, ಮುಖಂಡರಾದ ಎಚ್.ಎಂ.ರೇವಣ್ಣ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಪ್ರಕಾಶ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_51_12.txt b/eesanje/url_46_51_12.txt new file mode 100644 index 0000000000000000000000000000000000000000..a1459c47f0e4c53252419e3330ce6c0b1afaf9f6 --- /dev/null +++ b/eesanje/url_46_51_12.txt @@ -0,0 +1,9 @@ +ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ : ವಿಪಕ್ಷಗಳಿಗೆ ಸಿದ್ದು ತಿರುಗೇಟು +ಮೈಸೂರು, ಆ.7-ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್‌ ಮಾಡಿ ಸರ್ಕಾರ ಅಸ್ಥಿರ ಮಾಡಲು ಬಿಜೆಪಿ- ಜೆಡಿಎಸ್‌‍ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ರಾಜ್ಯದ ಜನತೆ ಅವರ ಸುಳ್ಳನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ವಾಗ್ದಾಳಿ ನಡೆಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳುಗಳಿಂದ ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಇದರಲ್ಲಿ ಬಿಜೆಪಿ- ಜೆಡಿಎಸ್‌‍ ನವರು ಯಶಸ್ವಿಯಾಗಲ್ಲ. ಈ ಹಿಂದೆ ಆಪರೇಷನ್‌ ಕಮಲ ಮಾಡಿದ್ದರು. ಆದರೆ ಅದು ಯಶಸ್ವಿಯಾಗಲಿಲ್ಲ. ಈಗ ನನ್ನನ್ನು ಮತ್ತೆ ಟಾರ್ಗೆಟ್‌ ಮಾಡಿದ್ದಾರೆ ಎಂದು ನೇರವಾಗಿ ಟೀಕಿಸಿದರು. +ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟೀಸ್‌‍. ಅದಕ್ಕೆ ಉತ್ತರ ನೀಡಿದ್ದೇನೆ. ಈ ನಡುವೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ರವರು ರಾಜ್ಯಪಾಲರನ್ನು ಭೇಟಿ ಮಾಡಿರುವುದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. +ಕಾನೂನಾತಕವಾಗಿ ನನ್ನ ತಪ್ಪಿಲ್ಲ ಎಂದು ರಾಜ್ಯಪಾಲರಿಗೆ ಮನವರಿಕೆಯಾಗಿರುತ್ತದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ವಿಪಕ್ಷಗಳು ಎಷ್ಟೇ ಸುಳ್ಳು ಹೇಳಿದರೂ ಅದನ್ನು ಎದುರಿಸುವ ಶಕ್ತಿ ನನಗಿದೆ. ಈ ಹಿಂದೆ ಬಿಜೆಪಿ ಭ್ರಷ್ಟಸರ್ಕಾರ ಆಡಳಿತ ನಡೆಸಿತ್ತು. ಅದರ ತನಿಖೆ ನಡೆಯುತ್ತಿದೆ. +ಹೀಗಿರುವಾಗ ಯಾವ ನೈತಿಕತೆಯಿಂದ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಮತ್ತು ರಾಜೀನಾಮೆ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು.ಬಿಎಸ್‌‍ ಯಡಿಯೂರಪ್ಪ ಅವರು ಕೋರ್ಟ್‌ ದಯೆಯಿಂದ ಹೊರಗಿದ್ದಾರೆ. ಈ ಇಳಿ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ. ರಾಜಕೀಯ ನಿವೃತ್ತಿಯಾಗಬೇಕಿತ್ತು. +ಆದರೆ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ನೀಡುತ್ತಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಏನು ಹೇಳಬೇಕೋ ಗೊತ್ತಿಲ್ಲ ಎಂದು ಟೀಕಿಸಿದರು.ಕಳೆದ 2014ರಲ್ಲಿ ನಾನು ಸಿಎಂ ಆಗಿದ್ದಾಗ ನನ್ನ ಪತ್ನಿ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಮೂಡಾ ಅಧಿಕಾರಿಗಳೇ ನನ್ನ ಗಮನಕ್ಕೆ ತಂದಿದ್ದರು. ಆಗ ನಾನು ಒಂದು ಗುಂಟೆ ಜಾಗವನ್ನೂ ಕೊಡಬೇಡಿ ಎಂದು ಹೇಳಿದ್ದೆನೆಂದು ಇದೇ ವೇಳೆ ತಿಳಿಸಿದರು. +2021ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದಾಗ ಬಿಜೆಪಿ ಸರ್ಕಾರವಿತ್ತು. ಅವರು ಕಾನೂನು ರೀತಿಯಲ್ಲಿ ಬದಲಿ ನಿವೇಶನ ಕೊಟ್ಟಿದ್ದಾರೆ. ನಾನು ಸೈಟು ಪಡೆಯಬೇಕು ಎಂಬ ಉದ್ದೇಶವಿದ್ದಿದ್ದರೆ ಸಿಎಂ ಆಗಿದ್ದಾಗಲೇ ಸೈಟು ಕೊಡಿಸುತ್ತಿದ್ದೆ ಎಂದು ಸ್ಪಷ್ಟನೆ ನೀಡಿದರು. +ನಾನು ಯಾವುದೇ ಅಧಿಕಾರ ಪ್ರಭಾವ ಬಳಸಿಲ್ಲ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ. ಈಗಿನ ನನ್ನ ಮೇಲೆ ಬಂದಿರುವ ಆರೋಪಗಳೇ ಬೇರೆ ಎಂದು ಹೇಳಿದರು.ಮೈಸೂರಿನಲ್ಲಿ ಆ. 9ರಂದು ಬೃಹತ್‌ ಸಮಾವೇಶ ನಡೆಯಲಿದೆ. ಆ ಸಂದರ್ಭದಲ್ಲಿ ಎಲ್ಲರ ಹಗರಣಗಳನ್ನು ನಿಮ ಮುಂದೆ ಇಡುತ್ತೇನೆ ಎಂದು ಸಿಎಂ ಗುಡುಗಿದ್ದಾರೆ. \ No newline at end of file diff --git a/eesanje/url_46_51_2.txt b/eesanje/url_46_51_2.txt new file mode 100644 index 0000000000000000000000000000000000000000..ea470ea42dcc0befa9a7eee59abb9c24e5e3de57 --- /dev/null +++ b/eesanje/url_46_51_2.txt @@ -0,0 +1,9 @@ +ರಾಜ್ಯದೆಲ್ಲೆಡೆ ಮನೆಮಾಡಿದ ನಾಗರಪಂಚಮಿ ಸಂಭ್ರಮ +ಬೆಂಗಳೂರು,ಆ.9-ಎಲ್ಲೆಡೆ ನಾಗರಪಂಚಮಿಯ ಸಂಭ್ರಮ. ಹಿಂದೂ ಸಂಪ್ರದಾಯದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಕಲ್ಲಿನ ನಾಗಪ್ಪನಿಗೆ ಹಾಲೆರೆದು ಪೂಜಿಸುವ ವೈಶಿಷ್ಟ್ಯವಿದೆ. ಇಂದು ಶ್ರದ್ದಾಭಕ್ತಿಯಿಂದ ನಾಗಪ್ಪನಿಗೆ ಹಾಲು ಎರೆಯುವ ಮೂಲಕ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ನಾಗರಪಂಚಮಿಯನ್ನು ಆಚರಿಸಿದರು. +ಕುಕ್ಕೆ ಸುಬ್ರಹಣ್ಯೇಶ್ವರ ದೇವಸ್ಥಾನ, ದೊಡ್ಡಬಳ್ಳಾಪುರದ ಘಾಟಿ ಸುಬ್ರಹಣ್ಯ, ಕೆಂಗೇರಿಯ ಮುಕ್ತಿನಾಗ ದೇವಾಲಯ ಸೇರಿದಂತೆ ವಿವಿಧ ನಾಗದೇವಾಲಯಗಳಲ್ಲಿ ಭಕ್ತಿಭಾವದಿಂದ ನಾಗರಪಂಚಮಿಯನ್ನು ಆಚರಿಸಲಾಯಿತು. +ಕುಕ್ಕೆಸುಬ್ರಹಣ್ಯದಲ್ಲಿ ಶ್ರಾವಣ ಮಾಸದ ನಾಗಪಂಚಮಿಯಂದು ವಿಶೇಷ ಪೂಜೆಗಳು ಜರುಗಿದವು. ನಾಡಿನಾದ್ಯಂತ ಆಗಮಿಸಿದ ಭಕ್ತರು, ನಾಗಪೂಜೆ, ಮಂಡಲ ಪೂಜೆಗಳಲ್ಲಿ ಪಾಲ್ಗೊಂಡಿದ್ದರು. ರಾಜಧಾನಿ ಬೆಂಗಳೂರಿನ ಹಲವು ದೇವಾಲಯಗಳಲ್ಲೂ ಕೂಡ ನಾಗಾರಾಧನೆ ನಡೆಯಿತು. ಕಾಡು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿರುವ ನಾಗದೇವನಿಗೆ ನಾಗಪಂಚಮಿ ನಿಮಿತ್ತ ಮಹಿಳೆಯರು ಹಾಲೆರೆದು ಪೂಜೆ ಸಲ್ಲಿಸಿದರು. +ರಾಜ್ಯದ ಬಹುತೇಕ ಕಡೆ ಈ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಣೆ ಮಾಡಲಾಗುತ್ತದೆ. ಅದರಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ನಾಗರಪಂಚಮಿಗೆ ವಿಶೇಷ ಮಹತ್ವವಿದೆ. ಇಂದು ದೇವಾಲಯಗಳಲ್ಲಿರುವ ನಾಗರಕಲ್ಲು, ಹೊಲಗದ್ದೆಗಳಲ್ಲಿರುವ ಹುತ್ತ ಸೇರಿದಂತೆ ಹಲವೆಡೆ ತೆರಳಿ ಪೂಜೆ ಸಲ್ಲಿಸುವ ಮೂಲಕ ನಾಗರಪಂಚಮಿಯನ್ನು ಅಚರಿಸಲಾಯಿತು. +ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಯಚೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ನಾಗರಪಂಚಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಂಚಮಿಯ 2ನೇ ದಿನವಾದ ಇಂದು ಹೆಣ್ಣುಮಕ್ಕಳು ಶುಚಿರ್ಭೂತರಾಗಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ನಾಗಬನಗಳಿಗೆ ತೆರಳಿ ಸರತಿಯಲ್ಲಿ ನಿಂತು ಕಲ್ಲಿನ ನಾಗಪ್ಪನಿಗೆ ಹಾಲೆರೆದು ಸಂಭ್ರಮಿಸಿದರು. +ವಿವಿಧ ತರಹದ ಉಸ್ಲಿ ಉಂಡೆ ಭಕ್ಷ್ಯಗಳನ್ನು ನಾಗಪ್ಪನಿಗೆ ನೈವೇದ್ಯ ಮಾಡಲಾಯಿತು. ಜಿಟಿಜಿಟಿ ಮಳೆಯ ನಡುವೆಯೂ ಮಹಿಳೆಯರು ನಾಗಬನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಉತ್ತರ ಕರ್ನಾಟಕದ ಭಾಗದಲ್ಲಿ ನಾಗರಪಂಚಮಿಯನ್ನು ಮೂರು ದಿನಗಳ ಕಾಲ ಆಚರಿಸುತ್ತಾರೆ. +ಮೊದಲೆರಡು ದಿನ ಮನೆಯಲ್ಲಿ ಪಂಚಮಿ ಆಚರಿಸಿ ಮೂರನೇ ದಿನವಾದ ಇಂದು ನಾಗಬನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಅಲ್ಲದೆ ಜೋಕಾಲಿಗಳನ್ನು ಕಟ್ಟಿ ಆಡುವ ಮೂಲಕ ಸಂಭ್ರಮಿಸುತ್ತಾರೆ. +ಕಲಿಯುಗದಲ್ಲಿ ದೇವರುಗಳು ಪ್ರತ್ಯಕ್ಷವಾಗಿ ಮಾನವನ ಕಣ್ಣಿಗೆ ಕಾಣುವುದಿಲ್ಲ, ವಿಗ್ರಹ ರೂಪದಲ್ಲಿ, ಶಿಲ್ಪ ರೂಪದಲ್ಲಿ, ಚಿತ್ರ ರೂಪಗಳಲ್ಲಿ ಆರಾಧನೆಗೊಳಪಡುತ್ತವೆ. ಆದರೆ ನಾಗದೇವರು ಮಾತ್ರ ಬಿಂಬ, ಪ್ರತಿಬಿಂಬ ರೂಪದಲ್ಲಿ ನಮ ಕಣ್ಣಿಗೆ ಪ್ರತ್ಯಕ್ಷವಾಗಿ ಕಾಣುತ್ತದೆ. ಹಾಗಾಗಿ ಪ್ರತ್ಯಕ್ಷ ದೇವನ ಪೂಜೆಗೆ ಪ್ರಥಮ ಆದ್ಯತೆ ಸಲ್ಲುತ್ತದೆ. \ No newline at end of file diff --git a/eesanje/url_46_51_3.txt b/eesanje/url_46_51_3.txt new file mode 100644 index 0000000000000000000000000000000000000000..46ada709b14a8971c5ff11b942b0188646441227 --- /dev/null +++ b/eesanje/url_46_51_3.txt @@ -0,0 +1,7 @@ +ಅಸಮಾನತೆ ನಿಗ್ರಹಕ್ಕೆ ಸಂವಿಧಾನ ಶಕ್ತಿಯುತ ಸಾಧನ: +ನವದೆಹಲಿ,ಆ.8- ಅಸಮಾನತೆಯನ್ನು ನಿಗ್ರಹಿಸಲು ಸಂವಿಧಾನವು ಶಕ್ತಿಯುತ ಸಾಧನ ಮತ್ತು ಅಸಮಾನತೆಯ ವಿರುದ್ಧ ರಕ್ಷಿಸುವ ಉದ್ದೇಶದಿಂದ ಸಂಸ್ಥೆಗಳು ಮತ್ತು ರಚನೆಗಳನ್ನು ರಚಿಸುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. +ಸಂವಿಧಾನವು ಈ ಸಂಸ್ಥೆಗಳಲ್ಲಿ ತಪಾಸಣೆ ಮತ್ತು ಸಮತೋಲನವನ್ನು ಒದಗಿಸುತ್ತದೆ ಮತ್ತು ದೇಶದ ನಾಗರಿಕರಿಗೆ ಸಾಂಸ್ಥಿಕ ಆದ್ಯತೆಗಳು ಮತ್ತು ಕಟ್ಟುಪಾಡುಗಳನ್ನು ಸಹ ನಿಗದಿಪಡಿಸುತ್ತದೆ ಎಂದು ಅವರು ಹೇಳಿದರು. ಇಲ್ಲಿನ ಒಪಿ ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾನಿಲಯದ 13ನೇ ಘಟಿಕೋತ್ಸವ ಸಮಾರಂಭ ಮತ್ತು ಸಂಸ್ಥಾಪಕರ ದಿನಾಚರಣೆಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಜೆಐ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ಪ್ರಪಂಚದಲ್ಲಿ ಅದರ ಎಲ್ಲಾ ಅಂಶಗಳಲ್ಲಿ ಅನ್ಯಾಯವನ್ನು ಗುರುತಿಸುವಂತೆ ಉತ್ತೇಜಿಸಿದರು. +ಸಂವಿಧಾನವು ಅಂತಹ ಅಸಮಾನತೆಗಳನ್ನು ನಿಗ್ರಹಿಸಲು ಪ್ರಬಲ ಸಾಧನವಾಗಿದೆ. ಇದು ಅಸಮಾನತೆಗಳ ವಿರುದ್ಧ ರಕ್ಷಿಸಲು ಉದ್ದೇಶಿಸಿರುವ ಸಂಸ್ಥೆಗಳು ಮತ್ತು ರಚನೆಗಳನ್ನು ರಚಿಸುತ್ತದೆ – ಸ್ಪಷ್ಟ ಅಥವಾ ಅಗೋಚರ, ಅವರು ಹೇಳಿದರು.ಆ ಅರ್ಥದಲ್ಲಿ, ಇದು ಒಂದು ಸಮತಲ ಕಾರ್ಯವನ್ನು ನಿರ್ವಹಿಸುತ್ತದೆ – ಅದು ಅಂತರ್-ಸಾಂಸ್ಥಿಕ ಸಂಬಂಧಗಳನ್ನು ನಿಯಂತ್ರಿಸುತ್ತದೆ; ಮತ್ತು ಲಂಬವಾದ ಕಾರ್ಯ – ಇದು ರಾಜ್ಯ ಮತ್ತು ಜನರ ನಡುವಿನ ಸಂಬಂಧವನ್ನು ನಿಯಂತ್ರಿಸುತ್ತದೆ. ಆದರೆ ಇದು ಅಷ್ಟೆ ಅಲ್ಲ. +ಸಂವಿಧಾನವು ಮಾಡುತ್ತದೆ ಅದಕ್ಕಿಂತ ಹೆಚ್ಚು, ಇದು ನಮ್ಮ ಸಾಮಾಜಿಕ ರಚನೆಯಲ್ಲಿ ಈ ಮೌಲ್ಯಗಳನ್ನು ಭದ್ರಪಡಿಸುತ್ತದೆ, ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ಸಾಂವಿಧಾನಿಕ ಸಿದ್ಧಾಂತಿಗಳು ಪ್ರಜಾಪ್ರಭುತ್ವದ ಸ್ಥಿರತೆಯನ್ನು ಅವುಗಳ ಮೂಲ ತತ್ವಗಳ ಸ್ಥಿರತೆಗೆ ಕಾರಣವೆಂದು ಅವರು ಹೇಳಿದರು. +ಆದಾಗ್ಯೂ, ನಮ್ಮ ಪ್ರಜಾಪ್ರಭುತ್ವದಲ್ಲಿ ನಾವು ಲಘುವಾಗಿ ಪರಿಗಣಿಸುವ ಸಂಗತಿಯೆಂದರೆ, ನಮ್ಮ ಸಂವಿಧಾನವು ನಮ್ಮ ನಾಗರಿಕ ಜೀವನಕ್ಕೆ ಒದಗಿಸುವ ಸ್ಥಿರತೆಯಾಗಿದೆ. ಸಂವಿಧಾನದ ದೀರ್ಘಾಯುಷ್ಯವು ಕಟ್ಟುನಿಟ್ಟಾದ ರೂಢಿಯಾಗಿ ಮಾಡದೆ ಸಂವಿಧಾನದಲ್ಲಿ ಮೂಲಭೂತ ಅಂಶಗಳನ್ನು ಅಳವಡಿಸಲು ಸಾಕಷ್ಟು ಪೂರ್ವಭಾವಿಯಾಗಿದ್ದ ನಮ್ಮ ರಚನೆಕಾರರ ಬುದ್ಧಿವಂತಿಕೆಯನ್ನು ಹೇಳುತ್ತದೆ. , ಮತ್ತು ಹೀಗಾಗಿ ಒಂದು ದುರ್ಬಲ ದಾಖಲೆಅವರು ಹೇಳಿದರು. +ಸಂವಿಧಾನವು ನಮ್ಮ ಪ್ರಜಾಪ್ರಭುತ್ವಕ್ಕೆ ಗಟ್ಟಿಮುಟ್ಟಾದ ಬುನಾದಿಯಾಗಿದ್ದರೂ ಸಾಕಷ್ಟು ನಮ್ಯತೆಯನ್ನು ಹೊಂದಿದೆ ಎಂದು ಸಿಜೆಐ ಹೇಳಿದರು. ಉದಾಹರಣೆಗೆ, ಲಿಂಗದ ಆಧಾರದ ಮೇಲೆ ತಾರತಮ್ಯವನ್ನು ಕಾನೂನು ನಿಷೇ„ಸುತ್ತದೆ ಎಂದು ಅವರು ಹೇಳಿದರು.ಮಹಿಳಾ ಉದ್ಯೋಗಿಗಳು ಕೆಲವು ಸಂಸ್ಥೆಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸುವ ಕಾನೂನು, ಅವರ ಭದ್ರತೆಗೆ ಬೆದರಿಕೆಗಳನ್ನು ಎದುರಿಸುವುದು ಮೇಲ್ನೋಟಕ್ಕೆ ಮಾರಕವಲ್ಲ ಎಂದು ಸಿಜೆಐ ಹೇಳಿದರು. \ No newline at end of file diff --git a/eesanje/url_46_51_4.txt b/eesanje/url_46_51_4.txt new file mode 100644 index 0000000000000000000000000000000000000000..b4de62ee05b601672f3bad3aba28d3a5a22a5e27 --- /dev/null +++ b/eesanje/url_46_51_4.txt @@ -0,0 +1,6 @@ +650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್‍ಗಳ ನೇಮಕ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ +ಬೆಂಗಳೂರು, ಆ.8- ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‍ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. +ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅ„ಕಾರಿಗಳ ಜೊತೆ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. +ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‍ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈಯಕ್ತಿಕ ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುತ್ತಿವೆ. ಈ ಹುದ್ದೆಗಳನ್ನು ನಿಯಮದಂತೆ ಯಾವುದೇ ಮುಲಾಜಿಗೊಳಗಾಗದೇ ಭರ್ತಿ ಮಾಡಬೇಕೆಂದು ತಾಕೀತು ಮಾಡಿದ್ದಾರೆ. +ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಖಾಲಿ ಇರುವ ಹ್ದು?ಗಳಿಗೆ ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಅಗತ್ಯವಾದ ಸಹಕಾರ ನೀಡಬೇಕು ಜೊತೆಗೆ ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ. ಕೆಇಎ ಮೂಲಕ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸರಕಾರ ಕಳೆದೆರಡು ವರ್ಷಗಳ ಹಿಂದೆಯೇ ಕಳುಹಿಸಿತ್ತು. ಆದಾಗ್ಯೂ, ಸರಿಯಾದ ಸಿ ಅಂಡ್ ಆರ್ ನಿಯಮಗಳು, ರೋಸ್ಟರ್ ಸಿಸ್ಟಮ್ ಇಲ್ಲದಿದ್ದಲ್ಲಿ ಪರೀಕ್ಷೆಯನ್ನು ನಡೆಸುವುದು ಕಷ್ಟ ಎಂದು ಕೆಇಎ ಉತ್ತರಿಸಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ಅ„ಕಾರಿಗಳು ಸಚಿವರ ಗಮನಕ್ಕೆ ತಂದರು. +ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ದಾದಿಯರ ನೇಮಕಾತಿಗೆ ಅನ್ವಯವಾಗುವ ಸಿ ಮತ್ತು ಆರ್ ನಿಯಮಗಳನ್ನು ಅನುಸರಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ನೇಮಕಾತಿ ನಿಲುವಳಿಯನ್ನು ಕೆಇಎಗೆ ಹಸ್ತಾಂತರಿಸುವ ಸುಗಮ ಪ್ರಕ್ರಿಯೆಗಾಗಿ, ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಪಠ್ಯಕ್ರಮಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ಸಚಿವರು ವೈದ್ಯಕೀಯ ಶಿಕ್ಷಣ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರಿಗೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_51_5.txt b/eesanje/url_46_51_5.txt new file mode 100644 index 0000000000000000000000000000000000000000..9f96debfd7efd52ee5d910c7b2e0b7e9c92be1c1 --- /dev/null +++ b/eesanje/url_46_51_5.txt @@ -0,0 +1,8 @@ +ಉಮಾಶ್ರೀಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ +ಬೆಂಗಳೂರು,ಆ.8- ಕರ್ನಾಟಕ ನಾಟಕ ಅಕಾಡೆಮಿಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಹಾಗೂ ವಿಧಾನಪರಿಷತ್ ಸದಸ್ಯೆ ಉಮಾಶ್ರೀ ಸೇರಿದಂತೆ ಮೂವರಿಗೆ ನೀಡಲಾಗುತ್ತಿದೆ. ಅಲ್ಲದೆ 75 ವಾರ್ಷಿಕ ಪ್ರಶಸ್ತಿಗಳು ಮತ್ತು 15 ದತ್ತಿನಿಧಿ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜ ಮೂರ್ತಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ವೃತ್ತಿರಂಗಭೂಮಿಯ 30ಕ್ಕೂ ಹೆಚ್ಚು ಕಲಾವಿದರನ್ನು ವಾರ್ಷಿಕ ಪ್ರಶಸ್ತಿ ಮತ್ತು ದತ್ತಿನಿ„ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದರು. 2022, 2023 ಮತ್ತು 2024ನೇ ಸಾಲಿನ ಅಕಾಡೆಮಿಯ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ, ದತ್ತಿನಿ„ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರಶಸ್ತಿಗೆ ಗಣ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. +ಕರ್ನಾಟಕ ನಾಟಕ ಅಕಾಡೆಮಿ ಪುನರ್ ರಚನೆಯಾಗಿದ್ದು, 2024-25ನೇ ಸಾಲಿಗೆ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿದೆ. ಭಾರತೀಯ ರಂಗಭೂಮಿಯಲ್ಲಿಯೇ ಅತ್ಯಂತ ಕ್ರಿಯಾಶೀಲವಾಗಿರುವ ಕನ್ನಡ ರಂಗಭೂಮಿ ಕಳೆದ 5 ದಶಕಗಳಲ್ಲಿ ಸಾ„ಸಿರುವ ಯಶಸ್ಸು ಅತ್ಯಂತ ಮಹತ್ತರವಾದುದು. ಈಗಾಗಲೇ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ತನ್ನದೇ ಆದ ಮಹತ್ತರವಾದ ಕೊಡುಗೆಗಳ ಮೂಲಕ ಶ್ರೀಮಂತವಾಗಿರುವ ರಂಗಭೂಮಿಗೆ ಕೊಡುಗೆ ಕೊಟ್ಟವರನ್ನು ಗುರುತಿಸಿ, ಕರ್ನಾಟಕ ಸರ್ಕಾರ ನಾಟಕ ಅಕಾಡೆಮಿಯ ಮೂಲಕ ಪ್ರತಿವರ್ಷ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದೆ ಎಂದರು. +ಈ ನಿಟ್ಟಿನಲ್ಲಿ ಪ್ರಸ್ತುತ 2022-23, 2023-24 ಮತ್ತು 2024-25ನೇ ಸಾಲಿನ ಪ್ರಶಸ್ತಿಗಳನ್ನು ನೀಡಬೇಕಾಗಿದ್ದು, ಆ.3ರಂದು ನಡೆದ ಅಕಾಡೆಮಿಯ ಸರ್ವಸದಸ್ಯರ ಸಭೆಯಲ್ಲಿ ಕಲಾವಿದರನ್ನು ಮತ್ತು ನಾಟಕಕಾರರನ್ನು ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ. ವರ್ಷದ ಪ್ರಶಸ್ತಿಗಳನ್ನು ಬಹುತೇಕ ಎಲ್ಲಾ ಜಿಲ್ಲೆಗಳನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಲಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಜಿಲ್ಲಾವಾರುಗಳಿಗೆ ಅನ್ವಯವಾಗುವಂತೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ವಿಶೇಷವಾಗಿ ಈ ಸಾಲಿನಲ್ಲಿ ಯುವಪ್ರಶಸ್ತಿ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರಶಸ್ತಿಗೆ ಆಯ್ಕೆ ಮಾಡುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು. +ಈ ಮೂರು ವರ್ಷಗಳಿಗೆ 3 ಕಲಾವಿದರನ್ನು ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, 2022ನೇ ಸಾಲಿಗೆ ಪ್ರಖ್ಯಾತ ನಟಿ ಉಮಾಶ್ರೀ, 2023ನೇ ಸಾಲಿಗೆ ನಾಟಕಕಾರ ಹೆಚ್.ಎಸ್.ಶಿವಪ್ರಕಾಶ್ ಹಾಗೂ 2024ನೇ ಸಾಲಿಗೆ ಪ್ರಸಿದ್ಧ ರಂಗಸಂಘಟಕ, ನಾಟಕಕಾರ ಮತ್ತು ಕೋಲಾರದ ಆದಿಮ ಸಾಂಸ್ಕೃತಿಕ ಪ್ರತಿಷ್ಠಾನದ ರೂವಾರಿ ಕೆ.ರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. +ಹಾಗೆಯೇ ವಾರ್ಷಿಕ ಪ್ರಶಸ್ತಿಗಳಲ್ಲಿಯೂ ನಾಡಿನ ವಿವಿಧ ಜಿಲ್ಲೆಗಳ ಅತ್ಯುತ್ತಮ ಕಲಾವಿದರ ಜೊತೆಗೆ ಈಗಾಗಲೇ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಪ್ರಕಾಶ್ ರೈ, ಬಿ.ಸುರೇಶ್, ಅಚ್ಯುತ ಕುಮಾರ್, ರಮೇಶ್ ಪಂಡಿತ್ ಮತ್ತು ಮಕ್ಕಳ ರಂಗಭೂಮಿಯ ನಾಟಕಕಾರರಾದ ಡಾ. ಲಕ್ಷ್ಮಿಪರಿ ಕೋಲಾರ ಮುಂತಾದವರು ವಾರ್ಷಿಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು. ರಘುನಂದನ್, ರಾಜಗುರು ಹೊಸಕೋಟಿ. ಯುವ ಪ್ರಶಸ್ತಿಗೆ ಡಾಲೇಟೂರ, ರಂಗಭೂಮಿಯ ಪ್ರಸಿದ್ಧ ಸಂಘಟಕ ಹಾಗೂ ರಂಗಸ್ವಾಮಿ ಜಿ. ಅವರನ್ನು ಆಯ್ಕೆ ಮಾಡಲಾಗಿದೆ. +ಹೊರನಾಡ ಕಲಾವಿದರಲ್ಲಿ ಮುಂಬೈನ ಪ್ರಸಿದ್ಧ ರಂಗನಿರ್ದೇಶಕಿ ಕನ್ನಡತಿ ನಂದಿತಾ ಯಾದವ್ ಮತ್ತು ಪಾಂಡಿಚೇರಿ ವಿಶ್ವವಿದ್ಯಾನಿಲಯದ ರಂಗತಜ್ಞೆ ಪ್ರಾಧ್ಯಾಪಕಿ ಡಾ. ಪವಿತ್ರಾ ಅವರನ್ನು ಆಯ್ಕೆ ಮಾಡಿರುವುದಾಗಿ ಅವರು ತಿಳಿಸಿದರು. \ No newline at end of file diff --git a/eesanje/url_46_51_6.txt b/eesanje/url_46_51_6.txt new file mode 100644 index 0000000000000000000000000000000000000000..fe15bdb5fa3b2186769101745e323ff597d62d1f --- /dev/null +++ b/eesanje/url_46_51_6.txt @@ -0,0 +1,3 @@ +ಪ್ರಜ್ವಲ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿಕೆ +ಬೆಂಗಳೂರು,ಆ.8- ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ. +ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರು ವಾದ ಮಂಡಿಸಿ ಮಹಿಳೆಗೆ ಕಿರುಕುಳವಾಗಿದೆ ಎಂದು ಆಕೆಯ ಹೇಳಿಕೆಯನ್ನು ಉಲ್ಲೇಖಿಸಿದರು.ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಆ.29 ಕ್ಕೆ ಮುಂದೂಡಿದೆ. \ No newline at end of file diff --git a/eesanje/url_46_51_7.txt b/eesanje/url_46_51_7.txt new file mode 100644 index 0000000000000000000000000000000000000000..d89adf07d72d8af4c7dfb1dae0c0ec7ff4e43e90 --- /dev/null +++ b/eesanje/url_46_51_7.txt @@ -0,0 +1,7 @@ +ಮದುವೆಯಾದ ಕೆಲವೇ ಗಂಟೆಗಳಲ್ಲಿ ಬಡಿದಾಟ : ನವಜೋಡಿ ಸಾವು.. +ಕೆಜಿಎಫ್, ಆ.8- ಸಪ್ತಪದಿ ತುಳಿದ ಕೆಲವೇ ಗಂಟೆಗಳಲ್ಲಿ ನವಜೋಡಿ ಮಾರಕಾಸಗಳಿಂದ ಹೊಡೆದಾಡಿಕೊಂಡು ಇಬ್ಬರೂ ಮೃತಪಟ್ಟಿರುವ ಘಟನೆಯೊಂದು ಅಂಡರ್‍ಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಸ್ಪರ ಎರಡೂ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಈ ಜೋಡಿ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ದುರಂತ ಅಂತ್ಯ ಕಂಡಿರುವುದು ಗ್ರಾಮವನ್ನು ಬೆಚ್ಚಿ ಬೀಳಿಸಿದೆ.ಆಂಧ್ರದ ರಾಯಸಂದ್ರದಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ, ಆಂಧ್ರಪ್ರದೇಶದ ಶಾಂತಿಪುರಂ ನಿವಾಸಿ ನವೀನ್ ಕುಮಾರ್(30) ಹಾಗೂ ಕೆಜಿಎಫ್ ನ ಬೈನೇಹಳ್ಳಿಯ ನಿವಾಸಿ ನಿಖಿತಾಶ್ರೀ(18) ಹೊಡೆದಾಡಿಕೊಂಡು ಮೃತಪಟ್ಟವರು. +ನಿಖಿತಾಶ್ರೀ ಮನೆಯಲ್ಲಿ ಆಕೆಗೆ ಮದುವೆ ಮಾಡಲು ಪೋಷಕರು ಬ್ರೋಕರ್‍ಗೆ ಹುಡುಗನನ್ನು ತೋರಿಸಲು ಹೇಳಿದ್ದರು. ಅದರಂತೆ ಬ್ರೋಕರ್ ಮೂರು ತಿಂಗಳ ಹಿಂದೆ ನವೀನ್ ಕುಮಾರ್‍ನನ್ನು ಪರಿಚಯಿಸಿ ಮನೆಗೆ ಕರೆಸಿಕೊಂಡು ಮದುವೆ ಮಾತುಕತೆ ನಡೆಸಿದ್ದರು. ಆ ಸಂದರ್ಭದಲ್ಲಿ ನವೀನ್ ಏನನ್ನು ಮಾತನಾಡದೇ ಮೌನವಾಗಿದ್ದ. ಆತನ ಮನೆಯವರಿಂದಲೂ ಮದುವೆಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹಾಗಾಗಿ ಒಂದೂವರೆ ತಿಂಗಳ ಹಿಂದೆ ಈ ಮದುವೆ ಬೇಡ ಎಂದಿದ್ದರು. + ನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ನಿಖಿತಾಶ್ರೀ ಜೊತೆ ಮಾತನಾಡುವ ಸಲುವಾಗಿ ನವೀನ್ ಕುಮಾರ್‍ ಕಾಲೇಜು ಬಳಿ ಹೋಗಿ ಆಕೆಗೆ ಮೊಬೈಲ್ ಕೊಡಿಸಿದ್ದಾನೆ. ಅಂದಿನಿಂದ ಇವರಿಬ್ಬರು ಮೊಬೈಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದರು.ಹುಡುಗನ ಮನೆಯವರು ಏಕಾಏಕಿ ಮೂರು ದಿನಗಳ ಹಿಂದೆ ನಿಖಿತಾಶ್ರೀ ಮನೆಗೆ ಮದುವೆ ಮಾತುಕತೆ ನಡೆಸಿ ಸರಳವಾಗಿ ಚಂಬರಸನಹಳ್ಳಿಯ ನವೀನ್ ಕುಮಾರನ ಅಕ್ಕನ ಮನೆಯಲ್ಲಿ ಮದುವೆ ಮಾಡೋಣ ಎಂದು ನಿನ್ನೆಗೆ ದಿನಾಂಕ ಗೊತ್ತು ಮಾಡಿದ್ದರು. +ಅದರಂತೆ ನಿನ್ನೆ ಬೆಳಗ್ಗೆ ನಿಖಿತಾಶ್ರೀ ಹಾಗೂ ನವೀನ್ ಕುಮಾರ್ ಮದುವೆ ನೆರವೇರಿದೆ. ನಂತರ ಗ್ರಾಮದಲ್ಲಿರುವ ವರನ ದೊಡ್ಡಪ್ಪನ ಮನೆಗೆ ವಧು-ವರನನ್ನು ಕರೆದುಕೊಂಡು ಹೋಗಿದ್ದಾರೆ. ಆ ಸಂದರ್ಭದಲ್ಲಿ ವಧು-ವರರಿಬ್ಬರೂ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡು ಯಾವುದೋ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಆ ವೇಳೆ ನವೀನ್ ಕುಮಾರ್ ಕೈಗೆ ಸಿಕ್ಕಿದ ಮಚ್ಚಿನಿಂದ ನಿಖಿತಾಶ್ರೀ ಮನಬಂದಂತೆ ಹಲ್ಲೆ ನಡೆಸಿ ನಂತರ ಆತನು ಮಚ್ಚಿನಿಂದ ಹೊಡೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. +ಕೊಠಡಿಯಲ್ಲಿ ಜೋರಾಗಿ ಕೂಗಾಟ ಕೇಳಿಸಿಕೊಂಡು ಸಂಬಂ„ಕರು ಬಾಗಿಲು ಹೊಡೆದು ನೋಡುವಷ್ಟರಲ್ಲಿ ನಿಖಿತಾಶ್ರೀ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗಮನಿಸಿ ಆಕೆಯನ್ನು ಹಾಗೂ ಗಂಭೀರ ಗಾಯಗೊಂಡಿದ್ದ ನವೀನ್ ಕುಮಾರ್‍ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ ಚಿಕಿತ್ಸೆ ಫಲಿಸದೇ ನಿಖಿತಾಶ್ರೀ ಮೃತಪಟ್ಟಿದ್ದಾಳೆ. ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನವೀನ್ ಕುಮಾರ್ ಇಂದು ಬೆಳಗ್ಗೆ ಎಸ್‍ಎನ್‍ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. +ನವಜೋಡಿ ಮನೆಯ ಕೊಠಡಿಗೆ ಹೋದ ಕೆಲ ಹೊತ್ತಿನಲ್ಲೇ ಯಾವ ವಿಚಾರಕ್ಕಾಗಿ ಜಗಳ ಮಾಡಿಕೊಂಡರು ಎಂಬುವುದು ನಿಗೂಢವಾಗಿದೆ. ಸ್ಥಳಕ್ಕೆ ಅಂಡರ್‍ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ವಧು-ವರರಿಬ್ಬರು ಸಂತೋಷವಾಗಿದ್ದರು. ನಾವು ಮದುವೆಗೆ ಹೋಗಿದ್ದೆವು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನು ಯಾರೋ ಹೊಡೆದಿರುವ ಅನುಮಾನ ಇದೆ ಎಂದು ನಿಖಿತಾಶ್ರೀ ಅವರ ತಂಗಿ ಅರ್ಚನಾ ಹಾಗೂ ತಾತ ವೆಂಕಟರಮಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_51_8.txt b/eesanje/url_46_51_8.txt new file mode 100644 index 0000000000000000000000000000000000000000..637245650ecf85ec7f66730ca853ca8257f4cb92 --- /dev/null +++ b/eesanje/url_46_51_8.txt @@ -0,0 +1,7 @@ +ವೃದ್ಧೆಯರನ್ನು ಟಾರ್ಗೆಟ್ ಮಾಡಿ ಒಡವೆ ಕಸಿಯುತ್ತಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ +ಕೊರಟಗೆರೆ,ಆ.8- ವೃದ್ಧಾಪ್ಯ ಮಾಸಾಶನ ಹೆಸರಿನಲ್ಲಿ ವೃದ್ಧೆಯರನ್ನು ಟಾರ್ಗೆಟ್ ಮಾಡಿ, ಯಾಮಾರಿಸಿ ಆಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳನನ್ನು ಸಿನಿಮೀಯ ರೀತಿಯಲ್ಲಿ ಕೊರಟಗೆರೆ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರುಘಟ್ಟ ಹೋಬಳಿಯ ಹುರಳಿಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜ (40) ಬಂಧಿತ ಆರೋಪಿ. +ಡಿಸಿಸಿ ಬ್ಯಾಂಕ್ ಬಳಿ ವೃದ್ಧೆಯೊಬ್ಬರಿಗೆ ಡ್ರಾಪ್ ನೀಡುವ ನೆಪದಲ್ಲಿ ಬಂದು ಆಕೆಯ ಕೊರಳಲ್ಲಿ ಚಿನ್ನದ ಸರವನ್ನು ನೋಡಿ ಕೊರಳಲ್ಲಿ ಚಿನ್ನದ ಸರ ಇದ್ದರೆ ವೃದ್ಧಾಪ್ಯ ವೇತನ ಸ್ಥಗಿತಗೊಳ್ಳಲಿದೆ ಎಂದು ನಂಬಿಸಿ ಹೆಂಗಸರುಗಳಿಂದ ಚಿನ್ನಾಭರಣ ಬಿಚ್ಚಿಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳ ಅರ್ಜಿ ತರುವುದಾಗಿ ಹೇಳಿ ತಪ್ಪಿಸಿಕೊಳ್ಳುತ್ತಿದ್ದ. +ಈತನನ್ನು ಬೆನ್ನತ್ತಿದ ಕೊರಟಗೆರೆ ಪೊಲೀಸ್ ತಂಡ ಸಿಸಿ ಕ್ಯಾಮೆರಾ ಪುಟೇಜ್‍ಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ಮುಂಭಾಗ ಟ್ರಾಫಿಕ್‍ನಲ್ಲಿ ರಸ್ತೆಯಲ್ಲಿಯೇ ಹಿಡಿಯುವಾಗ ದೊಡ್ಡ ಹೈಡ್ರಾಮ ನಡೆದು ಆರೋಪಿ ಮಂಜ ಪೊಲೀಸರ ಮೇಲೆಯೇ ಬೈಕ್ ಹತ್ತಿಸಲು ಮುಂದಾಗಿ ನಂತರ ಟ್ರಾಫಿಕ್ ಪೊಲೀಸರ ಸಹಕಾರದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. +ಪೋಸ್ಟ್ ಆಫೀಸ್ ಹಾಗೂ ಕೆಲವು ಬ್ಯಾಂಕುಗಳ ಮುಂದೆ ವೃದ್ಧಾಪ್ಯ ವೇತನಕ್ಕೆ ಬರುವ ವೃದ್ಧೆಯರನ್ನು ಟಾರ್ಗೆಟ್ ಮಾಡಿಕೊಂಡು ಮಂಜುನಾಥ್ ಹಣ ಬಿಡಿಸಿಕೊಡುವ ನೆಪದಲ್ಲಿ ಮಹಿಳೆಯರ ಜೊತೆ ಸೇರಿ ಸಲಿಗೆ ಬೆಳೆಸಿ ಹಳೆ ಪರಿಚಯದರಂತೆ ವರ್ತಿಸಿ ಹಣ ಬಿಡಿಸಿಕೊಡುವುದಾಗಿ ಸ್ಲಿಪ್ ಬರೆದುಕೊಂಡು ನೀವು ಕೊರಳಿಗೆ ಬಂಗಾರದ ಸರಗಳನ್ನು ಹಾಕಿಕೊಂಡು ಹೋದರೆ ವೃದ್ಧಾಪ್ಯ ವೇತನ ನಿಲ್ಲಿಸುತ್ತಾರೆ ಎಂದು ವೃದ್ದೆಯರ ಬಳಿ ಚಿನ್ನದ ಸರಗಳನ್ನು ಬಿಚ್ಚಿಸಿಕೊಂಡು ಸಿನಿಮೀಯ ರೀತಿಯಲ್ಲಿ ಕ್ಷಣಾರ್ಧದಲ್ಲಿ ಮರೆಯಾಗುತ್ತಿದ್ದ ಎನ್ನಲಾಗಿದೆ. +ಆರೋಪಿಯ ವಿರುದ್ಧ ಕೊರಟಗೆರೆ, ಮಧುಗಿರಿ, ಹೆಬ್ಬೂರು, ಕೋಳಾಲ ಠಾಣೆಗಳಲ್ಲಿ 7 ಪ್ರಕರಣ ದಾಖಲಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ನಗರದಲ್ಲಿ ವಂಚನೆ ಮಾಡಿದ್ದ ಈತನ ವಿರುದ್ಧ 32 ಪ್ರಕರಣಗಳಿವೆ.ಈ ಕಾರ್ಯಾಚರಣೆಯಲ್ಲಿ ಕೊರಟಗೆರೆ ಸಿಪಿಐ ಅನಿಲï, ಪಿಎಸ್‍ಐ ಚೇತನ್ ಗೌಡ ಮಾರ್ಗದರ್ಶನದಂತೆ ಕೊರಟಗೆರೆ ಪೊಲೀಸ್ ಸಿಬ್ಬಂದಿಗಳಾದ ದೊಡ್ಡಲಿಂಗಯ್ಯ ಹಾಗೂ ಮೋಹನ್ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 10 ಸಾವಿರ ನಗದು, 6.75 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. +ಇವರ ಕಾರ್ಯಾಚರಣೆಗೆ ಜಿಲ್ಲೆ ಪೊಲೀಸ್ ವರಿಷ್ಠಾvಕಾರಿ ಅಶೋಕ್ ಅಡಿಷನಲ್ ಎಸ್‍ಪಿ ಮರಿಯಪ್ಪ ಹಾಗೂ ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_51_9.txt b/eesanje/url_46_51_9.txt new file mode 100644 index 0000000000000000000000000000000000000000..ec667eb8e7f311e78cc648c859e2452403d6b2f9 --- /dev/null +++ b/eesanje/url_46_51_9.txt @@ -0,0 +1,5 @@ +ಬಳ್ಳಾರಿ: ನಿಧಿ ಆಸೆಗಾಗಿ ಗುಹೆಯೊಳಗೆ ಸುರಂಗ ಕೊರೆಯುತ್ತಿದ್ದ ಐವರ ಬಂಧನ +ಬಳ್ಳಾರಿ,ಆ.8- ನಿಧಿ ಆಸೆಗಾಗಿ ಬೆಟ್ಟದ ಮೇಲಿನ ಗುಹೆಯೊಳಗೆ ಸುರಂಗ ಕೊರೆಯಲು ಮುಂದಾಗಿದ್ದ 11 ಮಂದಿ ಕಳ್ಳರ ಪೈಕಿ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಆಂಧ್ರಮೂಲದ ಶ್ರೀನಿವಾಸ್ (45), ಆಕಾಶ್ ( 20), ಶ್ರೀನಿವಾಸ್, ವೆಂಕಟ್ ರಾವ್ ಹಾಗೂ ಗದಗ ಮೂಲದ ಭಗತ್ ಸಿಂಗ್ ದೊಡ್ಡಮನಿ (50) ಎಂಬುವರನ್ನು ಬಂಧಿಸಲಾಗಿದೆ. ಸಂಡೂರು ತಾಲೂಕಿನ ತಾರಾನಗರದ ನಾರಿಹಳ್ಳದ ಹಿಂಭಾಗದ ಗುಡ್ಡದಲ್ಲಿ ಈ ಖದೀಮರು ಸುರಂಗ ಕೊರೆಯಲು ಸಿದ್ದತೆ ಮಾಡಿಕೊಂಡಿದ್ದರು. +ನಿಧಿಗಾಗಿ 40 ಮೀಟರ್ ಆಳದ ಗುಹೆಯೊಳಗೆ ಇಳಿದಿದ್ದರು.ಗುಹೆಯೊಳಗೆ ಸುರಂಗ ಕೊರೆಯಲು ಕೃತಕ ಆಕ್ಸಿಜನ್ ವ್ಯವಸ್ಥೆ, ಲೈಟಿಂಗ್‍ಗಾಗಿ ಜನರೇಟರ್ ವ್ಯವಸ್ಥೆ ಮಾಡಿಕೊಂಡಿದ್ದರು. ನಿಧಿಗಾಗಿ ಎಲ್ಲ ಸಿದ್ಧತೆ ಮಾಡಿಕೊಂಡು ನೀರು ತರಲೆಂದು ಖದೀಮರು ನಾರಿಹಳ್ಳಕ್ಕೆ ಹೋಗಿದ್ದಾಗ, ಅದೇ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಅರಣ್ಯಾಧಿಕಾರಿಗಳು ತಡೆದು ವಿಚಾರಿಸಿದ್ದಾರೆ. ಕಳ್ಳರು ತಬ್ಬಿಬ್ಬಾಗಿ ಉತ್ತರ ನೀಡಲು ತಡವರಿಸಿದ್ದರಿಂದ ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ನಿಧಿಗಾಗಿ ಬಂದಿರುವುದಾಗಿ ತಿಳಿಸಿದ್ದಾರೆ. +ಕಳ್ಳರು ನೀಡಿದ ಮಾಹಿತಿಯಂತೆ ಅರಣ್ಯಾಧಿಕಾರಿಗಳು ಗುಹೆಯ ಬಳಿ ಹೋಗಿ ನೋಡಿದಾಗ ಅಲ್ಲಿ ಸುರಂಗ ಕೊರೆಯಲು ವ್ಯವಸ್ಥೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಅರಣ್ಯಾ„ಕಾರಿಗಳು ಬರುತ್ತಿದ್ದಂತೆ ಆರು ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅತ್ಯಾಧುನಿಕ ಟೆಕ್ನಾಲಜಿ ಬಳಸಿ ನಿಧಿ ಶೋಧನೆಗೆ ಅರಣ್ಯದಲ್ಲಿರುವ ಗುಹೆಗಳನ್ನು ಈ ಖದೀಮರು ಟಾರ್ಗೆಟ್ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇದಕ್ಕೆ ತಾರಾನಗರದ ಒಬ್ಬ ಹಾಗೂ ಹೊಸಪೇಟೆ ಇನ್ನೊಬ್ಬ ಕುಮ್ಮಕ್ಕು ನೀಡಿದ್ದಾನೆ. ಅರಣ್ಯಾಧಿಕಾರಿಗಳು ಬರುತ್ತಿದ್ದಂತೆ ಆರು ಮಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಐವರನ್ನು ಬಂ„ಸಿ ಅರಣ್ಯಾ„ಕಾರಿಗಳು ಕಾಡು ಪ್ರಾಣಿಗಳ ಹತ್ಯೆ ಕಾಯ್ದೆಯಡಿ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_52_1.txt b/eesanje/url_46_52_1.txt new file mode 100644 index 0000000000000000000000000000000000000000..f670a2b29e9799248ddf28e10bce320dee665a5b --- /dev/null +++ b/eesanje/url_46_52_1.txt @@ -0,0 +1,5 @@ +ಶಾಸಕ ಗೋಪಾಲಕೃಷ್ಣ ಬೇಳೂರು ಬಂಧನಕ್ಕೆ ಸಿ.ಟಿ.ರವಿ ಒತ್ತಾಯ +ಬೆಂಗಳೂರು,ಆ.7-ಹಣಕ್ಕೆ ಬೇಡಿಕೆಯಿಟ್ಟು ಸಹಾಯಕ ಇಂಜಿನಿಯರ್‌ಗೆ ಜೀವ ಬೆದರಿಕೆ ಹಾಕಿರುವ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಕೂಡಲೇ ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಬೇಕೆಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ. +ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಧಿಕಾರಿಗಳ ಹಣಕ್ಕಾಗಿ ಕಿರುಕುಳ ನೀಡುವುದೇ ಕರ್ನಾಟಕ ಕಾಂಗ್ರೆಸ್‌‍ ನೇತೃತ್ವದ ಸರ್ಕಾರದ ಒನ್‌ಲೈನ್‌ ಅಜೆಂಡಾ ಎಂದು ಗಂಭೀರ ಆರೋಪ ಮಾಡಿದ್ದಾರೆ. +ಶಾಸಕರ ಮಾತು ಕೇಳಿ ಪುಡಿರೌಡಿಯಂತೆ ವರ್ತಿಸಿ ಸಹಾಯಕ ಎಂಜಿಯರ್‌ಗೆ ಸುಪಾರಿ ಪಡೆದು ಕಿರುಕುಳ ನೀಡುತ್ತಿರುವ ಡಿವೈಎಸ್ಪಿ ಅವರನ್ನು ಕೂಡ ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ. +ಸಹಾಯಕ ಎಂಜಿನಿಯರ್‌ ಒಬ್ಬರು ತಮಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಂದ ಜೀವಬೆದರಿಕೆಯಿದೆ, ದಯವಿಟ್ಟು ನನ್ನನ್ನು ಕಾಪಾಡಿ ಎಂದು ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಅಂಗಲಾಚುತ್ತಿರುವುದು ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರ ಮತ್ತು ಅರಾಜಕತೆ ವ್ಯಾಪ್ತಿ ಎಷ್ಟರ ಮಟ್ಟಿಗಿದೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_46_52_10.txt b/eesanje/url_46_52_10.txt new file mode 100644 index 0000000000000000000000000000000000000000..d9f090fad2febf3b97dadac3281a361cd11251a8 --- /dev/null +++ b/eesanje/url_46_52_10.txt @@ -0,0 +1,11 @@ +ರಾಜ್ಯದಲ್ಲಿ ಮಳೆಯಿಂದ 61,700 ಹೆಕ್ಟೇರ್‌ ಬೆಳೆ ಹಾನಿ +ಚಿಕ್ಕಮಗಳೂರು, ಆ.6– ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿದರು. ಬಾಬಾಬುಡನ್‌ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. +ಇದುವರೆವಿಗೂ ಉತ್ತರ ಕರ್ನಾಟಕ ಹಾಗೂ ರಾಜ್ಯದ ಅಲ್ಲಲ್ಲಿ ಬೆಳೆ ಹಾನಿಯಾಗಿರುವ ವರದಿ ಬಂದಿದ್ದು, ಮಲೆನಾಡು ಪ್ರದೇಶದಲ್ಲಿ ಬೆಳೆ ಹಾನಿ ಜೊತೆಗೆ ಗುಡ್ಡ ಕುಸಿತ ಉಂಟಾಗಿದೆ. ಹಾನಿಗೆ ಸಂಬಂಧಿಸಿದಂತೆ ತಕ್ಷಣ ಪರಿಹಾರ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನೂ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಹಾನಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. +2019 ನೇ ಹಾಗೂ 2022 ನೇ ಸಾಲಿನಲ್ಲಿ 12 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಆ ಸಂದರ್ಭದಲ್ಲಿ 250 ಜನರ ಪ್ರಾಣ ಹಾನಿಯಾಗಿದೆ, ಈ ವರ್ಷ 58 ಜನ ಇಲ್ಲಿಯವರೆಗೂ ಪ್ರವಾಹದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ. ದೊಡ್ಡ ಪ್ರವಾಹ ಕಂಡು ಬಂದಿಲ್ಲ. ಕೆಲವು ಸೀಮಿತ ಪ್ರದೇಶಗಳಲ್ಲಿ ಹಾನಿಯಾಗಿದೆ ಎಂದರು. +ಅಧಿವೇಶನ ಮುಗಿದ ತಕ್ಷಣ ಮುಖ್ಯಮಂತ್ರಿಗಳು, ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿ ಜನರಿಗೆ ಆಗಿರುವ ಸಮಸ್ಯೆಗೆ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. +ಮಲೆನಾಡು ಬಹುಕಾಲದಿಂದ ಹೆಚ್ಚು ಮಳೆ ಕಂಡಿರುವ ಪ್ರದೇಶವಾಗಿದೆ. ಸ್ವಾಭಾವಿಕವಾಗಿ ಮಳೆ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಹವಾಮಾನ ಬದಲಾವಣೆಯಿಂದಾಗಿ ಜೂನ್‌ ತಿಂಗಳಿನಿಂದ ಜುಲೈ 10ರ ವರೆಗೆ ಮಳೆ ಕೊರತೆ ಕಾಣುತ್ತೇವೆ. ಜುಲೈ 10 ರ ನಂತರ ಎರಡು ತಿಂಗಳಿಗಾಗುವಷ್ಟು ಮಳೆ 20 ದಿನದಲ್ಲಿ ಸುರಿದಿದೆ. +ಹವಾಮಾನ ಬದಲಾವಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಪರಿಸರದ ವಿಷಯದಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಇಷ್ಟ ಬಂದ ಹಾಗೇ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡುವುದರಿಂದ ಗುಡ್ಡ ಕುಸಿತದಂತಹ ಅವಘಡಗಳನ್ನು ಕಾಣುತ್ತಿದ್ದೇವೆ ಎಂದು ತಿಳಿಸಿದರು. +ಗುಡ್ಡ ಕುಸಿತದಂತಹ ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರದ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾದಿಂದ ರಾಜ್ಯದಲ್ಲಿ ಗುಡ್ಡ ಕುಸಿತ ಸಾಧ್ಯತೆ ಹೆಚ್ಚು ಇರುವ ಕಡೆ ಈಗಾಗಲೇ ವೈಜ್ಞಾನಿಕ ಸರ್ವೆ ಮಾಡಿಸಿದ್ದು, ಅದರ ವರದಿ ಆಧಾರದ ಮೇಲೆ ಮಲೆನಾಡು ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದೆ. +ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಯಾವ ಜನವಸತಿ ಪ್ರದೇಶಗಳಲ್ಲಿ ಗುಡ್ಡ ಕುಸಿತದಿಂದ ತೊಂದರೆಯಾಗುವುದನ್ನು ಗುರುತಿಸಿ ವರದಿ ಕೊಡಲು ತಿಳಿಸಿದ್ದು, ಇನ್ನು 10-15 ದಿನಗಳಲ್ಲಿ ವರದಿ ತರಿಸಿಕೊಂಡು ಈ ವರ್ಷ 100 ಕೋಟಿ, ಮುಂದಿನ ವರ್ಷ 200 ಕೋಟಿ ಸೇರಿದಂತೆ ಒಟ್ಟು 300 ಕೋಟಿ ಮೊತ್ತದ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಒಪ್ಪಿದ್ದು , ಈ ಅನುದಾನದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಅಕ್ಕಪಕ್ಕದ ಕರಾವಳಿ ಜಿಲ್ಲೆಗಳ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು. +ಅತಿವೃಷ್ಟಿಯಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ತಿಳಿಸಲಾಗಿದೆ. ಗುಡ್ಡ ಕುಸಿತದಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಸಾಧ್ಯವಿಲ್ಲ. ಅವುಗಳ ಮರು ನಿರ್ಮಾಣವಾಗಬೇಕಾಗಿದೆ. ಇಂಥ ರಸ್ತೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. +ಶಾಸಕ ಹೆಚ್‌.ಡಿ. ತಮಯ್ಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್‌. ಹರೀಶ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ, ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್‌.ಎಸ್‌‍. ಕೀರ್ತನಾ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. \ No newline at end of file diff --git a/eesanje/url_46_52_11.txt b/eesanje/url_46_52_11.txt new file mode 100644 index 0000000000000000000000000000000000000000..6864227bbc9a7f600b30e32fd91e89a2c03e7830 --- /dev/null +++ b/eesanje/url_46_52_11.txt @@ -0,0 +1,12 @@ +ವಿಧವೆಯರಿಗೆ ಗನ್ ತೋರಿಸಿ ನಿವೇಶನ ಕಬ್ಜ ಮಾಡಿದ ಡಿಕೆಶಿ : ಹೆಚ್ಡಿಕೆ ನೇರ ಆರೋಪ +ರಾಮನಗರ/ಚನ್ನಪಟ್ಟಣ:ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನ ಚನ್ನಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದು ಮತ್ತೆ ಸವಾಲು ಹಾಕಿದರು. +ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಅಡ್ವಾನ್ಸ್ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ. ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂಥ ವ್ಯಕ್ತಿ ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು. +ಗನ್ ಇಟ್ಟು ವಿಧವಾ ತಾಯಂದಿರ ನಿವೇಶನಗಳನ್ನು ರಿಜಿಸ್ಟರ್ ಮಾಡಿಸಿಕೊಂಡವರು ನೀವು, ಅನ್ಯಾಯವಾಗಿ ಕಂಡೋರ ಆಸ್ತಿಯನ್ನು ಕಬ್ಜ ಮಾಡಿದವರು ನೀವು.. ಇಂಥ ಕೆಟ್ಟ ಹಿನ್ನೆಯ ನೀವು ನನ್ನ ಬಗ್ಗೆ ಮಾತನಾಡುತ್ತಿದ್ದೀರಿ. ಬನ್ನಿ ಪ್ರಮಾಣ ಮಾಡೋಣ. ಅಜ್ಜಯನ ಮುಂದೆ ಆಗಲಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಅಮ್ಮನ ಮುಂದೆ ಆಗಲಿ ಪ್ರಮಾಣ ಮಾಡೋಣ. ನೀವೇ ವಿಧಾನಸೌಧಕ್ಕೆ ಬನ್ನಿ ಎಂದು ಕರೆದಿದ್ದಿರಲ್ಲ.. ಅಲ್ಲಿಗೂ ಬರಲು ನಾನು ತಯಾರಿದ್ದೇನೆ. ಬನ್ನಿ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಗೆ ಸವಾಲು ಹಾಕಿದರು. +ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ದಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡುತ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರಕಾರ ಬಂದು ಒಂದೂವರೆ ವರ್ಷ ಆಯಿತಲ್ಲವೇ..ಇಷ್ಟು ದಿನ ಏನು ಮಾಡ್ತಿದ್ರಪ್ಪ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು. +ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋಡೋನ್ ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದ ಕೇಂದ್ರ ಸಚಿವರು ಬಹಿರಂಗ ಸಭೆಯಲ್ಲಿ ಆ ಕಲ್ಲು ಗೋದಾಮುಗಳ ಪೋಟೊಗಳನ್ನು ತೋರಿಸಿ,ಇದಕ್ಕೆ ಉತ್ತರ ಕೊಡಪ್ಪಾ..? ಎಂದು ಕೇಳಿದರು ಕುಮಾರಸ್ವಾಮಿ ಅವರು. +ಕನಕಪುರದ ಎಷ್ಟು ದಲಿತ ಕುಟುಂಬಗಳ ಹಾಳು ಮಾಡಿದ್ದೀರಿ ನೀವು. ಆ ಜನ ಕಣ್ಣಲ್ಲಿ ನೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಕುಮಾರಸ್ವಾಮಿ ರೈತನ ಮಗ ಅಲ್ಲ ಎಂದಿದ್ದಾರೆ ಅವರು. ಫ್ಯಾಂಟ್ ತೆಗೆದು ಪಂಚೆ ಹಾಕಿದ್ರೆ ರೈತ ಅಲ್ಲ ಎಂದು ಹೇಳಿದ್ದಾರೆ. ಬನ್ನಿ, ಬಿಡದಿಗೆ ಬಂದು ನೋಡಿ. 20 ಟನ್ ಕೊಬ್ಬರಿ ಬೆಳೆದಿದ್ದೇನೆ. ತೆಂಗು, ಬಾಳೆ, ಅಡಕೆಯಲ್ಲಿ 50 ಲಕ್ಷ ರೂಪಾಯಿ ರೈತನಾಗಿ ಸಂಪಾದನೆ ಮಾಡಿದ್ದೇನೆ. ನಿಮ್ಮಿಂದ ಇದು ಸಾಧ್ಯವೇ? ಎಂದು ಸಚಿವರು ಟಾಂಗ್ ಕೊಟ್ಟರು. +ಚನ್ನಪಟ್ಟಣಕ್ಕೆ ಕುಮಾರಸ್ವಾಮಿ ಮತ್ತು ದೇವೇಗೌಡರು ಮಾಡಿದ್ದಾರೆ ಎಂದು ಕೇಳುತ್ತಿದ್ದಾರೆ. ದೇವೇಗೌಡರ ಕಾಲದಲ್ಲಿ ಇಗ್ಗಲೂರು ಜಲಾಶಯ ಕಟ್ಟಲು ಹೋದರು. ಕೆಲವರು ಆಗಲ್ಲ ಎಂದು ಹೇಳಿದರು. ಆದರೆ, ದೇವೇಗೌಡರು ಪಟ್ಟು ಹಿಡಿದು ಆ ಯೋಜನೆಯನ್ನು ಕಾರ್ಯಗತ ಮಾಡಿದರು. ಇವತ್ತು ಈ ನೆಲಕ್ಕೆ ಆ ಜಲಾಶಯ ಜೀವನಾಡಿ ಆಗಿದೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು. +ಚನ್ನಪಟ್ಟಣದಲ್ಲಿ ಕೆರೆಗಳನ್ನು ತುಂಬಿಸುವ ಕೆಲಸ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ನಾನು, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದಾಗ ಕೆರೆಗಳನ್ನು ತುಂಬಿಸಲಾಯಿತು. ಯೋಗೇಶ್ವರ್ ಕೂಡ ಮಂತ್ರಿಯಾಗಿ ಕೆಲಸ ಮಾಡಿದರು. ಕಾಂಗ್ರೆಸ್ ನವರು ಏನೂ ಮಾಡಿಲ್ಲ ಎಂದು ಅವರು ಕಿಡಿಕಾರಿದರು. +ರಾಜ್ಯದಲ್ಲಿ ನಿಮ್ಮ ಆಡಳಿತ, ನಿರ್ವಹಣೆ ಕೆಟ್ಟದಾಗಿದೆ. ಗ್ಯಾರಂಟಿ ಎಂದು ಕೊಟ್ಟಿದ್ದೀರಿ. ಯಾರಿಗೆ ಲಾಭವಾಗಿದೆ ಅದರಿಂದ, ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಾಗಿದೆ‌? ರೈತ ಟಿಸಿ ದರ ಎಷ್ಟಾಗಿದೆ? ಸರಣಿ ಹಗರಣಗಳ ರೀತಿಯಲ್ಲಿ ಸರಣಿ ಬೆಲೆ ಏರಿಕೆ ಮಾಡಿದ್ದೀರಿ. ರೈತರಿಗೆ ಆದಾಯ ಇಲ್ಲ. ರೈತರಿಗೆ ಏನು ಕೊಟ್ಟಿದ್ದೀರಿ? ಬರೀ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದೀರಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. +ದಲಿತರ ಬಗ್ಗೆ ಇವರು ಚರ್ಚೆ ಮಾಡ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದರೋಡೆ ಮಾಡಿದ್ದಾರೆ. ಹಣ ದೋಚಿರೋ ಸಿದ್ದರಾಮಯ್ಯ, ಡಿಕೆಶಿ ಇಲ್ಲಿ ಬಂದು ದಲಿತರ ಬಗ್ಗೆ ಚರ್ಚೆ ಮಾಡ್ತೀರಾ? ಹೆಚ್ಡಿಕೆ ವಾಗ್ದಾಳಿ ನಡೆಸಿದರು. +ಗಿಫ್ಟ್ ಕೂಪನ್ ಹಂಚಿ 136 ಸೀಟು ಗೆದ್ದರು!!ನಾವು 136 ಸೀಟು ಗೆದ್ದು ಅಧಿಕಾರಕ್ಕೆ ಬಂದಿದೇವೆ ಎಂದು ಕಾಂಗ್ರೆಸ್ ನಾಯಕರು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೂಪನ್ ಹಂಚಿ ರಾಜಕಾರಣ ಮಾಡಿದೆ. ಲುಲು ಮಾಲ್ ಕೂಪನ್ ಕೊಟ್ಟವ್ರೆ. ಮೂರು ಸಾವಿರ, ಐದು ಸಾವಿರ ಕೂಪನ್ ಕೊಟ್ಟಿದ್ದರು. ಅದನ್ನು ತೆಗೆದುಕೊಂಡು ಹೋಗಿ ಲುಲು ಮಾಲ್ ನಲ್ಲಿ ಕೊಟ್ಟರೆ ಅದರಲ್ಲಿ ದುಡ್ಡೇ ಇಲ್ಲ. ಜನರಿಗೆ ಕಾಂಗ್ರೆಸ್ ನವರು ಮೋಸ ಮಾಡಿದ್ದು ಹೀಗೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_52_12.txt b/eesanje/url_46_52_12.txt new file mode 100644 index 0000000000000000000000000000000000000000..ec9cfa161a04110e19f95719fe6b9a5e0bdbcc97 --- /dev/null +++ b/eesanje/url_46_52_12.txt @@ -0,0 +1,6 @@ +ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವು : ಸಿಬಿಐ ತನಿಖೆಗೆ ಆಗ್ರಹ +ಬೆಂಗಳೂರು,ಆ.5-ಯಾದಗಿರಿ ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸುವಂತೆ ಅಂಬೇಡ್ಕರ್ಮಾನವ ಹಕ್ಕುಗಳ ಕ್ರಾಂತಿಸೇನೆ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್‌ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷರಾದ ಕ್ರಾಂತಿರಾಜು ಮಾತನಾಡಿ, ಸ್ವಾತಂತ್ರ್ಯ ಬಂದ 77 ವರ್ಷಗಳು ಕಳೆದರೂ ಇಂದಿಗೂ ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ. ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ಧ ಸೆಣೆಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ. +ಯಾದಗಿರಿ ಪೊಲೀಸ್‌‍ ಠಾಣೆ ಪಿಎಸ್‌‍ಐ ಪರುಶುರಾಮ್‌ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್‌ ರವರ ಪತ್ನಿ ಶ್ವೇತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್‌ ಮತ್ತು ಆತನ ಪುತ್ರ 30 ಲಕ್ಷ ರೂ. ಲಂಚ ಬೇಡಿಕೆ ಹಾಗೂ ಜಾತಿ ನಿಂದನೆ ಮಾಡಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಪರುಶುರಾಮ್‌ ರವರು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಶಾಸಕರ ಮತ್ತು ಮಗನ ಮೊಬೈಲ್‌ ಕಾಲ್‌ ರೆಕಾರ್ಡ್‌ ಮತ್ತು ಸಿ.ಸಿ.ಕ್ಯಾಮರ ಪರಿಶೀಲನೆ ಮಾಡಿ ತನಿಖೆ ಮಾಡಬೇಕು ಎಂದರು. +ರಾಜ್ಯದಲ್ಲಿರುವ ನಿಷ್ಟಾವಂತ ದಲಿತ ಸಮುದಾಯದ ಅಧಿಕಾರಿಗಳ ಮೇಲೆ ಕಿರುಕುಳ, ದೌರ್ಜನ್ಯ ನಡೆಯುತ್ತಿದೆ.ಲಂಚ, ಭ್ರಷ್ಟಚಾರ ತಾಂಡವವಾಡುತ್ತಿದೆ. ಪ್ರತಿ ಹ್ದುೆಗೆ ವರ್ಗಾವಣೆಗೆ ಇಂತಿಷ್ಟು ಲಂಚ ಫಿಕ್‌್ಸ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ನಿಷ್ಟಾವಂತ, ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡಲು ಎಂದು ಪ್ರಶ್ನಿಸಿದರು. +ಕೊಡಲೆ ಶಾಸಕರು ಹಾಗ್ತೂ ಅವರ ಪುತ್ರನ ವಿರುದ್ಧ ಕ್ರಮಕೈಗೊಳ್ಳಬೇಕು ಇಲ್ಲದೇ ಹೋದರೆ ಮುಂದಿನ ವಾರ ಪೊಲೀಸ್‌‍ ಮಹಾನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತ ಸಮುದಾಯ ಮುಖಂಡರು, ಚಿಂತಕರು, ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು. ಪಿಎಸ್‌‍ಐ ಪರುಶುರಾಮ್‌ ಶಂಕಾಸ್ಪದ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಮುಖ್ಯಮಂತ್ರಿಗಳು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು +ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿ ವಿ.ಗಿರಿಕುಮಾರ್‌, ಹಿರಿಯ ಹೋರಾಟಗಾರರಾದ ಉಮಾಶಂಕರ್‌, ಕಾರ್ಮಿಕರ ಒಕ್ಕೂಟದ ಅಧ್ಯಕ್ಷರಾದ ಬಿ.ದೇವರಾಜ್‌ ಮಾಧ್ಯಮಗೋಷ್ಟಿಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_52_2.txt b/eesanje/url_46_52_2.txt new file mode 100644 index 0000000000000000000000000000000000000000..9fc2d85967edb320b4891683a7874b562adc1b01 --- /dev/null +++ b/eesanje/url_46_52_2.txt @@ -0,0 +1,6 @@ +ಡಿಎಲ್‌ ಮತ್ತು ಆರ್‌ಸಿ ಕುರಿತು ರಾಜ್ಯ ಸಾರಿಗೆ ಇಲಾಖೆಯಿಂದ ಹೊಸ ಮಾದರಿ ವ್ಯವಸ್ಥೆ +ಬೆಂಗಳೂರು,ಆ.7– ರಾಜ್ಯದಲ್ಲಿ ವಾಹನ ಚಾಲಕರಿಗೆ ನೀಡಲಾಗುವ ವಾಹನ ಚಾಲನಾ ಪರವಾನಗಿ ಮತ್ತು ವಾಹನ ನೋಂದಣಿ ಪ್ರಮಾಣಪತ್ರದ ಸ್ವರೂಪ ಬದಲಿಸಲಾಗುತ್ತಿದ್ದು, ಮೈಕ್ರೋ ಚಿಪ್‌ ಜತೆಗೆ ಕ್ಯೂಆರ್‌ ಕೋಡ್‌ ಅಳವಡಿಸಿದ ಡಿಎಲ್‌ ಮತ್ತು ಆರ್‌ಸಿ ಸಾರ್ಟ್‌ ಕಾರ್ಡ್‌ ವಿತರಿಸಲು ರಾಜ್ಯ ಸಾರಿಗೆ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೇಶದೆಲ್ಲೆಡೆ ಡಿಎಲ್‌ ಮತ್ತು ಆರ್‌ಸಿಗಳ ಸ್ವರೂಪ ಒಂದೇ ರೀತಿಯಲ್ಲಿರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರೂಪಿಸಿರುವ ನಿಯಮ ಅನುಷ್ಠಾನಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. +ಎಂಒಆರ್‌ಟಿಎಚ್‌ ನೀಡಿರುವ ಮಾರ್ಗಸೂಚಿಯಂತೆ ಡ್ರೈವಿಂಗ್‌ ಲೈಸೆನ್ಸ್ ಮತ್ತು ರಿಜಿಸ್ಟ್ರೇಷನ್‌ ಸರ್ಟಿಫಿಕೆಟ್‌ ಮುದ್ರಿಸಿ, ವಿತರಿಸುವ ಖಾಸಗಿ ಸಂಸ್ಥೆಗಾಗಿ ಟೆಂಡರ್‌ ಪ್ರಕ್ರಿಯೆ ನಡೆಸಲಾಗಿದ್ದು, ಈ ತಿಂಗಳ ಅಂತ್ಯದೊಳಗೆ ಗುತ್ತಿಗೆದಾರರನ್ನು ಅಂತಿಮಗೊಳಿಸಿ ಸೆಪ್ಟೆಂಬರ್‌ನಿಂದ ಹೊಸ ಬಗೆಯ ಡಿಎಲ್‌ ಮತ್ತು ಆರ್‌ಸಿ ವಿತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. +ಹೊಸಬಗೆಯ ಡಿಎಲ್‌ನಲ್ಲಿ ಹಲವು ವಿವರಗಳನ್ನು ಅಳವಡಿಸಲಾಗುತ್ತಿದೆ. ಈವರೆಗೆ ಡಿಎಲ್‌ನಲ್ಲಿ ಚಾಲಕರ ಹೆಸರು, ಜನ ದಿನಾಂಕ, ವಿಳಾಸ, ರಕ್ತದ ಗುಂಪು ವಿವರಗಳು ಇರುತ್ತಿದ್ದವು. ಹೊಸ ಡಿಎಲ್‌ನಲ್ಲಿ ಆ ವಿವರಗಳ ಜತೆಗೆ ಡಿಎಲ್‌ ಹೊಂದಿರುವವರು ಅಂಗಾಂಗ ದಾನಿಯಾಗಿದ್ದಾರೆಯೇ ಎಂಬುದನ್ನು ಉಲ್ಲೇಖಿಸಲಾಗುತ್ತದೆ. ಜತೆಗೆ ಡಿಎಲ್‌ ಹೊಂದಿರುವವರ ಮೊಬೈಲ್‌ ಸಂಖ್ಯೆ, ಅವರ ಸಂಬಂಧಿಕರ ಅಥವಾ ತಕ್ಷಣದಲ್ಲಿ ಮಾಡಬಹುದಾದ ಮೊಬೈಲ್‌ ಕರೆ ಸಂಖ್ಯೆಗಳನ್ನೂ ನಮೂದಿಸಲಾಗುತ್ತದೆ. +ಸದ್ಯ ಇರುವ ಡಿಎಲ್‌ ಮತ್ತು ಆರ್‌ಸಿಯಲ್ಲಿ ಒಂದು ಬದಿಯಲ್ಲಿ ಮಾತ್ರ ಎಲ್ಲ ವಿವರಗಳಿದ್ದು, ಇನ್ನೊಂದು ಬದಿಯಲ್ಲಿ ಮೈಕೋಚಿಪ್‌ ಅಳವಡಿಸಲಾಗಿದೆ. ಹೊಸ ಡಿಎಲ್‌ ಮತ್ತು ಆರ್‌ಸಿಯ ಎರಡೂ ಬದಿಯಲ್ಲಿ ವಾಹನ ಮತ್ತು ವಾಹನ ಮಾಲೀಕರ ಅಥವಾ ಚಾಲಕರ ವಿವರ ನಮೂದಿಸಲಾಗುತ್ತದೆ. ಡಿಎಲ್‌ ಮತ್ತು ಆರ್‌ಸಿಗಳನ್ನು ಲೇಸರ್‌ ಪ್ರಿಂಟಿಂಗ್‌ನಲ್ಲಿ ಮುದ್ರಿಸಲಾಗುತ್ತದೆ. ಇನ್ನು ಕ್ಯೂಆರ್‌ ಕೋಡನ್ನು ಸ್ಕ್ಯಾನ್‌ ಮಾಡಿದರೆ ಡಿಎಲ್‌ ಮತ್ತು ಆರ್‌ಸಿಗೆ ಸಂಬಂಧಿಸಿದ ಎಲ್ಲ ವಿವರಗಳು ತಿಳಿಯುವಂತೆ ಮಾಡಲಾಗುತ್ತದೆ. +ಈವರೆಗೆ ಡಿಎಲ್‌ ಮತ್ತು ಆರ್‌ಸಿಯಲ್ಲಿ ವಾಹನ ಮತ್ತು ಚಾಲಕರ ಸಂಪೂರ್ಣ ವಿವರ ಇರುತ್ತಿರಲಿಲ್ಲ. ಹೊಸ ಡಿಎಲ್‌ ಮತ್ತು ಆರ್‌ಸಿಯಲ್ಲಿ ಚಾಲಕರು ಯಾವ ದಿನ, ಯಾವ ರೀತಿಯ ಸಂಚಾರ ನಿಯಮ ಉಲ್ಲಂಸಿದ್ದಾರೆ, ಅದಕ್ಕೆ ದಂಡ ಪಾವತಿಸಿದ್ದಾರೆಯೇ ಎಂಬಂತಹ ವಿವರಗಳು ದೊರೆಯಲಿದೆ. ಈ ವಿವರಗಳನ್ನು ಸಾರಿಗೆ ಇಲಾಖೆ ಕಾಲಕಾಲಕ್ಕೆ ಅಪ್‌ಡೇಟ್‌ ಮಾಡಲಿದೆ. ಡಿಎಲ್‌ ಹೊಂದಿರುವವರ ವಿವರಗಳ ಜತೆಗೆ, ಅವರ ಮೈಯಲ್ಲಿರುವ ಗುರುತುಗಳನ್ನೂ ನಮೂದಿಸಲಾಗುತ್ತದೆ. \ No newline at end of file diff --git a/eesanje/url_46_52_3.txt b/eesanje/url_46_52_3.txt new file mode 100644 index 0000000000000000000000000000000000000000..a0f76b3f403faec1f63508fb2205c1585bad90c0 --- /dev/null +++ b/eesanje/url_46_52_3.txt @@ -0,0 +1,6 @@ +“ಅಫಿಡವಿಟ್‌ನಲ್ಲಿ ಪತ್ನಿ ಆಸ್ತಿ ಕುರಿತು ತಪ್ಪು ಮಾಹಿತಿ : ಸಿದ್ದರಾಮಯ್ಯನವರೇ ಈಗ ಜ್ಞಾನೋದಯವಾಯಿತೇ..?” +ಬೆಂಗಳೂರು,ಆ.6- 2013ರ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿಯ ಆಸ್ತಿ ಉಲ್ಲೇಖ ಮಾಡದೆ ತಪ್ಪು ಮಾಹಿತಿ ನೀಡುತ್ತೀರಿ. ನಂತರ 2018ರಲ್ಲಿ ಅದರ ಮಾರುಕಟ್ಟೆ ಮೌಲ್ಯ ರೂ 25 ಲಕ್ಷ ಎಂದು ನಮೂದಿಸಿದ್ದೀರಿ. 5 ವರ್ಷಗಳಾದ ಮೇಲೆ ದಿಢೀರನೆ ಆಸ್ತಿ ಹೊಂದಿರುವ ಬಗ್ಗೆ ಜ್ಞಾನೋದಯವಾಯಿತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನೆ ಎಸೆದಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟಿರುವ ಆಶೋಕ್‌ ಅವರು, ಹಗರಣ ಬೆಳಕಿಗೆ ಬಂದ ಮೇಲೆ 63 ಕೋಟಿ ಕೊಡಿ ಸೈಟು ಬಿಟ್ಟುಕೊಡುತ್ತೇನೆ ಎಂದು ಹೇಳುತ್ತೀರಿ. 2018ರಲ್ಲಿ ರೂ 25 ಲಕ್ಷ ಇದ್ದ ಆಸ್ತಿ ಮೌಲ್ಯ, 2024ರಲ್ಲಿ ರೂ 63 ಕೋಟಿ ಆಗಲು ಹೇಗೆ ಸಾಧ್ಯ? ಇದೇನಾದರೂ ರಾಹುಲ್‌ ಗಾಂಧಿ ಅವರ ಆಲೂಗಡ್ಡೆ ಹಾಕಿ ಚಿನ್ನ ತೆಗೆಯುವ ಯೋಜನೆಯ ಭಾಗವಾ? ಎಂದು ವ್ಯಂಗ್ಯವಾಡಿದ್ದಾರೆ. +50:50ರ ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಕೊಡುವುದು ಬೇಡ ಎಂದು ನಗರಾಭಿವೃದ್ಧಿ ಇಲಾಖೆ ಆದೇಶವಿದ್ದರೂ ಅದನ್ನ ಉಲ್ಲಂಸಿ ಮೂಡಾ ಅಧ್ಯಕ್ಷ ಮರಿಗೌಡ ಅವರು ಹಗರಣದ ಬಾಗಿಲನ್ನು ತೆಗೆದಿದ್ದು ಏಕೆ? ಇದರ ಹಿಂದೆ ಯಾವ ಪ್ರಭಾವಿ ಶಕ್ತಿ ಕೆಲಸ ಮಾಡುತ್ತಿತ್ತು? ಉತ್ತರ_ ಕೊಡಿ_ಸಿದ್ದರಾಮಯ್ಯ ಎಂದು ಆಗ್ರಹಿಸಿದ್ದಾರೆ. +ಆತಹತ್ಯೆಗೆ ಶರಣಾದ ವಾಲೀಕಿ ಅಭಿವೃದ್ಧಿ ನಿಗಮದ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್‌ ಅವರು ತಮ ಡೆತ್‌ ನೋಟ್‌ ನಲ್ಲಿ ಸಚಿವ ನಾಗೇಂದ್ರ ಅವರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದರೂ, ಎಸ್‌‍ಐಟಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವರಾಜ ದದ್ದಲ್‌ ಹೆಸರನ್ನು ನಮೂದಿಸಿಲ್ಲದಿರುವುದು ಎಸ್‌‍ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಸರ್ಕಾರದ ವಿರುದ್ದ ವಾಗ್ದಳಿ ನಡೆಸಿದ್ದಾರೆ. +ಸಿಎಂ ಸಿದ್ದರಾಮಯ್ಯನವರೇ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್‌ ಅವರ ಹೆಸರನ್ನು ನಮೂದಿಸಿದರೆ ಅವರು ತಮ ಹೆಸರು ಬಾಯಿ ಬಿಡುತ್ತಾರೆ ಎಂಬ ಭಯವೇ? ಅಥವಾ ಈ ಹಗರಣವನ್ನ ಶಾಶ್ವತವಾಗಿ ಮುಚ್ಚಿಹಾಕುವ ಹುನ್ನಾರವೇ? ಎಂದು ಆಶೋಕ್‌ ಪ್ರಶ್ನೆ ಮಾಡಿದ್ದಾರೆ. \ No newline at end of file diff --git a/eesanje/url_46_52_4.txt b/eesanje/url_46_52_4.txt new file mode 100644 index 0000000000000000000000000000000000000000..805133b4f781465e070a7eb133f018d7421f27bc --- /dev/null +++ b/eesanje/url_46_52_4.txt @@ -0,0 +1,11 @@ +4ನೇ ದಿನಕ್ಕೆ ಕಾಲಿಟ್ಟ ‘ಮೈಸೂರು ಚಲೋ’, ಮಂಡ್ಯದಲ್ಲಿ ದೋಸ್ತಿಗಳ ಒಗ್ಗಟ್ಟಿನ ಹೆಜ್ಜೆ +ಬೆಂಗಳೂರು,ಆ.6– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಜಂಟಿ ಹೋರಾಟದಲ್ಲಿ ಟಾರ್ಗೆಟ್‌ ಆಗುತ್ತಿರುವವವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರ!ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭ ವಾಗಿ 4ನೇ ದಿನಕ್ಕೆ ಕಾಲಿಟ್ಟಿದೆ. +ಅಸಲಿಗೆ ಎರಡೂ ಪಕ್ಷಗಳಿಗೆ ಗುರಿಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದರೆ ಬಿಜೆಪಿ-ಜೆಡಿಎಸ್‌‍ ಗುರಿ ಡಿಸಿಎಂ ಶಿವಕುಮಾರ್‌ ಆಗುತ್ತಿದ್ದಾರೆ.ಪಾದಯಾತ್ರೆ ಪ್ರಾರಂಭಕ್ಕೂ ಮುನ್ನವೇ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಿದ್ದ ಶಿವಕುಮಾರ್‌ ಮುಖ್ಯವಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಗುರಿಯಾಗಿಟ್ಟುಕೊಂಡು ಕೆಂಡ ಕಾರುತ್ತಿದ್ದಾರೆ. +ಇದಕ್ಕೆ ಪ್ರತಿಯಾಗಿ ನಾವೇನು ಕಡಿಮೆ ಎಂಬಂತೆ ಕುಮಾರಸ್ವಾಮಿ, ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಸಿದ್ದರಾಮಯ್ಯನವರನ್ನು ಬದಿಗಿರಿಸಿ, ಡಿ.ಕೆ.ಶಿವಕುಮಾರ್‌ ಅವರನ್ನು ವೈಯಕ್ತಿಕ ನೆಲಗಟ್ಟಿನಲ್ಲಿ ದಾಳಿ ನಡೆಸುತ್ತಿರುವುದು ಪಾದಯಾತ್ರೆಯ ವಿಶೇಷವಾಗಿದೆ. +ಪಾದಯಾತ್ರೆಯುದ್ದಕ್ಕೂ ಡಿ.ಕೆ.ಶಿವಕುಮಾರ್‌ ಮತ್ತು ಕುಮಾರಸ್ವಾಮಿ ಅವರುಗಳು ತಮ ಕುಟುಂಬದ ಆಸ್ತಿ ವಿಷಯವೂ ಪ್ರಸ್ತಾಪವಾಗಿದೆ. ಅದರಲ್ಲೂ ಪ್ರತಿದಿನ ಜನಾಂದೋಲನ ನಡೆಸುತ್ತಿರುವ ಡಿಕೆಶಿ ಎರಡೂ ಪಕ್ಷಗಳ ಭ್ರಷ್ಟಾಚಾರವನ್ನು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ. +ಇದಕ್ಕೆ ಪ್ರತಿಯಾಗಿ ಸೇರಿಗೆ ಸವ್ವಾ ಸೇರು ಎಂಬಂತೆ ಕುಮಾರಸ್ವಾಮಿ ಕೂಡ ಡಿಕೆಶಿಯನ್ನು ಗುರಿಯಾಗಿಟ್ಟುಕೊಂಡು ಹಿಂದೆಂದಿಗಿಂತಲೂ ಆಕ್ರಮಣಕಾರಿ ಶೈಲಿಯಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.ಡಿಕೆಶಿ ಭ್ರಷ್ಟಾಚಾರದ ಪಿತಾಮಹ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದಿರುವುದೇ ಲೇಸು ಎಂದು ಬಿ.ವೈ.ವಿಜಯೇಂದ್ರ ಮಾಡಿದ ಆರೋಪವೇ ಇದಕ್ಕೆ ಮುನ್ನುಡಿ ಬರೆದಿತ್ತು. +ಯಾವಾಗ ವಿಜಯೇಂದ್ರ ತಮ ಮೇಲೆ ಇಷ್ಟು ವೈಯಕ್ತಿಕ ನೆಲಗಟ್ಟಿನಲ್ಲಿ ಆರೋಪ ಮಾಡಿದರೋ ಆಗ ಕೆರಳಿ ಕೆಂಡವಾದ ಡಿಕೆಶಿಯವರು ಯಡಿಯೂರಪ್ಪ ಹಾಗೂ ವಿಜಯೇಂದ್ರರ ಜೊತೆಗೆ ಕುಮಾರಸ್ವಾಮಿ ಕುಟುಂಬದವರ ವಿರುದ್ಧ ಆರೋಪಗಳ ಸುರಿಮಳೆಗೈದರು. +ಇಡೀ ಪಾದಯಾತ್ರೆಯು ಕುಮಾರಸ್ವಾಮಿ ಹಾಗೂ ಡಿಕೆಶಿ ಅವರ ಆಸ್ತಿ ಸಮರವಾಗಿ ಮಾರ್ಪಟ್ಟಿದೆ. ನಾನು ನಿನ್ನ ಹಾಗೆ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಎಂದು ಒಬ್ಬರು ಹೇಳಿದರೆ, ಮತ್ತೊಬ್ಬರು ಕನಕಪುರದ ಟೆಂಟ್‌ನಲ್ಲಿ ಸಿನಿಮಾ ತೋರಿಸಿ ಆಸ್ತಿ ಬರೆಸಿಕೊಂಡಿದ್ದೇನೆಯೇ ಎಂದು ತಿರುಗೇಟು ಕೊಡುತ್ತಿದ್ದಾರೆ. +ಯಾವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಗುರಿಯಾಗಬೇಕಾಗಿತ್ತೋ ಬದಲಿಗೆ ಇಲ್ಲಿ ಶಿವಕುಮಾರ್‌ ಎರಡೂ ಪಕ್ಷಗಳಿಗೆ ಆಹಾರವಾಗಿದ್ದಾರೆ.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗದ ಪ್ರಾಂತ್ಯದಲ್ಲಿ ಎನ್‌ಡಿಎ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿತ್ತು. 14 ಲೋಕಸಭಾ ಕ್ಷೇತ್ರಗಳ ಪೈಕಿ ಹಾಸನ, ಚಾಮರಾಜನಗರ ಹೊರತುಪಡಿಸಿದರೆ 12 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಗೆದ್ದುಕೊಂಡಿತ್ತು. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗ ಬಹುತೇಕ ಕಾಂಗ್ರೆಸ್‌‍ಮಯವಾಗಿತ್ತು. ಜೆಡಿಎಸ್‌‍ನ ಭದ್ರಕೋಟೆಯನ್ನು ಡಿಕೆಶಿ ಯಶಸ್ವಿಯಾಗಿ ಬೇಧಿಸಿದ್ದರು.ಯಾವಾಗ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ವ್ಯತಿರಿಕ್ತವಾಗಿ ಹೊರಬಂದಿತೋ, ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಮತ್ತು ಡಿಕೆಶಿ ಪೈಪೋಟಿಗೆ ಬಿದ್ದಂತೆ ವಾಕ್ಸಮರಕ್ಕೆ ನಿಂತಿದ್ದಾರೆ. +ಇಬ್ಬರ ಜಗಳದಲ್ಲಿ ಸಿದ್ದರಾಮಯ್ಯ ಪ್ರಕರಣ ಗೌಣವಾಗಿದೆ. ಈ ಎಲ್ಲಾ ಆಟವನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸದ್ದಿಲ್ಲದೆ ಹಳೆ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಿಕೊಳ್ಳುತ್ತಿದೆ. \ No newline at end of file diff --git a/eesanje/url_46_52_5.txt b/eesanje/url_46_52_5.txt new file mode 100644 index 0000000000000000000000000000000000000000..39d47dbe3ce17fa5def732dfdfc7b75158271c53 --- /dev/null +++ b/eesanje/url_46_52_5.txt @@ -0,0 +1,7 @@ +ಬೆಂಗಳೂರು-ಮಂಗಳೂರು ನಡುವೆ ಆ.8ರ ವರೆಗೆ ರೈಲು ಸಂಚಾರ ರದ್ದು +ಬೆಂಗಳೂರು, ಆ. 6-ಪಶ್ಚಿಮ ಘಟ್ಟದಲ್ಲಿ ಮಳೆಯಾಗುತ್ತಿರುವ ಪರಿಣಾಮ ಭೂಕುಸಿತ ಉಂಟಾಗಿ ಎಡಕುಮರಿ- ಕಡಗವಳ್ಳಿ ರೈಲ್ವೆ ಮಾರ್ಗ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ. 8ರವರೆಗೆ 12 ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದು ಮಾಡಲಾಗಿದೆ. +ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿತ್ತು. ಎಡಕುಮರಿ ಕಡಗವಳ್ಳಿ ರೈಲ್ವೆ ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ಬೆಂಗಳೂರು- ಮಂಗಳೂರು ಮಧ್ಯೆ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು. +ಈ ಮಾರ್ಗದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಅದು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಆ.8ರವರೆಗೆ 12 ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಕೆಎಸ್‌‍ಆರ್‌ ಬೆಂಗಳೂರು- ಕಾರವಾರ ಎಕ್ಸ್ ಪ್ರೆಸ್‌‍ ರೈಲು ಸಂಚಾರ ಆ.7ರವರೆಗೆ ರದ್ದಾಗಲಿದೆ. +ಕಾರವಾರ ಕೆಎಸ್‌‍ಆರ್‌ ಬೆಂಗಳೂರು ಎಕ್ಸ್ ಪ್ರೆಸ್‌‍- ಕಾರವಾರ ಮಡಗಾಂವ್‌, ಮಡಗಾಂವ್‌- ಕಾರವಾರ ವಿಶೇಷ ರೈಲಿನ ಸಂಚಾರವನ್ನು ಆ.8ರ ವರೆಗೆ ರದ್ದು ಮಾಡಲಾಗಿದೆ. ಸರ್‌.ಎಂ. ವಿಶ್ವೇಶ್ವರಯ್ಯ- ಮುರ್ಡೇಶ್ವರ ಎಕ್ಸ್ ಪ್ರೆಸ್‌‍, ಯಶವಂತಪುರ- ಕಾರವಾರ ಎಕ್ಸ್ ಪ್ರೆಸ್‌‍ ರೈಲುಗಳ ಸಂಚಾರವನ್ನು ಆ. 8ರವರೆಗೆ ಸಂಪೂರ್ಣವಾಗಿ ರದ್ದು ಮಾಡಲಾಗಿದೆ. +ಕಳೆದ ವಾರ ಸುರಿದ ಭಾರೀ ಮಳೆಗೆ ದೋಣಿ ಹಗಲ್‌ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತ ಉಂಟಾಗಿತ್ತು. ಇದೀಗ ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಕಾಮಗಾರಿ ಪೂರ್ಣಗೊಂಡಿದ್ದು, ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣಗೊಂಡಿವೆ. +ಪ್ರಾಯೋಗಿಕವಾಗಿ ಗೂಡ್ಸ್ ರೈಲು ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದುರಸ್ಥಿ ಕಾರ್ಯ ನಡೆಯುತ್ತಿರುವ ಸ್ಥಳ ಹಾಗೂ ಆಸುಪಾಸಿನಲ್ಲಿ 15 ಕಿಲೋ ಮೀಟರ್‌ ವೇಗದಲ್ಲಿ ಗೂಡ್ಸ್ ರೈಲಿನ ಪ್ರಾಯೋಗಿಕ ಓಡಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ ಪ್ರಯಾಣಿಕರ ರೈಲು ಸಂಚಾರಕ್ಕೆ ಇನ್ನೂ ಅವಕಾಶ ನೀಡಿಲ್ಲ. ಆ. 8ರವರೆಗೆ ಬೆಂಗಳೂರು- ಮಂಗಳೂರು ಮಧ್ಯೆ ರೈಲ್ವೇ ಸಂಚಾರ ರದ್ದುಗೊಳಿಸಿದ್ದು, ಆ. 8ರ ನಂತರ ಪ್ರಯಾಣಿಕರ ರೈಲು ಸಂಚಾರಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_52_6.txt b/eesanje/url_46_52_6.txt new file mode 100644 index 0000000000000000000000000000000000000000..54bf9059914255e9e29c619c35278a8d70b19d66 --- /dev/null +++ b/eesanje/url_46_52_6.txt @@ -0,0 +1,7 @@ +ಕೇಂದ್ರದಿಂದ ಕೊಬ್ಬರಿ ಖರೀದಿ, ತುಮಕೂರು ರೈತರ ಖಾತೆಗೆ 346 ಕೋಟಿ ನೇರ ಪಾವತಿ +ಬೆಂಗಳೂರು,ಆ.6-ತುಮಕೂರು ಜಿಲ್ಲೆಯಲ್ಲಿ ರೈತರಿಂದ ಖರೀದಿಸಲ್ಪಟ್ಟ ಉಂಡೆ ಕೊಬ್ಬರಿ ಮೊತ್ತ 346.50 ಕೋಟಿ ರೂ. ರೈತರ ಖಾತೆಗೆ ನೇರವಾಗಿ ಪಾವತಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. +2024ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27,000 ರೈತರಿಂದ ಒಟ್ಟು 3,15,000 ಕ್ವಿಂಟಾಲ್‌ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು ರೂ.378 ಕೋಟಿಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸ ಬೇಕಾಗಿತ್ತು. +ಈ ಸಂಬಂಧ 2024 ಆಗಸ್ಟ್‌ 5ರ ವರೆಗೆ ಸುಮಾರು 346.50 ಕೋಟಿ ಮೊತ್ತವನ್ನು (ಪ್ರತಿಶತ 92 ರಷ್ಟು) ರೈತರ ಖಾತೆಗೆ ನೇರವಾಗಿಪಾವತಿಸಲಾಗಿದೆ.ಶೀಘ್ರ ಹಣ ಪಾವತಿಗೆ ಸಚಿವ ಸೋಮಣ್ಣಅವರ ಮನವಿ ಮಾಡಿದ್ದರು. +ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು ಸುಮಾರು 24600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ರೈತರ ಖಾತೆಗೆ ಪಾವತಿಸ ಲಾಗಿದೆಯೆಂದು ತಿಳಿಸಿದ್ದಾರೆ,ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಇನ್ನು 31.64ಕೋಟಿ ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ ಇದು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಏಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. +ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ ರೂ.691 ಕೋಟಿಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿಸಚಿವ ಸೋಮಣ್ಣ ಅವರು ತಿಳಿಸಿದ್ದಾರೆ. +ರೈತರ ಖಾತೆಗೆ ಹಣ ಸಂದಾಯವಾದ ಬಗ್ಗೆ ಸಂತಸ ವ್ಯಕ್ತಪಡಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ತುಮಕೂರಿನ ರೈತರ ಪರವಾಗಿ ಧನ್ಯವಾದ ತಿಳಿಸಿದ್ದಾರೆ. \ No newline at end of file diff --git a/eesanje/url_46_52_7.txt b/eesanje/url_46_52_7.txt new file mode 100644 index 0000000000000000000000000000000000000000..6a5e32672bb734c5405519c7663211a629c683d8 --- /dev/null +++ b/eesanje/url_46_52_7.txt @@ -0,0 +1,9 @@ +ಕಾನೂನು ಓದಿದ್ದೇನೆ ಎನ್ನುವ ಸಿದ್ದರಾಮಯ್ಯನವರಿಗೆ ಕನಿಷ್ಠ ಜ್ಞಾನ ಇರಬೇಕಿತ್ತು : ಪಿ.ರಾಜೀವ್‌ +ಬೆಂಗಳೂರು,ಆ.6-ತಾವು ಲಾ (ಕಾನೂನು) ಓದಿದ್ದಾಗಿ ಸಿದ್ದರಾಮಯ್ಯನವರು ಮಾತುಮಾತಿಗೆ ಹೇಳುತ್ತಾರೆ. ಲಾ ಎಲ್ಲರಿಗೂ ಒಂದೇ ಎಂಬ ಕನಿಷ್ಠ ಜ್ಞಾನ ಮುಖ್ಯಮಂತ್ರಿಗಳಿಗೆ ಇರಬೇಕಿತ್ತು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಅವರು ತಿಳಿಸಿದರು. +ಮದ್ದೂರಿನಲ್ಲಿ ಶಾಸಕ ಡಿ.ಸಿ.ತಮಣ್ಣರವರ ಮನೆಯ ಆವರಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಸನಾನ್ಯ ಯಡಿಯೂರಪ್ಪನವರ ಮೇಲೆ ಹಂಸರಾಜ್‌ ಭಾರದ್ವಾಜ್‌ ಅವರು ತನಿಖೆಗೆ ಅನುಮತಿ ನೀಡಿದಾಗ ಇದೇ ಸಿದ್ದರಾಮಯ್ಯನವರು ಯಾವ ಮಾತು ಹೇಳಿದ್ದರು? ಯಾವ ಪದಗಳನ್ನು ಬಳಸಿದ್ದರು? ಎಂದು ಕೇಳಿದರು. +ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್‌‍ನ ಸಾವಿರಾರು ಕಾರ್ಯಕರ್ತರು ಒಟ್ಟಾಗಿ ಹೆಜ್ಜೆ ಹಾಕುತ್ತಿದ್ದಾರೆ. ಪಾದಯಾತ್ರೆಯ ಹಿಂಭಾಗದಲ್ಲಿ ನೂರಾರು ಕಾರುಗಳನ್ನು ನೀವು ನೋಡುತ್ತೀರಿ. ಈ ಬಿಸಿಲಿನಲ್ಲಿ ಖಾಲಿ ಕಾರುಗಳು ಹೋದರೂ ಒಬ್ಬರೂ ತಮ ಕಾರನ್ನೇರುತ್ತಿಲ್ಲ. ಪಾದಯಾತ್ರೆಯ ಬಗ್ಗೆ ಕಾರ್ಯಕರ್ತರ ಉತ್ಸಾಹ ಇದರಿಂದ ವ್ಯಕ್ತವಾಗುತ್ತದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. +ನಮಲ್ಲಿ ಕಾರ್ಯಕರ್ತರ ಮಟ್ಟದಿಂದ ರಾಷ್ಟಮಟ್ಟದವರೆಗೆ ಒಗ್ಗಟ್ಟಿದೆ ಎಂದು ತಿಳಿಸಿದರು. ಎಲ್ಲಾ ಕಡೆ ಹಾಸ್ಯಧಾರಿಗಳು, ಪಾತ್ರಧಾರಿಗಳು ಇರುತ್ತಾರೆ. ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದರು. ನಮ ಒಗ್ಗಟ್ಟು ಪ್ರಾಮಾಣಿಕತೆಗೆ ಇರುವಂಥದ್ದು, ಅವರ ಒಗ್ಗಟ್ಟು ಭ್ರಷ್ಟಾಚಾರವನ್ನು ರಕ್ಷಣೆ ಮಾಡಲು ಇರುವಂಥದ್ದು. ಇದು ವ್ಯತ್ಯಾಸ ಎಂದು ವಿವರಿಸಿದರು. +ಹೆಗ್ಗಣ ಬಿದ್ದಿದೆ; ಅದನ್ನು ನೋಡಿಕೊಳ್ಳಿ.. :ಇವತ್ತು ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಎನ್ನುತ್ತಾರೆ. ಸಿದ್ದರಾಮಯ್ಯನವರಿಗೆ ತಟ್ಟೆಯ ಸೈಜ್‌ ಎಷ್ಟು ಕತ್ತೆಯ ಸೈಜ್‌ ಎಷ್ಟೆಂದು ಗೊತ್ತಾಗುವುದಿಲ್ಲ. ಯಾರ ತಟ್ಟೆಯಲ್ಲೂ ಕತ್ತೆ ಬೀಳಲು ಸಾಧ್ಯವಿಲ್ಲ. ನಿಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಎಂದು ನಾವು ಹೇಳುತ್ತೇವೆ. ಅದನ್ನು ನೀವು ನೋಡಿಕೊಳ್ಳಿ ಎಂದು ಪಿ. ರಾಜೀವ್‌ ಅವರು ವ್ಯಂಗ್ಯವಾಡಿದರು. +ರಾಜ್ಯದ ಖಜಾನೆಯಿಂದ ರಾಜ್ಯ ಸರಕಾರವು ಹಣ ಲೂಟಿ ಮಾಡಿ ಚುನಾವಣೆಗೆ ಬಳಸಿದ ಉದಾಹರಣೆ ಇತಿಹಾಸದಲ್ಲೇ ಇಲ್ಲ. ಕಾಂಗ್ರೆಸ್‌‍ ಆಡಳಿತದಲ್ಲಿ ನಡೆದ ಇದು ಇಡೀ ದೇಶಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿ ಎಂದು ವಿಶ್ಲೇಷಿಸಿದರು. +ಅಧಿಕಾರಿಗಳ ಆತಹತ್ಯೆ ನಿರಂತರವಾಗಿ ನಡೆಯುತ್ತಿದೆ. ಸಚಿವರು ಎಂದು ಚಂದ್ರಶೇಖರ್‌ ಅವರು ತಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರೂ ಕೂಡ ಸಿಐಡಿ ಚಾರ್ಜ್‌ ಶೀಟ್‌ನಲ್ಲಿ ಅವರ ಹೆಸರನ್ನು ಕೈಬಿಡುವ ಮೂಲಕ ಕಾಂಗ್ರೆಸ್‌‍ ಭ್ರಷ್ಟಾಚಾರವನ್ನು ಯಾವ ರೀತಿ ರಕ್ಷಿಸಲು ಮುಂದಾಗುತ್ತದೆ, ಯಾವ ಕೀಳು ಮಟ್ಟಕ್ಕೆ ಇಳಿಯುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದರು. +ಕಿಕ್‌ ಬ್ಯಾಕ್‌ ಕೊಡಲು ಬ್ಲ್ಯಾಕ್‌ಮೇಲ್‌ :ಸಿದ್ದರಾಮಯ್ಯನವರನ್ನು ಇಳಿಸುತ್ತೇವೆ, ಇಲ್ಲವಾದರೆ ಕಿಕ್‌ಬ್ಯಾಕ್‌ ಕೊಡಿ ಎಂಬ ಬ್ಲ್ಯಾಕ್‌ಮೇಲ್‌ ತಂತ್ರಕ್ಕೆ ಕಾಂಗ್ರೆಸ್ಸಿನ ಹೈಕಮಾಂಡ್‌ ಇಳಿದಿರುವುದು ಈ ರಾಜ್ಯದ ದುರದೃಷ್ಟ. ಕರ್ನಾಟಕವು ಕಾಂಗ್ರೆಸ್ಸಿನ ಎಟಿಎಂ ಆಗಲಿದೆ ಎಂಬ ಈ ಹಿಂದಿನಿಂದಲೇ ಆಡುತ್ತಿದ್ದ ನಮ ಮಾತು ನಿಜವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಜೆಡಿಎಸ್‌‍ ಜನತಾದಳ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ವಿಧಾನಪರಿಷತ್‌ ಸದಸ್ಯ ಭೋಜೇಗೌಡ, ಶಾಸಕ ಡಿ.ಸಿ.ತಮಣ್ಣ, ಮಾಜಿ ಸಂಸದ ಪುಟ್ಟಸ್ವಾಮಿ ಮುಂತಾದವರು ಇದ್ದರು. \ No newline at end of file diff --git a/eesanje/url_46_52_8.txt b/eesanje/url_46_52_8.txt new file mode 100644 index 0000000000000000000000000000000000000000..e43c003403af1e258d6da84d6e891576ee823bba --- /dev/null +++ b/eesanje/url_46_52_8.txt @@ -0,0 +1,12 @@ +ಸಿಎಂ ಸಿದ್ದರಾಮಯ್ಯಗೆ 2ನೇ ನೋಟೀಸ್‌‍ ನೀಡಲು ಮುಂದಾದ ರಾಜ್ಯಪಾಲರು..? +ಬೆಂಗಳೂರು,ಆ.6– ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( ಮೂಡಾ)ದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎರಡನೇ ಬಾರಿ ಮತ್ತೊಂದು ನೋಟೀಸ್‌‍ ನೀಡಲು ಮುಂದಾಗಿದ್ದಾರೆ.ಈ ಹಿಂದೆ ನೀಡಿದ್ದ ಶೋಕಾಸ್‌‍ ನೋಟಿಸ್‌‍ಗೆ ರಾಜ್ಯಸರ್ಕಾರ ನೀಡಿರುವ ಉತ್ತರ ಸಮರ್ಪಕವಾಗಿಲ್ಲ ಎಂದು ಆಕ್ಷೇಪಿಸಿರುವ ರಾಜ್ಯಪಾಲರು ಎರಡನೇ ಬಾರಿ ಶೋಕಾಸ್‌‍ ನೋಟಿಸ್‌‍ ಜಾರಿ ಮಾಡುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. +ಸರ್ಕಾರದ ಪರವಾಗಿ ಮುಖ್ಯಕಾರ್ಯದರ್ಶಿಯವರು ನೀಡಿರುವ ಉತ್ತರಕ್ಕೂ, ಪ್ರಕರಣಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಮತ್ತೊಮೆ ಶೋಕಾಸ್‌‍ ನೋಟಿಸ್‌‍ ನೀಡುವಂತೆ ರಾಜ್ಯಪಾಲರಿಗೆ ಸ್ವತಃ ಕಾನೂನು ತಜ್ಞರೇ ಸಲಹೆ ಮಾಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ನಿನ್ನೆ ದೆಹಲಿಯಿಂದ ಆಗಮಿಸಿದ ರಾಜ್ಯಪಾಲರು ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೀಡಿರುವ ಉತ್ತರದ ಬಗ್ಗೆ ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ. +ಪ್ರಕರಣವನ್ನು ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದ್ದು, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರನ್ನು ರಕ್ಷಣೆ ಮಾಡಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಶೋಕಾಸ್‌‍ ನೋಟಿಸ್‌‍ ಅನ್ನು ಹಿಂಪಡೆಯುವಂತೆ ಮನವಿ ಮಾಡಲಾಗಿದೆ. ಹೀಗಾಗಿ ಎರಡನೇ ಬಾರಿ ನೋಟಿಸ್‌‍ ನೀಡಿ ಮುಂದಿನ ಕ್ರಮ ಜರುಗಿಸಲು ಕಾನೂನು ತಜ್ಞರು ಸಲಹೆ ಕೊಟ್ಟಿದ್ದಾರೆ. +ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಪ್ರಕರಣದಲ್ಲಿ ನಡೆದದ್ದೇ ರಾಜ್ಯಪಾಲರ ಈಗಿನ ನಡೆಗೆ ಕಾರಣ ಎನ್ನಲಾಗಿದೆ. ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಆದೇಶವನ್ನು ಯಡಿಯೂರಪ್ಪ ಪ್ರಶ್ನೆ ಮಾಡಿದ್ದರು. ರಾಜ್ಯಪಾಲರು ಅನುಮತಿ ಕೊಡುವಾಗ ಆರೋಪದ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆಯುವ ಪ್ರಕ್ರಿಯೆಯನ್ನು ಸರಿಯಾಗಿ ನಡೆಸಿಲ್ಲ. ಆತುರಾತುರವಾಗಿ ನಿರ್ಧಾರ ಮಾಡಿ ನೋಟೀಸ್‌‍ ಕೊಟ್ಟಿದ್ದಾರೆ. ರಾಜ್ಯ ಸರ್ಕಾರವನ್ನು ಅಭದ್ರ ಮಾಡುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದರು. +ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಇತ್ತು. ಹೀಗಾಗಿ ರಾಜಕೀಯ ಲಾಭ ಪಡೆಯಲು ಈ ನಿರ್ಧಾರ ಮಾಡಿದ್ದರು ಎಂದು ಯಡಿಯೂರಪ್ಪ ವಾದ ಮಾಡಿದ್ದರು. ಯಡಿಯೂರಪ್ಪ ವಾದವನ್ನು ಹೈಕೋರ್ಟ್‌ ಒಪ್ಪಿತ್ತು. ಜನಪ್ರತಿನಿಧಿಗಳ ಸರ್ಕಾರದ ನೇತೃತ್ವ ವಹಿಸಿರುವವರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಕೊಡುವಾಗ ಮೂರು ಬಾರಿ ನೋಟೀಸ್‌‍ ಹಾಗೂ ಮೂರು ಬಾರಿ ಲೀಗಲ್‌ ಓಪಿನಿಯನ್‌ ಪಡೆದು ಮುಂದುವರಿಯಬೇಕು ಎಂದು ಹೈಕೋರ್ಟ್‌ ಆದೇಶ ಮಾಡಿತ್ತು. +ಹೀಗಾಗಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಆರೋಪ ಕೇಳಿ ಬಂದಿರುವುದರಿಂದ, ಕಾನೂನು ಪ್ರಕ್ರಿಯೆ ಮಾಡುವಾಗ ಯಾವುದೇ ಲೋಪ ಆಗದಂತೆ ರಾಜ್ಯಪಾಲರು ಪದೇ ಪದೆ ನೋಟೀಸ್‌‍ ನೀಡುತ್ತಿದ್ದಾರೆ.ರಾಜ್ಯಪಾಲರು ಜುಲೈ 26ಕ್ಕೆ ಮುಖ್ಯಮಂತ್ರಿಗೆ ಮುಡಾ ಸಂಬಂಧ ಶೋಕಾಸ್‌‍ ನೋಟಿಸ್‌‍ ಕಳುಹಿಸಿದ್ದರು. +ಈ ನೋಟಿಸ್‌‍ನಲ್ಲಿ, ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್‌ 7, 9, 11, 12, ಮತ್ತು 15ರಲ್ಲಿ ಹಾಗೂ ಭಾರತೀಯ ನ್ಯಾಯ ಸಂಹಿತ 2023ರಡಿ ಸೆಕ್ಷನ್‌ 59, 61, 62, 201, 227, 228, 229, 239, 314, 316(5), 318(1)(2)(3), 319, 322, 324 (1)(2)(3), 335, 336, 338 ಮತ್ತು 340ರಲ್ಲಿ ನಿಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿ ಟಿ.ಜೆ.ಅಬ್ರಾಹಂ ಮನವಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ ಹಾಗೂ ಬಿಎನ್‌ಎಸ್‌‍ ಕಾಯ್ದೆಯ ವಿವಿಧ ಸೆಕ್ಷನ್‌ಗಳನ್ನು ಉಲ್ಲಂಸಿ ಮುಡಾದಲ್ಲಿ ನೀವು ಮತ್ತು ಕುಟುಂಬ ಸದಸ್ಯರು ಬದಲಿ ಪರಿಹಾರ ನಿವೇಶನಗಳನ್ನು ಪಡೆದಿರುವುದಾಗಿ ಟಿ.ಜೆ.ಅಬ್ರಾಹಂ ಆರೋಪಿಸಿದ್ದಾರೆ ಎಂದು ಉಲ್ಲೇಖಿಸಿದ್ದರು. +ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್‌ 17ಂ ಮತ್ತು 19 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಕಾಯ್ದೆಯ ಸೆಕ್ಷನ್‌ 218ರಡಿಯ ನಿಯಮದಂತೆ ಅರ್ಜಿದಾರನ ಮನವಿಯ ಮೇಲೆ ಕ್ರಮ ಕೈಗೊಳ್ಳುವ ಅಗತ್ಯ ಇದೆೞ ಎಂದು ಶೋಕಾಸ್‌‍ ನೋಟಿಸ್‌‍ನಲ್ಲಿ ರಾಜ್ಯಪಾಲರು ತಿಳಿಸಿದ್ದರು.ಹೀಗಾಗಿ, ಅಭಿಯೋಜನೆಗೆ ಏಕೆ ಅನುಮತಿ ನೀಡಬಾರದು ಎಂದು ಸಕಾರಣದೊಂದಿಗೆ ಸೂಕ್ತ ದಾಖಲೆಗಳ ಸಮೇತ ನಿಮ ವಿರುದ್ಧದ ಆರೋಪಗಳ ಬಗ್ಗೆ ಏಳು ದಿನಗಳೊಳಗಾಗಿ ಸ್ಪಷ್ಟನೆ ಸಲ್ಲಿಸುವಂತೆ ರಾಜ್ಯಪಾಲರು ಸೂಚಿಸಿದ್ದರು. +ಈ ಹಿಂದೆ ರಾಜ್ಯಪಾಲರು ನೀಡಿದ ನೋಟಿಸ್‌‍ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ರಾಜ್ಯಪಾಲರ ಸಂವಿಧಾನಿಕ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಕಾನೂನುಬದ್ಧವಾಗಿ ಚುನಾಯಿತವಾದ ಬಹುಮತದ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಟಿತ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. +ದೆಹಲಿಯಿಂದ ವಾಪಸ್‌‍ ಆಗಿರುವ ರಾಜ್ಯಪಾಲರು ಇದೀಗ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಲಿದ್ದಾರೆಯೇ, ಇಲ್ಲವೇ ಅಬ್ರಹಾಂ ನೀಡಿದ ದೂರನ್ನು ತಿರಸ್ಕರಿಸಲಿದ್ದಾರೆಯೇ ಎಂಬ ಚರ್ಚೆ ಪ್ರಾರಂಭವಾಗಿದೆ.ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದರೆ ಸರ್ಕಾರ ಹಾಗೂ ರಾಜಭವನದ ನಡುವೆ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಸದ್ಯಕ್ಕೆ ಸದ್ಯಕ್ಕೆ ರಾಜ್ಯಪಾಲರು ಕಾದು ನೋಡಲಿದ್ದಾರೆ ಎನ್ನಲಾಗುತ್ತಿದೆ. +ದೆಹಲಿಯಲ್ಲಿ ಸಂಸತ್‌ ಅಧಿವೇಶನ ನಡೆಯುತ್ತಿದ್ದು ಆ.12 ರಂದು ಮುಕ್ತಾಯಗೊಳ್ಳಲಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದರೆ, ಸದನದಲ್ಲಿ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸಬಹುದು ಎಂಬ ಕಾರಣಕ್ಕೆ ಅಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕೆ ಆ.12ರ ಬಳಿಕ ರಾಜ್ಯಪಾಲರು ತಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ. \ No newline at end of file diff --git a/eesanje/url_46_52_9.txt b/eesanje/url_46_52_9.txt new file mode 100644 index 0000000000000000000000000000000000000000..f2c36540dc930add8f324e5a00f6572fffaf377c --- /dev/null +++ b/eesanje/url_46_52_9.txt @@ -0,0 +1,12 @@ +ಸಿದ್ದರಾಮಯ್ಯ ವಿರುದ್ಧದ ಹೋರಾಟದಲ್ಲಿ ಟಾರ್ಗೆಟ್ ಆಗ್ತಿದ್ದಾರೆ ಡಿಕೆ +ಬೆಂಗಳೂರು,ಆ.6– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಜಂಟಿ ಹೋರಾಟದಲ್ಲಿ ಟಾರ್ಗೆಟ್‌ ಆಗುತ್ತಿರುವವವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತ್ರ! +ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಎನ್‌ಡಿಎ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರುವರೆಗೆ ನಡೆಸುತ್ತಿರುವ ಪಾದಯಾತ್ರೆ ಪ್ರಾರಂಭವಾಗಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಅಸಲಿಗೆ ಎರಡೂ ಪಕ್ಷಗಳಿಗೆ ಗುರಿಯಾಗಬೇಕಾಗಿದ್ದ ಸಿಎಂ ಸಿದ್ದರಾಮಯ್ಯ ಸದ್ಯ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದರೆ ಬಿಜೆಪಿ-ಜೆಡಿಎಸ್‌‍ ಗುರಿ ಡಿಸಿಎಂ ಶಿವಕುಮಾರ್‌ ಆಗುತ್ತಿದ್ದಾರೆ. +ಪಾದಯಾತ್ರೆ ಪ್ರಾರಂಭಕ್ಕೂ ಮುನ್ನವೇ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಿದ್ದ ಶಿವಕುಮಾರ್‌ ಮುಖ್ಯವಾಗಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರನ್ನು ಗುರಿಯಾಗಿಟ್ಟುಕೊಂಡು ಕೆಂಡ ಕಾರುತ್ತಿದ್ದಾರೆ. +ಇದಕ್ಕೆ ಪ್ರತಿಯಾಗಿ ನಾವೇನು ಕಡಿಮೆ ಎಂಬಂತೆ ಕುಮಾರಸ್ವಾಮಿ, ವಿಜಯೇಂದ್ರ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಸಿದ್ದರಾಮಯ್ಯನವರನ್ನು ಬದಿಗಿರಿಸಿ, ಡಿ.ಕೆ.ಶಿವಕುಮಾರ್‌ ಅವರನ್ನು ವೈಯಕ್ತಿಕ ನೆಲಗಟ್ಟಿನಲ್ಲಿ ದಾಳಿ ನಡೆಸುತ್ತಿರುವುದು ಪಾದಯಾತ್ರೆಯ ವಿಶೇಷವಾಗಿದೆ. +ಪಾದಯಾತ್ರೆಯುದ್ದಕ್ಕೂ ಡಿ.ಕೆ.ಶಿವಕುಮಾರ್‌ ಮತ್ತು ಕುಮಾರಸ್ವಾಮಿ ಅವರುಗಳು ತಮ ಕುಟುಂಬದ ಆಸ್ತಿ ವಿಷಯವೂ ಪ್ರಸ್ತಾಪವಾಗಿದೆ. ಅದರಲ್ಲೂ ಪ್ರತಿದಿನ ಜನಾಂದೋಲನ ನಡೆಸುತ್ತಿರುವ ಡಿಕೆಶಿ ಎರಡೂ ಪಕ್ಷಗಳ ಭ್ರಷ್ಟಾಚಾರವನ್ನು ಜನತೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡುತ್ತಿದ್ದಾರೆ. +ಇದಕ್ಕೆ ಪ್ರತಿಯಾಗಿ ಸೇರಿಗೆ ಸವ್ವಾ ಸೇರು ಎಂಬಂತೆ ಕುಮಾರಸ್ವಾಮಿ ಕೂಡ ಡಿಕೆಶಿಯನ್ನು ಗುರಿಯಾಗಿಟ್ಟುಕೊಂಡು ಹಿಂದೆಂದಿಗಿಂತಲೂ ಆಕ್ರಮಣಕಾರಿ ಶೈಲಿಯಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ. +ಡಿಕೆಶಿ ಭ್ರಷ್ಟಾಚಾರದ ಪಿತಾಮಹ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡದಿರುವುದೇ ಲೇಸು ಎಂದು ಬಿ.ವೈ.ವಿಜಯೇಂದ್ರ ಮಾಡಿದ ಆರೋಪವೇ ಇದಕ್ಕೆ ಮುನ್ನುಡಿ ಬರೆದಿತ್ತು.ಯಾವಾಗ ವಿಜಯೇಂದ್ರ ತಮ ಮೇಲೆ ಇಷ್ಟು ವೈಯಕ್ತಿಕ ನೆಲಗಟ್ಟಿನಲ್ಲಿ ಆರೋಪ ಮಾಡಿದರೋ ಆಗ ಕೆರಳಿ ಕೆಂಡವಾದ ಡಿಕೆಶಿಯವರು ಯಡಿಯೂರಪ್ಪ ಹಾಗೂ ವಿಜಯೇಂದ್ರರ ಜೊತೆಗೆ ಕುಮಾರಸ್ವಾಮಿ ಕುಟುಂಬದವರ ವಿರುದ್ಧ ಆರೋಪಗಳ ಸುರಿಮಳೆಗೈದರು. +ಇಡೀ ಪಾದಯಾತ್ರೆಯು ಕುಮಾರಸ್ವಾಮಿ ಹಾಗೂ ಡಿಕೆಶಿ ಅವರ ಆಸ್ತಿ ಸಮರವಾಗಿ ಮಾರ್ಪಟ್ಟಿದೆ. ನಾನು ನಿನ್ನ ಹಾಗೆ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಎಂದು ಒಬ್ಬರು ಹೇಳಿದರೆ, ಮತ್ತೊಬ್ಬರು ಕನಕಪುರದ ಟೆಂಟ್‌ನಲ್ಲಿ ಸಿನಿಮಾ ತೋರಿಸಿ ಆಸ್ತಿ ಬರೆಸಿಕೊಂಡಿದ್ದೇನೆಯೇ ಎಂದು ತಿರುಗೇಟು ಕೊಡುತ್ತಿದ್ದಾರೆ. +ಯಾವ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಗುರಿಯಾಗಬೇಕಾಗಿತ್ತೋ ಬದಲಿಗೆ ಇಲ್ಲಿ ಶಿವಕುಮಾರ್‌ ಎರಡೂ ಪಕ್ಷಗಳಿಗೆ ಆಹಾರವಾಗಿದ್ದಾರೆ.ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗದ ಪ್ರಾಂತ್ಯದಲ್ಲಿ ಎನ್‌ಡಿಎ ನಿರೀಕ್ಷೆಗೂ ಮೀರಿದ ಗೆಲುವು ಸಾಧಿಸಿತ್ತು. 14 ಲೋಕಸಭಾ ಕ್ಷೇತ್ರಗಳ ಪೈಕಿ ಹಾಸನ, ಚಾಮರಾಜನಗರ ಹೊರತುಪಡಿಸಿದರೆ 12 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟ ಗೆದ್ದುಕೊಂಡಿತ್ತು. +ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು ವಿಭಾಗ ಬಹುತೇಕ ಕಾಂಗ್ರೆಸ್‌‍ಮಯವಾಗಿತ್ತು. ಜೆಡಿಎಸ್‌‍ನ ಭದ್ರಕೋಟೆಯನ್ನು ಡಿಕೆಶಿ ಯಶಸ್ವಿಯಾಗಿ ಬೇಧಿಸಿದ್ದರು. +ಯಾವಾಗ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ವ್ಯತಿರಿಕ್ತವಾಗಿ ಹೊರಬಂದಿತೋ, ಅಸ್ತಿತ್ವ ಉಳಿಸಿಕೊಳ್ಳಲು ಕುಮಾರಸ್ವಾಮಿ ಮತ್ತು ಡಿಕೆಶಿ ಪೈಪೋಟಿಗೆ ಬಿದ್ದಂತೆ ವಾಕ್ಸಮರಕ್ಕೆ ನಿಂತಿದ್ದಾರೆ.ಇಬ್ಬರ ಜಗಳದಲ್ಲಿ ಸಿದ್ದರಾಮಯ್ಯ ಪ್ರಕರಣ ಗೌಣವಾಗಿದೆ. ಈ ಎಲ್ಲಾ ಆಟವನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸದ್ದಿಲ್ಲದೆ ಹಳೆ ಮೈಸೂರಿನಲ್ಲಿ ಪಕ್ಷ ಸಂಘಟನೆಯ ಬೇರುಗಳನ್ನು ಬಲಪಡಿಸಿಕೊಳ್ಳುತ್ತಿದೆ. \ No newline at end of file diff --git a/eesanje/url_46_53_1.txt b/eesanje/url_46_53_1.txt new file mode 100644 index 0000000000000000000000000000000000000000..821a3d66c3f8950e964daec3de8f1dc94f67a85e --- /dev/null +++ b/eesanje/url_46_53_1.txt @@ -0,0 +1,8 @@ +“ರೇವಣ್ಣ ಪ್ರಕರಣದಲ್ಲಿ ಇದ್ದ ಆತುರ ವಾಲ್ಮೀಕಿ ಹಗರಣದಲ್ಲಿ ಏಕಿಲ್ಲ..?” +ಬೆಂಗಳೂರು,ಆ.5-ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬ ಸದಸ್ಯರ ಮೇಲೆ ಬಂದಿ ರುವ ಆರೋಪಕ್ಕೆ ಸಂಬಂಧಿಸಿದಂತೆ ಮಾತ್ರ ಆತುರದಲ್ಲಿ ಎಸ್‌‍ಐಟಿ ರಚನೆ ಮಾಡಿ, ನೋಟೀಸ್‌‍ ನೀಡಿ, ವಿಚಾರಣೆ ಮಾಡಿ, ನ್ಯಾಯಾಂಗ ಬಂಧನಕ್ಕೂ ಕಳಿಸುತ್ತೀರಿ. +ಆದರೆ ಅದೇ ಆಸಕ್ತಿ ವಾಲೀಕಿ ನಿಗಮದ ಹಗರಣದಲ್ಲಿ ಯಾಕೆ ತೋರಿಸುತ್ತಿಲ್ಲ? ಇದು ಯಾವ ಸೀಮೆ ನ್ಯಾಯ ಸಿದ್ದರಾಮಯ್ಯನವರೇ? ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಆಶೋಕ್‌ ಪ್ರಶ್ನೆ ಮಾಡಿದ್ದಾರೆ. +ಈ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿರುವ ಆಶೋಕ್‌ ಅವರು, ಎಸ್‌‍ಐಟಿ ರಚನೆಯಾಗಿದ್ದು 31.05.2024 ರಂದು. ಆದರೆ ಎಸ್‌‍ಐಟಿ ರಚನೆಯಾಗಿ 40 ದಿನ ಕಳೆದರೂ ಮಾಜಿ ಸಚಿವ ನಾಗೇಂದ್ರ ಅವರನ್ನಾಗಲಿ, ಶಾಸಕ ಬಸವರಾಜ ದದ್ದಲ್‌ ಅವರನ್ನಾಗಲಿ ವಿಚಾರಣೆ ಮಾಡಲಿಲ್ಲ. +ವಿಚಾರಣೆ ಹೋಗಲಿ ಒಂದು ನೋಟಿಸ್‌‍ ಕೂಡಾ ಕೊಡಲಿಲ್ಲ. ಅಂದಮೇಲೆ ನಿಮಗೆ ಸತ್ಯ ಸಂಗತಿ ಹೊರಬರುವುದು ಬೇಕಾಗಿಯೇ ಇರಲಿಲ್ಲ. ಎಸ್‌‍ಐಟಿ ರಚಿಸಿದ್ದೇ ಈ ಹಗರಣ ಮುಚ್ಚಿಹಾಕಲು ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ. +ಎಸ್‌‍ಐಟಿ ನಿಮ ಕೈಗೊಂಬೆ ಎನ್ನುವುದಕ್ಕೆ ಪರಶುರಾಮ್‌ ಮತ್ತು ಪದನಾಭ್‌ ಅವರ ನಡುವೆ ನಡೆದಿರುವ ಫೋನ್ ಸಂಭಾಷಣೆಯೇ ಸಾಕ್ಷಿ. ಸಿಬಿಐ, ಇಡಿ ಆದರೆ ನಮಗೆ ಜೈಲೇ ಗತಿ, ಎಸ್‌‍ಐಟಿ ಆದರೆ ನೋಡಿಕೊಳ್ಳಬಹುದು ಎಂದು ಪದನಾಭ್‌ ಹೇಳಿರುವುದು ಸತ್ಯವಲ್ಲವೇ ಸಿದ್ದರಾಮಯ್ಯನವರೇ? ನಿಮ ಎಸ್‌‍ಐಟಿ ಎಷ್ಟು ನಿಷ್ಪಕ್ಷಪಾತಿ ಎಂದು ತಿಳಿಯಲು ಇದಕ್ಕಿಂತ ಪುರಾವೆ ಬೇಕೆ? ಎಂದು ವ್ಯಂಗ್ಯವಾಡಿದ್ದಾರೆ. +ದೇವನಹಳ್ಳಿ ಬಳಿಯ ಖಾಸಗಿ ಹೋಟೆಲ್‌ ಒಂದರಲ್ಲಿ ಮಾಜಿ ಸಚಿವ ನಾಗೇಂದ್ರ ಅವರು ನಿಗಮದ ಎಲ್ಲ ಅಧಿಕಾರಿಗಳನ್ನು ಕರೆದು, ಯಾವುದೇ ಕಾರಣಕ್ಕೂ ನನ್ನ ಹೆಸರನ್ನು ಎಲ್ಲಿಯೂ ಹೇಳಬೇಡಿ. ನಾನು ಅಧಿಕಾರದಲ್ಲಿ ಇದ್ದರೆ ಮಾತ್ರ ನಿಮನ್ನೆಲ್ಲ ಬಚಾವ್‌ ಮಾಡಲು ಸಾಧ್ಯ ಎಂದು ಎಚ್ಚರಿಕೆ ನೀಡಿದ್ದು ಸತ್ಯವಲ್ಲವೇ ಸಿದ್ದರಾಮಯ್ಯನವರೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +ಇಡಿ ಮಧ್ಯ ಪ್ರವೇಶವಾದ ನಂತರ ಕೇವಲ ನೆಪ ಮಾತ್ರಕ್ಕೆ ವಿಚಾರಣೆಯ ನಾಟಕ ಮಾಡಿದ್ದು ಸುಳ್ಳಾ ಸಿದ್ದರಾಮಯ್ಯನವರೇ? ವಿಚಾರಣೆಗೂ ಮುನ್ನ ಎಸ್‌‍ಐಟಿ ಮುಂದೆ ನೆಪ ಮಾತ್ರಕ್ಕೆ ಹೋಗಿ ಬಾ, ನಾನು ಅಧಿಕಾರಿಗಳಿಗೆ ಹೇಳಿಕೊಳ್ಳುತ್ತೇನೆ ಎಂದು ಪ್ರಭಾವಿ ನಾಯಕರೊಬ್ಬರು ನಾಗೇಂದ್ರ ಅವರಿಗೆ ಅಭಯ ಕೊಟ್ಟಿದ್ದು ಸುಳ್ಳೇ ಸಿದ್ದರಾಮಯ್ಯನವರೇ? ಎಂದು ಆಶೋಕ್‌ ಪ್ರಶ್ನೆಗಳ ಮೇಲೆ ಪ್ರಶ್ನೆ ಮಾಡಿದ್ದಾರೆ. \ No newline at end of file diff --git a/eesanje/url_46_53_10.txt b/eesanje/url_46_53_10.txt new file mode 100644 index 0000000000000000000000000000000000000000..4e625095cb2fcd17fee7cc02da69a13eec1afad8 --- /dev/null +++ b/eesanje/url_46_53_10.txt @@ -0,0 +1,7 @@ +ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ +ಬೆಂಗಳೂರು,ಆ.5- ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಸಾವಿನ ಬೆನ್ನಲ್ಲೇ ನಗರದ ಸಿಸಿಬಿ ಇನ್ಸ್ ಪೆಕ್ಟರ್‌ ಆತಹತ್ಯೆ ಮಾಡಿಕೊಂಡಿರುವ ಘಟನೆ ಕಗ್ಗಲಿಪುರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮೇಗೌಡ (54) ಆತಹತ್ಯೆ ಮಾಡಿಕೊಂಡಿರುವ ಇನ್ಸ್ ಪೆಕ್ಟರ್. +ಮೂಲತಃ ಚನ್ನಪಟ್ಟಣ ತಾಲ್ಲೂಕು ಎಲೆತೋಟದಹಳ್ಳಿ ಸಮೀಪದ ಕರ್ಲಹಳ್ಳಿ ನಿವಾಸಿಯಾದ ತಿಮೇಗೌಡ ಅವರು ಬಿಡದಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರ ಕುಟುಂಬ ಮೈಸೂರಿನಲ್ಲಿ ನೆಲೆಸಿದೆ. ಈ ಹಿಂದೆ ಬಿಡದಿ ಪೊಲೀಸ್‌‍ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮೇಗೌಡ ಅವರು ಎರಡು ತಿಂಗಳ ಹಿಂದೆಯಷ್ಟೇ ಸಿಸಿಬಿಗೆ ವರ್ಗಾವಣೆಯಾಗಿದ್ದರು. +ಕುಂಬಲಗೂಡು ಸಮೀಪದ ತಗಚಗುಪ್ಪೆಯ ಜಮೀನೊಂದರಲ್ಲಿ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡು ತಿಮೇಗೌಡ ಅವರು ಆತಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತಹತ್ಯೆಗೆ ಸದ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಆತಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. + +ಬಹುಶ: ರಾತ್ರಿ ಇವರು ಆತಹತ್ಯೆ ಮಾಡಿಕೊಂಡಿರಬಹುದು. ಇಂದು ಬೆಳಿಗ್ಗೆ ಈ ಮಾರ್ಗದಲ್ಲಿ ಹೋಗುತ್ತಿದ್ದ ಸಾರ್ವಜನಿಕರು ನೋಡಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ.ಸುದ್ದಿ ತಿಳಿದು ಕಗ್ಗಲಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. +ಈ ಬಗ್ಗೆ ಕಗ್ಗಲಿಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಅವರು ವರ್ಗಾವಣೆಯಾದ ಮಾರನೆದಿನವೇ ನಿಧನರಾಗಿದ್ದು, ಅವರ ಸಾವು ಸಂಶಯಾಸ್ಪಧವಾಗಿರುವುದರಿಂದ ಸರ್ಕಾರ ಸಿ.ಐ.ಡಿ ತನಿಖೆಗೆ ವಹಿಸಿದ್ದು, ಈಗಾಗಲೇ ಸಿ.ಐ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_53_11.txt b/eesanje/url_46_53_11.txt new file mode 100644 index 0000000000000000000000000000000000000000..f8652fd631d42f9ce421fb8ca7ac31d6f2ce20f8 --- /dev/null +++ b/eesanje/url_46_53_11.txt @@ -0,0 +1,16 @@ +ಬಿಜೆಪಿಯ ಖಾಯಂ ಭಿನ್ನಮತೀಯ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮಕ್ಕೆ ವರಿಷ್ಟರ ಚಿಂತನೆ +ಬೆಂಗಳೂರು,ಆ.5-ಸ್ವಪಕ್ಷೀಯರ ವಿರುದ್ದವೇ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಸಾಕಷ್ಟು ಮುಜುಗರ ಸೃಷ್ಟಿಸುತ್ತಿರುವ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಬಿಜಾಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಇಲ್ಲವೇ ಶಿಸ್ತುಕ್ರಮ ಜರುಗಿಸಲು ಕೇಂದ್ರ ವರಿಷ್ಟರು ಗಂಭೀರ ಚಿಂತನೆ ನಡೆಸಿದ್ದಾರೆ. +ತಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್‌ಕೋರ್‌ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್‌ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಮೇಲಂತೂ ಯತ್ನಾಳ್‌ ನಾಲಿಗೆ ಬಿಎಸ್‌‍ವೈ ಕುಟುಂಬದ ವಿರುದ್ಧ ಮತ್ತಷ್ಟು ಹರಿತಗೊಂಡಿದೆ. ಯಾವ ಮುಲಾಜು ಇಲ್ಲದೇ ಮನಬಂದಂತೆ ಬಿಎಸ್‌‍ವೈ ಕುಟುಂಬ ವಿರುದ್ಧ ನಾಲಿಗೆ ಹರಿಬಿಡುತ್ತಿದ್ದಾರೆ. +ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್‌‍ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲೇ ಯತ್ನಾಳ್‌ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಹಿರಂಗವಾಗಿಯೇ ಬಾಯಿಗೆ ಬಂದಂತೆ ಟೀಕೆ ಮಾಡುತ್ತಿರುವುದು ಸ್ವತಃ ಕಾರ್ಯಕರ್ತರಿಗೆ ಸಾಕಷ್ಟು ಇರುಸು ಮುರಿಸು ಉಂಟು ಮಾಡಿದೆ. +ಯತ್ನಾಳ್‌ ಅವರ ಹೇಳಿಕೆಗಳನ್ನು ಕಾಂಗ್ರೆಸ್‌‍ ಅಸ್ತ್ರ ಮಾಡಿಕೊಳ್ಳುತ್ತಿದ್ದು, ನಮ ವಿರುದ್ದ ಆರೋಪ ಮಾಡುತ್ತಿರುವ ನೀವು ( ಬಿಜೆಪಿಯವರು) ಮೊದಲು ನಿಮ ಪಕ್ಷದ ಹಿರಿಯ ನಾಯಕ ಯತ್ನಾಳ್‌ ಹೇಳಿಕೆಗೆ ಉತ್ತರ ಕೊಡಿ ಎಂದು ಕೈ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಇದರಿಂದಾಗಿ ಕಾರ್ಯಕರ್ತರು ಗೊಂದಲಕ್ಕೆ ಸಿಲುಕಿದ್ದು, ಅವರ ಮೇಲೆ ಏಕೆ ಶಿಸ್ತು ಕ್ರಮ ಜರಗಿಸಬಾರದು ಎಂದು ಪಕ್ಷದವರನ್ನೇ ಪ್ರಶ್ನೆ ಮಾಡುತ್ತಿದ್ದಾರೆ. +ಇದೀಗ ಯತ್ನಾಳ್‌ ಹೇಳೀಕೆಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ದೆಹಲಿ ಬಿಜೆಪಿ ನಾಯಕರು ಅವರ ಮೇಲೆ ಶಿಸ್ತು ಕ್ರಮ ಇಲ್ಲವೇ ಪಕ್ಷದಿಂದಲೇ ಉಚ್ಛಾಟನೆ ಮಾಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಮುಡಾ ಹಗರಣ ಇಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿನವರೆಗೂ ಸಿದ್ದರಾಮಯ್ಯ ಅವರ ರಾಜೀನಾಮಗೆ ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿರುವಾಗ ವಿಜಯೇಂದ್ರ ನಡೆ ಬಗ್ಗೆ ಯತ್ನಾಳ್‌ ಅನುಮಾನ ವ್ಯಕ್ತಪಡಿಸಿ, ಸ್ಫೋಟಕ ಹೇಳಿಕೆ ನೀಡಿದ್ದರು. +ವಿಜಯೇಂದ್ರ ಪಕ್ಷದ ಹಿತಾಸಕ್ತಿಗಾಗಿ ಪಾದಯಾತ್ರೆ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್‌ ಅಣತಿ ಮೇರೆಗೆ ಸಿದ್ದರಾಮಯ್ಯ ಅವರನ್ನು ಸಿಎಂ ಖುರ್ಚಿಯಿಂದ ಕೆಳಗಿಳಿಸಲು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಪಾದಯಾತ್ರೆ ಮಾಡುತ್ತಿದ್ದಾರೆೞೞ ಎಂದು ನೇರವಾಗಿ ಆರೋಪಿಸಿದ್ದರು. +ವಿಧಾನಸಭೆಯ ಅಽವೇಶನದಲ್ಲಿ ಕೂಡ ಸ್ವಪಕ್ಷದ ನಾಯಕರಿಗೆ ಯತ್ನಾಳ್‌ ಮುಜುಗರ ಸೃಷ್ಟಿಸಿ ಮಾತನಾಡಿದ್ದರು. ವಾಲೀಕಿ, ಮುಡಾ ಹಗರಣದಲ್ಲಿ ಬಿಜೆಪಿ ಪ್ರತಿಭಟನೆ ಏನೋ ಮಾಡುತ್ತಿದೆ. ಆದರೆ ಪ್ರತಿಭಟನೆ ನಂತರ ರಾತ್ರಿ ಅಶೋಕ್‌ ಸಿದ್ದರಾಮಯ್ಯಗೆ ಕರೆ ಮಾಡಿ, ತಪ್ಪು ತಿಳ್ಕೋಬೇಡಿ ಸರ್‌, ಮೇಲಿನವರ ಒತ್ತಡ ಇತ್ತು ಅಂತಾರೆ. +ಯಾವ ಅಪ್ಪ ಮಕ್ಕಳಿಗೂ ಯಾರೂ ಅಂಜಬಾರದು, ಯಾರಿಗೂ ಅಪ್ಪಾಜಿ ಅನ್ನಬಾರದು, ನಮ ಅಪ್ಪನಿಗೆ ಮಾತ್ರ ಅಪ್ಪ ಅನ್ನಬೇಕು. ಈ ಅಪ್ಪಾಜಿ ಸಂಸ್ಕೃತಿ ನಮ ರಾಜ್ಯದಿಂದ ಹೋಗಬೇಕು ಎಂದು ಯಡಿಯೂರಪ್ಪ ಹೆಸರು ಹೇಳದೇ ಕುಟುಕಿದ್ದರು. ಈ ಹಿಂದೆ ಕೋವಿಡ್‌ ಸಂದರ್ಭದಲ್ಲಿ ನಡೆದ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿ, 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿರುವ ಬಗ್ಗೆ ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ್ದರು. +ಬಸವರಾಜ ಬೊಮಾಯಿ ಅವರು ಮುಖ್ಯಮಂತ್ರಿಯಾದ ವೇಳೆ ಸಿಎಂ ಸ್ಥಾನಕ್ಕೆ 2,500 ಕೋಟಿ ರೂಪಾಯಿ, ಮಂತ್ರಿಸ್ಥಾನಕ್ಕೆ 100 ಕೋಟಿ ರೂಪಾಯಿ ಎಂದು ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದರು. ಇವರ ವಿವಾದದ ಮಾತುಗಳು ಪಟ್ಟಿ ಮಾಡುತ್ತ ಹೋದರೆ ಹನುಮಂತನ ಬಾಲದಷ್ಟು ಬೆಳೆಯುತ್ತೆ. ಆದರೆ, ಯತ್ನಾಳ್‌ ಮಾಡಿರುವ ಆರೋಪಗಳಿಗೆ ಯಾವುದಕ್ಕೂ ತಾರ್ಕಿಕ ಅಂತ್ಯ ಸಿಕ್ಕಿಲ್ಲ. +ಕಳೆದ ವಿಧಾನಸಭಾ ಚುನಾವಣೆ ನಂತರ ಪ್ರತಿಪಕ್ಷ ನಾಯಕ ಇಲ್ಲವೇ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಆಕಾಂಕ್ಷೆಯನ್ನು ಯತ್ನಾಳ್‌ ವ್ಯಕ್ತಪಡಿಸಿದ್ದರು. ಅಲ್ಲೂ ಅವರಿಗೆ ನಿರಾಸೆಯಾಯಿತು. ಆರ್‌.ಅಶೋಕ್‌ ಪ್ರತಿಪಕ್ಷ ನಾಯಕರಾದರು. ಬಿಎಸ್‌‍ವೈ ಪುತ್ರ ವಿಜಯೇಂದ್ರ ರಾಜ್ಯಾಧ್ಯಕ್ಷರಾದರು. ಬಿಎಸ್‌‍ವೈ ಕುಟುಂದ ಹಿಡಿತ ಇರೋವರೆಗೂ ತಮಗೆ ಪಕ್ಷದಲ್ಲಿ ಸ್ಥಾನಗಳು ಸಿಗುವುದಿಲ್ಲ ಎಂಬುದು ಯತ್ನಾಳ್‌ಗೆ ಮನವರಿಕೆಯಾದಂತಿದೆ. ಹೀಗಾಗಿ ಬಿಎಸ್‌‍ವೈ ಹಿಡಿತವನ್ನು ಸಡಿಲಗೊಳಿಸಲು ಅವಿರತ ಪ್ರಯತ್ನಕ್ಕೆ ಅವರು ಮುಂದಾದಂತೆ ಕಾಣುತ್ತಿದೆ. +ಇದಕ್ಕಾಗಿ ಬಿಎಸ್‌‍ವೈ ಕುಟುಂಬದ ವಿರುದ್ಧ ಒಂದಲ್ಲಾ ಒಂದು ಕಾರಣವಿಟ್ಟುಕೊಂಡು ಯತ್ನಾಳ್‌ ಯುದ್ಧ ಸಾರುತ್ತಾರೆ.ತಮ ಹೇಳಿಕೆಗಳ ಪರಿಣಾಮ ಏನಾಗಬಹುದೆಂದು ಅರಿತಿರುವ ಯತ್ನಾಳ್‌ ಪಕ್ಷದಿಂದ ಉಚ್ಛಾಟನೆ ಮಾಡಿದರೆ ಮಾಡಲಿ ಎಂಬ ನಿರ್ಧಾರಕ್ಕೆ ಬಂದಂತಿದೆ. ಶಾಸನಾತಕವಾಗಿ ಈ ಪ್ರಕ್ರಿಯೆಗೆ ಯಾವುದೇ ಮಾನ್ಯತೆಗಳಿಲ್ಲ, ಶಾಸಕತ್ವಕ್ಕೂ ಧಕ್ಕೆ ಆಗುವುದಿಲ್ಲ. +ಯಡಿಯೂರಪ್ಪ ವಿರುದ್ಧ ಮತ್ತಷ್ಟು ದಾಳಿಗೆ ಪರವಾನಗಿ ಸಿಕ್ಕಂತಾಗುತ್ತದೆ. ಈ ಹೋರಾಟವನ್ನು ಜೀವಂತವಾಗಿಟ್ಟುಕೊಂಡು ತಮದೇ ಸಮುದಾಯವಾದ ಪಂಚಮಸಾಲಿ ಲಿಂಗಾಯಿತರ ಪ್ರಶ್ನಾತೀತ ನಾಯಕನಾಗಿ ಹೊರ ಹೊಮುವುದು ಆ ಮೂಲಕ ಯಡಿಯೂರಪ್ಪ ಲಿಂಗಾಯಿತರ ಪ್ರಶ್ನಾತೀತ ನಾಯಕರಲ್ಲ ಎಂಬುದನ್ನು ಬಿಜೆಪಿ ನಾಯಕತ್ವಕ್ಕೆ ಮನದಟ್ಟು ಮಾಡಿಕೊಡುವುದು ಅವರ ಸದ್ಯದ ತಂತ್ರ. +ಇದನ್ನು ಅರಿತಿರುವ ಯಡಿಯೂರಪ್ಪ, ಇದೇ ಸಮುದಾಯಕ್ಕೆ ಸೇರಿದ ಅರವಿಂದ ಬೆಲ್ಲದ ಅವರನ್ನು ವಿಧಾನಸಭೆಯ ಪ್ರತಿಪಕ್ಷದ ಉಪ ನಾಯಕನ ಸ್ಥಾನಕ್ಕೆ ನೇಮಕವಾಗುವಂತೆ ನೋಡಿಕೊಳ್ಳುವ ಮೂಲಕ ಇಡೀ ಸಮುದಾಯದ ಬೆಂಬಲ ಯತ್ನಾಳ್‌ಗೆ ಇಲ್ಲ ಎಂಬುದನ್ನು ಸಾಬೀತು ಪಡಿಸುವ ತಂತ್ರಕ್ಕೆ ಶರಣಾಗಿದ್ದಾರೆ. ಕೋವಿಡ್‌ ಹಗರಣದ ಕುರಿತು ಮಾಡಿರುವ ಆರೋಪಗಳ ಮೂಲಕ ಕಾಂಗ್ರೆಸ್‌‍ ನಾಯಕರ ಕೈಗೆ ಯತ್ನಾಳ್‌ ತಾವಾಗೇ ಅಸ ಕೊಟ್ಟಿದ್ದಾರೆ. +ಪಕ್ಷೀಯ ನಾಯಕರ ವಿರುದ್ಧವೇ ಬಂಡಾಯ ಸಾರಿರುವ ಅವರಿಗೆ ದಿಲ್ಲಿ ಬಿಜೆಪಿ ಅಂಗಳದಲ್ಲಿರುವ ರಾಜ್ಯದ ಕೆಲವು ಬಿಜೆಪಿ ನಾಯಕರ ಬೆಂಬಲ ಇದೆ. ಅವರಿಗೂ ರಾಜ್ಯದಲ್ಲಿ ತಮ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಸದ್ಯಕ್ಕೆ ಈ ಗೊಂದಲಗಳು ಬಗೆಹರಿಯುವ ಸೂಚನೆಗಳು ಇಲ್ಲ. \ No newline at end of file diff --git a/eesanje/url_46_53_12.txt b/eesanje/url_46_53_12.txt new file mode 100644 index 0000000000000000000000000000000000000000..5883696c6727331649a399f26c85c5ee9449ac7a --- /dev/null +++ b/eesanje/url_46_53_12.txt @@ -0,0 +1,8 @@ +ರಾಷ್ಟ್ರಧ್ವಜ ಮಾರಾಟ-ತಯಾರಿಕೆಗೆ ಪೆಟ್ಟು ಕೊಟ್ಟ ಹವಾಮಾನ ವೈಪರೀತ್ಯ, ಭಾರೀ ಮಳೆ +ಕಲೇಶ ಮಂಡ್ಯಾಳಹುಬ್ಬಳ್ಳಿ,ಆ.5-ಉತ್ತರ ಕರ್ನಾಟಕ ಬಾಗದಲ್ಲಿ ಭಾರೀ ಮಳೆ ಹಾಗೂ ತಂಪಾದ ಗಾಳಿ ಬೀಸುವುದರಿಂದ ರಾಷ್ಟ್ರಧ್ವಜ ಮಾರಾಟಗಾರರ ಹಾಗೂ ತಯಾರಿಕೆಗೆ ದೊಡ್ಡ ಪ್ರಮಾಣದ ಹೊಡೆತ ಬಿದ್ದಿದೆ. ಕಳೆದ ವರ್ಷ ಸ್ವಾತಂತೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದಾಖಲೆಯ ವಹಿವಾಟು ನಡೆದಿತ್ತು. ಪ್ರತಿ ವರ್ಷ ಒಂದೂವರೆ ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಯುತ್ತದೆ. ಆದರೆ, ಈ ಸಲ ಜುಲೈ ವರೆಗೆ 97 ಲಕ್ಷ ಮೊತ್ತದ ವಹಿವಾಟು ಮಾತ್ರ ನಡೆದಿದೆ. +ಭಾರತೀಯ ಮಾನಕ ಸಂಸ್ಥೆ ಪ್ರಕಾರ 9 ವಿವಿಧ ಅಳತೆಯ ಧ್ವಜಗಳನ್ನು ಸಿದ್ಧಪಡಿಸಲಾಗುತ್ತದೆ. 21×14, 128, 9×6, 6×4, 4.5×3, 3×2, 1.5 1,9×6 5 6×4 ಅಳತೆಯ ಧ್ವಜಗಳನ್ನು ಸಿದ್ಧಪಡಿಸಿ, ಮಾರುತ್ತೇವೆ. ಅಳತೆಗೆ ತಕ್ಕಂತೆ 250 ರಿಂದ 30 ಸಾವಿರವರೆಗೆ ದರವಿದೆ. ಹುಬ್ಬಳ್ಳಿಯ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಉತ್ಪಾದನೆಯಾಗುವ ಖಾದಿ ಅಂಗಿ, ಪ್ಯಾಂಟ್‌‍, ಟವೆಲ್‌‍, ಕರವಸ, ಟೊಪ್ಪಿಗೆ, ಜಮಖಾನಿಯಂತಹ ವಸ್ತುಗಳಿಗೂ ಬೇಡಿಕೆ ತಗ್ಗಿದೆ. ನಗರ ಪ್ರದೇಶ ಮತ್ತು ಖಾದಿ ಬಗೆಗೆ ತಿಳಿದವರು ಮಾತ್ರ ಖರೀದಿಸುತ್ತಾರೆ. +ವೀವಿಂಗ್‌, ಸ್ಪಿನ್ನಿಂಗ್‌ ಕೆಲಸಕ್ಕೆ ಸಿಬ್ಬಂದಿ ಬೇಕು. ಆದರೆ, ಕೆಲಸಕ್ಕೆ ಜನ ಬರುತ್ತಿಲ್ಲ. ಬಾಗಲಕೋಟೆ, ಬಾದಾಮಿ, ಬೀಳಗಿಯಲ್ಲಿ 21 ಹಳ್ಳಿಗಳಲ್ಲಿ ಸಂಘದ ಕಚೇರಿಗಳಿವೆ. ಧ್ವಜ ಉತ್ಪಾದನೆಗೆ ಬಳಸುವ ಕೆಲ ಕಚ್ಚಾ ಸಾಮಗ್ರಿಗಳ ಮೇಲಿನ ಜಿಎಸ್ಟಿಯಿಂದ ಆರ್ಥಿಕ ಹೊರೆ ಹೆಚ್ಚಿದೆ. ಆಯಾ ವಸ್ತುಗಳ ಮೇಲೆ ತೆರಿಗೆ ಮುಕ್ತಗೊಳಿಸಿದರೆ ಅನುಕೂಲಕರ. +ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಗರಗ ಕೇಂದ್ರಕ್ಕೆ 2023ರ ಜುಲೈ 23ರಿಂದ 2/3 ಅಳತೆಯ ಧ್ವಜ ತಯಾರಿಕೆಗೆ ಅನುಮತಿ ಸಿಕ್ಕಿದ್ದು, ಈವರೆಗೆ ಅಂದಾಜು 10 ಲಕ್ಷ ವಹಿವಾಟು ಆಗಿದೆ. ಅಲ್ಲಿಯೂ ಹವಾಮಾನ ವೈಪರೀತ್ಯ, ಕಚ್ಚಾ ಸಾಮಗ್ರಿ ಪೂರೈಕೆ ಮತ್ತು ಸಿಬ್ಬಂದಿ ಕೊರತೆಯಿಂದ ಉತ್ಪಾದನೆಗೆ ಸಮಸ್ಯೆಯಾಗಿದೆ.ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ತಂಪಾಗಿ ನೂಲು, ಬಟ್ಟೆಗೆ ಹಾಕಿದ್ದ ಮಸಿ ಒಣಗುತ್ತಿಲ್ಲ. ಇದರಿಂದ ಉತ್ಪಾದನೆ ನಿಧಾನವಾಗಿದೆ. +ಶಕ್ತಿ ಪರಿಣಾಮ: +ಕೌಶಲ ಆಧಾರಿತ ಸಿಬ್ಬಂದಿಯ ಅಗತ್ಯವಿದೆ. ಆದರೆ ಇಲ್ಲಿ ಸಿಬ್ಬಂದಿಗೆ ಸಿಗುವ ಸಂಬಳವೂ ಕಡಿಮೆ. ದಿನಕ್ಕೆ ಅಂದಾಜು 230 ರಿಂದ 250 ಸಿಗಬಹುದು. ಅದಕ್ಕೆ ಕೆಲಸಕ್ಕೆ ಬರಲು ಜನರು ಜನ ಹಿಂದೇಟು ಹಾಕುತ್ತಾರೆ. ಮಹಿಳೆಯರು ಶಕ್ತಿ ಯೋಜನೆಯಡಿ ಕೆಲಸಕ್ಕೆಂದು ಪರ ಊರುಗಳಿಗೆ ಹೋಗುತ್ತಾರೆ. ಇಲ್ಲಿ ಕೆಲಸಕ್ಕೆ ಬರುವವರು ಇಲ್ಲದಂತಾಗಿದೆ ಎಂದರು. +ಪ್ಲಾಸ್ಟಿಕ್‌ ಸಿಂಥೆಟಿಕ್‌ ಧ್ವಜಗಳ ತಯಾರಿಕೆ ನಿಲ್ಲಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ರಾಷ್ಟ್ರಧ್ವಜದ ಬಗ್ಗೆ ಗೌರವ ಮೂಡಿಸುವ ಪಠ್ಯವನ್ನು 5ನೇ ತರಗತಿಯಿಂದ ಪಿಯುಸಿವರೆಗೆ ಅಳವಡಿಸಬೇಕು ಎಂಬುದು ಸಹ ಜನರ ಒತ್ತಾಯ ಆಗಿದೆ. \ No newline at end of file diff --git a/eesanje/url_46_53_2.txt b/eesanje/url_46_53_2.txt new file mode 100644 index 0000000000000000000000000000000000000000..2c1e5db95d8e2560f03a10ae4262a2cfa4fef819 --- /dev/null +++ b/eesanje/url_46_53_2.txt @@ -0,0 +1,7 @@ +ನಿಮ್ಮ ಸಹೋದರರ ಆಸ್ತಿ ಬಹಿರಂಗ ಪಡಿಸಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್ +ಬೆಂಗಳೂರು,ಆ.5-ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮ್ಮ ಸಹೋದರರ ಆಸ್ತಿಯ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ನನ್ನ ಆಸ್ತಿಯ ಹಿನ್ನಲೆಯನ್ನು ಪ್ರಸ್ತಾಪ ಮಾಡಿ ಪ್ರಶ್ನೆ ಕೇಳಿದ್ದಾರೆ. ಅವರಿಗೆ ಅಧಿಕಾರ ಇದೆ. ಮಾಹಿತಿ ಕೇಳಲಿ. ನನ್ನ ಕುಟುಂಬದ ಸದಸ್ಯರ ಆಸ್ತಿಪಟ್ಟಿ ಕೇಳಿದ್ದಾರೆ. +ಎಲ್ಲವನ್ನೂ ಕೊಡಲು ನಾನು ಸಿದ್ಧ. ಯಾವುದೇ ಮುಚ್ಚುಮರೆ ಇಲ್ಲ. ಆದರೆ ಅದಕ್ಕೂ ಮೊದಲು ಕುಮಾರಸ್ವಾಮಿ ಅವರ ಸಹೋದರರ ಆಸ್ತಿಯ ಲೆಕ್ಕ ಕೊಡಲಿ ಎಂದು ಹೇಳಿದ್ದಾರೆ. +ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಹೋದರ ಯಾವ ರೀತಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಲೆಕ್ಕಾಚಾರ ಆಗಬೇಕಿದೆ. ಕುಮಾರಸ್ವಾಮಿಯ ಹಗರಣಗಳಿಗೆ ಉತ್ತರ ಕೊಡುವಂತೆ ನಾವು ಜನಾಂದೋಲನ ಸಮಾವೇಶ ನಡೆಸಿ ಪ್ರಶ್ನೆ ಕೇಳುತ್ತಿದ್ದೇವೆ. ಅದಕ್ಕೆ ಈವರೆಗೂ ಉತ್ತರ ಕೊಟ್ಟಿಲ್ಲ. ಕುಮಾರಸ್ವಾಮಿ ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದರು. +ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭ್ರಷ್ಟಾಚಾರದ ಪಿತಾಮಹ ಎಂದು ಹೇಳಿದ್ದಾರೆ. ಅವರ ಅಪ್ಪನನ್ನು ಏಕೆ ಜೈಲಿಗೆ ಕಳುಹಿಸಿದ್ದರು?, ರಾಜೀನಾಮೆ ಏಕೆ ಕೊಡಿಸಿದ್ದರು? ಎಂಬುದರ ಬಗ್ಗೆ ಪಿತಾಮಹ ವಿಜಯೇಂದ್ರ ಮೊದಲು ಉತ್ತರ ಹೇಳಲಿ. +ನಂತರ ಅವರದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಗೂಳಿಹಟ್ಟಿ ಶೇಖರ್‌ ಕೇಳುತ್ತಿರುವ ಪ್ರಶ್ನೆಗಳಿಗೆ ಇಂದು ಚನ್ನಪಟ್ಟಣದ ಪಾದಯಾತ್ರೆಯಲ್ಲಿ ಉತ್ತರ ಕೊಡಲಿ ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಏಕೆ ಹಣ ಬಿಡುಗಡೆ ಮಾಡಿಸಲಿಲ್ಲ ಎಂಬುದಕ್ಕೆ ಸ್ಪಷ್ಟನೆ ನೀಡಬೇಕಿದೆ. ಈ ನಿಟ್ಟಿನಲ್ಲಿ ನಾವು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಕೊಡಲಿ ಎಂದು ಅವರು ಆಗ್ರಹಿಸಿದರು. \ No newline at end of file diff --git a/eesanje/url_46_53_3.txt b/eesanje/url_46_53_3.txt new file mode 100644 index 0000000000000000000000000000000000000000..0c1cbb05e4d991faf08a7f879493bed0ceca786a --- /dev/null +++ b/eesanje/url_46_53_3.txt @@ -0,0 +1,7 @@ +ರಾಮೇಶ್ವರ ಕೆಫೆಗೆ ಆರೋಪಿಯನ್ನು ಕರೆತಂದು ದೃಶ್ಯ ಮರುಸೃಷ್ಠಿಸಿದ ಎನ್ಐಎ +ಬೆಂಗಳೂರು,ಆ.5-ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ನಗರದ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಗೆ ಇಂದು ಬೆಳಿಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಮುಸಾವಿರ್‌ನನ್ನು ಸ್ಥಳಕ್ಕೆ ಕರೆತಂದು ಅಂದಿನ ಘಟನೆಯನ್ನು ಮರುಸೃಷ್ಟಿಸಿ ಮಹಜರು ನಡೆಸಿದರು. +ರಾಮೇಶ್ವರಂ ಕೆಫೆಯನ್ನು ಸ್ಫೋಟಿಸಲು ಮಾ.1ರಂದು ಆರೋಪಿ ಬಂದಿದ್ದ ರೀತಿಯಲ್ಲೇ ಇಂದು ಬೆಳಿಗ್ಗೆ ಕೆಫೆಗೆ ಟೋಫಿ ಧರಿಸಿ ಕೆಫೆಗೆ ಯಾವ ಮಾರ್ಗದಲ್ಲಿ ಬಂದ, ಎಷ್ಟು ನಿಮಿಷ ಕಫೆಯಲ್ಲಿ ಕುಳಿತಿದ್ದ, ಯಾವ ತಿಂಡಿ ಆರ್ಡರ್‌ ಮಾಡಿದ್ದ, ಕೆಫೆಯಲ್ಲಿ ಇದ್ದಷ್ಟು ಸಮಯ ಏನು ಮಾಡುತ್ತಿದ್ದ ನಂತರ ಹೊರಗೆ ಹೋಗುವಾಗ ತಾನು ತಂದಿದ್ದ ಸ್ಫೋಟಕಗಳಿದ್ದ ಬ್ಯಾಗನ್ನು ಯಾವ ಸ್ಥಳದಲ್ಲಿ ಇರಿಸಿದ್ದ ಎಂಬ ಅಂದಿನ ಘಟನಾವಳಿಗಳನ್ನು ಆರೋಪಿಯಿಂದಲೇ ಮರುಸೃಷ್ಠಿಸಿ ಎನ್‌ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿದರು. +ಎನ್ಐಎ ಅಧಿಕಾರಿಗಳು 2-3 ಬಾರಿ ಅಂದಿನ ದೃಶ್ಯಗಳನ್ನು ಮರುಸೃಷ್ಠಿ ಮಾಡಿದ್ದಾರೆ. ಆರೋಪಿ ಮುಸಾವಿರ್‌ ಅಂದು ಹೇಗೆ ಕೆಫೆಗೆ ನಡೆದುಕೊಂಡು ಬಂದಿದ್ದನ್ನು ತೋರಿಸಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾನೆ. ಬಾಂಬ್‌ ಇಟ್ಟಿದ್ದ ಸ್ಥಳ, ಕುಳಿತಿದ್ದ ಸ್ಥಳವನ್ನು ತೋರಿಸಿದ್ದಾನೆ. ಈ ಎಲ್ಲಾ ದೃಶ್ಯಾವಳಿಗಳನ್ನು ಅಧಿಕಾರಿಗಳು ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾರೆ. +ಈ ಸಂದರ್ಭದಲ್ಲಿ ಕೆಫೆ ಸುತ್ತಮುತ್ತಲೂ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿತ್ತು. ವೈಟ್‌ ಫೀಲ್ಡ್ ವಿಭಾಗದ 50ಕ್ಕೂ ಹೆಚ್ಚು ಅಧಿಕ ಪೊಲೀಸ್‌‍ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು. ಮಾ.1ರಂದು ನಡೆದಿದ್ದ ಕೆಫೆ ಸ್ಫೋಟದಲ್ಲಿ ಕೆಫೆ ಸಿಬ್ಬಂದಿ ಸೇರಿ 9 ಮಂದಿ ಗ್ರಾಹಕರು ಗಾಯಗೊಂಡಿದ್ದರು. ಅಂದಿನ ಘಟನೆ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿತ್ತು. +ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇದು ಉಗ್ರರ ಸಂಚಿರಬಹುದೆಂದು ಶಂಕೆ ವ್ಯಕ್ತಪಡಿಸಿ ಅಂದಿನಿಂದ ಹಲವು ಮಾಹಿತಿಗಳನ್ನು ಸಂಗ್ರಹಿಸಿದಾಗ, ಈ ಪ್ರಕರಣದ ಮಾಸ್ಟರ್‌ ಮೈಂಡ್‌ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್‌ತಾಹ ಹಾಗೂ ಮುಸಾವಿರ್‌ ಹುಸೇನ್‌ ಎಂಬುದು ಗೊತ್ತಾಯಿತು. +ಆರೋಪಿಗಳ ಜಾಡು ಹಿಡಿದು ಹೊರಟ ಎನ್‌ಐಎ ತಂಡ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ಏ.12ರಂದು ಬಂಧಿಸಿ ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಸಂಗ್ರಹಿಸಿತ್ತು. \ No newline at end of file diff --git a/eesanje/url_46_53_4.txt b/eesanje/url_46_53_4.txt new file mode 100644 index 0000000000000000000000000000000000000000..6e2faeb32d5d8593cccdb5900feca90ad22d5dce --- /dev/null +++ b/eesanje/url_46_53_4.txt @@ -0,0 +1,10 @@ +ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಿಎಂ ಹೇಳಿದ್ದೇನು..? +ಬೆಂಗಳೂರು,ಆ.5-ಮುಂದಿನ ವಾರ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯಿದ್ದು, ಎಚ್ಚರಿಕೆ ವಹಿಸಲು ಹಲವು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಹಾನಿ ಕುರಿತು ಇಂದು ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು. +ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಕಾಲಾವಧಿಯಲ್ಲಿ ಪೂರ್ಣ ಮನೆ ಹಾಳಾಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಬೇಕೆಂದು ನಿರ್ಣಯ ಮಾಡಲಾಗಿದ್ದು, ಅದು ದುರುಪಯೋಗವಾಗಿತ್ತು ಮತ್ತು ಎಲ್ಲರಿಗೂ ಪರಿಹಾರ ಸಿಗಲಿಲ್ಲ . ಮೊದಲ ಎರಡು ಕಂತುಗಳ ಹಣ ಬಿಡುಗಡೆಯಾದರೆ ಮೂರನೇ ಕಂತಿನ ಹಣ ಬಿಡುಗಡೆಯಾಗಲಿಲ್ಲ ಎಂದರು. +ಈಗ ನಮ ಸರ್ಕಾರ ಪೂರ್ಣ ಮನೆ ಹಾನಿಯಾಗಿದ್ದರೆ, 1,20,000 ರೂ. ಪರಿಹಾರದ ಜೊತೆಗೆ ಮನೆಯನ್ನು ಕಟ್ಟಿಸಿಕೊಡುತ್ತೇವೆ ಎಂದು ಹೇಳಿದರು.ರಾಜ್ಯದಲ್ಲಿ ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಾಗಿರುವ ಮಳೆಹಾನಿಯನ್ನು ಪರಿಶೀಲನೆ ನಡೆಸಲಾಗಿದೆ. +ಮನೆ ಬಿದ್ದು ಹೋಗಿರುವುದು, ಜೀವಹಾನಿ, ವಿದ್ಯುತ್ ಕಂಬ ಬಿದ್ದಿರುವುದು, ವಿದ್ಯುತ್ತ ಕಂಬಗಳ ದುರಸ್ತಿ ಸೇರಿದಂತೆ ಹಲವು ರೀತಿಯ ಪರಿಹಾರ ಕಾರ್ಯಗಳನ್ನು ಆರಂಭಿಸಲಾಗಿದೆ ಎಂದರು.40 ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಶಾಲೆಗಳಲ್ಲಿ ಹತ್ತು ದಿನ ರಜೆ ನೀಡಿದ್ದು, ಅಗತ್ಯವಾದರೆ ಮತ್ತುಷ್ಟು ದಿನ ರಜೆ ನೀಡಲಾಗುವುದು ಎಂದು ಹೇಳಿದರು. +ಮುಂದಿನ ವಾರ ಮಳೆ ಹೆಚ್ಚಾಗುವುದರಿಂದ ಕಂದಾಯ, ಅರಣ್ಯ, ಜಲಸಂಪನೂಲ, ಇಂಧನ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ. +ಖಾನಾಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪದೇ ಪದೇ ಹಳ್ಳಿಗಳು ಮುಳುಗಡೆಯಾಗುತ್ತಿರುವುದಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ನಮ ಸರ್ಕಾರ ಬಧ್ಧವಾಗಿದೆ. ಜನರೂ ಕೂಡ ಇದಕ್ಕೆ ಸಹಕರಿಸಬೇಕು. ಪುನರ್ ವಸತಿಗಾಗಿ ನಿರ್ಮಿಸಲಾದ ಸ್ಥಳಗಳಿಗೆ ಮುಳುಗಡೆಯ ಪ್ರದೇಶದ ಜನ ಸ್ಥಳಾಂತರಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. +ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ :ಗೃಹಲಕ್ಷ್ಮಿ ಯೋಜನೆಯಡಿ ಮೇವರೆಗೂ ಮಹಿಳೆಯರಿಗೆ ತಲಾ 2 ಸಾವಿರ ರೂ. ಹಣ ಪಾವತಿಸಲಾಗಿದೆ. ಜೂನ್ ತಿಂಗಳಿನಿಂದ ಬಾಕಿ ಇದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದರು. +ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದರೆ. ತಮ ವಿರುದ್ಧ ನೀಡಿರುವ ದೂರನ್ನು ತಿರಸ್ಕರಿಸುವಂತೆ ಈಗಾಗಲೇ ಸಂಪುಟದ ನಿರ್ಧಾರವನ್ನು ರಾಜ್ಯಪಾಲರಿಗೆ ತಿಳಿಸಲಾಗಿದೆ. ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಕಾದುನೋಡುತ್ತೇವೆ. ಈವರೆಗೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಹೇಳಿದರು. +ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜಕೀಯ ಹಾಗೂ ಕಾನೂನಾತಕವಾಗಿ ಹೋರಅಟ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_53_5.txt b/eesanje/url_46_53_5.txt new file mode 100644 index 0000000000000000000000000000000000000000..8b897e7da2149261456df13c74d2448591f908b6 --- /dev/null +++ b/eesanje/url_46_53_5.txt @@ -0,0 +1,5 @@ +ವೈಫಲ್ಯ ಮುಚ್ಚಿಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ : ಸಚಿವ ಕೃಷ್ಣ ಬೈರೇಗೌಡ +ಬೆಂಗಳೂರು,ಆ.5– ಜೆಡಿಎಸ್- ಬಿಜೆಪಿ ಪಕ್ಷಗಳು ತಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಪಾದಯಾತ್ರೆ ನಡೆಸಿ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನೆರೆ ಹಾವಳಿಯನ್ನು ವೀಕ್ಷಿಸಿ ಮಾತನಾಡಿದ ಅವರು, ಇವರ ವೈಲ್ಯ ಮುಚ್ಚಿಹಾಕಲು ಜನರ ಗಮನ ಬೇರೆಡೆ ಸೆಳೆಯುವ ಯತ್ನ ಮಾಡುತ್ತಿದ್ದಾರೆ. +ಕುಮಾರಸ್ವಾಮಿಯವರು ನಮ ಭದ್ರಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಸಾಕು ನಾನು ಅವರ ಕೈಮುಗಿಯುತ್ತೇನೆ ಎಂದರು. +ಬಿಜೆಪಿ-ಜೆಡಿಎಸ್ ಒಟ್ಟಾಗಿ ಆಪರೇಷನ್ ಮಾಡಿ ಜನರಿಂದ ಆಯ್ಕೆಯಾದ ಸರ್ಕಾರವನ್ನು ಬೀಳಿಸೋ ಪುರುಷಾರ್ಥಕ್ಕೆ ಜನ ಇವರನ್ನು ಆಯ್ಕೆ ಮಾಡಿ ಕಳಿಸಿರೋದು, ಸರ್ಕಾರ ಬೀಳಿಸೋದನ್ನೇ ಇವರು ರಾಜ್ಯದ ಅಭಿವೃದ್ಧಿ ಎಂದು ತಿಳಿದಿರುವ ಹಾಗಿದೆ ಎಂದು ಹೇಳಿದರು. +ಸರ್ಕಾರ ಬೀಳಿಸೋದು ಇರಲಿ, ಕೇಂದ್ರದಿಂದ ಯಾವೆಲ್ಲಾ ಯೋಜನೆಯನ್ನ ಇವರು ರಾಜ್ಯಕ್ಕೆ ತಂದಿದ್ದಾರೆ? ಇವರಿಂದ ರಾಜ್ಯಕ್ಕೆ ಕೊಡುಗೆ ಏನು? ಮೊದಲು ತಿಳಿಸಲಿ, ಆಪರೇಷನ್ ಕಮಲ ಮಾಡುವುದೇ ದೊಡ್ಡ ಕೊಡುಗೆಯಾ? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_53_6.txt b/eesanje/url_46_53_6.txt new file mode 100644 index 0000000000000000000000000000000000000000..5f492e0e120f776b939df52e36108f88e351f4ca --- /dev/null +++ b/eesanje/url_46_53_6.txt @@ -0,0 +1,7 @@ +ಕಾಂಗ್ರೆಸ್‌‍ ಸರ್ಕಾರದ ಪತನದ ಸಮಯ ಸಮೀಸುತ್ತಿದೆ : ಹೆಚ್‌ಡಿಕೆ ಭವಿಷ್ಯ +ಬೆಂಗಳೂರು, ಆ.5-ರಾಜ್ಯ ಕಾಂಗ್ರೆಸ್‌‍ ಸರ್ಕಾರ ಪತನವಾಗುವ ಸಮಯ ಹತ್ತಿರವಾಗಿದೆ ಎಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾಸ್ವಾಮಿ ಭವಿಷ್ಯ ನುಡಿದಿದ್ದಾರೆ. +ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಮೂರನೇ ದಿನವಾದ ಇಂದು ಕೆಂಗಲ್‌ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಾದಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. +ರಾಜ್ಯಕಾಂಗ್ರೆಸ್‌‍ ಸರ್ಕಾರದ ಪಾಪದ ಕೊಡ ತುಂಬಿದ್ದು, ಪತನಗೊಳ್ಳುವ ಕಾಲ ಸಮೀಪಿಸುತ್ತಿದೆ. ಅಧಿಕಾರ ಮಾಡಲು ಕಾಂಗ್ರೆಸ್‌‍ನವರಿಗೆ ಯೋಗ್ಯತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. +ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸಮಸ್ಯೆ ಬಗೆಹರಿಸುವುದು ಬಿಟ್ಟು ನನ್ನನ್ನು ಗುಣಗಾನ ಮಾಡಿಕೊಂಡು ಕೂತಿದ್ದಾರೆ. ಮಾತನಾಡಲು ಶಕ್ತಿ ಇಲ್ಲದ ಹುಚ್ಚರಂತೆ ಪದ ಬಳಕೆ ಮಾಡಿಕೊಂಡು ಹೋಗುತ್ತಿದ್ದಾರೆ. ನನ್ನ ಹತ್ತಿರ ಇರುವ ದಾಖಲೆ ತೆಗೆದರೆ ಈ ವ್ಯಕ್ತಿ ಮಾಡಿರುವ ಅವ್ಯವಹಾರದ ಸಂಪುಟವನ್ನೇ ಮಾಡಬಹುದು. ಏನೇನು ಕಟ್ಟಿಕೊಂದ್ದಾರೋ ಎಲ್ಲವನ್ನು ಬಿಚ್ಚಲಿ. ನಿಮ ಗೊಡ್ಡು ಬೆದರಿಕೆಗೆ ನಾನು ಹೆದರುವುದಿಲ್ಲ ಎಂದು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. +ಪ್ರಾಯಶ್ಚಿತ ಮಾಡಿಕೊಳ್ಳಬೇಕಾಗಿದ್ದು ಡಿ.ಕೆ. ಶಿವಕುಮಾರ್‌ ಎಂದಿರುವ ಅವರು, ತಪ್ಪು ಮಾಡಿಕೊಂಡು ಪ್ರಾಯಶ್ಚಿತ ಮಾಡಿಕೊಳ್ಳುವುದಿಲ್ಲ ಎಂಬ ಬಂಡ ಮಾತನಾಡುತ್ತಾರೆ. ಶಿವಕುಮಾರ್‌ ಮಾತಿಗೆ ಯಾರು ಗೌರವ ಕೊಡುತ್ತಿಲ್ಲ. ನಾವು ಮಾತನಾಡಿದರೆ ಆ ಮನುಷ್ಯನಿಗೆ ಏನಾಯಿತು. ಈಗಿನ ಪರಿಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ. +ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪರ ಅವರನ್ನು ನಾನು ಜೈಲಿಗೆ ಕಳಿಸಿಲ್ಲ. ಅವತ್ತಿನ ಸಂದರ್ಭದಲ್ಲಿ ವಿಚಾರ ಹಾಗಿತ್ತು ಎಂದು ಹೇಳಿದ್ದಾರೆ.ಹೆಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಶಾಸಕರಾದ ಸಿ.ಬಿ.ಸುರೇಶ್‌ ಬಾಬು, ಜಿ.ಟಿ.ಹರೀಶ್‌ಗೌಡ, ಮಾಜಿ ಶಾಸಕರಾದ ಡಾ.ಅನ್ನದಾನಿ, ಸಾ.ರಾ.ಮಹೇಶ್‌, ಮಂಜುನಾಥ್‌, ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_53_7.txt b/eesanje/url_46_53_7.txt new file mode 100644 index 0000000000000000000000000000000000000000..050da4d9a908998b52e64e22dfaa800056568889 --- /dev/null +++ b/eesanje/url_46_53_7.txt @@ -0,0 +1,7 @@ +ರಾಜ್ಯದಲ್ಲಿ ತಗ್ಗಿದ ವರುಣನ ಆರ್ಭಟ, ಸದ್ಯಕ್ಕೆ ಭಾರೀ ಮಳೆ ಮುನ್ಸೂಚನೆಗಳಿಲ್ಲ +ಬೆಂಗಳೂರು, ಆ.5-ಕರಾವಳಿ ಹಾಗೂ ಮಲೆನಾಡಿನಲ್ಲಿ ಆರ್ಭಟಿಸುತ್ತಿದ್ದ ವರುಣ ಸೌಮ್ಯವಾಗಿರುವ ಹಿನ್ನಲೆಯಲ್ಲ ಮಳೆ ಕಡಿಮೆಯಾಗಿದೆ. ಸದ್ಯಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ಆದರೂ ರಾಜ್ಯಾದ್ಯಂತ ಸಾಧಾರಣ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. +ಆಗಸ್ಟ್‌ ಒಂದರಿಂದ ಇದುವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ವಾಡಿಕೆಗಿಂತ ಶೇ.49ರಷ್ಟು ಕಡಿಮೆ ಮಳೆಯಾಗಿದೆ.ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣೆಗೆರೆ, ಮಂಡ್ಯ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ನೆರೆಹಾವಳಿ ಉಂಟಾಗಿದೆ. +ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಅಲ್ಲಲ್ಲಿ ಮಳೆ ಮುಂದುವರೆದಿದ್ದು, ನದಿಗಳ ಪ್ರವಾಹವೂ ಇಳಿಕೆಯಾಗುತ್ತಿದೆ. ಆದರೆ, ಬಹುತೇಕ ಜಲಾಶಯಗಳು ಭರ್ತಿಯಾಗಿರುವುದರಿಂದ ಜಲಾಶಯಗಳಿಂದ ಹೆಚ್ಚು ನೀರು ನದಿಗಳಿಗೆ ಬಿಡುತ್ತಿರುವುದರಿಂದ ಕಾವೇರಿ, ಶರಾವತಿ, ಕೃಷ್ಣಾ ಹಾಗೂ ತುಂಗಭದ್ರಾ, ಘಟಪ್ರಭಾ, ಮಲಪ್ರಭಾ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. +ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಕೃಷ್ಣಾ ಕೊಳ್ಳದ ಜಲಾನಯನ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ಕೃಷ್ಣಾ ನದಿ ಪಾತ್ರದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಉಳಿದಂತೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳ ಒಳಹರಿವು ಸಹ ಗಣನೀಯವಾಗಿ ಇಳಿಕೆಯಾಗಲಿದೆ. +ಜುಲೈ ತಿಂಗಳಿಗೆ ಹೋಲಿಸಿದರೆ, ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೂ ನಿರಂತರ ಮಳೆಯಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಹಾನಿ ಸಮಸ್ಯೆಗಳು ತಲೆದೋರಿವೆ. +ಮುಂಗಾರು ಮಳೆ ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯಾವುದೇ ಮಳೆ ಮುನ್ನಚ್ಚರಿಕೆ ನೀಡಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_53_8.txt b/eesanje/url_46_53_8.txt new file mode 100644 index 0000000000000000000000000000000000000000..0e08742a868f3d2141a9fd26510100edf6b7e1a1 --- /dev/null +++ b/eesanje/url_46_53_8.txt @@ -0,0 +1,12 @@ +3ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌‍ ‘ಮೈಸೂರು ಚಲೋ’ ಪಾದಯಾತ್ರೆ +ಬೆಂಗಳೂರು,ಆ.5-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. +ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್‌ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್‌ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್‌ನಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು. +ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೆಂಗಲ್‌ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌‍ನ ಪ್ರಮುಖರು ಹಾಜರಿದ್ದರು.ಬಳಿಕ ಕೆಂಗಲ್‌ನಿಂದ ಪ್ರಾರಂಭವಾದ ಪಾದಯಾತ್ರೆಯು ಸುಮಾರು 16 ಕಿ.ಮೀ. ಶ್ರಮಿಸಿ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ನಿಡಘಟ್ಟದಲ್ಲಿ ಮುಕ್ತಾಯಗೊಂಡಿತು. +ಮೂರನೇ ದಿನವಾದ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ಮತ್ತು ಜೆಡಿಎಸ್‌‍ನ ಹಲವು ಪ್ರಮುಖರು, ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. +ಬಿಜೆಪಿ ಹಾಗೂ ಜೆಡಿಎಸ್‌‍ನ ಬಾವುಟಗಳನ್ನು ಹಿಡಿದುಕೊಂಡು ಜೈಕಾರಗಳನ್ನು ಕೂಗಿ ಉತ್ಸಾಹದಿಂದಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ದಾರಿಯುದ್ದಕ್ಕೂ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದ ಉಭಯಪಕ್ಷಗಳ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಆಗ್ರಹಿಸಿದರು. +ಪಾದಯಾತ್ರೆಗೆ ಮೂರನೇ ದಿನ ಉಭಯ ಪಕ್ಷಗಳಲ್ಲಿ ಸಣ್ಣಪುಟ್ಟ ಗೊಂದಲಗಳು ನಿವಾರಣೆಯಾಗುತ್ತಿದ್ದು, ದಿನದಿಂದ ದಿನಕ್ಕೆ ಕಾರ್ಯಕರ್ತರ ಪಾಲ್ಗೊಳ್ಳುವಿಕೆಯು ಹೆಚ್ಚಾಗುತ್ತಲೇ ಇದೆ. +ಜೆಡಿಎಸ್‌‍ ಪ್ರಬಲವಾಗಿರುವ ಕಡೆ ತಮ ಅಸ್ತಿತ್ವವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜೆಡಿಎಸ್‌‍ ಪ್ರತ್ಯೇಕವಾಗಿ ನಡೆಯುವ ತಂತ್ರಗಾರಿಕೆಯನ್ನು ಪ್ರಯೋಗ ಮಾಡಿತ್ತು. ಆದರೆ, ಇದು ದೋಸ್ತಿಗಳಲ್ಲಿ ಒಡಕಿನ ಸಂದೇಶ ಕೊಡುತ್ತಿರುವ ಹಿನ್ನೆಲೆಯಲ್ಲಿ ಮೂರನೇ ದಿನ ಜೊತೆಯಾಗಿಯೇ ಬಿಜೆಪಿ ಮತ್ತು ಜೆಡಿಎಸ್‌‍ ಕಾರ್ಯಕರ್ತರು ಹೆಜ್ಜೆ ಹಾಕಿದರು. +ಪಾದಯಾತ್ರೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌.ಡಿ.ಕುಮಾರಸ್ವಾಮಿ ಅವರು, ರಾಮನಗರದಲ್ಲಿ ಪಾದಯಾತ್ರೆ ಅಂತ್ಯಗೊಂಡ ಬಳಿಕ ನಡೆಯಲಿರುವ ಕಾರ್ಯಕ್ರಮದಲ್ಲೂ ಡಿಕೆಶಿ ವಿರುದ್ಧ ಕಿಡಿಕಾರುವ ಸಂಭವವಿದೆ. +ಎಚ್‌ಡಿಕೆ ವಿರುದ್ಧ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಡಿಕೆಶಿಗೆ ರಾಮನಗರದಲ್ಲಿ ಮತ್ತಷ್ಟು ಉತ್ತರ ಕೊಡುವುದಾಗಿ ಎಚ್‌ಡಿಕೆ ಎಚ್ಚರಿಕೆ ನೀಡಿದ್ದರು. ಜಿಲ್ಲೆಯ ಹೆಸರು ಬದಲಾವಣೆ ವಿಚಾರವಾಗಿ ರಾಮನಗರದಲ್ಲೇ ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಲಿದ್ದಾರೆ. ಬಿಡದಿಯಲ್ಲಿ ಅವರು ಡಿ.ಕೆ.ಶಿವಕುಮಾರ್‌ ಅವರು ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆಂದು ಆರೋಪಿಸಿದ್ದರು. ಬಿಡದಿಯಲ್ಲಿ ಡಿ.ಕೆ.ಶಿವಕುಮಾರ್‌ ಅವರು ಕಟ್ಟಿರುವ ನರ್ಸಿಂಗ್‌ ಕಾಲೇಜು ಒಬ್ಬ ಬಡ ಬ್ರಾಹಣನಿಗೆ ಸೇರಿದ್ದು ಎಂದು ಆರೋಪಿಸಿದ್ದರು. ಸದಾಶಿವ ನಗರದಲ್ಲಿ ವಿಧವೆ ಮಹಿಳೆಯರ ಜಮೀನು ತಮ ಮಗಳ ಹೆಸರಿಗೆ ಬರೆಸಿದ್ದಾರೆ ಎಂದು ದೂರಿದ್ದರು. +ಮೊದಲ ದಿನದ ಪಾದಯಾತ್ರೆಯಲ್ಲಿ ಅಂತರ ಕಾಯ್ದುಕೊಂಡಿದ್ದ ಜೆಡಿಎಸ್‌‍ ಮುಖಂಡ ನಿಖಿಲ್‌ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಅವರು ಭಾನುವಾರ ಒಟ್ಟಿಗೆ ಹೆಜ್ಜೆ ಹಾಕಿದರು. ದಾರಿಯುದ್ದಕ್ಕೂ ಹೂವಿನ ಹಾರ, ತೂರಾಯಿಗಳಿಂದಲೇ ತುಂಬಿ ಹೋಗಿದ್ದ ಇಬ್ಬರು ನಾಯಕರುಗಳೊಟ್ಟಿಗೆ ಬಿಜೆಪಿ-ಜೆಡಿಎಸ್ನ ಶಾಸಕರು, ಎಂಎಲ್ಸಿಗಳು ನಡಿಗೆ ಹಾಕಿದರು. +ವಿಜಯೇಂದ್ರ ಮೇಲುಗೈ :ಮುಡಾ ಹಗರಣ ಹಾಗೂ ವಾಲೀಕಿ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್‌‍ ಹಮಿಕೊಂಡಿರುವ ಬೆಂಗಳೂರು- ಮೈಸೂರು ಪಾದಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೇಲುಗೈ ಸಾಧಿಸುತ್ತಿದ್ದಾರೆ. \ No newline at end of file diff --git a/eesanje/url_46_53_9.txt b/eesanje/url_46_53_9.txt new file mode 100644 index 0000000000000000000000000000000000000000..b1aaa7717cbb525de2bf63eed87edc476d112a71 --- /dev/null +++ b/eesanje/url_46_53_9.txt @@ -0,0 +1,14 @@ +ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡ್ತಾರಾ ರಾಜ್ಯಪಾಲರು..? +ಬೆಂಗಳೂರು,ಆ.5-ಒಂದು ವಾರದಿಂದ ದೆಹಲಿಯಲ್ಲಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಇಂದು ಬೆಂಗಳೂರಿಗೆ ಮರಳಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ನೀಡಲಾದ ಮನವಿಯ ಕುರಿತು ಯಾವುದೇ ಕ್ಷಣದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. +ನವದೆಹಲಿಗೆ ಭೇಟಿ ನೀಡಿದ್ದ ರಾಜ್ಯಪಾಲರು ಬಿಜೆಪಿ ಹೈಕಮಾಂಡ್‌ ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದು, ಕಳೆದ ಜುಲೈ 26ರಂದು ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂ, ರಾಜ್ಯಪಾಲರಿಗೆ ದೂರು ನೀಡಿದ್ದರು. +ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ದೂರನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯಪಾಲರು ಇದೀಗ ಕಾನೂನು ತಜ್ಞರ ವರದಿ ಕೇಳಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣಗಳು ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ನೀಡಿದ್ದ ತೀರ್ಪಿನ ಉಲ್ಲೇಖಿಸಿ ತಜ್ಞರು ವರದಿ ನೀಡಿದ್ದಾರೆ ಎಂದು ತಿಳಿದುಬಂದಿದೆ. +ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್‌‍ ನೋಟಿಸ್‌‍ ನೀಡಿದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸಕ್ಕೆ ತೆರಳಿದ್ದರು. ಇದರ ನಡುವೆ ನೋಟಿಸ್‌‍ ವಾಪಸ್‌‍ ಪಡೆಯಲು ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿದೆ. ಮತ್ತೊಂದೆಡೆ ನೋಟಿಸ್‌‍ಗೆ ಮುಖ್ಯಮಂತ್ರಿ ಅವರು ಉತ್ತರವನ್ನೂ ಕೊಟ್ಟಿದ್ದಾರೆ. +ರಾಜ್ಯ ಸರ್ಕಾರ ಕಳುಹಿಸಿರುವ ಮಂತ್ರಿಪರಿಷತ್‌ನ ನಿರ್ಧಾರವನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿದ್ದಾರೆ. ಸಿಎಂಗೆ ಕಳಿಸಿರುವ ನೋಟೀಸ್‌‍ ಅನ್ನು ವಾಪಸ್‌‍ ಪಡೆಯುವಂತೆ ರಾಜ್ಯಪಾಲರಿಗೆ ಸಂಪುಟ ಮನವಿ ಮಾಡಿದೆ.ಇದು ಪ್ರಾಸಿಕ್ಯೂಷನ್‌ಗೆ ಅರ್ಹ ಪ್ರಕರಣವೇ ಅಲ್ಲವೇ ಎಂದು ತೀರ್ಮಾನ ತೆಗೆದುಕೊಳ್ಳುವ ಹಾಗೂ ಕಾನೂನು ಸಲಹೆ ಬೇಕಿದ್ದರೆ ಮತ್ತೊಮೆ ವಕೀಲರ ಜತೆ ರಾಜ್ಯಪಾಲರು ಚರ್ಚೆ ನಡೆಸುವ ಸಂಭವ ಇದೆ ಎಂದು ಗೊತ್ತಾಗಿದೆ. +ಒಂದು ವೇಳೆ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ಕೊಟ್ಟರೆ ಕಾನೂನು ಕಂಟಕ ಎದುರಾಗಲಿದೆ. ಪ್ರಾಸಿಕ್ಯೂಶನ್‌ಗೆ ಅನುಮತಿ ಸಿಕ್ಕ ಬೆನ್ನಲ್ಲೇ ಅಬ್ರಾಹಂ ಖಾಸಗಿ ದೂರು ದಾಖಲಿಸಲಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ಇಲ್ಲವೇ ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಬಹುದು. ಬಳಿಕ ಪ್ರಕರಣ ಸ್ವೀಕರಿಸುವ ಇಲ್ಲವೇ ತಿರಸ್ಕರಿಸುವ ಬಗ್ಗೆ ನ್ಯಾಯಾಲಯದಲ್ಲಿ ವಾದ ಹಾಗೂ ಪ್ರತಿವಾದ ನಡೆಯಲಿದೆ. +ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ಅನುಮತಿ ನೀಡಿದ್ದೇ ಆದರೆ, ಅದಕ್ಕೆ ಸಾಂವಿಧಾನಿಕ ಮತ್ತು ರಾಜಕೀಯ ಪರಿಣಾಮಗಳು ಎದುರಾಗಬಹುದು ಎಂಬುದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ.ಈ ನಡುವೆ ಬಿಜೆಪಿ ಹೈಕಮಾಂಡ್‌ ಆತುರದ ನಿರ್ಧಾರ ಕೈಗೊಳ್ಳದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಪಾಲರ ಮೂಲಕ ಸಲಹೆಯನ್ನೂ ರವಾನಿಸಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. +ಕಾನೂನು ಹೇಳುವುದು ಏನು? :ಇನ್ನು ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ತಮ ಪರ ನಿರ್ಣಯ ಅಂಗೀಕರಿಸಿಕೊಂಡರೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆಯೋ ಅಥವಾ ಇಲ್ಲವೋ ಎಂಬ ಗೊಂದಲಗಳು ಎದುರಾಗಿವೆ. +ಸಂಪುಟದಲ್ಲಿ ನಿರ್ಣಯ ಅಂಗೀಕಾರವಾದರೂ ಸಹ ಆರ್ಟಿಕಲ್‌ 163ರಲ್ಲಿ ಉಲ್ಲೇಖವಾಗಿರುವಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಅಧಿಕಾರಿ ಹೊಂದಿದ್ದಾರೆ ಎಂದು ಕಾನೂನು ತಜ್ಷರು ಅಭಿಪ್ರಾಯಪಟ್ಟಿದ್ದಾರೆ. +ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಗ್ಗೆ ರಾಜ್ಯಪಾಲರು ನೇರವಾಗಿ ತೀರ್ಮಾನ ತೆಗೆದುಕೊಳ್ಳಬಹುದು. ಆರ್ಟಿಕಲ್‌ 163ರಲ್ಲಿ ಈ ಬಗ್ಗೆ ಉಲ್ಲೇಖ ಆಗಿದೆ. ಸಂಪುಟದ ಅಭಿಪ್ರಾಯ ಕೊಟ್ಟರೆ ಅನುಮೋದನೆ ಮಾಡಲೇಬೇಕು ಎಂಬ ನಿಯಮವಿಲ್ಲ. ಅವರು ಕೌನ್ಸಿಲ್‌ ಮಿನಿಸ್ಟರ್‌ ತೀರ್ಮಾನದ ವಿರುದ್ಧವಾಗಿ ಅನುಮತಿ ನೀಡಬಹುದು ಎಂಬುದು ಕಾನೂನು ತಜ್ಞರ ವಾದವಾಗಿದೆ. +ಸಚಿವ ಸಂಪುಟ ತೀರ್ಮಾನವನ್ನು ಲೆಕ್ಕಿಸದೆ, ಪ್ರಾಸಿಕ್ಯೂಷನ್‌ ಗೆ ಕೊಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಅಕ್ರಮ ನಡೆದಿದೆ ಎಂಬುದು ಮನವರಿಕೆ ಆಗಿದ್ದರೆ ಕಾನೂನಿನ ಪ್ರಕಾರ ಸಂಪುಟದ ಅಭಿಪ್ರಾಯ ತೆಗೆದುಕೊಳ್ಳಬಹುದು. ಇಲ್ಲ ಸ್ವತಂತ್ರವಾಗಿ ಕೂಡ ತೀರ್ಮಾನ ಮಾಡಬಹುದು ಎಂದು ಕಾನೂನು ಹೇಳುತ್ತದೆ. +2004ರಲ್ಲಿ ಮಧ್ಯಪ್ರದೇಶದ ಇಬ್ಬರು ಸಚಿವರು ಮೇಲೆ ಭೂಕಬಳಿಕೆ ಸಂಬಂದ ದೂರು ದಾಖಲಾಗಿತ್ತು. ಇವರ ವಿರುದ್ಧ ದೂರು ದಾಖಲಿಸದಂತೆ ಸಚಿವ ಸಂಪುಟದಲ್ಲಿ ಒಂದು ಸಾಲಿನ ನಿರ್ಣಯವನ್ನೂ ಸಹ ಮಾಡಲಾಗಿತ್ತು. ಆದರೆ ಅಂದಿನ ರಾಜ್ಯಪಾಲರು ಸಂಪುಟದ ತೀರ್ಮಾನವನ್ನು ಒಪ್ಪದೆ ತಾವಾಗಿಯೇ ಅನುಮತಿ ನೀಡಿದ್ದನ್ನು ಸುಪ್ರೆಂಕೋರ್ಟ್‌ ಒಪ್ಪಿತ್ತು. ಆದರೆ ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗೆ ನೀಡುವ ಹಾಗಿಲ್ಲ ಎಂಬುದನ್ನು ಸಹ ಉಲ್ಲೇಖ ಮಾಡಿತ್ತು. +ಸಿಎಂ ವಿರುದ್ಧ ವಿಚಾರಣಾ ಅನುಮತಿಯನ್ನು ರಾಜ್ಯಪಾಲರು ಕೊಟ್ಟರೆ ರಾಜಭವನದೊಂದಿಗೆ ಸಂಘರ್ಷಕ್ಕೆ ಇಳಿದರೂ ಆಶ್ಚರ್ಯವಿಲ್ಲ.ದೂರುದಾರರಾಗಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹೇಳುವಂತೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದೆ ಬೇರೆ ದಾರಿಯಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_54_1.txt b/eesanje/url_46_54_1.txt new file mode 100644 index 0000000000000000000000000000000000000000..d883e56e1ccc46f00e0ec12fdfe3b4ed76ab6ae1 --- /dev/null +++ b/eesanje/url_46_54_1.txt @@ -0,0 +1,9 @@ +ಅಕ್ರಮ ರೆಸಾರ್ಟ್‌, ಹೋಂಸ್ಟೇಗಳ ತೆರವಿಗೆ ಕಾರ್ಯಪಡೆ ರಚನೆ : ಸಚಿವ ಖಂಡ್ರೆ +ಬೆಂಗಳೂರು, ಆ.4-ರಾಜ್ಯದ 10 ಜಿಲ್ಲೆಗಳಲ್ಲಿ ಆವರಿಸಿರುವ ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್‌, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಘೋಷಿಸಿದ್ದಾರೆ. +ಈ ಸಂಬಂಧ ಮಾಧ್ಯ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. +ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. +ಎಸಿಎಫ್‌, ಡಿಸಿಎಫ್‌, ಸಿಎಫ್‌, ಸಿಸಿಎಫ್‌, ಎ.ಪಿ.ಸಿಸಿಎಫ್‌ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ 64 ಎ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಎಸಿಎಫ್‌ ಮೇಲ್ಪಟ್ಟ ದರ್ಜೆಯ ಎಲ್ಲ ಅಧಿಕಾರಿಗಳಿಗೂ ವಾರದಲ್ಲಿ ಎರಡು ದಿನ ತಮ ತಮ ವಲಯದಲ್ಲಿ ಪ್ರಕ್ರಿಯೆ ನಡೆಸಿ ತ್ವರಿತವಾಗಿ ಆದೇಶ ನೀಡಲು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. +ಈಗಾಗಲೇ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಶ್ಚಿಮಘಟ್ಟ ಅರಣ್ಯ ಒತ್ತುವರಿ ಕಾರ್ಯಪಡೆಗೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಹೇಳಿದ್ದಾರೆ. +ಮೊದಲಿಗೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಅಕ್ರಮ ರೆಸಾರ್ಟ್‌, ಹೋಂಸ್ಟೇಗಳನ್ನು ತೆರವು ಮಾಡಿ, ಬಳಿಕ ತೋಟ, ಕಟ್ಟಡಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಎಲ್ಲರೂ ಕಾನೂನಿನ ಮುಂದೆ ಸಮಾನರು. ಪಶ್ಚಿಮ ಘಟ್ಟವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವವರಿಗೆ ಅವಕಾಶ ನೀಡುವುದಿಲ್ಲ. ಇಂಥಹ ಚಟುವಟಿಕೆಯಿಂದ ಪರಿಸರಕ್ಕೆ ಆಗುವ ಹಾನಿಯನ್ನು ಸರಿದೂಗಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. +ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧ ಕ್ರಮ:ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆಯ ವೇಳೆ ಅವೈಜ್ಞಾನಿಕವಾಗಿ 90ಡಿಗ್ರಿಗೆ ಗುಡ್ಡ ಕಡಿದಿರುವುದೂ ಕುಸಿತಕ್ಕೆ ಕಾರಣವಾಗಿದ್ದು, ಇಂತಹ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಎಂಜಿನಿಯರುಗಳಿಗೂ ನೋಟಿಸ್‌‍ ನೀಡಿ ಕ್ರಮ ಜರುಗಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. +ವಯನಾಡು ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿದ್ದು ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ಕಣರೆಯಾಗಿದೆ. ಶಿರಾಡಿ ಘಾಟ್‌, ಚಾರ್ಮಾಡಿ ಘಾಟ್‌ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟಗಳಲ್ಲಿ ನಿರಂತರವಾಗಿ ಗುಡ್ಡ ಕುಸಿತಗಳು ಸಂಭವಿಸುತ್ತಿವೆ. ಈಗಲೂ ನಾವು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮನ್ನು ಕ್ಷಮಿಸುವುದಿಲ್ಲ ಎಂದು ಖಂಡ್ರೆ ಹೇಳಿದ್ದಾರೆ. \ No newline at end of file diff --git a/eesanje/url_46_54_10.txt b/eesanje/url_46_54_10.txt new file mode 100644 index 0000000000000000000000000000000000000000..91701c3f2fd1302b170ceb2654741400dfe4a3e2 --- /dev/null +++ b/eesanje/url_46_54_10.txt @@ -0,0 +1,5 @@ +ಪಿಎಸ್‌‍ಐ ಪರಶುರಾಮ್ ಸಾವು ಭ್ರಷ್ಟ ಸರ್ಕಾರ ಮಾಡಿದ ಕೊಲೆ : ಸಿ.ಟಿ.ರವಿ +ಬೆಂಗಳೂರು,ಆ.3-ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ರೇಟ್‌ ಕಾರ್ಡ್‌ ಮತ್ತು ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಯಾದಗಿರಿಯ ಪಿಎಸ್‌‍ಐ ಪರಶುರಾಮ ಅವರ ಜೀವ ಹೋಗಿದೆ. ಇದು ಸಾವಲ್ಲ. ಭ್ರಷ್ಟ ಸರ್ಕಾರ ಮಾಡಿದ ಕೊಲೆ ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಮಾಜಿ ಸಚಿವ ಸಿ.ಟಿ.ರವಿ ಸ್ಫೋಟಕ ಆರೋಪ ಮಾಡಿದ್ದಾರೆ. +ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಭ್ರಷ್ಟತನದ ಪರಮಾವಧಿ ಮುಟ್ಟಿದ ರಾಜ್ಯ ಕಾಂಗ್ರೆಸ್‌‍ ಸರ್ಕಾರ ಇನ್ನೊಬ್ಬ ಪೊಲೀಸ್‌‍ ಅಧಿಕಾರಿಯನ್ನು ಬಲಿಪಡೆದಿದೆ ಎಂದು ದೂರಿದ್ದಾರೆ. +ಅತ್ಯಂತ ಬಡತನದ ಹಿನ್ನೆಲೆಯಿಂದ ಬಂದರೂ, ತನ್ನ ಛಲ ಮತ್ತು ಸಾಧನೆಯಿಂದ ಪಿಎಸ್‌‍ಐ ಆದ ಪರಶುರಾಮ್‌ ಛಲವಾದಿ ಯಾದಗಿರಿಯಲ್ಲಿ ನಿನ್ನೆ ಸಾವಿಗೀಡಾಗಿದ್ದಾರೆ. ಮೃತರ ಪತ್ನಿ ತನ್ನ ಪತಿಯ ಸಾವಿಗೆ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಲಂಚದ ಹಣಕ್ಕಾಗಿ ಮಾಡಿದ ಒತ್ತಡದಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಾವಿಗೆ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದ್ದಾರೆ. +ಮೃತ ಪಿಎಸ್‌‍ಐ ಪತ್ನಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು ಅವರ ಹೆಸರೇಳಿದರೂ ಅವರನ್ಯಾಕೆ ಇನ್ನೂ ಬಂಧಿಸಿಲ್ಲ. ನಿಮ ಲಂಚದ ಹಾವಳಿಗೆ ಇನ್ನೆಷ್ಟು ಅಧಿಕಾರಿಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯನವರೇ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೇ, ಶಾಸಕ ಚನ್ನಾರೆಡ್ಡಿ ಪಾಟೀಲ್‌ ತುನ್ನೂರು ಮತ್ತವರ ಪುತ್ರನನ್ನು ಈ ಕೂಡಲೇ ಬಂಧಿಸಿ, ಮೃತ ಪಿಎಸ್‌‍ಐ ಸಾವಿಗೆ ನ್ಯಾಯ ದೊರಕಿಸಿ ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_54_11.txt b/eesanje/url_46_54_11.txt new file mode 100644 index 0000000000000000000000000000000000000000..c610bf9c526e03d69ac815cb4f6c50e58049a02c --- /dev/null +++ b/eesanje/url_46_54_11.txt @@ -0,0 +1,7 @@ +ಪಿಎಎಸ್‌‍ಐ ಪರಶುರಾಮ್‌ ಅಸಹಜ ಸಾವು, ಸರ್ಕಾರಕ್ಕೆ ತಲೆನೋವು +ಬೆಂಗಳೂರು,ಆ.3-ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣಗಳಿಂದ ರಾಜ್ಯಸರ್ಕಾರ ಮುಜುಗರಕ್ಕೆ ಒಳಗಾಗಿರುವ ನಡುವೆಯೇ ಪೊಲೀಸ್‌‍ ಅಧಿಕಾರಿ ಅಸಹಜ ಸಾವು ರಾಜ್ಯಸರ್ಕಾರಕ್ಕೆ ಸಾಕಷ್ಟು ಇರಿಸುಮುರಿಸು ಉಂಟುಮಾಡಿದೆ. +ಯಾದಗಿರಿ ಪಿಎಎಸ್‌‍ಐ ಪರಶುರಾಮ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಪರಶುರಾಮ್ ಅವರ ಪತ್ನಿ ಶ್ವೇತಾ ಅವರು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಸಂಗೀತ ಅವರಿಗೆ ದೂರು ನೀಡಿದ್ದು, ತಮ ಪತಿಗೆ ಸ್ಥಳ ನಿಯೋಜನೆಗಾಗಿ ಹಣ ನೀಡುವಂತೆ ಸ್ಥಳೀಯ ಶಾಸಕ ಚೆನ್ನರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಪದೇಪದೇ ಒತ್ತಡ ಹೇರುತ್ತಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ದೂರಿದ್ದಾರೆ. +ನಿನ್ನೆ ರಾತ್ರಿ ಆಸ್ಪತ್ರೆಯ ಮುಂಭಾಗ ದಲ್ಲೇ ಧರಣಿ ನಡೆಸಿದ ಶ್ವೇತಾ, ಶಾಸಕ ಚೆನ್ನರೆಡ್ಡಿ ಪಾಟೀಲ್‌ ಸ್ಥಳಕ್ಕೆ ಆಗಮಿಸ ಬೇಕೆಂದು ಪಟ್ಟು ಹಿಡಿದಿದ್ದರು.ಸಂಬಂಧಿಕರು ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರ ದುಡ್ಡಿನ ಆಸೆ ಹೆಚ್ಚಾಗಿದೆ. 7 ತಿಂಗಳಲ್ಲೇ ವರ್ಗಾವಣೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಘಟನೆ ನಡೆದು 17 ಘಂಟೆಗಳಾದರೂ ಪೊಲೀಸರು ದೂರು ದಾಖಲಿಸಿಲ್ಲ. ಇದನ್ನು ವಿರೋಧಿಸಿ ವಿವಿಧ ಸಂಘಟನೆ ಗಳು ರಾಷ್ಟ್ರೀಯ ಹೆದ್ದಾರಿ -150 ರಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. +ಕಿಮ್ಸೌ ಆಸ್ಪತ್ರೆಯ ಎದುರೇ ಪ್ರತಿಭಟನೆ ನಡೆದಿದ್ದರಿಂದಾಗಿ ಆಸ್ಪತ್ರೆಗೆ ಹೋಗಿಬರುವ ರೋಗಿಗಳಿಗೆ ತೀವ್ರ ತೊಂದರೆಯಾಯಿತು.ಪರಶುರಾಮ್‌ ಕುಟುಂಬದ ಸದಸ್ಯರೂ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ವಿರೋಧಪಕ್ಷಗಳ ಮುಖಂಡರು ಪರಶುರಾಮ್‌ರ ಸಾವಿನ ಪ್ರಕರಣವನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. +ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ವರ್ಗಾವಣೆಗೆ ಭಾರಿ ಪ್ರಮಾಣದ ಲಂಚ ಪಡೆಯಲಾಗುತ್ತಿದೆ. ಪ್ರಭಾವಿಗಳ ಹಸ್ತಕ್ಷೇಪದಿಂದ ವರ್ಗಾವಣೆಯಾಗುತ್ತಿದೆ. ಒಂದರ ಮೇಲೊಂದರ ಹಗರಣದ ಜೊತೆಗೆ ಅಧಿಕಾರಿಗಳ ವರ್ಗಾವಣೆಯಲ್ಲೂ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಿದ್ದಾರೆ. \ No newline at end of file diff --git a/eesanje/url_46_54_12.txt b/eesanje/url_46_54_12.txt new file mode 100644 index 0000000000000000000000000000000000000000..818943e767a5a5ef5e1499e05264bc4a2326ee89 --- /dev/null +++ b/eesanje/url_46_54_12.txt @@ -0,0 +1,10 @@ +ಸಿದ್ದರಾಮಯ್ಯನವರ ಬೆದರಿಕೆಗೆ ಜಗ್ಗುವುದಿಲ್ಲ, ಪಾದಯಾತ್ರೆ ನಿಲ್ಲಲ್ಲ : ವಿಜಯೇಂದ್ರ ಸವಾಲು +ಬೆಂಗಳೂರು,ಆ.3-ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡಿದರೆ ನಮಗೆ ಬೆದರಿಕೆ ಹಾಕಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆದರಿಕೆಗೆ ಹೆದರಿ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಸವಾಲು ಹಾಕಿದ್ದಾರೆ. +ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮುಡಾ ಹಗರಣದ ಬಗ್ಗೆ ಪ್ರಸ್ತಾಪಿಸಿದರೆ ನಮಗೆ ಸಿದ್ದರಾಮಯ್ಯನವರು ಬೆದರಿಕೆ ಹಾಕುತ್ತಿದ್ದಾರೆ. ನಿಮ ಗೊಡ್ಡು ಬೆದರಿಕೆಗೆ ಹೆದರಿ ನಾವು ಪಾದಯಾತ್ರೆ ನಿಲ್ಲಿಸುತ್ತೇವೆ ಎಂದುಕೊಂಡಿದ್ದರೆ ಅದು ನಿಮ ಭ್ರಮೆ ಎಂದು ತಿರುಗೇಟು ನೀಡಿದರು. +ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ. ಎಷ್ಟೇ ಸವಾಲುಗಳು ಬಂದರೂ ಅದನ್ನು ಎದರಿಸುವ ಶಕ್ತಿ ನಮಗಿದೆ. ಸಮಾಜವಾದಿ ಎನ್ನುತ್ತಿರುವ ಸಿದ್ದರಾಮಯ್ಯನವರ ಮುಖವಾಡವು ಕಳಚಿ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು. +ಮುಡಾ ಹಗರಣದಲ್ಲಿ ಖುದ್ದು ಸಿದ್ದರಾಮಯ್ಯನವರ ಕುಟುಂಬದವರೇ ಸಿಕ್ಕಿಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ನೀವು ಏಕೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್‌‍ ಶಾಸಕರೇ ನಮಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ಕಾಂಗ್ರೆಸ್‌‍ ಎಂದರೆ ಭ್ರಷ್ಟಾಚಾರ. ಭ್ರಷ್ಟಾಚಾರ ಎಂದರೆ ಕಾಂಗ್ರೆಸ್‌‍. ರಾಜ್ಯಪಾಲರು ನೀಡಿರುವ ಒಂದೇ ಒಂದು ಶೋಕಾಸ್‌‍ ನೋಟಿಸ್‌‍ಗೆ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಜಂಘಾಬಲವೇ ಉಡುಗಿ ಹೋಗಿದೆ. ಈಗ ನಮ ಮೇಲೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಮುಡಾ ಹಗರಣದ ಬಗ್ಗೆ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸಿದರೆ ಅಲ್ಲಿಯೂ ನಮಗೆ ಅವಕಾಶ ಸಿಗುವುದಿಲ್ಲ. ನೂರೊಂದು ಕಾರಣಗಳನ್ನು ನೀಡಿ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದರು. ಹೀಗಾಗಿ ಪಾದಯಾತ್ರೆ ಹಮಿಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು. +ಸಿದ್ದರಾಮಯ್ಯನವರೇ ನೇಮಕ ಮಾಡಿದ್ದ ಮುಡಾ ಅಧ್ಯಕ್ಷರೇ ಈ ಪ್ರಕರಣದಲ್ಲಿ 5 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಹೇಳಿದ್ದಾರೆ. ಆದರೆ ಇಲ್ಲಿ ಏನೇನೂ ನಡೆದಿಲ್ಲ ಎಂದು ಸರ್ಕಾರ ತಿಪ್ಪೇ ಸಾರಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂ ರಾಜೀನಾಮೆ ನೀಡುವವರೆಗೂ ನಾವು ವಿರಮಿಸುವುದಿಲ್ಲ ಎಂದು ಶಪಥ ಮಾಡಿದರು. +ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದು. ವಚನಭ್ರಷ್ಟ ಸರ್ಕಾರ ಆಗಿದೆ. ಅಹಿಂದ ಎಂದು ಹೇಳಿ, ಸಮಾಜಗಳನ್ನು ತುಳಿದಿದೆ. ವಾಲೀಕಿ ನಿಗಮದಲ್ಲಿ ಲೂಟಿ ಮಾಡಿದೆ. ಮೈಸೂರಿನ ಮುಡಾ ಒಂದು ಲಕ್ಷ ಅರ್ಜಿಗಳನ್ನು ಹಾಕಿಕೊಂಡು ನಿವೇಶನ ಕೊಡಲು ಹಾಗೆಯೇ ಕುಳಿತಿದ್ದಾರೆ. ಅಲ್ಲಿನ ಅರ್ಜಿದಾರರಿಗೆ ನಿವೇಶನ ಕೊಡುವ ಕೆಲಸ ಸಿದ್ಧರಾಮಯ್ಯ ಮಾಡಿಲ್ಲ ಎಂದು ದೂರಿದರು. +ಈ ಎರಡು ಹಗರಣಗಳ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ರಕ್ಷಣೆ ಕೊಡುತ್ತಿರುವುದು ಸಿಎಂ ಸಿದ್ಧರಾಮಯ್ಯ ಅವರೇ ಎಂದು ಆರೋಪಿಸಿದರು. \ No newline at end of file diff --git a/eesanje/url_46_54_2.txt b/eesanje/url_46_54_2.txt new file mode 100644 index 0000000000000000000000000000000000000000..94d5de4a5cc32ab62d489f0c09b7e4d385430d36 --- /dev/null +++ b/eesanje/url_46_54_2.txt @@ -0,0 +1,19 @@ +ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ : ಓಪನ್ ಚಾಲೆಂಜ್ +ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. +ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ. +ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ. ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. +ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. +ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ. +ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ. +ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ. ಬೆಂಗಳೂರು, ಆ.4- ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದೆ. ಯಾರಿಗೂ ಮೋಸ ಮಾಡಲಿಲ್ಲ. ನಾನು ವಂಚನೆ ಮಾಡಿ ಭೂಮಿ ಖರೀದಿಸಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಜೆಡಿಎಸ್‌‍ ರಾಜಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. +ಬಿಡದಿಯಲ್ಲಿ ಎರಡನೇ ದಿನದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಮುಂಚೆಯೇ 45 ಎಕರೆ ಜಮೀನು ತೆಗೆದುಕೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ ಎಂದಿದ್ದಾರೆ. ಆದರೆ, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. +ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇಂಥವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.ಹೆಣ್ಣು ಮಗಳೊಬ್ಬಳನ್ನು ಕಿಡ್ನಾಪ್‌ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದಾರೆ. + +ಅದೇನೋ ಬಿಚ್ಚಿಡುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ. ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಬಿಚ್ಚೋಕ್ಕೆ ಹೋದರೆ ನಿಮದು ಪುಟ ಗಟ್ಟಲೆ ಇದೆ.ಅಜ್ಜಯ್ಯನ ಬಗ್ಗೆ ಶಿವಕುಮಾರ್‌ ಗೆ ಭಕ್ತಿ, ಗೌರವವಿದ್ದರೆ ಪ್ರಾಮಾಣಿಕವಾಗಿ ಬೆಳೆದು ಬಂದರಾ ಎಂದು ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. +ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಎಂಬುದು ಗೊತ್ತಿದೆ. ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನನ್ನು ಬೆಳೆಸಿದೆ. ನಾನು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ಈಗ ಬಿಜೆಪಿ, ಜೆಡಿಎಸ್‌‍ ಮೈತ್ರಿ ಕಾಂಗ್ರೆಸ್‌‍ ನಿದ್ದೆಗೆಡಿಸಿದೆ. ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದವರು ಎಂದು ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ. +ಸಂಸದ ಡಾಕ್ಟರ್‌ ಮಂಜುನಾಥ್‌ ಅವರು ವೈದ್ಯರ ಕೆಲಸ ಮಾತ್ರ ಮಾಡುತ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರೀತಿದೆ. ಅವರ ಬಗ್ಗೆನೂ ಶಿವಕುಮಾರ್‌ ಮಾತಾಡಿದ್ದಾರೆ ಎಂದು ಹೇಳಿದ್ದಾರೆ.ಈ ಪಾದಯಾತ್ರೆಯನ್ನು ಅಸೂಯೆಯಿಂದ ಹಮಿಕೊಂಡಿದ್ದಲ್ಲ. ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅಂದುಕೊಂಡಿದ್ದಾರೆ. +ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೆಯುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸುವ ಕಾಂಗ್ರೆಸಿಗರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟೀಕಿಸಿದ್ದಾರೆ.ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತಾಡಿದ್ದಾರೆ. ಮೈಸೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಯವರೇ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ತಮ ಪತ್ನಿ ಹೆಸರಲ್ಲಿ 15 ನಿವೇಶನ ಪಡೆಯಲು ನಮ ವಿರೋಧವಿಲ್ಲ.ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು, ನಕಲಿ ದಾಖಲೆ ಸೃಷ್ಟಿ ಸಿ15 ನಿವೇಶನಗಳನ್ನು ಪಡೆದಿದ್ದಾರೆ. ಕಾನೂನು ಬಾಹಿರವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಆಸ್ತಿ ಲಪಟಾಯಿಸಿದ್ದಾರೆ. ಇದರ ದಾಖಲೆ ಸದನದಲ್ಲಿ ಇಟ್ಟಿದ್ದೇವೆ. ಆದರೆ, ಉತ್ತರ ಕೊಡದೇ ಕಾಂಗ್ರೆಸ್‌‍ ನಾಯಕರು ಪಲಾಯನ ಮಾಡಿದ್ದಾರೆ. ಯಾರಿಗಾದರೂ ತಾಕತ್‌ ಇದ್ರೆ, ಗಟ್ಟಿ ಧ್ವನಿ ಇದ್ದರೆ ಅದು ಕುಮಾರಸ್ವಾಮಿಗೆ ಎಂದು ಡಿಸಿಎಂ ಹೇಳಿದ್ದಾರೆ. +ಡಿಸಿಎಂ ಅವರು ಏನು ಪ್ರಶ್ನೆ ಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ,ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_54_3.txt b/eesanje/url_46_54_3.txt new file mode 100644 index 0000000000000000000000000000000000000000..3421b2b21bfab513b3cf97cbb5f00023779821e4 --- /dev/null +++ b/eesanje/url_46_54_3.txt @@ -0,0 +1,7 @@ +“ಸಿಎಂ, ಡಿಸಿಎಂ ರಾಜ್ಯವನ್ನು ಲೂಟಿಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ” +ಬೆಂಗಳೂರು, ಆ.4-ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್‌‍ ಸರ್ಕಾರವು ಹಣ ಲೂಟಿ ಮಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದರು. +ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ದೀನದಲಿತರು, ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು. +ಮಾನ್ಯ ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು. +ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿಂದ ಉಪ ಮುಖ್ಯಮಂತ್ರಿಯವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ ಎಂದು ಒತ್ತಾಯಿಸಿದರು. +ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ; ಲೂಟಿ ಮಾಡುತ್ತ ಕುಳಿತಿದ್ದೀರಿ ಎಂದು ಟೀಕಿಸಿದರು. +ಜೆಡಿಎಸ್‌‍ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‌ ಕುಮಾರ್‌, ಸತೀಶ್‌ ರೆಡ್ಡಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ್‌‍, ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ಮಂಜುನಾಥ್‌, ಶಾಸಕ ಕೃಷ್ಣಪ್ಪ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಗೋಪಾಲಯ್ಯ, ಮುಖಂಡ ಮಹೇಶ್‌, ಬಿಜೆಪಿ ಹಾಗೂ ಜೆಡಿಎಸ್‌‍ ಪಕ್ಷಗಳ ಸಂಸದರು, ಶಾಸಕರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು. \ No newline at end of file diff --git a/eesanje/url_46_54_4.txt b/eesanje/url_46_54_4.txt new file mode 100644 index 0000000000000000000000000000000000000000..c88d8be5573a7fbb368b34142d0a2534eb9faba5 --- /dev/null +++ b/eesanje/url_46_54_4.txt @@ -0,0 +1,7 @@ +ನಮ್ಮ ಪ್ರಶ್ನೆಗಳಿಗೆ ಉತ್ತರಿಸುವ ಬದಲು ನಮಗೇ ಪ್ರಶ್ನೆ ಹಾಕುತ್ತಿರುವುದು ಹಾಸ್ಯಾಸ್ಪದ : ವಿಜಯೇಂದ್ರ +ಬೆಂಗಳೂರು, ಆ.4-ನಮ್ಮದು ವಿರೋಧ ಪಕ್ಷ. ರಾಜ್ಯದ ಜನರ ಪರವಾಗಿ ನಾವು ಕೇಳುವ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಉತ್ತರ ನೀಡಬೇಕು. ಅದರ ಬದಲಾಗಿ ನಮಗೇ ಪ್ರಶ್ನೆ ಹಾಕುತ್ತಿದ್ದು, ಇದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. +ಮೈಸೂರು ಚಲೋ ಪಾದಯಾತ್ರೆಯ ಎರಡನೇ ದಿನವಾದ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸದನದಲ್ಲೂ ನಮ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇವತ್ತೂ ಉತ್ತರ ಸಿಕ್ಕಿಲ್ಲ. ಈ ಪಾದಯಾತ್ರೆ ಮೂಲಕ ಇವರಿಗೆ ಚಾಟಿ ಬೀಸುವ ಮತ್ತು ಬುದ್ಧಿ ಕಲಿಸುವ ಕೆಲಸ ಮಾಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. +ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನಗಳು ಹತ್ತಿರ ಆಗುತ್ತಿವೆಯೇ ಎಂಬ ಪ್ರಶ್ನೆಗೆ ನನಗೇನೂ ಇದರಲ್ಲಿ ಅನುಮಾನ ಇಲ್ಲ ಎಂದು ಉತ್ತರಿಸಿದರು. ಸಿದ್ದರಾಮಯ್ಯನವರು ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳು; ತಮ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲ ಎಂದು ಮೊಂಡುವಾದ ಮಾಡುತ್ತಿದ್ದರು. +ಇವತ್ತು ಅವರು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ನಿನ್ನೆ ಯಾದಗಿರಿಯಲ್ಲಿ ಪಿಎಸ್‌‍ಐ ಪರಶುರಾಮ್‌ ಆತಹತ್ಯೆ ಮಾಡಿಕೊಂಡಿದ್ದಾರೆ. ಇದರ ಹಿಂದಿನ ಕಾರಣ ರಾಜ್ಯದ ಜನತೆಗೆ ಗೊತ್ತಿದೆ. ರಾಜ್ಯದ ಆಡಳಿತ ಪಕ್ಷದ ಪರಿಸ್ಥಿತಿ ಹಿರಿಯಕ್ಕನ ಚಾಳಿ ಮನೆಮಂದಿಗೆ ಎಂಬಅತಾಗಿದೆ ಎಂದು ಟೀಕಿಸಿದರು. +ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಸ್ವತಃ ಮಂತ್ರಿಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದೇ ರೀತಿ ಆಡಳಿತ ಪಕ್ಷದ ಶಾಸಕರೂ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಆಕ್ಷೇಪಿಸಿದರು.ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳು, ಗುತ್ತಿಗೆ ಹಣ ಸಿಗದೆ ಗುತ್ತಿಗೆದಾರರು ಆತಹತ್ಯೆ ಮಾಡಿಕೊಳ್ಳುತ್ತಿದ್ದಾರೆ. +ಶಾಸಕರು ಕೇಳಿದ ಲಂಚ ಕೊಡಲಾಗದೆ ಪಿಎಸ್‌‍ಐ ಪರಶುರಾಮ್‌ ನಿನ್ನೆ ಸಾವನ್ನಪ್ಪಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಹೇಳಿಕೊಂಡು ಆಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಪಕ್ಷವು ಇಂದು ಹಗರಣಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದೆ ಎಂದು ಟೀಕಿಸಿದರು. \ No newline at end of file diff --git a/eesanje/url_46_54_5.txt b/eesanje/url_46_54_5.txt new file mode 100644 index 0000000000000000000000000000000000000000..c757d3fd4e069e7004dda721a3d6cf101a4d7946 --- /dev/null +++ b/eesanje/url_46_54_5.txt @@ -0,0 +1,5 @@ +ಪಿಎಸ್‌‍ಐ ಪರಶುರಾಮ್‌ ಸಾವು : ಶಾಸಕ ಹಾಗೂ ಪುತ್ರನ ವಿರುದ್ಧ ದೂರು ದಾಖಲು +ಯಾದಗಿರಿ,ಆ.3-ಸೈಬರ್‌ ಠಾಣೆಯ ಪಿಎಸ್‌‍ಐ ಪರಶುರಾಮ್‌ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌‍ನ ಯಾದಗಿರಿ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಹಾಗೂ ಅವರ ಪುತ್ರ ಪಂಪನಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. +ಪಿಎಸ್‌‍ಐ ಪರುಶುರಾಮ್‌ ನಿನ್ನೆ ಮೃತಪಟ್ಟಿದ್ದರು. ಅವರ ಪತ್ನಿ ಶ್ವೇತಾ ದೂರು ನೀಡಿದ್ದು, ತಮ ಪತಿಗೆ ವರ್ಗಾವಣೆ ಮತ್ತು ಸ್ಥಳ ನಿಯೋಜನೆಗಾಗಿ ಸ್ಥಳೀಯ ಶಾಸಕ ಮತ್ತು ಅವರ ಪುತ್ರ ಹಣದ ಬೇಡಿಕೆ ಇಟ್ಟಿದ್ದರು. ಇದರಿಂದ ಒತ್ತಡ ಹಾಗೂ ಮಾನಸಿಕ ಖಿನ್ನತೆಗೆ ಒಳಗಾದ ತಮ ಪತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದರು. +ಮೂರು ಪುಟಗಳ ದೂರು ಆಧರಿಸಿ ಯಾದಗಿರಿ ನಗರ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪಿಎಸ್‌‍ಐ ಮೃತಪಟ್ಟು 20 ಗಂಟೆಗಳಾದರೂ ದೂರು ದಾಖಲಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರೆ ಸರ್ಕಾರ ಅಳೆದುತೂಗಿ ಕೊನೆಗೂ ಎಫ್‌ಐಆರ್‌ ದಾಖಲಿಸಿದೆ. +ಆಡಳಿತ ಪಕ್ಷದ ಶಾಸಕರ ವಿರುದ್ಧ ಲಂಚ ಆರೋಪಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗಿರುವುದು ವಿಪಕ್ಷಗಳಿಗೆ ರಾಜಕೀಯವಾಗಿ ಮತ್ತೊಂದು ಅಸ್ತ್ರ ನೀಡಿದಂತಾಗಿದೆ. \ No newline at end of file diff --git a/eesanje/url_46_54_6.txt b/eesanje/url_46_54_6.txt new file mode 100644 index 0000000000000000000000000000000000000000..a95795f9f301ccb7d2a1dfe4e3ce00d39b744670 --- /dev/null +++ b/eesanje/url_46_54_6.txt @@ -0,0 +1,7 @@ +ಪಿಎಸ್‌‍ಐ ಸಾವಿನ ತನಿಖೆಗೆ ಸೂಚನೆ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಆ.3-ಯಾದಗಿರಿಯ ಪಿಎಸ್‌‍ಐ ಪರಶುರಾಮ್‌ ಅಸಹಜ ಸಾವಿನ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಯ ಪತ್ನಿ ಶ್ವೇತಾ ಅವರ ಆರೋಪವನ್ನು ತನಿಖೆಯಲ್ಲಿ ಪರಿಗಣಿಸುವಂತೆ ಆದೇಶಿಸಲಾಗಿದೆ. +ವರ್ಗಾವಣೆಗಾಗಿ ಸ್ಥಳೀಯ ಶಾಸಕರಿಗೆ 30 ಲಕ್ಷ ರೂ. ಲಂಚ ನೀಡಿದ್ದರು ಎಂದು ಆರೋಪ ಮಾಡಿದ್ದಾರೆ. ಅದು ಆರೋಪ ಮಾತ್ರ. ತನಿಖೆ ನಡೆಯಬೇಕು. ಆರೋಪ ಮಾಡಿದ ತಕ್ಷಣವೇ ಅದು ಸತ್ಯ ಎಂದಾಗಲೀ ಅಥವಾ ಸುಳ್ಳು ಎಂದಾಗಲೀ ಹೇಳಲಾಗುವುದಿಲ್ಲ. ತನಿಖೆ ನಡೆಯಲಿ ಎಂದರು. +ಪರಶುರಾಮ್‌ ಸಾವು ಸಹಜವಾಗಿದೆ. ಆತಹತ್ಯೆ ಅಲ್ಲ. ಮರಣದ ಮುನ್ನ ಬರೆದಿರುವ ಯಾವುದೇ ಪತ್ರಗಳು ದೊರೆತಿಲ್ಲ. ಕುಟುಂಬದ ಸದಸ್ಯರು ವರ್ಗಾವಣೆ ಹಿನ್ನೆಲೆಯಲ್ಲಿ ಒತ್ತಡಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಅದನ್ನು ನಾವು ತಳ್ಳಿಹಾಕುವುದಿಲ್ಲ. ತನಿಖೆ ಮಾಡಲು ಸೂಚಿಸಿದ್ದೇನೆ ಎಂದು ಹೇಳಿದರು. +ಪ್ರಾಥಮಿಕ ಸಾಕ್ಷ್ಯ ಹಾಗೂ ಮಾಹಿತಿ ಕಲೆ ಹಾಕಿದ ಬಳಿಕ ಎಫ್‌ಐಆರ್‌ ದಾಖಲಿಸುತ್ತಾರೆ. ಹಾಗಾಗಿ ವಿಳಂಬವಾಗಿ ಪ್ರಕರಣ ದಾಖಲಿಸಲಾಗುತ್ತಿದೆ ಎಂಬುದು ಸರಿಯಲ್ಲ. ಪ್ರಕರಣದಲ್ಲಿ ಕಾನೂನಿನ ಪಾಲನೆಯನ್ನಷ್ಟೇ ನಾವು ಮಾಡುತ್ತೇವೆ. ಅಧಿಕಾರಿಯ ಸಮುದಾಯ ಅಥವಾ ಜಾತಿಯನ್ನು ನಾವು ಪರಿಗಣಿಸುವುದಿಲ್ಲ. ಬಿಜೆಪಿ ನಾಯಕರು ಆರೋಪ ಮಾಡುವ ವಿಚಾರ ಕುರಿತಂತೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು. +ಒಂದು ವೇಳೆ ಪ್ರಕರಣದಲ್ಲಿ ಶಾಸಕರು ಭಾಗಿಯಾಗಿದ್ದರೂ ಕೂಡ ಎಫ್‌ಐಆರ್‌ ದಾಖಲಾದ ಬಳಿಕ ತನಿಖೆ ಮುಂದುವರೆಯಲಿದೆ ಎಂದು ತಿಳಿಸಿದರು. ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆಗೆ ಷರತ್ತುಗಳನ್ನು ವಿಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. +ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಎಚ್ಚರಿಕೆ ನೀಡಲಾಗಿದೆ. ಅವರು ನ್ಯಾಯಾಲಯಕ್ಕೆ ಹೋಗುವ ಮುನ್ನವೇ ನಾವೇ ಅನುಮತಿ ನೀಡುವುದಾಗಿ ಹೇಳಿದ್ದೆವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು ಎಂದು ತಿಳಿಸಿದರು. \ No newline at end of file diff --git a/eesanje/url_46_54_7.txt b/eesanje/url_46_54_7.txt new file mode 100644 index 0000000000000000000000000000000000000000..a8aa89e050d8bf6cdacbb798cb6080901d4bffa3 --- /dev/null +++ b/eesanje/url_46_54_7.txt @@ -0,0 +1,8 @@ +ಪಿಎಸ್‌‍ಐ ಪರಶುರಾಮ್‌ ಕುಟುಂಬಕ್ಕೆ ನ್ಯಾಯ ಕೊಡಿಸುತ್ತೇವೆ : ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ +ಬೆಂಗಳೂರು,ಆ.3– ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಶಾಸಕರ ವಿರುದ್ಧ ದೂರು ಬಂದಿದೆ. ಅದನ್ನು ಪರಿಶೀಲನೆ ನಡೆಸಿ ಕುಟುಂಬದ ಸದಸ್ಯರ ಬೇಡಿಕೆಗ ನುಗುಣವಾಗಿ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಭರವಸೆ ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಿಗ್ಗೆ ನಾನು ಪಿಎಸ್‌‍ಐರವರ ಪತ್ನಿ ಶ್ವೇತಾ ಹಾಗೂ ಕುಟುಂಬದ ಸದಸ್ಯರ ಜೊತೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದೇನೆ. ಕುಟುಂಬದ ಬೇಡಿಕೆಗನುಗುಣವಾಗಿ ಸರ್ಕಾರ ನಡೆದುಕೊಳ್ಳಲಿದೆ. ಅವರು ಕೇಳುವಂತಹ ತನಿಖೆಗೆ ಗೃಹಸಚಿವರು ಮತ್ತು ಮುಖ್ಯಮಂತ್ರಿಯವರು ಆದೇಶ ನೀಡಲಿದ್ದಾರೆ ಎಂದರು. +ಶಾಸಕರ ವಿರುದ್ಧ ನೀಡಿರುವ ದೂರನ್ನು ಸ್ವೀಕರಿಸಲಾಗಿದೆ. ಎಫ್‌ಐಆರ್‌ ದಾಖಲಿಸಬೇಕೆಂಬ ವಿಚಾರವನ್ನು ಪರಿಶೀಲಿಸಲಾಗುತ್ತಿದೆ. ಅಧಿಕಾರಿಯ ಸಾವಿನ ಸಂದರ್ಭದಲ್ಲಿ ಹೇಳಿಕೆಯಾಗಲೀ, ಮರಣಾ ಮುನ್ನ ಬರೆದಿರುವ ಪತ್ರವಾಗಲೀ ಸಿಕ್ಕಿಲ್ಲ. ಸಾವನ್ನು ಕೆಲವರು ಹೃದಯಾಘಾತ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಬೇರೆಯ ರೀತಿ ವ್ಯಾಖ್ಯಾನಿಸಿದ್ದಾರೆ ಎಂದು ಹೇಳಿದರು. +ಪಿಎಸ್‌‍ಐ ಅವರ ಪತ್ನಿ ಶ್ವೇತಾ 8 ತಿಂಗಳ ಗರ್ಭಿಣಿ. ಆಕೆಯ ಆರೋಗ್ಯ ನಮಗೆ ಬಹಳ ಮುಖ್ಯ. ದೂರವಾಣಿಯಲ್ಲಿ ಮಾತನಾಡಿದಾಗ ಮೊದಲು ಆರೋಗ್ಯದ ಕಡೆ ಗಮನ ನೀಡುವಂತೆ ಸಲಹೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇಲಾಖಾ ವಿಚಾರಣೆ, ಪರಿಹಾರ ಸೇರಿದಂತೆ ಲಭ್ಯವಿರುವ ಎಲ್ಲಾ ಅನುಕೂಲಗಳನ್ನೂ ಕುಟುಂಬದ ಸದಸ್ಯರಿಗೆ ಒದಗಿಸಲಾಗುವುದು. ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ್‌ ಅವರ ಜೊತೆಯೂ ಈ ಕುರಿತು ತಾವು ಚರ್ಚೆ ನಡೆಸಿರುವುದಾಗಿ ತಿಳಿಸಿದರು. +ಮೃತಪಟ್ಟ ಅಧಿಕಾರಿ ತಮ ಬಳಿ ಬಂದಿದ್ದರು. ವರ್ಗಾವಣೆಯಾಗಿ ಒಂದು ವರ್ಷವಾಗಿದೆ. ಈ ನಡುವೆ ಚುನಾವಣೆ ಕಾರಣಕ್ಕಾಗಿ ಮೂರು ತಿಂಗಳು ಅಫ್ಜಲ್‌ಪುರಕ್ಕೆ ಸ್ಥಳಾಂತರಿಸಲಾಗಿತ್ತು.ಮರಳಿ ಯಾದಗಿರಿಗೆ ವರ್ಗಾವಣೆಯಾಗಿದೆ. ಕಾರ್ಯ ನಿರ್ವಾಹಕ ಹುದ್ದೆಯನ್ನು ಕೊಟ್ಟರೆ ಇಲಾಖೆಯಲ್ಲಿ ತಮಗೂ ಸೇವಾ ಅನುಭವವಾಗುತ್ತದೆ ಎಂದು ಕೇಳಿಕೊಂಡಿದ್ದರು. ಕಲಬುರಗಿಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಅಲ್ಲಿಗೆ ಬರುವುದಾದರೆ ಅನುಕೂಲ ಮಾಡಿಕೊಡುವುದಾಗಿ ತಾವು ಸಲಹೆ ನೀಡಿದ್ದು, ಈಗಷ್ಟೇ ಯಾದಗಿರಿಗೆ ಕುಟುಂಬವನ್ನು ಸ್ಥಳಾಂತರಿಸಿದ್ದೇನೆ, ಎರಡು ದಿನ ಸಮಯ ಕೊಡಿ. ಮನೆಯವರ ಬಳಿ ಚರ್ಚಿಸಿ ತಿಳಿಸುತ್ತೇನೆ ಎಂದಿದ್ದರು. ಅಷ್ಟರಲ್ಲಿ ಸಾವಾಗಿದೆ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು. +ತಮ ಬಳಿ ಚರ್ಚಿಸಿದಾಗ ಶಾಸಕರು 30 ಲಕ್ಷ ರೂ. ಲಂಚ ಕೇಳಿದ ವಿಚಾರವನ್ನಾಗಲೀ, ಬೇರೆ ಯಾವುದನ್ನೂ ಪರಶುರಾಮ್‌ ಚರ್ಚೆ ಮಾಡಿರಲಿಲ್ಲ. ಕುಟುಂಬದ ಸದಸ್ಯರು ಏನೇ ಆರೋಪ ಮಾಡಿದರೂ ಅದನ್ನು ತನಿಖೆ ನಡೆಸಲಾಗುವುದು. ದೂರನ್ನು ನಾವು ತಿರಸ್ಕರಿಸಿಲ್ಲ. ತನಿಖೆ ನಡೆಸುತ್ತೇವೆ. ಮರಣೋತ್ತರ ಪರೀಕ್ಷಾ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಹೇಳಿದರು. +ಇದೇ ವೇಳೆ ಜೆಡಿಎಸ್‌‍-ಬಿಜೆಪಿಯ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿಯ ಹಲವು ನಾಯಕರು ವಿಜಯೇಂದ್ರರ ನಾಯಕತ್ವವನ್ನು ಒಪ್ಪಿಲ್ಲ. ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸುತ್ತಿಲ್ಲ. ಅವರಲ್ಲಿ ಒಗ್ಗಟ್ಟು ಕಾಣುತ್ತಿಲ್ಲ ಎಂದರು. ರಾಜ್ಯಪಾಲರನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ಸೂಕ್ತ ದಾಖಲೆಗಳಿಲ್ಲದೆ ಆರೋಪ ಮಾಡಲಾಗುತ್ತಿದೆ. ರಾಜಭವನವನ್ನು ಬಿಜೆಪಿಯವರು ಪ್ರಾದೇಶಿಕ ಕಚೇರಿಯಂತೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆಗೆ ನಮ ಸರ್ಕಾರ ಅಡ್ಡಿಪಡಿಸಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_54_8.txt b/eesanje/url_46_54_8.txt new file mode 100644 index 0000000000000000000000000000000000000000..748d28c6855fcf6fbb001214e85db23dc0344fc6 --- /dev/null +++ b/eesanje/url_46_54_8.txt @@ -0,0 +1,9 @@ +ಹೊಸ ಜಾಹೀರಾತು ನೀತಿ ಕೈ ಬಿಡಿ, 646 ಕೋಟಿ ಬಾಕಿ ವಸೂಲಿ ಮಾಡಿ : ಸಿಎಂ +ಬೆಂಗಳೂರು,ಆ.3– ರಾಜ್ಯ ಸರ್ಕಾರ ಜಾರಿಗೆ ತಂದಿರುವ ಹೊಸ ಜಾಹೀರಾತು ನೀತಿಯನ್ನು ಈ ಕೂಡಲೇ ವಾಪಸ್‌‍ ಪಡೆಯಬೇಕು ಎಂದು ಬಿಜೆಪಿ ಮುಖಂಡ ಎನ್‌. ಆರ್‌. ರಮೇಶ್‌ ಆಗ್ರಹಿಸಿದ್ದಾರೆ.ಅಧಿಕತ ಜಾಹೀರಾತು ಏಜೆನ್ಸಿಗಳಿಂದ ಬಾಕಿ ಬರಬೇಕಿರುವ ಸುಮಾರು 646 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ಜಾಹೀರಾತು ಶುಲ್ಕ ವಸೂಲಾತಿಗೆ ಕ್ರಮ ವಹಿಸುವ ಬದಲು ಉದ್ಯಾನನಗರಿಯ ಸೌದರ್ಯವನ್ನು ಹಾಳುಗೆಡಹುವ ಮತ್ತು ನಿರಂತರ ಅಪಘಾತಗಳಿಗೆ ಕಾರಣವಾಗುವ ಹೊಸ ಜಾಹೀರಾತು ನೀತಿ – 2024 ಯನ್ನು ಜಾರಿಗೆ ತಂದಿರುವ ಸರ್ಕಾರದ ಕಾನೂನುಬಾಹಿರ ನಡೆಯನ್ನು ಕೂಡಲೇ ಹಿಂಪಡೆಯಬೇಕೆಂದು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಬಿಬಿಎಂಪಿ ಆಡಳಿತಾಧಿಕಾರಿಗಳು ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. +ಪ್ರಸ್ತುತ ಬಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಳತೆಗಳ ಜಾಹೀರಾತು ಫಲಕಗಳನ್ನು ಅಳವಡಿಸುವ ಗುತ್ತಿಗೆಯನ್ನು ಪಡೆದಿದ್ದ ಒಟ್ಟು 110 ಅಧಿಕತ ಜಾಹೀರಾತು ಏಜೆನ್ಸಿಗಳು ಮತ್ತು ಒಟ್ಟು 2,621 ಅನಧಿಕತ ಜಾಹೀರಾತು ಏಜೆನ್ಸಿಗಳು ಇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಜಾಹೀರಾತು ಫಲಕಗಳನ್ನು ನಿಷೇಧಿಸಿ ಉಚ್ಛ ನ್ಯಾಯಾಲಯವು 2018 ರಲ್ಲಿ ಮಧ್ಯಂತರ ಆದೇಶವನ್ನು ನೀಡಿರುತ್ತದೆ. +ಇದೇ ವಿಷಯಕ್ಕೆ ಸಂಬಂಧಿಸಿದಂತೆ 2016 ರಲ್ಲಿ ರಾಜ್ಯ ಉಚ್ಛ ನ್ಯಾಯಾ ಲಯದಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದ ಪಾಲಿಕೆಯ ಅಂದಿನ ಆಯುಕ್ತ ರಾಗಿದ್ದ ಮಂಜುನಾಥ್‌ ಪ್ರಸಾದ್‌ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2,621 ಅನಧಿಕತ ಜಾಹೀರಾತು ಏಜೆನ್ಸಿಗಳಿದ್ದು, ಒಟ್ಟು . 331,92,20,410/- ಗಳಷ್ಟು ಜಾಹೀರಾತು ಶುಲ್ಕ ಅಧಿಕತ ಏಜೆನ್ಸಿಗಳಿಂದ ಬಾಕಿ ಬರಬೇಕಿರುತ್ತದೆ ಮತ್ತು ಈ ಸಂಬಂಧ ಒಟ್ಟು 5,507 ನೋಟೀಸ್‌‍ಗಳನ್ನು ನೀಡಲಾಗಿದೆ ಎಂಬ ವಿಷಯವನ್ನು ತಮ ಪ್ರಮಾಣ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದ್ದರು. +ಅದಕ್ಕೂ ಮುಂಚೆ ಪಾಲಿಕೆ ಆಯುಕ್ತರಾಗಿದ್ದ ಜಿ. ಕುಮಾರ್‌ ನಾಯಕ್‌ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 6,119 ಅನಧಿಕತ ಜಾಹೀರಾತು ಫಲಕಗಳು ಇವೆ ಎಂಬುದನ್ನು 2015 ರಂದು ಲೋಕಾಯುಕ್ತಕ್ಕೆ ತಮ ಪ್ರಮಾಣ ಪತ್ರ ಸಲ್ಲಿಸಿದ್ದರು. +ಈ ರೀತಿ, ಬೆಂಗಳೂರು ಮಹಾನಗರದ ಮುಖ್ಯ ರಸ್ತೆಗಳ ಇಕ್ಕೆಲಗಳಲ್ಲಿ ಮತ್ತು ವಾಣಿಜ್ಯ ಪ್ರದೇಶಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿದ್ದ ಏಜೆನ್ಸಿಗಳು 2018 ರ ಫೆಬ್ರುವರಿ ವರೆಗೆ ಹಾಗೂ 2017 ರಿಂದ ಈವರೆಗೆ ಪಿಪಿಪಿ ಮಾದರಿಯಲ್ಲಿ ನಿರ್ಮಿಸಿರುವ ಜಾಹೀರಾತು ಫಲಕಗಳಿಗೆ ಸಂಬಂಧಿಸಿದಂತೆ – ಬಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಒಟ್ಟು . +646,17,73,682/ಗಳಷ್ಟು ಬಹತ್‌ ಮೊತ್ತವು ಈ ಎರಡು ಪ್ರಾಕಾರದ ಜಾಹೀರಾತು ಶುಲ್ಕಗಳು ಸದರಿ ಜಾಹೀರಾತು ಏಜೆನ್ಸಿಗಳಿಂದ ಬಾಕಿ ಬರಬೇಕಿರುತ್ತದೆ. ಈ ಪೈಕಿ ಕೆಂಪರಾಜ್‌ ಎಂಬ ಒಬ್ಬರೇ ಸುಮಾರು 80 ಕೋಟಿ ರೂ. ಗಳಿಗೂ ಹೆಚ್ಚು ಜಾಹೀರಾತು ಶುಲ್ಕವನ್ನು ಬಾಕಿ ಉಳಿಸಿಕೊಂಡಿರುತ್ತಾರೆ. +ಇಷ್ಟು ಮೊತ್ತ ಬಾಕಿ ಇದ್ದರೂ ಬೆಂಗಳೂರು ಮಹಾನಗರದ ಮುಖ್ಯ ರಸ್ತೆಗಳಲ್ಲಿ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಲು ಅನುಮತಿ ನೀಡುವ ನಿರ್ಣಯ ವನ್ನು ಕೈಗೊಳ್ಳುವ ಅಧಿಕಾರವನ್ನು ನೀಡಿರುವ ಹೊಸ ಜಾಹೀರಾತು ನೀತಿ – 2024 ದಿಂದ ಬಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಕವಡೆ ಕಾಸಿನಷ್ಟು ಮಾತ್ರವೇ ಆದಾಯ ಬರುವುದಿಲ್ಲ. +ರಸ್ತೆ ಬದಿಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸುವುದರಿಂದ ಪ್ರತೀ ನಿತ್ಯ ಹತ್ತಾರು ಅಪಘಾತಗಳು ಸಂಭವಿಸುವ ಅವಕಾಶಗಳೇ ಅಧಿಕವಾಗಿರುತ್ತದೆ ಎಂಬ ಬೆಂಗಳೂರು ಸಂಚಾರಿ ಪೋಲೀಸರ ಅಭಿಪ್ರಾಯವನ್ನೂ ಸಹ ರಾಜ್ಯ ಸರ್ಕಾರ ಮತ್ತು ಬಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಡೆಗಣಿಸಿರುತ್ತದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ. \ No newline at end of file diff --git a/eesanje/url_46_54_9.txt b/eesanje/url_46_54_9.txt new file mode 100644 index 0000000000000000000000000000000000000000..673b845168d982a0ffe1e995b069ffae6e3ae650 --- /dev/null +++ b/eesanje/url_46_54_9.txt @@ -0,0 +1,10 @@ +ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌‍ ಜನಾಂದೋಲನ +ರಾಮನಗರ,ಆ.3-ಮುಡಾ ಹಾಗೂ ಮಹರ್ಷಿ ವಾಲೀಕಿ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್‌‍ ರಾಮನಗರದಲ್ಲಿಂದು ಜನಾಂದೋಲನ ನಡೆಸಿದೆ.ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ಅವಧಿಯಲ್ಲಿ ನಡೆದ ವಿವಿಧ ಹಗರಣಗಳ ಕುರಿತು ವಿವರಣೆ ನೀಡಿದರು. +ಪ್ರತಿಯೊಂದು ಹಗರಣವನ್ನು ಬಿಜೆಪಿಯವರು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಾರೆ. ಗುರು ರಾಘವೇಂದ್ರ ಬ್ಯಾಂಕಿನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿದ್ದರೂ ಈವರೆಗೂ ತನಿಖಾಧಿಕಾರಿಯನ್ನು ನೇಮಿಸಿಲ್ಲ. ಮೊಟ್ಟೆ ಖರೀದಿ ಹಗರಣದಲ್ಲಿ ಬಿಜೆಪಿಯ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ವಿರುದ್ಧ ಅಭಿಯೋಜನೆಗೆ ದೂರು ಸಲ್ಲಿಸಲಾಗಿದೆ. ಈವರೆಗೂ ಅನುಮತಿ ನೀಡಿಲ್ಲ ಎಂದು ಆರೋಪಿಸಿದರು. +ಬಿಜೆಪಿ-ಜೆಡಿಎಸ್‌‍ ಪಕ್ಷದವರು ಸುಳ್ಳು ಆರೋಪ ಮಾಡಿ ಪಾದಯಾತ್ರೆ ನಡೆಸುತ್ತಿದ್ದಾರೆ. ಇದು ಅವರ ಪಾಪದ ಪಾದಯಾತ್ರೆ. ಮೈಸೂರಿಗೆ ಬರಲಿ, ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಹೋಗಲಿ ಎಂದು ಹೇಳಿದರು. +ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಬಿಜೆಪಿ-ಜೆಡಿಎಸ್‌‍ನವರ ನೈತಿಕತೆಯನ್ನು ಪ್ರಶ್ನೆ ಮಾಡುವಂತಾಗಿದೆ. ಕುಮಾರಸ್ವಾಮಿ ಆರಂಭದಲ್ಲಿ ಚೆನ್ನಾಗಿ ಮಾತನಾಡುತ್ತಿದ್ದರು. ಇತ್ತೀಚೆಗೆ ಅವರ ಹೇಳಿಕೆಗಳು ತೀರಾ ಕೆಳಮಟ್ಟಕ್ಕಿಳಿದಿವೆ. ನಾವು ಅವರ ಹಂತಕ್ಕೆ ಇಳಿದು ಮಾತನಾಡುವುದು ಸರಿಯಲ್ಲ ಎಂದರು. +ಮುಡಾ ಕುಮಾರಸ್ವಾಮಿ ಸೇರಿದಂತೆ 125 ಮಂದಿಗೆ ಬದಲಿ ನಿವೇಶನ ನೀಡಿದೆ. ಈ ನಿವೇಶನಗಳನ್ನು ಹಂಚಿರುವುದು ಬಿಜೆಪಿಯ ಅಧಿಕಾರಾವಧಿಯಲ್ಲಿ ಎಂದು ವಾಗ್ದಾಳಿ ನಡೆಸಿದರು.ಕಾಂಗ್ರೆಸ್‌‍ ವಿರುದ್ಧ ಕೇಂದ್ರ ಸರ್ಕಾರ ಸಿಬಿಐ, ಇ.ಡಿ., ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಸುತ್ತಿದೆ. ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರೆ ಎಂದರು. +ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡಿ, ಮಾಜಿ ಪ್ರಧಾನಿಯ ಮಗ ಮುಖ್ಯಮಂತ್ರಿಯಾಗುವುದು ದೊಡ್ಡ ವಿಚಾರವಲ್ಲ. ಕನಕಪುರದ ಮಣ್ಣಿನ ಮಗ ಉಪಮುಖ್ಯಮಂತ್ರಿಯಾಗುವುದು ಸಾಧನೆ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ಬಿಜೆಪಿ-ಜೆಡಿಎಸ್‌‍ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. +ಬಿಜೆಪಿಯ ಕಳ್ಳರು ಕೆಂಗೇರಿಯಿಂದ ಬಿಜೆಪಿ ಯಾತ್ರೆ ಆರಂಭಿಸಿದ್ದಾರೆ. ಏನೇ ಮಾಡಿದರೂ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರನ್ನು ಅಲುಗಾಡಿಸಲು ಸಾಧ್ಯವಾಗುವುದಿಲ್ಲ ಎಂದರು. +ಸಂಸದರಾಗಿ ಡಿ.ಕೆ.ಸುರೇಶ್‌ ಉತ್ತಮವಾಗಿ ಕೆಲಸ ಮಾಡಿದರು. ಆದರೆ ರಾಮನಗರದ ಜನ ಅವರನ್ನು ಸೋಲಿಸಿ ಮೋಸ ಮಾಡಿದ್ದಾರೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಖರ್ಚು ಮಾಡಬೇಕಾಗಿದ್ದ 67 ಸಾವಿರ ಕೋಟಿ ರೂ.ಗಳನ್ನು ಬಾಕಿ ಉಳಿಸಿದೆ. +ಚೀನಾ ಭಾರತದ ಗಡಿಯೊಳಗೆ ನುಸುಳಿದೆ. ಈ ಯಾವ ವಿಚಾರಗಳನ್ನೂ ಬಿಜೆಪಿಯವರು ಪ್ರಸ್ತಾಪ ಮಾಡುತ್ತಿಲ್ಲ ಎಂದು ಕಿಡಿಕಾರಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಂ.ಬಿ.ಪಾಟೀಲ್‌, ಡಾ.ಎಂ.ಸಿ.ಸುಧಾಕರ್‌, ರಹೀಂಖಾನ್‌, ಕೆ.ಎಚ್‌. ಮುನಿಯಪ್ಪ, ಶರಣಪ್ರಕಾಶ್‌ ಪಾಟೀಲ್‌, ಮಾಜಿ ಸಂಸದ ಡಿ.ಕೆ.ಸುರೇಶ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್‌, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ್‌ ಸೊರಕೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_55_1.txt b/eesanje/url_46_55_1.txt new file mode 100644 index 0000000000000000000000000000000000000000..27b9211876dc287a4dcd232513cae1caca5bf65f --- /dev/null +++ b/eesanje/url_46_55_1.txt @@ -0,0 +1,10 @@ +ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ : ಕೇಂದ್ರ ಸಚಿವ ಕುಮಾರಸ್ವಾಮಿ +ಬೆಂಗಳೂರು, ಆ.3-ಹೊಟ್ಟೆಯ ಉರಿಗೆ, ಮನುಷ್ಯ ದೇಹಕ್ಕೆ ಔಷಧಿ ತೆಗೆದುಕೊಳ್ಳಬಹುದು. ಆದರೆ, ರಾಜಕೀಯದ ಹೊಟ್ಟೆ ಉರಿಗೆ ಔಷಧಿ ಇಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. +ಅಹಿಂದ ನಾಯಕ ಮುಖ್ಯಮಂತ್ರಿಯಾಗಿದ್ದಾರೆ ಎಂಬುದನ್ನು ಸಹಿಸದೇ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ರಾಜಕೀಯ ವ್ಯವಸ್ಥೆಯಲ್ಲಿ ಅಹಿಂದ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಯಾವ ರೀತಿ ಎಸ್ಸಿ, ಎಸ್ಟಿ ಜನರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಲೂಟಿ ಹೊಡೆದ್ದಾರೆ. ಇವರು ಅಹಿಂದ ರಕ್ಷಕರೇ? ಎಂದು ಪ್ರಶ್ನಿಸಿದ್ದಾರೆ. +ಇದಕ್ಕೆ ನಾವು ಹೊಟ್ಟೆ ಉರಿ ಪಡೆಯುತ್ತಿದ್ದೇವೆಯೇ? ಹೊಟ್ಟೆ ಉರಿ ಪಡೆಯಬೇಕಾದವರು ಅಹಿಂದ ವರ್ಗ. ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಜನರ ಆಕ್ರೋಶ ಇದೆ. ಅದಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು. +ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಇದನ್ನೇ ಹೇಳಬೇಕು ತಾನೇ? ಎಲ್ಲರೂ ಹೇಳೋದು ಇದನ್ನೇ ತಾನೇ? ಅವರಿಗೆ ಬೇಕಾದಾಗ ರಾಜ್ಯಪಾಲರು ಒಳ್ಳೆಯವರು, ಬೇಡ ಅಂದಾಗ ಕೆಟ್ಟವರು. 75 ವರ್ಷಗಳಿಂದ ನೋಡಿಕೊಂಡು ಬಂದಿದ್ದಾರೆ ಎಂದು ಟೀಕಿಸಿದರು. ಅವರ ತಪ್ಪನ್ನು ಮುಚ್ಚಿಕೊಳ್ಳಲು ಈ ರೀತಿ ಹೇಳುತ್ತಿದ್ದಾರೆ. ವರ್ಗಾವಣೆಗಳಲ್ಲಿ ಪ್ರತಿಯೊಂದು ಸ್ಥಳಕ್ಕೆ ಹಣ ಕೊಡಬೇಕು. ಸಾವಿರಾರು ಉದಾಹರಣೆ ಕೊಡಬಲ್ಲೆ ಎಂದು ಮುಖ್ಯಮಂತ್ರಿ ವಿರುದ್ಧ ಅವರು ವಾಗ್ದಾಳಿ ನಡೆಸಿದರು. +ಮುಡಾ ಪ್ರಕರಣದ ಒಂದೇ ಅಲ್ಲ. ರಾಜ್ಯ ಸರ್ಕಾರದ ಹಲವಾರು ವಿಷಯಗಳಲ್ಲಿ ಜನ ವಿರೋಧಿ ನೀತಿ ಇದೆ. ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸದನ ಸಮಿತಿ ರಚನೆ ಮಾಡಲಾಗಿತ್ತು. ನೈಸ್‌‍ ರಸ್ತೆ ಯೋಜನೆ ಹೆಸರಲ್ಲಿ ರೈತರ ಜಮೀನು ಲೂಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಸದನ ಸಮಿತಿ ವರದಿ ಕೋಲ್‌್ಡ ಸ್ಟೋರೇಜ್‌ನಲ್ಲಿದೆ ಎಂದು ಬೇಸರ ವ್ಯಕ್ತಪಡಿಸಿದರು. +ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ :ಜನಾಂದೋಲನ ಕಾಂಗ್ರೆಸ್‌‍ನಿಂದ ಆಗುವುದಲ್ಲ, ನಮಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಆಗಬೇಕಿದ್ದು, ಅದು ಪಾದಯಾತ್ರೆ ಮೂಲಕ ಆಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದರು. +ಮುಡಾ,ವಾಲೀಕಿ ಹಗರಣ, ಜನ ವಿರೋಧಿ ನೀತಿಯನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆಗೆ ಕೌಂಟರ್‌ ಆಗಿ ಕಾಂಗ್ರೆಸ್‌‍ ಜನಾಂದೋಲನ ಕಾರ್ಯಕ್ರಮ ಹಮಿಕೊಳ್ಳಲಾಗಿದೆ. ಎಲ್ಲಕ್ಕೂ ಉತ್ತರ ಕೋಡೋಣ. ಅಲ್ಲಿ ಯಾರು ಪ್ರಶ್ನೆ ಮಾಡುತ್ತಿದ್ದಾರೆ ಅವರಿಗೆ ಪ್ರಶ್ನೆ ಮಾಡಲು ನೈತಿಕತೆ ಇದೆಯಾ? ರಾಮನಗರ, ಬಿಡದಿ, ಚನ್ನಪಟ್ಟಣದಲ್ಲಿ ನನ್ನನ್ನು ಬೆಳೆಸಿರುವ ಜನರ ಮುಂದೆ ಉತ್ತರ ಕೋಡೋಣ. +ಕಾಂಗ್ರೆಸ್‌‍ ಪಕ್ಷವು ರಾಜ್ಯದಲ್ಲಿ ಹಲವು ಅಕ್ರಮಗಳು, ಕಾನೂನು ಬಾಹಿರ ಕೆಲಸಗಳಲ್ಲಿ ತೊಡಗಿದೆ. ಇದು ಜನವಿರೋಧಿ ಸರ್ಕಾರವಾಗಿದ್ದು, ಮುಡಾ, ವಾಲೀಕಿ ನಿಗಮದ ಹಗರಣಗಳು ಬಯಲಿಗೆ ಬಂದಿವೆ. ಇದು ಜನರ ಆಸ್ತಿಗಳನ್ನು ನುಂಗಿದ ಸರ್ಕಾರ ಎಂದರು. ದೇವೇಗೌಡರ ಕುಟುಂಬದಿಂದ ನೈಸ್‌‍ ಸುತ್ತಮುತ್ತ ಅಕ್ರಮ ಆಸ್ತಿ ಮಾಡಲಾಗಿದೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಅವರ ಕೈಯಲ್ಲೇ ಇದೆ. +ನಾವು ಅಕ್ರಮವಾಗಿ ಆಸ್ತಿ ಮಾಡಿದ್ದರೆ ಸರ್ಕಾರ ವಶಪಡಿಸಿಕೊಳ್ಳಲಿ. ಸರ್ಕಾರ ಅವರದ್ದೇ ಇದ್ದು ಮುಟ್ಟುಗೋಲು ಹಾಕಿಕೊಳ್ಳಲಿ. ಬೇಡವೆಂದು ಅವರನ್ನು ಯಾರು ಹಿಡಿದುಕೊಂಡಿದ್ದಾರೆ. ನಾವು ನ್ಯಾಯ ಬದ್ಧವಾಗಿ ಬದುಕಿದ್ದೇವೆ. ಇವರ ಥರ ನಾವು ಬದುಕಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು. ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ವಾಲೀಕಿ ನಿಗಮ ಹಾಗೂ ಮೂಡಾ ವಿಚಾರದಲ್ಲಿ ಸರ್ಕಾರ ಪಲಾಯನವಾದ ಮಾಡುತ್ತಿದೆ. ಮುಖ್ಯಮಂತ್ರಿ ಅವರೇ 81 ಕೋಟಿ ರೂ.ಹಗರಣ ಆಗಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಇತಿಹಾಸದಲ್ಲಿ ವಿರೋಧ ಪಕ್ಷ ಪ್ರಶ್ನೆ ಮಾಡುವುದು ಸಹಜ. ಆದರೆ, ಸರ್ಕಾರ ಅವರ ಕೈಯಲ್ಲಿದ್ದು ತನಿಖೆ ಮಾಡಲಿ ಎಂದರು. \ No newline at end of file diff --git a/eesanje/url_46_55_10.txt b/eesanje/url_46_55_10.txt new file mode 100644 index 0000000000000000000000000000000000000000..e18784d3846501a2661bf439252fa7e0f3316482 --- /dev/null +++ b/eesanje/url_46_55_10.txt @@ -0,0 +1,7 @@ +ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಬೆನ್ನಲ್ಲೇ ಮೈಸೂರು ಭಾಗದ ಶಾಸಕರ ಜೊತೆ ಸಿಎಂ ಚರ್ಚೆ +ಬೆಂಗಳೂರು,ಆ.3– ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ತಮ್ಮ ನಿವಾಸದಲ್ಲಿಂದು ಚಾಮರಾಜನಗರ, ಮಡಿಕೇರಿ ಮತ್ತು ಮೈಸೂರು ಜಿಲ್ಲೆಯ ಕಾಂಗ್ರೆಸ್‌‍ ಮುಖಂಡರ ಜೊತೆ ಉಪಹಾರ ಕೂಟ ನಡೆಸಿ ಪ್ರಸಕ್ತ ರಾಜಕೀಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಿದರು. +ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್‌ ಆಗಿರುವ ಸಿಎಂ ರಾಜಕೀಯವಾಗಿ ತಿರುಗೇಟು ನೀಡಲು ತಯಾರಿ ನಡೆಸಿದ್ದಾರೆ. +ನಗರದಲ್ಲಿ ಸಚಿವರ ಜೊತೆ ಉಪಹಾರ ಕೂಟ ನಡೆಸಿ ಸಮಾಲೋಚನೆ ನಡೆಸಿದರು. ಅದರ ಬೆನ್ನಲ್ಲೇ ಮೈಸೂರಿನಲ್ಲಿ ಮೂರು ಜಿಲ್ಲೆಗಳ ಮುಖಂಡರ ಜೊತೆ ಉಪಹಾರ ಕೂಟ ನಡೆಸುವ ಮೂಲಕ ಸಿದ್ದರಾಮಯ್ಯ ಪಾದಯಾತ್ರೆಗೆ ಪ್ರತಿಯಾಗಿ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ಕೈಗೊಂಡಿದ್ದಾರೆ. +ಈಗಾಗಲೇ ಬಿಡದಿ, ರಾಮನಗರದಲ್ಲಿ ಎರಡು ದಿನ ಕಾಂಗ್ರೆಸ್‌‍ ಸಮಾವೇಶ ನಡೆದಿದೆ. ಆ.9 ರಂದು ಮೈಸೂರಿನಲ್ಲಿ ಬೃಹತ್‌ ಸಮಾವೇಶ ಆಯೋಜನೆ ಮಾಡಲಾಗಿದೆ. ಅದಕ್ಕೆ ಸುಮಾರು ಒಂದು ಲಕ್ಷ ಜನ ಸಮಾವೇಶಗೊಳ್ಳಬೇಕು. ಬಿಜೆಪಿ-ಜೆಡಿಎಸ್‌‍ನ ಪಾದಯಾತ್ರೆಗೆ ಪ್ರತಿಯಾಗಿ ಈ ಎರಡೂ ಪಕ್ಷಗಳ ನಾಯಕರ ಹಗರಣಗಳನ್ನು ಜನರ ಮುಂದಿಡಬೇಕು ಎಂಬ ಚರ್ಚೆಗಳಾಗಿವೆ. +ಮತ್ತೊಂದೆಡೆ ಕಾಂಗ್ರೆಸ್‌‍ನ ಒಳವಲಯದಲ್ಲೆ ಸಿದ್ದರಾಮಯ್ಯ ಅವರ ವಿರುದ್ಧ ಅಪಸ್ವರಗಳು ಹೊಗೆಯಾಡುತ್ತಿದ್ದು, ಈ ಕುರಿತು ಚರ್ಚೆಯಾಗಿದೆ.ಒಂದು ವೇಳೆ ಪಕ್ಷದ ಒಳಗೆ ಅಪಸ್ವರಗಳು ಹೆಚ್ಚಾದರೆ ಅದಕ್ಕೆ ತಿರುಗೇಟು ನೀಡುವ ಸಲುವಾಗಿ ತಮ ತವರು ಜಿಲ್ಲೆಯಲ್ಲಿನ ಸಂಘಟನೆಗಳನ್ನು ಬಲಪಡಿಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದು, ಈ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. +ಸಚಿವರಾದ ಎಚ್‌.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಶಾಸಕರಾದ ಪೊನ್ನಣ್ಣ, ವಿಧಾನಪರಿಷತ್‌ ಸದಸ್ಯ ವಿಜಯೇಂದ್ರ, ಮುಖಂಡರಾದ ಶಿವಣ್ಣ, ಮರಿತಿಬ್ಬೇಗೌಡ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.ರಾಜಕೀಯ ವಿಪ್ಲವದ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ದೃಢವಾಗಿ ನಿಲ್ಲುವುದಾಗಿ ಜಿಲ್ಲೆಯ ನಾಯಕರು ಭರವಸೆ ನೀಡಿದ್ದಾರೆ. ಜೊತೆಗೆ ಇದೇ ವೇಳೆ ಮೂರು ಜಿಲ್ಲೆಗಳಲ್ಲಿನ ಮಳೆಹಾನಿಗೆ ಸಂಬಂಧಪಟ್ಟಂತೆಯೂ ಚರ್ಚೆಗಳಾಗಿವೆ. \ No newline at end of file diff --git a/eesanje/url_46_55_11.txt b/eesanje/url_46_55_11.txt new file mode 100644 index 0000000000000000000000000000000000000000..39ec0022ed66af618b208428b451dafc1ef7f8c4 --- /dev/null +++ b/eesanje/url_46_55_11.txt @@ -0,0 +1,6 @@ +ಶಾಸಕರ ಹಣಕ್ಕಾಗಿ ಒತ್ತಡ ಹೇರಿದ್ದೇ ಪಿಎಸ್‌‍ಐ ಪರಶುರಾಮ್‌ ಸಾವಿಗೆ ಕಾರಣ : ಆರ್‌.ಅಶೋಕ್‌ +ಬೆಂಗಳೂರು,ಆ.3-ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. +ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ. +ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. +ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌‍ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್‌‍ಐ ಪರಶುರಾಮ್‌ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು. +ಹಿಂದೆ ಯತೀಂದ್ರ ಅವರ ಹಲೋ ಅಪ್ಪ ಪ್ರಕರಣದಲ್ಲಿ ವರ್ಗಾವಣೆ ದಂಧೆ ಕೇಳಿ ಬಂದಿತ್ತು. ಈಗ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ನಡೆಯುತ್ತಿದೆ. ಬಿಜೆಪಿ ಈಗ ಈ ಪ್ರಕರಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_55_12.txt b/eesanje/url_46_55_12.txt new file mode 100644 index 0000000000000000000000000000000000000000..44daddef62198b2f786f5916a8e14d81c2e20fe2 --- /dev/null +++ b/eesanje/url_46_55_12.txt @@ -0,0 +1,6 @@ +ಯಾದಗಿರಿ ಪಿಎಸ್‌‍ಐ ಪರಶುರಾಮ್‌ ನಿಗೂಢ ಸಾವು, ಶಾಸಕರ ಮೇಲೆ ಲಂಚದ ಒತ್ತಡ ಆರೋಪ +ಬೆಂಗಳೂರು,ಆ.3– ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. +ಯಾದಗಿರಿ ಪಿಎಸ್‌‍ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್‌ ಅವರ ಸಾವಾಗಿದೆ ಎಂದು ಆಕೋಶ ವ್ಯಕ್ತಪಡಿಸಿದ್ದಾರೆ. +ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು. +ಶಾಸಕ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌‍ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಮೊತ್ತದ ಹಣ ಕೇಳುತ್ತಿದ್ದಾರೆ. ಪಿಎಸ್‌‍ಐ ಪರಶುರಾಮ್‌ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು. +ಹಿಂದೆ ಯತೀಂದ್ರ ಅವರ ಹಲೋ ಅಪ್ಪ ಪ್ರಕರಣದಲ್ಲಿ ವರ್ಗಾವಣೆ ದಂಧೆ ಕೇಳಿ ಬಂದಿತ್ತು. ಈಗ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ನಡೆಯುತ್ತಿದೆ. ಬಿಜೆಪಿ ಈಗ ಈ ಪ್ರಕರಣದ ಮಾಹಿತಿಯನ್ನು ಸಂಗ್ರಹ ಮಾಡುತ್ತಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_55_2.txt b/eesanje/url_46_55_2.txt new file mode 100644 index 0000000000000000000000000000000000000000..9bb483ee7b9c8a4ae67f3b2c7a43579e649cc47f --- /dev/null +++ b/eesanje/url_46_55_2.txt @@ -0,0 +1,10 @@ +ಪರಮೇಶ್ವರ್ ಅವರೇ ಪಿಎಸ್‌‍ಐ ಸಾವಿನ ಬಗ್ಗೆ ಉತ್ತರ ಕೊಡಿ : ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ +ಬೆಂಗಳೂರು, ಆ.3-ಯಾದಗಿರಿಯಲ್ಲಿ ನಿಮ ಇಲಾಖೆಯ ಪಿಎಸ್‌‍ಐ ಒಬ್ಬರು ಆತಹತ್ಯೆ ಮಾಡಿಕೊಂಡಿದ್ದಾರೆ. ಅದರ ಬಗ್ಗೆ ಉತ್ತರ ಕೊಡಿ ಎಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಪರಮೇಶ್ವರ್‌ ಅವರನ್ನು ಒತ್ತಾಯಿಸಿದರು. +ಕಾಂಗ್ರೆಸ್‌‍ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಬೆಂಗಳೂರಿನಿಂದ ಮೈಸೂರಿನವರೆಗಿನ ಪಾದಯಾತ್ರೆಗೆ ಕೆಂಗೇರಿ ಬಳಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ ಸಮಾಜದ ಅಧಿಕಾರಿಯೊಬ್ಬ ಆತಹತ್ಯೆ ಮಾಡಿಕೊಂಡಿದ್ದಾರೆ. 25 ಲಕ್ಷ ರೂ. ಲಂಚಕೊಟ್ಟಿಲ್ಲ ಎಂದು ಹೇಳಿ ಆತಹತ್ಯೆ ಮಾಡಿಕೊಂಡಿರುವುದಾಗಿ ಅವರ ಪತ್ನಿ ಹೇಳುತ್ತಾರೆ. +ನೀವು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರಿಗೆ ಕೊಡುವ ಗೌರವ ಇದೇನಾ? ನಿಮದೇ ಸಮಾಜದ ಪೊಲೀಸ್‌‍ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅದನ್ನು ತಡೆಯುವ ಶಕ್ತಿ ನಿಮಗಿಲ್ಲವೇ? ಎಂದು ವಾಗ್ದಾಳಿ ನಡೆಸಿದರು. +ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್‌ ಅವರು ಆತ್ಮಹತ್ಯೆಗೆ ಏಕೆ ಶರಣಾದರು? ಪೊಲೀಸ್‌‍ ಅಧಿಕಾರಿಗಳಿಗೆ ರಕ್ಷಣೆ ಕೊಡದ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ರಕ್ಷಣೆ ಕೊಡಲು ಸಾಧ್ಯವೇ? ಈಗಲಾದರೂ ಹಿಂದುಳಿದ ವರ್ಗಗಳ ಮುಖಂಡರು ತಿಳಿದುಕೊಳ್ಳಬೇಕು ಎಂದು ಟೀಕಿಸಿದರು. +ಜೈಲಿಗೆ ಹೋಗಲು ಸಿದ್ಧ ಎಂದು (ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌) ಅವರೇ ನಿನ್ನೆ ಹೇಳಿದ್ದಾರೆ. ರಾಜಕಾರಣಕ್ಕೆ ಬರುವ ಮುಂಚೆ ಅವರ ಆಸ್ತಿ ಏನಿತ್ತು ಎಂಬುದನ್ನು ಅವರ ಗುರುಗಳು ಸೋಷಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ. +ಬ್ಲಾಕ್‌ ಅಂಡ್‌ ವೈಟ್‌ ಟಿವಿ ಮತ್ತು ಡಿವಿಡಿ ಇಟ್ಟುಕೊಂಡು ದೊಡ್ಡಾಲಹಳ್ಳಿ ಮತ್ತು ಕೋಡಿಹಳ್ಳಿಯಲ್ಲಿ ಏನು ಪ್ರದರ್ಶನ ಮಾಡುತ್ತಿದ್ದರು, ಅದರಿಂದ ಹೇಗೆ ಹಣ ಸಂಪಾದನೆ ಮಾಡುತ್ತಿದ್ದರು ಎಂಬುದಾಗಿ ಹೇಳಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಸರ್ಕಾರದ ರಾಜ್ಯದ ಆಳ್ವಿಕೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರ ಹಿಂದೆಂದೂ ಕಂಡಿರದಂತಹ ಸರ್ಕಾರ ಕಾಣುತ್ತಿದ್ದೇವೆ. +ಈ ಕೆಟ್ಟ ಕಾಂಗ್ರೆಸ್‌‍ ಜನವಿರೋಧಿ ಸರ್ಕಾರ ವಿರುದ್ಧ ತಾಯಿ ಕೆಂಪಮ ದೇವಿಗೆ ಪೂಜೆ ಸಲ್ಲಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. +ದಾಖಲೆ ಬಿಡುಗಡೆ: ನಾಡಿನ ಜನತೆಯ ಅಭಿಪ್ರಾಯ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ನಮ್ಮ ಕಾರ್ಯಕ್ರಮ ತಡೆಯಲು ಕಾಂಗ್ರೆಸ್‌‍ ನಾಯಕರು ಬಿಡದಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ನನ್ನ ಪ್ರಶ್ನೆಗೆ ಬಿಡದಿ ರಾಮನಗರದಲ್ಲಿ ಉತ್ತರ ಕೊಡುತ್ತೇನೆ. +ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ರಾಮನಗರಕ್ಕೆ ಬಂದ ನಂತರ ಎಷ್ಟು ಆಸ್ತಿ ಮಾಡಿದ್ದಾರೆ ಎಂದು ಕೇಳಿದ್ದಾರೆ. ಅದಕ್ಕೆ ನಾವು ಉತ್ತರ ಕೊಡುತ್ತೇವೆ. ನಾವು ಅವರದ್ದು ಎಷ್ಟಿದೆ ಅನ್ನೋದನ್ನು ಕೂಡಾ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು. ನಾನು ಡಿಕೆಶಿ ಹಾಗೂ ಸಿಎಂ ಅವರ ದಾಖಲೆ ಪತ್ರಗಳನ್ನು ಕೇಂದ್ರಸರ್ಕಾರಕ್ಕೆ ಕೊಟ್ಟಿದ್ದೇನೆ. ನಮನ್ನು ಬಂಧನ ಮಾಡಲು ಬರುತ್ತಾರೆ ನಾವು ಬಂಧನಕ್ಕೂ ಸಿದ್ದವಿದ್ದೇವೆ ಎಂದು ಅವರೇ ಹೇಳಿಕೊಂಡಿದ್ದಾರೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_55_3.txt b/eesanje/url_46_55_3.txt new file mode 100644 index 0000000000000000000000000000000000000000..53952be8317516402d7df809c4adc7e18707f252 --- /dev/null +++ b/eesanje/url_46_55_3.txt @@ -0,0 +1,4 @@ +ಕ್ಯಾಶ್ ಫಾರ್ ಪೋಸ್ಟಿಂಗ್ ದಂಧೆಗೆ ಪರಶುರಾಂ ಬಲಿಯಾಗಿದ್ದಾರೆ : ಯತ್ನಾಳ್ +ಬೆಂಗಳೂರು,ಆ.3– ಕ್ಯಾಶ್ ಫಾರ್ ಪೋಸ್ಟಿಂಗ್ ಪರಿಣಾಮ ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ರಾಜ್ಯ ಸರ್ಕಾರ ಪಡೆದುಕೊಂಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಪಿಎಸ್ಐ ಪರಶುರಾಮ್ ಅವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ ಅವರ ಸಾವಿಗೆ ಯಾದಗರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಮತ್ತು ಅವರ ಮಗ ಸನ್ನಿ ಗೌಡ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. +ಏಳು ತಿಂಗಳ ಹಿಂದಯಷ್ಟೇ 30 ಲಕ್ಷ ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದ ಪರಶುರಾಮ ಅವರು ಸಾಲದ ಸುಳಿಗೆ ಸಿಲುಕಿದ್ದರು, ಇದೀಗ ಮತ್ತೆ ನಿಯಮಬಾಹಿರ ವರ್ಗಾವಣೆ ಮಾಡಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಬಸನಗೌಡ ಯತ್ನಾಳ್ ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_55_4.txt b/eesanje/url_46_55_4.txt new file mode 100644 index 0000000000000000000000000000000000000000..d0036931cccc724ea5930df4fbe27fb13eba2a2e --- /dev/null +++ b/eesanje/url_46_55_4.txt @@ -0,0 +1,5 @@ +ಶಾಸಕರ ಭವನದ ವಾಹನಗಳ ಬಾಡಿಗೆ ಮೊತ್ತ ವೇತನದಲ್ಲಿ ಕಡಿತ +ಬೆಂಗಳೂರು, ಆ.3-ಶಾಸಕರ ಭವನದ ವಾಹನಗಳನ್ನು ಉಪಯೋಗಿಸಿಕೊಂಡ ಶಾಸಕರು, ಮಾಜಿ ಶಾಸಕರು ಆ ವಾಹನದ ಬಾಡಿಗೆಯ ಮೊತ್ತವನ್ನು ನಗದು ರೂಪದಲ್ಲಿ ನೀಡದಂತೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಸೂಚಿಸಿದ್ದಾರೆ. +ಶಾಸಕರ ಭವನದ ವಾಹನಗಳನ್ನು ಶಾಸಕರು, ಮಾಜಿ ಶಾಸಕರಿಗೆ ಬಾಡಿಗೆ ನೀಡುವ ಪದ್ಧತಿ ಜಾರಿಯಲ್ಲಿದೆ. ಬಾಡಿಗೆ ಮೊತ್ತವನ್ನು ನಗದು ರೂಪದಲ್ಲಿ ನೀಡುವ ವ್ಯವಸ್ಥೆಯನ್ನು ಆಗಸ್ಟ್‌ ಒಂದರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದ್ದು, ನಗದು ರಹಿತ ವ್ಯವಸ್ಥೆ ಜಾರಿಗೆ ತರಲು ಸಭಾಧ್ಯಕ್ಷರು ಸೂಚಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಶಾಸಕರ ಭವನದ ವಾಹನಗಳನ್ನು ಉಪಯೋಗ ಮಾಡಿಕೊಂಡ ಸಂದರ್ಭದಲ್ಲಿ ಶಾಸಕರು, ಮಾಜಿ ಶಾಸಕರು ಬಾಡಿಗೆ ಮೊತ್ತವನ್ನು ಇನ್ನು ಮುಂದೆ ನಗದು ರೂಪದಲ್ಲಿ ಪಾವತಿ ಮಾಡದೇ ವಾಹನದ ಟ್ರಿಪ್‌ಶೀಟ್‌ನಲ್ಲಿ ಮಾತ್ರ ಸಹಿ ಮಾಡಬೇಕು. ಶಾಸಕರು, ಮಾಜಿ ಶಾಸಕರು ಟ್ರಿಪ್‌ಶೀಟ್‌ನಲ್ಲಿ ಸಹಿ ಮಾಡಿದ ನಂತರ ಬಳಸಿದ ವಾಹನದ ಬಾಡಿಗೆ ಮೊತ್ತ, ನಿರೀಕ್ಷಣಾ ಶುಲ್ಕ, ಜಿಎಸ್‌‍ಟಿ ಮೊತ್ತ ಸೇರಿಸಿ ಒಟ್ಟಾರೆ ಮೊತ್ತವನ್ನು ವೇತನದಲ್ಲಿ ಕಡಿತ ಮಾಡುವುದಾಗಿ ಅವರು ಹೇಳಿದ್ದಾರೆ. +ಶಾಸಕರ ವೇತನದಲ್ಲಿ ಮತ್ತು ಮಾಜಿ ಶಾಸಕರ ನಿವೃತ್ತಿ ವೇತನ, ರೈಲ್ವೇ ಭತ್ಯೆ ಮೊತ್ತದಲ್ಲಿ ಬಾಡಿಗೆ ಮೊತ್ತ ಕಡಿತ ಮಾಡುವುದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_55_5.txt b/eesanje/url_46_55_5.txt new file mode 100644 index 0000000000000000000000000000000000000000..234f71e91d810e5eea15685868b7e8b1880371ca --- /dev/null +++ b/eesanje/url_46_55_5.txt @@ -0,0 +1,11 @@ +ಅರಣ್ಯ ಇಲಾಖೆಯಲ್ಲಿ ಹಗರಣ : ಸರ್ಕಾರಕ್ಕೆ ಬಡ್ತಿಯ ಉರುಳು +ಬೆಂಗಳೂರು,ಆ.3-ವಲಯ ಅರಣ್ಯಾಧಿಕಾರಿ ಹುದ್ದೆಯಿಂದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಗೆ ಬಡ್ತಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ತೋರಿಸುತ್ತಿರುವ ಆತುರ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ನಿಯಮಗಳ ಉಲ್ಲಂಘನೆಯ ಆರೋಪಗಳು ಕೇಳಿ ಬಂದಿವೆ. +ಸರ್ಕಾರಿ ನೌಕರರಿಗೆ ಬಡ್ತಿ ನೀಡುವಾಗ ನೇರ ನೇಮಕಾತಿ ಆಗಿರುವವರು ಹಾಗೂ ಮುಂಬಡ್ತಿ ಪಡೆದ ಎರಡು ವೃಂದಗಳಿಂದಲೂ ಸರಾಸರಿ 50:50ರ ಅನುಪಾತವನ್ನು ಪರಿಗಣಿಸಬೇಕು ಎಂಬ ನಿಯಮ ಇದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಸಂಘದ ಪ್ರಮುಖರು ಮುಂಬಡ್ತಿ ಮೂಲಕ ಉನ್ನತ ಹ್ದುೆಗೇರಿದವರಾಗಿದ್ದು, ಸಹಜವಾಗಿಯೇ ನೇರ ನೇಮಕಾತಿ ಆದವರನ್ನು ಕಡೆಗಣಿಸಿ, ಮುಂಬಡ್ತಿ ಪಡೆದವರ ಪರವಾಗಿ ಲಾಬಿ ನಡೆಸಿದ್ದಾರೆ ಎಂಬ ಟೀಕೆಗಳಿವೆ. +1976ರ ಆದೇಶವನ್ನು ಉಲ್ಲಂಘಿಸಿ ಅರಣ್ಯ ಇಲಾಖೆಯು ಬ್ಲಾಕ್‌ ಅವಧಿ 17ರಲ್ಲಿ 13 ಹುದ್ದೆಗಳನ್ನು ಹಾಗೂ 27 ಮತ್ತು 29ರಲ್ಲಿ ತಲಾ 3 ಹೆಚ್ಚುವರಿ ಹ್ದುೆಗಳನ್ನು ಹೆಚ್ಚುವರಿಯಾಗಿ ಕ್ಲೈಮ್‌ ಮಾಡಿದೆ. ಜೊತೆಗೆ 2018ರ ಡಿಸೆಂಬರ್‌ 27ರಂದು ನಿಗದಿ ಪಡಿಸಿದ ನಮೂನೆಗಳಲ್ಲಿ ರಿಕ್ತಸ್ಥಾನವಹಿ ಹಾಗೂ ರೋಸ್ಟರ್‌ ರಿಜಿಸ್ಟರ್‌ ಪ್ರಕಟಿಸಿಲ್ಲ. ದೋಷಪೂರಿತ ಜೇಷ್ಠತಾ ಪಟ್ಟಿಯು 2020ರ ನವೆಂಬರ್‌ 19ರಂದು ರದ್ದುಗೊಂಡಿದೆ. ಜೇಷ್ಠತಾ ಪಟ್ಟಿಯಲ್ಲಾದ ಲೋಪಗಳನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. +ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣ ಇತ್ಯರ್ಥಗೊಳ್ಳುವವರೆಗೂ ಬಡ್ತಿ ನೀಡದಂತೆ ಆದೇಶಿಸಿದೆ. ಇದರ ನಡುವೆ ನ್ಯಾಯಾಲಯದ ಮೆಟ್ಟಿಲು ಏರಿದವರ ಹೆಸರನ್ನು ಜೇಷ್ಠತಾ ಪಟ್ಟಿಗೆ ಸೇರಿಸಿ ತೇಪೆ ಹಚ್ಚುವ ಕೆಲಸವನ್ನು ಅರಣ್ಯ ಇಲಾಖೆ ಮಾಡಿದೆ. ಪರಿಷ್ಕೃತ ಜೇಷ್ಠತಾ ಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ ಹೊರತು ಪಡಿಸಿ ನ್ಯಾಯೋಚಿತವಾದ ಕ್ರಮಗಳಾಗಿಲ್ಲ ಎಂದು ಅವಕಾಶ ವಂಚಿತ ಅಧಿಕಾರಿಗಳು ಆರೋಪಿಸಿದ್ದಾರೆ. +ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಸರ್ಕಾರ ಈಗ 72 ಮಂದಿಗೆ ವಲಯ ಅರಣ್ಯ ಅಧಿಕಾರಿಗಳ ಹುದ್ದೆಯಿಂದ ಸಹಾಯಕ ಅರಣ್ಯ ಅಧಿಕಾರಿ ಹ್ದುೆಗೆ ಬಡ್ತಿ ನೀಡಲು ಮುಂದಾಗಿದೆ. ದೋಷಪೂರಿತ ಜೇಷ್ಠತಾ ಪಟ್ಟಿ ಹಾಗೂ ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಬಡ್ತಿ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಕೆಲ ಅಧಿಕಾರಿಗಳು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ. +ಈ ನಡುವೆ ಅರಣ್ಯ ಇಲಾಖೆ ನೌಕರರಿಗೆ ಆತುರಾತುರವಾಗಿ ಮುಂಬಡ್ತಿ ನೀಡಲು ಸರ್ಕಾರ ಮುಂದಾಗಿದೆ. ಅದರಲ್ಲಿ ನೇರ ನೇಮಕಾತಿಯಾದವರನ್ನು ಕಡೆಗಣಿಸಲಾಗಿದೆ ಎಂಬ ದೂರುಗಳು ಇವೆ. ಕೆಲ ಪ್ರಭಾವಿಗಳು ಸರ್ಕಾರ ಮತ್ತು ಸಚಿವಾಲಯವನ್ನು ದಿಕ್ಕು ತಪ್ಪಿಸುವ ಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲವೂ ಸರಿ ಇದೆ ಮತ್ತು ನಿಯಮಗಳ ಪಾಲನೆಯಾಗಿದೆ ಎಂದು ಸಚಿವಾಲಯವನ್ನು ನಂಬಿಸಿ ಜೇಷ್ಠತಾ ಪಟ್ಟಿಗೆ ಅಂಗೀಕಾರ ಪಡೆದು ಬಡ್ತಿ ನೀಡುವ ಪ್ರಯತ್ನ ನಡೆದಿದೆ. +ಬಡ್ತಿ ನೀಡುವ ಸಲುವಾಗಿ ನಡೆದಿರುವ ಡಿಪಿಸಿಯಲ್ಲೂ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಎನ್ನಲಾಗಿದೆ. ಡಿಪಿಸಿ ಸಭೆಯ ಕಾರ್ಯಸೂಚಿ ಮಾಹಿತಿಯನ್ನು ರಹಸ್ಯವಾಗಿ ಇಡಲಾಗಿದೆ. ತೆರೆ ಮರೆಯಲ್ಲಿ ಎಲ್ಲವನ್ನೂ ಮುಗಿಸಿ, ಡಿಪಿಸಿ ಪ್ರಕಿಯೆಗೆ ಸದಸ್ಯರ ಸಹಿ ಪಡೆದುಕೊಳ್ಳಲಾಗಿದೆ.ಸಭೆಯಲ್ಲಿ ಆಖೈರುಗೊಳಿಸಲಾದ ಪಟ್ಟಿಯನ್ನು ಸಚಿವಾಲಯದ ಅನುಮೋದನೆಗೆ ಕಳುಹಿಸಲಾಗಿದೆ. ಅನಪೇಕ್ಷಿತ ಪ್ರಭಾವಗಳಿಂದಾಗಿ ನೇರ ನೇಮಕಾತಿಯ ಮೇಲೆ ಸೇವೆಗೆ ಸೇರಿ, ಮುಂಬಡ್ತಿಯ ನಿರೀಕ್ಷೆಯಲ್ಲಿದ್ದ 150ಕ್ಕೂ ಹೆಚ್ಚು ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ 371 ಜೆ ಅಡಿಯಲ್ಲಿ ಬರುವ ಅಧಿಕಾರಿಗಳಿಗೂ ದೋಷಪೂರಿತ ಜೇಷ್ಠತಾ ಪಟ್ಟಿಯಿಂದ ಅನ್ಯಾಯವಾಗುತ್ತಿದೆ ಎಂದು ಹೇಳಲಾಗಿದೆ. +ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆಯ ಪ್ರಕರಣ ಬಾಕಿ ಇದ್ದಾಗಲೂ ಕೂಡ ಡಿಪಿಸಿ ನಡೆಸಿ, ಮುಂಬಡ್ತಿ ನೀಡುವ ದುಸ್ಸಾಹಸ ಏಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಅವಕಾಶ ವಂಚಿತ ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಆ.19ಕ್ಕೆ ದಿನಾಂಕ ನಿಗದಿಯಾಗಿದೆ. ಅದಕ್ಕೂ ಮೊದಲು ಬಡ್ತಿ ನೀಡುವ ತಯಾರಿ ಶುರುವಾಗಿದೆ. +ಸದ್ಯಕ್ಕೆ ಮುಂಬಡ್ತಿ ನೀಡಿ, ಸ್ಥಳ ನಿಯೋಜನೆ ಮಾಡುವುದು, ನಂತರ ಕಾನೂನು ಸಂಘಷರ್ದಲ್ಲಿ ಕಾಲಹರಣ ಮಾಡಿ, ಬಡ್ತಿ ಪಡೆದವರು ಹುದ್ದೆಯ ಮೋಜನ್ನು ಅನುಭವಿಸುವುದು ಎಂಬ ಹುನ್ನಾರ ಅಡಗಿದಂತಿದೆ. +ರಾಜ್ಯದಲ್ಲಿ ಪ್ರಭಾವಿ ಸಂಸದರೊಬ್ಬರು ಮುಂಬಡ್ತಿ ಪಟ್ಟಿಗೆ ಅನುಮೋದನೆ ಕೊಡಿಸುವುದಾಗಿ ವ್ಯವಹಾರ ಕುದುರಿಸಿದ್ದಾರೆ, ಇದಕ್ಕಾಗಿ ಪಟ್ಟಿಯಲ್ಲಿ ಇರುವ ಅಧಿಕಾರಿಗಳಿಂದ ಭಾರೀ ಪ್ರಮಾಣದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪಗಳಿವೆ. ರಾಜ್ಯ ಸರ್ಕಾರ ಈಗಾಗಲೇ ಹಲವು ರೀತಿಯ ಆರೋಪಗಳಿಂದ ಮುಜುಗರಕ್ಕೀಡಾಗಿರುವ ಹಂತದಲ್ಲಿ ಹಣಕ್ಕಾಗಿ ಬಡ್ತಿ ಎಂಬ ಹೊಸ ಆರೋಪ ನುಂಗಲಾರದ ತುತ್ತಾಗಿದೆ. \ No newline at end of file diff --git a/eesanje/url_46_55_6.txt b/eesanje/url_46_55_6.txt new file mode 100644 index 0000000000000000000000000000000000000000..ba114d935c0d678a04bd1bb70b8eb278ad13b3dc --- /dev/null +++ b/eesanje/url_46_55_6.txt @@ -0,0 +1,8 @@ +ಪಾದಯಾತ್ರೆ ಮುಗಿಯುವ ಮುನ್ನವೇ ಸಿಎಂ ರಾಜೀನಾಮೆ ಸಾಧ್ಯತೆ : ಬಿಎಸ್‌‍ವೈ ಸ್ಫೋಟಕ ಹೇಳಿಕೆ +ಬೆಂಗಳೂರು,ಆ.3-ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ-ಜೆಡಿಎಸ್‌‍ ಹಮಿಕೊಂಡಿರುವ ಜಂಟಿ ಪಾದಯಾತ್ರೆ ಮುಗಿಯುವುದರೊಳಗೆ ತಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. +ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಗರಣದಲ್ಲಿ ಸಿದ್ದರಾಮಯ್ಯನವರ ಕುಟುಂಬವೇ ಆರೋಪಿ ಸ್ಥಾನದಲ್ಲಿರುವುದರಿಂದ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಎಚ್ಚರಿಸಿದರು. +ನನಗಿರುವ ಮಾಹಿತಿ ಪ್ರಕಾರ ನಮ ಪಾದಯಾತ್ರೆ ಮುಗಿಯುವುದರೊಳಗೆ ಸಿಎಂ ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ. ಬಹುತೇಕ ಅವರು ಮಾನಸಿಕವಾಗಿಯೂ ಅಧಿಕಾರದಿಂದ ನಿರ್ಗಮಿಸಲು ಸಿದ್ಧರಾಗಿದ್ದಾರೆ. ಕುಟುಂಬದವರೇ ಶಾಮೀಲಾಗಿರುವುದರಿಂದ ಬೇರೆ ದಾರಿ ಇಲ್ಲ ಎಂದು ಹೇಳಿದರು. +ಬಿಜೆಪಿ ಮತ್ತು ಜೆಡಿಎಸ್‌‍ ಜಂಟಿಯಾಗಿ ಪಾದಯಾತ್ರೆ ನಡೆಸುತ್ತಿದ್ದೇವೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲರೂ ಹೊಂದಿಕೊಂಡು ಭ್ರಷ್ಟ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುತ್ತೇವೆ. ನಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. +ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಪಾದಯಾತ್ರೆ ಹಮಿಕೊಂಡಿದ್ದೇವೆ. ಬೆಂಗಳೂರಿನಿಂದ ಮೈಸೂರಿನವರೆಗೂ ಪಾದಯಾತ್ರೆ ನಡೆಸುತ್ತೇವೆ. ಪ್ರತಿಯೊಂದು ಕಡೆ 8 ರಿಂದ 10 ಸಾವಿರ ಜನ ಸೇರುತ್ತಾರೆಂಬ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರಿಗೆ ಇದು ಕೊನೆ ಅವಕಾಶ. ಅವರೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. +ರಾಜೀನಾಮೆ ಅವರಾಗಿಯೇ ಕೊಟ್ಟರೆ ಅವರಿಗೆ ಅದು ಶೋಭೆ ತರುತ್ತದೆ, ಪಕ್ಷಕ್ಕೆ ಗೌರವ ಸಿಗುತ್ತದೆ. ಇಲ್ಲದಿದ್ದರೆ ಅನಿವಾರ್ಯವಾಗಿ ರಾಜ್ಯಪಾಲರೇ ಕ್ರಮ ತೆಗೆದುಕೊಳ್ಳಬಹುದು. ಇದಕ್ಕೆ ಅವಕಾಶ ಕೊಡದೇ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಸಲಹೆ ಕೊಡುತ್ತೇನೆ ಎಂದರು. ಜನರಿಗೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ವಾಸ್ತವ ಸ್ಥಿತಿ ತಿಳಿದಿದೆ. ಹೀಗಾಗಿ ಅವರು ಯಾವುದೇ ಆರೋಪಗಳಿಂದ ಮುಕ್ತಿ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. +ರಾಜ್ಯಪಾಲರ ಕಚೇರಿ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್‌‍ ಆರೋಪ ಮಾಡುತ್ತಿದೆ. ಈ ರೀತಿಯ ಆರೋಪ ಮಾಡಿ ತಮ ಮೇಲಿನ ಆರೋಪಗಳಿಂದ ಅವರು ಮುಕ್ತರಾಗಲು ಸಾಧ್ಯವೇ ಇಲ್ಲ ಎಂದರು. \ No newline at end of file diff --git a/eesanje/url_46_55_7.txt b/eesanje/url_46_55_7.txt new file mode 100644 index 0000000000000000000000000000000000000000..23df6868cf34681834dd6c537fef11b466eca9fe --- /dev/null +++ b/eesanje/url_46_55_7.txt @@ -0,0 +1,5 @@ +ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್ +ಬೆಂಗಳೂರು,ಆ.3-ನೀವು ನಿಜವಾಗಿಯೂ ಸತ್ಯಹರಿಶ್ಚಂದ್ರರೇ ಆಗಿ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವುದಾದರೆ ಮೊದಲು ಮುಡಾ ಹಗರಣ ಪ್ರಕರಣದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರೇ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸವಾಲು ಹಾಕಿದ್ದಾರೆ. +ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾಗಿದ್ದರೆ ರಾಜೀನಾಮೆ ನೀಡಲು ಮೀನಾಮೇಷ ಏಕೆ ಎಂದು ಪ್ರಶ್ನೆ ಮಾಡಿದರು. +ಸಿದ್ದರಾಮಯ್ಯನವರು ಅಧಿಕಾರದಲ್ಲಿ ಲೂಟಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಲಜ್ಜೆಗೆಟ್ಟ ಸರ್ಕಾರ ಇನ್ನಷ್ಟು ಉಂಡು ತಿಂದು ನೀರು ಕುಡಿಯುವ ಮನಃಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು. ಭಸಾಸುರರಾಗಿ ಜನರ ತಲೆ ಮೇಲೆ ಕೈ ಇಟ್ಟಿದ್ದಾರೆ. ನಾನು ಸತ್ಯ ಹರಿಶ್ಚಂದ್ರ ಅನ್ನುತ್ತಾರೆ. ಇಂದು ಅವರ ಬಣ್ಣ ಬಯಲಾಗಿದೆ. ಆದರೂ ರಾಜೀನಾಮೆಗೆ ಮನಸ್ಸು ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು. +ಇದು ಕೇವಲ ರಾಜ್ಯದ ಹಗರಣವಾಗಿ ಉಳಿದಿಲ್ಲ. ಸಿಎಂ ರಾಜ್ಯದ ಜನರ ಮನಸ್ಸಿನ ಭಾವನೆಗೆ ಗೌರವ ಕೊಟ್ಟು ರಾಜೀನಾಮೆ ಕೊಡಬೇಕು. ಇಲ್ಲವಾದರೆ ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದ ಅವರು, ಇನ್ನೆರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_55_8.txt b/eesanje/url_46_55_8.txt new file mode 100644 index 0000000000000000000000000000000000000000..c007a0bfd6c11a793896bb0f75157201c855a5de --- /dev/null +++ b/eesanje/url_46_55_8.txt @@ -0,0 +1,11 @@ +“ಮುಡಾ ಹಗರಣದ ಕಿಂಗ್‌ಪಿನ್‌ ಭೈರತಿ ಸುರೇಶ್‌ ಇನ್ನೂ ಏಕೆ ಅರೆಸ್ಟ್ ಆಗಿಲ್ಲ..?” +ಬೆಂಗಳೂರು,ಆ.3-ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಅಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರೇ ಇದರ ಕಿಂಗ್‌ಪಿನ್‌. ಅವನನ್ನು ಏಕೆ ಬಂಧಿಸಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. +ಸಭೆಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಅಂದಾಜು ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದರ ಸೂತ್ರಧಾರ ಭೈರತಿ ಸುರೇಶ್‌. ಅವನು ಏಕೆ ಹೊರಗಡೆ ಇದ್ದ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸರ್ಕಾರ ಈತನನ್ನು ಏಕೆ ಬಂಧಿಸಿಲ್ಲ? ಎಂದು ಪ್ರಶ್ನೆ ಮಾಡಿದರು. +ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಒಬ್ಬ ಸಚಿವರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದರಲ್ಲಿ 189 ಕೋಟಿ ಹಗರಣ ಆಗಿದೆ. ಅದಕ್ಕಾಗಿ ಸಚಿವರ ರಾಜೀನಾಮೆ ಪಡೆದು ಅವರನ್ನು ಇ.ಡಿ ಬಂಧಿಸಿದೆ. ಹಾಗಾದರೆ ಭೈರತಿ ಸುರೇಶ್‌ ಯಾವ ಮುಖ ಇಟ್ಟುಕೊಂಡು ಸಚಿವರಾಗಿ ಮುಂದುವರೆದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. +ವಾಲೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಒಂದು ನ್ಯಾಯ, ಮುಡಾಕ್ಕೆ ಇನ್ನೊಂದು ನ್ಯಾಯವೇ? ಮಾಜಿ ಸಚಿವ ಬಿ.ನಾಗೇಂದ್ರ ಜೈಲಿಗೆ ಹೋಗುವುದಾದರೆ ಸಾವಿರಾರು ಕೋಟಿ ಅಕ್ರಮ ಎಸಗಿರುವ ಭೈರತಿ ಸುರೇಶ್‌ ಕೂಡ ಜೈಲಿಗೆ ಹೋಗಬೇಕಲ್ಲವೇ ಎಂದು ವಿಶ್ವನಾಥ್‌ ಹರಿಹಾಯ್ದರು. +ಮುಡಾದಲ್ಲಿ ಅಕ್ರಮ ಎಸಗಿರುವ ಆಯುಕ್ತರ ಮೇಲೆ ಸರ್ಕಾರ ಏಕೆ ಕ್ರಮ ಜರುಗಿಸಿಲ್ಲ? ಅವರನ್ನು ರಕ್ಷಣೆ ಮಾಡಲು ನಗರಾಭಿವೃದ್ಧಿ ಸಚಿವರು ಮುಂದಾಗಿರಬಹುದು. ಪ್ರತಿಪಕ್ಷದವರು ನಿವೇಶನ ಪಡೆದುಕೊಂಡಿದ್ದಾರೆ. ಅವರ ದಾಖಲೆಗಳನ್ನು ಕಲೆ ಹಾಕುವುದರಲ್ಲಿ ಇವರು ನಿರತರಾಗಿದ್ದಾರೆಯೇ? ಎಂದು ಟೀಕಾ ಪ್ರಹಾರ ನಡೆಸಿದರು. +ಇನ್ನು ವಿಶ್ವನಾಥ್‌ ತಮ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಕೆಂಡಕಾರಿದರು. ಸಿದ್ದರಾಮಯ್ಯನವರೇ ನಿಮಗೆ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ಕೊಟ್ಟಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ರಾಜ್ಯಪಾಲರು ನೋಟಿಸ್‌‍ ಕೊಟ್ಟಿರುವುದು ಸರಿ ಎಂದು ಸಮರ್ಥಿಸಿದರು. +ಅವರ ನೋಟಿಸ್‌‍ಗೆ ಸರಿಯಾದ ಉತ್ತರ ಕೊಡದೆ ನೀವು ಏನೇನೊ ಬಾಯಿಗೆ ಬಂದಂತೆ ಮಾತನಾಡಬೇಡಿ, ನೀವೊಬ್ಬ ವಕೀಲರಾಗಿ ಕಾನೂನಿನ ಅರಿವು ನಿಮಗಿಲ್ಲವೇ? ರಾಜ್ಯಪಾಲರ ನೋಟಿಸ್‌‍ಗೆ ಉತ್ತರ ಕೊಡಬೇಕಾಗಿದ್ದು ನಿಮ ಕರ್ತವ್ಯ. ಅದನ್ನು ಬಿಟ್ಟು ಅವರು ಆ ಪಕ್ಷದವರಿಗೆ , ಈ ಪಕ್ಷದವರಿಗೆ ಎಂದು ಹೇಳುವುದನ್ನು ಮಾಡಬೇಡಿ. ಈಗ ನಿಮಗೆ ಶೋಭೆ ತರುವುದಿಲ್ಲ ಎಂದು ವಿಶ್ವನಾಥ್‌ ಎಚ್ಚರಿಸಿದರು. +ಸಿದ್ಧರಾಮಯ್ಯನವರೇ ನೀವು ನಿಮ ಸ್ಥಾನಕ್ಕೆ ಗೌರವದಿಂದ ರಾಜೀನಾಮೆ ಕೊಟ್ಟು ಇರುವ ಅಲ್ಪಸ್ವಲ್ಪ ಘನತೆಯನ್ನು ಹೆಚ್ಚಿಸಿಕೊಳ್ಳಿ. ಬಾಯಿಗೆ ಬಂದಂತೆ ಮಾತನಾಡುವುದರಿಂದ ನೀವು ದೊಡ್ಡವರಾಗುವುದಿಲ್ಲ. ನಿಮ ಇತ್ತೀಚಿನ ಬೆಳವಣಿಗೆಯನ್ನು ನೋಡಿದರೆ ನೀವು ಹಠಕ್ಕೆ ಬಿದ್ದು ಬಂಡತನ ಪ್ರದರ್ಶನ ಮಾಡುತ್ತಿದ್ದೀರಿ. ನಾವು-ನೀವು ಒಟ್ಟಿಗೆ ಬೆಳೆದವರು. ಒಟ್ಟಿಗೆ ಕಾನೂನು ಓದಿದ್ದೇವೆ ಎಂದು ಹೇಳಿದರು. +ನಿಮಗೆ ಅನುಕೂಲಕ್ಕೆ ಬೇಕಾದಾಗ ಕಾನೂನು ಸಂವಿಧಾನ, ರಾಜ್ಯಪಾಲರು ಎಲ್ಲವೂ ಸರಿ ಇರುತ್ತದೆ. ಒಂದು ಶೋಕಾಸ್‌‍ ನೋಟಿಸ್‌‍ ಕೊಟ್ಟಿಲ್ಲ ಎಂದ ತಕ್ಷಣ ಇಡೀ ವ್ಯವಸ್ಥೆಯೇ ಸರಿ ಇಲ್ಲ ಎಂದು ಹೇಳುವುದು ಸರಿಯಲ್ಲ. ಶೋಕಾಸ್‌‍ ನೋಟಿಸ್‌‍ಗೆ ಉತ್ತರ ಕೊಡದೆ ಸಚಿವ ಸಂಪುಟ ಸಭೆಯಲ್ಲಿ ನೋಟಿಸ್‌‍ ವಾಪಸ್‌‍ ಪಡೆಯಬೇಕೆಂದು ನಿಮ ಸಂಪುಟದ ಸಹೋದ್ಯೋಗಿಗಳಿಂದ ಒತ್ತಡ ಹಾಕುತ್ತೀರಿ. +ನಾಲ್ಕು ದಶಕಗಳ ರಾಜಕೀಯದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಎನ್ನುವ ನೀವು ಈಗ ಆರೋಪಿ ಸ್ಥಾನದಲ್ಲಿ ಇದ್ದೀರಿ ಎಂಬುದನ್ನು ಮರೆಯಬೇಡಿ. ಗೌರವದಿಂದ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ವಿಶ್ವನಾಥ್‌ ಟೀಕೆಗಳ ಸುರಿಮಳೆ ಗೈದರು. \ No newline at end of file diff --git a/eesanje/url_46_55_9.txt b/eesanje/url_46_55_9.txt new file mode 100644 index 0000000000000000000000000000000000000000..3f8bc44e665a8e98bb662ec03d0d7ad60d4d171a --- /dev/null +++ b/eesanje/url_46_55_9.txt @@ -0,0 +1,15 @@ +ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆ ಆರಂಭ +ಬೆಂಗಳೂರು,ಆ.3– ಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಇಂದು ಅದೇ ಅಸ್ತ್ರವನ್ನು ಬಳಸಿ ರಾಜಧಾನಿ ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್‌‍ ದೋಸ್ತಿ ಪಕ್ಷಗಳ ಜಂಟಿ ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. +ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ಕಾನೂನು ಬಾಹಿರ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಒಂದು ವಾರ ಕಾಲ ನಡೆಯಲಿರುವ ಪಾದಯಾತ್ರೆಗೆ ಕಾರ್ಯಕರ್ತರ ಹರ್ಷೋದ್ಘಾರ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳ ನಡುವೆಯೇ ಪಾದಯಾತ್ರೆಗೆ ಚಾಲನೆ ನೀಡಲಾಯಿತು. +ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್‌‍ ಅಗರ್ವಾಲ್‌, ಕೇಂದ್ರ ಸಚಿವರಾದ ಶೊಭಾ ಕರಂದ್ಲಾಜೆ, ವಿ.ಸೋಮಣ್ಣ, ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್‌‍ ನಾಯಕ ಸಿ.ಬಿ. ಸುರೇಶ್‌ ಬಾಬು, ಮಾಜಿ ಸಚಿವ ಜಿ.ಟಿ. ದೇವೇಗೌಡ, ಕೇಂದ್ರ ಸಚಿವರು, ಕೋರ್‌ ಕಮಿಟಿ ಸದಸ್ಯರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು. +ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅವರು ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ಕೊಟ್ಟರು. ಪಾದಯಾತ್ರೆಗಾಗಿ ಕಾಂಗ್ರೆಸ್‌‍ ವಿರುದ್ಧ ರಚಿಸಿದ ಗೀತೆಯನ್ನು ಇದೇ ವೇಳೆ ಉಭಯ ಪಕ್ಷಗಳ ನಾಯಕರು ಬಿಡುಗಡೆ ಮಾಡಿದರು. ಕೆಂಗೇರಿಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಮೀಪದ ಜೆ.ಕೆ.ಗ್ರ್ಯಾಂಡ್‌ ಅರೇನ ಸೆಂಟರ್‌ನಲ್ಲಿ ಕಾರ್ಯಕರ್ತರ ಬೃಹತ್‌ ಕಾರ್ಯಕ್ರಮ ಜರುಗಿತು. +ನಂತರ 10 ಗಂಟೆಗೆ ಪಾದಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಬಹುತೇಕ ಎಲ್ಲಾ ಪ್ರಮುಖರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. +ಅದರಲ್ಲೂ ಮುಡಾ ನಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದವರೇ ಶಾಮೀಲಾಗಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. +ವಿಶೇಷವಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರನ್ನು ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿದ ಮೈತ್ರಿ ಪಕ್ಷಗಳ ನಾಯಕರು ರಾಜ್ಯದಲ್ಲಿ ಸರ್ಕಾರ ಹೆಚ್ಚು ದಿನ ಉಳಿಯುವ ಲಕ್ಷಣಗಳಿಲ್ಲ ಎಂದು ಭವಿಷ್ಯ ನುಡಿದರು. +ಇಂದಿನಿಂದ ಆರಂಭವಾಗಿರುವ ಪಾದಯಾತ್ರೆ ಆ.10(ಶನಿವಾರ)ರವರೆಗೆ ಮೈಸೂರಿನಲ್ಲಿ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದೆ. ಒಟ್ಟು 140 ಕಿ.ಮೀ ಪಾದಯಾತ್ರೆ ಜರುಗಲಿದ್ದು, ಪ್ರತಿದಿನ 15ರಿಂದ 20 ಕಿ.ಮೀ ವರೆಗೂ ಶ್ರಮಿಸಲಿವೆ. +ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಂತರಿಕ ಸಭೆ ನಡೆಸಿದ್ದು, ಮತ್ತೊಂದು ತಂಡ ಪಾದಯಾತ್ರೆ ಮಾರ್ಗಪಥದ ಸಮೀಕ್ಷೆ, ವಸತಿ, ಉಟೋಪಚಾರ ಸ್ಥಳ, ಜೊತೆಗೆ ಬಹಿರಂಗ ಸಭೆಗಳಿಗೆ ಅಗತ್ಯ ಮೈದಾನ ಗುರುತಿಸಿ ಅಂತಿಮಗೊಳಸಲಾಗಿದೆ. +ನಿರ್ವಹಣೆಗೆ ವಿವಿಧ ಮೋರ್ಚಾಗಳ ಜೊತೆಗೆ ತಂಡಗಳು ರಚನೆಯಾಗಿವೆ. ಮೊದಲ ದಿನದ ಪಾದಯಾತ್ರೆಯನ್ನು ಯುವ ಮೋರ್ಚಾ ನಿರ್ವಹಿಸಿದವು. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. +ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್‌ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ. ಆಗಸ್ಟ್‌ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. +ಬಿಗಿ ಭದ್ರತೆ: ಕೆಂಗೇರಿಯ ನೈಸ್‌‍ ರಸ್ತೆ ಸಮೀಪದ ಕೆಂಪಮದೇವಿ ದೇವಸ್ಥಾನ ಬಳಿ ಪಾದಯಾತ್ರೆಗೆ ಚಾಲನೆ ದೊರೆಯಲಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಏರ್ಪಡುವ ಸಾಧ್ಯತೆಯಿದೆ. ಮೈಸೂರು ರಸ್ತೆ ಮಾರ್ಗದಲ್ಲಿ ಬೆಳಗ್ಗೆ ತೆರಳುವವರು ಹಾಗೂ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಸಂಚಾರ ದಟ್ಟಣೆಯ ಬಿಸಿ ತಟ್ಟಲಿದೆ. +ಪಾದಯಾತ್ರೆ ಆರಂಭವಾಗುವ ಸ್ಥಳದ ಬಳಿ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಸಂಚಾರ ಪೊಲೀಸ್‌‍ ವಿಭಾಗದ ಮೂವರು ಇನ್‌ಸ್ಪೆಕ್ಟರ್‌ ಹಾಗೂ 50 ಸಿಬ್ಬಂದಿ ನಿಯೋಜಿಸಲಾಗಿದೆ. ಉಳಿದಂತೆ ಸ್ಥಳದಲ್ಲಿ ಕೆಎಸ್‌‍ಆರ್‌ಪಿ ತುಕಡಿ ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. +ಇದಕ್ಕೂ ಮುನ್ನ ಬೆಳಗ್ಗೆ ಮೈಸೂರಿಗೆ ತೆರಳಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಯಶಸ್ವಿಯಾಗಲಿದೆ ಎಂದು ಪ್ರಾರ್ಥಿಸಿದರು. \ No newline at end of file diff --git a/eesanje/url_46_56_1.txt b/eesanje/url_46_56_1.txt new file mode 100644 index 0000000000000000000000000000000000000000..9e9dab1ef6a245b3b57686246e35731db3c4c9f1 --- /dev/null +++ b/eesanje/url_46_56_1.txt @@ -0,0 +1,6 @@ +ಮರಕ್ಕೆ ಆಡಿ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳ ದುರ್ಮರಣ +ಕೋಲಾರ,ಆ.3-ಸ್ನೇಹಿತನ ಮನೆಗೆ ಹೋಗಿ ವಾಪಸ್‌‍ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅತಿ ವೇಗದಿಂದಾಗಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಗ್ರಾಮಾಂತರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ರೇವಾ ಯೂನಿವರ್ಸಿಟಿ ಕಾಲೇಜಿನ ವಿದ್ಯಾರ್ಥಿಗಳಾದ ಹಾಸನ ಮೂಲದ ಹರ್ಷವರ್ಧನ್‌, ಬಳ್ಳಾರಿಯ ಬಸವರಾಜ್‌ ಹಾಗೂ ಬಂಗಾರಪೇಟೆಯ ನಿಚ್ಚಲ್‌ ಮೃತಪಟ್ಟ ವಿದ್ಯಾರ್ಥಿಗಳು.ಕಾರಿನಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾಯಿಗಗನ್‌ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾನೆ. +ಬಂಗಾರಪೇಟೆಯಲ್ಲಿರುವ ಸಾಯಿಗಗನ್‌ ಮನೆಗೆ ಈ ಮೂವರೂ ವಿದ್ಯಾರ್ಥಿಗಳು ಹೋಗಿದ್ದರು. ರಾತ್ರಿ ಅವರ ಮನೆಯಲ್ಲೇ ಉಳಿದುಕೊಂಡು ಬೆಳಗಿನ ಜಾವ ವಾಪಾಸ್‌‍ ಆಡಿ ಕಾರಿನಲ್ಲಿ ನಾಲ್ವರು ಬೆಂಗಳೂರಿಗೆ ಹಿಂದಿರುಗುತ್ತಿದ್ದರು. +ಕೋಲಾರ ಹೊರವಲಯದ ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರ ಬಳಿ ಬರುತ್ತಿದ್ದಾಗ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. +ಅಪಘಾತದ ತೀವ್ರತೆಗೆ ಆಡಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರಿನಲ್ಲಿ ಸಿಕ್ಕಿಕೊಂಡಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮೃತಪಟ್ಟಿರುವ ವಿದ್ಯಾರ್ಥಿಗಳ ಪೋಷಕರಿಗೆ ವಿಷಯ ತಿಳಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_56_10.txt b/eesanje/url_46_56_10.txt new file mode 100644 index 0000000000000000000000000000000000000000..a4c3f33c134c3874511f16ab0f31eca7b0bcd350 --- /dev/null +++ b/eesanje/url_46_56_10.txt @@ -0,0 +1,9 @@ +ರಾಜ್ಯಪಾಲರ ನೋಟೀಸ್ : ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ನೈತಿಕ ಬೆಂಬಲ +ಬೆಂಗಳೂರು,ಆ.2-ಮುಡಾ ಹಗರಣದಲ್ಲಿ ರಾಜ್ಯಪಾಲರು ಶೋಕಾಸ್‌‍ ನೋಟಿಸ್‌‍ ನೀಡಿರುವ ಹಿನ್ನಲೆಯಲ್ಲಿ ಹೈಕಮಾಂಡ್‌ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು ನೈತಿಕ ಬೆಂಬಲ ವ್ಯಕ್ತಪಡಿಸಿದ್ದಾರೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಹೈಕಮಾಂಡ್‌ನ ಪ್ರಭಾವಿ ನಾಯಕ ಕೆ.ಸಿ.ವೇಣುಗೋಪಾಲ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದ್ದು, ನಾವು ನಿಮ ಜೊತೆ ಇದ್ದೇವೆ. ಬಿಜೆಪಿಯ ಷಡ್ಯಂತ್ರವನ್ನು ಸಮರ್ಥವಾಗಿ ಎದುರಿಸೋಣ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. +ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಪಾದಯಾತ್ರೆ ನಡೆಸುತ್ತಿರುವ ಕುರಿತಂತೆ ಪ್ರಸ್ತಾಪಿಸಿದ ಕೆ.ಸಿ.ವೇಣುಗೋಪಾಲ್‌ ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್‌‍ ಪಕ್ಷ ನಡೆಸುವ ಹೋರಾಟದಲ್ಲಿ ತಾವು ರಾಜ್ಯಕ್ಕೆ ಬಂದು ಭಾಗವಹಿಸುವುದಾಗಿ ತಿಳಿಸಿದ್ದಾರೆ. +ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡಿರುವ ಹೈಕಮಾಂಡ್‌ ಯಾವುದೇ ಸಂದರ್ಭವಾದರೂ ನಾವು ನಿಮ ಜೊತೆ ನಿಲ್ಲುತ್ತೇವೆ ಎಂದಿದ್ದಾರೆಂದು ಹೇಳಲಾಗಿದೆ. +ಇದು ಸಿದ್ದರಾಮಯ್ಯ ಅವರ ಆತವಿಶ್ವಾಸವನ್ನು ಹೆಚ್ಚಿಸಿದ್ದು, ಬಿಜೆಪಿ, ಜೆಡಿಎಸ್‌‍ನ ಪಾದಯಾತ್ರೆ ರಾಜ್ಯಪಾಲರಿಂದ ಅಭಿಯೋಜನೆಗೆ ಪೂರ್ವಭಾವಿ ಅನುಮತಿಯ ಸಾಧ್ಯತೆ ಸೇರಿದಂತೆ ಹಲವು ಒತ್ತಡಗಳಿಂದ ಮುಜುಗರಕ್ಕೊಳಗಾಗಿದ್ದ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ನ ಭರವಸೆ ಆತವಿಶ್ವಾಸ ಹೆಚ್ಚಿಸಿದೆ ಎಂದು ಹೇಳಲಾಗಿದೆ. +ನಿನ್ನೆ ನಡೆದ ಸಚಿವರ ಉಪಹಾರಕೂಟ ಹಾಗೂ ಅನಂತರ ನಡೆದ ಸಂಪುಟ ಸಭೆ ನಿರ್ಣಯಗಳು ಸಿದ್ದರಾಮಯ್ಯ ಅವರಲ್ಲಿ ಸಚಿವರು ವಿಶ್ವಾಸ ಇಟ್ಟಿರುವುದನ್ನು ಸಾಬೀತುಪಡಿಸಿದವು. +ದೆಹಲಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌‍ನ ಸಂಸದರು ಮೂಡಾ ನಿವೇಶನ ಹಂಚಿಕೆ ಹಾಗೂ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ ಸಂಸತ್‌ ಮುಂದೆ ಪ್ರತಿಭಟನೆ ನಡೆಸಿದ್ದಲ್ಲದೆ ರಾಜ್ಯಸಭೆ, ಲೋಕಸಭೆಯ ಒಳಗೂ ಪ್ರಸ್ತಾಪ ಮಾಡಿದ್ದರು. +ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ದೆಹಲಿಗೆ ಕರೆಸಿಕೊಂಡ ಹೈಕಮಾಂಡ್‌ನ ನಾಯಕರು ಪ್ರಕರಣಗಳ ಬಗ್ಗೆ ಸುಧೀರ್ಘ ವಿವರಣೆ ಪಡೆದುಕೊಂಡಿದ್ದರು.ಈಗ ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಸಂಪುಟ ಸಭೆಯ ನಿರ್ಣಯದ ಬಳಿಕ ಸಿದ್ಧರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿರುವುದು ನಾಯಕತ್ವವನ್ನು ಗಟ್ಟಿಗೊಳಿಸಿದಂತಾಗಿದೆ. ರಾಜ್ಯಪಾಲರ ನಡವಳಿಕೆ ಹಾಗೂ ಬಿಜೆಪಿ-ಜೆಡಿಎಸ್‌‍ನ ಷಡ್ಯಂತರಗಳಿಗೆ ಕಾಂಗ್ರೆಸ್‌‍ ಪ್ರತ್ಯುತ್ತರಿಸಲಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_56_11.txt b/eesanje/url_46_56_11.txt new file mode 100644 index 0000000000000000000000000000000000000000..0e3409f023cc1f6cdbc6f353665d1fdd048f441a --- /dev/null +++ b/eesanje/url_46_56_11.txt @@ -0,0 +1,9 @@ +ಶೇ.91ರಷ್ಟು ಭರ್ತಿಯಾದ ಲಿಂಗನಮಕ್ಕಿ ಜಲಾಶಯ +ಬೆಂಗಳೂರು, ಆ.2-ರಾಜ್ಯದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಜಲ ವಿದ್ಯುತ್‌ ಉತ್ಪಾದಿಸುವ ಪ್ರಮುಖ ಜಲಾಶಯವಾದ ಲಿಂಗನಮಕ್ಕಿಯಲ್ಲಿ ಶೇ.91ರಷ್ಟು ನೀರು ಸಂಗ್ರಹವಾಗಿದ್ದು, ಶೀಘ್ರದಲ್ಲೇ ಗರಿಷ್ಠ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ 151.75 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಈ ಜಲಾಶಯದಲ್ಲಿ ಇಂದು 138.42 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ. ಭರ್ತಿಯಾಗಲು ಇನ್ನು 11 ಟಿಎಂಸಿ ನೀರು ಬೇಕಾಗಿದೆ. ಜಲಾಶಯದ ಒಳ ಹರಿವು 51,961 ಕ್ಯುಸೆಕ್ಸ್ ಇದ್ದು, ಹೊರ ಹರಿವು 3570 ಕ್ಯುಸೆಕ್ಸ್ ಇದೆ. +ಕಳೆದ ವರ್ಷ ಇದೇ ಅವಧಿಯಲ್ಲಿ 69.77 ಟಿಎಂಸಿ ಮಾತ್ರ ನೀರಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯವಿದು. ಸೂಪಾ ಜಲಾಶಯದಲ್ಲೂ ಶೇ.77ರಷ್ಟು ನೀರು ಸಂಗ್ರಹವಾಗಿದೆ. 44613 ಕ್ಯುಸೆಕ್ಸ್ ಒಳಹರಿವಿದೆ. ಗರಿಷ್ಠ 145.33 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ 111.61 ಟಿಎಂಸಿ ನೀರಿದೆ. +ಹಾಗೆಯೇ ವಾರಾಹಿ ಜಲಾಶಯದ ಗರಿಷ್ಠ ಸಾಮರ್ಥ್ಯ 31.10 ಟಿಎಂಸಿ ಆಗಿದ್ದು, 18.83 ಟಿಎಂಸಿಯಷ್ಟು ನೀರಿದೆ. ಒಳ ಹರಿವು 5202 ಕ್ಯುಸೆಕ್ಸ್ ನಷ್ಟಿದೆ. ಈ ಎರಡು ಜಲಾಶಯಗಳಿಗೆ ಸಾಕಷ್ಟು ಒಳಹರಿವು ಇಲ್ಲದಿರುವುದರಿಂದ ಸದ್ಯಕ್ಕೆ ಭರ್ತಿಯಾಗುವ ಸಾಧ್ಯತೆ ವಿರಳ. ಈ ಮೂರು ಜಲಾಶಯಗಳಲ್ಲಿ ಶೇ.82ರಷ್ಟು ನೀರು ಸಂಗ್ರಹವಾಗಿದೆ. ಸಾಕಷ್ಟು ಒಳಹರಿವು ಇದ್ದು, ಜಲಾನಯನ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಈ ಬಾರಿ ಜಲ ವಿದ್ಯುತ್‌ ಉತ್ಪಾದನೆಗೆ ಅನುಕೂಲವಾಗಲಿದೆ. ಅಂದರೆ, ಕಳೆದ ವರ್ಷಕ್ಕಿಂತ ಈ ಬಾರಿ ದುಪ್ಪಟ್ಟು ನೀರು ಈ ಜಲಾಶಯಗಳಲ್ಲಿದೆ. +ಸಂಘರ್ಷಕ್ಕೆ ತೆರೆ:ಕಾವೇರಿ ಕೊಳ್ಳದ ಜಲಾನಯನ ಭಾಗದ ಹಾರಂಗಿ, ಹೇಮಾವತಿ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿದ್ದು, ಈ ನಾಲ್ಕು ಜಲಾಶಯಗಳಿಗೆ 1,55,696 ಕ್ಯುಸೆಕ್ಸ್ ಒಳಹರಿವು ಇದೆ. 1,51,110 ಕ್ಯುಸೆಕ್ಸ್ ಹೊರ ಹರಿವು ಇದೆ. ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಒಳ ಹರಿವು ಸಹ ಇಳಿಕೆಯಾಗುತ್ತಿದೆ. +ಈಗಾಗಲೇ 100ಕ್ಕೂ ಹೆಚ್ಚು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಮೆಟ್ಟೂರು ಜಲಾಶಯವೂ ಭರ್ತಿಯಾಗಿದೆ. ಹೀಗಾಗಿ ಈ ಬಾರಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ಸಂಘರ್ಷಕ್ಕೆ ತೆರೆ ಬಿದ್ದಂತಾಗಿದೆ. +ಕೃಷ್ಣಾ ಕೊಳ್ಳದ ಮಲಪ್ರಭಾ ಜಲಾಶಯದಲ್ಲಿ ಶೇ.87ರಷ್ಟು ನೀರು ಸಂಗ್ರಹವಾಗಿದೆ. 19 ಸಾವಿರ ಕ್ಯುಸೆಕ್ಸ್ ಅಧಿಕ ಪ್ರಮಾಣದ ಒಳಹರಿವಿದೆ. ಈ ಜಲಾಶಯ ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳು ಭರ್ತಿಯಾಗಿವೆ. ಕೃಷ್ಣಾ ಕೊಳ್ಳದ ಜಲಾಶಯಗಳಿಗೆ ಅಂದರೆ, ಭದ್ರಾ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ನಾರಾಯಣಪುರ ಜಲಾಶಯಗಳಿಗೆ ಒಟ್ಟಾರೆ 5,24,181 ಕ್ಯುಸೆಕ್ಸ್ ನಷ್ಟು ಒಳಹರಿವಿದೆ. ಈ ಜಲಾಶಯಗಳಿಂದ 5,11,128 ಕ್ಯುಸೆಕ್ಸ್ ನಷ್ಟು ಹೊರ ಹರಿವಿದೆ. +ರಾಜ್ಯದ14 ಪ್ರಮುಖ ಜಲಾಶಯಗಳಲ್ಲಿ 895.62 ಟಿಎಂಸಿಯಷ್ಟು ಗರಿಷ್ಠ ಸಂಗ್ರಹ ಸಾಮರ್ಥ್ಯವಿದೆ. ಪ್ರಸ್ತುತ 731.64 ಟಿಎಂಸಿನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 599.77 ಟಿಎಂಸಿಯಷ್ಟು ಸಂಗ್ರಹವಾಗಿತ್ತು. ರಾಜ್ಯದಲ್ಲಿ ಅತಿವೃಷ್ಟಿ ಪ್ರವಾಹ ಉಂಟಾಗುತ್ತಿದ್ದರೂ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಾಕಷ್ಟು ನೀರು ಬರುತ್ತಿಲ್ಲ. 728 ಕ್ಯುಸೆಕ್ಸ್ ಮಾತ್ರ ಒಳಹರಿವು ಇದೆ. 30.42 ಟಿಎಂಸಿ ಗರಿಷ್ಠ ಸಾಮರ್ಥ್ಯದ ಈ ಜಲಾಶಯದಲ್ಲಿ 18.57 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 24.70 ಟಿಎಂಸಿ ನೀರು ಸಂಗ್ರಹವಾಗಿತ್ತು. \ No newline at end of file diff --git a/eesanje/url_46_56_12.txt b/eesanje/url_46_56_12.txt new file mode 100644 index 0000000000000000000000000000000000000000..eba9465bba48cb791e840088b97505f8a8899a4a --- /dev/null +++ b/eesanje/url_46_56_12.txt @@ -0,0 +1,6 @@ +ಮತ್ತೆ ಈರುಳ್ಳಿ ಬೆಲೆ ಏರಿಕೆ +ಬೆಂಗಳೂರು, ಜು.2-ಯಾವುದೇ ಅಡುಗೆ -ತಿಂಡಿ ಮಾಡಬೇಕಾದರೆ ಈರುಳ್ಳಿ ಇದ್ದರೆ ಚಂದ. ಇಲ್ಲ ಅಂದ್ರೆ ನಾಲಿಗೆಗೆ ರುಚಿ ತಟ್ಟುವುದಿಲ್ಲ. ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಬೆಳೆ ನಾಶವಾಗಿದ್ದು, ಬೆಲೆ ಏರಿಕೆಯಾಗಿದೆ. +ಸಾಮಾನ್ಯವಾಗಿ ತರಕಾರಿ ಹಾಗೂ ದಿನಸಿಗಳನ್ನು ಸಾಮಾನ್ಯ ಜನರು ಗ್ರಾಂ.ಗಳಲ್ಲಿ ಖರೀದಿಸುತ್ತಾರೆ. ಆದರೆ, ಈರುಳ್ಳಿಯನ್ನು ಮಾತ್ರ ಕೆಜಿ ಲೆಕ್ಕದಲ್ಲಿ ಕೊಂಡೊಯ್ಯುತ್ತಾರೆ. ಮೊದಲೆಲ್ಲ ಕೆಜಿ ಲೆಕ್ಕದಲ್ಲಿ ಮಾರಾಟವಾಗುತ್ತಿದ್ದ ಈರುಳ್ಳಿ ಈಗ 100 ರೂ.ಗೆ 2 ಕೆಜಿ, 3 ಕೆಜಿ ಅಂತ ಮಾರಾಟ ಮಾಡಲಾಗುತ್ತಿದೆ. +ಹೆಚ್ಚಾಗಿ ಈರುಳ್ಳಿ ಬೆಳೆಯುವ ಉತ್ತರ ಕರ್ನಾಟಕ, ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿದ್ದು, ಜಮೀನುಗಳೆಲ್ಲ ಜಲಾವೃತಗೊಂಡಿವೆ. ಜತೆಗೆ ದಾಸ್ತಾನು ಮಾಡಲಾಗಿದ್ದ ಮಾಲು ಕೂಡ ತೇವಾಂಶ ಹೆಚ್ಚಾಗಿ ಕೊಳೆಯುತ್ತಿದ್ದು , ಮಾರುಕಟ್ಟೆಗೆ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಹಾಗಾಗಿ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಯಲ್ಲಿ ಕೆಜಿಗೆ 50 ರೂ.ಗೆ ಮರಾಟವಾಗುತ್ತದೆ. +ಕಳೆದ ಕೆಲ ದಿನಗಳ ಹಿಂದೆ 100 ರೂ.ಗೆ 5 ಕೆಜಿ ಮಾರಾಟವಾಗುತ್ತಿದ್ದ ಈರುಳ್ಳಿ ಈಗ 100ರೂ.ಗೆ 2 ಕೆಜಿಗೆ ಮಾರಾಟ ಮಾಡಲಾಗುತ್ತಿದೆ. ಮೊದಲೆಲ್ಲ ಕೆಜಿ ಲೆಕ್ಕದಲ್ಲಿ ಮಾರಾಟ ಹೆಚ್ಚಾಗಿ ನಡೆಯುತ್ತಿತ್ತು. ಇತ್ತೀಚೆಗೆ 100ರೂ.ಗೆ 2 ಕೆಜಿ, ಮೂರು ಕೆಜಿ ಅಂತ ಮಾರಾಟ ಮಾಡಲಾಗುತ್ತಿದೆ. +ಸದ್ಯಕ್ಕೆ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಮಳೆ ಬಿಡುವು ಕೊಟ್ಟರೆ ಮಾತ್ರ ಹೊಸ ಬೆಳೆ ಮಾರುಕಟ್ಟೆಗೆ ಬರಲಿದೆ. ಅಲ್ಲಿಯವರೆಗೂ ಸದಸ್ಯಕ್ಕೆ ಬೆಳೆ ಇಳಿಯುವ ಸಾಧ್ಯತೆ ಇಲ್ಲ. ಇನ್ನೂ ಹೆಚ್ಚಾಗುವ ಲಕ್ಷಣಗಳು ಕಾಣುತ್ತಿವೆ.ಈ ಹಿನ್ನೆಲೆಯಲ್ಲಿ ಚಿಲ್ಲರೆ ಮಾರಾಟಗಾರರು ಮೂಟೆಗಟ್ಟಲೆ ಈ ರುಳ್ಳಿಯನ್ನು ದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_56_2.txt b/eesanje/url_46_56_2.txt new file mode 100644 index 0000000000000000000000000000000000000000..a5eb75942b82d34db1f79d486440213786efb98b --- /dev/null +++ b/eesanje/url_46_56_2.txt @@ -0,0 +1,5 @@ +ಚಂದ್ರಶೇಖರ್‌ ಗುರೂಜಿ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾ +ಹುಬ್ಬಳ್ಳಿ,ಆ.3– ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿಗೆ ಜಾಮೀನು ನೀಡಲು ಧಾರವಾಡ ಹೈಕೋರ್ಟ್‌ ನಿರಾಕರಿಸಿದೆ. +ನ್ಯಾಯಮೂರ್ತಿ ಎಸ್‌‍.ರಾಚಯ್ಯ ಅವರಿದ್ದ ಏಕ ಸದಸ್ಯ ಪೀಠ ದುಮವಾಡ ಗ್ರಾಮದ ನಿವಾಸಿ ಆರೋಪಿ ಮಹಾಂತೇಶ ಶಿರೂರ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸಮಾಜದಲ್ಲಿ ಆತಂಕ ಸೃಷ್ಠಿಸಿದೆ. +ಅಷ್ಟೇ ಅಲ್ಲ ಗುರೂಜಿ ಕುಟುಂಬ ಸೇರಿದಂತೆ ಸಾಕ್ಷಿಗಳಿಗೆ ತೊಂದರೆಯಾಗುವ ಸಾದ್ಯತೆ ಇದೆ ಎಂದು ಕಾರಣ ನೀಡಿ ಜಾಮೀನು ತಿರಸ್ಕರಿಸಿದೆ. +5, 2022 ರಂದು ಹುಬ್ಬಳ್ಳಿಯ ಉಣಕಲ್‌ ಸಮೀಪದ ಪ್ರೆಸಿಡೆಂಟ್‌ ಹೊಟೇಲ್‌ನಲ್ಲಿ ಮಹಾಂತೇಶ ಮತ್ತು ಆತನ ಸಹಚರ ಚೂರಿಯಿಂದ 50ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದರು.ಆರೋಪಿಗಳು ಸದ್ಯಕ್ಕೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿದ್ದು. ಹೈಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. \ No newline at end of file diff --git a/eesanje/url_46_56_3.txt b/eesanje/url_46_56_3.txt new file mode 100644 index 0000000000000000000000000000000000000000..b08ac75244fde2f10e84458dc862afb6fec0c06d --- /dev/null +++ b/eesanje/url_46_56_3.txt @@ -0,0 +1,7 @@ +ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ನಿರ್ದೇಶಕರಾದ ಎಂ.ಆರ್‌.ಮಮತಾ ನಿಧನ +ಬೆಂಗಳೂರು :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್‌. ಮಮತಾ (47) ಅವರು ನಿನ್ನೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. +ಪ್ರಸ್ತುತ ತುಮಕೂರು ಜಿಲ್ಲಾ ವಾರ್ತಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್‌.ಆರ್‌.ರವೀಶ್‌, ಮಗ ಪ್ರಜ್ವಲ್‌ ಹಾಗೂ ಅಪಾರ ಬಂಧುಗಳನ್ನು ಮಮತಾ ಅವರು ಅಗಲಿದ್ದಾರೆ. +ಬೆಂಗಳೂರಿನ ಅವರ ಮನೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯವರೆಗೂ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಅವರ ಅಂತ್ಯಕ್ರಿಯೆಯನ್ನು ತುಮಕೂರು ತಾಲ್ಲೂಕು ಆಲನೂರು ಗ್ರಾಮದ ಅವರ ತೋಟದಲ್ಲಿ ಮಧ್ಯಾಹ್ನ ನೆರವೇರಿಸಲಾಯಿತು. +ಮಮತಾ ಅವರು 1999ರಲ್ಲಿ ಈ ಸಂಜೆ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಮಮತಾ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರು, ಅಧಿಕಾರಿಗಳು, ಸಿಬ್ಬಂದಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಪ್ರೆಸ್‌‍ಕ್ಲಬ್‌, ಪತ್ರಕರ್ತರ ಸಹಕಾರ ಸಂಘ, ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌, ತುಮಕೂರು ಜಿಲ್ಲಾ ಪಂಚಾಯತ್‌ ಸಿಇಒ ಪ್ರಭು, ಎಸ್‌‍ಪಿ ಕೆ.ವಿ.ಅಶೋಕ್‌ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ. + +ಕ್ರಿಯಾಶೀಲ ಅಧಿಕಾರಿಯಾಗಿದ್ದ ಮಮತಾ ಅವರ ಸಾವು ಅತ್ಯಂತ ನೋವಿನ ಸಂಗತಿಯಾಗಿದೆ. ಅವರ ಆತಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪತ್ರಿಕಾ ಸಂಘಟನೆಗಳ ಮುಖಂಡರು ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_56_4.txt b/eesanje/url_46_56_4.txt new file mode 100644 index 0000000000000000000000000000000000000000..d49f5f8a2138df83574ec2edfc621eeb9daef55f --- /dev/null +++ b/eesanje/url_46_56_4.txt @@ -0,0 +1,6 @@ +822 ಮೆಟ್ರಿಕ್ ಟನ್ ಮಾವಿನ ಹಣ್ಣು ರಫ್ತು ಮಾಡಿ ದಾಖಲೆ ನಿರ್ಮಿಸಿದ ಬೆಂಗಳೂರು ಏರ್ಪೋರ್ಟ್ +ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (/ ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಸಾಧನೆ ಮಾಡಿದೆ. 2024ನೇ ಸಾಲಿನಲ್ಲಿ 822 ಮೆಟ್ರಿಕ್ ಟನ್‌ () ಮಾವಿನ ಹಣ್ಣಿನ ಸಾಗಾಟಣೆ ಮಾಡುವ ಮೂಲಕ ಈ ಬಾರಿ ಶೇ. 20 ರಷ್ಟು ಬೆಳವಣಿಗೆ ಕಂಡಿದೆ. +ಕಳೆದ ವರ್ಷದಲ್ಲಿ 685 ಎಟ್ರಿಕ್‌ ಟನ್‌ ಮಾವಿನಹಣ್ಣನ್ನು ರಫ್ತು ಮಾಡಲಾಗಿತ್ತು. ಈ ಬಾರಿ ಒಟ್ಟು 27 ಲಕ್ಷ ಮಾವಿನ ಹಣ್ಣನ್ನು ರಫ್ತು ಮಾಡುವ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಶೇ.59ರಷ್ಟು ಹೆಚ್ಚಳ ಕಂಡಿದೆ, ಸಾಗರೋತ್ತರ ಮಾರುಕಟ್ಟೆಗಳಲ್ಲಿ ಭಾರತೀಯ ಮಾವಿನಹಣ್ಣಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪೆರಿಷಬಲ್‌ ಸರಕುಗಳನ್ನು ರಫ್ತು ಮಾಡುವಲ್ಲಿ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಬದ್ಧತೆಯಿಂದ ರಫ್ತು ಪ್ರಮಾಣದಲ್ಲೂ ಏರಿಕೆ ಕಾಣುತ್ತಿದೆ. +ಈ ಋತುವಿನಲ್ಲಿ, ಯುಎಸ್‌ ಗೆ ಹೆಚ್ಚು ಮಾವಿನ ಹಣ್ಣುಗಳನ್ನು ರಫ್ತು ಮಾಡಲಾಗಿದೆ. ಪ್ರಮುಖವಾಗಿ, ವಾಷಿಂಗ್ಟನ್ ಡಲ್ಲೆಸ್ (ಐಎಡಿ), ಡಲ್ಲಾಸ್-ಫೋರ್ಟ್ ವರ್ತ್ (ಡಿಎಫ್‌ಡಬ್ಲ್ಯೂ), ಮತ್ತು ಸ್ಯಾನ್ ಫ್ರಾನ್ಸಿಸ್ಕೊ (ಎಸ್‌ಎಫ್‌ಒ) ನಂತಹ ವಿಮಾನ ನಿಲ್ದಾಣಗಳು ಭಾರತೀಯ ಮಾವು ಸಾಗಣೆಗೆ ಪ್ರಮುಖ ತಾಣವಾಗಿ ಹೊರಹೊಮ್ಮಿವೆ. ಇದರ ಜೊತೆಗೆ, ಚಿಕಾಗೋ (ಒಆರ್‌ಡಿ), ಸಿಯಾಟಲ್ (ಸಿಇಎ), ದುಬೈ (ಡಿಎಕ್ಸ್‌ಬಿ), ಲಂಡನ್ (ಎಲ್‌ಎಚ್‌ಆರ್‌), ಮತ್ತು ಹೂಸ್ಟನ್ (ಐಎಎಚ್‌) ನಂತಹ ಪ್ರಮುಖ ವಿಮಾನ ನಿಲ್ದಾಣಗಳು ಸೇರಿದಂತೆ 60 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಥಳಗಳಿಗೆ ರಫ್ತು ಮಾಡಲಾಗಿದೆ. ಈ ಮೂಲಕ ವಿಮಾನ ನಿಲ್ದಾಣವು ಭಾರತೀಯರ ಬೆಳೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ಕೃಷಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಗಳನ್ನು ತಲುಪಲು ಸಮರ್ಥವಾಗಿದೆ ಎಂಬುದನ್ನು ಸಾಬೀತು ಪಡಿಸಿದೆ. +ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಕಿ ರಘುನಾಥ್ ಮಾತನಾಡಿ, “ಬಿಎಲ್‌ಆರ್ ಏರ್‌ಪೋರ್ಟ್‌, ತಾಂತ್ರಿ ವಾಗಿ ಸುಧಾರಿತ ಕೋಲ್ಡ್ ಸ್ಟೋರೇಜ್ ಸೌಲಭ್ಯವಾದ ಡಬ್ಲ್ಯುಎಫ್‌ಎಸ್ ಬಿಎಲ್‌ಆರ್ ಕೂಲ್‌ಪೋರ್ಟ್ ಪೂರೈಕೆಯು ಪೆರಿಷೆಬಲ್‌ ಉತ್ಪನ್ನಗಳ ಗುಣಮಟ್ಟವನ್ನು ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಮಾವಿನ ರಫ್ತುಗಳನ್ನು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಿಸುವ ಈ ಸಾಧನೆಯು ಭಾರತೀಯ ಮಾವಿನಹಣ್ಣಿಗೆ, ವಿಶೇಷವಾಗಿ ಎರಡು ಪ್ರಮುಖ ಅಂತಾರಾಷ್ಟ್ರೀಯ ತಾಣಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಪ್ರಧಾನ ಗೇಟ್‌ವೇ ಆಗಿ ನಮ್ಮ ಸ್ಥಾನವನ್ನು ಬಲಪಡಿಸಿಕೊಂಡಿದ್ದೇವೆ ಎಂದರು. +ವ್ಯವಸ್ಥಾಪನಾ ಸಾಮರ್ಥ್ಯ, ಕಾರ್ಯತಂತ್ರದ ಪಾಲುದಾರಿಕೆ ಮತ್ತು ಕೃಷಿ ಕ್ಷೇತ್ರದ ಬೆಂಬಲದಿಂದ ವಿಮಾನ ನಿಲ್ದಾಣವು ಉತ್ತಮ ಗುಣಮಟ್ಟದ ತಾಜಾ ಉತ್ಪನ್ನಗಳ ರಫ್ತಿನಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ. ಆರ್ಥಿಕ ಬೆಳವಣಿಗೆಯಲ್ಲೂ ತನ್ನ ಪಾತ್ರವನ್ನು ಮುಂದುವರೆಸಿಕೊಂಡು ಸಾಗಿದೆ. \ No newline at end of file diff --git a/eesanje/url_46_56_5.txt b/eesanje/url_46_56_5.txt new file mode 100644 index 0000000000000000000000000000000000000000..53f972d2887a412f7327979a93dbc530f6b228e3 --- /dev/null +++ b/eesanje/url_46_56_5.txt @@ -0,0 +1,9 @@ +ಪಾದಯಾತ್ರೆ ಮೂಲಕ ಬಲ ಪ್ರದರ್ಶನಕ್ಕೆ ಬಿಜೆಪಿ-ಜೆಡಿಎಸ್‌‍ ಸಜ್ಜು +ಬೆಂಗಳೂರು,ಆ.2-ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದಲ್ಲಿ ನಿಯಮ ಬಾಹಿರವಾಗಿ ನಿವೇಶನ ಪಡೆದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್‌‍ ಜಂಟಿಯಾಗಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಾಳೆಯಿಂದ ಆರಂಭವಾಗಲಿದೆ.ನಾಳೆ ಬೆಳಗ್ಗೆ 8 ಗಂಟೆಗೆ ಕೆಂಗೇರಿ ಸಮೀಪದ ಮೈಸೂರು ರಸ್ತೆಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. +ಒಟ್ಟು ಏಳು ದಿನಗಳ ಕಾಲ ಅಂದರೆ ಆ.8ರವರೆಗೆ ಮೈಸೂರುವರೆಗೆ ಪಾದಯಾತ್ರೆ ಸಾಗಲಿದ್ದು, ಆ.10ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜೆಡಿಎಸ್‌‍ ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. +ನಾಳೆ ಬೆಳಗ್ಗೆ ಪ್ರಾರಂಭವಾಗಲಿರುವ ಪಾದಯಾತ್ರೆಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಸ್‌‍.ಯಡಿಯೂರಪ್ಪ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪ್ರಮುಖರಾದ ಆರ್‌.ಅಶೋಕ್‌, ಸುರೇಶ್‌ ಬಾಬು, ಛಲವಾದಿ ನಾರಾಯಣಸ್ವಾಮಿ, ಸಾ.ರಾ.ಮಹೇಶ್‌, ಬಂಡೆಪ್ಪ ಕಾಶ್ಯಂಪುರ್, ಅಶ್ವಥ್‌ ನಾರಾಯಣ, ಡಿ.ವಿ.ಸದಾನಂದಗೌಡ ಸೇರಿದಂತೆ ಎರಡು ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ. +ಮೊದಲ ದಿನ 16 ಕಿ.ಮೀ ಪಾದಯಾತ್ರೆ ಜರುಗಿದರೆ, 2ನೇ ದಿನ 22 ಕಿ.ಮೀ, ಎರಡನೇ ದಿನ 22 ಕಿ.ಮೀ, ಮೂರನೇ ದಿನ 20, 4ನೇ ದಿನ 20, ಐದನೇ ದಿನ 16, ಆರನೇ ದಿನ 17 ಹಾಗೂ ಕೊನೆಯ ದಿನದ 7 ಕಿ.ಮೀ ಪಾದಯಾತ್ರೆ ಸಾಗುವುದೊಂದಿಗೆಎ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯವಾಗಲಿದೆ. +8 ಗಂಟೆಗೆ ಪಾದಯಾತ್ರೆ ಪ್ರಾರಂಭವಾಗಿ ಬಿಡದಿಯಲ್ಲಿ ಮಧ್ಯಾಹ್ನ 1 ಗಂಟೆಗೆ ವೆಂಟೇಶ್ವರ ದೇವಸ್ಥಾನದಲ್ಲಿ ಭೋಜನ ಸ್ವೀಕರಿಸಿ ರಾತ್ರಿ 8 ಗಂಟೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಮಾಯಗಾನಹಳ್ಳಿಯಿಂದ ಯಾತ್ರೆ ಪ್ರಾರಂಭವಾಗಿ ರಾಮನಗರದ ಪದಾವತಿ ದೇವಸ್ಥಾನದಲ್ಲಿ ಭೋಜ ಸ್ವೀಕರಿಸಿ ನಂತರ ಸಂಜೆ 4.30ಕ್ಕೆ ಸಾರ್ವಜನಿಕ ಸಭೆ ನಡೆಯಲಿದೆ. ಕೆಂಗಲ್‌ನ ಕೆವಿಕೆ ಕನ್ವೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. +ಸೋಮವಾರ ನಿಡಘಟ್ಟದ ಸುಮಿತ್ರಾ ದೇವಿ ಕನ್ವೆಷನ್‌ ಹಾಲ್‌ನಿಂದ ಪ್ರಾರಂಭವಾಗಿ ಮಧ್ಯಾಹ್ನ ದೊಡ್ಡಮಾಳೂರಿನ ಶ್ರೀ ಚೌಡೇಶ್ವರಿ ಕನ್ವೆಷನ್‌ ಹಾಲ್‌ನಲ್ಲಿ ಭೋಜನ, ಭೈರಾಪಟ್ಟಣದಲ್ಲಿ ಸಂಜೆ ಕಾಫಿ ಹಾಗೂ ನಿಡುಘಟ್ಟದ ಸುಮಿತ್ರಾ ದೇವಿ ಕನ್ಷೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. +ಮಂಗಳವಾರ ಬೆಳಗ್ಗೆ 11 ಗಂಟೆಗೆ ಮದ್ದೂರಿನಲ್ಲಿ ಸಾರ್ವಜನಿಕ ಸಭೆ ನಡೆದರೆ ಮಧ್ಯಾಹ್ನ ಬಾಲಾಜಿ ಕನ್ವೆಷನ್‌ ಹಾಲ್‌ನಲ್ಲಿ ಭೋಜನ ಹಾಗೂ ಮಂಡ್ಯದ ಶಶಿಕಿರಣ ಕನ್ವೆಷನ್‌ ಹಾಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಮಂಡ್ಯದಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಸಭೆ, ಸುಮಾ ರವಿ ಕನ್ವೆಷನ್‌ ಹಾಲ್‌ನಲ್ಲಿ ಮಧ್ಯಾಹ್ನ ಭೋಜನ, ರಾತ್ರಿ 8 ಗಂಟೆಗೆ ತೂಬಿನಕೆರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. +ಗುರುವಾರ ಗೌಡಹಳ್ಳಿಯಿಂದ ಪ್ರಾರಂಭವಾಗಿ ಶ್ರೀರಂಗಪಟ್ಟಣದ ಮಂಜುನಾಥ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ, ಶುಕ್ರವಾರ ಶ್ರೀರಂಗಪಟ್ಟಣದಿಂದ ಮೈಸೂರಿಗೆ ಸಾಗಿ ಸಮಾರೋಪ ಸಮಾರಂಭ ಶನಿವಾರ ನಡೆಯಲಿದೆ. \ No newline at end of file diff --git a/eesanje/url_46_56_6.txt b/eesanje/url_46_56_6.txt new file mode 100644 index 0000000000000000000000000000000000000000..306061679975edfa5667797eabbe36873bdc5061 --- /dev/null +++ b/eesanje/url_46_56_6.txt @@ -0,0 +1,14 @@ +ಎಲ್ಲರ ಚಿತ್ತ ರಾಜಭವನದತ್ತ : ರಾಜಕೀಯ ಬೆಳವಣಿಗೆಗಳ ಬಗ್ಗೆ ಹೆಚ್ಚಿದ ಕುತೂಹಲ +ಬೆಂಗಳೂರು,ಆ.2-ಮುಡಾ ನಿವೇಶನ ಅಕ್ರಮ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಖಾಸಗಿ ದೂರಿನ ಕುರಿತು ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರು ತೆಗೆದುಕೊಳ್ಳುವ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ. +ಮುಖ್ಯಮಂತ್ರಿಗೆ ನೀಡಿರುವ ನೋಟೀಸ್‌‍ನ್ನು ಹಿಂಪಡೆಯಬೇಕೆಂದು ಸಚಿವ ಸಂಪು ಸಭೆಯಲ್ಲಿ ತೀರ್ಮಾನವನ್ನು ರಾಜ್ಯಪಾಲರು ಅಂಗೀಕರಿಸುತ್ತಾರೆಯೇ ಇಲ್ಲವೇ ತಿರಸ್ಕರಿಸುವರೇಂಬುದರ ಮೇಲೆ ಮುಂದಿನ ರಾಜಕೀಯ ಬೆಳವಣಿಗೆಗಳು ನಿಂತಿವೆ. ಸಾಮಾನ್ಯವಾಗಿ ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನು ಒಪ್ಪುವ ಸಾಧ್ಯತೆಗಳು ತೀರಾ ಕಡಿಮೆ. +ತಮಗಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡು ಮುಖ್ಯಮಂತ್ರಿ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವ ನಿದರ್ಶನಗಳು ಸಾಕಷ್ಟಿವೆ.ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಿಗೆ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಾರದೆಂದು ಸಚಿವ ಸಂಪುಟ ಸಭೆಒಂದು ಸಾಲಿನ ನಿರ್ಣಯವನ್ನು ಕೈಗೊಂಡಿದ್ದರೂ ರಾಜ್ಯಪಾಲರು ಅನುಮತಿ ನೀಡಿರುವ ಉದಾಹರಣೆಗಳು ಮುಂದಿವೆ. +ಇದೀಗ ನವದೆಹಲಿ ಪ್ರವಾಸದಲ್ಲಿರುವ ರಾಜ್ಯಪಾಲರು ಸೋಮವಾರ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಅವರು ತೆಗೆದುಕೊಳ್ಳುವ ಮುಂದಿನ ನಿರ್ಧಾರ ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.ಈ ಕ್ಷಣದವರೆಗೂ ರಾಜ್ಯಪಾಲರು ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಬಹಿರಂಗ ಹೇಳಿಕೆಯನ್ನು ಕೊಡದೆ ಎಲ್ಲವನ್ನೂ ಕಾಪಾಡಿಕೊಂಡು ಬಂದಿದ್ದಾರೆ. ಸರ್ಕಾರ ಶೋಕಾಸ್‌‍ ನೋಟಿಸ್‌‍ಗೆ ನೀಡುವ ಉತ್ತರವನ್ನು ನೋಡಿಕೊಂಡು ಕಾನೂನು ತಜ್ಞರ ಅಭಿಪ್ರಾಯ ತೆಗೆದುಕೊಂಡೇ ಮುಂದಿನ ಹೆಜ್ಜೆ ಇಡಲಿದ್ದಾರೆ ಎಂದು ಗೊತ್ತಾಗಿದೆ. +ನ್ಯಾಯಾಲಯದ ತೀರ್ಪುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕಾನೂನು ತಜ್ಞರ ಸಲಹೆ ಮೇರೆಗೆ ಅವರು ತಮ ಮುಂದಿನ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಭಾರದ್ವಾಜ್‌ ಮಾದರಿ ಆಗುವರೇ?:ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಕೇಳಿಬಂದಿದ್ದಾಗ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ಸಂಪುಟದ ನಿರ್ಣಯವನ್ನೇ ಲೆಕ್ಕಿಸದೇ ವಿಚಾರಣೆಗೆ ಅನುಮತಿ ನೀಡಿದ್ದರು. 2004ರ ಸುಪ್ರೀಂಕೋರ್ಟ್‌ ತೀರ್ಪಿನ ಒಂದು ಅಂಶವನ್ನು ಕೋಟ್‌ ಮಾಡಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. +ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್‌ಗಳ ಆರೋಪಗಳು ಬಂದಿದ್ದವು. ಈ ಆರೋಪಗಳ ಬಗ್ಗೆ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್‌ ಬಾಷಾ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 2011ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. +ಬಳಿಕ ಬಿಜೆಪಿ ಹೈಕಮಾಂಡ್‌ ಹಲವರಿಂದ ಕಾನೂನು ಸಲಹೆ ಪಡೆದುಕೊಂಡು ಬಿಎಸ್‌‍ವೈ ಸರ್ಕಾರದ ಮೂಲಕ ರಾಜ್ಯಪಾಲರಿಗೆ ಉತ್ತರಿಸಿತ್ತು. ಆದರೂ ಸಹ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್‌ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. +ಬಳಿಕ ಸಂಪುಟ ಸಭೆ ನಡೆಸಿ ಪ್ರಾಸಿಕ್ಯೂಷನ್‌ ವಿರುದ್ಧ ನಿರ್ಣಯ ಅಂಗೀಕರಿಸಲಾಗಿತ್ತು. ಆದರೆ ಸಂಪುಟ ನಿರ್ಣಯನ್ನು ಧಿಕ್ಕರಿಸಿ ಬಿಎಸ್‌‍ವೈ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದರು. +2004ರಲ್ಲಿ ಇಂತಹದೇ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಪೀಠವೊಂದು ಸ್ಪಷ್ಟವಾದ ತೀರ್ಪು ನೀಡಿದೆ. ರಾಜ್ಯಪಾಲರಾದವರು ಸಾಮಾನ್ಯವಾಗಿ ಸಚಿವರ ಸಲಹೆ, ಅಭಿಪ್ರಾಯವನ್ನು ಪಡೆದು ಕಾರ್ಯ ನಿರ್ವಹಿಸಬೇಕು ಹಾಗೂ ನಿರ್ಧಾರ ಪ್ರಕಟಿಸಬೇಕೇ ಹೊರತು ಅವರ ವಿವೇಚನೆಯಿಂದ ಅಲ್ಲ. ಕೆಲವೊಂದು ಸಂದರ್ಭಗಳಲ್ಲಿ ಮಾತ್ರ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ತೀರ್ಮಾನ ತೆಗೆದುಕೊಳ್ಳುವುದು ಸಮಂಜಸ ಎನಿಸುತ್ತದೆ ಎಂದು ತೀರ್ಪು ನೀಡಿತ್ತು. +ಈ ಹಿಂದೆ ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಇದೇ ತೀರ್ಪನ್ನು ಆಧರಿಸಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌‍ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಇತಿಹಾಸ. +ಸಾಂವಿಧಾನಿಕವಾಗಿ ಸ್ಪಷ್ಟವಾಗಿ ವ್ಯಾಖ್ಯಾನಿಸಲ್ಪಟ್ಟಿರುವ ನಿಯಮಗಳನ್ನು ರಾಜ್ಯಪಾಲರು ಪಾಲಿಸಲೇಬೇಕು. ಅನಿರ್ದಿಷ್ಟ ಕಾಲ ಯಾವುದೇ ನಿರ್ಧಾರ ಕೈಗೊಳ್ಳದೆ ಇರುವ ಆಯ್ಕೆಯನ್ನು ಸಂವಿಧಾನ ನೀಡಿಲ್ಲವಾದ್ದರಿಂದ ಸಂವಿಧಾನದ ಅನ್ವಯ ಮುಖ್ಯಮಂತ್ರಿ ಅಥವಾ ಸಚಿವ ಸಂಪುಟ ಸಲಹೆಗಳನ್ನು ಆಧರಿಸಿಯೇ ರಾಜ್ಯಪಾಲರು ಅಧಿಕಾರವನ್ನು ಚಲಾಯಿಸಬಹುದಾಗಿದೆ. +ಆದರೆ ಈ ಹಿಂದೆ ಯಡಿಯೂರಪ್ಪ ವಿರುದ್ಧ ವಿಚರಣೆಗೆ ಅನುಮತಿ ವಿರುದ್ಧ ಸಂಪುಟ ಸಭೆ ಒಂದು ಸಾಲಿನ ನಿರ್ಣಯ ಅಂಗೀಕರಿಸಿದ್ದರೂ ಸಹ ಅದನ್ನು ಲೆಕ್ಕಿಸಿದೇ ಹಂಸರಾಜ್‌ ಭಾರದ್ವಾಜ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. \ No newline at end of file diff --git a/eesanje/url_46_56_7.txt b/eesanje/url_46_56_7.txt new file mode 100644 index 0000000000000000000000000000000000000000..28bbda49c79c5a0753591afa23167c1b6f97135a --- /dev/null +++ b/eesanje/url_46_56_7.txt @@ -0,0 +1,10 @@ +ನಾನೇನೂ ತಪ್ಪು ಮಾಡಿಲ್ಲ, ಏಕೆ ಹೆದರಬೇಕು..? : ಸಿಎಂ ಸಿದ್ದರಾಮಯ್ಯ +ಮೈಸೂರು ,ಆ.2-ಮುಡಾ ನಿವೇಶನ ಹಂಚಿಕೆಯಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ರಾಜ್ಯಪಾಲರ ನೋಟಿಸ್‌‍ಗೆ ಏಕೆ ಹೆದರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರ, ಬಿಜೆಪಿ-ಜೆಡಿಎಸ್‌‍ನ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಮುಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ. +ಆದರೂ ಶೋಕಾಸ್‌‍ ನೋಟಿಸ್‌‍ ನೀಡುವ ಮೂಲಕ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆದಿದೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. ರಾಜ್ಯಪಾಲರು ನೋಟಿಸ್‌‍ ನೀಡಿದ ತಕ್ಷಣ ಸಿದ್ದರಾಮಯ್ಯ ಹೆದರಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಅವರು, ಬಹುಶಃ ಅಶೋಕ್‌ ಹೆದರಿರಬಹುದು. ನಾನೇಕೆ ಹೆದರಬೇಕು? ನಾನು ಯಾವುದೇ ತಪ್ಪು ಮಾಡಿಲ್ಲ. ಅಂದಮೇಲೆ ಭಯಪಡುವ ಅಗತ್ಯವಿಲ್ಲ. ರಾಜ್ಯಪಾಲರು ಕಾನೂನಿನ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದರು. +ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಶೋಕಾಸ್‌‍ ನೋಟಿಸ್‌‍ ಬಗ್ಗೆ ಚರ್ಚೆ ನಡೆಸಿ, ಕಾನೂನು ಬಾಹಿರವಾದ ನೋಟಿಸ್‌‍ನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ದೂರು ನೀಡಿರುವ ಟಿ.ಜೆ.ಅಬ್ರಹಾಂ ಬ್ಲಾಕ್‌ಮೇಲರ್‌ ವ್ಯಕ್ತಿ. ಈ ರೀತಿ ಹಲವು ಜನರ ವಿರುದ್ಧ ದೂರು ನೀಡಿದ್ದಾನೆ. ನಾನು ಜನರಿಂದ ಚುನಾಯಿತರಾದ 136 ಶಾಸಕರ ಪ್ರತಿನಿಧಿಯಾದ ಮುಖ್ಯಮಂತ್ರಿ. ನನಗೆ ಶೋಕಾಸ್‌‍ ನೋಟಿಸ್‌‍ ನೀಡುವಾಗ ಕಾನೂನಾತಕ ಅಂಶಗಳ ಸಮಗ್ರ ಪರಿಶೀಲನೆ ನಡೆಯಬೇಕು. ಆದರೆ ಅದಾವುದೂ ಇಲ್ಲದೇ ಆತುರವಾಗಿ ನೋಟಿಸ್‌‍ ನೀಡಲಾಗಿದೆ ಎಂದು ದೂರಿದರು. +ಅಬ್ರಹಾಂ ಬೆಳಗ್ಗೆ 11.30ಕ್ಕೆ ದೂರು ನೀಡಿದ್ದಾರೆ. ಅದೇ ದಿನ ಸಂಜೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ಸುದೀರ್ಘ ವಿವರಣೆ ನೀಡಿ ಲಿಖಿತ ಉತ್ತರ ನೀಡಿದ್ದಾರೆ.ಇದಾವುದನ್ನೂ ರಾಜ್ಯಪಾಲರು ಗಮನಿಸಿಲ್ಲ. +ದೂರು ಬಂದ ದಿನ ರಾತ್ರಿ 10 ಗಂಟೆಗೆ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಲಿಂಗ ಸ್ವಾಮಿ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರಿಗೆ ಕರೆ ಮಾಡಿ ಶೋಕಾಸ್‌‍ ನೋಟಿಸ್‌‍ ಸಿದ್ಧವಿದೆ ತೆಗೆದುಕೊಳ್ಳಿ ಎಂದಿದ್ದಾರೆ. ರಾತ್ರಿಯಾಗಿದ್ದಕ್ಕೆ ಅಂದು ನೋಟಿಸ್‌‍ ಸ್ವೀಕರಿಸಿಲ್ಲ. ಮಾರನೇ ದಿನ ಬೆಳಗ್ಗೆ 2 ಗಂಟೆಗೆ ನೋಟಿಸ್‍ ಕೊಟ್ಟಿದ್ದಾರೆ.ಇದೇ ರೀತಿ ಅಭಿಯೋಜನೆಗೆ ಅನುಮತಿ ನೀಡುವಂತೆ ರಾಜ್ಯಪಾಲರ ಮುಂದೆ ಹಲವಾರು ದೂರುಗಳಿವೆ. ಬಿಜೆಪಿಯ ಶಾಸಕರಾದ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ, ಜನಾರ್ಧನ ರೆಡ್ಡಿ, ಅವರ ವಿರುದ್ಧದ ದೂರುಗಳು ಹಲವಾರು ವರ್ಷಗಳಿಂದ ಬಾಕಿ ಇವೆ. ಅವುಗಳ ವಿಚಾರದಲ್ಲಿ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. +ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ. ಕಾನೂನು ಬಾಹಿರವಾಗಿ ಸಂವಿಧಾನಕ್ಕೆ ವಿರುದ್ಧವಾದ ನಡವಳಿಕೆಯನ್ನು ಅನುಸರಿಸಲಾಗಿದ್ದು, ಪ್ರಜಾಪ್ರಭುತ್ವವನ್ನು ನಾಶ ಮಾಡುವ ಹುನ್ನಾರವಾಗಿದೆ. ನನ್ನ ಪಾತ್ರ ಇಲ್ಲದೇ ಇದ್ದರೂ ಅನಗತ್ಯವಾಗಿ ನೋಟಿಸ್‌‍ ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. +ಸಂಪುಟದ ಸಲಹೆ ಮೇರೆಗೆ ರಾಜ್ಯಪಾಲರು ಕೆಲಸ ಮಾಡಬೇಕು. ಈ ವಿಚಾರವಾಗಿ ಸಂಪುಟದ ಸಲಹೆ ಕೇಳಿಲಿಲ್ಲ. ನಾವು ನೀಡಿಲ್ಲ. ಆದರೂ ನೋಟಿಸ್‌‍ ಕೊಟ್ಟಿದ್ದೇಕೆ? ಮುಡಾ ನಿವೇಶನ ಹಂಚಿಕೆ ಹಗರಣಗಳನ್ನು ತನಿಖೆ ನಡೆಸಲು ಜು.14ರಂದು ನ್ಯಾಯಾಂಗ ಆಯೋಗ ರಚಿಸಲಾಗಿದೆ. ಅದರ ವರದಿ ಬಂದಿಲ್ಲ ಎಂದು ತಿಳಿಸಿದರು. +ಜೆಡಿಎಸ್‌‍-ಬಿಜೆಪಿ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಆರಂಭದಲ್ಲಿ ಈ ಪ್ರಕರಣದಲ್ಲಿ ಏನೂ ಇಲ್ಲ ಪಾದಯಾತ್ರೆ ಬೇಡ ಎಂದು ಕುಮಾರಸ್ವಾಮಿ ಹೇಳಿದರು.ರಾಜ್ಯದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟದಲ್ಲಿದ್ದಾರೆ. +ಈಗ ಪಾದಯಾತ್ರೆ ಏಕೆ ಎಂದು ಕೇಂದ್ರ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು. ಈಗ ಅವರು ಪಾದಯಾತ್ರೆಗೆ ಹೋಗುತ್ತಿರುವುದು ಸ್ವ ಇಚ್ಛೆಯಿಂದಲ್ಲ ಎಂದರು. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಏನೇ ಹುನ್ನಾರ ನಡೆಸಿದರೂ ಅದನ್ನು ಎದುರಿಸಲು ನಾವು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು. \ No newline at end of file diff --git a/eesanje/url_46_56_8.txt b/eesanje/url_46_56_8.txt new file mode 100644 index 0000000000000000000000000000000000000000..aaba760f35b4f4c574cfa2e29e36b49992ff910d --- /dev/null +++ b/eesanje/url_46_56_8.txt @@ -0,0 +1,10 @@ +ಭವಿಷ್ಯದ ಸವಾಲು ಎದುರಿಸಲು ನ್ಯಾನೋ ತಂತ್ರಜ್ಞಾನ ಬಳಕೆಗೆ ಸಿಎಂ ಸಿದ್ದರಾಮಯ್ಯ ಕರೆ +ಬೆಂಗಳೂರು, ಆ.2-ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್‌, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ದೇಶದಲ್ಲೇ ಪ್ರತಿಷ್ಠಿತವಾಗಿರುವ ಬೆಂಗಳೂರು ಇಂಡಿಯಾ ನ್ಯಾನೋ ಸಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಇವುಗಳಿಗೆ ನ್ಯಾನೋ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಸಂಶೋಧಿಸಲು ವಿಜ್ಞಾನಿಗಳಿಗೆ ಮತ್ತು ಇಂಜಿನಿಯರ್‌ಗಳು ಮುಂದಾಗಬೇಕು ಎಂದು ಹೇಳಿದರು. +ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯ, ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳ ಮತ್ತು ಅವುಗಳ ಪರಿಹಾರ ಸಾಧ್ಯತೆಗಳ ವಿಚಾರ ವಿನಿಮಯ ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ. +ಇಂತಹ ಅಂತಾರಾಷ್ಟ್ರೀಯ ಸಮಾವೇಶಗಳು ಪರಸ್ಪರ ಸಂಪರ್ಕ ಸಾಧಿಸಲು, ಜ್ಞಾನವನ್ನು ಹಂಚಿಕೊಳ್ಳಲು, ತಾಂತ್ರಿಕತೆಗಳ ವಿನಿಮಯಕ್ಕೆ, ಕೌಶಲ್ಯ ಅಭಿವೃದ್ಧಿಗೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಸಾಕಷ್ಟು ಅವಕಾಶವನ್ನು ಕಲ್ಪಿಸಲಿದೆ ಎಂದು ಅಭಿಪ್ರಾಯಪಟ್ಟರು. +ಯುವ ಉದ್ಯಮಿಗಳು ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗ ಪಡೆದುಕೊಂಡು ರಾಜ್ಯದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ಮುಕ್ತ ಆಹ್ವಾನ ನೀಡುವುದಾಗಿ ಹೇಳಿದರು.ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದರು. +ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ ರಾಜ್ಯ ಮುಂಚೂಣಿಯಲ್ಲಿದೆ. ಐಐಎಸ್ಸಿ, ಜೆಎನ್‌ಸಿಎಎಸ್‌‍ಆರ್‌, ಎನ್‌ಸಿಬಿಎಸ್‌‍, ಸಿಇಎನ್‌ಎಸ್‌‍ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ರಾಷ್ಟ್ರದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ತಮಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ನಿಭಾಯಿಸಲಿದೆ ಎಂದು ವಿಶ್ವಾಸವ್ಯಕ್ತ ಪಡಿಸಿದರು. +ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರು ಈ ಪ್ರತಿಷ್ಠಿತ ನ್ಯಾನೋ ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸಿದ್ದರು. ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್‌ ಘೋಷ್‌ ಅವರನ್ನು ಅಭಿನಂದಿಸಿದರು. +ನ್ಯಾನೋ ಸಮಾವೇಶವನ್ನು 2007ರಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲು ಮಾರ್ಗದರ್ಶನ ನೀಡುತ್ತಿರುವ ಭಾರತ ರತ್ನ ಪ್ರೊ.ಸಿ.ಎನ್‌.ಆರ್‌. ರಾವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದ ಮುಖ್ಯಮಂತ್ರಿಯವರು, 13 ನೇ ಬೆಂಗಳೂರು ಇಂಡಿಯಾ ನ್ಯಾನೋ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು. +ಭಾರತರತ್ನ ಪ್ರೊ.ಸಿ.ಎನ್‌.ಆರ್‌. ರಾವ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎನ್‌.ಎಸ್‌‍.ಬೋಸರಾಜ್‌, ಶಾಸಕರಾದ ರಿಜ್ವಾನ್‌ ಅರ್ಹದ್, ಅಜಯ್‌ಸಿಂಗ್‌, ಕಿರಣ್‌ ಮಜೂಂದಾರ್‌ ಶಾ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರಿದ್ದರು. \ No newline at end of file diff --git a/eesanje/url_46_56_9.txt b/eesanje/url_46_56_9.txt new file mode 100644 index 0000000000000000000000000000000000000000..95734fae358893dfa33d4776179d61a0554a1cde --- /dev/null +++ b/eesanje/url_46_56_9.txt @@ -0,0 +1,9 @@ +ರಾಜ್ಯದ ಹಲವೆಡೆ ಗುಡ್ಡ ಕುಸಿತ, ಜನರಲ್ಲಿ ಆತಂಕ +ಬೆಂಗಳೂರು, ಆ.2-ಮುಂಗಾರು ಮಳೆಯ ಅಬ್ಬರಕ್ಕೆ ಪಶ್ಚಿಮ ಘಟ್ಟಗಳು ನಲುಗಿ ಹೋಗಿವೆ. ಮಳೆಯ ರೌದ್ರ ನರ್ತನಕ್ಕೆ ಹಲವೆಡೆ ಭೂಕುಸಿತ ಉಂಟಾಗಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಮಲೆನಾಡು, ಕರಾವಳಿ ಭಾಗದಲ್ಲಿ ಬೆಟ್ಟ- ಗುಡ್ಡಗಳು ಕುಸಿದು ಬೀಳುತ್ತಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. +ಅತ್ತ ಕೇರಳದ ವಯನಾಡಿನಲ್ಲಿ ಭೂಕುಸಿತ ದುರಂತ ಸಂಭವಿಸಿ ನೂರಾರು ಜನ ಸಾವನ್ನಪ್ಪಿ ಮತ್ತೆ ನೂರಾರು ಜನ ನಾಪತ್ತೆಯಾಗಿ ಬಿರುಸಿನ ಕಾರ್ಯಾಚರಣೆ ನಡೆಯುತ್ತಿದೆ.ಇತ್ತ ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ನಿಲ್ಲದ ಮಳೆಯ ಅಬ್ಬರಕ್ಕೆ ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಉಂಟಾಗಿ ಹಲವು ಅನಾಹುತಗಳು ಸಂಭವಿಸುತ್ತಿವೆ. +ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಪ್ರಾಣಾಪಾಯ ಆಗದಿದ್ದರೂ ನಿರಂತರವಾಗಿ ಗುಡ್ಡ, ಭೂಮಿ ಕುಸಿಯುತ್ತಿರುವುದು ಜನರಲ್ಲಿ ಆತಂಕದ ವಾತಾವರಣ ಉಂಟು ಮಾಡಿದೆ. ಮಳೆ ಬೇಕು, ಬೇಕು ಎನ್ನುತ್ತಿದ್ದ ಜನ ಈಗ ಮಳೆ ಸಾಕಪ್ಪ ದೇವರೇ ಎಂದು ಹೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನರು ಪ್ರವಾಹದ ಭೀತಿಯಲ್ಲಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಕಡೆ ಸೇತುವೆಗಳು, ರಸ್ತೆಗಳು, ಮಳೆಯ ಅಬ್ಬರಕ್ಕೆ ಕೊಚ್ಚಿಕೊಂಡು ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. +ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರ ಬಿಡುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ ಭಾಗದಲ್ಲಿ ಜನರು ಜೀವ ಕೈಯಲ್ಲಿ ಹಿಡಿದು ಜೀವನ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಇನ್ನು ಯಾವ ಪ್ರಮಾಣದ ಅಪಾಯ ಎದುರಾಗಬಹುದೋ ಎಂಬ ಆತಂಕ ಉಂಟಾಗಿದೆ. +ಹಾಸನದ ಶಿರಾಡಿ ಘಾಟ್ನ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡ ತಪ್ಪಲೆ ಬಳಿ ಭೂಕುಸಿತ ಮುಂದುವರೆದಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಶಿರಾಡಿ ಘಾಟ್ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದರಿಂದ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. +ಕಂದಾಯ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಾಡಿ ಘಾಟ್ನಲ್ಲಿ ಸದ್ಯ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಪುತ್ತೂರು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ಬೆಳಗಿನ ಜಾವ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. +ಬದಲಿ ರಸ್ತೆ ಪುತ್ತೂರು ಪೇಟೆ ಬಳಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು. ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಗಾಗ್ಗೆ ಗುಡ್ಡ ಕುಸಿಯುತ್ತಲೇ ಇರುತ್ತದೆ. ಇಂದು ಭಾರೀ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದ್ದು, ನಗರ ಸಭೆ ಅಧಿಕಾರಿಗಳು, ಪೊಲೀಸರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. +ಮುಂಗಾರು ಮಳೆಯ ಅಬ್ಬರ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ವ್ಯಾಪಿಸಿದೆ. ಹಲವೆಡೆ ಕಟ್ಟೆಚ್ಚರ ಘೋಷಿಸಲಾಗಿದೆ. ಮತ್ತೆ ಕೆಲವೆಡೆ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. \ No newline at end of file diff --git a/eesanje/url_46_57_1.txt b/eesanje/url_46_57_1.txt new file mode 100644 index 0000000000000000000000000000000000000000..89c22eae3785dba0b2b7f2febc406456385bcc33 --- /dev/null +++ b/eesanje/url_46_57_1.txt @@ -0,0 +1,6 @@ +ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಜೆಡಿಎಸ್‌‍ ನಾಯಕರಿಗೆ ಹೆಚ್‌ಡಿಕೆ ಸೂಚನೆ +ಬೆಂಗಳೂರು, ಆ.2-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣದ ವಿರುದ್ಧ ಬಿಜೆಪಿ ನಾಳೆಯಿಂದ ಆರಂಭಿಸಲಿರುವ ಬೆಂಗಳೂರಿನಿಂದ ಮೈಸೂರುವರೆಗಿನ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ಜೆಡಿಎಸ್‌‍ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ. +ಬೆಂಗಳೂರಿನ ಕೆಂಗೇರಿಯಲ್ಲಿರುವ ಕೆಂಪಮ ದೇವಸ್ಥಾನದಿಂದ ಮೈಸೂರು ನಗರದವರೆಗೆ ಜೆಡಿಎಸ್‌‍ ಹಾಗೂ ಬಿಜೆಪಿ ಪಕ್ಷಗಳು ಜಂಟಿಯಾಗಿ ಪಾದಯಾತ್ರೆಯನ್ನು ಹಮಿಕೊಂಡಿವೆ.ಪಾದಯಾತ್ರೆ ವಿಚಾರದಲ್ಲಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಮಾಜಿ ಶಾಸಕ ಪ್ರೀತಂಗೌಡ ಸಾರಥ್ಯದಲ್ಲಿ ನಡೆಯುವ ಪಾದಯಾತ್ರೆಗೆ ಬೆಂಬಲವಿಲ್ಲ ಎಂದು ಕುಮಾರಸ್ವಾಮಿ ಬಹಿರಂಗವಾಗಿ ಅಸಮಾಧಾನದ ಹೇಳಿಕೆ ನೀಡಿದ್ದರು. +ಇದರ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್‌ ದಾಸ್‌‍ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವೊಲಿಕೆ ಮಾಡಿದ್ದರು. ಮನವೊಲಿಕೆ ನಂತರ ಪಾದಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕುಮಾರಸ್ವಾಮಿ ತಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ನಿರ್ದೇಶನ ನೀಡಿದ್ದಾರೆ. +ನಾಳೆಯಿಂದ ಪ್ರಾರಂಭವಾಗುವ ಪಾದಯಾತ್ರೆಯಲ್ಲಿ ಪಕ್ಷದ ಮುಖಂಡರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರು ಹಾಗೂ ತಮ ಬೆಂಬಲಿಗರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಜೆಡಿಎಸ್‌‍ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದ್ದಾರೆ. +ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್‌, ಡಿ. ಕುಮಾರಸ್ವಾಮಿರವರ ಸೂಚನೆ ಮೇರೆಗೆ ಪಕ್ಷದ ಮುಖಂಡರಿಗೆ ಪಾಲ್ಗೊಳ್ಳಲು ಅವರು ಕರೆ ನೀಡಿದ್ದಾರೆ.ಬೆಂಗಳೂರು ಮಹಾನಗರ ಘಟಕದ ಜೆಡಿಎಸ್‌‍ ಅಧ್ಯಕ್ಷ ಹೆಚ್‌.ಎಂ.ರಮೇಶ್‌ಗೌಡ ಅವರ ನೇತೃತ್ವದಲ್ಲಿ ಸಭೆ ಸೇರಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. \ No newline at end of file diff --git a/eesanje/url_46_57_10.txt b/eesanje/url_46_57_10.txt new file mode 100644 index 0000000000000000000000000000000000000000..0805ffde703fa6ece490c74fb66a8fc4a150f047 --- /dev/null +++ b/eesanje/url_46_57_10.txt @@ -0,0 +1,8 @@ +ಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಆ.1– ರಾಜ್ಯಾದ್ಯಂತ ಕಳೆದೆರಡು ವಾರಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಆಗಸ್ಟ್‌ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. +ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದೆ. +ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ. +ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜೋಯಿಡಾ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. +ಕಾರವಾರ ನಗರದ ಗ್ರೀನ್‌ ಸ್ಟ್ರೀಟ್‌ ರಸ್ತೆ, ಹೈಚರ್ಚ್‌ ಅಬ್ಬುವಾಡ ರಸ್ತೆ, ಪದನಾಭನಗರ ಸಂಪೂರ್ಣ ಜಲಾವೃತಗೊಂಡಿದೆ.ಅಲ್ಲದೆ, ಅರಗ, ಚಂಡೀಯ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ ವಿಧಿಸಲಾಗಿದೆ. +ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಖಡಿತಗೊಂಡಿವೆ. +ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ ಪರಿಣಾಮ ನದಿ ಪಾತ್ರದಲ್ಲಿ ಇರುವ ಜಮೀನುಗಳು ಜಲಾವೃತಗೊಂಡು ತೆಂಗು- ಅಡಿಕೆ, ಭತ್ತದ ಗದ್ದೆಗಳು ಮುಳುಗಡೆಯಾಗಿವೆ. ಮೆಕ್ಕೆ ಜೋಳದ ತೆನೆ ಮೊಳಕೆಯೊಡೆಯುವ ಮುನ್ನ ಸಸಿಗಳು ನೆಲಕಚ್ಚಿವೆ. ನದಿ ನೀರು ವಾರಗಟ್ಟಲೆ ಅಡಿಕೆ ತೋಟದಲ್ಲಿ ನಿಂತರೆ ಅಡಿಕೆ ಗಿಡದ ಕಾಂಡಗಳು ಕೊಳೆಯುವ ಆತಂಕ ಎದುರಾಗಿದೆ. \ No newline at end of file diff --git a/eesanje/url_46_57_11.txt b/eesanje/url_46_57_11.txt new file mode 100644 index 0000000000000000000000000000000000000000..c89461f2214c5f8fb0d2f5bf9a8a5920bbb99879 --- /dev/null +++ b/eesanje/url_46_57_11.txt @@ -0,0 +1,18 @@ +ಪ್ರಧಾನಿ ಭೇಟಿಯಾಗಿ ಡಿಸಿಎಂ ಡಿಕೆಶಿ ಮಾಡಿನ ಮನವಿಗಳೇನು..? ಇಲ್ಲಿದೆ ವಿವರ +ನವದೆಹಲಿ,ಜು.31-ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನವದೆಹಲಿಯಲ್ಲಿಂದು ಭೇಟಿ ಮಾಡಿ ಬೆಂಗಳೂರು ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಾಕಿ ಇರುವ ಯೋಜನೆಗಳಿಗೆ ಮಂಜೂರಾತಿ ಕೊಡಿಸುವಂತೆ ಮನವಿ ಮಾಡಿದ್ದಾರೆ. +ಪ್ರಧಾನಿಯವರಿಗೆ ನೀಡಲಾಗಿರುವ ಪತ್ರದಲ್ಲಿ ಮೂರನೇ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಲಾಗಿದೆ. ಈ ಹಿಂದೆ ಗಮನ ಸೆಳೆದಂತೆ ರಾಜ್ಯದ ಬಹುಮುಖ್ಯ ಗಂಭೀರ ವಿಚಾರಗಳು ಹಾಗೂ ಯೋಜನೆಗಳಿಗೆ ಅದರಲ್ಲೂ ನಗರಾಭಿವೃದ್ಧಿ ಮತ್ತು ಬೆಂಗಳೂರಿನ ಸುಧಾರಣೆಗೆ ನಿಮ ಮಾರ್ಗದರ್ಶನ ಹಾಗೂ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ. +ನಿಮ ಅಮೂಲ್ಯವಾದ ದೃಷ್ಟಿಕೋನ ಮತ್ತು ತಜ್ಞತೆ ಕರ್ನಾಟಕದ ಪ್ರಗತಿಯಲ್ಲಿರುವ ಯೋಜನೆಗಳ ವೇಗೋತ್ಕರ್ಷಕ್ಕೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಅಗತ್ಯವಿದೆ. ಈಗಾಗಲೇ ಬೆಂಗಳೂರಿನ ಸುಧಾರಣೆ ಪ್ರಸ್ತಾವಿತ ಹಲವು ಯೋಜನೆಗಳ ಅನುಮೋದನೆಗೆ ನಿಮ ಮಧ್ಯಪ್ರವೇಶ ಅಗತ್ಯ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. +ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸುರಂಗ ರಸ್ತೆ ಹಾಗೂ ಮೇಲ್ಸೇತುವೆಗಳ ನಿರ್ಮಾಣ ಅಗತ್ಯವಿದೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 77.6 ಕಿ.ಮೀ. ನಗರದ ಒಳಗೆ ಹಾದುಹೋಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ತೀವ್ರವಾಗಿದೆ. ವಾಹನಗಳ ಸುಗಮ ಓಡಾಟಕ್ಕಾಗಿ ಮೇಲ್ಸೇತುವೆ ಹಾಗೂ ಸುರಂಗಗಳ ನಿರ್ಮಾಣ ಅಗತ್ಯವಿದೆ. ರಾಷ್ಟ್ರೀಯ ಹೆದ್ದಾರಿ 7 ಕ್ಕೆ ಹೊಸೂರಿನಿಂದ ಬಳ್ಳಾರಿ ಸಂಪರ್ಕಗೊಳ್ಳುತ್ತಿದ್ದು, ಕೆ.ಆರ್‌.ಪುರಂ ರಸ್ತೆಯಿಂದ ಮೈಸೂರು ರಸ್ತೆಯವರೆಗೆ ಇದು ಸುರಂಗ ರಸ್ತೆ ನಿರ್ಮಾಣದ ಔಚಿತ್ಯದ ಅಧ್ಯಯನ ನಡೆಸಲಾಗಿದೆ. ಭೂ ಸ್ವಾದೀನದ ಖರ್ಚನ್ನು ತಗ್ಗಿಸುವ ಅಗತ್ಯವಿದೆ. +ಎರಡು ಮೇಲ್ಸೇತುವೆ ಹಾಗೂ ಸುರಂಗ ಮಾರ್ಗಗಳಿಗಾಗಿ 36,950 ಕೋಟಿ ರೂ. ವೆಚ್ಚವಾಗಲಿದ್ದು, ಅಗತ್ಯ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.ಬೆಂಗಳೂರು ಮೆಟ್ರೋ ಯೋಜನೆಯ 5 ಕಾರಿಡಾರ್‌ಗಳಲ್ಲೂ ಉಪನಗರಗಳನ್ನು ಸಂಪರ್ಕಿಸುವಂತೆ ವಿಸ್ತರಣೆಯ ಅಗತ್ಯವಿದೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. +ಬಿಟಿಎಂ ಲೇಔಟ್‌ನಲ್ಲಿ ರೂಪಿಸಲಾಗಿರುವ ಡಬ್ಬಲ್‌ ಡೆಕ್ಕರ್‌ ಯೋಜನೆ ಯಶಸ್ವಿಯಾಗಿದ್ದು, ಅದೇ ಮಾದರಿಯಲ್ಲಿ ಬೆಂಗಳೂರಿನಾದ್ಯಂತ ಮೆಟ್ರೊ ಮತ್ತು ಮೇಲ್ಸೇತುವೆ ರಸ್ತೆ ಸಂಯೋಜಿತ ಯೋಜನೆಗೆ ಪ್ರಧಾನಿಯವರ ಬೆಂಬಲ ಕೇಳಲಾಗಿದೆ. ಇದೊಂದು ಅನ್ವೇಷಣಾತಕ ಯೋಜನೆಯಾಗಿದೆ. +ಜನಸಂಖ್ಯೆಗನುಗುಣವಾಗಿ ಬೆಂಗಳೂರಿನ ಮೂಲಸೌಲಭ್ಯಕ್ಕಾಗಿ ಡಬ್ಬಲ್‌ ಡೆಕ್ಕರ್‌ ವ್ಯವಸ್ಥೆ ಅಗತ್ಯವಿದೆ. ಮೇಲ್ಸೇತುವೆ ಮಾರ್ಗದಲ್ಲಿ ಮೆಟ್ರೊ ಹಳಿಗಳು ಅದರ ಕೆಳಗೆ ಸಿಗ್ನಲ್‌ ಮುಕ್ತ ಮೇಲ್ಸೇತುವೆ ರಸ್ತೆ ನಿರ್ಮಾಣದಿಂದ ಭೂಸ್ವಾಧೀನದ ವೆಚ್ಚ ಕಡಿಮೆಯಾಗುವುದರ ಜೊತೆಗೆ ತಡೆರಹಿತ ಸಂಚಾರ ನಡೆಯಲಿದೆ ಎಂದಿದ್ದಾರೆ. +ಸಿಲಿಕಾನ್‌ ಸಿಟಿ ಬೆಂಗಳೂರಿನ ಅಭಿವೃದ್ಧಿಯ ಬಗ್ಗೆ ಪ್ರಧಾನಿ ಬಗ್ಗೆ ಸುದೀರ್ಘ ವಿವರಣೆ ನೀಡಿರುವ ಡಿ.ಕೆ.ಶಿವಕುಮಾರ್, 73.04 ಕಿ.ಮೀ. ಉದ್ದದ 8 ಪಥಗಳ ಹೊರವರ್ತುಲ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.ಬೆಂಗಳೂರು ನಗರಕ್ಕೆ ವಾಹನಗಳ ಪ್ರವೇಶವನ್ನು ತಪ್ಪಿಸಿ ಹೊರವಲಯದಿಂದಲೇ ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಲು 27 ಸಾವಿರ ಕೋಟಿ ರೂ.ಗಳ ಹೊರವರ್ತುಲ ರಸ್ತೆ ನಿರ್ಮಿಸುವ ಅಗತ್ಯವಿದೆ. ರಸ್ತೆ ನಿರ್ಮಾಣದ ವೆಚ್ಚ 6 ಸಾವಿರ ಕೋಟಿ ರೂ. ಆದರೆ 21 ಸಾವಿರ ಕೋಟಿ ರೂ. ಭೂಸ್ವಾಧೀನಕ್ಕೆ ತಗುಲಲಿದೆ. ಇದಕ್ಕೆ ಬೆಂಬಲ ನೀಡುವಂತೆ ಬಜೆಟ್‌ ಪೂರ್ವಭಾವಿ ಸಭೆಯಲ್ಲೂ ಮನವಿ ಮಾಡಲಾಗಿತ್ತು ಎಂದು ವಿವರಿಸಿದ್ದಾರೆ. +ಬೆಂಗಳೂರಿನಲ್ಲಿ ಹೆಚ್ಚು ಧಾರಣ ಮತ್ತು ಕಡಿಮೆ ಅವಧಿಯ ಮಳೆಯಾಗಲಿದೆ. ಇದರಿಂದ ನಗರದಲ್ಲಿ ಸಾಕಷ್ಟು ನೆರೆಯ ಪರಿಸ್ಥಿತಿ ಉಂಟಾಗಿ ಜನಸಾಮಾನ್ಯರು ಸಂಕಷ್ಟಕ್ಕೊಳಗಾಗಿದ್ದಾರೆ. ವಿಶ್ವ ಬ್ಯಾಂಕ್‌ ನೆರವಿನಲ್ಲಿ 3 ಸಾವಿರ ಕೋಟಿ ರೂ. ವೆಚ್ಚ ಮಾಡಿ ಮಳೆ ಹಾನಿ ತಡೆಯ ಯೋಜನೆಗಳನ್ನು ಕೈಗೊಳ್ಳಬೇಕಿದೆ. ಕೆರೆಯ ಪುನಶ್ಚೇತನ ಹಾಗೂ ಇತರ ಕಾರ್ಯಕ್ರಮಗಳು ಇದರಡಿ ಬರಲಿವೆ ಎಂದು ತಿಳಿಸಿದ್ದಾರೆ. +15ನೇ ಹಣಕಾಸು ಯೋಜನೆಯಡಿ ಬೆಂಗಳೂರಿನ ಅಂತರ್ಜಲ ವೃದ್ಧಿ, ಸಂಚಾರ ನಿರ್ವಹಣೆಗಾಗಿ 6 ಸಾವಿರ ಕೋಟಿ ರೂ. ವಿಶೇಷ ಅನುದಾನ ನೀಡಬೇಕು. ತ್ಯಾಜ್ಯ ವಿಲೇವಾರಿಗೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಪ್ರತಿದಿನ 6,500 ಮೆಟ್ರಿಕ್‌ ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಈ ಯೋಜನೆಗೆ ಅಗತ್ಯ ನೆರವು ಕೊಡಿಸುವಂತೆ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. +ಈಜಿಪುರ ಒಳ ವರ್ತುಲ ರಸ್ತೆಯ ಸರ್ಜಾಪುರ ಮುಖ್ಯರಸ್ತೆಗೆ ರಕ್ಷಣಾ ಇಲಾಖೆಯ 17.50 ಎಕರೆ, ಬಾಣಸವಾಡಿಯ ರೈಲ್ವೆ ಮೇಲ್ಸೇತುವೆಗೆ 796.85 ಚ. =ಮೀ. ಭೂಮಿ ಹಾಗೂ ಬಯ್ಯಪ್ಪನಹಳ್ಳಿ ರೈಲ್ವೆ ಮೇಲ್ಸೇತುವೆಗೆ 4,454.78 ಚ.ಮೀ. ರಕ್ಷಣಾ ಭೂಮಿಯ ಅಗತ್ಯವಿದ್ದು, ಅದನ್ನು ಒದಗಿಸಿಕೊಡುವಂತೆ ಮನವಿ ಮಾಡಿದ್ದಾರೆ. +ಮೇಕೆದಾಟು ಯೋಜನೆಗೆ ಅಗತ್ಯ ಮಂಜೂರಾತಿಗೆ ಮನವಿರಾಜ್ಯ ಸರ್ಕಾರದ ಬಹುನಿರೀಕ್ಷಿತ ಮೇಕೆದಾಟು ಯೋಜನೆಗೆ ಕೇಂದ್ರ ಜಲಶಕ್ತಿ ಇಲಾಖೆಯ ಮಂತ್ರಾಲಯದ ಜಲ ಆಯೋಗದಿಂದ ಅಗತ್ಯ ಮಂಜೂರಾತಿ ಕೊಡಿಸುವಂತೆ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ. +ಕಾವೇರಿ ನ್ಯಾಯಾಧೀಕರಣ ಹಾಗೂ ಸುಪ್ರೀಂಕೋರ್ಟ್‌ನ ತೀರ್ಪಿನ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಹೆಚ್ಚುವರಿಯಾಗಿರುವ ನೀರಿನ ಪೈಕಿ 57 ಟಿಎಂಸಿಯನ್ನು ಸಂಗ್ರಹಿಸಲು ಮತ್ತು 400 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಗಾಗಿ ಮೇಕೆದಾಟುವಿಗಾಗಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ 2019ರ ಜನವರಿ 18 ರಂದು ಕೇಂದ್ರ ಜಲಶಕ್ತಿ ಆಯೋಗಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದೆ. ಕೇಂದ್ರ ಜಲಶಕ್ತಿ ಆಯೋಗ ಯೋಜನೆಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರವಾನಿಸಿದ್ದು, 2024ರ ಫೆಬ್ರವರಿ 1 ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ವಿಸ್ತೃತ ಯೋಜನಾ ವರದಿಯನ್ನು ಮತ್ತೆ ಕೇಂದ್ರ ಜಲಶಕ್ತಿ ಆಯೋಗಕ್ಕೆ ರವಾನಿಸಲಾಗಿದ್ದು, ತಾಂತ್ರಿಕ, ಆರ್ಥಿಕ ಅಂಶಗಳನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ. +ಈ ಹಂತದಲ್ಲಿ ಕೇಂದ್ರ ಮಧ್ಯಪ್ರವೇಶ ಮಾಡಿ ಯೋಜನೆಗೆ ಅಗತ್ಯ ಮಂಜೂರಾತಿ ಕೊಡಿಸುವಂತೆ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ.ಕೃಷ್ಣ ಮೇಲ್ದಂಡೆ ನದಿ ವಿವಾದದಲ್ಲಿ ಕೃಷ್ಣ ನ್ಯಾಯಾಧಿಕರಣ ನೀಡಿರುವ ತೀರ್ಪಿನ ಅನುಸಾರ ಅಧಿಸೂಚನೆಯನ್ನು ಹೊರಡಿಸಬೇಕು. ಈ ನದಿ ಉತ್ತರ ಕರ್ನಾಟಕ ಭಾಗಕ್ಕೆ ಜೀವನದಿಯಾಗಿದೆ. ಆಲಮಟ್ಟಿ ಅಣೆಕಟ್ಟಿನಿಂದ 5.94 ಲಕ್ಷ ಹೆಕ್ಟೇರ್‌ಗೆ ನೀರು ಒದಗಿಸಲಾಗಿದೆ. ನ್ಯಾಯಾಧೀಕರಣದ ತೀರ್ಪು ಅಧಿಸೂಚನೆಯಾದರೆ ಮತ್ತಷ್ಟು ಯೋಜನೆಗಳನ್ನು ಕೈಗೊಳ್ಳಲು ಸಹಾಯವಾಗಲಿದೆ ಎಂದು ವಿವರಿಸಿದ್ದಾರೆ. +ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ 367 ಸಣ್ಣ ಕೆರೆಗಳಿಗೆ ನೀರು ತುಂಬಿಸಲು ಭದ್ರಾ ಮೇಲ್ದಂಡೆಯ 29.90 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ರೂಪಿಸಲಾದ ಭದ್ರಾ ಮೇಲ್ದಂಡೆ ಯೋಜನೆ ಈವರೆಗೂ 9,665 ಕೋಟಿ ರೂ. ಖರ್ಚು ಮಾಡಲಾಗಿದೆ. ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು. ಈ ಹಿಂದೆ ಬಜೆಟ್‌ನಲ್ಲಿ ಘೋಷಿಸಲಾದ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. +ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಪ್ರಧಾನಿಯವರು ಭರವಸೆ ನೀಡಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.ಮಹದಾಯಿ ನದಿ ನೀರಿನ ವಿಚಾರವಾಗಿ ಪ್ರಧಾನಿಯವರ ಬಳಿ ಚರ್ಚೆ ನಡೆಸಿದ ಡಿ.ಕೆ.ಶಿವಕುಮಾರ್‌, ಕಳಸಾ ಬಂಡೂರಿ ಬಳಿ ಸಮತೋಲಿತ ಅಣೆಕಟ್ಟು ನಿರ್ಮಿಸಲು ಅನುಮತಿ ಕೊಡಿಸುವಂತೆ ಪ್ರಸ್ತಾವನೆ ಸಲ್ಲಿಸಿದ್ದಾರೆ.ರಾಷ್ಟ್ರೀಯ ನೀರು ಅಭಿವೃದ್ಧಿ ಸಂಸ್ಥೆ ಗೋದಾವರಿ, ಕಾವೇರಿ ನದಿ ಜೋಡಣೆ ಯೋಜನೆಯನ್ನು ಪ್ರಸ್ತಾಪಿಸಿದೆ. +ಇದರಿಂದ 146 ಟಿಎಂಸಿ ನೀರು ತಿರುವು ಪಡೆಯಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಪಾಂಡಿಚೇರಿ ರಾಜ್ಯಗಳ ನಡುವೆ ನದಿ ನೀರು ಹಂಚಿಕೆಯಾಗಲಿದೆ. ಈ ಯೋಜನೆ ಜಾರಿಯ ವಿಚಾರವಾಗಿ ಮಧ್ಯಪ್ರವೇಶಿಸಿ ರಾಜ್ಯಕ್ಕೆ ತನ್ನ ಪಾಲಿನ ನೀರನ್ನು ಪಡೆದುಕೊಳ್ಳಲು ಅಗತ್ಯ ನೆರವು ನೀಡುವಂತೆ ಪ್ರಧಾನಿಯವರಲ್ಲಿ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_57_12.txt b/eesanje/url_46_57_12.txt new file mode 100644 index 0000000000000000000000000000000000000000..b17af9c7525ee411a41370444a3b8f7bd9a43f99 --- /dev/null +++ b/eesanje/url_46_57_12.txt @@ -0,0 +1,12 @@ +ಮುಡಾ ಹಗರಣ : ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ +ಬೆಂಗಳೂರು,ಜು.31-ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ಬಿರುಗಾಳಿ ಎಬ್ಬಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ ಇದೆ. +ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ಖಾಸಗಿ ದೂರಿನ ಆಧಾರದ ಮೇಲೆ ಕಾನೂನು ತಜ್ಞರ ಅಭಿಪ್ರಾಯ ಪಡೆದಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಮತಿಸಿದ್ದಾರೆ ಎಂದು ತಿಳಿದುಬಂದಿದೆ. +ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್‌ 19/1 ಹಾಗೂ ಸಿಪಿಸಿ 1973ರ ಸೆಕ್ಷನ್‌ 197ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದೂರು ದಾಖಲಿಸಲು ಮತ್ತು ವಿಚಾರಣೆ ನಡೆಸಲು ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಮೇರೆಗೆ ಸಮತಿ ನೀಡುವ ಸಾಧ್ಯತೆಗಳು ಹೆಚ್ಚಾಗಿದೆ. +ಈ ಹಿಂದೆ ಅಕ್ರಮ ಡಿನೋಟಿಫಿಕೇಶನ್‌ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರಾದ ಹಂಸರಾಜ್‌ ಭಾರದ್ವಾಜ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. +ವಕೀಲರಾದ ಸಿರಾಜುದ್ದೀನ್‌ ಪಾಷ ಹಾಗೂ ಬಾಲ್‌ರಾಜ್‌ ಅವರು ನೀಡಿದ ಖಾಸಗಿ ದೂರಿನ ಅನ್ವಯ ಯಡಿಯೂರಪ್ಪನವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನೇ ಆಧಾರವಾಗಿಟ್ಟುಕೊಂಡಿರುವ ಥಾವರ್‌ಚಂದ್‌ ಗೆಲ್ಹೋಟ್‌, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅಸ್ತು ಎನ್ನಲಿದ್ದಾರೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. +ಮುಖ್ಯಮಂತ್ರಿ ಹಾಗೂ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ರಾಜ್ಯಪಾಲರು ಅನುಮತಿ ನೀಡಬಹುದೆಂದು ಸುಪ್ರೀಂಕೋರ್ಟ್‌ನ ಐದು ಮಂದಿ ಸದಸ್ಯರ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿತ್ತು.ಕರ್ನಾಟಕದವರೇ ಆದ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಹಾಗೂ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳೂ ಆಗಿದ್ದ ಸಂತೋಷ್‌ ಹೆಗ್ಡೆ ಅವರು ಸಾಂವಿಧಾನಿಕ ಪೀಠದ ಮುಖ್ಯಸ್ಥರಾಗಿದ್ದರು ಎಂಬುದು ಉಲೇಖಾರ್ಹ. +ಮಧ್ಯಪ್ರದೇಶದ ಇಂದೂರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನು ಬಾಹಿರವಾಗಿ ಮಂಜೂರಾತಿ ಜಮೀನನ್ನು ನೀಡಿದ ಪ್ರಕರಣ ಸಂಬಂಧ ಇಬ್ಬರ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ ನಡೆಸಲು ರಾಜ್ಯಪಾಲರು ಮುಖ್ಯಮಂತ್ರಿ ಇಲ್ಲವೇ ಸಚಿವರ ವಿರುದ್ಧ ಮೊಕದ್ದಮೆ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂಬುದು ಈ ತೀರ್ಪಿನ ಸಾರಾಂಶವಾಗಿತ್ತು. +ಅಲ್ಲದೆ ಈ ಹಿಂದೆ ಅಕ್ರಮ ಆಸ್ತಿ ಸಂಪಾದನೆ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಸುಬ್ರಹಣ್ಯ ಸ್ವಾಮಿ ಅವರು ಸಲ್ಲಿಸಿದ್ದ ದೂರಿನ ಮೇರೆಗೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧವೂ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ರಾಜ್ಯಪಾಲ ಚೆನ್ನಾರೆಡ್ಡಿ ಅನುಮೋದನೆ ನೀಡಿದ್ದರು. +ರಾಜ್ಯಪಾಲರ ಈ ಕ್ರಮವನ್ನು ಮದ್ರಾಸ್‌‍ ಹೈಕೋರ್ಟ್‌ ಮತ್ತು ಸುಪ್ರಿಂಕೋರ್ಟ್‌ ಕೂಡ ಎತ್ತಿ ಹಿಡಿದಿತ್ತು. ಈ ಎಲ್ಲವನ್ನೂ ಕೂಲಂಕುಷವಾಗಿ ಅಧ್ಯಯನ ನಡೆಸಿರುವ ಥಾವರ್‌ ಚಂದ್‌ ಗೆಲ್ಹೋಟ್‌, ಮುಡಾ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. +ಸಂಪುಟ ನಿರ್ಣಯ ತಿರಸ್ಕಾರ:ಈ ಹಿಂದೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೊಡಬಾರದೆಂದು ಅಂದು ಸಚಿವ ಸಂಪುಟ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಸಂಪುಟದ ತೀರ್ಮಾನವನ್ನು ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಸಾರಸಗಟಾಗಿ ತಿರಸ್ಕರಿಸಿ ಪ್ರಾಸಿಕ್ಯೂಷನ್‌ಗೆ ಸಮತಿಸಿದ್ದರು.ಒಂದು ವೇಳೆ ಗುರುವಾರ ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡರೆ ರಾಜ್ಯಪಾಲರ ತೀರ್ಮಾನ ಏನೆಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. +ಸಂಪುಟದ ತೀರ್ಮಾನವನ್ನು ರಾಜ್ಯಪಾಲರು ತಮ ವಿವೇಚನೆಯಡಿ ಒಪ್ಪುವುದು ಇಲ್ಲವೇ ತಿರಸ್ಕರಿಸುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿತ್ತು. ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂಬುದು ರಾಜ್ಯಪಾಲರಿಗೆ ಮನವರಿಕೆಯಾದರೆ ಸಿಬಿಐ ಸೇರಿದಂತೆ ಕೇಂದ್ರದ ಯಾವುದಾದರೂ ತನಿಖಾ ಸಂಸ್ಥೆಯೂ ತನಿಖೆ ನಡೆಸಲು ಶಿಫಾರಸ್ಸು ಮಾಡುವ ಸಂಭವವೂ ಇದೆ. \ No newline at end of file diff --git a/eesanje/url_46_57_2.txt b/eesanje/url_46_57_2.txt new file mode 100644 index 0000000000000000000000000000000000000000..bbc513bb038b1c6a48a6e60a204bd3ca7706cc8e --- /dev/null +++ b/eesanje/url_46_57_2.txt @@ -0,0 +1,7 @@ +ನೆರೆ ಪರಿಹಾರ ಪಡೆಯಲು ನಿರಾಕರಿಸಿದ್ದ ರೈತರ ಮನವೊಲಿಸಿದ ಸಚಿವ ಗುಂಡೂರಾವ್‌ +ಬೆಂಗಳೂರು, ಆ.2-ಭಾರೀ ಮಳೆ ಹಾಗೂ ಪ್ರವಾಹದಿಂದ ತೋಟ, ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಅದ್ಯಪಾಡಿ ಸುತ್ತಮುತ್ತಲ ಗ್ರಾಮಗಳ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರವ್‌ ಸೂಚನೆ ನೀಡಿದ್ದಾರೆ. +ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ಸಂದರ್ಭದಲ್ಲಿ ಅಕ್ಕ ಪಕ್ಕದ ಗ್ರಾಮಗಳು ಜಲಾವೃತವಾಗಿರುವುದನ್ನು ಸ್ಥಳೀಯ ನಿವಾಸಿಗಳು ಸಚಿವರ ಗಮನಕ್ಕೆ ತಂದರು. ಪ್ರತಿ ವರ್ಷ ಅದ್ಯಪಾಡಿಯಲ್ಲಿ ಫಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. +ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಫಾಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ. +ಇದೇ ವೇಳೆ ನೆರೆ ಪರಿಹಾರ ಪಡೆಯಲು ನಿರಾಕರಿಸಿದ ಅದ್ಯಪಾಡಿ ರೈತರ ಮನವೊಲಿಸಿದ ಸಚಿವರು, ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ. +ಒಂದಕ್ಕೂಂದು ಸಂಬಂಧ ಕಲ್ಪಿಸುವ ಅಗತ್ಯವಿಲ್ಲ. ಭತ್ತದ ಗದ್ದೆ, ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿರುವುದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹಾರ ಪಡೆಯಿರಿ. ಫಾಲ್ಗುಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. +ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ನಿವಾಸಿಗಳು ಸಚಿವರಿಗೆ ತಿಳಿಸಿದರು. ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನು ಅದ್ಯಪಾಡಿ ನಿವಾಸಿಗಳು ತಿರಸ್ಕರಿಸುತ್ತಾ ಬಂದಿದ್ದರು. \ No newline at end of file diff --git a/eesanje/url_46_57_3.txt b/eesanje/url_46_57_3.txt new file mode 100644 index 0000000000000000000000000000000000000000..802eacd36775bc5f71faaecc7fc9abf266388a3b --- /dev/null +++ b/eesanje/url_46_57_3.txt @@ -0,0 +1,6 @@ +ಸಿಎಂ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನು ಹೋರಾಟ : ಪ್ರಿಯಾಂಕ್‌ ಖರ್ಗೆ +ಬೆಂಗಳೂರು,ಆ.1-ರಾಜ್ಯಪಾಲರು ಮುಖ್ಯಮಂತ್ರಿಯವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದೇ ಆದರೆ ರಾಜ್ಯ ಸರ್ಕಾರ ಕಾನೂನಾತಕ ಹೋರಾಟವನ್ನು ಮುಂದುವರೆಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ರಾಜ್ಯಪಾಲರ ನಡವಳಿಕೆ ಸೇರಿದಂತೆ ಕಾರ್ಯವಿಧಾನಗಳಿಗೆ ಸ್ಪಷ್ಟವಾದ ನಿಯಮಾವಳಿಗಳಿವೆ. ಸಂಪುಟದ ಸಚಿವರ ಸಲಹೆ ಆಧರಿಸಿ ರಾಜ್ಯಪಾಲರು ನಡೆದುಕೊಳ್ಳಬೇಕು. ಆದರೆ ಪ್ರಸ್ತುತ ಬೆಳವಣಿಗೆಯಲ್ಲಿ ರಾಜ್ಯಪಾಲರು ನಡೆದುಕೊಳ್ಳುವ ರೀತಿ ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು. +ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸುದೀರ್ಘ ವಿವರಣೆ ನೀಡಿದ್ದಾರೆ. ದಾಖಲಾತಿಗಳನ್ನು ಸಲ್ಲಿಸಿದ್ದಾರೆ.ಅದರ ಬಳಿಕ ಕೂಡ ರಾಜ್ಯಪಾಲರು ನೋಟಿಸ್‌‍ ನೀಡಿರುವುದು ಪ್ರಶ್ನಾರ್ಹವಾಗಿದೆ. ಎಲ್ಲಿಂದ?, ಯಾರ ಮೂಲಕ ಸ್ಕ್ರಿಪ್ಟ್ ಗಳು ಬರುತ್ತಿವೆ ಎಂಬುದು ಪ್ರಶ್ನಾರ್ಹ. ಈ ಹಿಂದೆ ತಮಿಳುನಾಡು, ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ರಾಜ್ಯಪಾಲರು ಲೆಫ್ಟಿನೆಂಟ್‌ ಜನರಲ್‌ರವರು ನಡೆದುಕೊಂಡಿರುವುದು ನಮ ಕಣ್ಣೆದುರಿಗೇ ಇದೆ. +ಜನಾಭಿಪ್ರಾಯ ಪಡೆದು ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ರಾಜ್ಯಪಾಲರು ನೀಡಿರುವ ನೋಟಿಸ್‌‍ಗೆ ಸರ್ಕಾರ ಉತ್ತರ ನೀಡಲಿದೆ. ಅದನ್ನು ಮೀರಿ ಅಭಿಯೋಜನೆಗೆ ಅನುಮತಿ ನೀಡಿದರೆ ಕಾನೂನು ಹೋರಾಟ ಮುಂದುವರೆಸಲಾಗುವುದು. +ರಾಜ್ಯಪಾಲರ ಕಾರ್ಯವಿಧಾನ ಹಾಗೂ ನಡವಳಿಕೆಗಳ ಬಗ್ಗೆ ಈಗಾಗಲೇ ಸುಪ್ರೀಂಕೋರ್ಟ್‌ನ 5 ನ್ಯಾಯಮೂರ್ತಿಗಳ, 7 ನ್ಯಾಯಮೂರ್ತಿಗಳ ಪೀಠಗಳು ಪ್ರತ್ಯೇಕ ತೀರ್ಪು ನೀಡಿವೆ ಎಂದು ತಿಳಿಸಿದರು. ನಿನ್ನೆ ರಾತ್ರಿ ಮುಖ್ಯಮಂತ್ರಿಯವರು ನಡೆಸಿರುವ ಸಚಿವರ ಸಭೆಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ನೋಟೀಸ್‌‍ ವಿಚಾರವಾಗಿ ಸಚಿವರ ಸಲಹೆ ಪಡೆಯುವುದು ಸಹಜ ಎಂದು ಹೇಳಿದರು. \ No newline at end of file diff --git a/eesanje/url_46_57_4.txt b/eesanje/url_46_57_4.txt new file mode 100644 index 0000000000000000000000000000000000000000..49ae2df3fa03123c8f66c7c38ed73dba6dcd8a32 --- /dev/null +++ b/eesanje/url_46_57_4.txt @@ -0,0 +1,10 @@ +ಜೆಡಿಎಸ್ “ಬ್ಲಾಕ್‌ಮೇಲ್‌”ಗೆ ಬಗ್ಗದೆ ಪಾದಯಾತ್ರೆ ನಡೆಸುವಂತೆ ಬಿಜೆಪಿ ವರಿಷ್ಠರ ಸೂಚನೆ +ಬೆಂಗಳೂರು,ಆ.1-ಜೆಡಿಎಸ್ನ ಯಾವುದೇ ಬ್ಲಾಕ್ಮೇಲ್ಗೆ ಬಗ್ಗದೇ ಈಗಾಗಲೇ ನಿಗದಿ ಯಾಗಿರುವಂತೆ ಬೆಂಗಳೂ ರಿನಿಂದ ಮೈಸೂರುವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯನ್ನು ಮುಂದುವರೆಸಬೇಕೆಂದು ಕೇಂದ್ರ ಬಿಜೆಪಿ ವರಿಷ್ಠರು ರಾಜ್ಯಘಟಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ತಲೆಕೆಡಿಸಿಕೊಳ್ಳದೆ. +ಈಗಾಗಲೇ ತೀರ್ಮಾನಿಸಿರುವಂತೆ ಆ.3ರಿಂದ (ಶನಿವಾರ) ಮೈಸೂರುವರೆಗೆ ಪಾದಯಾತ್ರೆಯನ್ನು ನಡೆಸಿ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರವನ್ನು ಜನರಿಗೆ ಮನವರಿಕೆ ಮಾಡುವಂತೆ ಸೂಚನೆ ಕೊಡಲಾಗಿದೆ. +ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪಾದಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕೆಂದು ತಾಕೀತು ಮಾಡಿದ್ದಾರೆ. +ಜೆಡಿಎಸ್ ಪಾದಯಾತ್ರೆಗೆ ಏಕೆ ವಿರೋಧಪಡಿಸುತ್ತದೆ ಎಂಬುದು ನಮಗೆ ಗೊತ್ತಿದೆ. ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಅವರು ಕೈಜೋಡಿಸಿದರೆ ಜೋಡಿಸಲಿ, ಇಲ್ಲದಿದ್ದರೆ ಬಿಡಲಿ, ಅವರ ನೈತಿಕ ಬೆಂಬಲವನ್ನೂ ನಿರೀಕ್ಷಿಸದೇ ಬಿಜೆಪಿ ವತಿಯಿಂದಲೇ ಪಾದಯಾತ್ರೆಯನ್ನು ಆಯೋಜಿಸಬೇಕೆಂದು ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. +ಒಂದು ಬಾರಿ ನಾವು ಜೆಡಿಎಸ್ನ ಒತ್ತಡಕ್ಕೆ ಮಣಿದು ಬಗ್ಗಿದರೆ ಭವಿಷ್ಯದಲ್ಲಿ ಇದೇ ತಂತ್ರವನ್ನು ಅನುಸರಿಸುತ್ತಾರೆ. ಪಾದಯಾತ್ರೆ ಯಶಸ್ವಿಯಾದರೆ ಅದು ನೇರವಾಗಿ ಜೆಡಿಎಸ್ನ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ ಎಂಬುದು ಕುಮಾರಸ್ವಾಮಿಯವರ ಆತಂಕ. +ನಾವು ಒಂದು ರಾಷ್ಟ್ರೀಯ ಪಕ್ಷದವರಾಗಿ ನಮ ಗುರಿ ಏನಿದೆಯೋ ಅದನ್ನು ತಲುಪೋಣ. ಇಲ್ಲಿ ಪ್ರೀತಂಗೌಡ ಅವರ ಹೆಸರನ್ನು ಅನಗತ್ಯವಾಗಿ ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. ಇದರ ಮೂಲ ಕಾರಣ ಏನೆಂಬುದನ್ನು ನಾನು ಅರಿತಿದ್ದೇನೆ. ನಾಳೆ ಅವರನ್ನು ಪಕ್ಷದಿಂದ ಹೊರಹಾಕಿ ಎಂದು ಕುಮಾರಸ್ವಾಮಿ ಹೇಳಿದರೆ ಹಾಗೆ ಮಾಡಲು ಸಾಧ್ಯವೇ ಎಂದು ಅಮಿತ್ ಶಾ ಅವರು ವಿಜಯೇಂದ್ರರಿಗೆ ಪ್ರಶ್ನಿಸಿದ್ದಾರೆ. +ಸದ್ಯದಲ್ಲಿ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕ್ಷೇತ್ರವನ್ನು ಬಿಜೆಪಿಯವರಿಗೆ ಬಿಟ್ಟುಕೊಡಲು ಮೀನಾಮೇಷ ಎಣಿಸುತ್ತಿರುವ ಕುಮಾರಸ್ವಾಮಿಯವರು ಪ್ರೀತಂಗೌಡ ಅವರ ಹೆಸರನ್ನು ಎಳೆದುತಂದಿದ್ದಾರೆ. ಅವರ ರಾಜಕೀಯ ಮರ್ಮವನ್ನು ಅರ್ಥ ಮಾಡಿಕೊಳ್ಳದಷ್ಟು ದಡ್ಡರು ಬಿಜೆಪಿಯಲ್ಲಿಲ್ಲ. ಅಷ್ಟಕ್ಕೂ ನಾವೇನೂ ಪಾದಯಾತ್ರೆಗೆ ಬೆಂಬಲ ಕೊಡಬೇಕೆಂದು ಜೆಡಿಎಸ್ನವರಿಂದ ನಿರೀಕ್ಷೆ ಮಾಡಿಲ್ಲ. ಕೊಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು. ಪಾದಯಾತ್ರೆ ನಡೆಸಿಯೇ ತೀರಬೇಕೆಂದು ಹೇಳಿದ್ದಾರೆ. +ಮುಡಾ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವು ಕಾಂಗ್ರೆಸ್ ಸರ್ಕಾರಕ್ಕೆ ಸಾಕಷ್ಟು ಹಾನಿಯುಂಟು ಮಾಡಿದೆ. ಇದನ್ನು ನಾವು ರಾಜಕೀಯವಾಗಿ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಸರ್ಕಾರದ ಒಂದೊಂದು ಹಗರಣಗಳನ್ನು ಜನತೆಯ ಮುಂದೆ ಇಡಿ ಎಂದು ಅಮಿತ್ ಶಾ ಸೂಚಿಸಿರುವುದಾಗಿ ತಿಳಿದುಬಂದಿದೆ. +ಪಕ್ಷದ ವರಿಷ್ಠರಿಂದ ಸೂಚನೆ ಸಿಕ್ಕ ಬೆನ್ನಲ್ಲೇ ವಿಜಯೇಂದ್ರ ಪಾದಯಾತ್ರೆ ನಡೆಸಲು ರೂಪುರೇಷೆಗಳನ್ನು ಸಿದ್ಧಪಡಿಸಿದ್ದಾರೆ.ಸಮಾರೋಪ ಸಮಾರಂಭಕ್ಕೆ ಜೆ.ಪಿ.ನಡ್ಡಾ, ಅಮಿತ್ ಶಾ ಆಗಮಿಸಲಿದ್ದು, ಮೈಸೂರಿನ ಹೊರವಲಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಲು ಉದ್ದೇಶಿಲಾಗಿದೆ. \ No newline at end of file diff --git a/eesanje/url_46_57_5.txt b/eesanje/url_46_57_5.txt new file mode 100644 index 0000000000000000000000000000000000000000..036219421cba5b26e3c5be312772fa1c3b2f42b6 --- /dev/null +++ b/eesanje/url_46_57_5.txt @@ -0,0 +1,11 @@ +ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧ : ಪ್ರಹ್ಲಾದ್ ಜೋಷಿ +ನವದೆಹಲಿ,ಆ.1-ಕರ್ನಾಟಕ ಸರ್ಕಾರ ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರ ಅಕ್ಕಿಯನ್ನು ಕೊಡಲು ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಹಿತಿ ನೀಡಿದ್ದಾರೆ.ಈ ಕುರಿತು ನವದೆಹಲಿ ಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28 ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ.ಎಷ್ಟು ಬೇಕಾದರೂ ಅಕ್ಕಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ. +ಕರ್ನಾಟಕ ಮಾತ್ರವಲ್ಲದೆ, ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಕೊಡಲಿ ಸಿದ್ಧವಿದೆ. ಇನ್ನು ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶದಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು. +ಹೀಗಾಗಿ, ಕರ್ನಾಟಕದ ಮಾದರಿಯಲ್ಲಿಯೇ ಎಲ್ಲಾ ರಾಜ್ಯಗಳು ಅಕ್ಕಿಯನ್ನು ಕೇಳಿದರೆ ಸ್ಟಾಕ್ ಸಮಸ್ಯೆ ಆಗಬಹುದು ಎಂದು ಅಕ್ಕಿಯನ್ನು ಕೊಡದಿರಲು ತೀರ್ಮಾನ ಮಾಡಲಾಗಿತ್ತು ಎಂದು ಕೇಂದ್ರದ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡರು. +ಆದರೆ, ಈಗ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲೆಡೆ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಅಕ್ಕಿಯನ್ನು ಕೇಳಿದರೆ 28 ರುಪಾಯಿ ದರದಲ್ಲಿ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಈಗ ಸದಸ್ಯಕ್ಕೆ ಯಾವುದೇ ರಾಜ್ಯದಿಂದ ಅಕ್ಕಿ ಬೇಕೆಂದು ಮನವಿ ಬಂದಿಲ್ಲ. ದೇಶದಲ್ಲಿ ನಾವು 80 ಕೋಟಿ ಜನರಿಗೆ ಪಡಿತರ ಮೂಲಕ ಅಕ್ಕಿ ಕೊಡ್ತಿವಿ. ರಾಜ್ಯಗಳು ಹರಾಜಿಗೂ ಭಾಗಿಯಾಗದೇ ನೇರವಾಗಿ 28 ರೂ. ಕೊಡ್ತಿವಿ. ರಾಜ್ಯದಿಂದ ಈತನಕ ಯಾವುದೇ ಬೇಡಿಕೆ ಬಂದಿಲ್ಲ ಎಂದು ಮಾಹಿತಿ ನೀಡಿದರು. +ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕ್ನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು.ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆ.ಹೆಚ್.ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ. +ಪಾದಯಾತ್ರೆ ವಿಚಾರದ ಬಗ್ಗೆ ಮಾತನಾಡಿ, ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತುಕೆ ಮಾಡಲಾಗುವುದು. ಬಿಜೆಪಿ ಪಾದಯಾತ್ರೆ ನಡೆಯುತ್ತದೆ. ಅವರು ಹಾಗೂ ನಾವು ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಅವರು ಅಪಸ್ವರ ಹಿನ್ನೆಲೆಯಲ್ಲಿ ಅವರ ಜೊತೆಯೂ ನಮ ನಾಯಕರು ಮಾತುಕತೆ ನಡೆಸುತ್ತಾರೆ. ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತನಾಡುತ್ತವೆ ಎಂದು ತಿಳಿಸಿದ್ದಾರೆ. +ವಾಲೀಕಿ ಹಗರಣ ವಿಚಾರದ ಬಗ್ಗೆ ಮಾತನಾಡಿದ ಜೋಶಿ ಅವರು, ರಾಜ್ಯಪಾಲರು ಸಂವಿಧಾನಾತಕ ವ್ಯಕ್ತಿಯಾಗಿದ್ದಾರೆ. ಅವರ ಬಗ್ಗೆ ಯಾಕೆ ಇವರಿಗೆ ಭಯ. ಮುಡಾ ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆಯದೇ ಇದ್ದಿದ್ದರೆ ಈ ಅವ್ಯವಹಾರ ಹೊರಗಡೆ ಬರುತ್ತಿಲ್ಲ. ನೀವು ಭ್ರಷ್ಟಾಚಾರ, ಹಗರಣ ಮಾಡಿದ್ದೀರಿ. +ಸಿದ್ದರಾಮಯ್ಯ ಅವರು ಮುಖಚರ್ಯೆ ನೋಡಿ. ಭಯಗ್ರಸ್ಥರಾಗಿ ಈ ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಮೂಡಾ ಹಗರಣ- ದಾಖಲೆಗಳು ಅವರ ಪಕ್ಷದ ನಾಯಕರೇ ಕೊಟ್ಟಿದ್ದಾರೆ. 19 ಹಗರಣಗಳ ಪಟ್ಟಿಯ ಎಲ್ಲ ವಿವರಗಳನ್ನು ಮನೆ ಮನೆಗೆ ಹಂಚುತ್ತಾರೆ. ಯಾಕೆ ಹಂಚುತ್ತೀರಿ.. ನಿಮದೇ ಸರ್ಕಾರ ಇದೆ. ತನಿಖೆ ಮಾಡಿ. +ಎಲ್ಲರನ್ನು ಹೆದರಿಸಿ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಸಾಧ್ಯವಿಲ್ಲ. ಅಹಿಂದ ಇರಲಿ ಅಥವಾ ಬೇರೆ ಯಾವುದೇ ಸಮುದಾಯದ ನಾಯಕ ಇರಲಿ. ಭ್ರಷ್ಟಾಚಾರ ಮಾಡಿ, ತನಿಖೆ ಮಾಡುವುದು ಬೇಡ ಎಂದರೆ ಹೇಗೆ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಕೋಶ ವ್ಯಕ್ತಪಡಿಸಿದ್ದಾರೆ. +ಅಕ್ರಮ ನಡೆದಿರುವ ಬಗ್ಗೆ ಸಿಎಂ ಒಪ್ಪಿಕೊಂಡಿದ್ದಾರೆ. ಹಿಂದೆ ನಾನು 100 ಪರ್ಸೆಂಟ್ ಸರ್ಕಾರದ ಎಂದ್ದೆಿ. ಬಹಳ ಅಂದರೆ, 70-80 ಪರ್ಸೆಂಟ್ ಎಂದು ರಿಯಾಯಿತಿ ಕೊಡಬಹುದು. ಹಿಂದೆ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಹೊಗಳಿದ್ದರು. ಈಗ ಯಾಕೆ ತೆಗಳುತ್ತಿದ್ದಾರೆ? ಬಿಜೆಪಿ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲಿ, ಸರ್ಕಾರ ಅವರದ್ದೇ ಇದೆ. ನಮನ್ನು ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಗರಣ ಇದ್ದಿದ್ದರೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡುತ್ತಿದ್ದರೇ? ನಮ ರಾಜ್ಯ ಅಧ್ಯಕ್ಷರು ತನಿಖೆ ಮಾಡಿ ಎಂದು ಸವಾಲು ಹಾಕಿದ್ದಾರೆ ಎಂದು ಜೋಶಿ ಹೇಳಿದರು. \ No newline at end of file diff --git a/eesanje/url_46_57_6.txt b/eesanje/url_46_57_6.txt new file mode 100644 index 0000000000000000000000000000000000000000..a559fbcb00c6309055d022caceaaa5b1f398faf9 --- /dev/null +++ b/eesanje/url_46_57_6.txt @@ -0,0 +1,8 @@ +ರಾಜ್ಯಪಾಲರ ನೋಟಿಸ್ ಎದುರಿಸಲು ತಂತ್ರಗಾರಿಕೆ ಶುರು, ಒತ್ತಡದಲ್ಲಿ ಸಿಎಂ ಸಿದ್ದು +ಬೆಂಗಳೂರು,ಆ.1-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡುತ್ತಿದ್ದಂತೆ ಅಲರ್ಟ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಾತ್ಮಕವಾಗಿ ನಾನಾ ರೀತಿಯ ತಂತ್ರಗಾರಿಕೆಗಳನ್ನು ಅನುಸರಿಸಲಾರಂಭಿಸಿದ್ದಾರೆ. +ನಿನ್ನೆ ರಾತ್ರಿ ಆಪ್ತಸಚಿವರ ಜೊತೆ ಕೆ.ಜೆ.ಜಾರ್ಜ್ ಅವರ ಮನೆಯಲ್ಲಿರಹಸ್ಯ ಸಭೆ ನಡೆಸಿ ಚರ್ಚೆ ನಡೆಸಿದ್ದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸಂಪುಟದ ಬಹುತೇಕ ಸಚಿವರೊಂದಿಗೆ ಉಪಾಹಾರ ಕೂಟ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ.ಒಂದು ವೇಳೆ ರಾಜ್ಯಪಾಲರು ಅಭಿ ಯೋಜನೆಗೆ ಅನುಮತಿ ನೀಡಿದರೆ ಅನುಸರಿ ಸಬಹುದಾದ ಕಾನೂನಾತಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. +ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿದ್ದರಾಮಯ್ಯನವರು ರಾಜ್ಯಪಾಲರನ್ನು ಭೇಟಿ ಮಾಡಿ ವಿವರಣೆ ನೀಡಿದ್ದು, ದಾಖಲಾತಿಗಳನ್ನು ಕೂಡ ಸಲ್ಲಿಸಿದ್ದಾರೆ. ಅದರ ಹೊರತಾಗಿಯೂ ಖಾಸಗಿ ವ್ಯಕ್ತಿ ಅಬ್ರಹಾಂ ಹಾಗೂ ಬಿಜೆಪಿ ನೀಡಿದ ದೂರು ಆಧರಿಸಿ ರಾಜ್ಯಪಾಲರು ನೋಟಿಸ್ ನೀಡಿರುವುದು ಪರಿಸ್ಥಿತಿಯನ್ನು ಬಿಗಿಗೊಳಿಸಿದೆ. ಮುಖ್ಯಮಂತ್ರಿಯವರು ರಾಜಕೀಯ ಒತ್ತಡಕ್ಕೆ ಸಿಲುಕಿದ್ದಾರೆ. +ರಾಜ್ಯಪಾಲರ ನೋಟಿಸ್ಗೆ ಇಂದು ಉಪಹಾರ ಕೂಟದಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಕೇಂದ್ರದ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ಕೆಲವು ರಾಜ್ಯದ ಪ್ರಮುಖ ನಾಯಕರು ಷಡ್ಯಂತ್ರ ನಡೆಸಿ ಸಿದ್ದರಾಮಯ್ಯ ಅವರನ್ನು ಕಾನೂನಿನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಷ್ಟ್ರಮಟ್ಟದಲ್ಲೂ ಬಿಜೆಪಿ ಸಂಸತ್ನಲ್ಲಿ ಮುಡಾ ಹಾಗೂ ವಾಲೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಪ್ರಸ್ತಾಪಿಸಿದೆ. +ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ ಕರೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ದೆಹಲಿಗೆ ತೆರಳಿ ವಿವರಣೆ ನೀಡಿ ಬಂದಿದ್ದಾರೆ.ಇಂದಿನ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ಗೆ ಪ್ರತಿಕ್ರಿಯಿಸುವ ಹಾಗೂ ಅಭಿಯೋಜನೆಗೆ ವಿರೋಧ ವ್ಯಕ್ತಪಡಿಸುವ ನಿರ್ಣಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. +ರಾಜ್ಯಪಾಲರ ನಡವಳಿಕೆ ಸಾಂವಿಧಾನಿಕ ಸಂಘರ್ಷಕ್ಕೆ ಎಡೆಮಾಡಿಕೊಡುವ ಸಾಧ್ಯತೆ ಇದೆ. ಈ ಹಿಂದೆ ಯಡಿಯೂರಪ್ಪ ಅವರ ಪ್ರಕರಣದಲ್ಲಿ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ್ದರಿಂದಾಗಿಯೇ ಸಾಕಷ್ಟು ಕಾನೂನಾತಕ ಸಮಸ್ಯೆಗಳು ಎದುರಾದವು. ಈಗ ಮುಡಾ ಪ್ರಕರಣದಲ್ಲಿ ಯಾವುದೇ ಲೋಪ ಇಲ್ಲದೇ ಇದ್ದರೂ ಉದ್ದೇಶಪೂರಕವಾಗಿ ರಾಜಕೀಯ ಕಾರಣಕ್ಕೆ ಮುಖ್ಯಮಂತ್ರಿ ಹಾಗೂ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ಎಂಬ ಟೀಕೆಗಳು ಸಭೆಯಲ್ಲಿ ಕೇಳಿಬಂದಿವೆ. +ಉಪಹಾರಕೂಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ರಾಮಲಿಂಗಾರೆಡ್ಡಿ, ಮಧುಬಂಗಾರಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್, ಜಮೀರ್ ಅಹಮದ್ ಖಾನ್, ಸಂತೋಷ್ ಲಾಡ್, ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಎನ್.ಎಸ್.ಬೋಸರಾಜ್, ಶರಣಬಸಪ್ಪ ದರ್ಶನಾಪೂರ್, ರಹೀಂಖಾನ್, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ, ಡಿ.ಸುಧಾಕರ್, ಡಾ.ಎಂ.ಸಿ.ಸುಧಾಕರ್, ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಬಹುತೇಕರು ಭಾಗವಹಿಸಿದ್ದರು. ಕೆ.ಎಚ್.ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅವರು ಜಿಲ್ಲಾ ಪ್ರವಾಸದಲ್ಲಿದ್ದುದರಿಂದಾಗಿ ಸಭೆಯಿಂದ ದೂರ ಉಳಿದಿದ್ದರು. \ No newline at end of file diff --git a/eesanje/url_46_57_7.txt b/eesanje/url_46_57_7.txt new file mode 100644 index 0000000000000000000000000000000000000000..2ac68c6aeb96f4dc0bd9ce13f6f1aedc0be74df8 --- /dev/null +++ b/eesanje/url_46_57_7.txt @@ -0,0 +1,7 @@ +ಉತ್ತರ ಒಳನಾಡಿನಲ್ಲೂ ಭಾರೀ ಮಳೆ ಮುನ್ಸೂಚನೆ, ಆರೆಂಜ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಆ.1-ಕರಾವಳಿ, ಮಲೆನಾಡಿನ ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲೂ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಅರಬ್ಬೀ ಸಮುದ್ರದಲ್ಲಿ ಕೇರಳದ ಕರಾವಳಿಯಿಂದ ಗುಜರಾತಿನವರೆಗೂ ಸಮುದ್ರಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರ(ಟ್ರಫ್‌)ದ ಪರಿಣಾಮದಿಂದ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಇಂದು ಮತ್ತು ನಾಳೆ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗಬಹುದು. ಇದರಿಂದ ರಸ್ತೆ ಸಂಚಾರಕ್ಕೆ ಕೆಲವೆಡೆ ಅಡಚಣೆಗಳು, ನದಿಗಳಲ್ಲಿ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ. +ನಿರಂತರವಾಗಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಲಿದೆ. ಪ್ರವಾಹ ಉಂಟಾಗುವುದರಿಂದ ನದಿ ತೀರದ ಪ್ರದೇಶಗಳ ಜನವಸತಿಗಳ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಜಾನುವಾರುಗಳ ಸಹಿತ ಜನರು ತೆರಳಲು ಸೂಚಿಸಿದೆ. +ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಒಂದೆರಡು ಕಡೆ ಮಾತ್ರ ಭಾರೀ ಮಳೆಯಾಗಬಹುದು ಎಂದು ಹೇಳಿದೆ. +ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗು ಮುನ್ಸೂಚನೆಗಳಿದ್ದು, ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ. +ಆದರೆ, ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಕೃಷ್ಣಾ ಹಾಗೂ ಕಾವೇರಿ ಕೊಳ್ಳದ ನದಿಗಳಲ್ಲಿ ನೀರು ಹರಿಯುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ವರ್ಷ ಮುಂಗಾರು ಹಂಗಾಮಿನ ಮಳೆ ಕೊರತೆಯಿಂದ ರಾಜ್ಯ ಬರದಿಂದ ತತ್ತರಿಸಿದ್ದರೆ, ಈ ವರ್ಷ ಅಧಿಕ ಮಳೆಯಿಂದ ಅತಿವೃಷ್ಟಿ ಹಾಗೂ ನೆರೆಹಾವಳಿಯಿಂದ ಸಂಕಷ್ಟ ಉಂಟಾಗಿದೆ. \ No newline at end of file diff --git a/eesanje/url_46_57_8.txt b/eesanje/url_46_57_8.txt new file mode 100644 index 0000000000000000000000000000000000000000..f13b6ac5df8294307b9036e8cfa2c7cccde4d93a --- /dev/null +++ b/eesanje/url_46_57_8.txt @@ -0,0 +1,4 @@ +ಕೆಎಸ್‌‍ಎಫ್‌ಸಿ ಆಡಳಿತ ಮಂಡಳಿ ನಿರ್ದೇಶಕರಾಗಿ ಜಿ.ರಘು ಆಚಾರ್‌ ಆಯ್ಕೆ +ಬೆಂಗಳೂರು, ಆ.1-ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರಾಗಿ ಜಿ.ರಘು ಆಚಾರ್‌ ಅವಿರೋಧವಾಗಿ ಚುನಾಯಿತರಾಗಿದ್ದಾರೆ. +ಜಿ.ರಘು ಆಚಾರ್‌ ಅವರ ನಿರ್ದೇಶಕರ ಅವಧಿಯು ಮೂರು ವರ್ಷಗಳ ಅವಧಿಗೆ ಅಂದರೆ, ಜುಲೈ 18 ರಿಂದ 2027ರ ಜುಲೈ 17ರವರೆಗೆ ಇರುತ್ತದೆ ಎಂದು ಕೆಎಸ್‌‍ಎಫ್‌ಸಿಯ ವ್ಯವಸ್ಥಾಪಕ ನಿರ್ದೇಶಕ ಡಾ.ರೇಜು.ಎಂ.ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ರಾಜ್ಯ ಹಣಕಾಸು ಸಂಸ್ಥೆಗಳ ಕಾಯಿದೆ 1951 (ತಿದ್ದುಪಡಿ ಕಾಯಿದೆ 2000)ರ ಅಧಿನಿಯಮ 10 (ಇ) ಅಡಿಯಲ್ಲಿ ಹಾಗೂ ಸಂಸ್ಥೆಯ ಸಾಮಾನ್ಯ ನಿಯಮಾವಳಿ-2002ರ 63ನೇ ನಿಬಂಧನೆಯ ಅನ್ವಯ ರಘು ಆಚಾರ್‌ ಅವಿರೋಧವಾಗಿ ಚನಾಯಿತರಾಗಿದ್ದಾರೆಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_57_9.txt b/eesanje/url_46_57_9.txt new file mode 100644 index 0000000000000000000000000000000000000000..ab5bc801b4edcf5aa456d5bfffeb31182f43c366 --- /dev/null +++ b/eesanje/url_46_57_9.txt @@ -0,0 +1,6 @@ +ವಾಹನ ಸವಾರರೇ ಗಮನಿಸಿ : ಇಂದಿನಿಂದ ಹೆದ್ದಾರಿಗಳಲ್ಲಿ 130 ಕಿ.ಮೀ. ವೇಗ ಮೀರಿದರೆ ಕೇಸ್ ಗ್ಯಾರಂಟಿ +ಬೆಂಗಳೂರು, ಆ.1– ವಾಹನ ಚಾಲಕರೇ ಎಚ್ಚರ… ರೋಡ್‌ ಚೆನ್ನಾಗಿದೆ ಎಂದು ವೇಗವಾಗಿ ವಾಹನ ಚಲಾಯಿಸಿದರೆ ಪ್ರಕರಣ ದಾಖಲಾಗುತ್ತೆ. ಮೈಸೂರು, ಬೆಂಗಳೂರು, ಎಕ್ಸ್ ಪ್ರೆಸ್‌‍ ವೇ ನಲ್ಲಿ ಹೆಚ್ಚಾಗಿ ಅಪಘಾತ ಪ್ರಕರಣಗಳು ಸಂಭವಿಸಿ ಅನೇಕ ಸಾವು-ನೋವುಗಳು ಸಂಭವಿಸಿದ್ದವು. ಎಚ್ಚೆತ್ತ ಹೆದ್ದಾರಿ ಪ್ರಾಧಿಕಾರ ಹಾಗೂ ಸಂಚಾರಿ ಪೊಲೀಸರು ರಸ್ತೆಯಲ್ಲಿ ಎಐ ಕ್ಯಾಮೆರಾ ಅಳವಡಿಸಿದ್ದರಿಂದ ಗಣನೀಯವಾಗಿ ಅಪಘಾತಗಳು ಇಳಿಮುಖವಾಗಿವೆ. +ಕಳೆದ ಕೆಲದಿನಗಳ ಹಿಂದೆ ಅಷ್ಟೇ ನೈಸ್‌‍ ರಸ್ತೆಯಲ್ಲಿ ಕಾರೊಂದು ಅತಿ ವೇಗವಾಗಿ ಚಲಾಯಿಸಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹೀಗಾಗಿ ವೇಗಕ್ಕೆ ಕಡಿವಾಣ ಹಾಕಲು ಇಂದಿನಿಂದ ರಾಜ್ಯಾದ್ಯಂತ ಹೈವೆಗಳಲ್ಲಿ ಗಂಟೆಗೆ 130 ಕಿಲೋ ಮೀಟರ್‌ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಾಗಲಿದೆ. +ಜೊತೆಗೆ ಎರಡು ಸಾವಿರ ದಂಡ ಮತ್ತು ಗರಿಷ್ಠ ಆರು ತಿಂಗಳು ಜೈಲು ವಿಧಿಸಲಾಗುವುದು. ಜೊತೆಗೆ ಚಾಲನ ಪರವಾನಗಿಯನ್ನು ಕೂಡ ರದ್ದು ಪಡಿಸಲು ಪ್ರಾದೇಶಿಕ ಸಾರಿಗೆ ಕೇಂದ್ರಕ್ಕೆ ಪೊಲೀಸರು ಪತ್ರ ಬರೆಯಲಿದ್ದಾರೆ. ಇಲ್ಲಿಯವರೆಗೂ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. +ಆದರೆ ಇಂದಿನಿಂದ ಹಾಗಾಗುವುದಿಲ್ಲ. ದಂಡದ ಜೊತೆಗೆ ಪ್ರಕರಣವನ್ನು ಸಹ ದಾಖಲಿಸಲಾಗುವುದು ಎಂದು ರಾಜ್ಯ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಸಾಮಾಜಿಕ ಜಾಲತಾಣ-ಎಕ್ಸ್ ನಲ್ಲಿ ತಿಳಿಸಿದ್ದಾರೆ. +ಎಕ್ಸ್ ಪ್ರೆಸ್‌‍ ಹೈವೆನಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಷಲ್‌ ಇಂಟಲಿಜೆಂಟ್ಸ್ ಮೊರೆ ಹೋಗಿದ್ದು, ಹೆದ್ದಾರಿಗಳಲ್ಲಿ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ಈ ಕ್ಯಾಮೆರಾ ಸ್ವಯಂ ಚಾಲಿತ ನಂಬರ್‌ ಪ್ಲೇಟ್‌ ಗುರುತಿಸುವುದರೊಂದಿಗೆ ವಾಹನಗಳ ಮಾಹಿತಿಯನ್ನು ಕಂಟ್ರೋಲ್‌ ರೂಂಗೆ ರವಾನಿಸಿ ನಂತರ ಆರ್‌ಟಿಓ ಸಂಪರ್ಕ ಪಡೆದು ವಾಹನ ಮಾಲೀಕರಿಗೆ ದಂಡದ ನೊಟೀಸ್‌‍ ನೀಡಲಾಗುತ್ತದೆ. ಇದರಿಂದ ವಾಹನಗಳ ವೇಗ ತಗ್ಗಲಿದ್ದು, ಅಪಘಾತಗಳ ಸಂಖ್ಯೆ ಇಳಿಮುಖವಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_58_1.txt b/eesanje/url_46_58_1.txt new file mode 100644 index 0000000000000000000000000000000000000000..a692a02cfaac28e635fef4740d4ea52e237d3174 --- /dev/null +++ b/eesanje/url_46_58_1.txt @@ -0,0 +1,5 @@ +ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ಓಟಿಎಸ್‌‍ ಸಮಯ ವಿಸ್ತರಿಸಿ : ಮುಖ್ಯಮಂತ್ರಿ ಚಂದ್ರು +ಬೆಂಗಳೂರು,ಜು.31– ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಓಟಿಎಸ್‌‍ ವ್ಯವಸ್ಥೆಯಲ್ಲಿ ನೀಡಲಾಗಿದ್ದ ಸಮಯವನ್ನು ಮತ್ತೆ 15 ದಿವಸಗಳ ಕಾಲ ವಿಸ್ತರಣೆ ಮಾಡುವಂತೆ ಆಮ್‌ ಆದಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಈ ಕುರಿತು ಬೆಂಗಳೂರು ನಗರಾಭಿವದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿನ 2.87 ಲಕ್ಷ ಆಸ್ತಿಗಳಿಂದ 831 ಕೋಟಿ ತೆರಿಗೆ ಬಾಕಿ ಇದೆ . +ಬೆಂಗಳೂರಿನ ನಾಗರಿಕರು ಆಸ್ತಿ ತೆರಿಗೆಯನ್ನು ಕಟ್ಟಲು ಬೇಕಾಗುವ ವಲಯ ಘೋಷಿಸುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಇದೆ. ಬಿಬಿಎಂಪಿ ಪುನರ್‌ ನಿಗದಿ ಮಾಡಿರುವ ಬೇಡಿಕೆ ಪತ್ರದಲ್ಲಿಯೂ ಸಾಕಷ್ಟು ಗೊಂದಲಗಳಿರುವ ಕಾರಣದಿಂದ ಆಸ್ತಿ ತೆರಿಗೆ ಕಟ್ಟಲು ನಾಗರಿಕರುಗಳಿಗೆ ಸಾಧ್ಯವಾಗುತ್ತಿಲ್ಲ. ಈ ಎಲ್ಲಾ ವಿಚಾರಗಳನ್ನು ಪರಿಗಣಿಸಿ ಮತ್ತೆ 15 ದಿವಸಗಳ ಕಾಲ ಓ ಟಿ ಎಸ್‌‍ ಯೋಜನೆಯನ್ನು ವಿಸ್ತರಣೆ ಮಾಡಬೇಕು ಎಂದು ವಿನಂತಿಸಿದ್ದಾರೆ. +ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರುಗಳ ಜೊತೆ ಕಂದಾಯಾಧಿಕಾರಿಗಳು ಖುದ್ದಾಗಿ ಚರ್ಚಿಸಬೇಕು ಹಾಗೂ ಗೊಂದಲಗಳನ್ನು ಪರಿಹಾರ ಮಾಡಬೇಕು. ಬೆಂಗಳೂರಿನ ನಾಗರಿಕರು ತಮ ಜೀವಿತಾವಧಿಯಲ್ಲಿ ಕಷ್ಟಪಟ್ಟು ಉಳಿಸಿದ ಹಣದಿಂದ ಕಟ್ಟಿರುವ ಆಸ್ತಿಗಳನ್ನು ಯಾವುದೇ ಕಾರಣಕ್ಕೂ ಅಟ್ಯಾಚ್‌ (ಋಣ ಭಾರ) ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈ ಬಿಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_58_10.txt b/eesanje/url_46_58_10.txt new file mode 100644 index 0000000000000000000000000000000000000000..5de2ee5ab889036fbc103ea81fd4c598d1a65025 --- /dev/null +++ b/eesanje/url_46_58_10.txt @@ -0,0 +1,5 @@ +ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿ ಉಮಾ ಮಹದೇವನ್‌ +ಬೆಂಗಳೂರು,ಜು.30-ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಉಮಾ ಮಹದೇವನ್‌ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಭಿವೃದ್ಧಿ ಆಯುಕ್ತರ ಹುದ್ದೆಯ ಜೊತೆಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನು ಉಮಾ ಮಹದೇವನ್‌ ಅವರಿಗೆ ನೀಡಲಾಗಿದೆ. +ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್‌ ಫರ್ವೇಜ್‌ ಅವರಿಗೆ ಅದೇ ಇಲಾಖೆಯ ಪಂಚಾಯತ್‌ರಾಜ್‌ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.ತೋಟಗಾರಿಕೆ ಇಲಾಖೆ ನಿರ್ದೇಶಕರಾದ ರಮೇಶ್‌.ಡಿ.ಎಸ್‌‍ ಅವರಿಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಯ ಹೊಣೆಗಾರಿಕೆ ವಹಿಸಿ ಸರ್ಕಾರ ಆದೇಶ ವಹಿಸಿದೆ. +ಪಂಚಾಯತ್‌ರಾಜ್‌ ಇಲಾಖೆಯ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್‌ ಅವರಿಗೆ ಮೈಸೂರಿನಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌, ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಸಂಸ್ಥೆಯ ನಿರ್ದೇಶಕ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ. +ನಜೀರ್‌ಸಾಬ್‌ ಸಂಸ್ಥೆಯ ಹೊಣೆಗಾರಿಕೆಯಿಂದ ಶಿಲ್ಪಾ ನಾಗ್‌ ಅವರನ್ನು ಬಿಡುಗಡೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. \ No newline at end of file diff --git a/eesanje/url_46_58_11.txt b/eesanje/url_46_58_11.txt new file mode 100644 index 0000000000000000000000000000000000000000..8d20ff4cf4a35b5c2ad7a254b72447fcd0e74617 --- /dev/null +++ b/eesanje/url_46_58_11.txt @@ -0,0 +1,10 @@ +ದೋಸ್ತಿಗಳ ವಿರುದ್ಧವೇ ರೊಚ್ಚಿಗೆದ್ದ ಕೇಂದ್ರ ಸಚಿವ ಕುಮಾರಸ್ವಾಮಿ +ನವದೆಹಲಿ,ಜು.31-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ನಡೆಸಲಿರುವ ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು ಇತಿಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಾಸನದ ಬೀದಿಯಲ್ಲಿ ಪೆನ್‌ಡ್ರೈವ್‌ ಹಂಚಲು ಯಾರು ಕಾರಣ. ಅಂಥವರನ್ನು ಜೊತೆಯಲ್ಲಿ ಕೂರಿಸಿಕೊಂಡು ನಮನ್ನು ಸಭೆಗೆ ಕರೆಯುತ್ತಾರೆ. ನಮ ಕುಟುಂಬಕ್ಕೆ ವಿಷ ಹಾಕಿದವರನ್ನು ಸಭೆಗೆ ಕೂರಿಸಿಕೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಬೆಂಗಳೂರಿನಿಂದ ಮೈಸೂರಿನವರೆಗೆ ನಮ ಶಕ್ತಿ ಪ್ರಬಲವಾಗಿದೆ. ರಾಜಕಾರಣವೇ ಬೇರೆ, ಚುನಾವಣೆ ಬಂದಾಗ ಒಟ್ಟಿಗೆ ಹೋಗುವುದು ಬೇರೆ. ಆದರೆ ಇಂತಹ ಹೋರಾಟದ ವಿಚಾರದಲ್ಲಿ ವಿಶ್ವಾಸಕ್ಕೆ ಪಡೆಯದಿರುವುದು ಮನಸ್ಸಿಗೆ ತುಂಬ ನೋವಾಗಿದೆ ಎಂದಿದ್ದಾರೆ. +ಬಿಜೆಪಿಯವರು ಪಾದಯಾತ್ರೆ ಮಾಡಬೇಕೆಂಬ ನಿರ್ಧಾರ ಮಾಡಿದ್ದಾರೆ. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಬಿಜೆಪಿ ನಿಲುವಿನಲ್ಲಿ ತೀರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಆದರೆ ನಾವು ಪಾದಯಾತ್ರೆಗೆ ಸೂಕ್ತ ಸಂದರ್ಭವಲ್ಲ ಎಂದು ಹಿಂದೆ ಸರಿದಿದ್ದೇವೆ. ನಮಗೆ ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಹೇಳಿದ್ದಾರೆ. +ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಕುಟುಂಬವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಬೇಡ. ಈ ಸಂದರ್ಭದಲ್ಲಿ ಜನರ ನೋವಿಗೆ ಅವರ ಭಾವನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಕೇವಲ ರಾಜಕೀಯವೇ ಮುಖ್ಯವಲ್ಲ. +ಉತ್ತರ ಕರ್ನಾಟಕದ ನೂರಾರು ಗ್ರಾಮಗಳು ಜಲಾವೃತ್ತವಾಗಿದೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಹೀಗಾಗಿ ನಿನ್ನೆ ಕೋರ್‌ ಕಮಿಟಿ ಸಭೆಯಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ. ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು. +ಕೇರಳದಲ್ಲಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಗುಡ್ಡ ಕುಸಿತದಲ್ಲಿ ಕರ್ನಾಟಕದಿಂದ ಹೋದವರು ಕಣರೆಯಾಗಿದ್ದಾರೆ. ವಾಪಸ್‌‍ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಹಲವೆಡೆ ರೆಡ್‌, ಎಲ್ಲೋ ಅಲರ್ಟ್‌ ಘೋಷಣೆಯಾಗಿದೆ. ಹಲವು ಜಿಲ್ಲೆಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. +ಮಂಡ್ಯ ಭಾಗದಲ್ಲಿ ಭತ್ತದ ಸಸಿ ನಾಟಿ ಮಾಡುವ ಕೆಲಸ ಶುರುವಾಗಲಿದೆ. ಈ ಹಿನ್ನಲೆಯಲ್ಲಿ ಪಾದಯಾತ್ರೆ ಮುಂದೂಡುವ ನಿರ್ಧಾರಕ್ಕೆ ಬಂದಿದ್ದಾರೆ. \ No newline at end of file diff --git a/eesanje/url_46_58_12.txt b/eesanje/url_46_58_12.txt new file mode 100644 index 0000000000000000000000000000000000000000..6235c9cfc9d24dbdc7503d3cec7f2a6f1dba388b --- /dev/null +++ b/eesanje/url_46_58_12.txt @@ -0,0 +1,15 @@ +ವಯನಾಡು ಭೂಕುಸಿತದಲ್ಲಿ ಕರ್ನಾಟಕದ ನಾಲ್ವರ ಸಾವು, ದಂಪತಿ ಸೇರಿ ಹಲವರು ನಾಪತ್ತೆ +ವಯನಾಡು,ಜು.31– ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ ಪ್ರಕರಣದಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ದಂಪತಿ ಸೇರಿದಂತೆ ಹಲವರು ನಾಪತ್ತೆಯಾಗಿದ್ದಾರೆ. +ಪುಟ್ಟಸಿದ್ದಶೆಟ್ಟಿ (62), ರಾಣಿ ಮದರ್‌ (50), ರಾಜನ್‌, ರಜಿನಿ ಎಂಬುವರು ಮೃತಪಟ್ಟಿದ್ದು, ರಾಜನ್‌ ಮತ್ತು ರಜನಿ ದಂಪತಿ ನಾಪತ್ತೆಯಾಗಿದ್ದಾರೆ. ಅಲ್ಲದೇ ಮಂಡ್ಯ ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮ ಲೀಲಾವತಿ, ನಿಹಾಲ್‌ ಎಂಬವರೂ ನಾಪತ್ತೆಯಾಗಿದ್ದಾರೆ. ಮೂವರು (ಅನಿಲ್‌, ಪತ್ನಿ ಝಾನ್ಸಿ, ತಂದೆ ದೇವರಾಜು) ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹತ್ತಾರು ಮಂದಿ ಕಣರೆ ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ. +ಇನ್ನುಳಿದವರಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಈವರೆಗೆ ರಾಜೇಂದ್ರ (50), ರತ್ನಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ. ಗುರುಮಲ್ಲನ್‌(10), ಸಾವಿತ್ರಿ (54), ಸಬಿತಾ (43),ಶಿವಣ್ಣನ್‌ (50), ಅಪ್ಪಣ್ಣನ್‌(39), ಅಶ್ವಿನ್‌ (13), ಜೀತು (11), ದಿವ್ಯಾ (35),ರತ್ನಾ(48) ಎಂಬುವವರು ಕರ್ನಾಟಕದವರೇ ಆಗಿದ್ದು, ನಾಪತ್ತೆಯಾಗಿದ್ದಾರೆ. +ವೈನಾಡಿನಲ್ಲಿ ಕರ್ನಾಟಕ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್‌ ರಮೇಶ್‌ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. +ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್‌ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್‌ ಹಾಗು ರಜನಿ(55) ವಾಸವಿದ್ದರು. ರಾಜನ್‌, ರಜನಿಗಾಗಿ ಶೋಧಕಾರ್ಯ ನಡೆದಿದೆ. +ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. +ಗುಂಡ್ಲುಪೇಟೆ ತಹಸೀಲ್ದಾರ್‌ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್‌ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ. +ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್‌, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್‌ ಕುಮಾರ್‌ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. +ಕೇರಳದ ಮುಂಡಕೈಯಲ್ಲಿ ಅನಿಲ್‌, ಪತ್ನಿ ಝಾನ್ಸಿ, ಪುತ್ರ ನಿಹಾಲ್‌ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್‌ ತಾಯಿ ಲೀಲಾವತಿ(55), ಪುತ್ರ ನಿಹಾಲ್‌(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್‌ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ. +ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್ನಿಂದ 300 ಮೀಟರ್‌ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್‌ ಮಂಜುನಾಥ್‌ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್‌ ಮಾಹಿತಿ ನೀಡಿದ್ದಾರೆ. +ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್‌ ನಿಲ್ಲಿಸಿದ್ದರಿಂದ ಬಚಾವ್‌ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್‌ ಡ್ರೈವರ್‌ ಮಂಜುನಾಥ್‌ ಹೇಳಿಕೆ ನೀಡಿದ್ದಾರೆ. +ಜಲಸ್ಫೋಟದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ:ದುರಂತದಲ್ಲಿ ಬದುಕುಳಿದ ದೇವರಾಜು ಎಂಬವರು ಭೂಕುಸಿತ ಸಂಭವಿಸಿದ ಭೀಕರತೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಬ್ಬಬ್ಬಾ, ಮಣ್ಣು, ನೀರು ಒಟ್ಟಿಗೇ ರಭಸವಾಗಿ ಬರುತ್ತಿತ್ತು. ಬಂಡೆಗಳು ಉರುಳಿಬಂದು ಅಪ್ಪಳಿಸಿತ್ತಿದ್ದವು, ಉಸಿರು ಹಿಡಿದು ಕುಳಿತುಕೊಂಡಿದ್ದೆ. 500ಕ್ಕೂ ಹೆಚ್ಚು ಜನ ನಾಪತ್ತೆಯಾಗಿರಬಹುದು ಎಂದು ಕಣ್ಣೀರಿಟ್ಟಿದ್ದಾರೆ. +ಕೇರಳ ದುರಂತದಲ್ಲಿ ರಕ್ಷಣಾ ಕಾರ್ಯಕ್ಕೆ ಕನ್ನಡಿಗರ ಯುವಕರ ತಂಡ ಹೋಗಿದೆ. ಮಡಿಕೇರಿ ಮೂಲದ ಸ್ವಯಂ ಸೇವಾ ಸಂಘಟನೆಯ 15 ಯುವಕರು ಅಂಬುಲೆನ್ಸ್ ಸಮೇತ ರಕ್ಷಣಾ ಸ್ಥಳಕ್ಕೆ ದೌಡಾಯಿಸಿದ್ದು, ಸೇವೆ ಸಲ್ಲಿಸುತ್ತಿದ್ದಾರೆ. +ಜಿಲ್ಲಾಡಳಿತ ಸಹಾಯವಾಣಿಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷಿ?ಮಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_58_2.txt b/eesanje/url_46_58_2.txt new file mode 100644 index 0000000000000000000000000000000000000000..5346834bfed75ef07eb41bdc8ae8c117a8a92569 --- /dev/null +++ b/eesanje/url_46_58_2.txt @@ -0,0 +1,9 @@ +ಲೋಕಾಯುಕ್ತಕ್ಕೆ ಮೂಡಾ ಹಗರಣದ ಮತ್ತಷ್ಟು ದಾಖಲೆ ಒದಗಿಸಿದ ಎನ್‌.ಆರ್‌.ರಮೇಶ್‌ +ಬೆಂಗಳೂರು,ಜು.31– ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಗೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಮತ್ತಷ್ಟು ಮಹತ್ವಪೂರ್ಣ ದಾಖಲೆ ಒದಗಿಸಿಕೊಟ್ಟಿದ್ದಾರೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ವರ್ಗದವರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಮೇಶ್‌ ಅವರು ಈ ಹಿಂದೆ ಲೋಕಾಯುಕ್ತಕ್ಕೆ 400 ಪುಟಗಳ ದಾಖಲೆ ನೀಡಿ ಹಗರಣದ ತನಿಖೆ ನಡೆಸುವಂತೆ ದೂರು ನೀಡಿದ್ದರು. +ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರಿಗೆ ನೀಡಿರುವುದಾಗಿ ಎನ್‌.ಆರ್‌.ರಮೇಶ್‌ ತಿಳಿಸಿದ್ದಾರೆ. +1997-98 ರ ಅವಧಿಯಲ್ಲಿ ಅಭಿವದ್ಧಿ ಪಡಿಸಿ – ಡಾಂಬರೀಕರಣಗೊಂಡ ರಸ್ತೆಗಳು, ಪಾದಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಕೊಳವೆಗಳು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ದೇವನೂರು 3ನೇ ಹಂತದ ಬಡಾವಣೆಯಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು ಹಾಗೂ ಮೂರ್ನಾಲ್ಕು ವರ್ಷಗಳಲ್ಲಿಯೇ ಸದರಿ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು. +ಆದರೆ, ಅದಾಗಲೇ ಅಭಿವದ್ಧಿಗೊಂಡಿದ್ದ ಸದರಿ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು ಭೂ ಪರಿವರ್ತನೆ ಮಾಡಿ ಕೊಡುವಂತೆ 2004 ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಅಂದಿನ ಜಿಲ್ಲಾಧಿಕಾರಿಗಳು ತಾಲ್ಲೂಕು ತಹಶೀಲ್ದಾರರ ವರದಿಯನ್ನಾಧರಿಸಿ 2005 ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ ಎಂದು ಸ್ಥಳ ತನಿಖಾ ಟಿಪ್ಪಣಿಯಲ್ಲಿ ಬರೆಯಲಾಗಿದೆ. +2005 ಕ್ಕೂ ಏಳೆಂಟು ವರ್ಷಗಳ ಹಿಂದೆಯೇ ಸಂಪೂರ್ಣ ಅಭಿವದ್ಧಿ ಪಡಿಸಲಾಗಿದ್ದ ದೇವನೂರು 03ನೇ ಹಂತದ ಬಡಾವಣೆಯಲ್ಲಿ ವ್ಯವಸಾಯದ ಜಮೀನು ಇರಲು ಹೇಗೆ ಸಾಧ್ಯ. 2004-2006 ರ ಅವಧಿಯಲ್ಲಿ ಧರ್ಮಸಿಂಗ್‌ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಕ್ಕೆ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಆಗಿನ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ ಗಳು ಈ ರೀತಿಯ ಹಾಸ್ಯಾಸ್ಪದ ಮತ್ತು ಕಾನೂನು ಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿರುವುದು ಅತ್ಯಂತ ಸ್ಪಷ್ಟವಾಗಿರುತ್ತದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. +ಇದೇ ಜಮೀನಿಗೆ ಸಂಬಂಧಿಸಿ ದಂತೆ, ದೇವನೂರು 03ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿದ್ದ ಅಷ್ಟೂ ಜಮೀನುಗಳ ಮಾಲೀಕರುಗಳಿಗೆ ಮೂಡಾದ ಆಯುಕ್ತರು, ಭೂಸ್ವಾಧೀನ ಅಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿಗಳು ಮೈಸೂರಿನ ಪ್ರಧಾನ ಸಿವಿಲ್‌ ನ್ಯಾಯಾಲಯ ದಲ್ಲಿ ಒಟ್ಟು . 1,50,59,642.70 ಗಳಷ್ಟು ಸಂಪೂರ್ಣ ಪರಿಹಾರ ಧನವನ್ನು ಠೇವಣಿ ಇಟ್ಟಿರುತ್ತಾರೆ. +ಪ್ರಸ್ತುತ ತನಿಖಾ ಹಂತದಲ್ಲಿರುವ ಮೂಡಾದ ಈ ಬದಲಿ ನಿವೇಶನಗಳ ಹಗರಣದ ತನಿಖೆಗೆ, ಈ ಪತ್ರದೊಂದಿಗೆ ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಮಾನ್ಯ ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_58_3.txt b/eesanje/url_46_58_3.txt new file mode 100644 index 0000000000000000000000000000000000000000..4b36f3f3e0aadc973d35d967ddaeb8daca4363e3 --- /dev/null +++ b/eesanje/url_46_58_3.txt @@ -0,0 +1,7 @@ +“ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬಂದರೆ ರಾಜ್ಯದಲ್ಲಿ ರಕ್ತಕ್ರಾಂತಿಯಾಗುತ್ತೆ” +ಬೆಂಗಳೂರು, ಜು.31-ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕುರ್ಚಿಗೆ ಕೈ ಹಾಕಿದರೆ ರಾಜ್ಯಾದ್ಯಂತ ಪ್ರತೀ ಜಿಲ್ಲೆ , ತಾಲ್ಲೂಕು, ಗ್ರಾಮಮಟ್ಟದಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ. ಅವರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಿದರೆ ರಕ್ತಕ್ರಾಂತಿ ಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಕುರುಬರ ಸಂಘ, ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷದ ಮುಖಂಡರಿಗೆ ಎಚ್ಚರಿಕೆ ನೀಡಿದೆ. +ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಎಂ.ಈರಣ್ಣ, ಕಾರ್ಯಧ್ಯಕ್ಷ ಬಸವರಾಜ ಲ. ಬಸಲಿಗುಂದಿ, ಖಜಾಂಚಿ ಕೆ.ಎಂ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಸೋಮ ಶೇಖರ್‌, ರಾಮಚಂದ್ರಪ್ಪ, ವೆಂಕಟೇಶ್‌ ಮೂರ್ತಿ ಬಿ.ಟಿ.ಜಗದೀಶ್‌ ಮಾತನಾಡಿ, ಹಿಂದುಳಿದ ಜನಾಂಗದ ನಾಯಕ ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದರೆ ಅವರ ಜನಪರ ಕಾಳಜಿ ಮತ್ತು ಇತ್ತೀಚಿಗೆ ತಂದ ಬಡವರ ಕಾರ್ಯಕ್ರಮಗಳನ್ನು ಸಹಿಸಲಾಗದೆ, ಬಿಜೆಪಿ ಪಕ್ಷದ ವಿರೋಧ ಪಕ್ಷದ ನಾಯಕ ಅರ್‌. ಅಶೋಕ್‌ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ಮುಖಂಡರು ಅವರನ್ನು ಕುರ್ಚಿಯಿಂದ ಕೆಳಗಿಳಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. +ಮುಡ ಮತ್ತು ವಾಲೀಕಿ ಹಗರಣಗಳನ್ನು ಮುಂದಿಟ್ಟು, ಭ್ರಷ್ಟಾಚಾರ ನಡೆಯದಿದ್ದರೂ ಸುಳ್ಳು ಆರೋಪಗಳನ್ನ ಮಾಡಿ, ಅವರ ಮೇಲೆ ಕಳಂಕ ಹೊರಿಸುವ ಕೆಲಸ ನಡೆದಿದೆ. +ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ, ವಿರೋಧ ಪಕ್ಷದ ನಾಯಕ, 15 ಬಾರಿ ಬಜೆಟ್‌ ಮಂಡಿಸಿದ ಹಣಕಾಸು ಸಚಿವ ಸೇರಿದಂತೆ 40 ವರ್ಷಗಳ ಸುದೀರ್ಘ ರಾಜಕೀಯದಲ್ಲಿ ಹಲವು ಮಹತ್ವದ ಅಕಾರದ ಹ್ದುೆಯಲ್ಲಿ ಇದ್ದರೂ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದ ನಾಯಕ ಸಿದ್ದರಾಮಯ್ಯರವರ ವರ್ಚಸ್ಸಿಗೆ ಮಸಿ ಬಳಿದು ಅವರನ್ನು ರಾಜಕೀಯವಾಗಿ ಮುಗಿಸಿಯೇ ಬಿಡುವ ಹುನ್ನಾರ ಮಾಡುತ್ತಿದ್ದಾರೆ. +ಬಿಜೆಪಿ ಮತ್ತು ಜೆಡಿಎಸ್‌‍ ರಾಜ್ಯ ನಾಯಕರ ಕುತಂತ್ರಕ್ಕೆ ಬಿಜೆಪಿಯ ರಾಷ್ಟ್ರೀಯ ನಾಯಕರೂ ಕುಮಕ್ಕು ನೀಡುತ್ತಿದ್ದಾರೆ ಎಂದರು.ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ-ಜೆಡಿಎಸ್‌‍ ನಾಯಕರಿಗೆ ಇದು ಸ್ಪಷ್ಟವಾದ ಎಚ್ಚರಿಕೆ. ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು. +ಸಿದ್ದರಾಮಯ್ಯರವರನ್ನು ದುರ್ಬಲ ಗೊಳಿಸುವ ಕುತಂತ್ರವನ್ನು ಕೂಡಲೇ ನಿಲ್ಲಿಸದಿದ್ದರೆ ರಾಜ್ಯದ ಕುರಬ ಸಮಾಜದವರು ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ತಮ ವಿರುದ್ಧ ಸಿಡಿದೇಳಬೇಕಾಗುತ್ತದೆ. ನೀವು ಪಾದಯಾತ್ರೆಯ ಬೆದರಿಕೆ ಹಾಕಿದರೆ ಪರ್ಯಾಯವಾಗಿ ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮಗಳು ಹಾಗೂ ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಮಾಡಬೇಕಾಗುತ್ತದೆ ಎಂದರು. \ No newline at end of file diff --git a/eesanje/url_46_58_4.txt b/eesanje/url_46_58_4.txt new file mode 100644 index 0000000000000000000000000000000000000000..0e829bdab6fb7479f8646478d43e59c627b91412 --- /dev/null +++ b/eesanje/url_46_58_4.txt @@ -0,0 +1,5 @@ +ಕೇರಳಕ್ಕೆ ಎಲ್ಲಾ ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ +ನವದೆಹಲಿ,ಜು.31– ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. +ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದುರ್ಘಟನೆಯಲ್ಲಿ ಮೃತರ ಆತಕ್ಕೆ ಶಾಂತಿ ಕೋರಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ, ಕರ್ನಾಟಕದ ಇಬ್ಬರ ಜೀವಹಾನಿಯಾಗಿದೆ. ಇಂದು ಬೆಳಿಗ್ಗೆ ತಾವು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದು, ಕರ್ನಾಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದೇವೆ ಎಂದರು. +ರಾಜ್ಯದ ಇಬ್ಬರು ಐಎಎಸ್‌‍ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ನಿಯೋಜಿಸಲಾಗಿದ್ದು, ಕರ್ನಾಟಕದವರ ರಕ್ಷಣೆ ಹಾಗೂ ಪುನರ್‌ವಸತಿಗೆ ಸೂಚಿಸಲಾಗಿದೆ. +ಭೂಕುಸಿತ ದೊಡ್ಡ ಆಘಾತವನ್ನು ಉಂಟುಮಾಡಿದೆ ಎಂದು ಹೇಳಿದರು.ರಕ್ಷಣಾ ಕಾರ್ಯಾಚರಣೆಗೆ ಕರ್ನಾಟಕ ಎಲ್ಲಾ ರೀತಿಯ ಸಹಾಯ ನೀಡಲಿದ್ದು, ಯಾವುದೇ ಸಹಾಯ ಕೇಳಿದರೂ ನಾವು ತಯಾರಿದ್ದೇವೆ ಎಂದರು. \ No newline at end of file diff --git a/eesanje/url_46_58_5.txt b/eesanje/url_46_58_5.txt new file mode 100644 index 0000000000000000000000000000000000000000..0a64d40cf4502fad4a7990fec55a23d261586a27 --- /dev/null +++ b/eesanje/url_46_58_5.txt @@ -0,0 +1,7 @@ +ವಯನಾಡಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ +ನವದೆಹಲಿ,ಜು.31-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್‌ ಲಾಡ್‌ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. +ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. +ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್‌ ಲಾಡ್‌ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. +ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್‌ ತಿಳಿಸಿದ್ದಾರೆ. +ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್‌ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. +ಪರಿಹಾರ ಕಾರ್ಯದಲ್ಲಿ ನಮ ಸರ್ಕಾರ ನಿಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು. \ No newline at end of file diff --git a/eesanje/url_46_58_6.txt b/eesanje/url_46_58_6.txt new file mode 100644 index 0000000000000000000000000000000000000000..9089927078aade6b059d92a0599b18013a01dade --- /dev/null +++ b/eesanje/url_46_58_6.txt @@ -0,0 +1,6 @@ +ಮಳೆ ಅನಾಹುತ : ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸಭೆ +ಬೆಂಗಳೂರು,ಜು.31-ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದಲ್ಲಿ ಆಗಿರುವ ಬೆಟ್ಟ ಕುಸಿತ ಹಾಗೂ ಇತರ ಮಳೆ ಅನಾಹುತಗಳ ಬೆನ್ನಲ್ಲೇ ರಾಜ್ಯಸರ್ಕಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಮುಂದಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಗೃಹಕಚೇರಿ ಕೃಷ್ಣಾದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳ ಜೊತೆಗೆ ಪ್ರಾದೇಶಿಕ ಆಯುಕ್ತರು ,ಲೋಕೋಪಯೋಗಿ, ಗೃಹ, ಇಂಧನ, ಆರ್ಥಿಕ ಇಲಾಖೆ, ಕೃಷಿ, ಕಂದಾಯ, ರೇಷೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. +ಪ್ರತಿಯೊಂದು ಜಿಲ್ಲೆಯಲ್ಲೂ ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು. ಅದರಲ್ಲೂ ನೀರು ಹರಿಯುವ ಕಾಲುವೆಗಳು ಹಾಗೂ ಇತರ ಇಳಿಜಾರಿನ ಪ್ರದೇಶಗಳು, ಬೆಟ್ಟಗಳ ಸಾಲಿನ ವಿಚಾರವಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲು ತಯಾರಿ ನಡೆಸಿಕೊಂಡಿದ್ದಾರೆ. +ಹೈಕಮಾಂಡ್‌ನ ಬುಲಾವ್‌ ಮೇರೆಗೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿಯವರು ಇಂದು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಕೇರಳದ ಬೆಟ್ಟ ಕುಸಿತದಲ್ಲಿ ಸುಮಾರು 100 ಕ್ಕೂ ಹೆಚ್ಚು ಜೀವಹಾನಿಯಾಗಿರುವುದು ತೀವ್ರ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲೂ ಬೆಟ್ಟ ಕುಸಿತವಾಗಿ ಸಾಕಷ್ಟು ಜೀವಹಾನಿಯಾಗಿತ್ತು. +ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿರುವ ಮುಖ್ಯಮಂತ್ರಿಗಳು ಅಪಾಯಕಾರಿ ಸ್ಥಿತಿಯಲ್ಲಿರುವ ಬೆಟ್ಟ-ಗುಡ್ಡಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ತಗ್ಗು ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_58_7.txt b/eesanje/url_46_58_7.txt new file mode 100644 index 0000000000000000000000000000000000000000..345a97b34c451fe61289f85f25217eb556c32691 --- /dev/null +++ b/eesanje/url_46_58_7.txt @@ -0,0 +1,6 @@ +ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬದವರಿಗೆ ತಲಾ 5 ಲಕ್ಷ ರೂ ಘೋಷಿಸಿದ ಸಿಎಂ ಸಿದ್ದು +ಬೆಂಗಳೂರು,ಜು.31-ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದ ಕುಟುಂಬದ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. +ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರು ದುರಂತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದಿದ್ದಾರೆ. +ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್‌‍ ಅಽ ಕಾರಿಗಳು, ಎನ್‌‍.ಡಿ.ರ್ಆ.ಎ್‌‍ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್‌ ಲಾಡ್‌ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. +ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ.ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು… +ಸಂತ್ರಸ್ತರ ಪ್ರಾಣ ರಕ್ಷಣೆ ನಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. \ No newline at end of file diff --git a/eesanje/url_46_58_8.txt b/eesanje/url_46_58_8.txt new file mode 100644 index 0000000000000000000000000000000000000000..1dc9b8fb8e4653e25abbbe10b11666728c8ded36 --- /dev/null +++ b/eesanje/url_46_58_8.txt @@ -0,0 +1,5 @@ +ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಚಿವ ಗುಂಡೂರಾವ್‌ ಪತ್ನಿ +ಬೆಂಗಳೂರು,ಜು.31-ತಮ್ಮ ಹಾಗೂ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ಅವರ ಪತ್ನಿ ತಬು ಗುಂಡೂರಾವ್‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಇಂದು ನ್ಯಾಯಾಲಯದಲ್ಲಿ ಪ್ರಮಾಣೀಕೃತ ಹೇಳಿಕೆ ದಾಖಲಿಸಿದ್ದಾರೆ. +ಬೆಂಗಳೂರಿನ 42 ಎಸಿಎಂಎಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಾಗಿದ್ದು ತಬು ಅವರ ಪರವಾಗಿ ಸೂರ್ಯ ಮುಕುಂದ್‌ ರಾಜ್‌ ನ್ಯಾಯಾಲಯದ ಮುಂದೆ ಹಾಜರಾಗಿ ವಾದ ಮಂಡಿಸಿದ್ದಾರೆ. +ಒಬ್ಬ ಜನಪ್ರತಿನಿಧಿಯಾಗಿದ್ದುಕೊಂಡು ಯತ್ನಾಳ್‌ ನೀಡಿರುವ ಹೇಳಿಕೆ ಅವಹೇಳನಕಾರಿ ಮಾತ್ರವಲ್ಲ, ತಮ ರಾಷ್ಟ್ರೀಯತೆ ಹಾಗೂ ದೇಶಪ್ರೀಮದ ಬದ್ಧತೆಯನ್ನು ಪ್ರಶ್ನಿಸುವಂತಿದ್ದು, ಇದು ಕ್ರಿಮಿನಲ್‌ ಸ್ವರೂಪದ ಅಪರಾಧವಾಗಿದೆ ಎಂದು ತಬು ರಾವ್‌ ಅವರು ಹೇಳಿಕೆ ದಾಖಲಿಸಿದ್ದಾರೆ. +ಪ್ರಮಾಣೀಕೃತ ಹೇಳಿಕೆ ದಾಖಲಿಸಿಕೊಂಡಿರುವ ನ್ಯಾಯಾಲಯ ಆಗಸ್ಟ್‌ 7, 8 ರಂದು ಪ್ರಕರಣವನ್ನು ಅವಗಾಹನೆಗೆ ತೆಗೆದುಕೊಳ್ಳುವುದನ್ನು ನಿರ್ಧರಿಸಲಿದ್ದು ವಿಚಾರಣೆ ಮುಂದೂಡಲಾಗಿದೆ. \ No newline at end of file diff --git a/eesanje/url_46_58_9.txt b/eesanje/url_46_58_9.txt new file mode 100644 index 0000000000000000000000000000000000000000..d128034c9ee2304ba777d4d886b66a69321e778d --- /dev/null +++ b/eesanje/url_46_58_9.txt @@ -0,0 +1,5 @@ +ಪುನಿತ್‌ ಕೆರೆಹಳ್ಳಿಗೆ ಪೊಲೀಸರ ಹಲ್ಲೆ : ಠಾಣೆ ಎದುರು ಪ್ರತಾಪ್‌ ಸಿಂಹ ಪ್ರತಿಭಟನೆ +ಬೆಂಗಳೂರು,ಜು.31-ಮಾಜಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಇಂದು ಬೆಳಗ್ಗೆ ಬಸವೇಶ್ವರ ನಗರ ಠಾಣೆ ಮುಂದೆ ಜಮಾಯಿಯಿಸಿ ಪ್ರತಿಭಟನೆ ನಡೆಸಿದರು. +ಹಿಂದೂ ಕಾರ್ಯಕರ್ತ ಪುನಿತ್‌ ಕೆರೆಹಳ್ಳಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ ನಂತರ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. +ಕಳೆದ ವಾರ ರಾಜಸ್ಥಾನದಿಂದ ನಗರದ ರೈಲ್ವೆ ನಿಲ್ದಾಣಕ್ಕೆ ಬಂದ ಮಾಂಸ ಕಳಪೆಯಾಗಿದೆ. ಅದು ಕುರಿಯದ್ದಲ್ಲ, ನಾಯಿಯ ಮಾಂಸವೆಂದು ಗಲಾಟೆ ಮಾಡಿದ್ದರು. +ಆ ಸಂದರ್ಭದಲ್ಲಿ ಸ್ಥಳಕ್ಕೆ ಕಾಟನ್‌ಪೇಟೆ ಪೊಲೀಸರು ಆಗಮಿಸಿದ್ದಾಗ ಪುನಿತ್‌ ಕೆರೆಹಳ್ಳಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಗಲಾಟೆ ಮಾಡಿದ್ದರಿಂದ ಅವರನ್ನು ಬಂಧಿಸಿ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಇದೀಗ ಪುನೀತ್‌ ಕೆರೆಹಳ್ಳ ಜಾಮೀನು ಪಡೆದು ಹೊರಬಂದಿದ್ದಾರೆ. \ No newline at end of file diff --git a/eesanje/url_46_59_1.txt b/eesanje/url_46_59_1.txt new file mode 100644 index 0000000000000000000000000000000000000000..c844405de6d8aa56047fa1de0c3d767892fc2787 --- /dev/null +++ b/eesanje/url_46_59_1.txt @@ -0,0 +1,14 @@ +ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಕತ್ತಿ ಮಸೆಯುತ್ತಿರುವ ಜಾರಕಿಹೊಳಿ-ಯತ್ನಾಳ್‌ +ಬೆಂಗಳೂರು,ಜು.31-ಅಪ್ಪ-ಮಕ್ಕಳ ಬ್ಲಾಕ್‌ ಮೇಲ್‌ನಿಂದ ಪಕ್ಷವನ್ನು ಹೊರತರಬೇಕು, ಇದರ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸ್ವಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಯು ಬಿಜೆಪಿ ಪಾಳೆಯದಲ್ಲಿ ಮತ್ತೊಮೆ ಬಿರುಗಾಳಿ ಎಬ್ಬಿಸಿದೆ. ಇಷ್ಟು ದಿನ ಯಡಿಯೂರಪ್ಪ ಫ್ಯಾಮಿಲಿ ಜೊತೆ ಚೆನ್ನಾಗಿದ್ದ ರಮೇಶ್‌ ಜಾರಕಿಹೊಳಿ ಇದ್ದಕ್ಕಿದಂತೆ ಸಿಡಿದೆದ್ದಿದ್ದಾರೆ. +ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿರಬಹುದು. ಆದರೆ ನನಗಲ್ಲ, ನಾನು ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರವಾಗಿ ಸಮರ ಸಾರಿದ್ದಾರೆ. ಇದರಿಂದ ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. +ಇತ್ತ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬದ ವಿರುದ್ಧ ಮುಗಿಬೀಳುತ್ತಾರೆ. ಯತ್ನಾಳ್‌ ಮತ್ತು ರಮೇಶ್‌ ಜಾರಕಿಹೊಳಿ ಕೈ ಜೋಡಿಸಿ ವಿಜಯೇಂದ್ರ ವಿರುದ್ಧ ಯುದ್ಧ ಸಾರಿದ್ದಾರೆ. 2019ರಲ್ಲಿ ಕಾಂಗ್ರೆಸ್‌‍ ಮತ್ತು ಜೆಡಿಎಸ್‌‍ ಮೈತ್ರಿ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚನೆ ಮಾಡುವಲ್ಲಿ ರಮೇಶ್‌ ಜಾರಕಿಹೊಳಿ ಪಾತ್ರ ಬಹಳ ದೊಡ್ಡದು. ಆ ಸಮಯದಲ್ಲಿ ಕಾಂಗ್ರೆಸ್‌‍ನ 17 ಶಾಸಕರನ್ನು ಬಿಜೆಪಿಗೆ ಕರೆತಂದಿದ್ದು ಇದೇ ರಮೇಶ್‌ ಜಾರಕಿಹೊಳಿ. +ಬಿಜೆಪಿಗೆ ಬರುವ ಎಲ್ಲರಿಗೂ ಸಚಿವ ಸ್ಥಾನ ಕೊಡುತ್ತೇನೆ. ಅದು ನನ್ನ ಜವಾಬ್ದಾರಿ ಎಂದು ಯಡಿಯೂರಪ್ಪ ಅವರು ರಮೇಶ್‌ ಜಾರಕಿಹೊಳಿಗೆ ಭರವಸೆ ಕೊಟ್ಟಿರುತ್ತಾರೆ. ಅದರಂತೆ ರಮೇಶ್‌ ಜಾರಕಿಹೊಳಿ ಜಲ ಸಂಪನೂಲ ಸಚಿವರೂ ಆಗುತ್ತಾರೆ. ಅಲ್ಲಿಂದ ಯಡಿಯೂರಪ್ಪ ಅಂದರೆ ರಮೇಶ್‌ ಜಾರಕಿಹೊಳಿ ಪಾಲಿಗೆ ದೇವರ ಸಮನಾಗುತ್ತಾರೆ. ಕೊಟ್ಟ ಮಾತು ತಪ್ಪದ ಯಡಿಯೂರಪ್ಪ ಬೆನ್ನಿಗೆ ನಿಂತುಕೊಳ್ಳುತ್ತಾರೆ. +2021ರ ಮಾರ್ಚ್‌ನಲ್ಲಿ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾರೆ. ಆಗ ಸಿಎಂ ಆಗಿದ್ದ ಯಡಿಯೂರಪ್ಪ , ಜಾರಕಿಹೊಳಿ ವಿರುದ್ಧ ಆರೋಪ ಬರುತ್ತಿದ್ದಂತೆ ರಾಜೀನಾಮೆ ಪಡೆಯುತ್ತಾರೆ. ಈ ಸಮಯದಲ್ಲಿ ನೀವು ಆರೋಪದಿಂದ ಮುಕ್ತನಾದರೆ ಮತ್ತೆ ಸಚಿವ ಸ್ಥಾನ ನೀಡುತ್ತೇವೆ ಎಂದು ಭರವಸೆ ಕೊಡುತ್ತಾರೆ. ಅದಾದ ಮೇಲೆ ಅವರ ಮೇಲಿನ ಆರೋಪ ತಣ್ಣಗಾದರೂ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಜಾರಕಿಹೊಳಿ ಜಲಸಂಪನೂಲ ಸಚಿವರಾಗಿದ್ದರೂ ಸಚಿವ ಸಂಪುಟ ಸಭೆಯಲ್ಲಿ ಅವರ ಅನುಪಸ್ಥಿತಿಯ ಬಗ್ಗೆ ಉಲ್ಲೇಖಿಸದೇ ಯಡಿಯೂರಪ್ಪ ಸಭೆ ನಡೆಸುತ್ತಾರೆ. +ವಿಶ್ವೇಶ್ವರಯ್ಯ ಜಲ ನಿಗಮದ ಕೋಟ್ಯಂತರ ರೂಪಾಯಿ ಕಾಮಗಾರಿ ಸೇರಿದಂತೆ ಹಲವು ನೀರಾವರಿ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡುತ್ತಾರೆ. ಇದು ರಮೇಶ್‌ ಜಾರಕಿಹೊಳಿ ಮತ್ತಷ್ಟು ಕೆರಳಲು ನಾಂದಿ ಹಾಡಿತು. +ವಿಜಯೇಂದ್ರ ಮೇಲೆ ಕತ್ತಿ ಮಸೆಯುತ್ತಿರುವುದ್ಯಾಕೆ?ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದಾಗ ಬಿಜೆಪಿಯಲ್ಲಿ ಆಂತರಿಕ ಕಲಹ ಹೆಚ್ಚಾಗಿತ್ತು. ಘಟಾನುಘಟಿ ನಾಯಕರಾದ ಜಗದೀಶ್‌ ಶೆಟ್ಟರ್‌, ಲಕ್ಷ್ಮಣ್‌ ಸವದಿ ಆಗ ಬಿಜೆಪಿ ತೊರೆದಿದ್ದರು. ಬಿಜೆಪಿಯಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ ಎಂಬ ಸನ್ನಿವೇಶ ಎದುರಾಗಿತ್ತು. +ಅವರೆಲ್ಲರನ್ನೂ ಒಗ್ಗೂಡಿಸಿ,, ಪಕ್ಷವನ್ನು ಹದ್ದುಬಸ್ತಿಗೆ ತರುವ ಕೆಲಸ ರಾಜ್ಯಾಧ್ಯಕ್ಷರ ಮೇಲಿತ್ತು. ಆದರೆ, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಿದ್ದು ಕೆಲವು ಬಿಜೆಪಿ ನಾಯಕರಿಗೆ ಸುತಾರಾಂ ಇಷ್ಟ ಇರಲಿಲ್ಲ. ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸಾರಥ್ಯ ವಹಿಸಿದ್ದು ರಮೇಶ್‌ ಜಾರಕಿಹೊಳಿಗೂ ಇಷ್ಟ ಇರಲಿಲ್ಲ ಎಂಬ ವಿಷಯ ಈಗ ಬಹಿರಂಗವಾಗಿದೆ. +ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕ ಮೇಲೆ ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆದರೆ, ನನ್ನನ್ನು ತೆಗೆದುಕೊಳ್ಳಲಿಲ್ಲ ಅನ್ನೋದು ರಮೇಶ್‌ ಜಾರಕಿಹೊಳಿ ವಾದ. ಯತ್ನಾಳ್‌ ಆರೋಪದಂತೆ ಡಿಕೆ ಶಿವಕುಮಾರ್‌ ಹಾಗೂ ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿರುವ ಬಗ್ಗೆ ಜಾರಕಿಹೊಳಿಗೆ ಸಹಿಸಲು ಆಗುತ್ತಿಲ್ಲ. ಡಿಕೆ ಶಿವಕುಮಾರ್‌ ಮತ್ತು ರಮೇಶ್‌ ಜಾರಕಿಹೊಳಿಗೆ ಒಬ್ಬರನ್ನು ಕಂಡರೆ ಒಬ್ಬರಿಗೆ ಹಾವು-ಮುಂಗೂಸಿಯಂಥ ದ್ವೇಷ ಇರುವಂತೆ ಕಾಣುತ್ತದೆ. +ರಮೇಶ್‌ ಜಾರಕಿಹೊಳಿ ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ. ಕಾಂಗ್ರೆಸ್‌‍ನಲ್ಲಿ ರಮೇಶ್‌ ಜಾರಕಿಹೊಳಿ ಮಾತುಗಳು ನಡೆಯುತ್ತಿದ್ದವು. ಆದರೆ, ಬಿಜೆಪಿಗೆ ಬಂದ ಮೇಲೆ ಆರಂಭದಲ್ಲಿ ರಮೇಶ್‌ ಜಾರಕಿಹೊಳಿ ಹವಾ ಇತ್ತು. ಸಚಿವ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡಿದ್ರೋ ಅಲ್ಲಿಂದ ಪ್ರಭಾವ ಕಡಿಮೆಯಾಯ್ತು. ಪಕ್ಷವೂ ಅವರನ್ನು ಕಡೆಗಣಿಸುತ್ತಾ ಬಂತು. ಪಕ್ಷದಲ್ಲಿ ಏನೇ ನಿರ್ಣಯ ತೆಗೆದುಕೊಂಡರು ಕೂಡ ಇವರನ್ನು ಕೇಳುತ್ತಿರಲಿಲ್ಲ. ಇದು ಅವರಿಗೆ ಸಹಿಸಿಕೊಳ್ಳಲು ಆಗಲಿಲ್ಲ. ಇಷ್ಟು ದಿನ ಎಲ್ಲವನ್ನೂ ತಡೆದುಕೊಂಡಿದ್ದ ಸಾಹುಕಾರ್‌ ಈಗ ಸಿಡಿದೆದ್ದಿದ್ದಾರೆ. +ಯತ್ನಾಳ್‌ ಹಾಗೂ ರಮೇಶ್‌ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದಾರೆ. ಇಬ್ಬರದ್ದೂ ಒಂದೇ ಟಾರ್ಗೆಟ್‌ ಅದು ವಿಜಯೇಂದ್ರ. ಇತ್ತ ವಿಜಯೇಂದ್ರ ಮುಡಾ ಹಗರಣ ವಿರೋಧಿಸಿ ಪಾದಯಾತ್ರೆ ಮಾಡಲು ನಿರ್ಧಾರ ಮಾಡಿಕೊಂಡರೆ, ಇತ್ತ ರಮೇಶ್‌ ಜಾರಕಿಹೊಳಿ ಮತ್ತು ಯತ್ನಾಳ್‌ ವಾಲೀಕಿ ನಿಗಮ ಹಗರಣ ಖಂಡಿಸಿ ಪಾದಯಾತ್ರೆ ಮಾಡಲು ರೆಡಿಯಾಗಿದ್ದಾರೆ. +ಇದು ಕಾಂಗ್ರೆಸ್‌‍ ವಿರುದ್ಧದ ಹೋರಾಟ ಅನ್ನೋದಕ್ಕಿಂತ ವಿಜಯೇಂದ್ರ ಹಾಗೂ ಯತ್ನಾಳ್‌-ಜಾರಕಿಹೊಳಿ ನಡುವಿನ ಹೋರಾಟ ಅಂತ ಬಿಂಬಿತವಾಗುತ್ತಿದೆ. ಇಲ್ಲಿ ಇನ್ನೊಂದು ವಿಷಯವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ತಿಳಿಯುವುದು ಬಿಜೆಪಿಯಲ್ಲಿನ ಒಂದು ಬಣ ಸಿದ್ದರಾಮಯ್ಯರನ್ನು ವಿರೋಧಿಸುತ್ತಿದೆ. ಇನ್ನೊಂದು ಬಣ ಸಿದ್ದರಾಮಯ್ಯ ಪರವಾಗಿರುವಂತೆ ವರ್ತಿಸುತ್ತಿದೆ. +ರಮೇಶ್‌ ಜಾರಕಿಹೊಳಿ ಮತ್ತು ಯತ್ನಾಳ್‌ ಒಂದಾಗಿ ಭಿನ್ನ ಹಾದಿ ತುಳಿದಿದ್ದು ಬಿಜೆಪಿ ಹೈಕಮಾಂಡ್‌ನಲ್ಲಿ ಒತ್ತಡ ಉಂಟು ಮಾಡಿದೆ. ಬಿಜೆಪಿಯಲ್ಲಿ ಇದೇ ಬಣ ರಾಜಕೀಯ ಮುಂದುವರಿದರೆ, ಪಕ್ಷಕ್ಕೆ ಡ್ಯಾಮೇಜ್‌ ಆಗುವ ಜೊತೆಗೆ ಮುಂದೆ ನಡೆಯುವ ಚುನಾವಣೆಯ ಮೇಲೂ ಪರಿಣಾಮ ಬೀರಬಹುದು. ಹೀಗಾಗಿ ಹೈಕಮಾಂಡ್‌ ಬೆಣ್ಣೆಯಲ್ಲಿ ಕೂದಲು ತೆಗೆಯುವಂತೆ ಪಕ್ಷದ ಆಂತರಿಕ ಕಲಹವನ್ನು ನಿವಾರಿಸುವ ಅನಿವಾರ್ಯತೆ ಇದೆ. \ No newline at end of file diff --git a/eesanje/url_46_59_10.txt b/eesanje/url_46_59_10.txt new file mode 100644 index 0000000000000000000000000000000000000000..ac54e8b81c30d62089badb4cabddca83da482635 --- /dev/null +++ b/eesanje/url_46_59_10.txt @@ -0,0 +1,7 @@ +ಕೆಆರ್‌ಎಸ್‌‍ಗೆ ಬಾಗಿನ ಅರ್ಪಣೆ, ಕಾವೇರಿ ಮಾತೆಗೆ ಪೂಜೆ +ಮೈಸೂರು,ಜು.29-ಕಾವೇರಿ ನದಿಪಾತ್ರದಲ್ಲಿ ಸಮೃದ್ಧಿ ಮಳೆಯಿಂದ ತುಂಬಿ ಹರಿಯುತ್ತಿರುವ ಕೆಆರ್‌ಎಸ್‌‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಬಾಗಿನ ಅರ್ಪಿಸಿದರು.ಸಚಿವರಾದ ಎಚ್‌.ಸಿ.ಮಹ ದೇವಪ್ಪ, ಚೆಲುವರಾಯಸ್ವಾಮಿ, ವೆಂಕಟೇಶ್‌, ಜಿಲ್ಲೆಯ ಜನಪ್ರತಿನಿಧಿ ಗಳು ಭಾಗವಹಿಸಿದ್ದರು. +ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌, ಈ ಹಿಂದೆ ಮಳೆ ಬರದೇ ಇದ್ದಾಗ ವಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅಪಪ್ರಚಾರ ಮಾಡಿದರು. ಈಗ ಸಿದ್ದರಾಮಯ್ಯ ಅವರ ಕಾಲ್ಗುಣದಿಂದ ಸಮೃದ್ಧ ಮಳೆಯಾಗುತ್ತಿದೆ. ಎಲ್ಲಾ ಜಲಾಶಯಗಳೂ ತುಂಬಿ ತುಳುಕುತ್ತಿವೆ ಎಂದು ತಿರುಗೇಟು ನೀಡಿದರು.ಕಾವೇರಿ ನದಿಪಾತ್ರದಲ್ಲಿನ ರೈತರ ಹಿತರಕ್ಷಣೆಗೆ ನಮ ಸರ್ಕಾರ ಬದ್ಧವಾಗಿದೆ. ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು. +ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಆತುರಾತುರವಾಗಿ ಪ್ರತಿದಿನ 1 ಟಿಎಂಸಿ ನೀರು ಬಿಡಬೇಕು ಎಂದು ತೀರ್ಪು ನೀಡಿದೆ. ಕಾವೇರಿ ಕೃಪಾಶೀರ್ವಾದದಿಂದ ಉತ್ತಮ ಮಳೆಯಾಗುತ್ತಿದೆ. ಈ ತಿಂಗಳ ಅಂತ್ಯಕ್ಕೆ 40 ಟಿಎಂಸಿ ಬಿಡಬೇಕಿತ್ತು. ಈಗಾಗಲೇ 84 ಟಿಎಂಸಿಗೂ ಹೆಚ್ಚು ನೀರು ಹರಿದುಹೋಗಿದೆ. ನೀರು ಹರಿಸಿರುವ ಬಗ್ಗೆಯೂ ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ +ಉತ್ತಮ ಮಳೆಯಾದಾಗ ನಿಗದಿಗಿಂತಲೂ ಹೆಚ್ಚು ನೀರು ಹರಿದಿರುವ ಲೆಕ್ಕವಿದೆ ಎಂದು ವಿವರಣೆ ನೀಡಿದರು.ಇದೇ ರೀತಿ ಮಳೆಯಾದರೆ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ರೈತರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.ಕೆಆರ್‌ಎಸ್‌‍ ಅಣೆಕಟ್ಟೆಯ ಸಮೀಪವಿರುವ ಬೃಂದಾವನ ಉದ್ಯಾನವನವನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿ ಉತ್ತಮ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸಲಾಗುವುದು. ಕಳೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಯೋಜನೆಗಾಗಿ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಸರ್ಕಾರದ ಭೂಮಿಯೇ ಸಾಕಾಗಲಿದೆ ಎಂದು ಹೇಳಿದರು. +ಅಣೆಕಟ್ಟೆಯ ಭದ್ರತೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಗಂಗಾರತಿ ಮಾದರಿಯಲ್ಲೇ ಕಾವೇರಿ ಆರತಿಯನ್ನು ಆಯೋಜಿಸಲು ಚೆಲವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ಒಂದು ತಿಂಗಳಲ್ಲೇ ವರದಿ ಪಡೆದು ಮುಂದಿನ ತಿಂಗಳಿನಿಂದ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. +ಮುಂದಿನ ವರ್ಷದಿಂದ ಕೆಆರ್‌ಎಸ್‌‍ ಅಣೆಕಟ್ಟೆ ತುಂಬಿದ ವೇಳೆಯಲ್ಲಿ ಬಾಗಿನ ಅರ್ಪಿಸುವ ಸಂದರ್ಭದಲ್ಲೇ ಕಾರ್ಯಕ್ರಮ ಆಯೋಜನೆ ಮಾಡಿ 5 ಮಂದಿಗೆ ಪ್ರಶಸ್ತಿ ನೀಡಲಾಗುವುದು. ರೈತರಿಗೆ ಸಮರ್ಪಕವಾದ ನೀರು ಪೂರೈಕೆ ಮಾಡುವ 3 ಜನ ಸವಡಿಯರಿಗೆ ಒಬ್ಬ ಪ್ರಗತಿಪರ ರೈತ ಹಾಗೂ ಮತ್ತೊಬ್ಬ ಕಿರಿಯ ಎಂಜಿನಯರ್‌ಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_46_59_11.txt b/eesanje/url_46_59_11.txt new file mode 100644 index 0000000000000000000000000000000000000000..64a89424ed7e88fc5aefbce0101b5492b4cfa1bb --- /dev/null +++ b/eesanje/url_46_59_11.txt @@ -0,0 +1,15 @@ +ಭ್ರಷ್ಟ ಸರ್ಕಾರವೆಂದು ಬಿಂಬಿಸಲು ಬಿಜೆಪಿ ವ್ಯರ್ಥ ಪ್ರಯತ್ನ : ಸಿದ್ದು ವಾಗ್ದಾಳಿ +ಮೈಸೂರು,ಜು.29-ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯ ಮುಂದುವರೆದಿದೆ. ಇದರ ನಡುವೆ ಬಿಜೆಪಿಯ ನಾಯಕರು ಕರ್ನಾಟಕವನ್ನು ಅನಗತ್ಯವಾಗಿ ಭ್ರಷ್ಟ ಸರ್ಕಾರ ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. +ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ಪೂರ್ವಭಾವಿ ಸಭೆ ನಡೆಸಿದಾಗ ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಲಾಗಿದ್ದ 5300 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿಲ್ಲ. 15ನೇ ಹಣಕಾಸು ಆಯೋಗದ ಮಧ್ಯಂತರ ಶಿಫಾರಸಿನಲ್ಲಿ ಪೆರಿಫಿರಲ್‌ ರಿಂಗ್ ರಸ್ತೆಗೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ತಲಾ 3000 ಕೋಟಿ ರೂ. ನೀಡುವುದಾಗಿ ಘೋಷಿಸಲಾಗಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ. ಇದು ಅನ್ಯಾಯ ಅಲ್ಲವೇ? ಎಂದರು. +ನಿರ್ಮಲಾ ಸೀತಾರಾಮನ್‌ ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಕುಮಾರಸ್ವಾಮಿಯವರು ಕೂಡ ಮಂಡ್ಯದ ಸಂಸದರಾಗಿ ಕೇಂದ್ರಸಚಿವರಾಗಿದ್ದಾರೆ. ಮಂಡ್ಯಕ್ಕಾದರೂ ಯಾವುದಾದರೂ ಯೋಜನೆ ಬಜೆಟ್‌ನಲ್ಲಿ ಪ್ರಕಟಿಸಬೇಕಿತ್ತು. ಕೈಗಾರಿಕಾ ಕಾರಿಡಾರ್‌ ಘೋಷಣೆ ಮಾಡಬಹುದಿತ್ತು. ಮೇಕೆದಾಟು ಯೋಜನೆ, ಏಮ್ಸೌ, ಐಐಟಿ ಸೇರಿದಂತೆ ಹಲವು ವಿಚಾರಗಳಿಗೆ ರಾಜ್ಯಸರ್ಕಾರ ಮನವಿ ಸಲ್ಲಿಸಿತ್ತು. ಯಾವುದೂ ಈಡೇರಿಲ್ಲ. ಇದು ಅನ್ಯಾಯವಲ್ಲವೇ? ಎಂದು ಪ್ರಶ್ನಿಸಿದರು. +ನಿರ್ಮಲಾ ಸೀತಾರಾಮನ್‌ ಬಂದಾಗಲೆಲ್ಲಾ ಸುಳ್ಳು ಹೇಳಿ ಹೋಗುತ್ತಾರೆ. ಈ ಬಾರಿಯೂ ಅದೇ ರೀತಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಿದ್ದಾರೆ. 15ನೇ ಹಣಕಾಸು ಆಯೋಗದಲ್ಲಿ ನಮಗೆ ಭಾರಿ ಅನ್ಯಾಯವಾಗಿದೆ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದರು. +ರಾಜ್ಯದಲ್ಲಿ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದು ನಿರ್ಮಲಾ ಸೀತಾರಾಮನ್‌ ದೂರಿದ್ದಾರೆ. ಇವರ ಅವಧಿಯಲ್ಲಿ ಭಾರತಕ್ಕೆ ವಿದೇಶಿ ಬಂಡವಾಳ ಹೂಡಿಕೆಯೇ ತಗ್ಗಿದೆ. ಅದಕ್ಕೆ ಮೂಲ ಕಾರಣ ಕೇಂದ್ರ ಹಣಕಾಸು ಸಚಿವರು ರೂಪಿಸಿದ ನೀತಿಗಳು ಎಂದು ಹೇಳಿದರು. +ರಾಜ್ಯಸರ್ಕಾರ ತನ್ನ ಪಾಲಿನ ಹಣ ನೀಡದೇ ಕೇಂದ್ರದಿಂದ ಅನುದಾನ ಕೇಳುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿರುವುದನ್ನು ಆಕ್ಷೇಪಿಸಿದ ಸಿದ್ದರಾಮಯ್ಯನವರು, ದೇಶದಲ್ಲೇ ಮಹಾರಾಷ್ಟ್ರದ ನಂತರ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವುದು ಕರ್ನಾಟಕ ರಾಜ್ಯ. ನಮಗೆ ನ್ಯಾಯಯುತವಾದ ಪಾಲು ನೀಡಬೇಕಿದೆ. ಇವರೇ ಘೋಷಣೆ ಮಾಡಿದ ಭದ್ರಾ ಮೇಲ್ದಂಡೆ ಯೋಜನೆ ಹಣ ಬಾಕಿ ಇರುವಾಗಲೂ ರಾಜ್ಯಕ್ಕೆ ಯಾವುದೇ ಹಣ ಕೊಡಬೇಕಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳುತ್ತಿದ್ದಾರೆ ಎಂದು ಆಕ್ಷೇಪಿಸಿದರು. +ನೀತಿ ಆಯೋಗದ ಸಭೆಗೆ ಭಾಗವಹಿಸದೇ ಇರುವ ಬಗ್ಗೆ ಮಾಡಲಾಗುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇಂದ್ರದ ಅನ್ಯಾಯವನ್ನು ವಿರೋಧಿಸಿಯೇ ನಾವು ಸಭೆಯನ್ನು ಬಹಿಷ್ಕರಿಸಿದ್ದೇವೆ. ನಮಂತೆಯೇ ತಮಿಳುನಾಡು, ತೆಲಂಗಾಣ ಸೇರಿದಂತೆ ಬಿಜೆಪಿಯೇತರ ಆಡಳಿತವಿರುವ ಎಲ್ಲಾ ರಾಜ್ಯಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿವೆ. +ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಿದ್ದರು. ಕೊನೆಗೂ ಅವರಿಗೂ ಮಾತನಾಡಲು ಅವಕಾಶ ಸಿಕ್ಕಿಲ್ಲ ಎಂದು ಸಭಾತ್ಯಾಗ ಮಾಡಿದ್ದಾರೆ ಎಂದು ಹೇಳಿದರು.ರಾಜ್ಯದಲ್ಲಿ ಭ್ರಷ್ಟಾಚಾರ ಪೂರ್ತಿ ಹೋಗಿದೆ ಎಂದು ಹೇಳುವುದಿಲ್ಲ. ಆದರೆ ತಗ್ಗಿದೆ. ಆದರೂ ಕರ್ನಾಟಕವನ್ನು ಭ್ರಷ್ಟ ಸರ್ಕಾರ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ನಾವು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಕರ್ನಾಟಕ ಭ್ರಷ್ಟ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದರು. +ಈ ಹಿಂದೆ ಬಿಜೆಪಿಯ ಅವಧಿಯಲ್ಲಿ ನಡೆದಿದ್ದ 21 ಹಗರಣಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ. ಗುರುರಾಘವೇಂದ್ರ ಬ್ಯಾಂಕಿನ ವಂಚನೆ ಸೇರಿದಂತೆ ಹಲವು ಹಗರಣವನ್ನು ಸಿಬಿಐಗೆ ನೀಡಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದನ್ನೂ ಕೂಡ ಸಿಬಿಐ ತನಿಖೆಗೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು. +ಮುಡಾ ಪ್ರಕರಣದಲ್ಲಿ ನಾವೂ ಕೂಡ ಪಾದಯಾತ್ರೆ ಮಾಡುತ್ತೇವೆ. ಯಾವ ಕಾರಣಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್‌‍ನವರು ಪಾದಯಾತ್ರೆ ಮಾಡುತ್ತಿದ್ದಾರೆ?, ಬಿಜೆಪಿಯವರು ಹಲವಾರು ಹಗರಣವನ್ನು ನಡೆಸಿದ್ದಾರೆ. ಒಂದನ್ನೂ ಅವರು ತನಿಖೆ ನಡೆಸಲಿಲ್ಲ. ನಮ ಅವಧಿಯಲ್ಲಿ ಜನರಲ್ಲಿ ಅನುಮಾನ ಇರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ ಎಂದು ತಿಳಿಸಿದರು. +ಬಿಜೆಪಿ-ಜೆಡಿಎಸ್‌‍ನವರಿಗೆ ನಮ ಪೊಲೀಸ್‌‍ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್‌ಮೇಲ್‌ ಮಾಡುವುದರಲ್ಲಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು. ಬಂಡವಾಳ ಹೂಡಿಕೆ ಹಿನ್ನಡೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಟೀಕೆ ಮಾಡಿರುವುದಕ್ಕೆ ಸವಿಸ್ತಾರವಾದಂತಹ ಹೇಳಿಕೆ ನೀಡಲು ಸಚಿವರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. +ಕುಮಾರಸ್ವಾಮಿ ಬಹಳಷ್ಟು ಮಾತನಾಡುತ್ತಿದ್ದಾರೆ. 1984 ರಲ್ಲಿ ಮುಡಾದಿಂದ ಕೈಗಾರಿಕಾ ನಿವೇಶನ ಪಡೆದಿದ್ದಾರೆ. ಸ್ವಾಧೀನಪತ್ರ ತೆಗೆದುಕೊಂಡಿದ್ದಾರೆ. ಆದರೆ ಕೈಗಾರಿಕೆಯನ್ನೇ ಮಾಡಿಲ್ಲ. ಈಗ ನಿವೇಶನವನ್ನೇ ಪಡೆದಿಲ್ಲ ಎಂದು ಹೇಳುತ್ತಿದ್ದಾರೆ. ಈ ಹಿಂದೆ ಪುಟ್ಟಯ್ಯ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ನಿವೇಶನ ಕೊಡಿಸಲಾಗಿದೆ ಎಂದು ನಾವು ವಿವರ ನೀಡುವ ಮೂಲಕ ರಾಜಕೀಯವಾಗಿಯೇ ಪ್ರತಿಕ್ರಿಯೆ ನೀಡುತ್ತೇವೆ ಎಂದರು. +ಮಳೆ ಸುರಿಯುತ್ತಿರುವುದರಿಂದ ಕಾವೇರಿ ನೀರು ಬಿಡಲಾಗುತ್ತಿದ್ದು, ಮೆಟ್ಟೂರು ಜಲಾಶಯ ತುಂಬಿಹೋಗುವ ಸಾಧ್ಯತೆಯಿದೆ. ನೀರು ವ್ಯರ್ಥವಾಗುವುದನ್ನು ತಪ್ಪಿಸಲು ತಮಿಳುನಾಡಿನ ಜೊತೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ. ಆದರೆ ತಮಿಳುನಾಡಿನವರು ಮಾತುಕತೆಗೆ ಸಿದ್ಧರಿಲ್ಲ ಎಂದು ಹೇಳಿದರು. +ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು ಅಣೆಕಟ್ಟು ನಿರ್ಮಿಸಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಬಾಂಗ್ಲಾ ದೇಶದಿಂದ ಅಕ್ರಮ ವಲಸಿಗರು ಆಗಮಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದರು. \ No newline at end of file diff --git a/eesanje/url_46_59_12.txt b/eesanje/url_46_59_12.txt new file mode 100644 index 0000000000000000000000000000000000000000..0e6e1d6f9197664f9aa3b4c1ef60add38c6e6b84 --- /dev/null +++ b/eesanje/url_46_59_12.txt @@ -0,0 +1,5 @@ +ನಾಳೆಯಿಂದ ನೆರೆಪೀಡಿತ ಪ್ರದೇಶಗಳಿಗೆ ಬಿಜೆಪಿ ನಾಯಕರ ತಂಡ ಭೇಟಿ +ಬೆಂಗಳೂರು,ಜು.29-ಭಾರತದಲ್ಲಿ ಉಂಟಾಗಿರುವ ನೆರೆ ಹಾವಳಿಯನ್ನು ಪರಿಶೀಲಿಸಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷ ಬಿಜೆಪಿ ನಾಯಕರ ತಂಡವನ್ನು ರಚಿಸಿದೆ. ಈಗಾಗಲೇ ಉತ್ತರಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಹಾಗೂ ಆಸ್ತಿಪಾಸ್ತಿ ಹಾನಿಗೊಂಡಿದ್ದು, ಈ ಸಂದರ್ಭದಲ್ಲಿ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಅಶ್ವಥನಾರಾಯಣ, +ಅರಗ ಜ್ಞಾನೇಂದ್ರ, ಶ್ರೀರಾಮುಲು ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ , ಮೇಲನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ನೇತೃತ್ವದಲ್ಲಿ 6 ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಮಟ್ಟದ ಮುಖಂಡರು ಇರಲಿದ್ದು, ನಾಳೆಯಿಂದಲೇ ರಾಜ್ಯಾದ್ಯಂತ ಸಂಚರಿಸಲಿದೆ. +ವಿಧಾನಪರಿಷತ್‌ ವಿಪಕ್ಷ ನಾಯಕ ನಾರಾಯಣಸ್ವಾಮಿ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದರೆ ಅರವಿಂದ್‌ ಬೆಲ್ಲದ್‌ ನೇತೃತ್ವದ ತಂಡ ಬಾಗಲಕೋಟೆ, ಬಿಜಾಪುರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಲಿದೆ.ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದ ತಂಡ ವಿಜಯನಗರಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಆಲಿಸಲಿದೆ. ಮಾಜಿ ಶಾಸಕ ಗಾಲಿ ಜನಾರ್ಧನ್‌ ರೆಡ್ಡಿ ಭಾಗಿಯಾಗಲಿದ್ದಾರೆ. +ಆರ್‌.ಅಶೋಕ್‌ ನೇತೃತ್ವದ ತಂಡ ಮಂಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಅರಗ ಜ್ಞಾನೇಂದ್ರ ಅವರ ತಂಡ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಚರಿಸಲಿದೆ. \ No newline at end of file diff --git a/eesanje/url_46_59_2.txt b/eesanje/url_46_59_2.txt new file mode 100644 index 0000000000000000000000000000000000000000..4fd541705e74a81659b37f54bdafa98899c76232 --- /dev/null +++ b/eesanje/url_46_59_2.txt @@ -0,0 +1,6 @@ +ಕರಾವಳಿ, ಮಲೆನಾಡು ಭಾಗದಲ್ಲಿ ಎರಡು ದಿನ ಭಾರೀ ಮಳೆ ಮುನ್ನೆಚ್ಚರಿಕೆ +ಬೆಂಗಳೂರು, ಜು.31-ನಿರಂತರ ಮಳೆಯಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿವೃಷ್ಟಿ, ಪ್ರವಾಹ ಉಂಟಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಆದರೂ ವರುಣನಿಗೆ ಮಾತ್ರ ತೃಪ್ತಿಯಾದಂತೆ ಕಂಡುಬರುತ್ತಿಲ್ಲ. ಸದ್ಯಕ್ಕಂತೂ ಮಳೆ ನಿಲ್ಲುವ ಮುನ್ಸೂಚನೆಗಳಿಲ್ಲ. +ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. +ದಕ್ಷಿಣ ಗುಜರಾತ್‌ ನಿಂದ ಕೇರಳ ರಾಜ್ಯದ ಕರಾವಳಿಯ ಅರಬ್ಬೀ ಸಮುದ್ರ ಮಟ್ಟದಲ್ಲಿ ಉಂಟಾದ ಮೇಲುಬ್ಬರದ (ಟ್ರಫ್‌) ಪರಿಣಾಮ ರಾಜ್ಯದ ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಇಂದು ಬಿರುಗಾಳಿಯಿಂದ ಕೂಡಿದ ಸಿಡಿಲುಸಹಿತ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಅತ್ಯಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್‌ಅಲರ್ಟ್‌ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. +ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಆರೆಂಜ್‌‍ ಅಲರ್ಟ್‌ ನೀಡಲಾಗಿದೆ. ಅನಂತರದ ಮೂರು ದಿನಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ, ಇಂದಿನಿಂದ ಆಗಸ್ಟ್‌ 2 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. +ಅನಂತರದ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ನಿರಂತರವಾಗಿ ಬೀಳುತ್ತಿರುವ ಮಳೆಗೆ ರಾಜ್ಯ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದು, ನದಿಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಅಪಾರ ಪ್ರಮಾಣದ ಗುಡ್ಡ ಕುಸಿತ, ರಸ್ತೆ, ಸೇತುವೆ, ಬೆಳೆ, ವಿದ್ಯುತ್‌ ಸಂಪರ್ಕ, ಮನೆಗಳಿಗೆ ಹಾನಿ ಸಂಭವಿಸಿದೆ. \ No newline at end of file diff --git a/eesanje/url_46_59_3.txt b/eesanje/url_46_59_3.txt new file mode 100644 index 0000000000000000000000000000000000000000..47cad11bac7788d929a0fae7dec6db5752bf2f56 --- /dev/null +++ b/eesanje/url_46_59_3.txt @@ -0,0 +1,10 @@ +ಬಿಜೆಪಿ- ಜೆಡಿಎಸ್‌‍ ಪಾದಯಾತ್ರೆಗೆ ಕಾಂಗ್ರೆಸ್‌‍ನಿಂದ ಕೌಂಟರ್ ಪ್ಲಾನ್ ರೆಡಿ +ಬೆಂಗಳೂರು, ಜು.30-ಬಿಜೆಪಿ- ಜೆಡಿಎಸ್‌‍ ನಾಯಕರು ಮುಡಾ ಹಗರಣದ ವಿರುದ್ಧ ಜನಜಾಗೃತಿ ಮೂಡಿಸಲು ನಡೆಸಲಿರುವ ಪಾದ ಯಾತ್ರೆಯುದ್ದಕ್ಕೂ ಕಾಂಗ್ರೆಸ್‌‍ ಕೂಡ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಿಗೆ ಸತ್ಯಾಂಶ ತಿಳಿಸಲು ಮುಂದಾಗಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಸಂಪುಟದ ಹಿರಿಯ ಸಚಿವರೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ.ಬಿಜೆಪಿ-ಜೆಡಿಎಸ್‌‍ ಪಕ್ಷಗಳು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ನಡೆಸಿ ಮುಡಾ ನಿವೇಶನ ಹಂಚಿಕೆ ಹಾಗೂ ಮಹರ್ಷಿ ವಾಲೀಕಿ ಹಗರಣದ ಕುರಿತು ಜನಜಾಗೃತಿ ಮೂಡಿಸಲು ಮುಂದಾಗಿವೆ. ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್‌‍ ಮುಂದಾಗಿದೆ. +ಪಾದಯಾತ್ರೆ ನಡೆಯುವ ಮಾರ್ಗ ದುದ್ದಕ್ಕೂ ಬಿಡದಿ, ರಾಮನಗರ, ಮದ್ದೂರು-ಮಂಡ್ಯ, ಮೈಸೂರು ಪ್ರದೇಶಗಳಲ್ಲಿ ಕಾಂಗ್ರೆಸ್‌‍ ವತಿಯಿಂದ ಬೃಹತ್‌ ಸಮಾವೇಶಗಳನ್ನು ಆಯೋಜಿಸಿ ಜನರಿಗೆ ಸತ್ಯಾಂಶ ತಿಳಿಸಲು ಹಾಗೂ ಬಿಜೆಪಿ-ಜೆಡಿಎಸ್‌‍ ಪಾಳಯದ ಹಗರಣಗಳ ಬಗ್ಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ. +ಸದ್ಯದ ಕಾರ್ಯಕ್ರಮ ಪಟ್ಟಿ ಪ್ರಕಾರ, ಬಿಡದಿ, ರಾಮನಗರ, ಮದ್ದೂರು-ಮಂಡ್ಯ, ಮೈಸೂರು ರಸ್ತೆಯಲ್ಲಿ ನಾಲ್ಕು ಕಡೆ ಸಾರ್ವಜನಿಕ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಬಿಜೆಪಿಯ ಪಾದಯಾತ್ರೆ ತಲುಪುವ ಒಂದು ದಿನದ ಮೊದಲು ಕಾಂಗ್ರೆಸ್‌‍ ನಿಗದಿತ ಸ್ಥಳಗಳಲ್ಲಿ ಬೃಹತ್‌ ಸಮಾ ವೇಶಗಳನ್ನು ಆಯೋಜಿಸಲಿದೆ. +ಹೀಗಾಗಿ ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್‌‍ ನಾಯಕರು ಮಾಡುವ ಎಲ್ಲಾ ಆರೋಪಗಳಿಗೂ ಎದು ರೇಟು ನೀಡಲು ನಿರ್ಧರಿಸಲಾಗಿದೆ.ನಿನ್ನೆ ನಡೆದ ಸಭೆಯಲ್ಲಿ ಸಮಾವೇಶಗಳ ಆಯೋಜನೆ ಮತ್ತು ಯಾರ್ಯಾರು, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು?, ಯಾವ್ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು? ಎಂಬ ಕುರಿತು ಚರ್ಚೆಗಳಾಗಿವೆ. +ಅಂತಿಮವಾಗಿ ಮೈಸೂರಿನ ಸಮಾ ವೇಶಕ್ಕೆ ಹೈಕಮಾಂಡ್‌ ನಾಯಕ ರನ್ನು ಆಹ್ವಾನಿಸುವ ನಿರ್ಧಾರ ಗಳಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಪುಟದ ಪ್ರಮುಖ ಸಚಿವರು, ಕಾಂಗ್ರೆಸ್‌‍ ನಾಯಕರು ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. +ಬಿಜೆಪಿಯ ಹಗರಣಗಳನ್ನು ಎಳೆಎಳೆ ಯಾಗಿ ಬಿಡಿಸಿಟ್ಟು ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ಆಸ್ಪದವೇ ಇಲ್ಲದಂತೆ ಮಾಡುವ ರಣತಂತ್ರವನ್ನು ಕಾಂಗ್ರೆಸ್‌‍ ರೂಪಿಸಿದೆ.ಪಾದಯಾತ್ರೆಯ ಬಳಿಕ ರಾಜ್ಯದ ಇತರ ಪ್ರದೇಶಗಳಲ್ಲೂ ಇದೇ ರೀತಿಯ ಸಮಾವೇಶ ನಡೆಸುವ ಬಗ್ಗೆ ಚರ್ಚೆಗಳಾ ಗಿದ್ದು, ಬಿಜೆಪಿ-ಜೆಡಿಎಸ್‌‍ಗೆ ಭರ್ಜರಿ ಕೌಂಟರ್‌ ನೀಡಲು ತಯಾರಿ ನಡೆದಿದೆ. +ಪಾದಯಾತ್ರೆ ನಡೆಸಲು ಅಧಿಕೃತವಾಗಿ ಅನುಮತಿ ನೀಡದಿರಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿರುವ ಗೃಹಸಚಿವ ಪರಮೇಶ್ವರ್‌, ಈ ಹಿಂದೆ ನಾವು ವಿರೋಧಪಕ್ಷದಲ್ಲಿದ್ದಾಗ ಹಲವು ಪಾದಯಾತ್ರೆಗಳನ್ನು ನಡೆಸಿದ್ದೇವೆ. ಆಗಿನ ಸರ್ಕಾರ ನಮಗೆ ಅನುಮತಿ ನೀಡಿರಲಿಲ್ಲ. ಅದೇ ರೀತಿ ಈಗ ನಾವು ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ. ಆದರೆ ಅವರ ಹೋರಾಟಕ್ಕೆ ಅಡ್ಡಿಪಡಿಸುವುದಿಲ್ಲ. ರಾಜಕೀಯವಾಗಿ ಸೂಕ್ತ ಪ್ರತ್ಯುತ್ತರ ನೀಡುತ್ತೇವೆ ಎಂದು ಪರಮೇಶ್ವರ್‌ ಹೇಳಿದ್ದಾರೆ. +ವಿಧಾನಮಂಡಲ ಅಧಿವೇಶನದಲ್ಲಿ ಅರ್ಧಕ್ಕೆ ಮೊಟಕುಗೊಂಡ ಚರ್ಚೆ ಗಳು ಇನ್ನು ಮುಂದೆ ಜನತಾ ನ್ಯಾಯಾಲಯದಲ್ಲಿ ಚರ್ಚೆಗೊಳ ಗಾಗಲಿವೆ. ಪಾದಯಾತ್ರೆಯುದ್ದಕ್ಕೂ ರಾಜಕೀಯ ಜಿದ್ದಾಜಿದ್ದಿ ಕಂಡುಬರುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_59_4.txt b/eesanje/url_46_59_4.txt new file mode 100644 index 0000000000000000000000000000000000000000..5757624ab12056e62f8b42d1793bcb907bbcd52d --- /dev/null +++ b/eesanje/url_46_59_4.txt @@ -0,0 +1,12 @@ +ರಾಜ್ಯದಲ್ಲಿ ನಿಲ್ಲದ ವರುಣನ ಅವಾಂತರಗಳು : ಗ್ರಾಮಗಳು ಜಲಾವೃತ, ಹಲವೆಡೆ ಗುಡ್ಡ ಕುಸಿತ +ಬೆಂಗಳೂರು,ಜು.30-ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಅತ್ತ ಉತ್ತರಕರ್ನಾಟಕದಲ್ಲಿ ಮಳೆಯ ಪ್ರಮಾಣ ತಗ್ಗಿದ್ದರೂ ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದರಿಂದ ಕೃಷ್ಣಾ ಹಾಗೂ ಉಪನದಿಗಳ ಮಟ್ಟ ಏರಿಕೆಯಾಗಿ ಭಾರಿ ಪ್ರಮಾಣದಲ್ಲಿ ನೀರು ಹರಿದು ಗಡಿನಾಡುಗಳಲ್ಲಿ ಹಳ್ಳಿಗಳು ಜಲಾವೃತವಾಗಿ ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. +ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ತ್ರಿವೇಣಿ ಸಂಗಮ ಮುಳುಗಡೆಯಾಗಿದೆ. ಬಾಗಮಂಡಲ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಗೆ ಭಾಗಮಂಡಲದ ಭಗಂಡೇಶ್ವರ ಸನ್ನಿಧಿಯ ಮುಂಬಾಗಿಲ ಮೆಟ್ಟಿಲವರೆಗೆ ನೀರು ಆವರಿಸಿದೆ. +ಅತ್ತ ಮಲೆನಾಡಿನಲ್ಲೂ ಮಳೆಯ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಯಿಂದ ಚಾರ್ಮುಡಿ ರಸ್ತೆಯಲ್ಲಿ ಬೃಹತ್‌ ಮರವೊಂದು ರಸ್ತೆಗುರುಳಿ ಚಿಕ್ಕಮಗಳೂರಿನ ಮಂಗಳೂರು ಮಾರ್ಗ ಸಂಪೂರ್ಣ ಬಂದ್‌ ಆಗಿ ಕೊಟ್ಟಿಗೆಹಾರ ಸಮೀಪ ಟ್ರಾಫಿಕ್‌ ಜಾಮ್‌ ಆಗಿತ್ತು. ವಾಹನಗಳನ್ನು ನಿಲ್ಲಿಸಲು ಪೊಲೀಸರು ಹರಸಾಹಸ ಪಡುವಂತಾಯಿತು. ಸಕಲೇಶಪುರ ಸಮೀಪ ಶಿರಾಡಿಘಾಟ್‌ ರಸ್ತೆಯ ದೊಡ್ಡತಪ್ಪಲೆ ಬಳಿ ಭೂ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. +ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ರಸ್ತೆ ಪಕ್ಕದಲ್ಲಿ ಹಾದುಹೋಗಿರುವ ಎತ್ತಿನಹೊಳೆ ಪೈಪ್‌ಲೈನ್‌ ಸಮೀಪ ಭೂಮಿ ಕುಸಿದು ಬಾರ್ಲಿ- ಮಲ್ಲಗದ್ದೆ-ಕಾಡುಮನೆ ಸೇರಿದಂತೆ ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತವಾಗಿದೆ.ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದೆ. ಕಾವೇರಿ ಜಲಾಶಯಗಳೀಂದ ನದಿಗೆ ನೀರು ಬಿಡುತ್ತಿರುವ ಹೊರಹರಿವಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಪ್ರವಾಹ ಭೀತಿಯಲ್ಲಿದ್ದ 9 ಗ್ರಾಮಗಳು ಪಾರಾಗಿವೆ. +ಕಾವೇರಿ ನದಿಪಾತ್ರದ ಕೊಳ್ಳೆಗಾಲ ತಾಲ್ಲೂಕಿನ ದಾಸಪುರ, ಮಳ್ಳೂರು, ಹಳೆ ಅನ್ನಗಳ್ಳಿ, ಹಳೆ ಹಂಪಾಪುರ, ಅರಳೆ ಗ್ರಾಮದ ಪ್ರದೇಶಗಳಲ್ಲಿ ಪ್ರವಾಹ ನೀರಿನ ಪ್ರಮಾಣ ಕಡಿಮೆಯಾಗಿದೆ.ಸದ್ಯ ಕಾವೇರಿ ಜಲಾನಯನದ ಪ್ರದೇಶದಲ್ಲಿ ಯಾವುದೇ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ. ಪ್ರವಾಹದಿಂದ ಆದ ಬೆಳೆಹಾನಿಯ ಬಗ್ಗೆ ಡ್ರೋನ್‌ಗಳ ಮೂಲಕ ಸರ್ವೆ ನಡೆಸಲಾಗುತ್ತಿದೆ. +ಬೆಳಗಾವಿ :ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕೃಷ್ಣ, ದೂದ್‌ಗಂಗಾ, ವೇದ್‌ಗಂಗಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳ ಪ್ರವಾಹದಿಂದ 44 ಸೇತುವೆಗಳು ಮುಳುಗಡೆಯಾಗಿವೆ. ಇಡ್ಕಲ್‌ ಜಲಾಶಯದಿಂದ ಘಟಪ್ರಭಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಯಬಿಟ್ಟಿರುವುದರಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಪಿ.ವೈ.ಹುಣಶ್ಯಾಳ ಗ್ರಾಮ ಸಂಪೂರ್ಣ ಜಲಾವೃತವಾಗಿದೆ. +ಇಡೀ ಗ್ರಾಮಕ್ಕೆ ಗ್ರಾಮವೇ ನೀರಿನಿಂದ ಆವೃತವಾಗಿರುವುದಿರಂದ ಜನಜೀವನ ಸ್ತವ್ಯಸ್ಥವಾಗಿದ್ದು, ಗ್ರಾಮದಲ್ಲಿರುವ ಎಲ್ಲರನ್ನೂ ಸ್ಥಳಾಂತರ ಮಾಡಲಾಗಿದೆ. ಹಲವೆಡೆ ಮಳೆ ಎಡಬಿಡದೆ ಬರುತ್ತಿದ್ದರೆ, ಕೆಲವೆಡೆ ಮಳೆ ಬಿಟ್ಟುಬಿಟ್ಟು ಬರುತ್ತಿದೆ. +ಒಟ್ಟಾರೆ ಮಳೆಯಿಂದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರಕರ್ನಾಟಕ ಕರಾವಳಿ, ದಕ್ಷಿಣ ಕರ್ನಾಟಕ ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟದಿಂದ ಜನಜೀವನ ಅಸ್ತವ್ಯಸ್ತವಾಗಿದ್ದರೆ, ಮಧ್ಯ ಕರ್ನಾಟಕ ಭಾಗದಲ್ಲಿ ಮಳೆ ಅಷ್ಟೇನೂ ಪರಿಣಾಮ ಬೀರಿಲ್ಲ. +ಕಾಫಿನಾಡಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ:ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದ್ದು, ಭಾರೀ ಬಿರುಗಾಳಿ ಮಳೆಗೆ ಚಾರ್ಮುಡಿ ಘಾಟ್‌ನ 9ನೆ ತಿರುವಿನಲ್ಲಿಗುಡ್ಡ ಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್‌ ಆಗಿ ವಾಹನ ಚಾಲಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿತ್ತು. +ರಾತ್ರಿ ಭಾರೀ ಮಳೆಯಾಗಿದ್ದು, ಗುಡ್ಡಕುಸಿತದ ಪರಿಣಾಮ ಕೊಟ್ಟಿಗೆಹಾರದ ಬಳಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿ ಪ್ರಯಾಣಿಕರು ಗಂಟೆಗಟ್ಟಲೆ ರಸ್ತೆಯಲ್ಲೇ ಕತ್ತಲಲ್ಲೇ ಕಾಲ ಕಳೆಯುವಂತಾಗಿತ್ತು. ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮರ ತೆರವುಗೊಳಿಸಿದ ನಂತರ ವಾಹನಗಳು ಮಂದಗತಿಯಲ್ಲಿ ಸಾಗಿದವು.ಎನ್‌ಆರ್‌ ಪುರ ತಾಲೂಕಿನ ಮಹಲ್ಲೋಡು ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಬಾಳೆಹೊನ್ನೂರು- ಕಳಸ ಮಾರ್ಗ ಬಂದ್‌ ಆಗಿತ್ತು. +ಕಳೆದ ರಾತ್ರಿ ಭಾರೀ ಮಳೆಯಾಗಿದ್ದು , ಭದ್ರಾನದಿ ತುಂಬಿ ಹರಿಯುತ್ತಿದ್ದು, ನದಿಪಕ್ಕದ ಗ್ರಾಮಗಳಾದ ಬರೇಗುಡ್ಡಾ, ಮಹಲ್ಲೋಡು ನಿವಾಸಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ಧಾರಾಕಾರ ಮಳೆಯಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಹಾಗೂ ಎನ್‌ಆರ್‌ ಪುರ ತಾಲೂಕಿನ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೊಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ. \ No newline at end of file diff --git a/eesanje/url_46_59_5.txt b/eesanje/url_46_59_5.txt new file mode 100644 index 0000000000000000000000000000000000000000..d996569bd247d47f2c65fc15a3b95b4c202ad11a --- /dev/null +++ b/eesanje/url_46_59_5.txt @@ -0,0 +1,7 @@ +ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಗಡಿಪಾರು ಮಾಡುತ್ತೇವೆ : ಪರಮೇಶ್ವರ್‌ +ಬೆಂಗಳೂರು, ಜು.30– ನೆರೆಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ವಿರೋಧಪಕ್ಷಗಳವರು ತಡವಾಗಿ ಎಚ್ಚೆತ್ತು ಕೊಂಡು ಬಾಧಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಸಂಕಷ್ಟಕ್ಕೀಡಾದ ಪ್ರದೇಶಗಳಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾ ಸಚಿವರು ಈಗಾಗಲೇ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಜೊತೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದು, ಅಗತ್ಯ ಪರಿಹಾರಗಳನ್ನು ಕೊಡಿಸುತ್ತಿದ್ದಾರೆ ಎಂದು ಹೇಳಿದರು. +ಬಿಜೆಪಿ-ಜೆಡಿಎಸ್‌‍ನವರು ಪಾದಯಾತ್ರೆ ನೆಪದಲ್ಲಿ ಸಂಕಷ್ಟ ಸ್ಥಳಗಳಿಗೆ ಭೇಟಿ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.ಬಾಂಗ್ಲಾ ದೇಶದ ಅಕ್ರಮ ವಲಸಿಗರು ರಾಜ್ಯದಲ್ಲಿರುವುದು ಕಂಡುಬಂದರೆ ಅವರಲ್ಲಿ ಸೂಕ್ತ ದಾಖಲಾತಿಗಳು ಇಲ್ಲ ಎಂದು ಮನವರಿಕೆಯಾದರೆ ವಶಕ್ಕೆ ಪಡೆದು ದಿಗ್ಬಂಧನ ಕೇಂದ್ರದಲ್ಲಿರಿಸಲಾಗುವುದು. ನಂತರ ಅವರ ದೇಶಕ್ಕೆ ಮಾಹಿತಿ ನೀಡಿ ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು. +ಅಕ್ರಮ ವಲಸಿಗರ ವಿರುದ್ಧವಾಗಿ ಕ್ರಮ ಕೈಗೊಳ್ಳಲು ರಾಜಕೀಯ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ ಎಂದು ನಿವೃತ್ತ ಐಪಿಎಸ್‌‍ ಅಧಿಕಾರಿ ಭಾಸ್ಕರ್‌ ರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಅವರು ಪೊಲೀಸ್‌‍ ಆಯುಕ್ತರಾಗಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂಬುದು ಅವರದೇ ಹೇಳಿಕೆಯಿಂದ ಸಾಬೀತಾಗಿದೆ. ಆದರೆ ಈಗ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. +ವಿದೇಶಿಗರನ್ನು ಹೊಡೆದು , ಬಂಧಿಸಿ ಜೈಲಿನಲ್ಲಿಡಲಾಗುವುದಿಲ್ಲ. ರಾಜತಾಂತ್ರಿಕ ಮಾರ್ಗದಲ್ಲಿಯೇ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.ದೆಹಲಿಯ ಭೇಟಿಯ ವೇಳೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಪ್ರತ್ಯೇಕವಾಗಿ ಸಂಸತ್ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾವು ದೆಹಲಿಗೆ ಹೋದಾಗಲೂ ಈ ರೀತಿ ಪ್ರತ್ಯೇಕವಾಗಿ ಸಾಕಷ್ಟು ಬಾರಿ ಭೇಟಿ ಮಾಡಿದ್ದೇವೆ. ಅದರಲ್ಲೇನೂ ವಿಶೇಷ ಇಲ್ಲ. +ಹೈಕಮಾಂಡ್‌ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಿಗೆ ಮಾತ್ರ ಆಹ್ವಾನ ನೀಡಿದೆ. ಸಂಪುಟದ ಬೇರ್ಯಾವ ಸಚಿವರಿಗೂ ಆಹ್ವಾನ ಇಲ್ಲ ಎಂದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ರಕ್ಷಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹಲವರ ಮೇಲೆ ದಾಳಿಗಳಾಗುವುದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಸಾಮಾನ್ಯ ಎಂದು ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧದ ಕಾರ್ಯಾಚರಣೆಗೆ ಪರಮೇಶ್ವರ್‌ ಪ್ರತಿಕ್ರಿಯಿಸಿದರು. \ No newline at end of file diff --git a/eesanje/url_46_59_6.txt b/eesanje/url_46_59_6.txt new file mode 100644 index 0000000000000000000000000000000000000000..195500713623f859b58a558a7e83381e5d0d2614 --- /dev/null +++ b/eesanje/url_46_59_6.txt @@ -0,0 +1,5 @@ +ಶಿಕ್ಷಣ ಸಂಸ್ಥೆಗಳ ನಿವೇಶನ, ಕಟ್ಟಡಗಳಿಗೆ ಸುಂಕ ವಿಧಿಸಿರುವುದಕ್ಕೆ ವಿರೋಧ +ಬೆಂಗಳೂರು, ಜು.30– ಶೈಕ್ಷಣಿಕ ಉದ್ದೇಶಕ್ಕೆ ಬಳಸುವ ನಿವೇಶನ ಅಥವಾ ಕಟ್ಟಡಗಳಿಗೆ ಬೆಂಗಳೂರು ಮಹಾನಗರ ಪಾಲಿಕೆ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದ್ದು, ಇದು ಕಾನೂನು ಬಾಹಿರ ಎಂದು ಕರ್ನಾಟಕ ಖಾಸಗಿ ಶಿಕ್ಷಣಗಳ ಸಂಘ ವಿರೋಧಿಸಿದೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ, ಕರ್ನಾಟಕ ಮುನಿಸಿಪಲ್‌ ಆಕ್ಟ್‌, ಬಿಬಿಎಂಪಿ ಆಕ್ಟ್‌ ಹಾಗೂ ಟ್ಯಾಕ್ಸ್ ಗೆ ಸಂಬಂಧಿಸಿದಂತೆ ಚಾರಿಟೇಬಲ್‌ ಟ್ರಸ್ಟ್‌ನಡಿ ಸ್ಥಾಪಿಸಿರುವ ಶಾಲೆಗಳ ಕಟ್ಟಡ ಹಾಗೂ ಖಾಲಿ ನಿವೇಶನಗಳಿಗೆ ಯಾವುದೇ ರೀತಿಯ ಸುಂಕ( ಇನಮ್‌ ಟ್ಯಾಕ್ಸ್ , ಸರ್ವಿಸ್‌‍ ಟ್ಯಾಕ್ಸ್ , ಸೆಸ್‌‍ ಅಥವಾ ಬಿಬಿಎಂಪಿ ಟ್ಯಾಕ್ಸ್ ) ವಿಧಿಸುವಂತಿಲ್ಲ ಎಂದಿದೆ. +ಜೊತೆಗೆ ರಾಜ್ಯ ಹೈಕೋರ್ಟ್‌ ಸಹ ಟ್ಯಾಕ್ಸ್ ಸಂಬಂಧಿಸಿದ ಹಲವು ತೀರ್ಪುಗಳಲ್ಲಿ ಟ್ಯಾಕ್ಸ್ ವಿಽಸುವಂತಿಲ್ಲ, ಎಂದು ತೀರ್ಪು ನೀಡಿದೆ. ಹಾಗೂ ಸ್ವಾತಂತ್ರ್ಯ ನಂತರ ಇಲ್ಲಿಯವರೆಗೂ ದೇಶದ ಯಾವುದೇ ಶಾಲೆಗಳಿಂದ ಟ್ಯಾಕ್ಸ್ ನ್ನು ವಸೂಲಿ ಮಾಡಿಲ್ಲ. ಆದರೆ ಈಗ ಜು.19ರಿಂದ ಬೆಂಗಳೂರು ನಗರದ ಬಿಬಿಎಂಪಿಯು ಒಂದು ಸರ್ಕ್ಯುಲರ್‌ ಪ್ರಕಟಿಸಿ, ಬೆಂಗಳೂರಿನ ಶಾಲಾ ಕಾಲೇಜ್‌ ನವರಿಗೆ ಬೆದರಿಕೆ ಒಡ್ಡಿ, ಕಾನೂನುಬಾಹಿರವಾಗಿ, ಟ್ಯಾಕ್ಸ್ ವಸೂಲಿ ಮಾಡುತ್ತಿರುವುದನ್ನು ನಮ್ಮ ಒಕ್ಕೂಟ ಜಂಟಿಯಾಗಿ ಖಂಡಿಸುತ್ತದೆ ಎಂದರು. +ಇದು ಶಿಕ್ಷಣ ಸಂಸ್ಥೆಗಳಿಗೆ ಮಾಡುತ್ತಿರುವ ಮೋಸ, ಈ ರೀತಿಯ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಿ, ಈಗಾಗಲೇ ಪಡೆದಿರುವ ಟ್ಯಾಕ್ಸನ್ನು ಆಯಾ ಶಾಲಾ- ಕಾಲೇಜುಗಳಿಗೆ ಹಿಂದಿರುಗಿಸಬೇಕು. ಇಲ್ಲವಾದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಾನೂನು ಹೋರಾಟಕ್ಕೆ ಮುಂದಾಗಲು ನಾವು ಹಿಂಜರಿಯುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶ ಮಾಡಿ ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. \ No newline at end of file diff --git a/eesanje/url_46_59_7.txt b/eesanje/url_46_59_7.txt new file mode 100644 index 0000000000000000000000000000000000000000..e438222c27171e480b07aaaa7b7ff36be2867dff --- /dev/null +++ b/eesanje/url_46_59_7.txt @@ -0,0 +1,5 @@ +ಬಿಯರ್‌ ಪ್ರೀಯರಿಗೆ ಬೆಲೆ ಏರಿಕೆ ಭಾಗ್ಯ, , ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ +ಬೆಂಗಳೂರು, ಜುಲೈ 30 :ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ ಬಿಯರ್‌ ಮೇಲೆ ತೆರಿಗೆ ಹೆಚ್ಚಿಸಲಾಗಿದ್ದು,ಇದರಿಂದ ಇಂದಿನಿಂದಲೇ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಲಿದೆ.ರಾಜ್ಯದಲ್ಲಿ ಅಬಕಾರಿ ಇಲಾಖೆ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್‌ ಬೆಲೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೆ ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಮದ್ಯ ತಯಾರಿಕೆ ಕಂಪನಿಗಳು ದರ ಏರಿಸಿತ್ತು ಆದರೆ ಈಗ ಮತ್ತೆ ಹೆಚ್ಚಿಸಲಾಗಿದೆ 1 ವರ್ಷದಲ್ಲಿ ಸರಿ ಸುಮಾರು 50ರಿಂದ 60 ರೂ.ವರೆಗೆ ಏರಿಕೆಯಾಗಿದೆ. +ಸರ್ಕಾರ ಈ ಹಿಂದೆ ಬಿಯರ್‌ ಮೇಲೆ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಆ ನಂತರ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಿಯರ್‌ ಕಂಪನಿಗಳು ಫೆಬ್ರವರಿ ತಿಂಗಳಲ್ಲಿ ಬಿಯರ್‌ ಬೆಲೆ 10 ರೂ.ವರೆಗೆ ಏರಿಕೆ ಮಾಡಿತ್ತು.ಈಗ ಕಂಪನಿಗಳು ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ ನೀಡಿ ಬಿಯರ್‌ ದರ ಏರಿಕೆ ಮಾಡಿವೆ. ಈ ಮೂಲಕ 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು 50 ರಿಂದ 60 ರೂ. ವರೆಗೆ ಹೆಚ್ಚಳವಾದಂತಾಗಿದೆ. +ಕೆಲವು ಕಂಪನಿಗಳ ಬಿಯರ್‌ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ. ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರದಿಂದ ಜಾರಿಯಾಗಲಿದೆ. ಎಲ್ಲ ಬ್ರ್ಯಾಂಡ್‌ಗಳ ಬಿಯರ್‌ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. +ರಾಜ್ಯ ಸರ್ಕಾರ ಮೊದಲಿಗೆ ಮದ್ಯದ ಮೇಲಿನ ಸುಂಕ ಏರಿಸಿತ್ತು. ನಂತರ ವಾಣಿಜ್ಯ ವಾಹನಗಳ ಮೇಲಿನ ಸಾರಿಗೆ ಸೆಸ್‌‍ ಅನ್ನು ಏರಿಕೆ ಮಾಡಿತ್ತು.ನಂತರ ಮುಂದ್ರಾಂಕ ಶುಲ್ಕವನ್ನು ಏರಿಕೆ ಮಾಡಿತ್ತು. ನಂತರ ಬಿತ್ತನೆ ಬೀಜದ ಬೆಲೆ ಶೇ50-60 ರಷ್ಟು ಹೆಚ್ಚಳ ಮಾಡಿತ್ತು. ಪೆಟ್ರೋಲ್‌ ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳವಾಗಿತ್ತು. ತದನಂತರದಲ್ಲಿ ನಂದಿನಿ ಹಾಲಿನ ದರ 2 ರೂ. ಏರಿಕೆ ಮಾಡಿ ಈಗ ಮತ್ತೆ ಮದ್ಯದ ತೆರಿಗೆ ಮೇಲೆ ಕನ್ಣು ಹಾಕಿದೆ \ No newline at end of file diff --git a/eesanje/url_46_59_8.txt b/eesanje/url_46_59_8.txt new file mode 100644 index 0000000000000000000000000000000000000000..749c9a466c64f0cd6d4590d3988a8d29bbb93750 --- /dev/null +++ b/eesanje/url_46_59_8.txt @@ -0,0 +1,7 @@ +ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ +ಬೆಂಗಳೂರು,ಜು.30-ಮುಜರಾಯಿ ದೇವಾಲಯಗಳಲ್ಲಿ ಆನ್‌ಲೈನ್‌ ಸೇವೆಗೆ ಅರ್ಚಕರಿಂದ ವಿರೋಧ ವ್ಯಕ್ತವಾಗಿದೆ. ಆನ್‌ಲೈನ್‌ನಲ್ಲಿ ಕೆಲ ಭಕ್ತರು ಸಂಜೆ ಹಾಗೂ ರಾತ್ರಿ ಸೇವೆಗೆ ಬುಕ್‌ ಮಾಡಿರುತ್ತಾರೆ. ಹೆಚ್ಚು ಜನ ಪ್ರಸಾದಕ್ಕಾಗಿ ಬುಕ್‌ ಮಾಡಿಕೊಂಡಿರುತ್ತಾರೆ. ಇದರಿಂದ ಮರುದಿನ ಬೆಳಗ್ಗೆಯೇ ಬುಕ್‌ ಮಾಡಿದ ಭಕ್ತಾಧಿಗಳ ಸೇವೆ ಮಾಡಲು ಕಷ್ಟವಾಗುತ್ತದೆ ಎಂದು ಅರ್ಚಕರು ದೂರಿದ್ದಾರೆ. +ಅಲ್ಲದೆ ಭಕ್ತಾಧಿಗಳು ತಕ್ಷಣ ಮಾಡಿದ ಬುಕ್ಕಿಂಗ್‌ ಮಾಹಿತಿ ಅರ್ಚಕರಿಗೆ ಇರುವುದಿಲ್ಲ. ಪ್ರಸಾದವನ್ನು ತಕ್ಷಣಕ್ಕೆ ತಯಾರಿಸಲು ಆಗುವುದಿಲ್ಲ. ಪೂಜೆಗೆ ರಾತ್ರಿ ಬುಕ್‌ ಮಾಡಿದರೆ ಬೆಳಿಗ್ಗೆನೇ ಮಾಡಿ ಬಿಡಲು ಆಗುವುದಿಲ್ಲ. ಅದಕ್ಕಾಗಿ ನಾವು ಕೂಡ ತಯಾರಿ ಮಾಡಿಕೊಳ್ಳಬೇಕು. ತಕ್ಷಣಕ್ಕೆ ಬುಕ್ಕಿಂಗ್‌ ಮಾಡುವುದರಿಂದ ಪೂಜೆ ಮಾಡಿ ಹಾಗೂ ಪ್ರಸಾದ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸಾದ ತಯಾರಿಸಲು ಸಮಯ ಬೇಕಾಗುತ್ತದೆ. +ರಾತ್ರಿ ಬುಕ್‌ ಮಾಡಿ ಬೆಳಿಗ್ಗೆ ಪ್ರಸಾದ ಬೇಕು ಹಾಗೂ ಪೂಜೆ ನಡೆಯಬೇಕು ಅಂದರೆ ಅದು ಕಷ್ಟವಾಗುತ್ತಿದೆ ಎಂದು ಅರ್ಚಕ ಒಕ್ಕೂಟ ತಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಅರ್ಚಕರ ಒಕ್ಕೂಟ ಧಾರ್ಮಿಕ ದತ್ತಿ ಆಯುಕ್ತರಿಗೆ ಪತ್ರ ಬರೆದಿದೆ. ಮುಜರಾಯಿ ಇಲಾಖೆಗೆ ಒಳಪಡುವ ಬಹುತೇಕ ದೇವಸ್ಥಾನಗಳಲ್ಲಿ ಅಡುಗೆಯವರು ಹಾಗೂ ಅಗ್ರಾಣದ ವ್ಯವಸ್ಥೆ ಇಲ್ಲ. ಅಲ್ಲದೆ ಆನ್‌ಲೈನ್‌ನಲ್ಲಿ ಬುಕ್‌ ಮಾಡಿದ ಹಣ ಯಾವಾಗಲೋ ಅರ್ಚಕರ ಕೈ ಸೇರುತ್ತದೆ. ಇದರಿಂದ ಪೂಜಾ ಸಾಮಾಗ್ರಿ ಹಾಗೂ ಪ್ರಸಾದ ತಯಾರಿಸಲು ಬೇಕಾಗುವ ಪದಾರ್ಥಗಳನ್ನು ತರಲು ತೊಂದರೆಯಾಗುತ್ತಿದೆ. ಹೀಗಾಗಿ ಆನ್‌ಲೈನ್‌ ಸೇವೆಯನ್ನು ನಿಲ್ಲಿಸಬೇಕು ಎಂದು ಅರ್ಚಕರು ಒತ್ತಾಯಿಸಿದ್ದಾರೆ. +ಮುಜರಾಯಿ ಇಲಾಖೆಗೆ ಒಳಪಡುವ ರಾಜ್ಯದ ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ಆನ್‌ಲೈನ್‌ ಸೇವೆ ಒದಗಿಸುವುದಕ್ಕೆ ತೊಂದರೆ ಇಲ್ಲ. ಯಾಕೆಂದರೆ ಕುಕ್ಕೆ ಸುಬ್ರಹಣ್ಯ, ಚಾಮುಂಡಿಬೆಟ್ಟ, ನಂಜನಗೂಡು, ಮೇಲುಕೋಟೆ ಇತರ ದೊಡ್ಡ ದೇವಸ್ಥಾನಗಳಲ್ಲಿ ಇದಕ್ಕೆಲ್ಲ ವ್ಯವಸ್ಥೆ ಇದೆ. ಅಲ್ಲಿ ಆನ್‌ಲೈನ್‌ ಸೇವೆ ಒದಗಿಸಬಹುದು. ಯಾಕೆಂದರೆ ಅಲ್ಲಿ ಕೆಲಸದವರು, ಸಿಬ್ಬಂದಿಗಳು ಹಾಗೂ ಉಗ್ರಾಣಗಳು ಹೆಚ್ಚುವರಿಯಾಗಿ ಇರುತ್ತವೆ. ಇದರಿಂದ ಅಲ್ಲಿ ತೊಂದರೆಯಾಗುವುದಿಲ್ಲ. +ಆದರೆ ಇಂತಹ ವ್ಯವಸ್ಥೆ ಇಲ್ಲದ ದೇವಸ್ಥಾನಗಳಲ್ಲಿ ಇದು ಕಷ್ವವಾಗುತ್ತಿದೆ. ಇದರಿಂದ ನಿತ್ಯ ಪೂಜೆ ಸಲ್ಲಿಸುವ ಭಕ್ತರಿಗೆ ಪೂಜೆ ಮಾಡಿಕೊಡುವುದು ಆನ್‌ಲೈನ್‌ ಮೂಲಕ ಬಂದ ಭಕ್ತರಿಗಾಗಿ ಪೂಜೆ ಸಲ್ಲಿಸುವುದು ಕಷ್ಟವಾಗುತ್ತಿದೆ. ರಾತ್ರಿ ಬುಕ್‌ ಆದ ಸೇವೆಗೆ ಬೆಳಿಗ್ಗೆ ವ್ಯವಸ್ಥೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸಿದ್ದಾರೆ. +ಆದರೆ ಪೂಜಾ ಸೇವೆಗಳನ್ನು ಆನ್‌ಲೈನ್‌ ಮೂಲಕ ಬುಕ್‌ ಮಾಡಲು ಮೊದಲ ಹಂತವಾಗಿ ಬೆಂಗಳೂರಿನ ಬನಶಂಕರಿ ಅಮನವರ ದೇವಾಲಯದಲ್ಲಿ ಪೋರ್ಟಲ್‌ ಹಾಗೂ ಮೊಬೈಲ್‌ ಆಪ್‌ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆನ್‌ಲೈನ್‌ ಮೂಲಕ ಕಾಯ್ದಿರಿಸುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಂದಾಗಿ ಈ ಆನ್‌ಲೈನ್‌ ಸೇವೆಯನ್ನು ಹಾಗೂ ಈ ಮೊಬೈಲ್‌ ಆಪ್‌ನ್ನು ರದ್ದು ಮಾಡಬೇಕೆಂದು ಅರ್ಚಕರ ಒಕ್ಕೂಟ ಒತ್ತಾಯಿಸಿದೆ. \ No newline at end of file diff --git a/eesanje/url_46_59_9.txt b/eesanje/url_46_59_9.txt new file mode 100644 index 0000000000000000000000000000000000000000..36dcee0fb27a57b2640c70b2a122cd139ccf7e86 --- /dev/null +++ b/eesanje/url_46_59_9.txt @@ -0,0 +1,6 @@ +ಮೇಕೆದಾಟು ಯೋಜನೆ ಗೆ ತ.ನಾಡು ಅನಗತ್ಯ ವಿರೋಧ : ಸಿಎಂ ಸಿದ್ದರಾಮಯ್ಯ +ಮೈಸೂರು,ಜು.29-ಮೇಕೆದಾಟು ಅಣೆಕಟ್ಟೆ ನಿರ್ಮಿಸು ವುದರಿಂದ ತಮಿಳುನಾಡಿಗೆ ಹೆಚ್ಚಿನ ಲಾಭವಾಗುತ್ತದೆ. ಆದರೂ ರಾಜಕೀಯ ಕಾರಣಕ್ಕಾಗಿ ಅನಗತ್ಯವಾಗಿ ವಿರೋಧ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. +ಕೆಆರ್‌ಎಸ್‌‍ಗೆ ಬಾಗಿನ ಅರ್ಪಿಸಿದ ಬಳಿಕ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ 65 ಟಿಎಂಸಿ ನೀರು ಸಂಗ್ರಹಿಸಲು ಸಾಧ್ಯವಾಗುತ್ತದೆ. ಅಣೆಕಟ್ಟು ಕಟ್ಟುವುದು ತಮಿಳುನಾಡು ಜಾಗದಲ್ಲಲ್ಲ. ಕೇರಳದ ಜಾಗದಲ್ಲಿ. ಕಾವೇರಿ ನದಿಯ ನೀರಿನ ಹಂಚಿಕೆ ಕೇವಲ ತಮಿಳುನಾಡು-ಕರ್ನಾಟಕಕ್ಕೆ ಸೀಮಿತವಲ್ಲ. ಪಾಂಡಿಚೇರಿ ಹಾಗೂ ಕೇರಳ ರಾಜ್ಯಗಳೂ ಇದರ ಪಾಲುದಾರಿಕೆ ಹೊಂದಿವೆ ಎಂದರು. +ಮೇಕೆದಾಟು ನಿರ್ಮಾಣ ನಮ ಹಕ್ಕು. ಇದಕ್ಕಾಗಿ ಸಾಕಷ್ಟು ಪ್ರತಿಭಟನೆಯನ್ನು ನಡೆಸಿದ್ದೇವೆ. ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ತಕ್ಷಣ ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಕೇಂದ್ರ ಸರ್ಕಾರ ಈವರೆಗೂ ಅನುಮತಿ ನೀಡಿಲ್ಲ. ತಮಿಳುನಾಡಿನ ವಿರೋಧ ಅನಗತ್ಯ ಎಂದು ಹೇಳಿದರು. +ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಇ.ಡಿ, ಸಿಬಿಐ ಅನ್ನು ಬಳಸಿಕೊಂಡು ನಿರಪರಾಧಿಗಳನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದೆ. ಜನ ಇದನ್ನು ಖಂಡಿಸಬೇಕು ಎಂದ ಸಿದ್ದರಾಮಯ್ಯ, ಬಿಜೆಪಿಯವರು ಮನೆಮುರುಕರು. ಯಾವುದೇ ಪ್ರಕರಣವಾದರೂ ಜೆಡಿಎಸ್‌‍-ಬಿಜೆಪಿ ಒಂದಾಗಿ ಸಿಬಿಐ ತನಿಖೆಗೆ ಕೊಡಿ ಎಂದು ಒತ್ತಾಯ ಮಾಡುತ್ತಾರೆ ಎಂದು ಆಕ್ಷೇಪಿಸಿದರು. +ರಾಜ್ಯದ ಸಂಸದರು ಕೇಂದ್ರ ಸರ್ಕಾರದಿಂದಾಗಿರುವ ಅನ್ಯಾಯಗಳ ವಿರುದ್ಧ ಒಂದು ದಿನವೂ ಪ್ರತಿಭಟನೆ ಮಾಡಿಲ್ಲ. ಅನಗತ್ಯ ವಿಚಾರಗಳನ್ನು ಪ್ರಸ್ತಾಪಿಸುತ್ತಿದೆ. ಬಜೆಟ್‌ನ ಅನ್ಯಾಯವೂ ಸೇರಿದಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಆದರೆ ರಾಜ್ಯದ ಜೆಡಿಎಸ್‌‍-ಬಿಜೆಪಿ ಸಂಸದರು ಯಾವುದರ ಬಗ್ಗೆಯೂ ಪ್ರಸ್ತಾಪ ಮಾಡಿಲ್ಲ ಎಂದರು.ಪ್ರತಿ ವರ್ಷ ಇದೇ ರೀತಿ ರಾಜ್ಯದ ನದಿಗಳು ತುಂಬಿಹರಿಯಲಿ, ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ ಸಿದ್ದರಾಮಯ್ಯ, ಕೆಆರ್‌ಎಸ್‌‍ನ ಎಡದಂಡೆ ಕಾಲುವೆಯನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_46_5_1.txt b/eesanje/url_46_5_1.txt new file mode 100644 index 0000000000000000000000000000000000000000..2ad7fb8b794d7bbe16ae1decdd4982b3b1add0b4 --- /dev/null +++ b/eesanje/url_46_5_1.txt @@ -0,0 +1,12 @@ +ಎಚ್‌ಡಿಕೆ ಜಾಮೀನು ರದ್ದು ಕೋರಿ ಕೋರ್ಟ್‌ಗೆ ಎಸ್‌‍ಐಟಿ ಅರ್ಜಿ ಸಾಧ್ಯತೆ + ' +ಬೆಂಗಳೂರು,ಸೆ.30-ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಕೇಂದ್ರ ಸಚಿವ ಎಚ್‌.ಡಿ.ಕುಮಾರ ಸ್ವಾಮಿಯವರ ಜಾಮೀನು ರದ್ದು ಕೋರಿ ಎಸ್‌‍ಐಟಿ ಹೈಕೋರ್ಟ್‌ ಮೆಟ್ಟಿಲೇರಲು ಮುಂದಾಗಿದೆ.ಗಮನಿಸಬೇಕಾದ ಅಂಶವೆಂದರೆ ಮೂರು ದಿನಗಳ ಹಿಂದಷ್ಟೇ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. +ಇದರ ಬೆನ್ನಲೇ ಎಸ್‌‍ಐಟಿ ಲೋಕಾಯುಕ್ತ ನ್ಯಾಯಾಲಯ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಮೇಲನವಿ ಅರ್ಜಿ ಸಲ್ಲಿಕೆಗೆ ತಯಾರಿ ನಡೆಸಿದೆ.ಶನಿವಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿದ್ದ ಕುಮಾರಸ್ವಾಮಿ, ಲೋಕಾಯುಕ್ತ ಡಿವೈಎಸ್ಪಿ ಕವಿತಾ ಮತ್ತು ತನಿಖಾಧಿಕಾರಿಗಳು ಮುಂದಿಟ್ಟ ಕೆಲವು ಪ್ರಶ್ನೆಗಳಿಗೆ ಅಸಮರ್ಪಕ ಉತ್ತರ ನೀಡಿದ್ದಾರೆ ಎನ್ನಲಾಗಿದೆ. +ವಿಚಾರಣೆಗೆ ಅಸಹಕಾರ ತೋರಿದ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಮೇಲನವಿ ಸಲ್ಲಿಸಲು ಎಸ್‌‍ಐಟಿ ತೀರ್ಮಾನಿಸಿದೆ. ಈ ಸಂಬಂಧ ಸೋಮವಾರ ಕಾನೂನು ತಜ್ಞರ ಜೊತೆ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿದೆ. +ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ದ ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಇದು ಕರ್ತವ್ಯಕ್ಕೆ ಅಡ್ಡಿಪಡಿಸುವ ತಂತ್ರವಾಗಿದೆ. ಅವರು ಎಷ್ಟೇ ಆರೋಪ ಮಾಡಿದರೂ ಆರೋಪಿ ಆರೋಪಿಯೇ ಎಂದು ತಿರುಗೇಟು ನೀಡಿದ್ದರು. ಲೋಕಾಯುಕ್ತ ಪೊಲೀಸ್‌‍ ವರಿಷ್ಠಾಧಿಕಾರಿ 2023ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಪತ್ರ ಬರೆದಿದ್ದರು. +2006ರಲ್ಲಿ ಬಿಜೆಪಿ-ಜೆಡಿಎಸ್‌‍ ಸಮಿಶ್ರ ಸರ್ಕಾರವಿದ್ದಾಗ ಮುಖ್ಯಮಂತ್ರಿಯಾಗಿದ್ದ ಎಚ್‌ ಕುಮಾರಸ್ವಾಮಿ ಅವರು ಎಂಸಿಆರ್‌ ನಿಯಮಾವಳಿಗಳನ್ನು ಉಲ್ಲಂಘಿಸಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ವಿನೋದ್‌ ಗೋಯಲ್‌ ಎಂಬ ವ್ಯಕ್ತಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ನಲ್ಲಿನ 550 ಎಕರೆ ಭೂಮಿ ಮಂಜೂರು ಮಾಡಲು ಒಳಸಂಚು ರೂಪಿಸಿದ್ದಾರೆ ಎಂಬುದು ಆರೋಪವಾಗಿದೆ. +ಸಾಯಿ ವೆಂಕಟೇಶ್ವರ ಮಿನರಲ್‌್ಸ ಮಾಲೀಕ ವಿನೋದ್‌ ಗೋಯಲ್‌ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಕೆ.ಜಯಚಂದ್ರ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಬಿ ಟಿ ಜವರೇಗೌಡ ಸಹಕರಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. +ಈ ಪ್ರಕರಣದಲ್ಲಿ ಎಸ್‌‍ಐಟಿ ಅಧಿಕಾರಿಗಳು ವಿನೋದ್‌ ಗೋಯಲ್‌ ಅವರನ್ನು ಪ್ರಥಮ ಆರೋಪಿಯೆಂದೂ, ಎಚ್‌.ಡಿ. ಕುಮಾರಸ್ವಾಮಿ ಅವರನ್ನು 2ನೇ ಆರೋಪಿಯೆಂದೂ, ಕೆ.ಜಯಚಂದ್ರ ಹಾಗೂ ಜವರೇಗೌಡ ಅವರನ್ನು ಕ್ರಮವಾಗಿ ಮೂರು ಮತ್ತು ನಾಲ್ಕನೇ ಆರೋಪಿಗಳನ್ನಾಗಿ ದಾಖಲಿಸಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳಾದ 420, 465, 468, 409 ಜೊತೆಗೆ 120ಬಿ ಮತ್ತು ಐಪಿಸಿ ಸೆಕ್ಷನ್‌ 511, ಭ್ರಷ್ಟಾಚಾರ ನಿರೋಧಕ ಕಾಯಿದೆ ಸೆಕ್ಷನ್‌ 13(2) ಜೊತೆಗೆ 13(1)(ಡಿ) ಮತ್ತು ಎಂಎಂಆರ್‌ಡಿ ಕಾಯಿದೆಯ ಸೆಕ್ಷನ್‌ಗಳಾದ 21(2) ಮತ್ತು 23 ಅಡಿ ದಾಖಲಾಗಿರುವ ಪ್ರಕರಣದಲ್ಲಿ ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿಸಲು ಅಭಿಯೋಜನಾ ಮಂಜೂರಾತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು 2023ರ ಸೆಪ್ಟೆಂಬರ್‌ನಲ್ಲಿ ಮನವಿ ಮಾಡಿದ್ದಾರೆ. +ಪ್ರಕರಣದ ಹಿನ್ನೆಲೆ:ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್‌ಇಬಿ ರೇಂಜ್‌ ಪ್ರದೇಶದಲ್ಲಿ ಮೆಸರ್ಸ್‌ ಚೌಗಲೆ ಮತ್ತು ಕಂಪನಿಯು ಗಣಿಗಾರಿಕೆಗೆ ಮಂಜೂರಾತಿ ಪಡೆದು ಆನಂತರ ಸರ್ಕಾರಕ್ಕೆ 550 ಎಕರೆ ಅಧ್ಯರ್ಪಣೆ ಮಾಡಿದ ಪ್ರದೇಶಕ್ಕೆ ಗಣಿ ಗುತ್ತಿಗೆ ಮಂಜೂರಾತಿಗಾಗಿ 2006ರ ಏಪ್ರಿಲ್‌ ತಿಂಗಳಲ್ಲಿ ಒಟ್ಟು 29 ಅರ್ಜಿದಾರರು ತಮ ಸಂಸ್ಥೆ, ಕಂಪನಿ ಹೆಸರಿನಲ್ಲಿ ಬೇರೆ ಬೇರೆ ವಿಸ್ತೀರ್ಣಗಳಿಗೆ ಅರ್ಜಿ ಸಲ್ಲಿಸಿದ್ದವು. +ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಹೆಸರಿನಡಿ ಎಸ್‌‍ ವಿ ಸಾಕ್ರೆ ಸಲ್ಲಿಸಿದ್ದ ಅರ್ಜಿಯಲ್ಲಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಸಂಸ್ಥೆಯ ರೂಪುರೇಷೆಗಳು ಹಾಗೂ ಪಾಲುದಾರರ ಬಗ್ಗೆ ಇರುವ ಅಸ್ಪಷ್ಪತೆಯ ಲಾಭ ಪಡೆಯುವ ಉದ್ದೇಶದಿಂದ ವಿನೋದ್‌ ಗೋಯಲ್‌ ಎಂಬ ವ್ಯಕ್ತಿಯು ಸರ್ಕಾರಿ ಅಧಿಕಾರಿಗಳಾದ ಜಯಚಂದ್ರ ಮತ್ತು ಜವರೇಗೌಡ ಜೊತೆ ಶಾಮೀಲಾಗಿ, ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಆ ದಾಖಲೆಗಳನ್ನು ಆಧರಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಹೆಸರಿಗೆ ಗಣಿ ಗುತ್ತಿಗೆ ನೀಡುವಂತೆ ಮತ್ತು ಎಸ್‌‍.ವಿ.ಸಾಕ್ರೆ ಹೆಸರಿನ ಬದಲು ವಿನೋದ್‌ ಗೋಯೆಲ್‌ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್‌್ಸ ಮಾಲೀಕರು ಎಂದು ಮಾಡಿ, ಆ ಮೂಲಕ ಗಣಿ ಗುತ್ತಿಗೆ ಪಡೆಯಲು ಯತ್ನಿಸಿದ್ದಾರೆ ಎಂಬುದು ಆರೋಪವಾಗಿದೆ. \ No newline at end of file diff --git a/eesanje/url_46_5_10.txt b/eesanje/url_46_5_10.txt new file mode 100644 index 0000000000000000000000000000000000000000..0903eff8613c843fa7556a13668b2d596d7d4cce --- /dev/null +++ b/eesanje/url_46_5_10.txt @@ -0,0 +1,7 @@ +ಕೇಡರ್ ಕಂಟ್ರೋಲ್ ಮೂಲಕ ಚಂದ್ರಶೇಖರ್ ಮೇಲೆ ಕ್ರಮ ಕೈಗೊಳ್ಳುತ್ತೇವೆ : ಜೋಶಿ ಎಚ್ಚರಿಕೆ + +ಹುಬ್ಬಳ್ಳಿ, ಸೆ.29-ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸೇವಾ ನಿಯಮಗಳ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದು ತಿಳಿಸಿದರು. +ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಅಸಭ್ಯ ಭಾಷೆ ಬಳಸಿದವರಲ್ಲ. ಈ ಅಧಿಕಾರಿ ಬಗ್ಗೆಯೂ ಹಾಗೆಲ್ಲ ಏಕವಚನದಲ್ಲಿ ಮಾತನಾಡಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪದದಲ್ಲಿ ಸಂಬೋಧನೆ ಮಾಡಿರುವುದು ಅಧಿಕಾರಿಯ ಅಹಂಕಾರದ ಪರಮಾವಧಿಯಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. +ಸರ್ಕಾರದ ಆದೇಶವಿದ್ದರೆ ತನಿಖೆ ನಡೆಸಲಿ. ಕುಮಾರಸ್ವಾಮಿ ಆರೋಪ ಮಾಡಿದ್ದರೆ, ಗೌರವಯುತ ಭಾಷೆಯಲ್ಲಿ, ಸಭ್ಯ ಪದಗಳಲ್ಲಿ ಸ್ಪಷ್ಟನೆ ಕೊಡಲಿ. ಅದು ಬಿಟ್ಟು ಈ ರೀತಿ ಕೆಟ್ಟದಾಗಿ ಸಂಬೋಧಿಸುವುದು ಯಾವುದೇ ಅಧಿಕಾರಿಗಳಿಗೂ ಶೋಭೆ ತರುವುದಿಲ್ಲ ಎಂದು ಅವರು ಹೇಳಿದರು. +ಒಬ್ಬ ಜನಪ್ರತಿನಿಧಿ ಬಗ್ಗೆ ಲೋಕಾಯುಕ್ತ ಎಡಿಜಿಪಿ ಕೆಟ್ಟ ಪದ ಬಳಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ. ಇದು ಮುಂದೆ ಕಾಂಗ್ರೆಸ್ಗೆ ಮುಳುವಾಗಲಿದೆ. ಕಾಂಗ್ರೆಸ್ ಎಂಥೆಂಥ ಅಧಿಕಾರಿಗಳನ್ನು ಬೆಳೆಸುತ್ತಿದೆಯಲ್ಲವೇ ಎಂದು ಅವರು ಕಿಡಿ ಕಾರಿದರು.ರಾಜ್ಯದಲ್ಲಿ ಈ ಸರ್ಕಾರವೇ ಶಾಶ್ವತವಾಗಿ ಇರೋದಿಲ್ಲ. ಸ್ವಲ್ಪ ಎಚ್ಚರ ವಹಿಸಿ ಮಾತನಾಡಿ, ಕೆಲಸ ಮಾಡಿ ಎಂದು ಚಂದ್ರಶೇಖರ್ಗೆ ಜೋಶಿ ಚಾಟಿ ಬೀಸಿದರು. \ No newline at end of file diff --git a/eesanje/url_46_5_11.txt b/eesanje/url_46_5_11.txt new file mode 100644 index 0000000000000000000000000000000000000000..309d8371a111e9895a6f2ec62caec43b78ae68d7 --- /dev/null +++ b/eesanje/url_46_5_11.txt @@ -0,0 +1,11 @@ +ನೈತಿಕತೆ ಇದ್ದರೆ ಯಡಿಯೂರಪ್ಪ ಮತ್ತು ವಿಜಯೇಂದ್ರರನ್ನು ಮೊದಲು ಪಕ್ಷದಿಂದ ಹೊರಹಾಕಿ : ಪ್ರಿಯಾಂಕ್ ಖರ್ಗೆ + +ಬೆಂಗಳೂರು,ಸೆ.29-ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ತಮ್ಮ ಪಕ್ಷದಿಂದ ಮೊದಲು ಹೊರಹಾಕಲಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. +ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಇದಕ್ಕೆ ಹೆದರುವುದಿಲ್ಲ ಎಂದರು. +ಕರಡಿಗೆ ಎಷ್ಟು ಕೂದಲುಗಳಿವೆಯೋ ಅಷ್ಟು ಆರೋಪಗಳು ಬಿಜೆಪಿಯವರ ಮೇಲಿದೆ. ಬಿ.ವೈ.ವಿಜಯೇಂದ್ರ ಸೆಲ್ ಕಂಪನಿಗಳ ಮೂಲಕ ಮನಿಲ್ಯಾಂಡ್ರಿಂಗ್ ಮಾಡುತ್ತಿದ್ದಾರೆ. ಹಲವು ಬಾರಿ ಮಲೇಷಿಯಾ ಸೇರಿದಂತೆ ವಿದೇಶಗಳಿಗೆ ಭೇಟಿ ನೀಡಿದ್ದಾರೆ. ಅವರು ಎಷ್ಟು ಬಾರಿ ವಿದೇಶಕ್ಕೆ ಭೇಟಿ ನೀಡಿದ್ದಾರೆ ಎಂಬ ಬಗ್ಗೆ ಪಾಸ್ಪೋರ್ಟ್ ತೋರಿಸಲಿ. ನಾವು ನಮ ಪಾಸ್ಪೋರ್ಟ್ ತೋರಿಸುತ್ತೇವೆ ಎಂದು ಸೆಡ್ಡು ಹೊಡೆದರು. +ಪ್ರಹ್ಲಾದ್ ಜೋಷಿ ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಯಾವುದೇ ಯೋಜನೆಯನ್ನು ತಂದಿಲ್ಲ. ಆದರೆ ರಾಜಕೀಯವಾಗಿ ಕ್ಷುಲ್ಲಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋನಿಯಾಗಾಂಧಿ, ರಾಹುಲ್ಗಾಂಧಿ ಮನಿಲ್ಯಾಂಡ್ರಿಂಗ್ ಮಾಡಿದ್ದಾರೆ ಎಂದು ಜೋಷಿ ಹೇಳಿರುವುದು ಹಾಸ್ಯಾಸ್ಪದ. 10 ವರ್ಷ ಕೇಂದ್ರದಲ್ಲಿ ಆಡಳಿತ ಮಾಡಿರುವ ಜೋಷಿಯವರು ಚಾಂದಿನಿ ಚೌಕ್ನಲ್ಲಿ ಪಾನಿಪುರಿ ತಿನ್ನುತ್ತಿದ್ದಾರೆಯೇ?, ಒಂದು ವೇಳೆ ಸೋನಿಯಾಗಾಂಧಿ, ರಾಹುಲ್ಗಾಂಧಿ ತಪ್ಪು ಮಾಡಿದ್ದರೆ ಏಕೆ ಜೈಲಿಗೆ ಹಾಕಿಲ್ಲ ಎಂದು ಪ್ರಶ್ನಿಸಿದರು. +ಜೋಷಿಯವರ ಹೇಳಿಕೆಯನ್ನು ಗಮನಿಸಿದರೆ ಕೇಂದ್ರ ಗೃಹಸಚಿವ ಅಮಿತ್ ಷಾ ಅಸಮರ್ಥರು. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಅವರಿಂದಾಗುತ್ತಿಲ್ಲ ಎಂಬ ಅರ್ಥ ಬರುವಂತಿದೆ ಎಂದು ಹೇಳಿದರು. +ಮುನಿರತ್ನ ಅತ್ಯಾಚಾರ, ಹನಿಟ್ರ್ಯಾಪ್, ಜಾತಿನಿಂದನೆ ಸೇರಿದಂತೆ ಹಲವು ಆರೋಪಗಳಿಗೆ ಗುರಿಯಾಗಿದ್ದಾರೆ. ಬಿಜೆಪಿಯ ನಾಯಕರು ಅವರ ಬಗ್ಗೆ ಬಾಯಿ ಬಿಟ್ಟಿಲ್ಲ. ಛಲವಾದಿ ನಾರಾಯಣ ಸ್ವಾಮಿ, ನಿವೇಶನ ಹಗರಣದಲ್ಲಿದ್ದಾರೆ. ಯಡಿಯೂರಪ್ಪ ವಿರುದ್ಧ ಫೋಕ್ಸೊ ಪ್ರಕರಣದ ದಾಖಲಾಗಿದೆ. ಹಿಂದೂ ಧರ್ಮದ ರಕ್ಷಕರೆಂದು ಹೇಳಿಕೊಳ್ಳುವವರ ವಿರುದ್ಧ ಇರುವ ಪ್ರಕರಣಗಳನ್ನು ನೋಡಿದರೆ ನಾಚಿಕೆಯಾಗುತ್ತಿದೆ. ಮುನಿರತ್ನ ವಿರುದ್ಧ ಮಾತನಾಡಲು ಹೆದರುತ್ತಿರುವುದನ್ನು ನೋಡಿದರೆ ಬಿಜೆಪಿ ನಾಯಕರ ಸಿಡಿಗಳಿವೆಯೇ ಎಂಬ ಅನುಮಾನ ಕಾಡುತ್ತಿದೆ ಎಂದರು. +ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಆಗ ಅವರ ಕೈಕೆಳಗೆ ಇದೇ ಚಂದ್ರಶೇಖರ್ ಕೆಲಸ ಮಾಡಿದ್ದಾರೆ. ಈಗ ಕೆಟ್ಟವರಾಗಿರುವ ಅಧಿಕಾರಿ ಆಗ ಒಳ್ಳೆಯವರಾಗಿದ್ದರೇ?, ಕಾನೂನು ಪಾಲನೆ ಮಾಡಿದವರು ಇವರ ಕಣ್ಣಿಗೆ ಕೆಟ್ಟವರಾಗಿ ಕಾಣುತ್ತಾರೆಯೇ?, ಚಂದ್ರಶೇಖರ್ ಅವರು ಬರ್ನಾಡ್ ಷಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. ಈ ಪ್ರಕರಣದಲ್ಲಿ ಪತ್ರ ಬರೆದವನೂ ನಾನಲ್ಲ, ಸ್ವೀಕಾರ ಮಾಡಿದವನೂ ನಾನಲ್ಲ. ಚಂದ್ರಶೇಖರ್ ಅವರು ತಮ ಅಧಿಕಾರಿಗಳಿಗೆ ನೈತಿಕ ಧೈರ್ಯ ತುಂಬುವ ಸಲುವಾಗಿ ಈ ರೀತಿ ಪತ್ರ ಬರೆದಿರಬಹುದು ಎಂದು ಹೇಳಿದರು. +ಗಣಿಗಾರಿಕೆಗೆ ಅರಣ್ಯ ಭೂಮಿ ಹಂಚಿಕೆಗೆ ತಾವು ಸಹಿ ಹಾಕಿಲ್ಲ ಎಂದು ಮೊದಲು ಹೇಳಿದ್ದರು. ಅನಂತರ ಸಹಿ ಹಾಕಿದ್ದೇನೆ, ಡಿ ನೋಟಿಫಿಕೇಷನ್ ಮಾಡಿಲ್ಲ ಎಂದರು. ಕೊಲೆ ಮಾಡಿಲ್ಲ, ಕೊಲೆ ಯತ್ನ ಮಾಡಿದ್ದೇನೆ ಎಂದು ಹೇಳಿದಂತಿದೆ ಅವರ ಹೇಳಿಕೆ ಎಂದು ಲೇವಡಿ ಮಾಡಿದರು. +ರಾಜ್ಯ ಬಿಜೆಪಿಯವರು ಸಂಕಷ್ಟದಲ್ಲಿದ್ದಾರೆ. ನಾಯಕತ್ವದ ಪರ ಹಲವು ಹಗರಣಗಳು ಅವರನ್ನು ಕಾಡುತ್ತಿವೆ. ಎಲೆಕ್ಟ್ರೋಲ್ ಬಾಂಡ್ ಹಗರಣದಲ್ಲಿ ಬಿಜೆಪಿಯವರು ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_5_12.txt b/eesanje/url_46_5_12.txt new file mode 100644 index 0000000000000000000000000000000000000000..f388f3ec8804e4346066ab372d0fc280b31106a9 --- /dev/null +++ b/eesanje/url_46_5_12.txt @@ -0,0 +1,12 @@ +ನನ್ನ ಪ್ರಶ್ನೆಗಳಿಗೆ ಚಂದ್ರಶೇಖರ್ ಉತ್ತರಿಸಲಿ : ಎಚ್ಡಿಕೆ ಗರಂ +-- +ಬೆಂಗಳೂರು,ಸೆ.29-ಐಪಿಎಸ್ ಅಧಿಕಾರಿ ಚಂದ್ರ ಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಮತ್ತೆ ಆರೋಪಿಸಿದ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ನಾನು ಕೇಳಿರುವ ಪ್ರಶ್ನೆಗಳಿಗೆ ಈ ಅಧಿಕಾರಿ ಉತ್ತರ ನೀಡಲಿ ಎಂದು ಒತ್ತಾಯಿಸಿದ್ದಾರೆ. +ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ಅಧಿಕಾರಿ ತನ್ನ ಸಹೋದ್ಯೊ ೕಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು? ಎಲ್ಲಿ? ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಯಾವ ಸಂದರ್ಭದಲ್ಲಿ ಇದಕ್ಕೆ ಸರಿಯಾದ ಉತ್ತರ ಕೋಡಬೇಕೋ, ಕೊಡುತ್ತೇನೆ ಎಂದು ಅವರು ಹೇಳಿದರು. +ಅಧಿಕಾರಿ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಅವರು ಅಧಿಕಾರಿ ಸೋಗಿ ನಲ್ಲಿರುವ ಕ್ರಿಮಿನಲ್. ಅವರ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು.ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರ್ಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. +ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು. +ನನ್ನ ಪ್ರಶ್ನೆಗಳಿಗೆ ಉತ್ತರ ಕೊಡುವ ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು? ಎಲ್ಲಿ ಉತ್ತರ ಕೊಡಬೇಕು? ಎನ್ನುವುದು ನನಗೆ ಗೊತ್ತಿದೆ ಎಂದು ಅವರು ತಿಳಿಸಿದರು. +ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಸುದ್ದಿಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದರು ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ಸಿದ್ಧ ಮಾಡಿಕೊಟ್ಟರು. ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು. +ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಅಧಿಕಾರಿ ಆಂಧ್ರ ಪ್ರದೇಶ ಮೂಲದವರು. ಹಿಮಾಚಲ ಪ್ರದೇಶದ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗೆ ಬಂದಿದ್ದೀರಿ? ಅಧಿಕಾರಿ ಬಳಕೆ ಮಾಡಿರುವ ಭಾಷೆಯು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಯಾರು ಯಾರ ಜತೆ ಈತನ ಕ್ರಿಮಿನಲ್ ನಂಟಿದೆ ಎನ್ನುವುದನ್ನು ನಿನ್ನೆಯೇ ದಾಖಲೆ ಸಮೇತ ಹೇಳಿದ್ದೇನೆ. +ಒಬ್ಬ ಕೇಂದ್ರ ಮಂತ್ರಿ ಬಗ್ಗೆ ಯಾವ ಭಾಷೆ ಬಳಸಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಅವರು ಹೇಳಿದರು.ಪತ್ರದಲ್ಲಿ ಸತ್ಯಮೇವ ಜಯತೆ ಎಂದು ಅಧಿಕಾರಿ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೆ ಕಾರಣಕ್ಕಾಗಿಯೇ ಎಂದು ಕುಮಾರಸ್ವಾಮಿ ತಿಳಿಸಿದರು. +ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೇನೆಯೇ? ಅವರ ಕೈಕೆಳಗೆ ಕೆಲಸ ಮಾಡುವ ಇನ್‌್ಸಪೆಕ್ಟರ್ಗೆ 20 ಕೋಟಿ ರೂ. ಬೇಡಿಕೆ ಇಟ್ಟು ಸಿಕ್ಕಿ ಬಿದ್ದಿದ್ದಾರೆ. ಆ ಇನ್‌್ಸಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ 2 ಕೋಟಿ ರೂ.ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ಲವೇ? ನಂತರ ಕೇಸ್ ಕೋರ್ಟ್ ಮುಂದೆ ಇದೆಯಲ್ಲವೇ? ಇದೇನಾ ಅಧಿಕಾರಿಯ ಸತ್ಯಮೇವ ಜಯತೆ? ಎಂದು ಸಚಿವರು ಕಿಡಿಕಾರಿದರು. +ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಅವರನ್ನು ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕೇ? ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ ಮೇಲೆ ರಾಜೀನಾಮೆ ಯಾಕೆ ಕೊಡಲಿ? ಸುಳ್ಳು ಹೇಳುತ್ತಿರುವುದು ನಾನಲ್ಲ ಎಂದು ಟೀಕಾ ಪ್ರಹಾರ ನಡೆಸಿದರು. diff --git a/eesanje/url_46_5_2.txt b/eesanje/url_46_5_2.txt new file mode 100644 index 0000000000000000000000000000000000000000..6a61021296b67d4de0d3578558c396c1d8b1443e --- /dev/null +++ b/eesanje/url_46_5_2.txt @@ -0,0 +1,17 @@ +ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್‌, ಬಾಂಗ್ಲಾ ಪ್ರಜೆಗಳ ವಿರುದ್ಧ ಕಠಿಣ ಕ್ರಮ : ಪರಮೇಶ್ವರ್‌ + +ಬೆಂಗಳೂರು,ಸೆ.30-ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಹಾಗೂ ಹಲವು ಬಾಂಗ್ಲ ದೇಶೀಯರ ಬಗ್ಗೆ ತನಿಖೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಹತ್ತು ವರ್ಷದಿಂದ ಭಾರತದಲ್ಲಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. +ಯಾವ ಉದ್ದೇಶದಿಂದ ಬೆಂಗಳೂರಿಗೆ ಬಂದಿದ್ದರು ಎಂಬುದು ಹೊರಬರಲಿದೆ. ಹತ್ತು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದರು ಎಂಬುದು ಸತ್ಯವಾಗಿದ್ದರೆ, ಕೇಂದ್ರ ಗುಪ್ತದಳದ ಗಮನಕ್ಕೆ ಬರಲಿಲ್ಲ. ಬಂಧಿತರು ಪಾಸ್‌‍ಪೋರ್ಟ್‌ ಮಾಡಿಸಿಕೊಳ್ಳುವ ಮಟ್ಟಕ್ಕೆ ಹೋಗಿದ್ದರು. ಹೆಸರು ಬದಲಾಯಿಸಿಕೊಂಡಿದ್ದಾರೆ. ತನಿಖೆಯಲ್ಲಿ ಏನೆಲ್ಲ ಮಾಹಿತಿಗಳು ಹೊರಬರುತ್ತವೆ ಎಂಬುದನ್ನು ನೋಡೋಣ ಎಂದು ತಿಳಿಸಿದರು. +ಬಹಳ ಜನ ಬಾಂಗ್ಲಾ ದೇಶದವರು ಬಂದಿದ್ದಾರೆ. ಪ್ರತಿನಿತ್ಯ ಅವರನ್ನು ವಶಕ್ಕೆ ಪಡೆದು ವರದಿ ನೀಡುತ್ತಿದ್ದೇವೆ. ಬಾಂಗ್ಲಾ ಗಡಿಯಲ್ಲಿ ನುಸುಳದಂತೆ ಬಂದೋಬಸ್ತ್‌ ಹೆಚ್ಚಿಸಬೇಕು. ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಬಾಂಗ್ಲಾ ದೇಶದ ಹೈಕಮೀಷನ್‌ಗೂ ಮಾಹಿತಿ ನೀಡುತ್ತೇವೆ ಎಂದರು. +ಎತ್ತಿನಹೊಳೆ ಯೋಜನೆ ವಿಚಾರವಾಗಿ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಆಗಮಿಸಿದ್ದರು. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವರು ಹೇಳಿದರು. +ಎತ್ತಿನಹೊಳೆ ಯೋಜನೆ ವೇಗವಾಗಿ ಆಗುತ್ತಿಲ್ಲ. ಹಣ ಬಿಡುಗಡೆ ಆಗಬೇಕಿದೆ. ದೊಡ್ಡಬಳ್ಳಾಪುರದಲ್ಲಿ ನೀರು ಸಂಗ್ರಹಕ್ಕೆ ಐದು ಸಾವಿರ ಎಕರೆ ಭೂಮಿ ಪ್ರಸ್ತಾಪ ಮಾಡಲಾಗಿತ್ತು. ಅದರಲ್ಲಿ 2,500 ಎಕರೆ ಭೂಮಿ ಕೊರಟಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಿಂದಿನ ಸರ್ಕಾರ ಇದನ್ನು ಬದಲಾಯಿಸಿ, ನಿಲ್ಲಿಸಿತ್ತು. ಅದು ಆಗಬಾರದು ಎಂಬ ಚರ್ಚೆ ನಡೆಯುತ್ತಿತ್ತು. +ಮುಂದಿನ ವರ್ಷಕ್ಕಾದರು ಜಿಲ್ಲೆಗೆ ನೀರು ಬರಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡುವುದಾಗಿ ಡಿಸಿಎಂ ಅವರಿಗೆ ಹೇಳಿದ್ದೆ. ಡಿಸಿಎಂ ಅವರು ನಾನೇ ಬರುತ್ತೇನೆ, ಮಾತಾಡೋಣ ಎಂದಿದ್ದರು. ಬನ್ನಿ ಎಂದು ಕರೆದ್ದೆಿ ಎಂದು ಸ್ಪಷ್ಟನೆ ನೀಡಿದರು. +ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಿದ್ದಾರೆ. ನಾವು ಮಾತಾಡಿಕೊಳ್ಳದಿದ್ದರೆ ಇನ್ನ್ಯಾರು ಮಾತಾಡಿಕೊಳ್ಳಬೇಕು? ನಮ ಸಮಸ್ಯೆಗಳ ಬಗ್ಗೆ ನಾವೇ ಚರ್ಚೆ ಮಾಡಬೇಕು. ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಹೊಸದಾಗಿ ಭೇಟಿ ಆಗುತ್ತಿದ್ದೇವೆಯೇ? ಎಂದು ಪ್ರಶ್ನಿಸಿದರು. +ಡಿಸಿಎಂ ಭೇಟಿಯನ್ನು ಬೇರೆ ರೀತಿಯ ದೃಷ್ಟಿಕೋನದಲ್ಲಿ ನೋಡಬೇಕಿಲ್ಲ. ನಮ ಕೆಲಸ ಕಾರ್ಯಗಳಾಗಬೇಕಾಗುತ್ತದೆ. ಗುಬ್ಬಿಯಿಂದ ಕುಣಿಗಲ್‌ವರೆಗೆ ಎಕ್‌್ಸಪ್ರೆಸ್‌‍ ಕೆನಲ್‌ ಮಾಡಲು ಅನುಮತಿ ಸಿಕ್ಕಿದೆ. ಕೆಲಸ ಆರಂಭಿಸುವಾಗ ಜನರು ತಡೆದಿದ್ದಾರೆ. ಈ ಬಗ್ಗೆಯೂ ಚರ್ಚಿಸಲಾಗಿದೆ. ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರು ತಾಂತ್ರಿಕ ಸಮಿತಿ ಮಾಡಿದ್ದಾರೆ. ಅದರ ವರದಿ ಬಂದ ಮೇಲೆ ಮುಂದುವರಿಯುತ್ತದೆ. ಭೇಟಿ ಮಾಡುವುದಕ್ಕೆ ಬೇರೆಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. +ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಸಾವಿರ ಕೋಟಿ ರೂ. ನೋಡಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಸಾವಿರ ಕೋಟಿ ರೂ. ಎಲ್ಲಿಟ್ಟಿದ್ದಾರೆ ಎಂಬುದನ್ನು ಯತ್ನಾಳ್‌ ಅವರನ್ನೇ ಕೇಳಬೇಕು. ಸಾವಿರ ಕೋಟಿ ಎಲ್ಲಿಟ್ಟಿದ್ದಾರೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಸುಮೋಟೋ ಪ್ರಕರಣ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು. ಸಂದರ್ಭ ಬಂದರೆ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು. +ಫ್ರೇಜರ್‌ ಟೌನ್‌ನಲ್ಲಿ ಪೊಲೀಸ್‌‍ ವಸತಿಗೃಹಗಳ ದುಸ್ಥಿತಿಯನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುತ್ತೇನೆ. ಸಾಧ್ಯವಾದರೆ ಖುದ್ದಾಗಿ ಭೇಟಿ ನೀಡಿ, ಸೂಕ್ತ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು. +ಹಿರಿಯ ಅಧಿಕಾರಿ ಏನು ಪದ ಬಳಕೆ ಮಾಡಿದ್ದಾರೆ. ಬರ್ನಾಡ್‌ ಷಾ ಆ ರೀತಿ ಹೇಳಿದ್ದಾರೆ ಅಂತ ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರಿಗೆ ರೆಫರ್‌ ಮಾಡಿ ಹೇಳಿಲ್ಲವಲ್ಲ. ನಮಗೆ ಓದುವುದಕ್ಕೆ ಬರಬೇಕಲ್ಲ. ಓದುವುದಕ್ಕೆ, ಅರ್ಥ ಮಾಡಿಕೊಳ್ಳಲು ಬಂದರೆ ಈ ರೀತಿ ಪ್ರಶ್ನೆಯೇ ಬರುವುದಿಲ್ಲ ಎಂದರು. +ಬರ್ನಾಡ್‌ ಷಾ ಹೇಳಿರುವುದನ್ನು ಉಲ್ಲೇಖಿಸಿದ್ದಾರೆ. ಕುಮಾರಸ್ವಾಮಿ ಅವರು ನನಗೆ ಅನ್ವಯಿಸುತ್ತದೆ ಎಂದು ಏಕೆ ಅಂದುಕೊಳ್ಳಬೇಕು. ಗಾದೆಮಾತು, ನಾಣ್ಣುಡಿ, ದೊಡ್ಡವರು ಹೇಳಿದ ಮಾತುಗಳನ್ನು ಒಂದು ಅರ್ಥದಲ್ಲಿ ಹೇಳುತ್ತಾರೆ. ನಮಗೆ ಹೇಗೆ ಬೇಕೋ ಹಾಗೇ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು. +ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇ.ಡಿ ಅವರಿಗೆ ಮತ್ತೇ ದೂರು ಕೊಡಲಿ. ಅದೆಲ್ಲವನ್ನು ಕಾನೂನು ನೋಡಿಕೊಳ್ಳುತ್ತದೆ. ನಾವು ಪ್ರತಿಕ್ರಿಯಿಸಲು ಆಗುವುದಿಲ್ಲ ಎಂದರು. +ಯಾರಿಗೆ ಯಾರು ದ್ವೇಷ ಮಾಡುತ್ತಾರೋ ಗೊತ್ತಿಲ್ಲ. ದಿನಬೆಳಗಾದರೆ ಇದೇ ಆಗಿದೆ. ಇವರಿಗೆ ಅವರು ಏನೋ ಅಂದರು, ಅವರಿಗೇ ಇವರು ಏನೋ ಅಂದರು ಎಂಬುದಾಗಿದೆ. ಸಾರ್ವಜನಿಕ ಜೀವನ ಇಷ್ಟರ ಮಟ್ಟಿಗೆ ಕಲುಷಿತ ಆದರೆ ಬಹಳ ಕಷ್ಟ ಎಂದು ಅವರು ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_5_3.txt b/eesanje/url_46_5_3.txt new file mode 100644 index 0000000000000000000000000000000000000000..92530502f68d263bb19d21d1ce02b0f329e41a58 --- /dev/null +++ b/eesanje/url_46_5_3.txt @@ -0,0 +1,11 @@ +14 ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ಜನಾರ್ಧನ ರೆಡ್ಡಿಗೆ ಅನುಮತಿ, ಬೆಂಬಲಿಗರ ಸಂಭ್ರಮ + 14 , + +ನವದೆಹಲಿ, ಸೆ.30– ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಮಾಜಿ ಸಚಿವ, ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತವರು ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್‌ ತೆರವು ಮಾಡಿದೆ.ಈವರೆಗೂ ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಇದನ್ನು ಪ್ರಶ್ನಿಸಿ ಅವರ ಪರ ವಕೀಲರು ಸುಪ್ರೀಂಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿದ್ದರು. +ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್‌ ನೇತೃತ್ವದ ದ್ವಿಸದಸ್ಯ ಪೀಠ, ಬಳ್ಳಾರಿ , ಕಡಪ ಮತ್ತು ಅನಂತಪುರ ಜಿಲ್ಲೆಗಳಿಗೆ ತೆರಳಲು ಹಾಕಿದ್ದ ನಿರ್ಬಂಧವನ್ನು ತೆರವು ಮಾಡಿತು. +ಈ ಹಿಂದೆ ರೆಡ್ಡಿ ತಮ ಪುತ್ರಿಯ ವಿವಾಹ ಹಾಗೂ ಹೆರಿಗೆ ಸಂದರ್ಭದಲ್ಲಿ ಮಾತ್ರ ಬಳ್ಳಾರಿ ಪ್ರವೇಶಕ್ಕೆ ನ್ಯಾಯಾಲಯ ಅನುಮತಿ ನೀಡಿತ್ತು. ಅವರು ಜಿಲ್ಲೆಗೆ ಬಂದರೆ ಅಕ್ರಮ ಗಣಿಕಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಪ್ರಭಾವ ಬೀರಬಹುದೆಂಬ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹಾಕಲಾಗಿತ್ತು. +ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. 2015ರ ಜನವರಿ 23ರಂದು ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. +ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್‌ 5, 2011ರಲ್ಲಿ ಜನಾರ್ದನ ರೆಡ್ಡಿ ಹಾಗೂ ಒಬಳಾಪುರಂ ಮೈನಿಂಗ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ, ಸಂಬಂಧಿ ಬಿ.ವಿ.ಶ್ರೀನಿವಾಸ್‌‍ ರೆಡ್ಡಿ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಅವರನ್ನು ಆಂಧ್ರಪ್ರದೇಶದ ಪೆನುಗೊಂಡ ಜೈಲಿನಲ್ಲಿ ಇಡಲಾಗಿತ್ತು. +ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ರೆಡ್ಡಿ ಆಂಧ್ರಪ್ರದೇಶ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್‌ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ರೆಡ್ಡಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. +ಬೇಲೆಕೇರಿ ಅದಿರು ನಾಪತ್ತೆ ಸೇರಿದಂತೆ ಅಕ್ರಮ ಗಣಿಗಾರಿಕೆ, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ವಿರುದ್ಧ ಒಟ್ಟು ಏಳು ಪ್ರಕರಣಗಳು ದಾಖಲಾಗಿದ್ದವು. ಎಲ್ಲಾ ಪ್ರಕರಣಗಳಲ್ಲೂ ಜಾಮೀನು ಪಡೆದಿದ್ದ ರೆಡ್ಡಿ, ಒಬಳಾಪುರಂ ಮೈನಿಂಗ್‌ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಗಬೇಕಿತ್ತು. ಈಗ ಅದೂ ಸಿಕ್ಕಿದ್ದು, ರೆಡ್ಡಿ ಜೈಲಿನಿಂದ ಹೊರ ಬಂದಿದ್ದರು. +ಕಳೆದ ಬಾರಿಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಱಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದ ಇತರ ಅಭ್ಯರ್ಥಿಗಳು ಯಾರೂ ಗೆಲುವು ಸಾಧಿಸಿರಲಿಲ್ಲ.2024 ರ ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್‌ 25ರಂದು ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದರು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಷರತ್ತುರಹಿತವಾಗಿ ಬಿಜೆಪಿ ಜತೆ ವಿಲೀನಗೊಳಿಸಿದ್ದರು. \ No newline at end of file diff --git a/eesanje/url_46_5_4.txt b/eesanje/url_46_5_4.txt new file mode 100644 index 0000000000000000000000000000000000000000..c98d338b9f7ff460f68be35e41d5f087c5cf15c0 --- /dev/null +++ b/eesanje/url_46_5_4.txt @@ -0,0 +1,6 @@ +ಪ್ರಧಾನಿ ಮೋದಿ ಭಾರತವನ್ನು ನಂ.1 ಸ್ಥಾನಕ್ಕೆ ಕೊಂಡೊಯ್ಯಬೇಕು, ಖರ್ಗೆ ಅಭಿನಂದಿಸುವುದನ್ನು ನಾವು ನೋಡಬೇಕು : ವಿಜಯೇಂದ್ರ + +ಬೆಂಗಳೂರು,ಸೆ.30-ಪ್ರಧಾನಿ ನರೇಂದ್ರಮೋದಿ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್‌ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭಿನಂದಿಸುವುದನ್ನು ನಾವು ನೋಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. +ಈ ಸಂಬಂಧ ಎಕ್‌್ಸನಲ್ಲಿ ಟ್ವೀಟ್‌ ಮಾಡಿರುವ ಅವರು, ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರು ನೂರ್ಕಾಲ ಬಾಳಬೇಕು, ಸುದೀರ್ಘ ರಾಜಕೀಯ ಜೀವನ ಸಾಗಿಸಬೇಕು ಎನ್ನುವುದು ನಮ ಪ್ರಾಮಾಣಿಕ ಅಪೇಕ್ಷೆ ಹಾಗೂ ಪ್ರಾರ್ಥನೆ ಎಂದಿದ್ದಾರೆ. +ಖರ್ಗೆ ಅವರ ಕಣ್ಣ ಮುಂದೆಯೇ ಹೆಮೆಯ ಪ್ರಧಾನಿ ನರೇಂದ್ರ ಜೀ ಅವರು ಭಾರತವನ್ನು ವಿಶ್ವ ಮುಂಚೂಣಿಯಲ್ಲಿ ನಂಬರ್‌ 1 ಸ್ಥಾನಕ್ಕೆ ಕೊಂಡೊಯ್ಯಬೇಕು, ಅದನ್ನು ಖರ್ಗೆ ಅವರು ಅಭಿನಂದಿಸುವುದನ್ನು ನೋಡಬೇಕೆಂಬುದು ನಮ ಹೆಬ್ಬಯಕೆ ಎಂದು ಹೇಳಿದ್ದಾರೆ. +ಕೆಳಗಿಳಿಸುವವರ ವ್ಯೂಹ ಬೇಧಿಸಿ ಮೂರನೆ ಬಾರಿಯೂ ಮೇಲೆದ್ದು ನಿಂತ ಪ್ರಧಾನಿ ಮೋದಿಯವರ ಈವರೆಗಿನ ನಡೆ, ಸಾಧಿಸಿರುವ ಸಾಧನೆಗಳು ಶತಕೋಟಿ ಭಾರತೀಯರ ಕನಸನ್ನು ನನಸಾಗಿಸುತ್ತಿದೆ ಈ ನಿಟ್ಟಿನಲ್ಲಿ ಭಾರತ ಜಗತ್ತಿನ ಮುಂದೆ ನಂ.1 ಸ್ಥಾನದಲ್ಲಿ ತಲೆ ಎತ್ತಿ ನಿಲ್ಲವುದರಲ್ಲೂ ನಮಗೆ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_46_5_5.txt b/eesanje/url_46_5_5.txt new file mode 100644 index 0000000000000000000000000000000000000000..afabc29cf1ecc15b8f80216c57d42bce7aaeacec --- /dev/null +++ b/eesanje/url_46_5_5.txt @@ -0,0 +1,5 @@ +ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ + ' .4 +ಬೆಂಗಳೂರು,ಸೆ.30-ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಅ.4ಕ್ಕೆ ಮುಂದೂಡಿದೆ.ಸೋಮವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ದರ್ಶನ್ ಪರ ವಕೀಲರು ವಾದ ಮಂಡಿಸಲು ಸಮಯ ಅವಕಾಶ ಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. +ಇದನ್ನು ಮನ್ನಿಸಿದ ನ್ಯಾಯಾಲಯ ಮುಂದಿನ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿತು. ಇದರಿಂದಾಗಿ ದರ್ಶನ್ ಅಲ್ಲಿಯವರೆಗೂ ಬಳ್ಳಾರಿ ಜೈಲೇ ಗಟ್ಟಿ.ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. +ತನಿಖೆ ಮುಗಿದ ಹಿನ್ನಲೆಯಲ್ಲಿ ತಮಗೆ ಜಾಮೀನು ನೀಡಬೇಕೆಂದು ನ್ಯಾಯಾಲಯಕ್ಕೆ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈಗಾಗಲೇ ವಿಶೇಷ ಸಾರ್ವಜನಿಕ ಅಭಿಯೋಜಕ ಪ್ರಸನ್ನ ಅವರು, ಆಕ್ಷೇಪಣೆ ಸಲ್ಲಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.ನಾಗೇಶ್ ಪರ ವಕೀಲರು ವಾದ ಮಂಡಿಸಿದ ನಂತರ ನ್ಯಾಯಾಲಯ ನೀಡುವ ತೀರ್ಪು ದರ್ಶನ್ ಜಾಮೀನು ಭವಿಷ್ಯವನ್ನು ನಿರ್ಧರಿಸುತ್ತದೆ. \ No newline at end of file diff --git a/eesanje/url_46_5_6.txt b/eesanje/url_46_5_6.txt new file mode 100644 index 0000000000000000000000000000000000000000..333b7654ed64be1d8cc9f78fda22fb0e06ae8ed3 --- /dev/null +++ b/eesanje/url_46_5_6.txt @@ -0,0 +1,8 @@ +ನಾಲಿಗೆ ಹಾರಿಬಿಡುವ ಬಿಜೆಪಿ ಭಿನ್ನಮತೀಯರಿಗೆ ಹೈಕಮಾಂಡ್ ವಾರ್ನಿಂಗ್ + +ಬೆಂಗಳೂರು,ಸೆ.30-ಪಕ್ಷದಲ್ಲಿ ನಡೆಯುತ್ತಿರುವ ಬೆಳೆವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ದೆಹಲಿ ಬಿಜೆಪಿ ನಾಯಕರು ಭಿನ್ನಮತೀಯ ನಾಯಕರ ಚಟುವಟಿಕೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ಮುಂದಾಗಿದ್ದಾರೆ. ಇನ್ನು ಮುಂದೆ ಪ್ರತ್ಯೇಕವಾಗಿ ಯಾವುದೇ ನಾಯಕರು ಸಭೆ ನಡೆಸುವುದು, ಇಲ್ಲವೇ ಪಕ್ಷದ ಅನುಮತಿ ಇಲ್ಲದೆ ಬಾಯಿಗೆ ಬಂದಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಅದನ್ನು ಅಶಿಸ್ತು ಎಂದು ಪರಿಗಣಿಸುವುದಾಗಿ ಎಚ್ಚರಿಕೆ ಕೊಟ್ಟಿದೆ. +ಇನ್ನು ಮುಂದೆ ಪಕ್ಷದ ಅಧಿಕೃತ ಆದೇಶವಿಲ್ಲದೆ ಯಾರೋಬ್ಬರು ಸಭೆ ನಡೆಸುವಂತಿಲ್ಲ. ಏನೇ ಇದ್ದರೂ ಪಕ್ಷದ ಚೌಕಟ್ಟಿನೊಳಗೆ ನಡೆಯಬೇಕು. ಸ್ವಪಕ್ಷೀಯರ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. +ಬಿಜೆಪಿಯ ಖಾಯಂ ಭಿನ್ನಮತೀಯ ಎಂದು ಗುರುತಿಸಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಶಾಸಕರಾದ ಬಿ.ಪಿ.ಹರೀಶ್‌, ರಮೇಶ್‌ ಜಾರಕಿಹೊಳಿ, ಮಾಜಿ ಸಚಿವರಾದ ಪ್ರತಾಪ್‌ ಸಿಂಹ, ಜಿ.ಎಂ.ಸಿದ್ದೇಶ್ವರ್‌, ಅಣ್ಣಾ ಸಾಹೇಬ್‌ ಜೊಲ್ಲೆ ಜೊತೆ ಸಭೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವರಿಷ್ಠರು ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. +ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನಮಗೆ ನೋವು ತಂದಿದೆ. ಸಂಘ ಪರಿವಾರದ ನಾಯಕರು ಮಧ್ಯಪ್ರವೇಶ ಮಾಡಿ ಸಭೆ ನಡೆಸಿದ ಮೇಲು ಈ ರೀತಿ ಪ್ರತ್ಯೇಕ ಸಭೆ ನಡೆಸುವುದು ಸರಿಯಲ್ಲ.ಪಕ್ಷದ ಚೌಕಟ್ಟಿನೊಳಗೆ ನಡೆಸಬೇಕಾದ ಚಟುವಟಿಕೆಗಳನ್ನು ಪ್ರತ್ಯೇಕವಾಗಿ ನಡೆಸುತ್ತಿರುವ ಔಚಿತ್ಯವಾದರೂ ಏನು ರಾಷ್ಟ್ರೀಯ ನಾಯಕರು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ. +ಯಾವುದೇ ರಾಜ್ಯದಲ್ಲೂ ಇರದ ಇಕ್ಕಟ್ಟು-ಬಿಕ್ಕಟ್ಟು ಕರ್ನಾಟಕದಲ್ಲಿದೆ. ರಾಜ್ಯಾಧ್ಯಕ್ಷರು ಪದಾಧಿಕಾರಿಗಳ ಸಮಿತಿ ಇರುವಾಗ ಗುಂಪು ಕಟ್ಟಿಕೊಂಡು ಪ್ರತ್ಯೇಕ ಸಭೆ ನಡೆಸುವುದರಿಂದ ನೀವು ಏನನ್ನೂ ಸಾಧಿಸುತ್ತೀರಿ, ಸಂಘ ಪರಿವಾರದ ನಾಯಕರ ಜೊತೆ ಸಂಧಾನ ಸಭೆ ನಡೆಸಿದಾಗ ಕೊಟ್ಟ ಮಾತು ಮರೆತಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ. +ಆಡಳಿತಾರೂಢ ಕಾಂಗ್ರೆಸ್‌‍ನಲ್ಲಿ ಸಾಕಷ್ಟು ಸಮಸ್ಯೆಗಳು ಉಲ್ಬಣಗೊಂಡಿವೆ. ಈ ಸಂದರ್ಭದಲ್ಲಿ ಒಗ್ಗಟ್ಟು ತೋರಿಸಬೇಕಾದವರು ಬಿಕ್ಕಟ್ಟನ್ನು ಸೃಷ್ಟಿಸುತ್ತಿದ್ದೀರಿ, ಪಕ್ಷದ ಬ್ಯಾನರ್‌ನಡಿ ಪಾದಯಾತ್ರೆ ಮಾಡಿ ಎಂದರೆ ನಾವು ರಾಜ್ಯಾಧ್ಯಕ್ಷರನ್ನು ಹೊರಗಿಟ್ಟು, ಪಾದಯಾತ್ರೆ ಮಾಡುತ್ತೇವೆ ಎಂದರೆ ಅದಕ್ಕೆ ಅನುಮತಿ ನೀಡುವುದಾದರೂ ಹೇಗೆ ಎಂದು ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್‌‍ ಅಗರ್‌ವಾಲ್‌ ಅವರು ಯತ್ನಾಳ್‌ಗೆ ಪ್ರಶ್ನೆ ಮಾಡಿರುವುದಾಗಿ ತಿಳಿದುಬಂದಿದೆ. \ No newline at end of file diff --git a/eesanje/url_46_5_7.txt b/eesanje/url_46_5_7.txt new file mode 100644 index 0000000000000000000000000000000000000000..25409b9c6313193ef5b29b6dfbe4e632bf15deab --- /dev/null +++ b/eesanje/url_46_5_7.txt @@ -0,0 +1,7 @@ +ಸಂಕಷ್ಟ ಬಂದಾಗಲೆಲ್ಲ ‘ಜಾತಿ ಗಣತಿ’ ಜಪ ಮಾಡುವುದು ಸಿದ್ದರಾಮಯ್ಯನವರಿಗೆ ಚಟವಾಗಿಬಿಟ್ಟಿದೆ : ಸುನೀಲ್‌ ಕುಮಾರ್‌ + ' ' +ಬೆಂಗಳೂರು,ಸೆ.30-ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‌ ಕುಮಾರ್‌ ಟೀಕಿಸಿದ್ದಾರೆ. +ಸಿದ್ದರಾಮಯ್ಯನವರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿಕೊಳ್ಳುವುದಕ್ಕಾಗಿನ ಮಹಾನ್‌ ಅಸ್ತ್ರವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ, ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್‌ ಆಗುವುದು ಚಾಳಿಯಾಗಿ ಬಿಟ್ಟಿದೆ. ಪೊಲೀಸ್‌‍ ಭಾಷೆಯಲ್ಲಿ ಹೇಳಬೇಕೆಂದರೆ ಇದು ವೃತ್ತಿಪರ ಆರೋಪಿ ಎಸಗುವ ಗಮನ ಸೆಳೆಯುವ ತಂತ್ರ ಎಂದು ವ್ಯಂಗ್ಯವಾಡಿದ್ದಾರೆ. +ಸಿದ್ದರಾಮಯ್ಯನವರು ಹಾದಿ ತಪ್ಪಿಸುವುದರಲ್ಲಿ ಎಕ್‌್ಸಪರ್ಟ್‌, ಇಡೀ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್‌‍.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ. +ಮುಡಾ ವಿಚಾರದಲ್ಲಿ ಸಂಕಷ್ಟ ಎದುರಾಗುತ್ತಿದ್ದಂತೆ ನೀವು ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಹಿಂದುಳಿದ ಹಾಗೂ ಶೋಷಿತ ವರ್ಗದ ದಿಕ್ಕು ತಪ್ಪಿಸಲು ಹೊರಟಿದ್ದೀರಿ. ಎಷ್ಟು ದಿನ ಈ ನಾಟಕ? ಅಧಿಕಾರಕ್ಕೆ ಬಂದಾಗಿನಿಂದ ಜಾತಿ ಗಣತಿ ಅನುಷ್ಠಾನ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದೀರೇ ವಿನಾ ಆ ದಿಶೆಯಲ್ಲಿ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ ಎಂದು ಕಿಡಿಕಾರಿದ್ದಾರೆ. +ಹಲವು ಕಾರಣದಿಂದ ಜಾರಿಯಾಗಿಲ್ಲ ಎಂದು ಮಗುಮಾಗಿ ಹೇಳಿದರೆ ಸಾಕೆ? ಆ ಕಾರಣವನ್ನು ಬಹಿರಂಗಪಡಿಸಿ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಭಯವೇ? ಅಥವಾ ವರದಿಯಲ್ಲಿ ಲೋಪಗಳಿವೆಯೇ? ಯಾವುದನ್ನೂ ಸ್ಪಷ್ಟಪಡಿಸದೇ ಜಾರಿ ಜಪ ಎಷ್ಟು ವರ್ಷ ಮುಂದುವರಿಸುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.. \ No newline at end of file diff --git a/eesanje/url_46_5_8.txt b/eesanje/url_46_5_8.txt new file mode 100644 index 0000000000000000000000000000000000000000..876e90448534c372167b7fd4aea4614764e875e6 --- /dev/null +++ b/eesanje/url_46_5_8.txt @@ -0,0 +1,9 @@ +ಎಲೆಕ್ಟ್ರೋ ಬಾಂಡ್ ಹಗರಣ : ಪೊಲೀಸ್ ತನಿಖೆ ಚುರುಕು + +ಬೆಂಗಳೂರು,ಸೆ.29-ಎಲೆಕ್ಟ್ರೋಲ್ ಬಾಂಡ್ ಹಗರಣ ದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿರುವ ತಿಲಕ್ನಗರ ಠಾಣೆಯ ಪೊಲೀಸರು ಪ್ರಾಥಮಿಕ ಮಾಹಿತಿ ಹಾಗೂ ದಾಖಲಾತಿಗಳನ್ನು ಕಲೆ ಹಾಕಲಾರಂಭಿಸಿದ್ದು, ದೂರು ದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. +ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಪ್ರಕಾರ, ಜನಾಧಿಕಾರ ಸಂಘರ್ಷ ಪರಿಷತ್ನ ಸಹ ಅಧ್ಯಕ್ಷ ಆದರ್ಶ ಅಯ್ಯರ್ ಅವರ ದೂರನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.ಆದರ್ಶ ಅಯ್ಯರ್ ಅವರಿಂದ ಹೇಳಿಕೆಗಳನ್ನು ಪಡೆದುಕೊಳ್ಳಲಾಗಿದ್ದು, ಅವರ ಬಳಿಯಿರುವ ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತಿದೆ. +ದೂರುದಾರರ ಆರೋಪಗಳು ಹಾಗೂ ಅದಕ್ಕೆ ಪೂರಕವಾದ ದಾಖಲೆಗಳನ್ನು ವಿಶ್ಲೇಷಣೆ ನಡೆಸಲಾಗುತ್ತಿದೆ. ಎಲೆಕ್ಟ್ರೋಲ್ ಬಾಂಡ್ ರಾಷ್ಟ್ರಮಟ್ಟದ ಹಗರಣವಾಗಿದ್ದು, ಸುಪ್ರೀಂಕೋರ್ಟ್ನಲ್ಲಿ ಈಗಾಗಲೇ ವಿಚಾರಣೆಯ ಹಂತದಲ್ಲಿದೆ. ಜಾರಿ ನಿರ್ದೇಶನಾಲಯ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಕೆ ಮಾಡಿಕೊಂಡು ದಾಳಿ ನಡೆಸಿ, ಬೆದರಿಸಿ ಎಲೆಕ್ಟ್ರೋಲ್ ಬಾಂಡ್ಗಳನ್ನು ಖರೀದಿಸುವಂತೆ ಮಾಡಲಾಗಿದೆ ಎಂಬ ಆರೋಪವನ್ನು ವಿರೋಧಪಕ್ಷಗಳು ಮಾಡಿವೆ. +ಇದಕ್ಕೆ ತಕ್ಕ ಹಾಗೆ ಎಲೆಕ್ಟ್ರೋಲ್ ಬಾಂಡ್ನಲ್ಲಿ ಅಧಿಕಾರರೂಢ ಬಿಜೆಪಿ ಹೆಚ್ಚು ಪಾಲು ಹೊಂದಿರುವುದು ಚರ್ಚೆಗೆ ಗ್ರಾಸವಾಗಿತ್ತು. ದೂರುದಾರರಾದ ಆದರ್ಶ ಅಯ್ಯರ್ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ದಾಳಿ ಹಾಗೂ ಅದೇ ಟೈಮ್ಲೈನ್ನಲ್ಲಿ ಎಲೆಕ್ಟ್ರೋಲ್ ಬಾಂಡ್ ಖರೀದಿ ಆಗಿರುವುದರಿಂದ ಹಗರಣಗಳು ಆಗಿವೆ ಎಂದು ಆರೋಪಿಸಿದ್ದರು.ಕಳೆದ ಮಾರ್ಚ್ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ರಾಜ್ಯ ಬಿಜೆಪಿಯ ನಳಿನ್ಕುಮಾರ್ ಕಟೀಲ್, ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ದೂರುಗಳನ್ನು ನೀಡಿದ್ದರು. ಆದರೆ ಅದು ದಾಖಲಾಗಿರಲಿಲ್ಲ. +ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡು ದಿನಗಳ ಹಿಂದೆ ನ್ಯಾಯಾಲಯ ಆದೇಶ ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ. ತನಿಖೆಗೆ ಒಬ್ಬರು ಎಸಿಪಿ ಹಾಗೂ ಇಬ್ಬರು ಇನ್ಸ್ ಪೆಕ್ಟರ್ಗಳ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ದೂರುದಾರರು ಹೇಳಿದಂತೆ ಆರ್ಥಿಕ ವಹಿವಾಟು ಹಾಗೂ ಎಲೆಕ್ಟ್ರೋಲ್ ಬಾಂಡ್ ಖರೀದಿಯ ಟೈಮ್ಲೈನ್ ಹೊಂದಾಣಿಕೆಯಾಗಲಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. +ಪ್ರಾಥಮಿಕ ತನಿಖೆ ಪೂರ್ಣಗೊಂಡ ಬಳಿಕ ಪ್ರತಿವಾದಿಗಳಿಗೆ ನೋಟಿಸ್ ನೀಡುವ ಬಗ್ಗೆಯೂ ಅಧಿಕಾರಿಗಳು ಕಾನೂನು ತಜ್ಞರ ಸಲಹೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.ಎಸ್ಐಟಿ ರಚನೆ : ರಾಷ್ಟ್ರಮಟ್ಟದ ಈ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. +ಸ್ಥಳೀಯ ಪೊಲೀಸರು ತನಿಖೆ ನಡೆಸಲು ಕಷ್ಟಸಾಧ್ಯವಾಗುವುದರಿಂದ ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳವನ್ನು ರಚಿಸಿ ತನಿಖೆ ನಡೆಸುವ ಮೂಲಕ ಕೇಂದ್ರ ಬಿಜೆಪಿಗೆ ಸೆಡ್ಡು ಹೊಡೆಯಲು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಸೋಮವಾರ ಚರ್ಚೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_5_9.txt b/eesanje/url_46_5_9.txt new file mode 100644 index 0000000000000000000000000000000000000000..0970db0826446b4cb8e23d9cc76982b64c146f94 --- /dev/null +++ b/eesanje/url_46_5_9.txt @@ -0,0 +1,13 @@ +ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1000 ಕೋಟಿ ಮೀಸಲಿಟ್ಟಿದ್ದಾರೆ : ಯತ್ನಾಳ್ ಬಾಂಬ್ +1000 +ದಾವಣಗೆರೆ, ಸೆ.29– ಕಾಂಗ್ರೆಸ್ ಸರ್ಕಾರ ಉರುಳಿಸಲು ನಮ್ಮವರೇ 1 ಸಾವಿರ ಕೋಟಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಸ್ವಪಕ್ಷೀಯರ ವಿರುದ್ದವೇ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪೋಟಕ ಆರೋಪ ಮಾಡಿದ್ದಾರೆ. +ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಕೆಡವಿ, ತಾವು ಸಿಎಂ ಆಗಬೇಕೆಂದು ಬಿಜೆಪಿಯ ನಾಯಕರೊಬ್ಬರು ಒಂದು ಸಾವಿರ ಕೋಟಿ ರೂ. ರೆಡಿ ಮಾಡಿಕೊಂಡಿದ್ದಾರೆ.ಡಿಸೆಂಬರ್ ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ ಎಂದು ಭಾವಿಸಿಕೊಂಡಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೆಸರು ಹೇಳದೆ ಆರೋಪಿಸಿದರು. +ಈ ಹಿಂದೆ, ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಹೈಕಮಾಂಡ್ ಗೆ ಯಾರು ಎರಡೂವರೆ ಸಾವಿರ ಕೋಟಿ ರೂ. ಕೊಡುತ್ತಾರೋ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆ ಎಂದು ಹೇಳುವ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದರು. ಈಗ, ಬಿಜೆಪಿ ನಾಯಕರೊಬ್ಬರು ಸಿಎಂ ಆಗಲು 1000 ಕೋಟಿ ರೂ. ಕೂಡಿಟ್ಟುಕೊಂಡಿದ್ದಾರೆ ಎಂದು ಹೇಳುವ ಮೂಲಕ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆದರೆ, ಸಾವಿರ ಕೋಟಿ ರೂ. ಕೂಡಿಟ್ಟುಕೊಂಡಿರುವ ಬಿಜೆಪಿ ನಾಯಕ ಯಾರು ಎಂಬುದನ್ನು ಬಹಿರಂಗಪಡಿಲಿಲ್ಲ. +ಕಾಂಗ್ರೆಸ್ ಸರ್ಕಾರವನ್ನು ಕೆಡವಲು ನಮ್ಮ ಪಕ್ಷದವರೇ ಪ್ರಯತ್ನ ನಡೆಸುತ್ತಿದ್ದಾರೆ.ಆದರೆ, ಸರ್ಕಾರ ಅಸ್ಥಿರಗೊಳಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಅವರು ಮುಖ್ಯಮಂತ್ರಿಯಾಗಲು ನಾವು ಬೆಂಬಲ ಕೊಡಬೇಕಲ್ಲವೇ?. ಕಳೆದ ಬಾರಿಯಂತೆ ಎಲ್ಲಾ ಶಾಸಕರು ಆ ನಾಯಕತ್ವಕ್ಕೆ ಮನ್ನಣೆ ಕೊಡುವುದಿಲ್ಲ.ಸರ್ಕಾರ ರಚನೆ ಅವರು ಅಂದುಕೊಂಡಷ್ಟು ಸರಳವಾಗಿಲ್ಲ ಎಂದು ಹೇಳಿದರು. +ಸಿಎಂ ಆಗಬೇಕೆಂದು ಎಲ್ಲರಿಗೂ ಇಷ್ಟವಿರುತ್ತದೆ. ಆದರೆ, ಅದೃಷ್ಟ ಇದ್ದವರಿಗಷ್ಟೇ ಆಗುತ್ತೆ ಎಂದು ಮಾತು ಆರಂಭಿಸಿದ ಅವರು, ರಾಜ್ಯದಲ್ಲಿ ಇದೇ ವರ್ಷ ಡಿಸೆಂಬರ್ ನಲ್ಲಿ ದೊಡ್ಡದಾದ ರಾಜಕೀಯ ಕ್ರಾಂತಿಯೊಂದನ್ನು ಮಾಡಲು ಹಲವಾರು ಬಿಜೆಪಿಗರು ಪ್ರಯತ್ನಿಸುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕೆಡವಿ ತಾವು ಮುಖ್ಯಮಂತ್ರಿಯಾಗಲು ಬಿಜೆಪಿಯ ಒಬ್ಬ ನಾಯಕರು 1000 ಕೋಟಿ ರೂ.ಗಳನ್ನು ಕೂಡಿಟ್ಟುಕೊಂಡಿಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ. +ಕೆಲವರಿಗೆ ಶಾಸಕರನ್ನು ಖರೀದಿ ಮಾಡುವುದು ತುಂಬಾ ಸರಳವಾಗಿದೆ. ಏಕೆಂದರೆ ಹಿಂದೆಯೂ ಇದೇ ರೀತಿ ಖರೀದಿ ಮಾಡಿಯೇ ಕೆಲವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅದರ ಚಾಳಿ ಈಗ ಕೆಲವರು ಮುಂದುವರೆಸಿಕೊಂಡು ಹೋಗಲು ಸಜ್ಜಾಗಿದ್ದಾರೆ. ಪಕ್ಷದ ಹೈ ಕಮಾಂಡ್ ಇದಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಯತ್ನಾಳ್ ಹೇಳಿದರು. +ಕೆಲವರಿಗೆ ಯಾರು ಬೇಕಾಗಿಲ್ಲ. ಮುಖ್ಯಮಂತ್ರಿ ಗಾದಿ ಬೇಕಾಗಿದೆ ಅಷ್ಟೇ.ನಮಗೆ ಪಕ್ಷದ ಹಿತ ಮುಖ್ಯ.ಸ್ಥಾನಮಾನಕ್ಕಾಗಿ ಪಕ್ಷವನ್ನು ಒಬ್ಬರ ಕೈಯಲ್ಲಿ ಕೊಡಲು ಸಾಧ್ಯವಿಲ್ಲ. ಹಿಂದೆ ಒಬ್ಬರಿಗೆ ಎಲ್ಲವನ್ನೂ ಕೊಟ್ಟಿದ್ದಕ್ಕೆ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ.ಆದರೆ, ಆಪರೇಷನ್ ಕಮಲಕ್ಕೆ ನನ್ನ ಸಮ್ಮತಿಯಿಲ್ಲ ಎಂದು ಹೇಳಿದ ಅವರು, ಕಳೆದ ಬಾರಿ ಆಪರೇಷನ್ ಕಮಲ ಮಾಡಿದಾಗ ಬಂದಿದ್ದ 17 ಮಂದಿಯಿಂದಲೇ ಬಿಜೆಪಿಯ ಅವಸಾನವಾಗಿದ್ದು. +ಈಗ ಮತ್ತೆ ಅಂಥ ಪರಿಸ್ಥಿತಿ ಬರುವುದು ಬೇಡ ಎಂದರು. ಕಾಂಗ್ರೆಸ್ ಸರ್ಕಾರ ಬಿದ್ದ ಸಂದರ್ಭದಲ್ಲಿ ನಾವು ಚುನಾವಣೆಗೆ ಹೋಗಬೇಕು. ಜನರ ಆಶೀರ್ವಾದ ಪಡೆದು ಗೆದ್ದು ಅಧಿಕಾರಕ್ಕೆ ಬರಬೇಕು. ಆ ಮೂಲಕ, ಆಪರೇಷನ್ ಕಮಲ ಮುಂತಾದ ಭ್ರಷ್ಟಾಚಾರ ವ್ಯವಸ್ಥೆಯನ್ನು ಕೊನೆಗಾಣಿಸಬೇಕು ಎಂದು ಅವರು ಗುಡುಗಿದರು. +ಬೆಳಗಾವಿಯಲ್ಲಿ ಸಭೆ ಆದಮೇಲೆ ರಾಷ್ಟ್ರೀಯ ಸ್ವಯಂ ಸಂಘದ ಸಭೆ ಆಗಿದೆ ಅಲ್ಲಿ ಎಲ್ಲಾ ಹೇಳಿದ್ದೆವೆ.ನಮ್ಮ ಪಕ್ಷದ ಮುಖಂಡರಿಗೆ ತಿಳಿಸುವ ಕೆಲಸ ಮಾಡಿದ್ದೇವೆ.ಯಾರು ಬಿಜೆಪಿ ಮಹಾನ್ ನಾಯಕರು ಯಾರು ಬರುವುದಿಲ್ಲ. ದಾವಣಗೆರೆ ಯಲ್ಲಿ ಗಣೇಶ್ ವೇಳೆ ಗಲಾಟೆ ಆಗಿದೆ ಅದರ ಸಂಬಂದ ಬಂದಿದ್ದೇವೆ ಎಂದು ಯತ್ನಾಳ್ ಹೇಳಿದರು. +ಈ ಹಿಂದೆ, ಬಿಜೆಪಿ ಹೈಕಮಾಂಡ್ ಬಗ್ಗೆ ಹಾಗೂ ರಾಜ್ಯದ ಬಿಜೆಪಿಯ ಅಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಆಗಾಗ ವಿವಾದಾತ್ಮಕ ಹೇಳಿಕೆ ನೀಡುತ್ತಲೇ ಬಂದಿರುವ ಅವರು, ಬಿಜೆಪಿಗೆ ಭಾರೀ ಮುಜುಗರ ತಂದಿದ್ದಾರೆ. ಕೆಲವು ಸಂದರ್ಭಗಳಲ್ಲಿ ತಮ್ಮ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಲಿ ನೋಡೋಣ ಎಂದು ಸವಾಲು ಹಾಕಿದ್ದೂ ಉಂಟು. +ಈಗಾಗಲೇ ರಾಜ್ಯ ಬಿಜೆಪಿಯಿಂದ ಯತ್ನಾಳ್ ಅವರಿಗೆ ಎಚ್ಚರಿಕೆ ಸಂದೇಶ ಬಂದಿತ್ತು. ಆದರೆ, ಈಗ ಪುನಃ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಬಿಜೆಪಿ ನಾಯಕತ್ವ ಹೇಗೆ ಸ್ವೀಕರಿಸುತ್ತದೆ, ಯಾವ ರೀತಿ ಪ್ರತಿಕ್ರಿಯೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. diff --git a/eesanje/url_46_60_1.txt b/eesanje/url_46_60_1.txt new file mode 100644 index 0000000000000000000000000000000000000000..8a354fbc73239071e12fec8f433b7aeec2ae14c1 --- /dev/null +++ b/eesanje/url_46_60_1.txt @@ -0,0 +1,5 @@ +ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು, ಬಸ್ ಟಿಕೆಟ್ ದರ ದುಪ್ಪಟ್ಟು ವಸೂಲಿ +ಬೆಂಗಳೂರು,ಜು.29-ಶಿರಾಡಿ ಘಾಟ್ ಬಳಿಯ ಎಡಕುಮೇರಿ-ಕಡವಗರಳ್ಳಿ ಮಧ್ಯೆ ಭೂ ಕುಸಿತವಾಗಿ ಬೆಂಗಳೂರು-ಮಂಗಳೂರು ರೈಲು ಸಂಚಾರ ಒಂದು ವಾರಗಳ ಕಾಲ ರದ್ದಾಗಿದ್ದು, ಖಾಸಗಿ ಬಸ್ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. +ವಿಮಾನ ಪ್ರಯಾಣ ದರವೂ ಕೂಡ ಏರಿಕೆಯಾಗಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಒಂದು ವಾರ ರೈಲುಗಳ ಸಂಚಾರ ರದ್ದಾಗಿದ್ದು, 700 ಮಂದಿಯಿಂದ ದುರಸ್ಥಿ ಕಾರ್ಯ ನಡೆಯುತ್ತಿದ್ದು, ಆ.4ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. +ರೈಲು ಸಂಚಾರ ರದ್ದಾದ ಬೆನ್ನಲ್ಲೇ ಬೆಂಗಳೂರು-ಮಂಗಳೂರು ನಡುವಿನ ಖಾಸಗಿ ಬಸ್ಗಳ ಪ್ರಯಾಣದರ ದುಪ್ಪಟ್ಟಾಗಿದೆ. ಜೊತೆಗೆ ವಿಮಾನ ಪ್ರಯಾಣದರವೂ ಕೂಡ ಏರಿಕೆಯಾಗಿದೆ. ಸಾಮಾನ್ಯವಾಗಿ ರೂ. 2,000 ದಿಂದ ರೂ. 3,000 ವರೆಗೆ ಇದ್ದ ವಿಮಾನ ಪ್ರಯಾಣ ದರ ಈಗ ಏಕಾಏಕಿ ರೂ. 10000ಕ್ಕೆ ಏರಿಕೆಯಾಗಿದೆ. +ಕಣ್ಣೂರು-ಬೆಂಗಳೂರು ಎಕ್‌್ಸಪ್ರೆಸ್, ಮಂಗಳೂರು ಸೆಂಟ್ರಲ್-ವಿಜಯಪುರ ಸ್ಪೆಷಲ್ ಎಕ್‌್ಸಪ್ರೆಸ್, ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್, ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಮುರುಡೇಶ್ವರ ಎಕ್ಸ್ ಪ್ರೆಸ್, ಬೆಂಗಳೂರು-ಕಾರವಾರ-ಪಂಚಗಂಗ ಎಕ್‌್ಸಪ್ರೆಸ್ಗಳ ಪ್ರಯಾಣವನ್ನು ಆ.4ರವರೆಗೆ ರದ್ದು ಮಾಡಲಾಗಿದೆ. \ No newline at end of file diff --git a/eesanje/url_46_60_10.txt b/eesanje/url_46_60_10.txt new file mode 100644 index 0000000000000000000000000000000000000000..4173ad83a1dbb81bd519dd6ca2fe8b20638aaa97 --- /dev/null +++ b/eesanje/url_46_60_10.txt @@ -0,0 +1,5 @@ +ಬೆಂಗಳೂರಲ್ಲಿ ಕಳಪೆ ಮಾಂಸ ವಿವಾದ : ವರದಿಗೆ ಕಾಯುತ್ತಿರುವ ಪೊಲೀಸರು +ಬೆಂಗಳೂರು,ಜು.28-ನಗರದಲ್ಲಿ ಭುಗಿಲೆದ್ದಿರುವ ಮಾಂಸ ವಿವಾದಕ್ಕೆ ಸಂಬಂಧಿಸಿದಂತೆ ಮಾಂಸ ಪೂರೈಕೆದಾರರ ವಿರುದ್ಧ ದಾಖಲಾಗಿರುವ ಆರೋಪ ಪ್ರಕರಣ ಸಂಬಂಧ ಆಹಾರ ಮತ್ತು ಸುರಕ್ಷತಾ ಇಲಾಖೆಯವರ ವರದಿ ನಿರೀಕ್ಷಿಸಲಾಗಿದ್ದು, ವರದಿ ನಂತರ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್‌ ಕೆರೆಹಳ್ಳಿ ಹಾಗೂ ಆತನ ಸಹಚರರು ಮತ್ತು ಮಾಂಸ ಪೂರೈಕೆದಾರರು ಸೇರಿದಂತೆ ಒಟ್ಟು 3 ಎಫ್‌ಐಆರ್‌ಗಳು ಕಾಟನ್‌ಪೇಟೆ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪುನೀತ್‌ ಕೆರೆಹಳ್ಳಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. +2ನೇ ಎಫ್‌ಐಆರ್‌ನಲ್ಲಿ ಈತನ ಸಹಚರರನ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಲಾಗಿದೆ.ರಾಜಸ್ಥಾನದ ಮಾಂಸ ಪೂರೈಕೆದಾರರ ವಿರುದ್ಧ ಹಾನಿಕಾರಕ ಆಹಾರ ಪೂರೈಕೆ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಆಹಾರ ಸುರಕ್ಷತಾ ಇಲಾಖೆಯವರು ವಿವಾದಿತ ಮಾಂಸದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. +ಕಳೆದೆರಡು ದಿನಗಳ ಹಿಂದೆ ರಾಜಸ್ಥಾನದಿಂದ ಸುಮಾರು 90 ಬಾಕ್‌್ಸಗಳಲ್ಲಿ 4,500 ಕೆ.ಜಿ.ಗೂ ಹೆಚ್ಚು ಮಾಂಸ ರೈಲಿನಲ್ಲಿ ನಗರದ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣಕ್ಕೆ ತರಲಾಗಿತ್ತು. ಈ ಮಾಂಸ ತಿನ್ನಲು ಯೋಗ್ಯವಲ್ಲ. ನಾಯಿ ಮಾಂಸವೆಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ನಗರದ ಕೆಲ ಮಾಂಸದ ವ್ಯಾಪಾರಿಗಳು ಹೊರರಾಜ್ಯದಿಂದ ನಗರಕ್ಕೆ ಕಳಪೆ ಗುಣಮಟ್ಟದ ಮಾಂಸ ತಂದು ವ್ಯಾಪಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_46_60_11.txt b/eesanje/url_46_60_11.txt new file mode 100644 index 0000000000000000000000000000000000000000..3eddde8aedebd908cc812e40d3ca3b11768a61dd --- /dev/null +++ b/eesanje/url_46_60_11.txt @@ -0,0 +1,5 @@ +ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ +ಬೆಂಗಳೂರು,ಜು.28-ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮನವಿ ಮಾಡಿದ್ದಾರೆ. +ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. +ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ ಕ್ಷೇತ್ರ ವ್ಯಾಪ್ತಿಯ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ. +ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_60_12.txt b/eesanje/url_46_60_12.txt new file mode 100644 index 0000000000000000000000000000000000000000..b182a90637da8e1b259cd9de206425de33548568 --- /dev/null +++ b/eesanje/url_46_60_12.txt @@ -0,0 +1,11 @@ +ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ +ಬೆಂಗಳೂರು,ಜು.28-ರಾಷ್ಟ್ರೀಯ ಯೂನಿಯನ್‌ ಬ್ಯಾಂಕ್‌ನಲ್ಲಿ ಹಣ ವರ್ಗಾವಣೆಯಾಗಿದ್ದರೆ ಅದರ ಹೊಣೆಗಾರಿಕೆಯನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬೇಕೇ ವಿನಃ ಫಲಾಯನ ಮಾಡಬಾರದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಾಗ್ದಾಳಿ ನಡೆಸಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ. ಇದರ ಹೊಣೆಗಾರಿಕೆಯನ್ನು ನಿರ್ಮಲಾ ಸೀತಾರಾಮನ್‌ ಹೊರಬೇಕೆಂಬ ಸಿದ್ದರಾಮಯ್ಯನವರ ಹೇಳಿಕೆಗೆ ಕೆಂಡ ಕಾರಿದ ನಿರ್ಮಲಾ ಸೀತಾರಾಮನ್‌, ಅವರೊಬ್ಬರೇ ಚಾಣಾಕ್ಷ ಎಂದುಕೊಂಡಿದ್ದರೆ ಸಂತೋಷ ಎಂದು ವ್ಯಂಗ್ಯವಾಡಿದರು. +ನಾನು ಹೊಣೆ ಹೊತ್ತುಕೊಳ್ಳಬೇಕು ಎಂದು ಹೇಳುವುದಾದರೆ ಸಿದ್ದರಾಮಯ್ಯನವರು ಹಾಗೆಯೇ ಹೇಳಿಕೊಳ್ಳಲಿ. ಅದಕ್ಕೆ ನನ್ನದೇನೂ ಅಭ್ಯಂತರವಿಲ್ಲ. ಆದರೆ ಅವರೊಬ್ಬರೇ ಚಾಣಾಕ್ಷ ಎಂದುಕೊಂಡಿದ್ದರೆ ನನಗೂ ಅದರ ಹತ್ತು ಪಟ್ಟು ಚಾಣಾಕ್ಷತನ ತೋರಿಸಲು ಬರುತ್ತದೆ. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನಾನು ಇದರ ಬಗ್ಗೆ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಮಹರ್ಷಿ ವಾಲೀಕಿ ನಿಗಮದಲ್ಲಿ ಹಗರಣ ನಡೆದಿಲ್ಲ ಎಂದಿದ್ದರೆ ಅವರ ಸಂಪುಟದ ಸಚಿವರು ಯಾವ ಕಾರಣಕ್ಕಾಗಿ ರಾಜೀನಾಮೆ ಕೊಟ್ಟಿದ್ದಾರೆ? ಮತ್ತೊಬ್ಬ ಶಾಸಕರು ಇ.ಡಿ. ವಿಚಾರಣೆಯನ್ನು ಏಕೆ ಎದುರಿಸುತ್ತಿದ್ದಾರೆ? ಎಂಬ ಸತ್ಯ ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. +ನಿಗಮದಲ್ಲಿ ಅಕ್ರಮ ನಡೆದಿದ್ದರೂ ಸಿದ್ದರಾಮಯ್ಯ ಒಪ್ಪಿಕೊಳ್ಳದಿರುವುದು ನನಗೆ ಆಶ್ಚರ್ಯವೇನೂ ಉಂಟುಮಾಡಿಲ್ಲ. ಏಕೆಂದರೆ ಅದು ಎಸ್‌‍ಸಿ/ಎಸ್‌‍ಟಿ ಸಮುದಾಯಕ್ಕೆ ಸೇರಿದ ಹಣ ಎಂಬ ಧೋರಣೆಯಿಂದ ಇದನ್ನು ನಿರ್ಲಕ್ಷ ಮಾಡುತ್ತಿದ್ದಾರೆ. ಈ ವರ್ಗಗಳಿಗೆ ಅನ್ಯಾಯ ಆಗಿದೆ. ಹಣದ ದರೋಡೆಗೆ ಹೊಣೆಯಾರು ಎಂದು ನಿರ್ಮಲಾ ಸೀತಾರಾಮನ್‌ ಪ್ರಶ್ನಿಸಿದರು. +ಒಂದು ವೇಳೆ ರಾಷ್ಟ್ರೀಯ ಬ್ಯಾಂಕುಗಳಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ವಿರುದ್ಧ ಖಂಡಿತವಾಗಿ ಕಾನೂನಿನ ಪ್ರಕಾರವೇ ಕ್ರಮ ಆಗುತ್ತದೆ. ಅವರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ನೆಲದ ಕಾನೂನಿಗಿಂತ ಯಾರೊಬ್ಬರೂ ದೊಡ್ಡವರಲ್ಲ ಎಂದು ಹೇಳಿದರು.ಎಸ್‌‍ಸಿ/ಎಸ್‌‍ಟಿ ಸಮುದಾಯಕ್ಕೆ ಸೇರಿದ ಹಣವನ್ನು ದರೋಡೆ ಮಾಡಿದವರು ಯಾರು?, ಇದಕ್ಕೆ ಹೊಣೆಗಾರರು ಯಾರು? ಎಂಬುದು ಗೊತ್ತಾಗಬೇಕು. ಹಗರಣ ನಡೆದು ತಿಂಗಳಾಗಿದ್ದರೂ ಸಂಬಂಧಪಟ್ಟ ಸಚಿವರಿಂದ ರಾಜೀನಾಮೆ ನೀಡಲು ವಿಳಂಬ ಮಾಡಿದಿರಿ. ಅಧಿಕಾರಿಗಳ ತಲೆಗೆ ಕಟ್ಟಿ ಈ ಪ್ರಕರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಷಡ್ಯಂತ್ರ ನಡೆದಿತ್ತು ಎಂದು ಆರೋಪಿಸಿದರು. +ಹಣ ದೋಚಿದ್ದು ನಿಮ ಇಲಾಖೆ. ಈ ಹಣವು ಎಸ್‌‍ಸಿ/ಎಸ್‌‍ಟಿ ವರ್ಗಗಳಿಗೆ ಸೇರಿದ್ದು ಎಂಬುದನ್ನು ಮೊದಲು ಸಿದ್ದರಾಮಯ್ಯನವರು ಅರಿತುಕೊಂಡು ಮಾತನಾಡಲಿ. ಇದರಲ್ಲಿ ರಾಜಕಾರಣವನ್ನು ವಿಲೀನ ಮಾಡುವುದಾದರೆ ನಮಗೂ ಮಾಡಲು ಬರುತ್ತದೆ ಎಂದು ತಿರುಗೇಟು ನೀಡಿದರು. +ಎಸ್‌‍ಸಿ/ಎಸ್‌‍ಟಿ ವರ್ಗಗಳಿಗೆ ಸೇರಿದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೀರಿ. ನಿಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಬೇಡಿ. ತಪ್ಪು ಮಾಡಿದ್ದರೆ ಒಪ್ಪಿಕೊಳ್ಳುವ ಸೌಜನ್ಯ ಇಲ್ಲವೇ ಎಂದು ಸೀತಾರಾಮನ್‌ ಕೆಂಡ ಕಾರಿದರು. +ಶನಿವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರಬೇಕಿತ್ತು. ರಾಜ್ಯದ ಸಮಸ್ಯೆಗಳ ಬಗ್ಗೆ ಅಲ್ಲಿ ಬೆಳಕು ಚೆಲ್ಲಿದ್ದರೆ ಕರ್ನಾಟಕಕ್ಕೆ ಅನುಕೂಲವಾಗುತ್ತಿತ್ತು. ಅವರು ನೀತಿ ಆಯೋಗವನ್ನು ವೇದಿಕೆಯಾಗಿ ಬಳಸಿಕೊಳ್ಳುವ ಅವಕಾಶವನ್ನು ಕಳೆದುಕೊಂಡರು ಎಂದು ಅಸಮಾಧಾನ ಹೊರಹಾಕಿದರು. +ನೀತಿ ಆಯೋಗದ ಸಭೆಗೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೈಕ್‌ ಆಫ್‌ ಮಾಡಲಾಗಿತ್ತು ಎಂಬುದು ಶುದ್ಧ ಸುಳ್ಳು. ನಾವೇಕೆ ಅವರ ಮೈಕ್‌ ಆಫ್‌ ಮಾಡಬೇಕು. ಅವರು ಸಭೆಗೆ ಬಂದಿದ್ದೇ ವಿವಾದ ಸೃಷ್ಟಿಸಲು. ಒಳಗೆ ಏನು ಹೇಳಬೇಕೆಂಬ ಅರಿವಿಲ್ಲದೆ ಹೊರಗೆ ಬಂದು ಏನೇನೋ ಸುಳ್ಳು ಆರೋಪಗಳನ್ನು ಮಾಡಿದರು. ಅವರ ಹೇಳಿಕೆಗೂ, ಮಾಡಿರುವ ಆರೋಪಕ್ಕೂ ಒಂದಕ್ಕೊಂದು ಸಂಬಂಧವಿಲ್ಲ ಎಂದು ಸೀತಾರಾಮನ್‌ ತಿಳಿಸಿದರು. \ No newline at end of file diff --git a/eesanje/url_46_60_2.txt b/eesanje/url_46_60_2.txt new file mode 100644 index 0000000000000000000000000000000000000000..4bae44237367c2abdf78f300458d30ea5b899c7f --- /dev/null +++ b/eesanje/url_46_60_2.txt @@ -0,0 +1,10 @@ +ಕೇಂದ್ರ ಸರ್ಕಾರ ಕರ್ನಾಟಕದ ಆರ್ಥಿಕ ಬೆಳವಣಿಗೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ : ಡಿ.ಕೆ.ಸುರೇಶ್‌ +ಬೆಂಗಳೂರು,ಜು.29– ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರಸರ್ಕಾರ ಹಿಂಬಾಗಿಲ ಮೂಲಕ ಮಾಡುತ್ತಿದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್‌ನಲ್ಲಿ ಗುಜರಾತ್‌, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. +ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ನಿನ್ನೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಜಿಎಸ್‌‍ಟಿ ವ್ಯವಸ್ಥೆ ಜಾರಿಗೆ ಬಂದ ಬಳಿಕ ಇಲ್ಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸಿಕೊಳ್ಳುತ್ತದೆ. ಅವರು ಕೊಟ್ಟಾಗ ನಾವು ತೆಗೆದುಕೊಳ್ಳಬೇಕು. ಇನ್ನು ಆದಾಯ ತೆರಿಗೆ ವ್ಯವಸ್ಥೆಯಲ್ಲಿ ನಾವು ಚಕಾರವನ್ನೇ ಎತ್ತುವಂತಿಲ್ಲ. ರಾಜ್ಯಸರ್ಕಾರ ಸಹಕಾರ ನೀಡುವುದಿಲ್ಲ ಎಂದು ದೂರುವ ಕೇಂದ್ರಸರ್ಕಾರ ಸದ್ದಿಲ್ಲದೆ 3.50 ಲಕ್ಷ ಕೋಟಿ ತೆರಿಗೆ ವಸೂಲಿ ಮಾಡಿಕೊಳ್ಳುವಾಗ ಸಹಕಾರದ ಬಗ್ಗೆ ಮಾತನಾಡುವುದಿಲ್ಲ ಎಂದರು. +ಕೇಂದ್ರ ಸರ್ಕಾರದ ಈ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಯಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. +ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಕಡಿಮೆ ಅನುದಾನ ಇತ್ತು ಎಂಬುದು ಹಾಸ್ಯಾಸ್ಪದ. ಆಗಿನ ಬಜೆಟ್‌ ಗಾತ್ರ ಮತ್ತು ಈಗಿನ ಬಜೆಟ್‌ ಗಾತ್ರಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಹೇಳಿದರು. +ದಕ್ಷಿಣ ಭಾರತದವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ. ಕರ್ನಾಟಕದ ಬೆಳವಣಿಗೆಗೆ ಹಿಂಬಾಗಿಲ ಮೂಲಕ ಅಡ್ಡಿಪಡಿಸುವ ಪ್ರಯತ್ನವನ್ನು ನಿರಂತರವಾಗಿ ನಡೆಸಲಾಗುತ್ತಿದೆ. +ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒತ್ತಡದಲ್ಲಿ ಕೆಲಸ ಮಾಡುವುದು ಸರಿಯಲ್ಲ. ಮೊದಲು ಆರೋಗ್ಯದ ಕಡೆ ಗಮನ ಕೊಡಲಿ. ರಾಜ್ಯ ಮತ್ತು ದೇಶಕ್ಕೆ ಅವರ ಸೇವೆ ಅಗತ್ಯವಿದೆ. ಯಾರಿಗೇ ಆಗಲಿ ಕೆಟ್ಟದಾಗಬೇಕೆಂದು ಬಯಸುವ ವಂಶ ತಮದಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಮುಡಾ ಹಗರಣ ಬಿಜೆಪಿಯ ಕೂಸು. 1400 ನಿವೇಶನಗಳ ಹಂಚಿಕೆ ಪ್ರಕರಣವನ್ನು ನಮ ಸರ್ಕಾರ ತನಿಖೆ ನಡೆಸುತ್ತಿದೆ. ಅದೇ ರೀತಿ ವಾಲೀಕಿ ನಿಗಮದ ಹಗರಣಗಳು ಗಮನಕ್ಕೆ ಬರುತ್ತಿದ್ದಂತೆ ತನಿಖೆಗೆ ಆದೇಶಿಸಲಾಗಿದೆ. +ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ರಾಜ್ಯದಲ್ಲಿ ಕ್ರಿಯಾತಕ ವಿರೋಧಪಕ್ಷವಾಗಿ ಕೆಲಸ ಮಾಡಿದೆ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗ ತಮ ಮಾತನ್ನೇ ಬದಲಾಯಿಸಿದ್ದಾರೆ ಎಂದು ಡಿ.ಕೆ.ಸುರೇಶ್‌ ಆಕ್ಷೇಪಿಸಿದರು. \ No newline at end of file diff --git a/eesanje/url_46_60_3.txt b/eesanje/url_46_60_3.txt new file mode 100644 index 0000000000000000000000000000000000000000..9c04e8c841ddcaef81bff5c9aadbaccffbfb3050 --- /dev/null +++ b/eesanje/url_46_60_3.txt @@ -0,0 +1,9 @@ +ಹೈಕಮಾಂಡ್‌ ಭೇಟಿಗೆ ನಾಳೆ ದೆಹಲಿಗೆ ಹಾರಲಿದ್ದಾರೆ ಸಿಎಂ, ಡಿಸಿಎಂ +ಬೆಂಗಳೂರು,ಜು.29-ಇತ್ತೀಚಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. +ಈ ಬಗ್ಗೆ ಖಚಿತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷ ಹಾಗೂ ಸರ್ಕಾರದ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್‌ ನಾಯಕರು ಆಹ್ವಾನ ನೀಡಿದ್ದಾರೆ. ನಾನು, ಉಪಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. +ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌‍ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತಿದೆ. ಇದರ ಜೊತೆಗೆ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್‌‍ ನೀಡಲು ಮುಂದಾಗಿದೆ. ಈ ಮೂಲಕ ಕರ್ನಾಟಕದಲ್ಲಿರುವ ಕಾಂಗ್ರೆಸ್‌‍ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಹುನ್ನಾರ ಎಂಬ ಟೀಕೆಗಳು ಕೇಳಿಬಂದಿವೆ. +ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲು ಮುಂದಾಗಿದೆ. ಒಂದು ವೇಳೆ ಜಾರಿ ನಿರ್ದೇಶನಾಲಯ ನೋಟಿಸ್‌‍ ನೀಡಿದರೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ರಣನೀತಿ ರೂಪಿಸುವ ಸಲುವಾಗಿ ಹೈಕಮಾಂಡ್‌ ಸಮಾಲೋಚನೆ ನಡೆಸಲಿದೆ ಎಂದು ತಿಳಿದುಬಂದಿದೆ. +ಈಗಾಗಲೇ ಜಾರ್ಖಂಡ್‌, ದೆಹಲಿಯ ಮುಖ್ಯಮಂತ್ರಿಗಳನ್ನು ಇ.ಡಿ. ಬಳಸಿಕೊಂಡು ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಿದೆ. ಈಗ ಕಾಂಗ್ರೆಸ್‌‍ ಆಡಳಿತವಿರುವ ಕರ್ನಾಟಕದಲ್ಲಿ ಇದೇ ತಂತ್ರವನ್ನು ನಡೆಸಲು ಮುಂದಾಗಿದೆ. +ಇದಕ್ಕೆ ತಿರುಗೇಟು ನೀಡುವ ನಿಟ್ಟಿನಲ್ಲಿ ಯಾವ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸಬೇಕು?, ಪಕ್ಷದಲ್ಲಿ ಒಗ್ಗಟ್ಟನ್ನು ಯಾವ ರೀತಿ ಕಾಯ್ದುಕೊಳ್ಳಬೇಕು? ಎಂಬುದರ ಬಗ್ಗೆಯೂ ಹೈಕಮಾಂಡ್‌ ಸೂಚನೆ ನೀಡಲಿದೆ ಎಂದು ತಿಳಿದುಬಂದಿದೆ. +ಬಿಜೆಪಿ ಮತ್ತು ಜೆಡಿಎಸ್‌‍ನ ಕೆಲ ನಾಯಕರು ಡಿಸೆಂಬರ್‌ ವೇಳೆಗೆ ಕಾಂಗ್ರೆಸ್‌‍ ಸರ್ಕಾರ ಪತನವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ತೆರೆಮರೆಯಲ್ಲಿ ಹರಿದಾಡುತ್ತಿವೆ. ಈ ಕುರಿತು ಕೆಲವು ಕಾರ್ಯಾಚರಣೆಗಳು ಸದ್ದಿಲ್ಲದೆ ನಡೆಯುತ್ತಿರುವ ಮುನ್ಸೂಚನೆಯೂ ದೊರೆತಿದೆ. +ಈ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಜೊತೆ ಚರ್ಚೆ ನಡೆಸಲಿದೆ. ಎರಡು ದಿನಗಳ ಭೇಟಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಾಳೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ. \ No newline at end of file diff --git a/eesanje/url_46_60_4.txt b/eesanje/url_46_60_4.txt new file mode 100644 index 0000000000000000000000000000000000000000..bd1ed01c7cc6ba32f30ba37db41ecfacb25f9805 --- /dev/null +++ b/eesanje/url_46_60_4.txt @@ -0,0 +1,8 @@ +ಬಿಜೆಪಿ-ಜೆಡಿಎಸ್‌‍ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜು.29-ಮುಡಾ, ವಾಲ್ಮೀಕಿ ಸೇರಿದಂತೆ ವಿವಿಧ ಪ್ರಕರಣವನ್ನು ವಿರೋಧಿಸಿ ಬಿಜೆಪಿ-ಜೆಡಿಎಸ್‌‍ ಪಕ್ಷಗಳು ನಡೆಸುವ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಈ ಹಿಂದೆ ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು. +ಜೆಡಿಎಸ್‌‍-ಬಿಜೆಪಿಗೆ ಪ್ರತಿಯಾಗಿ ಕಾಂಗ್ರೆಸ್‌‍ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ ನಾವೂ ಕೂಡ ಉತ್ತರ ನೀಡಲೇಬೇಕಿದೆ. ವಿಪಕ್ಷಗಳು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ರಾಜಕೀಯವಾಗಿಯೇ ಮಾತನಾಡುತ್ತೇವೆ ಎಂದರು. +ಮುಡಾ ನಿವೇಶನ ಹಂಚಿಕೆ ಕಾನೂನು ಪ್ರಕಾರವಾಗಿಯೇ ನಡೆದಿದೆ. ಸೈಟುಗಳ ಹಂಚಿಕೆಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂಬ ಅಭಿಪ್ರಾಯ ಬಂದಿದ್ದರಿಂದಲೇ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಲಾಗಿದೆ. ವರದಿಯ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ಅಲ್ಲಿಯವರೆಗೂ ಸಮಾಧಾನದಿಂದ ಇರಲಾಗದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಪರಮೇಶ್ವರ್‌ ವಾಗ್ದಾಳಿ ನಡೆಸಿದರು. +ಖಾಸಗಿ ಕಂಪನಿಗಳು ರಾಜ್ಯದಿಂದ ಹೊರಹೋಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹಸಚಿವರು, ಖಾಸಗಿ ಕಂಪನಿಗಳು ಅವರದ್ದೇ ಆದ ಕೆಲವು ಆಯ್ಕೆಗಳನ್ನಿಟ್ಟುಕೊಂಡು ಬಂದಿರುತ್ತಾರೆ. ಇಲ್ಲಿಗೆ ಬಂದು ನಂತರ ಅವರಿಗೆ ಬೇಕಾದ ಕಡೆ ಹೋಗುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಬಿಬಿಎಂಪಿ ಕಸದ ಲಾರಿ ಅಪಘಾತವಾಗಿ ನಿನ್ನೆ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ. ಇದು ದುರದೃಷ್ಟಕರ ಘಟನೆ. ಬಿಬಿಎಂಪಿಯ ವತಿಯಿಂದ ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. +ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಮಾಂಸದ ಮಾದರಿಯನ್ನು ಪಡೆದು ಪ್ರಯೋಗಾಲಯದಲ್ಲಿ ಪರಿಶೀಲನೆ ನಡೆಸಲಾಗಿದೆ. ಅದು ನಾಯಿ ಮಾಂಸ ಅಲ್ಲ ಎಂದು ವರದಿ ಬಂದಿದೆ. ಸುಳ್ಳು ಆರೋಪ ಮಾಡಿದ ಪುನೀತ್‌ ಕೆರಹಳ್ಳಿ ಹಾಗೂ ಸಂಗಡಿಗರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ರಾಜಸ್ಥಾನದಿಂದ ಮಾಂಸ ತರಿಸಿಕೊಂಡಿರುವವರು ತಪ್ಪು ಮಾಡಿದ್ದು ಸಾಬೀತಾದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. +ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ರಾಜ್ಯಕ್ಕೆ ನೆರವು ನೀಡದೇ ಅನ್ಯಾಯ ಮಾಡಿದೆ. ಆಂಧ್ರ ಪ್ರದೇಶಕ್ಕೆ 15 ಸಾವಿರ ಕೊಟ್ಟಿದೆ. ಇದಕ್ಕೆ ನಮ ವಿರೋಧವಿಲ್ಲ. ಆದರೆ ಅನುದಾನ ಹಂಚಿಕೆ ಸಮಾನಾಂತರವಾಗಿರಬೇಕು. ನಮ ಪಾಲಿಗಾಗಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವ ಪರಿಸ್ಥಿತಿ ಬಂದಿತ್ತು. ಭದ್ರಾ ಮೇಲ್ದಂಡೆ ಸೇರಿದಂತೆ ಯಾವುದಕ್ಕೂ ಅನುದಾನ ನೀಡದೇ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ನೀತಿ ಆಯೋಗ ಸಭೆಯನ್ನು ಬಹಿಷ್ಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸಂಬಂಧ ಚೆನ್ನಾಗಿರಬೇಕು. ಕೇಂದ್ರ ಸರ್ಕಾರ ಆಡಳಿತವನ್ನು ಸೌಹಾರ್ದಯುತವಾಗಿ ನಡೆಸಿಕೊಡಬೇಕು. ಮಮತಾಬ್ಯಾನರ್ಜಿ ನೀತಿ ಆಯೋಗದ ಸಭೆಗೆ ಹೋಗಿ ಸಭಾತ್ಯಾಗ ಮಾಡಿದ್ದಾರೆ. ನಾವು ಭಾಗವಹಿಸಿದ್ದರೂ ಅದೇ ರೀತಿ ಮಾಡಬೇಕಿತ್ತೇ? ಎಂದು ಪರಮೇಶ್ವರ್‌ ಪ್ರಶ್ನಿಸಿದರು. \ No newline at end of file diff --git a/eesanje/url_46_60_5.txt b/eesanje/url_46_60_5.txt new file mode 100644 index 0000000000000000000000000000000000000000..f4cf83a3a4a0e5d653215e47107213a21797ee43 --- /dev/null +++ b/eesanje/url_46_60_5.txt @@ -0,0 +1,9 @@ +ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ : ನಿರಂತರ ಮಳೆಗೆ ದುಸ್ತರವಾದ ಜನಜೀವನ +ಬೆಂಗಳೂರು,ಜು.29- ದಕ್ಷಿಣ ಕನ್ನಡ, ಉತ್ತರಕನ್ನಡ, ಮಲೆನಾಡು, ಉತ್ತರಕರ್ನಾಟಕ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಜನರ ಬದುಕು ದುಸ್ತರವಾಗಿದೆ. ಸೇತುವೆಗಳು ಮುಳುಗಿ, ಸಂಪರ್ಕ ಕಡಿತಗೊಂಡಿದೆ. ನೂರಾರು ಗ್ರಾಮಗಳು ನೀರಿನಿಂದ ಆವೃತವಾಗಿವೆ. ಸಾವಿರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. +ಕೃಷ್ಣ, ಮಲಪ್ರಭಾ, ಘಟಪ್ರಭಾ, ವೇದಗಂಗ, ದೂದ್‌ಗಂಗ ನದಿಗಳ ಭೋರ್ಗರೆತಕ್ಕೆ ನೂರಾರು ಗ್ರಾಮಗಳು ಮುಳುಗಡೆಯಾಗಿ ಜನಜೀವನ ಚಿಂತಾಜನಕವಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿ ಸಾವಿರಾರು ಜನ ಸಂತ್ರಸ್ತರಾಗಿದ್ದಾರೆ. +ಕೃಷ್ಣೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ ಘಟಪ್ರಭಾ ಅಬ್ಬರಕ್ಕೆ ಬೆಳಗಾವಿ, ಗೋಕಾಕ್‌, ಹಲವು ಗ್ರಾಮಗಳು ಮುಳುಗಿ ಹೋಗಿದ್ದು, ಸಾವಿರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.ಹಿಡ್ಕಲ್‌ ಡ್ಯಾಮ್‌ ಮತ್ತು ನವಿಲುತೀರ್ಥ ಡ್ಯಾಮ್‌ಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ನದಿಪಾತ್ರದ ಗ್ರಾಮಗಳು ಮತ್ತು ಹೊಲಗದ್ದೆಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. +ಕೃಷ್ಣನದಿ ಪ್ರವಾಹ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲ್ಲೂಕುಗಳನ್ನು ಪೇಚಿಗೆ ಸಿಲುಕಿಸಿದೆ. ಮುಸುಗುಪ್ಪಿ ಮತ್ತು ಅಡಿಭಟ್ಟಿ ಗ್ರಾಮಗಳು ಸಂಪೂರ್ಣ ನೀರಿನಿಂದ ಆವೃತವಾಗಿ ನೂರಾರು ಮನೆಗಳು, ಸಾವಿರಾರು ಎಕರೆ ಜಮೀನು ನೀರಿನಿಂದ ಮುಳುಗಡೆಯಾಗಿದೆ. +ಗೋಕಾಕ್‌ನಗರ ಕೊನ್ನೂರು ಪಟ್ಟಣ ಮಳೆ ನೀರಿನಿಂದ ತುಂಬಿಹೋಗಿದ್ದು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಲಪ್ರಭಾ ನದಿ ಹಾಗೂ ನವಿಲುತೀರ್ಥ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರನ್ನು ಹರಿಯಬಿಟ್ಟಿದ್ದರಿಂದ ರಾಮದುರ್ಗ ನಗರದ ಬಳಿ ತೇರ್‌ಬಜಾರ್‌ ಸೇತುವೆ ಮುಳುಗಿ ಸಂಪರ್ಕ ಕಡಿತಗೊಂಡು ಹಲವು ಕುಟುಂಬಗಳ ಸ್ಥಳಾಂತರಕ್ಕೂ ಸಮಸ್ಯೆಯಾಗಿದೆ. +ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಖಾನಪುರ ತಾಲ್ಲೂಕಿಗೆ ಭೇಟಿ ನೀಡಿ ನೆರೆ ವೀಕ್ಷಣೆ ಮಾಡಿ ಜನತೆಯ ಸಮಸ್ಯೆ ಆಲಿಸಿದ್ದಾರೆ. ಜಿಲ್ಲಾಧಿಕಾರಿಗಳು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. +ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಚಿಕ್ಕೋಡಿ ತಾಲ್ಲೂಕಿನ ಯಡಿಯೂರು ವೀರಭದ್ರೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಪಶ್ಚಿಮಘಟ್ಟದಲ್ಲಿರುವ ನದಿಗಳ ಅಬ್ಬರ ಕಡಿಮೆಯಾಗಿಲ್ಲ. +ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ಭರ್ತಿಯಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರನ್ನು ಹರಿಬಿಟ್ಟಿರುವುದರಿಂದ ಬೆಳಗೊಳದ ಎಡಮುರಿ, ಬಲಮುರಿ, ಕಾರೇಪುರ ಸಂರಕ್ಷಿತ ಅರಣ್ಯ ಪ್ರದೇಶ ಸೇರಿ ರಂಗನತಿಟ್ಟು ಪಕ್ಷಿಧಾಮ ಜಲಾವೃತವಾಗಿದೆ. ನದಿ ತೀರದ ಕೆಲವು ಗ್ರಾಮಗಳ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿದೆ. \ No newline at end of file diff --git a/eesanje/url_46_60_6.txt b/eesanje/url_46_60_6.txt new file mode 100644 index 0000000000000000000000000000000000000000..a5715cb94ae311ee671247dc90f180dc6aa1afc1 --- /dev/null +++ b/eesanje/url_46_60_6.txt @@ -0,0 +1,8 @@ +ಮೂಗಿನಲ್ಲಿ ರಕ್ತಸ್ರಾವ : ಆಸ್ಪತ್ರೆಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಡಿಸ್ಚಾರ್ಜ್ +ಬೆಂಗಳೂರು:ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. +ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು. +ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು. +ಯಾರಿಗೂ ಆತಂಕ ಬೇಡಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅವರು, ಯಾರು ಆತಂಕಕ್ಕೆ ಒಳಗಾಗುವುದು ಅವಶ್ಯಕತೆ ಇಲ್ಲ. ನಮ್ಮ ಕಾರ್ಯಕರ್ತರು ಅಭಿಮಾನಿಗಳಿಗೆ ಮನವಿ ಮಾಡೋದು ಇಷ್ಟೇ.. ನಿಮ್ಮಗಳ ಶುಭ ಹಾರೈಕೆ ಇರುವರೆಗೆ, ಭಗವಂತನ ಕೃಪೆ, ತಂದೆ ತಾಯಿ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ ಎಂದರು. +ಮೂರು ಬಾರಿ ನನಗೆ ಹೃದಯ ಕವಾಟನ್ನು ಬದಲಾವಣೆ ಮಾಡಲಾಗಿದೆ. ಬ್ಲಡ್ ತಿನ್ನರ್ ಮಾತ್ರೆ ತೆಗೆದುಕೊಳ್ಳುತ್ತೇನೆ. ರಕ್ತ ಗಟ್ಟಿ ಆಗಬಾರದು ಎನ್ನುವ ಕಾರಣಕ್ಕೆ ಈ ಮಾತ್ರೆ ತೆಗೆದುಕೊಳ್ಳುತ್ತೇನೆ. ಒತ್ತಡ ಜಾಸ್ತಿಯಾದಾಗ, ವಿಶ್ರಾಂತಿ ಇಲ್ಲದೆ ಇದ್ದಾಗ ನನಗೆ ಮೂಗಿನಿಂದ ರಕ್ತಸ್ರಾವ ಆಗುವುದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ನನಗೆ ಸಿಕ್ಕಿರುವ ಸಮಯ ಒಂದೊಂದು ಕ್ಷಣವು ಮುಖ್ಯ. ಜನರಿಗೆ ಎನಾದರೂ ಒಂದು ಸಹಾಯ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಕೊಡುಗೆ ಕೊಡಬೇಕು ಎಂದರು ಅವರು. +ಜನರು ನಂಬಿಕೆ ಇಟ್ಟು ದೆಹಲಿಗೆ ಕಳಿಸಿದ್ದಾರೆ. ಜನತೆ ವಿಶ್ವಾಸಕ್ಕೆ ಧಕ್ಕೆ ತರುವುದಿಲ್ಲ. ಇದೊಂದು ತಾತ್ಕಾಲಿಕ ಸಮಸ್ಯೆ ಅಷ್ಟೇ. ಯಾರು ಆತಂಕಪಡುವುದು ಬೇಡ. ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ಮಾಡಿದ್ದಾರೆ. 92 ವರ್ಷಗಳ ದೇವೇಗೌಡರು ನಾಳೆಯ ದಿನ ಸಂಸತ್ತಿನಲ್ಲಿ ಕಾವೇರಿ ವಿಚಾರ ಪ್ರಸ್ತಾಪ ಮಾಡಲಿದ್ದಾರೆ. ಡಿಎಂಕೆ ಮತ್ತು ಇತರೆ ಸದಸ್ಯರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆ ಸಂದರ್ಭದಲ್ಲಿ ನಾನು ಅವರ ಜೊತೆಗೆ‌ ಇರಬೇಕು ಎಂದು ಕೇಂದ್ರ ಸಚಿವರು ಹೇಳಿದರು. +ರಾತ್ರಿ ನನ್ನ ದೇಹದಲ್ಲಿನ ಏರುಪೇರು ನೋಡಿಕೊಂಡು ದೆಹಲಿ ಪ್ರವಾಸ ನಿರ್ಧಾರ ಮಾಡುತ್ತೇನೆ. ವೈದ್ಯರಿಗೂ ಈ ಬಗ್ಗೆ ಮಾಹಿತಿ ನೀಡುತ್ತೇನೆ ಎಂದ ಅವರು; ಪಾದಯಾತ್ರೆ ಮಾಡದೇ ಇರುವುದಕ್ಕೆ ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಅದಕ್ಕೆ ಇನ್ನೂ ಒಂದು ವಾರ ಸಮಯ ಇದೆ. ನಾನು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ನಮ್ಮ ಶಾಸಕರ ಜೊತೆ ಪಾದಯಾತ್ರೆ ಮಾಡುತ್ತಾರೆ. ಈ ಬಗ್ಗೆ ಕಾರ್ಯಕರ್ತರಿಗೆ ಆತಂಕ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು. ಈ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಇದ್ದರು \ No newline at end of file diff --git a/eesanje/url_46_60_7.txt b/eesanje/url_46_60_7.txt new file mode 100644 index 0000000000000000000000000000000000000000..a1d09b09eb8e3ff8fd83e02385416fa9919431ca --- /dev/null +++ b/eesanje/url_46_60_7.txt @@ -0,0 +1,11 @@ +ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ, ಕಾಂಗ್ರೆಸ್ ತಪ್ಪು ಪ್ರಚಾರ ಮಾಡುತ್ತಿದೆ : ನಿರ್ಮಲಾ +ಬೆಂಗಳೂರು,ಜು.28-ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ರೀತಿಯ ಅನ್ಯಾಯ ಮಾಡಿಲ್ಲ ಎಂದು ಪುನರುಚ್ಚರಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಾಜ್ಯಸರ್ಕಾರ ಆಧಾರ ರಹಿತ ಅಂಕಿಅಂಶಗಳನ್ನು ನೀಡಿ ತಪ್ಪು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. +ತಮ ಪತ್ರಿಕಾಗೋಷ್ಠಿಯುದ್ದಕ್ಕೂ ಹಿಂದಿನ ಯುಪಿಎ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಾಜ್ಯಕ್ಕೆ ನೀಡಿರುವ ಅಂಕಿ ಅಂಶಗಳನ್ನು ದಾಖಲೆಗಳ ಸಮೇತ ವಿವರ ನೀಡಿದ ನಿರ್ಮಲಾ ಸೀತಾರಾಮನ್‌, ರಾಜ್ಯಸರ್ಕಾರ ಅರೆಬೆಂದ ದಾಖಲೆಗಳನ್ನು ಮುಂದಿಟ್ಟುಕೊಂಡು ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. +ಕೇಂದ್ರದ ಬಜೆಟ್‌ನಲ್ಲಿ ಕರ್ನಾಟಕ ಮಾತ್ರವಲ್ಲದೆ ಯಾವುದೇ ರಾಜ್ಯಕ್ಕೂ ನಾವು ಅನ್ಯಾಯ ಮಾಡಿಲ್ಲ. ಆಯಾ ರಾಜ್ಯಗಳಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಅನುದಾನವನ್ನು ನೀಡಿದ್ದೇವೆ. ಯಾವುದೇ ರೀತಿಯ ತಾರತಮ್ಯವೆಸಗಿಲ್ಲ ಎಂದು ಸ್ಪಷ್ಟಪಡಿಸಿದರು. +ಹಿಂದಿನ ಯುಪಿಎ ಸರ್ಕಾರ ಕರ್ನಾಟಕಕ್ಕೆ ಎರಡು ಅವಧಿಯಲ್ಲಿ 81,790 ಸಾವಿರ ಕೋಟಿ ಅನುದಾನವನ್ನು ರಾಜ್ಯಕ್ಕೆ ನೀಡಿತ್ತು. ಎನ್‌ಡಿಎ ಸರ್ಕಾರ ಎರಡು ಅವಧಿಯಲ್ಲಿ ರಾಜ್ಯಕ್ಕೆ 2,95,817 ಕೋಟಿ ಅನುದಾನವನ್ನು ಹಂಚಿಕೆ ಮಾಡಿದೆ. ಯುಪಿಎ, ಎನ್‌ಡಿಎ ಗೆ ಹೋಲಿಕೆ ಮಾಡಿದರೆ ನಾವು ನೀಡಿರುವುದು ಮೂರು ಪಟ್ಟು ಹೆಚ್ಚಳವಾಗುತ್ತದೆ ಎಂದು ಸಮರ್ಥನೆ ಮಾಡಿಕೊಂಡರು. +ಯುಪಿಎ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ 66 ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿತ್ತು. 2024ರ ಒಂದೇ ವರ್ಷದಲ್ಲಿ ಎನ್‌ಡಿಎ ಸರ್ಕಾರ 45,485 ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಇದೇ ವೇಳೆ ಯುಪಿಎ 60,799 ಕೋಟಿ ನೀಡಿದರೆ, ಎನ್‌ಡಿಎ ಸರ್ಕಾರ ಕರ್ನಾಟಕಕ್ಕೆ ಒಟ್ಟು 2,36,955 ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಇದು ದಾಖಲೆಗಳಲ್ಲಿರುವ ಅಂಕಿ ಅಂಶಗಳು. ಹಾಗಾದರೆ ಕರ್ನಾಟಕಕ್ಕೆ ಅನ್ಯಾಯವಾಗುವ ಮಾತು ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು. +ರೈಲ್ವೆ ಯೋಜನೆಯಡಿ ಕರ್ನಾಟಕಕ್ಕೆ ಯುಪಿಎ ಕೊಟ್ಟಿದ್ದು ಕೇವಲ 834 ಕೋಟಿ ರೂ. ಅನುದಾನ. ಈ ಅವಧಿಯಲ್ಲೇ ನಾವು ರಾಜ್ಯಕ್ಕೆ ವಿವಿಧ ರೈಲ್ವೆ ಯೋಜನೆಗಳಿಗೆ ಒಟ್ಟು 7,559 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇವೆ. 640 ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ, 2 ವಂದೇ ಭಾರತ್‌ ರೈಲುಗಳ ಚಾಲನೆ, ತುಮಕೂರಿನಲ್ಲಿ ಮೊದಲ ಕಾರಿಡಾರ್‌ಗೆ ಪ್ರಧಾನಿ ಚಾಲನೆ, ರಾಜ್ಯದ 7 ನಗರಗಳನ್ನು ಸಾರ್ಟ್‌ ಸಿಟಿ ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. +ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 1 ಲಕ್ಷ ಕೋಟಿಗೂ ಹೆಚ್ಚು ಹಣ ಕರ್ನಾಟಕಕ್ಕೆ ಬಂದಿದೆ. ಉಡಾನ್‌ ಯೋಜನೆಯಡಿ 7 ವಿಮಾನನಿಲ್ದಾಣಗಳು ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿವೆ. ಅನುಸಂಧಾನ್‌ ರಾಷ್ಟ್ರೀಯ ಸಂಶೋಧನೆ ಯೋಜನೆಯಡಿ ಬೆಂಗಳೂರಿಗೆ ಅನುಕೂಲವಾಗಲಿದೆ. ಇದೇ ರೀತಿ ಕೃಷಿ ವಲಯದ ವಿಸ್ತರಣೆಗೆ ಬೆಂಗಳೂರಿನ ಕೊಡುಗೆ ಅಪಾರ. ಬಾಹ್ಯಾಕಾಶ ವಲಯದಲ್ಲಿ ಅನುದಾನ ಕೊಟ್ಟಿದ್ದು, ಇದರಿಂದ ಈ ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. +ಬೆಂಗಳೂರು ಸೇರಿ 14 ನಗರಗಳಿಗೆ ಅಭಿವೃದ್ಧಿ ವಿಶೇಷ ಯೋಜನೆ, ಉದ್ದೇಶಿತ ನಗರ ಯೋಜನೆಯಿಂದ ಬೆಂಗಳೂರಿಗೆ ಲಾಭವಾಗಲಿದೆ. ಇದರಡಿ 100 ಕೋಟಿ ಮಹಿಳಾ ಉದ್ಯೋಗಿಗಳಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ಸಿಗಲಿದೆ.ಬೆಂಗಳೂರು ಕೃಷಿ ವಿ.ವಿ., ರಾಯಚೂರು ಕೃಷಿ ವಿ.ವಿ.ಗಳಲ್ಲಿ ಹವಾಮಾನ ಸಂಶೋಧನಾ ಘಟಕ, ಬೆಂಗಳೂರು ಸಾರ್ಟ್‌ ಸ್ಟಾರ್ಟ್‌ಅಪ್‌ಗಳಿಗೆ ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರು. +ವಿಶೇಷವಾಗಿ ಯುವಕರಿಗೆ 3 ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಲ್ಲಿ ಮುಖ್ಯವಾಗಿ ತರಬೇತಿ, ಇಂಟರ್ನ್‌ಶಿಪ್‌ ಯೋಜನೆ, ಕೌಶಲ್ಯಾಭಿವೃದ್ಧಿ ತರಬೇತಿ ಯೋಜನೆ, ಎನ್‌ಎಚ್‌ಎನ್‌ಇ ಅಭಿವೃದ್ಧಿಗೂ ಅನುದಾನ ಕೊಡಲಾಗಿದೆ.ಬೆಂಗಳೂರಿನ ಪೀಣ್ಯದಲ್ಲಿ ರಫ್ತು ಮಾಡುವ ಸಣ್ಣ ಕೈಗಾರಿಕೆಗಳು ಇರುವುದರಿಂದ ಎನ್‌ಎಚ್‌ಎನ್‌ಇ ಗಳಿಗೆ ಸ್ವಲ್ಪಮಟ್ಟಿನ ತೊಂದರೆಯಾಗುತ್ತಿತ್ತು. ಬಜೆಟ್‌ನಲ್ಲಿ ಅದಕ್ಕೂ ಉತ್ತರ ನೀಡಿದ್ದೇವೆ ಎಂದರು. +ಪ್ರಧಾನಮಂತ್ರಿ ವಿಪ್ರ ಕೈಗಾರಿಕಾ ಪಾರ್ಕ್‌ ಕಲಬುರಗಿಯಲ್ಲಿ ಸ್ಥಾಪನೆಯಾಗಲಿದೆ. ಹೀಗೆ ಎಲ್ಲಾ ವಲಯಕ್ಕೂ ಕೇಂದ್ರ ಸರ್ಕಾರ ಅನುದಾನ ಕೊಟ್ಟಿದೆ ಎಂದು ಅವರು ಸಮರ್ಥನೆ ಮಾಡಿದರು.ಇತ್ತೀಚೆಗೆ 1 ಲಕ್ಷ ಕೋಟಿ ರೂ. ಅನುದಾನವನ್ನು ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸಂಬಂಧಿತ ಕಾಮಗಾರಿಗಳಲ್ಲಿ ವೆಚ್ಚ ಮಾಡಲಾಗಿದೆ. ರಾಷ್ಟ್ರಮಟ್ಟದಲ್ಲಿ ಸರಾಸರಿ ಹಂಚಿಕೆಯಡಿ ಕರ್ನಾಟಕಕ್ಕೆ ಹೆಚ್ಚಿನ ಪಾಲು ಸಿಕ್ಕಿದೆ. ಸರಾಸರಿ ರಾಷ್ಟ್ರೀಯ ಅನುದಾನ ಹಂಚಿಕೆ ಪ್ರಮಾಣ 5.4 ಇದೆ. ಅದರಲ್ಲಿ ಕರ್ನಾಟಕಕ್ಕೆ 6.58 ಪಾಲು ಸಿಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_60_8.txt b/eesanje/url_46_60_8.txt new file mode 100644 index 0000000000000000000000000000000000000000..10e013dcdb6cf7f8041cc21f996598793c65f69e --- /dev/null +++ b/eesanje/url_46_60_8.txt @@ -0,0 +1,8 @@ +ವಿಶೇಷ ಚೇತರನ ನಿಖರ ಮಾಹಿತಿಯ ಅಗತ್ಯವಿದೆ : ಸಿಜೆಐ ಚಂದ್ರಚೂಡ್‌ +ಬೆಂಗಳೂರು, ಜು.28– ಅಂಗವೈಕಲ್ಯವನ್ನು ನೋಡುವ ರೀತಿಯಲ್ಲಿ ಗಮನಾರ್ಹ ಬದಲಾವಣೆಯಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ. +ಬೆಂಗಳೂರಿನಲ್ಲಿ ನಡೆದ ಭಾರತ ಪ್ರವೇಶ ಶೃಂಗಸಭೆ ಮತ್ತು ರಾಜ್ಯ ಅಂಗವಿಕಲ ಆಯುಕ್ತರ ಸಮಾವೇಶದ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು, ತರಬೇತಿ, ಸಾರ್ವಜನಿಕ ಸಭೆಗಳು ಮತ್ತು ನೀತಿ ನಿರೂಪಣೆಗಳು ಬದಲಾವಣೆಯನ್ನು ತಂದಿವೆ. ನಾವು ಅಂಗವೈಕಲ್ಯವನ್ನು ಸಮೀಪಿಸುವ ವಿಧಾನದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. +ಆಡಳಿತಾತ್ಮಕ ಅಧಿಕಾರಿಗಳಿಗೆ ತರಬೇತಿ ಅಕಾಡೆಮಿಗಳು ಸಂವೇದನಾಶೀಲ ಮಾದರಿಗಳನ್ನು ಹೊಂದಿವೆ. ಕೆಲವು ರಾಜ್ಯಗಳಲ್ಲಿ ಸೇವೆ ಸುಧಾರಿಸಲು, ಜನರ ಜೀವನ ಅನುಭವಗಳೊಂದಿಗೆ ನೀತಿ-ನಿರ್ಮಾಣವನ್ನು ತಿಳಿಸಲು ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಿಜೆಐ ಹೇಳಿದರು. +ಹೈದರಾಬಾದ್‌ನ ನಲ್ಸಾರ್‌ನಲ್ಲಿರುವ ಅಂಗವಿಕಲ ಅಧ್ಯಯನ ಕೇಂದ್ರದಂತಹ ವಿಶ್ವವಿದ್ಯಾಲಯಗಳಲ್ಲಿ ಮೀಸಲಾದ ಕ್ಲಿನಿಕ್‌ಗಳು, ಸಿಎಲ್‌ಪಿಆರ್‌ನಂತಹ ನೀತಿ ನಿರೂಪಣಾ ವೇದಿಕೆಗಳು, ಕಾನೂನು ನೀತಿಗಳ ವಿಧಿ ಕೇಂದ್ರಗಳು, ಎನ್‌ಜಿಒಗಳು ಮತ್ತು ಇತರ ಅನೇಕ ಸ್ವತಂತ್ರ ಮತ್ತು ಪ್ರಾಯೋಜಿತ ಸಂಸ್ಥೆಗಳು ವಾಸ್ತವತೆಯ ತಿಳುವಳಿಕೆಯನ್ನು ಹೆಚ್ಚಿಸಿವೆ ಎಂದರು. +ಖಾಸಗಿ ಕಾರ್ಪೊರೇಟ್‌ ಸಂಸ್ಥೆಗಳು ಸಂಶೋಧನಾ ಅನುದಾನಗಳು, ಸಿಎಸ್‌‍ಆರ್‌ ಕೊಡುಗೆಗಳು ಮತ್ತು ಅಂತರ್ಗತ ನೇಮಕಾತಿ ಅಭ್ಯಾಸಗಳಿಂದ ಹಿಡಿದು ಪ್ರಯತ್ನಗಳನ್ನು ಉತ್ತೇಜಿಸುವಲ್ಲಿ ಉತ್ತಮ ಉಪಕ್ರಮವನ್ನು ತೋರಿಸಿವೆ ಎಂದು ನ್ಯಾಯಮೂರ್ತಿ ಚಂದ್ರಚೂಡ್‌ ಹೇಳಿದರು. +ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳಿಗೆ ಪ್ರವೇಶ, ಸ್ವಾಯತ್ತತೆ, ಸಮಾನ ಭಾಗವಹಿಸುವಿಕೆಗೆ ಪೂರಕ ವಾತಾವರಣ ಅಗತ್ಯವಿದೆ. ವಿಶೇಷ ಚೇತನ ವ್ಯಕ್ತಿಗಳ ನಿಖರವಾದ ಅಂಕಿಅಂಶಗಳಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ವಿಕಲಚೇತನರನ್ನು ಹೆಚ್ಚಾಗಿ ನೇಮಿಸಿಕೊಳ್ಳುತ್ತಿವೆ. ಪರಿಸ್ಥಿತಿಗಳು ನಿಧಾನವಾಗಿ ಬದಲಾಗುತ್ತಿವೆ ಎಂದು ತಿಳಿಸಿದರು. +ಸುಮಾರು 20 ಕೋಟಿ ಜನರು ಮನೋ ಸಾಮಾಜಿಕ ಅಸಾಮರ್ಥ್ಯಗಳೊಂದಿಗೆ ವಾಸಿಸುತ್ತಿದ್ದಾರೆ. ಅವರ ಅಗತ್ಯಗಳನ್ನು ಸರಿಯಾಗಿ ಪತ್ತೆಹಚ್ಚಲು ಮತ್ತು ಸರಿಹೊಂದಿಸಲು ನಾವು ಸಿದ್ಧರಿಲ್ಲ. ಈ ವಿಷಯವಾಗಿ ಪ್ರಾಮಾಣಿಕ ಮತ್ತು ಉದ್ದೇಶಪೂರ್ವಕ ಸಂವಹನ ನಡೆಯಬೇಕಿದೆ ಎಂದು ಹೇಳಿದರು. \ No newline at end of file diff --git a/eesanje/url_46_60_9.txt b/eesanje/url_46_60_9.txt new file mode 100644 index 0000000000000000000000000000000000000000..e9b7f7f31e47a5a99f455ce9bdf25ce53df0ea3a --- /dev/null +++ b/eesanje/url_46_60_9.txt @@ -0,0 +1,13 @@ +ಕೇಂದ್ರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳ ಪುನಶ್ಚೇತನಕ್ಕೆ ಕಾರ್ಯಯೋಜನೆ : ಹೆಚ್ಡಿಕೆ +ಬೆಂಗಳೂರು,ಜು.28-ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ಉದ್ದಿಮೆಗಳನ್ನು ಪುನಶ್ಚೇತನಗೊಳಿಸಲು ಕಾರ್ಯಯೋಜನೆ ರೂಪಿಸಲಾಗುತ್ತಿದ್ದು, ಬಂಡವಾಳ ಹಿಂತೆಗೆತ ಎಂಬ ನಿರ್ಧಾರವನ್ನು ಹಿಂಪಡೆದು ಮರು ಹೂಡಿಕೆ ಎಂಬ ಪರಿಸ್ಥಿತಿ ನಿರ್ಮಾಣವಾಗಬೇಕಿದೆ. ಇದಕ್ಕಾಗಿ ಸತತ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬಂಡವಾಳ ಹಿಂತೆಗೆತ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಹಳಷ್ಟು ಕಂಪನಿಗಳು ಮುಚ್ಚಿ ಹೋಗಿವೆ. ಎಚ್‌ಎಂಟಿ ಒಂದು ಕಾಲದಲ್ಲಿ ಕೈಗಡಿಯಾರದ ಮಾರುಕಟ್ಟೆಯ ಶೇ.90 ರಷ್ಟು ಪಾಲು ಹೊಂದಿತ್ತು. 1975 ರಲ್ಲಿ 279 ಕೋಟಿ ರೂ. ಲಾಭ ಗಳಿಸಿತ್ತು. ಇಂದು ಅದರ ಮಾರುಕಟ್ಟೆ ಮೌಲ್ಯ 27 ಸಾವಿರ ಕೋಟಿಯಷ್ಟಾಗಬಹುದು. ಅಷ್ಟು ವೈಭವವಾಗಿ ನಡೆಯುತ್ತಿದ್ದ ಕಾರ್ಖಾನೆಯನ್ನು ಇಂದು ಅಧೋಗತಿಗೆ ತಂದಿಟ್ಟವರ್ಯಾರು ಎಂದು ಪ್ರಶ್ನಿಸಿದರು. +1983-84 ರಲ್ಲಿ ಎಚ್‌ಎಂಟಿಯಲ್ಲಿದ್ದ 350 ತಜ್ಞ ಎಂಜಿನಿಯರ್‌ಗಳನ್ನು ಟೈಟಾನ್‌ ಮತ್ತು ಟಾಟಾ ಕಂಪನಿಯವರು ಒಂದೇ ರಾತ್ರಿ ಕರೆದುಕೊಂಡು ಹೋದರು. ಕಾರ್ಖಾನೆ ಇಂದು ಮುಚ್ಚುವ ಸ್ಥಿತಿಗೆ ಬಂದಿದೆ. ನಾನು ಒಂದು ಘಟಕಕ್ಕೆ ಭೇಟಿ ನೀಡಿದ ತಕ್ಷಣ 47 ರೂ. ಇದ್ದ ಷೇರು ಮೌಲ್ಯ 92 ರೂ.ಗೆ ಹೆಚ್ಚಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಮತ್ತೆ ಪುನಶ್ಚೇತನಗೊಳಿಸಬೇಕಿದೆ. +ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರ ವಾಣಿಜ್ಯ, ಹಣಕಾಸು ಹಾಗೂ ಇತರ ಇಲಾಖೆಗಳ ಮನವೊಲಿಕೆ ಮಾಡಿ ಬಂಡವಾಳ ಹಿಂತೆಗೆತ ಎಂಬ ನಿರ್ಧಾರವನ್ನು ಬದಲಾವಣೆ ಮಾಡಿ ಬಂಡವಾಳ ಮರು ಹೂಡಿಕೆ ಎಂಬ ತೀರ್ಮಾನ ಮಾಡಬೇಕಿದೆ. ನನಗೆ ಆರು ತಿಂಗಳ ಕಾಲ ಸಮಯಾವಕಾಶ ಕೊಡಿ. ನಷ್ಟದಲ್ಲಿರುವ ಒಂದು ಉದ್ದಿಮೆಯನ್ನು ಲಾಭದಾಯಕವನ್ನಾಗಿ ಮಾಡಿ ಕೇಂದ್ರದ ಪ್ರಮುಖರ ಮನವೊಲಿಸಿ ಮರಳಿ ಮರುಹೂಡಿಕೆಯ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು. +ರಾಜ್ಯದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ 15 ಸಾವಿರ ಜನ ಕೆಲಸ ಮಾಡುತ್ತಿದ್ದರು. ಅದು ತುಕ್ಕು ಹಿಡಿದಿದೆ. ಅದೇ ರೀತಿ ಹಲವು ಉದ್ದಿಮೆಗಳು ಮುಚ್ಚಿ ಹೋಗಿವೆ. ಇವುಗಳ ಪುನಶ್ಚೇತನಕ್ಕೆ ದಿನಕ್ಕೆ 15 ಸಭೆ ನಡೆಸುತ್ತಿದ್ದೇನೆ ಎಂದು ಹೇಳಿದರು. +ಕಾವೇರಿ ನೀರನ್ನು ರಾಜ್ಯಕ್ಕೆ ಉಳಿಸಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದಾಗ ಕೈ ಜೋಡಿಸಿ ಮನವಿ ಮಾಡಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರನ್ನೂ ಭೇಟಿ ಮಾಡಿ ಮನವಿ ಮಾಡಿದ್ದು, ಶೀಘ್ರವೇ ಕಾವೇರಿ ವಿಚಾರವಾಗಿ ಸಭೆ ಕರೆಯುವುದಾಗಿ ಭರವಸೆ ದೊರೆತಿದೆ. +ಸೋಮವಾರ ರಾಜ್ಯಸಭೆಯಲ್ಲಿ ದೇವೇಗೌಡರು ಯೋಜನೆಯ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ನಾನು ಅಲ್ಲಿ ಇರಬೇಕು. ಇಲ್ಲವಾದರೆ ತಮಿಳುನಾಡಿನ 10 ಮಂದಿ ಸಂಸದರು ಎದ್ದುನಿಂತು ಗಲಾಟೆ ಮಾಡುತ್ತಾರೆ ಎಂದು ಹೇಳಿದರು. +ರಾಜ್ಯದವರೇ ಆದ ಮಲ್ಲಿಕಾರ್ಜುನ ಖರ್ಗೆ ಎಂದಾದರೂ ಕಾವೇರಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ?, ಹಿರಿಯರಾದರೂ ದೇವೇಗೌಡರು ಮೇಜು ಹಿಡಿದುಕೊಂಡು ಎದ್ದುನಿಂತು ಮಾತನಾಡುತ್ತಾರೆ. ಕಾಂಗ್ರೆಸ್‌‍ ನಾಯಕರು ಏಕೆ ಬಾಯಿ ಬಿಡುತ್ತಿಲ್ಲ? ಎಂದರು. +ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರ ಆದೇಶ ಮಾಡಿದ್ದಕ್ಕಿಂತಲೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಈಗಾಗಲೇ ಹರಿಯಬಿಡಲಾಗಿದೆ. ನೀರು ಬಿಡುವ ನಿರ್ಧಾರ ತೆಗೆದುಕೊಂಡು ಬಳಿಕ ಸರ್ವಪಕ್ಷ ಸಭೆ ಕರೆದಿದ್ದರು. ಇಂಡಿಯಾ ರಾಜಕೀಯ ಮಿತ್ರಕೂಟದ ಪಾಲುದಾರ ಪಕ್ಷವಾಗಿರುವ ಡಿಎಂಕೆಯ ಎಂ.ಕೆ.ಸ್ಟಾಲಿನ್‌ ಅವರನ್ನು ರಾಜ್ಯದ ಮುಖ್ಯಮಂತ್ರಿಗಳು ಎಂದಾದರೂ ಭೇಟಿ ಮಾಡಿ ಪ್ರಾಮಾಣಿಕವಾದ ಚರ್ಚೆ ನಡೆಸಿದ್ದಾರೆಯೇ ಎಂದು ಪ್ರಶ್ನಿಸಿದರು. +ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ, ದೇಸಾಯಿ ಅವರ ಏಕಸದಸ್ಯ ನ್ಯಾಯಾಂಗ ಆಯೋಗ ಮಾಡಿರುವುದೇ ಹಗರಣದಿಂದ ಬಚಾವಾಗಲು. ವಿಧಾನಸಭೆಯಲ್ಲಿ 21 ಹಗರಣವನ್ನು ಪ್ರಸ್ತಾಪಿಸಿ 1,500 ಕೋಟಿ ರೂ. ಹಗರಣವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷವಾಗಿದೆ. ಈವರೆಗೂ ಹಗರಣಗಳ ವಿಚಾರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದು ಪ್ರಶ್ನಿಸಿದರು. +ಮುಡಾದಿಂದ ನೀಡಲಾದ ನಿವೇಶನಕ್ಕಾಗಿ ನಾನು 1984ರಲ್ಲೇ 37 ಸಾವಿರ ರೂ. ಪಾವತಿ ಮಾಡಿದ್ದೆ. ಆದರೆ ಈವರೆಗೂ ನನಗೆ ನಿವೇಶನ ಸಿಕ್ಕಿಲ್ಲ. ಬದಲಿ ನಿವೇಶನ ನೀಡುವಂತೆ ಹಲವು ಬಾರಿ ಪತ್ರ ಬರೆದಿದ್ದೇನೆ. ಯಾವುದೇ ಪ್ರಯೋಜನವಾಗಿಲ್ಲ. ನಿವೇಶನ ಪಡೆಯದೇ ಇದ್ದರೂ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಸಿದ್ದರಾಮಯ್ಯ ಅವರಿಗೆ ಪರಿಶಿಷ್ಟ ಜಾತಿಯ ಜನರ ಜಾಗವೇ ಬೇಕಿತ್ತೇ?, ಬೇರೆ ಎಲ್ಲೂ ಸ್ಥಳ ಸಿಗಲಿಲ್ಲವೇ?, ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಜಾಗವನ್ನು ಪರಿವರ್ತನೆ ಮಾಡಿಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಸಿದ್ದರಾಮಯ್ಯ ಅವರು ಭಾವಮೈದುನನಿಂದ ದಾನಪತ್ರ ಪಡೆದುಕೊಳ್ಳಬೇಕಿತ್ತೇ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, 62 ಕೋಟಿ ರೂ. ಪರಿಹಾರ ನೀಡಬೇಕು ಎಂದು ಕೇಳುತ್ತಿದ್ದಾರೆ. ಯಾರಪ್ಪನ ದುಡ್ಡು ಎಂದು ಕೊಡಬೇಕು? ಎಂದು ಕಿಡಿಕಾರಿದರು. \ No newline at end of file diff --git a/eesanje/url_46_61_1.txt b/eesanje/url_46_61_1.txt new file mode 100644 index 0000000000000000000000000000000000000000..9a155d61a5be64f900a1e330c79040adeeeeec29 --- /dev/null +++ b/eesanje/url_46_61_1.txt @@ -0,0 +1,6 @@ +ಶಿರೂರು ಗುಡ್ಡ ಕುಸಿತ ದುರಂತ : ಸತತ 12 ದಿನಗಳಿಂದ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಗೆ ಬ್ರೇಕ್ +ಕಾರವಾರ ಜು.26:ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು ಸತತ 12 ದಿನ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡಗಳು ವಾಪಸಾಗಿದೆ. ಘಟನೆಯಲ್ಲಿ ಆಟವಾಡುತಿದ್ದ ಪುಟ್ಟ ಕಂದಮ್ಮಗಳು, ಟೀ ಅಂಗಡಿಯಲ್ಲಿ ಚಹ ಸವಿಯುತಿದ್ದ ಟ್ರಕ್‌ ಚಾಲಕರು, ಗುಡ್ಡದ ಬದಿಯಲ್ಲಿ ವಿಶ್ರಾಂತಿ ಪಡೆಯುತಿದ್ದ ಚಾಲಕ, ಮನೆಯಲ್ಲಿ ಅಡುಗೆ ಮಾಡುತಿದ್ದ ಮಹಿಳೆ ಸೇರಿ 11 ಜನ ಭೂ ಕುಸಿತ ದುರಂತದಲ್ಲಿ ಕಾಣೆಯಾಗಿದ್ದರು. +ಸತತ ಕಾರ್ಯಾಚರಣೆ ನಂತರ ಗಂಗಾವಳಿ ನದಿ ತೀರದ ಭಾಗದಲ್ಲಿ ಎಂಟು ಶವಗಳು ದೊರೆತಿತ್ತು ಆದರೆ, ಕೇರಳ ಮೂಲದ ಅರ್ಜುನ್‌, ಶಿರೂರಿನ ಲೋಕೇಶ್‌ ನಾಯ್ಕ, ಜಗನ್ನಾಥ ನಾಯ್ಕ ರವರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು.ಟೀ ಅಂಗಡಿ ಬಳಿ ಮಣ್ಣು ತೆರವು ಮಾಡಿದರೂ ಯಾವ ಗುರುತು ಪತ್ತೆಯಾಗಲೇ ಇಲ್ಲ. ಹೀಗಾಗಿ ಸೇನಾಪಡೆ , ಖಾಸಗಿ ಏಜೆನ್ಸಿ ಸಹಾಯ ಪಡೆದ ಜಿಲ್ಲಾಡಳಿತ. ತಂತ್ರಜ್ಞಾನ ಸಹಾಯದಿಂದ ಘಟನಾ ಸ್ಥಳದ ಸುತ್ತಮುತ್ತ ಶೋಧ ಕಾರ್ಯ ನಡೆಸಿದೆ. +ಇನ್ನು ದ್ರೋಣ್‌ ಹಾಗೂ ಥರ್ಮಲ್‌ ಸ್ಕ್ಯಾನ್‌ ಕಾರ್ಯಾಚರಣೆ ನಡೆಸಿದ ಖಾಸಗಿ ಕಂಪನಿಯ ನಿವೃತ್ತ ಮೇಜರ್‌ ಜನರಲ್‌ ಇಂದ್ರಬಾಲನ್‌ ಹೇಳುವಂತೆ ನದಿಯಲ್ಲಿ ರೆಲಿಂಗ್‌‍, ಟವರ್, ಲಾರಿ, ಟ್ಯಾಂಕರ್‌ ಕ್ಯಾಬಿನ್‌ ಸಿಗಬೇಕಿತ್ತು. ಮೂರು ಸ್ಪಾಟ್‌ಗಳು ಸಿಕ್ಕಿದ್ದು, ಅದರ ಪೈಕಿ ಅರ್ಜುನ್‌ ಲಾರಿ ಯಾವುದು ಎಂದು ಸಿಗಬೇಕಿದೆ . 60 ಮೀ. ಉದ್ದ ಹಾಗೂ 20 ಮೀ. ಆಳದಲ್ಲಿ ಒಂದು ಮೆಟಲ್‌ ಡಿಟೆಕ್ಟ್‌ ಆಗಿದ್ದು, 400 ಲಾಗ್ಸ್ ಟ್ರಕ್‌ನಲ್ಲಿದ್ದರಿಂದ ಹೆಚ್ಚು ಆಳದಲ್ಲಿ ಇರುವ ಸಾಧ್ಯತೆಗಳಿತ್ತು. 500 ಮೀ. ದೂರದಲ್ಲಿ ಮರದ ದಿಮ್ಮಿಗಳು ಸಿಕ್ಕಿದ್ದು, ಲಾರಿಯಿಂದ ಕೆಲವು ದಿಮ್ಮಿಗಳು ದೂರಾಗಿವೆ. +ಎರಡು ಸ್ಪಾಟ್‌ಗಳ ಪೈಕಿ ಲಾರಿ ಯಾವುದು ಎಂದು ನೋಡಲಾಗುತ್ತಿದೆ. ತುಂಬಾ ಆಳದಲ್ಲಿರುವ ಸ್ಪಾಟ್‌ ಲಾರಿಯಾಗಿರಬಹುದು ಎಂದು ಊಹೆ ಮಾಡಲಾಗಿದೆ. ಟ್ರಕ್‌ನ ಉಳಿದ ಭಾಗಗಳ ಜತೆಯೇ ಕ್ಯಾಬಿನ್‌ ಕೂಡ ಇದೆ. ಅದರೊಳಗೆ ಅರ್ಜುನ್‌ ಇರುವ ಸಾಧ್ಯತೆಯಿದೆ. ನದಿಯ ನೀರಿನ ಹರಿವಿನ ವೇಗ 8 ನಾಟ್ಸ್ ಇದೆ. +ಡೀಪ್‌ ಡೈವರ್ಸ್‌ಗಳಿಗೆ ಅಲ್ಲಿ ಹೋಗಿ ಪತ್ತೆ ಮಾಡುವುದು ಭಾರಿ ಕಷ್ಟ ಆಗುತ್ತದೆ. ಹಾಗಾಗಿ ನದಿಯ ನೀರಿನ ಹರಿವು ಕಡಿಮೆ ಆಗುವವರೆಗೂ ಡೀಪ್‌ ಡೈವರ್ಸ್‌ ಕಾರ್ಯಾಚರಣೆ ಮಾಡುವುದು ಕಷ್ಟವಾಗಿದೆ. ಇನ್ನು ಮಳೆಯೂ ಕೂಡ ಹೆಚ್ಚುಇರುವುದರಿಂದ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಆದಷ್ಟು ಬೇಗ ರೆಸ್ಕ್ಯೂ ಕಾರ್ಯಾಚರಣೆ ನಡೆಸಲಾಗುವುದು ಎಂದು ತಜ್ಞರು ತಿಳಿಸಿದ್ದಾರೆ.ಇಂದು ಸೇನೆ ಕಾರ್ಯಾಚರನೆ ಮುಗಿಸಿದ್ದು,ಸ್ಥಳಕ್ಕೆ ಕೇರಳಾದಿಂದ ಕೆಲ ಶಾಸಕರು ಬೇಟಿ ನೀಡಿದ್ದಾರೆ. \ No newline at end of file diff --git a/eesanje/url_46_61_10.txt b/eesanje/url_46_61_10.txt new file mode 100644 index 0000000000000000000000000000000000000000..1374331084d505b512ae134de457118216f9e82d --- /dev/null +++ b/eesanje/url_46_61_10.txt @@ -0,0 +1,7 @@ +ಮತ್ತೆ ರಾಮನಗರ ಮರುನಾಮಕರಣ ಮಾಡುವುದು ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ : ಡಿಕೆಶಿ +ಬೆಂಗಳೂರು,ಜು.27– ರಾಮನಗರ ನಮ ಜಿಲ್ಲೆ. ಅಲ್ಲಿನ ಜನರ ಬದುಕು ಹಾಗೂ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಿ ನಾವು ಮರುನಾಮಕರಣದ ಮೂಲಕ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ಅಧಿಕಾರಕ್ಕೆ ಬಂದು ಹೆಸರು ಬದಲಾವಣೆ ಮಾಡುವುದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದ್ದಾರೆ. +ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಯಾವಾಗಲೂ ನನ್ನನ್ನು ಸರ್ವನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ. ಮಲಗಿ ಎದ್ದ ತಕ್ಷಣ ಅವರಿಗೆ ನಮ ವಿಚಾರ ನೆನಪಿಗೆ ಬರುತ್ತದೆ. ಅವರ ಆಚಾರ, ವಿಚಾರ, ಹೆಜ್ಜೆ, ಚಿಂತನೆ ಎಲ್ಲವೂ ನಮಗೆ ಗೊತ್ತಿದೆ ಎಂದರು. +ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮರುನಾಮಕರಣ ಮಾಡಲಾಗಿದೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರೆಯಲಿದೆ. ನಾವು ರಾಮನಗರವನ್ನು ಯಥಾಸ್ಥಿತಿಯಲ್ಲಿ ಉಳಿಸಿದ್ದೇವೆ ಎಂದು ಹೇಳಿದರು. +ಹೊರಗಿನಿಂದ ಬಂದು ಅಕ್ರಮ ಮಾಡಲು ರಾಜಕೀಯದಲ್ಲಿ ಅವಕಾಶವಿದೆ. ಆದರೆ ರಾಮನಗರ ನಮದು. ಈ ಹಿಂದೆ ಕೆಂಗಲ್‌ ಹನುಮಂತಯ್ಯ ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಿದರು. ರಾಮಕೃಷ್ಣ ಹೆಗಡೆ, ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಕೂಡ ಬೆಂಗಳೂರು ಜಿಲ್ಲೆಯಿಂದಲೇ ಆಯ್ಕೆಯಾಗಿ ಅಧಿಕಾರ ಅನುಭವಿಸಿದರು. +ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಎಲ್ಲಾ ತಾಲ್ಲೂಕುಗಳ ಜನರು ನಮವರು. ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಗೆ ಪೂರಕವಾಗಿ ನಿರ್ಧಾರ ತೆಗೆದುಕೊಂಡಿದ್ದೇವೆ. ಬೆಂಗಳೂರಿಗೆ ವಿಶ್ವಮಟ್ಟದ ಖ್ಯಾತಿಯಿದೆ. ಆ ಹೆಸರನ್ನು ನಾವು ಏಕೆ ಬಿಟ್ಟುಕೊಡಬೇಕು ಎಂದು ಪ್ರಶ್ನಿಸಿದರು. +2028 ಕ್ಕೆ ಮರಳಿ ಅಧಿಕಾರಕ್ಕೆ ಬಂದು ರಾಮನಗರ ಹೆಸರನ್ನು ಮರುನಾಮಕರಣ ಮಾಡುವುದಾಗಿ ಕುಮಾರಸ್ವಾಮಿ ಹೇಳಿರುವ ನೀಡಿಕೆಗೆ ಪ್ರತಿಕ್ರಯಿಸಿದ ಡಿ.ಕೆ.ಶಿವಕುಮಾರ್‌, ಅದು ಅವರ ಹಣೆಬರಹದಲ್ಲಿ ಬರೆದಿಲ್ಲ. 2028ಕ್ಕೂ ಕಾಂಗ್ರೆಸ್‌‍ ಪಕ್ಷವೇ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_61_11.txt b/eesanje/url_46_61_11.txt new file mode 100644 index 0000000000000000000000000000000000000000..46a091d5de1bac0995dd69c3d482d3f05442827f --- /dev/null +++ b/eesanje/url_46_61_11.txt @@ -0,0 +1,9 @@ +ದೋಷಾರೋಪಣಾ ಪಟ್ಟಿ ಸಲ್ಲಿಕೆ ಬಳಿಕ ಜಾಮೀನಿಗೆ ಅರ್ಜಿ : ದರ್ಶನ್‌ ಪರ ವಕೀಲ +ಬೆಂಗಳೂರು,ಜು.27-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಳಿಕ ನಟ ದರ್ಶನ್‌ ಹಾಗೂ ಇತರರಿಗೆ ಜಾಮೀನು ಅರ್ಜಿ ಸಲ್ಲಿಸುವುದಾಗಿ ವಕೀಲ ರಂಗನಾಥರೆಡ್ಡಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೊಲೀಸರ ತನಿಖೆಯ ಬಗ್ಗೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. +ಜಾಮೀನು ಅರ್ಜಿ ಸಲ್ಲಿಕೆ ವಿಳಂಬವಾಗಬೇಕು ಎಂಬ ಕಾರಣಕ್ಕಾಗಿಯೇ ಅಭಿಯೋಜನೆ ಅಧಿಕಾರಿಗಳು ತನಿಖೆಯಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.ಅಭಿಯೋಜನೆಯಲ್ಲಿ ಉದ್ದೇಶಪೂರ್ವಕವಾಗಿಯೇ ತನಿಖಾ ವರದಿ ಸಲ್ಲಿಕೆಯನ್ನು ವಿಳಂಬ ಮಾಡಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ನ್ಯಾಯಾಲಯದ ವಿಚಾರಣೆ ವೇಳೆ ತನಿಖೆಗೆ ಹಿನ್ನಡೆಯುಂಟು ಮಾಡುತ್ತದೆ ಎಂದಿದ್ದಾರೆ. +ರಿಮ್ಯಾಂಡ್‌ ಅರ್ಜಿಯಲ್ಲಿ ತನಿಖೆಯ ಸೂಕ್ತ ವಿವರಗಳನ್ನು ದಾಖಲಿಸದೆ ಜಾಮೀನು ಅರ್ಜಿ ಸಲ್ಲಿಕೆಗೆ ವಿಳಂಬವಾಗುವಂತೆ ಮಾಡಲಾಗುತ್ತಿದೆ. ಪೊಲೀಸ್‌‍ ಮ್ಯಾನ್ಯುಯೆಲ್‌ನಲ್ಲಿ 90 ದಿನಗಳಲ್ಲಿ ಅಂತಿಮ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲೇಬೇಕು. ಅನಂತರ ನಾವು ದರ್ಶನ್‌ ಹಾಗೂ ಇತರರ ಪರವಾಗಿ ಜಾಮೀನು ಅರ್ಜಿಯನ್ನು ಸಲ್ಲಿಸುತ್ತೇವೆ ಎಂದರು. +ಪೊಲೀಸರು ರಿಮ್ಯಾಂಡ್‌ ಅರ್ಜಿಯಲ್ಲಿ ಸಮರ್ಪಕ ಮಾಹಿತಿಯನ್ನು ನೀಡುತ್ತಿಲ್ಲ. ಯಾವ ಆರೋಪಿಯಿಂದ ಯಾವ ರೀತಿ ಹೇಳಿಕೆ ಪಡೆಯಲಾಗಿದೆ. ಯಾವ ವ್ಯಕ್ತಿ ಯಾವ ರೀತಿಯ ಸಾಕ್ಷಿಯಾಗಿದ್ದಾನೆ. ಪಂಚರ ಸಾಕ್ಷಿಯೇ, ಮಹಜರು ಸಾಕ್ಷಿಯೇ, ಪ್ರತ್ಯಕ್ಷ ಸಾಕ್ಷಿಯೇ, ಸಾಂದರ್ಭಿಕ ಸಾಕ್ಷಿಯೇ ಎಂಬ ವಿವರಣೆಗಳನ್ನು ನೀಡುತ್ತಿಲ್ಲ. ಇದರಿಂದ ಜಾಮೀನು ಅರ್ಜಿ ಸಲ್ಲಿಸಲು ತಡೆ ನೀಡುವ ಪ್ರಯತ್ನ ಆಗಿರಬಹುದು ಎಂದು ದೂರಿದರು. +ಯಾವುದೇ ಪ್ರಕರಣದಲ್ಲಾದರೂ ರಿಮ್ಯಾಂಡ್‌ ಅರ್ಜಿಯಲ್ಲಿ ಸಂಪೂರ್ಣ ವಿವರವನ್ನು ದಾಖಲಿಸುವುದು ಪೊಲೀಸರ ಕರ್ತವ್ಯ. ಆದರೆ ಈ ಪ್ರಕರಣದಲ್ಲಿ ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಜಾಮೀನು ಅರ್ಜಿ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು. +ಈ ಪ್ರಕರಣ ಸಾಂದರ್ಭಿಕ ಸಾಕ್ಷ್ಯಗಳ ಮೇಲೆ ಅವಲಂಬಿತವಾಗಿದೆ. ಅಪಹರಣ, ಹಲ್ಲೆ ಮತ್ತು ನರಹತ್ಯೆ, ಮೂರನೆಯದಾಗಿ ಸಾಕ್ಷ್ಯ ನಾಶ ಆರೋಪಗಳಿವೆ. ಮೃತದೇಹವನ್ನು ವಿಲೇವಾರಿ ಮಾಡಿದ ಕೆಲ ಆರೋಪಿಗಳು ಠಾಣೆಗೆ ಹೋಗಿ ಶರಣಾಗಲು ಯತ್ನಿಸಿದ್ದರು ಎಂಬುದು ಪೊಲೀಸರ ಆರೋಪವಾಗಿದೆ.ತನಿಖೆಯಲ್ಲಿ ಎಲ್ಲಾ ಖಚಿತ ಮಾಹಿತಿಗಳನ್ನು ದಾಖಲಿಸಬೇಕಿತ್ತು. ಸೆಲಬ್ರೆಟಿ ಇದ್ದಾರೆ ಎಂಬ ಕಾರಣಕ್ಕಾಗಿ ಪಾರದರ್ಶಕ ದಾರಿಯನ್ನು ತಪ್ಪಿಸಲಾಗುತ್ತಿದೆ ಎಂದು ದೂರಿದರು. +ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿ ಸಾಕ್ಷಿ ಇದೆ ಎಂದು ಒಂದು ಬಾರಿ ಹೇಳಿದ್ದಾರೆ. ಮತ್ತೊಂದು ಬಾರಿ ವಿಡಿಯೋ ಸಾಕ್ಷ್ಯ ಇದೆ ಎಂದಿದ್ದಾರೆ. ನಾಲ್ಕನೇ ಬಾರಿ ರಿಮ್ಯಾಂಡ್‌ ಅರ್ಜಿಯಲ್ಲಿ ವಿಡಿಯೋ ಇರುವ ಬಗ್ಗೆ ಮಾಹಿತಿಯನ್ನೇ ನೀಡಿಲ್ಲ. ಈ ರೀತಿ ನಾನಾ ರೀತಿಯ ಗೊಂದಲಗಳು ಕಂಡುಬರುತ್ತಿದೆ ಎಂದು ಹೇಳಿದ್ದಾರೆ. +ಸೆಲೆಬ್ರೆಟಿಗಳು ಇದ್ದಾರೆ ಎಂಬ ಕಾರಣಕ್ಕಾಗಿ ಪ್ರಕರಣವನ್ನು ಬಲಪಡಿಸುವ ತಪ್ಪು ಪ್ರಯತ್ನವನ್ನು ಅಭಿಯೋಜನೆ ನಡೆಸುತ್ತಿದೆ. ಇದು ಸರಿಯಲ್ಲ. ಇದಕ್ಕಿಂತಲೂ ಗಂಭೀರವಾದ ಪ್ರಕರಣಗಳಲ್ಲಿ ಜಾಮೀನು ದೊರೆತ ಸಾಕಷ್ಟು ಉದಾಹರಣೆಗಳಿವೆ ಎಂದು ಹೇಳಿದರು. \ No newline at end of file diff --git a/eesanje/url_46_61_12.txt b/eesanje/url_46_61_12.txt new file mode 100644 index 0000000000000000000000000000000000000000..d7669e52f7dcb1e6eaeffc8ae3bd523f1e91529b --- /dev/null +++ b/eesanje/url_46_61_12.txt @@ -0,0 +1,7 @@ +ಕೇಂದ್ರ ಬಜೆಟ್‌ನಲ್ಲಿ /STಗೆ ಕೇವಲ 65 ಸಾವಿರ ಕೋಟಿ ರೂ. ಮೀಸಲು : ಸಿದ್ದರಾಮಯ್ಯ ಅಸಮಾಧಾನ +ಬೆಂಗಳೂರು,ಜು.27-ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಕೇವಲ 65 ಸಾವಿರ ಕೋಟಿ ರೂ.ಗಳನ್ನು ಮಾತ್ರ ಮೀಸಲಿಡಲಾಗಿದೆ. ಈ ಬಗ್ಗೆ ಯಾವ ಸಂಘಟನೆಗಳೂ ಪ್ರಶ್ನೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಮೈಸೂರು ಪ್ರವಾಸದಲ್ಲಿರುವ ಸಿಎಂ ಅವರ ನಿವಾಸದ ಬಳಿ ನೂರಾರು ಜನ ಆಗಮಿಸಿ ಅಹವಾಲು ಸಲ್ಲಿಸಿದರು. ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ, ವಿವಿಧ ಯೋಜನೆಗಳ ಕುರಿತು ಗಮನ ಸೆಳೆದರು. +ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಕೇಂದ್ರಸರ್ಕಾರ 48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ನೀಡಿರುವುದು ಕೇವಲ 65 ಸಾವಿರ ಕೋಟಿ ರೂ. ಮಾತ್ರ. ಅದೇ ಕರ್ನಾಟಕದಲ್ಲಿ 3.70 ಲಕ್ಷ ಕೋಟಿ ರೂ. ಬಜೆಟ್‌ ಗಾತ್ರದಲ್ಲಿ ನಮ ಸರ್ಕಾರ ಈ ಸಮುದಾಯದ ಅಭಿವೃದ್ಧಿಗೆ 39 ಸಾವಿರ ಕೋಟಿ ರೂ.ಗಳನ್ನು ಒದಗಿಸಿದೆ ಎಂದು ಹೇಳಿದರು. +ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿಡಲು ಪೂರಕವಾಗಿ ಮಸೂದೆ ರಚಿಸಲಾಗಿದೆ. ಅದಕ್ಕೂ ಮೊದಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.ಕ್ಕಿಂತಲೂ ಕಡಿಮೆ ಹಣ ದೊರೆಯುತ್ತಿತ್ತು. ಕಾಯಿದೆ ರಚನೆ ಬಳಿಕ 39 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ದೊರೆಯುತ್ತಿದೆ ಎಂದು ವಿವರಿಸಿದರು. +ಪ್ರತಿಯೊಂದು ರಾಜ್ಯದಲ್ಲೂ ರಾಜ್ಯಸರ್ಕಾರವನ್ನು ಪ್ರಶ್ನೆ ಮಾಡಲಾಗುತ್ತದೆ. ಕೇಂದ್ರಸರ್ಕಾರವನ್ನು ಏಕೆ ಕೇಳುತ್ತಿಲ್ಲ? 48 ಲಕ್ಷ ಕೋಟಿ ರೂ.ಗಳ ಗಾತ್ರದ ಬಜೆಟ್‌ಗೆ ಪೂರಕವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿಲ್ಲ. ಈ ಕುರಿತು ಯಾರಾದರೂ ಗಮನ ಹರಿಸಿದ್ದಾರೆಯೇ ಎಂದು ಪ್ರಶ್ನಿಸಿದರು. +ಇದೇ ಸಂದರ್ಭದಲ್ಲಿ ನೂರಾರು ಮಂದಿ ಮುಖ್ಯಮಂತ್ರಿಯವರ ನಿವಾಸದ ಬಳಿ ಬಂದು ಅಹವಾಲು ಸಲ್ಲಿಸಿದರು. ಅದರಲ್ಲಿ ಬಹಳಷ್ಟು ಮಂದಿ ನಿವೇಶನ, ಆರೋಗ್ಯ ಸಮಸ್ಯೆ ಸೇರಿದಂತೆ ವಿವಿಧ ತೊಂದರೆಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಿಕೊಂಡರು.ಎಲ್ಲರ ಬಳಿಯೂ ಸಾವಧಾನದಿಂದ ಅರ್ಜಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಅದಕ್ಕೆ ಪರಿಹಾರ ದೊರಕಿಸುವ ಭರವಸೆ ನೀಡಿದರು. \ No newline at end of file diff --git a/eesanje/url_46_61_2.txt b/eesanje/url_46_61_2.txt new file mode 100644 index 0000000000000000000000000000000000000000..905f1692f1ed47a253d9fd39b53c2f062f2b62b5 --- /dev/null +++ b/eesanje/url_46_61_2.txt @@ -0,0 +1,13 @@ +ಶೀಘ್ರದಲ್ಲೇ ದೇವರು ನನಗೆ ಸಿಎಂ ಆಗುವ ಅವಕಾಶ ಕೊಡಲಿದ್ದಾನೆ : ಹೆಚ್ಡಿಕೆ +ಮೈಸೂರು,ಜು.28-ಶೀಘ್ರವಾಗಿಯೇ ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ದೇವರು ಕೊಡಲಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್‌‍ ನಾಯಕರು ಅವರಪ್ಪರಾಣೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಆದರೆ ಅದೇ ಅವಧಿಯಲ್ಲೇ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ದೊರೆಯಿತು ಎಂದು ಹೇಳಿದರು. +ಈಗ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಿ ರಾಮನಗರದ ಹೆಸರು ಬದಲಾವಣೆ ಮಾಡುವ ಅವಕಾಶ ಹಣೆಯಲ್ಲಿ ಬರೆದಿಲ್ಲ ಎಂದು ಹೇಳಿದ್ದಾರೆ. ಅವರು ಯಾವ ರೀತಿ ಪದಗಳನ್ನು ಬಳಕೆ ಮಾಡುತ್ತಾರೋ, ಆದಷ್ಟು ಬೇಗ ಅವು ಜಾರಿಗೆ ಬರುತ್ತವೆ. ತಮಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶ ಶೀಘ್ರ ಬರಲಿದೆ ಎಂದಿದ್ದಾರೆ.ತಮಗೆ ಜನರ ಮತ್ತು ದೇವರ ಆಶೀರ್ವಾದ ಸಾಕು. ಡಿ.ಕೆ.ಶಿವಕುಮಾರ್‌ ಹಾಗೂ ಇತರರ ಆಶೀರ್ವಾದ ಬೇಡ ಎಂದು ಹೇಳಿದರು. +ಅನಂತರ ಮೈಸೂರಿನ ಪ್ರೆಸ್‌‍ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರದ ನಡವಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಕುಮಾರಸ್ವಾಮಿಯವರು ಉದ್ಯೋಗ ಅವಕಾಶ, ಕೌಶಲ್ಯಾಭಿವೃದ್ಧಿ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದು ಯಾವುದೋ ಒಂದು ರಾಜ್ಯಕ್ಕೆ ಸೀಮಿತವಲ್ಲ. ಕರ್ನಾಟಕಕ್ಕೂ ಲಾಭವಾಗಲಿದೆ ಎಂದರು. +ಕೌಶಲ್ಯಾಭಿವೃದ್ಧಿಗೆ 2015 ರಲ್ಲಿ 1.50 ಲಕ್ಷ ಕೋಟಿ ನೀಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 7.50 ಲಕ್ಷ ಕೋಟಿ ನೀಡಲಾಗಿದೆ. ಕಳೆದ 8 ವರ್ಷಗಳಲ್ಲಿ ಅದು ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಸುಮಾರು 11,000 ಖಾಸಗಿ ಕಂಪನಿಗಳು ಉಪಯೋಗ ಮಾಡಿಕೊಂಡಿವೆ. ಆ ಕಂಪನಿಗಳ ಮೂಲಕ ಕೌಶಲ್ಯಾಭಿವೃದ್ಧಿ ತರಬೇತಿ ಕೊಡಿಸಲಾಗಿದೆ. ಪ್ರಸಕ್ತ ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ 2 ಲಕ್ಷ ಕೋಟಿ ನೀಡಲಾಗಿದೆ. ಕೃಷಿ ಹಾಗೂ ಅದರ ಚಟುವಟಿಕೆಗಳಿಗೆ 1.50 ಲಕ್ಷ ಕೋಟಿ ಒದಗಿಸಲಾಗಿದೆ.ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ಇದು ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು. +ರಾಜ್ಯಕ್ಕೆ ಕೇಂದ್ರದಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಕರ್ನಾಟಕ ಸರ್ಕಾರ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ದೆಹಲಿಗೆ ಬಂದು ಆಯಾ ಇಲಾಖೆಗಳ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಿ, ಚರ್ಚಿಸಿ ಒತ್ತಡ ಹೇರಿದ್ದಾರೆ. +ಆದರೆ ಕರ್ನಾಟಕ ಸರ್ಕಾರ ಕರ್ನಾಟಕ ಭವನದಲ್ಲಿ ಸಂಸದರ ಸಭೆ ಕರೆದು ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳ ಬುಕ್‌ಲೆಟ್‌ ನೀಡಿ ಇದನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿ ಎಂದು ಮನವಿ ಮಾಡಿಕೊಳ್ಳುತ್ತಾರೆ. ಸಂಸತ್‌ನಲ್ಲಿ ಪ್ರಸ್ತಾಪಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮುಖ್ಯಮಂತ್ರಿಯಾಗಿ ಹಾಗೂ ಕೇಂದ್ರ ಸಚಿವರಾಗಿ ನನಗೂ ಸ್ವಲ್ಪ ಅನುಭವವಿದೆ. ರಾಜ್ಯಸರ್ಕಾರದ ನಡವಳಿಕೆ ಸರಿಯಿಲ್ಲ. ಕೇಂದ್ರಸರ್ಕಾರವನ್ನು ಟೀಕೆ ಮಾಡಿ ತಿರುಗುತ್ತಿದ್ದರೆ ಯಾವುದೇ ಕೆಲಸಗಳಾಗುವುದಿಲ್ಲ ಎಂದರು. +ಭದ್ರಾ ಮೇಲ್ದಂಡೆಗೆ 5,300 ಕೋಟಿ, ಬೆಂಗಳೂರು ಹೊರವಲಯದ ಪೆರಿಫೆರಲ್‌ ರಿಂಗ್‌ ರಸ್ತೆಗೆ 3 ಸಾವಿರ ಕೋಟಿ ಬಾಕಿ ಇದೆ ಎಂದು ಕಾಂಗ್ರೆಸ್‌‍ ಹೇಳುತ್ತಿದೆ. ಪೆರಿಫೆರಲ್‌ ರಿಂಗ್‌ ರಸ್ತೆ 2008 ರಲ್ಲೇ ನಾನೇ ಪ್ರಸ್ತಾವನೆ ಮಾಡಿದ್ದೆ. ಆಗ 3 ಸಾವಿರ ಕೋಟಿ ರೂ. ಒಟ್ಟು ವೆಚ್ಚವಿತ್ತು. ಈಗ ಅದು ಹಲವು ಪಟ್ಟು ಹೆಚ್ಚಾಗಿದೆ. ಈವರೆಗೂ ರಾಜ್ಯಸರ್ಕಾರ ಇದನ್ನು ಏಕೆ ಆದ್ಯತೆ ಮೇರೆಗೆ ಪರಿಗಣಿಸಲಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. +ಕೇಂದ್ರ ಸರ್ಕಾರ ಪೆರಿಫೆರಲ್‌ ರಿಂಗ್‌ ರಸ್ತೆಗೆ 3 ಸಾವಿರ ಕೋಟಿ ರೂ. ಕೊಟ್ಟರೂ ಒಟ್ಟು ಯೋಜನಾ ವೆಚ್ಚ 20 ಸಾವಿರ ಕೋಟಿ ಇದೆ. ಅದಕ್ಕೆ ಬಾಕಿ ಹಣವನ್ನು ಸರ್ಕಾರ ಎಲ್ಲಿಂದ ತರಲಿದೆ ಎಂದು ಪ್ರಶ್ನಿಸಿದರು. +ಈ ಹಿಂದೆ ಕೆರೆ ಪುನಶ್ಚೇತನಕ್ಕೆ ನೀಡಿದ್ದ ಹಣವನ್ನು ರಾಜ್ಯಸರ್ಕಾರ ದುರುಪಯೋಗಪಡಿಸಿಕೊಂಡಿರುವುದು ಸಿಎಜಿ ವರದಿಯಲ್ಲಿ ಉಲ್ಲೇಖವಿದೆ. ಮೆಗಾಟೆಕ್‌್ಸಟೈಲ್‌ ಪಾರ್ಕ್‌ಗೆ 100 ರಿಂದ 200 ಕೋಟಿ ರೂ. ಬಾಕಿ ಇದೆ. ಯಾದಗಿರಿಯಲ್ಲಿ ಪ್ರಸ್ತಾವಿತ ಯೋಜನೆ ಅನುಷ್ಠಾನಗೊಳಿಸಿಲ್ಲ. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿಲ್ಲ. ನಮಲ್ಲಿ ನಾವೇ ಅನ್ಯಾಯ ಮಾಡಿಕೊಳ್ಳುತ್ತಿದ್ದೇವೆ. ಯೋಜನೆಯನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಟೀಕೆ ಮಾಡುತ್ತಿರುವುದರಿಂದ ಪ್ರಯೋಜನವಾಗುವುದಿಲ್ಲ ಎಂದರು. +ಈ ಬಾರಿಯ ಬಜೆಟ್‌ನಲ್ಲಿ 45,485 ಕೋಟಿ ರೂ ತೆರಿಗೆ ಹಂಚಿಕೆ ಹಾಗೂ ಅನುದಾನದ ರೂಪದಲ್ಲಿ 15,000 ಕೋಟಿ ಸೇರಿ 60,000 ಕೋಟಿ ರೂ. ಕೇಂದ್ರದಿಂದ ರಾಜ್ಯಕ್ಕೆ ನೆರವು ದೊರೆಯುತ್ತಿದೆ ಎಂದು ಹೇಳಿದರು. +ಇದರ ಜೊತೆಗೆ ಸಾರ್ಟ್‌ಸಿಟಿಗೆ 6,400 ಕೋಟಿ ರೂ. ಅನುದಾನ ದೊರೆತಿದ್ದು, 904 ಯೋಜನೆಗಳಿಗೆ 14,480 ಕೋಟಿ ರೂ. ಬಳಕೆಯಾಗಿದೆ ಎಂದ ಅವರು ರಾಜ್ಯಸರ್ಕಾರ ಯಾವುದೇ ಯೋಜನೆಯ ಸವಿಸ್ತಾರ ನೀಲನಕ್ಷೆಯೊಂದಿಗೆ ಬಂದರೆ ನಾನೇ ಇವರಿಗೆ ಬೆಂಬಲ ಕೊಡುತ್ತೇನೆ. ಆದರೆ ಅದಕ್ಕೂ ಮೊದಲು ಇವರು ಹಾದಿಬೀದಿಯಲ್ಲಿ ಟೀಕೆ ಮಾಡುವುದನ್ನು ನಿಲ್ಲಿಸಬೇಕು. ಕುಮಾರಸ್ವಾಮಿ ರಾಜ್ಯಕ್ಕೆ ಬಂದರೆ ಸಚಿವರನ್ನು ಭೇಟಿ ಮಾಡಬಾರದು, ಅಧಿಕಾರಿಗಳ ಸಭೆ ನಡೆಸಬಾರದು ಎಂಬ ಧೋರಣೆಯನ್ನು ಬದಲಿಸಿಕೊಳ್ಳಲಿ ಎಂದರು. +ಕೇಂದ್ರ ಸರ್ಕಾರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಸಮಾಜಕಲ್ಯಾಣ ಇಲಾಖೆಯ ಕಲ್ಲೇಶ್‌ ಎಂಬುವರಿಂದ ದೂರು ಕೊಡಿಸಲಾಗಿದೆ. ಅದೇ ವ್ಯಕ್ತಿಯನ್ನು ಒಂದು ತಿಂಗಳ ಹಿಂದಷ್ಟೇ ಸರ್ಕಾರ ಅಮಾನತುಗೊಳಿಸಿತ್ತು. ಕೇಂದ್ರ ಸರ್ಕಾರ ನೀಡಿದ್ದ 40 ಕೋಟಿ ರೂ. ಅನುದಾನಕ್ಕೆ ಬಳಕೆದಾರರ ಪ್ರಮಾಣ ಪತ್ರ ನೀಡುವಂತೆ 8 ಬಾರಿ ಪತ್ರ ಬರೆದಿದ್ದರು. ಅದಕ್ಕೆ ಪ್ರತ್ಯುತ್ತರ ನೀಡದಿದ್ದರಿಂದ ಸದರಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು ಎಂದು ಹೇಳಿದರು. \ No newline at end of file diff --git a/eesanje/url_46_61_3.txt b/eesanje/url_46_61_3.txt new file mode 100644 index 0000000000000000000000000000000000000000..57895e1cf50e94e489cd48caab0f46a3cbdd888a --- /dev/null +++ b/eesanje/url_46_61_3.txt @@ -0,0 +1,10 @@ +ಬೆಳ್ಳಂಬೆಳಗ್ಗೆ ಘರ್ಜಿಸಿದ ಪೊಲೀಸರ ರಿವಾಲ್ವರ್‌, ಗುಂಡು ಹಾರಿಸಿ ರೌಡಿ ಶೀಟರ್‌ಗಳ ಸೆರೆ +ಕನಕಪುರ, ಜು.28-ಇಂದು ಬೆಳ್ಳಂಬೆಳಗ್ಗೆ ಪೊಲೀಸರ ರಿವಾಲ್ವರ್‌ ಗರ್ಜಿಸಿದ್ದು, ತಲೆಮರೆಸಿಕೊಂಡು ಆರ್ಭಟಿಸುತ್ತಿದ್ದ ಇಬ್ಬರು ರೌಡಿ ಶೀಟರ್‌ಗಳಿಗೆ ಗುಂಡು ಹಾರಿಸಿ ಸೆರೆ ಹಿಡಿಯಲಾಗಿದೆ.ಕಳೆದ ಜುಲೈ 22ರಂದು ಕನಕಪುರ ಪಟ್ಟಣದ ಮುಳಗಲ ಪ್ರದೇಶದಲ್ಲಿ ಜಿಪಂ ಮಾಜಿ ಅಧ್ಯಕ್ಷನ ಮನೆಗೆ ನುಗ್ಗಿ ದಾಂಧಲೆ ನಡೆಸಿ ಯುವಕನ ಕೈ ಕತ್ತರಿಸಿ ಮನೆಯವರ ಮೇಲೆ ಹಲ್ಲೆ ನಡೆಸಿದ್ದ ಕುಖ್ಯಾತ ರೌಡಿ ಶೀಟರ್‌ ಹಾಗೂ ಗಡಿ ಪಾರಾಗಿದ್ದ ಹರ್ಷ ಅಲಿಯಾಸ್‌‍ ಕೈಮಾ ಮತ್ತು ಕರುಣೇಶ್‌ ಅಲಿಯಾಸ್‌‍ ಕಣ್ಣನನ್ನು ಕಗ್ಗಲಿಪುರದ ಸಮೀಪ ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದೆ. +ಘಟನೆ ವಿವರ: ತಡರಾತ್ರಿ ಮನೆಗೆ ನುಗ್ಗಿದ್ದ ಆರು ಮಂದಿ ದಾಂಧಲೆ ನಡೆಸಿದ್ದರು. ಇದನ್ನು ನೋಡಿ ಜನರು ಭೀತಿಗೊಂಡಿದ್ದರು. ಸ್ಥಳಕ್ಕೆ ಬಂದಿದ್ದ ಐಜಿಪಿ ಪರಿಶೀಲನೆ ನಡೆಸಿ ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು. +ಕೇವಲ 24 ಗಂಟೆಗಳಲ್ಲೇ ನಾಲ್ವರು ಆರೋಪಿಗಳನ್ನು ಸೆರೆ ಹಿಡಿದರು. ಇವರಲ್ಲಿ ಪ್ರಮುಖ ಆರೋಪಿಗಳಾದ ಹರ್ಷ ಮತ್ತು ಕರುಣೇಶ್‌ ತಲೆಮರೆಸಿಕೊಂಡಿದ್ದರು. ಇವರಿಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಹುಡುಕಾಟ ನಡೆಸಲಾಗಿತ್ತು. ಆದರೆ, ಸಿಕ್ಕಿರಲಿಲ್ಲ. ಪೊಲೀಸರ ಬಗ್ಗೆ ಮಾಹಿತಿ ಪಡೆದು ಒಂದೇ ಪ್ರದೇಶದಲ್ಲಿರದೆ ಹಲವಾರು ಹಳ್ಳಿಗಳಿಗೆ ಸಂಚರಿಸಿ ತಲೆಮರೆಸಿಕೊಂಡಿದ್ದರು. +ಕಳೆದ ರಾತ್ರಿ ಕಗ್ಗಲಿಪುರದ ವ್ಯಾಲಿ ಶಾಲೆ ಬಳಿ ಇವರಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಕನಕಪುರ ಟೌನ್‌ ಸರ್ಕಲ್‌ ಇನ್‌್ಸಪೆಕ್ಟರ್‌ ಮಿಥುನ್‌ ಶಿಲ್ಪಿ ಹಾಗೂ ಪಿಎಸ್‌‍ಐ ಮನೋಹರ್‌ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. +ಇಂದು ಮುಂಜಾನೆ ಅವರಿರುವ ಸ್ಥಳಕ್ಕೆ ತಲುಪಿ ಮೊದಲು ಇಬ್ಬರು ಕಾನ್‌್ಸಟೆಬಲ್‌ಗಳು ಅವರನ್ನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಈ ಇಬ್ಬರು ಲಾಂಗ್‌ ಮತ್ತು ಡ್ರ್ಯಾಗರ್‌ನಿಂದ ಅವರ ಮೇಲೆಯೇ ಎರಗಿ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. +ತಕ್ಷಣ ಎಚ್ಚೆತ್ತ ಪೊಲೀಸರು ಅವರನ್ನು ಸುತ್ತುವರೆದು ಶರಣಾಗುವಂತೆ ಸೂಚಿಸಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಅದನ್ನು ಲೆಕ್ಕಿಸದೆ ಅವರ ಮೇಲೆಯೇ ದಾಳಿ ಮುಂದಾದಾಗ ಆತರಕ್ಷಣೆಗಾಗಿ ಇನ್‌್ಸಪೆಕ್ಟರ್‌ ಮತ್ತು ಸಬ್‌ಇನ್‌್ಸಪೆಕ್ಟರ್‌ ಹಾರಿಸಿದ ಗುಂಡುಗಳು ಹರ್ಷನ ಬಲಗಾಲು ಮತ್ತು ಎಡಗಾಲಿಗೆ ಗುಂಡು ತಗುಲಿದ್ದರೆ, ಮತ್ತೊಬ್ಬ ಆರೋಪಿ ಕಣ್ಣನಿಗೆ ಎಡಗಾಲಿಗೆ ಗುಂಡು ಬಿದ್ದು ಕುಸಿದು ಬಿದ್ದರು. +ತಕ್ಷಣ ಅವರನ್ನು ವಶಕ್ಕೆ ಪಡೆದು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಗಾಯಗೊಂಡಿರುವ ಇಬ್ಬರು ಕಾನ್‌್ಸಟೆಬಲ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. +ಒಟ್ಟಾರೆ, ಕಳೆದ ಆರು ದಿನಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ ಹರ್ಷನನ್ನು ಸೆರೆಹಿಡಿಯಲಾಗಿದೆ. ಈತನ ಮೇಲೆ ಸುಮಾರು ಐದಕ್ಕೂ ಹೆಚ್ಚು ಗಂಭೀರ ಪ್ರಕರಣಗಳಿದ್ದು, ಗಡೀಪಾರು ಮಾಡಲಾಗಿತ್ತು. ಆದರೆ, ಆತ ಕನಕಪುರಕ್ಕೆ ಬಂದು ಈ ದಾಂಧಲೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ. +ಸ್ಥಳಕ್ಕೆ ಎಸ್‌‍ಪಿ, ಡಿವೈಎಸ್‌‍ಪಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ. \ No newline at end of file diff --git a/eesanje/url_46_61_4.txt b/eesanje/url_46_61_4.txt new file mode 100644 index 0000000000000000000000000000000000000000..b390b6690790d4631875a55530acf934d692617b --- /dev/null +++ b/eesanje/url_46_61_4.txt @@ -0,0 +1,4 @@ +ಅತಿಥಿ ಗೃಹಕ್ಕೆ ಬೀಗ : ವಿಶ್ರಾಂತಿಗೆ ಬಂದಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬೇಸರ +ನಂಜನಗೂಡು, ಜು.28-ಬೆಳಗ್ಗೆ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಶಾಕ್‌ ಕಾದಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಲ್ಪ ವಿಶ್ರಾಂತಿ ಪಡೆಯಲು ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹಕ್ಕೆ ಆಗಮಿಸಿದಾಗ ಬೀಗ ಜಡಿಯಲಾಗಿತ್ತು. +ಈ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳನ್ನು ಕೇಳಿದಾಗ ಅಧಿಕಾರಿಗಳು ಬೀಗ ಹಾಕಿಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಸುಮಾರು 15 ನಿಮಿಷ ಅಲ್ಲಿ ಕಾದರೂ ಯಾರೂ ಬರದಿದ್ದಾಗ ಎಚ್‌ಡಿಕೆ ಬೇಸರಿದಂದಲೇ ಮೈಸೂರಿಗೆ ತೆರಳಿದರು. +ಈ ಸಂದರ್ಭದಲ್ಲಿ ಜತೆಯಲ್ಲಿದ್ದ ಮಾಜಿ ಶಾಸಕ ಸಾ.ರಾ.ಮಹೇಶ್‌ ಸೇರಿದಂತೆ ಇತರ ಜೆಡಿಎಸ್‌‍ ನಾಯಕರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತಪಡಿಸಿದರು.ಮೊದಲೇ ಕೇಂದ್ರ ಸಚಿವರು ಬರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಆದರೆ, ಸರ್ಕಾರದ ನಿರ್ದೇಶನದಂತೆ ಇಲ್ಲಿನ ಅಧಿಕಾರಿಗಳು ವರ್ತಿಸಿದ್ದಾರೆ. ಇದು ಎಂತಹ ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ. \ No newline at end of file diff --git a/eesanje/url_46_61_5.txt b/eesanje/url_46_61_5.txt new file mode 100644 index 0000000000000000000000000000000000000000..a8bb38ff6795ec0ec5492b485280be9c6e835f76 --- /dev/null +++ b/eesanje/url_46_61_5.txt @@ -0,0 +1,7 @@ +ಸಿದ್ದರಾಮಯ್ಯನವರಿಂದ ಅಧಿಕಾರ ದುರುಪಯೋಗ : ಹೆಚ್‌ಡಿಕೆ ಆರೋಪ +ನವದೆಹಲಿ, ಜು. 27-ಮುಡಾದಲ್ಲಿ ತಮಗೂ ನಿವೇಶನವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ನೀಡಿರುವ ಹೇಳಿಕೆ ಬಗ್ಗೆ ತಿರುಗೇಟು ನೀಡಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಸಿದ್ದರಾಮಯ್ಯ ಅವರಂತೆ ನಾನು ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಸೂರಿನಲ್ಲಿ ನನಗೆ ನಿವೇಶನ ಕೊಟ್ಟಿದ್ದಾರೆ ಎಂದು ಅರಿಬ್ಬರೂ ಹೇಳಿದ್ದಾರೆ. ಆದರೆ, ಈವರೆಗೆ ಆ ನಿವೇಶನವನ್ನೇ ನನಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.2006ರಲ್ಲಿಯೇ ನಾನು ಮುಖ್ಯಮಂತ್ರಿಯಾಗಿದ್ದೆ. ಅಧಿಕಾರ ದುರುಪಯೋಗ ಮಾಡಿಕೊಳ್ಳಬೇಕು ಎಂದು ನನಗೆ ಅನ್ನಿಸಿದ್ದಿದ್ದರೆ, ಆಗಲೇ ಆ ನಿವೇಶನವನ್ನು ನನ್ನ ಹೆಸರಿಗೆ ಬರೆಸಿಕೊಳ್ಳಬಹುದಾಗಿತ್ತು ಎಂದಿದ್ದಾರೆ. +ಈ ನಿವೇಶನದ ಬಗ್ಗೆ ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ತನಿಖೆ ನಡೆಯುತ್ತಿದೆ. ಲೋಕಾಯುಕ್ತ, ಸಿಐಡಿ ತನಿಖೆಗಳು ನಡೆದು ಹೋಗಿವೆ. 500 ನಿವೇಶನಗಳನ್ನು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಪಡೆದುಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡಲಾಗಿತ್ತು. ಕೊನೆಗೆ ತನಿಖೆಯಲ್ಲಿ ಒಂದು ನಿವೇಶನವನ್ನಷ್ಟೇ ಪಡೆದುಕೊಂಡಿದ್ದಾರೆ ಎಂದು ಗೊತ್ತಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. +2012ನೇ ಇಸವಿಯಲ್ಲಿ ನಾನು ಮುಡಾಕ್ಕೆ ಪತ್ರ ಬರೆದು ಹಂಚಿಕೆ ಮಾಡಿರುವ ನಿವೇಶನ ಕೊಡಿ ಎಂದು ಮನವಿ ಮಾಡಿದ್ದೆ. 2017ರಲ್ಲಿ ಮತ್ತೊಂದು ಪತ್ರವನ್ನೂ ಬರೆದಿದ್ದೆ. ನಾನು ಅಧಿಕಾರ ದುರುಪಯೋಗಪಡಿಸಿಕೊಳ್ಳಲಿಲ್ಲ. ಅಂಥ ಆಲೋಚನೆಯನ್ನೂ ಮಾಡಲಿಲ್ಲ ಎಂದು ಅವರು ಹೇಳಿದ್ದಾರೆ. +40 ವರ್ಷವಾದರೂ ನಿವೇಶನ ಕೊಟ್ಟಿಲ್ಲ: ನಿವೇಶನವನ್ನು ಅವರು ನನಗೆ ಧರ್ಮಕ್ಕೆ ಕೊಡುತ್ತಿಲ್ಲ. ನಾನು 34,000 ರೂ. ಹಣ ಕಟ್ಟಿದ್ದೇನೆ. ಆ ಹಣ ಕಟ್ಟಿ 40 ವರ್ಷಗಳೇ ಆಗಿದೆ. ನಿವೇಶನ ಕೊಟ್ಟಿಲ್ಲ. ಇದು ನಿಜವಾದ ಪರಿಸ್ಥಿತಿ ಎಂದು ಕುಮಾರಸ್ವಾಮಿ ಅವರು ಹೇಳಿದರು. +ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಆರ್ಭಟ ನೋಡಿದೆ. ಈ ವ್ಯಕ್ತಿ ಯಾವ ಹಿನ್ನೆಲೆಯಿಂದ ಬಂದಿರುವುದು ಎನ್ನುವುದು ನನಗೆ ಗೊತ್ತಿದೆ. ಬೆಂಗಳೂರು ನಗರದಲ್ಲಿ ಈ ಮಹಾಶಯ ಏನೆಲ್ಲಾ, ಯಾವೆಲ್ಲಾ ಭ್ರಷ್ಟಾಚಾರ ಎಸಗಿದ್ದಾರೆ ಎಂಬುದನ್ನು ತೆಗೆದರೆ ಈ ವ್ಯಕ್ತಿಯ ಅಸಲಿ ಬಂಡವಾಳ ಗೊತ್ತಾಗುತ್ತದೆ. ಬೆಂಗಳೂರು ಸುತ್ತಮುತ್ತಾ ಮಾಡಿದ್ದಾರಲ್ಲ. ಅದನ್ನಷ್ಟೇ ತೆಗೆದಿಟ್ಟರೆ ಸಾಕು ಎಂದು ಕುಮಾರಸ್ವಾಮಿ ಅವರು ಭೈರತಿ ಸುರೇಶ್‌ ಗೆ ತಿರುಗೇಟು ಕೊಟ್ಟರು. \ No newline at end of file diff --git a/eesanje/url_46_61_6.txt b/eesanje/url_46_61_6.txt new file mode 100644 index 0000000000000000000000000000000000000000..04a1cd663654d8545ea168c774793d2f3d0cb2de --- /dev/null +++ b/eesanje/url_46_61_6.txt @@ -0,0 +1,14 @@ +ಇನ್ನು ಮುಂದೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವ ಮುನ್ನ ಹುಷಾರ್..! +ಬೆಂಗಳೂರು,ಜು.27-ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್‌‍ವೇಯಲ್ಲಿ ಓವರ್‌ಸ್ಪೀಡ್‌ನಲ್ಲಿ ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ಮಾಡುವವರು ಕಂಬಿ ಎಣಿಸಬೇಕಾಗುತ್ತದೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್‌‍ ಹೋದರೆ ನಿಮ ಮೇಲೆ ಎಫ್‌ಐಆರ್‌ ದಾಖಲಾಗಲಿದೆ. +ಬೆಂಗಳೂರು-ಮೈಸೂರು ಹೈವೇಯಲ್ಲಿ ಟ್ರಾಫಿಕ್‌ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರೂ ರ್ಯಾಶ್‌ ಡ್ರೈವಿಂಗ್‌ ನಿಲ್ಲುತ್ತಿಲ್ಲ. ಹೀಗಾಗಿ ಅತಿ ವೇಗದಲ್ಲಿ ಚಾಹನ ಚಲಾಯಿಸುವವರ ವಿರುದ್ಧ ಕೇಸ್‌‍ ದಾಖಲು ಮಾಡಲು ಪೊಲೀಸರು ಮುಂದಾಗಿದ್ದಾರೆ.130 ಕಿಮೀಗೂ ಅಧಿಕ ವೇಗದಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂಟರ್‌ಸೆಪ್ಟರ್‌ಗಳು ಇದ್ದರೂ ಹಲವರು ಕ್ಯಾರೇ ಮಾಡುತ್ತಿಲ್ಲ. ಹೀಗಾಗಿ ಅಪಘಾತಗಳಾಗುತ್ತಿವೆ. ಅತಿ ವೇಗದ ಚಾಲನೆಯಿಂದಲೇ 90%ರಷ್ಟು ಅಪಘಾತಗಳು ಸಂಭವಿಸುತ್ತಿವೆ. +ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌‍ಗಳು ಪತ್ತೆಯಾಗಿವೆ. +ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್‌ ಹಾಕಲು ಎಡಿಜಿಪಿ ಅಲೋಕ್‌ಕುಮಾರ್‌ ಹೊಸ ಕ್ರಮಗಳನ್ನು ಕೈಗೆತ್ತಿಕೊಂಡಿದ್ದಾರೆ. ಆಗಸ್ಟ್‌ 1ರಿಂದಲೇ ಇದನ್ನು ಜಾರಿಗೊಳಿಸಲಾಗುತ್ತಿದೆ.ಸಾಮಾಜಿಕ ಜಾಲತಾಣ ಎಕ್‌್ಸ ಖಾತೆಯಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್‌‍ಐಆರ್‌ ದಾಖಲಿಸಲಾಗುತ್ತದೆ. ಸ್ಪೀಡ್‌ನಲ್ಲಿ 130 ಕಿಮೀ ದಾಟಿದರೆ ಎಫ್‌‍ಐಆರ್‌ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು ಎಂದು ಎಚ್ಚರಿಸಿದ್ದಾರೆ. +ಹೆದ್ದಾರಿಯಲ್ಲಿ ಸಾರ್ಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌‍ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್‌್ಸಪ್ರೆಸ್‌‍ ವೇನಲ್ಲಿ ಇಂಟೆಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ ಸಿಸ್ಟಮ್‌ ಅಳವಡಿಸಲಾಗಿದೆ. +ಈ ಮಾರ್ಗದಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡವನ್ನು ನೇರವಾಗಿ ಫಾಸ್ಟ್ಯಾಗ್‌ ಖಾತೆಯಿಂದಲೇ ಕಡಿತಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಕ್ಯಾಮೆರಾಗಳು, ಸ್ಪೀಡ್‌ ಗನ್‌ಗಳು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ನೆರವಾಗಲಿವೆ. +ಜುಲೈ 1ರಿಂದ ಮೈಸೂರು-ಬೆಂಗಳೂರು ಹೆದ್ದಾರಿಯು ಸಂಪೂರ್ಣವಾಗಿ ಕ್ರಿಯಾತಕ ಐಟಿಎಂಎಸ್‌‍ ಕಾರಿಡಾರ್‌ ಆಗಲಿದೆ ಎಂದು ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ ಅಲೋಕ್‌ಕುಮಾರ್‌ ಇತ್ತೀಚೆಗೆ ತಿಳಿಸಿದ್ದರು. +ಐಟಿಎಂಎಸ್‌‍ ಅಥವಾ ಇಂಟೆಲಿಜೆಂಟ್‌ ಟ್ರಾಫಿಕ್‌ ಮ್ಯಾನೇಜ್‌ಮೆಂಟ್‌‍ ಸಿಸ್ಟಮ್‌ ಅನ್ನು ಡಿಸೆಂಬರ್‌ 2022ರಲ್ಲಿ ಬೆಂಗಳೂರಿನಲ್ಲಿ ಚಾಲನೆಗೆ ತರಲಾಯಿತು. ಅದಕ್ಕಾಗಿ 250 ಸ್ವಯಂಚಾಲಿತ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ (ಎಎನ್‌ಪಿಆರ್‌) ಕ್ಯಾಮೆರಾಗಳು ಮತ್ತು 80 ರೆಡ್‌ ಲೈಟ್‌ ಉಲ್ಲಂಘನೆ ಪತ್ತೆ (ಆರ್‌ಎರ್‌ವಿಡಿ) ಕ್ಯಾಮೆರಾಗಳನ್ನು ನಗರದ 50 ಜಂಕ್ಷನ್‌ ಗಳಲ್ಲಿ ಅಳವಡಿಸಲಾಗಿದೆ. +ಈಗ ಐಟಿಎಂಎಸ್‌‍ ಅಡಿಯಲ್ಲಿ ಸ್ವಯಂಚಾಲಿತ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ ಕ್ಯಾಮೆರಾಗಳನ್ನು ಮೈಸೂರಿನ ಪ್ರಮುಖ ರಸ್ತೆಗಳಲ್ಲಿ 8.5 ಕೋಟಿ ರೂ. ಅಂದರೆ ಮೈಸೂರು ನಗರಕ್ಕೆ ರೂಪಾಯಿ 4 ಕೋಟಿ ಮತ್ತು ಮೈಸೂರು ಜಿಲ್ಲೆಗೆ ರೂ.4.5 ಕೋಟಿ ಅಂದಾಜು ವೆಚ್ಚದಲ್ಲಿ ಅಳವಡಿಸಲಾಗಿದೆ. ಅಲ್ಲದೇ ಜುಲೈ 1ರಿಂದ ಟ್ರಾಫಿಕ್‌ ರೂಲ್‌್ಸ ಬ್ರೇಕ್‌ ಮಾಡಿದ ವಾಹನ ಚಾಲಕರಿಗೆ ಚಲನ್‌ ನೀಡುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದ್ದರು. +ಅಲ್ಲದೇ ಕ್ಯಾಮೆರಾಗಳನ್ನು ಮೈಸೂರು ಜಿಲ್ಲೆಯ ಹುಣಸೂರು, ಎಚ್ ಡಿ ಕೋಟೆ, ನಂಜನಗೂಡು ಮತ್ತು ಟಿ ನರಸೀಪುರದಂತಹ ಹಲವಾರು ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಹಾಗಾಗಿ ರೂಲ್‌್ಸ ಬ್ರೇಕ್‌ ಮಾಡಿದ ವಾಹನ ಚಾಲಕರಿಗೆ ಸರಿಯಾದ ಸಮಯಕ್ಕೆ ಎಸ್‌‍ ಎಂಎಸ್‌‍ ಕಳುಹಿಸಲಾಗುವುದು ಎಂದು ಅವರು ಹೇಳಿದ್ದರು. +ಹೆಚ್ಚುವರಿಯಾಗಿ ಈ ವರ್ಷ ಬೆಂಗಳೂರಿನಿಂದ ಹತ್ತಿರದ ತಾಲೂಕುಗಳು ಮತ್ತು ಜಿಲ್ಲೆಗಳಿಗೆ ಸಂಪರ್ಕಿಸುವ ನಾಲ್ಕು ಪ್ರಮುಖ ಹೆದ್ದಾರಿಗಳಲ್ಲಿ (ತುಮಕೂರು ರಸ್ತೆ, ಕನಕಪುರ ರಸ್ತೆ, ಹೊಸೂರು ರಸ್ತೆ ಮತ್ತು ಹೊಸಕೋಟೆ) ಐಟಿಎಂಎಸ್‌‍ ಕ್ಯಾಮೆರಾಗಳನ್ನು ಅಳವಡಿಸಲು ಎಡಿಜಿಪಿ ಪ್ರಸ್ತಾಪಿದ್ದಾರೆ ಎಂಬುದಾಗಿ ತಿಳಿದುಬಂದಿದೆ. +ಐಟಿಎಂಎಸ್‌‍ ಕ್ಯಾಮೆರಾಗಳ ಜೊತೆಗೆ ಅವರು ಈ ರಸ್ತೆಗಳಲ್ಲಿ ವೇರಿಯಬಲ್‌ ಮೆಸೇಜಿಂಗ್‌ ಚಿಹ್ನೆಗಳನ್ನು ಸೇರಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ. ಈ ಸೈನ್‌ ಬೋರ್ಡ್‌ಗಳು ಸರಿಯಾದ ಸಮಯಕ್ಕೆ ಟ್ರಾಫಿಕ್‌ ಪರಿಸ್ಥಿತಿಯ ಕುರಿತು ಡಿಜಿಟಲ್‌ ಸಂದೇಶವನ್ನು ಪ್ರದರ್ಶಿಸುತ್ತದೆ. ಈ ಪ್ರಸ್ತಾವನೆಯನ್ನು ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರವು ಅನುಮೋದಿಸಿದ್ದು, ಗದಗ ಪಟ್ಟಣದಲ್ಲಿಯೂ ಐಟಿಎಂಎಸ್‌‍ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. +ಈ ಬಗ್ಗೆ ಜೂನ್‌ 1ರಂದು ರಾಜ್ಯ ಪೊಲೀಸ್‌‍ನ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗವು ಪ್ರಾದೇಶಿಕ ಎನ್‌ ಹೆಚ್‌‍ಎಐ ಅಧಿಕಾರಿಯೊಂದಿಗೆ ಸಭೆ ನಡೆಸಿತ್ತು. ಹಾಗೇ ಎಡಿಜಿಪಿ ಅವರು ಈ ಬಗ್ಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯುವ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_61_7.txt b/eesanje/url_46_61_7.txt new file mode 100644 index 0000000000000000000000000000000000000000..1357fd56067d4c6d0657a294f1136ed6c62947d2 --- /dev/null +++ b/eesanje/url_46_61_7.txt @@ -0,0 +1,6 @@ +ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಹಲವು ರೈಲು ರದ್ದು, ಕೆಲವೆಡೆ ಮಾರ್ಗ ಬದಲಾವಣೆ, ಇಲ್ಲಿದೆ ಮಾಹಿತಿ +ಮಂಗಳೂರು,ಜು.27-ಸತತವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭೂ ಕುಸಿತ ಸಂಭವಿಸಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕೆಲ ರೈಲು ಸಂಚಾರಗಳನ್ನು ರದ್ದುಗೊಳಿಸಲಾಗಿದೆ. +ಇಂದು ಹೊರಡುವ ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ಎಕ್ಸ್ ಪ್ರೆಸ್‌‍ ಹಾಗೂ ಕಾರವಾರ-ಯಶವಂತಪುರ ಎಕ್ಸ್ ಪ್ರೆಸ್‌‍ ರೈಲುಗಳನ್ನು ರದ್ದುಪಡಿಸಲಾಗಿದೆ. ಸಕಲೇಶಪುರ ಬಳಿಯ ಶಿರಾಡಿಘಾಟ್‌ ಪ್ರದೇಶದ ಎಡಕುಮೇರಿ ಕಡಗರವಳ್ಳಿ ನಡುವೆ ರೈಲು ಹಳಿಯ ಮೇಲೆ ಗುಡ್ಡ ಕುಸಿತ ಉಂಟಾದ ಹಿನ್ನಲೆಯಲ್ಲಿ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. +ಅದೇ ರೀತಿ ಹಾಸನ-ಮಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳಿಗೆ ಕೇರಳ-ತಮಿಳುನಾಡು ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ರಾತ್ರಿ 8 ಗಂಟೆಗೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಡುವ ಕಣ್ಣೂರು-ಬೆಂಗಳೂರು ರೈಲು ನಿನ್ನೆ ರಾತ್ರಿ 9.30 ಆದರೂ ಹೊರಟಿರಲಿಲ್ಲ. +ರೈಲು ಸಾಗುವ ಹಾದಿಯಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ರೈಲು ಟಿಕೆಟ್‌ ಪಡೆದಿದ್ದ ಪ್ರಯಾಣಿಕರು ಕಾದು ಕಾದು ಸಂಕಷ್ಟ ಅನುಭವಿಸಬೇಕಾಯಿತು.ಕೆಲ ಪ್ರಯಾಣಿಕರು ಬಸ್‌‍ನಲ್ಲಿ ಬೆಂಗಳೂರಿಗೆ ತೆರಳಿದರು. 9.45ರ ಸುಮಾರಿಗೆ ಈ ರೈಲು ಮರಳಿ ಕೇರಳದತ್ತ ಸಂಚರಿಸಿ ಸೇಲಂ ಮಾರ್ಗವಾಗಿ ಬೆಂಗಳೂರು ಸಂಚರಿಸಿತು. +ಇನ್ನು ಕೆಲವು ರೈಲುಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಏಳು ರೈಲುಗಳ ಸಂಚಾರವನ್ನು ಮಾರ್ಗ ಬದಲಾವಣೆ ಮಾಡಲಾಗಿದೆ. ವಿಜಯಪುರ ಎಕ್ಸ್ ಪ್ರೆಸ್‌‍ ರೈಲು ಕಾರವಾರ, ಮಡಗಾವ್‌, ಕ್ಯಾಲರಕ್‌, ಲೋಂಡಾ ಜಂಕ್ಷನ್‌, ಹುಬ್ಬಳ್ಳಿ ಮೂಲಕ ವಿಜಯಪುರಕ್ಕೆ ತೆರಳಿದೆ. ಸುಬ್ರಹಣ್ಯ-ಸಕಲೇಶಪುರ ನಡುವೆ ಭೂ ಕುಸಿತ ಸಂಭವಿಸಿ ರೈಲು ರದ್ದುಪಡಿಸಿದ ಕಾರಣ ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಸಮರ್ಪಕ ವ್ಯವಸ್ಥೆ ಮಾಡಿಲ್ಲ ಎಂದು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರೈಲ್ವೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. \ No newline at end of file diff --git a/eesanje/url_46_61_8.txt b/eesanje/url_46_61_8.txt new file mode 100644 index 0000000000000000000000000000000000000000..1ef3aa8ba04355868476c6662797529a343351f4 --- /dev/null +++ b/eesanje/url_46_61_8.txt @@ -0,0 +1,14 @@ +KSFCಯಿಂದ 1100 ಕೋಟಿ ರೂ. ಸಾಲ ನೀಡುವ ಗುರಿ +ಬೆಂಗಳೂರು,ಜು.27-ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯು 2024-25ನೇ ಹಣಕಾಸು ವರ್ಷದಲ್ಲಿ 1,100 ಕೋಟಿ ರೂ.ಗಳ ಸಾಧಾರಣ ಸಾಲ ಮಂಜೂರಾತಿ ಗುರಿ ಹೊಂದಿದೆ. +ಕೆಎಸ್ಎಫ್ಸಿಯ 65ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ರೇಜು.ಎಂ.ಟಿ ಅವರು, ಸಂಸ್ಥೆಯು ಗುಣಮಟ್ಟದ ಉದ್ಯಮಗಳಿಗೆ ಹಣಕಾಸು ನೆರವು ನೀಡಿ ಆರ್ಥಿಕ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ. +2024-25ರಲ್ಲಿ ಸಂಸ್ಥೆಯಲ್ಲಿ ಲಭ್ಯವಿರುವ ಎಲ್ಲಾ ಐದು ಬಡ್ಡಿ ಸಹಾಯಧನ ಸಾಲ ಯೋಜನೆಗಳಿಂದ ಉದ್ದೇಶಿತ ಸಾಲ ಮಂಜೂರಾತಿ ಹಾಗೂ ವಿತರಣೆೆಯ ಗುರಿ ಸಾಧಿಸುವ ನಿರೀಕ್ಷೆಯಿದೆ. ಅಲ್ಲದೆ ಅನುತ್ಪಾದಕ ಆಸ್ತಿಗಳನ್ನು ಮತ್ತಷ್ಟು ಕಡಿಮೆಗೊಳಿಸಲು ಸಂಸ್ಥೆಯು ಹೆಚ್ಚಿನ ಒತ್ತು ನೀಡಲಿದೆ ಎಂದು ಹೇಳಿದ್ದಾರೆ. +2023-24ರ ಹಣಕಾಸು ವರ್ಷದಲ್ಲಿ ರಾಜ್ಯ ಸರ್ಕಾರದ ಬೆಂಬಲದೊಂದಿಗೆ ಸಂಸ್ಥೆಯು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ನೂತನವಾಗಿ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆಗಳನ್ನು ಹಿಂದುಳಿದ ವರ್ಗಗಳ (ಪ್ರವರ್ಗ-1 ಮತ್ತು ಪ್ರವರ್ಗ-2ಎ ಜಾತಿಗಳಿಗೆ) ಉದ್ಯಮಿಗಳಿಗೆ ಅಲ್ಪ ಸಂಖ್ಯಾತ ಸಮುದಾಯಗಳ ಉದ್ಯಮಿಗಳಿಗೆ ಅನುಷ್ಠಾನಗೊಳಿಸಲಾಯಿತು ಎಂದಿದ್ದಾರೆ. +ಚಾಲ್ತಿಯಲ್ಲಿರುವ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿದರ ಸಹಾಯಧನ ಸಾಲ ಯೋಜನೆಯ ಗರಿಷ್ಠ ಮೊತ್ತವನ್ನು 2 ಕೋಟಿ ರೂ.ಗಳಿಂದ 5 ಕೋಟಿ ರೂ.ಗಳಿಗೆ ಹೆಚ್ಚಿಸಲಾಯಿತು. ಚಾಲ್ತಿಯಲ್ಲಿರುವ ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಘಟಕಗಳಿಗೆ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಶೇ.4ರ ಬಡ್ಡಿ ಸಹಾಯಧನ ಸಾಲ ಯೋಜನೆಗಳಡಿ ಯಶಸ್ವಿಯಾಗಿ ಹಣಕಾಸಿನ ನೆರವನ್ನು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. +143.28 ಕೋಟಿ ತೆರಿಗೆಪೂರ್ವ ದಾಖಲೆ ಲಾಭ:2023-24ನೇ ಸಾಲಿನ ಆರ್ಥಿಕ ಸ್ಥಿತಿಯನ್ನು ಕ್ರೋಡೀಕರಿಸಲಾಗಿದ್ದು, 143.28 ಕೋಟಿ ರೂ. ತೆರಿಗೆ ಪೂರ್ವ ದಾಖಲೆ ಲಾಭವನ್ನು ಹಾಗೂ 115.58 ಕೋಟಿ ರೂ. ತೆರಿಗೆ ನಂತರದ ಲಾಭವನ್ನು ಸಂಸ್ಥೆಯು ಗಳಿಸಿದೆ ಎಂದು ಅವರು ತಿಳಿಸಿದ್ದಾರೆ. +ಸಂಸ್ಥೆಯು 2023-24ರ ಹಣಕಾಸು ವರ್ಷದಲ್ಲಿ ವಿವಿಧ ಸಾಲ ಯೋಜನೆಗಳ ಮೂಲಕ 827.13 ಕೋಟಿ ರೂ. ಸಾಲ ಮಂಜೂರಾತಿ ಮಾಡಿದ್ದು, ಇದರಲ್ಲಿ 775.76 ಕೋಟಿ ಮೊತ್ತದ ಮಂಜೂರಾತಿಯು 610 ಸೂಕ್ಷ್ಮ ಮತ್ತು ಸಣ್ಣ ಗಾತ್ರದ ಕೈಗಾರಿಕಾ ಉದ್ಯಮಗಳಿಗೆ ನೀಡಲಾಗಿದೆೆ. 2024ರ ಮಾರ್ಚ್ ಅಂತ್ಯದವರೆಗೆ ಸಂಚಿತ ಸಾಲ ಮಂಜೂರಾತಿಯ ಮೊತ್ತವು 20,507.86 ಕೋಟಿ ರೂ.ಗಳನ್ನು 1,76,486 ಉದ್ಯಮಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. +ಈ ಹಣಕಾಸು ವರ್ಷದಲ್ಲಿ 613.04 ಕೋಟಿ ರೂ. ಸಾಲ ವಿತರಿಸಿದ್ದು, 2023-24ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಿತರಣೆಯ ಮೊತ್ತ 15,835.14 ಕೋಟಿ ರೂ.ಗಳಷ್ಟಾಗಿದೆ. ಹಣಕಾಸು ವರ್ಷ 2023-24ರಲ್ಲಿ 820.85 ಕೋಟಿ ರೂ. ಸಾಲ ವಸೂಲಾತಿ ಮಾಡಲಾಗಿದೆ ಮತ್ತು 257.08 ಕೋಟಿ ರೂ. ಬಡ್ಡಿ ಮೊತ್ತವು ವಸೂಲಾತಿಯಾಗಿದೆ. 2024ರ ಮಾರ್ಚ್ ಅಂತ್ಯದವರೆಗೆ ಸಂಚಿತ ವಸೂಲಾತಿಯ ಮೊತ್ತವು ರೂ.20,844.49 ಕೋಟಿಗಳಷ್ಟಾಗಿರುತ್ತದೆ. ಹಾಗೆಯೇ 2022-23ರಲ್ಲಿ ಶೇ.3.51ರಷ್ಟಿದ್ದ ನಿವ್ವಳ ಅನುತ್ಪಾದಕ ಆಸ್ತಿಯು ಪ್ರಸಕ್ತ ಹಣಕಾಸು ವರ್ಷ 2023-24ರಲ್ಲಿ ಶೇ.3.43ಕ್ಕೆ ಇಳಿಕೆಯಾಗಿದೆ ಎಂದು ಅಂಕಿ-ಅಂಶಗಳ ವಿವರ ನೀಡಿದ್ದಾರೆ. +ಸಾಲ ಮಂಜೂರಾತಿಯ ವಿವರಗಳು:ಸಂಸ್ಥೆಯ ಸ್ಥಾಪಿತ ದಿನದಿಂದ 2024ರ ಮಾರ್ಚ್ 31 ಅಂತ್ಯದವರೆಗೆ 31,706ಕ್ಕೂ ಹೆಚ್ಚಿನ ಮಹಿಳಾ ಉದ್ಯಮಿಗಳಿಗೆ 5,174.09 ಕೋಟಿ ರೂ.ಗಳ ಸಾಲ ಮಂಜೂರಾತಿ ಮಾಡಲಾಗಿದೆ. ಮುಂದುವರೆದು 22,636 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ 3,082.67 ಕೋಟಿ ರೂ.ಗಳಿಗೂ ಅಧಿಕ ಸಾಲ ಮಂಜೂರಾತಿ ನೆರವನ್ನು ನೀಡಿರುತ್ತದೆ ಹಾಗೂ 41,321 ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತ ಉದ್ಯಮಿಗಳಿಗೂ ಸುಮಾರು ರೂ.1,993.50 ಕೋಟಿಗಳ ಸಾಲ ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. +ಆಕರ್ಷಕ ಸಹಾಯಧನ ಸಾಲ ಯೋಜನೆಯಡಿ ನೆರವು:2023-24ರಲ್ಲಿ ಸಂಸ್ಥೆಯು ರಾಜ್ಯ ಸರ್ಕಾರದ ಬೆಂಬಲದೊಂದಿಗೆ ರೂಪಿತವಾದ ವಿವಿಧ ಬಡ್ಡಿ ಸಹಾಯಧನ ಸಾಲ ಯೋಜನೆಗಳಲ್ಲಿ ಮಹಿಳಾ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿದರ ಸಹಾಯಧನ ಸಾಲ ಯೋಜನೆಯಡಿ 103 ಮಹಿಳಾ ಉದ್ಯಮಿಗಳಿಗೆ 165.91 ಕೋಟಿ ರೂ. ಸಾಲ ಮಂಜೂರಾತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. +ಈ ಯೋಜನೆಯಡಿ 2024ರ ಮಾರ್ಚ್ 31ರ ಅಂತ್ಯದವರೆಗೆ ಒಟ್ಟು 1,214.39 ಕೋಟಿ ರೂ. ಸಂಚಿತ ನೆರವನ್ನು 1,460 ಮಹಿಳಾ ಉದ್ಯಮಿಗಳಿಂದ ಸ್ಥಾಪಿಸಲ್ಪಟ್ಟ ಉದ್ಯಮಗಳಿಗೆ ನೀಡಲಾಗಿದೆ. ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಘಟಕಗಳಿಗೆ ಲಭ್ಯವಿರುವ ಶೇ.5.5ರ ಬಡ್ಡಿ ಸಹಾಯಧನ ಸಾಲ ಯೋಜನೆಯಡಿ 240 ಘಟಕಗಳಿಗೆ 295.85 ಕೋಟಿ ರೂ.ಸಾಲ ಮಂಜೂರಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ. +ಹಣಕಾಸು ವರ್ಷದ ಅಂತ್ಯದವರೆಗೆ, 1,439 ಉದ್ಯಮಗಳಿಗೆೆ 1,658.03 ಕೋಟಿ ರೂ. ಸಂಚಿತ ನೆರವು ನೀಡಲಾಗಿದೆ. ಹಾಗೆಯೇ ಸದರಿ ವರ್ಷದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಲಭ್ಯವಿರುವ ಶೇ.4ರ ಬಡ್ಡಿ ಸಹಾಯಧನ ಸಾಲ ಯೋಜನೆಯಡಿ 269 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ 315.67 ಕೋಟಿ ರೂ. ಸಾಲ ಮಂಜೂರಾತಿ ಮಾಡಲಾಗಿದೆ. ಈ ಯೋಜನೆಯಡಿ ಸದರಿ ಹಣಕಾಸು ವರ್ಷದ ಅಂತ್ಯದವರೆಗೆ 2,544.51 ಕೋಟಿ ರೂ. ಸಂಚಿತ ನೆರವನ್ನು 3,993 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಂದ ಸ್ಥಾಪಿಸಲ್ಪಟ್ಟ ಉದ್ಯಮಗಳಿಗೆ ನೀಡಲಾಗಿದೆ ಎಂದು ವಿವರಿಸಿದ್ದಾರೆ. +ರಾಜ್ಯ ಸರ್ಕಾರದ ನೆರವು :2023-24ರ ಹಣಕಾಸು ವರ್ಷದಲ್ಲಿ ಕರ್ನಾಟಕ ಸರ್ಕಾರವು ಸಂಸ್ಥೆಗೆ 159.67 ಕೋಟಿ ರೂ. ಬಡ್ಡಿ ಸಹಾಯಧನ ಸಾಲ ಯೋಜನೆಗಳಿಗೆ ಪೂರಕ ನೆರವನ್ನು ಒದಗಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳು ಸ್ಥಾಪಿಸುವ ಜವಳಿ ಮತ್ತು ಕೈಮಗ್ಗ ಉದ್ಯಮಗಳಿಗೆೆ ವಿಶೇಷ ಅನುದಾನ ಯೋಜನೆಯಡಿ ಕರ್ನಾಟಕ ಸರ್ಕಾರವು ರೂ.12.75 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಅವರು ವಿವರಣೆ ನೀಡಿದ್ದಾರೆ. \ No newline at end of file diff --git a/eesanje/url_46_61_9.txt b/eesanje/url_46_61_9.txt new file mode 100644 index 0000000000000000000000000000000000000000..14b924a3cd33cfe9b00faa0e3c314468c9a51e61 --- /dev/null +++ b/eesanje/url_46_61_9.txt @@ -0,0 +1,12 @@ +ಬೆಂಗಳೂರು ಸಮಸ್ಯೆಗಳ ಬಗ್ಗೆ ಪಕ್ಷಬೇಧ ಮರೆತು ಜನಪ್ರತಿನಿಧಿಗಳ ಮಹತ್ವದ ಸಮಾಲೋಚನೆ +ಬೆಂಗಳೂರು,ಜು.27-ಬೆಂಗಳೂರು ಮಹಾನಗರದ ಸಮಸ್ಯೆಗಳು ಹಾಗೂ ಅದರ ಪರಿಹಾರಗಳ ಬಗ್ಗೆ ಪಕ್ಷಬೇಧ ಮರೆತು ಎಲ್ಲಾ ಜನಪ್ರತಿನಿಧಿಗಳು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. +ವಿಧಾನಸೌಧದಲ್ಲಿಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆದ ಸಭೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಚಿವರಾದ ಜಮೀರ್ ಅಹಮದ್ಖಾನ್, ಬಿಜೆಪಿಯ ಶಾಸಕರಾದ ಅಶ್ವತ್ಥ ನಾರಾಯಣ, ಎಸ್.ಆರ್.ವಿಶ್ವನಾಥ್, ಗೋಪಾಲಯ್ಯ, ಭೈರತಿ ಬಸವರಾಜು, ಮುನಿರತ್ನ, ರಾಮಮೂರ್ತಿ, ರವಿ ಸುಬ್ರಹಣ್ಯ, ದಾಸರಹಳ್ಳಿಯ ಮುನಿರಾಜು, ಕಾಂಗ್ರೆಸ್ನ ಬಿಡಿಎ ಅಧ್ಯಕ್ಷರೂ ಆಗಿರುವ ಎನ್.ಎ.ಹ್ಯಾರಿಸ್, ಆನೇಕಲ್ ಕ್ಷೇತ್ರದ ಶಿವಣ್ಣ, ಎ.ಸಿ.ಶ್ರೀನಿವಾಸ್, ವಿಧಾನಪರಿಷತ್ ಸದಸ್ಯ ಸುಧಾಂದಾಸ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು. +ಬ್ರ್ಯಾಂಡ್ ಬೆಂಗಳೂರು ವಿಚಾರವಾಗಿ ವಿರೋಧಪಕ್ಷಗಳ ಶಾಸಕರಲ್ಲಿ ಅಸಮಾಧಾನಗಳಿವೆ. ಇತ್ತೀಚೆಗೆ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.ಬೆಂಗಳೂರಿನ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬೆಂಗಳೂರಿನ ಶಾಸಕರ ಸಭೆ ಕರೆಯುವುದಾಗಿ ವಿಧಾನಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಅದರಂತೆ ಇಂದು ಸಭೆ ಕರೆಯಲಾಗಿತ್ತು. +ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲರೂ ಪರಸ್ಪರ ಆತೀಯತೆಯಿಂದ ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದರು. ಆರ್.ಅಶೋಕ್, ಡಿ.ಕೆ.ಶಿವಕುಮಾರ್ ಅಕ್ಕಪಕ್ಕ ಕುಳಿತು ಬೆಂಗಳೂರು ಮಹಾನಗರದ ಅಭಿವೃದ್ಧಿಯ ಕುರಿತು ಸಮಾಲೋಚನೆ ನಡೆಸಿದರು.ಬ್ರ್ಯಾಂಡ್ ಬೆಂಗಳೂರು ಎಂಬುದು ಕೇವಲ ಹೆಸರಿಗೆ ಸೀಮಿತ ಆಗಬಾರದು. ಈ ಹಿಂದೆ ಬಿಬಿಎಂಪಿಯನ್ನು ರಚನೆ ಮಾಡಿ ವಾರ್ಡ್ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಿದಾಗಲೇ ಬಿಜೆಪಿ ವಿರೋಧ ಮಾಡಿತ್ತು. ಈಗಲೂ ಹೊರವಲಯದ ಬೆಂಗಳೂರು ಯಾವುದೇ ಮೂಲಭೂತ ಸೌಲಭ್ಯವಿಲ್ಲದೆ ಸೊರಗುತ್ತಿದೆ. +ಇಂತಹ ಸಂದರ್ಭದಲ್ಲಿ ಗ್ರೇಟರ್ ಬೆಂಗಳೂರು ರಚನೆ ಮಾಡುವುದು ಅನಗತ್ಯ ಎಂದು ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಈ ಹಿಂದೆ ಬಸವರಾಜು ಬೊಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ಅನುದಾನ ನೀಡಿದ್ದರು. ಈಗ ಆರ್ಥಿಕ ಮುಗ್ಗಟ್ಟಿನ ನೆಪವೊಡ್ಡಿ ಹಣ ನೀಡುತ್ತಿಲ್ಲ. ಹೀಗಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. +ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೂ ಕನಿಷ್ಟ 25 ಕೋಟಿ ರೂ.ಗಳ ಅನುದಾನ ಒದಗಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.ಬ್ರ್ಯಾಂಡ್ ಬೆಂಗಳೂರು ಯೋಜನೆಗಾಗಿ ಸಾಕಷ್ಟು ಸಮಾಲೋಚನೆ ಹಾಗೂ ಅಧ್ಯಯನ ನಡೆಸಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕನುಗುಣವಾಗಿ ಬೆಂಗಳೂರಿನಲ್ಲಿ ಮೂಲಸೌಲಭ್ಯಗಳನ್ನು ನಿರ್ಮಿಸಬೇಕಿದೆ. ಜೊತೆಗೆ ಅಂತಹ ಸೌಲಭ್ಯಗಳನ್ನು ಕಲ್ಪಿಸಲು ಬ್ರ್ಯಾಂಡ್ ಬೆಂಗಳೂರು ಕಲ್ಪನೆಯನ್ನು ವಿನ್ಯಾಸಗೊಳಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿವರಿಸಿದರು. +ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಆಕಾಶ ಗೋಪುರ ನಿರ್ಮಾಣದ ಪ್ರಾತಕ್ಷ್ಯಿಕೆಯನ್ನು ಇದೇ ವೇಳೆ ಪ್ರದರ್ಶಿಸಲಾಯಿತು.ನಗರದ ಆಯಕಟ್ಟಿನ ಜಾಗದಲ್ಲಿ ಅತ್ಯಾಕರ್ಷಕವಾದ ಆಕಾಶ ಗೋಪುರವನ್ನು ನಿರ್ಮಿಸುವ ಪರಿಕಲ್ಪನೆ ಇದೆ. ಇದು ಪ್ರವಾಸಿ ಕ್ಷೇತ್ರವಾಗಿ ಅಭಿವೃದ್ಧಿಯಾಗಲಿದೆ. +ಭಾರತದಲ್ಲಿ ಹಲವು ಕಡೆ ವಿವಿಧ ಅತೀ ಎತ್ತರದ ನಿರ್ಮಾಣ ಯೋಜನೆಗಳು ಚಾಲ್ತಿಯಲ್ಲಿವೆ. ಮುಂಬೈನ ಓಷ್ಯನ್ ಟವರ್ನಲ್ಲಿ 331 ಮೀಟರ್, ಪೆಲಾಯಿಸ್ ರಾಯಲ್ನಲ್ಲಿ 320, ಆರಾಧ್ಯ ಅವಾನ್ ಟವರ್-1 307 ಮೀಟರ್, ಸೆಂಚುರಿ ಐಟಿ ಪಾರ್ಕ್ ಟವರ್ 300 ಮೀಟರ್, ಆರಾಧ್ಯಅವಾನ್ ಟವರ್ 295 ಮೀಟರ್ ಎತ್ತರದಲ್ಲಿ ನಿರ್ಮಿಸುವ ಪ್ರಸ್ತಾವಿತ ಯೋಜನೆಗಳಿವೆ ಎಂದು ಪ್ರಾತ್ಯಕ್ಷಿಕೆಯಲ್ಲಿ ವಿವರಿಸಲಾಗಿದೆ. +ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಆಕಾಶ ಗೋಪುರ ನಿರ್ಮಾಣದಿಂದ ನಗರದ ಆಧುನಿಕತೆಯನ್ನು ಸಂಭ್ರಮಿಸಲು ಸಾಧ್ಯವಾಗಲಿದೆ. ಇದರಿಂದ ಬೆಂಗಳೂರಿನ ಆಕರ್ಷಣೆ ಹೆಚ್ಚಾಗಿ ಪ್ರವಾಸೋದ್ಯಮ ಉತ್ತೇಜನಗೊಳ್ಳಲಿದೆ. ಆದಾಯ ಹಾಗೂ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ವಿವರಿಸಲಾಗಿದೆ. +200 ಕಿ.ಮೀ.ವರೆಗೂ ಹೆಚ್ಚಿನ ಹೊಸ ರಸ್ತೆಗಳ ನಿರ್ಮಾಣ, ಸುರಂಗ ರಸ್ತೆ, ಮೇಲು ಸೇತುವೆ, ಸಂಚಾರ ನಿರ್ವಹಣೆಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರಿನಲ್ಲಿ ಸಮೂಹ ಸಾರಿಗೆ, ಸೈಕಲ್ ಬಳಕೆಯನ್ನು ಉತ್ತೇಜಿಸುವ ಚರ್ಚೆಗಳು ನಡೆದಿವೆ.ವೈಜ್ಞಾನಿಕ ತ್ಯಾಜ್ಯ ವಿಲೇವಾರಿಯ ಮೂಲಕ ನಗರ ಸೌಂದರ್ಯೀಕರಣವನ್ನು ಹೆಚ್ಚಿಸಲು ಹಾಗೂ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಪ್ರಸ್ತಾವಿತ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗಿದೆ. +ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಕೈಗೊಳ್ಳಬೇಕಾದ ಕ್ರಮಗಳು, ಹೊರವಲಯದ ಮೂಲಸೌಕರ್ಯ ಅಭಿವೃದ್ಧಿ, ವಸತಿ ಯೋಜನೆಗಳು, ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತಿತರ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. \ No newline at end of file diff --git a/eesanje/url_46_62_1.txt b/eesanje/url_46_62_1.txt new file mode 100644 index 0000000000000000000000000000000000000000..4023cdb075111d2d706dda4004701b4d6a47d664 --- /dev/null +++ b/eesanje/url_46_62_1.txt @@ -0,0 +1,8 @@ +ವಾಲ್ಮೀಕಿ ನಿಗಮ ಹಗರಣದ ಪ್ರಮುಖ ಆರೋಪಿ ಮನೆಯಲ್ಲಿ 10 ಕೆಜಿ ಚಿನ್ನದ ಬಿಸ್ಕೆತ್ ಪತ್ತೆ..! +ಬೆಂಗಳೂರು,ಜು.27– ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಹಾಗೂ ಎಸ್‌‍ಐಟಿ ತನಿಖಾ ತಂಡವು ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಮನೆಯಲ್ಲಿ ಅಡಗಿಸಿಟ್ಟಿದ್ದ ಬರೋಬ್ಬರಿ 10 ಕೆಜಿ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ. +ಅಲ್ಲದೆ ಹೈದ್ರಾಬಾದ್‌ನ ಫ್ಲಾಟ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.ಆರೋಪಿ ಸತ್ಯನಾರಾಯಣವರ್ಮಾ ವಾಲೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ 15 ಕೆಜಿ ಚಿನ್ನದ ಬಿಸ್ಕೆಟ್‌ಗಳ ಬಗ್ಗೆ ಬಾಯ್ಸಿಟ್ಟಿದ್ದು, ಅದರಂತೆ ಹೈದ್ರಾಬಾದ್‌ನ ತ್ನ ಫ್ಲಾಟ್‌ನಲ್ಲಿ 10 ಕೆಜಿ ಚಿನ್ನದ ಗಟ್ಟಿ ಇಟ್ಟಿರುವುದಾಗಿ ಹೇಳಿದ್ದರು. +ಇದೀಗ ಎಸ್‌‍ಐಟಿ ತನಿಖಾ ತಂಡ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದು ಉಳಿದ 5 ಕೆಜಿ ಚಿನ್ನದ ಬಿಸ್ಕೆಟ್‌ಗಾಗಿ ಶೋಧ ನಡೆಸುತ್ತಿದ್ದಾರೆ.ಒಟ್ಟಾರೆ ವಾಲೀಕಿ ನಿಗಮದ ಹಣದಿಂದ ಸತ್ಯನಾರಾಯಣ ವರ್ಮಾ ಬರೋಬ್ಬರಿ 35 ಕೆಜಿ ಚಿನ್ನದ ಬಿಸ್ಕೆಟ್‌ ಖರೀದಿ ಮಾಡಿರುವ ಮಾಹಿತಿಯನ್ನು ತನಿಖಾ ತಂಡ ಕಲೆ ಹಾಕಿವೆ. +ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸತ್ಯನಾರಾಯಣ ವರ್ಮಾ ನಾಪತ್ತೆಯಾಗಿದ್ದರು. ಎಸ್‌‍ಐಟಿ ತಂಡ ಸತತ ಒಂದು ವಾರಗಳ ಕಾಲ ಹುಡುಕಾಟ ನಡೆಸಿದ್ದರಾದರೂ ಪತ್ತೆಯಾಗಿರಲಿಲ್ಲ. +ತದನಂತರ ವರ್ಮಾ ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹೈದ್ರಾಬಾದ್‌ನಲ್ಲಿರುವುದು ಗೊತ್ತಾಯಿತು. ತಕ್ಷಣ ತನಿಖಾ ತಂಡ ಮಾಸ್ಟರ್‌ ಪ್ಲಾನ್‌ ಮಾಡಿ ಹೈದ್ರಾಬಾದ್‌ಗೆ ತೆರಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿ, ನಗರಕ್ಕೆ ಕರೆತಂದು ತೀವ್ರ ವಿಚಾರಣೆಗೊಳಪಡಿಸಿದಾಗ ಹಣ ಹಾಗೂ ಚಿನ್ನದ ಬಗ್ಗೆ ತಿಳಿಸಿದ್ದರು. +ಸತ್ಯನಾರಾಯಣ ವರ್ಮಾ ಬಂಧನಕ್ಕೊಳಗಾಗುವ ವೇಳೆಗಾಗಲೇ ಹಣ, ಚಿನ್ನವನ್ನು ಬೇರೆಬೇರೆ ಕಡೆಗಳಲ್ಲಿ ಸಾಗಿಸಿದ್ದರು.ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹಣ ಹಾಗೂ ಫ್ಲಾಟ್‌ ಖರೀದಿ ಬಗ್ಗೆ ಸತ್ಯನಾರಾಯಣ ವರ್ಮಾ ಬಾಯ್ಬಿಟ್ಟಿದ್ದರು. +ತದನಂತರದಲ್ಲಿ ನ್ಯಾಯಾಲಯದಿಂದ ಸರ್ಚ್‌ ವಾರೆಂಟ್‌ ಪಡೆದು ಎಸ್‌‍ಐಟಿ ತಂಡ ಹೈದ್ರಾಬಾದ್‌ಗೆ ತೆರಳಿ ವರ್ಮಾಗೆ ಸೇರಿದ ಫ್ಲಾಟ್‌ ಶೋಧ ನಡೆಸಿದಾಗ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 8 ಕೋಟಿ ಹಣವನ್ನು ಜಪ್ತಿ ಮಾಡಿದ್ದಾರೆ. ಹೈದ್ರಾಬಾದ್‌ನ ಸೀಮಾಪೇಟೆ, ಮೀಯಾಪುರದಲ್ಲಿ ವಾಸವಿ ಬಿಲ್ಡರ್ಸ್‌ನಲ್ಲಿ ತಲಾ 2 ಫ್ಲಾಟ್‌ ಸೇರಿ ಬರೋಬ್ಬರಿ 11 ಫ್ಲಾಟ್‌ ಖರೀದಿಸಿರುವ ಬಗ್ಗೆ ಎಸ್‌‍ಐಟಿಗೆ ಮಾಹಿತಿ ಲಭ್ಯವಾಗಿದೆ. \ No newline at end of file diff --git a/eesanje/url_46_62_10.txt b/eesanje/url_46_62_10.txt new file mode 100644 index 0000000000000000000000000000000000000000..9f6b20ac25ac2655a377d14ced4ed8f6a9e70c47 --- /dev/null +++ b/eesanje/url_46_62_10.txt @@ -0,0 +1,8 @@ +ಸಿಎಂ ವಿರುದ್ಧ ದೂರು ದಾಖಲಿಸಲು ಅನುಮತಿಗೆ ರಾಜ್ಯಪಾಲರ ಬಳಿ ಮನವಿ +ಬೆಂಗಳೂರು,ಜು.26-ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಇದೀಗ ರಾಜಭವನಕ್ಕೂ ಕಾಲಿಟ್ಟಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಿಂ ಅವರು ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದಾರೆ.ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ದಾಖಲೆಗಳ ವಿವರಗಳನ್ನು ನೀಡಿದ್ದಾರೆ. +ಸುಮಾರು 2000ಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ನೀಡಿರುವ ಅಬ್ರಾಹಿಂ ಅವರು, ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಪುತ್ರ ಎಸ್‌‍.ಯತೀಂದ್ರ, ಮುಡಾ ಆಯುಕ್ತ ನಟೇಶ್‌ ಹಾಗೂ ಹಿಂದಿನ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದಾರೆ. +ಸೆಕ್ಷನ್‌ 218, ಭಾರತೀಯ ನಾಗರಿಕ ಸುರಕ್ಷಾ ಸಮಿತಿ, ಸೆಕ್ಷನ್‌ 17ಎ, 19 ಮತ್ತು 1988ರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಲು ಅಬ್ರಾಹಿಂ ಮನವಿ ಮಾಡಿದ್ದಾರೆ. ಕಳೆದ ಜು.18ರಂದು ಮೈಸೂರಿನ ವಿಜಯನಗರ ಪೊಲೀಸ್‌‍ ಠಾಣೆಯಲ್ಲಿ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಿಸಿದ್ದರೂ ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿನಲ್ಲಿ ಆರೋಪಿಸಲಾಗಿದೆ. +ಬದಲಿ ನಿವೇಶನ ಪಡೆದಿದ್ದರಿಂದ ಸರ್ಕಾರದ ಬೊಕ್ಕಸಕ್ಕೆ ಒಟ್ಟು 45 ಕೋಟಿ ನಷ್ಟವಾಗಿದೆ. ಉನ್ನತ ಸ್ಥಾನದಲ್ಲಿರುವ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ದೂರು ದಾಖಲಿಸಲು ಅನುಮತಿ ನೀಡಬೇಕು ಎಂಬುದಾಗಿಯೂ ಕೋರಿಕೊಳ್ಳಲಾಗಿದೆ. +ಈ ಹಿಂದೆ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಲು ಅಂದು ವಕೀಲರಾದ ಕೆ.ಎನ್‌.ಬಾಲರಾಜ್‌ ಹಾಗೂ ಸಿರಾಜುದ್ದೀನ್‌ ಪಾಷ ಅವರು ಅಂದಿನ ರಾಜ್ಯಪಾಲ ಹಂಸರಾಜ್‌ ಭಾರದಾಜ್‌ ಅವರು ದೂರು ದಾಖಲಿಸಲು ಅನುಮತಿ ನೀಡಿದ್ದರು ಎಂಬುದನ್ನು ಅಬ್ರಾಹಿಂ ಪ್ರಸ್ತಾಪಿಸಿದ್ದಾರೆ. +ಭೂಮಿ ವಶಪಡಿಸಿಕೊಂಡ ಜಾಗದಲ್ಲಿ, ಅಥವಾ ಸಮಾನಾಂತರ ಜಾಗದಲ್ಲಿ ಬದಲಿ ಭೂಮಿ ನೀಡಬೇಕು ಎಂಬುದು ಕಾನೂನಿನಲ್ಲಿದೆ. ಆದರೆ ಸಿಎಂ ಪತ್ನಿಗೆ ಭೂಸ್ವಾಧೀನವಾದ ಜಾಗ ಬಿಟ್ಟು, ವಿಜಯನಗರದಲ್ಲಿ ಭೂಮಿ ಕೊಡಲಾಗಿದೆ. 50:50 ಅನುಪಾತ ನಿಯಮವನ್ನು ದುರುಪಯೋಗಪಡಿಸಿಕೊಂಡು, 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_46_62_11.txt b/eesanje/url_46_62_11.txt new file mode 100644 index 0000000000000000000000000000000000000000..53ee42f59ec95980ffee87682694f6267ab8a6f5 --- /dev/null +++ b/eesanje/url_46_62_11.txt @@ -0,0 +1,8 @@ +ಅವಧಿಗೂ ಮುನ್ನವೇ ಅಧಿವೇಶನ ಮುಕ್ತಾಯಗೊಂಡಿದ್ದು ಬೇಸರ ತಂದಿದೆ : ಸ್ಪೀಕರ್ ಖಾದರ್ +ಬೆಂಗಳೂರು,ಜು.26-ವಿರೋಧ ಪಕ್ಷಗಳ ಧರಣಿ ನಡುವೆ ಸರ್ಕಾರಿ ಕಲಾಪಗಳನ್ನು ನಡೆಸುವುದು ಅನಿವಾರ್ಯವಾಗಿತ್ತು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಇಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ನಿಗದಿತ ಅವಧಿಗಿಂತ ಒಂದು ದಿನ ಮುನ್ನವೇ ಅಧಿವೇಶನ ಮುಕ್ತಾಯಗೊಂಡಿದ್ದು ಬೇಸರ ತಂದಿದೆ ಎಂದರು. +ಎಂಟು ದಿನಗಳ ಕಾಲ 36 ಗಂಟೆ 51 ನಿಮಿಷ ಕಾರ್ಯ ಕಲಾಪ ನಡೆಸಲಾಗಿದೆ. ದೇಶದ ಯಾವುದೇ ವಿಧಾನಸಭೆಯಲ್ಲಿ ಅಳವಡಿಸದ ಎಐ ಕ್ಯಾಮೆರಾ ಅಳವಡಿಸಲಾಗಿದ್ದು, ಶಾಸಕರು ಎಷ್ಟು ಬಾರಿ ಬರುತ್ತಾರೆ, ಎಷ್ಟು ಬಾರಿ ಹೊರಗೆ ಹೋಗುತ್ತಾರೆ, ಎಷ್ಟು ಅವಧಿ ಇದ್ದರು ಎಂಬುದು ಗೊತ್ತಾಗಲಿದೆ. +ನಿಲುವಳಿ ಸೂಚನೆಯಡಿ ಚರ್ಚಿತವಾಗುವ ವಿಚಾರವು ಇತ್ತೀಚಿನ ಘಟನೆಯಾಗಿರಬೇಕು, ಸಾರ್ವಜನಿಕ ಮಹತ್ವ ಹೊಂದಿರಬೇಕು, ನ್ಯಾಯಾಂಗ ಅಥವಾ ಅರೆ ನ್ಯಾಯಾಂಗದಿಂದ ತನಿಖೆ ನಡೆಯುತ್ತಿರಬಾರದು. ಆದರೆ ಮುಡಾ ಹಗರಣ ವಿಚಾರ ಈಗಾಗಲೇ ನ್ಯಾಯಾಂಗ ವಿಚಾರಣೆಗೆ ವಹಿಸಿರುವುದರಿಂದ ಕೆಟ್ಟ ಸಂಪ್ರದಾಯಕ್ಕೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡಲಿಲ್ಲ. ಸಭಾಧ್ಯಕ್ಷರು ನೀಡಿದ ರೂಲಿಂಗ್‌ ಸರಿಯಾಗಿದೆ ಎಂಬುದು ಮುಂದೆ ವಿರೋಧ ಪಕ್ಷಗಳಿಗೂ ಮನವರಿಕೆಯಾಗಲಿದೆ. ಅಶಿಸ್ತಿನ ವರ್ತನೆ ಕಂಡಾಗ ಕಠಿಣ ಕ್ರಮ ಕೈಗೊಳ್ಳುವುದು ಕಷ್ಟವಲ್ಲ. ಕಲಾಪ ಸುಗಮವಾಗಿ ನಡೆಯಬೇಕು ಎಂಬ ಕಾರಣಕ್ಕೆ ಸಹಿಸಿಕೊಂಡು ಅಧಿವೇಶನ ನಡೆಸಲಾಯಿತು ಎಂದರು. +ನೀಟ್‌ ಮತ್ತು ಅತಿವೃಷ್ಟಿ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಬೇಕಿತ್ತು. ಅದಾಗಲಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶೇ.85ರಷ್ಟು ಹಾಜರಾತಿ ಇತ್ತು. ವಿವಿಧ ಸ್ಥಾಯಿ ಸಮಿತಿಗಳ ಅಧಿಕಾರ ಆ.8ಕ್ಕೆ ಮುಗಿಯಲಿದ್ದು, ಮರುನೇಮಕಕ್ಕೆ ಸದನ ಸಭಾಧ್ಯಕ್ಷರಿಗೆ ಅಧಿಕಾರ ಕೊಟ್ಟಿದೆ ಎಂದರು. +ಈ ಅಧಿವೇಶನದಲ್ಲಿ 23 ಅಧಿಸೂಚನೆಗಳು, 146 ವಾರ್ಷಿಕ ವರದಿಗಳು, 160 ಲೆಕ್ಕ ಪರಿಶೋಕಾ ವರದಿಗಳು, 5 ಅನುಪಾಲನ ವರದಿಗಳು, 4 ಅನುಸರಣಾವರದಿ ಹಾಗೂ 1 ಲೆಕ್ಕ ತಪಸಣಾ ವರದಿ ಮಂಡಿಸಲಾಗಿದೆ. ಮಂಡಿಸಲಾದ 13 ವಿಧೇಯಕಗಳಲ್ಲಿ 12 ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ಸದನದಲ್ಲಿ ನಡೆದ ಕಾರ್ಯ ಕಲಾಪಗಳ ವರದಿಯನ್ನು ನೀಡಿದರು. +ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ವಿಧಾನಪರಿಷತ್‌ನಲ್ಲಿ 8 ದಿನಗಳ ಕಾಲ 37 ಗಂಟೆ, 30 ನಿಮಿಷ ಕಲಾಪ ನಡೆಸಲಾಗಿದೆ. ಒಟ್ಟು 135 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ ಎಂದರು. ನಾಲ್ಕು ಅಧಿಕೃತ ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ಶೂನ್ಯ ವೇಳೆಯ 62 ಸೂಚನೆಗಳ ಪೈಕಿ 39 ಸೂಚನೆಗಳಿಗೆ ಉತ್ತರವನ್ನು ಮಂಡಿಸಲಾಗಿದೆ ಎಂದು ಮಾಹಿತಿ ನೀಡಿದರು. +ಸುದ್ದಿಗೋಷ್ಠಿಯಲ್ಲಿ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ಉಭಯ ಸದನಗಳ ಕಾರ್ಯದರ್ಶಿಗಳು, ಅಧಿಕಾರಿಗಲು ಉಪಸ್ಥಿತರಿದ್ದರು. \ No newline at end of file diff --git a/eesanje/url_46_62_12.txt b/eesanje/url_46_62_12.txt new file mode 100644 index 0000000000000000000000000000000000000000..db51aa101315d82e59d242a735c2a4d6afe15368 --- /dev/null +++ b/eesanje/url_46_62_12.txt @@ -0,0 +1,5 @@ +ರಾಜ್ಯಕ್ಕೆ ಅನ್ಯಾಯವಾದಾಗ ಬಿಜೆಪಿ-ಜೆಡಿಎಸ್‌‍ ಸಂಸದರೇಕೆ ಪ್ರತಿಭಟಿಸಲಿಲ್ಲ..? : ಸಿಎಂ ಪ್ರಶ್ನೆ +ಬೆಂಗಳೂರು,ಜು.26-ರಾಜ್ಯಕ್ಕೆ ಅನ್ಯಾಯವಾಗಿರುವ ಬಗ್ಗೆ ಬಿಜೆಪಿ-ಜೆಡಿಎಸ್‌‍ನ ಸಂಸದರು, ರಾಜ್ಯಸಭಾ ಸದಸ್ಯರು ಸಂಸತ್‌ನಲ್ಲಿ ಎಂದಾದರೂ ಧ್ವನಿಯೆತ್ತಿದ್ದಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. +ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಸಂಸತ್‌ನಲ್ಲಿ ಜೆಡಿಎಸ್‌‍-ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿರುವುದಕ್ಕೆ ತಿರುಗೇಟು ನೀಡಿದ ಮುಖ್ಯಮಂತ್ರಿಯವರು, ರಾಜ್ಯಕ್ಕೆ ನಿರಂತರವಾಗಿ ಕೇಂದ್ರದಿಂದ ಅನ್ಯಾಯವಾಗುತ್ತಿದೆ. ತೆರಿಗೆ ಹಂಚಿಕೆಯಿಂದ ಆರಂಭಗೊಂಡು ಮೊನ್ನೆ ಮಂಡನೆಯಾದ ಬಜೆಟ್‌ನಲ್ಲೂ ಅನ್ಯಾಯ ಮುಂದುವರೆದಿದೆ. ಇದರ ಬಗ್ಗೆ ಜೆಡಿಎಸ್‌‍-ಬಿಜೆಪಿಯ ಸಂಸದರು ಧ್ವನಿಯನ್ನೇ ಎತ್ತಿಲ್ಲ ಎಂದು ಆಕ್ಷೇಪಿಸಿದರು. +ಸಂಸತ್‌ನ ಒಳಗೆ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್‌‍ನ ಸದಸ್ಯರು ಪ್ರತಿಭಟನೆ ನಡೆಸಿರುವುದು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌‍ ಸರ್ಕಾರದ ಹೆಸರಿಗೆ ಮಸಿ ಬಳಿಯುವ ರಾಜಕೀಯ ಹುನ್ನಾರ ಎಂದು ಸ್ಪಷ್ಟವಾಗಿ ತಿಳಿದುಬರುತ್ತದೆ. +ಕಳೆದ ಲೋಕಸಭೆ ಅವಧಿಯಲ್ಲಿ ರಾಜ್ಯದಿಂದ 25 ಜನ ಸಂಸದರು ಗೆದ್ದಿದ್ದರು. ಎಂದಾದರೂ ರಾಜ್ಯಕ್ಕಾಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ನಡೆಸಿದ್ದಾರೆಯೇ?, ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಸ್ತಾಪಿಸಿದ್ದಾರೆಯೇ?, ಮುಡಾ ಪ್ರಕರಣವನ್ನು ಪ್ರಸ್ತಾಪ ಮಾಡುತ್ತಾರೆ. ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದ್ದರೂ ಪ್ರಸ್ತಾಪ ಮಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_62_2.txt b/eesanje/url_46_62_2.txt new file mode 100644 index 0000000000000000000000000000000000000000..b061e4454ce8ae36cf4e59b1032e4d54f39ba0cf --- /dev/null +++ b/eesanje/url_46_62_2.txt @@ -0,0 +1,4 @@ +ಚಾರ್ಮುಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಟ್ರಾಫಿಕ್‌ ಜಾಮ್‌ +ದಕ್ಷಿಣ ಕನ್ನಡ,ಜು.27-ಮಲೆನಾಡು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಚಾರ್ಮುಡಿಘಾಟ್‌ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ರಸ್ತೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಸಂಪರ್ಕ ಕಡಿತಗೊಂಡು ಚಾರ್ಮುಡಿಘಾಟ್‌ನಿಂದ ಕೊಟ್ಟಿಗೆಹಾರದವರೆಗೆ ವಾಹನಗಳು ನಿಂತಲ್ಲೇ ನಿಂತಿದ್ದವು. +ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ಪೊಲೀಸರು ವಾಹನಗಳನ್ನು ತಡೆದು ವಾಪಸ್‌‍ ಕಳುಹಿಸಿದರು.ಅತ್ತ ಉಜರಿ ಬಳಿ ಚಾರ್ಮುಡಿಘಾಟ್‌ ಪ್ರವೇಶ ನಿರ್ಬಂಧಿಸಿ ವಾಹನಗಳನ್ನು ಶಿರಾಡಿಘಾಟ್‌ ಬಳಿ ತೆರಳುವಂತೆ ಸೂಚಿಸಲಾಯಿತು. +ಪ್ರತಿಬಾರಿ ಮಳೆ ಬಂದಾಗಲೂ ಚಾರ್ಮುಡಿಘಾಟ್‌ನಲ್ಲಿ ಗುಡ್ಡ ಕುಸಿಯುವುದು, ರಸ್ತೆಗಳ ಮೇಲೆ ಬಂಡೆಗಳು ಉರುಳುವುದು ಸರ್ವೆಸಾಮಾನ್ಯವಾಗಿದೆ.ಪ್ರತಿಬಾರಿಯೂ ಕೂಡ ವಾಹನ ಸಂಚಾರಕ್ಕೆ ಅಡಚಣೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಮಳೆಗಾಲದಲ್ಲಿ ಆಗುವ ಈ ತೊಂದರೆ ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾಗಿದೆ. \ No newline at end of file diff --git a/eesanje/url_46_62_3.txt b/eesanje/url_46_62_3.txt new file mode 100644 index 0000000000000000000000000000000000000000..9f286dcd82e6769da9c225fd405aff1e06cf081d --- /dev/null +++ b/eesanje/url_46_62_3.txt @@ -0,0 +1,6 @@ +ರಾಮನಗರ ಹೆಸರು ಬದಲಿಸಿದವರು ಸರ್ವನಾಶ ಆಗುತ್ತಾರೆ : ಹೆಚ್ಡಿಕೆ ಕಿಡಿ +ನವದೆಹಲಿ, ಜು. 27-ರಾಮನಗರ ಜಿಲ್ಲೆಗೆ ರಾಮನ ಹೆಸರು ತೆಗೆಯಲು ಆಗಲ್ಲ. ಈ ಭೂಮಿ ಇರುವ ತನಕ ರಾಮನಗರ ಹೆಸರನ್ನು ತೆಗೆಯಲು ಸಾಧ್ಯವಿಲ್ಲ. ಒಂದು ವೇಳೆ ತಮ್ಮ ಸ್ವಾರ್ಥಕ್ಕಾಗಿ ಹೆಸರು ಬದಲಾವಣೆ ಮಾಡಿದರೆ, ಆ ಕೃತ್ಯ ಎಸಗಿದವರು ಸರ್ವನಾಶ ಆಗುತ್ತಾರೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರ ಜಿಲ್ಲೆಯ ಹೆಸರನ್ನು ತೆಗೆದು ಬೆಂಗಳೂರು ದಕ್ಷಿಣ ಎಂದು ಮಾಡುವ ಬಗ್ಗೆ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕಟುವಾಗಿ ಟೀಕಿಸಿದ್ದಾರೆ. +ಜಿಲ್ಲೆ ರಚನೆ ಮಾಡಿ ರಾಮನಗರ ಎಂದು ಹೆಸರಿಡುವಾಗ, ವಿಧಾನಸಭೆ ಕ್ಷೇತ್ರಕ್ಕೆ ರಾಮನಗರ ಎಂದು ಹೆಸರು ಇಡುವಾಗ ಯಾವುದೇ ಮಾತು ಆಡಲೇ ಇಲ್ಲ. ತಕರಾರು ಮಾಡಲಿಲ್ಲ. ಈಗ ಸ್ವಾರ್ಥಕ್ಕಾಗಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ರಾಜ್ಯ ಸರ್ಕಾರ ಮೊದಲು ಕಾನೂನು ವ್ಯವಸ್ಥೆ ಸರಿ ಮಾಡಲಿ. ರಾಮನಗರ ಎಷ್ಟು ಅಭಿವೃದ್ಧಿ ಆಗಿದೆ ಅನ್ನುವುದನ್ನು ನೋಡಲಿ. ಹೆಸರು ಬದಲಾವಣೆಯಿಂದ ಭೂಮಿಗೆ ಬೆಲೆ ಬರಲ್ಲ. ಹೆಸರು ಬದಲಾಯಿಸಿದರೆ ಅವರ ಪತನ ಶುರುವಾಯಿತು ಎಂದೇ ಲೆಕ್ಕ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. +2028 ಅಥವಾ ಅದರೊಳಗೆಯೇ ಆ ಜಿಲ್ಲೆಗೆ ರಾಮನಗರ ಹೆಸರು ಮತ್ತೆ ಬರುತ್ತದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ರಾಜ್ಯದ ಮುಂದಿನ ರಾಜಕೀಯ ಭವಿಷ್ಯವನ್ನು ಸೂಚ್ಯವಾಗಿ ನುಡಿದ್ದಾರೆ. \ No newline at end of file diff --git a/eesanje/url_46_62_4.txt b/eesanje/url_46_62_4.txt new file mode 100644 index 0000000000000000000000000000000000000000..14ce05983b903904c5a69a6e8106332a378a86d3 --- /dev/null +++ b/eesanje/url_46_62_4.txt @@ -0,0 +1,10 @@ +ಮಳೆ ಆರ್ಭಟಕ್ಕೆ ಕಂಗಾಲಾದ ಅರ್ಧ ಕರ್ನಾಟಕ, ಇಲ್ಲಿದೆ ಅವಾಂತರಗಳ ವಿವರ +ಬೆಳಗಾವಿ/ಉತ್ತರಕನ್ನಡ,ಜು.27-ಮಳೆ…ಮಳೆ…ಮಳೆ… ಕಳೆದ ಹತ್ತು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಅರ್ಧರಾಜ್ಯ ಅಕ್ಷರಶಃ ನಲುಗಿ ಹೋಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜಲಾಶಯಗಳ ಮೂಲಕ ಭಾರಿ ಪ್ರಮಾಣದಲ್ಲಿ ನದಿಗಳಿಗೆ ನೀರನ್ನು ಬಿಡುಗಡೆಗೊಳಿಸುತ್ತಿರುವುದರಿಂದ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೊಲ, ಗದ್ದೆಗಳು ಜಲಾವೃತಗೊಂಡಿವೆ. ಹಲವು ಪಟ್ಟಣ ಪ್ರದೇಶ, ಗ್ರಾಮಗಳಿಗೆ ನೀರು ಹರಿದು ಜನಜೀವನ ಅಸ್ತವ್ಯಸ್ಥವಾಗಿದೆ. +ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ :ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಡಕುಮೇರಿ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದ್ದು, ನಿನ್ನೆ ಸಂಜೆಯಿಂದಲೇ ಬೆಂಗಳೂರು-ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗೂ ಗೂಡ್‌್ಸ ರೈಲು ಸಂಚಾರ ರದ್ದುಗೊಳಿಸಲಾಗಿತ್ತು. ಮಣ್ಣು ತೆರವು ಹಾಗೂ ಹಳಿ ದುರಸ್ಥಿ ಕಾರ್ಯಾಚರಣೆ ನಡೆಸಲಾಗಿದೆ. ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಪರ್ಯಾಯ ವ್ಯವಸ್ಥೆ ಮಾಡಿ ಬಸ್‌‍ ಮೂಲಕ ಕಳುಹಿಸಿಕೊಡಲಾಗಿದೆ. +ಚಾರ್ಮುಡಿಯಲ್ಲಿ ಸಂಚಾರ ಸ್ಥಗಿತ :ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಚಾರ್ಮುಡಿಘಾಟ್‌ನ ಹತ್ತನೇ ತಿರುವಿನಲ್ಲಿ ನಿನ್ನೆ ರಾತ್ರಿ ಗುಡ್ಡ ಕುಸಿದಿದ್ದು, ಕೊಟ್ಟಿಗೆಹಾರದವರೆಗೆ ಟ್ರಾಫಿಕ್‌ ಜಾಂ ಆಗಿತ್ತು. ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ವಾಹನಗಳನ್ನು ತಡೆದು ಪೊಲೀಸರು ವಾಪಸ್‌‍ ಕಳುಹಿಸಿದರು.ಅತ್ತ ಉಜರಿ ಬಳಿಯೂ ಚಾರ್ಮುಡಿ ಘಾಟ್‌ ಪ್ರವೇಶ ನಿರ್ಬಂಧಿಸಲಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗಿದೆ. +ಬೆಳಗಾವಿಯಲ್ಲಿ ಜನಜೀವನ ಅಸ್ತವ್ಯಸ್ಥ :ಬೆಳಗಾವಿ ಜಿಲ್ಲೆಯಲ್ಲಿ 7 ನದಿಗಳು ಉಕ್ಕಿ ಹರಿದು ಸುಮಾರು 182 ಗ್ರಾಮಗಳು ನೀರಿನಿಂದ ಆವೃತಿಯಾಗಿವೆ. ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ನೀರು ನುಗ್ಗಿ ಬೆಳೆ ಹಾನಿ ಸಂಭವಿಸಿದೆ. ಕೃಷ್ಣ, ದೂದ್‌ಗಂಗಾ, ವೇದ್‌ಗಂಗಾ, ಘಟಪ್ರಭಾ, ಮಲಪ್ರಭಾ, ತುಂಗಭದ್ರಾ ನದಿಗಳ ಅಬ್ಬರಕ್ಕೆ 50ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ. +ಕಾವೇರಿಯ ಅಬ್ಬರ, ಮುಳುಗಿದ ಸ್ನಾನಘಟ್ಟ :ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಕೆಆರ್‌ಎಸ್‌‍ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಹರಿಯಬಿಟ್ಟಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಬ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ. ಸ್ನಾನಘಟ್ಟ ದೇವಸ್ಥಾನದ ಮುಂಭಾಗ ನವಗ್ರಹ, ಅರಳಿಕಟ್ಟೆ, ಶಿವನ ದೇಗುಲಗಳು ಮುಳುಗಡೆಯಾಗಿವೆ. ಭಕ್ತರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶ್ರೀರಂಗಪಟ್ಟಣದ ಗೋಸಾಯ್‌ ಘಾಟ್‌ ಮುಳುಗಡೆಯಾಗಿದ್ದು, ಪಿಂಡಪ್ರಧಾನ, ಹೋಮ-ಹವನ, ಪೂಜಾಕೈಂಕರ್ಯಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಿನಿಮಾ ಚಿತ್ರೀಕರಣಕ್ಕೂ ನಿಷೇಧ ಹೇರಲಾಗಿದೆ. +ಮಲೆನಾಡಿನಲ್ಲಿ ನಿಲ್ಲದ ಮಳೆಯ ಅಬ್ಬರ :ಮಲೆನಾಡಿನ ಚಿಕ್ಕಮಗಳೂರಿನಲ್ಲೂ ಅಬ್ಬರದ ಮಳೆಯಾಗುತ್ತಿದ್ದು, ಜಿಲ್ಲೆಯ ಕಡೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮದಗದ ಕೆರೆ ಕೋಡಿ ಬಿದ್ದಿದೆ. ಕಳೆದ ಎರಡು ವಾರಗಳಿಂದ ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ಕೆರೆ ತುಂಬಿ ಕೋಡಿ ಬಿದ್ದಿದ್ದು, ಸುತ್ತಮುತ್ತಲ ಹಳ್ಳಿಗಳ ರೈತರು ಹಾಗೂ ಜನರ ಸಂಭ್ರಮಕ್ಕೆ ಕಾರಣವಾಗಿದೆ. +ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಮುಂದುವರೆದಿದೆ. ನಾಡಿಗೆ ವಿದ್ಯುತ್‌ ನೀಡುವ ಲಿಂಗನಮಕ್ಕಿ ಜಲಾಶಯ 1804 ಅಡಿ ತಲುಪಿದೆ. ಕಳೆದ ಎರಡು ವರ್ಷಗಳಲ್ಲಿ ಮಳೆಯ ಕೊರತೆಯಿಂದ ಜಲಾಶಯದಲ್ಲಿ ನಿರೀಕ್ಷಿಸಿದ ಮಟ್ಟದಲ್ಲಿ ನೀರು ಭರ್ತಿಯಾಗಿರಲಿಲ್ಲ. ಈ ಬಾರಿ ಉತ್ತಮ ಬೆಳೆಯಾಗಿದ್ದು, 1800 ಅಡಿ ದಾಟಿದೆ. +ಜಲಾಶಯ ತುಂಬಿದರೆ ನೀರನ್ನು ಹೊರಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಂಗಾಭದ್ರಾ ಜಲಾಶಯಕ್ಕೂ ಹೆಚ್ಚಿನ ಒಳಹರಿವಿದ್ದು, ತುಂಗಾಭದ್ರಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್‌ ಮಿಶ್ರಾ ತಿಳಿಸಿದ್ದಾರೆ. +ಜಿಲ್ಲೆಯ ಕಂಪ್ಲಿ, ಶಿರಗುಪ್ಪ ತಾಲ್ಲೂಕಿನ ನದಿ ಗ್ರಾಮದ ಗ್ರಾಮಸ್ಥರು ನದಿಪಾತ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ. ಹಲವೆಡೆ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಊಟ, ವಸತಿ ಸೇರಿದಂತೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನೂಡಲ್‌ ಅಧಿಕಾರಿಗಳನ್ನು ನೇಮಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. \ No newline at end of file diff --git a/eesanje/url_46_62_5.txt b/eesanje/url_46_62_5.txt new file mode 100644 index 0000000000000000000000000000000000000000..bfd2120975dab7bce02e3d909f49e46a7c18065a --- /dev/null +++ b/eesanje/url_46_62_5.txt @@ -0,0 +1,9 @@ +ಸಿದ್ದರಾಮಯ್ಯರವರ ಕ್ಲೀನ್‌ ಇಮೇಜ್‌ಗೆ ಧಕ್ಕೆ ತರಲು ಮುಡಾ ಆರೋಪ : ಸಚಿವ ರಾಜಣ್ಣ +ತುಮಕೂರು,ಜು.27-ಸಿದ್ದರಾಮಯ್ಯರವರ ಮೇಲೆ ಮಾಡುವ ಆರೋಪ ಅಹಿಂದ ವರ್ಗಗಳ ಮೇಲೆ ಮಾಡುವ ಆರೋಪ, ಮುಡಾದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಸೈಟು ಪಡೆದವರೇ ಇಂದು ಆರೋಪ ಮಾಡುತ್ತಿರುವುದು ಸಾಧುವಲ್ಲ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ. +ತಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಯಡಿಯೂರಪ್ಪ ನವರ ಕಾಲದಲ್ಲಿ ಮುಡಾದಲ್ಲಿ ಏನು ಆಗಿದೆ? ಆರೋಪ ಮಾಡುವವರೇ ಮುಡಾದ ಲನುಭವಿಗಳು ಸುಳ್ಳು ದಾಖಲಾತಿ ನೀಡಿ ಸೈಟು ಪಡೆದವರೆ ಇಂದು ಪ್ರಶ್ನೆ ಮಾಡುವುದು ಸಾದುವಲ್ಲ ಎಂದು ನುಡಿದರು. +ಸಿದ್ದರಾಮಯ್ಯನವರ ಕ್ಲೀನ್‌ ಇಮೇಜ್‌ಗೆ ಧಕ್ಕೆ ತರುವ ಯೋಜಿತ ವಾದ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್‌‍ನಲ್ಲಿ ಹಿಂದುಳಿದ ವರ್ಗದವರು ಮುಖ್ಯಮಂತ್ರಿಗಳು ಆದಾಗ ಅವರನ್ನು ಕಳಂಕಿತರು ಎಂದು ಹೇಳುವ ಇತಿಹಾಸವನ್ನು ಮುಂದುವರೆದ ಜನಾಂಗದವರು ಮಾಡುತ್ತಿರುವುದು ಹೀನ ಕೃತ್ಯ ಎಂದಿದ್ದಾರೆ. +ಬಿಜೆಪಿಯವರು ಮುಡಾ ಪ್ರಕರಣ ಮುಂದಿಟ್ಟು ಕೊಂಡು ಮೈಸೂರು ವರೆಗೆ ರ್ಯಾಲಿ ಮಾಡುತ್ತೇವೆ ಎಂದಿದ್ದಾರೆ. ಅವರು ಪ್ರತಿಭಟನಾ ರ್ಯಾಲಿ ಮಾಡಿದರೆ ನಾವೂ ಸಹ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಅಹಿಂದದವರು ಪ್ರತಿಭಟನೆ ಮಾಡುತ್ತೇವೆ ಎಂದಿರುವ ರಾಜಣ್ಣ ಅವರು ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಪ್ರಭಲವಾಗಿ ಪ್ರತಿಪಾದಿಸಿದರು.ತಾಲ್ಲೂಕು, ಜಿಲ್ಲಾ, ರಾಜ್ಯ ಸಹಕಾರ ಸಂಘಗಳಲ್ಲಿ ಪ.ಜಾತಿ/ಪ ಪಂಗಡ, ಹಿಂದುಳಿದವರಿಗೆ ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ಕಲ್ಪಸುತ್ತೇವೆ. +ನೇಮಕಾತಿಯಲ್ಲಿ ಸಹ ರೋಸ್ಟರ್‌ ಮಾಡಲಾಗುವುದು. ಸಹಕಾರಿ ಚುನಾವಣೆಯಲ್ಲಿ ಸಹ ಸ್ಪರ್ಧೆ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದ ಅವರು, ಅತಿವೃಷ್ಠಿಯಿಂದ ಜನ ತತ್ತರಿಸಿದ್ದಾರೆ. ಇದರ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಯಾಗಬೇಕಾಗಿತ್ತು. ಬಿಜೆಪಿ ಆ ಕೆಲಸ ಮಾಡದೆ ಕಾಲಹರಣ ಮಾಡಿದೆ ಎಂದು ಆರೋಪಿಸಿದರು. +ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಈಗಾಗಲೇ ಮೂರು ತನಿಖಾ ಸಂಸ್ಥೆಗಳು ತನಿಖೆ ಕೈಗೊಂಡಿದ್ದಾರೆ. ಮೂಡಾದಿಂದ ಯಾರು? ಯಾರು? ಸೈಟುಗಳು ತೆಗೆದುಕೊಂಡಿದ್ದಾರೆ ಅವರೆಲ್ಲಾ ವಾಪಸ್ಸು ನೀಡಲಿ, ಅದು ಬಿಟ್ಟು ಒಬ್ಬರ ಮೇಲೆ ಗದಾಪ್ರಹಾರ ನಡೆಸುವುದು ಸರಿಯಲ್ಲ ಎಂದರು. +ಬಿಜೆಪಿಯೇತರ ಸರ್ಕಾರವನ್ನು ಕೆಳಗಿಳಿಸುವುದೆ ಬಿಜೆಪಿಯ ಉದ್ದೇಶ. ಜಾರ್ಖಂಡ್‌ ಮತ್ತು ಅರವಿಂದ ಕೇಜ್ರಿವಾಲರ ಮೇಲೆ ನಡೆಯುತ್ತಿರುವುದು ಏನು? ಕೇಂದ್ರ ಸರ್ಕಾರವು ತನಿಖಾ ಸಂಸ್ಥೆ ಗಳನ್ನು ದುರುಪಯೋಗ ಮಾಡಿಕೊಂಡಿದೆ. ಶೇ 90/ ರಷ್ಟು ಬಿಜೆಪಿಯೇತರರ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದರು. +ಕಾಂಗ್ರೆಸ್‌‍ ಮುಖಂಡ ವೇಣುಗೋಪಾಲ ಮಾತನಾಡಿ, ಸಿದ್ದರಾಮಯ್ಯನವರ ಮೇಲೆ ಇಲ್ಲ ಸಲ್ಲದ ಆರೋಪವನ್ನು ಮಾಡುವ ವಿಜಯೇಂದ್ರ ಮೊದಲು ಬುದ್ಧಿ ಕಲಿಯಲಿ. ಯಡಿಯೂರಪ್ಪ ಜೈಲಿಗೆ ಹೋಗಲು ಇದೇ ವಿಜಯೇಂದ್ರ ಕಾರಣ ಅಲ್ಲವೇ? ಭೂತದ ಬಾಯಿಂದ ಭಗವದ್ಗೀತೆ ಕೇಳುವ ಅನಿವಾರ್ಯ ನಮಗಿಲ್ಲ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌‍ ಮುಖಂಡ ಟಿ.ಪಿ.ಮಂಜುನಾಥ್‌ ಹಾಜರಿದ್ದರು. \ No newline at end of file diff --git a/eesanje/url_46_62_6.txt b/eesanje/url_46_62_6.txt new file mode 100644 index 0000000000000000000000000000000000000000..1a8b9f2e6fc40ac3f2931ce98935135c419580f3 --- /dev/null +++ b/eesanje/url_46_62_6.txt @@ -0,0 +1,17 @@ + : ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸರ್ಕಾರ ಅಸ್ತು : ಇಲ್ಲಿದೆ ಸಂಪುಟ ಸಭೆ ಹೈಲೈಟ್ಸ್ +ಬೆಂಗಳೂರು, ಜು.26-ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡುವುದು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರು ನಾಮಕರಣ ಮಾಡುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. +ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು, ಜುಲೈ 31ಕ್ಕೆ ಸೇವೆಯಿಂದ ವಯೋನಿವೃತ್ತಿ ಹೊಂದಲಿದ್ದಾರೆ. ಅವರ ನಿವೃತ್ತಿಯ ನಂತರ ತೆರವಾಗುವ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ ಎಂದರು. +ನಿವೃತ್ತಿ ಹೊಂದಲಿರುವ ರಜನೀಶ್ ಗೋಯಲ್ ಅವರಿಗೆ ಸಂಪುಟ ಸಭೆಯಲ್ಲಿ ಬೀಳ್ಕೊಡುಗೆ ನೀಡಲಾಯಿತು ಎಂದು ಹೇಳಿದರು.ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಬದಲಾಯಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಜಿಲ್ಲೆಯ ಹೆಸರು ಮಾತ್ರ ಬದಲಾವಣೆಯಾಗಲಿದ್ದು, ಉಳಿದೆಲ್ಲವೂ ಹಾಗೆ ಇರಲಿದೆ. ಬ್ರಾಂಡ್ ಬೆಂಗಳೂರು ಹಿನ್ನಲೆಯಲ್ಲಿ ಈ ಬದಲಾವಣೆ ಮಾಡಲಾಗುತ್ತಿದ್ದು, ಕಂದಾಯ ಇಲಾಖೆ ಮುಂದಿನ ಪ್ರಕ್ರಿಯೆಯನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು. +ಕೆ. ಆರ್. ಎಸ್ ಜಲಾಶಯದ ಬೃಂದಾವನವನ್ನು ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ 2263 ಕೋಟಿ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತದೆ.‌ ಹೆಲಿಪ್ಯಾಡ್, ಪಾರ್ಕಿಂಗ್, ಜಲಕ್ರೀಡೆ ಸೇರಿದಂತೆ ಎಲ್ಲವೂ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು. +ಪ್ರೌಢಶಾಲೆಯ ಶಿಕ್ಷಕರು ಪದವಿಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ. 55 ಅಂಕಗಳಿಗೆ ಬದಲಾಗಿ ಶೇ. 50ರಷ್ಟು ಅಂಕಗಳನ್ನು ಗಳಿಸಿದವರಿಗೆ ಅವಕಾಶ ಮಾಡಿ ಕೊಡುವ ನಿರ್ಧಾರ ಕೈಗೊಳ್ಳಲಾಯಿತು. ಲೋಕೋಪಯೋಗಿ ಇಲಾಖೆ ವತಿಯಿಂದ ಕಲ್ಯಾಣ ಇಲಾಖೆಯ 15 ಹಾಸ್ಟೆಲ್ಗಳನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದರು. +2017-18 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಒಂದು ಬಾರಿಗೆ ಮಾತ್ರ ಎರಡು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿದ್ದು, ಅದಕ್ಕೆ ಘಟನೊತ್ತರ ಅನುಮೋದನೆ ನೀಡಲಾಯಿತು. ವಿಜ್ಞಾನ, ತಂತ್ರಜ್ಞಾನ, ಐಟಿ, ಬಿಟಿ ಇಲಾಖೆಯ ಅನಿಮೇಷನ್ ವಿಸ್ಯುಯಲ್ ಎಫೆಕ್ಟ್ ಗೆ 16 ಕೋಟಿ ಅನುದಾನ ನೀಡಲು ಸಮ್ಮತಿಸಲಾಯಿತು ಎಂದು ಪಾಟೀಲ್ ತಿಳಿಸಿದರು. +ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಪ್ರಕಟಿಸಿದರು. +ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ ( ) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. +2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ () ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ದಿನಾಂಕ: 21.06.2024ರ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಇದು ಅನ್ವಯವಾಗುತ್ತದೆ ಎಂದು ತಿಳಿಸಿದರು. +ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 2.64 ಎಕರೆ ಜಮೀನನ್ನು ಹಂಚಿಕೆ ಮಾಡಲು ಕೈಗಾರಿಕಾ ಇಲಾಖೆ ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಸಿ.ಎ ನಿವೇಶನ ಸಂಖ್ಯೆ: 1 ರಲ್ಲಿ 2.64 ಎಕರೆ ಜಮೀನನ್ನು ಪ್ರಸ್ತುತವಿರುವ ಹಂಚಿಕೆ ದರದ ಮೇಲೆ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಹಾಗೂ ವಿಸ್ತರಿಸುವ ರಿಯಾಯಿತಿ ಮೊತ್ತವನ್ನು ಸರ್ಕಾರದಿಂದ ಕೆಐಎಡಿಬಿಗೆ ಮರುಪಾವತಿ ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಸಚಿವರು ವಿವರಿಸಿದರು. +ಬೆಂಗಳೂರು ಆಧಾರಿತ ಅನಿಮೇಶನ್ ಇಂಡಸ್ಟ್ರಿ ( ) ಸಂಘಟನೆಯು ಅನಿಮೇಶನ್, ( ) ಮತ್ತು ಗೇಮಿಂಗ್ () ಉದ್ಯಮವನ್ನು ಅಭಿವೃದ್ಧಿಪಡಿಸಲು ಬದ್ಧವಾಗಿದೆ. ಇದು ಉದ್ಯಮ, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರ ಮತ್ತು (, , ) ಸಮುದಾಯದ ಪರಿಸರ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿದೆ. +ಒಟ್ಟು 16.00 ಕೋಟಿ ರೂ.ಗಳ ವೆಚ್ಚದಲ್ಲಿ ಈ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು. 2024-25ನೇ ಸಾಲಿನಲ್ಲಿ ಈಗ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದಾಗಿ ಮುಂಗಡ ಪತ್ರದ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದರು. ಈ ಪೈಕಿ ತಲಾ 100 ವಿದ್ಯಾರ್ಥಿಗಳಿಗೆ ಒಂದು ಹಾಸ್ಟೆಲ್ನಂತೆ 15 ಹಾಸ್ಟೆಲ್ಗಳ ನಿರ್ಮಾಣವನ್ನು ಕೈಗೊಳ್ಳಲಾಗುವುದು. ಪ್ರತಿ ಹಾಸ್ಟೆಲ್ ವೆಚ್ಚ 7 ಕೋಟಿಗಳು. ಒಟ್ಟು ಯೋಜನಾ ವೆಚ್ಚ ರೂ.105.00 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ. +ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢ ಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಮತ್ತು ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟವು ಒಪ್ಪಿದೆ ಎಂದು ಸಚಿವರು ತಿಳಿಸಿದರು. +ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ, 2013ರನ್ವಯ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ನರ್ಣಯಿಸಿದೆ. ಕೌಶಲ್ಯ ಮಿಷನ್ನ ಎಲ್ಲಾ ಅಲ್ಪಾವಧಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೆಡೆ ತರುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪಿಸಲು ಮತ್ತು ರಾಜ್ಯ ಸರ್ಕಾರದಿಂದ ಅನುಮೋದಿಸಲಾದ “ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು ಕೇಂದ್ರ ಸರ್ಕಾರದಿಂದ ಅನುಮೋದಿಸಲಾದ “ಪ್ರಧಾನಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು “ಸಂಕಲ್ಪ ಯೋಜನೆ”ಗಳನ್ನು ಕೌಶಲ್ಯಾಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ವಿಶೇಷ ಅಭಿವೃದ್ಧಿ ವಾಹಕವು 5 ಕೋಟಿ ರೂ.ಅಧಿಕೃತ ಷೇರು ಬಂಡವಾಳ 1 ಕೋಟಿ ರೂ. . 100 ರೂ. ಮುಖಬೆಲೆಯ 5 ಲಕ್ಷ ರೂ. ಇಕ್ವೀಟಿ ಷೇರುಗಳನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ.ಈ ಸರ್ಕಾರಿ ಸಂಸ್ಥೆಗೆ 6 ಜನ ನಿರ್ದೇಶಕರನ್ನು ನೇಮಕ ಮಾಡಲು ಅವರಲ್ಲಿ 3 ಜನ ಪುರುಷ ಸರ್ಕಾರೇತರ 2 ಮಹಿಳಾ ಸರ್ಕಾರೇತರ ಹಾಗೂ ನಿರ್ದೇಶಕರು, ಐಟಿಬಿಟಿ ನಿರ್ದೇಶಕರಾಗಿರುತ್ತಾರೆಂದು ಸಚಿವರು ತಿಳಿಸಿದರು. +ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಲ್ಲಿನ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಈಗಾಗಲೇ ನೀಡಿರುವ ಅನುಮೋದನೆಯಂತೆ ಟೆಂಡರ್ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದಿಸಿದೆ. +ಕೃಷ್ಣರಾಜಸಾಗರ ಆಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಆರ್ಥಿಕ ಇಲಾಖೆ, ಯೋಜನಾ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನೀಡಿರುವ ಅಭಿಪ್ರಾಯದನ್ವಯ ಪರಿಷ್ಕರಿಸಿ ಟೆಂಡರ್ ಮುಖಾಂತರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಚೌಕಟ್ಟಿನಲ್ಲಿ ಅನುಷ್ಠಾನಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ 2663.74 ಕೋಟಿ ರೂ. 34.5 ವರ್ಷಗಳ ಒಟ್ಟು ರಿಯಾಯಿತಿ ಅವಧಿಯು 4.5 ವರ್ಷಗಳ ರಿಯಾಯಿತಿ ಅವಧಿಯು ಸೇರಿದೆ. ಮಾಸ್ಟರ್ ಪ್ಲಾನ್ನಲ್ಲಿ ಒಟ್ಟು 45 ಘಟಕಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ವಿವರ ನೀಡಿದರು. \ No newline at end of file diff --git a/eesanje/url_46_62_7.txt b/eesanje/url_46_62_7.txt new file mode 100644 index 0000000000000000000000000000000000000000..7f3ba99e1d00fa3b2b0cadc6095cb4ea5e190232 --- /dev/null +++ b/eesanje/url_46_62_7.txt @@ -0,0 +1,9 @@ +ಸ್ವಪಕ್ಷೀಯರ ವಿರುದ್ಧವೇ ಅರವಿಂದ ಲಿಂಬಾವಳಿ ಕಿಡಿ +ಬೆಂಗಳೂರು,ಜು.26-ಮುಡಾ, ವಾಲ್ಮೀಕಿ ಹಗರಣ, ಹೆಚ್ಚುತ್ತಿರುವ ಡೆಂಘೀ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರದ ವೈಫಲ್ಯಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಲ್ಲಿ ವಿಫಲವಾಗಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಬಿಜೆಪಿ ಹಿರಿ ನಾಯಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಕೆಂಡಕಾರಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ ನಾಯಕರು ಮಾತಾಡಲೇ ಇಲ್ಲ. +ಶಾಸಕರೂ ಆಗಿರುವ ನಮ್ಮ ಪಕ್ಷದ ಅಧ್ಯಕ್ಷರು ಮತ್ತು ಪ್ರತಿಪಕ್ಷ ನಾಯಕರ ಮಧ್ಯೆ ಸಾಮರಸ್ಯ, ಹೊಂದಾಣಿಕೆ ಮತ್ತು ತಾಳ-ಮೇಳ ಇಲ್ಲದೇ ಹೋದದ್ದು ವಿಷಾದನೀಯ ಎಂದು ಕಿಡಿಕಾರಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಗ್ಯಾರಂಟಿ ಯೋಜನೆ ಹಣಕ್ಕೆ ಎಸ್‌‍ಸಿ-ಎಸ್‌‍ಟಿಗೆ ಮೀಸಲಿಟ್ಟಿರುವ ಅನುದಾನ ದುರ್ಬಳಕೆ ಹೀಗೆ ಯಾವ ವಿಷಯವನ್ನೂ ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಮ್ಮ ಪಕ್ಷಕ್ಕೆ ಸಾಧ್ಯವಾಗಲಿಲ್ಲ ಎಂದು ವಿಷಾದಿಸಿದ್ದಾರೆ. +ಈ ವಿಷಯಗಳ ಬಗ್ಗೆ ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಪ್ರತಿಪಕ್ಷದ ನಾಯಕರೂ ವಿಫಲರಾದರು. ಆಡಳಿತ ಪಕ್ಷದೊಂದಿಗೆ ಪ್ರತಿಪಕ್ಷ ಶಾಮೀಲಾಗಿದೆಯಾ ಎಂದು ಜನ ಮಾತಾಡಿಕೊಳ್ಳುವಂತಾಯಿತು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. +ಸಿಕ್ಕ ಅವಕಾಶ ಮತ್ತು ಸಮಯವನ್ನು ಸದನದಲ್ಲಿ ಸಮರ್ಪಕವಾಗಿ ಬಳಸಿಕೊಳ್ಳದೇ, ಇಡೀ ಅಧಿವೇಶನದಲ್ಲಿ ವೃಥಾ ಕಾಲಹರಣ ಮಾಡಿ, ಇನ್ನೂ ಒಂದು ದಿನ ಬಾಕಿ ಇರುವಾಗಲೇ ಸದನದ ಕಲಾಪಗಳನ್ನು ಮೊಟಕುಗೊಳಿಸುವಲ್ಲಿ ಆಡಳಿತ ಪಕ್ಷದವರೊಂದಿಗೆ ಕೈಜೋಡಿಸಿದ ನಮ್ಮ ಪಕ್ಷದ ನಾಯಕರ ನಡೆ ಪ್ರಶ್ನಾರ್ಹ ಎಂದು ಹೇಳಿದ್ದಾರೆ. +ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ. +ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ ನನಗೆ, ಇಂದಿನ ನಮ್ಮ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರ ಮತ್ತು ಆತಂಕವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಘೀ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. +ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು ನಮ್ಮ ಪಕ್ಷದ ನಾಯಕರಿಗೆ ಅನಿಸದೇ ಹೋದುದು ದುರ್ದೈವ ಎಂದು ಹೇಳೀದ್ದಾರೆ. ಮೈಸೂರಿನಲ್ಲಿ ಮುಡಾ ವಿರುದ್ಧ ನಡೆಸಿದ ಹೋರಾಟ ಕಣ್ಣೊರೆಸುವ ತಂತ್ರದಂತೆ ಕಂಡಿತು. ಒಟ್ಟಾರೆ ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ್ದಾರೆ. \ No newline at end of file diff --git a/eesanje/url_46_62_8.txt b/eesanje/url_46_62_8.txt new file mode 100644 index 0000000000000000000000000000000000000000..2005a364a4530b2f87e35418bba2a7beca33d757 --- /dev/null +++ b/eesanje/url_46_62_8.txt @@ -0,0 +1,9 @@ +ಯೂತ್‌ ಕಾಂಗ್ರೆಸ್‌ ಚುನಾವಣೆಗೆ ಸಿದ್ಧತೆ +ಬೆಂಗಳೂರು,ಜು.26– ರಾಷ್ಟ್ರಮಟ್ಟದಲ್ಲಿ ಹೊಸ ನಾಯಕರ ಹುಡುಕಾಟ ನಡೆಯುತ್ತಿದೆ. ಯೂತ್‌ ಕಾಂಗ್ರೆಸ್‌‍ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಸಾರ್ಟ್‌ ಫೋನ್‌ ಮೂಲಕ ಆನ್‌ಲೈನ್‌ ಸದಸ್ಯತ್ವ ನೋಂದಣಿ ಆರಂಭಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಬೇಕಾದರೂ ಆನ್‌ಲೈನ್‌ನಲ್ಲೇ ಸದಸ್ಯತ್ವ ಪಡೆಯಬಹುದು. ಸದಸ್ಯತ್ವದ ಜೊತೆಗೆ ಬ್ಲಾಕ್‌, ಡಿಸ್ಟ್ರಿಕ್ಟ್‌ ಪ್ರೆಸಿಡೆಂಟ್‌, ಜನರಲ್‌ ಸೆಕ್ರೆಟರಿ, ಕೆಪಿಸಿಸಿ ಪದಾಧಿಕಾರಿಗಳ ಚುನಾವಣೆಗೆ ಮತ ಚಲಾವಣೆಗೆ ಅವಕಾಶ ಕೊಡಲಾಗತ್ತದೆ. ಒಬ್ಬರಿಗೆ 6 ಮತ ಚಲಾವಣೆ ಮಾಡಲು ಅವಕಾಶ ಇದೆ ಎಂದು ತಿಳಿಸಿದರು. +ಸದಸ್ಯತ್ವ ನೋಂದಣಿಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಟೆಕ್ನಾಲಜಿ ಬಳಸಿ ಫೇಸ್‌‍ ಐಡೆಂಟಿಟಿ ಒಳಗೊಂಡಂತೆ ಸದಸ್ಯತ್ವ ಮಾಡಿಸುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾಧಿಕಾರಿಗಳು ಇರುತ್ತಾರೆ. ಆಗಸ್ಟ್‌ 2ರಿಂದ ನಾಮಪತ್ರ ಸಲ್ಲಿಕೆ. ಆ.9 ನಾಮಪತ್ರ ವಾಪಸ್‌‍ ಪಡೆಯಲು ಅಂತಿಮ ದಿನವಾಗಿದೆ. ಚುನಾವಣೆಗೆ ಮೀಸಲಾತಿ ಕೂಡ ನಿಗಧಿ ಮಾಡಲಾಗಿದೆ. ಎಸ್ಸಿ ಎಸ್ಟಿ, ಜನರಲ್‌ ಕೆಟಗರಿ ಇರಲಿದೆ ಎಂದು ಮಾಹಿತಿ ನೀಡಿದರು. +ಮಹಾತಗಾಂಧಿ ಕಾಂಗ್ರೆಸ್‌‍ ನಾಯಕತ್ವ ವಹಿಸಿ ನೂರು ವರ್ಷ ಆಗಿದೆ. ಈ ಸುಸಂದರ್ಭದಲ್ಲಿ ದೊಡ್ಡ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾರ್ಯಕ್ರಮ ರೂಪಿಸಲು ಸಮಿತಿ ರಚನೆ ಮಾಡಲಾಗುವುದು. 15 ಸಚಿವರು, ಪದಾಧಿಕಾರಿಗಳು ಸೇರಿ 60 ನಾಯಕರ ಕಮಿಟಿ ಮಾಡುತ್ತಿದ್ದೇವೆ. ಬೆಳಗಾವಿ, ಎಲ್ಲೆಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಇದೆಯೋ ಅಲ್ಲಿ ಕಾರ್ಯಕ್ರಮ ಮಾಡಲಾಗುವುದು ಎಂದರು. +ಹೆಚ್‌.ಕೆ.ಪಾಟೀಲ್‌ ಅಧ್ಯಕ್ಷತೆಯ ಸಮಿತಿಯಲ್ಲಿ ವೀರಪ್ಪ ಮೊಯ್ಲಿ ಸಲಹೆಗಾರರಾಗಿ ಇರುತ್ತಾರೆ. ಆ.9ರೊಳಗೆ ಸಭೆ ನಡೆಸಿ ನಂತರ ಸಲಹೆ ಕೊಡುತ್ತಾರೆ. ಪಕ್ಷ ಸರ್ಕಾರ ಮಟ್ಟದಲ್ಲಿ ಏನು ಕಾರ್ಯಕ್ರಮ ಮಾಡಬೇಕೋ ಮಾಡುತ್ತಿದ್ದೇವೆ ಎಂದು ಹೇಳಿದರು. +ಬಿಜೆಪಿಗೆ ತಿರುಗೇಟು: ಅವರೇ ತೊಡಿಕೊಂಡ ಬಾವಿಗೆ ಅವರೇ ಬೀಳಲು ಹೊರಟಿದ್ದಾರೆ. ವಾಲ್ಮೀಕಿ ನಿಗಮ ಹಗರಣದ ಬಗ್ಗೆ ನಾವೇ ಎಸ್‌‍ಐಟಿ ತನಿಖೆಗೆ ವಹಿಸಿದ್ದೇವೆ. 89 ಕೋಟಿನಾ 189 ಕೋಟಿ ಅಂತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಗಳಿಗೆ ಉತ್ತರಕೊಡಲು ಬಿಡದೆ ಬಿಜೆಪಿ ಕಾಲದ ಹಗರಣ ಮಾಡಿದ್ದಾರೆ. ತಮ ಪಕ್ಷಕ್ಕಾಗಿ ಮುಡಾ ಹಗರಣವಿಟ್ಟುಕೊಂಡು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿಯೊಂದಿಗೆ ಜೆಡಿಎಸ್‌‍ ವಿಲೀನವಾಗುತ್ತದೆಯೋ ಇಲ್ಲವೇ ಜೆಡಿಎಸ್‌‍ನವರೇ ಬಿಜೆಪಿಗೆ ವಿಲೀನವಾಗುತ್ತಾರೆಯೋ? ಎಂದು ವ್ಯಂಗ್ಯವಾಡಿದರು. +ಅವರ ಕಾಲದಲ್ಲಿ ನಡೆದ ಹಗರಣಗಳು. ಸಿಎಂ ಕುಟುಂಬದ ಜಮೀನನ್ನು ಮುಡಾ ಆಕ್ರಮಿಸಿಕೊಂಡಿದೆ. ಮುಡಾ 50:50 ಪರಿಹಾರ ಕೊಟ್ಟಿದೆ. ಇವರೇನು ಪರಿಹಾರ ಕೇಳಿಲ್ಲ. ಅವರೇ ಕೊಟ್ಟಿದ್ದಾರೆ. ಆಗ ಬಿಜೆಪಿ ಸರ್ಕಾರ ಇತ್ತು. ಆಸ್ತಿಗೆ ಪರಿಹಾರ ಮಾತ್ರ ಸಿಎಂ ಕುಟುಂಬ ಕೇಳಿದು, ಕಾನೂನು ಚೌಕಟ್ಟಿನನಲ್ಲೇ ನಡೆದಿದೆ. ಸಿಎಂ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದರು. +ಅವರು ಎಷ್ಟು ಬೇಕಾದರೂ ಪಾದಯಾತ್ರೆ ಮಾಡಲಿ. ನಾವು ಏನು ಕಾರ್ಯಕ್ರಮ ರೂಪಿಸಬೇಕು, ಅದನ್ನು ಮಾಡುತ್ತೇವೆ. ಅವರ ಪಾದಯಾತ್ರೆಗೆ ಏನು ಉತ್ತರ ಕೋಡಬೇಕೋ ಕೋಡುತ್ತೇವೆ. ಪಾದಯಾತ್ರೆ ಆರಂಭ ಮಾಡಿದ್ದು ಕಾಂಗ್ರೆಸ್‌‍ ಪಕ್ಷ. ಗಾಂಧಿಜೀ ಕಾಲದಿಂದ ಪಾದಯಾತ್ರೆ ಮಾಡುತ್ತಿದ್ದೇವೆ. ಬಿಜೆಪಿಗರೇ ಈ ಹಗರಣದಲ್ಲಿ ಸರ್ದಾರರು. ಅದು ಏನು ಬಿಚ್ಚಿಡಬೇಕೋ ನಾವು ಬಿಚ್ಚಿಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು. ವಾಲ್ಮೀಕಿ ನಿಗಮದ ಎಸ್‌‍ಐಟಿ ತನಿಖೆ ಮಧ್ಯಂತರ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಮಾಹಿತಿ ನನಗೆ ಇಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_62_9.txt b/eesanje/url_46_62_9.txt new file mode 100644 index 0000000000000000000000000000000000000000..350aed1d6a8f49bd85236c562b97163dd7878cfd --- /dev/null +++ b/eesanje/url_46_62_9.txt @@ -0,0 +1,8 @@ +ಎಚ್‌.ಡಿ.ಕುಮಾರಸ್ವಾಮಿಯವರಿಗೂ ಮುಡಾದಿಂದ ಬದಲಿ ನಿವೇಶನ ಮಂಜೂರು +ಬೆಂಗಳೂರು,ಜು.26– ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿಯವರು ಮುಡಾದಿಂದ ಬದಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ದಾಖಲಾತಿಗಳು ಬಹಿರಂಗಗೊಂಡಿವೆ. 1984 ರಲ್ಲಿ ಕುಮಾರಸ್ವಾಮಿ ಯವರಿಗೆ ಮೈಸೂರಿನ ಇಂಡಸ್ಟ್ರಿಯಲ್‌ ಸಬ್‌ ಅರ್ಬನ್‌ ಮೂರನೇ ಹಂತದಲ್ಲಿ 21 ಸಾವಿರ ಚದರ ಅಡಿಯ ನಿವೇಶನ ಮಂಜೂರಾಗಿತ್ತು. ಅದಕ್ಕಾಗಿ 1985 ಜನವರಿ 16 ರಂದು ಸ್ವಾಧೀನ ಪತ್ರವನ್ನೂ ನೀಡಲಾಗಿದೆ. +ಈ ನಿವೇಶನದಲ್ಲಿ ಅಳತೆಯ ಭಾಗಶಃ ಭಾಗವನ್ನು ಬೇರೆಯವರಿಗೆ ಮಂಜೂರು ಮಾಡಿದ್ದು, ತಮಗೆ ಹಂಚಿಕೆಯಾಗಿರುವ ನಿವೇಶನ ಲಭ್ಯವಿಲ್ಲದ ಕಾರಣ ಕೈಗಾರಿಕೆ ಪ್ರಾರಂಭಿಸಲು ಅನುಕೂಲವಾಗುವಂತೆ ಬದಲಿ ನಿವೇಶನ ನೀಡುವಂತೆ ಕುಮಾರಸ್ವಾಮಿಯವರು2017, 2019, 2020 ರಲ್ಲಿ ಮೂರು ಬಾರಿ ಮುಡಾಗೆ ಮನವಿ ಸಲ್ಲಿಸಿದ್ದಾರೆ. +ಈ ಬಗ್ಗೆ ತಾಂತ್ರಿಕ ತನಿಖೆ ನಡೆದಿದ್ದು, ನಿವೇಶನ ಸಂಖ್ಯೆ 17 ಬಿ 1 ರ ಸ್ವಾಧೀನ ಪತ್ರದಂತೆ ಸದರಿ ನಿವೇಶನದಲ್ಲಿ 13,064 ಚದರ ಅಡಿಗಳು ಭೌತಿಕವಾಗಿ ಲಭ್ಯವಿವೆ ಎಂದು ವರದಿ ಸಲ್ಲಿಸಲಾಗಿದೆ. ಕಡಿಮೆ ಇರುವ 7,936 ಚದರ ಅಡಿಯಷ್ಟು ಬದಲಿ ನಿವೇಶನ ನೀಡುವ ಪ್ರಸ್ತಾವನೆ ಸಲ್ಲಿಕೆಯಾಗಿದೆ. +ಈ ಕುರಿತು ಬದಲಿ ನಿವೇಶನ ನೀಡಲು ಪ್ರಾಧಿಕಾರ ಸಭೆಯಲ್ಲಿ ಚರ್ಚಿಸಲಾಗಿದ್ದು, 21,000 ಚದರ ಅಡಿಗೆ ತಾಳೆ ಹೊಂದುವ ನಿವೇಶನಗಳು ಇಂಡಸ್ಟ್ರಿಯಲ್‌ ಸಬ್‌ ಅರ್ಬನ್‌ನಲ್ಲಿ ಲಭ್ಯವಿಲ್ಲದ ಕಾರಣ ಪರ್ಯಾಯವಾಗಿ 32,800 ಚದರ ಅಡಿಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. +ಹೆಚ್ಚುವರಿಯಾಗಿರುವ 11,000 ಚದರ ಅಡಿಯನ್ನು ಕುಮಾರಸ್ವಾಮಿಯವರಿಗೆ ಮಂಜೂರು ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ರಿಕಾ ಗೋಷ್ಠಿಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ದಾಖಲಾತಿ ಬಿಡುಗಡೆ ಮಾಡಿದರು. +ಮುಡಾ ನಿವೇಶನ ಪಡೆದ ವಿಪಕ್ಷ ನಾಯಕರು :ಬೆಂಗಳೂರು, ಜು.26- ಮುಡಾದಿಂದ ಬಿಜೆಪಿ ಮತ್ತು ಜೆಡಿಎಸ್‌‍ನ ಶಾಸಕರು, ಜನಪ್ರತಿನಿಧಿಗಳು, ಪ್ರಮುಖ ನಾಯಕರು ನಿವೇಶನ ಪಡೆದಿರುವ ವಿವರ ಗಳನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಬಹಿರಂಗಪಡಿಸಿದ್ದಾರೆ. +ಸಿ.ಎನ್‌.ಮಂಜೇಗೌಡ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಗಂಗರಾಜು, ಮಹದೇವಸ್ವಾಮಿ, ಸಾ.ರಾ.ಮಹೇಶ್‌ ಸೇರಿದಂತೆ ವಿವಿಧ ನಾಯಕರು ಎಕರೆಗಟ್ಟಲೆ ಭೂಮಿಯನ್ನು ಮೈಸೂರಿನ ಪ್ರಮುಖ ಪ್ರದೇಶಗಳಲ್ಲಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಯವರು ಮುಡಾದಿಂದ ಬದಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲೆಯನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. \ No newline at end of file diff --git a/eesanje/url_46_63_1.txt b/eesanje/url_46_63_1.txt new file mode 100644 index 0000000000000000000000000000000000000000..f15b3c9b6f071373043ea3bf1aceeb754912167c --- /dev/null +++ b/eesanje/url_46_63_1.txt @@ -0,0 +1,4 @@ +“ಸಿಎಂ ಸಿದ್ದರಾಮಯ್ಯ ಬಾಲಕ ಬುದ್ದಿಯ ರಾಹುಲ್ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ” +ಬೆಂಗಳೂರು,ಜು.26-ದಿನೇ ದಿನೇ ಭ್ರಷ್ಟಾಚಾರದ ಕಳಂಕಿತ ಸಿಎಂ ಸಿದ್ದರಾಮಯ್ಯ ದುರ್ಬಲರಾಗುತ್ತಿದ್ದು, ತಮ್ಮ ಕುರ್ಚಿ ಉಳಿಸಿಕೊಳ್ಳಲು ಬಾಲಕ ಬುದ್ದಿಯ ರಾಹುಲ್ ಗಾಂಧಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್ ವಾಗ್ದಳಿ ನಡೆಸಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸನಲ್ಲಿ ಪೋಸ್ಟ್ ಮಾಡಿರುವ ಅವರು, 2016ರಲ್ಲಿ ಏಕಕಾಲದ ಚುನಾವಣೆಯ ಪರಿಕಲ್ಪನೆಯನ್ನು ಸ್ವಾಗತಿಸಿ ಬೆಂಬಲಿಸಿದ್ದ ಅದೇ ಸಿದ್ದರಾಮಯ್ಯ ಈಗ ಕರ್ನಾಟಕ ವಿಧಾನಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ವಿರುದ್ಧ ನಿರ್ಣಯ ಅಂಗೀಕರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. +ಸಿಎಂ ಸಿದ್ದರಾಮಯ್ಯ ಅವರೇ ಈ ಚೇಷ್ಟೆಗಳಿಂದ ಯಾರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದೀರಿ? ನಿಮ ಆತಸಾಕ್ಷಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಾ? ಅಧಿಕಾರಕ್ಕಾಗಿ ಆತವನ್ನು ಮಾರಿಕೊಂಡಿದ್ದೀರಾ? ಉತ್ತರ ಮಾಡಿ ಎಂದು ಅಶೋಕ್ ಸವಾಲು ಎಸೆದಿದ್ದಾರೆ. \ No newline at end of file diff --git a/eesanje/url_46_63_10.txt b/eesanje/url_46_63_10.txt new file mode 100644 index 0000000000000000000000000000000000000000..063fc2d52d4dc9c39e92cd51e05806e1b7407ab8 --- /dev/null +++ b/eesanje/url_46_63_10.txt @@ -0,0 +1,5 @@ +ಮುಡಾ ಅಕ್ರಮ ಚರ್ಚೆಗೆ ಅವಕಾಶ ನೀಡುವ ರೂಲಿಂಗ್ ಮರು ಪರಿಶೀಲನೆ ಮತ್ತೆ ತಿರಸ್ಕಾರ +ಬೆಂಗಳೂರು,ಜು.25-ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತಂತೆ ಸದನದಲ್ಲಿ ಅವಕಾಶ ನೀಡುವ ರೂಲಿಂಗ್ ಮರುಪರಿಶೀಲನೆ ಮಾಡಬೇಕೆಂಬ ಪ್ರತಿಪಕ್ಷಗಳ ಸದಸ್ಯರ ಕೋರಿಕೆಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತೆ ತಿರಸ್ಕರಿಸಿದ್ದಾರೆ. +ಬುಧವಾರವಷ್ಟೇ ಪ್ರತಿಪಕ್ಷಗಳ ಸದಸ್ಯರು ಮುಡಾ ಪ್ರಕರಣ ಕುರಿತು ಮಂಡಿಸಿದ್ದ ನಿಲುವಳಿ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು. ಈ ವೇಳೆ ಪ್ರತಿಪಕ್ಷದ ಸದಸ್ಯರು ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತಾವು ನೀಡಿರುವ ರೂಲಿಂಗ್ನ್ನು ಮರುಪರಿಶೀಲಿಸಬೇಕೆಂದು ಮನವಿ ಮಾಡಿಕೊಂಡರು. +ಗದ್ದಲದ ನಡುವೆಯೇ ತಮ್ಮ ತೀರ್ಮಾನವನ್ನು ಪ್ರಕಟಿಸಿದ ಹೊರಟ್ಟಿಯವರು ನಿಲುವಳಿ ಸೂಚನೆ ಪ್ರಸ್ತಾವನೆಗೆ ಚರ್ಚೆ ಮಾಡಲು ವಿಷಯವು ತುಂಬ ಸಾರ್ವಜನಿಕವಾಗಿ ಮಹತ್ವದ್ದಾಗಿರಬೇಕು. ಅಲ್ಲದೆ ಘಟನೆಯು ಇತ್ತೀಚೆಗೆ ನಡೆದಿರಬೇಕು. ಪ್ರತಿಪಕ್ಷಗಳ ಸದಸ್ಯರು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಕುರಿತಂತೆ ಚರ್ಚೆಗೆ ಅವಕಾಶ ನೀಡಬೇಕೆಂದು ನಿಲುವಳಿ ಸೂಚನೆ ಮಾಡಿದ್ದರು. ನಾನು ನಿಯಮ 59ರಡಿ ಚರ್ಚೆಗೆ ಅವಕಾಶ ಕೊಟ್ಟಿದ್ದೆ. ಅದೇ ರೀತಿ ಮುಡಾ ಪ್ರಕರಣದ ಬಗ್ಗೆಯೂ ಚರ್ಚೆಗೆ ಕೇಳಿದ್ದೀರಿ. ಈಗಾಗಲೇ ನಾನು ರೂಲಿಂಗ್ ನೀಡಿ ತಿರಸ್ಕರಿಸಿದ್ದೆನು. +ಇದನ್ನು ಮರುಪರಿಶೀಲನೆ ಮಾಡಬೇಕೆಂದು ಪ್ರತಿಪಕ್ಷದ ಸದಸ್ಯರು ಮನವಿ ಮಾಡಿದ್ದರು. ನಾನು ಹಿಂದಿನ ನಡವಳಿಕೆಯನ್ನು ಅಧ್ಯಯನ ನಡೆಸಿ ಒಂದು ಬಾರಿ ರೂಲಿಂಗ್ ನೀಡಿದ ಮೇಲೆ ಚರ್ಚೆಗೆ ಅವಕಾಶವಿಲ್ಲ. ಹೀಗಾಗಿ ನಿಮ್ಮ ಮನವಿಯನ್ನು ತಿರಸ್ಕರಿಸುತ್ತೇನೆ ಎಂದು ಪ್ರಕಟಿಸಿದರು. ಇದರಿಂದ ಸದನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಭಾರೀ ಗದ್ದಲ, ಕೋಲಾಹಲ ಉಂಟಾಯಿತು. \ No newline at end of file diff --git a/eesanje/url_46_63_11.txt b/eesanje/url_46_63_11.txt new file mode 100644 index 0000000000000000000000000000000000000000..424e6f779f5e8e589ff42a1da99a25f13b27ebfa --- /dev/null +++ b/eesanje/url_46_63_11.txt @@ -0,0 +1,9 @@ +ವಿಧಾನಸಭೆಯಲ್ಲಿ 6 ಮಹತ್ವದ ವಿಧೇಯಕಗಳು ಅಂಗೀಕಾರ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ +ಬೆಂಗಳೂರು,ಜು.25-ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡುವ 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸ್ಮಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕ ಸೇರಿದಂತೆ 6 ವಿಧೇಯಕಗಳು ವಿಧಾನಸಭೆಯಲ್ಲಿಂದು ಅಂಗೀಕಾರಗೊಂಡವು. +ಬಿಜೆಪಿ-ಜೆಡಿಎಸ್‌‍ ಶಾಸಕರ ಗದ್ದಲದ ನಡುವೆ ನಡೆದ ಶಾಸನ ರಚನಾ ಕಲಾಪದಲ್ಲಿ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರು ವಿಧೇಯಕ ಕುರಿತು ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್‌ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿ ಉಳ್ಳ ವ್ಯಕ್ತಿಗಳನ್ನು ಸಾರಕ ಮಿತ್ರರು ಪಟ್ಟಿಯಲ್ಲಿ ಸೇರಿಸುವುದಕ್ಕೆ ಅರ್ಹರಾಗಿಸುವುದಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದರು. +ಬಳಿಕ ಸಭಾಧ್ಯಕ್ಷರು 2024ನೇ ಸಾಲಿನ ಕರ್ನಾಟಕ ಪ್ರಾಚೀನ, ಐತಿಹಾಸಿಕ ಸಾರಕಗಳು, ಪುರಾತತ್ವ ಸ್ಥಳಗಳ ಮತ್ತು ಅವಶೇಷಗಳ (ತಿದ್ದುಪಡಿ) ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಒಪ್ಪಿಗೆ ದೊರೆಯಿತು. +ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರ ಪರವಾಗಿ ಕಾನೂನು ಸಚಿವರು ಪರ್ಯಾಲೋಚಿಸಿದ 2024 ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು, ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ವಿಧೇಯಕಕ್ಕೂ ಸದನ ಒಪ್ಪಿಗೆ ನೀಡಿತು. +ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವರು, ಹೊರಗುತ್ತಿಗೆಯಲ್ಲಿ ಸಾಮಾಜಿಕ ನ್ಯಾಯವಿರಲಿಲ್ಲ. ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ತಿದ್ದುಪಡಿ ತರಲಾಗಿದ್ದು, ಸದನ ಒಪ್ಪಿಗೆ ನೀಡಬೇಕೆಂದು ಇದಕ್ಕೂ ಮುನ್ನ ಕೋರಿದ್ದರು.ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿಯವರು ಮಂಡಿಸಿದ 2024 ನೇ ಸಾಲಿನ ರೇಣುಕಾ ಯಲ್ಲಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಕ್ಕೂ ಸದನದ ಒಪ್ಪಿಗೆ ದೊರೆಯಿತು. +ವಿಧೇಯಕ ಕುರಿತು ಮಾತನಾಡಿದ ರಾಮಲಿಂಗಾರೆಡ್ಡಿ, ಯಲ್ಲಮ ದೇವಾಲಯಕ್ಕೆ ಕರ್ನಾಟಕ, ಗೋವಾ, ಆಂಧ್ರ, ತೆಲಂಗಾಣದಿಂದ ವಾರ್ಷಿಕ 80 ಲಕ್ಷದಿಂದ 1 ಕೋಟಿ ಭಕ್ತಾದಿಗಳು ಬರುತ್ತಾರೆ. ಹೀಗಾಗಿ ರೇಣುಕಾ ಯಲ್ಲಮ ದೇವಸ್ಥಾನ ಅಭಿವೃದ್ಧಿ ಮತ್ತು ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಸ್ವತಂತ್ರ ಶಾಸನಬದ್ಧ ಪ್ರಾಧಿಕಾರದ ರಚನೆಗೆ ಉಪಬಂಧ ಕಲ್ಪಿಸಲು ಈ ವಿಧೇಯಕವನ್ನು ತರಲಾಗಿದೆ. ರಾಜ್ಯಮಟ್ಟದಲ್ಲಿ ಒಂದು ಸಮಿತಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇನ್ನೊಂದು ಸಮಿತಿ ಕಾರ್ಯ ನಿರ್ವಹಿಸಲಿದೆ. ಆ ಮೂಲಕ ದೇವಸ್ಥಾನದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಹೇಳಿದರು. +ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಭೂ ಕಂದಾಯ 2ನೇ ತಿದ್ದುಪಡಿ ವಿಧೇಯಕಕ್ಕೂ ಒಪ್ಪಿಗೆ ದೊರೆಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಂಡಿಸಿದ 2024ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕಕ್ಕೂ ಸದನ ಅಂಗೀಕಾರ ನೀಡಿತು. +ಬಳಿಕ ತೋಟಗಾರಿಕಾ ಸಚಿವ ಮಲ್ಲಿಕಾರ್ಜುನ ಅವರ ಪರವಾಗಿ ಕಾನೂನು ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣಾ) (ತಿದ್ದುಪಡಿ) ವಿಧೇಯಕಕ್ಕೂ ಸದನದ ಒಪ್ಪಿಗೆ ದೊರೆಯಿತು. \ No newline at end of file diff --git a/eesanje/url_46_63_12.txt b/eesanje/url_46_63_12.txt new file mode 100644 index 0000000000000000000000000000000000000000..7e4d08fc5660a3d882e82330bff84fad464f20ef --- /dev/null +++ b/eesanje/url_46_63_12.txt @@ -0,0 +1,5 @@ +ಪುರಸಭೆ ಸದಸ್ಯ ಸ್ಕ್ರಾಪ್‌ ರವಿ ಹಂತಕರ ಸೆರೆಗೆ 2 ತಂಡ ರಚನೆ +ಆನೇಕಲ್‌, ಜು.25-ಮನೆಗೆ ನುಗ್ಗಿ ಪುರಸಭೆ ಸದಸ್ಯನ ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.ಪುರಸಭೆ ಸದಸ್ಯ ರವಿ ಮನೆಯ ಆವರಣದಲ್ಲಿಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಹಂತಕರ ಬಂಧನಕ್ಕೆ ಪೋಲಿಸರು ಹುಡುಕಾಟ ನಡೆಸಿದ್ದಾರೆ. +ಪುರಸಭೆಯ 22ನೇ ವಾರ್ಡ್‌ ಸದಸ್ಯ ಹಾಗೂ ಕಾಂಗ್ರೆಸ್‌‍ ಮುಖಂಡರಾಗಿದ್ದ ರವಿ ಅಲಿಯಾಲ್‌ ಸ್ಕ್ರಾಪ್‌ ರವಿ ಬಹದ್ದೂರ್‌ ಪುರದ ತಮ ನಿವಾಸದಲ್ಲಿರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ನಿನ್ನೆ ರಾತ್ರಿ 8.30ರ ಸಂದರ್ಭದಲ್ಲಿ ಏಕಾಏಕಿ ಮನೆಗೆ ನುಗ್ಗಿ ಮಾರಕಾಸಗಳಿಂದ ರವಿ ಮೇಲೆ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ. +ರವಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌‍ಪಿ ಸಿ.ಕೆ. ಬಾಬು ಭೇಟಿ ನೀಡಿದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಈಗಾಗಲೇ ಎರಡು ತಂಡಗಳನ್ನು ರಚನೆ ಮಾಡಿದ್ದೇವೆ. +ತನಿಖೆ ನಂತರ ಕೊಲೆಗೆ ನಿಖರ ಕಾರಣ ತಿಳಿಯಲಿದೆ ಎಂದರು. ಸ್ಥಳಕ್ಕೆ ಶಾಸಕ ಬಿ.ಶಿವಣ್ಣ ಭೇಟಿ ನೀಡಿ ರವಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. \ No newline at end of file diff --git a/eesanje/url_46_63_2.txt b/eesanje/url_46_63_2.txt new file mode 100644 index 0000000000000000000000000000000000000000..920216a01d99c647488d6e9ccb8021c086468c6f --- /dev/null +++ b/eesanje/url_46_63_2.txt @@ -0,0 +1,7 @@ +ಬೆಂಗಳೂರಲ್ಲಿ ಡ್ರಗ್ಸ್ ಕಡಿವಾಣಕ್ಕೆ ಕಠಿಣ ಕ್ರಮ : ನಗರ ಪೊಲೀಸ್ ಆಯುಕ್ತ ಬಿ.ದಯಾನಂದ +ಬೆಂಗಳೂರು,ಜು.26-ವಿದೇಶಿ ಪ್ರಜೆಗಳಿಂದ ನಗರದಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆ ಹೆಚ್ಚಾಗುತ್ತಿದ್ದು, ಇದನ್ನು ಕಡಿವಾಣ ಹಾಕಲು ಅಂಗ ಸಂಸ್ಥೆ ಗಳೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಮತ್ತು ವೀಸಾ ಅನಧಿಕೃತ ವಿದೇಶಿ ಪ್ರಜೆಗಳಿಂದ ಮಾದಕ ವಸ್ತು ಜಾಲ ವಿಸ್ತಾರವಾಗುತ್ತಿದೆ. ಈ ಬಗ್ಗೆ ಈಗಾಗಲೇ ಸಿಸಿಬಿ ತಂಡ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಎನ್ ಸಿ ಬಿ, ಎ್ ಆರ್ ಆರ್ ಓ ಸೇರಿದಂತೆ ಅಂಗ ಸಂಸ್ಥೆಗಳ ಜೊತೆ ಸಭೆ ನಡೆಸಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. +ಅಕ್ರಮ ವೀಸಾ ಹೊಂದಿರುವ 20 ವಿದೇಶಿ ಪ್ರಜೆಗಳನ್ನು ಗುರುತಿಸಲಾಗಿದ್ದು, ಈಗಾಗಲೇ 10 ಮಂದಿಯನ್ನು ವಿದೇಶಗಳಿಗೆ ಕಳಿಸಿದ್ದು ಉಳಿದ ಹತ್ತು ಮಂದಿಯನ್ನು ಶೀಘ್ರದಲ್ಲೇ ಕಳುಹಿಸಿಕೊಡಲಾಗುವುದು ಎಂದರು. +ಶಾಲಾ ಮುಖ್ಯಸ್ಥರ ಜೊತೆ ಚರ್ಚೆ :ಮಾದಕ ವಸ್ತು ಜಾಲವು ಕಾಲೇಜುಗಳ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. +ಆರೋಪಿಯ ಶೀಘ್ರ ಬಂಧನ :ಕೋರಮಂಗಲ ಪಿಜಿಗೆ ನುಗ್ಗಿ ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ವ್ಹೀಲಿಂಗ್ ಪುಂಡರ ವಿರುದ್ಧ ಕ್ರಮ :ಇತ್ತೀಚೆಗೆ ಉದ್ಘಾಟನೆಯಾದ ಡಬ್ಬಲ್ ಡೆಕ್ಕರ್ ರಸ್ತೆಯಲ್ಲಿ ಕೆಲ ಪುಂಡರು ವೀಲಿಂಗ್ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಕಂಡುಬಂದಿದ್ದು ಅವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_63_3.txt b/eesanje/url_46_63_3.txt new file mode 100644 index 0000000000000000000000000000000000000000..5697e85f66972d46596ffb55426a31d9e3bd5f45 --- /dev/null +++ b/eesanje/url_46_63_3.txt @@ -0,0 +1,6 @@ +ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವರ್ಗಾವಣೆಗೆ ಶಾಸಕರ ಆಗ್ರಹ +ಬೆಂಗಳೂರು, ಜು.26-ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 55ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಪತ್ರ ಬರೆದಿದ್ದಾರೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸಿಎಂಗೆ ಪತ್ರ ಬರೆದಿದ್ದಾರೆ. +ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿರುವ ಸುಮಾರು 40ಕ್ಕೂ ಹೆಚ್ಚು ಎಕರೆ ಸರ್ಕಾರಿ ಜಾಗಕ್ಕೆ ಪ್ರಭಾವಿಗಳು ಕಾಂಪೌಂಡ್ ಹಾಕಿ ಖಾಸಗಿ ಗಾಲ್ಸ್ ಫ ಕೋರ್ಸ್, ಲೇಔಟ್ ಕೂಡ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಮಾಹಿತಿ ತಿಳಿದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ವರದಿ ಕೇಳಿದ್ದರು. +ಆಗ ಜಿಲ್ಲಾಧಿಕಾರಿ, ತಹಶೀಲ್ದಾರ್ ಪ್ರಭಾವಿಗಳಿಗೆ ಕ್ಲೀನ್ಚಿಟ್ ನೀಡಿ, ಕಂದಾಯ ಇಲಾಖೆಗೆ ಪತ್ರ ಬರೆದಿದ್ದರು. ಬಳಿಕ ಪ್ರಕರಣದ ಆಳಕ್ಕೆ ಇಳಿದು ಸರ್ವೇ ಮಾಡಲು ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಸೂಚನೆ ನೀಡಿದ್ದರು. +ಸರ್ವೇ ಬಳಿಕ ಸತ್ಯ ಹೊರಬಂದಿದ್ದು, ಸರ್ಕಾರಿ ಜಮೀನಿಗೆ ಕಾಂಪೌಂಡ್ ಹಾಕಿರುವುದು ಬಹಿರಂಗವಾಗಿದೆ. ಆಗ ರಾಜೇಂದ್ರ ಕಟಾರಿಯಾ ಅವರು ಈ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. +ರಾಜೇಂದ್ರ ಕಟಾರಿಯಾ ಬೆನ್ನಿಗೆ ಸಚಿವ ಕೃಷ್ಣಬೈರೇಗೌಡ ನಿಂತಿದ್ದಾರೆ. ಇದೇ ಕಾರಣಕ್ಕೆ ಕಟಾರಿಯಾ ವಿರುದ್ಧ ಕೆಲವು ಶಾಸಕರು ತಿರುಗಿಬಿದ್ದಿದ್ದಾರೆ.ರಾಜೇಂದ್ರ ಕಟಾರಿಯಾ ಅವರನ್ನು ವರ್ಗಾವಣೆ ಮಾಡುವಂತೆ 55 ಶಾಸಕರು ಸಹಿಯೊಂದಿಗೆ ಮುಖ್ಯಮಂತ್ರಿಗಳಿಗೆ ದೂರು ನೀಡಲಾಗಿದೆ. \ No newline at end of file diff --git a/eesanje/url_46_63_4.txt b/eesanje/url_46_63_4.txt new file mode 100644 index 0000000000000000000000000000000000000000..fe1a249617daed08a47744908be6bdb02678eda6 --- /dev/null +++ b/eesanje/url_46_63_4.txt @@ -0,0 +1,59 @@ +ಮುಡಾ ಹುನ್ನಾರದ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ : ವಿಪಕ್ಷಗಳ ವಿರುದ್ಧ ಆಕ್ರೋಶ +ಬೆಂಗಳೂರು,ಜು.26-ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮಗಳು ನಡೆಯದೇ ಇದ್ದರೂ ತಮ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಮತ್ತು ಜೆಡಿಎಸ್‌‍ ಹುನ್ನಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ಸುಳ್ಳು ಮಾಹಿತಿಯೊಂದಿಗೆ ಜನರನ್ನು ದಾರಿ ತಪ್ಪಿಸಿ ಅಪಪ್ರಚಾರ ಮಾಡುತ್ತಿವೆ ಎಂದು ಕಿಡಿಕಾರಿದರು. +ಭೂಮಿಯ ಮೂಲ ಒಡೆತನ ಹರಾಜು ಮೂಲಕ ಖರೀದಿ ಮಾಡಿದ್ದಾಗಿದ್ದು, ದೇವರಾಜ ಅವರಿಂದ ತಮ ಭಾವಮೈದುನ ಕಾನೂನುಬದ್ಧವಾಗಿ ಖರೀದಿ ಮಾಡಿದ್ದಾರೆ. ಹೀಗಾಗಿಪಿಟಿಸಿಎಲ್‌ ಕಾಯ್ದೆ ವ್ಯಾಪ್ತಿಗೆ ಭೂಮಿ ಬರುವುದಿಲ್ಲ.ನಿಂಗ ಅವರ ಕುಟುಂಬದ ಸದಸ್ಯರು ಒಪ್ಪಿಗೆಯೊಂದಿಗೆ ದೇವರಾಜ ಅವರಿಗೆ ಭೂಮಿಯ ಮಾಲಿಕತ್ವ ದಕ್ಕಿದೆ. ಹೀಗಾಗಿ ಈಗ ಮಂಜುನಾಥಸ್ವಾಮಿಯವರಿಂದ ಬಿಜೆಪಿಯವರು ದೂರು ಕೊಡಿಸಿ ಮನೆಮುರುಕ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಮುಡಾ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ವಿವರಣೆ ಕೇಳಿದರೆ ಸರ್ಕಾರ ವರದಿ ನೀಡಲು ಸಿದ್ಧವಿದೆ ಎಂದು ಹೇಳಿದ ಮುಖ್ಯಮಂತ್ರಿಯವರು ಮುಡಾದಲ್ಲಿ ವಿರೋಧಪಕ್ಷಗಳ ಬೇರೆ ಬೇರೆ ನಾಯಕರು ಪಡೆದಿರುವ ನಿವೇಶನಗಳ ಮಾಹಿತಿಗಳನ್ನು ಬಹಿರಂಗಪಡಿಸಿದರು. +ಈಗಾಗಲೇ ರಚನೆ ಮಾಡಲಾಗಿರುವ ನ್ಯಾಯಾಂಗ ಸಮಿತಿ ಮುಡಾದಲ್ಲ ನಡೆದಿರುವ ನಿವೇಶನ ಹಂಚಿಕೆ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪರಿಶೀಲನೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌‍ನ ಸಾ.ರಾ.ಮಹೇಶ್‌, ಜಿ.ಟಿ.ದೇವೇಗೌಡ ಹಾಗೂ ಇತರರಿಗೆ ಬದಲಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಮುಖ್ಯಮಂತ್ರಿ ದಾಖಲೆಗಳನ್ನು ಬಿಡುಗಡೆ ಮಾಡಿದರು. +ಸೇಡಿನ ರಾಜಕಾರಣದಿಂದ ಪ್ರತಿಪಕ್ಷಗಳಿಂದ ಮಸಿ ಬಳಿಯುವ ಯತ್ನ +ತಮ ರಾಜಕೀಯ ಜೀವನ ತೆರೆದ ಪುಸ್ತಕವಾಗಿದ್ದು, ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ. ಬಿಜೆಪಿ-ಜೆಡಿಎಸ್‌‍ ಪಕ್ಷಗಳು ದುರುದ್ದೇಶಪೂರಕವಾಗಿ ಸೇಡಿನ ರಾಜಕಾರಣದಿಂದ ಮಸಿ ಬಳಿಯುವ ಯತ್ನ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. +ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಧಾನಸಭೆ ಮತ್ತು ವಿಧಾನಮಂಡಲದಲ್ಲಿ ಜೆಡಿಎಸ್‌‍-ಬಿಜೆಪಿ ಪಕ್ಷಗಳು ಆಧಾರ ರಹಿತವಾಗಿ ಕಾನೂನು ಬಾಹಿರವಾದ ನಿಲುವಳಿ ಸೂಚನೆ ತಂದಿದ್ದರು. ನಿಲುವಳಿ ಚರ್ಚೆಯಾಗಬೇಕಾದರೆ ನಿಯಮಗಳ ಅನುಸಾರ ಇರಬೇಕು. ಆದರೆ  ಬಿಜೆಪಿಯವರು ನೀಡಿದ್ದ ನಿಲುವಳಿ ಸೂಚನೆ ನಿಯಮಗಳ ವಿರುದ್ಧವಾಗಿತ್ತು. ಅದನ್ನು ಚರ್ಚೆ ಮಾಡಲು ಅವಕಾಶ ಇರಲಿಲ್ಲ. ಹಾಗಾಗಿ ನಿಯಾಮವಳಿ ವಿರುದ್ಧವಾಗಿದ್ದ ಸೂಚನೆ ಕುರಿತು ವಿಧಾನ ಸಭಾಧ್ಯಕ್ಷರು, ವಿಧಾನ ಪರಿಷತ್‌ ಸಭಾಪತಿ ಕಾನೂನು ರೀತಿಯ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ 135 ಸ್ಥಾನಗಳನ್ನು ಗೆದ್ದ ಮೇಲೆ ಬಿಜೆಪಿ, ಜೆಡಿಎಸ್‌‍ನವರು ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. +ಕಾಂಗ್ರೆಸ್‌‍ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿರುವುದನ್ನು ಹಾಗೂ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಸರ್ಕಾರ ಎರಡು ವಾರ ವಿಧಾನ ಸಭಾಧಿವೇಶನ ನಡೆಸಿತ್ತು. ಅಷ್ಟೂ ದಿನ ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರವನ್ನು ಮಾತ್ರ ಬಿಜೆಪಿಯವರು ಚರ್ಚೆ ಮಾಡಿದ್ದಾರೆ. ರಾಜ್ಯದ ಸಮಸ್ಯೆಗಳ ಬಗ್ಗೆ ಚಕಾರ ಎತ್ತಿಲ್ಲ ಎಂದು ಆಕ್ಷೇಪಿಸಿದರು. +ರಾಜ್ಯದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಬಂದಿರುವುದರ ಬಗ್ಗೆ ಕಾಂಗ್ರೆಸ್‌‍ ಶಾಸಕರು ಮಾತ್ರ ಚರ್ಚೆ ಮಾಡಿದ್ದಾರೆ. ವಿರೋಧ ಪಕ್ಷಗಳ ಶಾಸಕರು ಆ ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಇದನ್ನು ನೋಡಿದರೆ ಮುಖ್ಯಮಂತ್ರಿ ವ್ಯಕ್ತಿತ್ವಕ್ಕೆ ಹಾಗೂ ಕಾಂಗ್ರೆಸ್‌‍ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನವನ್ನು ಎರಡು ಸದನಗಳಲ್ಲಿ ವಿರೋಧ ಪಕ್ಷಗಳು ನಡೆಸಿವೆ ಎಂದು ದೂರಿದರು. +ನಾನು ಮೊದಲ ಬಾರಿಗೆ 1983ರಲ್ಲಿ ಶಾಸಕನಾಗಿ, 1984ರಲ್ಲಿ ಸಚಿವನಾದವನು. ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ 40ವರ್ಷ ರಾಜಕೀಯದಲ್ಲಿದ್ದೇನೆ. ಸಚಿವನಾಗಿಯೇ 40 ವರ್ಷವಾಗಿದೆ. ಇವತ್ತಿನವರೆಗೆ ನನ್ನ ಮೇಲೆ ಒಂದು ಕಪ್ಪು ಚುಕ್ಕೆ ಇಲ್ಲ. +ನನ್ನ ರಾಜಕೀಯ ಜೀವನ ಪರಿಶುದ್ಧವಾಗಿದೆ. ಬಿಜೆಪಿ ಮತ್ತು ಜೆಡಿಎಸ್‌‍ನಿಂದ ಸೇಡಿನ ರಾಜಕಾರಣ ನಡೆಯುತ್ತಿದೆ. ಅವರು ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಕಳೆದ ವಿಧಾನಸಭೆಯಲ್ಲಿ ಸೋಲನ್ನನುಭವಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡರೂ ಹೆಚ್ಚು ಸ್ಥಾನ ಗೆಲ್ಲಲಾಗಿಲ್ಲ. ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ವಿಧಾನಸಭೆ ಚುನಾವಣೆಗಿಂತ ಲೋಕಸಭೆ ಚುನಾವಣೆಯಲ್ಲಿ ಶೇ.13.5ರಷ್ಟು ಕಾಂಗ್ರೆಸ್‌‍ ಹೆಚ್ಚು ಮತ ಗಳಿಸಿದೆ. ಬಿಜೆಪಿ-ಜೆಡಿಎಸ್‌‍ನವರು ಜನರ ವಿಶ್ವಾಸ ಕಳೆದುಕೊಂಡಿದ್ದು, ಅದನ್ನು ಮರು ಗಳಿಸಲು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು  ಅವರು ಟೀಕಿಸಿದರು. +ಈಗ ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಅನಗತ್ಯವಾಗಿ ಪ್ರಚಾರ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಹಂತ ಹಂತವಾಗಿ ಬಹಿರಂಗಗೊಳ್ಳಲಿದೆ ಎಂದು ಹೇಳಿದರು. +ಆರಂಭದಿಂದ ಪರಭಾರೆವರೆಗೂ ಸಮಗ್ರ ವಿವರ ನೀಡಿದ ಸಿಎಂ +ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭೂಮಿಯ ಮೂಲ ಆರಂಭದಿಂದ ಹಿಡಿದು ಇತ್ತೀಚಿನ ಪರಭಾರೆವರೆಗೂ ಸಮಗ್ರವಾದ ವಿವರಗಳನ್ನು ಜನತೆಯ ಮುಂದಿಟ್ಟಿದ್ದಾರೆ. ಈ ಮೊದಲು ಸಿಟಿ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಬೋರ್ಡ್‌ (ಸಿಐಟಿಬಿ)ಗಳು ಜಾರಿಯಲ್ಲಿದ್ದವು. 1985ರಲ್ಲಿ ಕಾನೂನು ತಿದ್ದುಪಡಿ ಮಾಡಿ ರಾಜ್ಯದೆಲ್ಲೆಡೆ ನಗರಾಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಯಿತು. ಅಂದಿನಿಂದ ಸಾವಿರಾರು ಎಕರೆ ಸ್ವಾಧೀನ ಮಾಡಿಕೊಂಡು, ನಿವೇಶನ ರಚನೆ ಮಾಡಿ ಹಂಚಲಾಗಿದೆ. +ಮುಡಾ ಸರ್ವೆ ನಂಬರ್‌ 464ರಲ್ಲಿ  3 ಎಕರೆ 16 ಗುಂಟೆ ಭೂಮಿಯನ್ನು ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ 2004ರಲ್ಲಿ ಕ್ರಯ ಮಾಡಿಕೊಂಡಿದ್ದಾರೆ. ಈ ಜಮೀನು ಪಿಟಿಸಿಎಲ್‌ ಕಾಯ್ದೆಗೆ ಒಳಪಡಲಿದೆ ಎಂದು ಬಿಜೆಪಿ-ಜೆಡಿಎಸ್‌‍ ಶಾಸಕರು ಆರೋಪಿಸುತ್ತಿದ್ದಾರೆ. ಆದರೆ ದಲಿತರಿಗೆ ಸರ್ಕಾರದಿಂದ ಜಮೀನು ಮಂಜೂರು ಆಗಿದ್ದರೆ, ಅಲ್ಲಿ ಕೆಲ ನಿಬಂಧನೆಗಳನ್ನು ಹಾಕಿರುತ್ತಾರೆ. ಅವು ಉಲ್ಲಂಘನೆಯಾಗಿದ್ದರೆ ಪಿಟಿಸಿಎಲ್‌ ಕಾಯ್ದೆ ಒಳಪಡಲಿದೆ, ಇದು ಪಿರ್ತಾಜಿತ ಆಸ್ತಿ. ಹಾಗಾಗಿ ಪಿಟಿಸಿಎಲ್‌ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಜಮೀನಿನ ಪೂರ್ವದಲ್ಲಿ ನಿಂಗ ಬಿನ್‌ ಜವರ 1935ರಲ್ಲಿ ಮೈಸೂರು ತಾಲ್ಲೂಕು ಕಚೇರಿಗೆ ಅರ್ಜಿ ನೀಡಿದ್ದಾರೆ. ಆಗ ಹರಾಜು ನಡೆಯುತ್ತದೆ.  26-9-1930ರಲ್ಲಿ ಹರಾಜು ನೋಟಿಸ್‌‍ ನೀಡಲಾಗಿದೆ. 3-10-1935 ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ನಿಂಗ ಕೂಗುತ್ತಾರೆ. ಬೇರೆ ಯಾರು ಇಲ್ಲದ ಕಾರಣ ನಿಂಗ ಬಿನ್‌ ಜವರ ಅವರಿಗೆ ಒಂದು ರೂಪಾಯಿಗೆ ಕ್ರಯ ಆಗುತ್ತದೆ. 13-10-1935ರಲ್ಲಿ ಅವರಿಗೆ ಹರಾಜಿನಲ್ಲಿ ಖರೀದಿ ಖಚಿತವಾಗುತ್ತದೆ ಎಂದು ವಿವರಿಸಿದರು. +ಜಮೀನು ಹರಾಜಿನ ಮೂಲಕ ಬಂದಿದ್ದು, ಸ್ವಯಾರ್ಜಿತ ಆಸ್ತಿ. ಕೆಸರೆ ಗ್ರಾಮದ ಸರ್ವೆ ನಂ.464 ರಲ್ಲಿನ 3.16 ಎಕರೆಯನ್ನು ಒಂದು ರೂಪಾಯಿಗೆ ಖರೀದಿಯಾಗಿದೆ. ಬಿಜೆಪಿ-ಜೆಡಿಎಸ್‌‍ ಜನರಿಗೆ ತಪ್ಪು ಮಾಹಿತಿ ನೀಡಲು ಕುಟೀಲ ಹರ ಸಾಹಸ ನಡೆಸುತ್ತಿದ್ದಾರೆ. ಗ್ರಾಂಟ್‌ ಆಗದಿದ್ದರೂ, ಸ್ವಯಾರ್ಜಿತ ಆಸ್ತಿಯಾಗಿದ್ದರೂ ಪಿಟಿಸಿಲ್‌ ಕಾಯ್ದೆಗೆ ಒಳಪಡಲಿದೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು. +ನಿಂಗ ಬಿನ್‌ ಜವರ ಅವರಿಗೆ ಮೂರು ಜನ ಮಕ್ಕಳು. ಮಲ್ಲಯ್ಯ, ಮೈಲಾರಯ್ಯ, ದೇವರಾಜ ಎಂಬುವರಿದ್ದು, ಮಲ್ಲಯ್ಯನಿಗೆ ವಾರಸುದಾರರಿಲ್ಲದೆ ಪವತಿಯಾಗಿದ್ದಾರೆ. ಮೈಲಾರಯ್ಯನ ಪತ್ನಿ ಪುಟ್ಟಗೌರಮ ಅವರ ಮಗ ಎಂ.ಮಂಜುನಾಥಸ್ವಾಮಿ ಇದ್ದರು. ಮಲ್ಲಯ್ಯ ಸೇರಿದಂತೆ ವಂಶವೃಕ್ಷಕ್ಕೆ ಮೂರು ಜನ ಸಹಿ ಮಾಡಿದ್ದಾರೆ. +ಸದರಿ ಭೂಮಿಯನ್ನು ದೇವರಾಜಯ್ಯನಿಗೆ ಖಾತೆ ಮಾಡಿಕೊಡಲು ನಮ್ಮ ವಿರೋಧ ಇಲ್ಲ ಎಂದು ಕುಟುಂಬದ ಸದಸ್ಯರು ಸರ್ಕಾರಕ್ಕೆ ಬರೆದುಕೊಡುತ್ತಾರೆ. ಮಲ್ಲಯ್ಯ, ಪುಟ್ಟಗೌರಮ, ಮಂಜುನಾಥಸ್ವಾಮಿ ಸಹಿ ಮಾಡಿದ್ದಾರೆ. ಇತ್ತೀಚೆಗೆ ಮಂಜುನಾಥಸ್ವಾಮಿಯನ್ನು ಬಿಜೆಪಿಯವರು ಪುಸಲಾಯಿಸಿ ದೂರು ಕೊಡಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಿಜೆಪಿ ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು. +ದೇವರಾಜು ಹೆಸರಿಗೆ ಮ್ಯೂಟೆಷನ್‌ ಹಾಗೂ ಪಹಣಿ ಆಗಿದೆ. ಇದಕ್ಕೆ ಕುಟುಂಬದ ಎಲ್ಲಾ ಸದಸ್ಯರು ಲಿಖಿತ ಹೇಳಿಕೆಗೆ ಸಹಿ ಹಾಕಿದ್ದಾರೆ. 20 ವರ್ಷ ಇಲ್ಲದ ತಕರಾರನ್ನು ಈಗ ಸೃಷ್ಟಿಸಲಾಗಿದೆ. ಬಿಜೆಪಿಯವರು ಮಲ್ಲಿಕಾರ್ಜುನಸ್ವಾಮಿಯನ್ನು ಎತ್ತಿ ಕಟ್ಟಿ ಚಿತಾವಣೆ ಮಾಡಿ ಹೇಳಿಕೆ ಕೊಡಿಸಿರುವ ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ ಎಂದು ಕಿಡಿಕಾರಿದರು. ಮುಡಾ ಈ ಜಮೀನು ಸ್ವಾಧೀನ ಪಡಿಸಿಕೊಳ್ಳಲು 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997ರಲ್ಲಿ ಅಂತಿಮ ಅಧಿಸೂಚನೆಯಾಗಿದೆ.  13-08-1996ರಲ್ಲಿ ದೇವರಾಜಯ್ಯ ಅರ್ಜಿ ಕೊಟ್ಟು ನನಗೆ ಕೆಸರೆ ಗ್ರಾಮದಲ್ಲಿ ಎರಡು ಸರ್ವೆ ನಂ.ಗಳಿಂದ ತಮಗೆ 4.18 ಎಕರೆ ಪಿರ್ತಾಜಿತ ಆಸ್ತಿ ಇದ್ದು ಹಾಲಿ ನನ್ನ ಸ್ವಾದೀನದಲ್ಲಿದೆ, ಈ ಕೃಷಿ ಭೂಮಿ ನಂಬಿ ಜೀವನ ಮಾಡುತ್ತಿದ್ದೇನೆ. ಇದನ್ನು ಬಿಟ್ಟು ಬೇರೆ ಜಮೀನು ಇಲ್ಲ. ನನಗೆ ನಾಲ್ಕು ಗಂಡು ಮಕ್ಕಳಿದ್ದಾರೆ. ಅಲ್ಲಿ ಸಾಕಷ್ಟು ಮರಗಳಿವೆ. ನಗರಾಭಿವೃದ್ಧಿ ಉದ್ದೇಶದ ಸ್ವಾಧೀನಕ್ಕೆ ಕೈ ಬಿಟ್ಟು ಕೃಷಿ ಮುಂದುವರೆಸಲು ಅನುಕೂಲ ಮಾಡಿಕೊಳ್ಳಬೇಕು ಎಂದು ಅರ್ಜಿ ಬರೆದಿದ್ದರು. +ಆಗ ಡಿ-ನೋಟಿಫಿಕೇಷನ್‌ ಮಾಡಲು ವಿ.ಬಾಲಸುಬ್ರಹಣ್ಯ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ವಿ.ಗೋವಿಂದರಾಜು, ಕಾನೂನು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಕೆ.ಎಂ.ತಮಯ್ಯ ಸದಸ್ಯರಾಗಿದ್ದರು. +24-07-1977 ಸಭೆಯಲ್ಲಿ ಡಿ-ನೋಟಿಫಿಕೇಷನ್‌ ಪ್ರಕ್ರಿಯೆಯಿಂದ ಕೈ ಬಿಡಲು ಶಿಫಾರಸ್ಸು ಮಾಡಲಾಗಿದೆ. ಸದರಿ ಭೂಮಿಯಲ್ಲಿ ನೀರು ಸರಬರಾಜು ಹಾಗೂ ಒಳ ಚರಂಡಿ ಯೋಜನೆ ನಡೆಯದಿರುವುದರಿಂದ ಭೂಸ್ವಾಧೀನದಿಂದ ಕೈ ಬಿಡಬಹುದು ಎಂದು ಚರ್ಚಿಸಿ ಸಮಿತಿಯವರು ಮುಡಾ ಶಿಫಾರಸ್ಸು ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಭೂ ಸ್ವಾದೀನಕ್ಕೆ ಈವರೆಗೂ ಯಾವುದೇ ಪರಿಹಾರ ಪಾವತಿಸಿಲ್ಲ ಎಂದರು. +ಅಂದಿನ ಸಭೆಯಲ್ಲಿ ಮೈಸೂರಿನ ಎರಡು ಜಾಗ ಸೇರಿ, ರಾಜ್ಯದ 19 ಕಡೆಗಳ ಭೂಮಿಯನ್ನು ಭೂ ಸ್ವಾದೀನದಿಂದ ಕೈ ಬಿಡಲಾಗಿದೆ 1998ರಲ್ಲಿ ಡಿ-ನೋಟಿಫಿಕೇಷನ್‌ ಆಗಿದೆ ಎಂದು ವಿವರಿಸಿದರು. +ಮಲ್ಲಿಕಾರ್ಜುನ ಸ್ವಾಮಿ ಹೆಸರಿಗೆ ದೇವರಾಜ ಅವರಿಂದ 25-08-2004ರಲ್ಲಿ ಖರೀದಿ ಕರಾರು ಆಗಿದೆ. ದೇವರಾಜು ಅವರ ಪತ್ನಿ ಮತ್ತು ಮಕ್ಕಳು ಖರೀದಿ ಕರಾರಿಗೆ ಸಹಿ ಹಾಕಿದ್ದಾರೆ. 15-07-2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.ನಮ್ಮ ಮಾವನಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಿ, ಜಗದೀಶ್‌. ಅವರು ಭಾಗವಾದಾಗ 6-10-2010ರಲ್ಲಿ ದಾನಪತ್ರದ ಮೂಲಕ ನನ್ನ ಪತ್ನಿ ಅವರಿಗೆ 3 ಎಕರೆ 16 ಗುಂಟೆ ಭೂಮಿ ನೀಡುತ್ತಾರೆ.  2013-14ರಲ್ಲಿ ಮುಡಾ ಅಕ್ರಮವಾಗಿ ಸ್ವಾಧೀನ ತೆಗೆದುಕೊಂಡು ನಿವೇಶನ ಹಾಗೂ ಪಾರ್ಕ್‌ ಮಾಡಿ ಹಂಚಿದ್ದಾರೆ ಎಂದು ಗೊತ್ತಾಯಿತು. 2014ರಲ್ಲಿ ಅರ್ಜಿ ನೀಡಿ, ನಮ್ಮ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿದ್ದೀರಾ ? ನಮ್ಮಗೆ ಪರ್ಯಾಯ ಜಮೀನು ಕೊಡಿ ಎಂದು ಮನವಿ ಸಲ್ಲಿಸಲಾಯಿತು ಎಂದು ವಿವರಿಸಿದರು. +ಮುಡಾ ನಿವೇಶನ ಹಂಚಿಕೆ ಕಾನೂನು ಬದ್ಧ : ರಾಜ್ಯಪಾಲರಿಗೆ ವರದಿ ಸಲ್ಲಿಕೆ +ಮುಡಾ ಪ್ರಕರಣದಲ್ಲಿ ರಾಜ್ಯಪಾಲರಿಗೆ ಸರ್ಕಾರ ವರದಿ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ವ್ಯಕ್ತಿಯೊಬ್ಬರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ವಿವರಣೆ ಕೇಳಿದರೆ ವರದಿ ನೀಡಲಾಗುವುದು.ಮುಡಾ ತಮಗೆ ನಿವೇಶನ ಹಂಚಿಕೆ ಮಾಡಿರುವುದು ಸಂಪೂರ್ಣ ಕಾನೂನು ಬದ್ಧವಾಗಿದೆ. ಇದನ್ನು ರಾಜ್ಯಪಾಲರಿಗೆ ತಿಳಿಸಲಾಗುವುದು ಎಂದು ಹೇಳಿದರು. +ಪರ್ಯಾಯ ನಿವೇಶನ ಪಡೆಯುವಲ್ಲಿ ನನ್ನ ಪತ್ನಿ, ಭಾವಮೈದುನನ ಪಾತ್ರವಿಲ್ಲ +ಬೆಂಗಳೂರು,ಜು.26- ಮುಡಾದಿಂದ ಪರ್ಯಾಯ ನಿವೇಶನ ಪಡೆಯುವ ಪ್ರಕರಣದಲ್ಲಿ ನನ್ನದಾಗಲೀ, ತಮ ಪತ್ನಿ ಪಾರ್ವತಿಯದಾಗಲೀ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿಯದ್ದಾಗಲೀ ಯಾವುದೇ ಪಾತ್ರವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತಮ ತಪ್ಪನ್ನು ಒಪ್ಪಿಕೊಂಡು ಬದಲಿ ನಿವೇಶನವನ್ನು ನೀಡಿದೆ ಎಂದು ಹೇಳಿದರು. +ಮುಡಾ ಭೂಮಿಯನ್ನು ಅಕ್ರಮವಾಗಿ ಬಳಸಿಕೊಂಡ ಕಾರಣಕ್ಕೆ 2014 ಮತ್ತು 2021 ರಲ್ಲಿ ತಮ ಪತ್ನಿ ಪಾರ್ವತಿಯವರು ಎರಡು ಬಾರಿ ಪತ್ರ ಬರೆದು ಬದಲಿ ನಿವೇಶನ ನೀಡುವಂತೆ ಮನವಿ ಮಾಡಿದ್ದರು.2014ರ ಜೂನ್‌ 23 ರಂದು ಮೊದಲ ಬಾರಿ ಪತ್ರ ಬರೆಯಲಾಗಿತ್ತು. ಆಗ ನಾನು ಮುಖ್ಯಮಂತ್ರಿಯಾಗಿದ್ದೆ. ನನ್ನ ಪತ್ನಿ ಅರ್ಜಿ ಸಲ್ಲಿಸಿರುವುದನ್ನು ಗಮನಕ್ಕೆ ತಂದಾಗ ನಾನು ಅಧಿಕಾರದಲ್ಲಿರುವುದರಿಂದ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬದಲಿ ನಿವೇಶನವನ್ನೂ ನೀಡುವುದಿಲ್ಲ. ಅಧಿಕಾರವಧಿ ಮುಗಿದ ಬಳಿಕ ಮುಡಾದವರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದೆ. ಮತ್ತೆ ಈ ವಿಚಾರವನ್ನು ನನ್ನ ಗಮನಕ್ಕೆ ತರುವುದು ಬೇಡ ಎಂದು ಸೂಚಿಸಿದ್ದಾಗಿ ತಿಳಿಸಿದರು.ನಂತರ 2021 ರಲ್ಲಿ ಮತ್ತೊಮೆ ಅರ್ಜಿ ಸಲ್ಲಿಸಲಾಗಿತ್ತು ಎಂದು ಮುಖ್ಯಮಂತ್ರಿ ಹೇಳಿದರು. +2017 ರ ಡಿಸೆಂಬರ್‌ 15 ರಂದು ಮುಡಾ ಸಭೆಯಲ್ಲಿ ಚರ್ಚೆ ಮಾಡಿ ಕೆಸರೆ ಗ್ರಾಮದ 464ರ ಸರ್ವೆ ನಂ.ನಲ್ಲಿ 3 ಎಕರೆ 16 ಗುಂಟೆ ಭೂಮಿಯನ್ನು ಭೂಸ್ವಾಧೀನದಿಂದ ಕೈಬಿಡಲಾಗಿದ್ದರೂ ಅದನ್ನು ಬಳಕೆ ಮಾಡಿಕೊಂಡು ನಿವೇಶನ ಹಂಚಿಕೆ ಮಾಡಿ ಮಾರಾಟ ಮಾಡಿರುವುದು ತಪ್ಪಾಗಿದೆ. ಜಮೀನಿನ ಮಾಲೀಕರು ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಿ ಸಮಾನಾಂತರವಾಗಿ ಪರಿವರ್ತನೆಯಾಗದೇ ಇರುವ ಭೂಮಿ ನೀಡಬೇಕೆಂದು ನಿರ್ಣಯ ಕೈಗೊಳ್ಳಲಾಯಿತು. +ನಂತರ 2021ರಲ್ಲಿ ಎರಡನೇ ಬಾರಿ ಅರ್ಜಿ ಸಲ್ಲಿಸಿದಾಗ ತಮ ಜಮೀನನ್ನು ಉಪಯೋಗಿಸಿಕೊಂಡಿರುವ ಬಾಬ್ತು ಯಾವುದೇ ಪರಿಹಾರ ನೀಡಿಲ್ಲ. ಭೂಮಿಗೆ ಭೂಮಿ ನೀಡುವುದು ಬೇಡ. ಶೇ.50:50ರ ಅನುಪಾತದಲ್ಲಿ ನಿವೇಶನ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. +ನಾವು ಇಂತಹ ಕಡೆಯೇ ಜಾಗ ಕೊಡಿ ಎಂದು ಕೇಳಿರಲಿಲ್ಲ. ಮುಡಾದವರು ವಿಜಯನಗರದ 3 ಮತ್ತು 4 ನೇ ಹಂತದ ಬಡಾವಣೆಯಲ್ಲಿ ನಿವೇಶನ ನೀಡಿದ್ದಾರೆ. ನಮ್ಮ ಒಟ್ಟು 3 ಎಕರೆ 16 ಗುಂಟೆಯಿಂದ 1,48,000 ಚದರ ಅಡಿ ಜಾಗ ವಿಸ್ತೀರ್ಣವಿದ್ದು, ಮುಡಾ ಬದಲಿಯಾಗಿ ನೀಡಿರುವುದು 38,588 ಚದರ ಅಡಿ ಮಾತ್ರ. ಮುಡಾ ನಿರ್ಣಯದಲ್ಲಿ ಅರ್ಜಿದಾರರು ಒಪ್ಪುವ ಜಾಗದಲ್ಲೇ ನಿವೇಶನ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ ಎಂದರು.ಮುಡಾ ಸಭೆಯಲ್ಲಿ ಜೆಡಿಎಸ್‌‍ ಶಾಸಕರಾದ ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ, ಬಿಜೆಪಿಯ ಎಸ್‌‍.ಎ.ರಾಮದಾಸ್‌‍, ಅದೇ ಪಕ್ಷದ ನಾಗೇಂದ್ರ ಭಾಗವಹಿಸಿದ್ದರು. +ಸುಂದರಮ್ಮ ಪ್ರಕರಣ : +ಇದೇ ರೀತಿ ಮುಡಾ ಸುಂದರಮ್ಮ ಎಂಬುವರ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿತ್ತು. ಅದರಲ್ಲೂ ತಪ್ಪು ಒಪ್ಪಿಕೊಂಡು ಬದಲಿ ನಿವೇಶನ ನೀಡಲು ಮುಡಾ ನಿರ್ಣಯಿಸಿತ್ತು. ಆದರೆ ಸುಂದರಮ ಮುಡಾದ ಪ್ರಸ್ತಾಪವನ್ನು ಒಪ್ಪಿಕೊಳ್ಳಲಿಲ್ಲ. ಬದಲಾಗಿ ಹೈಕೋರ್ಟ್‌ ಮೆಟ್ಟಿಲೇರಿದಾಗ ಸ್ವಾಧೀನಪಡಿಸಿಕೊಳ್ಳಲಾದ ಜಾಗದಷ್ಟೇ ಬದಲಿ ಭೂಮಿ ನೀಡುವ ಆದೇಶ ನೀಡಲಾಗಿತ್ತು. ಆದರೆ ನಮ್ಮ ಪ್ರಕರಣದಲ್ಲಿ 50:50 ಅನುಪಾತಕ್ಕೆ ಒಪ್ಪಿಕೊಂಡಿದ್ದೇವೆ. ಇದರಲ್ಲಿ ಲೋಪ ಏನಾಗಿದೆ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. +ಬಿಜೆಪಿಯವರ ಮನೆ ಮುರುಕ ರಾಜಕಾರಣ : ಸಿಎಂ ಸಿದ್ದು ಆಕ್ರೋಶ.. +ಬೆಂಗಳೂರು,ಜು.26- ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ ಹೆಸರಿಗೆ ಮಸಿ ಬಳಿಯುವ ದುರುದ್ದೇಶದಿಂದ ಬಿಜೆಪಿಯವರು ಮನೆಮುರುಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಂಗ ಬಿನ್‌ ಜವರ ಅವರ ಕುಟುಂಬದ ಸದಸ್ಯರು ಒಪ್ಪಂದದ ಮೇರೆಗೆ ಕೆಸರೆ ಗ್ರಾಮದ 3 ಎಕರೆ 16 ಗುಂಟೆಯನ್ನು ನಿಂಗ ಅವರ ಕೊನೆಯ ಪುತ್ರ ದೇವರಾಜ ಅವರ ಹೆಸರಿಗೆ ಬಿಟ್ಟುಕೊಟ್ಟಿದ್ದರು. ತಮ ಪಾಲಿನ ಭೂಮಿಯನ್ನು ದೇವರಾಜ ಪರಭಾರೆ ಮಾಡಿದ್ದಾರೆ. +ತಮ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಖರೀದಿಸಿ ಭೂಪರಿವರ್ತನೆ ಮಾಡಿಸಿಕೊಂಡಿದ್ದಾರೆ. ತಮ ಪತ್ನಿಯ ಹೆಸರಿಗೆ ದಾನಪತ್ರ ನೀಡಿದ್ದಾರೆ. ಇತ್ತೀಚೆಗೆ ವಿವಾದ ಮಾಡಿದ ಬಿಜೆಪಿಯವರು ಮಂಜುನಾಥಸ್ವಾಮಿ ಎಂಬುವರಿಂದ ಜಿಲ್ಲಾಧಿಕಾರಿಗೆ ದೂರು ಕೊಡಿಸಿ ತಮಗೂ ಪಾಲು ಬರಬೇಕೆಂದು ಪ್ರತಿಪಾದನೆ ಮಾಡಿಸಲು ಯತ್ನಿಸುತ್ತಿದ್ದಾರೆ. +ಕಳೆದ 24 ವರ್ಷಗಳಿಂದಲೂ ಈ ಭೂಮಿ ವಿಷಯವಾಗಿ ಯಾವುದೇ ತಗಾದೆಗಳು, ವ್ಯಾಜ್ಯಗಳು ಇರಲಿಲ್ಲ. ಪಾಲುದಾರಿಕೆ ಕೂಡ ಕುಟುಂಬದಲ್ಲಿ ಸಮರ್ಪಕವಾಗಿ ನಡೆದಿತ್ತು. ಆದರೆ ರಾಜಕೀಯ ಕಾರಣಕ್ಕಾಗಿ ದೂರು ಕೊಡಿಸಿ ಕುಟುಂಬದಲ್ಲಿ ಮನೆಮುರುಕ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. +ಆರಂಭದಿಂದ ಪರಭಾರೆವರೆಗೂ ಸಮಗ್ರ ವಿವರ ನೀಡಿದ ಸಿಎಂ +ಬೆಂಗಳೂರು,ಜು.26- ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಭೂಮಿಯ ಮೂಲ ಆರಂಭದಿಂದ ಹಿಡಿದು ಇತ್ತೀಚಿನ ಪರಭಾರೆವರೆಗೂ ಸಮಗ್ರವಾದ ವಿವರಗಳನ್ನು ಜನತೆಯ ಮುಂದಿಟ್ಟಿದ್ದಾರೆ. ಈ ಮೊದಲು ಸಿಟಿ ಇಂಪ್ರೂವ್‌ಮೆಂಟ್‌ ಟ್ರಸ್ಟ್‌ ಬೋರ್ಡ್‌ (ಸಿಐಟಿಬಿ)ಗಳು ಜಾರಿಯಲ್ಲಿದ್ದವು. 1985ರಲ್ಲಿ ಕಾನೂನು ತಿದ್ದುಪಡಿ ಮಾಡಿ ರಾಜ್ಯದೆಲ್ಲೆಡೆ ನಗರಾಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸಲಾಯಿತು. ಅಂದಿನಿಂದ ಸಾವಿರಾರು ಎಕರೆ ಸ್ವಾಧೀನ ಮಾಡಿಕೊಂಡು, ನಿವೇಶನ ರಚನೆ ಮಾಡಿ ಹಂಚಲಾಗಿದೆ. +ಮುಡಾ ಸರ್ವೆ ನಂಬರ್‌ 464ರಲ್ಲಿ  3 ಎಕರೆ 16 ಗುಂಟೆ ಭೂಮಿಯನ್ನು ಬಿ.ಎಂ.ಮಲ್ಲಿಕಾರ್ಜುನ ಸ್ವಾಮಿ 2004ರಲ್ಲಿ ಕ್ರಯ ಮಾಡಿಕೊಂಡಿದ್ದಾರೆ. ಈ ಜಮೀನು ಪಿಟಿಸಿಎಲ್‌ ಕಾಯ್ದೆಗೆ ಒಳಪಡಲಿದೆ ಎಂದು ಬಿಜೆಪಿ-ಜೆಡಿಎಸ್‌‍ ಶಾಸಕರು ಆರೋಪಿಸುತ್ತಿದ್ದಾರೆ. ಆದರೆ ದಲಿತರಿಗೆ ಸರ್ಕಾರದಿಂದ ಜಮೀನು ಮಂಜೂರು ಆಗಿದ್ದರೆ, ಅಲ್ಲಿ ಕೆಲ ನಿಬಂಧನೆಗಳನ್ನು ಹಾಕಿರುತ್ತಾರೆ. ಅವು ಉಲ್ಲಂಘನೆಯಾಗಿದ್ದರೆ ಪಿಟಿಸಿಎಲ್‌ ಕಾಯ್ದೆ ಒಳಪಡಲಿದೆ, ಇದು ಪಿರ್ತಾಜಿತ ಆಸ್ತಿ. ಹಾಗಾಗಿ ಪಿಟಿಸಿಎಲ್‌ ಕಾಯ್ದೆಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಜಮೀನಿನ ಪೂರ್ವದಲ್ಲಿ ನಿಂಗ ಬಿನ್‌ ಜವರ 1935ರಲ್ಲಿ ಮೈಸೂರು ತಾಲ್ಲೂಕು ಕಚೇರಿಗೆ ಅರ್ಜಿ ನೀಡಿದ್ದಾರೆ. ಆಗ ಹರಾಜು ನಡೆಯುತ್ತದೆ.  26-9-1930ರಲ್ಲಿ ಹರಾಜು ನೋಟಿಸ್‌‍ ನೀಡಲಾಗಿದೆ. 3-10-1935 ಹರಾಜಿನಲ್ಲಿ ಭಾಗವಹಿಸಿ ಒಂದು ರೂಪಾಯಿಗೆ ನಿಂಗ ಕೂಗುತ್ತಾರೆ. ಬೇರೆ ಯಾರು ಇಲ್ಲದ ಕಾರಣ ನಿಂಗ ಬಿನ್‌ ಜವರ ಅವರಿಗೆ ಒಂದು ರೂಪಾಯಿಗೆ ಕ್ರಯ ಆಗುತ್ತದೆ. 13-10-1935ರಲ್ಲಿ ಅವರಿಗೆ ಹರಾಜಿನಲ್ಲಿ ಖರೀದಿ ಖಚಿತವಾಗುತ್ತದೆ ಎಂದು ವಿವರಿಸಿದರು. +ಜಮೀನು ಹರಾಜಿನ ಮೂಲಕ ಬಂದಿದ್ದು, ಸ್ವಯಾರ್ಜಿತ ಆಸ್ತಿ. ಕೆಸರೆ ಗ್ರಾಮದ ಸರ್ವೆ ನಂ.464 ರಲ್ಲಿನ 3.16 ಎಕರೆಯನ್ನು ಒಂದು ರೂಪಾಯಿಗೆ ಖರೀದಿಯಾಗಿದೆ. ಬಿಜೆಪಿ-ಜೆಡಿಎಸ್‌‍ ಜನರಿಗೆ ತಪ್ಪು ಮಾಹಿತಿ ನೀಡಲು ಕುಟೀಲ ಹರ ಸಾಹಸ ನಡೆಸುತ್ತಿದ್ದಾರೆ. ಗ್ರಾಂಟ್‌ ಆಗದಿದ್ದರೂ, ಸ್ವಯಾರ್ಜಿತ ಆಸ್ತಿಯಾಗಿದ್ದರೂ ಪಿಟಿಸಿಲ್‌ ಕಾಯ್ದೆಗೆ ಒಳಪಡಲಿದೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು. +ನಿಂಗ ಬಿನ್‌ ಜವರ ಅವರಿಗೆ ಮೂರು ಜನ ಮಕ್ಕಳು. ಮಲ್ಲಯ್ಯ, ಮೈಲಾರಯ್ಯ, ದೇವರಾಜ ಎಂಬುವರಿದ್ದು, ಮಲ್ಲಯ್ಯನಿಗೆ ವಾರಸುದಾರರಿಲ್ಲದೆ ಪವತಿಯಾಗಿದ್ದಾರೆ. ಮೈಲಾರಯ್ಯನ ಪತ್ನಿ ಪುಟ್ಟಗೌರಮ ಅವರ ಮಗ ಎಂ.ಮಂಜುನಾಥಸ್ವಾಮಿ ಇದ್ದರು. ಮಲ್ಲಯ್ಯ ಸೇರಿದಂತೆ ವಂಶವೃಕ್ಷಕ್ಕೆ ಮೂರು ಜನ ಸಹಿ ಮಾಡಿದ್ದಾರೆ. +ಸದರಿ ಭೂಮಿಯನ್ನು ದೇವರಾಜಯ್ಯನಿಗೆ ಖಾತೆ ಮಾಡಿಕೊಡಲು ನಮ್ಮ ವಿರೋಧ ಇಲ್ಲ ಎಂದು ಕುಟುಂಬದ ಸದಸ್ಯರು ಸರ್ಕಾರಕ್ಕೆ ಬರೆದುಕೊಡುತ್ತಾರೆ. ಮಲ್ಲಯ್ಯ, ಪುಟ್ಟಗೌರಮ, ಮಂಜುನಾಥಸ್ವಾಮಿ ಸಹಿ ಮಾಡಿದ್ದಾರೆ. ಇತ್ತೀಚೆಗೆ ಮಂಜುನಾಥಸ್ವಾಮಿಯನ್ನು ಬಿಜೆಪಿಯವರು ಪುಸಲಾಯಿಸಿ ದೂರು ಕೊಡಿಸಿದ್ದಾರೆ. ಇಷ್ಟೆಲ್ಲಾ ಇದ್ದರೂ ಬಿಜೆಪಿ ಸುಳ್ಳು ಹೇಳುವುದರಲ್ಲಿ ಬಿಜೆಪಿ ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು. +ದೇವರಾಜು ಹೆಸರಿಗೆ ಮ್ಯೂಟೆಷನ್‌ ಹಾಗೂ ಪಹಣಿ ಆಗಿದೆ. ಇದಕ್ಕೆ ಕುಟುಂಬದ ಎಲ್ಲಾ ಸದಸ್ಯರು ಲಿಖಿತ ಹೇಳಿಕೆಗೆ ಸಹಿ ಹಾಕಿದ್ದಾರೆ. 20 ವರ್ಷ ಇಲ್ಲದ ತಕರಾರನ್ನು ಈಗ ಸೃಷ್ಟಿಸಲಾಗಿದೆ. ಬಿಜೆಪಿಯವರು ಮಲ್ಲಿಕಾರ್ಜುನಸ್ವಾಮಿಯನ್ನು ಎತ್ತಿ ಕಟ್ಟಿ ಚಿತಾವಣೆ ಮಾಡಿ ಹೇಳಿಕೆ ಕೊಡಿಸಿರುವ ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇದ್ಯಾ ಎಂದು ಕಿಡಿಕಾರಿದರು. ಮುಡಾ ಈ ಜಮೀನು ಸ್ವಾಧೀನ ಪಡಿಸಿಕೊಳ್ಳಲು 1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997ರಲ್ಲಿ ಅಂತಿಮ ಅಧಿಸೂಚನೆಯಾಗಿದೆ.  13-08-1996ರಲ್ಲಿ ದೇವರಾಜಯ್ಯ ಅರ್ಜಿ ಕೊಟ್ಟು ನನಗೆ ಕೆಸರೆ ಗ್ರಾಮದಲ್ಲಿ ಎರಡು ಸರ್ವೆ ನಂ.ಗಳಿಂದ ತಮಗೆ 4.18 ಎಕರೆ ಪಿರ್ತಾಜಿತ ಆಸ್ತಿ ಇದ್ದು ಹಾಲಿ ನನ್ನ ಸ್ವಾದೀನದಲ್ಲಿದೆ, ಈ ಕೃಷಿ ಭೂಮಿ ನಂಬಿ ಜೀವನ ಮಾಡುತ್ತಿದ್ದೇನೆ. ಇದನ್ನು ಬಿಟ್ಟು ಬೇರೆ ಜಮೀನು ಇಲ್ಲ. ನನಗೆ ನಾಲ್ಕು ಗಂಡು ಮಕ್ಕಳಿದ್ದಾರೆ. ಅಲ್ಲಿ ಸಾಕಷ್ಟು ಮರಗಳಿವೆ. ನಗರಾಭಿವೃದ್ಧಿ ಉದ್ದೇಶದ ಸ್ವಾಧೀನಕ್ಕೆ ಕೈ ಬಿಟ್ಟು ಕೃಷಿ ಮುಂದುವರೆಸಲು ಅನುಕೂಲ ಮಾಡಿಕೊಳ್ಳಬೇಕು ಎಂದು ಅರ್ಜಿ ಬರೆದಿದ್ದರು. +ಆಗ ಡಿ-ನೋಟಿಫಿಕೇಷನ್‌ ಮಾಡಲು ವಿ.ಬಾಲಸುಬ್ರಹಣ್ಯ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ವಿ.ಗೋವಿಂದರಾಜು, ಕಾನೂನು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಕೆ.ಎಂ.ತಮಯ್ಯ ಸದಸ್ಯರಾಗಿದ್ದರು. +24-07-1977 ಸಭೆಯಲ್ಲಿ ಡಿ-ನೋಟಿಫಿಕೇಷನ್‌ ಪ್ರಕ್ರಿಯೆಯಿಂದ ಕೈ ಬಿಡಲು ಶಿಫಾರಸ್ಸು ಮಾಡಲಾಗಿದೆ. ಸದರಿ ಭೂಮಿಯಲ್ಲಿ ನೀರು ಸರಬರಾಜು ಹಾಗೂ ಒಳ ಚರಂಡಿ ಯೋಜನೆ ನಡೆಯದಿರುವುದರಿಂದ ಭೂಸ್ವಾಧೀನದಿಂದ ಕೈ ಬಿಡಬಹುದು ಎಂದು ಚರ್ಚಿಸಿ ಸಮಿತಿಯವರು ಮುಡಾ ಶಿಫಾರಸ್ಸು ಆಧರಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಭೂ ಸ್ವಾದೀನಕ್ಕೆ ಈವರೆಗೂ ಯಾವುದೇ ಪರಿಹಾರ ಪಾವತಿಸಿಲ್ಲ ಎಂದರು. +ಅಂದಿನ ಸಭೆಯಲ್ಲಿ ಮೈಸೂರಿನ ಎರಡು ಜಾಗ ಸೇರಿ, ರಾಜ್ಯದ 19 ಕಡೆಗಳ ಭೂಮಿಯನ್ನು ಭೂ ಸ್ವಾದೀನದಿಂದ ಕೈ ಬಿಡಲಾಗಿದೆ 1998ರಲ್ಲಿ ಡಿ-ನೋಟಿಫಿಕೇಷನ್‌ ಆಗಿದೆ ಎಂದು ವಿವರಿಸಿದರು. +ಮಲ್ಲಿಕಾರ್ಜುನ ಸ್ವಾಮಿ ಹೆಸರಿಗೆ ದೇವರಾಜ ಅವರಿಂದ 25-08-2004ರಲ್ಲಿ ಖರೀದಿ ಕರಾರು ಆಗಿದೆ. ದೇವರಾಜು ಅವರ ಪತ್ನಿ ಮತ್ತು ಮಕ್ಕಳು ಖರೀದಿ ಕರಾರಿಗೆ ಸಹಿ ಹಾಕಿದ್ದಾರೆ. 15-07-2005ರಲ್ಲಿ ಮಲ್ಲಿಕಾರ್ಜುನಸ್ವಾಮಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಪರಿವರ್ತನೆ ಮಾಡಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದ್ದಾರೆ.ನಮ್ಮ ಮಾವನಿಗೆ ಮೂರು ಜನ ಮಕ್ಕಳು. ಮಲ್ಲಿಕಾರ್ಜುನ ಸ್ವಾಮಿ, ಪಾರ್ವತಿ, ಜಗದೀಶ್‌. ಅವರು ಭಾಗವಾದಾಗ 6-10-2010ರಲ್ಲಿ ದಾನಪತ್ರದ ಮೂಲಕ ನನ್ನ ಪತ್ನಿ ಅವರಿಗೆ 3 ಎಕರೆ 16 ಗುಂಟೆ ಭೂಮಿ ನೀಡುತ್ತಾರೆ.  2013-14ರಲ್ಲಿ ಮುಡಾ ಅಕ್ರಮವಾಗಿ ಸ್ವಾಧೀನ ತೆಗೆದುಕೊಂಡು ನಿವೇಶನ ಹಾಗೂ ಪಾರ್ಕ್‌ ಮಾಡಿ ಹಂಚಿದ್ದಾರೆ ಎಂದು ಗೊತ್ತಾಯಿತು. 2014ರಲ್ಲಿ ಅರ್ಜಿ ನೀಡಿ, ನಮ್ಮ ಜಮೀನನ್ನು ಅಕ್ರಮವಾಗಿ ಬಳಸಿಕೊಂಡಿದ್ದೀರಾ ? ನಮ್ಮಗೆ ಪರ್ಯಾಯ ಜಮೀನು ಕೊಡಿ ಎಂದು ಮನವಿ ಸಲ್ಲಿಸಲಾಯಿತು ಎಂದು ವಿವರಿಸಿದರು. +ಜೀವನದಲ್ಲೇ ಕಾಣದಷ್ಟು ಕೆಟ್ಟ ರಾಜಕಾರಣ +ಬಿಜೆಪಿ- ಜೆಡಿಎಸ್‌‍ ಪಕ್ಷಗಳು ನನ್ನ ಜೀವನದಲ್ಲೇ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿದ್ದು, ವೈಯಕ್ತಿಕವಾಗಿ ತೇಜೋವಧೆ ಮಾಡುವ ಹುನ್ನಾರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.ಕರ್ನಾಟಕದಲ್ಲಿ ಕುಸಿದು ಹೋಗುತ್ತಿರುವ ಜನಪ್ರಿಯತೆಯನ್ನು ಮರುಸ್ಥಾಪಿಸಿಕೊಳ್ಳಲು ಸಾವಿರ ಸಲ ಸುಳ್ಳು ಹೇಳಿದರೆ ನಿಜವಾಗುತ್ತದೆ ಎಂಬ ಹಿಟ್ಲರ್‌ ವಾದವನ್ನು ಅನುಸರಿಸುತ್ತಿದ್ದಾರೆ. ಪೇಶ್ವೆವಾದಿ ಮನಸ್ಥಿತಿಯನ್ನು ಪ್ರತಿಪಾದಿಸುತ್ತಿದ್ದಾರೆ. +ಈ ಹಿಂದೆ ದೇವರಾಜ ಅರಸು ವಿಚಾರದಲ್ಲೂ ಇದೇ ರೀತಿ ಅಪಪ್ರಚಾರ ನಡೆಸಲಾಯಿತು. ಧರ್ಮಸಿಂಗ್‌ ಬಗ್ಗೆಯೂ ಸಂಚುಗಳು ನಡೆದವು. ಕಲ್ಯಾಣದ ಬಿಜ್ಜಳನನ್ನು ಇದೇ ಮನಸ್ಥಿತಿಯ ಜನರೇ ಕೊಲೆ ಮಾಡಿದರು. ಗಮನಿತ ವರ್ಗಗಳ ಜನಸಮುದಾಯದಿಂದ ಬಂದವರು ರಾಜಕಾರಣ ಮಾಡಬಾರದು ಎಂಬ ನಿಲುವು ಇವರದು. ಮುಡಾ ವಿಚಾರದಲ್ಲಿ ಗುಲಗಂಜಿಯಷ್ಟೂ ನ್ಯೂನತೆ ಇಲ್ಲದೇ ಇದ್ದರೂ ದೊಡ್ಡದಾಗಿ ಚರ್ಚೆ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಸಂಚಿನ ಹಿಂದೆ ನಿಂತು ಆಟ ಆಡುತ್ತಿರುವ ಸೈದ್ಧಾಂತಿಕ ಗುರುಗಳಿಗೆ ಕರ್ನಾಟಕದ ಜನರ ಮನಸ್ಥಿತಿ ಅರ್ಥವಾಗುತ್ತಿದೆ. ಜನ ಅವರಿಂದ ದೂರವಾಗುತ್ತಿದ್ದಾರೆ. ಅದಕ್ಕಾಗಿ ಕಾಗಕ್ಕ, ಗೂಬಕ್ಕನ ಕಥೆ ಕಟ್ಟಿ ಜನರನ್ನು ನಂಬಿಸಲು ಹೊರಟಿದ್ದಾರೆ. ಬಿಜೆಪಿ-ಜೆಡಿಎಸ್‌‍ನವರ ಮೆದುಳು ಖಾಲಿಯಾಗಿದೆ. ಭೌತಿಕವಾಗಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಕಿಡಿಕಾರಿದ್ದಾರೆ. +ತನಿಖೆಗೆ ನ್ಯಾಯಾಂಗ ಆಯೋಗ +ಮುಡಾದಲ್ಲಿ ನಿವೇಶನ ಹಂಚಿಕೆ ಸೇರಿದಂತೆ ಇತರ ವಿಚಾರಗಳಲ್ಲಿ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌.ದೇಸಾಯಿ ಅವರ ಏಕಸದಸ್ಯ ಆಯೋಗವನ್ನು ರಚಿಸಲಾಗಿದ್ದು, ತನಿಖೆಯ ಚೌಕಟ್ಟಿನ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. +2006 ರಿಂದ 2024 ರ ನಡುವೆ ಮುಡಾ ಎಷ್ಟು ಬಡಾವಣೆಗಳನ್ನು ರಚಿಸಿದೆ. ಡಿ ನೋಟಿಫಿಕೇಷನ್‌ ಆಗಿರುವ ಎಷ್ಟು ಭೂಮಿಯನ್ನು ನಿವೇಶನಗಳನ್ನಾಗಿ ಮಾಡಲು ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಾಲಿಸಿರುವ ನಿಯಮಗಳ್ಯಾವುವು, ಉಲ್ಲಂಘಿಸಿರುವ ನಿಯಮಗಳ್ಯಾವುವು ಎಂಬುದನ್ನು ಪರಿಶೀಲನೆ ನಡೆಸಿ ವರದಿ ನೀಡಲು 6 ತಿಂಗಳ ಕಾಲಾವಕಾಶ ಇದೆ ಎಂದು ಹೇಳಿದರು. \ No newline at end of file diff --git a/eesanje/url_46_63_5.txt b/eesanje/url_46_63_5.txt new file mode 100644 index 0000000000000000000000000000000000000000..4fd19467965e1977d816e23f108a50f35a310d91 --- /dev/null +++ b/eesanje/url_46_63_5.txt @@ -0,0 +1,5 @@ +ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ ಮುನ್ಸೂಚನೆ +ಬೆಂಗಳೂರು, ಜು.26-ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳು ನಿರಂತರ ಮಳೆಯಿಂದ ಅತಿವೃಷ್ಟಿ ಹಾಗೂ ಪ್ರವಾಹಕ್ಕೆ ಸಿಲುಕಿ ನಲುಗಿದ್ದು, ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. +ಉತ್ತರ ಒಳನಾಡಿನಲ್ಲಿ ಇಂದು ಸಹ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಈಗಾಗಲೇ ನಿರಂತರ ಮಳೆಗೆ ಜಲಾಶಯಗಳು ಭರ್ತಿಯಾಗಿದ್ದು, ಭಾರೀ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ಹೀಗಾಗಿ ಅಪಾಯದ ಮಟ್ಟ ಮೀರಿ ನದಿಗಳು ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. +ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಾಳೆ ಬಲವಾದ ತಂಪಾದ ಮೈಲೈ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಹವಾಮಾನ ಇಲಾಖೆಯು ಆರೆಂಟ್‌ ಅಲರ್ಟ್‌ ಘೋಷಿಸಿದೆ. +ಜುಲೈ 28ರಿಂದ 30ರವರೆಗೆ ದಕ್ಷಿಣ ಒಳನಾಡಿನಲ್ಲೂ ಅಧಿಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಸಾಧಾರಣ ಮಳೆ ಮುಂದುವರೆಯಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಬಲವಾದ ಮೈಲೈ ಗಾಳಿ ಬೀಸಲಿದೆ. ಕೆಲವೊಮೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_46_63_6.txt b/eesanje/url_46_63_6.txt new file mode 100644 index 0000000000000000000000000000000000000000..e23658faf788683a93428f0252d839e96364f3af --- /dev/null +++ b/eesanje/url_46_63_6.txt @@ -0,0 +1,5 @@ +ಪ್ರಧಾನಿ ಮೋದಿ ಭೇಟಿಯಾದ ಗೌಡರು, ಕುಮಾರಸ್ವಾಮಿ +ನವದೆಹಲಿ, ಜು.26-ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. +ಪ್ರಧಾನಿ ಅವರ ಅಧಿಕೃತ ನಿವಾಸ ಲೋಕಕಲ್ಯಾಣ ಮಾರ್ಗದಲ್ಲಿ ಗೌಡರು ಮತ್ತು ಕುಮಾರಸ್ವಾಮಿ ಅವರು ನಿನ್ನೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವ ವಿಚಾರದ ಈ ಮೂವರು ನಾಯಕರು ಚರ್ಚೆ ಮಾಡಿದ್ದಾರೆ ಎಂಬ ವಿವರ ಲಭ್ಯವಾಗಿಲ್ಲ.ಭೇಟಿಯಾಗಿರುವ ಈ ವಿಚಾರವನ್ನು ಪ್ರಧಾನಿ ಎಕ್‌್ಸನಲ್ಲಿ ಪೋಟೋ ಸಹಿತ ಹಂಚಿಕೊಂಡಿದ್ದಾರೆ. +ದೇವೇಗೌಡರನ್ನು ಭೇಟಿಯಾಗುವುದು ಗೌರವದ ವಿಚಾರವಾಗಿದೆ. ವಿವಿಧ ವಿಷಯಗಳ ಬಗ್ಗೆ ಮಾಜಿ ಪ್ರಧಾನಿಗಳಿಗಿರುವ ಜಾಣೆ, ದೃಷ್ಟಿ ಕೋನವು ಪ್ರಬಲವಾದ ಮೌಲ್ಯಯುತವಾಗಿದೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. +ಭೇಟಿಯ ಸಂದರ್ಭದಲ್ಲಿ ಗೌಡರು ಕಲಾಕೃತಿಯನ್ನು ಉಡುಗೊರೆಯಾಗಿ ನೀಡಿದ್ದು, ಅದು ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿಯನ್ನು ನೆನಪಿಸುತ್ತದೆ. ಅವರ ಭೇಟಿ ಹಾಗೂ ನೀಡಿರುವ ಉಡುಗೊರೆಗೆ ಧನ್ಯವಾದಗಳನ್ನು ಮೋದಿ ಸಲ್ಲಿಸಿದ್ದಾರೆ. \ No newline at end of file diff --git a/eesanje/url_46_63_7.txt b/eesanje/url_46_63_7.txt new file mode 100644 index 0000000000000000000000000000000000000000..96c654c9ab1a4162703c6cadb135ff53fd6e6369 --- /dev/null +++ b/eesanje/url_46_63_7.txt @@ -0,0 +1,9 @@ +ಮುಂದುವರೆದ ಮುಂಗಾರು ಮಳೆ ಅಬ್ಬರ, ಜಲಾಶಯಗಳು ಭರ್ತಿ, ನದಿಪಾತ್ರದ ಗ್ರಾಮಗಳು ಜಲಾವೃತ +ಬೆಂಗಳೂರು,ಜು.26– ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ನಿರಂತರ ಮಳೆಯಿಂದ ಅನೇಕ ಕಡೆ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ.ವಿದ್ಯುತ್‌ ಕಂಬಗಳು ಮುರಿದು ಬಿದ್ದು ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳು ಜಲಾವೃತಗೊಂಡಿವೆ. +ಮಂಡ್ಯದಲ್ಲಿ ಕಾವೇರಿಯ ಅಬ್ಬರ ಹೆಚ್ಚಾಗಿದೆ. ಕೆಆರ್‌ಎಸ್‌‍ನಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದಲ್ಲಿರುವ ಧಾರ್ಮಿಕ ಕ್ಷೇತ್ರಗಳು ಮುಳುಗಡೆಯಾಗಿವೆ.ನಿಮಿಷಾಂಬ ದೇಗುಲದ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ. ಕಾವೇರಿ ನದಿ ಬಳಿ ಬ್ಯಾರಿಕೇಡ್‌ ಅಳವಡಿಸಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತರು ನದಿಗೆ ತೆರಳದಂತೆ ಸೂಚನೆ ನೀಡಲಾಗಿದೆ. +ರಂಗನತಿಟ್ಟು ಪಕ್ಷಿಧಾಮ ಜಲಾವೃತಗೊಂಡಿದ್ದು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಾವೇರಿಯ ಬೋರ್ಗರೆತಕ್ಕೆ ಪಕ್ಷಿ ಸಂಕುಲನ ನಲುಗಿ ಹೋಗಿದೆ. ಬೋಟಿಂಗ್‌ ಪಾಯಿಂಟ್‌ ಅನ್ನು ಸ್ಥಗಿತಗೊಳಿಸಲಾಗಿದೆ.ಉತ್ತರ ಕರ್ನಾಟಕದ ಬೆಳಗಾವಿಯಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಬೆಳಗಾವಿ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ರೌದ್ರನರ್ತನ ಮುಂದುವರೆದಿದೆ. ಭಾರಿ ಪ್ರಮಾಣದಲ್ಲಿ ಜಲಾಶಯಗಳಿಂದ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳಲ್ಲಿ ಮುಳುಗಡೆ ಭೀತಿ ಎದುರಾಗಿದೆ. +ಮುನ್ನೆಚ್ಚರಿಕೆ ಕ್ರಮವಾಗಿ ಹಲವರನ್ನು ಸ್ಥಳಾಂತರ ಮಾಡಲಾಗಿದೆ. ಬೆಳಗಾವಿ, ಖಾನಾಪುರ ಮುಂತಾದೆಡೆ ಮಳೆ ಧಾರಕಾರವಾಗಿ ಸುರಿಯುತ್ತಿರುವುದರ ಜೊತೆಗೆ ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊಲ-ಗದ್ದೆಗಳು ಜಲಾವೃತಗೊಂಡು ಪ್ರವಾಹದ ಭೀತಿ ಎದುರಾಗಿದೆ. +ದೂಪದಾಳ, ಮಾರ್ಕಂಡಯ್ಯ, ಬಳ್ಳಾರಿ ನಾಲದಿಂದ ಘಟಪ್ರಭಾ ನದಿಗೆ 60 ಸಾವಿರ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದೆ. ಆಲಮಟ್ಟಿಯಿಂದ ಕೃಷ್ಣಾ ನದಿಗೆ 2,500 ಲಕ್ಷ ಕ್ಯೂಸೆಕ್‌್ಸ ನೀರನ್ನು ಹೊರಬಿಡಲಾಗುತ್ತಿದೆ. ನಾರಾಯಣಪುರ ಜಲಾಶಯದಿಂದಲೂ ಕೂಡ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದ್ದು, ಕೃಷ್ಣ, ತುಂಗಭದ್ರಾ ತೀರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. +ಮಲೆನಾಡು ಭಾಗದ ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಧಾರಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ನಿರಂತರವಾಗಿ ಸುರಿಯುತ್ತಿದೆ. ಹಲವೆಡೆ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಕಡಲ ಕೊರೆತ ಉಂಟಾಗಿದೆ. +ಹಾಸನ ಜಿಲ್ಲೆಯಲ್ಲಿ ಸತತ ಹತ್ತು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೇಮಾವತಿ ಉಪನದಿಗಳಾದ ಐಗೂರು, ಎಡಕೆರೆ, ಪಾಲಳ್ಳಿ ಹೊಳೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯತೊಡಗಿದೆ. +ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುಂಗ, ಭದ್ರ, ಘಟಪ್ರಭಾ, ಮಲಪ್ರಭಾ, ಕಾವೇರಿ, ನೇತ್ರಾವತಿ, ಅಘನಾಶಿನಿ ಸೇರಿದಂತೆ ಬಹುತೇಕ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಭೀತಿ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. \ No newline at end of file diff --git a/eesanje/url_46_63_8.txt b/eesanje/url_46_63_8.txt new file mode 100644 index 0000000000000000000000000000000000000000..24046ccd8adc492ff8eec35f124bc2ce6a09bbd8 --- /dev/null +++ b/eesanje/url_46_63_8.txt @@ -0,0 +1,6 @@ +ಮುಡಾ ಹಗರಣದ ಸಿಬಿಐ ತನಿಖೆಗೆ ಆಗ್ರಹಿಸಿ ಸಂಸತ್‌ ಭವನದ ಬಿಜೆಪಿ -ಜೆಡಿಎಸ್‌‍ ಸಂಸದರ ಪ್ರತಿಭಟನೆ +ನವದೆಹಲಿ,ಜು.26-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್‌ ಬಾಬು, ಜಗದೀಶ್‌ ಶೆಟ್ಟರ್‌, ಜಗ್ಗೇಶ್‌ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಜಂಟಿಯಾಗಿ ಪ್ರತಿಭಟನೆ ನಡೆಸಿದರು. +ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್‌‍ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು. +ಕೈಯಲ್ಲಿ ಫಲಕಗಳನ್ನಿಡಿದಿದ್ದ ಸಂಸದರು ಸಿದ್ದರಾಮಯ್ಯ ಕುಟುಂಬದವರು ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ತಪ್ಪಿತಸ್ಥ ಸ್ಥಾನದಲ್ಲಿರುವ ಅವರು ಅಧಿಕಾರದಲ್ಲಿ ಮುಂದುವರೆಯಬಾರದು. ತಕ್ಷಣವೇ ರಾಜ್ಯ ಸರ್ಕಾರ ಸಿಬಿಐಗೆ ಪ್ರಕರಣವನ್ನು ಹಸ್ತಾಂತರ ಮಾಡಬೇಕೆಂದು ಒತ್ತಾಯಿಸಿದರು. +ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲೀಕಿ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಗಳ ಮೇಲೆ ಆರೋಪ ಇರುವುದರಿಂದ ನೈತಿಕವಾಗಿ ಮತ್ತು ರಾಜಕೀಯವಾಗಿ ಅಧಿಕಾರದಲ್ಲಿ ಮುಂದುವರೆಯಬಾರದೆಂದು ಎಂದು ಕಿಡಿಕಾರಿದರು. \ No newline at end of file diff --git a/eesanje/url_46_63_9.txt b/eesanje/url_46_63_9.txt new file mode 100644 index 0000000000000000000000000000000000000000..5b23696dc592847f720355bd80a9cd74e12790b4 --- /dev/null +++ b/eesanje/url_46_63_9.txt @@ -0,0 +1,6 @@ +ರಕ್ಷಣಾ ಸಚಿವ ರಾಜನಾಥ ಸಿಂಗ್‌ರನ್ನು ಭೇಟಿಯಾದ ಜಗದೀಶ್‌ ಶೆಟ್ಟರ್ +ಬೆಳಗಾವಿ,ಜು.25-ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರಿಕ ಕ್ಷೇತ್ರವನ್ನು / ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಸೂಚನೆ ನೀಡಬೇಕೆಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್‌ ಅವರಿಗೆ ಸಂಸದ ಜಗದೀಶ್‌ ಶೆಟ್ಟರ್‌ ಮನವಿ ಮಾಡಿದ್ದಾರೆ. +ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿರುವ ಅವರು, ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿೈಡ್‌ ಸಿವಿಲ್‌ ಏರೀಯಾ ಮಾತ್ರ ಅಧಿಕಾರಿಗಳು ಗುರುತಿಸಿ ಉಳಿದ ಸಿವಿಲ್‌ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲಿಲ್ಲ. +ಕೇವಲ ಬಜಾರ ಪ್ರದೇಶಗಳನ್ನು ಮಾತ್ರ ಪರಿಗಣಿಸಿ ಬಂಗಲೋ ಪ್ರದೇಶ ಮಾಡಿರಿಲಿಲ್ಲ. ಈ ಕುರಿತು ಇದೇ ಜು. 6 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು ಗಮನಕ್ಕೂ ತಂದರು ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. +ಈ ಹಿನ್ನಲೆಯಲ್ಲಿ ನವ-ದೆಹಲಿಯಲ್ಲಿ ಸಂಸದ ಜಗದೀಶ ಶೆಟ್ಟರ್‌ರವರು ರಕ್ಷಣಾ ಸಚಿವ ರಾಜನಾಥ ಸಿಂಗ್‌ರನ್ನು ಬೇಟಿ ಮಾಡಿ ಸುಧೀೕರ್ಘವಾಗಿ ಈ ಕುರಿತು ಚರ್ಚಿಸಿ, ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್‌ ಪ್ರದೇಶಗಳನ್ನು ಗುರುತಿಸಿ, ಕರಡು ಪ್ರಸ್ತಾವನೆಯನ್ನು ರೂಪಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ವಿನಂತಿದರು. +ರಕ್ಷಣಾ ಸಚಿವಾಲಯದ ನಿರ್ದೇಶಗಳಡಿ ಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸುವ ಬಗ್ಗೆ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವುದಾಗಿ ರಾಜನಾಥ ಸಿಂಗ್‌ ಭರವಸೆ ನೀಡಿದ್ದಾರೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ. \ No newline at end of file diff --git a/eesanje/url_46_64_1.txt b/eesanje/url_46_64_1.txt new file mode 100644 index 0000000000000000000000000000000000000000..cebc03dca058d14d4e3bd8bfa1674fc3268f8aaf --- /dev/null +++ b/eesanje/url_46_64_1.txt @@ -0,0 +1,8 @@ +ಕರ್ನಾಟಕ ವೈದ್ಯಕೀಯ ನೋಂದಣಿ ವಿಧೇಯಕ ಅಂಗೀಕಾರ +ಬೆಂಗಳೂರು,ಜು.25-ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಹಿಂಸಾಚಾರ, ಅಪಮಾನ ಮಾಡುವುದನ್ನು ನಿಷೇಧಿಸುವ ಮತ್ತು ಇಂತಹ ಕೃತ್ಯಗಳಿಗೆ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ಹಾಗೂ ವೈದ್ಯಕೀಯ ವೃತ್ತಿ ಪಾಲನೆ ಮಾಡುವವರಿಗೆ ಕಡ್ಡಾಯ ನೋಂದಣಿ ಮಾಡಿಸಬೇಕಾದ ಮಸೂದೆಯನ್ನು ವಿಧಾನಸಭೆಯಲ್ಲಿಂದು ಅಂಗೀಕರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಕೆಳಮನೆಯಲ್ಲಿ ಮಂಡಿಸಿದರು. +ಪ್ರಸ್ತಾವಿತ ಮಸೂದೆಯಲ್ಲಿ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಒಂದು ವೇಳೆ ನೋಂದಣಿಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್‌ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. +ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್‌ ಹಾಗೂ ಉಪ ರಿಜಿಸ್ಟರ್‌ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್‌ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಧಿಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಮಸೂದೆಯಲ್ಲಿ ಸೂಚಿಸಲಾಗಿದೆ. +ನಕಲಿಯಾಗಿ ವೈದ್ಯಕೀಯ ವೃತ್ತಿ ಮಾಡುವವರಿಗೆ 10 ಸಾವಿರ ರೂಪಾಯಿಂದ ಒಂದು ಲಕ್ಷ ರೂಪಾಯಿಗಳವರೆಗೂ ಜುಲಾನೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಹಿಂಸಿಸುವುದು, ಅಪಮಾನ ಮಾಡುವುದು, ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದಕ್ಕೆ ಈ ಮೊದಲು ನಿಗದಿಯಾಗಿದ್ದ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. +ಪ್ರಸ್ತಾವಿತ ಮಸೂದೆಯಲ್ಲಿ ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಏಳು ವರ್ಷಗಳವರೆಗೂ ವಿಸ್ತರಿಸಬಹುದಾದ ಕಾರಾಗೃಹ ವಾಸ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಇಲ್ಲದಂತೆ 2 ಲಕ್ಷಗಳವರೆಗೂ ಜುಲಾನೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಅಪರಾಧಗಳಿಗೆ ಪ್ರಚೋದನೆ ನೀಡುವವರೆಗೂ ಇದೇ ತೆರನಾದ ಶಿಕ್ಷೆಯನ್ನು ವಿಧಿಸಲು ಮಸೂದೆಯಲ್ಲಿ ಅವಕಾಶವಿದೆ. +ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೋ-ವಿಡಿಯೋಗಳಲ್ಲಿ, ಆಸ್ಪತ್ರೆಗಳಲ್ಲಾಗಲಿ ೇಟೋ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅವು ದಂಡನಾರ್ಹವಾಗಲಿವೆ.ಪ್ರಮುಖವಾದ ಈ ಮಸೂದೆ ಕುರಿತು ವಿಧಾನಸಭೆಯಲ್ಲಿ ಯಾವುದೇ ಚರ್ಚೆಗಳಾಗಲಿಲ್ಲ. ಮುಡಾ ಹಗರಣವನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್‌‍ನ ಶಾಸಕರು ಸದನದ ಬಾವಿಯಲ್ಲಿ ಇಳಿದು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. +ಈ ವೇಳೆ ಮಸೂದೆ ಮಂಡನೆ ಆಯಿತು. ಸಭಾಧ್ಯಕ್ಷ ಯು.ಟಿ.ಖಾದರ್‌ ಜನಪರವಾದ ಮಸೂದೆಗಳು ಮಂಡನೆಯಾಗಿವೆ. ಅವುಗಳ ಮೇಲೆ ಚರ್ಚೆ ಮಾಡಿ ಎಂದು ಮನವಿ ಮಾಡಿದರು. ವಿರೋಧ ಪಕ್ಷದ ನಾಯಕರು ತಮ ಪಟ್ಟನ್ನು ಮುಂದುವರೆದಿದ್ದರಿಂದಾಗಿ ಮಸೂದೆ ಚರ್ಚೆ ಇಲ್ಲದೆ ಅಂಗೀಕಾರಗೊಂಡಿತು. \ No newline at end of file diff --git a/eesanje/url_46_64_10.txt b/eesanje/url_46_64_10.txt new file mode 100644 index 0000000000000000000000000000000000000000..cc2a8cd4f31f59bbccd147bdae6d2eeb9ae69f38 --- /dev/null +++ b/eesanje/url_46_64_10.txt @@ -0,0 +1,10 @@ +ಹಲವು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಅಬ್ಬರ, ಶಾಲಾ-ಕಾಲೇಜುಗಳಿಗೆ ರಜೆ, ಜನಜೀವನ ಅಸ್ತವ್ಯಸ್ಥ +ಬೆಂಗಳೂರು,ಜು.25-ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರಿ ಮಳೆಯಿಂದ ಕೃಷ್ಣಾ, ದೂದ್‌ಗಂಗಾ, ವೇದ್‌ಗಂಗಾ, ತುಂಗಾ, ಭದ್ರಾ, ಘಟಪ್ರಭಾ, ಮಲಪ್ರಭಾ, ವರದ, ಅಘನಾಶಿನಿ, ನೇತ್ರಾವತಿ, ಕಾವೇರಿ, ಕಪಿಲ ಸೇರಿದಂತೆ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. +ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಮುಂಜಾಗ್ರತಾ ಕ್ರಮವಾಗಿ ನದಿ ತೀರದಲ್ಲಿ ಎನ್‌ಡಿಆರ್‌ ತಂಡಗಳನ್ನು ನಿಯೋಜಿಸಲಾಗಿದೆ.ಈಗಾಗಲೇ ಮಳೆ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಬ್ಬಿನಗದ್ದೆಯ ವಿನಯ್‌ ಮಂಜುನಾಥ್‌ ಗಾಡಿಗ (25) ಮರ ಬಿದ್ದು ಮೃತಪಟ್ಟಿದ್ದಾರೆ. ಮಂಡಗೋಡ ತಾಲ್ಲೂಕಿನ ಮಳಗಿ ಧರ್ಮ ಜಲಾಶಯದಲ್ಲಿ ಈಜಲು ಹೋಗಿದ್ದ ಮುಡಸಾಲಿ ಗ್ರಾಮದ ಶ್ರೀಕಾಂತ ಹರಿಜನ್‌ (20) ನೀರುಪಾಲಾಗಿದ್ದಾರೆ. +ಮುದ್ದೆಬಿಹಾಳ್‌ ತಾಲ್ಲೂಕಿನ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕುರಿಗಾಹಿ ಮಂಜುನಾಥ ಮಾದರ (28) ಮೃತದೇಹ ಯಾದಗಿರಿ ಜಿಲ್ಲೆ ಹೊರಟ್ಟಿ ಗ್ರಾಮದ ಕಾಲುವೆಯಲ್ಲಿ ಪತ್ತೆಯಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ 22, ಮಹಾಲಿಂಗಪುರ ತಾಲ್ಲೂಕಿನಲ್ಲಿ 3 ಸೇತುವೆಗಳು ಮುಳುಗಡೆಯಾಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ನದಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. +ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡಯ್ಯ ನದಿಗಳ ನೀರು ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಮೂಡಲಗಿ ತಾಲ್ಲೂಕಿನ ಘಟಪ್ರಭಾ ನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ 427 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.02 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿದ್ದರಿಂದ ಗಡ್ಡೆಗೊಳ್ಳಿ ಬಸವೇಶ್ವರ ದೇವಸ್ಥಾನ ಮುಳುಗಡೆಯಾಗಿದೆ. +ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಆರ್ಭಟ ಮುಂದುವರೆದಿದ್ದು, ಶಿರಸಿ, ಮತ್ತಿಗಟ್ಟಿ ಮಾರ್ಗವಾಗಿ ಆಂಕೋಲಾಕ್ಕೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಹಲವೆಡೆ ಮನೆಗಳ ಮೇಲೆ ಮರ ಬಿದ್ದು ಹಾನಿಯಾಗಿದೆ. +ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾದರೂ ನದಿಗಳ ಅಬ್ಬರ ತಗ್ಗಿಲ್ಲ. ಜಲಾಶಯಗಳಿಂದ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆ ನೀಡಲಾಗಿದೆ. +ಮಳೆಯ ಆರ್ಭಟದಿಂದ ಉತ್ತರಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ ಮುಂತಾದೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ನಿಪ್ಪಾಣಿ ತಾಲ್ಲೂಕಿನ ಕಾರದಗ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. +ದೂದ್‌ಗಂಗಾ ನದಿ ನೀರು ಗ್ರಾಮಕ್ಕೆ ನುಗ್ಗಿ ಇಲ್ಲಿನ ಹತ್ತಾರು ಮನೆಗಳು ಜಲಾವೃತಗೊಂಡಿವೆ. ಬಾಗಲಕೋಟೆಯಲ್ಲಿ ಭಾರಿ ಮಳೆಯಿಂದ ಡವಳೇಶ್ವರ-ಬೆಳಗಾವಿ ಸಂಪರ್ಕ ಸೇತುವೆ ಕಡಿತಗೊಂಡಿದೆ. ಯಾದಗಿರಿ ವೀರಾಂಜನೇಯ, ಕಂಗಾಲೇಶ್ವರ ದೇವಾಲಯಗಳು ಜಲಾವೃತಗೊಂಡಿವೆ. +ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರಿ ಮಳೆಯಿಂದ ಜನ ಹೈರಾಣಾಗಿ ಹೋಗಿದ್ದಾರೆ. ಆಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿರುವವರನ್ನು ಹೊರತೆಗೆಯುವ ಕಾರ್ಯಾಚರಣೆ ಹತ್ತನೇ ದಿನಕ್ಕೆ ಕಾಲಿಟ್ಟಿದೆ. \ No newline at end of file diff --git a/eesanje/url_46_64_11.txt b/eesanje/url_46_64_11.txt new file mode 100644 index 0000000000000000000000000000000000000000..9e09b34b6a442612eeb8a108511fb51c70019eb8 --- /dev/null +++ b/eesanje/url_46_64_11.txt @@ -0,0 +1,5 @@ +ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ : ಹಾಡು, ನೃತ್ಯ, ಭಜನೆ ಮಾಡಿ ರಾತ್ರಿಕಳೆದ ಶಾಸಕರು +ಬೆಂಗಳೂರು,ಜು.25-ಮೈಸೂರಿನ ಮೂಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ-ಜೆಡಿಎಸ್‌ ಶಾಸಕರು ಕಳೆದ ರಾತ್ರಿ ಹಾಡು, ಭಜನೆ, ನೃತ್ಯ ಮಾಡಿದ್ದಾರೆ. ನಿನ್ನೆ ಸಂಜೆ ಆರಂಭಿಸಿದ ಧರಣಿಯನ್ನು ರಾತ್ರಿ ಕೂಡಾ ಮುಂದುವರೆಸಿದ್ದರು. ರಾತ್ರಿ ವೇಳೆ ಶಾಸಕರು ಹಾಡು, ನೃತ್ಯ, ಭಜನೆ ಮೂಲಕ ಸಮಯ ಕಳೆದಿದ್ದಾರೆ. +ವಿರೋಧಪಕ್ಷದ ಮೊಗಸಾಲೆಯಲ್ಲಿ ತಡರಾತ್ರಿ ಸುಮಾರು 1 ಗಂಟೆವರೆಗೂ ಹಾಡು ಹೇಳಿ ರಂಜಿಸುವುದು, ಭಜನೆ ಮಾಡುವುದು ಹಾಗೂ ಶಾಸಕ ಪ್ರಭು ಚೌವ್ಹಾಣ್‌ ಅವರು ಹಾಡು ಮತ್ತು ನೃತ್ಯ ಮಾಡುವ ಮೂಲಕ ಶಾಸಕರನ್ನು ರಂಜಿಸಿದ್ದಾರೆ. +ಹೊಸದಾಗಿ ಆಯ್ಕೆಯಾದ ಶಾಸಕರು ಉತ್ಸಾಹದಿಂದ ಮನರಂಜನೆಯಲ್ಲಿ ಪಾಲ್ಗೊಂಡಿದ್ದಾರೆ. ಗುರ್ಮೇ ಸುರೇಶ್‌ ಶೆಟ್ಟಿ ಯವರು ಹಾಡು ಹೇಳುವ ಮೂಲಕ ರಂಜಿಸಿದ್ದಾರೆ. ಇದೇ ರೀತಿ ಶಾಸಕರು ಒಬ್ಬರಾದ ಮೇಲೆ ಒಬ್ಬರು ಹಾಡು ಹೇಳುವುದು, ಭಜನೆ ಮಾಡುವುದು, ನೃತ್ಯ ಮಾಡುವ ಮೂಲಕ ರಂಜಿಸಿದ್ದಾರೆ. ಭಜನೆ, ಹಾಡು ಹೇಳುವುದರಿಂದ ನಿದ್ರೆ ಮಾಡಲು ಯತ್ನಿಸಿದ ಶಾಸಕರಿಗೂ ಅಡಚಣೆಯಾಗಿದೆ. ಕೆಲ ಶಾಸಕರು ನಿದ್ರೆ ಮಾಡಲಾಗಲಿಲ್ಲ ಎಂದು ಹೇಳಿದ್ದಾರೆ. +ರಾತ್ರಿ ಊಟ, ಬೆಳಗಿನ ತಿಂಡಿಯನ್ನು ಮೊಗಸಾಲೆಯಲ್ಲಿ ಸೇವಿಸಿದ್ದಾರೆ. ಬೆಳಿಗ್ಗೆ ವಿಧಾನಸೌಧದ ಆವರಣದಲ್ಲಿ ವಾಕಿಂಗ್‌ ಮಾಡಿದ್ದಾರೆ. ಬಳಿಕ ಕೆಲವರು ಶಾಸಕರ ಭವನಕ್ಕೆ ಹೋಗಿ ತಮ್ಮ ತಮ್ಮ ಕೊಠಡಿಗಳಲ್ಲಿ ನಿತ್ಯಕರ್ಮಗಳನ್ನು ಮುಗಿಸಿ ಮರಳಿ ಧರಣಿಗೆ ಸೇರಿಕೊಂಡಿದ್ದಾರೆ.ಚರ್ಚೆಗೆ ಅವಕಾಶ ನೀಡುವವರೆಗೂ ಧರಣಿ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ಧರಣಿಯನ್ನ ಮುಂದುವರೆಸಿದ್ದಾರೆ. \ No newline at end of file diff --git a/eesanje/url_46_64_12.txt b/eesanje/url_46_64_12.txt new file mode 100644 index 0000000000000000000000000000000000000000..0712f9b8e2ce09cc6801dcb255ceda10b77f956a --- /dev/null +++ b/eesanje/url_46_64_12.txt @@ -0,0 +1,6 @@ +ಪುತ್ರನಿಗೆ ಟಿಕೆಟ್ ಕೊಡಿಸಲು ಇಬ್ರಾಹಿಂ ಲಾಬಿ.! +ಬೆಂಗಳೂರು,ಜು.24- ಶಿಗ್ಗಾವಿ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ತಮ್ಮ ಪುತ್ರನಿಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ನಾಯಕರ ಬಳಿ ಲಾಬಿ ನಡೆಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಸಿ.ಎಂ.ಇಬ್ರಾಹಿಂ, ವಿಧಾನಪರಿಷತ್ನಲ್ಲಿ ವಿರೋಧಪಕ್ಷದ ನಾಯಕನ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡಿದ್ದರು. ಪಕ್ಷ ಹಾಗೂ ನಾಯಕರ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡಿ ಮುಜುಗರ ಉಂಟು ಮಾಡಿದ್ದರು. +ಕೊನೆಗೆ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ಗೆ ಸೇರ್ಪಡೆಯಾದರು. ಅಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು. ಜೆಡಿಎಸ್ ನಾಯಕರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕ ಅಸಮಾಧಾನಗೊಂಡು ಜೆಡಿಎಸ್ನ ನಾಯಕರನ್ನು ಟೀಕಿಸಲಾರಂಭಿಸಿದರು. ಅಲ್ಲಿಂದಲೂ ಹೊರಗುಳಿದ ಸಿ.ಎಂ.ಇಬ್ರಾಹಿಂ ರಾಜಕೀಯವಾಗಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಮರಳಿ ಕಾಂಗ್ರೆಸ್ಗೆ ಬರಲಾಗದೇ, ಜೆಡಿಎಸ್ನಲ್ಲೂ ಯಾವುದೇ ಸ್ಥಾನಮಾನ ಪಡೆಯಲಾಗದೇ ತ್ರಿಶಂಕು ಸ್ಥಿತಿಯಲ್ಲಿದ್ದರು. +ತಮ್ಮ ಪುತ್ರ ಫಯಾಜ್ ಇತ್ತೀಚೆಗೆ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಅವರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬೇಕು ಎಂದು ಸಿ.ಎಂ.ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. +ಇತ್ತೀಚೆಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯಬೇಕಿದೆ. ಈ ಹಿಂದೆ 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಯಾಸಿರ್ ಅಹಮದ್ಖಾನ್ ಪಠಾಣ್ ಸ್ಪರ್ಧೆ ಮಾಡಿದ್ದರು. ಅದಕ್ಕೂ ಹಿಂದಿನ 2018, 2013 ಮತ್ತು 2008ರ ಚುನಾವಣೆಯಲ್ಲಿ ಸಯ್ಯದ್ ಅಜೀರ್ ಖಾದ್ರಿ ಸ್ಪರ್ಧಿಸಿ ಸೋಲು ಕಂಡಿದ್ದರು. +ಕಾಂಗ್ರೆಸ್ ಶಿಗ್ಗಾವಿ ಕ್ಷೇತ್ರವನ್ನು ಅಲ್ಪಸಂಖ್ಯಾತರ ವರ್ಗಕ್ಕೆ ಮೀಸಲಿಡುತ್ತಾ ಬಂದಿದೆ. ಈ ಬಾರಿ ಯಾಸಿರ್ ಅಹಮದ್ಖಾನ್ ಪಠಾಣ್ ಮರು ಸ್ಪರ್ಧೆಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆ ಸಿ.ಎಂ.ಇಬ್ರಾಹಿಂ ತಮ್ಮ ಪುತ್ರನಿಗೆ ಅವಕಾಶ ಕೊಡಿಸಲು ಪ್ರಯತ್ನ ನಡೆಸುತ್ತಿದ್ದಾರೆ.ಇದರ ಜೊತೆಗೆ ಕೇಂದ್ರ ಸಚಿವ ಕುಮಾರಸ್ವಾಮಿಯವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, ತುಕಾರಾಂ ಸಂಸದರಾದ ಬಳಿಕ ತೆರವಾಗಿರುವ ಸಂಡೂರು ಕ್ಷೇತ್ರಕ್ಕೂ ಉಪಚುನಾವಣೆ ನಡೆಯಬೇಕಿದೆ. ಈ ಕ್ಷೇತ್ರಗಳಲ್ಲಿ ಅವಕಾಶ ಗಿಟ್ಟಿಸಲು ಕಾಂಗ್ರೆಸ್ನ ಘಟಾನುಘಟಿ ನಾಯಕರು ತೆರೆಮರೆಯ ಲಾಬಿ ನಡೆಸುತ್ತಿದ್ದಾರೆ. ಈ ಕ್ಷಣದವರೆಗೂ ತಮ್ಮನ್ನು ಜೆಡಿಎಸ್ನ ನಾಯಕರು ಎಂದು ಹೇಳಿಕೊಳ್ಳುತ್ತಿರುವ ಸಿ.ಎಂ.ಇಬ್ರಾಹಿಂ ತಮ್ಮ ಪುತ್ರನಿಗೆ ಕಾಂಗ್ರೆಸ್ನಲ್ಲಿ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. \ No newline at end of file diff --git a/eesanje/url_46_64_2.txt b/eesanje/url_46_64_2.txt new file mode 100644 index 0000000000000000000000000000000000000000..ae9bed9badc740fa41610e9fb401db2055679c0d --- /dev/null +++ b/eesanje/url_46_64_2.txt @@ -0,0 +1,6 @@ +ಗ್ರೇಟರ್ ಬೆಂಗಳೂರು ಚರ್ಚೆಗೆ ಸದನ ಸಮಿತಿ ರಚನೆ : ಡಿಸಿಎಂ ಡಿಕೆಶಿ +ಬೆಂಗಳೂರು,ಜು.25-ಬೆಂಗಳೂರಿಗೆ ಹೊಸ ರೂಪ ನೀಡುವ 2024 ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸದನ ಸಮಿತಿ ರಚನೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು. +ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿದ ಉಪಮುಖ್ಯಮಂತ್ರಿ ಬೆಂಗಳೂರಿಗೆ ಹೊಸ ರೂಪ ನೀಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಇದಾಗಿದೆ. ಬೆಂಗಳೂರಿನ ಜನಸಂಖ್ಯೆ 1 ಕೋಟಿ 40 ಲಕ್ಷದಷ್ಟಿದೆ. ದೊಡ್ಡ ಸಮಸ್ಯೆಗಳಿವೆ. ಆಡಳಿತದಲ್ಲಿ ಸುಧಾರಣೆ ತರಬೇಕು. ನಾಗರಿಕರಿಗೆ ಹೆಚ್ಚು ಸೌಲಭ್ಯ ಕಲ್ಪಿಸಬೇಕು. +ಆಡಳಿತ ನಿಯಂತ್ರಣ ನೀಡಬೇಕು, ಆರ್ಥಿಕ ಶಕ್ತಿ ತುಂಬಬೇಕು. ಇದು ಮಹತ್ವದ ವಿಧೇಯಕವಾಗಿದ್ದು, ಒಪ್ಪಿಗೆ ನೀಡಬೇಕೆಂದು ಕೋರಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ್, ವಿಧೇಯಕವನ್ನು ಬಾಕಿ ಉಳಿಸಬೇಕು. ಇದರ ಬಗ್ಗೆ ಸಮಗ್ರ ಚರ್ಚೆಯಾಗಬೇಕಾಗಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್ನ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚಿಸಬೇಕೆಂದು ಸಲಹೆ ಮಾಡಿದರು. +ಇದಕ್ಕೆ ಪೂರಕವಾಗಿ ಮಾತನಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, ಇದೊಂದು ಐತಿಹಾಸಿಕವಾದ ವಿಧೇಯಕ. ಈ ವಿಧೇಯಕದ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಬೆಂಗಳೂರು ಪ್ರತಿನಿಧಿಸುವ ವಿಧಾನಸಭೆ, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚನೆ ಮಾಡಬೇಕು ಎಂದು ಒತ್ತಾಯಿಸಿದರು. +ಮತ್ತೆ ಮಾತನಾಡಿದ ಉಪಮುಖ್ಯಮಂತ್ರಿ, ವಿಧೇಯಕದ ಬಗ್ಗೆ ವಿಸ್ತೃತವಾದ ಚರ್ಚೆಯಾಗಬೇಕೆಂಬ ಆಲೋಚನೆಯಿದೆ. ಬೆಂಗಳೂರಿನ ಶಾಸಕರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣಭೈರೇಗೌಡ ಸೇರಿದಂತೆ ಹಲವರು ಸಾಕಷ್ಟು ಚರ್ಚೆಯಾಗಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ವ್ಯಾಪಕವಾದ ಚರ್ಚೆಯಾಗಲಿ. ನಾವು ಹರಿಬರಿ ಮಾಡುವುದಿಲ್ಲ. ಹೀಗಾಗಿ ಸದನ ಸಮಿತಿ ರಚನೆ ಮಾಡಲು ಒಪ್ಪಿಗೆ ಇದೆ ಎಂದು ಹೇಳಿದರು.ಆಗ ಸಭಾಧ್ಯಕ್ಷ ಯು.ಟಿ.ಖಾದರ್ರವರು ಈ ವಿಧೇಯಕವನ್ನು ಬಾಕಿ ಉಳಿಸಿಕೊಳ್ಳೋಣ ಎಂದು ಹೇಳಿ ಮುಂದಿನ ಕಲಾಪವನ್ನು ಕೈಗೆತ್ತಿಕೊಂಡರು. \ No newline at end of file diff --git a/eesanje/url_46_64_3.txt b/eesanje/url_46_64_3.txt new file mode 100644 index 0000000000000000000000000000000000000000..0ed7cda6bae0078ed777bd6adceb2b48b7f2c24a --- /dev/null +++ b/eesanje/url_46_64_3.txt @@ -0,0 +1,7 @@ +ಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ +ಬೆಂಗಳೂರು,ಜು.25-ಹೊಸ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆಯನ್ನು ನಡೆಸಬಾರದೆಂಬ ನಿರ್ಣಯವನ್ನು ಮಂಡಿಸಿದರು. +ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌‍ ಸದಸ್ಯರ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಘೋಷಿಸಿದರು. ಕರ್ನಾಟಕ ವಿಧಾನ ಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನ ಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಹೇಳಿದರು. +ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ XVಯಲ್ಲಿ ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯಸಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವವು ಭಾರತದ ಪ್ರಜಾಸತ್ತಾತಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. +ಬೇರೆ ಬೇರೆ ರಾಜ್ಯಗಳ ವಿಧಾನ ಸಭೆಗಳು ಅವುಗಳದ್ದೇ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ, ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು ಎಂದು ಆರೋಪಿಸಿದರು. +ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು. ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ. ಹಾಗಾಗಿ ಭಾರತದ ಪ್ರಜಾಸತ್ತಾತಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು. +ಮಾಜಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲದ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಒಂದು ರಾಷ್ಟ್ರ, ಒಂದು ಚುನಾವಣೆೞ ಕುರಿತು ತನ್ನ ವರದಿಯನ್ನು ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. 2024 ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಮತ್ತು ಡಿಲಿಮಿಟೇಶನ್‌ ಪ್ರಕ್ರಿಯೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಹೇಳಿದ್ದರು. \ No newline at end of file diff --git a/eesanje/url_46_64_4.txt b/eesanje/url_46_64_4.txt new file mode 100644 index 0000000000000000000000000000000000000000..ae1f70b85ddb1c8e82939219b7c71c4446766e64 --- /dev/null +++ b/eesanje/url_46_64_4.txt @@ -0,0 +1,13 @@ +ಮುಡಾ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರ ಏನೂ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ +ಬೆಂಗಳೂರು,ಜು.25– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ನಿವೇಶನ ಅಕ್ರಮದಲ್ಲಿ ನನ್ನ ಪಾತ್ರವೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಪರಿಷತ್‌ನಲ್ಲಿ ಘಂಟಾಘೋಷವಾಗಿ ಹೇಳಿದ್ದಾರೆ. ಮುಡಾ ಅಕ್ರಮದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯನವರು, ಪ್ರತಿಪಕ್ಷದ ಸದಸ್ಯರು ಎತ್ತಿರುವ ವಿಷಯದಲ್ಲಿ ನನ್ನ ಪಾತ್ರವೇ ಇಲ್ಲ ಎಂದು ಪುನರುಚ್ಚರಿಸಿದರು. +ನಾವು ಕಾನೂನುಬದ್ಧವಾಗಿ ನಿವೇಶನ ಹಂಚಿಕೆ ಮಾಡುವಂತೆ ಮುಡಾದವರಿಗೆ ಅರ್ಜಿ ಕೊಟ್ಟಿದ್ದೆವು. ಶೇ. 50-50ರ ಅನುಪಾತದಲ್ಲಿ ಕಾನೂನಿನಡಿಯೇ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ನಿಯಮಾನುಸುರವಾಗಿ ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪಿನ ಪ್ರಶ್ನೆ ಎಲ್ಲಿದೆ ಎಂದು ಪ್ರಶ್ನೆ ಮಾಡಿದರು. +ಮುಡಾದವರು ನಿಯಮಾನುಸಾರ ನಿವೇಶನ ಹಂಚಿಕೆ ಮಾಡುತ್ತಾರೆ. 38 ಚದರ ಅಡಿಯಲ್ಲಿ ಸ್ವತಃ ನಮದೇ ಭೂಮಿ ಹೋಗಿದೆ. ನಾನು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಈ ಅಕ್ರಮ ನಡೆದಿಲ್ಲ ಎಂದು ಹೇಳಿದ್ದೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. +ನಾವು ಇಂತಹ ಕಡೆಯೇ ನಿರ್ಧಿಷ್ಟ ಸ್ಥಳದಲ್ಲಿ ನಿವೇಶನ ಕೊಡಿ ಎಂದು ಕೇಳಿದ್ದರೆ ಅದು ನಿಯಮ ಬಾಹಿರವಾಗುತ್ತಿತ್ತು. ಮುಡಾದವರೇ ನಿವೇಶನ ಹಂಚಿಕೆ ಮಾಡಿರುವಾಗ ನಾವೇನು ಮಧ್ಯಪ್ರವೇಶ ಮಾಡಿದ್ದೇವಾ? ಎಂದು ಪ್ರತಿಪಕ್ಷದ ಸದಸ್ಯರದ ವಿರುದ್ಧ ಹರಿಹಾಯ್ದರು.ನಿಮ ಉದ್ದೇಶ ಏನೆಂಬುದು ನಮಗೆ ಸ್ಪಷ್ಟವಾಗಿ ಗೊತ್ತಿದೆ. ನಾನು ಮುಖ್ಯಮಂತ್ರಿಯಾಗಿದ್ದ ಎಂದು ನಿಮಗೆ ಹೊಟ್ಟೆ ಉರಿ. 40 ವರ್ಷ ಸಾರ್ವಜನಿಕ ಜೀವನದಲ್ಲಿರುವ ನನ್ನ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. +ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದೇನೆ ಎಂಬ ಕಾರಣಕ್ಕಾಗಿ ನಿಮಗೆ ಹೊಟ್ಟೆ ಉರಿ. ನನ್ನ ಮುಖಕ್ಕೆ ಮಸಿ ಬಳಿಯುವ ನಿಮ ಪ್ರಯತ್ನ ಈಡೇರುವುದಿಲ್ಲ ಎಂದು ಸಿಡಿಮಿಡಿಗೊಂಡರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ನಿಷ್ಪಕ್ಷಪಾತವಾಗಿ ತನಿಖೆ ವರದಿ ಬರಲಿದೆ ಎಂದರು. +ಮುಡಾ ಅಧ್ಯಕ್ಷರಾಗಿದ್ದ ರಾಜೀವ್‌ ಅವರೇ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಬಿಜೆಪಿ ಕಾಲದಲ್ಲೇ ಇದು ನಡೆದಿರುವುದು. ಈಗ ನನ್ನ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.ಅಧಿವೇಶನದ ಕಲಾಪ ನಡೆಯಬಾರದೆಂಬುದು ಪ್ರತಿಪಕ್ಷಗಳ ಹುನ್ನಾರ. +ಉದ್ದೇಶಪೂರ್ವಕವಾಗಿ ಪದೇ ಪದೇ ಒಂದೇ ವಿಷಯವನ್ನು ಪ್ರಸ್ತಾಪಿಸುತ್ತಿದ್ದಾರೆ. ಈಗಾಗಲೇ ಸಭಾಪತಿಯವರು ನಿಮ ನಿಲುವಳಿ ಸೂಚನೆ ಪ್ರಸ್ತಾವನೆಯನ್ನು ತಿರಸ್ಕಾರಿಸಿದ್ದೇವೆ ಎಂದು ರೂಲಿಂಗ್‌ ಕೊಟ್ಟಿದ್ದಾರೆ. ಆದರೂ ಅದೇ ವಿಷಯವನ್ನು ಚರ್ಚೆಗೆ ಕೊಡಬೇಕೆಂದು ಪಟ್ಟು ಹಿಡಿಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಗರಮಾದರು. +ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ನೀವು ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಂಡಿದ್ದೀರಿ. ನಿಮ ಮೇಲೆ ನಮಗೆ ಯಾವುದೇ ದ್ವೇಷವಿಲ್ಲ. ಮುಡಾದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ನಾವು ಚರ್ಚೆಗೆ ಕೇಳುತ್ತಿದ್ದೇವೆ. ಇದು ತಪ್ಪೇ ಎಂದು ಪ್ರಶ್ನೆ ಮಾಡಿದರು. +ಇದು ಸಾವಿರಾರು ಕೋಟಿಗಳ ವಿಷಯ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಶಾಮೀಲಾಗಿದ್ದಾರೆ ಎಂಬ ಆರೋಪವಿದೆ. ಇಂತಹ ಮಹತ್ವದ ವಿಷಯವನ್ನು ಚರ್ಚೆ ಮಾಡಲೇಬಾರದೆಂದರೆ ಹೇಗೆ ಎಂದು ಮರು ಪ್ರಶ್ನೆ ಹಾಕಿದರು. +ಈ ವೇಳೆ ಪ್ರತಿಪಕ್ಷಗಳ ಸದಸ್ಯರು ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದ ವೇಳೆ ಸಿಎಂ ಸಿದ್ದರಾಮಯ್ಯನವರ ಪರವಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಪರವಾಗಿ ನಿಂತರು.ಈ ಸಂದರ್ಭದಲ್ಲಿ ಬಿಜೆಪಿಯ ಸದಸ್ಯ ಸಿ.ಟಿ.ರವಿ ಅವರು, ಸಮಾಜವಾದಿ ಎನ್ನುತ್ತಾರೆ. ಮಜವಾದ ಮಾಡುತ್ತಾರೆ. ದಲಿತರ ಪರ ಎನ್ನುತ್ತಾರೆ. ಅವರ ಜಮೀನನ್ನೇ ಕಬಳಿಸುತ್ತಾರೆ. ದಲಿತರ ಅಭಿವೃದ್ಧಿ ಎನ್ನುತ್ತಾರೆ, ಅವರ ಬೆನ್ನಿಗೆ ಚೂರಿ ಹಾಕುತ್ತಾರೆ ಎಂದು ವಾಗ್ದಾಳಿ ನಡೆಸಿದರು. +187 ಕೋಟಿ ಮಹರ್ಷಿ ವಾಲೀಕಿ ನಿಗಮದ ದುಡ್ಡು ತೆಲಂಗಾಣಕ್ಕೆ ಹೋಯ್ತು. ಹೇಳುವುದು ಸಮಾಜವಾದ, ಮಾಡುವುದು ಮಜಾವಾದ. ದಲಿತರ ಸೈಟ್‌ ತಿಂದಿರುವ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ತರಾಟೆಗೆ ತೆಗೆದುಕೊಂಡರು. +ಗದ್ದಲದ ನಡುವೆಯೇ ಸಚಿವರು ಕೆಲವು ಕಾಯ್ದೆಗಳನ್ನು ಮಂಡಿಸಲು ಮುಂದಾದಾಗ ಗೋವಿಂದ ಗೋವಿಂದ ಎಂದು ಹಾಡುಗಳ ಮೂಲಕ ಆಡಳಿತ ಪಕ್ಷವನ್ನು ವಿರೋಧ ಪಕ್ಷದ ಸದಸ್ಯರು ಕಿಚಾಯಿಸಿದರು. ಆಗ ಆಡಳಿತ ಪಕ್ಷದವರು ಯಡಿಯೂರಪ್ಪ, ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌ ಅವಧಿಯಲ್ಲಿ ನಡೆದಿರುವ ಅಕ್ರಮಗಳನ್ನು ಪ್ರಸ್ತಾಪಿಸಿ ತಿರುಗೇಟು ನೀಡಿದರು. \ No newline at end of file diff --git a/eesanje/url_46_64_5.txt b/eesanje/url_46_64_5.txt new file mode 100644 index 0000000000000000000000000000000000000000..afc8a09f0c2b725a46f129308a59a481c752bd73 --- /dev/null +++ b/eesanje/url_46_64_5.txt @@ -0,0 +1,7 @@ +ಉಭಯ ಸದನಗಳಲ್ಲಿ ನೀಟ್‌ ಪರೀಕ್ಷೆ ರದ್ದುಪಡಿಸಿಸುವ ಮಹತ್ವದ ನಿರ್ಣಯ ಅಂಗೀಕಾರ +ಬೆಂಗಳೂರು,ಜು.25-ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ದೇಶಾದ್ಯಂತ ನಡೆಯುವ ರಾಷ್ಟ್ರೀಯ ಅರ್ಹತ ಪ್ರವೇಶ ಪರೀಕ್ಷೆ(ನೀಟ್‌)ಅನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಿ, ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಯಿತು. +ವಿಧಾನಸಭೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ್‌ ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ನಿರ್ಣಯವನ್ನು ಮಂಡಿಸಿ ಮಾತನಾಡಿ, ನೀಟ್‌ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತದೆ. ರಾಜ್ಯಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ನೀಟ್‌ ಪರೀಕ್ಷೆಯನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿದರು. +ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯಸರ್ಕಾರ ನಡೆಸುವ ಸಾಮಾನ್ಯ ಪರೀಕ್ಷೆ ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್‌ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್‌ ಪರೀಕ್ಷೆಯನ್ನು ರದ್ದುಪಡಿಸುವುದು ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಅಧಿನಿಯಮ 2019 ರಲ್ಲಿ ಅಗತ್ಯ ತಿದ್ದುಪಡಿ ಮಾಡಬೇಕೆಂದು ಸದನ ಒತ್ತಾಯಿಸುತ್ತದೆ ಎಂಬ ನಿರ್ಣಯ ಮಂಡಿಸಿದರು. +ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.ಅತ ಮೇಲನೆಯಲ್ಲಿ ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ನೀಟ್‌ ಪರೀಕ್ಷೆಯನ್ನು ರದ್ದು ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. +ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್‌ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್‌ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಯಿತು. +ನಿರ್ಣಯದ ಮೇಲೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್‌, ನೀಟ್‌ ಪರೀಕ್ಷಾ ವ್ಯವಸ್ಥೆಯು, ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣಾವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಈ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕೆಂದು ಹಾಗೂ ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನಾಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಹೇಳಿದರು.ಗದ್ದಲದ ನಡುವೆಯೇ ನಿರ್ಣಯವನ್ನು ಅಂಗೀಕರಿಸಲಾಯಿತು. \ No newline at end of file diff --git a/eesanje/url_46_64_6.txt b/eesanje/url_46_64_6.txt new file mode 100644 index 0000000000000000000000000000000000000000..9e0054e62aa72812ffdc204d0d3201d058575b90 --- /dev/null +++ b/eesanje/url_46_64_6.txt @@ -0,0 +1,8 @@ +ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ 3 ನಿರ್ಣಯಗಳ ಅಂಗೀಕಾರ +ಬೆಂಗಳೂರು,ಜು.25-ಕೇಂದ್ರ ಸರ್ಕಾರಕ್ಕೆ ಸಡ್ಡು ಹೊಡೆಯುವಂತಹ ಪ್ರಮುಖ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿದ್ದು ಅಂಗೀಕರಿಸಲಾಗಿದೆ. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌‍ ಸದಸ್ಯರ ಧರಣಿ, ಸತ್ಯಾಗ್ರಹದ ನಡುವೆಯೂ ರಾಜ್ಯ ಸರ್ಕಾರ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು. +ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು, ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು.ಒಂದು ದೇಶ- ಒಂದು ಚುನಾವಣೆ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿ, ಸರ್ವಾನುಮತದ ಅಂಗೀಕಾರವನ್ನು ಆಕ್ಷೇಪಿಸಿತ್ತು. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು. +ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು. +ಆರಂಭದಲ್ಲಿ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್‌, ರಾಜ್ಯ ಮತ್ತು ದಕ್ಷಿಣ ಭಾರತದ ಜನರ ರಕ್ಷಣೆಗಾಗಿ ಪ್ರಜಾಪ್ರಭುತ್ವದಲ್ಲಿ ಸೂಕ್ತ ಸ್ಥಾನಮಾನ ನಿಗದಿಯಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕಾರ ಮಾಡಬೇಕಾಗಿದೆ. ಶಾಂತ ಚಿತ್ತರಾಗಿ ಚರ್ಚೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ. +ನಿರ್ಣಯ ಮಂಡನೆ ಆಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನಾವು ಈ ನಿರ್ಣಯದ ಪರವಾಗಿದ್ದೇವೆ. ಚರ್ಚೆಯಲ್ಲಿ ಭಾಗವಹಿಸುತ್ತೇವೆ ಎಂದು ಪ್ರತಿಪಾದಿಸಿದರು. ಹಾಗಿದ್ದ ಮೇಲೆ ಧರಣಿ ಕೈ ಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ ಎಂದು ಸಭಾಧ್ಯಕ್ಷರು ಸಲಹೆ ನೀಡಿದರು. +ವಿರೋಧ ಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಧ್ಯಕ್ಷರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು. \ No newline at end of file diff --git a/eesanje/url_46_64_7.txt b/eesanje/url_46_64_7.txt new file mode 100644 index 0000000000000000000000000000000000000000..38c314f9263167b78f8dc21f634bfb63388a91d6 --- /dev/null +++ b/eesanje/url_46_64_7.txt @@ -0,0 +1,10 @@ +ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಹಲವು ವಿಧೇಯಕಗಳ ಮಂಡನೆ +ಬೆಂಗಳೂರು,ಜು.25-ಪ್ರತಿಪಕ್ಷಗಳ ಸದಸ್ಯರ ತೀವ್ರ ಗದ್ದಲದ ನಡುವೆಯೂ ವಿಧಾನಪರಿಷತ್‌ನಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ-2024 ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ಮುಡಾ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲೇ ಬಸವರಾಜ ಹೊರಟ್ಟಿಯವರು ವಿಧೇಯಕ ಮಂಡಿಸಲು ಸೂಚಿಸಿದರು. +ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2024ನೇ ಸಾಲಿನ ಕರ್ನಾಟಕ ಧನವಿನಿಯೋಗ ವಿಧೇಯಕ-2024ನ್ನು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿ ವಿಧೇಯಕವನ್ನು ಅಂಗೀಕರಿಸಬೇಕೆಂದು ಸದಸ್ಯರಿಗೆ ಮನವಿ ಮಾಡಿದರು. +ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ಅವರು ವಿಧಾನಸಭೆಯಿಂದ ಅಂಗೀಕೃತವಾಗಿರುವ 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ ವಿಧೇಯಕವನ್ನು ಮಂಡಿಸಿದರು. +ನಂತರ ವಿಧೇಯಕವನ್ನು ಅಂಗೀಕರಿಸಲಾಗಿದೆ ಎಂದು ಸಭಾಪತಿಗಳು ಘೋಷಣೆ ಮಾಡಿದರು. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕರ್ನಾಟಕ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆದುಕೊಂಡರು. +ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎನ್‌.ಎಸ್‌‍.ಭೋಸರಾಜ ಅವರು ಚುನಾವಣಾ ಪ್ರಸ್ತಾವನೆಗಳನ್ನು ಮಂಡಿಸಿದರು. ವಿಧಾನಮಂಡಲ ಹಾಗೂ ವಿಧಾನಪರಿಷತ್‌ನ ವಿವಿಧ ಸಮಿತಿಗಳಿಗೆ ಚುನಾವಣೆ ನಡೆಸುವ ಬದಲು ಸದಸ್ಯರುಗಳನ್ನು ನಾಮನಿರ್ದೇಶಿಸಲು ಸಭಾಪತಿಯವರಿಗೆ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಮಂಡಿಸಿದ ನಂತರ ಅಂಗೀಕರಿಸಲಾಯಿತು. +ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸೆನೆಟ್‌ಗೆ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಸಲಹಾ ಮಂಡಳಿಗೆ ಚುನಾವಣೆ ನಡೆಸುವ ಬದಲು ಸದಸ್ಯರುಗಳನ್ನು ನಾಮನಿರ್ದೇಶಿಸಲು ಸಭಾಪತಿಯವರಿಗೆ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಮಂಡಿಸಿದ ನಂತರ ಸದನವು ಅಂಗೀಕಾರ ನೀಡಿತು. +ವಿಧಾನಪರಿಷತ್‌ನ ನಿಯಮಾವಳಿ ಸಮಿತಿಗೆ ಶಾಸಕರನ್ನು ನಾಮನಿರ್ದೇಶನ ಮಾಡುವ ಸಭಾಪತಿಯವರಿಗೆ ಅಧಿಕಾರ ನೀಡುವ ಮತ್ತೊಂದು ಪ್ರಸ್ತಾವನೆ ಮಂಡನೆ ಮಾಡಲಾಯಿತು. ನಂತರ ವರದಿಗಳನ್ನು ಒಪ್ಪಿಸಲು ಸಭಾಪತಿಯವರು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಿದರು. +ಸದಸ್ಯರಾದ ಆರ್‌.ರಾಜೇಂದ್ರ ರಾಜಣ್ಣ ಅವರು 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಮೂರನೇ ವರದಿಯನ್ನು ಒಪ್ಪಿಸಿದರು. +ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಸದಸ್ಯ ಕೆ.ಅಬ್ದುಲ್‌ ಜಬ್ಬಾರ್‌ ಅವರು 2023-24ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಮೊದಲನೆ ವರದಿಯನ್ನು ಸದನಕ್ಕೆ ಒಪ್ಪಿಸಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳು ನಿರ್ಣಯಗಳನ್ನು ಮಂಡಿಸಿದರು. \ No newline at end of file diff --git a/eesanje/url_46_64_8.txt b/eesanje/url_46_64_8.txt new file mode 100644 index 0000000000000000000000000000000000000000..e244c7821877ab63ea7238bbb5b777b0f0488aec --- /dev/null +++ b/eesanje/url_46_64_8.txt @@ -0,0 +1,13 @@ +ವಿಪಕ್ಷಗಳಿಂದ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹುನ್ನಾರ : ಕಾಂಗ್ರೆಸ್‌‍ ಶಾಸಕರು ಕಿಡಿ +ಬೆಂಗಳೂರು,ಜು.25-ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ ವಿಚಾರದಲ್ಲಿ ಬಿಜೆಪಿ ಅನಗತ್ಯವಾಗಿ ರಾಜಕಾರಣ ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಹುನ್ನಾರ ನಡೆಸಿದೆ. ಜೊತೆಗೆ ವಿಧಾನಸಭೆಯಲ್ಲಿ ಸಭಾಧ್ಯಕ್ಷರ ರೂಲಿಂಗ್‌ ಅನ್ನು ವಿರೋಧಿಸಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ನಿಯಮಬಾಹಿರವಾಗಿ ನಡೆದುಕೊಂಡಿದೆ ಎಂದು ಕಾಂಗ್ರೆಸ್‌‍ ಶಾಸಕರು ಕಿಡಿ ಕಾರಿದ್ದಾರೆ. +ಅರಸೀಕೆರೆ ಕ್ಷೇತ್ರದ ಕೆ.ಎಂ.ಶಿವಲಿಂಗೇಗೌಡ, ಮಳವಳ್ಳಿ ಕ್ಷೇತ್ರದ ಪಿ.ಎಂ.ನರೇಂದ್ರಸ್ವಾಮಿ, ಬಂಗಾರಪೇಟೆ ಕ್ಷೇತ್ರದ ಎಂ.ನಾರಾಯಣಸ್ವಾಮಿ ಅವರು ಇಂದು ವಿಧಾನಸೌಧದ ಸಭೆಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರನ್ನು ಸಮರ್ಥಿಸಿಕೊಂಡರು ಹಾಗೂ ಮುಡಾ ಪ್ರಕರಣದಲ್ಲಿ ದಾಖಲಾತಿಗಳನ್ನು ಬಿಡುಗಡೆ ಮಾಡಿದರು. +ಶಿವಲಿಂಗೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ತಮ ರಾಜಕೀಯ ಜೀವನದ ಉದ್ದಕ್ಕೂ ಒಂದು ಕಪ್ಪು ಚುಕ್ಕೆ ಇಲ್ಲದಂತೆ ನಡೆದುಕೊಂಡಿದ್ದಾರೆ. ಬಿಜೆಪಿ ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇದೆ ಎಂದು ಅಪಪ್ರಚಾರ ಮಾಡುವ ಮೂಲಕ ಕೆಟ್ಟ ಹೆಸರು ತರುವ ಪ್ರಯತ್ನ ನಡೆಸುತ್ತಿದೆ. ಜೆಡಿಎಸ್‌‍ ಮತ್ತು ಬಿಜೆಪಿಯ ಈ ನಾಟಕ ಕಂಪನಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿರುಗೇಟು ನೀಡಿದರು. +ನಾರಾಯಣಸ್ವಾಮಿ ಅವರು ಮಾತನಾಡಿ, ಈ ಹಿಂದೆ ಬ್ರಿಟಿಷರ ಅವಧಿಯಲ್ಲಿ ಸರ್ಕಾರಿ ಜಮೀನನ್ನು ಹರಾಜು ಮೂಲಕ ವಿಲೀನ ಮಾಡಲಾಗುತ್ತಿತ್ತು. ಮೈಸೂರು ಸಮೀಪ ಮೂರು ಎಕರೆ 16 ಗುಂಟೆಯನ್ನು 1995 ರಲ್ಲಿ ಲಿಂಗ ಬಿನ್‌ ಜವರ ಎಂಬುವರು ಹರಾಜು ಮೂಲಕ ಖರೀದಿ ಮಾಡಿದ್ದರು. ಇದು ಯಾವುದೇ ಸರ್ಕಾರದ ನಿಯಮಾವಳಿ ಅಡಿ ಮಂಜೂರಾದ ಅಥವಾ ಷರತ್ತಿಗೆ ಒಳಪಟ್ಟ ಭೂಮಿಯಲ್ಲ ಎಂದು ಸಮರ್ಥಿಸಿಕೊಂಡರು. +ಲಿಂಗ ಅವರಿಗೆ ಮಲ್ಲಯ್ಯ, ಮೈಲಾರಲಿಂಗ ಹಾಗೂ ದೇವರಾಜ್‌ ಎಂಬ ಮೂವರು ಮಕ್ಕಳಿದ್ದರು. ಈ ಹಿಂದಿನ ಪದ್ಧತಿಯಲ್ಲಿ ಅಣ್ಣ-ತಮಂದಿರು ಪಂಚರ ಸಮುಖದಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ಮೂರು ಎಕರೆ 16 ಗುಂಟೆಯನ್ನು ದೇವರಾಜ್‌ ಅವರಿಗೆ ಬಿಟ್ಟುಕೊಡುವ ಹೇಳಿಕೆ ನೀಡಿದ್ದಾರೆ. ಅಧಿಕಾರಿಗಳು ಸಹೋದರರ ಹೇಳಿಕೆ ಆಧರಿಸಿ ದೇವರಾಜ್‌ ಅವರಿಗೆ ಆಸ್ತಿಯ ಸಂಪೂರ್ಣ ಸ್ವಾಧೀನ ಹಾಗೂ ಅಧಿಕಾರ ಪ್ರದತ್ತವಾಗುವ ಮ್ಯುಟೇಶನ್‌ ನೀಡಿದ್ದಾರೆ ಎಂದು ಹೇಳಿದರು. +1992 ರಲ್ಲಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಸದರಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ದೇವರಾಜು ಅವರು ಸ್ವಾಧೀನ ಪ್ರಕ್ರಿಯೆಯಿಂದ ತಮ ಭೂಮಿಯನ್ನು ಕೈಬಿಡುವಂತೆ ಮನವಿ ಮಾಡಿದ್ದರು. ಮನವಿ ಆಧರಿಸಿ ಮುಡಾ ಸಮಿತಿ ಚರ್ಚೆ ನಡೆಸಿದ್ದು, ದೇವರಾಜು ಸೇರಿದಂತೆ 19 ಜನರ ಸ್ವತ್ತುಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ಮುಡಾ ಕೈಬಿಟ್ಟಿದೆ. 2004ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಮಲ್ಲಿಕಾರ್ಜುನಯ್ಯ ಈ ಭೂಮಿಯನ್ನು ಖರೀದಿಸಿದ್ದಾರೆ. ದೇವರಾಜಯ್ಯ ಅವರ ಪಿತ್ರಾಜಿತ ಆಸ್ತಿಯಾಗಿದ್ದರಿಂದ ಹಾಗೂ ಲಿಂಗ ಅವರು ಹರಾಜು ಮೂಲಕ ಭೂಮಿ ಖರೀದಿ ಮಾಡಿದ್ದರಿಂದ ಮಲ್ಲಿಕಾರ್ಜುನಯ್ಯ ಅವರಿಗೆ ಭೂ ದಾಖಲೆಗಳು ವರ್ಗಾವಣೆಗೊಂಡಿವೆ ಎಂದರು. +ನರೇಂದ್ರ ಸ್ವಾಮಿ, ಬಿಜೆಪಿಯವರು ಉದ್ದೇಶ ಪೂರ್ವಕವಾಗಿ ಪರಿಶಿಷ್ಟ ಜಾತಿಯವರ ಭೂಮಿಯನ್ನು ಖರೀದಿಸಲಾಗಿದೆ ಎಂಬ ಆರೋಪ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. +ಮಲ್ಲಿಕಾರ್ಜುನ 2004ರಲ್ಲಿ ಜಮೀನು ಖರೀದಿಸಿದರು. 2005ರಲ್ಲಿ ಈ ಜಾಗದ ಭೂ ಪರಿವರ್ತನೆ ಆಗಿದೆ. 2010ರಲ್ಲಿ ಸದರಿ ಭೂಮಿಯನ್ನು ಮಲ್ಲಿಕಾರ್ಜುನಯ್ಯ ತಮ ಸಹೋದರಿ ಹಾಗೂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಅರಿಶಿಣ ಕುಂಕುಮಕ್ಕೆ ದಾನ ಪತ್ರ ಮಾಡಿಕೊಟ್ಟಿದ್ದಾರೆ. ಅನಂತರ ಮುಡಾ ಸದರಿ ಭೂಮಿಗೆ ಅಕ್ರಮವಾಗಿ ಪ್ರವೇಶ ಮಾಡಿ ನಿವೇಶನಗಳನ್ನಾಗಿ ಮಾಡಿ ಹಂಚಿದೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನಮ ಭೂಮಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ನಮ ಜಮೀನನ್ನು ಬಿಟ್ಟು ಕೊಡಿ ಅಥವಾ ಸಮಾನಾಂತರವಾದ ಜಾಗ ಕೊಡಿ ಎಂದು ಮನವಿ ಸಲ್ಲಿಸಿದ್ದರು. +ಬಿಜೆಪಿಯ ಅಧಿಕಾರ ಅವಧಿಯಲ್ಲಿ ಮುಡಾದ ಅಧ್ಯಕ್ಷರು ಹಾಗೂ ಇತರರು ಸಾಮಾನ್ಯ ಸಭೆ ನಡೆಸಿ ಪಾರ್ವತಿಯವರ ಅರ್ಜಿಯನ್ನು ಪರಿಶೀಲನೆ ನಡೆಸಿದ್ದಾರೆ. ಶಾಸಕರೂ ಆಗಿದ್ದ ಜಿ.ಟಿ.ದೇವೇಗೌಡ 50:50ರ ಅನುಪಾತ ಅಡಿ ಅರ್ಜಿದಾರರಿಗೆ ಭೂಮಿ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. +ಮರಿತಿಬ್ಬೇಗೌಡ ಮೂರು ಎಕರೆ 16 ಗುಂಟೆಯನ್ನು ಅರ್ಜಿದಾರರಿಗೆ ವಾಪಸ್‌‍ ನೀಡಬೇಕು ಎಂದು ಮುಡಾ ಸಭೆಯಲ್ಲಿ ಹೇಳಿದ್ದಾರೆ. ಎಲ್ಲವೂ ಕಾನೂನುಬದ್ಧವಾಗಿ ನಡೆದಿದೆ. ಈಗ ಬಿಜೆಪಿಯವರು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಲಿಂಗ ಕುಟುಂಬದ ಸದಸ್ಯನ ಮೂಲಕ ಅರ್ಜಿ ಕೊಡಿಸಿ ಗೊಂದಲ ಮೂಡಿಸುತ್ತಿದ್ದಾರೆ. ಇಷ್ಟು ವರ್ಷ ಇಲ್ಲದ ತಕರಾರು ಈಗ ಏಕೆ ಎಂದು ಪ್ರಶ್ನಿಸಿದರು. +ವಿಧಾನಸಭೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಮುಡಾ ಪ್ರಕರಣ ಸೂಕ್ತವಾಗಿಲ್ಲ. ಆರು ತಿಂಗಳ ಒಳಗಿನ ಪ್ರಸಕ್ತ ವಿದ್ಯಮಾನವಾಗಿರಬೇಕು ಸಾರ್ವಜನಿಕ ಮಹತ್ವದ್ದಾಗಿರಬೇಕು ಎಂಬ ನಿಯಮಗಳನ್ನು ಶಾಸನಸಭೆ ರಚನೆ ಮಾಡಿದೆ. ಬಿಜೆಪಿ ಅವರು ನೀಡಿದ ನಿಲುವಳಿ ಸೂಚನೆ, ಈ ಯಾವ ನಿಯಮಾವಳಿಗೂ ಅನ್ವಯಿಸುವುದಿಲ್ಲ. ಹೀಗಾಗಿ ಸಭಾಧ್ಯಕ್ಷರು ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದಾರೆ. ಮುಡಾ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. +ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶ ಇಲ್ಲ. ಆದರೂ ಬಿಜೆಪಿಯವರು ಜೆಡಿಎಸ್‌‍ ನಾಯಕರು ದುರುದ್ದೇಶಪೂರ್ವಕವಾಗಿ ಧರಣಿಯ ನಾಟಕ ಮಾಡುತ್ತಿದ್ದಾರೆ ಎಂದು ಶಿವಲಿಂಗೇಗೌಡ ಟೀಕೆ ಮಾಡಿದರು. \ No newline at end of file diff --git a/eesanje/url_46_64_9.txt b/eesanje/url_46_64_9.txt new file mode 100644 index 0000000000000000000000000000000000000000..7541a3eedd510ebfcbaf71f08793720b06005a6f --- /dev/null +++ b/eesanje/url_46_64_9.txt @@ -0,0 +1,6 @@ +ವಿರೋಧ ಪಕ್ಷಗಳ ಧರಣಿ ನಾಟಕವಷ್ಟೆ : ಹೆಚ್‌.ಕೆ.ಪಾಟೀಲ್‌ +ಬೆಂಗಳೂರು,ಜು.25-ವಿಧಾನಸೌಧದಲ್ಲಿ ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವ ಹೆಚ್‌.ಕೆ.ಪಾಟೀಲ್‌‍ ವಿಪಕ್ಷಗಳ ಧರಣಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.ಈ ಬಗ್ಗೆ ಮಾತನಾಡಿದ ಅವರು, ನಿನ್ನೆ ಪ್ರತಿಪಕ್ಷದವರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಿಲುವಳಿ ಪ್ರಸ್ತಾಪ ಏಕೆ ಮಾಡಬಾರದು ಎನ್ನುವುದನ್ನು ವಿವರಿಸಿದ್ದಾರೆ. +ಇಷ್ಟೆಲ್ಲಾ ಇದ್ದರೂ ಅವರು ಧರಣಿ ಮಾಡಿದ್ದಾರೆ. ರಾಜಕೀಯ ತಂತ್ರಕ್ಕೆ ಅವರು ವಿಧಾನಸಭಾ ಅಧಿವೇಶನ ಉಪಯೋಗ ಮಾಡಿಕೊಂಡಿದ್ದಾರೆ. ಈಗಾಗಲೇ ಈ ತನಿಖೆಯನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೂಲಕ ನಡೆಸಲಾಗುತ್ತಿದೆ. +ಆಪಾದನೆ ಅವರ ಮೇಲಿದ್ದರೂ ಸಿಎಂ ತನಿಖೆಗೆ ಆಯೋಗ ರಚಿಸಿದ್ದಾರೆ. ತನ್ನ ಮೇಲೆ ಆಪಾದನೆ ಇದ್ದಾಗ ಯಾರಾದರೂ ಒಬ್ಬ ಮುಖ್ಯಮಂತ್ರಿ ತನಿಖಾ ಆಯೋಗ ರಚಿಸಿರುವ ಉದಾಹಣೆ ಇದೆಯಾ? ಎಂದು ಪ್ರಶ್ನಿಸಿದರು. +ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ ಬೊಮಾಯಿ ಆಯೋಗ ರಚನೆ ಮಾಡಿದರಾ? ವಿರೋಧ ಪಕ್ಷ ಸಿಎಂ ನಿಲುವನ್ನು ಪ್ರಶಂಸೆ ಮಾಡಬೇಕಿತ್ತು. ಇದು ಕೇವಲ ರಾಜಕೀಯ ನಾಟಕ ಅಷ್ಟೆ. ಭಾರಿ ಮಳೆಯಿಂದ ಉತ್ತರ ಕನ್ನಡದಲ್ಲಿ, ಮಲೆನಾಡಲ್ಲಿ ಸಾಕಷ್ಟು ಅನಾಹುತ ಆಗಿದೆ. ಆದರೆ ಇದರ ಬಗ್ಗೆ ಚರ್ಚೆ ಮಾಡಿಲ್ಲ. +ಒನ್‌ ನೇಷನ್‌ ಒನ್‌ ಎಲೆಕ್ಷನ್‌ ವಿಚಾರದ ಬಿಲ್‌ ಇದೆ. ನೀಟ್‌ ವಿರೋಧಿಸಿ ಸಿಇಟಿ ಮರು ಸ್ಥಾಪಿಸುವ ಬಿಲ್‌ ಇದೆ. ಹತ್ತಾರು ಜನರ ಪರವಾದ ಬಿಲ್‌ ಬಗ್ಗೆ ಮಾತನಾಡುತ್ತಿಲ್ಲ. ವಿಪಕ್ಷಗಳ ಧರಣಿ ಕೇವಲ ರಾಜಕೀಯ ನಾಟಕವಷ್ಟೇ ಎಂದು ಆಕ್ಷೇಪಿಸಿದರು. \ No newline at end of file diff --git a/eesanje/url_46_65_1.txt b/eesanje/url_46_65_1.txt new file mode 100644 index 0000000000000000000000000000000000000000..3456ca6adece66c59e274901ec39011b2f6a0a9d --- /dev/null +++ b/eesanje/url_46_65_1.txt @@ -0,0 +1,5 @@ +ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆ.. +ಬೆಂಗಳೂರು,ಜು.24- ಮಹಿಳಾ ಪಿಜಿಯೊಳಗೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಬಿಹಾರ ಮೂಲದ ಕೃತಿಕುಮಾರಿ(24) ಕೊಲೆಯಾದ ಯುವತಿ. ಈಕೆ ಎಂಬಿಎ ಪದವೀಧರೆಯಾಗಿದ್ದು, ನಗರದ ಖಾಸಗಿ ಕಂಪನಿಯೊಂದರ ಉದ್ಯೋಗಿ. ಕೋರ ಮಂಗಲದ ವಿಆರ್ ಲೇಔಟ್ನಲ್ಲಿರುವ ಪಿಜಿಯಲ್ಲಿ ನೆಲೆಸಿದ್ದರು. +ನಿನ್ನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದು, ರಾತ್ರಿ ಪಿಜಿಗೆ ಕೃತಿ ಮರಳಿದ್ದರು. ಇದೇ ಸಮಯಕ್ಕಾಗಿ ಕಾಯುತ್ತಾ ಕುಳಿತಿದ್ದ ದುಷ್ಕರ್ಮಿ ರಾತ್ರಿ 11.10 ರಿಂದ 11.30 ರ ಮಧ್ಯೆ ಮಾಲೀಕರ ಹಾಗೂ ಮಹಿಳಾ ಸೆಕ್ಯೂರಿಟಿ ಗಾರ್ಡ್ ಕಣ್ತಪ್ಪಿಸಿ, ಪಿಜಿಯೊಳಗೆ ನುಗ್ಗಿ 3ನೇ ಮಹಡಿಯ ರೂಂ ಬಳಿ ಹೋಗಿ ಚಾಕುವಿನಿಂದ ಕೃತಿಕುಮಾರಿ ಕತ್ತು ಕೊಯ್ದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. +ಸುದ್ದಿ ತಿಳಿದು ಕೋರಮಂಗಲ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಪಿಜಿ ಹಾಗೂ ಸುತ್ತಮುತ್ತಲ ರಸ್ತೆಯಲ್ಲಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಆರೋಪಿಯ ಪತ್ತೆ ಕಾರ್ಯ ಕೈಗೊಂಡಿದ್ದಾರೆ. +ಪಿಜಿ ಯುವತಿಯರ ಆತಂಕ :ಮಹಿಳಾ ಪಿಜಿಯಲ್ಲಿ ನಡೆದಿರುವ ಘಟನೆಯಿಂದ ಉಳಿದ ಯುವತಿಯರು ಭಯಭೀತರಾಗಿದ್ದಾರೆ. ಆರೋಪಿ ಪಿಜಿಯೊಳಗೆ ಹೇಗೆ ಬಂದ, ಕೃತಿ ಉಳಿದುಕೊಂಡಿದ್ದ ರೂಮಿನ ವಿವರ ಹೇಗೆ ಗೊತ್ತಾಯಿತು, ಆತ ಎಲ್ಲಾ ತಿಳಿದುಕೊಂಡೇ ಬಂದಿರುವ ಅನುಮಾನ ವ್ಯಕ್ತವಾಗಿದೆ.ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಆದಷ್ಟು ಬೇಗ ಬಂಧಿಸಲಾಗುವುದು ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಈ ಸಂಜೆಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_65_10.txt b/eesanje/url_46_65_10.txt new file mode 100644 index 0000000000000000000000000000000000000000..8bf692708105940c95ec56f631ff0b4d4a560047 --- /dev/null +++ b/eesanje/url_46_65_10.txt @@ -0,0 +1,4 @@ +ನಾನು ಮೂಲತಃ ಅಂಬೇಡ್ಕರ್ ವಾದಿ: ಛಲವಾದಿ ನಾರಾಯಣಸ್ವಾಮಿ +ಬೆಂಗಳೂರು,ಜು.24- ಜನರ ಆಶಯಕ್ಕೆ ಅನುಗುಣವಾಗಿ ಸದನದ ಗೌರವಕ್ಕೆ ಚ್ಯುತಿ ಬಾರದಂತೆ ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ನನಗೆ ನೀಡಿರುವ ಈ ಮಹತ್ವದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ವಿಧಾನಪರಿಷತ್ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ನಾನು ಈ ಹುದ್ದೆಯನ್ನು ನಿರೀಕ್ಷೆ ಮಾಡಿರಲಿಲ್ಲ. ನನ್ನ ಜೊತೆ ಸಿ.ಟಿ.ರವಿ, ಎನ್.ರವಿಕುಮಾರ್ರವರು ಕೂಡ ಆಕಾಂಕ್ಷಿಗಳಾಗಿದ್ದರು. +ಅಂತಿಮವಾಗಿ ಪಕ್ಷವು ನನಗೆ ಜವಾಬ್ದಾರಿ ನೀಡಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ನಾನು ಮೂಲತಃ ಅಂಬೇಡ್ಕರ್ ವಾದಿ. ಅವರ ಆಶಯಗಳನ್ನಿಟ್ಟುಕೊಂಡು ರಾಜಕಾರಣಕ್ಕೆ ಬಂದಿದ್ದೇನೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು. +ನನಗೆ ಬಂಗಾರಪ್ಪನವರು ರಾಜಕೀಯ ಗುರುಗಳು. ನಾನು ಅಂದೆಯೇ ರಾಜಕೀಯ ಮುನ್ನಲೆಗೆ ಬರಬೇಕಿತ್ತು. ಕೆಲವು ಕಾರಣಗಳಿಂದ ಸಾಧ್ಯವಾಗಲಿಲ್ಲ. ಯೋಗ ಇರಲಿಲ್ಲವೋ ಅಥವಾ ಯೋಗ್ಯತೆ ಇರಲಿಲ್ಲವೋ ಗೊತ್ತಿಲ್ಲ. ನನಗೆ ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ಜವಾಬ್ದಾರಿಯುತವಾಗಿ ನಡೆಸುವುದಾಗಿ ತಿಳಿಸಿದರು. \ No newline at end of file diff --git a/eesanje/url_46_65_11.txt b/eesanje/url_46_65_11.txt new file mode 100644 index 0000000000000000000000000000000000000000..c5b1a59bb4b244dcd00c27829a0b806291a7e526 --- /dev/null +++ b/eesanje/url_46_65_11.txt @@ -0,0 +1,7 @@ +ಬೆಳೆ ಪರಿಹಾರ: ವಿಧಾನಪರಿಷತ್‌ನಲ್ಲಿ ಮಾತಿನ ಚಕಮಕಿ +ಬೆಂಗಳೂರು,ಜು.24- ರೈತರಿಗೆ ಬೆಳೆ ಪರಿಹಾರ ನೀಡುವ ವಿಷಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನಪರಿಷತ್‌ನಲ್ಲಿ ಕೆಲ ಹೊತ್ತು ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ವೇಳೆ ಕೇಶವಪ್ರಸಾದ್‌ ಅವರು, ರಾಜ್ಯಸರ್ಕಾರ ರೈತರ ಬೆಳೆಪರಿಹಾರ ನೀಡುವಲ್ಲಿ ತಾರತಮ್ಯ ಎಸಗಿದ್ದು, ವಿಫಲವಾಗಿದೆ ಎಂದು ದೂರಿದರು. +ಇದಕ್ಕೆ ಆಕ್ಷೇಪಿಸಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ನೀವು ರಾಜಕೀಯ ಮಾತನಾಡುತ್ತೀರಿ ಎಂದರೆ ನಮಗೂ ಕೂಡ ಮಾತನಾಡಲು ಬರುತ್ತದೆ ಎಂದು ತಿರುಗೇಟು ನೀಡಿದರು. 1296 ಕೋಟಿ ರಾಜ್ಯದಿಂದಲೂ ಪರಿಹಾರ ಕೊಟ್ಟಿದ್ದೇವೆ. ಕಳೆದ ವರ್ಷ ಕೇಂದ್ರಕ್ಕೆ ಆಂಧ್ರ, ಮಹಾರಾಷ್ಟ್ರದವರು ಪರಿಹಾರ ಕೇಳಿದರೂ ಯಾರಿಗೂ ಕೊಟ್ಟಿಲ್ಲ. ನಾವು ಸುಪ್ರೀಂಕೋರ್ಟ್‌ಗೆ ಹೋಗಿದ್ದಕ್ಕೆ 3,498 ಕೋಟಿ ರೂ. ಪರಿಹಾರ ಸಿಕ್ಕಿದೆ. 4,132 ಕೋಟಿ ರೂ ಬರಪರಿಹಾರಕ್ಕೆ ಖರ್ಚಾಗಿದೆ. ಕೇಂದ್ರ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಳೆದ ವರ್ಷ ಕೇಂದ್ರ ಸರ್ಕಾರ ಬೆಳೆಪರಿಹಾರವನ್ನು ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಕ್ಕೂ ಒಂದೇ ಒಂದು ನಯಾಪೈಸೆ ಹಣವನ್ನು ಕೊಡಲಿಲ್ಲ. ದೇಶದಲ್ಲೇ ಕರ್ನಾಟಕಕ್ಕೆ 3 ಸಾವಿರಕ್ಕೂ ಹೆಚ್ಚು ಕೋಟಿ ಅನುದಾನ ಬಂದಿದೆ ಎಂದರೆ ಅದಕ್ಕೆ ಸುಪ್ರೀಂಕೋರ್ಟ್‌ ಕಾರಣ ಎಂದು ತಿರುಗೇಟು ನೀಡಿದರು. +ನಾವು ಸುಪ್ರೀಂಕೋರ್ಟ ಕದ ತಟ್ಟಿದ್ದರಿಂದ ವಿಧಿಯಿಲ್ಲದೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಿತು. ಇಲ್ಲದಿದ್ದರೆ ಕರ್ನಾಟಕಕ್ಕೂ ದೊಡ್ಡ ಚೊಂಬು ಸಿಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲೂ ಬರಗಾಲ ಬಂದಿದ್ದರೂ ಒಂದೇ ಒಂದು ಪೈಸಾ ಹಣವನ್ನು ನೀಡಲಿಲ್ಲ. ನಾವು ನಮಗೆ ಬರಬೇಕಾದ ಹಣವನ್ನು ನೀಡಬೇಕೆಂದು ಒತ್ತಾಯಿಸಿ ನ್ಯಾಯಾಲಯದ ಮೊರೆ ಹೋದೆವು. ನಮಗೆ ನ್ಯಾಯ ಸಿಕ್ಕಿದ್ದರೆ ಅದು ನ್ಯಾಯಾಲಯದಿಂದ ಎಂದು ಹೇಳಿದರು. +ಆಗ ಬಿಜೆಪಿಯ ಸಿ.ಟಿ.ರವಿ, ಭಾರತಿ ಶೆಟ್ಟಿ, ಕೇಶವಪ್ರಸಾದ್‌ ಸೇರಿದಂತೆ ಮತ್ತಿತರರು ಆಕ್ಷೇಪಿಸಿ ಕೇಂದ್ರ ಸರ್ಕಾರವನ್ನು ಎಲ್ಲದಕ್ಕೂ ದೂಷಣೆ ಮಾಡುವುದು ಬೇಡ. 3 ಸಾವಿರ ಕೋಟಿ ರೂ. ಅನುದಾನ ಕೊಟ್ಟಿಲ್ಲವೇ? ಎಂದು ಸಚಿವರನ್ನು ಪ್ರಶ್ನಿಸಿದರು. ಆಗ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ರೈತರಿಗೆ ಬೆಳೆಪರಿಹಾರ ಸಿಗಬೇಕೆಂಬುದು ಎಲ್ಲರ ಆಶಯ. ಇದರಲ್ಲಿ ಯಾರಿಗೂ ತಾರತಮ್ಯ ಎಸಗುವುದು ಬೇಡ. ಸರ್ಕಾರ ಸಮರ್ಪಕವಾಗಿ ಪರಿಹಾರ ನೀಡಲಿ ಎಂದು ಸಲಹೆ ನೀಡಿದರು. +ಇದಕ್ಕೂ ಮುನ್ನ ಉತ್ತರಿಸಿದ ಕೃಷ್ಣಭೈರೇಗೌಡ, ನಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದಿನ ಎಲ್ಲಾ ಸರ್ಕಾರಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಪರಿಹಾರವನ್ನು ನೀಡಿದ್ದೇವೆ. ನಾವು ಈವರೆಗೂ ಒಟ್ಟು 33 ಲಕ್ಷಕ್ಕೂ ಅಧಿಕ ರೈತರಿಗೆ ಪರಿಹಾರ ಕೊಟ್ಟಿದ್ದೇವೆ. ಅಂದರೆ ಹಿಂದಿನ ಸರ್ಕಾರ ನೀಡಿದ್ದಕ್ಕಿಂತಲೂ ನಾವು ದುಪ್ಪಟ್ಟು ಕೊಟ್ಟಿದ್ದೇವೆ. ಬೆಳೆ ಪರಿಹಾರ ನೀಡಬೇಕಾದರೆ ಡಿಜಿಟಲ್‌ ವ್ಯವಸ್ಥೆಯನ್ನು ಮಾಡಿದ್ದೇವೆ. ಇದಕ್ಕಾಗಿ ವಿಶೇಷವಾದ ಆ್ಯಪ್‌ ಅನುಷ್ಠಾನ ಮಾಡಲಿದೆ. ರೈತರು ಬೆಳೆ ಬೆಳೆದಿದ್ದಾರೋ, ಇಲ್ಲವೋ ಎಂಬುದನ್ನು ಇದು ಖಾತರಿಪಡಿಸುತ್ತದೆ. ಶೇ.33 ಕ್ಕಿಂತಲೂ ಹೆಚ್ಚು ಬೆಳೆನಷ್ಟವಾಗಿದ್ದರೆ ಪರಿಹಾರ ನೀಡುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_65_12.txt b/eesanje/url_46_65_12.txt new file mode 100644 index 0000000000000000000000000000000000000000..b41cf7dacd06565172e2993cd58e952ab6cf7463 --- /dev/null +++ b/eesanje/url_46_65_12.txt @@ -0,0 +1,4 @@ +ರಾಜ್ಯದಲ್ಲಿ ನೂತನ 5 ಲೇಔಟ್‌ಗಳ ನಿರ್ಮಾಣ: ಸಚಿವ ಜಮೀರ್ ಅಹಮದ್ +ಬೆಂಗಳೂರು,ಜು.24- ರಾಜ್ಯದಲ್ಲಿ ನೂತನವಾಗಿ 5 ಲೇಔಟ್ಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹಾಕಿಕೊಂಡಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ವಿಧಾನಪರಿಷತ್ನ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸದಾಗಿ ರಾಜ್ಯದ ಒಟ್ಟು 5 ಕಡೆ ಅತ್ಯಂತ ಸುವ್ಯವಸ್ಥಿತ ಹಾಗೂ ಸುಸಜ್ಜಿತ ಲೇಔಟ್ಗಳನ್ನು ನಿರ್ಮಾಣ ಮಾಡಬೇಕೆಂಬ ಯೋಜನೆ ಇದೆ. ಆದರೆ ಯಾವ ಸ್ಥಳದಲ್ಲಿ ಮಾಡುತ್ತೇವೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ. ಬೇಕೆಂದರೆ ರೈತರು ಇದಕ್ಕೆ ಜಮೀನು ಕೊಡಲು ಹಿಂದೆಮುಂದೆ ನೋಡುತ್ತಾರೆ ಎಂದು ಸ್ಪಷ್ಟಪಡಿಸಿದರು. +ಲೇಔಟ್ಗಳನ್ನು ನಿರ್ಮಾಣ ಮಾಡಬೇಕೆಂಬ ಬೇಡಿಕೆ ಇದೆ. ಒಂದು ಲೇಔಟ್ ನಿರ್ಮಿಸಬೇಕೆಂದರೆ ಕನಿಷ್ಠ ಪಕ್ಷ 1 ಸಾವಿರ ಎಕರೆ ಜಮೀನು ಬೇಕು. ನಾವು ರೈತರಿಂದ ಬಲವಂತವಾಗಿ ಜಮೀನು ಭೂಸ್ವಾದೀನಪಡಿಸಿಕೊಳ್ಳಲು ಆಗುವುದಿಲ್ಲ. ಅವರ ಮನವೊಲಿಸಬೇಕಾಗುತ್ತದೆ ಎಂದು ತಿಳಿಸಿದರು. ಒಂದು ಲೇಔಟ್ನಲ್ಲಿ ಪಾರ್ಕಿಂಗ್, ಸ್ಟೇಡಿಯಂ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳೂ ಇರಬೇಕು. ಈಗಾಗಲೇ ಆನೇಕಲ್ನಲ್ಲಿ ಸುಮಾರು ಒಂದು ಸಾವಿರ ಎಕರೆಯಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿರುವ ಲೇಔಟ್ ನಿರ್ಮಾಣ ಮಾಡಿ ಅದರಲ್ಲಿ ಯಶಸ್ವಿಯೂ ಆಗಿದ್ದೇವೆ ಎಂದರು. +ಶೇ. 50:50 ಅನುಪಾತದಲ್ಲಿ ಭೂಸ್ವಾದೀನ ಮಾಡಿಕೊಳ್ಳಬೇಕೇ ಇಲ್ಲವೇ ನಾವೇ ಖರೀದಿ ಮಾಡಬೇಕೆ ಎಂಬುದರ ಬಗ್ಗೆಯೂ ಆಲೋಚನೆಯಿದೆ. ಗೃಹಮಂಡಳಿಯಿಂದ ಭೂ ಖರೀದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಮೀರ್ ಸ್ಪಷ್ಟಪಡಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ಹಿಂದಿನ ಸರ್ಕಾರ 71 ಎಕರೆಯಲ್ಲಿ ಲೇಔಟ್ ನಿರ್ಮಾಣ ಮಾಡಲು ಮುಂದಾಗಿತ್ತು. ಇಷ್ಟು ಸಣ್ಣ ಪ್ರಮಾಣದಲ್ಲಿ ಸಾಧ್ಯವಿಲ್ಲದ ಕಾರಣ ನೆನೆಗುದಿಗೆ ಬಿದ್ದಿದೆ. ಒಟ್ಟು 9,460 ಅರ್ಜಿಗಳು ಬಂದಿವೆ. ಅರ್ಜಿದಾರರಿಂದ ಒಟ್ಟು 26 ಕೋಟಿ 80 ಲಕ್ಷ ಠೇವಣಿ ಹಣವನ್ನು ಸಂಗ್ರಹಿಸಿ, ಯೂನಿಯನ್ ಬ್ಯಾಂಕ್ ಇಂಡಿಯಾದಲ್ಲಿ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದರು. \ No newline at end of file diff --git a/eesanje/url_46_65_2.txt b/eesanje/url_46_65_2.txt new file mode 100644 index 0000000000000000000000000000000000000000..823818124741665e85e807c1beca319cfbc70e25 --- /dev/null +++ b/eesanje/url_46_65_2.txt @@ -0,0 +1,7 @@ +ಮಚ್ಚಿನಿಂದ ಕೊಚ್ಚಿ ಅಪ್ಪ-ಮಗನ ಕೊಲೆ +ಬಾಗೇಪಲ್ಲಿ,ಜು.24- ಜಮೀನು ವಿವಾದದ ಹಿನ್ನೆಲೆಯಲ್ಲಿ ಟೈಲರ್ ಒಬ್ಬ ತನ್ನ ಅಣ್ಣ ಹಾಗೂ ಅಣ್ಣನ ಮಗನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪಿಸ್ತೂಲ್ನಿಂದ ಗುಂಡಿಕ್ಕಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಇಂದು ಬೆಳ್ಳಂಬೆಳಿಗ್ಗೆ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯ ಹಂಪಸಂದ್ರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ನಜೀರ್ ಅಹಮದ್ (55) ಎಂದು ಗುರುತಿಸಲಾಗಿದೆ. ಮಹಮದ್ ಬಷೀರ್ (65) ಕೊಲೆ ಆರೋಪಿ. +ಘಟನೆಯ ವಿವರ:ಇಂದು ಬೆಳಗಿನ ಜಾವ 5.15ರ ಸಮಯದಲ್ಲಿ ಮೃತ ನಜೀರ್ ಅಹಮದ್ ಪ್ರಾರ್ಥನೆ ಸಲ್ಲಿಸಲು ಮಸೀದಿಗೆ ಹೋಗುತ್ತಿದ್ದಾಗ ಹೊಂಚು ಹಾಕಿ ಕಾದು ಕುಳಿತಿದ್ದ ಮಹಮದ್ ಬಷೀರ್ ಏಕಾಏಕಿ ಮಚ್ಚಿನಿಂದ ಹಲ್ಲೆಮಾಡಿ ನಂತರ ತನ್ನ ಬಳಿ ಇದ್ದ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ. ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡು ನಜೀರ್ ಅಹಮದ್ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ನಂತರ ಕೊಲೆಗಾರ ಬಷೀರ್ ಕೂಗಳತೆ ದೂರದಲ್ಲಿದ್ದ ತನ್ನ ಅಣ್ಣ ಹಾಗೂ ಮೃತ ನಜೀರ್ರವರ ತಂದೆ ಮಹಬೂಬ್ ಸಾಬ್ (80) ಎಂಬುವವರ ಮೇಲೂ ಕೂಡ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. +ಪಿಸ್ತೂಲಿನ ಶಬ್ದಕ್ಕೆ ಬೆಚ್ಚಿಬಿದ್ದ ಜನರು ಹೊರ ಬಂದಾಗ ದ್ವಿಚಕ್ರ ವಾಹನದಲ್ಲಿ ಬಾಗೇಪಲ್ಲಿ ಪಟ್ಟಣದ ಕೊತ್ತಪಲ್ಲಿ ರಸ್ತೆಯಲ್ಲಿರುವ ತನ್ನ ಹೆಂಡತಿಯನ್ನು ಕೊಲೆ ಮಾಡಲು ಮಚ್ಚು ಮತ್ತು ಪಿಸ್ತೂಲ್ನೊಂದಿಗೆ ಹೋಗಿದ್ದಾನೆ. ಹಂಪಸಂದ್ರ ಗ್ರಾಮದಲ್ಲಿ ನಡೆದ ಕೊಲೆಯ ಬಗ್ಗೆ ಮಾಹಿತಿ ತಿಳಿದಿದ್ದ ಪೊಲೀಸರು ಬಾಗೇಪಲ್ಲಿ ಪಟ್ಟಣದ ಕೊಲೆಗಾರನ ಹೆಂಡತಿಗೆ ಮಾಹಿತಿ ನೀಡಿ ಬಾಗಿಲು ತೆರೆಯದಂತೆ ತಿಳಿಸಿದ್ದಾರೆ. +ಮನೆಯ ಬಳಿ ಹೋದ ಕೊಲೆಗಾರ ಬಾಗಿಲು ಬಡಿದಿದ್ದು ಬಾಗಿಲು ತೆಗೆಯದಿದ್ದಾಗ ಸ್ವಲ್ಪಹೊತ್ತು ಕಾದು ವಾಪಸ್ಸಾಗುವಾಗ ಪೊಲೀಸರು ಕೊಲೆ ಗಾರನನ್ನು ಬಂಧಿಸಿ ಪಿಸ್ತೂಲ್ ಹಾಗೂ ಮಚ್ಚನ್ನು ವಶಪಡಿಸಿಕೊಂಡಿದ್ದಾರೆ. ಗಂಭೀರ ಗಾಯಗೊಂಡ ಮಹಬೂಬ್ ಸಾಬ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ. +ಆರೋಪಿ ಕೆಲವರ್ಷಗಳಿಂದ ಸೌದಿಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು, ಇತ್ತೀಚೆಗೆ ಗ್ರಾಮಕ್ಕೆ ವಾಪಸ್ ಬಂದು ಇಲ್ಲಿಯೂ ಕೂಡ ಟೈಲರ್ ವೃತ್ತಿ ಮಾಡಿಕೊಂಡಿದ್ದ. ಆಸ್ತಿ ವಿಚಾರವಾಗಿ ಜಗಳ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಇದೇ ವಿಚಾರವಾಗಿ ಕೊಲೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. +ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಷಾಲ್ ಚೌಕ್ಸೆ, ಅಡಿಷನಲ್ ಎಸ್.ಪಿ. ಖಾಸಿಂ, ಡಿ.ವೈ.ಎಸ್.ಪಿ. ಶಿವಕುಮಾರ್, ಸರ್ಕಲ್ ಇನ್ಸಪೆಕ್ಟರ್ ನಯಾಜ್ ಬೇಗ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಕರೆಸಲಾಗಿತ್ತು. \ No newline at end of file diff --git a/eesanje/url_46_65_3.txt b/eesanje/url_46_65_3.txt new file mode 100644 index 0000000000000000000000000000000000000000..7570b071f848ba6c014fa4f60831bd2eb262be96 --- /dev/null +++ b/eesanje/url_46_65_3.txt @@ -0,0 +1,7 @@ +ಮುಡಾ ಅವ್ಯವಹಾರ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ +ಬೆಂಗಳೂರು,ಜು.24- ಮೈಸೂರು ನಗರಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯ ಬಳಿಕ ಮುಡಾ ಅಕ್ರಮ ಪ್ರಕರಣ ಯಾವ ಹಂತಕ್ಕೆ ಬರಲಿದೆ ಎಂದು ನೋಡಿಕೊಂಡು ಪಾದಯಾತ್ರೆ ನಡೆಸಲು ಬಿಜೆಪಿ ರಾಜ್ಯ ನಾಯಕರು ತೀರ್ಮಾನಿಸಿದ್ದು, ಒಂದು ವೇಳೆ ಸಿಎಂ ರಾಜೀನಾಮೆ ಕೊಡದಿದ್ದರೆ ಪಾದಯಾತ್ರೆ ಮೂಲಕ ಮೈಸೂರಿಗೆ ತೆರಳಿ ಸಿಎಂ ರಾಜೀನಾಮೆಗೆ ಆಗ್ರಹಿಸಲಿದ್ದಾರೆ. +ಅಧಿವೇಶನ ಬಳಿಕ ಜು. 29ರಂದು 120 ಕಿ.ಮೀ. ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಸೇರಿ ವಿವಿಧ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ. ಇನ್ನು ಪಾದಯಾತ್ರೆ ವೇಳೆ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗದೆ, ಚನ್ನಪಟ್ಟಣ, ಮಂಡ್ಯ ಒಳರಸ್ತೆಯಲ್ಲಿ ಪಾದಯಾತ್ರೆ ಮೂಲಕ ತೆರಳಿ ಜನರ ಗಮನ ಸೆಳೆಯಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂ. ಬೆಲೆಬಾಳುವ 14 ನಿವೇಶನಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಗಂಭೀರ ಆರೋಪ ಮಾಡುತ್ತಿದೆ. +ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ನಿವೇಶನ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. +ಬೆಂಗಳೂರು ಟು ಬಳ್ಳಾರಿ ಪಾದಯಾತ್ರೆ :2010ರ ಜುಲೈನಲ್ಲಿ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ರೆಡ್ಡಿ ಸಹೋದರರ ವಿರುದ್ಧ ದಿನೇಶ್ ಗುಂಡೂರಾವ್ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ದರು. ಇದರಿಂದ ಸದನದಲ್ಲಿ ಮಾತಿನ ಚಕಮಕಿ ಆರಂಭವಾಯಿತು. ಈ ವೇಳೆ ಅಂದಿನ ಬಿಜೆಪಿ ಶಾಸಕ ಟಿ.ಎಸ್.ಸುರೇಶ್ ಬಾಬು ಗುಂಡೂರಾವ್ ವಿರುದ್ಧ ಹರಿಹಾಯ್ದರು. ಬಳ್ಳಾರಿಗೆ ಬಾ ನೋಡಿಕೊಳ್ಳುತ್ತೇವೆ ಎಂದು ಸವಾಲು ಎಸೆದಿದ್ದರು.ಇದರಿಂದ ಸದನ ಮತ್ತಷ್ಟು ಗದ್ದಲಮಯವಾಯಿತು. ಬಳ್ಳಾರಿ ಶಾಸಕರು ತೋಳೇರಿಸಿಕೊಂಡು ವಿಪಕ್ಷ ನಾಯಕರ ಬಳಿ ಹೊರಟರು. ಇವರಲ್ಲಿ ಮೂವರು ರೆಡ್ಡಿ ಸಹೋದರರೂ ಇದ್ದರು. ಆಗ ಸಿಟ್ಟಿಗೆದ್ದ ಸಿದ್ದರಾಮಯ್ಯ ತೋಳು ತಟ್ಟಿ ಬಳ್ಳಾರಿಗೆ ಬರುತ್ತೇವೆ, ರೆಡ್ಡಿ ಮನೆ ಮುಂದೆಯೇ ಮೆರವಣಿಗೆ ಮಾಡುತ್ತೇವೆ ಎಂದು ಅಬ್ಬರಿಸಿ ಸವಾಲೆಸೆದಿದ್ದರು. +ಅನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ಮಾಡಿದರು. ನಂತರ ನಡೆದಿದೆಲ್ಲ ಇತಿಹಾಸ. ಇದೀಗ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಭಾಗಿಯಾದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಟು ಬಳ್ಳಾರಿ ಮಾದರಿಯಲ್ಲಿ ಬೆಂಗಳೂರು ಟು ಮೈಸೂರಿಗೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದ್ದಾರೆ. \ No newline at end of file diff --git a/eesanje/url_46_65_4.txt b/eesanje/url_46_65_4.txt new file mode 100644 index 0000000000000000000000000000000000000000..42a9e29c2b91e4ebc5cdc3d42690e99f9a9bedc3 --- /dev/null +++ b/eesanje/url_46_65_4.txt @@ -0,0 +1,4 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ: ಆಗಸ್ಟ್ ಎರಡನೆ ವಾರದಲ್ಲಿ ದೋಷಾರೋಪಣೆ ಸಲ್ಲಿಕೆ +ಬೆಂಗಳೂರು, ಜು.24- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮುಂದಿನ ಆಗಸ್ಟ್ ತಿಂಗಳ 2ನೇ ವಾರದಲ್ಲಿ ನ್ಯಾಯಾಲಯಕ್ಕೆ ಪ್ರಾಥಮಿಕ ದೋಷಾರೋಪಣೆ ಸಲ್ಲಿಸಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ್ನೋತ್ತರ ಪರೀಕ್ಷೆ ವರದಿ, ಆರೋಪಿಗಳ ಹೇಳಿಕೆಗಳು, ಪೊಲೀಸರು ಸಂಗ್ರಹಿಸಿರುವ 180 ಕ್ಕೂ ಹೆಚ್ಚು ಸಾಕ್ಷಗಳನ್ನೊಳಗೊಂಡಂತೆ ಪ್ರಾಥಮಿಕ ದೋಷಾರೋಪ ಪಟ್ಟಿಯನ್ನ ಸಲ್ಲಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. +ರೇಣುಕಾಸ್ವಾಮಿ ಕೊಲೆ ನಡೆದು ಎರಡು ತಿಂಗಳು ಕಳೆದಿದೆ. ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೈದರಾಬಾದಿಗೆ ಕಳುಹಿಸಿರುವ ವಿಡಿಯೋ ದಾಖಲೆಗಳ ವರದಿ ಬರಬೇಕಾಗಿದೆ. ಮೊಬೈಲ್ ರೀಟ್ರಿವ್ ವರದಿ ಪೊಲೀಸರ ಕೈಗೆ ಸಿಗಬೇಕಾಗಿದೆ. ಈ ಎಲ್ಲಾ ಮಾಹಿತಿಗಳು ಲಭ್ಯವಾದ ನಂತರ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. +ನಟ ದರ್ಶನ್ ಸೇರಿದಂತೆ ಆರೋಪಿಗಳ್ಯಾರೂ ಈವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. \ No newline at end of file diff --git a/eesanje/url_46_65_5.txt b/eesanje/url_46_65_5.txt new file mode 100644 index 0000000000000000000000000000000000000000..3c068eb16e4386322db879c066919b503520ba9c --- /dev/null +++ b/eesanje/url_46_65_5.txt @@ -0,0 +1,4 @@ +ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ಮೀಸಲು +ಬೆಂಗಳೂರು ಜ. 24- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 20 21ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024 25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು. +ಆರಂಭದಲ್ಲಿ ಸಭಾಧ್ಯಕ್ಷರು ಪ್ರಶ್ನೆ ಕೇಳಲು ಶಾಸಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ರವಿಕುಮಾರ್ ಗಾಣಿಗ ಎಂದು ಉಲ್ಲೇಖಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ಶಾಸಕರು, ಅದು ಗಾಣಿಗ ಗಣಿಗ ಎಂದು ತಿದ್ದುಪಡಿ ಮಾಡಿದರು. ಇದಕ್ಕೂ ಮೊದಲು ಉಮೇಶ್ ಕತ್ತಿ ಅವರ ಹೆಸರನ್ನು ಕೂಗುವಾಗಲೂ ಸಭಾಧ್ಯಕ್ಷರು ಉಮೇಶ್ ಹುಕ್ಕೇರಿ ಎಂದು ಹೇಳಿದಾಗ, ಬಿಜೆಪಿಯ ಶಾಸಕರು ಲೋಪವನ್ನು ಸರಿಪಡಿಸಿದರು. \ No newline at end of file diff --git a/eesanje/url_46_65_6.txt b/eesanje/url_46_65_6.txt new file mode 100644 index 0000000000000000000000000000000000000000..732ffbf7e7919e9efe1ac7f3fe969a71f523d974 --- /dev/null +++ b/eesanje/url_46_65_6.txt @@ -0,0 +1,11 @@ +ಪಕ್ಷಬೇಧ ಮರೆತು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಆಕ್ರೋಶ +ಬೆಂಗಳೂರು, ಜು.24- ಸಮಾಜ‌ ಕಲ್ಯಾಣ ಇಲಾಖೆಯ ರೈಸ್ ಸಂಸ್ಥೆಯಿಂದ ನಡೆಯುತ್ತಿರುವ ವಸತಿ ಶಾಲೆಗಳಲ್ಲಿನ ಶಿಕ್ಷಣ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎಂದು ಆಡಳಿತ ಪಕ್ಷವು ಸೇರಿದಂತೆ ಎಲ್ಲಾ ಶಾಸಕರು ಪಕ್ಷಬೇಧ ಮರೆತು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಶಾಸಕಿ ರೂಪಕಲಾ, ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳ ಲೋಪಗಳನ್ನು ವಿವರಿಸಿದರು. ಸಿಬ್ಬಂದಿಗಳ ಕೊರತೆ, ಶೈಕ್ಷಣಿಕ ವಾತಾವರಣ, ಸುರಕ್ಷತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ ಎಂದು ಸದನದ ಗಮನಕ್ಕೆ ತಂದರು. ಬೇಡಿಕೆಗೆ ಅನುಸಾರವಾಗಿ ವಸತಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶ ಇಲ್ಲ ಎಂಬ ವಿಚಾರವನ್ನು ವಿವರಿಸಿದರು. ಕ್ರೈಸ್ ಸಂಸ್ಥೆಯ ಶಾಲೆಗಳಿಗೆ ಮುರಾರ್ಜಿ ವಸತಿ ಶಾಲೆಯ ನಿರ್ವಹಣೆಗೆ ನೀಡುವಷ್ಟೇ ಅನುದಾನ ನೀಡಲಾಗುತ್ತಿದೆ. ಆದರೂ ಗುಣಮಟ್ಟದಲ್ಲಿ ಸಮಾಜ ಕಲ್ಯಾಣ ಶಾಲೆಗಳು ಕಳಪೆಯಾಗಿವೆ ಎಂದು ಆರೋಪಿಸಿದರು. ಇಲಾಖೆಯ ಉಪನಿರ್ದೇಶಕರೆ ಗುತ್ತಿಗೆದಾರರಾಗಿದ್ದಾರೆ. ಸಮುದಾಯ ಭವನಗಳ ನಿರ್ಮಾಣಕ್ಕೆ ವರ್ಷಕ್ಕೆ 1,300 ಕೋಟಿ ಖರ್ಚು ಮಾಡಲಾಗುತ್ತಿದೆ. ಶೋಷಿತರ ಶಿಕ್ಷಣ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವುದನ್ನು ಸರ್ಕಾರ ರೂಢಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. +ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ಪರವಾಗಿ ಉತ್ತರ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಇತ್ತೀಚಿಗೆ ನಡೆದ ಎಸ್‌ಸಿಪಿ ಮತ್ತು ಟಿಎಸ್ ಪಿ ಪರಿಷತ್ ಸಭೆಯಲ್ಲಿ ಕ್ರೈಸ್ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಅನುದಾನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ಹಾಸ್ಟೆಲ್ ಗಳಿಗೆ ಭೇಟಿ ನೀಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಆರೋಗ್ಯ ವಿಚಾರದಲ್ಲಿ ರಾಜಿ ಇಲ್ಲ ಎಂದು ಹೇಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ 68 ಭಾರತ ರತ್ನ ಡಾ. ಬಿಆರ್ ಅಂಬೇಡ್ಕರ್ ಸರ್ಕಾರಿ ವಸತಿ ಶಾಲೆಗಳನ್ನು ನಿರ್ವಹಿಸಲಾಗುತ್ತಿದೆ, ಇಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 8500 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ‌ ಇದೆ. +ವಾರ್ಷಿಕ ಸರಾಸರಿ ಆರು ಸಾವಿರದಿಂದ 6,500 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ಪ್ರಸಕ್ತ ವರ್ಷ 6059 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ 821 ವಸತಿ ಶಾಲೆಗಳು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ವಾರ್ಷಿಕವಾಗಿ 2,11,920 ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆರರಿಂದ 12ನೇ ತರಗತಿಯವರೆಗೂ 1,91,448 ವ್ಯಾಸಂಗ ಮಾಡುತ್ತಿದ್ದಾರೆ. ಪ್ರತಿ ವರ್ಷ 40,555 ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ ಎಂದು ವಿವರಿಸಿದರು. +ಚರ್ಚೆಯಲ್ಲಿ ಭಾಗವಹಿಸಿದ್ದ ಶಾಸಕ ಸುರೇಶ್ ಕುಮಾರ್, ಹಿರಿಯೂರಿನ ವಸತಿ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ಹಾಗೂ ಹಾವೇರಿ ಜಿಲ್ಲೆಯ ಮುರಾರ್ಜಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ಮನೆಯ ವಾತಾವರಣ ಇಲ್ಲದೆ ಖಿನ್ನತೆ ಕಾಡುತ್ತಿದೆ. ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಬಂಗಾರಪೇಟೆ ಕ್ಷೇತ್ರದ ನಾರಾಯಣಸ್ವಾಮಿ ಸರ್ಕಾರ ಶಿಕ್ಷಣದ ಉದ್ದೇಶಕ್ಕಾಗಿ ಕ್ರೈಸ್ ಶಾಲೆಗಳನ್ನು ಆರಂಭಿಸಿತ್ತು. ಆದರೆ ಈಗ ಅಲ್ಲಿ ಕಟ್ಟಡ ನಿರ್ಮಾಣ ಸೇರಿದಂತೆ ಇತರೆ ಗುತ್ತಿಗೆದಾರರದೇ ಆಡಳಿತವಾಗುದೆ ಎಂದು ಆರೋಪಿಸಿದರು. +ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕಮಿಟಿ ಹೆಸರಿನಲ್ಲಿ ಗುತ್ತಿಗೆ ವ್ಯವಹಾರಗಳೇ ವ್ಯಾಪಕವಾಗಿವೆ. ಕ್ರೈಸ್ ಶಾಲೆಗಳಲ್ಲಿ 20% ರಷ್ಟು ಖಾಯಂ ಶಿಕ್ಷಕರಿದ್ದರೆ, ಶೇಕಡ 80 ರಷ್ಟು ಹೊರಗುತ್ತಿಗೆಯ ಬೋಧಕ ಸಿಬ್ಬಂದಿ ಇದ್ದಾರೆ. ಹೆಣ್ಣು ಮಕ್ಕಳ ಹಾಸ್ಟೆಲ್ ಗಳಿಗೆ ಮಹಿಳೆಯರನ್ನೇ ವಾರ್ಡನ್ ಗಳನ್ನಾಗಿ ನೇಮಿಸಬೇಕು. ಒಟ್ಟಾರೆ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುವಲ್ಲಿ ಸಮಾಜ ಕಲ್ಯಾಣ ಇಲಾಖೆ ವೈಪಲ್ಯ ಕಂಡಿದೆ ಎಂದು ಗಂಭೀರ ಆರೋಪ ಮಾಡಿದರು. +ಸಕಲೇಶಪುರದ ಸಿಮೆಂಟ್ ಮಂಜು, ಕಂಪ್ಲಿ ಕ್ಷೇತ್ರದ ಗಣೇಶ್ ಮತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು. ಸಚಿವ ಸಚಿವ ಪ್ರಿಯಾಂಕ ಖರ್ಗೆ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ, ದೈಹಿಕ ಆರೋಗ್ಯ ಹಾಗೂ ಶಿಕ್ಷಣ ಗುಣಮಟ್ಟದ ಅಭಿವೃದ್ಧಿಗೆ ರೋಟರಿ ಸಂಸ್ಥೆಯೊಂದಿಗೆ ಕೌನ್ಸಿಲಿಂಗ್ ಹಾಗೂ ಇತರ ಸೌಲಭ್ಯಗಳನ್ನು ಕಲ್ಪಿಸಲು ಪ್ರಸ್ತಾವನೆ ಇದೆ. ಮುಂದಿನ ಎರಡು ತಿಂಗಳಲ್ಲಿ ಸಚಿವ ಸಂಪುಟದ ಅನುಮೋದನೆ ಪಡೆದು ಇದನ್ನು ಜಾರಿಗೆ ತರಲಾಗುವುದು. ಇಂಟರ್ನೆಟ್ ಹಾಗೂ ಇತರ ಅತ್ಯಾಧುನಿಕ ಸೌಲಭ್ಯಗಳಿಗಾಗಿ ಆತ್ಮಹತ್ಯೆಯ ಪ್ರಚೋದನೆಗಳಿಗೆ ಅವಕಾಶ ಹೆಚ್ಚಾಗುತ್ತಿವೆ. ಈ ಹಿಂದೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ರೇಣುಕಾ ಚಿದಂಬರಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರವೇಶ, ವಸತಿ ಶಾಲೆಗಳ ನಿರ್ವಹಣೆ, ಸುರಕ್ಷತೆಯ ಬಗ್ಗೆ ಪ್ರಮಾಣಿಕೃತ ವ್ಯವಸ್ಥೆ ಜಾರಿಗೊಳಿಸಲು ವೈಜ್ಞಾನಿಕ ವರದಿ ಪಡೆಯಲಾಗಿತ್ತು. +ಹಿಂದಿನ ಸರ್ಕಾರ ಅದನ್ನು ಜಾರಿಗೊಳಿಸಲಿಲ್ಲ. ಹಾಸ್ಟೆಲ್ ಗಳಲ್ಲಿ 1:7 ಅಥವಾ 1:9 ಅನುಪಾತದಲ್ಲಿ ಶೌಚಾಲಯ ಇರಬೇಕು. ಕೆಲವು ಕಡೆ 1: 21 ಅನುಪಾತದಲ್ಲಿ ಶೌಚಾಲಯಗಳಿವೆ. ಸಮುದಾಯ ಭವನಗಳಿಗೆ ಸರ್ಕಾರ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಹಿಂದೆ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ 14,000 ಸಮುದಾಯ ಭವನಗಳ ಮಂಜುರಾತಿಯನ್ನು ರದ್ದು ಮಾಡಿದ್ದೆ. ಈಗಲೂ ಭವನಗಳ ನಿರ್ಮಾಣಕ್ಕಾಗಿ 600 ಕೋಟಿ ಬಾಕಿ ಅಗತ್ಯ ಇದೆ. +ಈ ಸದನಕ್ಕೆ ಧೈರ್ಯವಿದ್ದರೆ ಎಲ್ಲಾ ಶಾಸಕರು ಒಟ್ಟಾಗಿ ಸಮುದಾಯ ಭವನಗಳ ನಿರ್ಮಾಣವನ್ನು ತಿರಸ್ಕರಿಸಿದರೆ ಅಷ್ಟು ಹಣವನ್ನು ವಸತಿ ಶಾಲೆಗಳ ಸುಧಾರಣೆಗೆ ಬಳಕೆ ಮಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು. ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ, ವಸತಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತದೆ. ಈ ಬಜೆಟ್ ನಲ್ಲಿ 20 ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ. 60 ಹೋಬಳಿಗಳಲ್ಲಿ ವಸತಿ ಶಾಲೆಗಳಿಲ್ಲ ಇವುಗಳಿಗೆ ಹಂತ ಹಂತವಾಗಿ ಮಂಜೂರು ಮಾಡುವುದಾಗಿ ಹೇಳಿದರು. +ಸದ್ಯಕ್ಕೆ ತಮ್ಮ ಕ್ಷೇತ್ರದಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದಾರೆ ಅವರ ಪಾಡೇನು ಎಂದು ಶಾಸಕ ಕಂಪ್ಲಿ ಗಣೇಶ್ ಪ್ರಸ್ತಾಪಿಸಿ, ಸರ್ಕಾರದ ನಿಖರ ಉತ್ತರಕ್ಕೆ ಪಟ್ಟು ಹಿಡಿದಾಗ ಗಲಿಬಿಲಿಯ ವಾತಾವರಣ ನಿರ್ಮಾಣವಾಯಿತು. \ No newline at end of file diff --git a/eesanje/url_46_65_7.txt b/eesanje/url_46_65_7.txt new file mode 100644 index 0000000000000000000000000000000000000000..0a05620b5847d9edec8a7c050ded6fe2bb23be87 --- /dev/null +++ b/eesanje/url_46_65_7.txt @@ -0,0 +1,4 @@ +ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳಿಗೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು,ಜು.24- ಬಜೆಟ್‌ನಲ್ಲಿ ಸಾಕಷ್ಟು ಅನುದಾನದ ಲಭ್ಯತೆ ಇರುವುದರಿಂದ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಯಾವುದೇ ರೀತಿಯ ಹೊರೆಯಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ 1,400 ಕೋಟಿ ಅನುದಾನವನ್ನು ನೀಡಿದ್ದಾರೆ. ಹಣಕಾಸಿನ ಲಭ್ಯತೆ ಮೇಲೆ ನಾವು ಸಾರಿಗೆ ನಿಗಮಗಳಿಗೆ ಹಣವನ್ನು ನೀಡುತ್ತೇವೆ. ಹೀಗಾಗಿ ಯಾವುದೇ ಸಂಸ್ಥೆಗೂ ಹೊರೆಯಾಗುವುದಿಲ್ಲ ಎಂದು ಪುನರುಚ್ಚರಿಸಿದರು. +ಕರ್ನಾಟಕ ವಾಹನ ತೆರಿಗೆ ಕಾಯಿದೆಗೆ ವಿನಾಯಿತಿ ನೀಡಿದ್ದರಿಂದ ನನಗೆ 600 ಕೋಟಿ ಹೆಚ್ಚುವರಿ ಅನುದಾನ ಸಿಗಲಿದೆ. ಅಲ್ಲದೆ, ಬಸ್‌‍ ಖರೀದಿ ಮಾಡಲು 580 ಕೋಟಿ ಅನುದಾನವೂ ಸಿಗಲಿದೆ. ಸಂಸ್ಥೆಯು ಈಗ ಸುಧಾರಣೆಯತ್ತ ಸಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.ಹತ್ತು ವರ್ಷಗಳ ಹಿಂದೆ ಟಿಕೆಟ್‌ ದರವನ್ನು ಹೆಚ್ಚಳ ಮಾಡಲಾಗಿತ್ತು. ಬಿಎಂಟಿಸಿಯಲ್ಲಿ ನಾಲ್ಕು ವರ್ಷಗಳಿಂದ ನಾವು ಟಿಕೆಟ್‌ ದರವನ್ನು ನಾವು ಪರಿಷ್ಕರಣೆ ಮಾಡಿಲ್ಲ. ಈ ಮೊದಲು ನೌಕರರಿಗೆ ನಿಗಮದಲ್ಲಿ ವೇತನ ನೀಡಲು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ಇತ್ತು. ಈಗ ಸಾಕಷ್ಟು ಸುಧಾರಣೆಯಾಗಿದೆ ಎಂದರು. +ಬಾಕಿ ಇರುವ 1,413 ಕೋಟಿ ಹಣವನ್ನು ಹಂತಹಂತವಾಗಿ ಪಾವತಿ ಮಾಡುತ್ತೇವೆ. ನನಗೆ ಆಯವ್ಯವದಲ್ಲಿ ಹಣ ಇರುವುದರಿಂದ ಸಮಸ್ಯೆ ಪ್ರಶ್ನೆ ಉದ್ಭವಿಸುವುದೇ ಇಲ್ಲ ಹಾಗೂ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_65_8.txt b/eesanje/url_46_65_8.txt new file mode 100644 index 0000000000000000000000000000000000000000..e37a0831e719e1fd5b0eb0e442ba9a5730a1741c --- /dev/null +++ b/eesanje/url_46_65_8.txt @@ -0,0 +1,5 @@ +ಚೊಂಬು, ತಟ್ಟೆ, ಚಮಚ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯರಕರ ಚರ್ಚೆ +ಬೆಂಗಳೂರು, ಜು.24-ಚೊಂಬು, ತಟ್ಟೆ, ಚಮಚ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಸ್ವಾರಸ್ಯರಕರ ಚರ್ಚೆಗೆ ಎಡೆ ಮಾಡಿಕೊಟ್ಟಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಉದ್ದೇಶಿಸಿ ನಗುತ್ತೀರಿ ಎಂದರು. ಆಗ ಸಭಾಧ್ಯಕ್ಷರು ನಗುತ್ತಿದ್ದರೂ ಅಗುವುದಿಲ್ಲವೆಂದರೆ ಹೇಗೆ? ಎಂದು ಹೇಳಿದರು.ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಅವರು ನಿಮ್ಮ ನಗು, ಕೋಪ ನಮಗೆ ಅರ್ಥವಾಗುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷರು ಕಳೆದ ಅಧಿವೇಶನದಲ್ಲಿ ಮೊದಲು ಅಧಿವೇಶನಕ್ಕೆ ಬಂದ ಶಾಸಕರಿಗೆ ನಮ್ಮ ಕಚೇರಿಯಲ್ಲಿ ಪ್ರಶಸ್ತಿ ಕೊಡಲಾಗುತ್ತಿದೆ, ಪಡೆದುಕೊಳ್ಳಿ ಎಂದು ಹೇಳಿದರು. +ಆಗ ಬಿಜೆಪಿ ಶಾಸಕ ಆರಗಜ್ಞಾನೇಂದ್ರ ಅವರು, ಅಧಿವೇಶನಕ್ಕೆ ಮೊದಲು ಬಂದವರಿಗೆ ಪ್ರಶಸ್ತಿ ಕೊಡುತ್ತೀರಿ. ಹಾಗೆಯೇ ಅಧಿವೇಶನ ನಡೆಯುವಾಗ ದಿನದ ಕಲಾಪ ಮುಗಿಯುವವರೆಗೂ ಸದನದಲ್ಲಿ ಹಾಜರಿದ್ದ ಶಾಸಕರಿಗೆ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.ಅದಕ್ಕೆ ಸಮ್ಮತಿಸಿದ ಸಭಾಧ್ಯಕ್ಷರು, ಕ್ಯಾಮೇರಾದಲ್ಲಿ ದಾಖಲಾಗುತ್ತದೆ. ಸದನದಲ್ಲಿ ದಿನದ ಕೊನೆಯ ಕಲಾಪದವರೆಗೂ ಇದ್ದ ಶಾಸಕರಿಗೂ ಕೊಡುತ್ತೇವೆ. ರಾಷ್ಟ್ರ ಲಾಂಛನವುಳ್ಳ ಕಪ್ಪುಗಳನ್ನು ಕೊಟ್ಟಿದ್ದೇವೆ. ಹಲವು ಶಾಸಕರು ಹೆಚ್ಚು ಪ್ರಶಸ್ತಿಗೆ ಭಾಜನರಾಗಿರುವುದರಿಂದ ಪ್ಲೇಟ್ ಕೊಡುತ್ತೇವೆ ಎಂದರು. +ಆಗ ಸುನಿಲ್ ಕುಮಾರ್ ಅವರು ಈ ಸರ್ಕಾರದಲ್ಲಿ ಕಪ್ಪು, ಲೋಟ ಅಷ್ಟೇ ಎಂದು ಛೇಡಿಸಿದರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ ತೃಪ್ತಿಯಾಗುವಂತೆ ಕೊಡುತ್ತೇವೆ ಎಂದು ತಿಳಿಸಿದರು. ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮಾತನಾಡಿ ಚೊಂಬು ಕೊಟ್ಟವರು ನೀವು, ನಾವು ಕಪ್ಪು ಕೊಟ್ಟಿದ್ದೇವೆ ಎಂದರು. ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಮಾತನಾಡಿ, ಕಪ್ಪು, ಸಾಸರ್ ಆಯಿತು. ಚಮಚ ಕೊಡಬೇಡಿ ಎಂದಾಗ ನಗೆಯ ಅಲೆ ಸದನದಲ್ಲಿ ತೇಲಿ ಬಂತು. +ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರನ್ನು ಒಟ್ಟಿಗೆ ಸೇರಿಸಿಯೇ ನಾವು ಪ್ರಶಸ್ತಿ ಕೊಡುವುದು ಎಂದು ಹೇಳಿ ಈ ವಿಚಾರದ ಚರ್ಚೆಗೆ ತೆರೆ ಎಳೆದರು. \ No newline at end of file diff --git a/eesanje/url_46_65_9.txt b/eesanje/url_46_65_9.txt new file mode 100644 index 0000000000000000000000000000000000000000..3b9a6fdec3d438ab3eb221feab61267ff5473f08 --- /dev/null +++ b/eesanje/url_46_65_9.txt @@ -0,0 +1,9 @@ +ವಿಧಾನಸಭೆಯಲ್ಲಿ ಮೂಡ ಪ್ರಸ್ತಾಪ: ಏರಿದ ಧನಿಯಲ್ಲಿ ಮಾತಿನ ಚಕಮಕಿ +ಬೆಂಗಳೂರು,ಜು.24- ಮೈಸೂರಿನ ಮೂಡ ಹಗರಣದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಬೇಕೆಂದು ವಿಧಾನ ಸಭೆಯಲ್ಲಿ ಬಿಜೆಪಿ ಪಟ್ಟುಹಿಡಿದ ಕಾರಣ ಆಡಳಿತ ಮತ್ತು ಪ್ರತಿಪಕ್ಷ ನಡುವೆ ಕೆಲಕಾಲ ಏರಿದ ಧ್ವನಿಯಲ್ಲಿ ಮಾತಿನ ಚಕಮಕಿ ನಡೆಯಿತು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನಿಲುವಳಿ ಸೂಚನೆ ಪೂರ್ವಬಾವಿ ಪ್ರಸ್ತಾಪ ಮಾಡಲು ಅವಕಾಶ ನೀಡಬೇಕು, ಪ್ರಶ್ನೋತ್ತರ ಬದಿಗೊತ್ತಿ ಅವಕಾಶ ನೀಡಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಅವರಲ್ಲಿ ಮನವಿ ಮಾಡಿದರು. +ಸಿಎಂ ಅವರ ಮೇಲೆ ಆರೋಪವಿದೆ ಮೂರ್ನಾಲ್ಕು ಸಾವಿರ ಕೋಟಿ ಹಗರಣವಾಗಿದೆ, ಚರ್ಚೆ ಮಾಡದಿದ್ದರೆ ಜನತೆ ಮುಚ್ಚಿ ಹಾಕುತ್ತಿದ್ದಾರೆ ಎಂದು ಮಾತನಾಡಿಕೊಳ್ಳುತ್ತಾರೆ ಎಂದರು. ಆಗ ಸಭಾಧ್ಯಕ್ಷರು, ಅಷ್ಟೊಂದು ಮಹತ್ವದ ವಿಚಾರವಾಗಿದ್ದರೆ ಅಧಿವೇಶನದ ಮೊದಲ ದಿನವೇ ನೋಟಿಸ್ ನೀಡಬೇಕಿತ್ತು. 10 ದಿನ ಏಕೆ ತಡ ಮಾಡಿದ್ದೀರಿ , ಈ ವಿಚಾರದಲ್ಲಿ ಮನವರಿಕೆ ಮಾಡಿಕೊಡುವ ಅಗತ್ಯವಿಲ್ಲ . 2 ವರ್ಷದ ಹಳೆಯ ವಿಚಾರ, ಆರೋಪದ ಬಗ್ಗೆ ನ್ಯಾಯಾಂಗ ಆಯೋಗ ತನಿಖೆ ನಡೆಸುತ್ತಿದೆ, ನೀವು ಗಡಿಬಿಡಿ ಮಾಡಬೇಡಿ, ಕೆಟ್ಟ ಸಂಪ್ರದಾಯ ಬೇಡ, ಪ್ರಶ್ನೋತ್ತರ ಕಲಾಪಕ್ಕೆ ಸಹಕಾರ ನೀಡಿ ಎಂದು ಕೋರಿದರು. +ಬಿಜೆಪಿ ಶಾಸಕ ಸುನೀಲ್ಕುಮಾರ್ ಮಾತನಾಡಿ, ಆಯೋಗದಲ್ಲಿ ತನಿಖೆ ನಡೆಯುತ್ತಿದ್ದರೆ ಸದನದಲ್ಲಿ ಚರ್ಚೆ ಮಾಡುವುದು ಬೇಡ ಎಂದಾದರೆ ಸದನ ನಡೆಸುವುದು ಏಕೆ ಮುಂದೂಡಿ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಎದ್ದುನಿಂತು ಪ್ರತಿಯಾಗಿ ಮಾತನಾಡಲು ಮುಂದಾದಾಗ ಬಿಜೆಪಿ ಶಾಸಕರೂ ಸಹ ಮಾತನಾಡಲು ಮುಂದಾಗುತ್ತಿದ್ದಂತೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. +ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಮಾತನಾಡಿ, ಮೂಡ ವಿಚಾರ ಚರ್ಚೆ ಮಾಡದಿದ್ದರೆ ಪ್ರತಿಪಕ್ಷ, ಆಡಳಿತ ಪಕ್ಷದ ಜೊತೆ ಕೈಜೋಡಿಸಿದ್ದಾರೆ ಎಂಬ ಅಪವಾದ ಬರುತ್ತದೆ. ಮುಖ್ಯಮಂತ್ರಿಯವರ ಮೇಲೆ ನೇರ ಆರೋಪ ಇರುವುದರಿಂದ ಚರ್ಚೆಗೆ ಅವಕಾಶ ಕೊಡಬೇಕು ಎಂದರು. ಸಚಿವ ಭೈರತಿ ಸುರೇಶ್ ಮಾತನಾಡಿ, ಇಡೀ ಜಾತಕವಿದೆ ಎಂದು ಕಡತವೊಂದನ್ನು ಪ್ರದರ್ಶಿಸಿದರು.ಆ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಪ್ರಶ್ನೋತ್ತರ ಪ್ರಾರಂಭವಾಗಲಿ, ಅನಗತ್ಯ ಗೊಂದಲ ಬೇಡ, ಪ್ರತಿಪಕ್ಷ ಆರೋಪಿಸುತ್ತಿರುವ ವಿಚಾರದ ಬಗ್ಗೆ ತನಿಖಾ ಆಯೋಗ ನೇಮಕವಾಗಿದೆ. ಅದನ್ನು ಸ್ವಾಗತಿಸುವುದನ್ನು ಬಿಟ್ಟು ಗೊಂದಲ ಸೃಷ್ಟಿಸುವುದು ಬೇಡ ಎಂದರು. +ಬಿಜೆಪಿಯ ಅರಗ ಜ್ಞಾನೇಂದ್ರ ಮಾತನಾಡಿ, ಮೂಡ ಹಗರಣದ ಕಡತವನ್ನು ನೀವೇಕೆ ತುಂಬಿಕೊಂಡು ಬಂದಿದ್ದೀರ ಎಂದು ಕಾಂಗ್ರೆಸ್ ಶಾಸಕರನ್ನು ಛೇಡಿಸಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಎಲ್ಲಾ ಪಕ್ಷದವರೂ ಇದ್ದಾರೆ ಎಂದು ಹೇಳುತ್ತಾರೆ. ಅದು ಬಹಿರಂಗವಾಗಲಿ, ಚರ್ಚೆಗೆ ಅವಕಾಶ ಕೊಡಿ ಎಂದರು. +ಮತ್ತೆ ಮಾತನಾಡಿದ ಕಾನೂನು ಸಚಿವರು, ಹಳೆ ವಿಚಾರವನ್ನು ನಿಲುವಳಿ ಸೂಚನೆಯಡಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.ಸಚಿವ ಭೈರತಿ ಸುರೇಶ್ ಮಾತನಾಡಿ, ಬಿಜೆಪಿ ಮಾಡಿರುವ ಅನಾಚಾರದ ಬಗ್ಗೆ ಒಂದು ಬಂಡಿ ಇದೆ. ಕೇವಲ ಒಬ್ಬರನ್ನು ಗುರಿ ಮಾಡುವುದಲ್ಲ. ಸುಳ್ಳು ವಿಳಾಸ ನೀಡಿ ಎಕರೆಗಟ್ಟಲೆ ಪಡೆದಿದ್ದಾರೆ ಎಂದು ಆರೋಪಿಸಿದರು. ಅಶ್ವತ್ಥನಾರಾಯಣ ಮಾತನಾಡಿ, ಸದನದಲ್ಲಿ ಚರ್ಚೆಯಾಗದಿದ್ದರೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎನ್ನುತ್ತಾರೆ. ಅದಕ್ಕಾಗಿ ಅವಕಾಶ ಕೊಡಿ ಎಂದರು. +ವಿರೋಧಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಮಾತನಾಡಿ, ಮುಖ್ಯಮಂತ್ರಿ ಮೇಲೆ ನೇರ ಆರೋಪವಿದೆ. ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು. ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಯಾರ್ಯಾರು ಅಡ್ಜಸ್ಟ್ಮೆಂಟ್ ಮಾಡಿಕೊಂಡಿದ್ದಾರೆ ಎಂಬುದನ್ನು ಜನರಿಗೆ ತೋರಿಸಿ ಅಂತವರನ್ನು ಮನೆಗೆ ಕಳುಹಿಸಿ. ಮುಂದಿನ ಚುನಾವಣೆಯಲ್ಲಿ ಪ್ರಾಮಾಣಿಕರನ್ನು ಆಯ್ಕೆ ಮಾಡಬೇಕು ಎಂದರು. ಆಡಳಿತ ಹಾಗೂ ಪ್ರತಿಪಕ್ಷದ ನಾಯಕರನ್ನು ಸಮಾಧಾನಪಡಿಸಿದ ಸಭಾಧ್ಯಕ್ಷರು ಗಡಿಬಿಡಿ ಬೇಡ ಎಂದು ಪ್ರಶ್ನೋತ್ತರ ಕಲಾಪಕ್ಕೆ ಅನುವು ಮಾಡಿಕೊಟ್ಟರು. +ಆಗ ಅಶೋಕ್ ಸೇರಿದಂತೆ ಬಿಜೆಪಿ ಸದಸ್ಯರು ಎದ್ದುನಿಂತು ಪ್ರಶ್ನೋತ್ತರ ಕಲಾಪದ ನಂತರ ಅವಕಾಶ ಮಾಡಿಕೊಡುತ್ತೀರ ಎಂಬ ಬಗ್ಗೆ ಸ್ಪಷ್ಟನೆಯನ್ನು ಸಭಾಧ್ಯಕ್ಷರಿಂದ ಕೇಳಬಯಸಿದರು. ಸುದೀರ್ಘ ಒತ್ತಾಯದ ನಂತರ ಈಗ ಪ್ರಶ್ನೋತ್ತರ ಕಲಾಪ ನಡೆಯಲಿ. ಅನಂತರ ಆ ಬಗ್ಗೆ ಪರಿಶೀಲನೆ ಮಾಡೋಣ ಎಂದಾಗ ಬಿಜೆಪಿ ಶಾಸಕರು ಸುಮನಾದರು. \ No newline at end of file diff --git a/eesanje/url_46_66_1.txt b/eesanje/url_46_66_1.txt new file mode 100644 index 0000000000000000000000000000000000000000..8692c698d2a1a53a083782d7f34b4ad1a34ffb82 --- /dev/null +++ b/eesanje/url_46_66_1.txt @@ -0,0 +1,7 @@ +ಪರಿಷತ್ ಪ್ರತಿಪಕ್ಷ ನಾಯಕರಾಗಿ ಛಲವಾದಿ : ಅಧಿಕೃತ ಪ್ರಕಟಣೆ +ಬೆಂಗಳೂರು,ಜು.24- ವಿಧಾನಪರಿಷತ್ನ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಛಲವಾದಿ ನಾರಾಯಣಸ್ವಾಮಿಯವರ ಹೆಸರನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಅಧಿಕೃತವಾಗಿ ಸದನದಲ್ಲಿ ಪ್ರಕಟಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿಯವರು ನಾರಾಯಣಸ್ವಾಮಿಯವರ ಹೆಸರನ್ನು ವಿರೋಧಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅವರನ್ನು ಕರೆತಂದು ವಿರೋಧಪಕ್ಷದ ನಾಯಕನ ಸ್ಥಾನದಲ್ಲಿ ಕೂರಿಸಿದರು. +ನಂತರ ಛಲವಾದಿ ನಾರಾಯಣಸ್ವಾಮಿಯವರಿಗೆ ಸಚಿವರು ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ನ ಸದಸ್ಯರು ಪಕ್ಷಭೇದ ಮರೆತು ಅಭಿನಂದನೆ ಸಲ್ಲಿಸಿದರು. ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಪ್ರಜಾಪ್ರಭುತ್ವದ ಸೌಂದರ್ಯ ಮತ್ತೆ ಮರುಕಳಿಸಿದೆ ಎಂಬುದಕ್ಕೆ ನಾರಾಯಣಸ್ವಾಮಿಯವರ ಆಯ್ಕೆಯೇ ನಿದರ್ಶನ. +ಪ್ರತಿಯೊಂದು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಗಬೇಕೆಂಬುದು ಸಂವಿಧಾನದ ಆಶಯ. ತಳಸಮುದಾಯದಿಂದ ಬಂದಿರುವ ಅವರಿಗೆ ಅತ್ಯಂತ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ. ಇದಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತಾರೆಂಬ ವಿಶ್ವಾಸವಿದೆ. ಚಿಂತಕರ ಚಾವಡಿ ಎಂದು ಕರೆಯುವ ಮೇಲನೆಯಲ್ಲಿ ಇನ್ನಷ್ಟು ಗುಣಮಟ್ಟದ ಚರ್ಚೆಯಾಗಲಿ. ಸರ್ಕಾರ ತಪ್ಪುದಾರಿಯಲ್ಲಿ ನಡೆದಾಗ ಸರಿದಾರಿಗೆ ತರುವ ಕೆಲಸವನ್ನು ಮಾಡಲಿ ಎಂದು ಆಶಿಸಿದರು. ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ನಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧಪಕ್ಷದ ನಾಯಕರನ್ನು ಛಾಯಾ ಮುಖ್ಯಮಂತ್ರಿ ಎಂದು ಕರೆಯುತ್ತಾರೆ. +ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡಿ ಎಚ್ಚರಿಸುವ ಕೆಲಸ ವಿರೋಧಪಕ್ಷದ ನಾಯಕರಿಂದ ಆಗಬೇಕು. ಕರ್ನಾಟಕದ ವಿಧಾನಪರಿಷತ್ಗೆ ಶತಮಾನಗಳ ಇತಿಹಾಸವಿದೆ. ಹಿಂದೆ ಮೈಸೂರು ರಾಜರ ಆಡಳಿತದಲ್ಲಿ ಈ ವ್ಯವಸ್ಥೆ ಇತ್ತು. ಈಗ ಅದನ್ನು ನಾವೂ ಕೂಡ ಅಳವಡಿಸಿಕೊಂಡಿದ್ದೇವೆ ಎಂದರು. ವಿರೋಧಪಕ್ಷದ ನಾಯಕರು ಸರ್ಕಾರಕ್ಕೆ ನಿರಂತರವಾಗಿ ಎಚ್ಚರಿಕೆ ಕೊಡುವ ಕೆಲಸ ಮಾಡಲಿ. ಒಳ್ಳೆಯ ಕೆಲಸ ಮಾಡಿದಾಗ ಹೊಗಳಬೇಕು, ತಪ್ಪು ಮಾಡಿದಾಗ ಕಿವಿ ಹಿಂಡುವ ಕೆಲಸ ಮಾಡಲಿ. ಆದರೆ ವಿರೋಧಕ್ಕಾಗಿ ವಿರೋಧಿಸುವುದು ಬೇಡ ಎಂದು ಮನವಿ ಮಾಡಿದರು. +ಜೆಡಿಎಸ್ನ ಎಸ್.ಎಲ್.ಭೋಜೇಗೌಡ ಮಾತನಾಡಿ, ಛಲವಾದಿ ನಾರಾಯಣಸ್ವಾಮಿಯವರ ಆಯ್ಕೆ ಅತ್ಯುತ್ತಮವಾಗಿದೆ. ಅವರು ಈ ಸ್ಥಾನಕ್ಕೆ ಅರ್ಹರೂ ಹೌದು. ಸಮಾಜಮುಖಿಯಾಗಿ ಕೆಲಸ ಮಾಡಬೇಕು. ಸದನದಲ್ಲಿ ಗುಣಮಟ್ಟದ ಚರ್ಚೆಯಾಗಬೇಕೆಂಬ ಮಾತುಗಳಿವೆ. ಅದಕ್ಕೆ ಪ್ರತಿಪಕ್ಷದ ನಾಯಕರು ಕೈಜೋಡಿಸಲಿ ಎಂದು ಕಿವಿಮಾತು ಹೇಳಿದರು. ಸಭಾನಾಯಕ ಬೋಸರಾಜು ಮಾತನಾಡಿ, ಛಲವಾದಿ ನಾರಾಯಣಸ್ವಾಮಿಯವರು ಹೋರಾಟದ ಹಿನ್ನೆಲೆಯಲ್ಲಿ ಬಂದವರು. ಅವರೂ ನಾವೂ ಒಂದೇ ಪಕ್ಷದಲ್ಲಿದ್ದವರು. ಈಗ ಅತ್ಯಂತ ಮಹತ್ವದ ವಿರೋಧಪಕ್ಷದ ಸ್ಥಾನದಲ್ಲಿ ಕುಳಿತಿದ್ದಾರೆ. ಇದರಲ್ಲಿ ಅವರು ಯಶಸ್ವಿಯಾಗಲಿ ಎಂದು ಆಶಿಸಿದರು. +ಬಿ.ಕೆ.ಹರಿಪ್ರಸಾದ್ ಮಾತನಾಡಿ, ಪ್ರತಿಪಕ್ಷದ ನಾಯಕನ ಸ್ಥಾನ ಅತ್ಯಂತ ಮಹತ್ವದ್ದು. ಮುಖ್ಯಮಂತ್ರಿ ಬಿಟ್ಟರೆ ಅತಿ ಹೆಚ್ಚು ಜವಾಬ್ದಾರಿ ಅವರಿಗಿರುತ್ತದೆ. ಸರ್ಕಾರ ತಪ್ಪು ಮಾಡಿದಾಗ ಛಾಟಿ ಬೀಸಬೇಕು. ಹಾಗೆಂದ ಮಾತ್ರಕ್ಕೆ ಎಲ್ಲವನ್ನೂ ವಿರೋಧಿಸಬಾರದು ಎಂದು ಸಲಹೆ ಮಾಡಿದರು. ಸಿ.ಟಿ.ರವಿ ಮಾತನಾಡಿ, ಪಕ್ಷವು ಅವರಿಗೆ ಅತ್ಯಂತ ಮಹತ್ವದ ಹುದ್ದೆ ನೀಡಿದೆ. ಜನರ ಆಶಯಕ್ಕೆ ತಕ್ಕಂತೆ ಅವರು ಕೆಲಸ ಮಾಡಬೇಕು ಎಂದು ಹೇಳಿದರು. ಸದಸ್ಯರಾದ ಶಶಿಲ್ ನಮೋಶಿ, ಉಮಾಶ್ರೀ, ಸಲೀಂ ಅಹಮದ್, ಸಂಕನೂರು, ಶರವಣ ಸೇರಿದಂತೆ ಅನೇಕರು ಮಾತನಾಡಿದರು. \ No newline at end of file diff --git a/eesanje/url_46_66_10.txt b/eesanje/url_46_66_10.txt new file mode 100644 index 0000000000000000000000000000000000000000..6c0e5fac64fb8aa14c402b79bfc31066ef901c52 --- /dev/null +++ b/eesanje/url_46_66_10.txt @@ -0,0 +1,5 @@ +ಭೂಕಬಳಿಕೆ: ಕೋಕಾ ಕೇಸ್ ದಾಖಲು +ಬೆಂಗಳೂರು,ಜು.22-ಭೂ ಕಬಳಿಕೆದಾರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ-2 ಸಾವಿರ (ಕೋಕಾ)ದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭೂ ಕಬಳಿಕೆದಾರರ ತಂಡದ ಮುಖ್ಯಸ್ಥ ಜಾನ್‍ಮೋಸಸ್‍ನನ್ನು ಬಂಧಿಸಿ ಸಿಐಡಿ ಪೊಲೀಸರ ವಶಕ್ಕೆ ಪಡೆದು ಈತನ ವಿರುದ್ಧ ಕಾಯ್ದೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಕಲಿ ದಾಖಲಾತಿ ಸೃಷ್ಠಿಸಿದ ವ್ಯಕ್ತಿಗಳಿಂದ ನ್ಯಾಯಾಲಯಗಳಲ್ಲಿ ದಾವೆಗಳನ್ನು ಹೂಡಿಸಿ ಪಡೆದ ಆದೇಶಗಳ ಮೂಲಕ ಅಮಾಯಾಕರ ಆಸ್ತಿಗಳನ್ನು ಕಬಳಿಸುತ್ತಿರುವ ಕುಖ್ಯಾತ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. +ಹಲಸೂರು ಗೇಟ್ ಪೊಲೀಸ್ ಠಾಣೆಗೆ ಲಘು ವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್‍ರವರು ದೂರು ನೀಡಿದ್ದು, ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿ ಘಟಕಕ್ಕೆ ವಹಿಸಲಾಗಿದೆ. ಸಿಐಡಿ ಘಟಕ ತನಿಖೆ ಕೈಗೊಂಡ ಸಮಯದಲ್ಲಿ ಇದೇ ರೀತಿಯ ಅನೇಕ ಅಪರಾಧಗಳು ಬೆಳಕಿಗೆ ಬಂದಿದ್ದು, 100ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. +ಈ ಎಲ್ಲಾ ಪ್ರಕರಣಗಳಲ್ಲಿ ಜಾನ್ ಮೋಸಸ್ ಹಾಗೂ ಆತನ ಸಹಚರರ ಚಟುವಟಿಕೆಗಳು ಬಹಿರಂಗಗೊಂಡಿದ್ದು, ಅವುಗಳಲ್ಲಿ 51 ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿರುತ್ತದೆ. ಈ ಸಂಘಟಿತ ಅಪರಾಗಳ ತಂಡ ಎಸಗಿರುವ ಕೃತ್ಯಗಳಿಂದ ಬಡವರ ಜಮೀನು, ನಿವೇಶನ, ಮನೆಗಳನ್ನು ಕಬಳಿಸಿದ್ದಲ್ಲದೆ ಅವರನ್ನು ಬೆದರಿಸಿ ಒತ್ತಾಯಪೂರ್ವಕವಾಗಿ ಕೋಟ್ಯಂತರ ಹಣವನ್ನು ಪಡೆದು ಮೋಸಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. +ತನಿಖಾಕಾಧಿರಿಗಳಾದ ಡಿವೈಎಸ್ಪಿ ಪುನೀತ್‍ಕುಮಾರ್, ಇನ್ಸ್‍ಪೆಕ್ಟರ್ ಶಿವಕುಮಾರ್ ಅವರು ತನಿಖೆ ಕೈಗೊಂಡು ಸಕ್ಷಮ ಪ್ರಾಕಾರದಿಂದ ಪೂರ್ವಾನುಮತಿ ಕೋಕಾ ಕಾಯ್ದೆ ಅಳವಡಿಸಿಕೊಂಡಿರುತ್ತಾರೆ. \ No newline at end of file diff --git a/eesanje/url_46_66_11.txt b/eesanje/url_46_66_11.txt new file mode 100644 index 0000000000000000000000000000000000000000..ec4b80cb4ddf2a9f196ef0eb2ecad7de12b88842 --- /dev/null +++ b/eesanje/url_46_66_11.txt @@ -0,0 +1,8 @@ +ಮಹಿಳಾಗೆ ಅತ್ಯಾಚಾರದ ಬೆದರಿಕೆ: 1.50 ಲಕ್ಷ ಸುಲಿಗೆ ಮಾಡಿದ್ದ ನಕಲಿ ಪೊಲೀಸ್ ಸೆರೆ +ಬೆಂಗಳೂರು,ಜು.22- ಮಹಿಳಾ ಥೆರಫಿಸ್ಟ್‍ಗೆ ತಾನೊಬ್ಬ ಪೊಲೀಸ್ ಎಂದು ಪರಿಚಯಿಸಿಕೊಂಡು ಹಣ ನೀಡದಿದ್ದರೆ ಅತ್ಯಾಚಾರವೆಸಗುವುದಾಗಿ ಹೆದರಿಸಿ 1.50 ಲಕ್ಷ ರೂ. ಪಡೆದು ಪರಾರಿಯಾಗಿದ್ದ ವಂಚಕನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಂದ್ರಕುಮಾರ್ (33) ಬಂಧಿತ ನಕಲಿ ಪೊಲೀಸ್. ಈತ ಸುರೇಶ ಎಂಬ ಹೆಸರಿನಲ್ಲಿ ಆನ್ಲೈನ್‍ನಲ್ಲಿ ಥೆರಪಿಗಾಗಿ ಪಶ್ಚಿಮ ಬಂಗಾಳ ಮೂಲದ 25 ವರ್ಷದ ಮಹಿಳಾ ಥೆರಫಿಸ್ಟಗೆ ಬುಕ್ ಮಾಡಿದ್ದನು. +ಥೆರಪಿಗಾಗಿ ರಾಮಮೂರ್ತಿ ನಗರದ ಅಪಾರ್ಟ್‍ಮೆಂಟ್ ಬಳಿ ರಾತ್ರಿ 10.30 ರ ಸುಮಾರಿನಲ್ಲಿ ಬಂದಿದ್ದಾಗ ಕಾರಿನಲ್ಲಿ ಆರೋಪಿ ಸ್ವಲ್ಪ ದೂರ ಕರೆದೊಯ್ದು ಬ್ಲಾಕ್‍ಮೇಲ್ ಮಾಡಿದ್ದಾರೆ. ತಾನೊಬ್ಬ ಪೊಲೀಸ್, 10 ಲಕ್ಷ ನೀಡದಿದ್ದರೆ ಅತ್ಯಾಚಾರ ಮಾಡುವುದಾಗಿ ಬೆದರಿಸಿದ್ದಾನೆ. ಆತನ ವರ್ತನೆಯಿಂದ ಭಯಗೊಂಡ ಮಹಿಳಾ ಥೆರಪಿಸ್ಟ್ ಸ್ನೇಹಿತರಿಗೆ ಕರೆ ಮಾಡಿ 1.50 ಲಕ್ಷ ರೂ.ವನ್ನು ಆರೋಪಿಗೆ ವರ್ಗಾವಣೆ ಮಾಡಿಸಿದ್ದಾರೆ. +ತದನಂತರ ರಾತ್ರಿಯಿಡೀ ಹೆಬ್ಬಾಳ ಸೇರಿದಂತೆ ಹಲವೆಡೆ ಕಾರಿನಲ್ಲಿ ಸುತ್ತಾಡಿಸಿ ಬೆಳಗಿನ ಜಾವ ಏರ್‍ಫೋರ್ಟ್ ಬಳಿ ಮಹಿಳಾ ಥೆರಫಿಸ್ಟ್‍ಗೆ ಇಳಿಸಿ ನೀನು ಊರಿಗೆ ಹಿಂದಿರುಗಬೇಕು, ಇಲ್ಲದಿದ್ದರೆ ಕೇಸ್ ಹಾಕುವುದಾಗಿ ಬೆದರಿಸಿದ್ದಾನೆ.ವಂಚಕನ ಮಾತಿಗೆ ಹೆದರದೆ ಮಹಿಳಾ ಥೆರಫಿಸ್ಟ್ ರಾಮಮೂರ್ತಿನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ತನಿಖೆ ಕೈಗೊಂಡು ಡಾಗ್ ಬ್ರೀಡಿಂಗ್ ಕೆಲಸ ಮಾಡುತ್ತಿದ್ದ ವಂಚಕ ಮಹೇಂದ್ರನನ್ನು ಬಂಧಿಸಿದ್ದಾರೆ. +ಆರೋಪಿ ಮೋಜಿನ ಜೀವನಕ್ಕಾಗಿ ಹಣ ಹೊಂದಿಸಲು ಈ ರೀತಿ ಹಣ ಸುಲಿಗೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದುದು ವಿಚಾರಣೆಯಿಂದ ಗೊತ್ತಾಗಿದೆ. ಈ ವಂಚಕ ಈ ಹಿಂದೆಯೂ ಇದೇ ರೀತಿ ಕೃತ್ಯವೆಸಗಿದ್ದು, ಈತನ ವಿರುದ್ಧ ಮಾರತಳ್ಳಿ, ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. +ವಿದ್ಯಾರ್ಥಿನಿಯ ಅಪಹರಿಸಿದ್ದ ನಾಲ್ವರಿಗೆ ನೋಟಿಸ್..ಬೆಂಗಳೂರು,ಜು.22- ಬಸ್‍ಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಪ್ರಜ್ಞೆತಪ್ಪಿಸಿ ಅಪಹರಿಸಿಕೊಂಡು ಹೋಗಿದ್ದ ನಾಲ್ವರಿಗೆ ವಿಚಾರಣೆಗಾಗಿ ಹಾಜರಾಗುವಂತೆ ಪೀಣ್ಯ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಕಳೆದ ತಿಂಗಳು 17 ವರ್ಷದ ಪಿಯು ವಿದ್ಯಾರ್ಥಿನಿ ತುಮಕೂರಿಗೆ ಹೋಗಲು ಜಾಲಹಳ್ಳಿ ಕ್ರಾಸ್ ಬಳಿ ಬಸ್‍ಗಾಗಿ ಕಾಯುತ್ತಿದ್ದಾಗ ಇಬ್ಬರು ಯುವಕರು, ಇಬ್ಬರು ಯುವತಿಯರು ಈಕೆ ಬಳಿ ಹೋಗಿ ರಾಸಾಯನಿಕ ಸಿಂಪಡಿಸಿ, ಮಾಸ್ಕ್ ಹಾಕಿ ಪ್ರಜ್ಞೆ ತಪ್ಪಿಸಿ ಕಾರಿನಲ್ಲಿ ಅಪಹರಿಸಿಕೊಂಡು ಮೈಸೂರಿಗೆ ಹೋಗಿ ರಸ್ತೆಬದಿ ಕಾರು ನಿಲ್ಲಿಸಿ ಇವರೆಲ್ಲಾ ಟೀ ಕುಡಿಯಲು ಹೋಗಿದ್ದಾರೆ. +ಆ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪ್ರಜ್ಞೆ ಬಂದಿದ್ದರೂ ಪ್ರಜ್ಞೆ ತಪ್ಪಿದಂತೆ ನಟಿಸಿ ಕಾರಿನಲ್ಲಿ ಯಾರೂ ಇಲ್ಲದಿರುವುದು ಗೊತ್ತಾದ ತಕ್ಷಣ ಇಳಿದು ಅಲ್ಲಿಂದ ತಪ್ಪಿಸಿಕೊಂಡು ಹೋಗಿ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಕೃತ್ಯ ನಡೆದ ಸ್ಥಳ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದಾಗಿದೆ ಎಂಬುದು ತಿಳಿದು ಪ್ರಕರಣವನ್ನು ಪೀಣ್ಯ ಠಾಣೆಗೆ ವರ್ಗಾಹಿಸಿದ್ದಾರೆ. +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೀಣ್ಯ ಠಾಣೆ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾ ಪರಿಶೀಲಿಸಿ, ಅಪಹರಣ ಮಾಡಲಾಗಿದ್ದ ಕಾರಿನ ನಂಬರ್ ಪತ್ತೆಹಚ್ಚಿ ನಾಲ್ವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. \ No newline at end of file diff --git a/eesanje/url_46_66_12.txt b/eesanje/url_46_66_12.txt new file mode 100644 index 0000000000000000000000000000000000000000..7571003ad232aad8c347d6829195742b62d939ee --- /dev/null +++ b/eesanje/url_46_66_12.txt @@ -0,0 +1,6 @@ +ಕಾರ್ಗಿಲ್ ವಿಜಯ ದಿವಸ್‍ನಲ್ಲಿ ಪ್ರಧಾನಿ ಮೋದಿ ಭಾಗಿ +ನವದೆಹಲಿ,ಜು.22- ಇದೇ 26 ರಂದು ಲಡಾಖ್‍ನಲ್ಲಿ ನಡೆಯಲಿರುವ 25ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್‍ನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಮತ್ತು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.ಕಾರ್ಗಿಲ್ ವಿಜಯ್ ದಿವಸ್‍ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‍ಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ ಡಿ ಮಿಶ್ರಾ ಅವರು ಮೋದಿ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. +1999 ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ರಜತ್ ಜಯಂತಿ ಯನ್ನು ಗುರುತಿಸಲು ಕಾರ್ಗಿಲ್ ಜಿಲ್ಲೆಯ ದ್ರಾಸ್‍ನಲ್ಲಿ ಜುಲೈ 24 ರಿಂದ 26 ರವರೆಗೆ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ದ್ರಾಸ್‍ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳ ಕುರಿತು ಚರ್ಚಿಸಲು ಮಿಶ್ರಾ ಅವರು ಇಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯದರ್ಶಿಯಲ್ಲಿ ಸಭೆ ನಡೆಸಿದರು ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. +ಜು.26 ರಂದು ಮೋದಿ ಅವರು ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಕಾರ್ಗಿಲ್ ವಿಜಯ್ ದಿವಸ್‍ನ 25 ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಲೆಫ್ಟಿನೆಂಟ್ ಗವರ್ನರ್ ಸಭೆಗೆ ತಿಳಿಸಿದರು. ಹೆಲಿಪ್ಯಾಡ್‍ನಲ್ಲಿ ಭದ್ರತೆ ಮತ್ತು ಸ್ವಾಗತ, ಅವರ ವಾಹನ ಯಾತ್ರೆಗೆ ಅಗತ್ಯ ವ್ಯವಸ್ಥೆಗಳು, ಸ್ಮಾರಕದಲ್ಲಿ ಪುಷ್ಪಾರ್ಚನೆ ಸಮಾರಂಭದ ವಿಧಾನ, ಯುದ್ಧ ವಿಧವೆಯರೊಂದಿಗೆ ಸಂವಾದ ಮತ್ತು ಹೆಲಿಪ್ಯಾಡ್‍ನಲ್ಲಿ ಹಸಿರು ಕೋಣೆಯನ್ನು ಸಿದ್ಧಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. +ಲೆಫ್ಟಿನೆಂಟ್ ಗವರ್ನರ್ ಅವರು 8 ಪರ್ವತ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ ಮೇಜರ್ ಜನರಲ್ ಸಚಿನ್ ಮಲಿಕ್ ಅವರನ್ನು ಡ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‍ನಲ್ಲಿನ ವ್ಯವಸ್ಥೆಗಳ ಬಗ್ಗೆ ವಿಚಾರಿಸಿದರು ಎಂದು ಅವರು ಹೇಳಿದರು. ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಸಮಯೋಚಿತವಾಗಿ ಪೂರ್ಣಗೊಳಿಸುವಂತೆ ಮಿಶ್ರಾ ಸಂಬಂಧ ಪಟ್ಟ ಅ„ಕಾರಿಗಳಿಗೆ ಸೂಚಿಸಿದರು ಎಂದು ವಕ್ತಾರರು ತಿಳಿಸಿದ್ದಾರೆ. +ಲೆಫ್ಟಿನೆಂಟ್ ಗವರ್ನರ್ ಅವರು ಜು.24 ರಂದು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಲಿದ್ದಾರೆ ಎಂದು ಅವರು ಹೇಳಿದರು. 26 ರಂದು ಬೆಳಿಗ್ಗೆ ದ್ರಾಸ್ ಬ್ರಿಗೇಡ್ ಹೆಲಿಪ್ಯಾಡ್‍ಗೆ ಪ್ರಧಾನಿ ಬಂದಿಳಿಯಲಿದ್ದಾರೆ ಮತ್ತು ಸೇನಾ ಅ„ಕಾರಿಗಳು ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎಂದು ಮೇಜರ್ ಜನರಲ್ ಮಲಿಕ್ ಹೇಳಿದ್ದಾರೆ. ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳುವ ಮುನ್ನ ಮೋದಿ ಗ್ರೀನ್ ರೂಂನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_46_66_2.txt b/eesanje/url_46_66_2.txt new file mode 100644 index 0000000000000000000000000000000000000000..9552ff37bcf1833f478d2be991b93a6f1f5b904b --- /dev/null +++ b/eesanje/url_46_66_2.txt @@ -0,0 +1,5 @@ +ಡಿಸಿಎಂ ಭೇಟಿ ಮಾಡಿದ ದರ್ಶನ ಪತ್ನಿ, ಸಹೋದರ +ಬೆಂಗಳೂರು,ಜು.24- ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್‌ ತೂಗುದೀಪ್‌ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನುಭೇಟಿ ಮಾಡಿದ್ದಾರೆ.ಇಂದು ಬೆಳಿಗ್ಗೆ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಆಗಮಿಸಿದ ಇಬ್ಬರು ಸುದೀರ್ಘ ಮಾತುಕತೆ ನಡೆಸಿದ್ದಾರೆ. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ ಅವರ ಪರವಾಗಿ ರಾಜ್ಯಾದ್ಯಂತ ಅಭಿಮಾನ ಹೆಚ್ಚುತ್ತಲೇ ಇದೆ. ನಿನ್ನೆ ರಾಮನಗರದಲ್ಲಿ ಕರಗ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡುವಾಗ ದರ್ಶನ್‌ ಅಭಿಮಾನಿಗಳು ಡಿ ಬಾಸ್‌‍ ಎಂದು ಘೋಷಣೆ ಕೂಗಿದ್ದರು. +ಇದಕ್ಕೆ ಸ್ಪಂದಿಸಿದ ಡಿ.ಕೆ.ಶಿವಕುಮಾರ್‌, ನಾವು ಕಾನೂನಿಗೆ ಬೆಲೆ ನೀಡಬೇಕು. ಹಾಗೆಯೇ ತಪ್ಪು ಮಾಡಿದವರನ್ನು ರಕ್ಷಣೆ ಮಾಡುವುದಿಲ್ಲ. ದರ್ಶನ್‌ ಪ್ರಕರಣದಲ್ಲಿ ನ್ಯಾಯೋಚಿತ ರೀತಿ ನಡೆದುಕೊಳ್ಳಲಾಗುವುದು. ದರ್ಶನ್‌ರವರ ಪತ್ನಿ ತಮಭೇಟಿ ಗೆ ಸಮಯ ಕೇಳಿದ್ದಾರೆ ಎಂದು ಹೇಳಿದ್ದರು. ಅದರಂತೆ ಇಂದು ಬೆಳಿಗ್ಗೆ ವಿಜಯಲಕ್ಷ್ಮಿ ಹಾಗೂ ದಿನಕರ್‌ ತೂಗುದೀಪ್‌ ಅವರು ಡಿ.ಕೆ.ಶಿವಕುಮಾರ್‌ ಅವರನ್ನುಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ. +ವಿಜಯಲಕ್ಷ್ಮಿ ಮತ್ತು ದಿನಕರ್‌ ಅವರಭೇಟಿ ವಿಚಾರ ಯಾವ ಕಾರಣಕ್ಕೆ ಎಂಬ ಅನುಮಾನಗಳು ಮೂಡಿವೆ. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ದರ್ಶನ್‌ ಮತ್ತು ಅವರ ತಂಡ ಈವರೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಇತ್ತ ಪೊಲೀಸರು ಪ್ರಕರಣದ ತನಿಖೆಯನ್ನುಾಗಶಃ ಮುಗಿಸಿದ್ದು, ಮೊದಲ ಹಂತದ ಚಾರ್ಜ್‌ಶೀಟ್‌ ಸಲ್ಲಿಸಲು ತಯಾರಿ ನಡೆಸಿದ್ದಾರೆ. ಈ ಹಂತದಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ದರ್ಶನ್‌ ಕುಟುಂಬದ ಸದಸ್ಯರ ಭೇಟಿ ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_66_3.txt b/eesanje/url_46_66_3.txt new file mode 100644 index 0000000000000000000000000000000000000000..c3ceebb57ef8d21727835ebfc8e9ea5f4e497a5d --- /dev/null +++ b/eesanje/url_46_66_3.txt @@ -0,0 +1,7 @@ +ಹುಬ್ಬಳ್ಳಿ: ಧರ್ಮದರ್ಶಿ ಕೊಲೆ ಆರೋಪಿ ಸೆರೆ +ಹುಬ್ಬಳ್ಳಿ, ಜು.23- ನಗರದ ಎಪಿಎಂಸಿಯಲ್ಲಿರುವ ದಕ್ಷಿಣ ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಮಹಾದೇವಪ್ಪ ವನಹಳ್ಳಿ ಎಂಬವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಸಿದಂತೆ ಹತ್ಯೆಗೈದ ಆರೋಪಿಯನ್ನು ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹುಧಾ ಮಹಾನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದರು. +ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕಮರಿಪೇಟ್‍ನ ನಿವಾಸಿ ಸಂತೋಷ್ ತಿಪ್ಪಣ್ಣಾ ಬೋಜಗಾರ (44) ಎಂಬ ಆರೋಪಿಯನ್ನು ನಗರದ ಚೆನ್ನಮ್ಮ ವೃತ್ತದಲ್ಲಿ ಬಂಧಿಸಲಾಗಿದೆ.ದೇವಸ್ಥಾನದ ಧರ್ಮದರ್ಶಿಯನ್ನು ಹತ್ಯೆ ಮಾಡಿದ್ದು, ಆರೋಪಿಯ ಕೆಲ ಸಂಬಂಧಿಕರು ಕೊಲೆಯಾದ ವ್ಯಕ್ತಿಯೊಂದಿಗೆ ಸೇರಿಕೊಂಡು ಆರೋಪಿತನಿಗೆ ಹಾಗೂ ಆತನ ಕುಟುಂಬದವರಿಗೆ ಕೆಲವು ಪೂಜೆಗಳನ್ನು ಮಾಡಿಸುವ ಮೂಲಕ ನಮ್ಮ ಕುಟುಂಬಕ್ಕೆ ಹಾನಿ ಉಂಟು ಮಾಡಿದ್ದಾರೆಂಬವುದನ್ನು ಈತ ಗಟ್ಟಿಯಾಗಿ ನಂಬಿದ್ದನು. ಇದರಿಂದ ದೇವೇಂದ್ರಪ್ಪ ಕೊಲೆಗೆ ಸಂಚು ರೂಪಿಸಿ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ತಿಳಿಸಿದರು. +ಇದೇ ಹಿನ್ನೆಲೆಯಲ್ಲಿಯೇ ದೇವೇಂದ್ರಪ್ಪನ ಹತ್ಯೆಗೆ 2022 ರಲ್ಲಿ ಮಾರ್ಚ್‍ನಲ್ಲಿ ಕೊಲೆಗೂ ಯತ್ನಿಸಿದ್ದನು. ಈ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ನಡೆಸಿದ ತನಿಖೆ ವೇಳೆ ಆರೋಪಿ ಗುರುತು ಸಿಕ್ಕಿರಲಿಲ್ಲ. ಈ ಆರೋಪಿ ಸೆರೆಯಾದ ನಂತರದಲ್ಲಿ ಎರಡು ಪ್ರಕರಣದ ಕೆಲ ತಾಂತ್ರಿಕ ಸಾಕ್ಷ್ಯಧಾರಗಳಿಂದ ಈತನೇ 2022 ರಲ್ಲಿಯೂ ಕೊಲೆಗೆ ಯತ್ನಿಸಿದ್ದನು ಎಂದು ತಿಳಿದು ಬಂದಿದೆ. ಅಲ್ಲದೇ, ಆರೋಪಿಯೂ ಇದನ್ನು ಒಪ್ಪಿಕೊಂಡಿದ್ದಾನೆ ಎಂದರು. +6 ವರ್ಷದ ಸಂಚುಆರೋಪಿಯು ಕಳೆದ ಆರುವರೆ ವರ್ಷದಿಂದ ಕೊಲೆ ಮಾಡಬೇಕೆಂದು ನಿರ್ಧಾರ ಮಾಡಿದ್ದನು. ಈ ಹಿನ್ನೆಲೆಯಲ್ಲಿ ದೇವೇಂದ್ರಪ್ಪನ ಚಲನವಲನಗಳ ಮೇಲೆ ನಿರಂತರ ನಿಗಾವಹಿಸಿದ್ದನು. ಅಲ್ಲದೇ, ಒಂಟಿಯಾಗಿ ಸಿಕ್ಕಾಗ ಕೊಲೆ ಮಾಡುವ ಉದ್ದೇಶದಿಂದ ಆತನ ಮನೆ, ದೇವಸ್ಥಾನ ಸುತ್ತ ಓಡಾಡಿದ್ದು, ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ ಎಂದರು. +ಆರೋಪಿಯ ಬಂಧನಕ್ಕಾಗಿ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಬಂಧನ ಮಾಡಿದ್ದು, 180 ಕ್ಕೂ ಹೆಚ್ಚು ಸಿಸಿ ಕ್ಯಾಮರಾ ಪರಿಶೀಲಿಸಿ ಆರೋಪಿಯ ಗುರುತು ಪತ್ತೆ ಹಚ್ಚಿ, ಸಂಶಯಾಸ್ಪದ ವ್ಯಕ್ತಿಯ ಮಾಹಿತಿ ನೀಡುವಂತೆ ಮನವಿ ಮಾಡಿದ್ದೇವು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಚೆನ್ನಮ್ಮ ಸರ್ಕಲ್ ಸುತ್ತಮುತ್ತಲಿನಲ್ಲಿ ಆರೋಪಿ ಓಡಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದರು. +ಆರೋಪಿಯನ್ನು ಬಂಧನ ಮಾಡುವಲ್ಲಿ ಡಿಸಿಪಿ ಮಹಾನಿಂಗ ನಂದಗಾವಿ, ಅಪರಾಧ ವಿಭಾಗದ ಡಿಸಿಪಿ ರವೀಶ್ ಎಸ್, ನವನಗರ ಠಾಣೆಯ ಇನ್ಸ್‍ಪೆಕ್ಟರ್ ಸಮ್ಮಿವುಲ್ಲಾ ಹಾಗೂ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದ ಪ್ರಕರಣ ಬೇಧಿಸಿದ್ದು, ತ್ವರಿತ ಕಾರ್ಯವನ್ನು ಪ್ರಶಂಸಿಸಿ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ ಎಂದರು. \ No newline at end of file diff --git a/eesanje/url_46_66_4.txt b/eesanje/url_46_66_4.txt new file mode 100644 index 0000000000000000000000000000000000000000..ee8b632532f4041f2292069ae55af2754006e5bc --- /dev/null +++ b/eesanje/url_46_66_4.txt @@ -0,0 +1,18 @@ +ಜ್ಯುವೆಲರಿ ಅಂಗಡಿಯಲ್ಲಿ ಬುರ್ಕಾ ಧರಿಸಿ ಸರಗಳ್ಳತನ- ಮಹಿಳೆಯರ ಬಂಧನ +ಬೆಂಗಳೂರು, ಜು.23- ಚಿನ್ನಾಭರಣ ಮಳಿಗೆಗೆ ಗ್ರಾಹಕರಂತೆ ಬುರುಕ ಧರಿಸಿಕೊಂಡು ಹೋಗಿ ಕೆಲಸಗಾರರ ಗಮನ ಸೆಳೆದು ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 4.75 ಲಕ್ಷ ರೂ. ಬೆಲೆಬಾಳುವ 78 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. +ಕುಮಾರಸ್ವಾಮಿ ಲೇಔಟ್ ವ್ಯಾಪ್ತಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಬುರ್ಕಾ ಧರಿಸಿದ್ದ ಇಬ್ಬರು ಮಹಿಳೆಯರು ಆಭರಣ ಖರೀದಿಸುವ ಗ್ರಾಹಕರಂತೆ ಹೋಗಿದ್ದು, ಅಲ್ಲಿನ ಕೆಲಸಗಾರ ಆಭರಣ ತೋರಿಸುತ್ತಿದ್ದಾಗ ಅವರುಗಳ ಗಮನ ಸೆಳೆದು ಸರವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. +ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ ವಿಸ್ರೋ ಲೇಔಟ್‍ನ ದೇವರಕೆರೆ ಪಕ್ಕದ ಖಾಲಿ ಜಾಗದಲ್ಲಿ ಇಂಡಿಗೋ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. +ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷನನ್ನು ಪೊಲೀಸ್ ಅಭಿರಕ್ಷೆಗೆ ಪಡೆಯಲಾಗಿದ್ದು, ಮತ್ತೊಬ್ಬ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳನ್ನು ವಿಚಾರಣೆಗೊಳಪಡಿಸಿದಾಗ ಕಳವು ಮಾಡಿದ ಚಿನ್ನದ ಸರವನ್ನು ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿರುವ ಜ್ಯುವೆಲರಿ ವರ್ಕ್‍ಶಾಪ್‍ಗೆ ನೀಡಿದ್ದಾಗಿ ತಿಳಿಸಿದ ಮೇರೆಗೆ ಪೊಲೀಸರು ವರ್ಕ್‍ಶಾಪ್‍ನಿಂದ ಆಭರಣವನ್ನು ಜಪ್ತಿ ಮಾಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೆ ಇನ್ಸ್‍ಪೆಕ್ಟರ್ ಹಾಗೂ ಸಿಬ್ಬಂದಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಮೂವರು ಸರಗಳ್ಳರ ಬಂಧನ 100 ಗ್ರಾಂ ಚಿನ್ನಾಭರಣ ಜಪ್ತಿಬೆಂಗಳೂರು, ಜು.23- ದಕ್ಷಿಣ ವಿಭಾಗದ ಸುಬ್ರಮಣ್ಯಪುರ ಹಾಗೂ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಮೂವರು ಸರಗಳ್ಳರನ್ನು ಬಂಧಿಸಿ 2.90 ಲಕ್ಷ ಮೌಲ್ಯದ 100 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. +ಸುಬ್ರಮಣ್ಯಪುರ: ಪ್ಲಂಬರ್ ಎಂದು ಹೇಳಿಕೊಂಡು ಮನೆಯೊಂದಕ್ಕೆ ಹೋಗಿ ಮಹಿಳೆಗೆ ಪಿಸ್ತೂಲಿನ ಹಿಂಭಾಗದಿಂದ ತಲೆಗೆ ಹೊಡೆದು ಹೆದರಿಸಿ 73 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯೊಬ್ಬನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕೃತ್ಯ ನಡೆಸಿ ಪರಾರಿಯಾಗುತ್ತಿದ್ದ ವೇಳೆ ತಕ್ಷಣ ಸಾರ್ವಜನಿಕರೊಬ್ಬರು 112ಗೆ ಕರೆ ಮಾಡಿ ಮಾಹಿತಿ ನೀಡಿದ ಮೇರೆಗೆ ಹೊಯ್ಸಳ ಸಿಬ್ಬಂದಿ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 5.50 ಲಕ್ಷ ರೂ. ಮೌಲ್ಯದ 73 ಗ್ರಾಂ ಚಿನ್ನದ ಮಾಂಗಲ್ಯ ಸರ ಕೃತ್ಯಕ್ಕೆ ಬಳಸಿದ ನಕಲಿ ಪಿಸ್ತೂಲ್ ಹಾಗೂ ಬಾಲ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ರಾಜು ನೇತೃತ್ವದ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿದ್ದರು. +ಪುಟ್ಟೇನಹಳ್ಳಿ: ಬೆಳಗಿನ ಜಾವ ಮಹಿಳೆಯೊಬ್ಬರು ಮನೆ ಬಳಿ ವಾಯು ವಿಹಾರ ಮಾಡುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂ„ಸಿ 2.40 ಲಕ್ಷ ರೂ. ಮೌಲ್ಯದ 27 ಗ್ರಾಂ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. +ಆರೋಪಿಗಳು ಮಾಂಗಲ್ಯಸರವನ್ನು ಕಿತ್ತುಕೊಳ್ಳುವ ಬರದಲ್ಲಿ ಸರದ ಅರ್ಧ ತುಂಡು ಮಹಿಳೆಯ ಕೈಯಲ್ಲಿ ಉಳಿದುಕೊಂಡಿದೆ. ಈ ಬಗ್ಗೆ ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಎಲ್ ಅಂಡ್ ಟಿ ಸೌತ್ ಸಿಟಿ ಅಪಾರ್ಟ್‍ಮೆಂಟ್ ಮುಂದಿನ ರಸ್ತೆಯಲ್ಲಿ ಆರೋಪಿಗಳಿಬ್ಬರನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಪೀಣ್ಯದಲ್ಲಿರುವ ಜ್ಯುವೆಲರಿ ಅಂಗಡಿಯಲ್ಲಿ ಚಿನ್ನದ ಮಾಂಗಲ್ಯ ಸರವನ್ನು ಅಡವಿಟ್ಟಿರುವುದಾಗಿ ತಿಳಿಸಿದ ಮೇರೆಗೆ ಪೆÇಲೀಸರು 2.40 ಲಕ್ಷ ಮೌಲ್ಯದ 27 ಗ್ರಾಂ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದಾರೆ.ಇನ್ಸ್‍ಪೆಕ್ಟರ್ ರವಿಕುಮಾರ್ ನೇತೃತ್ವದ ಸಿಬ್ಬಂದಿ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. +ಮನೆಗಳವು: ಭಾವ-ಭಾಮೈದುನನ ಸೆರೆ – 14.37 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ +ಬೆಂಗಳೂರು, ಜು.23- ಮನೆಗಳ ಬೀಗ ಮೀಟಿ ಕಳ್ಳತನ ಮಾಡುತ್ತಿದ್ದ ಭಾವ-ಭಾಮೈದುನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ 14.37 ಲಕ್ಷ ರೂ. ಮೌಲ್ಯದ 110 ಗ್ರಾಂ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಮೂಲದ ಸಿಮ್‍ಸೇನ್(23) ಮತ್ತು ಈತನ ಭಾವ ಶರತ್ ಕುಮಾರ್ ಬಂಧಿತ ಆರೋಪಿಗಳು. ಸಿಮ್‍ಸೇನ್ ನಗರದಲ್ಲಿ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು ಶರತ್ ಕುಮಾರ್ ಪೇಂಟರ್. +ಲಿಂಗರಾಜು ಪುರದ ಗಂಗಮ್ಮ ದೇವಸ್ಥಾನ ಸಮೀಪದ ಮನೆಯೊಂದರ ಬಾಗಿಲನ್ನು ಮುರಿದು ಒಳನುಗ್ಗಿ ಹಣ, ಆಭರಣ ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡು ಜಾನಕಿರಾಮ ಲೇಔಟ್‍ನಲ್ಲಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. +ಕಳವು ಮಾಡಿದ ವಸ್ತುಗಳನ್ನು ತನ್ನ ಭಾವನಿಗೆ ಕೊಟ್ಟಿರುವುದಾಗಿ ತಿಳಿಸಿದ ಮೇರೆಗೆ ಗೆ ಹೋಗಿ ಗೂಂಡಾ ಕಾಯ್ದೆಯಡಿ ಬಂಧಿತನಾಗಿ ಕಾರಾಗೃಹದಲ್ಲಿರುವ ಆರೋಪಿ ಭಾವನನ್ನು ಬಾಡಿ ವಾರೆಂಟ್ ಮುಖೆನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ 110 ಗ್ರಾಂ ಚಿನ್ನಾಭರಣ, ನಾಲ್ಕು ದ್ವಿಚಕ್ರ ವಾಹನ, ಎರಡು ಲ್ಯಾಪ್‍ಟಾಪ್, 7 -ಫೋನ್ ವಶಪಡಿಸಿಕೊಂಡಿದ್ದಾರೆ. +ಮೊದಲನೇ ಆರೋಪಿ ವಿರುದ್ಧ ಬಾಣಸವಾಡಿ ಆವಲಹಳ್ಳಿಯಲ್ಲಿನ ಮನೆಗಳ್ಳತನ ಕಾಡುಗೋಡಿ, ಕೊಡಿಗೇಹಳ್ಳಿ ಹಾಗೂ ಆವಲಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣಗಳು ದಾಖಲಾಗಿರುತ್ತವೆ.ಇನ್ಸ್‍ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.ಎಂಟು ಮಂದಿ ದ್ವಿಚಕ್ರ ವಾಹನ ಚೋರರ ಬಂಧನ: 36.96 ಲಕ್ಷ ಮೌಲ್ಯದ 37 ವಾಹನಗಳ ಜಪ್ತಿಬೆಂಗಳೂರು, ಜು.23- ನಗರದ ಪೊಲೀಸರು ಎಂಟು ಮಂದಿ ದ್ವಿಚಕ್ರ ವಾಹನ ಚೋರರನ್ನು ಬಂಧಿಸಿ 36.96 ಲಕ್ಷ ರೂ. ಮೌಲ್ಯದ 37 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. +ಬಾಗಲಗುಂಟೆ: ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಹಾಸನ, ಮಂಡ್ಯದಲ್ಲಿ ಮಾರಾಟ ಮಾಡಿದ್ದ ಮೂವರು ಆರೋಪಿಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿ 20 ಲಕ್ಷ ಮೌಲ್ಯದ 16 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನ ಮಾಡಿದ ದ್ವಿಚಕ್ರ ವಾಹನಗಳನ್ನು ಖರೀದಿಸಿದ್ದ ವ್ಯಕ್ತಿಗಳಿಂದ 15 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳ ಬಂಧನದಿಂದ 15 ದ್ವಿಚಕ್ರ ವಾಹನ ಪ್ರಕರಣಗಳು ಪತ್ತೆಯಾಗಿವೆ. ಇನ್ಸ್‍ಪೆಕ್ಟರ್ ಹನುಮಂತರಾಜು ಹಾಗೂ ಸಿಬ್ಬಂದಿ ತಂಡ ಪ್ರಕರಣವನ್ನು ಭೇದಿಸಿದೆ. +ಗಿರಿನಗರ: ಬೀಗ ಹಾಕಿ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳ ಹ್ಯಾಂಡಲ್‍ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ 10.71 ಲಕ್ಷ ರೂ. ಮೌಲ್ಯದ ಎಂಟು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ರಾತ್ರಿ ವೇಳೆ ಕಳ್ಳತನ ಮಾಡಿದ್ದ ಆರು ದ್ವಿಚಕ್ರ ವಾಹನಗಳನ್ನು ಬ್ಯಾಡರಹಳ್ಳಿ ಹಾಗೂ ಹೇರೋಹಳ್ಳಿಯ ಕೆರೆ ಪಕ್ಕದ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ ಮತ್ತೊಂದು ದ್ವಿಚಕ್ರ ವಾಹನವನ್ನು ಆವಲಹಳ್ಳಿಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಿರುವುದಾಗಿ ಆರೋಪಿಗಳು ತಿಳಿಸಿದ ಮೇರೆಗೆ ಏಳು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವರ ಬಂಧನದಿಂದ ಎಂಟು ಪ್ರಕರಣಗಳು ಪತ್ತೆಯಾಗಿವೆ.ಇನ್ಸ್‍ಪೆಕ್ಟರ್ ಸತೀಶ್‍ಕುಮಾರ್ ಮತ್ತು ಸಿಬ್ಬಂದಿಗಳು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಸಿ.ಕೆ. ಅಚ್ಚುಕಟ್ಟು:ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಇಬ್ಬರನ್ನು ಸಿಕೆ ಅಚ್ಚುಕಟ್ಟು ಠಾಣೆ ಪೆÇಲೀಸರು ಬಂ„ಸಿ 5.43 ಲಕ್ಷ ಬೆಲೆಬಾಳುವ 9 ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯ ಅರಬಿಕ್ ಕಾಲೇಜು ಬಳಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ ಮೇರೆಗೆ ಖಾಲಿ ಜಾಗದ ಬಳಿ ನಿಲ್ಲಿಸಿದಂತಹ ಒಟ್ಟು 9 ದ್ವಿಚಕ್ರ ವಾಹನಗಳನ್ನು ಇನ್ಸ್‍ಪೆಕ್ಟರ್ ಗಿರೀಶ್ ನಾಯಕ್ ಹಾಗೂ ಸಿಬ್ಬಂದಿ ತಂಡ ವಶಪಡಿಸಿಕೊಂಡಿದೆ. +ಕುಮಾರಸ್ವಾಮಿ ಲೇಔಟ್:ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ತಿರುಗಾಡುತ್ತಿದ್ದ ಆರೋಪಿಯೊಬ್ಬನನ್ನು ದ್ವಿಚಕ್ರ ವಾಹನ ಸಮೇತ ಬಂ„ಸಿ ವಿಚಾರಣೆಗೊಳಪಡಿಸಿದಾಗ ನಗರದ ವಿವಿಧ ಕಡೆ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು, ಆತನಿಂದ 80 ಸಾವಿರ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಕಳ್ಳತನ ಮಾಡಿದ ದ್ವಿಚಕ್ರ ವಾಹನಗಳನ್ನು ಮುನಿಯಪ್ಪ ಕಾಂಪೌಂಡ್‍ನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಬಗ್ಗೆ ತಿಳಿಸಿದ ಮೇರೆಗೆ ಮೂರು ದ್ವಿಚಕ್ರ ವಾಹನ ಸೇರಿ ನಾಲ್ಕು ವಾಹನಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೆÇಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿ ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ. \ No newline at end of file diff --git a/eesanje/url_46_66_5.txt b/eesanje/url_46_66_5.txt new file mode 100644 index 0000000000000000000000000000000000000000..97d76abfc8a33d0e221004165f172ec5cd3dfa94 --- /dev/null +++ b/eesanje/url_46_66_5.txt @@ -0,0 +1,13 @@ +ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಯಾವುದೇ ಯೋಜನೆ ಇಲ್ಲ, ಆಂಧ್ರ, ಬಿಹಾರಕ್ಕೆ ಮಣೆ +ಬೆಂಗಳೂರು,ಜು.23- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಹಿಂದೆಂದಿಗಿಂತಲೂ ಮಲತಾಯಿ ಧೋರಣೆ ಅನುಸರಿಸಲಾಗಿದ್ದು, ಈ ಬಾರಿ ಹೊಸದಾಗಿ ಒಂದೇ ಒಂದು ಯೋಜನೆಗಳನ್ನು ರಾಜ್ಯಕ್ಕೆ ನೀಡಿಲ್ಲ. ಕೇವಲ ಬೆಂಗಳೂರು-ಹೈದರಾಬಾದ್ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದನ್ನು ಹೊರತುಪಡಿಸಿದರೆ ರಾಜ್ಯಕ್ಕೆ ನೆನೆಗುದಿಗೆ ಬಿದ್ದಿರುವ ಯಾವುದೇ ಯೋಜನೆಗಳನ್ನು ಪ್ರಸ್ತಾಪಿಸಿಲ್ಲ. +ಈ ಬಾರಿಯ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ಸರ್ಕಾರ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಅಂದರೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿರುವ ವಿಎಸ್‍ಐಎಲ್ ಕಾರ್ಖಾನೆ ಪುನರಾರಂಭಕ್ಕೆ ವಿಶೇಷ ಪ್ಯಾಕೇಜ್, ಭದ್ರ ಮೇಲ್ದಂಡೆ ಯೋಜನೆ ಅನುಷ್ಠಾನ, ಮೇಕೆದಾಟು, ಕಳಸಾ ಬಂಡೂರಿ, ರೈಲ್ವೆ, ನೀರಾವರಿ ಸೇರಿದಂತೆ ಹಲವಾರು ಯೋಜನೆಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. +ತನ್ನ ಮಿತ್ರ ಪಕ್ಷಗಳನ್ನು ಓಲೈಕೆ ಮಾಡಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದ ಕೇಂದ್ರ ಸರ್ಕಾರ, ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದಡಿ ಹಣಕಾಸಿನ ನೆರವು ನೀಡಿದೆ. ತನ್ನ ಪಕ್ಷವೇ ಆಡಳಿತದಲ್ಲಿರುವ ಇಲ್ಲವೇ ಕಾಂಗ್ರೆಸ್ ಸೇರಿದಂತೆ ಪ್ರಾದೇಶಿಕ ಪಕ್ಷಗಳು ಅಧಿಕಾರದಲ್ಲಿರುವ ಯಾವುದೇ ರಾಜ್ಯಗಳಿಗೆ ಹೊಸ ಯೋಜನೆಗಳನ್ನು ಘೋಷಿಸಿಲ್ಲ. +ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ 19 ಸ್ಥಾನಗಳನ್ನು ಗೆದ್ದಿದ್ದರಿಂದ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇಲ್ಲದಿದ್ದರೂ ಕಡೆಪಕ್ಷ ಒಂದಿಷ್ಟು ಹೊಸ ಯೋಜನೆಗಳು ಸಿಗಲಿವೆ ಎಂಬ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ಬೆಳೆಯುತ್ತಿರುವ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿವಾರಿಸಲು ಸಬರ್ಬನ್ ರೈಲು, ಮೆಟ್ರೊ ರೈಲು ವಿಸ್ತರಣೆ, ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಭಾಗಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಮೇಕೆದಾಟು ಯೋಜನೆಗೆ ಅನುದಾನ ನೀಡಬೇಕೆಂಬ ರಾಜ್ಯ ಸರ್ಕಾರದ ಬೇಡಿಕೆಯನ್ನು ಕೇಂದ್ರ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಿದೆ. +ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯವನ್ನು ಪ್ರತಿನಿ„ಸುವ ಸಂಸದರನ್ನು ಭೇಟಿಯಾಗಿದ್ದರು. ಸಾಲದಕ್ಕೆ ಪ್ರಧಾನಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಸಚಿವರನ್ನು ಭೇಟಿಯಾಗಿ ರಾಜ್ಯದ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಅನುದಾನ ನೀಡಬೇಕೆಂದು ಮನವಿ ಮಾಡಿದ ಪ್ರಸ್ತಾವನೆ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗಿದೆ. +ಸಿಡಿದೆದ್ದ ಕನ್ನಡಿಗರು:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಲೋಕಸಭೆಯಲ್ಲಿ ಮಾತ್ರವಲ್ಲ, ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲೂ ಭಿನ್ನ ದನಿ ಕೇಳಿ ಬಂತು. ಅದರಲ್ಲೂ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮೋದಿ ಸರ್ಕಾರದ ಬಜೆಟ್‍ನಲ್ಲಿ ಸಾಲು ಸಾಲು ಯೋಜನೆಗಳು, ಲಕ್ಷ ಕೋಟಿ ಮೊತ್ತದ ಅನುದಾನಗಳನ್ನು ಘೋಷಣೆ ಮಾಡುತ್ತಿದ್ದಂತೆಯೇ ನೆಟ್ಟಿಗರು ರೊಚ್ಚಿಗೆದಿದ್ದಾರೆ. +ಆಂಧ್ರ, ಬಿಹಾರಕ್ಕೆ ಮಣೆ ಏಕೆ?:ಬಿಜೆಪಿ ಸಾರಥ್ಯದ ಎನ್‍ಡಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಜೆಡಿಯು ಹಾಗೂ ಟಿಡಿಪಿ ಪಕ್ಷಗಳು ಲೋಕಸಭೆಯಲ್ಲಿ ನಿರ್ಣಾಯಕ ಸಂಖ್ಯಾ ಬಲ ಹೊಂದಿವೆ. ಈ ಪಕ್ಷಗಳು ತಮ್ಮ ಬೆಂಬಲ ವಾಪಸ್ ಪಡೆದರೆ ಸರ್ಕಾರವೇ ಬಿದ್ದು ಹೋಗುತ್ತದೆ. ಹೀಗಾಗಿ, ಟಿಡಿಪಿ ನಾಯಕ, ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಹಾಗೂ ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್ ಕುಮಾರ್ ಅವರನ್ನ ಮೆಚ್ಚಿಸಲು ಮೋದಿ ಸರ್ಕಾರ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಭಾರೀ ಅನುದಾನ ನೀಡುತ್ತಿದೆ ಎಂದು ಹರಿಹಾಯ್ದಿದ್ದಾರೆ. +ಐತ-ಪಿಂಚಲು ಹೆಸರಿನ -ಫೆಸ್‍ಬುಕ್‍ನಲ್ಲಿ, ಕರ್ನಾಟಕಕ್ಕೆ ಮೂರು ನಾಮ ಹಾಕಲಾಗಿದೆ ಎಂದು ಬಿಂಬಿಸುವ ಪೋಸ್ಟ್ ಮಾಡಿದ್ದು, ಏನ್ರಪ್ಪಾ ಈ ಸಲ ಬಜೆಟ್ ಕೇವಲ ಆಂಧ್ರ ಮತ್ತು ಬಿಹಾರಕ್ಕೆ ಸೀಮಿತವೇ? ಕರ್ನಾಟಕಕ್ಕೆ ಏನೂ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಹಾಗೆ ನೋಡಿದರೆ ಕೇಂದ್ರ ಬಜೆಟ್‍ಗೆ ಮುನ್ನವೇ ಆಂಧ್ರ ಹಾಗೂ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವುದಿಲ್ಲ ಎಂದು ಮೋದಿ ಸರ್ಕಾರ ಹೇಳಿತ್ತು. ಆದರೆ ಬಜೆಟ್‍ನಲ್ಲಿ ಘೋಷಣೆ ಮಾಡಲಾದ ಯೋಜನೆಗಳ ಪೈಕಿ ಬಹುಪಾಲು ಯೋಜನೆಗಳು ಬಿಹಾರ ಹಾಗೂ ಆಂಧ್ರ ಪ್ರದೇಶ ರಾಜ್ಯದ ಕಡೆಗೇ ಹೋಗಿವೆ. +ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಬೆಂಗಳೂರು – ಹೈದರಾಬಾದ್ ನಡುವಣ ಹೆದ್ದಾರಿ ಅಭಿವೃದ್ದಿಯ ಪ್ರಸ್ತಾಪವಾಗಿದೆ. ಇನ್ನುಳಿದಂತೆ ಯಾವುದೂ ಮೇಲ್ನೋಟಕ್ಕೆ ಕಾಣದಿರೋದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. +ಪತ್ರಕರ್ತೆ ಸ್ಮಿತಾ ಪ್ರಕಾಶ್ ಅವರಂತೂ ಏನನ್ನೂ ಹೇಳದೆ ಕೇವಲ ಒಂದು -ಫೋಟೋ ಪ್ರಕಟಿಸಿ ಬಜೆಟ್ ಎಂದು ಬರೆದಿದ್ದಾರೆ. ಈ ಫೋಟೋದಲ್ಲಿ ಮೋದಿ ಅವರಿಗೆ ನಾಯ್ಡು ಹಾಗೂ ನಿತೀಶ್ ಕೈ ಮುಗಿಯುವ ಚಿತ್ರಣವಿದೆ!ಗಬ್ಬರ್ ಎಂಬುವರು ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ದೇಶದ ಷೇರು ಮಾರುಕಟ್ಟೆಯ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ನೆಟ್ಟಿಗರೊಬ್ಬರು ಬಿಂಬಿಸಿದ್ದಾರೆ. +ಇನ್ನು ಸಂಬಳದಾರರು ಪ್ರತಿ ಬಜೆಟ್‍ನಲ್ಲೂ ಪಂಚಾಯತ್ ವೆಬ್ ಸಿರೀಸ್ ಗ್ರಾಮಸ್ಥರ ರೀತಿ ಅನುದಾನ ಕೇಳುವಂತೆ ಆಗುತ್ತಿದೆ ಎಂದು ಕೆಲವು ನೆಟ್ಟಿಗರು ಲೇವಡಿ ಮಾಡಿದ್ದಾರೆ.ಮುಕೇಶ್ ಅಂಬಾನಿ ಅವರು ತಮ್ಮ ಮಗನ ಮದುವೆಯಲ್ಲಿ ಜನರಿಗೆ ಊಟಕ್ಕೆ ಬಡಿಸುವ ರೀತಿಯಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರ ಜೊತೆ ನಡೆದುಕೊಳ್ತಿದೆ ಎಂದು ರೋಷನ್ ರಾಜ್ ಎಂಬ ನೆಟ್ಟಿಗರು ವಿಡಿಯೋ ಸಮೇತ ಟ್ವೀಟ್ ಮಾಡಿದ್ದಾರೆ. +ಒಟ್ಟಿನಲ್ಲಿ ಆದಾಯ ತೆರಿಗೆ ಪಾವತಿದಾರರು ಹಾಗೂ ಮಧ್ಯಮ ವರ್ಗದವರು ಈ ಬಾರಿಯೂ ಬಜೆಟ್‍ನಿಂದ ತಮಗೆ ನಿರಾಸೆಯಾಗಿದೆ ಎಂದೇ ಅಭಿಪ್ರಾಯ ಹೊರಹಾಕಿದ್ದಾರೆ. \ No newline at end of file diff --git a/eesanje/url_46_66_6.txt b/eesanje/url_46_66_6.txt new file mode 100644 index 0000000000000000000000000000000000000000..1ac0926bbfbf6f10998c72a7a3683c06075522ce --- /dev/null +++ b/eesanje/url_46_66_6.txt @@ -0,0 +1,4 @@ +ಆಶಾದಾಯಕ ಬಜೆಟ್: ರಮೇಶ್ ಚಂದ್ರ ಲಹೋಟಿ +ಬೆಂಗಳೂರು, ಜು.23- ಯುವಕರ ಉದ್ಯೋಗಕ್ಕೆ ಉತ್ತೇಜನ, ಶಿಕ್ಷಣಕ್ಕೆ ಒತ್ತು, ಕೈಗಾರಿಕೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮತ್ತು ತೆರಿಗೆಯಲ್ಲಿ ದಂಡವನ್ನು ಹಿಂಪಡೆದಿರುವುದರಿಂದ ಕೇಂದ್ರ ಬಜೆಟ್ ಒಟ್ಟಾರೆ ಆಶಾದಾಯಕವಾಗಿದೆ ಎಂದು ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ ನೋಡಿದರೆ ಎನ್‍ಡಿಎ ಮಾದರಿ ಕಾಣುತ್ತದೆ. ಆದರೆ, ಕರ್ನಾಟಕಕ್ಕೆ ಅಷ್ಟಾಗಿ ಅನುದಾನ ಸಿಗದಿರುವುದು ಬೇಸರ ಮೂಡಿಸಿದೆ ಎಂದು ಹೇಳಿದರು. ವಿಶೇಷವಾಗಿ ಈ ಬಾರಿ ಎಂಎಸ್‍ಎಂಇಗಳಿಗೆ ಉತ್ತೇಜನ, ಕೃಷಿಗೆ ಒತ್ತು, ಮಹಿಳಾ ಉದ್ಯೋಗಿಗಳಿಗೆ ಹೊಸ ಅವಕಾಶಗಳು ಮತ್ತು ಉದ್ಯೋಗ ಸೃಷ್ಟಿಗೆ ಹೊಸ ಆಯಾಮ ನೀಡಿರುವುದನ್ನು ಸ್ವಾಗತಿಸುತ್ತದೆ ಎಂದರು. +ಮುದ್ರಾ ಯೋಜನೆ ಸಾಲವನ್ನು 20 ಲಕ್ಷಕ್ಕೆ ಏರಿಸಿರುವುದು, ಸೋಲಾರ್ ಪ್ಯಾನಲ್‍ಗಳ ಮೇಲಿನ ತೆರಿಗೆ ಇಳಿಕೆ ಸೇರಿದಂತೆ ಕೆಲವು ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿಯನ್ನು ಮುಂದುವರೆಸಿರುವುದರಿಂದ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹಿರಿಯ ಉಪಾಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷೆ ಉಮಾರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಡಾ.ಐ.ಎಸ್.ಪ್ರಸಾದ್ ಮತ್ತಿತರರಿದ್ದರು. \ No newline at end of file diff --git a/eesanje/url_46_66_7.txt b/eesanje/url_46_66_7.txt new file mode 100644 index 0000000000000000000000000000000000000000..e686c80f2e95400ac25e86330a9cf4ba68f9b4be --- /dev/null +++ b/eesanje/url_46_66_7.txt @@ -0,0 +1,5 @@ +ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಸಚಿವ ಕೆ.ಎನ್.ರಾಜಣ್ಣ +ಬೆಂಗಳೂರು,ಜು.23- ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಸದಸ್ಯ ಸಿ.ಟಿ.ರವಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರೈತರಿಗೆ ಸಾಲ ಸೇರಿದಂತೆ ಅವರಿಗೆ ಆರ್ಥಿಕ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಆದರೆ ರೈತರ ಸಾಲಮನ್ನ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಪುನರುಚ್ಚರಿಸಿದರು. +ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಸಹಕಾರ ಸಂಘಗಳ ಮೂಲಕ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ, ಮಧ್ಯಮಾವಧಿ ಸಾಲವನ್ನು ನೀಡುತ್ತಿದೆ. ಹಣಕಾಸಿನ ಲಭ್ಯತೆ ನೋಡಿಕೊಂಡು ರೈತರಿಗೆ ಸಾಲ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು. ಈ ಹಿಂದೆ ಯುಪಿಎ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು 75 ಕೋಟಿ ಸಾಲವನ್ನು ಮನ್ನ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು 50 ಸಾವಿರವರೆಗೂ ರೈತರ ಸಾಲ ಮನ್ನ ಮಾಡಿದ್ದರು. +ಸಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ಅವರು ಒಂದು ಲಕ್ಷ ಸಾಲ ಮನ್ನ ಮಾಡಿದ್ದಾರೆ. ಈಗ ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿರುವ ಸಾಲವನ್ನು ಮನ್ನಾ ಮಾಡುವಂತೆ ಒತ್ತಡ ಹಾಕಿ ಎಂದು ಸವಾಲು ಎಸೆದರು. ಅರ್ಜಿ ಹಾಕಿದ ಎಲ್ಲರಿಗೂ ಸಾಲ ಕೊಡಲು ಸಾಧ್ಯವಿಲ್ಲ. ಹಣಕಾಸಿನ ಲಭ್ಯತೆ ಮೇಲೆ ಸಾಲ ವಿತರಣೆ ಮಾಡುವ ವ್ಯವಸ್ಥೆ ಎಲ್ಲರ ಕಾಲದಲ್ಲೂ ಇದೆ. ಆದ್ಯತೆ ಮೇರೆಗೆ ಸಾಲವನ್ನು ನೀಡುತ್ತಾರೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಈ ವೇಳೆ ಸಿ.ಟಿ.ರವಿ ಮಾತನಾಡಿ, ಬಜೆಟ್‍ನಲ್ಲಿ ಸಾಲ ಮನ್ನ ಮಾಡಿರುವುದಾಗಿ ನೀವೇ ಘೋಷಣೆ ಮಾಡಿದ್ದೀರಿ. ಈಗ ಮಾತು ತಪ್ಪುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. \ No newline at end of file diff --git a/eesanje/url_46_66_8.txt b/eesanje/url_46_66_8.txt new file mode 100644 index 0000000000000000000000000000000000000000..9c7eed5b4de56847b38fa2972c99066d970aeb48 --- /dev/null +++ b/eesanje/url_46_66_8.txt @@ -0,0 +1,5 @@ +ಅನುದಾನ ತಾರತಮ್ಯ: ಆಡಳಿತ- ಪ್ರತಿಪಕ್ಷ ವಾಕ್ಸಮರ +ಬೆಂಗಳೂರು,ಜು.22- ಲೋಕೋಪ ಯೋಗಿ ಇಲಾಖೆ ಅಡಿ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿಷಯ ಆಡಳಿತ ಹಾಗೂ ಪ್ರತಿಪಕ್ಷ ಶಾಸಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಹೈದ್ರಾಬಾದ್, ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನದಡಿ ಪ್ರತ್ಯೇಕ ಅನುದಾನ ನೀಡಿದಂತೆ ಹೆಚ್ಚು ಮಳೆ ಸುರಿದು ರಸ್ತೆ ಹಾಳಾಗುವ ಕರಾವಳಿ ಭಾಗಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿದರು. +ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಬಿಜೆಪಿಯ ಸುರೇಶ್‍ಗೌಡ, ಅನುದಾನವನ್ನು ಒಂದು ಪಕ್ಷದ ಶಾಸಕರಿಗೆ ಹೆಚ್ಚು ನೀಡಲಾಗುತ್ತಿದೆ. ಬಿಜೆಪಿ-ಜೆಡಿಎಸ್‍ನವರಿಗೆ ತಾರತಮ್ಯವಾಗುತ್ತಿದೆ. ಇದನ್ನು ಸರಿಪಡಿಸದೇ ಇದ್ದರೆ ನಾವು ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದನ್ನು ಒಪ್ಪದ ಕಾಂಗ್ರೆಸ್ ಶಾಸಕರು ಬಿಜೆಪಿ ಆಡಳಿತದ ಅವಧಿಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡಿಮೆ ಅನುದಾನ ನೀಡಲಾಗುತ್ತಿತ್ತು ಎಂದು ತಿರುಗೇಟು ನೀಡಿ ವಾಗ್ವಾದಕ್ಕಿಳಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿಯ ಸುನಿಲ್‍ಕುಮಾರ್‍ರವರು ರಸ್ತೆ ದುರಸ್ತಿಗೆ ಎನ್‍ಡಿಆರ್‍ಎ-ïನಡಿ 30 ಸಾವಿರ, ಮನೆ ನಿರ್ಮಾಣಕ್ಕೆ 1.25 ಲಕ್ಷ ರೂ. ನೀಡಲಾಗುತ್ತಿದೆ. ಇದು ಯಾವುದಕ್ಕೂ ಸಾಲುವುದಿಲ್ಲ. ಮಳೆಗಾಲದಲ್ಲಿ ಹಾನಿಗೊಳಗಾದ ರಸ್ತೆ, ಮನೆಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಎಂದು ಒತ್ತಾಯಿಸಿದರಲ್ಲದೆ ಹಿಂದೆ ಮಹದೇವಪ್ಪ ಲೋಕೋಪಯೋಗಿ ಸಚಿವ ರಾಗಿದ್ದಾಗ ತಾರತಮ್ಯ ಮಾಡದೆ ಅನುದಾನ ಹಂಚಿದ್ದರು. ಈಗ ತಾರತಮ್ಯ ಹೆಚ್ಚಾಗಿದೆ ಎಂದು ಹೇಳಿದರು.ವಿರೋಧ ಪಕ್ಷದ ಶಾಸಕ ಆರ್.ಅಶೋಕ್ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗದಂತೆ ಎಚ್ಚರಿಕೆ ವಹಿಸುವಂತೆ ತಾಕೀತು ಮಾಡಿದರು. +ಉತ್ತರ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಳೆಗಾಲದ ನಂತರ ಹಾಳಾದ ರಸ್ತೆಗಳನ್ನು ದುರಸ್ತಿ ಮಾಡಲಾಗುವುದು. ಸದ್ಯಕ್ಕೆ ತಾತ್ಕಾಲಿಕವಾಗಿ ಸಂಚಾರ ಸುಗಮಗೊಳ್ಳಲು ಅಗತ್ಯ ಕೆಲಸ ನಿರ್ವಹಿಸುವುದಾಗಿ ಹೇಳಿದರಲ್ಲದೆ ಅನುದಾನ ಹಂಚಕೆಯಲ್ಲಿ ನಮ್ಮ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ. ಸಿಐಆರ್‍ಎ-ïನ ಅನುದಾನವನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲಾಗಿದೆ ಎಂದು ವಿವರಿಸಿದರು. \ No newline at end of file diff --git a/eesanje/url_46_66_9.txt b/eesanje/url_46_66_9.txt new file mode 100644 index 0000000000000000000000000000000000000000..42a44d43b21b82804c78543b36a387b7dde3903d --- /dev/null +++ b/eesanje/url_46_66_9.txt @@ -0,0 +1,3 @@ +ಮೈಸೂರಿನ ಮಾಲ್‍ನಲ್ಲಿ ಪಾಕ್ ಪರ ಘೋಷಣೆ +ಮೈಸೂರು,ಜು.22-ನಗರದ ಟಿಆರ್‍ಸಿ ಮಾಲ್‍ನಲ್ಲಿ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮïಎಲ್ ಮಾಲ್ ನಲ್ಲಿ ಬ್ಯಾಡ್ ನ್ಯೂಸ್ ಚಿತ್ರವು ಡಿಆರ್‍ಸಿ ಫಿಲಂಸ್ ನಲ್ಲಿ ರಿಲೀಸ್ ಆಗಿದ್ದು, ಫಿಲಂ ಪ್ರಾರಂಭದಲ್ಲಿ ಒಂದೇ ಮಾತರಂ ಹಾಡು ಬರುವಾಗ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. +ಘೋಷಣೆ ಕೂಗಿದ ನಂತರ ಪರ ವಿರೋ„ಗಳ ಮಾತಿನ ಚಕಮಕಿ ಜೋರಾಗಿ ನಡೆದಿದ್ದು, ಸ್ಥಳಕ್ಕೆ ಡಿಆರ್‍ಸಿ ಫಿಲಂ ಸೆಕ್ಯೂರಿಟಿ ಹಾಗೂ ಪೊಲೀಸರು ಮಧ್ಯಸ್ಥಿಕೆ ವಹಿಸಿ ಘೋಷಣೆ ಕೂಗಿದವರನ್ನು ವಶಕ್ಕೆ ಪಡೆದಿದ್ದಾರೆ.ಈ ಪ್ರಕರಣವು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇನ್‍ಸ್ಪೆಕ್ಟರ್‍ಕುಮಾರ್ ನೇತೃತ್ವದಲ್ಲಿ ವಿಚಾರಣೆ ಮುಂದುವರೆಯಲಿದೆ. \ No newline at end of file diff --git a/eesanje/url_46_67_1.txt b/eesanje/url_46_67_1.txt new file mode 100644 index 0000000000000000000000000000000000000000..e1567070988e3292c73a43f9cbe27c515849edd4 --- /dev/null +++ b/eesanje/url_46_67_1.txt @@ -0,0 +1,4 @@ +ಸೇನೆ ಬಂದಿದೆ ಉತ್ತರಿಸಿ: ಡಿಕೆಶಿಗೆ ಎಚ್‍ಡಿಕೆ ತಿರುಗೇಟು.. +ಬೆಂಗಳೂರು, ಜು.22- ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದ ಸ್ಥಳದಲ್ಲಿ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. +ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರ್ಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ವೀರಯೋಧರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ. ಇಷ್ಟು ಸರಳ ಸಾಮರಸ್ಯ ತತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ ಎಂದು ಟೀಕಿಸಿದ್ದಾರೆ. +ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದರು. ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು. ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_67_10.txt b/eesanje/url_46_67_10.txt new file mode 100644 index 0000000000000000000000000000000000000000..ed1367b800ba948024bb4cedcc90181d3a1484f1 --- /dev/null +++ b/eesanje/url_46_67_10.txt @@ -0,0 +1,4 @@ +ಪಾಲಿಟೆಕ್ನಿಕ್ ಕಾಲೇಜು ಮಂಜೂರಿಗೆ ಸಮಿತಿ ರಚನೆ : ಸಚಿವ ಎಂ.ಸಿ.ಸುಧಾಕರ್ +ಬೆಂಗಳೂರು,ಜು.22- ರಾಜ್ಯದಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಅಗತ್ಯವಿರುವ ಕಡೆ ಪ್ರಾರಂಭಿಸುವ ಬಗ್ಗೆ ಸಮಿತಿಯನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.ವಿಧಾನಪರಿಷತ್‍ನಲ್ಲಿ ಸದಸ್ಯ ಬಸನಗೌಡ ಬಾದರ್ಲಿ ಅವರು ರಾಯಚೂರು ಜಿಲ್ಲೆ ಸಿಂಧನೂರಿಗೆ ಮಂಜೂರಾಗಿದ್ದ ಪಾಲಿಟೆಕ್ನಿಕ್ ಕಾಲೇಜನ್ನು ಬೆಳಗಾವಿ ಜಿಲ್ಲೆ ಕಾಗವಾಡಕ್ಕೆ ಸ್ಥಳಾಂತರ ಮಾಡಲಾಗಿದೆ. ನಮ್ಮದು ಹಿಂದುಳಿದ ಪ್ರದೇಶದ ಏಕಿಂಥ ತಾರತಮ್ಯ ಎಂದು ಪ್ರಶ್ನೆ ಮಾಡಿದರು. +ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ಹಿಂದಿನ ಸರ್ಕಾರ ಅವೈಜ್ಞಾನಿಕವಾಗಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮಂಜೂರು ಮಾಡಿದೆ. ಇದರಿಂದ ಸಿಗಬೇಕಾದ ಕಾಲೇಜುಗಳಿಗೆ ಸಿಕ್ಕಿಲ್ಲ. ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ. +ಈ ವರದಿ ಬಂದ ನಂತರ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಮಂಜೂರು ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು.ಅನುದಾನಿತ ಕಾಲೇಜುಗಳಿಗೆ ಪಾಲಿಟೆಕ್ನಿಕ್ ಕಾಲೇಜು ಅವಶ್ಯಕತೆ ಇದೆ ಎಂಬುದನ್ನು ಸಮಿತಿ ಅಧ್ಯಯನ ನಡೆಸಿ ವರದಿ ನೀಡುತ್ತದೆ. ಈ ವರದಿ ಬಂದ ನಂತರ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. \ No newline at end of file diff --git a/eesanje/url_46_67_11.txt b/eesanje/url_46_67_11.txt new file mode 100644 index 0000000000000000000000000000000000000000..1ca44a430d11ff88eee5ee5a818dcc362f4b149c --- /dev/null +++ b/eesanje/url_46_67_11.txt @@ -0,0 +1,6 @@ +14 ಲಕ್ಷ ಅಕ್ರಮ ಸಕ್ರಮ ಅರ್ಜಿಗಳು ಬಂದಿದ್ದು, ಶೇ.95ರಷ್ಟ ವಿಲೇವಾರಿ : ಸಚಿವ ಕೃಷ್ಣಭೈರೇಗೌಡ +ಬೆಂಗಳೂರು,ಜು.22- ಅಕ್ರಮ ಸಕ್ರಮ ಯೋಜನೆಯ 94 ಸಿ ಮತ್ತು 94 ಸಿಸಿ ಅಡಿ 14 ಲಕ್ಷ ಅರ್ಜಿಗಳು ಬಂದಿದ್ದು, ಶೇ.95ರಷ್ಟನ್ನು ವಿಲೇವಾರಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.ವಿಧಾನಸಭೆಯ ಪರಶ್ನೋತ್ತರದ ಅವಧಿಯಲ್ಲಿ ಅಗರಿ ಬೊಮ್ಮನಹಳ್ಳಿಯ ಶಾಸಕ ನೇಮಿರಾಜ ನಾಯಕ್ ತಮ್ಮ ಕ್ಷೇತ್ರದಲ್ಲಿರುವ ಸರ್ಕಾರಿ ಜಮೀನುಗಳ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. +ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಬೇಕೆಂದು ಒತ್ತಾಯಿಸಿದಾಗ ಉತ್ತರಿಸಿದ ಸಚಿವರು, 2016ರಲ್ಲಿ ಸಿದ್ದರಾಮಯ್ಯನವರ ಸರ್ಕಾರ ಎರಡು ಬಾರಿ, ಹಿಂದಿನ ಬಿಜೆಪಿ ಸರ್ಕಾರ ಸೇರಿ 2023ರವರೆಗೂ ಏಳೆಂಟು ವರ್ಷಗಳ ಕಾಲ ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.ಅಗರಿಬೊಮ್ಮನಹಳ್ಳಿಯಲ್ಲಿ 94 ಸಿ ಎರಡು, 94 ಸಿಸಿ ಅಡಿ 50ಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಅರ್ಜಿ ಸಲ್ಲಿಸಿದ್ದರೆ ಮಾತ್ರ ಬಾಕಿ ಎಂದು ಪರಿಗಣಿಸಲಾಗುವುದು ಎಂದರು. +ಶಾಸಕರು ಪದೇ ಪದೇ ಮತ್ತೆ ಅರ್ಜಿಗಳನ್ನು ಆಹ್ವಾನಿಸುವಂತೆ ಒತ್ತಾಯಿಸಿದಾಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು, ಸರ್ಕಾರಿ ಜಾಗವನ್ನು ಬಡವರಿಂದ ಒತ್ತುವರಿ ಮಾಡಿಕೊಂಡು ಅದರಿಂದ ಲಾಭ ಮಾಡಿಕೊಳ್ಳಲು ರಿಯಲ್ ಎಸ್ಟೇಟ್ ವ್ಯವಹಾರದವರು ಲಾಭ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿದ್ದಾರೆ. ಎಲ್ಲದಕ್ಕೂ ಅಧಿವೇಶನದಲ್ಲೇ ಉತ್ತರ ನೀಡಲಾಗುವುದಿಲ್ಲ ಎಂದು ತಿಳಿ ಹೇಳಿದರು. +ಸಚಿವ ಕೃಷ್ಣಭೈರೇಗೌಡ ಅಗರಿಬೊಮ್ಮನಹಳ್ಳಿಯಲ್ಲಿ 70 ಸಾವಿರಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿ ಇತ್ತು ಎಂದು ಶಾಸಕರು ಹೇಳುತ್ತಿದ್ದಾರೆ. ಆದರೆ ಹಂಚಿಕೆ ಮಾಡಿ ಈಗ ಉಳಿದಿರುವುದು 38 ಸಾವಿರ ಮಾತ್ರ. ರಾಜ್ಯ ಸರ್ಕಾರ, ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿಗಾವಹಿಸಿ ಸಂರಕ್ಷಿಸಲು ಆನ್‍ಲೈನ್ ಆಪ್ ವ್ಯವಸ್ಥೆ ಮಾಡಿದೆ. ಅದರ ಅನುಸಾರ 14.5 ಲಕ್ಷ ಜಾಗದಲ್ಲಿ ಸರ್ಕಾರಿ ಭೂಮಿ ಗುರುತಿಸಲಾಗಿದೆ. ಅವುಗಳಲ್ಲಿ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆಪ್‍ನಲ್ಲಿ ಭೂಮಿಯ ಸರ್ವೇ ನಂಬರ್ ಮತ್ತು ಆಕಾರ್ ಹಾಗೂ ನಕ್ಷೆಯ ವಿರಗಳಿರುತ್ತವೆ. +ಕಂದಾಯ ಅಧಿಕಾರಿಗಳು ನಕ್ಷೆ ಆಧರಿಸಿ ಸರ್ಕಾರಿ ಭೂಮಿಯಲ್ಲಿ ನಡೆದು, ಒತ್ತುವರಿಯಾಗಿದೆ ಎಂದು ಗುರುತಿಸಿ ತಹಸೀಲ್ದಾರ್‍ಗೆ ವರದಿ ಮಾಡಬೇಕು. ಒತ್ತುವರಿಯಾಗಿದ್ದರೆ ಅದನ್ನು ತಕ್ಷಣವೇ ತೆರವು ಮಾಡಿ ಬೇಲಿ ಹಾಕಿ ಸಂರಕ್ಷಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು. ಸ್ಮಶಾನ ಸೇರಿದಂತೆ ಇತರ ಭೂಮಿಯನ್ನು ಸಂರಕ್ಷಿಸುವ ಉಸ್ತುವಾರಿಯನ್ನು ಸರ್ಕಾರವೇ ನಿಗಾವಹಿಸುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_67_12.txt b/eesanje/url_46_67_12.txt new file mode 100644 index 0000000000000000000000000000000000000000..b222a6a428a6328d65e04ebca799912f935fb1ee --- /dev/null +++ b/eesanje/url_46_67_12.txt @@ -0,0 +1,9 @@ +ವಿಧಾನಸಭೆ: ಧರಣಿಯನ್ನು ಹಿಂಪಡೆದ ಪ್ರತಿಪಕ್ಷಗಳು +ಬೆಂಗಳೂರು, ಜು.22- ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಕಳೆದ ಗುರುವಾರದಿಂದ ವಿಧಾನಸಭೆಯಲ್ಲಿ ನಡೆಸುತ್ತಿದ್ದ ಧರಣಿಯನ್ನು ಪ್ರತಿಪಕ್ಷಗಳು ಇಂದು ವಾಪಸ್ಸು ಪಡೆದವು. +ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡ ಕೂಡಲೇ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗಿಳಿದು ಧರಣಿ ಮುಂದುವರೆಸಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಶುಕ್ರವಾರ ಸದನಕ್ಕೆ ಸಕಾಲಕ್ಕೆ ಆಗಮಿಸಿದ ಶಾಸಕರ ಹೆಸರನ್ನು ವಾಚಿಸಿದರು. +ಮುಖ್ಯಮಂತ್ರಿಯವರು ಗುರುವಾರ ಉತ್ತರ ನೀಡುವಾಗ ನೀವು ಧರಣಿ ಆರಂಭಿಸಿದ್ದೀರಿ. ಈಗಾಗಲೇ ನೀವು ಪ್ರಸ್ತಾಪ ಮಾಡಿದ ವಿಚಾರದ ಬಗ್ಗೆ ಮುಖ್ಯಮಂತ್ರಿ ಉತ್ತರ ಕೊಟ್ಟಿದ್ದಾರೆ. ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆ, ಸಾರ್ವಜನಿಕ ಮಹತ್ವದ ವಿಚಾರಗಳಿವೆ. ಇಂದು ಗಮನ ಸೆಳೆಯುವ ಸೂಚನಗೆ ಆದ್ಯತೆ ಕೊಡಲಾಗಿದೆ. ಧರಣಿ ವಾಪಸ್ ಪಡೆದ ಸುಗಮ ಕಲಾಪ ನಡೆಸಲು ಸಹಕಾರ ನೀಡುವಂತೆ ಕೋರಿದರು. +ಆಗ ವಿರೋಧಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಆ ಹಣ ಮರಳಿ ಖಜಾನೆಗೆ ಬರಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ವಿಚಾರವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಬೇಕು ಎಂಬ ಉದ್ದೇಶದಿಂದ ಸದನದ ಹೊರಗೆ ಹೋರಾಟ ಮಾಡಿದ್ದೇವೆ. ಮುಖ್ಯಮಂತ್ರಿಯವರು ವಾಲ್ಮೀಕಿ ನಿಗಮದ ಹಗರಣ ಬಿಟ್ಟು ಉಳಿದೆಲ್ಲಾ ವಿಚಾರಕ್ಕೂ ಉತ್ತರ ಕೊಟ್ಟಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಹೋರಾಟ ಮಾಡಿದ್ದೇವೆ. ಧರಣಿಯ ನಡುವೆ ಶುಕ್ರವಾರ ಸದನದಲ್ಲಿ ಮಾತನಾಡಿದ ವಿಚಾರವನ್ನು ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದೆ. ಇದು ಸದನಕ್ಕೆ ಅಗೌರವ ತರುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. +ಮಳೆಯ ಅನಾಹುತದ ವಿಚಾರದ ಬಗ್ಗೆ ಹೆಚ್ಚು ಚರ್ಚೆಯಾಗಬೇಕಿತ್ತು. ಶುಕ್ರವಾರ ನಾವು ಧರಣಿಯಲ್ಲಿದ್ದೆವು. ನೀವು ಆ ವಿಚಾರದ ಚರ್ಚೆಗೆ ಅವಕಾಶ ಮಾಡಿಕೊಟ್ಟಿರಿ ಎಂದಾಗ ಆಡಳಿತ ಪಕ್ಷದ ಕೋನರೆಡ್ಡಿ, ಸಿಎಂ ರಾಜೀನಾಮೆ ಏಕೆ ಕೊಡಬೇಕು ಎಂದು ಆಕ್ಷೇಪ ಎತ್ತಿದರು. +ಇದಕ್ಕೆ ವಸತಿ ಸಚಿವ ಜಮೀರ್ ಅಹಮ್ಮದ್ ಧ್ವನಿಗೂಡಿಸಿ ಮಾತನಾಡಿದರು. ಮತ್ತೆ ಮಾತು ಮುಂದುವರೆಸಿದ ಆರ್.ಅಶೋಕ್ ಮಳೆಹಾನಿ ಪೀಡಿತ ಪ್ರದೇಶಗಳಿಗೆ ನಾನು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿ ಹಲವರು ಭೇಟಿ ನೀಡಿದ್ದೇವೆ. ರಾಜ್ಯದಲ್ಲಿ ಡೆಂೀ ಹಾವಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಮರಣಮೃದಂಗ ಭಾರಿಸುತ್ತಿದೆ. ಮುಡಾ ಹಗರಣ ತೆಗೆದುಕೊಳ್ಳಬೇಕು. ನಿಯಮ 69ರಡಿ ಸಾರ್ವಜನಿಕ ಮಹತ್ವದ ವಿಚಾರ ಚರ್ಚೆಯಾಗಬೇಕು. +ಶೂನ್ಯ ವೇಳೆ ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಸಭಾಧ್ಯಕ್ಷರ ವಿನಂತಿ ಮೇರೆಗೆ ಧರಣಿಯನ್ನು ವಾಪಸ್ ಪಡೆಯುತ್ತೇವೆ. ಆದರೆ ಮುಖ್ಯಮಂತ್ರಿ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮಾಡುತ್ತೇವೆ ಎಂದು ಹೇಳಿ ತಮ್ಮ ಸ್ವಸ್ಥಾನಗಳತ್ತ ತೆರಳಿ, ನಂತರ ಸದನದಿಂದ ಹೊರನಡೆದರು. +ಬಿಜೆಪಿಯ ಶಾಸಕ ಸುನಿಲ್‍ಕುಮಾರ್ ಮಾತ್ರ ಪ್ರಶ್ನೋತ್ತರ ಕಲಾಪದಲ್ಲಿ ಪಾಲ್ಗೊಂಡು ಪ್ರಶ್ನೆ ಕೇಳಿದರು.ಕಾಂಗ್ರೆಸ್‍ನ ನಯನಾ ಮೋಟಮ್ಮ ಅವರು ತಾವು ನೀಡಿರುವ ನಿಯಮ 69 ರ ಸೂಚನೆಯ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಬಿಜೆಪಿ-ಜೆಡಿಎಸ್ ಶಾಸಕರು ಸದನದಿಂದ ಹೊರಹೋಗುತ್ತಿರುವುದನ್ನು ಗಮನಿಸಿದ ಆಡಳಿತ ಪಕ್ಷದ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು.ಇದ್ಯಾವುದಕ್ಕೂ ಕಿವಿಗೊಡದ ಸಭಾಧ್ಯಕ್ಷರ ಪ್ರಶ್ನೋತ್ತರ ಕಲಾಪಕ್ಕೆ ಅನುವು ಮಾಡಿಕೊಟ್ಟರು. \ No newline at end of file diff --git a/eesanje/url_46_67_2.txt b/eesanje/url_46_67_2.txt new file mode 100644 index 0000000000000000000000000000000000000000..d60185e4e69a069b6c67423b47d744510a09c146 --- /dev/null +++ b/eesanje/url_46_67_2.txt @@ -0,0 +1,9 @@ +ಕೆಲಸದ ಅವಧಿ ವಿಸ್ತರಣೆಗೆ ಐಟಿ-ಬಿಟಿ ಉದ್ಯೋಗಿಗಳ ಆಕ್ಷೇಪ +ಬೆಂಗಳೂರು,ಜು.22- ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವ ಮಸೂದೆ ಮಂಡನೆಗೆ ಸಿದ್ದತೆ ನಡೆಸಿರುವ ರಾಜ್ಯ ಸರ್ಕಾರ ಇದೀಗ, ಐಟಿ- ಬಿಟಿ ಉದ್ಯೋಗಗಳಿಗೆ ಕೆಲಸದ ಅವಧಿಯನ್ನು 12ರಿಂದ 14 ಗಂಟೆಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ಮುಂದಾಗಿದೆ. ಆದರೆ ಸರ್ಕಾರದ ಈ ಕ್ರಮಕ್ಕೆ ಕಾರ್ಮಿಕ ವಲಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. +ರಾಜ್ಯ ಸರ್ಕಾರವು ಕರ್ನಾಟಕ ಶಾಪ್ಸ್ ಆ್ಯಂಡ್ ಎಶ್ಟಾಬ್ಲಿಶ್‍ಮೆಂಟ್ ಆ್ಯಕ್ಟ್‍ಗೆ ತಿದ್ದುಪಡಿ ತಂದು, ರಾಜ್ಯದಲ್ಲಿ ಐಟಿ, ಐಟಿ ಆಧಾರಿತ ಸೇವೆಗಳು ಹಾಗೂ ಬಿಪಿಒಗಳ ಕೆಲಸದ ಅವ„ಯನ್ನು 12ರಿಂದ 14 ತಾಸುಗಳಿಗೆ ಹೆಚ್ಚಿಸುವ ಪ್ರಸ್ತಾಪ ಇಟ್ಟುಕೊಂಡಿದೆ. ಶೀಘ್ರದಲ್ಲೇ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಿ, ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ. +ಐಟಿ ಕ್ಷೇತ್ರದ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಇಂತಹ ಪ್ರಸ್ತಾಪ ಹೊಂದಿದೆ ಎಂದು ಹೇಳಲಾಗಿದೆ. ಈ ತಿದ್ದುಪಡಿಯಲ್ಲಿ ಐಟಿ ಕಂಪನಿಗಳು ದಿನಕ್ಕೆ 14 ಗಂಟೆ ಕಾರ್ಯನಿರ್ವಹಿಸುವ (12 ಗಂಟೆ ಕೆಲಸ ಹಾಗೂ 2 ಗಂಟೆ ಹೆಚ್ಚುವರಿ ಕೆಲಸ) ಪ್ರಸ್ತಾಪವನ್ನು ಸೇರಿಸಲು ಉದ್ದೇಶಿಸಿದೆ. ಪ್ರಸ್ತುತ ಕಾರ್ಮಿಕ ಕಾನೂನಿನ ಅನ್ವಯ ಹೆಚ್ಚುವರಿ ಒಂದು ಗಂಟೆ ಒಳಗೊಂಡು 9 ಗಂಟೆಗಳ ಕಾಲ ಕೆಲಸ ನಿರ್ವಹಿಸಲು ಅನುಮತಿಸಲಾಗಿದೆ. +ಐಟಿ ವಲಯದ ನೂತನ ಪ್ರಸ್ತಾಪವು, ಐಟಿ/ಐಟಿಇಎಸ್/ಬಿಪಿಒ ವಲಯಗಳಲ್ಲಿ ದಿನಕ್ಕೆ 12 ಗಂಟೆಗಳಿಗೂ ಹೆಚ್ಚು ಸಮಯ ಹಾಗೂ ನಿರಂತರ ಮೂರು ನಿರಂತರ ತಿಂಗಳುಗಳಲ್ಲಿ 125 ಗಂಟೆಗಳು ಮೀರಬಾರದು ಎಂದು ತಿಳಿಸಲಾಗಿದೆ. ಐಟಿ ಕಂಪನಿಗಳ ಪ್ರಸ್ತಾಪದ ಬಗ್ಗೆ ರಾಜ್ಯ ಸರ್ಕಾರ ಚರ್ಚಿಸಿ ಶೀಘ್ರದಲ್ಲೇ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಸ್ತಾಪವು ಸಂಪುಟದಲ್ಲಿ ಚರ್ಚೆಯಾಗುವ ಸಂಭವವಿದೆ. +ತೀವ್ರ ವಿರೋಧ:ಸರ್ಕಾರದ ತೀರ್ಮಾನಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಐಟಿ ಕಂಪನಿಗಳ 14 ಗಂಟೆ ಕೆಲಸದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ಉದ್ಯೋಗಿಗಳ ಸಂಘ(ಕೆಐಟಿಯು) ಭಾರೀ ವಿರೋಧ ವ್ಯಕ್ತಪಡಿಸಿದೆ. ಈ ತಿದ್ದುಪಡಿಯು ಪ್ರಸ್ತುತ ಮೂರು ಪಾಳಿಗಳಲ್ಲಿರುವ ಪದ್ಧತಿಯ ಬದಲಿಗೆ ಎರಡು ಪದ್ಧತಿಯನ್ನು ಅನುಮತಿಸುವುದಾಗಿದೆ. ಇದರಿಂದ ಮೂರನೇ ಒಂದು ಭಾಗದಷ್ಟು ಕಾರ್ಮಿಕರನ್ನು ವಜಾಗೊಳಿಸುವ ಹುನ್ನಾರ ವಾಗಿದೆ ಎಂದು ಕೆಐಟಿಯು ತಿಳಿಸಿದೆ. +ಕೆಸಿಸಿಐ ವರದಿಯ ಪ್ರಕಾರ ಐಟಿ ವಲಯದ ಶೇ.45ರಷ್ಟು ಉದ್ಯೋಗಿಗಳು ಒತ್ತಡದಂತ ಮಾನಸಿಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಶೇ.55ರಷ್ಟು ಮಂದಿ ದೈಹಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈಗ ಜಾರಿಗೆ ತರಲು ಹೊರಟಿರುವ ತಿದ್ದುಪಡಿ ಉದ್ಯೋಗಿಗಳನ್ನು ಮತ್ತಷ್ಟು ಆಘಾತಕ್ಕೆ ದೂಡುತ್ತದೆ ಎಂದು ಕೆಐಟಿಯು ತಿಳಿಸಿದೆ. +ಐಟಿ ಉದ್ಯೋಗಿಗಳ ಕೆಲಸವನ್ನು ನಾಲ್ಕು ಗಂಟೆ ಹೆಚ್ಚಿಸುವುದರಿಂದ ನೌಕರರ ಖಾಸಗಿ ಹಾಗೂ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ. ಉದ್ಯೋಗಿಗಳು ವೃತ್ತಿ ಮಾಡುವ ಬದಲು ಮಷೀನ್‍ಗಳಾಗಿ ಬದಲಾಗುತ್ತಾರೆ. ಅವರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಪ್ರಸ್ತಾಪವನ್ನು ಪರಿಷ್ಕರಿಸಬೇಕು ಎಂದು ಒಕ್ಕೂಟ ಆಗ್ರಹಿಸಿದೆ. +ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್‍ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_67_3.txt b/eesanje/url_46_67_3.txt new file mode 100644 index 0000000000000000000000000000000000000000..da9f9e4b23d6315a1c10c7c78bf229e60227074c --- /dev/null +++ b/eesanje/url_46_67_3.txt @@ -0,0 +1,5 @@ +ಸಂಚಾರ ನಿಯಮ ಉಲ್ಲಂಘನೆ 748 ಪ್ರಕರಣ ದಾಖಲು 3.78 ಲಕ್ಷ ದಂಡ ಸಂಗ್ರಹ +ಬೆಂಗಳೂರು,ಜು.22- ಸಂಚಾರ ಉಲ್ಲಂಘನೆ ಮಾಡುವ ವಾಹನ ಸವಾರರು, ಚಾಲಕರ ವಿರುದ್ಧ ಉತ್ತರ ವಿಭಾಗದ ಸಂಚಾರಿ ಪೊಲೀಸರು ಕಾರ್ಯಾಚರಣೆ ಕೈಗೊಂಡು ಒಟ್ಟು 748 ಪ್ರಕರಣಗಳನ್ನು ದಾಖಲಿಸಿ 3.78 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ. +ಜು.14 ರಿಂದ 20 ರವರೆಗೆ ನಡೆಸಿದ ಕಾರ್ಯಾಚರಣೆಯ ವೇಳೆ ಏಕಮುಖ ಸಂಚಾರವಿದ್ದರೂ ವಿರುದ್ಧ ದಿಕ್ಕಿನಿಂದ ಸಂಚಾರ, ಪ್ರಕಾಶಮಾನವಾದ ಹೆಡ್‍ಲೈಟ್, ನಂಬರ್‍ಪ್ಲೇಟ್ ಡಿಫಕ್ಟ್, ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ, ಆಟೋ ಚಾಲಕರು ಸಮವಸ ಧರಿಸದಿರುವುದು, ಪುಟ್‍ಪಾತ್‍ನಲ್ಲಿ ಪಾರ್ಕಿಂಗ್ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಸಿರುವುದು ಕಂಡುಬಂದಿದೆ. +ಒಂದು ವಾರದ ಕಾರ್ಯಾಚರಣೆಯಲ್ಲಿ ಸಂಚಾರ ಉಲ್ಲಂಘನೆ ಮಾಡಿದ ಒಟ್ಟು 748 ಪ್ರಕರಣಗಳನ್ನು ದಾಖಲಿಸಿ 3,78,900 ರೂ. ದಂಡ ಸಂಗ್ರಹಿಸ ಲಾಗಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. +ಮುಂದಿನ ದಿನಗಳಲ್ಲಿಯೂ ಕಾರ್ಯಾಚರಣೆ ಮುಂದುವರೆ ಯಲಿದೆ ಎಂದು ಉತ್ತರ ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಿರಿಗೌಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_46_67_4.txt b/eesanje/url_46_67_4.txt new file mode 100644 index 0000000000000000000000000000000000000000..de4abee81b68df2605a5a5dd79a4c0c020e6bf26 --- /dev/null +++ b/eesanje/url_46_67_4.txt @@ -0,0 +1,8 @@ +ಉತ್ತರ ಕರ್ನಾಟಕಕ್ಕೀಗ ಜಲ ಕಂಟಕ +ಬೆಳಗಾವಿ,ಜು.22- ಪಶ್ಚಿಮ ಘಟ್ಟ ತೀರವಾದ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ ಇತರೆ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ, ಹಳ್ಳ-ಕೊಳ್ಳ, ಜಲಾಶಯಗಳು ತುಂಬಿ ಹರಿಯುತ್ತಿರುವ ಪರಿಣಾಮ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗ್ರಾಮಗಳ ಹೊಲ ಗದ್ದೆಗಳು ಜಲಾವೃತವಾಗಿವೆ. ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹಲವರನ್ನು ಸ್ಥಳಾಂತರ ಮಾಡಲಾಗುತ್ತಿದೆ. +ಘಟಪ್ರಭಾ ನದಿಗೆ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 15,000 ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದಾಗಿ ಬೆಳಗಾವಿ ಸಹಿತ ಬಾಗಲಕೋಟೆ, ಬಿಜಾಪುರ, ಧಾರವಾಡ ಜಿಲ್ಲೆಗಳ ನದಿ ತೀರದ ಗ್ರಾಮಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 17 ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿದ್ದು, 34 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ.ಜಿಲ್ಲೆಯ ಚಿಕ್ಕೋಡಿ, ಖಾನಾಪುರ, ಮೂಡಲಗಿ, ಗೋಕಾಕ್, ನಿಪ್ಪಾಣಿ ತಾಲೂಕಿನ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದಾಗಿ ಗ್ರಾಮಗಳಿಗೆ ನೀರು ನುಗ್ಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ. +ಜಿಲ್ಲೆಯಲ್ಲಿ ಇನ್ನೂ ಎರಡು-ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. +ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಎಸ್ಪಿ ಡಾ. ಭೀಮಾಶಂಕರ ಗುಳೇದ ಜಿಲ್ಲಾಯಲ್ಲಿ ಮಿಂಚಿನ ಸಂಚಾರ ಕೈಗೊಂಡಿದ್ದು, ಮಳೆ ಬಾಧಿತ ಖಾನಾಪುರ, ಚಿಕ್ಕೋಡಿ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿದರು. +ನೀರಿನಿಂದಾವೃತ ಕಾಡುವಾಸಿಗಳ ಅನುಕೂಲಕ್ಕೆ ತತ್‍ಕ್ಷಣ ಅಗತ್ಯ ಸೇವೆಗಳಾದ ಮೆಡಿಕಲ್ ಕಿಟï, ಹಾಲಿನ ಪುಡಿ, ಕ್ಯಾಂಡಲï, ಮ್ಯಾಚ್‍ಬಾಕ್ಸ್ ಸಹಿತ ಅಗತ್ಯ ಸಹಾಯ ಒದಗಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಮಳೆ ಪ್ರಮಾಣ ಮುಂದುವರೆದಿದ್ದು ಜನಜೀವನ, ಉದ್ಯೋಗ ವ್ಯಾಪಾರ ತೀವ್ರ ಕ್ಷೀಣಿಸಿದೆ. ಕಾರವಾರ, ಕರಾವಳಿ, ಮಲೆನಾಡು, ಕೊಡಗು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. +ಕಾರವಾರ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರಿನ ಬಳಿ ಗುಡ್ಡ ಕುಸಿದು 10 ಜನ ಮಣ್ಣಿನಡಿ ಸಿಲುಕಿಕೊಂಡಿದ್ದು, 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಎನ್‍ಡಿಆರ್‍ಎ-ï, ಎಸ್‍ಪಿಆರ್‍ಎ-ï ತಂಡದೊಂದಿಗೆ ಸೇನಾ ಸಿಬ್ಬಂದಿ ಕೂಡ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ. ನಿರಂತರ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರೆದಿದೆ. +ಕಾವೇರಿ ಜಲಾನಯನ ಪ್ರದೇಶದಲ್ಲಿ ಅಬ್ಬರದ ಮಳೆಗೆ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗಿವೆ. ಭದ್ರಾ, ತುಂಗಾ, ತುಂಗಾಭದ್ರಾ ಜಲಾಶಯಗಳು ಕೂಡ ಭರ್ತಿ ಹಂತದಲ್ಲಿವೆ. ಜಲಾಶಯಗಳಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರನ್ನು ಹೊರಬಿಡಲಾಗುತ್ತಿದೆ. ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.ಕೆಲವೆಡೆ ಮಳೆ ತಗ್ಗಿದ್ದರೂ ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ಪ್ರವಾಹದ ಭೀತಿ ಎದುರಾಗಿದೆ. ಜಲಾಶಯಗಳು, ಜಲಪಾತಗಳನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಪ್ರವಾಸಿಗರ ವೀಕ್ಷಣೆಗೆ ನಿಬರ್ಂಧ ವಿ„ಸಲಾಗಿದೆ. \ No newline at end of file diff --git a/eesanje/url_46_67_5.txt b/eesanje/url_46_67_5.txt new file mode 100644 index 0000000000000000000000000000000000000000..cadbca8cf837eb91e1abc801a9fc0b4a825f3f08 --- /dev/null +++ b/eesanje/url_46_67_5.txt @@ -0,0 +1,6 @@ +ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ನಕಲಿ ವೈದ್ಯರ ಹಾವಳಿ +ಬೆಂಗಳೂರು,ಜು.22- ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು, ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಿ ಜೈಲಿಗಟ್ಟುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಸಿದ್ದಾರೆ. +ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ತಿಪ್ಪಣ್ಣ ಕನಕನೂರು ಅವರು ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದೆ. ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.ಆಗ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ನಕಲಿ ವೈದ್ಯರು ಹೆಚ್ಚಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದು ಅತ್ಯಂತ ಗಾಬರಿ ಪಡುವ ವಿಷಯವೂ ಹೌದು. ಇದನ್ನು ನಿಯಂತ್ರಿಸುವುದು ಸರ್ಕಾರದ ಜವಾಬ್ದಾರಿ ಎಂದರು. +ನಕಲಿ ವೈದ್ಯರನ್ನು ಬಂಧಿಸಿದಾಗ ಇಲ್ಲವೇ ಅವರ ಮೇಲೆ ಕ್ರಮ ಜರುಗಿಸಿದಾಗ ನಮ್ಮ ಜನಪ್ರತಿನಿಧಿಗಳು ನಮ್ಮ ಮೇಲೆ ಒತ್ತಡ ಹಾಕುತ್ತಾರೆ. ಆರ್ಯುವೇದಿಕ್, ಅಲೋಪತಿ ಮತ್ತು ಪಾರಂಪರಿಕ ಕ್ಲಿನಿಕ್ ನಡೆಸುವವರ ಮೇಲೆ ಕ್ರಮ ಕೈಗೊಳ್ಳಲು ಮುಂದಾದರೆ ನಮಗೆ ಒತ್ತಡ ಬರುತ್ತವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. +ಇಂತಹ ನಕಲಿ ವೈದ್ಯರ ವಿರುದ್ಧ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದರ ವಿರುದ್ಧ ದಾಖಲಿಸಿ ನಂತರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಜೈಲಿಗೆ ಹಾಕುತ್ತೇವೆ ಎಂದು ವಿವರಿಸಿದರು.ಅಲೋಪತಿ ನಡೆಸುತ್ತಿರುವವರು ಆಸ್ಪತ್ರೆ ಮುಂಭಾಗ, ಬ್ಲೂ ಕಲರ್ ಮತ್ತು ಆರ್ಯುವೇದ ಆಸ್ಪತ್ರೆ ನಡೆಸುತ್ತಿರುವವರು ಗ್ರೀನ್ ಕಲರ್ ಬೋರ್ಡ್‍ಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ನಕಲಿ ವೈದ್ಯರನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ. ಇಂಥವರ ಬಗ್ಗೆ ವಿಶೇಷ ನಿಗಾ ವಹಿಸಲು ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು. +ಆಗ ತಿಪ್ಪಣ್ಣ ಅವರು ಕಲಬುರಗಿ ಜಿಲ್ಲೆಯಲ್ಲೇ 23 ನಕಲಿ ವೈದ್ಯರಿದ್ದಾರೆ. ನೀವು ಏನೇ ಕ್ರಮ ಜರುಗಿಸಿದರೂ ಮತ್ತೆ ಅವರು ಕ್ಲಿನಿಕ್‍ಗಳನ್ನು ಆರಂಭಿಸುತ್ತಾರೆ ಇದರಿಂದ ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ ಎಂದು ಸಚಿವರ ಗಮನಸೆಳೆದರು. ನೀವು ಏನೇ ಹೇಳಬೇಕಾದರೂ ದಾಖಲೆಗಳನ್ನು ಇಟ್ಟುಕೊಂಡು ಹೇಳಿ. ನಕಲಿ ವೈದ್ಯರು ಕ್ಲಿನಿಕಲ್‍ಗಳನ್ನು ಪ್ರಾರಂಭಿಸಿದರೆ ಎ-ïಐಆರ್ ದಾಖಲಿಸಲು ತಕ್ಷಣವೇ ಸೂಚನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಇವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. \ No newline at end of file diff --git a/eesanje/url_46_67_6.txt b/eesanje/url_46_67_6.txt new file mode 100644 index 0000000000000000000000000000000000000000..d6b49a5a00e6992a4f568acc9155b80ecd2c6f8d --- /dev/null +++ b/eesanje/url_46_67_6.txt @@ -0,0 +1,7 @@ +ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ +ಬೆಂಗಳೂರು,ಜು.22- ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಮುಂದಿನ ವರ್ಷದಿಂದ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. +ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಾವು ಕೆಆರ್‍ಎಸ್‍ಗೆ ಭೇಟಿ ನೀಡಿ ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರ ಜೊತೆ ಪರಿಶೀಲನೆ ನಡೆಸಿದ್ದು, ಬಾಗಿನ ಅರ್ಪಿಸಿದ್ದೇವೆ. ಕಾವೇರಿ ನೀರು ಬಿಡುಗಡೆ ಕುರಿತು ಮಾಹಿತಿ ಪಡೆದುಕೊಂಡಿದ್ದೇವೆ ಎಂದರು. +ನೀರು ನಿರ್ವಹಣಾ ಸಮಿತಿ ಜು.11 ರಿಂದ 31 ರವರೆಗೆ ಪ್ರತಿದಿನ 1 ಟಿಎಂಸಿಯಂತೆ 20 ಟಿಎಂಸಿ ನೀರು ಹರಿಸಲು ಆದೇಶ ನೀಡಿತ್ತು. ಈವರೆಗೂ ಬಿಳುಗುಂಡ್ಲುವಿಗೆ 30 ಟಿಎಂಸಿ ಹರಿದುಹೋಗಿದೆ ಎಂದು ವಿವರಿಸಿದರು.ಸಾಮಾನ್ಯ ವರ್ಷದಲ್ಲಿ ತಮಿಳುನಾಡಿಗೆ 40.14 ಟಿಎಂಸಿ ನೀರು ಬಿಡಬೇಕು. ಪ್ರಸಕ್ತ ಉತ್ತಮ ಮಳೆಯಾಗುತ್ತಿರುವುದರಿಂದ 51 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. 60 ಟಿಎಂಸಿಯಷ್ಟು ನೀರು ಬಿಡುವ ಅವಕಾಶಗಳಿವೆ ಎಂದು ಹೇಳಿದರು. +ಜೊತೆಗೆ ರೈತರ ಬೆಎಗಳಿಗೆ ನೀರು ಬಿಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೃಷಿ ಸಚಿವರು ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಮತ್ತು 1.81 ಲಕ್ಷ ರೈತರಿಗೆ ಬ್ಯಾಂಕ್‍ನ ಆರ್ಥಿಕ ನೆರವಿಗೆ ಸೂಚನೆ ನೀಡಿದ್ದಾರೆ. ಕಾವೇರಿ ನದಿಪಾತ್ರದಲ್ಲಿ 1,457 ಕೆರೆಗಳಿದ್ದು, ಅವುಗಳನ್ನು ತುಂಬಿಸಲು ಕಾಲುವೆಗಳನ್ನು ತೆರೆಯಲಾಗಿದೆ ಎಂದರು. +ಪ್ರತಿವರ್ಷ ಉತ್ತಮ ಮಳೆಯಾಗಲಿ, ನಮ್ಮ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮವನ್ನು ಮುಂದಿನ ವರ್ಷದಿಂದ ನಡೆಸಲು 5, 6 ಜಾಗಗಳನ್ನು ಗುರುತಿಸಲು ಪರಿಶೀಲನಾ ಕಾರ್ಯ ನಡೆಯುತ್ತಿದೆ. ಧಾರ್ಮಿಕ ದತ್ತಿ, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳು ಸ್ಥಳ ಪರಿಶೀಲನೆ ಹಾಗೂ ಕಾರ್ಯಕ್ರಮ ಆಯೋಜನೆ ಬಗ್ಗೆ ತಯಾರಿ ನಡೆಸುತ್ತಿವೆ ಎಂದು ಹೇಳಿದರು. +ಕೆಆರ್‍ಎಸ್‍ನ ಬೃಂದಾವನ ಉದ್ಯಾನವನವನ್ನು ಪಿಪಿಪಿ ಮಾದರಿಯಲ್ಲಿ ಉನ್ನತೀಕರಣಗೊಳಿಸಲು ಟೆಂಡರ್ ಕರೆಯಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು. \ No newline at end of file diff --git a/eesanje/url_46_67_7.txt b/eesanje/url_46_67_7.txt new file mode 100644 index 0000000000000000000000000000000000000000..9531d163723070bf88028178e13c2585d950dc54 --- /dev/null +++ b/eesanje/url_46_67_7.txt @@ -0,0 +1,4 @@ +ಮಾಜಿ ಸಚಿವ ನಾಗೇಂದ್ರಗೆ ಆ.3 ರವರೆಗೆ ನ್ಯಾಯಾಂಗ ಬಂಧನ +ಬೆಂಗಳೂರು,ಜು.22- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಆ. 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್‍ರವರು ವಾದ-ವಿವಾದ ಆಲಿಸಿ ನಾಗೇಂದ್ರ ಅವರನ್ನು ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದರು. +ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜು.10 ರಂದು ಬಂ„ಸಿ ಆರು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆಗೆ ಪಡೆದಿದ್ದರು. ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಐದು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. +ಇಂದಿಗೆ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮತ್ತೆ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಆರೋಪಿ ಪರ ವಕೀಲರಾದ ಶ್ಯಾಂ ಸುಂದರ್ ಅವರು ನಾಗೇಂದ್ರ ಅವರಿಗೆ ಹೃದಯ ಸಂಬಂಧ ಖಾಯಿಲೆ ಇದೆ. ಅವರಿಗೆ ವೈದ್ಯಕೀಯ ಸಹಾಯ ಬೇಕು, ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು. \ No newline at end of file diff --git a/eesanje/url_46_67_8.txt b/eesanje/url_46_67_8.txt new file mode 100644 index 0000000000000000000000000000000000000000..3bbfaf631bd246bd89acfd329d691324c9919515 --- /dev/null +++ b/eesanje/url_46_67_8.txt @@ -0,0 +1,5 @@ +ಡೆಂಗ್ಯೂ ಪರೀಕ್ಷೆ ಉಚಿತ ಮಾಡುವಂತೆ ಆರ್.ಅಶೋಕ್ ಸರ್ಕಾರಕ್ಕೆ ಒತ್ತಾಯ +ಬೆಂಗಳೂರು,ಜು.22- ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ರೋಗ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗ್ಯೂ ಪರೀಕ್ಷೆಯನ್ನು ಸರ್ಕಾರದಿಂದ ಉಚಿತವಾಗಿ ಮಾಡುವಂತೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿ ಒತ್ತಾಯಿಸಿದರು. +ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರಿನಲ್ಲಿ 300 ರಿಂದ 400 ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯದಲ್ಲಿ ಡೆಂಗ್ಯೂಗೆ 10 ಮಂದಿ ಮೃತಪಟ್ಟಿದ್ದಾರೆ. ಸತ್ತವರಲ್ಲಿ ಮಕ್ಕಳೇ ಹೆಚ್ಚಿದ್ದಾರೆ. ಇದುವರೆಗೆ ರಾಜ್ಯದಲ್ಲಿ 14,223 ಪ್ರಕರಣಗಳು ವರದಿಯಾಗುತ್ತಿವೆ. ಪ್ರತಿದಿನ 400 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆ. ಒಂದು ವರ್ಷದೊಳಗಿನ 238 ಮಕ್ಕಳಿಗೆ ಈ ರೋಗ ಕಂಡುಬಂದಿದೆ ಎಂದರು. +ಬೆಂಗಳೂರಿನಲ್ಲಿ 3, ಶಿವಮೊಗ್ಗದಲ್ಲಿ 2, ಧಾರವಾಡ, ಹಾಸನ, ಮೈಸೂರಿನಲ್ಲಿ ಡೆಂಗ್ಯೂ ರೋಗದಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ 300 ರೂ. ನಿಗದಿ ಮಾಡಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ 600 ರಿಂದ 700 ರೂ ನಿಗದಿ ಮಾಡಿ, ಲಂಗುಲಗಾಮಿಲ್ಲದೆ ರೋಗಿಗಳಿಂದ ಹೆಚ್ಚಿನ ದರ ಪಡೆಯಲಾಗುತ್ತಿದೆ. ಸೊಳ್ಳೆ ನಿಯಂತ್ರಣಕ್ಕೆ -Áಗಿಂಗ್ ಮಾಡಲಾಗುತ್ತಿಲ್ಲ. ನೀರು ನಿಲ್ಲುವ ಜಾಗಕ್ಕೆ ಔಷಧಿ ಸಿಂಪಡಣೆ ಮಾಡುತ್ತಿಲ್ಲ. ಒಟ್ಟಾರೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಬೆಂಗಳೂರಿನಲ್ಲೇ ಶೇ.60 ರಿಂದ 70 ರಷ್ಟು ಡೆಂಗ್ಯೂ ರೋಗ ಹೆಚ್ಚಾಗಿದೆ. ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಇದರಿಂದ ಡೆಂೀ, ಮಲೇರಿಯಾ ಹೆಚ್ಚಾಗುತ್ತಿದೆ ಎಂದರು. +ಸೊಳ್ಳೆಪರದೆ ಕೊಟ್ಟರೆ ಡೆಂಗ್ಯೂ ನಿಯಂತ್ರಣವಾಗುತ್ತದೆಯೇ? ಹಗಲಿನ ವೇಳೆ ಆ ಸೊಳ್ಳೆ ಕಚ್ಚುತ್ತದೆ ಎಂದಾಗ ಆರೋಗ್ಯಸಚಿವ ದಿನೇಶ್‍ಗುಂಡೂರಾವ್ ಮಾತನಾಡಿ, ಸೊಳ್ಳೆ ಪರದೆ ಕೊಡುವ ಬಗ್ಗೆ ತೀರ್ಮಾನವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ವಿಚಾರವನ್ನು ನಿಲುವಳಿ ಸೂಚನೆ ಬದಲಾಗಿ ನಿಯಮ 69 ರಡಿ ಚರ್ಚೆಗೆ ಕೊಡುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದರು. \ No newline at end of file diff --git a/eesanje/url_46_67_9.txt b/eesanje/url_46_67_9.txt new file mode 100644 index 0000000000000000000000000000000000000000..f9315c3637b47936e38d0b60476e745a5eaf3ed3 --- /dev/null +++ b/eesanje/url_46_67_9.txt @@ -0,0 +1,6 @@ +ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ: ದಿನೇಶ್ ಗುಂಡೂರಾವ್ +ಬೆಂಗಳೂರು,ಜು.22- ರಾಜ್ಯದಲ್ಲಿ ಎಲ್ಲಿಯೂ ಔಷಧಿಗಳ ಕೊರತೆ ಇಲ್ಲ. ಎಷ್ಟು ಬೇಡಿಕೆ ಇದೆಯೋ ಅಷ್ಟನ್ನು ಪೂರೈಕೆ ಮಾಡಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬಲ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. +ವಿಧಾನಪರಿಷತ್‍ನಲ್ಲಿಂದು ಸದಸ್ಯ ಪಿ.ಎಸ್.ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ದಿನೇಶ್ ಗುಂಡೂರಾವ್, ಯಾವುದೇ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಉಂಟಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಲಭ್ಯತೆ ಆಧಾರದ ಮೇಲೆ ಪೂರೈಕೆ ಮಾಡುತ್ತಿದ್ದೇವೆ. ಒಂದು ವೇಳೆ ನಿರ್ಧಿಷ್ಟ ಕಡೆ ಕೊರತೆ ಇದ್ದರೆ ನಮ್ಮ ಗಮನಕ್ಕೆ ತಂದರೆ ತತ್‍ಕ್ಷಣವೇ ಪೂರೈಕೆ ಮಾಡುವ ಆಶ್ವಾಸನೆ ನೀಡಿದರು. +ನಮ್ಮ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಈಗಾಗಲೇ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಿದ್ದೇವೆ. ಅನುಮೋದನೆ ಸಿಕ್ಕ ತಕ್ಷಣ ಹುದ್ದೆಗಳ ಭರ್ತಿಗೆ ಮುಂದಾಗುತ್ತೇವೆ ಎಂದು ತಿಳಿಸಿದರು. +ಇನ್ನು ಮುಂದೆ ಇಲಾಖೆ ಅಧಿಕಾರಿಗಳು ಎಲ್ಲೇ ಕೆಲಸ ಮಾಡಿದರೂ ಲಾಗಿನ್ ಆಗುವ ವ್ಯವಸ್ಥೆಯನ್ನು ಜಾರಿಗೊಳಿಸಿದ್ದೇವೆ. ಅದು ಗ್ರಾಮೀಣ ಭಾಗದಿಂದ ಹಿಡಿದು ಬೆಂಗಳೂರಿನವರೆಗೂ ಜಾರಿಯಲ್ಲಿರುತ್ತದೆ. ಸಿಬ್ಬಂದಿಗಳು ಕಡ್ಡಾಯವಾಗಿ ಕೆಲಸದ ಸಮಯ, ಹಾಜರಾತಿ, ಬೆರಳಚ್ಚು ನೀಡಲೇಬೇಕು. ಇಲ್ಲದಿದ್ದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. +ಇಲಾಖೆಯಲ್ಲಿ ಮೊದಲ ಬಾರಿಗೆ ಸಿಬ್ಬಂದಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿದ್ದೇವೆ. ಇಲ್ಲಿ ಎಲ್ಲವೂ ಪಾರದರ್ಶಕವಾಗಿ ನಡೆಯುತ್ತದೆ. ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಗುಂಡೂರಾವ್ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_68_1.txt b/eesanje/url_46_68_1.txt new file mode 100644 index 0000000000000000000000000000000000000000..f35f9fabe7ccd954f1ecd28e9fef5e5adaad3444 --- /dev/null +++ b/eesanje/url_46_68_1.txt @@ -0,0 +1,6 @@ +10 ಕೋಟಿ ವೆಚ್ಚದಲ್ಲಿ ಕೃಷಿ ಮಾರುಕಟ್ಟೆಗಳ ಅಭಿವೃದ್ಧಿ : ಕೃಷಿ ಸಚಿವ ಚೆಲುವರಾಯಸ್ವಾಮಿ +ನಾಗಮಂಗಲ,ಜು.22- ಕೃಷಿಗೆ ಸಂಬಂಧಿಸಿದಂತೆ ಕೊಬ್ಬರಿ ಮಾರಾಟ ರೈತರಿಗೆ ಎಲ್ಲಾ ರೀತಿಯಲ್ಲೂ ಅನುಕೂಲವಾಗುವ ನಿಟ್ಟಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ತಿಳಿಸಿದರು. +ಪಟ್ಟಣದ ವರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಹಂಗಣದಲ್ಲಿ ಮೂರು ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮುಕ್ತ ಹರಾಜು ಕಟ್ಟೆ ಕಾಂಕ್ರೀಟ್ ರಸ್ತೆ ಚರಂಡಿ ಹಾರುವ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ರೈತರು ಬೆಳೆಯುವ ಎಲ್ಲಾ ರೀತಿಯ ತರಕಾರಿಗಳು ಉತ್ಪನ್ನಗಳನ್ನು ಮಾರಾಟ ಮಾಡಲು ತೊಂದರೆಯಾಗದ ರೀತಿಯಲ್ಲಿ ಕೃಷಿ ಪ್ರಾಹಂಗಣದಲ್ಲಿ ಮುಕ್ತಾರಾಜುಕಟ್ಟೆ ಮೂಲಸೌಕರ್ಯ ಕಲ್ಪಿಸುವುದು ರೈತರು ಬೆಳೆಯುವ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. +ಮಳೆಯಾಶ್ರಿತ ಪ್ರದೇಶವಾದರೂ ಇಲ್ಲಿನ ರೈತರು ರಾಗಿಹುರಳಿ ತರಕಾರಿ ಜೊತೆಗೆ ಹೈನುಗಾರಿಕೆ ತೆಂಗು ಕೃಷಿ ಅವಲಂಬಿಸಿಕೊಂಡು ಅಧಿಕ ಪ್ರಮಾಣದಲ್ಲಿ ಕೊಬ್ಬರಿ ಉತ್ಪಾದನೆ ಮಾಡುತ್ತಿದ್ದಾರೆ ಆದ್ದರಿಂದ ರೈತರ ಕೊಬ್ಬರಿ ಮಾರುಕಟ್ಟೆಗೆ ಅನುಕೂಲ ಮಾಡಿಕೊಡುವ ಸಲುವಾಗಿ ಕೊಬ್ಬರಿ ಹರಾಜು ಮಾರುಕಟ್ಟೆ ಮಾದರಿಯಲ್ಲಿಯೇ ತಾಲೂಕಿನ ಕದಬಳ್ಳಿ ಅದ್ದಿಹಳ್ಳಿ ಸರ್ಕಲ್ ಮತ್ತು ನಾಗಮಂಗಲದ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಮಾತನಾಡಿದರು. +ರೈತರಿಗೆ ಕೃಷಿ ಇಲಾಖೆಯಿಂದ ಹಲವು ಸವಲತ್ತುಗಳು ಕೃಷಿ ಪರಿಕರಗಳು ಪಡೆಯುವ ಪ್ರತಿಯೊಬ್ಬ ರೈತರು ಪಡೆಯುವ ಉದ್ದೇಶದಿಂದ ಇಲಾಖೆಯ ಸವಲತ್ತುಗಳನ್ನು ಯೋಜನೆಗಳು ತರುತ್ತಿದ್ದರು ಪರಿಪೂರ್ಣವಾಗಿ ರೈತರ ಯೋಜನೆಗಳಿಂದ ಕೆಲವರು ವಂಚಿತರಾಗಿದ್ದು ಇಂತಹ ಈ ಸೌಲಭ್ಯಗಳಿಂದ ಪ್ರತಿಯೊಬ್ಬ ರೈತನಿಗೂ ಕೃಷಿ ಸವಲತ್ತುಗಳನ್ನು ಸಿಗುವ ದೃಷ್ಟಿಯಿಂದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌವಲತ್ತುಗಳನ್ನು ಪಡೆಯುವ ವ್‍ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು. +ತಾಲೂಕು ದಂಡಾಧಿಕಾರಿಗಳು ನಹಿಮ್ ಉನ್ನಿಸಾ.ಎಪಿಎಂಸಿ ಆಡಳಿತ ಅ„ಕಾರಿ ರೇವತಿ ಬಾಯಿ ಕಾರ್ಯದರ್ಶಿ ಎಸ್‍ಎಂ ಸರ್ವಜ್ಞ ಕಾರ್ಯಪಲಕ ಇಂಜಿನಿಯರ್ ಟಿ.ಸತೀಶ್ ಎಇಇ ಗೌರೀಶ್. ಎಸ್‍ಎಲ್ ಬಿ ನಿರ್ದೇಶಕ ತಿಮ್ಮರಾಯಿ ಗೌಡ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ನರಸಿಂಹಮೂರ್ತಿ ಎಚ್.ಡಿ ಕೃಷ್ಣೆಗೌಡ, ಪ್ರಸನ್ನ ಆರ್.ಕೆ.ಕೃಷ್ಣೇಗೌಡ, ಸಂಪತ್‍ಕುಮಾರ್, ಶ್ರೀನಿವಾಸ್, ಮರಿಸ್ವಾಮಿ, ರಮೇಶ್ ಹಾಗೂ ಅನೇಕ ಮುಖಂಡರು ಹಾಜರಿದ್ದರು. \ No newline at end of file diff --git a/eesanje/url_46_68_10.txt b/eesanje/url_46_68_10.txt new file mode 100644 index 0000000000000000000000000000000000000000..5a4be509c004626119efcad531521abcd73a9900 --- /dev/null +++ b/eesanje/url_46_68_10.txt @@ -0,0 +1,11 @@ +ಉತ್ತರ ಕನ್ನಡದ ಗುಡ್ಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ +ಕಾರವಾರ (ಅಂಕೋಲಾ): ಇಲ್ಲಿನ ರಾಷ್ಟ್ತ್ರೀಯ ಹೆದ್ದಾರಿಯ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು ಏಳು ಜನರು ಧಾರುಣ ಸಾವನ್ನಪ್ಪಿದ ಸ್ಥಳಕ್ಕೆ ಕೇಂದ್ರ ಸರಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಳಗ್ಗೆ ದೆಹಲಿಯಿಂದ ಹುಬ್ಬಳ್ಳಿಗೆ ಬಂದು ರಸ್ತೆ ಮಾರ್ಗವಾಗಿ ಶಿರೂರು ಗುಡ್ಡ ತಲುಪಿದ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಸೇರಿ ಇನ್ನಿತರೆ ಅಧಿಕಾರಿಗಳಿಂದ ದುರಂತದ ಬಗ್ಗೆ ಮಾಹಿತಿ ಪಡೆದುಕೊಂಡರು. +ಗುಡ್ಡ ಕುಸಿತ, ಪರಿಹಾರ ಕಾರ್ಯ, ನೊಂದವರಿಗೆ ನೆರವು, ಹೆದ್ದಾರಿಯಲ್ಲಿ ಮಣ್ಣು ತೆರವು, ಗಂಗಾವಳಿ ನದಿ ಪ್ರವಾಹ ಹಾಗೂ ಮಳೆ ಪರಿಸ್ಥಿತಿಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. +ಮಳೆಯ ನಡುವೆಯೇ ಗುಡ್ಡ ಕುಸಿತ ಭೀಕರತೆಯನ್ನು ವೀಕ್ಷಿಸಿದ ಸಚಿವರು; ಮಣ್ಣು ತೆರವು ಮತ್ತಿತರೆ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. +||ಮೃತರ ಕುಟುಂಬಗಳ ಜತೆ ಸರ್ಕಾರ ನಿಲ್ಲಬೇಕು ಎಂದ ಕೇಂದ್ರ ಸಚಿವರು|| +ರಾಜ್ಯ ಸರಕಾರವು ಗುಡ್ಡ ಕುಸಿತದಲ್ಲಿ ಜೀವ ಕಳೆದುಕೊಂಡಿರುವ ಕುಟುಂಬಗಳ ಜತೆ ನಿಲ್ಲಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಸ್ಥಳದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪರಿಹಾರ ಕಾರ್ಯದಲ್ಲಿ ರಾಜಕರಣ ಮಾಡಬಾರದು. ಕೇಂದ್ರ ಸರಕಾರವು ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ರಾಜ್ಯ ಸರ್ಕಾರವು ತನ್ನ ಪಾಲಿನ ಕೆಲಸವನ್ನು ಮಾಡಬೇಕು. ರಾಜಕೀಯದಿಂದ ಉಪಯೋಗ ಇಲ್ಲ. ನೊಂದ ಕುಟುಂಬಗಳಿಗೆ ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಹಾಗೂ ಮನೆಗಳನ್ನು ಕಳೆದುಕೊಂಡವರಿಗೆ ಮರು ವಸತಿ ಕಲ್ಪಿಸಬೇಕು ಎಂದು ಎಂದರು. +ಒಂದೇ ಕುಟುಂಬದಲ್ಲಿ ಐವರು, ಇನ್ನೂ ಇಬ್ಬರು ಈ ದುರಂತದಲ್ಲಿ ಜೀವ ಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ. ಎಲ್ಲರೂ ಶ್ರಮ ಜೀವಿಗಳು. ಇಬ್ಬರು ಮಕ್ಕಳು ಬಲಿಯಾಗಿರುವುದು ದುಃಖ ತಂದಿದೆ ಎಂದು ಕೇಂದ್ರ ಸಚಿವರು ಹೇಳಿದರು. ಯಾಕೆ ಈ ದುರಂತ ಸಂಭವಿಸಿತು? ಅದಕ್ಕೆ ಕಾರಣಗಳು ಏನು? ಕಾಮಗಾರಿಯಲ್ಲಿ ಸಮಸ್ಯೆ ಇದೆಯಾ? ಎಂಬ ಪರಿಶೀಲನೆ ನಡೆಸಲಾಗುವುದು ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೂ ತರಲಾಗುವುದು. ಮೊದಲು ಪರಿಹಾರ ಕಾರ್ಯ ಮುಗಿಯಲಿ. ಇದರಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು. +ಈ ಘಟನೆ ಪರಿಹಾರ ಕಾರ್ಯ ವಿಳಂಬವಾಗಿ ಸಾಗುತ್ತಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಈ ಬಗ್ಗೆ ನಾನು ಅಧಿಕಾರಿಗಳಿಗೆ ದೋಷ ಕೊಡಲಾರೆ. ಅವರು ಮಳೆಯ ನಡುವೆಯೂ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ದುರಂತ ಊಹೆಗೂ ನಿಲುಕದ್ದು. ಜನತೆಗೆ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಹೇಳಿದರು. +ರಾಜ್ಯ ಸರಕಾರದ ಯಾವೊಬ್ಬ ಸಚಿವರು, ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡದಿರುವ ಬಗ್ಗೆ ಸ್ಥಳೀಯರಿಗೆ ಬೇಸರವಿದೆ ಎಂದು ಮಾಧ್ಯಮಗಳು ಗಮನ ಸೆಳೆದಾಗ; ಈ ಬಗ್ಗೆ ನಾನು ಚರ್ಚೆ ನಡೆಸಲಾರೆ. ನಾನು ಬಂದಿದ್ದೇನೆ. ಕೇಂದ್ರದಿಂದ ಏನು ಸಹಾಯ ಮಾಡಿಸಬಹುದೋ ಅದನ್ನು ಮಾಡಿಸುತ್ತೇನೆ. ಇಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳದ್ದು ಜವಾಬ್ದಾರಿ ಇದೆ ಎಂದು ಉತ್ತರಿಸಿದರು. +ಭಾರೀ ಮಳೆಯಿಂದ ಹಾಸನ, ಮಂಗಳೂರು, ಚಿಕ್ಕಮಗಳೂರು, ಕೊಡಗು ಸೇರಿ ಕರಾವಳಿ ಮಲೆನಾಡು ಭಾಗದಲ್ಲಿ ಕೃಷಿ ಬೆಳೆ ನಷ್ಟವಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು. +ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ನಾಯಕ ಸೂರಜ್ ನಾಯಕ್ ಸೋನಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಜೆಡಿಎಸ್ ಮುಖಂಡರು ಸಚಿವರ ಜತೆಯಲ್ಲಿ ಇದ್ದರು. \ No newline at end of file diff --git a/eesanje/url_46_68_11.txt b/eesanje/url_46_68_11.txt new file mode 100644 index 0000000000000000000000000000000000000000..9b375cb638166ca0c9358f2d8709790f98fce21d --- /dev/null +++ b/eesanje/url_46_68_11.txt @@ -0,0 +1,3 @@ +14 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಸೆರೆ +ಬೆಂಗಳೂರು,ಜು.20- ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯೋಹಾನ್ ಅಲಿಯಾಸ್ ಪಾಪು(36) ಬಂಧಿತ ರೌಡಿ. ಈತನ ವಿರುದ್ಧ ಚಂದ್ರಲೇಔಟ್, ಅನ್ನಪೂರ್ಣೇಶ್ವರಿನಗರ, ಬಾಗಲಗುಂಟೆ ಪೊಲೀಸ್ ಠಾಣೆಗಳಲ್ಲಿ ರೌಡಿ ಪಟ್ಟಿ ತೆರೆಯಲಾಗಿದೆ. +ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಆರೋಪಿ ಯೋಹಾನ್ ವಿರುದ್ಧ 2010ನೇ ಸಾಲಿನಲ್ಲಿ ಎಲ್‍ಪಿಆರ್ ಪ್ರಕರಣ ದಾಖಲಾಗಿದೆ. 2012ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಆರೋಪಿ ಪತ್ತೆಗಾಗಿ ತಂಡವನ್ನು ರಚಿಸಲಾಗಿತ್ತು. ಈ ತಂಡ ಆರೋಪಿಯ ಬಗ್ಗೆ ಹಲವು ಮಾಹಿತಿಗಳನ್ನು ಕಲೆ ಹಾಕಿ ಬಂಧಿಸಿ ವೈಯಾಲಿ ಕಾವಲ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿಸಿಬಿ ಸಂಘಟಿತ ಅಪರಾಧ ದಳದ(ಪಶ್ಚಿಮ) ಅಧಿಕಾರಿ ಮತ್ತು ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. \ No newline at end of file diff --git a/eesanje/url_46_68_12.txt b/eesanje/url_46_68_12.txt new file mode 100644 index 0000000000000000000000000000000000000000..1d370ff948977e015f40afe23c51ac282fc48dbb --- /dev/null +++ b/eesanje/url_46_68_12.txt @@ -0,0 +1,9 @@ +ರಾಜ್ಯದಲ್ಲಿ ವಾಡಿಕೆಗಿಂತ ಶೇ.50ರಷ್ಟು ಅಧಿಕ ಮಳೆ: ಮೂರು ದಿನ ಆರೆಂಜ್ ಅಲರ್ಟ್ +ಬೆಂಗಳೂರು, ಜು.20-ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಜುಲೈ ಒಂದರಿಂದ ಇದುವರೆಗೆ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಹವಾಮಾನ ಮುನ್ಸೂನೆಗಳಿವೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡ ರೆಡ್ ಅಲರ್ಟ್ ನೀಡಲಾಗಿದ್ದು, ನಾಳೆಯಿಂದ ಮೂರು ದಿನಗಳ ಆರೆಂಜ್ ಅಲರ್ಟ್‍ನ್ನು ಹವಾಮಾನ ಇಲಾಖೆ ನೀಡಿದೆ. +ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಮಲೆನಾಡು ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನಲ್ಲಿ ಎಂದಿನಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. +ಜುಲೈ ಒಂದರಿಂದ ಇಂದಿನವರೆಗೆ ರಾಜ್ಯದಲ್ಲಿ 174 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದು, 262 ಮಿ.ಮೀ.ನಷ್ಟು ಮಳೆಯಾಗಿದೆ. ಜೂನ್ ಒಂದರಿಂದ ಇದುವರೆಗೆ ರಾಜ್ಯದಲ್ಲಿ 373 ಮಿ.ಮೀ.ವಾಡಿಕೆ ಮಳೆ ಪ್ರಮಾಣವಿದ್ದು, 464 ಮಿ.ಮೀ.ನಷ್ಟು ಮಳೆಯಾಗಿದ್ದು, ಶೇ. 24ರಷ್ಟು ಅ„ಕ ಮಳೆಯಾಗಿದೆ. +ರಾಜ್ಯದಲ್ಲಿ ಜುಲೈ ಒಂದರಿಂದ ಇದುವರೆಗೆ ದಕ್ಷಿಣ ಒಳನಾಡಿನಲ್ಲಿ ಶೇ.43, ಉತ್ತರ ಒಳನಾಡಿನಲ್ಲಿ ಶೇ.20, ಮಲೆನಾಡಿನಲ್ಲಿ ಶೇ.52 ಹಾಗೂ ಕರಾವಳಿಯಲ್ಲಿ ಶೇ.65ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.ಜುಲೈ 27ರವರೆಗೆ ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಅ„ಕ ಮಳೆ ಮುಂದುವರೆಯಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಮೇಲ್ಮೈಗಾಳಿ ಬೀಸುವುದರಿಂದ ಚಳಿಯ ಅನುಭವವಾಗಲಿದೆ. ನಿರಂತರ ಮಳೆಯಾಗುತ್ತಿರುವುದರಿಂದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. +ಭರ್ತಿಯತ್ತ ಜಲಾಶಯಗಳು: ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳ ಹರಿವು ಸಾಕಷ್ಟು ಪ್ರಮಾಣದಲ್ಲಿದ್ದು, ಆಲಮಟ್ಟಿ, ನಾರಾಯಣಪುರ, ಕೆಆರ್‍ಎಸ್, ಕಬಿನಿ, ಹಾರಂಗಿ, ಹೇಮಾವತಿ ಜಲಾಶಯಗಳಲ್ಲಿ ಭರ್ತಿಯಾಗುವ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಆದರೆ, ಒಳ ಹರಿವು ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹೊರ ಹರಿವನ್ನೂ ಹೆಚ್ಚಿಸಲಾಗಿದೆ. +ಒಂದೇ ದಿನದಲ್ಲಿ ರಾಜ್ಯದ 14 ಜಲಾಶಯಗಳಿಗೆ 43.4 ಟಿಎಂಸಿ ಅಡಿಯಷ್ಟು ನೀರು ಬಂದಿದೆ. ಕಾವೇರಿ ಕೊಳ್ಳದ ಜಲಾಶಯಗಳಿಗೆ 10.8, ಕೃಷ್ಣಾ ಕೊಳ್ಳದ ಜಲಾಶಯಗಳಿಗೆ 22.4 ಹಾಗೂ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳಿಗೆ 102 ಟಿಎಂಸಿ ಅಡಿಯಷ್ಟು ನೀರು ಬಂದಿದೆ. ಲಿಂಗನಮಕ್ಕಿ, ಸೂಪ ಹಾಗೂ ವಾರಾಹಿ ಜಲಾಶಯಗಳಲ್ಲಿ ಶೇ.49ರಷ್ಟು ನೀರು ಸಂಗ್ರಹವಾಗಿದ್ದು, ಒಟ್ಟು 1,18,413 ಕ್ಯುಸೆಕ್ಸ್ ಒಳಹರಿವು ಇದೆ. ಜಲಾಶಯದಿಂದ ನೀರು ಬಿಡಲಾಗುತ್ತಿಲ್ಲ. +ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಶೇ.88ರಷ್ಟು ನೀರು ಸಂಗ್ರಹವಾಗಿದೆ. 1.25 ಲಕ್ಷ ಕ್ಯುಸೆಕ್ಸ್‍ನಷ್ಟು ಒಳಹರಿವು ಇದ್ದು, 45 ಸಾವಿರ ಕ್ಯುಸೆಕ್ಸ್‍ಗೂ ಹೆಚ್ಚು ಹೊರ ಹರಿವಿದೆ. ಕೃಷ್ಣಾ ಕೊಳ್ಳದ ಜಲಾಶಯಗಳಲ್ಲಿ ಒಟ್ಟಾರೆ ಶೇ.68ರಷ್ಟು ನೀರು ಸಂಗ್ರಹವಾಗಿದೆ. 2.58 ಲಕ್ಷ ಕ್ಯುಸೆಕ್ಸ್‍ಗೂ ಅ„ಕ ಪ್ರಮಾಣದ ಒಳ ಹರಿವಿದೆ. 73 ಸಾವಿರ ಕ್ಯುಸೆಕ್ಸ್‍ಗೂ ಹೆಚ್ಚು ನೀರನ್ನು ಜಲಾಶಯಗಳಿಂದ ಹೊರ ಬಿಡಲಾಗುತ್ತಿದೆ. +ಹೆಚ್ಚು ಕಡಿಮೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಮುಂದುವರೆಯುವ ಸಾಧ್ಯತೆ ಇದೆ. ಮಳೆ ಕೂಡ ಮುಂದುವರೆಯುವ ಮುನ್ಸೂಚನೆ ಇರುವುದರಿಂದ ಈ ತಿಂಗಳ ಅಂತ್ಯದೊಳಗೆ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆಗಳಿವೆ. \ No newline at end of file diff --git a/eesanje/url_46_68_2.txt b/eesanje/url_46_68_2.txt new file mode 100644 index 0000000000000000000000000000000000000000..065e5c94fed400d225c06b4a98b12d8febbedfdf --- /dev/null +++ b/eesanje/url_46_68_2.txt @@ -0,0 +1,4 @@ +ರೀಲ್ಸ್ ಮಾಡಿದರೆ ಅಮಾನತ್ತು: ಸಾರಿಗೆ ಸಿಬಂದ್ದಿಗೆ ಎಚ್ಚರಿಕೆ +ಬೆಂಗಳೂರು,ಜು.21- ಸಾರಿಗೆ ಬಸ್‍ಗಳಲ್ಲಿ ಇನ್ನು ಮುಂದೆ ಚಾಲಕರು ಅಥವಾ ನಿರ್ವಾಹಕರು ಅನಪೇಕ್ಷಣಿಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಗಳನ್ನು ಮಾಡಿದರೆ ಸೇವೆಯಿಂದ ಅಮಾನತ್ತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೀಡಿದೆ. ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಸಾರಿಗೆ ಸಮುಚ್ಚಯಗಳಲ್ಲಿನ ಸಿಬ್ಬಂದಿಗಳು ಇತ್ತೀಚೆಗೆ ರೀಲ್ಸ್ ಮಾಡಿ ಖ್ಯಾತಿಗಳಿಸುವ ಉಮೇದಿಗೆ ಬಿದ್ದಿದ್ದಾರೆ. +ಕೆಎಸ್‍ಆರ್‍ಟಿಸಿ ಚಾಲಕರೊಬ್ಬರು ಮಳೆ ಸುರಿಯುವಾಗ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿ ರೀಲ್ಸ್ ಚಿತ್ರೀಕರಿಸಿದ್ದರು. ಈ ವಿಡಿಯೋವನ್ನು ಮುಂದಿಟ್ಟುಕೊಂಡು ವಿಪಕ್ಷಗಳ ಮುಖಂಡರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸಿದ್ದರಾಮಯ್ಯನವರ ಸರ್ಕಾರ ಅ„ಕಾರಕ್ಕೆ ಬಂದ ಬಳಿಕ ಪಂಚಖಾತ್ರಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚು ಮಾಡುತ್ತಿದೆ. ಸಾರಿಗೆ ಸೇರಿದಂತೆ ಇತರ ನಾಗರಿಕ ಸೌಲಭ್ಯಗಳನ್ನು ನಿರ್ಲಕ್ಷಿಸಲಾಗಿದೆ. ಬಸ್‍ಗಳು ಸೋರುತ್ತಿವೆ ಎಂದು ಕೆಂಡ ಕಾರಿದ್ದರು. +ಈ ಕುರಿತು ಎಚ್ಚರಿಕೆ ಕೊಟ್ಟ ನಂತರವೂ ಚಾಲನೆಯ ಸಂದರ್ಭದಲ್ಲೇ ಬಹಳಷ್ಟು ಚಾಲಕರು ರೀಲ್ಸ್‍ಗಳನ್ನು ಮಾಡಿದ್ದರು. ಹೀರೋ ಗಿರಿ ತೋರಿಸುವ ಚಾಲಕರು, ನಿರ್ವಾಹಕರ ಈ ಹುಚ್ಚಾಟಗಳಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಈ ಸಂಬಂಧ ಹಲವಾರು ದೂರುಗಳು, ಆಕ್ಷೇಪಗಳು ಸಲ್ಲಿಕೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆ ಇನ್ನು ಮುಂದೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಕರ್ತವ್ಯದ ವೇಳೆ ಅನಪೇಕ್ಷಣೀಯವಾಗಿ ಮೊಬೈಲ್ ಬಳಕೆ ಹಾಗೂ ರೀಲ್ಸ್ ಮಾಡುವುದು ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. \ No newline at end of file diff --git a/eesanje/url_46_68_3.txt b/eesanje/url_46_68_3.txt new file mode 100644 index 0000000000000000000000000000000000000000..3eb33eb29499a40c0426cbcbc1931f7fba3896cc --- /dev/null +++ b/eesanje/url_46_68_3.txt @@ -0,0 +1,5 @@ +ಮಳೆ ಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ +ಬೆಂಗಳೂರು,ಜು.21- ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉತ್ತರಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಸಂಭವಿಸಿದ ಮಳೆ ಹಾನಿಗಳ ಪ್ರದೇಶಗಳ ವೀಕ್ಷಣೆ ನಡೆಸಿದರು. ಭಾನುವಾರ ರಜಾದಿನ ಕೂಡ ವಿಶ್ರಾಂತಿ ಪಡೆಯದೆ ಸಿಎಂ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಗಮನಸೆಳೆಯಿತು. +ಕಳೆದ ಹತ್ತು ದಿನಗಳಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ, ಮೈಸೂತು, ಕೊಡುಗು ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆಯ ವಾತಾವರಣ ಸೃಷ್ಟಿಯಾಗಿದೆ.ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರಿಂದ ಸಂಪುಟದ ಸಚಿವರು, ಶಾಸಕರು, ಮುಖ್ಯಮಂತ್ರಿಗಳು ಬೆಂಗಳೂರಿನಲ್ಲೇ ಉಳಿದಿದ್ದರು. ಈ ನಡುವೆ ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನಲ್ಲಿ ಶಿರೂರಿನಲ್ಲಿ ಭೂ ಕುಸಿತವಾಗಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. +ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಗೋವಾಕ್ಕೆ ತೆರಳಿ ಅಲ್ಲಿಂದ ರಸ್ತೆ ಮೂಲಕ ಶಿರೂರಿಗೆ ಭೇಟಿ ನೀಡಿದ್ದಾರೆ. ಮಳೆಯಿಂದ ಸಂಕಷ್ಟಕ್ಕೀಡದ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ಜಿಲ್ಲಾಡಳಿತದ ಅಧಿಕಾರಿಗಳು, ನೌಕಾದಳ, ಕರ್ನಾಟಕ ವಿದ್ಯುತ್ ಉತ್ಪಾದನಾ ಸಂಸ್ಥೆ, ರಾಷ್ಟ್ರೀಯ ವಿದ್ಯುತ್ ಉತ್ಪಾದನಾ ಸಂಸ್ಥೆ-ಕೈಗಾ ಅ„ಕಾರಿಗಳ ಜೊತೆ ಸಭೆ ನಡೆಸಲಿದ್ದು, ಹೆದ್ದಾರಿ ನಿರ್ಮಾಣದಲ್ಲಿನ ಲೋಪದೋಷಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. +ರಾಷ್ಟ್ರೀಯ ಸಂಸ್ಥೆಗಳಾದ ನೌಕಾದಳ, ಕೈಗಾ ಅ„ಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳ, ಶಾಸಕರ, ಸಚಿವರ ಮಾತಿಗೆ ಮನ್ನಣೆ ನೀಡುತ್ತಿಲ್ಲ ಎಂಬ ಆಕ್ಷೇಪಗಳಿರುವುದರಿಂದ ಇಂದು ಮುಖ್ಯಮಂತ್ರಿಯವರೇ ಸ್ಥಳಕ್ಕೆ ಭೇಟಿ ನೀಡಿ ಸಭೆ ನಡೆಸಿದ್ದಾರೆ. \ No newline at end of file diff --git a/eesanje/url_46_68_4.txt b/eesanje/url_46_68_4.txt new file mode 100644 index 0000000000000000000000000000000000000000..f692b921b0f8c0864957fdf5b713543f160ee0ad --- /dev/null +++ b/eesanje/url_46_68_4.txt @@ -0,0 +1,6 @@ +ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಕಾಂಗ್ರೆಸ್‍ನವರಿಗೆ ಕೈಕಾಲು ನಡುಗುತ್ತೆ +ಬೆಂಗಳೂರು, ಜು.21-ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದರೆ ಕಾಂಗ್ರೆಸ್‍ನವರಿಗೆ ಕೈಕಾಲು ನಡುಗುತ್ತೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸುವುದಿಲ್ಲ ಎಂದರೆ, ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ನಾನು ಕರ್ನಾಟಕಕ್ಕೆ ಬರಲೇ ಬಾರದು ಎಂಬ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ತೊಂದರೆ ಉಂಟಾದ ಕಡೆ ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಆದರೆ, ಮಂಡ್ಯಕ್ಕೆ ಹೋದರೂ ಬೇಡ ಎನ್ನುತ್ತಾರೆ. ಉತ್ತರ ಕರ್ನಾಟಕಕ್ಕೆ ಹೋಗುತ್ತೇನೆ ಎಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಎನ್ನಲಿಲ್ಲ ಎಂದು ಮೂದಲಿಸಿದ್ದಾರೆ. +ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಗುಡ್ಡ ಕುಸಿತ ಸ್ಥಳಕ್ಕೆ ನಿನ್ನೆ ಹೋದಾಗ 5 ಕಿ.ಮೀ.ದೂರದಲ್ಲೇ ತಡೆಗೋಡೆ ಇಟ್ಟು ಏನೂ ಚಿತ್ರೀಕರಣ ಮಾಡದಂತೆ ಆದೇಶ ಮಾಡಿದ್ದರು. ಆದರೆ, ಸಕಲೇಶಪುರದಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ಪಲ್ಪ ಸಹಕಾರ ಕೊಟ್ಟಿದ್ದಾರೆ ಎಂದಿದ್ದಾರೆ. +ದರೋಡೆ ನಿಲ್ಲಿಸಲು ಮಿಲಿಟರಿ:ನಾನು ಯಾರನ್ನೂ ಟೀಕೆ ಮಾಡುವುದಿಲ್ಲ. ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಆದರೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಮಿಲಿಟರಿ ತರಬೇಕೆಂದು. ಮಿಲಿಟರಿ ತರಲು ಏಕೆ ಹೇಳಿದ್ದಾರೆ ಎಂಬುದರ ಯೋಚನೆ ಮಾಡುತ್ತಿದ್ದೇನೆ. ಅವರು ಮಿಲಿಟರಿ ಏಕೆ ತರಲು ಹೇಳಿದ್ದಾರೆಂದರೆ, ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಿಂತಲೂ ಚೆನ್ನಾಗಿ ದರೋಡೆ ನಡೆಯುತ್ತಿದೆ. ದರೋಡೆ ನಿಲ್ಲಿಸಲು ಮಿಲಿಟರಿ ಕರೆ ತರಲು ಹೇಳಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. +ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು, ಮಳೆ ಹಾನಿಗೆ ಸಂಬಂ„ಸಿದಂತೆ ಯಾವ ಸರ್ಕಾರವೂ ಹತ್ತು ಲಕ್ಷ ರೂ. ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅವರಿಗೆ ಸಮಯ ಸಿಕ್ಕರೆ ಕೊಡಗಿಗೆ ಭೇಟಿ ನೀಡಲಿ. ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ತು ಲಕ್ಷ ರೂ.ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ. ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. 50 ಸಾವಿರ ರೂ.ಗಳನ್ನು ಪದಾರ್ಥ ಕೊಳ್ಳಲು ಕೊಟ್ಟಿದ್ದೇವೆ. ಗೊತ್ತಿಲ್ಲದಿದ್ದರೆ ಹೋಗಿ ನೋಡಿಕೊಂಡು ಬರಲಿ ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_68_5.txt b/eesanje/url_46_68_5.txt new file mode 100644 index 0000000000000000000000000000000000000000..0fa8b188b606656cf4a786520bfb616cba66bf71 --- /dev/null +++ b/eesanje/url_46_68_5.txt @@ -0,0 +1,5 @@ +ಡಿ.ಕೆ.ಶಿವಕುಮಾರ್ ಟೀಕೆಗೆ ಅಶೋಕ್ ತಿರುಗೇಟು +ಹಾಸನ, ಜು.21- ಉಪಮುಖ್ಯಮಂತ್ರಿಗಳೇ ಮನೆ ಬಿಟ್ಟು ಹೊರಗೆ ಬನ್ನಿ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಲ್ಲಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರೆ ಏನೂ ಪ್ರಯೋಜನ ಆಗಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. +ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗುತ್ತಿಲ್ಲ ಎನ್ನುತ್ತೀರಾ. ನೀವಾದರೂ ಬನ್ನಿ. ನಿಮಗೆ ಯೋಗ್ಯತೆ ಇಲ್ಲವೆ. ನೀವು ಬಂದು ಬೇರೆಯವರಿಗೆ ಬುದ್ಧಿ ಹೇಳಿ ಎಂದರು. ನೀವು ಕೊಡುತ್ತಿರುವುದು ಹಣ. ನೀವು ನಯಾಪೈಸಾ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇಲ್ಲಿಗೆ ಬರಲು ಹಕ್ಕಿದೆ. ಕೇಳಲು ಹಕ್ಕಿದೆ. +ಕುಮಾರಸ್ವಾಮಿಯವರು ಕೇಂದ್ರ ಮಂತ್ರಿ ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ನಾವೆಲ್ಲಾ ಒಕ್ಕೂಟದ ವ್ಯವಸ್ಥೆಯಲ್ಲಿದ್ದೇವೆ ಎಂದು ಅಶೋಕ್ ತಿರುಗೇಟು ನೀಡಿದರು. ಕುಮಾರಸ್ವಾಮಿ ಅವರ ಕೈಯಲ್ಲಿ ಆಗುವುದಿಲ್ಲ ಎಂದಾದರೆ ನೀವು ಬಂದು ಕೆಲಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿ. ಕೇಂದ್ರ ಸಚಿವರಾದ ಕುಮಾರಸ್ವಾಮಿಯವರು ದೇಶವನ್ನೆಲ್ಲಾ ಸುತ್ತಬೇಕು. ಅದರ ನಡುವೆ ಕರ್ನಾಟಕಕ್ಕೆ ಆದ್ಯತೆ ನೀಡಿ ಬರುತ್ತಿದ್ದಾರೆ. ನಿಮಗೆ ಏಕೆ ಬರಲು ಆಗುತ್ತಿಲ್ಲ. ಈ ಸರ್ಕಾರ ಸತ್ತು ಹೋಗಿದೆ. ಬದುಕಿದ್ದರೆ ತಾನೇ ಏನಾದರೂ ಕೇಳಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಗರಣಗಳಲ್ಲಿ ಸರ್ಕಾರ ಮುಳುಗಿ ಹೋಗಿದ್ದು, ಅದರಿಂದ ಉತ್ತರ ಕೊಡಲು ಆಗುತ್ತಿಲ್ಲ. ಮೊದಲು ಸರ್ಕಾರ ಬದುಕಿದೆ ಎಂಬುದನ್ನು ತೋರಿಸಲಿ ಎಂದು ಟೀಕಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್, ಸಿ.ಎನ್. ಬಾಲಕೃಷ್ಣ, ಎಚ್.ಕೆ. ಸುರೇಶ್, ಮಾಜಿ ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು. \ No newline at end of file diff --git a/eesanje/url_46_68_6.txt b/eesanje/url_46_68_6.txt new file mode 100644 index 0000000000000000000000000000000000000000..1323aea057f18486b517d815c6a991541f6789c3 --- /dev/null +++ b/eesanje/url_46_68_6.txt @@ -0,0 +1,7 @@ +ನಾಳೆ ಸದನದಲ್ಲಿ ಮುಡಾ ಪ್ರತಿಧ್ವನಿ +ಬೆಂಗಳೂರು,ಜು.21- ಕಳೆದ ವಾರವಿಡೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ವಿಧಾನಸಭೆಯ ಕಲಾಪವನ್ನು ಆಪೋಶನ ತೆಗೆದುಕೊಂಡಿದ್ದು, ನಾಳೆಯಿಂದ ನಡೆಯುವ 2ನೇ ವಾರದ ಕಲಾಪದಲ್ಲಿ ಮುಡಾ ಹಂಚಿಕೆ ಹಗರಣವು ಸೇರ್ಪಡೆಯಾಗುವ ಸಾಧ್ಯತೆ ಇದೆ.ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಅಕ್ರಮವಾಗಿ 89.60 ಕೋಟಿ ರೂ. ವರ್ಗಾವಣೆಯಲ್ಲಿ ಎಸ್‍ಐಟಿ, ಸಿಬಿಐ, ಜಾರಿನಿರ್ದೇಶನಾಲಯಗಳು ತನಿಖೆ ನಡೆಸುತ್ತಿವೆ. ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ಆದಿಯಾಗಿ ಎಲ್ಲಾ ಪ್ರಮುಖ ಆರೋಪಿಗಳ ಬಂಧನವಾಗಿದೆ. +ವಿರೋಧ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರಾಜೀನಾಮೆನೀಡಬೇಕೆಂದು ಒತ್ತಾಯಿಸಿ ವಿಧಾನಸಭೆಯಲ್ಲಿ 2 ದಿನಗಳ ಕಾಲ ಧರಣಿ ನಡೆಸಿದೆ. ಒಂದು ವಾರದ ನಡೆದ ಚರ್ಚೆಗೆ ಸಿದ್ದರಾಮಯ್ಯನವರು ಲಿಖಿತವಾಗಿ ಉತ್ತರ ನೀಡಿ, ಯೂನಿಯನ್ ಬ್ಯಾಂಕ್ ರಾಷ್ಟ್ರೀಕೃತವಾಗಿದ್ದು, ಅಲ್ಲಿ ಹಣದ ಕಳ್ಳತನ ನಡೆದಿದೆ. ಇದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಣೆ ಹೊರುತ್ತಾರೆಯೇ ಎಂದು ತಿರುಗೇಟು ನೀಡುವ ಮೂಲಕ ವಿರೋಧ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. +ಜೊತೆಗೆ ಬಿಜೆಪಿ ಅವಧಿಯಲ್ಲಿ ನಡೆದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ತಿರುಗೇಟು ನೀಡಿದ್ದಾರೆ. ಬಹುತೇಕ ಈ ವಿಚಾರ ಮುಗಿದ ಅಧ್ಯಾಯದಂತಾಗಿದೆ. ಆದರೂ ವಿರೋಧ ಪಕ್ಷಗಳು ಸೋಮವಾರ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನೇ ಮುಂದುವರೆಸುತ್ತಾರೆಯೇ ಅಥವಾ ಹೊಸ ವಿಚಾರಗಳತ್ತ ಗಮನಹರಿಸುತ್ತಾರೆಯೇ ಎಂಬುದು ಕಾದು ನೋಡಬೇಕಿದೆ. +ಮೂಲಗಳ ಪ್ರಕಾರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮುಡಾ ಹಗರಣದ ಚರ್ಚೆಗೆ ಆಸಕ್ತಿ ವಹಿಸಿವೆ. ವಿರೋಧ ಪಕ್ಷಗಳು ನಿಲುವಳಿ ಸೂಚನೆಯಡಿ ಈ ವಿಚಾರವನ್ನು ಪ್ರಸ್ತಾಪಿಸಿದರೆ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿರುವುದರಿಂದ ಚರ್ಚೆಗೆ ಅವಕಾಶ ಇಲ್ಲ ಎಂದು ನಿಲುವಳಿಯನ್ನು ತಳ್ಳಿ ಹಾಕುವ ಸಾಧ್ಯತೆಗಳಿವೆ.ಸಾರ್ವಜನಿಕ ಮಹತ್ವದ ವಿಚಾರವನ್ನಾಗಿ ಚರ್ಚೆಗೆ ಅವಕಾಶ ನೀಡುವ ಪರಿಸ್ಥಿತಿಗಳು ಕ್ಷೀಣವಾಗಿವೆ. ವಿಪಕ್ಷಗಳು ಕಳೆದ ವಾರ ಪೂರ್ತಿ ನಿಗಮದ ಹಗರಣ ಬಿಟ್ಟು ಬೇರೆ ಯಾವುದೇ ಗಂಭೀರ ವಿಚಾರಗಳನ್ನು ಪ್ರಸ್ತಾಪಿಸಿಲ್ಲ.ಮುಡಾ ಹಗರಣವೊಂದು ಮುನ್ನಲೆಗೆ ಬಂದರೆ ಮಿಕ್ಕಾ ಎಲ್ಲಾ ವಿಚಾರಗಳು ನೇಪಥ್ಯಕ್ಕೆ ಸರಿಯುವ ಆತಂಕವಿದೆ. ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಸುಮಾರು 1 ಸಾವಿರಕ್ಕೂ ಹೆಚ್ಚು ಕಡೆ ಭೂ ಕುಸಿತಗಳಾಗಿವೆ. +ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ವಿದ್ಯುತ್ ಕಂಬ, ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ. ಹತ್ತಕ್ಕೂ ಹೆಚ್ಚು ಜೀವಹಾನಿಯಾಗಿದೆ. ಜಾನುವಾರುಗಳ ಹಾನಿಯ ಬಗ್ಗೆ ಸಮೀಕ್ಷೆ ನಡೆಯುತ್ತಿವೆ. ಜನರಸಾಮಾನ್ಯರ ಮನೆ ಕುಸಿದು ಬದುಕು ಬೀದಿಗೆ ಬಿದ್ದಿದೆ. ಪರಿಸ್ಥಿತಿ ಗಂಭೀರವಾಗಿದ್ದರೂ ವಿಧಾನಸಭೆಯಲ್ಲಿ ಈ ಬಗ್ಗೆ ಹೆಚ್ಚಿನ ಚರ್ಚೆಗಳಾಗಿಲ್ಲ. ಉತ್ತರಕನ್ನಡ ಜಿಲ್ಲೆ ಶಿರೂರಿನಲ್ಲಿ ಭೂಕುಸಿತವಾಗಿ ಹೆದ್ದಾರಿ ಬಂದಾಗಿದ್ದು, ಏಳೆಂಟು ಮಂದಿ ಜೀವ ಹಾನಿಯಾಗಿದೆ. ಈ ವಿಚಾರವನ್ನು ಆಡಳಿತ ಪಕ್ಷದ ಶಾಸಕರೇ ಪ್ರಸ್ತಾಪಿಸಿದ್ದರು. +ವಿರೋಧ ಪಕ್ಷಗಳು ಜನಸಾಮಾನ್ಯರನ್ನು ಕಾಡುತ್ತಿರುವ ಗಂಭೀರ ವಿಚಾರಗಳ ಬಗ್ಗೆ ಚಕಾರ ಎತ್ತದೆ ರಾಜಕೀಯ ಕಾರಣಕ್ಕಾಗಿ ವಾಲ್ಮೀಕಿ ನಿಗಮ ಹಾಗೂ ಮುಡಾದಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಆಡಳಿತ ಪಕ್ಷ ತಿರುಗೇಟು ನೀಡುತ್ತಿದೆ. ಒಟ್ಟಿನಲ್ಲಿ ನಾಳೆಯಿಂದ ನಡೆಯುವ ವಿಧಾನಮಂಡಲ ಕಲಾಪ ಮತ್ತಷ್ಟು ಕಾವೇರುವ ಸಾಧ್ಯತೆ ಇದೆ. ಗಲಾಟೆ, ಗದ್ದಲದ ನಡುವೆ ಕೆಲ ಮಸೂದೆಗಳು ಚರ್ಚೆಯಾಗದೆ ಅಂಗೀಕಾರಗೊಳ್ಳುವ ದುಗುಡವೂ ಕಾಡುತ್ತಿದೆ. \ No newline at end of file diff --git a/eesanje/url_46_68_7.txt b/eesanje/url_46_68_7.txt new file mode 100644 index 0000000000000000000000000000000000000000..854acac49d2418abd84093e3b8524b67e0e43a6d --- /dev/null +++ b/eesanje/url_46_68_7.txt @@ -0,0 +1,7 @@ +ರಾಜ್ಯದಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ +ಬೆಂಗಳೂರು, ಜು.21- ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿರುವ ಹಿನ್ನೆಲೆಯಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ. ಕೇರಳದ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರ ನಿರ್ಮಾಣವಾಗಿದೆ. ಅಲ್ಲದೇ ಮೇಲ್ಮೈ ಸುಳಿಗಾಳಿಯು ಉಂಟಾಗಿದೆ. +ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ವಾತಾವರಣದಲ್ಲಾಗಿರುವ ಈ ರೀತಿಯ ಬದಲಾವಣೆಯಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬೀಳುತ್ತಿರುವ ಭಾರೀ ಮಳೆ ಮುಂದುವರೆಯಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಮಳೆ ಹೆಚ್ಚಾಗುವ ಮುನ್ಸೂಚನೆಗಳಿವೆ. +ನಿರಂತರ ಭಾರೀ ಮಳೆಯಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿವೃಷ್ಟಿ ಉಂಟಾಗಿದ್ದು, ಗುಡ್ಡ ಕುಸಿತ, ಮನೆ, ರಸ್ತೆ, ವಿದ್ಯುತ್ ಸಂಪರ್ಕಗಳಿಗೆ ಹಲವೆಡೆ ಹಾನಿಯಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದ ಕಾವೇರಿ, ಕಪಿಲಾ, ಹೇಮಾವತಿ, ನೇತ್ರಾವತಿ, ಕೃಷ್ಣಾ, ತುಂಗಾಭದ್ರಾ ಮೊದಲಾದ ನದಿಗಳು ಮೈದುಂಬಿ ಹರಿಯುತ್ತಿವೆ. ಕಾವೇರಿ ಮತ್ತು ಕೃಷ್ಣಾ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಮಳೆ ಹೆಚ್ಚಾಗುವ ಮುನ್ಸೂಚನೆ ಇರುವುದರಿಂದ ನದಿಗಳ ನೀರಿನ ಪ್ರಮಾಣವೂ ಹೆಚ್ಚಾಗಲಿದೆ. +ಜಲ ವಿದ್ಯುತ್ ಉತ್ಪಾದಿಸುವ ಉದ್ದೇಶದ ಜಲಾಶಯಗಳನ್ನು ಹೊರತುಪಡಿಸಿ ಉಳಿದ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಸಾಕಷ್ಟು ಒಳಹರಿವು ಇರುವುದರಿಂದ ಹೆಚ್ಚಿನ ಪ್ರಮಾಣದ ನೀರನ್ನು ಕೃಷ್ಣಾ ಹಾಗೂ ಕಾವೇರಿ ಕೊಳ್ಳದ ಜಲಾಶಯಗಳಿಂದ ನದಿ ಬಿಡಲಾಗುತ್ತಿದೆ. ಹೀಗಾಗಿ ರಾಜ್ಯವು ಅತಿವೃಷ್ಟಿಯ ಜೊತೆಗೆ ಪ್ರವಾಹ ಪರಿಸ್ಥಿತಿ ಎದುರಿಸುವಂತಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಜೋರಾದ ಗಾಳಿಯೊಂದಿಗೆ ಅತಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ವಾರಾಂತ್ಯಕ್ಕೆ ಮಳೆ ಕಡಿಮೆಯಾಗುವ ಮುನ್ಸೂಚನೆಗಳಿವೆ. +ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಲಕ್ಷಣಗಳಿವೆ. ಕರಾವಳಿಯಂತೆ ದಕ್ಷಿಣ ಒಳನಾಡಿನಲ್ಲೂ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಜತೆಗೆ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ. ಹೀಗಾಗಿ ರಾಜ್ಯ ಅತಿವೃಷ್ಟಿ, ಪ್ರವಾಹದ ಸಂಕಷ್ಟಕ್ಕೆ ಸಿಲುಕಿದೆ. \ No newline at end of file diff --git a/eesanje/url_46_68_8.txt b/eesanje/url_46_68_8.txt new file mode 100644 index 0000000000000000000000000000000000000000..848920e362d3ab4a2d9104e99ec356eb0b2b49fe --- /dev/null +++ b/eesanje/url_46_68_8.txt @@ -0,0 +1,5 @@ +ಕೇರಳದ 14 ವರ್ಷದ ಬಾಲಕನಿಗೆ ನಿಫಾ ಸೋಂಕು +ತಿರುವಂತನಪುರಂ,ಜು.21- ಕೇರಳದಲ್ಲಿ ನಿಫಾ ಸೋಂಕು ಕಾಣಿಸಿಕೊಂಡಿದೆ. ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಪಕ್ಷಿಗಳು ಅಥವಾ ಪ್ರಾಣಿಗಳು ಕಚ್ಚಿದ ಹಣ್ಣುಗಳನ್ನು ಜನ ತಿನ್ನದಂತೆ ರಾಜ್ಯ ಆರೋಗ್ಯ ಇಲಾಖೆ ಜನರಿಗೆ ಎಚ್ಚರಿಕೆ ನೀಡಿದೆ. +ನಿಫಾ ವೈರಸ್ ಸೋಂಕು ಹಂದಿಗಳು ಮತ್ತು ಹಣ್ಣಿನ ಬಾವಲಿಗಳಂತಹ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಝೂನೋಟಿಕ್ ಕಾಯಿಲೆಯಾಗಿದೆ. ನಿಫಾ ಸಾಮಾನ್ಯವಾಗಿ ಪ್ರಾಣಿಗಳಿಂದ ಅಥವಾ ಕಲುಷಿತ ಆಹಾರದ ಮೂಲಕ ಮನುಷ್ಯರಿಗೆ ಹರಡುತ್ತದೆ. +ಇದರ ರೋಗಲಕ್ಷಣಗಳು ತೀವ್ರವಾದ ಜ್ವರ, ವಾಂತಿ ಮತ್ತು ಉಸಿರಾಟದ ಸೋಂಕನ್ನು ಒಳಗೊಂಡಿರುತ್ತವೆ, ಆದರೆ ತೀವ್ರತರವಾದ ಪ್ರಕರಣಗಳಲ್ಲಿ ರೋಗಗ್ರಸ್ತವಾಗುವಿಕೆಗಳು ಮತ್ತು ಮೆದುಳಿನ ಉರಿಯೂತವು ಕೋಮಾಗೆ ಕಾರಣವಾಗುತ್ತದೆ. ನಿಪಾಗೆ ಯಾವುದೇ ಲಸಿಕೆ ಇಲ್ಲ. +ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿರುವ ಬಾಲಕನಿಗೆ ಸೋಂಕು ತಗುಲಿರುವುದನ್ನು ಪುಣೆಯ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ ವೈರಾಲಜಿ ದೃಢಪಡಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.ಅವರನ್ನು ಕೋಝಿಕ್ಕೋಡ್‍ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗುವುದು. ಸಂಪರ್ಕ ಪತ್ತೆಹಚ್ಚುವಿಕೆ ಪ್ರಾರಂಭವಾಗಿದೆ. ಹೆಚ್ಚಿನ ಅಪಾಯದ ಸಂಪರ್ಕಗಳನ್ನು ಈಗಾಗಲೇ ಪ್ರತ್ಯೇಕಿಸಲಾಗಿದೆ ಮತ್ತು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಾರ್ಜ್ ತಿಳಿಸಿದ್ದಾರೆ. \ No newline at end of file diff --git a/eesanje/url_46_68_9.txt b/eesanje/url_46_68_9.txt new file mode 100644 index 0000000000000000000000000000000000000000..5a2b5b91b188d5e66b03f11beaa01b1cf24f8ab7 --- /dev/null +++ b/eesanje/url_46_68_9.txt @@ -0,0 +1,9 @@ +ತಾಕತ್ತಿದ್ದರೆ ಇ.ಡಿ ವಿರುದ್ಧ ಸಿದ್ದರಾಮಯ್ಯ ದೂರು ನೀಡಲಿ : ಆರ್. ಅಶೋಕ್ ಸವಾಲು +ಬೆಂಗಳೂರು,ಜು.20- ಒಂದು ವೇಳೆ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿಕೊಂಡಿಲ್ಲ ಎನ್ನುವುದಾದರೆ ಜಾರಿ ನಿರ್ದೇಶನಾಲಯ (ಇ.ಡಿ) ವಿರುದ್ಧ ತಾಕತ್ತಿದ್ದರೆ ದೂರು ದಾಖಲಿಸಲಿ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಎಸೆದಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಿದೆ ಎಂದು ಇ.ಡಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಇದನ್ನು ನಿರಾಕರಿಸುವುದಾದರೆ ಇ.ಡಿ ವಿರುದ್ಧ ದೂರು ದಾಖಲಿಸುವ ತಾಕತ್ತು ಇಲ್ಲವೇ ಎಂದು ಪ್ರಶ್ನೆ ಮಾಡಿದರು. +ಇ.ಡಿ ವಶದಲ್ಲಿರುವ ಮಾಜಿ ಸಚಿವ ನಾಗೇಂದ್ರ ನನ್ನ ಹೆಸರು ಬಾಯಿಬಿಟ್ಟರೆ ಬುಡಕ್ಕೆ ಬರಬಹುದು ಎಂಬ ಆತಂಕದಿಂದಲೇ ನೋಟಿಸ್ ನೀಡುವ ಮೊದಲೇ ಜಾಮೀನು ತೆಗೆದುಕೊಳ್ಳಲು ಮುಂದಾಗಿದ್ದಾರೆ.ನನ್ನ ಹೆಸರು ಹೇಳಿ ಎಂದು ನಾಗೇಂದ್ರ ಮೇಲೆ ಇ.ಡಿಯವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿರುವುದು ನಾಚಿಕೆಗೇಡಿನ ಸಂಗತಿ. ಒಬ್ಬ ಅಧಿಕಾರಿ ಕನಿಷ್ಟ ಎಂದರೂ 50 ಲಕ್ಷ ನುಂಗಬಹುದು. ನಿಗಮದ ಅಧಿಕಾರಿಗಳಾದ ಪದ್ಮನಾಭ ಮತ್ತು ಪರಶುರಾಮ ನಡೆಸಿರುವ ಸಂಭಾಷಣೆ ಬಿಡುಗಡೆಯಾದ ಮೇಲೂ ನಾಗೇಂದ್ರನನ್ನು ಸಮರ್ಥಿಸಿಕೊಳ್ಳುತ್ತಿರುವ ಸಿದ್ದರಾಮಯ್ಯನವರ ಮರ್ಮ ಎಲ್ಲರಿಗೂ ಅರ್ಥವಾಗುತ್ತದೆ ಎಂದು ವ್ಯಂಗ್ಯವಾಡಿದರು. +40 ಕೋಟಿ ಚೆಕ್ ಕೊಟ್ಟಿರುವುದು ಸುಳ್ಳೇ? ದೂರವಾಣಿ ಸಂಭಾಷಣೆ ನಡೆಸಿರುವುದು ಸುಳ್ಳೇ? ಡೆತ್‍ನೋಟ್ ಕೂಡ ಸುಳ್ಳು ಎಂದು ಹೇಳಬೇಕಿತ್ತು. ಬರೀ ಪದ್ಮನಾಭ ಎಂದು ಸಿಎಂ ಹೇಳಿದರೂ ಅಲ್ಲಿಂದ ಮುಂದಕ್ಕೆ ಹೋಗಲೇ ಇಲ್ಲ ಎಂದು ತರಾಟೆಗೆ ತೆಗೆದುಕೊಂಡರು. +ನಾವು ವಾಲ್ಮೀಕಿ ಹಗರಣದ ಬಗ್ಗೆ ಮಾತನಾಡಿದರೆ ಸಿದ್ದರಾಮಯ್ಯನವರು ಬಿಜೆಪಿ ಹಗರಣದ ಬಗ್ಗೆ ಮಾತನಾಡುತ್ತಿದ್ದಾರೆ. ಅ„ಕಾರಕ್ಕೆ ಬಂದು ಒಂದು ವರ್ಷವಾಯಿತು. ನಮ್ಮ ಮೇಲೆ 40% ಆರೋಪ ಮಾಡಿದ್ದೀರಿ. 15 ತಿಂಗಳು ಏನು ಮಾಡುತ್ತಿದ್ದೀರಿ? ನೀವು, ರಾಹುಲ್ ಗಾಂ„ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ ನಿಂತಿರಲಿಲ್ಲವೇ ಎಂದು ಪ್ರಶ್ನೆ ಮಾಡಿದರು. ಬಿಜೆಪಿ ಸರ್ಕಾರದ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದೀರಿ. ಬಂದ ಮೂರು ತಿಂಗಳಲ್ಲಿ ಅಫಿಡೆವಿಟ್ ಸಲ್ಲಿಸಿದಾಯಿತು. ಮೂರಾಯ್ತು, ಆರಾಯ್ತು, 15 ತಿಂಗಳಾಯ್ತು ವರದಿ ಎಲ್ಲಿ ಹೋಯ್ತು ಎಂದು ಪ್ರಶ್ನೆಗಳ ಪ್ರಶ್ನೆ ಮಾಡಿದರು. +ಸಿದ್ದರಾಮಯ್ಯನವರೇ ನಿಮಗೆ ಉಳಿದಿರುವುದು ಕೇವಲ ಮೂರುವರೆ ವರ್ಷ ಮಾತ್ರ. ನಮ್ಮ ಮೇಲೆ ನೀವು 20 ಹಗರಣಗಳ ಆರೋಪ ಮಾಡಬಹುದು. ನಾವು ನಿಮ್ಮ ಮೇಲೆ 70 ಹಗರಣಗಳ ಸಾಕ್ಷಿ ಸಮೇತ ಬುಕ್ ಬಿಡುಗಡೆ ಮಾಡುತ್ತೇವೆ. ಇದು ಸಿಎಜಿ ವರದಿಯ ಲೆಕ್ಕಗಳೆಂದು ಅಶೋಕ್ ಪುಸ್ತಕವನ್ನು ಬಿಡುಗಡೆ ಮಾಡಿದರು.ನಿಗಮದಲ್ಲಿರುವ ಹಣವನ್ನು ಕರ್ನಾಟಕದ ಬಾರ್‍ಗಳಿಗೆ ಹಾಕಿಸಿದರೆ ಗೊತ್ತಾಗಬಹುದೆಂಬ ಕಾರಣದಿಂದ ತೆಲಂಗಾಣದ ಬಾರ್‍ಗೆ ಹಾಕಿಸಿದ್ದೀರಿ. ಹಣವನ್ನು ಡ್ರಾ ಮಾಡಿಕೊಂಡಿದ್ದೀರಿ. ರಾಜ್ಯ ಸರ್ಕಾರವೇ ಹಣವನ್ನು ತುಂಬಬೇಕು. ಜೈಲಿನಲ್ಲಿರುವ ನಾಗೇಂದ್ರನನ್ನು ಏಕೆ ಬಿಡಿಸಿಕೊಂಡು ಬಂದಿಲ್ಲ ಎಂದು ಪ್ರಶ್ನಿಸಿದರು. +ಎಸ್‍ಐಟಿ ರಚನೆ ಮಾಡಿದ್ದೇ ಈ ಹಗರಣವನ್ನು ಮುಚ್ಚಿ ಹಾಕಲು. ಇದು ನಿಜವಾದ ಎಸ್‍ಐಟಿಯೇ ಅಲ್ಲ. ಸಿದ್ದರಾಮಯ್ಯ, ಶಿವಕುಮಾರ್, ಸುರ್ಜೆವಾಲ ಕೃಪಾಪೆÇೀಷಿತ ನಾಟಕ ಮಂಡಳಿ. ಒಂದು ತಿಂಗಳಾದರೂ ಹಗರಣದ ಪ್ರಮುಖ ಆರೋಪಿಗಳಿಗೆ ನೋಟಿಸ್ ಕೊಡಲಿಲ್ಲ. ಸಾಹೇಬ್ರು ಹೇಳಿದ ಮೇಲೆ ನಾವೇನು ಮಾಡುವುದು ಎಂದು ವಿಚಾರಣೆಯನ್ನು ಕಬೋರ್ಡ್‍ಗೆ ಹಾಕಲು ಅ„ಕಾರಿಗಳು ಮುಂದಾಗಿದ್ದರು ಎಂದು ದೂರಿದರು.ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಜೈಲಿಗೆ ಹಾಕಲಾಯಿತು. ಆದರೆ ವಾಲ್ಮೀಕಿ ಹಗರಣವನ್ನು ಮುಚ್ಚಲು ಮುಂದಾಗಿದ್ದರು. ಸಿದ್ದರಾಮಯ್ಯನವರು ಎಷ್ಟು ಹತಾಶರಾಗಿದ್ದಾರೆ ಎಂದರೆ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸರ್ಕಾರದ ಪ್ರಹ್ಲಾದ್ ಜೋಷಿ, ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೆಸರೇಳಿದ್ದಾರೆ. ಹಣವನ್ನು ನುಂಗಿ ನೀರು ಕುಡಿದಿರುವ ಇವರು ಈಗ ಕಂಡ ಕಂಡವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. +ನಾಳೆ ಭೇಟಿ: ರಾಜ್ಯದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶದಲ್ಲಿ ನಾನು ಮತ್ತು ಕುಮಾರಸ್ವಾಮಿ ನಾಳೆ ಭೇಟಿ ಕೊಡುತ್ತೇವೆ. ಅನೇಕ ಕಡೆ ಅನಾಹುತ ಸಂಭವಿಸಿದರೂ ಸಂಬಂಧಪಟ್ಟ ಸಚಿವರು ಭೇಟಿ ನೀಡಿಲ್ಲ. ಜನರು ತತ್ತರಿಸಿ ಹೋಗಿದ್ದಾರೆ. ಮಳೆ ಬಂದು 15 ದಿನವಾಗಿದೆ. ಸರ್ಕಾರದ ಕತ್ತೆ ಕಾಯುತ್ತಿದೆಯೇ ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_69_1.txt b/eesanje/url_46_69_1.txt new file mode 100644 index 0000000000000000000000000000000000000000..1df21ce460a6a957e7a6fd456bcfceb217b06e1c --- /dev/null +++ b/eesanje/url_46_69_1.txt @@ -0,0 +1,8 @@ +ಧಾರಾಕಾರ ಮಳೆಗೆ ಧರೆಗುರುಳಿದ ಮನೆಗಳು +ಬೆಂಗಳೂರು,ಜು.20- ಕಳೆದ 15 ದಿನಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಹುಬ್ಬಳ್ಳಿ, ಬೆಳಗಾವಿ, ಹಾಸನ, ಶಿವಮೊಗ್ಗ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಮನೆಗಳು ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿದೆ. ಬೆಳಗಾವಿಯಲ್ಲಿ ಮಳೆಯಿಂದಾಗಿ ಅನಾಹುತಗಳು ಹೆಚ್ಚಾಗಿವೆ. ಎರಡು ಗ್ರಾಮಗಳಲ್ಲಿ ಮನೆ ಕುಸಿದು ಕುಟುಂಬಸ್ಥರು ಬೀದಿ ಪಾಲಾಗಿದ್ದಾರೆ. +ಅದರಲ್ಲೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹೊಸಟ್ಟಿಯಲ್ಲಿ ಮನೆ ಕುಸಿಯುವ ಮುನ್ನ 2 ಇಟ್ಟಿಗೆಗಳು ಬಿದ್ದಿದ್ದು ಎಚ್ಚೆತ್ತ ಕುಟುಂಬಸ್ಥರು ಓಡಿ ಆಚೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ಅದೃಷ್ಟವಶಾತ್ ಎರಡು ಇಟ್ಟಿಗೆಗಳಿಂದಾಗಿ ಇಡೀ ಕುಟುಂಬ ಸಾವಿನ ದವಡೆಯಿಂದ ಪಾರಾಗಿದೆ. +ಪರಿಹಾರದ ನಿರೀಕ್ಷೆ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಅನಾಹುತಗಳು ಹೆಚ್ಚಾಗ್ತಿವೆ. ಸದ್ಯ ಬಿದ್ದ ಮನೆಯಲ್ಲಿಯೇ ನಿಂಗಪ್ಪ ಕಮತಗಿ ಕುಟುಂಬ ಬೇರೆ ದಾರಿ ಇಲ್ಲದೆ ವಾಸಿಸುವಂತಾಗಿದೆ. ಮನೆಯ ಒಂದು ಗೋಡೆ ಉರುಳಿ ಬಿದ್ದು ಅವಾಂತರವಾಗಿದೆ. ಮನೆಯ 11 ಜನ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಕಮತಗಿ ಕುಟುಂಬ ಸರ್ಕಾರದಿಂದ ಸಿಗುವ ಪರಿಹಾರದ ನಿರೀಕ್ಷೆಯಲ್ಲಿದೆ. +ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನಲೆಯಲ್ಲಿ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಆಯಾ ತಾಲೂಕಿನ ತಹಶೀಲ್ದಾರ್‍ಗಳು ರಜೆ ಘೋಷಣೆ ಮಾಡಿದ್ದಾರೆ. ಧಾರಾಕಾರ ಮಳೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಗಾಂಧಿನಗರದಲ್ಲಿ 3 ಮನೆಗಳು ಧರೆಗುರುಳಿವೆ. +ನವಲಗುಂದ: ಪಟ್ಟಣದಬಸವೇಶ್ವರ ನಗರದ ನಿವಾಸಿಯಾದ ಗೌರಮ್ಮ ಅನುರಾಜ್ ಕುಂಕುಮಗಾರ ಅವರ ಮನೆ ಸತತ ಮಳೆಯಿಂದಾಗಿ ರಾತ್ರಿ ಮನೆ ಕುಸಿದು ಮನೆಯಲ್ಲಿನ ಸಂಪೂರ್ಣ ವಸ್ತುಗಳು ಹಾಳಾಗಿವೆ. +ಹಾಸನ: ಭಾರೀ ಮಳೆಯ ಪರಿಣಾಮ ಮನೆ ಹಾಗೂ ಕೊಟ್ಟಿಗೆ ಕುಸಿದುಬಿದ್ದು ಮೂರು ಹಸುಗಳು ದಾರುಣವಾಗಿ ಮೃತಪಟ್ಟಿದ್ದು, ಅದೃಷ್ಟವಶಾತ್ ಮನೆ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೇಲೂರು ತಾಲ್ಲೂಕು ಮಾದೀಹಳ್ಳಿ ಹೋಬಳಿ ಸಂಕೇನಹಳ್ಳಿ ಗ್ರಾಮದ ಅಣ್ಣಪ್ಪ ಶೆಟ್ಟಿ ಮತ್ತು ರತ್ನಮ್ಮ ಎಂಬವರ ಮನೆ ಇಂದು ಮುಂಜಾನೆ ಇದ್ದಕ್ಕಿದ್ದಂತೆ ನೆಲಕ್ಕುರಳಿದೆ. ಮನೆಗೆ ಹೊಂದಿಕೊಂಡಂತಿದ್ದ ಕೊಟ್ಟಿಗೆಯಲ್ಲಿ ಮಲಗಿದ್ದ ಮೂರು ಹಸುಗಳುಸಾವನ್ನಪ್ಪಿವೆ. +ಮನೆಯಲ್ಲಿದ್ದ ಟಿ.ವಿ. ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು, ದವಸ ಧಾನ್ಯಗಳು ಮಣ್ಣುಪಾಲಾಗಿವೆ. ಮನೆ ಗೋಡೆ ನೆಲಕ್ಕುರುಳಿದ ರಭಸಕ್ಕೆ ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳು ಸಾವನ್ನಪ್ಪಿದ್ದು ಮಣ್ಣಿನಡಿ ಸಿಲುಕಿದರು ಹಸುಗಳ ದೇಹ ಕಂಡು ಮಾಲಕಿ ರತ್ನಮ್ಮ ದುಃಖಿಸುವ ದೃಶ್ಯ ಕರುಳು ಚುರುಕ್ ಎನ್ನಿಸುವಂತಿತ್ತು. \ No newline at end of file diff --git a/eesanje/url_46_69_10.txt b/eesanje/url_46_69_10.txt new file mode 100644 index 0000000000000000000000000000000000000000..7115e38b130743c5e45b0e2c815a2e4eb7849862 --- /dev/null +++ b/eesanje/url_46_69_10.txt @@ -0,0 +1,5 @@ +ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಭಕ್ತಾದಿಗಗಳಿಗೆ ಕಡ್ಡಾಯ ವಸ್ತ್ರಸಂಹಿತೆ +ಶೃಂಗೇರಿ: ಶೃಂಗೇರಿ ಶ್ರೀ ಶಾರದಾ ಪೀಠವು ಆಗಸ್ಟ್ 15 – 2024 ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರುವಂತೆ ಸೂಚಿಸಿ ಆಡಳಿತಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಭಾರತೀಯ ಸಾಂಪ್ರದಾಯಕವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಶ್ರೀ ಶಾರದಾಂಬೆ ದೇವಸ್ಥಾನದ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಅಂತವರು ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ. +ಪುರುಷರಾದಲ್ಲಿ ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ – ದುಪಟ್ಟ ಅಥವಾ ಲಂಗ ದಾವಣಿಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ದೇವರ ದರ್ಶನ ಮಾಡಬಹುದು. +ಶೃಂಗೇರಿ ಮಠದ ಈ ಆದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಅರ್ಧಂಬರ್ಧ ಬಟ್ಟೆ ತೊಟ್ಟು ಕೆಲವು ಬುದ್ಧಿಹೀನರು ಪಿಕ್ನಿಕ್ ಸ್ಪಾಟ್ ನಂತೆ ದೇವಾಲಯಗಳನ್ನು ಪ್ರವೇಶಿಸುತ್ತಾರೆ. ಇಂತಹ ನಿಯಮಗಳಿಂದ ಅದಕ್ಕೆ ಕಡಿವಾಣ ಹಾಕಬಹುದು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_69_11.txt b/eesanje/url_46_69_11.txt new file mode 100644 index 0000000000000000000000000000000000000000..af752d8bd8409ab0344b89691ccf7d1f009776b0 --- /dev/null +++ b/eesanje/url_46_69_11.txt @@ -0,0 +1,8 @@ +ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕಳಪೆ ಮೊಟ್ಟೆ ತಿಂದು ನೋಡಿ ಎಂದ ಸಭಾಪತಿ +ಬೆಂಗಳೂರು,ಜು.19- ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರೈಕೆಯಾಗುತ್ತಿರುವ ಕಳಪೆ ಆಹಾರದ ಕುರಿತು ಒಂದು ಬಾರಿ ಸಚಿವರು ಮೊಟ್ಟೆ ತಿಂದು ನೋಡಿದರೆ ಅಲ್ಲಿನ ಪರಿಸ್ಥಿತಿ ಹೇಗಿದೆ ಎಂಬುದು ನಿಮಗೆ ಅರ್ಥವಾಗುತ್ತದೆ ಎಂದು ಸಭಾಪತಿ ಹೊರಟ್ಟಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸೂಚಿಸಿದ ಪ್ರಸಂಗ ವಿಧಾನಪರಿಷತ್‌ನಲ್ಲಿ ನಡೆಯಿತು. +ಪ್ರಶ್ನೋತ್ತರ ಸಂದರ್ಭದಲ್ಲಿ ಸದಸ್ಯೆ ಹೇಮಲತಾ ನಾಯಕ್‌ ಅವರು ಅಂಗನವಾಡಿಗಳಿಗೆ ಪೂರೈಕೆಯಾಗುತ್ತಿ ರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಗಮನ ಸೆಳೆದರು. +ಮಕ್ಕಳಿಗೆ ನಮ ಸರ್ಕಾರ ಪೌಷ್ಟಿಕಾಂಶವುಳ್ಳ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಸಂಬಂಧ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ಸಭೆ ನಡೆಸಿದ್ದರೆಂದು ಹೇಳಿದರು. ಇದಕ್ಕೆ ಆಕ್ಷೇಪಿಸಿದ ಹೇಮಲತಾ ನಾಯಕ್‌ ಅನೇಕ ಅಂಗನವಾಡಿಗಳಲ್ಲಿ ಕಳಪೆ ಗುಣಮಟ್ಟದ ಆಹಾರಗಳನ್ನು ಪೂರೈಕೆ ಮಾಡಲಾಗುತ್ತಿದೆ. ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ಸೇರಿದಂತೆ ಎಲ್ಲವೂ ಕಳಪೆಯಾಗಿವೆ. ತಿನ್ನಲು ಯೋಗ್ಯವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು. +ಆಗ ಹೆಬ್ಬಾಳ್ಕರ್‌ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಳ್ಳಲು ಮುಂದಾದಾಗ ಮಧ್ಯಪ್ರವೇಶಿಸಿದ ಬಸವರಾಜ ಹೊರಟ್ಟಿ, ನೀವು ಮೊಟ್ಟೆಯನ್ನು ತಿನ್ನುತ್ತೀರಾ? ಒಂದು ಬಾರಿ ತಿಂದರೆ ನಿಮಗೆ ಗೊತ್ತಾಗುತ್ತದೆ ಎಂದು ಅಂಗನವಾಡಿಗಳ ವಸ್ತುಸ್ಥಿತಿಯನ್ನು ವಿವರಿಸುವ ಪ್ರಯತ್ನ ಮಾಡಿದರು. +ಆಗ ಸಚಿವರು ನಾನು ಮೊಟ್ಟೆಯನ್ನು ಇದುವರೆಗೂ ತಿಂದಿಲ್ಲ. ಅದನ್ನು ಕೈಯಲ್ಲೂ ಮುಟ್ಟುವುದಿಲ್ಲ. ಲೋಪದೋಷಗಳಿದ್ದರೆ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು.ಈ ವೇಳೆ ಹೊರಟ್ಟಿ ಅವರು, ಸದಸ್ಯರ ಜೊತೆಗೂಡಿ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳನ್ನು ಇತ್ಯರ್ಥಪಡಿಸಿ, ಎಲ್ಲಿ ಸಮಸ್ಯೆಗಳಿವೆಯೋ ಅಂತಹ ಕಡೆ ಆದ್ಯತೆ ಮೇರೆಗೆ ಗಮನಹರಿಸಿ ಎಂದು ಸಲಹೆ ಮಾಡಿದರು. +ಈ ಸಂದರ್ಭದಲ್ಲಿ ಹೇಮಲತಾ ನಾಯಕ್ ಅವರು ಸದನಕ್ಕೆ ಕಳಪೆ ಗುಣಮಟ್ಟದಿಂದ ಕೂಡಿರುವ ಮೊಟ್ಟೆಗಳನ್ನು ಬ್ಯಾಗ್ನಲ್ಲಿ ಹಾಕಿಕೊಂಡು ಸದನದಲ್ಲಿ ಪ್ರದರ್ಶಿಸಲು ಬಂದಿದ್ದರು. ಆದರೆ ಸಭಾಪತಿಗಳು ಅದಕ್ಕೆ ಅವಕಾಶ ಕೊಡಲಿಲ್ಲ. +ಇದಕ್ಕೆ ಮುನ್ನ ಮಾತನಾಡಿದ ಸಚಿವೆ ಹೆಬ್ಬಾಳ್ಕರ್‌, ಇದು ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿ 49 ವರ್ಷಗಳಾಗಿವೆ. ದೇವರ ದಯೆಯಿಂದ ಎಲ್ಲಿಯೂ ಕೂಡ ಕಹಿಯಾದ ಘಟನೆ ನಡೆದಿಲ್ಲ. ಒಂದು ವೇಳೆ ಎಲ್ಲಾದರೂ ಸಮಸ್ಯೆಗಳಿದ್ದರೆ ಸರಿಪಡಿಸುತ್ತೇವೆ ಎಂದು ಭರವಸೆ ಕೊಟ್ಟರು. \ No newline at end of file diff --git a/eesanje/url_46_69_12.txt b/eesanje/url_46_69_12.txt new file mode 100644 index 0000000000000000000000000000000000000000..7cb519a99325a968c48dd6962dd5808646167339 --- /dev/null +++ b/eesanje/url_46_69_12.txt @@ -0,0 +1,8 @@ +ಶಿರೂರು ಗುಡ್ಡ ಕುಸಿತ : ಅಧಿಕಾರಿಗಳ ಆರೋಪ- ಪ್ರತ್ಯಾರೋಪ, ಸಂತ್ರಸ್ತರು ಅತಂತ್ರ +ಬೆಂಗಳೂರು,ಜು.19-ಉತ್ತರಕನ್ನಡ ಅಂಕೋಲ ಬಳಿಯ ಶಿರೂರು ಬಳಿ ಗುಡ್ಡ ಕುಸಿದು ನದಿಯಲ್ಲಿ ಕೊಚ್ಚಿ ಹೋಗಿ ಏಳು ಮಂದಿ ಮೃತಪಟ್ಟು ಅಪಾರ ಹಾನಿ ಉಂಟಾಗಿದೆ. ಸಂತ್ರಸ್ತರು ಅತಂತ್ರ ಸ್ಥಿತಿಯಲ್ಲಿದ್ದರೆ, ಇತ್ತ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. +ಶಿರೂರಿನ ರಾಷ್ಟ್ರೀಯ ಹೆದ್ದಾರಿ 65ರಲ್ಲಿ ಭೂಕುಸಿತದಿಂದ ಜೀವಹಾನಿಗಳಾಗಿ ಶವಗಳನ್ನು ಹೊರತೆಗೆಯುವ ಕಾರ್ಯದಲ್ಲಿ ರಾಜ್ಯ ಸರ್ಕಾರ ತೊಡಗಿದೆ. ತಮ ಪ್ರಾಣ ಪಣಕ್ಕಿಟ್ಟು ಜಿಲ್ಲಾಡಳಿತ ಹಾಗೂ ಸಿಬ್ಬಂದಿ ಮೃತದೇಹಗಳಿಗಾಗಿ ಕಾರ್ಯಾಚರಣೆಯಲ್ಲಿ ಹಗಲಿರುಳು ತೊಡಗಿದ್ದಾರೆ. +ಈ ಭಾಗದಲ್ಲಿ ಸತತ ಮಳೆ ಸುರಿಯುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗಿದ್ದರೂ ಸಹ ತಮ ಪ್ರಾಣವನ್ನು ಲೆಕ್ಕಿಸದೆ ಸ್ಥಳೀಯರ ನೆರವಿಗಾಗಿ ಧಾವಿಸಿದ್ದಾರೆ. ಮಳೆ ಜೋರಾಗಿ ಮತ್ತೆ ಗುಡ್ಡ, ಜೆಸಿಬಿಯೂ ಕುಸಿಯುವ ಆತಂಕದಲ್ಲಿ ರಾಜ್ಯ ಸರ್ಕಾರ ತಮ ಜವಾಬ್ದಾರಿಯನ್ನು ಮರೆಯದೆ ಪರಿಸ್ಥಿತಿ ಸರಿದೂಗಿಸಲು ಯತ್ನಿಸುತ್ತಿದೆ. ಆದರೆ ಇತ್ತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ರಸ್ತೆ ಮಧ್ಯೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುತ್ತೇವೆ. ಮೊದಲು ರಸ್ತೆ ಕ್ಲಿಯರ್‌ ಆಗಬೇಕೆಂದು ಒತ್ತಡ ಹಾಕುತ್ತಿದ್ದಾರೆ. +ಒಂದು ವೇಳೆ ಈ ಮಣ್ಣಿನಡಿ ಯಾರಾದರೂ ಸಿಲುಕಿಕೊಂಡಿದ್ದರೆ ಮಣ್ಣು ತೆರವು ವೇಳೆ ಜೆಸಿಬಿ ತಾಗಿದರೆ ಎಂಬ ಆತಂಕ ಜಿಲ್ಲಾಡಳಿತದ್ದು, ಹಾಗಾಗಿ ರಾಜ್ಯಸರ್ಕಾರ ಹಾಗೂ ಕೇಂದ್ರ ಸರ್ಕಾರದ ಸಂಘರ್ಷದಿಂದ ಅಲ್ಲಿನ ಸ್ಥಳೀಯರು ಪರದಾಡುವಂತಾಗಿದ್ದಾರೆ. +ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರು ಮನಸೋ ಇಚ್ಛೆ ಗುಡ್ಡ ಕೊರೆದು ರಸ್ತೆ ನಿರ್ಮಿಸಿರುವುದೇ ಇಂದಿನ ಅನಾಹುತಕ್ಕೆ ಕಾರಣವಾಗಿದೆ ಎಂಬುದು ರಾಜ್ಯ ಸರ್ಕಾರದ ಆರೋಪವಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಶಿರೂರು ಅನಾಹುತಕ್ಕೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. +ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ಮಾನದಂಡಗಳನ್ನು ಪಾಲಿಸಿಲ್ಲ. ಟೋಲ್‌ ಸಂಗ್ರಹವೇ ಅವರ ಏಕೈಕ ಉದ್ದೇಶದಿಂದ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ. ನಂತರ ಸಂಭವಿಸುವ ಅಪಾಯಗಳಿಗೆ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹಿಸುವುದಷ್ಟೇ ಅವರ ಮಾನದಂಡವಾಗಿದೆಯೇ ಹೊರತು ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. +ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಮನವಿ ಮಾಡಿದರೂ ಸ್ಪಂದಿಸದೆ, ಕೇವಲ ಹೆದ್ದಾರಿ ಮಧ್ಯೆ ಬಿದ್ದಿರುವ ಮಣ್ಣು ತೆರವುಗೊಳಿಸಲಷ್ಟೇ ಯೋಚಿಸುತ್ತಿದೆ. ಈ ಭಾಗದಲ್ಲಷ್ಟೇ ಅಲ್ಲದೆ ಇದೇ ರೀತಿಯ ಅಪಾಯಕರ ಹೆದ್ದಾರಿಗಳಿವೆ. ಅದನ್ನು ಗುರುತಿಸಿ ಮಾಹಿತಿ ಸಂಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಭೆ ನಡೆಸಿ ಮುಂದಾಗುವ ಅಪಾಯವನ್ನು ತಪ್ಪಿಸಬೇಕಿದೆ. \ No newline at end of file diff --git a/eesanje/url_46_69_2.txt b/eesanje/url_46_69_2.txt new file mode 100644 index 0000000000000000000000000000000000000000..634c23ff9dee926c97fb195278f9837bcc12317c --- /dev/null +++ b/eesanje/url_46_69_2.txt @@ -0,0 +1,12 @@ +ಸಿಎಂ ಸಿದ್ಧರಾಮಯ್ಯ ಕುಟುಂಬಸ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು +ಬೆಂಗಳೂರು,ಜು.20- ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯ ಕಾರ್ಯದಲ್ಲಿ 40 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ಸರ್ಕಾರಕ್ಕೆ ನಷ್ಟ ಉಂಟು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತಿತರ ಅವರ ಕುಟುಂಬದ ವರ್ಗದವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. +ಸಿದ್ಧರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ, ಬಾವಮೈದುನ ಬಿ. ಎಂ. ಮಲ್ಲಿಕಾರ್ಜುನ ಸ್ವಾಮಿ, ಮೂಡಾ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, ಹೆಚ್. ವಿ. ರಾಜೀವ್ ಮತ್ತು ಅಂದಿನ ಆಯುಕ್ತರಾಗಿದ್ದ ಡಿ. ಬಿ. ನಟೇಶ್ ರವರುಗಳ ವಿರುದ್ಧವೂ ಸಹ ದೂರು ದಾಖಲು. ಆರೋಪಕ್ಕೆ ಅಗತ್ಯವಿರುವ ಎಲ್ಲಾ 383 ಪುಟಗಳ ದಾಖಲೆಗಳೊಂದಿಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ಸಿಎಂ ವಿರುದ್ಧ ದೂರು ನೀಡಿದ್ದಾರೆ. +ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ತನ್ನ ದೇವನೂರು 3ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು 1997 ರಂದು ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಕೆಸರೆ ಗ್ರಾಮ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ನೂರಾರು ಎಕರೆ ಜಮೀನುಗಳನ್ನು ಭೂಸ್ವಾಧಿ„ೀನ ಮಾಡಿಕೊಂಡಿರುತ್ತದೆ. ಇದರ ಪೈಕಿ ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ಜಾಗವನ್ನು ಅದರ ಮಾಲೀಕ ನಿಂಗ ಬಿನ್ ಜವರ ಅವರಿಂದ ಭೂಸ್ವಾಧಿನ ಪಡಿಸಿಕೊಂಡು, ಪರಿಹಾರದ ರೂಪದಲ್ಲಿ 3,24,700 ರೂ.ಗಳನ್ನು ಸದರಿ ಮಾಲೀಕರಿಗೆ ಬಿಡುಗಡೆ ಮಾಡಿರುತ್ತದೆ. +ಅದಾದ ನಂತರ 1998 ರಂದು ನಗರಾಭಿವೃದ್ಧಿ ಇಲಾಖೆಯು ಸದರಿ ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ಜಾಗವನ್ನು ಭೂಸ್ವಾಧಿ„ೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವಆದೇಶವನ್ನು ಹೊರಡಿಸುತ್ತದೆ. ಈ ಅವಧಿಯಲ್ಲಿ ಸಿದ್ಧರಾಮಯ್ಯನವರು ಅಂದಿನ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿರುತ್ತಾರೆ ಹಾಗೂ ಅವರ ಅತ್ಯಾಪ್ತರಾಗಿರುವ ಬಸವೇಗೌಡ ಅವರು ಮೂಡಾ ಅಧ್ಯಕ್ಷರಾಗಿರುತ್ತಾರೆ. +2004 ರಂದು ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತಿರ್ಣದ ಸ್ವತ್ತಿನ ಮಾಲೀಕರಾದ ನಿಂಗ ಬಿನ್ ಜವರ ಎಂಬುವವರ ಮಗನಾದ ಒ. ದೇವರಾಜು ಅವರಿಂದ ಸಿದ್ಧರಾಮಯ್ಯನವರ ಭಾವಮೈದುನ (ಪತ್ನಿಯ ಸಹೋದರ) ಮಲ್ಲಿಕಾರ್ಜುನ ಸ್ವಾಮಿ ಬಿನ್ ಮರಿಲಿಂಗಯ್ಯ ನವರು ಕ್ರಯಕ್ಕೆ ಪಡೆದು ತಮ್ಮ ಹೆಸರಿಗೆ ನೊಂದಣಿ ಮಾಡಿಸಿಕೊಳ್ಳುತ್ತಾರೆ. 2005 ರಂದು ಸದರಿ ಜಮೀನನ್ನು ವ್ಯವಸಾಯ ಪ್ರದೇಶದಿಂದ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಸಿಕೊಳ್ಳಲಾಗುತ್ತದೆ. +ಆದರೆ, ಸದರಿ ಜಮೀನಿನ ಮಾಲೀಕರಾದ ನಿಂಗ ಬಿನ್ ಜವರ ರವರು ಮರಣ ಹೊಂದಿದ್ದರೂ ಸಹ ಅವರ ಹೆಸರಿನಲ್ಲಿಯೇ ಜಿಲ್ಲಾಧಿಕಾರಿಗಳ ಕಛೇರಿಯಿಂದ ಭೂ ಪರಿವರ್ತನೆ ಮಾಡಲಾಗಿರುತ್ತದೆ. ಈ ಅವಧಿಯಲ್ಲಿ ಸಿದ್ಧರಾಮಯ್ಯನವರು (2004 ರಿಂದ 2006) ಅಂದಿನ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. +2010 ರಂದು ಸಿದ್ಧರಾಮಯ್ಯನವರ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಅವರು ಸದರಿ ಸ್ವತ್ತನ್ನು ತಮ್ಮ ಸಹೋದರಿ ಪಾರ್ವತಿ (ಸಿದ್ಧರಾಮಯ್ಯನವರ ಧರ್ಮಪತ್ನಿ) ಯವರ ಹೆಸರಿಗೆ ದಾನ ಪತ್ರದ ಮೂಲಕ ದಾನವಾಗಿ ನೀಡುತ್ತಾರೆ. ದಾನ ಪತ್ರದ ಮೂಲಕ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಬಂದಿದ್ದ ಸ್ವತ್ತಿಗೆ ಬದಲಾಗಿ, ಈಗಾಗಲೇ ಅಭಿವೃದ್ಧಿಯಾಗಿರುವ ಮೂಡಾದ ಇನ್ನೊಂದು ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಮಂಜೂರು ಮಾಡುವಂತೆ 2014 ರಲ್ಲಿ ಪಾರ್ವತಿಯವರು ಅರ್ಜಿ ಸಲ್ಲಿಸುತ್ತಾರೆ. +ಪಾರ್ವತಿಯವರ ಅರ್ಜಿಯನ್ನು ಪುರಸ್ಕರಿಸಿದ ನಗರಾಭಿವೃದ್ಧಿ ಇಲಾಖೆಯು ಬದಲಿ ನಿವೇಶನಗಳನ್ನು ಮಂಜೂರು ಮಾಡುವ ಬಗ್ಗೆ ಅನುಮೋದನೆ ನೀಡಿ ಸರ್ಕಾರಿ ಆದೇಶವನ್ನು ಹೊರಡಿಸುತ್ತದೆ 2017ರ ಡಿಸಂಬರ್‍ನಲ್ಲಿ ಮೂಡಾದಲ್ಲಿ ನಡೆದ ಪ್ರಾ„ಕಾರದ ಸಭೆಯಲ್ಲಿ (ವಿಷಯದ ಸಂಖ್ಯೆ – 30) ಅರ್ಜಿದಾರರಿಗೆ ಈಗಾಗಲೇ ಅಭಿವೃದ್ಧಿ ಪಡಿಸಿರುವ ಬಡಾವಣೆಯಲ್ಲಿ 38,284 ಚ. ಅಡಿ ವಿಸ್ತೀರ್ಣದ ಸ್ವತ್ತುಗಳನ್ನು ನಿವೇಶನಗಳ ರೂಪದಲ್ಲಿ ಮಂಜೂರು ಮಾಡುವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ. +ಮಾರುಕಟ್ಟೆ ಬೆಲೆ ಪ್ರತಿ ಚ. ಅಡಿಗೆ ?. 5,000/- ಗಳಷ್ಟು ಇರುವ ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಯಲ್ಲಿನ ನಿವೇಶನಗಳ ಬದಲಾಗಿ ಪ್ರತಿ ಚ. ಅಡಿಗೆ ?. 12,000/- ಗಳಿಗಿಂತಲೂ ಹೆಚ್ಚಿರುವ ಮೈಸೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ವಿಜಯನಗರ 03 ಮತ್ತು 04ನೇ ಹಂತದ ಬಡಾವಣೆಗಳಲ್ಲಿ ಒಟ್ಟು 38,284 ಚ. ಅಡಿ ವಿಸ್ತೀರ್ಣದ 14 ನಿವೇಶನಗಳನ್ನು ಬದಲಿ ನಿವೇಶನದ ಹೆಸರಿನಲ್ಲಿ ಪಾರ್ವತಿಯವರ ಹೆಸರಿಗೆ 2021-2022 ರಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಮೀರಿ ಹಂಚಿಕೆ ಮಾಡಲಾಗಿದೆ. +ನಗರಾಭಿವೃದ್ಧಿ ಇಲಾಖೆಯ ನಿಯಮಗಳನ್ವಯ – ಯಾವ ಬಡಾವಣೆಯ ನಿರ್ಮಾಣಕ್ಕೆಂದು ಪ್ರಾಧಿಕಾರವು ಸ್ಥಳೀಯರ ಸ್ವತ್ತುಗಳನ್ನು ಭೂಸ್ವಾಧಿ„ೀನ ಪಡಿಸಿಕೊಳ್ಳುತ್ತದೆಯೋ, ಅಂತಹ ಸ್ವತ್ತುಗಳ ಮಾಲೀಕರಿಗೆ ಅದೇ ಬಡಾವಣೆಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಬೇಕು ಅಥವಾ ಆ ಬಡಾವಣೆಯ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸುವ ಬಡಾವಣೆಯಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡಬಹುದಾಗಿರುತ್ತದೆ. ಆದರೆ, ಎಂತಹ ಸಂದರ್ಭದಲ್ಲಿಯೂ ಸಹ ಉದ್ದೇಶಿತ ಬಡಾವಣೆಯ ನಿವೇಶನಗಳಿಗೆ ಬದಲಾಗಿ, ಆ ಬಡಾವಣೆಗಿಂತಲೂ ಮುಂಚಿತವಾಗಿ ಅಭಿವೃದ್ಧಿ ಪಡಿಸಿರುವ ಬಡಾವಣೆಗಳಲ್ಲಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವುದು ಅಪರಾಧವಾಗಿರುತ್ತದೆ. +ಆದರೆ, ಈ ಪ್ರಕರಣದಲ್ಲಿ ಪಾರ್ವತಿಯವರಿಗೆ ವಾಸ್ತವವಾಗಿ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಹಂಚಿಕೆಯಾಗಿದ್ದ ನಿವೇಶನಗಳಿಗೆ ಬದಲಾಗಿ, ಅದಕ್ಕಿಂತಲೂ ಹತ್ತಾರು ವರ್ಷಗಳ ಹಿಂದೆಯೇ ಮೂಡಾ ಅಭಿವೃದ್ಧಿ ಪಡಿಸಿರುವ ವಿಜಯನಗರ 3 ಮತ್ತು 4ನೇ ಹಂತದ ಬಡಾವಣೆಗಳಲ್ಲಿನ ಅತ್ಯಂತ ಆಯಕಟ್ಟಿನ ಸ್ಥಳಗಳಲ್ಲಿರುವ ದುಬಾರಿ ನಿವೇಶನಗಳನ್ನು ಬದಲಿ ನಿವೇಶನದ ಹೆಸರಿನಲ್ಲಿ ಹಂಚಿಕೆ ಮಾಡಲಾಗಿದೆ ಎಂದು ರಮೇಶ್ ಅವರು ಗಂಭೀರ ಆರೋಪ ಮಾಡಿದ್ದಾರೆ. \ No newline at end of file diff --git a/eesanje/url_46_69_3.txt b/eesanje/url_46_69_3.txt new file mode 100644 index 0000000000000000000000000000000000000000..cbbb694d99c70b6603cfe24471cab754c3e39a68 --- /dev/null +++ b/eesanje/url_46_69_3.txt @@ -0,0 +1,12 @@ +ಪಕ್ಷ ಸಂಘಟನೆಯಲ್ಲಿ ಯಾವುದೇ ರಾಜಿ ಇಲ್ಲ: ಡಿಸಿಎಂ ಎಚ್ಚರಿಕೆ +ಬೆಂಗಳೂರು,ಜು.20- ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನು ಬದಿಗಿಟ್ಟು ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟ್ಟಪ್ಪಣೆ ಮಾಡಿದ್ದಾರೆ. +ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿಂದು ರಾಜ್ಯದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್‍ನ ಅಧ್ಯಕ್ಷರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಅವರು, ಕೆಲಸ ಮಾಡದೇ ಲೆಟರ್‍ಹೆಡ್‍ಗಾಗಿ ಪದಾಧಿಕಾರಿಗಳ ಸ್ಥಾನ ಪಡೆದಿರುವವರನ್ನು ಮುಲಾಜಿಲ್ಲದೇ ಕಿತ್ತೊಗೆಯುವುದಾಗಿ ಎಚ್ಚರಿಸಿದ್ದಾರೆ. +ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗಲಿದೆ. ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಸ್ಥಳೀಯ ನಾಯಕತ್ವ ಬಹಳ ಮುಖ್ಯ. ಹೀಗಾಗಿ ಪಕ್ಷದ ಪದಾಧಿಕಾರಿಗಳು, ಶಾಸಕರು, ಸಂಸದರು, ಸಚಿವರು ಪರಸ್ಪರ ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು. ಶಾಸಕರು, ಪಕ್ಷದ ಅಧ್ಯಕ್ಷರು ಸಹಕಾರ ನೀಡುವುದಿಲ್ಲ ಎಂಬ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ. ವ್ಯಕ್ತಿಗತ ಪ್ರತಿಷ್ಠೆಗಳೇನೇ ಇದ್ದರೂ ಅದನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು. +ಕೆಲವು ಕಡೆ ಪಕ್ಷ ಸಂಘಟನೆ ಕಾರ್ಯ ನೀರಸವಾಗಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ನಾಯಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಪದೇ ಪದೇ ಎಚ್ಚರಿಕೆ ನೀಡುತ್ತಾ ಕುಳಿತುಕೊಳ್ಳುವುದಿಲ್ಲ. ಕೆಲಸ ಮಾಡದೇ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಜವಾಬ್ದಾರಿಯಿಂದ ವಿಮುಕ್ತಿಗೊಳಿಸಲಾಗುವುದು ಎಂದರು. +ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮುಂದಿನ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಪ್ರತಿಷ್ಠೆಯ ಪ್ರಶ್ನೆ. ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವುದು ನಮ್ಮ ಆದ್ಯತೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಾಕೀತು ಮಾಡಿದ್ದಾರೆ. +ಹೆಸರಿಗಷ್ಟೇ ಅಧ್ಯಕ್ಷರು, ಪದಾಧಿಕಾರಿಗಳಾಗಿದ್ದುಕೊಂಡು ಬೂತ್‍ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡದಿದ್ದರೆ ಸಂದರ್ಭ ಬಂದಾಗ ಅಧಿಕಾರ ಕೊಡಿ ಎಂಬುವವರನ್ನು ಇನ್ನು ಮುಂದೆ ಪರಿಗಣಿಸುವುದಿಲ್ಲ. ಪ್ರತಿ ಹಂತದಲ್ಲೂ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದ ಬಳಿಕವೇ ಅಧಿಕಾರ ಹಂಚಿಕೆ ಮಾಡಲಾಗುತ್ತದೆ. ಕೆಲಸ ಮಾಡದೇ ಗುಂಪುಗಾರಿಕೆ ಮಾಡಿಕೊಂಡಿರುವವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ. ಪಕ್ಷದ ಪದಾಧಿಕಾರಿಗಳ ಹುದ್ದೆಯಲ್ಲೂ ಮುಂದುವರೆಯಲು ಸಾಧ್ಯವಿಲ್ಲ. ನನ್ನನ್ನೂ ಒಳಗೊಂಡಂತೆ ಎಲ್ಲರೂ ಪಕ್ಷದ ಸಂಘಟನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶಿಸಿದ್ದಾರೆ. +ಇನ್ನು ಮುಂದೆ ಕಾಂಗ್ರೆಸ್ ಕಚೇರಿಗೆ ಸಚಿವರು ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ನೋಂದಣಿ ಮಾಡಿಸಿಕೊಂಡು ಸಚಿವರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ನೀಡಿದವರ ಸಮಸ್ಯೆಗಳಿಗೆ ಪರಿಹಾರ ದೊರೆತಿರುವ ಬಗ್ಗೆ ಜಿಲ್ಲಾಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಗಮನ ಹರಿಸಬೇಕು. +ಮಳೆಗಾಲದಿಂದಾಗಿ ನೆರೆ ಪರಿಸ್ಥಿತಿ ಉಂಟಾಗಿದೆ. ಸಮಸ್ಯೆ ಇರುವ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆಗೂಡಿ ಸಂಕಷ್ಟದಲ್ಲಿರುವವರ ನೆರವಿಗೆ ಧಾವಿಸಬೇಕು ಎಂದು ಸಲಹೆ ನೀಡಿದ್ದಾರೆ. ನಿಗಮ ಮಂಡಳಿಗಳಿಗೆ ಬಾಕಿ ಇರುವ ಅಧ್ಯಕ್ಷರ ಹುದ್ದೆಗಳಿಗೆ ಹಾಗೂ ಸದಸ್ಯರ ಸ್ಥಾನಕ್ಕೆ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಪಕ್ಷಕ್ಕಾಗಿ ಕೆಲಸ ಮಾಡಿದ ಪ್ರಾಮಾಣಿಕರನ್ನು ಗುರುತಿಸಿ ಅವರಿಗೆ ಅವಕಾಶ ಕಲ್ಪಿಸಲು ಸಹಕಾರ ನೀಡುವಂತೆ ಡಿ.ಕೆ.ಶಿ ಮನವಿ ಮಾಡಿದ್ದಾರೆ. +ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾದ ವಿನಯ್‍ಕುಮಾರ್ ಸೊರಕೆ, ಕಾರ್ಯಾಧ್ಯಕ್ಷರಾದ ವಿನಯ್ ಕುಲಕರ್ಣಿ, ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ, ತನ್ವೀರ್ ಸೇಠ್, ವಸಂತಕುಮಾರ್, ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು, ಪ್ರಧಾನ ಕಾರ್ಯದರ್ಶಿ ವಿಜಯ್ ಮುಳಗುಂದ್ ಮತ್ತಿತರರು ಉಪಸ್ಥಿತರಿದ್ದರು. +ಇದಕ್ಕೂ ಮುನ್ನ ಪಕ್ಷದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟಿಸಲು, ಕೆಲ ನಾಯಕರಿಗೆ ಬಡ್ತಿ ನೀಡಲು ಹಾಗೂ ನಿಷ್ಠಾವಂತರನ್ನು ಗುರುತಿಸಿ ಅಧಿಕಾರದ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. +ಬಿಬಿಎಂಪಿ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಸಂಬಂಧಪಟ್ಟಂತೆ ಯಾವ ಕ್ಷಣದಲ್ಲಾದರೂ ನ್ಯಾಯಾಲಯದ ಆದೇಶ ಬರಬಹುದು. ಅದಕ್ಕೂ ಪೂರ್ವ ಸಿದ್ಧತೆ ಮಾಡಿಕೊಡಲಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸ್ವಂತ ಕಚೇರಿ, ಕಟ್ಟಡ ನೀಡಬೇಕು. ಒಂದು ವೇಳೆ ಬಾಡಿಗೆ ಕಟ್ಟಡವಿದ್ದರೆ ಶಾಸಕರು, ಸಚಿವರಾದಿಯಾಗಿ ಜಿಲ್ಲಾ ನಾಯಕರು ಪಕ್ಷದ ಕಚೇರಿಯಲ್ಲೇ ಸಭೆ ನಡೆಸಬೇಕು. ಯಾವುದೇ ಶಾಸಕರು ತಮ್ಮ ಮನೆಯಲ್ಲಿ ಪಕ್ಷದ ಸಭೆಗಳನ್ನು ನಡೆಸಬಾರದು ಎಂದು ಆದೇಶಿಸಿದರು. \ No newline at end of file diff --git a/eesanje/url_46_69_4.txt b/eesanje/url_46_69_4.txt new file mode 100644 index 0000000000000000000000000000000000000000..6e58c4a37353a425ec3dd04181fbe4e41a3f7da0 --- /dev/null +++ b/eesanje/url_46_69_4.txt @@ -0,0 +1,4 @@ +ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ರಘು ತಾಯಿ ನಿಧನ +ಬೆಂಗಳೂರು,ಜು.20- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರಘು ಅವರ ತಾಯಿ ಮಂಜುಳಮ್ಮ(75) ಇಂದು ಮುಂಜಾನೆ ನಿಧನರಾಗಿದ್ದಾರೆ. +ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಂಜುಳಮ್ಮ ಅವರನ್ನು ಮತ್ತೊಬ್ಬ ಮಗ ಮುರುಳಿ ಅವರು ಕೋಳಿಬುರುಜನ ಹಟ್ಟಿಯ ತಮ್ಮ ಮನೆಯಲ್ಲಿ ಆರೈಕೆ ಮಾಡುತ್ತಿದ್ದರು. ಇಂದು ಮುಂಜಾನೆ 5 ಗಂಟೆಯಲ್ಲಿ ಮಂಜುಳಮ್ಮ ಮೃತಪಟ್ಟಿದ್ದಾರೆ. +ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಅಂಡ್ ಗ್ಯಾಂಗ್‍ನಲ್ಲಿ ರಘು 4ನೇ ಆರೋಪಿ. ಈತ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷನಾಗಿದ್ದು, ಈ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. \ No newline at end of file diff --git a/eesanje/url_46_69_5.txt b/eesanje/url_46_69_5.txt new file mode 100644 index 0000000000000000000000000000000000000000..e6c5f0dabaffaa39733b82d8fd8027994c781359 --- /dev/null +++ b/eesanje/url_46_69_5.txt @@ -0,0 +1,9 @@ +ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ +ಹುಬ್ಬಳ್ಳಿ,ಜು.20- ರಾಜ್ಯದ ಹಲವೆಡೆ ಅತೀವೃಷ್ಟಿಯಿಂದಾಗಿ ಹಲವರು ಸಾವನ್ನಪ್ಪಿದ್ದಾರೆ. ಅನೇಕರು ಮನೆ ಕಳೆದುಕೊಂಡಿದ್ದಾರೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ತೆರಳಿ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕಿತ್ತು. ಆದರೆ ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. +ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಅನಾಹುತದಿಂದ ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡ್ಡ ಕುಸಿದು ಏಳಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೆ ಸರ್ಕಾರದ ಸಿಎಂ ಹಾಗೂ ಯಾವ ಸಚಿವರು ಅಲ್ಲಿಗೆ ಭೇಟಿ ನೀಡಿಲ್ಲ. ನಾನು ಮೂರು ದಿನಗಳ ಹಿಂದೆಯೇ ಅಲ್ಲಿಗೆ ಭೇಟಿ ಕೊಡಲು ಯೋಜಿಸಿದ್ದೆ. ಆದರೆ ದೆಹಲಿಯಲ್ಲಿ ಇಲಾಖೆಯ ನಿಗದಿತ ಕಾರ್ಯಕ್ರಮದ ನಿಮಿತ್ತ ಬರಲು ಆಗಲಿಲ್ಲ. ಇಂದು ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಮಾಡುತ್ತಿದ್ದೇನೆ. ನಾಳೆ ಸಕಲೇಶಪುರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸುವುದಾಗಿ ತಿಳಿಸಿದರು. +ಮಳೆಯಿಂದಾಗಿ ಹಲವಾರು ಮನೆಗಳನ್ನು ಕಳೆದುಕೊಂಡಿದ್ದಾರೆ ಹಾಗೂ ಮನೆಗಳಿಗೆ ನೀರು ನುಗ್ಗಿದೆ. ಆದರೆ ಕಂದಾಯ ಸಚಿವರು ಜಿಲ್ಲಾ„ಕಾರಿಗಳಿಗೆ ವಿಡಿಯೋ ಕಾನರೆನ್ಸ್ ಮೂಲಕ ಸೂಚನೆ ಕೊಡುತ್ತಿದ್ದಾರೆ. ಏನಾದರೂ ಕೇಳಿದರೆ ಪಿಡಿ ಖಾತೆಯಲ್ಲಿ ಹಣವಿದೆ ಎನ್ನುತ್ತಿದ್ದಾರೆ. ಹಣ ಇಟ್ಟರೆ ಸಾಲದು. ಸ್ಥಳಕ್ಕೆ ತೆರಳಿ ಪರಿಶೀಲಿಸಿ ಜನರಿಗೆ ಧೈರ್ಯ ತುಂಬುವ, ಸಾಂತ್ವನ ಹೇಳುವ ಕಾರ್ಯ ಮಾಡಬೇಕಿತ್ತು. ಇವರ ಈ ನಡೆಯಿಂದ ಸರ್ಕಾರಕ್ಕೆ ಜನರ ಮೇಲಿರುವ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಕುಟುಕಿದರು. +ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಏನೇ ಇರಲಿ. ಜನ ಸಂಕಷ್ಟ ಅನುಭವಿಸುತ್ತಿರುವ ಈ ಸಂದರ್ಭದಲ್ಲೂ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸದಿರುವುದು ದುರ್ದೈವದ ಸಂಗತಿ. ಈ ಸರ್ಕಾರ ಆಡಳಿತ ಹೇಗೆ ನಡೆಸಬೇಕೆಂಬುದು ಮರೆತು ಹೋಗಿದೆ ಎಂದು ಟೀಕಿಸಿದರು. +ಮುಡಾದಲ್ಲಿ ಸಿಎಂ ನೇರ ಕೈವಾಡ :ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ನೇರ ಕೈವಾಡವಿದೆ. 1992ರಲ್ಲಿ ಆರಂಭಿಕವಾಗಿ ನೋಟಿಫಿಕೇಶನ್ ಆಗಿದೆ. 1993ರಲ್ಲಿ ಮೃತರ ಮಗನ ಹೆಸರಲ್ಲಿ ಖಾತೆ ಆಗಿದೆ. 1998ರಲ್ಲಿ ಮೃತರ ಹೆಸರಲ್ಲಿ ಡಿನೋಟಿಫಿಕೇಶನ್ ಆಗಿದೆ. ಇದನ್ನು ಮಾಡಿಸಿದವರು ಯಾರು? ಎಂದು ಪ್ರಶ್ನಿಸಿದರು. +ವೈಫಲ್ಯ ಮುಚ್ಚಿಕೊಳ್ಳಲು ತನಿಖೆಯ ಗುಮ್ಮ :ಈಗ ಸಿದ್ದರಾಮಯ್ಯ ವಿಪಕ್ಷಗಳಿಗೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ. 2012ರಲ್ಲಿ ಬಿಜೆಪಿ ಆಡಳಿತದಲ್ಲಿನ 21 ಹಗರಣಗಳ ಬಗ್ಗೆ ಮಾತನಾಡುವವರು ಐದು ವರ್ಷಗಳ ಹಿಂದೆ ತಮ್ಮ ಹಾಗೂ ಈಗಿನ ಒಂದು ವರ್ಷದ ಆಡಳಿತದಲ್ಲಿ ಈ ಬಗ್ಗೆ ಏಕೆ ಸುಮ್ಮನಿದ್ದರು. ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ವಿಪಕ್ಷಗಳ ಮೇಲೆ ತನಿಖೆಯ ಗುಮ್ಮ ಬಿಡುತ್ತಿದ್ದಾರೆ ಎಂದು ಹರಿಹಾಯ್ದರು. +ಅಧಿಕಾರಿಗಳು ಅಕ್ರಮ ಮಾಡಿದರೂ ಅದಕ್ಕೆ ಸರ್ಕಾರವೇ ಹೊಣೆ. ಇವರ ದೌರ್ಬಲ್ಯಗಳಿಂದ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ನಿಗಮದ ಅಧಿಕಾರಿ ಬರೆದ ಡೆತ್‍ನೋಟ್‍ನಲ್ಲಿ ಮಂತ್ರಿಗಳು ಮೌಖಿಕವಾಗಿ ಆದೇಶ ಮಾಡಿದ್ದರು ಎಂದು ಹೇಳಿದ್ದಾರೆ. ಇದರ ಬಗ್ಗೆ ಮಂತ್ರಿಗಳಿಗೆ ಗೊತ್ತಿರಲಿಲ್ಲವೇ?, ಸಿಎಂ ಈ ರೀತಿ ಉಡಾಫೆ ಉತ್ತರ ಕೊಡುವುದು ಸರಿಯಲ್ಲ. ವಿಧಾನಸಭೆ ಕಲಾಪದಲ್ಲಿ ಯಾರೋ ಬರೆದುಕೊಟ್ಟದ್ದನ್ನು ಓದಿದ್ದಾರೆ. ನಮ್ಮ ರಾಜ್ಯದಲ್ಲಿ ಈ ರೀತಿಯ ಆಡಳಿತ ನಿರೀಕ್ಷಿಸಿರಲಿಲ್ಲ ಎಂದರು. +ಇ.ಡಿ ಯವರು ಸಿಎಂ ಹೆಸರು ಹೇಳುವಂತೆ ಬಂ„ತರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾಹಿತಿ ಅವರಿಗೆ ಎಲ್ಲಿಂದ ಬಂದಿತು? ಇ.ಡಿ ಯವರ ತನಿಖೆ ವಿಚಾರಗಳು ಸಿಎಂ ಹೇಗೆ ಗೊತ್ತಾಯಿತು?, ಅವರು ಏನೂ ತಪ್ಪು ಮಾಡದಿದ್ದರೆ, ಪ್ರಕರಣದಲ್ಲಿ ಭಾಗಿಯಾಗಿರದಿದ್ದರೆ ಅವರು ಏಕೆ ಊಹೆ ಮಾಡಿಕೊಂಡು ನಾಲ್ಕು ಸಚಿವರ ಕೈಯಿಂದ ಉತ್ತರ ಕೊಡಿಸಿದ್ದು? ಅವರಿಗೆ ಇಂತಹ ಪರಿಸ್ಥಿತಿ ಏಕೆ ಬಂದಿತು? ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_69_6.txt b/eesanje/url_46_69_6.txt new file mode 100644 index 0000000000000000000000000000000000000000..d1f79467d0ab00aca9b8758f1a0fa31f78298176 --- /dev/null +++ b/eesanje/url_46_69_6.txt @@ -0,0 +1,5 @@ +ಇನ್ನೆರೆಡು ದಿನದೊಳಗೆ ಡ್ಯಾಂ ಭರ್ತಿ! +ಮಂಡ್ಯ,ಜು.20- ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಸಾಗರಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಜಲಾಶಯದ ನೀರಿನ ಮಟ್ಟ 120 ಅಡಿಗೆ ಏರಿಕೆಯಾಗಿದೆ. 124.80 ಅಡಿ ಸಾಮಥ್ರ್ಯದ ಜಲಾಶಯ ಇನ್ನೆರೆಡು ದಿನದೊಳಗೆ ಭರ್ತಿಯಾಗುವ ಸಾಧ್ಯತೆ ಇದೆ. ಕೆಆರ್‍ಎಸ್ ಡ್ಯಾಂನಿಂದ ನದಿಗೆ ನೀರು ಬಿಡಲಿ. ಸಿದ್ಧತೆ ಮಾಡಿಕೊಡಲಾಗಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. +ಭಾರಿ ಪ್ರಮಾಣದಲ್ಲಿ ಒಳಹರಿವು ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡಲು ಮುಂದಾಗಿದ್ದು, ಸದ್ಯ 10 ರಿಂದ 25 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುವ ಸಾಧ್ಯತೆಯಿದೆ.ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಕ್ರಮ ವಹಿಸುವಂತೆ ಕಾವೇ ನೀರಾವರಿ ನಿಗಮ ಈಗಾಗಲೇ ಮನವಿ ಮಾಡಿದೆ. +ಕೆಆರ್‍ಎಸ್ ಜಲಾಶಯಕ್ಕೆ 51,375 ಕ್ಯೂಸೆಕ್ಸ್ ನೀರು ಒಳಹರಿವಿನ ಪ್ರಮಾಣವಿದ್ದು, ಸದ್ಯ 4,714 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದ ಕಬಿನಿ, ಹೇಮಾವತಿ, ಹಾರಂಗಿ ಜಲಾಶಯಗಳಲ್ಲಿನ ಒಳಹರಿವು ಪ್ರಮಾಣ ಹೆಚ್ಚಾಗಿ ಈಗಾಗಲೇ ಭರ್ತಿ ಹಂತ ತಲುಪಿವೆ.ಕಬಿನಿ ಜಲಾಶಯದಿಂದ 40,292 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. +ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳು ಭರ್ತಿಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ. \ No newline at end of file diff --git a/eesanje/url_46_69_7.txt b/eesanje/url_46_69_7.txt new file mode 100644 index 0000000000000000000000000000000000000000..a9b86a77efd9a31e0fc81da945157703c0c07631 --- /dev/null +++ b/eesanje/url_46_69_7.txt @@ -0,0 +1,10 @@ +ಎಡಬಿಡದೆ ಸುರಿಯುತ್ತಿರುವ ಮಳೆ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು +ಚಿಕ್ಕಮಗಳೂರು/ಕೊಡಗು/ಶಿವಮೊಗ್ಗ, ಜು.20- ಮಲೆನಾಡು, ಕರಾವಳಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರೆದಿದ್ದು, ಹಲವೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕುಮುದ್ವತಿ, ತುಂಗಾ, ಹಾರಂಗಿ, ಕಾವೇರಿ, ಕಪಿಲಾ ನದಿಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. + & & # 2 , 😟🥲 @…../3nKpt0jXYm +ಜಲಾಶಯಗಳಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಧಾರಕಾರ ಮಳೆಗೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಹೊಲ-ಗದ್ದೆಗಳು ಜಲಾವೃತಗೊಂಡಿವೆ. ಮತ್ತೆ ಕೆಲವೆಡೆ ಮನೆಗಳು ಕುಸಿದು ಸಾವು-ನೋವುಗಳು ಸಂಭವಿಸಿವೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಶಿರಾಡಿಘಾಟ್‍ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸಕಲೇಶಪುರ ದೊಡ್ಡತೋಪು ಬಳಿ ರಸ್ತೆಗೆ ಮಣ್ಣು ಕುಸಿದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಸಂಚಾರಕ್ಕೆ ಅಡಚಣೆಯಾಗಿತ್ತು. ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಗುಡ್ಡ ಕುಸಿದು ಶೃಂಗೇರಿ ತಾಲ್ಲೂಕು ನೆಮ್ಮಾರಮಕ್ಕಿ ಬಳಿ ವಾಹನ ಸಂಚಾರಕ್ಕೆ ಅಡಚಣೆಯಾಗಿ ಸವಾರರು ಪರದಾಡುವಂತಾಯಿತು. +ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಸಂಚಾರ ನಿರ್ಬಂvಸಲಾಗಿದೆ. ರಸ್ತೆ ಬಂದ್ ಮಾಡಲಾಗಿದೆ. ಧಾರ್ಮಿಕ ಕ್ಷೇತ್ರ ನಂಜುಂಡೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿ ಕುಸಿದಿದ್ದ ಗುಡ್ಡ ತೆರವು ಕಾರ್ಯಚರಣೆ ಮುಂದುವರೆದಿದೆ. ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯಲು ಐದು ದಿನಗಳಿಂದ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಹತ್ತು ಮಂದಿ ಮಣ್ಣಿನಡಿ ಸಿಲುಕಿದ್ದು, ಏಳು ಮೃತದೇಹಗಳನ್ನು ಈಗಾಗಲೇ ಹೊರತೆಗೆಯಲಾಗಿದೆ. + ' , 1,06,412 ! 64.28 /105 20 6AM#####../ +ಮಲೆನಾಡು, ಕರಾವಳಿ, ಪಶ್ಚಿಮಘಟ್ಟ, ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಗೆ ನದಿಗಳ ಆರ್ಭಟ ಜೋರಾಗಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಹಾಸನ ಜಿಲ್ಲೆಯಲ್ಲಿ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡು ಮನೆಗಳು ಕುಸಿತಗೊಂಡು ಜನ ಹೈರಾಣಾಗಿದ್ದಾರೆ. ವಿದ್ಯುತ್ ಸಂಪರ್ಕ ಕಡಿತದಿಂದ ಜನ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಸತತ ಮಳೆಯಿಂದ ಹೇಮಾವತಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬಂದಿದ್ದು, ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, ಜಲಾಶಯದಿಂದ ನದಿಗೆ ನೀರು ಬಿಡಲಾಗುತ್ತಿದೆ. ಬೇಲೂರು ಸಮೀಪದ ಯಗಚಿ ಜಲಾಶಯವು ಬಹುಪಾಲು ಭರ್ತಿಯಾಗಿದೆ. + 9 , !🤩🔥 ####../F3vGnY476h +ಬೆಳಗಾವಿ ಜಿಲ್ಲೆ ಖಾನಾಪುರ, ಮಹಾರಾಷ್ಟ್ರದ ಸಾವಂತವಾಡಿ ತಾಲ್ಲೂಕಿನ ಹಲವು ಸೇತುವೆಗಳು ಭಾರೀ ಮಳೆಗೆ ಮುಳುಗಡೆಯಾಗಿವೆ. ಕಾಡಂಚಿನ 30ಕ್ಕೂ ಹೆಚ್ಚು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಿಂದ 24 ಮನೆಗಳು ಸಂಪೂರ್ಣ ಕುಸಿದು ಹೋಗಿದ್ದು, 74 ಮನೆಗಳು ಭಾಗಶಃ ಕುಸಿದಿವೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ, ಅಘನಾಶಿನಿ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಚಾರ್ಮುಡಿ ರಸ್ತೆಯಲ್ಲಿ ಭೂಕುಸಿತ ಸಾಧ್ಯತೆ ಇರುವ ಕಾರಣ ರಸ್ತೆಯನ್ನು ಮುಚ್ಚಲಾಗಿದೆ. +ಉಡುಪಿ ಜಿಲ್ಲೆಯ ಸೌಪರ್ಣಿಕಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, 86 ಗ್ರಾಮಗಳ ನಿವಾಸಿಗಳನ್ನು ಆರೋಗ್ಯಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. \ No newline at end of file diff --git a/eesanje/url_46_69_8.txt b/eesanje/url_46_69_8.txt new file mode 100644 index 0000000000000000000000000000000000000000..61e21d5330bf4baebd0e0b096f7a6b60042cc9e2 --- /dev/null +++ b/eesanje/url_46_69_8.txt @@ -0,0 +1,9 @@ +ಶಾಲೆ ಮಕ್ಕಳಿಗೆ ಮೊಟ್ಟೆ ನೀಡಲು ಅಜೀಂಪ್ರೇಮ್‍ಜಿ ಫೌಂಡೇಶನ್ ಜೊತೆ ಒಪ್ಪಂದ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜು.20- ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ ಎಲ್ಲಾ ಮಕ್ಕಳಿಗೂ ಮುಂದಿನ ಮೂರು ವರ್ಷಗಳವರೆಗೆ ವಾರದ ನಾಲ್ಕು ದಿನಗಳ ಕಾಲ ಉಚಿತ ಮೊಟ್ಟೆ ನೀಡಲು ಅಜೀಂಪ್ರೇಮ್‍ಜಿ ಫೌಂಡೇಶನ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. +ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಲಾಗಿದ್ದ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರ ಮಕ್ಕಳಲ್ಲಿ ಪೌಷ್ಠಿಕಾಂಶ ಹೆಚ್ಚಿಸುವ ಉದ್ದೇಶದಿಂದ ಆರಂಭದಲ್ಲಿ ಒಂದು ದಿನ ಅನಂತರ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ದಿನ ಉಚಿತವಾಗಿ ಮೊಟ್ಟೆ ನೀಡಲಾಗುತ್ತಿತ್ತು.ಅಜೀಂಪ್ರೇಮ್‍ಜಿ ಯವರು ದೊಡ್ಡ ಮನಸ್ಸು ಮಾಡಿ 1,500 ಕೋಟಿ ರೂ. ವೆಚ್ಚದಲ್ಲಿ ಉಳಿದ ನಾಲ್ಕು ದಿನಗಳ ಕಾಲವೂ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ನೀಡಲು ಮುಂದೆ ಬಂದಿದ್ದಾರೆ. ಇದರಿಂದ ರಾಜ್ಯದ 55 ಲಕ್ಷ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. +ಮುಖ್ಯಮಂತ್ರಿ@siddaramaiahಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ,…../cjcGF78Rfq +ಅಜೀಂಪ್ರೇಮ್‍ಜಿ ಕುಟುಂಬ ಅನೇಕ ದಾನಧರ್ಮಗಳನ್ನು ಮಾಡಿದೆ. ಅವರ ದೊಡ್ಡತನದಿಂದಾಗಿ ಮಕ್ಕಳಿಗೆ ಪುಷ್ಕಳ ಆಹಾರ ದೊರೆಯುವಂತಾಗಿದೆ ಎಂದರು. ಮಕ್ಕಳು ಆರೋಗ್ಯವಂತರಾಗಿರಬೇಕು. ದೈಹಿಕ ಸದೃಢತೆ ಇದ್ದಾಗ ಜ್ಞಾನವಿಕಾಸವಾಗುತ್ತದೆ. ಬಡವರು, ಶ್ರೀಮಂತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಎಲ್ಲಾ ಮಕ್ಕಳಿಗೂ ಗುಣಮಟ್ಟದ ಸಮಾನ ಶಿಕ್ಷಣ ಸಿಗುವಂತಾಗಬೇಕು. +ಈ ನಿಟ್ಟಿನಲ್ಲಿ ಈ ಹಿಂದೆ ತಮ್ಮ ಮೊದಲಾವ„ಯ ಸರ್ಕಾರದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಹಾಗೂ ಸಾಕ್ಸ್‍ಗಳನ್ನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಶ್ರೀಮಂತರ ಮಕ್ಕಳು ಸಮವಸ, ಶೂ, ಸಾಕ್ಸ್ ಧರಿಸಿ ಶಾಲೆಗೆ ಬರುತ್ತಾರೆ. ಬಡವರ ಮಕ್ಕಳಲ್ಲಿ ಬೇಧಭಾವ ಸೃಷ್ಟಿಸಬಾರದು, ಜಾತಿಯ ಸೋಂಕು ಇರಬಾರದು, ಜಾತ್ಯಾತೀತರಾಗಿ ಬೆಳೆಯುವಂತ ವಾತಾವರಣ ನಿರ್ಮಾಣವಾಗಬೇಕು ಎಂದು ರಾಜ್ಯಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. +ಉಪಹಾರ, ಊಟ ಇಲ್ಲದೇ ಎಷ್ಟೋ ಮಕ್ಕಳು ಶಾಲೆಗೆ ಬರುವ ಪರಿಸ್ಥಿತಿ ಇತ್ತು. ಅದಕ್ಕಾಗಿ ಹಾಲು, ಮಧ್ಯಾಹ್ನದ ಬಿಸಿಯೂಟ ಜಾರಿಗೆ ತರಲಾಯಿತು. ಮೊಟ್ಟೆ ನೀಡುವ ಕಾರ್ಯಕ್ರಮವೂ ಕೂಡ ಹಂತಹಂತವಾಗಿ ಜಾರಿಗೆ ಬಂದಿತು ಎಂದು ವಿವರಿಸಿದರು. +ಹುಟ್ಟುವಾಗ ವಿಶ್ವಮಾನವರು, ಬೆಳದಂತೆ ಅಲ್ಪಮಾನವರಾಗುತ್ತಾರೆ ಎಂದು ರಾಷ್ಟ್ರಕವಿ ಕುವೆಂಪು ಹೇಳಿದ್ದಾರೆ. ಸಮಾಜದಲ್ಲಿ ವಿಶ್ವಮಾನವರಾಗಬೇಕು. ಅಲ್ಪಮಾನವರಾಗಬಾರದು. ಜಾತ್ಯಾತೀತ ಸಮಸಮಾಜದ ನಿರ್ಮಾಣವಾಗಬೇಕಾದರೆ ಎಲ್ಲರೂ ಜಾತ್ಯತೀತರಾಗಬೇಕು. ಮಕ್ಕಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಜ್ಞಾನವಿಕಾಸ ಹೊಂದಬೇಕು, ವೈಜ್ಞಾನಿಕ, ವೈಚಾರಿಕ ವಿಕಾಸಗೊಳ್ಳಬೇಕು. ಆಗ ಮಾತ್ರ ಸಮಾಜಮುಖಿಯಾಗಿ ಬೆಳೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. +ಕಾರ್ಯಕ್ರಮದಲ್ಲಿ ಉದ್ಯಮಿ ಅಜೀಂಪ್ರೇಮ್‍ಜಿ, ಶ್ರೀಮತಿ ಯಾಸ್ಮಿನ್, ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಮಧುಬಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_69_9.txt b/eesanje/url_46_69_9.txt new file mode 100644 index 0000000000000000000000000000000000000000..940fb56ffa8c491a066912799350864fd1c52379 --- /dev/null +++ b/eesanje/url_46_69_9.txt @@ -0,0 +1,5 @@ +ಸರ್ಕಾರದ 6ನೇ ಗ್ಯಾರಂಟಿ ಜಾರಿ : ಡಿಸಿಎಂ ಡಿಕೆಶಿ +ಬೆಂಗಳೂರು,ಜು.20- ನಮ್ಮ ಸರ್ಕಾರ ನುಡಿದಂತೆ ನೆಡೆದಿದ್ದು ನೌಕರರ 7ನೇ ವೇತನ ಆಯೋಗದ ವರದಿಯನ್ನು 6ನೇ ಗ್ಯಾರಂಟಿಯಾಗಿ ಜಾರಿಗೊಳಿಸಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಚನ್ನಪಟ್ಟಣ ತಾಲ್ಲೂಕು ಬಾಲಕರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಸೇವಾರತ್ನ ಪ್ರಶಸ್ತಿ ಪ್ರಧಾನ ಹಾಗೂ 7ನೇ ವೇತನ ಆಯೋಗ ಜಾರಿ ಸಂಬಂಧ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರ ನೀಡಿದ್ದ ಭರವಸೆಯಂತೆ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದೆ ಎಂದು ಹೇಳಿದರು. +ಈಗಾಗಲೇ ಎನ್.ಪಿ.ಎಸ್ ರದ್ದುಗೊಳಿಸಿ ಓ.ಪಿ.ಎಸ್ ಜಾರಿಗೊಳಿಸಿರುವ ರಾಜ್ಯಗಳಿಗೆ ಮೂರು ರಾಜ್ಯಗಳಿಗೆ ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳನ್ನು ನಿಯೋಜಿಸಿ ಅವರಿಂದ ವರದಿ ಪಡೆದು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ರವರು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯಯವರೊಂದಿಗೆ ಚರ್ಚಿಸಿದ್ದು ಕೆಲವೇ ದಿನಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದರು. +ಸಾರಿಗೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿಯವರು ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿ ವಿದ್ಯಾರ್ಥಿಗಳ ಬಗ್ಗೆ ಆಶಯ ನುಡಿಗಳನ್ನಾಡಿದರು ಹಾಗೂ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ರವರು ಸೇವಾರತ್ನ ಪ್ರಶಸ್ತಿ ಪ್ರಧಾನ ಮಾಡಿ ಪ್ರತಿಭಾನ್ವಿತ ಮಕ್ಕಳಿಗೆ ಶುಭಾಶಯ ಕೋರಿದರು. +ಜಿಲ್ಲಾಧ್ಯಕ್ಷ ಸತೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ತಿಮ್ಮೇಗೌಡ, ರಾಜ್ಯ ಖಜಾಂಚಿ ಡಾ. ಸಿದ್ದರಾಮಣ್ಣ, ಹಿರಿಯ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಬಸವರಾಜು, ಉಪಾಧ್ಯಕ್ಷ ಹರ್ಷ, ಸಿದ್ದೇಶ್, ಗಿರಿಗೌಡ, ಸೋಮಶೇಖರ್, ಪಾಂಡುರಂಗ, ಚೇತನ್, ನಾಗಭೂಷಣ್, ಶಂಕರಪ್ಪ ಮತ್ತು ರಾಮನಗರ ಜಿಲ್ಲಾ ಶಾಖೆಯ ಎಲ್ಲ ಪದಾ„ಕಾರಿಗಳು, ಜಿಲ್ಲಾಯ ಎಲ್ಲಾ ತಾಲೂಕುಗಳ ಅಧ್ಯಕ್ಷರು ಪದಾಧಿಕಾರಿಗಳು ಜಿಲ್ಲಾಯ ಸರ್ಕಾರಿ ನೌಕರರು, ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_6_1.txt b/eesanje/url_46_6_1.txt new file mode 100644 index 0000000000000000000000000000000000000000..2484a5f61eac1b5115bdf0d8d070d9cda74eb753 --- /dev/null +++ b/eesanje/url_46_6_1.txt @@ -0,0 +1,8 @@ +ಚಂದ್ರಶೇಖರ್‌ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ : ಸಿಎಂ ಸಮರ್ಥನೆ + : ' +ಮೈಸೂರು,ಸೆ.29– ಹಿರಿಯ ಐಪಿಎಸ್‌‍ ಅಧಿಕಾರಿ ಚಂದ್ರಶೇಖರ್‌ ಅವರು ಕುಮಾರಸ್ವಾಮಿಯವರನ್ನು ನೇರವಾಗಿ ಟೀಕಿಸಿಲ್ಲ, ಬರ್ನಾಡ್‌ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಪ್ಪು ಮಾಡಿದ್ದಾರೆ. ಅದಕ್ಕಾಗಿ ಅಧಿಕಾರಿಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. +ಕುಮಾರಸ್ವಾಮಿ ಮತ್ತು ಎಡಿಜಿಪಿ ನಡುವೆ ನಡೆಯುತ್ತಿರುವ ವಾದ-ಪ್ರತಿವಾದಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಎಡಿಜಿಪಿ ಚಂದ್ರಶೇಖರ್‌ ಅವರ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಅದಕ್ಕೆ ಚಂದ್ರಶೇಖರ್‌ ಉತ್ತರ ನೀಡಿದ್ದಾರೆ. ನನಗೆ ಅಷ್ಟೇ ಗೊತ್ತಿದೆ. ಕಾನೂನು ಬಾಹಿರವಾಗಿ ನಡೆದುಕೊಂಡಾಗ ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದು ಕಂಡುಬರುತ್ತದೆ ಎಂದು ಹೇಳಿದರು. +ಕುಮಾರಸ್ವಾಮಿಯವರನ್ನು ಹಂದಿ ಎಂದು ಚಂದ್ರಶೇಖರ್‌ ಅವರು ಹೇಳಿಲ್ಲ. ಬರ್ನಾಡ್‌ ಶಾ ಹೇಳಿದ್ದನ್ನು ಪ್ರಸ್ತಾಪಿಸಿದ್ದಾರೆ. ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದರು. +ಕುಮಾರಸ್ವಾಮಿಯವರ ಟೀಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದ ಅವರು, ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುಲಾಗುವುದು. ಎಲ್ಲದಕ್ಕೂ ಕಾನೂನು ಇದೆ. ದೂರು ಕೊಟ್ಟಾಕ್ಷಣ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ. ಮುಡಾ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ಸದ್ಯಕ್ಕೆ ತಾವು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು. +ಮುಡಾ ಪ್ರಕರಣದಲ್ಲಿ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಇವತ್ತಿನವರೆಗೂ ಅವರನ್ನು ನೋಡಿಯೇ ಇಲ್ಲ. ಅವರ ಮೇಲೆ ಏನೇನು ಕೇಸ್‌‍ಗಳಿರುವುದೂ ನನಗೆ ಗೊತ್ತಿಲ್ಲ. ಅವರು ಇಡಿಗೆ ದೂರು ಕೊಟ್ಟಿರಬಹುದು. ದೂರು ಕೊಟ್ಟ ತಕ್ಷಣ ಅದು ತನಿಖೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೊಟ್ಟಿದ್ದಾರೆ ಕೊಡಲಿ ಬಿಡಿ ಎಂದರು. +ಮೈಸೂರಿನಲ್ಲಿ ರೇವ್‌ ಪಾರ್ಟಿ ನಡೆದಿರುವ ಸ್ಥಳದಲ್ಲಿ ದಾಳಿ ಮಾಡಲಾಗಿದೆ ಎಂದು ಪೊಲೀಸ್‌‍ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಂತಹ ಯಾವುದೇ ಪ್ರಕರಣಗಳಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ತಮಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_6_10.txt b/eesanje/url_46_6_10.txt new file mode 100644 index 0000000000000000000000000000000000000000..7983168424dc3bae96cae670f976fdc31badd5b1 --- /dev/null +++ b/eesanje/url_46_6_10.txt @@ -0,0 +1,14 @@ +ಐಪಿಎಸ್ ಅಧಿಕಾರಿ ಚಂದ್ರಶೇಖರ್ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿ + +ಬೆಂಗಳೂರು,ಸೆ.28– ಹಿರಿಯ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹ ಕಾರ್ಯದರ್ಶಿಗೆ ನೀಡುವುದಾಗಿ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಯವರು ತಿಳಿಸಿದರು. +ಸುದ್ದಿಗೋಷ್ಠಿಯ ನ್ನುದ್ದೇಶಿಸಿ ಮಾತ ನಾಡಿದ ಅವರು, ಈ ಅಧಿಕಾರಿಯ ಕೈಕೆಳಗಿನ ಅಧಿಕಾರಿ ಹಾಗೂ ಶ್ರೀಧರ್ ಎಂಬುವವರು 20 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂಬ ದೂರನ್ನುನೀಡಿದ್ದಾರೆ. ಆದರೂ ರಾಜ್ಯಸರ್ಕಾರ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. +ಅವರ ಮೇಲಿರುವ ಆರೋಪಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹಕಾರ್ಯದರ್ಶಿಯವರಿಗೆ ನೀಡಲಾಗುವುದು. ಚಂದ್ರಶೇಖರ್ರವರ ಪತ್ನಿ ಹೆಸರಿನಲ್ಲಿ 38 ಮಹಡಿಯ ಕಟ್ಟಡವನ್ನು ರಾಜಕಾಲುವೆ ಮೇಲೆ ಕಟ್ಟುತ್ತಿದ್ದಾರೆ. ಅದರ ಬಗ್ಗೆ ಯಾವುದೇ ಕ್ರಮವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಇಂತಹ ಅಧಿಕಾರಿ ಲೋಕಾಯುಕ್ತ ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿ ವಿಚಾರಣೆ ನಡೆಸಲು ಸರ್ಕಾರದ ಅನುಮತಿ ಕೋರುವ ಉದ್ಧಟತನ ತೋರಿದ್ದಾರೆ. ಇವರಿಗೆ ಆ ಅಧಿಕಾರ ಕೊಟ್ಟವರು ಯಾರು?, ಇಂತಹ ಆರೋಪಗಳನ್ನು ಹೊತ್ತಿರುವ ಆ ಅಧಿಕಾರಿಯನ್ನು ಉನ್ನತ ಹುದ್ದೆಯಲ್ಲಿ ಏಕೆ ಇಟ್ಟುಕೊಂಡಿದ್ದೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದರು. +ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಯಾವ ರೀತಿ ಗೌರವ ಕೊಡುತ್ತಿದ್ದಾರೆ ಎಂಬುದಕ್ಕೆ ತಾಜಾ ನಿದರ್ಶನ. ಸಿದ್ದರಾಮಯ್ಯನವರು ವಿರೋಧಪಕ್ಷದ ನಾಯಕರಾಗಿದ್ದಾಗ ರಾಜ್ಯಪಾಲರ ಕರ್ತವ್ಯ ಹಾಗೂ ಜವಾಬ್ದಾರಿ ಬಗ್ಗೆ ಮಾತನಾಡಿದ್ದಾರೆ. ಆಗ ಸರ್ಕಾರ ತಪ್ಪು ಮಾಡಿದಾಗ ತಿದ್ದುವ ಅಧಿಕಾರ ರಾಜ್ಯಪಾಲರಿಗಿದೆ ಎಂದು ಹೇಳಿದ್ದಾರೆ. ಅದನ್ನೊಮೆ ಕೇಳುವುದು ಒಳ್ಳೆಯದು ಎಂದರು. +ಬೇರೆಯವರ ಮೇಲೆ ದೂರು ಕೊಟ್ಟ ತಕ್ಷಣ ಎಫ್ಐಆರ್ ಹಾಕಿ ಬಂಧಿಸಲಾಗುತ್ತದೆ. ಇಂತವರ ಮೇಲೆ ಇನ್‌್ಸಪೆಕ್ಟರ್ನವರೇ ದೂರು ಕೊಟ್ಟಿದ್ದರೂ ಏಕೆ ಕ್ರಮವಿಲ್ಲ ಎಂದು ದೂರಿನಲ್ಲಿನ ಕೆಲವು ಅಂಶಗಳನ್ನು ಉಲ್ಲೇಖಿಸಿದರು. +ಆಂಧ್ರಪ್ರದೇಶದ ಮೂಲದವರಾದ ಚಂದ್ರಶೇಖರ್ ಹಿಮಾಚಲ ಪ್ರದೇಶದ ಕೇಡರ್ನಲ್ಲಿ ಆಯ್ಕೆಯಾದವರು. 2008-09 ರಲ್ಲಿ ಕರ್ನಾಟಕದಲ್ಲಿ ನಿಯೋಜನೆ ಮೇಲೆ ಕೆಲಸ ಮಾಡಲು ರಾಜ್ಯಕ್ಕೆ ಬಂದವರು. ಗರಿಷ್ಠ 5 ವರ್ಷ ಈ ರೀತಿ ಸೇವೆ ಸಲ್ಲಿಸಬಹುದಷ್ಟೇ. ಆದರೆ ಇವರು ಹಿಮಾಚಲ ಪ್ರದೇಶದ ಹವಾಮಾನ ತಮ ಆರೋಗ್ಯಕ್ಕೆ ಅನುಕೂಲಕರವಾಗಿಲ್ಲ ಎಂದು ತಮ ಆರೋಗ್ಯದ ಬಗ್ಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಆರೋಪಿಸಿದರು. +ಈ ಅಧಿಕಾರಿಗೆ ಸಂಬಂಧಿಸಿದಂತೆ ಹಲವು ಅವ್ಯವಹಾರಗಳ ಆರೋಪಗಳು ಕೇಳಿಬಂದಿವೆ. ಇವರಿಗೆ ಲೋಕಾಯುಕ್ತ ಮತ್ತು ಆಂತರಿಕ ಭದ್ರತಾ ವಿಭಾಗದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. +ಇಂತಹ ಅಧಿಕಾರಿಯನ್ನು ಮುಂದಿಟ್ಟುಕೊಂಡು ನಾವು ಹೇಳಿದಂತೆ ವಿರೋಧಪಕ್ಷದವರನ್ನು ಮುಗಿಸಲು ಶ್ರಮ ವಹಿಸಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಸೂಚನೆ ಕೊಟ್ಟಿದ್ದಾರೆ. ಈ ಕಾರ್ಯ ಮಾಡುವವರಿಗೆ ಸಿಐಡಿಯ ಮುಖ್ಯಸ್ಥ ಸ್ಥಾನ ಇಲ್ಲವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆ ನೀಡುವ ಮಾತು ಕೂಡ ಕೊಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. +ಕೆಟ್ಟ ಸಂಪ್ರದಾಯಕ್ಕೆ ನಾಂದಿ :ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷದವರ ಮೇಲೆ ಸೇಡು ತೀರಿಸಿಕೊಳ್ಳುವ ಕೆಟ್ಟ ಸಂಪ್ರದಾಯಕ್ಕೆ ರಾಜ್ಯಸರ್ಕಾರ ನಾಂದಿ ಹಾಡಿದೆ ಎಂದು ಆರೋಪಿಸಿದರು. ಇದೇ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರೆದರೆ ಮುಂದೆ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು. +ಗಂಗೇನಹಳ್ಳಿ ಡಿ ನೋಟಿಫಿಕೇಷನ್ ನಾನು ಮಾಡಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಅದಕ್ಕೆ ಸಂಬಂಧಿಸಿದ ಕಡತ ನನ್ನ ಮುಂದೆ ಬಂದಾಗ ಕಾನೂನು ರೀತಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಅಷ್ಟೇ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನೋಟೀಸ್ ನೀಡಿರಲಿಲ್ಲ. +ಪತ್ರಿಕೆಯೊಂದರಲ್ಲಿ ವರದಿಯಾಗಿದ್ದನ್ನು ಗಮನಿಸಿ ನಿನ್ನೆ ನಾನೇ ಲೋಕಾಯುಕ್ತ ಕಚೇರಿಗೆ ಹೋಗಿದ್ದೆ. ಅಲ್ಲಿ ಹತ್ತು ನಿಮಿಷಗಳ ಕಾಲ ಉತ್ತರ ಕೊಟ್ಟಿದ್ದೇನೆ. ಅಧಿಕಾರಿಗಳಿಗೆ ತೊಂದರೆಯಾಗಬಾರದು ಎಂದು ಆ.21 ನೇ ತಾರೀಖಿನಂದು ಟೈಪು ಮಾಡಿ ಇಟ್ಟುಕೊಂಡಿದ್ದ ನೋಟಿಸ್ಗೆ ಸಹಿ ಹಾಕಿದ್ದೇನೆ ಎಂದು ಸ್ಪಷ್ಟನೆ ನೀಡಿದರು. \ No newline at end of file diff --git a/eesanje/url_46_6_11.txt b/eesanje/url_46_6_11.txt new file mode 100644 index 0000000000000000000000000000000000000000..1762ca64308c024425b5867362cebc7be8f9e27d --- /dev/null +++ b/eesanje/url_46_6_11.txt @@ -0,0 +1,6 @@ +ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್‌ ನೇಮಕ + . . +ಚಿಕ್ಕಬಳಾಪುರ, ಸೆ 28-ಕೇಂದ್ರ ಸರ್ಕಾರದಿಂದ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. +ಡಾ.ಕೆ.ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ. +ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ. +2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆೞೞ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_6_12.txt b/eesanje/url_46_6_12.txt new file mode 100644 index 0000000000000000000000000000000000000000..0b9db4c1021d7eb25a8dc32be4f460f1b67afb9e --- /dev/null +++ b/eesanje/url_46_6_12.txt @@ -0,0 +1,12 @@ +ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ + ' +ಬೆಂಗಳೂರು,ಸೆ.28– ಅತ್ಯಾಚಾರ, ಜಾತಿ ನಿಂದನೆ, ಜೀವ ಬೆದರಿಕೆ ಆರೋಪಕ್ಕೆ ಗುರಿಯಾಗಿರುವ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. +ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರ ವೈಯಾಲಿ ಕಾವಲ್‌ನಲ್ಲಿರುವ ನಿವಾಸ ಹಾಗೂ ಕಚೇರಿ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ. +ಎಫ್‌ಎಸ್‌‍ಎಲ್‌ ತಂಡದೊಂದಿಗೆ ನಡೆಸಿದ ದಾಳಿ ವೇಳೆ ಮುನಿರತ್ನ ಅವರ ನಿವಾಸದಲ್ಲಿದ್ದ ಹಲವಾರು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ. +ಮುನಿರತ್ನ ಅವರು ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚೆಲುವರಾಜು ಎಂಬುವರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರಿಗೆ ದೂರು ನೀಡಿದ್ದರೂ. ಈ ಸಂದರ್ಭದಲ್ಲಿ ಮುನಿರತ್ನ ಚೆಲುವರಾಜು ಅವರಿಗೆ ಬಾಯಿಗೆ ಬಂದಂತೆ ಬಯ್ಯುವ ಆಡಿಯೋ ವೈರಲ್‌ ಆಗಿತ್ತು. +ಈ ಬಗ್ಗೆ ಚೆಲುವರಾಜು ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದುಕೊಂಡಿದ್ದಾರೆ. ಬಿಬಿಎಂಪಿಯ ಮಾಜಿ ಸದಸ್ಯ ವೇಲುನಾಯ್ಕರ್‌, ಮುನಿರತ್ನ ಅವರು ಜಾತಿನಿಂದನೆ ಮಾಡಿದ್ದಾರೆ ಎಂದು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು. +ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮಹಿಳೆಯೊಬ್ಬರು ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ಸಂಚಲನ ಮೂಡಿಸಿದ್ದರು. +ಕಗ್ಗಲಿಪುರ ಪೊಲೀಸ್‌‍ ಠಾಣೆಗೆ ಆಗಮಿಸಿದ ಮಹಿಳೆ ಮುನಿರತ್ನ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಮಾತ್ರವಲ್ಲ, ತಮ ರಾಜಕೀಯ ಎದುರಾಳಿಗಳನ್ನು ಬ್ಲಾಕ್‌ಮೇಲ್‌ ಮಾಡಲು ಹನಿಟ್ರ್ಯಾಫ್‌ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. +ಈ ವಿಚಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು ಅದೇ ಸಂದರ್ಭದಲ್ಲಿ ಕೆಲವರ ಮೇಲೆ ಹನಿಟ್ರಾಪ್‌ ನಡೆಸಿರುವ ವಿಡಿಯೋಗಳು ವೈರಲ್‌ ಆಗಿದ್ದವು.ಜಾತಿನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. +ಮುನಿರತ್ನ ಅವರ ವಿರುದ್ಧ ಒಂದೊಂದೆ ಪ್ರಕರಣಗಳು ಹೊರ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ರಚಿಸಿತ್ತು. ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅವರನ್ನು ತಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. +ಇದೀಗ ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ ಮತ್ತವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಜರುಗಿಸಿದೆ. \ No newline at end of file diff --git a/eesanje/url_46_6_2.txt b/eesanje/url_46_6_2.txt new file mode 100644 index 0000000000000000000000000000000000000000..d62ff21de03994ff14337b0ffb4b6ecc1b9fcbf3 --- /dev/null +++ b/eesanje/url_46_6_2.txt @@ -0,0 +1,9 @@ +ಕೆಆರ್‌ಎಸ್‌‍ ನಿರ್ಬಂಧಿತ ಪ್ರದೇಶದಲ್ಲಿ ರೇವ್‌ ಪಾರ್ಟಿ, ನಶೆಯಲ್ಲಿ ತೂರಾಡಿದವರು ವಶಕ್ಕೆ + +ಮೈಸೂರು, ಸೆ. 29-ಕೆಆರ್‌ಎಸ್‌‍ನ ಹಿನ್ನೀರಿನ ಬಳಿ ಅನಧಿಕೃತವಾಗಿ ರೇವ್‌ ಪಾರ್ಟಿ ಆಯೋಜಿಸಿದ್ದ ಘಟನೆ ಮೈಸೂರನ್ನು ಬೆಚ್ಚಿಬೀಳಿಸಿದೆ.ಮಾಹಿತಿ ತಿಳಿದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆ ಮದ್ಯದ ನಶೆಯಲ್ಲಿ ತೂರಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. +ನಿರ್ಬಂಧಿತ ಪ್ರದೇಶವಾದ ಇಲ್ಲಿ ಅನಧಿಕೃತವಾಗಿ ಈ ಪಾರ್ಟಿ ಆಯೋಜಿಸಿ ಯುವಕ-ಯುವತಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಆಹ್ವಾನಿಸಲಾಗಿತ್ತು.ಆನ್‌ಲೈನ್‌ನಲ್ಲೇ ಹಣ ಕಟ್ಟಿಸಿಕೊಂಡು ಸುಮಾರು 30ಕ್ಕೂ ಹೆಚ್ಚು ಜೋಡಿಗಳು ಇದರಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದ್ದು, ಪೊಲೀಸರು ದಾಳಿ ಮಾಡುತ್ತಿದ್ದಂತೆಯೇ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ. +ಖಾಸಗಿ ವ್ಯಕ್ತಿಯೊಬ್ಬರಿಗೆ ಸೇರಿದ ಜಾಮೀನಿನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದ್ದು, ಮದ್ಯದ ಬಾಟಲಿಗಳು, ತರಾವರಿ ಭೋಜನ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. +ಈ ಪಾರ್ಟಿಗಾಗಿ ವಿದೇಶದಿಂದಲೂ ಕೆಲವು ಡಿಜೆಗಳನ್ನು ಕರೆಸಲಾಗಿತ್ತು. ಜೋರು ಧ್ವನಿಯನ್ನು ಆಲಿಸಿದ ಅಕ್ಕಪಕ್ಕದ ಗ್ರಾಮಸ್ಥರು ಪೊಲೀಸರಿಗೆ ವಿಷಯ ಮುಟ್ಟಿಸಿದ ನಂತರ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಸಾಮಾಜಿಕ ಜಾಲತಾಣದಲ್ಲೂ ಕೂಡ ಹರಿದಾಡುತ್ತಿದೆ. +ಇಲವಾಲ ಪೊಲೀಸ್‌‍ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಸುಮಾರು 50 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ನಿನ್ನೆ ತಡರಾತ್ರಿ ಪಾರ್ಟಿ ಆರಂಭವಾಗಿತ್ತು. ಡಿಜೆ ಮೂಲಕ ಅಬ್ಬರದ ಸಂಗೀತ ಏರ್ಪಡಿಸಲಾಗಿತ್ತು ಎಂದು ಸ್ಥಳೀಯರು ಆರೋಪಿಸಿದ್ದಾರೆ.ಎಸ್ಪಿ ವಿಷ್ಣುವರ್ಧನ್‌ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ನಾಗೇಶ್‌ ಹಾಗೂ ಡಿವೈಎಸ್ಪಿ ಕರೀಂ ರಾವತರ್‌ ಹಾಗೂ ಸಿಬ್ಬಂದಿ ದಾಳಿ ನಡೆಸಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. +ಎಲ್ಲರಿಗೂ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಪಾರ್ಟಿಗಾಗಿ ಬಳಸಲಾದ ಸಂಗೀತ ಉಪಕರಣಗಳು ಸೇರಿದಂತೆ 30 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ದಾಳಿ ವೇಳೆ ಯಾವುದೇ ಮಾದಕ ವಸ್ತು, ಗಾಂಜಾ ದೊರತಿಲ್ಲವೆಂದು ಎಸ್ಪಿ ವಿಷ್ಣುವರ್ಧನ್‌ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. +ದಸರಾಗೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ಪ್ರವಾಸಿಗರನ್ನು ಆಕರ್ಷಿಸಲು ಅನಧಿಕೃತವಾಗಿ ಕೆಲವೆಡೆ ಇಂತಹ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.ವೈದ್ಯಕೀಯ ತಪಾಸಣೆ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ಈ ಸಂಜೆಗೆ ತಿಳಿಸಿದ್ದಾರೆ. \ No newline at end of file diff --git a/eesanje/url_46_6_3.txt b/eesanje/url_46_6_3.txt new file mode 100644 index 0000000000000000000000000000000000000000..17e5919a4271a7ee8befd4b7a5ffe0cea30100a3 --- /dev/null +++ b/eesanje/url_46_6_3.txt @@ -0,0 +1,7 @@ +ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್‌ + +ಬೆಂಗಳೂರು. ಸೆ.29-ತೀವ್ರ ಮಳೆ ಕೊರತೆ ಉಂಟಾಗಿ ಬೆಳೆಗಳು ಒಣಗುವ ಪರಿಸ್ಥಿತಿ ತಲೆದೋರಿದ್ದ ಸಂದರ್ಭದಲ್ಲಿ ಮುಂಗಾರು ಚೇತರಿಕೆಯಾಗಿ ಮಳೆಯಾಗುತ್ತಿರುವುದು ರೈತರಲ್ಲಿ ಉತ್ಸಾಹ ಮೂಡಿಸಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದು ಮತ್ತು ನಾಳೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. +ಆಗಸ್ಟ್‌ನಂತೆ ಸೆಪ್ಟಂಬರ್‌ ತಿಂಗಳಲ್ಲೂ ಮಳೆ ಕಡಿಮೆಯಾಗಿತ್ತು. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಾತ್ರ ವಾಡಿಕೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬೆಳೆಗಳು ಒಣಗುತ್ತಿದ್ದವು. +ಇಂತಹ ಸಂದರ್ಭದಲ್ಲಿ ಮುಂಗಾರು ಮಳೆ ಚೇತರಿಕೆಯಾಗಿ ಕಳೆದ ನಾಲ್ಕೈದು ದಿನಗಳಿಂದ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕೆಲವೆಡೆ ಮಳೆಯ ತೀವ್ರ ಕೊರತೆಯಾಗಿ ಮತ್ತೆ ಬರದ ಛಾಯೆ ಆವರಿಸುವ ಆತಂಕ ಎದುರಾಗಿತ್ತು.ಈ ಮಧ್ಯೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಈಗ ಮುಂಗಾರು ಚುರುಕಾಗಿದೆ. ಇದರಿಂದ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಕರಾವಳಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ನೀಡಿದೆ. +ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು. ಮಿಂಚು ಹಾಗೂ ಬಲವಾದ ಮೇಲೈ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. +ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಸೆಪ್ಟೆಂಬರ್‌ ಒಂದರಿಂದ ನಿನ್ನೆವರೆಗೆ 148.2 ಮಿ.ಮೀ.ವಾಡಿಕೆ ಮಳೆಗೆ 119.7 ಮಿ.ಮೀ.ಮಳೆಯಾಗಿದೆ. ಇದು ವಾಡಿಕೆಗಿಂತ ಶೇ.19ರಷ್ಟು ಕಡಿಮೆಯಾಗಿದೆ.ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಶೇ.75ರಷ್ಟು ಹಾಗೂ ಉತ್ತರ ಒಳನಾಡಿನಲ್ಲಿ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. \ No newline at end of file diff --git a/eesanje/url_46_6_4.txt b/eesanje/url_46_6_4.txt new file mode 100644 index 0000000000000000000000000000000000000000..698c331e21720752f7e63c8c4b5827be0ce8876f --- /dev/null +++ b/eesanje/url_46_6_4.txt @@ -0,0 +1,14 @@ +ಸಿಎಂ ಆಯ್ತು ಈಗ ಸಚಿವರ ವಿರುದ್ಧ ಹಲವು ಸಚಿವರ ಬೆನ್ನುಬಿದ್ದ ಅಭಿಯೋಜನೆ ಭೂತ..? + +ಬೆಂಗಳೂರು, ಸೆ.29-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ, ರಾಜ್ಯಸರ್ಕಾರದ ಹಲವು ಸಚಿವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರ ಮುಂದೆ ದೂರುಗಳು ಬಾಕಿ ಉಳಿದಿದ್ದು, ಯಾವುದೇ ಕ್ಷಣದಲ್ಲಾದರೂ ಪೂರ್ವಾನುಮತಿ ದೊರೆಯುವ ಸಾಧ್ಯತೆ ಇದೆ. +ಸಚಿವರಾದ ಎಂ.ಬಿ. ಪಾಟೀಲ್‌, ಕೆ.ಎನ್‌. ರಾಜಣ್ಣ, ಪ್ರಿಯಾಂಕ ಖರ್ಗೆ ಅವರುಗಳ ವಿರುದ್ಧ ದೂರುಗಳು ರಾಜ್ಯಪಾಲರ ಕಛೇರಿಯಲ್ಲಿ ಪರಿಶೀಲನೆಗೆ ಒಳಪಡುತ್ತಿವೆ.ಒಂದು ವೇಳೆ ಪೂರ್ವಾನುಮತಿ ಕೊಟ್ಟಿದ್ದೆ ಆದರೆ, ರಾಜ್ಯ ಸರ್ಕಾರ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ. +ಸಾಮಾಜಿಕ ಕಾರ್ಯಕರ್ತ ಆದರ್ಶ ಆರ್‌ ಅಯ್ಯರ್‌ ಅವರ ಖಾಸಗಿ ದೂರು ಆಧರಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತರಾಮನ್‌ ಹಾಗೂ ಇತರರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ದೂರು ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಇದನ್ನು ದ್ವೇಷದ ರಾಜಕಾರಣ ಎಂದು ವಿಶ್ಲೇಷಿಸಲಾಗಿದೆ. ಕೆಂದ್ರ ಸಚಿರವರ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಪ್ರತಿಯಾಗಿ ರಾಜ್ಯಸರ್ಕಾರ ಸಚಿವರುಗಳ ವಿರುದ್ಧ ಇರುವ ದೂರುಗಳಿಗೆ ತ್ವರಿತ ಚಾಲನೆ ನೀಡುವ ಸಾಧ್ಯತೆಗಳಿವೆ. +ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿಯವರು ಸಚಿವರಾದ ಎಂ.ಬಿ. ಪಾಟೀಲ್‌, ಕೆ.ಎನ್‌. ರಾಜಣ್ಣ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಹಾಗೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಅಡಿಯಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಪೂರ್ವಾನುಮತಿಯ ಮಂಜೂರಾತಿ ಕೇಳಿದ್ದಾರೆ. +ಕೆಐಎಡಿಬಿಯಲ್ಲಿರುವ ನಾಗರಿಕ ಸೌಲಭ್ಯ ನಿವೇಶನಗಳು (ಸಿಎ)ನ್ನು ಹರಾಜು ಮೂಲಕ ಹಂಚಿಕೆ ಮಾಡುವ ಬದಲು, ನಿಯಮ ಪಾಲಿಸದೆ ಸಾಮಾನ್ಯ ದರದಲ್ಲಿ ಹಂಚಿಕೆ ಮಾಡಲಾಗಿದ್ದು, ಕೋಟ್ಯಂತ ರೂ. ನಷ್ಟ ಉಂಟುಮಾಡಲಾಗಿದೆ ಎಂದು ದೂರಲಾಗಿದೆ. +ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಹೈಟೆಕ್‌ ಡಿಫೆನ್ಸ್ ಅಂಡ್‌ ಏರೋಸ್ಪೇಸ್‌‍ ಪಾರ್ಕ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಫೆನ್ಸ್ ಅಂಡ್‌ ಏರೋಸ್ಪೇಸ್‌‍ ಪಾರ್ಕ್‌, ಸೋಂಪುರ ಒಂದನೇ ಹಂತ, ಎರಡನೇ ಹಂತ, ರಾಮನಗರ ಜಿಲ್ಲೆಯ ಬಿಡದಿ ಎರಡನೇ ಹಂತದ ಸೆಕ್ಟರ್‌, ಕೋಲಾರ ಜಿಲ್ಲೆಯ ನರಸಾಪುರ, ತುಮಕೂರಿನ ವಸಂತನರಸಾಪುರದ 1, 2, 3ನೇ ಹಂತ, ಧಾರವಾಡ ಜಿಲ್ಲೆಯ ಗಾಮನಗಟ್ಟಿ, ಜಿಗಣಿಯ 2ನೇ ಹಂತ, ಹಾರೋಹಳ್ಳಿ 3ನೇ ಹಂತ, ದೊಡ್ಡಬಳ್ಳಾಪುರ 3ನೇ ಹಂತ, ಮಾನ್ವಿ ನಂದಿಕೂರು ಕೈಗಾರಿಕಾ ಪ್ರದೇಶಗಳಲ್ಲಿ ಲಭ್ಯವಿದ್ದ ಸಿಎ ನಿವೇಶನಗಳ ಹಂಚಿಕೆಯನ್ನು ನಿಯಮ ಭಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +ನಿವೇಶನ ಪಡೆದ ಸುಮಾರು 39 ಕಂಪನಿಗಳ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಭಾರಿ ಭ್ರಷ್ಟಚಾರ ಹಾಗೂ ಅಕ್ರಮಗಳು ನಡೆದಿವೆ ಎಂದು ಹೇಳಲಾಗಿದ್ದು, ಸಚಿವ ಎಂ.ಬಿ.ಪಾಟೀಲ್‌ ಅವರ ಜೊತೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಹೆಸರನ್ನು ನಮೂದಿಸಲಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು 19ರ ಅಡಿ ಹಾಗೂ ಭಾರತೀಯ ನಾಗರಿಕ ಸುರಕ್ಷ ಸಂಹಿತೆ ಸೆಕ್ಷನ್‌ 218ರ ಅಡಿ ದೂರು ದಾಖಲಿಸಲು ಅನುಮತಿ ನೀಡುವಂತೆ ಆಗಸ್ಟ್‌ನಲ್ಲಿ ದೂರು ಸಲ್ಲಿಸಲಾಗಿದೆ. +ಅದೇ ರೀತಿ ಕರ್ನಾಟಕ ರಾಜ್ಯ ಅಫೆಕ್ಸ್ ನ ಬ್ಯಾಂಕ್‌ನಲ್ಲಿ ಕಳಂಕಿತ ವ್ಯಕ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಸೇವೆಯಲ್ಲಿ ಮುಂದುವರೆಸಲು ಮಂಜೂರಾತಿ ನೀಡುವ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ವಿರುದ್ಧವೂ ಭ್ತಷ್ಟಾಚಾರ ನಿಗ್ರಹ ಕಾಯ್ದೆ 19 ಹಾಗೂ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಅಡಿಯಲ್ಲಿ ದೂರು ದಾಖಲಿಸಲು ಪೂರ್ವಾನುಮತಿ ಕೇಳಿದ್ದಾರೆ. +ರಾಜ್ಯ ಅಫೆಕ್‌್ಸ ಬ್ಯಾಂಕ್‌ ನಿರ್ದೇಶಕರಾಗಿದ್ದ ಸಿ.ಎನ್‌. ದೇವರಾಜ್‌ ಅವರು ಖಾಸಗಿ ವ್ಯಕ್ತಿಗಳು, ವಾಣಿಜ್ಯ ಸಂಸ್ಥೆಗಳು, ಟ್ರಸ್ಟ್‌ಗಳಿಗೆ ಯಾವುದೇ ಜಾಮೀನು ಮತ್ತು ಭದ್ರತೆ ಪಡೆಯದೆ ಸಾಲ ನೀಡಿದ್ದಾರೆ. ಕಟ್ಟಡ ನಿರ್ಮಾಣದ ಕಂಪನಿ, ಸಕ್ಕರೆ ಕಾರ್ಖಾನೆಗಳು, ಚಿನ್ನದ ಅಂಗಡಿಗಳು ಹಾಗೂ ಇತರ ವ್ಯವಹಾರಗಳಿಗೆ ಬೇಕಾಬೆಟ್ಟಿಯಾಗಿ ನೂರಾರು ಕೋಟಿರೂ.ಗಳನ್ನು ಸಾಲ ನೀಡಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಉನ್ನತ ಮಟ್ಟದ ತನಿಖೆಗೂ ಆದೇಶಿಲಾಗಿದೆ. +ಸಹಕಾರ ಸಂಘಗಳ ಅಪರ ನಿಬಂಧಕರಾಗಿ ನಿವೃತ್ತರಾಗಿರುವ ದೇವರಾಜ್‌ ಅವರನ್ನು ಅಫೆಕ್‌್ಸ ಬ್ಯಾಂಕ್‌ಗೆ ವ್ಯವಸ್ಥಾಪಕ ನಿರ್ದೇಶಕರಾಗಿ 11 ತಿಂಗಳ ಅವಧಿಗೆ ನೇಮಕಾತಿ ಮಾಡಲಾಗಿದೆ. ಭ್ರಷ್ಟಚಾರ ಹಾಗೂ ವ್ಯಾಪಕ ಅವ್ಯವಹಾರದ ಆರೋಪ ಹೊತ್ತಿರುವ ದೇವರಾಜ್‌ ಅವರನ್ನು ಅಫೆಕ್‌್ಸ ಬ್ಯಾಂಕಿಗೆ ನೇಮಕ ಮಾಡಲು ಶಿಫಾರಸ್ಸು ಮಾಡಿರುವ ಸಚಿವ ಕೆ.ಎನ್‌.ರಾಜಣ್ಣ ಹಾಗೂ ಇತರರ ವಿರುದ್ಧ ದೂರು ದಾಖಲಿಸಲು ಪೂರ್ವಾನುಮತಿ ನೀಡುವಂತೆ ದಾಖಲಾತಿ ಸಹಿತವಾಗಿ ಅರ್ಜಿ ಸಲ್ಲಿಸಲಾಗಿದೆ. +ಸಚಿವ ಪ್ರಿಯಾಂಕ ಖರ್ಗೆ ಒಡೆತನದ ಸಂಸ್ಥೆಗೆ ನಿವೇಶನ ಪಡೆದಿರುವುದರಲ್ಲೂ ಲೋಪಗಳಾಗಿವೆ ಎಂದು ಆರೋಪಿಸಿ ದೂರು ದಾಖಲಿಸಲು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಂದ ಪೂರ್ವಾನುಮತಿ ಕೇಳಿದ್ದಾರೆ. +ಹಲವು ಸಚಿವರ ವಿರುದ್ಧ ದೂರು ನೀಡಲಾಗಿದ್ದು, ಒಂದು ವೇಳೆ ರಾಜ್ಯಪಾಲರು ಪೂವಾನುಮತಿ ನೀಡುತ್ತಾ ಹೋದರೆ ಪೊಲೀಸ್‌‍ ಠಾಣೆಗಳ ಕಾರ್ಯದೊತ್ತಡ ಹೆಚ್ಚಾಗಲಿದೆ. ಸರ್ಕಾರಕ್ಕೆ ಕಳಂಕ ತೀವ್ರಗೊಳ್ಳಲಿದೆ. ಒಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ಸಂಘರ್ಷ ಮುಂದುವರೆದ ಭಾಗವಾಗಿ ಸಚಿವರು ಪೊಲೀಸ್‌‍ ಠಾಣೆಗೆ ಪೆರೇಡ್‌ ನಡೆಸುವ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ. \ No newline at end of file diff --git a/eesanje/url_46_6_5.txt b/eesanje/url_46_6_5.txt new file mode 100644 index 0000000000000000000000000000000000000000..d78190131dfce197f9472bdc3e8af7776635971a --- /dev/null +++ b/eesanje/url_46_6_5.txt @@ -0,0 +1,9 @@ +ಹಿಂದಿನ ರಾಜ್ಯಪಾಲರ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯನವರ ಹಳೆ ವಿಡಿಯೋ ವೈರಲ್ + +ಬೆಂಗಳೂರು,ಸೆ.28-ರಾಜ್ಯಪಾಲ ಥಾವರ್‌ಚಂದ್‌ ಗೆಲ್ಹೋಟ್‌ ಕಾರ್ಯ ವೈಖರಿಗೆ ಕಾಂಗ್ರೆಸ್‌‍ ನಾಯಕರು ಪ್ರತಿದಿನ ಮುಗಿಬೀಳುತ್ತಿರುವ ಸಂದರ್ಭದಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗಿದೆ. +2011ರಲ್ಲಿ ಕರ್ನಾಟಕದ ರಾಜ್ಯಪಾಲ ರಾಗಿದ್ದ ಹಂಸರಾಜ್‌ ಭಾರದ್ವಾಜ್‌ ಅವರು ಅಂದಿನ ಬಿಜೆಪಿ ಸರ್ಕಾರಕ್ಕೆ ಒಂದಿಲ್ಲೊಂದು ರೀತಿ ಕಂಟಕಪ್ರಾಯರಾಗಿದ್ದರು.ಇದರಿಂದ ಕೆರಳಿದ್ದ ಬಿಜೆಪಿ ನಾಯಕರು ಹಂಸರಾಜ್‌ ಭಾರದ್ವಾಜ್‌ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದಲ್ಲದೆ ಅವರನ್ನು ವಾಪಸ್‌‍ ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಗೆ ದೂರು ನೀಡಿದ್ದರು. +.श्री .@ . . . ../0cHywyxSKy +ಆಗ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿ ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಲಾಗುತ್ತಿದೆ. ರಾಜ್ಯಪಾಲರನ್ನು ರಾಷ್ಟ್ರಪತಿಗಳು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡುತ್ತಾರೆ. ಕಾರ್ಯಾಂಗದ ಮುಖ್ಯಸ್ಥರಾಗಿರುವ ಅವರು ಸರ್ಕಾರಕ್ಕೆ ಎಲ್ಲ ರೀತಿಯ ಸಲಹೆ ಸೂಚನೆ, ಮಾರ್ಗ ರ್ಶನ ನೀಡುವ ಅಧಿಕಾರ ಹೊಂದಿದ್ದಾರೆ. +ರಾಷ್ಟ್ರಪತಿಗಳು ದೇಶದ ಮುಖ್ಯಸ್ಥರು. ಅವರ ಪ್ರತಿನಿಧಿಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಾರೆ. ಸರ್ಕಾರ ಒಂದು ಸಂವಿಧಾನದ ಚೌಕಟ್ಟಿನೊಳಗೆ ಕೆಲಸ ಮಾಡುತ್ತದೆಯೇ ಇಲ್ಲವೇ ಎಂಬುದನ್ನು ನೋಡಿಕೊಳ್ಳುತ್ತಾರೆ. +ಸರ್ಕಾರ ತಪ್ಪು ಮಾಡಿದಾಗ ಎಚ್ಚರಿಕೆ ಕೊಡುವ, ಬುದ್ದಿ ಹೇಳುವ, ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯಪಾಲರಿಗಿದೆ. ಅವರು ಅಧಿಕಾರ ಚಲಾಯಿಸಿದಾಗ ರಾಜಕೀಯ ಪ್ರೇರಿತ ದುರದ್ದೇಶದಿಂದ ಮಾಡಿದ್ದಾರೆ. +ಪೂರ್ವ ನಿಯೋಜಿತ, ವಿರೋಧ ಪಕ್ಷದವರು ಮಾಡಿಸುತ್ತಿದ್ದಾರೆ ಎಂದು ಹೇಳುವುದನ್ನು ಜನ ನಂಬುವುದಿಲ್ಲ ಎಂದು ಹೇಳಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವಿರುದ್ಧ ನೆಟ್ಟಿಗರು ತರಹೇವಾರಿ ಪ್ರಶ್ನೆಗಳನ್ನು ಮಾಡುತ್ತಿದ್ದಾರೆ. \ No newline at end of file diff --git a/eesanje/url_46_6_6.txt b/eesanje/url_46_6_6.txt new file mode 100644 index 0000000000000000000000000000000000000000..358a047a440084812b75daa676dd48badf4d641d --- /dev/null +++ b/eesanje/url_46_6_6.txt @@ -0,0 +1,7 @@ +ನಿರ್ಮಲಾ ಸೀತಾರಾಮನ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ + ' +ಬೆಂಗಳೂರು,ಸೆ.28-ಚುನಾವಣಾ ಬಾಂಡ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿ ರುವ ಬಿಜೆಪಿ ಜೆಡಿಎಸ್‌‍ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್‌ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂಬುದರ ಬಗ್ಗೆ ಬಿಜೆಪಿ ಜೆಡಿಎಸ್‌‍ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು. +ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕೂಡ ಈ ಹಗರಣದಲ್ಲಿ ಆರೋಪಿಯಾಗಿದ್ದಾರೆ. ಸಾರ್ವಜನಿಕರ ಹಣವನ್ನು ಲೂಟಿ ಮಾಡಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರದ ಮಂತ್ರಿಗಳು ವಾಮಮಾರ್ಗದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಈಗ ದೇಶದ ಜನತೆಗೆ ತಿಳಿದಿದೆ. ಇವರ ವಿರುದ್ಧ ಪ್ರಧಾನಿ ನರೇಂದ್ರಮೋದಿ ಕ್ರಮ ಕೈಗೊಳ್ಳುತ್ತಾರ ಎಂದು ಪ್ರಶ್ನಿಸಿದರು. +ನಿರ್ಮಲ ಸೀತಾರಾಮನ್‌ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿಯವರು ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು, ಭ್ರಷ್ಟಾಚಾರ ಎಂದರೆ ಬಿಜೆಪಿ ಬಿಜೆಪಿ ಎಂದರೆ ಭ್ರಷ್ಟಾಚಾರ ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರೆಸುವ ಬಿಜೆಪಿ ನಾಯಕರು ಈಗ ರಾಜೀನಾಮೆ ಕೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. +ಅತಿ ಹೆಚ್ಚು ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಬಿಜೆಪಿ ಎಂದು ಈಗ ಮತ್ತೆ ಸಾಬೀತಾಗಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಉಮೇಶ್‌ ಪುಟ್ಟರಾಜು, ನವೀನ್‌, ಹೇಮರಾಜ್‌, ಕೌಶಿಕ್‌, ವಾಸು, ಮಧು, ಗಜೇಂದ್ರ ಭಾಗವಹಿಸಿದ್ದರು. \ No newline at end of file diff --git a/eesanje/url_46_6_7.txt b/eesanje/url_46_6_7.txt new file mode 100644 index 0000000000000000000000000000000000000000..624337c845d2a74647b4d6fc7b9d906817b1fa7f --- /dev/null +++ b/eesanje/url_46_6_7.txt @@ -0,0 +1,9 @@ +ಮುಡಾ ಹಗರಣಕ್ಕೂ ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ : ಆರ್‌.ಅಶೋಕ್‌ + +ಬೆಂಗಳೂರು, ಸೆ.28-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿ ರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌‍ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌‍ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು. +ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ಐಆರ್ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದು ತಿಳಿಸಿದರು. +ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌‍ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. +ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದರು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. +ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ. ಆದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ರಾಜ್ಯ ಪೊಲೀಸರಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಲು ಆಗುವುದಿಲ್ಲ. ಯಾವ್ಯಾವುದೋ ಪ್ರಕರಣಕ್ಕೆ ಮುಡಾ ಹಗರಣವನ್ನು ಹೋಲಿಸುವುದು ಬೇಡ ಎಂದು ಅವರು ಹೇಳಿದರು. \ No newline at end of file diff --git a/eesanje/url_46_6_8.txt b/eesanje/url_46_6_8.txt new file mode 100644 index 0000000000000000000000000000000000000000..e8d0a44004b9f35131100ebf7f205bbf00a465b0 --- /dev/null +++ b/eesanje/url_46_6_8.txt @@ -0,0 +1,6 @@ +ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದ್ದೇನು..? + +ಬೆಳಗಾವಿ, ಸೆ.28-ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್‌ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿರಂತರ ಪ್ರಕ್ರಿಯೆ. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸ್ಪಷ್ಟಪಡಿಸಿದರು. +ಮಾಜಿ ಮುರುಗೇಶ್‌ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ ಆಗ್ರಹವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು. +ಬೆಳಗಾವಿ ಜಿಲ್ಲಾ ವಿಭಜನೆಯಾದರೆ ಬೆಂಬಲ: ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_46_6_9.txt b/eesanje/url_46_6_9.txt new file mode 100644 index 0000000000000000000000000000000000000000..6f81bf0f98930a4cf92279f47a9b7619448ce236 --- /dev/null +++ b/eesanje/url_46_6_9.txt @@ -0,0 +1,12 @@ +ಎಲೆಕ್ಟ್ರೋಲ್‌ ಬಾಂಡ್‌ ಹಗರಣ : ಮತ್ತಷ್ಟು ದೂರ ದಾಖಲಿಸಲು ಸಿದ್ಧತೆ + +ಬೆಂಗಳೂರು,ಸೆ.28-ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಎಲೆಕ್ಟ್ರೋಲ್‌ ಬಾಂಡ್‌ ಹಗರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಉಳಿದ ದೂರುಗಳ ಅಡಿಯೂ ಪ್ರಕರಣ ದಾಖಲಿಸಲು ಹಲವು ಸಂಘಟನೆಗಳು ಮುಂದಾಗಿವೆ. +ಕೇಂದ್ರಸರ್ಕಾರ ಜಾರಿನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆಯಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳಿಂದ ಹಣ ವಸೂಲಿ ಮಾಡಿದೆ ಹಾಗೂ ರಾಜಕೀಯ ಎದುರಾಳಿಗಳ ವಿರುದ್ಧ ಸಾಕ್ಷ್ಯಗಳನ್ನಾಗಿ ಬಳಕೆ ಮಾಡಲು ಪ್ರಯ ತ್ನಿಸಿದೆ ಎಂಬ ಆರೋಪಗಳಿದ್ದವು. +ಲೋಕಸಭೆ ಚುನಾವಣೆಗೂ ಮುನ್ನ ಎಲೆಕ್ಟ್ರೋಲ್‌ ಬಾಂಡ್‌ ಭಾರಿ ಸದ್ದು ಮಾಡಿತ್ತು. ರಾಜಕೀಯವಾಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಸುಪ್ರೀಂಕೋರ್ಟ್‌ ಈ ಕುರಿತು ವಿಚಾರಣೆ ನಡೆಸಿತ್ತು. ಬೆಂಗಳೂರಿನಲ್ಲಿ ಜನಾಧಿಕಾರ ಸಂಘರ್ಷ ಪರಿಷತ್‌ (ಜೆಎಸ್‌‍ಪಿ) ಡಾ.ಅಂಬೇಡ್ಕರ್‌ ದಂಡ್‌, ಫ್ಯೂಚರ್‌ ಇಂಡಿಯಾ ಆರ್ಗನೈಸೇಷನ್‌, ಲಂಚಮುಕ್ತ ಕರ್ನಾಟಕ ವೇದಿಕೆ ಸೇರಿದಂತೆ ನಾಲ್ಕು ಸಂಘಟನೆಗಳು ಎಲೆಕ್ಟ್ರೋಲ್‌ ಬಾಂಡ್‌ ಹಗರಣವನ್ನು ಅಧ್ಯಯನ ನಡೆಸಿ ದಾಖಲಾತಿಗಳ ಸಹಿತವಾಗಿ ದೂರು ಸಲ್ಲಿಸಿದ್ದವು. +ಜೆಎಸ್‌‍ಪಿಯ ಸಹ ಅಧ್ಯಕ್ಷ ಆದರ್ಶ ಅಯ್ಯರ್‌ ಬೆಂಗಳೂರಿನ ತಿಲಕ್‌ನಗರ ಪೊಲೀಸ್‌‍ ಠಾಣೆಗೆ ಕಳೆದ ಮಾರ್ಚ್‌ನಲ್ಲಿ ದೂರು ನೀಡಿದ್ದರು. ಆದರೆ ಪ್ರಕರಣ ದಾಖಲಾಗಿರಲಿಲ್ಲ. ಡಿಸಿಪಿಯವರಿಗೂ ದೂರು ಸಲ್ಲಿಸಲಾಗಿತ್ತು. ಅದೂ ಪ್ರಯೋಜನವಾಗದಿದ್ದಾಗ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದರು. +ಐದು ತಿಂಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ತೀರ್ಪು ನೀಡಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಪದಾಧಿಕಾರಿಗಳು, ಕರ್ನಾಟಕದ ಬಿಜೆಪಿ ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಸುಲಿಗೆ ಆರೋಪದಡಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ. +ನ್ಯಾಯಾಲಯದ ತೀರ್ಪಿನ ಪ್ರತಿಯೊಂದಿಗೆ ಆದರ್ಶ ಅಯ್ಯರ್‌ ಇಂದು ತಿಲಕ್‌ನಗರ ಪೊಲೀಸರನ್ನು ಸಂಪರ್ಕಿಸುತ್ತಿದ್ದು, ಎಫ್‌ಐಆರ್‌ ದಾಖಲಿಸುವಂತೆ ಮನವಿ ಮಾಡಿದ್ದಾರೆ.ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಸದಸ್ಯರಾಗಿದ್ದು, ಅವರ ಕಚೇರಿ ತಿಲಕ್‌ನಗರ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವುದರಿಂದ ಅಲ್ಲಿಗೆ ದೂರು ನೀಡಲಾಗಿತ್ತು ಎಂದು ಆದರ್ಶ ಅಯ್ಯರ್‌ ಈ ಸಂಜೆಗೆ ತಿಳಿಸಿದ್ದಾರೆ. +ನಾಲ್ಕು ಸಂಘಟನೆಗಳು ಎಲೆಕ್ಟ್ರೋಲ್‌ ಬಾಂಡ್‌ನ ಹಲವು ಪ್ರಕರಣಗಳನ್ನು ಅಧ್ಯಯನ ನಡೆಸಿ ಸಮಗ್ರ ದಾಖಲಾತಿಗಳನ್ನು ಸಜ್ಜುಗೊಳಿಸಿಕೊಂಡಿವೆ. ಸುಮಾರು 20 ಈ ರೀತಿಯ ಪ್ರಕರಣಗಳಿದ್ದು, ಅದರಲ್ಲಿ ತಾವು ಅರೊಬಿಂದೋ ಫಾರ್ಮ ಹಾಗೂ ವೇದಾಂತ್‌ ಕಂಪನಿಯಿಂದ ಹಣ ವಸೂಲಿಯಾಗಿರುವ ಮಾಹಿತಿಗಳೊಂದಿಗೆ ದೂರು ನೀಡಿದ್ದಾಗಿ ಆದರ್ಶ ಅಯ್ಯರ್‌ ತಿಳಿಸಿದ್ದಾರೆ. +ಅನಿಲ್‌ ಅಗರ್‌ವಾಲ್‌ ಒಡೆತನದ ಅರೊಬಿಂದೋ ಫಾರ್ಮದಿಂದ 230 ಕೋಟಿ ರೂ.ಗಳನ್ನು ಎಲೆಕ್ಟ್ರೋಲ್‌ ಬಾಂಡ್‌ ರೂಪದಲ್ಲಿ ವಸೂಲಿ ಮಾಡಲಾಗಿದೆ. ಜೊತೆಗೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರಕರಣದಲ್ಲಿ ಸುನಿಲ್‌ ಅಗರ್‌ವಾಲ್‌ ಅವರನ್ನು ಸಾಕ್ಷಿದಾರರನ್ನಾಗಿ ಮಾಡಲು ಒತ್ತಡ ಬಳಸಲಾಗಿದೆ ಎಂದು ಹೇಳಿದರು. +ಆಂಧ್ರಪ್ರದೇಶದ ಶರಶ್ಚಂದ್ರ ರೆಡ್ಡಿಯವರ ವೇದಾಂತ್‌ ಕಂಪನಿಯಿಂದ 49 ಕೋಟಿ ರೂ.ಗಳ ಎಲೆಕ್ಟ್ರೋಲ್‌ ಬಾಂಡ್‌ ವಸೂಲಿ ಮಾಡಿರುವ ದಾಖಲಾತಿಗಳಿವೆ ಎಂದು ತಿಳಿಸಿದ್ದಾರೆ.ಪ್ರಕರಣ ದಾಖಲಾಗಿರುವ ಸಮಯ, ವಿಚಾರಣೆ, ನೋಟಿಸ್‌‍, ಜಾಮೀನು ಮತ್ತು ಬಿಡುಗಡೆ ಈ ಎಲ್ಲಾ ಟೈಮ್‌ಲೈನ್‌ಗಳನ್ನು ಪರಿಶೀಲಿಸಿದರೆ ಎಲೆಕ್ಟ್ರೋಲ್‌ ಬಾಂಡ್‌ ವಸೂಲಿ ಹಿಂದೆ ಅಕ್ರಮ ನಡೆದಿದೆ ಎಂಬ ಆರೋಪ ಸ್ಪಷ್ಟವಾಗುತ್ತಿದೆ ಎಂದು ಆದರ್ಶ್‌ ಅಯ್ಯರ್‌ ದೂರಿದರು. +ಸದ್ಯಕ್ಕೆ ತಾವು ಎರಡು ಪ್ರಕರಣಗಳನ್ನು ಮುಂದಿಟ್ಟುಕೊಂಡು ದೂರು ದಾಖಲಿಸಿದ್ದು, ನಾವು ಸಲ್ಲಿಸಿದ್ದ ದಾಖಲಾತಿಗಳು ಹಾಗೂ ಮಾಹಿತಿಯನ್ನು ನ್ಯಾಯಾಲಯ ಪರಿಗಣಿಸಿ ತೀರ್ಪು ನೀಡಿದೆ. ಉಳಿದಂತೆ 20 ದೂರುಗಳ ಅಡಿಯಲ್ಲಿಯೂ ಪ್ರಕರಣ ದಾಖಲಿಸುವಂತೆ ಸ್ಥಳೀಯ ಪೊಲೀಸರಿಗೆ ಮನವಿ ಸಲ್ಲಿಸಲಾಗುವುದು. ಒಂದು ವೇಳೆ ಅವರು ನಿರಾಕರಿಸಿದರೆ ಮತ್ತೆ ಹತ್ತು ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಕಾನೂನು ಹೋರಾಟ ಮುಂದುವರೆಸುವುದಾಗಿ ಆದರ್ಶ ಅಯ್ಯರ್‌ ತಿಳಿಸಿದರು. diff --git a/eesanje/url_46_70_1.txt b/eesanje/url_46_70_1.txt new file mode 100644 index 0000000000000000000000000000000000000000..269f9d4a75ed8a6c6484d174e6ebf43626abfbaf --- /dev/null +++ b/eesanje/url_46_70_1.txt @@ -0,0 +1,8 @@ +ಶೀಘ್ರದಲ್ಲೇ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 150 ಹಾಸ್ಟೆಲ್‌ಗಳ‌ ಆರಂಭ +ಬೆಂಗಳೂರು,ಜು.19-ಶೀಘ್ರದಲ್ಲೇ ರಾಜ್ಯಾದ್ಯಂತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ 150 ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. +ವಿಧಾನಪರಿಷತ್‌ನಲ್ಲಿಂದು ಸದಸ್ಯ ಬಾಬಣ್ಣ ತಳವಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 75 ಬಾಲಕಿಯರ ಹಾಗೂ 75 ಬಾಲಕರು ಸೇರಿದಂತೆ ಒಟ್ಟು 150 ವಿದ್ಯಾರ್ಥಿನಿಲಯಗಳನ್ನು ತೆರೆಯಲಾಗುವುದು. ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ಘೋಷಣೆ ಮಾಡಿದ್ದರು ಎಂದು ತಿಳಿಸಿದರು. +ಮೈಸೂರು, ಬೆಳಗಾವಿ, ಧಾರವಾಡ ಸೇರಿದಂತೆ ವಿವಿಧ ಶೈಕ್ಷಣಿಕ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮೊದಲು ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕೆಂಬ ಆಲೋಚನೆ ಇತ್ತು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ತಾಲ್ಲೂಕು ಮಟ್ಟದಲ್ಲೂ ಪ್ರಾರಂಭಿಸಲಾಗುವುದು ಎಂದರು. +ಕಳೆದ ವರ್ಷ 2,28,000 ವಿದ್ಯಾರ್ಥಿಗಳು ಹಿಂದುಳಿದ, ಎಸ್ಸಿ-ಎಸ್ಟಿ ಹಾಸ್ಟೆಲ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ 100 ವಿದ್ಯಾರ್ಥಿಗಳಿರುವ ಕಡೆ 150 ಹಾಗೂ 150 ವಿದ್ಯಾರ್ಥಿಗಳಿರುವ ಹಾಸ್ಟೆಲ್‌ಗಳಲ್ಲಿ 200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತೇವೆ ಎಂದರು. +ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರಗಳನ್ನು ನೀಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೊದಲು ಮೂರು ತಿಂಗಳಿಗೊಮೆ ಆಹಾರ ಪದಾರ್ಥಗಳನ್ನು ಪರೀಕ್ಷೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ತಿಂಗಳು ಪರೀಕ್ಷೆಗೆ ಒಳಪಡಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. +ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ ನಡೆಸಿ ವಿದ್ಯಾರ್ಥಿ ನಿಲಯಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. +ಈವರೆಗೂ ಜಿಲ್ಲಾ ಮಟ್ಟದಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸಲು ಟೆಂಡರ್‌ ಕರೆಯಲಾಗುತ್ತಿತ್ತು. ಇದು ಟೆಂಡರ್‌ನಲ್ಲಿ ಭಾಗವಹಿಸಿದವರಿಗೆ ಸಿಗುತಿತ್ತು. ಇನ್ನು ಮುಂದೆ ತಾಲ್ಲೂಕು ಮಟ್ಟದಲ್ಲಿ ಟೆಂಡರ್‌ ಕರೆಯಲಾಗುತ್ತದೆ ಎಂದು ವಿವರಿಸಿದರು. \ No newline at end of file diff --git a/eesanje/url_46_70_10.txt b/eesanje/url_46_70_10.txt new file mode 100644 index 0000000000000000000000000000000000000000..a8210209a7fd8ff0b281a5ed1df6f188f024d089 --- /dev/null +++ b/eesanje/url_46_70_10.txt @@ -0,0 +1,5 @@ +ಕಲಾಪ ವೀಕ್ಷಣೆಗೆ ಬಂದ ವಿದ್ಯಾರ್ಥಿಗಳು, ಮಳೆಯಲ್ಲೇ ನೆಂದು ಹೋದ ಸ್ಕೂಲ್ ಬ್ಯಾಗುಗಳು +ಬೆಂಗಳೂರು, ಜು-19,ಕಲಾಪ ವೀಕ್ಷಣೆಗೆಂದು ವಿವಿಧ ಶಾಲೆಯ ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಖುಷಿ-ಖುಷಿಯಿಂದ ಬಂದಿದ್ದರು. ತಮ್ಮ ಶಾಲಾ ಬ್ಯಾಗುಗಳ ಸಮೇತ ಆಗಮಿಸಿದ್ದ ವಿದ್ಯಾರ್ಥಿಗಳ ಬ್ಯಾಗುಗಳನ್ನು ಒಳಗೆ ಬಿಡದೆ ವಿಧಾನಸೌಧ ಮುಂದಿನ ಬೃಹತ್‌ ಮೆಟ್ಟಿಲುಗಳ ಕೆಳಗಡೆ ಇರಿಸಲಾಯಿತು. +ಪಾಪ ವಿದ್ಯಾರ್ಥಿಗಳು ವಿಧಾನ ಮಂಡಲದ ಕಾರ್ಯ-ಕಲಾಪಗಳನ್ನು ವೀಕ್ಷಿಸಲು ಒಳಗೆ ಹೋದರೆ, ಇತ್ತ ಹೊರಗಡೆ ಮಳೆ ಸುರಿದು ಮೆಟ್ಟಿಲು ಕೆಳಗೆ ಇಟ್ಟಿದ್ದ ಬ್ಯಾಗುಗಳು ನೆಂದು ಒಳಗಿದ್ದ ಪುಸ್ತಕಗಳು ಹಾಳಾಯಿತು. +ಬ್ಯಾಗುಗಳನ್ನು ಒಳಗೆ ಬಿಡದಿದ್ದರೂ ಪರವಾಗಿಲ್ಲ, ಸುರಕ್ಷಿತ ಜಾಗದಾಲ್ಲಾದರೂ ಇರಿಸಬಹುದಿತ್ತು. ಮೆಟ್ಟಿಲುಗಳ ಕೆಳಗೆ ಇರಿಸಿ ಬ್ಯಾಗು, ಪುಸ್ತಕಗಳು ನೆನೆಯಲು ಕಾರಣವಾಗಿದ್ದು ನೋವಿನ ಸಂಗತಿ. +ಹೊರಗಡೆ ಮಳೆ ಬರುತ್ತಿದೆ, ಮಳೆಯಲ್ಲಿ ಬ್ಯಾಗುಗಳು ನೆನೆದು ಅದರ ಒಳಗಿರುವ ಪುಸ್ತಕಗಳು ಹಾಳಾಗಬಹುದೆಂಬ ಕಲ್ಪನೆಯೂ ಅಲ್ಲಿನ ಸಿಬ್ಬಂದಿಗಳಿಗೆ ಬರಲಿಲವೆ? ಪಾಪ ಖುಷಿಯಲ್ಲಿ ಬಂದ ಮಕ್ಕಳು ಮಳೆಯಲ್ಲಿ ತೊಯ್ದ ಬ್ಯಾಗುಗಳನ್ನು ಹಿಡಿದು ವಾಪಸ್ಸು ಹೋಗಬೇಕಾದ ಪರಿಸ್ಥಿತಿ ಬಂದಿದ್ದು ನೋವಿನ ಸಂಗತಿ. \ No newline at end of file diff --git a/eesanje/url_46_70_11.txt b/eesanje/url_46_70_11.txt new file mode 100644 index 0000000000000000000000000000000000000000..14c367574653a2442c8b562a1aaf2af98e1223ae --- /dev/null +++ b/eesanje/url_46_70_11.txt @@ -0,0 +1,6 @@ +ಕಾಡುಗೊಲ್ಲ ನಿಗಮಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ : ತಂಗಡಗಿ +ಬೆಂಗಳೂರು,ಜು.19-ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಆಶ್ವಾಸನೆ ನೀಡಿದರು. +ವಿಧಾನಪರಿಷತ್‌ನಲ್ಲಿ ಸದಸ್ಯ ನಾಗರಾಜ್‌ ಯಾದವ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಡುಗೊಲ್ಲ ಅಭಿವೃದ್ದಿ ನಿಗಮಕ್ಕೆ ಒಟ್ಟು 15 ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಿದ್ದೇವೆ. ಅನುದಾನ ಬಿಡುಗಡೆ ಮಾಡಬೇಕೆಂಬ ಒತ್ತಡವಿದೆ. ಹೀಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದರು. ‘ +ಸಮುದಾಯಕ್ಕೆ ಮೀಸಲಿಟ್ಟ ಹಣ ಇನ್ನು ಬಿಡುಗಡೆಯಾಗದಿರಲು ಕೆಲವು ತಾಂತ್ರಿಕ ಕಾರಣಗಳು ತೊಡಕ್ಕಾಗಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಅನುಕೂಲವಾಗುವಂತಹ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು. +ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಸದ್ಯ ನಾನೇ ಅಧ್ಯಕ್ಷನಾಗಿದ್ದೇನೆ. ಈ ಸಮುದಾಯದ ಬಗ್ಗೆ ಕಳಕಳಿ ಇರುವ ವ್ಯಕ್ತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಬೇಡಿಕೆಯು ಇದೆ. ಶೀಘ್ರದಲ್ಲೇ ಇದರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. +ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಬೇಕೆಂಬ ಸದಸ್ಯ ನಾಗರಾಜ್‌ ಅವರ ಮನವಿಗೆ ಉತ್ತರಿಸಿದ ಅವರು, ಈಗಾಗಲೇ ರಾಜ್ಯ ಸರ್ಕಾರವು ಕೇಂದ್ರಕ್ಕೆ ಶಿಫಾರಸ್ಸನ್ನು ಮಾಡಿದೆ. ಮುಖ್ಯಮಂತ್ರಿಗಳು ಕೂಡ ಸಂಬಂಧಪಟ್ಟವರ ಜೊತೆ ಚರ್ಚಿಸಿದ್ದಾರೆ. ಕೇಂದ್ರವು ಸ್ಪಂದಿಸುತ್ತದೆ ಎಂಬ ವಿಶ್ವಾಸವನ್ನು ತಂಗಡಗಿ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_70_12.txt b/eesanje/url_46_70_12.txt new file mode 100644 index 0000000000000000000000000000000000000000..d84f6d544ec053512d1242ca47b53990d10c4dd2 --- /dev/null +++ b/eesanje/url_46_70_12.txt @@ -0,0 +1,8 @@ +ವಿಧಾನಸಭೆಯ ಮೊಗಸಾಲೆಗೆ ಆಪ್ತ ಸಹಾಯಕರನ್ನು ಕರೆತರದಂತೆ ಸ್ಪೀಕರ್ ಸೂಚನೆ +ಬೆಂಗಳೂರು, ಜು.19-ವಿಧಾನಸಭೆಯ ಮೊಗಸಾಲೆಗೆ (ಲಾಂಜ್‌‍) ಆಪ್ತ ಸಹಾಯಕರನ್ನು ಕರೆತರಬಾರದು ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಶಾಸಕರಿಗೆ ಸೂಚನೆ ನೀಡಿದರು.ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡ ಕೂಡಲೆ ನಿನ್ನೆ ಸದನಕ್ಕೆ ಬೇಗ ಆಗಮಿಸಿದ ಶಾಸಕರ ಹೆಸರನ್ನು ವಾಚಿಸಿದ ನಂತರ ಸಭಾಧ್ಯಕ್ಷರು ಈ ಸೂಚನೆ ನೀಡಿದರು. +ಲಾಂಜ್‌ನಲ್ಲಿ ಆಪ್ತ ಸಹಾಯಕರು ಕೂರುವುದರಿಂದ ಅನಗತ್ಯ ಗದ್ದಲದ ವಾತಾವರಣವಾಗಲಿದೆ. ಹೀಗಾಗಿ ಶಾಸಕರು ತಮ ಆಪ್ತ ಸಹಾಯಕರನ್ನ ಕರೆತರಬಾರದು. ಮೊಗಸಾಲೆಗೆ ಆಪ್ತ ಸಹಾಯಕರು ಬಂದರೆ ಗದ್ದಲದ ವಾತಾವರಣ ನಿರ್ಮಾಣವಾಗುತ್ತಿದೆ. ಎಷ್ಟೋ ಬಾರಿ ಶಾಸಕರು ಮತ್ತು ಸಚಿವರಿಗೆ ಕೂರಲು ಲಾಂಜ್‌ನಲ್ಲಿ ಜಾಗ ಸಿಗುತ್ತಿಲ್ಲ. ಮಾಜಿ ಶಾಸಕರೊಬ್ಬರು ಲಾಂಜ್‌ನಲ್ಲಿ ಹೋಟೆಲ್‌ ಮಾಡಿದ್ದೀರಾ ಎಂದು ಕೇಳಿದರು ಎಂದು ಹೇಳಿದರು. +ಆದ್ದರಿಂದ ಅನಗತ್ಯವಾಗಿ ಶಾಸಕರು ತಮ ಸಹಾಯಕರನ್ನು ಕರೆತರಬೇಡಿ. ವಯಸ್ಸಾದ ಹಿರಿಯ ಶಾಸಕರು ಅಥವಾ ಮಾಜಿ ಶಾಸಕರು ನೆರವಿಗಾಗಿ ಒಬ್ಬರನ್ನು ಕರೆತಂದರೆ ಅಡ್ಡಿಯಿಲ್ಲ. ಆದರೆ ಉಳಿದವರು ಈ ರೂಢಿಯನ್ನು ಕೈಬಿಡಿ. ಮೊಗಸಾಲೆಯ ಗೌರವ ಕಾಪಾಡಿ ಎಂದು ಮನವಿ ಮಾಡಿದರು. +ಹಾಗೆಯೇ ಬೇರೆಯವರನ್ನು ಮೊಗಸಾಲೆಗೆ ಬರಲು ಒಳಬಿಡಲು ಮಾರ್ಷಲ್‌ಗಳ ಮೇಲೆ ಒತ್ತಡ ಹಾಕಬೇಡಿ. ನಾವೇ ಮಾಡಿದ ಕಾನೂನುಗಳನ್ನು, ನಿಯಮಗಳನ್ನು ಅವರು ಪಾಲಿಸುತ್ತಾರೆ. ಅವರ ಮೇಲೆ ಒತ್ತಡ ಹಾಕಿ ಬೇರೆಯವರನ್ನು ಒಳಗೆ ಕರೆತರುವುದರಲ್ಲಿ ಯಾವ ಹೆಚ್ಚುಗಾರಿಕೆಯೂ ಇಲ್ಲ ಎಂದು ಅವರು ಹೇಳಿದರು. +ವಿಶ್ರಾಂತಿಗೆ ಒರಗು ಕುರ್ಚಿ: +ವಿಧಾನಸಭೆಯ ಮೊಗಸಾಲೆಯಲ್ಲಿ ಮಧ್ಯಾಹ್ನದ ಊಟದ ನಂತರ ಶಾಸಕರ ಅಲ್ಪಕಾಲದ ವಿಶ್ರಾಂತಿಗೆ ಒರಗು (ರಿಕ್ಲೈನಿಂಗ್‌‍) ಕುರ್ಚಿಯ ವ್ಯವಸ್ಥೆ ಮಾಡಲಾಗಿದೆ. ಇದನ್ನು ಪ್ರಾಯೋಗಿಕವಾಗಿ ಮಾಡಿದ್ದು, ಒಂದು ಕುರ್ಚಿಯನ್ನು ಇರಿಸಲಾಗಿದೆ. ಮುಂದಿನ ಅಧಿವೇಶನದ ಹೊತ್ತಿಗೆ ಈ ಕುರ್ಚಿಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರುಬಜೆಟ್‌ ಅಧಿವೇಶನದಿಂದ ವಿಧಾನಸಭೆಯ ಮೊಗಸಾಲೆಯಲ್ಲೇ ಎಲ್ಲ ಶಾಸಕರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಪೀಠ ಕಲ್ಪಿಸಿದೆ. +ಊಟಕ್ಕಾಗಿ ಹೊರಗೆ ಹೋಗಿ ಬರುವುದು ತಡವಾಗದಿರಲಿ ಎನ್ನುವ ಕಾರಣಕ್ಕೆ ಈ ಕ್ರಮವನ್ನು ತೆಗೆದುಕೊಂಡಿದೆ. ಆದರೂ ಕೆಲವರು ಊಟವಾದ ನಂತರ ವಿಶ್ರಾಂತಿಗೆ ಶಾಸಕರ ಭವನಕ್ಕೆ ಹೋಗಿ ಬರುವುದಾಗಿ ಹೇಳುತ್ತಾರೆ. ಅದನ್ನು ತಪ್ಪಿಸಲು ಈಗ ಅಲ್ಪಕಾಲದ ವಿಶ್ರಾಂತಿಗೆ (ನ್ಯಾಪ್‌‍) ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_46_70_2.txt b/eesanje/url_46_70_2.txt new file mode 100644 index 0000000000000000000000000000000000000000..8672a8cc04fcfda463063cd29221fd8e4a2e0e1c --- /dev/null +++ b/eesanje/url_46_70_2.txt @@ -0,0 +1,12 @@ +ವಿಪಕ್ಷಗಳ ಧರಣಿ, ವಿಧಾನಸಭೆಯಲ್ಲಿ ಕೋಲಾಹಲ +ಬೆಂಗಳೂರು, ಜು.19– ವಾಲೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ನಿನ್ನೆ ಆರಂಭಿಸಿದ ಧರಣಿಯನ್ನು ವಿಧಾನಸಭೆಯಲ್ಲಿ ಇಂದು ಮುಂದುವರೆಸಿದ್ದರಿಂದ ಆರೋಪ, ಪ್ರತ್ಯಾರೋಪ ನಡೆದು ಸದನದಲ್ಲಿ ಕೋಲಾಹಲ ಉಂಟಾಯಿತು. +ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ಮುಂದುವರೆಸಿದರು.ಆಡಳಿತ ಮತ್ತು ಪ್ರತಿಕ್ಷಗಳ ನಡುವೆ ಪದೇ ಪದೇ ಆರೋಪ ಪತ್ಯಾರೋಪ ನಡೆದು ಸದನದಲ್ಲಿ ಕಾವೇರಿದ ವಾತವಾರಣ ಸಷ್ಟಿಯಾಯಿತು. ಪರಿಸ್ಥಿತಿ ತಿಳಿಗೊಳ್ಳದಿದ್ದಾಗ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ಅಧಿವೇಶನವನ್ನು ಕೆಲ ಕಾಲ ಮುಂದೂಡಿದರು. +ಪ್ರತಿಪಕ್ಷಗಳು ಧರಣಿ ನಡೆಸಿ ಘೋಷಣೆ ಕೂಗಿದರೆ, ಆಡಳಿತ ಪಕ್ಷದವರು ಕಲಾಪದಲ್ಲಿ ಪಾಲ್ಗೊಂಡು ವಿಪಕ್ಷ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಮುಂದೂಡಿದ ಸದನ ಮತ್ತೆ ಸಮಾವೇಶಗೊಂಡಾಗಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಪ್ರತ್ರಿ ಪಕ್ಷಗಳ ಶಾಸಕರು ಧರಣಿ ನಡೆಸಿದರೆ, ಆಡಳಿತ ಪಕ್ಷದ ಶಾಸಕರು ಕಲಾಪದಲ್ಲಿ ಪಾಲ್ಗೊಂಡು, ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಧರಣಿ ನಿರತ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರೆ, ಆಡಳಿತ ಪಕ್ಷದ ಶಾಸಕರು ಮಳೆ ಹಾನಿಯ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡರು.ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಾತನಾಡಿ, ಧರಣಿ ಕೈ ಬಿಟ್ಟು ಸ್ವಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸುವಂತೆ ಪದೇ ಪದೇ ಮಾಡಿದ ಮನವಿಗೆ ಧರಣಿ ನಿರತರು ಕಿವಿಗೊಡಲಿಲ್ಲ. +ಅಧಿವೇಶನ ನಡೆಸಲು ನಿಯಮ ಮತ್ತು ಸಂಪ್ರದಾಯವಿದೆ. ಹಿಂದೆ ಆಗಿರುವುದನ್ನೆಲ್ಲಾ ಮರೆತು ಕಲಾಪದಲ್ಲಿ ಪಾಲ್ಗೊಳ್‌ಳಿ. ಯಾರು ಪ್ಲೇ ಕಾರ್ಡ್‌ ಪ್ರದರ್ಶನ ಮಾಡುವುದು ಬೇಡ. ಆಡಳಿತ ಪಕ್ಷದ ಕಡೆಯೂ ಮಾಡಬೇಡಿ, ವಿರೋಧ ಪಕ್ಷದ ಕಡೆಯೂ ಪ್ಲೇ ಕಾರ್ಡ್‌ ಪ್ರದರ್ಶನ ಬೇಡ. ಪ್ರಜಾಪ್ರಭುತ್ವದ ಸೌಂದರ್ಯ ಪ್ರದರ್ಶನವಾಗಬೇಕು ಎಂದು ಸಭಾಧ್ಯಕ್ಷರು ಕಿವಿ ಮಾತು ಹೇಳಿದರು. +ವಿರೋಧ ಪಕ್ಷದ ನಾಯಕ ರ್ಆ.ಅಶೋಕ್‌ ಹಾಗೂ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿರಲಿಲ್ಲ. ಆರ್‌.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್‌‍ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. +ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ಪ್ರತಿಪಕ್ಷದವರು ಧರಣಿ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಏಕೆ ಎದ್ದು ನಿಲ್ಲುತ್ತಿದ್ದೀರಿ. ನಿಮ ಸ್ಥಾನದಲ್ಲೇ ಕುಳಿತುಕೊಳ್ಳಿ. ಪ್ರತಿಪಕ್ಷದವರ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಅಸಹನೆ ವ್ಯಕ್ತಪಡಿಸಿದರು. +ಎಲ್ಲರೂ ಒಟ್ಟಿಗೆ ಮಾತನಾಡಿದರೆ ಏನು ಕೇಳುವುದಿಲ್ಲ. ಒಬ್ಬೊಬ್ಬರಾಗಿ ಮಾತನಾಡಿದರೆ ಸರಿಯಾಗಿ ಕೇಳುತ್ತದೆ ಎಂದರು. ಆಗ ಆರ್‌.ಅಶೋಕ್‌ ಮತ್ತೆ ಮಾತನಾಡಿ, ವಾಲೀಕಿ ನಿಗಮದಲ್ಲಿ ಹಗರಣವಾಗಿದೆ. ಹಣ ಲೂಟಿಯಾಗಿದೆ ಎಂದು ಆಡಳಿತ ಪಕ್ಷದವರು ನಮನ್ನು ಬೆಂಬಲಿಸುತ್ತಿದ್ದಾರೆ. ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ, ಅನುದಾನಕ್ಕಾಗಿ ತಮದೇ ಸರ್ಕಾರದ ಮುಖ್ಯಸ್ಥರ ವಿರುದ್ಧ ಪರೋಕ್ಷವಾಗಿ ಗಲಾಟೆ ಮಾಡುತ್ತಿದ್ದಾರೆ ಎಂದು ಮೂದಲಿಸಿದರು.ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಉಂಟು ಮಾಡಿದರೆ, ಆಡಳಿತ ಪಕ್ಷದ ಶಾಸಕರು ತಮ ಸ್ಥಾನಗಳಲ್ಲೇ ಎದ್ದು ನಿಂತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು. ಇದರಿಂದ ಸದನ ಗದ್ದಲದಿಂದ ಗೊಂದಲದ ಗೂಡಾಯಿತು. ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿರಲಿಲ್ಲ. +ಆಗ ಸಭಾಧ್ಯಕ್ಷರು ಪದೇ ಪದೇ ಮಾಡಿದ ಮನವಿಗೆ ಯಾರು ಕಿವಿಗೊಡದಿದ್ದಾಗ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು.ಮತ್ತೆ ಸದನ ಸಮಾವೇಶಗೊಂಡಾಗ ಪ್ರತಿ ಪಕ್ಷಗಳ ಶಾಸಕರು ಧರಣಿ ನಡೆಸಿ ಘೋಷಣೆ ಕೂಗಲಾರಂಭಿಸಿದರು. ಮನವಿಗೆ ಪ್ರತಿಪಕ್ಷಗಳ ಶಾಸಕರು ಸ್ಪಂಧಿಸದಿದ್ದಾಗ, ಧರಣಿ ನಡುವೆ ಸಭಾಧ್‌ಯಕ್ಷರು ಅಧಿಕತ ಕಲಾಪ ಕೈಗೆತ್ತಿಕೊಂಡು ಅರ್ಜಿಗಳನ್ನು ಒಪ್ಪಿಸಲು ಅವಕಾಶ ನೀಡಿದರು. ಬಳಿಕ ಕಾನೂನು ಸಚಿವ ಹೆಚ್‌.ಕೆ. ಪಾಟೀಲ್‌ ಅವರು ಮೂರು ವಿಧೇಯಕಗಳನ್ನು ಮಂಡಿಸಿದರು. ಬಳಿಕ ಸಭಾಧ್ಯಕ್ಷರು ಕಾಂಗ್ರೆಸ್‌‍ ಶಾಸಕ ಪೊನ್ನಣ್ಣ ಅವರಿಗೆ ಮಳೆ ಹಾನಿ ಕುರಿತು ಚರ್ಚೆ ಮಾಡಲು ಅವಕಾಶ ನೀಡಿದರು. +ಎಚ್‌.ಕೆ.ಪಾಟೀಲ್‌ ಮಾತನಾಡಿ ಸದನದ ಘನತೆ ಕಾಪಾಡಿ, ಮುಖ್ಯಮಂತ್ರಿ ಉತ್ತರವನ್ನು ಆಲಿಸಿ. ಈ ರೀತಿ ಕಲಾಪಕ್ಕೆ ಅಡ್ಡಿ ಪಡಿಸಿದರೆ ಅಧಿವೇಶನದ ಸಮಯ ಹಾಳಾಗಲಿದೆ. ಸದನದ ಘನತೆ, ಗೌರವವನ್ನು ಗಾಳಿಗೆ ತೂರಿದ್ದಾರೆ ಎಂದು ಟೀಕಿಸಿದರು.ಅಶೋಕ್‌ ಮಾತನಾಡಿ ವಾಲೀಕಿ ನಿಗಮದ ಹಗರಣ ಮುಚ್ಚಿ ಹಾಕಲು ಈರೀತಿ ಮಾಡುತ್ತಿದ್ದಾರೆ. +ಚಂದ್ರಶೇಖರ್‌ ಸಾವಿಗೆ ನ್ಯಾಯ ಕೊಡಿ, ವಾಲೀಕಿ ನಿಗಮದಿಂದ ಟಕಾ ಟಕ್‌ ಹಣ ಹೋದಂತೆ ಈಗ ಟಕಾಟಕ್‌ ಅಂತಾ ಮಳೆ ಬಂದಿದೆ ಎಂದು ಮೂದಲಿಸಿದರು.ಪ್ರತಿಭಟನಾ ನಿರತ ಶಾಸಕರನ್ನು ಹೊರಹಾಕಿ ಸದನ ನಡೆಸುವಂತೆ ತಮಯ್ಯ ಸೇರಿದಂತೆ ಹಲವು ಸದಸ್ಯರು ಮನವಿ ಮಾಡಿದರು. ಕಾಂಗ್ರೆಸ್‌‍ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಬಿಜೆಪಿ ಆಡಳಿತಾವಧಿಯಲ್ಲಿ ಬೋವಿ ನಿಗಮ, ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಸೇರಿದಂತೆ ಹಲವು ನಿಗಮಗಳಲ್ಲಿ 220 ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಆರೋಪಿಸಿದರು. +ಇದೇ ರೀತಿ ಸದನದಲ್ಲಿ ಆಡಳಿತ ಮತ್ತು ಪತ್ರಿ ಪಕ್ಷಗಳ ಶಾಸಕರ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗಿ, ಸದನ ಗದ್ದಲ, ಗೊಂದಲದ ಗೂಡಾಯಿತಲ್ಲದೆ, ಕೋಲಾಹಲದ ವಾತಾವರಣ ಸಷ್ಟಿಯಾಯಿತು. \ No newline at end of file diff --git a/eesanje/url_46_70_3.txt b/eesanje/url_46_70_3.txt new file mode 100644 index 0000000000000000000000000000000000000000..b2b49f7cb824f03168f21c5255b5062db8ff70b1 --- /dev/null +++ b/eesanje/url_46_70_3.txt @@ -0,0 +1,6 @@ +ರಾಜ್ಯಾದ್ಯಂತ ಕೃಷಿ ಹೊಂಡ ನಿರ್ಮಾಣ +ಬೆಂಗಳೂರು,ಜು.19-ಇನ್ನು ಮುಂದೆ ನೀರಾವರಿ ಪ್ರದೇಶ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಕಡೆ ಕೃಷಿ ಹೊಂಡಗಳನ್ನು ತೆರೆಯಲಾಗುವುದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ವಿಧಾನಪರಿಷತ್ನಲ್ಲಿ ತಿಳಿಸಿದರು. +ಸದಸ್ಯ ಕೇಶವಪ್ರಸಾದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಈವರೆಗೂ ಕೃಷಿ ಹೊಂಡಗಳನ್ನು ನೀರಾವರಿ ಪ್ರದೇಶ ಹೊರತುಪಡಿಸಿ ಬೇರೆ ಬೇರೆ ಕಡೆ ತೆರೆಯಲಾಗುತ್ತಿತ್ತು. ಇನ್ನು ಮುಂದೆ ನೀರಾವರಿ ಪ್ರದೇಶದಲ್ಲೂ ತೆರೆಯಲು ಸಂಬಂಧಪಟ್ಟ ಅಽಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. +ಈ ಮೊದಲು 106 ತಾಲ್ಲೂಕುಗಳಲ್ಲಿ ಮಾತ್ರ ಕೃಷಿ ಹೊಂಡಗಳನ್ನು ತೆರೆಯಲು ಅವಕಾಶವಿತ್ತು. ಇದು ಎಲ್ಲ ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ನೀರಾವರಿ ಪ್ರದೇಶಗಳಲ್ಲೂ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು. +ಹೊಸದಾಗಿ ಕೃಷಿ ಹೊಂಡಗಳನ್ನು ತೆರೆಯುವವರು ಕಡ್ಡಾಯವಾಗಿ ತಂತಿಬೇಲಿಗಳನ್ನು ಅಳವಡಿಸಬೇಕು. ಅಲ್ಲದೆ ಅಲ್ಲಿ ಬೋರ್ಡ್ಗಳನ್ನು ಹಾಕಬೇಕು. ಸದ್ಯದಲ್ಲೇ ಇದಕ್ಕಾಗಿ ಹೊಸದೊಂದು ಆ್ಯಪ್ ತೆರೆಯುವುದಾಗಿ ವಿವರಿಸಿದರು. +ಕೃಷಿ ಹೊಂಡ ತೆರೆಯುವ ಪರಿಶಿಷ್ಟ ಜಾತಿ/ ಪಂಗಡದವರಿಗೆ ಶೇ.40ರಿಂದ 50ರಷ್ಟು ಸಬ್ಸಿಡಿ ನೀಡಲಾಗುತ್ತದೆ. ನೀರು ಸಂಗ್ರಹಣೆಯಾಗುವುದರಿಂದ ರೈತರು ಮಳೆಯಿಲ್ಲದ ಸಮಯದಲ್ಲಿ ಬಳಸಿಕೊಳ್ಳಬಹುದು. ಕೆಲವರು ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಅನಾನುಕೂಲವಾಗಿದೆ ಎಂದು ಹೇಳುತ್ತಿದ್ದಾರೆ. ಹೊಸದಾಗಿ ರಸ್ತೆ ನಿರ್ಮಾಣ ಮಾಡಿದಾಗ ಅಪಘಾತಗಳು ಸಂಭವಿಸುತ್ತವೆ. ನಾವು ಎಲ್ಲವನ್ನು ನಕಾರಾತ್ಮಕವಾಗಿ ಯೋಚಿಸುವ ಬದಲು ಸಕಾರಾತ್ಮಕವಾಗಿ ಯೋಚಿಸಬೇಕೆಂದು ಸಲಹೆ ಮಾಡಿದರು. \ No newline at end of file diff --git a/eesanje/url_46_70_4.txt b/eesanje/url_46_70_4.txt new file mode 100644 index 0000000000000000000000000000000000000000..dd90071ae902cd5c6479a80b46401a4d5f5da789 --- /dev/null +++ b/eesanje/url_46_70_4.txt @@ -0,0 +1,6 @@ +ಹಾವೇರಿ : ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರ ಸಾವು +ಹಾವೇರಿ,ಜು.19-ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಶಿಥಿಲಗೊಂಡಿದ್ದ ಮನೆ ಗೋಡೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆಯೆಂದು ಪೊಲೀಸರು ತಿಳಿಸಿದ್ದಾರೆ. +ದುರಂತದಲ್ಲಿ ಚೆನ್ನಮ (30), ಅಮೂಲ್ಯ (3), ಅನನ್ಯಾ (6) ಮೃತ ದುರ್ದೈವಿಗಳಾಗಿದ್ದು,ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸವಣೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ವೃದ್ಧೆ ಯಲ್ಲಮ, ಪುತ್ರ ಮುತ್ತು, ಸೊಸೆ ಸುನೀತಾ ಗಂಭೀರವಾಗಿ ಗಾಯಗೊಂಡಿದ್ದಾರೆ. +ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಆರು ಜನರು ಮನೆಯಲ್ಲಿ ಒಂದೇ ಕಡೆ ಮಲಗಿದ್ದರು. ಇಂದು ಮುಂಜಾನೆ ಸುಮಾರು 3.30ರ ಸುಮಾರಿನಲ್ಲಿ ಗೋಡೆ ಕುಸಿದು ಬಿದ್ದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಸ್ಥಳೀಯರು ರಕ್ಷಣೆಗೆ ದಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ . ಹುಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ. +ಸಂಸದ ಬಸವರಾಜ ಬೊವಾಯಿಯವರು ಇಂದು ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ.ಬೆಳಗಾವಿ ಜಿಲ್ಲೆಯ ಎಲ್ಲೆಡೆ ನಿರಂತರ ಮಳೆಯಾಗುತ್ತಿದ್ದು, ಖಾನಾಪುರ ತಾಲ್ಲೂಕಿನ ಕಸಮಳಗಿ ಗ್ರಾಮದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಮನೆಯಲ್ಲಿದೆದ ಗರ್ಭಿಣಿ ಸಮೇತ ಆರು ಜನ ಬದುಕುಳಿದಿದ್ದಾರೆ. +ಸಾವನ್ ತೇಗೂರು ಎಂಬುವವರಿಗೆ ಸೇರಿದ ಮನೆಯಲ್ಲಿ ಗರ್ಭಿಣಿ ಮತ್ತು ಆಕೆಯ ಕುಟುಂಬದವರು ವಾಸವಾಗಿದ್ದರು. ನಿನ್ನೆ ಮಧ್ಯರಾತ್ರಿ ಮಳೆಗೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕುಸಿದ ಗೋಡೆಯ ಹೊರಭಾಗದಲ್ಲಿ ಬಿದ್ದಿದ್ದಕ್ಕೆ ಕುಟುಂಬ ಬದುಕುಳಿದಿದೆ. \ No newline at end of file diff --git a/eesanje/url_46_70_5.txt b/eesanje/url_46_70_5.txt new file mode 100644 index 0000000000000000000000000000000000000000..e3e7d60d6131880d71535ddfa000c87a25f3f47d --- /dev/null +++ b/eesanje/url_46_70_5.txt @@ -0,0 +1,9 @@ +ಬಿಜೆಪಿ ಆಡಳಿತ ಅವಧಿಯ ಹಗರಣ ಬಯಲಿಗೆಳೆಯುವೆ : ಡಿಕೆಶಿ +ಬೆಂಗಳೂರು,ಜು.19-ಬಿಜೆಪಿ ಆಡಳಿತದ ಅವಧಿಯಲ್ಲಿ ವಿವಿಧ ನಿಗಮಗಳಲ್ಲಿ ನಡೆದಿರುವ 300 ಕೋಟಿ ರೂ.ಗಳ ಬೃಹತ್ ಹಗರಣವನ್ನು ಸದನದಲ್ಲಿ ಬಹಿರಂಗ ಪಡಿಸುವುದಾಗಿ ಉಪ ಮುಖ್ಯಮಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಧಿಕಾರಾವಯಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಹಣದ ಅವ್ಯವಹಾರವಾಗಿದೆ. ಯಾವ್ಯಾವ ನಿಗಮಗಳಲ್ಲಿ ಅಕ್ರಮವಾಗಿದೆ, ಯಾರ್ಯಾರು ಅಧ್ಯಕ್ಷರಾಗಿದ್ದರು, ಯಾರು ಆ ಅವಯಲ್ಲಿ ಮುಖ್ಯಮಂತ್ರಿಗಳಾಗಿದ್ದರು ಎಂಬ ಎಲ್ಲಾ ವಿವರಗಳನ್ನು ಸದನದಲ್ಲಿ ಬಹಿರಂಗಪಡಿಸುವುದಾಗಿ ಅವರು ಹೇಳಿದರು. +ಈಗಾಗಲೇ ಕೆಲವು ನಿಗಮಗಳ ಭ್ರಷ್ಟಾಚಾರದ ತನಿಖೆ ನಡೆಯುತ್ತಿದೆ. ಇನ್ನೂ ಕೆಲವು ನಿಗಮಗಳ ಅವ್ಯವಹಾರದ ತನಿಖೆ ಮುಂದುವರಿದಿದೆ ಎಂದು ಹೇಳಿದರು.ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಚರ್ಚೆ ಮಾಡುವುದು ಅನವಶ್ಯಕ ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವಿದ್ದೇವೆ. ಅದಕ್ಕಾಗಿ ಚರ್ಚೆಗೆ ಅವಕಾಶ ಕೊಟ್ಟಿದ್ದೇವೆ. +ಪ್ರಕರಣದ ಬಗ್ಗೆ ತನಿಖೆಗಾಗಿ ಎಸ್ಐಟಿ ರಚನೆ ಮಾಡಿದ್ದೇವೆ. 89 ಕೋಟಿ ಅಕ್ರಮ ಹಣ ವರ್ಗಾವಣೆಯಲ್ಲಿ ಈಗಾಗಲೇ 34 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ವ್ಯಾಪಕ ತನಿಖೆ ನಡೆಯುತ್ತಿದೆ. ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಬ್ಯಾಂಕ್ನಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಾಜೀನಾಮೆ ನೀಡಬೇಕಲ್ಲವೇ ಎಂದು ಅವರು ತಿರುಗೇಟು ನೀಡಿದರು. +ಬೋವಿ ನಿಗಮದಲ್ಲಿ 87 ಕೋಟಿ, ಎಪಿಎಂಸಿಯಲ್ಲಿ 47 ಕೋಟಿ, ಕರಕುಶಲ ಅಭಿವೃದ್ಧಿ ನಿಗಮದಲ್ಲಿ 27 ಕೋಟಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 5 ಕೋಟಿ, ದೇವರಾಜು ಅರಸ್ ಟ್ರಕ್ ಟರ್ಮಿನಲ್ ನಿಗಮದಲ್ಲಿ 47 ಕೋಟಿ, ಪರಿಸರ ಮಾಲಿನ್ಯ ಮಂಡಳಿಯಲ್ಲಿ 10 ಕೋಟಿ, ಕೆಐಎಡಿಬಿಯಿಂದ ಸೇಲಂಗೆ ವರ್ಗಾವಣೆಯಾಗಿರುವ ಹಣ ಸೇರಿದಂತೆ 300 ಕೋಟಿ ರೂ.ಗಳ ಭಾರೀ ಪ್ರಮಾಣದ ಅಕ್ರಮ ಹಣ ವರ್ಗಾವಣೆ ಬಗ್ಗೆ ಸದನದಲ್ಲಿ ಚರ್ಚಿಸುವುದಾಗಿ ಹೇಳಿದರು. +ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಕಾರದಲ್ಲಿದ್ದರು. ಅವರೇ ಕಿಂಗ್ಸ್ ಆಫ್ ಕರಪ್ಷನ್ ಎಂದು ಡಿಕೆಶಿ ಹೇಳಿದರು. +ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಹುದ್ದೆಗೆ 2.5 ಸಾವಿರ ಕೋಟಿ ರೂ. ನೀಡಬೇಕು. ಮಂತ್ರಿಗಳಾಗಲು 100 ಕೋಟಿ ರೂ. ಕೊಡಬೇಕು ಎಂದು ಹೇಳಿದ್ದರು. ಈ ಯಾವುದರ ಬಗ್ಗೆಯೂ ಯಾವ ಸಮಿತಿಯೂ ತನಿಖೆ ನಡೆಸಲಿಲ್ಲ ಎಂದರು. +ಕ್ಲಬ್ಗಳಲ್ಲಿ ಡ್ರೆಸ್ಕೋಡ್ ಇರುತ್ತದೆ. ಆದರೆ, ಮಾಲ್ಗಳಲ್ಲಿ ಯಾವುದೇ ಡ್ರೆಸ್ ಕೋಡ್ ಇರುವುದಿಲ್ಲ. ಪಂಚೆ ಧರಿಸಿ ಮಾಲ್ಗಳಿಗೆ ಹೋಗುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಅಡ್ಡಿಪಡಿಸುವ ಮಾಲ್ಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. \ No newline at end of file diff --git a/eesanje/url_46_70_6.txt b/eesanje/url_46_70_6.txt new file mode 100644 index 0000000000000000000000000000000000000000..97150bf2f63a60b3bff80a18fb88f1454305ca8d --- /dev/null +++ b/eesanje/url_46_70_6.txt @@ -0,0 +1,11 @@ +ಕರ್ನಾಟಕದಲ್ಲಿ ಪ್ರಾಮಾಣಿಕ ಆಡಳಿತ ಅಲ್ಲ, ಪಾರದರ್ಶಕ ಭ್ರಷ್ಟ ಆಡಳಿತವಿದೆ : ಸಿ.ಟಿ.ರವಿ +ಬೆಂಗಳೂರು,ಜು.19– ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ..!ವನ್ನು ಜಾರಿ ಮಾಡಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಟೀಕಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕ ಪ್ರಾಮಾಣಿಕ ಆಡಳಿತ ಅಲ್ಲ; ಪಾರದರ್ಶಕ ಭ್ರಷ್ಟ ಆಡಳಿತ ಇದು. ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ. ಆದರೆ, ಆಡಳಿತದಲ್ಲಿ ಪೂರ್ಣ ಇರುವುದು ಭ್ರಷ್ಟಾಚಾರ ಮಾತ್ರ ಎಂದು ವ್ಯಂಗ್ಯವಾಡಿದರು. +ಇವತ್ತು ಬಿಜೆಪಿ ಮತ್ತು ಜೆಡಿಎಸ್‌‍ ವಿಧಾನಪರಿಷತ್‌ ಸದಸ್ಯರು ಗಾಂಧಿ ಪ್ರತಿಮೆಯ ಮುಂದೆ ಈ ಭ್ರಷ್ಟ ಕಾಂಗ್ರೆಸ್‌‍ ಸರಕಾರದ ರೇಟ್‌ ಕಾರ್ಡ್‌ ಪ್ರದರ್ಶನ ಮಾಡಿದ್ದೇವೆ ಎಂದು ತಿಳಿಸಿದರು. +ನೀವು ಯಾರು ಬೇಕಿದ್ದರೂ ಇದನ್ನು ಪರಿಶೀಲಿಸಬಹುದು; ಇದು ಶೇ 100ರಷ್ಟು ಪಕ್ಕಾ ಇರುವ ಕಾಂಗ್ರೆಸ್‌‍ ರೇಟ್‌ ಕಾರ್ಡ್‌ ಎಂದು ಹೇಳಿದರು.ಜಾತಿ ಬಲ ಇದ್ದರೆ ನೀವು ಶೇ 10ರಷ್ಟು ಕಡಿಮೆ ಮಾಡಿಕೊಳ್ಳಬಹುದು. ಇಲ್ಲದೇ ಇದ್ದರೆ ಇನ್ನೂ ಶೇ 10ರಷ್ಟು ಜಾಸ್ತಿ ಕೊಡಬೇಕಾಗಿ ಬರಬಹುದು ಎಂದು ವಿಶ್ಲೇಷಿಸಿದರು. ಆದರೆ, ಈ ರೇಟ್‌ ಕಾರ್ಡ್‌ ಫಿಕ್‌್ಸ ಮಾಡಿರುವುದು ಪಕ್ಕಾ. ರೇಟ್‌ ಕಾರ್ಡ್‌ ಹೀಗಿದೆ ಎಂದು ಮಾಹಿತಿ ನೀಡಿದರು. +ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ರೇಟ್‌ ಕಾರ್ಡ್‌ ಅನುಗುಣವಾಗಿ ಎಫ್‌‍ಎಆರ್‌ (ಫ್ಲೋರ್‌ ಏರಿಯ ರೇಷಿಯೋ) ಒಂದು ಚದರಡಿಗೆ 100 ರೂ, ಸಿಎಲ್‌‍ಯು (ಚೇಂಜ್‌ ಆಫ್‌ ಲ್ಯಾಂಡ್‌ ಯೂಸ್‌‍- ಭೂ ಪರಿವರ್ತನೆಗೆ) ಒಂದು ಎಕರೆಗೆ 27 ಲಕ್ಷ ಫಿಕ್‌್ಸ ಆಗಿದೆ. ಗೃಹ ಇಲಾಖೆಯಲ್ಲಿ ಪೊಲೀಸ್‌‍ ಇನ್‌‍ಸ್ಪೆಕ್ಟರ್ಗೆ 50 ಲಕ್ಷದಿಂದ ಒಂದು ಕೋಟಿ ಇದು, ಅದು ಜಾಗದ ಮೇಲೆ ಕಿಮ್ಮತ್ತು ಹೆಚ್ಚು ಕಡಿಮೆ ಆಗುತ್ತದೆ ಎಂದು ತಿಳಿಸಿದರು. +ಕನಿಷ್ಠ 50 ಲಕ್ಷದಿಂದ ಗರಿಷ್ಠ ಒಂದು ಕೋಟಿಗೂ ಹೆಚ್ಚು ಎಂದು ವಿವರಿಸಿದರು.ಎಸಿಪಿ ಹುದ್ದೆಗೆ 1.5 ಕೋಟಿಯಿಂದ 2 ಕೋಟಿವರೆಗೆ (ಜಾಗದ ಕಿಮ್ಮತ್ತಿನ ಮೇಲೆ), ಎಂಜಿನಿಯರ್ಗಳಿಗೆ ಎಇ- 20ರಿಂದ 25 ಲಕ್ಷ, ಎಇಇ- 25ರಿಂದ 50 ಲಕ್ಷ, ಎಕ್ಸಿಕ್ಯೂಟಿವ್‌ ಎಂಜಿನಿಯರ್‌ 50 ಲಕ್ಷದಿಂದ 75 ಲಕ್ಷ, ಸಿಇ- ಒಂದು ಕೋಟಿಯಿಂದ 5 ಕೋಟಿವರೆಗೆ ನಿಗದಿ ಮಾಡಿದ್ದಾರೆ ಎಂದರು. +ಸಬ್‌ ರಿಜಿಸ್ಟ್ರಾರ್‌ ಮತ್ತು ಆರ್ಟಿಒ- ಹೋಲ್‌‍ಸೇಲ್‌ ಹರಾಜುಕಂದಾಯ ಇಲಾಖೆಯಡಿ ತಹಸೀಲ್ದಾರ್‌ 50 ಲಕ್ಷದಿಂದ ಒಂದು ಕೋಟಿ ನಿಗದಿಯಾಗಿದೆ. ಆದರೆ, ಈಗ ಅದು ಪ್ರಯತ್ನಿಸಿದರೂ ಆಗುತ್ತಿಲ್ಲ; ಅದು ಮಾರಾಟವಾಗಿದೆ. ಮತ್ತೆ ಮುಂದಿನ ವರ್ಷದ ವರೆಗೂ ಕಾಯಬೇಕು ಎಂದು ತಿಳಿಸಿದರು. +ಎಸಿ ಹುದ್ದೆ- 5 ಕೋಟಿಯಿಂದ 7 ಕೋಟಿ (ಬೆಂಗಳೂರು), ಎಕ್ಸೈಸ್‌‍ ಇಲಾಖೆ- ಇನ್‌‍ಸ್ಪೆಕ್ಟರ್‌ 50 ಲಕ್ಷ, ಡಿಸಿ 1 ಕೋಟಿಯಿಂದ 1.5 ಕೋಟಿ, ಸಬ್‌ ರಿಜಿಸ್ಟ್ರಾರ್‌ ಮತ್ತು ಆರ್‌ಟಿಒ- ಅದನ್ನು ಹರಾಜು ಹಾಕುತ್ತಾರೆ; ಅದನ್ನು ಹೋಲ್‌‍ಸೇಲ್‌ ಆಕ್ಷನ್‌ ಮಾಡುತ್ತಾರೆ. ಅದು ರಿಟೇಲ್‌ ಸೇಲ್‌ ಇಲ್ಲ. ಹೋಲ್‌‍ಸೇಲ್‌ ಆಕ್ಷನ್‌ ಪಡೆದವರು ಮರುಹಂಚಿಕೆ ಮಾಡುತ್ತಾರೆ ಎಂದು ಸಿ.ಟಿ.ರವಿ ಅವರು ತಿಳಿಸಿದರು. +ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ದುರ್ಬೀನು ಬೇಡ. ಮಹರ್ಷಿ ವಾಲೀಕಿ ನಿಗಮದ ಭ್ರಷ್ಟಾಚಾರವನ್ನು ಬಯಲಿಗೆ ತರುವ ಮೂಲಕ ನಾವು ಇವರ ಭ್ರಷ್ಟ ಆಡಳಿತವನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದೇವೆ. ಇವತ್ತು ರೇಟ್‌ ಕಾರ್ಡನ್ನು ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಿದ್ದೇವೆ. ನೀವು ಯಾರು ಬೇಕಾದರೂ ಪರಿಶೀಲನೆ ಮಾಡಿ; ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಹೇಗೆ ಇಲ್ಲವೋ, ಹಾಗೇ ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ದುರ್ಬೀನು ಹಾಕುವ ಅವಶ್ಯಕತೆ ಇಲ್ಲ ಎಂದು ಸಿ.ಟಿ.ರವಿ ಅವರು ತಿಳಿಸಿದರು. +ಇಷ್ಟಾದರೂ ಕೂಡ, 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲ ಎಂಬ ಮಾನ್ಯ ಮುಖ್ಯಮಂತ್ರಿಗಳ ಹೇಳಿಕೆಯನ್ನು ಮಾನ್ಯ ಮಾಡಬೇಕೇ ಬೇಡವೇ ಎಂಬುದನ್ನು ನಿಮಗೇ ಬಿಟ್ಟಿದ್ದೇನೆ ಎಂದು ಹೇಳಿದರು. \ No newline at end of file diff --git a/eesanje/url_46_70_7.txt b/eesanje/url_46_70_7.txt new file mode 100644 index 0000000000000000000000000000000000000000..8945afa1bf07377f2fd526a295c406a50b7c0375 --- /dev/null +++ b/eesanje/url_46_70_7.txt @@ -0,0 +1,7 @@ +ಸದನದಕ್ಕೆ ಬಾರದ ಸಚಿವರು, ಸರ್ಕಾರಕ್ಕೆ ಸಭಾಪತಿ ಹೊರಟ್ಟಿ ತರಾಟೆ +ಬೆಂಗಳೂರು,ಜು.19– ಸದನದ ಕಲಾಪ ನಡೆಯುವ ವೇಳೆ ಸಚಿವರು ಮತ್ತೆ ಗೈರು ಹಾಜರಾಗಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಪ್ರಸಂಗ ವಿಧಾನಪರಿಷತ್‌ನಲ್ಲಿಂದು ಜರುಗಿತು. +ಬೆಳಗ್ಗೆ ಸದನ ಆರಂಭವಾದ ವೇಳೆ ಆಡಳಿತಪಕ್ಷದ ಸಾಲಿನಲ್ಲಿ ಬೆರಳೆಣಿಕೆಯ ಸಚಿವರು ಕುಳಿತಿದ್ದರು. ಈ ವೇಳೆ ಸಭಾಪತಿಯವರು ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಿ ಸಂಬಂಧಪಟ್ಟ ಸದಸ್ಯರಿಗೆ ಪ್ರಶ್ನೆ ಕೇಳಲು ಸೂಚಿಸಿದರು. +ಆಗ ಜೆಡಿಎಸ್‌‍ನ ಭೋಜೆಗೌಡ ಅವರು ನಿಯಮಗಳ ಪ್ರಕಾರ ಉತ್ತರ ನೀಡುವ ಆರು ಸಚಿವರು ಸೇರಿದಂತೆ ಸದನದಲ್ಲಿ ಒಟ್ಟು 8 ಸಚಿವರು ಇರಬೇಕು. ಇಲ್ಲಿ ಕೇವಲ ಬೆರಳಣಿಕೆಯಷ್ಟು ಮಾತ್ರ ಸಚಿವರಿದ್ದಾರೆ. ಸಭಾಪತಿಗಳ ಮಾತಿಗೆ ಬೆಲೆ ಇಲ್ಲವೇ? ಹಾಗದರೆ ಸದನವನ್ನು ಏಕೆ ನಡೆಸಬೇಕೆಂದು ಏರಿದ ದನಿಯಲ್ಲಿ ಪ್ರಶ್ನಿಸಿದರು. +ಈ ವೇಳೆ ಸಭಾನಾಯಕ ಭೋಸ್‌‍ರಾಜ್‌, ಸದಸ್ಯರಾದ ಐವಾನ್‌ ಡಿಸೋಜ ಮತ್ತಿತರರು ಎಲ್ಲದರಲ್ಲೂ ರಾಜಕೀಯ ಮಾಡಬೇಡಿ ಎಂದು ಭೋಜೇಗೌಡರಿಗೆ ತಿರುಗೇಟು ನೀಡಿದರು. +ಇದಕ್ಕೆ ಮತ್ತೆ ಕಿಡಿಕಾರಿದ ಭೋಜೇಗೌಡರು ಇಂದು ಸದನದಲ್ಲಿ ಭೋಸರಾಜ್‌, ಎಚ್‌.ಕೆ.ಪಾಟೀಲ್‌, ಈಶ್ವರ್‌ ಖಂಡ್ರೆ, ದಿನೇಶ್‌ ಗುಂಡೂರಾವ್‌, ಕೆ.ಎಚ್‌.ಮುನಿಯಪ್ಪ, ಶರಣಪ್ರಕಾಶ್‌ ಪಾಟೀಲ್‌ ಸೇರಿದಂತೆ ಒಟ್ಟು 8 ಸಚಿವರು ಇರಬೇಕು. ಹಾಗಾದರೆ ಎಲ್ಲಿ ಹೋಗಿದ್ದಾರೆ ಎಂದು ಏರಿದ ದನಿಯಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದರು. +ಆಗ ಸಭಾಪತಿ ಹೊರಟ್ಟಿ ಅವರು ಕಲಾಪ ನಡೆಯುವ ವೇಳೆ ಕಡ್ಡಾಯವಾಗಿ ಸಚಿವರು ಮತ್ತು ಶಾಸಕರು ಸದನದಲ್ಲಿ ಹಾಜರಿರಲೇಬೇಕು. ಅಧಿಕಾರಿಗಳು ಇಲ್ಲದಿದ್ದರೆ ಹೇಗೆ? ನಾನು ಪ್ರತಿದಿನ ಹೇಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_70_8.txt b/eesanje/url_46_70_8.txt new file mode 100644 index 0000000000000000000000000000000000000000..8b22413d06979fae89b1ad92eaa333dd234a8510 --- /dev/null +++ b/eesanje/url_46_70_8.txt @@ -0,0 +1,5 @@ +ಹಿಂದೂ-ಮುಸ್ಲಿಂ ಐಕ್ಯತೆಗಾಗಿ ಸರ್ಕಾರದಿಂದ ನವರಸ ಉತ್ಸವ ಕಾರ್ಯಕ್ರಮ +ಬೆಂಗಳೂರು,ಜು.19-ಹಿಂದೂ ಮತ್ತು ಮುಸ್ಲಿಮರ ನಡುವೆ ಐಕ್ಯತಾ ಮನೋಭಾವ ಮೂಡಿಸಲು ರಾಜ್ಯಾದ್ಯಂತ ಶೀಘ್ರದಲ್ಲೇ ನವರಸ ಉತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. +ವಿಧಾನಪರಿಷತ್‌ನಲ್ಲಿ ಪ್ರಕಾಶ್‌ ರಾಥೋಡ್‌ ಅವರು, ಅದಿಲ್‌ ಶಾ ಅವರ ಕಾಲದಲ್ಲಿ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸಿ ಹಿಂದೂ ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮಗಳ ನಡುವೆ ಸಮನ್ವಯತೆ ಸಾಧಿಸಲು ಈ ನೃತ್ಯೋತ್ಸವವನ್ನು ಆರಂಭಿಸುತ್ತಿದ್ದರು. ಸರ್ಕಾರ ಇದನ್ನು ಪುನರಾರಂಭಿಸಬೇಕೆಂದು ಮನವಿ ಮಾಡಿದರು. +ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಂದೂ ಮುಸ್ಲಿಂ ನಡುವೆ ಸಾಮರಸ್ಯ ಹಾಳಾಗಿತ್ತು. ಇದೀಗ ರ್ಸಾರ ಇದರ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ಸಲಹೆ ನೀಡಿದರು. ನಮ ಸರ್ಕಾರ ಎಲ್ಲ ಧರ್ಮಗಳ ನಡುವೆ ಒಗ್ಗಟ್ಟು, ಸಾಮರಸ್ಯ ಮೂಡಿಸಲು ಬದ್ದವಾಗಿದೆ. +ಸದಸ್ಯರ ಕಳಕಳಿಯಂತೆ ನವರಸ ನೃತ್ಯೋತ್ಸವ ಕಾರ್ಯಕ್ರಮವನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದಕ್ಕೆ ಬೇಕಾದ ಅನುದಾನವನ್ನು ಸಹ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು. \ No newline at end of file diff --git a/eesanje/url_46_70_9.txt b/eesanje/url_46_70_9.txt new file mode 100644 index 0000000000000000000000000000000000000000..cb3142e576f9f1fdfa5e788d599d9b1bd18ad86e --- /dev/null +++ b/eesanje/url_46_70_9.txt @@ -0,0 +1,6 @@ +ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಅಂತರ್ಜಲ : ಪ್ರಿಯಾಂಕ್‌ ಖರ್ಗೆ ಆತಂಕ +ಬೆಂಗಳೂರು,ಜು.19-ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಂತರ್ಜಲ ಕುಸಿಯುತ್ತಿರುವ ಹಿನ್ನಲೆಯಲ್ಲಿ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸೆಂಟರ್‌ ಆಫ್‌ ಎಕ್ಸಲೆನ್ಸ್ ಪ್ರಾರಂಭಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. +ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರು ಅಂತರ್ಜಲ ಕುಸಿಯುತ್ತಿರುವ ಬಗ್ಗೆ ಗಮನಸೆಳೆದಾಗ ಅಂತರ್ಜಲ ಅತಿಹೆಚ್ಚು ಕುಸಿಯುತ್ತಿರುವ ರಾಜ್ಯಗಳಲ್ಲಿ ರಾಜಸ್ಥಾನದ ನಂತರ ಕರ್ನಾಟಕ ಸ್ಥಾನ ಪಡೆದುಕೊಂಡಿದೆ. ಇದು ಅತ್ಯಂತ ಅಪಾಯಕಾರಿ ಎಂದು ಆಶ್ಚರ್ಯ ವ್ಯಕ್ತಪಡಿಸಿದರು. +ಮಲೆನಾಡು, ಕರಾವಳಿ ತೀರಾಪ್ರದೇಶಗಳನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅಂತರ್ಜಲ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿದೆ. ಹೀಗಾಗಿ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಐಟಿಬಿಟಿ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯತೆಯಲ್ಲಿ ಈ ಕೇಂದ್ರದಲ್ಲಿ ಸ್ಥಾಪಿಸುತ್ತೇವೆ ಎಂದರು. +ಇದು ಕನಿಷ್ಠಪಕ್ಷ 3ರಿಂದ 4 ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದೇವೆ. ಅಲ್ಲಿಂದ ಅನುಮೋದನೆ ಸಿಕ್ಕ ತಕ್ಷಣ ಕಾರ್ಯಾರಂಭ ಆಗಲಿದೆ ಎಂದು ಹೇಳಿದರು. +2050ಕ್ಕೆ ದೇಶದಲ್ಲಿ ಅಂತರ್ಜಲ ಪ್ರಮಾಣ ತೀವ್ರವಾಗಿ ಕುಸಿಯಲಿದೆ. ನಾವು ಮುಂದಿನ 100 ವರ್ಷವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಎಲ್ಲಿ ನೀರಿನ ಮೌಲ್ಯ ಲಭ್ಯವಿದೆಯೋ ಅದನ್ನು ಬಳಸಿಕೊಳ್ಳಲಿದ್ದೇವ ಎಂದರು. \ No newline at end of file diff --git a/eesanje/url_46_71_1.txt b/eesanje/url_46_71_1.txt new file mode 100644 index 0000000000000000000000000000000000000000..f9db0dfb178045e8a5a392537bfbfe025d5fc42c --- /dev/null +++ b/eesanje/url_46_71_1.txt @@ -0,0 +1,7 @@ +ವಿಧಾನಸಭೆಯಲ್ಲಿ ಮುಂದುವರೆದ ಹಗರಣಗಳ ಗದ್ದಲ, ಪ್ರತಿಪಕ್ಷಗಳ ಧರಣಿ, ಕಲಾಪ ಮುಂದೂಡಿಕೆ +ಬೆಂಗಳೂರು, ಜು.19-ವಾಲ್ಮೀಕಿ ಅಭಿವದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಂಜಸ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಪಕ್ಷಗಳು ನಿನ್ನೆ ಆರಂಭಿಸಿದ ಧರಣಿಯನ್ನು ವಿಧಾನಸಭೆಯಲ್ಲಿ ಇಂದು ಮುಂದುವರೆಸಿದ್ದರಿಂದ ಆರೋಪ, ಪ್ರತ್ಯಾರೋಪ ನಡೆದು ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸದನದ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಬೇಕಾಯಿತು. +ಇಂದು ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌‍ ಶಾಸಕರು ಸಭಾಧ್ಯಕ್ಷರ ಪೀಠದ ಮುಂದಿನ ಬಾವಿಗೆ ಇಳಿದು ಧರಣಿ ಮುಂದುವರೆಸಿದರು.ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮಾತನಾಡಿ, ಧರಣಿ ಕೈ ಬಿಟ್ಟು ಸ್ವಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿದರು. +ವಿರೋಧ ಪಕ್ಷದ ನಾಯಕ ರ್ಆ.ಅಶೋಕ್‌ ಹಾಗೂ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌‍ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯುತ್ತಿರಲಿಲ್ಲ. ಸುರೇಶ್‌ ಬಾಬು ಮಾತನಾಡಿ ಮುಖ್ಯಮಂತ್ರಿಯವರ ಉತ್ತರ ಸಮರ್ಪಕವಾಗಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು. +ಆರ್‌.ಅಶೋಕ್‌ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್‌‍ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ಪ್ರತಿಪಕ್ಷದವರು ಧರಣಿ ಮಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು ಏಕೆ ಎದ್ದು ನಿಲ್ಲುತ್ತಿದ್ದೀರಿ. ನಿಮ ಸ್ಥಾನದಲ್ಲೇ ಕುಳಿತುಕೊಳ್ಳಿ. ಪ್ರತಿಪಕ್ಷದವರ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಅಸಹನೆ ವ್ಯಕ್ತ ಪಡಿಸಿದರು. +ಎಲ್ಲರೂ ಒಟ್ಟಿಗೆ ಮಾತನಾಡಿದರೆ ಏನು ಕೇಳುವುದಿಲ್ಲ. ಒಬ್ಬೊಬ್ಬರಾಗಿ ಮಾತನಾಡಿದರೆ ಸರಿಯಾಗಿ ಕೇಳುತ್ತದೆ ಎಂದರು. ಆಗ ಆರ್‌.ಅಶೋಕ್‌ ಮತ್ತೆ ಮಾತನಾಡಿ, ವಾಲೀಕಿ ನಿಗಮದಲ್ಲಿ ಹಗರಣವಾಗಿದೆ. ಹಣ ಲೂಟಿಯಾಗಿದೆ ಎಂದು ಆಡಳಿತ ಪಕ್ಷದವರು ನಮನ್ನು ಬೆಂಬಲಿಸುತ್ತಿದ್ದಾರೆ. ಘೋಷಣೆ ಕೂಗುತ್ತಿದ್ದಾರೆ. ಅಲ್ಲದೆ, ಅನುದಾನಕ್ಕಾಗಿ ತಮದೇ ಸರ್ಕಾರದ ಮುಖ್ಯಸ್ಥರ ವಿರುದ್ಧ ಪರೋಕ್ಷವಾಗಿ ಗಲಾಟೆ ಮಾಡುತ್ತಿದ್ದಾರೆ ಎಂದು ಮೂದಲಿಸಿದರು. +ಧರಣಿ ನಿರತ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಉಂಟು ಮಾಡಿದರೆ, ಆಡಳಿತ ಪಕ್ಷದ ಶಾಸಕರು ತಮ ಸ್ಥಾನಗಳಲ್ಲೇ ಎದ್ದು ನಿಂತು ಒಬ್ಬೊಬ್ಬರು ಒಂದೊಂದು ರೀತಿ ಮಾತನಾಡುತ್ತಿದ್ದರು. ಇದರಿಂದ ಸದನ ಗದ್ದಲದಿಂದ ಗೊಂದಲದ ಗೂಡಾಯಿತು. ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ಗೊತ್ತಾಗುತ್ತಿರಲಿಲ್ಲ.ಆಗ ಸಭಾಧ್ಯಕ್ಷರು ಪದೇ ಪದೇ ಮಾಡಿದ ಮನವಿಗೆ ಯಾರು ಕಿವಿಗೊಡದಿದ್ದಾಗ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದರು. \ No newline at end of file diff --git a/eesanje/url_46_71_10.txt b/eesanje/url_46_71_10.txt new file mode 100644 index 0000000000000000000000000000000000000000..faf9fd7ebec54ec1a1409b7a06a2699155d43708 --- /dev/null +++ b/eesanje/url_46_71_10.txt @@ -0,0 +1,12 @@ +“ಉಡ್ತಾ ಕರ್ನಾಟಕ”ವಾಗಲು ರಾಜ್ಯಸರ್ಕಾರ ಬಿಡಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜು.18-ಯಾವುದೇ ಕಾರಣಕ್ಕೂ ರಾಜ್ಯವನ್ನು ಉಡ್ತಾ ಕರ್ನಾಟಕವನ್ನಾಗಿ ಮಾಡಲು ರಾಜ್ಯಸರ್ಕಾರ ಬಿಡುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಪರಿಷತ್‌ನಲ್ಲಿ ಪುನರುಚ್ಚರಿಸಿದರು. ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿಯವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದೆ ಕೆಲವು ಸದಸ್ಯರು ಕರ್ನಾಟಕವು ಪಂಜಾಬ್‌ನಂತೆ ಉಟ್ತಾ ಕರ್ನಾಟಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು. +ನಾನು ಒಬ್ಬ ಗೃಹಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಎಂತಹ ಸಂದರ್ಭದಲ್ಲೂ ಕರ್ನಾಟಕವನ್ನು ಉಟ್ತಾ ಪಂಜಾಬ್‌ ಮಾಡಲು ಬಿಡುವುದಿಲ್ಲ. ಇದಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಸದನಕ್ಕೆ ತಿಳಿಸಿದರು.ಸರ್ಕಾರವು ಡ್ರಗ್ಸ್‌‍ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದ್ದು, ಯಾವುದೇ ಕಾರಣಕ್ಕು ಉಡ್ತಾ ಕರ್ನಾಟಕ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. +ರಾಜ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗುತ್ತಿರುವುದು ಗಮನಕ್ಕೆ ಬಂದಿದೆಯೇ, ದಾಖಲಾಗಿರುವ ಪ್ರಕರಣಗಳೆಷ್ಟು ಮತ್ತು ಎಷ್ಟು ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. +ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮಿಕೊಂಡಿದ್ದೇವೆ. +ಕಳೆದ ವರ್ಷ 2023ರಲ್ಲಿ 2409 ಶಾಲಾ-ಕಾಲೇಜುಗಳಲ್ಲಿ 3.95 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗಿತ್ತು. ಪ್ರಸಕ್ತ ವರ್ಷ ಜೂನ್‌ನಲ್ಲಿ 3,600 ಶಾಲಾ-ಕಾಲೇಜುಗಳಲ್ಲಿ 5.50 ಲಕ್ಷ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದ್ದೇವೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಕೈಗೆ ಡ್ರಗ್‌್ಸ ಸಿಗಬಾರದು ಎಂಬುದು ನಮ ಉದ್ದೇಶ. ಅವರಿಗೆ ಜಾಗೃತಿ ಮೂಡಿಸಿದರೆ ಡ್ರಗ್‌್ಸ ತೆಗೆದುಕೊಳ್ಳಲು ಹಿಂಜರಿಯುತ್ತಾರೆ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಗೃಹ ಸಚಿವ ಪರಮೇರ್ಶ್ವ ಅವರು ತಿಳಿಸಿದರು. +2022ರಲ್ಲಿ ಎನ್‌ಡಿಪಿಎಸ್‌‍ ಕಾಯ್ದೆಯಡಿ 6406 ಪ್ರಕರಣ ದಾಖಲಿಸಿದ್ದು, 6164 ಆರೋಪಿಗಳನ್ನು ಬಂಧಿಸಲಾಗಿದೆ. 3881 ಪ್ರಕರಣಗಳು ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದ್ದು, ಇದರಲ್ಲಿ 2365 ಜನರಿಗೆ ಶಿಕ್ಷೆಯಾಗಿದೆ. 2023ರಲ್ಲಿ 6764 ಪ್ರಕರಣಗಳಲ್ಲಿ 2280 ಬಂಧಿಸಲಾಗಿದೆ. +4187 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 2280 ಆರೋಪಿತರಿಗೆ ಶಿಕ್ಷೆಯಾಗಿದೆ. ಪ್ರಸಕ್ತ ವರ್ಷ ಜುಲೈ 10ರವರೆಗೆ 1791 ಪ್ರಕರಣಗಳಲ್ಲಿ 1179 ಆರೋಪಿಗಳನ್ನು ಬಂಧಿಸಲಾಗಿದೆ. 884 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದು 189 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮಾಹಿತಿ ನೀಡಿದರು. +ರಾಜ್ಯದಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ ಪಡಿಸಿದ್ದೇವೆ. 10 ಟನ್‌ ಗಾಂಜಾ, 250 ಕೆಜಿಯಷ್ಟು ಸಿಂಥೆಟಿಕ್‌ ಡ್ರಗ್ಸ್ ಸುಟ್ಟು ಹಾಕಲಾಗಿದೆ. ಯುವಕರು ಮಾದಕ ವ್ಯಸನದಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆ. ಹೀಗಾಗಿ ಡ್ರಗ್‌್ಸ ವಿರುದ್ಧವಾಗಿ ನಿರಂತರವಾದ ಹೋರಾಟ ನಡೆಸಲಾಗುತ್ತಿದೆ ಎಂದರು. +ವಿದೇಶದಿಂದ ವಿದ್ಯಾರ್ಥಿ ವೀಸಾದ ಮೇಲೆ ಬಂದು ದಂಧೆಗೆ ಇಳಿಯುತ್ತಿದ್ದಾರೆ. 150 ವಿದೇಶಿಗರನ್ನು ಗುರುತಿಸಿ, ಅಂಥವರನ್ನು ಬಂಧಿಸಿ ವಾಪಸ್‌‍ ಕಳುಹಿಸಲಾಗಿದೆ. ವಿದೇಶಿ ಯುವಕರ ಮೇಲೆ ಹೆಚ್ಚಿನ ನಿಗಾವಹಿಸಲಾಗಿದೆ. ಸಿಐಡಿ ಮಾದಕದ್ರವ್ಯ ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ ಎಡಿಜಿಪಿ ಮತ್ತು ಐಜಿಪಿ ಹ್ದುೆಯನ್ನು ಸೃಜಿಸಲಾಗಿದೆ. ರಾಜ್ಯದಲ್ಲಿ 43 ಸೆನ್‌ (ಸೈಬರ್‌, ನಾರ್ಕೋಟಿಕ್‌ ಮತ್ತು ಎಕನಾಮಿಕ್‌ ಅೆನ್‌್ಸ) ಸ್ಥಾಪಿಸಲಾಗಿದ್ದು, ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ವಿದೇಶದಿಂದ ಬರುವ ಪಾರ್ಸೆಲ್‌ಗಳ ಮೇಲೆ ನಿಗಾ ವಹಿಸಲಾಗಿದೆ. ಡ್ರಗ್‌್ಸ ಕುರಿತು ಸಾರ್ಜಜನಿಕತು ಮಾಹಿತಿ ನೀಡಲು ಆ್ಯಪ್‌ಗಳು ಮೊಬೈಲ್‌ ಅಪ್ಲಿಕೇಶನ್‌ ತರಲಾಗಿದೆ. ಇದರ ಮೂಲಕ ಪೊಲೀಸರಿಗೆ ಮಾಹಿತಿ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು. +ಮುಲಾಜಿಲ್ಲದೆ ಕ್ರಮ :ಸದಸ್ಯ ಡಾ. ಧನಂಜಯ್‌ ಸರ್ಜಿ ಅವರು, ಡಾರ್ಕ್‌ ಕ್ಲಬ್‌ ಮೂಲಕ ಡ್ರಗ್‌್ಸ ಬರುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ತೆಗೆದುಕೊಂಡು ಅಮಲಿನಲ್ಲಿ ಓಡಾಡುವ ವೀಡಿಯೋಗಳು ವೈರಲ್‌ ಆಗುತ್ತಿವೆ ಎಂದರು. ಈ ವೇಳೆ ಕಾಂಗ್ರೆಸ್‌‍ ಸದಸ್ಯ ಸಲೀಂ ಅಹದ್‌ ಅವರು, ದಂಧೆಯಲ್ಲಿ ಪೊಲೀಸರು ಭಾಗಿಯಾಗುತ್ತಿದ್ದಾರೆ. ಇದಕ್ಕೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಧ್ವನಿ ಎತ್ತಿದರು. +ಇದಕ್ಕೆ ಗೃಹ ಸಚಿವ ಪರಮೇಶ್ವರ ಅವರು ಪ್ರತಿಕ್ರಿಯಿಸಿ, ಈಗಾಗಲೇ ಸಾವಿರಾರು ಕೇಸ್‌‍ಗಳನ್ನು ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಭಾಗಿಯಾಗಿರುವುದು ಕಂಡು ಬಂದರೆ, ಅವರ ವಿರುದ್ಧವೂ ಯಾವುದೇ ರೀತಿಯ ಮುಲಾಜಿಲ್ಲದೆ ಕ್ರಮ ಜರುಗಿಸುತ್ತೇವೆ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_71_11.txt b/eesanje/url_46_71_11.txt new file mode 100644 index 0000000000000000000000000000000000000000..c0f87b4aa3718ea569390a566a909aa666c9d058 --- /dev/null +++ b/eesanje/url_46_71_11.txt @@ -0,0 +1,6 @@ +ಹಂತಹಂತವಾಗಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಬೋಸರಾಜು +ಬೆಂಗಳೂರು,ಜು.18-ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ವಿಧಾನಪರಿಷತ್‌ ಸಭಾನಾಯಕ ಬೋಸರಾಜು ಹೇಳಿದ್ದಾರೆ.ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದ್ದರು. +ಸಿಎಂ ಪರವಾಗಿ ಉತ್ತರಿಸಿದ ಬೋಸರಾಜು, ಸರ್ಕಾರ ಹಂತಹಂತವಾಗಿ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಏಕಕಾಲದಲ್ಲಿ ಎಲ್ಲಾ ಹುದ್ದೆಗಳನ್ನೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. +ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌‍ಸಿ)ದ ಮೂಲಕ ಕಾಲಕಾಲಕ್ಕೆ ಆರ್ಥಿಕ ಇತಿಮಿತಿಯೊಳಗೆ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಹುದ್ದೆ ತುಂಬುವಾಗ ಪಾರದರ್ಶಕತೆಯನ್ನು ಅಳವಡಿಸಿಕೊಳ್ಳಲಾಗುತ್ತದೆ. ಎಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. +ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ, ಹಿಂದೆ ಕೆಪಿಎಸ್‌‍ಸಿಯಲ್ಲಿ ಇಂತಹ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳು ಪಡೆದುಕೊಂಡರೆ ಅಂತವರಿಗೆ ತಾಳಿ ಭಾಗ್ಯ, ಶಾದಿ ಭಾಗ್ಯ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗಲೂ ಅದು ಇದೆಯೇ ಎಂದು ಪ್ರಶ್ನಿಸಿದರು. +ಕೆಪಿಎಸ್‌‍ಸಿಯಲ್ಲಿ ಅಧ್ಯಕ್ಷರು, ಸದಸ್ಯರ ನೇಮಕಾತಿಯಿಂದ ಹಿಡಿದು ಹುದ್ದೆಯನ್ನು ಪಡೆಯಬೇಕಾದರೂ ಜಾತಿ ಪ್ರಭಾವ, ಲಂಚದ ಆಮಿಷ ಯಥೇಚ್ಛವಾಗಿ ನಡೆಯುತ್ತದೆ. ಇದನ್ನು ಕೊನೆಗಾಣಿಸಬೇಕೆಂದು ಮನವಿ ಮಾಡಿದರು.ಕೆಪಿಎಸ್‌‍ಸಿಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ. ಸರ್ಕಾರ ಇದನ್ನು ವೆಬ್‌ಸೈಟ್‌ನಲ್ಲಿ ಏಕೆ ಹಾಕುವುದಿಲ್ಲ ಎಂದು ಪ್ರಶ್ನೆ ಮಾಡಿದರು. \ No newline at end of file diff --git a/eesanje/url_46_71_12.txt b/eesanje/url_46_71_12.txt new file mode 100644 index 0000000000000000000000000000000000000000..b70dff490fd1271c0ea68e7d5ffd30c332f546b2 --- /dev/null +++ b/eesanje/url_46_71_12.txt @@ -0,0 +1,6 @@ +ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ +ಬೆಂಗಳೂರು,ಜು.18- ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡುಬಂದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಬಕಾರಿ ಸಚಿವ ಆರ್‌.ಬಿ.ತಿಮಾಪುರ ಎಚ್ಚರಿಸಿದ್ದಾರೆ. +ಸದಸ್ಯ ಅನಿಲ್‌ಕುಮಾರ್‌ರವರ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಧಿಷ್ಟವಾಗಿ ಇಂತಹ ಕಡೆ ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ದಾಖಲೆ ಸಮೇತ ನೀಡಿದರೆ ಖಂಡಿತವಾಗಿ ಕಾನೂನು ಕ್ರಮ ಜರುಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಅಲ್ಲಿ ನಡೆಯುತ್ತದೆ, ಇಲ್ಲಿ ನಡೆಯುತ್ತದೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ನಮಗೆ ನಿರ್ಧಿಷ್ಟವಾಗಿ ನೀವು ದೂರು ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. +ಇದಕ್ಕೂ ಮುನ್ನ ಅನಿಲ್‌ಕುಮಾರ್‌ ಮಾತನಾಡಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಯುವಕರು ದಾರಿ ತಪ್ಪಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸದಸ್ಯರ ಗಮನ ಸೆಳೆದರು. +ಕೋಲಾರದಲ್ಲಿ ಗೋಪಿ ಎಂಬ ಎಫ್‌ಡಿ ಅಧಿಕಾರಿ 14 ವರ್ಷದಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಏಕೆ ವರ್ಗಾವಣೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.ಈ ವೇಳೆ ಸಚಿವ ತಿಮಾಪುರ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಆ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತೇವೆ. ಇಲಾಖೆಯಲ್ಲಿ ಪಾರದರ್ಶಕತೆ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_46_71_2.txt b/eesanje/url_46_71_2.txt new file mode 100644 index 0000000000000000000000000000000000000000..dc1da66d3e15c7ed9b69bcd853b919703a1796ac --- /dev/null +++ b/eesanje/url_46_71_2.txt @@ -0,0 +1,7 @@ +ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದುವರೆದ ವರುಣಾರ್ಭಟ, ಜನ ಜೀವನ ಅಸ್ತವ್ಯಸ್ತ +ಬೆಂಗಳೂರು, ಜು.19: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ, ಹಾವೇರಿ ಮತ್ತಿತರ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರೆದಿದ್ದು, ಜಲಾಶಯಗಳು ಭರ್ತಿಯಾಗಿವೆ. +ಹಳ್ಳ, ಕೊಳ್ಳಗಳು ತುಂಬಿ ಹೊಲ ಗದ್ದೆಗಳು ಜಲಾವೃತಗೊಂಡಿವೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರಾವಾರ, ಹಾಸನ ಮುಂತಾದೆಡೆ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. +ನಿರಂತರ ಮಳೆಯಿಂದ ಹೆದ್ದಾರಿಯ ಮೇಲೆ ಭಾರಿ ಪ್ರಮಾಣದ ಗುಡ್ಡ ದ ಮಣ್ಣು ಜರದಿದ್ದು ಅದನ್ನು ತೆರವುಗೊಳಿಸಲಾಗುತ್ತಿದೆ. ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗುತ್ತಿದೆ.ಚಿಕ್ಕಮಗಳೂರಿನ ಹಲವೆಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. +ಶೃಂಗೇರಿಯಲ್ಲಿ ತುಂಗಾ ಪ್ರವಾಹದಿಂದ ಪಟ್ಟಣದಲ್ಲಿ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಗಾಂದಿ ಮೈದಾನ ಭಾರತಿ ತೀರ್ಥ ರಸ್ತೆಯಲ್ಲಿ ಪ್ರವಾಹದ ನೀರು ಎರಡು ದಿನದಿಂದ ನಿಂತಿದೆ. ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಕಾರಣ ತುಂಗಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗುತ್ತಿದೆ. +ನದಿ ಭಾಗದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಶಿವಮೊಗ್ಗದ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದ್ದು, 71 ಸಾವಿರ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಕರಾವಳಿ ಭಾಗದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಲವು ಕಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. +ಚಿಕ್ಕಮಗಳೂರಿನ ಅಂಬಲೆ,ಲಕ್ಯ ಹೋಬಳಿ ಹೊರತುಪಡಿಸಿ ಎಲ್ಲೆಡೆ ಮಳೆ ಜೋರಾಗಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲಾಗಿದೆ. ಕೊಡಗಿನಲ್ಲಿ ಕೂಡ ಮಳೆಯ ಅಬ್ಬರ ಮುಂದುವರೆದಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲ, ನಾಪೋಕ್ಲು ಭಾಗದಲ್ಲಿ ನದಿಗಳು ತುಂಬಿ ಹರಿಯುತ್ತಿವೆ. ಕಾವೇರಿ ನದಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಕಾವೇರಿ ಜಲನಯನ ಪ್ರದೇಶದ ಕಬಿನಿ, ಹೇಮಾವತಿ, ಹಾರಂಗಿ, ಕೃಷ್ಣರಾಜ ಸಾಗರಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕಬಿನಿ ಈಗಾಗಲೇ ಭರ್ತಿಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. \ No newline at end of file diff --git a/eesanje/url_46_71_3.txt b/eesanje/url_46_71_3.txt new file mode 100644 index 0000000000000000000000000000000000000000..01e1927b2532484915767f80766c329649d29828 --- /dev/null +++ b/eesanje/url_46_71_3.txt @@ -0,0 +1,7 @@ +ಬೆಚ್ಚಗೆ ಮಲಗಿದ್ದ ಭ್ರಷ್ಟರಿಗೆ ಲೋಕಾಯುಕ್ತ ಶಾಕ್, ರಾಜ್ಯದಲ್ಲಿ 55ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ +ಬೆಂಗಳೂರು, ಜುಲೈ 19:ಜಿಟಿ ಜಿಟಿ ಮಳೆಯಿಂದ ಬೆಚ್ಚಗೆ ಮಲಗಿದ್ದ ಭ್ರಷ್ಟಾಚಾರಿ ಅಧಿಕಾರಿಗಳ ಮೆನೆ ಕದ ತಟ್ಟಿದ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.ರಾಜ್ಯದ 55ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಬರ್ಜರಿ ದಾಳಿ ನಡೆಸಿದ್ದಾರೆ. +ಬಂದ ದೂರಿನ ಆಧಾರದ ಮೇಲೆ 12 ಅಧಿಕಾರಿಗಳಿಗೆ ಮನೆ,ಕಚೇರಿ ಸೇರಿ ಅವರ ಇತರೆ ವ್ಯವಹಾರ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ .ಬೆಂಗಳುರು,ಯದಗಿರಿ,ಬೆಂಗಳೂರು ಗ್ರಾಮಾಂತರ,ಶಿವಮೊಗ್ಗ ,ತುಮಕೂರು ಜಿಲ್ಲೆಯಲ್ಲಿ ವಿವಿಧೆಡೆ ಕಾರ್ಯಾಚರಣೆ ನಡೆದಿದೆ.ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್‌ಗೆ ಲೋಕಾಯುಕ್ತ ಪೊಲೀಸರು ಶಾಕ್‌ ನೀಡಿದ್ದಾರೆ. +ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿರುವ ನಿವಾಸ,ರೇಸ್‌‍ ಕೋರ್ಸ್‌ ರಸ್ತೆಯ ಖನಿಜ ಭವನದ ಕಚೇರಿ ಸೇರಿ ಇವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ದಾಳಿ ನಡೆದಿದೆ. +ಇವರು ತುಮಕೂರು ನಗರದ ಬನಶಂಕರಿ ನಗರದಲ್ಲಿ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ ಹೊಂದಿದ್ದು ,ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿ ಫಾರಂಹೌಸ್‌‍ ಇದೆ. +ಅಲ್ಲದೆ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಪ್ಲಾಸ್ಟಿಕ್‌ ಬಾಟಲ್‌ ತಯಾರಿಕಾ ಘಟಕವಿದೆ ದಾಳಿ ಸಂದರ್ಭದಲ್ಲಿ ನಗದು .ಚಿನ್ನಾಭರಣ,ಕೆಲವು ಆಸ್ತಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. +ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್‌ ಸಿಎಲ್‌‍ ಅವರಿಗೂ ಬಿಸಿ ತಟ್ಟಿದೆ .ಬೆಮಗಲುರಿನಲ್ಲಿರುವ ಮನೆ ,ಮಂಗಳುರಿನ ಕಚೇರಿ ಸೇರಿ ವಿವಿಧೆಡೆ ಕಾರ್ಯಾಚರಣೆ ನಡೆದಿದೆ.ಹಲವೆಡೆ ನಿವೇಶನ,ಫ್ಲಾಟ್‌ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ .ಬ್ಯಾಂಕ್‌ನಲ್ಲಿರುವ ಲಾಕರ್‌,ಮತ್ತುಬೇನಮಿ ಆಸ್ತಿ ಬಗ್ಗೆ ಪರಿಶೀಲನೆ ನಡೆದಿದೆ. \ No newline at end of file diff --git a/eesanje/url_46_71_4.txt b/eesanje/url_46_71_4.txt new file mode 100644 index 0000000000000000000000000000000000000000..c5fbf8f4f1fce50472a358fc430c4872bab51662 --- /dev/null +++ b/eesanje/url_46_71_4.txt @@ -0,0 +1,6 @@ +ಆಸ್ತಿಗಳ ನಗದೀಕರಣ ಕುರಿತ ಊಹಾಪೋಹಗಳಿಗೆ ಸರ್ಕಾರ ಸ್ಪಷ್ಟನೆ +ಬೆಂಗಳೂರು,ಜು.18-ಸದ್ಯಕ್ಕೆ ಆಸ್ತಿ ನಗದೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಚಿವ ಬೋಸರಾಜು ಸ್ಪಷ್ಟಪಡಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧಾನಪರಿಷತ್‌ನಲ್ಲಿ ಉತ್ತರಿಸಿದ ಬೋಸರಾಜು, ಆಸ್ತಿಗಳ ನಗದೀಕರಣ ಕುರಿತಾಗಿ ಹಲವಾರು ಊಹಾಪೋಹಗಳು ಎದ್ದಿವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ರೀತಿಯ ಚರ್ಚೆಯಾಗಿಲ್ಲ ಎಂದು ಪುನರುಚ್ಚರಿಸಿದರು. +ನಾನು ಸ್ವತಃ ಮುಖ್ಯಮಂತ್ರಿಗಳ ಉತ್ತರದ ದಾಖಲೆಗಳನ್ನು ಸದನದಲ್ಲಿ ನೀಡುತ್ತಿದ್ದೇನೆ. ನಮ ಸರ್ಕಾರದ ಮುಂದೆ ಸಾಮಾನ್ಯ ಪ್ರಸ್ತಾವನೆ ಇಲ್ಲವೇ ಇಲ್ಲ. ಆರ್ಥಿಕ ಇಲಾಖೆ ಕೇವಲ ಮಾಹಿತಿ ಸಂಗ್ರಹಕ್ಕೆ ಮಾತ್ರ ಮುಂದಾಗಿತ್ತು. ಹೀಗಾಗಿಯೇ ಗೊಂದಲ ಉಂಟಾಗಿದೆ ಎಂದು ಸ್ಪಷ್ಟನೆ ನೀಡಿದರು. +ಆಸ್ತಿಗಳ ನಗದೀಕರಣ ಕೇವಲ ಇಲಾಖೆಗಳ ಆಂತರಿಕ ವಿಷಯ. ಅವರ ಮಟ್ಟದಲ್ಲಿ ಚರ್ಚೆಯಾಗಿದೆಯೇ ಹೊರತು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಒಂದು ವೇಳೆ ಆಸ್ತಿಗಳ ನಗದೀಕರಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕು. ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಇವೆಲ್ಲವೂ ಚರ್ಚೆಯಾದ ನಂತರವೇ ತೀರ್ಮಾನವಾಗುತ್ತದೆ ಎಂದು ಹೇಳಿದರು. +ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್‌‍ನ ತಿಪ್ಪೇಸ್ವಾಮಿಯವರು, ಗ್ಯಾರಂಟಿಗಳ ಹಿನ್ನೆಲೆ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ರಾಜ್ಯಸರ್ಕಾರ ನಿಗಮ, ಪ್ರಾಧಿಕಾರ, ಮಂಡಳಿಗಳ ಆಸ್ತಿಗಳನ್ನು ನಗದೀಕರಣ ಮಾಡಲು ಹೊರಟಿದೆ ಎಂದು ತರಾಟೆಗೆ ತೆಗೆದುಕೊಂಡರು. +ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌, ಇದು ಹಣಕಾಸು ಇಲಾಖೆಯ ಆಂತರಿಕ ವಿಚಾರ. ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಸುವುದು ಸೂಕ್ತವಲ್ಲ ಎಂದು ಸಲಹೆ ಮಾಡಿದರು.ಆಗ ತಿಪ್ಪೇಸ್ವಾಮಿ, ಸರ್ಕಾರ ಹೊರಗಿನವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲು ಹೊರಟಿದೆ. ನಮಲ್ಲೇ ಸಾಕಷ್ಟು ಆರ್ಥಿಕ ತಜ್ಞರಿದ್ದಾರೆ. ಬೋಸ್ಟಾನ್‌ ಕಂಪನಿಗೆ ಸಲಹೆ ನೀಡುವಂತೆ ಕೇಳಿಕೊಳ್ಳುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. \ No newline at end of file diff --git a/eesanje/url_46_71_5.txt b/eesanje/url_46_71_5.txt new file mode 100644 index 0000000000000000000000000000000000000000..086a0af78db230cfb955bfd9737a870ee0ee8d58 --- /dev/null +++ b/eesanje/url_46_71_5.txt @@ -0,0 +1,8 @@ +ಸಚಿವರು-ಅಧಿಕಾರಿಗಳಿಗೆ ಸಭಾಪತಿ ವಾರ್ನಿಂಗ್ +ಬೆಂಗಳೂರು,ಜು.18-ಸದನ ನಡೆಯುವ ವೇಳೆ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ನಾನು ಪದೇಪದೇ ಹೇಳುವುದಿಲ್ಲ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಆಡಳಿತ ಪಕ್ಷದಲ್ಲಿ ಎಚ್ಚರಿಕೆ ಕೊಟ್ಟ ಘಟನೆ ನಡೆಯಿತು. +ಸದನ ಆರಂಭವಾದಾಗ ಆಡಳಿತ ಪಕ್ಷದ ಸಾಲಿನಲ್ಲಿ ಸಚಿವರು ಹಾಗೂ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿತ್ತು. ಬಿಜೆಪಿ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು, ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಅವರಿಗೆ ಪ್ರಶ್ನೆ ಕೇಳಿದ್ದರು. +ಈ ವೇಳೆ ಸದನದಲ್ಲಿ ಸಚಿವರ ಹಾಜರಾತಿ ಇಲ್ಲದಿದ್ದರಿಂದ ಅಸಮಾಧಾನಗೊಂಡ ಪ್ರತಾಪ್‌ ಸಿಂಹ ನಾಯಕ್‌, ನಾವು ಯಾರಿಗೆ ಪ್ರಶ್ನೆ ಕೇಳಬೇಕು, ಸಂಬಂಧಪಟ್ಟ ಇಲಾಖಾ ಸಚಿವರೂ ಇಲ್ಲ, ಮಾಹಿತಿ ಕೊಡಲು ಅಧಿಕಾರಿಗಳೂ ಇಲ್ಲ ಎಂದು ಬೇಸರ ಹೊರಹಾಕಿದರು. +ಇದಕ್ಕೆ ಧ್ವನಿಗೂಡಿಸಿದ ಜೆಡಿಎಸ್‌‍ನ ಬೋಜೇಗೌಡ, ಸದನ ನಡೆಯುವಾಗ ಸಚಿವರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಈ ಹಿಂದೆಯೂ ನೀವು ಇದರ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದೀರಿ. ನಿಮ ಮಾತಿಗೆ ಬೆಲೆ ಇಲ್ಲ ಎಂದರೆ ಹೇಗೆ ಪ್ರಶ್ನಿಸಿದರು. +ಆಗ ಹೊರಟ್ಟಿಯವರು ಇಂದು ಸದನದಲ್ಲಿ ಎಚ್‌.ಕೆ.ಪಾಟೀಲ್‌, ಡಾ.ಎಂ.ಸಿ. ಸುಧಾಕರ್‌, ಶರಣಬಸಪ್ಪ ದರ್ಶನಾಪೂರ್‌, ಜಮೀರ್‌ ಅಹಮದ್‌ ಸೇರಿದಂತೆ ಮತ್ತಿತರರು ಸದನದಲ್ಲಿ ಹಾಜರಿರಬೇಕಿತ್ತು. ಜೊತೆಗೆ ಇಂತಹ ಇಲಾಖಾಧಿಕಾರಿಗಳು ಇರಬೇಕಿತ್ತು ಎಂದು ಹೆಸರುಗಳನ್ನು ಓದಿದರು. +ನೀವು ಎಚ್ಚರಿಕೆ ಕೊಟ್ಟ ಮೇಲೆ ಸದನಕ್ಕೆ ಬಾರದಿದ್ದರೆ ಹೇಗೆ? ನಿಮ ಮಾತಿಗೆ ಬೆಲೆ ಇಲ್ಲವೇ ಎಂದು ಬೋಜೇಗೌಡ ಪ್ರಶ್ನಿಸಿದಾಗ ಈಗ ನಾನು ಏನು ಮಾಡಬೇಕು. ಸರ್ಕಾರಕ್ಕೆ ಎಷ್ಟು ಸಾರಿ ಹೇಳುವುದು ಎಂದು ಹೊರಟ್ಟಿ ಬೇಸರದಿಂದಲೇ ಪ್ರಶ್ನಿಸಿದರು. +ಆಗ ಸಭಾನಾಯಕ ಬೋಸ್‌‍ರಾಜ್‌ ಅವರಿಗೆ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ. ಪದೇಪದೇ ನಾನು ಹೇಳಿದರೆ ಸರಿಯಲ್ಲ ಎಂದು ಬೇಸರದಿಂದಲೇ ಸರ್ಕಾರಕ್ಕೆ ಸಲಹೆ ನೀಡಿದರು. \ No newline at end of file diff --git a/eesanje/url_46_71_6.txt b/eesanje/url_46_71_6.txt new file mode 100644 index 0000000000000000000000000000000000000000..e229477f526a8cfad02134c6b398d18217ca7223 --- /dev/null +++ b/eesanje/url_46_71_6.txt @@ -0,0 +1,8 @@ +ಶಿರೂರು ಮಣ್ಣು ಕುಸಿತ ದುರಂತ : ಮತ್ತಿಬ್ಬರ ಮೃತದೇಹಗಳು ಪತ್ತೆ +ಬೆಂಗಳೂರು, ಜು.18– ಕಾರವಾರದ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ಮಂಗಳೂರು- ಗೋವಾ ಹೆದ್ದಾರಿಯಲ್ಲಿ ದಿಢೀರ್‌ ಮಣ್ಣು ಕುಸಿದು ಗಂಗಾವಳಿ ನದಿಗೆ ಕೊಚ್ಚಿಕೊಂಡು ಹೋದವರ ಪೈಕಿ ಇಂದು ಬೆಳಗ್ಗೆ ಅಂಕಿತಾ(5) ಹಾಗೂ ಟ್ಯಾಂಕರ್‌ ಚಾಲಕ ಮುರುಗನ್‌ ಮೃತದೇಹ ಪತ್ತೆಯಾಗಿವೆ. +ಗೋಕರ್ಣ ಸಮುದ್ರದ ದಡದಲ್ಲಿ ಟ್ಯಾಂಕರ್‌ ಚಾಲಕ ಮುರುಗನ್‌ ಹಾಗೂ ಅಂಕಿತಾ ಮೃತದೇಹ ತೇಲುತ್ತಿದ್ದುದು ಕಂಡು ಅಗ್ನಿಶಾಮಕ ದಳ ಇಂದು ಶವಗಳನ್ನು ಮೇಲೆತ್ತಿದ್ದಾರೆ. ಅಂದಿನ ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಆರು ಶವಗಳು ಪತ್ತೆಯಾಗಿವೆ. +ಈ ಭಾಗದಲ್ಲಿ ಕಳೆದೊಂದು ವಾರದಿಂದ ದಾರಾಕಾರ ಮಳೆ ಸುರಿಯುತ್ತಿದ್ದು, ಮನೆಗೆ ಹೊಂದಿಕಂಡಂತೆ ಶಿರೂರಿನ ಲಕ್ಷ್ಮಣ ನಾಯ್ಕ್ ಕುಟುಂಬ ಚಹಾ ಅಂಗಡಿ ಹಾಗೂ ಹೊಟೇಲ್‌ ನಡೆಸುತ್ತಾ ಜೀವನ ನಡೆಸುತ್ತಿದ್ದರು. +ಮಂಗಳವಾರ ಬೆಳಗ್ಗೆ ಏಕಾಏಕಿ ಗುಡ್ಡದ ಮಣ್ಣು ಕುಸಿಯುತ್ತಿದ್ದಂತೆ ಈ ಭಾಗದ ಜನರು ಆ ಭಾಗದಿಂದ ಓಡಿ ಪ್ರಾಣ ಉಳಿಸಿಕೊಂಡರೆ, ನೋಡ ನೋಡುತ್ತಿದ್ದಂತೆ ಲಕ್ಷ್ಮಣನಾಯ್‌್ಕ ಅವರ ಮನೆ- ಹೊಟೇಲ್‌ ಮೇಲೆ ಮಣ್ಣು ಕುಸಿದಿದೆ.ಆ ಸಂದರ್ಭದಲ್ಲಿ ಟ್ಯಾಂಕರ್‌ಗಳನ್ನು ನಿಲ್ಲಿಸಿ ಚಹಾ ಸೇವಿಸುತ್ತಿದ್ದ ಚಾಲಕರು ಹಾಗೂ ಲಕ್ಷ್ಮಣ್‌ನಾಯ್ಕ್ ಅವರ ಕುಟುಂಬದ ಐದು ಮಂದಿ ಸೇರಿ ಹಲವು ಮಂದಿ ನಾಪತ್ತೆಯಾಗಿದ್ದರು. +ತದನಂತರದಲ್ಲಿ ಅವರಿಗಾಗಿ ಹುಡುಕಾಟ ನಡೆಸಿದಾಗ ಪಕ್ಕದಲ್ಲೇ ಹರಿಯುತ್ತಿದ್ದ ಗಂಗಾವಳಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಬಗ್ಗೆ ಶಂಕೆ ವ್ಯಕ್ತಪಡಿಸಿ ಎಸ್‌‍ಡಿಆರ್‌ಎಫ್‌ ಅಗ್ನಿ ಶಾಮಕದಳ ಹಾಗೂ ಪೊಲೀಸರು ಹುಡುಕಾಟ ನಡೆಸಿದಾಗ ಗೋಕರ್ಣ ಸಮುದ್ರದ ಬ್ರಿಡ್‌್ಜ ಬಳಿ ಒಂದೇ ಕುಟುಂಬದ ನಾಲ್ವರ ಮೃತದೇಹಗಳನ್ನು ಹೊರ ತೆಗೆಯಲಾಗಿತ್ತು. ಇಂದು ಅದೇ ಕುಟುಂಬಕ್ಕೆ ಸೇರಿದ ಅಂಕಿತಾ ಹಾಗೂ ಶವ ಹಾಗೂ ಟ್ಯಾಂಕರ್‌ ಚಾಲಕ ಮುರುಗನ್‌ ಮೃತದೇಹ ಪತ್ತೆಯಾಗಿವೆ. +ಇಂದೂ ಸಹ ಜೆಸಿಬಿಗಳ ಮೂಲಕ ಹೆದ್ದಾರಿಯಲ್ಲಿ ಕುಸಿದು ಬಿದ್ದಿರುವ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಈ ಮಾರ್ಗದ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ನದಿಯಲ್ಲಿ ತೇಲಿ ಹೋಗಿರುವ ಟ್ಯಾಂಕರ್‌ನಿಂದ ಗ್ಯಾಸ್‌‍ನ್ನು ಯಾವ ರೀತಿ ಖಾಲಿ ಮಾಡಬಹುದೆಂಬುದರ ಬಗ್ಗೆ ತಜ್ಞರ ಸಲಹೆ ಪಡೆಯಲು ಜಿಲ್ಲಾಡಳಿತ ಮುಂದಾಗಿದೆ. +ಈ ಭಾಗದಲ್ಲಿ ಏಕಾಏಕಿ ದಿಢೀರ್‌ ಮಣ್ಣು ಕುಸಿಯಲು ಕಾರಣವೇನೆಂಬುದರ ಬಗ್ಗೆ ಅರಿಯಲು ಜಿಯೋಗ್ರಾಫಿಕಲ್‌ ಸರ್ವೆ ಆಫ್‌ ಇಂಡಿಯಾ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಂದು ಮಣ್ಣು ಕುಸಿತವಾಗಿ ಏಕಾಏಕಿ ಹರಿದ ನೀರಿನ ರಭಸಕ್ಕೆ ಗ್ರಾಮದ ನಾಲ್ಕು ಮನೆಗಳು ಕುರುಹಿಲ್ಲದಂತೆ ನೀರಿನಲ್ಲಿ ಕೊಚ್ಚಿಹೋಗಿವೆ. ಅಲ್ಲದೆ, ಐದಾರು ಮನೆಗಳು ಸಂಪೂರ್ಣ ಹಾನಿಯಾಗಿವೆ. \ No newline at end of file diff --git a/eesanje/url_46_71_7.txt b/eesanje/url_46_71_7.txt new file mode 100644 index 0000000000000000000000000000000000000000..06b9159129ede778d2b1169fbbbee980f8643ba2 --- /dev/null +++ b/eesanje/url_46_71_7.txt @@ -0,0 +1,11 @@ +ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ +ಬೆಂಗಳೂರು,ಜು.18-ವಾಲೀಕಿ ಪರಿಶಿಷ್ಟ ಪಂಗಡಗಳ ಹಗರಣದಲ್ಲಿ ಬಂಧಿತರಾಗಿರುವವರ ಮೇಲೆ ಜಾರಿ ನಿರ್ದೇಶನಾಲಯ ಒತ್ತಡ ಹೇರಿ ಸರ್ಕಾರದ ಪ್ರಮುಖರ ಹೆಸರು ಹೇಳಿಸುವ ಪ್ರಯತ್ನ ನಡೆಸುತ್ತಿದ್ದು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನ ನಡೆಸಿದೆ. ಇದಕ್ಕೆ ನಾವು ಹೆದರುವುದಿಲ್ಲ. ಕಾನೂನಾತಕವಾಗಿ ಹಾಗೂ ಪ್ರಜಾಸತ್ತಾತಕವಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಸಚಿವರ ತಂಡ ಘೋಷಣೆ ಮಾಡಿದೆ. +ವಿಧಾನಸೌಧದ ಸಭಾಂಗಣದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಕಂದಾಯ ಸಚಿವ ಕೃಷ್ಣಾಭೈರೇಗೌಡ, ಇಂಧನ ಸಚಿವ ಕೆ.ಜೆ.ಜಾರ್ಜ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ ಖರ್ಗೆ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಶಾಸಕ ಎ.ಎಸ್‌‍.ಪೊನ್ನಣ್ಣ ಮಾತನಾಡಿದರು. +ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಇ.ಡಿ. ತನಿಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದರು.ಕೃಷ್ಣಾಭೈರೇಗೌಡ ಮಾತನಾಡಿ, ಜಾರಿ ನಿರ್ದೇಶನಾಲಯ ಬಂಧಿತರ ಮೇಲೆ ಒತ್ತಡ ಹೇರತ್ತಿದ್ದು, ಸರ್ಕಾರದ ಪ್ರಮುಖರ ಹೆಸರನ್ನು ಹೇಳಿದರೆ ನಿಮನ್ನು ರಕ್ಷಿಸುತ್ತೇವೆ. ಇಲ್ಲದೇ ಹೋದರೆ ಜಾರಿ ನಿರ್ದೇಶನಾಲಯದ ಶಕ್ತಿ ಏನು ಎಂದು ತೋರಿಸುತ್ತೇವೆ ಎಂಬ ಬೆದರಿಕೆ ಹಾಕುತ್ತಿದ್ದಾರೆ. +ಕಳೆದ ಹತ್ತು ವರ್ಷಗಳಿಂದಲೂ ಜಾರಿ ನಿರ್ದೇಶನಾಲಯ ವಿರೋಧಪಕ್ಷಗಳನ್ನೇ ಗುರಿಯಾಗಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದೆ. ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿರೋಧಪಕ್ಷಗಳ ವಿರುದ್ಧ ಶೇ. 52 ರಷ್ಟು ಪ್ರಕರಣಗಳಿದ್ದವು. ಕಾಂಗ್ರೇಸ್‌‍ ನೇತೃತ್ವದ ಯುಪಿಎ ಮತ್ತು ಅದರ ಮಿತ್ರಪಕ್ಷಗಳ ಶೇ.47 ರಷ್ಟು ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಕಳೆದ ಹತ್ತು ವರ್ಷಗಳಿಂದ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಶೇ.95 ರಷ್ಟು ಪ್ರಕರಣಗಳು ವಿರೋಧಪಕ್ಷಗಳ ವಿರುದ್ಧ ದಾಖಲಾಗಿವೆ. ಶೇ.5 ರಷ್ಟು ಮಾತ್ರ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ದಾಖಲಾಗಿವೆ ಎಂದು ಹೇಳಿದರು. +ರಾಜ್ಯದಲ್ಲಿ ಬೋವಿ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಸೇರಿದಂತೆ ಹಲವು ಹಗರಣಗಳು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿವೆ. ಅದರ ಬಗ್ಗೆ ಜಾರಿ ನಿರ್ದೇಶನಾಲಯ ಏಕೆ ತನಿಖೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು. +ಪ್ರಿಯಾಂಕ್‌ ಖರ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಹಿನ್ನಡೆಯಾದಾಗಲೆಲ್ಲಾ ಕೇಂದ್ರ ಸರ್ಕಾರ ರಾಜ್ಯಗಳಲ್ಲಿರುವ ಬಿಜೆಪಿ ಘಟಕಗಳ ನೆರವಿಗೆ ಬರುತ್ತದೆ. ಬಿಜೆಪಿಯೇತರ ಸರ್ಕಾರಗಳಿರುವ ಕಡೆಗೆ ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಸರ್ಕಾರಗಳನ್ನು ಪಥನಗೊಳಿಸಲಾಗಿದೆ. 2019 ರಲ್ಲಿ ರಾಜ್ಯದ ಕಾಂಗ್ರೆಸ್‌‍ ಸರ್ಕಾರ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಮಹಾರಾಷ್ಟ್ರ, ಗೋವಾ, ಮಿಜೋರಾಂ, ನಾಗಾಲ್ಯಾಂಡ್‌, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರಗಳನ್ನು ಪತನಗೊಳಿಸಲಾಗಿದೆ. +ಆಂಧ್ರಪ್ರದೇಶ, ಪ.ಬಂಗಾಳ ಸೇರಿದಂತೆ ಹಲವು ಕಡೆ ಪ್ರಯತ್ನಗಳಾಗಿವೆ. ವಿರೋಧಪಕ್ಷಗಳಲ್ಲಿ ಇದ್ದವರ ಮೇಲೆ ದಾಳಿ ಮಾಡಿ ಬಿಜೆಪಿಗೆ ಸೆಳೆದುಕೊಂಡು ನಂತರ ಅವರಿಗೆ ಕ್ಲೀನ್‌ಶೀಟ್‌ ನೀಡಲಾಗುತ್ತಿದೆ. 444 ಶಾಸಕರನ್ನು ಇದೇ ರೀತಿ ಸೆಳೆದುಕೊಳ್ಳಲಾಗಿದೆ. 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ 3,000 ಕ್ಕೂ ಹೆಚ್ಚು ದಾಳಿಗಳಾಗಿವೆ. 121 ಮಂದಿ ರಾಜಕೀಯ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ 115 ಮಂದಿ ಕಾಂಗ್ರೆಸ್‌‍ ಮತ್ತು ವಿರೋಧಪಕ್ಷದ ಪ್ರಮುಖರಿದ್ದಾರೆ. +ದಿನೇಶ್‌ ಗುಂಡೂರಾವ್‌ ಮಾತನಾಡಿ, ಕೇಂದ್ರ ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುವ ಯತ್ನ ನಡೆಸುತ್ತಿದೆ ಎಂದರು.ಹಗರಣದ ಮಾಹಿತಿ ತಿಳಿಯುತ್ತಿದ್ದಂತೆ ನಮ ಸರ್ಕಾರ ಎಸ್‌‍ಐಟಿಯನ್ನು ರಚನೆ ಮಾಡಿ ತನಿಖೆ ನಡೆಸುತ್ತಿದೆ. ಈ ನಡುವೆ ಇ.ಡಿ ಏಕಾಏಕಿ ಮಧ್ಯಪ್ರವೇಶ ಮಾಡಿ, ನಾಗೇಂದ್ರ ಅವರನ್ನು ಬಂಧಿಸಿದೆ. ಜಾರಿ ನಿರ್ದೇಶನಾಲಯ ಕೇಂದ್ರ ತನಿಖೆ ಸಂಸ್ಥೆಯಾಗಿ ಉಳಿದಿಲ್ಲ. ಬಿಜೆಪಿಯ ರಾಜ್ಯಘಟಕವಾಗಿದೆ ಎಂದು ಗಂಭೀರ ಆರೋಪ ಮಾಡಿದರು. +ಕೆ.ಜೆ.ಜಾರ್ಜ್‌ ಮಾತನಾಡಿ, ಕಾಂಗ್ರೆಸಿಗರು ಬ್ರಿಟಿಷರ ಗುಂಡಿಗೇ ಹೆದರಿಲ್ಲ. ಇನ್ನು ಇಂತಹ ದಾಳಿಗಳಿಗೆಲ್ಲಾ ಜಗ್ಗುವುದಿಲ್ಲ. ಕೇಂದ್ರ ಸರ್ಕಾರದ ಆದೇಶದ ಮೇಲೆ ರಾಜ್ಯದಲ್ಲಿ ವಾಲೀಕಿ ಹಗರಣದಲ್ಲಿ ಇ.ಡಿ ದಾಳಿಯಾಗಿದೆ ಎಂದು ಆರೋಪಿಸಿದರು. +ಸಂತೋಷ್‌ ಲಾಡ್‌ ಮಾತನಾಡಿ, ಕೇಂದ್ರ ಸರ್ಕಾರದ ವರದಿಯಲ್ಲೇ ಹಲವಾರು ಭ್ರಷ್ಟಾಚಾರಗಳು ಬೆಳಕಿಗೆ ಬಂದಿವೆ. ಸಾವಿರಾರು ಕೋಟಿ ರೂ.ಗಳ ಎಲೆಕ್ಟ್ರೋಲ್‌ ಹಗರಣ, ಆನ್‌ಲೈನ್‌ನಲ್ಲಿ ಫಲಾನುಭವಿಗಳಿಗೆ ನಗದು ವರ್ಗಾವಣೆ ಹಗರಣ ಸೇರಿದಂತೆ ಬಹಳಷ್ಟು ಉದಾಹರಣೆಗಳಿದ್ದರೂ ಯಾವುದರಲ್ಲೂ ಜಾರಿ ನಿರ್ದೇಶನಾಲಯ ಸಿಬಿಐ ಅಥವಾ ಆದಾಯ ತೆರಿಗೆ ದಾಳಿಗಳಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_71_8.txt b/eesanje/url_46_71_8.txt new file mode 100644 index 0000000000000000000000000000000000000000..0174887718c0c551044811bca371526648562815 --- /dev/null +++ b/eesanje/url_46_71_8.txt @@ -0,0 +1,11 @@ +ವಿಧಾನಸಭೆಯಲ್ಲಿ ಹಗರಣಗಳ ಗದ್ದಲ : ಆಡಳಿತ-ವಿಪಕ್ಷಗಳ ವಾಗ್ಯುದ್ಧ +ಬೆಂಗಳೂರು, ಜು.18– ವಿಧಾನಸಭೆಯಲ್ಲಿಂದು ಆಡಳಿತ ಹಾಗು ಪ್ರತಿಪಕ್ಷಗಳ ನಡುವೆ ಹಗರಣಗಳ ಸದ್ದು ಜೋರಾಗಿ ನಡೆದು ಇಡೀ ಸದನದಲ್ಲಿ ಕಾವೇರಿದ ವಾತಾವರಣ ನಿರ್ಮಾಣವಾಗಿತ್ತು. ಸಾರ್ವಜನಿಕ ಮಹತ್ವದ ವಿಷಯ ನಿಯಮ-69ರಡಿ ಇಂದು ಪ್ರತಿಪಕ್ಷದ ನಾಯಕ ಅಶೋಕ್‌ ಅವರು ವಾಲೀಕಿ ನಿಗಮದಲ್ಲಿ ಪರಿಶಿಷ್ಟರ ಹಣ ಲೂಟಿ ಮಾಡಲಾಗಿದೆ ಎಂದು ಸಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದಾಗ ಆಡಳಿತ ಪಕ್ಷದ ಸಚಿವರು, ಶಾಸಕರು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಆಡಳಿತದಲ್ಲಿ ನೀವು ಎಷ್ಟು ಹಗರಣ ಮಾಡಿದ್ದೀರಿ ಎಂದು ತಿರುಗೇಟು ನೀಡಿದರು. +ಪ್ರತಿಪಕ್ಷದ ಶಾಸಕರಾದ ಬಸವರಾಜ ಪಾಟೀಲ್ ಯತ್ನಾಳ್‌, ಅರವಿಂದ ಬೆಲ್ಲದ್‌ ಸೇರಿದಂತೆ ಇತರರು ಚರ್ಚೆಯಲ್ಲಿ ಭಾಗಿಯಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕುಂಠಿತವಾಗಿದೆ ಎಂದು ಟೀಕಿಸಿದರು. +ಇದಕ್ಕೆ ಪ್ರತಿಯಾಗಿ ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಸಿ.ಮಹದೇವಪ್ಪ, ದಿನೇಶ್‌ ಗುಂಡೂರಾವ್‌, ಶಾಸಕ ನರೇಂದ್ರ ಸ್ವಾಮಿ, ಪ್ರಕಾಶ್‌ ಕೋಳಿವಾಡ ಸೇರಿದಂತೆ ಹಲವರು ಪ್ರತಿಪಕ್ಷದ ಶಾಸಕರ ಟೀಕೆಗೆ ಅಡ್ಡಿ ಉಂಟುಮಾಡಿ ತಿರುಗೇಟು ನೀಡಿದರು.ಒಟ್ಟಾರೆ ಕಳೆದ ಮೂರು ದಿನಗಳಿಂದ ಹಗರಣಗಳ ಕುರಿತು ಪದೇ ಪದೇ ಆಡಳಿತ, ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯುತ್ತಿದೆ. +ಈ ವೇಳೆ ಬಿಜೆಪಿ ಶಾಸಕರು ಮತ್ತೆ ಸಿಎಂ ಸಿದ್ದರಾಮಯ್ಯವಿರುದ್ಧ ಮುಗಿಬಿದ್ದು 100 ಪರ್ಸೆಂಟ್‌ ಸಿಎಂ ಎಂದು ಗಂಭೀರ ಆರೋಪ ಮಾಡಿದಾಗ ಕೆಂಡಾಮಂಡಲವಾದ ಮುಖ್ಯಮಂತ್ರಿಯವರು ನಿಮ ಹಗರಣಗಳನ್ನು ಹೊರ ತೆಗೆಯುತ್ತೇನೆ ಎಂದು ಎಚ್ಚರಿಸಿದಾಗ ಸದನ ಕಾವೇರಿತು. +ದಲಿತ ಪದ ಬಳಕೆ ಮಾಡುವಂತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಎಂದು ಹೇಳಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಅಶ್ವತ್‌ ನಾರಾಯಣ, ಸುರೇಶ್‌ ಕುಮಾರ್‌ ಮತ್ತಿತರರು ಎದ್ದು ನಿಂತ ಅಹಿಂದ ಬಳಕೆ ಮಾಡಿದ್ದು ನೀವೆ ಅಲ್ಲವೇ ಎಂದು ತೀರುಗೇಟು ನೀಡಿದರು. +ಬಿಜೆಪಿಯವರು ಪದೇ ಪದೇ ಸಾವಿರಕ್ಕೂ ಹೆಚ್ಚು ಸಲ ಇದೇ ಪದ ಬಳಕೆ ಮಾಡುತ್ತಿರುವುದನ್ನು ನೋಡಿದರೆ ಇವರಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಇವರ ನಡುವಳಿಕೆ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ ಎಂದು ಸಿಎಂ ಆಕೋಶ ವ್ಯಕ್ತಪಡಿಸಿದರು.ಇದಕ್ಕೆ ಬಿಜೆಪಿ ಅಶ್ವಥ್‌ ನಾರಾಯಣ, ಕಾಂಗ್ರೆಸ್‌‍ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ತಿರುಗೇಟು ನೀಡಿದರು. +ನಿಮ ಹಗರಣಗಳು ಏನೇನಿವೆ ಎಂದು ತೆಗೆಯಬೇಕಾ? ಎಲ್ಲವನ್ನೂ ತೆಗೆಯುತ್ತೇನೆ ಎಂದು ಸಿಎಂ ಹೇಳಿದಾಗ, ಇದಕ್ಕೆ ಶಾಸಕ ಅಶ್ವತ್‌ ನಾರಾಯಣ ಏರು ಧ್ವನಿಯಲ್ಲಿ ಪೇ ಸಿಎಂ… ಶೇ.100ರಷ್ಟು ಸಿಎಂ… ಏನು ಬೆದರಿಕೆ ಹಾಕುತ್ತೀರಾ. ತೆಗೆಯಿರಿ ಎಂದು ತಿರುಗಿ ಬಿದ್ದರು.ಸಿಟ್ಟಾದ ಸಿಎಂ ಏನೆಂದು ಮಾತನಾಡುತ್ತಿದ್ದೀರಾ..ನಿಮಗಿಂತಲೂ ಜೋರಾಗಿ ಕೂಗಲು ನನಗೂ ಬರುತ್ತದೆ. +ಶೇ.40ರಷ್ಟು ಕಮಿಷನ್‌ ಪಡೆದ ನಿಮಿಂದ ನಾವು ಭ್ರಷ್ಟಚಾರದ ವಿರುದ್ಧ ಪಾಠ ಕಲಿಯಬೇಕಾ? ಇವರ ಭ್ರಷ್ಟಚಾರ ಬಯಲಾಗಿದೆ. ಇವರಿಗೆ ನಾಚಿಕೆಯಾಗಬೇಕು, ಮಾನ ಮರ್ಯಾದೆ ಇಲ್ಲದೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಕೋಶ ವ್ಯಕ್ತಪಡಿಸಿದರು.ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ಕಾವೇರಿದ ಚರ್ಚೆಗಳು ನಡೆದವು. +ಮತ್ತೆ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಜೈಲಿಗೆ ಹೋಗಿ ಬಂದವರು ಇವರು. ಭ್ರಷ್ಟಚಾರದಿಂದ ಅಧಿಕಾರಕ್ಕೆ ಬಂದವರು. ಕೆಪಿಎಸ್ಸಿ ನೇಮಕಾತಿಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲಿ ನಡೆದಿರುವುದರ ಬಗ್ಗೆ ಬಿಜೆಪಿಯವರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.ಈ ಸರ್ಕಾರಕ್ಕೆ ಲೂಟಿ ಹೊಡೆಯುವುದೇ ಕೆಲಸವಾಗಿದೆ ಎಂದು ಅಶ್ವಥ್‌ ನಾರಾಯಣ್‌ ಆರೋಪಿಸಿದರು. +ಈ ಹಂತದಲ್ಲಿ ಅಶ್ವಥ್‌ ನಾರಾಯಣ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ದಿನೇಶ್‌ ಗುಂಡುರಾವ್‌ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ನಾಚಿಕೆಯಾಗುವುದಿಲ್ಲವೇ ಎಂದು ಟೀಕಿಸಿಕೊಂಡಿದ್ದು ಆಯಿತು. ಬಿಜೆಪಿಯ ಕೆಲ ಶಾಸಕರು ಹದ್ದು ಮೀರಿದ ವರ್ತನೆ ಪ್ರದರ್ಶಿಸುತ್ತಿದ್ದಾರೆ, ಅವರನ್ನು ಸದನದಿಂದ ಅಮಾನತು ಮಾಡಿ ಎಂದು ಕಾಂಗ್ರೆಸ್‌‍ ಸದಸ್ಯರು ಒತ್ತಾಯಿಸಿದರು. \ No newline at end of file diff --git a/eesanje/url_46_71_9.txt b/eesanje/url_46_71_9.txt new file mode 100644 index 0000000000000000000000000000000000000000..2f7bb82f29ac1f1daec69b2b9862bc9ce6ea735a --- /dev/null +++ b/eesanje/url_46_71_9.txt @@ -0,0 +1,6 @@ +ಅಧಿವೇಶನ ಮುಗಿಯುವುದರೊಳಗೆ ‘ಕಂಬಳ’ ಆಯೋಜಕರ ಅನುದಾನ ಬಿಡುಗಡೆ : ಎಚ್‌.ಕೆ.ಪಾಟೀಲ್‌ +ಬೆಂಗಳೂರು,ಜು.18-ದಕ್ಷಿಣ ಕನ್ನಡದ ಪ್ರಖ್ಯಾತ ಕ್ರೀಡಾಕೂಟವಾದ ಕಂಬಳ ಆಯೋಜಕರಿಗೆ ತಡೆಹಿಡಿದಿರುವ ಅನುದಾನವನ್ನು ಈ ಅಧಿವೇಶನ ಮುಗಿಯುವುದರೊಳಗೆ ಬಿಡುಗಡೆ ಮಾಡುವುದಾಗಿ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ಭರವಸೆ ನೀಡಿದ್ದಾರೆ. +ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಅವರು 2023-24 ನೇ ಸಾಲಿನಲ್ಲಿ ಕಂಬಳ ಆಯೋಜಿಸಿದ್ದ ಆಯೋಜಕರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡದೇ ವಿಳಂಬ ಮಾಡಿದೆ ಎಂದು ಸರ್ಕಾರದ ಗಮನ ಸೆಳೆದರು. +ಇದಕ್ಕೆ ಸ್ಪಷ್ಟನೆ ನೀಡಿದ ಸಚಿವ ಪಾಟೀಲ್‌ ಅವರು, ಜಿಲ್ಲಾಧಿಕಾರಿಗಳು ಕಳೆದ ಮಾ.21 ರಂದು ಸರ್ಕಾರಕ್ಕೆ ಒಟ್ಟು ವೆಚ್ಚದ ಬಿಲ್‌ ಪಾವತಿಸಿದ್ದರು. ಇದು ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ತಕ್ಷಣವೇ ಅನುದಾನ ಬಿಡುಗಡೆ ಮಾಡಲು ಸದನದಲ್ಲಿದ್ದ ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಿದರು. +ಪುತ್ತೂರಿನ ಕೋಟೆಯ ಚೆನ್ನಯ್ಯ ಅವರಿಗೆ 5 ಲಕ್ಷ, ಜೋಡಿ ಚೆನ್ನಯ್ಯ ಅವರಿಗೆ 10 ಲಕ್ಷ ಅನುದಾನವನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡಲಾಗುತ್ತದೆ ಎಂದರು.ಆಗ ಪ್ರತಾಪ್‌ ಸಿಂಹ ನಾಯಕ್‌, ಈ ಹಿಂದೆ ಸದಾನಂದೇಗೌಡರು ಮುಖ್ಯಮಂತ್ರಿಯಾಗಿದ್ದಾಗ 20 ಕಂಬಳ ಆಯೋಜಕರಿಗೆ ತಲಾ 5 ಲಕ್ಷ ರೂ. ಹಣದಂತೆ ಒಂದು ಕೋಟಿ ಅನುದಾನವನ್ನು ನೀಡಿದ್ದರು. ನಂತರ ಸಿ.ಪಿ.ಯೋಗೀಶ್ವರ್‌ರವರು ಸಚಿವರಾಗಿದ್ದಾಗ ತಲಾ 5 ಲಕ್ಷ ರೂ. ಅನುದಾನ ಕೊಟ್ಟಿದ್ದಾರೆ. ಈಗ ಅವರಿಗೇಕೆ ತಾರತಮ್ಯ ಎಂದು ಪ್ರಶ್ನಿಸಿದರು. +ಈ ವರ್ಷ 5 ಕಡೆ ಕಂಬಳ ಆಯೋಜನೆ ಮಾಡುತ್ತೇವೆ. ಆವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಆರ್ಥಿಕ ನೆರವು ನೀಡುತ್ತೇವೆ. ಅನುದಾನ ಹೆಚ್ಚಳ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಇದರಲ್ಲಿ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಾಟೀಲ್‌ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_72_1.txt b/eesanje/url_46_72_1.txt new file mode 100644 index 0000000000000000000000000000000000000000..f008b25af46e2c0a004806a21cee8307ead2483f --- /dev/null +++ b/eesanje/url_46_72_1.txt @@ -0,0 +1,4 @@ +ನೀಟ್‌-ಪಿಜಿ ಪರೀಕ್ಷೆ ಮುಂದೂಡುವಂತೆ ಸರ್ಕಾರಕ್ಕೆ ಐವಾನ್‌ ಡಿಸೋಜ ಮನವಿ +ಬೆಂಗಳೂರು,ಜು.18– ವೈದ್ಯಕೀಯ ಕೋರ್ಸ್‌ಗಳಿಗೆ ನಡೆಯುವ ನೀಟ್‌-ಪಿಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿರುವ ವೇಳೆ ರಾಜ್ಯಸರ್ಕಾರ ಕನಿಷ್ಟ ಒಂದು ತಿಂಗಳು ಮುಂದೂಡಬೇಕೆಂದು ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜ ಸರ್ಕಾರಕ್ಕೆ ಮನವಿ ಮಾಡಿದರು. +ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನೀಟ್‌ ಪರೀಕ್ಷೆಯಲ್ಲಿ ಈ ಬಾರಿ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದರಲ್ಲಿ ಅನೇಕರು ಶಾಮೀಲಾಗಿರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಹೀಗಾಗಿ ರಾಜ್ಯಸರ್ಕಾರ ಕನಿಷ್ಟ ಪಕ್ಷ ಒಂದು ತಿಂಗಳು ರಾಜ್ಯದಲ್ಲಿ ಮುಂದೂಡಲಿ ಎಂದು ಮನವಿ ಮಾಡಿದರು. +ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದಿಂದಾಗಿ ಗ್ರಾಮೀಣ ಸೇವೆಯಲ್ಲಿರುವ ವೈದ್ಯರು ಕಂಗಾಲಾಗಿದ್ದಾರೆ. ಅವರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೀಟ್‌-ಪಿಜಿ ಪರೀಕ್ಷೆಗಳನ್ನು ಆಗಸ್ಟ್‌ 11 ಕ್ಕೆ ಮುಂದೂಡಲಾಗಿದೆ. ಹಾಗಾಗಿ ಕನಿಷ್ಟ ಪಕ್ಷ ಗ್ರಾಮೀಣ ವೈದ್ಯರಿಗೆ 30 ದಿನಗಳ ರಜೆ ನೀಡಲಿ ಎಂದು ಮನವಿ ಮಾಡಿದರು. \ No newline at end of file diff --git a/eesanje/url_46_72_10.txt b/eesanje/url_46_72_10.txt new file mode 100644 index 0000000000000000000000000000000000000000..8625139d0fe2b5f6741423db5ee1918b589bacdb --- /dev/null +++ b/eesanje/url_46_72_10.txt @@ -0,0 +1,11 @@ +ಪ್ರತಿದಿನ ಠಾಣೆಗೆ ಭೇಟಿ ನೀಡುವಂತೆ ಹಿರಿಯ ಪೊಲೀಸ್‌‍ ಅಧಿಕಾರಿಗಳಿಗೆ ಅಲೋಕ್‌ ಮೋಹನ್‌ ಸೂಚನೆ +ಬೆಂಗಳೂರು,ಜು.17-ಹಿರಿಯ ಪೊಲೀಸ್‌‍ ಅಧಿಕಾರಿಗಳು ಪ್ರತಿದಿನ ಕನಿಷ್ಠ ಪಕ್ಷ ಒಂದು ಠಾಣೆಗೆ ಭೇಟಿ ನೀಡಬೇಕು, ಘೋರ ಅಪರಾಧಗಳು ನಡೆದ ಸಂದರ್ಭದಲ್ಲಿ ತಕ್ಷಣ ಆ ಸ್ಥಳಕ್ಕೆ ಭೇಟಿ ನೀಡಬೇಕೆಂದು ರಾಜ್ಯದ ಪೊಲೀಸ್‌‍ ಮಹಾ ನಿರ್ದೇಶಕರಾದ ಡಾ.ಅಲೋಕ್‌ ಮೋಹನ್‌ ಅವರು ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. +ಡಿಜಿ ಕಚೇರಿಯಲ್ಲಿ ಇತ್ತೀಚಗೆ ನಡೆದ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಾಲ್ಗೊಂಡು ಕೆಲವು ಸೂಚನೆಗಳನ್ನು ನೀಡಿದ್ದರು.ಈ ಹಿನ್ನೆಲೆಯಲ್ಲಿ ಡಿಜಿಯವರು 20 ಅಂಶಗಳ ಪಟ್ಟಿ ಮಾಡಿ ಹಿರಿಯ ಅಧಿಕಾರಿಗಳಿಗೆ ಕಳುಹಿಸಿ ಅವುಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ತಿಳಿಸಿದ್ದಾರೆ. +ಎಸ್‌‍ಪಿ, ಡಿಸಿಪಿ, ಐಜಿಪಿ, ಡಿಐಜಿ, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಪ್ರತಿದಿನ ಕನಿಷ್ಟ ಒಂದು ಠಾಣೆಗೆ ಭೇಟಿ ನೀಡಿ, ಅಲ್ಲಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕು. ಪೊಲೀಸರು ನಾಗರಿಕ ಕೇಂದ್ರಿತ ವಿಧಾನದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. +ಕ್ಲಬ್‌ಗಳು, ಜೂಜು, ಮಟ್ಕಾ ಸೇರಿದಂತೆ ಎಲ್ಲಾ ಸಂಘಟಿತ ಅಪರಾಧಗಳನ್ನು ತಕ್ಷಣವೇ ನಿಲ್ಲಿಸಬೇಕು. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಡ್ರಗ್ಸ್ ಮತ್ತು ಮಾದಕ ದ್ರವ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಶಾಲೆ ಮತ್ತು ಕಾಲೇಜುಗಳಿಗೆ ಭೇಟಿ ನೀಡಬೇಕು. +ರಾಜ್ಯವನ್ನು ಮಾದಕದ್ರವ್ಯ ಮುಕ್ತವನ್ನಾಗಿ ಮಾಡಲು ಪ್ರತಿದಿನವೂ ಆ ಬಗ್ಗೆ ತೀವ್ರ ಕಾರ್ಯಾಚರಣೆ ನಡೆಸಬೇಕು. ಎಲ್ಲಾ ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇ-ಬೀಟ್‌ ಅಪ್ಲಿಕೇಷನ್‌ ನಿರ್ವಹಣೆಯನ್ನು ಅರಿತು ಅರ್ಥಪೂರ್ಣವಾಗಿ ಅನುಷ್ಠಾನ ಮಾಡಬೇಕು.ಪೊಲೀಸ್‌‍ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಿಗ್ಗೆ 9 ರಿಂದ 11 ರವರೆಗೆ ಮತ್ತು ಸಂಜೆ 6 ರಿಂದ 9 ರವರೆಗೆ ಪೊಲೀಸ್‌‍ ಸಮವಸ್ತ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ಮಾಡಬೇಕು. ಶಾಲಾ-ಕಾಲೇಜು ಆರಂಭ ಹಾಗೂ ಮುಕ್ತಾಯದ ಸಂದರ್ಭದಲ್ಲಿ ಈವ್‌-ಟೀಸಿಂಗ್‌ ನಡೆಯದಂತೆ ನೋಡಿಕೊಳ್ಳಬೇಕು. ಶಿಕ್ಷಣ ಸಂಸ್ಥೆಗಳ ಸುತ್ತ ಮಾದಕದ್ರವ್ಯ ಮಾರಾಟ ತಡೆಯುವ ರೀತಿಯಲ್ಲಿ ಬೀಟ್‌ಗಳನ್ನು ನಿರ್ವಹಣೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. +ಠಾಣೆಯಲ್ಲಿ ಸ್ವೀಕರಿಸುವ ಎಲ್ಲಾ ದೂರುಗಳನ್ನು ಕಾನೂನು ಪ್ರಕಾರ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು.ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟುವ ನಿಟ್ಟನಲ್ಲಿ ರಸ್ತೆ ಬದಿ ನಿಲ್ಲಿಸಿದ ಎಲ್ಲಾ ವಾಹನಗಳು ತಮ್ಮ ಪಾರ್ಕಿಂಗ್‌ ದೀಪಗಳನ್ನು ಆನ್‌ ಮಾಡಿರುವುದನ್ನು ಹಾಗೂ ರಸ್ತೆಯಿಂದ ಸಾಕಷ್ಟು ದೂರ ನಿಲ್ಲಿಸಿರುವುದನ್ನು ಗಸ್ತು ತಿರುಗುವ ವಾಹನಗಳು ಖಚಿತಪಡಿಸಿಕೊಳ್ಳಬೇಕು. +ಜಿಲ್ಲಾ ಮತ್ತು ನಗರಮಟ್ಟದ ಪೊಲೀಸ್‌‍ ಠಾಣೆಗಳಲ್ಲಿ ನಿಯಮಿತವಾಗಿ ಶಾಂತಿ ಸಮಿತಿ ಸಭೆಗಳನ್ನು ಆಯೋಜಿಸುವ ಮೂಲಕ ಎಲ್ಲಾ ಸಮುದಾಯದವರು ಉತ್ತಮ್ಮವಾದ ಬಾಂಧವ್ಯವನ್ನು ಕಾಪಾಡಿಕೊಳ್ಳಬೇಕು. +ಪಿಎಸ್‌‍ಐ ಮಟ್ಟದಿಂದ ಎಸ್ಪಿ-ಡಿಸಿಪಿವರೆಗಿನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆಗಳನ್ನು ನಿರಂತರವಾಗಿ ನಡೆಸುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ನಿಯಮಿತವಾಗಿ ಪರಿಹರಿಸುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಅವರು ಸೂಚಿಸಿದ್ದಾರೆ.ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ಪೊಲೀಸ್‌‍ ಠಾಣೆಗಳಲ್ಲಿ ಕಾಣೆಯಾದ ಹೆಣ್ಣುಮಕ್ಕಳು, ಮಹಿಳೆಯರ ಪತ್ತೆ ಕಾರ್ಯಕ್ಕೆ ಚಾಲನೆ ನೀಡಬೇಕು. ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಿಸುವ ಕೆಎಸ್‌‍ಆರ್‌ಪಿ ಪ್ಲಟೂನ್‌ಗಳನ್ನು ನಿಯೋಜಿಸುವ ಮೊದಲು ಗರಿಷ್ಠ ಸಂಖ್ಯೆಯ ಡಿ.ಎ.ಆರ್‌/ಸಿ.ಎ.ಆರ್‌ ಘಟಕದ ಸಿಬ್ಬಂದಿ ನಿಯೋಜಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. +ಜಿಲ್ಲಾ ಎಸ್ಪಿಗಳು ತಮ್ಮ ವ್ಯಾಪ್ತಿಯಲ್ಲಿರುವ ಕೆಎಸ್‌‍ಆರ್‌ಪಿ ಮತ್ತು ಅಗತ್ಯ ಸಂಸ್ಥೆಗಳಿಗೆ ಆಗಾಗ್ಗೆ ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಬೇಕು. ಅಲ್ಲದೆ ಜಿಲ್ಲಾ ಎಸ್ಪಿಗಳು, ಡಿಸಿಪಿಗಳು ಕಾರಾಗೃಹಗಳ ಮೇಲೆ ದಿಢೀರ್‌ ತಪಾಸಣೆ ನಡೆಸಬೇಕು ಹಾಗೂ ತಲೆಮರೆಸಿಕೊಂಡಿರುವ ಖೈದಿಗಳ ಬಂಧನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. +ದ್ವೇಷ ಭಾಷಣ ಮತ್ತು ಪ್ರಚೋದನಕಾರಿ ಘೋಷಣೆಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಲೋಕ್‌ ಮೋಹನ್‌ ಅವರು ಹಿರಿಯ ಪೊಲೀಸ್‌‍ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. \ No newline at end of file diff --git a/eesanje/url_46_72_11.txt b/eesanje/url_46_72_11.txt new file mode 100644 index 0000000000000000000000000000000000000000..26816a5a7876b8dcb467ec3016e55d46685a4dcc --- /dev/null +++ b/eesanje/url_46_72_11.txt @@ -0,0 +1,17 @@ +ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ 100% ಉದ್ಯೋಗ ಮೀಸಲಾತಿ : ಉದ್ಯಮಿಗಳ ಅಪಸ್ವರ, ಸರ್ಕಾರ ಹೇಳೋದೇನು..? +ಬೆಂಗಳೂರು, ಜು.17-ಖಾಸಗಿ ಉದ್ಯಮ ಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು ಹಾಗೂ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಸರ್ಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಈ ವಿಚಾರದ ಬಗ್ಗೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು. +ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು. +ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. +ಕರ್ನಾಟಕವು ಪುರೋಗಾಮಿ ರಾಜ್ಯವಾಗಿದೆ. ಗ್ಲೋಬಲ್‌ ಚೈನಾ ಒನ್‌ ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದ್ದಾರೆ. +ಸಂಪುಟದಲ್ಲಿ ಒಪ್ಪಿಗೆ, ಸದನದಲ್ಲಿ ನಾಳೆ ಮಂಡನೆ :ಬೆಂಗಳೂರು,ಜು.17- ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧಪಟ್ಟಂತಹ ಮಸೂದೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡಿಗರ ಪರವಾದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಮೊದಲು ವಾಣಿಜ್ಯ ಮಳಿಗೆಗಳು ಹಾಗೂ ಸಂಕೀರ್ಣಗಳ ಮುಂದೆ ಕನ್ನಡ ನಾಮಫಲಕ ಹಾಕುವ ಕುರಿತಂತೆ ನಿರ್ಣಯ ಕೈಗೊಳ್ಳಲಾಯಿತು. +ಭಾಷಾ ಬಳಕೆ, ಸರ್ಕಾರಿ ಕಡತದಲ್ಲಿ ಕನ್ನಡದ ಬಳಕೆ, ಧ್ವಜ ಬಳಕೆ ಕುರಿತಂತೆ ನಿರ್ಣಯ ಕೈಗೊಂಡಿದೆ. ಅದೇ ರೀತಿ ಉದ್ಯೋಗ ಸೃಷ್ಟಿಯಾಗುವ ಕಡೆ ಕನ್ನಡಿಗರಿಗೆ ನಿರ್ದಿಷ್ಟ ಪ್ರಮಾಣದ ಉದ್ಯೋಗಗಳನ್ನು ಮೀಸಲಿಡುವ ಕುರಿತಂತೆಯೂ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ಬಯೋಕಾನ್‌ ಹಾಗೂ ಇನ್ಫೋಸಿಸ್‌‍ನಂತಹ ಸಂಸ್ಥೆಗಳ ಮುಖ್ಯಸ್ಥರು ವಿರೋಧ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಂತ್ರಜ್ಞಾನ ಹಾಗೂ ತಾಂತ್ರಿಕತೆ ಆಧರಿತ ಉದ್ಯೋಗಗಳ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಇಲ್ಲ. ವಿರೋಧ ಮಾಡುತ್ತಿರುವ ಬಹಳಷ್ಟು ಸಂಸ್ಥೆಗಳು ರಾಜ್ಯದಿಂದಲೇ ಬೆಳೆದಿವೆ. ಅಗತ್ಯ ಸಂದರ್ಭಗಳಲ್ಲಿ ಅವರಿಗೆ ಮಸೂದೆಯಿಂದ ವಿನಾಯಿತಿ ನೀಡಲಾಗುವುದು. ಆದರೆ ಇದರ ಕುರಿತಂತೆ ಸರ್ಕಾರಕ್ಕೆ ಮಾಹಿತಿ ನೀಡಬೇಕಾಗುತ್ತದೆ ಎಂದು ಹೇಳಿದರು. +ಅಧಿವೇಶನ ನಡೆಯುತ್ತಿರುವುದರಿಂದಾಗಿ ಯಾವ ಪ್ರಮಾಣದ ಮೀಸಲಾತಿ ಎಂದು ಸದ್ಯಕ್ಕೆ ತಾವು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದರು.ಜಿ.ಟಿ.ಮಾಲ್‌ನಲ್ಲಿ ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ರೈತರಿಗೆ ಪ್ರವೇಶ ನೀಡದೇ ಇರುವ ಕುರಿತು ದೂರು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ಕುರಿತಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸೂಚಿಸಲಾಗುವುದು ಎಂದು ಹೇಳಿದರು. +ಬೆಂಗಳೂರಿನಲ್ಲಿ ತೆರಿಗೆ ಹೆಚ್ಚಳ, ಪೆರಿಫೆರಲ್‌ ರಿಂಗ್‌ ರಸ್ತೆ, ತ್ಯಾಜ್ಯ ವಿಲೇವಾರಿಗೆ ಸಂಬಂಧಪಟ್ಟಂತೆ ಹಲವಾರು ವಿಚಾರಗಳನ್ನು ಇಂದು ಮುಖ್ಯಮಂತ್ರಿ ಹಾಗೂ ಬೆಂಗಳೂರಿನ ಸಚಿವರುಗಳ ಜೊತೆ ಚರ್ಚೆ ನಡೆಸಲಾಗುವುದು. ಬ್ರ್ಯಾಂಡ್‌ ಬೆಂಗಳೂರಿನಲ್ಲಿ ಹಲವು ಸಲಹೆಗಳು ಕೇಳಿಬಂದಿವೆ. ಅವುಗಳ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವ ಬದಲಾಗಿ ಎಲ್ಲರ ಜೊತೆ ಚರ್ಚಿಸಿ ಮಾಹಿತಿ ವಿನಿಮಯ ಮಾಡಿಕೊಳ್ಳುವುದಾಗಿ ತಿಳಿಸಿದರು. +ಕಸ ವಿಲೇವಾರಿಯಲ್ಲಿ 15,000 ಕೋಟಿ ರೂ.ಗಳನ್ನು ಲೂಟಿ ಮಾಡುವ ತಯಾರಿ ನಡೆದಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ. ಕಸ ವಿಲೇವಾರಿಗೆ ವೆಚ್ಚ ಮಾಡುತ್ತಿರುವುದೇ 450 ಕೋಟಿ ರೂ., 15,000 ಕೋಟಿ ರೂ.ಗಳನ್ನು ಎಲ್ಲಿಂದ ತರಲು ಸಾಧ್ಯ ಎಂದು ಪ್ರಶ್ನಿಸಿದರು. +ತ್ಯಾಜ್ಯ ವಿಲೇವಾರಿಯಲ್ಲಿ ಟೆಂಡರ್‌ ನಡೆಸದೆ ಮನಸೋ ಇಚ್ಛೆ ಬಿಲ್‌ಗಳನ್ನು ಮಾಡಿ ದಂಧೆ ಮಾಡಲಾಗುತ್ತಿದೆ. ನಾವು ಅದಕ್ಕೆ ಟೆಂಡರ್‌ ಕರೆದು ಕ್ರಮಬದ್ಧಗೊಳಿಸಲು ಮುಂದಾಗಿದ್ದೇವೆ. ಇದರಲ್ಲಿ ಯಾವುದೇ ಅವ್ಯವಹಾರಗಳಿಲ್ಲ. ಟೆಂಡರ್‌ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. +ನ್ಯಾಯಾಲಯದಲ್ಲಿ ತಗಾದೆ ಇಲ್ಲಿದೆ. ಯಾವುದೇ ಪ್ರಕ್ರಿಯೆಗಳು ಇನ್ನೂ ಮುಗಿಯದೇ ಇದ್ದರೂ ಅನಗತ್ಯವಾಗಿ ಟೀಕೆಗಳನ್ನು ಮಾಡಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದ್ದ ಮಂಡೂರಿನಲ್ಲಿ ಈಗಾಗಲೇ ಕಸ ಹಾಕದಂತೆ ವಿರೋಧ ವ್ಯಕ್ತವಾಗಿದ್ದು, ಮೂರು ದಿನಗಳಿಂದ ಸ್ಥಗಿತಗೊಳಿಸಲಾಗಿದೆ. +ಬದಲಿ ಜಾಗವನ್ನು ಹುಡುಕಾಡಲಾಗುತ್ತಿದೆ. ನೈಸ್‌‍ ರಸ್ತೆಯಲ್ಲಿ ಒಂದು ಸ್ಥಳ ಗುರುತಿಸಲಾಗಿದ್ದು, ಬೇರೆ ಕಡೆ 2-3 ಜಾಗಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.ರಾಜ್ಯದಲ್ಲಿ ಕೆಲವು ಭಾಗದಲ್ಲಿ ಉತ್ತಮ್ಮ ಮಳೆಯಾಗುತ್ತಿದೆ. ಬಹುಶಃ ತಮಿಳುನಾಡಿನೊಂದಿಗಿನ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಈ ಸಂದರ್ಭದಲ್ಲಿ ಇತ್ಯರ್ಥವಾಗುವ ನಿರೀಕ್ಷೆಗಳಿವೆ ಎಂದರು. +ಉದ್ಯಮಿಗಳ ಅಪಸ್ವರ :ಬೆಂಗಳೂರು,ಜು.17- ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖ್ಯಾತ ಉದ್ಯಮಿಳಾದ ಕಿರಣ್‌ ಮಜುಂದಾರ್‌ ಶಾ ಮತ್ತು ಮೋಹನ್‌ದಾಸ್‌‍ ಪೈ ಅವರಂತಹ ಪ್ರಮುಖರು ರಾಜ್ಯ ಸರ್ಕಾರದ ಈ ನಿರ್ಧಾರ ಫ್ಯಾಸಿಸ್ಟ್ ಮತ್ತು ರಿಗ್ರೆಸಿವ್‌ ಎಂದು ಬಣ್ಣಿಸಿದ್ದಾರೆ.ಮಾತ್ರವಲ್ಲ ಅಂತಹ ಮಸೂದೆಗಳು ಹೂಡಿಕೆದಾರರನ್ನು ಕರ್ನಾಟಕದಿಂದ ದೂರವಿಡುವಂತೆ ಮಾಡುತ್ತದೆ ಮತ್ತು ರಾಜ್ಯದ ಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. +ಐಟಿ ಬಿಟಿ ಸಂಸ್ಥೆಗಳಿಗೆ ನುರಿತ ಪ್ರತಿಭೆಗಳ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವಂತೆ ಸೂಚಿಸುವುದು ಟೆಕ್‌ ಸಂಸ್ಥೆಗಳಿಗೆ ನಷ್ಟವಾಗಲಿದೆ ಹೀಗಾಗಿ ನುರಿತರ ನೇಮಕಕ್ಕೆ ಯಾವುದೇ ಅಡೆ ತಡೆ ಇರಬಾರದು ಎಂದು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಎಕ್ಸ್ ಸ ಮಾಡಿದ್ದಾರೆ. +ಇನ್ಫೋಸಿಸ್‌‍ನ ಮಾಜಿ ಸಿಎಫ್‌ಒ ಟಿವಿ ಮೋಹನ್‌ದಾಸ್‌‍ ಪೈ ಕೂಡ ಮಸೂದೆಯನ್ನು ಬದಲಾವಣೆ ಮಾಡಬೇಕು ಮತ್ತು ಅದನ್ನು ಫ್ಯಾಸಿಸ್ಟ್‌ ಬಿಲ್‌ ಎಂದು ಕರೆದಿದ್ದಾರೆ. ಇದು ತಾರತಮ್ಯ, ಪ್ರತಿಗಾಮಿ ಮತ್ತು ಸಂವಿಧಾನದ ವಿರುದ್ಧವಾಗಿದೆ ಎಂದಿದ್ದಾರೆ. \ No newline at end of file diff --git a/eesanje/url_46_72_12.txt b/eesanje/url_46_72_12.txt new file mode 100644 index 0000000000000000000000000000000000000000..e4d5ae2214a471daa29aa50ab30a4b1c66dba8a5 --- /dev/null +++ b/eesanje/url_46_72_12.txt @@ -0,0 +1,16 @@ +ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು : 2 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ +ಬೆಂಗಳೂರು,ಜು.17-ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಕಾಣಿಸಿಕೊಂಡಿರುವ ಮುಂಗಾರು ಮಳೆಯಬ್ಬರ ಬುಧವಾರವೂ ಮುಂದುವರಿದಿದೆ. ಭಾರೀ ಮಳೆ, ಪ್ರವಾಹ ಹಾಗೂ ಗುಡ್ಡಕುಸಿತದಿಂದಾಗಿ ಉತ್ತರಕನ್ನಡ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಿರಾಶ್ರಿತರಾಗಿರುವ 2 ಸಾವಿರಕ್ಕೂ ಹೆಚ್ಚು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. +ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದ ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಭಾರೀ ಹಾನಿಯಾಗಿದೆ. ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಎನ್‌ಡಿಆರೆಫ್‌ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ. +ಮನೆಯಲ್ಲಿದ್ದ ಸೀಥಿಗೌಡ (65) ಎಂಬ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಯ ಸ್ಥೀತಿ ಚಿಂತಾಜನಕವಾಗಿದೆ. ಕಾರವಾರ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ಗುಡ್ಡ ಉಂಟಾದ ಗುಡ್ಡ ಕುಸಿತದಿಂದ 9 ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಹೇಳಲಾಗಿತ್ತು. ಮಾಹಿತಿಯ ಪ್ರಕಾರ ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. +ಗುಡ್ಡದ ಕೆಳಗಿದ್ದ 2 ಮನೆಗಳು ಮತ್ತೊಂದು ಟೀ ಸ್ಟಾಲ್‌ ಧ್ವಂಸಗೊಂಡಿವೆ. ಒಂದು ಮನೆಯಲ್ಲಿದ್ದ ಪೂರ್ತಿ ಕುಟುಂಬ ಬಲಿಯಾಗಿದ್ದಾರೆ. ಎನ್‌ಡಿಅರ್‌ ಎಫ್‌ ತಂಡದ ಸಿಬ್ಬಂದಿ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಇದುವರೆಗೆ 5 ಮೃತದೇಹಗಳು ಪತ್ತೆಯಾಗಿವೆ. ಮತ್ತೊಂದು ಮನೆಯಲ್ಲಿದ್ದ 7 ಜನರ ಪೈಕಿ ಒಬ್ಬ ವೃದ್ಧೆ ಮಾತ್ರ ಸಾವನ್ನಪ್ಪಿದ್ದಾರೆ ಉಳಿದವರು ಬಚಾವಾಗಿದ್ದಾರೆ. +ಉತ್ತರಕನ್ನಡ ಜಿಲ್ಲೆಯ ಕಾರವಾರ, ಕುಮಟಾ ತಾಲೂಕುಗಳಲ್ಲಿ ತಲಾ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇವುಗಳಲ್ಲಿ 2,368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಕಾಳಜಿ ಕೇಂದ್ರಗಳನ್ನು ಆಶ್ರಯಿಸಿರುವ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಊಟ, ವೈದ್ಯರ ತಂಡದಿಂದ ಆರೋಗ್ಯ ತಪಾಸಣೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯ ನೀಡಲಾಗುತ್ತಿದೆ. +22 ಮನೆಗಳಿಗೆ ಹಾನಿ:ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 3 ಮನೆಗಳು ಪೂರ್ಣ ಹಾನಿಗೊಳಗಾಗಿವೆ. ಇನ್ನುಳಿದಂತೆ ಒಂದು ಮನೆಗೆ ತೀವ್ರ ಹಾನಿ ಹಾಗು 18 ಮನೆಗಳಿಗೆ ಭಾಗಶಃ ಹಾನಿಯಾಗಿದೆ. +ಕಾರವಾರ ತಾಲೂಕಿನಲ್ಲಿ ಮನೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಂಕೋಲ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣೆಯ 2 ತಂಡಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ. +ಅಂಕೋಲಾದ ಶಿರೂರು ಗ್ರಾಮದಲ್ಲಿ ಸಂಭವಿಸಿರುವ ಭೂ ಕುಸಿತದ ವೇಳೆ ಎರಡು ಗ್ಯಾಸ್‌‍ ಟ್ಯಾಂಕರ್‌ಗಳು ಗಂಗಾವಳಿ ನದಿಗೆ ಉರುಳಿ ಬಿದ್ದಿವೆ. ಈ ಟ್ಯಾಂಕರ್‌ಗಳು ಸೋರಿಕೆಯಾಗುವ ಸಾಧ್ಯತೆ ಇದ್ದು, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಗುಡ್ಡ, ನದಿ, ಹಳ್ಳ, ಕೆರೆ ಸಮೀಪದಲ್ಲಿ ವಾಸಿಸುತ್ತಿರುವ ಜನ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. +ಭಾರೀ ಮಳೆ ಮುನ್ಸೂಚನೆ:ರೆಡ್‌ ಅಲರ್ಟ್‌ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ನಾಳೆಯವರೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದೆ.ಜಿಲ್ಲಾಧಿಕಾರಿ ಸೂಚನೆ: ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಹಾಗೂ ಮೊಬೈಲ್‌ ಸಂಖ್ಯೆ ಸಂಖ್ಯೆ 9483511015 ಕರೆ, ಮೆಸೇಜ್‌, ವಾಟ್ಸಾಪ್‌ ಸಂದೇಶ ಅಥವಾ ವಾಟ್ಸಾಪ್‌ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷೀಪ್ರಿಯಾ ತಿಳಿಸಿದ್ದಾರೆ. +ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತ:ಭಾರೀ ಮಳೆಗೆ ಜಿಲ್ಲೆಯ ಅಂಕೋಲಾ, ಕಾರವಾರ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ವ್ಯಾಪಕ ಹಾನಿ ಆಗಿದೆ. ಅಂಕೋಲಾ ಬಳಿ ಶಿರೂರಿನಲ್ಲಿ ಕಾರವಾರ- ಮಂಗಳೂರು ಚತುಷ್ಪಥ ಹೆದ್ದಾರಿ, ಕುಮಟಾ-ಹುಬ್ಬಳ್ಳಿ ಹೆದ್ದಾರಿಯ ರಾಗಿಹೊಸಳ್ಳಿ ಬಳಿ, ಹೊನ್ನಾವರ- ಬೆಂಗಳೂರು ಹೆದ್ದಾರಿಯಲ್ಲಿ ವರ್ನಕೆರೆ ಬಳಿ, ಕಾರವಾರ ಇಳಕಲ್‌ ಹೆದ್ದಾರಿಯಲ್ಲಿ ಕಡವಾಡ ಮಂದ್ರಾಳಿ ಬಳಿ ಗುಡ್ಡ ಕುಸಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. +ಇನ್ನು ಕಾರವಾರ-ಅಂಕೋಲಾ ನಡುವೆ ಅರಗಾ, ಚೆಂಡಿಯಾ ಹಾಗೂ ಅಮದಳ್ಳಿ ಬಳಿ ಚತುಷ್ಪಥ ಹೆದ್ದಾರಿ ಮೇಲೆ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಜಿಲ್ಲೆಯ ಪ್ರಮುಖ ನದಿಗಳಾದ ಅಘನಾಶಿನಿ, ಗಂಗಾವಳಿ, ಗುಂಡಬಾಳ, ಚಂಡಿಕಾ, ಭಾಸ್ಕರಿ, ಬಡ ಗಣಿ ಮತ್ತಿತರ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. +ಶೃಂಗೇರಿಯಲ್ಲಿ ನೆರೆ:ಚಿಕ್ಕಮಗಳೂರಿನ ಶೃಂಗೇರಿ ಪಟ್ಟಣ ತುಂಗಾ ಪ್ರವಾಹದಿಂದಾಗಿ ಜಲದಿಗ್ಧಂಧನಕ್ಕೊಳಗಾಗಿದೆ. ಇಲ್ಲಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. +ದಾವಣಗೆರೆಯಲ್ಲೂ ಅಬ್ಬರ:ಮಲೆನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಹಿನ್ನೆಲೆ ದಾವಣಗೆರೆ ಭಾಗದಲ್ಲಿ ತುಂಗಭದ್ರ ನದಿ ಉಕ್ಕಿ ಹರಿಯುತ್ತಿದೆ. ಪರಿಣಾಮ ಉಕ್ಕಡಗಾತ್ರಿ ದೇವಾಲಯದ ಸ್ನಾನ ಘಟ್ಟ ಹಾಗೂ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ.ತುಂಗಾ ನದಿಗೆ 75 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರು ಹೊರ ಬಿಡಲಾಗಿದ್ದು, ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಸಹ ಮುಳುಗಡೆಯಾಗಿದೆ. ಅಲ್ಲದೇ ದೇವಾಲಯದ ಮುಂಭಾಗದವರೆಗೂ ನೀರು ಬಂದಿದೆ. +ಉಕ್ಕಡಗಾತ್ರಿ ಭಾಗಕ್ಕೆ ಪ್ರವೇಶಿಸುವ ರಸ್ತೆಗೆ ಸೂಕ್ತ ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿ ವರ್ಷ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್‌ ಆಗಿ ಜನರಿಗೆ ತೊಂದರೆಯಾಗುತ್ತದೆ ಎಂದು ಜನ ಆಕ್ರೋಶ ಹೊರಹಾಕಿದ್ದಾರೆ. +ಮಳೆಯ ಅಬ್ಬರದಿಂದ ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ವಸತಿ ಪ್ರದೇಶಕ್ಕೆ ನದಿಯ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. \ No newline at end of file diff --git a/eesanje/url_46_72_2.txt b/eesanje/url_46_72_2.txt new file mode 100644 index 0000000000000000000000000000000000000000..7840ac2889e110cfff8f42302ffe7213a29ca189 --- /dev/null +++ b/eesanje/url_46_72_2.txt @@ -0,0 +1,8 @@ +ಸಿಎಂ ರಾಜಿನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆ +ಬೆಂಗಳೂರು,ಜು.18-ಮುಡಾ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ನಡೆಯಿತು. +ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಸೇರಿದಂತೆ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.ಫ್ರೀಡಂ ಪಾರ್ಕ್‌ನಿಂದ ಮೆರವಣಿಗೆ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಹೊರಡುತ್ತಿದ್ದಂತೆ ಮಾರ್ಗಮಧ್ಯೆಯೇ ಪೊಲೀಸರು ಪ್ರತಿಭಟನಾ ನಿರತರನ್ನು ಬಂಧಿಸಿ ವಶಕ್ಕೆ ಪಡೆದರು. +ಈ ವೇಳೆ ಪ್ರತಿಭಟನಾ ನಿರತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕುನುಗ್ಗಲು ಉಂಟಾಗಿ ಗೊಂದಲದ ಪರಿಸ್ಥಿತಿ ಉಂಟಾಯಿತು.ಪ್ರತಿಭಟನಾ ನಿರತರನ್ನು ಬಂಧಿಸಲು ಮುಂದಾಗುತ್ತಿದ್ದಂತೆ ಬಿಜೆಪಿಯ ಕೆಲವರು ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಯಾವುದಕ್ಕೂ ಜಗ್ಗದ ಪೊಲೀಸರು ಪ್ರಮುಖರನ್ನು ಬಂಧಿಸಿದರು. +ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿಷಯಾಂತರ ಮಾಡಿದೆ. ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಶೇ.100 ರಷ್ಟು ಉದ್ಯೋಗ ನೀಡುವ ಮಸೂದೆ ಮಂಡನೆ ಮಾಡುವುದಾಗಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಏಕಾಏಕಿ ತನ್ನ ನಿರ್ಧಾರದಿಂದ ಹಿಂದೆ ಸರಿದಿರುವುದು ಏಕೆ ಎಂದು ಪ್ರಶ್ನಿಸಿದರು. +ಅಕ್ರಮದಲ್ಲಿ ಸಿಲುಕಿಕೊಂಡಿರುವ ಸರ್ಕಾರ ವಿಷಯಾಂತರ ಮಾಡಲು ಮಸೂದೆ ಮಂಡನೆ ಮಾಡುವ ಮುಂದಾಗಿದೆ. ವಾಲೀಕಿ, ಮುಡಾ ಸೇರಿದಂತೆ ಸರ್ಕಾರದ ಮೇಲೆ ಹಲವು ಹಗರಣಗಳು ಕೇಳಿಬಂದಿವೆ. ನಿಜವಾಗಿಯೂ ನಿಮಗೆ ಕಳಕಳಿಯಿದ್ದರೆ ಮಸೂದೆ ಮಂಡನೆ ನಿರ್ಧಾರದಿಂದ ಏಕೆ ಹಿಂದೆ ಸರಿದಿದೆ ಎಂದು ಪ್ರಶ್ನೆ ಮಾಡಿದರು. +ಸರ್ಕಾರದ ಈ ಕರ್ಮಕಾಂಡ ರಾಷ್ಟ್ರಮಟ್ಟದಲ್ಲೂ ಸದ್ದು ಮಾಡಿದೆ. ಸ್ವತಃ ಮುಖ್ಯಮಂತ್ರಿಗಳ ಕುಟುಂಬದವರೇ ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನು ಮುಚ್ಚಿ ಹಾಕಲು ಏನೂ ನಡೆದಿಲ್ಲ ಎಂದು ಸಿದ್ದರಾಮಯ್ಯ ತಿಪ್ಪೆ ಸಾರುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ನಾವು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ಬಿಡುವುದಿಲ್ಲ. ಸರ್ಕಾರ ಎಷ್ಟೇ ಮುಚ್ಚಿ ಹಾಕುತ್ತೇನೆಂದರೂ ಜನತೆ ಮುಂದಿಡುತ್ತೇವೆ. ಒಂದೊಂದೇ ಹಗರಣವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_72_3.txt b/eesanje/url_46_72_3.txt new file mode 100644 index 0000000000000000000000000000000000000000..139072ce82480d10a962ce8cfd02192003d48b1c --- /dev/null +++ b/eesanje/url_46_72_3.txt @@ -0,0 +1,10 @@ +ರೈತನಿಗೆ ಅಪಮಾನ ಮಾಡಿದ ಜಿ.ಟಿ.ಮಾಲ್‌ ವಿರುದ್ಧ ಕ್ರಮ : ಭೈರತಿ ಸುರೇಶ್‌ +ಬೆಂಗಳೂರು,ಜು.18- ರೈತನಿಗೆ ಅಪಮಾನ ಮಾಡಿದ ಮಾಗಡಿ ರಸ್ತೆಯ ಜಿ.ಟಿ.ಮಾಲ್‌ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿಧಾನಸಭೆಗೆ ತಿಳಿಸಿದರು. ರೈತರೊಬ್ಬರನ್ನು ಮಾಲ್‌ಗೆ ಬಿಡದೆ ಅಪಮಾನ ಮಾಡಿದ ಬಗ್ಗೆ ಪಕ್ಷಬೇಧ ಮರೆತು ಸದನದಲ್ಲಿ ಚರ್ಚೆ ಮಾಡಿ ಮಾಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದಾಗ ಮಧ್ಯಪ್ರವೇಶಿಸಿದ ಸಚಿವರು, ರೈತನಿಗೆ ಅಪಮಾನ ಮಾಡಿದ ಮಾಲ್‌ ವಿರುದ್ಧ ಒಂದು ವಾರ ಮುಚ್ಚಿಸುವಂತ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. +ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌ರವರು, ಗ್ರಾಮೀಣ ಭಾಗದಿಂದ ಬಂದ ಯುವಕ ತಮ ತಂದೆಯನ್ನು ಮಾಲ್‌ಗೆ ಕರೆದೊಯ್ದಾಗ ಅಲ್ಲಿ ಆ ರೈತನನ್ನು ಮಾಲಿನ ಒಳಗೆ ಬಿಡಲಿಲ್ಲ. ಆ ರೈತ ಕರ್ನಾಟಕದ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟಿದ್ದರು. ಪಂಚೆ ತೊಟ್ಟಿದ್ದಾರೆ ಎಂಬ ಕಾರಣಕ್ಕೆ ಬಿಟ್ಟಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರ ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಎಲ್ಲಾ ಮಾಲಿಗೂ ಸಂದೇಶ ರವಾನಿಸಬೇಕು ಎಂದರು. +ಮಾಲಿನ ಮಾಲೀಕರು ಎಷ್ಟೇ ಶ್ರೀಮಂತರಾದರೂ ಅದು ಮುಖ್ಯವಲ್ಲ. ಕಟ್ಟಕಡೆಯ ಜನರಿಗೆ ಸ್ಪಂದಿಸುವುದು ಮುಖ್ಯ ಎಂದು ಹೇಳಿದರು.ಇದಕ್ಕೆ ಧ್ವನಿಗೂಡಿಸಿದ ಆಡಳಿತ ಪಕ್ಷದ ಶಾಸಕ ಲಕ್ಷ್ಮಣ ಸವದಿ, ಮಾಲ್‌ ವಿರುದ್ಧ ಕಠಿಣ ಕ್ರಮ ಎಂದು ಹೇಳಿದರೆ ಆಗದು, ಒಂದು ವಾರಗಳ ವಿದ್ಯುತ್‌ ಕಡಿತ ಮಾಡಿ, ಆಗ ತಕ್ಕ ಪಾಠ ಆಗಲಿದೆ, ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಿ ರೈತರ ಉಡುಪಿಗೆ ಬೆಲೆ ಕೊಡದ ಮಾಲ್‌ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಿದರು. +ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ಪ್ರಕಾಶ್‌ ಕೋಳಿವಾಡ ಮಾತನಾಡಿ, ನಮ ಕ್ಷೇತ್ರದ ಅರೆಮಲ್ಲಾಪುರ ಗ್ರಾಮದ ರೈತನಾಗಿದ್ದು, 9 ಜನ ಮಕ್ಕಳಿದ್ದಾರೆ. ಎಲ್ಲರಿಗೂ ಶಿಕ್ಷಣ ಕೊಡಿಸಿದ್ದಾರೆ. ಒಬ್ಬ ಪುತ್ರ ಎಂಬಿಎ ಓದುತ್ತಿದ್ದು, ಆ ಮಗನನ್ನು ನೋಡಲು ರೈತ ಬಂದಿದ್ದಾಗ ಮಗ ಜಿ.ಟಿ ಮಾಲ್‌ಗೆ ಕರೆದುಕೊಂಡು ಹೋದಾಗ, ಅನ್ನದಾತನಿಗೆ ಅಪಮಾನ ಮಾಡಿದ ಮಾಲ್‌ ಅನ್ನು ಮುಚ್ಚಿಸಬೇಕೆಂದು ಒತ್ತಾಯಿಸಿದರು. +ಆಡಳಿತ ಪಕ್ಷದ ಮುಖ್ಯ ಸಚೇತಕ ಮಾತನಾಡಿ, ಮಾಲ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಾಗೆಯೇ ಬೆಂಗಳೂರಿನಲ್ಲಿರುವ ಕ್ಲಬ್‌ಗಳಲ್ಲಿ ಶೂ ಧರಿಸಲೇಬೇಕು ಎಂಬ ಷರತ್ತುಗಳನ್ನು ಹಾಕುತ್ತಾರೆ. ಅವುಗಳ ವಿರುದ್ಧವೂ ಕ್ರಮವಾಗಬೇಕು ಎಂದರು.ಸಚಿವ ಭೈರತಿ ಸುರೇಶ್‌ ಮಾತನಾಡಿ, ಕ್ಲಬ್‌ಗಳಲ್ಲಿ ಪಂಚೆ, ಚಪ್ಪಲಿ ಹಾಕುವಂತಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಪಂಚೆ ಉಟ್ಟುಕೊಂಡು ಹೋದರೆ ಆಗಲೂ ಹಾಗೆಯೇ ಮಾಡುತ್ತಾರಾ? ಸಾಂಪ್ರದಾಯಿಕ ಉಡುಗೆಗೆ ಗೌರವ ಸಿಗುವಂತಾಗಬೇಕು ಎಂದರು.ಆಗ ಬಿಜೆಪಿ ಶಾಸಕ ಸುರೇಶ್‌ಕುಮಾರ್‌, ಚಡ್ಡಿ, ಪ್ಯಾಂಟು ಹಾಕಿಕೊಂಡು ಹೋದರೆ ಬಿಡುತ್ತಾರೆ. ಪಂಚೆ ಧರಿಸಿದ್ದರೆ ಬಿಡುವುದಿಲ್ಲ. ಏಕೆ ಅಂತಹ ಕ್ಲಬ್‌ಗಳಿಗೆ ಹೋಗುತ್ತೀರಾ? ಎಂದು ಛೇಡಿಸಿದರು. +ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ರೈತರಿಗೆ ಅವಮಾನ ಮಾಡಿದ ವಿಚಾರ ಹತ್ತಾರು ಬಾರಿ ಚರ್ಚೆಯಾಗಿದೆ. ಈಗ ರೈತರಿಗೆ ಆಗಿರುವ ಅವಮಾನಕ್ಕೆ ಸರ್ಕಾರದಿಂದ ಕ್ರಮ ಕೈಗೊಳ್ಳುವ ಏನಾದರೂ ಆದೇಶ ಹೊರಡಿಸಿ. ಆ ಆದೇಶವನ್ನು ಕಾರ್ಯದರ್ಶಿಗಳು ಅನುಷ್ಠಾನ ಮಾಡಬೇಕು. ಅವರು ಬ್ರಹ ಇದ್ದಂತೆ. ರೇಸ್‌‍ಕೋರ್ಸ್‌ಗೆ ಆಡಲು ಬರುವವರು ಶೇ.90 ರಷ್ಟು ಆಟೋ ಚಾಲಕರು. ಅವರು ಪುಸ್ತಕ ಓದುತ್ತಾ ರೇಸ್‌‍ಗೆ ಹೋಗುತ್ತಾರೆ. ನಿಜವಾಗಿಯೂ ಓದಿದ್ದರೆ ಆಟೋ ಓಡಿಸಬೇಕಿರಲಿಲ್ಲ. ಅಲ್ಲಿರುವವರು ಬಹುತೇಕ ಐಎಎಸ್‌‍, ಐಪಿಎಸ್‌‍ನವರೇ ಇದ್ದಾರೆ. +ಹ್ಯಾರಿಸ್‌‍ ನೇತೃತ್ವದಲ್ಲಿ ಒಂದು ಸಮಿತಿ ಎ.ಮಂಜು ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಕ್ಲಬ್‌ಗಳ ಕುರಿತು ವರದಿ ಕೊಟ್ಟಿದೆ. ಏನೂ ಆಗಿಲ್ಲ. ನಗರಾಭಿವೃದ್ಧಿ ಸಚಿವರು ಇಂತಹ ಘಟನೆ ಮರುಕಳಿಸಿದರೆ, ಪರಪ್ಪನ ಅಗ್ರಹಾರ ಜೈಲಿಗೆ ಹಾಕುತ್ತೇವೆ ಎಂಬ ಸಂದೇಶ ನೀಡುವ ಹೇಳಿಕೆ ಕೊಡಿ, ಆದೇಶ ಹೊರಡಿಸಿ ಎಂದು ಆಗ್ರಹಿಸಿದರು. +ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ರೈತರಿಗೆ ಮಾಲ್‌ ಪ್ರವೇಶ ಮಾಡಲು ಅವಕಾಶ ಕೊಡದೇ ಇರುಉವುದು ಸರಿಯಲ್ಲ. ಮಾಲ್‌ ಮಾಲೀಕರಾಗಲೀ, ಆಡಳಿತ ವರ್ಗದವರಾಗಲೀ ಅಪಮಾನ ಮಾಡುವುದು, ಘನತೆ, ಸ್ವಾಭಿಮಾನಕ್ಕೆ ಧಕ್ಕೆ ತರುವುದು ಸಂವಿಧಾನದ ಪ್ರಕಾರ ಅವಕಾಶವಿಲ್ಲ. ಇಂತಹ ನಡವಳಿಕೆಯನ್ನು ಖಂಡಿಸುತ್ತೇವೆ. ವರದಿ ಪಡೆದು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. +ಜೆಡಿಎಸ್‌‍ ಶಾಸಕ ಶರಣಗೌಡ ಕಂದಕೂರ್‌ ಮಾತನಾಡಿ, ಅಲ್ಲಿ ಭದ್ರತಾ ಸಿಬ್ಬಂದಿ ಕೂಡ ರೈತರ ಪುತ್ರ. ಮಾಲ್‌ನ ಮಾಲಿಕರ ಮೇಲೆ ಎಫ್‌ಐಆರ್‌ ದಾಖಲಿಸಬೇಕು. ಸೆಕ್ಯೂರಿಟಿ ಏಜೆನ್ಸಿ ವಿರುದ್ಧವೂ ಕ್ರಮವಾಗಬೇಕು ಎಂದು ಹೇಳಿದರು.ಹಲವು ಶಾಸಕರು ಮಾಲ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದಾಗ ಮಧ್ಯಪ್ರವೇಶಿಸಿದ ಸಚಿವ ಭೈರತಿ ಸುರೇಶ್‌ ಮಾಲ್‌ ಅನ್ನು 7 ದಿನ ಮುಚ್ಚಿಸುವುದಾಗಿ ಭರವಸೆ ನೀಡಿದಾಗ ಈ ವಿಚಾರದ ಚರ್ಚೆಗೆ ತೆರೆ ಬಿದ್ದಿತು. \ No newline at end of file diff --git a/eesanje/url_46_72_4.txt b/eesanje/url_46_72_4.txt new file mode 100644 index 0000000000000000000000000000000000000000..fbac71c996c8cbeef3b8e0841fa58bee1db42239 --- /dev/null +++ b/eesanje/url_46_72_4.txt @@ -0,0 +1,17 @@ +ವಿಧಾನಸಭೆಯಲ್ಲಿ ಸಚಿವರ ಗೈರು, ಪ್ರತಿಪಕ್ಷಗಳ ಶಾಸಕರಿಂದ ಕೆಲಕಾಲ ಸಭಾತ್ಯಾಗ +ಬೆಂಗಳೂರು,ಜು.18- ವಿಧಾನಸಭೆಯ ಕಲಾಪ ಆರಂಭದಲ್ಲಿ ಆಡಳಿತ ಪಕ್ಷದ ಮೊದಲ ಸಾಲಿನಲ್ಲಿ ಸಚಿವರಿಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಶಾಸಕರು ಕೆಲಕಾಲ ಸಭಾತ್ಯಾಗ ಮಾಡಿದರು.ಇಂದು ಬೆಳಿಗ್ಗೆ ವಿಧಾನಸಭೆ ಸಮಾವೇಶಗೊಂಡ ಕೂಡಲೇ ಎದ್ದುನಿಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಸಚಿವರಿಲ್ಲ ಎಂದು ಆಕ್ಷೇಪವೆತ್ತಿದರು. +ಮತ್ತೊಬ್ಬ ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೊದಲ ಸಾಲಿನಲ್ಲಿ ಯಾವ ಸಚಿವರೂ ಇಲ್ಲ. ಶೂನ್ಯವಿದೆ. 9.45 ನಿಮಿಷಕ್ಕೆ ನಾವು ಬಂದಿದ್ದೇವೆ. ಅಧಿವೇಶನ ಚೆನ್ನಾಗಿ ನಡೆಯಬೇಕು. ಹೊಸ ನಿಯಮ ಜಾರಿಗೆ ತಂದಿದ್ದೀರಿ. ಹೀಗಾದರೆ ಹೇಗೆ ಎಂದು ಪ್ರಶ್ನಿಸಿದರು. +ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ಅಧಿವೇಶನ ಸುಗಮವಾಗಿ ನಡೆಯಬೇಕು ಎಂದು ಹೊಸ ನಿಯಮ ತಂದಿದ್ದೀರಿ. ಆಡಳಿತ ಪಕ್ಷ ಮಾದರಿಯಾಗಬೇಕು. ಇದು ಯಾವ ರೀತಿ ಮಾಡೆಲ್‌ ಆಗಿದ್ದಾರೆ ನೋಡಿ. ಸಚಿವರಿಲ್ಲ. ಹೀಗಾಗಿ ಸದನದ ಕಲಾಪವನ್ನು 10 ನಿಮಿಷ ಮುಂದೂಡಿ, ಆಡಳಿತ ಪಕ್ಷದವರು ಬುದ್ಧಿ ಕಲಿಯಲಿ. ವಿಧಾನಸಭೆಯಲ್ಲಿ ಹಾಜರಿರಬೇಕಾದ ಸಚಿವರ ಹೆಸರನ್ನು ಓದಿ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅವರನ್ನು ಆಗ್ರಹಿಸಿದರು. +ಆಡಳಿತ ಪಕ್ಷದ ಮುಖ್ಯ ಸಚೇತಕ ಅಶೋಕ್‌ ಪಟ್ಟಣ್ಣ ಮಾತನಾಡಿ, ಶಾಸಕರಿಗೆ ವಿಪ್‌ ನೀಡಲಾಗಿದೆ. ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಹೇಳಲು ಮುಂದಾದರು.ಆಗ ಅಶೋಕ್‌, ರಾಜೀನಾಮೆ ಕೊಟ್ಟು ನೀವು ಮಂತ್ರಿಯಾಗಿ ಎಂದು ಛೇಡಿಸಿದರು.ಮತ್ತೆ ಮಾತು ಮುಂದುವರೆಸಿದ ಬಸನಗೌಡ ಪಾಟೀಲ್‌ ಯತ್ನಾಳ್‌, ಗಂಭೀರವಾದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ವಿಚಾರವನ್ನು ಪ್ರಸ್ತಾಪಿಸುತ್ತೇವೆ, ಮುಖ್ಯಮಂತ್ರಿಗಳಿಲ್ಲ, ಸಚಿವರಿಲ್ಲ ಅವರಿಗೆ ನೈತಿಕ ಹೊಣೆ ಇಲ್ಲ. ಇ.ಡಿ ಪತ್ರಿಕಾ ಹೇಳಿಕೆ ನೀಡಿದೆ ನೋಡಿ ಎಂದು ಪ್ರದರ್ಶಿಸಿದರು. +ಅಷ್ಟರಲ್ಲಿ ಸದನಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ನಾವು ಮೂರ್ನಾಲ್ಕು ಸಚಿವರಿದ್ದೇವೆ. ಅವರು ಚರ್ಚೆ ಮಾಡಲಿ. ಸರ್ಕಾರ ಉತ್ತರ ನೀಡುತ್ತದೆ ಎಂದರು. +ಮತ್ತೆ ಅಶೋಕ್‌ ಮಾತನಾಡಿ, ಕೋಟ್ಯಂತರ ರೂ. ಅಧಿವೇಶನಕ್ಕಾಗಿ ಖರ್ಚಾಗುತ್ತದೆ. ಶಾಸಕರ ಊಟ, ತಿಂಡಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಇವರಿಗೆ ಏನು ದಾಡಿ ಬಂದಿದೆ. ಬೇಜವಾಬ್ದಾರಿಯಿಂದ ಸರ್ಕಾರ ನಡೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸಿ ನಾವು ಸಭಾತ್ಯಾಗ ಮಾಡುತ್ತೇವೆ ಎಂದು ಹೇಳಿ ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೊರನಡೆದರು. ಜೆಡಿಎಸ್‌‍ ಶಾಸಕರೂ ಕೂಡ ಅವರನ್ನು ಹಿಂಬಾಲಿಸಿ ಸದನದಿಂದ ಹೊರನಡೆದರು. +ಆಗ ಸಭಾಧ್ಯಕ್ಷ ಯು.ಟಿ.ಖಾದರ್‌ ಮಾತನಾಡಿ, ವಿಪ್‌ ಅವರೇ ಎಲ್ಲಿದ್ದೀರಾ?, ಮನೆಯಲ್ಲಿದ್ದೀರಾ? ಅಥವಾ ಅಸೆಂಬ್ಲಿಯಲ್ಲಿದ್ದೀರಾ?, ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಸಚಿವರಿಲ್ಲದೇ ಇರುವುದು ತಪ್ಪು. ಅರ್ಥ ಮಾಡಿಕೊಳ್ಳಬೇಕು. ಪ್ರತಿಪಕ್ಷದವರ ಆಗ್ರಹದಲ್ಲಿ ತಪ್ಪು ಇಲ್ಲ. ಮಂತ್ರಿಗಳಿಂದ ಕೆಟ್ಟ ಹೆಸರು ಬರುತ್ತದೆ ಎಂದರು. +ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಆಡಳಿತ ಪಕ್ಷದ ಶಾಸಕ ರಾಜು ಕಾಗೆ, ನಮ ಕ್ಷೇತ್ರದವರು ಭೇಟಿಯಾಗಲು ಬಂದಿರುತ್ತಾರೆ. ಅವರನ್ನು ಮಾತನಾಡಿಸಿ ಬರಲು ತಡವಾಗುತ್ತದೆ. ನೀವು ಅಧಿವೇಶನವನ್ನು 9.30ಕ್ಕೆ ಕರೆದರೆ ತೊಂದರೆಯಾಗುತ್ತದೆ. 11 ಗಂಟೆಗೆ ಆರಂಭಿಸಿದರೆ ಅನುಕೂಲ. ನೀವು 7 ಗಂಟೆಗೆ ಕರೆದರೂ ಬರುತ್ತೇವೆ. ಸಂಜೆ ವೇಳೆ ಶಾಸಕರು ಭೇಟಿಗೆ ಅವಕಾಶ ಮಾಡಿಕೊಟ್ಟರೆ ಅನುಕೂಲ ಎಂದರು. +ಮತ್ತೆ ಮಾತನಾಡಿದ ಸಭಾಧ್ಯಕ್ಷ ಯು.ಟಿ.ಖಾದರ್‌, ವಿಧೇಯಕಗಳಿವೆ. ವಿಧೇಯಕಗಳ ಚರ್ಚೆಯಾಗಬೇಕು, ಕಾರ್ಯಕಲಾಪಗಳ ಪಟ್ಟಿ ಮುಗಿಸಬೇಕು, ಸಚಿವರಿಗೂ ಜವಾಬ್ದಾರಿ ಇರಬೇಕು, ಅಧಿವೇಶನ ನಡೆಸುವ ವೇಳೆ ಸಭೆಗಳನ್ನು ನಡೆಸಬಾರದು, ಅಧಿವೇಶನಕ್ಕೆ ತಡವಾಗಿ ಬರುವುದು ಸರಿಯಲ್ಲ. ಮಂತ್ರಿಗಳು ಸರಿಯಾದ ಸಮಯಕ್ಕೆ ಬಂದರೆ ಶಾಸಕರು ಬರುತ್ತಾರೆ. ಅಧಿವೇಶನದ ಸಂದರ್ಭದಲ್ಲಿ ಬೆಳಿಗ್ಗೆ ಸಭೆ ನಡೆಸುವುದು ಸರಿಯಲ್ಲ. ಆ ಕಾರಣಕ್ಕೆ ಬೆಳಿಗ್ಗೆ 9.30ಕ್ಕೆ ಅಧಿವೇಶನವನ್ನುಆರಂಭಿಸುತ್ತಿದ್ದೇವೆ. +ಸಚಿವರು ಕಚೇರಿಯಲ್ಲಿದ್ದರೆ ಜನರೂ ಭೇಟಿಯಾಗಲು ಬರುತ್ತಾರೆ. ಸರ್ಕಾರಕ್ಕೆ ಒಂದು ವರ್ಷ ಕಳೆದಿದೆ. ಇನ್ನಾದರೂ ಇದು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಸೂಚಿಸಿದರು. +ಆಡಳಿತ ಪಕ್ಷದ ಶಾಸಕ ಶರತ್‌ ಕುಮಾರ್‌ ಬಚ್ಚೇಗೌಡ ಮಾತನಾಡಿ, ಮಂಗಳವಾರ ಸಂಜೆ ವಿಪಕ್ಷಗಳು ಚರ್ಚೆಯಲ್ಲಿ ಭಾಗವಹಿಸಲಿಲ್ಲ. ಇಂದು ಚರ್ಚೆ ಮಾಡಿ ಪರಿಹಾರ ಹುಡುಕಬೇಕಿತ್ತು. ಪ್ರಚಾರಕ್ಕಾಗಿ ಸಭಾತ್ಯಾಗ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.ಸಮಾಜಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾತನಾಡಿ, ಸಭಾಧ್ಯಕ್ಷರ ಕಾಳಜಿ ಅರ್ಥವಾಗುತ್ತದೆ. +ಅಧಿವೇಶನದಲ್ಲಿ ಪಾಲ್ಗೊಳ್ಳುವುದು ಪ್ರಮುಖ ವಿಚಾರ. ಸರ್ಕಾರದ ಆಡಳಿತದ ವೈಫಲ್ಯ, ಸುಧಾರಣೆ ಬಗ್ಗೆ ವಿರೋಧಪಕ್ಷಗಳು ಸಲಹೆ ನೀಡಲು ಅಧಿವೇಶನ ಬಳಕೆಯಾಗಬೇಕು. ಮಹತ್ತರವಾದ ಸಭೆ ಇದು. ಯಾವಾಗಲೂ ಮುಖ್ಯಮಂತ್ರಿ ಇರುವುದಿಲ್ಲ. ಸಚಿವರು, ಅಧಿಕಾರಿಗಳು ಇರುತ್ತಾರೆ. ವಿಪಕ್ಷಗಳು ಮಾಡುವ ಟೀಕೆ, ಸಲಹೆಗಳನ್ನು ನೋಟ್‌ ಮಾಡಿಕೊಳ್ಳುತ್ತೇವೆ. ನಾವುಮೂರ್ನಾಲ್ಕು ಸಚಿವರು ಇದ್ದೆವು. ವಿಪಕ್ಷಗಳು ಚರ್ಚೆ ಪ್ರಾರಂಭಿಸಬೇಕಿತ್ತು. ನಾವು ಉತ್ತರ ಕೊಡಲು ಸಿದ್ಧವಿದ್ದೆವು ಎಂದರು. +ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ 11 ಗಂಟೆಗೆ ಅಧಿವೇಶನ ಕರೆದರೂ, 11.30 ಹಾಗೂ 12 ಗಂಟೆಗೆ ಸದನ ಶುರುವಾಗುತ್ತಿತ್ತು. 20 ನಿಮಿಷ ವಿಳಂಬವಾಗಿದೆ. ರಾಜಕಾರಣಕ್ಕಾಗಿ ಸಭೆ ತ್ಯಾಗ ಮಾಡಬಾರದು. ನಾವು ತಪ್ಪನ್ನು ತಿದ್ದಿಕೊಳ್ಳುತ್ತೇವೆ ಎಂದರು. +ಮತ್ತೆ ಮಾತನಾಡಿದ ಸಭಾಧ್ಯಕ್ಷರು, ಸುಗಮ ಕಲಾಪ ಆಗಬೇಕು. ನಮನಮ ತಪ್ಪನ್ನು ಅರ್ಥ ಮಾಡಿಕೊಳ್ಳಬೇಕು. ಆಡಳಿತ ಪಕ್ಷದವರು ವಿರೋಧಪಕ್ಷದವರನ್ನು ದೂಷಿಸುವುದು, ವಿರೋಧಪಕ್ಷದವರು ಆಡಳಿತ ಪಕ್ಷದವರನ್ನು ದೂಷಿಸುವುದು ಸರಿಯಲ್ಲ. ಏನೇ ಕೆಲಸವಿದ್ದರೂ ಸಕಲಾಕ್ಕೆ ಸದನಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಬೇಕು. ಸದನಕ್ಕೆ ಹೋಗುತ್ತೇವೆ ಎಂದರೆ ಶಾಸಕರಿಗೆ ಯಾರೂ ಬೇಡ ಎನ್ನುವುದಿಲ್ಲ. ಸಭಾತ್ಯಾಗ ಮಾಡುವುದು ಸರಿ ಎನ್ನುವುದಿಲ್ಲ. +ಅವರು ಚರ್ಚೆ ಪ್ರಾರಂಭ ಮಾಡಬೇಕಿತ್ತು. ಎಲ್ಲರಲ್ಲೂ ಮನಃ ಪರಿವರ್ತನೆಯಾಗಬೇಕು ಎಂದು ಹೇಳಿ ಮಂಗಳವಾರ ಸದನಕ್ಕೆ ಬೇಗ ಬಂದ ಶಾಸಕರ ಹೆಸರನ್ನು ಉಲ್ಲೇಖಿಸಿ ರೈತನಿಗೆ ಮಾಲ್‌ನಲ್ಲಿ ಅಪಮಾನ ಮಾಡಿದ ವಿಚಾರವನ್ನು ಪ್ರಸ್ತಾಪಿಸಲು ಮುಂದಾದರು.ಅಷ್ಟರಲ್ಲಿ ವಿರೋಧಪಕ್ಷದ ಶಾಸಕರು ಸದನಕ್ಕೆ ಆಗಮಿಸಿದರು. +ಕಾಂಗ್ರೆಸ್‌‍ ಶಾಸಕ ಕೋನರೆಡ್ಡಿ ಮಾತನಾಡಿ, ಬಿಜೆಪಿಯ ಬಸನಗೌಡ ಯತ್ನಾಳ್‌, ಅಶೋಕ್‌ರವರ ನಡುವೆಯೇ ಗೊಂದಲವಿದೆ ಎಂದರು. ಆಗ ಯತ್ನಾಳ್‌ ಮಾತನಾಡಿ, ನಿಮದನ್ನು ನೋಡಿಕೊಳ್ಳಿ. ನಿಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ. ನಮ ಜಗಳದ ಬಗ್ಗೆ ನಿಮಗೇಕೆ ಕಾಳಜಿ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_72_5.txt b/eesanje/url_46_72_5.txt new file mode 100644 index 0000000000000000000000000000000000000000..b2f2c298c237f5f56575d5e8cc12f44a37dfdfb6 --- /dev/null +++ b/eesanje/url_46_72_5.txt @@ -0,0 +1,5 @@ +ಸದನಕ್ಕೆ ಸಚಿವರು ಚಕ್ಕರ್ : ‘ವರ್ಕ್‌ ಫ್ರಂ ಅಸೆಂಬ್ಲಿ’ ಮಾಡಿ ಎಂದು ಸುರೇಶ್‌ಕುಮಾರ್‌ ಅಸಮಾಧಾನ +ಬೆಂಗಳೂರು,ಜು.18-ಕೋವಿಡ್‌ ಸಂದರ್ಭದಲ್ಲಿ ವರ್ಕ್‌ ಫ್ರಂ ಹೋಂ ಜಾರಿಯಲ್ಲಿತ್ತು. ಈಗ ಸಚಿವರು ಸದನಕ್ಕೆ ಬಾರದಿದ್ದರೆ ವರ್ಕ್‌ ಫ್ರಂ ಅಸೆಂಬ್ಲಿ ಮಾಡಿ ಎಂದು ಬಿಜೆಪಿ ಹಿರಿಯ ಶಾಸಕ ಎಸ್‌‍.ಸುರೇಶ್‌ಕುಮಾರ್‌ ವಿಧಾನಸಭೆಯಲ್ಲಿ ಒತ್ತಾಯಿಸಿದರು.ಇಂದು ಬೆಳಿಗ್ಗೆ ಸದನದ ಸಮಾವೇಶಗೊಂಡಾಗ ಸಚಿವರ ಗೈರುಹಾಜರಿ ಎದ್ದುಕಾಣುವುದನ್ನು ಗಮನಿಸಿದ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿ ಮತ್ತೆ ಸದನಕ್ಕೆ ಆಗಮಿಸಿದಾಗಲೂ ಸಚಿವರ ಹಾಜರಾತಿ ಸುಧಾರಿಸಿರಲಿಲ್ಲ. +ಇದನ್ನು ಗಮನಿಸಿದ ಸುರೇಶ್‌ಕುಮಾರ್‌, ಒಂದು ಗಂಟೆ ಕಳೆದರೂ ಸಚಿವರು ಸದನಕ್ಕೆ ಬಂದಿಲ್ಲ. ಹೀಗಾಗಿ ವರ್ಕ್‌ ಫ್ರಂ ಅಸೆಂಬ್ಲಿ ಮಾಡಿದರೆ ನಾವು ಅಲ್ಲಿಂದಲೇ ಕೇಳುತ್ತೇವೆ. ಅವರು ಉತ್ತರವನ್ನು ನೀಡಲಿ ಎಂದರು. +ಮತ್ತೊಬ್ಬ ಶಾಸಕ ಅರವಿಂದ್‌ ಬೆಲ್ಲದ್‌ ಮಾತನಾಡಿ, ನೀವು ಸಚಿವರಿಗೆ ಗೈರುಹಾಜರಾಗಲು ಅನುಮತಿ ಕೊಟ್ಟಿದ್ದರೆ ಸದನವನ್ನು ಮುಂದೂಡಿ ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ನಾವು ಪ್ರಚಾರಕ್ಕೆ ಸಭಾತ್ಯಾಗ ಮಾಡಿಲ್ಲ. ನೀವು ವಿಪಕ್ಷದಲ್ಲಿದ್ದಾಗ ಮಾಡಿರಲಿಲ್ಲವೇ? ಎಂದು ಆಡಳಿತ ಪಕ್ಷವನ್ನುತರಾಟೆಗೆ ತೆಗೆದುಕೊಂಡರು. +ಮೊದಲ ಸಾಲಿನಲ್ಲಿ 10 ಸಚಿವರು ಇರಬೇಕು, ಮೂರನೇ ಒಂದು ಭಾಗ ಇಲ್ಲವೇ ನಾಲ್ಕು ಸಚಿವರಿರಬೇಕು. ಎರಡನೇ ಸಾಲಿನಲ್ಲಿ 15 ಸಚಿವರಲ್ಲಿ ಯಾರೂ ಇಲ್ಲ. ಈಗಷ್ಟೇ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಬಂದರು. ಮುಖ್ಯಮಂತ್ರಿ ಬಂದರೆ ಒಳ್ಳೆಯದು. 3 ಜನ ಸಚಿವರಿದ್ದರೂ ನಾವು ಚರ್ಚೆ ಪ್ರಾರಂಭಿಸುತ್ತೆವೆ ಎಂದು ಹೇಳಿದರು.ಅಲ್ಲಿಗೆ ಸಭಾಧ್ಯಕ್ಷರು ಮಧ್ಯಪ್ರವೇಶಿಸಿ ಈ ಚರ್ಚೆಗೆ ತೆರೆ ಎಳೆದು ಸದನವನ್ನು ಮುಂದುವರೆಸಿದರು. \ No newline at end of file diff --git a/eesanje/url_46_72_6.txt b/eesanje/url_46_72_6.txt new file mode 100644 index 0000000000000000000000000000000000000000..2e52d7d977d43bb4f95b5c4abfd4bfd9e9b4175b --- /dev/null +++ b/eesanje/url_46_72_6.txt @@ -0,0 +1,5 @@ +ಪ.ವರ್ಗ ಮತ್ತು ಪ.ಪಂಗಡದ ಜನಾಂಗಕ್ಕೆ ದ್ರೋಹ ಎಸಗಲಾಗಿದೆ : ಆರ್‌.ಅಶೋಕ್‌ +ಬೆಂಗಳೂರು,ಜು.18-ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿಯ 25 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಆ ಜನಾಂಗಕ್ಕೆ ದ್ರೋಹ ಎಸಗಲಾಗಿದೆ ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ವಿಧಾನಸಭೆಯಲ್ಲಿ ತಿಳಿಸಿದರು. +ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಅವೈಜ್ಞಾನಿಕವಾಗಿ 5 ಗ್ಯಾರಂಟಿಗಳನ್ನು ಜಾರಿಗೆ ತಂದರು. ಆ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ ಅನುದಾನ ಒದಗಿಸುವ ಬಗ್ಗೆ ಸರಿಯಾದ ಚರ್ಚೆ ಮಾಡಲಿಲ್ಲ. ಕಳೆದ ವರ್ಷ ಹಾಗೂ ಈ ವರ್ಷ ಮೀಸಲಿಟ್ಟಿದ್ದ ಎಸ್ಸಿಪಿ ಮತ್ತು ಟಿಎಸ್ಪಿಯ 25 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಬಳಸಲಾಗಿದೆ ಎಂದು ಆಕ್ಷೇಪಿಸಿದರು. +ಎಸ್‌‍ಸಿ/ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನು ಆ ಸಮುದಾಯದ ಕಲ್ಯಾಣಕ್ಕಾಗಿ ರಸ್ತೆ, ಚರಂಡಿ, ಪ್ರದೇಶದ ಅಭಿವೃದ್ಧಿ, ಬಡಾವಣೆಗಳ ಅಭಿವೃದ್ಧಿಗೆ ವಿನಿಯೋಗಿಸಬೇಕಿತ್ತು. ಆದರೆ ಕಾಯಿದೆಯನ್ನು ಗಾಳಿಗೆ ತೂರಲಾಗಿದೆ. ಅದೇ ರೀತಿ ಲಿಂಗಾಯತರ ಅಭಿವೃದ್ಧಿ ನಿಗಮ, ಒಕ್ಕಲಿಗರ ಅಭಿವೃದ್ಧಿ ನಿಗಮ, ಬ್ರಾಹಣರ ಅಭಿವೃದ್ಧಿ ನಿಗಮವನ್ನು ಬಳಸಿಕೊಳ್ಳಿ ಎಂದು ವಾಗ್ದಾಳಿ ನಡೆಸಿದರು. +ಎಸ್‌‍ಸಿ/ಎಸ್ಟಿ ಜನಾಂಗಕ್ಕೆ ಸರ್ಕಾರ ಮಾಡುತ್ತಿರುವ ದ್ರೋಹ ವಂಚನೆಯಾಗಿದೆ. ಅವರಿಗೆ 2 ಸಾವಿರ ಕೊಡುವುದರಿಂದ ಶುದ್ಧ ಕುಡಿಯುವ ನೀರು ದೊರೆಯುವುದಿಲ್ಲ. ಆ ಜನಾಂಗಕ್ಕೆ ಮೀಸಲಿಟ್ಟ ಹಣವನ್ನ ಬೇರೆ ಕಾರಣಕ್ಕೆ ಖರ್ಚು ಮಾಡಬಾರದು, ಈ ಬಗ್ಗೆ ಚರ್ಚೆಗೆ ಹೆಚ್ಚಿನ ಅವಕಾಶ ನೀಡಬೇಕೆಂದು ಕೋರಿದರು.ಆಗ ಸಭಾಧ್ಯಕ್ಷರು ಈ ವಿಚಾರವನ್ನು ನಿಲುವಳಿ ಸೂಚನೆ ಬದಲಿಗೆ ನಿಯಮ 69 ರಡಿ ಚರ್ಚೆಗೆ ಅವಕಾಶ ನೀಡುವುದಾಗಿ ಪ್ರಕಟಿಸಿದರು. \ No newline at end of file diff --git a/eesanje/url_46_72_7.txt b/eesanje/url_46_72_7.txt new file mode 100644 index 0000000000000000000000000000000000000000..7990c4122a1a5e0a396b33822f3fa4feccd78227 --- /dev/null +++ b/eesanje/url_46_72_7.txt @@ -0,0 +1,9 @@ +270ಕ್ಕೂ ಹೆಚ್ಚು ನಕಲಿ ಖಾತೆ ತೆರೆದು ವಂಚನೆ : ಪೊಲೀಸ್‌‍ ಬಲೆಗೆ ಬಿದ್ದ ಸೈಬರ್‌ ವಂಚಕರು +ಹುಬ್ಬಳ್ಳಿ, ಜು.17-ಸೈಬರ್‌ ವಂಚಕರ ಜಾಲವನ್ನು ಪತ್ತೆ ಮಾಡಿರುವ ಸೈಬರ್‌ ಕ್ರೈಂ ಠಾಣೆ ಪೊಲೀಸರು, ದೆಹಲಿಯಲ್ಲಿ ಇಬ್ಬರು ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಮತ್ತು ಮುಂಬೈಯಲ್ಲಿ ಬಟ್ಟೆ ವ್ಯಾಪಾರಿಯನ್ನು ಬಂಧಿಸಿ ಮೊಬೈಲ್‌, ಲ್ಯಾಪ್‌ಟಾಪ್‌ ಸೇರಿ ಕೆಲ ದಾಖಲೆಯನ್ನು ವಶಪಡಿಸಿಕೊಂಡು, ಕೆಲ ಬ್ಯಾಂಕ್‌ಗಳ ಖಾತೆಗಳನ್ನು ನಿಷ್ಕಿಯಗೊಳಿಸಿ 60 ಲಕ್ಷ ಬಳಕೆಯನ್ನು ತಡೆ ಹಿಡಿದಿದ್ದಾರೆ. +ದೆಹಲಿಯ ನಿಖಿಲಕುಮಾರ್‌ ರೌನಿ ಮತ್ತು ಸಚಿನ್‌ ಬೋಲಾ ಹಾಗೂ ಮುಂಬೈಯ ನಿಗಮ್‌ ಬಂಧಿತ ಆರೋಪಿಗಳು. ಮೂವರನ್ನು ಹುಬ್ಬಳ್ಳಿಗೆ ಕರೆ ತಂದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. +ಇಬ್ಬರು ಆರೋಪಿಗಳು ಸಾಫ್ಟ್ ವೇರ್‌ ಎಂಜಿನಿಯರ್‌ಗಳಾಗಿದ್ದು, ಡಾರ್ಕ್‌ನೆಟ್‌ಲ್ಲಿ ಸಕ್ರಿಯರಾಗಿ ಕೋಡಿಂಗ್‌ ಮತ್ತು ಡಿ-ಕೋಡಿಂಗ್‌ ಮಾಡುವಲ್ಲಿ ಪರಿಣಿತರು. ಈ ಹಿಂದೆ ಐಟಿ ಕಂಪನಿಯಲ್ಲಿ ಕೆಲಸ ಮಾಡಿ, ಹೊರಬಂದವರು. ಇನ್ನೊಬ್ಬ ಆರೋಪಿ ಬಟ್ಟೆ ವ್ಯಾಪಾರಿ. ಈ ಮೂವರು ಕರ್ನಾಟಕ ಸೇರಿ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ, ಅಸ್ಸಾಂ, ಮಧ್ಯಪ್ರದೇಶ, ತಮಿಳುನಾಡು, ದೆಹಲಿ ಹಾಗೂ ಇತರ ರಾಜ್ಯಗಳಲ್ಲಿ ಸಂಪರ್ಕ ಜಾಲ ವಿಸ್ತರಿಸಿಕೊಂಡು, ಆನ್‌ಲೈನ್‌ ಮೂಲಕ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಪ್ರಾಥಮಿಕ ಹಂತದ ತನಿಖೆ ಪ್ರಕಾರ, ಸಾರ್ವಜನಿಕರನ್ನು ವಂಚಿಸಿ ಗಳಿಸಿದ ಹಣವನ್ನು ಆರೋಪಿಗಳು ಸರ್ಕಾರಿ ಮತ್ತು ಖಾಸಗಿಯ ವಿವಿಧ ಬ್ಯಾಂಕ್ಗಳ 37 ಖಾತೆಗಳಿಗೆ ವರ್ಗಾಯಿ ಸಿಕೊಳ್ಳುತ್ತಿದ್ದರು. ಅದನ್ನು ದೇಶದ ವಿವಿಧ ಬ್ಯಾಂಕ್‌ಗಳಲ್ಲಿನ 270ಕ್ಕೂ ನಕಲಿ ಖಾತೆಗೆ ವರ್ಗಾಯಿಸಿಕೊಂಡು, ಡ್ರಾ ಮಾಡಿಕೊಳ್ಳುತ್ತಿದ್ದರು. +ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಅಂದಾಜು ನೂರಾರು ಕೋಟಿಗೂ ಅಧಿಕ ಹಣ ವರ್ಗಾವಣೆಯಾದ ಬಗ್ಗೆ ಶಂಕೆಯಿದೆ.ಕೆಲ ದಿನಗಳ ಹಿಂದೆ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ಆನ್‌ಲೈನ್‌ ವಂಚನೆ ಕುರಿತು ಪ್ರಕರಣ ದಾಖಲಾಗಿತ್ತು. ಅದರ ಜಾಡು ಹಿಡಿದ ಪೊಲೀಸರಿಗೆ, ವಂಚಕರ ಜಾಲ ದೇಶದೆಲ್ಲೆಡೆ ವಿಸ್ತರಿಸಿರುವುದು ಗೊತ್ತಾಯಿತು. +ಹಣ ವರ್ಗಾವಣೆಯಾದ ಬ್ಯಾಂಕ್‌, ಸ್ಥಳ, ಖಾತೆ ವಿವರ, ವಿಳಾಸ, ಮೊಬೈಲ್‌ ಸಂಪರ್ಕ ಸಂಖ್ಯೆ ಮಾಹಿತಿ ಕಲೆಹಾಕಿ, ವಿಚಾರಣೆ ತೀವ್ರಗೊಳಿಸಿದ್ದರು. ಆಗ ವಿವಿಧ ಬ್ಯಾಂಕ್‌ಗಳ ಖಾತೆಗಳಿಗೆ ಸಕಾರಣವಿಲ್ಲದೆ ಹಣ ವಹಿವಾಟು ಆಗಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರೋಪಿಗಳು ಯಾರದ್ದೋ ಹೆಸರಲ್ಲಿರುವ ಬ್ಯಾಂಕ್‌ ಖಾತೆಗೆ ಇನ್ಯಾರದ್ದೋ ಹೆಸರಲ್ಲಿ ಇರುವ ಮೊಬೈಲ್‌ ನಂಬರ್‌ ಜೋಡಣೆ ಮಾಡಿದ್ದರು. ಬ್ಯಾಂಕ್‌ ಖಾತೆ ವಿಳಾಸ ಅಸ್ಸಾಂ ರಾಜ್ಯದ್ದಾಗಿದ್ದರೆ ಮೊಬೈಲ್‌ ಸಂಖ್ಯೆ ವಿಳಾಸ ಕರ್ನಾಟಕದ್ದಾಗಿರುವುದು ತನಿಖೆಯಿಂದ ಗೊತ್ತಾಗಿದೆ. +ಹೀಗೆ ಬೇರೆ ಬೇರೆ ರಾಜ್ಯಗಳ ನಿವಾಸಿಗಳ ಹೆಸರಲ್ಲಿ ಬ್ಯಾಂಕ್‌ಗಳಲ್ಲಿ ನಕಲಿ ಖಾತೆ ತೆರೆದು ಹಣ ವರ್ಗಾಯಿಸಿಕೊಂಡಿರುವುದು ಗೊತ್ತಾಗಿದೆ. 270ಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳಿಂದ ಹಣ ವಹಿವಾಟು ನಡೆದಿದೆ. ಹೀಗಾಗಿ ಮೊತ್ತದ ಬಗ್ಗೆ ನಿಖರ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. \ No newline at end of file diff --git a/eesanje/url_46_72_8.txt b/eesanje/url_46_72_8.txt new file mode 100644 index 0000000000000000000000000000000000000000..50377989a8fcc015578707ee6f336f1561c8d0ca --- /dev/null +++ b/eesanje/url_46_72_8.txt @@ -0,0 +1,7 @@ +ಎಚ್ಚೆತ್ತುಕೊಂಡ ಜಿಟಿ ಮಾಲ್‌ : ಪಂಚೆ ಧರಿಸಿ ಬಂದ ರೈತನಿಗೆ ಸನ್ಮಾನ +ಬೆಂಗಳೂರು,ಜು.17-ಬೆಂಗಳೂರು,ಜು.17- ಪಂಚೆ ಧರಿಸಿದ್ದಾರೆಂಬ ಒಂದೇ ಕಾರಣಕ್ಕಾಗಿ ಮಾಲ್‌ನೊಳಗೆ ಬಿಡದೆ ರೈತನಿಗೆ ಅಪಮಾನ ಮಾಡಿದ್ದ ಮಾಲ್‌ನವರು ಎಚ್ಚೆತ್ತುಕೊಂಡು ಸನ್ಮಾನಿಸಿದ ಅಪರೂಪದ ಘಟನೆ ನಗರದಲ್ಲಿ ನಡೆದಿದೆ. +ಮಂಗಳವಾರ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ಗೆ ಹಾವೇರಿ ಮೂಲದ ಕುಟುಂಬವೊಂದು ಕಲ್ಕಿ ಸಿನಿಮಾ ವೀಕ್ಷಿಸಲು ಆಗಮಿಸಿತ್ತು. ಇದೇ ವೇಳೆ ಅವರ ಜೊತೆಗೆ ಫಕೀರಪ್ಪ ಎಂಬ ರೈತರು ಕೂಡ ಬಂದಿದ್ದರು. +ಸೆಕ್ಯುರಿಟಿ ಗಾರ್ಡ್‌ಗಳು, ಪಂಚೆ ಉಟ್ಟಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಮಾಲ್‌ ಒಳಗೆ ಬಿಡದೆ ಅವಮಾನಿಸಿ ಹೊರಗೆ ಕಳುಹಿಸಿದ್ದರು. ಇದನ್ನು ಅವರ ಪುತ್ರ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. +ಇದಕ್ಕೆ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಸೇರಿದಂತೆ ಅನೇಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮಾಲ್‌ನವರು ಕೂಡಲೇ ರೈತನ ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಮಾಲ್‌ ಮುಂದೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದ್ದರು. +ಕುರುಬೂರು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರು ಈ ಘಟನೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿ, ಇಂಥ ಘಟನೆಯ ಮೂಲಕ ರೈತರಿಗೆ ಅವಮಾನ ಮಾಡಲಾಗಿದೆ ಎಂದು ಖಂಡಿಸಿದ್ದಾರೆ. ಕೂಡಲೇ ಮಾಲ್‌ ಮಾಲೀಕರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. +ಕ್ಷಮೆ ಯಾಚನೆ: ನಿನ್ನೆಯ ಅವಾಂತರದ ನಂತರ ಎಚ್ಚೆತ್ತುಕೊಂಡ ಮಾಲ್‌ ಸಿಬ್ಬಂದಿ ಇಂದು ಪಂಚೆ ಉಟ್ಟವರನ್ನು ಒಳಗೆ ಬಿಡುತ್ತಿರುವುದಷ್ಟೇ ಅಲ್ಲ, ಪಂಚೆ ಉಟ್ಟವರಿಗೆ ಕೈಮುಗಿದು ಬರಮಾಡಿಕೊಳ್ಳುತ್ತಿದ್ದಾರೆ! \ No newline at end of file diff --git a/eesanje/url_46_72_9.txt b/eesanje/url_46_72_9.txt new file mode 100644 index 0000000000000000000000000000000000000000..6ed0e7b5d1942c54d8016d196c0514b080e588f7 --- /dev/null +++ b/eesanje/url_46_72_9.txt @@ -0,0 +1,15 @@ +ಸಚಿವರು, ಅಧಿಕಾರಿಗಳ ಜೊತೆ ಸಿಎಂ ಸಭೆ, ಸದ್ಯದಲ್ಲೇ ಕಾದಿದೆಯಾ ‘ತೆರಿಗೆ ಏರಿಕೆ’ ಶಾಕ್..? +ಬೆಂಗಳೂರು,ಜು.17-ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. +ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು ರಾಜ್ಯಸರ್ಕಾರ ಪ್ರಯತ್ನಪೂರ್ವಕವಾಗಿ ತಡೆಹಿಡಿದಿತ್ತು. ಆದರೆ ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ಪ್ರಸ್ತಾವನೆಗಳಿವೆ. +ಪ್ರಸ್ತುತ ಜಾರಿಯಲ್ಲಿರುವ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಬದಲಾವಣೆ ಮಾಡಿ ಆಸ್ತಿಗಳ ಮೌಲ್ಯದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾವನೆಗಳಿವೆ.ಸ್ವಯಂ ಸ್ವಾಧೀನದಲ್ಲಿರುವ ಜನವಸತಿ ಪ್ರದೇಶಗಳಿಗೆ ಮಾರ್ಗಸೂಚಿ ಮೌಲ್ಯದ ಮೇಲೆ ಶೇ.0.1 ರಷ್ಟು ಬಾಡಿಗೆ ಆಧಾರಿತ ಆಸ್ತಿಗಳಿಗೆ ಶೇ.0.2 ರಷ್ಟು ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. +ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಗಳಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬರುತ್ತಿಲ್ಲ. ಬಹಳಷ್ಟು ಮಂದಿ ತಪ್ಪು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯ ಬಗ್ಗೆಯೂ ಚರ್ಚೆಗಳಾಗಿವೆ. +ಸಂಚಾರ ದಟ್ಟಣೆ ನಿರ್ವಹಣೆಗೆ ಬೆಂಗಳೂರಿನಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳ ನಿರ್ಮಾಣ ಕುರಿತು ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅತೀ ಉದ್ದನೆಯ ಸುರಂಗ ಮಾರ್ಗ ರಸ್ತೆ ಕುರಿತು ಪ್ರಸ್ತಾವನೆಗಳಿವೆ. ಅದೇ ರೀತಿ ಬೆಂಗಳೂರಿನಲ್ಲಿ 200 ಕಿ.ಮೀ. ಹೊಸ ರಸ್ತೆಗಳ ನಿರ್ಮಾಣಕ್ಕೂ ತಯಾರಿಗಳಾಗಿದ್ದು, ಈ ರಸ್ತೆಗಳಿಗೆ 50 ಅಡಿ ಇಕ್ಕೆಲಗಳಲ್ಲಿ ಬಫರ್‌ಝೂನ್‌ ಕಾಯ್ದಿರಿಸುವ ಬಗ್ಗೆಯೂ ಚರ್ಚೆಗಳಾಗಿವೆ. +ಜೊತೆಗೆ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ವಿದ್ಯುತ್‌ ಉತ್ಪಾದನೆಯಂತಹ ಉಪಕ್ರಮಗಳ ಚರ್ಚೆಗಳಾಗುತ್ತಿವೆ. ತ್ಯಾಜ್ಯ ವಿಲೇವಾರಿ ಘಟಕಗಳು ತುಂಬಿ ಹೋಗಿದ್ದು, ಬದಲಿ ಜಾಗದ ಹುಡುಕಾಟದ ಜೊತೆಗೆ ತ್ಯಾಜ್ಯವನ್ನೇ ಬಳಸಿಕೊಂಡು ವಿದ್ಯುತ್‌ ಉತ್ಪಾದನೆ ಮಾಡುವ ಸಾಧಕ-ಬಾಧಕಗಳು ಹಾಗೂ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. +ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆಯ ಕುರಿತು ಅಧಿಕಾರಿಗಳು ತಯಾರಿಸಿರುವ ಪ್ರಸ್ತಾವನೆಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಬಿಬಿಎಂಪಿ ಚುನಾವಣೆಗೆ ಕಾಲಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಮುಖ್ಯಮಂತ್ರಿ ನಕಾರಾತಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಂಪನೂಲ ಕ್ರೂಢೀಕರಣ, ಮೂಲ ಸೌಲಭ್ಯ ಹೆಚ್ಚಳ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಬ್ರ್ಯಾಂಡ್‌ ಬೆಂಗಳೂರಿಗಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯ ಇದೆ ಎಂದು ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಅಧಿಕಾರಿಗಳು ವಾದಿಸಿದ್ದಾರೆ.ಸರ್ಕಾರದಿಂದ ಹೆಚ್ಚುವರಿ ಆರ್ಥಿಕ ನೆರವಿಗಾಗಿಯೂ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗಿದೆ. +ಬೆಂಗಳೂರು,ಜು.17-ಆಸ್ತಿ ತೆರಿಗೆ ಪರಿಷ್ಕರಣೆ, ಕಸ ವಿಲೇವಾರಿ, ಸಂಚಾರ ದಟ್ಟಣೆ ನಿರ್ವಹಣೆ ಸೇರಿದಂತೆ ಬ್ರ್ಯಾಂಡ್‌ ಬೆಂಗಳೂರಿಗೆ ಪೂರಕವಾಗಿ ಮಹತ್ವದ ಯೋಜನೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ನಗರದ ಸಚಿವರು ಹಾಗೂ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು. +ಬೆಂಗಳೂರಿನಲ್ಲಿ ಹಲವಾರು ವರ್ಷಗಳಿಂದ ಆಸ್ತಿ ತೆರಿಗೆಯ ಪರಿಷ್ಕರಣೆ ಆಗಿಲ್ಲ. ಕಳೆದ ವರ್ಷ ಕಂದಾಯ ಇಲಾಖೆ ಆಸ್ತಿಗಳ ಮಾರ್ಗಸೂಚಿ ದರವನ್ನು 25 ರಿಂದ 30 ರಷ್ಟು ಹೆಚ್ಚಳ ಮಾಡಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಪ್ರಸ್ತಾವವನ್ನು ರಾಜ್ಯಸರ್ಕಾರ ಪ್ರಯತ್ನಪೂರ್ವಕವಾಗಿ ತಡೆಹಿಡಿದಿತ್ತು. ಆದರೆ ಮುಂದಿನ ದಿನಗಳಲ್ಲಿ ತೆರಿಗೆ ಹೆಚ್ಚಳ ಮಾಡುವುದು ಅನಿವಾರ್ಯ ಎಂಬ ಪ್ರಸ್ತಾವನೆಗಳಿವೆ. +ಪ್ರಸ್ತುತ ಜಾರಿಯಲ್ಲಿರುವ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಬದಲಾವಣೆ ಮಾಡಿ ಆಸ್ತಿಗಳ ಮೌಲ್ಯದ ಮೇಲೆ ತೆರಿಗೆ ವಿಧಿಸುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ಬಗ್ಗೆ ಪ್ರಸ್ತಾವನೆಗಳಿವೆ.ಸ್ವಯಂ ಸ್ವಾಧೀನದಲ್ಲಿರುವ ಜನವಸತಿ ಪ್ರದೇಶಗಳಿಗೆ ಮಾರ್ಗಸೂಚಿ ಮೌಲ್ಯದ ಮೇಲೆ ಶೇ.0.1 ರಷ್ಟು ಬಾಡಿಗೆ ಆಧಾರಿತ ಆಸ್ತಿಗಳಿಗೆ ಶೇ.0.2 ರಷ್ಟು ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. +ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ಧತಿಗಳಲ್ಲಿ ನಿರೀಕ್ಷಿತ ಪ್ರಮಾಣದ ಆದಾಯ ಬರುತ್ತಿಲ್ಲ. ಬಹಳಷ್ಟು ಮಂದಿ ತಪ್ಪು ಮಾಹಿತಿ ನೀಡಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ತೆರಿಗೆ ವ್ಯವಸ್ಥೆಯ ಬಗ್ಗೆಯೂ ಚರ್ಚೆಗಳಾಗಿವೆ. +ಸಂಚಾರ ದಟ್ಟಣೆ ನಿರ್ವಹಣೆಗೆ ಬೆಂಗಳೂರಿನಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳ ನಿರ್ಮಾಣ ಕುರಿತು ಬಹಳ ದಿನಗಳಿಂದಲೂ ಚರ್ಚೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಅತೀ ಉದ್ದನೆಯ ಸುರಂಗ ಮಾರ್ಗ ರಸ್ತೆ ಕುರಿತು ಪ್ರಸ್ತಾವನೆಗಳಿವೆ. ಅದೇ ರೀತಿ ಬೆಂಗಳೂರಿನಲ್ಲಿ 200 ಕಿ.ಮೀ. ಹೊಸ ರಸ್ತೆಗಳ ನಿರ್ಮಾಣಕ್ಕೂ ತಯಾರಿಗಳಾಗಿದ್ದು, ಈ ರಸ್ತೆಗಳಿಗೆ 50 ಅಡಿ ಇಕ್ಕೆಲಗಳಲ್ಲಿ ಬಫರ್‌ಝೂನ್‌ ಕಾಯ್ದಿರಿಸುವ ಬಗ್ಗೆಯೂ ಚರ್ಚೆಗಳಾಗಿವೆ. +ಜೊತೆಗೆ ಬೆಂಗಳೂರಿನಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ವಿದ್ಯುತ್‌ ಉತ್ಪಾದನೆಯಂತಹ ಉಪಕ್ರಮಗಳ ಚರ್ಚೆಗಳಾಗುತ್ತಿವೆ. ತ್ಯಾಜ್ಯ ವಿಲೇವಾರಿ ಘಟಕಗಳು ತುಂಬಿ ಹೋಗಿದ್ದು, ಬದಲಿ ಜಾಗದ ಹುಡುಕಾಟದ ಜೊತೆಗೆ ತ್ಯಾಜ್ಯವನ್ನೇ ಬಳಸಿಕೊಂಡು ವಿದ್ಯುತ್‌ ಉತ್ಪಾದನೆ ಮಾಡುವ ಸಾಧಕ-ಬಾಧಕಗಳು ಹಾಗೂ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. +ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆಯ ಕುರಿತು ಅಧಿಕಾರಿಗಳು ತಯಾರಿಸಿರುವ ಪ್ರಸ್ತಾವನೆಯನ್ನು ಸಭೆಯಲ್ಲಿ ಮಂಡಿಸಲಾಗಿದೆ. ಬಿಬಿಎಂಪಿ ಚುನಾವಣೆಗೆ ಕಾಲಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಮುಖ್ಯಮಂತ್ರಿ ನಕಾರಾತಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಆದರೆ ಸಂಪನೂಲ ಕ್ರೂಢೀಕರಣ, ಮೂಲ ಸೌಲಭ್ಯ ಹೆಚ್ಚಳ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಬ್ರ್ಯಾಂಡ್‌ ಬೆಂಗಳೂರಿಗಾಗಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಅನಿವಾರ್ಯ ಇದೆ ಎಂದು ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಅಧಿಕಾರಿಗಳು ವಾದಿಸಿದ್ದಾರೆ.ಸರ್ಕಾರದಿಂದ ಹೆಚ್ಚುವರಿ ಆರ್ಥಿಕ ನೆರವಿಗಾಗಿಯೂ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗಿದೆ. \ No newline at end of file diff --git a/eesanje/url_46_73_1.txt b/eesanje/url_46_73_1.txt new file mode 100644 index 0000000000000000000000000000000000000000..ad59cfe4ed83a9247e25f49c31685018ac4155b4 --- /dev/null +++ b/eesanje/url_46_73_1.txt @@ -0,0 +1,10 @@ +ಸದನದೊಳಗೆ ಸ್ವಪಕ್ಷ ನಾಯಕರಿಂದಲೇ ಮುಜುಗರಕ್ಕೀಡಾಗುತ್ತಿದೆ ಪ್ರತಿಪಕ್ಷ ಬಿಜೆಪಿ +ಬೆಂಗಳೂರು,ಜು.17-ರಾಜ್ಯ ಸರ್ಕಾರದ ಹಗರಣಗಳನ್ನು ಮುಂದಿಟ್ಟುಕೊಂಡು ವಿಧಾನಮಂಡಲದ ಉಭಯ ಸದನಗಳಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಾದ ಪ್ರತಿಪಕ್ಷ ಬಿಜೆಪಿ ಸದನದೊಳಗೆ ಮುಜುಗರಕ್ಕೀಡಾಗುತ್ತಿದೆ. ಅದರಲ್ಲೂ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಂಗಳವಾರ ಸದನದಲ್ಲಿ ಪರೋಕ್ಷವಾಗಿ ನಡೆಸಿದ ವಾಗ್ದಾಳಿ, ಮಾಡಿರುವ ಟೀಕೆ ಬಿಜೆಪಿಯೊಳಗೆ ಮತ್ತೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡಿದೆ. +ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟಾಚಾರಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಬೇಕೆಂದು ಬಿಜೆಪಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ವಾಲೀಕಿಯಲ್ಲಿ ನಡೆದ ಭ್ರಷ್ಟಾಚಾರ, ಮೂಡಾ ನಿವೇಶನ ಹಂಚಿಕೆ ಅಕ್ರಮ ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ವೈಫಲ್ಯಗಳನ್ನು ಸದನದ ಮುಂದಿಟ್ಟು ಹೋರಾಟ ನಡೆಸಬೇಕೆಂಬುದು ಕೇಂದ್ರ ಬಿಜೆಪಿ ವರಿಷ್ಠರ ಸೂಚನೆಯಾಗಿತ್ತು. +ಆದರೆ ಸರ್ಕಾರವನ್ನು ಬೆತಲು ಮಾಡುತ್ತೇವೆ ಎಂದು ಅಧಿವೇಶನಕ್ಕೂ ಮೊದಲೇ ಗುಡುಗಿದ್ದ ಬಿಜೆಪಿ ಇದೀಗ ಸದನದಲ್ಲಿ ತಾನೇ ಮುಜುಗರಕ್ಕೆ ಸಿಲುಕಿ ತಲೆ ತಗ್ಗಿಸುವಂತಾಗಿದೆ. ಏಕೆಂದರೆ ಬಿಜೆಪಿಯ ಖಾಯಂ ವಿರೋಧ ಪಕ್ಷದ ನಾಯಕನೆಂದೇ ಗುರುತಿಸಿಕೊಂಡಿರುವ ಯತ್ನಾಳ್‌ ಸದನದೊಳಗೆ ಆಡಿರುವ ಮಾತುಗಳು ವಿರೋಧ ಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ ಸಿಕ್ಕುವಂತೆ ಮಾಡಿದೆ. +ಸದನದಲ್ಲಿ ಯತ್ನಾಳ್‌ ಎದ್ದು ನಿಂತರೆಂದರೆ, ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುವ ಜೊತೆಗೆ ಸ್ವಪಕ್ಷದ ನಾಯಕರನ್ನೇ ಪದೇ ಪದೇ ಚುಚ್ಚುತ್ತಾರೆ. ಸದನದಲ್ಲೇ ತಮ ಪಕ್ಷದ ನಾಯಕರ ವಿರುದ್ಧ ಅಡ್ಜೆಸ್ಟ್‌ಮೆಂಟ್‌ ರಾಜಕಾರಣದ ಆರೋಪ ಮಾಡುತ್ತಿದ್ದಾರೆ.ವಾಲೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಮಾತನಾಡುತ್ತಾ ಯತ್ನಾಳ್‌, ಬಿಜೆಪಿ ಹೋರಾಟ ಕೇವಲ ನಾಟಕ ಎಂದು ಜರಿದಿದ್ದರು. ಹಗರಣವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ, ಉಗ್ರವಾಗಿ ಖಂಡಿಸುತ್ತೇವೆ, ಸಭಾತ್ಯಾಗ ಮಾಡುತ್ತೇವೆ. ಹಗಲೂ ರಾತ್ರಿ ಧರಣಿ ಕೂರುತ್ತೇವೆ. ರಾತ್ರಿ, ನೀವು, ಹೋಂ ಮಿನಿಸ್ಟರ್‌ ಬರ್ತಾರೆ ಊಟ ತಿಂಡಿ ಕೊಡ್ತೀರಿ, ನಾಟಕ ಮಾಡ್ತೀರಿ ಎಂದು ಕಾಲೆಳೆದಿದ್ದರು. +ಅಶೋಕ್‌ ಕಾಲೆಳೆದ ಯತ್ನಾಳ್‌:ಅಶೋಕ್‌ ನೇತೃತ್ವದಲ್ಲಿ ದಲಿತ ಸಮುದಾಯದ ಹಿತ ಕಾಪಾಡುತ್ತೇವೆ ಎನ್ನುವುದು ಪರಿಹಾರ ಅಲ್ಲ. ಅಶೋಕ್‌ ಸ್ವಾಭಿಮಾನದ ರಾಜಕೀಯ ಮಾಡಲು ನಿರ್ಧಾರ ಮಾಡಿದ್ದರಿಂದ ಚೆನ್ನಾಗಿ ಮಾಡಿದ್ದಾರೆ. ಯಾರ ಅಪ್ಪ ಮಕ್ಕಳಿಗೆ ಯಾರೂ ಅಂಜಬಾರದು. ಯಾರಿಗೂ ಅಪ್ಪಾಜಿ ಅನ್ನಬಾರದು. ಅಪ್ಪಾಜಿ ಸಂಸ್ಕೃತಿ ಬೇಡ ಎಂದು ಪರೋಕ್ಷವಾಗಿ ವಿಜಯೇಂದ್ರ ಹಾಗೂ ಬಿಎಸ್‌‍ ಯಡಿಯೂರಪ್ಪ ಅವರಿಗೂ ಟಾಂಗ್‌ ನೀಡಿದರು. +ಭಾರೀ ಹೋರಾಟ , ಗಡ ಗಡ ನಡುಗಿದ ಸರ್ಕಾರ ಎಂದು ಒಂದು ಕಡೆಯಲ್ಲಿ ಹೇಳುತ್ತಾರೆ. ಬಳಿಕ ಆಡಳಿತ ಪಕ್ಷದ ನಾಯಕರಿಗೆ ಫೋನ್‌ ಕರೆ ಮಾಡಿ, ಏನೂ ತಪ್ಪು ತಿಳಿದುಕೊಳ್ಳಬೇಡಿ, ಮೇಲಿ ಒತ್ತಡ ಹೈಕಮಾಂಡ್‌ ಒತ್ತಡ ಎನ್ನುತ್ತಾರೆ. ಅಲ್ಲದೆ, ವಾಲೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ರಾಜೀನಾಮೆ ಪಡೆದುಕೊಂಡಿದ್ದಕ್ಕೆ ನಿಮನ್ನು ಅಭಿನಂದಿಸುತ್ತೇನೆ ಎಂದು ಆರ್‌.ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಉಲ್ಲೇಖಿಸಿ ನೀಡಿದ್ದ ಹೇಳಿಕೆಯನ್ನು ಸದನದಲ್ಲಿ ಪ್ರಸ್ತಾಪಿಸಿದ್ದ ಯತ್ನಾಳ್‌, ಪರೋಕ್ಷವಾಗಿ ಹೊಂದಾಣಿಕೆ ರಾಜಕೀಯ ಬಿಜೆಪಿಯಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. +ಯತ್ನಾಳ್‌ ನಡೆ ವಿರುದ್ಧ ಹೈಕಮಾಂಡ್‌ ಕೂಡಾ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆಡಳಿತ ಪಕ್ಷದ ಸದಸ್ಯರು ಯತ್ನಾಳ್‌ ಮಾತಿಗೆ ನಿಂತರೆ ಮತ್ತಷ್ಟು ಮಾತನಾಡಿ ಎಂದು ಹುರಿದುಂಬಿಸುತ್ತಾರೆ. ಯತ್ನಾಳ್‌ ಅವರು ವಿರೋಧ ಪಕ್ಷದೊಳಗಿನ ವಿರೋಧ ಪಕ್ಷದ ನಾಯಕ ಎಂಬ ಮಾತೂ ವಾಸ್ತವ. +ಪರಿಷತ್‌ನಲ್ಲೂ ಅದೇ ಸ್ಥಿತಿ:ವಿಧಾನಸಭೆಯಲ್ಲಿ ಒಂದು ಕತೆಯಾದರೆ ಪರಿಷತ್‌ನಲ್ಲೂ ಅದೇ ಕಥೆ ಇದೆ. ವಿರೋಧ ಪಕ್ಷದ ನಾಯಕನ ಸ್ಥಾನವಿಲ್ಲದೆ ಏಕಾಂಗಿಯಾಗಿರುವ ಬಿಜೆಪಿಯಲ್ಲಿ ಯಾವ ಸದಸ್ಯರು ಯಾವ ವಿಷಯವನ್ನು ಕೈಗೆತ್ತಿಕೊಳ್ಳಬೇಕು, ಸರ್ಕಾರದ ವಿರುದ್ಧ ಹೇಗೆ ಹೋರಾಟ ನಡೆಸಬೇಕು ಎಂಬುದರ ಬಗ್ಗೆ ತಲೆಬುಡ ಒಂದೂ ಇಲ್ಲ. +ಸೋಮವಾರದಿಂದ ಆರಂಭವಾದ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಒಂದಿಷ್ಟು ಸರ್ಕಾರದ ವಿರುದ್ಧ ಅಬ್ಬರಿಸುತ್ತಿದ್ದಾರೆ. ಆದರೆ ಅವರಿಗೆ ಸ್ವಪಕ್ಷೀಯರೇ ಬೆಂಬಲ ನೀಡುತ್ತಿಲ್ಲ. ಮಂಗಳವಾರ ಮಾಜಿ ಸಚಿವ ನಾಗೇಂದ್ರ ಫೋಟೋ ಹಿಡಿದು ಸದನದಲ್ಲಿ ಸಿ.ಟಿ.ರವಿ ಮಾತನಾಡಿದ್ದರು. ಈ ವೇಳೆ ಆಡಳಿತಾರೂಢ ಕಾಂಗ್ರೆಸ್‌‍ ಸದಸ್ಯರು ರವಿ ವಿರುದ್ಧ ಪ್ರತಿದಾಳಿ ನಡೆಸಿದರು. ಆಗ ಬಿಜೆಪಿಯ ಯಾವ ಸದಸ್ಯರೂ ಕೂಡ ತಮ ಸದಸ್ಯನ ಪರವಾಗಿ ನಿಲ್ಲನಿಲ್ಲ. ಇದು ಪಕ್ಷದೊಳಗೆ ತಾಳಮೇಳ ಎಲ್ಲವೂ ತಪ್ಪಿದೆ ಎಂದು ರುಜುವಾತು ಪಡಿಸಿದೆ. \ No newline at end of file diff --git a/eesanje/url_46_73_10.txt b/eesanje/url_46_73_10.txt new file mode 100644 index 0000000000000000000000000000000000000000..1321e1d63b0d7881c53380ab9f9130ed2a29ab6d --- /dev/null +++ b/eesanje/url_46_73_10.txt @@ -0,0 +1,9 @@ +ಬೆಂಗಳೂರು ಶಾಸಕರೊಂದಿಗೆ ಜು.27ರಂದು ಸಭೆ : ಡಿಕೆಶಿ +ಬೆಂಗಳೂರು,ಜು.16- ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸುವ ಸಂಬಂಧ ಬೆಂಗಳೂರಿನ ಶಾಸಕರ ಜೊತೆ ಜು.27ರಂದು ಸಭೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧಾನಸಭೆಗೆ ತಿಳಿಸಿದರು. +ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ, ಅಧಿವೇಶನ ಮುಗಿದ ಮರುದಿನವೇ ವೈಟ್ಯಾಪಿಂಗ್‌, ರಸ್ತೆಗುಂಡಿ ಮುಚ್ಚುವುದು ಮೊದಲಾದ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿ ನಿರ್ಧಾರ ಮಾಡೋಣ, ಕಸ ವಿಲೇವಾರಿ, ಸಂಚಾರ ದಟ್ಟಣೆ, ಬೀದಿ ದೀಪ ನಿರ್ವಹಣೆ, ತೆರಿಗೆ ಸಂಗ್ರಹ, ಹಸರೀಕರಣ, ಕುಡಿಯುವ ನೀರು ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ. ಶಾಸಕರು ಹೇಳಿದಂತೆ ವಿವಿಧ ಇಲಾಖೆಗಳ ನಡುವೆ ಸಮನ್ವಯ ಇಲ್ಲ. ತಾವು ಉಸ್ತುವಾರಿ ವಹಿಸಿದ ನಂತರ ಒಂದು ಹಂತಕ್ಕೆ ಬಂದಿದೆ ಎಂದು ಹೇಳಿದರು. +ವೈಟ್ಯಾಪಿಂಗ್‌ ಕಾಮಗಾರಿ, ರಸ್ತೆಗಳ ನಿರ್ಮಾಣ ಮತ್ತು ಹಗಲೀಕರಣ, ಸುರಂಗ ಮಾರ್ಗ, ಮೆಟ್ರೊ ರೋಡ್‌ ಫ್ಲೈಓವರ್‌ ಸೇರಿದಂತೆ ವಿವಿಧ ಕಾಮಗಾರಿಗಳಿಗೆ 3450 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದಿಂದ ನಿಗದಪಡಿಸಲಾಗಿದೆ. ಇದರಲ್ಲಿ ಬಿಬಿಎಂಪಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ 1790 ಕೋಟಿ ರೂ. ರಾಜ್ಯ ಸರ್ಕಾರದಿಂದ 1660 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು. +ಏ.1ರಿಂದ ಜೂ.30ರವರೆಗೆ ಪಾಲಿಕೆ ವ್ಯಾಪ್ತಿಯಲ್ಲಿ 16,202 ರಸ್ತೆಗುಂಡಿಗಳನ್ನು ಗುರುತಿಸಿದ್ದು, ಈ ಪೈಕಿ 15,686 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. 516 ರಸ್ತೆ ಗುಂಡಿಗಳು ಬಾಕಿ ಇವೆ. ರಸ್ತೆ ಗುಂಡಿಗಳನ್ನು ದುರಸ್ತಿಪಡಿಸಲು ಬಿಬಿಎಂಪಿ ಬ್ಯಾಚ್‌ ಮಿಕ್ಸ್ ಸ ಘಟಕವನ್ನು ಸ್ಥಾಪಿಸಲಾಗಿದ್ದು, ಪ್ರತಿ ವಾರ್ಡ್‌ 15 ಲಕ್ಷ ರೂ. ಅನುದಾನವನ್ನು ಗುಂಡಿ ಮುಚ್ಚಲು ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು. +ಮಳೆಗಾಲದಲ್ಲಿಯೂ ರಸ್ತೆಗುಂಡಿ ಮುಚ್ಚಲು ತಂಪಾದ ಡಾಂಬರು ಮಿಶ್ರಣ ತಯಾರಿಸುವ ಘಟಕವನ್ನು ಸ್ಥಾಪಿಸಲಾಗಿದೆ. ಬಿಡಬ್ಲುಎಸ್‌‍ಎಸ್‌‍ಬಿ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಲಾಗಿದ್ದು, ರಸ್ತೆ ಅಗೆಯುವುದನ್ನು ಹೆಚ್ಚು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗಿದೆ. ರಸ್ತೆ ಗುಂಡಿಗಳನ್ನು ಗುರುತಿಸಲು ಮತ್ತು ನಿಗಾವಹಿಸಲು ರಸ್ತೆಗುಂಡಿ ಗಮನ ಎಂಬ ನೂತನ ಮೊಬೈಲ್‌ ಆಪ್‌ನ್ನು ಸೃಜಿಸಲು ಉದ್ದೇಶಿಸಲಾಗಿದೆ ಎಂದರು. +ಇದಕ್ಕೂ ಮುನ್ನ ಮಾತನಾಡಿದ ಶಾಸಕ ರಾಮಮೂರ್ತಿ, ಬ್ರಾಂಡ್ ಬೆಂಗಳೂರು, ಗ್ರೇಟರ್‌ ಬೆಂಗಳೂರು ಎಂದು ಹೇಳುತ್ತೀರಿ. ಬೆಂಗಳೂರನ್ನು 5 ಭಾಗ ಮಾಡುವುದಾಗಿ ಹೇಳುತ್ತೀರಿ. ಈ ಪರಿಕಲ್ಪನೆ ಅರ್ಥವಾಗುತ್ತಿಲ್ಲ. ವಿರೋಧ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಟ್ಟಿಲ್ಲ. ಕೇವಲ 516 ರಸ್ತೆ ಗುಂಡಿಗಳು ಬಾಕಿ ಉಳಿದಿರುವುದಾಗಿ ಹೇಳುತ್ತೀರಿ, ಯಾವ ರಸ್ತೆಯಲ್ಲಿ ಗುಂಡಿಗಳಿಲ್ಲ ಹೇಳಿ ಎಂದು ಆಗ್ರಹಿಸಿದರು. +ಇದಕ್ಕೆ ದನಿಗೂಡಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಎಲ್ಲಾ ರಸ್ತೆಗಳು ಗುಂಡಿಗಳಾಗಿವೆ. ಮಳೆಯಿಂದ ಹೆಚ್ಚು ಗುಂಡಿಗಳಾಗುತ್ತಿವೆ. ಗುಂಡಿ ಮುಚ್ಚಿರುವುದರ ಗುಣಮಟ್ಟವೂ ಸರಿಯಿಲ್ಲ. ಕಳೆದ 15 ವರ್ಷದಲ್ಲಿ ಯಾವ ಯಾವ ಕ್ಷೇತ್ರಕ್ಕೆ ಎಷ್ಟೇಷ್ಟು ಅನುದಾನ ನೀಡಲಾಗಿದೆ ಎಂಬ ಮಾಹಿತಿಯ ಶ್ವೇತಪತ್ರ ಹೊರಡಿಸಿ, ಬಿಜೆಪಿ 16 ಶಾಸಕರು ಬೆಂಗಳೂರಿನಲ್ಲಿದ್ದಾರೆ. ಎಲ್ಲಾ ಕ್ಷೇತ್ರದ ಅಭಿವೃದ್ಧಿಗೂ ಅನುದಾನ ಕೊಡಿ ಎಂದು ಒತ್ತಾಯಿಸಿದರು. +ಬಿಜೆಪಿ ಶಾಸಕ ಎಸ್‌‍.ಸುರೇಶ್‌ಕುಮಾರ್‌ ಮಾತನಾಡಿ, ಬ್ರಾಂಡ್‌ ಬೆಂಗಳೂರು ಮಾಡಲು ಹೊರಟಿದ್ದೀರಿ. ವಿವಿಧ ಇಲಾಖೆಗಳ ನಡುವೆ ಸಮನ್ವಯ ಇಲ್ಲ. ಬೆಂಗಳೂರು ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ರಚನೆ ಮಾಡಿ, ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಒಂದು ಟಾಸ್ಕ್‌ಫೋರ್ಸ್‌ ರಚನೆ ಮಾಡಿ ಎಂದು ಸಲಹೆ ಮಾಡಿದರು. \ No newline at end of file diff --git a/eesanje/url_46_73_11.txt b/eesanje/url_46_73_11.txt new file mode 100644 index 0000000000000000000000000000000000000000..7f630d03c5a955ca39f4174eb683fb6025522189 --- /dev/null +++ b/eesanje/url_46_73_11.txt @@ -0,0 +1,10 @@ +ಇನ್ನೊಂದು ತಿಂಗಳಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ +ಬೆಂಗಳೂರು,ಜು.16-ಇನ್ನೊಂದು ತಿಂಗಳಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರುವುದಾಗಿ ಕಾನೂನು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸುರೇಶ್‌ ಎಚ್‌.ಕೆ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಗಿ ಪ್ರವಾಸಿತಾಣಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುವುದು ಎಂದರು. +ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 26 ದೇವಾಲಯಗಳಿದ್ದು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಂರಕ್ಷಿತ ಸಾರಕಗಳಲ್ಲಿ ಬೇಲೂರು ಮತ್ತು ಹಳೇಬೀಡು ದೇವಾಲಯಗಳು ಸೇರಿವೆ. ಬೇಲೂರು, ಹಳೇಬೀಡು ದೇವಾಲಯಗಳಂತೆ ಶಿಲ್ಪಕಲೆ ಇರುವ 21 ಪ್ರಾಚೀನ ದೇವಾಲಯಗಳಿವೆ. +ಬೇಲೂರು, ಹಳೇಬೀಡಿಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಇನ್ನಷ್ಟು ಮೂಲಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.ಹಳೇಬೀಡು ಹೊಯ್ಸಳೇಶ್ವರ ದೇವಾಲಯ ಹಾಗೂ ಸುತ್ತಮುತ್ತಲಿನ ಶಿಲ್ಪಕಲೆಗಳ ದೇವಾಲಯಗಳ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ರಾತ್ರಿ ವೇಳೆ ತಂಗಲು ಯಾತ್ರಿ ನಿವಾಸ ನಿರ್ಮಿಸಲಾಗಿದೆ ಎಂದರು. +ಪ್ರವಾಸೋದ್ಯಮ ಮೂಲಭೂತ ಸೌಕರ್ಯ ವೆಚ್ಚದಡಿಯಲ್ಲಿ 20 ಕೋಟಿ ರೂ.ಗಳ ಪೈಕಿ 16 ಕೋಟಿ ರೂ.ಗಳನ್ನು ಮುಂದುವರೆದ ಕಾಮಗಾರಿಗಳಿಗೆ 4 ಕೋಟಿ ರೂ.ಗಳನ್ನು ನೂತನ ಕಾಮಗಾರಿಗಳಿಗೆ ಕೈಗೊಳ್ಳಲಾಗುವುದು. ಮೂಲ ಸೌಲಭ್ಯ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. +ಶಾಸಕ ಗುರುಮೇಸುರೇಶ್‌ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಡುಪಿ ಜಿಲ್ಲೆಯ ಕಾಪು ಲೈಟ್‌ಹೌಸ್‌‍ ಬೀಚ್‌ ಅಭಿವೃದ್ಧಿ ಕಾಮಗಾರಿಗೆ 5 ಕೋಟಿ ರೂ. ಮಂಜೂರು ಮಾಡಲಾಗಿದೆ. ಒಂದು ಜಿಲ್ಲೆಯಲ್ಲಿ ಒಂದು ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಈ ಹಣ ಮಂಜೂರು ಮಾಡಲಾಗಿದೆ. ಮತ್ತೊಂದು ಬೀಚ್‌ ಅಭಿವೃದ್ಧಿಪಡಿಸಲು ಅನುದಾನದ ಸಮಸ್ಯೆ ಇದೆ. ಎರಡರಲ್ಲಿ ಯಾವುದಾದರೊಂದು ತಾಣ ಅಭಿವೃದ್ಧಿ ಪಡಿಸಿಕೊಳ್ಳಬಹುದು. ಅದನ್ನೇ ಶಾಸಕರೇ ನಿರ್ಧಾರ ಮಾಡಬೇಕು ಎಂದರು. +ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧಪ್ರವಾಸೋದ್ಯಮ ಅಭಿವೃದ್ಧಿಗೆ 2024-25ನೇ ಸಾಲಿನಲ್ಲಿ 23,930.40 ಲಕ್ಷ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ. +ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್‌‍ ಶಾಸಕ ನರೇಂದ್ರ ಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದರಿ ಅನುದಾನದಲ್ಲಿ ರಾಜ್ಯದ ವಿವಿಧ ಪ್ರವಾಸಿತಾಣಗಳಲ್ಲಿ ಯಾತ್ರಿನಿವಾಸ, ಡಾರ್ಮಿಟರಿ, ಶೌಚಾಲಯ, ಅಂತಿಮ ಹಂತದ ಕೂಡು ರಸ್ತೆ, ಮೆಟ್ಟಿಲುಗಳು, ರೇಲಿಂಗ್‌್ಸ, ಕುಡಿಯುವ ನೀರಿನ ಸೌಲಭ್ಯ, ಸ್ನಾನಗೃಹ, ಸಾರಕಗಳ ಸಂರಕ್ಷಣೆ ಇತ್ಯಾದಿ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. +ನೂತನ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ 3071.64 ಲಕ್ಷ ರೂಪಾಯಿಗಳನ್ನು ಒದಗಿಸಲಾಗಿದ್ದು, ಈವರೆಗೂ ಯಾವುದೇ ಕಾಮಗಾರಿಗಳನ್ನು ಕೈಗೊಂಡಿಲ್ಲ. ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಸಮಾಜಕಲ್ಯಾಣ ಇಲಾಖೆಯ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು. +ಮಳವಳ್ಳಿ ಕ್ಷೇತ್ರದ ಬಸವನಬೆಟ್ಟ ಮತ್ತು ಶಿವನಸಮುದ್ರ ಸುತ್ತಮುತ್ತ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಒತ್ತಾಯಿಸಿದರು. ಈ ಬಗ್ಗೆ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. \ No newline at end of file diff --git a/eesanje/url_46_73_12.txt b/eesanje/url_46_73_12.txt new file mode 100644 index 0000000000000000000000000000000000000000..f1608a7e4c2832d13567bc96fd25badc50055fcf --- /dev/null +++ b/eesanje/url_46_73_12.txt @@ -0,0 +1,7 @@ +ವಾಲ್ಮೀಕಿ ನಿಗಮ ಹಗರಣದಲ್ಲಿ ಇನ್ನೂ ಹಲವು ಸಚಿವರು ಶಾಮೀಲಾಗಿದ್ದಾರೆ : ವಿಜಯೇಂದ್ರ +ಬೆಂಗಳೂರು,ಜು.16-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಶಾಸಕರು, ಮಾಜಿ ಮಂತ್ರಿಗಳು ಮಾತ್ರವಲ್ಲದೆ ಕೆಲವು ಸಚಿವರು ಭಾಗಿಯಾಗಿದ್ದಾರೆ. ಇವೆಲ್ಲವೂ ಬಹಿರಂಗವಾಗಿದ್ದು, ರಾಜ್ಯದ ಜನತೆ ಮುಂದೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಹಗರಣದಲ್ಲಿ ಯಾರೂ ಕೂಡ ತನಿಖೆಯಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಯಾರೆಷ್ಟೇ ದೊಡ್ಡವರಾದರೂ ಸಿಬಿಐ ಮತ್ತು ಇ.ಡಿ ಮುಂದಕ್ಕೆ ಹೋಗಬೇಕಾಗುತ್ತದೆ. ಅವರದೇ ಆದ ರೀತಿಯಲ್ಲಿ ತನಿಖೆ ನಡೆಸುತ್ತಾರೆ ಎಂದರು. +ಒಂದೆಡೆ ಸಿಬಿಐ ತನಿಖೆ ನಡೆದಿದೆ. ಇನ್ನೊಂದೆಡೆ ಪ್ರತ್ಯೇಕವಾಗಿ ರಾಜ್ಯದಿಂದ ಎಸ್ಐಟಿ ತನಿಖೆ ನಡೆಸುತ್ತಿದೆ. ನಾಗೇಂದ್ರ ಅವರು ಈಗಾಗಲೇ ಇ.ಡಿ ಕಸ್ಟಡಿಯಲ್ಲಿದ್ದಾರೆ. ವಾಲ್ಮೀಕಿ ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಅವರು ನಿನ್ನೆ ಸದನಕ್ಕೆ ಹಾಜರಾಗಿದ್ದರು. ಯಾರು ಎಲ್ಲಿದ್ದಾರೆಂಬುದು ಮುಖ್ಯವಲ್ಲ. ಅದಕ್ಕಿಂತ ಹೆಚ್ಚಾಗಿ ನಾಗೇಂದ್ರರ ಜೊತೆಗೆ ದದ್ದಲ್ ಅವರ ಪಾತ್ರವೂ ಇದೆ ಎಂಬುದು ಬಹಿರಂಗವಾಗಿದೆ ಎಂದು ವಿವರಿಸಿದರು. +ಕಾವೇರಿ ನೀರು- ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳದಿರಿ. ಕಾವೇರಿ ನದಿ ನೀರಿನ ಸಂಬಂಧ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ಕರೆದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ತಮಿಳುನಾಡಿನಲ್ಲಿ ಏನು ಮಾಡುತ್ತಾರೆ ಎಂಬುದು ಮುಖ್ಯವಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿಗಳು ಕರೆದ ಸಭೆಯಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಮಂಡಿಸಿದ್ದೇವೆ. +ಯಾವುದೇ ಕಾರಣಕ್ಕೂ ರಾಜ್ಯದ, ಅದರಲ್ಲೂ ವಿಶೇಷವಾಗಿ ಮೈಸೂರು ಭಾಗದ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ರಾಜ್ಯ ಸರಕಾರ ನಡೆದುಕೊಳ್ಳಬಾರದು ಎಂದು ಆಗ್ರಹಿಸಿದ್ದಾಗಿ ತಿಳಿಸಿದರು. ಪ್ರತಿ ವರ್ಷವೂ ಕ್ಯಾತೆ ತೆಗೆಯುವ ತಮಿಳುನಾಡು ಸರಕಾರ ಪ್ರತಿ ಸಂದರ್ಭದಲ್ಲೂ, ಪ್ರತಿ ವರ್ಷವೂ ಕ್ಯಾತೆ ತೆಗೆಯುತ್ತಲೇ ಇರುತ್ತದೆ. +ಟ್ರಿಬ್ಯೂನಲ್ನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ವಾದ ಮಂಡಿಸಬೇಕು. ಇದಕ್ಕಾಗಿ ಸೂಕ್ತ ನ್ಯಾಯವಾದಿಗಳನ್ನು ನೇಮಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಆ ನಿಟ್ಟಿನಲ್ಲಿ ಅವರು ಸಮರ್ಪಕ ನಿರ್ಧಾರ ಕೈಗೊಳ್ಳುವ ವಿಶ್ವಾಸ ನಮ್ಮಗೂ ಇದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_46_73_2.txt b/eesanje/url_46_73_2.txt new file mode 100644 index 0000000000000000000000000000000000000000..89ddbf03cd8f8416507246eb4c3afc4863aa2b54 --- /dev/null +++ b/eesanje/url_46_73_2.txt @@ -0,0 +1,7 @@ +ವಾಲ್ಮೀಕಿ ನಿಗಮ ಹಗರಣ : ಬಿ.ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ +ಬೆಂಗಳೂರು,ಜು.17-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಪತ್ನಿಯನ್ನು ಜಾರಿನಿರ್ದೇಶನಾಲಯ(ಇ.ಡಿ)ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. +ಬಿಇಎಲ್‌ ರಸ್ತೆಯಲ್ಲಿರುವ ರಾಮ್ಕೆ ಅಪಾರ್ಟ್‌ಮೆಂಟ್‌ನಲ್ಲಿದ್ದ ಬಿ.ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಇ.ಡಿ ಅಧಿಕಾರಿಗಳ ಒಂದು ತಂಡ ವಶಕ್ಕೆ ಪಡೆದಿದೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಯಲ್ಲಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ ಮಂಜುಳಾ ಅವರ ಖಾತೆಯೂ ನಾಗೇಂದ್ರ ಕೋಟ್ಯಂತರ ಹಣವನ್ನು ವರ್ಗಾವಣೆ ಮಾಡಿದ್ದರ ಆರೋಪದ ಹಿನ್ನಲೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. +ಇ.ಡಿ ಅಧಿಕಾರಿಗಳು ನಾಗೇಂದ್ರ ಅವರ ಬ್ಯಾಂಕ್‌ ವಹಿವಾಟನ್ನು ತನಿಖೆಗೊಳಪಡಿಸಿದಾಗ ಪತ್ನಿ ಖಾತೆಗೆ ಕೋಟ್ಯಂತರ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ. ಮಂಜುಳ ಹೆಸರಿನಲ್ಲಿ ಬೇನಾಮಿ ಖಾತೆಗಳನ್ನು ತೆರೆದಿದ್ದ ನಾಗೇಂದ್ರ ಹಂತ ಹಂತವಾಗಿ ಸುಮಾರು 20 ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿದ್ದರೆಂಬ ಶಂಕೆ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. +ಹೈದರಾಬಾದ್‌ನ ಬಂಜಾರ ಹಿಲ್ಸ್ ನಲ್ಲಿರುವ ಆರ್‌ಎಲ್‌ವಿ ಬ್ಯಾಂಕ್‌ನಲ್ಲಿ ಬೇನಾಮಿ ಖಾತೆ ತೆರೆದು ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉಪಖಾತೆ ತೆರೆದು ಅಲ್ಲಿಂದ ಹಣವನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಇ.ಡಿ ತನಿಖಾ ತಂಡ ಹಣದ ಮೂಲಕ್ಕೆ ಕೈ ಹಾಕಿದ್ದು, ಮಂಜುಳಾ ಅವರಿಂದ ಮಾಹಿತಿ ಪಡೆಯುತ್ತಿದೆ. +ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ನಿವಾಸ, ಕಚೇರಿ ಸೇರಿದಂತೆ ಮತ್ತಿತರ ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಬಳ್ಳಾರಿ ಸೇರಿದಂತೆ ನಾಗೇಂದ್ರ ಒಡೆತನಕ್ಕೆ ಸೇರಿದ ಮನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಸುಮಾರು ಎರಡು ದಿನಗಳ ನಂತರ ಸುದೀರ್ಘ ವಿಚಾರಣೆ ಬಳಿಕ ನಾಗೇಂದ್ರ ಅವರನ್ನು ಇಡಿ ಬಂಧಿಸಿತ್ತು. +ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಇ.ಡಿ ತನ್ನ ವಶಕ್ಕೆ ಪಡೆದುಕೊಂಡಿದೆ. ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಸನಗೌಡ ದದ್ದಲ್‌ ಮೇಲೂ ದಾಳಿ ನಡೆಸಲಾಗಿತ್ತು. ಇದೀಗ ಇ.ಡಿ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್‌‍ ಜಾರಿ ಮಾಡಿದೆ. \ No newline at end of file diff --git a/eesanje/url_46_73_3.txt b/eesanje/url_46_73_3.txt new file mode 100644 index 0000000000000000000000000000000000000000..26cf082b19b0ca0e6985d9c872c3cda6e874f829 --- /dev/null +++ b/eesanje/url_46_73_3.txt @@ -0,0 +1,5 @@ +ವಿದೇಶದಲ್ಲಿ ಕೆಲಸಕ್ಕೆ ಹೋಗುವ ಮುನ್ನ ಏಜೆಂಟ್‌ಗಳ ನೈಜತೆ ಪರಿಶೀಲಿಸಿ : ಆರತಿ ಕೃಷ್ಣ +ಬೆಂಗಳೂರು, ಜು.17-ಹೊರ ದೇಶಗಳಲ್ಲಿ ಕೆಲಸಕ್ಕಾಗಿ ತೆರಳುವ ಮುನ್ನ ಏಜೆಂಟ್‌ಗಳ ನೈಜತೆ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರು ಸಲಹೆ ಮಾಡಿದ್ದಾರೆ. +ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಧಿಕೃತವಲ್ಲದ ಏಜೆಂಟ್‌ಗಳ ಮಾತಿಗೆ ಮರುಳಾಗಿ ಮೋಸ ಹೋಗಬಾರದು. ಅಧಿಕೃತ ಏಜೆಂಟ್‌ಗಳ ಇಲ್ಲವೇ ಸಂಬಂಧಿಸಿದ ಸರ್ಕಾರದ ಇಲಾಖೆಗಳ ಸಹಾಯ ಪಡೆಯುವಂತೆ ತಿಳಿಸಿದ್ದಾರೆ. +ರಾಮನಗರದ ನಿವಾಸಿ ಮೊಹಮದ್‌ ಅಶ್ಪಾಕ್‌ ಎಂಬುವರು ಸೌದಿ ಅರೇಬಿಯಾಕ್ಕೆ ಉದ್ಯೋಗಕ್ಕೆ ತೆರಳಿದ್ದು, ಅಲ್ಲಿ ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಅಶ್ಪಾಕ್‌ ಕುಟುಂಬದ ಮನವಿ ಮೇರೆಗೆ ನಮ ಸಮಿತಿಯು ಸೌದಿ ಅರೇಬಿಯದ ಭಾರತೀಯ ರಾಯಭಾರಿ ಕಚೇರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿತು. ಬಳಿಕ ಜೆದ್ದಾ ಕಾನ್ಸುಲ್‌ ಜನರಲ್‌ರನ್ನು ಸಂಪರ್ಕಿಸಿ ತ್ವರಿತವಾಗಿ ಎಕ್ಸಿಟ್‌ ಪಾಸ್‌‍ ದೊರೆಯುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದಾರೆ. +ಕೆ.ಎನ್‌.ಆರ್‌.ಐ.ಜೆಡ್ಡಾ ಕನ್ನಡ ಸಂಘವು ವಿಮಾನ ಟಿಕೆಟ್‌ ಮತ್ತು ಭಾರತಕ್ಕೆ ವಾಪಸ್ಸಾಗುವರೆಗೂ ಆದ ವೆಚ್ಚದ ನೆರವು ನೀಡಿದೆ. ಅನಿವಾಸಿ ಭಾರತಿಯ ಸಮಿತಿಯ ಸಕಾಲಿಕ ಪ್ರಯತ್ನದಿಂದ ಅಶ್ಪಾಕ್‌ ತಾಯ್ನಾಡಿಗೆ ಮರಳಿದ್ದಾರೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_46_73_4.txt b/eesanje/url_46_73_4.txt new file mode 100644 index 0000000000000000000000000000000000000000..2d1579be3e32ed8ef65777979c5f7e016b251d64 --- /dev/null +++ b/eesanje/url_46_73_4.txt @@ -0,0 +1,6 @@ +ಕರಾವಳಿಯಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ +ಬೆಂಗಳೂರು, ಜು.17-ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಇಂದು ಕೂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. +ಕರಾವಳಿ ಭಾಗದಲ್ಲಿ ಬಲವಾದ ಮೇಲೈ ಗಾಳಿಯೊಂದಿಗೆ ಅತ್ಯಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. +ಅಲ್ಲದೆ, ನಾಳೆಯಿಂದ ಜು.21ರವರೆಗೆ ಕರಾವಳಿ ಭಾಗದಲ್ಲಿ ಜೋರಾದ ಗಾಳಿ ಮತ್ತು ಮಳೆ ಮುಂದುವರೆಯಲಿದೆ. ಇಂದಿನಿಂದ ಜು.21ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಹವಾಮಾನ ಮುನ್ಸೂಚನೆಗಳಿವೆ. ಹೀಗಾಗಿ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. +ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆ ಇದೆ. ಆದರೆ, ಜುಲೈ 19ರಿಂದ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ(ಟ್ರಫ್‌) ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಕೆಲವೆಡೆ ಭಾರೀ ಮಳೆ ಹಾಗೂ ಮತ್ತೆ ಕೆಲವೆಡೆ ಹಗುರ ಇಲ್ಲವೇ ಸಾಧಾರಣ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಮುಂಗಾರು ಹಂಗಾಮಿನ ಬಿತ್ತನೆ ಸಂದರ್ಭದಲ್ಲಿ ನಿರಂತರ ಮಳೆಯಾಗುತ್ತಿರುವುದು ರೈತರಿಗೆ ಖುಷಿ ತಂದಿದೆ. ಮುಂಗಾರು ಬೆಳೆಗಳ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕಾಗಿವೆ. \ No newline at end of file diff --git a/eesanje/url_46_73_5.txt b/eesanje/url_46_73_5.txt new file mode 100644 index 0000000000000000000000000000000000000000..1c0d9e16f72d3ecfd3ae66d5c8e2085069c8873b --- /dev/null +++ b/eesanje/url_46_73_5.txt @@ -0,0 +1,7 @@ +110 ಅಡಿ ದಾಟಿದ ಕೆಆರ್‌ಎಸ್‌‍ ಜಲಾಶಯದ ನೀರಿನಮಟ್ಟ +ಬೆಂಗಳೂರು, ಜು.17-ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌‍ ಜಲಾಶಯಕ್ಕೆ ಒಂದೇ ದಿನ ಮೂರು ಅಡಿಯಷ್ಟು ನೀರು ಬಂದಿದ್ದು, ಇಂದು 110 ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗಿದೆ. +ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಕೆಆರ್‌ಎಸ್‌‍ ಜಲಾಶಯದ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ. ಇಂದು 36,674 ಕ್ಯೂಸೆಕ್‌ ಒಳಹರಿವು ಇತ್ತು. +ನಿನ್ನೆ 107.60 ಅಡಿ ಇದ್ದ ಕೆಆರ್‌ಎಸ್‌‍ ಜಲಾಶಯದ ನೀರಿನ ಮಟ್ಟವು ಇಂದು 110.60 ಅಡಿಗೆ ತಲುಪಿದೆ. ನಿನ್ನೆ ಕೆಆರ್‌ಎಸ್‌‍ ಜಲಾಶಯದಲ್ಲಿ 29.378 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಇಂದು 32.330 ಟಿಎಂಸಿ ಅಡಿಗೆ ಏರಿಕೆಯಾಗಿದೆ. +ಈ ಜಲಾಶಯದ ಗರಿಷ್ಠ ಮಟ್ಟ ಸಾಮರ್ಥ್ಯ 124.80 ಅಡಿ ಆಗಿದೆ. ಅಂದರೆ, ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಲಿದೆ. ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದರೂ ಹೊರ ಹರಿವು 2,361 ಕ್ಯೂಸೆಕ್‌ನಷ್ಟಿದೆ. +ಇದೆ ರೀತಿ ಕಾವೇರಿ ಕೊಳ್ಳದ ಹೇಮಾವತಿ, ಹಾರಂಗಿ ಹಾಗೂ ಕಬಿನಿ ಜಲಾಶಯಗಳಿಗೂ ಒಳ ಹರಿವು ಗಣನೀಯವಾಗಿ ಏರಿಕೆಯಾಗಿದೆ. ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಭರ್ತಿಯಾಗುವ ಸನಿಹದಲ್ಲಿವೆ. ಆದರೆ, ಒಳಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಿಂದ ಹೊರಕ್ಕೆ ನೀರನ್ನು ಬಿಡಲಾಗುತ್ತಿದೆ. +ಭಾರೀ ಮಳೆಯಾಗುತ್ತಿರುವ ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಎರಡೂ ಜಲಾಶಯಗಳಿಂದ ಹೆಚ್ಚಿನ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. \ No newline at end of file diff --git a/eesanje/url_46_73_6.txt b/eesanje/url_46_73_6.txt new file mode 100644 index 0000000000000000000000000000000000000000..dae29584d820a874c3848bbdd7c5483ea8519544 --- /dev/null +++ b/eesanje/url_46_73_6.txt @@ -0,0 +1,7 @@ +ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇಮಕದಲ್ಲಿ ಕರ್ನಾಟಕದ ಪ್ರಾತಿನಿಧ್ಯ ಕಡೆಗಣಿಸದಂತೆ ಮನವಿ +ಬೆಂಗಳೂರು, ಜು.17-ದೇಶದ ಇತರ ರಾಜ್ಯಗಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮಾಡುವಾಗ ಕರ್ನಾಟಕದ ಪ್ರಾತಿನಿಧ್ಯದ ಕೊರತೆ ನಿವಾರಿಸುವಂತೆ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಲ್ಲಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ ಮನವಿ ಮಾಡಿದ್ದಾರೆ. +ಹೈಕೋರ್ಟಿನ ಮುಖ್ಯ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಪರಿಶೀಲಿಸಿ ಅಸಮತೋಲನವನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೊಲಿಜಿಯಂನ ಮುಖ್ಯಸ್ಥರಾಗಿರುವ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಅವರಿಗೆ ರಂಗನಾಥ ಅವರು ಪತ್ರ ಬರೆದಿದ್ದಾರೆ. +ನ್ಯಾಯಾಧೀಶರ ನೇಮಕಾತಿಯು ಹೆಚ್ಚು ಪಾರದರ್ಶಕ ಮತ್ತು ಅಂತರ್ಗತ ಆಯ್ಕೆ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಕರ್ನಾಟಕ ಸೇರಿದಂತೆ ಇತರ ಕಡಿಮೆ ಪ್ರಾತಿನಿಧ್ಯವಿರುವ ಪ್ರದೇಶಗಳಿಂದ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಮತ್ತು ಉತ್ತೇಜಿಸಲು ಸಂಘಟಿತ ಪ್ರಯತ್ನವಿರಬೇಕು ಎಂದು ಭಾವಿಸುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. +ಭಾರತದಾದ್ಯಂತ ಇರುವ ಇತರ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆಯ ನೇಮಕಾತಿಯಲ್ಲಿ ಕರ್ನಾಟಕ ಹೈಕೋರ್ಟಿನ ನ್ಯಾಯಾಧೀಶರ ಪ್ರಾತಿನಿಧ್ಯ ಕಡಿಮೆ ಇರುವ ಬಗ್ಗೆ ಕಳವಳದೊಂದಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ. +ಕರ್ನಾಟಕ ಉಚ್ಚ ನ್ಯಾಯಾಲಯವು ಹಲವು ವರ್ಷಗಳಿಂದ ಹೆಚ್ಚು ಸಮರ್ಥ ಮತ್ತು ಅನುಭವಿ ನ್ಯಾಯಾಧೀಶರನ್ನು ಸೃಷ್ಟಿಸಿದೆ. ಅವರಲ್ಲಿ ಹಲವರು ತಮ್ಮ ಕಾನೂನು ಚಾತುರ್ಯ, ನ್ಯಾಯಾಂಗ ಮನೋಧರ್ಮ ಮತ್ತು ಸಂವಿಧಾನವನ್ನು ಎತ್ತಿಹಿಡಿಯುವ ಬದ್ಧತೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಆದರೂ, ಇತ್ತೀಚಿನ ವರ್ಷಗಳಲ್ಲಿ ಇತರ ರಾಜ್ಯಗಳ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿಯಾಗುವಾಗ ಕರ್ನಾಟಕದ ನ್ಯಾಯಾಧೀಶರನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. +ನ್ಯಾಯಾಂಗ ನೇಮಕಾತಿಗಳ ಪ್ರಕ್ರಿಯೆಯು ಹಿರಿತನ, ಅರ್ಹತೆ ಮತ್ತು ಪ್ರಾದೇಶಿಕ ಸಮತೋಲನದ ಪರಿಗಣನೆಗಳನ್ನು ಒಳಗೊಂಡಿರುವ ಒಂದು ಸಂಕೀರ್ಣ ಪ್ರಕ್ರಿಯೆಯಾಗಿದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ರಂಗನಾಥ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.. \ No newline at end of file diff --git a/eesanje/url_46_73_7.txt b/eesanje/url_46_73_7.txt new file mode 100644 index 0000000000000000000000000000000000000000..009593d28a3bd6f36a54ee1f876353d0ec7003d4 --- /dev/null +++ b/eesanje/url_46_73_7.txt @@ -0,0 +1,8 @@ +ಹಾಸನಾಂಬ ದರ್ಶನ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ +ಹಾಸನ ಜು.17-ಶ್ರೀ ಹಾಸನಾಂಬ ದೇವಾಲಯದ ಬಾಗಿಲನ್ನು ಅ.24 ಕ್ಕೆ ತೆರೆದು ನ.3 ರಂದು ಬಾಗಿಲು ಮುಚ್ಚಲಾಗುವುದು. ಜಾತ್ರಾ ಮಹೋತ್ಸವವು ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. +ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ 9 ದಿನಗಳು ಮಾತ್ರ ದೊರಕುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಡಿನಲ್ಲಿ ಸುಸ್ಸಜ್ಜಿತವಾದ ಸಿದ್ದತೆ ಮಾಡಿಕೊಳ್ಳುವುದರ ಜೊತೆಗೆ ಕಳೆದ ಬಾರಿ ಕಂಡು ಬಂದಿರುವ ಸಣ್ಣಪುಟ್ಟ ಲೋಪದೋಷಗಳನ್ನು ಗಮನಿಸಿ ಸರಿಪಡಿಸಲು ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಿದರು. +ಕುಡಿಯುವ ನೀರು, ವಿದ್ಯುತ್‌ ದೀಪಾಲಂಕಾರ, ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತಿತರೆ ಅಗತ್ಯವಿರುವ ಎಲ್ಲಾ ಸಿದ್ದತೆಗಾಗಿ ಒಂದು ವಾರದೊಳಗೆ ಟೆಂಡರ್‌ ಕರೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಾತ್ರಾ ಸಂದರ್ಭದಲ್ಲಿ ಸ್ವಚ್ಚತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಹೆಚ್ಚು ಜನಸಂದಣಿ ಇರುವ ಕಾರಣ ಶೌಚಾಲಯ ನಿರ್ವಹಣೆ ಬಹಳ ಅಚ್ಚುಕಟ್ಟಾಗಿ ಆಗಬೇಕು ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು. +ಯಾವುದೇ ಅವಘಡಗಳಿಗೆ ಆಸ್ಪದವಿಲ್ಲದಂತೆ ದೇವಸ್ಥಾನದ ಸುತ್ತ ಇರುವ ವಿದ್ಯುತ್‌ ಲೈನ್‌ ಅನ್ನು ಅಂಡರ್‌ ಗ್ರೌಂಡ್‌ ಕೇಬಲ್‌ ಅಳವಡಿಸಲು ಚೆಸ್ಕಾಂ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರಲ್ಲದೆ, ಸುರಕ್ಷತಾ ಕ್ರಮಗಳನ್ನು ಕೈಗೊಂಡು ಜಾತ್ರಾ ಸಂದರ್ಭದಲ್ಲಿ ವಿದ್ಯುತ್‌ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ನಿರ್ವಹಿಸುವಂತೆ ನಿರ್ದೇಶನ ನೀಡಿದರು. +ಆನ್‌ಲೈನ್‌ ಬುಕ್ಕಿಂಗ್‌ :ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಈ ಬಾರಿ ಆನ್‌ ಲೈನ್‌ ಬುಕಿಂಗ್‌ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು. ಹೂವಿನ ಅಲಂಕಾರವನ್ನು ಕಳೆದ ಬಾರಿಗಿಂತ ವಿಭಿನ್ನವಾಗಿ ಮಾಡಿಸಲು ಪ್ರಯತ್ನಿಸಿ ಎಂದು ತಿಳಿಸಿದರು. +ಪ್ಯಾಕೇಜ್‌ ಟೂರ್‌ :ಪ್ರವಾಸಿಗರು ಹಾಸನ ಜಿಲ್ಲೆಯಲ್ಲಿರುವ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ಅನುಕೂಲವಾಗುವಂತೆ ಕೆ.ಎಸ್‌‍.ಆರ್‌.ಟಿ.ಸಿ. ಬಸ್‌‍ಗಳಲ್ಲಿ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ಯಾರ ಮೋಟರಿಂಗ್‌, ಪ್ಯಾರ ಗ್ಲೈಡಿಂಗ್‌ ಹಾಗೂ ಹಾಸನ ಬೈ ಸ್ಕೈ ಆಯೋಜನೆಗೆ ಕ್ರಮ ವಹಿಸಿ ಎಂದು ತಿಳಿಸಿದರಲ್ಲದೆ, ಚನ್ನಪಟ್ಟಣ ಕೆರೆ ಅಂಗಳದಲ್ಲಿ ನಿರ್ಮಿಸಿರುವ ವಿಹಾರ ಧಾಮದಲ್ಲಿ ಬೋಟಿಂಗ್‌ ವ್ಯವಸ್ಥೆಗೆ ಕೂಡ ನಿಗಾ ವಹಿಸಲು ಸೂಚಿಸಿದರು. +ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೆಡಾಕೂಟ ಆಯೋಜನೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ನಗರದ ರಸ್ತೆಗಳ ಗುಂಡಿ ಮುಚ್ಚುವುದು ಹಾಗೂ ಸ್ವಚ್ಚತೆಗೆ ಗಮನ ಹರಿಸುವಂತೆ ನಗರ ಸಭೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್‌. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಚೆಸ್ಕಾಂ ಸೂಪರಿಟೆಂಡೆಂಟ್‌ ಇಂಜಿನಿಯರ್‌ ಎಂ.ಕೆ.ಸೋಮಶೇಖರ್‌, ಉಪ ವಿಭಾಗಾಧಿಕಾರಿ ಮಾರುತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಎ.ಜಗದೀಶ್‌ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_46_73_8.txt b/eesanje/url_46_73_8.txt new file mode 100644 index 0000000000000000000000000000000000000000..08bdc3edbb39090533e1e14a3f41892b47987373 --- /dev/null +++ b/eesanje/url_46_73_8.txt @@ -0,0 +1,8 @@ +ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಚಿಂತನೆ +ಬೆಂಗಳೂರು,ಜು.16-ಕರ್ನಾಟಕದ ಮದರಸಾ ಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರ ಅಲ್ಲಿಯೂ ಕನ್ನಡ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ. ಇನ್ನು ಮುಂದೆ ರಾಜ್ಯದ ಮದರಸಾಗಳಲ್ಲಿ ಕಡ್ಡಾಯ ವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ. +ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. +ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ. ಮದರಸಾಗಳಲ್ಲಿ ರಾಮನ ಕುರಿತು ಅಧ್ಯಯನ ಉತ್ತರಾಖಂಡದ ಮದರಸಾ ಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. +ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದು ಧಾರ್ಮಿಕ ಸೌಹಾರ್ದತೆಯ ಸಂಕೇತವೂ ಆಗಿದೆ ಎನ್ನಲಾಗುತ್ತಿದೆ. +ಈ ಕುರಿತು ಉತ್ತರಾಖಂಡ ವಕ್ಸ್ ಫ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸೌ ಅವರೇ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದ್ದರು. ಮದರಸಾ ಆಧುನೀಕರಣ ಯೋಜನೆಯ ಭಾಗವಾಗಿ ಇನ್ನು ಮುಂದೆ ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತ ಪಠ್ಯಗಳನ್ನು ಅಳವಡಿಸಿಕೊಳ್ಳ ಲಾಗುತ್ತದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರವಾದಿ ಮೊಹಮದರ ಜತೆಗೆ ಶ್ರೀರಾಮನ ಕುರಿತು ಕೂಡ ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದ್ದರು. +ಶಾದಾಬ್ ಶಾಮ್ಸೌ ಅವರು ಬಿಜೆಪಿ ಮುಖಂಡರೂ ಆಗಿದ್ದು, ಅವರು ಮದರಸಾಗಳಲ್ಲಿ ಬೋಧನೆ ಮಾಡುವ ಮೌಲ್ವಿಗಳನ್ನೂ ಒಪ್ಪಿಸಿದ್ದಾರೆ. ಧರ್ಮ, ಜಾತಿಯ ಸಂಕೋಲೆಗಳು ಇಲ್ಲದೆಯೇ ರಾಮನನ್ನು ಆರಾಧಿಸಬಹುದು. ಆತನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಮನೋಭಾವದಿಂದ ಶಾದಾಬ್‌ ಶಾಮ್ಸೌ ಈ ನಿರ್ಧಾರ ತೆಗೆದುಕೊಂಡಿದ್ದಾರೆ. +ಉತ್ತರಾಖಂಡದ ವಕ್ಸ್ ಫ ಬೋರ್ಡ್‌ ವ್ಯಾಪ್ತಿಗೆ ಸುಮಾರು 117 ಮದರಸಾಗಳು ಬರುತ್ತವೆ. ಡೆಹ್ರಾಡೂನ್‌, ಹರಿದ್ವಾರ, ಉಧಾಮ್‌ ಸಿಂಗ್‌ ನಗರ ಹಾಗೂ ನೈನಿತಾಲ್‌ ಜಿಲ್ಲೆ ಸೇರಿ ಹಲವೆಡೆ ವಕ್ಸ್ ಫ ಬೋರ್ಡ್‌ ವ್ಯಾಪ್ತಿಯ ಮದರಸಾಗಳಲ್ಲಿ ರಾಮನ ಕುರಿತ ಅಧ್ಯಾಯಗಳನ್ನು ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_73_9.txt b/eesanje/url_46_73_9.txt new file mode 100644 index 0000000000000000000000000000000000000000..975603a70f2eece41ce742bd8fb62f8324be9133 --- /dev/null +++ b/eesanje/url_46_73_9.txt @@ -0,0 +1,12 @@ +ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರೇ ಇಲ್ಲ +ಬೆಂಗಳೂರು,ಜು.16-ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭಗೊಂಡಿದ್ದು, ವಿಧಾನ ಪರಿಷತ್ತಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೆ ಯಾವುದೇ ಹೆಸರನ್ನು ಅಂತಿಮ ಗೊಳಿಸದ ಕಾರಣ ವಿರೋಧ ಪಕ್ಷದ ನಾಯಕರೇ ಇಲ್ಲದೇ ಬಿಜೆಪಿ ಭಾಗಿಯಾಗುವಂತಾಗಿದೆ. +ವಿರೋಧ ಪಕ್ಷದ ನಾಯಕನ ಆಸನ ಖಾಲಿಯಿಟ್ಟು ಕೇಸರಿ ಪಡೆ ಸದನದಲ್ಲಿ ಹಾಜರಾಗಿದ್ದು, ಯಾರ ನಾಯಕತ್ವದಲ್ಲಿ ಮುನ್ನಡೆಯಬೇಕು ಎನ್ನುವ ಗೊಂದಲದಲ್ಲೇ ಸದಸ್ಯರು ಕಲಾಪದಲ್ಲಿ ಮುಂದುವರೆಯುವ ಅನಿವಾರ್ಯತೆ ಸೃಷ್ಟಿಯಾಗಿದೆ. +ವಿರೋಧಪಕ್ಷ ನಾಯಕ ಸ್ಥಾನದ ಹುದ್ದೆ ಖಾಲಿ ಇರುವುದರಿಂದ ಮೊದಲ ದಿನದ ಕಲಾಪ ದಲ್ಲಿಯೇ ಇದರ ಪರಿಣಾಮ ಬಿಜೆಪಿಗೆ ತಟ್ಟಿದೆ. ನಿಲುವಳಿ ಸೂಚನೆ ಮಂಡನೆ, ಪ್ರಶ್ನೋತ್ತರ ಕಲಾಪದಲ್ಲಿ ಉಪ ಪ್ರಶ್ನೆಗಳಿಗೆ ಸಾಥ್‌ ಕೊರತೆ, ಸಭಾಪತಿಗಳ ಮೂಲಕ ಸರ್ಕಾರಕ್ಕೆ ಚಾಟಿ ಬೀಸುವ ಅವಕಾಶವನ್ನು ತಪ್ಪಿಸಿಕೊಂಡಿತು. +ವಿರೋಧ ಪಕ್ಷದ ನಾಯಕರು ಯಾವಾಗ ಎದ್ದು ನಿಂತರೂ ಅವರು ಮಾತನಾಡಲು ಅವಕಾಶ ಕೊಡಲಾಗುತ್ತದೆ. ಆದರೆ ಈಗ ಆ ಸ್ಥಾನ ಖಾಲಿ ಇರುವ ಕಾರಣ ಬಿಜೆಪಿ ಸದಸ್ಯರು ಅಗತ್ಯ ಬಿದ್ದಾಗಲೆಲ್ಲಾ ಮಧ್ಯಪ್ರವೇಶ ಮಾಡಿ ಸರ್ಕಾರವನ್ನು ಟೀಕಿಸುವ ಅವಕಾಶ ಕಳೆದುಕೊಂಡಿದ್ದಾರೆ. +ಇದು ಒಂದು ರೀತಿಯಲ್ಲಿ ಸರ್ಕಾರಕ್ಕೆ ಧನಾತಕವಾದ ಅಂಶವಾಗಿದೆ. ಆಡಳಿತ ಪಕ್ಷದ ಚರ್ಚೆಯ ಬೇಡಿಕೆಗೆ ವಿರೋಧ ವ್ಯಕ್ತಪಡಿಸಲು ವಿರೋಧ ಪಕ್ಷದ ನಾಯಕರಿಲ್ಲದ ಕಾರಣ ಆಡಳಿತ ಪಕ್ಷಕ್ಕೆ ಕೆಲವೊಂದು ವಿಷಯ ಆಕ್ಷೇಪಣೆ ಯಿಲ್ಲದೆ ಅರ್ಧ ಗಂಟೆ ಚರ್ಚೆಗೆ ಅವಕಾಶ ಪಡೆದುಕೊಳ್ಳಲು ಸಾಧ್ಯವಾಯಿತು. +ಭಾನುವಾರ ರಾತ್ರಿ ವೇಳೆಗೆ ಹೈಕಮಾಂಡ್‌ನಿಂದ ವಿರೋಧ ಪಕ್ಷದ ನಾಯಕರ ಹೆಸರು ಪ್ರಕಟವಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ, ಬೆಳಗ್ಗೆ ಕಲಾಪ ಶುರುವಾದರೂ ಹೈಕಮಾಂಡ್‌ ಕಡೆಯಿಂದ ಯಾವುದೇ ಸಂದೇಶ ಬಾರದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲದೆ ಬಿಜೆಪಿ ಸದನಕ್ಕೆ ಹಾಜರಾಗುವಂತಾಗಿದೆ. +ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಸಂಸತ್‌ ಸದಸ್ಯರಾಗಿ ಆಯ್ಕೆಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆ, ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕನ ಸ್ಥಾನ ತೆರವಾಗಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರ ನೇಮಕ ಮಾಡಲು ಬಿಜೆಪಿ ಮತ್ತೆ ವಿಳಂಬ ಮಾಡುತ್ತಿದೆ.ವರ್ಷದ ಹಿಂದೆಯೂ ಈ ಸ್ಥಾನವನ್ನು ಖಾಲಿಯಾಗಿಟ್ಟೇ ಎರಡು ಅಧಿವೇಶನ ಮುಗಿಸಿದ್ದ ಬಿಜೆಪಿ, ಈಗ ಮತ್ತೊಮೆ ಅಂತಹದ್ದೇ ಸ್ಥಿತಿ ಎದುರಿಸುವಂತಾಗಿದೆ. +2023ರ ಮೇ ತಿಂಗಳಿನಲ್ಲಿಯೇ ಕಾಂಗ್ರೆಸ್‌‍ ಸರ್ಕಾರ ರಚಿಸಿದರೂ ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲು ಆರು ತಿಂಗಳು ಬೇಕಾಯಿತು. ಡಿಸೆಂಬರ್‌ನಲ್ಲಿ ವಿಧಾನಪರಿಷತ್‌ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡಿತು. ಇದೀಗ ಮತ್ತೆ ಹೊಸ ಪ್ರತಿಪಕ್ಷ ನಾಯಕರ ತಲಾಶ್‌ನಲ್ಲಿ ಬಿಜೆಪಿ ಹೈಕಮಾಂಡ್‌ ನಿರತವಾಗಿದೆ. ಸದ್ಯ ಪರಿಷತ್‌ ಪ್ರತಿಪಕ್ಷದ ಸಚೇತಕರಾಗಿರುವ ರವಿಕುಮಾರ್‌ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅನುಭವಿ, ಉತ್ತಮ್ಮ ಸಂಘಟಕ, ಪಕ್ಷಕ್ಕೆ ಸಲ್ಲಿಸಿರುವ ಸೇವೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯೂ ಆಗಿರುವ ಹಿನ್ನೆಲೆಯಲ್ಲಿ ರವಿಕುಮಾರ್‌ ಅವರನ್ನೇ ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. +ಉತ್ಸಾಹದಲ್ಲಿ ಸಿ.ಟಿ.ರವಿ: ಸಿ.ಟಿ.ರವಿ ಉತ್ತಮ್ಮ ವಾಗಿ, ಪಕ್ಷದ ನಿಷ್ಟಾವಂತ ಕಾರ್ಯ ಕರ್ತ. ಯಡಿಯೂರಪ್ಪ ಸಂಪುಟದಲ್ಲಿದ್ದಾಗ ಸಂಘಟನೆಗೆ ಬರುವಂತೆ ಪಕ್ಷ ನೀಡಿದ್ದ ನಿರ್ದೇಶನವನ್ನು ಪಾಲಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ವಹಿಸಿಕೊಂಡಿದ್ದವರು. +ಪಕ್ಷದ ಶಿಸ್ತಿನ ಸಿಪಾಯಿ, ಕ್ರಿಯಾಶೀಲತೆ, ರಾಜಕೀಯ ಅನುಭವದ ಆಧಾರದಲ್ಲಿ ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸುವ ಚಾಕಚಕ್ಯತೆ ಇರುವ ಹಿನ್ನೆಲೆ ಸಿ. ಟಿ ರವಿ ಬಿಜೆಪಿಗೆ ಉತ್ತಮ್ಮ ಆಯ್ಕೆ. ಆದರೆ ಉಭಯ ಸದನಗಳಲ್ಲಿಯೂ ಒಕ್ಕಲಿಗ ಸಮುದಾಯಕ್ಕೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲು ಕಷ್ಟಸಾಧ್ಯವಾಗಿರುವ ಹಿನ್ನೆಲೆ ಸದ್ಯದ ಮಟ್ಟಿಗೆ ಸಿ.ಟಿ.ರವಿಗೆ ಅವಕಾಶ ಸಿಗುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ. +ಆದರೂ ಹೈಕಮಾಂಡ್‌ ನಿರ್ಧಾರದ ಮೇಲೆ ಎಲ್ಲವೂ ನಿಂತಿದೆ. ಸದ್ಯ ಸದನಕ್ಕೆ ಉತ್ಸಾಹದಲ್ಲಿ ಭಾಗಿಯಾಗಿರುವ ಸಿ ಟಿ ರವಿ, ಬಿಜೆಪಿ ಪರ ಗಟ್ಟಿ ದನಿಯಾಗಿ ಮಾತನಾಡುತ್ತಿ ದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ರಾಧಾಮೋಹನ್‌ ದಾಸ್‌‍ ಅಗರ್ವಾಲ್‌ ನೇಮಕಗೊಂಡ ನಂತರ ಮೊದಲ ಕಾರ್ಯಕಾರಿಣಿ ಪೂರ್ಣಗೊಂಡಿದ್ದು, ನಂತರ ನಡೆದ ಅನೌಪಚಾರಿಕ ಸಭೆಯಲ್ಲಿ ಪರಿಷತ್‌ ಪ್ರತಿಪಕ್ಷ ನಾಯಕರ ಆಯ್ಕೆ ವಿಷಯದ ಕುರಿತು ಚರ್ಚೆಯಾಗಿದೆ. ಆಕಾಂಕ್ಷಿಗಳ ಪಟ್ಟಿಯೊಂದಿಗೆ ಅಗರ್ವಾಲ್‌ ದೆಹಲಿಗೆ ತೆರಳಿದ್ದು, ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಯಾಗಿದೆ. \ No newline at end of file diff --git a/eesanje/url_46_74_1.txt b/eesanje/url_46_74_1.txt new file mode 100644 index 0000000000000000000000000000000000000000..614ef3694012f893b7210216402b0a469696025a --- /dev/null +++ b/eesanje/url_46_74_1.txt @@ -0,0 +1,10 @@ +ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ : ವಿಧಾನಸಭೆಯಲ್ಲಿ ರೇವಣ್ಣ ಆಕ್ರೋಶ +ಬೆಂಗಳೂರು,ಜು.16-ಹಾಸನದ ಪೆನ್‌ಡ್ರೈವ್‌ ಪ್ರಕರಣ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ್ದು, ವಾದ-ಪ್ರತಿವಾದಗಳಿಂದಾಗಿ ಕಾವೇರಿದ ವಾತಾವರಣ ನಿರ್ಮಾಣವಾಯಿತು. ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ರವರು ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮಗಳ ಕುರಿತು ಚರ್ಚೆ ಮಾಡುವ ವೇಳೆಯಲ್ಲಿ ರಾಜ್ಯಸರ್ಕಾರ ರಚಿಸಿರುವ ಎಸ್‌‍ಐಟಿ ತನಿಖೆಯ ತಾರತಮ್ಯವನ್ನು ಪ್ರಸ್ತಾಪಿಸಿದರು. +ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ತನಿಖೆ ನಡೆಸುತ್ತಿರುವ ಎಸ್‌‍ಐಟಿ ತಂಡ ಎಫ್‌ಐಆರ್‌ ದಾಖಲಾಗಿ 40 ದಿನಗಳಾದರೂ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರನ್ನು ವಿಚಾರಣೆಗೆ ಕರೆಯುವುದಿಲ್ಲ. ಅದೇ ರೀತಿ ರೇವಣ್ಣನ ಮಗ ಮಾಡಿದ ತಪ್ಪಿಗೆ ರೇವಣ್ಣ ಅವರನ್ನು ಬಂಧಿಸಿ ಜೈಲಿಗೆ ಹಾಕಲಾಯಿತು. ಬೆಂಗಳೂರು, ಹಾಸನ, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ತಲಾ 20 ಮಂದಿ ಪೊಲೀಸರ ತಂಡಗಳನ್ನು ನಿಯೋಜಿಸಲಾಗಿತ್ತು. +ರೇವಣ್ಣ ಅವರ ಪತ್ನಿ ಭವಾನಿಯವರ ಬಂಧನಕ್ಕೂ ಪ್ರಯತ್ನಿಸಲಾಯಿತು. ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡರು. ನಮ್ಮ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಬಂಧಿಸುವ ಯತ್ನಗಳಾದವು. ಎಸ್‌‍ಐಟಿ ಅಧಿಕಾರಿಗಳ ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದರು. ಮಧ್ಯಪ್ರವೇಶಿಸಿದ ಜೆಡಿಎಸ್‌‍ನ ಹಿರಿಯ ಶಾಸಕರೂ ಆಗಿರುವ ಎಚ್‌.ಡಿ.ರೇವಣ್ಣ, ವಿರೋಧಪಕ್ಷದ ನಾಯಕರು ನನ್ನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಸ್ಪಷ್ಟನೆ ನೀಡಲು ನನಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದರು. +ಜೆಡಿಎಸ್‌‍ನ ಶಾಸಕ ಕೃಷ್ಣಪ್ಪ ಅವರು, ರೇವಣ್ಣ ಅವರ ಪುತ್ರ ತಪ್ಪು ಮಾಡಿದ್ದಾರೆ ಎಂದು ಹೇಳುವುದು ಸರಿಯಲ್ಲ. ಅದನ್ನು ನ್ಯಾಯಾಲಯ ತೀರ್ಮಾನ ಮಾಡುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಆರ್‌.ಅಶೋಕ್‌ ಅವರು ತಮ್ಮ ಹೇಳಿಕೆಯನ್ನು ಸರಿಪಡಿಸಿಕೊಳ್ಳುವುದಾಗಿ ಹೇಳಿದರು. +ಚರ್ಚೆಯ ನಡುವೆ ಪದೇಪದೇ ವಿಷಯ ಪ್ರಸ್ತಾಪವಾದಾಗ ಕಾಂಗ್ರೆಸ್‌‍ನ ಶಾಸಕ ರಿಜ್ವಾನ್‌ ಹರ್ಷದ್‌, ಎರಡು ಎಸ್‌‍ಐಟಿ ತಂಡಗಳ ನಡುವೆ ಪದೇ ಪದೇ ಹೋಲಿಕೆ ಮಾಡಿ ಮಾತನಾಡುತ್ತಿರುವುದು ಏಕೆ?, ನೂರಾರು ಮಹಿಳೆಯರ ಮಾನಹರಣವಾಗಿರುವ ಪ್ರಕರಣ ವಾಲ್ಮೀಕಿ ಹಗರಣಕ್ಕಿಂತಲೂ ಕಡಿಮೆ ಎಂಬ ಧೋರಣೆಯೇ?, ಮಹಿಳೆಯರ ಮಾನಕ್ಕೆ ಬೆಲೆ ಇಲ್ಲವೇ? ಎಂದು ಆಕ್ಷೇಪ ವ್ಯಕ್ತಪಡಿಸಿದರು. +ಕಾಂಗ್ರೆಸ್‌‍ನ ಶಾಸಕ ನಾರಾಯಣ ಸ್ವಾಮಿಯವರು ಮಧ್ಯಪ್ರವೇಶ ಮಾಡಿ ಹಣ ಹೋದರೆ ಬರುತ್ತದೆ, ಮಾನ ಹೋದರೆ ಬರುತ್ತದೆಯೇ? ಎಂದು ಪ್ರಶ್ನಿಸಿದರು.ಸಿಟ್ಟಾದ ರೇವಣ್ಣ ಅವರು ನಿಮ ಬಂಡವಾಳ ಗೊತ್ತಿದೆ, ಕುಳಿತುಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕೃಷ್ಣಪ್ಪ, ನೀವೆಲ್ಲಾ ಶ್ರೀರಾಮಚಂದ್ರರು ಎಂದು ಕಾಂಗ್ರೆಸ್ಸಿಗರನ್ನು ಮೂದಲಿಸಿದರು.ಅವಕಾಶ ಪಡೆದುಕೊಂಡು ಸ್ಪಷ್ಟನೆ ನೀಡಿದ ರೇವಣ್ಣ ಅವರು, ನನಗೆ ಕಾಂಗ್ರೆಸ್‌‍ ಶಾಸಕರಂತೆ ವಾದ ಮಾಡುವಷ್ಟು ಶಕ್ತಿ ಇಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ, ನಾನು ಯಾರ ಪರವಾಗಿಯೂ ವಹಿಸಿಕೊಂಡು ಮಾತನಾಡುತ್ತಿಲ್ಲ. 40 ವರ್ಷ ಸಾರ್ವಜನಿಕ ಜೀವನದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಹೆಣ್ಣು ಮಗಳೊಬ್ಬಳನ್ನು ಪೊಲೀಸ್‌‍ ಮಹಾನಿರ್ದೇಶಕರ ಕಚೇರಿಗೆ ಕರೆಸಿಕೊಂಡು ದೂರು ಬರೆಸಿಕೊಂಡಿದ್ದಾರೆ. ಇಂತಹ ವ್ಯಕ್ತಿ ಪೊಲೀಸ್‌‍ ಮಹಾನಿರ್ದೇಶಕನಾಗಲು ಅನರ್ಹ. ಮೂರೂ ಬಿಟ್ಟು ನೀತಿಗೆಟ್ಟ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. +ಈ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಾಳಯದಿಂದ ಆಕ್ಷೇಪಗಳು ವ್ಯಕ್ತವಾದವು. ಸಚಿವ ಪ್ರಿಯಾಂಕ ಖರ್ಗೆ ಸಂತ್ರಸ್ತರ ದೂರು ತೆಗೆದುಕೊಳ್ಳುವುದು ತಪ್ಪೇ? ಎಂದು ಪ್ರಶ್ನಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ರೇವಣ್ಣ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. ಅವರಿಗೆ ಅನ್ಯಾಯವಾಗಿದ್ದರೆ ಪ್ರತ್ಯೇಕವಾಗಿ ನೋಟೀಸ್‌‍ ಕೊಡಲಿ, ಚರ್ಚೆಗೆ ಅವಕಾಶ ಮಾಡಿಕೊಡಿ ಎಂದು ಸಲಹೆ ಮಾಡಿದರು. +ನಾನು ನೋಟೀಸ್‌‍ ಕೊಡುತ್ತೇನೆ ಎಂದು ರೇವಣ್ಣ ಪ್ರತ್ಯುತ್ತರಿಸಿದರು. ಈ ನಡುವೆ ಕಾಂಗ್ರೆಸ್‌‍ ಶಾಸಕ ಪೊನ್ನಣ್ಣ ಸ್ಪಷ್ಟನೆ ನೀಡಲು ಬಯಸಿದರಾದರೂ ಸಭಾಧ್ಯಕ್ಷರು ಅವಕಾಶ ಕೊಡಲಿಲ್ಲ.ಒಟ್ಟಾರೆ ಪೆನ್‌ಡ್ರೈವ್‌ ಪ್ರಕರಣ ಕಲಾಪದಲ್ಲಿ ಕೆಲಕಾಲ ಕಾವೇರಿದ ಚರ್ಚೆಗೆ ಗ್ರಾಸವಾಯಿತು. \ No newline at end of file diff --git a/eesanje/url_46_74_10.txt b/eesanje/url_46_74_10.txt new file mode 100644 index 0000000000000000000000000000000000000000..51a47620adb5269e9db72e02f666ced58a8d987e --- /dev/null +++ b/eesanje/url_46_74_10.txt @@ -0,0 +1,8 @@ +ಹಾಲಿನ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ : ಸಚಿವ ಕೆ.ವೆಂಕಟೇಶ್ +ಬೆಂಗಳೂರು,ಜು.16-ಬಾಕಿ ಇರುವ ಹಾಲಿನ ಪ್ರೋತ್ಸಾಹಧನವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪಶು ಸಂಗೋಪನಾ ಖಾತೆ ಸಚಿವ ಕೆ.ವೆಂಕಟೇಶ್ ಆಶ್ವಾಸನೆ ನೀಡಿದರು. +ವಿಧಾನಪರಿಷತ್ನಲ್ಲಿ ಸದಸ್ಯ ಹನುಮಂತ ನಿರಾಣಿಯವರು ಬಾಗಲಕೋಟೆ , ವಿಜಾಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸುಮಾರು 31 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಗಮನಸೆಳೆದರು. +ಈ ವೇಳೆ ಸಚಿವ ರಾಜಣ್ಣ ಉತ್ತರಿಸಲು ಮುಂದಾದಾಗ ಮಧ್ಯಪ್ರವೇಶಿಸಿದ ವೆಂಕಟೇಶ್ ಅವರು, ಬಾಕಿ ಇರುವ ಹಾಲಿನ ಪ್ರೋತ್ಸಾಹಧನ ನಮ್ಮ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿಸಿಕೊಳ್ಳಲಾಗಿತ್ತು. ಸುಮಾರು 700 ಕೋಟಿ ಬಾಕಿ ಇತ್ತು. ನಮ್ಮ ಸರ್ಕಾರ 200 ಕೋಟಿ ಸಹಾಯಧನವನ್ನು ಬಿಡುಗಡೆ ಮಾಡಿದೆ ಎಂದರು. +ಇದಕ್ಕೆ ಆಕ್ಷೇಪಿಸಿದ ಬಿಜೆಪಿ ಸದಸ್ಯರು, ಇಲ್ಲಿ ಯಾವ ಪಕ್ಷದ ಸರ್ಕಾರ ಇದೆ ಎಂಬುದು ಮುಖ್ಯವಲ್ಲ. ಮೊದಲು ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಿ. ಹಿಂದೆ ನಿಮ ಸರ್ಕಾರದ ಅವಧಿಯಲ್ಲಿ ಬಾಕಿ ಇರಲಿಲ್ಲವೇ? ರೈತರಿಗೇಕೆ ಇಂತಹ ಪಕ್ಷಪಾತ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು. +ಆಗ ಸಚಿವ ರಾಜಣ್ಣ ಇದು ನಿರಂತರವಾದ ಪ್ರಕ್ರಿಯೆ. ಎಲ್ಲಾ ಸರ್ಕಾರಗಳು ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಬೇಕು. ಇದರಲ್ಲಿ ಯಾವ ಸರ್ಕಾರ ಎಂಬುದು ಮುಖ್ಯವಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಇದ್ದ ಕಾರಣ ವಿಳಂಬವಾಗಿದೆ. ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು. +ಆದಷ್ಟು ಬೇಗ ಕ್ರಮ:ಕಾಂಗ್ರೆಸ್ ಸದಸ್ಯ ಎಸ್.ರವಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ರಾಜಣ್ಣ, ಸಾಲ ಮನ್ನಾ ಯೋಜನೆಯಡಿ ಸಹಕಾರಿ ಬ್ಯಾಂಕ್ಗಳಿಗೆ ಆದಷ್ಟು ಬೇಗ ಹಣವನ್ನು ಪಾವತಿ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. +ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 50 ಸಾವಿರ ರೂ.ವರೆಗೆ ರೈತರ ಸಾಲ ಮನ್ನ ಮಾಡಲಾಗಿತ್ತು. ಇದರಿಂದ ಸಹಕಾರಿ ಬ್ಯಾಂಕ್ಗಳಿಗೆ ಹಣವನ್ನು ಕೆಲವು ಗೊಂದಲಗಳಿಂದ ಪಾವತಿಯಾಗಿಲ್ಲ. ಆದಷ್ಟು ಶೀಘ್ರ ಹಣ ಪಾವತಿಸುವುದಾಗಿ ತಿಳಿಸಿದರು. \ No newline at end of file diff --git a/eesanje/url_46_74_11.txt b/eesanje/url_46_74_11.txt new file mode 100644 index 0000000000000000000000000000000000000000..2d7e9a9332e21031703366d3af30034834c70065 --- /dev/null +++ b/eesanje/url_46_74_11.txt @@ -0,0 +1,14 @@ +ವಾಲ್ಮೀಕಿ, ಮುಡಾ ಹಗರಣ : ವಿಧಾನಸಭೆಯಲ್ಲಿ ವಾಕ್ಸಮರ, ಕೋಲಾಹಲ +ಬೆಂಗಳೂರು,ಜು.16-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದ ಚರ್ಚೆಗೂ ಮುನ್ನ ಭ್ರಷ್ಟಾಚಾರದ ಕುರಿತಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಗ್ವಾದ ನಡೆದು ಗದ್ದಲ ತೀವ್ರಗೊಂಡು ಕಲಾಪವನ್ನು ಕೆಲಕಾಲ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. +ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಯ ಬಳಿಕ ಸಭಾಧ್ಯಕ್ಷರು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕುರಿತಂತೆ ನಿನ್ನೆಯಿಂದ ನಡೆಯುತ್ತಿರುವ ಚರ್ಚೆಯನ್ನು ಮುಂದುವರೆಸಲು ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಸೂಚನೆ ನೀಡಿದರು. +ಆರ್.ಅಶೋಕ್ರವರು ಮಾತನಾಡಲು ಎದ್ದು ನಿಂತಾಗ ಟ್ರಜರಿ ಬೆಂಚ್ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಮಾತ್ರ ಇದ್ದರು. ಆರ್ಥಿಕ ಇಲಾಖೆಯ ಅಧಿಕಾರಿಗಳು ಸದನದಲ್ಲಿಲ್ಲ. ನಾವು ಹೇಳುವುದನ್ನುದಾಖಲಿಸಿಕೊಳ್ಳುವವರು ಯಾರು? ಎಂದು ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದರು. +ಇದಕ್ಕೆ ಬಿಜೆಪಿಯ ಅಶ್ವತ್ಥನಾರಾಯಣ, ಸುರೇಶ್ಕುಮಾರ್ ಬೆಂಬಲ ವ್ಯಕ್ತಪಡಿಸಿದರು. ಈ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಐಡಿಯ ಹಿರಿಯ ಅಧಿಕಾರಿಗಳು ಸದನದ ಒಳಗೆ ಬಂದರು.ಆದರೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿಲ್ಲದೇ ಇರುವುದನ್ನು ವಿಪಕ್ಷಗಳ ನಾಯಕರು ಪ್ರಧಾನವಾಗಿ ಪ್ರಸ್ತಾಪಿಸಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಖುದ್ದು ಮುಖ್ಯಮಂತ್ರಿಯವರೇ ಇರಬೇಕು. ಕನಿಷ್ಠ ಪಕ್ಷ ಆರ್ಥಿಕ ಇಲಾಖೆಯ ಅಧಿಕಾರಿಗಳಾದರೂ ಹಾಜರಿರಬೇಕು ಎಂದು ಪಟ್ಟು ಹಿಡಿದರು. +ಸಭಾಧ್ಯಕ್ಷರ ಪೀಠದಲ್ಲಿದ್ದ ಉಪಾಧ್ಯಕ್ಷ ರುದ್ರಪ್ಪ ಲಮಾಣಿಯವರು ಸಮಯ ವ್ಯರ್ಥ ಮಾಡಬೇಡಿ, ಚರ್ಚೆ ಮುಂದುವರೆಸಿ, ಸಂಬಂಧಪಟ್ಟ ಅಧಿಕಾರಿಗಳು ಬರುತ್ತಾರೆ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಅಶ್ವತ್ಥನಾರಾಯಣ ಹಠಕ್ಕೆ ಬಿದ್ದು ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಕಲಾಪದಲ್ಲಿ ಹಾಜರಿರಬೇಕು. ಅವರನ್ನು ಕರೆಸಿ ಎಂದು ಒತ್ತಾಯಿಸಿದರು. ಇದರಿಂದ ಉಪಸಭಾಧ್ಯಕ್ಷರೊಂದಿಗೆ ಕೆಲಕಾಲ ಮಾತುಕತೆಗಳು ನಡೆದವು. +ಅಶ್ವತ್ಥನಾರಾಯಣರವರು ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಆರ್ಥಿಕ ಇಲಾಖೆಯ ಬಾಧ್ಯತೆಯನ್ನು ಹೊಂದಿದೆ. ಮುಖ್ಯಮಂತ್ರಿಯವರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.ಇದರಿಂದ ಸಿಟ್ಟಾದ ಡಿ.ಕೆ.ಶಿವಕುಮಾರ್ರವರು ಏಕವಚನದಲ್ಲಿ ನೀನು ಭ್ರಷ್ಟಾಚಾರದ ಪಿತಾಮಹ ಎಂದು ವಾಗ್ದಾಳಿ ನಡೆಸಿದರು. +ಇದು ಬಿಜೆಪಿ ಶಾಸಕರನ್ನು ಕೆರಳಿ ಕೆಂಡವಾಗಿಸಿತು. ಎಲ್ಲರೂ ಎದ್ದುನಿಂತು ಗದ್ದಲ ಮಾಡಲಾರಂಭಿಸಿದರು. ಅಶ್ವತ್ಥನಾರಾಯಣ ಅವರು ಉಪಮುಖ್ಯಮಂತ್ರಿಯವರು ನನ್ನ ಹೆಸರನ್ನು ಪ್ರಸ್ತಾಪಿಸಿ ಆರೋಪ ಮಾಡಿದ್ದಾರೆ. ಅದಕ್ಕೆ ಸೂಕ್ತ ಮಾಹಿತಿ ಕೊಡಬೇಕು. ಇಲ್ಲವಾದರೆ, ಕ್ಷಮೆ ಕೇಳಬೇಕು. ಆರೋಪ ಮಾಡಲಾದ ಪದಗಳನ್ನು ಕಡತದಿಂದ ತೆಗೆಯಬೇಕು ಎಂದು ಪಟ್ಟು ಹಿಡಿದರು. +ಆದರೆ ಇದಕ್ಕೆ ಒಪ್ಪದ ಡಿ.ಕೆ.ಶಿವಕುಮಾರ್ ನೇರವಾಗಿ ಮುಖ್ಯಮಂತ್ರಿಯವರ ಪಾತ್ರ ಇದೆ ಎಂದು ಮಾತನಾಡುವುದು ಸರಿಯೇ? ಎಂದು ತಿರುಗೇಟು ನೀಡಿದ್ದಲ್ಲದೆ, ಮತ್ತೊಮೆ ತಮ್ಮ ಆರೋಪವನ್ನು ಪುನರುಚ್ಚರಿಸಿದರು.ಉಪಮುಖ್ಯಮಂತ್ರಿಗಳು ಹಿಟ್ ಅಂಡ್ ರನ್ ಪ್ರವೃತ್ತಿ ಅನುಸರಿಸುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಕಿಡಿಕಾರಿದರು. +ಸಚಿವ ಕೆ.ಜೆ.ಜಾರ್ಜ್ ಎಲೆಕ್ಟೊರ ಬಾಂಡ್ನಲ್ಲಿ ಸಾವಿರಾರು ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಪ್ರಸ್ತಾಪಿಸಿದರು.ಬಿಜೆಪಿಯ ಸುನೀಲ್ಕುಮಾರ್ರವರು ಉಪಮುಖ್ಯಮಂತ್ರಿಯವರು ಯಾವುದೇ ನೋಟೀಸ್ ನೀಡದೆ ನಮ್ಮ ಪಕ್ಷದ ಶಾಸಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ನಿಯಮಾವಳಿಗಳನ್ನು ಮೀರಿ ಯಾರು, ಯಾರ ಹೆಸರನ್ನಾದರೂ ಹೇಳಬಹುದೇ?, ನಾವೂ ನಿಮ ಹೆಸರನ್ನು ಹೇಳಬಹುದೇ? ಎಂದು ತಿರುಗೇಟು ನೀಡಿದರು. +ಈ ಸಂದರ್ಭದಲ್ಲಿ ಗೃಹಸಚಿವ ಪರಮೇಶ್ವರ್ ಹಾಗೂ ಬಿಜೆಪಿಯ ಸುರೇಶ್ಕುಮಾರ್ ನಡುವೆ ಮಾತಿನ ಚಕಮಕಿ ನಡೆದವು.ವಾದ-ವಿವಾದ ಕಾವೇರಿ ಪರಿಸ್ಥಿತಿ ಗದ್ದಲಮಯವಾಯಿತು.ಉಪಸಭಾಧ್ಯಕ್ಷರು ಸಮಯ ವ್ಯರ್ಥ ಮಾಡಬೇಡಿ, ಚರ್ಚೆ ಮುಂದುವರೆಸಿ ಎಂದು ಹಲವು ಬಾರಿ ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ. +ಬಿಜೆಪಿಯ ಶಾಸಕರು ಕಾಂಗ್ರೆಸಿಗರು ದಲಿತರ ಹಣವನ್ನು ಲೂಟಿ ಮಾಡಿ ಇಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರೆ ಕಾಂಗ್ರೆಸ್ ಸದಸ್ಯರು ಆಪರೇಷನ್ ಕಮಲದ ಮೂಲಕ ಭ್ರಷ್ಟಾಚಾರದ ಪಿತಾಮಹ ಆಗಿದ್ದು ಯಾರು? ಎಂದು ಪ್ರತಿದಾಳಿ ನಡೆಸಿದರು.ಈ ಹಂತದಲ್ಲಿ ಪೀಠಕ್ಕೆ ಆಗಮಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ ಎರಡೂ ಕಡೆಯಿಂದಲೂ ವಾಗ್ದಾಳಿಗಳು ಜೋರಾದ ಹಿನ್ನೆಲೆಯಲ್ಲಿ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. +ನಂತರ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಆಕ್ಷೇಪಾರ್ಹ ಹೇಳಿಕೆಗಳನ್ನು ಕಡತದಿಂದ ತೆಗೆದುಹಾಕುವುದಾಗಿ ಹೇಳಿ ಚರ್ಚೆಗೆ ಅವಕಾಶ ನೀಡಿದರು.ಹಿರಿಯ ಸದಸ್ಯ ಸುರೇಶ್ಕುಮಾರ್ರವರು, ಈಗಾಗಲೇ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ನೇರಪ್ರಸಾರದಲ್ಲಿ ಎಲ್ಲವೂ ಜನರಿಗೆ ತಲುಪಿ ಆಗಿದೆ. ಈಗ ಕಡತದಿಂದ ತೆಗೆದರೆ ಅದರಿಂದ ಏನೂ ಪ್ರಯೋಜನವಾಗುವುದಿಲ್ಲ. +ಕಡತದಿಂದ ತೆಗೆಯುವಂತಹ ಸಂಪ್ರದಾಯ ಹಳೆಯದು. ಬದಲಾದ ಕಾಲಮಾನದಲ್ಲಿ ಹೇಳಿಕೆಗಳು ನೇರವಾಗಿ ಪ್ರಸಾರವಾಗುತ್ತಿವೆ ಎಂದು ಹೇಳಿದರು.ಈ ವಿಚಾರದಲ್ಲಿ ತಾವು ಬೇರೇನು ಮಾಡಲು ಸಾಧ್ಯ? ಎಂದು ಸಭಾಧ್ಯಕ್ಷರು ಅಸಹಾಯಕತೆ ವ್ಯಕ್ತಪಡಿಸಿದರು. ನಂತರ ಚರ್ಚೆಯನ್ನು ಮುಂದುವರೆಸಲು ವಿಪಕ್ಷ ನಾಯಕರಿಗೆ ಸೂಚನೆ ನೀಡಿದರು.ಕಾವೇರಿದ ವಾತಾವರಣ ತಿಳಿಯಾಗಿ ಚರ್ಚೆ ಮುಂದುವರೆಯಿತು. \ No newline at end of file diff --git a/eesanje/url_46_74_12.txt b/eesanje/url_46_74_12.txt new file mode 100644 index 0000000000000000000000000000000000000000..3139f42da076cd1aa9f321fc408d3db17ab61efc --- /dev/null +++ b/eesanje/url_46_74_12.txt @@ -0,0 +1,9 @@ +ಚಡ್ಡಿ ಹಾಕಿಕೊಂಡು ಬರುವವರಿಗೂ ಸಹಕಾರಿ ಬ್ಯಾಂಕ್‌ಗಳು ಸಾಲ ಕೊಡಬೇಕು : ದಿನೇಶ್‌ ಗೂಳಿಗೌಡ +ಬೆಂಗಳೂರು,ಜು.16-ಚಡ್ಡಿ ಹಾಕಿಕೊಂಡು ಬರುವವರಿಗೂ ಸಹಕಾರಿ ಬ್ಯಾಂಕ್‌ಗಳು ಸಾಲ ನೀಡುವಂತೆ ಸರ್ಕಾರ ಸಂಬಂಧಪಟ್ಟವರಿಗೆ ಸೂಕ್ತ ನಿರ್ಧಾರ ನೀಡಬೇಕೆಂದು ಕಾಂಗ್ರೆಸ್‌‍ ಸದಸ್ಯ ದಿನೇಶ್‌ ಗೂಳಿಗೌಡ ಪರಿಷತ್‌ನಲ್ಲಿ ಆಗ್ರಹಿಸಿದರು. +ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‌ಗಳು ಇಂದು ಸಿ.ಟಿ.ರವಿ, ಭೋಜೇಗೌಡ ಅಂಥವರಿಗೆ ಮಾತ್ರ ಸಾಲ ಕೊಡುತ್ತಾರೆ. ಚಡ್ಡಿ ಹಾಕಿಕೊಂಡು ಬರುವವರಿಗೂ ಸಾಲ ಕೊಡಬೇಕು. ಈ ಹಿನ್ನಲೆಯಲ್ಲಿ ಸರ್ಕಾರ ಸಹಕಾರಿ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು. +ಸರ್ಕಾರ ಸಹಕಾರಿ ಬ್ಯಾಂಕ್‌ಗಳ ಮೂಲಕ ರೈತರಿಗೆ ಶೇ.95ರಷ್ಟು ಸಾಲ ನೀಡಿದ್ದೇವೆ ಎಂದು ಹೇಳುತ್ತಿದೆ. ಕಳೆದ ವರ್ಷ ಕೃಷಿ ಇಲಾಖೆಯು 148 ಲಕ್ಷ ಟನ್‌ ಆಹಾರ ಉತ್ಪಾದಿಸುವ ಗುರಿ ಹೊಂದಿತ್ತು. ವಾಸ್ತವವಾಗಿ 128 ಲಕ್ಷ ಟನ್‌ ಆಹಾರ ಉತ್ಪಾದನೆಯಾಯಿತು. 20 ಲಕ್ಷ ಟನ್‌ ಉತ್ಪಾದನೆಯಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ವಿವರಿಸಿದರು. +ಅದೇ ರೀತಿ ಪ್ರಸಕ್ತ ವರ್ಷ 80 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯನ್ನು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಇಟ್ಟುಕೊಂಡಿದ್ದರು. ವಾಸ್ತವವಾಗಿ ಈವರೆಗೂ 60 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನಮ ರೈತರಿಗೆ ಸಕಾಲಕ್ಕೆ ಸರಿಯಾಗಿ ಬೀಜ, ಗೊಬ್ಬರ, ಯಂತ್ರೋಪಕರಣಗಳು ಸಿಗುವಂತೆ ಸರ್ಕಾರ ಮುಂದಾಗಲಿ ಎಂದು ಒತ್ತಾಯಿಸಿದರು. +ಆಗ ಸಹಕಾರ ಸಚಿವ ರಾಜಣ್ಣ, ಪ್ರತಿ ವರ್ಷ ಸಹಕಾರಿ ಇಲಾಖೆಯಿಂದ ಇಂತಿಷ್ಟು ಸಾಲ ನೀಡಬೇಕೆಂಬ ಗುರಿ ಇಟ್ಟುಕೊಂಡಿದ್ದೇವೆ. ಈ ಬಾರಿ ಶೇ.95ರಷ್ಟು ಗುರಿ ಮುಟ್ಟಿದ್ದೇವೆ. ಇದಕ್ಕಾಗಿ ಸದಸ್ಯರು ನನಗೆ ಅಭಿನಂದನೆ ಸಲ್ಲಿಸಬೇಕೆಂದು ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ ಅವರು ಶೇ.100ರಷ್ಟು ಗುರಿ ತಲುಪಿಲ್ಲ ಎಂದು ಹೇಳುತ್ತಿರುವುದು ಆಶ್ಚರ್ಯವಾಗುತ್ತಿದೆ ಎಂದು ಹಾಸ್ಯ ಮಾಡಿದರು. +ರೈತರಿಗೆ ಅಲ್ಪಾವಧಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ 3ರಿಂದ 5 ಲಕ್ಷದವರೆಗೆ ಹಾಗೂ ಮಧ್ಯಮಾವಧಿ ಸಾಲವನ್ನ 10ರಿಂದ 15 ಲಕ್ಷ ನೀಡುತ್ತೇವೆ. ಅರ್ಜಿ ಹಾಕಿದ ಎಲ್ಲರಿಗೂ ಸಾಲ ನೀಡುವುದಿಲ್ಲ. ರೈತರಿಗೆ ಸಾಲ ನೀಡಬೇಕಾದರೆ ಕೆಲವು ಮಾನದಂಡಗಳಿರುತ್ತವೆ. ಅದರ ಪ್ರಕಾರವೇ ಅಧಿಕಾರಿಗಳು ಸಾಲ ನೀಡುತ್ತಾರೆ ಎಂದು ರಾಜಣ್ಣ ಸದನಕ್ಕೆ ತಿಳಿಸಿದರು. +ಸದಸ್ಯ ಶಾಂತರಾಮ್‌ ಸಿದ್ದಕ್ಕಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಲ್ಯಾಂಡ್‌ ಬ್ಯಾಂಕ್‌ ಮೂಲಕ ಅರಣ್ಯ ಪ್ರದೇಶಗಳಲ್ಲಿ ಕಿರು ಉತ್ಪನ್ನ ಬೆಳೆಯುವ ಅರಣ್ಯವಾಸಿಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲು ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು. +ಅರಣ್ಯದಲ್ಲಿ ಸಿಗುವ ಕಿರು ಉತ್ಪನ್ನಗಳನ್ನು ಬಳಸಿಕೊಂಡು ಸಹಕಾರಿ ಬ್ಯಾಂಕ್‌ನಲ್ಲಿ ಮಾರಾಟ ಮಾಡಲು ಅವಕಾಶವಿದೆ. ಪ್ರಸ್ತುತ 11 ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಇದೆ. ಅರಣ್ಯಗಳಲ್ಲಿ ಉತ್ಪನ್ನಗಳನ್ನು ಬಳಸಲು ಕೆಲವು ನಿಬಂಧನೆಗಳು ಇವೆ. ಇದು ನಮ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶವೂ ಇಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_74_2.txt b/eesanje/url_46_74_2.txt new file mode 100644 index 0000000000000000000000000000000000000000..4cd3a8c27c4597710bd875da25281aaeb251bf61 --- /dev/null +++ b/eesanje/url_46_74_2.txt @@ -0,0 +1,8 @@ +ವಿಧಾನಸಭೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಘೋಷಿಸಿದ ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜು.16– ರಾಜ್ಯ ಸರ್ಕಾರಿ ನೌಕರರ ಮೂಲ ವೇತನ ಮತ್ತು ಪಿಂಚಣಿಯನ್ನು ಏಳನೇ ರಾಜ್ಯ ವೇತನ ಆಯೋಗದ ಶಿಫಾರಸು ಆಧರಿಸಿ ಶೇ.58.50ರವರೆಗೆ ಪರಿಷ್ಕರಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಪ್ರಕಟಿಸಿದರು. +ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು 2022ರ ನವೆಂಬರ್ 19ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಆಯೋಗವು 2024ರ ಮಾರ್ಚ್ 24ರಂದು ವರದಿ ನೀಡಿದೆ ಎಂದು ವಿವರಿಸಿದರು. +7ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಽತ ಭತ್ಯೆ, ಪಿಂಚಣಿಯನ್ನು 2022ರ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ಮುಂದಿನ ಆಗಸ್್ಟ 1ರಿಂದ ಅನುಷ್ಠಾನಗೊಳಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ ಎಂದರು. +2022ರ ಜುಲೈ 1ರಿಂದ ನೌಕರರ ಮೂಲ ವೇತನಕ್ಕೆ ಶೇಕಡಾ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ ಎಂದು ಪ್ರಕಟಿಸಿದರು. +ಪರಿಷ್ಕರಣೆಯ ಬಳಿಕ ನೌಕರರ ಕನಿಷ್ಠ ಮೂಲವೇತನ 17 ಸಾವಿರದಿಂದ 27 ಸಾವಿರಕ್ಕೆ, ಗರಿಷ್ಟ ವೇತನ 1,50,600 ದಿಂದ 2,41.200 ವರೆಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು 8,500 ದಿಂದ 13,500ಕ್ಕೆ ಮತ್ತು ಗರಿಷ್ಠ ಪಿಂಚಣಿಯು 75,300 ದಿಂದ ರೂ. 1,20,600 ಕ್ಕೆ ಪರಿಷ್ಕರಣೆಗೊಳ್ಳುತ್ತದೆ ಎಂದು ವಿವರಿಸಿದರು. +ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ ಎಂದು ಹೇಳಿದರು.ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 20,208 ಕೋಟಿ ರೂಪಾಯಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. +ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.ಮುಖ್ಯಮಂತ್ರಿಯವರ ಪ್ರಕಟಣೆಯನ್ನು ಆಡಳಿತ ಪಕ್ಷದ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರು. ಸಭಾಧ್ಯಕ್ಷರು ಸರ್ಕಾರಿ ನೌಕರ ಪರವಾಗಿ ಸರ್ಕಾರವನ್ನು ಅಭಿನಂದಿಸುವುದಾಗಿ ತಿಳಿಸಿದರು. \ No newline at end of file diff --git a/eesanje/url_46_74_3.txt b/eesanje/url_46_74_3.txt new file mode 100644 index 0000000000000000000000000000000000000000..94596ae7c00060e93ff2073a7d94d01dc11f2938 --- /dev/null +++ b/eesanje/url_46_74_3.txt @@ -0,0 +1,7 @@ +ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್‌‍ ಸದಸ್ಯರ ನಡುವೆ ಏರುಧ್ವನಿಯಲ್ಲಿ ವಾಗ್ವಾದ +ಬೆಂಗಳೂರು,ಜು.16-ಬಿಜೆಪಿ ಮತ್ತು ಕಾಂಗ್ರೆಸ್‌‍ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ವಿಧಾನಸಭೆಯಲ್ಲಿಂದು ಜರುಗಿತು.ವಿರೋಧ ಪಕ್ಷದ ನಾಯಕ ಆರ್‌.ಅಶೋಕ್ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸು ತ್ತಿದ್ದಂತೆ ಕಾಂಗ್ರೆಸ್‌‍ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. +ಭಾರಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಬೋವಿ ನಿಗಮ, ಬಂಜಾರ ನಿಗಮದಲ್ಲಿ ಅವ್ಯವಹಾರವಾಗಿದೆ. ದೇವರಾಜ ಅರಸು ಟ್ರಕ್‌ ಟರ್ಮಿನಲ್‌ನಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ ಮತ್ತು ಸಿಬಿಐ ಅನ್ನು ಕಳುಹಿಸಿ. ಎಲೆಕ್ಟೊರಲ್‌ ಬಾಂಡ್‌್ಸನಲ್ಲೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. +ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಮಾತನಾಡಿ, ರಾಜಕೀಯ ದುರುದ್ದೇಶದಿಂದ ಮಾತನಾಡಿದ್ದಾರೆ. ಅವರಿಗೆ ಶೋಭೆ ತರುವುದಿಲ್ಲ ಎಂದು ಛೇಡಿಸಿದರು. ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಮಧ್ಯಪ್ರವೇಶಿಸಿ, ದಲಿತರ ಪರವಾಗಿ ಮೊಸಳೆ ಕಣ್ಣೀರು ಸುರಿಸಿದ್ದಾರೆ. ದಲಿತರ ಉದ್ಧಾರಕ್ಕೆ ಎಸ್ಸಿಪಿ/ಟಿಎಸ್ಪಿ ಕಾಯ್ದೆಯನ್ನು ನಾವು ತಂದಿದ್ದೇವೆ ಎಂದರು. +ಈ ಹಂತದಲ್ಲಿ ಆಡಳಿತ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾಯಿತು.ಒಂದು ಹಂತದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿ, ದೇವರಾಜ ಅರಸು ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ಮಾಡಿಸಿ ಎಂದು ತಿರುಗೇಟು ನೀಡಿದರು. +ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ದೇವರಾಜು ಅರಸು ಟ್ರಕ್‌ ಟರ್ಮಿನಲ್‌, ತಾಂಡಾ ಅಭಿವೃದ್ಧಿ ನಿಗಮದಲ್ಲೂ ಅವ್ಯವಹಾರವಾಗಿದೆ. ಅಲ್ಲಿಗೂ ಇ.ಡಿ., ಐಟಿ ಅಧಿಕಾರಿಗಳನ್ನು ಕಳುಹಿಸಿ ಎಂದು ಒತ್ತಾಯಿಸಿದರು. +ಇದೇ ರೀತಿ ಕಾಂಗ್ರೆಸ್‌‍ ಮತ್ತು ಬಿಜೆಪಿ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ವಾಗ್ವಾದ ನಡೆಯಿತು. ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌ರವರು ಆಡಳಿತ ಮತ್ತು ವಿಪಕ್ಷ ಶಾಸಕರನ್ನು ಸಮಾಧಾನಪಡಿಸಿ ಮುಖ್ಯಮಂತ್ರಿಯವರು ಹೇಳಿಕೆ ನೀಡಲು ಅನುವು ಮಾಡಿಕೊಟ್ಟರು. \ No newline at end of file diff --git a/eesanje/url_46_74_4.txt b/eesanje/url_46_74_4.txt new file mode 100644 index 0000000000000000000000000000000000000000..4475a460a939d8cc38e95424ae9701f6a4a70658 --- /dev/null +++ b/eesanje/url_46_74_4.txt @@ -0,0 +1,9 @@ +ವಾಲ್ಮೀಕಿ ನಿಗಮ ಹಗರಣ : ಸಿಎಂ ರಾಜೀನಾಮೆಗೆ ಅಶೋಕ್‌ ಒತ್ತಾಯ +ಬೆಂಗಳೂರು,ಜು.16-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. +ನಿಯಮ 69ರಡಿ ಚರ್ಚೆ ನಡೆಸಿದ ಅವರು, ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ದುರುಪಯೋಗವಾಗಿರುವುದರ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು. ಈ ಆರೋಪದಲ್ಲಿ ಕಾನೂನು ವಿಚಾರ ಏನೇ ಇದ್ದರೂ ಬದಿಗಿರಿಸಿ ದಲಿತರ ಹಣ ದುರ್ಬಳಕೆಯಾಗಿರುವುದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಆಗ ಬಿಜೆಪಿ ಶಾಸಕರು ಮೇಜು ಕುಟ್ಟಿ ಸ್ವಾಗತಿಸಿದರು. +ಈ ಹಣ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗವಾಗಿರುವುದರ ಹೊಣೆಯನ್ನು ಯಾರೂ ಹೊತ್ತ್ತುಕೊಳ್ಳಲು ಸಿದ್ಧರಿಲ್ಲ. ಸಮಾಜಕಲ್ಯಾಣ ಇಲಾಖೆ ನಮ್ಮಗೆ ಸಂಬಂಽಸಿದ್ದಲ್ಲ ಎಂದು ಹೇಳಿದೆ. ಹಣಕಾಸು ಇಲಾಖೆ ನಾವು ಹಣ ಕೊಟ್ಟಿದ್ದೇವೆ. ನಮ್ಮಗೇನೂ ಗೊತ್ತಿಲ್ಲ ಎಂದಿದೆ. ಮುಖ್ಯಮಂತ್ರಿಯವರು ಹಣ ಕೊಟ್ಟಿದ್ದೇವೆ, ನಮ್ಮಗೆ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಹೀಗೆ ಒಬ್ಬರ ಮೇಲೆ ಇನ್ನೊಬ್ಬರು ವರ್ಗಾಯಿಸುತ್ತಿದ್ದಾರೆ. ಯಾರೂ ಅದರ ಹೊಣೆ ಹೊರುತ್ತಿಲ್ಲ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲವೇ? ಸರ್ಕಾರ ಈ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಿದೆ ಎಂದು ಅಶೋಕ್ ವಾಗ್ದಾಳಿ ನಡೆಸಿದರು. +ಮುಖ್ಯಮಂತ್ರಿ ಹಣಕಾಸು ಖಾತೆಯನ್ನು ಹೊಂದಿದ್ದಾರೆ. ಹೀಗಾಗಿ ಹಣ ಮಂಜೂರಾಗುವುದು, ಹಣ ಖರ್ಚಾಗುವುದು ಎಲ್ಲದರ ಮಾಹಿತಿ ಇರುತ್ತದೆ. ಇಲ್ಲದಿದ್ದರೆ ಕೇಳಬೇಕಲ್ಲವೇ? ಆ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯೂ ಮಾತನಾಡಲಿಲ್ಲ ಎಂದು ಟೀಕಿಸಿದರು.ಆಡಳಿತ ಪಕ್ಷದ ಮೊಗಸಾಲೆಯಲ್ಲಿ ಶಾಸಕರು ದಲಿತರ ಮತದಾನದಿಂದ ಗೆದ್ದಿದ್ದೇವೆ. ದಲಿತರ ಹಣವನ್ನೇ ಹೊಡೆಯಬೇಕಿತ್ತೇ? ಯಾವ ಮುಖವಿಟ್ಟುಕೊಂಡು ಮತ ಕೇಳೋಣ, ಲಿಂಗಾಯತರ, ಒಕ್ಕಲಿಗರ, ಬ್ರಾಹ್ಮಣರ ನಿಗಮದ ಹಣ ಹೊಡೆಯಬಾರದಿತ್ತೇ? ಅವರು ಶ್ರೀಮಂತರು. ದಲಿತರ ಹಣ ಲೂಟಿಯಾಗಿದೆ ಎಂದು ಮಾತನಾಡಿಕೊಂಡಿದ್ದಾರೆ ಎಂದರು. +ಲಾನುಭವಿಗಳಿಗೆ ಸಿಗಬೇಕಾದ ಹಣ ತೆಲಂಗಾಣಕ್ಕೆ ಹೋಗಿದೆ. ಯಾರನ್ನು ಗುರಿ ಮಾಡುತ್ತೀರ? ಯಾರು ರಾಜೀನಾಮೆ ಕೊಡುತ್ತಾರೆ? 224 ಕ್ಷೇತ್ರದ ಮತದಾರರಿಗೆ ತಲುಪಬೇಕಾದ ಹಣ ದುರ್ಬಳಕೆಯಾಗಿದೆ. ದಲಿತರ ಬದುಕಿಗೆ ಸರ್ಕಾರ ಕೊಳ್ಳಿ ಇಟ್ಟಿದೆ. ಶೋಷಿತ ಸಮುದಾಯದ ಹಣ ಲೂಟಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. +ಮುಖ್ಯಮಂತ್ರಿಯವರಿಗೆ ಹಾಗೂ ಸಚಿವರಿಗೆ ವಿನಂತಿ ಮಾಡುತ್ತೇನೆ. ಎಸ್ಟಿ ಜನಾಂಗದವರ ಮನೆಯಲ್ಲಿ ಒಂದು ದಿನ ವಾಸ್ತವ್ಯ ಮಾಡಿ, ಅವರ ಕಷ್ಟ, ಗೋಳು ನಿಮಗೆ ಗೊತ್ತಾಗುತ್ತದೆ. ಆರ್ಟಿಜಿಎಸ್, ಗೂಗಲ್ಪೇ ಹೀಗೆ ಅವರ ಹಣವನ್ನು ಲೂಟಿ ಮಾಡಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್ ಅವರ ಕುಟುಂಬ ಬೀದಿಗೆ ಬಂದಿದೆ. +ಸಚಿವರಾದ ಮಧುಬಂಗಾರಪ್ಪ ಹಾಗೂ ಪರಮೇಶ್ವರ ಅವರು ಸಾಂತ್ವನ ಹೇಳಿದ್ದಾರೆ. ಮತ್ತ್ಯಾರೂ ಬಂದಿಲ್ಲ ಎಂದು ಚಂದ್ರಶೇಖರನ್ ಕುಟುಂಬದವರು ಹೇಳಿದ್ದಾರೆ. ಜೀವ ಒತ್ತೆಯಿಟ್ಟಾದರೂ ನ್ಯಾಯ ಪಡೆಯುವುದಾಗಿ ಚಂದ್ರಶೇಖರನ್ ಅವರ ಪತ್ನಿ ಹೇಳಿದ್ದಾರೆ. ಅನ್ಯಾಯವಾಗಿ ಅಮಾಯಕರ ಸಾವಾಗಿದೆ ಎಂದು ತಮ್ಮದೇ ಆದ ಧಾಟಿಯಲ್ಲಿ ವಾಗ್ದಾಳಿ ನಡೆಸಿದರು. +ಒಂದು ವೇಳೆ ಚಂದ್ರಶೇಖರನ್ ಆತ್ಮಹತ್ಯೆ ನಡೆಯದಿದ್ದರೆ ಗೋವಾದಲ್ಲಿ 187 ಕೋಟಿ ರೂ.ಗೂ ಬಿಲ್ ತಯಾರಿಸುತ್ತಿದ್ದರು. ವಾಲ್ಮೀಕಿ ಜನಾಂಗದ ಶಾಪ ನಿಮಗೆ ತಟ್ಟಬಾರದು ಎಂದಿದ್ದರೆ ಕೂಡಲೇ ಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿ. ಅಕ್ರಮ ಹಣ ವರ್ಗಾವಣೆ ಬಗ್ಗೆ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_74_5.txt b/eesanje/url_46_74_5.txt new file mode 100644 index 0000000000000000000000000000000000000000..bb6272dc5f911dce550eb3e07b970f3f305e099f --- /dev/null +++ b/eesanje/url_46_74_5.txt @@ -0,0 +1,9 @@ +ಮೇಕೆದಾಟು ಯೋಜನೆಗೆ ಸಹಕಾರ ತಮಿಳುನಾಡಿಗೆ ಡಿಸಿಎಂ ಡಿಕೆಶಿ ‘ವಿನಮ್ರ ಮನವಿ’ +ಬೆಂಗಳೂರು, ಜು.16- ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದರು. +ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು ಸರ್ಕಾರ ಸರ್ವಪಕ್ಷ ಸಭೆ ಕರೆದಿರುವ ಬಗ್ಗೆ ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನಾವು ಸರ್ವಪಕ್ಷ ಸಭೆ ಮಾಡಿದಂತೆ, ತಮಿಳುನಾಡಿನವರು ಸಹ ಸರ್ವಪಕ್ಷ ಸಭೆ ಮಾಡುತ್ತಿದ್ದಾರೆ. ಅದು ಅವರ ಹಕ್ಕು. ಅವರ ಸಭೆಗೆ ನಮ್ಮ ಆಕ್ಷೇಪವಿಲ್ಲ. ಆದರೆ ನಿಮಗೂ ಹೆಚ್ಚು ಅನುಕೂಲ ಆಗುವ ಮೇಕೆದಾಟು ಯೋಜನೆಗೆ ಸಹಕಾರ ನೀಡಿ ಎಂದು ತಿಳಿಸಿದರು. +ರಾಜ್ಯದಲ್ಲಿ ನಿನ್ನೆಯಿಂದ ಹೆಚ್ಚು ಮಳೆ ಬೀಳುತ್ತಿದ್ದು, ಕಾವೇರಿ ಕೊಳ್ಳದ ಅಣೆಕಟ್ಟುಗಳಿಗೆ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಹಾರಂಗಿಯಿಂದ 20 ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಹೊರಗೆ ಹರಿಬಿಡಲಾಗುತ್ತಿದೆ. ಮಳೆಯೇ ನಮ್ಮಗೆ ಆಧಾರ. ನಾನು ತಮಿಳುನಾಡಿನ ಬಳಿ ಮನವಿ ಮಾಡಿಕೊಳ್ಳುತ್ತೇನೆ. +ನಿಮ್ಮ ಹಿತಾಸಕ್ತಿ ಕಾಪಾಡುವುದಕ್ಕಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡಿ. ಈ ಯೋಜನೆ ನಮ್ಮಗಿಂತ ನಿಮಗೆ ಹೆಚ್ಚು ಅನುಕೂಲವಾಗುತ್ತದೆ. ಈ ಅಣೆಕಟ್ಟಿನಲ್ಲಿ ಸಂಗ್ರಹವಾದ ನೀರನ್ನು ನಿಮಗೇ ನೀಡಲಾಗುವುದು. ಬೆಂಗಳೂರಿನಲ್ಲಿ ಕನ್ನಡಿಗರು, ತಮಿಳಿಗರು, ಆಂಧ್ರದವರು ಮತ್ತು ಉತ್ತರ ಭಾರತದ ರಾಜ್ಯಗಳ ಜನರಿದ್ದಾರೆ. ಎಲ್ಲರಿಗೂ ಕುಡಿಯುವ ನೀರು ಲಭಿಸಲಿದೆ.ಹೀಗಾಗಿ ಮೇಕೆದಾಟು ಯೋಜನೆಗೆ ಸಹಕಾರ ನೀಡುವಂತೆ ಕರ್ನಾಟಕ ರಾಜ್ಯದ ಪರವಾಗಿ ವಿನಮ್ರವಾಗಿ ಮನವಿ ಮಾಡುತ್ತೇವೆ ಎಂದು ತಿಳಿಸಿದರು. +ಮಳೆ ಇದೇ ರೀತಿ ಬಿದ್ದರೆ, ನೀವು ತಮಿಳುನಾಡಿಗೆ ನೀರು ಬಿಡುತ್ತೀರಾ ಎಂದು ಕೇಳಿದಾಗ, ಖಂಡಿತವಾಗಿ ಬಿಡುತ್ತೇವೆ. ನಾವು ಬಿಡಲೇಬೇಕು. ಒಳಹರಿವು ಹೆಚ್ಚಳವಾದರೆ ನಾವು ನೀರನ್ನು ಹರಿಸಲೇಬೇಕು. ಅದನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ ಎಂದು ಹೇಳಿದರು. +ಕುಮಾರಸ್ವಾಮಿ ತಮ್ಮ ಪಕ್ಷದವರನ್ನು ಗೋಡಂಬಿ, ದ್ರಾಕ್ಷಿ ತಿನ್ನಲು ಕಳಿಸಿದ್ದರಾ? :ಸರ್ವಪಕ್ಷ ಸಭೆಗೆ ಗೋಡಂಬಿ ದ್ರಾಕ್ಷಿ ತಿನ್ನಲು ಹೋಗಬೇಕಿತ್ತಾ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಸಿನಿಮಾ ಶೈಲಿಯಲ್ಲಿ ಮಾತನಾಡುತ್ತಿದ್ದಾರೆ. ಗೋಡಂಬಿ, ದ್ರಾಕ್ಷಿ ತಿನ್ನಲು ನಾವು ಕರೆದಿದ್ದೇವಾ? ಹಾಗಿದ್ದರೆ, ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಾಯಕರನ್ನು ಸರ್ವಪಕ್ಷ ಸಭೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಕಳುಹಿಸಿದ್ದರೆ? ಕುಮಾರಸ್ವಾಮಿಗೆ ರಾಜಕಾರಣ, ಟೀಕೆ, ಆರೋಪ, ಹಿಟ್ ಅಂಡ್ ರನ್ ಮಾಡುವುದು ಬಿಟ್ಟರೆ, ಕಾವೇರಿ ನೀರು, ನಮ್ಮ ರೈತರ ಹಿತ, ರಾಜ್ಯದ ಹಿತದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ತಿಳಿಸಿದರು. +ಕುಮಾರಸ್ವಾಮಿ ಅವರು ನಿಮ್ಮ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿರುವುದೇಕೆ ಎಂದು ಕೇಳಿದಾಗ, ಅಸೂಯೆ ಬಿಟ್ಟರೆ ಬೇರೇನೂ ಇಲ್ಲ. ಮೊದಲಿಂದಲೂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಎಲ್ಲಾ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡೋಣ ಬಾ ಎಂದು ಕರೆಯುತ್ತಿದ್ದೇನೆ. ಕಳೆದ ಬಾರಿ ಸದನದಲ್ಲಿ ಚರ್ಚೆಗೆ ಕರೆದಾಗಲೂ ಬರಲಿಲ್ಲ ಎಂದು ತಿಳಿಸಿದರು. +ನಾನು ಯಾವುದೇ ತಪ್ಪು ಮಾಡಿಲ್ಲ:ತಮ್ಮ ವಿರುದ್ಧದ ಸಿಬಿಐ ಪ್ರಕರಣ ರದ್ದು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, ಈಗಾಗಲೇ ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಗೆ ನೀಡಲಾಗಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸುತ್ತಿದೆ. ಆದರೂ ಸಿಬಿಐ ತಮ್ಮ ವ್ಯಾಪ್ತಿ ಮೀರಿ ಈ ಪ್ರಕರಣ ತನಿಖೆ ನಡೆಸಲು ಮುಂದಾಗಿರುವುದು ಏಕೆ ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಮುಂದಿನ ಒಂದೆರಡು ದಿನಗಳಲ್ಲಿ ಅವರ ಮುಂದೆ ಹೋಗಿ ನನ್ನ ವಿಚಾರ ತಿಳಿಸುತ್ತೇನೆ. ತನಿಖೆ ಹೆಸರಲ್ಲಿ ನನ್ನ ಜತೆ ವ್ಯವಹಾರ ಮಾಡಿದವರಿಗೆ ಕಿರುಕುಳ ನೀಡಿದ್ದಾರೆ ಎಂದು ನುಡಿದರು. \ No newline at end of file diff --git a/eesanje/url_46_74_6.txt b/eesanje/url_46_74_6.txt new file mode 100644 index 0000000000000000000000000000000000000000..911a3143387feda6e8b2517ce75594629e8795b3 --- /dev/null +++ b/eesanje/url_46_74_6.txt @@ -0,0 +1,7 @@ +ರಾಜ್ಯದ ಹಿತದೃಷ್ಟಿಯಿಂದ 2ನೇ ಅಂತಾರಾಜ್ಯ ವಿಮಾನ ನಿಲ್ದಾಣ ಸ್ಥಾಪನೆ : ಎಂ.ಬಿ.ಪಾಟೀಲ್ +ಬೆಂಗಳೂರು,ಜು.16- ರಾಜ್ಯದ ಜನತೆಯ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಸೂಕ್ತವಾದ ಸ್ಥಳದಲ್ಲಿ 2ನೇ ಅಂತಾರಾಜ್ಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿಧಾನಪರಿಷತ್ಗೆ ತಿಳಿಸಿದರು. +ಸದಸ್ಯ ನವೀನ್ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿ, ಗೋವಾ, ಮುಂಬೈನಲ್ಲಿ ಈಗಾಗಲೇ 2ನೇ ವಿಮಾನ ನಿಲ್ದಾಣಗಳನ್ನು ಸ್ಥಾಪನೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸ್ಥಾಪನೆ ಮಾಡುವುದಾಗಿ ಹೇಳಿದರು. +ಬೆಂಗಳೂರಿನ ಸುತ್ತಮುತ್ತ ಏಳೆಂಟು ಕಡೆ ಸ್ಥಳಗಳನ್ನು ಗುರುತಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಽಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗುವುದು. ಇಂತಹ ಸ್ಥಳದಲ್ಲೇ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕೆಂಬ ಒತ್ತಡವಿದೆ. ನಾನು ಯಾವುದೇ ಒತ್ತಡಕ್ಕೂ ಬಗ್ಗದೆ ಸೂಕ್ತ ಸ್ಥಳದಲ್ಲಿ ರಾಜ್ಯದ ಹಿತದೃಷ್ಟಿ ಮತ್ತು ಭವಿಷ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದರು. +ಪ್ರಸ್ತುತ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2035ಕ್ಕೆ 110 ಮಿಲಿಯನ್ ಪ್ರಯಾಣಿಕರ ಸಾಮರ್ಥ್ಯ ತಲುಪುತ್ತದೆ. ಅದೇ ರೀತಿ ಸರಕು ಸಾಗಾಣಿಕೆಯಲ್ಲಿ 110 ಟನ್ ತಲುಪಲಿದೆ. ನಾವು 2033ರೊಳಗೆ 2ನೇ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕಿದೆ ಎಂದರು. +ತುಮಕೂರು, ಚಿತ್ರದುರ್ಗ, ಎಲೆಕ್ಟ್ರಾನಿಕ್ ಸಿಟಿ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹೀಗೆ ಹಲವಾರು ಕಡೆ ವಿಮಾನ ನಿಲ್ದಾಣ ಸ್ಥಾಪನೆಗೆ ಒತ್ತಡವಿದೆ. ಯಾವುದೇ ಒಂದು ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕಾದರೆ ಕೆಲವು ಮಾನದಂಡಗಳಿವೆ ಎಂದು ಮಾಹಿತಿ ನೀಡಿದರು. +ಮೊದಲ ಸುತ್ತಿನ ಸಭೆಯಲ್ಲಿ ಏಳೆಂಟು ಸ್ಥಳಗಳನ್ನು ಗುರುತಿಸಿದ್ದೇವೆ. ಅದು ಅಂತಿಮಗೊಂಡಿಲ್ಲ. ಬೆಂಗಳೂರು ಸುತ್ತಮುತ್ತ ಸ್ಥಾಪನೆ ಮಾಡುವುದಂತೂ ಖಚಿತ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಪಾಟೀಲ್ ಪುನರುಚ್ಚಿಸಿದರು. ಇದಕ್ಕೂ ಮುನ್ನ ಸದಸ್ಯ ನವೀನ್ ಅವರು, 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡುವುದಾದರೆ ಚಿತ್ರದುರ್ಗ, ತುಮಕೂರು ಮಧ್ಯ ಭಾಗದಲ್ಲಿ ಮಾಡಬೇಕೆಂದು ಮನವಿ ಮಾಡಿದರು. \ No newline at end of file diff --git a/eesanje/url_46_74_7.txt b/eesanje/url_46_74_7.txt new file mode 100644 index 0000000000000000000000000000000000000000..40f7abc3cc8ec19557c3c5340dc573a247452a56 --- /dev/null +++ b/eesanje/url_46_74_7.txt @@ -0,0 +1,4 @@ +ಹೊಸ ಪೊಲೀಸ್‌‍ ಠಾಣೆಗೆ ಪ್ರಾರಂಭಿಸಲು 50 ರಿಂದ 60 ಸಾವಿರ ಜನಸಂಖ್ಯೆ ಇರಬೇಕು : ಪರಮೇಶ್ವರ್‌ +ಬೆಂಗಳೂರು,ಜು.16-ಹೊಸ ಪೊಲೀಸ್‌‍ ಠಾಣೆ ಪ್ರಾರಂಭಿಸಲು ಜನಸಂಖ್ಯೆ 50ರಿಂದ 60 ಸಾವಿರ ಇರಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಅಲ್ಲಮಪ್ರಭು ಪಾಟೀಲ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಪೊಲೀಸ್‌‍ ಆಯೋಗದ ಮಾರ್ಗಸೂಚಿಯಂತೆ ಪೊಲೀಸ್‌‍ ಠಾಣೆ ತೆರೆಯಬೇಕಾಗುತ್ತದೆ. +ಶಾಸಕರು ಕೇಳಿರುವ ಕಲಬರುಗಿ ನಗರದ ಜೇವರ್ಗಿ ರಸ್ತೆಯ ರಾಮಮಂದಿರದ ಬಳಿ ಕೊಟನೂರು ಪೊಲೀಸ್‌‍ ಹೊರಠಾಣೆಗೆ ನಿಗದಿತ ಮಾನದಂಡಗಳನ್ನು ಪೂರೈಸದ ಹಿನ್ನಲೆಯಲ್ಲಿ ಪರಿಗಣಿಸಿಲ್ಲ . +ಶಾಸಕರು ಮತ್ತೊಮೆ ಪರಿಶೀಲನೆ ಮಾಡುವಂತೆ ಹೇಳಿದ್ದಾರೆ. ಅದರಂತೆ ಪರಿಶೀಲಿಸಿ ಅಗತ್ಯಬಿದ್ದರೆ ಪರಿಗಣಿಸಲಾಗು ವುದು. ಆದರೆ ಅಕ್ಕಪಕ್ಕದ ಠಾಣೆಗಳನ್ನು ಬಲವರ್ಧನೆ ಮಾಡ ಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_74_8.txt b/eesanje/url_46_74_8.txt new file mode 100644 index 0000000000000000000000000000000000000000..0307b9450433cc75bb61b0dda38d57b99a22e12e --- /dev/null +++ b/eesanje/url_46_74_8.txt @@ -0,0 +1,7 @@ +ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ವಾಲ್ಮೀಕಿ ನಿಗಮ ಹಗರಣ, ಕಲಾಪ ಮುಂದೂಡಿಕೆ +ಬೆಂಗಳೂರು,ಜು.16– ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣದ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌‍ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದ ಹಿನ್ನೆಲೆಯಲ್ಲಿ ಪರಿಷತ್‌ ಕಲಾಪವನ್ನು ಕೆಲಕಾಲ ಮುಂದೂಡಲಾಯಿತು. +ಶೂನ್ಯ ಅವಧಿ ಮುಗಿದ ನಂತರ ಸಭಾಪತಿ ಬಸವರಾಜ ಹೊರಟ್ಟಿ ಅವರು, ಬೇರೊಂದು ಕಾರ್ಯಕಲಾಪವನ್ನು ತೆಗೆದುಕೊಳ್ಳಲು ಮುಂದಾದರು. ಇದಕ್ಕೆ ತೀರಾ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಸದಸ್ಯರಾದ ಸಿ.ಟಿ.ರವಿ, ಎನ್‌.ರವಿಕುಮಾರ್‌ ಸೇರಿದಂತೆ ಮತ್ತಿತರರು ಪ್ರಶ್ನೋತ್ತರ ಮುಗಿದ ಮೇಲೆ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದು ಹೇಳಿದ್ದೀರಿ. ಈಗ ಏಕೆ ನಿಲುವು ಬದಲಾಯಿಸಿದ್ದೀರಿ ಎಂದು ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ಈಗಾಗಲೇ ಇದರ ಬಗ್ಗೆ ಚರ್ಚೆಯಾಗಿದೆ. ಪ್ರಕರಣದ ಕುರಿತು ತನಿಖೆಯೂ ಆಗುತ್ತಿದೆ. ಪುನಃ ಅದೇ ವಿಷಯವನ್ನು ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ. ನಾನು ಕಾರ್ಯ ಕಲಾಪದ ಪ್ರಕಾರ ಸದನವನ್ನು ನಡೆಸಬೇಕೆಂದು ಹೊರಟ್ಟಿ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು. +ಪ್ರಶ್ನೋತ್ತರ ಅವಧಿ ಮುಗಿದ ಬಳಿಕ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದ ಮೇಲೆ ಏಕಾಏಕಿ ನೀವು ನಿಲುವು ಬದಲಾಯಿಸಿದ್ದು ಸರಿಯಲ್ಲ. ಇದರಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ. ನೂರಾರು ಕೋಟಿ ಹಣವನ್ನು ಲಪಾಟಯಿಸಿ ಕೆಲವರು ಜೈಲು ಪಾಲಾಗಿದ್ದಾರೆ. ಚರ್ಚೆಗೆ ಅವಕಾಶ ಕೊಡುವುದಿಲ್ಲ ಎಂದರೆ ಹೇಗೆ ಎಂದು ಸ್ಪೀಕರ್‌ ವಿರುದ್ಧ ಅಸಮಾಧಾನ ಹೊರಹಾಕಿದರು. +ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಮಾತಿನ ಚಕಮಕಿ, ಗದ್ದಲ, ಕೋಲಾಹಲ ಉಂಟಾಯಿತು. ಸಭಾಪತಿಗಳು ಒಂದು ಬಾರಿ ರೂಲಿಂಗ್‌ ನೀಡಿದ ಮೇಲೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ. ನಿಮ ಮೇಲೆ ಅಧಿಕಾರ ಚಲಾಯಿಸಲು ಅವಕಾಶ ಕೊಡಬೇಡಿ ಎಂದು ಬಿಜೆಪಿ ಸದಸ್ಯರ ವಿರುದ್ಧ ಕಾಂಗ್ರೆಸ್‌‍ ಸದಸ್ಯರು ಆಕ್ರೋಶ ಹೊರಹಾಕಿದರು. +ಸದಸ್ಯರು ಸದನ ನಡೆಯಲು ಅವಕಾಶ ಮಾಡಿಕೊಡಬೇಕೆಂದು ಹೊರಟ್ಟಿಯವರು ಮಾಡಿಕೊಂಡ ಮನವಿಗೆ ಯಾರೂ ಕೂಡ ಜಗ್ಗಲಿಲ್ಲ. ಬಿಜೆಪಿ ಸದಸ್ಯರು ಚರ್ಚೆಗೆ ಒತ್ತಾಯಿಸಿದರೆ ಕಾಂಗ್ರೆಸ್‌‍ ಸದಸ್ಯರು ಅವಕಾಶ ನೀಡಬೇಡಿ ಎಂದು ತಿರುಗೇಟು ನೀಡಿದರು.ಸದನ ಸಹಜ ಸ್ಥಿತಿಗೆ ಬರದ ಕಾರಣ ಸಭಾಪತಿಯವರು ಕೆಲ ಕಾಲ ಸದನವನ್ನು ಮುಂದೂಡಿದರು. \ No newline at end of file diff --git a/eesanje/url_46_74_9.txt b/eesanje/url_46_74_9.txt new file mode 100644 index 0000000000000000000000000000000000000000..b4c311f2557eb1bf96ed07e7ffbed431f08ffd6b --- /dev/null +++ b/eesanje/url_46_74_9.txt @@ -0,0 +1,8 @@ +ಹೆದ್ದಾರಿ ಪ್ರಾಧಿಕಾರದ ವಿರುದ್ಧ ಶಾಸಕ ಸತೀಶ್ ಸೈಲ್ ಆಕ್ರೋಶ +ಬೆಂಗಳೂರು,ಜು.16- ಕಾರವಾರದ ಅಂಕೋಲಾ ಬಳಿ ಶಿರೂರು ಗ್ರಾಮದ ಬಳಿ ಭೂಕುಸಿತವಾಗಿ 10 ರಿಂದ 15 ಜನ ಗಂಗಾವತಿ ನೀರು ಪಾಲಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಆತಂಕ ವ್ಯಕ್ತಪಡಿಸಿದ್ದಾರೆ.ವಿಧಾನಸಭೆಯ ಶೂನ್ಯ ವೇಳೆಯಲ್ಲಿ ವಿಷಯಪ್ರಸ್ತಾಪಿಸಿದ ಶಾಸಕರು, ಭಾರಿ ಮಳೆಯಿಂದಾಗಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ 2,3 ಮನೆಗಳು ಹಾಗೂ ಸಂಚರಿಸುತ್ತಿದ್ದ ಟ್ಯಾಂಕರ್ ಕೂಡ ನದಿಗೆ ಕೊಚ್ಚಿಕೊಂಡು ಹೋಗಿದೆ. ನಿವಾಸಿಗಳು ಮತ್ತು ಟ್ಯಾಂಕರ್ ಸಿಬ್ಬಂದಿ ಸೇರಿ 10-15 ಮಂದಿ ಗಂಗಾವತಿ ನದಿಯ ನೀರು ಪಾಲಾಗಿದ್ದಾರೆ ಎಂದು ವಿವರಿಸಿದರು. +ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವಾಗ ಬೆಟ್ಟ-ಗುಡ್ಡದ ಮೇಲಿನ ಭೂಮಿಯನ್ನು 400 ಮೀಟರ್ ಇಳಿಜಾರು ಮಾದರಿಯಲ್ಲಿ ನಿರ್ಮಿಸಬೇಕು ಎಂದು ನಾವು ಹಲವು ಬಾರಿ ಸಲಹೆ ನೀಡಿದ್ದೇವೆ. ಆದರೆ ರಾಷ್ಟ್ರೀಯ ಪ್ರಾಧಿಕಾರದ ಅಧಿಕಾರಿಗಳು ನಮ್ಮ ಮಾತಿಗೆ ಮನ್ನಣೆ ನೀಡುವುದಿಲ್ಲ. ಈ ಮೊದಲು ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಿಲ್ಲಾಧಿಕಾರಿಯವರಿಗೆ ಸಾಕಷ್ಟು ಬಾರಿ ದೂರು ನೀಡಿದ್ದೇವೆ. ಅವರು ವರ್ಗಾವಣೆಯಾಗಿ ಹೋದರು. ಈಗ ಉಸ್ತುವಾರಿ ಜಿಲ್ಲಾಧಿಕಾರಿಯಾಗಿರುವ ರಿತೀಶ್ಕುಮಾರ್ ಸಿಂಗ್ ಅವರಿಗೆ ಮನವಿ ಮಾಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ಷೇಪಿಸಿದರು. +ರಸ್ತೆ ನಿರ್ಮಿಸುವಾಗ ಗುಡ್ಡದ ಪ್ರದೇಶವನ್ನು ಕಡಿದಾಗಿ ಕತ್ತರಿಸಿದ್ದರಿಂದಾಗಿ ಇಂದು ಭೂ ಕುಸಿತವಾಗಿದೆ. ಅಂಕೋಲಾದಲ್ಲಿನ ಹೃದಯಭಾಗದಲ್ಲಿ 415 ಹೆಕ್ಟೇರ್ ಜಾಗವನ್ನು ಸೀಬರ್ಡ್ ಯೋಜನೆಗೆ ಬಿಟ್ಟುಕೊಡಲಾಗಿದೆ. ಈ ಪ್ರದೇಶದಲ್ಲಿ 15, 20 ಅಂತಸ್ತಿನ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಪ್ರಶ್ನೆ ಮಾಡಿದರೆ ದೇಶದ ಹಿತಾಸಕ್ತಿ ಚರ್ಚೆ ಮಾಡಬೇಡಿ ಎಂದು ಹೇಳುತ್ತಾರೆ. ಜನಸಾಮಾನ್ಯರಿಗೆ ಇರುವಂತೆ ಸೀಬರ್ಡ್ ಯೋಜನೆಯ ಕಟ್ಟುಪಾಡುಗಳು ನೇವಿಯವರಿಗೆ ಇಲ್ಲ ಎಂದು ಆಕ್ಷೇಪಿಸಿದರು. +ಸರ್ಕಾರದ ಪರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಕೃಷ್ಣಾಭೈರೇಗೌಡ, ರಾಷ್ಟ್ರೀಯ ಹೆದ್ದಾರಿ ಹಾಗೂ ಸೀಬರ್ಡ್ ಈ ಎರಡೂ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿವೆ. ಕಳೆದ ಬಾರಿ ತಾವು ಕಾರಾವರಾರಕ್ಕೆ ಭೇಟಿ ನೀಡಿದಾಗ ಸೀಬರ್ಡ್ ಯೋಜನೆಯ ಅಧಿಕಾರಿಗಳನ್ನು ಕರೆಸಿ ಕೆಲವು ಸಲಹೆಗಳನ್ನು ನೀಡಿದ್ದೇವೆ. ರಾಜ್ಯಸರ್ಕಾರ ನಿರ್ದೇಶನ ನೀಡಲು ಬರುವುದಿಲ್ಲ. ಮುಂದಿನ ದಿನಗಳಲ್ಲಿ ಹೆದ್ದಾರಿ ನಿರ್ಮಾಣದಲ್ಲಾಗಿರುವ ಲೋಪಗಳನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು. ಸದ್ಯಕ್ಕೆ ಭೂಕುಸಿತದಿಂದ ಶಿರೂರಿನಲ್ಲಿ ಸಂಸಿರುವ ಘಟನೆಯ ಬಗ್ಗೆ ಮಾಹಿತಿ ಪಡೆದು ಸದನಕ್ಕೆ ತಿಳಿಸುತ್ತೇನೆ ಎಂದು ಹೇಳಿದರು. +ವಿಪಕ್ಷ ನಾಯಕ ಆರ್.ಅಶೋಕ್, 10-15 ಮಂದಿ ನೀರು ಪಾಲಾಗಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಮೊದಲು ಅವರ ಪರಿಸ್ಥಿತಿ ಏನಾಗಿದೆ, ಜೀವರಕ್ಷಣೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಿ. ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕುರಿತು ಪ್ರಸ್ತಾಪಿಸಬಹುದು ಎಂದು ಸಲಹೆ ನೀಡಿದರು. +ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣಭೈರೇಗೌಡ, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದ್ದಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ವಿಪತ್ತು ನಿರ್ವಹಣಾ ದಳದ ತಂಡವನ್ನು ಕಾರವಾರದಲ್ಲಿ ನೆಲೆ ನಿಲ್ಲಿಸಲಾಗಿದೆ. ಅದರ ಮೂಲಕ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. +ಸತೀಶ್ ಶೈಲು ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳ ಧೋರಣೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದಾಗ, ಸಭಾಧ್ಯಕ್ಷ ಯು.ಟಿ.ಖಾದರ್ ಜಿಲ್ಲಾಧಿಕಾರಿಗಳು ಹೆದ್ದಾರಿ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಅವಕಾಶವಿದೆ. ಈ ಹಿಂದೆ ಪ್ರಕರಣವೊಂದರಲ್ಲಿ ಹಲವು ಬಾರಿ ಮೌಖಿಕ ಸೂಚನೆ ನೀಡಿದಾಗ ಎನ್ಎಚ್ಐನ ಅಧಿಕಾರಿಗಳು ಸ್ಪಂದಿಸಿರಲಿಲ್ಲ. ಕೊನೆಗೆ ಜಿಲ್ಲಾಧಿಕಾರಿಯವರು ಸರಿಯಾದ ರಸ್ತೆ ನಿರ್ವಹಣೆಯಾಗದೇ ಇದ್ದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದರು. ಆಗ ರಸ್ತೆ ಸರಿ ಹೋಯಿತು. ಅಂಕೋಲದ ಪ್ರಕರಣದಲ್ಲೂ ಜಿಲ್ಲಾಧಿಕಾರಿಗಳ ಪಾತ್ರ ಇರುತ್ತದೆ ಎಂದರು. \ No newline at end of file diff --git a/eesanje/url_46_75_1.txt b/eesanje/url_46_75_1.txt new file mode 100644 index 0000000000000000000000000000000000000000..71cfd5fbdc9b2fb93e23f7e10684a30cd7b9f7c5 --- /dev/null +++ b/eesanje/url_46_75_1.txt @@ -0,0 +1,4 @@ +ಗೌರಿ ಲಂಕೇಶ್‌ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು +ಬೆಂಗಳೂರು,ಜು.16-ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಎಸ್‌‍.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ, ಆರೋಪಿಗಳಾದ ಅಮಿತ್‌ ದಿಗ್ವೇದ್‌ಕರ್‌, ಕೆ.ಟಿ.ನವೀನ್‌ಕುಮಾರ್‌, ಎಚ್‌.ಎಲ್‌.ಸುರೇಶ್‌ಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. +ಗೌರಿ ಲಂಕೇಶ್‌ ಕೊಲೆ ಪ್ರಕರಣದಲ್ಲಿ ಆರೋಪಿಗಳು ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘಕಾಲ ಅವರನ್ನು ಜೈಲಿನಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ. +ಹಿರಿಯ ವಕೀಲ ಅರುಣ್‌ ಶಾಮ್‌, ಮಧುಕರ್‌ ದೇಶಪಾಂಡೆ, ಬಸವರಾಜ್‌ ಸಪ್ಪಣ್ಣನವರ್‌ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಆರೋಪಿ ಎ11 ಮೋಹನ್‌ ನಾಯಕ್‌ಗೆ ಮಾತ್ರ ಜಾಮೀನು ದೊರೆತಿತ್ತು. \ No newline at end of file diff --git a/eesanje/url_46_75_10.txt b/eesanje/url_46_75_10.txt new file mode 100644 index 0000000000000000000000000000000000000000..b9421fb9b89dfa867e8009b98151881c6ba20d56 --- /dev/null +++ b/eesanje/url_46_75_10.txt @@ -0,0 +1,6 @@ +ತಮಿಳುನಾಡಿಗೆ ಹರಿಯುತ್ತಿದೆ ಬೇಡಿಕೆಗಿಂತ ಹೆಚ್ಚು ಕಾವೇರಿ ನೀರು +ಬೆಂಗಳೂರು,ಜು.15-ಕಾನೂನು ಸಂಕಷ್ಟದಿಂದ ಪಾರಾಗಲು ರಾಜ್ಯ ಸರ್ಕಾರ ತಮಿಳುನಾಡಿಗೆ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ನೀರನ್ನು ಬಿಡುತ್ತಿದೆ. ನಮ್ಮಲ್ಲೇ ನೀರಿಲ್ಲ, ನೀರು ಬಿಡಲುಸಾಧ್ಯವೇ ಇಲ್ಲ ಎಂದು ಒಂದೆಡೆ ಸರ್ವಪಕ್ಷಗಳ ಸಭೆ ಕರೆದು ನಿರ್ಣಯ ಕೈಗೊಳ್ಳುವ ನಾಟಕ ಆಡುವುದರ ಜೊತೆಗೆ ನೀರನ್ನು ಸಹ ತಮಿಳುನಾಡಿಗೆ ಹರಿಯಬಿಡುತ್ತಿದೆ. +ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಒಂದು ಟಿಎಂಸಿ ನೀರನ್ನು ಜುಲೈ 25ರವರೆಗೆ ಹರಿಸುವಂತೆ ಆದೇಶಿಸಿದೆ. ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಸರ್ಕಾರ, ಪ್ರತಿದಿನ 2 ಟಿಎಂಸಿ ನೀರನ್ನು ಹರಿಸುತ್ತಿದೆ. +ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಜಲಾಶಯಗಳು ಭರ್ತಿಯಾಗುವ ಸಂಭವವಿದೆ. ಇನ್ನು ಮುಂದೆ ಮಳೆಯಾಗುವ ಸಾದ್ಯತೆ ಇದೆ. ಈಗಾಗಲೇ ನಾವು ತಮಿಳುನಾಡಿಗೆ ನಿಗದಿತ ಪ್ರಮಾಣದಲ್ಲಿ ನೀರು ಹರಿಸಬೇಕಿತ್ತು. ಈಗ ಮಳೆಯಾಗುತ್ತಿದ್ದು, ನೀರು ಬಿಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂಬುದನ್ನು ಅರಿತು ಪ್ರತಿದಿನ 25 ಸಾವರ ಕ್ಯೂಸೆಕ್ಸ್ ಸ ನೀರನ್ನು ಹರಿಯಬಿಡುತ್ತಿದೆ. +ಕಾವೇರಿ ಜಲಾಯನ ಪ್ರದೇಶದ ಕಬಿನಿ ಭರ್ತಿಯಾಗಿದೆ. ಹಾರಂಗಿಗೆ ಒಳ ಹರಿವನ ಪ್ರಮಾಣ ಹೆಚ್ಛಾಗಿದೆ. ಅದೇ ರೀತಿ ಹೇಮಾವತಿ, ಕೆಆರ್ಎಸ್ ಜಲಾಶಯಗಳಿಗೂ ನೀರು ಹೆಚ್ಚಾಗಿ ಹರಿದುಬರುತ್ತಿದೆ. ಮಳೆಯೂ ಕೂಡ ಜಲಾನಯನ ಪ್ರದೇಶದಲ್ಲಿ ಬಿಡುತ್ತಿದೆ. ಹೀಗಾಗಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. +ಕಾನೂನು ಸಂಕಷ್ಟದಿಂದ ಪಾರಾಗಲು ಮತ್ತು ಜೂನ್, ಜುಲೈ ತಿಂಗಳಿಲ್ಲಿ ಹರಿಸಬೇಕಾದ ನೀರನ್ನು ಸಾಧ್ಯವಾದಷ್ಟು ಮಟ್ಟಿಗೆ ಪ್ರಯತ್ನ ಮಾಡಲಾಗುತ್ತಿದೆ. ಒಂದೆಡೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ. ನಮ್ಮಗೆ ನೀರು ಸಾಕಾಗುವುದಿಲ್ಲ ಎಂದು ಎಲ್ಲ ಹೇಳುತ್ತೇಲೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. \ No newline at end of file diff --git a/eesanje/url_46_75_11.txt b/eesanje/url_46_75_11.txt new file mode 100644 index 0000000000000000000000000000000000000000..07d492373d251ddfde5c0f2c76692425d390b6c1 --- /dev/null +++ b/eesanje/url_46_75_11.txt @@ -0,0 +1,6 @@ +ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್ +ಬೆಂಗಳೂರು,ಜು.15-ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.ಬಿಜೆಪಿ ಸದಸ್ಯ ಧನಂಜಯ್ಯ ಸರ್ಜಿ ಪರವಾಗಿ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿಪಡಿಸಿ ಸುತ್ತೋಲೆ ಹೊರಡಿಸಿದೆ. ಇದನ್ನು ಮೀರಿ ಸಾರ್ವಜನಿಕರಿಂದ ಹೆಚ್ಚಿನ ಹಣ ತೆಗೆದುಕೊಂಡರೆ ಕಾನೂನು ಕ್ರಮ ಖಚಿತ ಎಂದು ಎಚ್ಚರಿಕೆ ಕೊಟ್ಟರು. +ಡೆಂಘೀ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್ ಮಾದರಿಯಲ್ಲಿ ನಿಯಂತ್ರಣ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜೊತೆಗೆ ಟಾಸ್ಕ್ಫೋರ್ಸ್ ಕೂಡ ರಚನೆ ಮಾಡಲಾಗಿದೆ ಎಂದು ವಿವರಿಸಿದರು. +ಎರಡಕ್ಕಿಂತ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ ಈ ಪ್ರದೇಶದಲ್ಲಿ ಹೆಚ್ಚಿನ ಡೆಂಘೀ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಈಗಾಗಲೇ ಸಮಾರೋಪಾದಿಯಲ್ಲಿ ಕೆಲಸಗಳನ್ನು ಕೈಗೊಂಡಿದ್ದಾರೆ ಎಂದರು. +ಎರಡು ಅಥವಾ ಮೂರಕ್ಕಿಂತ ಡೆಂಘೀ ಪ್ರಕರಣಗಳು ಕಾಣಿಸಿಕೊಂಡರೆ ಕ್ಲಿನಿಕ್ಗಳನ್ನು ತೆರೆಯಲು ಸೂಚಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ನಾವು ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಕರ್ನಾಟಕ, ತಮಿಳುನಾಡು ಮತ್ತು ಕೇರಳಗಳಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಉತ್ತರ ಭಾರತದಲ್ಲಿ ಈ ಪ್ರಕರಣಗಳು ಕಡಿಮೆ ಇದೆ. +ಮಳೆಗಾಲವಾಗಿರುವುದರಿಂದ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಸೆಪ್ಟೆಂಬರ್ವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ಮಾಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ, ಕಂದಾಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಮೂಲಕ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ. ಸರ್ಕಾರದ ಜೊತೆಗೆ ಶಾಸಕರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. \ No newline at end of file diff --git a/eesanje/url_46_75_12.txt b/eesanje/url_46_75_12.txt new file mode 100644 index 0000000000000000000000000000000000000000..fda0052c86f0567f861cb4c8aa0defcfe6bf15ff --- /dev/null +++ b/eesanje/url_46_75_12.txt @@ -0,0 +1,7 @@ +ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ +ಬೆಂಗಳೂರು,ಜು.15-ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್‌‍ ಪ್ರಸಾದ್‌, ಚಿತ್ರನಟ ದ್ವಾರಕೀಶ್‌, ಖ್ಯಾತ ನಿರೂಪಕಿ ಅಪರ್ಣಾ, ಸಾಹಿತಿ ಕಮಲ ಹಂಪನಾ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ವಿಧಾನಪರಿಷತ್‌ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ನಿರ್ಣಯವನ್ನು ಮಂಡಿಸಿದರು. +ಇತ್ತೀಚೆಗೆ ಅಗಲಿದ ವಿಧಾನಪರಿಷತ್‌ ಮಾಜಿ ಸದಸ್ಯೆ ಸುನಂದಾ ಪಾಟೀಲ್‌‍, ಟಿ.ಕೆ.ಚಿನ್ನಸ್ವಾಮಿ, ಇಕ್ಬಾಲ್‌ ಅಹಮದ್‌ ಸರಡಗಿ, ಎಂ.ಬಿ.ಭಾನು ಪ್ರಕಾಶ್‌‍, ಮಾಜಿ ಸಚಿವೆ ನಾಗಮ ಕೇಶವಮೂರ್ತಿ, ಕೇಂದ್ರದ ಮಾಜಿ ಸಚಿವ ಶ್ರೀನಿವಾಸಪ್ರಸಾದ್‌, ಎಂ.ಪಿ.ಕೇಶವಮೂರ್ತಿ, ಪಾಡ್ದನ ಕಲಾವಿದೆ ಗಿಡಿಗೆರೆ ರಾಮಕ್ಕ, ನಟ ದ್ವಾರಕೀಶ್‌, ಯಕ್ಷಗಾನ ಕಲಾವಿದ ಸುಬ್ರಹಣ್ಯ ಧಾರೇಶ್ವರ, ಪೇತ್ರಿ ಮಾಧವನಾಯಕ್‌ , ಸರೋದ್‌ ವಾದಕ ರಾಜೀವ್‌ ತಾರಾನಾಥ್‌‍, ಹಿರಿಯ ರಂಗಕರ್ಮಿ ಡಾ.ನಟೇಶ್‌ ರತ್ನ, ಕನ್ನಡ ವಿದುಷಿ ಕಮಲಾ ಹಂಪನಾ, ನಿರೂಪಕಿ ಅಪರ್ಣಾ ಅವರಿಗೆ ಸಂತಾಪ ಸೂಚಿಸಲಾಯಿತು. +ಸಂತಾಪ ನಿರ್ಣಯದ ಮೇಲೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ ಅಗಲಿದ ಗಣ್ಯರ ಸೇವೆಯನ್ನು ಸರಿಸಿದರು. ಕೇಂದ್ರ ಮಾಜಿ ಸಚಿವರಾಗಿದ್ದ ವಿ.ಶ್ರೀನಿವಾಸ್‌‍ ಪ್ರಸಾದ್‌ ಅವರು, ದಲಿತ ಸಮುದಾಯದ ಆಶಾಕಿರಣವಾಗಿದ್ದರು. ಯಾವುದೇ ಹುದ್ದೆಯನ್ನು ನೀಡಿದರೂ ಅದನ್ನು ಯಶಸ್ವಿಯಾಗಿ ನಿಭಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ರಾಜ್ಯವು ಅವರನ್ನು ಕಳೆದುಕೊಂಡು ಬಡವಾಗಿದೆ ಎಂದು ವಿಷಾದಿಸಿದರು. +ಚಿತ್ರನಟ ದ್ವಾರಕೀಶ್‌, ನಿರೂಪಕಿ ಅಪರ್ಣ ಸೇರಿದಂತೆ ಅನೇಕರು ಕನ್ನಡ ಭಾಷಾ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದರು. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಹೇಳಿದರು.ಸಭಾ ನಾಯಕ ಎನ್‌.ಎಸ್‌‍.ಭೋಸರಾಜ್‌ ಮಾತನಾಡಿ, ಮಾಜಿ ಸಚಿವೆ ನಾಗಮ ಕೇಶವಮೂರ್ತಿಯವರು ಶಾಸನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಬೇಕೆಂದು ಕನಸು ಕಂಡಿದ್ದರು. ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಹೋರಾಟಗಳನ್ನು ನಡೆಸಿದ್ದರು ಎಂದು ಸರಿಸಿದರು. +ಹಿಂದುಳಿದ ಕಲ್ಯಾಣ ಕರ್ನಾಟಕದ ಕಲಬುರಗಿಯಿಂದ ಸಂಸದರಾಗಿ ವಿಧಾನಪರಿಷತ್‌ ಸದಸ್ಯರಾಗಿದ್ದ ಇಕ್ಬಾಲ್‌ ಅಹಮದ್‌ ಸರಡಗಿ, ವಿ.ಶ್ರೀನಿವಾಸ್‌‍ ಪ್ರಸಾದ್‌, ದ್ವಾರಕೀಶ್‌ ಸೇರಿದಂತೆ ಅನೇಕರು ನಾಡಿಗೆ ತಮದೇ ಆದ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆ ಎಂದೆಂದಿಗೂ ಅಜರಾಮರವಾಗಿರತ್ತದೆ ಎಂದು ಬಣ್ಣಿಸಿದರು. +ಸಂತಾಪ ನಿರ್ಣಯದ ಮೇಲೆ ಬಿಜೆಪಿಯ ಶಶಿಲ್‌ ನಮೋಶಿ ಕೂಡ ಮಾತನಾಡಿ, ಅಗಲಿದ ಗಣ್ಯರ ಸೇವೆಯನ್ನು ಕೊಂಡಾಡಿದರು. ಮೃತರ ಗೌರವಾರ್ಥವಾಗಿ ಸದನದ ಎಲ್ಲ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು. ಬಳಿಕ ಸಭಾಪತಿಯವರು ಜೆಡಿಎಸ್‌‍ನ ಎಸ್‌‍.ಎಲ್‌.ಭೋಜೇಗೌಡ ಅವರನ್ನು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು. \ No newline at end of file diff --git a/eesanje/url_46_75_2.txt b/eesanje/url_46_75_2.txt new file mode 100644 index 0000000000000000000000000000000000000000..78cee87549bbb89c6efd09051362b23669476865 --- /dev/null +++ b/eesanje/url_46_75_2.txt @@ -0,0 +1,7 @@ +ಅಂಕೋಲಾ :ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುಡ್ಡ ಕುಸಿದು 7 ಮಂದಿ ದುರ್ಮರಣ, ತುರ್ತು ರಕ್ಷಣಾ ಕಾರ್ಯ + +ಬೆಂಗಳೂರು,ಜು.16- ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ರೌದ್ರ ನರ್ತನಕ್ಕೆ ಅಂಕೋಲ ತಾಲ್ಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿದ್ದು, ಏಳು ಮಂದಿ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ಇಂದು ಬೆಳಗ್ಗೆ ನಡೆದಿದೆ. +ಇನ್ನು ಹಲವರು ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಹೆದ್ದಾರಿ 66 ಸಮೀಪದ ಹೋಟೆಲ್‌ವೊಂದರ ಬಳಿ ಎಲ್‌ಪಿಜಿ ಟ್ಯಾಂಕರ್‌ ನಿಲ್ಲಿಸಿಕೊಂಡು ಟೀ ಕುಡಿಯುತ್ತಿದ್ದ ವೇಳೆ ಗುಡ್ಡ ಕುಸಿತ ಉಂಟಾಗಿ ಟ್ಯಾಂಕರ್‌ನ ಚಾಲಕ ಮತ್ತು ಕ್ಲೀನರ್‌ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. ಇದರಲ್ಲಿ ಏಳು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ ಎಂದು ಉತ್ತರಕನ್ನಡ ಲೋಕಸಭಾ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. +ಒಂದೇ ಕುಟುಂಬದ ಐದು ಮಂದಿ ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾಗಿದ್ದು, ಮಣ್ಣಿನಡಿ ಸಿಲುಕಿರುವ ಇನ್ನಿಬ್ಬರು ಬದುಕಿರುವ ಸಾಧ್ಯತೆ ಕ್ಷೀಣಿಸಿದೆ. ಅವರನ್ನು ಹೊರತೆಗೆಯಲು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.ಮಣ್ಣಿನಡಿ ಸಿಲುಕಿರುವ ಮೃತದೇಹಗಳನ್ನು ಎನ್‌ಡಿಆರ್‌ಎಫ್‌ ಸಿಬ್ಬಂದಿ ಹೊರತೆಗೆಯುತ್ತಿದ್ದಾರೆ. +ಹೆದ್ದಾರಿ ಸಂಚಾರ ಬಂದ್‌:ಗುಡ್ಡ ಕುಸಿತದಿಂದಾಗಿ ಅಂಕೋಲ ಹೆದ್ದಾರಿಯಲ್ಲಿ ಸಂಚಾರ ಬಂದ್‌ ಆಗಿದ್ದು, ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯಲ್ಲಿ ನಿಂತಿವೆ. ಉತ್ತರಕನ್ನಡದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಗರದಲ್ಲಿರುವ ಕೆಎಸ್‌‍ಆರ್‌ಟಿಸಿ ಬಸ್‌‍ ಡಿಪೋ ಜಲಾವೃತವಾಗಿದ್ದು, 50ಕ್ಕೂ ಹೆಚ್ಚು ಬಸ್‌‍ಗಳು ಮುಳುಗಡೆಯಾಗಿ ಪ್ರಯಾಣಿಕರಿಗೆ ಅಡಚಣೆಯಾಗಿದೆ. +ಅಬ್ಬುವಾಡ ರಸ್ತೆಯಲ್ಲಿನ ಡಿಪೋದಲ್ಲಿದ್ದ ಬಸ್‌‍ಗಳನ್ನು ಹೊರ ತೆಗೆಯಲು ಚಾಲಕರು ಹರಸಾಹಸ ಪಡುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಚರಂಡಿ ನೀರು ಡಿಪೋಗೆ ನುಗ್ಗಿದ ಪರಿಣಾಮ ಸಮಸ್ಯೆಯಾಗಿದೆ. ಹೊನ್ನಾವರ, ಬಾಸ್‌‍ಕೆರೆ , ಹೊರ್ನೆಕೆರೆ ಬಳಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ 69ರಲ್ಲಿ ತಾತ್ಕಾಲಿಕವಾಗಿ ಸಂಚಾರ ಬಂದ್‌ ಮಾಡಲಾಗಿದೆ. ನೂರಾರು ವಾಹನಗಳು ನಿಂತಲ್ಲಿಯೇ ನಿಂತಿದ್ದವು. diff --git a/eesanje/url_46_75_3.txt b/eesanje/url_46_75_3.txt new file mode 100644 index 0000000000000000000000000000000000000000..db02f9fb119c2d4dacae04ad7d2273da7e40a6a9 --- /dev/null +++ b/eesanje/url_46_75_3.txt @@ -0,0 +1,9 @@ +ನಿಷ್ಪಕ್ಷಪಾತವಾಗಿ ಮುಡಾ ಹಗರಣದ ತನಿಖೆ ನಡೆಸುವಂತೆ ನಟ ಚೇತನ್‌ ಆಗ್ರಹ +ಚಿಕ್ಕಬಳ್ಳಾಪುರ,ಜು.16– ಮುಡಾ ಹಗರಣದಲ್ಲಿ ಯಾರ್ಯಾರು ಭಾಗಿಯಾಗಿರುವವರೆಲ್ಲರನ್ನೂ ಪಕ್ಷಾತೀತ ಹಾಗೂ ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು ಎಂದು ನಟ ಚೇತನ್‌ ಆಗ್ರಹಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲೀಕಿ ನಿಗಮದ ಹಗರಣ ಸೇರಿದಂತೆ ಸಾಕಷ್ಟು ಹಗರಣಗಳ ತನಿಖೆ ಮಾಡುವಲ್ಲಿ ಎಸ್‌‍.ಐ.ಟಿ ವಿಲವಾಗುತ್ತಿದೆ. ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು. +ಮುಡಾ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪಕ್ಷಾತೀತವಾಗಿ, ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಅದು ಬಿಜೆಪಿ ಅವಧಿಯಲ್ಲಿ ಆಗಿರುವುದು ಎಂದು ಹೇಳುತ್ತಿರುವುದು ಸರಿಯಾದ ಕ್ರಮವಲ್ಲ ಎಂದರು. +ವಿಧಾನಸೌಧದ ಮುಂಭಾಗದಲ್ಲಿ 25 ಅಡಿ ಉದ್ದದ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿರುವುದು ಮೌಢ್ಯದ ಪ್ರತೀಕ. ಇದು ವೈಜ್ಞಾನಿಕ ಮನಸ್ಥಿತಿಯನ್ನು ಹೋಗಲಾಡಿಸುವ ಪ್ರಯತ್ನ ಇದನ್ನು ಎಲ್ಲರೂ ಖಂಡಿಸಬೇಕು ಎಂದ ಅವರು ತನಿಖಾ ಸಂಸ್ಥೆಗಳು ಸರ್ಕಾರದ ತಾಳಕ್ಕೆ ಕುಣಿಯುತ್ತಿವೆ. +ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಗರಣಗಳು ಹೊರಬರಬೇಕು. ರಾಜ್ಯದ ಕುರಿ ಕಳ್ಳತನ ಹೆಚ್ಚುತ್ತಿರುವ ಕಾರಣ ಕುರಿಗಾಹಿಗಳು ಬಂದೂಕು ವಿತರಣೆ ಮಾಡುವ ಕುರಿತು ಸರ್ಕಾರ ಬಹಳ ದಿನಗಳಿಂದ ಚಿಂತನೆ ನಡೆಸುತ್ತಿದೆ. ಇದೂ ಸಹ ಸರಿಯಾದ ಕ್ರಮವಲ್ಲ. ಇದು ಸಮಾಜದ ಶಾಂತಿ, ಸುರಕ್ಷತೆಗೆ ಹಾನಿಕಾರಕ. ಇದಕ್ಕೆ ಬದಲಾಗಿ ಪೊಲೀಸ್‌‍ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿ. ನೀವು ಬಂದೂಕು ಕೊಡುತ್ತಿರುವುದು ರಕ್ಷಣೆಗೆ ಅಲ್ಲ. ಮನುಷ್ಯರ ನಡುವಿನ ಸಂಘರ್ಷಕ್ಕೆ ದಾರಿಯಾಗಲಿದೆ ಎಂದು ಹೇಳಿದರು. +ದೇಶದಲ್ಲಿ ಅರಣ್ಯ ಕಬಳಿಕೆ ಹೆಚ್ಚಾಗಿದೆ. ಅರಣ್ಯಗಳು ಪ್ರಪಂಚದ ಶ್ವಾಸಕೋಶಗಳಿದ್ದಂತೆ. ಗೋಮಾಳ ಜಾಗವನ್ನು ಕೈಗಾರಿಕೆ ಮತ್ತು ಭೂ ಮಾಲೀಕರು ಅತಿಕ್ರಮಣ ಮಾಡುತ್ತಿದ್ದಾರೆ. ಪ್ರಾಣಿ ಪಕ್ಷಿಗಳ ಉಳಿವಿಗಾಗಿ, ಧನ, ಕರು, ಕುರಿ ಮೇಕೆಗಳ ಮೇವಿಗಾಗಿ ಗೋಮಾಳಗಳ ರಕ್ಷಣೆ ಆಗಬೇಕಿದೆ ಎಂದರು. +ಅಹಿಂದ ಒಕ್ಕೂಟಗಳ ಅಧ್ಯಕ್ಷ, ಹೈಕೋರ್ಟ್‌ ವಕೀಲ ಹರಿರಾಂ ಮಾತನಾಡಿ, ಕಾಂಗ್ರೆಸ್‌‍ ಸರ್ಕಾರ ಗ್ಯಾರಂಟಿಗಳಿಗಾಗಿ ಬೇರೆ ಮಾರ್ಗ ಅನುಸರಿಸಬಹುದು ಎಂದು ನಾವು ಭಾವಿಸ್ದೆಿವು. ಆದರೆ, ದಲಿತರ ಜೇಬನ್ನು ಕದಿಯುತ್ತಿರುವ 420 ಕಾಂಗ್ರೆಸ್‌‍ ಎಂದು ನಾವು ಊಹಿಸಿರಲಿಲ್ಲ. ದಲಿತರ ಎಸ್ಸಿಪಿ – ಟಿಎಸ್ಪಿ ಹಣವನ್ನು ಗ್ಯಾರಂಟಿಗಳ ಅನುಷ್ಟಾನಕ್ಕೆ ಬಳಸಿದೆ. ಕಳೆದ 9 ವರ್ಷಗಳಲ್ಲಿ ಸುಮಾರು 75 ಸಾವಿರ ಕೋಟಿ ದಲಿತರ ಹಣ ದುರ್ಬಳಕೆ ಆಗಿದೆ. ನಿಗಮಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ದಲಿತರ ನಿಯೋಗ ಇದೆಲ್ಲವನ್ನೂ ಪ್ರಶ್ನೆ ಮಾಡಲು ಹೋದಾಗ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕಿಡಿಕಾರಿದರು. +ಪಿ.ಟಿ.ಸಿ.ಎಲ್‌ ಕಾಯ್ದೆಯ ಪರಿಣಾಮ ದಲಿತರು ಭೂಮಿ ಕಳೆದುಕೊಂಡರು. ಅಧಿಕಾರಿಗಳು ದಲಿತರ ವಿರುದ್ಧವಾಗಿ ಆದೇಶ ಮಾಡುತ್ತಿದ್ದಾರೆ. ಎಸಿ, ಡಿಸಿಗಳನ್ನು ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನ ರಕ್ಷಣೆ ಮಾಡುವ ಕೆಲಸಕ್ಕೆ ಸರ್ಕಾರ ಮುಂದಾಗುತ್ತಿದೆ ಎಂದು ಗುಡುಗಿದರು. +ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿರುವ ಶಾಸಕರ ಸಂಬಂಧಿಯೊಬ್ಬರು 150 ಕೋಟಿ ಬೆಲೆಬಾಳುವ ಜಮೀನನ್ನು ದಲಿತರ ವಿರುದ್ಧವಾಗಿ ಆದೇಶ ಮಾಡಿದ್ದಾರೆ. ಜನಪ್ರತಿನಿಧಿಗಳಷ್ಟೇ ಅಲ್ಲ, ಅವರ ಕೆಳಗಿನ ಅಧಿಕಾರಿ ವರ್ಗವೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಂತವರನ್ನು ಕಾಪಾಡುವ ಕೆಲಸಕ್ಕೆ ಸರಕಾರ ಮುಂದಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಪರಿವರ್ತನ ಸಂಘ ರಾಜ್ಯಾಧ್ಯಕ್ಷರಾದ ಹರಿರಾಮ್‌ ನಾಗಾರ್ಜುನ, ವಕೀಲ ಮುನಿರಾಜು, ಅಭಿಲಾಶ್‌, ನಾಗಾರ್ಜುನ, ಸುಬ್ಬು ಇದ್ದರು. \ No newline at end of file diff --git a/eesanje/url_46_75_4.txt b/eesanje/url_46_75_4.txt new file mode 100644 index 0000000000000000000000000000000000000000..5e8e5059e584e5c2550e426282397da4b2606577 --- /dev/null +++ b/eesanje/url_46_75_4.txt @@ -0,0 +1,6 @@ +ಬುರ್ಖಾ ಧರಿಸಿ ಬಂದು ಚಿನ್ನ ದೋಚಿದ ಕಳ್ಳರು +ಅರಕಲಗೂಡು, ಜು.15-ಪಟ್ಟಣದ ಆರ್‌ಆರ್‌ ಗೋಲ್ಸ್ ಡ ಪ್ಯಾಲೇಸ್‌‍ ಚಿನ್ನದ ಅಂಗಡಿಯಲ್ಲಿ ಚಿನ್ನದ ಖರೀದಿಸುವ ನೆಪದಲ್ಲಿ ಮಾರುವೇಷದಲ್ಲಿ ಬುರ್ಖಾ ಧರಿಸಿ ಬಂದಿದ್ದ ನಾಲ್ವರು ಒಡೆಗಳನ್ನು ಕದ್ದು ಪರಾರಿಯಾಗಿದ್ದಾರೆ. +ಒಡವೆಗಳನ್ನು ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದಿರುವ ಕಳ್ಳರು ಓಲೆ ತೋರಿಸಲು ಹೇಳಿ ಓಲೆ ಮತ್ತು ಮಾಂಗಲ್ಯ ಸರಗಳನ್ನು ನೋಡುತ್ತಾ ಸೇಲ್ಸ್ ಸ ಮ್ಯಾನ್‌ ದೀಪಿಕಾ ಅವರ ಗಮನವನ್ನು ಬೇರೆಡೆ ಸೆಳೆದು 94.715 ಗ್ರಾಂ ತೂಕದ 6,91,323 ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. +7.466 ಗ್ರಾಂನ ಓಲೆ, 37.169 ಗ್ರಾಂ ನ ಚಿನ್ನದ ಕರಿಮಣಿ ಸರ, 50.080 ಗ್ರಾಂ ನ 916 ಚಿನ್ನದ ಸರ, ಎರಡು ಎಳೆ ಮಾಂಗಲ್ಯ ಸರ 37.466 ಗ್ರಾಂನ ತೂಕದ ಓಲೆ 37.16 9 ಗ್ರಾಂ ತೂಕದ ಕರಿಮಣಿ ಸರ, 50.080 ಎರಡೆಳೆ ಮಾಂಗಲ್ಯ ಸರವನ್ನು ಕದ್ದಿರುತ್ತಾರೆ. ಈ ಎಲ್ಲಾ ಕಳ್ಳತನದ ದೃಶ್ಯ ನಮ್ಮ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. +ನಾವು ಮರುದಿನ ಸ್ಟಾಕ್‌ ಚೆಕ್‌ ಮಾಡುವ ವೇಳೆ ಈ ಘಟನೆ ಕಂಡುಬಂದಿರುತ್ತದೆ. ಈ ಸಂದರ್ಭದಲ್ಲಿ ನಮ್ಮ ಅಂಗಡಿಯ ಎಕ್ಸಿಕ್ಯೂಟಿವ್‌ ದೀಪಿಕಾ ಅವರ ಗಮನವನ್ನು ಬೇರೆ ಸೆಳೆದು ನಾಲ್ಕು ಜನರು ಸಹ ಚಾಲಾಕಿತನದಿಂದ ಈ ಕಳ್ಳತನವನ್ನು ಮಾಡಿಕೊಂಡು ಹೋಗಿರುತ್ತಾರೆ. +ನಾವು ಅರಕಲಗೂಡು ಪಟ್ಟಣದ ಇತರೆ ಅಂಗಡಿಗಳು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿ ಅವರುಗಳು ಅನಕೃ ವೃತ್ತದವರೆಗೆ ನಡೆದುಕೊಂಡು ಬಂದಿದ್ದು ಆನಂತರ ಯಾವ ಕಡೆ ಹೋಗಿರುತ್ತಾರೆ ಎಂದು ತಿಳಿದು ಬಂದಿದಿಲ್ಲ. ದಿನೇ ದಿನೇ ಪಟ್ಟಣದಲ್ಲಿ ಕಳ್ಳತನಗಳು ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಆರಕ್ಷಕ ಇಲಾಖೆಯವರು ತುರ್ತಾಗಿ ಕ್ರಮ ಕೈಗೊಂಡು ಕಳ್ಳತನಗಳುನ್ನು ತಡೆಗಟ್ಟಬೇಕೆಂದು ನಾವು ಎಲ್ಲರ ಪರವಾಗಿ ಕೇಳಿಕೊಳ್ಳುತ್ತೇನೆ ಎಂದರು. ಅರಕಲಗೂಡು ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_75_5.txt b/eesanje/url_46_75_5.txt new file mode 100644 index 0000000000000000000000000000000000000000..f1210cdef0c330fbf91dccd07abe1e9a49be48a9 --- /dev/null +++ b/eesanje/url_46_75_5.txt @@ -0,0 +1,9 @@ +ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ +ಬೆಂಗಳೂರು,ಜು.15-ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷರಾಗಿದ್ದ ನಾಗಮ ಕೇಶವಮೂರ್ತಿ, ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರಾಗಿದ್ದ ವಿ.ಶ್ರೀನಿವಾಸ ಪ್ರಸಾದ್‌, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ನಿರೂಪಕಿ ಅಪರ್ಣಾ ಸೇರಿದಂತೆ ಇತ್ತೀಚೆಗೆ ನಿಧನರಾದ ಗಣ್ಯರಿಗೆ ವಿಧಾನಸಭೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿದರು. +ಸಭಾಧ್ಯಕ್ಷರು ಮಂಡಿಸಿದ ಸಂತಾಪ ಸೂಚನೆಯನ್ನು ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಾಗಮ ಕೇಶವಮೂರ್ತಿಯವರು ಸಾಮಾಜಿಕ ಸೇವೆಯಲ್ಲಿ ಮದರ್‌ ಥೆರೇಸಾ, ರಾಜಕಾರಣದಲ್ಲಿ ದಾವಣಗೆರೆ ಇಂದಿರಾಗಾಂಧಿ ಎಂದೇ ಖ್ಯಾತಿ ಪಡೆದಿದ್ದರು. ಶ್ರೀನಿವಾಸ್‌‍ ಪ್ರಸಾದ್‌ ಅವರು, ಆರು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿ ಶೋಷಿತರ, ದೀನ ದಲಿತರ ಹಿಂದುಳಿದವರ ಧ್ವನಿಯಾಗಿದ್ದರು ಎಂದು ಗುಣಗಾನ ಮಾಡಿದರು. +ದ್ವಾರಕೀಶ್‌ ಅವರು ಖ್ಯಾತ ಹಾಸ್ಯನಟರಾಗಿದ್ದು, ನಿರ್ಮಾಪಕ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಸಿಂಗಾಪುರದಲ್ಲಿ ರಾಜಾ ಕುಳ್ಳ ಎಂಬುದು ವಿದೇಶದಲ್ಲೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು ಎಂದು ಸರಿಸಿದರು.ಸಾಹಿತಿ ಕಮಲಾ ಹಂಪನಾ ಅವರು ಜೈನ ಧರ್ಮ, ಹಳಗನ್ನಡ ಗ್ರಂಥ ಸಂಪಾದನೆ ಮಾಡಿದ್ದರು. ದಾನ ಚಿಂತಾಮಣಿ, ಅತ್ತಿಮಬ್ಬೆ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದು. ನಾಡೋಜ ಗೌರವವೂ ಅವರಿಗೆ ಸಂದಿತ್ತು ಎಂದು ಹೇಳಿದರು. +ನಿರೂಪಕಿ ಅಪರ್ಣಾ ಅವರು ಶುದ್ಧಕನ್ನಡದಲ್ಲಿ ನಿರೂಪಣೆ ಮಾಡುವ ಕಲೆ ಮೈಗೂಡಿಸಿಕೊಂಡಿದ್ದರು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು ಎಂದರು. ಖ್ಯಾತ ಧರ್ಮಗುರುವಾಗಿದ್ದ ಖಾಝಿ ಅಸ್ಸಯ್ಯದ್ ಫಝಲ್‌ ಕೋಯಮ ತಂಙಳ್‌ ಅಲ್ಬುಖಾರಿ ಅವರು ಜಾತಿ, ಧರ್ಮ, ಮತ ಭೇದವಿಲ್ಲದೆ ಮಾನವೀಯತೆಯಿಂದ ಕೂಡಿದ ವ್ಯಕ್ತಿ ಎಂದು ಸರಿಸಿದ ಅವರು, ಇತ್ತೀಚೆಗೆ ಅಗಲಿದ ಎಲ್ಲಾ ಗಣ್ಯರಿಗೂ ಶಾಂತಿ ದೊರೆಯಲಿ, ಸಾವಿನ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ಹಾಗೂ ಬಂಧುಗಳಿಗೆ ದೊರೆಯಲಿ ಎಂದು ಕೋರಿದರು. +ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ಮಾತನಾಡಿ, ನಾನು ಶಾಸಕನಾಗಿದ್ದಾಗ ಮತ್ತು ಶಾಸಕನಾಗುವ ಮೊದಲು ಸದಸ್ಯರಾಗಿದ್ದವರು ನಿಧನರಾಗಿದ್ದಾರೆ. ಅವರು ಈ ಸದನಕ್ಕೆ ಗೌರವ ತರುವ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಸಾಹಿತ್ಯ, ಚಿತ್ರರಂಗಕ್ಕೂ ಗೌರವ ತರುವ ರೀತಿಯಲ್ಲಿ ಕೆಲಸ ಮಾಡಿದ ಗಣ್ಯರೂ ಅಗಲಿದ್ದಾರೆ. ಇವರೆಲ್ಲರಿಗೂ ಸಂತಾಪವನ್ನು ಸೂಚಿಸುವುದಾಗಿ ತಿಳಿಸಿದರು. +ನಾಗಮ ಕೇಶವಮೂರ್ತಿಯವರು ಮಹಿಳೆಯರಿಗೆ ದಾರಿದೀಪವಾಗಿದ್ದವರು ಎಂದು ಸರಿಸಿದರು. ಶ್ರೀನಿವಾಸ್‌‍ ಪ್ರಸಾದ್‌ ಅವರು ಯಾವುದೇ ಪಕ್ಷದಲ್ಲಿದ್ದರೂ ತಮ್ಮ ತನವನ್ನು ಬಿಟ್ಟುಕೊಟ್ಟಿರಲಿಲ್ಲ. ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಕೆಲಸ ಮಾಡಿದ್ದರು. ಅಪರ್ಣಾ ಅವರ ಧ್ವನಿ ಮೆಟ್ರೋದಲ್ಲಿ ಉಳಿದಿದೆ. ದ್ವಾರಕೀಶ್‌ ಅವರು ಹಾಸ್ಯನಟರಾಗಿ ಹೆಚ್ಚು ಚಿರಪರಿಚಿತರಾದವರು ಎಂದು ಮೃತರ ಗುಣಗಾನ ಮಾಡಿದರು. +ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಶ್ರೀನಿವಾಸ್‌‍ ಪ್ರಸಾದ್‌ ಸ್ನೇಹಮಯಿಯಾಗಿದ್ದರು. ದ್ವಾರಕೀಶ್‌ ಅವರು ಆತೀಯರಾಗಿದ್ದರೂ ಅವರ ಸಿನಿಮಾವನ್ನು ಕ್ಯೂನಲ್ಲಿ ನಿಂತು ಟಿಕೆಟ್‌ ಪಡೆದು ವೀಕ್ಷಿಸಲಾಗುತ್ತಿತ್ತು. ಕಮಲಾ ಹಂಪನಾ ಅವರ ಪುತ್ರನ ಜೊತೆ ತಾವೂ ವ್ಯಾಸಂಗ ಮಾಡುವಾಗ ರಾಜಾಜಿನಗರದಲ್ಲಿ ಸಮಯ ಕಳೆದಿದ್ದೆವು ಎಂದು ಮೃತರ, ಗಣ್ಯರ ನಡುವಿನ ಒಡನಾಟವನ್ನು ಮೆಲುಕು ಹಾಕಿದರು. +ಸಚಿವ ಡಾ.ಎಚ್‌.ಸಿಮಹದೇವಪ್ಪ ಮಾತನಾಡಿ, 14 ಜನ ಮಹನೀಯರು ನಮ್ಮನ್ನು ಅಗಲಿದ್ದಾರೆ. ಹುಟ್ಟು ಸ್ವಾಭಾವಿಕ, ಸಾವು ಖಚಿತ. ಬದುಕಿನ ಪ್ರಯಾಣ ಅಂತ್ಯಗೊಳಿಸಿದವರಿಗೆ ನಾವು ಸಂತಾಪವನ್ನು ಸಲ್ಲಿಸುತ್ತಿದ್ದೇವೆ ಎಂದು ಹೇಳಿ ಮೃತರ ಗುಣಗಾನ ಮಾಡಿದರು.ಜೆಡಿಎಸ್‌‍ನ ಶಾಸಕರಾದ ಶಾರದಾ ಪೂರ್ಯ ನಾಯಕ್‌, ತರೀಕೆರೆ ಶ್ರೀನಿವಾಸ್‌‍, ಹರೀಶ್‌ ಪೂಂಜಾ, ದರ್ಶನ್‌ ಧ್ರುವನಾರಾಯಣ, ಕೂಡ್ಲಗಿ ಶ್ರೀನಿವಾಸ್‌‍, ಶೈಲೇಂದ್ರ, ಹರೀಶ್‌, ಕೆ.ಆರ್‌.ಕೃಷ್ಣಮೂರ್ತಿ, ಬಿ.ವೈ.ವಿಜಯೇಂದ್ರ, ಬಸಂತಪ್ಪ, ಕೃಷ್ಣಪ್ಪ ಮತ್ತಿತರರು ಮೃತರ ಗುಣಗಾನ ಮಾಡಿ ತೀವ್ರ ಸಂತಾಪ ಸೂಚಿಸಿದರು.ನಂತರ ಸದನದಲ್ಲಿ ಸದಸ್ಯರೆಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. \ No newline at end of file diff --git a/eesanje/url_46_75_6.txt b/eesanje/url_46_75_6.txt new file mode 100644 index 0000000000000000000000000000000000000000..88f7f2d0a4054a1e9f820bc2f56ab25af9cd68f9 --- /dev/null +++ b/eesanje/url_46_75_6.txt @@ -0,0 +1,5 @@ +ಜೆಡಿಎಲ್‌ಪಿ ನಾಯಕರಾಗಿ ಸುರೇಶ್‌ಬಾಬು ನೇಮಕ +ಬೆಂಗಳೂರು,ಜು.15-ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್‌ಬಾಬು ಅವರನ್ನು ನೇಮಿಸಲಾಗಿದೆ. ಜೆಡಿಎಸ್‌‍ನ ರಾಜ್ಯಾಧ್ಯಕ್ಷರಾದ ಎಚ್‌.ಡಿ.ಕುಮಾರಸ್ವಾಮಿಯವರ ಶಿಫಾರಸು ಆಧರಿಸಿ ಜೆಡಿಎಸ್‌‍ ಪಕ್ಷದ ಶಾಸಕರನ್ನಾಗಿ ನೇಮಿಸಿರುವುದಾಗಿ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್‌ ಪ್ರಕಟಿಸಿದರು. +ಕುರುಬ ಸಮುದಾಯಕ್ಕೆ ಸೇರಿರುವ ಸುರೇಶ್‌ಬಾಬು ಅವರು, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ನಾಲ್ಕನೇ ಅವಧಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೊದಲು ಎಚ್‌.ಡಿ. ಕುಮಾರ ಸ್ವಾಮಿಯವರು ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕರಾಗಿ ಕೆಲಸ ಮಾಡುತ್ತಿದ್ದರು. +ಅಧಿಕೃತ ಬಿಜೆಪಿ ವಿರೋಧ ಪಕ್ಷವಾಗಿದ್ದರೂ ಕೂಡ ಜೆಡಿಎಸ್‌‍ನ ಕುಮಾರಸ್ವಾಮಿಯವರ ಚರ್ಚೆಗಳು, ಹೇಳಿಕೆಗಳು ಹೆಚ್ಚು ಮಹತ್ವ ಪಡೆದುಕೊಂಡಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ- ಜೆಡಿಎಸ್‌‍ ಮೈತ್ರಿರಾಜಕಾರಣ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರ ದಿಂದ ಸಂಸದರಾಗಿ ಆಯ್ಕೆಯಾಗಿದ್ದು, ಕೇಂದ್ರ ಸರ್ಕಾರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. +ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅವರಿಂದ ತೆರವಾದ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸುರೇಶ್‌ ಬಾಬು ಅವರನ್ನು ನೇಮಿಸಲಾಗಿದೆ. \ No newline at end of file diff --git a/eesanje/url_46_75_7.txt b/eesanje/url_46_75_7.txt new file mode 100644 index 0000000000000000000000000000000000000000..55c7f51844745ea8a197b16e846da9c1068b46e6 --- /dev/null +++ b/eesanje/url_46_75_7.txt @@ -0,0 +1,7 @@ +ರಾಯಚೂರು ಏಮ್ಸೌ ಕುರಿತು ಮೇಲ್ಮನೆಯಲ್ಲಿ ವಾಕ್ಸಮರ +ಬೆಂಗಳೂರು,ಜು.15-ರಾಯಚೂರಿ ನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸೌ) ಸ್ಥಾಪನೆ ಮಾಡುವ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಿಧಾನ ಪರಿಷತ್ನಲ್ಲಿ ಭಾರೀ ಮಾತಿನ ಚಕಮಕಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ತಿಪ್ಪೇಸ್ವಾಮಿ ಅವರು ರಾಯಚೂರಿನಲ್ಲಿ ಏಮ್ಸೌ ಆಸ್ಪತ್ರೆಯನ್ನು ಯಾವಾಗ ಸ್ಥಾಪನೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. +ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ರಾಯಚೂರಿನಲ್ಲಿ ಏಮ್ಸೌ ಸ್ಥಾಪನೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಸಂಸದರು, ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ಕೇಂದ್ರದ ಆರೋಗ್ಯ ಸಚಿವರನ್ನು ಎರಡು ಬಾರಿ ಭೇಟಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಏಮ್ಸೌ ಆಸ್ಪತ್ರೆ ಸ್ಥಾಪನೆ ಮಾಡಿದರೆ ಭೂಮಿ, ವಿದ್ಯುತ್, ನೀರು ಸೇರಿದಂತೆ ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ಹೇಳಿದ್ದೆವು. ಆದರೂ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ದೇಶದ ಎಲ್ಲ ರಾಜ್ಯಗಳಲ್ಲೂ ಏಮ್ಸೌ ಸ್ಥಾಪನೆ ಮಾಡಲು ಅವಕಾಶ ನೀಡಲಾಗಿದೆ ಆದರೆ ಕರ್ನಾಟಕ ಮತ್ತು ಕೇರಳಕ್ಕೆ ಅವಕಾಶ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಆಕ್ಷೇಪಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಗದ್ದಲ ಉಂಟಾಯಿತು. ಬಿಜೆಪಿಯ ಸಿ.ಟಿ.ರವಿ ಅವರು ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡಿಲ್ಲ. ಐಐಟಿ ಕೊಟ್ಟಿದ್ದು ನರೇಂದ್ರಮೋದಿ ಸರ್ಕಾರವಲ್ಲವೇ? ಎಂದು ಪ್ರಶ್ನೆ ಮಾಡಿದರು. +ಆಗ ಆಡಳಿತ ಪಕ್ಷ ಪ್ರಿಯಾಂಕ ಖರ್ಗೆ ಸೇರಿದಂತೆ ಮತ್ತಿತರರು ಕೇಂದ್ರ ಸರ್ಕಾರವೇನೂ ನಮ್ಮಗೆ ದಾನ ಕೊಡುತ್ತದೆಯೇ? ನಾವೇನು ಕೇಂದ್ರಕ್ಕೆ ತೆರಿಗೆ ಕಟ್ಟುವುದಿಲ್ಲವೇ? ಕರ್ನಾಟಕಕ್ಕೆ ಏಮ್ಸೌ ಮಂಜೂರು ಮಾಡಲು ನಿಮ ಪ್ರಧಾನಿಗೆ ಹೇಳಿ ಎಂದು ಸವಾಲು ಹಾಕಿದರು. +ಮುಖ್ಯಮಂತ್ರಿಗಳು ಅನೇಕ ಬಾರಿ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರೂ ಸ್ಪಂದಿಸಿಲ್ಲ. ಇನ್ನು ಎಷ್ಟು ಬಾರಿ ಪ್ರಯತ್ನಿಸಬೇಕು, ನಮ್ಮಗೇನು ಉಚಿತವಾಗಿ ಕೊಡುವುದಿಲ್ಲ. ಬೇರೆ ರಾಜ್ಯಗಳಿಗೆ ಕೊಟ್ಟಂತೆ ನಮ್ಮಗೂ ಕೊಡಬೇಕು ಎಂಬುದಷ್ಟೇ ನಮ್ಮ ಮನವಿ. ನಿಮ ಸಂಸದರ ಮೂಲಕ ಒತ್ತಡ ಹಾಕಿ ಶರಣಪ್ರಕಾಶ್ ಪಾಟೀಲ್ ಸಿ.ಟಿ.ರವಿಗೆ ತಿರುಗೇಟು ನೀಡಿದರು. \ No newline at end of file diff --git a/eesanje/url_46_75_8.txt b/eesanje/url_46_75_8.txt new file mode 100644 index 0000000000000000000000000000000000000000..84f019c22cfb71feac481629166f2a3aaa2c38a6 --- /dev/null +++ b/eesanje/url_46_75_8.txt @@ -0,0 +1,10 @@ +ಡಿಸಿಎಂ ಡಿಕೆಶಿಗೆ “ಸುಪ್ರೀಂ” ಹಿನ್ನಡೆ, ಸಿಬಿಐ ತನಿಖೆ ರದ್ದು ಕೋರಿದ್ದ ಅರ್ಜಿ ವಜಾ +ಬೆಂಗಳೂರು,ಜು.15-ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಭಾರೀ ಹಿನ್ನಡೆ ಉಂಟಾಗಿದೆ. +ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ಮೂರು ತಿಂಗಳೊಳಗೆ ಶಿವಕುಮಾರ್ ಮೇಲಿನ ಆರೋಪದ ಕುರಿತು ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ. +ಈ ವೇಳೆ ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಕಾಯ್ದೆಯಡಿ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಸಿಬಿಐ ಕೂಡ ಅದರ ವಿಚಾರಣೆ ನಡೆಸುವುದು ಹೇಗೆ? ಇದು ಅಕ್ರಮ ಎಂದು ವಾದ ಮಂಡಿಸಿದರು. +ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಮ ಮೇಲೆ ಇಸಿ ಆಕ್ಟ್ ನಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇಸಿ ಆಕ್ಟ್ನಡಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು. +ಏನಿದು ಪ್ರಕರಣ?:2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಇಡಿ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. +ಈ ಎಫ್ಐಆರ್ನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್, ಸುಪ್ರೀಂ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ . ಈ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ.ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. +2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು. ಸುಮಾರು ಶೇ.45 ಅಥವಾ ರೂ. 75 ಕೋಟಿ ರೂ.ರಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. +ಈಗಲ್ಟನ್ ರೆಸಾರ್ಟ್ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು. +ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. \ No newline at end of file diff --git a/eesanje/url_46_75_9.txt b/eesanje/url_46_75_9.txt new file mode 100644 index 0000000000000000000000000000000000000000..c68d92443cefe7ca8c82d124743b5b8b025dec9f --- /dev/null +++ b/eesanje/url_46_75_9.txt @@ -0,0 +1,7 @@ +ಸಾರಿಗೆ ಬಸ್ ಟಿಕೆಟ್ ದರ ಏರಿಕೆಯಿಲ್ಲ : ಸಚಿವ ರಾಮಲಿಂಗಾರೆಡ್ಡಿ +ಬೆಂಗಳೂರು,ಜು.15-ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಮ್ಮ ಮುಂದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿರುವ ರಾಜು ಕಾಗೆ ಅವರು, ಪೆಟ್ರೋಲ್, ಡೀಸೆಲ್ ದರದ ಏರಿಕೆ ನಂತರ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ. +ಈಗ ಈ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಹೇಳಿಕೆಗೆ ಸಚಿವರು ಅಸಮತಿ ಸೂಚಿಸಿದರು.ಅಧ್ಯಕ್ಷರಾಗಿ ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಆದರೆ ಸಚಿವನಾಗಿ ನನ್ನ ಮುಂದೆ ಯಾವುದೇ ಪ್ರಸ್ತಾಪಗಳಿಲ್ಲ. ಒಂದು ವೇಳೆ ಅಂತಹ ಪ್ರಸ್ತಾಪಗಳು ಬಂದರೆ ಪರಿಶೀಲಿಸುವುದಾಗಿ ಹೇಳಿದರು. ಈ ಮೂಲಕ ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಸಚಿವರು ತಳ್ಳಿ ಹಾಕಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲೆ ಮಾರಾಟ ತೆರಿಗೆ ಏರಿಕೆ ಮಾಡಿದ ಬಳಿಕ ಸಾರಿಗೆ ಸಂಸ್ಥೆಗಳಿಗೆ ನಷ್ಟವಾಗುತ್ತಿದೆ ಎಂಬ ವ್ಯಾಖ್ಯಾನಗಳು ಕೇಳಿಬಂದಿವೆ. +ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಿಜೆಪಿಯವರು ಹೇಳುತ್ತಿರುವಂತಹ ಹಗರಣ ನಡೆದಿರುವುದು 2021 ರಲ್ಲಿ. ಆಗ ಮುಖ್ಯಮಂತ್ರಿಯಾಗಿದ್ದುದು ಬಿ.ಎಸ್.ಯಡಿಯೂರಪ್ಪ ಅವರು. ಸಾರಿಗೆ ಸಚಿವರು, ಮುಡಾ ಅಧ್ಯಕ್ಷರಾಗಿದ್ದವರೂ ಕೂಡ ಬಿಜೆಪಿ ನಾಯಕರು. ಸಿದ್ದರಾಮಯ್ಯನವರು ತಮ್ಮ ಜಮೀನಿಗೆ ಪರಿಹಾರ ಕೇಳಿದ್ದಾರೆ. ಬಿಜೆಪಿಯವರು ನಿಯಮ ಬಾಹಿರವಾಗಿ ನಿವೇಶನಗಳನ್ನು ಕೊಟ್ಟಿದ್ದರೆ ಅದು ಅವರೇ ಮಾಡಿದ ತಪ್ಪು. ಅದಕ್ಕೆ ನಮ್ಮ ಸರ್ಕಾರ ಹೊಣೆಯಲ್ಲ ಎಂದರು. +ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಯಾವುದೇ ಆರೋಪಗಳು ಕೇಳಿಬಂದರೂ ತನಿಖೆ ನಡೆಸುತ್ತಿದ್ದೇವೆ. ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಹಗರಣದಲ್ಲಿ ಎಸ್ಐಟಿ ತನಿಖೆಗೆ ವಹಿಸಲಾಗಿದೆ. ಮುಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. +ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್ಐ, ಎಂಜಿನಿಯರಿಂಗ್, ಕೆಇಬಿ ಹುದ್ದೆಗಳ ನೇಮಕಾತಿಗೆ ಹಗರಣಗಳಾಗಿದ್ದವು. ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸೇರಿದಂತೆ ನಾನಾ ಹಗರಣಗಳಾಗಿದ್ದವು. ಬಿಜೆಪಿ ಇದ್ಯಾವುದನ್ನೂ ತನಿಖೆಗೆ ಒಪ್ಪಿಸಲಿಲ್ಲ. ನಮ್ಮ ಸರ್ಕಾರ ಪಾರದರ್ಶಕವಾಗಿದೆ. ಅದಕ್ಕಾಗಿ ಯಾವುದೇ ಆರೋಪ ಕೇಳಿಬಂದರೂ ತನಿಖೆ ಮಾಡಿಸುತ್ತಿದ್ದೇವೆ ಎಂದು ಹೇಳಿದರು. +ಶೇ.40 ಹಗರಣಕ್ಕೆ ಸಾಕ್ಷಿ ಇರುವುದಿಲ್ಲ. ಒಂದು ವೇಳೆ ಸಾಕ್ಷಿ ಕೊಡಬೇಕೆಂದಾದರೂ ನ್ಯಾಯಾಲಯದಲ್ಲಿ ವಿಚಾರಣೆಯಾಗಬೇಕು, ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಬೇಕು, ಅನಂತರ ಸಾಕ್ಷಿಯನ್ನು ಸಲ್ಲಿಸಬಹುದು ಎಂದರು. \ No newline at end of file diff --git a/eesanje/url_46_76_1.txt b/eesanje/url_46_76_1.txt new file mode 100644 index 0000000000000000000000000000000000000000..ee42d88f457c40b51c04653769f05a5ca24ca44f --- /dev/null +++ b/eesanje/url_46_76_1.txt @@ -0,0 +1,6 @@ +ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಕುರಿತ ಚರ್ಚೆಗೆ ವಿಧಾನಪರಿಷತ್‌ನಲ್ಲಿ ನಿಲುವಳಿ ಸೂಚನೆ +ಬೆಂಗಳೂರು,ಜು.15-ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ಬಹುಕೋಟಿ ಹಗರಣ ಕುರಿತು ಚರ್ಚೆಗೆ ಅವಕಾಶ ಕೊಡಬೇಕೆಂದು ಪ್ರತಿಪಕ್ಷ ಬಿಜೆಪಿ ವಿಧಾನಪರಿಷತ್‌ನಲ್ಲಿ ನಿಲುವಳಿ ಸೂಚನೆ ಮಂಡಿಸಿತು. ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ನಿಯಮ 59ರಡಿ ನಿಲುವಳಿ ಸೂಚನೆ ಮಂಡಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದರು. +ಇದು ಬಹುದೊಡ್ಡ ಹಗರಣವಾಗಿರುವುದರಿಂದ ದಿನದ ಕಲಾಪವನ್ನು ಬದಿಗೊತ್ತಿ ಚರ್ಚೆಗೆ ಅವಕಾಶ ಮಾಡಿಕೊಡಿ. ಇದೊಂದು ಬ್ರಹಾಂಡ ಭ್ರಷ್ಟಾಚಾರ. ಅಹಿಂದ ನಾಯಕರು ಎಂದುಕೊಂಡವರ ಅಡಿಯಲ್ಲೇ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.ಆಗ ಸಭಾಪತಿಗಳು ಸದನವನ್ನು ನಿಯಮಗಳ ಪ್ರಕಾರ ನಡೆಸಬೇಕು, ನೀವು ನೋಟಿಸ್‌‍ ನೀಡಿರುವುದು ನಮ ಗಮನಕ್ಕೆ ಬಂದಿದೆ. ಮೊದಲು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಳ್ಳಬೇಕು. ನಂತರ ನಿರ್ಧರಿಸುತ್ತೇನೆ ಎಂದು ಹೇಳಿದರು. +ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿಯ ಎನ್‌.ರವಿಕುಮಾರ್‌ ಅವರು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಿಂದ ಬಳ್ಳಾರಿ ಲೋಕಸಭೆ ಚುನಾವಣೆಗೆ ಎಷ್ಟು ಹಣ ಹೋಗಿದೆ? ತೆಲಂಗಾಣಕ್ಕೆ ಎಷ್ಟು ಹಣ ಹೋಗಿದೆ ಇದರ ಬಗ್ಗೆ ಚರ್ಚೆಯಾಗಬೇಕೆಂದು ಪಟ್ಟು ಹಿಡಿದರು. +ಈ ಸಂದರ್ಭದಲ್ಲಿ ಕಾಂಗ್ರೆಸ್‌‍ನ ಯು.ಬಿ.ವೆಂಕಟೇಶ್‌ ಅವರು ನಿಮದು ಸಾವಿರಾರು ಕೋಟಿ ಭ್ರಷ್ಟಾಚಾರದ ಬಗ್ಗೆ ನಮ ಬಳಿಯೂ ದಾಖಲೆಗಳಿವೆ. ಸಭಾಪತಿಗಳು ಪ್ರಶ್ನೋತ್ತರವನ್ನು ಕೈಗೆತ್ತಿಕೊಳ್ಳುತ್ತೇನೆ ಎಂದು ಹೇಳಿದ ಮೇಲೆ ಚರ್ಚೆ ಮಾಡುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತಾದರೂ ಗಲಾಟೆ ನಡುವೆಯೇ ಸಭಾಪತಿಯವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡರು. \ No newline at end of file diff --git a/eesanje/url_46_76_10.txt b/eesanje/url_46_76_10.txt new file mode 100644 index 0000000000000000000000000000000000000000..36e7ee366a93844a2b01d2f7f98716db047df8f5 --- /dev/null +++ b/eesanje/url_46_76_10.txt @@ -0,0 +1,7 @@ +ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ : ರೆಡ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಜು.15-ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದೆ. ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. +ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಹಾಗೂ ಪಿಯುಸಿವರೆಗೂ ಕಾಲೇಜಿಗೆ ರಜೆ ನೀಡಲಾಗುತ್ತಿದೆ. ರಾಜ್ಯದ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಮಲೆನಾಡು ಸೇರಿದಂತೆ ಕೆಲವೆಡೆ ಉತ್ತಮ ಮಳೆಯಾಗಿದೆ.ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. +ಕೇರಳದ ಉತ್ತರ ಕರಾವಳಿಯೊಂದ ಮಹಾರಾಷ್ಟ್ರದವರೆಗೆ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ(ಟ್ರಫ್‌) ಉಂಟಾಗಿದೆ. ಜೊತೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಆಂದ್ರ ಪ್ರದೇಶದ ಕರಾವಳಿಯ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದೆ ಪರಿಚಲನೆ ಉಂಟಾಗುತ್ತಿದೆ. +ಈ ಎರಡು ಕಾರಣಗಳಿಂದ ಮೋಡ ಕವಿದ ವಾತಾವರಣ ಕಂಡುಬರಲಿದೆ. ಕೆಲವೆಡೆ ತುಂತುರು ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.ನಾಳೆಯಿಂದ ಜು.19ರವರಗೆ ಜೋರಾದ ಮೇಲೈ ಗಾಳಿ ಬೀಸಲಿದೆ. ಅಲ್ಲದೆ, ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯನ್ನು ಉಲ್ಲೇಖಿಸಿ ಹೇಳಿದೆ. +ಉತ್ತರ ಒಳನಾಡಿನಲ್ಲಿ ನಾಳೆಯಿಂದ ಎರಡು ದಿನ ಅಧಿಕ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ನಿನ್ನೆಯಿಂದಲೇ ಕೆಲವೆಡೆ ಆಗಾಗ್ಗೆ ತುಂತುರು ಮಳೆ ಆರಂಗೊಂಡಿದ್ದು, ಇಂದೂ ಮುಂದುವರೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಆರಂಭಗೊಂಡ ಹಗುರ ಮಳೆ ಇಂದೂ ಕೂಡ ಮುಂದುವರೆದಿದೆ. +ಮೋಡ ಕವಿದಿರುವುದರಿಂದ ತಂಪಾದ ವಾತಾವರಣವಿದ್ದು, ಚಳಿಯ ಅನುಭವವಾಗುತ್ತಿದೆ. ಜಿಟಿಜಿಟಿ ಮಳೆಯಾಗುವ ಲಕ್ಷಗಳು ಗೋಚರಿಸುತ್ತಿವೆ. ಇದರಿಂದ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರು ಕೊಡೆ, ಜರ್ಕಿನ್‌ಗಳ ಆಶ್ರಯ ಪಡೆದಿರುವುದು ಹಲವೆಡೆ ಕಂಡುಬಂದಿತು. \ No newline at end of file diff --git a/eesanje/url_46_76_11.txt b/eesanje/url_46_76_11.txt new file mode 100644 index 0000000000000000000000000000000000000000..3e8d68de6bff2eb8e89ae379d88e148c22661dee --- /dev/null +++ b/eesanje/url_46_76_11.txt @@ -0,0 +1,4 @@ +ದುಮ್ಮಿಕ್ಕಿ ಹರಿಯುತ್ತಿರುವ ಜೋಗ ಜಲಪಾತ ವೀಕ್ಷಣೆಗೆ ಮುಗಿಬಿದ್ದ ಪ್ರವಾಸಿಗರು +ಶಿವಮೊಗ್ಗ,ಜು.15-ಶರಾವತಿ ನದಿಪಾತ್ರದಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಜೋಗಜಲಪಾತದ ರಾಜ, ರಾಣಿ, ರೋರಲ್‌ಲೇಡಿ ಹಾಗೂ ರಾಕೇಟ್‌ ದುಮಿಕ್ಕಿ ಹರಿಯುತ್ತಿದ್ದು ಈ ರಮಣಿಯ ಸೌಂದರ್ಯ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. +ಜೋಗಜಲಪಾತದಲ್ಲಿ ಹಾಲ್ನೋರೆಯಂತೆ ಬಂಡೆಗಳ ನಡುವೆ ಹರಿಯುತ್ತಾ ಸದ್ದು ಮಾಡುತ್ತಾ ಭಾರಿ ಎತ್ತರದಿಂದ ಧುಮಿಕ್ಕಿ ಹರಿಯುವ ಮನೋಹರ ದೃಶ್ಯವನ್ನು ನೋಡುವುದೆ ಒಂದು ಚಂದ ಅದರಲ್ಲೂ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ನೀರಿನ ರಭಸ ಜೋರಾಗಿದ್ದು ಸ್ವರ್ಗವೆ ಧರೆಗಿಳಿದಂತೆ ಭಾಸವಾಗುತ್ತದೆ. +ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ನೆನ್ನೆ ವಿಕೆಂಡ್‌ ಹಿನ್ನಲೆಯಲ್ಲಿ ಚುಮು ಚುಮ ಚಳಿ, ತುಂತುರು ಮಳೆ ನಡುವೆಯೂ ಬೆಂಗಳೂರು, ಮೈಸೂರು, ತುಮಕೂರು, ಸೇರಿದಮಂತೆ ವಿವಿಧ ಜಿಲ್ಲೆಗಳಿಂದ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ವಾಹನ ದಟ್ಟಣೆ ಹಾಗೂ ಜನ ದಟ್ಟಣೆ ಉಂಟಾಗಿತ್ತು.ಸರದಿ ಸಾಲಿನಲ್ಲಿ ನಿಂತು ಜನರು ಟಿಕೆಟ್‌ ಖರೀದಿಸಿ ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. \ No newline at end of file diff --git a/eesanje/url_46_76_12.txt b/eesanje/url_46_76_12.txt new file mode 100644 index 0000000000000000000000000000000000000000..346b40506da8b87870819ba645091036170072d0 --- /dev/null +++ b/eesanje/url_46_76_12.txt @@ -0,0 +1,8 @@ +ಕಾವೇರಿ ನೀರು ಹರಿಸುವ ತೀರ್ಪಿನ ಹಿನ್ನೆಲೆಯಲ್ಲಿ ಇಂದು ಸಂಜೆ ಸರ್ವಪಕ್ಷ ಸಭೆ +ಬೆಂಗಳೂರು,ಜು.14- ಕಾವೇರಿ ನದಿಪಾತ್ರದಿಂದ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರು ಹರಿಸುವಂತೆ ಹೇಳಲಾಗಿರುವ ತೀರ್ಪಿನ ಕುರಿತಂತೆ ಇಂದು ಸಂಜೆ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ರಾಜ್ಯದ ಹಿತಾಸಕ್ತಿ ತಕ್ಷಣದ ಸಲುವಾಗಿ ಮಹತ್ವದ ಚರ್ಚೆಗಳು ನಡೆಯಲಿವೆ.ಸಭೆಗೆ ಕಾವೇರಿ ನದಿಪಾತ್ರದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ರಾಜ್ಯದಿಂದ ಕೇಂದ್ರದಲ್ಲಿ ಸಚಿವರಾದವರನ್ನು ಆಹ್ವಾನಿಸಲಾಗಿದೆ. +ಪ್ರತಿದಿನ ಒಂದು ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶಿಸಿರುವುದು ರಾಜ್ಯ ಸರ್ಕಾರಕ್ಕೆ ಬಿಸಿ ತುಪ್ಪವಾಗಿದ್ದು, ಇದರ ಪಾಲಿಸಿದರೆ ಭವಿಷ್ಯದಲ್ಲಿ ಕೃಷಿ, ಕುಡಿಯುವ ನೀರಿಗೆ ಸಮಸ್ಯೆಎ ಎದುರಾಗಲಿದೆ. +ಹೀಗಾಗಿ ಆದೇಶದ ಪಾಲನೆ ಕಷ್ಟಸಾಧ್ಯ ಎಂಬ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಹೊಂದಿದೆ. ಈಗಾಗಲೇ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿರುವುದರಿಂದ ಅದರ ಅನುಷ್ಠಾನಕ್ಕೆ ಕಾಲಾವಕಾಶ ನೀಡುವಂತೆ ಮೇಲನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. +ಆದರೆ ಸರ್ವಪಕ್ಷಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಂಡ್ಯದ ಸಂಸದರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ಪ್ರಮುಖ ಸಚಿವರಾಗಿದ್ದಾರೆ. ಹೀಗಾಗಿ ಕಾವೇರಿ ನೀರಿನ ವಿವಾದವನ್ನು ಬಗೆಹರಿಸಲು ಅವರ ಸಹಕಾರ ಕೋರಲು ಸರ್ಕಾರ ನಿರ್ಧರಿಸಿದೆ. +ರಾಜ್ಯದಲ್ಲಿ ಮಳೆಯಾಗುತ್ತಿದ್ದರೂ ಕೆರೆಕಟ್ಟೆಗಳು ತುಂಬುವಷ್ಟು ನೀರು ಬರುತ್ತಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿನಲ್ಲೂ ಸಾಕಷ್ಟು ಮಳೆಯಾಗಿದ್ದು, ಅಲ್ಲಿನ ಜಲಾಶಯಗಳಲ್ಲಿ ಹೆಚ್ಚುವರಿ ನೀರಿದೆ. ಸುಮಾರು 5.5 ಟಿಎಂಸಿ ನೀರನ್ನು ತಮಿಳುನಾಡು ನದಿಗೆ ಹರಿಯಬಿಟ್ಟಿದೆ ಎಂದು ಸಿಡಬ್ಲ್ಯುಆರ್‌ಸಿ ಮುಂದೆ ಕರ್ನಾಟಕ ವಾದ ಮಂಡಿಸಿತ್ತು. ಅದರ ಹೊರತಾಗಿಯೂ ಜು.31ರವರೆಗೆ ಪ್ರತಿದಿನ 11,500 ಸಾವಿರ ಕ್ಯೂಸೆಕ್‌ ಅಂದರೆ ಒಂದು ಟಿಎಂಸಿ ನೀರನ್ನು ಹರಿಸುವಂತೆ ಸಿಡಬ್ಲ್ಯುಆರ್‌ಸಿ ಆದೇಶ ನೀಡಿದೆ. +ನದಿಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಜಲಾಶಯಗಳ ಒಳಹರಿವು ಹೆಚ್ಚಿದೆ. ಯಾಂತ್ರಿತವಾಗಿ ಹೊರಹರಿವು ಕೂಡ ಹೆಚ್ಚಾಗಿದ್ದು, ತಮಿಳುನಾಡಿಗೆ ನ್ಯಾಯಾಲಯದ ಆದೇಶಕ್ಕಿಂತಲೂ ಹೆಚ್ಚಿನ ನೀರು ತಲುಪುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಮಳೆ ಕಡಿಮೆಯಾದರೆ ಜಲಾಶಯಗಳಲ್ಲಿನ ನೀರಿನ ಸಂಗ್ರಹ ತಗ್ಗಿದರೆ ಸಂಕಷ್ಟ ವರ್ಷ ಸೃಷ್ಟಿಯಾಗಲಿದೆ. ಪ್ರಸ್ತುತ ಉತ್ತಮ ಮಳೆಯಾಗುತ್ತಿದ್ದರೂ ಜಲಾಶಯಗಳಲ್ಲಿರುವ ನೀರು ಕೆರೆಕಟ್ಟೆಗಳನ್ನು ತುಂಬಿಸುವಷ್ಟು ಲಭ್ಯವಿಲ್ಲ ಎಂಬ ಅಂಕಿಅಂಶಗಳಿವೆ. +ತಮಿಳುನಾಡು ಹಿಂದಿನ ಜಲವರ್ಷದ ಬಾಕಿಯನ್ನೂ ಲೆಕ್ಕ ಹಾಕಿ ಪ್ರಸಕ್ತ ಸಾಲಿನಲ್ಲಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿದೆ. ಈ ನಿಟ್ಟಿನಲ್ಲಿ ಸಂಜೆ ನಡೆಯುವ ಸರ್ವಪಕ್ಷ ಸಭೆ ಗಮನಸೆಳೆದಿದೆ. \ No newline at end of file diff --git a/eesanje/url_46_76_2.txt b/eesanje/url_46_76_2.txt new file mode 100644 index 0000000000000000000000000000000000000000..9966f2e52a553e455603dc536116960366d7cfad --- /dev/null +++ b/eesanje/url_46_76_2.txt @@ -0,0 +1,4 @@ +ರಾಜ್ಯದ ಉಪಮುಖ್ಯಮಂತ್ರಿಗಳ ಶೂಗಳನ್ನೇ ಕದ್ದ ಕಳ್ಳರು +ಬೆಂಗಳೂರು,ಜು.15-ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಶೂ ಕಳವಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ನಾಲ್ಕು ಪ್ರದೇಶಗಳ ರಸ್ತೆಗಳ ವೈಟ್ಯಾಪಿಂಗ್‌ ಕಾಮಗಾರಿಗೆ ಚಾಲನೆ ನೀಡಲಾಯಿತು. +ಚಾಲನೆಗೂ ಮುನ್ನ ನಡೆದ ಪೂಜೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಶಾಸಕ ಅಶ್ವಥ್‌ ನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಭಾಗವಹಿಸಿದ್ದರು. ಸದಾಶಿವನಗರದ ಭಾಷಂ ಸರ್ಕಲ್‌ ಬಳಿ ನಡೆದ ಕಾರ್ಯಕ್ರಮದ ಸಂದರ್ಭದಲ್ಲಿ ಚಾಲಾಕಿ ಕಳ್ಳನೊಬ್ಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಶೂವನ್ನು ಎಗರಿಸಿದ್ದಾನೆ. +ವೈಟ್ಯಾಪಿಂಗ್‌ ಕಾಮಗಾರಿಗೂ ಮುನ್ನ ಶಿವಕುಮಾರ್‌ ಅವರು ಶೂ ಬಿಚ್ಚಿಟ್ಟಿದ್ದರು. ಪೂಜೆ ಮುಗಿಸಿ ಕಾರಿನ ಬಳಿ ತೆರಳಿದಾಗ ಶೂಗಳೇ ಇರಲಿಲ್ಲ. ಕೆಲ ಕಾಲ ಹುಡುಕಾಡಿದ ನಂತರ ಅವರು ಕಾರಿನಲ್ಲಿದ ಬೇರೆ ಶೂಗಳನ್ನು ಧರಿಸಿ ಹೊರಟರು. \ No newline at end of file diff --git a/eesanje/url_46_76_3.txt b/eesanje/url_46_76_3.txt new file mode 100644 index 0000000000000000000000000000000000000000..d5dacf98a140331118bab764ba062945e335c0d3 --- /dev/null +++ b/eesanje/url_46_76_3.txt @@ -0,0 +1,5 @@ +ದಲಿತರ ಹೆಸರು ಹೇಳಿ ಗೆದ್ದು ಅವರ ಹಣವನ್ನೇ ಲೂಟಿ ಮಾಡಿದ ಕಾಂಗ್ರೆಸ್‌‍ ಸರ್ಕಾರ : ಅಶೋಕ್‌ ಕಿಡಿ +ಬೆಂಗಳೂರು,ಜು.15-ರಾಜ್ಯದ ಇತಿಹಾಸದಲ್ಲಿ 187 ಕೋಟಿ ದಲಿತರ ಹಣ ಲೂಟಿಯಾಗಿದೆ. ದಲಿತರ ಪರ ಹೇಳುತ್ತಾ ಮತ ಪಡೆದ ಕಾಂಗ್ರೆಸ್‌‍ ಅವರ ಹಣವನ್ನೇ ಲೂಟಿ ಹೊಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಿಡಿಕಾರಿದರು. +ಈ ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕೂಡಲೇ ತಮ ಸ್ಥಾನಕ್ಕೆ ರಾಜೀನಾಮೆ ಕೋಡಬೇಕು ಎಂದು ಆಗ್ರಹಿಸಿದರು. 187 ಕೋಟಿ ಲೂಟಿ ಮಾಡಿರುವ ಕಾಂಗ್ರೆಸ್‌‍ ವಿರುದ್ಧ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸದನದ ಒಳಗೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು. +ಸಿಎಂ ತಮನ್ನು ರಕ್ಷಣೆ ಮಾಡಿಕೊಳ್ಳಲು ಆಗಲು ನಿವೃತ್ತ ನ್ಯಾಯಮೂರ್ತಿಗಳ ಮುಖಾಂತರ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಇವರ ಮೇಲೆ ಆರೋಪ ಬಂದರೆ ನ್ಯಾಯಂಗ ತನಿಖೆ. ಯಡಿಯೂರಪ್ಪ ಮೇಲಾದರೆ ಎಸ್‌‍ಐಟಿ ತನಿಖೆಯೇ? ಎಂದು ವ್ಯಂಗ್ಯವಾಡಿದರು. +ಶಾಸಕ ಅಶ್ವಥನಾರಾಯಣ್‌ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆಮುಡಾ ಹಗರಣದಲ್ಲಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿದ್ದಾ. ಸಿಬಿಐಗೆ ಹಸ್ತಾಂತರ ಮಾಡಬೇಕಿತ್ತು. ಸಿಎಂ ರಾಜೀನಾಮೆ ಕೊಡಬೇಕು. ಕಾಂಗ್ರೆಸ್‌‍ಗೆ ನೈತಿಕತೆ ಇಲ್ಲ, ಹೈಕಮಾಂಡ್‌ ನಾಯಕರೂ ಕೂಡ ಪ್ರತಿಕ್ರಿಯೆ ನೀಡಿಲ್ಲ. ಸದನದಲ್ಲಿ ಈ ವಿಷಯ ಪ್ರಸ್ತಾಪಿಸಿ ಚರ್ಚಿಸುತ್ತೇವೆ ಎಂದರು. \ No newline at end of file diff --git a/eesanje/url_46_76_4.txt b/eesanje/url_46_76_4.txt new file mode 100644 index 0000000000000000000000000000000000000000..bc77d0aabf1fa7ce745683b919627b74dc44a834 --- /dev/null +++ b/eesanje/url_46_76_4.txt @@ -0,0 +1,5 @@ +ವಿಧಾನಪರಿಷತ್‌ನ ಸಭಾನಾಯಕರಾಗಿ ಎನ್‌.ಎಸ್‌‍.ಭೋಸರಾಜ್‌ ನೇಮಕ +ಬೆಂಗಳೂರು,ಜು.15-ವಿಧಾನಪರಿಷತ್‌ನ ಸಭಾನಾಯಕರಾಗಿ ಹಾಲಿ ಸಚಿವ ಎನ್‌.ಎಸ್‌‍.ಭೋಸರಾಜ್‌ ಅವರು ನೇಮಕವಾಗಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಾಗಿ ಭೋಸರಾಜ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೂಚನೆಯಂತೆ ಭೋಸರಾಜ್‌ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಿಸುತ್ತಿದ್ದಂತೆ ಸದನದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು. +ಸಣ್ಣ ನೀರಾವರಿ ಸಚಿವರಾಗಿರುವ ಭೋಸ್‌‍ ರಾಜ್‌ ಅವರು ಇತ್ತೀಚೆಗೆ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. +ಹಿರಿತನದ ಆಧಾರದ ಮೇಲೆ ಭೋಸ್‌‍ರಾಜ್‌ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆಯೂ ಅವರು ಸಭಾ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. \ No newline at end of file diff --git a/eesanje/url_46_76_5.txt b/eesanje/url_46_76_5.txt new file mode 100644 index 0000000000000000000000000000000000000000..178d990cc0b23378961d4ba49caf70f1ada1706f --- /dev/null +++ b/eesanje/url_46_76_5.txt @@ -0,0 +1,6 @@ +ವಿಧಾನಸೌಧದಲ್ಲಿ ಶಾಸಕ ಬಸನಗೌಡ ದದ್ದಲ್‌ ಪ್ರತ್ಯಕ್ಷ +ಬೆಂಗಳೂರು,ಜು.15- ಎಸ್‌‍ಐಟಿ ತನಿಖೆ ನಂತರ ಸಾರ್ವಜನಿಕವಾಗಿ ಕಾಣಿಸಿಕೊಳ್ಳದೇ ಇದ್ದ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ದದ್ದಲ್‌ ಇಂದು ವಿಧಾನಸೌಧದಲ್ಲಿ ಪ್ರತ್ಯಕ್ಷರಾದರು.ಕಲಾಪದಲ್ಲಿ ಭಾಗವಹಿಸಲು ಆಗಮಿಸಿ ಬಸನಗೌಡ ದದ್ದಲ್‌ ಮುಖ್ಯಮಂತ್ರಿಯವರನ್ನು ವಿಧಾನಸಭೆಯ ಕಾರಿಡಾರ್‌ನಲ್ಲಿರುವ ಕಚೇರಿಯಲ್ಲಿ ಭೇಟಿ ಮಾಡಿ ವಿವರಣೆ ನೀಡಿದ್ದಾರೆ. +ಈ ಸಂದರ್ಭದಲ್ಲಿ ಎಸ್‌‍ಐಟಿ ತನಿಖೆಯ ಬಗ್ಗೆ ಬಸನಗೌಡ ದದ್ದಲ್‌ಮುಖ್ಯಮಂತ್ರಿಯವರಿಗೆ ವಿವರಣೆ ನೀಡಿದ್ದು, ತಾವು ಎರಡು-ಮೂರು ದಿನಗಳಿಂದ ಎಲ್ಲಿದ್ದೆ ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. +ನಂತರ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಬಸನಗೌಡ ದದ್ದಲ್‌ಭೇಟಿಯಾಗಿದ್ದು, ಶುಕ್ರವಾರ ಎಸ್‌‍ಐಟಿ ವಿಚಾರಣೆ ಬಳಿಕ ತಾವು ಊರಿಗೆ ತೆರಳಿದ್ದು, ಮನೆಯಲ್ಲಿಯೇ ಇದ್ದಿದ್ದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. +ತಾವು ಎಲ್ಲಿಯೂ ಹೋಗಿಲ್ಲ. ತಲೆ ಮರೆಸಿಕೊಂಡೂ ಇಲ್ಲ. ಬಿಜೆಪಿಯವರು ಅನಗತ್ಯವಾಗಿ ತಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.ನಂತರ ಕಲಾಪದಲ್ಲಿಯೂ ಭಾಗವಹಿಸಿದ್ದಾರೆ. +ಇದಕ್ಕೂ ಮುನ್ನ ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ದದ್ದಲ್‌, ಎಲ್ಲಾ ಪ್ರಶ್ನೆಗಳಿಗೂ ವಿಧಾನಸಭೆಯಲ್ಲಿಯೇ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.ನಾನು ಕಲಾಪದಲ್ಲಿ ಭಾಗವಹಿಸುತ್ತಿದ್ದೇನೆ, ಅಲ್ಲಿಯೇ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_46_76_6.txt b/eesanje/url_46_76_6.txt new file mode 100644 index 0000000000000000000000000000000000000000..b3cd2b1fd2fe5ac436c113e94fee91c74189583d --- /dev/null +++ b/eesanje/url_46_76_6.txt @@ -0,0 +1,11 @@ +ಧಾರಾಕಾರ ಮಳೆ : ಜಲಾಶಯಗಳು ಭರ್ತಿ, ಹೊಲಗದ್ದೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ +ಕಾರವಾರ/ಮಡಿಕೇರಿ/ಕೊಡಗು,ಜು.15-ಕರಾವಳಿ, ಕೊಡಗು, ದಕ್ಷಿಣ ಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿದ್ದು, ಜಲಾಶಯಗಳು ಭರ್ತಿಯಾಗತೊಡಗಿವೆ. ಹಳ್ಳಕೊಳ್ಳಗಳು ತುಂಬಿಹರಿದು ಹೊಲಗದ್ದೆಗಳು ಜಲಾವೃತವಾಗಿ ರಸ್ತೆಗಳಿಗೆ ನೀರು ಹರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. +ಕೊಡಗು, ಉತ್ತರಕನ್ನಡ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದ ಪರಿಣಾಮ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯಾದ್ಯಂತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. +ಜಲಾಶಯದಿಂದ ತಡರಾತ್ರಿ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ತ್ರಿವೇಣಿ ಸಂಗಮದಲ್ಲಿ ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಮಳೆ ಇದೇ ರೀತಿ ಮುಂದುವರೆದರೆ ಮಡಿಕೇರಿ, ನಾಪೊಕ್ಲು ರಸ್ತೆ ಸಂಪರ್ಕ ಕಳೆದುಕೊಳ್ಳುವ ಸಾಧ್ಯತೆಯಿದೆ. ಹಲವಾರು ಹಳ್ಳಿಗಳಲ್ಲಿ ವಿದ್ಯುತ್‌ಕಂಬ ಹಾಗೂ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. +ಬೆಳಗಾವಿ :ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ, ದೂಧ್‌ಗಂಗಾ, ವೇದ್‌ಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. +ಚಿಕ್ಕಮಗಳೂರು :ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಗೆ ಹಳ್ಳಕೊಳ್ಳಗಳು ತುಂಬಿಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಭದ್ರಾ ತುಂಗಾ ಜಲಾಶಯಕ್ಕೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದೆ. +ಉತ್ತರ ಕನ್ನಡ :ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಹಲವೆಡೆ ಹಾನಿ ಸಂಭವಿಸಿದೆ. ತಾಲ್ಲೂಕಿನ ಇಡೂರಿನ ಮನೆಗಳಿಗೆ ನೀರು ನುಗ್ಗಿ ಗ್ರಾಮ ಮುಳುಗಡೆಯಾದಂತಾಗಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. +ಕಾರವಾರ ತಾಲ್ಲೂಕಿನ ಬಿಣಗ, ಚಂಗ್ಯಾ ಸೇರಿದಂತೆ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವಂತಾಗಿತ್ತು. ಈ ಭಾಗದ ನೂರಾರು ಎಕರೆ ಪ್ರದೇಶ ಜಲಾವೃತಗೊಂಡು ಬೆಳೆಗಳು ಹಾನಿಯಾಗಿವೆ. ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. +ಮಂಗಳೂರು :ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. +ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಕಬಿನಿ ಭರ್ತಿಯಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. +ಹೇಮಾವತಿ, ಕೃಷ್ಣರಾಜಸಾಗರ ಜಲಾಶಯಕ್ಕೆ ಕೂಡ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಅತ್ತ ತೀರ್ಥಹಳ್ಳಿಯ ಆಗುಂಬೆಯ 5ನೇ ಘಾಟ್‌ನ ತಿರುವಿನಲ್ಲಿ ಗುಡ್ಡಕುಸಿತ ಉಂಟಾದ ಪರಿಣಾಮ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. \ No newline at end of file diff --git a/eesanje/url_46_76_7.txt b/eesanje/url_46_76_7.txt new file mode 100644 index 0000000000000000000000000000000000000000..72476956baa057cefca149b7936d1404d91c3f0d --- /dev/null +++ b/eesanje/url_46_76_7.txt @@ -0,0 +1,5 @@ +ವಿರೋಧಪಕ್ಷಗಳ ಆರೋಪಕ್ಕೆ ಸದನದಲ್ಲಿಯೇ ಉತ್ತರ ಕೊಡ್ತೀನಿ : ಸಿಎಂ +ಬೆಂಗಳೂರು,ಜು.15– ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿರೋಧಪಕ್ಷಗಳು ನೀಡಿರುವ ನಿಲುವಳಿ ಸೂಚನೆಗೆ ಸದನದಲ್ಲಿಯೇ ಉತ್ತರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದ ಯಾವುದೇ ವಿಚಾರವಿದ್ದರೂ ಅದರ ಚರ್ಚೆಗೆ ಸರ್ಕಾರ ಸಿದ್ಧವಿದೆ. ಸದನದಲ್ಲಿ ವಿಪಕ್ಷಗಳು ನಿಲುವಳಿ ಸೂಚನೆ ಸೇರಿದಂತೆ ಯಾವುದೇ ನಿಯಮದಡಿ ಪ್ರಸ್ತಾಪ ಮಾಡಿದರೂ ಅದಕ್ಕೆ ಸದನದ ಒಳಗೆ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿ ತೆರಳಿದರು. +ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್‌ ಅವರಿಗೆ ಮನವಿ ಸಲ್ಲಿಸಿದೆ. ಇದು ಕಲಾಪದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ. +ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದು, ಸದನದ ಹೊರಗೆ ಚರ್ಚೆ ಮಾಡುವ ಬದಲಾಗಿ ಸದನದ ಒಳಗೇ ಉತ್ತರ ನೀಡುವುದಾಗಿ ಹೇಳಿದರು. \ No newline at end of file diff --git a/eesanje/url_46_76_8.txt b/eesanje/url_46_76_8.txt new file mode 100644 index 0000000000000000000000000000000000000000..8846c51ad64fa8c47741e719cdcbc86ae7c3bf6f --- /dev/null +++ b/eesanje/url_46_76_8.txt @@ -0,0 +1,4 @@ +ಕೇಂದ್ರ ಸಚಿವ .ಕುಮಾರಸ್ವಾಮಿಯವರಿಗೆ ಡಿಕೆಶಿ ಓಪನ್ ಚಾಲೆಂಜ್ +ಬೆಂಗಳೂರು,ಜು.15-ಭ್ರಷ್ಟಾಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ತಮೊಂದಿಗೆ ಸಾರ್ವಜನಿಕ ಚರ್ಚೆಗೆ ಬರಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸವಾಲು ಹಾಕಿದ್ದಾರೆ. +ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಮ ಜೀವನದುದ್ದಕ್ಕೂ ಹಿಟ್‌ ಅಂಡ್‌ ರನ್‌ ರೀತಿಯಲ್ಲೇ ವರ್ತಿಸುತ್ತಿದ್ದಾರೆ. ಅವರು ಮಾಡಿದ ಆರೋಪಗಳಿಗೆ ಬದ್ಧತೆ ಇದ್ದರೆ ವಿಧಾನಸೌಧದ ಕಲಾಪದಲ್ಲಿ ಬಂದು ಚರ್ಚೆ ಮಾಡಬೇಕಿತ್ತು. ಅವರ ಪಕ್ಷದ ಶಾಸಕರು ಬಂದು ಚರ್ಚೆ ಮಾಡಲಿ ಎಂದು ಸವಾಲು ಹಾಕಿದರು. +ಕುಮಾರಸ್ವಾಮಿ ನೇರವಾಗಿ ತಮೊಂದಿಗೆ ಚರ್ಚೆಗೆ ಬರಲಿ. ಇಲ್ಲವಾದರೇ ಯಾವುದೇ ವಾಹಿನಿಯಲ್ಲಿ ಚರ್ಚೆಗೆ ಕರೆದರೂ ನಾನು ಸಿದ್ಧ. ಅನಗತ್ಯವಾಗಿ ಹಿಟ್‌ ಅಂಡ್‌ ರನ್‌ ಆರೋಪ ಮಾಡಿ ಓಡಿಹೋಗಲಾಗುತ್ತಿದೆ. ಕಿಂಗ್‌ ಆಫ್‌ ಕರೆಕ್ಷನ್‌ ಯಾರು ಎಂದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_46_76_9.txt b/eesanje/url_46_76_9.txt new file mode 100644 index 0000000000000000000000000000000000000000..518e6dbc4f1ff2087a687c6e3b438cbc78660539 --- /dev/null +++ b/eesanje/url_46_76_9.txt @@ -0,0 +1,9 @@ +ರಾಜ್ಯದಲ್ಲಿ ಡೆಂಘೀ ಹೆಚ್ಚಳ : ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆ +ಬೆಂಗಳೂರು,ಜು.15-ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು (ಡಿಎಸ್‌‍ಇಎಲ್‌‍) ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮತ್ತು ರೋಗ ಹರಡುವಿಕೆ ತಡೆಯಲು ಕ್ರಮ ಕೈಗೊಳ್ಳುವಂತೆ ಸುತ್ತೋಲೆ ಹೊರಡಿಸಿದೆ. +ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಘೀ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಈಗ ಸುತ್ತೋಲೆ ಹೊರಡಿಸಿದೆ. +ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಲು ಶಾಲಾ ಆವರಣ ಮತ್ತು ಸಮೀಪದಲ್ಲಿ ಸಂಗ್ರಹವಾಗಿರುವ ನೀರನ್ನು ತೆರವುಗೊಳಿಸಲು ಮತ್ತು ಒದ್ದೆಯಾದ ತ್ಯಾಜ್ಯವನ್ನು ತಕ್ಷಣವೇ ವಿಲೇವಾರಿ ಮಾಡಲು ಶಾಲೆಗಳಿಗೆ ಸೂಚನೆ ನೀಡಿದೆ. +ಶಾಲಾ ವಿದ್ಯಾರ್ಥಿಗಳು ಅಂತಹ ಪ್ರದೇಶಗಳ ಬಳಿ ತಿರುಗಾಡದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ತ್ಯಾಜ್ಯವನ್ನು ತೆರವುಗೊಳಿಸಲು ಮತ್ತು ವಿಲೇವಾರಿ ಮಾಡಲು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ. +ಶಿಕ್ಷಣ ಸಂಸ್ಥೆಗಳು ಗ್ರಾಮ ಪಂಚಾಯತಿ ಮತ್ತು ನಾಗರಿಕ ಸಂಸ್ಥೆಗಳ ಜೊತೆಗೂಡಿ ಡೆಂಗ್ಯೂ ವಿರೋಧಿ ಕ್ರಮಗಳಿಗಾಗಿ ಔಷಧಿ ಸಿಂಪಡಣೆ ಮತ್ತು ಫಾಗಿಂಗ್‌ ಕಾರ್ಯಾಚರಣೆಗಳನ್ನು ನಡೆಸಬೇಕು. ಶಾಲೆಗಳಲ್ಲಿನ ನೀರಿನ ಸಂಗ್ರಹಕಗಳನ್ನು (ತೊಟ್ಟಿ, ಬ್ಯಾರೆಲ್‌ ಇತ್ಯಾದಿ)ಗಳನ್ನು ವಾರಕ್ಕೊಮೆ ಉಜ್ಜಿ, ತೊಳೆದು, ಖಾಲಿ ಮಾಡಿ. ಒಣಗಿಸಿ ಭರ್ತಿ ಮಾಡಿದ ನಂತರ ಭದ್ರವಾದ ಮುಚ್ಚಳದಿಂದ ಮುಚ್ಚಬೇಕು ಎಂದು ಸೂಚಿಸಿದೆ. +ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮಕ್ಕಳಲ್ಲಿ ಜಾಗೃತಿ ಮೂಡಿಸಲುವ ಕೆಲಸ ಮಾಡಬೇಕು. ಡೆಂಗ್ಯೂ, ಚಿಕೂನ್‌‍ಗುನ್ಯಾ ಮತ್ತು ಝೀಕಾ ವೈರಸ್‌‍ನಂತಹ ರೋಗಗಳ ಲಕ್ಷಣಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. +ಶಾಲಾ ವಿದ್ಯಾರ್ಥಿಗಳಲ್ಲಿ ಜ್ವರದ ಪ್ರಕರಣಗಳು ವರದಿಯಾದರೆ ಕೂಡಲೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಪೋಷಕರು ಮತ್ತು ಶಿಕ್ಷಕರು ಮಕ್ಕಳ ರೋಗಲಕ್ಷಣಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮಕ್ಕಳು ಬೆಳಿಗ್ಗೆ ಮತ್ತು ಸಂಜೆ ಹೊರಾಂಗಣದಲ್ಲಿದ್ದಾಗ ಉದ್ದ ತೋಳಿನ ಬಟ್ಟೆಗಳನ್ನು ಧರಿಸುವಂತಹ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. +ನಾಗರಿಕರು ತಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿರ್ಜಲೀಕರಣವನ್ನು ತಪ್ಪಿಸಲು ಸಾಕಷ್ಟು ನೀರು ಕುಡಿಯಬೇಕು. ಕನಿಷ್ಠ ಎರಡು-ಮೂರು ಲೀಟರ್‌ ನೀರು ಮತ್ತು ನೀರಿನಂಶ ಹೆಚ್ಚಿರುವ ಕಲ್ಲಂಗಡಿ ಮತ್ತು ಕಿತ್ತಳೆಯಂತಹ ಹಣ್ಣುಗಳನ್ನು ಸೇವಿಸಬೇಕು. ಮಕ್ಕಳು ಮತ್ತು ಯುವಕರು ಸಮತೋಲಿತ ಆಹಾರ ಕ್ರಮವನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ. \ No newline at end of file diff --git a/eesanje/url_46_77_1.txt b/eesanje/url_46_77_1.txt new file mode 100644 index 0000000000000000000000000000000000000000..3469e7766090f6e793962e68f70fc225b2942f03 --- /dev/null +++ b/eesanje/url_46_77_1.txt @@ -0,0 +1,3 @@ +ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು +ಹುಬ್ಬಳ್ಳಿ,ಜು.14-ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಆತಹತ್ಯೆಗೆ ಮುಂದಾಗಿದ್ದ ವ್ಯಕ್ತಿಯನ್ನು ಉಳಿಸಿ ಕಲಘಟಗಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. +ತಾಲ್ಲೂಕಿನ ನೆಲ್ಲಿಹರವಿ ಗ್ರಾಮದ ಶಂಭುಲಿಂಗಯ್ಯ ಹುಲಸೋಗಿ ಕುಡಿದ ಮತ್ತಿನಲ್ಲಿ ನೇಣಿ ಹಾಕಿಕೊಳ್ಳಲು ಮುಂದಾಗಿದ್ದ,ಮನೆಯಲ್ಲಿ ನೇಣು ಬಿಗಿದು ಆತಹತ್ಯೆ ಮಾಡಿಕೊಳ್ಳುತ್ತಿದ್ದಾಗ ಏಕಾಏಕಿ 112ಗೆ ಕರೆ ಬಂದ ಹಿನ್ನಲೆ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ಅವರು ಸ್ಥಳಕ್ಕೆ ದೌಡಾಯಿಸಿ ನೇಣಿಗೆ ಕೊರಳೊಡ್ಡಿದ ಶಂಭುಲಿಂಗಯ್ಯ ಪ್ರಾಣ ಉಳಿಸಿದ್ದಾರೆ. ಸದ್ಯ ಕಲಘಟಗಿ ತಾಲೂಕ ಆಸ್ಪತ್ರೆಯಲ್ಲಿ ಶಂಭುಲಿಂಗಯ್ಯನಿಗೆ ಚಿಕಿತ್ಸೆ ನೀಡಲಾಗುತ್ತಿದೆ. diff --git a/eesanje/url_46_77_10.txt b/eesanje/url_46_77_10.txt new file mode 100644 index 0000000000000000000000000000000000000000..659dfcf3eaba8a1d47b5abe6a37fde7331ad2590 --- /dev/null +++ b/eesanje/url_46_77_10.txt @@ -0,0 +1,8 @@ +ಸನಾತನ ಧರ್ಮ ಉಳಿಸಲು ಹೋರಾಟ ಅನಿವಾರ್ಯ : ಬಾಲಿ ಸೆನೆಟರ್ +ಬೆಂಗಳೂರು,ಜು.13– ಹಿಂದೂ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಇಂಡೋನೇಷ್ಯಾ ಜಂಟಿಯಾಗಿ ಹೋರಾಟ ನಡೆಸಲು ಮುಂದಾಗುವ ಅವಶ್ಯಕತೆ ಇದೆ ಎಂದು ಬಾಲಿ ಸೆನೆಟರ್(ಸಂಸದ) ಡಾ.ಗುಸ್ತಿ ಆರ್ಯ, ವೇದಕರ್ಣ ಮಹೇಂದ್ರದತ್ತ ವೇದಸ್ವರಪುತ್ರ ಸೂರ್ಯ ಅವರು ಹೇಳಿದ್ದಾರೆ. +ಕರ್ನಾಟಕದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಅವರು ಇತ್ತೀಚೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದರು. ಲಿಂಬಾವಳಿಯವರು ಬಾಲಿ ದ್ವೀಪಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ಸಂಸದರಾಗಿರುವ ಡಾ. ಗುಸ್ತಿ ಆರ್ಯ ವೇದಕರ್ಣ ಮಹೇಂದ್ರದತ್ತ ವೇದಸ್ವರಪುತ್ರ ಸೂರ್ಯ ಅವರನ್ನು ಭೇಟಿಯಾಗಿ ಕರ್ನಾಟಕ ಹಾಗೂ ಭಾರತದ ರಾಜಕೀಯ ಬೆಳವಣಿಗೆಗಳು, ಶಿಕ್ಷಣ, ಕೈಗಾರಿಕೆ, ಆರೋಗ್ಯ, ಹಿಂದೂ ಧರ್ಮದ ಬೆಳವಣಿಗೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. +ಬಾಲಿಯಲ್ಲಿ 10 ವರ್ಷಗಳ ಹಿಂದೆ ಶೇ.95ರಷ್ಟಿದ್ದ ಹಿಂದೂ ಜನಸಂಖ್ಯೆ ಈಗ ಶೇ.75ಕ್ಕೆ ಇಳಿಕೆಯಾಗಿದೆ. ಕೇವಲ ಒಂದು ದಶಕದ ಅವಧಿಯಲ್ಲಿ ಶೇ.20ರಷ್ಟು ಕುಸಿತ ಕಂಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಡಾ.ಗುಸ್ತಿ ಆರ್ಯ ಅವರು ವಿಷಾದಿಸಿರುವುದಾಗಿ ಲಿಂಬಾವಳಿ ಹೇಳಿದ್ದಾರೆ. +ಭಾರತ ಮತ್ತು ಇಂಡೊನೇಷ್ಯಾ ಸನಾತನ ಧರ್ಮದ ಉಳಿವಿಗಾಗಿ ಹೋರಾಟ ನಡೆಸಬೇಕು. ಧರ್ಮ ಮತ್ತು ಅಧರ್ಮದ ನಡುವೆ ಹೋರಾಟ ನಡೆದರೆ ಮಾತ್ರ ಹಿಂದೂ ಧರ್ಮ ಉಳಿಯಲು ಸಾಧ್ಯ. ನಾವು ಯಾವುದೇ ಬೆಲೆ ತೆತ್ತಾದರೂ ಸನಾತನ ಧರ್ಮದ ಉಳಿವಿಗಾಗಿ ಮುಂದಾಗಲೇಬೇಕು. ಈ ನಿಟ್ಟಿನಲ್ಲಿ ಭಾರತದ ಹೋರಾಟಕ್ಕೆ ಇಂಡೊನೇಷ್ಯಾ ಸದಾ ಕೈ ಜೋಡಿಸಲಿದೆ ಎಂದು ಅವರು ಭರವಸೆ ನೀಡಿದ್ದಾಗಿ ಲಿಂಬಾವಳಿ ತಿಳಿಸಿದ್ದಾರೆ. +ಹಿಂದೂ ಧರ್ಮದ ಉಳಿವಿಗಾಗಿ ಇಂಡೋನೇಷ್ಯಾ ಇಟ್ಟುಕೊಂಡಿರುವ ಕಳಕಳಿ ನನಗೆ ಒಂದು ಕ್ಷಣ ಅಚ್ಚರಿ ಮತ್ತು ದಿಗ್ಬ್ರಾಂತಿ ಉಂಟು ಮಾಡಿತು. ಧರ್ಮವನ್ನ ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂಬುದನ್ನುಅಲ್ಲಿನ ಜನತೆ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ. +ಪ್ರವಾಸದ ಸಂದರ್ಭದಲ್ಲಿ ಅನೇಕ ಹಿಂದೂ ಯುವಕರನ್ನು ಭೇಟಿಯಾಗಿ ಮುಕ್ತವಾಗಿ ಚರ್ಚೆ ನಡೆಸಿದೆ. ಸ್ಥಳೀಯ ಜನರು ಹಿಂದೂ ಹೆಸರು ಇಟ್ಟುಕೊಂಡಿದ್ದರೂ ಅವರಿಗೆ ಅದರ ಅರ್ಥ ಮತ್ತು ಮಹತ್ವ ಗೊತ್ತಿಲ್ಲ. ಹಿಂದೂ ಧರ್ಮದ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಅವರಿಗೆ ತಿಳಿ ಹೇಳಿದ್ದಾಗಿ ಲಿಂಬಾವಳಿ ತಿಳಿಸಿದ್ದಾರೆ. +ಪ್ರಧಾನಮಂತ್ರಿ ನರೇಂದ್ರ ಮೋದಿಯವರಂತಹ ಧೀಮಂತ ನಾಯಕನಿದ್ದರೂ ದೇಶದಲ್ಲಿ ಬಿಜೆಪಿಯ ಬಲ ಕುಸಿದಿರುವುದು ಪಕ್ಷಕ್ಕೆ ಎಚ್ಚರಿಕೆಯ ಘಂಟೆ. ಇದರಿಂದ ಪಕ್ಷ ಮತ್ತು ಅದರ ನಾಯಕರು ಎಚ್ಚೆತ್ತುಕೊಳ್ಳಬೇಕು ಎಂದು ಗುಸ್ತಿ ಆರ್ಯ ಅಭಿಪ್ರಾಯ ವ್ಯಕ್ತಪಡಿಸಿದರು.ಇದೇ ವೇಳೆ ಐಟಿ ರಾಜಧಾನಿಯಾಗಿರುವ ಬೆಂಗಳೂರಿನೊಂದಿಗೆ ಶೈಕ್ಷಣಿಕ, ಸಾಂಸ್ಕೃತಿಕ ವಿಜ್ಞಾನ ಮತ್ತು ಸಾಫ್ಟ್ ವೇರ್ ಕ್ಷೇತ್ರಗಳಲ್ಲಿ ನಾವು ಬಾಲಿಯನ್ನು ಜೋಡಿಸ ಬಯಸುತ್ತೇವೆ, ನಮ್ಮಗೆ ನಿಮ ಸಹಕಾರ ಬಹಳ ಅಗತ್ಯ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಾನು ಅವರನ್ನು ಬೆಂಗಳೂರಿಗೆ ಆಹ್ವಾನಿಸಿದೆ ಮತ್ತು ಅವರು ಸಂತೋಷದಿಂದ ಇಲ್ಲಿಗೆ ಭೇಟಿ ನೀಡಲು ಸಿನೆಟರ್ ಒಪ್ಪಿದರು ಎಂದು ಲಿಂಬಾವಳಿ ತಿಳಿಸಿದರು. \ No newline at end of file diff --git a/eesanje/url_46_77_11.txt b/eesanje/url_46_77_11.txt new file mode 100644 index 0000000000000000000000000000000000000000..b6d3dfad3fe7de2f908d7103680f08f8302cb4c4 --- /dev/null +++ b/eesanje/url_46_77_11.txt @@ -0,0 +1,7 @@ +ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆದ ಪರೀಕ್ಷೆ ವೀಕ್ಷಿಸಿದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ +ಬೆಂಗಳೂರು,ಜು.13-ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು ಬಿಎಂಟಿಸಿ (ಕಲ್ಯಾಣ ಕರ್ನಾಟಕ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷೆ ಪ್ರಕ್ರಿಯೆಯನ್ನು ವೆಬ್ಕಾಸ್ಟಿಂಗ್ ಮೂಲಕ ವೀಕ್ಷಿಸಿದರು. +ಕೆಇಎನಲ್ಲಿ ಅಳವಡಿಸಿರುವ ಟಿವಿ ಪರದೆಗಳಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಪರೀಕ್ಷಾ ಪ್ರಕ್ರಿಯೆಯ ನೇರ ಪ್ರಸಾರವನ್ನು ಸಚಿವರು ಹಾಗೂ ಅಧಿಕಾರಿಗಳು ವೀಕ್ಷಿಸಿದರು. ಇಂದು ಮತ್ತು ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕ್ಯಾಮರಾ ಕಣ್ಗಾವಲಿನಲ್ಲಿ ಮೇಲಿನ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುತ್ತಿದೆ. +ಬೆಂಗಳೂರು, ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ನಗರಗಳ ಒಟ್ಟು 22 ಕೇಂದ್ರಗಳ, 377 ಕೊಠಡಿಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ಇದೇ ಮೊದಲ ಬಾರಿಗೆ ವೆಬ್ ಕ್ಯಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ. +ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕ್ರಮ ತೆಗೆದುಕೊಂಡಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಆಗುವ ಬೆಳವಣಿಗೆಗಳನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಮೇಲ್ವಿಚಾರಣೆಗೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. +ಪ್ರಶ್ನೆ ಪತ್ರಿಕೆ ಸ್ವೀಕಾರ ಮತ್ತು ಅದರ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಅಲ್ಲದೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಸಂದರ್ಭದಲ್ಲಿ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅಲ್ಲೇ ಅದನ್ನು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜತೆಗೂ ಆನ್ ಲೈನ್ ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹೀಗೆ ಮಾಡುವುದರಿಂದ ಯಾರದೊ ಹೆಸರಿನಲ್ಲಿ ಇನ್ಯಾರೊ ಪರೀಕ್ಷೆ ಬರೆಯುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ. +ಇತ್ತೀಚೆಗೆ ನಡೆಸಿದ ಡಿಸಿಇಟಿ ಸಂದರ್ಭದಲ್ಲಿ ಪ್ರಾಯೋಗಿಕವಾಗಿ ಪ್ರಾಂಶುಪಾಲರ ಕಚೇರಿಯಲ್ಲಿನ ಬೆಳವಣಿಗೆಗಳನ್ನು ವೆಬ್ ಕಾಸ್ಟಿಂಗ್ ಮಾಡಿದ್ದು ಯಶಸ್ವಿಯಾದ ನಂತರ ಪರೀಕ್ಷೆ ನಡೆಯುವ ಕೊಠಡಿಯಿಂದಲೂ ವೆಬ್ ಕಾಸ್ಟಿಂಗ್ ಮಾಡಲು ತೀರ್ಮಾನಿಸಲಾಗಿದೆ.ಕಲ್ಬುರ್ಗಿ, ಧಾರವಾಡ ಮತ್ತು ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿಯೂ ಒಂದೊಂದು ಉಪ ಕಮಾಂಡಿಂಗ್ ಸೆಂಟರ್ ಇದ್ದು, ಅಲ್ಲಿಯೂ ಮೇಲ್ವಿಚಾರಣೆ ನಡೆಸಲಾಗುತ್ತದೆ. ಇದೇ ಮೊದಲ ಬಾರಿಗೆ ಬೇರೆ ಜಿಲ್ಲೆಗಳ ವಿಶೇಷ ವೀಕ್ಷಕರನ್ನೂ ನಿಯೋಜಿಸಿದ್ದು, ಅವರು ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲಿದ್ದಾರೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_46_77_12.txt b/eesanje/url_46_77_12.txt new file mode 100644 index 0000000000000000000000000000000000000000..68ffce13974a3be6ddb37ecfda5589a6be3256e0 --- /dev/null +++ b/eesanje/url_46_77_12.txt @@ -0,0 +1,9 @@ +ನಾಗೇಂದ್ರ ಅವರೇ ವಾಲ್ಮೀಕಿ ನಿಗಮ ಅಕ್ರಮದ ರೂವಾರಿ : ಇಡಿ +ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಅಕ್ರಮದ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಎಂದು ಜಾರಿನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ರಿಮ್ಯಾಂಡ್ ಅರ್ಜಿ ಸಲ್ಲಿಸಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿ„ಗಳ ನ್ಯಾಯಾಲಯಕ್ಕೆ ಇಡಿ ಅಧಿಕಾರಿಗಳು, 100 ಪುಟಗಳ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದು, ತಾವು ಬಿ.ನಾಗೇಂದ್ರ ಅವರನ್ನು ಏಕೆ ಬಂಧಿಸುತ್ತಿದ್ದೇವೆ ಎಂದು ಅರ್ಜಿಯಲ್ಲಿ ಮನವರಿಕೆ ಮಾಡಿದ್ದಾರೆ. +ಈ ಅಕ್ರಮದ ಮಾಸ್ಟರ್ ಮೈಂಡ್ ಬಿ.ನಾಗೇಂದ್ರ. ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಅಕ್ರಮಕ್ಕೆ ಇವರೇ ಸೂತ್ರಧಾರರು. ಇವರ ನಿರ್ದೇಶನದಂತೆಯೇ ಇದು ನಡೆದಿದೆ ಎಂದು ಹೇಳಿದೆ.ನನಗೂ ಪ್ರಕರಣಕ್ಕೂ ಸಂಬಂಧವೇ ಇಲ್ಲ ಎಂದು ಹೇಳುತ್ತಿರುವ ಬಿ.ನಾಗೇಂದ್ರ ನಿಗಮದಲ್ಲಿದ್ದ 187 ಕೋಟಿ ಹಣದಲ್ಲಿ ಮೊದಲು 97 ಕೋಟಿಯನ್ನು ವರ್ಗಾವಣೆ ಮಾಡಲು ಅಧಿಕಾರಿಗಳ ಮೇಲೆ ನಿರಂತರವಾಗಿ ಒತ್ತಡ ಹಾಕಿದ್ದರು. +ಒಂದು ಹಂತದಲ್ಲಿ ಹಣ ವರ್ಗಾವಣೆ ಮಾಡದಿದ್ದರೆ ಹಿಂದಿನ ಪ್ರಕರಣವನ್ನು ಮುಂದಿಟ್ಟುಕೊಂಡು ಸೇವೆಯಿಂದ ಅಮಾನತುಪಡಿಸುವ ಬೆದರಿಕೆ ಹಾಕಿದ್ದರು ಎಂಬುದನ್ನು ಪತ್ತೆಹಚ್ಚಿದೆ.ಹೈದರಾಬಾದ್‍ನ ಬಂಜಾರಾ ಹಿಲ್ಸ್‍ನಲ್ಲಿರುವ ರತ್ನಾಕರ ಬ್ಯಾಂಕ್‍ನಲ್ಲಿ 18 ನಕಲಿ ಖಾತೆಗಳನ್ನು ತೆರೆದು ಮೇ 29ರಂದು ನಿಗಮದಿಂದ ರಾತ್ರೋರಾತ್ರಿ 40 ಕೋಟಿ ರೂ.ಗೂ ಅ„ಕ ಹಣ ವರ್ಗಾವಣೆ ಮಾಡಲಾಗಿದೆ. +ಮಹರ್ಷಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಮುಖ್ಯ ಹಣಕಾಸು ಅಧೀಕ್ಷಕರು ಸೇರಿದಂತೆ ನಿಗಮ ಹಲವು ಅಧಿಕಾರಿಗಳು ಬೆಂಗಳೂರಿನ ಶಾಂಗ್ರೀಲ ಹೋಟೆಲ್‍ನಲ್ಲಿ ಸಭೆ ನಡೆಸಿದ್ದರು ಎಂದು ರಿಮ್ಯಾಂಡ್ ಅರ್ಜಿಯಲ್ಲಿ ಇಡಿ ಉಲ್ಲೇಖ ಮಾಡಿದೆ.ಒಂದು ಹಂತದಲ್ಲಿ ನಿಗಮದ ಅಧಿಕಾರಿಗಳು ಮುಂದೊಂದು ದಿನ ಪ್ರಕರಣ ಆಚೆ ಬಂದರೆ ನಿಮಗೂ ಮತ್ತು ನಮಗೂ ಕಾನೂನಿನ ಸಂಕಷ್ಟ ಎದುರಾಗಲಿದೆ. +ಹೀಗಾಗಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದರು. ಇದಕ್ಕೆ ನಾಗೇಂದ್ರ ನಾನು ಅಧಿಕಾರದಲ್ಲಿದ್ದರೆ ಯಾವುದು ಕೂಡ ಆಚೆ ಬರುವುದಿಲ್ಲ. ನಿಮ್ಮನೆಲ್ಲ ರಕ್ಷಣೆ ಮಾಡುತ್ತೇನೆ. ನಾನು ಹೇಳಿದಂತೆ ಕೇಳಿ ಬಂಜಾರಾ ಹಿಲ್ಸ್‍ನಲ್ಲಿರುವ 18 ಖಾತೆಗಳಿಗೆ ಹಣ ವರ್ಗಾವಣೆ ಮಾಡಿ, ಅದಕ್ಕೂ ಮುನ್ನ ಎಂಜಿರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಪಖಾತೆ ತೆರೆಯುವಂತೆ ಸೂಚಿಸಿದ್ದರು. +ಮೇ 29ರಂದು ಶಾಂಗ್ರೀಲ ಹೋಟೆಲ್‍ನಲ್ಲಿ ನಡೆದ ಸಭೆಗೆ ನಾಗೇಂದ್ರ ಅವರ ಸಂಬಂ„ ನೆಕ್ಕುಂಟಿ ನಾಗರಾಜ್ ಸೇರಿದಂತೆ ನಿಗಮದ ಕೆಲವು ಅ„ಕಾರಿಗಳನ್ನು ಆಹ್ವಾನಿಸಲಾಗಿತ್ತು.ಇದಕ್ಕೂ ಮುನ್ನ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿರುವ ಚಂದ್ರಿಕಾ ಹೋಟೇಲ್‍ನಿಂದ ಪದ್ಮನಾಭ್ ಮತ್ತು ನಾಗೇಂದ್ರ ಒಂದೇ ಕಾರಿನಲ್ಲಿ ಶಾಂಗ್ರೀಲಾ ಹೋಟೆಲ್‍ಗೆ ತೆರಳಿದ್ದರು. +ಈ ವೇಳೆ ಇಬ್ಬರ ನಡುವೆ ನಡೆದ ಮಾತುಕತೆಯಂತೆ ನಿಗಮದಲ್ಲಿರುವ ಒಟ್ಟು 187 ಕೋಟಿ ಹಣವನ್ನ ಹಂತ ಹಂತವಾಗಿ ವರ್ಗಾವಣೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ.ಇವೆಲ್ಲವೂ ಕೂಡ ಸಚಿವ ನಾಗೇಂದ್ರ ತಮ್ಮ ಪ್ರಭಾವ ಬಳಸಿ ಅ„ಕಾರ ದುರುಪಯೋಗಪಡಿಸಿಕೊಂಡು ಹಣ ವರ್ಗಾವಣೆ ಮಾಡಿರುವುದಕ್ಕೆ ಸಿಕ್ಕಿರುವ ಸಾಕ್ಷ್ಯಾಧಾರಗಳು. +ನಿಗಮದ ಅಧಿಕಾರಿಗಳ ಜೊತೆ ನಡೆದಿರುವ ದೂರವಾಣಿ ಸಂಭಾಷಣೆ, ಚಾಟಿಂಗ್, ಡಿಜಿಟಲ್ ಸಾಕ್ಷ್ಯಾಧಾರ ಕಲೆ ಹಾಕಿದೆ. ಅವರು ಪ್ರಭಾವಿ ವ್ಯಕ್ತಿಯಾಗಿದ್ದು, ಆಚೆ ಇದ್ದರೆ ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಬಂಧನ ಅಗತ್ಯವಿದೆ ಎಂದು ಇಡಿ ಅ„ಕಾರಿಗಳು ರಿಮ್ಯಾಂಡ್ ಅರ್ಜಿಯಲ್ಲಿ ಮನವರಿಕೆ ಮಾಡಿದ್ದಾರೆ. \ No newline at end of file diff --git a/eesanje/url_46_77_2.txt b/eesanje/url_46_77_2.txt new file mode 100644 index 0000000000000000000000000000000000000000..57226a9db2e643487b28042c04026ed0348454bb --- /dev/null +++ b/eesanje/url_46_77_2.txt @@ -0,0 +1,6 @@ +ಅಧಿವೇಶನ ಆರಂಭಕ್ಕೂ ಮುನ್ನವೇ ಹಿರಿಯ ಅಧಿಕಾರಿಗಳಿಗೆ ಸಿಎಂ ಚಾಟಿ +ಬೆಂಗಳೂರು,ಜು.14-ಸರ್ಕಾರದ ಅಭಿವೃದ್ಧಿ ಕಾರ್ಯಚಟುವಟಿಕೆಗಳ ಕುರಿತು ನಿಖರವಾದ, ಕರಾರುವಕ್ಕಾದ ಮಾಹಿತಿಗಳನ್ನು ತತ್ಕ್ಷಣ ಒದಗಿಸಲು ಪೂರಕ ವಾತಾವರಣವನ್ನು ಸಜ್ಜುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. +ಗೃಹಕಚೇರಿ ಕೃಷ್ಣಾದಲ್ಲಿಂದು ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಹಾಗೂ ನಿರ್ದೇಶಕರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು. +ಈ ಬಾರಿಯ ಅಧಿವೇಶನದಲ್ಲಿ ಸಾಕಷ್ಟು ವಿಚಾರಗಳು ಚರ್ಚೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಕೆಲವು ವಿವಾದಗಳನ್ನು ಪ್ರಸ್ತಾಪಿಸಿ ವಿರೋಧ ಪಕ್ಷಗಳು ಟೀಕೆ ಮಾಡಬಹುದು. ಯಾವುದೇ ವಿಚಾರವಾದರೂ ಅದರ ಪೂರ್ವಪರ ಹಾಗೂ ವರ್ತಮಾನದ ಸಮಗ್ರ ಮಾಹಿತಿಗಳು ಸಂಬಂಧಪಟ್ಟ ಸಚಿವರಿಗೆ ತತಕ್ಷಣಕ್ಕೆ ಲಭ್ಯವಾಗುವಂತೆ ಹಿರಿಯ ಅಧಿಕಾರಿಗಳು ಕಾಳಜಿ ವಹಿಸಬೇಕು. +ಈ ಹಿಂದೆ ನಡೆದಿರುವ ಚರ್ಚೆಗಳು, ಆದೇಶಗಳು ಎಲ್ಲವನ್ನೂ ಮುಕ್ತವಾಗಿ ಪಾರದರ್ಶಕವಾಗಿ ಸಚಿವರ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ. ರಾಜ್ಯದ ಹಣಕಾಸು ಸ್ಥಿತಿ, ಗ್ಯಾರಂಟಿ ಯೋಜನೆಗಳು, ಕಾರ್ಯಕ್ರಮಗಳ ಪ್ರಗತಿ, ಬಜೆಟ್ ಘೋಷಿತ ಯೋಜನೆಗಳ ಕಾರ್ಯಾನುಷ್ಟಾನ ಆದೇಶ ಸೇರಿದಂತೆ ಪ್ರತಿಯೊಂದು ವಿಚಾರವನ್ನು ಅಧಿವೇಶನದಲ್ಲಿ ಸಚಿವರಿಗೆ ಒದಗಿಸಬೇಕು. +ತಪ್ಪು ಮಾಹಿತಿ ನೀಡಿ ಸದನದಲ್ಲಿ ಮುಜುಗರದ ವಾತಾವರಣ ಸೃಷ್ಟಿಯಾದರೆ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಕುಡಿಯುವ ನೀರಿನ ಸಮಸ್ಯೆ, ಕಲುಷಿತ ನೀರು ಸೇರಿದಂತೆ ಗಂಭೀರವಾದ ಸಮಸ್ಯೆಗಳ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. \ No newline at end of file diff --git a/eesanje/url_46_77_3.txt b/eesanje/url_46_77_3.txt new file mode 100644 index 0000000000000000000000000000000000000000..de31a3187e2e04cdd43ac7db5040cdac2d6bf692 --- /dev/null +++ b/eesanje/url_46_77_3.txt @@ -0,0 +1,10 @@ +ಜಲಾಶಯಗಳಿಗೆ ಒಳ ಹರಿವು ಹೆಚ್ಚಳ, ಹೆಚ್ಚುವರಿ ನೀರು ತಮಿಳುನಾಡಿಗೆ +ಮಂಡ್ಯ,ಜು.14-ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದ್ದಕ್ಕಿಂತಲೂ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಸಮಿತಿ ಒಂದು ಟಿಎಂಸಿ ಅಂದರೆ 11,500 ಕ್ಯೂಸೆಕ್ ನೀರನ್ನು ಪ್ರತಿದಿನ ಹರಿಸುವಂತೆ ಸೂಚನೆ ನೀಡಿದೆ. ಅದೃಷ್ಟವಶಾತ್ ಕಬಿನಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳಹರಿವಿನ ಪ್ರಮಾಣ 4,500 ಕ್ಯೂಸೆಕ್ಸ್ ಇದೆ. +ಸಹಜವಾಗಿ 18ರಿಂದ 20 ಸಾವಿರ ಕ್ಯೂಸೆಕ್ಸ್ ಹೊರ ಹರಿವಿದೆ. ತಮಿಳುನಾಡಿಗೆ ಯಾವುದೇ ಜಲಾಶಯದಿಂದ ನೀರು ಹರಿದರೂ ಅದು ಪರಿಗಣಿಸಲ್ಪಡುವುದರಿಂದ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ ಎಂದು ಹೇಳಿದರು. ಮಳೆ ಇದೇ ರೀತಿ ಮುಂದುವರೆದು 10 ದಿನ ಸರಿದೂಗಿಸಿದರೆ ತಮಿಳುನಾಡಿಗೆ ನೀರು ಹರಿಸಬೇಕಾದ ಈ ತಿಂಗಳ ಕೋಟಾ ಮುಗಿಯುತ್ತದೆ. +ಹೇಮಾವತಿಯಲ್ಲೂ ನೀರಿನ ಸಂಗ್ರಹ ಉತ್ತಮವಾಗಿದೆ. ಆದರೆ ಕೆಆರ್ಎಸ್ಗೆ 11 ಸಾವಿರದಷ್ಟಿದ್ದ ಒಳಹರಿವು 6 ಸಾವಿರ, ನಂತರ ಈಗ 3 ಸಾವಿರ ಕ್ಯೂಸೆಕ್‌್ಸಗೆ ಇಳಿಕೆಯಾಗಿದೆ. ಹೇಮಾವತಿ, ಹಾರಂಗಿ ಜಲಾಶಯಗಳು ನಾಲ್ಕೈದು ದಿನಗಳಲ್ಲಿ ತುಂಬುವ ಅವಕಾಶವಿದೆ ಎಂದು ವಿವರಿಸಿದರು. +ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲುಆರ್ಸಿ ನೀಡಿರುವ ಆದೇಶದ ಜಾರಿಗೆ ಕಾಲಾವಕಾಶ ಕೇಳಿ ಮೇಲನವಿ ಸಲ್ಲಿಸಲು ಚರ್ಚೆಗಳಾಗುತ್ತಿವೆ. ಇನ್ನು ಸುಮಾರು 10 ದಿನಗಳ ಕಾಲ ಮಳೆಯ ಪ್ರಮಾಣವನ್ನು ನೋಡಿಕೊಂಡು ನೀರು ಹರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. +ಸದ್ಯದ ಪರಿಸ್ಥಿತಿಯಲ್ಲಿ ಕೆಆರ್ಎಸ್ ತುಂಬಿಲ್ಲ. 104 ಅಡಿಯಷ್ಟು ಮಾತ್ರ ನೀರಿದೆ. ಕೆರೆಕಟ್ಟೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಜು.15ರ ನಂತರ ಭತ್ತ ಬೆಳೆಯುವ ಚಟುವಟಿಕೆಗಳು ಶುರುವಾಗಬೇಕಾಗಿತ್ತು. ಆದರೆ ನೀರಿನ ಲಭ್ಯತೆ ಮತ್ತು ಕೊರತೆಯನ್ನು ನೋಡಿಕೊಂಡು ಕೃಷಿ ಮಾಡುವಂತೆ ರೈತರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು. +ಕಾವೇರಿ ನೀರು ನಿಯಂತ್ರಣ ಸಮಿತಿಯ ಮುಂದೆ ರಾಜ್ಯದ ಪರವಾಗಿ ಸರಿಯಾದ ವಾದ ಮಂಡಿಸಿಲ್ಲ ಎಂಬ ಮಾಜಿ ಸಂಸದ ಪುಟ್ಟರಾಜು ಅವರ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ರಾಜ್ಯ ಲಿಖಿತವಾಗಿಯೇ ವಾದ ಮಂಡಿಸಿದೆ. ತನ್ನ ಇತಿಮತಿಯಲ್ಲಿ ಎಲ್ಲಾ ಮಾಹಿತಿಗಳನ್ನು ಒದಗಿಸಿದೆ. ಆದರೂ ಸಮಿತಿಯ ತೀರ್ಪು ಆಘಾತಕಾರಿಯಾಗಿದೆ ಎಂದರು. ಲೋಕಸಭಾ ಚುನಾವಣೆಯಲ್ಲಿ ಕಾವೇರಿ ವಿವಾದ ಬಗೆಹರಿಸುವುದು ತಮ ಆದ್ಯತೆ ಎಂದು ಹೇಳಿ ಪ್ರಚಾರ ಮಾಡಿ ಸಂಸದರಾಗಿ, ಕೇಂದ್ರದಲ್ಲಿ ಸಚಿವರಾಗಿರುವವರು ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಯಾವ ರೀತಿಯ ಸಲಹೆ ನೀಡುತ್ತಾರೆ ಎಂಬುದನ್ನು ಕಾದುನೋಡುತ್ತೇವೆ ಎಂದು ಹೇಳಿದರು. +ಮಂಡ್ಯದಲ್ಲಿ ಡಿ.21ರಿಂದ ಮೂರು ದಿನಗಳ ಕಾಲ ನಡೆಯುವ ಅಖಿಲಭಾರತ ಕನ್ನಡ ಸಾಹಿತ್ಯ ಸಮೇಳನಕ್ಕೆ ಚಿಕ್ಕಮಂಡ್ಯ , ಅಮರಾವತಿ ಹೋಟೆಲ್ ಹಿಂಭಾಗ ಸೇರಿದಂತೆ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಸೂಕ್ತ ಜಾಗವನ್ನು ಶೀಘ್ರವಾಗಿ ಅಖೈರುಗೊಳಿಸುವುದಾಗಿ ಹೇಳಿದರು. +ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ. ಅವರ ಪತ್ನಿಯ ಹೆಸರಿಲ್ಲಿ ಜಮೀನನ್ನು ಮುಡಾದವರು ಅಕ್ರಮವಾಗಿ ಬಳಕೆ ಮಾಡಿಕೊಂಡು ನಿವೇಶನ ಮಾಡಿ ಮಾರಾಟ ಮಾಡಿದ್ದಾರೆ. ಇದನ್ನು ಒಪ್ಪಿಕೊಂಡು ಬದಲಿ ಜಾಗ ನೀಡಲಾಗಿದೆ. ಜಾಗ ನೀಡಿದ ಸಂದರ್ಭದಲ್ಲಿ ಮುಡಾ ಅಧ್ಯಕ್ಷರಾಗಿದ್ದು ಬಿಜೆಪಿಯ ರಾಜೇಶ್ ಎಂಬ ವ್ಯಕ್ತಿ. +ಮುಖ್ಯಮಂತ್ರಿಯಾಗಿ ಬಸವರಾಜ ಬೊಮಾಯಿ ಅವರು ಮಾಡಿದ್ದ ತಪ್ಪುಗಳನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಅವರನ್ನು ಹೊಣೆಗಾರರನ್ನಾಗಿ ಮಾಡಿ ಟೀಕಿ ಮಾಡುತ್ತಿದ್ದಾರೆ ಎಂದು ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_46_77_4.txt b/eesanje/url_46_77_4.txt new file mode 100644 index 0000000000000000000000000000000000000000..a8ac14e6c5c9e3950f6b003199232f59d3287151 --- /dev/null +++ b/eesanje/url_46_77_4.txt @@ -0,0 +1,5 @@ +ಮಾಜಿ ಸಚಿವ ನಾಗೇಂದ್ರಗೆ ಇಡಿ ಗ್ರಿಲ್ +ಬೆಂಗಳೂರು,ಜು.14-ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಇ.ಡಿ ಅಧಿಕಾರಿಗಳು ವಾಲೀಕಿ ನಿಗಮದ ಬಹುಕೋಟಿ ಹಗರಣದ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ನಿಗಮದ ಅಕ್ರಮ ಹಣ ವರ್ಗಾವಣೆ ಬಗ್ಗೆ ಬಿ.ನಾಗೇಂದ್ರ ಅವರನ್ನು ಶುಕ್ರವಾರ ಬಂಧಿಸಿದ್ದ ಇ.ಡಿ ಅಧಿಕಾರಿಗಳು ಶನಿವಾರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ನ್ಯಾಯಾಲಯ ಆರು ದಿನಗಳ ಕಾಲ ಇ.ಡಿ ಕಸ್ಟಡಿಗೆ ನೀಡಿದೆ. +ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಮುಂದಿಟ್ಟು ಮಾಹಿತಿಗಳನ್ನು ಪಡೆದಿದ್ದಾರೆ ಎಂದು ಗೊತ್ತಾಗಿದೆ. +ಹಣ ಎಲ್ಲಿಂದ, ಯಾರಿಗೆ ಹೋಯಿತು, ಯಾವುದಕ್ಕೆ ಉಪಯೋಗಿಸಲಾಯಿತು ಎಂಬಿತ್ಯಾದಿ ಪ್ರಶ್ನೆಗಳ ಮೂಲಕ ಮಾಹಿತಿಗಳನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ. +ಹಲವು ಪ್ರಶ್ನೆಗಳಿಗೆ ನಾಗೇಂದ್ರ ಅವರು ಉತ್ತರಿಸಿದ್ದು, ಇನ್ನು ಹಲವು ಪ್ರಶ್ನೆಗಳಿಗೆ ನನಗೇನೂ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_77_5.txt b/eesanje/url_46_77_5.txt new file mode 100644 index 0000000000000000000000000000000000000000..48b6096123c5c23bbf721d30f51ed847729a29b0 --- /dev/null +++ b/eesanje/url_46_77_5.txt @@ -0,0 +1,6 @@ +ನಾಳೆಯಿಂದ ವಿಧಾನಮಂಡಲ ಅಧಿವೇಶನ : ಹಗರಣಗಳ ಹೈಡ್ರಾಮಾ ನಿರೀಕ್ಷೆ +ಬೆಂಗಳೂರು,ಜು.14-ಲೋಕಸಭೆ ಚುನಾವಣೆ ಬಳಿಕ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವೆ ನಡೆಯುವ ಮಾತಿನ ಸಮರಕ್ಕೆ ನಾಳೆಯಿಂದ ವಿಧಾನಮಂಡಲ ಅಧಿವೇಶನ ವೇದಿಕೆಯಾಗಲಿದೆ. ಲೋಕಸಭೆ ಚುನಾವಣೆ ಮತ್ತು ಅದಕ್ಕೂ ಮೊದಲು ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌‍ ನಡುವೆ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದ್ದವು. +ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಒಂದರ ಮೇಲೊಂದರಂತೆ ಹಗರಣಗಳನ್ನು ಪ್ರಸ್ತಾಪಿಸಿ ವಿಪಕ್ಷಗಳು ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಅದರಲ್ಲೂ ಪ್ರಮುಖವಾಗಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಭಾರೀ ಸದ್ದು ಮಾಡಿವೆ. +ಜೊತೆಗೆ ಅಭಿವೃದ್ಧಿಯಲ್ಲಿನ ಹಿನ್ನಡೆ, ಕಲುಷಿತ ನೀರಿನ ಪ್ರಕರಣಗಳು, ಹಾಲಿನ ದರ ಏರಿಕೆ, ಬರ ನಿರ್ವಹಣೆಯಲ್ಲಿನ ಲೋಪಗಳು ಮತ್ತು ಮಳೆಗಾಲದಲ್ಲಿ ಮುಂಗಾರು ಚಟುವಟಿಕೆಗಳಿಗೆ ಪೂರಕವಾದ ಸೌಲಭ್ಯಗಳ ಕೊರತೆ ಸೇರಿದಂತೆ ಹಲವಾರು ವಿಚಾರಗಳು ಪ್ರತಿಪಕ್ಷಗಳ ಬತ್ತಳಿಕೆಯಲ್ಲಿವೆ. +ಇದರ ನಡುವೆ ರಾಜಕೀಯ ಪ್ರೇರಿತ ವಿವಾದಿತ ಹೇಳಿಕೆಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಆಡಳಿತಾರೂಢ ಕಾಂಗ್ರೆಸ್‌‍ನ ವಿರುದ್ಧ ಪ್ರತಿಪಕ್ಷಗಳು ಒಟ್ಟಾಗಿ ವಾಗ್ದಾಳಿ ನಡೆಸಲು ಸಜ್ಜುಗೊಂಡಿದ್ದರೆ, ಇತ್ತ ಈ ಹಿಂದಿನ ಸರ್ಕಾರದಲ್ಲಿ ಆಗಿರುವ ಹಗರಣಗಳು ಹಾಗೂ ಲೋಪಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್‌‍ ಕೂಡ ತಯಾರಿ ನಡೆಸಿದೆ. +ಬಹುತೇಕ ಈ ಅಧಿವೇಶನದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ಜುಗಲ್‌ಬಂಧಿಯೇ ಸದ್ದು ಮಾಡುವ ಸಾಧ್ಯತೆ ಇದೆ. ಡೆಂಘೀ ಪ್ರಕರಣಗಳು ತೀವ್ರವಾಗಿ ಸಾಕಷ್ಟು ಕಷ್ಟನಷ್ಟಕ್ಕೆ ಕಾರಣವಾಗಿದೆ. ಅದರೊಂದಿಗೆ ಬೇರೆ ರೀತಿಯ ಸಾಂಕ್ರಾಮಿಕ ಸಮಸ್ಯೆಗಳು, ಆರೋಗ್ಯ ಕೇಂದ್ರಗಳಲ್ಲಿನ ಸೌಲಭ್ಯ ಕೊರತೆ ಜನರನ್ನು ಬಧಿಸುತ್ತಿದೆ. ಇಂತಹ ಜನಪರವಾದ ವಿಚಾರಗಳನ್ನು ಕುರಿತು ಚರ್ಚೆಗೆ ಅವಕಾಶವಾಗಲಿದೆಯೇ ಎಂಬುದೇ ಕುತೂಹಲ ಕೆರಳಿಸಿದೆ. \ No newline at end of file diff --git a/eesanje/url_46_77_6.txt b/eesanje/url_46_77_6.txt new file mode 100644 index 0000000000000000000000000000000000000000..ba9ee31d5ee07c3c31c3fbf6d6485a9a3ef7e0bc --- /dev/null +++ b/eesanje/url_46_77_6.txt @@ -0,0 +1,13 @@ +ವಿವಿಧ ಸಮುದಾಯಗಳ ನಿಗಮ-ಮಂಡಳಿಗಳಿಗೂ ತಟ್ಟಿದ ವಾಲ್ಮೀಕಿ ನಿಗಮದ ಅಕ್ರಮ ಎಫೆಕ್ಟ್ +ಬೆಂಗಳೂರು,ಜು.14-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪರಿಣಾಮವಾಗಿ ಸರ್ಕಾರದ ವಿವಿಧ ಸಮುದಾಯಗಳ ನಿಗಮ ಮಂಡಳಿಗಳಿಗೂ ಭಾರೀ ಬಿಸಿ ತಗಲುವಂತಾಗಿದೆ. +ಎತ್ತಿಗೆ ಜ್ವರ ಬಂದರೆ ಎಮೆಗೆ ಬರೆ ಎಳೆದಂತೆ ವಾಲೀಕಿ ನಿಗಮದಲ್ಲಾಗಿರುವ ಅವ್ಯವಹಾರದಿಂದಾಗಿ ಬಹುತೇಕ ಎಲ್ಲಾ ನಿಗಮಗಳಲ್ಲೂ ಸೌಲಭ್ಯಗಳ ಹಂಚಿಕೆ, ಫಲಾನುಭವಿಗಳ ಆಯ್ಕೆ, ಹಣ ಬಿಡುಗಡೆಗೆ ತಡೆ ನೀಡಲಾಗಿದೆ. +ರಾಜಕೀಯ ಕಾರಣಗಳಿಗಾಗಿ ಬಿಜೆಪಿ, ಕಾಂಗ್ರೆಸ್‌‍ ಪಕ್ಷಗಳು ಅವಕಾಶ ಸಿಕ್ಕಾಗಲೆಲ್ಲ ಜಾತಿಗೊಂದು ನಿಗಮಗಳನ್ನು ರಚನೆ ಮಾಡಿದ್ದಾರೆ. ಹೀಗಾಗಿ ಬಹುತೇಕ ಜಾತಿ ಆಧಾರಿತ ನಿಗಮಗಳಲ್ಲಿ ಸ್ವಾವಲಂಬನೆ, ಸ್ವಯಂ ಉದ್ಯೋಗ, ಶೈಕ್ಷಣಿಕ ಚಟುವಟಿಕೆಯ ಬೆಂಬಲ ಸೇರಿದಂತೆ ಹಲವಾರು ಸೌಲಭ್ಯಗಳಿವೆ. +ಆದರೆ ಅವುಗಳನ್ನು ತಲುಪಿಸಲು ಸಾಧ್ಯವಾಗದೆ ನಿಗಮಗಳು ನಿಷ್ಕ್ರಿಯಗೊಂಡಿವೆ. ವಿಧಾನಸಭಾ ಚುನಾವಣೆ ಕಾರಣಕ್ಕಾಗಿ ಕಳೆದ ವರ್ಷ ನಿಗಮಗಳ ಚಟುವಟಿಕೆಗಳಿಗೆ ಗ್ರಹಣ ಬಡಿದಿತ್ತು. ಹೊಸ ಸರ್ಕಾರ ಬಂದು ಸುಧಾರಿಸಿಕೊಳ್ಳುವಷ್ಟರಲ್ಲಿ ಮತ್ತೆ ಲೋಕಸಭೆ ಚುನಾವಣೆ ಎದುರಾಗಿತ್ತು. +ನೀತಿಸಂಹಿತೆಯಿಂದಾಗಿ ಜೂನ್‌ವರೆಗೂ ಸರಿಸುಮಾರು ನಾಲ್ಕು ತಿಂಗಳು ಆಡಳಿತ ಯಂತ್ರ ಕೋಮಾ ಸ್ಥಿತಿಯಲ್ಲಿತ್ತು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯೂ ನಡೆಯಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಫಲಾನುಭವಿಗಳ ಪಟ್ಟಿ ಇಲ್ಲದೆ, ಹಣ ಬಿಡುಗಡೆಯಾಗದೆ ಯೋಜನೆಗಳು ನೆನೆಗುದಿಗೆ ಬಿದ್ದಿವೆ. +ಹೆಸರಿಗೆ ಮಾತ್ರ ಸರ್ಕಾರದ ಸೌಲಭ್ಯಗಳ ಪ್ರಗತಿ ಕಾಗದ ಪತ್ರದಲ್ಲಿದೆ. ಪ್ರತಿಯೊಂದು ಇಲಾಖೆಯಲ್ಲೂ ಆಯಾ ಸಚಿವರು ತಮ ಸಾಧನೆಗಳ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅವೆಲ್ಲವೂ ಕೇವಲ ಲೆಕ್ಕಪತ್ರಗಳಿಗೆ ಮಾತ್ರ ಸೀಮಿತವಾಗಿವೆ. ಭೌತಿಕವಾಗಿ ನಿಗಮಗಳಲ್ಲಿ ಫಲಾನುಭವಿಗಳ ಪಟ್ಟಿಯೇ ಇಲ್ಲ ಎಂಬ ಅಂಶ ಚರ್ಚೆಗೆ ಗ್ರಾಸವಾಗಿದೆ. +ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಇದೇ ರೀತಿ ಬಳಕೆಯಾಗದೆ ಉಳಿದ 187 ಕೋಟಿ ರೂ.ಗಳನ್ನು ದುಷ್ಟ ಜಾಲ ದುರ್ಬಳಕೆ ಮಾಡಿಕೊಂಡು ನುಂಗಿ ನೀರು ಕುಡಿಯುವ ಹುನ್ನಾರ ನಡೆಸಿತ್ತು. ಬಹುತೇಕ ಅಷ್ಟೂ ಹಣಕ್ಕೂ ನಕಲಿ ಫಲಾನುಭವಿಗಳ ಪಟ್ಟಿಯನ್ನು ಲಗತ್ತಿಸಿ ಹಣ ಲಪಟಾಯಿಸುವ ಸಾಧ್ಯತೆಗಳಿದ್ದವು. +ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತಹತ್ಯೆಯಿಂದಾಗಿ ಹಗರಣ ಬಯಲಿಗೆ ಬಂದಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಇಲಾಖೆಯ ಸಚಿವರಾಗಿದ್ದವರೂ ಸೇರಿದಂತೆ ಎಲ್ಲರೂ ವಿಚಾರಣೆಗೊಳಗಾಗಿ ಜೈಲಿನ ಕಂಬಿ ಎಣಿಸುವಂತಾಗಿದೆ. +ಹಗರಣ ಬೆಳಕಿಗೆ ಬರುತ್ತಿದ್ದಂತೆ ಸರ್ಕಾರದ ಪ್ರಮುಖರು ಎಲ್ಲಾ ನಿಗಮಗಳ ಅಧ್ಯಕ್ಷರಿಗೆ ಸ್ಪಷ್ಟ ಸೂಚನೆ ನೀಡಿದ್ದು, ಯಾವುದೇ ಕಡತಗಳನ್ನು ವಿಲೇವಾರಿ ಮಾಡಬಾರದು, ಫಲಾನುಭವಿಗಳ ಆಯ್ಕೆ ಪಟ್ಟಿ ಸೇರಿದಂತೆ ಬೇರೆಲ್ಲ ಚಟುವಟಿಕೆಗಳು ನಡೆದರೂ ಹಣ ಒಂದೂ ರೂಪಾಯಿಯೂ ಬಿಡುಗಡೆಯಾಗಬಾರದು ಎಂಬ ಸೂಚನೆ ನೀಡಿದ್ದಾರೆ. ಇದರಿಂದಾಗಿ ಹಲವಾರು ನಿಗಮಗಳಲ್ಲಿ ಸಾವಿರಾರು ಕೋಟಿ ರೂ. ಕೊಳೆಯುತ್ತ ಬಿದ್ದಿದೆ. +ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಕೆಲವು ನಿಗಮಗಳಲ್ಲಿ ಮೂರು ವರ್ಷಗಳಿಂದಲೂ ಫಲಾನುಭವಿಗಳಿಗೆ ಸೌಲಭ್ಯ ಹಂಚಿಕೆಯಾಗದೆ ಸುಮಾರು 500ರಿಂದ 600 ಕೋಟಿ ರೂ.ಗಳಷ್ಟು ಹಣ ಬಾಕಿ ಇವೆ ಎಂದು ಹೇಳಲಾಗುತ್ತಿದೆ. +ಈ ಹಿಂದಿನ ಸರ್ಕಾರಗಳು ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಮನಸ್ಸಿಲ್ಲದೆ ಫಲಾನುಭವಿಗಳು ಸಂತ್ರಸ್ತರಾದರೆ , ಪ್ರಸ್ತುತ ಸರ್ಕಾರದಲ್ಲಿ ಹಗರಣದ ಗ್ರಹಣದಿಂದಾಗಿ ಮತ್ತಷ್ಟು ವಿಳಂಬವಾಗಿದೆ. +ಆದರೆ ಪ್ರತಿಯೊಂದು ಇಲಾಖೆಯ ಸಚಿವರು ಮಾತ್ರ ನೂರಾರು ಫಲಾನುಭವಿಗಳ ಪಟ್ಟಿ ನೀಡುತ್ತಾ ಹಣ ಖರ್ಚುವೆಚ್ಚದ ಮಾಹಿತಿ ನೀಡುತ್ತಲೇ ಬಂದಿದ್ದಾರೆ. ವಾಸ್ತವವಾಗಿ ಫಲಾನುಭವಿಗಳು ಇಲ್ಲ, ಸೌಲಭ್ಯಗಳು ಇಲ್ಲ ಎಂಬಂತಾಗಿದೆ. ನಾಳೆಯಿಂದ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಲು ಕೆಲವು ಶಾಸಕರು ದಾಖಲಾತಿಗಳನ್ನು ಸಜ್ಜುಗೊಳಿಸಿಕೊಂಡಿದ್ದಾರೆ. \ No newline at end of file diff --git a/eesanje/url_46_77_7.txt b/eesanje/url_46_77_7.txt new file mode 100644 index 0000000000000000000000000000000000000000..d23551adba826fc5d41a93edf89082c48a4e1418 --- /dev/null +++ b/eesanje/url_46_77_7.txt @@ -0,0 +1,7 @@ +ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ +ಬೆಂಗಳೂರು,ಜು.14-ಕರಾವಳಿ, ಮಲೆನಾಡು, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಈ ಐದು ಜಿಲ್ಲೆಗಳಲ್ಲೂ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಆಂಕೋಲ, ಕುಮುಟಾ, ಕಡ್ತ, ಗೇರುಸೊಪ್ಪೆ, ಹೊನ್ನಾವರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗುತ್ತಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕೊಡುಗು ಜಿಲ್ಲೆಯ ಬಾಗಮಂಡಲದಲ್ಲಿ ನಿನ್ನೆ ಒಂದೇ ದಿನ 13 ಸೆ.ಮೀ ಮಳೆಯಾಗಿದೆ. +ನಿರಂತರ ಮಳೆಯಿಂದ ಮಲೆನಾಡು, ಕರಾವಳಿ ಭಾಗದಲ್ಲಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ಹೊಲಗದ್ದೆಗಳಿಗೂ ನೀರು ತುಂಬಿ ಬೆಳೆಗಳಿಗೂ ಹಾನಿಯಾಗಿದೆ. ಕೆರೆಕಟ್ಟೆಗಳು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನಕ್ಕೆ ಹಲವೆಡೆ ತೊಂದರೆಯಾಗಿದೆ. +ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಬರುತ್ತಿರುವುದರಿಂದ ಕಬಿನಿ, ಹೇಮಾವತಿ, ಹಾರಂಗಿ, ಕೃಷ್ಣರಾಜಸಾಗರ ಜಲಾಶಯಗಳ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿ ನೀರು ಸಂಗ್ರಹ ಜಾಸ್ತಿಯಾಗಿದೆ. ಅತ್ತ ಶಿವಮೊಗ್ಗ ಮತ್ತು ಮಲೆನಾಡು ಪ್ರದೇಶಗಳಲ್ಲೂ ನಿರಂತರ ಮಳೆಯಾಗುತ್ತಿರುವುದರಿಂದ ತುಂಗ, ಭದ್ರ ಜಲಾಶಯಗಳಿಗೂ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. +ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಗೆ ನಾಳೆ ಆರೆಂಜ್‌ ಅಲೆರ್ಟ್‌ ಹಾಗೂ ಮುಂದಿನ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.ಯಾದಗಿರಿ, ಹಾವೇರಿ, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. +ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ನಿರಂತರ ಮಳೆಯಾಗುತ್ತಿದ್ದು, ಮತ್ತೆ ಮಳೆ ಹೆಚ್ಚಾಗುವ ಸಂಭವವಿದೆ. +ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ನದಿಪಾತ್ರದ ಜನರು ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚಿಸಿದೆ. ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಗುರ ಮತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. \ No newline at end of file diff --git a/eesanje/url_46_77_8.txt b/eesanje/url_46_77_8.txt new file mode 100644 index 0000000000000000000000000000000000000000..7ac093a458dbf208e361fdf1ec627b74c2f2edbe --- /dev/null +++ b/eesanje/url_46_77_8.txt @@ -0,0 +1,5 @@ +ಬಸವರಾಜ್‌ ರಾಯರೆಡ್ಡಿ “ಖಜಾನೆ ಖಾಲಿ” ಹೇಳಿಕೆಗೆ ದಿನೇಶ್‌ ಗೂಳಿಗೌಡ ಆಕ್ಷೇಪ +ಬೆಂಗಳೂರು,ಜು.14-ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್‌ ರಾಯರೆಡ್ಡಿ ಅವರು ನೀಡಿದ ಹೇಳಿಕೆಗೆ ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. +ಅಧಿಕಾರಕ್ಕೆ ಬರುವ ಮೊದಲು ಹೊರಡಿಸಿದ್ದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌‍ ಪಕ್ಷವು ಘೋಷಿಸಿದ್ದ 5 ಪ್ರಮುಖ ಗ್ಯಾರಂಟಿ ಯೋಜನೆಗಳ ಸಹಿತ ಇನ್ನಿತರ ಆಶ್ವಾಸನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈಡೇರಿಸುತ್ತಾ ಬರುತ್ತಿದ್ದಾರೆ. +ರಾಜ್ಯದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯುತ್ತಿರಬೇಕಾದರೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಅವರು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ. +ಇಂಥ ಹೇಳಿಕೆಗೆ ಕಡಿವಾಣ ಹಾಕಲು ಮನವಿ:ರಾಜ್ಯದ 223 ತಾಲೂಕುಗಳಲ್ಲಿ ತೀವ್ರತರದ ಬರ ಪರಿಸ್ಥಿತಿ ಇತ್ತು. ಆದರೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬರೆದ ಬಿಸಿ ಅಷ್ಟಾಗಿ ತಟ್ಟಲಿಲ್ಲ. ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯದ ಜನತೆಯೇ ಕೊಂಡಾಡುತ್ತಿರುವಾಗ ಇಂತಹ ಗೊಂದಲಮಯ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಹೇಳಿಕೆಗಳಿಗೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು ಎಂದು ಅವರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_77_9.txt b/eesanje/url_46_77_9.txt new file mode 100644 index 0000000000000000000000000000000000000000..6b266a7ef717d212a050b087481dc867f4e480e5 --- /dev/null +++ b/eesanje/url_46_77_9.txt @@ -0,0 +1,5 @@ +ವಾಲ್ಮೀಕಿ ನಿಗಮದ ಅಕ್ರಮದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಪರಾರಿ +ಬೆಂಗಳೂರು,ಜು.14-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪಿ ಶಾಸಕ ಬಸನಗೌಡ ದದ್ದಲ್‌ ಅವರು ಪಶ್ಚಿಮ ಬಂಗಾಳ ಅಥವಾ ಹೈದರಾಬಾದ್‌ಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. +ತಲೆಮರೆಸಿಕೊಂಡಿರುವ ದದ್ದಲ್‌ ಅವರ ಪತ್ತೆಗೆ ಜಾರಿ ನಿರ್ದೇಶನಾಲಯ(ಇಡಿ) ಬಲೆ ಬೀಸಿದೆ.ಬಸನಗೌಡ ದದ್ದಲ್‌ ಅವರು ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌‍ಐಟಿ ಎದುರು ಶುಕ್ರವಾರ ವಿಚಾರಣೆಗೆ ಹಾಜರಾಗಿದ್ದರು. ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್‌‍ಐಟಿ ಅಧಿಕಾರಿಗಳು ಸೂಚಿಸಿದ್ದರು. ನಂತರ ಅವರು ನಾಪತ್ತೆಯಾಗಿದ್ದಾರೆ. +ಇಡಿ ಅಧಿಕಾರಿಗಳು ಅವರ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ಅವರ ನಿವಾಸ, ಕಚೇರಿಯಲ್ಲಿ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮಂತ್ರಾಲಯ ಮಾರ್ಗವಾಗಿ ಹೈದರಾಬಾದ್‌ಗೆ ತೆರಳಿದ್ದು, ಅಲ್ಲಿಂದ ಪಶ್ಚಿಮ ಬಂಗಾಳಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಜಾಡು ಹಿಡಿದಿರುವ ಇಡಿ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದೆ. +ಮಂಗಳವಾರ ಮತ್ತು ಬುಧವಾರ ಇಡಿ ಅಧಿಕಾರಿಗಳು ದದ್ದಲ್‌ ಅವರ ಯಲಹಂಕದಲ್ಲಿರುವ ನಿವಾಸ, ರಾಯಚೂರಿನ ನಿವಾಸ ಸೇರಿ ವಿವಿಧೆಡೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. \ No newline at end of file diff --git a/eesanje/url_46_78_1.txt b/eesanje/url_46_78_1.txt new file mode 100644 index 0000000000000000000000000000000000000000..3e78267b79a7b3920f4bae6c380fecc483430fa2 --- /dev/null +++ b/eesanje/url_46_78_1.txt @@ -0,0 +1,12 @@ +ಸಿಎಂ ಪತ್ನಿಗೆ ದಾನವಾಗಿ ಬಂದ ಜಮೀನು ಮುಡಾಗೆ ಸೇರಿದ್ದು : ಹೆಚ್ಡಿಕೆ +ಬೆಂಗಳೂರು,ಜು.13-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ದಾನವಾಗಿ ಬಂದಿದ್ದ ಜಮೀನು ಮುಡಾಗೆ ಸೇರಿದ್ದಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2010ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ ದಾನವಾಗಿ ಕೃಷಿ ಜಮೀನು ಬಂದಿರುವ ಮಾಹಿತಿ ಇದೆ. ಆದರೆ 1997ರಲ್ಲೇ ಜಮೀನು ಭೂಸ್ವಾಧೀನವಾಗಿದ್ದು, ಮುಡಾದಿಂದ ನ್ಯಾಯಾಲಯಕ್ಕೆ 3.16 ಲಕ್ಷ ರೂ. ಹಣ ಪಾವತಿಯಾಗಿದೆ ಎಂದರು. +ಮುಡಾ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹಣ ಪಾವತಿಸಿದ ಮೇಲೆ ಜಮೀನು ಮೂಡಾ ಸ್ವತ್ತಾಗಿದೆ. 2004ರಲ್ಲಿ ದೇವರಾಜು ಎಂಬುವರಿಂದ ಮಲ್ಲಿಕಾರ್ಜುನ ಸ್ವಾಮಿ ಎಂಬುವರು ಖರೀದಿಸಿರುವ ಮಾಹಿತಿ ಇದೆ. ನಂತರ ಆ ಜಮೀನನ್ನ 2005ರಲ್ಲಿ ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದ್ದಾರೆ. ಆಗ ಉಪ ಮುಖ್ಯಮಂತ್ರಿಯಾಗಿದ್ದವರೇ ಸಿದ್ದರಾಮಯ್ಯ ಅವರೇ ಎಂದು ಹೇಳಿದರು. +ನಿಂಗ ಅಲಿಯಾಸ್ ಜವರ ಎಂಬ ವ್ಯಕ್ತಿ ಹೆಸರಿನಲ್ಲಿ 1992-93ರಲ್ಲಿ 3 ಎಕರೆ 16 ಗುಂಟೆ ಜಮೀನು ಪೌತಿ ಖಾತೆಯಾಗಿದೆ. 1998ರಲ್ಲಿ ಡಿನೋಟಿಫಿಕೇಷನ್ ಅನ್ನು ಸತ್ತ ವ್ಯಕ್ತಿ ಹೆಸರಿನಲ್ಲಿ ಮಾಡಲಾಗಿದೆ. ಆಗ ಉಪಮುಖ್ಯಮಂತ್ರಿಯಾಗಿದ್ದವರು ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ತಿಳಿಸಿದರು. +ಸಿದ್ದರಾಮಯ್ಯ ಅವರ ಪತ್ನಿಯ ತಮ ದಾನವಾಗಿ ಈ ಜಮೀನನ್ನು ನೀಡಿರುವುದಾಗಿ ಹೇಳಲಾಗಿದೆ. ಆದರೆ ಮುಡಾ ಜಮೀನು ದೇವರಾಜು ಅವರಿಗೆ ಹೇಗೆ ಬಂತು? ಸತ್ತ ವ್ಯಕ್ತಿಗೆ ಡಿನೋಟಿಫಿಕೇಷನ್ ಹೇಗಾಯ್ತು ಎಂಬ ವಿವರವನ್ನು ಮುಖ್ಯಮಂತ್ರಿ ಬಹಿರಂಗಪಡಿಸಬೇಕೆಂದು ಆಗ್ರಹಿಸಿದರು. +ತಮ ಆರೋಪಕ್ಕೆ ಸಂಬಂಧಪಟ್ಟಂತೆ ಮೂಡಾದ ಯೋಜನಾ ನಕ್ಷೆ ಸೇರಿದಂತೆ ಹಲವು ದಾಖಲೆಗಳನ್ನು ಪ್ರದರ್ಶಿಸಿದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಪತ್ನಿ ಹೆಸರಿಗೆ ದಾನವಾಗಿ ಬಂದಿರುವ ಜಮೀನಿನ ಮಾಹಿತಿಯನ್ನು ಸಿದ್ದರಾಮಯ್ಯ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿಲ್ಲ ಎಂದು ಟೀಕಿಸಿದರು. +ಮುಡಾ ಹಗರಣ ಬೇರೆ, ಮುಖ್ಯಮಂತ್ರಿ ಕುಟುಂಬದ ಅವ್ಯವಹಾರದ ಪ್ರಶ್ನೆಯೇ ಬೇರೆ. ಮುಖ್ಯಮಂತ್ರಿಯ ಮೂಗಿನ ನೇರಕ್ಕೆ ಇದು ನಡೆದಿದೆ. ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಸ್ಥಾನದಲ್ಲಿ ನಡೆದ ಅವ್ಯವಹಾರವಾಗಿದ್ದು,ಇದು ಅಧಿಕಾರದ ದುರುಪಯೋಗವಾಗಿದೆ ಎಂದು ಆರೋಪಿಸಿದರು. +62 ಕೋಟಿ ರೂ. ಬೆಲೆ ಬಾಳುವ ಆಸ್ತಿಗೆ ಬದಲಿ ನಿವೇಶನ ಪಡೆದಿರುವುದಾಗಿ ಹೇಳಿದ್ದಾರೆ. ಎಲ್ಲಿ ಭೂಸ್ವಾಧೀನವಾಗಿದೆಯೋ ಆ ಜಾಗದಲ್ಲಿ ಎರಡು ನಿವೇಶನ ಪಡೆಯಬಹುದು ಎಂಬ ನಿಯಮವಿದೆ. ಅದರೆ ಬೇರೆ ಕಡೆ ನಿವೇಶವನ್ನು ಪಡೆದಿದ್ದಾರೆ. ಇದು ಅವರ ಪಿತ್ರಾರ್ಜಿತ ಆಸ್ತಿಯಲ್ಲ ಎಂದು ತಿಳಿಸಿದರು. +ಎಲ್ಲರ ಮೇಲೆ ಕ್ರಮವಾಗಲಿ:ಮೂರ್ನಾಲ್ಕು ಸಾವಿರ ಕೋಟಿ ರೂ. ಮೂಡ ಹಗರಣವಾಗಿದ್ದು, ಆರೋಪ ಯಾರ್ಯಾರ ಮೇಲೆ ಬಂದಿದೆಯೋ ಅವರ ಮೇಲೆ ಕ್ರಮ ಕೈಗೊಳ್ಳುವುದು ಸರ್ಕಾರದ ಕರ್ತವ್ಯ ಎಂದರು.ಮುಖ್ಯಮಂತ್ರಿಯವರ ಮೇಲೆ ಕೇಳಿಬಂದಿರುವ ಆರೋಪಕೆ ಸಂಬಂಧಿಸಿದಂತೆ ನಾನು ಮಾಹಿತಿ ಒದಗಿಸಿದ್ದೇನೆ. ಯಾರಾದರೂ ವಕೀಲರು ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ ಪಡೆದು ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿದರು. +ಹಿಂದುಳಿದ ನಾಯಕ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಪ್ರತಿಪಕ್ಷಗಳು ಟೀಕೆಮಾಡುತ್ತಿವೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ,ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದಾಗ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವೆಯಾಗಲ್ಲವೆ? ಚಂದ್ರಶೇಖರ್ ಎಂಬುವರ ಡೆತ್ನೋಟ್ ಇಲ್ಲದಿದ್ದರೆ ಏನು ಮಾಡುತ್ತಿದ್ದಿರಿ? ಎಂದು ವಾಗ್ದಾಳಿ ನಡೆಸಿದರು. +ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಂಡಪ್ಪ ಕಾಶೆಂಪುರ್, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಎಸ್.ಎಲ್.ಭೋಜೇಗೌಡ, ಜೆಡಿಎಸ್ ಮುಖಂಡರಾದ ಆರ್.ಪ್ರಕಾಶ್ ಮತ್ತಿತರರು ಹಾಜರಿದ್ದರು. \ No newline at end of file diff --git a/eesanje/url_46_78_10.txt b/eesanje/url_46_78_10.txt new file mode 100644 index 0000000000000000000000000000000000000000..c6c0d57862c28bbe837e0341e0f6d960f38db07b --- /dev/null +++ b/eesanje/url_46_78_10.txt @@ -0,0 +1,9 @@ +ವಾಲ್ಮೀಕಿ ನಿಗಮ ಅವ್ಯವಹಾರ : ಶಾಸಕ ದದ್ದಲ್‌ ಜೊತೆ ಪುತ್ರ ತ್ರಿಶೂಲ್‌ಗೂ ಕಾನೂನು ಕಂಟಕ +ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಇಡಿ ಅಧಿಕಾರಿಗಳ ಖೆಡ್ಡಾಕ್ಕೆ ಮಾಜಿ ಸಚಿವ ಬಿ.ನಾಗೇಂದ್ರ ಬಿದ್ದಿರುವ ಬೆನ್ನಲ್ಲೇ ಇದೀಗ ಶಾಸಕ ಬಸನಗೌಡ ದದ್ದಲ್‌ ಮತ್ತು ಪುತ್ರನಿಗೂ ಸಂಕಷ್ಟ ಎದುರಾಗಿದೆ. +ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಬಸನಗೌಡ ದದ್ದಲ್‌ ಅವರನ್ನು ವಶಕ್ಕೆ ಪಡೆಯಲು ಬಲೆ ಬೀಸಿದೆ.ಈ ಬೆನ್ನಲ್ಲೇ ದದ್ದಲ್‌ ಅವರ ಪುತ್ರತ್ರಿಶೂಲ್‌ಗೂ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದು, ಎಸ್‌‍ಐಟಿ ಹಾಗೂ ಇಡಿ ಜೊತೆ ಜೊತೆಯಾಗಿ ವಶಕ್ಕೆ ಪಡೆಯಲು ಮುಂದಾಗಿದೆ. +ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಸುಮಾರು 6 ಗಂಟೆಗೂ ಹೆಚ್ಚು ಕಾಲ ಎಸ್‌‍ಐಟಿ ವಿಚಾರಣೆ ಎದುರಿಸಿದ್ದ ಬಸನಗೌಡ ದದ್ದಲ್‌ ನಂತರ ಎಲ್ಲಿಗೆ ಹೋಗಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ.ಈವರೆಗೂ ಅವರು ಎಲ್ಲಿದ್ದಾರೆ ಎಂಬುದು ಕುಟುಂಬದ ಸದಸ್ಯರಿಗೂ ಕೂಡ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ಸದ್ಯ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಇಡಿ ಯಾವುದೇ ಕ್ಷಣದಲ್ಲಿ ಬಂಧಿಸಬಹುದೆಂಬ ಭಯದಿಂದ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. +ಈ ಹಗರಣದಲ್ಲಿ ಬಸನಗೌಡ ದದ್ದಲ್‌ ಕೂಡ ಶಾಮೀಲಾಗಿರುವುದು ಕೆಲವು ದಾಖಲಾತಿಗಳಿಂದ ಬಹಿರಂಗಗೊಂಡಿದೆ. ಹೀಗಾಗಿಯೇ ಇಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲು ಮುಂದಾಗಿದೆ. ಬುಧವಾರ ಮುಂಜಾನೆಯೇ ಬೆಂಗಳೂರಿನ ಯಲಹಂಕ, ರಾಯಚೂರು ಸೇರಿದಂತೆ ಸಂಬಂಧಿಕರ ಮನೆ, ಕಚೇರಿ, ಮತ್ತಿತರ ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. +ಬಸನಗೌಡ ದದ್ದಲ್‌ ಅವರ ಆಪ್ತ ಕಾರ್ಯದರ್ಶಿ ಪಂಪಣ್ಣ ಸೇರಿದಂತೆ ಕೆಲವು ಆಪ್ತರನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದಲ್ಲಿ ದದ್ದಲ್‌ ಹೆಸರು ಕೂಡ ಕೇಳಿಬಂದಿದ್ದು, ಇಡಿ ಅಧಿಕಾರಿಗಳು ಕೆಲವು ಡಿಜಿಟಲ್‌ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಯಾವುದೇ ಕ್ಷಣದಲ್ಲೂ ಅವರು ಇಡಿ ಗಾಳಕ್ಕೆ ಬೀಳಬಹುದೆಂದು ತಿಳಿದುಬಂದಿದೆ. +ಪುತ್ರನಿಗೂ ಸಂಕಷ್ಟ:ಇಷ್ಟೆಲ್ಲ ಬೆಳವಣಿಗೆಗಳ ನಡುವೆಯೇ ಬಸನಗೌಡ ದದ್ದಲ್‌ ಪುತ್ರ ತ್ರಿಶೂಲ್‌ ನಾಯಕ್‌ ಖರೀದಿಸಿರುವ ಜಮೀನು ವಿವಾದದ ಕೇಂದ್ರಬಿಂದುವಾಗಿದೆ. ಸಿರವಾರ ಹೋಬಳಿ ಗಣದಿನ್ನಿ ಗ್ರಾಮದಲ್ಲಿ ಸರ್ವೆ ನಂ.33/1 ನಂಬರಿನ ಬಸನ ಗೌಡ ಸಿದ್ದನಗೌಡ ಎಂಬುವರಿಂದ ಜಮೀನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. +ಕಳೆದ ಮೇ 25ರಂದು ತ್ರಿಶೂಲ್‌ ನಾಯಕ್‌ ಹೆಸರಿನಲ್ಲಿ ಜಮೀನನ್ನು ನೋಂದಣಿ ಮಾಡಿಸಲಾಗಿದೆ. 4 ಎಕರೆ 30 ಗುಂಟೆ ಜಮೀನನ್ನು ದದ್ದಲ್‌ ಖರೀದಿಸಿದ್ದಾರೆ.ಗಮನಾರ್ಹ ವಿಷಯವೆಂದರೆ ಮಹರ್ಷಿ ವಾಲೀಕಿ ಹಗರಣ ಹೊರಬರಲು ಕಾರಣರಾಗಿದ್ದ ಶಿವಮೊಗ್ಗದ ಚಂದ್ರಶೇಖರನ್‌ ಆತಹತ್ಯೆಗೂ ಮುನ್ನವೇ ಈ ಜಮೀನನ್ನು ಖರೀದಿಸಲಾಗಿತ್ತು. +ಒಂದು ಎಕರೆಗೆ 36 ಲಕ್ಷ ರೂ.ನಂತೆ ಒಟ್ಟು 4 ಎಕರೆ 30 ಗುಂಟೆ ಜಮೀನನ್ನು ಖರೀದಿ ಮಾಡಲಾಗಿದೆ. ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ಹಣದಿಂದಲೇ ಈ ಜಮೀನನ್ನು ಖರೀದಿಸಲಾಗಿದೆಯೇ ಎಂಬ ಅನುಮಾನ ಎಸ್‌‍ಐಟಿ ಮತ್ತು ಇಡಿಗೆ ಮೂಡಿದೆ.ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸ್‌‍ಐಟಿ ನೋಟಿಸ್‌‍ ನೀಡಲು ಮುಂದಾಗಿದ್ದರೆ, ಇಡಿ ಕೂಡ ತ್ರಿಶೂಲ್‌ ನಾಯಕ್‌ ಅವರನ್ನು ವಿಚಾರಣೆಗೊಳಪಡಿಸಲು ಸಜ್ಜಾಗುತ್ತಿದೆ. ಸದ್ಯ ತ್ರಿಶೂಲ್‌ ನಾಯಕ್‌ ದೆಹಲಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. \ No newline at end of file diff --git a/eesanje/url_46_78_11.txt b/eesanje/url_46_78_11.txt new file mode 100644 index 0000000000000000000000000000000000000000..d5c4303f8e7348af8ea39c9a9e82dc340583e7b9 --- /dev/null +++ b/eesanje/url_46_78_11.txt @@ -0,0 +1,12 @@ +ಮಾಜಿ ಸಚಿವ ಬಿ.ನಾಗೇಂದ್ರ 6 ದಿನ ಇಡಿ ವಶಕ್ಕೆ +ಬೆಂಗಳೂರು,ಜು.13-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.ಶುಕ್ರವಾರ ಬೆಳಗ್ಗೆ ಡಾಲರ್‌ರ‍ಸ ಕಾಲೋನಿಯಲ್ಲಿರುವ ನಾಗೇಂದ್ರ ಅವರ ಫ್ಲಾಟ್‌ನಲ್ಲಿ ಇಡಿ ಅಧಿಕಾರಿಗಳು ಬಂಧಿಸಿ ಬೆಂಗಳೂರಿನ ಶಾಂತಿನಗರ ಕಚೇರಿಯಲ್ಲಿ ಸರಿಸುಮಾರು 22 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. +ನಿಯಮದಂತೆ ಆರೋಪಿಯೊಬ್ಬರನ್ನು ವಶಕ್ಕೆ ಪಡೆದ ನಂತರ 24 ಗಂಟೆಯೊಳಗೆ ನ್ಯಾಯಾಲಯ ಇಲ್ಲವೇ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕು. ಅದರಂತೆ ಇಡಿ ಅಧಿಕಾರಿಗಳು ಶನಿವಾರ ಮುಂಜಾನೆ ಯಲಹಂಕದಲ್ಲಿರುವ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್‌ ಅವರ ಮುಂದೆ ಹಾಜರುಪಡಿಸಿದರು. +ಮೊದಲು ಆರೋಪಿ ನಾಗೇಂದ್ರ ಅವರನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕೆಂದು ಕೋರಿದರು. ಅಂತಿಮವಾಗಿ ನ್ಯಾಯಾಲಯ ಆರು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ನೀಡಿತು. ಪುನಃ ಅಂದರೆ ಜುಲೈ 18ರಂದು ತಮ ಮುಂದೆ ಹಾಜರುಪಡಿಸಬೇಕೆಂದು ಇಡಿ ಅಧಿಕಾರಿಗಳಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದರು. +ಈ ವೇಳೆ ಆರೋಪಿ ಸ್ಥಾನದಲ್ಲಿರುವ ನಾಗೇಂದ್ರ ಅವರು ತಮಗೆ ಆರೋಗ್ಯದ ಸಮಸ್ಯೆ ಇರುವುದನ್ನು ನ್ಯಾಯಮೂರ್ತಿಗಳ ಮುಂದೆ ಹೇಳಿಕೊಂಡರು. ಬಿಪಿ, ಆಯಾಸ ಇದೆ ಎಂದು ನ್ಯಾಯಮೂರ್ತಿಗಳ ಗಮನಸೆಳೆಯುವ ಪ್ರಯತ್ನ ಮಾಡಿದರು. ಪ್ರತಿದಿನ ಮೂರು ಗಂಟೆ ಮಾತ್ರ ವಿಚಾರಣೆ ನಡೆಸಬಹುದು. ವಿಚಾರಣೆಯ ನಂತರ 30 ನಿಮಿಷಗಳ ಕಾಲ ವಿಶ್ರಾಂತಿ ನೀಡಬೇಕು. ಅಲ್ಲದೆ ಅವರಿಗೆ ಪ್ರತಿದಿನ ವೈದ್ಯಕೀಯ ತಪಾಸಣೆಗೊಳಪಡಿಸಬೇಕೆಂದು ಇಡಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. +ಈ ವೇಳೆ ನಾಗೇಂದ್ರ ನ್ಯಾಯಾಧೀಶರ ಮುಂದೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ನಿಯಮದಂತೆಯೇ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಹಣ ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ನನ್ನನ್ನು ಬಲಿಪಶು ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು. +ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವೈದ್ಯಕೀಯ ನೆರವು ಬೇಕು. ಇಡಿ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದನ್ನು ಮನ್ನಿಸಿದ ನ್ಯಾಯಾಧೀಶರು ಆರೋಪಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆಯನ್ನು ನೀಡಬೇಕೆಂದು ಸೂಚನೆ ನೀಡಿದರು. +ಇದಕ್ಕೂ ಮುನ್ನ ಇಡಿ ಪರ ಹಾಜರಾದ ವಿಶೇಷ ಸಾರ್ವಜನಿಕ ಅಭಿಯೋಜಕ ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆ ನಡೆಸಬೇಕು. ಇದು ಬಹುಕೋಟಿ ಹಗರಣವಾಗಿದೆ. ಒಂದು ರಾಜ್ಯದಿಂದ ಎರಡು ರಾಜ್ಯಗಳಿಗೆ ಹಣ ವರ್ಗಾವಣೆಯಾಗಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು. +ನೂರಾರು ಕೋಟಿ ಅವ್ಯವಹಾರ ಹೇಗೆ ನಡೆಯಿತು ಎಂಬುದರ ಕುರಿತು ವಿಸ್ತೃತ ಚರ್ಚೆ ನಡೆಯಬೇಕು, ಆರೋಪಿ ಸ್ಥಾನದಲ್ಲಿರುವವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ ಅವರನ್ನು 14 ದಿನ ಇಡಿ ಅಧಿಕಾರಿಗಳ ವಶಕ್ಕೆ ನೀಡುವಂತೆ ಕೋರಿದರು. +ಅಂತಿಮವಾಗಿ ನ್ಯಾಯಾಲಯ ಆರು ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿ ಇದೇ 18ರಂದು(ಗುರುವಾರ) ಬೆಳಗ್ಗೆ 11.30ಕ್ಕೆ ಹಾಜರುಪಡಿಸಬೇಕೆಂದು ನಿರ್ದೇಶನ ನೀಡಿದರು.ನಾಗೇಂದ್ರ ಅವರನ್ನು ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಅದಕ್ಕೂ ಮುನ್ನ ಸತತ 40 ಗಂಟೆಗಳ ಕಾಲ ನಾಗೇಂದ್ರ ಅವರ ಮನೆ ಹಾಗೂ ಕಚೇರಿಯನ್ನು ತಪಾಸಣೆ ನಡೆಸಲಾಗಿತ್ತು. +ನಾಗೇಂದ್ರಗೆ ನಿನ್ನೆ ತಡರಾತ್ರಿ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ತಪಾಸಣೆ ಮುಗಿಸಿ ನಿನ್ನೆ ರಾತ್ರಿ ಇಡಿ ಕಚೇರಿಗೆ ಕರೆತರಲಾಗಿತ್ತು. ಬೌರಿಂಗ್‌ ಆಸ್ಪತ್ರೆಯ ವೈದ್ಯರು, ಆರೋಗ್ಯ ಸ್ಥಿರವಾಗಿದೆ ಎಂದು ರಿಪೋರ್ಟ್‌ ನೀಡಿದ್ದಾರೆ. +ಶನಿವಾರ ಬೆಳಗ್ಗೆ ನಾಗೇಂದ್ರರನ್ನು ಕರೆತರುವಂತೆ ನ್ಯಾಯಾಧೀಶರು ಸೂಚಿಸಿದ್ದರು. ಹೀಗಾಗಿ ನಿನ್ನೆ ರಾತ್ರಿಯೂ ಇಡಿ ಕಚೇರಿಯಲ್ಲೇ ಅವರನ್ನು ಅಧಿಕಾರಿಗಳು ಇರಿಸಿಕೊಂಡಿದ್ದರು. ಇಡಿ ಕಚೇರಿಯಲ್ಲೇ ಮಲಗಲು ಬೆಡ್ಶೀಟ್‌‍, ದಿಂಬು ತರಿಸಿಕೊಂಡಿದ್ದರು. ಲೋಕಲ್‌ ಪೊಲೀಸ್‌‍ ಸ್ಟೇಷನ್‌ಗೂ ಕರೆದೊಯ್ಯದೆ ವಿಚಾರಣಾ ಗೌಪ್ಯತೆ ಕಾಪಾಡಿಕೊಂಡಿದ್ದರು. \ No newline at end of file diff --git a/eesanje/url_46_78_12.txt b/eesanje/url_46_78_12.txt new file mode 100644 index 0000000000000000000000000000000000000000..46a9c0ef50aaadab195d6b9258f09e6744f56187 --- /dev/null +++ b/eesanje/url_46_78_12.txt @@ -0,0 +1,5 @@ +ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಸಿಎಂ ಪಾತ್ರದ ಕುರಿತು ಸಮಗ್ರ ತನಿಖೆಯಾಗಬೇಕು : ಜೋಷಿ +ಬೆಂಗಳೂರು, ಜು.13-ರಾಜ್ಯದಲ್ಲಿ ವಾಲ್ಮೀಕಿ ಹಗರಣ, ಮುಡಾ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಅವರಿಗೂ ಎಸ್‌‍ಐಟಿ ನೋಟಿಸ್‌‍ ನೀಡಿ ತನಿಖೆ ನಡೆಸಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಆಗ್ರಹಿಸಿದರು. +ಬಿಜೆಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು. +ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ 187 ಕೋಟಿ ರೂ.ನಷ್ಟು ದೊಡ್ಡಮೊತ್ತದ ಹಣ ವಾಲೀಕಿ ಅಭಿವೃದ್ಧಿ ನಿಗಮದಿಂದ ವರ್ಗಾವಣೆಯಾಗಲು ಸಾಧ್ಯವೇ ಇಲ್ಲ. ಈ ಭ್ರಷ್ಟಾಚಾರದ ಬಗ್ಗೆ ಸಿಎಂ ಅವರಿಗೂ ಎಸ್‌‍ಐಟಿ ನೋಟಿಸ್‌‍ ನೀಡಿ ತನಿಖೆ ನಡೆಸಬೇಕು. ಇನ್ನು ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ. ಅವರ ಹಸ್ತಕ್ಷೇಪವಿಲ್ಲದೆ ನಡೆಯಲು ಸಾಧ್ಯವಿಲ್ಲ. ಈ ಬಗ್ಗೆಯೂ ಕೂಡ ಅವರ ವಿರುದ್ಧ ನೇರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. +ಮೈಸೂರು ಮುಖ್ಯಮಂತ್ರಿಯವರ ತವರು ಜಿಲ್ಲೆ. ಅವರಿಗೆ ಗೊತ್ತಿದ್ದೇ ಈ ಭ್ರಷ್ಟಾಚಾರ ನಡೆದಿದೆ. ಅವರು ಈ ಹಗರಣದ ನೈತಿಕ ಹೊಣೆ ಹೊರಬೇಕು. ಈ ಎರಡು ಬಹುದೊಡ್ಡ ಹಗರಣಗಳ ಬಗ್ಗೆ ಸಿಎಂ ವಿರುದ್ಧ ತನಿಖೆ ನಡೆಸಬೇಕು ಎಂದು ಜೋಷಿ ಆಗ್ರಹಿಸಿದರು. \ No newline at end of file diff --git a/eesanje/url_46_78_2.txt b/eesanje/url_46_78_2.txt new file mode 100644 index 0000000000000000000000000000000000000000..87cac865726dc3503417d4ac151ee96da09ef426 --- /dev/null +++ b/eesanje/url_46_78_2.txt @@ -0,0 +1,4 @@ +ಸಿದ್ದರಾಮಯ್ಯನವರೇ ನಿಮ್ಮ ಅಹಂಕಾರವೇ ನಿಮನ್ನು ರಾಜಕೀಯ ಅಧಃಪತನಕ್ಕೆ ತಳ್ಳುತ್ತೆ : ಅಶೋಕ್ ಕಿಡಿ +ಬೆಂಗಳೂರು,ಜು.13-ತಾವು ಯಾವ ಸೀಮೆ ಸುಲ್ತಾನರೂ ಅಲ್ಲ, ನವಾಬರೂ ಅಲ್ಲ. ನಿಮ್ಮ ಅಹಂಕಾರವೇ ನಿಮನ್ನ ರಾಜಕೀಯ ಅಧಃಪತನಕ್ಕಿಳಿಸುವುದು ಶತ:ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ಕೊಟ್ಟಿದ್ದಾರೆ. +ಈ ಕುರಿತು ತಮ ಎಕ್ಸ್ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು,ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಹತ್ತಿದ ಏಣಿಯನ್ನೇ ಒದೆಯುವಷ್ಟು ಅಧಿಕಾರದ ಮದವೇರಿದೆಯೇ ಸಿಎಂನವರೇ? ಅಧಿಕಾರದ ಮದವೇರಿದ ಪಕ್ಷಕ್ಕೆ ಮತದಾರರು ವಸ್ತುಗಳೇ ಹೊರತು ಜನರ ಸಮಸ್ಯೆಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎನ್ನುವುದಕ್ಕೆ ಚಾಮರಾಜನಗರದಲ್ಲಿ ನಡೆದಿರುವ ಘಟನೆಯೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಮುಖ್ಯಮಂತ್ರಿಗಳೇ ಜನರು ತಮ ಸಮಸ್ಯೆಗಳು, ಕುಂದುಕೊರತೆಗಳನ್ನು ಬರೆದು ಅಹವಾಲುಗಳನ್ನು ಕೊಟ್ಟರೆ ಅದನ್ನು ನಿಕೃಷ್ಟವಾಗಿ ಬೀದಿಪಾಲು ಮಾಡುತ್ತೀರಲ್ಲ, ಇದಕ್ಕೇನಾ ಜನ ನಿಮಗೆ ಅಧಿಕಾರ ಕೊಟ್ಟಿರುವುದು? ಎಂದು ಪ್ರಶ್ನೆ ಮಾಡಿದ್ದಾರೆ. ತಮ್ಮ ಕುರ್ಚಿ ಜನಸೇವೆ ಮಾಡಲಿ ಎಂದು ಮತದಾರರು ನೀಡಿರುವ ಭಿಕ್ಷೆ ಎಂದು ಅವರು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_46_78_3.txt b/eesanje/url_46_78_3.txt new file mode 100644 index 0000000000000000000000000000000000000000..55479992ade411577d023e7c23af7f27131f110a --- /dev/null +++ b/eesanje/url_46_78_3.txt @@ -0,0 +1,6 @@ +ಉಪ್ಪು ತಿಂದವರು ನೀರು ಕುಡಿಯಲೇಬೇಕು : ಸಿಎಂ ಸಿದ್ಧರಾಮಯ್ಯ +ಬೆಂಗಳೂರು, ಜು.13– ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದ್ದು, ಜಾರಿನಿರ್ದೇಶನಾಲಯದ ಮಧ್ಯಪ್ರವೇಶ ಅಗತ್ಯ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. +ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ವಿಶೇಷ ತನಿಖಾದಳ ರಚನೆ ಮಾಡಿದ್ದೇವೆ ಎಂದು ಹೇಳಿದರು. +ನಿಗಮದಲ್ಲಿನ ಹಣ ವರ್ಗಾವಣೆ ಪ್ರಕರಣಕ್ಕೆ ಆರ್ಥಿಕ ಇಲಾಖೆ ಹೊಣೆ ಯಲ್ಲ. ಬ್ಯಾಂಕ್ಗಳಲ್ಲಿ ಅಕ್ರಮಗಳಾದರೆ ಅದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ಪ್ರಧಾನಿ ನರೇಂದ್ರಮೋದಿ ಹೊಣೆಗಾರರು ಎಂದು ಹೇಳಲು ಸಾಧ್ಯವೇ? ನಿಗಮದಲ್ಲಿನ ವ್ಯವಸ್ಥಾಪಕ ನಿರ್ದೇಶಕರು, ಹಣಕಾಸು ಅಧಿಕಾರಿಗಳು ಹೊಣೆಗಾರರಾಗಿದ್ದಾರೆ. +ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ವ್ಯವಸ್ಥಾಪಕ ನಿರ್ದೇಶಕರು ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಿದರು. ಎಸ್ಐಟಿ ತನಿಖೆ ಬಹಳ ಮುಂದುವರೆದಿದೆ. ಸಂಬಂಧಪಟ್ಟವರನ್ನು ಬಂಧಿಸಿರುವ ಜೊತೆಗೆ ಈವರೆಗೂ ನಡೆದ ತನಿಖೆ ಹಾಗೂ ಕಾರ್ಯಾಚರಣೆಯಲ್ಲಿ 30 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. +ಈ ಹಂತದಲ್ಲಿ ಜಾರಿನಿರ್ದೇಶನಾಲಯದ ಮಧ್ಯಪ್ರವೇಶ ಅಗತ್ಯ ಇರಲಿಲ್ಲ. ಬಹುಶಃ ಬ್ಯಾಂಕ್ನಲ್ಲಿ ನಡೆದ ವಹಿವಾಟಿಗೆ ಸಂಬಂಧಪಟ್ಟಂತೆ ಇಡಿ ತನಿಖೆ ನಡೆಸುತ್ತಿರಬಹುದು ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_78_4.txt b/eesanje/url_46_78_4.txt new file mode 100644 index 0000000000000000000000000000000000000000..18500a34a9884f5547c3bddc7d7d878bc60817ef --- /dev/null +++ b/eesanje/url_46_78_4.txt @@ -0,0 +1,16 @@ +ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜು.13-ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ನಡೆಯಿತು. ಆರಂಭದಲ್ಲಿ ಮುಖ್ಯಮಂತ್ರಿಯವರು ಖುದ್ದು ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸಿದರು. +ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ, ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು. ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದುಕೊಂಡ ಮುಖ್ಯಮಂತ್ರಿಯವರು, ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅ„ಕಾರಿಗಳ ಮೂಲಕ ಈಡೇರಿಸುವಂತೆ ತಮ್ಮ ಕಚೇರಿ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿದರು. ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳಿಗೆ ಸಳದಲ್ಲೇ ಸ್ಪಂದಿಸಿದರು. +ರಾಜ್ಯದ ಹಲವೆಡೆಯಿಂದ ಕಾರ್ಯಕರ್ತರು ಆಗಮಿಸಿದ್ದರು. ಸುಮಾರು 712 ಜನ ಗೂಗಲ್ ಫಾರಂನಲ್ಲಿ ನೋಂದಣಿಯಾಗಿದ್ದು, ಒಟ್ಟು ನಾಲ್ಕು ಸಾವಿರ ಮಂದಿ ನೋಂದಣಿಯಾಗಿದೆ. ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಆಗಮಿಸಿದ ಸಾವಿರಕ್ಕೂ ಹೆಚ್ಚು ಜನರ ಹೆಸರು, ವಿಳಾಸ, ಪಕ್ಷದ ಸದಸ್ಯತ್ವ ಸಂಖ್ಯೆಯನ್ನು ಪರಿಶೀಲಿಸಿ, ಕೆಪಿಸಿಸಿ ಕಚೇರಿ ಸಿಬ್ಬಂದಿಗಳು ಪಡೆದುಕೊಂಡು ಅರ್ಜಿ ಸಂಖ್ಯೆ ನೀಡಿದರು. ಮಧ್ಯಹ್ನಾ 2 ಗಂಟೆಯ ಬಳಿಕ ಕಾರ್ಯಕ್ರಮಕ್ಕೆ ತೆರಳಬೇಕಿರುವುದರಿಂದ ಟೋಕನ್ ಸಂಖ್ಯೆ ಇಲ್ಲದವರ ಅರ್ಜಿಗಳನ್ನು ನೇರವಾಗಿ ಪಡೆದುಕೊಳ್ಳಲಾಯಿತು. ದೂರಗಳ ಸಂಖ್ಯೆ ಜಾಸ್ತಿ ಇದೆ. ಪ್ರತಿ ತಿಂಗಳು ಕನಿಷ್ಠ ಎರಡು ಬಾರಿ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ.ಚಂದ್ರಶೇಖರ್ ಮನವಿ ಮಾಡಿದರು. +ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮದ ಕೊನೆಯಲ್ಲಿ ಸಮಯದ ಕೊರತೆಯಿಂದ ಸಾಲಾಗಿ ನಿಂತಿದ್ದ ಕಾರ್ಯಕರ್ತರಿಂದ ಮುಖ್ಯಮಂತ್ರಿಯವರು ಖುದ್ದು ಅರ್ಜಿಗಳನ್ನು ಪಡೆದುಕೊಂಡು ಸ್ಪಂದಿಸುವುದಾಗಿ ಹೇಳಿ ಕಳುಹಿಸಿದರು.ವಿಕಲಚೇತನರ ಸಮಸ್ಯೆ ಆಲಿಕೆ ವೇಳೆ ಕಾರ್ಯಕರ್ತನೊಬ್ಬ ತಾನು ಹಾಸನದ ದುದ್ದ ಗ್ರಾಮದಿಂದ ಬಂದಿದ್ದೇನೆ. ಜೀವನಕ್ಕೆ ಅನುಕೂಲ ಮಾಡಿಕೊಡುವಂತೆ ಬೇಡಿಕೆ ಸಲ್ಲಿಸಿದರು. ಮೂರು ಚಕ್ರದ ವಾಹನ ನೀಡುವಂತೆ ಕೆಲವರು ಮನವಿ ಮಾಡಿದರು. ಮತ್ತೊಬ್ಬರಿಂದ ನಾಲ್ಕು ಚಕ್ರದ ವಾಹನಕ್ಕೆ ಬೇಡಿಕೆ ಕೇಳಿ ಬಂತು. +ಬಸವನಗುಡಿ ಕ್ಷೇತ್ರದ ಕಾರ್ಯಕರ್ತರೊಬ್ಬರು ಮಕ್ಕಳ ಶಾಲಾ ಶುಲ್ಕ ಪಾವತಿಸಲು ಸಮಸ್ಯೆ ಇದೆ, ಸಹಾಯ ಮಾಡಿ ಎಂದು ಮನವಿ ಮಾಡಿದರು. ಮಹಿಳೆಯೊಬ್ಬರು ಆರ್ಥಿಕ ಸಹಾಯಕ್ಕೆ ಮನವಿ ಮಾಡಿದರು. ನಿಗಮದಿಂದ ಸಹಾಯ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. +ಬೀದಿಬದಿ ವ್ಯಾಪಾರಿ ಘಟಕದ ಅಧ್ಯಕ್ಷರು, ನಿವೇಶನಕ್ಕೆ ಬೇಡಿಕೆ ಮಂಡಿಸಿದರು. ಅರ್ಜಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.ಮತ್ತೊಬ್ಬರು ಸೈಬರ್ ಸೆಂಟರ್ ಸ್ಥಾಪನೆಗೆ ಮನವಿ ಸಲ್ಲಿಸಿದರು. ಮಹಿಳೆಯೊಬ್ಬರು ತಾವು ಎಂಎ ಪದವಿ ಪಡೆದಿದ್ದು, ಕೆಲಸ ಕೊಡಿಸುವಂತೆ ಮನವಿ ಮಾಡಿದರು. ನಿಮಗೆ ಪಾಠ ಮಾಡೋಕೆ ಸಾಧ್ಯವೇ ಎಂದು ಮುಖ್ಯಮಂತ್ರಿ ಕೇಳಿದರು. ಮಹಿಳೆ ಸಾಧ್ಯವಿದೆ ಎಂದಾಗ ಅವಕಾಶ ಕೊಡಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು. +ನಾನು 50 ವರ್ಷದಿಂದ ಕೆಲಸ ಮಾಡುತ್ತಿದ್ದೇನೆ, ನಿಗಮ ಮಂಡಳಿಯಲ್ಲಿ ಅವಕಾಶ ಕೊಡಿಸಿ ಎಂದು ಕಾರ್ಯಕರ್ತರೊಬ್ಬರು ಬೇಡಿಕೆಯಿಟ್ಟರು. ಮಹಿಳೆಯೊಬ್ಬರು ಪಾತಿಮಾ -ಫೌಂಡೇಶನ್ ಆ್ಯಂಬುಲೆನ್ಸ್ ಕೊಡಿಸುವಂತೆ ಬೇಡಿಕೆಯಿಟ್ಟರು. +ಮತ್ತೊಬ್ಬ ಕಾರ್ಯಕರ್ತೆ ನಿಮ್ಮನ್ನ ನೋಡಿದರೆ ದೇವರನ್ನು ನೋಡಿದಂತಾಗುತ್ತದೆ ಎಂದು ಹೊಗಳಿದರು. ನನಗೆ ಪಕ್ಷದಲ್ಲಿ ಸ್ಥಾನಮಾನ ಕೊಡಿಸಿ, ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮನವಿ ಸಲ್ಲಿಸಿದರು. ಪಕ್ಷದ ಪದಾ„ಕಾರಿಯನ್ನಾಗಿ ನಾಳೆಯೇ ನೇಮಕ ಮಾಡುವುದಾಗಿ ಕೆಪಿಸಿಸಿ ಕಾರ್ಯಧ್ಯಕ್ಷ ಜಿ.ಸಿ.ಚಂದ್ರಶೇಖರ್ ಭರವಸೆ ನೀಡಿದರು. +ನೆಲಮಂಗಲದ ಮಾರುತಿ ಎಂಬುವರು ಗುತ್ತಿಗೆ ನೌಕರಿ ಕೊಡಿಸುವಂತೆ, ಬ್ರೈನ್ ಸ್ಟ್ರೊಕ್ ಗೊಳಗಾದ ಕಾರ್ಯಕರ್ತ ತನಗೆ ಕೆಲಸ ಕೊಡಿಸಿ ಮನವಿ ಕೇಳಿ ಬಂತು. ನಿನಗೆ ಮಕ್ಕಳಿದ್ದಾರಾ, ಏನು ಓದುತ್ತಿದ್ದಾರೆ. ನಿಮ್ಮ ಹೆಂಡತಿಗೆ ಗೃಹ ಲಕ್ಷ್ಮಿ ಬರುತ್ತಿದ್ಯಾ ಎಂದು ಕೇಳಿ ವಿವರಣೆ ಪಡೆದುಕೊಂಡ ಮುಖ್ಯಮಂತ್ರಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು. +ಪಹಣಿ ಹಾಗೂ ಭೂ ದಾಖಲೆ ಮಾಡಿಕೊಡುವಲ್ಲಿ ವಿಳಂಬವಾಗಿರುವ ಬಗ್ಗೆ ಹಾಸನ ಚನ್ನಪಟ್ಟಣ ತಾಲ್ಲೂಕು ಬಾಗೂರು ಹೋಬಳಿ ಮಾದಿಹಳ್ಳಿಯ ಕಾರ್ಯಕರ್ತರೊಬ್ಬರು ದೂರು ನೀಡಿದರು. ಈ ವೇಳೆ ಹಾಸನದ ಜಿಲ್ಲಾ„ಕಾರಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಯಾಕಪ್ಪ ಇಷ್ಟೊಂದು ವಿಳಂಬ ಮಾಡುತ್ತೀರಾ. ಇಂತದಕ್ಕೆಲ್ಲ ವಿಳಂಬ ಮಾಡ್ಬೇಡಿ. ನಮ್ಮ ಮೂವರು ಕಾರ್ಯಕರ್ತರು ಬರ್ತಾರೆ. ಕೂಡಲೇ ಕೆಲಸ ಮಾಡಿಕೊಡಿ ಎಂದು ಸಿಎಂ ಕಟ್ಟಪ್ಪಣೆ ಮಾಡಿದರು. +ಕಾಂಗ್ರೆಸ್ ಕಚೇರಿ ಬಳಿ ಪೌರಕಾರ್ಮಿಕರ ನಿಯೋಗವೊಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನೆಗೆ ಮನವಿ ನೀಡಿತ್ತು. ರಾಜೀವ್‍ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿದ ಮುಖ್ಯಮಂತ್ರಿಯವರು ಐದು ಮಂದಿ ಇದ್ದಾರೆ, ಅವರಿಗೆ ಮನೆ ಕೊಡಿಸಿ ಎಂದು ಸೂಚನೆ ನೀಡಿದರು. +ಶಿರಹಟ್ಟಿ ಬಸಪ್ಪ ಶಿವಪ್ಪ ಗಂಟಿ ಇವರಿಗೆ ಕೊಳವೆ ಮಂಜೂರು ಮಾಡಿಕೊಡಿ ಎಂದು ಸಂಬಂ„ಸಿದ ಅ„ಕಾರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.ಮಹಿಳೆಯೊಬ್ಬರು ಮನೆಗೆ ಬೇಡಿಕೆ ಇಟ್ಟಾಗ ಸ್ಪಂದಿಸುವುದಾಗಿ ಹೇಳಿದ ಮುಖ್ಯಮಂತ್ರಿಯವರು, ಗೃಹಲಕ್ಷ್ಮೀ, ಅನ್ನಭಾಗ್ಯದ ಹಣ ಬರುತ್ತಿದೆ. ಶಕ್ತಿ ಯೋಜನೆ ಬಗ್ಗೆ ಪುರುಷರು ಟೀಕೆ ಮಾಡುತ್ತಿದ್ಧಾರೆ. ಬಸ್ ಫ್ರೀ ಇರುವುದು ತಮಗೆ ಅನುಕೂಲವಾಗಿದೆ. ಅನ್ನ ಕೊಟ್ಟು ಅನ್ನರಾಮಯ್ಯ ಆಗಿರುವ ಸಿದ್ದರಾಮಯ್ಯ, ವಸತಿ ನೀಡಿ ವಸತಿ ರಾಮಯ್ಯ ಆಗಲಿ ಎಂದು ಹೇಳಿದರು. +ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು. +ಸದ್ಯ ಕೆಎಂಎಫ್ ನಲ್ಲಿರುವ ಸಾಫ್ಟ್ ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳದ ಎಸ್.ಶಿವನಾಗಪ್ಪ ಅವರು ಮನವಿ ಸಲ್ಲಿಸಿದರು. +ಮುಖ್ಯಮಂತ್ರಿಗಳು ಸ್ಥಳದಲ್ಲೇ ಎಂಡಿ ಅವರಿಗೆ -ಫೋನ್ ಮೂಲಕ ಸಂಪರ್ಕಿಸಿ, ಹಾಲು ಉತ್ಪಾದಕರ ಸ್ನೇಹಿಯಾಗಿರುವ ಸಾಫ್ಟ್ ವೇರ್ ಅನ್ನು ಅಳವಡಿಸುವಂತೆ ಸೂಚನೆ ನೀಡಿದರು. ಕೆಪಿಸಿಸಿ ಕಾರ್ಯಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ತನ್ವೀರ್ ಶೆಠ್, ವಸಂತ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಮುಖ್ಯಮಂತ್ರಿ ಕಾರ್ಯಕರ್ತರಿಗೆ ಹಸ್ತಲಾಘವ ನೀಡಿ ಅರ್ಜಿ ಸ್ವೀಕರಿಸಿ, ಗಂಭೀರ ಸಮಸ್ಯೆಗಳ ಬಗ್ಗೆ ತಾಳ್ಮೆಯಿಂದ ವಿವರಣೆ ಪಡೆದುಕೊಂಡರು. \ No newline at end of file diff --git a/eesanje/url_46_78_5.txt b/eesanje/url_46_78_5.txt new file mode 100644 index 0000000000000000000000000000000000000000..bab6ec6967bc8cc62813a03fcb06ebf29d85b7bf --- /dev/null +++ b/eesanje/url_46_78_5.txt @@ -0,0 +1,9 @@ +ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು : ಗೃಹ ಸಚಿವ ಪರಮೇಶ್ವರ್ +ಬೆಂಗಳೂರು, ಜು.13– ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಯಾವುದೇ ತಕರಾರು ಇಲ್ಲ. ಆದರೆ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅ„ಕಾರಿಗಳು ಬಂ„ಸಿದ್ದಾರೆ. ಇಡಿ ಸಂಸ್ಥೆಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ತನಿಖೆ ಹಾಗೂ ಬಂಧನ ಮಾಡಿದ್ದಾರೆ. ಇದು ಕಾನೂನು ಪ್ರಕಾರ ನಡೆಯುವ ಪ್ರಕ್ರಿಯೆ. ಆದರೆ ಇದನ್ನು ರಾಜಕೀಯವಾಗಿ ಉಪಯೋಗಿಸಬಾರದು ಎಂದರು. +ಇಡಿ, ಸಿಬಿಐ ಸೇರಿ ಕೇಂದ್ರ ತನಿಖಾ ಸಂಸ್ಥೆಗಳು ರಾಜಕೀಯ ಅಸಗಳಾಗಬಾರದು ಎಂದು ಮೊದಲಿನಿಂದಲೂ ಹೇಳುತ್ತಿದ್ದೇವೆ. ತನಿಖೆಗೆ ನಮ್ಮ ತಕರಾರು ಇಲ್ಲ. ನಮ್ಮ ಸರ್ಕಾರ ಎಸ್‍ಐಟಿ ರಚನೆ ಮಾಡಿದ್ದೇವೆ. ಮಾಜಿ ಸಚಿವ ನಾಗೇಂದ್ರ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆಗಿರುವ ಶಾಸಕ ಬಸನಗೌಡ ದದ್ಧಲ್‍ರನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ವಿಚಾರಕ್ಕೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ. ಏಕಾಏಕಿ ಇಡಿ ಪ್ರವೇಶ ಮಾಡಿದೆ, ಅವರಿಗೆ ಮಾಹಿತಿ ಇರಬಹುದು ಅದನ್ನು ನಾವು ಅಲ್ಲಗಳೆಯುವುದಿಲ್ಲ ಎಂದು ಹೇಳಿದ್ದಾರೆ. +ಇತ್ತ ಜಾರಿ ನಿರ್ದೇಶನಾಲಯ ತನಿಖೆ ನಡೆಯುತ್ತಿರುವ ನಡುವೆಯೇ ಎಸ್‍ಐಟಿ ಕೂಡ ಇಬ್ಬರನ್ನು ಕರೆಸಿ ವಿಚಾರಣೆ ಮಾಡಿ, ಅಗತ್ಯ ಮಾಹಿತಿ ಪಡೆದಿದೆ. ಅಗತ್ಯ ಎನಿಸಿದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ, ನಿಗಮದ ಅಧ್ಯಕ್ಷ ಬಸವನಗೌಡ ದದ್ಧಲ್ ತಲೆ ಮರೆಸಿಕೊಂಡಿಲ್ಲ. ಕುಟುಂಬದ ಸದಸ್ಯರ ಜೊತೆ ಇಲ್ಲೆ ಓಡಾಡಿಕೊಂಡಿದ್ದಾರೆ ಎಂದು ನಿನ್ನೆ ನಾನು ಕೇಳಿದಾಗ ಅಧಿಕಾರಿಗಳು ಹೇಳಿದರು. ಅವರು ಎಲ್ಲಿಯೂ ತಲೆ ಮರೆಸಿಕೊಂಡಿಲ್ಲ ಎಂದು ಗೃಹ ಸಚಿವರು ಸ್ಪಷ್ಟ ಪಡಿಸಿದರು. +ನಿಗಮದ ಹಣವನ್ನು ಲೋಕಸಭೆ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂಬ ಕಾರಣಕ್ಕೆ ಇಡಿ ತನಿಖೆ ನಡೆಸಲಾಗುತ್ತಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ. ಇಡಿಯವರು ನಮ್ಮ ಪೊಲೀಸರಿಗೆ ಯಾವುದೇ ಮಾಹಿತಿ ನೀಡಿಲ್ಲ, ಊಹೆ ಮಾಡಿ ಹೇಳುವುದು ನಮಗೂ ಸರಿ ಕಾಣುವುದಿಲ್ಲ ಎಂದು ಹೇಳಿದರು. +ದೇವರಾಜ ಅರಸು ಟ್ರಕ್ ಟ್ರಮಿನಲ್‍ನಲ್ಲಿ 40-50 ಕೋಟಿ ಅವ್ಯವಹಾರ ನಡೆದಿದೆ ಎಂಬ ಕಾರಣಕ್ಕೆ ಹಿಂದೆ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಧಾನ ಪರಿಷತ್‍ನ ಮಾಜಿ ಅಧ್ಯಕ್ಷ ವೀರಯ್ಯರನ್ನು ಬಂ„ಸಲಾಗಿದೆ ಎಂದು ಹೇಳಿದರು. +ನಾಳೆ ಸರ್ವಪಕ್ಷ ಸಭೆ:ಕಾವೇರಿ ನದಿ ನೀರಿನ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ನಾಳೆ ಸರ್ವ ಪಕ್ಷ ಸಭೆ ಕರೆಯಲಾಗಿದೆ. ತಾಂತ್ರಿಕ ಸಮಿತಿಯವರು ನಾಳೆ ಸಭೆಯಲ್ಲಿ ನೀಡುವ ಮಾಹಿತಿಗಳೇನು ಎಂಬುದನ್ನು ಕಾದು ನೋಡಬೇಕಿದೆ. ಸುಪ್ರೀಂ ಕೋರ್ಟ್ ಯಾವ ಕಾಲದಲ್ಲಿ ಎಷ್ಟು ನೀರು ಬಿಡಬೇಕು ಎಂಬ ಕುರಿತು ಮಾರ್ಗಸೂಚಿ ನೀಡಿದೆ. ಹಿಂದಿನ ಆದೇಶಗಳು ಇವೆ. ಆದರೆ ಅಷ್ಟು ನೀರು ಬಿಡಲು ನಮ್ಮ ಬಳಿ ನೀರು ಇರಬೇಕಲ್ಲ. ಈಗಷ್ಟೆ ಮಳೆ ಶುರುವಾಗಿದೆ. ಅಣೆಕಟ್ಟೆಯಲ್ಲಿ ಎಷ್ಟು ನೀರಿದೆ, ಒಳ ಹರಿವು ಎಷ್ಟು ಎಂಬ ಬಗ್ಗೆ ತಂತ್ರಜ್ಞರು ಮಾಹಿತಿ ನೀಡಲಿದ್ದಾರೆ ಎಂದರು. +ಪ್ರತಿಭಟನೆ ಎಲ್ಲರ ಹಕ್ಕು, ಆದರೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಭಟನೆ ಮಾಡಬೇಕು. ಈ ವೇಳೆ ಸಾರ್ವಜನಿಕಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸುಪ್ರೀಂಕೋರ್ಟ್‍ಗಿಂತ ಯಾರು ದೊಡ್ಡವರಾಗಲು ಸಾಧ್ಯವಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_78_6.txt b/eesanje/url_46_78_6.txt new file mode 100644 index 0000000000000000000000000000000000000000..2fc37bc4bdd82828a05be1a61f29a250a22ccfac --- /dev/null +++ b/eesanje/url_46_78_6.txt @@ -0,0 +1,5 @@ +“ನನಗೇನು ಗೊತ್ತಿಲ್ಲ” : ಮತ್ತೆ ಸಮರ್ಥಿಸಿಕೊಂಡ ಮಾಜಿ ಸಚಿವ ನಾಗೇಂದ್ರ +ಬೆಂಗಳೂರು,ಜು.13– ವಾಲೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ ಅವರು ಮತ್ತೆ ಸಮರ್ಥಿಸಿಕೊಂಡಿದ್ದಾರೆ. +ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌‍ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಪ್ರತಿಕ್ರಿಯಿಸಿದರು. +ಹಗರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳವರೆಗೆ ಜಾರಿ ನಿರ್ದೇಶನಾಲಯ ಶೋಧ ನಡೆಸಿತು. ಅಧಿಕಾರಿಗಳು, ಬಸನಗೌಡ ದದ್ದಲ್‌ ಅವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು. +ಈ ವೇಳೆ ನಾಗೇಂದ್ರ ಆಪ್ತ ಸಹಾಯಕ ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ನಂತರ ವಾಪಸ್‌‍ ಕಳುಹಿಸಿತ್ತು. ಇತ್ತ ಬಸನಗೌಡ ಅವರ ವಿಚಾರಣೆಯೂ ನಡೆದಿತ್ತು. \ No newline at end of file diff --git a/eesanje/url_46_78_7.txt b/eesanje/url_46_78_7.txt new file mode 100644 index 0000000000000000000000000000000000000000..ec49ba3d9659ea8db72089111c8ea0b871345d8f --- /dev/null +++ b/eesanje/url_46_78_7.txt @@ -0,0 +1,9 @@ +ಜು.15ರಿಂದ ವಿಧಾನಮಂಡಲ ಅಧಿವೇಶನ, ವಾಕ್ಸಮರಕ್ಕೆ ವೇದಿಕೆ ಸಜ್ಜು +ಬೆಂಗಳೂರು, ಜು.13-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನವು ಜುಲೈ 15ರಿಂದ 26ವರೆಗೆ ನಡೆಯಲಿದೆ. ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು, ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಳಂಬ, ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ, ಮುಡಾ ಹಗರಣ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. +ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಈಗಾಗಲೇ ವಾಲೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. +ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ ಎಂಬ ಪ್ರತಿಪಕ್ಷಗಳು ನಿರಂತರ ಆರೋಪ ಮಾಡುತ್ತಾ ಬಂದಿವೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಪ್ರಮುಖವಾಗಿ ಈ ವಿಚಾರ ಪ್ರಸ್ತಾಪಿಸುವ ಸಾಧ್ಯತೆಗಳಿವೆ.ಮಳೆ ಹಾನಿಯ ಪರಿಹಾರ ಬಿಡುಗಡೆ ವಿಳಂಬ, ಕಳೆದ ವರ್ಷದ ಬರ ಪರಿಹಾರ ನೀಡಿಕೆ ವಿಳಂಬ, ಡೆಂಘೀ ರೋಗ ಉಲ್ಬಣ, ಹಾಲಿನ ದರ ಏರಿಕೆ ಸೇರಿದಂತೆ ಹಲವು ವಿಚಾರಗಳು ಪ್ರತಿಪಕ್ಷಗಳ ಅಸ್ತ್ರವಾಗಲಿವೆ. +ಆಡಳಿತ ಪಕ್ಷವೂ ಪ್ರತಿಪಕ್ಷಗಳ ಅಸ್ತ್ರಗಳಿಗೆ ತಕ್ಕ ಪ್ರತ್ಯಸ್ತ್ರಗಳನ್ನು ಬಳಸಲು ಸಜ್ಜಾಗಿದೆ. ಬಿಜೆಪಿ ಆಡಳಿತಾವಧಿಯಲ್ಲಿನ ಲೋಪ-ದೋಷಗಳನ್ನು ಮುಂದಿಟ್ಟುಕೊಂಡು ಪ್ರತಿಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶ ಹೊಂದಿದೆ. +ಅಧಿವೇಶನದ ಮೊದಲ ದಿನ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಲಾಗುತ್ತದೆ. ಬಳಿಕ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿವೆ. ಮಂಗಳವಾರದಿಂದ ಅಧಿವೇಶನದಲ್ಲಿ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆಗಳಿವೆ. +ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್‌‍ ಅಧಿವೇಶನದಲ್ಲೂ ಜಂಟಿ ಹೋರಾಟ ನಡೆಸಲು ನಿರ್ಧರಿಸಿವೆ. ಮುಡಾ ಹಗರಣ, ವಾಲೀಕಿ ನಿಗಮದ ಹಗರಣ, ವರ್ಗಾವಣೆ ದಂಧೆ, ಪರಿಶಿಷ್ಟ ಜಾತಿ, ವರ್ಗದ ಹಣ ದುರ್ಬಳಕೆ, ರೈತರ ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ಅನೇಕ ವಿಷಯಗಳನ್ನು ಆದ್ಯತೆ ಮೇಲೆ ಸದನದಲ್ಲಿ ಪ್ರಸ್ತಾಪಿಸಲು ಸಿದ್ಧತೆ ನಡೆಸಿವೆ. +ಬರಗಾಲ ಸಮಸ್ಯೆ, ಮಳೆಯ ಅವಾಂತರ, ಡೆಂಘೀಯಿಂದ ಸಾವನ್ನಪ್ಪಿದವರ ವಿಚಾರ, ಕಾನೂನು ಮತ್ತು ಸುವ್ಯವಸ್ಥೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿಕೆಯಲ್ಲಿನ ವಿಳಂಬ ಸೇರಿದಂತೆ ಹತ್ತಾರು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿವೆ. +ಹೀಗಾಗಿ ಮಳೆಗಾಲದ ಈ ಅಧಿವೇಶನವು ಹಲವು ಪ್ರಮುಖ ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ನಿರೀಕ್ಷೆ ಇದೆ. 9 ದಿನಗಳ ಕಾಲ ನಡೆಯುವ ವಿಧಾನ ಮಂಡಲದ ಅಧಿವೇಶನವು ಆಡಳಿತ ಮತ್ತು ಪ್ರತಿ ಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ. \ No newline at end of file diff --git a/eesanje/url_46_78_8.txt b/eesanje/url_46_78_8.txt new file mode 100644 index 0000000000000000000000000000000000000000..442470e29f442b94d0a1da0010a9a6c49d514860 --- /dev/null +++ b/eesanje/url_46_78_8.txt @@ -0,0 +1,5 @@ +ರಾಮನಗರ ಜಿಲ್ಲೆ ಮರುನಾಮಕರಣ ಬೇಡ : ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಆಗ್ರಹ +ಬೆಂಗಳೂರು, ಜು.13-ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವವಿರುವ ರಾಮನಗರ ಜಿಲ್ಲೆಯ ಹೆಸರನ್ನು ಯಾವುದೇ ಕಾರಣಕ್ಕೂ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾಯಿಸಬಾರದು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. +ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರಾಮನಗರಕ್ಕೆ ಐತಿಹಾಸಿಕ, ಪೌರಾಣಿಕ ಚರಿತ್ರೆ ಇದೆ. ಜತೆಗೆ ಭಾವನಾತ ಹಾಗೂ ಧಾರ್ಮಿಕ ವಿಚಾರ ಅಡಗಿರುವುದರಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಬಾರದು ಎಂದು ಆಗ್ರಹಿಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರು ರಾಮನಗರ ಎಂಬ ಹೆಸರನ್ನು ನಾಮಕರಣ ಮಾಡಿದ್ದಾರೆ. ಸಿದ್ಧಗಂಗಾಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಗಳು ಹಾಗೂ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರು ಜನಿಸಿದ್ದು ರಾಮನಗರ ಜಿಲ್ಲೆಯಲ್ಲಿಯೇ ಎಂದು ಅವರು ಹೇಳಿದ್ದಾರೆ. +ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಸಹ ಇದೇ ಜಿಲ್ಲೆಗೆ ಸೇರಿದವರು. 2007ರಲ್ಲಿ ಅಭಿವೃದ್ಧಿ ದೃಷ್ಟಿಯಿಂದ ರಾಮನಗರ ಜಿಲ್ಲೆ ಮಾಡಲಾಗಿದೆ. ಅದನ್ನು ಕಡೆಗಣಿಸಿ ಈಗ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವ ಪ್ರಸ್ತಾವನೆಯನ್ನು ತಿರಸ್ಕರಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_78_9.txt b/eesanje/url_46_78_9.txt new file mode 100644 index 0000000000000000000000000000000000000000..674de21ef542e9500cdbd03b5fff0e3e58799fe9 --- /dev/null +++ b/eesanje/url_46_78_9.txt @@ -0,0 +1,10 @@ +ಮಾಜಿ ಸಚಿವ ನಾಗೇಂದ್ರಗೆ ಜೈಲುವಾಸ ಹೊಸದೇನಲ್ಲ, ಇಲ್ಲಿದೆ ಹಿಸ್ಟರಿ +ಬೆಂಗಳೂರು,ಜು.13– ಇಡಿ ಬಲೆಗೆ ಬಿದ್ದಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೂ ಜೈಲು ವಾಸ ಇಲ್ಲವೇ ಕೇಂದ್ರೀಯ ತನಿಖಾ ಸಂಸ್ಥೆಗಳ ವಿಚಾರಣೆ ಹೊಸತೇನಲ್ಲ..! ಏಕೆಂದರೆ ಈ ಹಿಂದೆಯೂ ಆಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ಶ್ರೀಕೃಷ್ಣನ ಜನಸ್ಥಳವನ್ನು ದರ್ಶನ ಮಾಡಿದ್ದರು. ಈಗಲೂ ಅದರ ವಿಚಾರಣೆ ನಡೆಯುತ್ತಿದ್ದು, ಆರೋಪಿ ಸ್ಥಾನದಲ್ಲಿದ್ದಾರೆ. +ಸಿಬಿಐ ಸಲ್ಲಿಸಿದ್ದ ಚಾರ್ಜ್‌ ಶೀಟ್‌ ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಥಮ ಆರೋಪಿ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಕೂಡ್ಲಿಗೆ ಶಾಸಕರಾದ ನಾಗೇಂದ್ರ, ಕಾರವಾರದ ಶಾಸಕ ಸತೀಶ್‌ ಸೈಲ್‌‍, ಕಂಪ್ಲಿ ಶಾಸಕ ಸುರೇಶ್‌‍ಬಾಬು, ವಿಜಯನಗರ ಶಾಸಕ (ಆಗ ಹೊಸಪೇಟೆ) ಆನಂದ್‌‍ಸಿಂಗ್‌ ವಿರುದ್ಧವೂ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು. 2013ರಲ್ಲಿ ನಾಗೇಂದ್ರ ಅವರ ಬಂಧನವಾಗಿತ್ತು. +ಆನಂತರ, 2014ರ ಡಿಸೆಂಬರ್‌ ನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ಜಾಮೀನಿನ ಆಧಾರದ ಮೇಲೆ ಬುಧವಾರ ನಾಗೇಂದ್ರ ಜೈಲಿಂದ ಬಿಡುಗಡೆಯಾದರು.ಆದರೆ, 2015ರಲ್ಲಿ ಎರಡು ಬಾರಿ ಅವರ ಬಂಧನವಾಗಿತ್ತು. +ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ಶಾಸಕ ನಾಗೇಂದ್ರ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳ ಮಾ. 20ರಂದು ಬಂಧಿಸಲಾಗಿತ್ತು. ಅದರಿಂದ ಜಾಮೀನು ಪಡೆದ ನಂತರ ಜೂ.4ರಂದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಅವರನ್ನು ಸಿಬಿಐ ಅಧಿಕಾರಿಗಳು ಮತ್ತೆ ಬಂಧಿಸಿದ್ದರು. +ಆಗ, ನಾಗೇಂದ್ರ ಸೇರಿದಂತೆ 7 ಜನರನ್ನು ಸಿಬಿಐ ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದರು. ಎಲ್ಲರನ್ನೂ ಜೂ.8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆನಂತರ ಅದರಲ್ಲೂ ಜಾಮೀನು ಪಡೆದಿದ್ದ ನಾಗೇಂದ್ರ ಹೊರಬಂದಿದ್ದರು. ಆಗಿನ ಲೋಕಾಯುಕ್ತರಾಗಿದ್ದ ನ್ಯಾ.ಸಂತೋಷ್‌ ಹೆಗ್ಡೆ ನೇತೃತ್ವದಲ್ಲಿ ನಡೆದಿದ್ದ ಆ ಅಕ್ರಮದ ತನಿಖೆಯಲ್ಲಿ ಮೊದಲ ಹೆಸರು ಕೇಳಿಬಂದಿದ್ದು ಈಗಿನ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರದ್ದು. +ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಬೇಲೇಕೇರಿಯಿಂದ ಸಾವಿರಾರು ಮೆಟ್ರಿಕ್‌ ಟನ್‌ ನಷ್ಟು ಅದಿರು ನಾಪತ್ತೆಯಾದ ಪ್ರಕರಣ. ಕಬ್ಬಿಣದ ಅದಿರನ್ನು ಬಳ್ಳಾರಿಯಿಂದ ಉತ್ತರ ಕನ್ನಡದ ಬೇಲೇಕೇರಿ ಬಂದರಿಗೆ ಅಕ್ರಮವಾಗಿ ಸಾಗಿಸಿ, ವಿದೇಶಕ್ಕೆ ಕಳ್ಳ ಸಾಗಣಿಕೆ ಮಾಡುತ್ತಿದ್ದ ಪ್ರಕರಣವನ್ನು ನಿಷ್ಟುರ ತನಿಖೆಗೊಳಪಡಿಸಿದ್ದರು. ಲೋಕಾಯುಕ್ತ ನ್ಯಾ.ಸಂತೋಷ್‌ ಹೆಗ್ಡೆ ಅವರು ಸರಕಾರಕ್ಕೆ ವರದಿ ಕೊಟ್ಟಾಗ ರಾಜಕೀಯ ಎದ್ದು ಅಲ್ಲೋಲ ಕಲ್ಲೋಲ ಉಂಟು ಮಾಡಿತ್ತು. +ಆಗ ದೊಡ್ಡ ಕಂಪನಿಯಿಂದ ಲಂಚ ಪಡೆದು ಅಕ್ರಮವಾಗಿ ಅದಿರು ಸಾಗಾಣಿಕೆಗೆ ಅವಕಾಶಕೊಟ್ಟ ಆರೋಪದ ಮೇಲೆ ದೊಡ್ಡ-ದೊಡ್ಡ ಅಧಿಕಾರಿಗಳೇ ಜೈಲು ಪಾಲಾಗಿದ್ದರು. ಆದರೆ ತನಿಖೆಯ ಅಂಗವಾಗಿ ಬೇಲೇಕೇರಿ ಬಂದರಿನಲ್ಲಿದ್ದ 8.50 ಲಕ್ಷ ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರಿಗೆ ಹೊದಿಕೆ ಹೊದಿಸಿ, ಅದನ್ನು ಸೀಝ್‌ ಮಾಡಲಾಗಿತ್ತು. ಆದರೂ ಅಷ್ಟೂ ಅದಿರು ಅಲ್ಲಿಂದ ನಾಪತ್ತೆಯಾಗಿತ್ತು. +ಬೇಲೇಕೇರಿ ಬಂದರಿಗೆ ಅದಿರು ಕಳ್ಳ ಸಾಗಾಣಿಕೆಯಾಗಿರುವುದನ್ನು ತನ್ನ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದ ಸಿಇಸಿ, ಸಿಬಿಐ ತನಿಖೆಗೆ ಶಿಫಾರಸು ಮಾಡಿತ್ತು. ಅದಾನಿ ಕಂಪನಿ ವಿರುದ್ಧವು ತನಿಖೆ ಮಾಡುವಂತೆ ತಿಳಿಸಿತ್ತು. +ಈ ಹಿನ್ನೆಲೆಯಲ್ಲಿ ಸಿಬಿಐ ತಂಡ ಆಗ, ಚೆನ್ನೈನಲ್ಲಿ ಈ ಕುರಿತಂತೆ ಪ್ರಕರಣ ದಾಖಲಿಸಿತ್ತು. ಆ ಪ್ರಕರಣದಲ್ಲಿ ಆರೋಪಿಗಳಾಗಿದ್ದವರಲ್ಲಿ ಬಿ.ನಾಗೇಂದ್ರ ಕೂಡ ಒಬ್ಬರು. ಆಗ ಅವರು ಕೂಡ್ಲಿಗಿಯ ಬಿಜೆಪಿ ಶಾಸಕರಾಗಿದ್ದರು. \ No newline at end of file diff --git a/eesanje/url_46_79_1.txt b/eesanje/url_46_79_1.txt new file mode 100644 index 0000000000000000000000000000000000000000..31e8a2b13ddc1fb2fad3151e73d1cc78ca62efaf --- /dev/null +++ b/eesanje/url_46_79_1.txt @@ -0,0 +1,8 @@ +ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ +ಮೈಸೂರು,ಜು.12-ಚಾಮುಂಡಿ ಬೆಟ್ಟದಲ್ಲಿಂದು ಮೊದಲ ಆಷಾಢ ಶುಕ್ರವಾರ ಪ್ರಯುಕ್ತ ಸಡಗರ, ಸಂಭ್ರಮ ಮನೆ ಮಾಡಿತ್ತು.ಮುಂಜಾನೆ ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದ್ದು ನೋಡಲು ಎರಡು ಕಣ್ಣುಗಳು ಸಾಲದೆಂಬಂತಿದೆ. +ದೇವಿಯ ದರ್ಶನಕ್ಕಾಗಿ ರಾಜ್ಯಾದ್ಯಂತ ಆಗಮಿಸಿರುವ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ಸುಗಮ ದರ್ಶನಕ್ಕೆ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕಲ್ಪಿಸಿದೆ. ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳನ್ನು ಕರೆದೊಯ್ಯಲು 35 ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. +ಬೆಳಿಗ್ಗೆ ದೇವಾಲಯದ ಪ್ರಧಾನ ಅರ್ಚಕರಾದ ಡಾಕ್ಟರ್ ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ದೇವಿ ಚಾಮುಂಡೇಶ್ವರಿಗೆ ಮುಂಜಾನೆ ಮೂರು ಮೂವತ್ತರಿಂದ ಮಹಾನ್ ನ್ಯಾಸ ಪೂರ್ವಕ ರುದ್ರಾಭಿಷೇಕ, ಅಷ್ಟೋತ್ತರ ಸಹಸ್ರನಾಮ ಮತ್ತಿತರ ಪೂಜಾ ಕೈಂಕರ್ಯಗಳು ನೆರವೇರಿದವುವಿಶೇಷ ಪೂಜೆ ನಂತರ ಭಕ್ತಾದಿಗಳಿಗೆ ಬೆಳಿಗ್ಗೆ 6 ಗಂಟೆಯಿಂದ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. +ಭಕ್ತಾದಿಗಳು ದೇವಾಲಯ ಪ್ರವೇಶಿಸಲು ಮೂರು ಸಾಲುಗಳ ವ್ಯವಸ್ಥೆ ಮಾಡಲಾಗಿತ್ತು. ಒಂದರಲ್ಲಿ ಧರ್ಮದರ್ಶನ ಮತ್ತೆರಡು ಸಾಲಿನಲ್ಲಿ 50 ರೂ.ವಿನ ಟಿಕೆಟ್ ಖರೀದಿಸಿ ದೇವಿಯ ದರ್ಶನಕ್ಕೆ ತೆರಳಬಹುದಾಗಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. +ಭಕ್ತಾದಿಗಳು ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ ನಲ್ಲಿ ವಾಹನಗಳನ್ನು ನಿಲ್ಲಿಸಿ ಅಲ್ಲಿಂದ ವ್ಯವಸ್ಥೆ ಮಾಡಲಾಗಿರುವ ಉಚಿತ ಬಸ್ಸುಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಬೇಕಾಗಿದೆ. ಭಕ್ತಾದಿಗಳಿಗಾಗಿ ಇಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. +ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ತೆರಳುವ ಭಕ್ತಾದಿಗಳಿಗಾಗಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.ಶಕ್ತಿದೇವತೆಯ ದರ್ಶನ ಪಡೆದ ಭಕ್ತರು ಪುನೀತರಾಗಿ ದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್್ತ ಮಾಡಲಾಗಿದೆ. ಎಲ್ಲಾ ವ್ಯವಸ್ಥೆ ಅಚ್ಚುಕಟ್ಟಾಗಿದೆ, 800 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. +ದೇವಾಲಯದ ಪ್ರಾಂಗಣ ಹಾಗೂ ಆವರಣವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿದ್ದು, ಹಬ್ಬದ ವಾತಾವರಣ ಮನೆ ಮಾಡಿದೆ. ರಾತ್ರಿವರೆಗೂ ದೇವಿಯ ದರ್ಶನ ಇರಲಿದೆ. \ No newline at end of file diff --git a/eesanje/url_46_79_10.txt b/eesanje/url_46_79_10.txt new file mode 100644 index 0000000000000000000000000000000000000000..becd2e513819871e0f5ff693c75e5752373c32d3 --- /dev/null +++ b/eesanje/url_46_79_10.txt @@ -0,0 +1,8 @@ +ತಮ್ಮ ಕುರ್ಚಿಗೆ ಕಂಟಕವಾಗುತ್ತದೆ ಎಂದು ಸಿಎಂ ನಮ್ಮ ಪ್ರತಿಭಟನೆ ಹತ್ತಿಕ್ಕುತ್ತಿದ್ದಾರೆ : ವಿಜಯೇಂದ್ರ +ಬೆಂಗಳೂರು,ಜು.12– ಮುಡಾ ಹಗರಣ ಆಚೆ ಬಂದರೆ ತಮ್ಮ ಕುರ್ಚಿಗೆ ಕಂಟಕವಾಗುತ್ತದೆ ಎಂಬ ಏಕೈಕ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ ಪ್ರತಿಭಟನೆಯನ್ನು ಪೊಲೀಸರ ಮೂಲಕ ಹತ್ತಿಕ್ಕಿದ್ದಾರೆ. ಆದರೆ ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುವುದು ನಮ ಹಕ್ಕು. ಅದನ್ನು ಹತ್ತಿಕ್ಕಲು ಸರ್ಕಾರಕ್ಕಾಗಲೀ, ಇಲ್ಲವೇ ಪೊಲೀಸರಿಗಾಗಲೀ ಅವಕಾಶವಿಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೋ? ಅಥವಾ ತುಘಲಕ್‌ ದರ್ಬಾರ್‌ ಆಡಳಿತದಲ್ಲಿದ್ದೇವೋ? ಎಂದು ಪ್ರಶ್ನಿಸಿದರು. +ಮುಡಾ ಹಗರಣ ಆಚೆ ಬಂದರೆ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಸಿದ್ದರಾಮಯ್ಯನವರು ಪ್ರಕರಣವನ್ನು ತಿಪ್ಪೆ ಸಾರುವ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇವರು ಪ್ರತಿಪಕ್ಷದ ನಾಯಕರಾದಾಗ ನಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿರಲಿಲ್ಲವೇ? ಅವರಿಗೊಂದು ನ್ಯಾಯ, ನಮಗೊಂದು ನ್ಯಾಯವೇ? ಎಂದು ಆಕ್ರೋಶ ಹೊರಹಾಕಿದರು. +ನಾವು ಪೊಲೀಸರ ಬಗ್ಗೆ ದೂಷಣೆ ಮಾಡುವುದಿಲ್ಲ. ಅವರು ಸರ್ಕಾರದ ನಿರ್ದೇಶನದಂತೆ ಕೆಲಸ ಮಾಡುತ್ತಾರೆ. ನೀವು ಎಷ್ಟೇ ಹತ್ತಿಕ್ಕಿದರೂ ಸತ್ಯಾಂಶವನ್ನು ಮರೆಮಾಚಲು ಸಾಧ್ಯವಿಲ್ಲ. ಇಂದಲ್ಲಾ ನಾಳೆ ಸಿದ್ದರಾಮಯ್ಯನವರ ಕುರ್ಚಿಗೆ ಕಂಟಕ ಬರುವುದು ಗ್ಯಾರಂಟಿ ಎಂದು ವಿಜಯೇಂದ್ರ ಭವಿಷ್ಯ ನುಡಿದರು. +ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ಹಣವನ್ನು ತೆಲಂಗಾಣ ವಿಧಾನಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಒತ್ತಡ ಹಾಕಿ ನಿಗಮದಲ್ಲಿದ್ದ ಹಣವನ್ನು ಸಾಗಿಸಲಾಗಿದೆ. ಇದರಲ್ಲಿ ಅವರು ಹರಕೆ ಕುರಿ, ಇನ್ನೂ ಕೆಲವರು ಸಿಕ್ಕಿಬೀಳಲಿದ್ದಾರೆ ಎಂದು ಹೇಳಿದರು. +ನಾನು ಹಿಂದುಳಿದ ಸಮುದಾಯದಿಂದ ಬಂದವನೆಂಬ ಕಾರಣಕ್ಕಾಗಿ ಬಿಜೆಪಿಯವರು ಷಡ್ಯಂತರ ನಡೆಸುತ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ, ಕಾಂಗ್ರೆಸ್‌‍ನಲ್ಲಿ ಇವರೊಬ್ಬರು ಮಾತ್ರ ಹಿಂದುಳಿದವರೇ? ಎಂದು ಪ್ರಶ್ನಿಸಿದರು. +ಕಾಂಗ್ರೆಸ್‌‍ ಪಕ್ಷದಲ್ಲಿ ಅನೇಕ ದಲಿತ, ಹಿಂದುಳಿದ ನಾಯಕರಿದ್ದಾರೆ. ಅವರಿಗಿಂತ ಹಿಂದುಳಿದವರು ಇನ್ಯಾರಿದ್ದಾರೆ?. ಬಿ.ಕೆ.ಹರಿಪ್ರಸಾದ್‌ ನೀಡಿರುವ ಹೇಳಿಕೆಗೆ ಮೊದಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಉತ್ತರ ಕೊಡಬೇಕು.ಅಧಿವೇಶನದಲ್ಲೂ ನಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_79_11.txt b/eesanje/url_46_79_11.txt new file mode 100644 index 0000000000000000000000000000000000000000..947f8262bc36b26c559489907a24cec4a8994f5a --- /dev/null +++ b/eesanje/url_46_79_11.txt @@ -0,0 +1,3 @@ +ಅಪರ್ಣಾ ಅಗಲಿಕೆಯ ನೋವನ್ನು ಕವಿತೆ ಮೂಲಕ ವ್ಯಕ್ತಪಡಿಸಿದ ಪತಿ ನಾಗರಾಜು +ಬೆಂಗಳೂರು, ಜು. 12:ಪತ್ನಿ ಅಪರ್ಣಾಳನ್ನು ಕಳೆದುಕೊಂಡ ನೋವಿನಲ್ಲಿ ಪತಿ ನಾಗರಾಜು ಅವರು ರಚಿಸಿದ ಶೋಕ ಕವನಬೆಳಗಿಕೊಂಡಿರೆಂದುಕಿಡಿ ತಾಕಿಸಿ ಹೊರಟಿತುಹೆಣ್ಣುಚಿತ್ತು ತೆಗೆದುಬತ್ತಿಯ ನೆತ್ತಿ ಚೆನ್ನಾಗಿಸಿತಿರುಪಿ ತಿದ್ದಿಇರುತುಸುವಿರೆಂದು ಕರೆದರೂನಿಲ್ಲದೆಯೇಬೇರಾವುದೋ ಕರೆಗೆತಣ್ಣಗೆ ಓಗೊಟ್ಟ ಮೇರೆಯಲ್ಲಿಒಂದೇ ಒಂದುನಿಮಿಷಬಂದೇನೆಂದು ಕಡೆಗಳಿಗೆಯ ಸೆರಗಿನ ಬೆನ್ನಿನಲ್ಲಿಅಂದು.ಕಾದಿದ್ದೇನೆಈಗ ಬಂದಾಳೆಂದುಆಗ ಬಂದಾಳೆಂದುಮರಳಿಜೀವ ತಂದಾಳೆಂದುಇದುಮೂರನೇ ದಿವಸಇಷ್ಟಾಗಿಬೆಳಗಲಿಟ್ಟ ಕಿರಿಸೊಡರಬೆಳಕು ನಾನುಉರಿವುದಷ್ಟೇ ಕೆಲಸಇರುವ ತನಕ. ನಾಗರಾಜ್‌ ಅವರ ಫೇಸ್‌ಬುಕ್‌ ಬರಹಅಪರ್ಣಾ ಇಹಲೋಕದ ವ್ಯಾಪಾರವನ್ನು ತ್ಯಜಿಸಿ ಸ್ವರ್ಗಸ್ಥಳಾಗಿದ್ದಾಳೆ. ಕಳೆದ ಎರಡು ವರ್ಷಗಳಿಂದ ನಾನು ಮತ್ತು ಅವಳ ನಾಲ್ಕನೇ ಹಂತದಲ್ಲಿದ್ದ ಶ್ವಾಸಕೋಶದ ಕ್ಯಾನರ್‌ ವಿರುದ್ಧ ಸೆಣಸುತ್ತಿದ್ದೇವು. ಈ ಹೋರಾಟದಲ್ಲಿ ನಾವಿಬ್ಬರೂ ಸೋತಿದ್ದೇವೆ. ಅತ್ಯಂತ ವಿಷಾದದಿಂದ ಈ ಮಾತುಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. +ಅಪರ್ಣಾಳಿಗೆ ಬರುವ ಅಕ್ಟೋಬರ್‌ಗೆ 58 ವರ್ಷ ತುಂಬುತ್ತಿತ್ತು. ಎಲ್ಲರ ಪ್ರೀತಿ ಸಹಕಾರ ಇರಲಿ ಎಂದು ಅವರ ಪತಿ ವಸ್ತಾರೆ ನಾಗರಾಜು ಅವರು ಅಪರ್ಣಾ ಅವರ ಅಂತಿಮ ವಿದಾಯದ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ನೋವು ತೋಡಿಕೊಂಡ ರೀತಿ. \ No newline at end of file diff --git a/eesanje/url_46_79_12.txt b/eesanje/url_46_79_12.txt new file mode 100644 index 0000000000000000000000000000000000000000..09ab2dca37e1321fb2d6584b3a6a7eef71e780ef --- /dev/null +++ b/eesanje/url_46_79_12.txt @@ -0,0 +1,8 @@ +ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅರೆಸ್ಟ್ +ಬೆಂಗಳೂರು, ಜು.12 –ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಿ ನಂತರ ಬಂಧಿಸಿದ್ದಾರೆ. +ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳಿಗ್ಗೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡಿತ್ತು.ನಾಗೇಂದ್ರ ಅವರನ್ನು ವಿಚಾರಣೆಗಾಗಿ ಇಡಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ಆಗಮಿಸಿ ನಂತರ ಕಚೇರಿಗೆ ಕರೆದೊಯ್ಯದಿದ್ದರು. +ಹಗರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಜೂನ್‌ 6 ರಂದು ರಾಜೀನಾಮೆ ಸಲ್ಲಿಸಿದರು. +ನನ್ನ ಮನೆಯಿಂದ ಕರೆತರಲಾಗುತ್ತಿದೆ…ನನಗೇನೂ ಗೊತ್ತಿಲ್ಲ ಎಂದು ಇಡಿ ಕಚೇರಿಗೆ ಕರೆದೊಯ್ಯುತ್ತಿದ್ದಂತೆ ನಾಗೇಂದ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ.ಹಲವು ಸ್ಥಳಗಳಲ್ಲಿ ಇಡಿ ಕಳೆದ ಎರಡು ದಿನಗಳಿಂದ ಶೋಧ ನಡೆಸಿ ಪ್ರಸ್ತುತ ಶಾಕರನ್ನು ವಶಕ್ಕೆ ಪಡೆದಿರುವುದು ಸಂಚಲನ ಸೃಷ್ಠಿಸಿದೆ. +ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಸುಮಾರು 20 ಸ್ಥಳಗಳಲ್ಲಿ ಮನಿ ಲಾಂಡರಿಂಗ್‌ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಿದ ಪ್ರಕರಣದ ಭಾಗವಾಗಿ ಇವರನ್ನು ವಶಕ್ಕೆ ಪಡಯಲಾಗಿದೆ ಎಂದು ಮೂಲಗಳು ತಿಳಿಸಿವೆ.ಇಲಾಖೆಯ ಅಧೀಕ್ಷಕ ಚಂದ್ರಶೇಖರನ್‌ ಕಳೆದ ಮೇ 26 ರಂದು ಆತಹತ್ಯೆ ಮಾಡಿಕೊಂಡ ನಂತರ 187 ಕೋಟಿ ಅವ್ಯವಹಾರ ಬೆಳಕಿಗೆ ಬಂದಿತ್ತು. +ನಿಗಮಕ್ಕೆ ಸೇರಿದ 187 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಯಿಂದ ಅನಧಿಕೃತವಾಗಿ ಪ್ರಸಿದ್ಧ ಐಟಿ ಕಂಪನಿಗಳು ಮತ್ತು ಹೈದರಾಬಾದ್‌ ಮೂಲದ ಸಹಕಾರಿ ಬ್ಯಾಂಕ್‌ಗೆ ಸೇರಿದ ವಿವಿಧ ಖಾತೆಗಳಿಗೆ 88.62 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. +ಅಮಾನತುಗೊಂಡಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ ಜಿ ಪದನಾಭ್‌,ಪರಶುರಾಮ್‌ ಜಿ ದುರುಗಣ್ಣವರ್‌ ಮತ್ತು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಸುಚಿಸಿತಾ ರಾವಲ್‌ ಅವರ ಹೆಸರನ್ನು ಟಿಪ್ಪಣಿಯಲ್ಲಿ ಹೆಸರಿಸಿದ್ದಾರೆ, ಆದರೆ ಸಚಿವರು ಹಣವನ್ನು ವರ್ಗಾಯಿಸಲು ಮೌಖಿಕ ಆದೇಶವನ್ನು ನೀಡಿದ್ದಾರೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_79_2.txt b/eesanje/url_46_79_2.txt new file mode 100644 index 0000000000000000000000000000000000000000..68658496f9e77eca66501c3a1c199d349e58f5d8 --- /dev/null +++ b/eesanje/url_46_79_2.txt @@ -0,0 +1,6 @@ +ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನ ಪಾತ್ರವಿಲ್ಲ : ನಾಗೇಂದ್ರ +ಬೆಂಗಳೂರು,ಜು.12– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ತಮ ಪಾತ್ರ ಇಲ್ಲ ಎಂದು ಪುನರುಚ್ಚರಿಸಿರುವ ಮಾಜಿ ಸಚಿವ ಬಿ.ನಾಗೇಂದ್ರ ತಮ ಆಪ್ತ ಸಹಾಯಕರೂ ಸೇರಿದಂತೆ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. +ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳಿಗ್ಗೆ ನಾಗೇಂದ್ರ ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಕರೆತರುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆಯಿಂದ ತಮನ್ನು ಕರೆತಂದಿದ್ದಾರೆ. ನಮ ಕಚೇರಿಯ ಸಿಬ್ಬಂದಿಗಳು ಹಣ ಪಡೆದಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. +ಹಗರಣ ಬೆಳಕಿಗೆ ಬಂದ ವೇಳೆಯಲ್ಲಿ ನಾಗೇಂದ್ರ ಅವರು ಪತ್ರಿಕಾಗೋಷ್ಠಿ ನಡೆಸಿ ಹಣ ಅಕ್ರಮ ವರ್ಗಾವಣೆಯಲ್ಲಿ ಬ್ಯಾಂಕ್‌ ಸಿಬ್ಬಂದಿಗಳ ಪಾತ್ರ ಇದೆ. ಅಧಿಕಾರಿಗಳ ನಡವಳಿಕೆಗಳು ಸಂಶಯಾಸ್ಪದ ಎಂದು ಹೇಳಿದರು. +ಅಕ್ರಮ ಹಣ ವರ್ಗಾವಣೆ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಎಂಬ ಸಮರ್ಥನೆ ನೀಡಿದ್ದರು. ಆತಹತ್ಯೆ ಮಾಡಿಕೊಂಡ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಮರಣ ಪತ್ರದಲ್ಲಿ ಸಚಿವರ ಮೌಖಿಕ ಸೂಚನೆ ಎಂದು ಉಲ್ಲೇಖಿಸಿರುವ ಬಗ್ಗೆ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬರಲಿದೆ ಎಂದು ಹೇಳಿಕೊಂಡಿದ್ದರು. +ಈಗ ಅದೇ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ಹಗರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. \ No newline at end of file diff --git a/eesanje/url_46_79_3.txt b/eesanje/url_46_79_3.txt new file mode 100644 index 0000000000000000000000000000000000000000..1d2cd4d8e4b1a29666b9669c885bda9e3e7050f2 --- /dev/null +++ b/eesanje/url_46_79_3.txt @@ -0,0 +1,5 @@ +ಎಸ್ಐಟಿ ವಿಚಾರಣೆಗೆ ಹಾಜರಾದ ಶಾಸಕ ಬಸನಗೌಡ ದದ್ದಲ್ +ಬೆಂಗಳೂರು,ಜು.12– ಬಹುಕೋಟಿ ಹಣ ಅಕ್ರಮ ವರ್ಗಾವಣೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಅವರು ಇಂದು ಎಸ್ಐಟಿ ಎದುರು ವಿಚಾರಣೆಗೆ ಹಾಜರಾದರು.ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹಗರಣದ ಬಗ್ಗೆ ದದ್ದಲ್ ಅವರಿಗೆ ಪ್ರಶ್ನೆಗಳನ್ನು ಕೇಳಿ ಮಾಹಿತಿಗಳನ್ನು ಪಡೆದುಕೊಂಡರು. +ಮಂಗಳವಾರ ಮುಂಜಾನೆ ಇ.ಡಿ ಅಧಿಕಾರಿಗಳು ದದ್ದಲ್ ಅವರ ಬೆಂಗಳೂರಿನ ಯಲಹಂಕದ ನಿವಾಸ, ಕಚೇರಿ ಹಾಗೂ ರಾಯಚೂರಿನ ನಿವಾಸ ಸೇರಿದಂತೆ ಹಲವೆಡೆ ದಾಳಿ ಮಾಡಿ ಶೋಧ ನಡೆಸಿದ್ದರು. +ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಶಾಸಕರು, ಆಪ್ತರು ಸೇರಿದಂತೆ ಹಲವರನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಶಾಸಕ ದದ್ದಲ್ ಅವರು ಈ ಪ್ರಕರಣದ ಸಂಬಂಧ ಸೋಮವಾರ ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಿದ್ದರು. +ಮಂಗಳವಾರ ಮತ್ತೆ ವಿಚಾರಣೆಗೆ ಬರುವಂತೆ ಎಸ್ಐಟಿ ನೋಟೀಸ್ ನೀಡಿತ್ತು. ಆದರೆ ಮಂಗಳವಾರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿರಲಿಲ್ಲ. ಎಸ್ಐಟಿ ನೋಟೀಸ್ ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ದದ್ದಲ್ ಅವರಿಂದ ಎಸ್ಐಟಿ ಅಧಿಕಾರಿಗಳು ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_79_4.txt b/eesanje/url_46_79_4.txt new file mode 100644 index 0000000000000000000000000000000000000000..86a0c2f628a403c946c22e05283388cf69d65ae8 --- /dev/null +++ b/eesanje/url_46_79_4.txt @@ -0,0 +1,11 @@ +ಮೌನಕ್ಕೆ ಜಾರಿದ ‘ಅಚ್ಚ ಕನ್ನಡ’ತಿ, ಕೊನೆಗೂ ನನಸಾಗದ ಅಪರ್ಣಾ ಕನಸು +ಬೆಂಗಳೂರು,ಜು.12-ಛಲ ಬಿಡದ ಹೋರಾಟಗಾರ್ತಿ ಅಮೋಘ ನಿರೂಪಣಾ ಶೈಲಿಯ ಮೂಲಕ ಕನ್ನಡ ಭಾಷೆ ಬೆಳಗಿಸಿದ ಶ್ರೇಷ್ಠ ಕನ್ನಡತಿ ಅಪರ್ಣಾ ಕನ್ನಡ ನಾಡಿನ ಮನೆ ಮಾತಾಗಿದ್ದಾರೆ. ತಮ ಮಾತಿನ ಶೈಲಿಯಿಂದಲೇ ಜನಮನ್ನಣೆ ಗಳಿಸಿದವರು. ಮೂಲತಃ ಚಿಕ್ಕಮಗಳೂರಿನ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯವರಾದ 1966 ಅಕ್ಟೋಬರ್ 14 ರಂದು ನಾರಾಯಣಸ್ವಾಮಿ ಮತ್ತು ಪದಾವತಿಯ ದಂಪತಿಯ ಮಗಳಾಗಿ ಜನಿಸಿದರು. +ಆದರೆ ಇವರು ಬೆಳೆದಿದ್ದೆಲ್ಲವೂ ಬೆಂಗಳೂರಿನಲ್ಲಿ. ಕುಮಾರಪಾರ್ಕ್ನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಎಂಎಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದರು. ಅಪರ್ಣಾ ಅವರ ತಂದೆ ನಾರಾಯಣಸ್ವಾಮಿ ಪ್ರಸಿದ್ಧ ಪತ್ರಿಕೆಯಲ್ಲಿ ಸಿನಿಮಾ ಪುರವಣಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ನಾರಾಯಣಸ್ವಾಮಿಯವರಿಗೆ ಖ್ಯಾತ ಸಿನಿಮಾ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪರಿಚಯವಿತ್ತು. ಈ ಹಿನ್ನೆಲೆಯಲ್ಲಿ ಕಣಗಾಲ್ರವರು ಅಪರ್ಣಾ ಅವರ ಪ್ರತಿಭೆ ಗುರುತಿಸಿ ಸಿನಿಮಾದಲ್ಲಿ ಅಭಿನಯಕ್ಕೆ ಅವಕಾಶ ನೀಡಿದ್ದರು. +ಹೀಗೆ 1984 ರಲ್ಲಿ ಮಸಣದ ಹೂವು ಚಿತ್ರದಿಂದ ತಮ ಸಿನಿಮಾ ಪ್ರಯಾಣ ಆರಂಭಿಸಿದ ಅಪರ್ಣಾ ನಂತರದಲ್ಲಿ ಇನ್ಸ್ಪೆಕ್ಟರ್ ವಿಕ್ರಂ, ನಮೂರ ರಾಜ, ಸಾಹಸವೀರ, ಡಾ.ಕೃಷ್ಣ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿ ಮನ್ನಣೆ ಗಳಿಸಿದರು. ಹಿರಿಯ ನಟರಾದ ವಿಷ್ಣುವರ್ಧನ್, ಅಂಬರೀಶ್, ರವಿಚಂದ್ರನ್, ಟೈಗರ್ ಪ್ರಭಾಕರ್ ಹಾಗೂ ಶಿವರಾಜ್ಕುಮಾರ್ ಸೇರಿದಂತೆ ಹಲವು ನಟರೊಂದಿಗೆ ಬೆಳ್ಳಿತೆರೆಯಲ್ಲಿ ಮಿಂಚಿದರು. ಇವರ ನಟನೆಯ ಕೊನೆಯ ಚಿತ್ರ ಗ್ರೇ ಗೇಮ್ಸೌ ಆಗಿತ್ತು. +1993 ರಿಂದ 2010 ರವರೆಗೂ ರೇಡಿಯೋ ಆರ್ಜೆ ಆಗಿಯೂ ಕಾರ್ಯ ನಿರ್ವಹಿಸಿದರು. 90 ರ ದಶಕದಲ್ಲಿ ದೂರದರ್ಶನ ಆಕಾಶವಾಣಿ ಕಾರ್ಯಕ್ರಮಗಳ ನಿರೂಪಣಾ ಶೈಲಿ ಅಪರ್ಣಾ ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟವು. ಸರ್ಕಾರದ ಕಾರ್ಯಕ್ರಮಗಳು, ವಿವಿಧ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಅಪರ್ಣಾ ಅವರ ನಿರೂಪಣೆಯೇ ಇರುತ್ತಿತ್ತು. +ಭಾಷಾ ಶ್ರೀಮಂತಿಕೆಗೆ ಮೆರಗು : ಕನ್ನಡ ಭಾಷಾ ಸೌಂದರ್ಯ ಹೆಚ್ಚಿಸಿದ ನಿರೂಪಕಿ ಎಂದರೆ ತಪ್ಪಾಗಲಾರದು. ನಿರೂಪಣೆ ಎಂದರೆ ಕೇವಲ ಮಾತಲ್ಲ. ಕನ್ನಡದ ಕಂಪು, ಸಾಹಿತ್ಯ ಧಾರೆ, ಭಾಷಾ ಶ್ರೀಮಂತಿಕೆಯನ್ನು ತೋರಿಸಿಕೊಟ್ಟವರು ಅಪರ್ಣಾ. ಇದೇ ಕಾರಣಕ್ಕೆ ನಿರೂಪಣಾ ಲೋಕದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ಕೀರ್ತಿ ಅವರದ್ದಾಯಿತು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆ ಕಾಲ ನಿರೂಪಣೆ ನಿರ್ವಹಿಸಿದ ದಾಖಲೆಯೂ ಅಪರ್ಣಾ ಅವರ ಹೆಸರಿನಲ್ಲಿದೆ. +ನಮ್ಮ ಮೆಟ್ರೋದಲ್ಲಿ ಅಪರ್ಣಾ ಧ್ವನಿ :ಇನ್ನು ಕಿರುತೆರೆಯ ಮೂಡಲಮನೆ, ಮುಕ್ತ ಸೇರಿದಂತೆ ಹಲವಾರು ಧಾರವಾಹಿಗಳ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾದ ಅಪರ್ಣಾ ಶುದ್ಧ ಕನ್ನಡ ಸಾಹಿತ್ಯದ ಗಾಂಭೀರ್ಯದೊಂದಿಗೆ ಹಾಸ್ಯ ನಟನೆಯ ಮೂಲಕವೂ ಪರಿಚಯವಾದರು. ಕಿರುತೆರೆಯ ಮಜಾ ಟಾಕೀಸ್ನಲ್ಲಿ ಮೊದಲ ಬಾರಿಗೆ ಕಾಮಿಡಿ ಶೋನಲ್ಲಿ ಒನ್ ಅಂಡ್ ಓನ್ಲಿ ವರಲಕ್ಷ್ಮಿ ಪಾತ್ರದಲ್ಲಿ ಮಿಂಚಿದರು. ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಮೊದಲ ಸೀಸನ್ನಲ್ಲಿ ಅಪರ್ಣಾ ಸ್ಪರ್ಧಿಯಾಗಿ ಜನರ ಗಮನ ಸೆಳೆದಿದ್ದರು. +ಮುಂದಿನ ನಿಲ್ದಾಣ ಬೆಂಗಳೂರಿನ ನಮ ಮೆಟ್ರೋಗೂ ದನಿಯಾಗಿದ್ದರು. ಅವರು ನಟಿ, ನಿರೂಪಕಿ ಮಾತ್ರವಲ್ಲ. ಸೃಜನಶೀಲ ಮನಸ್ಸಿನ ಕನ್ನಡದ ಶ್ರೇಷ್ಠ ಕುಡಿ. ಒಂದೇ ಒಂದು ಇಂಗ್ಲಿಷ್ ಪದ ಬಳಸದೆ ಕನ್ನಡದಲ್ಲಿಯೇ ಯಾವುದೇ ಕಾರ್ಯಕ್ರಮವನ್ನೂ ಲೀಲಾಜಾಲವಾಗಿ ನಡೆಸಿಕೊಡುತ್ತಿದ್ದ ರೀತಿ ಎಂಥವರನ್ನು ನಿಬ್ಬೆರೆಗಾಗಿಸುತ್ತಿತ್ತು. +ಅವರ ನಿರೂಪಣಾ ಶೈಲಿ ಎಲ್ಲರಿಗೂ ಇಷ್ಟವಾಗುತ್ತಿತ್ತು. ಚಿತ್ರರಂಗ ಕಾರ್ಯಕ್ರಮವಾಗಲೀ, ರಾಜಕೀಯ ಕಾರ್ಯಕ್ರಮವಾಗಲೀ, ಧಾರ್ಮಿಕ, ಸಾಮಾಜಿಕ, ಯಾವುದೇ ಕಾರ್ಯಕ್ರಮವಾಗಲೀ ಅಪರ್ಣಾ ಅವರ ನಿರೂಪಣೆ ಎಲ್ಲರಿಗೂ ಇಷ್ಟ. ಕೇವಲ 57 ವರ್ಷಕ್ಕೆ ಅವರು ಇಹಲೋಕ ತ್ಯಜಿಸಿದ್ದು, ಕನ್ನಡ ಅಭಿಮಾನಿ ಬಳಗಕ್ಕೆ ತುಂಬಲಾರದ ನೋವಿನ ಸಂಗತಿ. +ನನಸಾಗದ ಅಪರ್ಣಾ ಕನಸುಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಅವರು ನಿರೂಪಣಾ ಶಾಲೆಯೊಂದನ್ನು ತೆರೆಯಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು.ತಮ ಗೆಳೆಯರ ಬಳಿ ಆಸೆಯನ್ನು ಹಂಚಿಕೊಂಡಿದ್ದರು. ಕೊನೆಗೂ ಅವರ ಆಸೆ ಈಡೇರಲಿಲ್ಲ. ಅವರ ಕನಸು ನನಸಾಗಲಿಲ್ಲ. ತಮ ನಿರೂಪಣಾ ಶೈಲಿಯಿಂದಲೇ ಮನೆಮಾತಾಗಿದ್ದ ಅಪರ್ಣಾ ಅವರು ನಿರೂಪಣಾ ಶಾಲೆ ತೆರೆದು ಅದನ್ನು ವಿಸ್ತರಿಸಬೇಕೆಂದು ಕಂಡಿದ್ದ ಕನಸು ಕನಸಾಗಿಯೇ ಉಳಿಯಿತು. +ಅಪರ್ಣಾ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಎರಡು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಕ್ಯಾನ್ಸರ್ ನಾಲ್ಕನೇ ಸ್ಟೇಜ್ನಲ್ಲಿತ್ತು. ಕೀಮೋಥೆರಪಿ ಮಾಡಿಸಿದ್ದರು. ಆದರೆ ಚಿಕಿತ್ಸೆ ಫಲ ಕೊಡದೆ ಇಹಲೋಕ ತ್ಯಜಿಸಿದರು. \ No newline at end of file diff --git a/eesanje/url_46_79_5.txt b/eesanje/url_46_79_5.txt new file mode 100644 index 0000000000000000000000000000000000000000..19a2deec80c33bf22ee6ef820b5cead48c24959e --- /dev/null +++ b/eesanje/url_46_79_5.txt @@ -0,0 +1,6 @@ +ಮೂಡಾದಲ್ಲಿ ಯಾವುದೇ ಲೋಪವಾಗಿಲ್ಲ, ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ : ಡಿಕೆಶಿ +ಬೆಂಗಳೂರು,ಜು.12-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಡಿ ನಿವೇಶನ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ, ಬಿಜೆಪಿ ರಾಜಕೀಯ ಕಾರಣಕ್ಕೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ತಿರುಗೇಟು ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ನಾವು ಗೆದ್ದ ಬಳಿಕ ಬಿಜೆಪಿಯವರು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ನಾನಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲೇ ದೊಡ್ಡ ರಾಜ್ಯಗಳ ಪೈಕಿ ಅಧಿಕಾರದಲ್ಲಿರುವುದು ಕರ್ನಾಟಕದಲ್ಲಿ ಮಾತ್ರ. ಅದಕ್ಕಾಗಿ ಇಲ್ಲಿ ನಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು. +ತಾವು ಹಿಂದುಳಿದ ವರ್ಗಕ್ಕೆ ಸೇರಿರುವುದರಿಂದ ಬಿಜೆಪಿ ಷಡ್ಯಂತರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿರುವುದಕ್ಕೆ ಡಿ.ಕೆ.ಶಿವಕುಮಾರ್‌ ಸಹಮತ ವ್ಯಕ್ತಪಡಿಸಿದರು.ಯಾವುದೇ ಹುರುಳಿಲ್ಲದೇ ಇದ್ದರೂ ರಾಜಕೀಯ ಮಾಡುತ್ತಿದ್ದಾರೆ. ಸಮಯ ಬಂದಾಗ ಸೂಕ್ತ ಉತ್ತರ ನೀಡುತ್ತೇವೆ ಎಂದರು. +ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆ ಅಗತ್ಯವಿರಲಿಲ್ಲ. ಈಗಾಗಲೇ ರಾಜ್ಯಸರ್ಕಾರವೇ ತನಿಖೆ ನಡೆಸುತ್ತಿತ್ತು. ಅದರ ಹೊರತಾಗಿಯೂ ಜಾರಿ ನಿರ್ದೇಶನಾಲಯ ಏನು ಮಾಡುತ್ತಿದೆ ಎಂಬುದನ್ನು ತಿಳಿದುಕೊಂಡು ನಂತರ ಪ್ರತಿಕ್ರಿಯಿಸುತ್ತೇವೆ ಎಂದರು. +ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪಿಗೆ ಸಂಬಂಧಪಟ್ಟಂತೆ ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ಅದರ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_79_6.txt b/eesanje/url_46_79_6.txt new file mode 100644 index 0000000000000000000000000000000000000000..2e5ac47b1bf854e06342acabbdfefd390f2abcc4 --- /dev/null +++ b/eesanje/url_46_79_6.txt @@ -0,0 +1,5 @@ +ಅಕ್ರಮವಾಗಿ ಮರಗಳನ್ನು ಕಡಿದಿರುವ ಪ್ರಕರಣದ ವಿಚಾರಣೆಗೆ 4 ತಿಂಗಳ ಗಡುವು +ಬೆಂಗಳೂರು, ಜು.12-ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮಾಗೇರಿ ಗ್ರಾಮದ ಹಿಡುವಳಿ ಪ್ರದೇಶದಲ್ಲಿ ಅನುಮತಿ ನೀಡದ ಸರ್ವೆ ನಂಬರ್‌ಗಳಲ್ಲಿ ಅಕ್ರಮವಾಗಿ ಮರಗಳನ್ನು ಕಡಿದಿರುವ ಆರೋಪ ಪ್ರಕರಣದ ಮಂಡನಾಧಿಕಾರಿಯಾಗಿ ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ನೇಮಿಲಾಗಿದೆ. +ಈ ಪ್ರಕರಣದ ವಿಚಾರಣಾ ಪ್ರಕ್ರಿಯೆಯನ್ನು ನಾಲ್ಕು ತಿಂಗಳ ಕಾಲ ಮಿತಿಯೊಳಗೆ ಪೂರ್ಣಗೊಳಿಸಿ ವಿಚಾರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಅರಣ್ಯ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. +ಕಳೆದ 2023ರ ಸೆ.12ರಂದು ಹೊರಡಿಸಿದ್ದ ಆದೇಶದಲ್ಲಿ ಸಾಮಾಜಿಕ ಅರಣ್ಯ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯನ್ನು ಮರಗಳನ್ನು ಕಡಿದ ಪ್ರಕರಣದ ಮಂಡನಾಧಿಕಾರಿಯನ್ನಾಗಿ ಮಾಡಲಾಗಿತ್ತು. ಈಗ ಮಂಡನಾಧಿಕಾರಿಯನ್ನು ಬದಲಿಸಿದ್ದು, ಹಾಸನ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ವಿಚಾರಣೆ ಹೊಣೆಗಾರಿಕೆಯನ್ನು ವಹಿಸಲಾಗಿದೆ. +ಮರಗಳನ್ನು ಅನುಮತಿ ಇಲ್ಲದೆ ಕಡಿದಿರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಿ.ಲಿಂಗರಾಜ, ಅಂದಿನ ವಲಯ ಅರಣಾಧಿಕಾರಿ ಸಿ.ಅಭಿಲಾಷ್‌ ಮತ್ತು ವಲಯ ಅರಣ್ಯಾಧಿಕಾರಿ (ಕಡ್ಡಾಯ ನಿವೃತ್ತಿ) ಹೆಚ್‌.ಕೆ.ಮರಿಸ್ವಾಮಿ ಅವರ ವಿರುದ್ಧ 1957ರ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 13ರ ಅನ್ವಯ ಜಂಟಿ ಇಲಾಖಾ ವಿಚಾರಣೆ ಜರುಗಿಸಲು 2023ರ ಸೆ.12ರಂದು ಆದೇಶಿಸಲಾಗಿತ್ತು. \ No newline at end of file diff --git a/eesanje/url_46_79_7.txt b/eesanje/url_46_79_7.txt new file mode 100644 index 0000000000000000000000000000000000000000..ea5e558b499e84bd709adce669ff094b3446bd4a --- /dev/null +++ b/eesanje/url_46_79_7.txt @@ -0,0 +1,5 @@ +ಮಳೆಗಾಲದ ಅಧಿವೇಶನಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ಧತೆ +ಬೆಂಗಳೂರು, ಜು.12-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ಜುಲೈ 15ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿದ್ಧತಾ ಕಾರ್ಯಗಳು ಚುರುಕುಗೊಂಡಿವೆ. +ಸಕಲ ಸಿದ್ಧತೆಗಳು ನಡೆಯುತ್ತಿವೆ. ವಿಧಾನಸಭೆ ಪ್ರವೇಶದ್ವಾರವನ್ನು ನವೀಕರಿಸಲಾಗುತ್ತಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಸಭಾಂಗಣ, ಮೊಗಸಾಲೆಗಳನ್ನು ಶುಚಿಗೊಳಿಸಲಾಗುತ್ತಿದೆ. ಉಭಯ ಸದನಗಳ ಪ್ರವೇಶ ದ್ವಾರಗಳಲ್ಲಿ ಅಲಂಕಾರಿಕ ಗಿಡಗಳನ್ನು ಇಟ್ಟು ಶೃಂಗರಿಸಲಾಗುತ್ತಿದೆ. +ವಿಧಾನಸಭಾಧ್ಯಕ್ಷರ ಹಾಗೂ ವಿಧಾನ ಪರಿಷತ್‌ ಸಭಾಪತಿಗಳ ಪೀಠದ ಇಕ್ಕೆಲಗಳಲ್ಲಿ ವಿಶೇಷ ಅಲಂಕಾರಿಕ ಗಿಡಗಳು, ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗುತ್ತದೆ.ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ ಉಳಿದಿರುವುದರಿಂದ ಉಭಯ ಸದನಗಳ ಸಿಬ್ಬಂದಿ ಸಿದ್ಧತಾ ಕಾರ್ಯದಲ್ಲಿ ನಿರತರಾಗಿದ್ದಾರೆ. +ವಿಧಾನಸೌಧದ ಪ್ರವೇಶ ದ್ವಾರಗಳು, ಕಾರಿಡಾರ್‌ಗಳನ್ನು ಶುಚಿಗೊಳಿಸುವ ಕಾರ್ಯ ನಡೆಯುತ್ತಿದೆ. ಹೀಗಾಗಿ ವಿಧಾನಸೌಧದ ಆವರಣದಲ್ಲೂ ಹೊಸ ಸೊಬಗು ಕಂಡುಬರುತ್ತಿದೆ.ಮಳೆಗಾಲವಾಗಿರುವುದರಿಂದ ವಿಧಾನಸೌಧದ ಆವರಣದಲ್ಲಿ ಹಚ್ಚ ಹಸಿರಿನ ವಾತಾವರಣವಿದೆ. ಗಿಡಗಳು ಹೂವುಗಳಿಂದ ಕಂಗೊಳಿಸುತ್ತಿವೆ. ಈ ಬಾರಿಯ ಅಧಿವೇಶನಕ್ಕೆ ವಿಧಾನಸೌಧದಲ್ಲಿ ಹೊಸ ಮೆರುಗು ಮೂಡಿದೆ. \ No newline at end of file diff --git a/eesanje/url_46_79_8.txt b/eesanje/url_46_79_8.txt new file mode 100644 index 0000000000000000000000000000000000000000..ff33576648c169dd074d91e6bf218ef76a6da509 --- /dev/null +++ b/eesanje/url_46_79_8.txt @@ -0,0 +1,6 @@ +ಉಪ್ಪು ತಿಂದವರು ನೀರು ಕುಡಿಯಲೇ ಬೇಕು : ಸಿಎಂಗೆ ಅಶೋಕ್‌ ಎಚ್ಚರಿಕೆ +ಬೆಂಗಳೂರು,ಜು.12-ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ತಮ ಪಾಪದ ಕೊಡ ತುಂಬಿದೆ. ಪ್ರಾಯಶ್ಚಿತ ಕಾದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ಕೊಟ್ಟಿದ್ದಾರೆ. +ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಪೋಸ್ಟ್‌ ಮಾಡಿರುವ ಅಶೋಕ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರು 4,000 ಕೋಟಿ ಮೌಲ್ಯದ ಮುಡಾ ಭೂಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ತಮ ಎಂದಿನ ಶೈಲಿಯಲ್ಲಿ ಜಾತಿ ಹೆಸರಿನಲ್ಲಿ ರಕ್ಷಣೆ ಪಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. +ಸಿದ್ದರಾಮಯ್ಯನವರೇ, ತಮ ನಾಯಕ ರಾಹುಲ್‌ ಗಾಂಧಿ ಅವರು ಮೋದಿ ಉಪನಾಮದ ಬಗ್ಗೆ ನಿಂದನೆ ಮಾಡಿ ನ್ಯಾಯಾಲಯದಲ್ಲಿ ಛೀಮಾರಿ ಹಾಕಿಸಿಕೊಂಡರಲ್ಲ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬ ಎರಡು ಬಾರಿ ಪ್ರಧಾನ ಮಂತ್ರಿ ಆದರಲ್ಲ ಅನ್ನುವ ಹೊಟ್ಟೆ ಉರಿಯಿಂದ ನಿಂದಿಸಿದ್ದಾ? ಎಂದು ಪ್ರಶ್ನೆ ಮಾಡಿದ್ದಾರೆ. +ತಾವು ಮತ್ತು ತಮ ಪಟಾಲಂ ದಿನ ಬೆಳಗಾದರೆ ಪ್ರಧಾನಿ ಮೋದಿ ಅವರನ್ನ ಪದೇ ಪದೇ ವೈಯಕ್ತಿಕ ನಿಂದನೆ ಮಾಡುತ್ತೀರಲ್ಲ, ಅದು ಕೂಡ ಹಿಂದುಳಿದ ಸಮುದಾಯಕ್ಕೆ ಸೇರಿದ ಒಬ್ಬ ಚಹಾ ಮಾರುವ ವ್ಯಕ್ತಿ ಮೂರು ಬಾರಿ ಸತತವಾಗಿ ದೇಶದ ಪ್ರಧಾನಿ ಆದರಲ್ಲ ಎನ್ನುವ ದ್ವೇಷದಿಂದಲೇ? ಎಂದು ತಾರಾಟೆಗೆ ತೆಗೆದುಕೊಂಡಿದ್ದಾರೆ. +ತಮ ಇಡೀ ಜೀವನವೆಲ್ಲಾ ಅಹಿಂದ ಸಮುದಾಯಗಳ ಬೆನ್ನಿನ ಮೇಲೆ ಸವಾರಿ ಮಾಡಿ ಅಧಿಕಾರ ಅನುಭವಿದ ತಾವು ದಲಿತರಿಗೆ, ಹಿಂದುಳಿದವರಿಗೆ ಮಾಡಿದ್ದಾದರೂ ಏನು? ದಲಿತರ ದುಡ್ಡು ಲೂಟಿ ಹೊಡೆದಿದ್ದು, ದಲಿತರ ಕುರ್ಚಿ ಕಿತ್ತುಕೊಂಡು ಅವರಿಗೆ ಮೋಸ ಮಾಡಿದ್ದು, ಇದಿಷ್ಟೇ ನಿಮ ಸಾಧನೆ ಎಂದು ಅಶೋಕ್‌ ಸಿದ್ದರಾಮಯ್ಯ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ. \ No newline at end of file diff --git a/eesanje/url_46_79_9.txt b/eesanje/url_46_79_9.txt new file mode 100644 index 0000000000000000000000000000000000000000..a2fac2cffa7573807f11562c4b6026326dcff306 --- /dev/null +++ b/eesanje/url_46_79_9.txt @@ -0,0 +1,6 @@ +ಮೈಸೂರು ಚಲೋ ಪ್ರತಿಭಟನೆ, ಬಿಜೆಪಿ ನಾಯಕರು ಪೊಲೀಸರ ವಶಕ್ಕೆ +ಬೆಂಗಳೂರು,ಜು.12-ಮೈಸೂರಿನ ಮುಡಾದಲ್ಲಿ ನಡೆದಿರುವ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು.ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಮಾಜಿ ಸಚಿವರಾದ ಸಿ.ಟಿ.ರವಿ, ಮುನಿರತ್ನ ಸೇರಿದಂತೆ ಬಿಜೆಪಿಯ ಬಹುತೇಕ ಎಲ್ಲಾ ಶಾಸಕರು, ಪಕ್ಷದ ಪ್ರಮುಖರು ಮತ್ತಿತರರು ಬೆಂಗಳೂರಿನಿಂದ ಮೈಸೂರು ಚಲೋ ಪ್ರತಿಭಟನೆ ನಡೆಸಿದರು. +ಆದರೆ ವಾಹನಗಳಲ್ಲಿ ಮೈಸೂರಿಗೆ ಹೊರಟಿದ್ದ ಪ್ರತಿಭಟನಾನಿರತರನ್ನು ಪೊಲೀಸರು ರಾಮನಗರ ಸಮೀಪದ ಕಣಮಿಣಿಕೆ ಟೋಲ್‌ ಬಳಿ ವಶಕ್ಕೆ ಪಡೆದುಕೊಂಡರು.ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಜೆಪಿಯ ಪ್ರಮುಖ ನಾಯಕರನ್ನು ಬಿಜೆಪಿ ಕಚೇರಿ ಮತ್ತು ಮನೆಗಳಲ್ಲೇ ವಶಕ್ಕೆ ಪಡೆಯುವ ಪ್ರಯತ್ನ ನಡೆಸಿದರು. +ಆದರೂ ಪೊಲೀಸರ ಜೊತೆ ವಾಗ್ವಾದ ನಡೆಸಿ ವಾಹನಗಳಲ್ಲಿ ಭಾರಿ ಸಂಖ್ಯೆಯ ಕಾರ್ಯಕರ್ತರು ಮೈಸೂರಿನತ್ತ ಹೊರಟಿದ್ದರು. ಆಗಲೇ ರಸ್ತೆಯಲ್ಲಿ ವಶಕ್ಕೆ ಪಡೆಯಲು ಮುಂದಾಗಿದ್ದ ಪೊಲೀಸರು ಕಣಮಿಣಿಕೆ ಬಳಿ ಬರುತ್ತಿದ್ದಂತೆ ಎಲ್ಲರನ್ನೂ ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಭಾರಿ ಮಾತಿನ ಚಕಮಕಿ ನಡೆದು ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. +ವಾಹನಗಳು ತೆರಳದಂತೆ ಪೊಲೀಸರು ಟೋಲ್‌ ಸೇರಿದಂತೆ ಮತ್ತಿತರ ಕಡೆ ಅಡ್ಡಲಾಗಿ ಬ್ಯಾರಿಕೇಡ್‌ ಹಾಗೂ ಪೊಲೀಸ್‌‍ ವಾಹನಗಳನ್ನು ಅಡ್ಡ ನಿಲ್ಲಿಸಿದ್ದರು. ಆದರೂ ಬಿಜೆಪಿ ಕಾರ್ಯಕರ್ತರು ವಾಹನಗಳನ್ನು ತೆರವುಗೊಳಿಸಿ ಮೈಸೂರಿನತ್ತ ಹೊರಡಲು ಪ್ರಯತ್ನ ನಡೆಸಿದರೂ ಪೊಲೀಸರು ಅವಕಾಶ ನೀಡಲಿಲ್ಲ. ತಕ್ಷಣವೇ ಪ್ರತಿಭಟನಾನಿರತ ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಸ್‌‍ಗಳಲ್ಲಿ ಬಲವಂತವಾಗಿ ತುಂಬಿಕೊಂಡು ಠಾಣೆಗೆ ಕರೆದೊಯ್ದರು. +ಇದಕ್ಕೂ ಮುನ್ನ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖಂಡರಾದ ತಮೇಶ್‌ಗೌಡ, ಮುನಿರತ್ನ, ಅಶ್ವತ್ಥ ನಾರಾಯಣ, ಕೃಷ್ಣಪ್ಪ, ನಂದೀಶ್‌ ರೆಡ್ಡಿ ಸೇರಿದಂತೆ ಹಲವರನ್ನು ಅವರ ನಿವಾಸದ ಬಳಿಯೇ ವಶಕ್ಕೆ ಪಡೆಯಲು ಮುಂದಾಗಿದ್ದರು. ಮನೆಯಿಂದ ಆಚೆ ಬರದಂತೆ ಅವರವರ ನಿವಾಸದ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. \ No newline at end of file diff --git a/eesanje/url_46_7_1.txt b/eesanje/url_46_7_1.txt new file mode 100644 index 0000000000000000000000000000000000000000..5a5bfc661c076190c85f1f5cbb901bc68d77f554 --- /dev/null +++ b/eesanje/url_46_7_1.txt @@ -0,0 +1,11 @@ +ವಿಧಾನಮಂಡಲದ ಜಂಟಿ ಸ್ಥಾಯಿ ಸಮಿತಿಗಳ ನೇಮಕ + +ಬೆಂಗಳೂರು, ಸೆ.28– ಪ್ರಸಕ್ತ 2024-25ನೇ ಸಾಲಿನ ಕರ್ನಾಟಕ ವಿಧಾನಮಂಡಲದ 9 ವಿವಿಧ ಜಂಟಿ ಸ್ಥಾಯಿ ಸಮಿತಿಗಳು ಹಾಗೂ 6 ಸ್ಥಾಯಿ ಸಮಿತಿಗಳನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ರವರು ರಚನೆ ಮಾಡಿದ್ದಾರೆ. ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಸಿ.ಸಿ. ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದ್ದು, ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ ಸೇರಿದಂತೆ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ ನಾಲ್ವರು ಸದಸ್ಯರು ಸಮಿತಿಯ ಸದಸ್ಯರಾಗಿದ್ದಾರೆ. +ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಸವರಾಜ್‌ ನೀಲಪ್ಪ ಶಿವಣ್ಣನವರ್‌, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ. +ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎ.ಆರ್‌.ಕೃಷ್ಣಮೂರ್ತಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಿ.ಶಿವಣ್ಣ, ಸದಸ್ಯರಾಗಿ ವಿಧಾನಸಭೆಯ 16 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ. +ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಹೆಚ್‌,ಡಿ,ರೇವಣ್ಣ ಹಾಗೂ ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎನ್‌. ಎಚ್‌. ಕೋನರೆಡ್ಡಿ, ಸದಸ್ಯರಾಗಿ ವಿಧಾನಸಭೆಯ 14 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ. +ಗ್ರಂಥಾಲಯ ಸಮಿತಿ ಅಧ್ಯಕ್ಷರಾಗಿ ಶಾಸಕ ಯು.ಬಿ.ಬಣಕಾರ್‌, ಸದಸ್ಯರಾಗಿ ವಿಧಾನಸಭೆಯ 5 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 3ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ರಿಜ್ವಾನ್‌ ಅರ್ಷದ್‌, ಸದಸ್ಯರಾಗಿ ವಿಧಾನಸಭೆಯ 14 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ. +ವಿಧಾನಸಭೆಯ ಸಮಿತಿಗಳಾದ ಅಂದಾಜು ಸಮಿತಿ ಅಧ್ಯಕ್ಷರಾಗಿ ಶಾಸಕ ಹಂಪನಗೌಡ ಬಾದರ್ಲಿ ಹಾಗೂ 18 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಕೆ.ವೈ.ನಂಜೇಗೌಡ ಹಾಗೂ 15 ಶಾಸಕರು ಸದಸ್ಯರಾಗಿದ್ದಾರೆ. +ಹಕ್ಕುಬಾಧ್ಯತೆಗಳ ಸಮಿತಿಯ ಅಧ್ಯಕ್ಷರಾಗಿ ಕೌಜಲಗಿ ಶಿವಾನಂದ ಮಹಾಂತೇಶ ಹಾಗೂ 11 ಶಾಸಕರು ಸದಸ್ಯರಾಗಿದ್ದಾರೆ. ಖಾಸಗಿ ಸದಸ್ಯರು ವಿಧೇಯಕ ಹಾಗೂ ನಿರ್ಣಯಗಳ ಸಮಿತಿಯ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 11 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. +ಅರ್ಜಿಗಳ ಸಮಿತಿಯ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 16ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. ವಸತಿ ಸೌಕರ್ಯ ಸಮಿತಿ ಅಧ್ಯಕ್ಷರಾಗಿ ವಿಧಾನಸಭಾಧ್ಯಕ್ಷರಾದ ರುದ್ರಪ್ಪ, ಮಾನಪ್ಪ ಲಮಾಣಿ ಹಾಗೂ 12 ಶಾಸಕರು ಸದಸ್ಯರಾಗಿ ನೇಮಕವಾಗಿದ್ದಾರೆ. \ No newline at end of file diff --git a/eesanje/url_46_7_10.txt b/eesanje/url_46_7_10.txt new file mode 100644 index 0000000000000000000000000000000000000000..75597ff6ee553dca88185678f81592765fa9d72d --- /dev/null +++ b/eesanje/url_46_7_10.txt @@ -0,0 +1,9 @@ +ನೈತಿಕತೆ ಇದ್ದರೆ ಸಿಎಂ ಒಂದೇ ಒಂದು ಕ್ಷಣವೂ ಅಧಿಕಾರದಲ್ಲಿರಬಾರದು : ಅಶ್ವಥ್‌ ನಾರಾಯಣ + : +ಬೆಂಗಳೂರು,ಸೆ.27-ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆ ಇದ್ದರೆ ಒಂದೇ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯದೇ ಕೂಡಲೇ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ಒತ್ತಾಯಿಸಿದ್ದಾರೆ. +ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಯಾವ ಮುಖ ಇಟ್ಟುಕೊಂಡು ಅಧಿಕಾರದಲ್ಲಿ ಮುಂದುವರೆಯುತ್ತಾರೆ. ಸಾರ್ವಜನಿಕ ಜೀವನದಲ್ಲಿರುವ ಅವರಿಗೆ ದೇಶದ ಕಾನೂನು ಬಗ್ಗೆ ಗೌರವವಿದ್ದರೆ ಒಂದೇ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಇರಬಾರದು ಎಂದು ಆಗ್ರಹಿಸಿದರು. +ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌‍ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಒಂದೇ ಕೆಲಸ ಪ್ರಾಮಾಣಿಕವಾಗಿ ಮಾಡುತ್ತಿದೆ. ಅಧಿಕಾರ ದುರ್ಬಳಕೆ, ಭ್ರಷ್ಟಾಚಾರ, ಆಡಳಿತ ಶೂನ್ಯ, ಸರ್ಕಾರದ ಅಧಿಕಾರಿಗಳ ಆತಹತ್ಯೆ ಇಷ್ಟೇ ಆಗುತ್ತಿದೆ. ಭ್ರಷ್ಟ ಕಾಂಗ್ರೆಸ್‌‍ ಪ್ರಾಮಾಣಿಕ ಆಡಳಿತ ನೀಡುವುದಾಗಿ ಹೇಳುತ್ತಿದ್ದಾರೆ. ಇವರು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿಗಳು. ಅವರ ವಿಚಾರದಲ್ಲಿ ಯಾವುದೂ ಸ್ಪಷ್ಟತೆ ಇಲ್ಲ ಎಂದು ಕಿಡಿಕಾರಿದರು. +ಮಹರ್ಷಿ ವಾಲೀಕಿಯಿಂದ ಆರಂಭವಾಗಿ, ಇತ್ತೀಚಿನವರೆಗೂ ಭ್ರಷ್ಟಾಚಾರ ಆಗಿದೆ. ಶೇ.100 ಭ್ರಷ್ಟಾಚಾರ ಮಾಡಿರುವುದಾಗಿ ಅವರೇ ಒಪ್ಪಿಕೊಂಡಿದ್ದಾರೆ. ಭೂಮಿ ಕಬಳಿಕೆ ಮಾಡಿರುವುದು ಸ್ಪಷ್ಟವಾಗಿದೆ. ಏನೇ ಹೇಳಿದರೂ ನಾವು ಮಾಡಿಲ್ಲ ಅಂತಿದ್ದಾರೆ. ಇವರ ಭ್ರಷ್ಟಾಚಾರ ಸಂಪೂರ್ಣವಾಗಿ ಬಯಲಿಗೆ ಬಂದಿದೆ. ಕೋರ್ಟಲ್ಲಿ ಎಲ್ಲವೂ ಬಯಲಾಗಿದೆ. ಸಾಮಾನ್ಯ ಜನರಿಗೂ ಇದು ಅರ್ಥ ಆಗಿದೆ ಎಂದರು. +ಏನೆಲ್ಲಾ ಕ್ರಮ ಆಗಬೇಕು ಎಂದು ರಾಜ್ಯಪಾಲರು ಸೂಚಿಸಿದ್ದರೂ ಇದರ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ. ಕೋರ್ಟ್‌ ಕೂಡ ಇವರ ತಪ್ಪು ಏನೆಂದು ತಿಳಿಸಿದೆ. ಜಮೀನು ಹೇಗೆ ಕೈ ಬದಲಾವಣೆ ಆಗಿದೆ ಎಂಬುದರ ಬಗ್ಗೆ ಸಂಪೂರ್ಣ ದಾಖಲೆ ಇದೆ. ಅಧಿಕಾರ ಹೇಗೆ ದುರ್ಬಳಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಇಷ್ಟೆಲ್ಲಾ ಆದರೂ ರಾಜೀನಾಮೆ ಕೊಡಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ದೂರಿದರು. +ಸರ್ಕಾರವನ್ನು ಕಾಂಗ್ರೆಸ್‌‍ಮಯ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಏನೇ ಕೇಳಿದರೂ ಉತ್ತರ ಇಲ್ಲ. ರಾಜ್ಯಪಾಲರಿಗೆ ಚೀಫ್‌ ಸೆಕ್ರೆಟರಿ ಉತ್ತರ ಕೊಡುವಂತಿಲ್ಲ, ಡಿಜಿಪಿ ಮೇಲೆ ನಂಬಿಕೆ ಇಲ್ಲ. ಕ್ಯಾಬಿನೆಟ್‌ ನಲ್ಲಿ ಅಳೆದು ತೂಗಿ ಉತ್ತರ ಕೊಡುತ್ತೇ ಎನ್ನುತಾರೆ. ರಾಜ್ಯಪಾಲರಿಗೆ ಮಾಹಿತಿ ಕೊಡುವುದಿಲ್ಲ ಎಂಬುದು ಕಾಂಗ್ರೆಸ್‌‍ ಆಡಳಿತಾನಾ? ಮುಖ್ಯ ಕಾರ್ಯದರ್ಶಿ, ಅಧಿಕಾರಿಗಳನ್ನು ರಾಜ್ಯಪಾಲರು ನೇಮಕ ಮಾಡ್ತಾರಾ ಎಂದು ಪ್ರಶ್ನಿಸಿದರು. +ಮಾಜಿ ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೋಳಿವಾಡ ಅವರಿದ ಆರಂಭವಾಗಿ ಸಂತೋಷ್‌ ಹೆಗ್ಡೆ ಅವರು ಹೇಳಿದ್ದಾರೆ. ಫೇರ್‌ ಅಂಡ್‌ ಇಂಪಾರ್ಷಲ್‌ ಆಗಿ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಸಿದ್ದರಾಮಯ್ಯ ಅವರ ಮಾತು, ಅವರೇ ಕೇಳಲ್ಲ ಅಂದರೆ ಹೇಗೆ ಎಂದು ವ್ಯಂಗ್ಯವಾಡಿದರು. \ No newline at end of file diff --git a/eesanje/url_46_7_11.txt b/eesanje/url_46_7_11.txt new file mode 100644 index 0000000000000000000000000000000000000000..4e772c64be3911f1df95a9f97fa33b6fd39a655f --- /dev/null +++ b/eesanje/url_46_7_11.txt @@ -0,0 +1,8 @@ +ಸಿಬಿಐ ತನಿಖೆಗೆ ರಾಜ್ಯ ಸರ್ಕಾರದ ಅನುಮತಿ : ಸಿಎಂ ರಕ್ಷಣೆಗೆ ಈ ನಿರ್ಣಯ ಮಾಡಿಲ್ಲ ಎಂದ ಸಚಿವ ಪಾಟೀಲ್ + +ಬೆಂಗಳೂರು,ಸೆ.27-ಸಿಬಿಐ ಮುಕ್ತ ತನಿಖೆಗೆ ಅವಕಾಶ ನಿರಾಕರಿಸುವ ಬದಲಾವಣೆಗಳ ಕುರಿತು ಕಾಂಗ್ರೆಸ್ ನಾಯಕರು ಸಮರ್ಥನೆ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ಷಣೆಗಾಗಿ ಈ ರೀತಿಯ ನಿರ್ಣಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಈ ಹಿಂದೆ ಕೇಂದ್ರದ ಅಧಿಕಾರಿಗಳ ವಿರುದ್ಧ ನೇರವಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ನಮ್ಮ ಅನುಮತಿ ಬೇಕಿರಲಿಲ್ಲ. ಇನ್ನು ಮುಂದೆ ಕೇಂದ್ರದ ಅಧಿಕಾರಿಗಳ ತನಿಖೆಗೂ ರಾಜ್ಯಸರ್ಕಾರದ ಅನುಮತಿಯ ಅಗತ್ಯವಿದೆ ಎಂಬ ಬದಲಾವಣೆ ಮಾಡಿದ್ದೇವೆ. ಸಿದ್ದರಾಮಯ್ಯನವರಿಗಾಗಿ ಈ ನಿರ್ಣಯ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಕೇಂದ್ರ ಸರ್ಕಾರದ ನೌಕರರು ಅಲ್ಲ ಎಂದು ಸ್ಪಷ್ಟಪಡಿಸಿದರು. +ರಾಜ್ಯಸರ್ಕಾರದ ನಿರ್ಣಯ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸಂಬಂಧಪಟ್ಟಿದ್ದಾಗಿದೆ. ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡುವುದು ಸರಿಯಲ್ಲ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರಮೋದಿ ಹರಿಯಾಣದಲ್ಲಿ ಕರ್ನಾಟಕದ ಪ್ರಕರಣವನ್ನು ಉಲ್ಲೇಖ ಮಾಡಿದ್ದಾರೆ. ಮಾನ್ಯ ಪ್ರಧಾನಿಯವರು ಎಲೆಕ್ಟ್ರೋಲ್ ಬಾಂಡ್ಗಳ ಬಗ್ಗೆ ಸುಪ್ರೀಂಕೋರ್ಟ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಪುನರುಚ್ಚರಿಸಬೇಕು. +ಮೋದಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಪ್ರತಿಸವಾಲು ಹಾಕಿದರು.ಕೇಂದ್ರಸಚಿವ ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ. ಅವರೂ ಕೂಡ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು. +ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ವಿರುದ್ಧ ಈವರೆಗೂ ಪ್ರಾಥಮಿಕ ತನಿಖೆ ಕೂಡ ಆಗಿಲ್ಲ ಎಂಬುದನ್ನು ಮರೆಯುವಂತಿಲ್ಲ ಎಂದು ಹೇಳಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ರವರು ಅಧಿಕಾರಿಗಳಿಗೆ ನೇರವಾಗಿ ಪತ್ರ ಬರೆಯುವುದಿಲ್ಲ. ಮುಖ್ಯಮಂತ್ರಿಯವರಿಗೆ ಬರೆಯಬೇಕು. ಎಲ್ಲದಕ್ಕೂ ಒಂದು ನಿಯಮವಿದೆ. +ರಾಜ್ಯಪಾಲರು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ನಿಯಮಗಳನ್ನು ಮೀರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಅವರಿಗೆ ವಯಸ್ಸಾಗಿದೆ. ಹೀಗಾಗಿ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು. diff --git a/eesanje/url_46_7_12.txt b/eesanje/url_46_7_12.txt new file mode 100644 index 0000000000000000000000000000000000000000..9265bb02d7128468f45e364fde5a3af3f84d4e55 --- /dev/null +++ b/eesanje/url_46_7_12.txt @@ -0,0 +1,9 @@ +ಕೋರ್ಟ್ ಸೂಚನೆಯಂತೆ ಸಿಎಂ ವಿರುದ್ಧ ಎಫ್ಐಆರ್ ದಾಖಲು..? + ..? +ಬೆಂಗಳೂರು,ಸೆ.27– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಸಿಆರ್ಪಿಸಿ ಸೆಕ್ಷನ್ ಅಡಿಯೇ ಇಂದು ಎಫ್ಐಆರ್ ದಾಖಲಾಗಲಿದೆ. ಸಿಆರ್ಪಿಸಿ ಸೆಕ್ಷನ್ 156(3)ರಡಿಯೇ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದುನ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಎಸ್ಪಿ ಇಂದು ಸಂಜೆಯೊಳಗೆ ಎಫ್ಐಆರ್ ದಾಖಲಿಸಲಿದ್ದಾರೆ. +ಯಾವ ಕಾಯ್ದೆಯಡಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದೂರು ದಾಖಲಿಸಬೇಕೆಂದು ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಲೋಕಾಯುಕ್ತ ಎಡಿಜಿಪಿ ಮೌನೀಶ್ ಕರ್ಬಿಕರ್ ಅವರಿಗೆ ಪತ್ರ ಬರೆದು ಸಲಹೆ ಕೇಳಿದ್ದರು.ಈ ನಡುವೆ ಪ್ರಕರಣದ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಸಹ ಕೇಳಿದ್ದರು. +ಈ ಪತ್ರಕ್ಕೆ ಉತ್ತರಿಸಿರುವ ಎಡಿಜಿಪಿ ಮೌನೀಶ್ ಕರ್ಬಿಕರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದಂತೆ ಸಿಆರ್ಪಿಸಿ ಸೆಕ್ಷನ್ 156(3) ಅಡಿಯೇ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.ಹಿರಿಯ ಅಧಿಕಾರಿಗಳ ಸೂಚನೆ ಮತ್ತು ಕಾನೂನು ತಜ್ಞರ ಸಲಹೆಯಂತೆ ಮೈಸೂರು ಲೋಕಾಯುಕ್ತ ಎಸ್ಪಿ ಅವರು ಪ್ರಕರಣ ದಾಖಲಿಸಲಿದ್ದಾರೆ. +ಇದರಿಂದಾಗಿ ಕಳೆದ ಎರಡು ದಿನಗಳಿಂದ ಸಿದ್ದರಾಮಯ್ಯ ಪ್ರಕರಣದಲ್ಲಿ ಯಾವ ಕಾಯ್ದೆಯಡಿ ದೂರು ದಾಖಲಿಸಬೇಕು ಎಂಬುದರ ಕುರಿತು ಉಂಟಾಗಿದ್ದ ಗೊಂದಲ ಬಹುತೇಕ ನಿವಾರಣೆಯಾಗಿದೆ. ಇದೀಗ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಯಾವುದೇ ಸಂದರ್ಭದಲ್ಲಿ ಎಫ್ಐಆರ್ ದಾಖಲಾಗುವ ಸಾಧ್ಯತೆ ನಿಚ್ಚಳವಾಗಿದೆ. +ಸೆಕ್ಷನ್ 120ಬಿ(ಅಪರಾಧಿಕ ಒಳಸಂಚು), 166-ಯಾವುದೇ ವಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕ ನೌಕರನು ಕಾನೂನು ಬದ್ದ ಆದೇಶ ಪಾಲಸದಿರುವುದು, 403 ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 ಅಪರಾಧಿಕ ನಂಬಿಕೆದ್ರೋಹ, 420 ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಮಾಣಿಕವಾಗಿ ಪ್ರೇರೇಪಿಸುವುದು, 42 ಕೇಡಿನ ಅಪರಾಧಕ್ಕಾಗಿ ದಂಡನೆ, 465 ಖೋಟಾ ತಯಾರಿಕೆಗೆ ದಂಡನೆ, 468 ವಂಚನೆ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 ಅಕ್ರಮ ಬಂಧನ, 351 ಹಲ್ಲೆ ಕಾನೂನಿನಡಿ ತನಿಖೆ ನಡೆಯಲಿದೆ. +ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿಯಾದರೆ ಪಾರ್ವತಿ 2ನೇ ಆರೋಪಿ, ಮಲ್ಲಿಕಾರ್ಜುನಸ್ವಾಮಿ 3ನೇ ಹಾಗೂ ದೇವರಾಜ್ 4ನೇ ಆರೋಪಿಯಾಗಲಿದ್ದಾರೆ. ನ್ಯಾಯಾಲಯವು ಆರೋಪಿಗಳ ವಿರುದ್ಧ ನಿರ್ಧಿಷ್ಟ ಸೆಕ್ಷನ್ಗಳಡಿ ದಾಖಲಿಸಿ ತನಿಖೆ ನಡೆಸಬೇಕೆಂದು ನಿರ್ದೇಶನ ನೀಡಿರುವುದರಿಂದ ಲೋಕಾಯುಕ್ತ ಪೊಲೀಸರು ಅದರ ಪ್ರಕಾರವೇ ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದಾರೆ. +ಎಫ್ಐಆರ್ ದಾಖಲಾದ ನಂತರ ಆರೋಪಿ ಸ್ಥಾನದಲ್ಲಿ ಇರುವವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ಯಾವ ಸೆಕ್ಷನ್ನಡಿ ದೂರು ದಾಖಲಿಸಬೇಕೆಂಬ ಗೊಂದಲ ಉಂಟಾಗಿತ್ತು. ಸಿಆರ್ಪಿಸಿ ಅಡಿ ಎಫ್ಐಆರ ದಾಖಲಿಸುವ ಬಗ್ಗೆಯೇ ಭಿನ್ನಾಭಿಪ್ರಾಯ ಇತ್ತು. ಅಂತಿಮವಾಗಿ ಕಾನೂನು ತಜ್ಞರು ನ್ಯಾಯಾಲಯದ ಆದೇಶದಂತೆ ದೂರು ದಾಖಲಿಸಬೇಕೆಂಬ ಸಲಹೆ ಕೊಟ್ಟ ನಂತರ ಗೊಂದಲ ಬಗೆಹರಿದಿದೆ. \ No newline at end of file diff --git a/eesanje/url_46_7_2.txt b/eesanje/url_46_7_2.txt new file mode 100644 index 0000000000000000000000000000000000000000..88416b3ffbb8b276b46617a6d9cea9154b3b875b --- /dev/null +++ b/eesanje/url_46_7_2.txt @@ -0,0 +1,10 @@ +“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದೇವೆ” + 12 +ಅರಕಲಗೂಡು, ಸೆ.28-ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೆ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. +ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಬಹು ದೊಡ್ಡ ಇಲಾಖೆಯಾಗಿದೆ. ರಾಜ್ಯದಲ್ಲಿ 58 ಸಾವಿರ ಶಾಲಾ ಕಾಲೇಜುಗಳು ಇದ್ದು ಒಂದು ಕೋಟಿಗೂ ಹೆಚ್ಚಿನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. +ಸರ್ಕಾರಿ ನೌಕರರಲ್ಲಿ ಶೇ 40 ರಷ್ಟು ನೌಕರರು ಈ ಇಲಾಖೆಯವರೆ ಇದ್ದು ವಾರ್ಷಿ ರೂ 50 ಸಾವಿರ ಕೋಟಿ ವೆಚ್ಚವಾಗುತ್ತಿದೆ. 7 ನೇ ವೇತನ ಆಯೋಗದ ಅನುಷ್ಠಾನದಿಂದ ಶಿಕ್ಷರ ವೇತನದಲ್ಲಿ ರೂ 6 ಸಾವಿರ ಕೋಟಿ ಹೆಚ್ಚಳವಾಗಿದೆ ಎಂದರು. +ಕಲ್ಯಾಣ ಕರ್ನಾಟಕದಲ್ಲಿ 6 ಸಾವಿರ ಶಿಕ್ಷಕರ ನೇಮಕಾತಿ ಬಾಕಿ ಇದ್ದು 5800 ಶಿಕ್ಷಕರನ್ನು ಒಂದುತಿಂಗಳಲ್ಲಿ ನೇಮಕಾತಿ ಮಾಡಲಾಗುವುದು. ರಾಜ್ಯದಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಮಾಡಿ ಕೊಂಡಿದ್ದು ದೈಹಿಕ ಶಿಕ್ಷರು ಸೇರಿದಂತೆ ವಿವಿಧ ವಿಷಯಗಳನ್ನು ಬೋಧಿಸಲು ಹೆಚ್ಚುವರಿಯಾಗಿ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. +ಸರ್ಕಾರಿ ಶಾಲೆಯ ಮಕ್ಕಳಲ್ಲಿ ಅಪೌಷ್ಠಕತೆ ಹೊಗಲಾಡಿಸಲಿ ಈ ಗಾಗಲೆ ರಾಗಿ ಮಾಲ್ಟ ನೀಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಕೋಳಿ ಮೊಟ್ಟೆ ನೀಡುವ ಯೋಜನೆ ಮಾಡಲಾಗಿತ್ತು.ಈ ಯೋಜನೆಗೆ ಅಜೀಂ ಪ್ರೇಂಜೀ ಪೌಂಡೇಷನ್‌ ರೂ1591ಕೋಟಿ ದೇಣಿಗೆ ನೀಡಿದ್ದು ಇದರಲ್ಲಿ ವಾರದ 6 ದಿನಗಳೂ ಮೊಟ್ಟೆ ನೀಡುವ ಯೋಜನೆ ರೂಪಿಸಿದ್ದು ಈಗಾಗಲೇ ಚಾಲನೆ ನೀಡಲಾಗಿದೆ ಎಂದರು. +ಶಾಸಕ ಎ. ಮಂಜು ಮಾತನಾಡಿ, ತಾಲ್ಲೂಕಿನಲ್ಲಿ ತಾವು ಹಳೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ತೆರೆದಿರುವ 12 ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ, ಇದಕ್ಕೆ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಹಕಾರ ಮುಖ್ಯವಾಗಿದೆ. ಸಚಿವರು ತಾಲ್ಲೂಕಿನಲ್ಲಿ ಶೈಕ್ಷಣಿಕ ಅಭಿವೃದ್ದಿಗೆ ಹೆಚ್ಚಿನ ನೆರವು ನೀಡುವಂತೆ ಮನವಿ ಮಾಡಿದರು. +ಸಂಸದ ಶ್ರೇಯಸ್‌‍ ಎಂ. ಪಟೇಲ್‌ ಹಾಗೂ ಹುಣಸೂರು ಬಾಲಕಿಯರ ಸರ್ಕಾರಿಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಚ್‌.ಎನ್‌. ಗಿರೀಶ್‌ ಮಾತನಾಡಿದರು. ಇದೇ ವೇಳೆ ನವೀಕೃತ ಗುರುಭವನವನ್ನು ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. +ಪಪಂ ಅಧ್ಯಕ್ಷ ಎಸ್‌‍. ಎಸ್‌‍. ಪ್ರದೀಪ್‌ ಕುಮಾರ್‌, ತಹಶೀಲ್ದಾರ್‌ ಸೌಮ್ಯ, ಜಿಪಂ ಉಪಕಾರ್ಯದರ್ಶಿ ಚಂದ್ರಶೇಖರ್‌, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಉಪನಿರ್ದೇಶಕ ಮಹಾಲಿಂಗಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್‌‍.ಕೆ. ಪಾಂಡು, ಡಯಟ್‌ ಪ್ರಾಂಶುಪಾಲ ಜಿ. ರಂಗನಾಥಸ್ವಾಮಿ, ತಾಪಂ ಇಒ ಪ್ರಕಾಶ್‌, ಬಿಇಒ ಕೆ.ಪಿ. ನಾರಾಯಣ್‌‍, ಬಿಆರ್‌ ಸಿ ಸಿ.ಎಸ್‌‍. ಬಾಲರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ. ಎ. ರಂಗಸ್ವಾಮಿ, ಪಪಂ ಮುಖ್ಯಾಧಿಕಾರಿ ಬಸವರಾಜ್‌ ಟಾಕಪ್ಪ ಶಿಗ್ಗಾಂವಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪ, ಜಿಲ್ಲಾ ಪ್ರೌಢಶಾಲಾ ಸಂಘದ ಅಧ್ಯಕ್ಷ ಎಚ್‌‍.ಸಿ. ಬಸವರಾಜ್‌‍, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೈ.ಪಿ.ಶಿವಶಂಕರ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_7_3.txt b/eesanje/url_46_7_3.txt new file mode 100644 index 0000000000000000000000000000000000000000..722809400d01686e83503aedcc8a8d63a89fe9aa --- /dev/null +++ b/eesanje/url_46_7_3.txt @@ -0,0 +1,14 @@ +ಖರ್ಗೆ ಕುಟುಂಬದಿಂದ ಸರ್ಕಾರಿ ಆಸ್ತಿ ಕಬಳಿಕೆ : ಲೋಕಾಯುಕ್ತಕ್ಕೆ ಎನ್‌.ಆರ್‌.ರಮೇಶ್‌ ದೂರು + +ಬೆಂಗಳೂರು,ಸೆ.27– ತಮ ಪ್ರಭಾವ ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ನಗರದ ಎರಡು ಬೇರೆ ಬೇರೆ ಸ್ಥಳಗಳಲ್ಲಿ ಅಮೂಲ್ಯವಾದ ಸರ್ಕಾರಿ ಸ್ವತ್ತುಗಳನ್ನು ಕಬಳಿಕೆ ಮಾಡಿಕೊಂಡಿದೆ ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಈ ಕುರಿತಂತೆ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ದಾಖಲೆ ಸಮೇತ ದೂರು ನೀಡಿದ್ದಾರೆ. +ಲೋಕಾಯುಕ್ತ ಪೊಲೀಸ್‌‍ ಮಹಾನಿರ್ದೇಶಕ ಸುಬ್ರಮಣ್ಯೇಶ್ವರ ರಾವ್‌ ಅವರನ್ನು ಭೇಟಿಯಾಗಿ ದೂರು ನೀಡಿದ ನಂತರ ಮಾತ ನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬಸ್ಥರ ನೇತತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಹೆಸರಿನಲ್ಲಿ ಬಹತ್‌ ಭೂ ಹಗರಣ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. +ನಾಡಿನ ಅತ್ಯಂತ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಮತ್ತವರ ಕುಟುಂಬದವರು ಭಾರತ ಸಂವಿಧಾನದ ಬಗ್ಗೆ ಸ್ಪಷ್ಟ ತಿಳುವಳಿಕೆ ಇದ್ದರೂ ಸಹ, ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತಮದೇ ಸಿದ್ದಾರ್ಥ ವಿಹಾರ ಟ್ರಸ್ಟ್‌ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂದಿದ್ದಾರೆ. +2014ರಲ್ಲಿ ಬಿಟಿಎಂ 4ನೇ ಹಂತದಲ್ಲಿ 8,002 ಚ. ಮೀ. (86,133 ಚ. ಅಡಿ) ವಿಸ್ತೀರ್ಣದ ಸಿಎ ನಿವೇಶನವನ್ನು ಶೈಕ್ಷಣಿಕ ಉದ್ದೇಶಕ್ಕೆಂದು ಬಿಡಿಎಯಿಂದ 30 ವರ್ಷಗಳ ಗುತ್ತಿಗೆಗೆ ಪಡೆದಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಸಂಸ್ಥೆಯು ಈ ವಿಷಯವನ್ನು ಮರೆ ಮಾಚಿ ಇದೀಗ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಯಲಹಂಕ ಬಳಿಯ ಬಾಗಲೂರಿನ ಹೈಟೆಕ್‌ ಡಿಫೆನ್‌್ಸ ಮತ್ತು ಏರೋಸ್ಪೇಸ್‌‍ ಪಾರ್ಕ್‌ನ ಹಾರ್ಡ್‌ವೇರ್‌ ಪಾರ್ಕ್‌ ನಲ್ಲಿ 05 ಎಕರೆ ವಿಸ್ತೀರ್ಣದ ಸಿಎ ನಿವೇಶನವನ್ನು ಮಂಜೂರು ಮಾಡಿಸಿ ಕೊಳ್ಳುವ ಮೂಲಕ ಕಾನೂನು ಬಾಹಿರ ಕಾರ್ಯವನ್ನು ಎಸಗಿದೆ. +ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ, ಮಾರುತಿ ರಾವ್‌ ಡಿ. ಮಾಲೆ, ಶಾಂತಪ್ಪ, ಸಾಯಬಣ್ಣ ಅವರನ್ನೊಳಗೊಂಡ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಎಂಬ ಸಂಸ್ಥೆಯನ್ನು ಗುಲ್ಬರ್ಗ ಜಿಲ್ಲೆಯ ಕುಸನೂರು ಗ್ರಾಮದ ವಿಳಾಸದಲ್ಲಿ 1994 ರಲ್ಲಿ ಪ್ರಾರಂಭಿಸಿದ ನಂತರ, ಟ್ರಸ್ಟ್‌ ಮೂಲಕ ಬೆಂಗಳೂರು ಮಹಾನಗರದಲ್ಲಿ ಶೈಕ್ಷಣಿಕ ಸಂಸ್ಥೆ ಯನ್ನು ಪ್ರಾರಂಭಿಸುವ ಉದ್ದೇಶ ದಿಂದ 2009ರಲ್ಲಿ ಬಿಡಿಎಯಲ್ಲಿ ಸಿವ ನಿವೇಶನ ಹಂಚಿಕೆ ಮಾಡುವಂತೆ ಅರ್ಜಿ ಸಲ್ಲಿಸಿರುತ್ತಾರೆ. +ಸಿಎ ನಿವೇಶನಕ್ಕಾಗಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿ ಯನ್ನು ಪುರಸ್ಕರಿಸಿದ್ದ ಬೆಂಗಳೂರು ಅಭಿವದ್ಧಿ ಪ್ರಾಧಿಕಾರ ಮೊದಲಿಗೆ ಬನಶಂಕರಿ 6ನೇ ಹಂತ, 5ನೇ ಬ್ಲಾಕ್‌ ನಲ್ಲಿರುವ 8,125 ಚ. ಮೀಟರ್‌ ವಿಸ್ತೀರ್ಣದ ಸಿವ ನಿವೇಶನ ಸಂಖ್ಯೆ 3 ಅನ್ನು ಹಂಚಿಕೆ ಮಾಡಿ 2010 ರಂದು ಹಂಚಿಕೆ ಪತ್ರ ನೀಡಿರುತ್ತದೆ. +ಸಿದ್ಧಾರ್ಥ ವಿಹಾರ ಟ್ರಸ್ಟ್‌ ಟ್ರಸ್ಟೀಗಳಲ್ಲಿ ಒಬ್ಬರಾದ ರಾಧಾಕಷ್ಣರವರು ಬನಶಂಕರಿ 6ನೇ ಹಂತದ 5ನೇ ಬ್ಲಾಕ್‌ ನ ಸಿಎ ನಿವೇಶನ ಸಂಖ್ಯೆ – 03 ಕ್ಕೆ ಬದಲಾಗಿ ಈಗಾಗಲೇ ಅಭಿವದ್ಧಿಗೊಂಡಿರುವ ಬಡಾವಣೆಯಲ್ಲಿ ಬದಲಿ ನಿವೇಶನ ಹಂಚಿಕೆ ಮಾಡುವಂತೆ ಬೆಂಗಳೂರು ಅಭಿವದ್ಧಿ ಪ್ರಾಧಿಕಾರಕ್ಕೆ ಮನವಿ ಪತ್ರ ಸಲ್ಲಿಸುತ್ತಾರೆ. ಸದರಿ ಮನವಿ ಪತ್ರದಲ್ಲಿ ಬೆಂಗಳೂರು ಮಹಾನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾಗಿರುವ ಬಿಟಿಎಂ 4ನೇ ಹಂತದ 2ನೇ ಬ್ಲಾಕ್‌ನ ಸಿಎ ನಿವೇಶನ ಸಂಖ್ಯೆ – 05 ಅನ್ನು ಬದಲಿ ನಿವೇಶನದ ಹೆಸರಿನಲ್ಲಿ ಹಂಚಿಕೆ ಮಾಡಲಾಗುತ್ತದೆ. +ಸದರಿ ಬಿಟಿಎಂ 4ನೇ ಹಂತದ ಸಿಎ ನಿವೇಶನವನ್ನು ಸಿದ್ಧಾರ್ಥ ವಿಹಾರ ಟ್ರ್ಟ್‌‍ನ ಕಾರ್ಯದರ್ಶಿ ಮಾರುತಿ ರಾವ್‌ ಡಿ. ಮಾಲೆ ಅವರ ಹೆಸರಿಗೆ 2014 ರಂದು ಬಿಡಿಎ ಸ್ವಾಧೀನ ಪತ್ರ ನೀಡಿರುತ್ತದೆ. +ಪ್ರಸ್ತುತ 130 ಕೋಟಿ ರೂ. ಬೆಲೆ ಬಾಳುವ ಈ ಆಸ್ತಿಗೆ ಬಿಬಿಎಂಪಿ ಯಿಂದ ಖಾತಾ ಕೂಡ ಮಾಡಿ ಕೊಡಲಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದರೆ, ಖರ್ಗೆ ಅವರು ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಒಂದೇ ಸಂಸ್ಥೆಯ ಹೆಸರಿಗೆ – ಒಂದೇ ಉದ್ದೇಶಕ್ಕಾಗಿ – ಒಂದಕ್ಕಿಂತ ಹೆಚ್ಚು ಸರ್ಕಾರೀ ಸ್ವತ್ತನ್ನು ಪಡೆಯುವುದು ಕಾನೂನು ಸಮತವಲ್ಲದ ಕಾರ್ಯ ಎಂಬ ಸ್ಪಷ್ಟ ಅರಿವು ಇದ್ದರೂ ಟ್ರಸ್ಟ್‌ನವರು 2024ರ ಮಾರ್ಚ್‌ ತಿಂಗಳಿನಲ್ಲಿ ಕೆಐಎಡಿಬಿಗೆ ಅರ್ಜಿ ಸಲ್ಲಿಸಿ ಬಾಗಲೂರಿನಲ್ಲಿ ಅಭಿವದ್ಧಿ ಪಡಿಸಿರುವ ಹೈಟೆಕ್‌ ಡಿಫೆನ್ಸ್ ಮತ್ತು ಏರೋಸ್ಪೇಸ್‌‍ ಪಾರ್ಕ್‌ನ ಹಾರ್ಡ್‌ವೇರ್‌ ಪಾರ್ಕ್‌ನಲ್ಲಿ ಸಿಎ ನಿವೇಶನವನ್ನು ಹಂಚಿಕೆ ಮಾಡುವಂತೆ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿ ಸಲಾಗಿದೆ. +ಸದರಿ ಸ್ವತ್ತಿಗೆ ಗುತ್ತಿಗೆ ಮೊತ್ತ 14,25,00,000 ರೂ. ಗಳನ್ನು ನಿಗದಿ ಪಡಿಸಿ 30 ವರ್ಷಗಳ ಗುತ್ತಿಗೆಗೆ ನೀಡಲಾಗಿದೆ. ಆದರೆ ಹಂಚಿಕೆಯಾಗಿರುವ 5 ಎಕರೆ ಮೌಲ್ಯದ ಆಸ್ತಿ ಮೌಲ್ಯದ ಸದ್ಯದ ಬೆಲೆ 110 ಕೋಟಿ ರೂ.ಗಳಾಗಿರುವುದು ವಿಶೇಷ. +ಒಂದೇ ಸಂಸ್ಥೆಯ ಹೆಸರಿಗೆ ಒಟ್ಟು 240 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಎರಡು ಸಿಎ ನಿವೇಶನಗಳನ್ನು ಬಿಡಿಎ ಮತ್ತು ಕೆಐಎಡಿಬಿ ಸರ್ಕಾರಿ ಸಂಸ್ಥೆಗಳಿಂದ ಹಂಚಿಕೆ ಮಾಡಿಸಿಕೊಳ್ಳುವ ಮೂಲಕ ಮಹಾ ವಂಚನೆ ಮಾಡಿರುವ ಟ್ರಸ್ಟ್‌ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಸಿದ್ಧಾರ್ಥ ವಿಹಾರ ಟ್ರಸ್ಟ್‌ ಹೆಸರಿಗೆ ಹಂಚಿಕೆ ಮಾಡಿರುವ ಕೈಗಾರಿಕಾ ಸಚಿವ ಎಂ.ಬಿ .ಪಾಟೀಲ್‌, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್‌, ಮತ್ತಿತರ ಇಲಾಖೆ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ, ವಂಚನೆ, ಮತ್ತು ಸರ್ಕಾರಿ ಭೂ ಕಬಳಿಕೆಗೆ ಸಹಕಾರ ಪ್ರಕರಣಗಳನ್ನು ದಾಖಲಿಸಲಾಗಿದೆ. ಜೊತೆಗೆ ರಾಜ್ಯಪಾಲರಿಗೂ ಸಂಪೂರ್ಣ ದಾಖಲೆ ನೀಡಲಾಗಿದೆ ಎಂದು ರಮೇಶ್‌ ಹೇಳಿದರು. \ No newline at end of file diff --git a/eesanje/url_46_7_4.txt b/eesanje/url_46_7_4.txt new file mode 100644 index 0000000000000000000000000000000000000000..0d84d557ee37f46de0a950ff05d1e924dbd75539 --- /dev/null +++ b/eesanje/url_46_7_4.txt @@ -0,0 +1,13 @@ +ಮುಡಾ ಸಣ್ಣ ಪ್ರಕರಣ : ಸಿಎಂ ಬೆನ್ನಿಗೆ ನಿಂತ ಮಲ್ಲಿಕಾರ್ಜುನ ಖರ್ಗೆ + ' +ಬೆಂಗಳೂರು,ಸೆ.27– ಉದ್ಯಮಿಗಳ 16 ಲಕ್ಷ ಕೋಟಿ ಸಾಲವನ್ನು ರೈಟ್‌ ಆಫ್‌ ಮಾಡಲಾಗಿದೆ. ಕೋಟ್ಯಂತರ ರೂ. ನಷ್ಟವನ್ನು ಕಡೆಗಣಿಸಿ ಸಣ್ಣಪ್ರಮಾಣದ ಮುಡಾ ಪ್ರಕರಣವನ್ನು ಪ್ರತಿನಿತ್ಯ ಚರ್ಚಿಸಲಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಹೈಕಮಾಂಡ್‌ ಇದೆ ಎಂದು ಹೇಳುವ ಮೂಲಕ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗುವ ಹಂತದಲ್ಲಿ ಹೈಕಮಾಂಡ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರ ಈ ಹೇಳಿಕೆಗಳು ರಾಜಕೀಯವಾಗಿ ಭುಗಿಲೆದ್ದಿದ್ದ ಚರ್ಚೆಗಳಿಗೆ ತೆರೆ ಎಳೆದಿವೆ. +ಮುಡಾ ಪ್ರಕರಣದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿಲ್ಲ. ದೋಷಿ ಎಂದೂ ಕೂಡ ತೀರ್ಮಾನವಾಗಿಲ್ಲ. ಆದರೂ ಪ್ರತಿದಿನ ಈ ಕುರಿತೇ ಹೆಚ್ಚು ಚರ್ಚೆಯಾಗುತ್ತಿದೆ. ಈ ಮೂಲಕ ಕಾಂಗ್ರೆಸ್‌‍ ಪಕ್ಷದ ವರ್ಚಸ್ಸನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. +ಈ ಹಿಂದೆ ಗುಜರಾತ್‌ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾ ಹತ್ಯಾಕಾಂಡ ನಡೆದಿತ್ತು. ಆ ವೇಳೆ ಅವರು ರಾಜೀನಾಮೆ ನೀಡಿದ್ದರೇ? ಅಮಿತ್ ಷಾ ವಿರುದ್ಧವೂ ಹಲವು ಪ್ರಕರಣಗಳು ಬಾಕಿ ಇದ್ದವು. ಅವರೂ ಕೂಡ ರಾಜೀನಾಮೆ ನೀಡಿರಲಿಲ್ಲ. ಬಿಜೆಪಿಯವರು ಯಾವುದೋ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು. +ವ್ಯಕ್ತಿಯ ವರ್ಚಸ್ಸನ್ನು ಹಾಳು ಮಾಡುವ ಮೂಲಕ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟು ಮಾಡುವ ಹುನ್ನಾರಗಳನ್ನು ಬಿಜೆಪಿ ನಡೆಸಿದೆ. ಬಿಜೆಪಿಯ ಕೇಂದ್ರ ನಾಯಕರ ಗುರಿ ಕಾಂಗ್ರೆಸ್‌‍ ಪಕ್ಷವಾಗಿದೆ. ವ್ಯಕ್ತಿಗತ ಗುರಿಯಿಲ್ಲ. ಏನೇ ಆದರೂ ಪಕ್ಷ ಮುಂದುವರೆಯುತ್ತದೆ. ನಮ ಪಕ್ಷವನ್ನು ಮುಗಿಸಲು ಮೂಲ ಮತಬ್ಯಾಂಕನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ಈ ಎಲ್ಲಾ ಪ್ರತಿಭಟನೆಗಳು, ಚರ್ಚೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಕಾನೂನು ತನ್ನ ನಿರ್ಧಾರವನ್ನು ತೆಗೆದುಕೊಳ್ಳಲಿ. ಆ ಸಂದರ್ಭ ಎದುರಾದಾಗ ನಾವು ಪರಿಶೀಲನೆ ನಡೆಸುತ್ತೇವೆ. ಈಗ ಏನೂ ಇಲ್ಲ. ಆದರೂ ಪ್ರತಿದಿನ ಮುಡಾ … ಮುಡಾ… ಎಂದು ಚರ್ಚೆಗಳಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಉದ್ಯಮಿಗಳ 14 ಲಕ್ಷ ಕೋಟಿ ರೂ.ಗಳ ಸಾಲವನ್ನು ರೈಟ್‌ ಆಫ್‌ ಹೆಸರಿನಲ್ಲಿ ಮನ್ನಾ ಮಾಡಲಾಗಿದೆ. ಅದನ್ನು ಮರೆತು ದೋಷಾರೋಪಣ ಪಟ್ಟಿಯೂ ಸಲ್ಲಿಕೆಯಾಗಿಲ್ಲ, ಶಿಕ್ಷೆಯೂ ಘೋಷಣೆಯಾಗದಿರುವ ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿದಿನ ಹೋರಾಟ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು. +ಸಿಬಿಐ ತನಿಖೆಗಿಂತ ಮುಕ್ತ ಅವಕಾಶವನ್ನು ಮೊಟಕುಗೊಳಿಸುವ ರಾಜ್ಯ ಸಚಿವ ಸಂಪುಟದ ನಿರ್ಣಯವನ್ನು ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಇದು ಹೊಸದಲ್ಲ. ಈ ಹಿಂದೆ ದೇವರಾಜ ಅರಸುರವರು ಮುಖ್ಯಮಂತ್ರಿಯಾಗಿದ್ದಾಗಲೂ ಇಂತಹ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಸಿಬಿಐ ತನಿಖೆಯ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಾಗ ತನಿಖೆಯ ಮುಕ್ತ ಅವಕಾಶವನ್ನು ಹಿಂಪಡೆಯಲಾಗಿತ್ತು ಎಂದು ಹೇಳಿದರು. +ತಮಿಳುನಾಡಿನ ವೀರಪ್ಪನ್‌ ಮತ್ತು ಸ್ಟಾಂಪ್‌ ಹಗರಣದ ಆರೋಪಿ ತೆಲಗಿ ಮತ್ತು ಕೋಲಾರದ ದಲಿತರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ನಾನು ಗೃಹಸಚಿವನಾಗಿದ್ದಾಗ ಶಿಫಾರಸ್ಸು ಮಾಡಿದ್ದೆ. +ಆದರೆ ರಾಜ್ಯಸರ್ಕಾರದ ತನಿಖೆಯೇ ಸರಿಯಾಗಿದೆ ಎಂದು ಹೇಳಿ ಸಿಬಿಐ ತನಿಖೆಗೆ ಮುಂದಾಗಲಿಲ್ಲ. ವೀರಪ್ಪನ್‌ ಕರ್ನಾಟಕ, ತಮಿಳುನಾಡು ಸೇರಿ 2 ರಾಜ್ಯಗಳಲ್ಲಿ ನೂರಾರು ಜನರನ್ನು ಕೊಂದಿದ್ದ. ಸ್ಟಾಂಪ್‌ ಹಗರಣದಲ್ಲಿ ನೂರಾರು ಕೋಟಿ ರೂ.ಗಳ ನಷ್ಟವಾಗಿತ್ತು.ಈ ಪ್ರಕರಣಗಳಲ್ಲಿ ಅಂತಾರಾಜ್ಯ ವ್ಯಾಪ್ತಿ ಇದ್ದುದರಿಂದ ಸಿಬಿಐ ತನಿಖೆ ಅಗತ್ಯ ಎಂದು ನಾನು ಶಿಫಾರಸ್ಸು ಮಾಡಿದಾಗ ಸಿಬಿಐ ಸಿದ್ಧವಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಸಿಬಿಐಗೆ ತನಿಖೆ ಒಪ್ಪಿಸಬೇಕೇ, ಬೇಡವೇ ಎಂದು ರಾಜ್ಯಸರ್ಕಾರದ ವಿವೇಚನೆಗೆ ಒಳಪಟ್ಟಿದೆ ಎಂದು ಖರ್ಗೆ ಸಮರ್ಥಿಸಿಕೊಂಡರು. ರಾಜಭವನ ಹಾಗೂ ರಾಜ್ಯಸರ್ಕಾರದ ನಡುವಿನ ಸಂಘರ್ಷದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. \ No newline at end of file diff --git a/eesanje/url_46_7_5.txt b/eesanje/url_46_7_5.txt new file mode 100644 index 0000000000000000000000000000000000000000..b71eb9b8aff6ca76d9a02e548eb3ac3bedb3592e --- /dev/null +++ b/eesanje/url_46_7_5.txt @@ -0,0 +1,10 @@ +ಯುಪಿಯಲ್ಲಿ ಕಾಂಗ್ರೆಸ್‌‍-ಎಸ್‌‍ಪಿ ಮೈತ್ರಿ ಕ್ಷೀಣ + 10 , +ಲಕ್ನೋ,ಸೆ.27-ಉತ್ತರ ಪ್ರದೇಶ ವಿಧಾನಸಭಾ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ತೀವ್ರಗೊಳಿಸಿವೆ.ಲೋಕಸಭೆ ಚುನಾವಣೆ ನಂತರ ನಡೆಯುತ್ತಿರುವ ಈ ಉಪ ಚುನಾವಣೆಯಲ್ಲಿ ಎಸ್‌‍ಪಿ- ಕಾಂಗ್ರೆಸ್‌‍ ಮೈತ್ರಿಯ ವ್ಯಾಪ್ತಿ ಕ್ಷೀಣಿಸಿರುವುದರಿಂದ ಕಾಂಗ್ರೆಸ್‌‍ ಎಲ್ಲಾ 10 ಸ್ಥಾನಗಳಲ್ಲಿ ತನ್ನ ಪ್ರಭಾವ ಮೂಡಿಸಲು ಪ್ರಾರಂಭಿಸಿದೆ. +ಇದೇ ಸಮಯದಲ್ಲಿ, ಮೂರು ವಿಧಾನಸಭಾ ಸ್ಥಾನಗಳು ತನಗೆ ಹೆಚ್ಚು ಸೂಕ್ತ ಎಂದು ಪರಿಗಣಿಸಿವೆ. ವಾಸ್ತವವಾಗಿ ಹರಿಯಾಣ ಮತ್ತು ಜಮು ಮತ್ತು ಕಾಶೀರ ಚುನಾವಣೆಗಳ ನಂತರ, ಉತ್ತರಪ್ರದೇಶದಲ್ಲಿ ಉಪಚುನಾವಣೆ ಪ್ರಕ್ರಿಯೆಯು ವೇಗ ಪಡೆಯುತ್ತಿದೆ. +ಕರ್ಹಾಲ್‌, ಮಿಲ್ಕಿಪುರ್‌, ಕತೇಹಾರಿ, ಕುಂದರ್ಕಿ, ಘಾಜಿಯಾಬಾದ್‌, ಖೈರ್‌, ಮೀರಾಪುರ್‌, ಫುಲ್ಪುರ್‌, ಮಂಜ್ವಾ ಮತ್ತು ಸಿಸಾಮಾವುಗಳಲ್ಲಿ ಉಪಚುನಾವಣೆಗಳು ನಡೆಯಲಿವೆ.ಈ ಪೈಕಿ ಮೊದಲ 5 ಸ್ಥಾನಗಳು ಸಮಾಜವಾದಿ ಪಕ್ಷದದ್ದಾಗಿದ್ದವು. ಇದಲ್ಲದೇ ಆರೆಲ್‌ಡಿ-ನಿಶಾದ್‌ ಪಕ್ಷ ತಲಾ ಒಂದು ಸ್ಥಾನ ಗೆದ್ದಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಗೆದ್ದಿತ್ತು. ಆದರೆ ಲೋಕಸಭೆ ಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಬಿಜೆಪಿ ಈ ಬಾರಿ ಎಚ್ಚೆತ್ತುಕೊಂಡಿದೆ. +ಸದಸ್ಯತ್ವ ಅಭಿಯಾನದ ಹೆಸರಿನಲ್ಲಿ ಉಪಚುನಾವಣೆಗಳ ನೆಲೆಯನ್ನು ಬಲಪಡಿಸುತ್ತಿದ್ದಾರೆ. ಮತ್ತೊಂದೆಡೆ, ಎಸ್‌‍ಪಿ ಯುವಕರು ಮತ್ತು ಹಿರಿಯ ಅಧಿಕಾರಿಗಳ ತಂಡಗಳನ್ನು ಸಹ ನಿಯೋಜಿಸಿದ್ದಾರೆ. ಏತನಧ್ಯೆ, ಲೋಕಸಭೆ ಚುನಾವಣೆಯಲ್ಲಿ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್‌‍, ಎಸ್‌‍ಪಿ ಜೊತೆಗಿನ ಮೈತ್ರಿ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆಯನ್ನು ಸ್ವೀಕರಿಸಿಲ್ಲ. ಹೀಗಾಗಿ ಕಾಂಗ್ರೆಸ್‌‍ ಕೂಡ ಉಪಚುನಾವಣೆಗೆ ಸಿದ್ಧತೆ ಆರಂಭಿಸಿದೆ. +ಕಾಂಗ್ರೆಸ್‌‍ ತನ್ನ ಇಬ್ಬರು ಶಾಸಕರು ಮತ್ತು 6 ಸಂಸದರನ್ನು ಕಣಕ್ಕಿಳಿಸಿದೆ. ಅವರನ್ನು ಚುನಾವಣಾ ಕ್ಷೇತ್ರಗಳ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಜತೆಗೆ ರಾಷ್ಟ್ರೀಯ ತಂಡವೂ ಚುನಾವಣಾ ತಯಾರಿಯಲ್ಲಿ ನಿರತವಾಗಿದೆ. ಮತ್ತೊಂದೆಡೆ, ಬುಧವಾರ ಕಾಂಗ್ರೆಸ್‌‍ ವಾರ್‌ ರೂಮ್‌ನ ಉಸ್ತುವಾರಿಯನ್ನು ಘೋಷಿಸಿದೆ. +ಕಾಂಗ್ರೆಸ್‌‍ ಎಲ್ಲ 10 ಸ್ಥಾನಗಳಿಗೂ ವಾರ್‌ ರೂಂ ಉಸ್ತುವಾರಿಗಳನ್ನು ಮಾಡಿದೆ. ಕಾಂಗ್ರೆಸ್‌‍ ಎಲ್ಲಾ ಕ್ಷೇತ್ರಗಳಿಗೂ ಸಿದ್ಧತೆ ಆರಂಭಿಸಿದೆ. ಆದರೆ, ಮೀರಾಪುರ್‌, ಫುಲ್ಪುರ್‌, ಮಂಜ್ವಾ ಸೀಟುಗಳು ತನಗೆ ಹೆಚ್ಚು ಸೂಕ್ತವೆಂದು ಪರಿಗಣಿಸಿದ್ದಾರೆ. +ಎಸ್‌‍ಪಿ ಮೂಲಗಳ ಪ್ರಕಾರ, ಹರಿಯಾಣದಲ್ಲಿ ಕಾಂಗ್ರೆಸ್‌‍ ಸೀಟುಗಳನ್ನು ಹಂಚಿಕೊಳ್ಳದ ಕಾರಣ ಉನ್ನತ ನಾಯಕತ್ವವು ಕಂಗಾಲಾಗಿದೆ. ಅನೇಕ ಕಾಂಗ್ರೆಸ್‌‍ ನಾಯಕರು, ಮೈತ್ರಿ ಚರ್ಚೆಯಲ್ಲಿ, ಹರಿಯಾಣದಲ್ಲಿ ಎಸ್ಪಿ ಬೆಂಬಲವನ್ನು ತಿರಸ್ಕರಿಸಿದರು. ಅಷ್ಟೇ ಅಲ್ಲ, ಕೊನೆಯ ಕ್ಷಣದವರೆಗೂ ಚಿತ್ರವೂ ಕ್ಲಿಯರ್‌ ಆಗಿರಲಿಲ್ಲ. ಈ ಹಿಂದೆ ಮಧ್ಯಪ್ರದೇಶದಲ್ಲೂ ಇದೇ ದ್ರೋಹ ನಡೆದಿತ್ತು. +ಆದ್ದರಿಂದ, ಹರ್ಯಾಣದಲ್ಲಿ ಎಸ್‌‍ಪಿ ಬೆಂಬಲ ನೆಲೆಯನ್ನು ಹೊಂದಿಲ್ಲದಿರುವಂತೆ, ಯುಪಿಯಲ್ಲಿ ಕಾಂಗ್ರೆಸ್‌‍ಗೆ ಹೆಚ್ಚು ಅಸ್ತಿತ್ವವಿಲ್ಲ ಎಂದು ಎಸ್‌‍ಪಿ ನಾಯಕರು ಹೇಳುತ್ತಾರೆ. ಅದೇ ಸಮಯದಲ್ಲಿ, ಅನೇಕ ಹಿರಿಯ ಎಸ್ಪಿ ನಾಯಕರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಜೊತೆಗಿನ ಮೈತ್ರಿಯನ್ನು ಸಮರ್ಥಿಸಲಿಲ್ಲ. ಹೀಗಿರುವಾಗ ಉಪಚುನಾವಣೆಯಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡುವ ನಿರೀಕ್ಷೆ ಗರಿಗೆದರಿದೆ. \ No newline at end of file diff --git a/eesanje/url_46_7_6.txt b/eesanje/url_46_7_6.txt new file mode 100644 index 0000000000000000000000000000000000000000..7618b5048347d10bfee64f77dea0a60c346d48bb --- /dev/null +++ b/eesanje/url_46_7_6.txt @@ -0,0 +1,8 @@ +ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕುರಿತು ಹೈಕೋರ್ಟ್‌ಗೆ ಸುಪ್ರೀಂ ಮಹತ್ವದ ನಿರ್ದೇಶನ + ' - +ನವದೆಹಲಿ,ಸೆ.27-ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಕುರಿತು ಮರು ಮತಗಳ ಎಣಿಕೆ ಬಗ್ಗೆ ಕರ್ನಾಟಕ ಹೈಕೋರ್ಟ್‌ ಸೂಕ್ತ ವಿಚಾರಣೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. +ಕಳೆದ 2023 ಮೇ ತಿಂಗಳಿನಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಅವರು ಕಾಂಗ್ರೆಸ್‌‍ ವಿಜೇತ ಅಭ್ಯರ್ಥಿ ಟಿ.ಡಿ.ರಾಜೇಗೌಡ ವಿರುದ್ಧ 201 ಮತಗಳ ಅಂತರದಿಂದ ಸೋಲು ಕಂಡಿದ್ದರು. +ಪರಾಜಿತ ಜೀವರಾಜ್‌ ಅವರು ಒಟ್ಟು ಚಲಾವಣೆಯಾದ ಮತಗಳಲ್ಲಿ 279 ಕುಲಗೆಟ್ಟ ಮತಗಳಿರುವುದರಿಂದ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಬೇಕೆಂದು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದು ಪುರಸ್ಕರಿಸಿರಲಿಲ್ಲ.ಇದನ್ನು ಪ್ರಶ್ನಿಸಿ ಜೀವರಾಜ್‌ ಸುಪ್ರೀಂಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿ ಚುನಾವಣಾಧಿಕಾರಿಗಳ ಕ್ರಮಕ್ಕೆ ಆಕ್ಷೇಪಿಸಿ ಮರು ಎಣಿಕೆಗೆ ಅವಕಾಶ ನೀಡಬೇಕೆಂದು ಕೋರಿದ್ದರು. +ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳು ಸೋತಿರುವ ಮತಗಳಿಗಿಂತ ಕುಲಗೆಟ್ಟ ಮತಗಳೇ ಹೆಚ್ಚಾಗಿವೆ. ಹೀಗಾಗಿ ಮರು ಮತ ಎಣಿಕೆ ನಡೆಸಬೇಕೆಂದು ಅವರ ಪರ ವಕೀಲರು ನ್ಯಾಯಾಧೀಶರಿಗೆ ಮನವಿ ಮಾಡಿದರು. +ಇದನ್ನು ಮನ್ನಿಸಿದ ನ್ಯಾಯಪೀಠ ನಿಮ ಅರ್ಜಿದಾರರು ಕೇಳುತ್ತಿರುವುದು ನ್ಯಾಯಯುತವಾಗಿದೆ. ಪರಾಜಿತ ಅಭ್ಯರ್ಥಿ 201 ಮತಗಳಿಂದ ಸೋಲು ಕಂಡಿದ್ದಾರೆ. ಕುಲಗೆಟ್ಟ ಮತಗಳೇ 279 ಇವೆ. ಹೀಗಾಗಿ ಮರು ಎಣಿಕೆ ನಡೆಸಬೇಕೆಂಬುದರಲ್ಲಿ ನಮಗೆ ಸಹಮತವಿದೆ ಎಂದು ಅಭಿಪ್ರಾಯಪಟ್ಟರು. +ಕರ್ನಾಟಕ ಹೈಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸಿ ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳಬೇಕೆಂದು ಸುಪ್ರೀಂಕೋರ್ಟ್‌ ಆದೇಶಿಸಿದೆ. ಇದೀಗ ನ್ಯಾಯಾಲಯದ ಆದೇಶದಂತೆ ಹೈಕೋರ್ಟ್‌ ಮರು ಎಣಿಕೆ ನಡೆಸುತ್ತದೆಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ. \ No newline at end of file diff --git a/eesanje/url_46_7_7.txt b/eesanje/url_46_7_7.txt new file mode 100644 index 0000000000000000000000000000000000000000..ee73e0eec4afe43f5182c2a4f543ce3337c22a4a --- /dev/null +++ b/eesanje/url_46_7_7.txt @@ -0,0 +1,6 @@ +ಮುಕ್ತ ಪ್ರವೇಶಕ್ಕೆ ಸಿಬಿಐಗೆ ನಿರ್ಭಂಧ : ಕೇಂದ್ರ ಸಚಿವ ಎಚ್‌ಡಿಕೆ ಗರಂ + +ಬೆಂಗಳೂರು,ಸೆ.27-ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್‌ ಮಾಡಿಸಿದ್ದೀರಿ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದಾರೆ. +ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಬಿಐ ರಾಜ್ಯ ಪ್ರವೇಶಕ್ಕೆ ಬಂದ್‌ ಮಾಡಿಸಿರುವುದರಿಂದ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂದು ಲೇವಡಿ ಮಾಡಿದ್ದಾರೆ.ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಎಂದು ಅವರು ಹೇಳಿದ್ದಾರೆ. +ಸಿದ್ದರಾಮಯ್ಯನವರೇ, ನಿಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು, ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು, ಮೂಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. +ಕರ್ಮ ಹಿಟ್‌ ಬ್ಯಾಕ್‌ ಎಂದರೆ ಇದೇ ಅಲ್ಲವೇ ಸಿದ್ದರಾಮಯ್ಯನವರೇ?, ನಿಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್‌ ಬರ್ಖಾಸ್ತು ಮಾಡಿಬಿಟ್ಟಿತು ಎಂದು ಅವರು ಟೀಕಾ ಪ್ರಹಾರ ಮಾಡಿದ್ದಾರೆ. diff --git a/eesanje/url_46_7_8.txt b/eesanje/url_46_7_8.txt new file mode 100644 index 0000000000000000000000000000000000000000..511805c63e9b985be39b1b4cea5f67633e12003c --- /dev/null +++ b/eesanje/url_46_7_8.txt @@ -0,0 +1,10 @@ +ದ್ವೇಷದ ರಾಜಕಾರಣ ಕಡಿವಾಣಕ್ಕಾಗಿ ಸಿಬಿಐನ ಮುಕ್ತ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆಯಲಾಗಿದೆ ; ಡಿಕೆಶಿ +"' ": +ಬೆಂಗಳೂರು,ಸೆ.27-ದ್ವೇಷದ ರಾಜಕಾರಣಕ್ಕೆ ಕಡಿವಾಣ ಹಾಕಲು ಸಿಬಿಐನ ಮುಕ್ತ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ. ರಾಜ್ಯದ ಅಧಿಕಾರಿಗಳು ತನಿಖೆ ಮಾಡಲು ಸಾಧ್ಯವಾಗದೇ ಇರುವ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯಸರ್ಕಾರ ಸಿದ್ಧವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. +ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಾವೆಲ್ಲ ಪ್ರಕರಣಗಳನ್ನು ಸಿಬಿಐನವರಿಗೆ ವಹಿಸಲಾಗಿತ್ತು. ಸಿಬಿಐನವರು ಐಎಂಎ ಸೇರಿ ಹಲವು ಪ್ರಕರಣಗಳಲ್ಲಿ ಯಾವ ರೀತಿ ವರದಿ ನೀಡಿದ್ದರು ಎಂದು ಗೊತ್ತಿದೆ ಎಂದು ಹೇಳಿದರು. +ಬಿಜೆಪಿ ಮತ್ತು ಜೆಡಿಎಸ್‌‍ನವರು ಸಿಬಿಐ ಬಗ್ಗೆ ಕೆಲ ವರ್ಷಗಳ ಹಿಂದೆ ಯಾವ ರೀತಿ ಹೇಳಿಕೆ ನೀಡಿದ್ದರು ಎಂಬುದನ್ನು ಸರಿಸಿಕೊಳ್ಳಲಿ. ಕಾಂಗ್ರೆಸ್‌‍ ಬಚಾವೋ ಸಂಸ್ಥೆ ಎಂದೆಲ್ಲ ಟೀಕೆ ಮಾಡಿದ್ದರು. ಈಗ ಅದೇ ಸಿವಿಐ ಪರವಾಗಿ ಮಾತನಾಡುತ್ತಿದ್ದಾರೆ. ರಾಜ್ಯಸರ್ಕಾರದ ವಿರುದ್ಧವೂ ಟೀಕೆ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ಸೂಕ್ತ ಸಮಯದಲ್ಲಿ ಅವರಿಗೆ ಉತ್ತರ ನೀಡುತ್ತೇನೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಣೆ ಮಾಡಲು ರಾಜ್ಯ ಸಂಪುಟದಲ್ಲಿ ಸಿಬಿಐ ತನಿಖೆಗೆ ಮುಕ್ತ ಅವಕಾಶ ನಿರಾಕರಿಸುವ ರೀತಿಯ ನಿರ್ಣಯ ಕೈಗೊಂಡಿಲ್ಲ. ತುರ್ತು ಹಾಗೂ ಅಗತ್ಯ ಸಂದರ್ಭದಲ್ಲಿ ಸಿಬಿಐ ತನಿಖೆಗೆ ರಾಜ್ಯಸರ್ಕಾರ ಅನುಮತಿ ನೀಡಲು ಸಿದ್ಧವಿದೆ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು. +ರಾಜ್ಯಪಾಲರಿಗೆ ವರದಿ ಸಲ್ಲಿಸಬೇಕಾದರೆ, ಅದಕ್ಕೊಂದು ನಿಯಮ ಇದೆ. ಮೊದಲು ಮುಖ್ಯಮಂತ್ರಿ ಕಛೇರಿಗೆ ಪತ್ರ ಬರಬೇಕು. ಅನಂತರ ಅಲ್ಲಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಮಾಹಿತಿ ತಲುಪಬೇಕಿದೆ ಎಂದರು. +ರೀ ಡೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡತವೊಂದು ತಮ ಬಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಉಪಸಮಿತಿ ರಚಿಸುವ ನಿರ್ಣಯ ಕೈಗೊಳ್ಳಲಾಗಿದೆ. ಹಾಗೆಯೇ ಯಾವುದೇ ವಿಚಾರವಾದರೂ ಮುಖ್ಯಮಂತ್ರಿಯವರ ಗಮನಕ್ಕೆ ತರಲು ತೀರ್ಮಾನಿಸಲಾಗಿದೆ. +ಪರಿಸ್ಥಿತಿ ಹೀಗಿರುವಾಗ ಮನಸೋ ಇಚ್ಛೆ ನಾವಾಗಿಯೇ ರಾಜ್ಯಪಾಲರಿಗೆ ವರದಿ ನೀಡಲು ಸಾಧ್ಯವೇ?, ನನಗೆ ಆಡಳಿತ ವ್ಯವಹಾರಗಳ ಬಗ್ಗೆ ಅಲ್ಪಸ್ವಲ್ಪ ಜ್ಞಾನ ಇದೆ. ಅಷ್ಟೊಂದು ಬುದ್ಧಿವಂತ, ವಿದ್ಯಾವಂತ ಅಲ್ಲದೇ ಇದ್ದರೂ ಪ್ರಜ್ಞಾವಂತಿಕೆ ಇದೆ ಎಂದರು.ರಾಜ್ಯಪಾಲರು ಅರ್ಕಾವತಿ ರೀ ಡೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ಕೇಳಿದಾಕ್ಷಣ ನಾವು ವರದಿ ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದ ಅವರು, ರಾಜ್ಯಪಾಲರ ಪತ್ರದ ಬಗ್ಗೆ ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ ಎಂದರು. +ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಾಗುವುದರಿಂದ ಯಾವುದೇ ಮುಜುಗರ ಆಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ರಾಜ್ಯಪಾಲರ ಕಚೇರಿಯಿಂದ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಾಜ್ಯಪಾಲರ ಕಚೇರಿಯಲ್ಲಿ ಹಾಗೂ ಲೋಕಾಯುಕ್ತ ಕಚೇರಿಯಲ್ಲಿ ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದರು. \ No newline at end of file diff --git a/eesanje/url_46_7_9.txt b/eesanje/url_46_7_9.txt new file mode 100644 index 0000000000000000000000000000000000000000..daca6d425157279d938497ad5c648aea811a7deb --- /dev/null +++ b/eesanje/url_46_7_9.txt @@ -0,0 +1,7 @@ +ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ : ಸಿಎಂ ಪುನರುಚ್ಚಾರ + , : +ಮೈಸೂರು,ಸೆ.27-ರಾಜಭವನದ ಅಧಿಕಾರ ವ್ಯಾಪ್ತಿ ಹಾಗೂ ದುರುಪಯೋಗದ ಬಗ್ಗೆ ದೇಶವ್ಯಾಪ್ತಿಯಲ್ಲಿ ಚರ್ಚೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ, ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. +ನಾನು ತಪ್ಪು ಮಾಡಿಲ್ಲ, ಹಾಗಾಗಿ ರಾಜೀನಾಮೆ ಕೊಡುವುದಿಲ್ಲ. ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ ನನ್ನ ರಾಜೀನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರತಿಕ್ರಿಯಿಸಿದರು.ರಾಜ್ಯಪಾಲರು ಆಡಳಿತದಲ್ಲಿ ತಲೆ ಹಾಕಬಾರದು, ರಾಜ್ಯದ ಜನರು ನಮಗೆ 5 ವರ್ಷ ಅಧಿಕಾರ ನಡೆಸಿ, ಅಭಿವೃದ್ಧಿ ಮಾಡಿ ಎಂದು ಅವಕಾಶ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜಭವನ ಸೇರಿ ಎಲ್ಲಾ ಕಡೆ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. +ನಿಮ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆಯಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾನು ಏಕೆ ರಾಜೀನಾಮೆ ಕೊಡಬೇಕು, ತಪ್ಪು ಮಾಡಿದ್ದರೆ ಮಾತ್ರ ರಾಜೀನಾಮೆ ಕೊಡಬೇಕು ಎಂದು ಹೇಳಿದರು. +ಗೋದ್ರಾ ಗಲಭೆ ಆಗಿದ್ದಾಗ ಮೋದಿ ರಾಜೀನಾಮೆ ನೀಡಿದ್ದರಾ, ಎಫ್‌ಐಆರ್‌ ಆಗಿ ಜಾಮೀನು ಪಡೆದಿರುವ ಕುಮಾರಸ್ವಾಮಿ ಏಕೆ ರಾಜೀನಾಮೆ ಕೊಟ್ಟಿಲ್ಲ, ನಾನು ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ, ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ, ರಾಜ್ಯಪಾಲರ ಯಾವ ಪತ್ರಗಳಿಗೂ ಸಿಎಸ್‌‍ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಖಡಕ್ಕಾಗಿ ಹೇಳಿದರು. \ No newline at end of file diff --git a/eesanje/url_46_80_1.txt b/eesanje/url_46_80_1.txt new file mode 100644 index 0000000000000000000000000000000000000000..5731212fa2e6f0c8ccfbb8c2f5947e3643931501 --- /dev/null +++ b/eesanje/url_46_80_1.txt @@ -0,0 +1,12 @@ +ನೈತಿಕತೆ ಇದ್ದರೆ ನಾಗೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶ್ರೀರಾಮಲು +ಬೆಂಗಳೂರು,ಜು.11– ವಾಲೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನಡೆದಿರುವ ಅಕ್ರಮದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನೈತಿಕತೆ, ಸ್ವಾಭಿಮಾನವಿದ್ದರೆ ಕೂಡಲೇ ತಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿ.ಶ್ರೀರಾಮಲು ಸವಾಲು ಹಾಕಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗೇಂದ್ರ ಅವರಿಗೆ ತಪ್ಪು ಮಾಡಿದ್ದೇನೆ ಎನ್ನುವ ಸ್ವಾಭಿಮಾನವಿದ್ದರೆ ಅವರು ಶಾಸಕ ಸ್ಥಾನದಲ್ಲಿ ಮುಂದುವರೆ ಯಬಾರದು. ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದೇನೆ ಎಂಬ ಪಾಪಪ್ರಜ್ಞೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. +ಸಮುದಾಯದ ಮಂತ್ರಿಯಾಗಿ ಮೀಸಲು ಕ್ಷೇತ್ರದಿಂದ ಗೆದ್ದು ಆ ಸಮುದಾಯದ ಬೆನ್ನಿಗೆ ಚೂರಿ ಹಾಕಿರುವ ನಾಗೇಂದ್ರ ಶಾಸಕ ಸ್ಥಾನದಲ್ಲಿ ಮುಂದುವರೆಯುವ ನೈತಿಕತೆ ಉಳಿಸಿಕೊಂಡಿಲ್ಲ. ಎಸ್‌‍ಐಟಿ ಇಲ್ಲವೇ ಇ.ಡಿ ಅಧಿಕಾರಿಗಳು ತಕ್ಷಣವೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು. +ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳ ವಿರುದ್ಧ ತನಿಖಾ ತಂಡದವರು ಪ್ರಬಲವಾದ ಎಫ್‌ಐಆರ್‌ ದಾಖಲಿಸಬೇಕು. ಜೊತೆಗೆ ಒಂದು ತಿಂಗಳೊಳಗೆ ನಿಗಮದ ಹಣವನ್ನು ಸರ್ಕಾರಕ್ಕೆ ಹಿಂತಿರುಗಿಸಬೇಕೆಂದು ಒತ್ತಾಯ ಮಾಡಿದರು. +ಕೇವಲ ವಾಲೀಕಿ ಅಭಿವೃದ್ಧಿ ನಿಗಮವಲ್ಲದೆ, ಇದೇ ರೀತಿ ಅನೇಕ ನಿಗಮಮಂಡಳಿಗಳಲ್ಲೂ ಹಣ ದುರುಪಯೋಗ ಮಾಡಿರುವ ಆರೋಪ ಕೇಳಿಬಂದಿದೆ. ತಕ್ಷಣವೇ ಸರ್ಕಾರ ಪ್ರತಿಯೊಂದು ನಿಗಮಗಳ ಲೆಕ್ಕ ಪರಿಶೋಧನೆ ನಡೆಸಲು ಮುಂದಾಗಬೇಕು ಎಂದು ಹೇಳಿದರು. +ನಾವು ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ಬಿಡುವುದಿಲ್ಲ. ಶೀಘ್ರದಲ್ಲೇ ಪರಿಶಿಷ್ಟ ಪಂಗಡದ ನಿಯೋಗವು ದೆಹಲಿಗೆ ತೆರಳಿ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ದೂರು ನೀಡುತ್ತೇವೆ. ನಮ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಯಾರೇ ದುರುಪಯೋಗಪಡಿಸಿಕೊಂಡಿದ್ದರೂ ಸುಮನೆ ಬಿಡುವುದಿಲ್ಲ. ಒಂದೊಂದು ರೂಪಾಯಿ ಕೂಡ ವಾಪಸ್‌‍ ಹಿಂತಿರುಗಿಸುವವರೆಗೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. +ನಾಗೇಂದ್ರ ಅವರ ಆಪ್ತ ಕಾರ್ಯದರ್ಶಿ ಹರೀಶ್‌ ಖಾತೆಗೆ 80 ಲಕ್ಷ ಹಣ ವರ್ಗಾವಣೆಯಾಗಿದೆ. ಇದೇ ರೀತಿ ಅವರ ಸುತ್ತಮುತ್ತಲೂ ಇರುವವರು, ಸಂಬಂಧಿಕರು ಬೇರೆ ಬೇರೆಯವರ ಹೆಸರಿನಲ್ಲಿ ಹಣ ಬೇಕಾಬಿಟ್ಟಿ ವರ್ಗಾ ವಣೆಯಾಗಿರುವುದು ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.ಗೃಹಸಚಿವ ಡಾ.ಜಿ.ಪರಮೇಶ್ವರ್‌ ಒಬ್ಬ ಹಿರಿಯರು. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಆದರೆ ಅವರು ಬೇಜವಾಬ್ದಾರಿಯಾಗಿ ಮಾತನಾಡಿರುವುದಕ್ಕೆ ನೋವಿದೆ ಎಂದು ಅಸಮಾಧಾನ ಹೊರಹಾಕಿದರು. +ಮಾಜಿ ಸಚಿವ ರಾಜೀವ್‌ಗೌಡ ಮಾತನಾಡಿ, ಮೂರು ಕೋಟಿ ಮೇಲೆ ವರ್ಗಾವಣೆ ಆಗಬೇಕಾದರೆ ಚೀ್‌‍ ಸೆಕ್ರೆಟರಿ ಗಮನಕ್ಕೆ ತರಬೇಕು. ಆದರೆ ಯಾರ ಗಮನಕ್ಕೂ ತಾರದೆ 50 ಕೋಟಿ ಒಂದೇ ದಿನ ವರ್ಗಾವಣೆ ಮಾಡಿದ್ದಾರೆ. +ಇತಿಹಾಸದಲ್ಲಿ ಮೊದಲ ಬಾರಿಗೆ ಬ್ಯಾಂಕ್‌ ಮೂಲಕ ಲೂಟಿ ಮಾಡಿದ್ದಾರೆ. ವೈಟ್‌ ಮೂಲಕವೇ ಕೊಳ್ಳೆ ಹೊಡೆಯುವ ಕೆಲಸ ಕಾಂಗ್ರೆಸ್‌‍ ಮಾಡಿದೆ. ವೈಟ್‌ ಮೂಲಕವೇ ಹಣ ವರ್ಗಾವಣೆ ಆಗಿದ್ದು, ಅದನ್ನು ರಿಕವರಿ ಮಾಡುವುದಕ್ಕೆ ಇಷ್ಟು ದಿನ ಬೇಕಾ? ಎಂದು ಪ್ರಶ್ನಿಸಿದರು. +ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತ್ತಿದೆ. ಎಸ್ಟಿ ಸಮುದಾಯದ ಪರ ಕೆಲಸ ಮಾಡಲು ನಾವು ಸೋತಿದ್ದೇವೆ. ಕಾಂಗ್ರೆಸ್‌‍ನಿಂದ ಎಸ್ಟಿ ಸಮುದಾಯದ 14 ಜನ ಗೆದ್ದಿದ್ದಾರೆ. ಆದರೆ ಯಾರೂ ಕೂಡ ಮಾತಾಡುತ್ತಿಲ್ಲ. ಎಲ್ಲರೂ ಕೇವಲ ರಬ್ಬರ್‌ ಸ್ಟ್ಯಾಂಪ್‌ ಆಗಿದ್ದಾರೆ ಎಂದರು.ನಿಗಮದ ಹಣ ಬ್ಯಾಂಕಿನಲ್ಲಿ ಇಡಬೇಕಾದರೆ ಸಿಎಂ ಅನುಮತಿ ಇಲ್ಲದೆ ಇಡಲು ಸಾಧ್ಯವಿಲ್ಲ. +ನಾನು ನಿಗಮದ ಅಧ್ಯಕ್ಷ ಆಗಿದ್ದವನು. ಹಣ ಬಡ್ಡಿ ಹೆಚ್ಚು ಕೊಡ್ತಾರೆ ಅಂದ್ರೆ ಟೆಂಡರ್‌ ಕರೆದು ಇಡಬೇಕು. ಆದರೆ ಇದನ್ನು ಮುಚ್ಚಿಹಾಕಲು ನೋಡುತ್ತಿದ್ದಾರೆ. ಸಿಬಿಐ ಪ್ರವೇಶ ಮಾಡಿರುವುದರಿಂದ ಇನ್ನು ಮುಚ್ಚಿಹಾಕಲು ಸಾಧ್ಯವಾಗಿಲ್ಲ. ಎಸ್ಟಿ ಬೋರ್ಡಿಗೆ ಹಣ ವಾಪಸ್‌‍ ತರಬೇಕು. ಜಮೀನು ತೆಗೆದವರಿಗೆ ಹಣ ಸಿಕ್ಕಿಲ್ಲ, ಬೋರು ಕೊರೆಸಲು ಹಣ ಇಲ್ಲದೆ ಕಾಯುತ್ತಿದ್ದಾರೆ. ನಾಗೇಂದ್ರ ಒಬ್ಬರ ರಾಜೀನಾಮೆ ಪಡೆದರೆ ಸಾಲುವುದಿಲ್ಲ. 187 ಕೋಟಿ ಹಣ ವಾಪಸ್‌‍ ತರಬೇಕು. ಅಧಿಕಾರಿಗಳ ತಲೆದಂಡ ಕೂಡ ಆಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_80_10.txt b/eesanje/url_46_80_10.txt new file mode 100644 index 0000000000000000000000000000000000000000..58fe31174ae00c67ba404757e061f416678d4771 --- /dev/null +++ b/eesanje/url_46_80_10.txt @@ -0,0 +1,11 @@ +ಸರ್ಕಾರಿ ಶಾಲೆಗಳಲ್ಲಿ `ನಾವು ಮನುಜರು’ ಎಂಬ ವಿನೂತನ ಕಾರ್ಯಕ್ರಮ +ಬೆಂಗಳೂರು,ಜು.11-ಮೇಲು-ಕೀಳು ಎಂಬ ಮನೋಭಾವವನ್ನು ಹೋಗಲಾಡಿಸಿ ಮಕ್ಕಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವನೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಸದುದ್ದೇಶದಿಂದ ಶಾಲಾ ಮಕ್ಕಳಲ್ಲಿ ನಾವು ಮನುಜರು ಎಂಬ ವಿಶೇಷ ಶೈಕ್ಷಣಿಕ ನೂತನ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಮುಂದಾಗಿದೆ. +ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಕ್ಕೆ ಬರಲಿದೆ. ಇನ್ನು ಮುಂದೆ ಶಾಲೆಗಳಲ್ಲಿ ಚರ್ಚೆ, ವಿಮರ್ಶೆ ಮತ್ತು ಸಂವಾದಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. +ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಮಾರ್ಚ್‌ನಲ್ಲಿ ಮಂಡಿಸಿದ್ದ ಬಜೆಟ್‌ ವೇಳೆ ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಸಮಸಮಾಜ ನಿರ್ಮಾಣ ಹಾಗೂ ನಾವೆಲ್ಲರೂ ಮನುಜರು ಎಂಬುದನ್ನು ಉಲ್ಲೇಖಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಡಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮವನ್ನು ಆಯೋಜಿಸುವುದಾಗಿ ಘೋಷಿಸಿದ್ದರು. +ಇದೀಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ ಇನ್ನು ಮುಂದೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ನಾವು ಮನುಜರು ಎಂಬ ವಿನೂತನವಾದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಕಾಗುತ್ತದೆ. +ಏನಿದು ಕಾರ್ಯಕ್ರಮ :ಈ ಕಾರ್ಯಕ್ರಮವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ ಎರಡು ಗಂಟೆಗಳ ಕಾಲ (40 ನಿಮಿಷಗಳ ಮೂರು ಅವಧಿಗಳೊಂದಿಗೆ) ಚರ್ಚೆಗಳು ಮತ್ತು ಸಂವಾದಗಳನ್ನು ಒಳಗೊಂಡಿರುತ್ತದೆ.ಮೌಲ್ಯ ಶಿಕ್ಷಣದ ಒಂದು ಅವಧಿ ಮತ್ತು ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸಗಳ ಎರಡು ಅವಧಿಗಳನ್ನು ಇದಕ್ಕೆ ಹೊಂದಿಸಲಾಗಿದೆ. +ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗದರ್ಶನ ನೀಡುವಂತೆ ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್‌ ಅಧಿಕಾರಿಯನ್ನು ನೇಮಿಸಿ, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆಗೆ (ಡಿಎಸ್‌‍ಇಆರ್‌ಟಿ) ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. +ಈ ಕಾರ್ಯಕ್ರಮ ಅನುಷ್ಠಾನಕ್ಕೆ ವಿಶೇಷ ಅನುದಾನ ನೀಡುವುದಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಾರ್ಯಕ್ರಮದ ಅನುಷ್ಠಾನದ ಸ್ವರೂಪವನ್ನು ಬಿಡುಗಡೆ ಮಾಡಿದೆ. ಸಾಮರಸ್ಯದ ಪಾಠಗಳು ಸ್ವರೂಪದ ಪ್ರಕಾರ, ಸ್ಥಳೀಯ ಮತ್ತು ರಾಷ್ಟ್ರೀಯ ಹಬ್ಬಗಳು, ಜಾನಪದ ಆಟಗಳು, ಕ್ರೀಡೆಗಳು ಇತ್ಯಾದಿಗಳನ್ನು ಆಧರಿಸಿ ಸಾಮಾಜಿಕ ಸಾಮರಸ್ಯ ಮತ್ತು ಅದರ ಮಹತ್ವದ ಬಗ್ಗೆ ಚರ್ಚೆ ನಡೆಸಬೇಕು. +ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ, ಮೌಲ್ಯಯುತ ಶಿಕ್ಷಣ ಮತ್ತು ಸಹಬಾಳ್ವೆಯನ್ನು ಉತ್ತೇಜಿಸಲು ಸಂಪನೂಲ ವ್ಯಕ್ತಿಗಳು, ತಜ್ಞರನ್ನು ಆಹ್ವಾನಿಸಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. +ವಾರಕ್ಕೆ ಎರಡು ಗಂಟೆಗಳನ್ನು (ತಲಾ 40 ನಿಮಿಷಗಳ ಮೂರು ಕಾರ್ಯಕ್ರಮ) ಮೀಸಲಿಡಲು ಸೂಚಿಸಲಾಗಿದೆ. ದೇಶದ ಸಮಾಜ ಸುಧಾರಕರು, ಕ್ರಾಂತಿಗಳ ಮಾಹಿತಿ ಒದಗಿಸುವುದು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು, ಸಮಾಜದಲ್ಲಿನ ಅಸಮಾನತೆ ನಿವಾರಣೆ ಕುರಿತು ಚರ್ಚೆಗಳನ್ನು ಆಯೋಜಿಸಲು ತಿಳಿಸಲಾಗಿದೆ. +ಈ ಬಗ್ಗೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣದ ಆಯುಕ್ತರಾದ ಬಿ.ಬಿ.ಕಾವೇರಿ, ಡಿಎಸ್‌‍ಇಆರ್‌ಟಿ ಈ ಕಾರ್ಯಕ್ರಮದ ಅನುಷ್ಠಾನ ಪ್ರಾಧಿಕಾರವಾಗಿದ್ದು, ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವ ಸಾಮರ್ಥ್ಯವನ್ನು ಸುಧಾರಿಸಲು, ತರ್ಕಬದ್ಧತೆ ಮತ್ತು ಪ್ರತಿಯೊಂದು ಸಮಸ್ಯೆಯ ಸಾಧಕ-ಬಾಧಕಗಳನ್ನು ಅರ್ಥ ಮಾಡಿಕೊಳ್ಳುವಂತೆ ಮಾಡುವ ಗುರಿಯನ್ನು ಹೊಂದಿದೆ. ಇದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಶೀಘ್ರದಲ್ಲೇ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇದನ್ನು ಕಾರ್ಯಗತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_80_11.txt b/eesanje/url_46_80_11.txt new file mode 100644 index 0000000000000000000000000000000000000000..54c79f5c6722f83d3c926ee552c05fc07418cbe3 --- /dev/null +++ b/eesanje/url_46_80_11.txt @@ -0,0 +1,5 @@ +ವೆಬ್‌ಸೈಟ್‌ ಡೌನ್ : ಹೊಸ ಬಿಪಿಎಲ್‌ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಜನರ ಪರದಾಟ +ಬೆಂಗಳೂರು,ಜು.11– ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್‌ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.ಹೊಸ ಬಿಪಿಎಲ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್‌ಸೈಟ್‌ ... ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಮೊಬೈಲ್‌‍, ಕಂಪ್ಯೂಟರ್‌, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. +ಇನ್ನು ಬಿಪಿಎಲ್‌‍, ಎಪಿಎಲ್‌‍, ತುರ್ತು ಆರೋಗ್ಯ ಸಂಬಂಧ ಬಿಪಿಎಲ್‌ ಕಾರ್ಡ್‌ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ ರೇಷನ್‌ ಕಾರ್ಡ್‌ಗಳ ತಿದ್ದುಪಡಿಗೂ ಅವಕಾಶ ನೀಡಿದ್ದು, ಬೆಂಗಳೂರು ಒನ್‌ ಸೆಂಟರ್‌ಗಳಿಗೆ ಫಲನುಭವಿಗಳು ಆಗಮಿಸುತ್ತಿದ್ದಾರೆ. +ಒಂದು ವರ್ಷದ ಬಳಿಕ ರೇಷನ್‌ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ಕೊಟ್ಟಿರುವ ಕಾರಣ ಲಾನುಭವಿಗಳು ಬೆಂಗಳೂರು ಒನ್‌ ಸೆಂಟರ್‌ಗಳಿಗೆ ಧಾವಿಸುತ್ತಿದ್ದಾರೆ. ಆದರೆ ವೆಬ್‌ಸೈಟ್‌ ಓಪನ್‌ ಆಗುತ್ತಿದ್ದು, ಅರ್ಜಿ ಮಾತ್ರ ರವಾನೆಯಾಗುತ್ತಿಲ್ಲ. ಹೀಗಾಗಿ ಆಹಾರ ನಾಗಾರೀಕ ಸರಬರಾಜು ಇಲಾಖೆಯ ವಿರುದ್ಧ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. +ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದ್ದೇವೆ ಎಂದು ಹೇಳಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಪರ್ಮಿಷನ್‌ ಕೊಟ್ಟಿದ್ದಾರೆ ಎಂದು ಎಸಿ ರೂಮಿನಲ್ಲಿ ಸುಮನೆ ಕುಳಿತುಕೊಂಡರೆ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಯಾರು? ತಿದ್ದಪಡಿಗೆ ಒಂದು ವಾರ ಅಲೆದಿದ್ದೇವೆ. ಇದೀಗ ಅರ್ಜಿ ಸಲ್ಲಿಸಲು ಅಲೆದಾಡಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಮ ಸಮಸ್ಯೆಗಳನ್ನು ಯಾರು ಆಲಿಸುತ್ತಾರೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_80_12.txt b/eesanje/url_46_80_12.txt new file mode 100644 index 0000000000000000000000000000000000000000..84900bb69c8dd76c570e49c691dfad1615306dd6 --- /dev/null +++ b/eesanje/url_46_80_12.txt @@ -0,0 +1,8 @@ +ಯುಜಿಸಿ ಹೊಸ ನಿಯಮ ಪಾಲನೆ ಅಸಾಧ್ಯ : ಕೇಂದ್ರಕ್ಕೆ ಸೆಡ್ಡು ಹೊಡೆದ ರಾಜ್ಯಸರ್ಕಾರ +ಬೆಂಗಳೂರು,ಜು.11– ರಾಷ್ಟ್ರೀಯ ಶಿಕ್ಷಣ ನೀತಿಗೆ ಸಡ್ಡು ಹೊಡೆದು ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಇದೀಗ ದ್ವೈವಾರ್ಷಿಕ ಪ್ರವೇಶಾತಿ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ನೀಡಿದ್ದ ಸೂಚನೆ ಪಾಲಿಸುವುದಿಲ್ಲ ಎಂದು ಹೇಳುವುದರೊಂದಿಗೆ ಕೇಂದ್ರದೊಂದಿಗೆ ಮತ್ತೊಂದು ಸಂಘರ್ಷಕ್ಕಿಳಿದಿದೆ. +ಈ ಹಿಂದಿನ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಜಾರಿಗೆ ತಂದಿದ್ದ ಪದವಿ ಶಿಕ್ಷಣದವರೆಗಿನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ರಚಿಸುತ್ತಿರುವ ಕಾಂಗ್ರೆಸ್‌‍ ಸರ್ಕಾರ, ಇದೀಗ ಉನ್ನತ ಶಿಕ್ಷಣದಲ್ಲಿಯೂ ಯುಜಿಸಿ ನಿರ್ದೇಶನದ ವಿರುದ್ಧ ನಿಲುವು ತಳೆದಿದೆ. +ಪ್ರತಿ ಶೈಕ್ಷಣಿಕ ವರ್ಷಾರಂಭದ ನಂತರ ಜುಲೈ-ಆಗಸ್ಟ್‌ ಮತ್ತು ಜನವರಿ ಫೆಬ್ರವರಿ ದ್ವೈವಾರ್ಷಿಕ ಪ್ರವೇಶಾತಿ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಯುಜಿಸಿ ಸೂಚಿಸಿತ್ತು. ಹೊಸ ಮಾದರಿಯ ಪ್ರವೇಶಾತಿಗಳು 2024-25ನೇ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ಬರಲಿದೆ ಎಂದಿತ್ತು. ಆದರೆ, ಇದು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ, ಯುಜಿಸಿಗೆ ಪತ್ರ ಬರೆಯಲು ನಿರ್ಧರಿಸಿದೆ. +ದ್ವೈವಾರ್ಷಿಕ ಪ್ರವೇಶಾತಿ ಏಕೆ? ಯುಜಿಸಿ ಹೇಳುವುದೇನು?:ಉನ್ನತ ಶಿಕ್ಷಣ ಅಧ್ಯಯನಕ್ಕೆ ಪ್ರವೇಶ ಪಡೆಯಲು ಅರ್ಹತೆ ಹೊಂದಿಯೂ ಯಾವುದಾದರೂ ಕಾರಣದಿಂದ ಜುಲೈ-ಆಗಸ್ಟ್‌ನಲ್ಲಿ ಉನ್ನತ ಶಿಕ್ಷಣ ಪ್ರವೇಶಾವಕಾಶ ತಪ್ಪುವ ಸಾಧ್ಯತೆ ಇರುವ ವಿದ್ಯಾರ್ಥಿಗಳಿಗೆ ಹೊಸ ಪದ್ಧತಿಯಂತೆ ವರ್ಷಕ್ಕೆರಡು ಬಾರಿ ಪ್ರವೇಶಾತಿ ಸೌಲಭ್ಯ ದೊರೆಯುವ ತನ್ನ ನಿಲುವನ್ನು ಯುಜಿಸಿ ಸಮರ್ಥಿಸಿಕೊಂಡಿದೆ. ಜಗತ್ತಿನಾದ್ಯಂತ ಹಲವು ವಿವಿಗಳು ಈಗಾಗಲೇ ವರ್ಷಕ್ಕೆ ಎರಡು ಬಾರಿ ಪ್ರವೇಶಾತಿ ನಿಯಮ ಅನುಸರಿಸುತ್ತಿವೆ. +ಅದನ್ನು ಅಳವಡಿಸಿಕೊಂಡರೆ ಭಾರತೀಯ ಉನ್ನತ ಶಿಕ್ಷಣ ಸಂಸ್ಥೆಗಳು ಜಾಗತಿಕ ಸಹಯೋಗ ಮತ್ತು ವಿದ್ಯಾರ್ಥಿ ವಿನಿಮಯ ಹೆಚ್ಚಿಸಲು ನೆರವಾಗುತ್ತದೆ ಎಂದು ಯುಜಿಸಿ ಅಭಿಪ್ರಾಯಪಟ್ಟಿದೆ. +ಉನ್ನತ ಶಿಕ್ಷಣ ಸಚಿವರ ಪ್ರತಿಕ್ರಿಯೆ:ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು 2035ಕ್ಕೆ ಈಗಿರುವ ಪ್ರಮಾಣಕ್ಕಿಂತ ಶೇ.50ರಷ್ಟು ಹೆಚ್ಚಿಸುವ ಗುರಿ ಸಾಧಿಸಲು ಎಲ್ಲ ಕಾಲೇಜುಗಳಲ್ಲಿಯೂ ವರ್ಷಕ್ಕೆ ಎರಡು ಬಾರಿ ಪ್ರವೇಶ ನೀಡಬೇಕೆನ್ನುವ ಸೂಚನೆ ಪಾಲಿಸಲು ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದ್ದಾರೆ. +ಸರ್ಕಾರಿ, ಖಾಸಗಿ ಕಾಲೇಜುಗಳು ಅಧ್ಯಾಪಕರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಈಗಿರುವ ಪದ್ಧತಿ ಪ್ರಕಾರವೇ ಉನ್ನತ ಶಿಕ್ಷಣ ನೀಡುವುದು ಕಠಿಣ. ಹಾಗಾಗಿ, ಯಜಿಸಿಯ ಹೊಸ ನಿಯಮ ಪಾಲನೆ ಅಸಾಧ್ಯ ಎಂದು ಪತ್ರ ಬರೆಯಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. \ No newline at end of file diff --git a/eesanje/url_46_80_2.txt b/eesanje/url_46_80_2.txt new file mode 100644 index 0000000000000000000000000000000000000000..5507f00723ecf94b9d0d716a8efc87a9c6400943 --- /dev/null +++ b/eesanje/url_46_80_2.txt @@ -0,0 +1,5 @@ +ಪರಿಷತ್‌ ಸದಸ್ಯರಾಗಿ ಬಸನಗೌಡ ಬಾದರ್ಲಿ ಪ್ರಮಾಣ ವಚನ ಸ್ವೀಕಾರ +ಬೆಂಗಳೂರು, ಜೂ.11– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಬಸನಗೌಡ ಬಾದರ್ಲಿ ಇಂದು ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. +ವಿಧಾನಸೌಧದ ಸಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮುಖದಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿ ಬಾದರ್ಲಿ ಅವರು, ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಸ್ವೀಕರಿಸಿದರು. +ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಬಸನಗೌಡ ಬಾದರ್ಲಿ ಹೊರತುಪಡಿಸಿ ಬೇರೆ ಅಭ್ಯರ್ಥಿಗಳು ಸ್ಪರ್ಧಿಸಿರಲಿಲ್ಲ. ಪ್ರತಿಪಕ್ಷಗಳಾದ ಜೆಡಿಎಸ್‌‍ ಮತ್ತು ಬಿಜೆಪಿ ಚುನಾವಣೆಯಿಂದ ದೂರ ಉಳಿದಿದ್ದವು. ಹೀಗಾಗಿ ಬಾದರ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು. +ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಾದರ್ಲಿ ಅವರನ್ನು ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದರು. \ No newline at end of file diff --git a/eesanje/url_46_80_3.txt b/eesanje/url_46_80_3.txt new file mode 100644 index 0000000000000000000000000000000000000000..666eae41760b70b4b92bda9cc464c0cb8f4e0a8e --- /dev/null +++ b/eesanje/url_46_80_3.txt @@ -0,0 +1,8 @@ +ವಾಲ್ಮೀಕಿ ಹಗರಣದಲ್ಲಿ ಇನ್ನೂ ಹಲವರು ಸಿಕ್ಕಿಬೀಳುತ್ತಾರೆ : ವಿಜಯೇಂದ್ರ +ಬೆಂಗಳೂರು,ಜು.11-ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಮಾತ್ರವಲ್ಲದೆ ಇನ್ನೂ ಅನೇಕರು ಸಿಕ್ಕಿಬೀಳಲಿದ್ದಾರೆ, ಕಾದು ನೋಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಾಗೇಂದ್ರ ಮಾತ್ರವಲ್ಲದೆ ಘಟಾನುಘಟಿ ನಾಯಕರ ಕೊರಳಿಗೆ ಉರುಳಾಗಲಿದೆ. ಎಲ್ಲವನ್ನೂ ಕಾಲವೇ ನಿರ್ಧರಿಸಲಿದೆ ಎಂದು ಸೂಚ್ಯವಾಗಿ ತಿಳಿಸಿದರು. +ಬೇನಾಮಿಯಾಗಿ ಅನೇಕರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಉಜೂರು ಎಂಬುವವರಿಗೆ ಎರಡು ಖಾತೆಗಳಿಂದ ಹಣ ವರ್ಗಾವಣೆಯಾಗಿರುವುದೇ ನಿದರ್ಶನ. ಇದು ಬಹುದೊಡ್ಡ ಹಗರಣವಾಗಿದ್ದು, ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಲಿದೆ ಎಂದರು. +ಎಸ್‌‍ಸಿ/ಎಸ್‌‍ಸಿಪಿ/ಟಿಎಸ್‌‍ಪಿ ಯೋಜನೆಯಡಿ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡಿರುವುದಕ್ಕೆ ಸ್ವತಃ ರಾಷ್ಟ್ರೀಯ ಪರಿಶಿಷ್ಟ ಜಾತಿಯ ಆಯೋಗ ಆಕ್ಷೇಪಿಸಿ ವಾರದೊಳಗೆ ವರದಿ ಕೊಡುವಂತೆ ಸೂಚನೆ ನೀಡಿದೆ. ಇದು ದಲಿತ ವಿರೋಧಿ ಸರ್ಕಾರ ಎನ್ನುವುದಕ್ಕಿಂತ ಬೇರೇನು ನಿದರ್ಶನ ಬೇಕು? ಎಂದು ಪ್ರಶ್ನಿಸಿದರು. +ಮಾತೆತ್ತಿದರೆ ನಾನು ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯನವರು ತಮ ಬೆನ್ನನ್ನು ತಾವೇ ಚಪ್ಪರಿಸಿಕೊಳ್ಳುತ್ತಿದ್ದಾರೆ. ತಮ ಬಗ್ಗೆ ತಾವೇ ಜೈಕಾರವನ್ನೂ ಹಾಕಿಕೊಳ್ಳುತ್ತಿದ್ದಾರೆ. ನಿಜವಾಗಿಯೂ ಕಾಂಗ್ರೆಸ್‌‍ ಸರ್ಕಾರ ದಲಿತರಿಗೆ ಚೂರಿ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗಳಿಗೆ ಈ ಹಿಂದೆಯೂ ಬಳಸಿಕೊಂಡಿದ್ದರು. ಇದೀಗ 14 ಸಾವಿರ ಕೋಟಿ ಹಣವನ್ನು ಬಳಸಿಕೊಂಡಿದ್ದಾರೆ. ಒಟ್ಟಾರೆ 24 ಸಾವಿರ ಕೋಟಿ ರೂ. ಹಣ ಬಳಕೆಯಾಗಿದೆ. ಇದು ದಲಿತರಿಗೆ ಮಾಡಿದ ಅನ್ಯಾಯವಲ್ಲವೇ? ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. +ಮುಡಾ ಹಗರಣದಲ್ಲಿ ಸ್ವತಃ ಸಿದ್ದರಾಮಯ್ಯನವರ ಕುಟುಂಬದವರೇ ಶಾಮೀಲಾಗಿದ್ದಾರೆ. ಈಗ ಇದನ್ನೂ ಕೂಡ ತಿಪ್ಪೆ ಸಾರುವ ಕೆಲಸ ನಡೆಯುತ್ತಿದೆ. ಇದರ ವಿರುದ್ಧ ಮೈಸೂರಿನಲ್ಲಿ ನಾಳೆ ಪಕ್ಷದ ವತಿಯಿಂದ ಬೃಹತ್‌ ಹೋರಾಟ ನಡೆಸುವುದಾಗಿ ವಿಜಯೇಂದ್ರ ಹೇಳಿದರು. \ No newline at end of file diff --git a/eesanje/url_46_80_4.txt b/eesanje/url_46_80_4.txt new file mode 100644 index 0000000000000000000000000000000000000000..c8fee2e52ca30da4bdded1b2025456e380e0178d --- /dev/null +++ b/eesanje/url_46_80_4.txt @@ -0,0 +1,13 @@ +ಪತ್ರಕರ್ತರ ಪ್ರಶ್ನೆಗಳ ಸುರಿಮಳೆಗೆ ರೊಚ್ಚಿಗೆದ್ದು ರೇಗಾಡಿದ ಸಿಎಂ ಸಿದ್ದರಾಮಯ್ಯ +ಮೈಸೂರು,ಜು.11– ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖಾ ವರದಿ ತಮ ಕೈ ಸೇರಿಲ್ಲ ಎಂದು ಹೇಳುವ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಳೆ ಕಳೆದುಕೊಂಡು ಏರಿದ ಧ್ವನಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣ ಕುರಿತು ತನಿಖೆಗೆ ಎಸ್ಐಟಿ ರಚಿಸಲಾಗಿದೆ. ಸರ್ಕಾರಕ್ಕೆ ಇನ್ನೂ ವರದಿ ಬಂದಿಲ್ಲ. +ಪ್ರಾಥಮಿಕ ವರದಿಯೂ ಇಲ್ಲ, ಅಂತಿಮ ವರದಿಯೂ ನಮಗೆ ತಲುಪಿಲ್ಲ. ಪೂರ್ಣ ಪ್ರಮಾಣದ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೊಣೆಗಾರಿಕೆಯನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು. +ಖಜಾನೆಯಿಂದ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಎದುರಾದಾಗ ಆ ರೀತಿಯಾಗಲು ಸಾಧ್ಯವಿಲ್ಲ ಎಂದು ಸಮರ್ಥನೆ ನೀಡಿದರು. ಬಿಜೆಪಿಯವರು ಹೇಳುತ್ತಾರೆ ಎಂಬ ಕಾರಣಕ್ಕೆ ಮಾಧ್ಯಮದವರು ಆ ರೀತಿಯ ಪ್ರಶ್ನೆಗಳನ್ನು ಕೇಳಬಾರದು. ಹಣ ವರ್ಗಾವಣೆಯಾಗಿರುವುದಕ್ಕೆ ದಾಖಲಾತಿ ಎಲ್ಲಿದೆ ಎಂದು ಖಾರವಾಗಿ ಪ್ರಶ್ನಿಸಿದರು. +ಇಲಾಖಾವಾರು ಮತ್ತು ನಿಗಮಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಅಧಿಕಾರಿಗಳು ಅನುದಾನ ಲಭ್ಯತೆ ಆಧಾರದ ಮೇಲೆ ಬಿಡುಗಡೆ ಮಾಡುತ್ತಾರೆ. ನನಗೆ ಅದರ ಮಾಹಿತಿ ಬರುವುದಿಲ್ಲ. ಆ ಕಡತಕ್ಕೆ ನಾನು ಸಹಿಯನ್ನೂ ಹಾಕುವುದಿಲ್ಲ. ಹಣ ವರ್ಗಾವಣೆಯಾಗಿರುವ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಇನ್ನೂ ವರದಿ ಬಂದಿಲ್ಲ ಎಂದು ಹೇಳಿದರು. +ಆರ್ಥಿಕ ಸಚಿವರಾಗಿರುವ ಸಿದ್ದರಾಮಯ್ಯನವರು ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಬಳಿಕ ನಿರ್ದೋಷಿಯಾದರೆ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಜೆಡಿಎಸ್ನ ಶಾಸಕ ಜಿ.ಟಿ.ದೇವೇಗೌಡರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ಇದರಲ್ಲಿ ಬ್ಯಾಂಕ್ ಅವ್ಯವಹಾರವಾಗಿದೆ. ಹಾಗಿದ್ದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜೀನಾಮೆ ನೀಡಬೇಕಲ್ಲವೇ? ಎಂದು ತಿರುಗೇಟು ನೀಡಿದರು. +ತನಿಖೆಯೇ ಮುಗಿದಿಲ್ಲ, ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿಲ್ಲ, ಖಜಾನೆಯಿಂದ ಹಣ ವರ್ಗಾವಣೆಯಾಗಿದೆ ಎಂದು ದಾಖಲೆ ಎಲ್ಲಿದೆ? ಎಂದಾಗ ಮಾಧ್ಯಮದವರು ದಾಖಲಾತಿ ತೋರಿಸಿದರು. ಇದು ಆದೇಶ ಅಲ್ಲ ಎಂದು ತಳ್ಳಿ ಹಾಕಿದರು. ಎಸ್ಐಟಿ ದಾಖಲಾತಿ ನೀಡಿದೆ ಎನ್ನುತ್ತಿದ್ದಂತೆ ಸಿಟ್ಟಾದ ಸಿದ್ದರಾಮಯ್ಯನವರು, ಎಲ್ಲಿದೆ, ಯಾವ ವರದಿ ಬಂದಿದೆ ಎಂದು ಏರಿದ ಧ್ವನಿಯಲ್ಲಿ ಕೆಂಡಾಮಂಡಲವಾದರು. +ದಾಖಲಾತಿ ತೋರಿಸುವುದಾಗಿ ಮಾಧ್ಯಮದವರು ಹೇಳುತ್ತಿದ್ದಂತೆ ಎಸ್ಐಟಿಯವರು ವಿಶ್ಲೇಷಣೆ ನಡೆಸಿ ತನಿಖಾ ವರದಿ ನೀಡಲಿ. ನಂತರ ಜವಾಬ್ದಾರಿ ನಿಗದಿ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದರು.ಮುಡಾ ಹಗರಣದಲ್ಲಿ ಯಾವುದೇ ಲೋಪವಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಷ್ಟೇ ಅಲ್ಲ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಬಂದು ಪ್ರತಿಭಟನೆ ಮಾಡಲಿ. ಅವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ರಾಜಕೀಯವಾಗಿಯೇ ತಿರುಗೇಟು ನೀಡಲು ನಮಗೂ ಗೊತ್ತಿದೆ ಎಂದು ಹೇಳಿದರು. +ಬದಲಿ ನಿವೇಶನ ಮಂಜೂರಾತಿಯಲ್ಲಿ ನಿಯಮ ಬಾಹಿರವಾಗಿ ಏನು ನಡೆದಿದೆ ಎಂದು ಬಿಜೆಪಿಯವರು ಸಾಬೀತು ಪಡಿಸಬೇಕು. 2005 ರಲ್ಲಿ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಡಲಾಗಿದೆ. 2010 ರಲ್ಲಿ ದಾನಪತ್ರದಲ್ಲಿ ಕೃಷಿ ಭೂಮಿಯೆಂದೇ ನಮೂದು ಮಾಡಲಾಗಿದೆ. ಅದಕ್ಕೂ, ನಮಗೂ ಸಂಬಂಧವಿಲ್ಲ. ನನ್ನ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ದಾನಪತ್ರ ನೀಡಿದ್ದಾರೆ. ಅದರಲ್ಲಿ ನಿಯಮಾವಳಿ ಉಲ್ಲಂಘನೆಯೇನಿಲ್ಲ. ಒಂದು ವೇಳೆ ಕೃಷಿಭೂಮಿಯೆಂದು ನಮೂದಾಗಿದ್ದರೂ ಕೂಡ ಅದು ದೊಡ್ಡ ಅಪರಾಧವೇನಲ್ಲ ಎಂದರು. +2010 ರವರೆಗೂ ಭೂಮಿ ಕೃಷಿ ಮಾದರಿಯಲ್ಲಿಯೇ ಇತ್ತು. 2014 ರಲ್ಲಿ ಮುಡಾ ನಿವೇಶನವನ್ನಾಗಿ ಅಭಿವೃದ್ಧಿಪಡಿಸಿ ಹಂಚಿದೆ. ಅದನ್ನು ಹಾಗೆಯೇ ಬಿಟ್ಟುಬಿಡಬೇಕೆ?, ಬದಲಿ ನಿವೇಶನ ಕೇಳಿದ್ದೇವೆ, ನಿರ್ದಿಷ್ಟ ಜಾಗದಲ್ಲಿ ಕೊಡಿ ಎಂದು ಕೇಳಿಲ್ಲ, ಮುಡಾದಲ್ಲಿ ಎಲ್ಲಾ ಪಕ್ಷದವರೂ ಸದಸ್ಯರಿದ್ದು, ಅವರದೇ ಸರ್ಕಾರವಿತ್ತು. ನಿವೇಶನ ನೀಡಿದ್ದು ಅವರದೇ ಆಡಳಿತಾವಧಿಯಲ್ಲಿ. ಇದಕ್ಕೆ ಹೊಣೆ ಯಾರು? ಎಂದು ಪ್ರಶ್ನಿಸಿದರು. +ಕಾನೂನು ಪ್ರಕಾರ, ಬದಲಿ ಜಮೀನು ನೀಡಿದ್ದಾರೆ. ಇದೇ ರೀತಿಯ ಸುಂದರಮ ಎಂಬುವವರ ಪ್ರಕರಣದಲ್ಲಿ ಹೈಕೋರ್ಟ್ ನಿರ್ದೇಶನ ನೀಡಿ ಬದಲಿ ನಿವೇಶನಕ್ಕೆ ಆದೇಶಿಸಿದೆ. ಮುಡಾಗೆ ದಂಡವನ್ನೂ ವಿಧಿಸಿದೆ. ಅವರ ಆಡಳಿತದಲ್ಲಿ ಮುಡಾ ತಪ್ಪು ಮಾಡಿದರೆ ಅದಕ್ಕೆ ಸಿದ್ದರಾಮಯ್ಯ ಹೊಣೆಯೇ? ಎಂದು ಪ್ರಶ್ನಿಸಿದರು. +ಭೂ ಸ್ವಾಧೀನ ಹೊಸ ಕಾಯಿದೆಯ ಪ್ರಕಾರ, ಮೂರು ಪಟ್ಟು ಪರಿಹಾರ ನೀಡಬೇಕಾಗುತ್ತದೆ. ಅದರನುಸಾರ 62 ಕೋಟಿ ರೂ. ಮೌಲ್ಯವಾಗುತ್ತದೆ ಎಂದು ಹೇಳಿದ್ದೇನೆ. 2021 ರಲ್ಲಿ ನಾನು ವಿರೋಧಪಕ್ಷದ ನಾಯಕನಾಗಿದ್ದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯೂ ಆಗಿರಲಿಲ್ಲ ಎಂದು ಹೇಳಿದರು. +ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದಲ್ಲಿ ಇದನ್ನು ನಮೂದಿಸದೇ ಇರುವ ಬಗ್ಗೆ ಮಾಡಲಾಗಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಯೋಗ ನೋಟೀಸ್ ಕೊಡಲಿ. ನಾನು ಉತ್ತರ ಕೊಡುತ್ತೇನೆ ಎಂದರು.ಹಿಂದುಳಿದ ವರ್ಗದ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೊಟ್ಟೆಉರಿ ತಾಳಲಾಗದೆ, ಈ ರೀತಿಯ ಸಂಚು ಮಾಡುತ್ತಿದ್ದಾರೆ. ನಾನು ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_80_5.txt b/eesanje/url_46_80_5.txt new file mode 100644 index 0000000000000000000000000000000000000000..260fa5fd8346793c498fbd647a7b41736b9dce34 --- /dev/null +++ b/eesanje/url_46_80_5.txt @@ -0,0 +1,5 @@ +ಕಲಘಟಗಿ : 32 ಲಕ್ಷಮೌಲ್ಯದ ನಕಲಿ ಮದ್ಯ ಜಪ್ತಿ, ನಾಲ್ವರ ಸೆರೆ +ಕಲಘಟಗಿ (ಧಾರವಾಡ),ಜು.11-ಕಲಘಟಗಿ ಠಾಣಾ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಗೋವಾ ಮಾರುಕಟ್ಟೆ ಸಂಪರ್ಕದಿಂದ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ನಾಲ್ವರನ್ನು ಬಂಧಿಸಿ 32ಲಕ್ಷ ರೂ. ಮೌಲ್ಯದ ಮದ್ಯವನ್ನು ಜಪ್ತಿ ಮಾಡಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಬಂಧಿತರು ಗೋವಾದಿಂದ ಸುಮಾರು 12.42 ಲಕ್ಷ ರೂ. ಕಿಮತ್ತಿನ ಎಡ್ರಿಯಲ್ ಕೋಲಾ ಲಿಕ್ಕರ್ ತೆಗೆದುಕೊಂಡು ಬಂದು ಕಲರ್ ಮಿಕ್ಸ್ ಮಾಡಿ ಇಂಪಿರಿಯಲ್ ಬ್ಲ್ಯೂ ಲೇಬಲ್ ಅಂಟಿಸಿ ಸುಮಾರು 32 ಲಕ್ಷ ರೂ. ಮೌಲ್ಯದ ಮದ್ಯ ತಯಾರಿಸಿ ಮಾರಲು ಇಟ್ಟುಕೊಂಡಿದ್ದರು ಎಂದರು. +ಹುಬ್ಬಳ್ಳಿ ಮೂಲದ ವಿನಾಯಕ ಜಿತೂರಿ, ವಿನಾಯಕ ಶಿಲ್ಲಿಂಗ್, ಈಶ್ವರ ಪವಾರ ಹಾಗೂ ರೋಹಿತ್ ಶಿಲ್ಲಿಂಗ್ ಎಂಬುವರನ್ನು ಬಂಧಿಸಲಾಗಿದೆ ಎಂದು ಹೇಳಿದರು.ಬಂಧಿತರಿಂದ 21.84ರೂ. ಮೌಲ್ಯದ 182 ಬಾಕ್ಸ್ ಇಂಪಿರಿಯಲ್ ಬ್ಲ್ಯೂ ಲೇಬಲ್ ಅಂಟಿಸಿದ ಎಡ್ರಿಯಲ್ ಕೋಲಾ ಲಿಕ್ಕರ್, 6.24 ಲಕ್ಷ ರೂ. ಮೌಲ್ಯದ ಕಲರ್ ಮಿಕ್ಸ್ ಮಾಡಿ ಲೇಬಲ್ ಅಂಟಿಸಿದ 52 ಬಾಕ್ಸ್ ಗಳು, 3.48 ಲಕ್ಷ ರೂ. ಮೌಲ್ಯದ ಕ್ರಮದಲ್ಲಿ ಡಂಪ್ ಮಾಡಿ ಕಲರ್ ಮಿಕ್ಸ್ ನ 29 ಬಾಕ್ಸ್ ಗಳು, 10 ಸಾವಿರ ಮೌಲ್ಯದ 1 ಕೀಪ್ಯಾಡ್ ಮೋಬೈಲ್, 1 ಸ್ಕ್ರೀನ್ ಟಚ್ ಮೊಬೈಲ್ ಹಾಗೂ ಎಸ್ಬಿಐ ಬ್ಯಾಂಕ್ ಪಾಸ್ಬುಕ್ ಹಾಗೂ 35 ಸಾವಿರ ಮೌಲ್ಯದ ಸ್ಕೂಟಿ ವಾಹನವನ್ನು ಜಪ್ತಿ ಮಾಡಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಡಿಎಸ್ಪಿಗಳಾದ ಎಸ್.ಎಂ.ನಾಗರಾಜ, ನಾರಾಯಣ ಭರಮನಿ, ಸಿಪಿಐ ಶ್ರೀಶೈಲ್ ಕೌಜಲಗಿ ಸೇರಿದಂತೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು. \ No newline at end of file diff --git a/eesanje/url_46_80_6.txt b/eesanje/url_46_80_6.txt new file mode 100644 index 0000000000000000000000000000000000000000..20ecc798b2341835ee7983fb49b92af4fe896693 --- /dev/null +++ b/eesanje/url_46_80_6.txt @@ -0,0 +1,5 @@ +ಪಬ್ಜಿ ಆಟದಲ್ಲಿ ಹಣ ಕಳೆದುಕೊಂಡ ವಿದ್ಯಾರ್ಥಿ ಆತಹತ್ಯೆ +ಹುಬ್ಬಳ್ಳಿ,ಜು.11– ಆನ್ಲೈನ್ನಲ್ಲಿ ಪಬ್ಜಿ ಸೇರಿದಂತೆ ವಿವಿಧ ಗೇಮಿಂಗ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ.ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ವಿದ್ಯಾರ್ಥಿ. ಈತ ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. +ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ವಾಸವಿದ್ದ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ.ರಾಕೇಶ್ ಶ್ರೀಶೈಲ್ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. +ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಸಾವಿನ ಹಿನ್ನೆಲೆ ಪೊಲೀಸ್ ಆಯುಕ್ತ ಶಶಿಕುಮಾರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದಾರೆ. ಆತಹತ್ಯೆ ಮಾಡಿಕೊಂಡ ಕೋಣೆಯ ಪರಿಶೀಲನೆ ಮಾಡಿದ್ದಾರೆ. +ಆತಹತ್ಯೆ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ಆಸ್ಪತ್ರೆ ಮುಟ್ಟುವುದರೊಳಗಾಗಿ ಆತ ಮೃತಪಟ್ಟಿದ್ದನು ಸದ್ಯ ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಅಶೋಕನರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_80_7.txt b/eesanje/url_46_80_7.txt new file mode 100644 index 0000000000000000000000000000000000000000..836a54be977772aecd3721d55e46cd215f226ff2 --- /dev/null +++ b/eesanje/url_46_80_7.txt @@ -0,0 +1,12 @@ +ವಾಲ್ಮೀಕಿ ನಿಗಮ ಹಗರಣದಲ್ಲಿ ಇಡಿಯಿಂದ ಕೆಲವರ ಬಂಧನ ಸಾಧ್ಯತೆ +ಬೆಂಗಳೂರು,ಜು.11-ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ದಾಳಿ ಸತತ 24 ಗಂಟೆಗಳಿಂದ ಮುಂದುವರಿದಿದೆ. +ಕಳೆದ ರಾತ್ರಿಯಿಂದ ಮಾಜಿ ಸಚಿವ ನಾಗೇಂದ್ರ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರುಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಂಡು ಮನೆಯಲ್ಲಿ ಸಿಕ್ಕಿರುವ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. +ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುತ್ತಿರುವ ಯಾವುದೇ ಪ್ರಶ್ನೆಗಳಿಗೆ ನಾಗೇಂದ್ರ ಮತ್ತು ದದ್ದಲ್ ಸರಿಯಾದ ಉತ್ತರ ಕೊಡದೆ ಎಲ್ಲದಕ್ಕೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಬಂಧಿಸಲು ಇಡಿ ತಂಡ ಸಜ್ಜಾಗಿದೆ. ಕೆಲವು ದಾಖಲೆಗಳ ಪರಿಶೀಲನೆ ಬಳಿಕ ಬಂಧನಕ್ಕೆ ಸಿದ್ದತೆ ನಡೆಸಲಾಗಿದೆ. +ಮನೆ ಮತ್ತು ಕಚೇರಿಯಲ್ಲಿ ಸಿಕ್ಕಿರುವ ಕೆಲವು ದಾಖಲೆಗಳ ಪರಿಶೀಲನೆಗೆ ಐಸಿಐಸಿಐ ಬ್ಯಾಂಕ್ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿತ್ತು. ಅವರಿಂದ ಮಾಹಿತಿ ಪಡೆದ ನಂತರ ಯಾವುದೇ ವೇಳೆ ಬಂಧನಕ್ಕೆ ಒಳಪಡಿಸಬಹುದು ಎಂದು ಇಡಿ ಮೂಲಗಳು ತಿಳಿಸಿವೆ.ಇನ್ನು ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ಕಳೆದ ರಾತ್ರಿಯಿಂದ ಮುಂಜಾನೆವರೆಗೂ ಮುಂದುವರಿದಿದೆ. +ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶಾಸಕ ದದ್ದಲ್ ನಿವಾಸ, ಕಚೇರಿ ಸೇರಿ ಉಳಿದ ಕಡೆಯೂ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಒಟ್ಟು ಹದಿನೆಂಟು ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದ್ದು, ರಾತ್ರಿ ಹನ್ನೆರಡು ಗಂಟೆಗೆ ಅಧಿಕಾರಿಗಳು ದಾಳಿಗೆ ವಿರಾಮ ನೀಡಿದ್ದರು. ದಾಳಿ ಮಾಡಿದ್ದ ಸ್ಥಳದಲ್ಲೇ ಉಳಿದುಕೊಂಡಿದ್ದರು. +ಇಡಿ ಅಧಿಕಾರಿಗಳ ಒಂದು ತಂಡ ನಾಗೇಂದ್ರ ನಿವಾಸದಲ್ಲಿ ಹಾಗೂ ಇನ್ನೊಂದು ತಂಡ ದದ್ದಲ್ ನಿವಾಸದಲ್ಲಿ ಉಳಿದುಕೊಂಡಿದ್ದರು. ಒಂದೇ ಕಾಲಕ್ಕೆ ಹದಿನೆಂಟಕ್ಕೂ ಹೆಚ್ಚು ಸ್ಥಳದಲ್ಲಿ ತಪಾಸಣೆ ನಡೆಸಲಾಗಿತ್ತು. ಎಲ್ಲಾ ದಾಳಿ ಸ್ಥಳಗಳಲ್ಲಿ ಏನೆಲ್ಲಾ ದೊರೆತಿದೆ ಎಂದು ಪರಿಶೀಲನೆ ಮಾಡಿ, ನಂತರ ಇಂಟರ್ ಲಿಂಕ್ ಹೊಂದಿರುವ ಸ್ಥಳದಲ್ಲಿ ಮತ್ತೆ ದಾಖಲೆಗಳ ಪರಿಶೀಲನೆ ನಡೆಯುವುದಿದೆ. ನಿನ್ನೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ನನ್ನು ಇಡಿ ವಶಕ್ಕೆ ಪಡೆದು ತನಿಖೆ ನಡೆಸಿತ್ತು. +ಪಂಪಣ್ಣ ಮನೆ ಮೇಲೆ ದಾಳಿ :ಬಸನಗೌಡ ದದ್ದಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ದದ್ದಲ್ ಆಪ್ತನ ಅಕ್ರಮ ಬಗೆದಷ್ಟೂ ಬಯಲಾಗುತ್ತಿದೆ. ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್ ವರ್ಕರ್ ಆಗಿ ಮುಂದುವರಿದಿದ್ದ. ನೂತನ ಎಂಎಲ್ಸಿ ಒಬ್ಬರ ಪಿಎ ಆಗಲು, ಪಿಡಿಓ ಕೆಲಸಕ್ಕೆ ಹಾಜರಾಗಿರಲಿಲ್ಲ. ನಗರದ ಆಜಾದ್ ನಗರದಲ್ಲಿ ಐಷಾರಾಮಿ ಫ್ಲ್ಯಾಟ್ ಖರೀದಿಸಿ ವಾಸ ಮಾಡುತ್ತಿದ್ದ. ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸನಗೌಡ ದದ್ದಲ್ ಅವರ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ. +ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪವಿದೆ. ಆರೋಪದ ಹಿನ್ನೆಲೆಯಲ್ಲಿ ಜುಲೈ 5 ರಂದು ಈತ ಎಸ್ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಇಡಿ ಪಡೆದಿದೆ. ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ. +ಹರೀಶ್ ಬಾಯಿ ಬಿಡಿಸಿದ ಇಡಿ :ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ನನ್ನು ಇಡಿ ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀಸಾಗರ ಹೋಟೆಲ್ ಬಳಿ ಡೀಲ್ ನಡೆದಿರುವುದು ಗೊತ್ತಾಗಿದೆ. ಹರೀಶ್ ಎರಡು ಬ್ಯಾಗ್ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದ. ನಿಗಮದ ಎಂಡಿ ಪದನಾಭ, ಅಕೌಂಟೆಂಟ್ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್ ಪಡೆಯಲು ಈ ಹೋಟೆಲ್ಗೆ ಬಂದಿದ್ದ. ಪಿಎ ಹರೀಶ್ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ. +ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ. +ಬ್ಯಾಂಕ್ ಸಿಬ್ಬಂದಿಗಳಿಗೆ ಲಕ್ಷ ಲಕ್ಷ ಕಮಿಷನ್ :ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮೆರಾ ರೆಕಾರ್ಡ್ಗಳನ್ನು ಎಸ್ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್ಗೆ ಭೇಟಿ ನೀಡಿ ಬ್ಯಾಂಕ್ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ. \ No newline at end of file diff --git a/eesanje/url_46_80_8.txt b/eesanje/url_46_80_8.txt new file mode 100644 index 0000000000000000000000000000000000000000..63b5a59eb83696c4c5a49e9d58020f480e9bdba6 --- /dev/null +++ b/eesanje/url_46_80_8.txt @@ -0,0 +1,13 @@ +ರಾಜ್ಯದ 11 ಜಿಲ್ಲೆಗಳಲ್ಲಿ 56 ಕಡೆ ಲೋಕಾಯುಕ್ತ ದಾಳಿ +ಬೆಂಗಳೂರು, ಜು.11 –ಬೆಳ್ಳಂಬೆಳಗ್ಗೆ ಸುಮಾರು 100ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ರಾಜ್ಯದ 56 ಸ್ಥಳಗಳಲ್ಲಿ ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.ಒಂದೆಡೆ ನಿನ್ನೆಯಷ್ಟೇ ವಾಲೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ಮಾಡಿದ್ದರೆ ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟರ ಮನೆಗಳ ಮೇಲೆ ಮೆಗಾ ರೇಡ್ ಮಾಡಿದ್ದಾರೆ. +ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ದೂರುಗಳ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, 11 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. +ಹಾಸನ, ಬೆಂಗಳೂರು, ಕೋಲಾರ, ಮೈಸೂರು, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ, ಕಲ್ಬುರ್ಗಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಸುಮಾರು 100 ಅಧಿಕಾರಿಗಳ ತಂಡಗಳು 56 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಂಗೇರಿ ವಿಭಾಗದಲ್ಲಿರುವ ಕಂದಾಯ ಅಧಿಕಾರಿ ಬಸವರಾಜ ಮಾಗಿ ಅವರು ಮೂಲತಃ ಕಲ್ಬುರ್ಗಿಯವರಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ನಿವಾಸಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಬಂಗಾರ, ನಗದು ಹಣ ಪತ್ತೆಯಾಗಿದ್ದು, ಇದಲ್ಲದೆ ಲಕ್ಷಾಂತರ ಮೊತ್ತದ ಕ್ಯಾಪ್ಸಿ ಕಾಯಿನ್ಗಳು ಪತ್ತೆಯಾಗಿದ್ದು ಅಧಿಕಾರಿಗಳೇ ಬೆರಗಾಗಿದ್ದಾರೆ. +ಮಂಡ್ಯ:ನಗರದ ನಿವೃತ್ತ ಎಕ್ಸಿಕ್ಯೂಟಿವ್ ಎಂಜಿನಿಯರ್ ಶಿವರಾಜ್ ಅವರ ಮನೆ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಫಾರ್ಮಹೌಸ್, ಶಿವರಾಜ್ ತಂದೆ ಮನೆ ಹಾಗೂ ಇವರು ಜಲ್ಲಿ ಕ್ರಷರ್ ವ್ಯವಹಾರ ಹೊಂದಿದ್ದು ಅಲ್ಲೂ ಕೂಡ ದಾಳಿ ನಡೆದಿದೆ. ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. +ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಉತ್ತರ ದಾಸನಪುರ ಗ್ರಾಪಂ ಕಾರ್ಯದರ್ಶಿ ಎನ್.ಎಂ. ಜಗದೀಶ್ಗೆ ಶಾಕ್ ನೀಡಿದ್ದಾರೆ. ಹಾಸನದ ಅವರ ಮನೆ, ಬೆಂಗಳೂರಿನಲ್ಲಿರುವ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. +ಕೋಲಾರದಲ್ಲಿ ತಹಸೀಲ್ದಾರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮನೆಗಳ ಮೇಲೆ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. +ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ಮಹೇಶ್ ಅವರ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ, ಗೋಕುಲಂ ಕಚೇರಿಯಲ್ಲಿಯೂ ದಾಳಿ ನಡೆದಿದ್ದು ಹಲವು ಕಡೆ ನಿವೇಶನ, ಕೃಷಿ ಜಮೀನು ಸೇರಿ ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. +ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಟಾಗೋರ್, ಮಹಾನಿರೀಕ್ಷಕ ಸುಬ್ರಮಣ್ಯೇಶ್ವರ ರಾವ್, ಮೈಸೂರು ಪ್ರಭಾರ ಎಸ್ಪಿ ಸುರೇಶ್ಬಾಬು ಅವರ ಮಾರ್ಗದರ್ಶನದಲ್ಲಿ, ಲೋಕಾಯುಕ್ತ ಡಿವೈಎಸ್ಪಿ ಕೃಷ್ಣಯ್ಯ, ಇನ್‌್ಸಪೆಕ್ಟರ್ಗಳಾದ ರವಿಕುಮಾರ್, ಜಯರತ್ನ, ಲೋಕೇಶ್ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. +ಬೆಳಗಾವಿ:ಬೆಳಗಾವಿ ಜಿಪಂ ಎಇಇ ಮಹದೇವ ಬನ್ನೂರ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರುವ ಅವರ ಬನ್ನೂರ ಅವರಿಗೆ ಸೇರಿದ ಮನೆಯ ಕೋಣೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದಾರೆ. ಈ ಹಿಂದೆಯೂ ಸಹ ಮನೆ ಮೇಲೆ ದಾಳಿ ಮಾಡಿ ದಾಖಲೆ ಸಂಗ್ರಹಿಸಿದ್ದರು. ಇದೀಗ ಮತ್ತೊಮೆ ಮುಂದುವರೆದ ಭಾಗವಾಗಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ, ಇನ್‌್ಸಪೆಕ್ಟರ್ ನಿರಂಜನ್ ಪಾಟೀಲ ನೇತೃತ್ವದ ತಂಡ ದಾಳಿ ನಡೆಸಿದೆ. +ಚಿತ್ರದುರ್ಗ:ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್ ಎಂ. ರವೀಂದ್ರಗೆ ಸೇರಿದ ಮನೆ, ಹಿರಿಯೂರು ತಾಲೂಕಿನ ಸೂಗೂರು ಫಾರ್ಮಹೌಸ್ ಹಾಗೂ ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ. +ಧಾರವಾಡ:ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಅವರ ಮನೆ ಹಾಗೂ ಧಾರವಾಡದ ಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರಗಳಲ್ಲಿರುವ ಪಿಜಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. +ರಾಮನಗರ:ಜಿಲ್ಲೆಯ ಹಾರೋಹಳ್ಳಿ ತಹಸೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.ವಿಜಿಯಣ್ಣ ಅವರು ಈ ಮೊದಲು ಕೋಲಾರ ತಹಸೀಲ್ದಾರ್ ಆಗಿದ್ದರು. ಲೋಕಾಯುಕ್ತ ಎಸ್ಪಿ ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ. \ No newline at end of file diff --git a/eesanje/url_46_80_9.txt b/eesanje/url_46_80_9.txt new file mode 100644 index 0000000000000000000000000000000000000000..a9ed771ee980babc6bccac634a85699edcae2e45 --- /dev/null +++ b/eesanje/url_46_80_9.txt @@ -0,0 +1,13 @@ +ವಾಲ್ಮೀಕಿ ನಿಗಮದ ಹಗರಣ : ಇಂದೂ ಮುಂದುವರೆದ ಇಡಿ ಕಾರ್ಯಾಚರಣೆ +ಬೆಂಗಳೂರು,ಜು.11– ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಬೃಹತ್‌ ಕಾರ್ಯಾಚರಣೆ ಸತತ 24 ಗಂಟೆಗಳಿಂದ ದಾಳಿ ಮುಂದುವರಿದಿದೆ. +ಕಳೆದ ರಾತ್ರಿಯಿಂದ ಮಾಜಿ ಸಚಿವ ನಾಗೇಂದ್ರ ಮತ್ತು ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಅವರುಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಮಾಜಿ ಸಚಿವ ನಾಗೇಂದ್ರ ಮನೆಗೆ ಇಡಿ ಅಧಿಕಾರಿಗಳು ಬೆಳಗಿನ ಜಾವ ಐದು ಗಂಟೆಗೇ ಬ್ಯಾಂಕ್‌ ಅಧಿಕಾರಿಗಳನ್ನು ಕರೆಸಿಕೊಂಡು ಮನೆಯಲ್ಲಿ ಸಿಕ್ಕಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. +ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕೇಳುತ್ತಿರುವ ಯಾವುದೇ ಪ್ರಶ್ನೆಗಳಿಗೆ ನಾಗೇಂದ್ರ ಮತ್ತು ದದ್ದಲ್‌ ಸರಿಯಾದ ಉತ್ತರ ಕೊಡದೆ ಎಲ್ಲದಕ್ಕೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಬಂಧಿಸಲು ಇಡಿ ತಂಡ ಸಜ್ಜಾಗಿದೆ. ಕೆಲವು ದಾಖಲೆಗಳ ಪರಿಶೀಲನೆ ಬಳಿಕ ಬಂಧನಕ್ಕೆ ಸಿದ್ದತೆ ನಡೆಸಲಾಗಿದೆ. +ಮನೆ ಮತ್ತು ಕಚೇರಿಯಲ್ಲಿ ಸಿಕ್ಕಿರುವ ಕೆಲವು ದಾಖಲೆಗಳ ಪರಿಶೀಲನೆಗೆ ಐಸಿಐಸಿಐ ಬ್ಯಾಂಕ್‌ ಅಧಿಕಾರಿಗಳನ್ನು ಕರೆಸಿಕೊಳ್ಳಲಾಗಿತ್ತು. ಅವರಿಂದ ಮಾಹಿತಿ ಪಡೆದ ನಂತರ ಯಾವುದೇ ವೇಳೆ ಬಂಧನಕ್ಕೆ ಒಳಪಡಿಸಬಹುದು ಎಂದು ಇಡಿ ಮೂಲಗಳು ತಿಳಿಸಿವೆ. +ಇನ್ನು ನಿನ್ನೆ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋ ಕಾರ್ಯ ಕಳೆದ ರಾತ್ರಿಯಿಂದ ಮುಂಜಾನೆವರೆಗೂ ಮುಂದುವರಿದಿದೆ. +ಸಚಿವ ನಾಗೇಂದ್ರ ನಿವಾಸದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಿಂದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಶಾಸಕ ದದ್ದಲ್‌ ನಿವಾಸ, ಕಚೇರಿ ಸೇರಿ ಉಳಿದ ಕಡೆಯೂ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಒಟ್ಟು ಹದಿನೆಂಟು ಕಡೆ ಜಾರಿ ನಿರ್ದೇಶನಾಲಯ ದಾಳಿ ನಡೆದಿದ್ದು, ರಾತ್ರಿ ಹನ್ನೆರಡು ಗಂಟೆಗೆ ಅಧಿಕಾರಿಗಳು ದಾಳಿಗೆ ವಿರಾಮ ನೀಡಿದ್ದರು. ದಾಳಿ ಮಾಡಿದ್ದ ಸ್ಥಳದಲ್ಲೇ ಉಳಿದುಕೊಂಡಿದ್ದರು. +ಇಡಿ ಅಧಿಕಾರಿಗಳ ಒಂದು ತಂಡ ನಾಗೇಂದ್ರ ನಿವಾಸದಲ್ಲಿ ಹಾಗೂ ಇನ್ನೊಂದು ತಂಡ ದದ್ದಲ್‌ ನಿವಾಸದಲ್ಲಿ ಉಳಿದುಕೊಂಡಿದ್ದರು. ಒಂದೇ ಕಾಲಕ್ಕೆ ಹದಿನೆಂಟಕ್ಕೂ ಹೆಚ್ಚು ಸ್ಥಳದಲ್ಲಿ ತಪಾಸಣೆ ನಡೆಸಲಾಗಿತ್ತು. ಎಲ್ಲಾ ದಾಳಿ ಸ್ಥಳಗಳಲ್ಲಿ ಏನೆಲ್ಲಾ ದೊರೆತಿದೆ ಎಂದು ಪರಿಶೀಲನೆ ಮಾಡಿ, ನಂತರ ಇಂಟರ್‌ ಲಿಂಕ್‌ ಹೊಂದಿರುವ ಸ್ಥಳದಲ್ಲಿ ಮತ್ತೆ ದಾಖಲೆಗಳ ಪರಿಶೀಲನೆ ನಡೆಯುವುದಿದೆ. ನಿನ್ನೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್‌ನನ್ನು ಇಡಿ ವಶಕ್ಕೆ ಪಡೆದು ತನಿಖೆ ನಡೆಸಿತ್ತು. +ಪಂಪಣ್ಣ ಮನೆ ಮೇಲೆ ದಾಳಿ :ಬಸನಗೌಡ ದದ್ದಲ್‌ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೆ ಇಡಿ ದಾಳಿ ನಡೆಸಿದ್ದು, ದದ್ದಲ್‌ ಆಪ್ತನ ಆಕ್ರಮ ಬಗೆದಷ್ಟೂ ಬಯಲಾಗುತ್ತಿದೆ. ಬಿಚ್ಚಾಲಿ ಗ್ರಾ.ಪಂ ಪಿಡಿಓ ಆಗಿ ನಿಯೋಜನೆಗೊಂಡಿದ್ದ ಪಂಪಣ್ಣ, ಪಿಡಿಓ ಚಾರ್ಜ್‌ ತೆಗೆದುಕೊಳ್ಳದೆ ರಾಯಚೂರು ತಾ.ಪಂನಲ್ಲಿ ಕೇಸ್‌‍ ವರ್ಕರ್‌ ಆಗಿ ಮುಂದುವರಿದಿದ್ದ. ನೂತನ ಎಂಎಲ್‌ಸಿ ಒಬ್ಬರ ಪಿಎ ಆಗಲು, ಪಿಡಿಓ ಕೆಲಸಕ್ಕೆ ಹಾಜರಾಗಿರಲಿಲ್ಲ. ನಗರದ ಆಜಾದ್‌ ನಗರದಲ್ಲಿ ಐಷಾರಾಮಿ ಪ್ಲ್ಯಾಟ್‌ ಖರೀದಿಸಿ ವಾಸ ಮಾಡುತ್ತಿದ್ದ. ತಾಲ್ಲೂಕು ಪಂಚಾಯತ್‌ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೂ ಬಸನಗೌಡ ದದ್ದಲ್‌ ಅವರ ಖಾಸಗಿ ವ್ಯವಹಾರ ನೋಡಿಕೊಳ್ಳುತ್ತಿದ್ದ. +ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್‌ ಪಡೆದಿರುವ ಆರೋಪವಿದೆ. ಆರೋಪದ ಹಿನ್ನೆಲೆಯಲ್ಲಿ ಜುಲೈ 5 ರಂದು ಈತ ಎಸ್‌‍ಐಟಿ ವಿಚಾರಣೆ ಒಳಗಾಗಿದ್ದ. ಪಂಪಣ್ಣನಿಂದ ಮಹತ್ವದ ದಾಖಲೆಗಳನ್ನು ಇಡಿ ಪಡೆದಿದೆ. ಪಂಪಣ್ಣ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಇಡಿ ಅಧಿಕಾರಿಗಳು ಸ್ಕ್ಯಾನ್‌ ಮಾಡಿ ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ. +ಹರೀಶ್‌ ಬಾಯಿ ಬಿಡಿಸಿದ ಇಡಿ :ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ನನ್ನು ಇಡಿ ವಿಚಾರಣೆ ನಡೆಸಿದ್ದು, ಮಲ್ಲೇಶ್ವರಂನ ಶ್ರೀ ಸಾಗರ ಹೋಟೆಲ್‌ ಬಳಿ ಡೀಲ್‌ ನಡೆದಿರುವುದು ಗೊತ್ತಾಗಿದೆ. ಹರೀಶ್‌ ಎರಡು ಬ್ಯಾಗ್‌ಗಳಲ್ಲಿ 25 ಲಕ್ಷ ರೂ. ಹಣ ಪಡೆದಿದ್ದ. ನಿಗಮದ ಎಂಡಿ ಪದನಾಭ, ಅಕೌಂಟೆಂಟ್‌ ಪರಶುರಾಮ ಬಳಿ 25 ಲಕ್ಷ ರೂ. ಕಮಿಷನ್‌ ಪಡೆಯಲು ಈ ಹೋಟೆಲ್‌ಗೆ ಬಂದಿದ್ದ. ಪಿಎ ಹರೀಶ್‌ ಕೊಟ್ಟ ಮಾಹಿತಿ ಅಧಾರದ ಮೇಲೆ ನಾಗೇಂದ್ರ ಅವರನ್ನು ಪ್ರಶ್ನಿಸಲಾಗುತ್ತಿದ್ದು, ಹೇಳಿಕೆ ದಾಖಲು ಮಾಡಿಕೊಳ್ಳಲಾಗುತ್ತಿದೆ. +ಈ 25 ಲಕ್ಷ ಹಣ ತರಿಸಿದವರು ಯಾರು, ಆ ಹಣ ಎಲ್ಲಿದೆ ಎಂಬ ಮಾಹಿತಿ ಇಡಿಗೆ ಬೇಕಾಗಿದೆ. ಸದ್ಯ ಐದು ಜನ ಇಡಿ ಅಧಿಕಾರಿಗಳ ತಂಡದಿಂದ ನಾಗೇಂದ್ರ ಮನೆಯಲ್ಲಿ ಶೋಧ ಮುಂದುವರಿದ್ದು, ಬ್ಯಾಂಕ್‌ ಅಧಿಕಾರಿಗಳ ಮೇಲಿನ ಇಡಿ ದಾಳಿಯಲ್ಲಿ ಸಿಕ್ಕ ದಾಖಲೆಗಳ ಅಧಾರದ ಮೇಲೆ ಮಾಜಿ ಸಚಿವರ ವಿಚಾರಣೆ ನಡೆಸಲಾಗುತ್ತಿದೆ. +ಬ್ಯಾಂಕ್‌ ಸಿಬ್ಬಂದಿಗಳಿಗೆ ಲಕ್ಷ ಲಕ್ಷ ಕಮಿಷನ್‌ :ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಬ್ಯಾಂಕ್‌ ಸಿಬ್ಬಂದಿಗೂ ಲಕ್ಷ ಲಕ್ಷ ರೂ. ಕಮಿಷನ್‌ ನೀಡಲಾಗಿತ್ತು. ಅಕ್ರಮವಾಗಿ ಹಣ ವರ್ಗಾವಣೆ ಮಾಡಲು ಸಚಿವರ ಹಾಗೂ ಅಧ್ಯಕ್ಷರ ಪಿಎಗಳು ಬ್ಯಾಂಕ್‌ಗೆ ಸತತವಾಗಿ ಭೇಟಿ ನೀಡಿದ್ದರು. ಈಗಾಗಲೇ ಬ್ಯಾಂಕಿನ ಸಿಸಿ ಕ್ಯಾಮರಾ ರೆಕಾರ್ಡ್‌ಗಳನ್ನು ಎಸ್‌‍ಐಟಿ ಪರಿಶೀಲನೆ ಮಾಡಿದ್ದು, ಅದನ್ನು ಇಡಿ ಕೂಡ ಸಂಗ್ರಹಿಸಿದೆ. ಸಚಿವರ ಹಾಗೂ ಶಾಸಕರ ಮೇಲೆ ದಾಳಿಗೂ ಮುನ್ನ ಬ್ಯಾಂಕ್‌ಗೆ ಭೇಟಿ ನೀಡಿ ಬ್ಯಾಂಕ್‌ ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದೆ. \ No newline at end of file diff --git a/eesanje/url_46_81_1.txt b/eesanje/url_46_81_1.txt new file mode 100644 index 0000000000000000000000000000000000000000..79fc8fcb9bc17222dd034d7b60de86eab9649758 --- /dev/null +++ b/eesanje/url_46_81_1.txt @@ -0,0 +1,9 @@ +ಕಳಸಾ-ಬಂಡೂರಿ ಯೋಜನೆ ಜಾರಿಗೆ ಗೋವಾ ಸಿಎಂ ಅಡ್ಡಗಾಲು : ಶಾಸಕ ಕೋನರಡ್ಡಿ +ನವಲಗುಂದ,ಜು.11-ಉತ್ತರ ಕರ್ನಾಟಕದ ಪ್ರಮುಖ ಬೇಡಿಕೆ ಮಹದಾಯಿ ಕಳಸಾ-ಬಂಡೂರಿ ಜಾರಿ ಮಾಡಲು ಗೋವಾ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಪ್ರವಾಹ ಪ್ರಾಧಿಕಾರ ಮೂಲಕ ಯೋಜನೆ ತಡೆಯಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಹದಾಯಿ ಹೋರಾಟಗಾರ ಹಾಗೂ ಶಾಸಕ ಎನ್‌.ಹೆಚ್‌. ಕೋನರಡ್ಡಿ ಹೇಳಿದರು. +ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಕೇಂದ್ರ ಸರ್ಕಾರದ ಅನುಮತಿ ಪಡೆಯದೆ ಮಹದಾಯಿ ಹತ್ತಿರ ವಿರುವ ವಿಆರ್‌ಡಿ ಆಣೆಕಟ್ಟು ಎತ್ತರಕ್ಕೆ ರಾಜ್ಯದ ವಿರೋಧವಿದೆ ಎಂದು ಅವರು ಹೇಳಿದರು. +ಗೋವಾ ಸರ್ಕಾರ ಒತ್ತಡದ ಮೆರೆಗೆ ಕೇಂದ್ರ ಸರ್ಕಾರ ರಚಿಸಿರುವ ಕೇಂದ್ರ ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಬಾರಿ ಮಳೆಯಾಗುವ ಸಂದರ್ಭದಲ್ಲಿ ಮಹದಾಯಿ ಅಚ್ಚುಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸುವ ಉದ್ದೇಶ ಏನು? ಎಂಬ ವಿಷಯವನ್ನು ರಾಜ್ಯದ ಸಂಸದರು ಗಂಭೀರವಾಗಿ ಪರಿಗಣಿಸಬೇಕು ಎಂದರು.ಮಹದಾಯಿ ನ್ಯಾಯಧೀಕರಣ ನ್ಯಾಯಮೂರ್ತಿ ಪಾಂಚಾಳ ಅವರು ಅಂತಿಮ ತೀರ್ಪು ನೀಡಿ ಕರ್ನಾಟಕಕ್ಕೆ 13.42 ಟಿಎಂಸಿ ನೀರು ಉಪಯೋಗಿಸಲು ಆದೇಶಿಸಿದೆ. +ನೀರು ಉಪಯೋಗಿಸಲು ಕಳಸಾ ನಾಲಾ ತಿರುವು ಯೋಜನಯಡಿ 1.72 ಟಿಎಂಸಿ ಹಾಗೂ ಬಂಡೂರ ನಾಲಾ ತಿರುವು ಯೋಜನೆ ಅಡಿ 2.18 ಟಿಎಂಸಿ ಕುಡಿಯುವ ನೀರಿನ (ಲಿಫ್‌್ಟ ಯೋಜನೆಗಳು) ಮಾಡಲು ಯಾವದೇ ತೊಂದರೆ ಇಲ್ಲ. ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ 27/02/2020 ರಂದು ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ನಂತರ ಡಿಪಿಆರ್‌ ತಯಾರಿಸಲು 29/12/2022 ರಂದು ಅನುಮತಿ ಸಹ ನೀಡಿದೆ. +ಮಹದಾಯಿ ಕಳಸಾ-ಬಂಡೂರಿ ಯೋಜನೆ ಪ್ರದೇಶದಲ್ಲಿ 26.925 ಹಾಗೂ ಬಂಡೂರ ಯೋಜನೆಗೆ 28.447 ಹೆಕ್ಟೇರ್‌ ಬೇಕಾಗಿದ್ದ ಅರಣ್ಯ ಭೂಮಿಗೆ ಬದಲಾಗಿ ರಾಜ್ಯ ಸರ್ಕರ ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದೆ. ಗೋವಾ ಕುಂಟು ನೆಪ ನೀಡಿ ಅಲ್ಲಿ ಹುಲಿ ಕಾರಿಡಾರ್‌ ಇದೆ ಎಂದು ಈ ಯೋಜನೆಯನ್ನು ಮುಂದೂಡಲು ಪ್ರಯತ್ನಿಸುತ್ತಿದೆ. +ಅದಕ್ಕೆ ರಾಜ್ಯ ಸರ್ಕಾರ ಅರಣ್ಯ ಪರಿಸರ ಉನ್ನತ ಸಮಿತಿ ಅನುಮೋದನೆ ಪಡೆಯಲು 30/01/2024 ರಂದು 77ನೇ ಎಸ್‌‍ ಸಿ-ಎನ್‌ಬಿಡಬ್ಲ್ಯೂಎಲ್‌ ಸಭೆಯಲ್ಲಿ ಮಂಡಿಸಿದೆ. ಆದರೆ ಕೇಂದ್ರ ಸರ್ಕಾರ ಅನುಮತಿ ನೀಡದೇ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ಮುಂಡೂಡಿ ಕಾಲಹರಣ ಮಾಡುವ ಬದಲು ರಾಜ್ಯದ ಹಿತದೃಷ್ಟಿಯಿಂದ ಅನುಮತಿ ನೀಡಬೇಕು ಎಂದರು. +ರಾಜ್ಯದ ನೆಲ ಜಲದ ಪ್ರಶ್ನೆ ಬಂದಾಗ ಹಿಂದಿನಿಂದಲೂ ರಾಜಕೀಯವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಒಗ್ಗಟ್ಟಾಗಿ ನಿರ್ಣಯ ತೆಗೆದುಕೊಂಡಿದ್ದು ಈಗ ರಾಜ್ಯದ ಎಲ್ಲಾ ಸಂಸದರು, ಕೇಂದ್ರ ಸಚಿವರು ಒಗ್ಗಟ್ಟಾಗಿ ಈ ಯೋಜನೆ ಜಾರಿಗೆ ಪ್ರಯತ್ನಿಸದಿದ್ದರೆ ಕರ್ನಾಟಕಕ್ಕೆ ಅನ್ಯಾಯವಾಗುತ್ತದೆ. +ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೇಂದ್ರ ಸರ್ಕಾರ ಅನುಮತಿ ನೀಡುವ ನಿರೀಕ್ಷೆಯ ಮೇಲೆ ಕಳಸಾ-ಬಂಡೂರಿ ನಾಲಾ ತಿರುವ ಯೋಜನೆಗಳಿಗೆ (ಲಿಫ್‌್ಟ ಯೋಜನೆಗಳು) ಟೆಂಡರ್‌ ಪ್ರಕ್ರಿಯೆ ಅಂತಿಮಗೊಳಿಸಿ ಕೇಂದ್ರ ಸರ್ಕಾರ ಅರಣ್ಯ ಮತ್ತು ವನ್ಯಜೀವಿ ಪರಿಸರ ಇಲಾಖೆಯಿಂದ ಅನುಮೋದನೆ ಪಡೆದ ತಕ್ಷಣ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಂಡು ಕಾಮಗಾರಿ ಪ್ರಾರಂಭಿಸಲು ನಿರ್ಧರಿಸಿದ್ದಾರೆ ಎಂದರು. \ No newline at end of file diff --git a/eesanje/url_46_81_10.txt b/eesanje/url_46_81_10.txt new file mode 100644 index 0000000000000000000000000000000000000000..4f69d3590d40825963be03bda9a3b64e76846848 --- /dev/null +++ b/eesanje/url_46_81_10.txt @@ -0,0 +1,15 @@ +ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ ಬಸನಗೌಡ ದದ್ದಲ್‌ ಮನೆ, ಕಚೇರಿ ಸೇರಿ 18 ಕಡೆ ಇಡಿ ದಾಳಿ +ಬೆಂಗಳೂರು,ಜು.10– ರಾಜ್ಯ ಸರ್ಕಾರಕ್ಕೆ ಭಾರೀ ಕಂಠಕವಾಗಿ ಪರಿಣಮಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್‌, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳ ಮನೆ, ಕಚೇರಿ, ಬ್ಯಾಂಕ್‌ ಸೇರಿದಂತೆ ಒಟ್ಟು 18 ಕಡೆ ಏಕಕಾಲಕ್ಕೆ ಜಾರಿ ನಿದೇರ್ಶನಾಲಯ ( ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. +ವಿಶೇಷವೆಂದರೆ ನಿನ್ನೆಯಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ವಾಲೀಕಿ ನಿಗಮ ಮಂಡಳಿ ಅಧ್ಯಕ್ಷ ಬಸನಗೌಡ ದದ್ದಲ್‌, ಎಸ್‌‍ಐಟಿ ಮುಂದೆ ವಿಚಾರಣೆಗೆ ಹಾಜರಾದ ಮರುದಿನವೇ ಇಡಿ ದಾಳಿ ನಡೆಸಿದೆ.ಮೂಲಗಳ ಪ್ರಕಾರ ಈಗಾಗಲೇ ಬಿ.ನಾಗೇಂದ್ರ ಅವರನ್ನು ಇಡಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. +ಬುಧವಾರ ಬೆಳಗ್ಗೆ ಒಟ್ಟು 5 ತಂಡ ಪ್ರತ್ಯೇಕವಾಗಿ ಬೆಂಗಳೂರು, ರಾಯಚೂರು, ಬಳ್ಳಾರಿ, ಹೈದರಾಬಾದ್‌ ಸೇರಿದಂತೆ ಒಟ್ಟು 18 ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಮಹತ್ವದ ದಾಖಲೆಗಳು, ಹಣದ ವಹಿವಾಟಿನ ಕಾಗದ ಪತ್ರಗಳು, ಮೊಬೈಲ್‌ ಸೇರಿದಂತೆ ಮತ್ತಿತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. +ದಾಳಿಗೂ ಮುನ್ನ ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸಣ್ಣ ಸುಳಿವನ್ನು ಕೂಡ ನೀಡಿರಲಿಲ್ಲ. ಸಿಎಸ್‌‍ಎಫ್‌ ಭದ್ರತೆಯೊಂದಿಗೆ ಎಲ್ಲಾ ಕಡೆ ದಾಳಿ ನಡೆಸಲಾಗಿದೆ.ಮಾಜಿ ಸಚಿವ ನಾಗೇಂದ್ರ ಅವರ ಡಾಲರ್‌ರ‍ಸ ಕಾಲೋನಿಯಲ್ಲಿರುವ ರಾಮ್ಕಿ ಉತ್ಸವ್‌ ಫ್ಲಾಟ್‌ ಜೊತೆಗೆ ಅವರ ಆಸ್ತಿಗಳಿರುವ ಬಿಇಎಲ್‌ ರೋಡ್‌, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಲಾಗಿದೆ. +ಇಡಿ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾಗೇಂದ್ರ ಮನೆಯಲ್ಲೇ ಇದ್ದರು. ಈ ವೇಳೆ ಕುಟುಂಬದ ಸಮುಖದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಕೆಲವನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಬಳ್ಳಾರಿಯ ಮನೆಯ ಮೇಲೂ ದಾಳಿ ನಡೆಸಲಾಗಿದೆ. +ವಾಲೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ರಾಮ್‌ರಹೀಮ್‌ ಕಾಲೋನಿಯ ಮನೆ ಮೇಲೆ ದಾಳಿ ಮಾಡಲಾಗಿದೆ. ಅದೇ ರೀತಿ ಬೆಂಗಳೂರಿನ ಯಲಹಂಕ, ಕೋರಮಂಗಲ, ಶಾಸಕರ ಭವನ, ವಾಲೀಕಿ ಮುಖ್ಯ ಕಚೇರಿ, ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. +ಅಧಿಕಾರಿಗಳ ಮೇಲೆ ದಾಳಿ: ಬಹುಕೋಟಿ ಹಗರಣದ ಬಹುಕೋಟಿ ಹಗರಣ ಹೊರಬಂದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳಿಗೂ ಇಡಿ ಬಿಸಿ ಮುಟ್ಟಿಸಿದೆ. ಎಂಜಿರಸ್ತೆಯ ಮುಖ್ಯ ಕಚೇರಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದೆ. +ಮುಖ್ಯವಾಗಿ ಯ್ಯೂನಿಯನ್‌ ಬ್ಯಾಂಕ್‌ ಬ್ರಾಂಚ್‌ ಹೆಡ್‌ ಸುಚಿಸಿತಾ, ಕ್ರೆಡಿಟ್‌ ಆಫೀಸರ್‌ ಕೃಷ್ಣಮೂರ್ತಿ, ಬ್ರಾಂಚ್‌ ಹೆಡ್‌ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗಿದೆ. ವಾಲೀಕಿ ನಿಗಮದ ಎಂಡಿ ಜೆ.ಜೆ.ಪದನಾಭ್‌‍, ಲೆಕ್ಕಪರಿಶೋಧಕ ಪರಶುರಾಮ್‌ ಮನೆ ಮೇಲೂ ದಾಳಿ ನಡೆಸಲಾಗಿದೆ. +ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್‌‍, ಸತ್ಯನಾರಾಯಣ್‌ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ಮಾಡಲಾಗಿದೆ. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಬಿ.ನಾಗೇಂದ್ರ ಮನೆ ಮೇಲೂ ಬೆಳಗ್ಗೆ 3ರಿಂದ 4 ಅಧಿಕಾರಿಗಳಿದ್ದ ತಂಡ ದಾಳಿ ಮಾಡಿದೆ.ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಬ್ರಾಂಚ್‌ ಮುಖ್ಯಸ್ಥೆ ಸುಚಿಸಿತಾ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಆದರೆ ಅವರು ಮನೆಯಲ್ಲಿ ಇಲ್ಲದ ಕಾರಣ ಮನೆಗೆ ನೋಟಿಸ್‌‍ ಅಂಟಿಸಲಾಗಿದೆ. +ಏನಿದು ಹಗರಣ: ವಾಲೀಕಿ ನಿಗಮದ ಹಗರಣದಲ್ಲಿ 183 ಕೋಟಿ ರೂ. ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತಹತ್ಯೆ ಮಾಡಿಕೊಂಡ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇತ್ತು. ಬ್ಯಾಂಕ್‌ಗಳಲ್ಲಿ ಬಹುಕೋಟಿ ಹಣ ಅಕ್ರಮ ನಡೆದಾಗ ಈ ವಿಚಾರದಲ್ಲಿ ರಾಜ್ಯ ಯಾವುದೇ ಒಪ್ಪಿಗೆ ನೀಡದೆಯೂ ಸಿಬಿಐ ಹಾಗೂ ಇಡಿ ಇದರಲ್ಲಿ ಮಧ್ಯೆ ಪ್ರವೇಶಿಸಿ ತನಿಖೆ ಕೈಗೆತ್ತಿಕೊಳ್ಳಬಹುದಾಗಿದೆ. ಎರಡೂ ಸಂಸ್ಥೆಗಳು ಈ ಪ್ರಕರಣದ ಬಗ್ಗೆ ಆಸಕ್ತಿ ವಹಿಸಿವೆ ಎಂದು ಗೊತ್ತಾಗಿತ್ತು. +ಒಟ್ಟು 94 ಕೋಟಿ 73 ಲಕ್ಷ ಅವ್‌ಯವಹಾರ ನಡೆದಿದೆ ಎನ್ನಲಾಗಿದ್ದು, ಈ ಪೈಕಿ ಎಸ್‌‍ಐಟಿ ಅಧಿಕಾರಿಗಳು 14.5 ಕೋಟಿ ನಗದು ಹಣ ವಶಕ್ಕೆ ಪಡೆದುಕೊಂಡಿದ್ದಾರೆ.ಮಹರ್ಷಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಕೆಲದಿನಗಳ ಹಿಂದೆಯಷ್ಟೇ ಶಿವಮೊಗ್ಗದಲ್ಲಿರುವ ತಮ ನಿವಾಸದಲ್ಲಿ ಆತಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. +ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್‌‍, ಮೆಸೇಜ್‌ ಬಂದಿಲ್ಲ. ಬ್ಯಾಂಕ್‌ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್‌ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಂಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್‌್ಸ ಠಾಣೆಯಲ್ಲಿ ಎಫ್‌‍ಐಆರ್‌ ದಾಖಲಾಗಿತ್ತು. +ನೂರಾರು ಕೋಟಿ ಆಕ್ರಮ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ. +ಬ್ಯಾಂಕ್‌ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ, ಮಾ.21ರಂದು 44 ಕೋಟಿ , ಮಾ.22ರಂದು 43.33 ಕೋಟಿ ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ. \ No newline at end of file diff --git a/eesanje/url_46_81_11.txt b/eesanje/url_46_81_11.txt new file mode 100644 index 0000000000000000000000000000000000000000..7e714aa30f700339e7fa29f02c6c63125ecd3824 --- /dev/null +++ b/eesanje/url_46_81_11.txt @@ -0,0 +1,9 @@ +ಆಷಾಡ ಶುಕ್ರವಾರ : ವಿಶೇಷ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ +ಮೈಸೂರು,ಜು.10- ಆಷಾಡ ಶುಕ್ರವಾರದ ಅಂಗವಾಗಿ ನಗರದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.ಪ್ರತಿವರ್ಷ ಚಾಮುಂಡಿಬೆಟ್ಟದಲ್ಲಿ ಆಷಾಡ ಶುಕ್ರವಾರದ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಅದೇ ರೀತಿ ಈ ಬಾರಿಯೂ ಸಹ ಆಷಾಡ ಶುಕ್ರವಾರದ ಪೂಜಾ ಕೈಂಕರ್ಯಗಳು ನಡೆಯಲಿದೆ. +ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನಾಡದೇವಿಯ ದರ್ಶನ ಪಡೆಯಲಿದ್ದಾರೆ.ಭಕ್ತಾದಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ದೇವಾಲಯದ ಆಡಳಿತ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. +ಈ ಬಾರಿ 12, 19, 26 ಹಾಗೂ ಆಗಸ್ಟ್‌ 2 ರಂದು ಆಷಾಡ ಶುಕ್ರವಾರ ಬರಲಿದ್ದು, ಇದರ ಜೊತೆ ಇದೇ 27 ರಂದು ಚಾಮುಂಡೇಶ್ವರಿ ಅಮನವರ ವರ್ಧಂತೋತ್ಸವ ನಡೆಯಲಿದೆ. ಪ್ರತಿ ಶುಕ್ರವಾರ ಅಮನವರಿಗೆ ವಿಶೇಷ ಪೂಜೆ ನಡೆಯಲಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಚಾಮುಂಡಿಬೆಟ್ಟಕ್ಕೆ ಕೆಎಸ್‌‍ಆರ್‌ಟಿಸಿ ಉಚಿತ ಬಸ್‌‍ ಸೇವೆ ಕಲ್ಪಿಸಿದೆ. +ಆಷಾಡದ ಅಂಗವಾಗಿ ಶನಿವಾರ ಹಾಗೂ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದ್ದು, ಲಲಿತ ಮಹಲ್‌ ಮೈದಾನದಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲಾಗಿದೆ. +ಸಾರಿಗೆ ಬಸ್‌‍ಗಳ ಮೂಲಕ ಬೆಟ್ಟಕ್ಕೆ ಹೋಗಬಹುದಾಗಿದೆ. ಈ ಬಾರಿ ಚಾಮುಂಡೇಶ್ವರಿ ದೇವಿಯ ಪ್ರವೇಶಕ್ಕೆ ಪಾಸ್‌‍ ವ್ಯವಸ್ಥೆ ಇರುವುದಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ದರ್ಶನ ವ್ಯವಸ್ಥೆಯನ್ನು ಮಾಡಲಾಗಿದ್ದು, ನಿಗದಿಪಡಿಸಿದ ಟಿಕೆಟ್‌ ಪಡೆದು ದೇವಿಯ ದರ್ಶನ ಮಾಡಬಹುದಾಗಿದೆ. +ಭಕ್ತಾದಿಗಳ ಅನುಕೂಲಕ್ಕಾಗಿ ಲಲಿತ ಮಹಲ್‌ನ ಪಾರ್ಕಿಂಗ್‌ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲೇ ಪ್ರವೇಶ ಟಿಕೆಟ್‌ಗಳನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ.ಕುಡಿಯುವ ನೀರು, ಶೌಚಗೃಹ, ವೈದ್ಯಕೀಯ ತುರ್ತು ಚಿಕಿತ್ಸೆ ಸೇರಿದಂತೆ ಮತ್ತಿತರೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. +ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ದೇವಾಲಯದ ಸುತ್ತಮುತ್ತ ಸಿಸಿ ಕ್ಯಾಮರಾ ಹಾಗೂ ಪೊಲೀಸ್‌‍ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. +ಪ್ಲಾಸ್ಟಿಕ್‌ ಮುಕ್ತ ಆಷಾಡ :ಬೆಟ್ಟಕ್ಕೆ ಭಕ್ತಾದಿಗಳು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಕೈಚೀಲ ಸೇರಿದಂತೆ ಇತರೆ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್‌ ತಂದಲ್ಲಿ ದಂಡ ವಿಧಿಸಲಾಗಿದೆ. ಜೊತೆಗೆ ಬೆಟ್ಟದ ಆವರಣದಲ್ಲಿರುವ ಅಂಗಡಿಗಳಲ್ಲಿಯೂ ಸಹ ಪ್ಲಾಸ್ಟಿಕ್‌ ಬಳಸಬಾರದೆಂದು ಜಿಲ್ಲಾಡಳಿತ ಸೂಚಿಸಿದೆ. \ No newline at end of file diff --git a/eesanje/url_46_81_12.txt b/eesanje/url_46_81_12.txt new file mode 100644 index 0000000000000000000000000000000000000000..c0e5370bc042ab5f7b6d88ce4398a26b409fc58b --- /dev/null +++ b/eesanje/url_46_81_12.txt @@ -0,0 +1,7 @@ +ಕಾನೂನು ಎಲ್ಲರಿಗೂ ಒಂದೇ, ಅದನ್ನು ಪಾಲಿಸದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ : ಪರಮೇಶ್ವರ್‌ +ಬೆಂಗಳೂರು,ಜು.9-ಈ ನೆಲದಲ್ಲಿ ಉಳ್ಳವರಿಗೂ, ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ. ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. +ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ. ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು. +ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಬಿಡುಗಡೆ ಮಾಡಲಾಗುತ್ತಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ವರ್ಷಕ್ಕೆ ಮೂರು ಬಾರಿ ಬಿಡುಗಡೆ ಸನ್ನಡತೆ ಮೇಲೆ ಮಾಡಲಾಗುತ್ತಿದೆ. ನಿಮಲ್ಲಿಯೇ ಪರಿವರ್ತನೆ ತಂದುಕೊಂಡರೆ, ಸಮಾಜದಲ್ಲಿ ಬದುಕಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ತಿಳಿಸಿದರು. +ಜೀವನ ತುಂಬ ವೇಗವಾಗಿ ಸಾಗುತ್ತಿದೆ. ಯಾವುದೇ ಕಾರಣಕ್ಕು ನೀವು ಮತ್ತೊಂದು ತಪ್ಪನ್ನು ಮಾಡಬೇಡಿ. ನಿಮ ಕುಟುಂಬದ ಜೊತೆ ಉಳಿದ ಜೀವನವನ್ನು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು. +ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕು ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿಡಬೇಕು, ವಿವಿಧ ಕೌಶಲ ತರಬೇತಿ, ಶಿಕ್ಷಣದ ಮೂಲಕ ಅವರನ್ನು ಸುಧಾರಿಸಿ ಪರಿವರ್ತನೆ ತರುವ ಜವಾಬ್ದಾರಿಯು ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅನೇಕ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. +ಈ ಸಂದರ್ಭದಲ್ಲಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕರಾದ ಮಾಲಿನಿ ಕೃಷ್ಣಮೂರ್ತಿ, ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌, ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್‌‍ ಮಹಾ ನಿರೀಕ್ಷಕ ಆನಂದ್‌ ರೆಡ್ಡಿ, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಾತಿಮಾ ಉಪಸ್ಥಿತರಿದ್ದರು. \ No newline at end of file diff --git a/eesanje/url_46_81_2.txt b/eesanje/url_46_81_2.txt new file mode 100644 index 0000000000000000000000000000000000000000..c1270b62a9578f2214cf39a31ac8279b4d296891 --- /dev/null +++ b/eesanje/url_46_81_2.txt @@ -0,0 +1,6 @@ +ಯಾರನ್ನು ಓಲೈಸಲು ರಾಮನಗರ ಹೆಸರು ಬದಲಿಸುತ್ತಿದ್ದೀರಿ..? : ನಿಖಿಲ್‌ ಪ್ರಶ್ನೆ +ಬೆಂಗಳೂರು,ಜು.10-ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡುವುದಕ್ಕೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್‌ ಕುಮಾರ ಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. +ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಕೇವಲ ಕೆಲವರನ್ನು ತುಷ್ಟೀಕರಣ ಮಾಡಲು ಮಾತ್ರ ರಾಮನಗರದ ಹೆಸರನ್ನು ಬದಲಾವಣೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. +ಪುರಾಣ ಪ್ರಸಿದ್ಧವಾದ ರಾಮನಗರ ಹೆಸರನ್ನು ಕಿತ್ತುಹಾಕಿ, ಅದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದರಲ್ಲಿ ಯಾವ ಹಿಡೆನ್‌ ಅಜೆಂಡಾ ಅಡಗಿದೆಯೋ ಗೊತ್ತಿಲ್ಲ. ಆದರೆ, ಯಾರನ್ನು ಓಲೈಸಲು ರಾಮನಗರ ಹೆಸರಿಗೆ ಗೇಟ್‌ ಪಾಸ್‌‍ ನೀಡಲಾಗುತ್ತಿದೆ ಎನ್ನುವ ಒಳಗುಟ್ಟು ಮಾತ್ರ ರಟ್ಟಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ರಿಯಲ್‌ ಎಸ್ಟೇಟ್‌ ದಂಧೆಕೋರರಿಗೆ ಜಿಲ್ಲೆಯನ್ನು ಸ್ವರ್ಗವನ್ನಾಗಿ ಮಾಡುವುದು ಈ ಷಡ್ಯಂತ್ರ್ಯದ ಕರಾಳಮುಖ. ಕೆಲವರ ತುಷ್ಟೀಕರಣ ಮತ್ತೊಂದು ಮುಖ. ರಾಜಕೀಯವಾಗಿ ಬಹಳ ಎತ್ತರದ ಸ್ಥಾನದಲ್ಲಿರುವ ರಾಮನಗರ ಜಿಲ್ಲೆಯ ಹೆಗ್ಗುರುತನ್ನೇ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ. +ವಿಧಾನಸೌಧದ ಶಿಲ್ಪಿ ಕೆಂಗಲ್‌ ಹನುಮಂತಯ್ಯನವರು, ಈ ದೇಶದ ಪ್ರಧಾನಿಗಳಾಗಿದ್ದ ಹೆಚ್‌.ಡಿ. ದೇವೇಗೌಡರು, ಎರಡು ಬಾರಿ ರಾಜ್ಯ ಮುಖ್ಯಮಂತ್ರಿಗಳಾಗಿದ್ದ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಮನಗರ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದರು. ಜಿಲ್ಲೆಯ ಹೆಸರು ಬದಲಿಸಲು ಹೊರಟವರು ಮೊದಲು ಈ ಇತಿಹಾಸ ಅರಿತರೆ ಒಳ್ಳೆಯದು. ನಮ ರಾಮನಗರ ನಮ ಹೆಮ್ಮೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_81_3.txt b/eesanje/url_46_81_3.txt new file mode 100644 index 0000000000000000000000000000000000000000..f617ebb7898516743af751bd5f3fe12c4f9c0300 --- /dev/null +++ b/eesanje/url_46_81_3.txt @@ -0,0 +1,12 @@ +ತುಮಕೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಪ್ರಸ್ತಾಪ : ಪರಮೇಶ್ವರ್ ಹೇಳಿದ್ದೇನು..? +ಬೆಂಗಳೂರು,ಜು.10-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌‍ಐಟಿ ಅಧಿಕಾರಿಗಳು ತನಿಖೆ ಚುರುಕು ಗೊಳಿಸಿದ್ದಾರೆ. ಇಂದು ಮತ್ತೆ ವಿಚಾರಣೆ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ನಡೆದಿರುವುದು ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರಾಜ್ಯಸರ್ಕಾರಕ್ಕೆ ಯಾವುದೇ ಮಾಹಿತಿ ನೀಡು ವುದಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸುತ್ತಾರೆ. ದಾಳಿ ನಡೆಸುವಾಗಲೂ ಯಾವುದೇ ಮಾಹಿತಿ ನೀಡುವುದಿಲ್ಲ. ಇಂದು ಯಾವ ಹಿನ್ನೆಲೆಗೆ ದಾಳಿ ನಡೆದಿರುವುದು ಎಂದು ತಮಗೆ ಗೊತ್ತಿಲ್ಲ ಎಂದರು. +ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ದದ್ದಲ್‌ ಅವರ ಆಪ್ತ ಸಹಾಯಕರ ಹೇಳಿಕೆಗಳನ್ನು ಆಧರಿಸಿ ಎಸ್‌‍ಐಟಿ ಅಧಿಕಾರಿಗಳು ಇಬ್ಬರನ್ನು ತನಿಖೆಗೆ ಕರೆದಿದ್ದಾರೆ. ರಾಜ್ಯಸರ್ಕಾರ ಇಡೀ ಪ್ರಕರಣವನ್ನು ಎಸ್‌‍ಐಟಿ ತನಿಖೆಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಯುತ್ತಿದೆ ಎಂದರು. +ಸಾರ್ವಜನಿಕವಾಗಿ ಚರ್ಚೆ ಯಾಗುವ ವಿಚಾರಗಳ ಬಗ್ಗೆ ಮಾಹಿತಿ ಇಲ್ಲದೆ ನಾವು ಹೇಳಿಕೆ ನೀಡಲು ಸಾಧ್ಯವಿಲ್ಲ. ಎಸ್‌‍ಐಟಿ ಮತ್ತು ಸಿಬಿಐ ಅಧಿಕಾರಿಗಳು ಅದನ್ನು ಗಮನಿಸುತ್ತಾರೆ. ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಹೇಳಿಕೆಗಳನ್ನೂ ಕೊಡುವಂತಿಲ್ಲ, ಕೊಡಲೂಬಾರದು ಎಂದು ಹೇಳಿದರು. +ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣವಾಗಿಲ್ಲ ಎಂದು ಯಾರೂ ಹೇಳಿಲ್ಲ. ಅಕ್ರಮವಾಗಿದೆ ಎಂಬ ಕಾರಣಕ್ಕಾಗಿಯೇ ಎಸ್‌‍ಐಟಿ ರಚಿಸಿ ತನಿಖೆ ಮಾಡಲಾಗುತ್ತಿದೆ. ಇಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಹುಬ್ಬಳ್ಳಿಯ ನೇಹಾ ಹಿರೇಮಠ್‌ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿ ದ್ದಾರೆ. ತನಿಖೆಯಲ್ಲಿ ಯಾವ ಮಾಹಿತಿ ತಿಳಿದುಬಂದಿದೆ, ಲಭ್ಯವಿರುವ ಸಾಕ್ಷ್ಯಗಳ ಆಧಾರದ ಮೇಲೆ ವರದಿ ನೀಡಿರುತ್ತಾರೆ. ಬಿಜೆಪಿಯವರು ಹೇಳಿದಂತೆ ಲವ್‌ ಜಿಹಾದ್‌ ಅಂಶವನ್ನೂ ಪರಿಶೀಲಿಸಲಾಗಿರುತ್ತದೆ. ಅವರು ಹೇಳಿದಾಕ್ಷಣ ದೋಷಾರೋಪಣ ಪಟ್ಟಿಯಲ್ಲಿ ಅಂತಹ ಅಂಶಗಳನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದರು. +ಗ್ರೇಟರ್‌ ಬೆಂಗಳೂರು ಪ್ರಸ್ತಾವನೆ :ಏಷ್ಯಾದಲ್ಲೇ ಬೆಂಗಳೂರು ಅತೀ ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕೆ ತಕ್ಕ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ಬಗ್ಗೆ ಪ್ರತಿಕ್ರಿಯಿಸಿದರು. +ಬೆಂಗಳೂರಿನ ಬೆಳವಣಿಗೆ ಅಗತ್ಯವಿದೆ. ಇದರಿಂದ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ. ತುಮಕೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಆಲೋಚನೆಯಿದೆ. ಈ ಕುರಿತಂತೆಯೂ ನಾವು ಪ್ರಸ್ತಾವನೆ ಸಲ್ಲಿಸಲು ತಯಾರಾಗಿದ್ದೇವೆ. ತುಮಕೂರಿಗೆ ಮೆಟ್ರೋ ಮಾರ್ಗ ಕಲ್ಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಅಂತಾರಾಷ್ಟ್ರೀಯ ಎರಡನೇ ವಿಮಾನ ನಿಲ್ದಾಣವನ್ನು ತುಮಕೂರು ಸುತ್ತಮುತ್ತ ನಿರ್ಮಿಸುವ ಬಗ್ಗೆ ಈ ಹಿಂದೆ ಸಚಿವರಾಗಿದ್ದ ಮುರುಗೇಶ್‌ ನಿರಾಣಿ ಪ್ರಸ್ತಾಪಿಸಿದ್ದರು ಎಂದು ಹೇಳಿದರು. +ಗ್ರೇಟರ್‌ ಬೆಂಗಳೂರು ಎಂದು ಏಕಾಏಕಿ ಈಗಲೇ ಪ್ರಸ್ತಾವನೆ ಸಲ್ಲಿಸುವುದಿಲ್ಲ. ಅದಕ್ಕೆ ಅಗತ್ಯವಾಗಿರುವ ಮಾನದಂಡಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. +ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಕಡಿಮೆ ಸ್ಥಾನ ಗೆಲ್ಲಲು ಕಾರಣವಾಗಿರುವ ಅಂಶಗಳ ಬಗ್ಗೆ ಸತ್ಯಶೋಧನಾ ಸಮಿತಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದೆ. ಹಿರಿಯ ಕಾಂಗ್ರೆಸ್‌‍ ನಾಯಕ ಬಿ.ಕೆ.ಹರಿಪ್ರಸಾದ್‌ ಕಾರ್ಯಕರ್ತರನ್ನು ಕಡೆಗಣಿಸಿದ್ದರಿಂದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಬಹುದು ಎಂದು ಹೇಳಿದರು. +ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾದ ನಿವೇಶನಗಳ ಮೌಲ್ಯವನ್ನು ಮುಖ್ಯಮಂತ್ರಿಯವರು ಕಡಿಮೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌ ಅವರು, ಜನ ಕಾಂಗ್ರೆಸ್‌‍ಗೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಬಿಜೆಪಿ ಹೇಳಿದಂತೆಲ್ಲಾ ಕೇಳಲಾಗುವುದಿಲ್ಲ. ಈ ಮೊದಲು ನಾಲ್ಕು ವರ್ಷ ಯಾವ ರೀತಿ ಆಡಳಿತ ನಡೆಸಿದ್ದಾರೆ ಎಂದು ಗೊತ್ತಿದೆ. ಈಗ ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಹೇಳುತ್ತಿದ್ದಾರೆ. ಇವರನ್ನೇ ಕೇಳಿಕೊಂಡು ನಾವು ಆಡಳಿತ ನಡೆಸಲಾಗುವುದಿಲ್ಲ. ಜನ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದರು. \ No newline at end of file diff --git a/eesanje/url_46_81_4.txt b/eesanje/url_46_81_4.txt new file mode 100644 index 0000000000000000000000000000000000000000..b510477fd81b7d8f71e2128870618df5fd3141c1 --- /dev/null +++ b/eesanje/url_46_81_4.txt @@ -0,0 +1,11 @@ +ಮುಡಾ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ, ಸಿಬಿಐ ತನಿಖೆ ಅಗತ್ಯವಿಲ್ಲ : ಸಿಎಂ +ಮೈಸೂರು,ಜು.10-ಮುಡಾ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಬಿಜೆಪಿಯ ಬೇಡಿಕೆಯನ್ನು ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ತಮ ಪತ್ನಿಗೆ ಬದಲಿ ನಿವೇಶನ ನೀಡಿರುವುದು ಕಾನೂನುಬದ್ಧವಾಗಿದೆ. ಯಾವುದೇ ಅವ್ಯವಹಾರಗಳಾಗಿಲ್ಲ. +ಭೂಮಿ ಕಳೆದುಕೊಂಡಿರುವುದು ಒಂದು ಪ್ರಕರಣವಾದರೆ, ನಮ ಜಮೀನನ್ನು ಕಾನೂನುಬಾಹಿರವಾಗಿ ಮುಡಾ ಒತ್ತುವರಿ ಮಾಡಿಕೊಂಡಿದೆ. ಇದನ್ನು ಮುಡಾ ತನ್ನ ಸಮಿತಿ ಸಭೆಯಲ್ಲಿ ಒಪ್ಪಿಕೊಂಡಿದೆ ಎಂದರು.ನಮ ಜಮೀನಿಗೆ ಪರಿಹಾರ ಕೇಳಿದಾಗ ವಿಜಯನಗರದಲ್ಲಿ ಜಾಗ ಕೊಟ್ಟಿದ್ದಾರೆ. ನಾವು ಇಂತಹುದೇ ಜಾಗದಲ್ಲಿ ನೀಡಿ ಎಂದು ಕೇಳಿರಲಿಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿಯೇ ಇದರಲ್ಲಿ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. +ಮುಡಾದಿಂದ ನಿಯಮಬಾಹಿರವಾಗಿ ನಿವೇಶನ ಹಂಚಿರುವುದನ್ನು ಇಬ್ಬರು ಐಎಎಸ್‌‍ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ. ಅಕ್ರಮ ನಡೆದಿರುವುದು ವರದಿಯಲ್ಲಿ ಸಾಬೀತಾ ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಬಿಜೆಪಿಯವರು ಈಗಾಗಲೇ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮ ಮನೆಗೂ ಮುತ್ತಿಗೆ ಹಾಕಿದ್ದಾರೆ. ಈಗ ಮೈಸೂರಿನಲ್ಲೂ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ರಾಜಕೀಯ ಕಾರಣಕ್ಕಾಗಿ ಅವರು ಏನಾದರೂ ಮಾಡಲಿ. ವಿಧಾನಸಭೆಯಲ್ಲಿ ವಿಚಾರ ಪ್ರಸ್ತಾಪವಾದರೆ ಉತ್ತರ ನೀಡಲು ನಮ ಸರ್ಕಾರ ಸಿದ್ಧವಿದೆ ಎಂದರು. +ಮುಡಾದಲ್ಲಿ ಜನಪ್ರತಿನಿಧಿಗಳ ಸಮಿತಿಯನ್ನು ರದ್ದು ಮಾಡಬೇಕು ಎಂಬ ನಿಟ್ಟಿನಲ್ಲಿ ಕಾನೂನು ರೂಪಿಸುವ ಕುರಿತು ಚರ್ಚೆಗಳಾಗುತ್ತಿವೆ. ಈ ಹಿಂದೆ ರಾಮಣ್ಣ ಅವರು ಅಧ್ಯಕ್ಷರಾಗಿದ್ದಾಗಲೂ ಇದೇ ರೀತಿಯ ಚರ್ಚೆಗಳು ನಡೆದಿದ್ದವು. ಜನಪ್ರತಿನಿಧಿ ಗಳ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. +ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿಯವರು ಒತ್ತಾಯಿಸುತ್ತಿರುವುದು ಅರ್ಥಹೀನ. ಈ ಹಿಂದೆ ನಮ ಸರ್ಕಾರ ಹಲವು ಪ್ರಕರಣಗಳನ್ನು ಸಿಬಿಐಗೆ ನೀಡಿದೆ. ಬಿಜೆಪಿಯವರು ಒಂದು ಪ್ರಕರಣವನ್ನೂ ನೀಡಿಲ್ಲ. ಯಾವುದೇ ಪ್ರಕರಣವಾದರೂ ತನಿಖೆ ನಡೆಸಲು ನಮ ಪೊಲೀಸರು ಸಮರ್ಥರಿದ್ದಾರೆ. ಸಿಬಿಐನ ಮಹಾನಿರ್ದೇಶಕರಾಗಿರುವ ಪ್ರವೀಣ್‌ ಸೂದ್‌ ಅವರು ರಾಜ್ಯದಲ್ಲಿ ಪೊಲೀಸ್‌‍ ಮಹಾನಿರ್ದೇಶಕರಾಗಿದ್ದರು. ಅಲ್ಲಿಯೂ ಕೂಡ ಪೊಲೀಸ್‌‍ ಅಧಿಕಾರಿಗಳೇ ಇದ್ದಾರೆ ಎಂದರು. +ಸಿಬಿಐ ಅನ್ನು ಚೋರ್‌ ಬಚಾವ್‌ ಸಂಸ್ಥೆ ಎನ್ನುತ್ತಿದ್ದ ಬಿಜೆಪಿಯವರು ಈಗ ಪ್ರತಿಯೊಂದನ್ನೂ ಸಿಬಿಐಗೆ ಕೊಡಿ ಎಂದು ಕೇಳುತ್ತಿದ್ದಾರೆ. ನಮಗೆ ನಮ ಪೊಲೀಸರ ಸಾಮರ್ಥ್ಯದ ಮೇಲೆ ನಂಬಿಕೆ ಇದೆ ಎಂದು ಹೇಳಿದರು.ರಾಜ್ಯದಲ್ಲಿ ಈಗಾಗಲೇ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಜಿಲ್ಲಾಮಟ್ಟದಲ್ಲಿ ಪ್ರಗತಿ ಪರಿಶೀಲನೆ ನಡೆಸಲು ಜಿಲ್ಲಾ ಸಚಿವರುಗಳಿಗೆ ಸೂಚನೆ ನೀಡಲಾಗಿದೆ ಎಂದರು. +ರಾಮನಗರದ ಜಿಲ್ಲೆಯ ಎಲ್ಲಾ ಮುಖಂಡರೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕತ್ವದಲ್ಲಿ ನಿನ್ನೆ ತಮನ್ನು ಭೇಟಿ ಮಾಡಿ, ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮನವಿ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದೇನೆ ಎಂದು ಹೇಳಿದರು. +ಕುಮಾರಸ್ವಾಮಿಯವರಿಗೆ ಮುಖ್ಯಮಂತ್ರಿಯಾಗಲು ಜನ ಆಶೀರ್ವಾದ ಮಾಡಿಲ್ಲ. ಚುನಾವಣೆಯಲ್ಲಿ ಅವರಿಗೆ ಬೆಂಬಲ ಸಿಕ್ಕಿಲ್ಲ. ನಾವು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದಾಗ ಅದನ್ನು ಕಿತ್ತುಹಾಕುತ್ತೇವೆ ಎಂದು ಕುಮಾರಸ್ವಾಮಿ ಹೇಳಿರುವುದು ಭ್ರಮೆ. ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಲೇವಡಿ ಮಾಡಿದರು.ಮಾಜಿ ಸಚಿವ ಬಿ.ನಾಗೇಂದ್ರಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಇದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಅವರ ಕೆಲಸವನ್ನು ಅವರು ಮಾಡಲಿ ಎಂದು ಹೇಳಿದರು. +ಕಳೆದ ತಿಂಗಳು ದೆಹಲಿಗೆ ಭೇಟಿ ನೀಡಿದ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಹಕಾರ ನೀಡುವಂತೆ ಮನವಿ ನೀಡಿದ್ದೇವೆ. ಪ್ರಧಾನಿಯವರು ಅಧಿಕಾರಿಗಳ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು ಹೇಳಿದರು. +ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಪಟ್ಟಂತೆ ನ್ಯಾಯಾಲಯ ನೀಡುವ ನಿರ್ದೇಶನಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದರು.ಬಿಬಿಎಂಪಿಯ ಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್‌ ಹಂತದಲ್ಲಿದೆ. ತಾ.ಪಂ., ಜಿ.ಪಂ. ಮೀಸಲಾತಿ ಹೈಕೋರ್ಟ್‌ ವಿಚಾರಣೆಯಲ್ಲಿದೆ. ಅಲ್ಲಿನ ನಿರ್ದೇಶನಗಳ ನಂತರ ಚುನಾವಣೆಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. \ No newline at end of file diff --git a/eesanje/url_46_81_5.txt b/eesanje/url_46_81_5.txt new file mode 100644 index 0000000000000000000000000000000000000000..ec0a8a2b3501a20bbff04902eac3ad42fcfde600 --- /dev/null +++ b/eesanje/url_46_81_5.txt @@ -0,0 +1,5 @@ +ಗ್ಯಾರಂಟಿಗಳಿಗೆ / ಹಣ ಬಳಕೆ : 7 ದಿನದೊಳಗೆ ವರದಿ ನೀಡುವಂತೆ ಸರ್ಕಾರಕ್ಕೆ ನೋಟೀಸ್ +ಬೆಂಗಳೂರು,ಜು.10– ಪರಿಶಿಷ್ಟ ಜಾತಿ ಮತ್ತು ವರ್ಗಗಳ ವಿಶೇಷ ಉಪಯೋಜನೆಯ 14 ಸಾವಿರ ಕೋಟಿ ರೂ.ಗಳನ್ನು ಕಾಂಗ್ರೆಸ್‌‍ ಸರ್ಕಾರ ತನ್ನ ಪಂಚಖಾತ್ರಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿರುವುದರ ಕುರಿತಂತೆ 7 ದಿನಗಳೊಳಗಾಗಿ ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ರಾಜ್ಯಸರ್ಕಾರಕ್ಕೆ ನೋಟೀಸ್‌‍ ನೀಡಿದೆ. +ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಬಳಕೆಯಾಗಬೇಕಾದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಲಾಗಿದೆ ಎಂಬ ಆಕ್ಷೇಪ ವ್ಯಕ್ತಪಡಿಸಿದೆ. +ಆಯೋಗ ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಮಾಧ್ಯಮದವರ ವರದಿ ಆಧರಿಸಿ ನೋಟೀಸ್‌‍ ಜಾರಿ ಮಾಡಿದೆ. ಕರ್ನಾಟಕ ಪ.ಜಾತಿ ಉಪಯೋಜನೆ ಮತ್ತು ಪ.ಪಂಗಡಗಳ ಉಪಯೋಜನೆಗೆ ಬಳಕೆಯಾಗಬೇಕಾಗಿದ್ದ 14,730.53 ಕೋಟಿ ರೂ.ಗಳನ್ನು 5 ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ. +ರಾಷ್ಟ್ರೀಯ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಯೋಜನೆಗಳ ಮೇಲೆ ನಿಗಾ ಇರಿಸಿದೆ. ಎಸ್‌‍ಸಿಪಿ ಮತ್ತು ಕೇಂದ್ರ ಸರ್ಕಾರದ ವಿಶೇಷ ನೆರವುಗಳ ಬಳಕೆಯನ್ನು ಪರಿಶೀಲಿಸುತ್ತದೆ. ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿರುವ ಬಗ್ಗೆ ಆಯೋಗಕ್ಕೆ 7 ದಿನದೊಳಗಾಗಿ ವರದಿ ನೀಡಬೇಕು ಎಂದು ನೋಟೀಸ್‌‍ನಲ್ಲಿ ಸೂಚಿಸಲಾಗಿದೆ. \ No newline at end of file diff --git a/eesanje/url_46_81_6.txt b/eesanje/url_46_81_6.txt new file mode 100644 index 0000000000000000000000000000000000000000..02c78e0ebf0ead9136d341dab4e844f6dc8cdb88 --- /dev/null +++ b/eesanje/url_46_81_6.txt @@ -0,0 +1,12 @@ +ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸದಿದ್ದರೆ ಜನಾಂದೋಲನ : ವಿಜಯೇಂದ್ರ ವಾರ್ನಿಂಗ್ +ಬೆಂಗಳೂರು,ಜು.10-ಮುಡಾ ಭೂ ಕಬಳಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಸದಸ್ಯರು ನೇರ ಶಾಮೀಲಾಗಿರುವ ಹಿನ್ನಲೆಯಲ್ಲಿ ಸಿಬಿಐನಿಂದ ತನಿಖೆ ನಡೆಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ದ ಜನಾಂದೋಲನ ರೂಪಿಸುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅವರು ಅನೇಕ ತಪ್ಪು ಮಾಹಿತಿಗಳನ್ನು ನೀಡುತ್ತಿದ್ದು, ಮುಖವಾಡ ಕಳಚಿ ಬಿದ್ದಿದೆ. ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ ಎಂದು ವಾಗ್ದಾಳಿ ನಡೆಸಿದರು. +ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳು ಜಮೀನನ್ನು ಕಬಳಿಕೆ ಮಾಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ಬಂಡತನಕ್ಕೆ ಬಿದ್ದು ತಾವು ಮಾಡಿರುವ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸಿಬಿಐ ತನಿಖೆಗೆ ವಹಿಸಲು ಸಮಸ್ಯೆ ಏನು ಎಂದು ಪ್ರಶ್ನೆ ಮಾಡಿದರು. +ನೀವು ಪ್ರಾಮಾಣಿಕರಾಗಿದ್ದರೆ ಸಿಬಿಐಗೆ ಕೊಡಲು ಹಿಂದೆಮುಂದೆ ಮೀನಾಮೇಷ ಏಕೆ ಎಣಿಸುತ್ತಿದ್ದೀರಿ, ಈ ಪ್ರಕರಣವನ್ನು ಎಸ್‌‍ಐಟಿಗೆ ಕೊಟ್ಟರೆ ತಿಪ್ಪೆ ಸವರುವ ಕೆಲಸ ಮಾಡುತ್ತಾರೆ. ನಿಮ ವಿರುದ್ಧ ಎಸ್‌‍ಐಟಿ ದೂರು ದಾಖಲಿಸಲು ಸಾಧ್ಯವೇ. ವಿಚಾರಣೆಗೆ ನೋಟಿಸ್‌‍ ಕೊಡಲು ಆಗುತ್ತದೆಯೇ ಎಂದು ಕಿಡಿಕಾರಿದರು. +ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದುಕೊಂಡು ಅವ್ಯವಹಾರ ನಡೆಸಿ ನಮಗೆ ಪರಿಹಾರ ನೀಡಬೇಕೆಂದು ಹೇಳಿದ ದೇಶದ ಮೊದಲ ಮುಖ್ಯಮಂತ್ರಿ. ಕುಟುಂಬದ ಸದಸ್ಯರಿಗೆ ಬೇಕಾಬಿಟ್ಟಿ ನಿವೇಶನ ಹಂಚಲಾಗಿದೆ. ಪರಿಹಾರ ನೀಡಲು ಹೇಗೆ ಸಾಧ್ಯ ಎಂದು ವಿಜಯೇಂದ್ರ ಪ್ರಶ್ನಿಸಿದರು. +ಅಧಿಕಾರಕ್ಕೆ ಬರುವ ಮುನ್ನ ಭ್ರಷ್ಟಾಚಾರ ಆಡಳಿತ ನೀಡುತ್ತೇವೆ ಎಂದು ರಾಜ್ಯದ ಜನತೆಗೆ ವಾಗ್ದಾನ ಮಾಡಿದ್ದರು. ಮಹದೇವಪ್ಪನಿಗೂ ಫ್ರೀ, ನಿನಗೂ ಫ್ರೀ ಎಂದು ಹೇಳಿದ್ದ ಸಿದ್ದರಾಮಯ್ಯನವರು ಈಗ ತಮ ಪತ್ನಿಗೆ 14 ನಿವೇಶನಗಳನ್ನು ಮಂಜೂರು ಮಾಡಿಕೊಂಡಿದ್ದಾರೆ. ಇದು ಅವರ ಆಡಳಿತ ಶೈಲಿ ಎಂದು ವ್ಯಂಗ್ಯವಾಡಿದರು. +ಸಿಎಂ ತಮ ಪತ್ನಿಗೆ 2 ಕೂಟಿಗೂ ಹೆಚ್ಚು ಬೆಲೆಬಾಳುವ, 62 ಕೋಟಿಗೂ ಹೆಚ್ಚಿನ ಸೈಟ್‌ ಅಲಾರ್ಟ್‌ ಮಾಡಿಕೊಂಡಿದ್ದಾರೆತಾವೇ ಅವ್ಯವಹಾರ ನಡೆಸಿ ಪರಿಹಾರ ಕೇಳಿದ ಸಿಎಂ ದೇಶದಲ್ಲಿ ಇದ್ದರೆ ಅದು ಸಿದ್ದರಾಮಯ್ಯ. 2022ನೇ ಜನವರಿ 12ರಂದು ಕ್ರಯಪತ್ರ ಅಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಮಿಯನ್ನ ಸ್ವ ಇಚ್ಛೆಯಿಂದ ಬಿಟ್ಟುಕೊಡಲು ನಿಯಮ 1991ರ ಮೆರೆಗೆ 14 ಸೈಟ್‌ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಸಿಎಂ ಅವರು ಹೇಳಿದಂತೆ 91ರ ಕಾನೂನಿನ ಪ್ರಕಾರ ಅವರಿಗೆ ಬರಬೇಕಾದ ಸೈಟ್‌ 4.800 ಅಡಿ 4060 ಇರುವ 2 ಸೈಟ್‌ ಕೊಡಬೇಕು ಎಂದು ಮಾತ್ರ ಇರುವುದು. +ಕಾನೂನಿನಲ್ಲಿ 2 ಸೈಟ್‌ ಕೊಡುವ ಜಾಗದಲ್ಲಿ 14 ಸೈಟ್‌ ಕೊಟ್ಟಿದ್ದಾರೆ ಅಂದರೆ ಇದು ಕಾನೂನು ಬಾಹಿರವಾದುದು ಎಂದರು. 2004ರಲ್ಲಿ ಪಾರ್ವತಮ ಅವರ ಅಣ್ಣ ಜಮೀನು ಖರೀದಿ ಮಾಡ್ತಾರೆ. ಭೂಸ್ವಾಧೀನದಲ್ಲಿ ಇದೆ ಅಂತ ದಾಖಲೆಯಲ್ಲಿ ಇತ್ತು 2009-10ರಲ್ಲಿ ಗಿಫ್‌್ಟ ಕೊಟ್ಟಾಗಲೂ ಈ ಲ್ಯಾಂಡ್‌‍, ಅಕ್ವೈಸೇಷನ್‌ ಆಫ್‌ ಮೂಡಾ ಈ 3 ಎಕರೆ 18 ಗುಂಟೆನಲ್ಲಿ ಉಲ್ಲೇಖ ಇದೆ, ಮೂಡಾ ಅಕ್ವೈಸೇಷನ್‌ ಆಗಿದೆ ಎಂದು ಮಲ್ಲಿಕಾರ್ಜುನ ಸ್ವಾಮಿ ಅವರು ಗಿಫ್ಟ್ ಕೊಟ್ಟಾಗ ಅದು ಕೃಷಿ ಭೂಮಿ ಎಂದರು. +ಅದು ತಪ್ಪು ಮಾಹಿತಿ ಸಿಎಂ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಮೆನ್ಷನ್‌ ಮಾಡಿಲ್ಲ. ಇದು ಕ್ಲಿಯರ್‌ ವಯಲೇಶನ್‌ ಅಫ್‌ ಆ್ಯಕ್ಟ್‌‍, ಭಾರತೀಯ ಚುನಾವಣಾ ಆಯೋಗಕ್ಕೂ ದೂರು ಕೊಡುತ್ತೇವೆ. ಸಿಎಂ ನನಗೆ 18 ಕೋಟಿ ಮಾತ್ರ ಬಂದಿರೋದು ಎಂದು ಹೇಳುತ್ತಾರೆ. 1991 ರ ಕಾಯಿದೆ ಪ್ರಕಾರ 4060ಯ 2 ಸೈಟ್‌ ಮಾತ್ರ ತೆಗೆದುಕೊಳ್ಳುವ ಅರ್ಹತೆ ರುತ್ತದೆ. ಅದು ಹೇಗೆ 14 ಸೈಟ್‌ ಸಿಗುತ್ತದೆ ಎಂದು ಪ್ರಶ್ನಿಸಿದರು. +ಸಚಿವ ಭೈರತಿ ಸುರೇಶ್‌ ಆತುರಾತುರವಾಗಿ ಮೂಡಾ ಅಧಿಕಾರಿಗಳ ಸಭೆ ನಡೆಸಿ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ. ಯಾವ ಡಿಸಿ ಮೂಡಾದಲ್ಲಿ ಭ್ರಷ್ಟಾಚಾರ ನಡಿತಿದೆ ಎಂದು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಆ ಡಿಸಿಯನ್ನು ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ. ಸಚಿವ ಭೈರತಿ ಸುರೇಶ್‌ ಮೂಡ ಕಡತಗಳನ್ನು ತಗೊಂಡು ಬೆಂಗಳೂರಿಗೆ ಬರ್ತಾರೆ ಸುರೇಶ್‌ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. +14 ನಿವೇಶನಗಳ ಸದ್ಯದ ಬೆಲೆ ಸ್ಕೈಯರ್‌ ಫೀಟ್‌ ಗೆ 9 ಸಾವಿರ ರೂ ಇದೆ2 ಸೈಟ್‌ ಗೆ ಅಷ್ಟೇ ಕೊಡುವ ಅಧಿಕಾರ ಇರೋದು, 14 ಸೈಟ್‌ ಹೇಗೆ ಕೊಟ್ರುಹರಾಜು ಆಗಬೇಕಿದ್ದ ಸೈಟ್‌ಗಳು ಅಕ್ರಮವಾಗಿ ಹಗರಣ ಮಾಡಲಾಗುತ್ತಿದೆ. ಡಿಸಿ ವರದಿ ಕೊಟ್ಟ ನಂತರವೂ, 40 ಸೈಟ್‌ಗಳನ್ನು ಒಬ್ಬರಿಗೆ ಕೊಟ್ಟಿದ್ದಾರೆ. ಸರ್ಕಾರ ಬಂದಮೇಲೆ ಕಾನೂನು ಬಾಹಿರವಾಗಿ ಸಾವಿರಾರು ನಿವೇಶನ ನೀಡಿದ್ದಾರೆ. ನಾವು ದಾಖಲೆ ಸಮೇತ ಈ ಹಗರಣವನ್ನು ತೆರೆದಿಟ್ಟಿದ್ದೀವಿ ಎಂದರು. \ No newline at end of file diff --git a/eesanje/url_46_81_7.txt b/eesanje/url_46_81_7.txt new file mode 100644 index 0000000000000000000000000000000000000000..afe37d720621ef9eb4b326ede9ec45b396d4454a --- /dev/null +++ b/eesanje/url_46_81_7.txt @@ -0,0 +1,9 @@ +ಉಪಚುನಾವಣೆಗಳ ಸನಿಹದಲ್ಲೇ ಕಾಂಗ್ರೆಸ್‌ಗೆ ಮುಜುಗರವನ್ನುಂಟುಮಾಡಿದ ಇಡಿ ದಾಳಿ +ಬೆಂಗಳೂರು,ಜು.10-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಕಾಂಗ್ರೆಸ್‌‍ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ಉಪಚುನಾವಣೆಗಳ ಸಂದರ್ಭದಲ್ಲೇ ಇಕ್ಕಟ್ಟಿನ ವಾತಾವರಣ ನಿರ್ಮಿಸಿದೆ. +ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಮರೆಯಲ್ಲಿ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ನುಂಗಿ ನೀರು ಕುಡಿಯಲು ಭಾರಿ ಸಂಚು ನಡೆದಿತ್ತು. ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರ ಆತಹತ್ಯೆಯಿಂದಾಗಿ ಇಡೀ ಪ್ರಕರಣ ಬೆಳಕಿಗೆ ಬಂದಿದ್ದು, ಸರ್ಕಾರದ ಘಟಾನುಘಟಿಗಳ ಬುಡ ಅಲುಗಾಡುವಂತೆ ಮಾಡಿದೆ. +ನಾಗೇಂದ್ರ ಅವರು ಪರಿಶಿಷ್ಟ ಪಂಗಡದ ಅಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿದೆ. ಆದರೂ ಹಗರಣದಲ್ಲಿ ಅವರನ್ನು ಪ್ರಮುಖ ಪಾತ್ರಧಾರಿ ಎಂದು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ. ಸಚಿವರ ಮೌಖಿಕ ಆದೇಶದ ಮೇಲೆ ಹಣ ವರ್ಗಾವಣೆ ಮಾಡಲಾಯಿತು ಎಂದು ಆತಹತ್ಯೆ ಮಾಡಿಕೊಂಡ ಅಧಿಕಾರಿ ಮರಣಪತ್ರದಲ್ಲಿ ನಮೂದು ಮಾಡಿದ್ದಾರೆ. +ನಾಗೇಂದ್ರ ಅವರು ರಾಜೀನಾಮೆ ನೀಡಿದ ಬಳಿಕ ಇತ್ತೀಚಿನವರೆಗೂ ಅವರನ್ನು ವಿಚಾರಣೆಗೊಳಪಡಿಸುವ ಧೈರ್ಯವನ್ನು ಎಸ್‌‍ಐಟಿ ಮಾಡಿರಲಿಲ್ಲ. ನಿಗಮದ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಚಿವಾಲಯದ ಅಧಿಕಾರಿಗಳು ಹಾಗೂ ನಾಗೇಂದ್ರ ಅವರ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಿದ ಮೇಲೆ ಸಚಿವರ ಮೌಖಿಕ ಆದೇಶದ ಬಗ್ಗೆ ಮಾಹಿತಿ ದೊರೆತಿದೆ ಎಂದು ತಿಳಿದುಬಂದಿದೆ. +ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಆಡಳಿತ ಪಕ್ಷದ ಶಾಸಕನನ್ನೇ ಬಂಧಿಸಿದರೆ ಅದು ಬೇರೆ ರೀತಿಯ ಸಂದೇಶ ಹೋಗಬಹುದು ಎಂಬ ಕಾರಣಕ್ಕೆ ಈವರೆಗೂ ತನಿಖೆಯ ನೆಪದಲ್ಲಿ ಕಾಲಾಹರಣ ನಡೆದಿತ್ತು ಎಂದು ತಿಳಿದುಬಂದಿದೆ. +ಈಗ ಇಡಿ ದಾಳಿಯಿಂದಾಗಿ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಂತಾಗಿದೆ. ಇಡಿ ಅಧಿಕಾರಿಗಳು ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸವರಾಜ ದದ್ದಲ್‌ ಅವರನ್ನು ಬಂಧಿಸಿದರೆ ಅದು ಕಾಂಗ್ರೆಸ್‌‍ ಪಕ್ಷಕ್ಕೆ ಭಾರಿ ಮುಜುಗರ ಉಂಟುಮಾಡಿದಂತಾಗುತ್ತದೆ. ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವುದಂತೂ ನಿಜ ಎಂದು ಖುದ್ದು ನಾಗೇಂದ್ರ ಸೇರಿದಂತೆ ಗೃಹಸಚಿವ ಪರಮೇಶ್ವರ್‌ ಆದಿಯಾಗಿ ಎಲ್ಲರೂ ಒಪ್ಪಿಕೊಂಡಿದ್ದಾರೆ. +ಅಕ್ರಮಗಳು ನಡೆದಿವೆ ಎಂಬ ಕಾರಣಕ್ಕಾಗಿಯೇ ಖುದ್ದು ಮುಖ್ಯಮಂತ್ರಿಯವರೇ ತನಿಖೆಗೆ ವಿಶೇಷ ದಳ ರಚಿಸಿದ್ದಾರೆ. ತನಿಖೆ ನಡೆಯುತ್ತಲೇ ಇದೆ. ಆದರೆ ಅಧಿಕಾರಿಗಳನ್ನು ಹೊರತುಪಡಿಸಿ ಹಗರಣದ ಮೂಲಕ್ಕೆ ಈವರೆಗೂ ಅಧಿಕಾರಿಗಳು ಕೈ ಇಟ್ಟಿರಲಿಲ್ಲ. +ಎಸ್‌‍ಐಟಿಗಿಂತಲೂ ಮೊದಲೇ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದರೆ ಕಾಂಗ್ರೆಸ್‌‍ ಪಕ್ಷಕ್ಕೆ ತೀವ್ರ ಮುಜುಗರವಾಗುವುದಷ್ಟೇ ಅಲ್ಲ, ಸರ್ಕಾರಕ್ಕೂ ಹಿನ್ನಡೆಯಾದಂತಾಗುತ್ತದೆ. ಹಾಗೆಂದು ಎಸ್‌‍ಐಟಿ ಅಧಿಕಾರಿಗಳೂ ಕೂಡ ನಾಗೇಂದ್ರ ಅವರನ್ನು ಬಂಧಿಸಲು ಹಿಂಜರಿಯುತ್ತಿದ್ದಾರೆ.ಒಟ್ಟಾರೆ ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣ ಕಾಂಗ್ರೆಸ್‌‍ ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. \ No newline at end of file diff --git a/eesanje/url_46_81_8.txt b/eesanje/url_46_81_8.txt new file mode 100644 index 0000000000000000000000000000000000000000..8c992d16ec3c1bf2282772d6de12d8f2e35b9206 --- /dev/null +++ b/eesanje/url_46_81_8.txt @@ -0,0 +1,7 @@ +ಭವಾನಿ ರೇವಣ್ಣ ನಿರೀಕ್ಷಣಾ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಕಾರ +ಹೊಸದಿಲ್ಲಿ,ಜು.10-ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.ಮೈಸೂರು ಜಿಲ್ಲೆ ಕೆ.ಆರ್‌.ನಗರದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಣ ಮಾಡಲಾಗಿತ್ತೆಂಬ ಆರೋಪ ಭವಾನಿ ರೇವಣ್ಣ ಮೇಲೆ ಕೇಳಿಬಂದಿತ್ತು. ಕರ್ನಾಟಕ ಹೈಕೋರ್ಟ್‌ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಬೇಕೆಂದು ಕೋರಿ ಎಸ್‌‍ಐಟಿ ಸುಪ್ರೀಂಕೋರ್ಟ್‌ಗೆ ಮೇಲನವಿ ಅರ್ಜಿ ಸಲ್ಲಿಸಿತ್ತು. +ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುಯಾನ್‌ ಅವರಿದ್ದ ದ್ವಿಸದಸ್ಯ ಪೀಠವು ಭವಾನಿ ರೇವಣ್ಣ ಅವರಿಗೆ ನೀಡಿರುವ ಜಾಮೀನನ್ನು ನಿರಾಕರಿಸಿ ನೋಟೀಸ್‌‍ ಜಾರಿ ಮಾಡಿದೆ. +ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಗಂಭೀರ ಆರೋಪವನ್ನು ಭವಾನಿ ರೇವಣ್ಣ ಎದುರಿಸುತ್ತಿದ್ದಾರೆ. ಹೀಗಾಗಿ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನನ್ನು ರದ್ದುಮಾಡಬೇಕೆಂದು ಎಸ್‌‍ಐಟಿ ಪರ ವಕೀಲ ಕಪಿಲ್‌ ಸಿಬಲ್‌ ಮನವಿ ಮಾಡಿದರು. +ಆರೋಪಿಯು 55 ವರ್ಷ ವಯಸ್ಸಿನ ಮಹಿಳೆಯಾಗಿದ್ದು, ಅವರ ಮಗನ ವಿರುದ್ಧ ಅಮಾನುಷ ಕೃತ್ಯಗಳಲ್ಲಿ ತೊಡಗಿರುವ ಗಂಭೀರ ಆರೋಪಗಳಿವೆ, ಆತ ಓಡಿಹೋಗಿ ಕೊನೆಗೆ ಸಿಕ್ಕಿಬಿದ್ದಿದ್ದಾನೆ. ಹೀಗಾಗಿ ಜಾಮೀನನ್ನು ರದ್ದು ಮಾಡಬೇಕೆಂದು ಕೋರಿದರು.ಆದರೆ ಕಪಿಲ್‌ ಸಿಬಲ್‌ ಅವರ ಈ ವಾದವನ್ನು ಮನ್ನಣೆ ಮಾಡದ ಸುಪ್ರೀಂಕೋರ್ಟ್‌ ಈ ರೀತಿಯ ಆರೋಪಗಳ ಸಂದರ್ಭದಲ್ಲಿ, ತನ್ನ ಮಗ ಮಾಡಿದ ಅಪರಾಧಕ್ಕೆ ಕುಮಕ್ಕು ನೀಡುವಲ್ಲಿ ತಾಯಿಯ ಪಾತ್ರವೇನು? ಎಂದು ಕಪಿಲ್‌ ಸಿಬಲ್‌ ಅವರನ್ನು ಪ್ರಶ್ನೆ ಮಾಡಿತು. +ಈ ವೇಳೆ ಸಿಬಲ್‌ ಅವರು ಕರ್ನಾಟಕ ಹೈಕೋರ್ಟ್‌ ವಿಚಾರಣೆ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರ ಮೇಲೆ ದಾಖಲಾಗಿರುವ ಸೆಕ್ಷನ್‌ಗಳನ್ನು ಗುರುತಿಸುವಲ್ಲಿ ವಿಫಲವಾಗಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ಅಪಹರಣ ಮಾಡಿರುವುದು ಅತ್ಯಂತ ಗಂಭೀರವಾದ ಪ್ರಕರಣ. ತನ್ನ ಮಗನನ್ನು ರಕ್ಷಣೆ ಮಾಡುವ ಉದ್ದೇಶದಿಂದಲೇ ಆರೋಪಿಯೇ ಈ ಕೃತ್ಯವೆಸಗಿದ್ದಾರೆ ಎಂದು ಮನವರಿಕೆ ಮಾಡುವ ಪ್ರಯತ್ನ ಮಾಡಿದರು. +ಆಗ ದ್ವಿಸದಸ್ಯ ಪೀಠವು ಕಪಿಲ್‌ ಸಿಬಲ್‌ ಹೇಳಿಕೆಗೆ ಆಕ್ಷೇಪಿಸಿ, ಏನೂ ಇಲ್ಲ… ನಾವು ಈ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಕಟು ಶಬ್ದಗಳಲ್ಲಿಯೇ ನಿರ್ದೇಶನ ನೀಡಿತು.ಜೂನ್‌ 18 ರಂದು ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಹೈಕೋರ್ಟ್‌ ತನಿಖೆಯ ಸಮಯದಲ್ಲಿ ಅವರು ಈಗಾಗಲೇ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ, ಅವರು ತಮ ಮಗನ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ಎಸ್‌‍ಐಟಿಗೆ ಸಹಕರಿಸುತ್ತಿಲ್ಲ ಎಂದು ಹೇಳುವುದು ಅನ್ಯಾಯವಾಗಿದೆ ಎಂದು ಒತ್ತಿ ಹೇಳಿದರು. \ No newline at end of file diff --git a/eesanje/url_46_81_9.txt b/eesanje/url_46_81_9.txt new file mode 100644 index 0000000000000000000000000000000000000000..ba550e0ae1f65e6c2391060e69e9c9a893537e70 --- /dev/null +++ b/eesanje/url_46_81_9.txt @@ -0,0 +1,13 @@ +ಇಡಿ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜು.10-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌‍ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಮತ್ತೆ ವಿಚಾರಣೆ ಮುಂದುವರೆದಿದೆ. ಈ ನಡುವೆ ಇಡಿ ದಾಳಿ ನಡೆದಿರುವುದು ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ರಾಜ್ಯಸರ್ಕಾರಕ್ಕೆ ಯಾವುದೇ ಮಾಹಿತಿ ನೀಡುವುದಿಲ್ಲ. ಸ್ವತಂತ್ರವಾಗಿ ತನಿಖೆ ನಡೆಸುತ್ತಾರೆ. ದಾಳಿ ನಡೆಸುವಾಗಲೂ ಯಾವುದೇ ಮಾಹಿತಿ ನೀಡುವುದಿಲ್ಲ. ಇಂದು ಯಾವ ಹಿನ್ನೆಲೆಗೆ ದಾಳಿ ನಡೆದಿರುವುದು ಎಂದು ತಮಗೆ ಗೊತ್ತಿಲ್ಲ ಎಂದರು. +ಮಾಜಿ ಸಚಿವ ನಾಗೇಂದ್ರ ಮತ್ತು ಶಾಸಕ ದದ್ದಲ್‌ ಅವರ ಆಪ್ತ ಸಹಾಯಕರ ಹೇಳಿಕೆಗಳನ್ನು ಆಧರಿಸಿ ಎಸ್‌‍ಐಟಿ ಅಧಿಕಾರಿಗಳು ಇಬ್ಬರನ್ನು ತನಿಖೆಗೆ ಕರೆದಿದ್ದಾರೆ. ರಾಜ್ಯಸರ್ಕಾರ ಇಡೀ ಪ್ರಕರಣವನ್ನು ಎಸ್‌‍ಐಟಿ ತನಿಖೆಗೆ ವಹಿಸಿದೆ. ಮತ್ತೊಂದೆಡೆ ಬ್ಯಾಂಕಿನ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಿಬಿಐ ತನಿಖೆ ನಡೆಯುತ್ತಿದೆ ಎಂದರು. +ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರಗಳ ಬಗ್ಗೆ ಮಾಹಿತಿ ಇಲ್ಲದೆ ನಾವು ಹೇಳಿಕೆ ನೀಡಲು ಸಾಧ್ಯವಿಲ್ಲ. ಎಸ್‌‍ಐಟಿ ಮತ್ತು ಸಿಬಿಐ ಅಧಿಕಾರಿಗಳು ಅದನ್ನು ಗಮನಿಸುತ್ತಾರೆ. ತನಿಖೆ ನಡೆಯುವ ಹಂತದಲ್ಲಿ ನಾವು ಯಾವುದೇ ಹೇಳಿಕೆಗಳನ್ನೂ ಕೊಡುವಂತಿಲ್ಲ, ಕೊಡಲೂಬಾರದು ಎಂದು ಹೇಳಿದರು. +ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಗರಣವಾಗಿಲ್ಲ ಎಂದು ಯಾರೂ ಹೇಳಿಲ್ಲ. ಅಕ್ರಮವಾಗಿದೆ ಎಂಬ ಕಾರಣಕ್ಕಾಗಿಯೇ ಎಸ್‌‍ಐಟಿ ರಚಿಸಿ ತನಿಖೆ ಮಾಡಲಾಗುತ್ತಿದೆ. ಇಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಹುಬ್ಬಳ್ಳಿಯ ನೇಹಾ ಹಿರೇಮಠ್‌ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವ ಮಾಹಿತಿ ತಿಳಿದುಬಂದಿದೆ. ಲಭ್ಯವಿರುವ ಸಾಕ್ಷಿಗಳ ಆಧಾರದ ಮೇಲೆ ವರದಿ ನೀಡಿರುತ್ತಾರೆ. +ಬಿಜೆಪಿಯವರು ಹೇಳಿದಂತೆ ಲವ್‌ ಜಿಹಾದ್‌ ಅಂಶವನ್ನೂ ಪರಿಶೀಲಿಸಲಾಗಿರುತ್ತದೆ. ಅವರು ಹೇಳಿದಾಕ್ಷಣ ದೋಷಾರೋಪಣ ಪಟ್ಟಿಯಲ್ಲಿ ಅಂತಹ ಅಂಶಗಳನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದರು. +ಗ್ರೇಟರ್‌ ಬೆಂಗಳೂರು ಪ್ರಸ್ತಾವನೆ :ಏಷ್ಯಾದಲ್ಲೇ ಬೆಂಗಳೂರು ಅತೀ ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕೆ ತಕ್ಕ ಹಾಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ಬಗ್ಗೆ ಪ್ರತಿಕ್ರಿಯಿಸಿದರು. +ಬೆಂಗಳೂರಿನ ಬೆಳವಣಿಗೆ ಅಗತ್ಯವಿದೆ. ಇದರಿಂದ ಉದ್ಯೋಗವಕಾಶಗಳು ಹೆಚ್ಚಾಗುತ್ತಿವೆ. ತುಮಕೂರನ್ನು ಗ್ರೇಟರ್‌ ಬೆಂಗಳೂರು ಮಾಡುವ ಆಲೋಚನೆಯಿದೆ. ಈ ಕುರಿತಂತೆಯೂ ನಾವು ಪ್ರಸ್ತಾವನೆ ಸಲ್ಲಿಸಲು ತಯಾರಾಗಿದ್ದೇವೆ. ತುಮಕೂರಿಗೆ ಮೆಟ್ರೊ ಮಾರ್ಗ ಕಲ್ಪಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಅಂತಾರಾಷ್ಟ್ರೀಯ ಎರಡನೇ ವಿಮಾನ ನಿಲ್ದಾಣವನ್ನು ತುಮಕೂರು ಸುತ್ತಮುತ್ತ ನಿರ್ಮಿಸುವ ಬಗ್ಗೆ ಈ ಹಿಂದೆ ಸಚಿವರಾಗಿದ್ದ ಮುರುಗೇಶ್‌ ನಿರಾಣಿ ಪ್ರಸ್ತಾಪಿಸಿದ್ದರು ಎಂದು ಹೇಳಿದರು. +ಗ್ರೇಟರ್‌ ಬೆಂಗಳೂರು ಎಂದು ಏಕಾಏಕಿ ಈಗಲೇ ಪ್ರಸ್ತಾವನೆ ಸಲ್ಲಿಸುವುದಿಲ್ಲ. ಅದಕ್ಕೆ ಅಗತ್ಯವಾಗಿರುವ ಮಾನದಂಡಗಳನ್ನು ಪೂರೈಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. +ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಕಡಿಮೆ ಸ್ಥಾನ ಗೆಲ್ಲಲು ಕಾರಣವಾಗಿರುವ ಅಂಶಗಳ ಬಗ್ಗೆ ಸತ್ಯಶೋಧನಾ ಸಮಿತಿ ಪರಿಶೀಲನೆ ನಡೆಸಲಾಗುತ್ತಿದೆ. ಹಿರಿಯ ಕಾಂಗ್ರೆಸ್‌‍ ನಾಯಕ ಬಿ.ಕೆ.ಹರಿಪ್ರಸಾದ್‌ ಕಾರ್ಯಕರ್ತರನ್ನು ಕಡೆಗಣಿಸಿದ್ದರಿಂದ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ನೀಡಿರುವ ಹೇಳಿಕೆ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಬಹುದು ಎಂದು ಹೇಳಿದರು. +ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಡೆಯಲಾದ ನಿವೇಶನಗಳ ಮೌಲ್ಯವನ್ನು ಮುಖ್ಯಮಂತ್ರಿಯವರು ಕಡಿಮೆ ನೀಡಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌ ಅವರು, ಜನ ಕಾಂಗ್ರೆಸ್‌‍ಗೆ ಮತ ಹಾಕಿ ಅಧಿಕಾರ ನೀಡಿದ್ದಾರೆ. ಬಿಜೆಪಿ ಹೇಳಿದಂತೆಲ್ಲಾ ಕೇಳಲಾಗುವುದಿಲ್ಲ. +ಈ ಮೊದಲು ನಾಲ್ಕು ವರ್ಷ ಯಾವ ರೀತಿ ಆಡಳಿತ ನಡೆಸಿದ್ದಾರೆ ಎಂದು ಗೊತ್ತಿದೆ. ಈಗ ಹಾಗಿರಬೇಕು, ಹೀಗಿರಬೇಕು ಎಂದೆಲ್ಲಾ ಹೇಳುತ್ತಿದ್ದಾರೆ. ಇವರನ್ನೇ ಕೇಳಿಕೊಂಡು ನಾವು ಆಡಳಿತ ನಡೆಸಲಾಗುವುದಿಲ್ಲ. ಜನ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದರು. \ No newline at end of file diff --git a/eesanje/url_46_82_1.txt b/eesanje/url_46_82_1.txt new file mode 100644 index 0000000000000000000000000000000000000000..d152f88b5dea6ab6c3d0da55df048c21510089e9 --- /dev/null +++ b/eesanje/url_46_82_1.txt @@ -0,0 +1,11 @@ +ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲು ಸಿಎಂ ಸೂಚನೆ +ಬೆಂಗಳೂರು,ಜು.9-ರಾಜ್ಯದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯ ಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ ಎಂದರು. +ಸ್ಥಳೀಯರೊಂದಿಗೆ ಸೇರಿಕೊಂಡು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಪ್ರವಾಸೋದ್ಯಮ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು. +ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು. +ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ, ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು. +ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು. ಪ್ರವಾಸೋದ್ಯಮ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಮುಖ್ಯಮಂತ್ರಿ ಸೂಚಿಸಿದರು. +ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌‍ ದೊರೆಯುತ್ತಿದೆ. 25 ಸಾವಿರ ಸಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. +ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ತಿಳಿಸಿದರು. +ರಾಜ್ಯದಲ್ಲಿ 25 ಸಾವಿರ ಸಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್‌ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ ನಿಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್‌ ಪ್ಲಾನ್‌ ಮಾಡಿ, ಬಜೆಟ್‌ ಪ್ಲಾನ್‌ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ ನಿಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು. +ನಿಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರುತ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್‌ ಪ್ಲಾನ್‌ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್‌.ಕೆ.ಪಾಟೀಲ್‌ ಅಭಿಪ್ರಾಯಪಟ್ಟರು. +ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್‌.ಕೆ.ಪಾಟೀಲ್‌ ಅವರು ಪ್ರಸ್ತಾವನೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ದಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು. \ No newline at end of file diff --git a/eesanje/url_46_82_10.txt b/eesanje/url_46_82_10.txt new file mode 100644 index 0000000000000000000000000000000000000000..47e76edc892b3d8dbbd36c660fc448b155bd69d2 --- /dev/null +++ b/eesanje/url_46_82_10.txt @@ -0,0 +1,6 @@ +ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಪ್ರಾಣ ಹೋದರೆ ಸಹಿಸಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜು.9– ಅಧಿಕಾರಿಗಳ ಉದಾಸೀನದಿಂದ ರಸ್ತೆ ಅಪಘಾತಗಳಲ್ಲಿ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸುವುದಿಲ್ಲ, ನೀವು ರಸ್ತೆಗಿಳಿದು ಸುರಕ್ಷತಾ ಕ್ರಮಗಳನ್ನು ಪರೀಕ್ಷಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. +ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ವಲಯ ಮತ್ತು ಬ್ಲಾಕ್‌ ಸ್ಪಾಟ್‌ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ ಜವಾಬ್ದಾರಿ ಮುಗಿಯಿತೇ ಎಂದು ಪ್ರಶ್ನಿಸಿದರು. +ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. +ಕಂದಾಯ, ಪೊಲೀಸ್‌‍, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. +ನಮ ನಿರ್ಲಕ್ಷ್ಯದಿಂದ ಜನರ ಪ್ರಾಣಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್‌್ಸ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್ವರ್ಕ್‌ ಮಾಡಬೇಕು ಎಂದರು. \ No newline at end of file diff --git a/eesanje/url_46_82_11.txt b/eesanje/url_46_82_11.txt new file mode 100644 index 0000000000000000000000000000000000000000..6d3bb9137f7ab2b222ced285dda8350693c34ab6 --- /dev/null +++ b/eesanje/url_46_82_11.txt @@ -0,0 +1,9 @@ +ನಿರಂತರ ಮಳೆಯಿಂದ ರಾಜ್ಯದ ಜಲಾಶಯಗಳಿಗೆ ಜೀವಕಳೆ +ಬೆಂಗಳೂರು, ಜು. 9-ನಿರಂತರ ಬೀಳುತ್ತಿರುವ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚಾಗುತ್ತಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಶೇ.39ರಷ್ಟು ನೀರು ಸಂಗ್ರಹವಾಗಿದೆ.ಮುಂಗಾರು ಮಳೆ ಕೈಕೊಟ್ಟಿದ್ದ ಪರಿಣಾಮ ಕಳೆದವರ್ಷ ಇದೇ ಅವಧಿಯಲ್ಲಿ ಎಲ್ಲಾ ಜಲಾಶಯಗಳಲ್ಲಿ 196.87ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು. ಆದರೆ, ಈ ವರ್ಷ 349.50 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಅಂದರೆ, 153 ಟಿಎಂಸಿ ಅಡಿಯಷ್ಟು ಹೆಚ್ಚು ನೀರಿದೆ. +ಕಾವೇರಿ ಜಲಾನಯನ ಭಾಗದಲ್ಲಿ ಒಳಹರಿವು ಇಳಿಮುಖವಾಗುತ್ತಿದ್ದರೆ, ಕೃಷ್ಣಾ ಕೊಳ್ಳ ಹಾಗೂ ಜಲ ವಿದ್ಯುತ್ ಉತ್ಪಾದಿಸುವ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಶೇ.60ರಷ್ಟು ನೀರು ಸಂಗ್ರಹವಾಗಿದೆ. +ಭರ್ತಿಯತ್ತ ಕಬಿನಿ ಜಲಾಶಯ: ಕಬಿನಿ ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 19.52 ಟಿಎಂಸಿ ಅಡಿಯಷ್ಟಿದ್ದು, ಇಂದು 18.52 ಟಿಎಂಸಿ ಅಡಿಯಷ್ಟಿದೆ. ಕಳೆದ ವರ್ಷ ಕೇವಲ 9.99 ಟಿಎಂಸಿ ಅಡಿಯಷ್ಟಿತ್ತು. ಒಳಹರಿವು 6 ಸಾವಿರ ಕ್ಯುಸೆಕ್‌್ಸಗಿಂತ ಹೆಚ್ಚಿದ್ದು, 2000 ಕ್ಯುಸೆಕ್‌್ಸ ಹೊರ ಹರಿವಿದೆ. +ಹಾರಂಗಿ ಜಲಾಶಯದಲ್ಲಿ ಶೇ.68ರಷ್ಟು ನೀರಿದೆ.ಒಳಹರಿವು ಕೇವಲ ಎರಡು ಸಾವಿರದಷ್ಟಿದೆ. ಗರಿಷ್ಠ ಮಟ್ಟ ತಲುಪಲು ಇನ್ನೂ 3 ಟಿಎಂಸಿಯಷ್ಟು ನೀರು ಬೇಕಿದೆ. ಹೇಮಾವತಿ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ 3 ಟಿಎಂಸಿಯಷ್ಟು ಹೆಚ್ಚು ನೀರಿದೆ. ಈಗ ಶೇ.51ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಒಳಹರಿವು 6 ಸಾವಿರ ಕ್ಯುಸೆಕ್‌್ಸಗೂ ಹೆಚ್ಚಿದೆ. +ಜೀವನಾಡಿ ಕೆಆರ್ಎಸ್ ಜಲಾಶಯದಲ್ಲಿ ಶೇ.52ರಷ್ಟು ನೀರು ಸಂಗ್ರಹವಾಗಿದೆ. ಒಳಹರಿವು 6 ಸಾವಿರ ಕ್ಯುಸೆಕ್‌್ಸಗೂ ಹೆಚ್ಚಿದೆ. 49.45 ಟಿಎಂಸಿ ಸಾಮರ್ಥ್ಯವಿರುವ ಈ ಜಲಾಶಯದಲ್ಲಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು ಸಂಗ್ರಹವಾಗಿದೆ. +ಜಲ ವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ ಜಲಾಶಯಕ್ಕೆ 23 ಸಾವಿರ ಕ್ಯುಸೆಕ್‌್ಸಗೂ ಹೆಚ್ಚು ಹಾಗೂ ಸೂಪ ಜಲಾಶಯಕ್ಕೆ 19 ಸಾವಿರ ಕ್ಯುಸೆಕ್‌್ಸಗೂ ಅಧಿಕ ಒಳಹರಿವು ಇದೆ. ಲಿಂಗನಮಕ್ಕಿ, ಸೂಪಾ , ವಾರಾಹಿ ಜಲಾಶಯಗಳಿಗೆ ಒಟ್ಟು 46 ಸಾವಿರಕ್ಕೂ ಹೆಚ್ಚು ಕ್ಯುಸೆಕ್‌್ಸ ಒಳಹರಿವು ಇದೆ. ಶೇ.28ರಷ್ಟು ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ ದುಪ್ಪಟ್ಟು ನೀರು ಈ ಜಲಾಶಯಗಳಲ್ಲಿದೆ. +ಕೃಷ್ಣಾ ಕೊಳ್ಳದ ಆಲಮಟ್ಟಿ ಜಲಾಶಯಕ್ಕೆ 78 ಸಾವಿರ ಕ್ಯುಸೆಕ್‌್ಸ ಅಧಿಕ ಪ್ರಮಾಣದ ನೀರು ಬರುತ್ತಿದೆ. ಶೇ.58ರಷ್ಟು ನೀರು ಸಂಗ್ರಹವಾಗಿದೆ. ತುಂಗಾಭದ್ರಾ ಜಲಾಶಯಕ್ಕೆ 23 ಸಾವಿರ ಕ್ಯುಸೆಕ್‌್ಸಗೂ ಅಧಿಕ ಹಾಗೂ ಘಟಪ್ರಭಾ, ಜಲಾಶಯಕ್ಕೆ 25 ಸಾವಿರ ಕ್ಯುಸೆಕ್‌್ಸ ಹೆಚ್ಚು ಪ್ರಮಾಣದ ಒಳಹರಿವಿದೆ. +ಕೃಷ್ಣಾ ಕೊಳ್ಳದ 7 ಜಲಾಶಯಗಳಲ್ಲಿ ಶೇ.40ರಷ್ಟು ನೀರು ಸಂಗ್ರಹವಾಗಿದ್ದು, ಒಟ್ಟು 1.43 ಲಕ್ಷ ಕ್ಯುಸೆಕ್‌್ಸಗೂ ಅಧಿಕ ಪ್ರಮಾಣದ ಒಳಹರಿವು ಇದೆ. ಒಟ್ಟಾರೆ ರಾಜ್ಯದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ಸಮಾಧಾನಕರವಾಗಿದೆ. \ No newline at end of file diff --git a/eesanje/url_46_82_12.txt b/eesanje/url_46_82_12.txt new file mode 100644 index 0000000000000000000000000000000000000000..92f0a1ee8da9330dcf3b7bcbe89ff0b3f1461cc3 --- /dev/null +++ b/eesanje/url_46_82_12.txt @@ -0,0 +1,15 @@ +ಶಾಕಿಂಗ್ : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ..! +ಬೆಂಗಳೂರು,ಜು.9-ಹೆಚ್ಚುತ್ತಿರುವ ಅನಕ್ಷರತೆ, ಕುಟುಂಬ ಸದಸ್ಯರ ಒತ್ತಡ, ಏಕಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ, ಗಂಡು ಸಂತಾನ ಬೇಕೆಂಬ ಹೆಬ್ಬಯಕೆ, ಪ್ರೇಮ ಪ್ರಕರಣ ಇತರೆ ಕಾರಣಗಳಿಂದ ರಾಜ್ಯದಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. +ರಾಜ್ಯದಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣ ದಾಖಲಾಗಿದ್ದು, ಸರ್ಕಾರ ಇಂತಹ ಅಮಾನುಷ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂತಾನೋತ್ಪತಿ ಮಕ್ಕಳ ಆರೋಗ್ಯ(ಆರ್ಸಿಎಚ್) ದತ್ತಾಂಶದ ವರದಿಯು ಹೇಳಿದೆ. +ದುರಂತವೆಂದರೆ ಅತಿಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು (1344), ಬೆಳಗಾವಿ(986) ಹಾಗೂ 3ನೇ ಸ್ಥಾನದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು(943) ಬಾಲ ಗರ್ಭೀಣಿ ಪ್ರಕರಣಗಳು ದಾಖಲಾಗಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. +ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿದ್ದು, ಸರ್ಕಾರ ಗ್ರಾಮೀಣ ಮತ್ತು ನಗರಪ್ರದೇಶಗಳಲ್ಲಿ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ. +ಈ ವರದಿಯನ್ನು ಸ್ವೀಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಾಲಗರ್ಭಿಣಿ ಪ್ರಕರಣಗಳನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಒಂದು ವೇಳೆ ಇದು ಮರುಕಳಿಸಿದರೆ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಸೂಚನೆ ಕೊಟ್ಟಿದ್ದಾರೆ. +ರಾಜ್ಯದಲ್ಲಿ ಜ.1, 2022ರಿಂದ ಮಾರ್ಚ್ 31, 2023ರವರೆಗೆ 13,477 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ ಎಂದು ಸಂತಾನೋತ್ಪತ್ತಿ ಮಕ್ಕಳ ಆರೋಗ್ಯ ದತ್ತಾಂಶ ತಿಳಿಸಿದೆ. +ಬೆಳಗಾವಿಯಲ್ಲಿ 986, ಮೈಸೂರು 943, ಚಿತ್ರದುರ್ಗ 806, ವಿಜಯಪುರ 769 ಬಾಲ ಗರ್ಭಿಣಿಯರ ಪ್ರಕರಣಗಳಿವೆ.ಕಲಬುರ್ಗಿ ಜಿಲ್ಲೆಯಲ್ಲಿ 764, ತುಮಕೂರಿನಲ್ಲಿ 689, ಮಂಡ್ಯದಲ್ಲಿ 647, ಬಾಗಲಕೋಟೆಯಲ್ಲಿ 567, ವಿಜಯನಗರ 507, ರಾಯಚೂರಲ್ಲಿ 493, ಯಾದಗಿರಿಯಲ್ಲಿ 481, ಬಳ್ಳಾರಿಯಲ್ಲಿ 459, ದಾವಣಗೆರೆಯಲ್ಲಿ 457, ಬೀದರ್ನಲ್ಲಿ 412, ಕೋಲಾರದಲ್ಲಿ 396 ಮತ್ತು ಹಾಸನದಲ್ಲಿ 317 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. +ರಾಮನಗರದಲ್ಲಿ 267, ಚಿಕ್ಕಬಳ್ಳಾಪುರದಲ್ಲಿ 263, ಶಿವಮೊಗ್ಗದಲ್ಲಿ 247, ಹಾವೇರಿಯಲ್ಲಿ 246, ಚಿಕ್ಕಮಗಳೂರಲ್ಲಿ 242, ಕೊಪ್ಪಳದಲ್ಲಿ 228, ಬೆಂಗಳೂರು ಗ್ರಾಮಾಂತರದಲ್ಲಿ 216, ಚಾಮರಾಜನಗರದಲ್ಲಿ 180, ಧಾರವಾಡದಲ್ಲಿ 178, ಕೊಡಗುನಲ್ಲಿ 127 ಮತ್ತು ಗದಗ ಜಿಲ್ಲೆಯಲ್ಲಿ 105, ಉತ್ತರ ಕನ್ನಡದಲ್ಲಿ 71, ದಕ್ಷಿಣ ಕನ್ನಡದಲ್ಲಿ 48 ಹಾಗೂ ಉಡುಪಿ ಜಿಲ್ಲೆಯಲ್ಲಿ 32 ಬಾಲ ಗರ್ಭಿಣಿ ಪ್ರಕರಣಗಳಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇಂಥ ಪ್ರಕರಣಗಳು ಪತ್ತೆಯಾಗುತ್ತಿವೆ. +ಕಾರಣವೇನು?:ವರದಿಯಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಅಧಿಕವಾಗಲು ಪ್ರಮುಖ ಕಾರಣಗಳನ್ನು ವಿಶ್ಲೇಷಿಸಲಾಗಿದೆ. ಅದರಂತೆ, ಕುಟುಂಬದ ಸದಸ್ಯರ ಒತ್ತಡ, ಏಕ ಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ ಕಾರಣಗಳಿಂದ 2,920 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. +ಶಾಲೆಯಿಂದ ಹೊರಗುಳಿಯುವುದು, ಶೈಕ್ಷಣಿಕ ಸೌಲಭ್ಯಗಳ ಕೊರತೆಯಿಂದ 716 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. ಇನ್ನು ಮಾನಸಿಕ ಹಾಗೂ ಭಾವನ್ಮಾಕ ಬದಲಾವಣೆಗಳು (ಪ್ರೇಮ ಪ್ರಕರಣ) ಗಳಿಂದ 2033 ಬಾಲ ಗರ್ಭಿಣಿ ಪ್ರಕರಣಗಳು ಪತ್ತೆಯಾಗಿವೆ. +ತಂದೆ ಅಥವಾ ತಾಯಿ ಮಾನಸಿಕ ಅಸ್ವಸ್ಥತೆ, ವಿಧವೆ ತಾಯಿ, ಪೋಷಕರ ತೀವ್ರ ಅನಾರೋಗ್ಯ, ಕೊರೊನಾ ಕಾರಣದಿಂದ 847 ಬಾಲ್ಯ ವಿವಾಹ ಬಾಲ ಗರ್ಭಿಣಿ ಪ್ರಕರಣಗಳಿಗೆ ಕಾರಣವಾಗಿವೆ ಎಂದು ವರದಿ ಹೇಳಿದೆ. +ನಿಯಂತ್ರಣಕ್ಕೆ ಕ್ರಮಗಳೇನು?:ಎಲ್ಲಾ ಸಂಬಂಧಿತ ಇಲಾಖೆಗಳು ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕಣಗಳ ತಡೆಗಟ್ಟಲು ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುವುದು ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. +ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೊಳಿಸಿ, ಪ್ರತಿ ತಿಂಗಳು ದತ್ತಾಂಶದ ಪ್ರಕಾರ, ಬಾಲ್ಯವಿವಾಹ ಪ್ರಕರಣಗಳನ್ನು ಪರಿಶೀಲಿಸಬೇಕು ಎಂದು ಸೂಚಿಸಿದ್ದಾರೆ. +ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಾಲ್ಯವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟಲು ಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_82_2.txt b/eesanje/url_46_82_2.txt new file mode 100644 index 0000000000000000000000000000000000000000..9b953d153fcd4371a4913e06609567bac05312c3 --- /dev/null +++ b/eesanje/url_46_82_2.txt @@ -0,0 +1,6 @@ +ನಂದಿನಿ ಲಘು ಉಪಾಹಾರ ಪ್ಯಾಕ್‌ ಬಿಡುಗಡೆ +ಬೆಂಗಳೂರು, ಜು.9– ಗೋವಿನಿಂದ ಗ್ರಾಹಕರವರೆಗೆ ಎಂಬ ಶೀರ್ಷಿಕೆಯನ್ನು ಹೊತ್ತು ಕಳೆದ 40 ವರ್ಷಗಳಿಂದ ಗ್ರಾಹಕರ ಅಭಿರುಚಿಗೆ ತಕ್ಕಂತೆ ನಂದಿನಿ ಬ್ರಾಂಡ್‌ ಅಡಿಯಲ್ಲಿ 170 ಕ್ಕೂ ಅಧಿಕ ಉತ್ಕೃಷ್ಟ ಗುಣಮಟ್ಟದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಂದಿರುವ ಸಂಸ್ಥೆ ಈಗ ಲಘು ಉಪಾಹಾರವನ್ನು ಹೊರತಂದಿದೆ. +ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ದಿನನಿತ್ಯ ಕಚೇರಿ ಬಳಕೆ ಮತ್ತು ಆಯೋಜಿಸಲಾಗುವ ಸಭೆಗಳಿಗೆ ಆಗತ್ಯವಿರುವ ಲಘು ಉಪಾಹಾರವನ್ನು ಒದಗಿಸಲು ಇರುವ ಸುವರ್ಣಾವಕಾಶವನ್ನು ಕಹಾಮ ಪರಿಗಣಿಸಿ ನಂದಿನಿ ಬ್ರಾಂಡ್‌ನಲ್ಲಿ ಲಭ್ಯವಿರುವ ಶುಚಿ ಮತ್ತು ರುಚಿಕರವಾದ ಉತ್ಪನ್ನಗಳನ್ನು ಬಳಸಿಕೊಂಡು ವಿನೂತನ ಪ್ಯಾಕ್‌ನಲ್ಲಿ ನಂದಿನಿ ಲಘು ಉಪಾಹಾರದ ಪ್ಯಾಕ್‌ ಅನ್ನು ಸಿದ್ಧಪಡಿಸಲಾಗಿದೆ. +ವಿಧಾನಸೌಧದಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಗಳು ಮತ್ತು ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಸಾಂಕೇತಿಕವಾಗಿ ನಂದಿನಿ ಲಘು ಉಪಾಹಾರ ಪ್ಯಾಕ್‌ ಅನ್ನು ಬಿಡುಗಡೆಗೊಳಿಸಿದರು. +ನಂದಿನಿ ಲಘು ಉಪಹಾರದ ಪ್ಯಾಕ್‌ ಅನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಕಹಾಮ ಸಿದ್ದವಿದ್ದು, 4ಜಿ ವಿನಾಯಿತಿ ನೀಡಿ ಆದೇಶವನ್ನು ಹೊರಡಿಸಲು ರಾಜ್ಯ ಸರ್ಕಾರವನ್ನು ಈಗಾಗಲೇ ಮನವಿ ಮಾಡಲಾಗಿರುವ ವಿಷಯವನ್ನು ಸದರಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯ ಅವಗಾಹನೆಗೆ ತರಲಾಯಿತು ಮತ್ತು 4ಜಿ ವಿನಾಯಿತಿ ನೀಡಿ ಸೂಕ್ತ ಆದೇಶವನ್ನು ಹೊರಡಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸಲು ಮನವಿ ಮಾಡಲಾಗಿದೆ. +ಉಪ ಮುಖ್ಯಮಂತ್ರಿ, ಗೃಹ ಮಂತ್ರಿ, ಸಹಕಾರ ಸಚಿವರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಸಚಿವರು, ಇಂಧನ ಸಚಿವರು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರು ಹಾಗೂ ಕಹಾಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_82_3.txt b/eesanje/url_46_82_3.txt new file mode 100644 index 0000000000000000000000000000000000000000..0dadfab7462977942e6c53927f4c573604372cc4 --- /dev/null +++ b/eesanje/url_46_82_3.txt @@ -0,0 +1,9 @@ +‘ರಾಮನಗರ’ ಜಿಲ್ಲೆಗೆ ಮರುನಾಮಕರಣ ಮಾಡುವಂತೆ ಸಿಎಂಗೆ ಮನವಿ +ಬೆಂಗಳೂರು,ಜು.9-ರಾಮನಗರ ಜಿಲ್ಲೆಯ ಮೂಲ ಹೆಸರನ್ನು ಉಳಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. +ವಿಧಾನಸೌಧದಲ್ಲಿಂದು ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ, ದೊಡ್ಡಬಳ್ಳಾಪುರ, ಹೊಸಕೋಟೆ, ಯಲಹಂಕ, ನೆಲಮಂಗಲ, ಕನಕಪುರ, ಮಾಗಡಿ, ದೇವನಹಳ್ಳಿ, ಚನ್ನಪಟ್ಟಣ ಎಲ್ಲವೂ ಬೆಂಗಳೂರು ನಗರದ ಭಾಗಗಳಾಗಿದ್ದವು. ಅದನ್ನು ಗ್ರಾಮಾಂತರ ಎಂದು ಬೇರ್ಪಡಿಸಲಾಯಿತು. ಅನಂತರ ಒಂದಿಷ್ಟು ಭಾಗವನ್ನು ಪ್ರತ್ಯೇಕಗೊಳಿಸಿ ರಾಮನಗರ ಜಿಲ್ಲೆ ಮಾಡಲಾಗಿದೆ. ಈ ಪ್ರದೇಶಗಳೆಲ್ಲಾ ಹಳೆಯ ಬೆಂಗಳೂರು ಎಂದೇ ಪ್ರಸಿದ್ಧಿ ಪಡೆದಿವೆ ಎಂದರು. +ಅಮೆರಿಕಾ, ಯೂರೋಪ್‌ ಖಂಡದಲ್ಲಿ ಪ್ರತಿಷ್ಠಿತ ಸ್ಥಳಗಳಿಗೆ ಸ್ವಂತ ಹೆಸರಿದೆ. ಆಡಳಿತಾತಕ ದೃಷ್ಟಿಯಿಂದ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವುದು ಅಗತ್ಯವಾಗಿದೆ ಎಂದು ವಿವರಿಸಿದರು. +ನಾವು ಹೊಸ ಜಿಲ್ಲೆಯನ್ನು ಸೃಷ್ಟಿಸುತ್ತಿಲ್ಲ. ಒಂದು ಕಡೆ ಆಂಧ್ರಪ್ರದೇಶ, ಇನ್ನೊಂದು ಕಡೆ ತಮಿಳುನಾಡು ಗಡಿಯನ್ನು ಬೆಂಗಳೂರಿನ ಭಾಗಗಳು ಹಂಚಿಕೊಂಡಿವೆ. ತುಮಕೂರು ಮತ್ತು ಬಳ್ಳಾರಿ ರಸ್ತೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ದಿಕ್ಕುಗಳಲ್ಲೂ ಬೆಂಗಳೂರು ವಿಸ್ತರಣೆಯಾಗಿದೆ. ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವುದರಿಂದ ಭೂಮಿಯ ಬೆಲೆ ಹೆಚ್ಚಾಗುತ್ತದೆ, ಕೈಗಾರಿಕೆಗಳ ಅಭಿವೃದ್ಧಿಯೂ ಆಗುತ್ತದೆ ಎಂದು ವಿವರಿಸಿದ್ದಾರೆ. +ಡಿ.ಕೆ.ಶಿವಕುಮಾರ್‌ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಇಕ್ಬಾಲ್‌ ಹುಸೇನ್‌, ಮಾಜಿ ಸಂಸದ ಡಿ.ಕೆ.ಸುರೇಶ್‌, ವಿಧಾನಪರಿಷತ್‌ ಸದಸ್ಯರಾದ ಪುಟ್ಟಣ್ಣ, ಎಸ್‌‍.ರವಿ, ಸುಧಾಮ್‌ದಾಸ್‌‍, ಪಿ.ಎಂ.ಲಿಂಗಪ್ಪ, ರಾಜು, ಮಾಜಿ ಶಾಸಕ ಎಂ.ಪಿ.ಅಶ್ವತ್‌್ಥ, ಬಿಎಂಐಸಿಪಿಎ ರಘುನಂದರಾಮಣ್ಣ, ಕೆಪಿಸಿಸಿ ಉಪಾಧ್ಯಕ್ಷ ಜಿಯಾವುಲ್ಲಾ, ರಾಮನಗರ ಜಿಲ್ಲಾ ಕಾಂಗ್ರೆಸ್‌‍ ಸಮಿತಿ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಸಹಿ ಹಾಕಿದ್ದಾರೆ. +ಆರಂಭದಲ್ಲಿ ಬೆಂಗಳೂರು ಜಿಲ್ಲೆಗೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್‌, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ತಾಲ್ಲೂಕುಗಳು ಸೇರಿದ್ದವು.1986 ರಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಘೋಷಿಸಲಾಯಿತು. +2007 ರಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಸಿಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡ ಬಳ್ಳಾಪುರ ತಾಲ್ಲೂಕುಗಳನ್ನೊಳಗೊಂಡಂತೆ ಹೊಸ ಜಿಲ್ಲೆಯನ್ನು ಘೋಷಿಸಿ ಬೆಂಗಳೂರು ಗ್ರಾಮಾಂತರ ಹೆಸರನ್ನೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ, ರಾಮನಗರ ತಾಲ್ಲೂಕುಗಳನ್ನು ಸೇರಿಸಿ ಹೊಸದಾಗಿ ರಾಮನಗರ ಜಿಲ್ಲೆ ಮಾಡಲಾಗಿದೆ. +ಪ್ರಸ್ತುತ ಬೆಂಗಳೂರು ನಗರ, ಅಂತಾರಾಷ್ಟ್ರೀಯ ಖ್ಯಾತಿ ಸಾರ್ವಭೌಮತ್ವ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯವಾಗಬೇಕು ಎಂಬುದು ಜನರ ಆಶಯ ಮತ್ತು ನಮ ಚಿಂತನೆಯಾಗಿದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಈ 5 ತಾಲ್ಲೂಕುಗಳನ್ನು ಒಳಗೊಂಡು ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ರಚನೆ ಮಾಡುವಂತೆ ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_82_4.txt b/eesanje/url_46_82_4.txt new file mode 100644 index 0000000000000000000000000000000000000000..e220840d177bdf82e5e1434e10dcc6df25061359 --- /dev/null +++ b/eesanje/url_46_82_4.txt @@ -0,0 +1,8 @@ +ಸಿಎಸ್‌‍ಆರ್‌ ನೆರವಿನಲ್ಲಿ 2 ಸಾವಿರ ಶಾಲೆಗಳ ನಿರ್ಮಾಣ : ಸಿಎಂ +ಬೆಂಗಳೂರು,ಜು.9– ಬಜೆಟ್‌ನಲ್ಲಿ ಘೋಷಿಸಿರುವಂತೆ ಪಂಚಾಯತ್‌ ವ್ಯಾಪ್ತಿಯಲ್ಲಿ 2 ಸಾವಿರ ಮಾದರಿ ಶಾಲೆಗಳನ್ನು ಸಿಎಸ್‌‍ಆರ್‌ ಅಡಿಯಲ್ಲಿ ನಿರ್ಮಿ ಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. +ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿದೆ. +ರಾಜ್ಯದಲ್ಲಿ ಖಾಸಗಿ ಕಂಪೆನಿಗಳು ಕಾಯ್ದೆ ಪ್ರಕಾರ ಕಳೆದ ಸಾಲಿನಲ್ಲಿ 8,163 ಕೋಟಿ ಕಡ್ಡಾಯವಾಗಿ ಸಿಎಸ್‌‍ಆರ್‌ ಅಡಿ ವೆಚ್ಚ ಮಾಡಬೇಕಾಗಿತ್ತು. ಖಾಸಗಿ ಕಂಪೆನಿಗಳು ಈ ಅವಧಿಯಲ್ಲಿ 4 ಲಕ್ಷ ಕೋಟಿ ರೂ. ಲಾಭ ಗಳಿಸಿವೆ. 1,190 ಕೋಟಿ ಕಳೆದ ವರ್ಷ ಸಿಎಸ್‌‍ಆರ್‌ ಅಡಿ ವೆಚ್ಚ ಮಾಡಿದ್ದು, ಶೇ.30ರಷ್ಟು ಮಾತ್ರ ಸಿಎಸ್ಆರ್‌ ಅಡಿ ಬಳಸುತ್ತಿವೆ ಎಂದರು. +ರಾಮನಗರ ಜಿಲ್ಲೆಯಲ್ಲಿ ಪೈಲೆಟ್‌ ಯೋಜನೆಯಾಗಿ ಆರಂಭಿಸಲಾಗಿದ್ದು, ಮೂರು ಪಂಚಾಯತ್‌ಗಳಿಗೆ ಒಂದು ಶಾಲೆಯಂತೆ ಈಗಾಗಲೇ 20 ಶಾಲೆ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಟೊಯೋಟಾ ಕಂಪೆನಿ ಒಂದೇ 20 ಕೋಟಿ ಸಿಎಸ್‌‍ಆರ್‌ ಅಡಿ ಒದಗಿಸಿದ್ದಾರೆ. ನಾವು 3 ಎಕರೆ ಜಮೀನು ಒದಗಿಸಬೇಕು. ಶಾಲೆಯ ಮಾದರಿಯನ್ನು ಮಾತ್ರ ನಾವು ಒದಗಿಸುತ್ತೇವೆ. ನಿರ್ಮಾಣ ಕಾರ್ಯವನ್ನು ಅವರೇ ಮಾಡುತ್ತಾರೆ ಎಂದು ಹೇಳಿದರು. +ರಾಜ್ಯದಲ್ಲಿ ಈಗಾಗಲೇ 500 ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ 2 ಸಾವಿರ ಶಾಲೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಪ್ರಮುಖ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ ಎಂದರು. +ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ:ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ ಎಂದ ಅವರು, ರಾಜಪ್ಪ ಎನ್ನುವ ಮೇಸ್ಟ್ರು ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ಶಾಲೆಗೆ ಸೇರಿಸದಿದ್ದರೆ ನಾನು ಮುಖ್ಯಮಂತ್ರಿಯೇ ಆಗುತ್ತಿರಲಿಲ್ಲ ಎಂದು ಹೇಳಿದರು. +ಶಾಲೆಯಿಂದ ಯಾವ ಮಕ್ಕಳೂ ಹೊರಗುಳಿಯಬಾರದು. ಪ್ರತಿ ವರ್ಷ 6 ರಿಂದ 16 ವರ್ಷದೊಳಗಿನ ಮಕ್ಕಳ ಸಮೀಕ್ಷೆಯನ್ನು ನಡೆಸಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮತ್ತೆ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. \ No newline at end of file diff --git a/eesanje/url_46_82_5.txt b/eesanje/url_46_82_5.txt new file mode 100644 index 0000000000000000000000000000000000000000..42dba5dc2c4440a041cbf2ffd7d95e926b2da86b --- /dev/null +++ b/eesanje/url_46_82_5.txt @@ -0,0 +1,7 @@ +ಎಸ್‌ಐಟಿ ಮುಂದೆ ಹಾಜರಾದ ಮಾಜಿ ಸಚಿವ ನಾಗೇಂದ್ರ +ಬೆಂಗಳೂರು,ಜು.9– ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಇಂದು ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರು ಎಸ್‌‍ಐಟಿ ಮುಂದೆ ವಿಚಾರಣೆಗೆ ಹಾಜರಾದರು. +ಈ ಹಗರಣದಲ್ಲಿ ನಾಗೇಂದ್ರ ಅವರು ಭಾಗಿಯಾಗಿದ್ದಾರೆಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ದಳ ನೋಟೀಸ್‌‍ ನೀಡಿತ್ತು. +ಹಾಗಾಗಿ ಇಂದು ಸಿಐಡಿ ಕಚೇರಿಯಲ್ಲಿರುವ ಎಸ್‌‍ಐಟಿ ಮುಂದೆ ನಾಗೇಂದ್ರ ಅವರು ಹಾಜರಾಗಿದ್ದು, ತನಿಖಾಧಿಕಾರಿಗಳು ಅವರಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. +ವಾಲೀಕಿ ನಗರದಲ್ಲಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಡ ಕೇಳಿಬಂದಿದ್ದರಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. +ಈ ಹಗರಣದಲ್ಲಿ ಈಗಾಗಲೇ ಎಸ್‌‍ಐಟಿ ಹಲವರನ್ನು ಬಂಧಿಸಿದ್ದು, ಇಂದು ನಾಗೇಂದ್ರ ಅವರನ್ನು ತನಿಖಾಧಿಕಾರಿಗಳು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ ಹಲವು ವಿವರಗಳನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ. +ವಾಲೀಕಿ ನಿಗಮದ ಬ್ಯಾಂಕ್‌ನಿಂದ 18 ನಕಲಿ ಖಾತೆಗಳಿಗೆ ಸುಮಾರು 94 ಕೋಟಿ ರೂ. ಅಕ್ರಮವಾಗಿ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ಸರ್ಕಾರ ಎಸ್‌‍ಐಟಿ ರಚಿಸಿತ್ತು. \ No newline at end of file diff --git a/eesanje/url_46_82_6.txt b/eesanje/url_46_82_6.txt new file mode 100644 index 0000000000000000000000000000000000000000..1d31e881e5ffb6bdaee60ec6ad4189b73616e19a --- /dev/null +++ b/eesanje/url_46_82_6.txt @@ -0,0 +1,7 @@ +ಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ +ಬೆಂಗಳೂರು,ಜು.9-ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು. +ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಗರಂ ಆದರು. +ರಾಜ್ಯದಲ್ಲಿ 2022-23ರ ಅವಽಯಲ್ಲಿ 13,477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಽ ಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು. +ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಅವರು ಖಡಕ್‌ ಸೂಚನೆ ನೀಡಿದರು. +ಅಂಗನವಾಡಿ ನೇಮಕ ಪೂರ್ಣಗೊಳಿಸಿ :ಅಂಗನವಾಡಿ ಕಾರ್ಯಕರ್ತೆಯರ 4,180 ಹ್ದುೆಗಳು ಹಾಗೂ ಸಹಾಯಕಿಯರ 9,411 ಹ್ದುೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು. +ನಗರ ಪ್ರದೇಶದಲ್ಲಿ ಸಹಾಯಕಿಯರ ಹ್ದುೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ ಅವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು. \ No newline at end of file diff --git a/eesanje/url_46_82_7.txt b/eesanje/url_46_82_7.txt new file mode 100644 index 0000000000000000000000000000000000000000..76c47a22ef550cf6a2ef9f332fc4737cc7502b93 --- /dev/null +++ b/eesanje/url_46_82_7.txt @@ -0,0 +1,5 @@ +ರಾಮನಗರದ ಕಂದಾಯ ಭವನದ ಬಳಿ ಹೈಡ್ರಾಮ, ಲಘು ಲಾಠಿ ಪ್ರಹಾರ +ಬೆಂಗಳೂರು,ಜು.9– ರಾಮನಗರ ತಾಲ್ಲೂಕಿನ ಹಳ್ಳಿಮಾಳದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ರಾಮನಗರ ಕಂದಾಯ ಭವನದ ಬಳಿ ಪ್ರತಿಭಟನೆ ನಡೆಸಿದಾಗ ಉದ್ವಿಗ್ನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಲಾಗಿದೆ. +ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯನ್ನು ರಾಜಕೀಯ ಕಾರಣಕ್ಕಾಗಿ ಮುಂದೂಡಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. +ಪ್ರತಿಭಟನೆ ವೇಳೆ ಕಂದಾಯ ಭವನದಲ್ಲಿ ಇರುವ ಸಹಕಾರ ಇಲಾಖೆಯ ನಿರ್ಬಂಧಕರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ತಳ್ಳಾಟ ನೂಕಾಟ ಉಂಟಾಯಿತು.ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ವಾಗ್ವಾದ ಉಂಟಾಯಿತು. +ಕಚೇರಿಗೆ ಮುತ್ತಿಗೆ ಹಾಕುವುದನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಾಗ ಪ್ರತಿಭಟನಾನಿರತರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಲಾಯಿತು. ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪ್ರತಿಭಟನಾ ನಿರತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_82_8.txt b/eesanje/url_46_82_8.txt new file mode 100644 index 0000000000000000000000000000000000000000..873c456bc6cae7512b42316b4e11470800b9e387 --- /dev/null +++ b/eesanje/url_46_82_8.txt @@ -0,0 +1,8 @@ +ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ : ಪೆಡ್ಲರ್‌ಗಳನ್ನು ಮಟ್ಟಹಾಕ್ತಿವಿ ಎಂದ ಶಶಿಕುಮಾರ್‌ +ಹುಬ್ಬಳ್ಳಿ,ಜು.9-ಹುಬ್ಬಳ್ಳಿ- ಧಾರವಾಡ ಅವಳಿನಗರ ಹೊರ ಭಾಗಗಳಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ದಂಧೆ ಮೀತಿ ಮೀರಿದ್ದು , ಮಟ್ಟ ಹಾಕಲು ಮುಂದಾಗಿದ್ದೇವೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್‌‍ ಕಮೀಷನರ್‌ ಶಶಿಕುಮಾರ್‌ ಹೇಳಿದರು. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಮಾದಕ ವಸ್ತುಗಳ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡ ಲಾಗುತ್ತಿದೆ. ಈಗ 180ಕ್ಕೂ ಹೆಚ್ಚು ಆರೋಪಗಳಿಗೆ ಪೇರಡ್‌ ಮೂಲಕ ಎಚ್ಚರಿಕೆ ನೀಡಲಾಗಿದೆ ಎಂದರು. +ಎನ್‌ಡಿಪಿಎಸ್‌‍ ಕಾಯ್ದೆ ಅಡಿ ಆರೋಪಿಗಳಾಗಿದ್ದಾರೆ. ಅಂಥವರನ್ನು ಕೇವಲ ಸುಮನೆ ಅವರನ್ನು ಕರೆಸಿ ಕಳಿಸುವುದಿಲ್ಲ. ಯಾರಾರು ಇಂತಹ ಕೃತ್ಯಗಳಲ್ಲಿ ತೊಡಗಿದ್ದಾರೋ ಅಂಥವರ ವಿರ್ದುದ ರೌಡಿಶೀಟರ್‌ ತೆರೆಯಲಾ ಗುವುದು ಎಂದು ಹೇಳಿದರು. +ಎನ್‌ಡಿಪಿಎಸ್‌‍ನಲ್ಲಿ ಭಾಗಿ ಯಾದವರು ಅವರಿಗೆ ಬೆಂಬಲಕ್ಕೆ ನಿಂತವರು, ಸಹಾಯ ಮಾಡುವವರು, ವಾಹನ ಕೊಡುವವರು ಯಾರು ಆರೇಸ್ಡ್‌ ಮಾಡಿದಾಗ ಸಹಾಯ ಮಾಡುವವರು ಲೀಗಲ್‌ ಸಪೋರ್ಟ್‌ ಮಾಡುವವರುವ ಅವರ ಮೇಲೋ ಸಹ ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ಮುಖ್ಯವಾಗಿ ಡಾಕ್ಯುಮೆಂಟ್‌ ಮೆಂಟೆನ್‌ ಮಾಡಲಾಗುತ್ತದೆ ಎಂದು ತಿಳಿಸಿದರು. +ಮುಂಜಾಗ್ರತಾ ಕ್ರಮವಾಗಿ ಪ್ರಕರಣ ದಾಖಲು ಮಾಡಲಾಗು ವುದು. ಎನ್‌ ಡಿಪಿಎಸ್‌‍ ನಲ್ಲಿ ಭಾಗಿಯಾದವರ ಬಿಡುಗಡೆಗಾಗಿ 2 ಲಕ್ಷ ಭದ್ರತಾ ಬಾಂಡ್‌ ಮೇಲೆ ಬಿಡುವ ಸೂಚನೆ ಸಹ ಕೊಡಲಾಗಿದೆ. ಮಾದಕ ವಸ್ತುಗಳ ಹಾಟ್‌್ಸಸ್ಪಾಟ್‌ ಆಗಿದ್ದು ಆ ಏರಿಯಾ ಮೇಲೆ ನಿಗಾ ಇಡಲಾಗಿದೆ. ಡ್ರಗ್‌ ಮಾರಾಟ, ಹೋಲ್‌ಸೇಲ್‌ ಮಾರಾಟ, ಸೇವನೆ ಕುರಿತು ಮಾಹಿತಿ ಕಲೆ ಹಾಕಲಾಗಿದೆ ಎಂದರು. +ನಮ ಸಬ್ಇನ್‌ಸ್ಪೆಕ್ಟರ್‌ ,ಎಸಿಪಿ, ಡಿಸಿಪಿಗಳು, ಪ್ರತಿ ಠಾಣೆಯಿಂದ 10 ಸಿಬ್ಬಂದಿ ತಂಡ ರಚನೆ ಮಾಡಲಾಗಿದ್ದು ಮುತುವರ್ಜಿ ಯಿಂದ ಕಾರ್ಯಾಚರಣೆ ಮಾಡತಾ ಇದ್ದಾರೆ.ಪ್ರತಿ ಪೊಲೀಸ್‌‍ ಠಾಣೆಯಲ್ಲಿ ಶೂನ್ಯ ಅಪರಾಧ ವ್ಯವಸ್ಥೆ ಮಾಡಲು ಪ್ರಯತ್ನ ಮಾಡಲಾಗುತ್ತದೆ. +ಇನ್ನು ಗಾಂಜಾ, ಡ್ರಗ್‌್ಸ ಮೂಲ ಯಾವುದು ಅದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತದೆಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆಯಾವ ಯಾವಾ ಏರಿಯಾಗಳಲ್ಲಿ ಮಾದಕ ವಸ್ತುಗಳ ಮಾರಾಟ ಮಾಡಲಾಗುತ್ತದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ.ಇನ್ನು ಶಾಲಾ ಕಾಲೇಜುಗಳ ಸುತ್ತಲಿನ ಪ್ರದೇಶದಲ್ಲಿ ಸಿಸಿ ಟಿವಿ ಅಳವಡಿಕೆಗೆ ಸೂಚಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. +ಒಂದು ಸಿಸಿ ಟಿವಿ ಇದೆ. ಅಂದರೆ ಅಲ್ಲಿ ಎಷ್ಟೋ ಅಪರಾಧ ಕೃತ್ಯ ತಡೆಯಲು ಸಾಧ್ಯ ಎಂದ ಅವರು, ಯಾವುದೇ ಪ್ರಭಾವಕ್ಕೆ ಒಳಗಾಗುವ ಪ್ರಶ್ನೆಯೇ ಇಲ್ಲ. ಗಾಂಜಾ, ಡ್ರಗ್‌್ಸ ಮಾರಾಟ, ಸೇವೆನೆ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದರು. \ No newline at end of file diff --git a/eesanje/url_46_82_9.txt b/eesanje/url_46_82_9.txt new file mode 100644 index 0000000000000000000000000000000000000000..7cc63fecf60f84096a1008ddd9783ed523104cff --- /dev/null +++ b/eesanje/url_46_82_9.txt @@ -0,0 +1,12 @@ +ಮಹದಾಯಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕ ಸರ್ಕಾರ ನಿಯಮ ಉಲ್ಲಂಘಿಸಿಲ್ಲ : ಪ್ರವಾಹ್‌ ಸಮಿತಿ +ನವದೆಹಲಿ,ಜು.9-ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಗದಗ ಜಿಲ್ಲೆಯ ಸುತ್ತಮುತ್ತಲಿನ ಜಾಗಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹದಾಯಿ ನದಿನೀರು ಹಂಚಿಕೆಯಲ್ಲಿ ಕರ್ನಾಟಕ ಸರ್ಕಾರ ಯಾವುದೇ ರೀತಿಯ ನಿಯಮಗಳನ್ನು ಉಲ್ಲಂಘನೆ ಮಾಡಿಲ್ಲ ಎಂದು ಪ್ರವಾಹ್‌ ಸಮಿತಿ ವರದಿ ನೀಡಿದೆ. +ಕೇಂದ್ರ ಜಲಶಕ್ತಿ ಆಯೋಗದ ಸೂಚನೆ ಮೇರೆಗೆ ಕಳೆದ ಭಾನುವಾರ ಉನ್ನತ ಅಧಿಕಾರಿಗಳ ತಂಡವು ಕರ್ನಾಟಕದ ತೀವ್ರ ವಿರೋಧದ ನಡುವೆಯೂ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕೆಲವು ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿತು.ಮಹದಾಯಿ ನದಿನೀರು ಹಂಚಿಕೆ ಸಂಬಂಧ ಕರ್ನಾಟಕ ಸರ್ಕಾರ ನಿಯಮಗಳನ್ನುಉಲ್ಲಂಘಿಸಿ ಕಾಮಗಾರಿ ಪ್ರಾರಂಭಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಗಂಭೀರ ಆರೋಪ ಮಾಡಿದ್ದರು. +ಹೀಗಾಗಿ ಕೇಂದ್ರದಿಂದ ಉನ್ನತಾಧಿಕಾರಿಗಳ ತಂಡ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿತ್ತು. ಇದೀಗ ಕೇಂದ್ರ ಜಲಶಕ್ತಿ ಇಲಾಖೆಗೆ ನೀಡಿರುವ ವರದಿಯಲ್ಲಿ ಉನ್ನತ ಅಧಿಕಾರಿಗಳ ನೇತೃತ್ವದ ನಿಯೋಗವು ಕರ್ನಾಟಕ ಎಲ್ಲಿಯೂ ಕೂಡ ನಿಯಮಗಳನ್ನು ಉಲ್ಲಂಘಿಸಿಲ್ಲ. ಈ ಯೋಜನೆ ಸಂಬಂಧ ಈವರೆಗೂ ನಡೆದಿರುವ ಕಾಮಗಾರಿಗಳು ನಿಯಮದ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಉನ್ನತ ಅಧಿಕಾರಿಗಳ ನೇತೃತ್ವದ ನಿಯೋಗ ವರದಿ ನೀಡಿರುವುದಾಗಿ ತಿಳಿದುಬಂದಿದೆ. +ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮೊನ್ನೆ ಜುಲೈ 7ರಂದು ಕಳಸಾ-ಬಂಡೂರಿ ಯೋಜನೆಯ ಸ್ಥಳಗಳನ್ನು ಪ್ರವಾಹ್‌ ಸದಸ್ಯರು ಪರಿಶೀಲಿಸಿದರೆ ಕರ್ನಾಟಕವು ಮಲಪ್ರಭಾ ನದಿಗೆ ಅಕ್ರಮವಾಗಿ ನೀರು ಹರಿಸುವುದನ್ನು ಬಹಿರಂಗಪಡಿಸುತ್ತದೆ ಎಂದು ಹೇಳಿಕೆ ನೀಡಿದ್ದರು. +ಪ್ರವಾಹ್‌ ಸದಸ್ಯರು ಭಾನುವಾರ ಕಣಕುಂಬಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೋವಾ ಸರ್ಕಾರವು ಆರೋಪಿಸಿದಂತೆ ಯೋಜನೆಯ ಸ್ಥಳದಲ್ಲಿ ಅವರಿಗೆ ಯಾವುದೇ ಉಲ್ಲಂಘನೆ ಕಂಡುಬಂದಿಲ್ಲ. ಇದರಿಂದ ಗೋವಾ ಮುಖ್ಯಮಂತ್ರಿಗಳ ಹೇಳಿಕೆಗೆ ಹಿನ್ನಡೆಯುಂಟಾಗಿದೆ ಎಂದು ಸರ್ಕಾರದ ಉನ್ನತ ಮೂಲವೊಂದು ತಿಳಿಸಿದೆ. +ಮಹದಾಯಿ ಜಲವಿವಾದ ನ್ಯಾಯಮಂಡಳಿ ಘೋಷಿಸಿದ ತೀರ್ಪು ಉಲ್ಲಂಘನೆಯ ಕುರಿತು ಸೋಮವಾರ ಬೆಂಗಳೂರಿನಲ್ಲಿ ಪ್ರವಾಹ್‌ ಸದಸ್ಯರು ನಡೆಸಿದ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಜುಲೈ 7ರಂದು ಕಣಕುಂಬಿಗೆ ಪ್ರವಾಹ್‌ ಸದಸ್ಯರು ಭೇಟಿ ನೀಡಿದ್ದು ಕರ್ನಾಟಕದ ಉಲ್ಲಂಘನೆಯ ಆರೋಪಗಳನ್ನು ತನಿಖೆ ಮಾಡಲು ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಗೋವಾ ಸರ್ಕಾರ ಆರೋಪಿಸಿದೆ. +ಕಣಕುಂಬಿಯಲ್ಲಿ ಯೋಜನಾ ಸ್ಥಳಗಳನ್ನು ಪರಿಶೀಲಿಸಿದಾಗ ಗೋವಾದ ಇಂಜಿನಿಯರ್‌ಗಳು ಪ್ರವಾಹ್‌ ಸದಸ್ಯರೊಂದಿಗೆ ಇದ್ದರು. ನಿನ್ನೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಕುರಿತು ಪ್ರವಾಹ್‌ ಸದಸ್ಯರು ಚರ್ಚಿಸಿದ್ದಾರೆ. +ಮಹದಾಯಿ ನದಿಯಿಂದ ನೀರನ್ನು ಹರಿಸುವ ನಿರೀಕ್ಷೆಯಿರುವ ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಪಾರದರ್ಶಕತೆ ಕಾಯ್ದುಕೊಂಡಿರುವುದಕ್ಕೆ ಗೋವಾದ ಎಂಜಿನಿಯರ್‌ಗಳು ಸಂತೋಷಪಟ್ಟಿದ್ದಾರೆ. ಯೋಜನಾ ಸ್ಥಳಗಳಲ್ಲಿ ಯಾವುದೇ ಅಕ್ರಮ ಪತ್ತೆಯಾಗಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. +ಕರ್ನಾಟಕ ಸರ್ಕಾರವು ನ್ಯಾಯಾಲಯ ಮತ್ತು ಮಹದಾಯಿ ಜಲ ವಿವಾದ ನ್ಯಾಯಮಂಡಳಿಯ ಎಲ್ಲಾ ಆದೇಶಗಳು ಮತ್ತು ನಿರ್ದೇಶನಗಳಿಗೆ ಬದ್ಧವಾಗಿದೆ. ಹೀಗಾಗಿ ಯೋಜನಾ ಸ್ಥಳದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ನೀರು ತಿರುಗಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸರ್ಕಾರದ ಮೂಲಗಳು ತಿಳಿಸಿವೆ. +ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಸರ್ಕಾರದ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಯ ವಿವರವಾದ ಯೋಜನಾ ವರದಿ ಕುರಿತು ಚರ್ಚಿಸಲಾಯಿತು. ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರದಿಂದ ಎಲ್ಲಾ ಅನುಮೋದನೆಗಳನ್ನು ಪಡೆಯುವವರೆಗೆ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಮಲಪ್ರಭಾಕ್ಕೆ ಮಹದಾಯಿ ನೀರು ಹರಿಸುವುದನ್ನು ತಡೆಯಲು ಗೋವಾ ಸರ್ಕಾರ ಮಾರ್ಗೋಪಾಯಗಳನ್ನು ಅನ್ವೇಷಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ಕೇಂದ್ರದಿಂದ ಅರಣ್ಯ ಮತ್ತು ವನ್ಯಜೀವಿ ಅನುಮತಿ ಸೇರಿದಂತೆ ಎಲ್ಲಾ ಅಡೆತಡೆಗಳನ್ನು ನಿವಾರಿಸುವ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಬದ್ಧವಾಗಿದೆ. \ No newline at end of file diff --git a/eesanje/url_46_83_1.txt b/eesanje/url_46_83_1.txt new file mode 100644 index 0000000000000000000000000000000000000000..cd2e362e3634fde8a2fe99fc75e8a41b1af6a893 --- /dev/null +++ b/eesanje/url_46_83_1.txt @@ -0,0 +1,7 @@ +ಜೈಲೂಟ ಸೇರುತ್ತಿಲ್ಲ, ಮನೆಯೂಟಕ್ಕೆ ಅನುಮತಿ ಕೋರಿ ನಟ ದರ್ಶನ್‌ ರಿಟ್‌ ಅರ್ಜಿ +ಬೆಂಗಳೂರು,ಜು.9-ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಹಾಗೂ ಚಿತ್ರನಟ ದರ್ಶನ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. +ನನಗೆ ಜೈಲಿನ ಊಟ ಸೇವಿಸಿದರೆ ಅಲರ್ಜಿ ಉಂಟಾಗುತ್ತಿದೆ. ಕಳೆದ ವಾರದಿಂದ ನನಗೆ ಪರಪ್ಪನ ಅಗ್ರಹಾರದಲ್ಲಿ ಜೈಲಿನ ಅಧಿಕಾರಿಗಳು ನೀಡುತ್ತಿರುವ ಊಟ ಸೇರುತ್ತಿಲ್ಲ. ಹೀಗಾಗಿ ಮನೆಯೂಟ ನೀಡಲು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿಕೊಂಡಿದ್ದಾರೆ. +ನಾನು ಜೈಲಿನ ಊಟ ಸರಿಯಿಲ್ಲ ಎಂದು ಇಲ್ಲವೇ ಆ ಊಟಕ್ಕೆ ಅಗೌರವ ತೋರಿಸುತ್ತಿಲ್ಲ. ನನ್ನ ದೇಹಕ್ಕೆ ಒಗ್ಗುತ್ತಿಲ್ಲವಾದ್ದರಿಂದ ವೈದ್ಯರ ಸೂಚನೆ ಮೇರೆಗೆ ಮನೆಯೂಟ ಮಾಡಬೇಕು. ನ್ಯಾಯಾಲಯ ನನ್ನ ಮನವಿಯನ್ನು ಪರಿಗಣಿಸಬೇಕೆಂದು ರಿಟ್‌ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. +ಊಟದ ಜೊತೆಗೆ ಮನೆಯಿಂದ ಹಾಸಿಗೆ, ದಿಂಬು, ಬ್ರೆಷ್‌, ಟೂನ್‌ಪೇಸ್ಟ್‌, ಸೋಪು ಹಾಗೂ ಬಟ್ಟೆಗಳನ್ನು ಬಳಸಲು ಅವಕಾಶ ನೀಡಬೇಕು, ನ್ಯಾಯಾಲಯವು ನನ್ನ ಮನವಿಯನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ.ಇದೀಗ ನ್ಯಾಯಾಲಯ ದರ್ಶನ್‌ ಅವರ ಮನವಿಯನ್ನು ಪರಿಗಣಿಸುತ್ತದೆಯೇ ಎಂಬುದು ಕುತೂಹಲಕಾರಿ. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ದರ್ಶನ್‌ ಸೇರಿದಂತೆ ಒಟ್ಟು 17 ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. +ರೇಣುಕಾಸ್ವಾಮಿ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ವಿವಾದದ ಬಿರುಗಾಳಿಯನ್ನೇ ಸೃಷ್ಟಿಸಿತು. ಆಪ್ತ ಗೆಳೆತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಇನ್‌ಸ್ಟ್ರಾಗ್ರಾಮ್‌ನಲ್ಲಿ ಅಶ್ಲೀಲ ಮೆಸೇಜ್‌ ಮಾಡಿದ ಎಂಬ ಕಾರಣಕ್ಕಾಗಿ ದರ್ಶನ್‌ ಹಾಗು ಇತರೆ ಆರೋಪಿಗಳು ಬರ್ಭರವಾಗಿ ಕೊಲೆ ಮಾಡಿ ಮೃತದೇಹವನ್ನು ಕಾಮಾಕ್ಷಿಪಾಳ್ಯದ ರಾಜಕಾಲುವೆ ಬಳಿ ಇರುವ ಮೋರಿಗೆ ಎಸೆದಿದ್ದರು. \ No newline at end of file diff --git a/eesanje/url_46_83_10.txt b/eesanje/url_46_83_10.txt new file mode 100644 index 0000000000000000000000000000000000000000..a7321ac695a54aac199ca616cd760429f5e8e241 --- /dev/null +++ b/eesanje/url_46_83_10.txt @@ -0,0 +1,9 @@ +ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕನ ಆಯ್ಕೆಗೆ ತೆರೆ ಮರೆಯ ಕಸರತ್ತು +ಬೆಂಗಳೂರು,ಜು.8-ಇನ್ನೊಂದು ವಾರದಲ್ಲಿ ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ, ವಿಧಾನಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕನನ್ನು ಬಿಜೆಪಿ ಆಯ್ಕೆ ಮಾಡಬೇಕಿದ್ದು, ಆಕಾಂಕ್ಷಿಗಳ ಅಂತಿಮ ಹಂತದ ತೆರೆಮೆರೆಯ ಕಸರತ್ತು ಜೋರಾಗಿದೆ. +ವಿಪಕ್ಷದ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಇಬ್ಬರ ಹೆಸರು ಕೇಳಿ ಬರುತ್ತಿತ್ತು. ಈಗ, ಈ ಪಟ್ಟಿಗೆ ಅಚ್ಚರಿಯಾಗಿ ಮತ್ತೋರ್ವ ಹಿರಿಯ ನಾಯಕನ ಹೆಸರು ಸೇರ್ಪಡೆಯಾಗಿದೆ. +ವಿಧಾನಪರಿಷತ್‌ ವಿಪಕ್ಷ ನಾಯಕ ರೇಸ್‌‍ನಲ್ಲಿ ಸಿಟಿ ರವಿ, ಎನ್‌.ರವಿಕುಮಾರ್‌ ಸದನದಲ್ಲಿ ಹಿಂದುತ್ವ ಫೈರ್‌ ಬ್ಯಾಂಡ್‌ ಎದುರಿಸೋದು ಕೈಗೆ ಸವಾಲು!ಆದರೆ ಬಿಜೆಪಿ ವರಿಷ್ಠರು ವಿಪಕ್ಷದ ನಾಯಕನ ಆಯ್ಕೆ ಮಾಡುವ ಮುನ್ನವೇ, ಗೂಗಲ್‌ ತನ್ನ ಕರ್ನಾಟಕ ವಿಧಾನ ಪರಿಷತ್‌ ಪೇಜ್‌ ನಲ್ಲಿ ಛಲವಾದಿ ನಾರಾಯಣಸ್ವಾಮಿಯವರು ವಿಪಕ್ಷದ ನಾಯಕ ಎಂದು ಅಪ್ಡೇಟ್‌ ಮಾಡಿದೆ. ಅಲ್ಲದೇ, ಜೂನ್‌ 29, 2024ರಿಂದ ಅನ್ವಯವಾಗುವಂತೆ ವಿಪಕ್ಷದ ನಾಯಕ ಎಂದು ತನ್ನ ಪೇಜಿನಲ್ಲಿ ಹಾಕಿಕೊಂಡು ಅಚ್ಚರಿಯನ್ನು ಮೂಡಿಸಿದೆ. +ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಎನ್‌‍. ರವಿ ಕುಮಾರ್‌ ಅವರನ್ನು ಮರು ಆಯ್ಕೆ ಮಾಡಿತ್ತು. ಇದರ ಜೊತೆಗೆ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋಲುಂಡಿದ್ದ ಸಿ.ಟಿ.ರವಿ ಅವರನ್ನು ಮತ್ತು ಮಾರುತಿ ರಾವ್‌ ಮುಳೆ ಅವರನ್ನು ಮೇಲ್ಮನೆಗೆ ಕಳುಹಿಸಿತ್ತು.ವಿಧಾನಪರಿಷತ್ತಿನಲ್ಲಿ ವಿಪಕ್ಷದ ನಾಯಕರಾಗಿ ಒಂದೋ ಎನ್‌.ರವಿಕುಮಾರ್‌ ಇಲ್ಲವೇ, ಸಿ.ಟಿ.ರವಿ ಆಯ್ಕೆಯಾಗಬಹುದು ಎಂದೇ ಲೆಕ್ಕಾಚಾರವಾಗಿತ್ತು. ಆದರೆ ಈಗ ಛಲವಾದಿ ನಾರಾಯಣಸ್ವಾಮಿಯವರ ಹೆಸರು ಮುನ್ನಲೆಗೆ ಬಂದಿದೆ. ಹೀಗಾಗಿ, ವಿಪಕ್ಷದ ನಾಯಕನ ಸ್ಥಾನಕ್ಕೆ ಮೂವರ ನಡುವೆ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ. +ಸಾಮಾಜಿಕ ಅಥವಾ ಪ್ರಾದೇಶಿಕ ನ್ಯಾಯಕ್ಕೆ ಬಿಜೆಪಿ ಹೈಕಮಾಂಡ್‌ ಪ್ರಾಮುಖ್ಯತೆಯನ್ನು ಕೊಟ್ಟಿದ್ದೇ ಆದಲ್ಲಿ, ರಾಜ್ಯ ಬಿಜೆಪಿ ನಾಯಕರ ಪ್ರಯತ್ನ ಕೈಗೂಡುವ ಸಾಧ್ಯತೆ ಕಮ್ಮಿ. ಇನ್ನೊಂದು ಮೂಲಗಳ ಪ್ರಕಾರ, ಅಧಿವೇಶನಕ್ಕೆ ಮುನ್ನ ವಿಪಕ್ಷದ ನಾಯಕನ ಸ್ಥಾನ ಭರ್ತಿ ಮಾಡುವ ಸಾಧ್ಯತೆಯೂ ಅನುಮಾನ ಎಂದೂ ಹೇಳಲಾಗುತ್ತಿದೆ.ವಿಪಕ್ಷದ ನಾಯಕನ ಸ್ಥಾನ ಖಾಲಿ ಬಿಟ್ಟು ವಿಧಾನ ಮಂಡಲದ ಕಾರ್ಯಕಲಾಪವನ್ನು ಬಿಜೆಪಿ ಎದುರಿಸಿದ ಉದಾಹರಣೆ ಹಿಂದೆಯೂ ಇದೆ. +ಕಳೆದ ವರ್ಷದ ಮೇ ತಿಂಗಳಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಜುಲೈನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಬಿಜೆಪಿ ವರಿಷ್ಠರು ವಿಧಾನಸಭೆಗೆ ತನ್ನ ನಾಯಕನನ್ನು ಆಯ್ಕೆಯೇ ಮಾಡಿರಲಿಲ್ಲ. +ಕಳೆದ ವರ್ಷದ ಇಡೀ ಜುಲೈ ಅಧಿವೇಶನ ಅಧಿಕೃತ ವಿಪಕ್ಷದ ನಾಯಕನ ಆಯ್ಕೆಯಾಗದೇ ನಡೆದಿತ್ತು. ಕಾಂಗ್ರೆಸ್‌‍ ಇದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಇದಾದ ನಂತರ, ಡಿಸೆಂಬರ್‌ ಬೆಳಗಾವಿಯ ಚಳಿಗಾಲದ ಅಧಿವೇಶನದ ಮುನ್ನ ನವೆಂಬರ್‌ ತಿಂಗಳಲ್ಲಿ ಆರ್‌.ಅಶೋಕ್‌ ಅವರನ್ನು ಆಯ್ಕೆ ಮಾಡಿತ್ತು. +ಸಂಘಟನೆಗೆ ದುಡಿದವರಿಗೆ ಆದ್ಯತೆಯನ್ನು ಕೊಡುವ ಪರಿಪಾಠವನ್ನು ಬಿಜೆಪಿ ಮುಂದುವರಿಸಿಕೊಂಡು ಹೋಗುವ ಸಾಧ್ಯತೆಯಿದೆ. ತಮ್ಮ ಪಕ್ಷ ನಿಷ್ಠೆಯ ಹಿನ್ನಲೆಯಲ್ಲಿ ಛಲವಾದಿ ನಾರಾಯಣಸ್ವಾಮಿಯವರನ್ನು ಬಿಜೆಪಿ ಮೇಲ್ಮನೆಗೆ ಆಯ್ಕೆ ಮಾಡಿತ್ತು.ಸಿ.ಟಿ.ರವಿ ಮತ್ತು ರವಿ ಕುಮಾರ್‌ ನಡುವೆ ಛಲವಾದಿ ಹೆಸರು ಮುನ್ನಲೆಗೆ ಬಂದಿರುವುದು ಬಿಜೆಪಿಯ ಕೆಲವರು ನಾಯಕರಿಗೇ ಆಶ್ಚರ್ಯವನ್ನು ತಂದಿದೆ. 75 ಸದಸ್ಯ ಬಲದ ವಿಧಾನ ಪರಿಷತ್‌ ನಲ್ಲಿ ಕಾಂಗ್ರೆಸ್‌‍ ಇತ್ತೀಚೆಗೆ ಆಯ್ಕೆಯಾದವರನ್ನೂ ಸೇರಿ 36, ಬಿಜೆಪಿ 29, ಜೆಡಿಎಸ್‌‍ 8, ಪಕ್ಷೇತರ 1 ಸದಸ್ಯರಿದ್ದಾರೆ. ಒಂದು ಸ್ಥಾನ ಇನ್ನೂ ಖಾಲಿಯಿದೆ. \ No newline at end of file diff --git a/eesanje/url_46_83_11.txt b/eesanje/url_46_83_11.txt new file mode 100644 index 0000000000000000000000000000000000000000..1135ac93af8d5af436471dd4a087e0f8f0cc69f3 --- /dev/null +++ b/eesanje/url_46_83_11.txt @@ -0,0 +1,5 @@ +ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಬಿಟ್ಟು ಕಿಂಚಿತ್ತೂ ಜನಪರ ಕೆಲಸ ಮಾಡಿಲ್ಲ : ವಿಜಯೇಂದ್ರ +ಬೆಂಗಳೂರು,ಜು.8-ಕೇವಲ ಮತ ಬ್ಯಾಂಕ್ ರಾಜಕಾರಣವನ್ನು ಹೊರತುಪಡಿಸಿ ಕಾಂಗ್ರೆಸ್ ಸರ್ಕಾರ ಯಾವುದೇ ಜನಪರ ಕಾರ್ಯಗಳಿಗೂ ಕಿಂಚಿತ್ತು ಗಮನಹರಿಸಿಲ್ಲ. ಬೆಳೆ ಪರಿಹಾರದಿಂದ ವಂಚಿತರಾಗಿರುವ ರೈತರ ನೆರವಿಗೆ ಈಗಲಾದರೂ ಬೆಳೆ ಪರಿಹಾರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಒತ್ತಾಯಿಸಿದ್ದಾರೆ. +ಈ ಕುರಿತು ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಷ್ಟದಲ್ಲಿರುವ ರೈತರ ಗೋಳು ಕೇಳುವವರೇ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷದ ಅವಧಿಯಿಂದಲೂ ರೈತರು ಒಂದಲ್ಲ ಒಂದು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಕಾಂಗ್ರೆಸ್ ಕಾಳಜಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಕಳೆದ ಬಾರಿಯ ಮುಂಗಾರು ಹಾಗೂ ಹಿಂಗಾರು ವಿಫಲತೆಯಿಂದ ನೊಂದಿರುವ ರೈತರು ಬಿಡಿಗಾಸು ಬರ ಪರಿಹಾರ ನೀಡಿ ಕೈತೊಳೆದುಕೊಂಡು ರೈತದ್ವೇಷಿ ಸರ್ಕಾರವೆಂಬ ಅಪಕೀರ್ತಿ ಅಂಟಿಸಿಕೊಂಡಿದೆ ಎಂದು ದೂರಿದ್ದಾರೆ. +ಸಂಕಷ್ಟದ ಸಮಯದಲ್ಲಾದರೂ ಸರ್ಕಾರದ ಬೆಳೆ ಪರಿಹಾರವೂ ರೈತನ ಖಾತೆಗೆ ಜಮೆಯಾಗಿಲ್ಲ, ಮಾನ್ಯ ಅವರು ನೀಡುತ್ತಿದ್ದ ಕಿಸಾನ್ ಸಮಾನ್ ಯೋಜನೆ ರಾಜ್ಯದ ಪಾಲಿನ 4000 ರೂ. ಗಳನ್ನೂ ನಿಲ್ಲಿಸಿ ಅನ್ನದಾತರಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_46_83_12.txt b/eesanje/url_46_83_12.txt new file mode 100644 index 0000000000000000000000000000000000000000..4a80d11f624aad54841ffd1e5c971a9f1ce593eb --- /dev/null +++ b/eesanje/url_46_83_12.txt @@ -0,0 +1,5 @@ +ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ +ಬೆಂಗಳೂರು, ಜೂ.8-ನೈರುತ್ಯ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಒಳನಾಡಿನಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. +ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಭಾಗಶಃ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.ಕೇರಳದಿಂದ ಮಹಾರಾಷ್ಟ್ರದವರೆಗೆ ಮೇಲುಬ್ಬರ ಉಂಟಾಗಿದ್ದು, ಬಂಗಾಳ ಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕೇರಳ, ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಎಂಟತ್ತು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಅದೇ ರೀತಿ ಪ್ರಮುಖ ಜಲಾಶಯಗಳಲ್ಲೂ ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚಾಗುತ್ತಿದೆ.ಭಾರೀ ಮಳೆಯಾಗುತ್ತಿರುವ ಕರಾವಳಿ ಹಾಗೂ ಮಲೆನಾಡಿನಲ್ಲಿ ಭೂ ಕುಸಿತ, ಮರ ಹಾಗೂ ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ನಿರಂತರ ಮಳೆಯಿಂದ ಜನಜೀವನವೂ ಅಸ್ತವ್ಯಸ್ತಗೊಂಡಿದೆ. +ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ರೈತರು ಸಹ ಬಿತ್ತನೆಗೆ ಭೂಮಿ ಹದ ಮಾಡತೊಡಗಿದ್ದಾರೆ. ಜೂನ್‌ ತಿಂಗಳಲ್ಲೂ ಉತ್ತಮ ಮಳೆಯಾಗಿತ್ತು. ಹೀಗಾಗಿ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ಬಿತ್ತನೆಗೆ ರೈತರು ಸಿದ್ಧತೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_46_83_2.txt b/eesanje/url_46_83_2.txt new file mode 100644 index 0000000000000000000000000000000000000000..bb646739a57db9fbe659e9e4352e0f8be3ec16f6 --- /dev/null +++ b/eesanje/url_46_83_2.txt @@ -0,0 +1,5 @@ +ಕಾರಿನ ಗಾಜು ಒಡೆದು 10 ಲಕ್ಷ ರೂ. ದೋಚಿ ಪರಾರಿ +ಗೌರಿಬಿದನೂರು, ಜು.9– ಕಾರಿನ ಗಾಜು ಒಡೆದು 10 ಲಕ್ಷ ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕು ಕಚೇರಿ ಸಮೀಪ ನಡೆದಿದೆ. ಕೊರಟಗೆರೆ ತಾಲೂಕಿನ ತೊಗರಿಘಟ್ಟದ ವಾಸಿ ನಾರಾಯಣಪ್ಪ (72) ಹಣ ಕಳೆದುಕೊಂಡ ವ್ಯಕ್ತಿ. +ಇತ್ತೀಚೆಗೆ ಗೌರಿಬಿದನೂರು ತಾಲೂಕಿನ ಕಲ್ಲೂಡಿ ಗ್ರಾಮದ ಬಳಿ ಜಮೀನು ಖರೀದಿ ಮಾಡಿ ಅದನ್ನು ಉಪನೋಂದಣಿ ಕಚೇರಿಯಲ್ಲಿ ತಮ್ಮ ಹೆಸರಿಗೆ ನೋಂದಾಯಿಸಿಕೊಳ್ಳಲು ಬಂದಿದ್ದಾರೆ. +ಜಮೀನು ಮಾಲೀಕರಿಗೆ ಹಣ ಕೊಡಲು ಕಾರಿನ ಹಿಂಬದಿಯಲ್ಲಿ 35 ಲಕ್ಷ ಬ್ಯಾಗ್‌ವೊಂದರಲ್ಲಿ ಇಟ್ಟಿದ್ದು, ಕಾರನ್ನು ತಾಲೂಕು ಕಚೇರಿ ಮುಂದೆ ಇರುವ ಹೊಟೇಲ್‌ ಬಳಿ ನಿಲ್ಲಿಸಿ ನೋಂದಣಿ ಕಚೇರಿಗೆ ಹೋಗಿ ಬರುವಷ್ಟರಲ್ಲಿ ಯಾರೋ ಹೊಂಚು ಹಾಕಿ ಕಾರಿನ ಹಿಂಬದಿಯ ಗಾಜು ಒಡೆದು 10 ಲಕ್ಷ ರೂ.ಗಳ ಬಂಡಲ್‌ ಮಾತ್ರ ತೆಗೆದುಕೊಂಡು ಪರಾರಿಯಾಗಿದ್ದಾರೆ. +ಈ ಸಂಬಂಧ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ನಾರಾಯಣಪ್ಪ ದೂರು ದಾಖಲಿಸಿದ್ದು, ಸ್ಥಳಕ್ಕೆ ಎಸ್‌ಐಗಳಾದ ರಮೇಶ್‌ ಗುಗ್ಗರಿ, ಗೋಪಾಲ್‌ ಮತ್ತು ಸಿಬ್ಬಂದಿ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. \ No newline at end of file diff --git a/eesanje/url_46_83_3.txt b/eesanje/url_46_83_3.txt new file mode 100644 index 0000000000000000000000000000000000000000..98d7dd732f97efa180d51c1a74e1cc713a00738d --- /dev/null +++ b/eesanje/url_46_83_3.txt @@ -0,0 +1,5 @@ +ಸೇತುವೆ ಮೇಲಿಂದ ಕೆಳಗೆ ಬಿದ್ದ ಲಾರಿ, ತಪ್ಪಿದ ಭಾರೀ ಅನಾಹುತ +ಗೌರಿಬಿದನೂರು, ಜು.9-ನಗರದ ಮಧುಗಿರಿ ರಸ್ತೆಯ ರೈಲ್ವೆ ಮೇಲ್ಸೇತುವೆಯಿಂದ ಸರಕು ಸಾಗಾಣಿಕೆ ಬೃಹತ್‌ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಕಾರೊಂದು ಜಖಂ ಅಗಿರುವ ಘಟನೆ ಜರುಗಿದೆ.ಮಧುಗಿರಿ ರಸ್ತೆ ಕಡೆಯಿಂದ ರೈಲ್ವೆ ಮೇಲ್ಸೇತುವೆ ಮೇಲೆ ಗೌರಿಬಿದನೂರು ಕಡೆಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ 25 ಅಡಿಗಳ ಕೆಳಕ್ಕೆ ಬಿದ್ದರೂ ಚಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಮಧುಗಿರಿ ರಸ್ತೆ ಕಡೆಯಿಂದ ಬರುತ್ತಿರುವಾಗ ಬೆಸ್ಕಾಂ ಕಚೇರಿ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದು ಲಾರಿ ನಿಲ್ಲಿಸದೆ ಅತಿವೇಗವಾಗಿ ಚಲಾಯಿಸಿಕೊಂಡು ರೈಲ್ವೆ ಮೇಲ್ಸೇತುವೆ ಮೇಲೆ ಬರುವ ವೇಳೆ ನಿಯಂತ್ರಣ ಕಳೆದುಕೊಂಡು ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಸೇತುವೆ ಮೇಲಿಂದ ಕೆಳಗೆ ಬಿದ್ದಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡು ಲಾರಿಯಲ್ಲೇ ಸಿಲುಕಿಕೊಂಡಿದ್ದು, ಸ್ಥಳೀಯರು ಹರಸಾಹಸ ಪಟ್ಟು ಆತನನ್ನು ಹೊರತೆಗೆದು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. +ತಪ್ಪಿದ ಭಾರೀ ಅವಘಡ: ಲಾರಿ ಬಿದ್ದಿರುವ ರಸ್ತೆಯ ಸಮೀಪದಲ್ಲೇ ರೈಲ್ವೆ ನಿಲ್ದಾಣವಿದ್ದು, ಪ್ರತಿನಿತ್ಯ ಬೆಂಗಳೂರು-ಹಿಂದೂಪುರ ಪ್ಯಾಸೆಂಜರ್‌ ರೈಲಿನಲ್ಲಿ ಸಾವಿರಾರು ಮಂದಿ ಪ್ರಯಾಣಿಕರು ಇದೇ ರಸ್ತೆಯಲ್ಲಿ ಹೋಗುತ್ತಾರೆ. ಅದೃಷ್ಟವಶಾತ್‌ ಪ್ಯಾಸೆಂಜರ್‌ ರೈಲು ಬಂದು ಹೋದ ನಂತರ ಈ ಅವಘಡ ಸಂಭವಿಸಿದೆ. +ರೈಲು ಬಂದ ವೇಳೆ ಲಾರಿ ಬಿದ್ದದ್ದರೆ ಆಗುತ್ತಿದ್ದ ಸಾವು-ನೋವಿನ ಸಂಖ್ಯೆ ಊಹಿಸಲೂ ಅಸಾಧ್ಯವಾಗಿರುತ್ತಿತ್ತು. ಈ ವಿಷಯ ತಿಳಿದು ರೈಲ್ವೆ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್‌, ಎಸ್‌ಐ ಗೋಪಾಲ್‌ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. \ No newline at end of file diff --git a/eesanje/url_46_83_4.txt b/eesanje/url_46_83_4.txt new file mode 100644 index 0000000000000000000000000000000000000000..be39cff657601ffaea238c7f2ccd0a14b66dd28d --- /dev/null +++ b/eesanje/url_46_83_4.txt @@ -0,0 +1,9 @@ +ಡೆಂಘೀ ಕುರಿತು ಬಿಜೆಪಿಯಿಂದ ಅಪಪ್ರಚಾರ : ಸಚಿವ ರಾಮಲಿಂಗಾರೆಡ್ಡಿ ಕಿಡಿ +ಬೆಂಗಳೂರು,ಜು.9-ಡೆಂಘೀ ವಿಚಾರದಲ್ಲಿ ವಿರೋಧಪಕ್ಷ ಬಿಜೆಪಿ ಅನಗತ್ಯವಾಗಿ ಅಪಪ್ರಚಾರ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಕ್ಷೇಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷವೂ ಮಳೆಗಾಲದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತವೆ. ಬಿಬಿಎಂಪಿ ಆಯುಕ್ತರು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದು, ವೈದ್ಯಕೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. +ನೀರು ನಿಂತು ಸೊಳ್ಳೆ ಉತ್ಪತ್ತಿಯಾಗದಂತೆಯೂ ಎಚ್ಚರಿಕೆ ವಹಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಈಗಾಗಲೇ ಹಲವಾರು ಸಭೆಗಳನ್ನು ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಗಳನ್ನು ನಡೆಸಿದ್ದಾರೆ. ಡೆಂಘೀ ನಿಯಂತ್ರಣದ ಜೊತೆಗೆ ಸಾವಿನ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು. +ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿಯವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಬದಲಾಗಿ ರಾಜ್ಯಸರ್ಕಾರದ ಬೇಡಿಕೆಗನುಗುಣವಾಗಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲಿ, ಅದಕ್ಕೆ ಪ್ರತಿಯಾಗಿ ಹಣ ಪಾವತಿಸಲು ತಮ ಬಳಿ ಹಣ ಇದೆಯೋ, ಇಲ್ಲವೋ ಎಂಬುದು ಅನಂತರ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು. +ಲೋಕಸಭಾ ಚುನಾವಣೆಗೂ ಮುನ್ನ ಪ್ರತಿ ಕೆ.ಜಿ.ಗೆ 29 ರೂ.ಗಳಂತೆ ಭಾರತ್‌ ಅಕ್ಕಿ ಯೋಜನೆಯನ್ನು ಜಾರಿಗೊಳಿಸಿದ್ದರು. ಮತದಾನ ಮುಗಿಯುತ್ತಿದ್ದಂತೆ ಯೋಜನೆ ಸ್ಥಗಿತಗೊಳಿಸಿದ್ದಾರೆ. ಇದರ ಬಗ್ಗೆ ಕೇಂದ್ರ ಸಚಿವರು ಮಾತನಾಡಲಿ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ರಾಜ್ಯಸರ್ಕಾರದ ವಿರುದ್ಧ ಉಡಾಫೆಯ ಹೇಳಿಕೆ ನೀಡುವುದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. +ಉತ್ತರಕುಮಾರನ ಪೌರುಷ ಒಲೆಯ ಮುಂದೆ ಎನ್ನುವಂತೆ ಬಿಜೆಪಿ ನಾಯಕರು ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ. ಅಕ್ಕಿಯನ್ನು ಮೊದಲು ಮಂಜೂರು ಮಾಡಿ ಅನಂತರ ಹಣ ಕೊಡದೇ ಇದ್ದರೆ ಮಾತನಾಡಲಿ ಎಂದು ಸವಾಲು ಹಾಕಿದರು. +ಚನ್ನಪಟ್ಟಣ ವಿಧಾನಸಭಾ ಚುನಾವಣೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಚನ್ನಪಟ್ಟಣ ಅಷ್ಟೇ ಅಲ್ಲ, ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮಾಯಿ ಅವರ ಶಿಗ್ಗಾವಿ ಕ್ಷೇತ್ರ ಮತ್ತು ಬಳ್ಳಾರಿಯ ಸೊಲ್ಲೂರು ಕ್ಷೇತ್ರಗಳ ಉಪಚುನಾವಣೆ ಬಗ್ಗೆಯೂ ಚರ್ಚೆಯಾಗಲಿದೆ ಎಂದರು.ಚನ್ನಪಟ್ಟಣದಲ್ಲಿ ಡಿ.ಕೆ.ಶಿವಕುಮಾರ್‌ ಸ್ಪರ್ಧೆ ಮಾಡುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರು ಯಾವ ರಣತಂತ್ರಗಳನ್ನು ಅನುಸರಿಸುತ್ತಿದ್ದಾರೋ ಕಾದು ನೋಡಬೇಕಿದೆ ಎಂದು ಹೇಳಿದರು. +ರಾಮನಗರ ಜಿಲ್ಲೆಯ ಹೆಸರು ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಈ ಹಿಂದೆ ರಾಮನಗರವು ಬೆಂಗಳೂರು ಜಿಲ್ಲೆಯ ವ್ಯಾಪ್ತಿಯಲ್ಲಿತ್ತು. ಆ ಪ್ರದೇಶವೆಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ 12 ಗ್ರಾಮಾಂತರ ಕ್ಷೇತ್ರಗಳಿದ್ದವು. ರಾಮನಗರವೂ ಸೇರಿದಂತೆ ಹಲವಾರು ಪ್ರದೇಶಗಳು ಬೆಂಗಳೂರಿನ ಭೂಭಾಗಗಳಾಗಿದ್ದವು ಎಂದರು. +ಬಿಬಿಎಂಪಿ ಪುನರ್‌ರಚನೆಯ ವರದಿ ಸಲ್ಲಿಕೆಯ ಕುರಿತು ಚರ್ಚೆಗಳಾಗಿವೆ. ಸಂಬಂಧಪಟ್ಟ ಸಚಿವರು ಇದಕ್ಕೆ ಉತ್ತರ ನೀಡುತ್ತಾರೆ ಎಂದು ಜಾರಿಕೊಂಡರು. \ No newline at end of file diff --git a/eesanje/url_46_83_5.txt b/eesanje/url_46_83_5.txt new file mode 100644 index 0000000000000000000000000000000000000000..d2c280f9952aa1c5788d0d1376fe0a6c05e98659 --- /dev/null +++ b/eesanje/url_46_83_5.txt @@ -0,0 +1,12 @@ +ವರುಣಾರ್ಭಟಕ್ಕೆ ನಲುಗಿದ ಕರಾವಳಿ ಜಿಲ್ಲೆಗಳು, ಜನರ ಬದುಕು ದುಸ್ತರ +ಉಡುಪಿ/ಉತ್ತರಕನ್ನಡ/ಬೆಳಗಾವಿ,ಜು.9-ಮಂಗಳೂರು, ಉಡುಪಿ, ಬೆಳಗಾವಿ, ಉತ್ತರಕನ್ನಡ, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ವರುಣನ ಆರ್ಭಟಕ್ಕೆ ನದಿ, ಜಲಾಶಯಗಳು, ಹಳ್ಳಕೊಳ್ಳ ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡಿವೆ. ರಸ್ತೆಗಳು ನೀರು ತುಂಬಿ ಸಂಚಾರಕ್ಕೆ ಅಡಚಣೆಯಾಗಿದೆ. ಮನೆಗಳಿಗೆ ನೀರು ನುಗ್ಗಿ ಜನ ಜಾಗರಣೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. +ಉತ್ತರ ಕನ್ನಡ, ಉಡುಪಿ ಸೇರಿದಂತೆ ಜಿಲ್ಲೆಗಳ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ತಗ್ಗುಪ್ರದೇಶಗಳಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ ಪರಿಣಾಮ ನೂರಾರು ಮನೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. +ಪ್ರವಾಹಪೀಡಿತ ಪ್ರದೇಶಗಳಲ್ಲಿದ್ದ ಜನರನ್ನು ಎಸ್‌‍ಡಿಆರ್‌ಎಫ್‌ ತಂಡದವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಹಲವರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ವರುಣನ ಆರ್ಭಟ ಮುಂದುವರೆದಿದೆ. +ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಜನರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ. ಬಹುತೇಕ ಶಾಲಾ-ಕಾಲೇಜುಗಳಿಗೆ ನೀಡಿರುವ ರಜೆಯನ್ನು ಮುಂದುವರೆಸಲಾಗಿದೆ.ಉಡುಪಿ ಜಿಲ್ಲೆಯಾದ್ಯಂತ ಕೂಡ ಮಳೆ ಮುಂದುವರೆದಿದೆ. ಶ್ರೀ ಕೃಷ್ಣಮಠದ ಪಾರ್ಕಿಂಗ್‌ ಜಾಗ ಮುಳುಗಡೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲೇ ಬೀಡುಬಿಟ್ಟು ನೀರು ಹೊರಹಾಕಲು ಹರಸಾಹಸ ಪಟ್ಟರು. +ವಿವಿಧೆಡೆ ಕೃತಕ ನೆರೆ ಸೃಷ್ಟಿಯಾಗಿ ಅನೇಕ ಮನೆಗಳಿಗೆ ನೀರು ನುಗ್ಗಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಯ ಪರಿಣಾಮ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನ ಮನೆಯಿಂದ ಹೊರಬರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢಶಾಲೆ, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶಿಸಿದ್ದಾರೆ. +ಭಾರಿ ಮಳೆ ಬೀಳುವ ನಿರೀಕ್ಷೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆಯಂತೆ ರೆಡ್‌ ಅಲರ್ಟ್‌ ಘೋಷಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಗತ್ಯ ತುರ್ತು ಕ್ರಮಗಳನ್ನು ಕೈಗೊಂಡಿದೆ.ತಗ್ಗಿನ ಪ್ರದೇಶ, ಕೆರೆ, ನದಿ, ಸಮುದ್ರ ತೀರದ ನಿವಾಸಿಗಳು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ. +ಪ್ರವಾಸಿಗರು ಪ್ರವಾಸಿ ಸ್ಥಳಗಳಿಗೆ ತೆರಳದಂತೆ ಜಾಗೃತಿ ವಹಿಸುವುದು, ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲೂ ವರುಷಧಾರೆ ಮುಂದುವರೆದಿದೆ. ಜಿಲ್ಲೆಯ ಕುಮಟಾ, ಹೊನ್ನಾವರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಕರಾವಳಿಯಲ್ಲೂ ಕೂಡ ಮಳೆಯ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶದ ನಿವಾಸಿಗಳಿಗೆ ಆತಂಕ ಮೂಡಿಸಿದೆ. +ಉತ್ತರ ಕರ್ನಾಟಕದ ಗಡಿಭಾಗ ತತ್ತರ :ಅತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಉ.ಕರ್ನಾಟಕದ ಗಡಿಭಾಗದ ಬೆಳಗಾವಿ, ಚಿಕ್ಕೋಡಿಯ ಹಲವು ಪ್ರದೇಶಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕೃಷ್ಣಾ ಸೇರಿದಂತೆ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. +ಚಿಕ್ಕೋಡಿ ಭಾಗದ ಹಲವು ಸೇತುವೆಗಳು ಜಲಾವೃತಗೊಂಡಿದ್ದು, ಸುಗಮ ಸಂಚಾರಕ್ಕೆ ಅಡಚಣೆಯಾಗಿದೆ. ದೂಧ್‌ಗಂಗಾ, ವೇದ್‌ಗಂಗಾ ನದಿ ನೀರಿನ ಮಟ್ಟ ಏರಿಕೆಯಾಗಿ, ಚಿಕ್ಕೋಡಿಯ ಯಕ್ಸಂಬಾದ ಮಲ್ಲಾಣಿಕಿ ಬಾಬಾ ದರ್ಗಾಕ್ಕೆ ನೀರು ಹರಿದಿದೆ.ಮಲೆನಾಡು, ಕರಾವಳಿ, ಉ.ಕನ್ನಡ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಸಂಭಾವ್ಯ ಅನಾಹುತಗಳನ್ನು ತಡೆಗಟ್ಟಲು ಪ್ರಕೃತಿ ವಿಕೋಪ ಪಡೆ ಸನ್ನದ್ಧವಾಗಿದೆ. +ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ವರುಣನ ಆರ್ಭಟ ಜೋರಾಗಿತ್ತು. ನಿನ್ನೆ ಸಂಜೆಯಿಂದ ನಗರದ ವಿವಿಧೆಡೆ ಭಾರಿ ಮಳೆ ಸುರಿದ ಪರಿಣಾಮ ಜನ ಹೈರಾಣಾಗಿದ್ದರು. ವಾಹನ ಸವಾರರು ಮನೆಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಹಲವೆಡೆ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೆ ಅಡಚಣೆಯಾಯಿತು. +ಮೈಸೂರು ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಕಾವೇರಿ ಜಂಕ್ಷನ್‌, ಓಕಳಿಪುರ ಜಂಕ್ಷನ್‌, ಶಿವಾನಂದ ವೃತ್ತ ರೈಲ್ವೆ ಕೆಳಸೇತುವೆ ಸೇರಿದಂತೆ ವಿವಿಧೆಡೆ ನೀರು ನಿಂತು ವಾಹನ ಸವಾರರು ಪರದಾಡಿದರು.ಭಾರಿ ಮಳೆ ಪರಿಣಾಮ ಹಲವೆಡೆ ಮರಗಳು ಧರೆಗುರುಳಿ, ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಬಿಬಿಎಂಪಿ ಸಿಬ್ಬಂದಿ ಮರಗಳನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. \ No newline at end of file diff --git a/eesanje/url_46_83_6.txt b/eesanje/url_46_83_6.txt new file mode 100644 index 0000000000000000000000000000000000000000..6cb37dcc62aa114b3fb2f4a604eb3c92dd4ca85b --- /dev/null +++ b/eesanje/url_46_83_6.txt @@ -0,0 +1,7 @@ +ನೈತಿಕ ಪೊಲೀಸ್‌‍ಗಿರಿ : ಆತಹತ್ಯೆಗೆ ಯತ್ನಿಸಿದ ಪ್ರೀತಿಸಿ ಮದುವೆಯಾಗಿದ್ದ ಯುವಕ + +ನೆಲಮಂಗಲ,ಜು.9- ಪ್ರೀತಿಸಿ ಮದುವೆಯಾಗಿದ್ದಕ್ಕೆ ಪೊಲೀಸ್‌‍ ಹೆಸರಲ್ಲಿ ಕರೆ ಮಾಡಿ ಧಮ್ಕಿ ಹಾಕಿದ್ದರಿಂದ ನೊಂದ ಯುವಕ ಆತಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ನೆಲಮಂಗಲದ ಎಬಿಬಿ ಕಾರ್ಖಾನೆಯಲ್ಲಿ ದಿನಗೂಲಿ ನೌಕರನಾಗಿರುವ ಪ್ರಮೋದ್‌ ಒಂದು ವರ್ಷದಿಂದ ದೀಪಿಕಾ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ನಡುವೆಯೂ ದಾಬಸ್‌‍ಪೇಟೆಯ ಬಳಿಯ ಉದ್ದಾನೇಶ್ವರ ಬೆಟ್ಟದಲ್ಲಿ ನಾಲ್ಕೈದು ದಿನಗಳ ಹಿಂದಷ್ಟೇ ಮದುವೆಯಾಗಿದ್ದಾರೆ. +ನಂತರ ದಾಬಸ್‌‍ಪೇಟೆ ಪೊಲೀಸ್‌‍ ಠಾಣೆಗೆ ಹೋಗಿ ನವಜೋಡಿ ರಕ್ಷಣೆಗೆ ಮೊರೆಹೋಗಿದ್ದಾರೆ. ಪೊಲೀಸ್‌‍ ಸಮುಖದಲ್ಲಿ ಇವರಿಬ್ಬರ ವಿಚಾರಣೆ ನಡೆಸಿ, ಎರಡೂ ಕುಟುಂಬದವರನ್ನು ಠಾಣೆಗೆ ಕರೆಸಿ ರಾಜಿ ಪಂಚಾಯ್ತಿ ನಡೆದು, ಯುವತಿ ತನ್ನ ಮನೆಗೆ ಹೋಗಿದ್ದಾಳೆ. +ಇಷ್ಟಕ್ಕೆ ಸುಮನಾಗದ ಖಾಸಗಿ ವ್ಯಕ್ತಿ ಸುರೇಶ ಎಂಬಾತ ಪೊಲೀಸ್‌‍ ಸಬ್‌ಇನ್‌ಸ್ಪೆಕ್ಟರ್‌ ಹೆಸರಲ್ಲಿ ಯುವಕನಿಗೆ ಫೋನ್‌ ಮಾಡಿ, ಬೆದರಿಕೆ ಹಾಕಿ, ಯುವತಿಯ ಬ್ಯಾಗ್‌ ತಂದುಕೊಡದಿದ್ದರೆ ನಿನ್ನ ಮನೆಗೆ ಪೊಲೀಸ್‌‍ ಜೀಪು ಬರುತ್ತದೆ ಎಂದು ಹೆದರಿಸಿದ್ದಾನೆ.ಇದರಿಂದ ಗಾಬರಿಯಾದ ಪ್ರಮೋದ್‌, ಮನೆ ಬಳಿ ಪೊಲೀಸ್‌‍ ಜೀಪು ಬಂದರೆ ನನ್ನ ಕುಟುಂಬದವರಿಗೆ ತೊಂದರೆಯಾಗುತ್ತದೆ ಎಂದು ಹೆದರಿ ವಿಷ ಸೇವಿಸಿ ಆತಹತ್ಯೆಗೆ ಯತ್ನಿಸಿದ್ದಾನೆ. +ತಕ್ಷಣ ಮನೆಯವರು ಪ್ರಮೋದ್‌ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆತ ಚೇತರಿಸಿಕೊಳ್ಳುತ್ತಿದ್ದಾನೆ.ವಿಷಯ ತಿಳಿದು ಪೊಲೀಸರು ಆಸ್ಪತ್ರೆಗೆ ತೆರಳಿ ಯುವಕನಿಂದ ಮಾಹಿತಿ ಪಡೆದುಕೊಂಡಿದ್ದಾರೆ. +ಪ್ರಮೋದ್‌ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ತಕ್ಷಣ ದೀಪಿಕಾ ತನ್ನ ಮನೆಯಿಂದ ಆಸ್ಪತ್ರೆಗೆ ಬಂದು ನಾಲ್ಕು ದಿನಗಳಿಂದ ಆತನ ಜೊತೆಯಲ್ಲಿಯೇ ಇದ್ದಾಳೆ.ಇದೀಗ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಪ್ರಮೋದ್‌ನಿಂದ ಹೇಳಿಕೆ ಪಡೆದ ನಂತರ ಪ್ರಕರಣ ದಾಖಲಿಸಿಕೊಳ್ಳಲಿದ್ದಾರೆ. \ No newline at end of file diff --git a/eesanje/url_46_83_7.txt b/eesanje/url_46_83_7.txt new file mode 100644 index 0000000000000000000000000000000000000000..2357eaafa281d6c21724dbf4051742f879db0f02 --- /dev/null +++ b/eesanje/url_46_83_7.txt @@ -0,0 +1,10 @@ +ಕರ್ನಾಟಕಕ್ಕೆ ಮೂರು ವೈದ್ಯಕೀಯ ಕಾಲೇಜುಗಳು ಮಂಜೂರು +ಬೆಂಗಳೂರು :ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ)ವು ಕರ್ನಾಟಕಕ್ಕೆ ಈ ಬಾರಿ ಮೂರು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ.ಶ್ರೀ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ನಗರೂರ್, ಬೆಂಗಳೂರು ಉತ್ತರ), ಪಿಇಎಸ್ ವಿಶ್ವವಿದ್ಯಾನಿಲಯ ಹಾಗೂ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆ(ಕೋನಪ್ಪನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ ಬೆಂಗಳೂರು) ಮತ್ತು ಎಸ್‍ಆರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಾಗಲಕೋಟೆ). +ಈ ಮೂರು ವೈದ್ಯಕೀಯ ಕಾಲೇಜುಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭವಾಗಲಿದೆ. ಬಿಜೆಜಿಎಸ್‍ಗೆ 150, ಪಿಇಎಸ್‍ಗೆ 100 ಹಾಗೂ ಬಾಗಲಕೋಟೆ ಎಸ್‍ಆರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ 100 ವೈದ್ಯಕೀಯ ಸೀಟುಗಳು ಲಭ್ಯವಾಗಲಿವೆ. +ರಾಜ್ಯದಿಂದ ಈ ಬಾರಿ ಒಟ್ಟು ಐದು ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಬೇಕೆಂದು ಎನ್‍ಎಂಸಿಗೆ ಮನವಿ ಮಾಡಲಾಗಿತ್ತು. ಆದರೆ ರಾಮನಗರ ಮತ್ತು ಕನಕಪುರದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕೆಂಬ ಬೇಡಿಕೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಕೆಲವು ತಾಂತ್ರಿಕ ಕಾರಣಗಳಿಂದ ಅನುಮೋದನೆ ನೀಡಿಲ್ಲ. +ಪ್ರಸ್ತುತ ಮೂರು ವೈದ್ಯಕೀಯ ಕಾಲೇಜುಗಳು ಹೊಸದಾಗಿ ಪ್ರಾರಂಭ ಆಗುತ್ತಿರುವುದರಿಂದ ಪ್ರಸ್ತುತ ರಾಜ್ಯದಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 73ಕ್ಕೆ ಏರಿದೆ. ಸದ್ಯ 11,745 ವೈದ್ಯಕೀಯ ಸೀಟುಗಳು ಲಭ್ಯವಾಗುತ್ತಿದ್ದು, 2024-25ನೇ ಸಾಲಿನ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಸೀಟುಗಳ ಸಂಖ್ಯೆ 12,095ಕ್ಕೆ ಏರಿಕೆಯಾಗಲಿದೆ. +ಒಂದು ವೇಳೆ ರಾಮನಗರ ಮತ್ತು ಕನಕಪುರಕ್ಕೂ ಈ ವರ್ಷದಿಂದಲೇ ವೈದ್ಯಕೀಯ ಕಾಲೇಜುಗಳ ಪ್ರಾರಂಭಕ್ಕೆ ಎನ್‍ಎಂಸಿ ಅನುಮೋದನೆ ನೀಡಿದರೆ ಹೆಚ್ಚುವರಿಯಾಗಿ ಇನ್ನು 300 ವೈದ್ಯಕೀಯ ಸೀಟುಗಳು ಸಿಗಲಿವೆ ಎಂದು ತಿಳಿದುಬಂದಿದೆ.ರಾಮನಗರದಲ್ಲಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸಿಬ್ಬಂದಿ ಕೊರತೆ ಮತ್ತು 650 ಬೆಡ್‍ಗಳು ಇರಬೇಕೆಂಬ ನಿಯಮವಿದೆ. +ಪ್ರಸ್ತುತ ರಾಮನಗರದಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ತಡವಾಗಿದೆ. ಒಂದು ವೈದ್ಯಕೀಯ ಕಾಲೇಜನ್ನು ಹೊಸದಾಗಿ ಪ್ರಾರಂಭಿಸಬೇಕಾದರೆ ಎಂಎನ್‍ಸಿ ಮತ್ತು ಎಂಸಿಐನ ಕೆಲವು ಮಾನದಂಡಗಳನ್ನು ಪಾಲಿಸಲೇಬೇಕು. +ನಿಯಮಗಳು:2024-25ನೇ ಶೈಕ್ಷಣಿಕ ಸಾಲಿನಿಂದ ಆರಂಭವಾಗುವ ಹೊಸ ವೈದ್ಯಕೀಯ ಕಾಲೇಜುಗಳಲ್ಲಿ ಎಂಬಿಬಿಎಸ್ ಸೀಟುಗಳ ಮಿತಿಯನ್ನು ಗರಿಷ್ಠ 150ಕ್ಕೆ ನಿಗದಿಪಡಿಸಿದೆ.ರಾಜ್ಯಗಳಲ್ಲಿರುವ 10 ಲಕ್ಷ ಜನಸಂಖ್ಯೆಗೆ 100 ವೈದ್ಯಕೀಯ ಪದವಿ ಸೀಟುಗಳು ಎಂಬ ಅನುಪಾತಕ್ಕೆ ಅನುಗುಣವಾಗಿ ಈ ಮಾನದಂಡ ರೂಪಿಸಲಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳಲ್ಲಿನ ವೈದ್ಯಕೀಯ ಪದವಿ ಕೋರ್ಸ್, ಹೊಸ ವೈದ್ಯಕೀಯ ಕೋರ್ಸ್ ಆರಂಭ, ಹಾಲಿ ಇರುವ ಸೀಟುಗಳ ಹೆಚ್ಚಳ, ಮೌಲ್ಯಮಾಪನ ಮತ್ತು ಮೌಲ್ಯಾಂಕನ ನಿಯಮಗಳಿಗೆ ಸಂಬಂಧಿಸಿದಂತೆ ಆಯೋಗ ಪ್ರಕಟಿಸಿರುವ ಮಾರ್ಗಸೂಚಿಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. +*ಯಾವುದೇ ಕಾಲೇಜಿಗೆ ಹೆಚ್ಚುವರಿಯಾಗಿ ಅನುಮತಿಸಿದ ಕೋಟಾ ಸೀಟುಗಳು ಕೂಡ ಕಾಲೇಜಿಗೆ ಮಂಜೂರು ಮಾಡಿರುವ ಒಟ್ಟು ಸೀಟುಗಳ ಮಿತಿಯನ್ನು ಮೀರಬಾರದು.*ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆದಿರುವ ಹೊಸ ವೈದ್ಯಕೀಯ ಕಾಲೇಜುಗಳಿಗೆ ಮೊದಲ ಮೂರು ವರ್ಷಗಳಲ್ಲಿ ಅನುಕ್ರಮವಾಗಿ 50, 100 ಹಾಗೂ 150 ಸೀಟುಗಳ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ. +*ಹೊಸ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸುಸಜ್ಜಿತ ಆಸ್ಪತ್ರೆ ಇರಬೇಕು. ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಇರಬೇಕು.*ಆಸ್ಪತ್ರೆಯು ಕನಿಷ್ಠ 220 ಹಾಸಿಗೆ ಸಾಮಥ್ರ್ಯ ಹೊಂದಿರಬೇಕು. ಕಾಲೇಜು ಮತ್ತು ಆಸ್ಪತ್ರೆ ನಡುವೆ ವಿದ್ಯಾರ್ಥಿಗಳು, ವೈದ್ಯಕೀಯ ಸಿಬ್ಬಂದಿಯ ಪ್ರಯಾಣದ ಅಂತರ 30 ನಿಮಿಷಕ್ಕೂ ಹೆಚ್ಚಿರಬಾರದು.*ಸಹಾಯಕ ವೈದ್ಯರಿಗೆ ನೆರವಾಗುವಂತೆ ಕಾಲೇಜಿನ ವ್‍ಯಾಪ್ತಿಯಲ್ಲಿ ಗ್ರಾಮೀಣ ಆರೋಗ್ಯ ಕೇಂದ್ರಗಳು/ ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಇರಬೇಕು*ಪ್ರತಿ ವೈದ್ಯಕೀಯ ಸಂಸ್ಥೆಯಲ್ಲೂ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ಪೂರಕವಾಗುವಂತಹ ಸುಸಜ್ಜಿತ ಪ್ರಯೋಗಾಲಯ ಇರಬೇಕು \ No newline at end of file diff --git a/eesanje/url_46_83_8.txt b/eesanje/url_46_83_8.txt new file mode 100644 index 0000000000000000000000000000000000000000..9adca8939d17d906d4253c8af8560c8b88c25014 --- /dev/null +++ b/eesanje/url_46_83_8.txt @@ -0,0 +1,5 @@ +ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರಬರಲಿ : ಅರವಿಂದ ಬೆಲ್ಲದ +ಹುಬ್ಬಳ್ಳಿ,ಜು.8-ರಾಜ್ಯ ಸರ್ಕಾರ ಡೆಂಘೀ ನಿಯಂತ್ರಣಕ್ಕೆ ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಚಿವರು ಬೆಂಗಳೂರು ಬಿಟ್ಟು ಹೊರ ಬಂದು ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಈ ಬಗ್ಗೆ ಪರಿಶೀಲಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. +ನಗರದ ಕಿಮ್ಸ್‌‍ ಆಸ್ಪತ್ರೆಗೆ ಭೇಟಿ ನೀಡಿ ಡೆಂಘೀಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಔಷಧ, ಪರೀಕ್ಷೆಗೆ ಪ್ರತ್ಯೇಕವಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು. +ಆರೋಗ್ಯ ಸಚಿವರು ರಾಜಧಾನಿ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ಪರಿಶೀಲಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಇರುವ ಆರೋಗ್ಯ ಪರಿಸ್ಥಿತಿಯ ಬಗ್ಗೆ ಗಮನ ಹರಿಸಬೇಕು. ಡೆಂಘೀ ಮಾರಕ ಕಾಯಿಲೆಯಾಗಿದ್ದು, ನಿಯಂತ್ರಿಸದಿದ್ದರೆ ಸಾರ್ವಜನಿಕರು ಸಂಕಷ್ಟಕ್ಕೀಡಾಗುವ ಸಾಧ್ಯತೆಯಿದೆ. +ಸಾವು-ನೋವುಗಳು ಹೆಚ್ಚಾಗುತ್ತವೆ. ಕೂಡಲೇ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈಗಾಗಲೇ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೆಂಘೀ ಕಾಯಿಲೆಯಿಂದ ಹಲವರು ಸಾವನ್ನಪ್ಪಿದರೆ, ಸಾಕಷ್ಟು ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ. ಸರ್ಕಾರ ಡೆಂಘೀ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. \ No newline at end of file diff --git a/eesanje/url_46_83_9.txt b/eesanje/url_46_83_9.txt new file mode 100644 index 0000000000000000000000000000000000000000..b9cf4d4984ddce2cb97ac2aa6d0fb8c1b389ef9d --- /dev/null +++ b/eesanje/url_46_83_9.txt @@ -0,0 +1,8 @@ +ಆಡಳಿತ ಸುಧಾರಣೆ ಕುರಿತು ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯಾಧಿಕಾರಿಗಳ ಜೊತೆ ಸಿಎಂ ಸಭೆ +ಬೆಂಗಳೂರು,ಜು.8– ರಾಜ್ಯದ ಆಡಳಿತ ಸುಧಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಪುಟದ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ. +ಇಂದಿನಿಂದ ಆರಂಭಗೊಂಡ 2 ದಿನಗಳ ಸಮಾವೇಶದಲ್ಲಿ ಬಜೆಟ್‌ ಘೋಷಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಜೊತೆಗೆ ಪಂಚಖಾತ್ರಿ ಯೋಜನೆಗಳ ಅನುಷ್ಠಾನದ ಬಗ್ಗೆಯೂ ಪರಾಮರ್ಶೆಗಳು ನಡೆದಿವೆ. ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಹಲವು ಕಡೆ ಪ್ರವಾಹ ಪರಿಸ್ಥಿತಿ ಕಂಡುಬರುವ ಸಾಧ್ಯತೆ ಇದೆ. ಕರಾವಳಿ ಸೇರಿದಂತೆ ಕೆಲವು ಭಾಗಗಳಲ್ಲಿ ಸಾಕಷ್ಟು ಹಾನಿಯಾಗಿದೆ. +ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸಮಸ್ಯೆ ಪೀಡಿತ ಪ್ರದೇಶಗಳಿಗೆ ತಕ್ಷಣವೇ ತೆರಳಿ ನೆರವು ನೀಡಬೇಕು ಎಂದು ತಾಕೀತು ಮಾಡಿದ್ದಾರೆ.ಹಲವಾರು ಕಡೆ ಅಧಿಕಾರಿಗಳು ಸ್ಥಳಗಳಿಗೆ ತೆರಳದೆ ಕೇಂದ್ರಸ್ಥಾನದಲ್ಲಿಲ್ಲದೆ ಜನರಿಗೆ ಅಲಭ್ಯವಾಗಿರುವ ದೂರುಗಳಿವೆ. ಮುಂದಿನ ದಿನಗಳಲ್ಲಿ ಈ ರೀತಿಯ ಪ್ರವೃತ್ತಿ ನಿಲ್ಲಬೇಕು. ಸಾರ್ವಜನಿಕರ ಭೇಟಿ ಮತ್ತು ಸರ್ಕಾರದ ಕೆಲಸಗಳು ಸರಿಸಮಾನವಾಗಿ ನಡೆಯಬೇಕು. +ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಿಕೊಡಲು ಸರ್ಕಾರ ಸಿದ್ಧವಿದೆ. ಸರ್ಕಾರದ ಆಶಯಗಳಿಗೆ ಪೂರಕವಾಗಿ ಅಧಿಕಾರಿಗಳು ಕೆಲಸ ಮಾಡಬೇಕು. ಜಡ್ಡುಗಟ್ಟಿದ ವ್ಯವಸ್ಥೆ ಬದಲಾಗಬೇಕು. ಜನಸ್ನೇಹಿ ಆಡಳಿತ ನಮ ಆದ್ಯತೆ ಎಂದು ಸೂಚನೆ ನೀಡಿದ್ದಾರೆ.ಆಡಳಿತ ವ್ಯವಸ್ಥೆಯಲ್ಲಿ ಆಧುನಿಕ ತಾಂತ್ರಿಕತೆಯನ್ನು ಬಳಸಿಕೊಳ್ಳಬೇಕು. ಜನರಿಗೆ ಉತ್ತಮ ಸೇವೆ ನೀಡುವ ಮೂಲಕ ಭ್ರಷ್ಟಾಚಾರ ನಿಯಂತ್ರಣ, ಅನಗತ್ಯ ವಿಳಂಬದಂತಹ ಪಿಡುಗುಗಳನ್ನು ತೊಡೆದು ಹಾಕಬೇಕು ಎಂದು ಆದೇಶಿಸಿದ್ದಾರೆ. +ಪ್ರತಿ ಜಿಲ್ಲಾಧಿಕಾರಿಗಳಿಂದಲೂ ಪ್ರತ್ಯೇಕ ವಿವರಣೆಗಳನ್ನು ಪಡೆದುಕೊಂಡ ಮುಖ್ಯಮಂತ್ರಿಯವರು ಜಿಲ್ಲೆ ಉಸ್ತುವಾರಿ ಸಚಿವರ ಜೊತೆ ಸಹಯೋಗದೊಂದಿಗೆ ಕೆಲಸ ಮಾಡಿ, ಜನಪ್ರತಿನಿಧಿಗಳು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಅದಕ್ಕೆ ತಕ್ಷಣ ಸ್ಪಂದಿಸಿ ಎಂದು ಸಲಹೆ ನೀಡಿದ್ದಾರೆ. +ಆಡಳಿತದಲ್ಲಿ ಅಸಡ್ಡೆ ತೋರುವವರಗೆ ನಮ ಸರ್ಕಾರದಲ್ಲಿ ಕ್ಷಮೆ ಇಲ್ಲ. ಯಾವುದೇ ಜನಪರ ಯೋಜನೆಗಳಿಗೆ ಮತ್ತು ಬಜೆಟ್‌ ಅನುಮೋದಿತ ಕಾರ್ಯಕ್ರಮಗಳಿಗೆ ಆರ್ಥಿಕ ಸಮಸ್ಯೆಯಿಲ್ಲ. ಹೀಗಾಗಿ ಹಣಕಾಸಿನ ನೆಪ ಹೇಳಿ ಎಲ್ಲಿಯೂ ಯೋಜನೆಯ ಜಾರಿಗೆ ವಿಳಂಬವಾಗಬಾರದು ಎಂದು ಎಚ್ಚರಿಸಿದ್ದಾರೆ. +ಇತ್ತೀಚಿನ ದಿನಗಳಲ್ಲಿ ಡೆಂಘೀ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಜನಸಾಮಾನ್ಯರನ್ನು ಬಾಧಿಸುತ್ತಿವೆ. ಸೊಳ್ಳೆ ನಿಯಂತ್ರಣ ಸೇರಿದಂತೆ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಮೂಲಸೌಲಭ್ಯ ವ್ಯವಸ್ಥೆಯನ್ನು ಸುಧಾರಿತ ಸ್ಥಿತಿಯಲ್ಲಿಡಬೇಕು ಎಂದು ಮುಖ್ಯಮಂತ್ರಿ ಆದೇಶಿಸಿದ್ದಾರೆ. \ No newline at end of file diff --git a/eesanje/url_46_84_1.txt b/eesanje/url_46_84_1.txt new file mode 100644 index 0000000000000000000000000000000000000000..149c6b82c93d488838b4801f582c16b4ea7f0762 --- /dev/null +++ b/eesanje/url_46_84_1.txt @@ -0,0 +1,6 @@ +ಇದೇ ತಿಂಗಳ 13ರಂದು ಕಾಂಗ್ರೆಸ್‌‍ ಕಚೇರಿಯಲ್ಲಿ ಕಾರ್ಯಕರ್ತರ ಕುಂದುಕೊರತೆ ಆಲಿಸಲಿದ್ದಾರೆ ಸಿಎಂ +ಬೆಂಗಳೂರು,ಜು.8-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ತಿಂಗಳ 13 ರಂದು ಕಾಂಗ್ರೆಸ್‌‍ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಲು ಮತ್ತೊಮೆ ಸಮಯ ನಿಗದಿಯಾಗಿದೆ. ಈ ಮೊದಲು ಜು.6 ರಂದು ನಿಗದಿಯಾಗಿದ್ದ ಸಮಯ ವಿವಿಧ ಕಾರಣಗಳಿಗಾಗಿ ಮುಂದೂಡಿಕೆ ಆಗಿತ್ತು. ಈಗ ಎರಡನೇ ಬಾರಿ ಜು.13 ರಂದು ಸಮಯ ನಿಗದಿಯಾಗಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿಯವರು ಕೆಪಿಸಿಸಿಯ ಭಾರತ್‌ಜೋಡೋ ಆಡಿಟೋರಿಯಂನ ಕಟ್ಟಡದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. +ಪಕ್ಷದ ಸದಸ್ಯರು, ಕಾರ್ಯಕರ್ತರು, ಮುಖಂಡರು ಅಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಡಳಿತಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮದ ಸಭೆಯಲ್ಲಿ ಭಾಗವಹಿಸುವವರು ಪೂರ್ವಭಾವಿಯಾಗಿ ನೊಂದಾವಣೆ ಮಾಡಿಕೊಳ್ಳಬೇಕಿದೆ. +ಗೂಗಲ್‌ ಶೀಟ್‌ನಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಪಕ್ಷದ ಕಚೇರಿಗೆ ಸಲ್ಲಿಸಬೇಕು. ನೊಂದಣಿ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಮಂಜುನಾಥ ಬಚ್ಚೇಗೌಡ – 9731931116, ಚಮನ್‌ ರ್ಜಾನಾ – 9986899910, ಸೈಯದ್‌ ಮೊಯಿನ್‌ – 9980476394, ವಿಜಯ್‌ ಮತ್ತಿಕಟ್ಟಿ – 9480774569, ಬಿ.ಆರ್‌. ನಾಯ್ಡು – 9945490000 ಅನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ. +ಸಂಪುಟದ ಪ್ರತಿಯೊಬ್ಬ ಸಚಿವರು ನಿಯಮಿತವಾಗಿ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲುಗಳನ್ನು ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು. +ಅದರಂತೆ ಈಗಾಗಲೇ ಸಚಿವ ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಕೆಲವರು ಪಕ್ಷದ ಕಚೇರಿಗೆ ಭೇಟಿ ನೀಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಾವೇ ಪಕ್ಷದ ಕಚೇರಿಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಸ್ಪಂದನಾ ಕಾರ್ಯಕ್ರಮ ನಡೆಸುವ ಮೂಲಕ ಇತರ ಸಚಿವರಿಗೆ ಮೇಲ್ಪಂಕ್ತಿ ಹಾಕಿಕೊಡುವುದಾಗಿ ಹೇಳಿದರು. ಅದರಂತೆ ಈ ಮೊದಲು ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆಯಾಗಿ ಈಗ 2ನೇ ಬಾರಿ ಸಮಯ ನಿಗದಿಯಾಗಿದೆ. \ No newline at end of file diff --git a/eesanje/url_46_84_10.txt b/eesanje/url_46_84_10.txt new file mode 100644 index 0000000000000000000000000000000000000000..5ef9f9ad9f6f136b27429e7303b58eb9cb251943 --- /dev/null +++ b/eesanje/url_46_84_10.txt @@ -0,0 +1,6 @@ +ಮಹಾದಾಯಿ ಕುರಿತು ಗೋವಾ ಕಿರಿಕ್, ತಿರುಗೇಟು ನೀಡದೆ ರಾಜ್ಯ ಸರ್ಕಾರ ಮೌನ +ಬೆಳಗಾವಿ,ಜೂ.7-ಮಹಾ ದಾಯಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಟ್ವೀಟ್ ಮೂಲಕ ಸುಖಾಸುಮನೆ ಕಿತಾಪತಿ ತೆಗೆದಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ತಿರುಗೇಟು ನೀಡದೆ ಮೌನ ವಹಿಸಿದೆ ಎಂದು ಅಮಾಧಾನ ವ್ಯಕ್ತವಾಗಿದೆ.ಮಹಾದಾಯಿ ಟ್ರಿಬ್ಯೂನಲ್ ಶಿಫಾರಸಿನ ಮೇರೆಗೆ ಕೇಂದ್ರದಿಂದ ಸೃಜಿಸಲಾದ ಪ್ರವಾಹ (ಪ್ರೊಗ್ರೆಸಿವ್ ರಿವರ್ ಅಥಾರಿಟಿ ಫಾರ್ ವೆಲ್ಫೇರ್ ಆ್ಯಂಡ್ ಹಾರ್ಮನಿ) ಅಧಿಕಾರಿಗಳ ತಂಡ ಇಂದು ಗೋವಾ ಕರ್ನಾಟಕ ಗಡಿಯ ಕಣಕುಂಬಿಯಲ್ಲಿ ಸಭೆ ನಡೆಸಿದೆ. +ಸಭೆಯಲ್ಲಿ ಪ್ರವಾಹವನ್ನು ನೀರಿನ ಯೋಜನಾ ಪ್ರದೇಶಗಳಲ್ಲಿ ಪರಸ್ಪರ ಸಾಮರಸ್ಯ ಬೆಳೆಸಲು ಸಮಿತಿ ರಚಿಸಿರುವುದು ಗಮನಾರ್ಹ. ಆದರೆ ಗೋವಾ ಸಿಎಂ ಪ್ರಮೋದ ಸಾವಂತ್ ಟ್ವೀಟ್ ಮಾಡಿ ಪ್ರವಾಹವನ್ನು ಪರಿವೀಕ್ಷಣೆಗೆ ಕರೆಸಿದ್ದಾಗಲೂ ಕರ್ನಾಟಕ ಸರಕಾರ ನಿರ್ಲಕ್ಷ್ಯ ವಹಿಸಿದೆ. +ನಿಯಮಿತ ಭೇಟಿಗಾಗಿ ಪ್ರವಾಹ ಸಮಿತಿ ಆಗಮಿಸಿದೆ ಎಂದು ಗೋವಾ ಹೇಳಿಕೊಳ್ಳುತ್ತಿದ್ದರೂ ಅದರ ಹುನ್ನಾರ ಬೇರೆಯದೇ ಆಗದೆ. ಗೋವಾ ಸಿಎಂ ಟ್ವೀಟ್ ಮಾಡಿ 72 ಗಂಟೆ ಕಳೆದರೂ ಕರ್ನಾಟಕ ಮಾತ್ರ ಈ ವಿಷಯದಲ್ಲಿ ಗಮನಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತವಾಗಿದೆ. +ಕರ್ನಾಟಕ-ಗೋವಾ ನಡುವಿನ ಮಹದಾಯಿ ಯೋಜನಾ ಪ್ರದೇಶದಲ್ಲಿ ಸಾಮರಸ್ಯ ಮೂಡಿಸುವ ಪ್ರವಾಹ ಆಗಮಿಸಿ ಏನು ಪ್ರಯೋಜನ? ತಿಳಿದಿಲ್ಲ. ಜಲಶಕ್ತಿ ಮಂತ್ರಾಲಯದ ಪ್ರವಾಹ ಸಮಿತಿಯ ಚೇರಮನ್ ಪಿ.ಎಂ. ಸ್ಕಾಟ್, ಸದಸ್ಯರಾದ ಮುಖ್ಯ ಅಭಿಯಂತರ ವಿರೇಂದ್ರ ಶರ್ಮಾ, ನವದೆಹಲಿಯ ಹೈಡ್ರೋಲಾಜಿ ವಿಭಾಗದ ಮುಖ್ಯ ಅಭಿಯಂತರ ಮನೋಜ್ ತಿವಾರಿ, ಮಿಲಿಂದ ನಾಯಕ, ಸುಭಾಶಚಂದ್ರ ಸೇರಿ ಇತರ ಹಿರಿಯ ಅಧಿಕಾರಿಗಳು ಸಾಧಕಬಾಧಕಗಳ ಚರ್ಚೆ ನಡೆಸಿದ್ದಾರೆ. +ಕರ್ನಾಟಕ ಸರಕಾರದ ಮೌನ, ಗೋವಾ ಸಿಎಂ ಕಿತಾಪತಿ, ನಿಯಮಿತದ ಹೆಸರಿನಲ್ಲಿ ಆಗಮಿಸಿದ ಪ್ರವಾಹ ಸಮಿತಿಯ ಪರಿವೀಕ್ಷಣೆಗೆ ರಾಜ್ಯ ಕನ್ನಡ ಹಾಗೂ ಸಾಮಾಜಿಕ ಸಂಘಟನೆಗಳ ಆಕ್ಷೇಪ ವ್ಯಕ್ತಪಡಿಸಿವೆ. ಕರ್ನಾಟಕ ಸರಕಾರದ ಮೌನ ಹಾಗೂ ಗೋವಾ ಸಿಎಂ ಸಾವಂತ್ ಅವರ ತರಾತುರಿಯ ಉದ್ಧಟತನದ ಬಗ್ಗೆ ಹಿರಿಯ ಹೋರಾಟಗಾರ ಅಶೋಕ ಚಂದರಗಿ ಅವರು ಅಸಹನೆ ವ್ಯಕ್ತಪಡಿಸಿದ್ದ ಆರೆ. \ No newline at end of file diff --git a/eesanje/url_46_84_11.txt b/eesanje/url_46_84_11.txt new file mode 100644 index 0000000000000000000000000000000000000000..bf74c23da90b917fe5b625f5ad4bafb8dd0edd50 --- /dev/null +++ b/eesanje/url_46_84_11.txt @@ -0,0 +1,10 @@ +ಡೆಂಘೀ ತುರ್ತು ಘೋಷಿಸಿ ಉಚಿತ ಚಿಕಿತ್ಸೆ ನೀಡುವಂತೆ ಆರ್.ಅಶೋಕ್ ಆಗ್ರಹ +ಬೆಂಗಳೂರು,ಜು.7– ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಉಲ್ಬಣಿಸುತ್ತಿದ್ದು, ಸರ್ಕಾರ ಕೂಡಲೇ ಡೆಂಘೀ ತುರ್ತು ಘೋಷಿಸಿ ಪ್ರತಿಯೊಬ್ಬರಿಗೂ ಉಚಿತವಾಗಿ ಚಿಕಿತ್ಸೆ ನೀಡಲು ಮುಂದಾಗಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. +ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಡೆಂಘೀ ಸೋಂಕಿತರ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಹಲವು ದಿನಗಳಿಂದ ಡೆಂಘೀ ಮಹಾಮಾರಿಯಾಗಿ ಪರಿ ಣಮಿಸಿದೆ. ರಾಜ್ಯದಲ್ಲಿ ಪ್ರತಿ ದಿನ ಮೂರರಿಂದ 4 ಜನ ಸಾವನ್ನ ಪ್ಪುತ್ತಿದ್ದಾರೆ. ಕೂಡಲೇ ಡೆಂಘೀ ತುರ್ತು ಘೋಷಿಸಿ ಉಚಿತವಾಗಿ ಚಿಕಿತ್ಸೆ ನೀಡ ಬೇಕೆಂದು ಒತ್ತಾಯಿಸಿದರು. +ಭಾನುವಾರವೂ ಇಬ್ಬರು ಮಕ್ಕಳು ಡೆಂಘೀಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇದು ಅತ್ಯಂತ ಬೇಸರದ ಸಂಗತಿ. ಈ ಹಿಂದೆ ಕೋವಿಡ್-19 ಕಾಣಿಸಿಕೊಂಡಾಗ ನಮ ಸರ್ಕಾರ ಪ್ರತಿಯೊಬ್ಬರಿಗೂ ಉಚಿತವಾಗಿ ಚಿಕಿತ್ಸೆ ನೀಡಿತ್ತು. ಡೆಂಘೀ ಪರೀಕ್ಷೆ ಮಾಡುವಂತೆ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು, ಇದಕ್ಕೂ ಕೂಡ ಸರ್ಕಾರ ದರ ನಿಗದಿಪಡಿಸಬಾರದೆಂದು ಮನವಿ ಮಾಡಿದರು. +ಮೊದಲು ಉಚಿತವಾಗಿ ಕೊಟ್ಟು ನಂತರ ಜನರಿಂದ ಹಣ ವಸೂಲಿ ಮಾಡುವ ಕೆಲಸ ಮಾಡಬೇಡಿ. ಹೆಚ್ಚೆಂದರೆ 10 ಕೋಟಿ ಖರ್ಚಾಗಬಹುದು. ಮೂರವರೆ ಲಕ್ಷ ಕೋಟಿ ಬಜೆಟ್ ಮಂಡಿಸುವ ಸರ್ಕಾರಕ್ಕೆ ಇದು ಯಾವ ಲೆಕ್ಕವೂ ಅಲ್ಲ. ಜನರ ರಕ್ಷಣೆಗೆ ನಾವಿದ್ದೇನೆ ಎಂದು ಸರ್ಕಾರ ಅಭಯ ನೀಡಬೇಕೆಂದು ಮನವಿ ಮಾಡಿದರು. +ಕೋವಿಡ್ ಮಾದರಿಯಲ್ಲಿ ಡೆಂಘೀಗೂ ಪ್ರತ್ಯೇಕವಾದ ವಾರ್ಡ್ಗಳನ್ನು ಮಾಡಬೇಕು. ನನಗಿರುವ ಮಾಹಿತಿ ಪ್ರಕಾರ ರಾಜ್ಯದ ಅನೇಕ ಕಡೆ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಇದೆ. ತಕ್ಷಣವೇ ಅಧಿಕಾರಿಗಳ ಸಭೆ ಕರೆದು ಈ ಸಮಸ್ಯೆಯನ್ನು ಪರಿಹರಿಸಬೇಕು. ಜನರು ಪರೀಕ್ಷೆ ಮಾಡಿಕೊಳ್ಳದೇ ಇರುವುದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮೊದಲು ಅಧಿಕಾರಿಗಳು ಎಸಿ ಕೊಠಡಿಯಿಂದ ಹೊರಬಂದು ಕೆಲಸ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಹಿಂದೆ ನಾನು ಆರೋಗ್ಯ ಸಚಿವನಾಗಿ ಕೆಲಸ ಮಾಡಿದ ಅನುಭವದಲ್ಲಿ ಸರ್ಕಾರಕ್ಕೆ ನನ್ನದೇ ಆದ ಸಲಹೆಗಳನ್ನು ಕೊಡುತ್ತಿದ್ದೇನೆ. ವಿರೋಧ ಪಕ್ಷದ ನಾಯಕನಾಗಿ ನಾನು ಮಾಡಬೇಕಾದ ಕರ್ತವ್ಯವೂ ಹೌದು. ಈಗಾಗಲೇ ಝೀಕಾ ವೈರಸ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಕಾಲರದಿಂದಲೂ ಜನರು ಸಾಯುತ್ತಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕೆಂದು ಅಶೋಕ್ ಒತ್ತಾಯಿಸಿದರು. +ಕೇವಲ ಅಧಿಕಾರಿಗಳ ಜೊತೆ ಸಭೆ ನಡೆಸಿದರೆ ಪ್ರಯೋಜನವಿಲ್ಲ. ಪ್ರತಿಯೊಬ್ಬರು ಮೈಚಳಿ ಬಿಟ್ಟು ಕೆಲಸ ಮಾಡಬೇಕು. ಡೆಂಘೀ ಹಾಗೂ ಝೀಕಾ ವೈರಸ್ ನಿಯಂತ್ರಣಕ್ಕೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು, ನೀವು ಸಭೆಗಳ ಮೇಲೆ ಸಭೆ ನಡೆಸಿದರೆ ಅದರು ಕಾಫಿ, ಟೀ, ದೋಸೆಗೆ ಸೀಮಿತವಾಗುತ್ತದೆ ಎಂದು ವ್ಯಂಗ್ಯವಾಡಿದರು.ಇದಕ್ಕೂ ಮೊದಲು ಜಯನಗರದ ಆಸ್ಪತ್ರೆಗೆ ಭೇಟಿ ನೀಡಿದ ಅಶೋಕ್, ಡೆಂಘೀ ಪ್ರಕರಣದಿಂದ ಬಳಲುತ್ತಿರುವ ರೋಗಿಗಳನ್ನು ಭೇಟಿಯಾಗಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು. +ಜಯನಗರದ ಸಂಜಯಗಾಂಧಿ ಜನರಲ್ ಅಸ್ಪತ್ರೆಗೂ ಭೇಟಿ ಕೊಟ್ಟ ಅಶೋಕ್, ಪ್ರತಿಯೊಬ್ಬ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದರು. ನಿಮನ್ನು ವೈದ್ಯರು ಸರಿಯಾಗಿ ನೋಡಿಕೊಳ್ಳುತ್ತಿದ್ದಾರೆಯೇ? ಸಕಾಲಕ್ಕೆ ಸರಿಯಾಗಿ ಔಷಧಿ, ಊಟ ಕೊಡುತ್ತಿದ್ದಾರೆಯೇ? ಹೆಚ್ಚಿನ ಹಣ ಕೇಳುತ್ತಿದ್ದಾರೆಯೇ ಎಂದು ವಿಚಾರಿಸಿದರು. +ನೀವು ದೃತಿಗೆಡಬೇಡಿ. ಧೈರ್ಯದಿಂದಿರಿ. ಆದಷ್ಟು ಬೇಗ ಗುಣಮುಖರಾಗುತ್ತೀರಿ ಎಂದು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ.ಕೆ.ರಾಮಮೂರ್ತಿ ಮತ್ತಿತರು ಇದ್ದರು. \ No newline at end of file diff --git a/eesanje/url_46_84_12.txt b/eesanje/url_46_84_12.txt new file mode 100644 index 0000000000000000000000000000000000000000..4c5c31de5287fe6df3f87d8798a0ade2fb58f657 --- /dev/null +++ b/eesanje/url_46_84_12.txt @@ -0,0 +1,4 @@ +ಸಿಎಂ – ಡಿಸಿಎಂ ಹುದ್ದೆಗಳ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಸ್ಥಗಿತವಾಗಿದೆ : ಶೋಭಾ ಕರಂದ್ಲಾಜೆ +ಬೆಂಗಳೂರು,ಜು.7-ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವಿನ ಹುದ್ದೆ ಸಂಬಂಧಿತ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತ ಗೊಂಡಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದರು. +ಶೇಷಾದ್ರಿಪುರದ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು. +ಝೀಕಾ ಕೂಡ ಸಂಕಷ್ಟ ತಂದೊಡ್ಡುತ್ತಿದೆ. ಇದರ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ಬಿಲ್ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು. \ No newline at end of file diff --git a/eesanje/url_46_84_2.txt b/eesanje/url_46_84_2.txt new file mode 100644 index 0000000000000000000000000000000000000000..d26974e2d580b47c8ed7b5175c28a9aea7b1dd04 --- /dev/null +++ b/eesanje/url_46_84_2.txt @@ -0,0 +1,6 @@ +ಪೇಪರ್‌ ಹಾವು ಬಿಟ್ಟು ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡಲಾಗುತ್ತದೆ : ಜಗದೀಶ್‌ ಶೆಟ್ಟರ್‌ +ಹುಬ್ಬಳ್ಳಿ,ಜು.8-ಮುಡಾ ಹಗರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಆಗುತ್ತಿಲ್ಲ. ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡುವ ಕೆಲಸವಾಗುತ್ತಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೈಸೂರಿನಲ್ಲಿ ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹೇದೇವಪ್ಪ ಅವರು ನಿನ್ನೆ ಮೈಸೂರಿನ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡುವ ಮೂಲಕ ಪೇರ್ಪರ್‌ಹಾವು ಬಿಟ್ಟಿದ್ದಾರೆ, ಇದು ಮುಖ್ಯಮಂತ್ರಿಗಳನ್ನು ರಕ್ಷಣೆ ಮಾಡುವ ವ್ಯವಸ್ಥೆ ಆಗಿದೆ ಎಂದು ಹೇಳಿದರು. +ಮುಡಾ ಹಗರಣದಲ್ಲಿ ಬೇರೆ ಪಕ್ಷದಲ್ಲಿ ಬೇರೆ ಪಕ್ಷದವರು ಇದ್ದಾರೆ, ಬೇರೆಯವರು ಹಗರಣದಲ್ಲಿ ಭಾಗಿಯಾಗಿದ್ದಾರೆ, ಎಲ್ಲ ಶಾಸಕರು ಇದ್ದಾರೆ ಎಂದು ಮಹದೇವಪ್ಪ ನೀಡಿರುವ ಹೇಳಿಕೆ, ಇದೊಂದು ಪೇಪರ್‌ ಹಾವು ಅಷ್ಟೇ ಆಗಿದ್ದು, ಅವರ ಹುಳುಕೂ ಸಹ ಹೊರಗೆ ಬರುತ್ತದೆ ಎಂದರು. +ಮುಡಾ ಹಗರಣ ಮುಖ್ಯಮಂತ್ರಿಗಳ ತಲೆಗೆ ಬರತ್ತದೆ ಎಂದು ಅವರನ್ನು ಬಚಾವ್‌ ಮಾಡಲು ಸುದ್ದಿಗೋಷ್ಠಿ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬಚಾವ್‌ ಮಾಡುವ ಕೆಲಸ ಆಗಬಾರದು ಎಂದು ಹೇಳಿದರು. +ಮಹದಾಯಿ ಯೋಜನೆ ಆರಂಭದ ಕಣಕುಂಬಿಗೆ ಪ್ರವಾಹ ತಂಡ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕೇಂದ್ರದ ನಿಯೋಗ ಬಂದಿದ್ದು ಪರಿಸರ, ಹುಲಿ ಕಾರಿಡಾರ್‌ ಹಿನ್ನೆಲೆಯಲ್ಲಿ ಬಂದರೆ ಓಕೆ. ಆದರೆ, ಕೇಂದ್ರದ ಇಂತಹ ತಂಡ ಬಂದಾಗ ರಾಜ್ಯ ಸರ್ಕಾರ ಲ್‌ ಅಲರ್ಟ್‌ ಆಗಬೇಕಾಗುತ್ತದೆ. +ರಾಜ್ಯದಿಂದ ಸರಿಯಾದ ರಿಪೋರ್ಟ್‌ ಹೋಗದೇ ಇದ್ದಾಗ ಕಾನೂನು ತೊಡಕುಗಳು ಆರಂಭವಾಗುತ್ತವೆ ಎಂದರು.ರಾಜ್ಯ ಸರ್ಕಾರ ಮಹದಾಯಿ ವಿಚಾರದಲ್ಲಿ ಗಂಭೀರವಾದ ಪ್ರಯತ್ನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮಹದಾಯಿ ಹೋರಾಟಗಾರರು, ರೈತರು ಸಹ ಎಚ್ಚರಿಕೆ ಕೊಟ್ಟಿದ್ದಾರೆ, ತಂಡ ಬಂದಾಗ ಏನೇನು ಪರಿಶೀಲನೆ ಆಯಿತು, ಏನೆಲ್ಲಾ ವಿಚಾರಣೆ ನಡೆಸಲಾಯಿತು, ಈ ಆಧಾರದ ಮೇಲೆ ರಾಜ್ಯ ಸರ್ಕಾರ ವರದಿ ಕೊಡಬೇಕು ಎಂದು ತಿಳಿಸಿದರು. \ No newline at end of file diff --git a/eesanje/url_46_84_3.txt b/eesanje/url_46_84_3.txt new file mode 100644 index 0000000000000000000000000000000000000000..3229520abc81e3f2c409502fe5f160ccec4aaf51 --- /dev/null +++ b/eesanje/url_46_84_3.txt @@ -0,0 +1,16 @@ +ನೀವು ಮಹಾರಾಜರಲ್ಲ, ಜನ ಸೇವಕರೆಂಬುದನ್ನು ನೆನಪಿಟ್ಟುಕೊಳ್ಳಿ : ಜಿಲ್ಲಾಧಿಕಾರಿಗಳಿಗೆ ಸಿಎಂ ಎಚ್ಚರಿಕೆ +ಬೆಂಗಳೂರು ಜು 8– ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ, ಕರ್ತವ್ಯ ಲೋಪಕ್ಕೆ ಇನ್ನೂ ಮುಂದೆ ಕೆಳ ಹಂತದ ಅಧಿಕಾರಿಗಳ ಜೊತೆಗೆ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. +ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯನಿವರ್ಹಣಾಧಿಕಾರಿಗಳ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಅವರು, ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ ಹಾಗೂ ಸಿಇಒಗಳು ಜಿಲ್ಲೆಯ ಮಾಹಿತಿಯನ್ನು ಅಂಗೈನಲ್ಲಿ ಇಟ್ಟುಕೊಂಡು ಉತ್ಸಾಹ, ಕ್ರಿಯಾಶೀಲತೆ ಹಾಗೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು, ಜಿಲ್ಲೆಯ ಅಭಿವೃದ್ಧಿಯಾಗಲು ಸಾಧ್ಯ ಎಂದರು. +ಜಿಲ್ಲಾಧಿಕಾರಿಗಳು ಗಜೆಟಿಯರ್‌, ಎಕನಾಮಿಕ್‌ ಸರ್ವೇ ಓದಿದರೆ ಆ ಜಿಲ್ಲೆಯ ಇತಿಹಾಸ, ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯ. ಜಿಲ್ಲೆಯ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಿತಿಗಳ ಬಗ್ಗೆ ಅರಿತುಕೊಳ್ಳಬೇಕು. ಅಲ್ಲಿನ ಸಾಕ್ಷರತೆ, ಶಿಕ್ಷಣ, ತಲಾ ಆದಾಯ ಮೊದಲಾದವುಗಳ ಕುರಿತು ತಿಳಿದಿರಬೇಕು ಎಂದು ಹೇಳಿದರು. +ಇದು ಅಧಿಕಾರಿಗಳನ್ನು ಟೀಕೆ ಮಾಡಲು ಕರೆದ ಸಭೆ ಅಲ್ಲ. ಜಿಲ್ಲೆಯಲ್ಲಿ ಅಭಿವೃದ್ಧಿ ಯಾವ ರೀತಿ ಮಾಡಿದ್ದೀರಿ ಎಂದು ಪರಿಶೀಲಿಸಲು ಕರೆದ ಸಭೆ ಇದು. ಪ್ರತಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಡಿಸಿ, ಸಿಇಒ, ಎಸ್ಪಿ ಅಧಿಕಾರಿಗಳ ಪಾತ್ರ ದೊಡ್ಡದು. ಈ ಮೂರು ಜನರು ಸಮನ್ವಯದಿಂದ ಬೇರೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದರೆ ಅಭಿವೃದ್ಧಿ ವೇಗ ಪಡೆಯಲು ಸಾಧ್ಯ ಎಂದರು. +ನಾನು ಮಂತ್ರಿಯಾಗಿ 40 ವರ್ಷಗಳಾದವು. 40 ಕ್ಕೂ ಹೆಚ್ಚು ವರ್ಷಗಳಿಂದ ಅಧಿಕಾರಿಗಳ ಕಾರ್ಯ ವೈಖರಿಯನ್ನು ನೋಡುತ್ತಿದ್ದೇನೆ. ರಾಜಕಾರಣಿಗಳು, ಅಧಿಕಾರಿಗಳು ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಬೇಕು. ಆದರೆ ನಿರೀಕ್ಷಿತ ಮಟ್ಟದಲ್ಲಿ ಪರಿಣಾಮಕಾರಿಯಾಗಿಲ್ಲ. ಅವತ್ತು ಭ್ರಷ್ಟಾಚಾರ ಹೇಗಿತ್ತು, ಇವತ್ತು ಹೇಗಿದೆ ಎಂದು ನೋಡಿದಾಗ, ಕಾರ್ಯಾಂಗ ಮತ್ತು ಶಾಸಕಾಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬುದು ಕಂಡುಬರುತ್ತದೆ. +ಫ್ರೇಸರ್‌ ಎಂಬ ಅಧಿಕಾರಿಯ ಸಲಹೆ ಇಲ್ಲದೆ ನಾಲ್ವಡಿ ಕೃಷ್ಣರಾಜ ಒಡೆಯರ್‌, ಗಾಯಕ್‌ವಾಡ್‌, ಶಾಹು ಮಹಾರಾಜ ಮೊದಲಾದವರು ಒಳ್ಳೆಯ ಅರಸರೆಂದು ಹೆಸರುಗಳಿಸಲು ಸಾಧ್ಯವಾಗುತ್ತಿರಲಿಲ್ಲ. ಬಳ್ಳಾರಿಯಲ್ಲಿ ಮನ್ರೋ ಎಂಬ ಅಧಿಕಾರಿ ಕಲೆಕ್ಟರ್‌ ಆಗಿದ್ದರು. ಇಂದಿಗೂ ಅಲ್ಲಿನ ಜನ ತಮ್ಮ ಮಕ್ಕಳಿಗೆ ಅವರ ಹೆಸರಿಡುತ್ತಾರೆ. +ನಾವೆಲ್ಲರೂ ಜನಸೇವಕರು ಎಂಬ ಭಾವನೆಯಿಂದ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಾಗುತ್ತದೆ. ನಮ್ಮ ಜನರು ತಮ ಮಕ್ಕಳಿಗೆ ನಿಮ್ಮ ಹೆಸರು ಇಡುವ ರೀತಿಯಲ್ಲಿ ಗುಣಾತಕವಾಗಿ, ಪರಿಣಾಮಕಾರಿಯಾಗಿ ಕೆಲಸ ಮಾಡಲು ಅವಕಾಶಗಳಿವೆ, ನಿಮಿಂದ ಇದು ಸಾಧ್ಯವಿದೆ ಎಂದು ಹುರಿದುಂಬಿಸಿದರು. +ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯ ಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಮುಂದೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು. 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ವಿಷಾದಿಸಿದರು. +ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ . ಕರ್ನಾಟಕ ಗುಡ್‌ ಗೌರ್ನೆನ್‌್ಸನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ ಮೇಲಿದೆ ಎಂದರು. +ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ಸ್ಥಳೀಯವಾಗಿ ಸರಿಯಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಅರ್ಜಿಗಳು ತಮವರೆಗೂ ಬರುತ್ತಿರಲಿಲ್ಲ. ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ಮುಂದೂಡಿ ಮುಚ್ಚಳಿಕೆ ಕೊಟ್ಟು ಕೈ ತೊಳೆದುಕೊಳ್ಳಬಾರದು, ಸಮಸ್ಯೆಗಳಿಗೆ ಪರಿಹಾರ ಕೊಡಿಸಬೇಕು. +ಅರ್ಜಿಯನ್ನು ಮುಂದೂಡಿಕೆ ಮಾಡಲು ಡಿಸಿಗಳು, ಸಿಇಒಗಳು ಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿಯಾಗದೆ, ಗುಣಾತ್ಮಕವಾಗಿ ವಿಲೇವಾರಿ ಆಗದಿದ್ದರೆ ನಿಮ ವಿರುದ್ಧ ಕ್ರಮ ಖಚಿತ ಎಂದು ಹಿರಿಯ ಅಧಿಕಾರಿಗಳಿಗೆ ಎಚ್ಚರಿಸಿದರು. +ತಹಶೀಲ್ದಾರ್‌, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ ಡಿಸಿಗಳು, ಸಿಇಒಗಳು ಗಮನ ಹರಿಸಬೇಕು ಎಂದು ಆದೇಶಿಸಿದರು. +ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ ಆರ್‌ಆರ್‌ಟಿ (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ. ಡಿಸಿಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. ಡಿಸಿಗಳೇ ಬಾಕಿ ಉಳಿಸಿಕೊಂಡರೆ ಎಸಿಗಳು ಮತ್ತು ತಹಶೀಲ್ದಾರ್‌ ಗಳಿಗೆ ಡಿಸಿಗಳು ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು. +ಕೆಲವು ಡಿಸಿಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಇದೇ ರೀತಿ ಕೆಲಸ ಮಾಡಲು ಉಳಿದ ಅಧಿಕಾರಿಗಳಿಗೆ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಯವರು, ಜನರನ್ನು ಅನಗತ್ಯವಾಗಿ ಅಲೆದಾಡಿಸುವುದು ಹಾಗೂ ಕೆಲಸ ಮಾಡಿಕೊಡದೆ ಇರುವುದು ಕಂಡು ಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು. +ಬಡವರ ಬಗ್ಗೆ ಅನುಕಂಪ ಇರಬೇಕು. ಅಸಮಾನತೆ ನೀಗಿಸಲು ಪ್ರಯತ್ನಿಸಬೇಕು. ಬಸವಣ್ಣ, ಗಾಂಧೀಜಿ, ಅಂಬೇಡ್ಕರ್‌ ಅವರನ್ನು ಓದುತ್ತೇವೆ. ಸಂವಿಧಾನ ಅರಿತುಕೊಳ್ಳಬೇಕು ಎಂದು ಹೇಳುತ್ತೇವೆ. ಇದು ಕೇವಲ ಓದುವುದಕ್ಕಲ್ಲ; ಅನುಷ್ಠಾನ ಮಾಡುವುದಕ್ಕೆ ಎಂಬುದನ್ನು ಅರಿತುಕೊಳ್ಳಿ. ಈ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೀರಿ. ಪರಿಸ್ಥಿತಿ ಬದಲಾದಂತೆ ನಾವೂ ಬದಲಾಗಬೇಕು ಎಂದರು. \ No newline at end of file diff --git a/eesanje/url_46_84_4.txt b/eesanje/url_46_84_4.txt new file mode 100644 index 0000000000000000000000000000000000000000..851faeb8b812e5bad98b199b8a72761b1080d20f --- /dev/null +++ b/eesanje/url_46_84_4.txt @@ -0,0 +1,5 @@ +ಬೆಡ್‌ಶೀಟ್‌ ಸುತ್ತಿಕೊಂಡು ಎಟಿಎಂ ದೋಚಿದ ದರೋಡೆಕೋರರು +ಬೆಂಗಳೂರು,ಜು.8-ಬೆಡ್‌ಶೀಟ್‌ ಸುತ್ತಿಕೊಂಡು ಎಟಿಎಂನೊಳಗೆ ನುಗ್ಗಿದ ದರೋಡೆಕೋರರು ಎಟಿಎಂನಿಂದ 16.56 ಲಕ್ಷ ರೂ. ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಳ್ಳಂದೂರು ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. +ಬೆಳ್ಳಂದೂರಿನ ದೊಡ್ಡಕನ್ನಳ್ಳಿಯಲ್ಲಿರುವ ಆಕ್ಸಿಸ್‌‍ ಬ್ಯಾಂಕ್‌ ಎಟಿಎಂಗೆ ಮೊನ್ನೆ ಬೆಳಗಿನ ಜಾವ 3.30ರ ಸುಮಾರಿನಲ್ಲಿ ನುಗ್ಗಿದ ದರೋಡೆಕೋರರು ಒಳಬರುತ್ತಿದ್ದಂತೆ ತಮ ಚಹರೆ ಕಾಣಬಾರದು ಎಂದು ಸಿಸಿ ಕ್ಯಾಮರಾಗೆ ಕಪ್ಪು ಸ್ಪ್ರೇ ಸಿಂಪಡಿಸಿದ್ದಾರೆ. +ನಂತರ ಗ್ಯಾಸ್‌‍ ಕಟರ್‌ ಬಳಸಿ ಎಟಿಎಂ ಮಿಷಿನ್‌ ಅನ್ನು ಕತ್ತರಿಸಿ ಅದರಲ್ಲಿದ್ದಂತಹ 16,56,800 ರೂ. ಹಣ ಕದ್ದೊಯ್ದಿದ್ದಾರೆ.ದರೋಡೆಕೋರರು ಬೆಡ್‌ಶೀಟ್‌ ಸುತ್ತಿಕೊಂಡು ಎಟಿಎಂನೊಳಗೆ ಬಂದಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದರೋಡೆಕೋರರು ಹೊಸೂರಿನಲ್ಲಿ ಮತ್ತೊಂದು ಎಟಿಎಂನಲ್ಲಿ ದರೋಡೆ ಮಾಡಿರುವುದು ಗೊತ್ತಾಗಿದೆ. +ಸುದ್ದಿ ತಿಳಿದು ಬೆಳ್ಳಂದೂರು ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.ದರೋಡೆಕೋರರು ಯಾವ ರಸ್ತೆ ಮೂಲಕ ಎಟಿಎಂ ಬಳಿ ಬಂದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. \ No newline at end of file diff --git a/eesanje/url_46_84_5.txt b/eesanje/url_46_84_5.txt new file mode 100644 index 0000000000000000000000000000000000000000..bb78faeb03a9d1dee5329deefa7c0968dc76f021 --- /dev/null +++ b/eesanje/url_46_84_5.txt @@ -0,0 +1,9 @@ +ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಹೇಗೆ ನಿಲ್ಲಿಸಲು ಸಾಧ್ಯ..? : ಪರಮೇಶ್ವರ್‌ +ಬೆಂಗಳೂರು,ಜು.8-ಸರ್ಕಾರದ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿಗೊಳಿಸುವಂತೆ ಕೇಂದ್ರ ಸರ್ಕಾರ ಮೊದಲು ಸೂಚನೆ ನೀಡಲಿ,ಅನಂತರ ರಾಜ್ಯಸರ್ಕಾರ ಆ ಕುರಿತು ಪರಿಶೀಲನೆ ನಡೆಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.ರಾಜ್ಯದ ಆಡಳಿತ ನಡೆಸಲು ಜನ ನಮನ್ನು ಆಯ್ಕೆ ಮಾಡಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸಲು ಬಿಜೆಪಿಯವರನ್ನು ಆಯ್ಕೆ ಮಾಡಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಹೇಗೆ ನಿರ್ದೇಶನ ನೀಡಲು ಸಾಧ್ಯ ಎಂದು ಪ್ರಶ್ನಿಸಿದರು. +ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್‌ ಅವರು ಕೇಂದ್ರಸರ್ಕಾರಕ್ಕೆ ಪತ್ರ ಬರೆದು, ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಆರ್ಥಿಕ ಸಂಕಷ್ಟ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ನಾವು ಬಗೆಹರಿಸಿಕೊಳ್ಳುತ್ತೇವೆ. ಆಡಳಿತ ನಡೆಸುವವರು ನಾವು. +ಪಂಚಖಾತ್ರಿಗಳನ್ನು ವಿಧಿಸುತ್ತವೆ ಎಂದು ಎಂದೂ ಹೇಳಿಲ್ಲ. ಯೋಜನೆಗಾಗಿ 52 ಸಾವಿರ ಕೋಟಿ ರೂ.ಗಳನ್ನು ನಿಗದಿ ಮಾಡಿದ್ದೇವೆ. ಇದರ ಸಾಧಕ-ಬಾಧಕಗಳನ್ನು ನಾವೇ ನಿಭಾಯಿಸಿಕೊಳ್ಳುತ್ತೇವೆ. ಅದನ್ನು ಮೀರಿ ಕೇಂದ್ರ ಸರ್ಕಾರ ಯಾವ ಆಧಾರದ ಮೇಲೆ ನಿರ್ದೇಶನ ನೀಡಲು ಸಾಧ್ಯವಿದೆ. ಮೊದಲು ಆ ರೀತಿಯ ನಿರ್ದೇಶನ ಕೊಡಲಿ ಎಂದು ಸವಾಲು ಹಾಕಿದರು. +ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಆದರೆ ಅಕ್ಕಿ ಖರೀದಿಗೆ ರಾಜ್ಯಸರ್ಕಾರದ ಬಳಿ ಹಣವೇ ಇಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್‌ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್‌ ಅವರು, ಪ್ರಹ್ಲಾದ್‌ ಜೋಷಿಯವರು ಅಕ್ಕಿ ನೀಡಲು ಸಿದ್ಧ ಎಂದು ನಾಳೆಯೇ ಪತ್ರ ಬರೆಯಲಿ, ನಾವು ಹೇಗೆ ಸ್ಪಂದಿಸುತ್ತೇವೆ ಎಂದು ಗೊತ್ತಾಗುತ್ತದೆ ಎಂದರು. +ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಯಾವುದನ್ನೂ ಮುಚ್ಚಿ ಹಾಕಲು ರಾಜ್ಯಸರ್ಕಾರ ಯತ್ನಿಸುತ್ತಿಲ್ಲ. ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಮದು ತೆರೆದ ಪುಸ್ತಕವಾಗಿದೆ. ಈ ಬಗ್ಗೆ ಪದೇಪದೇ ಹೇಳುವ ಅಗತ್ಯವಿಲ್ಲ. ಕುಮಾರಸ್ವಾಮಿಯವರು ನೀಡುತ್ತಿರುವ ಹೇಳಿಕೆಯ ಬಗ್ಗೆಯೂ ನಮಗೆ ಮಾಹಿತಿ ಇಲ್ಲ ಎಂದು ಹೇಳಿದರು.ಯಾವುದೇ ಹಗರಣ ನಡೆಯದೇ ಇದ್ದ ಮೇಲೆ ಎಸ್‌‍ಐಟಿಯಾಗಲೀ, ಸಿಬಿಐ ತನಿಖೆಯಾಗಲೀ ಅಗತ್ಯವಿಲ್ಲ ಎಂದರು. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಅಗತ್ಯ ರಾಜ್ಯಸರ್ಕಾರಕ್ಕಿಲ್ಲ. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಮಾಧ್ಯಮದವರು ಹೇಳಿದರು ಎಂದು ಫಾಸ್ಟ್‌ ಫಾರ್ಫರ್ಡ್‌ ಮಾಡಿಕೊಂಡು ತನಿಖೆ ಮಾಡಲಾಗುವುದಿಲ್ಲ. ಅದಕ್ಕೆ ತನ್ನದೇ ಆದ ಪ್ರಕ್ರಿಯೆಗಳಿವೆ. ಅದನ್ನು ಆಧರಿಸಿ ದೋಷಾರೋಪಣ ಪಟ್ಟಿ ಸಲ್ಲಿಸುತ್ತಾರೆ. ಸಮರ್ಪಕ ಸಾಕ್ಷಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಹೇಳಿದರು. +ನಾವು ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಹೈಕಮಾಂಡ್‌ನ ನಾಯಕರನ್ನು ಭೇಟಿ ಮಾಡಿದ್ದೇವೆ. ರಾಜ್ಯಸರ್ಕಾರದ ಆಡಳಿತಕ್ಕೆ ವರಿಷ್ಠರು ಶಹಬ್ಬಾಸ್‌‍ಗಿರಿ ನೀಡಿದ್ದಾರೆ. ಇದರ ಹೊರತಾಗಿ ಹುದ್ದೆಗಳ ವಿಚಾರವಾಗಿ ಚರ್ಚೆ ಮಾಡಬೇಕು ಎಂದು ಯಾವ ನಿರ್ದೇಶನಗಳನ್ನೂ ನೀಡಿಲ್ಲ. ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡುತ್ತಿದ್ದೀರಾ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕಳುಹಿಸಿದ್ದಾರೆ ಎಂದರು. +ಪಿಎಎಸ್‌‍ಐ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಹಿಂದೆ ಮೂರು ಅಧಿಸೂಚನೆಗಳನ್ನು ಹೊರಡಿಸಲಾಗಿದ್ದು, ಆ ವಿಷಯದಲ್ಲಿ ಏನೆಲ್ಲಾ ನಡೆದಿದೆ ಎಂದು ಎಲ್ಲರಿಗೂ ಗೊತ್ತು. ಮರುಪರೀಕ್ಷೆಯಾಗಿದೆ. ನ್ಯಾಯಾಲಯ ನಿರ್ದೇಶನ ನೀಡಿದೆ. ಅಂತಿಮವಾಗಿ ಪಟ್ಟಿ ತಯಾರಾಗಿದೆ. ಅಂತಿಮವಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಕೆಲ ಸ್ಪಷ್ಟನೆಗಳನ್ನು ಕೇಳಿದೆ. ಅದನ್ನು ನೀಡಿದ ಮೇಲೆ ನೇಮಕಾತಿ ಆದೇಶ ನೀಡಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_46_84_6.txt b/eesanje/url_46_84_6.txt new file mode 100644 index 0000000000000000000000000000000000000000..fa634e53c373a43f684e5041190e71c06b32bb2c --- /dev/null +++ b/eesanje/url_46_84_6.txt @@ -0,0 +1,5 @@ +ಹುಬ್ಬಳ್ಳಿಯಲ್ಲಿ ಡೆಂಘೀಗೆ ನಾಲ್ವರು ಸಾವು +ಹುಬ್ಬಳ್ಳಿ,ಜು.8-ದಿನದಿಂದ ದಿನಕ್ಕೆ ಮಾರಕ ರೋಗ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ರಾಜ್ಯಾದ್ಯಂತ ಸಾವಿರಾರು ಜನ ಡೆಂಘೀ ಲಕ್ಷಣಗಳಿಂದ ನಲುಗುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಡೆಂಘೀ ಕಾಯಿಲೆಯಿಂದ ನಾಲ್ವರು ಮೃತಪಟ್ಟಿರುವುದಾಗಿ ಹುಬ್ಬಳ್ಳಿ ಕಿಮ್ಸ್‌‍ ಆಸ್ಪತ್ರೆ ನಿರ್ದೇಶಕ ಡಾ.ಎಸ್‌‍.ಎಸ್‌‍.ಕಮಾರ್‌ ಹೇಳಿದ್ದಾರೆ. +ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಕ್ಕಳ ವಾರ್ಡ್‌ನಲ್ಲಿ ಡೆಂಘೀಯಿಂದ ನಾಲ್ವರು ಮೃತಪಟ್ಟಿದ್ದಾರೆ. ಕಿಮ್ಸ್‌‍ ಆಸ್ಪತ್ರೆಯ ಮೆಡಿಸನ್‌ ವಾರ್ಡ್‌ನಲ್ಲಿ ಯಾವುದೇ ಸಾವು ಆಗಿಲ್ಲ ಎಂದು ತಿಳಿಸಿದ್ದಾರೆ. +ಧಾರವಾಡ ಜಿಲ್ಲೆಯಲ್ಲಿ ಡೆಂಘೀಯಿಂದ ಯಾವುದೇ ಸಾವು ಸಂಭವಿಸಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. +ಸದ್ಯ ಮೆಡಿಸನ್‌ ವಾರ್ಡ್‌ನ ಐಸಿಯುವಿನಲ್ಲಿ ಇಬ್ಬರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳ ವಾರ್ಡ್‌ನ ಐಸಿಯುವಿನಲ್ಲಿ 18 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_46_84_7.txt b/eesanje/url_46_84_7.txt new file mode 100644 index 0000000000000000000000000000000000000000..950f450d372d4e3e84ebf0842eb4ac980f15f846 --- /dev/null +++ b/eesanje/url_46_84_7.txt @@ -0,0 +1,8 @@ +ಮೈ ಶುಗರ್‌ ಸಕ್ಕರೆ ಕಾರ್ಖಾನೆ ವಿದ್ಯುತ್‌ ಬಿಲ್‌ ಮನ್ನಾ ಮಾಡುವ ಕಡತ ಮಂಡನೆಗೆ ಸಿಎಂ ಸೂಚನೆ +ಬೆಂಗಳೂರು,ಜು.8-ಮಂಡ್ಯದ ಮೈ ಶುಗರ್‌ ಸಕ್ಕರೆ ಕಾರ್ಖಾನೆಯ ವಿದ್ಯುತ್‌ ಬಿಲ್‌ ಬಾಕಿಯನ್ನು ಮನ್ನಾ ಮಾಡುವ ಬಗ್ಗೆ ಪರಿಶೀಲಿಸಿ, ಕಡತ ಮಂಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. +ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಅವರು ಮೈಶುಗರ್‌ ಸಕ್ಕರೆ ಕಾರ್ಖಾನೆಯ ಬಾಕಿ ವಿದ್ಯುತ್‌ ಬಿಲ್‌ ಅನ್ನು ಮನ್ನಾ ಮಾಡುವಂತೆ ಮಾಡಿರುವ ಮನವಿಗೆ ಮುಖ್ಯಮಂತ್ರಿಗಳು, ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ತರಲು ಕ್ರಮ ವಹಿಸುವಂತೆ ಸೂಚಿಸಿದ್ದಾರೆ. +ಮಂಡ್ಯ ಮೈ ಶುಗರ್‌ ಕಾರ್ಖಾನೆ ಕಳೆದ 25 ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟಿಲ್ಲ. ಹೀಗಾಗಿ 52.25 ಕೋಟಿ ರೂ. ಬಾಕಿ ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿಯು ಮೈಶುಗರ್‌ ಸಕ್ಕರೆ ಕಾರ್ಖಾನೆಗೆ ನೋಟಿಸ್‌‍ ನೀಡಿತ್ತು. ರೈತರ ಹಿತ ದೃಷ್ಟಿಯಿಂದ ಕಾರ್ಖಾನೆ ಉಳಿಸಿಕೊಳ್ಳುವುದು ಅವಶ್ಯವಾಗಿದ್ದು, ವಿದ್ಯುತ್‌ ಬಿಲ್‌ ಮನ್ನಾ ಮಾಡಬೇಕು ಎಂದು ದಿನೇಶ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. +ಮನವಿ ಪತ್ರದಲ್ಲೇನಿತ್ತು? :ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್‌ ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. +ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್‌ ಬಿಲ್‌ 52.25 ಕೋಟಿ ರೂಪಾಯಿಯನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದರು. +ಕಾರ್ಖಾನೆ ಕೆಲವು ಅನಿವಾರ್ಯ ಕಾರಣಗಳಿಂದ ಕಳೆದ 25 ವರ್ಷಗಳಿಂದ ವಿದ್ಯುತ್‌ ಬಿಲ್‌ ಕಟ್ಟಿಲ್ಲ. 52.25 ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್‌‍ ನೀಡಿದೆ. ವಿದ್ಯುತ್‌ ಪಾವತಿ ಮಾಡುವಂತೆ ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂಪಾಯಿ ನಷ್ಟದಲ್ಲಿದೆ. +ಅಷ್ಟೊಂದು ಹಣವನ್ನು ವಿದ್ಯುತ್‌ ಬಿಲ್‌ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಇದರಿಂದ ಈಗಾಗಲೇ ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು ಎಂದು ದಿನೇಶ್‌ ಗೂಳಿಗೌಡ ಅವರು ಮನವಿ ಪತ್ರದಲ್ಲಿ ಸಮಸ್ಯೆಗಳ ತೀವ್ರತೆಯನ್ನು ತಿಳಿಸಿದ್ದರು. \ No newline at end of file diff --git a/eesanje/url_46_84_8.txt b/eesanje/url_46_84_8.txt new file mode 100644 index 0000000000000000000000000000000000000000..f8ce23a43a7f25ff63be67cfd4185af944cf388e --- /dev/null +++ b/eesanje/url_46_84_8.txt @@ -0,0 +1,6 @@ +ಡೆಂಘೀ ನಿಯಂತ್ರಣಕ್ಕೆ ಕ್ರಮ ವಹಿಸಲು ಗ್ರಾಮ ಪಂಚಾಯತಿಗಳಿಗೆ ಸೂಚನೆ +ಬೆಂಗಳೂರು,ಜು.7-ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ವರದಿ ಯಾಗುತ್ತಿರುವ ಹಿನ್ನೆಲೆ ಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ. +ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ. +ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು, ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು, ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಛಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. +ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಮತ್ತು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು, ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮಿಕೊಳ್ಳಬೇಕು ಎಂದು ಸಚಿವರು ತಮ ಮಾರ್ಗದರ್ಶನ ಸೂಚಿಯಲ್ಲಿ ತಿಳಿಸಿದ್ದಾರೆ. +ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಗಳನ್ನು ಡೆಂಘೀ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಪಂಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_84_9.txt b/eesanje/url_46_84_9.txt new file mode 100644 index 0000000000000000000000000000000000000000..240453f78b307f86d87aaf4911c75ede9c83b917 --- /dev/null +++ b/eesanje/url_46_84_9.txt @@ -0,0 +1,6 @@ +ರಾಜ್ಯದಲ್ಲಿ ಡೆಂಘೀಗೆ ಮತ್ತಿಬ್ಬರು ಬಲಿ +ಬೆಂಗಳೂರು,ಜು.7-ರಾಜ್ಯದಲ್ಲಿ ಮಹಾಮಾರಿ ಡೆಂಘೀ ಅಬ್ಬರ ಜೋರಾಗಿದ್ದು, ಅದರಲ್ಲೂ ಮಕ್ಕಳೇ ಬಲಿಯಾಗುತ್ತಿದ್ದು, ಗದಗ ಜಿಲ್ಲೆಯಲ್ಲಿ ಬಾಲಕನೊಬ್ಬ ಸೋಂಕಿಗೆ ಮೃತಪಟ್ಟಿದ್ದರೆ, ಹಾಸನ ಜಿಲ್ಲೆಯಲ್ಲಿ ಯುವತಿಯೊಬ್ಬಳು ಬಲಿಯಾಗಿದ್ದು, ಆತಂಕ ಹೆಚ್ಚಿಸಿದೆ.ಹಾಸನ ಜಿಲ್ಲೆಯಲ್ಲಿ ಇದುವರೆಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಇದೀಗ ಯುವತಿಯೊಬ್ಬಳು ಬಲಿಯಾಗಿರುವ ಘಟನೆ ವರದಿಯಾಗಿದೆ. +ಹಾಸನ ಜಿಲ್ಲೆಯಲ್ಲಿ ಇದುವರೆಗೆ ಐವರು ಸಾವನ್ನಪ್ಪಿದ್ದು, ನಿಯಂತ್ರಣಕ್ಕೆ ಜಿಲ್ಲಾಡಳಿತ ಹರಸಾಹಸ ಪಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. 224 ಮಂದಿಗೆ ಸೋಂಕು ಪತ್ತೆಯಾಗಿದೆ.ಹೆಚ್ಚಾಗಿ ಮಕ್ಕಳೇ ಶಂಕಿತ ಸೋಂಕಿಗೆ ಬಲಿಯಾಗಿದ್ದಾರೆ. ಗದಗ ತಾಲೂಕಿನ ಶಿರುಂಜ ಗ್ರಾಮಕ್ಕೂ ಸಹ ಸೋಂಕು ಆವರಿಸಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕ ಮೃತಪಟ್ಟಿದ್ದಾನೆ. +ತೀವ್ರತರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಗದಗದ ಜಿಮ್ಸೌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.ನಿನ್ನೆ ಒಂದೇ ದಿನ 175 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ 115 ಜನರಿಗೆ ಡೆಂಘೀ ಪತ್ತೆಯಾಗಿದೆ.ರಾಜ್ಯದಲ್ಲಿ ಇದುವರೆಗೆ 7 ಸಾವಿರ ಜನರಿಗೆ ಡೆಂಘೀ ಸೋಂಕು ತಗುಲಿದ್ದು, ಜನರಲ್ಲಿ ತೀವ್ರ ಆತಂಕ ಮನೆಮಾಡಿದೆ. +ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಡೆಂಘೀ ಹರಡುವ ಪ್ರದೇಶಗಳಲ್ಲಿ ಲಾರ್ವಾ ಸರ್ವೆ ಮಾಡಲಾಗುತ್ತಿದ್ದು, ಲಾರ್ವಾ ಸೊಳ್ಳೆ ನಾಶಕ್ಕೆ ಫಾಗಿಂಗ್ ಮಾಡಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೂ ಸಹ ಸೊಳ್ಳೆಗಳ ನಿಯಂತ್ರಣಕ್ಕೆ ಪಾಲಿಕೆ ಅಗತ್ಯ ಕ್ರಮ ಕೈಗೊಂಡಿದ್ದು, ದಿನಕ್ಕೆ 2-3 ಬಾರಿ ಫಾಗಿಂಗ್ ಮಾಡಲಾಗುತ್ತಿದೆ. +ಯಾವುದೇ ಕಾರಣಕ್ಕೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಕ್ರಮ ವಹಿಸಿ, ಸೊಳ್ಳೆಗಳ ಉತ್ಪತ್ತಿಯಾಗದಂತೆ ಎಚ್ಚರ ವಹಿಸಿ. ಆದಷ್ಟು ಮಕ್ಕಳನ್ನು ಸುರಕ್ಷತೆಯಿಂದ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿದೆ. \ No newline at end of file diff --git a/eesanje/url_46_85_1.txt b/eesanje/url_46_85_1.txt new file mode 100644 index 0000000000000000000000000000000000000000..c6d86fa3e92859112d61c557414760a254e162af --- /dev/null +++ b/eesanje/url_46_85_1.txt @@ -0,0 +1,8 @@ +ಮೋದಿ ಸರ್ಕಾರದ ಜೊತೆ ಸಿದ್ದರಾಮಯ್ಯ ಅನಗತ್ಯವಾಗಿ ಕಾಲುಕೆರೆದು ಜಗಳಮಾಡುತ್ತಿದ್ದಾರೆ : ಕೇಂದ್ರ ಸಚಿವ ಹೆಚ್ಡಿಕೆ +ಬೆಂಗಳೂರು, ಜು.7– ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅನಗತ್ಯವಾಗಿ ಕಾಲುಕೆರೆದು ಜಗಳ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. +ಕೇಂದ್ರದ ಜೊತೆ ಸುಖಾಸುಮನೆ ಜಗಳ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಎಲ್ಲಾ ರಾಜ್ಯಗಳು ಕೇಂದ್ರದ ಜೊತೆ ಸೌಹಾರ್ದಯುತವಾದ ವಾತಾವರಣ ಮೂಡಿಸಿ ಕೆಲಸ ಮಾಡಿಕೊಳ್ಳುತ್ತವೆ. ಕರ್ನಾಟಕದಲ್ಲಿ ಸಿದ್ದರಾಮಯ್ಯನವರ ಸರ್ಕಾರ ಕೇಂದ್ರದ ಜೊತೆ ದುರದ್ದೇಶಪೂರ್ವಕವಾಗಿ ಟೀಕೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಕುಮಾರಸ್ವಾಮಿ ದೂಡಿದ್ದಾರೆ. +ಪಿಟಿಐಗೆ ಸಂದರ್ಶನ ನೀಡಿರುವ ಅವರು ಕೇಂದ್ರದ ಜೊತೆ ನೀವು ಜಗಳ ಮಾಡುವುದರಿಂದ ಯಾವ ಪ್ರಯೋಜನವೂ ಇಲ್ಲ. ಅಲ್ಲಿನ ಸರ್ಕಾರದ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆದರೆ ರಾಜ್ಯಕ್ಕೆ ಅನುಕೂಲವಾಗಲಿದೆ. ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಎಂಬ ಮಾತ್ರಕ್ಕೆ ಪ್ರತಿ ದಿನ ಕುಂಟು ಲಾಭ ಹೇಳುತ್ತಿದ್ದಾರೆ. ಇದರಿಂದ ನಿಮಗೆ ಏನು ಲಾಭ ಸಿಗುತ್ತದೆ ಎಂದು ಪ್ರಶ್ನಿಸಿದ್ದಾರೆ. +ಅನಗತ್ಯವಾಗಿ ನೀವು ಕೇಂದ್ರದ ಜೊತೆ ಸಂಘರ್ಷ ಮಾಡುವುದನ್ನು ನಿಲ್ಲಿಸಿ. ಅಧಿಕಾರಕ್ಕೆ ಬಂದ ಮೊದಲ ದಿನವೇ ಟೀಕೆ ಮಾಡುವುದು, ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. +ಏನೇ ಸಮಸ್ಯೆಗಳಿದ್ದರೂ ಕೂತು ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಆದರೆ ಕಾಂಗ್ರೆಸ್‌‍ ನಾಯಕರು, ಕೇಂದ್ರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಹೊರತು ಕಾಂಗ್ರೆಸ್‌‍ ಪಕ್ಷಕ್ಕೆ ಅಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಮಾತಿನಲ್ಲೇ ಛಾಟಿ ಬೀಸಿದ್ದಾರೆ. +ಕೇಂದ್ರದಲ್ಲಿ ಆಡಳಿತಾರೂಢ ಎನ್‌ಡಿಎಯ ಭಾಗವಾಗಿರುವ ಜೆಡಿ (ಎಸ್‌‍) ನಾಯಕ, ಪ್ರಧಾನಿ ನರೇಂದ್ರ ಮತ್ತು ಬಿಜೆಪಿ ನಾಯಕತ್ವವು ತನ್ನ ಮೇಲೆ ವಿಶ್ವಾಸವನ್ನು ಹೊಂದಿದೆ ಮತ್ತು ಅವರ ನಿರೀಕ್ಷೆಗಳನ್ನು ಈಡೇರಿಸಲು ಅವರು ಬಯಸುತ್ತಾರೆ ಎಂದು ಹೇಳಿದರು.ಯುವ ಪೀಳಿಗೆಗೆ ಉದ್ಯೋಗ ಸೃಷ್ಟಿಸುವುದು ಪ್ರಧಾನಮಂತ್ರಿಯವರ ದೃಷ್ಟಿಯಾಗಿದೆ ಮತ್ತು ಅದರ ಬಗ್ಗೆ ನಾನು ಕೂಡ ಗಮನಹರಿಸಿದ್ದೇನೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೇರಿಸಿದರು.ಲೋಕಸಭೆ ಚುನಾವಣೆಯ ನಂತರ ಪ್ರಧಾನಿ, ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಮೇಲೆ ಸ್ವಲ್ಪ ವಿಶ್ವಾಸವಿದೆ ಎಂದು ಕುಮಾರಸ್ವಾಮಿ ಹೇಳಿದರು. +ಜಿಡಿಪಿ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಎರಡು ಸೂಕ್ಷ್ಮ ಇಲಾಖೆಗಳ ಜವಾಬ್ದಾರಿಯನ್ನು ಪ್ರಧಾನಿ ನನಗೆ ನೀಡಿದ್ದಾರೆ. ಉಕ್ಕು ಮತ್ತು ಭಾರೀ ಕೈಗಾರಿಕೆ ಇಲಾಖೆಗಳನ್ನು ವಹಿಸಿರುವುದರಿಂದ ತಮ ಇಲಾಖೆಯ ಅಧ್ಯಯನಕ್ಕೆ ಕನಿಷ್ಠ ಮೂರು ತಿಂಗಳ ಅಗತ್ಯವಿದೆ ಎಂದರು. \ No newline at end of file diff --git a/eesanje/url_46_85_10.txt b/eesanje/url_46_85_10.txt new file mode 100644 index 0000000000000000000000000000000000000000..c10e6acb899b0aee6575b2d3dd96d3f187c0a83f --- /dev/null +++ b/eesanje/url_46_85_10.txt @@ -0,0 +1,11 @@ +ಡ್ರಗ್ಸ್, ಬೆಟ್ಟಿಂಗ್‌ ದಂಧೆಗೆ ಕಡಿವಾಣ ಹಾಕದಿದ್ದರೆ ಪೊಲೀಸ್‌‍ ಅಧಿಕಾರಿಗಳೇ ಹೊಣೆ : ಸಿಎಂ ಖಡಕ್‌ ಎಚ್ಚರಿಕೆ +ಬೆಂಗಳೂರು,ಜು.6-ತಮ್ಮ ವ್ಯಾಪ್ತಿಯಲ್ಲಿನ ಕ್ಲಬ್‌, ಇಸ್ಪೀಟು, ಬೆಟ್ಟಿಂಗ್‌, ಡ್ರಗ್ಸ್ ದಂಧೆಗಳನ್ನು ನಿಲ್ಲಿಸದಿದ್ದರೆ ಎಸ್ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದರು. +ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರ ಕಚೇರಿಯಲ್ಲಿ 2024 ರ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಎಸ್ಪಿ ಮತ್ತು ಐಜಿ ಮಟ್ಟದ ಅಧಿಕಾರಿಗಳು ಪ್ರತಿ ಠಾಣೆಗಳಿಗೆ ಹೋಗಿ ಪರಿಶೀಲನೆ ನಡೆಸಿದರೆ ನಿಮ ವ್ಯಾಪ್ತಿಯಲ್ಲಿನ ಕ್ಲಬ್‌, ಇಸ್ಪೀಟ್‌, ಬೆಟ್ಟಿಂಗ್‌ ದಂಧೆಗಳನ್ನು ತಪ್ಪಿಸಬಹುದು ಎಂದು ಹೇಳಿದರು. +ಎಸ್ಪಿ-ಡಿಸಿಪಿ-ಐಜಿಗಳು ಪೊಲೀಸ್‌‍ ಮ್ಯಾನುಯೆಲ್‌ ವ್ಯಾಪ್ತಿಯ ಪ್ರಕಾರ, ಪ್ರತೀ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಸ್ಪಷ್ಟ ಸೂಚನೆ ನೀಡಿದ ಸಿಎಂ, ನಾಳೆಯಿಂದಲೇ ಠಾಣೆಗಳಿಗೆ ಭೇಟಿ ನೀಡಬೇಕು, ಅರ್ಧಗಂಟೆಯಲ್ಲಿ ಶಾಸ್ತ್ರ ಮುಗಿಸಬಾರದು, ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಎಚ್ಚರಿಸಿದರು. +ಫೇಕ್‌ ನ್ಯೂಸ್‌‍ ಪ್ರಸಾರ ತಡೆಗಟ್ಟಿ :ಫೇಕ್‌ ನ್ಯೂಸ್‌‍ಗಳು ಸಮಾಜದ ನೆಮದಿಗೆ ಕಂಠಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ ಫ್ಯಾಕ್ಟ್‌ಚೆಕ್‌ ಘಟಕಗಳನ್ನು ಮಾಡಿದ್ದೇವೆ, ಆದರೂ ಫೇಕ್‌ ನ್ಯೂಸ್‌‍ಗಳು ಹೆಚ್ಚಾಗುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್‌ ನ್ಯೂಸ್‌‍ ತಡೆಯಲು ಆಗುತ್ತಿರುವ ಕೆಲಸ ಸಾಕಾಗುತ್ತಿಲ್ಲ ಎಂದು ಎಚ್ಚರಿಸಿದರು.ಕೃತಕ ಬುದ್ಧಿಮತ್ತೆ ಬಳಸಿ ಸ್ವಯಂಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದೂರುಗಳನ್ನು ದಾಖಲಿಸಿ, ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕೆಂದು ಸ್ಪಷ್ಟ ಸೂಚನೆ ನೀಡಿದರು. +ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ? :ಡ್ರಗ್‌್ಸ ಮಾರುವವರು ಯಾರು?, ರೌಡಿಗಳು ಯಾರು, ರಿಯಲ್‌ ಎಸ್ಟೇಟ್‌ ಮಾಡುವವರು ಯಾರು ಎನ್ನುವುದು ಆಯಾ ಠಾಣಾ ಅಧಿಕಾರಿಗಳಿಗೆ ಗೊತ್ತಿರುತ್ತೆ. ಆದರೂ ಏಕೆ ನಿಲ್ಲುತ್ತಿಲ್ಲ ಎಂದು ಪ್ರಶ್ನಿಸಿದರು. ನಿಮಗೆ ಗನ್‌ಗಳನ್ನು ಕೊಟ್ಟಿರುವುದು ಏಕೆ?, ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ?, ರೌಡಿಗಳಿಗೆ ಪೊಲೀಸ್‌‍ ಭಯವಿರಬೇಕು ಎಂದು ಎಚ್ಚರಿಸಿದರು.ಕೆಲವು ಪೊಲೀಸರಿಗೆ ಇ-ಬೀಟ್‌ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆ ನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. +ತಪ್ಪುಗಳನ್ನು ಸರಿಮಾಡಿಕೊಂಡು ಗುಣಾತಕ ಪೊಲೀಸ್‌‍ ವ್ಯವಸ್ಥೆ ಗಟ್ಟಿಗೊಳಿಸುವ ಮೂಲಕ ದೇಶದಲ್ಲಿ ಕರ್ನಾಟಕ ಪೊಲೀಸ್‌‍ಗೆ ಇರುವ ಉನ್ನತ ಹೆಸರನ್ನು ಉಳಿಸಿ-ಬೆಳೆಸಬೇಕು ಎಂದರು.ಸಮಾಜದಲ್ಲಿ ಎಲ್ಲರೂ ನಿಶ್ಚಿಂತೆಯಿಂದ, ಭಯ ಮುಕ್ತವಾಗಿ ವಾಸಿಸುವ ವಾತಾವರಣ ಇರಬೇಕು. ಮಹಾತಗಾಂಧಿ ಅವರ ಮಾತು ಪ್ರಸ್ತಾಪಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. +ಕಾನೂನು ಸುವ್ಯವಸ್ಥೆ ಸುರಕ್ಷಿತವಾಗಿದ್ದರೆ ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ ಸೃಷ್ಟಿ ಸಾಧ್ಯ. ಇವೆಲ್ಲದರಿಂದ ತಲಾ ಆದಾಯ, ಜಿಡಿಪಿ ಬೆಳವಣಿಗೆ ಆಗುತ್ತ್ತದೆ. ನಮ ಸಮಾಜ ಜಾತಿ ವ್ಯವಸ್ಥೆಯಿಂದಾಗಿ ಅಸಮಾನತೆಯಿಂದ ಕೂಡಿದೆ. ಹಿರಿಯ ಪೊಲೀಸ್‌‍ ಅಧಿಕಾರಿಗಳು ನಿಮ ಜವಾಬ್ದಾರಿಗಳನ್ನು, ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದರೆ ನಿಮ ಕೆಳಗಿನ ಅಧಿಕಾರಿಗಳು ಇನ್ನಷ್ಡು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಬೀಟ್‌ ವ್ಯವಸ್ಥೆ, ಸಂಚಾರ ವ್ಯವಸ್ಥೆ, ಹೈವೇ ಪ್ಯಾಟೋಲಿಂಗ್‌ ವ್ಯವಸ್ಥೆಯನ್ನು ತೀವ್ರ ಪರಿಣಾಮಕಾರಿಯಾಗಿ ನಿರ್ವಹಿಸಲು ಸೂಚನೆ ನೀಡಿದರು. +ಹುಬ್ಬಳ್ಳಿಯಲ್ಲಿ ಒಂದರ ಹಿಂದೆ ಮತ್ತೊಂದು ಕೊಲೆಗಳು ನಡೆದವು. ಇಂಟೆಲಿಜೆಂಟ್‌ ಪೊಲೀಸರು ಎಚ್ಚರ ಇದ್ದಿದ್ದರೆ ಎರಡನೇ ಕೊಲೆ ತಪ್ಪಿಸಬಹುದಿತ್ತು. ಅದಕ್ಕೇ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಬೇಕಾಯಿತು. ಇವರ ನಿರ್ಲಕ್ಷ್ಯದಿಂದ ಕೊಲೆ ಆಗಿದೆ. ಈ ಕೊಲೆ ತಪ್ಪಿಸಬಹುದಿತ್ತು ಎಂದರು. +ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್‌‍ಗೆ ಅಭಿನಂದಿಸಿದ ಸಿಎಂ :ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ಕೋಮುಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದಕ್ಕೆ ಗೃಹ ಸಚಿವರಿಗೆ, ಕರ್ನಾಟಕ ಪೊಲೀಸ್‌‍ಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು. +ಗೃಹ ಸಚಿವ ಜಿ.ಪರಮೇಶ್ವರ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌‍, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್‌‍.ಆರ್‌.ಉಮಾಶಂಕರ್‌, ಡಿಜಿ-ಐಜಿ ಡಾ.ಅಲೋಕ್‌ ಮೋಹನ್‌‍, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕ್‌ ಚಂದ್ರ ಅವರುಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_85_11.txt b/eesanje/url_46_85_11.txt new file mode 100644 index 0000000000000000000000000000000000000000..dfb66b540ba8d14966349b401efc5474949deecd --- /dev/null +++ b/eesanje/url_46_85_11.txt @@ -0,0 +1,5 @@ +ಕಬಿನಿ, ಕೆಆರ್‌ಎಸ್‌‍ನಲ್ಲಿ ನೀರಿನ ಮಟ್ಟ ಹೆಚ್ಚಳ +ಬೆಂಗಳೂರು,ಜು.6-ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, ಕೇರಳ, ಕೊಡಗು, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳ ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿದೆ. ಕಬಿನಿ ಜಲಾಶಯ ಭರ್ತಿಯಾಗಲು ಕೇವಲ 3 ಅಡಿ ಮಾತ್ರ ಬಾಕಿಯಿದೆ. 2284 ಅಡಿ ಗರಿಷ್ಠ ಸಾಮರ್ಥ್ಯ ಇರುವ ಕಬಿನಿ ಜಲಾಶಯದಲ್ಲಿ ಇಂದು 2281.32 ಅಡಿ ಸಂಗ್ರಹವಾಗಿದೆ. ಅಂದರೆ 19.52 ಟಿಎಂಸಿ ಗರಿಷ್ಠ ಸಾಮರ್ಥ್ಯವಿದೆ. +17.82 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಸುಮಾರು ಇನ್ನು ಒಂದು ಟಿಎಂಸಿ ನೀರು ಬಂದರೆ ಪೂರ್ಣವಾಗಿ ಭರ್ತಿಯಾಗಲಿದೆ. 5500ಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು, 4000 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್ಎಸ್ ಜಲಾಶಯಕ್ಕೆ 6 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿದ್ದು 101 ಅಡಿಗೆ ತಲುಪಿದೆ. 49.452 ಅಡಿ ಟಿಎಂಸಿ ಗರಿಷ್ಠ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿ ಇಂದು 23.523 ಟಿಎಂಸಿ ನೀರಿದೆ. ಇನ್ನು ಶೇ.50ರಷ್ಟು ನೀರು ಜಲಾಶಯಕ್ಕೆ ಇನ್ನೂ ಬಂದಿಲ್ಲ. +ಕಬಿನಿ ಮತ್ತು ಕಾವೇರಿ ಜಲನಯನ ಭಾಗದಲ್ಲಿ ಮಳೆಯ ಪ್ರಮಾಣ ಏರಿಳಿತವಾದಂತೆ ಈ ಜಲಾಶಯಗಳಿಗೆ ಬರುವ ಒಳಹರಿವಿನಲ್ಲೂ ವ್ಯತ್ಯಾಸವಾಗುತ್ತಿದೆ. ಇನ್ನು ಮೂರ್ನಾಲ್ಕು ದಿನ ಉತ್ತಮ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಇನ್ನಷ್ಟು ನೀರು ಜಲಾಶಯಗಳಿಗೆ ಹರಿದುಬರಲಿದೆ. +ಇದೇ ರೀತಿ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತುಂಗಭದ್ರ, ಲಿಂಗನಮಕ್ಕಿ, ವರಾಹಿ, ಸೂಪಾ ಜಲಾಶಯಗಳಿಗೂ ಒಳಹರಿವು ಹೆಚ್ಚಳವಾಗಿದೆ.ಕೃಷ್ಣಾ ಕೊಳ್ಳದ ಘಟಪ್ರಭಾ, ಮಲಪ್ರಭಾ ಜಲಾಶಯಗಳ ಒಳಹರಿವು ಕೂಡ ಹೆಚ್ಚುತ್ತಿದ್ದು, ನೀರಿನ ಸಂಗ್ರಹವು ಏರಿಕೆ ಕಂಡಿದೆ. \ No newline at end of file diff --git a/eesanje/url_46_85_12.txt b/eesanje/url_46_85_12.txt new file mode 100644 index 0000000000000000000000000000000000000000..17c4f713177a4e2710edbf4a15556df707f27aa7 --- /dev/null +++ b/eesanje/url_46_85_12.txt @@ -0,0 +1,6 @@ +ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಆಯ್ಕೆ ಅಧಿಕಾರ ಎಚ್‌ಡಿಡಿ-ಎಚ್‌ಡಿಕೆಗೆ +ಬೆಂಗಳೂರು,ಜು.6– ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ. +ಜೆಪಿಭವನದಲ್ಲಿಂದು ಎಚ್‌.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆ ಯಲ್ಲಿ ನಡೆದ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕುಮಾರಸ್ವಾಮಿ ಅವರು ಲೋಕಸಭೆಗೆ ಚುನಾಯಿತರಾದ ಮೇಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಶಾಸಕಾಂಗ ಪಕ್ಷದ ಸ್ಥಾನ ತೆರವಾಗಿದೆ. ಆ ಸ್ಥಾನಕ್ಕೆ ಹಿರಿಯ ಶಾಸಕರಾದ ಜಿ.ಟಿ.ದೇವೇಗೌಡರು, ಎಚ್‌.ಡಿ. ರೇವಣ್ಣ ಸೇರಿದಂತೆ ಹಲವರ ಹೆಸರು ಗಳು ಕೇಳಿಬಂದಿವೆ. ದೇವೇಗೌಡರು ಮತ್ತು ಕುಮಾರಸ್ವಾಮಿಯವರು ನೇಮಕ ಮಾಡುವವರು ಶಾಸಕಾಂಗ ಪಕ್ಷದ ನಾಯಕರಾಗಲಿದ್ದಾರೆ. +ಮಳೆಗಾಲದ ಅಧಿವೇಶನದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು, ಜನರ ಸಮಸ್ಯೆಗಳನ್ನು ಹೇಗೆ ಪ್ರಸ್ತಾಪಿಸಬೇಕು ಎಂಬ ಬಗ್ಗೆ ಕುಮಾರಸ್ವಾಮಿ ಶಾಸಕರಿಗೆ ಮಾರ್ಗ ದರ್ಶನ ಮಾಡಿದ್ದಾರೆ.ಪೂರ್ವ ಸಿದ್ದತೆ ಮಾಡಿಕೊಂಡು ಅಧಿವೇಶನದಲ್ಲಿ ಭಾಗಿಯಾಗಬೇಕು, ಜನರು ಅಧಿವೇಶನದಲ್ಲಿ ನಾವು ನಡೆಸುವ ಹೋರಾಟ ಬೆಳಕು ಚೆಲ್ಲುವ ವಿಚಾರವನ್ನು ಗಮನಿಸುತ್ತಾರೆ. +ಕ್ಷೇತ್ರದ ಸಮಸ್ಯೆಗಳಿಗೂ ಆದ್ಯತೆ ನೀಡಬೇಕು, ಪ್ರಶ್ನೋತ್ತರ ಅವಧಿ ಮಹತ್ತರವಾದುದು ಎಲ್ಲರೂ ತಪ್ಪದೇ ಅಧಿವೇಶನದಲ್ಲಿ ಪಾಲ್ಗೊಳ್ಳ ಬೇಕು, ಸಮರ್ಥವಾಗಿ ಜನರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.ಸದನದಲ್ಲಿ ವಿಷಯಾಧಾರಿತ ಹೋರಾಟ ಮಾಡಬೇಕು, ಪಕ್ಷ ಸಂಘಟನೆಗೂ ಒತ್ತು ಕೊಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ. +ಸಭೆಯಲ್ಲಿ ಶಾಸಕರಾದ ಸುರೇಶ್‌ ಬಾಬು, ವೆಂಕಟಶಿವಾ ರೆಡ್ಡಿ, ಸಮೃದ್ದಿ ಮಂಜುನಾಥ್‌, ಸ್ವರೂಪ್‌, ಎಂ.ಪಿ.ಕೃಷ್ಣಪ್ಪ, ಶಾರದಾ ಪುರ್ಯಾ ನಾಯಕ್‌, ಹರೀಶ್‌ಗೌಡ, ನೇಮಿರಾಜ ನಾಯಕ್‌, ಜವರಾಯಿಗೌಡ, ತಿಪ್ಪೇಸ್ವಾಮಿ, ಕರೆಮ, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಮಾಜಿ ಶಾಸಕರಾದ ವೈ.ಎಸ್‍.ವಿ.ದತ್ತ, ಬಂಡೆಪ್ಪ ಕಾಶಂಪುರ್‌, ವೆಂಕಟರಮಣ ನಾಡಗೌಡ, ಅಲ್‌ಕೋಡ್‌ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ರಮೇಶ್‌ ಗೌಡ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_85_2.txt b/eesanje/url_46_85_2.txt new file mode 100644 index 0000000000000000000000000000000000000000..455ea581230296dc4f80a7e68db2b85275692d49 --- /dev/null +++ b/eesanje/url_46_85_2.txt @@ -0,0 +1,8 @@ +ಸಿಎಂ-ಡಿಸಿಎಂ ವಿಚಾರ ಹಾದಿ-ಬೀದಿಯಲ್ಲಿ ಮಾತನಾಡುವ ವಿಷಯವಲ್ಲ : ಸಚಿವ ಆರ್‌.ಬಿ. ತಿಮ್ಮಾಪುರ +ಹುಬ್ಬಳ್ಳಿ, ಜು.7-ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಹಾದಿ ಬೀದಿಯಲ್ಲಿ ಮಾತನಾಡುವ ವಿಷಯವಲ್ಲ ಎಂದು ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಅದರದ್ದೇ ಆದ ಘನತೆ, ಮಹತ್ವ ಇರುತ್ತದೆ. ಹಾದಿ ಬೀದಿಯಲ್ಲಿ ಚರ್ಚೆ ಮಾಡುವ ವಿಷಯವಲ್ಲ. +ಇದಕ್ಕಾಗಿ ಒಂದು ರೂಪುರೇಷೆ ಇದೆ. ಹೈಕಮಾಂಡ್‌ ಇದೆ, ಸಿಎಲ್‌ಪಿ ಇದೆ. ನಾಲ್ಕು ಗೋಡೆಗಳ ಮಧ್ಯೆ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಎಲ್ಲೆಂದರಲ್ಲಿ ಚರ್ಚೆ ಮಾಡಬಾರದು ಎಂದು ಹೇಳಿದರು.ಮಾಧ್ಯಮದವರೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡ್ತಾ ಇದ್ದೀರಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. +ಎಸ್‌‍ಸಿಎಸ್‌‍ಪಿ/ ಟಿಎಸ್‌‍ಪಿ ಅನುದಾನ ದುರ್ಬಳಕೆಯಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ದುರ್ಬಳಕೆ ಆಗುತ್ತಿಲ್ಲ. ವಾಸ್ತವಾಂಶ ನೋಡಬೇಕು ಎಂದರು.ಹಿಂದುಳಿದ ಜನಾಂಗಕ್ಕೆ ಸಹಾಯ ಮಾಡುವ ಪ್ರವೃತ್ತಿ ಮುಖ್ಯಮಂತ್ರಿಗಳಲ್ಲಿ ಇದೆ. ಯಾವುದೇ ರೀತಿಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಿಲ್ಲ. ಈಗಾಗಲೇ ಸಿಎಂ ಅವರೇ ತಂದ ಕಾನೂನು ಇದು. ಹೆಚ್ಚಿಗೆ ಅನುದಾನ ಕೊಡುತ್ತಿದ್ದಾರೆ. ಇದರಲ್ಲಿ ವಿಪಕ್ಷದವರು ಹುಳುಕು ಹುಡುಕುತ್ತಿದ್ದಾರೆ ಎಂದರು. +ಅಬಕಾರಿ ಇಲಾಖೆಯಲ್ಲಿ ಬಾರ್‌ ವ್ಯಾಪಾರಸ್ಥರಿಗಾಗಿ ವ್ಯಾಪಾರ ಸ್ನೇಹಿ ಅದಾಲತ್‌ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಂತಹ ವಿಚಾರ ಬಹಳ ದಿನಗಳಿಂದ ಇದೆ. ನಮ ಇಲಾಖೆಯಲ್ಲಿ ಇದು ಆಗಬೇಕಾಗಿದೆ. ಗೋವಾದಲ್ಲಿ ಲಿಕ್ಕರ್‌ ಬಹಳ ಕಡಿಮೆ ದರದಲ್ಲಿ ಸಿಗುತ್ತದೆ. ಅಲ್ಲಿ ಯಾವುದೇ ತೆರಿಗೆ ಇಲ್ಲ. ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಸ್ಪಿರಿಟ್‌ ಹೋಗುತ್ತದೆ. ಅದನ್ನು ಮೊದಲು ತಡೆಗಟ್ಟಬೇಕು. ನಮ ರಾಜ್ಯದ ಲಿಕ್ಕರ್‌ ಚೆನ್ನಾಗಿದೆ. ಬೇರೆ ರಾಜ್ಯದ ಕಳಪೆ ಲಿಕ್ಕರ್‌ ನಮ ರಾಜ್ಯಕ್ಕೆ ಬರದಂತೆ ಕಡಿವಾಣ ಹಾಕಬೇಕಾಗಿದೆ ಎಂದರು. +ಮದ್ಯದ ದರ ಏರಿಕೆ ಇಲ್ಲ:ಮದ್ಯದ ದರ ಏರಿಕೆ ಕೇವಲ ಊಹಾಪೋಹ. ಎಂಎಸ್‌‍ ಐಎಸ್‌‍ಗಳಿಗೆ ಇನ್ನು ಮುಂದೆ ಪರವಾನಗಿ ಕೊಡದಿರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಾರ್‌ಗಳಿಗೆ ತೊಂದರೆಯಾಗುತ್ತದೆ ಎಂಬುದಕ್ಕೆ ಅಲ್ಲ, ಇದೊಂದು ಆಡಳಿತಾತಕ ನಿರ್ಧಾರ ಎಂದು ಹೇಳಿದರು. +ಮುಡಾ ಹಗರಣ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿಯವರು ಕೆಲಸವಿಲ್ಲದೆ ಒತ್ತಡ ಮಾಡುತ್ತಿದ್ದಾರೆ.ಮುಖ್ಯಮಂತ್ರಿಗಳ ಘನತೆಗೆ ಧಕ್ಕೆ ತರಲು ಬಿಜೆಪಿ ಈ ಆಗ್ರಹ ಮಾಡುತ್ತಿದೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ. ಅವರ ಸರ್ಕಾರ ಇದ್ದಾಗಲೇ ಮಾಡಿದ್ದು ಈಗ ಸಿಬಿಐಗೆ ಒತ್ತಡ ಮಾಡುತ್ತಿದ್ದಾರೆ ಎಂದು ಹೇಳಿದರು. +ಬಡವರ ಬಗ್ಗೆ ಕಾಳಜಿ ಇದ್ದರೆ ರಾಜ್ಯಕ್ಕೆ ಅಕ್ಕಿ ಕೊಡಬೇಕು. ಅವರಿಗೆ ಕೇವಲ ಹಿಂದುತ್ವ, ಜಾತಿ, ಧರ್ಮದ ವಿವಾದ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು. \ No newline at end of file diff --git a/eesanje/url_46_85_3.txt b/eesanje/url_46_85_3.txt new file mode 100644 index 0000000000000000000000000000000000000000..ecd7380ab5e597db395ea53890cba7ffcfa4b8c1 --- /dev/null +++ b/eesanje/url_46_85_3.txt @@ -0,0 +1,8 @@ +ವಾಹನಗಳಿಗೆ ಹೈಬೀಮ್‌ ಹೆಡ್‌ಲೈಟ್‌ ಬಳಕೆ : 4 ದಿನದಲ್ಲಿ 5 ಸಾವಿರ ಕೇಸ್ ದಾಖಲು +ಬೆಂಗಳೂರು,ಜು.7-ವಾಹನಗಳಿಗೆ ಹೆಚ್ಚು ಬೆಳಕು ಹೊರಸೂಸುವ ಹಾಗೂ ಕಣ್ಣು ಕುಕ್ಕುವ ಹೈಬೀಮ್‌ ಹೆಡ್‌ಲೈಟ್‌ ಬಳಸಿ ವಾಹನ ಚಲಾಯಿಸುತ್ತಿದ್ದ ಚಾಲಕರಿಗೆ ರಾಜ್ಯ ಪೊಲೀಸರು ಬಿಸಿ ಮುಟ್ಟಿಸಿದ್ದು, ನಾಲ್ಕು ದಿನಗಳ ಅವಧಿಯಲ್ಲಿ 5 ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. +ನಗರದಲ್ಲಿ 2,153 ಪ್ರಕರಣ, ಮೈಸೂರು 302, ತುಮಕೂರು 237, ಉ.ಕನ್ನಡ 236, ರಾಯಚೂರು 260, ವಿಜಯನಗರ 182 ಪ್ರಕರಣಗಳು ಸೇರಿದಂತೆ ರಾಜ್ಯಾದ್ಯಂತ ಜುಲೈ 1 ರಿಂದ 4 ರವರೆಗೆ 5 ಸಾವಿರ ಪ್ರಕರಣಗಳು ದಾಖಲಾಗಿವೆ. +ಹೆಚ್ಚು ಬೆಳಕು ಹೊರಸೂಸುವಂತಹ ಎಲ್‌ಇಡಿ ದೀಪಗಳಿಂದ ಎದುರುಗಡೆ ಬರುವ ವಾಹನ ಸವಾರರಿಗೆ ತೊಂದರೆಯಾಗಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. +ಈ ಬಗ್ಗೆ ಈ ಹಿಂದೆಯೇ ರಾಜ್ಯ ರಸ್ತೆ ಹಾಗೂ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್‌‍ ಮಹಾ ನಿರ್ದೇಶಕರಾದ ಅಲೋಕ್‌ ಕುಮಾರ್‌ ಅವರು, ಹೈಬೀಮ್‌ ಲೈಟ್‌ ಬಳಸದಂತೆ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದರೂ ಸಹ ನಿಯಮ ಉಲ್ಲಂಘಿಸಿದ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ.ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ 500 ರೂ., ಎರಡನೇ ಬಾರಿ 1,000 ರೂ. ದಂಡ ವಿಧಿಸಲಾಗುತ್ತದೆ. +ಈ ಬಗ್ಗೆ ಅಲೋಕ್‌ಕುಮಾರ್‌ರವರು ಪ್ರತಿಕ್ರಿಯಿಸಿ, ವಾಹನಗಳಲ್ಲಿ ಪ್ರಖರ ಬೆಳಕು ಹೊರಸೂಸುವಂತಹ ಎಲ್‌ಇಡಿ ದೀಪ ಬಳಸುವುದರಿಂದ ಅಪಘಾತಗಳು ಸಂಭವಿಸಿ ಸಾವು-ನೋವುಗಳು ಹೆಚ್ಚಾಗುತ್ತಿವೆ. ಹಾಗಾಗಿ ವಾಹನ ಸವಾರರು ಕೇಂದ್ರ ಮೋಟಾರು ಕಾಯಿದೆಯ ಮಾರ್ಗಸೂಚಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ. +ವಾಹನಗಳಲ್ಲಿ ಸೂಕ್ತವಾದ ಹೆಡ್‌ಲೈಟ್‌ ಬಳಸದಿದ್ದರೆ ಇತರ ವಾಹನ ಚಾಲಕರಿಗೆ ಅಡ್ಡಿಯುಂಟಾಗಿ ಅಪಾಯ ತಂದೊಡ್ಡುವ ಸಾಧ್ಯತೆ ಇರುತ್ತದೆ. ವಾಹನದ ಮುಂಬದಿಯ ರಸ್ತೆ ಗೋಚರಿಸದಿದ್ದಾಗ, ಮಂಜು, ಹೊಗೆ, ಮಳೆ, ದಟ್ಟ ಕತ್ತಲು ಕವಿದ ಸಂದರ್ಭಗಳಲ್ಲಿ ಮಾತ್ರ ಹೈಬೀಮ್‌ ಲೈಟ್‌ ಬಳಸಬಹುದಾಗಿದೆ. +ಒಂದು ವೇಳೆ ನಿಮಗೆ ರಸ್ತೆ ಕಾಣಿಸದಿದ್ದಾಗ ಅಥವಾ ನಿಮ ಎದುರಿನಿಂದ ಯಾವುದೇ ವಾಹನ ಬರುತ್ತಿಲ್ಲ ಎಂದರಷ್ಟೇ ಇಂತಹ ಹೈಬೀಮ್‌ ಲೈಟ್‌ ಬಳಸಬಹುದಾಗಿದೆ.ಜನವಸತಿ ಪ್ರದೇಶಗಳಲ್ಲಿ, ನಗರ ಪ್ರದೇಶದಲ್ಲಿ, ವಾಹನಗಳು ಬರುತ್ತಿದ್ದಾಗ, ಸಂಚಾರ ದಟ್ಟಣೆ ಇರುವ ಕಡೆಗಳಲ್ಲಿ ಹೈಬೀಮ್‌ ಲೈಟ್‌ ಬಳಸುವುದನ್ನು ನಿಷಿದ್ಧವಾಗಿದೆ ಎಂದು ಅಲೋಕ್‌ ಕುಮಾರ್‌ರವರು ತಿಳಿಸಿದ್ದಾರೆ. \ No newline at end of file diff --git a/eesanje/url_46_85_4.txt b/eesanje/url_46_85_4.txt new file mode 100644 index 0000000000000000000000000000000000000000..6897419bf50876990efb9b28c124798e561028c8 --- /dev/null +++ b/eesanje/url_46_85_4.txt @@ -0,0 +1,10 @@ +ರಾಜ್ಯದಲ್ಲಿ ಡೆಂಘೀ ಹಾವಳಿ : ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ, ಜನರ ನರಳಾಟ +ಬೆಂಗಳೂರು,ಜು.7-ರಾಜ್ಯಾದ್ಯಂತ ಡೆಂಘೀ ಪ್ರಕರಣಗಳು ತೀವ್ರಗೊಂಡಿರುವ ನಡುವೆಯೂ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಕಂಡುಬಂದಿದ್ದು, ಜನಸಾಮಾನ್ಯರು ಸಂಕಷ್ಟಕ್ಕೀಡಾಗುವಂತಾಗಿದೆ. +ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾಸಿಟಮಲ್‌ ಹೊರತುಪಡಿಸಿದರೆ, ಉಳಿದ ಔಷಧಿಗಳ ಕೊರತೆ ತೀವ್ರವಾಗಿ ಕಾಡುತ್ತಿವೆ. ಸರ್ಕಾರದಿಂದ ಔಷಧಿ ಖರೀದಿಗೆ ಸರಿಯಾದ ಅನುದಾನ ದೊರೆಯುತ್ತಿಲ್ಲ ಎಂಬ ಆರೋಪಗಳು ತೀವ್ರವಾಗಿವೆ. +ರಾಜ್ಯಸರ್ಕಾರ ಯಾವುದೇ ಆರೋಗ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ವಸನ್ನದ್ಧವಾಗಿದೆ ಎಂಬ ಹೇಳಿಕೆಗಳು ಪದೇಪದೇ ಕೇಳಿಬರುತ್ತಿವೆ. ಆದರೆ, ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಿವೆ. +ಸುಮಾರು ಏಳೆಂಟು ಸಾವಿರ ಮಂದಿ ಈ ಸೋಂಕಿನಿಂದ ಸಂಕಷ್ಟಕ್ಕೀಡಾಗಿದ್ದಾರೆ. ಅವರ ಚಿಕಿತ್ಸೆಗೆ ಅಗತ್ಯವಾದ ಔಷಧೋಪಾರಗಳು ಹಾಗೂ ಪ್ರಯೋಗಾಲಯದ ಸಲಕರಣೆಗಳ ಕೊರತೆ ಎದುರಾಗಿದೆ ಎಂದು ಹೇಳಲಾಗಿದೆ. +ಸಾಮಾನ್ಯವಾಗಿ ಪ್ರತಿ ವರ್ಷ ಆಗಸ್ಟ್‌ನಿಂದ ಸೆಪ್ಟಂಬರ್‌ ನಡುವೆ ಡೆಂಘೀ ಪ್ರಕರಣಗಳು ಹೆಚ್ಚಾಗುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿನಿಂದ ಎದುರಾಗಬಹುದಾದ ಸಮಸ್ಯೆಗೆ ಸರ್ಕಾರ ಪೂರ್ವತಾಲೀಮು ನಡೆಸಿತ್ತು. ಆದರೆ ಡೆಂಘೀ ಸಮಸ್ಯೆ ಒಂದು ತಿಂಗಳು ಮುಂಚಿತವಾಗಿಯೇ ಎದುರಾಗಿದ್ದು, ರಾಜ್ಯ ಸರ್ಕಾರಕ್ಕೆ ಗಲಿಬಿಲಿ ಉಂಟುಮಾಡಿದೆ. +ಹಲವಾರು ವರ್ಷಗಳಿಂದ ಸರ್ಕಾರಿ ಆಸ್ಪತ್ರೆಗಳ ಔಷಧಿ ಪೂರೈಕೆಯ ಪ್ರಮಾಣ ಶೇ.30ರಿಂದ ಶೇ.40 ಕ್ಕೆ ಕಡಿತ ಮಾಡಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ನೂರು ರೋಗಿಗಳು ಚಿಕಿತ್ಸೆ ಪಡೆದರೆ, ಅವರಲ್ಲಿ ಶೇ. 30 ಮಂದಿಗೆ ಔಷಧಿ ಕೊಡುವಷ್ಟು ಮಾತ್ರ ಪೂರೈಕೆ ಇದೆ ಎಂದು ಹೇಳಲಾಗುತ್ತಿತ್ತು. +ಇತ್ತೀಚೆಗೆ ರಾಜ್ಯಸರ್ಕಾರ ಈ ಪ್ರಮಾಣವನ್ನು ಶೇ.60 ರಿಂದ ಶೇ.70 ಕ್ಕೆ ಹೆಚ್ಚಿಸಿದೆ. ಅದರಲ್ಲೂ ಕೆಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ ಲಭ್ಯವಿಲ್ಲದೆ ಸರ್ಕಾರಿ ವೈದ್ಯರು ಚೀಟಿ ಬರೆದುಕೊಡುವುದು, ಜನಸಾಮಾನ್ಯರು ಖಾಸಗಿ ಔಷಧಾಲಯಗಳಿಗೆ ಹಣ ತೆರುವುದು ಸಾಮಾನ್ಯವಾಗಿದೆ. +ಸರ್ಕಾರಿ ಆಸ್ಪತ್ರೆಗಳೆಂದರೆ ನೈರ್ಮಲ್ಯದ ಕೊರತೆ, ವೈದ್ಯಕೀಯ ಸಿಬ್ಬಂದಿಗಳ ಅಸಡ್ಡೆ ಮೊದಲಿನಿಂದಲೂ ಕೇಳಿಬರುತ್ತಿರುವ ಆರೋಪಗಳಿವೆ.ಅನಿವಾರ್ಯವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಆಶ್ರಯಿಸಬೇಕಾದವರಿಗೆ ಅಲ್ಲಿನ ಅವ್ಯವಸ್ಥೆಗಳು ರೇಜಿಗಿಡಿಸುತ್ತಿವೆ. ಅನಿರೀಕ್ಷಿತವಾಗಿ ಎದುರಾಗಿರುವ ಡೆಂಘೀ ಸಮಸ್ಯೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಹೋದರೆ ವೈದ್ಯರು ಬರೆದುಕೊಡುವ ಔಷಧಿಯಲ್ಲಿ ಬಹುತೇಕ ಹೊರಗಿನ ಖಾಸಗಿ ಔಷಧಾಲಯಗಳಲ್ಲೇ ಖರೀದಿಸಬೇಕಾದ ಪರಿಸ್ಥಿತಿ ಇದೆ. +ಜನರ ಆರೋಗ್ಯ ಸೇವೆಗೆ ಹಣಕಾಸಿನ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇಪದೇ ಹೇಳುತ್ತಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧಿಯ ಕೊರತೆಯ ಬಗ್ಗೆ ಚಕಾರವೇ ಎತ್ತದೆ ಸರ್ಕಾರ ಜಾಣ ಮೌನಕ್ಕೆ ಶರಣಾಗಿದೆ. \ No newline at end of file diff --git a/eesanje/url_46_85_5.txt b/eesanje/url_46_85_5.txt new file mode 100644 index 0000000000000000000000000000000000000000..3b9f0c1de7ecb8226deaae729781195df5079fd6 --- /dev/null +++ b/eesanje/url_46_85_5.txt @@ -0,0 +1,6 @@ +ಸ್ವಿಮ್ಮಿಂಗ್ ವಿಚಾರ : ಬಿಜೆಪಿಗೆ ದಿನೇಶ್‌ಗುಂಡೂರಾವ್‌ ತಿರುಗೇಟು +ಬೆಂಗಳೂರು,ಜು.7-ಈಜು, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೊಟ್ಟವರು ಬಿಜೆಪಿ ಪಕ್ಷದಲ್ಲಿರುವಾಗ ಬಿಜೆಪಿ ಈಜನ್ನು ಕ್ರೀಡೆಯಾಗಿ ನೋಡಲು ಹೇಗೆ ಸಾಧ್ಯ? ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದ್ದಾರೆ. +ಬಿಜೆಪಿಯ ಟೀಕೆಗೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರಿಗೆ ಈಜು ಒಂದು ಮೋಜಿನ ರೀತಿ ಕಾಣುತ್ತದೆ, ಈಜುವುದು ಮೋಜು ಮಸ್ತಿಯೇ ಎಂದು ಪ್ರಶ್ನಿಸಿದ್ದಾರೆ.ತಾವು ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದು ಮೋಜು ಮಸ್ತಿಗಲ್ಲ. +ಜಿಲ್ಲಾ ಉಸ್ತುವಾರಿ ಸಚಿವನಾಗಿ ಈ ಹಿಂದೆ ಈಜುಕೊಳ ಉದ್ಘಾಟನೆಯಲ್ಲಿ ನನಗೆ ಪಾಲ್ಗೊಳ್ಳಲು ಆಗಿರಲಿಲ್ಲ. ಆ ಸಂದರ್ಭದಲ್ಲಿ ಅಲ್ಲಿಯ ಕ್ರೆಡಾಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು ಹಿನ್ನೆಲೆಯಲ್ಲಿ ನಾನು ಇನ್ನಮೆ ಭೇಟಿ ನೀಡಿ ಈಜುಕೊಳದಲ್ಲಿ ಈಜುತ್ತೇನೆ ಎಂದು ಭರವಸೆ ನೀಡ್ದೆಿ. ಅದರಂತೆ ಸಮಯ ಬಿಡುವು ಮಾಡಿಕೊಂಡು ಈಜುಕೊಳಕ್ಕೆ ಭೇಟಿ ನೀಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. +ನಾನು ಈಜುವುದಕ್ಕೂ, ರಾಜ್ಯದಲ್ಲಿ ಡೆಂಘೀ ಹೆಚ್ಚಳಕ್ಕೂ ಎತ್ತಣ ಸಂಬಧ. ಅಷ್ಟಕ್ಕೂ ಮಂಗಳೂರಿಗೆ ಬಂದು ನಾನು ಮೊದಲ ಮಾಡಿದ ಕೆಲಸವೇ ಡೆಂಘೀ ತಪಾಸಣೆ. ಈಡಿಸ್‌‍ ಸೊಳ್ಳೆಯ ಉತ್ಪತ್ತಿ ತಾಣಗಳ ನಾಶ ಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿದೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾದ ಸ್ಥಳಗಳನ್ನು ಪರಿಶೀಲಿಸಿ ಜನರಲ್ಲಿ ಜಾಗೃತಿ ಮೂಡಿಸಿದ್ದೇವೆ ಎಂದು ಹೇಳಿದ್ದಾರೆ. +ಬಿಜೆಪಿಯವರಿಗೆ ಈಜು ಒಂದು ಮೋಜಿನ ರೀತಿ ಕಾಣುತ್ತೆ.. ಈಜು, ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೊಟ್ಟವರು ಬಿಜೆಪಿ ಪಕ್ಷದಲ್ಲಿರುವಾಗ ಬಿಜೆಪಿ ಇದನ್ನ ಕ್ರೀಡೆಯಾಗಿ ಹೇಗೆ ನೋಡಲು ಸಾಧ್ಯ.. ಬಿಜೆಪಿಗರಿಗೆ ಈಜುವುದು ಮೋಜು ಮಸ್ತಿಯೇ..!ನಾನು ಇಂದು ಮಂಗಳೂರು ಅಂತಾರಾಷ್ಟ್ರೀಯ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದು ಮೋಜು ಮಸ್ತಿಗಲ್ಲ.‌ ಜಿಲ್ಲಾ…://./nATzEn4NYc \ No newline at end of file diff --git a/eesanje/url_46_85_6.txt b/eesanje/url_46_85_6.txt new file mode 100644 index 0000000000000000000000000000000000000000..e08ebbac7dcc4736ca0e3cd7c5e6d6ff739bb58a --- /dev/null +++ b/eesanje/url_46_85_6.txt @@ -0,0 +1,9 @@ +ಸದ್ಯಕ್ಕೆ ಸಿಎಂ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ : ‘ಕೈ’ಕಮಂಡ್ ಸಂದೇಶ +ಬೆಂಗಳೂರು,ಜು.7-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿದಂತೆ ನಾನಾ ರೀತಿಯ ಚರ್ಚೆಗಳಿಗೆ ತಣ್ಣನೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌‍ ಹೈಕಮಾಂಡ್‌ ಸದ್ಯದ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಎಲ್ಲವೂ ಯಥಾರೀತಿಯಲ್ಲಿ ಮುಂದುವರೆಯುತ್ತವೆ ಎಂಬ ಸಂದೇಶ ರವಾನಿಸಿದ್ದು, ಗೊಂದಲ ಹೇಳಿಕೆ ನೀಡುತ್ತಿದ್ದವರಿಗೆ ಮುಖಭಂಗವಾದಂತಾಗಿದೆ. +ರಾಜಕೀಯ ಕಾರಣಗಳಿಗಾಗಿ ಮತ್ತು ಕೆಲವರು ತಮ ಅಸ್ತಿತ್ವದ ಉಳಿವಿಗೆ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆಯಾಗಬೇಕಾಗಿದ್ದ ವಿಚಾರಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಗೊಂದಲ ಉಂಟು ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಇದೇ ರೀತಿಯ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡಿದ್ದವು. +ಈಗ ಪಂಚಾಯತ್‌ರಾಜ್‌, ಬಿಬಿಎಂಪಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಂದರ್ಭದಲ್ಲಿ ಮತ್ತೆ ಗೊಂದಲಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ಗೆ ದೂರು ನೀಡಿದ್ದಾರೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ರಾಜ್ಯದಲ್ಲಿ ವಿವಾದಿತ ಹೇಳಿಕೆ ನೀಡುವ ಕೆಲ ನಾಯಕರುಗಳಿಗೆ ದೂರವಾಣಿ ಕರೆ ಮಾಡಿದ್ದು, ತಮಗೆ ನಿರಂತರವಾಗಿ ಪ್ರಚಾರದಲ್ಲಿರುವ ಆಸಕ್ತಿ ಇದ್ದರೆ, ತಾವು ಪಕ್ಷದಿಂದ ಪಡೆದಿರುವ ಸಾಂವಿಧಾನಿಕ ಸ್ಥಾನಮಾನಗಳಿಗೆ ರಾಜೀನಾಮೆ ನೀಡಿ, ಅನಂತರ ತಮಗಿಷ್ಟ ಬಂದಂತೆ ಹೇಳಿಕೆ ನೀಡಿ ಎಂದು ಖಾರವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. +ಅಧಿಕಾರ ಬದಲಾವಣೆ ಅಥವಾ ಯಾವುದೇ ಜವಾಬ್ದಾರಿಗಳ ಕುರಿತಂತೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಅಂತಹ ಸಂದರ್ಭ ಬಂದಾಗ ಹಿರಿಯ ನಾಯಕರ ಜೊತೆ ಚರ್ಚೆ ನಡೆಸಲಾಗುವುದು. ಸದ್ಯಕ್ಕೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಹಾನಿ ಉಂಟುಮಾಡಬೇಡಿ ಎಂದು ಎಚ್ಚರಿಸಿದ್ದಾರೆ ಎನ್ನಲಾಗಿದೆ. +ಕೆಲವು ಮುಖಂಡರು ತಮ ನೆಚ್ಚಿನ ನಾಯಕನ ಓಲೈಕೆಗೆ ಮತ್ತು ಇನ್ನ್ಯಾರದೋ ಮೇಲಿನ ದ್ವೇಷಕ್ಕಾಗಿ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿ ಕುರಿತು ಹೇಳಿಕೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಪಕ್ಷದಲ್ಲಿ ಕೇಳಿಬರುತ್ತಿವೆ.ಇದಕ್ಕೆ ಪ್ರತಿತಂತ್ರ ಎಂಬಂತೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳಿಗೂ ಇಂಬು ನೀಡಿದಂತಾಗಿದೆ. +ಮುಖ್ಯಮಂತ್ರಿ ಹುದ್ದೆಯ ಕುರಿತು ಗೊಂದಲಗಳು ಸೃಷ್ಟಿಯಾದರೆ ಅದು ಆಡಳಿತದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಹೀಗಾಗಿ ಹೈಕಮಾಂಡ್‌ ಮಧ್ಯಪ್ರವೇಶ ಮಾಡಿ ಅನಗತ್ಯ ಗೊಂದಲಗಳಿಗೆ ಕಡಿವಾಣ ಹಾಕಬೇಕು ಎಂದು ಸಿದ್ದರಾಮಯ್ಯ ಅವರು ಇತ್ತೀಚಿನ ದೆಹಲಿಯ ಭೇಟಿಯ ವೇಳೆ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದರು. +ಯಾವುದೇ ಗುಂಪಿನ ಪರ-ವಿರೋಧ ಚರ್ಚೆಗಳು ಅನಗತ್ಯ. ಜನ ನೀಡಿರುವ ಅಧಿಕಾರವನ್ನು ಜನಪರ ಕೆಲಸಗಳಿಗಷ್ಟೇ ಬಳಕೆ ಮಾಡಬೇಕು, ರಾಜಕಾರಣ ಪ್ರತಿ ಪಕ್ಷಗಳ ವಿರುದ್ಧವಾಗಿರಬೇಕೇ ಹೊರತು ಸ್ವ ಪಕ್ಷೀಯರ ವಿರುದ್ಧ ಅಲ್ಲ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ರಾಜ್ಯ ನಾಯಕರಿಗೆ ಖಡಕ್‌ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.ಇನ್ನು ಮುಂದೆಯೂ ಗೊಂದಲ ಹೇಳಿಕೆ ನೀಡುವುದು ಮುಂದುವರೆದರೆ ಪಕ್ಷ ಅನಿವಾರ್ಯವಾಗಿ ಶಿಸ್ತುಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂಬ ಎಚ್ಚರಿಕೆ ರವಾನಿಸಿದ್ದಾರೆ ಎನ್ನಲಾಗಿದೆ. \ No newline at end of file diff --git a/eesanje/url_46_85_7.txt b/eesanje/url_46_85_7.txt new file mode 100644 index 0000000000000000000000000000000000000000..a06a8381d056f708aa4fe5bb9093386970b56dfe --- /dev/null +++ b/eesanje/url_46_85_7.txt @@ -0,0 +1,12 @@ +ರಾಜ್ಯದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣ ಪ್ರಕ್ರಿಯೆಗೆ ಚಾಲನೆ +ಬೆಂಗಳೂರು,ಜು.7-ತಮಿಳುನಾಡಿಗೆ ಸಡ್ಡು ಹೊಡೆದು ರಾಜ್ಯದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ನಿರ್ಮಾಣಕ್ಕೆ ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಸ್ಥಳ ಆಯ್ಕೆಯೂ ಸೇರಿದಂತೆ ಹಲವು ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆ. ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗಿನ ಒಪ್ಪಂದದ ಪ್ರಕಾರ, 2032 ರವರೆಗೂ ಮತ್ತೊಂದು ವಿಮಾನನಿಲ್ದಾಣ ನಿರ್ಮಿಸಲು ಅವಕಾಶ ಇಲ್ಲ. 2033 ರ ನಂತರ ವಿಮಾನನಿಲ್ದಾಣ ಸ್ಥಾಪನೆಗೆ ಯಾವುದೇ ಅಡ್ಡಿ ಇಲ್ಲ ಎಂದರು. +ಆದರೂ ರಾಜ್ಯಸರ್ಕಾರಕ್ಕೆ ವಿಶೇಷ ರಿಯಾಯಿತಿಗಳಿವೆ. ಎಕ್‌್ಸಕ್ಯೂಸ್ಲೀವ್‌ ಕ್ಲಾಸ್‌‍ ನಿಯಮಾವಳಿಗಳ ಅನುಸಾರವೇ ಎರಡನೇ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸ್ಥಾಪನೆಗೆ ನಿರ್ಧರಿಸಲಾಗಿದೆ.ಕೆಲದಿನಗಳ ಹಿಂದೆ ಮೂಲಭೂತ ಸೌಕರ್ಯ ಇಲಾಖೆಯ ಸಭೆ ನಡೆಸಲಾಗಿದ್ದು, 2033 ರವರೆಗೂ ಕಾಯುವ ಅಗತ್ಯವಿಲ್ಲ. ಇದರ ನಡುವೆ ಭೂಸ್ವಾಧೀನ, ಸ್ಥಳ ಆಯ್ಕೆ ಸೇರಿದಂತೆ ಇತರ ಮಾನದಂಡಗಳ ಪರಿಶೀಲನೆ ಆರಂಭವಾಗಿದೆ ಎಂದರು. +2ನೇ ವಿಮಾನನಿಲ್ದಾಣದ ನಿರ್ಮಾಣಕ್ಕೆ ಈಗಾಗಲೇ ಅಸ್ತಿತ್ವದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದ ಸಂಪರ್ಕವನ್ನು ಪ್ರಮುಖವಾಗಿ ಗಮನದಲ್ಲಿಟ್ಟುಕೊಳ್ಳಬೇಕೇ? ಅಥವಾ ಪ್ರಯಾಣಿಕರ ದಟ್ಟಣೆಯನ್ನು ಪರಿಗಣಿಸಬೇಕೇ? ಎಂಬ ಗೊಂದಲಗಳಿವೆ. +ಈ ಗೊಂದಲವನ್ನು ಮೊದಲು ಪರಿಹರಿಸಿಕೊಳ್ಳಬೇಕಿದೆ. ಇದಕ್ಕಾಗಿ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳಿಗೂ ವರದಿ ನೀಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ನ್ಯೂಯಾರ್ಕ್‌, ಲಂಡನ್‌ನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಹತ್ತಿರದಲ್ಲೇ ಇವೆ. +ನಮ ದೇಶದ ಮುಂಬೈನ ಹೊಸ ವಿಮಾನನಿಲ್ದಾಣ, ಹಳೆ ವಿಮಾನ ನಿಲ್ದಾಣಗಳು 35 ಕಿ.ಮೀ.ಅಂತರದಲ್ಲಿವೆ. ಹಾಲಿ ಇರುವ ವಿಮಾನನಿಲ್ದಾಣಕ್ಕೆ ಸಂಪರ್ಕಿಸುವಂತೆ 2ನೇ ವಿಮಾನನಿಲ್ದಾಣ ನಿರ್ಮಿಸುವುದಾದರೆ ಅದಕ್ಕೆ ದೊಡ್ಡಬಳ್ಳಾಪುರ, ದಾಬಸ್‌‍ಪೇಟೆ, ತುಮಕೂರಿನಂತಹ ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರಿನ ಉತ್ತರಭಾಗದ ಕಡೆ ಗಮನ ಹರಿಸಬೇಕಾಗುತ್ತದೆ. +ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದನ್ನು ಪರಿಗಣಿಸುವುದಾದರೆ ಬೆಂಗಳೂರು ದಕ್ಷಿಣದಲ್ಲಿ ವಿಮಾನನಿಲ್ದಾಣ ನಿರ್ಮಿಸಬೇಕು. ಇದಕ್ಕಾಗಿ ವೈಟ್‌ಫೀಲ್‌್ಡ ಅಥವಾ ಕನಕಪುರ ಭಾಗಗಳನ್ನು ಪರಿಶೀಲಿಸಲಾಗುತ್ತಿದೆ. +ಐದಾರು ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಎರಡನೇ ಸಭೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬಳಿಕ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು ಎಂದರು.ನಾವು ಸಭೆ ನಡೆಸಿದ ಮೇಲೆ ತಮಿಳುನಾಡು ಸರ್ಕಾರವೂ ಕೂಡ ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ಹೇಳಿದೆ. ಅವರಿಗೆ ಯಾವ ಮಾನದಂಡಗಳು ಅವಕಾಶ ಕಲ್ಪಿಸುತ್ತವೆ ಎಂಬುದನ್ನು ನೋಡಬೇಕಿದೆ ಎಂದರು. +ಇನ್ನು ರಾಜಕೀಯ ವಿಚಾರಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್‌ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಹೈಕಮಾಂಡ್‌ ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ. ಯಾರು, ಯಾವುದೇ ಚರ್ಚೆ ಮಾಡಿದರೂ ಅದು ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು. +ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆಗೆ ಸಂಬಂಧಪಟ್ಟ ಪ್ರಕರಣದಲ್ಲಿ ಬಿಜೆಪಿಯವರು ಸಿಬಿಐ ತನಿಖೆಗೆ ಕೇಳುತ್ತಿರುವುದು ಹಾಸ್ಯಾಸ್ಪದ. ಈ ಮೊದಲು ಸಿಬಿಐ ಅನ್ನು ಕಾಂಗ್ರೆಸ್‌‍ ಇನ್ವೆಸ್ಟಿಗೇಷನ್‌ ಬ್ಯೂರೋ ಎನ್ನುತ್ತಿದ್ದರು. ಕಳೆದ 2 ಅವಧಿಯಲ್ಲಿ ಸಿಬಿಐ ಅನ್ನು ವಿರೋಧಪಕ್ಷಗಳ ವಿರುದ್ಧ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲಾಗಿದೆ. +ಪ್ರತಿಪಕ್ಷಗಳ ನಾಯಕರ ವಿರುದ್ಧ ಸಿಬಿಐ, ಇಡಿ ದಾಳಿ ನಡೆಸಿ ರಾಜಕೀಯವಾಗಿ ಅಸ್ತಿತ್ವ ಯತ್ನ ನಡೆಸಿದೆ. ಈಗ ಅದು ಬಿಜೆಪಿ ಬ್ಯೂರೊ ಆಫ್‌ ಇನ್ವೆಸ್ಟಿಗೇಷನ್‌ ಆಗಿದೆ. ಎಲೆಕ್ಟೊರಲ್‌ ಬಾಂಡ್‌ ಹಗರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳ ದಾಳಿ ನಡೆಸಿರುವುದು ಕಂಡುಬಂದಿದೆ. +ಹೀಗಾಗಿ ಬಿಜೆಪಿಯವರು ಸಿಬಿಐ ತನಿಖೆ ಕೇಳುವ ನೈತಿಕತೆಯನ್ನು ಉಳಿಸಿಕೊಂಡಿಲ್ಲ. ಈ ಹಿಂದೆ ನಮ ಸರ್ಕಾರ ಇದ್ದಾಗ ಏಳೆಂಟು ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆವು. ಬಿಜೆಪಿಯವರು ಒಂದು ಪ್ರಕರಣವನ್ನು ಸಿಬಿಐಗೆ ಒಪ್ಪಿಸಿರಲಿಲ್ಲ ಎಂದು ಹೇಳಿದರು.ಕೆಐಎಡಿಬಿ ನಿವೇಶನ ಹಂಚಿಕೆಯಲ್ಲೂ ಅವ್ಯವಹಾರಗಳಾಗಿವೆ ಎಂಬುದು ಆಧಾರರಹಿತವಾದ ಆರೋಪ. ನಾವು ಪಾರದರ್ಶಕವಾದ ಪದ್ಧತಿಯನ್ನು ಅನುಸರಿಸಿದ್ದೇವೆ. ಈ ಕುರಿತು ಮುಖ್ಯಮಂತ್ರಿಯವರಿಗೆ ದೂರು ನೀಡಿರುವುದು ತಮ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ದೂರು ಕುರಿತು ಮುಖ್ಯಮಂತ್ರಿಯವರು ತಮ ಬಳಿ ವಿವರಣೆ ಕೇಳಿದರೆ ಉತ್ತರ ನೀಡುವುದಾಗಿ ತಿಳಿಸಿದರು. \ No newline at end of file diff --git a/eesanje/url_46_85_8.txt b/eesanje/url_46_85_8.txt new file mode 100644 index 0000000000000000000000000000000000000000..05069e4ebfcb9c92448f86771cbec854dfa85646 --- /dev/null +++ b/eesanje/url_46_85_8.txt @@ -0,0 +1,5 @@ +ಕಬಿನಿ- ಕೆಆರ್‌ಎಸ್ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ..? +ಬೆಂಗಳೂರು,ಜು.7-ಕಾವೇರಿ ಜಲಾಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಬೀಳುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಮತ್ತು ಕೃಷ್ಣರಾಜ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. +ಕೃಷ್ಣರಾಜ ಜಲಾಶಯಕ್ಕೆ 11,027 ಕ್ಯೂಸೆಕ್‌ ನೀರು ಹರಿದುಬರುತ್ತಿದ್ದು, 124.80 ಅಡಿ ಗರಿಷ್ಠ ಮಟ್ಟದ ಜಲಾಶಯ ಈಗ 102 ಅಡಿ ಮಟ್ಟಕ್ಕೆ ತಲುಪಿದೆ. ಒಳಹರಿವಿನ ಪ್ರಮಾಣ 562 ಕ್ಯೂಸೆಕ್‌ ಇದೆ. 49.42 ಅಡಿ ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 24.417 ಅಡಿ ಟಿಎಂಸಿ ನೀರು ಸಂಗ್ರಹವಾಗಿದೆ. +ಮಳೆ ಮತ್ತಷ್ಟು ಜೋರಾದರೆ ಡ್ಯಾಮ್‌ನಲ್ಲಿ ನೀರು ಸಂಗ್ರಹ ಹೆಚ್ಚಾಗಲಿದೆ. ದಿನೇ ದಿನೇ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದ್ದು, ಜಲಾಯನ ಭಾಗದ ರೈತರಲ್ಲಿ ಸಂತಸ ಮನೆ ಮಾಡಿದೆ. +ಅದೇ ರೀತಿ ಕಬಿನಿ ಜಲಾಶಯಕ್ಕೂ ನೀರಿನ ಮಟ್ಟ ಹೆಚ್ಚಾಗಿದೆ. ಜಲಾಶಯ ಭರ್ತಿಯಾಗಲು ಕೇವಲ 2 ಅಡಿ ಮಾತ್ರ ಬಾಕಿ ಇದೆ. 5,039 ಕ್ಯೂಸೆಕ್‌ ಒಳಹರಿವಿನ ಪ್ರಮಾಣ ಇದೆ. 3250 ಕ್ಯೂಸೆಕ್‌ ಹೊರಹರಿವಿನ ಪ್ರಮಾಣ ಇದೆ. ಈ ಭಾಗದಲ್ಲಿ ಮಳೆ ಮುಂದುವರೆದಿದ್ದು, ಸದ್ಯದಲ್ಲೇ ಜಲಾಶಯ ಭರ್ತಿಯಾಗಲಿದೆ. \ No newline at end of file diff --git a/eesanje/url_46_85_9.txt b/eesanje/url_46_85_9.txt new file mode 100644 index 0000000000000000000000000000000000000000..790a331b3c610e05cd8ebd5e6e40b539b6fcfeee --- /dev/null +++ b/eesanje/url_46_85_9.txt @@ -0,0 +1,8 @@ +ಹೇಮಾವತಿ ಯೋಜನೆಯ ಸಾಧಕ-ಬಾಧಕ ಅಧ್ಯಯನಕ್ಕೆ ಸಮಿತಿ ರಚನೆ +ಬೆಂಗಳೂರು, ಜು.6-ಹೇಮಾವತಿ ನಾಲೆಯಿಂದ ಕುಣಿಗಲ್‌ ಹಾಗೂ ಮಾಗಡಿ ತಾಲ್ಲೂಕಿಗೆ ಕುಡಿಯುವ ನೀರು ಒದಗಿಸುವ ಯೋಜನೆಯ ಸಾಧಕ-ಬಾಧಕಗಳು ಹಾಗೂ ತಾಂತ್ರಿಕ ಮಾಹಿತಿ ಅಧ್ಯಯನಕ್ಕೆ ರಾಜ್ಯಸರ್ಕಾರ ಸಮಿತಿಯೊಂದನ್ನು ರಚಿಸಿದ್ದು, ತಿಂಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಿದೆ. +ತುಮಕೂರು ಶಾಖಾ ನಾಲೆಯ ಸರಪಳಿ 70 ಕಿ.ಮೀ.ನಿಂದ ಗುರುತ್ವಾಕರ್ಷಣೆ ಪೈಪ್‌ಲೈನ್‌ ಅವಳಡಿಸುವ ಮುಖಾಂತರ ಶ್ರೀರಂಗ ಕೆರೆ ತುಂಬಿಸುವ ಯೋಜನೆಯ ಮೊದಲನೇ ಹಂತ ಸರಪಳಿ 0 ಕಿ.ಮೀ.ನಿಂದ 17 ನೇ ಕಿ.ಮೀ. ವರೆಗೆ ಹಾಗೂ 2ನೇ ಹಂತ ಸರಪಳಿ 17 ಕಿ.ಮೀ.ನಿಂದ 35.54 ಕಿ.ಮೀ.ವರೆಗೆ ಕಾಮಗಾರಿ ಪ್ರಾರಂಭಿಸಲಾಗಿದೆ. +ಆದರೆ ವಿವಿಧ ರೈತ ಸಂಘಟನೆಗಳು ಜನಪ್ರತಿನಿಧಿಗಳ ನೇತೃತ್ವದಲ್ಲಿ ಪ್ರತಿಭಟನೆ ಹಾಗೂ ಧರಣಿಗಳು ನಡೆಯುತ್ತಿವೆ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. +ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜೂ.20 ರಂದು ತುಮಕೂರು ಜಿಲ್ಲಾ ಸಚಿವರಾದ ಡಾ.ಜಿ. ಪರಮೇಶ್ವರ್‌, ಕೆ.ಎನ್‌.ರಾಜಣ್ಣ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದ್ದರು. +ಸಭೆಯಲ್ಲಿ ಕೇಳಿಬಂದ ಸಲಹೆ ಪ್ರಕಾರ, ತುಮಕೂರು ಶಾಖಾ ಕಾಲುವೆ ಜಾಲದ ಪ್ರಾರಂಭದಲ್ಲಿ ನಿಗದಿಪಡಿಸಿದ ನೀರು ಹರಿಸಲು ಉಂಟಾಗಬಹುದಾದ ತೊಂದರೆಗಳನ್ನು ಪರಿಹರಿಸಲು ಹಾಗೂ ತುಮಕೂರು ಶಾಖಾ ಕಾಲುವೆಯ ವಿವಿಧ ಭಾಗಗಳಿಗೆ ನಿಗದಿಯಾಗಿರುವ ನೀರನ್ನು ಹರಿಸಲು ಕೈಗೊಳ್ಳಬಹುದಾದ ನೀರು ನಿರ್ವಹಣಾ ಕ್ರಮಗಳಾದ ಹಾಗೂ ನಿಯಮಗಳ ಬಗ್ಗೆ ಅಧ್ಯಯನ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದೆ. +ನಿವೃತ್ತ ಮುಖ್ಯ ಎಂಜಿನಿಯರ್‌ ಅರವಿಂದ ಡಿ. ಕಣಗಿಲೆ ಸಮಿತಿ ಅಧ್ಯಕ್ಷರಾಗಿದ್ದು, ನಿವೃತ್ತ ಪ್ರಧಾನ ಎಂಜಿನಿಯರ್‌ ಕೆ.ಬಾಲಕೃಷ್ಣ, ನಿವೃತ್ತ ಮುಖ್ಯ ಎಂಜಿನಿಯರುಗಳಾದ ಶಂಕರೇಗೌಡ, ಎಂ.ಜಿ.ಶಿವಕುಮಾ ಸದಸ್ಯರಾಗಿದ್ದು, ಹೇಮಾವತಿ ನಾಲಾ ವೃತ್ತದ ಅಧೀಕ್ಷಕ ಎಂಜಿನಿಯರ್‌ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. +70 ಕಿ.ಮೀ.ನಿಂದ 166.70 ಕಿ.ಮೀ.ವರೆಗೆ ನೀರು ಹರಿಸುವ ಮಾರ್ಗದಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಅಧ್ಯಯನ ನಡೆಸಿ ಅವುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.ತುಮಕೂರು ಶಾಖಾ ಕಾಲುವೆಯ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಬಗ್ಗೆಯೂ ಸಮಿತಿ ಅಧ್ಯಯನ ವರದಿ ನೀಡಬೇಕು ಎಂದು ಸೂಚಿಸಲಾಗಿದೆ. \ No newline at end of file diff --git a/eesanje/url_46_86_1.txt b/eesanje/url_46_86_1.txt new file mode 100644 index 0000000000000000000000000000000000000000..5ed863b9506b00f404c8ef015873d91a00623a0c --- /dev/null +++ b/eesanje/url_46_86_1.txt @@ -0,0 +1,6 @@ +ಹೊಸ ಕ್ರಿಮಿನಲ್‌ ಕಾನೂನುಗಳ ಮಾಹಿತಿಗೆ ಕೈಪಿಡಿ ಆಪ್‌ ಬಿಡುಗಡೆ +ಬೆಂಗಳೂರು,ಜು.6-ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕೈಪಿಡಿ ಆಪ್ಗಳನ್ನು ಬಿಡುಗಡೆ ಮಾಡಿದರು. ನೂತನ ಕ್ರಿಮಿನಲ್ ಕಾನೂನುಗಳ ಸಂಚಯ ಎಂಬ ಮೊಬೈಲ್ ಆಪ್, ವಿಧಿವಿಜ್ಞಾನ ಇಲಾಖೆಯಿಂದ ಸೀನ್ ಆಫ್ ಕ್ರೈಂ ಕೈಪಿಡಿ, ಹೊಯ್ಸಳ ವಾಹನಗಳ ರಿಯಲ್ ಟೈಮ್ ಟ್ರಾಕಿಂಗ್ ಪ್ರಾತ್ಯಕ್ಷಿಕೆ, ಸೇಫ್ ಕನೆಕ್ಟ್ ತಂತ್ರಾಂಶ ಬಿಡುಗಡೆ, ಆಡಿಯೋ-ವಿಡಿಯೋ ಸಂಪರ್ಕ ಮಾಡುವ ಟೆಕ್ನಾಲಜಿ, ಡಿಜಿಟಲ್ಅರೆಸ್ಟ್ ಸ್ಕ್ಯಾಮ್ ತನಿಖಾ ಕೈಪಿಡಿ, ಆನ್ಲೈನ್ ವಂಚನೆ ಪ್ರಕರಣಗಳ ತನಿಖೆ ಮಾಡುವ ಕೈಪಿಡಿ ಹಾಗೂ ತೊಂದರೆಯಲ್ಲಿರುವ ವ್ಯಕ್ತಿ ಕಮಾಂಡ್ ಸೆಂಟರ್ ಸಿಬ್ಬಂದಿ ಯೊಂದಿಗೆ ಸಂಪರ್ಕಿಸುವ ತಂತ್ರಜ್ಞಾನವನ್ನು ಇಂದು ಬಿಡುಗಡೆ ಮಾಡಲಾಯಿತು. +ಪೊಲೀಸ್‌‍ ಪ್ರಧಾನ ಕಛೇರಿಯ ಸಮೇಳನ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮಾವೇಶ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರು ಪಾಲ್ಗೊಂಡಿದ್ದರು. +ಹೊಸ ಕಾನೂನು ಮಾಹಿತಿಗೆ ಸಂಚಯ ಆಪ್‌:ಹೊಸದಾಗಿ ಜಾರಿಗೆ ಬಂದಿರುವ ಮೂರು ಕ್ರಿಮಿನಲ್ ಕಾನೂನುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒಂದೇ ಸ್ಥಳದಲ್ಲಿ ಸಮಗ್ರ ಮಾರ್ಗದರ್ಶಿಯಾಗಿ ಕಾರ್ಯ ನಿರ್ವಹಿಸಲು ಮೊಬೈಲ್‌ ಅಪ್ಲಿಕೇಷನ್‌ ಸಂಚಯವನ್ನು ಅಭಿವೃದ್ಧಿಪಡಿಸಿದೆ. ಈ ಅಪ್ಲಿಕೇಶನ್‌ ಹೊಸ ಕ್ರಿಮಿನಲ್‌ ಕಾನೂನುಗಳಾದ ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯಾ ಅಧಿನಿಯಮಗಳ ಸಂಕಲನವಾಗಿದೆ. +ಸಂಚಯ ಆಪ್‌ ಕ್ರಿಮಿನಲ್‌ ಕಾನೂನುಗಳ ಸಂಪನೂಲದ ಕೇಂದ್ರಬಿಂದುವಾಗಿ ಹೊರ ಹೊಮಲಿದ್ದು, ಸಂಬಂಧಿತ ಪಾಲುದಾರರಾದ ನ್ಯಾಯಾಂಗ ಅಭಿಯೋಜಕರು, ವಕೀಲರು, ಕಾನೂನು ವಿದ್ಯಾರ್ಥಿಗಳು ಮತ್ತು ಪೊಲೀಸ್‌‍ ಅಧಿಕಾರಿಗಳಿಗೆ ಇತ್ತೀಚಿನ ಕ್ರಿಮಿನಲ್‌ ಕಾನೂನುಗಳ ಮಾರ್ಪಾಡಿನ ಬಗ್ಗೆ ಮಾಹಿತಿ ನೀಡುವ ಮೂಲಕ ಅರಿವು ಹೆಚ್ಚಿಸಲಿದೆ. +ಮುಖ್ಯಾಂಶಗಳು:*ಕಾನೂನು ಸಂಬಂಧಿತ ಪಾಲುದಾರರಾದ ನ್ಯಾಯಾಂಗ ಅಭಿಯೋಜಕರು, ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ಪೊಲೀಸ್‌‍ ಅಧಿಕಾರಿಗಳಿಗೆ ಇತ್ತೀಚಿನ ಕ್ರಿಮಿನಲ್‌ ಕಾನೂನುಗಳ ಮಾರ್ಪಾಡಿನ ಬಗ್ಗೆ ಸಿದ್ದ ಮಾರ್ಗದರ್ಶಿ.*ಆಫ್‌ಲೈನ್‌ ಮತ್ತು ಆನ್‌ಲೈನ್‌ ಎರಡೂ ವಿಧದಲ್ಲಿ ಬಳಕೆ ಮಾಡಬಹುದಾಗಿರುತ್ತದೆ.*ಕಾನೂನುಗಳ ಮಾರ್ಪಾಡಿನ ಬಗ್ಗೆ ಹಳೆಯ ಹಾಗೂ ಹೊಸ ಕಾನೂನುಗಳ ತುಲನಾ ಅವಕಾಶ.*ಬದಲಾದ ಕಾನೂನುಗಳ ಸುಲಭ ಮತ್ತು ಶೀಘ್ರ ಅರ್ಥೈಸುವಿಕೆ*ಕಾನೂನಿನ ಎಲ್ಲಾ ಅಧ್ಯಾಯಗಳ ಮತ್ತು ಭಾಗಗಳ ಲಿಂಕ್‌ ಸೌಲಭ್ಯ*ನಿರ್ಧಿಷ್ಟ ಮಾಹಿತಿಯ ಪತ್ತೆಹಚ್ಚುವ ಕಾರ್ಯನಿರತೆ*ಕರ್ನಾಟಕ ಪೊಲೀಸ್‌‍ ಅಕಾಡೆಮಿಯಿಂದ ಪ್ರಕಟಿಸಲಾಗಿರುವ ನ್ಯೂ ಕ್ರಿಮಿನಲ್‌ ಲಾ ಕನ್ನಡ ಕೈಪಿಡಿಯನ್ನು ಆಪ್‌ನಲ್ಲಿ ಅಳವಡಿಸಲಾಗಿದೆ. \ No newline at end of file diff --git a/eesanje/url_46_86_10.txt b/eesanje/url_46_86_10.txt new file mode 100644 index 0000000000000000000000000000000000000000..0b2be3cfd2c5a5cd1a5ec343131c7fe1ba4cc9a7 --- /dev/null +++ b/eesanje/url_46_86_10.txt @@ -0,0 +1,4 @@ +ಶಿವಮೊಗ್ಗದಲ್ಲಿ ಝೀಕಾ ವೈರಸ್‌‍ಗೆ ವೃದ್ಧ ಬಲಿ +ಬೆಂಗಳೂರು,ಜು.6-ರಾಜ್ಯಾದ್ಯಂತ ಡೆಂಘೀ ಮಹಾಮಾರಿ ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಶಿವಮೊಗ್ಗದಲ್ಲಿ ಝೀಕಾ ವೈರಸ್‌‍ಗೆ ವೃದ್ಧನೊಬ್ಬ ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ.ಮಹಾರಾಷ್ಟ್ರದಲ್ಲಿ ಝೀಕಾ ವೈರಸ್‌‍ ಪತ್ತೆಯಾಗಿದ್ದು, ಎಲ್ಲ ರಾಜ್ಯಗಳಿಗೂ ಕಟ್ಟೆಚ್ಚರ ವಹಿಸಬೇಕೆಂದು ಕೇಂದ್ರ ಸರ್ಕಾರ ನಿನ್ನೆಯಷ್ಟೇ ಸೂಚನೆ ನೀಡಿದ ಬೆನ್ನಲ್ಲೇ ವೃದ್ದರೊಬ್ಬರು ಸಾವನ್ನಪ್ಪಿರುವುದು ಕಳವಳ ಉಂಟು ಮಾಡಿದೆ. +ಶಿವಮೊಗ್ಗದ ಗಾಂಧಿನಗರದ 74 ವರ್ಷದ ವೃದ್ದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಜೂ.19ರಂದು ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಕೊಡಿಸಿ ಗುರುವಾರ ಕುಟುಂಬದವರು ಅವರನ್ನು ಮನೆಗೆ ಕರೆದೊಯ್ದಿದ್ದರು. ಆದರೆ ನಿನ್ನೆ ಮನೆಯಲ್ಲಿ ಮೃತಪಟ್ಟಿದ್ದಾರೆ. +ಝೀಕಾ ವೈರಸ್‌‍ನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಆರೋಗ್ಯ ಇಲಾಖೆ ಕಟ್ಟೆಚ್ಚರಕ್ಕೆ ಸೂಚನೆ ನೀಡಿದೆ. \ No newline at end of file diff --git a/eesanje/url_46_86_11.txt b/eesanje/url_46_86_11.txt new file mode 100644 index 0000000000000000000000000000000000000000..f3debf213c19189fc87d9022b465c5c91951f74a --- /dev/null +++ b/eesanje/url_46_86_11.txt @@ -0,0 +1,4 @@ +ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಹೆಚ್ಚಳ +ಬೆಂಗಳೂರು,ಜು.6-ರಾಜ್ಯದಲ್ಲಿ ಜೂನ್‌ ತಿಂಗಳಿನ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣ 7773.83 ಕೋಟಿ ರೂ. ಆಗಿದೆ. ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಒಟ್ಟು 24,862.77 ಕೋಟಿ ರೂ. ಸಂಗ್ರಹವಾಗಿದೆ. ಮೇ ತಿಂಗಳಿಗಿಂತ ಜೂನ್‌ ತಿಂಗಳಿನಲ್ಲಿ 349.52 ಕೋಟಿ ರೂ. ಹೆಚ್ಚು ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಸಂಗ್ರಹವಾಗಿತ್ತು. +ಜೂನ್‌ ತಿಂಗಳಿನಲ್ಲಿ 5792.34 ಕೋಟಿ ಸರಕು ಸೇವಾ ತೆರಿಗೆ, 1885.65 ಕೋಟಿ ಕರ್ನಾಟಕ ಮಾರಾಟ ತೆರಿಗೆ ಹಾಗೂ 95.84 ಕೋಟ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ.ಮೇ ತಿಂಗಳಿಗೆ ಹೋಲಿಸಿದರೆ ಜೂನ್‌ ತಿಂಗಳಿನಲ್ಲಿ ಸುಮಾರು 20 ಕೋಟಿ ರೂ.ನಷ್ಟು ವೃತ್ತಿ ತೆರಿಗೆ ಕಡಿಮೆಯಾಗಿದೆ. ಕಳೆದ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೂ ಈ ವರ್ಷ ಜೂನ್‌ ತಿಂಗಳ ವಾಣಿಜ್ಯ ತೆರಿಗೆ ಹೆಚ್ಚಾಗಿದೆ. +ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಇದುವರೆಗೆ 19043.44 ಕೋಟಿ ಸರಕು ಸೇವಾ ತೆರಿಗೆ, 5428.45 ಕೋಟಿ ಮಾರಾಟ ತೆರಿಗೆ ಹಾಗೂ 390.88 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹವಾಗಿದೆ. ಒಟ್ಟಾರೆ 24862.77 ಕೋಟಿ ರೂ. ವಾಣಿಜ್ಯ ತೆರಿಗೆ ರಾಜ್ಯದಲ್ಲಿ ಸಂಗ್ರಹವಾದಂತಾಗಿದೆ. \ No newline at end of file diff --git a/eesanje/url_46_86_12.txt b/eesanje/url_46_86_12.txt new file mode 100644 index 0000000000000000000000000000000000000000..7d721a9aa8c9e14942273fe72b1497f5b420e06e --- /dev/null +++ b/eesanje/url_46_86_12.txt @@ -0,0 +1,7 @@ +ರಾಜ್ಯದಲ್ಲಿ ಸಾವಿನ ಡೆಂಘೀ ಕೇಕೆ, ಬೆಂಗಳೂರಲ್ಲಿ ಬಾಲಕ ಬಲಿ +ಬೆಂಗಳೂರು,ಜು.6- ರಾಜ್ಯದಲ್ಲಿ ಡೆಂಘೀ ದಿನೇ ದಿನೇ ಉಲ್ಬಣಗೊಳ್ಳುತ್ತಿದ್ದು, ಮತ್ತಷ್ಟು ಆತಂಕ ಎದುರಾಗಿದೆ. ಮಹಾಮಾರಿ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಬಾಲಕನೋರ್ವ ಡೆಂಘೀಗೆ ಬಲಿಯಾಗಿದ್ದಾನೆ.ಈಗಾಗಲೇ ಡೆಂಘೀ ಮಹಾಮಾರಿಗೆ ಈಗಾಗಲೇ ಹಾಸನದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ 11 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. +ಡೆಂಘೀ ಜ್ವರದಿಂದ ಬಳಲುತ್ತಿದ್ದ ಅಂಜನಾಪುರದ ಗಗನ್‌(11) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಡರಾತ್ರಿ ಸಾವನ್ನಪ್ಪಿದ್ದಾನೆ.ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಮುಂದುವರೆದಿದೆ. ದಿನೇ ದಿನೇ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. +ಈಗಾಗಲೇ ನಗರದಲ್ಲಿ 1700ಕ್ಕೂ ಹೆಚ್ಚು ಮಂದಿ ಡೆಂಘೀ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ, ಮೈಸೂರು, ಹಾಸನ, ಧಾರವಾಡ, ಚಿತ್ರದುರ್ಗ, ಹಾವೇರಿ ಹಲವೆಡೆ ಡೆಂಘೀ ತನ್ನ ಹಾವಳಿಯನ್ನು ಮುಂದುವರೆಸಿದ್ದು, 6700ಕ್ಕೂ ಹೆಚ್ಚು ಜನ ಡೆಂಘೀ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಹಾಸನ ಜಿಲ್ಲೆಯಲ್ಲಿ ಡೆಂಘೀ ಆರ್ಭಟ ಮುಂದುವರೆದಿದೆ. ಡೆಂಘೀ ಜ್ವರಕ್ಕೆ ನಾಲ್ವರು ಈಗಾಗಲೇ ಬಲಿಯಾಗಿದ್ದಾರೆ. ಕಳೆದ ಜೂ.30ರಂದು ಹೊಳೆನರಸೀಪುರ ತಾಲ್ಲೂಕಿನ ದೊಡ್ಡಮಗ್ಗೆಯ ವರ್ಷಿಕ(8) ಸಾವನ್ನಪಿದ್ದಳು. ಜು.1ರಂದು ಅರಕಲಗೂಡಿನ ಅಕ್ಷತಾ(13), ಜುಲೈ 3ರಂದು ಗುಡ್ಡೇನಹಳ್ಳಿಯ ಕಲಾಶ್ರೀ( 11), ಜು.5ರಂದು ಹೊಳೆನರಸೀಪುರದ ದೊಡ್ಡಳ್ಳಿ ಗ್ರಾಮದ ಸಮೃದ್ದಿ(8) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. +ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ನಿವಾಸಿ ವೇಣು ಡೆಂಘೀ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ರಾಮನಗರ ಜಿಲ್ಲೆಯಲ್ಲೂ ಕೂಡ ಡೆಂಘೀ ಕಾಯಿಲೆ ಬಗ್ಗೆ ತಪಾಸಣೆ ಮಾಡಲಾಗಿದ್ದು, 773 ಜ್ವರ ಪೀಡಿತ ರೋಗಿಗಳ ರಕ್ತ ಮಾದರಿ ಪರೀಕ್ಷೆ ಮಾಡಿದ್ದು, 58 ಜನರಿಗೆ ಡೆಂಘೀ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. +ದಿನೇ ದಿನೇ ಡೆಂಘೀ ಉಲ್ಬಣಗೊಳ್ಳುತ್ತಿದ್ದು, ಸಾವುನೋವುಗಳಿಂದ ಜನ ಬಳಲುತ್ತಿರುವುದರಿಂದ ಆತಂಕ ಸೃಷ್ಟಿಯಾಗಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.ರೋಗ ಬರದಂತೆ ಮುನ್ನೆಚ್ಚರಿಕೆಗೆ ವಹಿಸಲು ಸಾರ್ವಜನಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. diff --git a/eesanje/url_46_86_2.txt b/eesanje/url_46_86_2.txt new file mode 100644 index 0000000000000000000000000000000000000000..3ffb7e014f81c6407ceb6ddf6a00897c7aa4f39f --- /dev/null +++ b/eesanje/url_46_86_2.txt @@ -0,0 +1,3 @@ +ನ್ಯಾಯ ನೀಡಿಕೆಯಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಪ್ರಥಮ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು,ಜು.6-ದೇಶದ ಪ್ರತಿಷ್ಠಿತ ಇಂಡಿಯನ್‌ ಜಸ್ಟೀಸ್‌‍ ರಿಪೋರ್ಟ್‌ನವರು ನಡೆಸಿದ ಸಮೀಕ್ಷಾ ವರದಿಯಲ್ಲಿ ಕರ್ನಾಟಕ ಪೊಲೀಸ್‌‍ ಇಡೀ ದೇಶದಲ್ಲೇ ನ್ಯಾಯ ನೀಡಿಕೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು. +ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇಂಡಿಯನ್‌ ಜಸ್ಟೀಸ್‌‍ ರಿಪೋರ್ಟ್‌ ಒಟ್ಟು 10 ಅಂಕಗಳನ್ನಿಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್‌‍ 6.38 ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದಿದೆ ಎಂದರು. ಈ ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಗೃಹಸಚಿವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. \ No newline at end of file diff --git a/eesanje/url_46_86_3.txt b/eesanje/url_46_86_3.txt new file mode 100644 index 0000000000000000000000000000000000000000..7b5d6c19b1b1c0ba6130526e0f50b3d1b11a2048 --- /dev/null +++ b/eesanje/url_46_86_3.txt @@ -0,0 +1,9 @@ +ರಾಜ್ಯದಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಘೋಷಣೆ ಮಾಡಬೇಕು : ಸಂಸದ ಡಾ.ಮಂಜುನಾಥ್ +ಬೆಂಗಳೂರು,ಜು.6-ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಹಿರಿಯ ಹೃದ್ರೋಗ ತಜ್ಞ ಹಾಗೂ ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ನೀಡಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಏಳೆಂಟು ಸಾವಿರ ಮಂದಿ ಡೆಂಘೀ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳೆಂಟು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿ ಇದನ್ನು ನಿರ್ವಹಣೆ ಮಾಡಲು ವಿಶೇಷ ಕಾರ್ಯಪಡೆಯನ್ನು ರಚಿಸಬೇಕು. ವಿವಿಧ ಇಲಾಖೆಗಳು ಸಮನ್ವಯತೆಯಿಂದ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು. +ಡೆಂಘೀ ಸೋಂಕಿಗೆ ನಿಖರವಾದಂತಹ ಚಿಕಿತ್ಸೆ ಇಲ್ಲ. ರೋಗಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ, ತಲೆನೋವು, ಸುಸ್ತುಗಳಿಗೆ ಆಯಾ ಪರಿಹಾರದ ಚಿಕಿತ್ಸೆ ನೀಡಲಾಗುತ್ತಿದೆಯೇ ಹೊರತು, ಡೆಂಘೀ ಸೋಂಕಿಗೆ ನಿಖರವಾದ ಚಿಕಿತ್ಸೆ ಇಲ್ಲ. ಹೀಗಾಗಿ ನಿಯಂತ್ರಣವೇ ಸೂಕ್ತ ಮಾರ್ಗ ಎಂದು ಹೇಳಿದರು. +ರಾಜ್ಯದಲ್ಲಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆಗಳನ್ನು ಅಗೆದಿದ್ದಾರೆ. ಹಳ್ಳದಿಣ್ಣೆಗಳು ಹೆಚ್ಚಾಗಿವೆ. ನೀರು ನಿಂತು ಸೊಳ್ಳೆಗಳ ಉತ್ಪಾದನೆ ತೀವ್ರಗೊಳ್ಳುತ್ತಿವೆ. ಮೊದಲು ಸರ್ಕಾರ ಸೊಳ್ಳೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ವೈದ್ಯಕೀಯ ಶಿಕ್ಷಣ, ಕಂದಾಯ ಸೇರಿ ಹಲವು ಇಲಾಖೆಗಳ ಸಹಯೋಗದಲ್ಲಿ ಕಾರ್ಯಾಚರಣೆ ನಡೆಯಬೇಕಿದೆ ಎಂದರು. +ಆರೋಗ್ಯ ತುರ್ತು ಪರಿಸ್ಥಿತಿಯಾಗಿರುವುದರಿಂದ ಡೆಂಘೀ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೋವಿಡ್ ಸಂದರ್ಭದಲ್ಲಿ ಅನುಸರಿಸಿದಂತೆ ಗರಿಷ್ಠ ಚಿಕಿತ್ಸೆಯ ಮಿತಿಯನ್ನು ನಿಗದಿ ಮಾಡಿ ಡೆಂಘೀಗೂ ಉಚಿತವಾದ ಚಿಕಿತ್ಸೆ ನೀಡಬೇಕು. ಪ್ರತ್ಯೇಕವಾದ ವಾರ್ ರೂಂ ಅನ್ನು ಸ್ಥಾಪಿಸಬೇಕು ಎಂದು ಸಲಹೆ ನೀಡಿದರು. +ಸೊಳ್ಳೆಗಳ ಹಾವಳಿಯಿಂದ ಮಕ್ಕಳನ್ನು ರಕ್ಷಿಸಲು ಲಭ್ಯವಿರುವ ವ್ಯವಸ್ಥೆಗಳನ್ನು ಪಾಲಿಸಬೇಕು. ಶಾಲಾ-ಕಾಲೇಜುಗಳಲ್ಲಿ, ಮಕ್ಕಳಲ್ಲಿ ಜಾಗೃತಿ ಜಾಥಾ ಮೂಡಿಸಬೇಕು ಎಂದು ಹೇಳಿದರು. +ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಮಂದಿ ತೊಂದರೆಗೀಡಾಗಿದ್ದರು. ಈಗ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳ ಪ್ರಮಾಣ ಇದೆ. ಹೀಗಾಗಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಪರಿಸ್ಥಿತಿ ನಿಭಾಯಿಸಲು ಸಾಧ್ಯ. ಕೆಲವು ದೇಶಗಳಲ್ಲಿ ಡೆಂಘೀ ನಿಯಂತ್ರಣಕ್ಕೆ ಲಸಿಕೆ ನೀಡಲಾಗುತ್ತಿದೆ. ಜೂನ್-ಜುಲೈನಲ್ಲಿ ಇದನ್ನು ನೀಡಿದರೆ ಸಾವಿನ ಸಾಧ್ಯತೆ, ತೀವ್ರ ನಿಗಾ ಘಟಕದ ಅವಶ್ಯಕತೆ ತಗ್ಗಲಿದೆ ಎಂದು ಹೇಳಿದರು. +ಸ್ಪಷ್ಟನೆ :ಮುಂದಿನ ಉಪಚುನಾವಣೆಯಲ್ಲಿ ನನ್ನ ಪತ್ನಿ ಅನುಸೂಯ ಅವರು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದರು. ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಕೆಲವು ಮಾಧ್ಯಮಗಳಲ್ಲಿ ಅನುಸೂಯ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಬಂದಿದ್ದು, ನಮಗೆ ಮುಜುಗರ ತಂದಿದೆ ಅವರು ಹೇಳಿದರು. \ No newline at end of file diff --git a/eesanje/url_46_86_4.txt b/eesanje/url_46_86_4.txt new file mode 100644 index 0000000000000000000000000000000000000000..993de24f0776990b1337d38b53b76a12ab987667 --- /dev/null +++ b/eesanje/url_46_86_4.txt @@ -0,0 +1,10 @@ +ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಪತ್ತೆ : ಹೈ ಅಲರ್ಟ್ ಘೋಷಣೆ, ಪ್ರವಾಸ ನಿಲ್ಲಿಸುವಂತೆ ಸೂಚನೆ +ಬೆಂಗಳೂರು,ಜು.6-ರಾಜ್ಯದಲ್ಲಿ ಡೆಂಘೀ ಪ್ರಕರಣ ಗಳು ತೀವ್ರವಾಗಿ ಹೆಚ್ಚಾಗಿರುವ ನಡುವೆ ಶಿವಮೊಗ್ಗದಲ್ಲಿ ಝೀಕಾ ವೈರಸ್ ಪರಿಣಾಮ ಹಿರಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ನೆರೆಯ ರಾಜ್ಯದಲ್ಲಿ ಮೆದುಳು ಸೋಂಕಿನ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಪತ್ತೆಯಾಗಿರುವುದು ತೀವ್ರ ಆತಂಕ ಮೂಡಿಸಿದೆ. +ರಾಜ್ಯದಲ್ಲಿ ಡೆಂಘೀ ಪ್ರಕರಣಗಳು 6 ಸಾವಿರದ ಗಡಿ ದಾಟಿದ್ದು, ಜೀವಹಾನಿಯ ಸಂಖ್ಯೆ 6 ರಷ್ಟಾಗಿದೆ. ಶಿವಮೊಗ್ಗದಲ್ಲಿ 74 ವರ್ಷದ ವ್ಯಕ್ತಿ ಝೀಕಾ ವೈರಸ್ ಸೋಂಕಿಗೆ ಜೀವ ತೆತ್ತಿದ್ದಾರೆ. ಇತ್ತ ಕೇರಳದಲ್ಲಿ ಕಳೆದ ಮೇ ತಿಂಗಳಿನಿಂದೀಚೆಗೆ 4 ಮಂದಿ, ಅದರಲ್ಲೂ ಬಾಲಕರು ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಸೋಂಕಿಗೆ ಸಿಲುಕಿದ್ದು, 3 ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ. +ಡೆಂಘೀ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಬೇಕು ಎಂದು ಹಿರಿಯ ವೈದ್ಯರು ಹಾಗೂ ಮಾಜಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.ಡೆಂಘೀ ಮತ್ತು ಝೀಕಾ ವೈರಸ್ ಆತಂಕದ ನಡುವೆ ಕೇರಳದ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಮತ್ತಷ್ಟು ಗಂಭೀರ ಪರಿಸ್ಥಿತಿಯನ್ನು ನಿರ್ಮಿಸಿದೆ. +ಕಲುಷಿತ ನೀರಿನಲ್ಲಿ ಸ್ವತಂತ್ರವಾಗಿ ಜೀವಿಸುವ ಅಮೀಬಾ ಮಾದರಿಯ ಸೋಂಕಿನಿಂದ ಹರಡುವ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆ ಮೆದುಳಿನ ಸೋಂಕಿಗೆ ಕಾರಣವಾಗಲಿದ್ದು, ಮಾರಣಾಂತಿಕವಾಗಿದೆ. +ಉತ್ತರ ಕೇರಳದ ಪಯೋಲಿ ಪ್ರದೇಶದಲ್ಲಿ 14 ವರ್ಷದ ಬಾಲಕ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಕಾಯಿಲೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಜೀವ ಕಳೆದುಕೊಂಡಿದ್ದಾನೆ. ಈತನಿಗೆ ಚಿಕಿತ್ಸೆ ನೀಡಿದ್ದ ವೈದ್ಯರೂ ಕೂಡ ಜು.1 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. +ವೈದ್ಯರಲ್ಲಿ ಸೋಂಕನ್ನು ತಕ್ಷಣವೇ ಗುರುತಿಸಿ ಚಿಕಿತ್ಸೆ ಆರಂಭಿಸಿದ್ದರಿಂದಾಗಿ ಆರೋಗ್ಯ ಸುಧಾರಣೆ ಕಂಡುಬಂದಿದೆ ಎಂದು ಹೇಳಲಾಗಿದೆ.ಇದಕ್ಕೂ ಮೊದಲು ಮೇ 21 ರಂದು ಮಲಪ್ಪುರಂನಲ್ಲಿ 5 ವರ್ಷದ ಬಾಲಕಿ, ಕನ್ನೂರಿನಲ್ಲಿ ಜೂ.25 ರಂದು 13 ವರ್ಷದ ಬಾಲಕಿ ಮೆದುಳು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತುರ್ತು ಸಭೆ ನಡೆಸಿದ್ದು, ಹಲವಾರು ಸೂಚನೆಗಳನ್ನು ನೀಡಿದ್ದಾರೆ. +ಜಲ ಮೂಲಗಳ ಶುದ್ಧೀಕರಣ, ಈಜುಕೊಳಗಳಿಗೆ ಕ್ಲೋರೇನಿಯೇಷನ್ ಮೂಲಕ ಸ್ವಚ್ಛಗೊಳಿಸುವುದು, ಮಕ್ಕಳನ್ನು ನೀರಿನಲ್ಲಿ ಬಿಡುವಾಗ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ನಾನಾ ರೀತಿಯ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. +ಕೇರಳದಲ್ಲಿ ಅಮೀಬಿಕ್ ಮೆನಿಂಗೋಎನ್ಸಿಫಲಿಟಿಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಗಡಿಭಾಗದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸೋಂಕಿತ ಪ್ರದೇಶಗಳಿಂದ ರಾಜ್ಯಕ್ಕೆ ಬರುವವರು ಮತ್ತು ಇಲ್ಲಿಂದ ಅಲ್ಲಿಗೆ ಪ್ರವಾಸಕ್ಕೆ ತೆರಳುವವರ ಮೇಲೆ ನಿಗಾ ವಹಿಸಲಾಗಿದೆ. ಈ ಸಂದರ್ಭದಲ್ಲಿ ಕೇರಳದ ಪ್ರವಾಸವನ್ನು ಮುಂದೂಡುವುದು ಸೂಕ್ತ ಎಂಬ ಸಲಹೆಗಳು ಕೇಳಿಬರುತ್ತಿವೆ. +ಅಶುದ್ಧ ನೀರಿನಲ್ಲಿ ಅಡಗಿರುವ ಅಮೀಬಾ ಮಾದರಿ ವೈರಾಣು ಮೂಗಿನ ಮೂಲಕ ದೇಹ ಪ್ರವೇಶಿಸಲಿದ್ದು, ಸೋಂಕಿಗೆ ಕಾರಣವಾಗಲಿದೆ.ಕೇರಳದಲ್ಲಿ 2017 ಮತ್ತು 2023 ರಲ್ಲೂ ಇದೇ ಸೋಂಕು ಪತ್ತೆಯಾಗಿ ತೀವ್ರ ಆತಂಕ ಮೂಡಿಸಿತ್ತು. \ No newline at end of file diff --git a/eesanje/url_46_86_5.txt b/eesanje/url_46_86_5.txt new file mode 100644 index 0000000000000000000000000000000000000000..36e0e482ebb57a919866b2458e7878f428d9b799 --- /dev/null +++ b/eesanje/url_46_86_5.txt @@ -0,0 +1,10 @@ +ಚುನಾವಣೆ ನಂತರ ಕೇಂದ್ರ ಸರ್ಕಾರ ‘ಭಾರತ್‌ ಅಕ್ಕಿ’ ಯೋಜನೆ ಕೈಬಿಟ್ಟಿದೆ : ಸಿಎಂ ಸಿದ್ದರಾಮಯ್ಯ ಆಕ್ಷೇಪ +ಬೆಂಗಳೂರು,ಜು.6-ಚುನಾವಣೆಯ ಕಾರಣಕ್ಕಾಗಿ ಭಾರತ್‌ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿತ್ತು. ಮತದಾನದ ಬಳಿಕ ಆ ಯೋಜನೆಯನ್ನು ಸ್ಥಗಿತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. +ಬಾಬು ಜಗಜೀವನ್‌ರಾಂ ಅವರ ಪುಣ್ಯಸರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗ ಇರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್‌ ಅಕ್ಕಿ ರಾಜಕೀಯ ಕಾರಣಕ್ಕಾಗಿ ಜಾರಿಗೊಳಿಸಿದ್ದ ಯೋಜನೆ. ಚುನಾವಣೆ ಬಳಿಕ ಅದು ಸ್ಥಗಿತಗೊಂಡಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು. +ನಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಇದು ರಾಜಕೀಯ ಹೊರತಾದ ಕಾರ್ಯಕ್ರಮ. ಕೇಂದ್ರಸರ್ಕಾರ ಬಡವರಿಗೆ ಅಕ್ಕಿ ಸಿಗಬಾರದು ಎಂಬ ಕಾರಣಕ್ಕೆ ಅನ್ನಭಾಗ್ಯಕ್ಕೆ ಅಕ್ಕಿ ನೀಡುತ್ತಿಲ್ಲ. ಆಹಾರ ದಾಸ್ತಾನು ಮಳಿಗೆಯಲ್ಲಿ ಸಾಕಷ್ಟು ಅಕ್ಕಿ ಇದ್ದರೂ ರಾಜ್ಯಕ್ಕೆ ಪೂರೈಸದೆ ನಮ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿ ಎಂಬ ಸಂಚು ನಡೆಸಿದೆ ಎಂದು ಆರೋಪಿಸಿದರು. +ಇದರ ಅರ್ಥ ಕೇಂದ್ರ ಸರ್ಕಾರ ದಲಿತರು, ಹಿಂದುಳಿದ ವರ್ಗದವರು ಎಲ್ಲಾ ಜಾತಿಯ ಬಡವರ ವಿರುದ್ಧವಾಗಿದೆ. ನಾವು ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಅಕ್ಕಿ ನೀಡಲಿಲ್ಲ. ಹೀಗಾಗಿ ಅನಿವಾರ್ಯವಾಗಿ ನಾವು ಅಕ್ಕಿಯ ಬದಲು ಹಣವನ್ನು ಫಲಾನುಭವಿಗಳಿಗೆ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ದೂರಿದರು. +ಬಾಬು ಜಗಜೀವನ್‌ ರಾಂ 1952 ರಿಂದ ಸುದೀರ್ಘವಾಗಿ 40 ವರ್ಷಕ್ಕೂ ಹೆಚ್ಚು ಕಾಲ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಇಂದಿರಾಗಾಂಧಿಯವರ ಸಂಪುಟದಲ್ಲಿ ಆಹಾರ ಮಂತ್ರಿಯಾಗಿದ್ದ ಬಾಬು ಜಗಜೀವನ ರಾಂ ಹೊಸ ತಳಿ, ರಸಗೊಬ್ಬರವನ್ನು ಪರಿಚಯಿಸಿ ಆಹಾರ ಉತ್ಪಾದನೆಯನ್ನು ಹೆಚ್ಚಿಸಿದರು ಎಂದರು. +ಅದಕ್ಕೂ ಮೊದಲು ನಾವು ವಿದೇಶಗಳ ಮುಂದೆ ಆಹಾರಕ್ಕಾಗಿ ಕೈ ಚಾಚಿ ಬೇಡಬೇಕಾದ ಪರಿಸ್ಥಿತಿ ಇತ್ತು. ಭಾರತ ಆಹಾರ ಸ್ವಾವಲಂಬನೆ ಸಾಧಿಸಲು ಬಾಬು ಜಗಜೀವನ ರಾಂ ಪ್ರಮುಖ ಕಾರಣಕರ್ತರಲ್ಲೊಬ್ಬರು. +ರಕ್ಷಣಾ ಮಂತ್ರಿಯಾಗಿಯೂ ಕೆಲಸ ಮಾಡಿದ್ದರು. ದಕ್ಷ ಆಡಳಿತಗಾರ, ಕಾರ್ಮಿಕ ಕಾನೂನುಗಳ ರಚನೆಗೆ ಕಾರಣಕರ್ತರಾಗಿದ್ದರು. ದಲಿತರು, ಬಡವರು, ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಿದ್ದ ಅವರನ್ನು ಸರಿಸಿ, ಅವರು ತೋರಿದ ದಾರಿಯಲ್ಲಿ ನಡೆಯುವುದು ನಮ ಕರ್ತವ್ಯ ಎಂದರು. +ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗ 100 ಕೋಟಿ ರೂ. ವೆಚ್ಚದಲ್ಲಿ ಬಾಬು ಜಗಜೀವನ ರಾಂ ಹೆಸರಿನ ಭವನ ನಿರ್ಮಿಸಿ ಅಲ್ಲಿ ವಿಜ್ಞಾನ, ಕೌಶಲ್ಯ ತರಬೇತಿ ನೀಡಲು ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಕಟ್ಟಡ ನಿರ್ಮಾಣ ಪೂರ್ಣಗೊಂಡಿದ್ದು, ಇದೇ 13 ರಂದು ತಾವು ಅದನ್ನು ಉದ್ಘಾಟಿಸುವುದಾಗಿ ಮುಖ್ಯಮಂತ್ರಿ ತಿಳಿಸಿದರು. +ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್‌, ಎಚ್‌.ಸಿ.ಮಹದೇವಪ್ಪ, ಕೆ.ಎಚ್‌.ಮಹದೇವಪ್ಪ, ಆರ್‌.ಬಿ.ತಿಮಾಪುರ್‌ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_86_6.txt b/eesanje/url_46_86_6.txt new file mode 100644 index 0000000000000000000000000000000000000000..9a621dc404e1c1e3d39f5290808dde827b6c4e65 --- /dev/null +++ b/eesanje/url_46_86_6.txt @@ -0,0 +1,5 @@ +ಮಂಗಳೂರಲ್ಲಿ ಸಚಿವ ದಿನೇಶ್‌ ಗುಂಡೂರಾವ್‌ ಸ್ವಿಮ್ಮಿಂಗ್ +ಮಂಗಳೂರು,ಜು.6-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಇಂದು ಬೆಳಿಗ್ಗೆ ಮಂಗಳೂರಿನ ಎಮ್ಮೆ ಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಕಸರತ್ತು ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. +ಮಳೆಗಾಲ ಸಂದರ್ಭದಲ್ಲಿ ಸಂಭವಿಸಬಹುದಾದ ನೆರೆ ಹಾಗೂ ಇತರ ಪರಿಸ್ಥಿತಿಗಳ ಅವಲೋಕನಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಸ ಕೈಗೊಂಡಿದ್ದಾರೆ.ನಿನ್ನೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಹಾಗೂ ಸೊಳ್ಳೆ ನಾಶ ಕುರಿತು ಜನರಲ್ಲಿ ಅರಿವು ಮೂಡಿಸಿದರು. ಜೊತೆಗೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. +ಇಂದೂ ಕೂಡ ಮಂಗಳೂರು ವಾಸ್ತವ್ಯವನ್ನು ಮುಂದುವರೆಸಿರುವ ಸಚಿವರು, ವಿವಿಧ ಅಭಿವೃದ್ಧಿ ಯೋಜನೆಗಳ ಪರಾಮರ್ಶೆ ಜೊತೆಗೆ ಮಳೆ ಅನಾಹುತಗಳ ಕುರಿತು ಸ್ಥಳ ಪರಿಶೀಲನೆ ನಡೆಸಲಿದ್ದಾರೆ. +ಅದಕ್ಕೂ ಮುನ್ನ ಬೆಳಿಗ್ಗೆ ವಾಯುವಿಹಾರದ ಬಳಿಕ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಮೀನಿನಂತೆ ಈಜಿ ತಮ ದೈಹಿಕ ಕ್ಷಮತೆ ಪ್ರದರ್ಶನ ಮಾಡಿದರು.ಲೀಲಾಜಾಲವಾಗಿ ಸಚಿವರು ಈಜಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. \ No newline at end of file diff --git a/eesanje/url_46_86_7.txt b/eesanje/url_46_86_7.txt new file mode 100644 index 0000000000000000000000000000000000000000..4b9ff8715f051792f6d1e9374d8baf825b29ef0f --- /dev/null +++ b/eesanje/url_46_86_7.txt @@ -0,0 +1,11 @@ +ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪಕ್ಕೆ ಪರಮೇಶ್ವರ್‌ ತಿರುಗೇಟು +ಬೆಂಗಳೂರು,ಜು.6-ದಿಶಾ ಸಮಿತಿಯ ಸಭೆಗಳನ್ನು ಹೊರತುಪಡಿಸಿ ಕೇಂದ್ರ ಸಚಿವರು ನೇರವಾಗಿ ರಾಜ್ಯಸರ್ಕಾರದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲು ಅವಕಾಶ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಡಿದ ಆರೋಪಕ್ಕೆ ಸ್ಪಷ್ಟನೆ ನೀಡಿದ ಪರಮೇಶ್ವರ್‌ರವರು, ಮುಖ್ಯಮಂತ್ರಿ ಹಾಗೂ ರಾಜ್ಯದ ಸಚಿವರನ್ನು ಹೊರತುಪಡಿಸಿ ಕೇಂದ್ರ ಸಚಿವರಿಗೆ ರಾಜ್ಯದ ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶಗಳಿಲ್ಲ. ಈ ಹಿಂದೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿಯವರಿಗೆ ಈ ವಿಚಾರ ಚೆನ್ನಾಗಿ ಗೊತ್ತಿದೆ. ಆದರೂ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. +ಮುಖ್ಯಮಂತ್ರಿಯಾದವರು ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ಶಿಷ್ಟಾಚಾರದ ಪಾಲನೆಗೆ ಸೂಚನೆಗಳನ್ನು ಸರ್ಕಾರ ನೀಡುತ್ತದೆ. ಕುಮಾರಸ್ವಾಮಿ ಕೇಂದ್ರದ ಸಚಿವರಾಗಿದ್ದಾರೆ. ಅವರಿಗೆ ಪ್ರತ್ಯೇಕ ಶಿಷ್ಟಾಚಾರಗಳಿರುತ್ತವೆ. ಸಂಸದರು ಮತ್ತು ಕೇಂದ್ರ ಸಚಿವರಿಗೆ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ನಡೆಸಲು ದಿಶಾ ಸಮಿತಿ ಸಭೆಗಳಿರುತ್ತವೆ. +ಜೊತೆಗೆ ರಾಜ್ಯಸರ್ಕಾರದ ಸಚಿವರು ನಡೆಸುವ ಸಭೆಗಳಲ್ಲಿ ಭಾಗವಹಿಸಬಹುದು. ಅವರೇ ನೇರವಾಗಿ ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲು ಅವಕಾಶವಿಲ್ಲ. ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಇದೇ ರೀತಿಯ ನಿಯಮಾವಳಿಗಳ ಪಾಲನೆಯಾಗಿತ್ತು ಎಂದು ಪ್ರತಿಪಾದಿಸಿದರು. +ಸಂಸದರಾಗಿದ್ದ ಡಿ.ಕೆ.ಶಿವಕುಮಾರ್‌ ಸಭೆ ಮಾಡಿ, ಪ್ರಗತಿ ಪರಿಶೀಲನೆ ನಡೆಸಿದ ಮಾಹಿತಿ ತಮಗಿಲ್ಲ. ನಾಲ್ಕು ಮಂದಿ ಅಧಿಕಾರಿಗಳನ್ನು ಕರೆದು ಚರ್ಚೆ ಮಾಡಿರಬಹುದು. ಆದರೆ ಪ್ರಗತಿ ಪರಿಶೀಲನೆ ನಡೆಸಲು ಅವರಿಗೂ ಅವಕಾಶವಿರಲಿಲ್ಲ ಎಂದರು. +ಮುಡಾ ನಿವೇಶನ ಹಂಚಿಕೆ ಹಗರಣ ಬಯಲಾಗಿರುವುದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕೈವಾಡವಿದೆ ಎಂದು ಕುಮಾರಸ್ವಾಮಿಯವರು ಮಾಡಿರುವ ಆರೋಪ ಆಧಾರರಹಿತ. ಈ ಬಗ್ಗೆ ಖುದ್ದು ಡಿ.ಕೆ.ಶಿವಕುಮಾರ್‌ರವರೇ ಸ್ಪಷ್ಟನೆ ನೀಡಿ ತಮಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿರುವುದಾಗಿ ತಿಳಿಸಿದರು. +ವಾಲೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಗತ್ಯ ಕಂಡುಬಂದರೆ ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ ದದ್ದಲ್‌ ಅವರನ್ನು ವಿಚಾರಣೆಗೊಳಪಡಿಸಲಿದೆ ಎಂದರು. +ಮಾಹಿತಿ ಪಡೆಯುವ ಸಲುವಾಗಿ ಅವಶ್ಯಕತೆ ಇರುವವರಿಗೆ ನೋಟೀಸ್‌‍ ಕೊಟ್ಟು ವಿಚಾರಣೆಗೆ ಕರೆಯುತ್ತಾರೆ. ನಾಗೇಂದ್ರ ಅವರ ಮೂರ್ನಾಲ್ಕು ಜನ ಆಪ್ತ ಸಹಾಯಕರಿಗೆ ಈಗಾಗಲೇ ನೋಟೀಸ್‌‍ ಕೊಟ್ಟು ವಿಚಾರಣೆ ನಡೆಸಲಾಗಿದೆ. ಅಗತ್ಯ ಬಿದ್ದರೆ ನಾಗೇಂದ್ರ ಅವರಿಗೂ ನೋಟೀಸ್‌‍ ನೀಡಲಾಗುವುದು ಎಂದು ನುಡಿದರು. +ಹುಬ್ಬಳ್ಳಿಯಲ್ಲಿನ ಸಿದ್ದರಾಮೋತ್ಸವದ ಬಗ್ಗೆ ಈವರೆಗೂ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಿರಿಯ ಪೊಲೀಸ್‌‍ ಅಧಿಕಾರಿಯ ಸಭೆ ನಡೆಸಿ ಕಾನೂನು ಸುವ್ಯವಸ್ಥೆ ಪಾಲನೆಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಪ್ರತಿ ವರ್ಷ ಎರಡು ಬಾರಿ ಎಸ್ಪಿ ದರ್ಜೆಗಿಂತಲೂ ಮೇಲ್ಪಟ್ಟ ಅಧಿಕಾರಿಗಳ ಸಮೇಳನವನ್ನು ನಡೆಸಲಾಗುತ್ತದೆ. +ಸರ್ಕಾರದ ಆದ್ಯತೆಗಳೇನು? ಪೊಲೀಸ್‌‍ ಇಲಾಖೆ ಯಾವ ರೀತಿ ನಡೆದುಕೊಳ್ಳಬೇಕು. ಸಮಸ್ಯೆಗಳೇನು? ಅಗತ್ಯಗಳೇನು? ಎಂಬ ಬಗ್ಗೆ ಚರ್ಚೆ ಮಾಡಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇರಬೇಕು ಎಂಬ ಬಗ್ಗೆಯೂ ಮಾರ್ಗದರ್ಶನ ನೀಡಲಾಗುವುದು ಎಂದರು. \ No newline at end of file diff --git a/eesanje/url_46_86_8.txt b/eesanje/url_46_86_8.txt new file mode 100644 index 0000000000000000000000000000000000000000..0dd2ebbb5041955d5bc96395caca26e06d6169df --- /dev/null +++ b/eesanje/url_46_86_8.txt @@ -0,0 +1,5 @@ +ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ, ನಿಟ್ಟುಸಿರು ಬಿಟ್ಟ ಜನ +ಬೆಂಗಳೂರು, ಜು.6-ಕಳೆದ ಎರಡು ತಿಂಗಳಿನಿಂದ ಸ್ಥಿರತೆ ಕಾಯ್ದುಕೊಂಡಿದ್ದ ತರಕಾರಿ ಬೆಲೆ ಹಂತ ಹಂತವಾಗಿ ಇಳಿಮುಖವಾಗುತ್ತಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಬಿರು ಬೇಸಿಗೆ ಹಾಗೂ ನೀರಿನ ಅಭಾವದಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಭಾರೀ ಹೊರೆಯಾಗಿತ್ತು. ಅದರಲ್ಲೂ ಬೀನ್ಸ್ ಡಬ್ಬಲ್‌ ಸೆಂಚುರಿ ಬಾರಿಸಿತ್ತು. ಕಳೆದ ಐದು ದಿನಗಳಿಂದ ಬೆಲೆಗಳು ಇಳಿಮುಖವಾಗುತ್ತಿವೆ. +ರಾಜ್ಯದ ವಿವಿಧೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಹೊಸ ಬೆಳೆಗಳು ಮಾರುಕಟ್ಟೆಗೆ ಬರುತ್ತಿದ್ದು, ಬೆಲೆಯಲ್ಲಿ ಇಳಿಮುಖವಾಗುತ್ತಿದೆ. ಜತೆಗೆ ಆಷಾಢ ಕೂಡ ಪ್ರಾರಂಭವಾಗಿದ್ದು, ಈ ಸಮಯದಲ್ಲಿ ಹೆಚ್ಚು ಶುಭ ಸಮಾರಂಭಗಳು ನಡೆಯದ ಹಿನ್ನೆಲೆಯಲ್ಲಿ ತರಕಾರಿಗಳ ಬೇಡಿಕೆ ಕಡಿಮೆಯಾಗಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಬಹುದು. +ಕೆಜಿಗೆ 200ರೂ. ಗಡಿ ದಾಟಿದ್ದ ಬೀನ್ಸ್ ಇದೀಗ 60ರೂ.ಗೆ ಬಂದಿದೆ. ಕ್ಯಾರೆಟ್‌ 50ರೂ., ಬದನೆಕಾಯಿ 40ರೂ., ಮೂಲಂಗಿ 30ರೂ., ಸೌತೆಕಾಯಿ 20ರೂ., ಟೊಮ್ಯಾಟೋ 50ರೂ., ಆಲೂಗಡ್ಡೆ 40ರೂ., ಬೆಂಡೆಕಾಯಿ 40ರೂ., ತೊಂಡೆಕಾಯಿ 30ರೂ., ಬೀಟ್ರೂಟ್‌ 40ರೂ., ಹಸಿಮೆಣಸಿನಕಾಯಿ 80ರೂ., ಕೋಸು 40ರೂ.ಗೆ ಇಳಿದಿದೆ. +ಕಳೆದ ಎರಡು ತಿಂಗಳಿನಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿತ್ತು. ಈ ಸಮಯದಲ್ಲಿ ಗ್ರಾಹಕರು ಹಾಗೂ ಚಿಲ್ಲರೆ ವ್ಯಾಪಾರಿಗಳು ಸಂಕಷ್ಟ ಎದುರಾಗಿತ್ತು. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಾಗಡಿ, ರಾಮನಗರ, ಬೆಂಗಳೂರು ಗ್ರಾಮಾಂತರ, ಹೊಸಕೋಟೆ, ನೆಲಮಂಗಲ ಸೇರಿದಂತೆ ವಿವಿಧ ಭಾಗಗಳಿಂದ ಬೆಂಗಳೂರಿನ ಮಾರುಕಟ್ಟೆಗಳಿಗೆ ಅಪಾರ ಪ್ರಮಾಣದಲ್ಲಿ ಮಾಲು ಬರುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗಲಿದೆ. \ No newline at end of file diff --git a/eesanje/url_46_86_9.txt b/eesanje/url_46_86_9.txt new file mode 100644 index 0000000000000000000000000000000000000000..247d1349c854be1c96be073ea8f417db551c8eaa --- /dev/null +++ b/eesanje/url_46_86_9.txt @@ -0,0 +1,6 @@ +100 ಕೋಟಿ ವೆಚ್ಚದಲ್ಲಿ ತುಮಕೂರು ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ +ತುಮಕೂರು, ಜು.6-ಮೆಟೋಪಾಲಿಟನ್‌ ಸೀಟಿ ಮಾದರಿಯಲ್ಲೇ ತುಮಕೂರು ರೈಲ್ವೆ ನಿಲ್ದಾಣವನ್ನು ನೂರು ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಸಂಬಂಧ ಚರ್ಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ತಿಂಗಳು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಸಂದರ್ಭದಲ್ಲಿ ರಾಜ್ಯ ಸೇರಿದಂತೆ ದೇಶಕ್ಕೆ ಸಿಹಿ ಸುದ್ದಿ ನೀಡುತ್ತೇವೆ ಎಂದರು. +ತುಮಕೂರು ಬೆಂಗಳೂರಿಗೆ ಸಮೀಪವಿರುವುದರಿಂದ ತುಮಕೂರು ಮತ್ತಷ್ಟು ಅಭಿವೃದ್ಧಿಯಾಗಬೇಕು. ಜಿಲ್ಲೆಯ ಮೂಲಕವೇ ಹಲವು ನಗರಗಳಿಗೆ ರೈಲ್ವೆ ಸಂಪರ್ಕ ಇರುವುದರಿಂದ ಮೇಲ್ದರ್ಜೆಗೇರಿಸುಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ಗುರುವಾರದವರೆಗೆ ಕೇಂದ್ರ ಸ್ಥಾನ ದೆಹಲಿಯಲ್ಲೇ ಇದ್ದು, ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಆದೇಶವಿರುವುದರಿಂದ ಕೇಂದ್ರ ಸ್ಥಾನದಲ್ಲೇ ಇರಬೇಕಾಗುತ್ತದೆ. ಈ ಬಗ್ಗೆ ಜನರಿಗೆ ಗೊಂದಲ ಬೇಡ ಎಂದರು. +ಗುರುವಾರದಿಂದ ಭಾನುವಾರದವರೆಗೆ ಜನರ ಜೊತೆಯಲ್ಲಿ ಇರುತ್ತೇನೆ ಎಂದ ಸಚಿವರು, ಕಾರ್ಪೊರೇಟರ್‌ ಆಗಿ, ಶಾಸಕನಾಗಿ, ಸಚಿವನಾಗಿ ಈಗ ಕೇಂದ್ರ ಸರ್ಕಾರದಲ್ಲಿ ಸಚಿವನಾಗಿದ್ದು, ಜಿಲ್ಲೆಯ ಜನತೆ ಆಶೀರ್ವದಿಸಿ ಕೇಂದ್ರ ಸಚಿವನನ್ನಾಗಿ ಮಾಡಿದ್ದಾರೆ. +ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ತುಮಕೂರು ದಾವಣಗೆರೆಯ ರೈಲ್ವೆ ಮಾರ್ಗ ಕಾಮಗಾರಿಗೆ 600 ಕೋಟಿ ರೂ., ರೈಲ್ವೆ ವಿದ್ಯುದ್ದೀಕರಣಕ್ಕೆ 389 ಕೋಟಿ ರೂ. ಮೀಸಲಿಡಲಾಗಿದೆ. ತುಮಕೂರು ರಾಯದುರ್ಗ, ತುಮಕೂರು ದಾವಣಗೆರೆ ರೈಲ್ವೆ ಮಾರ್ಗಗಳ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದರು. +ಮಾಜಿ ಸಂಸದ ಜಿ.ಎಸ್‌.ಬಸವರಾಜು ಅವರ ಕನಸಿನಂತೆ ಬಾಕಿ ಉಳಿದಿರುವ ರಿಂಗ್‌ ರೋಡ್‌, ವಸಂತ ನರಸಪುರ, ಮದ್ರಾಸ್‌ ಕಾರಿಡಾರ್‌ ರಸ್ತೆಗೆ ಶೀಘ್ರ ಚಾಲನೆ ನೀಡಲಾಗುವುದು. ಶಿರಾ ಮತ್ತು ಬೆಂಗಳೂರಿನ ಮಾದವರವರೆಗಿನ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಇರುತ್ತದೆ. ಇದನ್ನು ಸರಿಪಡಿಸಲು ನೂತನ ವ್ಯವಸ್ಥೆ ಕಲ್ಪಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.ಶಾಸಕ ಜ್ಯೋತಿಗಣೇಶ್‌, ಬಿಜೆಪಿ ಮುಖಂಡರು, ಕಾರ್ಯಕರ್ತರು ಜತೆಯಲ್ಲಿದ್ದರು. \ No newline at end of file diff --git a/eesanje/url_46_87_1.txt b/eesanje/url_46_87_1.txt new file mode 100644 index 0000000000000000000000000000000000000000..c06fbde7a36539cb753ddbbb2df98ddaf1b11919 --- /dev/null +++ b/eesanje/url_46_87_1.txt @@ -0,0 +1,8 @@ +ಮಂಗಳೂರು ವಿಮಾನನಿಲ್ದಾಣದಿಂದ ಅಂತಾರಾಷ್ಟ್ರೀಯ ಸರಕು ಸಾಗಣೆ ಸೇವೆ ಆರಂಭ +ಮಂಗಳೂರು,ಜುಲೈ 6-ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ನಿಂದ (ಸರಕು ಸಾಗಣೆ )ಐಕ್ಸ್ -815 ವಿಮಾನದಲ್ಲಿ 2,522 ಕೆಜಿ ಹಣ್ಣುಗಳು ಮತ್ತು ತರಕಾರಿಗಳನ್ನು ಅಬುಧಾಬಿಗೆ ಸಾಗಿಸಲಾಗಿದೆ. ಇಂದಿನಿಂದ ಅಧಿಕೃತವಾಗಿ ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಎಎಎಚ್‌ಎಲ್‌ ಕಾರ್ಗೋ ತಂಡ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಸ್ಟಮ್ಸ್‌‍, ಮತ್ತು ಇಂಡಿಗೋ ಮತ್ತು ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ಮತ್ತು ಸಿಐಎಸ್‌‍ಎಫ್‌ನ ಏರ್‌ಪೋರ್ಟ್‌ ಸೆಕ್ಯುರಿಟಿ ಗ್ರೂಪ್‌ನ ಪ್ರತಿನಿಧಿಗಳ ಸಮುಖದಲ್ಲಿ ಔಪಚಾರಿಕ ಚಾಲನೆ ನೀಡಲಾಯಿತು . +ವಿಮಾನ ನಿಲ್ದಾಣವು ದೇಶೀಯ ಸರಕು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಒಂದು ವರ್ಷದ ನಂತರ ಈಗ ಅಂತರಾಷ್ಟ್ರೀಯ ವಲಯ ಪ್ರವೇಶಿಸಿದ್ದೇವೆ ಹೆಚ್ಚಿನ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಕಳೆದ ಮೇ 10 ರಂದು ಕಸ್ಟಮ್ಸ್‌‍ ಕಮಿಷನರ್‌ ಅವರು ವಿಮಾನ ನಿಲ್ದಾಣವನ್ನು ಕಸ್ಟೋಡಿಯನ್‌ ಮತ್ತು ಕಸ್ಟಮ್ಸ್‌‍ ಕಾರ್ಗೋ ಸರ್ವಿಸ್‌‍ ಪೊವೈಡರ್‌ ನೇಮಿಸಿದ್ದಾರೆ, ಇದು ಅಂತರರಾಷ್ಟ್ರೀಯ ಸರಕು ಕಾರ್ಯಾಚರಣೆಗಳ ಪ್ರಾರಂಭಕ್ಕೆ ಹಸಿರು ನಿಶಾನೆಯಾಗಿದೆ. +ಅಂತರಾಷ್ಟ್ರೀಯ ಕಾರ್ಗೋ ಕಾರ್ಯಾಚರಣೆಗಳ ಪ್ರಾರಂಭವು ಕರಾವಳಿ ಕರ್ನಾಟಕ ಮತ್ತು ಕೇರಳ ಮತ್ತು ಒಳನಾಡಿನ ರಫ್ತುದಾರರಿಗೆ ತಾಜಾ ಹಣ್ಣುಗಳು ಮತ್ತು ತರಕಾರಿಗಳು, ಆಹಾರ, ಯಂತ್ರದ ಭಾಗಗಳು, ಜವಳಿ, ಶೂಗಳು, ಉಷ್ಣವಲಯದ ಮೀನು, ಘನೀಕತ ಮತ್ತು ಒಣ ಮೀನು, ಪ್ಲಾಸ್ಟಿಕ್‌ ಬಣ್ಣ ಸಾಮಗ್ರಿಗಳು ಮತ್ತು ಹಡಗು ಭಾಗಗಳಂತಹ ಹಾಳಾಗುವ ವಸ್ತುಗಳನ್ನು ರಫ್ತು ಮಾಡಲು ಅನುವು ಮಾಡಿಕೊಡುತ್ತದೆ. +ಇಂಡಿಗೋ ಮತ್ತು ಏರ್‌ ಇಂಡಿಯಾ ಎಕ್ಸ್ ಪ್ರೆಸ್‌‍ಗಳು ತಮ ಸಂಪರ್ಕದೊಂದಿಗೆ ದುಬೈ, ದೋಹಾ, ದವಾಮ್‌‍, ಕುವೈತ್‌, ಮಸ್ಕತ್‌, ಅಬುಧಾಬಿ ಮತ್ತು ಬಹ್ರೇನ್‌ಗಳಿಗೆ ಸರಕುಗಳನ್ನು ಕಳುಹಿಸುತ್ತಿದೆ. +ದೇಶೀಯ ಕಾರ್ಗೋದಲ್ಲಿ 2024-25 ರ ಹಣಕಾಸು ವರ್ಷದಲ್ಲಿ ಮೇ 1, 2023 ರಿಂದ ತನ್ನ ಕಾರ್ಯಾಚರಣೆಯ ಮೊದಲ 11 ತಿಂಗಳುಗಳಲ್ಲಿ 3706.02 ಟನ್‌ ಸರಕುಗಳನ್ನು ನಿರ್ವಹಿಸುವಲ್ಲಿ ವಿಮಾನ ನಿಲ್ದಾಣವು ಉತ್ತಮವಾಗಿ ಕಾರ್ಯನಿರ್ವಹಿಸಿದೆ. \ No newline at end of file diff --git a/eesanje/url_46_87_10.txt b/eesanje/url_46_87_10.txt new file mode 100644 index 0000000000000000000000000000000000000000..4ef0f1d34ce5e3f3a7431022d57309bc1353d3bc --- /dev/null +++ b/eesanje/url_46_87_10.txt @@ -0,0 +1,5 @@ +ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ, ಆರೇಂಜ್‌ ಅಲರ್ಟ್‌ ಘೋಷಣೆ +ಬೆಂಗಳೂರು, ಜು.5-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಕೇರಳ ಕರಾವಳಿಯಿಂದ ದಕ್ಷಿಣ ಗುಜರಾತ್‌ವರೆಗೂ ಅರಬ್ಬೀ ಸಮುದ್ರದಲ್ಲಿ ಮೇಲುಬ್ಬರ ಉಂಟಾಗಿರುವ ಪರಿಣಾಮ ಭಾರೀ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೆ, ಜುಲೈ 8 ಮತ್ತು 9ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. +ಕಳೆದೊಂದು ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳು ಮೈದುಂಬಿ ಹರಿಯುತ್ತಿವೆ. ಕೆಲವೆಡೆ ಭೂ ಕುಸಿತವೂ ಉಂಟಾಗಿದೆ. ಮರ, ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. +ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗುವ ಸಾಧ್ಯತೆಗಳಿದ್ದು, ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. \ No newline at end of file diff --git a/eesanje/url_46_87_11.txt b/eesanje/url_46_87_11.txt new file mode 100644 index 0000000000000000000000000000000000000000..0220437123768697d8830939515c5b3a6e829a4f --- /dev/null +++ b/eesanje/url_46_87_11.txt @@ -0,0 +1,5 @@ +ಸಿಎಂ ಸ್ಥಾನದ ಆಕಾಂಕ್ಷಿಗಳಿಂದ ಮೂಡಾ ಹಗರಣ ಬಯಲು : ಹೆಚ್‌ಡಿಕೆ ಸ್ಪೋಟಕ ಹೇಳಿಕೆ +ಬೆಂಗಳೂರು, ಜು.5-ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೈಸೂರಿನ ಮೂಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. +ಮಂಡ್ಯದಲ್ಲಿ ಜನತಾ ದರ್ಶನ ಆರಂಭಿಸುವ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.ಇಷ್ಟು ದಿನಗಳ ಕಾಲ ಹೊರಗೆ ಬಾರದ ಮೂಡಾ ಹಗರಣ ಈಗ ಬೆಳಕಿಗೆ ಬಂದಿರುವುದು ಏಕೆ? ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿಯ ಮೇಲೆ ಟವೆಲ್‌ ಹಾಕಿರುವವರ ಪಾತ್ರವಿದೆ ಎಂದು ಆರೋಪಿಸಿದ್ದಾರೆ. +ಸಿಡಿ ಫ್ಯಾಕ್ಟರಿ ಬಂದ್‌ ಆಯ್ತು. ಮೂಡಾ ಫ್ಯಾಕ್ಟರಿ ಶುರುವಾಯ್ತು ಎಂದು ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಆರೋಪ ಮಾಡಿದ್ದಾರೆ.ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ, ಮೂಡಾ ಹಗರಣ ಹೊರಬರಲು ಕಾಂಗ್ರೆಸ್‌‍ನವರು ಒಳಗೇ ಕುಮಕ್ಕು ನೀಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಮಾಹಿತಿ ಇದೆ. +ಮುಖ್ಯಮಂತ್ರಿ ಅವರ ಪತ್ನಿಗೆ ಆ ಜಾಗ ಹೇಗೆ ಬಂದಿದೆ ಎಂಬುದೂ ಗೊತ್ತಿದೆ ಎಂದಿದ್ದಾರೆ.ಸುಮಾರು 62 ಕೋಟಿ ರೂ. ಪರಿಹಾರ ಕೇಳುವ ಮುಖ್ಯಮಂತ್ರಿ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ. \ No newline at end of file diff --git a/eesanje/url_46_87_12.txt b/eesanje/url_46_87_12.txt new file mode 100644 index 0000000000000000000000000000000000000000..10bb77cc1d81997ce5e6b82e8341eacddeff8dcf --- /dev/null +++ b/eesanje/url_46_87_12.txt @@ -0,0 +1,4 @@ +ಮೇಲ್ಮನೆ ಉಪ ಚುನಾವಣೆ : ಬಸನಗೌಡ ಬಾದರ್ಲಿ ಅವಿರೋಧ ಆಯ್ಕೆ +ಬೆಂಗಳೂರು, ಜು.5– ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಬಸನಗೌಡ ಬಾದರ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಇಂದು ಸಂಜೆ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ. +ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆದಿದೆ. ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಈ ಚುನಾವಣೆಯಲ್ಲಿ ಸ್ಪರ್ಧಿಸದೇ ದೂರ ಉಳಿದಿದ್ದವು. +ಚುನಾವಣಾ ಕಣದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಬಸನಗೌಡ ಬಾದರ್ಲಿ ಮಾತ್ರ ಉಳಿದಿರುವುದರಿಂದ ಅವಿರೋಧ ಆಯ್ಕೆಯಾಗಲಿದ್ದಾರೆ. ಇವರ ಮೇಲನೆ ಸದಸ್ಯತ್ವದ ಅವಧಿ 2028ರ ಜೂನ್‌ 14ರವರೆಗೆ ಇರಲಿದೆ. ಈ ಚುನಾವಣಾ ಫಲಿತಾಂಶದ ನಂತರ ಮೇಲನೆಯಲ್ಲಿ ಕಾಂಗ್ರೆಸ್‌‍ ಸದಸ್ಯರ ಬಲ 33ಕ್ಕೆ ಹೆಚ್ಚಾಗಲಿದೆ. \ No newline at end of file diff --git a/eesanje/url_46_87_2.txt b/eesanje/url_46_87_2.txt new file mode 100644 index 0000000000000000000000000000000000000000..44e3faf6460e579b9017cab8f953152b07c8dc2e --- /dev/null +++ b/eesanje/url_46_87_2.txt @@ -0,0 +1,7 @@ +ಮಲೆನಾಡು-ಕರಾವಳಿ ಭಾಗಗಳಲ್ಲಿ ಮುಂದುವರೆದ ಮಳೆ ಆರ್ಭಟ,ಜನಜೀವನ ಅಸ್ತವ್ಯಸ್ತ +ಬೆಂಗಳೂರು,ಜು.6-ಮಲೆನಾಡು, ಕರಾವಳಿ, ಉತ್ತರಕನ್ನಡ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು ಜಲಾವೃತಗೊಂಡಿವೆ. ಹಲವೆಡೆ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಗಾತ್ರದ ಮರಗಳು ಧರೆಗುರುಳಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. +ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ, ಅನುದಾನಿತ, ಖಾಸಗಿ, ಪ್ರಾಥಮಿಕ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈಮುಗಿಲನ್‌ ತಿಳಿಸಿದ್ದಾರೆ. +ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ವಿದ್ಯುತ್‌ ಕಂಬ ಮತ್ತು ತಂತಿಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. +ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿ ದಾಖಲೆಯ ಮಳೆಯಾಗಿದೆ. ಚಾರ್ಮುಡಿಘಾಟ್‌ ಹೆದ್ದಾರಿ ಸಂಚಾರಕ್ಕೆ ಅಡಚಣೆಯಾಗಿದೆ. ಬಾಳೂರು, ಮಲೆಮನೆ, ಮದುಗುಂಡಿ, ಜಾವಳಿ ಕೋಗ್ರೆ ಮುಂತಾದ ಗ್ರಾಮಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ, ಕುದುರೆಮುಖ ಭಾಗದಲ್ಲಿಯೂ ಭಾರೀ ಮಳೆ ಸುರಿಯುತ್ತಿದ್ದು, ತುಂಗಭದ್ರ, ಹೇಮಾವತಿ ನದಿನೀರಿನ ಮಟ್ಟ ಏರಿಕೆಯಾಗಿದೆ. +ಉತ್ತರಕನ್ನಡ ಭಾಗದಲ್ಲೂ ಕೂಡ ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೊಲಗದ್ದೆಗಳು ನೀರಿನಿಂದ ತುಂಬಿದ್ದು, ಜನ ಮನೆಯಲ್ಲಿ ಇರಲಾರದೆ ಹೊರಗೂ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.ದೇವಾಲಯಗಳು, ಶಾಲಾಕಾಲೇಜುಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆ ಸಂಚಾರದಲ್ಲೂ ಕೂಡ ವ್ಯತ್ಯವಾಗಿದ್ದು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. +ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಜನಜಾನುವಾರುಗಳ ಸಾವುನೋವು ಸಂಭವಿಸದಂತೆ ಎಚ್ಚರ ವಹಿಸಲಾಗಿದೆ.ಇತ್ತ ಕೊಡಗು, ಕಾವೇರಿ, ಜಲಾನಯನ ಪ್ರದೇಶದಲ್ಲೂ ಕೂಡ ಮಳೆ ಮುಂದುವರೆದಿದೆ. ಜಲಾನಯನ ಪ್ರದೇಶದ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. \ No newline at end of file diff --git a/eesanje/url_46_87_3.txt b/eesanje/url_46_87_3.txt new file mode 100644 index 0000000000000000000000000000000000000000..b0193697ca6880ffe07c8128df523f85202b5632 --- /dev/null +++ b/eesanje/url_46_87_3.txt @@ -0,0 +1,5 @@ +ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ಜಾರಿ +ಬೆಂಗಳೂರು,ಜು.6– ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ, ಕೆಕೆಆರ್‌ಟಿಸಿ, ಕೆಯುಡಬ್ಲುಎಸ್‌‍ಡಿಬಿಯ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯು ಜು.13 ಮತ್ತು 14ರಂದು ನಡೆಯಲಿದೆ. ಈ ಪರೀಕ್ಷೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಪುರುಷ ಅಭ್ಯರ್ಥಿಗಳು ತುಂಬು ತೋಳಿನ ಅಂಗಿ, ಜೀನ್ಸ್ ಪ್ಯಾಂಟ್‌, ಕಸೂತಿ ಬಟ್ಟೆ, ಶೂ, ಕಿವಿಯೋಲೆ, ಉಂಗುರ, ಸರ, ಕಡಗ ಧರಿಸುವುದನ್ನು ನಿಷೇಧಿಸಲಾಗಿದೆ +ಅರ್ಧತೋಳಿನ ಅಂಗಿ, ಕುರ್ತ, ಫೈಜಾಮ, ಜೇಬುಗಳು ಕಡಿಮೆ ಇರುವ ಪ್ಯಾಂಟ್‌, ತೆಳುವಾದ ಚಪ್ಪಲಿ ಧರಿಸಬಹುದಾಗಿದೆ. ಮಹಿಳಾ ಅಭ್ಯರ್ಥಿಗಳು ಕಸೂತಿ, ಹೂಗಳು, ಬ್ರೂಚ್‌ಗಳು, ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು, ಜೀನ್ಸ್ ಪ್ಯಾಂಟ್‌, ಎತ್ತರವಾದ ಹಿಮಡಿಯ ಶೂ, ಚಪ್ಪಲಿಗಳನ್ನು, ಮಂಗಳಸೂತ್ರ , ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಪರೀಕ್ಷಾ ಕೊಠಡಿಗೆ ನಿಷೇಧಿಸಿದೆ. ಅರ್ಧತೋಳಿನ ಬಟ್ಟೆಗಳನ್ನು , ತೆಳುವಾದ ಅಡಿ ಭಾಗ ಹೊಂದಿರುವ ಚಪ್ಪಲಿಗಳನ್ನು ಧರಿಸಬಹುದಾಗಿದೆ. +ಈ ಡ್ರೆಸ್‌‍ ಕೋಡ್‌ ಅನುಸರಿಸುವುದರ ಜೊತೆಗೆ ಎಲ್ಲ ಅಭ್ಯರ್ಥಿಗಳು ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೊಠಡಿಗೆ ಕೊಂಡೊಯ್ಯುವಂತಿಲ್ಲ. ಎಲೆಕ್ಟ್ರಾನಿಕ್‌ ವಸ್ತುಗಳು, ಪೆನ್‌ಡ್ರೈವ್‌, ಮೈಕ್ರೊಫೋನ್‌, ಬ್ಲೂಟೂತ್‌, ಕೈಗಡಿಯಾರ, ತಿನ್ನಬಹುದಾದ ಪದಾರ್ಥಗಳು, ಕುಡಿಯುವ ನೀರಿನ ಬಾಟಲ್‌, ಪೆನ್ಸಿಲ್‌, ಪೇಪರ್‌, ಎರೈಸರ್‌, ಟೋಪಿ, ಮಾಸ್ಕ್‌ ನಿಷೇಧಿಸಲಾಗಿದೆ. +ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಗುರುತಿನಚೀಟಿ ತರುವುದು ಕಡ್ಡಾಯವಾಗಿದ್ದು, ಪರೀಕ್ಷೆಯ ಕೊನೆಯ ಗಂಟೆ ಬಾರಿಸಿದ ನಂತರ ಅಭ್ಯರ್ಥಿಗಳು ಹೊರಹೋಗಲು ಮಾತ್ರ ಅನುಮತಿ ಇರುತ್ತದೆ ಎಂದು ಕೆಇಎ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_87_4.txt b/eesanje/url_46_87_4.txt new file mode 100644 index 0000000000000000000000000000000000000000..7dd9f357ca068034634449b9aed2175d261696f5 --- /dev/null +++ b/eesanje/url_46_87_4.txt @@ -0,0 +1,7 @@ +ಮುಡಾದಲ್ಲಿ ಯಾವ ಹಗರಣವೂ ನಡೆದಿಲ್ಲ : ಸಚಿವ ಬೈರತಿ ಸುರೇಶ್‌ +ಮೈಸೂರು, ಜು.5-ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಯಾವ ಹಗರಣ ಇದೆ. ಅದರಲ್ಲಿ ಯಾವ ಹಗರಣವೂ ಇಲ್ಲ. ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಯಾರಿಗೆ ನಿವೇಶನ ನೀಡಲಾಗಿದೆ ಎಂಬ ವಿಚಾರವನ್ನು ಇಬ್ಬರು ಐಎಎಸ್‌‍ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. +ನಿವೇಶನವನ್ನೂ ರೈತರಿಗೆ, ಖಾಸಗಿಯವರಿಗೆ, ಏಜೆಂಟರಿಗೆ ನಿವೇಶನ ನೀಡಲಾಗಿದೆ ಎಂಬುದರ ಪರಿಶೀಲನೆ ನಡೆಯುತ್ತಿದೆ. ಹಗರಣ ಎಂದು ಸಾಬೀತು ಆದ ಮೇಲೆ ಮುಂದಿನ ಚರ್ಚೆ ಮಾಡಬಹುದು ಎಂದರು. +ಈ ಪ್ರಕರಣಕ್ಕೂ ಡಿ.ಕೆ.ಶಿವುಕುಮಾರ್‌ ಅವರಿಗೂ ಸಂಬಂಧ ಇಲ್ಲ. ಅವರು ಬೆಂಗಳೂರಿನ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಮೈಸೂರಿನಲ್ಲಿ ಅವರ ಪಾತ್ರ ಇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು. ಮುಡಾದಲ್ಲಿ ಏನಾಗಿದೆ ಎಂದು ಸಿಬಿಐ ತನಿಖೆಗೆ ಒಪ್ಪಿಸಬೇಕು. ಹಗರಣ ನಡೆದಿದ್ದರೆ ತಾನೇ ಸಿಬಿಐಗೆ ವಹಿಸುವುದು. ಏನು ಆಗೇ ಇಲ್ಲ ಎಂದ ಮೇಲೆ ಸಿಬಿಐ ತನಿಖೆ ಯಾಕೆ ಎಂದ ಅವರು, ನಮಲ್ಲಿ ಪೊಲೀಸ್‌‍ ಅಧಿಕಾರಿಗಳಿಲ್ಲವೇ, ಬಿಜೆಪಿಯವರು ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು ಎಂದು ಪ್ರಶ್ನಿಸಿದರು. +ಮುಡಾ ಪ್ರಕರಣದಲ್ಲಿ ಇಬ್ಬರು ಐಎಎಸ್‌‍ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರೈತರಿಗೆ ನಿವೇಶನ ನೀಡದೇ ಮೂರನೇ ವ್ಯಕ್ತಿಗಳಿಗೆ ನೀಡಲಾಗಿದೆ ಎಂಬ ಆರೋಪವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಅದರ ಪರಿಶೀಲನೆಗೆ ತನಿಖೆ ನಡೆಸುತ್ತಿರುವ ಇಬ್ಬರು ಐಎಎಸ್‌‍ ಅಧಿಕಾರಿಗಳಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ. +ಅದು ಮುಗಿಯುವವರೆಗೂ ಕಾಯಬೇಕು. ಅದಕ್ಕೂ ಮೊದಲು ಸಿಬಿಐ, ಎಫ್‌ಬಿಐ ತನಿಖೆಗೆ ಕೊಡಿ ಎಂದರೆ ಬಿಜೆಪಿ-ಜೆಡಿಎಸ್‌‍ನವರು ಹೇಳಿದರೆ, ಸರ್ಕಾರ ಅದನ್ನು ಪಾಲನೆ ಮಾಡಬೇಕೆ. ಸರ್ಕಾರಕ್ಕೆ ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡಲಿದೆ ಎಂದರು. ಕಾಂಗ್ರೆಸ್‌‍ನಲ್ಲಿ ಯಾವುದೇ ಬಣಗಳಿಲ್ಲ ಎಂದು ಸ್ಪಷ್ಟ ಪಡಿಸಿದ ಅವರು, ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ವಿರುದ್ಧ ವಾಗ್ದಾಳಿ ನಡೆಸಿದರು. +ವಿಶ್ವನಾಥ್‌ ತಮ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದಾರೆ. ರಿಯಲ್‌ ಎಸ್ಟೇಟ್‌ ಗಿರಾಕಿ ಎಂದಿದ್ದಾರೆ. ನನಗೂ ಏಕವಚನದಲ್ಲಿ ಮಾತನಾಡಲು ಬರುತ್ತದೆ. ವಯಸ್ಸಿಗೆ ಮರ್ಯಾದೆ ಕೊಟ್ಟು ಇಷ್ಟು ದಿನ ಸುಮನಿದ್ದೆ. ಯಾರ್ರಿ ಅವನು ವಿಶ್ವನಾಥ್‌ ಎಂದು ಸಿಡಿಮಿಡಿಯಾದ ಸಚಿವರು, ಅವನು ಅವನ ಮಗ ನನ್ನ ಬಳಿ ಬಂದು ನಿವೇಶನ ಕೇಳಿದ್ದರು. ಆ ಕುರಿತ ಫೋಟೋ ನನ್ನ ಬಳಿ ಇದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.ನಾನು ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತೇನೆ. ಅದೇನು ವ್ಯವಹಾರ ಅಲ್ಲವೇ ಅವನಂತೆ ನಾನೇನು ರೊಲ್‌ಕಾಲ್‌ ಗಿರಾಕಿ ಅಲ್ಲ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_87_5.txt b/eesanje/url_46_87_5.txt new file mode 100644 index 0000000000000000000000000000000000000000..35de5d558d3887a0868e148fdfd25f48ef5616d5 --- /dev/null +++ b/eesanje/url_46_87_5.txt @@ -0,0 +1,9 @@ +ಕೇಂದ್ರ ಪುರಸ್ಕೃತ ಯೋಜನೆಗಳ ಹಣ ಬಿಡುಗಡೆಗೆ ಮೂಗುದಾರ ಹಾಕಿದ ‘ಗ್ಯಾರಂಟಿ’ ಸರ್ಕಾರ +ಬೆಂಗಳೂರು,ಜು.5-ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಬೊಕ್ಕಸದಿಂದ ಹಣ ಬಿಡುಗಡೆಗೆ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ಜಾರಿಗೊಳಿಸಿದೆ.ಜೊತೆಯಲ್ಲೇ ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಬಿಡುಗಡೆಗೆ ಮುನ್ನ ರಾಜ್ಯ ಆರ್ಥಿಕ ಇಲಾಖೆಯ ಪೂರ್ವಾನುಮತಿ ಕಡ್ಡಾಯ ಎಂಬ ಸುತ್ತೋಲೆ ರವಾನಿಸಲಾಗಿದೆ.ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌ ಅವರು 16 ಪುಟಗಳ ಸುತ್ತೋಲೆಯನ್ನು ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ, ನಿಗಮ ಮಂಡಳಿಗಳು, ಅರೆ ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳ ಪ್ರಮುಖರಿಗೆ ಕಳುಹಿಸಿದ್ದಾರೆ. +ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಈ ಮೊದಲು ಪೂರ್ವ ನಿರ್ಧರಿತ ಅನುಮೋದನೆ ಆಧರಿತವಾಗಿ ಹಣ ಬಿಡುಗಡೆಯಾಗುತ್ತಿತ್ತು. ಅದಕ್ಕೆ ಕಡಿವಾಣ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸರ್ಕಾರದ ಕಿಸಾನ್‌ ಸಮಾನ್‌, ಫಸಲ್‌ ಭೀಮಾ ಸೇರಿದಂತೆ ಹಲವು ಯೋಜನೆಗಳಿಗೆ ಹಣ ಬಿಡುಗಡೆಗೂ ಮುನ್ನ ಆರ್ಥಿಕ ಇಲಾಖೆ ಅನುಮತಿ ಅಗತ್ಯ ಎಂದು ಆದೇಶಿಸಲಾಗಿದೆ. +ರಾಜ್ಯ ಸರ್ಕಾರದ ವಿವಿಧ ನಿಗಮಗಳು, ಕೆಆರ್‌ಐಡಿಎಲ್‌ನಂತಹ ಸಂಸ್ಥೆಗಳು, ಗಂಗಕಲ್ಯಾಣ, ಸ್ವಾವಲಂಬನೆ ಯೋಜನೆಯಂತಹ ಕಾರ್ಯಕ್ರಮಗಳಿಗೆ ಹಣ ಬಿಡುಗಡೆ ಮಾಡುವ ಮುನ್ನ ಆರ್ಥಿಕ ಇಲಾಖೆಯ ಪೂರ್ವಾನುಮತಿ ಪಡೆಯುವಂತೆ ತಾಕೀತು ಮಾಡಲಾಗಿದೆ. +ಕೆಲವು ಯೋಜನೆಗಳಿಗೆ ಅದರಲ್ಲೂ 10 ಕೋಟಿಗಿಂತ ಕಡಿಮೆ ವೆಚ್ಚದ ಕಾರ್ಯಕ್ರಮಗಳಿಗೆ ಕರ್ನಾಟಕ ಪಾರದರ್ಶಕ ಅಧಿನಿಯಮ ಪಾಲನೆ ಮಾಡಿ ಹಣ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದೆ. +ಷೇರು ಬಂಡವಾಳ ಹೂಡಿಕೆ ಮತ್ತು ಸಾಲ ಪಾವತಿ ವಿಚಾರಗಳಿಗೂ ನಿಯಂತ್ರಣ ಹೇರಲಾಗಿದೆ. ಸರ್ಕಾರದ ಬಹುನಿರೀಕ್ಷಿತ ಶಕ್ತಿ, ಯುವನಿಧಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಇವುಗಳಡಿ ಹಣ ಬಿಡುಗಡೆ ಮಾಡುವಾಗ ಆರ್ಥಿಕ ಇಲಾಖೆಯಿಂದ ಕಡತದಲ್ಲಿ ಪೂರ್ವಾನುಮೋದನೆ ಪಡೆಯಬೇಕೆಂದು ಸೂಚಿಸಲಾಗಿದೆ. +ಎಸ್‌‍ಸಿಎಸ್‌‍ಪಿ, ಟಿಎಸ್‌‍ಪಿ ಯೋಜನೆಯಡಿ ಹಣ ಬಿಡುಗಡೆಯಾಗುವ ಹಿಂದಿನ ಪಾವತಿಯಲ್ಲಿ ಶೇ.75ರಷ್ಟು ಬಳಕೆಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು, ಈ ವರ್ಷದ ಜುಲೈನಿಂದ ಸೆಪ್ಟೆಂಬರ್‌ವರೆಗೆ ಆಯವ್ಯಯ ಅಂದಾಜಿನ 12/1 ಭಾಗವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಬೇಕು. ಬಂಡವಾಳ ವೆಚ್ಚದ ಹಣ ಬಿಡುಗಡೆ ಸಂದರ್ಭದಲ್ಲಿ ಸರ್ಕಾರ ಅನುಮೋದಿಸಿದ ಯೋಜನೆಗಳಿಗೆ ಮಾತ್ರ ಅವಕಾಶ ನೀಡಬೇಕು. +ಆರ್ಥಿಕ ಇಲಾಖೆಯ ಅಂಕಿತ ಪತ್ರ ಇಲ್ಲದೆ ಆಯಾ ಇಲಾಖೆಗಳ ಬಿಲ್‌ಗಳನ್ನು ನೇರವಾಗಿ ಪಾವತಿಸತಕ್ಕದ್ದಲ್ಲ ಎಂದು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಪಂಚಖಾತ್ರಿ ಯೋಜನೆಗಳ ಜಾರಿಯ ಬಳಿಕ ಆರ್ಥಿಕವಾಗಿ ಸಾಕಷ್ಟು ಹಿನ್ನಡೆಯಾಗಿದೆ. ಸಂಪನೂಲ ಕೊರತೆ ಇದೆ ಎಂಬ ಆರೋಪಗಳನ್ನು ವಿರೋಧ ಪಕ್ಷಗಳು ಪದೇ ಪದೇ ಮಾಡುತ್ತಲೇ ಇವೆ. ಇದಕ್ಕೆ ಪೂರಕ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧೀನದಲ್ಲಿರುವ ಆರ್ಥಿಕ ಇಲಾಖೆಯು ಪ್ರತಿಯೊಂದು ವಹಿವಾಟಿನ ಮೇಲೂ ನಿಗಾ ಇಡುವ ಆದೇಶ ಹೊರಡಿಸಿರುವುದು ಗಮನ ಸೆಳೆದಿದೆ. +ಮತ್ತೊಂದೆಡೆ 14 ಬಜೆಟ್‌ಗಳನ್ನು ಮಂಡಿಸಿ ಅನುಭವಿಯಾಗಿರುವ ಸಿದ್ದರಾಮಯ್ಯನವರು, ಹಣಕಾಸು ವ್ಯವಸ್ಥೆಯಲ್ಲಿ ಶಿಸ್ತು ತರಲು ಈ ರೀತಿಯ ಕ್ರಮಗಳನ್ನು ಕೈಗೊಂಡಿರುವುದು ಸ್ವಾಗತಾರ್ಹ. ಬೇಕಾಬಿಟ್ಟಿ ಹಣ ಬಿಡುಗಡೆಯಾಗಿ ದುರ್ಬಳಕೆಯಾಗುವುದು ತಪ್ಪುತ್ತದೆ. ಜನರ ತೆರಿಗೆ ಹಣದ ರಕ್ಷಣೆ ಸರ್ಕಾರದ ಹೊಣೆ ಎಂಬ ಸಮರ್ಥನೆಗಳು ಕೇಳಿಬರುತ್ತಿದೆ. \ No newline at end of file diff --git a/eesanje/url_46_87_6.txt b/eesanje/url_46_87_6.txt new file mode 100644 index 0000000000000000000000000000000000000000..be6b6a56c6ddd0819eaf3577901e1b5052c44733 --- /dev/null +++ b/eesanje/url_46_87_6.txt @@ -0,0 +1,12 @@ +ವರ್ಗಾವಣೆಗೆ ಶಿಫಾರಸು ತರಬೇಡಿ : ಕಮಿಷನರ್ ದಯಾನಂದ ಎಚ್ಚರಿಕೆ +ಬೆಂಗಳೂರು,ಜು.5-ವರ್ಗಾವಣೆಗೆ ಯಾವುದೇ ಶಿಫಾರಸು, ಒತ್ತಡ ತರಬೇಡಿ ಎಂದು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಅವರು ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್ ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕಕವಾಯಿತಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. +ಬಡ್ತಿಯಾಗಲಿ, ವರ್ಗಾವಣೆಯಾಗಲಿ ಪಾರದರ್ಶಕವಾಗಿರಲಿದೆ, ಏಕರೂಪದಲ್ಲಿ ಕೌನ್ಸಿಲಿಂಗ್ ಮೂಲಕ ನಡೆಯಲಿದೆ. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ, ವರ್ಗಾವಣೆಯ ಪಟ್ಟಿ ರೆಡಿಯಾಗುತ್ತಿದೆ. ನಮ ಇಲಾಖೆಯಲ್ಲದೆ ಬೇರೆ ಬೇರೆ ಇಲಾಖೆಗಳಲ್ಲೂ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು. +ಈಗಾಗಲೇ ಎಎಸ್ಐ ಮಟ್ಟದ ಅಧಿಕಾರಿಗಳಿಗೆ ಪಿಎಸ್ಐ ಬಡ್ತಿ ನೀಡಲಾಗಿದೆ. ಇದೀಗ ಹೆಡ್ ಕಾನ್ಸ್ಟೇಬಲ್ನಿಂದ ಎಎಸ್ಐ ಹಾಗೂ ಕಾನ್ಸ್ಟೇಬಲ್ನಿಂದ ಹೆಡ್ ಕಾನ್ಸ್ಟೇಬಲ್ಗೆ ಬಡ್ತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು. +ಪ್ರಶಂಸೆ:ನಗರದ ಪೊಲೀಸರ ಕಾರ್ಯತತ್ಪರತೆ ಹಾಗೂ ವೃತ್ತಿ ಕೌಶಲ್ಯವನ್ನು ಪ್ರಶಂಸಿಸಿದ ಆಯುಕ್ತರು, ಇತ್ತೀಚಿನ ಕೆಲವು ಪ್ರಕರಗಳ ತನಿಖೆಯಿಂದಾಗಿ ಪೊಲೀಸರ ವೃತ್ತಿ ಕೌಶಲ್ಯವನ್ನು ಎಲ್ಲಾ ಕಡೆ ಶ್ಲಾಘಿಸಲಾಗುತ್ತಿದೆ. ಇದು ಅಭಿನಂದನಾರ್ಹ ಅಂಶ. ನಗರದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮನ್ನಣೆ ದೊರೆಯುತ್ತಿದೆ. ಇದೊಂದು ಟೀಂ ವರ್ಕ್ ಕೆಲಸಕ್ಕೆ ಸಾಕ್ಷಿ ಎಂದು ಭಾವಿಸಿದ್ದೇನೆ ಎಂದರು. +ಇದೇ ರೀತಿ ವೃತ್ತಿಪರತೆ, ಕರ್ತವ್ಯ ತತ್ಪರತೆ, ಸಮಯ ಪ್ರಜ್ಞೆ, ಎಲ್ಲಾ ವಿಷಯಗಳನ್ನು ನಾವು ಪಾಲನೆ ಮಾಡಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು. +ಸ್ವತ್ತಿನ ಅಪರಾಧ ತಡೆಗಟ್ಟಿ:ಪ್ರಮುಖವಾಗಿ ಅಪರಾಧ ಪ್ರಕರಣಗಳ ಪೈಕಿ ಸ್ವತ್ತಿನ ಅಪರಾಧಗಳ ಆರೋಪಿಗಳನ್ನು ಪತ್ತೆಹಚ್ಚಲು ಕರ್ತವ್ಯ ಪ್ರಜ್ಞೆ ತೋರಿಸಬೇಕು. ಸಾರ್ವಜನಿಕರ ಜೀವನದ ದುಡಿಮೆಯ ಹಣವಾಗಲಿ, ಸ್ವತ್ತು ಇಲ್ಲವೇ ಮನೆಗಳ್ಳತನ,ಮೊಬೈಲ್ ಕಳ್ಳತನ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. +ವಸ್ತುಗಳನ್ನು ಕಳೆದುಕೊಂಡವರು ನೊಂದಿರುತ್ತಾರೆ. ಅಂಥವರ ಕಷ್ಟಗಳಿಗೆ ಸ್ಪಂದಿಸಬೇಕು. ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿದರೆ ಮುಂದೆ ದೊಡ್ಡ ಕ್ರಿಮಿನಲ್ಗಳಾಗುವುದನ್ನು ತಪ್ಪಿಸಬಹುದು ಎಂದರು. +ಸಂಯಮದಿಂದ ವರ್ತಿಸಿ:ಪೊಲೀಸ್ ಠಾಣೆಗಳಿಗೆ ದೂರು ನೀಡಲು ಬರುವಂತಹ ದೂರುದಾರರು, ಸಾರ್ವಜನಿಕರ ಜೊತೆ ಸಂಯಮದಿಂದ ವರ್ತಿಸಿ ಏರುಧ್ವನಿಯಲ್ಲಿ ಮಾತನಾಡಬೇಡಿ ಎಂದು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. +ಹೊಸ ಕಾನೂನಿನ ಅರಿವಿರಲಿ:ರಾಜ್ಯದಲ್ಲಿ ಜಾರಿಯಾಗಿರುವ ಮೂರು ಹೊಸ ಕಾನೂನುಗಳ ಬಗ್ಗೆ ಅರಿತುಕೊಳ್ಳಬೇಕು. ಈ ಕಾನೂನುಗಳನ್ನು ಲೋಪವಾಗದಂತೆ ಸರಿಯಾದ ರೀತಿಯಲ್ಲಿ ಪಾಲಿಸಬೇಕು. ಏನಾದರೂ ಸಮಸ್ಯೆ ಇದ್ದರೆ ಮೇಲಾಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯಿರಿ, ಆ ಬಗ್ಗೆ ಚರ್ಚಿಸಿ ತಿಳಿದುಕೊಳ್ಳಿ, ಠಾಣೆಗಳ ಸಿಬ್ಬಂದಿಗಳು ಈ ಮೂರು ಕಾನೂನುಗಳ ಬಗ್ಗೆ ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಿ ಎಂದು ಆಯುಕ್ತರು ಹೇಳಿದರು. +ಕವಾಯತಿನಲ್ಲಿ ಎಲ್ಲಾರೂ ಭಾಗವಹಿಸಿ:ಪ್ರತಿ ತಿಂಗಳು ಮಾಸಿಕ ಕವಾಯತು ಅನುಷ್ಠಾನಕ್ಕೆ ತರಲಾಗಿದೆ. ನಿರಂತರವಾಗಿ ಕವಾಯತಿನಲ್ಲಿ ಎಲ್ಲಾ ಸಿಬ್ಬಂದಿ ವರ್ಗ ಪಾಲ್ಗೊಳ್ಳಬೇಕು. ಅದರಲ್ಲೂ ದೈನಂದಿನ ಕರ್ತವ್ಯದ ಜೊತೆಗೆ ನಿತ್ಯ ನಿರ್ವಹಿಸುವಂತಹ ಸಂಚಾರ, ರಾತ್ರಿ ಗಸ್ತು, ಠಾಣೆಯಲ್ಲಿನ ಕರ್ತವ್ಯದ ಜೊತೆಗೆ ಕವಾಯತು ಅಭ್ಯಾಸ ಮಾಡಿ ಮುಂದೆಯೂ ನಿರ್ವಹಿಸಿಕೊಂಡು ಹೋಗಬೇಕೆಂದು ಹೇಳಿದರು. +ಇಂದಿನ ಕವಾಯಿತಿನಲ್ಲಿ ಅತ್ಯಂತ ಉತ್ತಮ ಶ್ರೇಣಿಯ ಪ್ರದರ್ಶನವನ್ನು ನೀಡಿದಂತಹ ದೇವರಾಜ್ ಹಾಗೂ ಕವಾಯಿತಿನಲ್ಲಿ ಭಾಗವಹಿಸಿದ್ದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಮಿತ್ರರಿಗೆ ಅಭಿನಂದನೆ ಸಲ್ಲಿಸಿ ಶುಭಾಷಯ ಹೇಳಿದರು. \ No newline at end of file diff --git a/eesanje/url_46_87_7.txt b/eesanje/url_46_87_7.txt new file mode 100644 index 0000000000000000000000000000000000000000..332197c3117e09deb6f97d0f7e47454517b42d1c --- /dev/null +++ b/eesanje/url_46_87_7.txt @@ -0,0 +1,4 @@ +ಸಿಎಂ ಪತ್ನಿಗೆ ನೀಡಿದ ನಿವೇಶನಗಳ ಕಡತ ತಿರುಚುವ ಪ್ರಯತ್ನ ನಡೆಯುತ್ತಿದೆ : ಅಶೋಕ್ ಆರೋಪ +ಬೆಂಗಳೂರು,ಜು.5-ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35 ಕೋಟಿ ರೂ. ಮೌಲ್ಯದ 14 ನಿವೇಶನಗಳಿಗೆ ಸಂಬಂಧಪಟ್ಟ ಕಡತಗಳನ್ನು ತಿರುಚುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರು ಕಡತಗಳನ್ನು ಬೆಂಗಳೂರಿಗೆ ತಂದಿದ್ದಾರೆ ಎಂದು ವಿಧಾನಸ ಭೆಯ ಪ್ರತಿಪಕ್ಷದ ನಾಯಕ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. +ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದಲೇ ನಗರಾಭಿವೃದ್ಧಿ ಸಚಿವ ಭೈರತಿ ಸಚಿವ ಕಡತಗಳನ್ನು ಬೆಂಗಳೂರಿಗೆ ತಂದಿರುವ ಗುಮಾನಿ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. +ಸರ್ಕಾರ ಈ ಕೂಡಲೇ ಸಂಬಂಧಪಟ್ಟ ಕಡತಗಳನ್ನು ಬಹಿರಂಗ ಮಾಡಿ ಸಾರ್ವಜನಿಕರ ಮುಂದಿಡಬೇಕು ಎಂದು ಸಿದ್ದರಾಮಯ್ಯ ಅವರನ್ನು ಅಶೋಕ್ ಒತ್ತಾಯಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾದ 4,000 ಕೋಟಿ ಮೌಲ್ಯದ ಮುಡಾ ಹಗರಣದಲ್ಲಿ ದಿನಕ್ಕೊಂದು ಕರ್ಮಕಾಂಡ ಬಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_87_8.txt b/eesanje/url_46_87_8.txt new file mode 100644 index 0000000000000000000000000000000000000000..bf3cbcc6abea61d5596cb6d58e3b73a537309620 --- /dev/null +++ b/eesanje/url_46_87_8.txt @@ -0,0 +1,5 @@ +ಮೈಸೂರು ಡಿಸಿ ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ +ಬೆಂಗಳೂರು, ಜು.5– ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಕಳೆದ 2 ದಿನದಲ್ಲಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು ಇದೀಗ, 23 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತಡ ರಾತ್ರಿ ಆದೇಶ ಹೊರಡಿಸಲಾಗಿದೆ. +ಪ್ರಮುಖವಾಗಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ನೇಮಿಸಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಉಳಿದಂತೆ ವರ್ಗಾವಣೆಯಾದ ಅಧಿಕಾರಿಗಳ ವಿವರ ಕೆಳಕಂಡಂತಿದೆ. +* ಡಾ.ರಾಮ್ಪ್ರಸಾತ್ ಮನೋಹರ್, ಹೆಚ್ಚುವರಿ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಅಧ್ಯಕ್ಷರು ಬೆಂಗಳೂರು ಜಲಮಂಡಳಿ* ಬಿ.ಶರತ್-ವ್ಯವಸ್ಥಾಪಕ ನಿರ್ದೇಶಕರು ,ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ* ಸೆಲ್ವಮಣಿ- ವ್ಯವಸ್ಥಾಪಕ ನಿರ್ದೇಶಕರು,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ* ನಿತೀಶ್ ಪಾಟೀಲ್-ಐಎಎಸ್ ನಿರ್ದೇಶಕರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಬೆಂಗಳೂರು* ಡಾ. ಅರುಂಧತಿ ಚಂದ್ರಶೇಖರ್-ಆಯುಕ್ತರು, ಪಂಚಾಯತ್ ರಾಜ್ ಇಲಾಖೆ ,ಬೆಂಗಳೂರು* ಜ್ಯೋತಿ ಕೆ-ಆಯುಕ್ತರು ಮತ್ತು ನಿರ್ದೇಶಕರು, ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ, ಬೆಂಗಳೂರು* ಶ್ರೀಧರ ಸಿ.ಎನ್.-ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು* ಡಾ.ರಾಜೇಂದ್ರ ಕೆ.ವಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಬೆಂಗಳೂರು* ಚಂದ್ರಶೇಖರ ನಾಯಕ ಎಲ್- ಹೆಚ್ಚುವರಿ ಆಯುಕ್ತರು,ವಾಣಿಜ್ಯ ತೆರಿಗೆಗಳು(ಜಾರಿ), ಬೆಂಗಳೂರು* ವಿಜಯಮಹಾಂತೇಶ ಬಿ ದಾನಮನವರ್-ಜಿಲ್ಲಾಧಿಕಾರಿ, ಹಾವೇರಿ ಜಿಲ್ಲೆ* ಗೋವಿಂದ ರೆಡ್ಡಿ-ಜಿಲ್ಲಾಧಿಕಾರಿ, ಗದಗ +* ರಘುನಂದನ್ ಮೂರ್ತಿ-ಖಜಾನೆ ಆಯುಕ್ತರು, ಬೆಂಗಳೂರು* ಡಾ.ಗಂಗಾಧರಸ್ವಾಮಿ ಜಿ.ಎಂ.-ಜಿಲ್ಲಾಧಿಕಾರಿ, ದಾವಣಗೆರೆ* ಲಕ್ಷೀಕಾಂತ್ ರೆಡ್ಡಿ-ಜಿಲ್ಲಾಧಿಕಾರಿ, ಮೈಸೂರು* ನಿತೀಶ್ ಕೆ-ಜಿಲ್ಲಾಧಿಕಾರಿ, ರಾಯಚೂರು ಜಿಲ್ಲೆ* ಮೊಹಮದ್ ರೋಷನ್ -ಜಿಲ್ಲಾಧಿಕಾರಿ, ಬೆಳಗಾವಿ ಜಿಲ್ಲೆ* ಶಿಲ್ಪಾ ಶರ್ಮಾ- ಜಿಲ್ಲಾಧಿಕಾರಿ, ಬೀದರ್ ಜಿಲ್ಲೆ.* ಡಾ.ದಿಲೀಶ್ ಸಸಿ-ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸೆಂಟರ್ ಫಾರ್ ಇ-ಆಡಳಿತ, ಬೆಂಗಳೂರು* ಲೋಖಂಡೆ ಸ್ನೇಹಲ್ ಸುಧಾಕರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖಾನೆ \ No newline at end of file diff --git a/eesanje/url_46_87_9.txt b/eesanje/url_46_87_9.txt new file mode 100644 index 0000000000000000000000000000000000000000..11051afb37e05b4e8a55ef6e3bdd0d6c28c8c878 --- /dev/null +++ b/eesanje/url_46_87_9.txt @@ -0,0 +1,4 @@ +ಜನತಾ ದರ್ಶನ ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ : ಹೆಚ್‌ಡಿಕೆ +ಬೆಂಗಳೂರು, ಜು.5-ಜನತಾ ದರ್ಶನ ನಡೆಸುವ ವಿಚಾರದಲ್ಲೂ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. +ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಡೆಸುವ ಜನತಾ ದರ್ಶನದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರವಿಡಲು ನಿಮಿಂದ ಸಾಧ್ಯವಿಲ್ಲ ಎಂದು ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ಜನತಾ ದರ್ಶನ ನಡೆಸುವುದನ್ನು ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಡೆಸುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿಯ ಸಭೆ ನಡೆಸಿದಾಗ ಏನು ಮಾಡುತ್ತಿದ್ದರು? ಚುನಾವಣೆ ಸಂದರ್ಭದಲ್ಲಿ ಜನ ಸ್ಪಂದನ ಕಾರ್ಯಕ್ರಮ ಮಾಡಿದಾಗ ಎಲ್ಲಿ ಹೋಗಿದ್ದರು ಎಂದು ಟೀಕಾಪ್ರಹಾರ ನಡೆಸಿದ್ದಾರೆ. \ No newline at end of file diff --git a/eesanje/url_46_88_1.txt b/eesanje/url_46_88_1.txt new file mode 100644 index 0000000000000000000000000000000000000000..f609fff7d128319c94e0b702b7724700a9a9f571 --- /dev/null +++ b/eesanje/url_46_88_1.txt @@ -0,0 +1,7 @@ +ಪ.ಜಾತಿ, ಪ.ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಆಯಾ ವರ್ಷವೇ ಖರ್ಚು ಮಾಡುವಂತೆ ಸಿಎಂ ಕಟ್ಟಪ್ಪಣೆ +ಬೆಂಗಳೂರು ಜು.5-ಎಸ್‌‍ಸಿಎಸ್‌‍ಪಿ ಮತ್ತು ಟಿಎಸ್ಪಿ ಅಡಿ ನಿಗದಿ ಮಾಡಲಾದ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ನಿಗದಿ ಪಡಿಸಿದ ಅನುದಾನ ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಪಾಲನೆ ಮಾಡಲಾಗಿದೆ. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಕಾನೂನು ರೂಪಿಸಲಾಗಿದೆ. ಈ ನಿಯಮವನ್ನು ಯಾರು ನಿರ್ಲಕ್ಷ್ಯಿಸಿದರೂ ಕ್ರಮ ತೆಗೆದುಕೊಳ್ಳಲಾಗುವುದು, ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ ಎಂದು ಎಚ್ಚರಿಸಿದರು. +ಇಡೀ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ಎಸ್‌‍ಸಿಎಸ್‌‍ಪಿ ಮತ್ತು ಟಿಎಸ್‌‍ಪಿ ಕಾಯ್ದೆ ಮಾಡಿರುವುದು ನಮ ಸರ್ಕಾರ ಮಾತ್ರ. ಇದರಿಂದ 2024-25 ನೇ ಸಾಲಿಗೆ ಎಸ್‌‍.ಸಿ.ಎಸ್‌‍.ಪಿ., ಟಿಎಸ್‌‍.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11ರಷ್ಟು ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌‍.ಸಿ.ಎಸ್‌‍.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್‌‍.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ ಎಂದು ತಿಳಿಸಿದರು. +ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ. ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಣ ಬಿಡುಗಡೆಗೆಯಾಗಿದ್ದು, ಅದರಲ್ಲಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು. +ಉಳಿಕೆ ಹಣ ವ್ಯಯವಾಗಬಾರದು. ಅದೇ ವರ್ಷ ವೆಚ್ಚವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ. ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು. ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ ಎಂದು ವಿವರಿಸಿದರು. +ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಹೆಚ್‌.ಸಿ. ಮಹದೇವಪ್ಪ, ಸಚಿವರಾದ ಹೆಚ್‌.ಕೆ.ಪಾಟೀಲ್‌‍, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಶಾಸಕರುಗಳಾದ ಪ್ರಸಾದ್‌ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್‌‍, ಪಿ.ಎಂ.ನರೇಂದ್ರಸ್ವಾಮಿ, ಕೃಷ್ಣಾನಾಯಕ್‌ , ವಿಧಾನ ಪರಿಷತ್‌ ಸದಸ್ಯರಾದ ಪ್ರಕಾಶ್‌ ರಾಥೋಡ್‌, ಸಂಸದರಾದ ಸುನಿಲ್‌ ಬೋಸ್‌‍ ಪ್ರಕಾಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಗೋಯೆಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_88_10.txt b/eesanje/url_46_88_10.txt new file mode 100644 index 0000000000000000000000000000000000000000..df0c41d007679857fe427a4feac12e824a41be13 --- /dev/null +++ b/eesanje/url_46_88_10.txt @@ -0,0 +1,5 @@ +ಹಚ್ಚೆ ಹಾಕಿಸಿಕೊಂಡು ಸಿದ್ದರಾಮಯ್ಯಗೆ ಅಭಿಮಾನಿಗಳಿಂದ ವಿನೂತನ ಬೆಂಬಲ +ಬೆಂಗಳೂರು,ಜು.4-ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸುತ್ತಿರುವ ನಡುವೆಯೇ ಸಿದ್ದರಾಮಯ್ಯ ಅವರ ಹೆಸರು ಹಾಗೂ ಭಾವಚಿತ್ರವನ್ನು ಅಚ್ಚೆ ಹಾಕಿಸಿಕೊಂಡು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ. +ಮೈಸೂರಿನಲ್ಲಿ ನಡೆದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ವಿಪಕ್ಷಗಳು ವ್ಯಾಪಕ ಟೀಕೆ ಮಾಡುತ್ತಿವೆ. ರಾಜೀನಾಮೆಗೂ ಪಟ್ಟು ಹಿಡಿದಿವೆ. ಆದರೆ ಇವೆಲ್ಲದಕ್ಕೂ ಸೆಡ್ಡು ಹೊಡೆದಂತೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ತಮ ಕೈ ಮೇಲೆ, ಬೆನ್ನ ಮೇಲೆ ಸಿದ್ದರಾಮಯ್ಯ ಅವರ ಹೆಸರನ್ನು ದೊಡ್ಡದಾಗಿ ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಿದ್ದರಾಮಯ್ಯನವರ ಭಾವಚಿತ್ರವನ್ನು ಬರೆಸಿಕೊಳ್ಳುತ್ತಿರುವುದು ಗಮನ ಸೆಳೆದಿದೆ. +ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ಗೆ ಜೈಲಿನಲ್ಲಿ ನೀಡಲಾಗಿದ್ದ ಖೈದಿ ಸಂಖ್ಯೆಯನ್ನು ಅಭಿಮಾನಿಗಳು ತಮ ಕೈಮೇಲೆ ಟ್ಯಾಟೂ ಹಾಕಿಸಿಕೊಂಡು, ಗಾಡಿಯ ಮೇಲೆ ಬರೆಸಿಕೊಂಡು ಅಭಿಮಾನ ವ್ಯಕ್ತಪಡಿಸಿದ್ದರು. +ಇದೇ ರೀತಿ ಕಾಂಗ್ರೆಸ್ನ ಶಾಸಕ ಲಕ್ಷ್ಮಣ್ ಸವದಿ ಅವರ ಹೆಸರನ್ನೂ ಕೆಲವು ಅಭಿಮಾನಿಗಳು ಟ್ಯಾಟೂ ಹಾಕಿಸಿಕೊಂಡಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು.ಈಗ ಸಿದ್ದರಾಮಯ್ಯ ಅವರ ಪರವಾಗಿ ಅದೇ ರೀತಿಯ ವಿಡಿಯೋಗಳು ವೈರಲ್ ಆಗುತ್ತಿವೆ. \ No newline at end of file diff --git a/eesanje/url_46_88_11.txt b/eesanje/url_46_88_11.txt new file mode 100644 index 0000000000000000000000000000000000000000..8cbcabea5d0605fd726488f86f0d0477f90adb8e --- /dev/null +++ b/eesanje/url_46_88_11.txt @@ -0,0 +1,3 @@ +ಮತ್ತೆ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ +ಬೆಂಗಳೂರು, ಜು.4– ಕಳೆದ ಮಂಗಳವಾರ ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರ ಕಮಿಷನರ್ ಸೇರಿದಂತೆ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಇದೀಗ ಮತ್ತೆ ನಾಲ್ಕು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. +ಪುಟ್ಟ ಮಾದಯ್ಯ- ರಾಯಚೂರು ಎಸ್ಪಿ, ಯಶೋಧ ವಂಟಗೋಡಿ – ಕರ್ನಾಟಕ ಲೋಕಾಯುಕ್ತ ಎಸ್ಪಿ, ಸಜೀತ್- ಈಶಾನ್ಯ ವಿಭಾಗದ ಡಿಸಿಪಿ, ಡಾ. ರಾಮ್ ಎಲ್ ಅರಸಿದ್ದಿ- ಕೊಪ್ಪಳ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. \ No newline at end of file diff --git a/eesanje/url_46_88_12.txt b/eesanje/url_46_88_12.txt new file mode 100644 index 0000000000000000000000000000000000000000..3862bf361f2f8fecc35b25b9136c043be8598b45 --- /dev/null +++ b/eesanje/url_46_88_12.txt @@ -0,0 +1,8 @@ +ಸಿದ್ದರಾಮಯ್ಯನವರಿಗೆ ಧಮ್ಮು-ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ : ಬಿಎಸ್ವೈ ಚಾಲೆಂಜ್ +ಬೆಂಗಳೂರು,ಜು.4-ಲೋಕಸಭೆ ಚುನಾವಣೆಯಲ್ಲಿ ಮತದಾರರಿಂದ ತಿರಸ್ಕೃತವಾಗಿರುವ ಕಾಂಗ್ರೆಸ್‌‍ ಪಕ್ಷ ಅಧಿಕಾರ ನಡೆಸಲು ನೈತಿಕತೆ ಕಳೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧಮ್ಮು ಮತ್ತು ತಾಕತ್ತಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಎದುರಿಸಿ ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿಯ ಸದಸ್ಯ, ಮಾಜಿ ಸಿಎಂ ಯಡಿಯೂರಪ್ಪ ಬಹಿರಂಗ ಸವಾಲು ಹಾಕಿದ್ದಾರೆ. +ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಕೇವಲ 9 ಸ್ಥಾನ ಗೆದ್ದಿದೆ. ನಿಮನ್ನು ಒಂದಂಕಿಗೆ ಇಳಿಸುತ್ತೇವೆ ಎಂದು ಹೇಳಿದ್ದ ನಾವು ಹೇಳಿದಂತೆ ನಡೆದುಕೊಂಡಿದ್ದೇವೆ. ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದರು. +ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತವರು ಜಿಲ್ಲೆಯಲ್ಲೇ ಕಾಂಗ್ರೆಸ್‌‍ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಇವರು ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ತಾಕತ್ತಿದ್ದರೆ ವಿಧಾನಸಭೆ ಚುನಾವಣೆ ವಿಸರ್ಜಿಸಿ ಹೊಸ ಜನಾದೇಶ ಪಡೆಯಿರಿ ಎಂದು ಸವಾಲು ಎಸೆದರು. +ಈಗಲೇ ಚುನಾವಣೆ ನಡೆದರೆ ಬಿಜೆಪಿ ನಿಚ್ಚಳವಾಗಿ ಅಧಿಕಾರಕ್ಕೆ ಬರಲಿದೆ. 19 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌‍ ಗೆದ್ದಿದೆ. ಕಾಂಗ್ರೆಸ್‌‍ ಕಟಾಕಟ್‌ ಸುಳ್ಳು, ಗ್ಯಾರಂಟಿಗಳ ನಡುವೆಯೂ 19 ಸ್ಥಾನ ಗೆದ್ದು , ಶೇ 46.06% ಮತ ಬಿಜೆಪಿ ಪಡೆದಿದೆ. ಅದರ ಶ್ರೇಯಸ್ಸು ನಮ ಮತಭಾಂದವರಿಗೆ ಸಲುತ್ತದೆ ಎಂದರು. +ಸಿಕ್ಕ ಸಿಕ್ಕ ಕಡೆ ಜನರ ತೆರಿಗೆ ಹೆಚ್ಚಿಸಿ ಜನರ ಹೊಟ್ಟೆ ಮೇಲೆ ಹೊಡಿತಿದ್ದಾರೆ. ಸರ್ಕಾರ ಪಾಪರ್‌ ಆಗದಿದ್ದರೆ ಪೆಟ್ರೋಲ್‌‍- ಡೀಸೆಲ್‌ ಬೆಲೆ ಹೆಚ್ಚಿಸುವ ಅಗತ್ಯ ಇರುತ್ತಿರಲಿಲ್ಲ. ಬರಗಾಲ ಇದ್ದರೂ ಕಾವೇರಿ ನೀರು ಹರಿಸಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. +ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ, ಪೋಲಿಸ್‌‍ ಠಾಣೆ ಮುತ್ತಿಗೆ, ದಲಿತ ಮಹಿಳೆ ಮೇಲೆ ಹಲ್ಲೆ, ವಾಲೀಕಿ ನಿಗಮದ ಹಗರಣ ಇದು ಒಂದು ಹಂತಕ್ಕೆ ಬರುವ ಮೊದಲೇ ಮೂಡಾ ಹಗರಣ ಬಯಲಿಗೆ ಬಂದಿದೆ. ಮುಖ್ಯಮಂತ್ರಿ ಗಳ ತವರು ಜಿಲ್ಲೆಯಲ್ಲೇ ಅವರ ಕಣ್ಣುಮುಂದೆ ನಡೆದಿದೆ. ಈ ಹಗರಣದಲ್ಲಿ ಸಿಎಂ ಕೈವಾಡವಿದೆ. ಮುಂದೆ ಬರುವ ಅಧಿವೇಶನದಲ್ಲಿ ಎಲ್ಲಾ ಹಗರಣಗಳನ್ನು ಬಯಲು ಮಾಡುತ್ತೇವೆ ಎಂದು ಗುಡುಗಿದರು. +ಇನ್ನು ಕೆಲವೇ ದಿನಗಳಲ್ಲಿ ಸ್ಥಳೀಯ ಸಂಸ್ಥೆ, ಬಿಬಿಎಂಪಿ ಚುನಾವಣೆ ಬರ್ತಿದೆಈ ಚುನಾವಣೆಗಳಲ್ಲಿ ನಾವು ಹೆಚ್ಚು ಸೀಟ್‌ ಗೆದ್ದು ಅಧಿಕಾರಕ್ಕೆ ಬರಬೇಕಾಗಿದೆ. ವಿಜಯೇಂದ್ರ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದಾರೆ. ಸದನದ ಒಳಗೂ- ಹೊರಗೂ ಸಕ್ರಿಯ ವಿರೋಧ ಪಕ್ಷವಾಗಿ ಕೆಲಸ ಮಾಡೋಣಪಕ್ಷ ಸಂಘಟನೆ ಮಾಡಿ , ಪಕ್ಷವನ್ನು ಬೆಳೆಸೋಣಕಾಂಗ್ರೆಸ್‌‍ ನ ಜನವಿರೋಧಿ, ಭ್ರಷ್ಟಾಚಾರದ ವಿರುದ್ಧ ಸಮರ ಸಾರೋಣ ಎಂದು ಕರೆ ಕೊಟ್ಟರು. \ No newline at end of file diff --git a/eesanje/url_46_88_2.txt b/eesanje/url_46_88_2.txt new file mode 100644 index 0000000000000000000000000000000000000000..569eb9bb797d23b5c92f821873b790a119de6f99 --- /dev/null +++ b/eesanje/url_46_88_2.txt @@ -0,0 +1,9 @@ +ದಿನಕಳೆದಂತೆ ಹೆಚ್ಚುತ್ತಲೇ ಇದೆ ಡೆಂಘೀ ಆರ್ಭಟ, ಸಾರ್ವಜನಿಕರಲ್ಲಿ ಆತಂಕ +ಬೆಂಗಳೂರು,ಜು.5-ರಾಜಧಾನಿ ಬೆಂಗಳೂರು ಸೇರಿದಂತೆ ಮಹಾಮಾರಿ ಡೆಂಘೀ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈಗಾಗಲೇ ಈ ಮಾರಕ ಕಾಯಿಲೆಗೆ ಮಕ್ಕಳು, ಮಹಿಳೆಯರು ಸೇರಿ ಏಳು ಮಂದಿ ಮೃತಪಟ್ಟಿದ್ದಾರೆ. ಸಾವುನೋವಿನ ಪ್ರಮಾಣವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. +ಡೆಂಘೀ ಮಹಾಮಾರಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿರುವ ನಡುವೆಯೇ ರೋಗ ಲಕ್ಷಣಗಳಿಂದ ಆಸ್ಪತ್ರೆ ಸೇರುವವರ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ.ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಉಡುಪಿ, ಧಾರವಾಡ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈವರೆಗೆ 6,676 ಮಂದಿಯಲ್ಲಿ ಡೆಂಘೀ ರೋಗ ಲಕ್ಷಣಗಳಿರುವುದು ಕಂಡುಬಂದಿದೆ. +ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಡೆಂಘೀಗೆ ಬಲಿಯಾಗಿರುವುದು ಸೇರಿದಂತೆ ಈವರೆಗೆ 7 ಮಂದಿ ರೋಗಕ್ಕೆ ಬಲಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಎಂಬುವರು ತಾಲ್ಲೂಕಿನಾದ್ಯಂತ ಡೆಂಘೀ ವಿರುದ್ಧ ಜಾಗೃತಿ ಮೂಡಿಸುತ್ತಿದ್ದರು. ಇದೀಗ ಅವರೇ ಡೆಂಘೀಗೆ ಬಲಿಯಾಗಿದ್ದಾರೆ. +ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಡೆಂಘೀ ಪ್ರಕರಣಗಳಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿದ್ದು, ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 512 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರತಿದಿನ ತಪಾಸಣೆ ನಡೆಸಲಾಗುತ್ತಿದೆ. ಶಿವಮೊಗ್ಗದಲ್ಲೂ ಕೂಡ ಆಸ್ಪತ್ರೆಗಳು ರೋಗಿಗಳಿಂದ ತುಂಬಿದೆ. +ಈವರೆಗೆ 83 ಪ್ರಕರಣಗಳು ದಾಖಲಾಗಿವೆ. ರೋಗಕ್ಕೆ ಅಗತ್ಯವಾದ ವೈಟ್‌ ಪ್ಲೇಟ್‌ಲೇಟ್‌ ಸಂಗ್ರಹಿಸಿಡುವಂತೆ ಸೂಚಿಸಲಾಗಿದೆ. ಹಾವೇರಿ ಜಿಲ್ಲೆಯಲ್ಲಿ ಈ ರೋಗದಿಂದ ಈಗಾಗಲೇ ಇಬ್ಬರು ಸಾವನ್ನಪ್ಪಿದ್ದು, 463 ಮಂದಿ ಡೆಂಘೀ ಬಾಧಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.ಚಿತ್ರದುರ್ಗ, ದಕ್ಷಿಣ ಕನ್ನಡದ ಆಸ್ಪತ್ರೆಗಳಲ್ಲಿ ಡೆಂಘೀ ರೋಗಗಳಿಗೆ ಪ್ರತ್ಯೇಕ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. +ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಅಬ್ಬರ ಜೋರಾಗುತ್ತಿದೆ. ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು , ಬಿಬಿಎಂಪಿ, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸಿವೆ. ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ನೀರು ತುಂಬಿಕೊಳ್ಳುವುದರಿಂದ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಡೆಂಘೀ ಹರಡಲು ಕಾರಣವಾಗುತ್ತದೆ. +ಈ ಹಿನ್ನೆಲೆಯಲ್ಲಿ ಮನೆಗಳ ಸುತ್ತಮುತ್ತ ಮತ್ತು ಖಾಲಿ ಜಾಗಗಳಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ ನೀಡಲಾಗಿದೆ. ಖಾಸಗಿ ಮಾಲೀಕತ್ವದ ಜಾಗಗಳಲ್ಲಿ ಸ್ವಚ್ಚತೆ ಕಾಪಾಡದವರಿಗೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ಖಾಸಗಿಯವರ ನಿವೇಶನ ಮತ್ತು ಸ್ವತ್ತುಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡುಬಂದಲ್ಲಿ ಮೊದಲಿಗೆ ಎಚ್ಚರಿಕೆ ನೀಡಲಾಗುತ್ತದೆ. ಇದಕ್ಕೆ ಸ್ಪಂದಿಸದಿದ್ದರೆ 50 ರೂ. ದಂಡ ವಿಧಿಸಲಾಗುತ್ತದೆ. ನಂತರ ಸ್ಥಳ ಸ್ವಚ್ಚವಾಗುವವರೆಗೂ ಪ್ರತಿನಿತ್ಯ 15 ರೂ. ದಂಡ ವಿಧಿಸಲು ತೀರ್ಮಾನಿಸಲಾಗಿದೆ. +ಕಳೆದ ಏಪ್ರಿಲ್‌ನಿಂದ ಮೇ 10ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 1974 ತಪಾಸಣೆಗಳನ್ನು ನಡೆಸಲಾಗಿದ್ದು, 930 ಜನರಿಗೆ ಡೆಂಘೀ ಲಕ್ಷಣಗಳು ಕಂಡುಬಂದಿವೆ. ನಿರ್ಲಕ್ಷ್ಯ ಮಾಡಿದರೆ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಬೊಮನಹಳ್ಳಿ ವಲಯದಲ್ಲಿ 20, ದಾಸರಹಳ್ಳಿ 2, ಮಹದೇವಪುರ 97, ಆರ್‌ಆರ್‌ನಗರ 18, ದಕ್ಷಿಣ ವಲಯ 453, ಪಶ್ಚಿಮ ವಲಯ 99, ಯಲಹಂಕದಲ್ಲಿ 17 ಡೆಂಘೀ ಪ್ರಕರಣಗಳು ದಾಖಲಾಗಿವೆ. \ No newline at end of file diff --git a/eesanje/url_46_88_3.txt b/eesanje/url_46_88_3.txt new file mode 100644 index 0000000000000000000000000000000000000000..427bbbb5bc80f8466fdc363f1aada52342fb2446 --- /dev/null +++ b/eesanje/url_46_88_3.txt @@ -0,0 +1,7 @@ +ಶೇ.5ರಷ್ಟು ವಿನಾಯ್ತಿಯೊಂದಿಗೆ ಆಸ್ತಿ ತೆರಿಗೆ ಪಾವತಿಯ ಅವಧಿ ವಿಸ್ತರಣೆ +ಬೆಂಗಳೂರು,ಜು.5-ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್‌‍ಎಲ್‌‍ಎಸ್‌‍ಎ)ದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತಿಯನ್ನು ಜುಲೈ ಅಂತ್ಯದವರೆಗೆ ವಿಸ್ತರಿಸಿದೆ.ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ವಿನಾಯಿತಿಯನ್ನು ಈ ತಿಂಗಳ ಅಂತ್ಯದವರೆಗೆ ನೀಡಲಾಗುತ್ತಿದೆ. +ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್‌ ತಿಂಗಳಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ರಿಯಾಯಿತಿಯನ್ನು ಜುಲೈ 31ರವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮನವಿಯಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. +ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಜೂ.4ರಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಲ್‌‍.ರಘುನಾಥ್‌ ಪತ್ರ ಬರೆದಿದ್ದರು. ಇದರಿಂದ ಇನ್ನೂ ಆಸ್ತಿ ತೆರಿಗೆ ಪಾವತಿಸದೇ ಇದ್ದವರು ಜುಲೈ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿ ಶೇ.5ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. +ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜುಲೈ 13ರಂದು ರಾಜ್ಯ ವ್ಯಾಪಿ ರಾಷ್ಟ್ರೀಯ ಲೋಕ್‌ ಅದಾಲತ್‌ ಆಯೋಜಿಸಲಾಗಿದೆ. ಇದರಲ್ಲಿ ಸಾವಿರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ ಇದೆ ಎಂಬ ವಿಚಾರ ಪ್ರಾಧಿಕಾರದ ಗಮನಕ್ಕೆ ಬಂದಿದೆ. +ಶೇ.5ರಷ್ಟು ರಿಯಾಯಿತಿಯನ್ನು ಜುಲೈ 13ರವರೆಗೆ ನೀಡಿದರೆ ಲೋಕ ಅದಾಲತ್‌ ಅವಕಾಶವನ್ನು ಬಳಸಿಕೊಂಡು ಆಸ್ತಿ ಮಾಲೀಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿ ತೆರಿಗೆ ಪಾವತಿಸಬಹುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುತ್ತದೆ. ಹಾಗಾಗಿ ರಿಯಾಯಿತಿ ಅವಕಾಶವನ್ನು ವಿಸ್ತರಿಸಬೇಕು ಎಂದು ಪ್ರಾಧಿಕಾರ ಮನವಿ ಮಾಡಿತ್ತು. +ಇದನ್ನು ಪರಿಗಣಿಸಿದ ನಗರಾಭಿವೃದ್ಧಿ ಇಲಾಖೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲು ಕಲ್ಪಿಸಲಾಗಿರುವ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಆದೇಶಿಸಾಗಿದೆ. \ No newline at end of file diff --git a/eesanje/url_46_88_4.txt b/eesanje/url_46_88_4.txt new file mode 100644 index 0000000000000000000000000000000000000000..cc03e80020994fac212c5ad8c69583ab60e8b0b8 --- /dev/null +++ b/eesanje/url_46_88_4.txt @@ -0,0 +1,7 @@ +3 ಕ್ಷೇತ್ರಗಳ ಉಪಚುನಾವಣೆ : ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ +ಬೆಂಗಳೂರು,ಜು.5-ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ ಮಾಡಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌‍.ಅಶ್ವತ್ನಾರಾಯಣ, ಸಂಡೂರಿಗೆ ಸಿ.ಟಿ.ರವಿ, ಶಿಗ್ಗಾವಿಗೆ ಆರ್‌.ಅಶೋಕ್‌ ನೇತೃತ್ವದ ತಂಡಗಳನ್ನು ರಚನೆ ಮಾಡಲಾಗಿದೆ. +ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ. ವರದಿಗಳು ಪೂರ್ಣಗೊಂಡ ಬಳಿಕ ಹೈಕಮಾಂಡ್‌ಗೆ ಕಳಿಸಲು ಬಿಜೆಪಿ ನಿರ್ಧಾರ ಮಾಡಿದೆ. +ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. +2008, 2013, 2018 ಹಾಗೂ 2023ರ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬಸವರಾಜ ಬೊಮಾಯಿ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. +ಚನ್ನಪಟ್ಟಣದಿಂದ ಜೆಡಿಎಸ್‌‍ ಶಾಸಕರಾಗಿದ್ದ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆಯಿಂದ ಗೆದ್ದು ಕೇಂದ್ರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿದ್ದಾರೆ. +ಸಂಡೂರು ಕಾಂಗ್ರೆಸ್‌‍ ಶಾಸಕರಾಗಿದ್ದ ಇ.ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. \ No newline at end of file diff --git a/eesanje/url_46_88_5.txt b/eesanje/url_46_88_5.txt new file mode 100644 index 0000000000000000000000000000000000000000..81cbf555b7199894ee1f168b010d1577afb4c329 --- /dev/null +++ b/eesanje/url_46_88_5.txt @@ -0,0 +1,6 @@ +ಹಾಸನದಲ್ಲಿ ಶಂಕಿತ ಡೆಂಘೀಗೆ ಮತ್ತೊಬ್ಬ ಬಾಲಕಿ ಬಲಿ, ಒಂದೇ ವಾರದಲ್ಲಿ ನಾಲ್ವರು ಬಾಲಕಿಯರ ಸಾವು +ಹಾಸನ,ಜು.5-ರಾಜ್ಯಾದ್ಯಂತ ಮಹಮಾರಿ ಡೆಂಘೀ ರಣಕೇಕೆ ಮುಂದುವರೆದಿದ್ದು, ಹಾಸನದಲ್ಲಿ ಮತ್ತೊಂದು ಬಾಲಕಿ ಶಂಕಿತ ಡೆಂಘೀಗೆ ಬಲಿಯಾಗಿದ್ದಾಳೆ.ಸಮೃದ್ಧಿ(8) ಮೃತಪಟ್ಟ ಬಾಲಕಿ. ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ದೊಡ್ಡಹಳ್ಳಿ ಗ್ರಾಮದ ರಮೇಶ್‌ ಅಶ್ವಿನಿ ದಂಪತಿಯ ಪುತ್ರಿ ಸಮೃದ್ಧಿಗೆ ಕಳೆದ ಮೂರ್ನಾಲ್ಕು ದಿನಗಳಿಂದ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನದ ಹಿಂದೆ ಹಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿತ್ತು. +ಚೇತರಿಸಿಕೊಳ್ಳದ ಹಿನ್ನಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ಬಾಲಕಿಯನ್ನು ವರ್ಗಾಯಿಸಲಾಗಿತ್ತು. ಆದರೆ ಅಲ್ಲೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಮೃದ್ಧಿ ಮೃತಪಟ್ಟಿದ್ದಾಳೆ. +ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಶಂಕಿತ ಡೆಂಘೀಗೆ ನಾಲ್ವರು ಬಾಲಕಿಯರು ಬಲಿಯಾಗಿದ್ದು, ಜಿಲ್ಲೆಯ ಜನತೆಯಲ್ಲಿ ಭಾರೀ ಆತಂಕ ಉಂಟು ಮಾಡಿದೆ. ಅದರಲ್ಲೂ ಹೊಳೆನರಸೀಪುರ ತಾಲ್ಲೂಕಿನಲ್ಲಿ ಮೂವರು ಮೃತಪಟ್ಟಿರುವುದು ಮತ್ತಷ್ಟು ಆತಂಕ ಸೃಷ್ಟಿಸಿದೆ. ಮಹಾಮಾರಿ ಡೆಂಘೀಗೆ ಹಾಸನ ಜಿಲ್ಲೆಯ ಜನತೆ ನಲುಗಿ ಹೋಗಿದ್ದು, ಪ್ರತಿಕ್ಷಣ ಆತಂಕದಲ್ಲೇ ದಿನ ಕಳೆಯುತ್ತಿದ್ದಾರೆ. +ಹುಣಸೂರು ವರದಿ:ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಡೆಂಘೀಗೆ ಬಲಿಯಾಗಿದ್ದಾರೆ.ಹುಣಸೂರು ತಾಲ್ಲೂಕಿನ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಗೇಂದ್ರ ಎಂಬುವರು ಕಾರ್ಯ ನಿರ್ವಹಿಸುತ್ತಿದ್ದು, ತಾಲ್ಲೂಕಿನಾದ್ಯಂತ ಡೆಂಘೀ ವಿರುದ್ಧ ಜಾಗೃತಿ ಮೂಡಿಸುತ್ತಿದ್ದರು. ಇದೀಗ ಅವರೇ ಡೆಂಘೀಗೆ ಬಲಿಯಾಗಿದ್ದಾರೆ. +ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಮೈಸೂರು, ಧಾರವಾಡ, ದಕ್ಷಿಣ ಕನ್ನಡ, ವಿಜಯಪುರ, ಉಡುಪಿ, ಬೆಳಗಾವಿ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಶಂಕಿತ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಶಿಸ್ತು ಕ್ರಮ ತೆಗೆದುಕೊಂಡಿದೆ. \ No newline at end of file diff --git a/eesanje/url_46_88_6.txt b/eesanje/url_46_88_6.txt new file mode 100644 index 0000000000000000000000000000000000000000..adebcfa9ee21bc2765342b49b2d2b9595436df12 --- /dev/null +++ b/eesanje/url_46_88_6.txt @@ -0,0 +1,7 @@ +ಬೆಂಗಳೂರು-ತುಮಕೂರು-ಅರಸೀಕೆರೆ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ, ಹೆಚ್ಚುವರಿ ಬೋಗಿ ಅಳವಡಿಸಲು ಒತ್ತಾಯ +ತುಮಕೂರು, ಜು.5-ಬೆಂಗಳೂರಿನಿಂದ ತುಮಕೂರು, ಅರಸೀಕೆರೆ ಕಡೆಗೆ ಸಂಜೆ ವೇಳೆ ಚಲಿಸುವ ವಿಶೇಷ ಪ್ಯಾಸೆಂಜರ್‌ ಹಾಗೂ ಗೋಲ್ಗುಂಬಸ್‌ ರೈಲುಗಳಲ್ಲಿ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು ಹೈರಾಣಾಗುತ್ತಿದ್ದು, ಹೆಚ್ಚುವರಿ ಜನರಲ್‌ ಬೋಗಿಗಳು ಅಥವಾ ಹೆಚ್ಚುವರಿ ರೈಲನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರನ್ನು ಪ್ರಯಾಣಿಕರು ಒತ್ತಾಯಿಸಿದ್ದಾರೆ. +ಪ್ರತಿನಿತ್ಯ ರಾಜಧಾನಿ ಬೆಂಗಳೂರಿಗೆ ಅರಸೀಕೆರೆ, ತಿಪಟೂರು, ಗುಬ್ಬಿ, ತುಮಕೂರು ಸೇರಿದಂತೆ ಈ ಭಾಗದ ವಿವಿಧೆಡೆಗಳಿಂದ ಸಾವಿರಾರು ಮಂದಿ ಸರ್ಕಾರಿ, ಅರೆ ಸರ್ಕಾರಿ, ಖಾಸಗಿ, ಬ್ಯುಸಿನೆಸ್‌ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ರೈಲಿನಲ್ಲಿ ಪ್ರಯಾಣ ಸುತ್ತಾರೆ.ಕೆಲ ಎಕ್ಸ್ ಪ್ರೆಸ್‌ ರೈಲುಗಳು ನಿರ್ದಿಷ್ಟ ನಿಲ್ದಾಣಗಳಲ್ಲಿ ನಿಲುಗಡೆ ಮಾಡುವುದನ್ನು ಬಿಟ್ಟರೆ ಉಳಿದೆಡೆ ನಿಲ್ಲಿಸುವುದಿಲ್ಲ. ಹಾಗಾಗಿ ಪ್ಯಾಸೆಂಜರ್‌ ರೈಲಿಗೆ ಬಹಳ ಬೇಡಿಕೆ ಇದೆ. +ಈ ಪ್ಯಾಸೆಂಜರ್‌ ರೈಲಿನಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಆದರೆ ಈ ರೈಲಿನ ಬೋಗಿಗಳಲ್ಲಿ ಜನ ನಿಲ್ಲಲು ಜಾಗ ಇಲ್ಲದಷ್ಟರ ಮಟ್ಟಿಗೆ ಪ್ರಯಾಣಿಕರು ತುಂಬಿರುತ್ತಾರೆ. ಒಮ್ಮೊಮ್ಮೆ ಬೋಗಿಗಳಲ್ಲಿ ಉಸಿರಾಡಲು ಸಹ ಜಾಗ ಇರುವುದಿಲ್ಲ. ಉಸಿರುಗಟ್ಟಿ ಪ್ರಯಾಣಿಸಬೇಕಾದ ವಾತಾವರಣ ಸೃಷ್ಟಿಯಾಗಿರುತ್ತದೆ. +ಅದರಲ್ಲೂ ಬೆಳಿಗ್ಗೆ ಮತ್ತು ಸಂಜೆ ವೇಳೆ ವೃದ್ಧರು, ಮಕ್ಕಳು, ಮಹಿಳೆಯರು ರೈಲುಗಾಡಿಗಳಲ್ಲಿ ಪ್ರಯಾಣಿಸುವುದು ಬಹಳ ದುಸ್ತರವಾಗಿದೆ. ಹಾಗಾಗಿ ಈ ಬಗ್ಗೆ ರೈಲ್ವೆ ಅಧಿ ಕಾರಿಗಳು ಹಾಗೂ ಸಚಿವ ವಿ.ಸೋಮಣ್ಣ ಅವರು ಗಮನ ಹರಿಸಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಹೆಚ್ಚುವರಿ ರೈಲುಗಳನ್ನು ಓಡಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ. +ಗೋಲ್ಗುಂಬಸ್‌ ರೈಲಿನಲ್ಲಿ ಎರಡು ಅಥವಾ ಮೂರು ಮಾತ್ರ ಜನರಲ್‌ ಬೋಗಿಗಳು ಇರುತ್ತವೆ. ಉಳಿದಂತೆ ರಿಸರ್ವ್‌ ಬೋಗಿಗಳು ಇವೆ. ಇದರಿಂದಾಗಿ ಪಾಸ್‌ ಹೊಂದಿರುವವರು ಹಾಗೂ ಟಿಕೆಟ್‌ ಪಡೆದು ಪ್ರಯಾಣಿಸುವವರಿಗೆ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ. +ಗೋಲ್ಗುಂಬಸ್‌ ರೈಲಿನಲ್ಲಿ ಹೆಚ್ಚುವರಿ ಜನರಲ್‌ ಬೋಗಿಗಳನ್ನು ಅಳಪಡಿಸಿದರೆ ಪ್ರತಿನಿತ್ಯ ಪ್ರಯಾಣಿಸುವ ಪ್ರಯಾಣಿಕರಿಗೆ ತುಂಬಾ ಅನುಕೂಲವಾಗಲಿದೆ. ಈ ಬಗ್ಗೆಯೂ ಸಚಿವರು ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_88_7.txt b/eesanje/url_46_88_7.txt new file mode 100644 index 0000000000000000000000000000000000000000..b3f8ef606cd2b6d703f8b72624fd33e45b5904aa --- /dev/null +++ b/eesanje/url_46_88_7.txt @@ -0,0 +1,7 @@ +ಡಿಸಿಎಂ ಆಗುವ ಆಸೆ ನನಗಿಲ್ಲ : ಕೆ.ಜೆ.ಜಾರ್ಜ್ +ಬೆಂಗಳೂರು,ಜು.4-ಕೊಟ್ಟ ಕೆಲಸವನ್ನೇ ಸರಿಯಾಗಿ ಮಾಡಿದರೆ ಸಾಕು. ಉಪಮುಖ್ಯಮಂತ್ರಿಯಾಗುವ ಯಾವ ಆಸೆಯೂ ತಮಗಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1969 ರಲ್ಲಿ ರಾಜಕೀಯಕ್ಕೆ ಬಂದವನು. +ನೀವು ರಾಜಕೀಯಕ್ಕೆ ಬಂದು ದೇಶ ಉದ್ಧಾರ ಮಾಡಬೇಕೆಂದು ನನಗೆ ಯಾರೂ ಹೇಳಲಿಲ್ಲ. ಸಮಾಜಸೇವೆ ಮಾಡುವ ಆಸಕ್ತಿಯಿಂದ ರಾಜಕಾರಣಕ್ಕೆ ಬಂದೆ. ಶಾಸಕನಾಗುತ್ತೇನೆ ಎಂದುಕೊಂಡಿರಲಿಲ್ಲ. ಪಕ್ಷ ತನ್ನನ್ನು ಗುರುತಿಸಿ, ಸಚಿವನನ್ನಾಗಿ ಮಾಡಿದೆ ಎಂದರು. +ಹಿರಿತನದ ಆಧಾರದ ಮೇಲೆ ಅವಕಾಶ ನೀಡುವುದು, ಬಿಡುವುದು ಹೈಕಮಾಂಡ್ ಅಥವಾ ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ನನಗೆ ಆ ಹುದ್ದೆಗಳ ಮೇಲೆ ಆಸಕ್ತಿಯಿಲ್ಲ. ಈಗಾಗಲೇ ಉತ್ತಮವಾದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇದ್ದಾರೆ. ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಅಗತ್ಯವಿಲ್ಲ. ಆದರೂ ಅದರ ವಿಚಾರವಾಗಿ ಕ್ರಮ ಕೈಗೊಳ್ಳಬೇಕಾಗಿರುವುದು ಮುಖ್ಯಮಂತ್ರಿಯವರ ಅಧಿಕಾರ ಎಂದು ಹೇಳಿದರು. +ಮುಡಾ ನಿವೇಶನ ಹಂಚಿಕೆ ಪ್ರಕರಣ ನಡೆದಿರುವುದು ಬಿಜೆಪಿಯವರ ಕಾಲದಲ್ಲಿ. ಡಿ ನೋಟಿಫಿಕೇಶನ್ ಆಗಿದ್ದ ಜಾಗವನ್ನು ಮೈಸೂರು ನಗರಾಭಿವೃದ್ಧಿ ಯಾವ ರೀತಿ ನಿವೇಶನ ಮಾಡಲು ಸಾಧ್ಯ?, ವಿರೋಧಪಕ್ಷಗಳಿಗೆ ಬೇರೆ ವಿಚಾರಗಳಿಲ್ಲ. ಹಾಗಾಗಿ ಇಂತಹ ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದರು. +ಈಗಾಗಲೇ ಪ್ರಕರಣದ ವಿಚಾರಣೆ ನಡೆಯುತ್ತಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.ಬಿಜೆಪಿಯವರು ಪ್ರತಿಯೊಂದು ಪ್ರಕರಣವನ್ನೂ ಸಿಬಿಐ ತನಿಖೆಗೆ ಕೇಳುತ್ತಿದ್ದಾರೆ. ಈ ಹಿಂದೆ ಐಎಎಸ್ ಅ„ಕಾರಿ ಡಿ.ಕೆ.ರವಿ, ಡಿವೈಎಸ್ಪಿ ಗಣಪತಿ ಪ್ರಕರಣಗಳನ್ನು ಸಿಬಿಐಗೆ ನೀಡಲಾಯಿತು.ಫಲಿತಾಂಶಗಳೇನು ಎಂದು ಪ್ರಶ್ನಿಸಿದರು. +ನಮ್ಮಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ಸಿಬಿಐಗೆ ನೀಡುವ ಅಗತ್ಯವಿಲ್ಲ ಎಂದರು.ತಾವು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದು, ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಯಾವುದೇ ಲೋಪಗಳಾಗಿಲ್ಲ ಎಂದು ಸಮರ್ಥಿಸಿಕೊಂಡರು. \ No newline at end of file diff --git a/eesanje/url_46_88_8.txt b/eesanje/url_46_88_8.txt new file mode 100644 index 0000000000000000000000000000000000000000..7cdeee128ae296a1d4ac84c7ff451e357c3af20f --- /dev/null +++ b/eesanje/url_46_88_8.txt @@ -0,0 +1,10 @@ +ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಮುಡಾ ಹಗರಣದ ತನಿಖೆ +ಬೆಂಗಳೂರು,ಜು.4-ಮುಡಾದಿಂದ ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯಸರ್ಕಾರ ಮುಂದಾಗಿದ್ದು, ಈಗಾಗಲೇ ಹಂಚಿಕೆ ಮಾಡಲಾಗಿದ್ದ ನಿವೇಶನಗಳನ್ನು ಹಿಂಪಡೆಯಲಾಗಿದೆ. +ಜಿಲ್ಲಾಧಿಕಾರಿಯವರಿಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಹೆಚ್ಚುವರಿ ತನಿಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ.ವಿಶೇಷ ತನಿಖೆ ಅಥವಾ ಸಿಐಡಿ ವಿಚಾರಣೆಗೆ ಸಲಹೆಗಳು ಕೇಳಿಬಂದಿವೆ. ಸದ್ಯದ ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವರದಿ ಮತ್ತು ಹಿರಿಯ ಐಎಎಸ್ ಅಧಿಕಾರಿಯ ತನಿಖೆಯ ಬಳಿಕ ಪ್ರಕರಣದ ಹೆಚ್ಚುವರಿ ತನಿಖೆಗೆ ಆದೇಶಿಸುವ ಸಾಧ್ಯತೆಗಳಿವೆ. +ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಮುಡಾ ಆಯುಕ್ತರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಎಲ್ಲೆಲ್ಲಿ ಕರ್ತವ್ಯ ಲೋಪಗಳಾಗಿವೆ?, ಕಾನೂನು ಉಲ್ಲಂಘನೆಯ ಅಂಶಗಳೇನು? ಎಂಬೆಲ್ಲಾ ವಿಚಾರಗಳನ್ನು ಪರಿಶೀಲಿಸಲಾಗುತ್ತಿದ್ದು, ಅವ್ಯವಹಾರಗಳು ಕಂಡುಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ. +ಹೊಸ ಬೆಳವಣಿಗೆ ಎಂಬಂತೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟ್ರೊನೊಲಾಜಿಯಾ ದಾಖಲಾತಿಗಳು ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿಯವರ ವಿಸ್ತೃತವಾದ ಪತ್ರ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. +ಮೈಸೂರಿನ ದೇವನೂರು ಮೂರನೇ ಹಂತದ ಬಡಾವಣೆಗಾಗಿ ಕೆಸರೆ ಗ್ರಾಮದಲ್ಲಿ ಶ್ರೀನಿಂಗ ಅವರ ಹೆಸರಿನಲ್ಲಿದ್ದ 3.16 ಎಕರೆಯನ್ನು ಭೂಸ್ವಾಧೀನಪಡಿಸಿಕೊಳ್ಳಲು 1992 ರಲ್ಲಿ ಅಧಿಸೂಚನೆ ಹೊರಡಿಸಲಾ ಗಿತ್ತು. 1998 ರಲ್ಲಿ ಅಂತಿಮ ಅಧಿಸೂಚನೆ ಪ್ರಕಟವಾಗಿದ್ದು, 1998 ರಲ್ಲಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ. +2004 ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಎಂಬುವರು ಈ ಭೂಮಿಯನ್ನು ಕ್ರಯಕ್ಕೆ ಪಡೆದಿರುತ್ತಾರೆ. 2005 ರಲ್ಲಿ ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತನೆಯಾಗಿದೆ. 2010 ರಲ್ಲಿ ಮಲ್ಲಿಕಾರ್ಜುನ ಸ್ವಾಮಿಯವರು ತಮ ತಂಗಿ ಪಾರ್ವತಿ ಅವರಿಗೆ ಭೂಮಿಯನ್ನು ದಾನ ಮಾಡಿದ್ದರು. ಅದರಂತೆ ದಾಖಲಾತಿಗಳು ಬದಲಾಗಿವೆ. +2014 ರಲ್ಲಿ ಪಾರ್ವತಿ ಅವರು ಮನವಿ ಸಲ್ಲಿಸಿದ್ದು, ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಭೂಮಿಗೆ ಪರಿಹಾರ ನೀಡುವಂತೆ ವಿನಂತಿಸಿದ್ದಾರೆ. 2017 ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಮಿ ಬಳಕೆ ಮಾಡಿಕೊಂಡಿರುವು ತಪ್ಪಾಗಿದ್ದು, ಪರಿಹಾರ ರೂಪದಲ್ಲಿ ಬದಲಿ ನಿವೇಶನವನ್ನು ಶೇ. 50 ರ ಅನುಪಾತದಲ್ಲಿ ನೀಡಲು ಕ್ರಮ ಕೈಗೊಳ್ಳಲಾಗಿರುತ್ತದೆ. ಈ ಎಲ್ಲಾ ವಿಚಾರಗಳಿಗೂ ದಾಖಲಾತಿಗಳು ಲಭ್ಯವಿದ್ದು, ಅದರ ಪರಿಶೀಲನೆಗಳು ನಡೆಯುತ್ತಿವೆ. +ವಿವಾದ ಕಾವೇರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಚಿಕೆಯಾಗಿದ್ದ ಪರ್ಯಾಯ ನಿವೇಶನಗಳನ್ನು ಹಿಂಪಡೆಯಲು ಆದೇಶಿಸಿದ್ದಾರೆ. ಜೊತೆಯಲ್ಲಿ ಮುಡಾ ಆಯುಕ್ತರನ್ನು ಅಮಾನತುಗೊಳಿಸಿದ್ದಾರೆ. +ಪ್ರಾಧಿಕಾರದಿಂದ ಇದೇ ರೀತಿ ಬೇರೆಬೇರೆ ನಿವೇಶನಗಳ ಹಂಚಿಕೆಯನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಹೋರಾಟ ನಡೆಸಲು ಮುಂದಾಗಿದೆ. ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಗುತ್ತಿದೆ. ಆದರೆ ಇದಕ್ಕೆ ಸೊಪ್ಪು ಹಾಕದ ಸಿದ್ದರಾಮಯ್ಯನವರು ರಾಜೀನಾಮೆಯನ್ನೂ ನೀಡುವುದಿಲ್ಲ, ಸಿಬಿಐಗೂ ವಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. \ No newline at end of file diff --git a/eesanje/url_46_88_9.txt b/eesanje/url_46_88_9.txt new file mode 100644 index 0000000000000000000000000000000000000000..21b3de66704956c3656281ba3c8e789f95a5d634 --- /dev/null +++ b/eesanje/url_46_88_9.txt @@ -0,0 +1,13 @@ +ವಾಹನಗಳಲ್ಲಿ ತೀಕ್ಷ್ಣ ಎಲ್ಇಡಿ ಲೈಟ್ ಅಳವಡಿಸಿಕೊಂಡವರಿಗೆ ಬಿಸಿ ಮುಟ್ಟಿಸಿದ ಪೊಲೀಸ್ +ಬೆಂಗಳೂರು, ಜು.4-ರಾಜ್ಯ ಸಂಚಾರಿ ಪೊಲೀಸರು ಇದೀಗ ವಾಹನಗಳಲ್ಲಿ ಕಣ್ಣು ಕುಕ್ಕುವಂತಹ ಎಲ್ಇಡಿ ಲೈಟ್ಗಳನ್ನು ಅಳವಡಿಸಿ ಕೊಂಡು ಇತರರಿಗೆ ತೊಂದರೆ ಉಂಟು ಮಾಡುವರ ವಿರುದ್ಧ ಬಿಸಿ ಮುಟ್ಟಿಸಿದ್ದು, ಈವರೆಗೆ 1518 ಪ್ರಕರಣಗಳು ದಾಖಲಾಗಿವೆ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಮಹಾಪೊಲೀಸ್ ನಿರ್ದೇಶಕರಾದ ಅಲೋಕ್ ಕುಮಾರ್ ತಿಳಿಸಿದ್ದಾರೆ. +ಈ ಬಗ್ಗೆ ಅವರು ಎಕ್‌್ಸನಲ್ಲಿ ಪ್ರಕಟಿಸಿದ್ದು, ಜುಲೈ ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಎಲ್ಇಡಿ ಲೈಟ್ ಅಳವಡಿಸಿ ಕೊಳ್ಳುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. +ಬೆಂಗಳೂರಿನಲ್ಲಿ ಅತಿ ಹೆಚ್ಚು:ವಾಹನಗಳಿಗೆ ತೀಕ್ಷ್ಣ ಬೆಳಕು ಬಿಂಬಿಸುವಂತಹ ಎಲ್ಇಡಿ ಲೈಟ್ಗಳನ್ನು ಅಳವಡಿಸಿದ ಅತಿ ಹೆಚ್ಚು ಪ್ರಕರಣಗಳು ನಗರದಲ್ಲಿ ವರದಿಯಾಗಿವೆ. ಈ ಬಗ್ಗೆ 686 ಪ್ರಕರಣಗಳು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ನಂತರದ ಸ್ಥಾನದಲ್ಲಿ ಮಂಗಳೂರು ನಗರ 96 ಪ್ರಕರಣ, ರಾಯಚೂರು 93 ಪ್ರಕರಣಗಳು ದಾಖಲಾಗಿದ್ದು, ಕೊಪ್ಪಳ, ಕೆಜಿಎಫ್, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. +ನಿನ್ನೆ ಸುಮಾರು 287 ವಾಹನಗಳನ್ನು ತಪಾಸಣೆ ಮಾಡಲಾಗಿದ್ದು, 100ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿಕೊಂಡು 57,500 ದಂಡ ಸಂಗ್ರಹ ಮಾಡಲಾಗಿದೆ ಎಂದು ಪೂರ್ವ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಆರ್.ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ರಸ್ತೆ ಅಪಘಾತಗಳು ಮತ್ತು ಅದರಿಂದಾಗಿ ಸಾವು- ನೋವುಗಳನ್ನು ತಪ್ಪಿಸಲು ಕೇಂದ್ರ ಮೋಟಾರು ವಾಹನಗಳ ನಿಯಮಗಳ ಅಡಿ ಅನುಮತಿಸಲಾದ ಲೈಟ್ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕೆಂದು ರಾಜ್ಯ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. +ವಾಹನಗಳಲ್ಲಿ ಕಣ್ಣು ಕುಕ್ಕುವಂತಹ ಲೈಟ್ಗಳನ್ನು ಬಳಸುತ್ತಿದ್ದರೆ, ಅಪಘಾತಗಳಿಗೆ ಕಾರಣವಾಗುತ್ತದೆ. ಅಲ್ಲದೆ, ಇತರೇ ಚಾಲಕರಿಗೆ ತೊಂದರೆ ಉಂಟಾಗುತ್ತದೆ.ಹಾಗಾಗಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ.ಹೀಗಾಗಿ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಲೋಕ್ ಕುಮಾರ್ ಅವರು ಎಚ್ಚರಿಸಿದ್ದಾರೆ. +ಕೇಂದ್ರ ಮೋಟಾರ್ ವಾಹನ ಕಾಯ್ದೆ ಉಲ್ಲಂಘಿಸಿ ತೀಕ್ಷ್ಣ ಬೆಳಕು ಸೂಸುವ ಎಲ್ಇಡಿ ಲೈಟ್ ಅಳವಡಿಸಿದ್ದ ಬಗ್ಗೆ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವರು ವಂದನೆ ಸಲ್ಲಿಸಿದ್ದಾರೆ. +ಸಂಚಾರ ನಿಯಮ ಉಲ್ಲಂಘನೆ : 184 ಪ್ರಕರಣ- 90700 ರೂ. ದಂಡ ಸಂಗ್ರಹಬೆಂಗಳೂರು, ಜು.4- ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುತ್ತಿರುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತಿವೆ.ಪ್ರಮುಖವಾಗಿ ದ್ವಿಚಕ್ರ ವಾಹನಗಳಲ್ಲಿ ಹೆಚ್ಚು ಅಪಘಾತವಾಗುತ್ತಿರುವುದರಿಂದ ಪಶ್ಚಿಮ ವಿಭಾಗದ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು 184 ಪ್ರಕರಣಗಳನ್ನು ದಾಖಲಿಸಿ 90,700 ರೂ. ದಂಡ ವಸೂಲಿ ಮಾಡಿದ್ದಾರೆ. +ಏಕಮುಖ ಸಂಚಾರಕ್ಕೆ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡಿದ 55 ಪ್ರಕರಣದಲ್ಲಿ 27,600 ರೂ. ದಂಡ ವಸೂಲಿ ಮಾಡಲಾಗಿದ್ದು, ತಪ್ಪು ನಿಲುಗಡೆ 69 ಪ್ರಕರಣ- 37,800 ರೂ. ದಂಡ, ಟಾತ್ ಪಾರ್ಕಿಂಗ್ ವಾಹನ ಚಾಲನೆ 6 ಪ್ರಕರಣ- 5000 ರೂ. ದಂಡ. ಟ್ಪಾತ್ ರೈಡಿಂಗ್ 9 ಪ್ರಕರಣ- 5 ಸಾವಿರ ದಂಡ, ಮೊಬೈಲ್ ಬಳಸಿ ವಾಹನ ಚಾಲನೆ 7 ಪ್ರಕರಣ -10 ಸಾವಿರ ದಂಡ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ 511 ಪ್ರಕರಣ- 2.51 ಲಕ್ಷ ದಂಡ, ತ್ರಿಬಲ್ ರೈಡಿಂಗ್ 10 ಪ್ರಕರಣ-6 ಸಾವಿರ ದಂಡ ಹಾಗೂ ಇತರೆ ಸಂಚಾರಿ ನಿಯಮ ಉಲ್ಲಂಸಿದ 184 ಪ್ರಕರಣದಲ್ಲಿ 90700 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪಶ್ಚಿಮ ಸಂಚಾರ ವಿಭಾಗದ ಉಪಪೊಲೀಸ್ ಆಯುಕ್ತರಾದ ಅನಿತಾ ಬಿ.ಹದ್ದಣ್ಣನವರ್ ತಿಳಿಸಿದ್ದಾರೆ. +ಸುಮಾರು 851 ಪ್ರಕರಣಗಳಲ್ಲಿ ಒಟ್ಟು 4,33,600 ರೂ. ದಂಡ ಸಂಗ್ರಹಿಸಲಾಗಿದೆ. ಜೊತೆಗೆ ಎಲ್ಲ ವಾಹನ ಚಾಲಕರು, ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಗಳನ್ನು ಪಾಲಿಸುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಮುಂದಿನ ದಿನಗಳಲ್ಲಿಯೂ ಸಹ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. +ಹೈಬೀಮ್ಲೈಟ್:ಇತ್ತೀಚಿನ ದಿನಗಳಲ್ಲಿ ಕೆಲವು ವಾಹನಗಳಲ್ಲಿ ಹೈಬೀಮ್ ಲೈಟ್ ಉಪಯೋಗಿಸುತ್ತಿದ್ದು, ಅಂತಹ ವಾಹನಗಳ ಸವಾರರ ವಿರುದ್ಧ 77 ಪ್ರಕರಣಗಳನ್ನು ದಾಖಲಿಸಿ 38500 ರೂ. ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ. +ಹೈಬೀಮ್ಲೈಟ್ ಉಪಯೋ ಗಿಸುವುದರಿಂದ ರಾತ್ರಿ ಸಮಯದಲ್ಲಿ ರಸ್ತೆ ಅಪಘಾತಗಳು ಉಂಟಾಗುವ ಸಂಭವವಿರುತ್ತದೆ. ಹಾಗಾಗಿ ಪಶ್ಚಿಮ ವಿಭಾಗದ ಎಲ್ಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಚರಣೆ ಕೈಗೊಳ್ಳಲಾಗಿದೆ. ಎಲ್ಲಾ ವಾಹನ ಚಾಲಕರು ಹಾಗೂ ಸವಾರರು ಕಡ್ಡಾಯವಾಗಿ ಸಂಚಾರ ನಿಯಮಗಳ ಮಹತ್ವದ ಬಗ್ಗೆ ಅರಿವು ಮೂಡಿಸಿಕೊಂಡು ನಿಯಮಗಳನ್ನು ಪಾಲಿಸುವಂತೆ ಡಿಸಿಪಿ ಅವರು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_46_89_1.txt b/eesanje/url_46_89_1.txt new file mode 100644 index 0000000000000000000000000000000000000000..58b77336b0d198104c6fd9e24b0b56af6e6a8ec1 --- /dev/null +++ b/eesanje/url_46_89_1.txt @@ -0,0 +1,7 @@ +ಗ್ರಾಮೀಣ ಪ್ರದೇಶದಲ್ಲಿ ‘ಅರಳೀಕಟ್ಟೆ ಮಾದರಿ ನ್ಯಾಯಾಲಯ’ಗಳ ಸ್ಥಾಪನೆಗೆ ಮುಂದಾದ ಸರ್ಕಾರ +ಬೆಂಗಳೂರು,ಜು.4-ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿಯೇ ನ್ಯಾಯ ದೊರೆಯಬೇಕು. ಅದಕ್ಕಾಗಿ ಮುಂದಿನ ಅರಳೀಕಟ್ಟೆ ಮಾದರಿಯಲ್ಲಿ ನ್ಯಾಯಾಲಯಗಳನ್ನು ಸ್ಥಾಪಿಸಿ ಅದಕ್ಕೆ ನ್ಯಾಯಾಧೀಶರೇ ಅಧ್ಯಕ್ಷತೆ ವಹಿಸುವಂತಹ ಹೊಸ ವ್ಯವಸ್ಥೆಯನ್ನು ಜಾರಿಗೆ ತರುವ ನೂತನ ನೀತಿಯ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರಿಗೆ ನ್ಯಾಯ ಸಿಗಬೇಕು ಎಂಬ ಪರಿಕಲ್ಪನೆಯಡಿ ನೂತನ ನ್ಯಾಯ ನೀತಿಯನ್ನು ರೂಪಿಸಲಾಗುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ತಂದಿದ್ದರು ಎಂದು ಹೇಳಿದರು. +ಗ್ರಾಮೀಣ ಭಾಗದ ಜನರಿಗೆ ಗ್ರಾಮಮಟ್ಟದಲ್ಲೇ ನ್ಯಾಯ ಸಿಗಬೇಕು. ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದ್ದ ಅರಳೀಕಟ್ಟೆ ನ್ಯಾಯ ಪಂಚಾಯಿತಿಗಳನ್ನು ಈಗ ಉತ್ತಮಗೊಳಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ತಾಲ್ಲೂಕು ಮಟ್ಟದ ನ್ಯಾಯಾಧೀಶರು ಸ್ಥಳೀಯ ನ್ಯಾಯ ಪಂಚಾಯಿತಿಗಳ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿವರಿಸಿದರು. +ಕೇಂದ್ರ ಸರ್ಕಾರ ಜು.1 ರಿಂದ ಜಾರಿಗೆ ತಂದಿರುವ ನೂತನ ಅಪರಾಧ ಕಾನೂನುಗಳ ಕುರಿತಂತೆ ಆಕ್ಷೇಪಣೆಗಳಿದ್ದರೆ ಕೇಂದ್ರಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಹೇಳಿದರು.ಮೈಸೂರಿನ ಮುಡಾ ಪ್ರಕರಣದ ಪರಿಶೀಲನೆ ನಡೆಯುತ್ತಿದೆ. ಈಗಾಗಲೇ ಮುಖ್ಯಮಂತ್ರಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. +ಬಿಜೆಪಿಯವರು ಕೇಳುವಂತೆ ಎಲ್ಲಾ ಪ್ರಕರಣಗಳನ್ನೂ ಸಿಬಿಐಗೆ ಕೊಟ್ಟರೆ ಸ್ಥಳೀಯ ಪೊಲೀಸರಿಗೆ ಕೆಲಸವೇ ಇಲ್ಲದಂತಾಗುತ್ತದೆ ಎಂದು ಹೇಳಿದರು.ವಿಧಾನಮಂಡಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಯಾವ ವಿಚಾರವನ್ನು ಚರ್ಚೆಗೆ ಕೈಗೆತ್ತಿಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್‌ ಅನುಮತಿ ಪಡೆದು ಯಾವುದೇ ವಿಷಯವನ್ನು ಪ್ರಸ್ತಾಪಿಸಿದರೂ ಸರ್ಕಾರ ಸಮರ್ಥ ಉತ್ತರ ನೀಡಲಿದೆ ಎಂದರು. +ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಚರ್ಚೆಯಿಂದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೇಸರವಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ದೆಹಲಿಯಲ್ಲಿ ತಾವು ಅವರನ್ನು ಭೇಟಿ ಮಾಡಿದ್ದು, ಆ ವೇಳೆ ಅವರು ಬೇಸರದ ಯಾವ ವಿಚಾರಗಳನ್ನೂ ಪ್ರಸ್ತಾಪಿಸಲಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_89_10.txt b/eesanje/url_46_89_10.txt new file mode 100644 index 0000000000000000000000000000000000000000..3cffe36aec9c187c68c8af2de8ca02b077679e1a --- /dev/null +++ b/eesanje/url_46_89_10.txt @@ -0,0 +1,7 @@ +ಐಪಿಎಸ್ ಅಧಿಕಾರಿಗಳ ವರ್ಗಾವಣೆ : ಮೈಸೂರು,ಹುಬ್ಬಳ್ಳಿ ಪೊಲೀಸ್ ಆಯುಕ್ತರ ಎತ್ತಂಗಡಿ +ಬೆಂಗಳೂರು, ಜು.3-ಕೊಲೆ, ಅಪರಾಧ ಚಟುವಟಿಕೆಗಳು ಹೆಚ್ಚಾಗಿ ಜನಸಾಮಾನ್ಯರಲ್ಲಿ ಅಸಮಾಧಾನ ಉಂಟಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ, ನಗರ ಪೊಲೀಸ್ ಆಯುಕ್ತರು ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. +ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಭೀಕರ ಕೊಲೆಗಳಾಗಿದ್ದವು. ಇದರಿಂದ ಆತಂಕಗೊಂಡ ಹುಬ್ಬಳ್ಳಿ ಜನತೆ ಮಹಾನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆತಂಕ ವ್ಯಕ್ತಪಡಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಡ ಹಾಕಿದ್ದರು. +ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. +ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ್ ಅವರನ್ನು ತತ್ಕ್ಷಣ ಜಾರಿಗೆ ಬರುವಂತೆ ಎಐಜಿಪಿಯಾಗಿ ಬೆಂಗಳೂರು ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ನೇಮಿಸಲಾಗಿದೆ. +ನೇಹಾ-ಅಂಜಲಿ ಕೊಲೆ ನಡೆದಾಗ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ಮಾಡಿದ್ದರು. ಕೊನೆಗೂ ಸರ್ಕಾರ ಸಾರ್ವಜನಿಕರ ಹೋರಾಟಕ್ಕೆ ಮತ್ತು ಕಾಂಗ್ರೆಸ್ ಮುಖಂಡರ ಮನವಿಗೆ ಸ್ಪಂದಿಸಿ ರೇಣುಕಾ ಸುಕುಮಾರ್ ಅವರನ್ನು ವರ್ಗಾವಣೆ ಮಾಡಿದೆ. +ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ:ಲಾಬೂರಾಮ್: ಐಜಿಪಿ ಕೇಂದ್ರ ವಲಯರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್ಡಿಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆಸೀಮಾ ಲಾಟ್ಕರ್: ಪೊಲೀಸ್ ಆಯುಕ್ತ, ಮೈಸೂರು ನಗರಎನ್.ವಿಷ್ಣುವರ್ಧನ್: ಎಸ್ಪಿ, ಮೈಸೂರು ಜಿಲ್ಲೆರೇಣುಕಾ ಸುಕುಮಾರ್: ಎಐಜಿಪಿ (ಬೆಂಗಳೂರು ಡಿಜಿ ಕಚೇರಿ)ಸಿ.ಕೆ.ಬಾಬಾ: ಎಸ್ಪಿ, ಬೆಂಗಳೂರು ಗ್ರಾಮಾಂತರಸುಮನ್.ಡಿ.ಪೆನ್ನೇಕರ್: ಎಸ್ಪಿ, ಬಿಎಂಟಿಎ್ಸಿ.ಬಿ.ರಿಷ್ಯಂತ್: ಎಸ್ಪಿ, ವೈರ್ಲೆಸ್ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿಎಂ.ನಾರಾಯಣ್: ಎಸ್ಪಿ, ಉತ್ತರ ಕನ್ನಡಎಸ್‌‍.ಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗಯತೀಶ್.ಎನ್: ಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆಡಿ.ಎಲ್.ನಾಗೇಶ್: ಡಿಸಿಪಿ, ಸಿಎಆರ್ಹೆಚ್ ಪ್ರಧಾನ ಕಚೇರಿ, ಬೆಂಗಳೂರುಪದಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರಡಾ.ಟಿ.ಕವಿತಾ: ಎಸ್ಪಿ, ಚಾಮರಾಜನಗರ ಜಿಲ್ಲೆಪ್ರದೀಪ್ ಗುಂಟಿ: ಎಸ್ಪಿ, ಬೀದರ್ ಜಿಲ್ಲೆಬಿ.ನಿಖಿಲ್: ಎಸ್ಪಿ, ಕೋಲಾರ ಜಿಲ್ಲೆಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ, ಹುಬ್ಬಳ್ಳಿ-ಧಾರವಾಡಮಲ್ಲಿಕಾರ್ಜುನ ಬಾಲದಂಡಿ: ಎಸ್ಪಿ, ಮಂಡ್ಯ ಜಿಲ್ಲೆವಿ.ಜೆ.ಡಾ.ಶೋಭಾ ರಾಣಿ: ಎಸ್ಪಿ, ಬಳ್ಳಾರಿ ಜಿಲ್ಲೆಕುಶಾಲ್ ಚೌಕ್ಸಿ: ಎಸ್ಪಿ, ಚಿಕ್ಕಬಳ್ಳಾಪುರ ಜಿಲ್ಲೆನೂತನ ಮೂರು ಕಾನೂನು ಜಾರಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. \ No newline at end of file diff --git a/eesanje/url_46_89_11.txt b/eesanje/url_46_89_11.txt new file mode 100644 index 0000000000000000000000000000000000000000..c3845b010c4b0a67d78c84cac0e8f71334f07240 --- /dev/null +++ b/eesanje/url_46_89_11.txt @@ -0,0 +1,5 @@ +ಜು.8ರಿಂದ ಗುತ್ತಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ +ಬೆಂಗಳೂರು,ಜು.3-ಬಾಕಿ ಇರುವ ಸಾವಿರಾರು ಕೋಟಿ ರೂ. ಬಿಲ್‌ ಬಿಡುಗಡೆಗೆ ಒತ್ತಾಯಿಸಿ ಗುತ್ತಿಗೆದಾರರು ಜು.8 ರಿಂದ ತಮ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. +ಬಿಬಿಎಂಪಿ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರು ಜು.8ರಿಂದ ಮುಷ್ಕರ ನಡೆಸಲು ಸಮತಿ ಸೂಚಿಸಿದ್ದಾರೆ. +ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ದ ಗುತ್ತಿಗೆದಾರರ ಬಂಡಾಯ..ನಂದಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಗುತ್ತಿಗೆದಾರರ ಸಭೆಯಲ್ಲಿ ವಾರ್ಡ್‌ ಕಾಮಗಾರಿ.ರಸ್ತೆ,ವೈಟ್‌ ಟಾಪಿಂಗ್‌ ಮಳೆ ನೀರು ಕಾಲುವೆ .ಕೆರೆ ಸೇರಿದಂತೆ ಎಲ್ಲ ರೀತಿಯ ಕಾಮಗಾರಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. +ಗುತ್ತಿಗೆದಾರರ 1,600 ಕೋಟಿ ಬಿಲ್‌ ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ತಮ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಈ ತೀರ್ಮಾನ ಕೈಗೊಳ್ಳಬೇಕಾಯಿತು ಎಂದು ನಂದಕುಮಾರ್‌ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_46_89_12.txt b/eesanje/url_46_89_12.txt new file mode 100644 index 0000000000000000000000000000000000000000..171beaca070f1c67b14e290be36f9f9abdc59ab3 --- /dev/null +++ b/eesanje/url_46_89_12.txt @@ -0,0 +1,10 @@ +ಮುಡಾ ಬಹುಕೋಟಿ ಹಗರಣವನ್ನುಸಿಬಿಐಗೆ ವಹಿಸುವಂತೆ ವಿಜಯೇಂದ್ರ ಒತ್ತಾಯ +ಬೆಂಗಳೂರು,ಜು.3-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ರಾಜ್ಯಸರ್ಕಾರ ಕೂಡಲೇ ಸಿಬಿಐಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನ ಮುಡಾದಲ್ಲೇ ಸುಮಾರು 4 ಸಾವಿರ ಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಅನೇಕ ಪ್ರಭಾವಿಗಳೂ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು. +ಈ ಮೊದಲು ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಏನೂ ನಡೆದಿಲ್ಲ ಎಂದು ತಿಪ್ಪೆ ಸಾರುವ ಕೆಲಸ ಮಾಡಲಾಯಿತು. ಬಳಿಕ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರವಾಗಬಾರದು ಎಂದು ರಾಜೀನಾಮೆ ನೀಡಿದ್ದಾರೆ ಎಂದು ಸಬೂಬು ಹೇಳುತ್ತಿದ್ದಾರೆ. ತಪ್ಪೇ ಮಾಡಿಲ್ಲ ಎಂದ ಮೇಲೆ ಅವರು ರಾಜೀನಾಮೆ ಏಕೆ ನೀಡಿದರು? ಎಂದು ಪ್ರಶ್ನೆ ಮಾಡಿದರು. +ಮುಡಾದಲ್ಲಿ ಹಗರಣ ಹೊರಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಡಬರಿಸಿ ಸಭೆ ನಡೆಸಿದರು. ಅಕ್ರಮ ನಡೆದಿಲ್ಲ ಎಂದರೆ ಆಯುಕ್ತರು, ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತನಿಖೆಗೆ ಆದೇಶ ಮಾಡಿರುವುದು ಏಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. +ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ತಮ ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂ. ಬೆಲೆ ಬಾಳುವ ನಿವೇಶನಗಳನ್ನು ಹಿಂಬಾಲಕರಿಗೆ ಹಂಚಿಕೆ ಮಾಡಿದ್ದಾರೆ. ಇದೀಗ ಈ ಹಗರಣದಲ್ಲಿ ಸ್ವತಃ ಸಿಎಂ ಅವರ ಪತ್ನಿಯೂ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. +ಮುಖ್ಯಮಂತ್ರಿ ಕುಟುಂಬದ ಮೇಲೆ ಆರೋಪ ಬಂದಾಗ ರಾಜ್ಯಸರ್ಕಾರದ ತನಿಖಾ ಸಂಸ್ಥೆಗಳು ನಿಸ್ಪಕ್ಷಪಾತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದರು.ಮುಡಾದಲ್ಲಿ ಅಕ್ರಮ ನಡೆದಿಲ್ಲ ಎಂದರೆ ಸಚಿವ ಭೈರತಿ ಸುರೇಶ್‌ ಅವರು ಅಧಿಕಾರಿಗಳನ್ನು ಏಕೆ ವರ್ಗಾವಣೆ ಮಾಡಬೇಕಿತ್ತು?, ಇದು ಸಿಎಂ ಕುಟುಂಬದ ಬುಡಕ್ಕೆ ಬರುತ್ತದೆ ಎಂದು ಗೊತ್ತಾದ ಮೇಲೆ ಹಗರಣವನ್ನು ಮುಚ್ಚಿ ಹಾಕಲು ವ್ಯವಸ್ಥಿತವಾದ ಷಡ್ಯಂತ್ರ ಮಾಡಲಾಗಿದೆ. +ಯತೀಂದ್ರ ಹಾಗೂ ಇತರರನ್ನು ರಕ್ಷಣೆ ಮಾಡುವ ಕಾರಣಕ್ಕಾಗಿಯೇ ಸರ್ಕಾರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.ತಮ ಬುಡಕ್ಕೂ ಹಗರಣ ಸುತ್ತಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಸಚಿವ ಸುರೇಶ್‌ ಅವರು ಹಗರಣದ ಕಡತವನ್ನು ರಾತ್ರೋರಾತ್ರಿ ತೆಗೆದುಕೊಂಡು ಬಂದಿದ್ದಾರೆ. ಈಗ ಏನೂ ಇಲ್ಲ ಎಂದು ತಿಪ್ಪೆ ಸಾರುವ ಕೆಲಸ ನಡೆಯುತ್ತಿದೆ. ನನಗಿರುವ ಮಾಹಿತಿ ಪ್ರಕಾರ, 4 ಸಾವಿರ ಕೋಟಿ ಹಗರಣ ನಡೆದಿದೆ. ಇದರಲ್ಲಿ ಸಿದ್ದರಾಮಯ್ಯ ಹಾಗೂ ಭೈರತಿ ಸುರೇಶ್‌ ನೇರ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿದರು. +ವಾಲೀಕಿ ಅಭಿವೃದ್ಧಿ ನಿಗಮದಲ್ಲೂ ಏನೂ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು ಸಮರ್ಥಿಸಿಕೊಳ್ಳುತ್ತಿದ್ದರು. ನಾಗೇಂದ್ರ ಬಂಧನವಾದರೆ ಸರ್ಕಾರದ ಬುಡವೇ ಅಲುಗಾಡಲಿದೆ ಎಂಬ ಕಾರಣಕ್ಕಾಗಿ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ. +ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌‍ ಈಗ ಅದೇ ಬ್ರಹಾಂಡ ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲೂ ಜನತೆ ಸರಿಯಾದ ಪಾಠವನ್ನು ಕಲಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದರು. \ No newline at end of file diff --git a/eesanje/url_46_89_2.txt b/eesanje/url_46_89_2.txt new file mode 100644 index 0000000000000000000000000000000000000000..1d8c86c6310fe09ac9db901393b1802bd6af6e7c --- /dev/null +++ b/eesanje/url_46_89_2.txt @@ -0,0 +1,6 @@ +ಸಿಎಂ ಮಾಡಿ ಎಂದು ಹೇಳುವುದು ಮಠಾಧೀಶರ ಕೆಲಸವಲ್ಲ : ಬಸವ ಜಯಮೃತ್ಯುಂಜಯ ಸ್ವಾಮೀಜಿ +ಹುಬ್ಬಳ್ಳಿ,ಜು.4-ಯಾವುದೇ ಸರ್ಕಾರದಲ್ಲಿ ಇವರನ್ನೇ ಮುಖ್ಯಮಂತ್ರಿ ಮಾಡಿ ಎಂದು ಹೇಳುವುದು ಮಠಾಧೀಶರ ಕೆಲಸವಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. +ಮುಖ್ಯಮಂತ್ರಿ ಮಾಡುವುದು ಆಡಳಿತ ಪಕ್ಷದ ಶಾಸಕರ ಕೆಲಸ, ಸಲಹೆ ಕೇಳಿದರೆ ಸಮಾಜದ ಗುರುಗಳಾಗಿ ಸಲಹೆ ಕೊಡಬೇಕು, ಮೀಸಲಾತಿ ಪಾದಯಾತ್ರೆಯ ನಂತರ ಇವರನ್ನೇ ಮಂತ್ರಿ ಮಾಡಿ ಎಂದು ಹೇಳುವುದನ್ನು ಬಿಟ್ಟಿದ್ದೇವೆ. ನಮ ಗುರಿಯೇನಿದ್ದರೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡಿಸುವುದು ಎಂದರು. +ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಹೋರಾಟದಿಂದ ಸ್ಫೂರ್ತಿ ಪಡೆದು ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಪಂಚಮಸಾಲಿ ಸಮಾಜದ ಬೇಡಿಕೆಗೆ ಸ್ಪಂದಿಸಿ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ ಎಂದರು. +ರಾಜ್ಯ ಸರ್ಕಾರ ಮಳೆಗಾಲದ ಅಧಿವೇಶನದಲ್ಲಿ 2 ಎ ಮೀಸಲಾತಿ ಘೋಷಿಸಬೇಕು ಎಂದು ಆಗ್ರಹಿಸಿದ ಅವರು, ಅಧಿವೇಶನದಲ್ಲಿ ಮೀಸಲಾತಿ ಹಕ್ಕು ಪ್ರತಿಪಾದಿಸಲು ಪಂಚಮಸಾಲಿ ಸಮಾಜದ ಶಾಸಕರನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು. +ಜುಲೈ 6ರಂದು ಹುಬ್ಬಳ್ಳಿಯಲ್ಲಿ ಪತ್ರ ಚಳವಳಿ ನಡೆಯಲಿದ್ದು, ಶಾಸಕ ಎಮ್‌‍.ಆರ್‌. ಪಾಟೀಲ್‌‍, ಅರವಿಂದ ಬೆಲ್ಲದ್‌ ಮನೆಗೆ ಹೋಗಿ ಆಗ್ರಹ ಪತ್ರ ನೀಡಲಾಗುವುದು. ನಮ ಶಾಸಕರು ಅಧಿವೇಶನದಲ್ಲಿ ಮೀಸಲಾತಿಗೆ ಆಗ್ರಹಿಸದೆ ಇರುವುದು ಸಮಾಜಕ್ಕೆ ನಿರಾಸೆ ಮೂಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_46_89_3.txt b/eesanje/url_46_89_3.txt new file mode 100644 index 0000000000000000000000000000000000000000..3b7ed59a563411b19d7911babaecca325aeb422b --- /dev/null +++ b/eesanje/url_46_89_3.txt @@ -0,0 +1,8 @@ +4 ಸಾವಿರ ಕೋಟಿ ಭ್ರಷ್ಟಾಚಾರ : ತಕ್ಷಣ ಸಿಎಂ ರಾಜೀನಾಮೆಗೆ ಆರ್‌.ಅಶೋಕ್‌ ಒತ್ತಾಯ +ಬೆಂಗಳೂರು,ಜೂ.4-ಸಾವಿರಾರು ಬ್ರಹಾಂಡ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಮೂಡಾ ಹಗರಣವನ್ನು ರಾಜ್ಯ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಶಕಗಳಲ್ಲಿ ಇದು ಬಹುದೊಡ್ಡ ಹಗರಣವಾಗಿದೆ. ಅಂದಾಜ 4 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೂಡಲೇ ಸಿಬಿಐಗೆ ವಹಿಸಬೇಕೆಂದು ಅವರು ಆಗ್ರಹಿಸಿದರು. +ಮೂಡಾ ಹಗರಣದಲ್ಲಿ ಬಿಜೆಪಿ, ಜೆಡಿಎಸ್‌‍ ಸೇರಿದಂತೆ ಯಾರೇ ಇದ್ದರೂ ಮುಖ್ಯಮಂತ್ರಿಗಳು ನಿರ್ದಾಕ್ಷಿಣ್ಯವಾಗಿ ಬಂಧಿಸಲಿ. ಅದಕ್ಕೆ ನಮದೇನು ತಕರಾರು ಇಲ್ಲ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬದವರ ಹೆಸರೇ ಕೇಳಿಬರುತ್ತಿರುವುದರಿಂದ ನೈತಿಕವಾಗಿ ಅಧಿಕಾರದಲ್ಲಿ ಮುಂದುವರೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು. +ಬಿಜೆಪಿ ಕಾಲದಲ್ಲಿ ಇದು ಹಗರಣವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ನಡೆದಿದ್ದರೂ ತನಿಖೆಯಾಗಬೇಕು. ಅಂದು ಮೂಡಾದಲ್ಲಿ ಆಯುಕ್ತರಾದವರು ಯಾರೆಂಬುದನ್ನು ಪತ್ತೆಹಚ್ಚಿ ಬಂಧಿಸಬೇಕಲ್ಲವೇ ಎಂದು ಅಶೋಕ್‌ ಸಿಎಂಗೆ ತಿರುಗೇಟು ನೀಡಿದರು. +86 ಸಾವಿರ ಜನರು ನಿವೇಶನ ಪಡೆಯಲು ಅರ್ಜಿ ಹಾಕಿದ್ದಾರೆ. ಅವರಿಗೆ ನಿವೇಶನವನ್ನೇ ಕೊಟ್ಟಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ ಕೂಡ ದೊಡ್ಡ ಫಲಾನುಭವಿಯಾಗಿದ್ದಾರೆ. ಒಮೆ ಜಮೀನನ್ನು ಸರ್ಕಾರ ಭೂ ಸ್ವಾಧೀನ ಮಾಡಿಕೊಂಡರೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಪಾರ್ವತಮಗೆ ನಿವೇಶನ ಬದಲಾಯಿಸಿ ಬೇರೊಂದು ಕಡೆ ನಿವೇಶನ ಕೊಡಲು ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. +50-50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುವ ನಿಯಮವೇ ಕಾನೂನು ಬಾಹಿರ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಭೂ ಸ್ವಾಧೀನ ಮಾಡಿಕೊಂಡರೆ ಎಂಜಿ ರಸ್ತೆಯಲ್ಲಿ ಬದಲಿ ನಿವೇಶನ ಕೊಟ್ಟಂತಾಗುತ್ತದೆ. ಮೂಡಾ ಅಧ್ಯಕ್ಷರೇ ಹಲವು ಬಾರಿ ಪತ್ರ ಬರೆದು ಇದು ಅಕ್ರಮ ಎಂದು ಹೇಳಿದ್ದಾರೆ. +ಆದರೆ ಇದರಲ್ಲಿ ಅನೇಕ ಪ್ರಭಾವಿಶಾಲಿಗಳು ಮತ್ತು ಮಧ್ಯವರ್ತಿಗಳು ಶಾಮೀಲಾಗಿದ್ದಾರೆ. ಈ ಪ್ರಕರಣವನ್ನು ನಾವು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವರೆಗೂ ಬಿಡುವುದಿಲ್ಲ ಎಂದು ಅಶೋಕ್‌ ಎಚ್ಚರಿಸಿದರು. \ No newline at end of file diff --git a/eesanje/url_46_89_4.txt b/eesanje/url_46_89_4.txt new file mode 100644 index 0000000000000000000000000000000000000000..22b93707d80f200a4a622f9af49d196b88d4ee1c --- /dev/null +++ b/eesanje/url_46_89_4.txt @@ -0,0 +1,6 @@ +ಹಾಸನ ಜಿಲ್ಲೆಯಲ್ಲಿ ಡೆಂಘೀಗೆ ಬಾಲಕಿ ಬಲಿ +ಹಾಸನ,ಜು.4-ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಡೆಂಘೀ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿಗೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಗುಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್‌. (11) ಮೃತಪಟ್ಟ ಬಾಲಕಿ. +ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬಾಲಕಿ ಮೃಪಟ್ಟಿದ್ದಾಳೆ.ಡೆಂಘೀಯಿಂದ ಇದುವರೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. +ಜೂ.28 ರಂದು ಹೊಳೆನರಸೀಪುರ ತಾಲ್ಲೂಕಿನ ಹಳ್ಳಿ ಮೈಸೂರು ಗ್ರಾಮದಲ್ಲಿ ವರ್ಷಿಕ (8) ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದು, ಇದು ಡೆಂಘೀ ಮಹಾಮಾರಿಗೆ ಎರಡನೇ ಬಲಿಯಾಗಿದ್ದು, ತಾಲ್ಲೂಕಿನಾದ್ಯಂತ ಆತಂಕ ಮನೆ ಮಾಡಿದೆ. +ತಾವು ವಾಸಿಸುವ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸೊಳ್ಳೆಗಳು ಉತ್ಪತ್ತಿಯಾಗದಂತೆ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಮಾಡುತ್ತಿರಬೇಕು. ಮಳೆ ನೀರು, ಹಸಿಕಸಿ ಶೇಖರಣೆಯಾಗುವಂತಹ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. +ನೀರು ಸಂಗ್ರಹ ಮಾಡುವ ತೊಟ್ಟಿಗಳನ್ನು ಎರಡು ದಿನಕ್ಕೊಮೆ ಸ್ವಚ್ಛ ಮಾಡಬೇಕು. ಸಣ್ಣ ಜ್ವರ ಬಂದರೂ ಸಹ ನಿರ್ಲಕ್ಷಿಸದೇ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಮಂಡಳಿ ಮನವಿ ಮಾಡಿದೆ. \ No newline at end of file diff --git a/eesanje/url_46_89_5.txt b/eesanje/url_46_89_5.txt new file mode 100644 index 0000000000000000000000000000000000000000..94f1445cbf8194cdd32d1b89f899204b7f6b2592 --- /dev/null +++ b/eesanje/url_46_89_5.txt @@ -0,0 +1,5 @@ +ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆ : ಕಬಿನಿ, ಕೆಆರ್‌ಎಸ್‌‍ ಒಳಹರಿವು ಹೆಚ್ಚಳ +ಬೆಂಗಳೂರು,ಜು.4-ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ,ಕೆಆರ್‌ಎಸ್‌‍ ಜಲಾಶಯಗಳಿಗೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕಬಿನಿ ಜಲಾಶಯಕ್ಕೆ 18,560 ಕ್ಯೂಸೆಕ್ಸ್ ಒಳಹರಿವಿನ ಪ್ರಮಾಣವಿದ್ದು, 84 ಅಡಿ ಎತ್ತರದ ಜಲಾಶಯದಲ್ಲಿ ಈಗಾಗಲೇ 80 ಅಡಿ ನೀರು ಸಂಗ್ರಹವಾಗಿದೆ. +ಕಬಿನಿ ಜಲಾಶಯದ ಭರ್ತಿಯಾಗಲು ಕೇವಲ 4 ಅಡಿ ಬಾಕಿಯಿದ್ದು, ಇದೇ ರೀತಿ ಮಳೆ ಮುಂದುವರೆದು ಒಳಹರಿವಿನ ಪ್ರಮಾಣ ಹೆಚ್ಚಾದರೆ ಇನ್ನೆರಡು ದಿನಗಳಲ್ಲಿ ಕಬಿನಿ ಜಲಾಶಯ ಭರ್ತಿಯಾಗಲಿದೆ. ಕೃಷ್ಣರಾಜ ಸಾಗರಕ್ಕೂ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. 124.8 ಅಡಿ ಎತ್ತರದ ಅಣ್ಣೆಕಟ್ಟಿನಲ್ಲಿ 100 ಮಟ್ಟದಲ್ಲಿ ನೀರು ಸಂಗ್ರಹವಾಗಿದೆ. +49.452 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 22.267 ಟಿಎಂಸಿ ನೀರು ಸಂಗ್ರಹವಾಗಿದೆ. 11,189 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದ್ದು, ಜಲಾಶಯದ ನೀರಿನ ಸಂಗ್ರಹ ದಿನೇ ದಿನೇ ಹೆಚ್ಚಾಗುತ್ತಿದೆ. ಒಳಹರಿವಿನ ಪ್ರಮಾಣ 540 ಕ್ಯೂಸೆಕ್‌ ಇದೆ. +ದಿನೇ ದಿನೇ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮನೆ ಮಾಡಿದೆ. ಶೀಘ್ರವೇ ನಾಲೆಗಳಿಗೆ ನೀರು ಬಿಡುವ ನಿರೀಕ್ಷೆಯಲ್ಲಿ ಅನ್ನದಾತರು ಇದ್ದಾರೆ. \ No newline at end of file diff --git a/eesanje/url_46_89_6.txt b/eesanje/url_46_89_6.txt new file mode 100644 index 0000000000000000000000000000000000000000..33a0adca38163d180be6bd8b7365631f37fe78a4 --- /dev/null +++ b/eesanje/url_46_89_6.txt @@ -0,0 +1,8 @@ +ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಸಮರ್ಥಿಸಿಕೊಂಡ ಬಿ.ಕೆ. ಹರಿಪ್ರಸಾದ್‌ +ಬೆಂಗಳೂರು,ಜು.3-ದೇಶದ ಆಂತರಿಕ ಕ್ಷೋಭೆ ಯನ್ನು ಹತ್ತಿಕ್ಕಲು ಆಗಿನ ಪ್ರಧಾನಿ ಇಂದಿರಾ ಗಾಂಧಿ ಯವರು ತುರ್ತು ಪರಿಸ್ಥಿತಿ ಯನ್ನು ಜಾರಿ ಗೊಳಿಸಿದ್ದರು. ಇದು ಸಂವಿಧಾನ ಬಾಹಿರ ವಾಗಿರಲಿಲ್ಲ ಎಂದು ಕಾಂಗ್ರೆಸ್‌‍ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌ ಸಮರ್ಥಿಸಿ ಕೊಂಡಿದ್ದಾರೆ. +ಪಕ್ಷದ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಸರ್ಕಾರ ರಚನೆ ವೇಳೆ ರಾಷ್ಟ್ರಪತಿಯವರು ಸಂಸತ್‌ನ ಜಂಟಿ ಅಧಿವೇಶನದಲ್ಲಿ ತಮ ಭವಿಷ್ಯದ ಯೋಜನೆಗಳನ್ನು ಪ್ರಸ್ತಾಪಿಸಿ ವಿವರಣೆ ನೀಡುವುದು ಸಾಮಾನ್ಯ. ಆದರೆ ಈ ಬಾರಿ ನರೇಂದ್ರ ಮೋದಿಯವರ ಸರ್ಕಾರ ರಾಷ್ಟ್ರಪತಿಯವರಿಂದ ಮಾಡಿಸಿರುವ ಭಾಷಣದಲ್ಲಿ ತುರ್ತು ಪರಿಸ್ಥಿತಿಯನ್ನು ಪ್ರಸ್ತಾಪ ಮಾಡಿರುವುದು ಖಂಡನೀಯ. +ದೇಶದ ಒಳಗೆ ಮತ್ತು ಹೊರಗೆ ರಾಷ್ಟ್ರವಿರೋಧಿ ಶಕ್ತಿಗಳು ವಿಜೃಂಭಿಸಿದಾಗ ಸುರಕ್ಷತಾ ದೃಷ್ಟಿಯಿಂದ ತುರ್ತುಪರಿಸ್ಥಿತಿಯನ್ನು ಜಾರಿಗೊಳಿಸಲು ಸಂವಿಧಾನದಲ್ಲಿ ಅವಕಾಶ ವಿದೆ. ಹೀಗಾಗಿ ಶ್ರೀಮತಿ ಇಂದಿರಾ ಗಾಂಧಿಯವರು ಜಾರಿಗೊಳಿಸಿದ ತುರ್ತು ಪರಿಸ್ಥಿತಿ ಸಂವಿಧಾನ ಬಾಹಿರ ವಲ್ಲ ಎಂದು ಸಮರ್ಥಿಸಿ ಕೊಂಡರು. +ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಕಾಂಗ್ರೆಸ್‌‍ ಸರ್ಕಾರ ಸಮಾಜ ಘಾತುಕ ಶಕ್ತಿಗಳು, ಕಳ್ಳ ಸಾಗಣಿಕೆದಾರರು, ರಾಷ್ಟ್ರದ ಸಂವಿಧಾನವನ್ನು ಬುಡಮೇಲು ಮಾಡಲು ಯತ್ನಿಸಿದವರನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಈಗಿನ ಕೇಂದ್ರ ಸರ್ಕಾರ ವಿವಿಧ ರಾಜ್ಯದ ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದೆ. ವಿಪಕ್ಷ ನಾಯಕರ ಮೇಲೆ ಹಗೆತನ ಸಾಧಿಸುತ್ತಿದೆ. ತುರ್ತು ಪರಿಸ್ಥಿತಿಯಲ್ಲಿ ವಿರೋಧಪಕ್ಷದ ನಾಯಕರಾಗಿದ್ದ ವಾಜಪೇಯಿ ಅವರನ್ನು ಗೃಹಬಂಧನದಲ್ಲಿಡಲಾಗಿತ್ತು. ಈಗ ಕೇಂದ್ರ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರ ಕಣ್ಣೆದುರಿಗಿದೆ ಎಂದು ನುಡಿದರು. +ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ವಿರೋಧಿ ಶಕ್ತಿಗಳನ್ನು ಹತ್ತಿಕ್ಕಲು ತುರ್ತು ಪರಿಸ್ಥಿತಿ ಹೇರಿದ್ದ ರಲ್ಲಿ ತಪ್ಪಿಲ್ಲ. ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಇಂದಿರಾಗಾಂಧಿ ವಿರುದ್ಧ ತೀರ್ಪು ನೀಡುತ್ತದೆ. ತೀರ್ಪು ನೀಡಿದ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಮೇಲನವಿ ಸಲ್ಲಿಸಲು 7 ವಾರಗಳ ಕಾಲಾವಕಾಶ ನೀಡಿದರು. ಸುಪ್ರೀಂಕೋರ್ಟ್‌ ಕೂಡ ಇಂದಿರಾ ಗಾಂಧಿಯವರನ್ನು ಪ್ರಧಾನಿ ಸ್ಥಾನದಲ್ಲಿ ಮುಂದುವರೆಯಲು ಅವಕಾಶ ನೀಡುತ್ತದೆ ಎಂದು ಹೇಳಿದರು. +ಜಯಪ್ರಕಾಶ್‌ ನಾರಾಯಣ್‌ ಅವರು ಇಂದಿರಾಗಾಂಧಿಯವರ ವಿರುದ್ಧ ಪ್ರಜಾಸತ್ತಾತಕ ಹೋರಾಟ ನಡೆಸುವ ಬದಲಾಗಿ ಸೇನೆ ಹಾಗೂ ಇತರ ಸಶಸ್ತ್ರ ಪಡೆಗಳಿಗೆ ದಂಗೆ ಏಳಲು ಕರೆ ನೀಡುತ್ತಾರೆ. ಹೀಗಾಗಿ ಅನಿವಾರ್ಯವಾಗಿ ತುರ್ತು ಪರಿಸ್ಥಿತಿ ಹೇರಬೇಕಾಗುತ್ತದೆ. ಕೊನೆಗೆ ಅದನ್ನು ಹಿಂದೆ ಪಡೆದಿದ್ದೂ ಕೂಡ ಇಂದಿರಾ ಗಾಂಧಿಯವರೇ ಎಂದು ವಿವರಿಸಿದರು. +ತುರ್ತು ಪರಿಸ್ಥಿತಿ ಜಾರಿಯಲ್ಲಿ ಯಾವುದೇ ಸಂವಿಧಾನ ಉಲ್ಲಂಘನೆ ಯಾಗಿರಲಿಲ್ಲ. ಕಾಂಗ್ರೆಸ್‌‍ ಎಂದೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದು ಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_89_7.txt b/eesanje/url_46_89_7.txt new file mode 100644 index 0000000000000000000000000000000000000000..f9c4b159d97e6d75c17ef37f4567103b9f8368ff --- /dev/null +++ b/eesanje/url_46_89_7.txt @@ -0,0 +1,4 @@ +ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ +ಬೆಂಗಳೂರು, ಜು.3– ಸ್ಥಳ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ. +ಹಾಲಿ ಆಯುಕ್ತರಾಗಿದ್ದ ಐಎಎಸ್‌‍ ಅಧಿಕಾರಿ ಸೂರಳ್ಕರ್‌ ವಿಕಾಸ್‌‍ ಕಿಶೋರ್‌ ಅವರನ್ನು ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದೆ. +ಈ ಹಿಂದೆ ಕೂಡ ಹೇಮಂತ್‌ ಎಂ.ನಿಂಬಾಳ್ಕರ್‌ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದರು. ಈ ವೇಳೆ ಇಲಾಖೆಯ ಹಿರಿಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅವರಿಗೆ ಶುಭ ಹಾರೈಸಿದರು. \ No newline at end of file diff --git a/eesanje/url_46_89_8.txt b/eesanje/url_46_89_8.txt new file mode 100644 index 0000000000000000000000000000000000000000..605287e54c85d034a25c0575f5820caa67c91bc1 --- /dev/null +++ b/eesanje/url_46_89_8.txt @@ -0,0 +1,7 @@ +ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ : ಆರ್‌.ಅಶೋಕ್‌ ಆಕೋಶ +ಬೆಂಗಳೂರು, ಜು.3-ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಂಡಾಗಲೇ ಲೂಟಿ ಹೊಡೆಯಲು ಸುರಂಗ ಕೊರೆದಿದ್ದಾರೆ. ಈಗ ಮೂಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದ್ದು, ಈ ಸರ್ಕಾರ ಲೂಟಿ ಮಾಡೆಲ್‌ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಕೋಶ ವ್ಯಕ್ತಪಡಿಸಿದರು. +ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಕಾಂಗ್ರೆಸ್‌‍ ಸರ್ಕಾರದ ಜನ ವಿರೋಧಿ ನಿಲುವು ವಿರುದ್ಧ ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಆರ್‌.ಅಶೋಕ್‌ ಮುತ್ತಿಗೆ ಹಾಕಿದರು. +ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲೀಕಿ ಅಭಿವೃದ್ಧಿ ನಿಗಮದ ದಲಿತರ ಹಣವನ್ನು ತೆಲಂಗಾಣದ ಬಾರ್‌ ಅಂಡ್‌ ರೆಸ್ಟೋರೆಂಟ್‌ಗೆ, ಚಿನ್ನದ ಅಂಗಡಿಗಳಿಗೆ ಟಕಾಟಕ್‌ ಎಂದು ವರ್ಗಾವಣೆ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಲವಾಗಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ, ಸ್ವಯಂಪ್ರೀರಣೆಯಿಂದ ನೀಡಿದ್ದಾರೆ ಎಂದು ಕಾಂಗ್ರೆಸ್‌‍ನವರು ಹೇಳುತ್ತಿದ್ದಾರೆ. ಈಗ ಮುಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ ಎಂದು ದೂರಿದರು. +ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದಂತೆಯೇ ಈಗ ಕಾಂಗ್ರೆಸ್‌‍ ಸರ್ಕಾರ ಬೆಂಗಳೂರಿನಲ್ಲಿ ತುರ್ತು ಸ್ಥಿತಿ ಜಾರಿಗೊಳಿಸಿದೆ. ಬಿಜೆಪಿ ಶಾಸಕರು ಸಿಎಂ ಮನೆಗೆ ಬರಬಾರದೆಂದು ನೂರಾರು ಪೊಲೀಸರನ್ನು ನಿಯೋಜಿಸಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ರಾಮೇಶ್ವರಂ ಕೆೆಯಲ್ಲಿ ಬಾಂಬ್‌ ಸ್ಫೋಟ ಮಾಡಿದ ಭಯೋತ್ಪಾದಕರನ್ನು ಹಿಡಿಯಲು ಐದಾರು ಪೊಲೀಸರನ್ನು ಕಳುಹಿಸಿದ್ದರು. ಇಲ್ಲಿ ಶಾಸಕರನ್ನು ಹಿಡಿಯಲು ನೂರಾರು ಪೊಲೀಸರನ್ನು ಕಳುಹಿಸಲಾಗಿದೆ ಎಂದು ಆಕೋಶ ಹೊರಹಾಕಿದರು. +ಮೈಸೂರು ಮುಡಾದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ. 50:50 ಅನುಪಾತದಲ್ಲಿ ನಿವೇಶನಗಳನ್ನು ಹಂಚಿ 3-4 ಸಾವಿರ ಕೋಟಿ ರೂ. ಲೂಟಿ ಮಾಡಲಾಗಿದೆ. 86 ಸಾವಿರ ಅರ್ಜಿಗಳನ್ನು ಸಲ್ಲಿಸಿದ ಬಡವರಿಗೆ ನಿವೇಶನ ನೀಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ. 15 ನಿವೇಶನ ನೀಡಬೇಕಾದಲ್ಲಿ 60 ನಿವೇಶನ ನೀಡಿದ್ದಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ನಿವೇಶನ ದೋಚಿದ್ದಾರೆ. ಕಾಂಗ್ರೆಸ್‌‍ನದ್ದು ಲೂಟಿ ಮಾಡೆಲ್‌ ಎಂದರು. +ಕಾಂಗ್ರೆಸ್‌‍ ಸರ್ಕಾರ ಕೂಡಲೇ ಈ ನಿವೇಶನ ಯೋಜನೆಯನ್ನು ರದ್ದು ಮಾಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರಬರಲಿದೆ. ಈ ವಿಚಾರವನ್ನು ಸದನದಲ್ಲಿ ಮಾತನಾಡಿ ಸತ್ಯ ಬಯಲಿಗೆ ತರುತ್ತೇವೆ ಎಂದರು. \ No newline at end of file diff --git a/eesanje/url_46_89_9.txt b/eesanje/url_46_89_9.txt new file mode 100644 index 0000000000000000000000000000000000000000..12902a63815fe3af1228024836cab31c0d72e654 --- /dev/null +++ b/eesanje/url_46_89_9.txt @@ -0,0 +1,8 @@ +ಕಲುಷಿತ ನೀರಿನ ದುರಂತ ಮರುಕಳಿಸಿದರೆ ಅಧಿಕಾರಿಗಳೇ ಹೊಣೆ : ಸಿಎಂ ಎಚ್ಚರಿಕೆ +ಬೆಂಗಳೂರು,ಜು.3-ಕಲುಷಿತ ನೀರಿನ ಪ್ರಕರಣಗಳು ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ ಒಳಾಂಗಣ ದಲ್ಲಿ ನಡೆದ ವಿಶ್ವಪರಿಸರ ದಿನಾಚರಣೆಯಲ್ಲಿ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. +ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.ಡೆಂಘೀ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು. +ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು. +ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು. +ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.ಜೂ.5 ರಂದು ಪರಿಸರ ದಿನಾಚರಣೆ ಆಚರಿಸಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಕಾರಣಕ್ಕಾಗಿ ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. +ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಕ್ಕಳು ಪರಿಸರ ಕಾಳಜಿಯ ಕುರಿತು ಆಶುಭಾಷಣ ನಡೆಸಿದರು. ಕಂಠೀರವ ಕ್ರೀಡಾಂಗಣದ ಹೊರಾಂಗಣದಲ್ಲಿ ಸಸಿ ನೆಟ್ಟ ಮುಖ್ಯಮಂತ್ರಿ ಪರಿಸರ ಮಾಲಿನ್ಯ ತಡೆಗೆ ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಯಂತ್ರೋಪಕರಣಗಳ ಪ್ರದರ್ಶನವನ್ನು ವೀಕ್ಷಿಸಿದರು. +ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ರೆಹಮಾನ್ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಮರಿಗೌಡ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_8_1.txt b/eesanje/url_46_8_1.txt new file mode 100644 index 0000000000000000000000000000000000000000..f88debaeabd8fb4468cd57722ceeaa3fc8eb685a --- /dev/null +++ b/eesanje/url_46_8_1.txt @@ -0,0 +1,13 @@ +ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ 6 ಕೋಟಿ ರೂ. ವಂಚನೆ, 10 ಮಂದಿ ಬಂಧನ +10 +ಬೆಂಗಳೂರು,ಸೆ.27-ಆನ್ಲೈನ್ ಜಾಬ್ ಟಾಸ್ಕ್ ಹೆಸರಲ್ಲಿ ಆರು ಕೋಟಿ ರೂ. ಹಣವನ್ನು ಪಡೆದು ವಂಚಿಸುತ್ತಿದ್ದ ನಗರದ ಹತ್ತು ಮಂದಿ ಆರೋಪಿಗಳನ್ನು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 72 ಮೊಬೈಲ್ ಫೋನ್ಗಳು, 182 ಡೆಬಿಟ್ ಕಾರ್ಡ್ಗಳು, 2 ಲ್ಯಾಪ್ಟಾಪ್, ವಿವಿಧ ಕಂಪನಿಯ 133 ಸಿಮ್ ಕಾರ್ಡ್ಗಳು, 127 ಬ್ಯಾಂಕ್ ಪಾಸ್ಪುಸ್ತಕಗಳು ಹಾಗೂ 1.74 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ. +ಆರೋಪಿಗಳೆಲ್ಲರೂ ನಗರದವರಾಗಿದ್ದು, ಈ ಪ್ರಕರಣಗಳಂತೆಯೇ ಭಾರತದಾದ್ಯಂತ ವಿವಿಧ 21 ರಾಜ್ಯಗಳಲ್ಲಿ ಒಟ್ಟು 122 ಎನ್ಸಿಆರ್ಪಿ ಪ್ರಕರಣಗಳು ಇವರುಗಳ ವಿರುದ್ಧ ದಾಖಲಾಗಿರುತ್ತವೆ.ಆಂಧ್ರಪ್ರದೇಶದಲ್ಲಿ 10, ಅಸ್ಸಾ 1, ಬಿಹಾರ 6, ಚಂಡೀಗಢ 1, ಛತ್ತೀಸ್ಗಢ 3, ದೆಹಲಿ 3, ಗುಜರಾತ್ 7, ಹರಿಯಾಣ 1, ಹಿಮಾಚಲ ಪ್ರದೇಶ 1, ಕರ್ನಾಟಕ 9, ಕೇರಳ 2, ಮಧ್ಯಪ್ರದೇಶ 1, ಮಹಾರಾಷ್ಟ್ರ 12, ಒಡಿಸ್ಸಾ 2, ಪಂಜಾಬ್ 4, ರಾಜಸ್ತಾನ 5, ತಮಿಳುನಾಡು 20, ತೆಲಂಗಾಣ 12, ಉತ್ತರಪ್ರದೇಶ 16, ಉತ್ತರಾಖಂಡ 3, ಪಶ್ಚಿಮ ಬಂಗಾಳ 3 ಮತ್ತು ಬೆಂಗಳೂರು ನಗರದ ಉತ್ತರ ಸಿಇಎನ್ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿರುತ್ತವೆ. +ಬಾಗಲಗುಂಟೆಯ ಟಿ. ದಾಸರಹಳ್ಳಿ ನಿವಾಸಿಯೊಬ್ಬರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯು ವಾಟ್ಸಪ್ ಮೂಲಕ ಮೆಸೇಜ್ ಮಾಡಿ ಆನ್ಲೈನ್ ಜಾಬ್ ನೀಡುವುದಾಗಿ ನಂಬಿಸಿದ್ದಾನೆ. ನಂತರ ವಾಟ್ಸಪ್ ಮೂಲಕ ಅವರಿಗೆ ಕೆಲವು ಲಿಂಕ್ಗಳನ್ನು ಕಳುಹಿಸಿ, ಟೆಲಿಗ್ರಾಂ ಗ್ರೂಪ್ಗೆ ಸೇರ್ಪಡಿಸಿ, ಟಾಸ್ಕ್ಗಳನ್ನು ನೀಡಿದ್ದು, ಈ ಟಾಸ್ಕ್ನಲ್ಲಿ ಐಷಾರಾಮಿ ಹೋಟೆಲ್ಗಳ ರೀವ್ಯೂವನ್ನು ಮಾಡುವಂತೆ ತಿಳಿಸಿದ್ದಾನೆ.ರೀವ್ಯೂ ಮಾಡುವ ಸಮಯದಲ್ಲಿ 150 ರಿಂದ 200 ರೂ. ಹಣವನ್ನು ಸಲ್ಲಿಸಿ ರೀವ್ಯೂ ರಿಪೋರ್ಟ್ ಅನ್ನು ಕಳುಹಿಸಿದ್ದಲ್ಲಿ ಕೂಡಲೇ ಅಪರಿಚಿತ ವ್ಯಕ್ತಿಯು 400 ರಿಂದ 500 ರೂ. ಹಣವನ್ನು ಅಕೌಂಟ್ಗೆ ಹಾಕುತ್ತಿದ್ದನು. +ಇದೇ ರೀತಿ ಹಲವಾರು ರೀವ್ಯೂ ರಿಪೋರ್ಟ್ಗಳನ್ನು ತರಿಸಿಕೊಂಡು ಹೆಚ್ಚಿನ ಹಣವನ್ನು ಸಂದಾಯ ಮಾಡಿ, ನಂಬಿಕೆ ಬರುವಂತೆ ಅಪರಿಚಿತ ವ್ಯಕ್ತಿಯು ನಡೆದುಕೊಂಡಿದ್ದಾನೆ. ಕ್ರಿಪ್ರೋ ಕರೆನ್ಸಿ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ್ದಲ್ಲಿ ಹೆಚ್ಚಿನ ಲಾಭ ಬರುವುದಾಗಿ ಅವರನ್ನು ನಂಬಿಸಿದ ವಂಚಕ ಹಂತಹಂತವಾಗಿ ಒಟ್ಟು 25,37,815 ರೂ.ಗಳನ್ನು ತನ್ನ ಅಕೌಂಟಿಗೆ ವರ್ಗಾಹಿಸಿಕೊಂಡಿದ್ದಾನೆ.ತದನಂತರದಲ್ಲಿ ತಾನು ಮೋಸ ಹೋಗಿರುವುದಾಗಿ ಅರಿತು ಸಿ.ಇ.ಎನ್. ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಪಿರ್ಯಾದುದಾರರು ದೂರು ನೀಡಿದ್ದಾರೆ. +ತನಿಖೆಯನ್ನು ಕೈಗೊಂಡ ಸೈಬರ್ಕ್ರೈಂ ಪೊಲೀಸರು ವಿವಿಧ ಬ್ಯಾಂಕ್ಗಳ ಅಕೌಂಟ್ಗಳಿಗೆ ಹಣವು ವರ್ಗಾವಣೆಯಾಗಿರುವ ಖಾತೆಗಳ ಖಾತೆದಾರರ ವಿವರಗಳನ್ನು ಸಂಪೂರ್ಣವಾಗಿ ಪಡೆದುಕೊಂಡು, ಈ ಜಾಲದಲ್ಲಿ ತೊಡಗಿಸಿಕೊಂಡಿದ್ದ ಒಟ್ಟು 10 ಮಂದಿಯ ಪೈಕಿ 7 ಮಂದಿಯನ್ನು ಆರ್.ಟಿ.ನಗರದ 13ನೇ ಕ್ರಾಸ್ನ ಕಾಫಿಡೇ ಮುಂಭಾಗ ಮೊಬೈಲ್ಗಳು ಹಾಗೂ ಮೂರು ಬ್ಯಾಗ್ಗಳ ಸಮೇತ ವಶಕ್ಕೆ ಪಡೆದಿದ್ದಾರೆ. +ನಂತರ ಠಾಣೆಗೆ ಕರೆತಂದು ಮೂರು ಬ್ಯಾಗ್ಗಳನ್ನು ಪರಿಶೀಲಿಸಿ ಅದರಲ್ಲಿದ್ದ 99 ಡೆಬಿಟ್ ಕಾರ್ಡ್ಗಳು, 50 ಬ್ಯಾಂಕ್ ಪಾಸ್ ಪುಸ್ತಕಗಳು, 41 ಸಿಮ್ ಕಾರ್ಡ್ಗಳು, 1 ಲ್ಯಾಪ್ಟಾಪ್, 23 ಮೊಬೈಲ್ಫೋನ್ಗಳು ಹಾಗೂ 1.24 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.7 ಮಂದಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಲ್ಲದೆ, ತಲೆಮರೆಸಿಕೊಂಡಿರುವ ಇತರ ಮೂವರು ಸಹಚರರ ಬಗ್ಗೆ ಮಾಹಿತಿಯನ್ನು ನೀಡಿ, ಅವರು ಚೀನಾ ದೇಶಕ್ಕೆ ಹೋಗಿದ್ದು, ಚೀನಾದಲ್ಲಿ ಸೈಬರ್ ವಂಚಕರನ್ನು ಭೇಟಿ ಮಾಡಿ, ನಗರಕ್ಕೆ ವಾಪಸ್ಬಂದಿರುವುದಾಗಿ ತಿಳಿಸಿದ್ದಾರೆ. +ತನಿಖೆ ಮುಂದುವರೆಸಿ ತಲೆಮರೆಸಿಕೊಂಡಿದ್ದ ಮೂವರ ವಿರುದ್ಧ ಲುಕ್ಔಟ್ ನೋಟಿಸ್ (ಎಲ್.ಓ.ಸಿ) ಅನ್ನು ಹೊರಡಿಸಲಾಗಿತ್ತು.ನಂತರ ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರನ್ನು ನಗರದ ವಿಮಾನನಿಲ್ದಾಣದ ಅಧಿಕಾರಿಗಳು ಅವರ ವಶಕ್ಕೆ ಪಡೆದು, ನಂತರ ಈ ಪ್ರಕರಣದ ತನಿಖಾಧಿಕಾರಿಯವರಿಗೆ ಹಸ್ತಾಂತರಿಸಿದ್ದಾರೆ. ವಶಕ್ಕೆ ಪಡೆದ ಈ ಮೂವರು ವ್ಯಕ್ತಿಗಳಿಂದ 6 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ. +ಒಟ್ಟು 10 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ನೆಲಗದರನಹಳ್ಳಿ, ಪೀಣ್ಯಾ ಪೊಲೀಸ್ಠಾಣೆಯ ವ್ಯಾಪ್ತಿಯಲ್ಲಿ ಒಂದು ಕಛೇರಿಯನ್ನು ಹೊಂದಿದ್ದು, ಕಛೇರಿಯಲ್ಲಿ ಆರೋಪಿತನು ಕೃತ್ಯಕ್ಕೆ ಉಪಯೋಗಿಸಿದ 47 ಬ್ಯಾಂಕ್ ಪಾಸ್ ಬುಕ್ಗಳು, 48 ಸಿಮ್ ಕಾರ್ಡ್ಗಳು, 31 ಡೆಬಿಟ್ ಕಾರ್ಡ್ಗಳು, 9 ಮೊಬೈಲ್ ಫೋನ್ಗಳನ್ನು ಹಾಜರು ಪಡಿಸಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. +ಮೂವರು ಆರೋಪಿಗಳು ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಪಿ.ಜಿ ಯಲ್ಲಿ ವಾಸವಾಗಿದ್ದು, ಪಿ.ಜಿ ಯಲ್ಲಿಟ್ಟಿದ್ದ 52 ಡೆಬಿಟ್ ಕಾರ್ಡ್ಗಳು, 34 ಮೊಬೈಲ್ ಫೋನ್ಗಳು, 40 ಸಿಮ್ಕಾರ್ಡ್ಗಳು, 1 ಲ್ಯಾಪ್ಟಾಪ್ ಹಾಗೂ 30 ಬ್ಯಾಂಕ್ ಪಾಸ್ ಬುಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. +ಇತರೆ ಆರೋಪಿಗಳ ಮನೆಗಳನ್ನು ಶೋಧಿಸಲಾಗಿ, ಕೃತ್ಯಕ್ಕೆ ಬಳಸಿದ ಯಾವುದೇ ಉಪಯುಕ್ತ ಮಾಹಿತಿ, ವಸ್ತುಗಳು ಲಭ್ಯವಾಗಿಲ್ಲ.10 ಆರೋಪಿಗಳ ಪೈಕಿ 5 ಆರೋಪಿಗಳು ವಿವಿಧ ಎ.ಟಿ.ಎಂ ನಿಂದ ಹಣ ಪಡೆದಿದ್ದು ಆ ಎ.ಟಿ.ಎಂ ಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ. +ತನಿಖೆಯನ್ನು ಮುಂದುವರೆಸಿ, ಈ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 127 ವಿವಿಧ ಬ್ಯಾಂಕ್ ಪಾಸ್ ಪುಸ್ತಕಗಳ ಆಧಾರದ ಮೇಲೆ, ಒಟ್ಟು 7,34,768 ರೂ. ಗಳನ್ನು ಫ್ರೀಜ್ ಮಾಡಿ ತನಿಖೆ ಮುಂದುವರೆಸಿದ್ದಾರೆ.ಈ ಪ್ರಕರಣವನ್ನು ಸಿ.ಇ.ಎನ್. ಕ್ರೈಂ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಶಿವರತ್ನ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. \ No newline at end of file diff --git a/eesanje/url_46_8_10.txt b/eesanje/url_46_8_10.txt new file mode 100644 index 0000000000000000000000000000000000000000..094e3f3f9ea739f5d18dbb1e5f41537eac12f958 --- /dev/null +++ b/eesanje/url_46_8_10.txt @@ -0,0 +1,5 @@ +ಸಿದ್ದರಾಮಯ್ಯ ಪ್ರಕರಣ ದಾಖಲಿಸಲು ಅಧಿಕಾರಿಗಳು ಹಿಂದೇಟು.. +ಬೆಂಗಳೂರು, ಸೆ.26- ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಪ್ರಕರಣ ದಾಖಲಿಸಲು ಸಂಬಂಧ ಪಟ್ಟ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪಿನ ಪ್ರತಿಯನ್ನು ತಾವು ಮೈಸೂರು ಲೋಕಾಯುಕ್ತ ಪೊಲೀಸರಿಗೆ ತಲುಪಿಸಿದ್ದು, ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸಲಾಗುತ್ತಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು. +ಮೈಸೂರು ಲೋಕಾಯುಕ್ತದ ಎಸ್‌‍ಪಿ ಅವರು ಕೈಗೆ ಸಿಗುತ್ತಿಲ್ಲ. ಜೊತೆಗೆ ಯಾವ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಲೋಕಾಯುಕ್ತದ ಹಿರಿಯ ಅಧಿಕಾರಿಗಳಿಗೂ ತಾವು ಕರೆ ಮಾಡಿ ಮಾಹಿತಿ ನೀಡಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.ಇನ್ನೂ ಅರ್ಧಗಂಟೆ ಕಾಲ ಕಾಯುತ್ತೇನೆ ಅನಂತರವೂ ಅಧಿಕಾರಿಗಳು ಸ್ಪಂದಿಸದೆ ಇದ್ದರೆ, ಸಂಬಂಧ ಪಟ್ಟ ಪೊಲೀಸ್‌‍ ಠಾಣೆಗೆ ಲೋಕಾಯುಕ್ತ ಎಸ್‌‍ಪಿ ಕಾಣೆಯಾಗಿದ್ದಾರೆ ಎಂದು ದೂರು ನೀಡುತ್ತೇನೆ ಹಾಗೂ ನ್ಯಾಯಾಲಯದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. +ಸ್ನೇಹಮಯಿ ಕೃಷ್ಣ ಅವರು ಇಂದು ಮೈಸೂರು ಲೋಕಾಯುಕ್ತ ಪೊಲೀಸ್‌‍ ಠಾಣೆ ಭೇಟಿ ನೀಡುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದ ಆದೇಶದ ಪ್ರಕಾರ ಇಂದು ನಾಲ್ಕು ಪ್ರತ್ಯೇಕ ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ಪ್ರಕರಣ ದಾಖಲಿಸಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಹಾಗೂ ಜಮೀನಿನ ಮಾಲೀಕ ದೇವರಾಜು ಹಾಗೂ ಇತರ ಅಧಿಕಾರಿ ವಿರುದ್ಧ ನಾವು ದೂರು ನೀಡಿದ್ದೇವೆ. ಅದರ ಪ್ರಕಾರವೇ ಪ್ರಕರಣ ದಾಖಲಿಸಬೇಕಿದೆ ಎಂದರು. +ಲೋಕಾಯುಕ್ತ ರಾಜ್ಯಸರ್ಕಾರದ ವ್ಯಾಪ್ತಿಯಲ್ಲಿದೆ. ಹಿಗಾಗಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದಾಗ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆೆಗೆ ಒಪ್ಪಿಸಬೇಕೆಂದು ಒಂದೆರೆಡು ದಿನಗಳಲ್ಲಿ ಹೈಕೋರ್ಟ್‌ ಮೆಟ್ಟಿಲೇರುವುದಾಗಿ ತಿಳಿಸಿದರು. \ No newline at end of file diff --git a/eesanje/url_46_8_11.txt b/eesanje/url_46_8_11.txt new file mode 100644 index 0000000000000000000000000000000000000000..5b9a265cd80c3590ea67f6ddb02cbbff58948a5f --- /dev/null +++ b/eesanje/url_46_8_11.txt @@ -0,0 +1,7 @@ +ಯಾವುದೇ ಕ್ಷಣದಲ್ಲಿ ಸಿಎಂ, ಕುಟುಂಬದ ವಿರುದ್ಧ ಎಫ್‌ಐಆರ್‌ ಸಾಧ್ಯತೆ +ಬೆಂಗಳೂರು, ಸೆ.26- ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದರಿಂದ ಯಾವುದೇ ಸಂದರ್ಭದಲ್ಲಿ ಸಿಎಂ ಮತ್ತು ಕುಟುಂಬದವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗುವ ಸಾಧ್ಯತೆ ಇದೆ. +ಈಗಾಗಲೇ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಆದೇಶದ ಪ್ರತಿ ಲೋಕಾಯುಕ್ತ ಎಡಿಜಿಪಿಗೆ ತಲುಪಿದ್ದು, ಅಲ್ಲಿಂದ ಮೈಸೂರು ಎಸ್‌‍ಪಿಯವರಿಗೆ ರವಾನೆಯಾಗಿದ್ದು, ಅಧಿಕೃತವಾಗಿ ತನಿಖೆ ಆರಂಭವಾಗಲಿದೆ. ನ್ಯಾಯಾಲಯದ ಆದೇಶದ ಪ್ರತಿ ಬುಧವಾರ ವಿಳಂಬವಾಗಿ ತಲು ಪಿದ್ದರಿಂದ ಲೋಕಾಯುಕ್ತ ಎಡಿಜಿಪಿಯವರು ಗುರುವಾರ ಅದನ್ನು ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌ ಅವರಿಗೆ ಹಸ್ತಾಂತರ ಮಾಡಿದ್ದಾರೆ. +ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಪ್ರತಿಯನ್ನು ತೆಗೆದುಕೊಂಡು ತೆರಳಿದ್ದಾರೆ. ಮೊದಲು ಇನ್‌ಸ್ಪೆಕ್ಟರ್‌ ಒಬ್ಬರನ್ನು ಕಳುಹಿಸಿದ್ದರಾದರೂ ನಂತರ ಅವರೇ ಬಂದು ಪಡೆದುಕೊಂಡಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ಬಾಮೈದುನ, ಮಲ್ಲಿಕಾರ್ಜುನ ಸ್ವಾಮಿ ಜಮೀನು ಮಾಲೀಕ ದೇವರಾಜ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲಿದ್ದಾರೆ. +ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲನೇ ಆರೋಪಿಯಾದರೆ ಪತ್ನಿ ಪಾರ್ವತಮ 2ನೇ ಆರೋಪಿಯಾಗಲಿದ್ದಾರೆ. ಸಿಆರ್‌ಪಿಸಿ ಸೆಕ್ಷನ್‌ 156(3)ರಡಿ ದೂರು ದಾಖಲಿಸಲು ನ್ಯಾಯಾಲಯ ಆದೇಶ ನೀಡಿದೆ. ಇದರ ಪ್ರಕಾರವೇ ಲೋಕಾಯುಕ್ತ ಎಸ್‌‍ಪಿ ಎಫ್‌ಐಆರ್‌ ದಾಖಲಿಸಲಿದ್ದಾರೆ. ನ್ಯಾಯಾಲಯವು ಐಪಿಸಿ ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಬೇನಾಮಿ ಪ್ರಾಪರ್ಟಿ ಟ್ರಾನ್ಸಕ್ಷನ್‌ ಕಾಯ್ದೆ ಹಾಗೂ ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ತನಿಖೆ ನಡೆಸಲಿದ್ದಾರೆ. +ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು 120ಬಿ 120ಬಿ – ಅಪರಾಧಿಕ ಒಳಸಂಚು, 166 – ಯಾವುದೇ ವ್ಯಕ್ತಿಗೆ ಹಾನಿ ಉಂಟು ಮಾಡುವ ಉದ್ದೇಶದಿಂದ ಸಾರ್ವಜನಿಕನೌಕರನು ಕಾನೂನು ಬದ್ದ ಆದೇಶ ಪಾಲಿಸದಿರುವುದು, 403 – ಸ್ವತ್ತಿನ ಅಪ್ರಮಾಣಿಕ ದುರುಪಯೋಗ, 406 – ಅಪರಾಧಿಕ ನಂಬಿಕೆದ್ರೋಹ, 420 – ವಂಚನೆ ಮಾಡುವುದು ಮತ್ತು ಸ್ವತ್ತನ್ನ ನೀಡಲು ಅಪ್ರಾಮಾಣಿಕವಾಗಿ ಪ್ರೇರೇಪಿಸುವುದು, 426 – ಕೇಡಿನ ಅಪರಾಧಕ್ಕಾಗಿ ದಂಡನೆ, 465 – ಖೋಟಾ ತಯಾರಿಕೆಗೆ ದಂಡನೆ, 468 – ವಂಚನೆಯ ಉದ್ದೇಶಕ್ಕಾಗಿ ಖೋಟಾ ತಯಾರಿಕೆ, 340 – ಅಕ್ರಮ ಬಂಧನ, 351 – ಹಲ್ಲೆ ಕಾನೂನುನಡಿ ತನಿಖೆ ನಡೆಯಲಿದೆ.ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988, ಪಿಸಿ ಆಕ್ಟ್‌ 9 – ಸಾರ್ವಜನಿಕ ಸೇವಕನ ಮೇಲೆ ಪ್ರಭಾವ ಬೀರುವ ಮೂಲಕ ಅನುಕೂಲತೆ ಸ್ವೀಕಾರದ ಅಪರಾಧದ ಬಗ್ಗೆ ತಿಳಿಸುತ್ತದೆ. +ಪಿಸಿ ಆಕ್ಟ್‌ 13 – ಸಾರ್ವಜನಿಕ ಸೇವಕನಿಂದ ಕ್ರಿಮಿನಲ್‌ ದುರ್ನಡತೆಯ ಬಗ್ಗೆ ವ್ಯವಹರಿಸುತ್ತದೆ, ಬೇನಾಮಿ ಪ್ರಾಪರ್ಟಿ ಟ್ರಾನ್ಸಾಕ್ಷನ್‌ ಆ್ಯಕ್ಟ್‌ -1988 ಸೆಕ್ಷನ್‌ 3 – ಬೇನಾಮಿ ವಹಿವಾಟುಗಳ ನಿಷೇಧ ಮತ್ತು ಪ್ರವೇಶಕ್ಕೆ ಶಿಕ್ಷೆ, ಸೆಕ್ಷನ್‌ 53 – ಬೇನಾಮಿ ದಂಡದ ಬಗ್ಗೆ ಹಾಗೂ ಸೆಕ್ಷನ್‌ 54 – ಸುಳ್ಳು ಮಾಹಿತಿ ನೀಡುವುದಕ್ಕೆ ದಂಡದ ಬಗ್ಗೆ ತಿಳಿಸುತ್ತದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ – 2011, ಸೆಕ್ಷನ್‌ 3 – ಎಲ್ಲಾ ರೀತಿಯ ಭೂಕಬಳಿಕೆ ನಿಷೇಧ ಮತ್ತು ಕಾನೂನು ಬಾಹಿರ, ಸೆಕ್ಷನ್‌ 4- ಯಾವುದೇ ವ್ಯಕ್ತಿ ಸ್ವತಃ ಅಥವಾ ಇನ್ನೊಬ್ಬ ವ್ಯಕ್ತಿಯ ಮೂಲಕ ಭೂ ಕಬಳಿಕೆ ಮಾಡುವಂತಿಲ್ಲ. \ No newline at end of file diff --git a/eesanje/url_46_8_12.txt b/eesanje/url_46_8_12.txt new file mode 100644 index 0000000000000000000000000000000000000000..61d7de0536a2b1cd89d77a79f7487d2d6380dcf1 --- /dev/null +++ b/eesanje/url_46_8_12.txt @@ -0,0 +1,4 @@ +ಜಾಮೀನಿನ ಮೇಲೆ ಇರುವವರು ಮೊದಲು ರಾಜೀನಾಮೆ ನೀಡಲಿ: ಮಹದೇವಪ್ಪ +ಬೆಂಗಳೂರು, ಸೆ.26 – ಜಾಮೀನಿನ ಮೇಲೆ ಇರುವವರೆಲ್ಲಾ ಮೊದಲು ತಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಆನಂತರ ನೈತಿಕತೆ ಬಗ್ಗೆ ಮಾತನಾಡಲಿ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಮಾಡಿರುವ ತಪ್ಪೇನು? ಎಂದು ಪ್ರಶ್ನಿಸಿದರು. +ಬಡಜನರ ಪರವಾಗಿ ಕೆಲಸ ಮಾಡಿದ್ದೇ ತಪ್ಪಾಯಿತೆ? ಕಾನೂನಾತಕ ಹಾಗೂ ರಾಜಕೀಯವಾಗಿ ಎಲ್ಲಾ ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದರು. ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ನೀಡಿರುವ ಹೇಳಿಕೆ ವ್ಯಕ್ತಿಗತ ಅಭಿಪ್ರಾಯ. ಅದು ಪಕ್ಷದ ಅಭಿಪ್ರಾಯವಲ್ಲ ಎಂದರು. +ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರು ಮೊದಲು ಅವರ ಮನೆ ಸರಿ ಮಾಡಿಕೊಳ್ಳಲಿ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌‍.ಈಶ್ವರಪ್ಪ ಅವರ ಮನೆಯಲ್ಲಿ ಏನು ನಡೆಯುತ್ತಿದೆ? ಪರ್ಯಾಯ ನಾಯಕತ್ವದ ಸಭೆ ನಡೆಯುತ್ತಿದೆ ಎಂದು ಆರೋಪಿಸಿದರು. \ No newline at end of file diff --git a/eesanje/url_46_8_2.txt b/eesanje/url_46_8_2.txt new file mode 100644 index 0000000000000000000000000000000000000000..4f138f4a97a846266d78cec0c3aeb35db2311410 --- /dev/null +++ b/eesanje/url_46_8_2.txt @@ -0,0 +1,13 @@ +ರಾಜ್ಯಪಾಲರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ : ಪರಮೇಶ್ವರ್ + : +ಬೆಂಗಳೂರು,ಸೆ.27-ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಗತ್ಯ ಮಾಹಿತಿ ನೀಡಲು ರಾಜ್ಯಸರ್ಕಾರದ ವಿರೋಧವಿಲ್ಲ. ಆದರೆ ಸಂಪುಟದ ಗಮನಕ್ಕೆ ಬಂದು ವರದಿ ನೀಡುವುದರಿಂದ ಹೊಣೆಗಾರಿಕೆ ಹೆಚ್ಚಿರುತ್ತದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಎಲ್ಲಾ ಪತ್ರಗಳಿಗೂ ಉತ್ತರ ಕೊಡಲು ನಮ ಸರ್ಕಾರ ಸಿದ್ಧವಿದೆ. ಆದರೆ ಅದು ಸಂಪುಟದ ಗಮನಕ್ಕೆ ಬರಬೇಕಿದೆ.ಈ ಹಿಂದೆ ಅನೇಕ ಸಂದರ್ಭಗಳಲ್ಲಿ ಇಲಾಖೆಗಳಿಂದ ನೇರವಾಗಿ ಮಾಹಿತಿ ತೆಗೆದುಕೊಂಡು ಮುಖ್ಯಕಾರ್ಯದರ್ಶಿಯವರೇ ರಾಜ್ಯಪಾಲರಿಗೆ ವರದಿ ನೀಡಿರುವ ಉದಾಹರಣೆಗಳಿವೆ ಎಂದು ಹೇಳಿದರು. +ತೆರೆಮರೆಯಲ್ಲಿ ಯಾರೋ ಪತ್ರ ಬರೆಯುವುದು, ಯಾರೋ ಮಾಹಿತಿ ಪಡೆಯುವುದು ನಡೆಯುತ್ತಿದೆ. ಇದು ಸರಿಯಲ್ಲ. ಸಂಪುಟಕ್ಕೆ ಕಡತ ಮಂಡನೆಯಾದರೆ ಯಾವುದನ್ನು ರಾಜ್ಯಪಾಲರಿಗೆ ನೀಡಬೇಕು ಅಥವಾ ತಡೆಹಿಡಿಯಬೇಕು ಎಂಬುದನ್ನು ನಿರ್ಧರಿಸಲು ಸಾಧ್ಯವಾಗುತ್ತದೆ. ಸಂಪುಟದ ಗಮನಕ್ಕೆ ತಂದಾಗ ಮುಖ್ಯ ಕಾರ್ಯದರ್ಶಿಯವರು ಹೊಣೆಗಾರರಾಗುವುದಿಲ್ಲ. ಸರ್ಕಾರವೇ ಉತ್ತರದಾಯಿತ್ವವಾಗಿರುತ್ತದೆ ಎಂದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ದಾಖಲಾಗುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಮುಡಾ ಪ್ರಕರಣದ ಕುರಿತು ತೀರ್ಪು ನೀಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಡಳಿತ ಮಾಡುವವರು ಧರ್ಮ ಹಾಗೂ ನೈತಿಕತೆ ಪಾಲನೆ ಮಾಡಬೇಕು. ಇಲ್ಲವಾದರೆ ರಾವಣ ರಾಜ್ಯ ನಿರ್ಮಾಣವಾಗುತ್ತದೆ ಎಂದು ಉಲ್ಲೇಖಿಸಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಆಡಳಿತ ಮಾಡುವವರಷ್ಟೇ ಅಲ್ಲ, ಎಲ್ಲರೂ ಧರ್ಮಪಾಲನೆ ಮಾಡಬೇಕು ಎಂದರು. +ಕಾನೂನು ಮಾಡುವವರಿಗೆ ಒಂದು ಧರ್ಮ, ನ್ಯಾಯಾಧೀಶರುಗಳಿಗೆ ಒಂದು ಧರ್ಮ ಎಂದು ಇರುವುದಿಲ್ಲ. ಎಲ್ಲರೂ ಧರ್ಮಪಾಲನೆ ಮಾಡಿದಾಗ ರಾಮರಾಜ್ಯವಾಗುತ್ತದೆ ಎಂದು ತಿಳಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ನಾಯಕ. ಕೆ.ಬಿ.ಕೋಳಿವಾಡ ವೈಯಕ್ತಿಕವಾದ ಅಭಿಪ್ರಾಯವನ್ನು ಹೇಳಿಕೊಂಡಿದ್ದಾರೆ. ಸದ್ಯಕ್ಕೆ ಕಾಂಗ್ರೆಸ್ನಲ್ಲಿ ಅವರು ಯಾವುದೇ ಸ್ಥಾನಮಾನ ಹೊಂದಿಲ್ಲ. ಈ ಹಿಂದೆ ವಿಧಾನಸಭೆಯ ಅಧ್ಯಕ್ಷರಾಗಿದ್ದರು. ಸದ್ಯಕ್ಕೆ ಅವರು ನೀಡಿರುವ ಅಭಿಪ್ರಾಯ ಪಕ್ಷಕ್ಕೆ ಸಂಬಂಧಪಟ್ಟಿದ್ದಲ್ಲ.ಕೆ.ಬಿ.ಕೋಳಿವಾಡರ ಹೇಳಿಕೆ ಹಿಂದೆ ಅನ್ಯರ ಪ್ರಭಾವ ಇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದರು. +ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೋರಿ ಬಿಜೆಪಿಯವರು ಪ್ರತಿಭಟನೆ ನಡೆಸುವುದು ಹೊಸತೇನಲ್ಲ. ಆರಂಭದಿಂದಲೂ ಇದನ್ನೇ ಮಾಡುತ್ತಿದ್ದಾರೆ. ಈಗ ವೇಗ ಹೆಚ್ಚಿಸಿರಬಹುದು. ಎಕ್ಸಲೇಟರ್ ಹೆಚ್ಚು ಒತ್ತಿದ್ದಾರೆ ಎನ್ನಿಸುತ್ತದೆ. ವಿರೋಧಪಕ್ಷಗಳಾಗಿ ಹೋರಾಟ ಮಾಡುವುದು ಅವರ ಧರ್ಮ ಎಂದು ಹೇಳಿದರು. +ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೆಹಲಿ ಪೊಲೀಸ್ ಕಾಯಿದೆಯ ಅಡಿಯಲ್ಲಿ ಸಿಬಿಐ ಅಧಿಕಾರಿಗಳು ನೇರವಾಗಿ ತನಿಖೆ ಮಾಡಲು ಅವಕಾಶವಿದೆ. ಆದರೆ ಅನೇಕ ಸಂದರ್ಭದಲ್ಲಿ ರಾಜ್ಯಸರ್ಕಾರಗಳು ತನಿಖೆಗೆ ಅವಕಾಶ ಮಾಡಿಕೊಟ್ಟಿವೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಪೂರ್ವಾನುಮತಿ ಪಡೆಯುವಂತೆ ಸೂಚಿಸಲಾಗಿದೆ ಎಂದು ಹೇಳಿದರು. +ನಮ ರಾಜ್ಯದಲ್ಲಿ ನಾಲ್ಕೈದು ಬಾರಿ ನೇರವಾಗಿ ಸಿಬಿಐ ತನಿಖೆ ನಡೆಯುವಂತಿಲ್ಲ ಎಂದು ನಿರ್ಣಯ ಕೈಗೊಳ್ಳಲಾಗಿದೆ. ಹಿಂದಿನ ಸರ್ಕಾರ ನೇರ ತನಿಖೆಗೆ ಅವಕಾಶ ಮಾಡಿಕೊಟ್ಟಿತ್ತು. ನಮ ಸರ್ಕಾರ ಅದನ್ನು ಹಿಂಪಡೆದಿದೆ. ಇದು ಹೊಸದೂ ಅಲ್ಲ, ಆಶ್ಚರ್ಯ ಪಡುವಂತೆಯೂ ಇಲ್ಲ ಎಂದರು. +ಅನೇಕ ಪ್ರಕರಣಗಳಲ್ಲಿ ರಾಜ್ಯಸರ್ಕಾರದ ಗಮನಕ್ಕೆ ತರದೇ ನೇರವಾಗಿ ತನಿಖೆ ಮಾಡುವುದು ಸರಿಯಲ್ಲ ಎಂದ ಅವರು, ಸಂಪುಟದಲ್ಲಿ ನಿರ್ಣಯ ತೆಗೆದುಕೊಂಡ ಸಮಯ ಹಾಗೂ ಸಂದರ್ಭ ಸರಿಯಿಲ್ಲದೇ ಇರಬಹುದು. ಆದರೆ ನಮ ನಿರ್ಣಯ ಸರಿ ಇದೆ. ಇದು ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ತೆಗೆದುಕೊಂಡ ನಿರ್ಣಯವಲ್ಲ ಎಂದು ಹೇಳಿದರು. +ರಾಜಭವನದಿಂದ ಮಾಹಿತಿ ಸೋರಿಕೆಯಾಗುತ್ತಿದ್ದರೆ ಅದಕ್ಕೆ ರಾಜಭವನವೇ ಹೊಣೆಗಾರಿಕೆ. ಆ ಆವರಣದೊಳಗೆ ಯಾರಿಗೂ ಹೋಗಲು ಸಾಧ್ಯವಾಗುವುದಿಲ್ಲ. ಅತ್ಯುತ್ಕೃಷ್ಟವಾದ ಭದ್ರತಾ ವಲಯ ಎಂದು ಪರಿಗಣಿಸಿದ್ದೇವೆ. ರಾಜಭವನದಿಂದ ಅನೇಕ ಪತ್ರಗಳು ಬರುತ್ತಿವೆ. ಇದನ್ನು ತನಿಖೆ ಮಾಡಿ ಎಂದು ಪತ್ರ ಬರೆದರೆ ತನಿಖೆ ಮಾಡಲು ನಾವು ಸಿದ್ಧರಿದ್ದೇವೆ ಎಂದರು.ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟರೆ ಪೊಲೀಸರು ತೆರಳಿ ರಾಜಭವನದ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಯಾರಿಂದ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಪತ್ತೆ ಹಚ್ಚುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_46_8_3.txt b/eesanje/url_46_8_3.txt new file mode 100644 index 0000000000000000000000000000000000000000..2d6a90d7120efd7c2a0b5f2dc9fea58de55c1500 --- /dev/null +++ b/eesanje/url_46_8_3.txt @@ -0,0 +1,7 @@ +ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ +- +ತುಮಕೂರು, ಸೆ.27-ಪ್ರಯಾಣಿಕರ ಅನುಕೂಲಕ್ಕಾಗಿ ರಾಜಧಾನಿ ಬೆಂಗಳೂರು ಮತ್ತು ತುಮಕೂರು ನಡುವೆ ಸಂಚರಿಸುವ ವಿಶೇಷ ಮೆಮು ರೈಲಿಗೆ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಚಾಲನೆ ನೀಡಿದರು. +ಕೇಂದ್ರ ಸಚಿವರಾದ ಬಳಿಕ ತುಮಕೂರು ಜಿಲ್ಲೆಗೆ ಹಲವಾರು ಹೊಸ ಹೊಸ ರೈಲ್ವೆ ಯೋಜನೆಗಳನ್ನು ಕೊಡುಗೆಗಳನ್ನಾಗಿ ಸಚಿವರು ನೀಡುತ್ತಿದ್ದು, ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮೆಮು ರೈಲಿಗೆ ಹಸಿರು ನಿಶಾನೆ ನೀಡಿದ್ದಾರೆ. +ಇದರಿಂದ ಬಸ್‌‍ಗಳಲ್ಲಿ ಒತ್ತಡ ಕಡಿಮೆಯಾಗಲಿದೆ. ಪ್ರತಿನಿತ್ಯ ಕೆಲಸ, ವ್ಯಾಪಾರ ಸೇರಿದಂತೆ ಮತ್ತಿತರ ಕಾರಣಗಳಿಗಾಗಿ ಪ್ರತಿನಿತ್ಯ ಸಾವಿರಾರು ಮಂದಿ ತುಮಕೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸ ಕಾರ್ಯಗಳಿಗೆ ತೆರಳಲು ಅನುಕೂಲವಾಗುವಂತೆ ಈ ಮೆಮು ರೈಲನ್ನು ಬಿಡಲಾಗಿದೆ. +ಈ ಹೊಸ ರೈಲು ಭಾನುವಾರ ಹೊರತುಪಡಿಸಿ ಆರು ದಿನವೂ ಸಂಚರಿಸಲಿದೆ. ತುಮಕೂರು ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 8.45ಕ್ಕೆ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ.ಮತ್ತೆ ಈ ರೈಲು ಸಂಜೆ 5.40ಕ್ಕೆ ಯಶವಂತಪುರದಿಂದ ಹೊರಟು 7.15ಕ್ಕೆ ತುಮಕೂರು ತಲುಪಲಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಸೋಮಣ್ಣ ಅವರು ತಿಳಿಸಿದರು. +ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ, ಸುರೇಶ್‌ ಗೌಡ, ಮಾಜಿ ಸಂಸದ ಜಿ.ಎಸ್‌‍. ಬಸವರಾಜ್‌ ಸೇರಿದಂತೆ ರೈಲ್ವೆ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_8_4.txt b/eesanje/url_46_8_4.txt new file mode 100644 index 0000000000000000000000000000000000000000..4d47d2ca4fd8ea285d6c148a30858be061c7bb9f --- /dev/null +++ b/eesanje/url_46_8_4.txt @@ -0,0 +1,10 @@ +ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಗೊಂದಲ + +ಬೆಂಗಳೂರು,ಸೆ.27-ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಅಧಿಕಾರಿಗಳಿಗೆ ಎಫ್‌‍ಐಆರ್‌‍ ದಾಖಲಿಸುವ ವಿಷಯದಲ್ಲಿ ಗೊಂದಲ ಉಂಟಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಸೆಕ್ಷನ್‌‍ 156(3)ರಡಿ ಎಫ್‌‍ಐಆರ್‌‍ ದಾಖಲಿಸಿ ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿತ್ತು. +ಇದರಂತೆ ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌‍ ಅವರು ಗುರುವಾರ ಬೆಂಗಳೂರಿನ ಕೇಂದ್ರ ಕಚೇರಿಗೆ ಆಗಮಿಸಿ ಲೋಕಾಯುಕ್ತ ಎಡಿಜಿಪಿ ಮನೀಶ್‌‍ ಕರ್ಬಿಕರ್‌‍ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ನ್ಯಾಯಾಲಯದ ಪ್ರತಿಯನ್ನು ಪಡೆದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಹೊಸ ಕಾಯ್ದೆ ಬಿಎನ್‌‍ಎಸ್‌‍ಎಸ್‌‍ ಇಲ್ಲವೇ ಸಿಆರ್‌‍ಪಿಸಿ ಸೆಕ್ಷನ್‌‍ನಡಿ ದೂರು ದಾಖಲಿಸಬೇಕೇ? ಎಂಬ ಗೊಂದಲದಲ್ಲಿ ಸಿಲುಕಿರುವುದರಿಂದಲೇ ಎಫ್‌‍ಐಆರ್‌‍ ದಾಖಲಿಸಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ. +ಬಿಎನ್‌‍ಎಸ್‌‍ಎಸ್‌‍ ಅಥವಾ ಸಿಆರ್‌‍ಪಿಸಿ ಅಡಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಜಮೀನು ಮಾಲೀಕ ದೇವರಾಜ್‌‍ ಸೇರಿದಂತೆ ಯಾವ ಸೆಕ್ಷನ್‌‍ನಡಿ ದೂರು ದಾಖಲಿಸಬೇಕು ಎಂಬುದರ ಬಗ್ಗೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ಎಡಿಜಿಪಿ ಮನೀಶ್‌‍ ಕರ್ಬಿಕರ್‌‍ಗೆ ಮೈಸೂರು ಲೋಕಾಯುಕ್ತ ಎಸ್‌‍ಪಿ ಉದೇಶ್‌‍ ಪತ್ರ ಬರೆದಿದ್ದಾರೆ. +ಲೋಕಾಯುಕ್ತರ ಈ ಪತ್ರಕ್ಕೆ ಸೂಕ್ತ ಉತ್ತರ ಬಂದ ಮೇಲೆ ಎಫ್‌‍ ಐ ಆರ್‌‍ ದಾಖಲು ಪ್ರಕಿಯೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ ಎಫ್‌‍ ಐ ಆರ್‌‍ ದಾಖಲಾಗುವುದು ಬಹುತೇಕ ಅನುಮಾನ ಎಂದು ಹೇಳಲಾಗುತ್ತಿದೆ. +ಪ್ರಕರಣವು ಬಿಎನ್‌‍ಎಸ್‌‍ಎಸ್‌‍ ಕಾಯ್ದೆ ಜಾರಿಯಾಗುವ ಮುನ್ನವೇ ನಡೆದಿದೆ. ಇದೊಂದು ಹಿಂದಿನ ಪ್ರಕರಣವಾಗಿರುವುದರಿಂದ ಸಿಆರ್‌‍ಪಿಸಿ ಅಡಿ ಎಫ್‌‍ಐಆರ್‌‍ ದಾಖಲಿಸಿ ತನಿಖೆ ನಡೆಸಬೇಕೇ? ಇಲ್ಲವೇ ಹೊಸ ಕಾನೂನಿನ ಅನ್ವಯ ತನಿಖೆ ನಡೆಸಬೇಕೆ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. +ಈ ಕುರಿತು ಲೋಕಾಯುಕ್ತ ಹಿರಿಯ ಅಧಿಕಾರಿಗಳು ಕಾನೂನು ತಜ್ಞರ ಮೊರೆ ಹೋಗಿದ್ದು, ಯಾವ ಸೆಕ್ಷನ್‌‍ ನಡಿ ನ್ಯಾಯಾಲಯದ ಆದೇಶದಂತೆ ದೂರು ದಾಖಲಿಸಬೇಕು ಎಂಬುದರ ಬಗ್ಗೆ ಸಲಹೆ ಪಡೆಯಲಿದ್ದಾರೆ. ಈ ಬೆಳವಣಿಗೆಗಳಿಂದಾಗಿಯೇ ಸಿಎಂ ವಿರುದ್ಧ ಎಫ್‌‍ಐಆರ್‌‍ ದಾಖಲಿಸುವ ಪ್ರಕ್ರಿಯೆ ವಿಳಂಬವಾಗಿದ್ದು, ಮೂಲಗಳ ಪ್ರಕಾರ ಇಂದು ಕೂಡ ಎಫ್‌‍ಐಆರ್‌‍ ದಾಖಲಾಗುವ ಸಾಧ್ಯತೆ ಇಲ್ಲ ಎಂದು ತಿಳಿದುಬಂದಿದೆ. +ಕಾನೂನು ತಜ್ಞರು ನೀಡುವ ಅಭಿಪ್ರಾಯವನ್ನು ಆಧರಿಸಿ ಸಿಆರ್‌‍ಪಿಸಿ ಇಲ್ಲವೇ ಹೊಸದಾಗಿ ಬಂದಿರುವ ಬಿಎನ್‌‍ಎಸ್‌‍ಎಸ್‌‍ ಕಾನೂನಿನಡಿ ಪ್ರಕರಣ ದಾಖಲಿಸಿ ನಂತರವೇ ಎಫ್‌‍ಐಆರ್‌‍ ದಾಖಲು ಮಾಡಿಕೊಳ್ಳಲಿದ್ದಾರೆ. +ಹಳೆಯ ಸಿಆರ್‌‍ಪಿಸಿ ಕಾಯ್ದೆಯಡಿ ದೂರು ದಾಖಲಿಸಿಕೊಂಡರೇ ಆಗ ಕೂಡಲೇ ಎಫ್‌‍ಐಆರ್‌‍ ದಾಖಲು ಮಾಡಬೇಕಾಗುತ್ತದೆ. ಆದರೆ, ಪ್ರಸ್ತುತ ಜಾರಿಯಲ್ಲಿರುವ ನೂತನ ಬಿಎನ್‌‍ಎಸ್‌‍ಎಸ್‌‍ ಕಾಯ್ದೆಯಡಿ ದೂರು ದಾಖಲಾದರೆ, ಮೊದಲು ನೋಟಿಸ್‌‍ ಜಾರಿಗೊಳಿಸಿ ಅವರಿಂದ ಉತ್ತರ ಪಡೆದ ನಂತರ ಎಫ್‌‍ಐಆರ್‌‍ ದಾಖಲಿಸಬೇಕಾಗುತ್ತದೆ. ಹಾಗಾಗಿ ಇದೀಗ ಲೋಕಾಯುಕ್ತರು ಗೊಂದಲದಲ್ಲಿದ್ದು ಹಳೆಯ ಸಿಆರ್‌‍ಪಿಸಿ ಕಾಯ್ಡೆಯಡಿ ದೂರು ದಾಖಲಿಸಬೇಕೋ ಅಥವಾ ಹೊಸ ಬಿಎನ್‌‍ಎಸ್‌‍ಎಸ್‌‍ ಕಾಯ್ದೆಯಡಿ ದೂರು ದಾಖಲಿಸಬೇಕೋ ಎಂಬುದರಲ್ಲಿ ಗೊಂದಲ ಇದೆ. \ No newline at end of file diff --git a/eesanje/url_46_8_5.txt b/eesanje/url_46_8_5.txt new file mode 100644 index 0000000000000000000000000000000000000000..2053f88de7fb0a3e61e348a4977d70fb670f8287 --- /dev/null +++ b/eesanje/url_46_8_5.txt @@ -0,0 +1,8 @@ +ಕೋರ್ಟ್‌ ಆದೇಶದಂತೆ 301 ಎಕರೆ ಅರಣ್ಯ ಭೂಮಿ ವಶಕ್ಕೆ ಈಶ್ವರ ಖಂಡ್ರೆ ಸೂಚನೆ + +ಬೆಂಗಳೂರು, ಸೆ.27-ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾವಲು ಪ್ರದೇಶದ ಸರ್ವೆ ನಂ.1ರಿಂದ 22ರವರೆಗಿನ 301.07 ಎಕರೆ ಕಿರು ಅರಣ್ಯ ಭೂಮಿಯನ್ನು ನ್ಯಾಯಾಲಯದ ಆದೇಶದಂತೆ ಮರಳಿ ವಶಕ್ಕೆ ಪಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. +ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ರಾಮಕೃಷ್ಣೇಗೌಡ ಎಂಬುವವರು 2000ದಲ್ಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಡಬ್ಲ್ಯು.ಪಿ. 11835/2000)ಗೆ ಸಂಬಂಧಿಸಿದಂತೆ ಕೋರ್ಟ್‌ 2009ರಲ್ಲಿಯೇ ಎಲ್ಲ ಅನಧಿಕೃತ ಮಂಜೂರಾತಿಯನ್ನು ರದ್ದು ಮಾಡಿಸಿ, ಭೂಮಿಯನ್ನು ಯಥಾವತ್‌ ಅರಣ್ಯವಾಗಿ ಉಳಿಸಲು ತೀರ್ಪಿತ್ತಿದ್ದರೂ ಕ್ರಮ ವಹಿಸದ ಕಾನೂನು ವಿಭಾಗದ ಎಲ್ಲ ಎಪಿಸಿಸಿಎಫ್‌ಗಳು ಮತ್ತು ಹಾಸನ ಡಿಸಿಎಫ್‌ಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಈ ಸಂಬಂಧ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ನೀಡಿರುವ ಟಿಪ್ಪಣಿಯಲ್ಲಿ ಸಚಿವರು ಸದರಿ ಜಮೀನನ್ನು ವಶಕ್ಕೆ ಪಡೆಯಲು ಕ್ರಮ ವಹಿಸಲು ಮತ್ತು ನಿರ್ಲಕ್ಷ್ಯ ಹಾಗೂ ಕರ್ತವ್ಯಲೋಪ ಎಸಗಿರುವ ಎಲ್ಲ ಎಪಿಸಿಸಿಎಫ್‌ಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌‍ ನೀಡಿ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. +1940ರ ಜನವರಿ 15ರಂದು ಚನ್ನರಾಯಪಟ್ಟಣ ತಾಲೂಕು ಕಗ್ಗಲಿ ಕಾಲು ಪ್ರದೇಶವನ್ನು ಕಿರು ಅರಣ್ಯ ಎಂದು ಅಂದಿನ ಮಹಾರಾಜರ ಆಳ್ವಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಸದರಿ ಕಿರು ಅರಣ್ಯ ಜಮೀನನ್ನು ಅಕ್ರಮವಾಗಿ ದರಕಾಸ್ತು ಮಂಜೂರು ಮಾಡಲಾಗಿತ್ತು. ಈ ವಿರುದ್ಧ ರಾಮಕೃಷ್ಣೇಗೌಡ ಬಿನ್‌ ಏರೇಗೌಡ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. +ಅಂದಿನ ಮುಖ್ಯ ನ್ಯಾಯಮೂರ್ತಿ ಪಿ.ಡಿ. ದಿನಕರನ್‌ ಮತ್ತು ಮೋಹನ ಶಾಂತನಗೌಡರ್‌ ಅವರಿದ್ದ ವಿಭಾಗೀಯ ಪೀಠ 2009ರ ನ. 6ರಂದು ಎಲ್ಲಾ ದರಕಾಸ್ತು ಮಂಜೂರಾತಿಗಳನ್ನು ರದ್ದು ಮಾಡಿ ಕಗ್ಗಲಿ ಕಾವಲು ಸರ್ವೆ ನಂ.1ರಿಂದ 22ರವರೆಗಿನ 331.07 ಎಕರೆ ಪ್ರದೇಶವನ್ನು ಯಥಾವತ್‌ ಅರಣ್ಯವಾಗಿ ಉಳಿಸುವಂತೆ ಆದೇಶ ನೀಡಿತ್ತು. +ಬಳಿಕ ಹಾಸನ ಜಿಲ್ಲೆಯ ಕೆಲವು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಚನ್ನರಾಯಪಟ್ಟಣ ತಹಶೀಲ್ದಾರರಿಗೆ ಪತ್ರ ಬರೆದಿರುವುದನ್ನು ಬಿಟ್ಟರೆ ಈ ಭೂಮಿಯನ್ನು ಮರಳಿ ವಶಕ್ಕೆ ಪಡೆದು ಅರಣ್ಯ ಬೆಳೆಸುವ ಪ್ರಯತ್ನವನ್ನೇ ಮಾಡದಿರುವ ಬಗ್ಗೆ ಅರಣ್ಯ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ \ No newline at end of file diff --git a/eesanje/url_46_8_6.txt b/eesanje/url_46_8_6.txt new file mode 100644 index 0000000000000000000000000000000000000000..12a6357b4b91fe925b496c6f80c3484015fe5513 --- /dev/null +++ b/eesanje/url_46_8_6.txt @@ -0,0 +1,4 @@ +ರಾಜಾರೋಷವಾಗಿ ರಾಜೀನಾಮೆ ನೀಡಿ : ಜಗ್ಗೇಶ್‌ +ಬೆಂಗಳೂರು,ಸೆ.26- ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್‌ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‌ನಲ್ಲಿ ತುಂಬಿ ಹೋಗಿದೆ. ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ ಎಂದು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಒತ್ತಾಯಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಕೂಡ ಹೇಳಿದೆ. ಆದರೂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ಮುಡಾ ಹಗರಣ ಮೂಲಕ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಸಿದ್ದರಾಮಯ್ಯ ಘನವಾದ ಹೆಸರು ತಂದುಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. +ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿಗೆ ತಾವು ಹಿಡಿದಿದ್ದ ಸಂವಿಧಾನ ಪುಸ್ತಕದಲ್ಲಿಎಷ್ಟು ಪುಟ ಇದೆ ಎಂದು ಹೇಳಲು ಆಗಲಿಲ್ಲ. ಅಂತಹವರನ್ನು ಪ್ರಧಾನಿ ಮಾಡಲು ಹೊರಟಿದ್ದಾರೆ. ಅಂತಹ ನಾಯಕನ ಕೆಳಗೆ ಇರುವ ಸಿದ್ದರಾಮಯ್ಯ ಘನವಾದ ಕೆಲಸ ಮಾಡಿದ್ದಾರೆ. ರಾಜ್ಯದ ಮಾನ ಮರ್ಯಾದೆ ಈಗಾಗಲೆ ಹರಾಜಾಗಿದೆ. ರಾಜೀನಾಮೆ ಕೊಡಿ, ನಿರ್ದೋಷಿಯಾಗಿ ಹೊರಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_46_8_7.txt b/eesanje/url_46_8_7.txt new file mode 100644 index 0000000000000000000000000000000000000000..361e992aa14020cbbdf9566aa66f2a4a512dacae --- /dev/null +++ b/eesanje/url_46_8_7.txt @@ -0,0 +1,9 @@ +ಅವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯನಾ.?: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ +ವಿಜಯಪುರ ; ಸನ್ಮಾನ್ಯ ಸಿದ್ದರಾಮಣ್ಣ ನವರೇ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ ತನಿಖೆಗೆ ಹೋಗಬೇಕು, ರಾಜೀನಾಮೆ ಕೊಡಬೇಕೆಂದು ಆಗ್ರಹ ಮಾಡಿದ್ರಿ, ಅವರಿಗೆ ಒಂದು ನ್ಯಾಯ, ನಿಮಗೊಂದು ನ್ಯಾಯನಾ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು. +ಈ ಕುರಿತು ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು :ಮೂಡಾ ಹಗರಣದಲ್ಲಿ ಸ್ವತಃ ಈ ರಾಜ್ಯದ ಸಿಎಂ ಭಾಗಿ ಆಗಿದ್ದಾರೆ. ಸುಳ್ಳು ದಾಖಲಾತಿ ಸೃಷ್ಟಿ ಮಾಡಿ ಇವತ್ತು ಏನು ಮಾಡಿದ್ದಾರೆ ಗೊತ್ತಿದೆ. ಸಿದ್ದರಾಮಣ್ಣನವರು ಹಿರಿಯರಿದ್ದಾರೆ. ಅನುಭವಿಗಳಿದ್ದಾರೆವಕೀಲರಿದ್ದಾರೆ. ಯಡ್ಡಿಯೂರಪ್ಪ ಸಾಹೇಬ್ರ ಮೇಲೆ ಆರೋಪ ಬಂದಾಗ ನೀವು ಆರೋಪ ಮುಕ್ತವಾಗಿ ಬರುವವರೆಗೂ ರಾಜಿನಾಮೆ ಕೊಡಿ ಅಂತಾ ಹೇಳಿದ್ರು.. +ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಿ: ಆದರೆ ಇವತ್ತು ಅವರಿಗೆ ಒಂದು ನ್ಯಾಯ. ಇವರಿಗೊಂದು ನ್ಯಾಯ ಅಂತಾ ಹೇಳುತ್ತಿರುವುದು ಸರಿಯಲ್ಲ ಸಾರ್ವಜನಿಕ ಬದುಕಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಾ ಅವರು ಬಂದಿದ್ದಾರೆ… ತನಿಖೆ ಪಾರದರ್ಶಕವಾಗಿ ನಡೆಯಬೇಕು ಅಂದ್ರೆ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಅವರು ಆಗ್ರಹಿಸಿದರು. +ನಾವು ಪಾದಯಾತ್ರೆ ಮಾಡಿದ್ದು ಯಾವುದೋ ಒಂದು ವ್ಯಕ್ತಿಯ ಮೇಲಿನ ದ್ವೇಷದಿಂದ ಅಲ್ಲ.. ರಾಜ್ಯದ ಸಂಪತ್ತು ಲೂಟಿ ಆದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಪಾದಯಾತ್ರೆ ಮಾಡಲಾಗಿತ್ತು… ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಈ ವಿಚಾರವಾಗಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. +ರಾಜ್ಯದ ಜನತೆ ಪ್ರಶ್ನೆಗೆ ಉತ್ತರ ಕೊಡಿ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಕುಮಾರಸ್ವಾಮಿ ಮೊದಲು ರಾಜಿನಾಮೆ ಕೊಡಲಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು ; ಇದೆಲ್ಲ ಹಳೆ ಕಥೆ ಬಿಟ್ಟು ಇದೇನು ಹೊಸದೇನಲ್ಲ… ಮೈನಿಂಗ್ ದು ಹಳೆ ಕಥೆ.. ಇದನ್ನ ತಿರುಚೋದು ಬೇಡ… ರಾಜ್ಯದ ಜನತೆ ಕೇಳುತ್ತಿರುವ ಪ್ರಶ್ನೆಗೆ ಅವರು ಉತ್ತರಿಸಲಿ ಅಷ್ಟೇ. ಹೀಗಾಗಿ ರಾಜ್ಯದ ಜನತೆ ಕೇಳುವ ಪ್ರಶ್ನೆಗೆ ಮೊದಲು ಅವರು ಉತ್ತರಿಸಲಿ ಎಂದ ಕಿಡಿಕಾರಿದರು. +ನಮ್ಮ ಮೇಲೆ ಸುಳ್ಳು ದಾಖಲೆ ಹುಡುಕುವುದರಲ್ಲಿ ಕಾಂಗ್ರೆಸ್ ಸಮಯ ಕಳೆಯುತ್ತಿದ್ದಾರೆ.ಜನ 136 ಶಾಸಕರನ್ನ ಗೆಲ್ಲಿಸಿ ಕಾಂಗ್ರೆಸ್ ಗೆ ಅಧಿಕಾರ ಕೊಟ್ಟಿದ್ದಾರೆ. ಪಾದಯಾತ್ರೆ ಯಶಸ್ಸು ಇವರಿಗೆ ಸಹಿಸಲಾಗುತ್ತಿಲ್ಲ.ಆಡಳಿತ ಪಕ್ಷ ವಿರೋಧ ಪಕ್ಷಕ್ಕೆ ಪ್ರಶ್ನೆ ಕೇಳುವಂತ ಸನ್ನಿವೇಶ ಈ ರಾಜ್ಯ ದ ಇತಿಹಾಸದಲ್ಲಿ ಮೊದಲು ಎಂದು ಕಿಡಿಕಾರಿದರು. +ದೇವೇಗೌಡರ ಕೊಡುಗೆ ಅಪಾರ; ದೇವೇಗೌಡರು ಪ್ರಧಾನ ಮಂತ್ರಿಗಳಾದ ಸಂದರ್ಭದಲ್ಲಿ ಆಲಮಟ್ಟಿ ಜಲಾಶಯಕ್ಕೆ ಸಾವಿರ ಕೋಟಿ ಅನುದಾನ ಕೊಟ್ಟಿರುವುದು ಇವತ್ತಿಗೂ ಮರೆಯುವುದಕ್ಕೆ ಆಗಲ್ಲ, ಈ ಭಾಗದ ಜನತೆಯ ಹೃದಯದಲ್ಲಿ ದಟ್ಟವಾಗಿ ನಿಂತಿದೆ ಎಂದರು.ಇವೆಲ್ಲವನ್ನು ನೋಡಿದಾಗ ಇಲ್ಲಿರುವ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜನತಾದಳ ಪಕ್ಷ ಅತ್ಯಂತ ಪ್ರಭಾವ ಶಾಲಿಯಾಗಿ ಮುಂಬರುವ ಚುನಾವಣೆಯಲ್ಲಿ ನಾಲ್ಕಕ್ಕೆ ನಾಲ್ಕು ಕ್ಷೇತ್ರಗಳನ್ನು ಗೆಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಕಾನೂನುನಿಗಿಂತ ದೊಡ್ಡವರು ಇಲ್ಲ: ಜಮೀರ್ ಅಹಮದ್ ಬಳ್ಳಾರಿ ಉಸ್ತುವಾರಿ ಎನ್ನುವ ಕಾರಣಕ್ಕೆ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರಕ್ಕೆ ಮಾತನಾಡಿದ ಅವರು ; ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. ಎಷ್ಟೇ ಬಲಿಷ್ಠ, ಪ್ರಭಾವಿಗಳಿದ್ದರು ಈ ನೆಲದ ಕಾನೂನಿಗೆ ತಲೆಬಾಗಬೇಕು. ಅಂತಿಮವಾಗಿ ಕಾನೂನು ಇದೆ.ಕೋರ್ಟ್ ಇದೆ ಸೂಕ್ತ ಕ್ರಮ ಕೈಗೊಳ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. \ No newline at end of file diff --git a/eesanje/url_46_8_8.txt b/eesanje/url_46_8_8.txt new file mode 100644 index 0000000000000000000000000000000000000000..6f237bd9e5c71f5199ccd2702a91948fc1d1a9ea --- /dev/null +++ b/eesanje/url_46_8_8.txt @@ -0,0 +1,9 @@ +ರಾಜೀನಾಮೆ ನೀಡಿ ನೈತಿಕತೆ ಪ್ರದರ್ಶಿಸಿ : ಸಿಎಂಗೆ ಅಶೋಕ್‌ ಸವಾಲು +ಬೆಂಗಳೂರು,ಸೆ.26- ಕಾಂಗ್ರೆಸ್‌‍ ಹೈಕಮಾಂಡ್‌ಗೆ ದಮು , ತಾಕತ್ತು ಇದ್ದರೆ ಮುಡಾ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯನ್ನು ತಕ್ಷಣವೇ ಪಡೆದು ನೈತಿಕತೆ ಪ್ರದರ್ಶನ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಬಹಿರಂಗ ಸವಾಲು ಹಾಕಿದ್ದಾರೆ. +ಮುಡಾ ಪ್ರಕರಣ ಸಂಬಂಧ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆಯನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಉಳಿಸಿಕೊಂಡಿದ್ದರೆ ಮೊದಲು ಸಿದ್ದರಾಮಯ್ಯನವರ ರಾಜೀನಾಮೆ ಪಡೆಯಲಿ. ಇಲ್ಲದಿದ್ದರೆ ಕಾಂಗ್ರೆಸ್‌‍ ಪಕ್ಷ ಭ್ರಷ್ಟಾಚಾರದ ಜೊತೆ ರಾಜೀ ಮಾಡಿಕೊಂಡಿದೆ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಎಸೆದರು. +ಹಿಂದೆ ನಮ ಪಕ್ಷದ ಹಿರಿಯರಾದ ಯಡಿಯೂರಪ್ಪನವರ ವಿರುದ್ಧ ಎಫ್‌ಐಆರ್‌ ದಾಖಲಾದಾಗ ಇದೇ ಸಿದ್ದರಾಮಯ್ಯ ಏನೇನು ಮಾತನಾಡಿದರು ಎಂಬುದನ್ನು ಒಂದು ಬಾರಿ ಆತಾವಲೋಕನ ಮಾಡಿಕೊಳ್ಳಲಿ. ಅಂದು ರಾಜೀನಾಮೆಗೆ ಒತ್ತಾಯಿಸಿದ್ದ ಇವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. +ಸಿದ್ದರಾಮಯ್ಯ ಅವರಿಗೆ ಈಗ ಬೇರೆ ಆಯ್ಕೆಗಳೇ ಇಲ್ಲ. ಹೈಕೋರ್ಟ್‌ ಆದೇಶ ಬಂದಿದೆ. ಯಾವ ಸೆಕ್ಷನ್‌ನಡಿ ತನಿಖೆಯಾಗಬೇಕು ಎಂಬುದನ್ನೂ ಹೇಳಿದೆ. ಸೆಕ್ಷನ್‌ 420ರಡಿ ದೂರು ದಾಖಲಿಸಲಾಗಿದೆ. ಎಫ್‌ಐಆರ್‌ ಅಗಿದ್ಯಾ? ರಾಜೀನಾಮೆ ಕೊಡೋಕೆ ಎಂದು ಪ್ರಶ್ನಿಸುತ್ತಿದ್ದರು. ಇವತ್ತು ಎಫ್‌ಐಆರ್‌ ಆಗಲಿದೆ. ಇದಕ್ಕಿಂತ ಇನ್ನೇನು ಬೇಕು? ಎಂದು ಪ್ರಶ್ನಿಸಿದರು. ಹಿಂದೆ ಯಡಿಯೂರಪ್ಪ ಅವರು ಲೋಕಾಯುಕ್ತ ತನಿಖೆ ಆಗುವಾಗ ಯಾವ ಹೇಳಿಕೆ ಕೊಟ್ಟಿದ್ದೀರಿ? ಯಡಿಯೂರಪ್ಪ ಕೇಸ್‌‍ ಬೇರೆ, ನಮ ಕೇಸ್‌‍ ಬೇರೆ ಅಂತೀರಿ. ಈಶ್ವರಪ್ಪ ಕೇಸ್‌‍ ಆದಾಗ ಏನ್‌ ಹೇಳಿದ್ದೀರಿ? ತನಿಖೆ ಆಗಿತ್ತಾ? ಆಗ.. ಈಶ್ವರಪ್ಪ ರಾಜೀನಾಮೆಗೆ ಕುಸ್ತಿ ಮಾಡಿದ್ದೀರಿ. ಈಗ ಯಾಕೆ ಮಾಡುತ್ತಿಲ್ಲ ಎಂದು ಪ್ರಶ್ನೆ ಹಾಕಿದರು. +ಮೋದಿ ಅವರು ಹೇಳಿದ್ದರೇ ನಿಮಗೆ ಮುಡಾದಲ್ಲಿ ಸೈಟ್‌ ತಗೊಳ್ಳೋಕೆ? ವಾಲೀಕಿ ಹಗರಣದಲ್ಲಿ ಎಸ್‌‍ಟಿಗಳ ಹಣ ದುರುಪಯೋಗ ಆಗಿರುವುದನ್ನು ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ. ಅಭಿವೃದ್ಧಿಯಲ್ಲಿ ನಿಮಗೆ ಕಾಸು ಬರುತ್ತಿಲ್ಲ. ರಾಜೀನಾಮೆ ಕೊಡಬೇಕು ಎಂದು ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರೇ ಹೇಳಿದ್ದಾರೆ. ಕೋಳಿವಾಡ ಅವರು ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಟವೆಲ್‌ ಹಾಕಿಕೊಂಡು 7 ಜನ ಕಾಯುತ್ತಿದ್ದಾರೆ. ರಾಹುಲ್‌ ಗಾಂಧಿ ಅವರೇ ಸಂವಿಧಾನ ಪುಸ್ತಕ ಕೈನಲ್ಲಿ ಹಿಡಿಕೊಂಡು, ನಮಗೆಲ್ಲಾ ಪಾಠ ಮಾಡಿದ್ರಲ್ಲಾ? ಈಗ ರಾಜೀನಾಮೆ ಪಡೆದುಕೊಳ್ಳಿ ಎಂದು ಅಶೋಕ್‌ ಸವಾಲು ಎಸೆದರು. +ಮಾಜಿ ಸಚಿವ ಸುನೀಲ್‌ಕುಮಾರ್‌ ಮಾತನಾಡಿ, ಇಂದು ಆರಂಭವಾಗುವ ಪ್ರತಿಭಟನೆ ಜನಾಂದೋಲನವಾಗಲಿದೆ. ಇಂಥ ಭಂಡ ಸಿಎಂ ಅನ್ನು ರಾಜ್ಯ ನೋಡಿಲ್ಲ,ಸಿದ್ದರಾಮಯ್ಯ ನವರಿಗೆ ಇಂಥ ಭಂಡತನ ಬರಬಾರದಿತ್ತು ಎಂದು ಟೀಕಿಸಿದರು. ಕಳಂಕ ಹೊತ್ತ ಸಿಎಂ, ನ್ಯಾಯಾಲಯದ ಛೀಮಾರಿ ಹಾಕಿಸಿಕೊಂಡ ಸಿಎಂ ಆಡಳಿತ ನಡೆಸಲು ನೈತಿಕತೆ ಕಳೆದುಕೊಂಡಿದ್ದಾರೆ. ಮೂರು ತಿಂಗಳು ಹೊರಗಿರಿ, ನಿರ್ದೋಷಿಯಾದರೆ ಮತ್ತೆ ಸಿಎಂ ಆಗಿ. ಆಗ ಬೇಕಿದ್ದರೆ ದೆಹಲಿ ಥರ ಎರಡು ಕುರ್ಚಿ ಇಟ್ಟುಕೊಳ್ಳಿ. ಗೌರವ ಇದ್ದರೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು. +ಮಾತೆತ್ತಿದರೆ ನೀವಿಲ್ವಾ ನಾವಲ್ವಾ ಎನ್ನುತ್ತಾರೆ. ನಿಮದು ಹೇಳಿ ಈಗ, ನಿಮ ಕಳಂಕ ಬಗ್ಗೆ ಮಾತಾಡಿ. ಯಡಿಯೂರಪ್ಪ ಇದ್ದಾಗ ಏನ್‌ ಮಾತಾಡಿದ್ರಿ, ನೆನಪಿಸಿಕೊಳ್ಳಿ. ನಿಮಗೆ ಎರಡು ನಾಲಿಗೆ ಇದೆ ಎಂದು ಹೇಳಲ್ಲ. ಆದರೆ ಎರಡು ನಾಲಿಗೆ ಇರೋರ ಹಾಗೆ ನಡೆದುಕೊಳ್ಳಬೇಡಿ ಎಂದರು. ಮಾಜಿ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಹೈಕೋರ್ಟ್‌, ಜನಪ್ರತಿನಿಧಿಗಳ ಕೋರ್ಟ್‌ಗಳಲ್ಲಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಆದೇಶವಾಗಿದೆ. ತನಿಖೆ ಎದುರಿಸುತ್ತೇನೆ, ರಾಜೀನಾಮೆ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಬಂಡತನ ತೋರುತ್ತಿದ್ದಾರೆ. ಮುಖ್ಯಮಂತ್ರಿಯಾದವರು ಈ ಮಟ್ಟಕ್ಕೆ ಇಳಿಯಬಾರದು ಎಂದು ವ್ಯಂಗ್ಯವಾಡಿದರು. +ವಿಪಕ್ಷ ನಾಯಕರಾಗಿದ್ದಾಗ ಅವಧಿಯಲ್ಲಿ ಸಿದ್ದರಾಮಯ್ಯನವರು ನೈತಿಕತೆ ಬಗ್ಗೆ ಬಹಳ ಮಾತನಾಡಿದ್ದರು ಎಂದು ಟೀಕಿಸಿದ ಅವರು, ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು. ಮುಡಾ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ಸಿದ್ದರಾಮಯ್ಯ ವಿರುದ್ಧ ಇಂದು ಎಫ್‌ಐಆರ್‌ ದಾಖಲಾಗುತ್ತದೆ. ಇಂಥ ಸಂದರ್ಭ ಬಂದಾಗ ಸಿದ್ದರಾಮಯ್ಯ ಮಾದರಿಯಾಗಿ ನಡೆದುಕೊಳ್ಳಬೇಕು. ಕ್ಲೀನ್‌ಚಿಟ್‌ ತಗೊಂಡು ಮತ್ತೆ ಬಂದು ಸಿಎಂ ಆಗಲಿ. ಯಾರೂ ತಡೆಯುವುದಿಲ್ಲ. ರಾಜೀನಾಮೆ ಕೊಟ್ಟು ಕೆಳಗಿಳಿದು ನೈತಿಕವಾಗಿ ಸರಿ ಇದ್ದೀನಿ ಎಂಬುದನ್ನು ಸಿದ್ದರಾಮಯ್ಯ ತೋರಿಸಲಿ ಎಂದು ಸವಾಲು ಹಾಕಿದರು. \ No newline at end of file diff --git a/eesanje/url_46_8_9.txt b/eesanje/url_46_8_9.txt new file mode 100644 index 0000000000000000000000000000000000000000..f0e74b4bf4764a0ab12e1000cb447b3d3a4f28b8 --- /dev/null +++ b/eesanje/url_46_8_9.txt @@ -0,0 +1,4 @@ +ಜಮೀರ್‌ ಅಹಮದ್‌ ವಿರುದ್ಧ ನ್ಯಾಯಾಂಗ ನಿಂದನೆ ದೂರು +ಬೆಂಗಳೂರು,ಸೆ.26- ಮುಡಾ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ಹೇಳಿರುವ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ದೂರುದಾರ ಟಿ.ಜೆ.ಅಬ್ರಹಾಂ ಹೇಳಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಮೀರ್‌ ಅಹಮದ್‌, ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ನೀಡಿರುವ ತೀರ್ಪು ರಾಜಕೀಯ ಪ್ರೇರಿತ ಎಂದು ವಿವಾದಾತಕ ಹೇಳಿಕೆ ನೀಡಿದ್ದರು. +ಈಗ ಜಮೀರ್‌ ಹೇಳಿಕೆಯನ್ನೇ ಅಸ್ತ್ರ ಮಾಡಿಕೊಂಡಿರುವ ಅಬ್ರಹಾಂ ಅವರ ವಿರುದ್ಧ ಶುಕ್ರವಾರ ಅಥವಾ ಶನಿವಾರ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ತಿಳಿಸಿದರು. ಜಮೀರ್‌ ಅಹಮದ್‌ ಸಾಮಾನ್ಯ ವ್ಯಕ್ತಿಯಲ್ಲ. ಅವರೊಬ್ಬ ಜನಪ್ರತಿನಿಧಿ. ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡಬೇಕು. ಇದಕ್ಕೆ ರಾಜಕೀಯ ಬಣ್ಣ ಕಟ್ಟುವುದು ಅತ್ಯಂತ ದುರದೃಷ್ಟಕರ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಹೂಡುತ್ತೇವೆ ಎಂದು ಎಚ್ಚರಿಸಿದರು. +ಜಮೀರ್‌ ಅಹಮದ್‌ಗೆ ನಾಲಿಗೆ ಮೇಲೆ ಹಿಡಿತವಿಲ್ಲ. ಏನು ಮಾತನಾಡುತ್ತೇನೆಂಬ ಪರಿಜ್ಞಾನವೂ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಏನ ಮಾತನಾಡುತ್ತಿದ್ದೇನೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲ. ನ್ಯಾಯಾಲಯದ ಮೂಲಕವೇ ಅವರಿಗೆ ಪಾಠ ಕಲಿಸಬೇಕೆಂದು ಅಬ್ರಹಾಂ ಗುಡುಗಿದ್ದಾರೆ. ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿದ್ದ ಜಮೀರ್‌ ಅಹಮದ್‌ ಇದು ರಾಜಕೀಯ ಪ್ರೇರಿತ ತೀರ್ಪಾಗಿದೆ. ನಮಗೆ ಹೈಕೋರ್ಟ್‌ ನೀಡಿರುವ ಆದೇಶ ಸಮಾಧಾನ ತಂದಿಲ್ಲ ಎಂದು ಪರೋಕ್ಷವಾಗಿ ಅಸಮಾಧಾ ಹೊರಹಾಕಿದ್ದರು. \ No newline at end of file diff --git a/eesanje/url_46_90_1.txt b/eesanje/url_46_90_1.txt new file mode 100644 index 0000000000000000000000000000000000000000..56371617e133a03535f786e2707ef99d10527b04 --- /dev/null +++ b/eesanje/url_46_90_1.txt @@ -0,0 +1,7 @@ +ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲೆತ್ನಿಸಿದ ಪ್ರತಿಪಕ್ಷದ ನಾಯಕರನ್ನು ಎಳೆದೊಯ್ದ ಪೊಲೀಸರು +ಬೆಂಗಳೂರು,ಜು.3– ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗ ಜರುಗಿತು. +ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಸೇರಿದಂತೆ ಒಟ್ಟು 5 ತಂಡದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರಿ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. +5 ತಂಡದ ಜೊತೆಗೆ ಶಾಸಕರು, ವಿಧಾನಪರಿಷತ್‌ ಸದಸ್ಯರು, ಪಕ್ಷದ ಅಧಿಕಾರಿಗಳು ಹಾಗೂ ಪದಾಧಿಕಾರಿಗಳು ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆ ಮಾರ್ಗಮಧ್ಯದಲ್ಲಿಯೇ ಪೊಲೀಸರು ಪ್ರತಿಭಟನಾನಿರತರನ್ನು ತಡೆದು ವಶಕ್ಕೆ ಪಡೆದರು.ಶಿವಾನಂದ ವೃತ್ತದ ಬಳಿ ಬರುತ್ತಿದ್ದಂತೆ ತಡೆದ ಪೊಲೀಸರು ವಿಜಯೇಂದ್ರ, ಅಶೋಕ್‌ ಸೇರಿದಂತೆ ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸ್‌‍ ವಾಹನದಲ್ಲಿ ಕರೆದೊಯ್ದರು. +ಈ ವೇಳೆ ಪ್ರತಿಭಟನಾ ನಿರತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಹಗರಣದಲ್ಲಿ ಶಾಮೀಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣವೇ ತಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು. +ಹಣಕಾಸು ಖಾತೆಯನ್ನು ಹೊಂದಿರುವ ಸಿದ್ದರಾಮಯ್ಯನವರು ಮೂಗಿನಡಿಯೇ ಸುಮಾರು 187 ಕೋಟಿ ಹಗರಣ ನಡೆದಿದೆ. ಅವರ ಅನುಮತಿ ಇಲ್ಲದೇ ನಿಗಮದ ಹಣವನ್ನು ಖಾಸಗಿ ಬ್ಯಾಂಕಿನಲ್ಲಿ ಖಾತೆ ತೆರೆಯಲು ಅನುಮತಿ ನೀಡಿದವರು ಯಾರು?, ಹಣಕಾಸು ಇಲಾಖೆಯ ಕಾರ್ಯದರ್ಶಿ ಒಪ್ಪಿಗೆಯಿಲ್ಲದೆ, ಇದು ನಡೆಯಲು ಸಾಧ್ಯವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು. +ಇದರಲ್ಲಿ ಭಾರಿ ದೊಡ್ಡ ಮೊತ್ತದ ಹಗರಣ ನಡೆದಿರುವುದರಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ನೈತಿಕತೆ ಕಳೆದುಕೊಂಡಿದ್ದಾರೆ. ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. \ No newline at end of file diff --git a/eesanje/url_46_90_10.txt b/eesanje/url_46_90_10.txt new file mode 100644 index 0000000000000000000000000000000000000000..520bd1fff7726e6d0872e3ce24711bce360e7a5e --- /dev/null +++ b/eesanje/url_46_90_10.txt @@ -0,0 +1,7 @@ +ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ +ಬೆಂಗಳೂರು,ಜು.1-ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವ ಚರ್ಚೆ ಮುನ್ನಲೆಗೆ ಬಂದಿದ್ದು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. +ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದರಿಂದ ಸದ್ಯದಲ್ಲ ಜೆಡಿಎಸ್‌‍ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಮುಖ ರಾಗಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ ಚುನಾಯಿತರಾಗಿ ಕೇಂದ್ರ ಸಚಿವರಾಗುತ್ತಿದ್ದಂತೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ ವಿಚಾರ ಚರ್ಚೆಗೆ ಬಂದಿದೆ. +ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್‌, ಶಾಸಕ ಸಿ.ಬಿ.ಸುರೇಶ್‌ ಬಾಬು ಅವರ ಹೆಸರು ಚಲಾವಣೆಗೆ ಬಂದಿದೆ. ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸು ವುದಿಲ್ಲ. ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ನಿಖಿಲ್‌ಕುಮಾರಸ್ವಾಮಿ ಈಗಾಗಲೇ ಸ್ಪಷ್ಟಪಡಿಸಿ ದ್ದಾರೆ. ಹೀಗಾಗಿ ನಿಖಿಲ್‌ಕುಮಾರ ಸ್ವಾಮಿ ರಾಜ್ಯಾಧ್ಯಕ್ಷರಾಗಿ ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. +ಜಿಟಿಡಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ: ಕುಮಾರಸ್ವಾಮಿ ಅವರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ಸ್ಥಾನ ತೆರವಾಗಿದೆ. +ಆ ಸ್ಥಾನಕ್ಕೆ ಜೆಡಿಎಸ್‌‍ ಕೋರ್‌ ಕಮಿಟಿ ಅಧ್ಯಕ್ಷರಾಗಿರುವ ಹಿರಿಯ ಶಾಸಕ ಜಿ.ಟಿ. ದೇವೇಗೌಡರಿಗೆ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಈ ಬಗ್ಗೆ ಆಂತರಿಕ ವಲಯದಲ್ಲಿ ಚರ್ಚೆ ನಡೆದಿದೆ. +ಮಳೆಗಾಲದ ಅಧಿವೇಶನ ಆರಂಭ ವಾಗುವ ವೇಳೆಗೆ ಹೊಸ ಜೆಡಿಎಸ್‌‍ನ ಶಾಸಕಾಂಗ ಪಕ್ಷದ ನಾಯಕ ನೇಮಕವಾಗಲಿದ್ದು ಜಿ.ಟಿ.ದೇವೇಗೌಡರು ಆ ಸ್ಥಾನ ಪಡೆಯಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_90_11.txt b/eesanje/url_46_90_11.txt new file mode 100644 index 0000000000000000000000000000000000000000..00f4b5a80f2146703e9e3e907db605eac3a6cb9d --- /dev/null +++ b/eesanje/url_46_90_11.txt @@ -0,0 +1,10 @@ +ವಾಲ್ಮೀಕಿ ನಿಗಮ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ : ಪರಮೇಶ್ವರ್‌ +ಬೆಂಗಳೂರು,ಜು.1-ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಗರಣದ ಬಗ್ಗೆ ಎಸ್‌‍ಐಟಿ ಮತ್ತು ಸಿಬಿಐನಿಂದ ಪ್ರತ್ಯೇಕವಾದ ತನಿಖೆ ನಡೆಯುತ್ತಿದೆ. +ಸಿಬಿಐನವರು ಬ್ಯಾಂಕಿನಲ್ಲಾಗಿರುವ ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಸ್‌‍ಐಟಿ ಇಲಾಖೆ ಲೋಪಗಳ ಬಗ್ಗೆ ವಿಚಾರಣೆ ನಡೆಸುತ್ತದೆ. ಈ ಎರಡೂ ತನಿಖೆಯ ವರದಿಗಳು ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಅದು ಅಧಿಕಾರಿಗಳೇ ಇರಲಿ, ರಾಜಕಾರಣಿಗಳೇ ಇರಲಿ, ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. +ಬಿಜೆಪಿಯವರು ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವರದಿ ಬರುವವರೆಗೂ ಯಾರ ಪಾತ್ರದ ಬಗ್ಗೆಯೂ ಸ್ಪಷ್ಟತೆ ಇಲ್ಲ. ತನಿಖೆ ಪೂರ್ಣಗೊಳ್ಳುವವರೆಗೂ ತಾಳೆಯಿಂದ ಇರಿ ಎಂದು ಹೇಳಿದರು. +ಡಿಸಿಎಂ ಹುದ್ದೆಗಾಗಿ ನಮಲ್ಲಿ ಯಾವುದೇ ಕಿತ್ತಾಟಗಳಿಲ್ಲ. ಜನಾದೇಶ ನೀಡಿದಂತೆ ನಮ ಸರ್ಕಾರ ಅಭಿವೃದ್ಧಿ ಕೆಲಸದತ್ತ ಗಮನ ಹರಿಸಿದೆ. ಬಿಜೆಪಿಯವರು ಅನಗತ್ಯವಾಗಿ ನಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀರಾವರಿ, ರಸ್ತೆ ಅಭಿವೃದ್ಧಿ, ಕಂದಾಯ ಇಲಾಖೆ ಸೇರಿದಂತೆ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಿಂತಿಲ್ಲ. +ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೂ ಕೂಡ ಮುಂದುವರೆಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ನಾಯಕರುಗಳ ನಡುವೆ ಹೊಂದಾಣಿಕೆ ಇಲ್ಲ. ಪರಸ್ಪರ ಅವರೇ ಕಚ್ಚಾಡುತ್ತಿದ್ದಾರೆ. ನಮ ಬಗ್ಗೆ ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದರು. ಇಂದಿನಿಂದ ನೂತನ ಅಪರಾಧ ಮತ್ತು ನ್ಯಾಯ ಕಾನೂನುಗಳು ದೇಶಾದ್ಯಂತ ಜಾರಿಯಾಗುತ್ತಿದೆ. ರಾಜ್ಯಸರ್ಕಾರ ಅವುಗಳ ಅನುಷ್ಠಾನಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದೆ. +ಕಾನ್‌್ಸಟೇಬಲ್‌ನಿಂದ ಅಧಿಕಾರಿಗಳವರೆಗೂ ಎಲ್ಲರಿಗೂ ತರಬೇತಿ ನೀಡಲಾಗುವುದು. ವಿಶೇಷವಾದ ಆ್ಯಪ್‌ ಸಿದ್ಧಪಡಿಸಲಾಗಿದ್ದು, ಕಾನೂನು ಕಾಯ್ದೆಗಳ ಪರಿಚಯವಾಗುವವರೆಗೂ ಸುಲಭವಾಗಿ ಅರ್ಥೈಸುವಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು. +ಹೊಸ ಕಾನೂನುಗಳ ಯಶಸ್ಸು ಅಥವಾ ವೈಫಲ್ಯಗಳ ಬಗ್ಗೆ ತಕ್ಷಣವೇ ಏನೂ ಹೇಳಲು ಸಾಧ್ಯವಿಲ್ಲ. ಇಂದಿನಿಂದ ಹೊಸ ಕಾನೂನುಗಳ ಪ್ರಕಾರ, ಪ್ರಕರಣ ದಾಖಲಿಸಲಾಗುವುದು. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವಾಗ ಕಾನೂನುಗಳ ಸಫಲತೆ ಅಥವಾ ಲೋಪಗಳ ಬಗ್ಗೆ ಚರ್ಚೆಯಾಗಲಿದೆ. ಅಗತ್ಯವಿದ್ದರೆ ತಿದ್ದುಪಡಿ ತರಲೂ ಕೂಡ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು. +ಪೊಲೀಸ್‌‍ ಸಿಬ್ಬಂದಿಗಳ ಅಂತರ್‌ಜಿಲ್ಲಾ ವರ್ಗಾವಣೆಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದಿಂದ ಬಂದು ಬೆಂಗಳೂರಿನಲ್ಲಿ ಪೊಲೀಸ್‌‍ ಸೇವೆಯಲ್ಲಿ ಸೇರಿದವರಿಗೆ ಮರಳಿ ತವರಿನತ್ತ ಹೋಗಲು ಅವಕಾಶ ಇಲ್ಲದಂತಾಗಿದೆ. ಆರೋಗ್ಯ ಸಮಸ್ಯೆ, ಪೋಷಕರ ಅವಲಂಬನೆ, ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ಪರಿಷ್ಕರಿಸುವುದಾಗಿ ಹೇಳಿದರು. +ಸರೋಜಿನಿ ಮಹಿಷಿ ವರದಿ ಅನುಷ್ಠಾನ ಕುರಿತು ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶ ಸರಿಯಾಗಿದ್ದರೆ ಸರ್ಕಾರ ಗಮನ ಹರಿಸಲಿದೆ. ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಈಗಾಗಲೇ ನಿರ್ದೇಶನ ನೀಡಿರುವುದಾಗಿ ಹೇಳಿದರು. \ No newline at end of file diff --git a/eesanje/url_46_90_12.txt b/eesanje/url_46_90_12.txt new file mode 100644 index 0000000000000000000000000000000000000000..3ea323e4e166a58bf83093d95525c54d1f985bcc --- /dev/null +++ b/eesanje/url_46_90_12.txt @@ -0,0 +1,9 @@ +ಶೇ.80 ರಷ್ಟು ಖಾಸಗಿ, ಸರ್ಕಾರಿ ಉದ್ಯೋಗ ಕನ್ನಡಿಗರಿಗೆ ಸಿಗಬೇಕು : ಕರವೇ ಪ್ರತಿಭಟನೆ +ಬೆಂಗಳೂರು,ಜು.1-ಕೇಂದ್ರ ಮತ್ತು ರಾಜ್ಯಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಉದ್ಯೋಗಗಳನ್ನು ಮೀಸಲಿಡಬೇಕೆಂದು ಆಗ್ರಹಿಸಿ ಅದಕ್ಕೆ ಅಗತ್ಯ ಕಾಯಿದೆಯನ್ನು ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಯ ರಣಕಹಳೆ ಮೊಳಗಿಸಿದರು. +ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರೆ, ರಾಜ್ಯಾದ್ಯಂತ ಕಾರ್ಯಕರ್ತರು ಎಲ್ಲಾ ಜಿಲ್ಲಾ ಕೇಂದ್ರಗಳ ಬಳಿ ಪ್ರತಿಭಟನೆ ನಡೆಸಿ ಎಲ್ಲಾ ಹಂತದಲ್ಲೂ ಕನ್ನಡಿಗರಿಗೆ ಉದ್ಯೋಗ ನೀಡುವಂತಹ ಸೂಕ್ತ ಕಾಯಿದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. +ಸರೋಜಿನಿ ಮಹಿಷಿ ವರದಿ ಜಾರಿಗೆ ತರುವುದು ಸೇರಿದಂತೆ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.100 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಬೇಕು. ಇತರೆ ವರ್ಗಗಳಲ್ಲಿ ಶೇ.80 ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೇ ನೀಡಬೇಕೆಂಬ ಒತ್ತಾಯವನ್ನು ಮಂಡಿಸಲಾಯಿತು. +ಕರವೇ ಕರೆಕೊಟ್ಟ ಈ ಬೆಂಬಲಕ್ಕೆ ಕನ್ನಡ ಸಾಹಿತ್ಯ ಪರಿಷತ್‌ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು, ಕಲಾವಿದರು, ಚಲನಚಿತ್ರ ನಟ-ನಟಿಯರು ಬೆಂಬಲ ಘೋಷಿಸಿ, ಪ್ರತಿಭಟನೆಯಲ್ಲಿ ಪಾಲ್ಗೊಂಡು ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು. +ಚಳುವಳಿಯ ನೇತೃತ್ವ ವಹಿಸಿದ್ದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಈ ಸಂದರ್ಭದಲ್ಲಿ ಮಾತನಾಡಿ, ರಾಜ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾಡಿನ ನೆಲ, ಜಲ, ಸಂಸ್ಕೃತಿ ಉಳಿವಿಗಾಗಿ ನಿರಂತರ ಹೋರಾಟ ಮಾಡುತ್ತಾ ಬಂದಿದೆ. +ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಇತ್ತೀಚೆಗೆ ಹೋರಾಟ ಮಾಡಿ ಅದರಲ್ಲಿ ಯಶಸ್ಸನ್ನು ಕಂಡಿದೆ. ಈಗ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟಕ್ಕಿಳಿದಿದೆ.ನಮ ರಾಜ್ಯದಲ್ಲಿ ನಮವರಿಗೇ ಉದ್ಯೋಗ ಕೊಡಿ ಎಂದು ಕೇಳಬೇಕಾದ ದುಸ್ಥಿತಿ ಬಂದಿರುವುದು ದುರದೃಷ್ಟಕರ. ಕನ್ನಡಿಗರು ಸಹನಾಶೀಲರು, ಶಾಂತಿಪ್ರಿಯರೂ ಆಗಿರುವುದರಿಂದ ಅನ್ಯಭಾಷಿಗರು ನಮವರ ಮೇಲೆ ಸವಾರಿ ಮಾಡುತ್ತಿದ್ದಾರೆ. ಹಾಗಾಗಿ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಉದ್ಯೋಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. +ರಾಜಧಾನಿ ಬೆಂಗಳೂರು ಸೇರಿದಂತೆ ನಾಡಿನ ಎಲ್ಲಾ ಭಾಗಗಳಲ್ಲಿಯೂ ಕೂಡ ಬೇರೆ ಬೇರೆ ರಾಜ್ಯದವರು ಉದ್ಯೋಗಗಳನ್ನು ಆಕ್ರಮಿಸಿಕೊಂಡಿದ್ದಾರೆ. ಕನ್ನಡಿಗರ ಹಕ್ಕುಗಳನ್ನು ಹೊರರಾಜ್ಯಗಳಿಂದ ಬಂದವರು ಅನುಭವಿಸುತ್ತಿರುವುದರಿಂದ ನಮ ರಾಜ್ಯದಲ್ಲಿ ಕನ್ನಡಿಗರು ನಿರುದ್ಯೋಗಿಗಳಾಗಿ ಅಲೆಯುವಂತಹ ಪರಿಸ್ಥಿತಿ ಬಂದಿದೆ. ಹೀಗಾಗಿ ನಾವೆಲ್ಲಾ ಒಂದಾಗಿ ಹೋರಾಟ ಮಾಡಬೇಕಾದ ಅನಿವಾರ್ಯ ಎದುರಾಗಿದೆ. ಈಗ ನಾವು ಸಿಡಿದೆದ್ದು ನಿಲ್ಲದಿದ್ದರೆ ಮುಂದೆ ಖಂಡಿತಾ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. +ಕರ್ನಾಟಕದಲ್ಲಿ ಸಂಪತ್ತು, ಉದ್ಯೋಗದ ಮೇಲೆ ಮೊದಲ ಹಕ್ಕು ಆದ್ಯತೆ ಕನ್ನಡಿಗರಿಗೆ ಸಿಗಬೇಕೆಂಬುದು ನಮ ಪ್ರತಿಪಾದನೆ. ಅದಕ್ಕಾಗಿ ನಾವು ಹೋರಾಟಕ್ಕೆ ಇಳಿದಿದ್ದೇವೆ. ಅದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ನಮ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ನಾರಾಯಣಗೌಡರು ಗುಡುಗಿದರು.ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ರಾಜ್ಯಸರ್ಕಾರಕ್ಕೆ ಸಲ್ಲಿಸಲಾಯಿತು. \ No newline at end of file diff --git a/eesanje/url_46_90_2.txt b/eesanje/url_46_90_2.txt new file mode 100644 index 0000000000000000000000000000000000000000..17766d172d94fddda16e7accba380aeb38fc4ce4 --- /dev/null +++ b/eesanje/url_46_90_2.txt @@ -0,0 +1,11 @@ +ಗೃಹಲಕ್ಷ್ಮಿ ಹಣ ಸಂದಾಯ ಸ್ಥಗಿತ..? : ಮಾತು ತಪ್ಪಿದ ‘ಗ್ಯಾರಂಟಿ’ ಸರ್ಕಾರದ ವಿರುದ್ಧ ಜನಾಕ್ರೋಶ +ಬೆಂಗಳೂರು,ಜು.3-ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಸ್ಥಗಿತಗೊಳಿಸಲಾಗಿದ್ದು, ಮಾತು ತಪ್ಪಿದ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಲೋಕಸಭಾ ಚುನಾವಣೆಗೂ ಮುನ್ನ ಯೋಜನೆಯನ್ನು ಜಾರಿಗೊಳಿಸಿದ್ದ ರಾಜ್ಯಸರ್ಕಾರ ನಿಯಮಿತವಾಗಿ ಮೂರು ತಿಂಗಳಿಗೂ ಹೆಚ್ಚು ಕಾಲ ಹಣ ಸಂದಾಯ ಮಾಡಿದೆ.ಲೋಕಸಭಾ ಚುನಾವಣೆ ನಂತರ ಏಕಾಏಕಿ ಹಣ ಸಂದಾಯ ಸ್ಥಗಿತಗೊಂಡಿದೆ. +ಮತದಾನಕ್ಕೂ ಹಿಂದುಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಹಣವನ್ನು ಪಾವತಿಸಲಾಗಿತ್ತು. ಫಲಿತಾಂಶದಲ್ಲಿ ಕಾಂಗ್ರೆಸ್‌‍ ಪಕ್ಷ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸದೇ ಇರುವುದರಿಂದ ಯೋಜನೆಗಳ ಬಗ್ಗೆ ವ್ಯಾಪಕ ವಿಮರ್ಶೆಗಳು ಶುರುವಾಗಿವೆ. +ಜನ ಭಾವನಾತಕ ವಿಚಾರಗಳಿಗೆ ಮಣೆ ಹಾಕಿದ್ದಾರೆ. ಅಭಿವೃದ್ಧಿ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ಫಲಾನುಭವಿಗಳೂ ಕೂಡ ಕಾಂಗ್ರೆಸ್‌‍ ಪಕ್ಷವನ್ನು ಬೆಂಬಲಿಸಿಲ್ಲ. ಹೀಗಾಗಿ ಯೋಜನೆಗಳನ್ನು ಮುಂದುವರೆಸಬೇಕೇ? ಬೇಡವೇ? ಎಂಬ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. +ಕಾಂಗ್ರೆಸ್‌‍ನ ಕೆಲವು ಶಾಸಕರು ಪಂಚಖಾತ್ರಿ ಯೋಜನೆಗಳನ್ನು ನಿಲ್ಲಿಸಿ ಆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಆದರೆ ಸರ್ಕಾರದ ಪ್ರಮುಖರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿದಂತೆ ಮತ್ತಿತರ ಮುಖಂಡರು ನಾವು ಚುನಾವಣೆ ಅಥವಾ ಮತಗಳಿಕೆಯ ಕಾರಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿಲ್ಲ. +ಜನರ ಜೀವನ ಸುಧಾರಣೆ, ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಸುಸ್ಥಿರತೆಗಾಗಿ ಪಂಚಖಾತ್ರಿ ಯೋಜನೆಗಳನ್ನು ರೂಪಿಸಲಾಗಿದೆ. ಅವುಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಆಡಿದ ಮಾತಿನಂತೆ ಸರ್ಕಾರ ನಡೆದುಕೊಳ್ಳುತ್ತಿಲ್ಲ ಎಂಬ ಟೀಕೆಗಳಿವೆ. +ಚುನಾವಣೆಯ ಸಂದರ್ಭದಲ್ಲಿ ನೀತಿಸಂಹಿತೆಯನ್ನೂ ಮೀರಿ 2 ಸಾವಿರ ರೂ.ಗಳ ಗೃಹಲಕ್ಷ್ಮಿ ಹಣವನ್ನು ಪಾವತಿಸಿದ ಸರ್ಕಾರ, ಫಲಿತಾಂಶದ ಬಳಿಕ ಸ್ಥಗಿತಗೊಳಿಸಿರುವುದೇಕೆ ಎಂಬ ಪ್ರಶ್ನೆಗಳಿವೆ.ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳುತ್ತಲೇ ಫಲಾನುಭವಿಗಳಿಗೆ ಹಣ ಸಂದಾಯ ಮಾಡದಿರುವುದು ಚರ್ಚೆಗೆ ಗ್ರಾಸವಾಗಿದೆ. +ಬಹುನಿರೀಕ್ಷಿತ ಗೃಹಲಕ್ಷಿ ಯೋಜನೆಯಡಿ ಸರ್ಕಾರ ತನ್ನ ಬೊಕ್ಕಸದಿಂದ ಫಲಾನುಭವಿಗಳಿಗೆ ಹಣ ನೀಡಬೇಕಿದೆ. ಯೋಜನೆಗೆ ಹಣ 2 ತಿಂಗಳಿನಿಂದಲೂ ಸ್ಥಗಿತಗೊಂಡಿದೆ ಎಂದು ಹೇಳಲಾಗುತ್ತಿದೆ. +ಉಳಿದೆರಡು ಯೋಜನೆಗಳಾದ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಪಾಲಿನ ವೆಚ್ಚ ಬಾಬ್ತನ್ನು ಸರ್ಕಾರ ತನ್ನದೇ ಅಂಗ ಸಂಸ್ಥೆಗಳಿಗೆ ಪಾವತಿಸುತ್ತಿದೆ. ಹೀಗಾಗಿ ಪಾವತಿಯಲ್ಲಿ ವಿಳಂಬವಾದರೂ ಅದು ಜನಸಾಮಾನ್ಯರ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ. ಈ ಎರಡೂ ಯೋಜನೆಗಳು ಅಬಾಧಿತವಾಗಿ ಮುಂದುವರೆದಿವೆ. +ಗೃಹಲಕ್ಷ್ಮಿ ಯೋಜನೆ ಕೆಲವರಿಗೆ ಅನಗತ್ಯ ಎನಿಸಿದರೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ವರದಾನವಾಗಿದೆ. ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಕ್ಕೆ ಆರ್ಥಿಕ ಚೈತನ್ಯ ನೀಡುವಲ್ಲಿ ಸಫಲವಾಗಿತ್ತು. ಅದರಲ್ಲೂ ಹಿರಿಯ ಮಹಿಳೆಯರಿಗೆ ಯೋಜನೆ ಜೀವನಾಧಾರವಾಗಿತ್ತು. ಈಗ ಅದರ ಹಣವನ್ನು ಪಾವತಿಸದೇ ಇರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. +ಸರ್ಕಾರ ಯೋಜನೆಗಳನ್ನು ನಿಲ್ಲಿಸುತ್ತದೆಯೋ?, ಮುಂದುವರೆಸುತ್ತದೆಯೋ? ಎಂಬ ಪ್ರಶ್ನೆಗಳು ಕಾಡುತ್ತಿವೆ. ಕಾಂಗ್ರೆಸ್‌‍ಗೆ ಮತ ಹಾಕಿಲ್ಲ ಎಂಬ ಸಿಟ್ಟಿಗೆ ಯೋಜನೆ ಸ್ಥಗಿತಗೊಂಡರೆ ಅದನ್ನೇ ನಂಬಿ ಕುಳಿತಿರುವ ಅಸಹಾಯಕ ಮಹಿಳೆಯರಿಗೆ ಭಾರಿ ನಿರಾಶೆಯಾಗುವುದಂತೂ ಗ್ಯಾರಂಟಿ. \ No newline at end of file diff --git a/eesanje/url_46_90_3.txt b/eesanje/url_46_90_3.txt new file mode 100644 index 0000000000000000000000000000000000000000..70eaef3daefae5b593d8d06937f2cd7dc0c3f226 --- /dev/null +++ b/eesanje/url_46_90_3.txt @@ -0,0 +1,5 @@ +ಜುಲೈ 15ರಿಂದ ಮಳೆಗಾಲದ ಅಧಿವೇಶನ +ಬೆಂಗಳೂರು, ಜು.3– ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನವು ಜುಲೈ 15ರಿಂದ ಪ್ರಾರಂಭವಾಗಲಿದೆ.ಜುಲೈ 15ರಿಂದ ಜು.26ರವರೆಗೆ 9ದಿನಗಳ ಮಳೆಗಾಲದ ಅಧಿವೇಶನವನ್ನು ನಡೆಸಲು ನಿಗದಿಪಡಿಸಲಾಗಿದೆ. ಜುಲೈ 15ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆ ಅಧಿವೇಶನ ಸಮಾವೇಶಗೊಳ್ಳುವಂತೆ ರಾಜ್ಯಪಾಲರು ಆದೇಶಿಸಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಜುಲೈ 26 ನಂತರ ಅಧಿವೇಶನವನ್ನು ವಿಸ್ತರಣೆ ಮಾಡುವ ಅಥವಾ ಮುಕ್ತಾಯಗೊಳಿಸುವ ಬಗ್ಗೆ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ.ಕಳೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಡೆಸುವ ದಿನಾಂಕ ನಿರ್ಧಾರ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಲಾಗಿತ್ತು. ಅದರಂತೆ ಅಧಿವೇಶನ ನಡೆಸುವ ದಿನಾಂಕವನ್ನು ನಿಗದಿಪಡಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿದ್ದು, ಅವರು ಅನುಮತಿ ನೀಡಿದ್ದಾರೆ. +ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಈ ಚುನಾವಣೆಯ ಗೆಲುವಿನ ಉತ್ಸಾಹದಲ್ಲಿರುವ ಪ್ರತಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌‍ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿವೆ. ಹೀಗಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ಈ ಬಾರಿಯ ಅಧಿವೇಶನ ವೇದಿಕೆಯಾಗಲಿದೆ. +ರೈತರ ಆತಹತ್ಯೆ, ಕಳೆದ ಮುಂಗಾರು ಹಂಗಾಮಿನ ಬರಪರಿಹಾರ ಧನ ವಿತರಣೆ ವಿಳಂಬ, ಪೆಟ್ರೋಲ್‌, ಡೀಸೆಲ್‌, ಹಾಲು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ವಿಚಾರವನ್ನು ಪ್ರಮುಖ ಅಸ್ತ್ರವಾಗಿ ಸರ್ಕಾರದ ವಿರುದ್ಧ ಬಳಸಲು ಪ್ರತಿ ಪಕ್ಷಗಳು ತಯಾರಿ ನಡೆಸಿವೆ.ಜನರು ದಿನ ನಿತ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸದನದ ಒಳ ಹೊರಗು ಹೋರಾಟ ನಡೆಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹಾಗೂ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ ದೊರಕಿಸಲು ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ. \ No newline at end of file diff --git a/eesanje/url_46_90_4.txt b/eesanje/url_46_90_4.txt new file mode 100644 index 0000000000000000000000000000000000000000..7e32466f96fb561d87e28255591995ff8519a212 --- /dev/null +++ b/eesanje/url_46_90_4.txt @@ -0,0 +1,5 @@ +ಜು.5ರಂದು ಮಂಡ್ಯದಲ್ಲಿ ಹೆಚ್‌ಡಿಕೆ ಜನತಾ ದರ್ಶನ +ಬೆಂಗಳೂರು, ಜು.3-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಜು.5ರಂದು ಮಂಡ್ಯದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. +ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ಅಂದು ಬೆಳಿಗ್ಗೆ 10 ಗಂಟೆಯಿಂದ ಜನತಾ ದರ್ಶನ ನಡೆಸಲಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕುಮಾರಸ್ವಾಮಿ ಅವರು ನಡೆಸಲಿರುವ ಜನತಾ ದರ್ಶನಕ್ಕೆ ಅಗತ್ಯ ಸಿದ್ಧತೆ ಹಾಗೂ ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿಗೆ ಸಚಿವರ ಆಪ್ತ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. +ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರು ನಡೆಸಿದ್ದ ಜನತಾ ದರ್ಶನ ಜನಮನ್ನಣೆಗೆ ಪಾತ್ರವಾಗಿತ್ತು. ಮಂಡ್ಯ ಕ್ಷೇತ್ರದಿಂದ ಚುನಾಯಿತರಾದ ನಂತರ ಮೊದಲ ಬಾರಿಗೆ ನಡೆಸುವ ಜನತಾ ದರ್ಶನವಾಗಿದೆ. +ಜನತಾ ದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸಂಬಂಧಿಸಿದ ಮನವಿ ಪತ್ರಗಳನ್ನು ಕುಮಾರಸ್ವಾಮಿ ಅವರು ಸ್ವೀಕರಿಸಲಿದ್ದಾರೆ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_46_90_5.txt b/eesanje/url_46_90_5.txt new file mode 100644 index 0000000000000000000000000000000000000000..7df61b94da639301f4e846a62c3d36c503d3d2ed --- /dev/null +++ b/eesanje/url_46_90_5.txt @@ -0,0 +1,12 @@ +“ಹಿಂದೂಗಳು ಹಿಂಸೆ ಮಾಡ್ತಾರೆ”ಎಂದ ರಾಹುಲ್ ಸಮರ್ಥಿಸಿಕೊಂಡ ಸಿಎಂಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್ +ಬೆಂಗಳೂರು,ಜು.2-ಹಿಂದೂ ಎಂದು ಹೇಳಿಕೊಳ್ಳುವವರು 24 ಗಂಟೆ ಹಿಂಸೆ, ದ್ವೇಷ, ಸುಳ್ಳನ್ನು ಹರಡುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನೆಟ್ಟಿಗರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. +ಸಂಸತ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಮ ನಾಯಕರಾದ ರಾಹುಲ್‌ ಗಾಂಧಿ ಅವರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದ ಬಿಜೆಪಿ, ತನಗೆ ಹೇಳಿದ ಮಾತನ್ನು ಹಿಂದೂ ಧರ್ಮಕ್ಕೆ ಹೇಳಿದ್ದಾರೆ ಎಂದು ತಿರುಚಿ ತನ್ನ ವೈಲ್ಯ ಮರೆಮಾಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. +ವಾಟ್ಸ್‌‍ ಆಪ್‌ ನಲ್ಲಿ ಬಿಜೆಪಿ ಕೃಪಾಪೋಷಿತ ಫೇಕ್ ನ್ಯೂಸ್‌‍ ಶೂರರು ಹರಿಬಿಟ್ಟಿರುವ ಅರ್ಧಂಬರ್ಧ ವಿಡಿಯೋ ನೋಡಿ ಅದನ್ನು ಇತರರಿಗೂ ರ್ಶೇ ಮಾಡದಿರಿ. ಸತ್ಯ ಏನೆಂಬುದನ್ನು ಒಳಗೊಂಡ ಪೂರ್ತಿ ವಿಡಿಯೋ ಇಲ್ಲಿದೆ ಎಂದು ವಿಡಿಯೋ ಹಂಚಿಕೂಂಡಿದ್ದರು.ಅವರು ಹಂಚಿಕೊಂಡ ವಿಡಿಯೋದಲ್ಲಿ ರಾಹುಲ್‌ ಮೊದಲು ಹೇಳಿದ್ದು, ನಂತರ ಸ್ಪಷ್ಟನೆ ನೀಡಿದ್ದು ಎರಡೂ ಇದೆ. ಸಿದ್ದರಾಮಯ್ಯನವರ ಸಮರ್ಥನೆಯನ್ನು ಬಹುತೇಕ ನೆಟ್ಟಿಗರು ಒಪ್ಪಿಕೊಂಡಿಲ್ಲ. +'ಭಯಪಡಬೇಡಿ, ಭಯಗೊಳಿಸಬೇಡಿ'ಎಂದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸೇರಿದಂತೆ ಎಲ್ಲ ಧರ್ಮಗಳು ಸಾರಿ ಹೇಳಿವೆ.ಆದರೆ ಬಿಜೆಪಿಯಲ್ಲಿ ಹಿಂದುಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು…."– ಹೀಗೆಂದು ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಹೇಳಿದರೆ ಬಿಜೆಪಿ ನಾಯಕರೇಕೆ ಉರಿದು ಬೀಳಬೇಕು?…../XXVAhI2BZN +ಮಾನ್ಯ ಮುಖ್ಯಮಂತ್ರಿಗಳೇ ಸ್ವಲ್ಪ ವಿವೇಚನೆ ಇರಲಿ :ಮಾನ್ಯ ಮುಖ್ಯಮಂತ್ರಿಗಳೇ ಸ್ವಲ್ಪ ವಿವೇಚನೆ ಇರಲಿ, ಅಖಂಡ ಭಾರತವನ್ನು ಯಾವುದರ ಆಧಾರದ ಮೇಲೆ ವಿಭಜನೆ ಮಾಡಿದ್ದು. ಭಾರತವು ಬಾಂಗ್ಲಾದೇಶ ಉಗಮಕ್ಕೆ ಕಾರಣವಾಯಿತು ಆದರೆ ಅಲ್ಲಿ ಹಿಂದೂ ಧರ್ಮವನ್ನು ಹೇರಲಿಲ್ಲ, ಆದರೆ ಬಾಂಗ್ಲಾದೇಶ ಜಾತ್ಯತೀತತೆ ಬಿಟ್ಟು ಮುಸ್ಲಿಂ ರಾಷ್ಟ್ರ ಅಂತ ಘೋಷಣೆ ಮಾಡಿಕೊಂಡಿತ್ತು. ಅಲ್ಲಿನ ಹಿಂದೂಗಳ ಪರಿಸ್ಥಿತಿ ಅರಿವಿದೇಯ? ಎಂದು ನೆಟ್ಟಿಗರೊಬ್ಬರು ಪ್ರಶ್ನಿಸಿದ್ದಾರೆ. +ನಿಮ ಮತ್ತು ಕಾಂಗ್ರೆಸ್‌‍ ನ ಹಿಂದೂ ವಿರೋಧಿ ನೀತಿ :ಸಿದ್ದರಾಮಯ್ಯನವರೇ, ಬಹಳ ಬುದ್ಧಿವಂತಿಕೆಯಿಂದ ನಿಮ ಮತ್ತು ಕಾಂಗ್ರೆಸ್‌‍ನ ಹಿಂದೂ ವಿರೋಧಿ ನೀತಿಯನ್ನು ರಾಹುಲ್‌ ಗಾಂಧಿಯ ಹೆಸರಲ್ಲಿ ವಿವರಿಸಿದ್ದೀರಿ!! ರಾಜಕೀಯ ಲಾಭಕ್ಕಾಗಿ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿದಿದ್ದೀರಿ ಕಾಂಗ್ರೆಸ್‌‍ನವರು.. ಥೂ ನಾಚಿಕೆಯಾಗಬೇಕು ಕಾಂಗ್ರೆಸ್‌‍ ನವರಿಗೆ!! ಹಿಂದೂಗಳು ಹಿಂಸೆ, ಭಯ ಮತ್ತು ಸುಳ್ಳು ಹರಡುವವರೇ? ಎನ್ನುವ ಇನ್ನೊಂದು ಪ್ರತಿಕ್ರಿಯೆ ಬಂದಿದೆ. +ಸ್ವಲ್ಪ ಕೇಳಿ ….../ +ಪರಮೇಶ್ವರ ತ್ರಿಶೂಲ ದುಷ್ಟರ ಸಂಹಾರಕ್ಕೆ ಇರೋದು :ಪರಮೇಶ್ವರ ತ್ರಿಶೂಲ ದುಷ್ಟರ ಸಂಹಾರಕ್ಕೆ ಇರೋದು. ಹಿಂದೂಗಳು ಆಗಿರುವುದಕ್ಕೆ ಇಲ್ಲಿಯವರೆಗೂ ಅನ್ಯ ಧರ್ಮದವರ ದಾಳಿ ಯಾರನ್ನು ಸಹಿಸಿಕೊಂಡು ತಮ ದೇಶದ ಎರಡು ಭಾಗವನ್ನು ಕಳೆದುಕೊಂಡು, ಶಿರ ಭಾಗವನ್ನು ಇದೀಗ ಉಳಿಸಿಕೊಂಡಿರೋದು. ಕತ್ತೆಗೇನು ಗೊತ್ತು ಭತ್ತದ ಸುಗ್ಗಿ? ದಾಳಿಗೆ ಪ್ರತಿದಾಳಿ ಎಂದು. ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರದ ನೀತಿ ಗೊತ್ತು ಎನ್ನುವ ಮತ್ತೊಂದು ಪ್ರತಿಕ್ರಿಯೆ ಬಂದಿದೆ. +ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ತಮ ಚೊಚ್ಚಲ ಭಾಷಣವನ್ನು ವೀರಾವೇಷವಾಗಿ ಏನೋ ಲೋಕಸಭೆಯಲ್ಲಿ ಮಾಡಿದ್ದಾರೆ. ಆದರೆ, ತಮ ಭಾಷಣದ ವೇಳೆ ಶಿವನ ೇಟೋ ಹಿಡಿದು ಮಾಡಿದ ಭಾಷಣ ಆಕೋಶಕ್ಕೆ ಕಾರಣವಾಗಿದೆ. ಮಾತಿನ ಭರದಲ್ಲಿ ವಿನಾಕಾರಣ ವಿವಾದ ಮೈಗೆಳೆದುಕೊಂಡಿದ್ದಾರೆ. +ಆ ವೇಳೆ, ಮಧ್ಯ ಪ್ರವೇಶಿಸಿದ ಪ್ರಧಾನಿ ಮೋದಿ, ಇಡೀ ಹಿಂದೂ ಸಮುದಾಯವನ್ನು ಹಿಂಸಾತಕ ಎಂದು ಕರೆಯುವುದು ಗಂಭೀರ ವಿಚಾರ ಎಂದು ಹೇಳಿದ್ದರು. ಆಗ, ತಮ ತಪ್ಪಿನ ಅರಿವಾದ ರಾಹುಲ್‌ ಗಾಂಧಿ, ಇಲ್ಲ..ಇಲ್ಲ.. ನಾನು ಹೇಳಿದ್ದು ಬಿಜೆಪಿ, ಆರ್‌ಎಸ್‌‍ಎಸ್‌‍, ಮೋದಿ ಮಾತ್ರ ಹಿಂದೂಗಳಲ್ಲ ಎಂದು ಸ್ಪಷ್ಟನೆ ನೀಡಿದ್ದರು. ರಾಹುಲ್‌ ಅವರ ಹೇಳಿಕೆಯನ್ನು ಸಿಎಂ ಸಿದ್ದರಾಮಯ್ಯ ತಮ ಟ್ವಿಟ್ಟರ್‌ (ಎಕ್ಸ್ ) ನಲ್ಲಿ ಸಮರ್ಥಿಸಿಕೊಂಡಿದ್ದು ಹೀಗೆ.. ಭಯಪಡಬೇಡಿ, ಭಯಗೊಳಿಸಬೇಡಿ ಎಂದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್‌, ಸಿಖ್‌ ಸೇರಿದಂತೆ ಎಲ್ಲ ಧರ್ಮಗಳು ಸಾರಿ ಹೇಳಿವೆ. +ಆದರೆ ಬಿಜೆಪಿಯಲ್ಲಿ ಹಿಂದುಗಳೆಂದು ಹೇಳಿಕೊಳ್ಳುವವರ ಕೆಲಸವೇ ಹಿಂಸೆ, ಭಯ ಮತ್ತು ಸುಳ್ಳು ಹರಡುವುದು…. ಹೀಗೆಂದು ವಿರೋಧಪಕ್ಷದ ನಾಯಕರಾದ ರಾಹುಲ್‌ ಗಾಂಧಿಯವರು ಹೇಳಿದರೆ ಬಿಜೆಪಿ ನಾಯಕರೇಕೆ ಉರಿದು ಬೀಳಬೇಕು? ಬಿಜೆಪಿ ಅವರಿಗೆ, ಆರ್‌.ಎಸ್‌‍.ಎಸ್‌‍ ನವರಿಗೆ, ಬಿಜೆಪಿಯವರಿಗೆ ಗುರಿಯಾಗಿಸಿ ಹೇಳಿದರೆ ಅದು ಇಡೀ ಹಿಂದೂ ಧರ್ಮಕ್ಕೆ ಹೇಳಿದಂತಾಗುತ್ತದೆಯೇ? ಎಂದು ಹೇಳಿಕೆಯನ್ನು ರಾಹುಲ್‌ ಗಾಂಧಿ ಅವರು ಸಮರ್ಥನೆ ಮಾಡಿಕೊಂಡಿದ್ದರು. \ No newline at end of file diff --git a/eesanje/url_46_90_6.txt b/eesanje/url_46_90_6.txt new file mode 100644 index 0000000000000000000000000000000000000000..bc0c1cbc1078a6da8a3c69cea3778f07b936dc0f --- /dev/null +++ b/eesanje/url_46_90_6.txt @@ -0,0 +1,11 @@ +ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಿತಿಮೀರಿದ ಡೆಂಘಿ ಮಹಾಮಾರಿ, 6ಮಂದಿ ಸಾವು +ಬೆಂಗಳೂರು,ಜು.2-ರಾಜ್ಯದ ಹಲವೆಡೆ ಡೆಂಘಿ ಮಹಾಮಾರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.ರಾಜಧಾನಿ ಬೆಂಗಳೂರು, ಹಾಸನ, ಶಿವಮೊಗ್ಗ, ಹಾವೇರಿ, , ಚಿಕ್ಕಮಗಳೂರು, ಮೈಸೂರು, ಚಿತ್ರದುರ್ಗ, ಧಾರವಾಡ ಸೇರಿದಂತೆ ಹಲವೆಡೆ ದಿನೇದಿನೇ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾವು-ನೋವು ಕೂಡ ಸಂಭವಿಸುತ್ತಿದೆ. ಈಗಾಗಲೇ ಡೆಂಘಿಗೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. +ಬೆಂಗಳೂರಿನಲ್ಲಿ 1, ಶಿವಮೊಗ್ಗ 1, ಹಾಸನ 2, ಹಾವೇರಿಯಲ್ಲಿ 1, ಧಾರವಾಡದಲ್ಲಿ ಒಬ್ಬರು ಡೆಂಘಿ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಡೆಂಘಿ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. +ಬೆಂಗಳೂರಿನಲ್ಲಿ 1,563, ಚಿಕ್ಕಮಗಳೂರು 491, ಮೈಸೂರು 479, ಹಾವೇರಿಯಲ್ಲಿ 451, ಚಿತ್ರದುರ್ಗ 265, ದಕ್ಷಿಣ ಕನ್ನಡ 233 ಮಂದಿ ಡೆಂಘಿ ಲಕ್ಷಣಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ವಿವಿಧೆಡೆ 5 ಸಾವಿರಕ್ಕೂ ಹೆಚ್ಚು ಮಂದಿಗೆ ಈ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಬೇಕೆಂದು ಸೂಚನೆ ನೀಡಲಾಗಿದೆ.ವ್ಯಾಪಕವಾಗಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಇಂದು ಮಹತ್ವದ ಸಭೆ ನಡೆಸಲಿದ್ದಾರೆ. +ಡೆಂಘಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೋಗ ನಿಯಂತ್ರಣದ ಬಗ್ಗೆ ಕೈಗೊಳ್ಳುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ. +ರಾಜಧಾನಿಯಲ್ಲಿ ಡೆಂಘಿ ಹೆಚ್ಚಳ :ರಾಜಧಾನಿ ಬೆಂಗಳೂರಿನಲ್ಲಿ ಮಾರಕ ರೋಗ ಡೆಂಘಿ ದಿನೇದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಲರ್ಟ್‌ ಆಗಿರುವ ಬಿಬಿಎಂಪಿ ಮನೆಮನೆ ಸಮೀಕ್ಷೆ ನಡೆಸಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಮುಂದಾಗಿದೆ. +1500 ಜನರ ತಂಡ ರಚಿಸಿ 12 ಲಕ್ಷ ಮನೆಗಳ ಸಮೀಕ್ಷೆ ನಡೆಸಲು ಯೋಜನೆ ರೂಪಿಸಿದ್ದು, ಪ್ರತಿ ವಾರ ಈ ತಂಡ ಮನೆಮನೆಗಳಿಗೆ ತೆರಳಿ ಡೆಂಘಿ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದೆ. ರೋಗ ಪತ್ತೆ ತಡೆಯುವಿಕೆ, ರೋಗ ಬರದಂತೆ ಎಚ್ಚರ ವಹಿಸುವ ಕಾರ್ಯಗಳಲ್ಲಿ ಮುಂದಾಗಿದೆ. +ಆಶಾ ಕಾರ್ಯಕರ್ತೆಯರು, ಎಎನ್‌ಎಂ ಕಾರ್ಯಕರ್ತರು ಹಾಗೂ ಆರೋಗ್ಯಾಧಿಕಾರಿಗಳನ್ನೊಳಗೊಂಡ ಈ ತಂಡ ಎನ್‌ಎಸ್‌‍ಎಸ್‌‍ ಹಾಗೂ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು ಈ ಮಾರಕ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಂದಾಗಿದೆ. +ಬೆಂಗಳೂರಿನಲ್ಲಿ 1,563 ಡೆಂಘಿ ಲಕ್ಷಣ ಪ್ರಕರಣಗಳು ಕಂಡುಬಂದಿವೆ. ಕೇವಲ 2 ದಿನದಲ್ಲಿ 78 ಸ್ಯಾಂಪಲ್‌ಗಳ ಪೈಕಿ 12 ಮಂದಿಗೆ ಡೆಂಘಿ ಇರುವುದು ದೃಢಪಟ್ಟಿದೆ. ಪಶ್ಚಿಮ ವಲಯದಲ್ಲಿ 5, ಬೊಮನಹಳ್ಳಿ ಹಾಗೂ ಮಹದೇವಪುರ ವಲಯದಲ್ಲಿ ತಲಾ 2 ಪ್ರಕರಣಗಳು ದೃಢಪಟ್ಟಿರುವುದು ಪತ್ತೆಯಗಿದೆ. +ಮುಂಜಾಗ್ರತಾ ಕ್ರಮವಾಗಿ ಎಲ್ಲಾ ವಲಯಗಳಲ್ಲೂ ಕಟ್ಟೆಚ್ಚರ ವಹಿಸುವಂತೆ ಹಿರಿಯ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಡೆಂಘಿ ಪ್ರಕರಣಗಳ ಬಗ್ಗೆ ಕಡ್ಡಾಯವಾಗಿ ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಲಾಗಿದೆ. +ಹಾವೇರಿಯಲ್ಲಿ ಡೆಂಘಿ ಆತಂಕ :ಹಾವೇರಿ ಜಿಲ್ಲೆಯಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್‌ ನಿನ್ನೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಪ್ರತಿ ವಾರ್ಡ್‌ಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಡೆಂಘಿ ವಾರ್ಡ್‌ ಸೇರಿದಂತೆ ಮಹಿಳಾ, ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಅವರು ಕ್ರಮಗಳ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದರು. \ No newline at end of file diff --git a/eesanje/url_46_90_7.txt b/eesanje/url_46_90_7.txt new file mode 100644 index 0000000000000000000000000000000000000000..1141d7d03e0ca9243d4e43f16b0aab0be48f73e1 --- /dev/null +++ b/eesanje/url_46_90_7.txt @@ -0,0 +1,8 @@ + : 4,000 ಕೋಟಿ ರೂ. ಗುಳುಂ ಮಾಡಿದ ಗೋಲಾಲ್‌ ಸಿಎಂ : ಆರ್‌.ಅಶೋಕ್‌ ಗಂಭೀರ ಆರೋಪ +ಬೆಂಗಳೂರು,ಜು.2-ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನು ಗುಳುಂ ಮಾಡಿರುವ ಸಿದ್ಧ ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮೆ ತಮ ಕೈ ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಸಾಲು ಸಾಲು ಪೋಸ್ಟ್‌ ಮಾಡಿರುವ ಆಶೋಕ್‌ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ 4,000 ಕೋಟಿ ಗುಳುಂ ಮಾಡಿರುವ ಹಗರಣಕ್ಕೆ ಈ ಪ್ರಶ್ನೆಗಳಿಗೆ ನಿಮ ಬಳಿ ಉತ್ತರವಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ. +ಗೋಲಾಲ್‌ ಸಿಎಂ ಸಿದ್ದರಾಮಯ್ಯನವರೇನವರೇ, ತಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈ ತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್‌‍ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ ಪಾಲೆಷ್ಟು? ಎಂದು ಪ್ರಶ್ನೆಸಿದ್ದಾರೆ. +50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು? ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಾರಸ್ಸು ಮಾಡಿದ್ದು ಯಾರು? ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ಎಂದು ಕಿಡಿಕಾರಿದ್ದಾರೆ. +ನಿಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥ್ದೊಂದು ಬೃಹತ್‌ ಹಗರಣ ತಮ ಗಮನಕ್ಕೆ ಬಾರದೆ, ತಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಎಂದು ಅಶೋಕ್‌ ಅನುಮಾನ ವ್ಯಕ್ತಪಡಿಸಿದ್ದಾರೆ. +ಗೋಲ್ಮಾಲ್ ಸಿಎಂ₹4,000 ಕೋಟಿ ಗುಳುಂವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ 'ಸಿದ್ಧ'ಹಸ್ತರು ಈಗ ಮೈಸೂರಿನ ಮುಡಾದಲ್ಲಿ ₹4,000 ಕೋಟಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ 'ಕೈ'ಚಳಕ ಪ್ರದರ್ಶನ ಮಾಡಿದ್ದಾರೆ.ಗೋಲ್ಮಾಲ್ ಸಿಎಂ@siddaramaiahನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ…../ \ No newline at end of file diff --git a/eesanje/url_46_90_8.txt b/eesanje/url_46_90_8.txt new file mode 100644 index 0000000000000000000000000000000000000000..43af3851a3b82ca80e0b7ddda8e91e05ee7402d2 --- /dev/null +++ b/eesanje/url_46_90_8.txt @@ -0,0 +1,6 @@ +ಅತಿರೇಕದ ಅಭಿಮಾನ : 1 ವರ್ಷದ ಮಗುವಿಗೆ ಖೈದಿ ಬಟ್ಟೆ ಹಾಕಿ ನಂಬರ್ ನೀಡಿ ಹುಚ್ಚಾಟ +ಬೆಂಗಳೂರು,ಜು.2-ಕೊಲೆ ಆರೋಪದ ಮೇಲೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿದ್ದರೂ ಅವರ ಮೇಲಿನ ಅಭಿಮಾನಿಗಳ ಹುಚ್ಚು ಪ್ರೀತಿ ಮಾತ್ರ ಕಮ್ಮಿಯಾಗಿಲ್ಲ.ದರ್ಶನ್‌ ಮೇಲಿನ ಅಭಿಮಾನಕ್ಕಾಗಿ ಇಲ್ಲೊಬ್ಬ ಹುಚ್ಚು ಅಭಿಮಾನಿ ತನ್ನ ಹೆತ್ತ ಮಗುವನ್ನೇ ಖೈದಿ ಮಾದರಿ ಅಲಂಕರಿಸಿ ಜೈಲಿನಲ್ಲಿ ದರ್ಶನ್‌ಗೆ ನೀಡಿರುವ ಖೈದಿ ಸಂಖ್ಯೆಯನ್ನೇ ಹಾಕಿ ಹುಚ್ಚಾಟ ಮೇರೆದಿದ್ದಾನೆ +ತನ್ನ ಒಂದು ವರ್ಷದ ಮಗುವಿಗೆ ಖೈದಿಯ ರೀತಿ ಬಿಳಿ ಬಟ್ಟೆ ಹಾಕಿ ಪೋಟೋಶೂಟ್‌ ಮಾಡಿಸಿ ಖೈದಿ ನಂಬರ್‌, ಕೈ ಕೋಳದ ಮಾದರಿ ಚಿತ್ರ ಹಾಕಿ ಪೋಟೋಶೂಟ್‌ ಮಾಡಿಸಿದ್ದಾನೆ. +ಹಿಂದೆಲ್ಲ ಮಕ್ಕಳಿಗೆ ಕಷ್ಣನ ವೇಷ, ಸ್ವಾಮಿ ವಿವೇಕಾನಂದರು ವೇಷ, ಅಂಬೇಡ್ಕರ್‌ ರಂತಹ ಗಣ್ಯ ವ್ಯಕ್ತಿಗಳ ರೀತಿಯ ಪೋಟೋ ಶೂಟ್‌ ಮಾಡಿಸುವುದು ಟ್ರೆಂಡ್‌ ಆಗಿತ್ತು.ಆದರೆ ಈಗ ಬೆಳೆಯುವ ಮಗುವಿಗೆ ಖೈದಿ ರೀತಿ ಉಡುಪು ತೊಡಿಸಿ ಪೋಟೋ ಶೂಟ್‌ ಮಾಡಿಸಿರೋದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. +ಕೊಲೆ ಆರೋಪದ ಮೇಲೆ ತಮ ನೆಚ್ಚಿನ ನಾಯಕ ಜೈಲು ಪಾಲಾದರೂ ಆತನ ಮೇಲಿನ ಅಭಿಮಾನದಿಂದ ಜನ ದೇವರಿಗೆ ವಿಶೇಷ ಪೂಜೆ ಮಾಡಿಸುವುದು, ಉರುಳು ಸೇವೆ ಮಾಡಿಸುವುದನ್ನು ಮಾಡಿಕೊಂಡು ಬರುತ್ತಿದ್ದಾರೆ. +ಕೆಲವರಂತೂ ಇನ್ನು ಪರಪ್ಪನ ಅಗ್ರಹಾರದ ಜೈಲಿನ ಮುಂದೆ ತಮ ನಾಯಕನ ಬಿಡುಗಡೆಗಾಗಿ ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.ಇದೀಗ ತಮ ಮಗುವಿಗೆ ಖೈದಿ ಮಾದರಿ ಬಟ್ಟೆ, ನಂಬರ್‌ ತೊಡಿಸಿ ಹುಚ್ಚಾಟ ಪ್ರದರ್ಶಿಸಿರುವುದು ಅತಿಯಾಯ್ತು ಎನಿಸತೊಡಗಿದೆ. \ No newline at end of file diff --git a/eesanje/url_46_90_9.txt b/eesanje/url_46_90_9.txt new file mode 100644 index 0000000000000000000000000000000000000000..a03318794871523b4b9113ca277c3bac38ab659b --- /dev/null +++ b/eesanje/url_46_90_9.txt @@ -0,0 +1,4 @@ +ಪತ್ನಿಯನ್ನು ಇರಿದು ಕೊಂದ ಕಾನ್ಸ್‌ಟೇಬಲ್‌ ಮನೆಮುಂದೆ ಶವವಿಟ್ಟು ಪೋಷಕರ ಪ್ರತಿಭಟನೆ +ಹಾಸನ,ಜು.2-ಚಾಕುವಿನಿಂದ ಇರಿದು ಪತ್ನಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಕಾನ್ಸ್‌ಟೇಬಲ್‌ ಲೋಕನಾಥ್‌ ನಿವಾಸದೆದುರು ಶವವಿಟ್ಟು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಮತಾ ಅವರು ನಿನ್ನೆ ಲೋಕನಾಥ್‌ ವಿರುದ್ಧ ಎಸ್‌‍ಪಿ ಕಚೇರಿಗೆ ದೂರು ನೀಡಲು ಆಗಮಿಸಿದಾಗ ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. +ಈ ಸಂಬಂಧ ನ್ಯಾಯಕ್ಕಾಗಿ ಪೋಷಕರು ಲೋಕನಾಥ್‌ ನಿವಾಸದೆದುರು ಶವವನ್ನಿಟ್ಟು ಪ್ರತಿಭಟನೆ ನಡೆಸಿ ಆರೋಪಿ ತಂದೆ-ತಾಯಿಯನ್ನೂ ಕೂಡ ಬಂಧಿಸುವಂತೆ ಆಗ್ರಹಿಸಿದ್ದಾರೆ.ಸಾವಿಗೆ ಕಾರಣರಾದವರನ್ನು ಬಂಧಿಸುವಂತೆ ಮಮತಾ ಪೋಷಕರು ಆಗ್ರಹಿಸಿದ್ದಾರೆ. ತಾಯಿಯ ಮೃತದೇಹದ ಮುಂದೆ ಮಕ್ಕಳು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. +ಸ್ಥಳದಲ್ಲೇ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಲಾಗಿದೆ. ಲೋಕನಾಥ್‌ಗೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿರುವ ಮಮತಾ ಪೋಷಕರು ಆಕೆಯ ವಿರುದ್ಧವೂ ಸಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ. \ No newline at end of file diff --git a/eesanje/url_46_91_1.txt b/eesanje/url_46_91_1.txt new file mode 100644 index 0000000000000000000000000000000000000000..9f52b4e07adc6855e98e69ec5727759bb95abfa8 --- /dev/null +++ b/eesanje/url_46_91_1.txt @@ -0,0 +1,12 @@ +ನಕಲಿ ಸುದ್ದಿಗಳ ಪರಿಶೀಲನೆಗೆ ಜಿಲ್ಲಾ ಮಟ್ಟದಲ್ಲಿ ವಿಶೇಷ ಘಟಕ ಸ್ಥಾಪನೆ : ಸಿಎಂ +ಬೆಂಗಳೂರು,ಜು.1– ನಕಲಿ ಸುದ್ದಿಗಳ ಪರಿಶೀಲನೆಗೆ ಜಿಲ್ಲಾಮಟ್ಟದಲ್ಲಿ ವಿಶೇಷ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಧನಿಕ ಯುಗದಲ್ಲಿ ಹೊಸ ಸವಾಲುಗಳನ್ನು ಎದುರಿಸಲು ಮಾಧ್ಯಮಗಳು ಸಜ್ಜುಗೊಳ್ಳಬೇಕು ಎಂದು ಕರೆ ನೀಡಿದರು. +ನಗರದ ಪ್ರೆಸ್‌‍ಕ್ಲಬ್‌ ಆವರಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪ್ರೆಸ್‌‍ಕ್ಲಬ್‌ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣ ವೇಗವಾಗಿ ಜನರನ್ನು ಮುಟ್ಟುತ್ತಿದೆ. ಹಿಂದಿನ ದಿನಗಳಲ್ಲಿ ಸುದ್ದಿಗಾಗಿ ಟಿವಿ, ಪತ್ರಿಕೆಗಳು ಮತ್ತು ರೇಡಿಯೋವನ್ನು ಅವಲಂಬಿಸಬೇಕಿತ್ತು. ಈಗ ಅದಕ್ಕಿಂತಲೂ ವೇಗವಾಗಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ದೊರೆಯುತ್ತಿದೆ ಎಂದು ಹೇಳಿದರು. +ಸಾಮಾಜಿಕ ಜಾಲತಾಣದಿಂದ ಉಪಯೋಗದ ಜೊತೆಗೆ ಕೆಟ್ಟ ಪರಿಣಾಮವೂ ಇದೆ. ಅದನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸಿದರೆ ಉಪಯೋಗವಾಗಲಿದೆ. ಇಲ್ಲವಾದರೆ ನಕಲಿ ಸುದ್ದಿಗಳು ಸಮಾಜಕ್ಕೆ ತೊಂದರೆಯುಂಟು ಮಾಡುತ್ತವೆ. ಇವುಗಳನ್ನು ಪರಿಶೀಲಿಸಲು ಮತ್ತು ನಿಯಂತ್ರಿಸಲು ಪ್ರತೀ ಜಿಲ್ಲಾ ಕೇಂದ್ರದಲ್ಲೂ ವಿಶೇಷ ಘಟಕಗಳನ್ನು ಆರಂಭಿಸಿದ್ದೇವೆ ಎಂದರು. +ನಕಲಿ ಸುದ್ದಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಯಾರು ಹಿತವರೋ ಅವರ ಪರವಾಗಿ ಹೆಚ್ಚು ಪ್ರಚಾರಗಳಾಗುತ್ತವೆ. ವಿರುದ್ಧವಾಗಿರುವವರನ್ನು ಟೀಕಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳು ಬೇಡ ಎಂದು ಹೇಳುವ ಪರಿಸ್ಥಿತಿ ಈಗಿಲ್ಲ. ಆದರೆ ಅವುಗಳ ಮೇಲೆ ನಿಯಂತ್ರಣ ಅಗತ್ಯವಿದೆ ಎಂದು ಹೇಳಿದರು. +ತಾವು ಸಾಮಾಜಿಕ ಜಾಲತಾಣವನ್ನು ನೋಡುವುದನ್ನೇ ಬಿಟ್ಟಿದ್ದೇನೆ. ಮೊಬೈಲ್‌ ಫೋನ್‌ ಕೂಡ ಇಟ್ಟುಕೊಂಡಿಲ್ಲ. ಈ ಮೊದಲು ಆರು ತಿಂಗಳ ಕಾಲ ಮೊಬೈಲ್‌ ಇಟ್ಟುಕೊಂಡಿದ್ದೆ. ಆಗ ರಾತ್ರಿಯೆಲ್ಲಾ ಕರೆಗಳು ಬರುತ್ತಿದ್ದವು. ನಿದ್ರೆ ಮಾಡಲು ಆಗುತ್ತಿರಲಿಲ್ಲ. ಅದಕ್ಕಾಗಿ ಫೋನ್‌ ಬಳಕೆ ನಿಲ್ಲಿಸಿದ್ದೇನೆ. ಸಿಬ್ಬಂದಿಗಳು ಮತ್ತು ಅಂಗರಕ್ಷಕರ ಫೋನ್‌ಗಳ ಮೂಲಕವೇ ನಾನು ಸಂಪರ್ಕ ಸಾಧಿಸುತ್ತೇನೆ ಎಂದು ಹೇಳಿದರು. +ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್‌ ಮಾತನಾಡಿ, ಆಧುನಿಕ ತಂತ್ರಜ್ಞಾನ, ಕೃತಕ ಬುದ್ದಿಮತ್ತೆ, ಸಾಮಾಜಿಕ ಜಾಲತಾಣಗಳಿಂದಾಗಿ ಮಾಧ್ಯಮಗಳು ಮತ್ತು ಸುದ್ದಿಸಂಸ್ಥೆಗಳು ಅಪ್ರಸ್ತುತವಾಗುತ್ತಿವೆ. ರಾಜ್ಯದ ಯಾವ ಪತ್ರಿಕೆಯ ಪ್ರಸಾರ ಸಂಖ್ಯೆ 30 ಲಕ್ಷ ದಾಟಿಲ್ಲ. ಆದರೆ ವಾಟ್‌್ಸ ಆ್ಯಪ್‌ ಬಳಕೆದಾರ ಸಂಖ್ಯೆ 35 ಕೋಟಿ, ಫೇಸ್‌‍ಬುಕ್‌ನಲ್ಲಿ 39 ಕೋಟಿ, ಇನ್ಸ್ಟಾಗ್ರಾಮ್‌ನಲ್ಲಿ 36 ಕೋಟಿ ಚಂದಾದಾರರಿದ್ದಾರೆ. +ಸಾಮಾಜಿಕ ಜಾಲತಣಾದಲ್ಲಿ ಹೆಚ್ಚು ಸಕ್ರಿಯ ಹಾಗೂ ಜನಪ್ರಿಯವಾಗಿರುವವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಈ ಹಿಂದೆ ನರೇಂದ್ರ ಮೋದಿ ಹಾಗೂ ಅಮಿತ್‌ ಷಾ ಹೇಳಿದ್ದರು. +ಏಕಕಾಲಕ್ಕೆ ನಮ ಸಂದೇಶಗಳು 32 ಲಕ್ಷ ವಾಟ್‌್ಸಆ್ಯಪ್‌ ಚಂದಾದಾರನ್ನು ತಲುಪುತ್ತವೆ. ಅಲ್ಲಿಂದ ಮುಂದೂಡಲ್ಪಟ್ಟ ಸಂದೇಶಗಳು ಸರಿಸುಮಾರು 80 ಕೋಟಿ ಜನರಿಗೆ ಹಂಚಿಕೆಯಾಗುತ್ತವೆ ಎಂದು ಬಿಜೆಪಿ ನಾಯಕರು ಹೇಳಿದ್ದು, ನಮಗೆ ಮಾಧ್ಯಮಗಳ ಅವಶ್ಯಕತೆಯೇ ಇಲ್ಲ ಎಂದು ನೀಡಿದ ಹೇಳಿಕೆಯನ್ನು ಸರಿಸಿಕೊಂಡರು. +ಇಂದು ಒಂದು ಭಾಗವಾದರೆ ಮತ್ತೊಂದು ದಿಕ್ಕಿನಲ್ಲಿ ಮಾಧ್ಯಮಗಳು ತಮಷ್ಟಕ್ಕೇ ತಾವೇ ಅಪ್ರಸ್ತುತವಾಗುತ್ತಿವೆ. ಕಳೆದ ಹತ್ತು ವರ್ಷಗಳಿಂದಲೂ ಯಾವ ಹಗರಣದ ಬಗ್ಗೆಯೂ ಚರ್ಚೆಯಾಗಿಲ್ಲ. ಪ್ರೊಫೈಲ್‌, ನೋಟು ಅಮಾನೀಕರಣ, ಪಿಎಂ ಕೇಸ್‌‍, ಚೀನಾ ಗಡಿ ಒತ್ತುವರಿ ಸೇರಿ ಯಾವ ವಿಚಾರಗಳು ಮಾಧ್ಯಮಗಳ ಚರ್ಚೆಯ ವಸ್ತುವಾಗಿಲ್ಲ. ಕರ್ನಾಟಕ ನಕಲಿ ಸುದ್ದಿಗಳ ಫ್ಯಾಕ್ಟರಿಯಾಗಿದೆ. ಕೆಲವು ಮಾಧ್ಯಮಗಳಂತೂ ಜನರ ಬೌದ್ಧಿಕತೆ ಮೇಲೆಯೇ ದಾಳಿ ಮಾಡಿವೆ. ಹೀಗಾಗಿ ಜನರೂ ಕೂಡ ಮಾಧ್ಯಮಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದು ನಿಂತಿದೆ ಎಂದು ಹೇಳಿದರು. +ನಕಲಿ ಸುದ್ದಿಗಳ ಬಗ್ಗೆ ಪಠ್ಯಕ್ರಮದಲ್ಲಿ ವಿಷಯ ಅಳವಡಿಕೆಯಾಗಬೇಕು. ರಾಜ್ಯದ ಮಾಧ್ಯಮ ಸಂಸ್ಥೆಯವರು ಎಚ್ಚೆತ್ತುಕೊಳ್ಳಬೇಕು. ಇಲ್ಲವಾದರೆ ಅಪಾಯಕಾರಿ ಪರಿಸ್ಥಿತಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಬೇಕಾಗುತ್ತದೆ ಎಂದರು. +ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ವಾರ್ತಾ ಇಲಾಖೆ ಆಯುಕ್ತ ಸೂರಳ್ಕರ್‌ ವಿಕಾಸ್‌‍ ಕಿಶೋರ್‌, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌, ಪ್ರೆಸ್‍ ಕ್ಲಬ್‌ ಅಧ್ಯಕ್ಷ ಆರ್‌.ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು. \ No newline at end of file diff --git a/eesanje/url_46_91_10.txt b/eesanje/url_46_91_10.txt new file mode 100644 index 0000000000000000000000000000000000000000..79ec6cb6d662eb7cf161a76df19f5264eaf3e75e --- /dev/null +++ b/eesanje/url_46_91_10.txt @@ -0,0 +1,9 @@ +ಗೋಬಿ-ಕಬಾಬ್‌ ನಂತರ ಈಗ ಶವರ್ಮಾ ಬ್ಯಾನ್‌ ಮಾಡಲು ರಾಜ್ಯ ಸರ್ಕಾರ ಚಿಂತನೆ +ಬೆಂಗಳೂರು,ಜೂ.30-ಗೋಬಿ ಮಂಚೂರಿ ಹಾಗೂ ಕಬಾಬ್‌ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್‌ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್‌ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ. +ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್‌ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. +ಮಾಧ್ಯಮಗಳಲ್ಲಿ ಶವರ್ಮಾ ಸೇವಿಸಿ ಫುಡ್‌ ಪಾಯ್ಸನ್‌ ಆಗಿರುವ ಕುರಿತು ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೋರೇಷನ್‌ ವ್‌ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶವರ್ಮಾದ ಆಹಾರ ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸಲಾಗಿದೆ. +ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತವಾಗಿದ್ದರೆ 8 ಮಾದರಿಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ ಕಂಡು ಬಂದಿರುವುದರಿಂದ ಅಸುರಕ್ಷಿತ ಎಂದು ನಿರ್ಧರಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದೆ. +ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ. +ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ ಉದ್ದಿಮೆಗೆ ಎಫ್‌ಎಸ್‌‍ಎಸ್‌‍ಎಐ ನೋಂದಣಿ ಅಥವಾ ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ ವ್ಯಾಪಾರ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ. ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ. +ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_46_91_11.txt b/eesanje/url_46_91_11.txt new file mode 100644 index 0000000000000000000000000000000000000000..5d028e4922c5db1292d51fee1d387a363c348bff --- /dev/null +++ b/eesanje/url_46_91_11.txt @@ -0,0 +1,9 @@ +ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದ ಡಿಕೆಶಿ +ಬೆಂಗಳೂರು,ಜೂ30– ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭೇಟಿ ನೀಡಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.ದೆಹಲಿ ಪ್ರವಾಸದಲ್ಲಿರುವ ಅವರು, ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ನಡೆಯುವ ಉಪಚುನಾವಣೆಗಳ ಸಿದ್ಧತೆ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ. +ಜೊತೆಗೆ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಕುರಿತು ರಾಜ್ಯದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಕಡಿವಾಣ ಹಾಕುವಂತೆ ಮನವಿ ಮಾಡಿದ್ದಾರೆ.ವಿಧಾನಸಭೆ ಚುನಾವಣೆಯ ಬಳಿಕ ಸರ್ಕಾರ ರಚನೆ ವೇಳೆ ಹೈಕಮಾಂಡ್‌ ನಾಯಕರ ಜೊತೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರು ರಹಸ್ಯ ಚರ್ಚೆ ನಡೆಸಿದ್ದು, ಅನಂತರ ಸರ್ಕಾರ ರಚನೆಯಾಗಿದೆ. ಸುಗಮವಾದ ಆಡಳಿತ ನಡೆಯುತ್ತಿದೆ. +ಇದರ ನಡುವೆ ಅಪ್ರಚೋದಿತವಾಗಿ ಸಿದ್ದರಾಮಯ್ಯ ಅವರ ಬಣದ ನಾಯಕರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದಾರೆ.ಮತ್ತೊಂದೆಡೆ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಮುಖ್ಯಮಂತ್ರಿ ಬದಲಾವಣೆ ಅಥವಾ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿ ಗೊಂದಲವುಂಟು ಮಾಡುತ್ತಿದ್ದಾರೆ. +ಪರಸ್ಪರ ಈ ಗೊಂದಲಗಳಿಂದಾಗಿ ಪಕ್ಷದಲ್ಲಿ ಭಿನ್ನಮತ ಹಾಗೂ ಗುಂಪುಗಾರಿಕೆ ತಲೆದೋರುವಂತಾಗಿವೆ. ಆರಂಭದಿಂದಲೂ ಮುಖ್ಯಮಂತ್ರಿಯವರ ಜೊತೆ ಸೌಹಾರ್ದಯುತವಾದ ಸಂಬಂಧ ರೂಢಿಸಿಕೊಂಡಿರುವ ಡಿ.ಕೆ.ಶಿವಕುಮಾರ್‌ ಆಡಳಿತಕ್ಕೆ ಹೆಗಲಾಗಿದ್ದಾರೆ.ಇದರ ನಡುವೆ ಅನಪೇಕ್ಷಣೀಯವಾಗಿ ಹೇಳಿಕೆಗಳು ಹೊರಬರುತ್ತಿರುವುದು ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಮುಜುಗರ ಉಂಟುಮಾಡುತ್ತಿದೆ ಹಾಗೂ ಕಾರ್ಯಕರ್ತರಲ್ಲೂ ಗೊಂದಲ ಹುಟ್ಟುಹಾಕುತ್ತಿದೆ. +ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಾಗದಂತೆ ಕಡಿವಾಣ ಹಾಕಲು ಡಿ.ಕೆ.ಶಿವಕುಮಾರ್‌ರವರು ಮಲ್ಲಿಕಾರ್ಜುನ ಖರ್ಗೆಯವರ ಬಳಿ ಮನವಿ ಮಾಡಿದ್ದಾರೆ. +ಲೋಕಸಭಾ ಚುನಾವಣೆಗೂ ಮುನ್ನ ಇದೇ ರೀತಿಯ ಚರ್ಚೆಗಳು ನಡೆದಾಗ ಮಧ್ಯಪ್ರವೇಶಿಸಿದ ಮಲ್ಲಿಕಾರ್ಜುನ ಖರ್ಗೆಯವರು, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾವನೆಗಳಿಲ್ಲ. ಈ ಕುರಿತು ಚರ್ಚೆಗಳು ಅನಗತ್ಯ ಎಂದು ಸ್ಪಷ್ಟಪಡಿಸಿದರು. ಅದರ ಪ್ರಯುಕ್ತ ಎಲ್ಲಾ ಚರ್ಚೆಗಳಿಗೆ ಬ್ರೇಕ್‌ ಬಿದ್ದಿತ್ತು. ಚುನಾವಣೆ ಬಳಿಕ ಮತ್ತೆ ಚರ್ಚೆಗಳು ಆರಂಭವಾಗಿವೆ. +ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಂತದಲ್ಲಿ ಇಂತಹ ಚರ್ಚೆಗಳು ಗೊಂದಲ ಉಂಟುಮಾಡಬಹುದು ಎಂಬ ಆತಂಕ ಕಾಡಲಾರಂಭಿಸಿದೆ. ಅದಕ್ಕಾಗಿ ಡಿ.ಕೆ.ಶಿವಕುಮಾರ್‌ ಹೈಕಮಾಂಡ್‌ ಮೊರೆ ಹೋಗಿದ್ದು, ಗೊಂದಲ ಉಂಟುಮಾಡುವ ಯಾವುದೇ ಹೇಳಿಕೆಗಳನ್ನು ನೀಡದಂತೆ ರಾಜ್ಯ ಸಚಿವರು ಹಾಗೂ ನಾಯಕರಿಗೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ. +ಚನ್ನಪಟ್ಟಣ, ಶಿಗ್ಗಾವು ಮತ್ತು ಸಂಡೂರು ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಹಾಗೂ ಮತ್ತಿತರ ವಿಚಾರಗಳ ಬಗ್ಗೆಯೂ ಖರ್ಗೆಯವರೊಂದಿಗೆ ಡಿ.ಕೆ.ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ. \ No newline at end of file diff --git a/eesanje/url_46_91_12.txt b/eesanje/url_46_91_12.txt new file mode 100644 index 0000000000000000000000000000000000000000..33d135e2c0ce38cec0839b9bac2cd14f40d29e37 --- /dev/null +++ b/eesanje/url_46_91_12.txt @@ -0,0 +1,18 @@ +ನಾಳೆಯಿಂದ ದೇಶದಲ್ಲಿ 3 ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿ, ಇಲ್ಲಿದೆ ಹೆಚ್ಚಿನ ಮಾಹಿತಿ +ನವದೆಹಲಿ,ಜೂ.30 –ಭಾರತದ ಆಡಳಿತ ವ್ಯವಸ್ಥೆ ಹೊಸ ಸ್ವರೂಪ ನೀಡುವ ನಿಟ್ಟಿನಲ್ಲಿ ಹಳೆಯ ಕಾನೂನುಗಳಿಗೆ ಮಹತ್ತರ ಬದಲಾವಣೆ ಮಾಡಿ ರೂಪಿಸಲಾಗಿರುವ ಭಾರತೀಯ ನ್ಯಾಯ ಸಂಹಿತಾ (ಬಿಎನ್‌‍ಎಸ್‌‍), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌‍ಎಸ್‌‍ಎಸ್‌‍), ಭಾರತೀಯ ಸಾಕ್ಷಿ ಅಧಿನಿಯಮ (ಬಿಎಸ್‌‍ಎ) ಕಾನೂನುಗಳು ನಾಳೆಯಿಂದ (ಜುಲೈ 1 ರಿಂದ ) ದೇಶಾದ್ಯಂತ ಜಾರಿಗೆ ಬರಲಿದೆ. +ಹೊಸ ಕಾನೂನುಗಳನ್ನು 2023ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈಚೆಗೆ ಈ ಕಾಯ್ದೆಗಳಿಗೆ ಸಹಿ ಹಾಕಿದ್ದರು. ಮುಂದಿನ ವಾರದಿಂದ ಹೊಸ ಅಪರಾಧ ಕಾನೂನುಗಳನ್ನು ಜಾರಿಗೆ ತರಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣ ಸಜ್ಜಾಗಿವೆ. +ಕಳೆದ ವರ್ಷ ಆಗಸ್ಟ್‌ನಲ್ಲಿ ಸಂಸತ್ತಿನ ಉಭಯ ಸದನಗಳಾದ ಲೋಕಸಭಾ ಹಾಗೂ ರಾಜ್ಯಸಭೆಯಲ್ಲಿ ಪರಿಚಯಿಸಲಾದ ಈ ಕಾನೂನುಗಳು ಕ್ರಮವಾಗಿ ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ , ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಿಸುತ್ತವೆ. +ಇವುಗಳ ಪ್ರಚಾರಕ್ಕಾಗಿ 40 ಲಕ್ಷ ಕಾರ್ಯಕರ್ತರು, 5.65 ಲಕ್ಷ ಪೊಲೀಸ್‌‍ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿತ್ತು.ಹೊಸ ಕಾನೂನುಗಳ ಜಾರಿ ಮತ್ತು ಮಾಹಿತಿಯ ವಿಚಾರದಲ್ಲಿ ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ನಿರಂತರ ಸಭೆಗಳನ್ನು ನಡೆಸಿದೆ. +ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ವೆಬಿನಾರ್ಗಳ ಮೂಲಕ ಹೊಸ ಕಾನೂನುಗಳ ಬಗ್ಗೆ ಮಾಹಿತಿ ನೀಡಿದೆ. ಇದಕ್ಕಾಗಿ ಸುಮಾರು 40 ಲಕ್ಷ ತಳಮಟ್ಟದ ಕಾರ್ಯಕರ್ತರನ್ನು ಬಳಸಿಕೊಂಡಿದೆ.ಕಾನೂನು ವ್ಯವಹಾರಗಳ ಇಲಾಖೆಯು ದೆಹಲಿಯಲ್ಲಿ ನಾಲ್ಕು ಸಮೇಳನಗಳನ್ನು ನಡೆಸಿದೆ. ಇದರಲ್‌‍ಗ ಭಾರತದ ಮುಖ್ಯ ನ್ಯಾಯಾಧೀಶರು, ಸುಪ್ರೀಂ ಕೋರ್ಟ್‌ ಮತ್ತು ಹೈಕೋಟ್ರ್ಗಳ ನ್ಯಾಯಾಧೀಶರು ಮತ್ತು ಕಾನೂನು ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. +ಉನ್ನತ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗವು 1,200 ವಿಶ್ವವಿದ್ಯಾನಿಲಯಗಳು ಮತ್ತು 40 ಸಾವಿರ ಕಾಲೇಜುಗಳಲ್ಲಿ ಪ್ರಚುರಪಡಿಸಿದೆ.ಭಾರತೀಯ ನ್ಯಾಯ ಸಂಹಿತಾ 163 ವರ್ಷಗಳ ಹಳೆಯ ಐಪಿಸಿ ಅನ್ನು ಬದಲಿಸುತ್ತದೆ, ದಂಡ ಕಾನೂನಿನಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುತ್ತದೆ. ಲೈಂಗಿಕ ಅಪರಾಧಗಳು ಕಠಿಣ ಕ್ರಮಗಳನ್ನು ನೋಡುತ್ತವೆ, ಅದನ್ನು ಪೂರೈಸುವ ಉದ್ದೇಶವಿಲ್ಲದೆ ಮದುವೆಗೆ ಭರವಸೆ ನೀಡುವ ಮೂಲಕ ಮೋಸದ ಲೈಂಗಿಕ ಸಂಭೋಗದಲ್ಲಿ ತೊಡಗುವವರಿಗೆ ಕಾನೂನು ಹತ್ತು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸುತ್ತದೆ. ಉದ್ಯೋಗ, ಬಡ್ತಿ ಅಥವಾ ಮದುವೆಗೆ ಸಂಬಂಧಿಸಿದ ಸುಳ್ಳು ಭರವಸೆಗಳನ್ನು ಒಬ್ಬರ ಗುರುತನ್ನು ಮರೆಮಾಚುವ ಮೂಲಕ ಹೊಸ ಕಾನೂನು ಮೋಸವನ್ನು ಸಹ ಪರಿಹರಿಸುತ್ತದೆ. +ಸಂಘಟಿತ ಅಪರಾಧವು ಈಗ ಸಮಗ್ರ ಕಾನೂನು ಪರಿಶೀಲನೆಯನ್ನು ಎದುರಿಸುತ್ತಿದೆ, ಇದು ಕಾನೂನುಬಾಹಿರ ಚಟುವಟಿಕೆಗಳ ವಿಶಾಲ ವ್ಯಾಪ್ತಿಯನ್ನು ಒಳಗೊಂಡಿದೆ. ಅಪಹರಣ, ದರೋಡೆ, ವಾಹನ ಕಳ್ಳತನ, ಸುಲಿಗೆ, ಭೂ ಕಬಳಿಕೆ, ಗುತ್ತಿಗೆ ಹತ್ಯೆ, ಆರ್ಥಿಕ ಅಪರಾಧಗಳು, ಸೈಬರ್‌ ಅಪರಾಧಗಳು ಮತ್ತು ವ್ಯಕ್ತಿಗಳ ಕಳ್ಳಸಾಗಣೆ, ಔಷಧಗಳು, ಶಸ್ತ್ರಾಸ್ತ್ರಗಳು, ಅಥವಾ ಅಕ್ರಮ ಸರಕುಗಳು ಅಥವಾ ಸೇವೆಗಳು ಸೇರಿವೆ. +ವೇಶ್ಯಾವಾಟಿಕೆ ಅಥವಾ ಸುಲಿಗೆಗಾಗಿ ಮಾನವ ಕಳ್ಳಸಾಗಣೆ, ಸಂಘಟಿತ ಅಪರಾಧ ಸಿಂಡಿಕೇಟ್‌‍ಗಳ ಸದಸ್ಯರಾಗಿ ಅಥವಾ ಅಂತಹ ಸಿಂಡಿಕೇಟ್‌ಗಳ ಪರವಾಗಿ ಸಂಗೀತ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ವ್ಯಕ್ತಿಗಳು ಅಥವಾ ಗುಂಪುಗಳು ನಡೆಸಿದರೆ, ತೀವ್ರವಾದ ದಂಡವನ್ನು ಎದುರಿಸಬೇಕಾಗುತ್ತದೆ. +ಹಿಂಸಾಚಾರ, ಬೆದರಿಕೆ, ಬೆದರಿಕೆ, ದಬ್ಬಾಳಿಕೆ, ಅಥವಾ ನೇರ ಅಥವಾ ಪರೋಕ್ಷ ವಸ್ತು ಲಾಭಕ್ಕಾಗಿ ಇತರ ಕಾನೂನುಬಾಹಿರ ವಿಧಾನಗಳ ಮೂಲಕ ಕಾರ್ಯಗತಗೊಳಿಸಲಾದ ಈ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ1973 ರ ಕ್ರಿಮಿನಲ್‌ ಪ್ರೊಸೀಜರ್‌ ಕೋಡ್‌ (ಸಿಆರ್‌ ಪಿ ಸಿ) ಅನ್ನು ಬದಲಿಸಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾರ್ಯವಿಧಾನದ ಕಾನೂನಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತದೆ. +ಒಂದು ಗಮನಾರ್ಹವಾದ ನಿಬಂಧನೆಯು ವಿಚಾರಣಾಧೀನ ಕೈದಿಗಳಿಗೆ, ಜೀವಾವಧಿ ಶಿಕ್ಷೆ ಅಥವಾ ಬಹು ಆರೋಪಗಳನ್ನು ಹೊಂದಿರುವ ಪ್ರಕರಣಗಳನ್ನು ಹೊರತುಪಡಿಸಿ, ಮೊದಲ ಬಾರಿಗೆ ಅಪರಾಧಿಗಳು ತಮ್ಮ ಗರಿಷ್ಠ ಶಿಕ್ಷೆಯ ಮೂರನೇ ಒಂದು ಭಾಗವನ್ನು ಪೂರೈಸಿದ ನಂತರ ಜಾಮೀನು ಪಡೆಯಲು ಅವಕಾಶ ಮಾಡಿಕೊಡುತ್ತದೆ, ಇದು ಅಂಡರ್‌ ಟ್ರಯಲ್‌‍ಗಳು ಕಡ್ಡಾಯ ಜಾಮೀನಿಗೆ ಅರ್ಹತೆ ಪಡೆಯುವುದು ಕಷ್ಟಕರವಾಗಿದೆ. .ಫೋರೆನ್ಸಿಕ್‌ ತನಿಖೆಯು ಈಗ ಕನಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗುವ ಅಪರಾಧಗಳಿಗೆ ಕಡ್ಡಾಯವಾಗಿದೆ, ಫೋರೆನ್ಸಿಕ್‌ ತಜ್ಞರು ಅಪರಾಧದ ದೃಶ್ಯಗಳಲ್ಲಿ ಸಾಕ್ಷ್ಯವನ್ನು ಸಂಗ್ರಹಿಸುತ್ತಾರೆ ಮತ್ತು ದಾಖಲಿಸುತ್ತಾರೆ ಎಂದು ಖಚಿತಪಡಿಸಿಕೊಳ್ಳುತ್ತಾರೆ. +ಒಂದು ರಾಜ್ಯವು ವಿಧಿವಿಜ್ಞಾನ ಸೌಲಭ್ಯವನ್ನು ಹೊಂದಿಲ್ಲದಿದ್ದರೆ, ಅದು ಇನ್ನೊಂದು ರಾಜ್ಯದಲ್ಲಿ ಸೌಲಭ್ಯವನ್ನು ಬಳಸುತ್ತದೆ.ಭಾರತೀಯ ಸಾಕ್ಷಿ ಅಧಿನಿಯಮ್‌ಭಾರತೀಯ ಸಾಕ್ಷಿ ಅಧಿನಿಯಮ್‌ (ಬಿಎಸ್‌‍ ಎ), ಎವಿಡೆನ್‌್ಸ ಆಕ್ಟ್‌ ಬದಲಿಗೆ, ನಿರ್ಣಾಯಕ ನವೀಕರಣಗಳನ್ನು ಪರಿಚಯಿಸುತ್ತದೆ,ಹೊಸ ಮಸೂದೆಯು ಎಲೆಕ್ಟ್ರಾನಿಕ್‌ ಪುರಾವೆಗಳ ಮೇಲಿನ ನಿಯಮಗಳನ್ನು ಸರಳಗೊಳಿಸುತ್ತದೆ ಮತ್ತು ದ್ವಿತೀಯ ಸಾಕ್ಷ್ಯದ ವ್ಯಾಪ್ತಿಯನ್ನು ವಿಸ್ತರಿಸುತ್ತದೆ. ಇದು ಎಲೆಕ್ಟ್ರಾನಿಕ್‌ ದಾಖಲೆಗಳಿಗಾಗಿ ವಿವರವಾದ ಬಹಿರಂಗಪಡಿಸುವಿಕೆಯ ಸ್ವರೂಪಗಳ ಅಗತ್ಯವಿದೆ, ಕೇವಲ ಅಫಿಡವಿಟ್‌ಗಳನ್ನು ಮೀರಿ ಚಲಿಸುತ್ತದೆ. +ಇದು ಎಲೆಕ್ಟ್ರಾನಿಕ್‌ ದಾಖಲೆಗಳ ವಿಷಯಗಳ ನೈಜತೆಯ ಬಗ್ಗೆ ಕೇವಲ ಅಫಿಡವಿಟ್‌ ಮತ್ತು ಸ್ವಯಂ-ಘೋಷಣೆಯಿಂದ ನಿಯಂತ್ರಿಸಲ್ಪಡುವ ಪ್ರಮಾಣಪತ್ರದ ವಿವರವಾದ ಬಹಿರಂಗಪಡಿಸುವಿಕೆಯ ಸ್ವರೂಪವನ್ನು ಸೂಚಿಸುತ್ತದೆ. ದ್ವಿತೀಯ ಸಾಕ್ಷ್ಯದ ವಾಖ್ಯಾನವನ್ನು ವಿಸ್ತರಿಸಲಾಗಿದೆ ಮತ್ತು ಬಿಲ್‌ ಲಿಖಿತ ಪ್ರವೇಶಗಳನ್ನು ದ್ವಿತೀಯ ಸಾಕ್ಷಿಯಾಗಿ ಪರಿಗಣಿಸುವ ಮೂಲಕ ಎವಿಡೆನ್ಸ್ ಆಕ್ಟ್‌ ಲೋಪ ದೋಷವನ್ನು ಪ್ಲಗ್‌ ಮಾಡುತ್ತದೆ. +ಆನ್‌ ಲೈನ್‌ ನಲ್ಲಿ ದೂರು ನೀಡಲು ಅವಕಾಶ ಯಾವುದೇ ವ್‌ಯಕ್ತಿಯು ದೈಹಿಕವಾಗಿ ಪೊಲೀಸ್‌‍ ಠಾಣೆಗೆ ತೆರಳಿ ದೂರು ನೀಡುವ ಅಗತ್ಯವಿಲ್ಲ. ಎಲೆಕ್ಟ್ರಾನಿಕ್‌ ಸಂವಹನದ ಮೂಲಕ ವಿಷಯದ ಮಾಹಿತಿ ನೀಡಬಹುದು. ಇದು ಸುಲಭ ಮತ್ತು ತ್ವರಿತವಾಗಿ ವರದಿ ಮಾಡಲು ಅನುವು ನೀಡುತ್ತದೆ. ಪೊಲೀಸರಿಂದ ತ್ವರಿತ ಕ್ರಮವೂ ಸಿಗಲಿದೆ. (ಬಿಎನ್‌‍ಎಸ್‌‍ಎಸ್‌‍ 173 ಸೆಕ್ಷನ್‌‍)ಯಾವುದೇ ಪೊಲೀಸ್‌‍ ಠಾಣೆಯಲ್ಲಿ ವ್‌ಯಕ್ತಿಯು ಎಫ್‌‍ಐಆರ್‌ ದಾಖಲಿಸಬಹುದು. ಇದು ಕಾನೂನು ಪ್ರಕ್ರಿಯೆಗಳನ್ನು ಶೀಘ್ರವಾಗಿಸುತ್ತದೆ. +ಎಫ್‌‍ಐಆರ್‌ನ ಉಚಿತ ಪ್ರತಿ:ದೂರುದಾರರು ಮತ್ತು ಸಂತ್ರಸ್ತರು ಎಫ್‌‍ಐಆರ್ನ ಪ್ರತಿಯನ್ನು ಉಚಿತವಾಗಿ ಪಡೆಯಲಿದ್ದಾರೆ. ಅಪರಾಧದಲ್ಲಿ ತಮ್ಮ ಭಾಗವಹಿಸುವಿಕೆಯನ್ನು ತಿಳಿದುಕೊಳ್ಳಬಹುದು. (ಬಿಎನ್‌‍ಎಸ್‌‍ಎಸ್‌‍ 173 ಸೆಕ್ಷನ್‌‍)ತ್ವರಿತಗತಿ ತನಿಖೆಗಳು ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿವೆ. ಮಾಹಿತಿಯನ್ನು ದಾಖಲಿಸಿದ ಎರಡು ತಿಂಗಳೊಳಗೆ ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸುತ್ತದೆ. +ಮುಖ್ಯ ಬದಲಾವಣೆ : +*ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌‍)- ಹಿಂದಿನ 511 ಸೆಕ್ಷನ್‌ಗಳ ಬದಲಾಗಿ ಈಗ 358 ಸೆಕ್ಷನ್‌ಗಳನ್ನು ಒಳಗೊಂಡಿದೆ.*20 ಹೊಸ ಅಪರಾಧಗಳು ಸೇರಿಸಲ್ಪಟ್ಟಿವೆ.*33 ಅಪರಾಧಗಳ ಶಿಕ್ಷೆಯ ಅವಧಿ ಹೆಚ್ಚಿಸಲಾಗಿದೆ.*83 ಅಪರಾಧಗಳಲ್ಲಿ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ.*23 ಅಪರಾಧಗಳಿಗೆ ಕಡ್ಡಾಯ ಕನಿಷ್ಟ ಶಿಕ್ಷೆಯನ್ನು ಪರಿಚಯಿಸಲಾಗಿದೆ.*19 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.*ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌‍ಎಸ್‌‍)- ಹಿಂದಿನ 484 ಸೆಕ್ಷನ್‌ಗಳ ಬದಲಾಗಿ ಹೊಸ ಕಾನೂನು 531 ಸೆಕ್ಷನ್‌ಗಳನ್ನು ಒಳಗೊಂಡಿದೆ.*177 ಕಲಂಗಳನ್ನು ಬದಲಾಯಿಸಲಾಗಿದೆ ಮತ್ತು 9 ಸೆಕ್ಷನ್‌ಗಳನ್ನು ಸೇರಿಸಲಾಗಿದೆ.*44 ಹೊಸ ಕಲಂಗಳು ಮತ್ತು ಸ್ಪಷ್ಟೀಕರಣಗಳನ್ನು ಸೇರಿಸಲಾಗಿದೆ.*35 ಸೆಕ್ಷನ್‌ಗಳಲ್ಲಿ ಸಮಯ ನಿರ್ಧಾರ ಮತ್ತು ಆಡಿಯೋ-ವಿಡಿಯೋ ವ್ಯವಸ್ಥೆಯನ್ನು ಸೇರಿಸಲಾಗಿದೆ.*14 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.*ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್‌‍ಎ)- ಹೊಸ ಕಾನೂನು ಹಿಂದಿನ 166 ಸೆಕ್ಷನ್‌ಗಳ ಬದಲು 170 ಸೆಕ್ಷನ್‌ಗಳನ್ನು ಒಳಗೊಂಡಿದೆ. +*24 ಕಲಂಗಳನ್ನು ಬದಲಾಯಿಸಲಾಗಿದೆ.*2 ಹೊಸ ಕಲಂಗಳು ಮತ್ತು 6 ಉಪಕಲಂಗಳನ್ನು ಸೇರ್ಪಡೆ ಮಾಡಲಾಗಿದೆ.*6 ಸೆಕ್ಷನ್‌ಗಳನ್ನು ರದ್ದುಪಡಿಸಲಾಗಿದೆ.ಈ ಹೊಸ ಕಾನೂನುಗಳು ಅಪರಾಧ, ನ್ಯಾಯ ಮತ್ತು ಸಾಕ್ಷ್ಯಾಧಾರಗಳ ವ್ಯವಹಾರಗಳನ್ನು ಸುಧಾರಿಸಲು ತ್ವರಿತ ನ್ಯಾಯ ನೀಡಲು ಸಹಕರಿಸಲಿವೆ. \ No newline at end of file diff --git a/eesanje/url_46_91_2.txt b/eesanje/url_46_91_2.txt new file mode 100644 index 0000000000000000000000000000000000000000..e634b2a5f39bcc874165ead61d4f215ab3c153d2 --- /dev/null +++ b/eesanje/url_46_91_2.txt @@ -0,0 +1,7 @@ +ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್ +ಹಾಸನ, ಜೂ.1-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೂಲತಃ ಹಾಸನ ಹೊರವಲಯದ ಚನ್ನಪಟ್ಟಣದ ನಿವಾಸಿ ಮಮತಾ(38) ಕೊಲೆಯಾದ ಮಹಿಳೆ. ಕೆ.ಆರ್.ಪುರಂನ ಲೋಕನಾಥ್ನನ್ನು 17 ವರ್ಷದ ಹಿಂದೆ ಮಮತಾ ಪ್ರೀತಿಸಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. +ಹಲವು ತಿಂಗಳುಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತಿತ್ತು. ಇದರಿಂದ ಮನನೊಂದಿದ್ದ ಪತ್ನಿ ಮಮತಾ ಪತಿ ಲೋಕನಾಥ್ ವಿರುದ್ಧ ಎಸ್ಪಿಗೆ ದೂರು ನೀಡಲು ಇಂದು ಬೆಳಗ್ಗೆ ಕಚೇರಿ ಬಳಿ ಹೋಗಿದ್ದರು.ಪತ್ನಿ ಎಸ್ಪಿ ಕಚೇರಿ ಬಳಿ ಬಂದಿದ್ದಾಳೆಂದು ಕೋಪಗೊಂಡ ಲೋಕನಾಥ್, ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಎದೆಗೆ ಇರಿದು ಪರಾರಿಯಾಗಿದ್ದನು. +ರಕ್ತದ ಮಡುವಿನಲ್ಲೇ ಎಸ್ಪಿ ಕಚೇರಿಗೆ ಒಳಗೆ ಹೋದ ಮಮತಾ ಕುಸಿದು ಬಿದ್ದಿದ್ದಾರೆ. ತಕ್ಷಣ ಕಚೇರಿಯಲ್ಲಿದ್ದ ಸಿಬ್ಬಂದಿ ಮಮತ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತ್ತಾದರೂ ಕೆಲ ಹೊತ್ತಿನಲ್ಲೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಆರೋಪಿ ಪತಿ ಲೋಕನಾಥ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. +ಫೋಷಕರ ಆಕ್ರಂದನ: ಮಗಳ ಸಾವಿಗೆ ಅಳಿಯನೇ ಕಾರಣ. ಆತನಿಗೆ ಕಠಿಣ ಶಿಕ್ಷೆಯಾಗಬೇಕು. ಆಸ್ತಿ, ಸೈಟ್, ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದ ಎಂದು ಮಾವ ಶಾಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಅಳಿಯ ಲೋಕನಾಥ ತಮ ಮಗಳ ಮೇಲೆ ದೈಹಿಕ ಹಲ್ಲೆ ಮಾಡಿದ್ದಾನೆ. ಕಿರುಕುಳ ಕೊಟ್ಟರೂ ಸಹ ಮಗಳು ಸಹಿಸಿಕೊಂಡಿದ್ದಳು. ಇದೀಗ ಅವಳ ಸಾವು ನೋಡುವಂತಾಯಿತು ಎಂದು ಮಮತಾ ತಾಯಿ ಕಣ್ಣೀರು ಹಾಕಿದ್ದಾರೆ. +ಕೌಟುಂಬಿಕ ಕಲಹ:ಈ ಬಗ್ಗೆ ಎಸ್ಪಿ ಮೊಹಮದ್ ಸುಜಿತಾ ಮಾಧ್ಯಮದೊಂದಿಗೆ ಮಾತನಾಡಿ, ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಜಗಳವಾಗಿತ್ತು ಎಂದು ಗೊತ್ತಾಗಿದೆ. ಇಂದು ಬೆಳಗ್ಗೆ ಮಮತಾ ಅವರು ದೂರು ನೀಡಲು ಬಂದಿದ್ದಾಗ ಕಚೇರಿ ಎದುರು ಘಟನೆ ನಡೆದು ಹೋಗಿದೆ. ಪತಿ ಲೋಕನಾಥ್ನನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_91_3.txt b/eesanje/url_46_91_3.txt new file mode 100644 index 0000000000000000000000000000000000000000..b76480c3acad99a5205ef65be8f7d03e66330237 --- /dev/null +++ b/eesanje/url_46_91_3.txt @@ -0,0 +1,13 @@ +ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ : ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಿಜೆಪಿ..? +ಬೆಂಗಳೂರು,ಜು.1-ಸದ್ಯದಲ್ಲೇ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕರೆತರುವ ಪ್ರಯತ್ನ ಸದ್ದಿಲ್ಲದೆ ನಡೆದಿದೆ. +ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ ಸಂಸದ ಬಸವರಾಜ ಬೊಮಾಯಿ ಅವರ ಪುತ್ರ ಭರತ್‌ ಬೊಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸೊಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಶ್ರೀರಾಮುಲು ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ. +ಇನ್ನು ಪಕ್ಷದಲ್ಲಿ ಪ್ರಾಥಮಿಕ ಹಂತದಲ್ಲಿ ಮಾತ್ರ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್‌‍ಗೆ ಠಕ್ಕರ್‌ ಕೊಡಲು ಬಿಜೆಪಿ ರಣತಂತ್ರ ರೂಪಿಸಿದೆ. ಅಂತಿಮವಾಗಿ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕೆಂದು ಸೂಚನೆ ನೀಡಲಾಗಿದೆ. +ಚನ್ನಪಟ್ಟಣಕ್ಕೆ ಅನುಸೂಯ?:ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಭದ್ರಕೋಟೆ ಎಂದು ಹೇಳಲಾಗಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. +ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜತೆಗೆ ಒಕ್ಕಲಿಗ ನಾಯಕರಾದ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ. ಶಿವಕುಮಾರ್‌ರವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯಾಗಿದೆ. +ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ನಿಂದ ಡಿ.ಕೆ.ಶಿವಕುಮಾರ್‌ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ ಎನ್ನಲಾಗುತ್ತಿದೆ.ಈಗಾಗಲೇ ಬೆಂಗಳೂರು ಗ್ರಾಮಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್‌ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ್‌ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. +ಒಂದು ವೇಳೆ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ಹಾಗೂ ಕಾಂಗ್ರೆಸ್‌‍ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌‍ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಅವರ ಪತ್ನಿ ಅನುಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿವೆ. +ಅನಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ. ಒಂದು ವೇಳೆ ಅನುಸೂಯಾ ಅವರನ್ನು ಕಣಕ್ಕಿಳಿಸಿದರೆ ಯಾವೆಲ್ಲ ಪ್ರಯೋಜನಗಳು ಆಗಬಹುದು ಎಂಬ ಬಗ್ಗೆ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಉಭಯ ಪಕ್ಷಗಳ ನಾಯಕರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. +ಈಗಷ್ಟೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದೊಂದಿಗೆ ಎಚ್‌‍.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ರಾಜಿನಾಮೆಯಿಂದ ತೆರವಾಗಿರುವ ಶಾಸಕ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌‍ ಗೆಲುವು ಕಾಣಲೇಬೇಕು. ಕ್ಷೇತ್ರದಲ್ಲಿ ಜೆಡಿಎಸ್‌‍ ಉಳಿಸಿಕೊಳ್ಳುವುದು ಎಚ್‌ಡಿಕೆಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. +ಶ್ರೀರಾಮುಲು, ಭರತ್‌ ಬೊಮಾಯಿಗೆ ಸಿಗಲಿದೆಯೇ ಟಿಕೆಟ್‌?:ಇನ್ನು ಮಾಜಿ ಮುಖ್ಯಮಂತ್ರಿ ಬೊಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿರುವ ಹಿನ್ನಲೆ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಪುತ್ರ ಭರತ್‌ ಬೊಮಾಯಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆದಿದೆ. +ಕುಟುಂಬದವರಿಗೆ ಟಿಕೆಟ್‌ ಕೊಟ್ಟರೆ ಬೊಮಾಯಿ ಅವರೇ ವಿಶೇಷ ಗಮನಹರಿಸಿ ಪುತ್ರನನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತುಕೊಳ್ಳುತ್ತಾರೆ. ಹೀಗಾಗಿ ಅವರನ್ನು ಅಭ್ಯರ್ಥಿ ಮಾಡಬೇಕೆಂಬ ಒತ್ತಡವೂ ಕೇಳಿಬಂದಿದೆ. ಇದೇ ರೀತಿ ಕಳೆದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಎರಡೂ ಚುನಾವಣೆಗಳಲ್ಲಿ ಸೋತು ರಾಜಕೀಯ ಅತಂತ್ರಕ್ಕೆ ಸಿಲುಕಿರುವ ಬಿ.ಶ್ರೀರಾಮುಲು ಮತ್ತೊಮೆ ಅದೃಷ್ಟ ಪರೀಕ್ಷೆಗಿಳಿಯಲು ಹವಣಿಸುತ್ತಿದ್ದಾರೆ. +ಬಳ್ಳಾರಿ ಸಂಸದ ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಮುಲು ಟಿಕೆಟ್‌ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ.ಆದರೆ ಎರಡು ಚುನಾವಣೆಗಳಲ್ಲಿ ಸೋತಿರುವ ಶ್ರೀರಾಮುಲ ಬದಲಿಗೆ ತಮ ಆಪ್ತ ಕೆ.ಎಸ್‌‍.ದಿವಾಕರ್‌ ಬಾಬುಗೆ ಟಿಕೆಟ್‌ ಕೊಡಿಸಲು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅಖಾಡಕ್ಕಿಳಿದಿದ್ದಾರೆ. \ No newline at end of file diff --git a/eesanje/url_46_91_4.txt b/eesanje/url_46_91_4.txt new file mode 100644 index 0000000000000000000000000000000000000000..cae903188f9df65fb4d00eedd2aedb478a929969 --- /dev/null +++ b/eesanje/url_46_91_4.txt @@ -0,0 +1,7 @@ +ಕರಾವಳಿ, ಮಲೆನಾಡು ಮುಂದುವರೆದ ಮಳೆ, ಜಲಾಶಯಗಳಿಗೆ ಒಳಹರಿವು ಹೆಚ್ಚಳ +ಬೆಂಗಳೂರು,ಜು.1-ಕರಾವಳಿ, ಮಲೆನಾಡು, ಕೇರಳದ ವೈನಾಡು ಭಾಗದಲ್ಲಿ ಮಳೆ ಮುಂದುವರೆದಿದ್ದು, ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಪ್ರಮುಖ ಜಲಾಶಯವಾದ ಕೆಆರ್‌ಎಸ್‌‍ನಲ್ಲಿ ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. +ಕೊಡಗು, ಚಿಕ್ಕಮಗಳೂರು ಹಾಗೂ ಕೇರಳದಲ್ಲಿ ಭಾರಿ ಮಳೆಯಾದ ಪರಿಣಾಮ ಕೆಆರ್‌ಎಸ್‌‍, ಕಬಿನಿ ಜಲಾಶಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಒಳಹರಿವು ಹೆಚ್ಚಾಗಿತ್ತು. +ಮಳೆ ಕಡಿಮೆಯಾದ ಬೆನ್ನಲ್ಲೇ ಒಳಹರಿವಿನ ಪ್ರಮಾಣ ಇಳಿಕೆಯಾಗಿದೆ. ಕೆಆರ್‌ಎಸ್‌‍ ಜಲಾಶಯಕ್ಕೆ 9 ಸಾವಿರ ಕ್ಯೂಸೆಕ್‌್ಸನಷ್ಟು ಒಳಹರಿವು ಇಂದು ಇತ್ತು. ಮತ್ತೆ ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಹೆಚ್ಚಳವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಹೀಗಾಗಿ ಇನ್ನಷ್ಟು ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. +ಗರಿಷ್ಠ 49.452 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಕೆಆರ್‌ಎಸ್‌‍ ಜಲಾಶಯದಲ್ಲಿ ಪ್ರಸ್ತುತ 19.487 ಟಿಎಂಸಿ ನೀರಿದೆ. ನಿನ್ನೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್‌್ಸನಷ್ಟು ಒಳಹರಿವು ಇತ್ತು. ಜಲಾಶಯದಿಂದ 500 ಕ್ಕೂ ಹೆಚ್ಚು ಕ್ಯೂಸೆಕ್ಸ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. +ಹವಾಮಾನದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಹಾಗೂ ಅರಬ್ಬಿಸಮುದ್ರದದಲ್ಲಿ ಟ್ರಪ್‌ ನಿರ್ಮಾಣವಾಗಿದೆ. ಇದು ಕೇರಳದ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ವ್ಯಾಪಕವಾಗಿ ಹರಡಿಕೊಂಡಿರುವುದರಿಂದ ಕೇರಳ, ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. +ದಕ್ಷಿಣ ಹಾಗೂ ಉತ್ತರ ಒಳನಾಡನಲ್ಲ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುವ ಸಂಭವವಿದೆ. ತಂಪಾದ ಮೇಲೈ ಗಾಳಿ ಆಗಾಗ್ಗೆ ಬೀಸುವುದರಿಂದ ಚಳಿಯ ವಾತಾವರಣ ಹೆಚ್ಚಾಗಲಿದೆ. \ No newline at end of file diff --git a/eesanje/url_46_91_5.txt b/eesanje/url_46_91_5.txt new file mode 100644 index 0000000000000000000000000000000000000000..5704adb854a7f5c187b74cbd2eb6df73a94888dd --- /dev/null +++ b/eesanje/url_46_91_5.txt @@ -0,0 +1,6 @@ +ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಆರೋಪ ಮಾಡಿದ ಬಿಜೆಪಿ +ಬೆಂಗಳೂರು,ಜೂ.30-ಅಬಕಾರಿ ಇಲಾಖೆಯಲ್ಲಿ ಬೆಂಗಳೂರು ವ್ಯಾಪ್ತಿಯ ಎಂಟು ಉಪ ಆಯಕ್ತರ ಪೈಕಿ ನಾಲ್ವರನ್ನು ತಮದೇ ಜಾತಿಯ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿರುವುದನ್ನು ರಾಜ್ಯ ಬಿಜೆಪಿ ವಿರೋಧಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಸ್ವಜನ ಪಕ್ಷಪಾತದ ಗಂಭೀರ ಆರೋಪ ಮಾಡಿದೆ. +ಅಬಕಾರಿ ಇಲಾಖೆಯಲ್ಲಿ ಜಾತಿ ತಾರತಮ್ಯ ಮಾಡಲಾಗಿದೆ. ಒಂದೇ ಸಮುದಾಯದ ನಾಲ್ವರಿಗೆ ಸ್ಥಾನಮಾನ ನೀಡಲಾಗಿದೆ. ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ಕೆಲ ಸಚಿವರ ಆಪ್ತರಿಗೆ ಮಣೆ ಹಾಕಲಾಗಿದೆ ಎಂದು ದೂರಿದೆ. +ಈ ಹಿಂದೆಯೂ ರಾಜ್ಯ ಸರ್ಕಾರದ ವಿರುದ್ಧ ಸ್ವಜನಪಕ್ಷಪಾತ ಆರೋಪ ಕೇಳಿಬಂದಿತ್ತು. ಇದೀಗ ಮತ್ತೆ ಸ್ವಜನ ಪಕ್ಷಪಾತ ಆರೋಪ ಕೇಳಿ ಬಂದಿದ್ದು, ಈ ವಿಚಾರವಾಗಿ ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ತಿಳಿಸಿದೆ. +ಅಬಕಾರಿ ಇಲಾಖೆ ಒಂದೇ ಅಲ್ಲ ಇನ್ನಿತರ ಇಲಾಖೆಯಲ್ಲೂ ಸ್ವಜನಪಕ್ಷಪಾತ ನಡೆಯುತ್ತಿದೆ. ಕಾಂಗ್ರೆಸ್‌‍ ಅಂದರೆ ಸ್ವಜನ ಪಕ್ಷಪಾತ. ಗಾಂಧಿ ಕುಟುಂಬವೇ ಇದಕ್ಕೆ ಉದಾಹರಣೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಸಚಿವರು ವರ್ಗಾವಣೆ ದಂಧೆ ಮಾಡುತ್ತಿದ್ದಾರೆ. ಎಲ್ಲ ಇಲಾಖೆಗಳಲ್ಲೂ ವರ್ಗಾವಣೆ ದಂಧೆ ಜೋರಾಗಿದೆ. ಹೀಗಾಗಿ ಸಚಿವರು ತಮ ಸಮುದಾಯದವರಿಗೆ ಸ್ಧಾನಮಾನ ನೀಡುತ್ತಿದ್ದಾರೆ ಎಂದು ಆರೋಪಿಸಿದರು. +ಇತ್ತಿಚೆಗೆ ಇಲಾಖೆಗಳಲ್ಲಿ ಸಿಂಡಿಕೇಟ್‌ಗಳೇ ಇಲಾಖೆಯ ವರ್ಗಾವಣೆಯನ್ನು ನಿರ್ಧಾರ ಮಾಡುತ್ತಾರೆ. ಇದೇ ಸಿಂಡಿಕೇಟ್‌ಗಳೇ ಸಚಿವರ ಮೇಲೂ ಪ್ರಭಾವ ಬೀರುತ್ತಾರೆ. ಸಚಿವರು ವರ್ಗಾವಣೆಯನ್ನು ಹೋಲ್‌ ಸೇಲ್‌ ವ್ಯಾಪಾರ ಮಾಡಿಕೊಂಡಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪ ಮಾಡಿದ್ದಾರೆ. \ No newline at end of file diff --git a/eesanje/url_46_91_6.txt b/eesanje/url_46_91_6.txt new file mode 100644 index 0000000000000000000000000000000000000000..abf3ceb9ed9503a9e8615c30af857327d02e1532 --- /dev/null +++ b/eesanje/url_46_91_6.txt @@ -0,0 +1,3 @@ +ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನ +ಬೆಂಗಳೂರು,ಜೂ.30-ಮಾಜಿ ಮುಖ್ಯಮಂತ್ರಿವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50) ಅನಾರೋಗ್ಯದಿಂದ ನಿಧನವಾಗಿದ್ದಾರೆ.ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. +ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿದ್ದರು. ಜನಾನುರಾಗಿ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. \ No newline at end of file diff --git a/eesanje/url_46_91_7.txt b/eesanje/url_46_91_7.txt new file mode 100644 index 0000000000000000000000000000000000000000..9add23a21720d00c393d6548a3693179b51227d5 --- /dev/null +++ b/eesanje/url_46_91_7.txt @@ -0,0 +1,7 @@ +ಹೈದರಾಬಾದ್‌ ಫಿಲಂ ಸಿಟಿ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಜೂ.30– ವರನಟ ಡಾ.ರಾಜ್‌ಕುಮಾರ್‌ ಅವರ ಕನಸಿನಂತೆ ರಾಜ್ಯದಲ್ಲಿ ಚಿತ್ರನಗರಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಶಿವಾನಂದ ಸರ್ಕಲ್‌ ಬಳಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ತೆಲಂಗಾಣದ ಹೈದರಾಬಾದ್‌ನಲ್ಲಿ ಫಿಲಂ ಸಿಟಿ ಇದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಚಿತ್ರನಗರಿ ನಿರ್ಮಿಸಬೇಕೆಂಬುದು ಡಾ.ರಾಜ್‌ಕುಮಾರ್‌ ಅವರ ಕನಸು. ಬಹಳ ವರ್ಷಗಳಿಂದಲೂ ಇದಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು. +ಈ ಹಿಂದೆ ನಮದೇ ಸರ್ಕಾರ ಮೈಸೂರಿನ ಕಡಕೋಳದ ಹಿಮಾವು ಬಳಿ 100 ಎಕರೆಯನ್ನು ಚಿತ್ರನಗರಿಗಾಗಿ ನೀಡಿದೆ. ಅಲ್ಲಿ ಖಾಸಗಿ ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ಪಿಪಿಪಿ ಮಾದರಿಯಲ್ಲಿ ಸುಸಜ್ಜಿತವಾದ ಫಿಲಂಸಿಟಿ ನಿರ್ಮಿಸಲು ಅಗತ್ಯ ಇರುವ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. +ಚಿತ್ರರಂಗದ ಬೆಳವಣಿಗೆಗೆ ಅಗತ್ಯ ಇರುವ ಎಲ್ಲಾ ಸಹಕಾರಗಳನ್ನು ನಮ ಸರ್ಕಾರ ನೀಡಲಿದೆ. ಸಂಕಷ್ಟದ ಸಂದರ್ಭದಲ್ಲೂ ನಿರ್ಮಾಪಕರು ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಅವರಿಗೆ ಧನ್ಯವಾದಗಳು ಎಂದರು.ಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡಕ್ಕೆ ಈವರೆಗೂ ಸರ್ಕಾರದಿಂದ ಆರ್ಥಿಕ ಸಹಾಯ ಕೇಳಿರಲಿಲ್ಲ. ಈಗಷ್ಟೇ ಕೇಳಿದ್ದಾರೆ. ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು. ಚಿತ್ರರಂಗದ ಅಭಿವೃದ್ಧಿಗೆ ಮೊದಲಿನಿಂದಲೂ ಸರ್ಕಾರ ನೆರವು ನೀಡಲಾಗುತ್ತಿದೆ. ಮುಂದೆ ಕೂಡ ಅದೇ ರೀತಿಯ ಬೆಂಬಲ ಮುಂದುವರೆಯಲಿದೆ ಎಂದು ಹೇಳಿದರು. +ಅನ್ಯಭಾಷೆಗಳ ಮಾದರಿಯಲ್ಲಿ ಕನ್ನಡ ಭಾಷೆಯಲ್ಲೂ ಓಟಿಟಿ ವೇದಿಕೆ ಸೃಷ್ಟಿಸುವ ಬೇಡಿಕೆ ಕುರಿತು ಪರಿಶೀಲಿಸಲಾಗುವುದು. ಸಂಬಂಧಪಟ್ಟವರ ಜೊತೆ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.ಕನ್ನಡ ಭಾಷೆಯ ಚಿತ್ರಗಳಿಗೆ ನಮ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಾಗುವುದು. ರಾಜ್ಯದಲ್ಲಿ ಫಿಲಂಸಿಟಿ ಮಾಡಲೇಬೇಕಿದೆ. ರಾಜ್‌ಕುಮಾರ್‌ ಅವರ ಕನಸನ್ನು ನನಸು ಮಾಡುತ್ತೇವೆ ಎಂದು ಹೇಳಿದರು. +ಕಳೆದ ಎರಡು ದಿನಗಳಿಂದ ತಾವು ದೆಹಲಿಯಲ್ಲಿದ್ದು, ಪ್ರಧಾನಮಂತ್ರಿಯವರು ನಿನ್ನೆ ಸಂಜೆ ಭೇಟಿಗೆ ಸಮಯ ನೀಡಿದ್ದರು. ಅವರನ್ನು ನಿನ್ನೆ ಭೇಟಿ ಮಾಡಿ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ಸಂಪನೂಲ ನೀಡಬೇಕು ಮತ್ತು ಬಾಕಿ ಇರುವ ಆರ್ಥಿಕ ನೆರವನ್ನು ನೀಡಬೇಕು ಎಂದು ಮನವಿ ನೀಡಿದ್ದೇವೆ. ಜೊತೆಗೆ ನೀರಾವರಿ, ಮೆಟ್ರೋ ಸೇರಿದಂತೆ ಹಲವಾರು ಯೋಜನೆಗಳಿಗೆ ನೆರವು ಕೇಳಿ ಪ್ರಧಾನಿಯವರ ಪ್ರಸ್ತಾವನೆ ಮಂಡಿಸಿದ್ದೇವೆ ಎಂದರು. +ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿಯೇ ದೆಹಲಿಯಿಂದ ಆಗಮಿಸಿದ್ದಾಗಿ ಮುಖ್ಯಮಂತ್ರಿ ತಿಳಿಸಿದರು.ರಾಜ್ಯಸಭಾ ಸದಸ್ಯ ಜಗ್ಗೇಶ್‌, ನಟ ಶಿವರಾಜ್‌ಕುಮಾರ್‌, ನಟ ಹಾಗೂ ಸಂಗೀತ ನಿರ್ದೇಶಕ ಸಾಧುಕೋಕಿಲ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ಸಚಿವ ಭೈರತಿ ಸುರೇಶ್‌, ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_91_8.txt b/eesanje/url_46_91_8.txt new file mode 100644 index 0000000000000000000000000000000000000000..912ebdfc6f8b9d8686dcf0ada3bec36586718394 --- /dev/null +++ b/eesanje/url_46_91_8.txt @@ -0,0 +1,6 @@ +ಸಿಎಂ, ಡಿಸಿಎಂ ಹುದ್ದೆಗಳ ಬಗ್ಗೆ ಯಾರೇ ಚರ್ಚೆ ಮಾಡಿದರೂ ಶಿಸ್ತು ಕ್ರಮ : ‘ಕೈ’ಕಮಾಂಡ್‌ ಎಚ್ಚರಿಕೆ +ಬೆಂಗಳೂರು,ಜೂ.30-ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ರಾಜ್ಯದಲ್ಲಿ ಇನ್ನು ಮುಂದೆ ಯಾರೇ ಚರ್ಚೆ ಮಾಡಿದರೂ ಹೈಕಮಾಂಡ್‌ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ರವಾನಿಸಿದೆ.ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಹೈಕಮಾಂಡ್‌ ಜೊತೆ ಚರ್ಚೆ ನಡೆಸಿದ್ದು, ಅದರ ಪ್ರಯುಕ್ತ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಇನ್ನು ಮುಂದೆ ಯಾವುದೇ ಸಚಿವರಾಗಲೀ, ಶಾಸಕರಾಗಲೀ ಹೇಳಿಕೆ ನೀಡಿದರೆ ನೋಟೀಸ್‌‍ ನೀಡುವುದೂ ಸೇರಿದಂತೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೈಕಮಾಂಡ್‌ ಎಚ್ಚರಿಕೆಯ ಸಂದೇಶ ರವಾನಿಸಿದೆ. +ವಿಶೇಷವಾಗಿ ಸಚಿವರು ತಮಗೆ ವಹಿಸಿರುವ ಇಲಾಖೆಗಳ ಜವಾಬ್ದಾರಿಗಳಿಗೆ ಮಾತ್ರವೇ ಮಾಧ್ಯಮಗಳಿಗೆ ಹೇಳಿಕೆ ನೀಡಬೇಕು. ಅದನ್ನು ಹೊರತುಪಡಿಸಿ ಪಕ್ಷದ ವಿಚಾರವಾಗಿ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಶ್ನೆ ಮಾಡಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದ್ದಾರೆ. +ಮುಖ್ಯಮಂತ್ರಿ ಬದಲಾವಣೆ ಕುರಿತು ಡಿ.ಕೆ.ಶಿವಕುಮಾರ್‌ ಆಪ್ತರು ಸೇರಿದಂತೆ ಕೆಲ ಸಚಿವರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಣ ಪದೇಪದೇ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪ್ರಸ್ತಾಪಿಸುತ್ತಲೇ ಬರುತ್ತಿದ್ದಾರೆ. ಇದು ಸಹಜವಾಗಿಯೇ ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿಯವರ ನಡುವೆ ಅನಗತ್ಯವಾಗಿ ಗೊಂದಲದ ವಾತಾವರಣ ಸೃಷ್ಟಿಸುತ್ತಿದೆ. +ಯಾವುದೇ ಹುದ್ದೆಗಳ ಸೃಷ್ಟಿಯ ಬಗ್ಗೆ ಇನ್ನು ಮುಂದೆ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ರಾಜ್ಯನಾಯಕರು ಈ ಬಗ್ಗೆ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಲಾಗಿದೆ. ಅದನ್ನು ಮೀರಿ ಸಚಿವರು, ಶಾಸಕರು ಹೇಳಿಕೆ ನೀಡುವುದನ್ನು ಮುಂದುವರೆಸಿದರೆ ಶಿಸ್ತು ಸಮಿತಿಗೆ ದೂರನ್ನು ರವಾನಿಸಬೇಕಾಗುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ. +ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರತ್ಯೇಕವಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಿಮ ಬೆಂಬಲಿಗರಿಗೆ ಸ್ಪಷ್ಟ ಸೂಚನೆ ಕೊಡಿ, ಯಾವುದೇ ಗೊಂದಲದ ಹೇಳಿಕೆ ಬರದಂತೆ ನೋಡಿಕೊಳ್ಳಿ, ನಾಳೆ ಪಕ್ಷ ಶಿಸ್ತು ಉಲ್ಲಂಘಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದರೆ ಹಿಂಬಾಲಕರು ಎಂಬ ಕಾರಣಕ್ಕೆ ರಕ್ಷಣೆಗೆ ಬರಬೇಡಿ ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_46_91_9.txt b/eesanje/url_46_91_9.txt new file mode 100644 index 0000000000000000000000000000000000000000..966c2fb694973a7edcc3a695a1f3ad975d638de5 --- /dev/null +++ b/eesanje/url_46_91_9.txt @@ -0,0 +1,9 @@ +ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರದಲ್ಲೇ ಸಭೆ : ಸಿಎಂ +ಬೆಂಗಳೂರು,ಜೂ.30– ಕನ್ನಡ ಚಲನಚಿತ್ರರಂಗದ ಬೆಳವಣಿಗೆ ಹಾಗೂ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಶೀಘ್ರದಲ್ಲೇ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಶಿವಾನಂದ ವೃತ್ತದ ಬಳಿ ನಿರ್ಮಿಸಲಾಗಿರುವ ಕನ್ನಡ ಚಲನಚಿತ್ರರಂಗದ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಚಿತ್ರರಂಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಗತ್ಯ ಪರಿಹಾರ ಕಂಡುಕೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಸಮುಖದಲ್ಲಿ ಕಲಾವಿದರು, ನಿರ್ಮಾಪಕರು, ಚಿತ್ರಮಂದಿರಗಳ ಮಾಲೀಕರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಚರ್ಚೆ ನಡೆಸಲಾಗುವುದು. +ಹಿರಿಯ ಕಲಾವಿದರಿಗೆ ನೆರವು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸುವುದಾಗಿ ಹೇಳಿದರು.ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ಪ್ರಸ್ತಾಪವಾದಾಗ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸಾಧು ಕೋಕಿಲಾ ಭಾನುವಾರ ಸಭೆ ಕರೆಯಬೇಡಿ ಎಂದು ಸಲಹೆ ನೀಡಿದರು. +ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು ಭಾನುವಾರವೇ ನಿಮಗೆ ಒಳ್ಳೆಯ ದಿನ. ಭಾನುವಾರ ಬೆಳಿಗ್ಗೆ 11 ಗಂಟೆಗೆ ಸಭೆ ಸೇರಿ, 1 ಗಂಟೆಗೆ ಸಭೆ ಮುಗಿಸೋಣ ಎಂದು ಹೇಳಿದರು.ಮಾತು ಮುಂದುವರೆಸಿದ ಮುಖ್ಯಮಂತ್ರಿಗಳು, ತಾಂತ್ರಿಕ ಹಾಗೂ ವಿಜ್ಞಾನದ ಬೆಳವಣಿಗೆಯಿಂದ ಚಲನಚಿತ್ರರಂಗಕ್ಕೆ ತೊಂದರೆಯಾಗಿದೆ. ಕಲಾವಿದರಿಗೆ, ತಂತ್ರಜ್ಞರಿಗೆ ಅವಕಾಶಗಳು ಸಿಗಬೇಕು ಎಂಬ ಕಾರಣಕ್ಕೆ ನಿರ್ಮಾಪಕರು ಚಿತ್ರ ನಿರ್ದೇಶಿಸುತ್ತಿದ್ದಾರೆ. ಲಾಭಕ್ಕಾಗಿ ಚಿತ್ರ ಮಾಡುತ್ತಿಲ್ಲ ಎಂದು ಹೇಳಿದರು. +ಕಳೆದ ನಾಲ್ಕು ವರ್ಷಗಳಿಂದಲೂ ಚಲನಚಿತ್ರಗಳಿಗೆ ಪ್ರಶಸ್ತಿಗಳನ್ನು ನೀಡಿಲ್ಲ ಎಂಬ ಮಾಹಿತಿ ಇದೆ. ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಪ್ರಶಸ್ತಿಗಳನ್ನು ಆಯಾ ವರ್ಷವೇ ನೀಡಲಾಗುವುದು ಎಂದು ಭರವಸೆ ನೀಡಿದರು. +ಮೊಬೈಲ್‌ಗಿಂತಲೂ ಚಿತ್ರಮಂದಿರದಲ್ಲಿ ಚಲನಚಿತ್ರ ನೋಡುವ ಅನುಭವ ಸೊಗಸು. ಸಾಮಾಜಿಕ ಕಳಕಳಿಯ ಹಾಗೂ ಸಾಮಾಜಿಕ ಪರಿಣಾಮ ಬೀರುವ ಚಿತ್ರಗಳನ್ನು ನಿರ್ಮಿಸಬೇಕು. ಉತ್ತಮ ಚಿತ್ರಗಳನ್ನು ನಿರ್ಮಿಸಿದರೆ ಜನ ನೋಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಫಿಲಂಸಿಟಿ ನಿರ್ಮಾಣಕ್ಕೆ ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈಗಾಗಲೇ ಜಮೀನು ಹಸ್ತಾಂತರಿಸಲಾಗಿದೆ. ಅದಕ್ಕೆ ಯಾವುದೇ ತೊಡಕುಗಳಿಲ್ಲ. ಪಿಪಿಪಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಹೇಳಿದರು. +ಚಲನಚಿತ್ರಗಳ ಸಂಖ್ಯೆ ಹೆಚ್ಚಾಗುತ್ತಿದೆ, ಚಿತ್ರಮಂದಿರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಜ್ಯಸರ್ಕಾರ ಚಿತ್ರರಂಗದ ಬೆಳವಣಿಗೆಗೆ ನೆರವು ನೀಡಲು ಹಿಂದೆ ಬೀಳುವುದಿಲ್ಲ. ನೂತನ ಕಟ್ಟಡ ಸೇರಿದಂತೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇನೆ ಎಂದ ಅವರು, ರಾಜ್ಯದಲ್ಲಿ ಕನ್ನಡದ ವಾತಾವರಣ ನಿರ್ಮಿಸಬೇಕು ಎಂದು ಕರೆ ನೀಡಿದರು. +ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾ.ರಾ.ಗೋವಿಂದು ಅವರು, ಕೇರಳದ ಮಾದರಿಯಲ್ಲಿ ರಾಜ್ಯಸರ್ಕಾರವೇ ಓಟಿಟಿ ವೇದಿಕೆ ನಿರ್ಮಾಣ ಮತ್ತು ನಿಯಮಾವಳಿಗಳನ್ನು ರಚಿಸಬೇಕು. ವಾರ್ತಾ ಇಲಾಖೆಯಿಂದ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ಗೆ 45 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ತಯಾರಿಸಿ ಚಾಲನೆ ನೀಡಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ಅದು ಸ್ಥಗಿತಗೊಂಡಿದೆ. ಅದಕ್ಕೆ ಪುನರ್‌ ಚಾಲನೆ ನೀಡಬೇಕು ಎಂದು ಮನವಿ ಮಾಡಿದರು. +ಸಚಿವ ಭೈರತಿ ಸುರೇಶ್‌, ಶಾಸಕ ರಿಜ್ವಾನ್‌ ಹರ್ಷದ್‌, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್‌, ನಟ ಶಿವರಾಜ್‌ಕುಮಾರ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ರಾಜ್ಯಸಭಾ ಸದಸ್ಯರೂ ಆಗಿರುವ ನಟ ಜಗ್ಗೇಶ್‌, ನಿರ್ಮಾಪಕರಾದ ಬಾಮಾ ಹರೀಶ್‌ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_92_1.txt b/eesanje/url_46_92_1.txt new file mode 100644 index 0000000000000000000000000000000000000000..5c65723400faed0984da059cea901d5e8a0fa933 --- /dev/null +++ b/eesanje/url_46_92_1.txt @@ -0,0 +1,9 @@ +ನ್ಯಾಯ ಪಾಲಿಸಿದರೆ ಅದು ನಿಮನ್ನು ರಕ್ಷಿಸುತ್ತೆ : ಡಿಜಿಪಿ ಕಮಲ್‌ಪಂಥ್‌ +ಬೆಂಗಳೂರು, ಜೂ.29-ಯಾವಾಗಲೂ ನ್ಯಾಯವನ್ನು ಕಾಪಾಡಬೇಕು, ನ್ಯಾಯವನ್ನು ಎತ್ತಿ ಹಿಡಿದರೆ ಆ ನ್ಯಾಯ ನಿಮನ್ನು ಕಾಪಾಡುತ್ತದೆ ಎಂದು ಗೃಹರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿಪಿ ಕಮಲ್‌ಪಂಥ್‌ ಇಂದಿಲ್ಲಿ ತಿಳಿಸಿದರು.ಕೋರಮಂಗಲದ ಕೆಎಸ್‌‍ಆರ್‌ಪಿ ಪರೇಡ್‌ ಮೈದಾನದಲ್ಲಿ ಹಮಿಕೊಂಡಿದ್ದ ಬೀಳ್ಕೊಡುಗೆ ಕವಾಯತಿನಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. +ಧರ್ಮೋ ರಕ್ಷತಿ ರಕ್ಷಿತಃ ಅಂದರೆ ನ್ಯಾಯವನ್ನು ಕಾಪಾಡಿದರೆ ಆ ನ್ಯಾಯ ನಿಮನ್ನು ಕಾಪಾಡುತ್ತದೆ. ನ್ಯಾಯ ಕೊಂದರೆ ಅದು ನಿಮನ್ನು ಕೊಲ್ಲುತ್ತದೆ ಎಂದು ವಿವರವಾಗಿ ತಿಳಿಸಿದರು.ಕರ್ನಾಟಕ ರಾಜ್ಯ ಪೊಲೀಸ್‌‍ಗೆ ಇಡೀ ದೇಶದಲ್ಲೇ ಉತ್ತಮವಾದ ಹೆಸರಿದೆ. ಹಾಗಾಗಿ ನೀವೆಲ್ಲರೂ ಅದಕ್ಕೆ ಬದ್ಧರಾಗಿ, ಜವಾಬ್ದಾರಿಯಿಂದ ಕರ್ತವ್ಯ ನಿಭಾಯಿಸಿ ಎಂದರು. +ಪೊಲೀಸ್‌‍ ಇಲಾಖೆಗೆ ತರುಣರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಇಲಾಖೆಯನ್ನು ಅವರು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಾರೆಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +1990ರಲ್ಲಿ ಕರ್ನಾಟಕ ಪೊಲೀಸ್‌‍ ಕೇಡರ್‌ ಅಧಿಕಾರಿಯಾಗಿ ಆಯ್ಕೆಯಾಗಿ ಕರ್ನಾಟಕ ಪೊಲೀಸ್‌‍ ಸೇವೆಗೆ ಬಂದಾಗ ರಾಜ್ಯದ ಪರಿಸ್ಥಿತಿ ಹಾಗೂ ದೇಶದ ಪರಿಸ್ಥಿತಿ ಹೇಗಿತ್ತು ಎಂಬುವುದನ್ನು ವಿವರಿಸಿದ ಅವರು ನಾನು ಪೊಲೀಸ್‌‍ ಸೇವೆಗೆ ಸೇರುವುದು ನಮ ತಾಯಿಗೆ ಇಷ್ಟವಿರಲಿಲ್ಲ. ನಾನು ಅಖಿಲ ಭಾರತ ಪೊಲೀಸ್‌‍ ಸೇವೆಗೆ ಆಯ್ಕೆಯಾದಾಗ ಬಹಳ ಆತಂಕ ಇತ್ತು. ಏಕೆಂದರೆ ನನಗೆ ಭಾಷೆಯ ಸಮಸ್ಯೆಯಾಗಿತ್ತು. +ನಾನು ಹಿರಿಯ ಹಾಗೂ ಕಿರಿಯ ಅಧಿಕಾರಿಗಳು, ರಾಜ್ಯದ ಜನರಿಂದ ಭಾಷೆ ಕಲಿತೆ. ಕರ್ನಾಟಕ ರಾಜ್ಯದ ಜನರು ನನಗೆ ಸಹಕಾರ ನೀಡಿದರು ಎಂದು ಸರಿಸಿದರು.ನಾನು ಪೊಲೀಸ್‌‍ ಇಲಾಖೆಗೆ ಸೇರಿದ ಸಂದರ್ಭದಲ್ಲಿ ಕೆಎಸ್‌‍ಆರ್‌ಪಿ ತುಕಡಿಗಳು ಹೇಗೆ ಕರ್ತವ್ಯ ನಿರ್ವಹಿಸಿದರು ಎಂಬುದನ್ನು ವಿವರಿಸಿದ ಅವರು, ಮೆಣಸಿನ ಹಾಡ್ಯದಲ್ಲಿ ನಡೆದ ನಕ್ಸಲ್‌ ಕಾರ್ಯಾಚರಣೆ ವೇಳೆ 600 ಮಂದಿ ಸಿಬ್ಬಂದಿ ಜೊತೆ ಆ ಸ್ಥಳಕ್ಕೆ ಹೋಗಿ ಸಂಜೆಯೇ ಅಲರ್ಟ್‌ ಆದೆವು. ಬೆಳಗಾಗುತ್ತಿದ್ದಂತೆ ಕಾರ್ಯಾಚರಣೆ ಆರಂಭಿಸಿದಾಗ ಬಹಳ ಆತಂಕ ಇತ್ತು. ಹಗಲಿರುಳು ಕರ್ತವ್ಯ ನಿಭಾಯಿಸಿದೆವು.ಏಕೆಂದರೆ ನಾವು ಒಬ್ಬ ನಾಗರಿಕನಿಗೂ ತೊಂದರೆಯಾಗದಂತೆ ಕಾರ್ಯಾಚರಣೆ ಮಾಡಬೇಕಾಗಿತ್ತು ಎಂದು ಅಂದಿನ ಘಟನೆಯನ್ನು ಮೆಲುಕು ಹಾಕಿದ್ದರು. +ಕರ್ನಾಟಕದಲ್ಲಿನ ಸಾಮ್ಯತೆ, ಸೌಜನ್ಯತೆ, ಸಂಸ್ಕೃತಿ, ಸಭ್ಯತೆ ಬೇರೆಲ್ಲೂ ಇಲ್ಲ. ರಾಜ್ಯದ ಜನತೆ ನಮಗೆ ನೀಡಿದ ಪ್ರೀತಿ, ವಿಶ್ವಾಸದಿಂದ ಉತ್ತಮ ಸೇವೆ ಸಲ್ಲಿಸಲು ಅವಕಾಶವಾಯಿತು ಎಂದರು.ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡಿದಾಗ ಇದ್ದಂತಹ ಸಮಸ್ಯೆಯನ್ನು ಎಲ್ಲಾ ಸಿಬ್ಬಂದಿಯ ಸಹಕಾರದಿಂದ ಬಗೆಹರಿಸಲು ಸಾಧ್ಯವಾಯಿತು. ಒಬ್ಬ ವ್ಯಕ್ತಿಯಿಂದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ. ಕಾನ್‌ಸ್ಟೆಬಲ್‌ನಿಂದ ಎಸ್ಪಿ ವರೆಗೂ ತಂಡವಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ರೀತಿಯಲ್ಲಿ ಆ ಸಮಸ್ಯೆ ಬಗೆಹರಿಯುತ್ತದೆ. ನಾನು ಎನ್ನದೇ ಪ್ರತಿಯೊಬ್ಬರೂ ಇಲಾಖೆಯಲ್ಲಿ ಒಗ್ಗೂಡಿ ಕರ್ತವ್ಯ ನಿಭಾಯಿಸಬೇಕೆಂದರು. +ನಾನು ಸಿದ್ಧಾಂತ ಇಟ್ಟುಕೊಂಡು 34 ವರ್ಷ ಸುದೀರ್ಘವಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿರುವುದು ತೃಪ್ತಿ ತಂದಿದೆ. ಸಿಬಿಐನಲ್ಲೂ ಕರ್ತವ್ಯ ನಿಭಾಯಿಸಿದೆ. ನ್ಯಾಯ, ನೀತಿ, ಪ್ರಾಮಾಣಿಕತೆಯಿಂದ ಕೆಲಸ ಮಾಡಲು ನನಗೆ ಎಲ್ಲಾ ಹಿರಿಯ- ಕಿರಿಯ ಅಧಿಕಾರಿಗಳು ಸಹಕಾರ ಕೊಟ್ಟರು. ರಾಜ್ಯದ ಜನರು ಒಳ್ಳೆಯವರು. ಅವರ ಪ್ರೀತಿ- ವಿಶ್ವಾಸದಿಂದ ನಾನು ಉತ್ತಮ ಸೇವೆ ಸಲ್ಲಿಸಲು ಅವಕಾಶವಾಯಿತು. +ಸರ್ಕಾರ ನನಗೆ ಹಲವಾರು ಜವಾಬ್ದಾರಿಗಳನ್ನು ಕೊಟ್ಟಿತು. ಆ ಜವಾಬ್ದಾರಿಗಳನ್ನು ನಾನು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆಂಬ ತೃಪ್ತಿ ನನಗಿದೆ.ಇಷ್ಟು ವರ್ಷ ಸುದೀರ್ಘ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಹಾಗೂ ಇಲಾಖೆಯ ಎಲ್ಲಾ ಹಿರಿಯ- ಕಿರಿಯ ಅಧಿಕಾರಿಗಳಿಗೆ ವಂದನೆ ಸಲ್ಲಿಸುವುದಾಗಿ ಕಮಲ್‌ಪಂಥ್‌ ಹೇಳಿದರು. \ No newline at end of file diff --git a/eesanje/url_46_92_10.txt b/eesanje/url_46_92_10.txt new file mode 100644 index 0000000000000000000000000000000000000000..42e50af7b97e5e423f766fc6dd7c4562a1f079f8 --- /dev/null +++ b/eesanje/url_46_92_10.txt @@ -0,0 +1,6 @@ +ಬೌದ್ಧ ಸಮುದಾಯದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ : ಸಚಿವ ಜಮೀರ್‌ ಅಹಮದ್‌ +ಮೈಸೂರು, ಜೂ.29-ರಾಜ್ಯ ಸರ್ಕಾರ ಬೌದ್ಧ ಸಮುದಾಯದ ಜತೆಯಿದ್ದು, ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಅಲ್ಪಸಂಖ್ಯಾ ತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ತಿಳಿಸಿದ್ದಾರೆ. +ಸರಸ್ವತಿಪುರಂನಲ್ಲಿ ಮಹಾಬೋಧಿ ಮೈತ್ರಿ ಮಂಡಲವು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನೀಡಲಾದ ಒಂದು ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಬೌದ್ಧ ಸಮುದಾಯವು ರಾಜ್ಯದಲ್ಲಿ ನೆಲೆಸಿರುವುದರ ಜತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಶಿಕ್ಷಣಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಯಾವುದೇ ರೀತಿಯ ನೆರವು ನೀಡಲು ಸಿದ್ಧ ಎಂದು ಹೇಳಿದರು. +ಇದೇ ಸಂದರ್ಭದಲ್ಲಿ ಮಹಾಬೋಧಿ ಮೈತ್ರಿಮಂಡಲದ ಸರಸ್ವತಿಪುರಂ, ಹುಣಸೂರು, ಬೈಲಕುಪ್ಪೆ, ಟಿ.ನರಸೀಪುರ ಶಾಖೆಗಳ ಶಿಕ್ಷಣ ಸಂಸ್ಥೆ ಕಟ್ಟಡ ನಿರ್ಮಾಣ ಹಾಗೂ ಇತರೆ ಸೌಲಭ್ಯಕ್ಕೆ ನೀಡಲಾದ 1.62 ಕೋಟಿ ರೂ. ಅನುದಾನದ ಚೆಕ್‌ಅನ್ನು ಸಚಿವರು ಖುದ್ದು ಬೆಂಗಳೂರಿನಿಂದ ಬಂದು ಆನಂದ ಬಂತೇಜಿ ಅವರಿಗೆ ಹಸ್ತಾಂತರ ಮಾಡಿದರು. +ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಅಗತ್ಯ ಲ್ಯಾಪ್‌ಟಾಪ್‌ ಖರೀದಿಸಲು 2 ಲಕ್ಷ ನೆರವನ್ನು ವೈಯಕ್ತಿಕವಾಗಿ ನೀಡಿದರು.ಎನ್‌ಸಿಸಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆಯಲು ಇಲಾಖೆಯಿಂದ ನೆರವು ಕೊಡಿಸಲಾಗುವುದು. ಸಾಧ್ಯವಾಗದಿದ್ದರೆ ವೈಯಕ್ತಿಕ ವಾಗಿ ನೀಡಲಾಗುವುದು ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಸಚಿವರಿಗೆ ಗೌರವ ಪ್ರಶಸ್ತಿ ನೀಡಿ ಸನಾನಿಸಲಾಯಿತು. +ಆನಂದ ಬಂತೇಜಿ, ಇತ್ತೀಕಾ ಮಹಾಧೀರಾ, ಸಿದ್ಧಾರ್ಥ್‌ ವಾಟ್ಸಾಯನ್‌ ಉಪಸ್ಥಿತರಿದ್ದರು.ಗುರುಪುರ ಕ್ಯಾಂಪ್‌ಗೆ ಭೇಟಿ : ಸಚಿವ ಜಮೀರ್‌ ಅಹಮದ್‌ ಖಾನ್‌, ಹುಣಸೂರು ಗುರುಪುರ ಕ್ಯಾಂಪ್‌ನ ಗುಡ್‌ ಮೆಡ್‌ ತಾಂತ್ರಿಕ ವಿಶ್ವವಿದ್ಯಾಲಯ ಸೊಸೈಟಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಅಲ್ಲಿನ ಬೌದ್ಧ ಬಿಕ್ಕುಗಳೊಂದಿಗೆ ಸಂವಾದ ನಡೆಸಿದರು. \ No newline at end of file diff --git a/eesanje/url_46_92_11.txt b/eesanje/url_46_92_11.txt new file mode 100644 index 0000000000000000000000000000000000000000..e26f140526986ebabbf1b18353d020934bb1f6e5 --- /dev/null +++ b/eesanje/url_46_92_11.txt @@ -0,0 +1,7 @@ +ಗುಜರಾತ್‌ ಗಿಫ್ಟ್ ಸಿಟಿ ಮಾದರಿಯಲ್ಲಿ ಸೆಂಟ್ರಲ್‌ ಬ್ಯುಸಿನೆಸ್‌‍ ಡಿಸ್ಟ್ರಿಕ್ಟ್‌ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ +ಬೆಂಗಳೂರು, ಜೂ.29-ಅಹಮದಾಬಾದ್‌ ಸಬರಮತಿ ದಂಡೆಯಲ್ಲಿ ಗುಜರಾತ್‌ ಇಂಟರ್‌ ನ್ಯಾಷನಲ್‌ ಫೈನಾನ್ಸ್ ಟೆಕ್‌-ಸಿಟಿ (ಗಿಫ್ಟ್ ಸಿಟಿ) ಮಾದರಿಯಲ್ಲಿ ಸೆಂಟ್ರಲ್‌ ಬ್ಯುಸಿನೆಸ್‌‍ ಡಿಸ್ಟ್ರಿಕ್ಟ್‌ ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರನ್ನು ಭೇಟಿ ಮಾಡಿ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. +ಕರ್ನಾಟಕ ಐಟಿ, ಬಿಟಿ, ಏರೋಸ್ಪೇಸ್‌‍, ಆಟೋಮೋಟಿವ್‌, ಜವಳಿ ಮತ್ತು ಭಾರೀ ಕೈಗಾರಿಕಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. ರಾಜ್ಯ ಈ ಕ್ಷೇತ್ರಗಳ ಅಭಿವೃದ್ಧಿಗೆ ಸೂಕ್ತ ಸ್ಥಳವಾಗಿದ್ದು, ಹೂಡಿಕೆಗೆ ಅಗಾಧ ಅವಕಾಶವಿದೆ. ಟೆಕ್‌ ಹಬ್‌ ಮತ್ತು ಸಿಲಿಕಾನ್‌ ವ್ಯಾಲಿ ಆಫ್‌ ಇಂಡಿಯಾ ಎಂದು ಬೆಂಗಳೂರು ಗುರುತಿಸಿಕೊಂಡಿದೆ. +ಬೆಂಗಳೂರು ಸೆಮಿಕಂಡಕ್ಟರ್‌ ಮತ್ತು ಎಲೆಕ್ಟ್ರಾನಿಕ್ಸ್ ಡೊಮೇನ್‌, ಫಿನ್ಟೆಕ್‌ ಸ್ಪೇಸ್‌‍, ಎಂಟಪ್ರೈರ್ಸ್‌ ಟೆಕ್‌, ಇ-ಕಾಮರ್ಸ್‌ ಮತ್ತು ಎಡ್‌-ಟೆಕ್‌ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ. ಗಿಫ್ಟ್ ಸಿಟಿ ನಿರ್ಮಾಣದಿಂದ ಆರ್ಥಿಕ ಬೆಳವಣಿಗೆಗೆ ಉತ್ತೇಜನ ದೊರೆಯಲಿದ್ದು, ಹಲವಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಯತೇಚ್ಚವಾಗಿ ವಿದೇಶಿ ಹೂಡಿಕೆಗಳೂ ಬರಲಿವೆ. ಇದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. +4.5 ಶತಕೋಟಿ ಡಾಲರ್‌ ಮೌಲ್ಯದ ಎಲೆಕ್ಟ್ರಾನಿಕ್‌ ರಫ್ತುಗಳೊಂದಿಗೆ ರಾಜ್ಯವು ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ, ಶೇ.46ರಷ್ಟು ರಾಷ್ಟ್ರೀಯ ಪಾಲನ್ನು ಹೊಂದಿದ್ದು, ಭಾರತದ ಕೈಗಾರಿಕಾ ಉತ್ಪಾದನೆಗೆ ಶೇ.10ರಷ್ಟು ಕೊಡುಗೆ ನೀಡುತ್ತಿದೆ. +300 ಕ್ಕೂ ಹೆಚ್ಚು ರಫ್ತು-ಆಧಾರಿತ ಉತ್ಪಾದನಾ ಘಟಕಗಳಿಗೆ ನೆಲೆಯಾಗಿದೆ, ಭಾರತದಲ್ಲಿ ಕರ್ನಾಟಕವು ಅತಿದೊಡ್ಡ ಚಿಪ್‌ ವಿನ್ಯಾಸ ಕೇಂದ್ರವನ್ನು ಹೊಂದಿದೆ. 100ಕ್ಕೂ ಹೆಚ್ಚು ಫ್ಯಾಬಲ್ಲೆಸ್‌‍ ಚಿಪ್‌ ವಿನ್ಯಾಸ ಕೇಂದ್ರಗಳನ್ನು ಹೊಂದಿದೆ. ಭಾರತದಲ್ಲಿ ಏರೋಸ್ಪೇಸ್‌‍ ಮತ್ತು ರಕ್ಷಣಾ ಸಾಧನಗಳ ಪ್ರಮುಖ ತಯಾರಕ ಸ್ಥಾನವಾಗಿದೆ ಎಂದು ವಿವರಿಸಿದ್ದಾರೆ. +ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಕೈಗಾರಿಕೆ ಹಾಗೂ ಕಂಪನಿಗಳಿಗೆ ರಾಜ್ಯ ಸರ್ಕಾರ ಭೂಮಿಯ ಮೇಲೆ ಶೇ.25ರಷ್ಟು ಬಂಡವಾಳ ಸಬ್ಸಿಡಿ, ಯಂತ್ರೋಪಕರಣಗಳ ಮೇಲೆ ಶೇ.20ರಷ್ಟು ಬಂಡವಾಳ ಸಬ್ಸಿಡಿ, ಸ್ಟ್ಯಾಂಪ್‌ ಡ್ಯೂಟಿ ಮತ್ತು ನೋಂದಣಿ ಶುಲ್ಕಗಳು, ಭೂ ಪರಿವರ್ತನೆ ಮತ್ತು ವಿದ್ಯುತ್‌ ಸುಂಕದ ಮರುಪಾವತಿ ಸೇರಿ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_92_12.txt b/eesanje/url_46_92_12.txt new file mode 100644 index 0000000000000000000000000000000000000000..a1a0dd38e93dab9a5748b692be2231da6ee6772d --- /dev/null +++ b/eesanje/url_46_92_12.txt @@ -0,0 +1,12 @@ +ಸಿಎಂ, ಡಿಸಿಎಂ ಹುದ್ದೆಯ ವಿವಾದದ ಕುರಿತು ಡಿಕೆಶಿ ಖಡಕ್ ವಾರ್ನಿಂಗ್ +ಬೆಂಗಳೂರು, ಜೂ.29-ಉಪಮುಖ್ಯಮಂತ್ರಿ ಹುದ್ದೆಯೂ ಇಲ್ಲ, ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೂ ಚರ್ಚೆ ಇಲ್ಲ. ನಾನು ಮಾಡಿರುವ ಕೆಲಸಕ್ಕೆ ಪಕ್ಷ ತೀರ್ಮಾನ ಮಾಡಲಿದೆ. ನನಗೆ ಯಾರ ಶಿಫಾರಸು ಅಗತ್ಯ ಇಲ್ಲ. ಸಿಎಂ ಹಾಗೂ ಡಿಸಿಎಂ ಹುದ್ದೆಗಳ ಬಗ್ಗೆ ಇನ್ನು ಮುಂದೆ ಯಾರೂ ಬಹಿರಂಗ ಹೇಳಿಕೆ ನೀಡಬಾರದು. ಇಲ್ಲಿಗೇ ಮುಗಿಯಬೇಕು, ಇನ್ನೂ ಮುಂದೆಯೂ ಚರ್ಚೆ ಮುಂದುವರೆದರೆ ಪಕ್ಷದವರಿಗೆ ನೋಟೀಸ್‌‍ ನೀಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. +ನಗರದ ತಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಇಲ್ಲ, ಮುಖ್ಯಮಂತ್ರಿ ಪ್ರಶ್ನೆ ಇಲ್ಲ. ದಯವಿಟ್ಟು ನಾನು ಮನವಿ ಮಾಡುತ್ತೇನೆ. ನನಗೆ ಯಾರ ಶಿಫಾರಸಿನ ಅವಶ್ಯಕತೆ ಇಲ್ಲ. ನಾವು ಮಾಡಿರುವ ಕೆಲಸಕ್ಕೆ ನಮ ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದರು. +ಪಕ್ಷದ ಹಿತದೃಷ್ಟಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಕುಳಿತುಕೊಂಡು ಚರ್ಚೆ ಮಾಡಿ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಇನ್ನೂ ಮುಂದೆ ಈ ವಿಷಯವಾಗಿ ಶಾಸಕರಾಗಲಿ, ಸಚಿವರಾಗಲಿ, ಸ್ವಾಮಿಗಳಾಗಲಿ ಮಾತನಾಡುವ ಅವಶ್ಯಕತೆ ಇಲ್ಲ. ಅವರ ಆಶೀರ್ವಾದ ಇದ್ದರೆ ಒಳಗಿನಿಂದಲೇ ಹರಸಲಿ ಸಾಕು, ಅದನ್ನ ಬಿಟ್ಟು ಇನ್ನು ಮುಂದೆ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. +ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಕುರಿತು ಯಾವ ಮಂತ್ರಿಯೂ ಬಹಿರಂಗವಾಗಿ ಚರ್ಚೆ ಮಾಡಬೇಕಾಗಿಲ್ಲ. ನಮ ಪಕ್ಷದ ಶಾಸಕರೂ ಕೂಡ ಪ್ರಸ್ತಾಪ ಮಾಡಬಾರದು, ಹಾಗೂ ಮುಂದುವರೆದರೆ ಎಐಸಿಸಿ ಅಥವಾ ತಾವು ವಿಧಿ ಇಲ್ಲದೆ ನೋಟೀಸ್‌‍ ನೀಡಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾರೂ ಇಲ್ಲ. ಪಕ್ಷವನ್ನು ಎಷ್ಟು ಶ್ರಮ ಪಟ್ಟಿದ್ದೇವೆ, ಏನೆಲ್ಲಾ ಮಾಡಿದ್ದೇವೆ ಎಂಬುದು ನಮಗೆ ಗೊತ್ತಿದೆ. ಇವತ್ತು ಇವರ್ಯಾರೂ ಮಾತನಾಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು. +ದೆಹಲಿಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಲಿಫ್‌್ಟನಲ್ಲಿ ಹೋಗುವಾಗ ವಿಶ್ವ ಒಕ್ಕಲಿಗರ ಸಂಸ್ಥಾನದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಹೇಳಿಕೆ ಬಗ್ಗೆ ಚರ್ಚೆ ಮಾಡಿದ್ದು, ಹೇಳಿಕೊಟ್ಟು ಹೇಳಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳುತ್ತಾರೆ, ಅದಕ್ಕೆ ಗೃಹ ಸಚಿವರು ಹೌದು ಎಂದು ತಲೆಯಾಡಿಸುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮಗೆ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಬಾಯಿಗೆ ಬೀಗ ಹಾಕಿಕೊಂಡು ಇದ್ದರೆ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ಸಿಟ್ಟಾಗಿ ಹೇಳಿದರು. +ಈವರೆಗೂ ಯಾವ ಸ್ವಾಮೀಜಿಯವರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಕುರಿತು ಹೇಳಿಕೆ ನೀಡಿರಲಿಲ್ಲ. ಈಗಷ್ಟೇ ಸ್ವಾಮೀಜಿ ಮಾತನಾಡಿದ್ದಾರೆ. ನಮ ರಾಜಕಾರಣದ ಸುದ್ದಿಗೆ ಮಠಾಧೀಶರು ಬರುವುದು ಬೇಡ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದರು.ದೆಹಲಿಯಲ್ಲಿ ನಡೆದ ಸಂಸದರ ಸಭೆಯ ಕುರಿತು ವಿವರಣೆ ನೀಡಿದ ಡಿ.ಕೆ.ಶಿವಕುಮಾರ್‌ ಅವರು, ಇಬ್ಬರು ಸಂಸದರು ಖಾಸಗಿ ಕಾರ್ಯಕ್ರಮದಿಂದಾಗಿ ಸಭೆಯಲ್ಲಿ ಭಾಗವಹಿಸಿರಲಿಲ್ಲ. +ಉಳಿದಂತೆ ಎಲ್ಲರೂ ಭಾಗವಹಿಸಿದ್ದರು. ರಾಜಕಾರಣ ಬದಿಗಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕರಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಸಚಿವರು, ಅಽಕಾರಿಗಳು ದೆಹಲಿಗೆ ಬಂದು ತಮ್ಮನ್ನು ಭೇಟಿ ಮಾಡಿದರೆ ಕೇಂದ್ರದಿಂದ ಅಗತ್ಯ ನೆರವು ಕೊಡಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು. +ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಎರಡು ಗಂಟೆ ಸಭೆಯಲ್ಲಿ ಭಾಗವಹಿಸಿದ್ದು ದೊಡ್ಡ ಸಾಧನೆ. ಭದ್ರಾ ಮೇಲ್ದಂಡೆ ಯೋಜನೆಗೆ ಈ ಮೊದಲು ಘೋಷಿಸಿದ್ದ 5300 ಕೋಟಿ ರೂಪಾಯಿಗಳ ವಿಶೇಷ ಅನುದಾನದ ವಿಷಯದಲ್ಲಿ ತಾವು ಈಗಲೂ ಬದ್ಧ ಎಂದು ಸಚಿವೆ ಭರವಸೆ ನೀಡಿದ್ದಾರೆ. ಆದರೆ ಕೆಲ ತಾಂತ್ರಿಕ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಈವರೆಗೂ ಅದರ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕೇಂದ್ರ ಸರ್ಕಾರಕ್ಕೆ ಅಗತ್ಯ ಇರುವ ರೀತಿಯಲ್ಲೆಲ್ಲಾ ಬರೆದುಕೊಟ್ಟಿದ್ದೇವೆ. ಮುಂದೆ ಕೂಡ ಅಗತ್ಯ ಮಾಹಿತಿ ಒದಗಿಸುತ್ತೇವೆ ಎಂದು ಹೇಳಿದರು. +ಇನ್ನೂ ಮಹದಾಯಿ ವಿಚಾರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಯವರು ಸಂಸದರಾಗಿ ದೆಹಲಿಗೆ ಹೋಗಿದ್ದಾರೆ. ಅವರಿಗೆ ಎಲ್ಲಾ ಮಾಹಿತಿಗಳು ಬೆರಳ ತುದಿಯಲ್ಲಿ ಇದೆ. ಅವರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಚರ್ಚೆ ಮಾಡಿ ಇತ್ಯರ್ಥ ಪಡಿಸಬಹುದು ಎಂದು ವಿಶ್ವಾಸ ವ್ಯಕ್ತ ಪಡಿಸಿದರು. +ನಿನ್ನೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವರನ್ನು ಭೇಟಿ ಮಾಡಿದ್ದೆವು. ಅವರು ಎಲ್ಲೆಲ್ಲಿ ಅಡಚಣೆ ಇದೆ ಎಂದು ತಿಳಿಸಿದ್ದಾರೆ. ಕೆಲವು ಕಡೆ ರೈತರು ಮಾರ್ಗ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಇನ್ನೂ ಕೆಲವು ಕಡೆ ದೇವಸ್ಥಾನಗಳು ಅಡ್ಡ ಬರಲಿದ್ದು, ಅದನ್ನು ಮುಟ್ಟಬಾರದು ಎಂದು ಒತ್ತಾಯಿಸಲಾಗುತ್ತಿದೆ. ಆದರೆ ಅದೆಲ್ಲಾ ಸಾಧ್ಯವಿಲ್ಲ. ನಾವು ಸ್ಥಳೀಯರ ಜೊತೆ ಚರ್ಚೆ ಮಾಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಹೇಳಿದರು. +ಇಂದು ಸಂಜೆ ಮುಖ್ಯಮಂತ್ರಿಯವರು ಮತ್ತು ತಾವು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಈ ವೇಳೆ ಮುಖ್ಯಮಂತ್ರಿಯವರು ವಿಶೇಷ ಮನವಿಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. \ No newline at end of file diff --git a/eesanje/url_46_92_2.txt b/eesanje/url_46_92_2.txt new file mode 100644 index 0000000000000000000000000000000000000000..ee99d09b3f52c87d6c269f09fc62740650672144 --- /dev/null +++ b/eesanje/url_46_92_2.txt @@ -0,0 +1,9 @@ +ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಮೇಯರ್‌ ಆಗಿ ರಾಮಣ್ಣ ಬಡಿಗೇರ-ಉಪಮೇಯರ್‌ ಆಗಿ ದುರ್ಗಾಮಾ ಆಯ್ಕೆ +ಹುಬ್ಬಳ್ಳಿ,ಜೂ.29-ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್‌ ಆಗಿ ಮಹಾನಗರ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ ಹಾಗೂ ಉಪಮೇಯರ್‌ ಆಗಿ ಸದಸ್ಯೆ ದುರ್ಗಮಾ ಬೀಜವಾಡ ಆಯ್ಕೆಯಾಗಿದ್ದಾರೆ. +ಕಾಂಗ್ರೆಸ್‌‍ನಿಂದ ಮೇಯರ್‌ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಾರ್ಡ್‌ ನಂ.33 ಇಮ್ರಾನ್‌ ಯಲಿಗಾರ, ಹಾಗೂ ವಾರ್ಡ್‌ ನಂಬರ್‌ 50ರ ಸದಸ್ಯೆ ಉಪಮೇಯರ್‌ ಸ್ಧಾನಕ್ಕೆ ಮಂಗಳಾ ಮೋಹನ ಹಿರೇಮನಿ ಸ್ಪರ್ಧೆ ಮಾಡಿದ್ದರು. +ಪಕ್ಷಗಳ ಬಲಾಬಲ :ಬಿಜೆಪಿ-39 ಕಾಂಗ್ರೆಸ್‌‍-33 ಎಐಎಂಐಎಂ- 3, ಜೆಡಿಎಸ್‌‍ 1 ಪಕ್ಷೇತರ, 6 ಮತ ಲೆಕ್ಕಾಚಾರ 90, ಚಲಾವಣೆಯಾಗಲಿರುವ ಒಟ್ಟು ಮತಗಳು 48, ಬಿಜೆಪಿ ಬಳಿಯಿರುವ ಮತಗಳು (ಪಾಲಿಕೆ ಸದಸ್ಯರು ಸಂಸದ ಶಾಸಕರು ವಿಧಾನಪರಿಷತ್‌ ಸದಸ್ಯರು ಪಕ್ಷೇತರರು ಸೇರಿ) 37.ಸರಸ್ವತಿ ಧೋಂಗಡಿ ಅವರ ಸದಸ್ಯತ್ವ ಅನರ್ಹತೆಯಿಂದ ಬಿಜೆಪಿ ಬಲ 39ರಿಂದ 38ಕ್ಕೆ ಕುಸಿದಿತ್ತು. ಅವರ ಅನರ್ಹತೆ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿದ್ದರಿಂದ ಬಿಜೆಪಿ ಬಲ ಯಥಾಸ್ಥಿತಿಗೆ ಬಂದಿದೆ. +ಉಪ ಮೇಯರ್‌ ಸ್ಥಾನಕ್ಕೆ ಬಿಜೆಪಿಯಲ್ಲಿ ದುರ್ಗಮ್ಮ ಶಶಿಕಾಂತ ಬಿಜವಾಡ, ಚಂದ್ರಿಕಾ ಮೇಸ್ತ್ರಿ ಅವರು ಪ್ರಮುಖ ಆಕಾಂಕ್ಷಿಗಳಿದ್ದರು. ಪಂಚತಾರಾ ಹೊಟೇಲ್ನಲ್ಲಿ ಸಭೆಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಬರದಂತೆ ಹಾಗೂ ಕುದುರೆ ವ್ಯಾಪಾರ ನಡೆಯದಂತೆ ನಿನ್ನೆನೇ ನಗರದ ಗೋಕುಲ ರಸ್ತೆಯಲ್ಲಿನ ಪಂಚತಾರಾ ಹೊಟೇಲ್ನಲ್ಲಿಬಿಜೆಪಿ ಸದಸ್ಯರನ್ನ ವಾಸ್ತವ್ಯ ಹೂಡಿದ್ದರು. +ಇದರಿಂದಾಗಿ ಕಳೆದ ಎರಡು ದಿನಗಳಿಂದ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದ್ದವು. ಅಗತ್ಯ ಸಂಖ್ಯಾಬಲ ಇರುವ ಬಿಜೆಪಿಯಲ್ಲಿ ಮೇಯರ್‌ ಸ್ಥಾನಕ್ಕೆ ಯಾರು ಅಭ್ಯರ್ಥಿ ಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿತ್ತು. +ಬಿಜೆಪಿಯಲ್ಲಿ ಮೇಯರ್ ಸ್ಥಾನಕ್ಕೆ ರಾಮಣ್ಣ ಬಡಿಗೇರ, ತಿಪ್ಪಣ್ಣ ಮಜ್ಜಗಿ, ಸತೀಶ ಹಾನಗಲ್, ಬೀರಪ್ಪ ಖಂಡೇಕಾರ, ಉಮೇಶಗೌಡ ಕೌಜಗೇರಿ ಅವರ ಹೆಸರುಗಳು ಮುಂಚೂಣಿಯಲ್ಲಿದ್ದವು. ಇದರಲ್ಲಿ ಪಕ್ಷದ ವರಿಷ್ಠರು ರಾಮಣ್ಣ ಬಡಿಗೇರಗೆ ಮಣೆ ಹಾಕಿದರು. +ವೈಯಕ್ತಿಕ ವರ್ಚಸ್ಸು, ಪಕ್ಷ ನಿಷ್ಠೆ, ಉತ್ತಮ ಆಡಳಿತದ ಮೂಲಕ ಪಕ್ಷಕ್ಕೆ ಹೆಸರು ತರುವುದು, ಅನುಭವ, ಹಿರಿತನ ಆದರಿಸಿ ಅಭ್ಯರ್ಥಿ ಆಯ್ಕೆ ಮಾಡಲು ಕಸರತ್ತ ಸಹ ನಡೆಸಲಾಗಿತ್ತು.ಈಗಾಗಲೇ ಹಿರಿಯ ಪಾಲಿಕೆ ಸದಸ್ಯ ರಾಮಣ್ಣ ಬಡಿಗೇರ್‌ ಅವರು ನಾಲ್ಕು ಬಾರಿ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. +ರಾಮಣ್ಣ ಬಡಿಗೇರ ವಿಧಾನಸಭೆಯ ಉಪನಾಯಕ ಶಾಸಕ ಅರವಿಂದ್‌ ಬೆಲ್ಲದವರ ಶಿಷ್ಯ ಸಹ ಆಗಿದ್ದು ಇನ್ನೊಂದು ಕಡೆ ಶಾಸಕ ಮಹೇಶ್‌ ಟೆಂಗಿನಕಾಯಿ ಬೀರಪ್ಪ ಖಂಡೆಕಾರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು ಎನ್ನಲಾಗಿದೆ. \ No newline at end of file diff --git a/eesanje/url_46_92_3.txt b/eesanje/url_46_92_3.txt new file mode 100644 index 0000000000000000000000000000000000000000..b5e7d49e14a465d2fd33d5f41cf3744aac08ec07 --- /dev/null +++ b/eesanje/url_46_92_3.txt @@ -0,0 +1,7 @@ +ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ +ಬೆಂಗಳೂರು, ಜೂ.29-ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಲವು ಸ್ಫೋಟಕ ಮಾಹಿತಿ ಬೆಳಕಿಗೆ ಅಭಿವೃದ್ಧಿ ನಿಗಮ ಹಗರಣದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳಿದಿದೆ.ಯಾರದ್ದೋ ಕಂಪೆನಿ ಹೆಸರಿನಲ್ಲಿ ಇನ್ಯಾರೋ ಖಾತೆ ತೆರೆದು ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಎಸ್‌‍ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ. +ಕಂಪೆನಿಗಳ ಅಸಲಿ ಮಾಲೀಕರ ಗಮನಕ್ಕೆ ಬಾರದ ರೀತಿಯಲ್ಲಿ ಅದೇ ಕಂಪೆನಿ ಹೆಸರಿನಲ್ಲಿ ನಕಲಿ ಖಾತೆ ತೆರೆದು ಕೋಟಿ ಕೋಟಿ ಹಣ ವಹಿವಾಟು ಮಾಡಿರುವುದನ್ನು ಪತ್ತೆಹಚ್ಚಿರುವ ಎಸ್‌‍ಐಟಿ, ನಕಲಿ ಅಕೌಂಟ್‌ನ ಅಸಲಿ ಮಾಲೀಕರನ್ನು ಪತ್ತೆ ಮಾಡಿ ಅವರನ್ನು ಕರೆಸಿ ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಗೊತ್ತಾಗಿದೆ. +ತಮ ಕಂಪೆನಿ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವುದು ಕಂಪೆನಿಯ ಅಸಲಿ ಮಾಲೀಕರ ಗಮನಕ್ಕೆ ಬಂದಿಲ್ಲ. ಅದರಲ್ಲೂ ಆ ಖಾತೆಯಲ್ಲಿ ಕೋಟಿ ಕೋಟಿ ಹಣ ಇತ್ತೇ ಎಂಬುವುದು ತಿಳಿದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. +ಈ ಸಂಬಂಧ ಕಂಪೆನಿ ಮಾಲೀಕರು ದೂರು ನೀಡಿದ್ದು, ನಾಲ್ಕು ಎಫ್‌ಐಆರ್‌ ದಾಖಲಾಗಿದೆ. ಒಂದೊಂದು ಅಕೌಂಟ್‌ನಲ್ಲಿ ಸುಮಾರು 5 ಕೋಟಿಯಂತೆ ನಾಲ್ಕು ಖಾತೆಗಳಲ್ಲಿ 20 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದ್ದು, ಪುನಃ ಆ ಖಾತೆಗಳಿಂದ ಹಣ ಡ್ರಾ ಮಾಡಿಕೊಳ್ಳಲಾಗಿದೆ.ಈ ಖಾತೆಗಳಿಗೆ ವಾಲೀಕಿ ನಿಗಮದ ಅಧಿಕೃತ ಖಾತೆಯಿಂದ ಹಣ ವರ್ಗಾವಣೆಯಾಗಿರುವುದು ಎಸ್‌‍ಐಟಿ ತನಿಖೆಯಿಂದ ಗೊತ್ತಾಗಿದೆ. +ನಗರದ ಠಾಣೆಗಳಲ್ಲಿ ದಾಖಲಾಗಿರುವ ನಾಲ್ಕು ಎಫ್‌ಐಆರ್‌ ಗಳು ಎಸ್‌‍ಐಟಿಗೆ ವರ್ಗಾವಣೆಯಾಗಿದ್ದು, ಈ ಹಗರಣದಲ್ಲಿ ಸಿಲುಕಿರುವ ಇನ್ನಷ್ಟು ಮಂದಿಗೆ ಆತಂಕ ಶುರುವಾಗಿದೆ.ವಾಲೀಕಿ ನಿಗಮ ಹಗರಣದ ಆರೋಪಿಗಳು ಒಂದೊಂದೇ ಸತ್ಯ ಬಾಯ್ಬಿಡುತ್ತಿದ್ದಾರೆ. ನಿಗಮದ ಕೋಟ್ಯಾಂತರ ಹಣ ವಹಿವಾಟಿಗೆ ಬರೋಬ್ಬರಿ 193 ಅಕೌಂಟ್‌ಗಳನ್ನು ಬಳಸಿಕೊಂಡಿರುವುದನ್ನು ಎಸ್‌‍ಐಟಿ ಪತ್ತೆಹಚ್ಚಿದೆ. +ಈ ಎಲ್ಲಾ ಯೋಜನೆಯ ಮಾಸ್ಟರ್‌ ಮೈಂಡ್‌ ಹೈದ್ರಾಬಾದ್‌ ಮೂಲದ ಸತ್ಯನಾರಾಯಣ ವರ್ಮಾ ಎಂಬುವುದು ಗೊತ್ತಾಗಿದೆ.ನಕಲಿ ಅಕೌಂಟ್‌ಗಳನ್ನು ಸೃಷ್ಟಿಸಿ ವಹಿವಾಟು ಮಾಡಿದ ಆರೋಪದ ಮೇಲೆ ಮತ್ತೊಬ್ಬ ಆರೋಪಿಯನ್ನು ಎಸ್‌‍ಐಟಿ ಬಂಧಿಸಿದೆ. ಈತ ಕೋಟಿಕೋಟಿ ಹಣ ವಹಿವಾಟು ಮಾಡಲು ಸಹಾಯ ಮಾಡಿದ್ದ ಎಂಬುವುದು ತನಿಖೆಯಿಂದ ಬೆಳಕಿಗೆ ಬಂದಿದೆ. \ No newline at end of file diff --git a/eesanje/url_46_92_4.txt b/eesanje/url_46_92_4.txt new file mode 100644 index 0000000000000000000000000000000000000000..d6703e86ce6bba1ea709b6e3747baaf0f3237abb --- /dev/null +++ b/eesanje/url_46_92_4.txt @@ -0,0 +1,7 @@ +ಪ್ರಮುಖ ಜಲಾಶಯಗಳಿಗೆ ಒಳ ಹರಿವಿನ ಪ್ರಮಾಣ ಹೆಚ್ಚಳ +ಬೆಂಗಳೂರು, ಜೂ.29-ಕಳೆದ ನಾಲ್ಕೈದು ದಿನಗಳಿಂದ ಕೇರಳದ ವಯನಾಡು, ಕೊಡಗು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಬಿದ್ದ ಮಳೆಯಿಂದಾಗಿ ಪ್ರಮುಖ ಜಲಾಶಯಗಳ ನೀರಿನ ಒಳ ಹರಿವು ಗಣನೀಯವಾಗಿ ಹೆಚ್ಚಾಗಿದೆ. ಶೇ. 3ರಷ್ಟು ನೀರಿನ ಸಂಗ್ರಹ ಹೆಚ್ಚಾಗಿದೆ.ಅಂದರೆ, ಸುಮಾರು 18 ಟಿಎಂಸಿ ಅಡಿಯಷ್ಟು ನೀರು ಜಲಾಶಯಗಳಿಗೆ ಹರಿದು ಬಂದಿದೆ.ಕೇರಳ, ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಏರಿಕೆಯಾಗಿದ್ದ ಒಳಹರಿವಿನ ಪ್ರಮಾಣ ನಾಳೆಯಿಂದ ಇಳಿಮುಖವಾಗುವ ಸಾಧ್ಯತೆ ಹೆಚ್ಚಾಗಿದೆ. +ಕರ್ನಾಟಕ ರಾಜ್ಯ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಪ್ರಸ್ತುತ ಶೇ. 24ರಷ್ಟು ನೀರು ಸಂಗ್ರಹವಾಗಿದೆ. ಅಂದರೆ, 217.83 ಟಿಎಂಸಿ ಅಡಿ ನೀರು ಜಲಾಶಯಗಳಲ್ಲಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 171.98 ಅಡಿ ನೀರಿತ್ತು. ಕಳೆದ ವರ್ಷಕ್ಕಿಂತ ಸುಮಾರು 46 ಟಿಎಂಸಿಯಷ್ಟು ಹೆಚ್ಚುವರಿ ನೀರು ಸಂಗ್ರಹವಾಗಿದೆ.ಕಾವೇರಿ ಜಲಾನಯನ ಭಾಗದ ಹಾರಂಗಿ, ಹೇಮಾವತಿ, ಕೆಆರ್‌ಎಸ್‌‍ ಹಾಗೂ ಕಬಿನಿ ಜಲಾಶಯಗಳಿಗೆ ಕಳೆದ ಮೂರು ದಿನಗಳಿಂದ ಒಳಹರಿವು ಹೆಚ್ಚಳವಾಗಿದೆ. ಈ ನಾಲ್ಕು ಜಲಾಶಯಗಳಿಂದ ಒಟ್ಟು 43 ಸಾವಿರ ಕ್ಯುಸೆಕ್ಸ್ ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. +ಹಾರಂಗಿ ಜಲಾಶಯಕ್ಕೆ ಒಂದೂವರೆ ಸಾವಿರ ಕ್ಯುಸೆಕ್ಸ್ ಗೂ ಅಧಿಕ ನೀರು ಬರುತ್ತಿದೆ. ಹೇಮಾವತಿ ಜಲಾಶಯಕ್ಕೆ 5 ಸಾವಿರ ಕ್ಯುಸೆಕ್‌್ಸಗೂ ಹೆಚ್ಚು, ಕೆಆರ್‌ಎಸ್‌‍ ಜಲಾಶಯಕ್ಕೆ 18 ಸಾವಿರ ಕ್ಯುಸೆಕ್‌್ಸಗೂ ಅಧಿಕ ಹಾಗೂ ಕಬಿನಿ ಜಲಾಶಯಕ್ಕೆ 17 ಸಾವಿರ ಕ್ಯುಸೆಕ್‌್ಸಗೂ ಅಧಿಕ ಪ್ರಮಾಣದ ಒಳಹರಿವಿದೆ. +ನಿನ್ನೆ 20 ಸಾವಿರ ಕ್ಯುಸೆಕ್ಸ್ ಗಿಂತ ಹೆಚ್ಚಿದ್ದ ಕಬಿನಿ ಜಲಾಶಯದ ಒಳಹರಿವು ಇಂದು 17 ಸಾವಿರ ಕ್ಯುಸೆಕ್‌್ಸಗೆ ಇಳಿಕೆಯಾಗಿದೆ. ಶೇ.73ರಷ್ಟು ನೀರು ಸಂಗ್ರಹವಾಗಿದೆ. 19.52 ಟಿಎಂಸಿ ಸಾಮರ್ಥ್ಯದ ಈ ಜಲಾಶಯದಲ್ಲಿ ಪ್ರಸ್ತುತ 14.31 ಟಿಎಂಸಿಯಷ್ಟು ನೀರಿದೆ.ಆದರೆ, ಕೆಆರ್‌ಎಸ್‌‍ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನಿನ್ನೆ 13 ಸಾವಿರ ಕ್ಯುಸೆಕ್‌್ಸನಷ್ಟಿದ್ದ ಒಳಹರಿವು ಇಂದು 18 ಸಾವಿರ ಕ್ಯುಸೆಕ್ಸ್ಗಿಂತ ಹೆಚ್ಚಾಗಿದೆ. ಶೇ.36ರಷ್ಟು ನೀರು ಸಂಗ್ರಹವಾಗಿದೆ. ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ಶೇ.42ರಷ್ಟು ನೀರು ಸಂಗ್ರಹವಾಗಿದೆ. +ಜಲ ವಿದ್ಯುತ್‌ ಉತ್ಪಾದಿಸುವ ಲಿಂಗನಮಕ್ಕಿ, ಸೂಪಾ ಹಾಗೂ ವಾರಾಹಿ ಜಲಾಶಯಗಳಲ್ಲಿ ಶೇ.18ರಷ್ಟು ನೀರಿದೆ. ಕಳೆದ ವರ್ಷಕ್ಕಿಂತ 13 ಟಿಎಂಸಿ ನೀರು ಹೆಚ್ಚಾಗಿದೆ. ಮೂರು ಜಲಾಶಯಗಳಿಗೆ 14 ಸಾವಿರ ಕ್ಯುಸೆಕ್ಸ್ ಗೂ ಅಧಿಕ ಪ್ರಮಾಣದ ಒಳಹರಿವು ಇದೆ. ಇದರಲ್ಲಿ ಲಿಂಗನಮಕ್ಕಿ ಜಲಾಶಯಕ್ಕೆ 9 ಸಾವಿರ ಕ್ಯುಸೆಕ್‌್ಸಗೂ ಅಧಿಕ ಪ್ರಮಾಣದ ನೀರು ಬರುತ್ತಿದೆ.ಕೃಷ್ಣಾ ಕೊಳ್ಳದ 7 ಪ್ರಮುಖ ಜಲಾಶಯಗಳಲ್ಲೂ ಒಳ ಹರಿವು ಹೆಚ್ಚಾಗಿದೆ. +ಒಟ್ಟಾರೆ 18 ಸಾವಿರ ಕ್ಯುಸೆಕ್ಸ್ ಗಿಂತ ಅಧಿಕ ಒಳಹರಿವು ಕಂಡುಬರುತ್ತಿದೆ. ಶೇ. 22 ರಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕಿಂತ 20 ಟಿಎಂಸಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ. ಹೀಗಾಗಿ ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಹಾಗೂ ನೀರಿನ ಸಂಗ್ರಹದ ಪ್ರಮಾಣ ಸುಧಾರಿಸಿದೆ. ಆದರೂ ಉತ್ತರ ಕರ್ನಾಟಕ ಸೇರಿದಂತೆ ಒಳನಾಡಿನಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಜಲಾಶಯಗಳಿಗೂ ನೀರು ಬಂದಿಲ್ಲ. \ No newline at end of file diff --git a/eesanje/url_46_92_5.txt b/eesanje/url_46_92_5.txt new file mode 100644 index 0000000000000000000000000000000000000000..ef7a1d173ccef8e469964181ca7c687973414cb9 --- /dev/null +++ b/eesanje/url_46_92_5.txt @@ -0,0 +1,9 @@ +ರಾಜ್ಯದಲ್ಲಿ ಮರಣ ಮೃದಂಗ ಬಾರಿಸುತ್ತಿದೆ ಡೆಂಘೀ, ಚಿಕೂನ್‌ಗುನ್ಯಾ +ಬೆಂಗಳೂರು,ಜೂ.29-ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಡೆಂಘೀ ಮರಣ ಮೃದಂಗ ಬಾರಿಸುತ್ತಿದೆ. ರಾಜ್ಯದಲ್ಲಿ ಇದುವರೆಗೂ ಏಳು ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿರುವುದು ಪತ್ತೆಯಾಗಿದೆ. +ರಾಜಧಾನಿ ಬೆಂಗಳೂರಿನಲ್ಲಿ 27 ವರ್ಷದ ಯುವಕ ಹಾಗೂ 80 ವರ್ಷದ ವೃದ್ದೆ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಡೆಂಘೀ ಬಗ್ಗೆ ಅಗತ್ಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜ್ವರದಿಂದ ಬಳಲುತ್ತಿದ್ದ ಸಿ.ವಿ. ರಾಮನ್ ನಗರದ ವಾಸಿ ಅಭಿಲಾಷ್ (27) ಜೂನ್25 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಡೆಂಘೀ ಸೋಂಕು ಇರುವುದು ದಢಪಟ್ಟಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೇ ಜೂ.27 ರಂದು ಮತಪಟ್ಟಿದ್ದರು. +ಅದೇ ರೀತಿ ತಮಿಳುನಾಡಿನ ಮೂಲದ ನೀರಜಾದೇವಿ (80) ಡೆಂಘೀಗೆ ಬಲಿಯಾಗಿದ್ದಾರೆ. ಇವರು ಸ್ತನ ಕ್ಯಾನ್ಸರ್ ಚಿಕಿತ್ಸೆಗಾಗಿ ನಗರಕ್ಕೆ ಬಂದಿದ್ದರು. ಜೂನ್ 20 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಈ ವೇಳೆ ಅವರಿಗೆ ಡೆಂಘೀ ಇರುವುದು ತಿಳಿದುಬಂದು ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮೃತಪಟ್ಟಿದ್ದರು. +ರಾಜ್ಯದಲ್ಲಿ ಈವರೆಗೆ ಒಟ್ಟು 5,749 ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ ಬಿಬಿಎಂಪಿ ಹೊರತು ಪಡಿಸಿ ರಾಜ್ಯದಲ್ಲಿ 4,364 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಅದರಲ್ಲೂ ಸಿಲಿಕಾನ್ ಸಿಟಿಯಂತೂ ಡೆಂಘೀ ಸೋಂಕಿನಿಂದ ನರಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. +ಬಿಬಿಎಂಪಿ ವ್ಯಾಪ್ತಿಯಲ್ಲೇ ಕಳೆದ 2023ರಲ್ಲಿ ಜನವರಿಯಿಂದ ಜೂನ್ ವರೆಗೆ ಒಟ್ಟು 732 ಪ್ರಕರಣಗಳು ದಾಖಲಾಗಿದ್ದವು. ಆದರೆ ಈ ಬಾರಿ 1385 ಪ್ರಕರಣಗಳು ವರದಿಯಾಗಿವೆ. ಕಳೆದ ಬಾರಿಗಿಂತ ದುಪ್ಪಟ್ಟಾಗಿರುವ ಡೆಂಘೀ ಪ್ರಕರಣಗಳು ಆರೋಗ್ಯ ಇಲಾಖೆಗೆ ತಲೆನೋವಾಗಿದೆ. +ಇನ್ನುರಾಜ್ಯದಲ್ಲಿ ಡೆಂಘೀಗೆ ಒಟ್ಟು 5 ಮಂದಿ ಬಲಿಯಾಗಿದ್ದಾರೆ. ಡೆಂಘೀ ಜೊತೆ ಚಿಕನ್ಗುನ್ಯಾ ಕೂಡ ಹೆಚ್ಚುತ್ತಿರುವುದು ಆತಂಕ ದುಪ್ಪಟ್ಟು ಮಾಡಿದೆ. ರಾಜ್ಯದಲ್ಲಿ ಈವರೆಗೂ ಒಟ್ಟು 897 ಚಿಕನ್ ಗುನ್ಯಾ ಪ್ರಕರಣಗಳು ವರದಿಯಾಗಿರುವುದೂ ಬೆಳಕಿಗೆ ಬಂದಿರುವುದು ಇಷ್ಟೆಲ್ಲಾ ಆತಂಕಕ್ಕೆ ಕಾರಣವಾಗಿದೆ. +ಡೆಂಘೀಗೆ ಬಾಲಕಿ ಬಲಿ..ಚಿಕ್ಕಮಗಳೂರು, ಜೂ.29- ಡೆಂಘೀ ಮಹಾಮಾರಿಗೆ ಆರು ವರ್ಷದ ಬಾಲಕಿ ಮೃತಪಟ್ಟಿದ್ದು, ಸ್ಥಳೀಯ ಜನತೆ ಆತಂಕಗೊಂಡಿದ್ದಾರೆ. ಕಡೂರು ತಾಲ್ಲೂಕಿನ ಸಖರಾಯಪಟ್ಟಣ ದಲ್ಲಿ ಸಾನಿಯಾ(6) ಡೆಂಘೀ ಸೋಂಕಿನಿಂದ ಮೃತಪಟ್ಟ ಬಾಲಕಿ.ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಸಾನಿಯಾಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾನಿಯಾ ಮೃತಪಟ್ಟಿದ್ದಾಳೆ. +ತಂದೆಯ ಮನವಿ: ಡೆಂಘಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯ ದೊರಕುವಂತಾಗಬೇಕು. ತಮ ಮಗಳಿಗೆ ಆದ ಸ್ಥಿತಿ ಬೇರೆ ಮಕ್ಕಳಿಗೆ ಆಗಬಾರದು ಎಂದು ಸಾನಿಯಾ ತಂದೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.ಸರ್ಕಾರ ನಮಗೆ ಪರಿಹಾರ ಕೊಡುವುದು ಬೇಡ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಘಿ ಸೇರಿದಂತೆ ವಿವಿಧ ಮಾರಣಾಂತಿಕ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.ಸಖರಾಯಪಟ್ಟಣದಲ್ಲಿ ಡೆಂಘಿಗೆ ಬಾಲಕಿ ಮೃತಪಟ್ಟಿ ವಿಷಯ ತಿಳಿದು ಸುತ್ತಮುತ್ತಲ ನಿವಾಸಿಗಳು ಆತಂಕಗೊಂಡಿದ್ದಾರೆ. \ No newline at end of file diff --git a/eesanje/url_46_92_6.txt b/eesanje/url_46_92_6.txt new file mode 100644 index 0000000000000000000000000000000000000000..523e3bcf2c184dbf57841ce21ee2e00a753b3801 --- /dev/null +++ b/eesanje/url_46_92_6.txt @@ -0,0 +1,8 @@ +ತೀವ್ರ ಚರ್ಚೆಯಾಗುತ್ತಿದೆ ಸ್ವಾಮೀಜಿ ಕುರಿತು ಸಿಎಂ ಸಿದ್ದರಾಮಯ್ಯವರು ಆಡಿದ “ಮಾತು” +ಬೆಂಗಳೂರು,ಜೂ.29-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಬಿಟ್ಟುಕೊಡಬೇಕು ಎಂದು ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಕುಮಾರ ಚಂದ್ರಶೇಖರ್‌ ಸ್ವಾಮೀಜಿ ಅವರಿಗೆ ಹೇಳಿಕೊಟ್ಟು ಹೇಳಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಸಚಿವರೊಂದಿಗೆ ಮಾತನಾಡಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. +ಸಂಪುಟದ ಹಲವು ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಿನ್ನೆ ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್‌ ಷಾ ಅವರನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೊಂದಿಗೆ ಭೇಟಿ ಮಾಡಿದ್ದರು. ಅಲ್ಲಿಂದ ವಾಪಸ್‌‍ ಬರುವಾಗ ಸಿದ್ದರಾಮಯ್ಯ ಅವರ ಜೊತೆ ಪರಮೇಶ್ವರ್‌, ಇಂಧನ ಸಚಿವ ಕೆ.ಜೆ.ಜಾರ್ಜ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಲಿಫ್ಟ್ ನಲ್ಲಿದ್ದರು. ಆಗ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆಯನ್ನು ಪ್ರಸ್ತಾಪಿಸಲಾಗಿದೆ. +ಸ್ವಾಮೀಜಿಯವರಿಗೆ ಹೇಳಿಕೊಟ್ಟು ಮಾತನಾಡಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದರೆ, ಅದಕ್ಕೆ ಸಚಿವ ಪರಮೇಶ್ವರ್‌ ಹೌದು ಎಂಬಂತೆ ತಲೆಯಾಡಿಸಿದ್ದಾರೆ. ಈ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. +ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯ ಕಾರ್ಯಕ್ರಮದ ವೇದಿಕೆಯಲ್ಲಿ ಚಂದ್ರಶೇಖರ ಸ್ವಾಮೀಜಿ ಅಧಿಕಾರ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯನವರಿಗೆ ಹೇಳುತ್ತಿದ್ದಂತೆ ವಾತಾವರಣವೇ ಬದಲಾಯಿತು. ವೇದಿಕೆಯಲ್ಲಿದ್ದ ಸಿದ್ದರಾಮಯ್ಯನವರ ಮುಖಚರ್ಯೆ ಬದಲಾಗಿತ್ತು. +ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಮಾಧ್ಯಮದವರ ಪ್ರಶ್ನೆಗೆ ಅಸಹನೆಯಿಂದಲೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ನಮದು ಪ್ರಜಾಪ್ರಭುತ್ವದ ದೇಶ. ಕಾಂಗ್ರೆಸ್‌‍ ಹೈಕಮಾಂಡ್‌ನ ಪಕ್ಷ. ಪಕ್ಷದ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು.ಅದರ ಬೆನ್ನಲ್ಲೇ ಮೊದಲಿನಿಂದಲೂ ಹೆಚ್ಚುವರಿ ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಯ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದ ಕೆ.ಎನ್‌.ರಾಜಣ್ಣ ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್‌ ಮಾಡಿದ್ದರು. +ಈ ವಿಚಾರಗಳು ವ್ಯಾಪಕ ಚರ್ಚೆಯಾಗುತ್ತಿರುವ ನಡುವೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ಅವರ ನಡುವಿನ ಸಂಭಾಷಣೆ ಕುತೂಹಲ ಕೆರಳಿಸಿದೆ. ಕೆಂಪೇಗೌಡ ಜಯಂತಿ ಮುಗಿದ ಬೆನ್ನಲ್ಲೇ ಅವರಿಬ್ಬರು ದೆಹಲಿಗೆ ತೆರಳಿದರು. ಅಲ್ಲಿ ಜೊತೆ ಜೊತೆಯಾಗಿಯೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರು ಸ್ವಾಮೀಜಯವರ ಹೇಳಿಕೆ ವಿಷಯವಾಗಿ ಅನುಮಾನ ವ್ಯಕ್ತಪಡಿಸಿರುವುದು ಸರ್ಕಾರದಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಬಿಂಬಿಸುತ್ತಿದೆ. +ಮೇಲ್ನೋಟಕ್ಕೆ ಎಲ್ಲರೂ ಒಟ್ಟಾಗಿದ್ದೇವೆ, ಭಿನ್ನಮತ ಇಲ್ಲ ಎಂದು ಪ್ರತಿಪಾದಿಸಲಾಗುತ್ತಿದೆ. ಆದರೆ ಒಳಗೊಳಗೆ ಒಬ್ಬರ ಮೇಲೆ ಮತ್ತೊಬ್ಬರು ಮಸಲತ್ತು ನಡೆಸುತ್ತಿರುವಂತೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿ.ಕೆ.ಶಿವಕುಮಾರ್‌ ಅವರು, ಇನ್ನು ಮುಂದೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಯಾರಾದರೂ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್‌‍ ನೀಡುವುದಾಗಿ ಎಚ್ಚರಿಸಿದ್ದಾರೆ. ಆದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡುವೆಯೇ ಅನುಮಾನದ ಹೊಗೆಯಾಡುತ್ತಿರುವುದು ವಿಪಕ್ಷಗಳಿಗೆ ಆಹಾರವಾಗಿದೆ. \ No newline at end of file diff --git a/eesanje/url_46_92_7.txt b/eesanje/url_46_92_7.txt new file mode 100644 index 0000000000000000000000000000000000000000..c76b903f94c417c9aef760451f7e5d174f78e8a6 --- /dev/null +++ b/eesanje/url_46_92_7.txt @@ -0,0 +1,7 @@ +“ಬೆಲೆ ಏರಿಕೆ ಗ್ಯಾರಂಟಿ” ಸರ್ಕಾರದ ವಿರುದ್ಧ ಪ್ರೀಡಂಪಾರ್ಕ್‌ನಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ +ಬೆಂಗಳೂರು,ಜೂ.29-ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಇಂದು ನಗರದ ಪ್ರೀಡಂಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದುರ.ಬಿಜೆಪಿ ರೈತಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್‌‍.ನಡಹಳ್ಳಿ, ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು. +ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತರು ಹಾಲಿನ ಪಾಕೆಟ್‌ ಪ್ರದರ್ಶಿಸಿದ್ದಲ್ಲದೆ ಹಸು ಹಿಡಿದುಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಪ್ರತಿಭಟನಾನಿರತರು ಹಾಲಿನ ದರ, ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಬರ ಭಾಗ್ಯ ಕೊಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್‌‍.ನಡಹಳ್ಳಿ ಅವರು, ಲೀಟರ್‌ಗೆ 50 ಎಮ್‌ಎಲ್‌ ಹೆಚ್ಚಿಗೆ ಕೊಡಿ ಎಂದು ಯಾರದರೂ ಒತ್ತಾಯ ಮಾಡಿದ್ದರಾ? ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಥನೆ ಮಾಡುವಂತಹ ಮೊಂಡು ವಾದ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +2008ರಲ್ಲಿ ಯಡಿಯೂರಪ್ಪ ಹಾಲು ಉತ್ಪಾದಕ ರೈತರಿಗೆ ಪ್ರೊತ್ಸಾಹ ಧನ ಕೊಟ್ಟಿದ್ದರು. ಈ ಸರ್ಕಾರ ಸಂಪೂರ್ಣವಾಗಿ ನಿಲ್ಲಿಸಿದೆ. ರೈತರಿಗೆ 5 ರೂ. ನೇರವಾಗಿ ಖಾತೆಗೆ ಹಾಕಬೇಕು. ನಮ ಸರ್ಕಾರ ಬಂದರೆ 7 ರೂ. ಕೊಡುತ್ತೇವೆ ಅಂದಿದ್ದರು. ಆದರೆ ಈ ಸರ್ಕಾರ 5 ರೂ. ಸಹ ಕೊಡುತ್ತಿಲ್ಲ ಎಂದು ವ್ಯಂಗ್ಯವಾಡಿದರು. +ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣವನ್ನು ಅವರ ಖಾತೆಗಳಿಗೆ ಹಾಕಬೇಕು. ಬೆಲೆ ಹೆಚ್ಚಿಸುವ ಬದಲು ಪ್ರೋತ್ಸಾಹ ಧನ ಕೊಡಬೇಕು ಎಂದು ಅವರು ಆಗ್ರಹಿಸಿದರು. ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮಾತನಾಡಿ, ಸರ್ಕಾರ ತನ್ನ ಉದ್ದಟತನ ತೋರಿಸುತ್ತಿದೆ. ಹಾಲಿನ ಬೆಲೆ ಏರಿಸಿ ರೈತರಿಗೆ ಬೆಂಬಲ ನೀಡದೆ ಅವರ ಜೊತೆ ಚೆಲ್ಲಾಟ ಆಡುತ್ತಿದೆ ಎಂದು ರೈತರಿಗೆ ಬರೆ ಹಾಕುವ ಸರ್ಕಾರದ ನೀತಿ ನಿರ್ಧಾರಗಳನ್ನು ಸರ್ಕಾರ ಬದಲಾಯಿಸಬೇಕು ಎಂದು ಒತ್ತಾಯಿಸಿದರು. +ಬೀಜ ಗೊಬ್ಬರದ ಬೆಲೆ ಗಗನಕ್ಕೇರಿದೆ. ರೈತ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಹಾಲಿನಬೆಲೆ ಏರಿಸಿ ಗ್ರಾಹಕರಿಗೆ ಬರೆ ಹಾಕಿದೆ. ಡೀಸೆಲ್‌ ಪೆಟ್ರೋಲ್‌ ಬೆಲೆ ಜಾಸ್ತಿಯಾಗಿದೆ. ರೈತ, ಮಹಿಳಾ,ಯುವಕರ ವಿರೋಧಿ ಸರ್ಕಾರ ಇದು ಸಿಎಂ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದರು. \ No newline at end of file diff --git a/eesanje/url_46_92_8.txt b/eesanje/url_46_92_8.txt new file mode 100644 index 0000000000000000000000000000000000000000..8c1e6c698a2044d4098141e816b150e60c2095db --- /dev/null +++ b/eesanje/url_46_92_8.txt @@ -0,0 +1,6 @@ +ಮನಸ್ಸಿನಲ್ಲಿ ಇದ್ದದ್ದನ್ನು ನೇರವಾಗಿ ಹೇಳಿದ್ದೇನೆ, ಒತ್ತಡದಲ್ಲಿ ಹೇಳಿಕೆ ನೀಡಿಲ್ಲ : ಚಂದ್ರಶೇಖರನಾಥ ಸ್ವಾಮೀಜಿ +ಬೆಂಗಳೂರು,ಜೂ.29– ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ನೀಡಿರುವ ಹೇಳಿಕೆ ಹಿಂದೆ ಯಾರ ಒತ್ತಡವೂ ಇರಲಿಲ್ಲ. ಮನಸ್ಸಿನಲ್ಲಿ ಇದ್ದದ್ದನ್ನು ನೇರವಾಗಿ ಹೇಳಿರುವುದಾಗಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದ್ದಾರೆ. +ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಪರಿಶ್ರಮ ಅರಿತು ಪ್ರೀತಿಯಿಂದ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟುಕೊಟ್ಟರೆ ಒಳ್ಳೆಯದು ಎಂದರು. +ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಿ ಎಂದು ನಿಗದಿಪಡಿಸಲು ನಾವು ಯಾರು ಎಂದ ಅವರು, ಸಿದ್ಧರಾಮಯ್ಯನವರ ನಂತರ ಮುಖ್ಯಮಂತ್ರಿಯಾಗುವುದು ಡಿ.ಕೆ.ಶಿವಕುಮಾರ್‌ ಸರದಿಯೇ ಹೊರತು ಬೇರೆಯವರಲ್ಲ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಿ 6 ತಿಂಗಳೋ, ವರ್ಷವೋ ಕಳೆದ ನಂತರ ಯಾರೂ ಬೇಕಾದರೂ ಮುಖ್ಯಮಂತ್ರಿಯಾಗಲಿ ಎಂದು ಅವರು ಹೇಳಿದರು. +ನಾನು ಸಮುದಾಯವನ್ನು ಇಟ್ಟುಕೊಂಡು ಡಿ.ಕೆ.ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಕೇಳಿಲ್ಲ. ಮುಂದಿನ ಸರದಿ ಇರುವುದು ಡಿ.ಕೆ.ಶಿವಕುಮಾರ್‌ರದೇ ಹೊರತು ಬೇರೆ ಸಮುದಾಯದವರಲ್ಲ. ಜಾತಿ, ಜನಾಂಗ, ಸಮುದಾಯದ ಬಗ್ಗೆ ಮಾತನಾಡುವುದಿಲ್ಲ. ನಮ ವೈಯಕ್ತಿಕ ಅಭಿಪ್ರಾಯವನ್ನು ಅಂದು ಹೇಳಿದ್ದೇವೆ. ಮನಸ್ಸಿನಲ್ಲಿತ್ತು. ಅದನ್ನು ಹೇಳಿದ್ದೇವೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾದರೆ ಒಳ್ಳೆಯದು. +ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾರೆ. ಈ ಸಮಯ ಬಿಟ್ಟರೆ ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿಯಾಗಲು ಬೇರೆ ಸಮಯ ಬರುವುದಿಲ್ಲ. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಇದು ಕಾರ್ಯ ಸಾಧ್ಯವಾಗುತ್ತದೆ. ಹಾಗಾಗಿ ಈ ವಿಚಾರವನ್ನು ಪ್ರಸ್ತಾಪಿಸಿರುವುದಾಗಿ ಸ್ವಾಮೀಜಿ ತಿಳಿಸಿದರು. \ No newline at end of file diff --git a/eesanje/url_46_92_9.txt b/eesanje/url_46_92_9.txt new file mode 100644 index 0000000000000000000000000000000000000000..01b59f0f56802ae56b2709c42ecdaa38b229e4ab --- /dev/null +++ b/eesanje/url_46_92_9.txt @@ -0,0 +1,10 @@ +ಏಕವಚನದಲ್ಲಿ ಸ್ವಾಮೀಜಿಯನ್ನು ನಿಂದಿಸಿ ಸಿದ್ದರಾಮಯ್ಯ ಹಿಂದೂ ವಿರೋಧಿ ಧೋರಣೆ ಪ್ರದರ್ಶಿಸಿದ್ದಾರೆ : ಬಿಜೆಪಿ +ಬೆಂಗಳೂರು, ಜೂ.29-ಸಿದ್ದರಾಮಯ್ಯ ಅವರೇ ಡಿಕೆಶಿ ಜೊತೆ ವೈಮನಸ್ಸಿದ್ದರೆ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಸ್ವಾಮೀಜಿಗಳ ಬಗ್ಗೆ ಅಗೌರವದಿಂದ ಮಾತನಾಡಿದರೆ ನಿಮಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿ ಹೇಳಿದೆ. +ಸಿಎಂ ಸ್ಥಾನವನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮನವಿ ಮಾಡಿದ ಬೆನ್ನಲ್ಲೇ ವ್ಯಕ್ತಿಯೊಬ್ಬರೊಂದಿಗೆ ಸಿದ್ದರಾಮಯ್ಯ ಅವರು ನಡೆಸಿರುವ ಮಾತುಕತೆ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. +ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯನವರು ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ. +ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನಡುವೆ ವೈಮನಸ್ಯವಿದ್ದರೆ ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ. ಅದು ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನು ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಹೇಳಿದ್ದಾರೆ. +ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ@siddaramaiahನವರು ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ.ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ@DKShivakumarನಡುವೆ ವೈಮನಸ್ಯವಿದ್ದರೆ ಅದನ್ನ ಪಕ್ಷದ ವೇದಿಕೆಯಲ್ಲಿ…../ +ಮತ್ತೊಂದು ಪ್ಟೋ್‌ನಲ್ಲಿ ಗೃಹ ಸಚಿವ ಪರಮೇಶ್ವರ್‌ ವಿರುದ್ಧವೂ ಕಿಡಿಕಾರಿದ್ದಾರೆ. ದಿಕ್ಕು ದೆಸೆಯಿಲ್ಲದ ನೀತಿಗಳಿಂದ ಪಾಪರ್‌ ಆಗಿರುವ ಕಾಂಗ್ರೆಸ್‌ ಸರ್ಕಾರದ ಬಳಿ ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ನೀಡುವುದಕ್ಕೂ ದುಡ್ಡಿಲ್ಲ. ಹುಬ್ಬಳ್ಳಿಯಲ್ಲಿ ಕೊಲೆಗೀಡಾಗಿದ್ದ ಅಂಜಲಿ ಅಂಬಿಗೇರ ಮನೆಗೆ ಮೇ 20 ರಂದು ಡಾ. ಪರಮೇಶ್ವರ್‌ ಭೇಟಿ ನೀಡಿ, ಪರಿಹಾರದ ಭರವಸೆ ನೀಡಿದ್ದರು. ಚುನಾವಣೆ ನೀತಿ ಸಂಹಿತೆ ಮುಗಿದು ತಿಂಗಳು ಕಳೆಯುತ್ತಾ ಬಂದರೂ ಕಾಂಗ್ರೆಸ್‌ ಸರ್ಕಾರಕ್ಕೆ ಕೊಟ್ಟ ಮಾತು ಮರೆತು ಹೋಗಿದೆ. +ಬಣ್ಣ ಬಣ್ಣದ ಕಾಗೆ ಹಾರಿಸಿ ಜನರಿಗೆ ಟೋಪಿ ಹಾಕುವುದು, ವಿಶ್ವಾಸ ದೋಹ ಬಗೆಯುವುದೇ ಸಿದ್ದರಾಮಯ್ಯನವರ ಸರ್ಕಾರ ಕೊಡುವ ಗ್ಯಾರಂಟಿ. ಮೊದಲೇ ನೀಚಕೃತ್ಯದಿಂದ ನೊಂದಿರುವ ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ನೀಡದಷ್ಟು ದಯನೀಯ ಸ್ಥಿತಿಗೆ ಸರ್ಕಾರ ತಲುಪಿರುವುದು ಕನ್ನಡಿಗರ ದೌರ್ಭಾಗ್ಯ ಎಂದು ಕಿಡಿಕಾರಿದ್ದಾರೆ. +ಬೆಲೆ ಏರಿಕೆ ವಿರುದ್ಧ ರಾಜ್ಯ ಬಿಜೆಪಿ ಪ್ಟೋ್‌ ಮಾಡಿದ್ದು, ಸರ್ಕಾರದ ಕುರಿತು ವ್ಯಂಗ್ಯವಾಡಿದೆ. ಇಂಧನ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ ರಾಜ್ಯದ ಜನರ ನೆಮ್ಮದಿಗೆ ಕೊಳ್ಳಿಯಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರು ಇದೀಗ ಹೊಸ ಸಂಶೋಧನೆಗೆ ಇಳಿದಿದ್ದಾರೆ. 25 ಸಾವಿರ ಎಕರೆ ಸಾರ್ವಜನಿಕ ಆಸ್ತಿ ಅಡವಿಡಲು ಆಳ ಅಧ್ಯಯನ ನಡೆಸಿದ ಕಾಂಗ್ರೆಸ್‌ ಸರ್ಕಾರವೀಗ, ಬಸ್‌ ಪ್ರಯಾಣ ದರ ಸೇರಿ ಬೆಲೆ ಏರಿಕೆಗೆ ಇನ್ನೇನಾದರೂ ಉಳಿದಿದೆಯಾ? ಅಂತ ದುರ್ಬಿನ್‌ ಹಾಕಿಕೊಂಡು ಶೋಧನೆಯಲ್ಲಿ ತೊಡಗಿದೆ. +ಕಾಂಗ್ರೆಸ್‌ ಅಂದ್ರೆ ಜನರ ಜೇಬಿಗೆ ಕತ್ತರಿ ಖಚಿತ. ಕರುನಾಡು ದಿವಾಳಿ ಖಂಡಿತ. ಹಾಗೇ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕನ್ನಡಿಗರು ದಂಗೆ ಏಳುವುದೂ ನಿಶ್ಚಿತ ಎಂದು ಲೇವಡಿ ಮಾಡಿದೆ. \ No newline at end of file diff --git a/eesanje/url_46_93_1.txt b/eesanje/url_46_93_1.txt new file mode 100644 index 0000000000000000000000000000000000000000..2bdb0bee0b19e3e8b3dcf13b79917e1c2b36d886 --- /dev/null +++ b/eesanje/url_46_93_1.txt @@ -0,0 +1,4 @@ +ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ : ಕೆಆರ್‌ಎಸ್‌‍ ಒಳಹರಿವು ಹೆಚ್ಚಳ +ಮೈಸೂರು,ಜೂ.29-ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕೃಷ್ಣರಾಜ ಜಲಶಾಯಕ್ಕೆ 18,644 ಕ್ಯೂಸೆಕ್‌ ಒಳಹರಿವು ಹೆಚ್ಚಳವಾಗಿದೆ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಜಲಾಶಯದಲ್ಲಿ 92.80 ಅಡಿ ನೀರು ಸಂಗ್ರಹವಾಗಿದೆ. 124.8 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್‌‍ ಡ್ಯಾಮ್‌ 93 ಅಡಿ ತಲುಪುವ ಸನ್ನಿಹದಲ್ಲಿದೆ. +ಕಳೆದ ಮೂರ್ನಾಲ್ಕು ದಿನಗಳಿಂದ ಕಾವೇರಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರದಿಂದ ಕೆಆರ್‌ಎಸ್‌‍ಗೆ ಒಳಹರಿವು ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. +ನಿನ್ನೆ 13,437 ಕ್ಯೂಸೆಕ್‌ ಒಳಹರಿವು ಇತ್ತು. ಇಂದು ಒಳಹರಿವಿನ ಪ್ರಮಾಣ 18,644 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇದೇ ರೀತಿ ಮಳೆಯ ಪ್ರಮಾಣ ಹೆಚ್ಚಾಗಿ ಒಳಹರಿವಿನ ಪ್ರಮಾಣ ಹೆಚ್ಚಾದರೆ ಜಲಾಶಯದಲ್ಲಿ ನೀರು ಸಂಗ್ರಹವು ಹೆಚ್ಚಾಗುತ್ತದೆ. ಸದ್ಯ ಒಳಹರಿವು 478 ಕ್ಯೂಸೆಕ್‌ ಮಾತ್ರ ಇದೆ. \ No newline at end of file diff --git a/eesanje/url_46_93_10.txt b/eesanje/url_46_93_10.txt new file mode 100644 index 0000000000000000000000000000000000000000..4621ef1a5a21e7fb3e87f89c1d4ecdd18d6dba92 --- /dev/null +++ b/eesanje/url_46_93_10.txt @@ -0,0 +1,6 @@ +ಸಂಚಾರಿ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮವಾಗಲಿ : ಹೆಚ್‌.ಡಿ.ಕೆ. +ಬೆಂಗಳೂರು, ಜೂ.28-ಸಂಚಾರಿ ನಿಯಮಗಳನ್ನು ಪಾಲಿಸದೇ ನಿರ್ಲಕ್ಷ್ಯ ವಹಿಸುವವರ ವಿರುದ್ಧ ಸಂಬಂಧಿಸಿದ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. +ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ ಎಂದಿದ್ದಾರೆ. +ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ ದುಃಖ ಉಂಟಾಗಿದೆ. ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ದುರಂತ ಸಂಭವಿಸಿದೆ.ಮೃತಪಟ್ಟ ಎಲ್ಲರ ಆತ್ಮಕ್ಕೂ ಚಿರಶಾಂತಿ ಸಿಗಲಿ ಹಾಗೂ ಗಾಯಾಳುಗಳು ಆದಷ್ಟು ಬೇಗ… +ಅಪಘಾತದಲ್ಲಿ ಗಾಯಗೊಂಡಿರುವವರಿಗೆ ರಾಜ್ಯ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಒತ್ತಾಯಿಸಿರುವ ಅವರು, ಲಾರಿ ಚಾಲಕ ದೋಷಪೂರಿತ ಪಾರ್ಕಿಂಗ್‌ ಮಾಡಿರುವುದೇ ಅಪಘಾತಕ್ಕೆ ಕಾರಣವೆಂದು ಹಾವೇರಿ ಪೊಲೀಸ್‌‍ ವರಿಷ್ಠಾಧಿಕಾರಿಗಳು ಹೇಳಿದ್ದಾರೆ. ಚಾಲಕರು ಸಂಚಾರಿ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಈ ಗ್ಗೆ ನಿರ್ಲಕ್ಷ್ಯ ತೋರಿ ಜೀವಕ್ಕೆ ಎರವಾಗುತ್ತಿರುವುದು ನೋವಿನ ಸಂಗತಿ ಎಂದು ತಿಳಿಸಿದ್ದಾರೆ. +ತಾಯಿ ಸವದತ್ತಿ ಶ್ರೀ ರೇಣುಕಾ ಯಲ್ಲಮನ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಈ ಅಪಘಾತದ ದುರಂತ ಸಂಭವಿಸಿದೆ. ಮೃತಪಟ್ಟಿರುವ ಎಲ್ಲರ ಆತಕ್ಕೆ ಚಿರಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. \ No newline at end of file diff --git a/eesanje/url_46_93_11.txt b/eesanje/url_46_93_11.txt new file mode 100644 index 0000000000000000000000000000000000000000..c2725737345197e34b4cba4f20028cf1277692ee --- /dev/null +++ b/eesanje/url_46_93_11.txt @@ -0,0 +1,8 @@ +ಚನ್ನಪಟ್ಟಣ ಉಪಚುನಾವಣೆಯಲ್ಲಿ ತೊಡೆತಟ್ಟಲಿರುವ “ಮೈತ್ರಿ ವೀರ” ಯಾರು..? +ಬೆಂಗಳೂರು,ಜೂ.28-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜ್ಯದ ಗಮನ ಸೆಳೆಯುತ್ತಿದ್ದು, ಬಿಜೆಪಿ ಜೆಡಿಎಸ್‌‍ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಬಗ್ಗೆ ಭಾರೀ ಕುತೂಹಲ ಮೂಡಿಸಿದೆ. ಈ ನಡುವೆ ಬಿಜೆಪಿ ಹಾಗೂ ಜೆಡಿಎಸ್‌‍ ಮೈತ್ರಿಯು ಕ್ಷೇತ್ರದಲ್ಲಿ ಪಕ್ಷದ ಚಿಹ್ನೆ ವಿನಿಮಯ ಮಾಡುವ ಹೊಸ ತಂತ್ರಗಾರಿಕೆ ಹೆಣೆದಿದೆ. ಇದರಿಂದಾಗಿ ಈ ಕ್ಷೇತ್ರಕ್ಕೆ ಜೆಡಿಎಸ್‌‍ ಪಕ್ಷದ ಚಿಹ್ನೆ ದೊರೆಯುತ್ತಿರುವುದು ಬಹುತೇಕ ಫಿಕ್ಸ್ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ. +ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈಗ ರಾಜ್ಯದ ಜನರ ಕಣ್ಣು ಉಪ ಚುನಾವಣೆಯ ಮೇಲೆ ನೆಟ್ಟಿದೆ. ಶಾಸಕರು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹಾವೇರಿಯ ಶಿಗ್ಗಾಂವಿ, ರಾಮನಗರದ ಚನ್ನಪಟ್ಟಣ, ವಿಜಯನಗರದ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. +ಹೆಚ್‌‍.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಡಿ.ಕೆ.ಶಿವಕುಮಾರ್‌ ಎಂಟ್ರಿ ಕೊಟ್ಟಿದ್ದಾರೆ. ಇದರಿಂದಾಗಿ ಪ್ರತಿಷ್ಠೆಯ ಕ್ಷೇತ್ರವಾಗಿದೆ. ಡಿಕೆ ಬ್ರದರ್ಸ್‌ ಸೋಲಿಸಲು ಮೈತ್ರಿ ಪಕ್ಷ ಚಿಹ್ನೆ ವಿನಿಯಮದಡಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದೆ. ಆದರೆ ಮೈತ್ರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವರ ಹೆಸರಿದ್ದು, ಯಾರಿಗೆ ಟಿಕೆಟ್‌ ಸಿಗುತ್ತದೆ ಎಂಬುದು ಕಾದು ನೋಡಬೇಕಿದೆ. +ಜೆಡಿಎಸ್‌‍ ಚಿಹ್ನೆಯಿಂದಲೇ ಸ್ಪರ್ಧೆ:ಚನ್ನಪಟ್ಟಣ ಜೆಡಿಎಸ್‌‍ ಪಕ್ಷದ ಭದ್ರಕೋಟೆ. ಈ ಕ್ಷೇತ್ರ ಹೇಳಿ ಕೇಳಿ ಪ್ರಸ್ತುತ ಕೇಂದ್ರ ಸಂಪುಟ ಸಚಿವರಾಗಿರುವ ಹೆಚ್‌‍.ಡಿ.ಕುಮಾರಸ್ವಾಮಿ ನಿಕಟಪೂರ್ವ ಶಾಸಕರಾಗಿದ್ದ ಕ್ಷೇತ್ರವಾಗಿದೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ಟಾಂಗ್‌ ಕೊಡಬೇಕಾದರೆ ಈ ಕ್ಷೇತ್ರದಲ್ಲಿ ಬಲಿಷ್ಠ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು. +ಈ ಕ್ಷೇತ್ರದಲ್ಲಿ ಜೆಡಿಎಸ್‌‍ ಚಿಹ್ನೆಯಡಿ ಮೈತ್ರಿ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ. ಇದರಿಂದಾಗಿ ನಿಖಿಲ್‌ ಕುಮಾರಸ್ವಾಮಿ ಅಥವಾ ಜಯಮುತ್ತು ಅವರನ್ನೇ ಅಭ್ಯರ್ಥಿಯನ್ನಾಗಿಸಬೇಕೆಂಬ ಕೂಗು ಪಕ್ಷದಲ್ಲಿ ಕೇಳಿ ಬರುತ್ತಿದೆ. +ಮತ್ತೊಂದೆಡೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರನ್ನು ಜೆಡಿಎಸ್‌‍ ಚಿಹ್ನೆಯಿಂದ ನಿಲ್ಲಿಸುವ ತಂತ್ರವೂ ಚಾಲ್ತಿಯಲ್ಲಿದೆ ಎಂದು ಹೇಳಲಾಗುತ್ತಿದೆ.ಸದ್ಯದ ಪರಿಸ್ಥಿತಿಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಹೆಚ್‌‍.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವಿನ ಹಣಾಹಣಿಯಾಗಿದೆ. ಅಭ್ಯರ್ಥಿಗಳಾಗಿ ಕಣಕ್ಕೆ ಯಾರೇ ಬಂದರೂ ಇಬ್ಬರಿಗೂ ಇದು ಪ್ರತಿಷ್ಠೆಯ ಚುನಾವಣೆ. +ಡಿ.ಕೆ.ಶಿವಕುಮಾರ್‌ ಅವರು ಶತಾಯಗತಾಯ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌‍ ಬಾವುಟ ಹಾರಿಸಬೇಕೆಂಬ ಪಣ ತೊಟ್ಟಿದ್ದರೆ, ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕಿರುವುದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಗೆ ಅನಿವಾರ್ಯ. ಹೀಗಾಗಿ ಉಪಚುನಾವಣಾ ಕಣ ರಂಗೇರಿದೆ. \ No newline at end of file diff --git a/eesanje/url_46_93_12.txt b/eesanje/url_46_93_12.txt new file mode 100644 index 0000000000000000000000000000000000000000..11f18aa85cc258b8ccee9e8b5b331f3618b988ea --- /dev/null +++ b/eesanje/url_46_93_12.txt @@ -0,0 +1,15 @@ +ಆರ್‌.ಅಶೋಕ್‌ ವಿರುದ್ಧ ಸ್ವಪಕ್ಷದಲ್ಲೇ ಅಸಮಾಧಾನ, ಪ್ರತಿಪಕ್ಷದ ನಾಯಕನಾಗಿ ಬೇರೊಬ್ಬರ ಆಯ್ಕೆಗೆ ಚರ್ಚೆ +ಬೆಂಗಳೂರು,ಜೂ.28-ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಕಾರ್ಯವೈಖರಿಯ ಬಗ್ಗೆ ಸ್ವಪಕ್ಷದಲ್ಲೇ ಅಸಮಾಧಾನ ವ್ಯಕ್ತವಾಗಿದ್ದು, ಹುದ್ದೆಯಿಂದ ತೆರವುಗೊಳಿಸಿ ಬೇರೊಬ್ಬರನ್ನು ನೇಮಕ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚೆ ಆರಂಭವಾಗಿದೆ.ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವಲ್ಲಿ ವಿಫಲರಾಗಿರುವ ಅಶೋಕ್‌ ಬದಲಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸರ್ಕಾರದ ವಿರುದ್ಧ ದಾಖಲೆಗಳ ಸಮೇತ ಛಾಟಿ ಬೀಸುವ ಯುವ ನಾಯಕನನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ. +ಅಶೋಕ್‌ ಅವರ ಸ್ಥಾನಕ್ಕೆ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ಕುಮಾರ್‌ ಅವರನ್ನು ನೇಮಕ ಮಾಡಲಾಗುತ್ತದೆ ಎಂಬ ಗುಸುಗುಸು ಕೇಳಿ ಬರುತ್ತಿದೆ. ಜುಲೈನಲ್ಲಿ ಅಧಿವೇಶನ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಅಷ್ಟರಲ್ಲಿ ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಬಹುದು ಎಂದು ಹೇಳಲಾಗುತ್ತಿದೆ. +ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಅಶೋಕ್‌ ಸರ್ಕಾರದ ವೈಫಲ್ಯಗಳನ್ನು ಸದನದ ಒಳಗೆ ಮತ್ತು ಹೊರಗೆ ಜನರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲೇ ಕೇಳಿಬಂದಿದೆ. +ಹೀಗಾಗಿ ಮುಂದಿನ ಮಳೆಗಾಲದ ಅಧಿವೇಶನದ ಒಳಗೆ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಅಶೋಕ್‌ ಬದಲಿಗೆ ಹಿಂದುಳಿದ ವರ್ಗಗಳ ನಾಯಕ ಆರ್‌ಎಸ್‌‍ಎಸ್‌‍ ಹಿನ್ನಲೆಯ ಸುನೀಲ್‌ಕುಮಾರ್‌ ನೇಮಕವಾಗಬಹುದೆಂಬ ಗುಸುಗುಸು ಬಿಜೆಪಿ ಪಾಳೆಯದಲ್ಲಿ ಕೇಳಿಬರುತ್ತಿದೆ. +ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌ ಸೇರಿದಂತೆ ಅನೇಕರು ಸರ್ಕಾರವನ್ನು ಸದನದಲ್ಲಿ ದಾಖಲೆಗಳನ್ನಿಟ್ಟು ಮುಜುಗರಕ್ಕೆ ಸಿಲುಕಿಸುತ್ತಿದ್ದರು. ಆದರೆ ಅಶೋಕ್‌ ಇದುವರೆಗೂ ಇಂತಹ ಒಂದೇ ಒಂದು ಅವಕಾಶವನ್ನು ಸದ್ಬಳಕೆ ಮಾಡಿಕೊಂಡಿಲ್ಲ ಎಂಬ ಅಸಮಾಧಾನ ಶಾಸಕರಲ್ಲಿ ಮಡುಗಟ್ಟಿದೆ. +ಕಾನೂನು ಸುವ್ಯವಸ್ಥೆ , ರಾಜ್ಯದಲ್ಲಿ ನಡೆದ ಸರಣಿ ಕೊಲೆಗಳು, ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಕೇಳಿಬಂದ ಹಗರಣ, ಸರ್ಕಾರದ ವೈಫಲ್ಯಗಳ ಬಗ್ಗೆ ಸದನದಲ್ಲಿ ಸಮರ್ಥವಾಗಿ ಮಾತನಾಡುವಲ್ಲಿ ಅಶೋಕ್‌ ವಿಫಲರಾಗುತ್ತಿದ್ದಾರೆ ಎನ್ನಲಾಗುತ್ತಿದೆ. +ಹೀಗಾಗಿ ಬಹುತೇಕ ಶಾಸಕರು ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರುಗಳಿಗೆ ಎದುರೇಟು ನೀಡುವ ನಾಯಕನೊಬ್ಬನನ್ನು ಛಾಯಾ ಮುಖ್ಯಮಂತ್ರಿ ಎಂದೇ ಕರೆಯಲ್ಪಡುವ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೂರಿಸಬೇಕೆಂಬ ಒಕ್ಕೊರಲಿನ ಆಗ್ರಹ ಮಾಡುತ್ತಿದ್ದಾರೆ. +ಈ ಹಿಂದೆ ಬಿಜೆಪಿ ಸರ್ಕಾರದ ಕೆಲವು ಹಗರಣಗಳ ಬಗ್ಗೆ ಅಂದು ಸಿದ್ದರಾಮಯ್ಯನವರು ಗಂಟೆಗಟ್ಟಲೇ ಮಾತನಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಅಲ್ಲದೆ ಸಾಕಷ್ಟು ಬಾರಿ ಮುಜುಗರಕ್ಕೂ ಸಿಲುಕಿಸಿದ ನಿದರ್ಶನಗಳೂ ಇವೆ. ಆದರೆ ಅಶೋಕ್‌ ಅವರು ಈವರೆಗೂ ಸದನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಒಂದೇ ಒಂದು ಪ್ರಸಂಗವೂ ಜರುಗಿಲ್ಲ. ಬದಲಿಗೆ ಕೆಲವು ಸಂದರ್ಭಗಳಲ್ಲಿ ಅವರೇ ಮುಜುಗರಕ್ಕೀಡಾದ ಪ್ರಸಂಗವೂ ಜರುಗಿದೆ. ಹೀಗಾಗಿ ಅವರ ಸ್ಥಾನಕ್ಕೆ ಕುತ್ತು ಎಂಬ ಮಾತು ಜಗನ್ನಾಥ ಭವನದಿಂದಲೇ ರಿಂಗಣಿಸುತ್ತಿದೆ. +ಶೀಘ್ರದಲ್ಲೇ ಆಯ್ಕೆ:ಇನ್ನು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾಗಿರುವುದರಿಂದ, ಪ್ರತಿಪಕ್ಷ ಬಿಜೆಪಿಯು ಪರಿಷತ್ತಿನಲ್ಲಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನೇಮಿಸಲು ಮುಂದಾಗಿದೆ.ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಮತ್ತೊಬ್ಬ ಎಂಎಲ್‌ಸಿ ಎನ್‌.ರವಿಕುಮಾರ್‌ ಅವರ ಹೆಸರು ಕೂಡ ಕೇಳಿಬರುತ್ತಿದೆ. +ವಿರೋಧ ಪಕ್ಷದ ನಾಯಕರಾಗಿದ್ದ ಪೂಜಾರಿ ಅವರು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅದರಂತೆ ಅವರು ಪರಿಷತ್ತಿಗೆ ರಾಜೀನಾಮೆ ನೀಡಿದರು. ಆಡಳಿತಾರೂಢ ಕಾಂಗ್ರೆಸ್‌‍ನ್ನು ಸಮರ್ಥವಾಗಿ ಎದುರಿಸಬಲ್ಲ ಮೇಲನೆಗೆ ಬಿಜೆಪಿ ಈಗ ಪ್ರಬಲ ವಿರೋಧ ಪಕ್ಷದ ನಾಯಕನನ್ನು ಹುಡುಕುತ್ತಿದೆ. +ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ಒಕ್ಕಲಿಗರಾಗಿದ್ದಾರೆ, ಸಿ.ಟಿ.ರವಿ ಕೂಡ ಒಕ್ಕಲಿಗರಾಗಿರುವುದರಿಂದ ಪರಿಷತ್‌ ಪ್ರತಿಪಕ್ಷ ನಾಯಕನ ಸ್ಥಾನ ನೀಡುವ ಸಾಧ್ಯತೆ ಕಡಿಮೆ. ಒಬಿಸಿ ಸಮುದಾಯಕ್ಕೆ ಸೇರಿದ ರವಿಕುಮಾರ್‌ ಅವರು ಜನಪ್ರಿಯ ಮುಖಂಡರಾಗಿದ್ದಾರೆ, ಇದರೊಂದಿಗೆ ಸದನದಲ್ಲಿ ಒಕ್ಕಲಿಗ ಮತ್ತು ಒಬಿಸಿ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಿರುವುದಾಗಿ ಪಕ್ಷ ಹೇಳಿಕೊಳ್ಳಬಹುದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲಿಂಗಾಯತ. ಅಲ್ಲದೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ್‌ ಬೆಲ್ಲದ್‌ ಕೂಡ ಲಿಂಗಾಯತರಾಗಿದ್ದಾರೆ. +ರವಿಕುಮಾರ್‌ ಅವರನ್ನು ಪರಿಷತ್‌ ಪ್ರತಿಪಕ್ಷ ನಾಯಕನಾಗಿ ನೇಮಕ ಮಾಡಲು ಹಲವು ನಾಯಕರು ಮತ್ತು ಎಂಎಲ್‌ಸಿಗಳು ಉತ್ಸುಕರಾಗಿದ್ದಾರೆ. ಪಕ್ಷದ ನೆಲೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ಶ್ರಮಿಸಿದ್ದಾರೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಪಕ್ಷದ ಹೈಕಮಾಂಡ್‌ ಉತ್ಸುಕವಾಗಿದೆ ಎಂದು ಪಕ್ಷದ ಪ್ರಮುಖರೊಬ್ಬರು ತಿಳಿಸಿದ್ದಾರೆ. +ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದಲ್ಲಿ ಸದನದಲ್ಲಿ ಕಾಂಗ್ರೆಸ್‌‍ಗಿಂತ ಹೆಚ್ಚಿನ ಶಾಸಕರಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರವಿದ್ದು, ಹೀಗಾಗಿ ಪ್ರಬಲ ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಲು ಬಿಜೆಪಿ ಮೇಲೆ ಒತ್ತಡವಿದೆ. ಈ ಹಿಂದೆ ಸಚಿವರಾಗಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಸಿ.ಟಿ.ರವಿ ಪಕ್ಷಕ್ಕೆ ಮತ್ತೊಂದು ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. +ಒಕ್ಕಲಿಗ ನಾಯಕರಾಗಿರುವ ಸಿ,ಟಿ ರವಿ ಅವರು ಕೂಡ ಒಂದು ವಿಭಾಗದ ಬೆಂಬಲ ಪಡೆದಿದ್ದಾರೆ. ಮತ್ತೊಬ್ಬ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಕೂಡ ರೇಸ್‌‍ನಲ್ಲಿದ್ದಾರೆ. ದೆಹಲಿಯಲ್ಲಿರುವ ವಿಜಯೇಂದ್ರ ಅವರು ಹಿರಿಯ ನಾಯಕರ ಜೊತೆ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_46_93_2.txt b/eesanje/url_46_93_2.txt new file mode 100644 index 0000000000000000000000000000000000000000..12583a0d842e1e78280f3bb0a5ad7958876b722b --- /dev/null +++ b/eesanje/url_46_93_2.txt @@ -0,0 +1,6 @@ +ಮುಖ್ಯಮಂತ್ರಿ ಬದಲಾಯಿಸುವುದಾದರೆ ವೀರಶೈವ ಸಮುದಾಯದವರನ್ನೇ ಸಿಎಂ ಮಾಡಿ +ಬೆಳಗಾವಿ,ಜೂ.28-ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವುದಾದರೆ ವೀರಶೈವ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರು ಒತ್ತಾಯಿಸಿದ್ದಾರೆ. +ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಪೂರ್ವನಿರ್ಧರಿತ ಒಡಂಬಡಿಕೆಗಳಿದ್ದರೆ ಅದರ ಪ್ರಕಾರ ನಡೆದುಕೊಳ್ಳುವುದಕ್ಕೆ ನಮ ಅಭ್ಯಂತರವಿಲ್ಲ ಎಂದಿದ್ದಾರೆ. +ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಸಂದರ್ಭದಲ್ಲಿ ವೀರಶೈವ ಸಮುದಾಯವನ್ನು ಕಡೆಗಣಿಸಬಾರದು ಎಂದರು.ಎಂ.ಡಿ.ಪಾಟೀಲ್‌, ಎಸ್‌‍.ಎಸ್‌‍.ಮಲ್ಲಿಕಾರ್ಜುನ್‌ ಸೇರಿದಂತೆ ಸಮುದಾಯದ ಎಲ್ಲಾ ಸಚಿವರು ಸರ್ಕಾರದಲ್ಲಿ ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. +ಈ ನಿಟ್ಟಿನಲ್ಲಿ ಕಾಶಿ ಪೀಠ, ಉಜ್ಜಯಿನಿ ಪೀಠ ಸೇರಿ ಪಂಚಪೀಠಗಳ ಜೊತೆ ಈ ಕುರಿತು ಚರ್ಚೆ ನಡೆಸಿದ್ದೇವೆ. ಅವರೂ ಕೂಡ ಈ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ನಿನ್ನೆ ಕೆಂಪೇಗೌಡ ಜಯಂತಿಯ ವೇಳೆ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಅನುಭವಿಸಿದ್ದಾರೆ. +ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಧಿಕಾರ ಬಿಟ್ಟುಕೊಟ್ಟು ಸಹಕಾರ ನೀಡಬೇಕೆಂದು ಹೇಳಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈಗ ಅದರ ಬೆನ್ನಲ್ಲೇ ಪಂಚಪೀಠಗಳಿಂದ ವೀರಶೈವ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಬಂದಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. \ No newline at end of file diff --git a/eesanje/url_46_93_3.txt b/eesanje/url_46_93_3.txt new file mode 100644 index 0000000000000000000000000000000000000000..926ff5055b841ff951b7a13c5c1d616a255f25f1 --- /dev/null +++ b/eesanje/url_46_93_3.txt @@ -0,0 +1,7 @@ +ಮಾನ-ಮರ್ಯಾದೆ ಇದ್ದಿದ್ರೆ ವೇದಿಕೆಯಲ್ಲೇ ಸಿಎಂ ರಾಜೀನಾಮೆ ನೀಡಬೇಕಿತ್ತು : ಆರ್‌.ಅಶೋಕ +ಕೋಲಾರ, ಜೂ.28: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು. +ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದರು. +ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದರು. +ತೈಲ ದರ ಏರಿಕೆಯಾಗಿ ಎಲ್ಲ ದರಗಳು ಏರಿದೆ. ಹಾಲು ಉತ್ಪಾದನೆ ಹೆಚ್ಚಳವಾದರೆ ಅದನ್ನು ಬೇರೆ ರೀತಿ ಬಳಸಿಕೊಳ್ಳಬಹುದು. ಅದನ್ನು ಬಿಟ್ಟು ಹಾಲಿನ ದರ ಏರಿಸಿದ್ದಾರೆ. ಇನ್ನು ಲಿಕ್ಕರ್‌ ದರ ಕೂಡ ಏರಿಸುತ್ತಾರೆ. ಅವೈಜ್ಞಾನಿಕ ಗ್ಯಾರಂಟಿಗಳನ್ನು ಜಾರಿ ಮಾಡಿ, ಅದಕ್ಕೆ ಹಣ ಹೊಂದಿಸಲು ಸಾಧ್ಯವಾಗದೆ ತೆರಿಗೆ ವಿಧಿಸಿ ಜನರ ರಕ್ತ ಹೀರುತ್ತಿದ್ದಾರೆ ಎಂದು ದೂರಿದರು. +ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತುಒಕ್ಕಲಿಗ ಸ್ವಾಮೀಜಿಯವರು ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಹೇಳಿದ್ದಾರೆ. ಸಿದ್ದರಾಮಯ್ಯ ಧರ್ಮಾತ್ಮ ಅಲ್ಲ ಎಂದೇ ಸ್ವಾಮೀಜಿ ಪರೋಕ್ಷವಾಗಿ ಹೇಳಿದ್ದರೂ, ಡಿ.ಕೆ.ಶಿವಕುಮಾರ್‌ ಮೌನವಾಗಿದ್ದರು. ಸಿದ್ದರಾಮಯ್ಯ ಚಾಕು ಹಾಕಿದರೆ, ಡಿ.ಕೆ.ಶಿವಕುಮಾರ್‌ ಚೂರಿ ಹಾಕುತ್ತಾರೆ. ಮಾನ ಮರ್ಯದೆ ಇದ್ದಿದ್ದರೆ ಸಿದ್ದರಾಮಯ್ಯ ವೇದಿಕೆಯಲ್ಲೇ ರಾಜೀನಾಮೆ ನೀಡಿ ಹೋಗಬೇಕಿತ್ತು ಎಂದರು. +ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕಾಟದಿಂದ ತಪ್ಪಿಸಿಕೊಳ್ಳಲು ಡಿ.ಕೆ.ಸುರೇಶ್‌ ಅವರನ್ನು ಸೋಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಡಿ.ಕೆ.ಶಿವಕುಮಾರ್‌ ಸ್ವಾಮೀಜಿ ಕೈಯಲ್ಲಿ ಹೇಳಿಕೆ ಕೊಡಿಸಿದ್ದಾರೆ. ಇದರ ನಡುವೆ ಮೂರು ಡಿಸಿಎಂ ಬೇಕೆಂದು ಸಚಿವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಶಾಸಕರ ಶಾಪದಿಂದಲೇ ಸರ್ಕಾರ ಬೀಳಲಿದೆ ಎಂದರು. \ No newline at end of file diff --git a/eesanje/url_46_93_4.txt b/eesanje/url_46_93_4.txt new file mode 100644 index 0000000000000000000000000000000000000000..d5fb4d47f8df9f09b4587b1d0a907a15e4a9f858 --- /dev/null +++ b/eesanje/url_46_93_4.txt @@ -0,0 +1,5 @@ +ರಾಜ್ಯದ 4 ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಪರಿಷ್ಕರಿಸಿ ಸರ್ಕಾರ ಆದೇಶ +ಬೆಂಗಳೂರು,ಜೂ.28– ಸಾರ್ವಜನಿಕ ಸಾರಿಗೆ ಬಸ್‌‍ ದರ ಏರಿಕೆ ಮಾಡುವ ಪ್ರಸ್ತಾಪದ ಮಧ್ಯೆಯೇ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. +2023ರ ಮಾರ್ಚ್‌ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್‌ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್‌ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ. +ನಾಲ್ಕು ನಿಗಮಗಳಿಗೆ 220 ಕೋಟಿ ರೂ:ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ನೀಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. +2023ರ ಮಾರ್ಚ್‌ 1ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020ರ ಜನವರಿ 1 ರಿಂದ 2023ರ ಫೆಬ್ರವರಿ 28ರ ಅವಧಿಯನ್ನು ನೋಷನಲ್‌ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_93_5.txt b/eesanje/url_46_93_5.txt new file mode 100644 index 0000000000000000000000000000000000000000..34179bce6863d731106678c1d15b3f54a8db8e5d --- /dev/null +++ b/eesanje/url_46_93_5.txt @@ -0,0 +1,14 @@ +ಕೇಂದ್ರದಿಂದ ಅನುದಾನ ಹೆಚ್ಚಳಕ್ಕೆ ಒತ್ತಡ ಹೇರುವಂತೆ ಸಂಸದರಿಗೆ ಸಿಎಂ ಮನವಿ +ನವದೆಹಲಿ, ಜೂ.28-ರಾಜ್ಯಕ್ಕೆ ಅನುದಾನ ಹಂಚಿಕೆ ಸಂದರ್ಭದಲ್ಲಿ 1971ರ ಜನಸಂಖ್ಯೆಯನ್ನೇ ಮಾನದಂಡ ವಾಗಿ ಪರಿಗಣಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಸಂಸದರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. +ನವದೆಹಲಿಯಲ್ಲಿ ನಿನ್ನೆ ನಡೆದ ಸಂಸದರ ಸಭೆಯ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, 15ನೇ ಹಣಕಾಸು ಆಯೋಗ ಅನುದಾನ ಹಂಚಿಕೆಗೆ 2011ರ ಜನಸಂಖ್ಯೆ ಪರಿಗಣಿಸಿದೆ, ನಮ ರಾಜ್ಯದಲ್ಲಿ ಜನಸಂಖ್ಯೆಯನ್ನು ಸಮರ್ಥವಾಗಿ ನಿಯಂತ್ರಿಸಲಾಗಿದೆ. ಹಾಗಾಗಿ 1971ರ ಜನಗಣತಿಯನ್ನು ಪರಿಗಣಿಸುವಂತೆ ಒತ್ತಡ ಹೇರುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು. +ರಾಜ್ಯದಿಂದ ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ನೀಡುತ್ತಿದ್ದೇವೆ. ನಮಗೆ ವಾಪಾಸ್‌‍ ಬರುವುದು ಶೇ.12ರಷ್ಟು ಮಾತ್ರ. ಇದರಲ್ಲಿ ದೊಡ್ಡ ಅನ್ಯಾಯವಾಗಿದೆ, ಸರಿ ಪಡಿಸಿ ಎಂದಿದ್ದೇವೆ. 16ನೇ ಹಣಕಾಸು ಆಯೋಗದ ಮುಂದೆ ವಾದ ಮಾಡಿ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. +15ನೇ ಹಣಕಾಸು ಆಯೋಗದಲ್ಲಿ ಎರಡು ವರದಿ ನೀಡಿದೆ. 2021ರಲ್ಲಿ ಮೊದಲ ವರದಿ ನೀಡಿದೆ. ಅದು ಆ ವರ್ಷಕ್ಕೆ ಸೀಮಿತವಾಗಿತ್ತು. 2020-21ರ ವರದಿಯಲ್ಲಿ 5495 ಕೋಟಿ ಅನುದಾನ ಕೊಡಬೇಕು ಎಂದು ಪ್ರಸ್ತಾಪಿಸಲಾಗಿತ್ತು, ಜೊತೆಗೆ ಮೀಜೋರಾಂ 546 ಕೋಟಿ, ತೆಲಂಗಾಣಕ್ಕೆ 723 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಹೇಳಲಾಗಿತ್ತು. ಅದನ್ನು ಕೊಟ್ಟಿಲ್ಲ. +14ನೇ ಹಣಕಾಸು ಆಯೋಗದಲ್ಲಿ ಶೇ.4.7 ರಷ್ಟು ಅನುದಾನ ಬಂದಿದ್ದರೆ, 15ನೇ ಆಯೋಗದಲ್ಲಿ ಶೇ.3.6ರಷ್ಟು ಕಡಿಮೆಯಾಗಿದೆ. ಅದನ್ನು ನ್ನಿನೆ ಸಂಸದರ ಗಮನಕ್ಕೆ ತಂದಿದ್ದೇವೆ. ಅನುದಾನ ಹಂಚಿಕೆಯ ಮಾನದಂಡಗಳನ್ನು ಸರಿಯಾಗಿಲ್ಲ. ಸಂಸದರು ಕೇಂದ್ರ ಸರ್ಕಾರ ಹಾಗೂ ಆರ್ಥಿಕ ಇಲಾಖೆ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸಿದ್ದೇವೆ. +ಹಿಂದಿನ ಸರ್ಕಾರದಲ್ಲೂ ಇದು ಚರ್ಚೆಯಾಗಿ, ಹಣ ಪಡೆಯಲು ಪ್ರಯತ್ನವೂ ನಡೆದಿತ್ತು. ಕೇಂದ್ರ ಸರ್ಕಾರ ಎರಡನೇ ವರದಿಯಲ್ಲಿ ವಿಶೇಷ ಅನುದಾನದ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿ ಹಣ ಕೊಟ್ಟಿಲ್ಲ. ಆದರೆ ಮೊದಲ ವರದಿಯನ್ನು ತಿರಸ್ಕರಿಸಿಲ್ಲ. ಜೊತೆಗೆ ಎರಡನೇ ವರದಿಯಲ್ಲಿ ಫೆರಿಫರಲ್‌ ರಿಂಗ್‌ ರಸ್ತೆ ಹಾಗೂ ಬೆಂಗಳೂರಿನ ಅಂತರ್ಜಲ ವೃದ್ಧಿಗಾಗಿ ಕೆರೆ ಅಭಿವೃದ್ಧಿಗೆ ತಲಾ ಮೂರು ಸಾವಿರದಂತೆ ಒಟ್ಟು ಆರು ಸಾವಿರ ಕೋಟಿ ಕೊಡುತ್ತೇವೆ ಎಂದು ಹೇಳಿದ್ದರು. +ಕೊಟ್ಟಿಲ್ಲ. ಅದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜಕೀಯ ವಾಗಿ ಹೇಳಿಕೆ ನೀಡಿ ಜಾರಿಕೊಳ್ಳುತ್ತಿದ್ದಾರೆ. ಎಲ್ಲಾ ಸೇರಿ ಒಟ್ಟು 11,495 ಹಣ ಬಾಕಿ ಇದೆ. ಇದಕ್ಕೆ ಒತ್ತಡ ಹೇರಲು ಸಂಸದರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು. +ಮೇಟ್ರೋ ಮೂರನೇ ಹಂತದ 15600 ಕೋಟಿ ರೂಪಾಯಿ ಯೋಜನೆ ಮಂಜೂರು ಮಾಡಿಸಬೇಕು. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರಾಜ್ಯಕ್ಕೆ 700 ಕೋಟಿ ಬರಬೇಕಿದೆ. ರಾಯಚೂರಿನಲ್ಲಿ ಏಮ್ಸೌ ಸ್ಥಾಪನೆಗೆ ಮನವಿ ಮಾಡಿದ್ದೇವೆ. ಎನ್‌ಡಿಆರ್‌ಎಫ್‌ ಅಡಿ ಪರಿಹಾರ ನೀಡುವ ಪ್ರಮಾಣವನ್ನು ಪರಿಷ್ಕರಣೆ ಮಾಡಲು ಒತ್ತಾಯಸಿದ್ದೇವೆ. ದೇಶದಲ್ಲಿ 12 ರಾಜ್ಯಗಳು ಹೆಚ್ಚು ಬರಕ್ಕೆ ತುತ್ತಾಗುತ್ತವೆ. ಅದರಲ್ಲಿ ಕರ್ನಾಟಕವೂ ಪ್ರಮುಖವಾಗಿದ್ದು, ಹೆಚ್ಚಿನ ಪರಿಹಾರ ಮತ್ತು ಇನ್‌ಪುಟ್‌ ಸಬ್ಸಿಡಿ ಪ್ರಮಾಣ ಹೆಚ್ಚಿಸಬೇಕು ಎಂದು ಮನವಿ ಮಾಡಿರುವುದಾಗಿ ವಿವರಿಸಿದರು. +ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕರಿಸಬೇಕು. ವರದಿಯಿಂದ ರೈತರಿಗೆ ಹಾಗೂ ಅರಣ್ಯ ಪ್ರದೇಶದಲ್ಲಿ ವಾಸಿಸುವರಿಗೆ ಅನುಕೂಲವಾಗುವುದಿಲ್ಲ ಎಂದು ಹೇಳಿದ್ದೇವೆ. ಈ ವಿಚಾರ ನ್ಯಾಯಾಲಯದಲ್ಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಜನರ ಅಭಿಪ್ರಾಯವನ್ನು ನಾವು ವಿವರಸಿದ್ದೇವೆ ಎಂದು ತಿಳಿಸಿದರು. +ರೈಲ್ವೆ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ. ರೈಲ್ವೆಯಿಂದ ಬರುವ ಆದಾಯ ಸಂಪೂರ್ಣ ಕೇಂದ್ರ ಸರ್ಕಾರದ್ದಾಗಿದೆ, ಆದರೂ ರಾಜ್ಯದಲ್ಲಿ ಹೆಚ್ಚು ರೈಲ್ವೆ ಮಾರ್ಗಗಳಾಲಿ ಎಂದು ಜಾಗ ನೀಡುತ್ತಿದೆ. ಎಸ್‌‍.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ವೆಚ್ಚದಲ್ಲಿ ಶೇಕಡವಾರು ಭರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈಗ ಆ ಪ್ರಮಾಣ ಶೇ.50ರಷ್ಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸಿ ಮತ್ತಷ್ಟು ಯೋಜನೆಗಳನ್ನು ಆರಂಭಿಸಲು ಒತ್ತಾಯಿಸಿದ್ದೇವೆ ಎಂದರು. +ಗ್ರಾಮ ಸಡಕ್‌ ಯೋಜನೆಯ ರಸ್ತೆಗಳು ಬೇರೆ ರಾಜ್ಯಕ್ಕೆ ಹೊಲಿಸಿದರೆ ನಮಲ್ಲಿ ಕಡಿಮೆ ಇವೆ. ಇಂದು ಕೇಂದ್ರ ಸಚಿವ ನಿತೀನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ.ಅಲ್ಪಸಂಖ್ಯಾತರಿ ಅಭಿವೃದ್ಧಿಗೆ 659 ಕೋಟಿ ರೂಪಾಯಿ ವೆಚ್ಚದಲ್ಲಿ 52 ಯೋಜನೆಗಳನ್ನು ಮಾಡಲಾಗಿದೆ, ಬುಡಕಟ್ಟು ಜನರ ಅಭಿವೃದ್ಧಿಗೆ ಅನುದಾನ ಕೊಡಿಸಲು ಪ್ರಸ್ತಾಪಿಸಲಾಗಿದೆ. ಕೆಲವು ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದಕ್ಕೆ ಅನುಮತಿ ನೀಡುವಂತೆ ಕೇಳಿದ್ದೇವೆ. +ಮೀನುಗಾರಿಕೆ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಮಾಜಳ್ಳಿಯಲ್ಲ ಹೊಸ ಬಂದರು ಮಾಡಬೇಕು, ಮಂಗಳೂರಿನಲ್ಲಿರುವ ಮೀನುಗಾರಿಗೆ ಬಂದರು ವಿಸ್ತರಣೆ ಮಾಡಲು 2023ರಿಂದ ಬೇಡಿಕೆ ಸಲ್ಲಿಸಿದ್ದೇವೆ. ಅದಕ್ಕೆ ಮಂಜೂರಾತಿ ಕೊಡಿಸಲು ಕೇಳಿಕೊಂಡಿದ್ದೇವೆ. +ಬಾಕಿ ಯೋಜನೆಗಳ ಸಂಪೂರ್ಣ ವಿವರಣೆಯ ಕಿರು ಹೊತ್ತಿಗೆಯನ್ನು ಸಂಸದರಿಗೆ ನೀಡಿದ್ದೇವೆ. ಚುನಾವಣೆ ಮುಗಿದೆ. ಇಂದು ನಡೆಯುತ್ತಿರುವ ಸಭೆ ವಿಧಾನಮಂಡಲ ಅಥವಾ ಸಂಸತ್‌ ಅಧಿವೇಶನ ಅಲ್ಲ. ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಮನವಿ ಮಾಡಿದ್ದೇನೆ ಎಂದು ವಿವರಿಸಿದರು. \ No newline at end of file diff --git a/eesanje/url_46_93_6.txt b/eesanje/url_46_93_6.txt new file mode 100644 index 0000000000000000000000000000000000000000..78753696e27b50c6e03b7f8ff562d1ad97e408e5 --- /dev/null +++ b/eesanje/url_46_93_6.txt @@ -0,0 +1,9 @@ +ಜನ ನೀಡಿರುವ ಸ್ನೇಹ-ಅಭಿಮಾನ ದೊಡ್ಡದು : ಡಾ.ಬಿ.ಆರ್‌.ಮಮತಾ +ಬೆಂಗಳೂರು, ಜೂ.28-ನಾನು ಹೆಜ್ಜೆಯಿಟ್ಟಿರುವಲ್ಲೆಲ್ಲಾ ಜನ ನೀಡಿರುವ ಸ್ನೇಹ ದೊಡ್ಡದು. ಅದು ನನ್ನಲ್ಲಿ ಧನ್ಯತಾ ಭಾವ ತುಂಬಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಹಾ ನಿರೀಕ್ಷಕರಾದ ಡಾ. ಬಿ.ಆರ್. ಮಮತಾ ಅವರು ಹೇಳಿದರು. +ಜೂ.30ರಂದು ನಿವೃತ್ತರಾಗುತ್ತಿರುವ ಮಮತಾ ಅವರಿಗೆ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಎಂಬ ಮಾತಿನಂತೆ ನನ್ನ ಸ್ನೇಹಿತರು, ಹಿರಿಯರು, ಮಾರ್ಗದರ್ಶಕರು ಅಧಿ ಕಾರಿಗಳು ನನ್ನನ್ನು ರೂಪಿಸಿದ್ದಾರೆ. ಚಿತ್ರದುರ್ಗದ ಕುಗ್ರಾಮ ಪಿಟ್ಲಾಳಿಯ ನಂಟು ಸದಾ ಉಳಿಸಿಕೊಂಡು ಬೆಳೆದುಬಂದ ಬಗೆಯನ್ನು ವಿವರಿಸಿದ ಮಮತಾ ಅವರು ಮೊದಲು ಆಸೆಪಟ್ಟಂತೆ ವೈದ್ಯರಾಗದೇ ಪತ್ರಕರ್ತೆಯಾಗಿದ್ದು, ವಿಪ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ್ದನ್ನು ಸ್ಮರಿಸಿದರು. ನಂತರ ವಾರ್ತಾ ಇಲಾಖೆಗೆ ಅನಿರೀಕ್ಷಿತವಾಗಿ ಸೇರಿ ಐಎಎಸ್ವರೆಗಿನ ತಮ್ಮ ವೃತ್ತಿ ಜೀವನದ ಪಯಣವನ್ನು ವಿವರಿಸಿದರು. +ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್.ಶ್ರೀನಿವಾಸಮೂರ್ತಿ ಮಾತನಾಡಿ, ಸೇವೆಗೆ ಸೇರಿದ ನಂತರವೂ ಮಮತಾ ಅವರು ತಮ್ಮ ಶಿಕ್ಷಣವನ್ನೂ ಮುಂದುವರೆಸಿದ್ದು ವಿಶೇಷ. ದೇಶ-ವಿದೇಶಗಳನ್ನು +ಸುತ್ತಿ ತಮ್ಮ ಜ್ಞಾನವನ್ನು ಬೆಳೆಸಿಕೊಂಡರು. ಇದು ಎಲ್ಲರೂ ಕಲಿಯಬೇಕಾದ ಪಾಠ. ಕಾನೂನು ಮೀರಿ ಅದರ ಆಂತರ್ಯ ಅರ್ಥಮಾಡಿಕೊಂಡು ಜನರಿಗೆ ಉಪಯೋಗವಾಗುವಂತೆ ನಡೆದುಕೊಂಡವರು ಮಮತಾ. ಸರ್ಕಾರಿ ವ್ಯವಸ್ಥೆಯ ಕುಂದು-ಕೊರತೆಗಳ ನಡುವೆಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಬಹುದೆಂದು ನಿರೂಪಿಸಿರುವುದು ಅವರ ದಕ್ಷತೆಗೆ ಸಾಕ್ಷಿಯಾಗಿದೆ. ಸರ್ಕಾರಿ ಸೇವೆಯಲ್ಲಿ ಸಾರ್ಥಕವಾದ ಸೇವೆ ಸಲ್ಲಿಸಿದ್ದಾರೆ ಎಂದರು. +ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಎಂ.ಕೆ.ಶಂಕರಲಿಂಗೇಗೌಡ ಮಾತನಾಡಿ, ಅಭಿಪ್ರಾಯ ರೂಪಿಸುವಲ್ಲಿ ವಾರ್ತಾ ಇಲಾಖೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ವಾರ್ತಾಧಿ ಕಾರಿ ಮಮತಾ ಅವರು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಹೊಂದಿದ್ದರು. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಐಟಿ ವಿಭಾಗದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತಂತ್ರಜ್ಞಾನ ಆಗಷ್ಟೇ ಬೆಳೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರದ ಕಣ್ಣು ಮತ್ತು ಕಿವಿಗಳಾಗಿ ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಿದ್ದರು. ನಿವೃತ್ತಿ ನಂತರವೂ ಕ್ರಿಯಾಶೀಲರಾಗಿರುವಂತೆ ಸಲಹೆ ನೀಡಿದರು. +ಮಮತಾ ಅವರು ಗುರಿ ಸಾಧಿಸುವ ಛಾತಿವುಳ್ಳವರಾಗಿದ್ದಾರೆ. ಕಳಂಕರಹಿತರಾಗಿ, ಪ್ರಾಮಾಣಿಕತೆ, ಸರಳತೆಯಿಂದ ಕೆಲಸ ನಿರ್ವಹಿಸಿದವರು. ತಾವು ಎಲ್ಲೇ ಕಾರ್ಯನಿರ್ವಹಿಸಿದರೂ ಅವರು ಮಾಡಿದ ಕೆಲಸಕ್ಕೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ ಎಂದು ಎನ್.ಆರ್. ವಿಶುಕುಮಾರ್ ತಿಳಿಸಿದರು. +ಆಪ್ತ ಸ್ನೇಹಿತೆ, ಹಿರಿಯ ಪತ್ರಕರ್ತರಾದ ನಾಹೀದ್ ಅತಾವುಲ್ಲಾ ಮಾತನಾಡಿ ,ಮಮತಾ ಅವರು ನನಗೆ ಅಧಿ ಕಾರಿಗಿಂತಲೂ ಸ್ನೇಹಿತೆಯಾಗಿ ಹೆಚ್ಚು ಆಪ್ತರು. ಅಧಿ ಕಾರಶಾಹಿ ಹೇಗೆ ಕೆಲಸ ಮಾಡಬೇಕೆನ್ನುವುದಕ್ಕೆ ಮಮತಾ ಅತ್ಯುತ್ತಮ ಉದಾಹರಣೆ ಎಂದರು. +ಗಾಂಧಿ ಭವನದ ಅಧ್ಯಕ್ಷರಾದ ವೂಡೆ.ಪಿ.ಕೃಷ್ಣ ಮಾತನಾಡಿ, ವಾರ್ತಾ ಇಲಾಖೆಯಿಂದ ಐಎಎಸ್ಗೆ ಬಡ್ತಿ ಪಡೆದ ಮೊದಲ ಅಧಿ ಕಾರಿಯಾದ ಮಮತಾ ಅವರ ಸಂವಹನ ಕೌಶಲ್ಯ ಅತ್ಯುತ್ತಮ. ಸರಳತೆ ಹಾಗೂ ದಕ್ಷತೆ ಅವರ ವಿಶೇಷ ಗುಣಗಳು. ಮುದ್ರಾಂಕ ಇಲಾಖೆಯಲ್ಲಿ ತಂತ್ರಜ್ಞಾನ ಅಭಿವೃದ್ಧಿಗೆ ಕಾರಣೀಭೂತರು ಎಂದರು. ವಾರ್ತಾ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಹೆಚ್. ಬಿ.ದಿನೇಶ್ ಕಾರ್ಯಕ್ರಮ ನಿರೂಪಿಸಿದರು. \ No newline at end of file diff --git a/eesanje/url_46_93_7.txt b/eesanje/url_46_93_7.txt new file mode 100644 index 0000000000000000000000000000000000000000..3e77a3e1fa9d93917c074cc3805c2304b8b0a6c2 --- /dev/null +++ b/eesanje/url_46_93_7.txt @@ -0,0 +1,15 @@ +ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನಿ ಬಳಿ ಮತ್ತೆ ಮನವಿ : ಸಿಎಂ +ನವದೆಹಲಿ, ಜೂ.28-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನಾಳೆ ಸಂಜೆ ಭೇಟಿ ಮಾಡುತ್ತಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮತ್ತೆ ಮನವಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. +ನಿನ್ನೆ ಸಂಸದರ ಸಭೆ ನಡೆಸಿದ ಕುರಿತಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಾವೇರಿ ನದಿ ನೀರಿನ ವಿವಾದ ಈಗಾಗಲೇ ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಿದೆ. ತೀರ್ಪಿನಂತೆ ತಮಿಳುನಾಡಿಗೆ ಸಾಮಾನ್ಯ ವರ್ಷದಲ್ಲಿ 179 ಟಿಎಂಸಿ ನೀರು ಹರಿಸಲು ಕರ್ನಾಟಕ ಒಪ್ಪಿಕೊಂಡಿದೆ. +ಹೆಚ್ಚುವರಿ ನೀರಿನ ಸಂಗ್ರಹಕ್ಕೆ ನಮ ನೆಲದಲ್ಲಿ ನಮ ಹಣದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಯೋಜನೆ ರೂಪಿಸಿದ್ದೇವೆ. ತಮಿಳುನಾಡು ರಾಜಕೀಯ ಕಾರಣಕ್ಕೆ ತಕರಾರು ತೆಗೆದು ಸುಪ್ರೀಕೋರ್ಟ್‌ ಮೊರೆ ಹೋಗಿದೆ. ಆದರೂ ಯಾವ ನ್ಯಾಯಾಲಯದಲ್ಲೂ ತಡೆಯಾಜ್ಞೆ ಇಲ್ಲ. ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕಿದೆ ಎಂದು ವಿವರಿಸಿದರು. +ಕಳೆದ ವರ್ಷ ಡಿಸೆಂಬರ್‌ 19ರಂದು ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿದಾಗ ಮೇಕೆದಾಟು ಯೋಜನೆಯನ್ನು ಪ್ರಸ್ತಾಪಿಸಲಾಗಿತ್ತು. ನಾಳೆಯ ಭೇಟಿಯಲ್ಲಿಯೂ ಮತ್ತೆ ಪ್ರಸ್ತಾಪ ಮಾಡುತ್ತೇವೆ. ತಮಿಳುನಾಡು ಜೊತೆ ಸಭೆ ಕರೆಯಿರಿ ಎಂದು ನಾವು ಹೇಳುವುದಿಲ್ಲ. ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರದ ಮನವೋಲಿಸಬೇಕು ಅಥವಾ ಅನುಮತಿ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. +ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟದಲ್ಲಿ ಡಿಎಂಕೆ ಮಿತ್ರ ಪಕ್ಷವಾಗಿದೆ. ಹಾಗಾಗಿ ಕಾಂಗ್ರೆಸ್‌‍ ಸರ್ಕಾರ ಡಿಎಂಕೆಯವರ ಜೊತೆ ಚರ್ಚಿಸಬೇಕು ಎಂದು ಬಿಜೆಪಿ ಹೇಳುತ್ತಿರುವುದು ಅರ್ಥಹೀನ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದೆ. ಅವರು ಮಾತನಾಡಿ ಮಹಾದಾಯಿ ಯೋಜನೆಗೆ ಅನುಮತಿ ಕೊಡಿಸುತ್ತಾರೆಯೇ ಎಂದು ಮರು ಪ್ರಶ್ನಿಸಿದರು. +ಮಹದಾಯಿ ಕುಡಿಯುವ ನೀರಿನ ಯೋಜನೆ 2018ರಲ್ಲಿ ಇತ್ಯರ್ಥವಾಗಿದೆ. ನ್ಯಾಯಾಲಯದಲ್ಲಿ ಪ್ರಕರಣ ಇದೆ ನಿನ್ನೆ ಸಭೆಗೂ ಮುನ್ನಾ ಕೇಂದ್ರ ಸಚಿವರು ನೀಡಿರುವ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಅದು ತಪ್ಪು ಮಾಹಿತಿ. ವಿವಾದ ಕುರಿತು ನ್ಯಾಯಾಧೀಕರಣದ ತೀರ್ಪು ನೀಡಿದೆ, ಅದು ಅಧಿಸೂಚನೆಯೂ ಆಗಿದೆ. ಅದರ ಆಧಾರದ ಮೇಲೆ ನಾವು ಮಹದಾಯಿ ಯೋಜನೆಗೆ ವಿಸ್ತ್ರ ಯೋಜನಾ ವರದಿ ಸಿದ್ದಪಡಿಸಿ, ಟೆಂಡರ್‌ ಕರೆದಿದ್ದೇವೆ. +ಅದಕ್ಕೆ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಮಾತ್ರ ಬಾಕಿ ಇದೆ. ಅದಕ್ಕೆ ನ್ಯಾಯಾಲಯದಲ್ಲಿ ಪ್ರಕರಣ ಇದೆ ಎಂದು ನೆಪ ಹೇಳಬೇಡಿ ಕೇಂದ್ರದಿಂದ ಅನುಮತಿ ಕೊಡಿಸಿ ಎಂದು ಕೇಂದ್ರ ಸಚಿವರು ಹಾಗೂ ಸಂಸದರದಲ್ಲಿ ಮನವಿ ಮಾಡಿದ್ದೇವೆ ಎಂದರು. +ಭದ್ರ ಮೇಲ್ಡಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ 2023-24ರ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದರು. ಹಣ ಬಿಡುಗಡೆಯಾಗಿಲ್ಲ. ರಾಜ್ಯದಿಂದ ತಾಂತ್ರಿಕ ಸಮಸ್ಯೆ ಇದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆ ರೀತಿ ಸಮಸ್ಯೆ ಇದೆ ಎಂದು ಈವರೆಗೂ ನಮಗೆ ಹೇಳಿರಲಿಲ್ಲ, ಅಸಲಿಗೆ ಯಾವುದೇ ಸಮಸ್ಯೆಯೂ ಇಲ್ಲ. ಹಣ ಬಿಡುಗಡೆ ಮಾಡುವಂತೆ ನಾವು ಪತ್ರ ಬರೆದಿದ್ದೇವೆ. ಹಣ ಸಿಗಲಿದೆ ಎಂಬ ಆಶಾಭಾವನೆ ಇದೆ. ಅದೇ ರೀತಿಕೃಷ್ಣ ನ್ಯಾಯಾಧೀಕರಣ ತೀರ್ಪಿನ ಅಧಿಸೂಚನೆಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಲು ಆಗ್ರಹಿಸಿದ್ದೇವೆ ಎಂದು ಹೇಳಿದರು. +ರಾಜಕೀಯಕ್ಕಾಗಿ ಕೇಂದ್ರ ಸಚಿವರ ಪತ್ರ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪತ್ರ ಬರೆದು ಕರ್ನಾಟಕದಲ್ಲಿ ವಿತ್ತಿಯ ಕೊರತೆ ಹೆಚ್ಚಾಗಿದೆ ಎಂದು ಹೇಳಿರುವುದರ ಹಿಂದೆ ರಾಜಕೀಯ ಅಡಗಿದೆ.ವಿತ್ತಿಯ ಶೇ.2.1ರಿಂದ ಶೇ.3ಕ್ಕೆ ಹೋಗಿದೆ ಎಂಬುದು ತಪ್ಪು ಮಾಹಿತಿ. ವಿತ್ತಿಯ ಜವಾಬ್ದಾರಿ ಶೇ.3ರಷ್ಟಿರಬೇಕು ಎಂಬ ನಿಯಮ ಇದೆ. ರಾಜ್ಯದಲ್ಲಿ ವಿತ್ತಿಯ ಕೊರತೆ ಶೇ.2.6ರಷ್ಟಿದ್ದು, ಕಾನೂನು ರೀತಿ ಮಿತಿಯಲ್ಲಿದೆ. ಕೇಂದ್ರ ಸರ್ಕಾರ ವಿತ್ತಿಯ ಕೊರತೆ ನಿರ್ವಹಣೆಯಲ್ಲಿ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದರು. +ನಮಲ್ಲಿ ಕಂದಾಯ ವೆಚ್ಚ ಹೆಚ್ಚಾಗಿರುವುದು ನಿಜ. ಇದರಿಂದಾಗಿ ಕಂದಾಯ ಕೊರತೆ ಹೆಚ್ಚಾಗಿದೆ. ಮುಂದಿನ ವರ್ಷ ಇದನ್ನು ಸರಿ ಪಡಿಸಿಕೊಳ್ಳಲಾಗುವುದು. ಒಟ್ಟು ಸಾಲ ಜಿಡಿಪಿಯ ಶೇ.25ರ ಒಳಗೆ ಇರಬೇಕು ಎಂದಿದೆ. ನಮ ಆರ್ಥಿಕ ಸ್ಥಿತಿ ನಿಯಮ ಅನುಸಾರ ಮಿತಿಯಲ್ಲಿದೆ. ಕೇಂದ್ರ ಸಚಿವರ ಪತ್ರಕ್ಕೆ ಸವಿಸ್ತಾರವಾಗಿ ಉತ್ತರ ನೀಡಲಾಗುವುದು ಎಂದು ಹೇಳಿದರು. +ಪೆಟ್ರೋಲ್‌ ಡಿಸೇಲ್‌ ದರ ಹೆಚ್ಚಿಸಿದವರು ಕೇಂದ್ರ ಸರ್ಕಾರ. ಕೇಂದ್ರ ಅಬಕಾರಿ ತೆರಿಗೆಯನ್ನು ಹೆಚ್ಚಿಸಿದ್ದು ನರೇಂದ್ರ ಮೋದಿಯವರು ಹೀಗಾಗಿ ತೈಲ ಬೆಲೆ ಮತ್ತು ಅಗುಗೆ ಅನಿಲ ಹೆಚ್ಚಾಗಿದೆ. ನಮ ಸರ್ಕಾರ ಹಾಲಿನ ದರ ಹೆಚ್ಚಿಸಿಲ್ಲ. ಹಾಲಿನ ಸಂಗ್ರಹ ಹೆಚ್ಚಾಗಿದೆ. ಅದಕ್ಕಾಗಿ ಹಾಲಿನ ಪ್ರಮಾಣವನ್ನು ಹೆಚ್ಚು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯುತ್ತಿದ್ದೇವೆ. ಹಿಂದೆ ಮೂರು ರೂಪಾಯಿ ದರ ಹೆಚ್ಚಿಸಿದಾಗಲೂ ಅದನ್ನು ಸಂಪೂರ್ಣ ರೈತರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. +ಬೆಲೆ ಹೆಚ್ಚಿಸಲಾಗುತ್ತಿದೆ ಎಂದು ಬಿಜೆಪಿ ಅನಗತ್ಯವಾಗಿ ಆರೋಪ ಮಾಡುತ್ತಿದೆ. ಕಳೆದ ಐದಾರು ವರ್ಷದಿಂದ ಕಂದಾಯ ಇಲಾಖೆಯಲ್ಲಿ ಮಾರ್ಗಸೂಚಿ ಬೆಲೆ ಪರಿಷ್ಕರಣೆಯಾಗಿರಲಿಲ್ಲ. ಅದಕ್ಕಾಗಿ ಹೆಚ್ಚಿಸಿದ್ದೇವೆ ಎಂದು ಸಮರ್ಥಿಸಿಕೊಂಡರು. +ರಾಜ್ಯದಲ್ಲಿ ಹಣದುಬ್ಬರ ಹೆಚ್ಚಾಗಿದೆ. ರಾಷ್ಟ್ರೀಯ ಸರಾಸರಿಗಿಂತ ರಾಜ್ಯದಲ್ಲಿ ಹಣದುಬ್ಬರ ಕಡಿಮೆ ಇದೆ. ಶೇ.80ರಷ್ಟು ಹಣದುಬ್ಬರಕ್ಕೆ ಕೇಂದ್ರ ಸರ್ಕಾರ ಕಾರಣವಾಗಿದೆ ಎಂದು ದೂರಿದರು.ಬರ ಪರಿಹಾರಕ್ಕೆ ನ್ಯಾಯಾಲಯಕ್ಕೆ ಮೇಲನವಿ ಸಲ್ಲಿಸಿ ಕಾನೂನು ಸಂಘರ್ಷದಿಂದ ಆರ್ಥಿಕ ನೆರವು ಪಡೆದುಕೊಳ್ಳಲಾಗಿದೆ. ಹಾಗಿದ್ದರೆ ಕೇಂದ್ರ ಸಚಿವರ ಜವಾಬ್ದಾರಿ ಏನು ಎಂದು ಪ್ರಶ್ನಿಸಿದರು.ವಾಲೀಕಿ ಅಭಿವೃದ್ಧಿ ನಿಗಮ ಎಸ್‌‍ಐಟಿ ತನಿಖೆಯಾಗಿದೆ, ನಿಷ್ಪಕ್ಷಪಾತ ತನಿಖೆ ನಡೆಯುತ್ತಿದೆ. +ಬ್ಯಾಂಕ್‌ ಹಗರಣವಾಗಿರುವುದರಿಂದ ಸಿಬಿಐ ತನಿಖೆಯೂ ನಡೆಯುತ್ತಿದೆ. ನಾವು ಪೊಲೀಸ್‌‍ರಿಗೆ ದೂರು ನೀಡಿದ್ದೇವೆ. ಅದರ ತನಿಖೆ ಮಾಡುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿಲ್ಲ. ಅಧಿಕಾರದಲ್ಲಿ ಇಲ್ಲದಿದ್ದಾಗ ಸಿಬಿಐ ತನಿಖೆ ಬೇಕು ಎನ್ನುತ್ತಾರೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_93_8.txt b/eesanje/url_46_93_8.txt new file mode 100644 index 0000000000000000000000000000000000000000..3714fcf9b5cac313db42942c85042cd0535b2aa2 --- /dev/null +++ b/eesanje/url_46_93_8.txt @@ -0,0 +1,3 @@ +ಹಾವೇರಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ +ನವದೆಹಲಿ, ಜೂ.28-ಹಾವೇರಿಯ ಬ್ಯಾಡಗಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. +ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ತಾವು ದೆಹಲಿಯಲ್ಲಿದ್ದರು, ಗುಪ್ತದಳದ ಅಧಿಕಾರಿಗಳು ಈಗಷ್ಟೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರ ಕುಟುಂಬದ ಸದಸ್ಯರಿಗೆ ಪರಿಹಾರ ನೀಡಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_93_9.txt b/eesanje/url_46_93_9.txt new file mode 100644 index 0000000000000000000000000000000000000000..0ff14781fd2c7e0d3f34419be4b33536fa63e820 --- /dev/null +++ b/eesanje/url_46_93_9.txt @@ -0,0 +1,6 @@ +ಸೀಮಿತ ಅವಧಿಯ ಪರಿಷ್ಕೃತ ವೇತನ ನಿಗದಿಗೆ ಕೆಎಸ್‌‍ಆರ್‌ಟಿಸಿ ಅಸ್ತು +ಬೆಂಗಳೂರು,ಜೂ.28– ಕಳೆದ 2020ರ ಜನವರಿ 1ರಿಂದ 2023ರ ಫೆ.28ರವರೆಗಿನ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ ಉಪದಾನ ಹಾಗೂ ನಿವೃತ್ತಿ ಗಳಿಕೆ ನಗದೀಕರಣ ಪಾವತಿ ಮಾಡಲು ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ. +ಈ ಅವಧಿಯನ್ನು ನೋಷನಲ್‌ ಆಗಿ ಪರಿಗಣಿಸಿ ವೇತನ ನಿಗದಿಪಡಿಸಿ ಅಂತಿಮ ಆರ್ಥಿಕ ಸೌಲಭ್ಯಗಳನ್ನು ಪಾವತಿ ಮಾಡಲು ಕೆಎಸ್‌‍ಆರ್‌ಟಿಸಿ ನಿರ್ಧರಿಸಿದೆ. ನಿಗದಿಪಡಿಸಿದ ವೇತನವನ್ನು ಅಧಿಕಾರಿ ಮತ್ತು ಅಂತಿಮ ದಿನಾಂಕದಿಂದ ಪಡೆಯುತ್ತಿದ್ದ ಮೂಲ ವೇತನವನ್ನು ಪರಿಗಣಿಸಿ ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳನ್ನು ಮಾತ್ರ ಲೆಕ್ಕಾಚಾರ ಮಾಡಿ ಪಾವತಿಸಲು ಅನುಮೋದನೆ ನೀಡಲಾಗಿದೆ. +ನಿವೃತ್ತ ನೌಕರರಿಗೆ ಸಂಬಂಧಿಸಿದಂತೆ ನೌಕರರಿಗೆ ಪರಿಷ್ಕೃತ ವೇತನ ನಿಗದಿ ಪಟ್ಟಿಗಳನ್ನು ಆ.31ರೊಳಗೆ ತಯಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೆಎಸ್‌‍ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ. +ಗಳಿಕೆ ರಜೆ ನಗದೀಕರಣ ಬಿಲ್‌ನಲ್ಲಿ ಶಾಸನಬದ್ಧ ಕಡಿತಗಳನ್ನು ಹಾಗೂ ಅಧಿಕಾರಿ ನೌಕರರಿಂದ ಬರಬೇಕಾದ ಬಾಕಿ ಮೊತ್ತವಿದ್ದಲ್ಲಿ ಕಡಿತಗೊಳಿಸಿ ಪಾವತಿಸಬೇಕಾದ ನಿವ್ವಳ ಮೊತ್ತದ ಕ್ಲೈಮ್‌ಗಳನ್ನು ಸೆ.30ರೊಳಗೆ ಸಿದ್ಧಪಡಿಸಲು ಸೂಚಿಸಿದ್ದಾರೆ. +ಈ ಕ್ಲೈಮ್‌ಗಳನ್ನು ಸಾಧ್ಯವಾದರೆ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಪಾವತಿಸಲು ಆಯಾ ಸಂಸ್ಥೆಗಳು ತಮ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ್ದಾರೆ. \ No newline at end of file diff --git a/eesanje/url_46_94_1.txt b/eesanje/url_46_94_1.txt new file mode 100644 index 0000000000000000000000000000000000000000..7cc091283b4bc5263248bd80c96e70ff13c543a0 --- /dev/null +++ b/eesanje/url_46_94_1.txt @@ -0,0 +1,7 @@ +ಚನ್ನಪಟ್ಟಣ ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ : ಡಿಕೆಶಿ ಸ್ಪಷ್ಟನೆ +ಬೆಂಗಳೂರು, ಜೂ.28-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯ ಬಗ್ಗೆ ಕುತೂಹಲ ಇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ .ಕೆ.ಶಿವಕುಮಾರ್‌ ಅವರು ತಮ್ಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ. +ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ನಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಆಗಾಗ್ಗೆ ಈ ಕುರಿತು ಗೊಂದಲಗಳು ಸೃಷ್ಟಿಯಾಗುತ್ತಿವೆ. ಅಂತಹ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. +ಚನ್ನಪಟ್ಟಣ ಚುನಾವಣೆಯಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್‌ ಅಭ್ಯರ್ಥಿಯಾಗಲಿದ್ದಾರೆ ಎಂಬ ವದಂತಿಗಳು ಆರಂಭದಲ್ಲಿದ್ದವು. ಆದರೆ ಡಿ.ಕೆ.ಸುರೇಶ್‌ ಅದನ್ನು ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜನ ತಮಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದು, ಅದರಂತೆ ತಾವು ಚುನಾವಣಾ ರಾಜಕೀಯದಿಂದ ದೂರ ಉಳಿದು ವಿಶ್ರಾಂತಿ ಪಡೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. +ಅದರ ಜೊತೆಯಲ್ಲೇ ಚನ್ನಪಟ್ಟಣ ಕ್ಷೇತ್ರಕ್ಕೆ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿ, ಅಚ್ಚರಿ ಮೂಡಿಸಿದ್ದರು. ಇದಕ್ಕೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದಿದ್ದವು.ಡಿ.ಕೆ.ಶಿವಕುಮಾರ್‌ರವರ ಪುತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ ಅದೆಲ್ಲವುದಕ್ಕೂ ಡಿ.ಕೆ.ಶಿವಕುಮಾರ್‌ ತೆರೆ ಎಳೆದಿದ್ದಾರೆ. ತಮ ಕುಟುಂಬದಿಂದ ಬೇರೆ ಯಾರೂ ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ಸ್ಪಷ್ಟಪಡಿಸಿದ್ದಾರೆ. ಇದರ ಬಳಿಕ ಚನ್ನಪಟ್ಟಣಕ್ಕೆ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. +ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್‌ ಅವರು ಸೋಲು ಕಂಡ ಬಳಿಕ ಡಿ.ಕೆ.ಶಿವಕುಮಾರ್‌ ಅವರಿಗೆ ತವರು ಜಿಲ್ಲೆಯಲ್ಲೇ ಹಿನ್ನಡೆಯಾಗಿತ್ತು. ಇದನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಡಿ.ಕೆ. ಸಹೋದರರು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದು ತಂತ್ರಗಾರಿಕೆ ರೂಪಿಸುತ್ತಿದ್ದಾರೆ. +ಡಿ.ಕೆ.ಶಿವಕುಮಾರ್‌ ಈಗಾಗಲೇ ಎರಡು ಬಾರಿ ಕ್ಷೇತ್ರದಲ್ಲಿ ಜನಸ್ಪಂದನ ನಡೆಸಿದ್ದಾರೆ. ಪದೇಪದೇ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಗೆದ್ದು ಮತ್ತೆ ತಮ ಅಧಿಪತ್ಯವನ್ನು ಉಳಿಸಿಕೊಳ್ಳಬೇಕು ಎಂಬ ಹೋರಾಟಕ್ಕೆ ಮುಂದಾಗಿದ್ದಾರೆ.ಅಚ್ಚರಿ ಹಾಗೂ ಕುತೂಹಲದ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯ ನಡುವೆ, ಯಾರೇ ಕಣಕ್ಕಿಳಿದರೂ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಡಿ.ಕೆ.ಸುರೇಶ್‌ ಪದೇಪದೇ ಹೇಳುತ್ತಿದ್ದಾರೆ.ಡಿ.ಕೆ.ಶಿವಕುಮಾರ್‌ ತಮ ಕುಟುಂಬದ ಸದಸ್ಯರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಬಳಿಕ ಹೊರಗಿನ ಅಭ್ಯರ್ಥಿಯ ಹುಡುಕಾಟವು ತೀವ್ರವಾಗಿ ನಡೆದಿದೆ. \ No newline at end of file diff --git a/eesanje/url_46_94_10.txt b/eesanje/url_46_94_10.txt new file mode 100644 index 0000000000000000000000000000000000000000..def2e56d45a41b25fab601fcfc824277d74c4034 --- /dev/null +++ b/eesanje/url_46_94_10.txt @@ -0,0 +1,6 @@ +ಏಕವಚನದಲ್ಲೇ “ಬುದ್ದಿವಂತ ಅರ್ಥಶಾಸ್ತ್ರಜ್ಞ” ಸಿದ್ದರಾಮಯ್ಯ ವಿರುದ್ಧ ಅಶೋಕ್ ಹಿಗ್ಗಾಮುಗ್ಗಾ ವಾಗ್ದಾಳಿ +ಬೆಂಗಳೂರು,ಜೂ.27-ಬಡವರಿಗೆ ಸಹಾಯ ಮಾಡುವ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಲ್ಲ. ಅದೇನಾದರೂ ಇದ್ದರೆ ದುಡ್ಡು ಹೊಡೆಯುವ ಜ್ಞಾನ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.ಜಾಸ್ತಿ ಹಾಲು ಕೊಡಬೇಕೆಂದು ನಿಮನ್ನು ಯಾರು ಕೇಳಿದರು? ಯಾರಾದರೂ ಬಂದು ಕೇಳಿದ್ದರಾ? ಅರ್ಜಿ ಕೊಟ್ಟು 50 ಎಂಎಲ್‌ ಜಾಸ್ತಿ ಕೊಡಿ ಎಂದು ಒತ್ತಾಯಿಸಿದವರ್ಯಾರು? ಎಂದು ಪ್ರಶ್ನಿಸಿದ್ದಾರೆ. +ಈ ಸರ್ಕಾರ ಹಾಲನ್ನು ಹಾಲಾಹಲ ಮಾಡಿದೆ. ವರ್ಷದ ಹಿಂದೆ 3 ರೂ. ಈಗ 2 ರೂ. ಏರಿಕೆ ಆಗಿದೆ. ಮೊದಲ ಶೇ.80ರಷ್ಟು ಹಣ ರೈತರಿಗೆ ಕೊಡುತ್ತೇವೆ ಎಂದರು, 10 ಪೈಸೆ ಹಣವನ್ನೂ ಕೊಟ್ಟಿಲ್ಲ. 50 ಎಂಎಲ್‌ಗೆ 2 ರೂ. ಜಾಸ್ತಿ ಮಾಡಿದ್ದೀನಿ ಎನ್ನತ್ತೀರಾ? ಅಪ್ಪಾ ಬುದ್ದಿವಂತ ಅರ್ಥಶಾಸ್ತ್ರಜ್ಞರೇ ದೇಶಕ್ಕೆ ಅರ್ಥ ಹೇಳಿ ಕೊಡೋಕೆ ಹೋಗ್ತಿದ್ದೀಯ ಎಂದು ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. +ಕೆಂಪೇಗೌಡ ಜಯಂತಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದಿರುವುದಕ್ಕೆ ಕಿಡಿಕಾರಿದ ಅವರು, ಕುಮಾರಸ್ವಾಮಿ ಕೇಂದ್ರ ಸಚಿವರು. ಈ ಸಮಾಜದ ಪ್ರಶ್ನಾತೀಥ ನಾಯಕರು. ನಾವಿನ್ನು ಬೆಳೆಯಬೇಕು. ಮಾಜಿ ಪ್ರಧಾನಿ ದೇವೇಗೌಡರು ಎತ್ತರಕ್ಕೆ ಬೆಳೆದಿದ್ದಾರೆ. ಮಾಜಿ ಪ್ರಧಾನಿಗಳಿಗೆ ಗೌರವ ಕೊಡಬೇಕಿತ್ತು. ಗೌರವ ಕೊಡೋದು ಸರ್ಕಾರದ ಕೆಲಸ ಎಂದರು. +ಕೆಂಪೇಗೌಡರ ಜಯಂತಿ ರಾಜಕೀಯ ವೇದಿಕೆ ಆಗಬಾರದು. ಇದು ದ್ವೇಷದ ರಾಜಕಾರಣಸರ್ಕಾರ ದ್ವೇಷ ರಾಜಕಾರಣದಿಂದ ಹೊರ ಬರಬೇಕು. ಸರ್ಕಾರ ಜನರ ದುಡ್ಡಲ್ಲಿ ಜಯಂತಿ ಮಾಡುತ್ತಿದೆ. ಕಾಂಗ್ರೆಸ್‌‍ ಅವರು ಸ್ವಂತ ದುಡ್ಡಲ್ಲಿ ಮಾಡಲಿ ಆಗ ಯಾರನ್ನ ಬೇಕಾದರೂ ಕರೆಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಚನ್ನಪಟ್ಟಣ ಕ್ಷೇತ್ರಕ್ಕೆ ಮೈತ್ರಿ ಒಂದೇ ಅಭ್ಯರ್ಥಿ ಕುಮಾರಸ್ವಾಮಿ ಹೇಳಿದ್ದಾರೆ. ನಾವು ಗೆಲ್ಲಬೇಕು ಅಷ್ಟೇ ಗೆಲ್ಲುವವರು ಯಾರಾದರೂ ಪರವಾಗಿಲ್ಲ ಅಂದಿದ್ದಾರೆ. ಡಿಸಿಎಂ ಅವರಿಗೆ ಚನ್ನಪಟ್ಟಣ ಬಗ್ಗೆ ಪ್ರೀತಿ ಬಂದಿದೆ. ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ಮೂರು ನಾಮ ಹಾಕಬೇಕು. ಆಗ ಈ ಬೆಲೆ ಏರಿಕೆ ಎಲ್ಲ ನಿಲ್ಲುತ್ತವೆ. ಕಾಂಗ್ರೆಸ್‌‍ಗೆ ಬಿಪಿ, ಶುಗರ್‌ ಲೆವಲ್‌ ಏರಿಕೆ ಆಗಿದೆ. ಹೀಗಾಗಿ ಶಾಕ್‌ ಟ್ರೀಟ್‌ಮೆಂಟ್‌ ಕೊಡಬೇಕು ಎಂದು ಅಪಹಾಸ್ಯ ಮಾಡಿದರು. \ No newline at end of file diff --git a/eesanje/url_46_94_11.txt b/eesanje/url_46_94_11.txt new file mode 100644 index 0000000000000000000000000000000000000000..44d99e0a7a79a4b2c4b581e7d0121958b6b83617 --- /dev/null +++ b/eesanje/url_46_94_11.txt @@ -0,0 +1,5 @@ +ನಾಡಪ್ರಭು ಕೆಂಪೇಗೌಡರ ಆಳ್ವಿಕೆ ಪ್ರೇರಣೆ ಮತ್ತು ಮಾದರಿ : ಸಿಎಂ +ಬೆಂಗಳೂರು, ಜೂ.27- ನಾಡಪ್ರಭು ಕೆಂಪೇಗೌಡ ಅವರ ಆಳ್ವಿಕೆಯ ಮಾದರಿ ಮತ್ತು ಪ್ರೇರಣೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಮುಂದಿರುವ ಕೆಂಪೇಗೌಡರ ಪ್ರತಿಮೆಗೆ 515 ನೇ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. +ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿದರು. ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದರು. ಇಂದು ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ ಎಂದರು. +ವೃತ್ತಿ ಆಧಾರದ ಮೇಲೆ ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿದರು. ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ, ತಿಗಳರ ಪೇಟೆ, ಬಳೆಪೇಟೆ ನಿರ್ಮಾಣ ಮಾಡಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು. +ತಾವು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದ ವತಿಯಿಂದ ಕೆಂಪೇಗೌಡರ ಜಯಂತಿ ಆಚರಿಸಲು ನಿರ್ಧಾರ ಕೈಗೆತ್ತಿಕೊಂಡಿದ್ದಲ್ಲದೆ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಿದರು. ಅಂದಿನಿಂದ ಇಂದಿನವರೆಗೂ ನಿರಂತರವಾಗಿ ಸರ್ಕಾರದಿಂದ ನಾಡಪ್ರಭುಗಳ ಜಯಂತಿ ಆಚರಣೆಯಾಗುತ್ತಿದೆ ಎಂದರು. \ No newline at end of file diff --git a/eesanje/url_46_94_12.txt b/eesanje/url_46_94_12.txt new file mode 100644 index 0000000000000000000000000000000000000000..c8317c8d988b745461615b9e4709480c7bb9476e --- /dev/null +++ b/eesanje/url_46_94_12.txt @@ -0,0 +1,9 @@ +ದೆಹಲಿಯಲ್ಲಿ ಮುಖಾಮುಖಿಯಾಗಲಿದ್ದಾರೆ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜೂ.27-ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಪ್ರವಾಸದ ವೇಳೆ ಕೇಂದ್ರ ಬೃಹತ್‌ ಮತ್ತು ಉಕ್ಕು ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಲಿದ್ದಾರೆ. +ವಿಧಾನಸಭೆ ಚುನಾವಣೆ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಕಾಂಗ್ರೆಸ್‌‍ ಹಾಗೂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಆರಂಭಿಸಿದರು. ಅದು ರಾಜಕೀಯ ಎಲ್ಲೆಯನ್ನೂ ಮೀರಿ ಟೀಕೆಗಳು ನಡೆದಿದ್ದವು. ವೈಯಕ್ತಿಕ ತೇಜೋವಧೆಗಳಾಗಿದ್ದವು. ಬೆಂಗಳೂರಿನಲ್ಲಿ ನಡೆದ ಒಂದೆರಡು ಸಭೆಗಳಲ್ಲಿ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಮುಖಾಮುಖಿಯಾಗಿದ್ದರು. +ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡಿದಗಿಂತಲೂ ಜಗಳ ಮಾಡಿದ್ದೇ ಹೆಚ್ಚು. ಲೋಕಸಭಾ ಚುನಾವಣೆ ವೇಳೆಗೆ ಕುಮಾರಸ್ವಾಮಿ ತಮ ಪಕ್ಷ ಜೆಡಿಎಸ್‌‍ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬಳಿಕವಂತೂ ಅಧಿಕೃತ ವಿರೋಧಪಕ್ಷದ ನಾಯಕರಂತೆಯೇ ಟೀಕೆ ಮಾಡಲಾರಂಭಿಸಿದ್ದರು. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯನವರನ್ನು ಅವಕಾಶ ಸಿಕ್ಕಾಗಲೆಲ್ಲಾ ಟೀಕಿಸಿ ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತಿದ್ದರು. +ಹಾಲಿನ ದರ ಏರಿಕೆ ವಿಚಾರವಾಗಿ ನಿನ್ನೆ ಕೂಡ ಕುಮಾರಸ್ವಾಮಿ ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯವರಿಗೆ ವಿಷಯ ಸರಿಯಾಗಿ ತಿಳಿದಿಲ್ಲ. ಮೊದಲು ಸರಿಯಾದ ಮಾಹಿತಿ ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿಯೂ ಆಗಿತ್ತು. +ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಪ್ರಭಾವಿ ನಾಯಕರಾಗಿದ್ದು, ಬೇರೆಲ್ಲಾ ಮುಖಂಡರು ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೇಳಬೇಕಿತ್ತು.ಕಾಲದ ಮಹಿಮೆ ಎಂಬಂತೆ ಈಗ ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಅವರ ಭೇಟಿಗೆ ಸಿದ್ದರಾಮಯ್ಯ ಅವರು ಸಮಯ ಕೇಳಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅಲ್ಲಿ ಸಂಸದರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ ಕರ್ನಾಟಕವನ್ನು ಕೇಂದ್ರದಲ್ಲಿ ಪ್ರತಿನಿಧಿಸುವ ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಕಾರ್ಮಿಕ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಲಿದ್ದಾರೆ. +ಕರ್ನಾಟಕದಲ್ಲಿ ಪ್ರತಿನಿಧಿಸುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಇದೇ ವೇಳೆ ಮುಖ್ಯಮಂತ್ರಿಯವರು ಭೇಟಿ ಮಾಡಲು ಸಮಯ ಕೇಳಿದ್ದಾರೆ. ಕರ್ನಾಟಕದಿಂದ ಹಲವಾರು ಯೋಜನೆಗಳ ಪ್ರಸ್ತಾವನೆ ಕೇಂದ್ರ ಸರ್ಕಾರಗಳ ಮುಂದಿವೆ. ನಿರ್ಮಲಾ ಸೀತಾರಾಮನ್‌ ಅವರು ಹೊಸದಾಗಿ ಬಜೆಟ್‌ ಮಂಡಿಸಲು ತಯಾರಿ ನಡೆಸಿದ್ದು, ಅದರಲ್ಲಿ ರಾಜ್ಯಕ್ಕೆ ಹೆಚ್ಚಿನ ಆದ್ಯತೆ ದೊರೆಯುವಂತೆ ಮಾಡಲು ಮುಖ್ಯಮಂತ್ರಿ ಮುಂದಾಗಿದ್ದಾರೆ. +ಕಳೆದ ಎರಡು ವರ್ಷಗಳ ಹಿಂದಿನ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,100 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಘೊಷಿಸಲಾಗಿತ್ತು. ಆ ಹಣ ಇನ್ನೂ ಬಾಕಿ ಇದೆ. ಜೊತೆಗೆ 14ನೇ ಹಣಕಾಸು ಯೋಜನೆಯಲ್ಲಿ ಬೆಂಗಳೂರಿನ ಕೆರೆಗಳ ಅಭಿವೃದ್ಧಿ ಮತ್ತು ಹೊರವರ್ತುಲ ರಸ್ತೆಗೆ ತಲಾ 3 ಸಾವಿರ ಕೋಟಿ ರೂ.ಗಳನ್ನು ಪ್ರಸ್ತಾಪಿಸಲಾಗಿತ್ತು. ಆದರೆ ಅದು ನೆನೆಗುದಿಗೆ ಬಿದ್ದಿದೆ. ಮತ್ತೊಂದೆಡೆ ನೀರಾವರಿ ಯೋಜನೆಗಳಾದ ಮೇಕೆದಾಟು, ಮಹಾದಾಯಿಗೆ ಕೇಂದ್ರದ ಅನುಮತಿ ಹಾಗೂ ಆರ್ಥಿಕ ನೆರವಿನ ಅಗತ್ಯವಿದ್ದು, ಇದರ ಬಗ್ಗೆಯೂ ಪ್ರಸ್ತಾಪವಾಗಲಿದೆ. +ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಬೇಕೆಂಬ ಪ್ರಸ್ತಾವನೆ ಹಲವು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ. ಹಾಗೆಯೇ ಮೆಟ್ರೋ ರೈಲನ್ನು ತುಮಕೂರಿನವರೆಗೂ ಹಾಗೂ ಬೆಂಗಳೂರು ದಕ್ಷಿಣ ಹಾಗೂ ಪೂರ್ವಾಭಿಮುಖವಾಗಿ ಮತ್ತಷ್ಟು ದೂರ ವಿಸ್ತರಿಸುವ ಪ್ರಸ್ತಾಪಗಳಿದ್ದು, ಅದಕ್ಕೂ ಕೇಂದ್ರದ ಮುಂದೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಗಳಿವೆ. ಜೊತೆಗೆ ತೆರಿಗೆ ಹಂಚಿಕೆಯಲ್ಲಿ ನ್ಯಾಯೋಚಿತ ಪಾಲು ಪಡೆದುಕೊಳ್ಳಲು ಸಹಕಾರ ನೀಡುವಂತೆ ಸಂಸದರಿಗೆ ಮನವಿ ಮಾಡಲಿರುವ ಸಿದ್ದರಾಮಯ್ಯ ಅವರು ಇದೇ ವೇಳೆ ಕೇಂದ್ರ ಸಚಿವರ ಮುಂದೆ ಪ್ರಸ್ತಾವನೆ ಮಂಡಿಸಲು ತಯಾರಿ ನಡೆಸಿದ್ದಾರೆ. \ No newline at end of file diff --git a/eesanje/url_46_94_2.txt b/eesanje/url_46_94_2.txt new file mode 100644 index 0000000000000000000000000000000000000000..90ad7c06fe432e9f3d6908aa1b4462adb187d269 --- /dev/null +++ b/eesanje/url_46_94_2.txt @@ -0,0 +1,19 @@ + : ಹಾವೇರಿ ಬಳಿ ಭೀಕರ ಅಪಘಾತ, ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನ ದುರ್ಮರಣ +ಹಾವೇರಿ, ಜೂ.28- ಸವದತ್ತಿ ರೇಣುಕಾ ಯಲ್ಲಮ ದೇವಿ ದರ್ಶನ ಪಡೆದು ಟಿಟಿ ವಾಹನದಲ್ಲಿ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿದಂತೆ 13 ಮಂದಿ ಮೃತಪಟ್ಟಿರುವ ದಾರುಣ ಘಟನೆ ಇಂದು ನಸುಕಿನ ಜಾವ ಸಂಭವಿಸಿದೆ. +ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್‌‍ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬರುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ. +ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಬಳಿ ಎಮಿಹಟ್ಟಿ ಗ್ರಾಮದ ನಾಗೇಶ (50) ವಿಶಾಲಾಕ್ಷಿ (40), ಆದರ್ಶ್‌ (23), ಪರಶುರಾಮ್‌ (45), ಭಾಗ್ಯ (40), ಸುಭದ್ರಾಬಾಯಿ (65), ಪುಣ್ಯ (50), ಮಂಜುಳಾ ಬಾಯಿ (62), ಮಾನಸ (24), ರೂಪಾ (40), ಮಂಜುಳಾ (50) ಹಾಗೂ ಎರಡು ಅವಳಿ ಮಕ್ಕಳು ಮೃತಪಟ್ಟಿದ್ದು, ಇವರಿಬ್ಬರ ಹೆಸರು ಸದ್ಯಕ್ಕೆ ತಿಳಿದುಬಂದಿಲ್ಲ. +ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರುಗಳು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎಮಿಹಟ್ಟಿ ಗ್ರಾಮದಿಂದ 15 ಮಂದಿ ಕಳೆದ ಸೋಮವಾರ ವಿವಿಧ ದೇವಸ್ಥಾನಗಳ ಪ್ರವಾಸಕ್ಕೆಂದು ಟಿಟಿ ವಾಹನದಲ್ಲಿ ತೆರಳಿದ್ದರು.ನಿನ್ನೆ ಸವದತ್ತಿ ರೇಣುಕಾ ಯಲ್ಲಮ ದೇವಿ ದರ್ಶನ ಪಡೆದು 15 ಮಂದಿ ವಾಪಾಸ್‌‍ ತಮ ಗ್ರಾಮಕ್ಕೆ ಮರಳುತ್ತಿದ್ದರು. +ಇಂದು ನಸುಕಿನ ಜಾವ 4 ಗಂಟೆಯ ಸುಮಾರಿನಲ್ಲಿ ಈ ಟಿಟಿ ವಾಹನ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್‌‍ ಬಳಿಯ ಪುಣಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ರಸ್ತೆ ಬದಿ ಲಾರಿ ನಿಲ್ಲಿಸಿರುವುದು ಟಿಟಿ ಚಾಲನೆ ಮಾಡುತ್ತಿದ್ದ ಚಾಲಕನ ಗಮನಕ್ಕೆ ಬಾರದೆ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. +ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಅರ್ಧಭಾಗ ಲಾರಿ ಹಿಂಬದಿಗೆ ಸಿಕ್ಕಿಕೊಂಡು ಸ್ಥಳದಲ್ಲೇ 11 ಮಂದಿ ಸಾವನ್ನಪ್ಪಿದರೆ, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಮೃತರ ಪೈಕಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟರೆ ಉಳಿದವರೆಲ್ಲರೂ ಸಂಬಂಧಿಕರು. ಮೃತರಲ್ಲಿ ಇಬ್ಬರು ಅವಳಿ ಮಕ್ಕಳು ತಾಯಿ ಎದುರೇ ಪ್ರಾಣ ಬಿಟ್ಟಿವೆ. +ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹಾವೇರಿ ಠಾಣೆ ಪೊಲೀಸರು ಹಾಗೂ ಎಸ್‌‍ಪಿ ಅಂಶಕುಮಾರ್‌ ಮತ್ತು ತಂಡ ಪರಿಶೀಲನೆ ನಡೆಸಿ, ಟಿಟಿ ವಾಹನದೊಳಗೆ ಸಿಕ್ಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.ಎಲ್ಲಾ ಮೃತದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿಡಲಾಗಿದೆ. +ಆಂಬುಲೆನ್ಸ್ ಸಿಬ್ಬಂದಿ ಕಣ್ಣೀರು:ಯಾವುದೇ ಸಾವಾಗಲಿ, ನಮಗೆ ಅವರು ಪರಿಚಯವಿಲ್ಲದಿದ್ದರೂ ಮೃತದೇಹ ನೋಡಿದಾಗ ಕಣ್ಣೀರು ಬರುತ್ತದೆ. ಮೃತದೇಹಗಳನ್ನು ಸಾಗಿಸಲು ಬಂದಿದ್ದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಈ ಭೀಕರತೆ ಕಂಡು ಮಮಲ ಮರುಗಿದ್ದಾರೆ. ಅವಳಿ ಮಕ್ಕಳ ಮೃತದೇಹಗಳನ್ನು ಆಂಬುಲೆನ್ಸ್ ನಲ್ಲಿ ಇಡುತ್ತಿದ್ದಾಗ ಕೈಯಲ್ಲಿ ಹಿಡಿದು ಕಣ್ಣೀರು ಹಾಕಿದ್ದು, ಎಂತವರ ಮನವೂ ಕರಗುವಂತಿತ್ತು. +ಮೃತದೇಹಗಳು ಛಿದ್ರಛಿದ್ರ :ಅಪಘಾತದ ರಭಸಕ್ಕೆ ಮೃತದೇಹಗಳು ಛಿದ್ರಛಿದ್ರವಾಗಿವೆ. ಕೆಲವೊಂದು ದೇಹ ಅಪ್ಪಚ್ಚಿಯಾಗಿವೆ. +ಎಮಿಹಟ್ಟಿ ಗ್ರಾಮದಲ್ಲಿ ನೀರವ ಮೌನ :ಸೋಮವಾರ ದೇವರ ದರ್ಶನಕ್ಕೆ ಹೋಗಿದ್ದ ಸಂಬಂಧಿಕರೆಲ್ಲಾ ಇಂದು ವಾಪಾಸ್‌‍ ಬರುತ್ತಾರೆಂದು ಕುಟುಂಬಸ್ಥರು ಕಾಯುತ್ತಿದ್ದಾಗ ಬರಸಿಡಿಲಿನಂತೆ ಬಂದ ಸಾವಿನ ಸುದ್ದಿಯಿಂದ ಎಮೆಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. +ಹಾವೇರಿಗೆ ಸಂಬಂಧಿಕರ ಆಗಮನ :ಅಪಘಾತದಲ್ಲಿ ತಮವರು ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು ಹಾವೇರಿಗೆ ಬಂದಿದ್ದು, ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಕಂಡು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. +ಹೊಸ ಟಿಟಿ ಖರೀದಿ :ನಾಗೇಶ ಅವರು ಹೊಸ ಟಿಟಿ ಖರೀದಿಸಿದ್ದರು. ನಾಗೇಶ ಅವರ ಮಗ ಆದರ್ಶ ಟಿಟಿ ಚಾಲನೆ ಮಾಡುತ್ತಿದ್ದನು. ಹೊಸದಾಗಿ ವಾಹನ ಖರೀದಿಸಿದ್ದರಿಂದ ಸಂಬಂಧಿಕರನ್ನೆಲ್ಲಾ ಕರೆದುಕೊಂಡು ದೇವರ ದರ್ಶನಕ್ಕೆ ಹೋಗಿ ವಾಪಾಸ್‌‍ ಬರುವಾಗ ಈ ದುರಂತ ಸಂಭವಿಸಿರುವುದು ವಿಪರ್ಯಾಸ.ನಾಗೇಶ್‌ ಎಂಬುವರ ಕುಟುಂಬದ ನಾಲ್ವರು ಮೃತಪಟ್ಟಿರುವುದು ದುರದೃಷ್ಟಕರ. +ಮನೆಯೇ ಸರ್ವನಾಶ :ತಮವರನ್ನು ಕಳೆದುಕೊಂಡ ಮೃತನ ಸಹೋದರ ಕಣ್ಣೀರು ಹಾಕುತ್ತಾ ಮನಯೇ ಸರ್ವನಾಶವಾಯಿತೆಂದು ಗೋಳಾಡುತ್ತಿದ್ದುದು ಕರಳು ಕಿತ್ತುಬರುವಂತಿತ್ತು. +ಅತೀವೇಗವೇ ಕಾರಣ :ಊರಿಗೆ ಬೇಗ ಹೋಗಬೇಕೆನ್ನುವ ಆತುರದಲ್ಲಿ ನಿದ್ದೆಗೆಟ್ಟು ಅತಿವೇಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲನೆ ಮಾಡಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ನಿದ್ದೆ ಮಂಪರಿನಿಂದಾಗಿ ಈ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಸೂಕ್ತ ಚಿಕಿತ್ಸೆ, ತ್ವರಿತ ಪರಿಹಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯ :ಹುಬ್ಬಳ್ಳಿ,ಜೂ.28- ಹಾವೇರಿ ಜಿಲ್ಲೆ ಗುಂಡೇನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ. +ಈ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾದ ಸುದ್ದಿ ತಿಳಿದು ಸಚಿವ ಜೋಶಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.ದೇವರು ಮೃತರ ಆತಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಸ್ಥರಿಗೆ ನೋವು ಸಹಿಸಿಕೊಳ್ಳು ಶಕ್ತಿ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ. +ರಾಜ್ಯ ಸರ್ಕಾರ ಈ ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಆದ್ಯತೆ ನೀಡಬೇಕು ಹಾಗೂ ಮೃತರ ಕುಟುಂಬಕ್ಕೆ ತ್ವರಿತ ಪರಿಹಾರ ನೀಡಲು ಮುಂದಾಗಬೇಕೆಂದು ಒತ್ತಾಯಿಸಿ ಸಚಿವ ಪ್ರಲ್ಹಾದ ಜೋಶಿ ಟ್ವೀಟ್‌ ಮಾಡಿದ್ದಾರೆ. + diff --git a/eesanje/url_46_94_3.txt b/eesanje/url_46_94_3.txt new file mode 100644 index 0000000000000000000000000000000000000000..bc1dcb1838f29bfb2f615980bcf4068b214173ea --- /dev/null +++ b/eesanje/url_46_94_3.txt @@ -0,0 +1,4 @@ +ಕೆಂಪೇಗೌಡರ ಜಯಂತಿಗೆ ಎಚ್‌ಡಿಡಿ, ಎಚ್‌ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಜೆಡಿಎಸ್‌ ಪ್ರತಿಭಟನೆ +ಬೆಂಗಳೂರು, ಜೂ.27– ರಾಜ್ಯ ಸರ್ಕಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಸಿದ ನಾಡಪ್ರಭು ಕೆಂಪೇಗೌಡರ ಜಯಂತಿ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಿಲ್ಲ ಎಂದು ಆರೋಪಿಸಿ ಜೆಡಿಎಸ್‌‍ ಇಂದು ಪ್ರತಿಭಟನೆ ನಡೆಸಿತು. +ಜೆಡಿಎಸ್‌‍ ಕೇಂದ್ರ ಕಚೇರಿ ಜೆಪಿಭವನದ ಬಳಿ ಬೆಂಗಳೂರು ಮಹಾನಗರ ಜೆಡಿಎಸ್‌‍ ಅಧ್ಯಕ್ಷ ರಮೇಶ್‌ಗೌಡ, ಮಾಜಿ ಅಧ್ಯಕ್ಷ ಆರ್‌.ರಮೇಶ್‌ಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕೆಲ ಕಾಲ ಪ್ರತಿಭಟನೆ ನಡೆಸಿದ ಕೆಲವು ಜೆಡಿಎಸ್‌‍ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. +ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಆಹ್ವಾನಿಸದಿರುವುದಕ್ಕೆ ವಿರೋಧ ವ್ಯಕ್ತ ಪಡಿಸಲಾಗಿತ್ತು. ಅಲ್ಲದೆ, ಕುಮಾರಸ್ವಾಮಿ ಅವರು ಹೇಳಿಕೆ ನೀಡಿ, ದೆಹಲಿಯಲ್ಲೇ ಕೆಂಪೇಗೌಡರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಕೆಂಪೇಗೌಡರು ನಿರ್ಮಿಸಿದ ಕೆರೆಗಳನ್ನು ಸಂರಕ್ಷಣೆ ಮಾಡಲಿ ಎಂದಿದ್ದರು. \ No newline at end of file diff --git a/eesanje/url_46_94_4.txt b/eesanje/url_46_94_4.txt new file mode 100644 index 0000000000000000000000000000000000000000..caff30e567cf5355d799de73dc313c7fa4bce574 --- /dev/null +++ b/eesanje/url_46_94_4.txt @@ -0,0 +1,6 @@ +ಬೆಂಗಳೂರಿನ ಸಂಚಾರದಟ್ಟಣೆಯನ್ನು ಸುಧಾರಿಸಲು 150 ಕಿ.ಮೀ. ಹೊಸ ರಸ್ತೆ ಯೋಜನೆ +ಬೆಂಗಳೂರು, ಜೂ.27– ನಾಡಪ್ರಭು ಕೆಂಪೇಗೌಡ ನಿರ್ಮಿತ ಮಹಾನಗರಿ ಬೆಂಗಳೂರಿನ ಸಂಚಾರದಟ್ಟಣೆಯನ್ನು ಸುಧಾರಿಸಲು 150 ಕಿ.ಮೀ.ನಷ್ಟು ಹೊಸ ಕಾರ್ಯಯೋಜನೆಯನ್ನು ಸಿದ್ಧಗೊಳಿಸಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. +ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, 150 ಕಿ.ಮೀ. ಯೋಜನೆಯಲ್ಲಿ ಮೇಲ್ಸೇತುವೆ, ಕೆಳ ಸೇತುವೆ ಹಾಗೂ ಸುರಂಗ ಮಾರ್ಗದ ರಸ್ತೆಗಳು ಒಳಗೊಂಡಿರುತ್ತವೆ ಎಂದು ಹೇಳಿದರು. +ಪೆರಿಫೆರಲ್‌ ರಿಂಗ್‌ ರಸ್ತೆ ನೆನೆಗುದಿಗೆ ಬಿದ್ದಿದೆ. ಏಳೆಂಟು ಬಾರಿ ಟೆಂಡರ್‌ ಕರೆದರೂ ಅದನ್ನು ಕೈಗೆತ್ತಿಕೊಳ್ಳಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಯೋಜನೆಯ ಸ್ವರೂಪವನ್ನು ಬದಲಾಯಿಸಿ ಬ್ಯುಸಿನೆಸ್‌‍ ಕಾರಿಡಾರನ್ನಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದರು. +ಬ್ರ್ಯಾಂಡ್‌ ಬೆಂಗಳೂರಿನ ಮೂಲಕ ಬೆಂಗಳೂರಿಗೆ ಹೊಸ ಸ್ವರೂಪ ನೀಡಲು ಕ್ರಮ ಕೈಗೊಳ್ಳಲಾಗಿದೆ. 70 ಸಾವಿರ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು. ನಾಡಪ್ರಭು ಕೆಂಪೇಗೌಡರ ಕುರಿತು ಶಾಲಾ-ಕಾಲೇಜುಗಳಲ್ಲಿ ಚರ್ಚಾಗೋಷ್ಠಿ, ಅಧ್ಯಯನ ಹಾಗೂ ಇತರ ಚಟುವಟಿಕೆಗಳಿಗೆ ಪ್ರತೀ ತಾಲ್ಲೂಕಿಗೆ ಬಿಬಿಎಂಪಿಯಿಂದ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ ಎಂದರು. +ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎಂಬುದು ಮುಖ್ಯ ಅಲ್ಲ. ಅವರು ಯಾವ ರೀತಿ ಜನಾನುರಾಗಿಯಾಗಿ ಕೆಲಸ ಮಾಡುತ್ತಾರೆ ಎಂಬುದಕ್ಕೆ ಕೆಂಪೇಗೌಡರು ಉದಾಹರಣೆ ಎಂದರು. ಬೆಂಗಳೂರಿನಲ್ಲಿ ಒಂದು ಕೋಟಿ ನಲ್ವತ್ತು ಲಕ್ಷ ಜನ ವಾಸಿಸುತ್ತಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ.25 ರಷ್ಟು ಸಾಂದ್ರತೆ ನಗರದಲ್ಲಿದೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು. ಅವಕಾಶಗಳು ಯಾರನ್ನೂ ಹುಡುಕಿಕೊಂಡು ಬರುವುದಿಲ್ಲ. ಸಂಘಸಂಸ್ಥೆಗಳು ಅವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. \ No newline at end of file diff --git a/eesanje/url_46_94_5.txt b/eesanje/url_46_94_5.txt new file mode 100644 index 0000000000000000000000000000000000000000..6af9bdb80f275e15ae7d0b90bfac136e0eb06ab0 --- /dev/null +++ b/eesanje/url_46_94_5.txt @@ -0,0 +1,9 @@ +ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..? +ಬೆಂಗಳೂರು, ಜೂ.27-ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಡ ಬೇಕು ಎಂದು ಮನವಿ ಮಾಡಿದರು. +ಇದಕ್ಕೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಮ ಕಾಂಗ್ರೆಸ್ ಹೈಕಮಾಂಡ್ನ ಪಕ್ಷ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು. +ಅಧಿಕಾರ ಹಸ್ತಾಂತರ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದನ್ನು ಪಾಲಿಸಬೇಕು ಎಂದು ಅನ್ಯಮನಸ್ಕರಾಗಿ ಹೇಳಿ ತೆರಳಿದರು.ಇದಕ್ಕೂ ಮುನ್ನ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ನಾಡಪ್ರಭು ಕೆಂಪೇಗೌಡ ಅವರ ಜಾತ್ಯತೀತ ನಿಲುವು ಆದರ್ಶನೀಯ. ಪ್ರತಿಯೊಬ್ಬರೂ ಅದನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಮನುಷ್ಯರಾಗಿ ಬದುಕಬೇಕು ಎಂದು ಕರೆ ನೀಡಿದರು. +ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಲಹೆ ನೀಡಿದ್ದರು. ಅವರ ಸಲಹೆ ಮೇರೆಗೆ ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಯಿತು ಎಂದು ಹೇಳಿದರು. +ನಾಡಿನ ಜನತೆ ಸಂಭ್ರಮದಿಂದ ಕೆಂಪೇಗೌಡ ಜಯಂತಿಯನ್ನು ಆಚರಿಸುತ್ತಿದ್ದಾರೆ. ನಾಡಪ್ರಭುಗಳ ಆಡಳಿತ ಎಲ್ಲರಿಗೂ ಪ್ರೇರಣೆ. ಅವರ ಸಮಾಜಮುಖಿ ಕೆಲಸ ಹಾಗೂ ಮಾದರಿ ಆಡಳಿತ ಶ್ಲಾಘನೀಯ. ಕೆಂಪೇಗೌಡರು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದ್ದರು. ಆಡಳಿತದಲ್ಲಿ ಎಂದೂ ಜಾತಿ, ಧರ್ಮ ಬೇಧ ಮಾಡಲಿಲ್ಲ. ಎಲ್ಲಾ ಜನಾಂಗದ ಅಭಿವೃದ್ಧಿಗೆ ಪ್ರಯತ್ನಿಸಿದರು. +ಅವರ ದೂರದೃಷ್ಟಿಯಿಂದಾಗಿ ಬೆಂಗಳೂರು ನಿರ್ಮಾಣಗೊಂಡು ಇಂದು ವಿಶ್ವ ಪ್ರಸಿದ್ಧಿಯಾಗಿದೆ. ಇಲ್ಲಿ ಹಲವು ಜಾತಿ, ಧರ್ಮದವರು ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಗಾಂಧಿ ಸಾರಕ ಸಂಸ್ಥೆ, ಸುಮಂಗಲಿ ಸೇವಾಶ್ರಮ ಹಾಗೂ ಬಸವನಗುಡಿ ಸೊಸೈಟಿಯ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಸೈನ್ಸ್ ಫೋರಂಗೆ ನಾಡಪ್ರಭು ಕೆಂಪೇಗೌಡರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. +ಗಾಂಧಿಸಾರಕ ಸಂಸ್ಥೆಯಿಂದ ವೊಡೆ ಪಿ. ಕೃಷ್ಣ, ಸುಮಂಗಲಿ ಸೇವಾಶ್ರಮದ ಸುಶೀಲಮ, ಶಾಂತಮ, ಸೈನ್ಸ್ ಫೋರಂನ ವೆಂಕಟಶಿವಾರೆಡ್ಡಿ, ವಿ.ಎನ್.ಸುಬ್ರಹಣ್ಯ ಅವರನ್ನು ಸನಾನಿಸಲಾಯಿತು. +ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಶಿವರಾಜ್ ತಂಗಡಗಿ, ಶಾಸಕರಾದ ರಿಜ್ವಾನ್ ಹರ್ಷದ್, ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಗೋವಿಂದರಾಜು, ಸಲೀಂ ಅಹಮದ್, ರಾಮೋಜಿ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_46_94_6.txt b/eesanje/url_46_94_6.txt new file mode 100644 index 0000000000000000000000000000000000000000..7f101b656105243391dc6265d5584bf81ea25976 --- /dev/null +++ b/eesanje/url_46_94_6.txt @@ -0,0 +1,5 @@ +ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 1.04 ಕೋಟಿ ರೂ. ವಂಚನೆ +ಹುಬ್ಬಳ್ಳಿ,ಜೂ.27-ಕ್ರಿಪ್ಟೋ ಕರೆನ್ಸಿ ಖರೀದಿಸಿದರೆ ಹೆಚ್ಚಿನ ಲಾಭ ಪಡೆಯಬಹು ದೆಂದು ನಗರದ ಉದ್ಯಮಿ ಮತ್ತು ಅವರ ಇಬ್ಬರು ಸ್ನೇಹಿತರಿಗೆ ವೆಬ್ ಲಿಂಕ್ ಕಳುಹಿಸಿ, 1.04 ಕೋಟಿ ವರ್ಗಾಯಿಸಿಕೊಂಡು ವಂಚಿ ಸಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. +ಉದ್ಯಮಿ ಶಿವಾನಂದ ಪಾವುಸ್ಕರ್ ಮತ್ತು ಅವರ ಸ್ನೇಹಿತರಾದ ಪ್ರವೀಣ ಕುಲಕರ್ಣಿ, ಸುಜೀತ್ ಕಲಬುರಗಿ ವಂಚನೆಗೆ ಒಳಗಾದವರು. ಫೇಸ್ಬುಕ್ನಲ್ಲಿ ಕ್ರಿಪ್ಟೋ ಕರೆನ್ಸಿ ಕುರಿತು ಜಾಹೀರಾಜು ನೋಡಿ, ಅಲ್ಲಿನ ಮೊಬೈಲ್ ನಂಬರ್ಗೆ ಕರೆ ಮಾಡಿದ್ದರು. ಛಾಯಾಸಿಂಗ್ ಹೆಸರಿನ ವ್ಯಕ್ತಿ ಪರಿಚಯವಾಗಿದ್ದ. +ಬಳಿಕ ಅವನು ಕೆಲವು ವೆಬ್ಸೈಟ್ಗಳ ಲಿಂಕ್ ಕಳುಹಿಸಿ, ಅದರಲ್ಲಿರುವ ವಿಯಾಕಾ ಕ್ರಿಪ್ಟೋ ಆ್ಯಪ್ ಅಳವಡಿಸಿಕೊಳ್ಳಲು ಸೂಚಿಸಿದ. ಅದನ್ನು ನಂಬಿದ ಮೂವರು ಮೊಬೈಲ್ಗಳಿಗೆ ಆ್ಯಪ್ ಅಳವಡಿಸಿಕೊಂಡರು. +ಆಗ ಶಿವಾನಂದ ಖಾತೆಯಿಂದ 68.99 ಲಕ್ಷ, ಸುಜಿತ್ ಖಾತೆಯಿಂದ 14.85 ಲಕ್ಷ ಹಾಗೂ ಪ್ರವೀಣ ಖಾತೆಯಿಂದ 21.05 ಲಕ್ಷ ಬೇರೊಂದು ಖಾತೆಗೆ ವರ್ಗವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_46_94_7.txt b/eesanje/url_46_94_7.txt new file mode 100644 index 0000000000000000000000000000000000000000..1e7637fedaf07298a73beb2b8694691795b5c976 --- /dev/null +++ b/eesanje/url_46_94_7.txt @@ -0,0 +1,7 @@ +ಭಾರಿ ಮಳೆಯಿಂದ ಜಲಾಶಯಗಳ ಒಳಹರಿವು ಹೆಚ್ಚಳ +ಬೆಂಗಳೂರು, ಜೂ.27– ಮುಂಗಾರು ಮಳೆ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕೇರಳದ ವೈನಾಡಿನಲ್ಲಿ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳ ಹರಿವು ಗಣನೀಯವಾಗಿ ಹೆಚ್ಚಳವಾಗಿದೆ. +ಜಲವಿದ್ಯುತ್‌ ಉತ್ಪಾದಿಸುವ ಮೂರು ಜಲಾಶಯಗಳಿಗೆ ಒಟ್ಟು 24 ಸಾವಿರ ಕ್ಯೂಸೆಕ್‌್ಸಗೂ ಹೆಚ್ಚು ನೀರು ಹರಿದುಬರುತ್ತಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 19 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದರೆ ಸೂಪಾ ಜಲಾಶಯಕ್ಕೆ 2,800ಕ್ಕೂ ಹೆಚ್ಚು ಕ್ಯೂಸೆಕ್‌್ಸ ಹಾಗೂ ವರಾಹಿ ಜಲಾಶಯಕ್ಕೆ 1,600ಕ್ಕೂ ಹೆಚ್ಚು ಕ್ಯೂಸೆಕ್‌್ಸ ನೀರು ಒಳಹರಿವಿದೆ. +ಕಾವೇರಿ ನದಿಪಾತ್ರದ ಹಾರಂಗಿ ಜಲಾಶಯಕ್ಕೆ 1,400 ಕ್ಯೂಸೆಕ್ಸ್ ಗೂ ಹೆಚ್ಚು, ಹೇವಾಮತಿ ಜಲಾಶಯ 4,000 ಕ್ಕೂ ಹೆಚ್ಚು, ಕೆಆರ್‌ಎಸ್‌‍ ಜಲಾಶಯಕ್ಕೆ 3,800 ಕ್ಕೂ ಹೆಚ್ಚು ಹಾಗೂ ಕಬಿನಿ ಜಲಾಶಯಕ್ಕೆ 17,000 ಕ್ಯೂಸೆಕ್ಸ್ ನಷ್ಟು ಒಳಹರಿವಿದೆ. +ಕೃಷ್ಣ ಕೊಳ್ಳದ ಭದ್ರಾ ಜಲಾಶಯಕ್ಕೆ 4,000, ಘಟಪ್ರಭಾ ಜಲಾಶಯಕ್ಕೆ 27,000, ಆಲಮಟ್ಟಿ ಜಲಾಶಯಕ್ಕೆ 4,000 ಕ್ಯೂಸೆಕ್ಸ್ ನಷ್ಟು ಒಳಹರಿವಿದೆ. ಒಟ್ಟಾರೆ 12,000ಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕೃಷ್ಣ ಕೊಳ್ಳದ ವ್ಯಾಪ್ತಿಯ ಜಲಾಶಯಗಳಿಗೆ ಒಳಹರಿವಿದೆ. +ಶೇ.1 ರಷ್ಟು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಶೇಖರಣೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇನ್ನು ಮೂರ್ನಾಲ್ಕು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. +ಕಾವೇರಿ ಕೊಳ್ಳದಲ್ಲಿ ಶೇ.16, ಕೃಷ್ಣ ಕೊಳ್ಳದಲ್ಲಿ ಶೇ.21 ಹಾಗೂ ಜಲವಿದ್ಯುತ್‌ ಉತ್ಪಾದಿಸುವ ಜಲಾಶಯಗಳಲ್ಲಿ ಪ್ರಸ್ತುತ ಶೇ.15 ರಷ್ಟು ನೀರು ಸಂಗ್ರಹವಾಗಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಲಾಶಯಗಳ ನೀರಿನ ಸಂಗ್ರಹದ ಪ್ರಮಾಣ ಹೆಚ್ಚಳವಾಗಿರುವುದು ಕಂಡುಬಂದಿದೆ. \ No newline at end of file diff --git a/eesanje/url_46_94_8.txt b/eesanje/url_46_94_8.txt new file mode 100644 index 0000000000000000000000000000000000000000..430f473c7b14e1a4aec1b13d25ff6c5655f2e8a5 --- /dev/null +++ b/eesanje/url_46_94_8.txt @@ -0,0 +1,12 @@ +ಡಿಸಿಎಂ ಹುದ್ದೆ ಬೇಕೆನ್ನುವವರು ಹೈಕಮಾಂಡ್‌ ಬಳಿ ಹೋಗಿ ಚರ್ಚಿಸಿ : ಡಿಕೆಶಿ ಖಡಕ್ ಎಚ್ಚರಿಕೆ +ಬೆಂಗಳೂರು, ಜೂ.27-ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಬೇಕು ಎನ್ನುವವರು ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲಾಗಿ ಹೈಕಮಾಂಡ್‌ ಜೊತೆ ಚರ್ಚಿಸಿ ಬೇಡಿಕೆಯನ್ನು ಈಡೇರಿಸಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. +ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದ ಮುಂದಿರುವ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಿಕೆಗಳಿಗೆ ಹೇಳಿಕೆ ನೀಡುವವರು ದೆಹಲಿಗೆ ಹೋಗಿ ಹೈಕಮಾಂಡ್‌ ಬಳಿ ಮಾತನಾಡಿ, ತಮಗೆ ಬೇಕಾದ ಪರಿಹಾರ ಪಡೆದುಕೊಂಡು ಬರಲಿ. ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ ಎಂದು ತಾಕೀತು ಮಾಡಿದರು. +ಮಾಧ್ಯಮಗಳು, ಪತ್ರಿಕೆಗಳು ಪರಿಹಾರ ನೀಡುವುದಿಲ್ಲ. ಪ್ರಚಾರ ಮಾತ್ರ ನೀಡುತ್ತವೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎನ್ನುವವರೂ ಕೂಡ ಸಮಯ ವ್ಯರ್ಥ ಮಾಡಬಾರದು. ಎಲ್ಲಿಂದ ಪರಿಹಾರ ಪಡೆಯಬೇಕೋ, ಅಲ್ಲಿಂದ ಪಡೆದುಕೊಳ್ಳಲಿ. ಹೇಳಿಕೆ ನೀಡುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದರು. +ವೈದ್ಯರ ಬಳಿ ಹೋದರೆ ಒಂದಿಷ್ಟು ಔಷಧ ಸಿಗುತ್ತದೆ, ವಕೀಲರ ಬಳಿ ಹೋದರೆ ಕಾನೂನು ಸಲಹೆ ಸಿಗುತ್ತದೆ. ಹೀಗಾಗಿ ಬೇಡಿಕೆಗಳ ಬಗ್ಗೆ ಚರ್ಚೆ ಮಾಡುವವರು ಎಲ್ಲಿ ಬೇಕೋ ಅಲ್ಲಿ ಪರಿಹಾರ ಪಡೆದುಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. +ನೂತನ ಸಂಸದರನ್ನು ದೆಹಲಿಯಲ್ಲಿ ಭೇಟಿ ಮಾಡುತ್ತಿದ್ದೇವೆ. ಈಗಲಾದರೂ ರಾಜ್ಯದಿಂದ ಆಯ್ಕೆಯಾದವರು ಬಾಯಿ ಬಿಟ್ಟು ಮಾತನಾಡಿ, ಕರ್ನಾಟಕದ ಹಿತಾಸಕ್ತಿ ಪಾಲನೆಗೆ ಕೆಲಸ ಮಾಡಲಿ. ಹೀಗಾಗಿ ಸಂಸದರ ಜೊತೆ ಚರ್ಚೆ ಮಾಡುತ್ತೇವೆ ಎಂದರು. +ಕೆಂಪೇಗೌಡರ ಆಚಾರ, ವಿಚಾರ, ಪ್ರಚಾರಕ್ಕೆ ಅನುದಾನ :ನಾಡಪ್ರಭು ಕೆಂಪೇಗೌಡರ ಆಚಾರ, ವಿಚಾರ, ಪ್ರಚಾರಕ್ಕೆ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ವಿಚಾರ ಸಂಕಿರಣ ಹಾಗೂ ಚರ್ಚಾ ಸ್ಪರ್ಧೆ ನಡೆಸಲು ಒಂದು ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಜಯಂತಿ ಕಾರ್ಯಕ್ರಮವನ್ನು ದೊಡ್ಡದಾಗಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಸಾವಿರ ರೂ.ಗಳನ್ನುಮಾತ್ರ ನೀಡಲಾಗುತ್ತದೆ. ಬಿಬಿಎಂಪಿಯಿಂದ ಹೆಚ್ಚುವರಿಯಾಗಿ 1 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ನಿರ್ಮಿಸಿದ ಬೆಂಗಳೂರಿನಲ್ಲಿ ಇಂದು ಎಲ್ಲಾ ಜಾತಿಯ ಜನರೂ ಇದ್ದಾರೆ ಎಂದು ಹೇಳಿದರು. +ದೇವನಹಳ್ಳಿಯಲ್ಲಿ 10 ಎಕರೆ, ಮಾಗಡಿ ರಸ್ತೆಯಲ್ಲಿ 5 ಎಕರೆ ಸ್ಥಳ ನಿಗದಿ ಮಾಡಲಾಗಿದ್ದು, ಬೆಂಗಳೂರು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಅಲ್ಲಿ ಭವ್ಯ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದರು. +ತಪ್ಪು ಸರಿಪಡಿಸುತ್ತೇವೆ :ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸದೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ ಅಪಮಾನ ಮಾಡಲಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ರಾಜಕಾರಣ ಮಾಡುವವರು ಮಾಡಲಿ, ನಾವು ಯಾರನ್ನೂ ಅಗೌರವಿಸುವುದಿಲ್ಲ ಎಂದರು. +ಮಾಜಿ ಮುಖ್ಯಮಂತ್ರಿಗಳ ಪೈಕಿ ಎಸ್‌‍.ಎಂ.ಕೃಷ್ಣ, ಸದಾನಂದಗೌಡರು, ದೇವೇಗೌಡರು, ಕುಮಾರಸ್ವಾಮಿ ಆಗಿದ್ದಾರೆ. ಆ ಸಮಾಜದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವುದು ಶಿಷ್ಟಾಚಾರ. ನಾನು ಸ್ವಲ್ಪ ಕಾರ್ಯದೊತ್ತಡದಲ್ಲಿದ್ದೆ. ಅಧಿಕಾರಿಗಳು ಶಿಷ್ಟಾಚಾರವನ್ನು ಪಾಲಿಸಿಲ್ಲ ಎಂದು ಹೇಳಿದರು. +ದೇವೇಗೌಡರು ಹಾಸನವನ್ನು, ಕುಮಾರಸ್ವಾಮಿಯವರು ಮಂಡ್ಯವನ್ನು ತವರು ಕ್ಷೇತ್ರ ಮಾಡಿಕೊಂಡಿದ್ದಾರೆ. ಪ್ರಾಧಿಕಾರ ಬೆಂಗಳೂರಿನ ವ್ಯಾಪ್ತಿಯಲ್ಲಿ ಶಿಷ್ಟಾಚಾರವನ್ನು ಪಾಲಿಸಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಬೆಂಗಳೂರನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಹೆಸರನ್ನು ಹಾಕಲಾಗಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಅವರ ಹೆಸರನ್ನು ಹಾಕಬಾರದು ಎಂಬ ಉದ್ದೇಶವಿಲ್ಲ. ಮುಂದಿನ ಬಾರಿ ತಪ್ಪನ್ನು ಸರಿಪಡಿಸಲಾಗುವುದು ಎಂದರು. +ಕೆಂಪೇಗೌಡರ ಜಯಂತಿಗೆ ಬೇರೆ ಸಮುದಾಯದ ಸ್ವಾಮೀಜಿಗಳನ್ನು ಕರೆಯಲು ಸೂಚನೆ ನೀಡಿದ್ದೇವೆ. ಕೆಂಪೇಗೌಡರು ಒಕ್ಕಲಿಗರಿಗೆ ಮಾತ್ರ ಆಸ್ತಿಯಲ್ಲ. ಅವರು ನಿರ್ಮಿಸಿದ ಬೆಂಗಳೂರು ಎಲ್ಲರಿಗೂ ಸೇರಿದೆ. ವೃತ್ತಿ ಆಧಾರಿತವಾಗಿ ಬೆಂಗಳೂರು ನಿರ್ಮಿಸಿದ ಧೀಮಂತರು ಕೆಂಪೇಗೌಡರು ಎಂದು ಹೇಳಿದರು. \ No newline at end of file diff --git a/eesanje/url_46_94_9.txt b/eesanje/url_46_94_9.txt new file mode 100644 index 0000000000000000000000000000000000000000..d5f6792ac78335f26a15e9d1d4c1c9d9fcd9c116 --- /dev/null +++ b/eesanje/url_46_94_9.txt @@ -0,0 +1,7 @@ + : ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ವೇದಿಕೆಯಲ್ಲೇ ಸಿದ್ದುಗೆ ಸ್ವಾಮೀಜಿ ಒತ್ತಾಯ +ಬೆಂಗಳೂರು, ಜೂ.27– ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ. ಡಿ.ಕೆ.ಶಿವಕುಮಾರ್‌ರವರಿಗೆ ಅವಕಾಶ ಸಿಕ್ಕಿಲ್ಲ. ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟು ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಒತ್ತಾಯಿಸಿದ್ದಾರೆ. +ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಉತ್ಸವದಲ್ಲಿ ಮಾತನಾಡಿದ ಅವರು, ಬೆಂಗಳೂರನ್ನು ವಿಭಜಿಸಲು ಈ ಮೊದಲು ಚರ್ಚೆ ನಡೆದಿತ್ತು. ಹೋರಾಟದಿಂದ ಅದನ್ನು ಸ್ಥಗಿತಗೊಳಿಸಲಾಯಿತು. ಈಗ ಮತ್ತೆ ಅಂತಹುದೇ ಚರ್ಚೆ ನಡೆಯುತ್ತಿದೆ. ಇದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. +ಬೆಂಗಳೂರು ವಿಭಜಿಸಬೇಕು ಎಂದಾದರೆ ಉತ್ತರಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ಎರಡು ಭಾಗ ಮಾಡಿ ಉತ್ತರ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಆಗ ಆ ಭಾಗದಿಂದ ಬೆಂಗಳೂರಿಗೆ ವಲಸೆ ಬರುವುದು ತಪ್ಪುತ್ತದೆ ಎಂದು ಹೇಳಿದರು. +ಎಲ್ಲರೂ ಮುಖ್ಯಮಂತ್ರಿಗಳಾಗಿ ಅಧಿಕಾರ ಅನುಭವಿಸಿದ್ದಾರೆ. ನಮ ಡಿ.ಕೆ.ಶಿವಕುಮಾರ್‌ರವರು ಆಗಿಲ್ಲ. ಸಿದ್ದರಾಮಯ್ಯ ಅವರು ಈಗಾಗಲೇ ಮುಖ್ಯಮಂತ್ರಿಗಳಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ರವರಿಗೆ ಬಿಟ್ಟುಕೊಟ್ಟು, ಒಳ್ಳೆಯದಾಗಲಿ ಎಂದು ಅನುಗ್ರಹಿಸಬೇಕು. ಸಿದ್ದರಾಮಯ್ಯ ಅವರಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಡಿ.ಕೆ.ಶಿವಕುಮಾರ್‌ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು. +ಈ ವೇಳೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ರವರು ವೇದಿಕೆಯಲ್ಲಿದ್ದರು ಎಂಬುದು ಗಮನಾರ್ಹ.ನಂತರ ಮಾತನಾಡಿದ ಪಟ್ಟನಾಯ್ಕನಹಳ್ಳಿ ಶ್ರೀಕ್ಷೇತ್ರ ಶ್ರೀ ಸ್ಫಟಿಕಪುರ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ.ನಂಜಾವಧೂತ ಸ್ವಾಮೀಜಿಯವರು, ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಪ್ರಾಧಿಕಾರ ರಚನೆ ಸೇರಿದಂತೆ ಹಲವು ಬೇಡಿಕೆಗಳಿಗೆ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ ಎಂದು ಶ್ಲಾಘಿಸಿದರು. +ಜಗಜ್ಯೋತಿ ಬಸವೇಶ್ವರರ ಫೋಟೋ ಹಾಕಿದಂತೆ ಬೆಂಗಳೂರಿನ ವ್ಯಾಪ್ತಿಗಳಲ್ಲಾದರೂ ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರವನ್ನು ಅಳವಡಿಸಬೇಕು. ಕೆಜಿ ಯಿಂದ ಪಿಜಿ ಯವರೆಗೂ ನಾಡಪ್ರಭು ಅವರ ಪಠ್ಯವನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು. \ No newline at end of file diff --git a/eesanje/url_46_95_1.txt b/eesanje/url_46_95_1.txt new file mode 100644 index 0000000000000000000000000000000000000000..5d8eebb48c558a8eb8646f3ec09a4b7f8c383c06 --- /dev/null +++ b/eesanje/url_46_95_1.txt @@ -0,0 +1,10 @@ +ಶನಿವಾರ ಪಿಎಂ ಮೋದಿ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜೂ.27-ಸಂಸದರ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಹಲವು ಸಚಿವರುಗಳ ಜೊತೆಗೆ ನಾಡಿದ್ದು ಸಂಜೆ ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. +ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ವಿಧಾನಸೌಧದದ ಮುಂಭಾಗ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಸಭೆಯನ್ನು ದೆಹಲಿಯಲ್ಲಿ ಕರೆಯಲಾಗಿದೆ. +ತಾವು ಅದರಲ್ಲಿ ಭಾಗವಹಿಸುತ್ತಿದ್ದು, ರಾಜ್ಯದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಯೋಜನೆಗಳ ಪಟ್ಟಿ ನೀಡುತ್ತೇನೆ. ಅವುಗಳ ಮಂಜೂರಾತಿಗೆ ಹಾಗೂ ಹಣ ಬಿಡುಗಡೆಗೆ ಪ್ರಯತ್ನಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು. +ಜೊತೆಗೆ ಹಲವಾರು ಕೇಂದ್ರ ಸಚಿವರು, ಕೇಂದ್ರದ ರಾಜ್ಯ ಸಚಿವರುಗಳನ್ನು ಭೇಟಿ ಮಾಡುತ್ತೇನೆ. ವಿಶೇಷವಾಗಿ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಟ್ಕರಿ, ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್‌, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರನ್ನು ಭೇಟಿಯಾಗಲಿದ್ದೇನೆ. +ಕೇಂದ್ರ ಗೃಹಸಚಿವ ಅಮಿತ್‌ ಶಾ ಇನ್ನೂ ಸಮಯ ನೀಡಬೇಕಿದೆ. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌.ಪಾಟೀಲ್‌ರನ್ನು ಭೇಟಿಯಾಗಲಿದ್ದೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂ.29 ರಂದು ರಾತ್ರಿ 8 ಗಂಟೆಗೆ ಭೇಟಿಯಾಗಲು ಸಮಯ ನೀಡಿದ್ದಾರೆ ಎಂದು ತಿಳಿಸಿದರು. +ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್‌ಗೆ ರಾಜ್ಯದಿಂದ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಲಾಗಿದೆ. ತಮ ಭಾಷಣದ ಪ್ರತಿಯನ್ನು ಕಂದಾಯ ಸಚಿವ ಕೃಷ್ಣಭೈರೇಗೌಡ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಡೆಸಿದ ಸಭೆಯಲ್ಲಿ ಮಂಡಿಸಿದ್ದಾರೆ ಎಂದು ಹೇಳಿದರು. +ರಾಹುಲ್‌ಗಾಂಧಿಯವರು ಪಾದಯಾತ್ರೆ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ದೇಶಾದ್ಯಂತ ಸಂಚಾರ ಮಾಡಿ ಸಮಸ್ಯೆಗಳ ಬಗ್ಗೆ ಅರಿತುಕೊಂಡಿದ್ದಾರೆ. ಸಂಸತ್‌ನಲ್ಲಿ ವಿರೋಧಪಕ್ಷದ ನಾಯಕರಾಗಿ ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಸಂಪ್ರದಾಯದಂತೆ ನಿನ್ನೆ ಲೋಕಸಭೆಯ ಸ್ಪೀಕರ್‌ ಆಯ್ಕೆ ಚುನಾವಣೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಒಟ್ಟಾಗಿ ಸ್ಪೀಕರ್‌ ಓಂಬಿರ್ಲಾ ಅವರನ್ನು ಕರೆದುಕೊಂಡು ಹೋಗಿ ಪೀಠಾಸೀನರನ್ನಾಗಿಸಿದ್ದಾರೆ ಎಂದು ಹೇಳಿದರು. +ಭಾರತ ಬಹುತ್ವದ ರಾಷ್ಟ್ರ. ವಿವಿಧ ಜಾತಿ, ಧರ್ಮ, ಭಾಷೆಗಳ ಜನ ವಾಸಿಸುತ್ತಿದ್ದಾರೆ. ಹಾಗಾಗಿ ಹಿಂದೂ ರಾಷ್ಟ್ರ ಮಾಡಲು ಸಾಧ್ಯವಿಲ್ಲ. ನೋಬೆಲ್‌ ಪ್ರಶಸ್ತಿ ಪುರಸ್ಕೃತ ಅಮರ್ತ್ಯಸೇನ್‌ ಹೇಳಿದಂತೆ ಲೋಕಸಭೆಯ ಚುನಾವಣೆ ಫಲಿತಾಂಶ ಭಾರತ ಹಿಂದೂರಾಷ್ಟ್ರ ಅಲ್ಲ ಎಂಬ ಅಭಿಪ್ರಾಯ ಸರಿಯಾಗಿದೆ ಎಂದರು. \ No newline at end of file diff --git a/eesanje/url_46_95_10.txt b/eesanje/url_46_95_10.txt new file mode 100644 index 0000000000000000000000000000000000000000..aa97972640efdc735f3b0e13863c2fe52f74133e --- /dev/null +++ b/eesanje/url_46_95_10.txt @@ -0,0 +1,7 @@ + : ಗೃಹ ಸಚಿವರ ತವರಲ್ಲೇ ವ್ಯವಸ್ಥಿತ ಮಕ್ಕಳ ಮಾರಾಟ ಜಾಲ ಪತ್ತೆ +ಬೆಂಗಳೂರು, ಜೂ.26-ಮಕ್ಕಳನ್ನು ಕಳ್ಳತನ ಮಾಡಿ ಸಂತಾನಹೀನ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯವಸ್ಥಿತ ಜಾಲವೊಂದನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲೆಯ ಪೊಲೀಸರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸಿಬ್ಬಂದಿಗಳನ್ನು ಬಂಧಿಸಿದ್ದಾರೆ. +ಈ ಬೃಹತ್ ಜಾಲದಲ್ಲಿ ಕೆಲದಿನಗಳ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಎನ್ಎಂ ಆಗಿ ಕೆಲಸ ಮಾಡುತ್ತಿರುವ ಯು.ಡಿ.ಮಹೇಶ್, ಮೆಹಬೂಬ್ ಷರೀಫ್ ಎಂಬ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಇಬ್ಬರನ್ನು, ಜಾತ್ರೆಗಳಲ್ಲಿ ಹಚ್ಚೆ ಬರೆಯುವ ಗುಬ್ಬಿ ತಾಲ್ಲೂಕಿನ ಚಿಕ್ಕಗುಡ್ಡ ಗ್ರಾಮದ ಕೆ.ಎನ್.ರಾಮಕೃಷ್ಣ, ತುಮಕೂರಿನ ಭಾರತಿ ನಗರದ ಹನುಮಂತರಾಜು, ನಾಗಮಂಗಲ ಮುಬಾರಕ್ ಪಾಶ, ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುವ ಪೂರ್ಣಿಮಾ, ಶಿರಾ ನಗರದ ಸೌಜನ್ಯ ಅವರನ್ನು ಬಂಧಿಸಲಾಗಿದೆ. +ಕಳೆದ ಜೂ.9 ರಂದು ಗುಬ್ಬಿ ನಗರದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಹದೇವಿ ಎಂಬುವರು ಮಲಗಿದ್ದಾಗ ಆಕೆಯ 11 ತಿಂಗಳ ಗಂಡುಮಗುವನ್ನು ಕದ್ದೊಯ್ಯಲಾಗಿತ್ತು. ದೂರು ಆಧರಿಸಿ ತನಿಖೆ ನಡೆಸಿದ ಗುಬ್ಬಿ ಪೊಲೀಸರು ತಾಂತ್ರಿಕ ಸಹಾಯದ ಆಧಾರದಲ್ಲಿ ಮಗುವನ್ನು ಕಳ್ಳತನ ಮಾಡಿದ ರಾಮಕೃಷ್ಣ ಹಾಗೂ ಹನುಮಂತರನ್ನು ಬಂಧಿಸಿದ್ದರು. +ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿಗಳು ಮಗುವನ್ನು ಬೆಳ್ಳೂರು ಕ್ರಾಸ್ನ ಮುಬಾರಕ್ ಅವರಿಗೆ 1.75 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾಗಿ ವಿವರಿಸಿದ್ದಾರೆ.ಅವಿವಾಹಿತ ಹೆಣ್ಣುಮಕ್ಕಳು ಗರ್ಭ ಧರಿಸುವುದನ್ನು ಪತ್ತೆ ಹಚ್ಚುತ್ತಿದ್ದ ಈ ಜಾಲ ಅವರಿಗೆ ಹಣದ ಆಮಿಷ ತೋರಿಸಿ ಹೆರಿಗೆ ನಂತರ ಮಗುವನ್ನು ಪಡೆದುಕೊಂಡು ಸಂತಾನಹೀನ ದಂಪತಿಗಳಿಗೆ 2 ರಿಂದ 3 ಲಕ್ಷ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. +ಆರೋಪಿಗಳು ಈವರೆಗೂ 9 ಮಕ್ಕಳನ್ನು ಮಾರಾಟ ಮಾಡಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು 5 ಮಕ್ಕಳನ್ನು ಸಂರಕ್ಷಿಸಿದ್ದಾರೆ. ಒಂದು ಮಗು ಮೃತಪಟ್ಟಿದ್ದು, ಇನ್ನೊಂದನ್ನು ಪೋಷಕರಿಗೆ ವಾಪಸ್ ನೀಡಲಾಗಿದೆ.ಸಂರಕ್ಷಿಸಲಾದ 5 ಮಕ್ಕಳಲ್ಲಿ 4 ಮಕ್ಕಳು ಕಲ್ಯಾಣ ಕೇಂದ್ರದ ಆಶಯದಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಆರೋಪಿಗಳು ಮಕ್ಕಳನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. +ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆಯಾಗಿತ್ತು. ಇದೀಗ ಗೃಹಸಚಿವರ ತವರು ಜಿಲ್ಲೆಯಲ್ಲೇ ಇಂತಹ ಜಾಲ ಕಂಡುಬಂದಿರುವುದು ಆತಂಕ ಮೂಡಿಸಿದೆ. \ No newline at end of file diff --git a/eesanje/url_46_95_11.txt b/eesanje/url_46_95_11.txt new file mode 100644 index 0000000000000000000000000000000000000000..d562bd3213ab42dab0d0435135be87b924f98044 --- /dev/null +++ b/eesanje/url_46_95_11.txt @@ -0,0 +1,6 @@ +ಹಾಲಿನ ದರ ಹೆಚ್ಚಿಸಿಲ್ಲ, ಕಾಫಿ, ಟೀ ಬೆಲೆ ಹೇಗೆ ಹೆಚ್ಚಾಗುತ್ತೆ..? : ಸಿಎಂ ಸಿಡಿಮಿಡಿ +ಬೆಂಗಳೂರು, ಜೂ.26-ಹಾಲಿನ ದರವೇ ಹೆಚ್ಚಳವಾಗಿಲ್ಲ. ಹಾಗಿದ್ದರೂ ಹೋಟೆಲ್‌ನವರು ಕಾಫಿ, ಟೀ ಬೆಲೆಯನ್ನು ಹೇಗೆ ಹೆಚ್ಚಳ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ಬೆಲೆ ಹೆಚ್ಚಳವಾಗಿಲ್ಲ ಎಂದು ಪುನರುಚ್ಚರಿಸಿದರು. +ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ 90 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಈಗ ಅದು 99 ಲಕ್ಷ ಲೀಟರ್‌ಗೆ ಹೆಚ್ಚಾಗಿದೆ. ಹೆಚ್ಚುವರಿ ಹಾಲಿನ ಮಾರುಕಟ್ಟೆ ಕಲ್ಪಿಸಬೇಕು. ರೈತರು ಹೈನುಗಾರರು ಉತ್ಪಾದಿಸಿದ ಹಾಲನ್ನು ಖರೀದಿಸುವುದಿಲ್ಲ ಎಂದು ನಿರಾಕರಿಸಲು ಸಾಧ್ಯವೇ? ಅಥವಾ ಹಾಲನ್ನು ಚೆಲ್ಲಿಬಿಡಲಾಗುತ್ತದೆಯೇ? ಎಂದು ಖಾರವಾಗಿ ಪ್ರತಿಕ್ರಿಯಿಸಿದರು. +ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್‌ ಮತ್ತು ಒಂದು ಲೀಟರ್‌ ಹಾಲಿನ ಪೊಟ್ಟಣಕ್ಕೆ 50 ಎಂಎಲ್‌ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ. ಹೀಗಿರುವಾಗ ಹಾಲಿನ ದರ ಎಲ್ಲಿ ಹೆಚ್ಚಾಗಿದೆ ಎಂದು ತಿರುಗೇಟು ನೀಡಿದರು.ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ಹೇಳುವುದನ್ನು ನಂಬುವವರಿಗಾದರೂ ವಿವೇಚನೆ ಬೇಡವೇ? ಎಂದು ಪ್ರಶ್ನಿಸಿದರು. +ಹೋಟೆಲ್‌ನವರು ಕಾಫಿ, ಟೀ ಬೆಲೆ ಹೆಚ್ಚಿಸುವ ಅಗತ್ಯವಿಲ್ಲ. ಏಕೆಂದರೆ ಹಾಲಿನ ಬೆಲೆ ಹೆಚ್ಚಳವಾಗಿಲ್ಲ ಎಂದು ಹೇಳಿದರು. ರಾಹುಲ್‌ಗಾಂಧಿಯವರು ಲೋಕಸಭೆಯ ವಿರೋಧಪಕ್ಷದ ನಾಯಕರಾಗಬೇಕು ಎಂದು ಕಾಂಗ್ರೆಸ್‌‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಾನು ಪ್ರಸ್ತಾಪ ಮಾಡಿದ್ದೆ. ಪಕ್ಷದ ಇತರ ನಾಯಕರು ಇದನ್ನೇ ಪ್ರತಿಪಾದಿಸಿದ್ದರು. ಈಗ ರಾಹುಲ್‌ಗಾಂಧಿ ಜವಾಬ್ದಾರಿ ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು. +ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಸರ್ಕಾರವನ್ನು ಸಂಸತ್‌ನಲ್ಲಿ ಎದುರಿಸಲು ರಾಹುಲ್‌ಗಾಂಧಿಯವರ ಅಗತ್ಯವಿತ್ತು. ದೇಶದ ಹಿತದೃಷ್ಟಿಯಿಂದ ರಾಹುಲ್‌ಗಾಂಧಿ ಜವಾಬ್ದಾರಿ ವಹಿಸಿಕೊಂಡಿರುವುದು ಸಾಗತಾರ್ಹ ಎಂದರು. ದೆಹಲಿಯಲ್ಲಿ ನಡೆಯುವ ಸಂಸದರ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಹೋಗುವಾಗ ಹೇಳುತ್ತೇನೆ ಎಂದು ತೆರಳಿದರು. \ No newline at end of file diff --git a/eesanje/url_46_95_12.txt b/eesanje/url_46_95_12.txt new file mode 100644 index 0000000000000000000000000000000000000000..d1afb60fbdc71b054c5da3970f9c0d11c1e3b576 --- /dev/null +++ b/eesanje/url_46_95_12.txt @@ -0,0 +1,10 @@ +ಮಾದಕ ವ್ಯಸನಿಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು, ಜೂ.26-ದೇಶದಲ್ಲಿ 5 ಕೋಟಿಗೂ ಹೆಚ್ಚು ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದು, ಇದರಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಆತಂಕ ವ್ಯಕ್ತಪಡಿಸಿದರು.ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್‌‍ ಇಲಾಖೆಯು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. +ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ. ಮಾದಕ ವಸ್ತುಗಳ ವ್ಯಸನದ ಸಮಸ್ಯೆಯನ್ನು ಅರ್ಥೈಸಿಕೊಂಡ ವಿಶ್ವಸಂಸ್ಥೆಯು 1987ರಲ್ಲಿ ಮಾದಕ ವಸ್ತು ವಿರೋಧಿ ದಿನವನ್ನು ಜೂ.26ರಂದು ಆಚರಿಸಲು ನಿರ್ಣಯಿಸಿತು. ಮಾದಕ ದ್ರವ್ಯ ಸಮಾಜಕ್ಕೆ ದೊಡ್ಡ ರೋಗವಾಗಿ ಅಂಟಿಕೊಳ್ಳುತ್ತಿದ್ದು, ಯುವ ಪೀಳಿಗೆ ಸಂಕಷ್ಟಕ್ಕೆ ಸಿಲುಕದಂತೆ ಜಾಗೃತಿ ಮೂಡಿಸಬೇಕಿದೆ ಎಂದರು. +ಭಾರತವು ಮಾದಕ ವಸ್ತುಗಳ ಸಮಸ್ಯೆಯಲ್ಲಿ ಸಿಲುಕುತ್ತಿದೆ. 5 ಕೋಟಿ ಜನ ಮಾದಕ ವ್ಯಸನಕ್ಕೆ ಅಂಟಿಕೊಂಡಿದ್ದಾರೆ. ಯುವಕರು ಹಾಳಾದರೆ, ದೇಶ ಸಂಕಷ್ಟಕ್ಕೆ ಸಿಲುಕಿದಂತಾಗುತ್ತದೆ. ಭಾರತ ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ಬಹಳ ಎಚ್ಚರಿಕೆಯಿಂದ ದೇಶದ ಮುಂದಿನ ಭವಿಷ್ಯವನ್ನು ನೋಡಿಕೊಳ್ಳಬೇಕಿದೆ ಎಂದು ಹೇಳಿದರು. +ಕೊಲೆ ಪ್ರಕರಣಗಳನ್ನು ಪತ್ತೆ ಹಚ್ಚುವಾಗ 17 ರಿಂದ 20 ವರ್ಷದೊಳಗಿನವರೇ ಭಾಗಿಯಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ತಪ್ಪಿತಸ್ಥರನ್ನು ತಪಾಸಣೆಗೆ ಒಳಪಡಿಸಿದಾಗ ಮಾದಕ ವ್ಯಸನಿಯಾಗಿದ್ದರು ಎಂಬುದು ಗೊತ್ತಾಗುತ್ತಿದೆ. ಮಾದಕ ವ್ಯಸನದಿಂದ ಸಮಾಜಕ್ಕೆ ಅಪಾಯವಿದ್ದು, ಪಾಲಕರು ತಮ ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಹಿಸಬೇಕು. ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಹೆಚ್ಚು ಜಾಗೃತಿ ಮೂಡಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. +ರಾಜ್ಯ ಸರ್ಕಾರವು ಡ್ರಗ್‌್ಸ ಮುಕ್ತ ಕರ್ನಾಟಕ ನಿರ್ಮಾಣದ ಘೋಷಣೆ ಮಾಡಿದೆ. ಸಂಪೂರ್ಣವಾಗಿ ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಇಲಾಖೆಯು ಯುದ್ಧವನ್ನೇ ಸಾರಿದೆ. 40 ಕೋಟಿ ರೂ. ಮೌಲ್ಯದ ಡ್ರಗ್‌್ಸ ನಾಶಪಡಿಸಲಾಗಿದ್ದು, 10 ಟನ್‌ ಗಾಂಜಾ ಸುಟ್ಟು ಹಾಕಲಾಗಿದೆ. ಇಷ್ಟೊಂದು ಪ್ರಮಾಣದ ಡ್ರಗ್‌್ಸ ಯುವಕರ ಕೈಸೇರಿದ್ದರೆ ಎಷ್ಟು ಕುಟುಂಬಗಳು ಹಾಳಾಗುತ್ತಿದ್ದವೋ ಎಂದು ಆತಂಕ ವ್ಯಕ್ತಪಡಿಸಿದರು. +ಡ್ರಗ್‌್ಸನಿಂದ ದೂರ ಇರುತ್ತೇವೆ ಎಂದು ಪ್ರತಿಯೊಬ್ಬರೂ ಸಂಕಲ್ಪ ಮಾಡಿಕೊಳ್ಳಬೇಕು. ಐಟಿ ಕಂಪನಿಗಳು ಕೈಗಾರಿಕೆಗಳು ಡ್ರಗ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಹೇಳಿದರು. +ನಗರ ಪೊಲೀಸ್‌‍ ಆಯುಕ್ತ ಬಿ.ದಯಾನಂದ್‌ ಮಾತನಾಡಿ, ಪ್ರತಿ ವರ್ಷ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ದಿನಾಚರಣೆ ನಡೆಸಲಾಗುತ್ತದೆ. ಈ ವರ್ಷ `ಸಾಕ್ಷಿ ಅಸ್ಪಷ್ಟ ನಿಯಂತ್ರಣ ಅವಶ್ಯ’ ಧ್ಯೇಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ರಾಜ್ಯವನ್ನು ಮಾದಕವ್ಯಸನ ಮುಕ್ತಗೊಳಿಸಲು ದೃಢ ಸಂಕಲ್ಪದೊಂದಿಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು. +ಕಾರ್ಯಕ್ರಮದಲ್ಲಿ ಮಾದಕ ವ್ಯಸನದ ವಿರುದ್ಧವಾಗಿ ಜಾಗೃತಿ ಪ್ರಾತಿಕ್ಷಿಕೆಗಳು ನಡೆದವು. ನಿರಂತರ ಕಾರ್ಯಾಚರಣೆಯಿಂದಾಗಿ ವಶಪಡಿಸಿಕೊಳ್ಳಲಾಗಿರುವ 42 ಕೋಟಿ ರೂ. ಮೌಲ್ಯದ 1,227 ಕೆಜಿ ಪ್ರಮಾಣದ ಗಾಂಜಾ, ಕೊಕೈನ್‌ನಂತಹ ಮಾದಕ ವಸ್ತುಗಳನ್ನು ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. +ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ.ಗೋವಿಂದರಾಜ್‌, ಶಾಸಕ ರಿಜ್ವಾನ್‌ ಅರ್ಷದ್‌, ರಾಜ್ಯ ಪೊಲೀಸ್‌‍ ಮಹಾನಿರ್ದೇಶಕ ಅಲೋಕ್‌ ಮೋಹನ್‌, ಸಿಐಡಿ ವಿಭಾಗದ ಡಿಜಿಪಿ ಡಾ. ಎಂ.ಎ.ಸಲೀಂ, ಎಡಿಜಿಪಿ ಪ್ರಣಬ್‌ ಮೋಹಾಂತಿ, ಆದರ್ಶ ಡೆವಲಪರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಜಯಶಂಕರ್‌ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_46_95_2.txt b/eesanje/url_46_95_2.txt new file mode 100644 index 0000000000000000000000000000000000000000..77c6e679fa7b2c85a469b0c87d9291644a988174 --- /dev/null +++ b/eesanje/url_46_95_2.txt @@ -0,0 +1,4 @@ +ಕೆಂಪೇಗೌಡರ 515ನೇ ಜಯಂತಿ : ನಾಡಪ್ರಭುಗೆ ಕೇಂದ್ರ ಸಚಿವರಿಂದ ಗೌರವ ಸಮರ್ಪಣೆ +ಬೆಂಗಳೂರು, ಜೂ.27-ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಅಂಗವಾಗಿ ಕರ್ನಾಟಕ ಭವನದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆಯನ್ನು ಕೇಂದ್ರ ಭಾರಿ ಮತ್ತು ಉಕ್ಕು ಕೈಗಾರಿಕ ಸಚಿವ ಎಚ್‌.ಡಿ.ಕುಮಾರಸ್ವಾಮಿ, ಕೇಂದ್ರ ರೈಲ್ವೆ, ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ ಮತ್ತು ಸಂಸದ ಮಲ್ಲೇಶ್‌ಬಾಬು ನೆರವೇರಿಸಿದರು. +ನ್ಯಾಯ, ನೀತಿ, ನಿಷ್ಠೆ ಮತ್ತು ದೂರದೃಷ್ಟಿ ಈ ನಾಲ್ಕು ಆಧಾರಸ್ತಂಭಗಳ ಮೇಲೆ ಆಡಳಿತ ನಡೆಸಿದ ನಾಡಪ್ರಭುಗಳು ಅಮರ ಅಜರಾಮರ ಎಂದು ಕುಮಾರಸ್ವಾಮಿ ಬಣ್ಣಿಸಿದ್ದಾರೆ. ಎಲ್ಲರಿಗೂ ಕೆಂಪೇಗೌಡರ 515ನೇ ಜಯಂತಿಯ ಶುಭಾಶಯಗಳನ್ನು ಎಕ್ಸ್ ಮೂಲಕ ಕೋರಿರುವ ಅವರು, ಕನ್ನಡಿಗರ ಸ್ವಾಭಿಮಾನ, ಶೌರ್ಯ ಹಾಗೂ ಸಹಿಷ್ಣತೆಯ ಪ್ರತೀಕವಾಗಿದ್ದರು. +ಕೆಂಪೇಗೌಡರು ನಮೆಲ್ಲರ ಪಾಲಿನ ಪ್ರಾತಃ ಸರಣೀಯರು. ಇಡೀ ಜಗತ್ತೇ ನಿಬ್ಬೆರಗಾಗಿ ಇಂದು ಬೆಂಗಳೂರನ್ನು ನೋಡುತ್ತಿದೆ ಎಂದರೆ ಅದಕ್ಕೆ ನಾಡಪ್ರಭುಗಳು ಹಾಕಿಕೊಟ್ಟಿರುವ ಹೆಜ್ಜೆ ಗುರುತುಗಳೇ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_46_95_3.txt b/eesanje/url_46_95_3.txt new file mode 100644 index 0000000000000000000000000000000000000000..5f944a217edbd01ceacc057313fb383ca4e5f5c6 --- /dev/null +++ b/eesanje/url_46_95_3.txt @@ -0,0 +1,6 @@ +ಒಕ್ಕಲಿಗರ ಸಂಘದಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಆಚರಣೆ +ಬೆಂಗಳೂರು, ಜೂ.27-ವಿವಿಧ ಜಾನಪದ ಕಲಾತಂಡಗಳ ಕಲಾಪ್ರದರ್ಶನ ಸೇರಿದಂತೆ ವೈವಿಧ್ಯಮಯ ಮೆರವಣಿಗೆಯೊಂದಿಗೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಇಂದು ಆಚರಿಸಲಾಯಿತು. +ಸಂಘದ ಆವರಣದಲ್ಲಿರುವ ಅಶ್ವಾರೂಢ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ನೆರವೇರಿಸುವುದರೊಂದಿಗೆ ಜಯಂತಿ ಆಚರಣೆ ಮಾಡಲಾಯಿತು. +ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯ್ಕನಹಳ್ಳಿಯ ಸ್ಫಟಿಕಪುರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವದೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ, ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ಜಯಮುತ್ತು, ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡ, +ಉಪಾಧ್ಯಕ್ಷರಾದ ಎಲ್‌.ಶ್ರೀನಿವಾಸ್‌‍, ಸಿ.ದೇವರಾಜು, ಖಜಾಂಚಿ ಸಿ.ಮಾರೇಗೌಡ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ನೆಲ್ಲಿಗೆರೆ ಬಾಲು, ನಿರ್ದೇಶಕರಾದ ಬಿ.ಪಿ.ಮಂಜೇಗೌಡ, ಅಶೋಕ್‌ ಜಯರಾಂ, ಆರ್‌.ಪ್ರಕಾಶ್‌, ಟಿ.ಕೋನಪ್ಪರೆಡ್ಡಿ, ಪುಟ್ಟಸ್ವಾಮಿ ಮೊದಲಾದವರ ಸಮುಖದಲ್ಲಿ ಜಯಂತಿ ಆಚರಿಸಲಾಯಿತು. +ಬಳಿಕ ಅಶ್ವಾರೂಢ ಕೆಂಪೇಗೌಡ ವೇಷಧಾರಿ, ನಂದಿಧ್ವಜ, ವೀರಭದ್ರ ಕುಣಿತ, ಗಾರುಡಿ ಗೊಂಬೆ, ಡೊಳ್ಳು ಕುಣಿತ, ತಮಟೆ, ಪಾಳೆಗಾರ ವೇಶ, ಪೂಜಾ ಕುಣಿತ, ಪಟಕುಣಿತ, ಮೈಸೂರು ನಗಾರಿ, ಮಂಗಳವಾದ್ಯದೊಂದಿಗೆ ಸಂಘದ ಆವರಣದಿಂದ ಕಂಠೀರವ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು. \ No newline at end of file diff --git a/eesanje/url_46_95_4.txt b/eesanje/url_46_95_4.txt new file mode 100644 index 0000000000000000000000000000000000000000..fa562b8b08b140d753a089d527e60044704c5335 --- /dev/null +++ b/eesanje/url_46_95_4.txt @@ -0,0 +1,7 @@ +ಕರಾವಳಿಯಲ್ಲಿ ಮಳೆ ಅಬ್ಬರಕ್ಕೆ ಮತ್ತಿಬ್ಬರು ಬಲಿ, ವಿದ್ಯುತ್‌ ತಂತಿ ತಗುಲಿ ಆಟೋ ಚಾಲಕರಿಬ್ಬರ ಮೃತ್ಯು +ಬೆಂಗಳೂರು, ಜೂ.27-ರಾಜ್ಯದ ಮಲೆನಾಡು, ಕರಾವಳಿ, ಕೊಡಗು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ.ಭಾರಿ ಮಳೆಯ ಆರ್ಭಟಕ್ಕೆ ನಿನ್ನೆಯಷ್ಟೇ ಮಂಗಳೂರಿನ ಮನೆಯೊಂದರ ಕಾಂಪೌಂಡ್‌ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಂದು ಭಾರಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತಗುಲಿ ಮಂಗಳೂರಿನ ಪಾಂಡೇಶ್ವರಿ ರೋ ಸಾರಿಯೋ ಶಾಲೆಯ ಬಳಿ ಇಬ್ಬರು ಆಟೋ ಚಾಲಕರು ಮೃತಪಟ್ಟಿದ್ದಾರೆ. +ರಾಜು-ದೇವರಾಜು ಮೃತ ಆಟೋ ಚಾಲಕರೆಂದು ಗುರುತಿಸಲಾಗಿದೆ. ರಾತ್ರಿ ಭಾರಿ ಮಳೆ ಬಿದ್ದ ಪರಿಣಾಮ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ರಾಜು ಆಟೋಚಾಲಕ ಒದ್ದಾಡುತ್ತಿದ್ದ. ಅವರನ್ನು ಬಚಾವ್‌ ಮಾಡಲು ಮುಂದಾದ ಮತ್ತೊಬ್ಬ ಆಟೋ ಚಾಲಕನಿಗೂ ವಿದ್ಯುತ್‌ ಸ್ಪರ್ಶಗೊಂಡು ಇಬ್ಬರೂ ಸಾವನ್ನಪ್ಪಿದ್ದಾರೆ.ದಕ್ಷಿಣ ಕನ್ನಡ ಘಟ್ಟಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. +ಕುಕ್ಕೆ ಸುಬ್ರಹಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಕುಮಾರಧಾರ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಯಾಗಿದ್ದು, ಸುಬ್ರಹಣ್ಯ ದೇವಾಲಯದ ಆವರಣದ ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ ನೀಡಲಾಗಿದೆ.ಭಾರಿ ಮಳೆಯಾಗುತ್ತಿದ್ದರೂ ನದಿ ದಡದಲ್ಲಿ ಭಕ್ತಾದಿಗಳು ತೀರ್ಥ ಸ್ನಾನ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ತಡೆಯಲು ಕುಮಾರಧಾರ ನದಿ ತೀರದಲ್ಲಿ ದೇವಳದ ಭದ್ರತಾ ಸಿಬ್ಬಂದಿಗಳು ಮತ್ತು ಹೋಂಗಾರ್ಡ್‌್ಸ ಅನ್ನು ನಿಯೋಜನೆ ಮಾಡಲಾಗಿದೆ. +ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಆಗುಂಬೆ, ಚಾರ್ಮುಡಿ, ಶಿರಾಡಿ ಘಾಟ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದೆರಡು ದಿನಗಳಿಂದ ಮಳೆ ಬಿಟ್ಟೂ ಬಿಡದಂತೆ ಸುರಿಯುತ್ತಿದೆ. ರಸ್ತೆಗಳು, ಹೊಲಗದ್ದೆಗಳೆಲ್ಲಾ ಜಲಾವೃತವಾಗಿವೆ. +ಬಿಸಿ ರೋಡ್‌ ಜಂಕ್ಷನ್‌ ಸಹಿತ ಹಲವು ಪ್ರದೇಶಗಳಲ್ಲಿ ನಡೆದಾಡಲೂ ಆಗದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರ ವಹಿಸಲಾಗಿದೆ. +ಇತ್ತ ಮಡಕೇರಿ, ಬಾಗಮಂಡಲ ಮತ್ತಿತರೆಡೆ ಮಳೆ ಅಬ್ಬರ ಮುಂದುವರೆದಿದೆ. ನಗರದ ಸುಲೆಮಾನ್‌ ಎಂಬುವರ ಮನೆಯ ಹಿಂದೆ ಮಣ್ಣು ಕುಸಿದಿದ್ದು, ನಗರಸಭೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಣ್ಣು ತೆರವುಗೊಳಿಸಿದ್ದಾರೆ. ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸನ್ನದ್ಧ ಸ್ಥಿತಿಯಲ್ಲಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ.ಕಬಿನಿ, ಕಾವೇರಿ ಅಣೆಕಟ್ಟುಗಳ ಒಳಹರಿವು ಜಾಸ್ತಿಯಾಗಿದೆ. \ No newline at end of file diff --git a/eesanje/url_46_95_5.txt b/eesanje/url_46_95_5.txt new file mode 100644 index 0000000000000000000000000000000000000000..c6bcd7dbf0032a5d160b1b5b589f9916eb624b8c --- /dev/null +++ b/eesanje/url_46_95_5.txt @@ -0,0 +1,5 @@ +41 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಪೊಲೀಸರು +ಬೆಂಗಳೂರು, ಜೂ.26– ಮಾದಕ ದ್ರವ್ಯ ಮಾರಾಟ ಹಾಗೂ ಸರಬರಾಜು ವಿರುದ್ಧ ಸಮರ ಸಾರಿರುವ ಬೆಂಗಳೂರು ನಗರ ಪೊಲೀಸರು ವಿವಿಧ ಪ್ರಕರಣಗಳಲ್ಲಿ ಕಳೆದ ಫೆಬ್ರವರಿ 10ರಿಂದ ಜೂ. 24ರವರೆಗೆ ವಶಪಡಿಸಿಕೊಳ್ಳಲಾದ 41,73,22,900 ಮೌಲ್ಯದ ವಿವಿಧ ಮಾದಕ ದ್ರವ್ಯಗಳನ್ನು ಇಂದು ನಾಶ ಮಾಡಲಾಯಿತು. +ನಗರದಲ್ಲಿ ಇತ್ತೀಚೆಗೆ ಮಾದಕ ದ್ರವ್ಯಗಳ ಮಾರಾಟ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಇದರ ಮೇಲೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಮಾರಾಟ, ಸರಬರಾಜಿನಲ್ಲಿ ತೊಡಗಿದ್ದವರನ್ನು ಬಂಧಿಸಿ ಅಪಾರ ಪ್ರಮಾಣದ ಗಾಂಜಾ, ಚರಸ್ಸು, ಕೊಕೈನ್‌, ಎಂಡಿಎಂಎ ಪೌಡರ್‌ ಸೇರಿದಂತೆ ಮತ್ತಿತರ ಗಾಂಜಾ ವಸ್ತುಗಳನ್ನು ವಶಕ್ಕೆ ಪಡೆದು ನೆಲಮಂಗಲ ತಾಲೂಕಿನ ದಾಬಸ್‌‍ಪೇಟೆ ಕೈಗಾರಿಕಾ ಪ್ರದೇಶದಲ್ಲಿ ಹಿರಿಯ ಪೊಲೀಸ್‌‍ ಅಧಿಕಾರಿಗಳ ಸಮುಖದಲ್ಲಿ ನಾಶ ಮಾಡಲಾಯಿತು. +ಯುವ ಜನತೆಯನ್ನು ಟಾರ್ಗೆಟ್‌ ಮಾಡಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುವವರ ವಿರುದ್ಧ ನಗರ ಪೊಲೀಸರು ಕ್ರಮ ಕೈಗೊಂಡಿದ್ದು, ಮಾದಕ ದ್ರವ್ಯ ಮುಕ್ತ ಬೆಂಗಳೂರನ್ನು ನಿರ್ಮಾಣ ಮಾಡಲು ಪಣ ತೊಟ್ಟಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. +ನಗರ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು ಹಾಗೂ ಗಾಂಜಾ ಮಾರಾಟ, ಸಾಗಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿದರೆ ಅಂತಹವರ ವಿರುದ್ಧ ನಿರ್ಧಾಕ್ಷಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_46_95_6.txt b/eesanje/url_46_95_6.txt new file mode 100644 index 0000000000000000000000000000000000000000..421d98844244a09cf56d1684554da34ea18b3e1c --- /dev/null +++ b/eesanje/url_46_95_6.txt @@ -0,0 +1,11 @@ +ಸದ್ಯದಲ್ಲೇ ಆಟೋ ಬಾಡಿಗೆ, ಹೋಟೆಲ್‌ ತಿಂಡಿ ದರ ಏರಿಕೆ “ಗ್ಯಾರಂಟಿ” +ಬೆಂಗಳೂರು,ಜೂ.26-ಡೀಸೆಲ್‌, ಪೆಟ್ರೋಲ್‌ ಹಾಗೂ ಹಾಲಿನ ದರ ಏರಿಕೆಯಾಗಿರು ಬೆನ್ನಲ್ಲೇ, ಆಟೋ ಪ್ರಯಾಣ ದರ, ಹೋಟೆಲ್‌‍ಗಳಲ್ಲಿ ತಿಂಡಿ-ತಿನಿಸುಗಳ ಬೆಲೆ ಕೂಡ ಹೆಚ್ಚಾಗಲಿದ್ದು, ಹೋಟೆಲ್‌ಗಳನ್ನೇ ನೆಚ್ಚಿಕೊಂಡಿರುವ ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬೀಳಲಿದೆ.ಬೆಲೆ ಏರಿಕೆ ಒತ್ತಡ ಎದುರಿಸುತ್ತಿರುವ ಹೋಟೆಲ್‌ ಉದ್ಯಮ ತನ್ನ ಮೇಲಿನ ಆರ್ಥಿಕ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿದೆ. ಇದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. +ವಿದ್ಯುತ್‌ ಶುಲ್ಕ, ತರಕಾರಿ, ಬೇಳೆಕಾಳುಗಳ ದರ ಏರಿಕೆ ಬಿಸಿಯ ಮಧ್ಯೆ ಇದೀಗ ಹಾಲಿನ ಬೆಲೆ ಹೆಚ್ಚಾಗಿರುವುದರಿಂದ ಹೋಟೆಲ್‌ ಉದ್ಯಮಕ್ಕೆ ಹೊಡೆತ ಬಿದಿದ್ದು, ಆರ್ಥಿಕ ನಷ್ಟದಿಂದ ಹೊರಬರಲು ಶೇ.10ರಷ್ಟು ದರ ಏರಿಸಲು ಹೋಟೆಲ್‌ ಮಾಲೀಕರು ತೀರ್ಮಾನಿಸಿದ್ದಾರೆ.ಇಡ್ಲಿ-ವಡೆ, ದೋಸೆ, ರೈಸ್‌‍ಬಾತ್‌‍, ಚೌಚೌ ಬಾತ್‌ ತಿಂಡಿಗೆ 5 ರೂ., ಕಾಫಿ, ಟೀ ದರವನ್ನು 1ರಿಂದ 2 ರೂ. ಏರಿಸಲು ಚಿಂತಿಸಲಾಗಿದೆ. ಹಾಲು, ತುಪ್ಪ, ಬೆಣ್ಣೆ ಹಾಗೂ ಇತರೆ ಆಹಾರ ಪದಾರ್ಥಗಳ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ತಿಂಡಿಗಳ ಬೆಲೆ ಹೆಚ್ಚಳ ಅನಿವಾರ್ಯ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. +ಕೆಲವೊಂದು ಹೋಟೆಲ್‌‍ಗಳು ಈಗಾಗಲೇ ದರ ಹೆಚ್ಚಳ ಮಾಡಿವೆ. ಇನ್ನು ಕೆಲ ಹೋಟೆಲ್‌‍ಗಳ ಮಾಲೀಕರ ದರ ಏರಿಕೆ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ.ಕಳೆದ ವರ್ಷ ಸಿಲಿಂಡರ್‌ಗೆ ನೀಡುತ್ತಿದ್ದ ರಿಯಾಯಿತಿ ರದ್ದುಗೊಳಿಸಲಾಗಿದೆ. ಕಳೆದ ಕೆಲವು ತಿಂಗಳಿನಿಂದ ತೊಗರಿ, ಉದ್ದು, ಹೆಸರು ಬೇಳೆ ಸೇರಿದಂತೆ ಬೇಳೆ ಕಾಳುಗಳ ದರ ಏರಿಕೆ ಕಂಡಿದ್ದು ನೇರವಾಗಿ ಹೋಟೆಲ್‌‍ಗಳ ಆರ್ಥಿಕ ಹೊರೆಗೆ ಕಾರಣವಾಗಿತ್ತು. +ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ಟೊಮೆಟೊ, ಕ್ಯಾರೆಟ್‌‍, ಬೀನ್‌್ಸ ಬೆಲೆ ಶತಕ ದಾಟಿರುವುದು ಮತ್ತಷ್ಟು ಹೊಡೆತ ನೀಡಿದೆ. ಬೆಲೆ ಹೆಚ್ಚಿಸುತ್ತಿರುವುದು ಉದ್ಯಮಕ್ಕೆ ಪೆಟ್ಟು ಕೊಟ್ಟಿದೆ. ಹೀಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಕೆಲವು ಹೋಟೆಲ್‌ ಮಾಲೀಕರು ಹೇಳಿದ್ದಾರೆ. +ಕಳೆದೊಂದು ತಿಂಗಳಿಂದ ಲಾಭವನ್ನೇ ಕಂಡಿಲ್ಲ. ಕೆಲ ತಿನಿಸುಗಳನ್ನು ಮಾಡಿ ನಷ್ಟ ಅನುಭವಿಸಿದ್ದಾರೆ. ಸಾಮಾನ್ಯ ಜನರು ಬರುವುದೇ ದರ್ಶಿನಿಗಳಿಗೆ. ಆದ್ದರಿಂದ ನಮಗೆ ಏಕಾಏಕಿ ಬೆಲೆ ಹೆಚ್ಚಿಸಲೂ ಆಗುವುದಿಲ್ಲ. ಆದರೆ ಈಗ ಅನಿವಾರ್ಯತೆಗೆ ಸಿಲುಕಿದ್ದೇವೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ. +ಹೋಟೆಲ್‌ ಉತ್ಪನ್ನಗಳ ಜೊತೆಗೆ ಬೇಕರಿ ಖಾದ್ಯಗಳ ಬೆಲೆಯೂ ಹೆಚ್ಚಾಗುತ್ತಿದೆ. ಕೇಕ್‌‍, ಪೇಡಾ, ಖೋವಾ, ಬ್ರೆಡ್‌‍, ಬನ್‌ ಸೇರಿದಂತೆ ಸಿಹಿ ತಿನಿಸುಗಳ ಬೆಲೆಯೂ ಹೆಚ್ಚಾಗಲಿದೆ.ಕಳೆದ ಆರು ತಿಂಗಳ ಹಿಂದೆ ಏರಿಕೆಯಾಗಿದ್ದ ಮೈದಾ ಹಿಟ್ಟು ಬೆಲೆ ಇಳಿದಿಲ್ಲ. ನಾವು ತಯಾರಿಸುವ ಎಲ್ಲ ಖಾದ್ಯಗಳಿಗೂ ಹಾಲು ಅತ್ಯವಶ್ಯ. ಹೀಗಾಗಿ ಬೇಕರಿ ತಿನಿಸುಗಳ ಬೆಲೆ ಏರಿಸಬೇಕಾಗುತ್ತದೆ ಎಂದು ಬೇಕರಿ ವರ್ತಕರು ತಿಳಿಸಿದ್ದಾರೆ. ಇದರಿಂದ ಬೇಕರಿ ತಿನಿಸುಗಳ ಬೆಲೆ ಕೂಡ ಶೀಘ್ರದಲ್ಲೇ ಏರಲಿದೆ. +ಕಳೆದ ಆರು ತಿಂಗಳ ಹಿಂದೆ ಏರಿಕೆಯಾಗಿದ್ದ ಮೈದಾ ಹಿಟ್ಟು ಬೆಲೆ ಇಳಿದಿಲ್ಲ. ನಾವು ತಯಾರಿಸುವ ಎಲ್ಲ ಖಾದ್ಯಗಳಿಗೂ ಹಾಲು ಅತ್ಯವಶ್ಯ. ಹೀಗಾಗಿ ಬೇಕರಿ ತಿನಿಸುಗಳ ಬೆಲೆ ಏರಿಸಬೇಕಾಗುತ್ತದೆ ಎಂದು ಬೇಕರಿ ವರ್ತಕರು ತಿಳಿಸಿದ್ದಾರೆ. ಇದರಿಂದ ಬೇಕರಿ ತಿನಿಸುಗಳ ಬೆಲೆ ಕೂಡ ಶೀಘ್ರದಲ್ಲೇ ಏರಲಿದೆ. +ಪ್ರಮಾಣಕ್ಕೆ ಕತ್ತರಿ: ಕೆಲವು ಹೋಟೆಲ್‌‍ಗಳು ದರ ಹೆಚ್ಚಿಸಿದರೆ ಗ್ರಾಹಕರ ಸಂಖ್ಯೆ ಕಡಿಮೆಯಾಗುವ ಆತಂಕದ ಹಿನ್ನೆಲೆಯಲ್ಲಿ ಊಟ, ತಿಂಡಿಯ ಪ್ರಮಾಣವನ್ನೇ ಕಡಿಮೆ ಮಾಡಿದ್ದಾರೆ. ಅಂದರೆ ದೋಸೆ, ಇಡ್ಲಿ, ವಡೆಯ ಗಾತ್ರವನ್ನು ಕುಗ್ಗಿಸಲಾಗಿದೆ. ಹಾಗೆಯೇ, ರೈಸ್‌‍ಬಾತ್‍, ಚೌಚೌಬಾತ್‌ ನೀಡುವ ಬೌಲ್‌ ಅನ್ನು ತುಸು ಚಿಕ್ಕ ಗಾತ್ರಕ್ಕೆ ಬದಲಿಸಿದ್ದಾರೆ. +ಮನವಿ:ಇದರ ಬೆನ್ನಲ್ಲೇ ಡೀಸೆಲ್‌ ಮತ್ತು ಪೆಟ್ರೋಲ್‌ ದರ ಹೆಚ್ಚಳವಾಗಿರುವುದರಿಂದ ಆಟೋ ಚಾಲಕರ ಸಂಘ ದರವನ್ನು ಪರಿಷ್ಕರಣೆ ಮಾಡುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಿದೆ. +ಕಳೆದ ಹಲವು ತಿಂಗಳಿನಿಂದ ದರ ಪರಿಷ್ಕರಣೆಯಾಗಿಲ್ಲ. ಇಂಧನ ಬೆಲೆ ಏರಿಯಾಗಿರುವುದರಿಂದ ನಿರ್ವಹಣೆ ಮಾಡುವುದು ಕಷ್ಟಕರವಾಗುತ್ತಿದ್ದು, ಆಟೋ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಿಕೊಡುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಆಟೋ ಚಾಲಕರ ಸಂಘ ಪತ್ರ ಬರೆದು ಮನವಿ ಮಾಡಿಕೊಂಡಿದೆ. \ No newline at end of file diff --git a/eesanje/url_46_95_7.txt b/eesanje/url_46_95_7.txt new file mode 100644 index 0000000000000000000000000000000000000000..3e10b4df501320a2cf79992e01b3eb529891a1e2 --- /dev/null +++ b/eesanje/url_46_95_7.txt @@ -0,0 +1,15 @@ +ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ +ಬೆಂಗಳೂರು, ಜೂ.26-ಹುಲಿ ಸಫಾರಿ, ಸಸ್ಯಾಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ ನೂತನ ವಾಗಿ ನಿರ್ಮಿಸಿರುವ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು. +ಇದು ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿ ಆಗಿದೆ. ಪ್ರಸ್ತುತ 8 ಚಿರತೆಗಳನ್ನು ತೆರೆದ ವನ ಪ್ರದೇಶದಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. +ಈ ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿ ಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. +ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು. +ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದೂ ಮಾಹಿತಿ ನೀಡಿದರು. ಸ್ವಾಗತ ಕಮಾನನ್ನೂ ಉದ್ಘಾಟಿಸಿದರು. +ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು. +ಮೃಗಾಲಯಗಳು ಮನರಂಜನೆ ಜೊತೆಗೆ, ಜ್ಞಾನಮಂದಿರವಾಗಬೇಕುರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿಂದು ದಕ್ಷಿಣ ಭಾರತದ ಮೊದಲ ಹಾಗೂ ದೇಶದ ಅತಿ ದೊಡ್ಡ ಚಿರತೆ ಸಫಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು. +ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಿ, ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಪ್ರೀರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಸೂಚನೆ ನೀಡಿದರು. +ಬನ್ನೇರುಘಟ್ಟದಲ್ಲಿರುವ ವೇದಾ ಎಂಬ ಹೆಣ್ಣಾನೆ ಕಳೆದ ಜನವರಿ 26ರ ಗಣರಾಜ್ಯ ದಿನದಂದು ಗಂಡಾನೆ ಮರಿಗೆ ಜನ್ಮ ನೀಡಿದ್ದು, ಭಾರತ ಗಣತಂತ್ರದ ದಿನ ಹುಟ್ಟಿದ ಈ ಆನೆಗೆ ಸ್ವರಾಜ್ ಎಂದು ನಾಮಕರಣ ಮಾಡಲಾಯಿತು. ಈಶ್ವರ ಖಂಡ್ರೆ ಅವರು ಫಲಕ ಅನಾವರಣ ಮಾಡಿ ಆನೆಗೆ ಸ್ವರಾಜ್ ಎಂದು ಹೆಸರಿಟ್ಟರು. +ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 26 ಆನೆಗಳಿದ್ದು, ಇಲ್ಲಿ ವರ್ಷಕ್ಕೆ 2ರಿಂದ 3 ಮರಿಗಳ ಜನನವಾಗುತ್ತದೆ. ಈ ಆನೆ ಮರಿಗಳಿಗೆ ಹಾಲುಣಿಸುವ ಕೇಂದ್ರವನ್ನೂ ಇಂದು ಉದ್ಘಾಟಿಸಲಾಯಿತು. ಉದ್ಯಾನದಲ್ಲಿ ಜನಿಸುವ ಆನೆಮರಿಗಳ ಪೈಕಿ ಸುಮಾರು 3 ವರ್ಷದ ಮರಿಗಳನ್ನು ಹಾಲುಣಿಸಲು ತಾಯಿಯಿಂದ ಬೇರ್ಪಡಿಸಿ, ಮಾವುತರ ಜೊತೆ ಬಾಂಧವ್ಯ ಬೆಸೆಯಲು 10 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ ಹಾಲುಣಿಸುವ ಕೇಂದ್ರಕ್ಕೆ ಸ್ಥಳಾಂತರಿಸಲಾಗುತ್ತದೆ, ಅಲ್ಲಿ ಮಾವುತರು ಮತ್ತು ಕಾವಾಡಿಗಳು ಆನೆ ಮರಿಗಳಿಗೆ 24 ಗಂಟೆಯೂ ವಿಶೇಷ ಆರೈಕೆ ಮಾಡುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದರು. +ಈ ಕೇಂದ್ರದಲ್ಲಿ ಆನೆ ಮರಿಗಳ ಮುಕ್ತ ಸಂಚಾರಕ್ಕಾಗಿ ಒಂದು ಸಣ್ಣ ಕ್ರಾಲ್ ಮತ್ತು ಮರಿಗಳ ಮೇಲೆ ನಿಗಾ ಇಡಲು ಅಸ್ತಿತ್ವದಲ್ಲಿರುವ ಆನೆ ಕಟ್ಟಡದ ಮೇಲೆ ಕಾವಾಡಿಗಳಿಗೆ ಒಂದು ಕೋಣೆಯನ್ನು ನಿರ್ಮಿಸಲಾಗಿದೆ. ಈ ಕೇಂದ್ರವನ್ನೂ ಇಂದು ಉದ್ಘಾಟಿಸಲಾಗಿದೆ ಎಂದರು. +ಚಿಟ್ಟೆ ಉದ್ಯಾನವನದಲ್ಲಿ ಶಿಶು ಆರೈಕೆ ಕೊಠಡಿ:ಬನ್ನೇರುಘಟ್ಟ ಉದ್ಯಾನಕ್ಕೆ ಬರುವ ಸಂದರ್ಶಕರ ಪೈಕಿ, ಮಹಿಳೆಯರು, ಹಾಲುಣಿಸುವ ತಾಯಂದಿರೂ ಇರುತ್ತಾರೆ. ಹೀಗಾಗಿ ಶಿಶು ಆರೈಕೆ ಕೋಣೆಯನ್ನು ಸಹ ಇಲ್ಲಿ ನಿರ್ಮಿಸಲಾಗಿದ್ದು, ಪುಟ್ಟ ಶಿಶುಗಳು, ಅಂಬೆಗಾಲಿಡುವ ಕಂದಮ್ಮಗಳು ಮತ್ತು ಚಿಕ್ಕ ಮಕ್ಕಳ ವೈಯಕ್ತಿಕ ಅಗತ್ಯಗಳನ್ನು ಪೂರೈಸಲು ಚಿಟ್ಟೆ ಉದ್ಯಾನದಲ್ಲಿ ಶಿಶು ಆರೈಕೆ ಕೊಠಡಿ ನಿರ್ಮಿಸಲಾಗಿದ್ದು, ಇದನ್ನು ಇಂದು ಉದ್ಘಾಟಿಸಲಾಗಿದೆ. ಮುಂದಿನ ವರ್ಷದ ಡಿಸೆಂರ್ಬ ಒಳಗೆ ಇನ್ನೂ ಎರಡು ಶಿಶು ಆರೈಕೆ ಕೊಠಡಿಗಳನ್ನು ಇಲ್ಲಿ ನಿರ್ಮಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು. +ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸ್ಕೈವಾಕ್ ಮತ್ತು ಐದು ಪ್ರಾಣಿ ಆವರಣಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಬನ್ನೇರುಘಟ್ಟ ಜೈವಿಕ ಉದ್ಯಾನ 1974 ರಿಂದ ಪ್ರವಾಸಿಗರಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದ್ದು, ಇದನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೃಗಾಲಯದಿಂದ ಚಿಟ್ಟೆ ಉದ್ಯಾನವನಕ್ಕೆ ಸಂಪರ್ಕವನ್ನು ಕಲ್ಪಿಸಲು ಸ್ಕೈವಾಕ್ ವಿನ್ಯಾಸಗೊಳಿಸಲಾಗಿದೆ ಈ ಸ್ಕೈವಾಕ್ನಲ್ಲಿ ನಡಯುವ ಪ್ರವಾಸಿಗರಿಗೆ ಅರಣ್ಯ ದರ್ಶನವೂ ಆಗುತ್ತದೆ. ಹತ್ತಿರದಿಂದಪಕ್ಷಿಗಳನ್ನು ನೋಡಲು ಅವಕಾಶವೂ ಆಗುತ್ತದೆ. +ಎಮು ಮತ್ತು ರಿಯಾಗೆ 50 ಲಕ್ಷ ರೂ.ಗಳ ವೆಚ್ಚದಲ್ಲಿ ಹೊಸ ನೈಸರ್ಗಿಕ ಆವರಣ, 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಂಟಿಂಗ್ ಚೀತಾ ಆವರಣ, 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಹಮದ್ರಿಯಾಸ್ ಮತ್ತು ಆಲಿವ್ ಬಾಬೂನ್ ಆವರಣ ಮತ್ತು 1.5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಭಾರತೀಯ ಬೂದು ತೋಳ ಆವರಣವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. \ No newline at end of file diff --git a/eesanje/url_46_95_8.txt b/eesanje/url_46_95_8.txt new file mode 100644 index 0000000000000000000000000000000000000000..25fdf77403e2f65743db7b89b3993260b8719389 --- /dev/null +++ b/eesanje/url_46_95_8.txt @@ -0,0 +1,9 @@ +ರಾಜ್ಯದ ಏಳು ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಸ್ಥಾಪನೆ +ಬೆಳಗಾವಿ ಜೂ 26-ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ತಿಳಿಸಿದ್ದಾರೆ.ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಅವರು ಮಾತನಾಡಿದರು. +ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯ ನಗರ ಯಾದಗಿರಿ, ಗದಗ , ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಕೃಷಿ ಹೊಸ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದರು. +ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ . ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು ಎಂದರು. +ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆಗೆ ಸೂಚಸಿದ ಅವರು, ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸುವಂತೆ ನಿರ್ದೇಶನ ನೀಡಿದರು. +ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸುವಂತೆ ಅವರು ತಿಳಿಸಿದರು.ಅಧಿಕಾರಿಗಳು ಪರಸ್ಪರ ಸಮನ್ವಯದಿಂದ, ಜವಾಬ್ದಾರಿಯುತವಾಗಿ ಕೆಲಸ ಮಾಡಿ ಎಂದು ಸಚಿವರು ಸೂಚಿಸಿದರು. +ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ ಎಂದು ನಿರ್ದೇಶನ ನೀಡಿದರು. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗಳ ಬಗ್ಗೆ ಅರಿವು ಮೂಡಿಸಿ, ಕೃಷಿ ಜಮೀನುಗಳಿಗೆ ಅವುಗಳನ್ನು ವರ್ಗಾವಣೆ ಮಾಡಿ ಎಂದು ತಿಳಿಸಿದರು. +ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೋಂದಣಿ ಜಾಸ್ತಿ ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ ಎಂದು ಸಲಹೆ ನೀಡಿದರು.ಹೈಟೆಕ್ ಹಾರ್ವೆಸ್ಟ್ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ ಎಂದು ಅವರು ಹೇಳಿದರು. +ಸುಸ್ಥಿರ, ಸಮಗ್ರ ಕೃಷಿ ಬಗ್ಗೆ ತರಬೇತಿ, ಮಾರ್ಗದರ್ಶನ ನೀಡಿ ಬಜೆಟ್ನಲ್ಲಿ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಶೀಘ್ರದಲ್ಲೇ ಅನುಷ್ಠಾನಗೊಳಿಸಿ ಎಂದು ನಿರ್ದೇಶನ ನೀಡಿದರು.ಕೃಷಿ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಡಾ. ಜಿ.ಟಿ ಪುತ್ರ, ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು. \ No newline at end of file diff --git a/eesanje/url_46_95_9.txt b/eesanje/url_46_95_9.txt new file mode 100644 index 0000000000000000000000000000000000000000..705728ecdea1ac40fa104caf3cd28b149b19d665 --- /dev/null +++ b/eesanje/url_46_95_9.txt @@ -0,0 +1,12 @@ +ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ತರಾಟೆ +ಬೆಂಗಳೂರು, ಜೂ.26-ಕರ್ನಾಟಕ ಗಣಿ ಪರಿಸರ ಪುನಶ್ಚೇತನ ಯೋಜನೆಗಳಿಗೆ ವರ್ಷ ಕಳೆದರೂ ವಿಸ್ತೃತ ಯೋಜನಾ ವರದಿ ತಯಾರಾಗದೇ ಇರುವ ಬಗ್ಗೆ ಅಸಹನೆ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಕಾರ್ಯದರ್ಶಿಯವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಗಂಭೀರ ಎಚ್ಚರಿಕೆ ನೀಡಿದ್ದಾರೆ. +ಮುಂದಿನ ಒಂದು ವಾರದೊಳಗಾಗಿ ವಿಸ್ತೃತ ಯೋಜನಾ ವರದಿಗಳನ್ನು ಪೂರ್ಣಗೊಳಿಸಿ ಅನುಮೋದನೆಗೆ ಸಲ್ಲಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆದೇಶಿಸಿದ್ದಾರೆ. +ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಎಂಇಆರ್‌ಸಿ)ದ ಅಡಿ ಗಣಿ ಪ್ರದೇಶಗಳ ಪುನಶ್ಚೇತನ ಯೋಜನೆ ಸಿಇಪಿಎಂಐಜೆಡ್‌ಗಾಗಿ 24,996.30 ಕೋಟಿ ರೂ. ಒದಗಿಸಲಾಗಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಈ ಹಣ ಖರ್ಚು ಮಾಡಬೇಕು. +ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್‌ ರೆಡ್ಡಿ ಅವರ ನೇತೃತ್ವದ ಸಮಿತಿ 7,978.78 ಕೋಟಿ ರೂ. ಮೊತ್ತದ 358 ಯೋಜನೆಗಳನ್ನು ಅನುಮೋದಿಸಿದೆ. ಈ ಪೈಕಿ ಒಟ್ಟು 3469.41 ಕೋಟಿ ರೂ. ವೆಚ್ಚದ 182 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 135 ಯೋಜನೆಗಳಿಗೆ ಟೆಂಡರ್‌ ಕರೆಯಲಾಗಿದ್ದು, 47 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. 23 ಕಾಮಗಾರಿಗಳನ್ನು ವಿವಿಧ ಸಂಸ್ಥೆಗಳಿಗೆ ವಹಿಸಲಾಗಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು. +ಯೋಜನೆಗಳ ಸಕಾಲಿಕ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಂಬಂಧಿಸಿದ ಇಲಾಖೆಯಲ್ಲಿ ಯೋಜನಾ ಮೇಲ್ವಿಚಾರಣೆ ಘಟಕ ಸ್ಥಾಪಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.ವರ್ಷ ಕಳೆದರೂ ಡಿಪಿಆರ್‌ ಆಗದೇ ಇದ್ದುದಕ್ಕೆ ಕಾರ್ಯದರ್ಶಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಯವರು ಅಧಿಕಾರಿಗಳ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ. +ಇದು ವಿಶೇಷ ಕಾರ್ಯಕ್ರಮವಾಗಿದ್ದು, ಟೆಂಡರ್‌ನ ವಾಡಿಕೆಯ ಷರತ್ತುಗಳು ಅನ್ವಯಿಸುವುದಿಲ್ಲ. ಟೆಂಡರ್‌ನಲ್ಲಿ ನಿಗಮವು ವಾರದೊಳಗೆ ಬಿಲ್‌ ಪಾವತಿಸಲಾಗುವುದರಿಂದ ಯಾವುದೇ ಮುಂಗಡ ನೀಡಲಾಗದು ಎಂಬುದನ್ನು ಗುತ್ತಿಗೆದಾರರಿಗೆ ಸ್ಪಷ್ಟವಾಗಿ ತಿಳಿಸಲು ಸೂಚಿಸಿದರು. +ರೈಲ್ವೆ ಯೋಜನೆಗಳಿಗೆ 5271.96 ಕೋಟಿ ರೂ., ಕುಡಿಯುವ ನೀರಿನ ಯೋಜನೆಗಳಿಗೆ 4929.84 ಕೋಟಿ ರೂ., ಆರೋಗ್ಯ ಕ್ಷೇತ್ರಕ್ಕೆ 1915.78 ಕೋಟಿ ರೂ., ಪರಿಸರ ಪುನಃಸ್ಥಾಪನೆಗೆ 2655.17 ಕೋಟಿ ರೂ., ರಸ್ತೆಗಳು ಮತ್ತು ಸಂವಹನ ಯೋಜನೆಗಳಿಗೆ 2559.17 ಕೋಟಿ ರೂ., ವಸತಿ ಯೋಜನೆಗಳಿಗೆ 1193.98 ಕೋಟಿ ರೂ. ನಿಗದಿ ಪಡಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. +ವಸತಿ ಯೋಜನೆಗಳಡಿ ಲಾನುಭವಿಗಳನ್ನು ಶೀಘ್ರವೇ ಗುರುತಿಸಲು ಮುಖ್ಯಮಂತ್ರಿ ಆದೇಶಿಸಿದರು. ಸಣ್ಣ ನೀರಾವರಿ ಇಲಾಖೆ 14 ಯೋಜನೆಗಳ ಪೈಕಿ 7 ಯೋಜನೆಗಳ ಕಾಮಗಾರಿ ಆರಂಭಿಸಲಾಗಿದೆ. ಉಳಿದ 7 ಯೋಜನೆಗಳ ಟೆಂಡರ್‌ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ ಕಾಮಗಾರಿ ಅನುಷ್ಠಾನ ಮಾಡುವಂತೆ ತಾಕೀತು ಮಾಡಿದರು. +ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಶಾಲೆಗಳ ಕಟ್ಟಡ ದುರಸ್ತಿ, ಕೊಠಡಿ, ಪ್ರಯೋಗಾಲಯ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಅಂಗನವಾಡಿ ಕಟ್ಟಡ, ವಿದ್ಯಾರ್ಥಿ ನಿಲಯಗಳು ಮತ್ತಿತರ ಯೋಜನೆಗಳಿಗೆ ಒತ್ತು ನೀಡಬೇಕು. ಲಭ್ಯವಿರುವ ಅನುದಾನದಲ್ಲಿ ಈ ನಾಲ್ಕೂ ಜಿಲ್ಲೆಗಳನ್ನು ಮಾದರಿ ಜಿಲ್ಲೆಗಳಾಗಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಹೇಳಿದರು. +ಗಣಿ ಬಾಧಿತ ಜಿಲ್ಲೆಗಳಲ್ಲಿ ಮಾಲಿನ್ಯದ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದ್ದು, ತೃಪ್ತಿಕರ ಹಂತಕ್ಕೆ ತಲುಪಿದೆ ಎಂದು ಅಧಿಕಾರಿಗಳು ವಿವರಿಸಿದರು.ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್‌‍.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ.ತ್ರಿಲೋಕಚಂದ್ರ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. +ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ ಬಳ್ಳಾರಿಯ ಬಳಿ ಮಂಜೂರಾಗಿದ್ದ ಜಮೀನಿಗೆ ಇತ್ತೀಚೆಗೆ ತಡೆ ನೀಡಲಾಗಿದೆ. ಕುದುರೆಮುಖ ಕಂಪನಿಯನ್ನು ಪುನಶ್ಚೇತನಗೊಳಿಸಬೇಕು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರಯತ್ನಿಸುತ್ತಿರುವುದರ ಹಂತದಲ್ಲೇ ಮುಖ್ಯಮಂತ್ರಿಗಳು ಗಣಿ ಭೂಪ್ರದೇಶ ಪುನಶ್ಚೇತನ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿರುವುದು ಗಮನ ಸೆಳೆದಿದೆ. \ No newline at end of file diff --git a/eesanje/url_46_96_1.txt b/eesanje/url_46_96_1.txt new file mode 100644 index 0000000000000000000000000000000000000000..d2b8a2ac4d44d46532535080bb2a844a66fe691e --- /dev/null +++ b/eesanje/url_46_96_1.txt @@ -0,0 +1,5 @@ +ಮಂಗಳೂರು : ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು +ಮಂಗಳೂರು, ಜೂನ್‌ 26:ರಾತ್ರಿಯಿಡೀ ಸುರಿದ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. +ಯಾಸಿರ್‌ (45), ಅವರ ಪತ್ನಿ ಮರಿಯಮ (40) ಹಾಗೂ ಮಕ್ಕಳಾದ ರಿಯಾನ ಮತ್ತು ರಿಫಾನ ಮೃತ ದುರ್ದೈವಿಗಳಾಗಿದ್ದಾರೆ.ಈ ಪ್ರದೇಶದಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು,ಅಬೂಬಕ್ಕರ್‌ ಎಂಬವರ ಮನೆಯ ಗೋಡೆ ಯಾಸಿರ್‌ ಅವರ ಮನೆ ಗೊಡೆ ಮೇಲೆ ಬಿದ್ದು ಅದು ಕೂಡ ಕುಸಿದಿದೆ.ಸ್ಥಳೀಯರು ನೆರವಿಗೆ ದಾವಿಸಿ ಅವಶೇಷಡಿ ಸಿಲುಕಿದ್ದವರನ್ನು ರಕ್ಷಿಸಲು ಮುಂದಾಗಿದ್ದಾರೆ. +ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು ಬರುವಷ್ಟರಲ್ಲಿ ಮನೆಯಲ್ಲಿದ್ದ ನಾಲ್ವರು ಕೊನೆಯುಸಿರೆಳೆದಿದ್ದಾರೆ.ಎಲ್ಲಾ ಮೃತದೇಹವನ್ನು ಹೊರತೆಗೆದು ಆಸ್ಪತ್ತೆಗೆ ಸಾಗಿಸಲಾಗಿದೆ. +ಘಟನೆ ನಡೆದಾಗ ಎಲ್ಲರೂ ಮಲಗಿದ್ದರು ಅವರ ಮೇಲೆ ಇಟ್ಟಿಗೆ ಮಣ್ಣು ಬಿದ್ದು ಅವಶೇಷದಿಂದ ಹೊರಬರಲಾಗದೆ ಕೊನೆಯುಸಿರೆಳೆದಿದ್ದಾರೆ,ಘಟನೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಉಳ್ಳಾಲ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_46_96_10.txt b/eesanje/url_46_96_10.txt new file mode 100644 index 0000000000000000000000000000000000000000..91a4cc5a87d4171f5ccb1b526108a5c3d208283b --- /dev/null +++ b/eesanje/url_46_96_10.txt @@ -0,0 +1,13 @@ +ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತುಮಕೂರು ಬಂದ್‌ ಯಶಸ್ವಿ +ತುಮಕೂರು, ಜೂ.25-ಜಿಲ್ಲೆಯ ಪಾಲಿನ ಹೇಮಾವತಿ ನೀರನ್ನು ಪ್ರತ್ಯೇಕ ಎಕ್‌್ಸಪ್ರೆಸ್‌‍ ಲಿಂಕ್‌ ಕೆನಾಲ್‌ ಮೂಲಕ ರಾಮನಗರ ಜಿಲ್ಲೆಗೆ ಕೊಂಡೊಯ್ಯುವ ಯೋಜನೆ ವಿರೋಧಿಸಿ ಇಂದು ಕರೆ ನೀಡಿದ್ದ ಜಿಲ್ಲಾ ಬಂದ್‌ ಬಹುತೇಕ ಯಶಸ್ವಿಯಾಗಿ ನಡೆಯಿತು.ವಿವಿಧ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಬಿಜೆಪಿ-ಜೆಡಿಎಸ್‌‍ ಜಿಲ್ಲಾ ಘಟಕಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದವು. +ಬಹುತೇಕ ಅಂಗಡಿಗಳನ್ನು ಬಂದ್‌ ಮಾಡಿ ವರ್ತಕರು ಸ್ವಯಂಪ್ರೇರಿತವಾಗಿ ಬೆಂಬಲ ಸೂಚಿಸಿದರು. ಅಗತ್ಯ ಸೇವೆಗಳು ಎಂದಿನಂತೆ ಇದ್ದವು. ಜನರ ಓಡಾಟ ಹಾಗೂ ವಾಹನಗಳ ಸಂಚಾರ ವಿರಳವಾಗಿತ್ತು. +ನಗರದ ಟೌನ್‌ಹಾಲ್‌ ವೃತ್ತದ ಬಳಿ ಹೋರಾಟ ಸಮಿತಿ ಸದಸ್ಯರು, ರೈತರು, ಸಂಘ ಸಂಸ್ಥೆಗಳು, ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಸಮಾವೇಶಗೊಂಡು ಖಾಲಿ ಕೊಡಗಳನ್ನು ಹಿಡಿದು ಮಾನವ ಸರಪಳಿ ನಿರ್ಮಿಸಿ, ಉರುಳುಸೇವೆ ಮಾಡಿ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ಮಹಿಳಾ ಮುಖಂಡರು ಸಹ ಖಾಲಿ ಕೊಡಗಳನ್ನು ಪ್ರದರ್ಶಿಸಿ ರಕ್ತಕೊಟ್ಟೆವು, ಹೇಮಾವತಿ ಬಿಡೆವು ಎಂಬ ಘೋಷವಾಕ್ಯದೊಂದಿಗೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಕಾಮಗಾರಿ ನಡೆಸಬಾರದೆಂದು ಆಕ್ರೋಶ ಹೊರಹಾಕಿದವು. +ಈ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ, ಜಿಲ್ಲೆಯಾದ್ಯಂತ ಶಾಂತಿಯುತ ಬಂದ್‌ಗೆ ಕರೆ ಕೊಟ್ಟಿದ್ದೆವು. ಅದರಂತೆ ಹೇಮಾವತಿ ನಾಲಾ ವಲಯದ ತಾಲ್ಲೂಕು ವಲಯದಲ್ಲಿ ಬಂದ್‌ ಯಶಸ್ವಿಯಾಗಿದೆ.ನಮ ನೀರು, ನಮ ಹಕ್ಕು ಘೋಷಣೆಯಡಿಯಲ್ಲಿ ಹೋರಾಟ ರೂಪಿಸಿದ್ದೇವೆ. +ಉಪಮುಖ್ಯಮಂತ್ರಿಗಳು ಮಾಗಡಿ ಹಾಗೂ ರಾಮನಗರಕ್ಕೆ ನೀರು ಕೊಡಲು ಪೈಪ್‌ಲೈನ್‌ ಪ್ರಾರಂಭ ಮಾಡಿದ್ದಾರೆ. ಇದರಿಂದ ಗುಬ್ಬಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಮಧುಗಿರಿ, ಕೊರಟಗೆರೆ, ತುಮಕೂರು ಗ್ರಾಮಾಂತರ ಹಾಗೂ ನಗರಕ್ಕೆ ನೀರಿನ ಸಮಸ್ಯೆ ಉಂಟಾಗಲಿದೆ. ಕಾಮಗಾರಿ ನಿಲ್ಲಿಸುವವರೆಗೂ ನಮ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಸಿದರು. +ಬಿ.ಎಚ್‌.ರಸ್ತೆ, ಎಂ.ಜಿ.ರಸ್ತೆ, ಹೊರಪೇಟೆ, ರಾಮಪ್ಪ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ರಸ್ತೆ ಮೂಲಕ ಪ್ರತಿಭಟನಾ ರ್ಯಾಲಿಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ತಲುಪಿದ ಪ್ರತಿಭಟನಾಕಾರರು ಡಿಸಿ ಮುಖಾಂತರ ರಾಜ್ಯಪಾಲರಿಗೆ ಯೋಜನೆಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದರು. + +ಈ ಹೋರಾಟಕ್ಕೆ ಜಿಲ್ಲಾ ವರ್ತಕರು, ಹಮಾಲಿಗಳ ಸಂಘ, ರೈಸ್‌‍ಮಿಲ್‌ ಮಾಲೀಕರು, ಚಿತ್ರಮಂದಿರ ಮಾಲೀಕರು, ಖಾಸಗಿ ಬಸ್ಸು, ಟೆಂಪೊ ಮಾಲೀಕರು ಸೇರಿದಂತೆ ವಿವಿಧ ಸಂಘದವರು ಬೆಂಬಲ ಸೂಚಿಸಿದರು. +ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಯಾವುದೇ ರಜೆ ನೀಡಿರಲಿಲ್ಲ. ಎಂದಿನಂತೆ ತರಗತಿಗಳು ನಡೆದವು. ನಗರದಲ್ಲಿ ಬಸ್ಸು, ಆಟೋಗಳ ಸಂಚಾರ ಮಾಮೂಲಿಯಾಗಿತ್ತು. ನಾಡು-ನುಡಿ-ಜಲದ ವಿಚಾರದಲ್ಲಿ ಆಟೋ ಚಾಲಕರು ಮುಂಚೂಣಿಯಲ್ಲಿದ್ದು, ಇಂದೂ ಕೂಡ ಹೇಮಾವತಿ ನೀರಿಗಾಗಿ ನಗರದ ಆಟೋ ಚಾಲಕರು ಧ್ವನಿಯೆತ್ತಿ ಬಂದ್‌ನಲ್ಲಿ ಭಾಗವಹಿಸಿದ್ದರು. +ಹೇಮಾವತಿ ನಾಲಾ ವಲಯದ ಗುಬ್ಬಿ, ಚಿಕ್ಕನಾಯಕನಹಳ್ಳಿ, ತುಮಕೂರು, ತುರುವೇಕೆರೆ, ಗ್ರಾಮಾಂತರ ಕ್ಷೇತ್ರಗಳಲ್ಲೂ ಸಹ ಪ್ರತಿಭಟನೆ ನಡೆಯಿತು.ತುರುವೇಕೆರೆಯಲ್ಲಿ ತಾಲೂಕು ರೈತ ಸಂಘ, ಹಸಿರು ಸೇನೆ ಮತ್ತು ಪ್ರಗತಿಪರ ಸಂಘಟನೆಗಳು ರೈತರೊಂದಿಗೆ ಬಂದ್‌ ನಡೆಸಿದವು. ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ಮಾಡಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. +ತುಮಕೂರಿನಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಸದಾಶಿವಯ್ಯ, ಮಹೇಶ್‌, ಪ್ರಭಾಕರ್‌, ಟೂಡಾ ಮಾಜಿ ಅಧ್ಯಕ್ಷ ಶ್ರೀಧರ್‌, ಕನ್ನಡ ಸೇನೆಯ ಧನಿಯಾಕುಮಾರ್‌, ಕರ್ನಾಟಕ ರಕ್ಷಣಾ ವೇದಿಕೆಯ ಅರುಣ್‌ಕುಮಾರ್‌, ರೈತ ಸಂಘದ ಮುಖಂಡರಾದ ಗೋವಿಂದರಾಜು, ಹೋಟೆಲ್‌ ಮಾಲೀಕರ ಸಂಘದ ಗುರುಬಳುಕರಾಯ್‌, ದಲಿತ ಸಂಘಟನೆಯ ನರಸಿಂಹಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಅಶೋಕ್‌ ಅವರು ಬಿಗಿ ಪೊಲೀಸ್‌‍ ಬಂದೋಬಸ್ತ್‌ ಕಲ್ಪಿಸಿದ್ದರು. ಬಂದ್‌ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದೆ ಬಹುತೇಕ ಶಾಂತಿಯುತವಾಗಿ ನಡೆಯಿತು. \ No newline at end of file diff --git a/eesanje/url_46_96_11.txt b/eesanje/url_46_96_11.txt new file mode 100644 index 0000000000000000000000000000000000000000..211efd3d520d46ea2c87aa9a4ef272c0f9c94230 --- /dev/null +++ b/eesanje/url_46_96_11.txt @@ -0,0 +1,5 @@ +ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ +ಬೆಂಗಳೂರು, ಜೂ.25-ನೆರೆ ರಾಜ್ಯಗಳಿಗೆ ಹೋಲಿಗೆ ಮಾಡಿದರೆ ನಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದರ ಪರಿಷ್ಕರಣೆಯ ಬಗ್ಗೆ ಕೆಎಂಎಫ್‌ ಜೊತೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು. +ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್‌. ತೀರ್ಮಾನಿಸುತ್ತದೆ. ಅದು ಸರ್ಕಾರದ ತೀರ್ಮಾನವಲ್ಲ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು. ಜೊತೆ ಕೆಎಂಎಫ್‌ ಅಧ್ಯಕ್ಷರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದರು. +ರಾಜ್ಯದಲ್ಲಿ ಹಾಲಿನ ಸಂಗ್ರಹ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್‌ ಹಾಲಿನ ಪಟ್ಟಣಕ್ಕೆ 50 ಎಂಎಲ್‌ ಹಾಲನ್ನೂ ಹೆಚ್ಚುವರಿಯಾಗಿ ಸೇರಿಸಿ, ಅದಕ್ಕೆ ತಗಲುವ 2.10 ರೂಪಾಯಿ ವೆಚ್ಚದಲ್ಲಿ 2 ರೂಪಾಯಿಗಳನ್ನು ಗ್ರಾಹಕರಿಂದ ಪಡೆಯಲು ನಿರ್ಧರಿಸಲಾಗಿದೆ. ಇದರಿಂದ ನಷ್ಟವಾಗುವ 10 ಪೈಸೆಯನ್ನು ಹಾಗೂ ಏಜೆಂಟರಿಗೆ ನೀಡಬೇಕಾದ 10 ಪೈಸೆ ಸೇರಿ 20 ಪೈಸೆ ನಷ್ಟವನ್ನು ಕೆಎಂಎಫ್‌ ಭರಿಸಲಿದೆ ಎಂದು ಅದರ ಅಧ್ಯಕ್ಷ ಭೀಮಾನಾಯಕ್‌ ತಿಳಿಸಿದ್ದಾರೆ. +ಸಂಗ್ರಹಿಸಿದ ಹಾಲನ್ನು ಪೌಡರ್‌ ಮಾಡಿ ದಾಸ್ತಾನು ಮಾಡುವುದರಿಂದ ಅದು ನಿರರ್ಥಕ ವೆಚ್ಚವಾಗುತ್ತದೆ. ಸಂಸ್ಥೆಯ ಉಳಿವಿಗೆ ಹೆಚ್ಚುವರಿ ಹಾಲನ್ನು ಗ್ರಾಹಕರಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ. ಹಾಲಿನ ಸಂಗ್ರಹ ತಗ್ಗಿದರೆ 50 ಎಂಎಲ್‌ ಸೇರ್ಪಡೆಯನ್ನು ಹಿಂಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಭೀಮಾನಾಯಕ್‌ ಅವರು ಮುಖ್ಯಮಂತ್ರಿಯವರಿಗೂ ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_46_96_12.txt b/eesanje/url_46_96_12.txt new file mode 100644 index 0000000000000000000000000000000000000000..706ad3542d76052291439d039eb747d1e284158b --- /dev/null +++ b/eesanje/url_46_96_12.txt @@ -0,0 +1,7 @@ +ಡಿಸೆಂಬರ್‌ನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ +ಬೆಂಗಳೂರು, ಜೂನ್ 25-ಸಕ್ಕರೆ ನಾಡು ಮಂಡ್ಯದಲ್ಲಿ 2024ನೇ ಸಾಲಿನಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. +ಗೃಹ ಕಚೇರಿ ಕೃಷ್ಣಾದಲ್ಲಿಂದು ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು. +ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು. +ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು. +ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದು ತಿಳಿಸಿದರು. +ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಽಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_96_2.txt b/eesanje/url_46_96_2.txt new file mode 100644 index 0000000000000000000000000000000000000000..92507987c55184392815e1699445e4fc141410bc --- /dev/null +++ b/eesanje/url_46_96_2.txt @@ -0,0 +1,12 @@ +ಡಿಕೆ ಸೊಕ್ಕು ಮುರಿಯಲೆಂದೇ ಸಿದ್ದರಾಮಯ್ಯ ಡಿಸಿಎಂ ಹುದ್ದೆ ಸೃಷ್ಟಿಯ ಗುಲ್ಲೆಬ್ಬಿಸಿದ್ದಾರೆ : ವಿಜಯೇಂದ್ರ ಆರೋಪ +ನವದೆಹಲಿ,ಜೂ.26-ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸೊಕ್ಕು ಮುರಿಯಬೇಕೆಂದೇ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಸಿಎಂ ಸಿದ್ದರಾಮಯ್ಯನವರ ಪಾತ್ರವಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ನಲ್ಲಿ ಒಂದು ಬಣ ಡಿ.ಕೆ.ಶಿವಕುಮಾರ್‌ ಅವರನ್ನು ರಾಜಕೀಯವಾಗಿ ಕಟ್ಟಿ ಹಾಕಲು ವ್ಯವಸ್ಥಿತ ಷಡ್ಯಂತರ ರೂಪಿಸಿದೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದು ಸಿದ್ದರಾಮಯ್ಯ ಬಣದ ಸಚಿವರು ಹಾಗೂ ಶಾಸಕರ ಒತ್ತಾಸೆ. ನನಗೆ ಭರವಸೆ ಇದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗುತ್ತಾರೆ ಎಂದರು. +ಶಿವಕುಮಾರ್‌ ವಿರುದ್ಧ ಆಡಳಿತ ಪಕ್ಷದಲ್ಲಿ ಸಾಕಷ್ಟು ರಾಜಕೀಯ ಪಿತೂರಿಗಳು ನಡೆಯುತ್ತಿವೆ. ಒಂದು ಬಣ ಅವರ ರಾಜಕೀಯ ಏಳಿಗೆಯನ್ನು ಸಹಿಸಿಕೊಳ್ಳುತ್ತಿದೆ. ಹೀಗಾಗಿ ಸಿದ್ದರಾಮಯ್ಯನವರು ಹೈಕಮಾಂಡ್‌ ಮೇಲೆ ಒತ್ತಡ ಹಾಕಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸಿಕೊಳ್ಳಬಹುದು ಎಂದು ಭವಿಷ್ಯ ನುಡಿದರು. +ರಾಜ್ಯದಲ್ಲಿ ಬೆಲೆ ಏರಿಕೆಯ ಪರ್ವ ನಡೆಯುತ್ತಿದೆ. ರಾಜ್ಯದ ಜನರಿಗೆ ಬರೆ ಎಳೆಯುವ ಕೆಲಸ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಕಳೆದ ವಾರ ಸಿಎಂ ಪೆಟ್ರೋಲ್‌‍, ಡೀಸೆಲ್‌ ಬೆಲೆ ಏರಿಕೆ ಮಾಡಿದ್ದಾರೆ. ನಾವು ಪ್ರಶ್ನೆ ಮಾಡಿದರೆ ಉದ್ಧಟತನದ ಉತ್ತರ ಹೇಳುತ್ತಾರೆ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಯಾಕಿಷ್ಟು ಕಟುವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದರು. +ಟ್ರ್ಯಾಕ್ಟರ್‌ ಟಿಲ್ಲರ್‌ ಬಳಸುವ ರೈತರೂ ತೊಂದರೆ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜದ ದರ ಶೇ.40- 50ರಷ್ಟು ಹೆಚ್ಚಾಗಿದೆ. ಇಂಥ ಸಂಕಷ್ಟದ ಸಂದರ್ಭದಲ್ಲೂ ಜನರಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್‌‍ ಸರಕಾರ ಯಾಕೆ ಇಷ್ಟು ಕಟುವಾಗಿ ನಡೆದುಕೊಳ್ಳುತ್ತಿದೆ ಎಂದು ಕಟುವಾಗಿ ಪ್ರಶ್ನಿಸಿದರು. +ಕಾಂಗ್ರೆಸ್ಸಿಗರು ಸಾಕಷ್ಟು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಅಯ್ಯೋ ಎನ್ನಿಸುತ್ತಿದೆ. ಆಡಳಿತ ಪಕ್ಷದ ಶಾಸಕರು ತಲೆ ಎತ್ತಿ ಓಡಾಡಲು ಆಗುತ್ತಿಲ್ಲ. ಅಭಿವೃದ್ಧಿಗೆ ಹಣ ಕೊಡಿ ಎಂದು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. +ರಾಜ್ಯದ ಕಾಂಗ್ರೆಸ್‌‍ ಸರಕಾರವು ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದ್ದರೂ ಸಹ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ. ಮತ್ತೊಂದೆಡೆ ಅಭಿವೃದ್ಧಿ ಶೂನ್ಯತೆ ರಾಜ್ಯವನ್ನು ಕಾಡುವಂತಾಗಿದೆ. ಅಭಿವೃದ್ಧಿ ಇಲ್ಲದೆ ಶಾಸಕರು ತಲೆ ಎತ್ತಿಕೊಂಡು ಓಡಾಡಲು ಆಗುತ್ತಿಲ್ಲ ಎಂದು ವಿಶ್ಲೇಷಿಸಿದರು. +ರಾಜೀನಾಮೆಗೆ ಒತ್ತಾಯ:ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಸಂಬಂಧ ಹಣಕಾಸು ಸಚಿವರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜವಾಬ್ದಾರಿ ಹೊರಬೇಕು. ಈ ಸಂಬಂಧ ಶರಣಪ್ರಕಾಶ್‌ ಪಾಟೀಲ್‌‍, ನಿಗಮದ ಅಧ್ಯಕ್ಷರು ಕೂಡಲೇ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ಇದೇ 28ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಇದೇ ವೇಳೆ ವಿಜಯೇಂದ್ರ ತಿಳಿಸಿದರು. +ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಪೋಲಾಗಿದ್ದು ದುರ್ಬಳಕೆಯಾಗಿದೆ. ಕಾಂಗ್ರೆಸ್‌‍ ಸರಕಾರವು ಈ ಹಣವನ್ನು ದೋಚಿದೆ ಎಂದು ಟೀಕಿಸಿದರು.ಕರ್ನಾಟಕ ರಾಜ್ಯ ಸರಕಾರವು ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಆಕ್ಷೇಪಿಸಿದ ಅವರು, ನಿಗಮದ ಹಗರಣ ಸಂಬಂಧ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯ ಪತ್ರದನ್ವಯ ಸಿಬಿಐ ತನಿಖೆ ನಡೆಯುತ್ತಿದೆ. ರಾಜ್ಯ ಸರಕಾರ ಆತುರಾತುರವಾಗಿ ಎಸ್‌‍ಐಟಿಯನ್ನೂ ರಚಿಸಿ ತಮಗೆ ಬೇಕಾದಂತೆ ತನಿಖೆ ನಡೆಸುತ್ತಿದೆ ಎಂದು ಆರೋಪಿಸಿದರು. +ಎಸ್‌‍ಐಟಿ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಅಲ್ಲಿ-ಇಲ್ಲಿ ಅಧಿಕಾರಿ ಮನೆಯಲ್ಲಿ ಒಂದಷ್ಟು ಹಣ ಲಭಿಸಿದೆ ಎನ್ನುವ ಮೂಲಕ ಕಣ್ಣೊರೆಸುವ ತಂತ್ರವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂದು ದೂರಿದರು. +ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ತೆಲಂಗಾಣಕ್ಕೆ ಬೇನಾಮಿ ಖಾತೆಗೆ ಹಣ ವರ್ಗಾವಣೆ ಮಾಡಿ ವಿತ್‌‍ಡ್ರಾ ಮಾಡಿದ್ದಾರೆ. ಈ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಹಿಂದೆಯೂ ಕಾಂಗ್ರೆಸ್‌‍ ಸರಕಾರ ಇದ್ದಾಗ ಇಂಥ ಅನೇಕ ಹಗರಣಗಳನ್ನು ಅವರದೇ ಎಸಿಬಿ ಮೂಲಕ ಮುಚ್ಚಿ ಹಾಕಿದ್ದರು ಎಂದು ಆರೋಪಿಸಿದರು. \ No newline at end of file diff --git a/eesanje/url_46_96_3.txt b/eesanje/url_46_96_3.txt new file mode 100644 index 0000000000000000000000000000000000000000..6ee7d2146484f0b212a3def7e78d268fe451e95f --- /dev/null +++ b/eesanje/url_46_96_3.txt @@ -0,0 +1,7 @@ +ಬಿಜೆಪಿ ರೈತರ ವಿರೋಧಿ : ಡಿಕೆಶಿ ವಾಗ್ದಾಳಿ +ಬೆಂಗಳೂರು, ಜೂ.26– ಬಿಜೆಪಿ ರೈತರ ವಿರೋಧಿ ಎಂದು ವಾಗ್ದಾಳಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಲಿನ ಬೆಲೆಯನ್ನು ಯಾರು, ಏನೇ ಹೇಳಲಿ ರೈತರ ಹಿತದೃಷ್ಟಿಯಿಂದ ಮತ್ತಷ್ಟು ಹೆಚ್ಚಿಸಬೇಕಿತ್ತು ಎಂದು ಪ್ರತಿಪಾದಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಹಾಲಿನ ಬೆಲೆಯನ್ನು ಏರಿಸುವುದರ ಮೂಲಕ ತಮ್ಮ ರೈತ ವಿರೋಧಿ ನಿಲುವನ್ನು ಬಯಲು ಮಾಡಿಕೊಂಡಿದ್ದಾರೆ. +ರೈತರು ಹಸುಗಳನ್ನು ಸಾಕಲಾರದೆ ಮಾರಾಟ ಮಾಡುತ್ತಿದ್ದಾರೆ. ಪ್ರತಿ ಪ್ಯಾಕೆಟ್‌ ಹಾಲಿನ ಬೆಲೆ 2 ರೂ. ಹೆಚ್ಚಿಸಿರುವುದನ್ನು ವಿವಾದ ಮಾಡಿ ಗೊಂದಲ ಮಾಡುತ್ತಿರುವವರು ರೈತರ ಸಂಕಷ್ಟಗಳನ್ನು ಒಮ್ಮೆ ಬಂದು ಕೇಳಲಿ ಎಂದು ತಿರುಗೇಟು ನೀಡಿದರು. +ಹಾಲಿನ ದರ ಹೆಚ್ಚಳದಿಂದ ರೈತರಿಗೆ ಲಾಭವಾಗಲಿದೆ. ಕೆಎಂಎಫ್‌ ಎಂದರೆ ಅದು ರೈತರ ಸಂಸ್ಥೆ. ಅಲ್ಲಿ ವರ್ತಕರು ಯಾರೂ ಇಲ್ಲ. ಬಿಜೆಪಿಯವರು ಉದ್ದೇಶಪೂರ್ವಕವಾಗಿ ವಿವಾದ ಮಾಡಿ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ರೈತರ ಹಿತರಕ್ಷಣೆಗಾಗಿ 2 ರೂ.ಗಿಂತಲೂ ಹೆಚ್ಚಾಗಿ ದರ ಹೆಚ್ಚಿಸಬೇಕಿತ್ತು ಎಂದರು. +ಪಶು ಆಹಾರದ ಬೆಲೆ ತೀವ್ರವಾಗಿದೆ. ಇದಕ್ಕೆ ತೆರಿಗೆ ಪದ್ಧತಿ ಕಾರಣ. ಬಿಜೆಪಿಯವರು ಇದರ ಬಗ್ಗೆ ಮಾತನಾಡುವುದಿಲ್ಲ. ಹಸು ಸಾಕಾಣಿಕೆ ದುಬಾರಿಯಾಗಿದೆ. ನೆರೆ ರಾಜ್ಯವಾದ ಮಹಾರಾಷ್ಟ್ರದಲ್ಲಿ ಪ್ರತೀ ಲೀಟರ್‌ಗೆ ಹಾಲಿನ ಬೆಲೆ ಎಷ್ಟಿದೆ ಎಂದು ಬಿಜೆಪಿಯವರಿಗೆ ಗೊತ್ತಿದೆಯೇ?, ಗುಜರಾತಿನ ಅಮೂಲ್‌ ಹಾಲಿನ ದರವೂ ನಮಗಿಂತ ಹೆಚ್ಚಿದೆ. ರೈತರಿಗೆ ಅನುಕೂಲ ಆಗುವುದನ್ನು ಬಿಜೆಪಿಯವರಿಂದ ಸಹಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ವಿವಾದ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. +ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್‌ಗಾಂಧಿ ಆಯ್ಕೆಯಾಗಿರುವುದರಿಂದ ದೇಶದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಅವಕಾಶವಾಗುತ್ತದೆ. ಜನರ ಬಯಕೆ ರಾಹುಲ್‌ಗಾಂಧಿ ವಿಪಕ್ಷ ನಾಯಕರಾಗಬೇಕು ಎಂಬುದಾಗಿತ್ತು. ಸೋನಿಯಾಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜನರ ಭಾವನೆಗಳಿಗೆ ಸ್ಪಂದಿಸಿ ರಾಹುಲ್‌ಗಾಂಧಿ ಜವಾಬ್ದಾರಿ ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಹೇಳುವುದಾಗಿ ತಿಳಿಸಿದರು. +ಮುಂದಿನ ದಿನಗಳಲ್ಲಿ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಉಳಿವಿಗೆ ರಾಹುಲ್‌ಗಾಂಧಿ ಹೋರಾಟ ನಡೆಸುವ ವಿಶ್ವಾಸವಿದೆ ಎಂದು ಹೇಳಿದರು. \ No newline at end of file diff --git a/eesanje/url_46_96_4.txt b/eesanje/url_46_96_4.txt new file mode 100644 index 0000000000000000000000000000000000000000..2f5ff4da6fe1c241f5ea4354240e553775c824de --- /dev/null +++ b/eesanje/url_46_96_4.txt @@ -0,0 +1,6 @@ +ಸಿಎಂ ಭದ್ರತಾ ವಾಹನಕ್ಕೆ ಅಡ್ಡಿಪಡಿಸಿದ ಬೈಕ್‌ ಸವಾರನ ವಿರುದ್ಧ ದೂರು +ಮೈಸೂರು,ಜೂ. 26-ಮುಖ್ಯಮಂತ್ರಿಗಳ ಕಾನ್‌ವೇ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್‌ ಸವಾರನ ವಿರುದ್ಧ ಮೈಸೂರಿನ ಕೆಆರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.ಜೂ.23ರಂದು ಮುಖ್ಯಮಂತ್ರಿಗಳ ಕಾನ್‌ವೇ ಏರ್‌ಪೋರ್ಟ್‌ನಿಂದ ನಜರ್‌ಬಾದ್‌ನಲ್ಲಿರುವ ರಿಫ್ರೆಷ್‌ ಮೆಂಟ್‌ ಕಡೆಗೆ ಸಾಗುತ್ತಿತ್ತು. +ಕಾನ್‌ವೇ ಸಾಗುವ ಹಾದಿಯಾದ ಮೈಸೂರು-ನಂಜನಗೂಡು ಹೆದ್ದಾರಿಯ ರಾಜಹಂಸ ಜಂಕ್ಷನ್‌ ಬಳಿ ಬ್ಯಾರಿಕೇಡ್‌ಗಳಮ್ಮಿ ಅಳವಡಿಸಿ ಗನ್‌ಹೌಸ್‌ ರಸ್ತೆಯಿಂದ ಬರುವ ವಾಹನಗಳನ್ನ ನಿಯಂತ್ರಿಸುವ ಕರ್ತವ್ಯದಲ್ಲಿ ಸಂಚಾರಿ ಸಿಬ್ಬಂದಿಗಳಾದ ಅಣ್ಣಯ್ಯ ಹಾಗೂ ಉಪೇಂದ್ರ ಅವರು ನಿರತರಾಗಿದ್ದರು. +ಈ ವೇಳೆ ಶಿವು ತನ್ನ ಯಮಹಾ ಬೈಕ್‌ನಲ್ಲಿ ಅತಿವೇಗವಾಗಿ ಹಾಗೂ ಅಜಾಗರೂಕತೆಯಿಂದ ಬರುತ್ತಿದ್ದ. ಇದನ್ನು ಗಮನಿಸಿದ ಅಣ್ಣಯ್ಯ ಹಾಗೂ ಉಪೇಂದ್ರ ಅವರು ಬೈಕ್‌ ನಿಲ್ಲಿಸುವಂತೆ ಸೂಚನೆ ನೀಡಿದರು. ಆದರೆ ಇದ್ಯಾವುದನ್ನೂ ಲೆಕ್ಕಿಸದ ಶಿವು ಕರ್ತವ್ಯ ನಿರತ ಪೊಲೀಸ್‌ ಸಿಬ್ಬಂದಿ ಉಪೇಂದ್ರ ಅವರಿಗೆ ಡಿಕ್ಕಿ ಹೊಡೆದು ನಂತರ ಬ್ಯಾರಿಕೇಡ್‌ಗಳನ್ನು ಭೇದಿಸಿ ಸಿಎಂ ಕಾನ್‌ವಾಯ್‌ ಬರುತ್ತಿದ್ದ ವಿರುದ್ಧ ದಿಕ್ಕಿನಲ್ಲಿ ಅತಿವೇಗವಾಗಿ ಚಲಿಸಿ ನಂತರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. +ಇದರಿಂದಾಗಿ ಸಿಎಂ ಕಾನ್‌ವೇ ಸುಗಮವಾಗಿ ಸಾಗಲು ಕೆಲಕಾಲ ಅಡಚಣೆಯಾಗಿದೆ. ಬೈಕ್‌ನಿಂದ ಬಿದ್ದು ಗಾಯಗೊಂಡ ಶಿವುನನ್ನು ಕಾನ್‌ವೇ ಜೊತೆ ಬರುತ್ತಿದ್ದ ಅಂಬ್ಯುಲ್ಸೆ್‌ ಮೂಲಕ ಗೋಪಾಲಗೌಡ ಆಸ್ಪತ್ರೆಗೆ ಸಾಗಿಸಲಾಗಿದೆ. +ಸಿಎಂ ಕಾನ್‌ವೇಗೆ ಅಡ್ಡಿಪಡಿಸಿ ಕರ್ತವ್ಯ ನಿರತ ಪೊಲೀಸ್‌ಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಿವು ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸಂಚಾರಿ ಪೇದೆ ಅಣ್ಣಯ್ಯ ಕೆಆರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. \ No newline at end of file diff --git a/eesanje/url_46_96_5.txt b/eesanje/url_46_96_5.txt new file mode 100644 index 0000000000000000000000000000000000000000..263b785728873717749e4171f31edfd85b5d2605 --- /dev/null +++ b/eesanje/url_46_96_5.txt @@ -0,0 +1,5 @@ +ರಾಜ್ಯದಲ್ಲಿ ತಿಂಗಳ ಅಂತ್ಯದವರೆಗೆ ಮುಂದುವರೆಯಲಿದೆ ಮಳೆ +ಬೆಂಗಳೂರು, ಜೂ.26-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ.ಹವಾಮಾನ ಮುನ್ಸೂಚನೆ ಪ್ರಕಾರ, ಜೂನ್‌ ತಿಂಗಳ ಅಂತ್ಯದವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. +ಅರಬ್ಬಿ ಸಮುದ್ರದಲ್ಲಿ ಟ್ರಬ್‌ ನಿರ್ಮಾಣವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದೆ. ಇದರಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಕೆಲವೆಡೆ ಹೊರತುಪಡಿಸಿ ರಾಜ್ಯದಲ್ಲಿ ಭಾರಿ ಮಳೆಯಾಗಿಲ್ಲ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ. +ರಾಜ್ಯದಲ್ಲಿ ಕಳೆದ ಒಂದು ವಾರದಿಂದಲೂ ಭಾರಿ ಮಳೆ ಮುನ್ನೆಚ್ಚರಿಕೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಕೆಲವೆಡೆ 2 ವಾರಗಳಿಂದಲೂ ಮಳೆಯಾಗಿಲ್ಲ. ಕೆಲವೆಡೆ ಮಾತ್ರ ಉತ್ತಮ ಮಳೆಯಾಗಿದ್ದು, ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ.ಮೋಡದ ಜೊತೆಗೆ ಬಲವಾದ ಮೇಲೈ ಗಾಳಿ ಬೀಸುತ್ತಿದೆ. ಹೀಗಾಗಿ ರಾಜ್ಯದ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ವಿರಳ ಎಂದು ತಜ್ಞರು ಹೇಳಿದ್ದಾರೆ. \ No newline at end of file diff --git a/eesanje/url_46_96_6.txt b/eesanje/url_46_96_6.txt new file mode 100644 index 0000000000000000000000000000000000000000..8cfafcc8abc015e709c653ba26b576e58e6883d7 --- /dev/null +++ b/eesanje/url_46_96_6.txt @@ -0,0 +1,6 @@ +ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ : ಗೃಹಸಚಿವ ಪರಮೇಶ್ವರ್‌ +ಬೆಂಗಳೂರು, ಜೂ.26-ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ತನಿಖೆಯ ಬಳಿಕ ಸತ್ಯಾಸತ್ಯ ಆಧರಿಸಿ ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ದಾಖಲಿಸಿದ ಬಳಿಕ ತನಿಖೆ ನಡೆಸಲಾಗುತ್ತದೆ. ಅವರ ಪಾತ್ರ ಇರುವುದು ಕಂಡುಬಂದರೆ ಸೂಕ್ತ ಕಾನೂನು ಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಸ್ಪಷ್ಟಪಡಿಸಿದರು. +ತುಮಕೂರಿನಿಂದ ಪೈಪ್‌ಲೈನ್‌ ಮೂಲಕ ಹೇಮಾವತಿ ನೀರು ಸರಬರಾಜು ಮಾಡುವ ಯೋಜನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರಿಗೆ ಯಾವ ನದಿಯಿಂದಾದರೂ ನೀರು ತೆಗೆದುಕೊಂಡು ಹೋಗಬಹುದು. ಇದಕ್ಕೆ ಯಾವುದೇ ಅಡಚಣೆ ಇರುವುದಿಲ್ಲ. ಕೃಷ್ಣದಿಂದ ಕಾವೇರಿಗೆ, ಕಾವೇರಿಯಿಂದ ಕೃಷ್ಣಗೆ ನೀರು ತೆಗೆದುಕೊಂಡು ಹೋಗಲು ಅವಕಾಶವಿದೆ. ಹಾಗಾಗಿ ಮಾಗಡಿ ಶಾಸಕ ಬಾಲಕೃಷ್ಣ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ. +ಯೋಜನೆ ವಿವಾದಕ್ಕೆ ಗುರಿಯಾಗಿದೆ. ಇದನ್ನು ಸರಿಪಡಿಸಲು ನಾವೆಲ್ಲಾ ಪ್ರಯತ್ನಿಸುತ್ತಿದ್ದೇವೆ. ನೀರಾವರಿ ಸಚಿವರು ಸಭೆ ಕರೆದಿದ್ದು, ಜಿಲ್ಲೆಯ ಜನರಿಗೆ ದೊರೆಯಬೇಕಾದ ನೀರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸುವುದಾಗಿ ಭರವಸೆ ನೀಡಿದ್ದಾರೆ. +ತಾಂತ್ರಿಕವಾಗಿ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಚರ್ಚೆಗಳಾಗುತ್ತಿವೆ. ಈ ಬಗ್ಗೆ ತಾಂತ್ರಿಕ ಸಮಿತಿ ರಚಿಸುವಂತೆ ಜಿಲ್ಲೆಯ ಶಾಸಕರು ಒತ್ತಾಯಿಸಿದರು. ಸಚಿವರು ಅದಕ್ಕೆ ಒಪ್ಪಿಗೆ ಸೂಚಿಸಿದರು. ಸಮಿತಿ ರಚಿಸಿ ಹೊರಗೆ ನಡೆದ ಬಳಿಕ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಬೇಕು ಎಂದು ನಾವು ಪರಿಶೀಲಿಸುತ್ತೇವೆ ಎಂದು ಹೇಳಿದರು. \ No newline at end of file diff --git a/eesanje/url_46_96_7.txt b/eesanje/url_46_96_7.txt new file mode 100644 index 0000000000000000000000000000000000000000..041fe5c54985430ca027dce02787551eb6345322 --- /dev/null +++ b/eesanje/url_46_96_7.txt @@ -0,0 +1,9 @@ +ಆಸ್ತಿ ವಿಚಾರಕ್ಕೆ ವಿಚ್ಛೇದಿತ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ-ಮಗ..! +ಶಿಡ್ಲಘಟ್ಟ, ಜೂ.26-ವಿಚ್ಛೇದಿತ ಪತ್ನಿಯನ್ನು ಪತಿ ಹಾಗೂ ಆತನ ಎರಡನೆ ಪತ್ನಿಯ ಪುತ್ರ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಸೊಣ್ಣೆನಹಳ್ಳಿ ಗ್ರಾಮದಲ್ಲಿ ಬೆಳಿಗ್ಗೆ ನಡೆದಿದೆ.ಪದ್ಮಮ್ಮ ( 45) ಭೀಕರವಾಗಿ ಕೊಲೆಯಾದ ಮಹಿಳೆ. +ಮೃತಳ ಪತಿ ಮುನಿರೆಡ್ಡಿ (58) ಕೊಲೆ ಮಾಡಿದ ನಂತರ ಸ್ವತಃ ಪೊಲೀಸರಿಗೆ ಶರಣಾಗಿದ್ದಾನೆ. ಕೊಲೆಯಲ್ಲಿ ಭಾಗಿಯಾದ ಮುನಿರೆಡ್ಡಿಯ ಮತ್ತೊಬ್ಬ ಪತ್ನಿಯ ಪುತ್ರ (20) ಗಿರೀಶ್‌ ತಲೆ ಮರೆಸಿಕೊಂಡಿದ್ದಾನೆ.ಮುನಿರೆಡ್ಡಿ ಹಾಗೂ ಪದ್ಮಮ್ಮ ನಡುವೆ ಕೌಟುಂಬಿಕ ವಿಚಾರವಾಗಿ ಗಲಾಟೆ ನಡೆದು ಇಬ್ಬರೂ ವಿಚ್ಛೇದನ ಪಡೆದು ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪದ್ಮಮ್ಮಗೆ ಇಬ್ಬರು ಪುತ್ರರಿದ್ದರು. ಇಬ್ಬರೂ ಪುತ್ರರೂ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟಿದ್ದು, ಒಬ್ಬಂಟಿಯಾಗಿ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದಳು. +ವಿಚ್ಛೇದನ ಪಡೆದ ಮುನಿರೆಡ್ಡಿ ಮತ್ತೊಂದು ಮದುವೆಯಾಗಿದ್ದು, ಒಂದು ಹೆಣ್ಣು ಒಂದು ಹಾಗೂ ಒಂದು ಗಂಡು ಮಗು ಇದೆ. ಈ ಮಧ್ಯೆ ಪದ್ಮಮ್ಮಳಿಗೆ ಜೀವನಾಂಶಕ್ಕಾಗಿ ನೀಡಿದ ಜಮೀನನ್ನು ವಾಪಸ್‌ ಮಾಡುವಂತೆ ಮುನಿರೆಡ್ಡಿ ತಗಾದೆ ತೆಗೆದಿದ್ದಾನೆ ಎನ್ನಲಾಗಿದೆ. +ನಿನಗೆ ಮಕ್ಕಳಿಲ್ಲವಲ್ಲ ಜಮೀನು ಇಟ್ಟುಕೊಂಡು ಏನು ಮಾಡ್ತೀಯಾ ಎಂದು ಜಮೀನು ವಾಪಸ್‌ ಮಾಡು ಎಂದು ಆಗಾಗ್ಗೆ ಪೀಡಿಸುತ್ತಿದ್ದು, ಇದು ಪದ್ಮಮ್ಮ ಮತ್ತು ಮುನಿರೆಡ್ಡಿ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿತ್ತು. +ಮುನಿರೆಡ್ಡಿ ಹಾಗೂ ಆತನ ಮಗ ಗಿರೀಶ್‌ ಬೆಳಗ್ಗೆಯೇ ಪದ್ಮಮ್ಮಳ ಮನೆಗೆ ತೆರಳಿದ್ದು, ಶೌಚ ಕಾರ್ಯ ಮುಗಿಸಿ ಮನೆಯೊಳಗೆ ಬಂದ ಪದ್ಮಮ್ಮಳ ಮೇಲೆ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಪದ್ಮಮ್ಮ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. +ಘಟನೆ ನಂತರ ಗಿರೀಶ್‌ ತಲೆ ಮರೆಸಿಕೊಂಡಿದ್ದು, ಮುನಿರೆಡ್ಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಅಲ್ಲಿಂದ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಆರೋಪಿ ಮುನಿರೆಡ್ಡಿಯನ್ನು ಕರೆ ತರಲಾಗಿದೆ. +ವಿಷಯ ತಿಳಿಯುತ್ತಿದ್ದಂತೆ ಸಿಪಿಐ ಎಂ.ಶ್ರೀನಿವಾಸ್‌, ಗ್ರಾಮಾಂತರ ಠಾಣೆ ಎಸ್‌ಐ ಸತೀಶ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆರಳಚ್ಚು ತಜ್ಞರ ತಂಡ ಆಗಮಿಸಿ ಪರಿಶೀಲಿಸಿದೆ. ನಗರದಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. +ಎಸ್‌ಪಿ ಡಿ.ಎಲ್‌‍.ನಾಗೇಶ್‌, ಎಎಸ್‌ಪಿ ರಾಜ ಇಮಾಮ್‌ ಖಾಸಿಂ, ಡಿವೈಎಸ್‌ಪಿ ಮುರಳೀಧರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_96_8.txt b/eesanje/url_46_96_8.txt new file mode 100644 index 0000000000000000000000000000000000000000..6e719b399176064875e611ba553361dc92e5d9fe --- /dev/null +++ b/eesanje/url_46_96_8.txt @@ -0,0 +1,6 @@ +ಬೇವಿನ ಮರದಲ್ಲಿ ಜಿನುಗಿದ ಹಾಲು, ಪೂಜೆ ಮಾಡಲು ಮುಗಿಬಿದ್ದ ಜನ +ಗೌರಿಬಿದನೂರು, ಜೂ.26-ನಗರದ ಬೈಪಾಸ್‌ ರಸ್ತೆಯ ವಿನಾಯಕ ವೃತ್ತದ ಬಳಿ ರಸ್ತೆಯ ಬದಿಯಲ್ಲಿನ ಬೇವಿನ ಮರವೊಂದರಲ್ಲಿ ಹಾಲು ಬರುತ್ತಿದ್ದು, ಈ ವಿಸ್ಮಯ ನೋಡಲು ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದು, ಮರಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ. +ವಿನಾಯಕ ವೃತ್ತದ ಡಿ.ಪಾಳ್ಯ ರಸ್ತೆಯ ಬದಿಯಲ್ಲಿನ ಬೇವಿನ ಮರದ ರೆಂಬೆಯಿಂದ ಬೆಳಗಿನ ಜಾವದಿಂದ ಒಂದೇ ಸಮನೆ ಮರದಲ್ಲಿ ಹಾಲು ಜಿನುಗುತ್ತಿದ್ದು, ಈ ಸುದ್ದಿ ನಗರದೆಲ್ಲೆಡೆ ಹಬ್ಬಿ ಬೇವಿನ ಮರದಲ್ಲಿ ಹಾಲು ಬರುವುದನ್ನು ವೀಕ್ಷಿಸಲು ಮುಗಿಬಿದ್ದರು. +ಸಂಕಷ್ಟಹರ ಚತುರ್ಥಿ ದಿನದಂದೇ ಈ ಘಟನೆ ನಡೆಯುತ್ತಿರುವುದು ವಿಶೇಷ ಎಂದು ಕೆಲವರು ಈ ಹಾಲನ್ನು ಕೈಯಲ್ಲಿ ಹಿಡಿದು ಕುಡಿಯುತ್ತಿದ್ದರು. ಇನ್ನು ಮಹಿಳೆಯರು ಇದೊಂದು ಪವಾಡ ಎಂದು ವಿಶೇಷ ಪೂಜೆ ಸಲ್ಲಿಸಿ ಭಕ್ತಿಯಿಂದ ಮೆರೆದರು. +ಎಲ್ಲ ಮರಗಳಲ್ಲಿನ ಬೇರುಗಳು ನೀರನ್ನು ಭೂಮಿಯಿಂದ ಮೇಲಕ್ಕೆ ತೆಗೆದುಕೊಂಡು ಹೋಗಲು ಸಹಾಯ ಮಾಡುತ್ತವೆ. ಇದರಲ್ಲಿ ಇರುವ ಕೋಶಗಳು ಮರದ ಎಲ್ಲ ರಂಬೆ ಕೊಂಬೆಗಳಿಗೆ ನೀರನ್ನು ರವಾನಿಸುತ್ತವೆ. ಹೀಗೆ ನೀರು ಪೂರೈಸುವ ಕೋಶಗಳು ಅಪರೂಪಕ್ಕೆ ಎಂಬಂತೆ ನಾಶವಾದಾಗ , ಇಂಥ ಘಟನೆಗಳು ನಡೆಯುತ್ತವೆ. +ಹೀಗೆ ಕೋಶಗಳು ತನ್ನ ಕ್ರಿಯೆಯನ್ನು ಕಡಿಮೆ ಮಾಡಿದಾಗ ಮರದ ಒಳಗಿರುವ ನೀರಿನ ಅಂಶ ಹೊರಗೆ ಬರುತ್ತದೆ. ಸಹಜವಾಗಿ ಮರದಲ್ಲಿ ಬುರುಗು ಇರುವುದರಿಂದ ಬುರುಗು ಮಿಶ್ರಿತ ನೀರು ಹಾಲಾಗಿ ಕಾಣುತ್ತದೆ. ಅಲ್ಲದೆ, ಕೋಶಗಳು ನಾಶವಾಗಿರುವುದರಿಂದ ಸಹಜವಾಗಿ ನೀರನ್ನು ಮೇಲೆಕ್ಕೆ ಒಯ್ಯಲಾಗದೆ ನೀರು ಹಾಲಿನಂತಾಗಿ ಜಿನುಗತ್ತದೆ. ಜೊತೆಗೆ ಹವಾಮಾನ ವೈಪರೀತ್ಯವೂ ಸಹ ಈ ಪ್ರಕ್ರಿಯೆಗೆ ಕಾರಣವಾಗಿದೆ ಎನ್ನುತ್ತಾರೆ ಜೀವಶಾಸ ಉಪನ್ಯಾಸಕ ಟಿ.ಜಯರಾಂಮ್‌. \ No newline at end of file diff --git a/eesanje/url_46_96_9.txt b/eesanje/url_46_96_9.txt new file mode 100644 index 0000000000000000000000000000000000000000..3bf538c8b66076cee8507e5d1c8489b9bd43d463 --- /dev/null +++ b/eesanje/url_46_96_9.txt @@ -0,0 +1,8 @@ +ಹಾಲಿನ ದರ ಹೆಚ್ಚಳ ಮಾಡಿಲ್ಲ, ಹೆಚ್ಚುವರಿ ಹಾಲಿಗೆ 2 ರೂ. ಹೆಚ್ಚಿಸಲಾಗಿದೆ ಅಷ್ಟೇ : ಸಿಎಂ ಸ್ಪಷ್ಟನೆ +ನಂದಿನ ಹಾಲಿನ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್‌ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಅರ್ಧಲೀಟರ್‌ ಹಾಲಿನ ಪ್ಯಾಕೇಟ್‌ ನಲ್ಲಿ ಮುಂದೆ 550 ಎಂಎಲ್‌ ಹಾಲು ಹಾಗೂ ಲೀಟರ್‌ ಪ್ಯಾಕೇಟ್‌ ನಲ್ಲಿ 1,050 ಎಂಎಲ್‌ ಹಾಲು ಸಿಗಲಿದೆ. ಹಾಲಿನ ದರ ಹೆಚ್ಚಳವಾಗಿಲ್ಲ ಎಂದು ಅವರು ಹೇಳಿದ್ದಾರೆ. +ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ರೈತರು ಹೆಚ್ಚುವರಿಯಾಗಿ ತರುತ್ತಿರುವ ಹಾಲನ್ನು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಕೆಎಂಎಫ್‌ ಸಂಸ್ಥೆ ಪ್ಯಾಕೇಟ್‌ ಗಳಲ್ಲಿ ಹಾಲಿನ ಪ್ರಮಾಣವನ್ನು ಹೆಚ್ಚಳ ಮಾಡುವ ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ. +ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್‌ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್‌ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಒಂದು ಲೀಟರ್‌ ಹಾಲಿನ ಪ್ಯಾಕೇಟಿಗೆ ಹೆಚ್ಚುವರಿಯಾಗಿ 50 ಮಿ.ಲೀ ಹಾಲನ್ನು ಸೇರಿಸಿ, ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ. +ಈವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್‌ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್‌ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವ ಸದುದ್ದೇಶವನ್ನು ಹೊಂದಿದೆ ಎಂದು ಅವರು ಹೇಳಿದ್ದಾರೆ. +ಈಗಾಗಲೇ ಗರಿಷ್ಟ ಪ್ರಮಾಣದ ಹಾಲನ್ನು ಹಾಲಿನ ಪೌಡರ್‌ ತಯಾರಿಕೆ ಮಾಡುವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತಿದೆ. ನಿತ್ಯ ಸುಮಾರು 30 ಲಕ್ಷ ಲೀಟರ್‌ ಹಾಲು ಪೌಡರ್‌ ತಯಾರಿಕೆಗಾಗಿ ಬಳಸಲ್ಪಡುತ್ತಿದ್ದು, 250 ಮೆಟ್ರಿಕ್‌ ಟನ್‌ ಹಾಲಿನ ಪೌಡರ್‌ ತಯಾರಿಸಲಾಗುತ್ತಿದೆ. ಇದು ಹಾಲಿನ ಪೌಡರ್‌ ಗೆ ಇರುವ ಬೇಡಿಕೆಗೆ ಅನುಗುಣವಾಗಿದೆ. +ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ರಾಜ್ಯದಲ್ಲಿ ನಿತ್ಯ ಸರಾಸರಿ 72 ಲಕ್ಷ ಲೀಟರ್‌ ಗಳಷ್ಟು ಹಾಲು ಸಂಗ್ರಹವಾಗುತ್ತಿತ್ತು. ಈ ಹಿಂದೆ ಹಾಲಿನ ಬೆಲೆಯಲ್ಲಿ ರೂ.3 ಹೆಚ್ಚಳ ಮಾಡಿ ಆ ಹೆಚ್ಚುವರಿ ಹಣವನ್ನು ರೈತರಿಗೆ ನೇರವಾಗಿ ವರ್ಗಾಯಿಸುವ ಪ್ರೋತ್ಸಾಹದಾಯಕ ಕ್ರಮ ಕೈಗೊಂಡಿದ್ದರಿಂದ ಹೈನೋದ್ಯಮವು ಹಿಂದಿಗಿಂತ ಲಾಭ ತಂದುಕೊಡುವ ಉದ್ಯೋಗವಾಯಿತು ಜೊತೆಗೆ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಾನುವಾರುಗಳಿಗೆ ಹಸಿರು ಮೇವು ಲಭ್ಯವಾಗುತ್ತಿದೆ. ಈ ಎರಡು ಕಾರಣಗಳಿಂದಾಗಿ ರಾಜ್ಯದಲ್ಲಿ ಹಾಲಿನ ಉತ್ಪಾದನೆ ಇಂದು ನಿತ್ಯ ಸರಿಸುಮಾರು 1 ಕೋಟಿ ಲೀಟರ್‌ ತಲುಪುವ ಹಂತಕ್ಕೆ ಬಂದಿದೆ ಎಂದು ಅವರು ವಿವರಿಸಿದ್ದಾರೆ. +ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಹಾಲನ್ನು ರೈತರಿಂದ ಖರೀದಿಸಿ, ಗ್ರಾಹಕರಿಗೂ ಹೊರೆಯಾಗದ ರೀತಿಯಲ್ಲಿ ಮಾರಾಟ ಮಾಡುವ ಸಲುವಾಗಿ ಕೆ.ಎಂ.ಎಫ್‌ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_46_97_1.txt b/eesanje/url_46_97_1.txt new file mode 100644 index 0000000000000000000000000000000000000000..ebb951f531fa567c2190da3f20bba0cf3a6fe88a --- /dev/null +++ b/eesanje/url_46_97_1.txt @@ -0,0 +1,4 @@ +ಡಿಕೆಶಿಗೆ ಅವರಿಗೆ ನಾನು ಆಭಾರಿಯಾಗಿದ್ದೇನ : ಎಚ್‌ಡಿಕೆ ವ್ಯಂಗ್ಯ +ನವದೆಹಲಿ, ಜೂ.25-ಜನರ ಕುಂದು-ಕೊರತೆ ಆಲಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಚನ್ನಪಟ್ಟಣ ಪ್ರವಾಸ ಕೈಗೊಂಡಿರುವುದಕ್ಕೆ ಆಭಾರಿಯಾಗಿದ್ದೇನೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಶಿವಕುಮಾರ್‌ ಹೋಗಿದ್ದಾರೆ. +ಜನರ ಸಂಕಷ್ಟ ಏನೆಂಬುದನ್ನು ಕೇಳಲಿ. ನಾನು ರಾಜಕಾರಣಕ್ಕೆ ಬಂದಿದ್ದು ತಡವಾಗಿದೆ ನಿಜ. ಕುಮಾರಸ್ವಾಮಿ ಅವರಿಗಿಂತ ನಾನೇ ಹಿರಿಯ ಎಂದು ಶಿವಕುಮಾರ್‌ ಹೇಳಿದ್ದಾರೆ ಎಂದರು.ಚನ್ನಪಟ್ಟಣ ಮತ್ತು ನನ್ನ ನಡುವಿನ ಸಂಬಂಧ ಈಗ ಪ್ರಾರಂಭವಾಗಿಲ್ಲ. ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು 1985ರಲ್ಲಿ ಸ್ಪರ್ಧಿಸಿದಾಗ ನಾನು ಚುನಾವಣೆ ಉಸ್ತುವಾರಿ ವಹಿಸಿದೆ. +ಆಗ ದೇವೇಗೌಡರ ಬದಲು ನಾನೇ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದರೆ, 1989ರಲ್ಲಿ ಶಿವಕುಮಾರ್‌ ಶಾಸಕರಾಗುತ್ತಿರಲಿಲ್ಲ ಎಂದು ಹೇಳಿದರು.ನಮ್ಮ ತಂದೆಯವರು ತೆರವು ಮಾಡಿದ ಸಾತನೂರು ಕ್ಷೇತ್ರದ ಸ್ಪರ್ಧೆಗೆ ಒಪ್ಪಿಗೆ ಕೊಟ್ಟಿದ್ದರೆ ನಾನೇ ಸ್ಪರ್ಧೆ ಮಾಡಿ ಶಾಸಕನಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್‌‍ ಪಕ್ಷದ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು. \ No newline at end of file diff --git a/eesanje/url_46_97_10.txt b/eesanje/url_46_97_10.txt new file mode 100644 index 0000000000000000000000000000000000000000..00faae213558fd7306325702460830d732b7c3d9 --- /dev/null +++ b/eesanje/url_46_97_10.txt @@ -0,0 +1,7 @@ +ಜಿ.ಪಂ., ತಾ.ಪಂ. ಚುನಾವಣೆ ವಿಳಂಬ : ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸಿದ ಚುನಾವಣಾ ಆಯೋಗ +ಬೆಂಗಳೂರು,ಜೂ.25-ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಽಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲು ಅಂತಿಮಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದೆ. +ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ನಿನ್ನೆ ವಿಚಾರಣೆ ನಡೆಸಿದ್ದು, ಸರ್ಕಾರ ತನ್ನ ವಾದ ಮಂಡಿಸಲು ಕಾಲಾವಕಾಶ ಕೋರಿದೆ. ಅದರಂತೆ ಹೈಕೋರ್ಟ್‌ ಅರ್ಜಿ ವಿಚಾರಣೆಯನ್ನು ಜುಲೈ 11ಕ್ಕೆ ಮುಂದೂಡಿದೆ. +ಅರ್ಜಿ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರವಾದ ಮಂಡಿಸಿದ ಹಿರಿಯ ವಕೀಲ ಕೆ.ಎನ್‌.ಣೀಂದ್ರ, ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ. ಆದ್ದರಿಂದ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. +ಈ ವೇಳೆ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ, ಈ ವಿಚಾರವಾಗಿ ಅಡ್ವಕೇಟ್‌ ಜನರಲ್‌ ವಾದ ಮಂಡಿಸಲಿದ್ದಾರೆ. ಹಾಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಮನವಿ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.11ಕ್ಕೆ ಮುಂದೂಡಿತು. +ಭರವಸೆ ನೀಡಿದ್ದ ಸರ್ಕಾರ:ಈ ಹಿಂದೆ ಶೀಘ್ರವಾಗಿ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಯನ್ನು ಡಿಸೆಂಬರ್‌ 19ರಂದು ಪ್ರಕಟಿಸಲಾಗುವುದು. ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆಯ ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು. ಅದಾದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಽಸೂಚನೆ ಹೊರಡಿಸಲಾಗುವುದು ಎಂದು ಹೈಕೋರ್ಟ್‌ಗೆ ಭರವಸೆ ನೀಡಿತ್ತು. +ಅಲ್ಲದೇ, ಮೀಸಲು ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುವುದು. ಅದಾದ ಎರಡು ವಾರಗಳಲ್ಲಿ ಮೀಸಲಾತಿ ಅಂತಿಮಗೊಳಿಸಲಾಗುವುದು ಎಂದು ರಾಜ್ಯಸರ್ಕಾರ 2023 ರ ಡಿ.19 ರಂದು ಉಚ್ಛ ನ್ಯಾಯಾಲಯಕ್ಕೆ ಭರವಸೆ ನೀಡಿತ್ತು. ಭರವಸೆಯಂತೆ ನಡೆದುಕೊಳ್ಳದಿದ್ದರೆ ಚುನಾವಣಾ ಆಯೋಗ ನ್ಯಾಯಾಲಯದ ಮೊರೆ ಹೋಗಬಹುದು ಎಂದು ಹೇಳಿತ್ತು. \ No newline at end of file diff --git a/eesanje/url_46_97_11.txt b/eesanje/url_46_97_11.txt new file mode 100644 index 0000000000000000000000000000000000000000..214981c884e5df2f122bceb4fbdfef326f518041 --- /dev/null +++ b/eesanje/url_46_97_11.txt @@ -0,0 +1,8 @@ +“ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ” +ಮಂಗಳೂರು, ಜೂ.25-ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ನಡೆಯುತ್ತಿರುವ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ. ಅದಕ್ಕೆ ನಾನೇಕೆ ಅಡ್ಡಿಪಡಿಸಲಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವಾಗಿ ಚರ್ಚೆಯಾಗಿದೆ. ಪ್ರಚಾರ ಸಿಗುತ್ತದೆ. ಹೀಗಾಗಿ ಈ ಬಗ್ಗೆ ಎಲ್ಲರೂ ಪ್ರತಿಕ್ರಿಯೆ ನೀಡುತ್ತಾರೆ. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಅಗತ್ಯತೆ ಇದೆಯೋ, ಇಲ್ಲವೋ ಎಂಬ ಬಗ್ಗೆ ಪಕ್ಷ ನಿರ್ಧರಿಸುತ್ತದೆ. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಲಿದ್ದಾರೆ ಎಂದು ಹೇಳಿದರು. +ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡದೊಡ್ಡವರು ಶಾಸಕರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾನು ಆ ಜಿಲ್ಲೆಯವನು. ಈ ಮೊದಲು ನಾನು ಸ್ಪರ್ಧಿಸಿದ್ದ ಸಾತನೂರು ಕ್ಷೇತ್ರದ ಬಹುಭಾಗ ಚನ್ನಪಟ್ಟಣ ತಾಲ್ಲೂಕಿಗೆ ಸೇರಿತ್ತು. ಜನ ಅವಕಾಶ ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ಸಹಾಯ ಮಾಡಬೇಕೆಂಬುದು ತಮ ಇರಾದೆ ಎಂದರು. +ಬಡವರಿಗೆ ಸಹಾಯ ಮಾಡುವುದು ನಮ ಉದ್ದೇಶ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ ಸಹೋದರನಿಗೆ ಆಸಕ್ತಿಯಿಲ್ಲ. ಜನ ವಿಶ್ರಾಂತಿ ಪಡೆಯಲು ಆದೇಶ ನೀಡಿದ್ದಾರೆ. ಅದರಂತೆ ವಿಶ್ರಾಂತಿಯಲ್ಲಿದ್ದಾರೆ. ಅಭ್ಯರ್ಥಿ ಯಾರು ಎಂಬುದನ್ನು ಪಕ್ಷ ನಿರ್ಧರಿಸಲಿದೆ.ಡಿ.ಕೆ.ಸುರೇಶ್‌ರವರು ಪಕ್ಷದ ಕೆಲಸ ಮಾಡಬೇಕು ಎಂಬ ಆಸಕ್ತಿ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 80 ಸಾವಿರ ಮತ ನೀಡಿದ್ದಾರೆ. ಹೀಗಾಗಿ ನಂಬಿದವರ ಕೈಬಿಡಬಾರದು ಎಂಬುದು ನಮ ಉದ್ದೇಶ ಎಂದರು. +ಯಾವತ್ತೂ ಇಲ್ಲದವರು ಈಗ ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ ಎಂದು ಎಚ್‌.ಡಿ.ಕುಮಾರಸ್ವಾಮಿಯವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣ ನೋಡುವ ಮೊದಲೇ ನಾನು ನೋಡಿದ್ದೇನೆ. ಅವರಿಗಿಂತ ಮೊದಲೇ ನಾನು ರಾಜಕೀಯಕ್ಕೆ ಬಂದವನು. +1985 ರಲ್ಲಿ ನಾನು ಕುಮಾರಸ್ವಾಮಿಯವರ ತಂದೆ ಎಚ್‌.ಡಿ.ದೇವೇಗೌಡರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. 1995 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು ಎಂದು ಹೇಳಿದ್ದಾರೆ.ನಾವು ಹಿಂದೂ ಧರ್ಮ ಪಾಲನೆ ಮಾಡುತ್ತೇವೆ. ಧರ್ಮ, ಸಂಸ್ಕೃತಿ ಪಾಲನೆ ನಮ ಹಕ್ಕು. ಹೀಗಾಗಿ ಕುಟುಂಬ ಸಮೇತರಾಗಿ ಸುಬ್ರಹಣ್ಯ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_97_12.txt b/eesanje/url_46_97_12.txt new file mode 100644 index 0000000000000000000000000000000000000000..e5423806838e8532643211ea5b25a3a5754c8454 --- /dev/null +++ b/eesanje/url_46_97_12.txt @@ -0,0 +1,5 @@ +ರಾಮನಗರಕ್ಕೆ ಕಾವೇರಿ ನೀರಿನ ಕನಸು ನನಸಾಗಿದೆ : ಹೆಚ್ಡಿಕೆ +ಬೆಂಗಳೂರು, ಜೂ.25– ರಾಮನಗರ ಜಿಲ್ಲೆಗೆ ಕಾವೇರಿ ನದಿಯಿಂದ ಕುಡಿಯುವ ನೀರು ಪೂರೈಸುವ ಕನಸು ನನಸಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಮನಗರ ಜಿಲ್ಲೆಗೆ ಕಾವೇರಿ ತಾಯಿ ಪದಾರ್ಪಣೆ ಮಾಡಿದ್ದಾಳೆ. ಈ ನೆಲದ ಜನರ ಕನಸು ನನಸಾಗಿದೆ ಎಂದು ಹೇಳಿದ್ದಾರೆ. +ಕಳೆದ 2018ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ 458 ಕೋಟಿ ರೂ. ವೆಚ್ಚದಲ್ಲಿ ಟಿ.ಕೆ.ಹಳ್ಳಿಯಿಂದ ರಾಮನಗರ ಜಿಲ್ಲೆಗೆ ಕಾವೇರಿ ನೀರು ಪೂರೈಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ನೀಡಿದ್ದೆ. +ಈ ಯೋಜನೆ ಇದೀಗ ಸಾಕಾರಗೊಂಡಿದ್ದು, ಪ್ರಾಯೋಗಿಕವಾಗಿ ಬೋಳಪ್ಪನಹಳ್ಳಿ ಗುಡ್ಡಕ್ಕೆ ಕಾವೇರಿ ನೀರು ಹರಿದು ಬಂದಿದೆ ಎಂದಿದ್ದಾರೆ.ಇದು ನನಗಷ್ಟೇ ಅಲ್ಲ, ಇಡೀ ಜಿಲ್ಲೆಯ ಜನರ ಸಂಭ್ರಮಕ್ಕೆ ಕಾರಣವಾಗಿದೆ. ನನಗೆ ರಾಜಕೀಯ ಜನ ಕೊಟ್ಟ ಈ ನೆಲದ ಋಣ ತೀರಿಸಲು ಮತ್ತಷ್ಟು ಶ್ರಮಿಸುತ್ತೇನೆ ಎಲ್ಲರಿಗೂ ಶುಭವಾಗಲಿ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_46_97_2.txt b/eesanje/url_46_97_2.txt new file mode 100644 index 0000000000000000000000000000000000000000..5694081d9c597b3a0a0f2bfbaffd7ca2ef0af0dc --- /dev/null +++ b/eesanje/url_46_97_2.txt @@ -0,0 +1,4 @@ +ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರೀತಂಗೌಡಗೆ ನೋಟಿಸ್ ಸಾಧ್ಯತೆ..? +ಬೆಂಗಳೂರು, ಜೂ.25– ಮಾಜಿ ಶಾಸಕ, ಬಿಜೆಪಿ ಮುಖಂಡ ಪ್ರೀತಂಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಯಾವುದೇ ಕ್ಷಣದಲ್ಲಾದರೂ ಎಸ್‌‍ಐಟಿ ನೋಟಿಸ್‌‍ ನೀಡಲಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿ ವೈರಲ್‌ ಮಾಡಿರುವ ಬಗ್ಗೆ ಸಿಐಡಿಯಲ್ಲಿ ಪ್ರಕರಣ ದಾಖಲಾಗಿದೆ. +ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಬಿಜೆಪಿ ಮುಖಂಡ ಪ್ರೀತಂಗೌಡ, ಆಪ್ತರಾದ ಕಿರಣ್‌, ಶರತ್‌ ವಿರುದ್ಧ ಸಿಐಡಿ ಸೈಬರ್‌ ಕ್ರೈಮ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.ಪೆನ್‌ಡ್ರೈವ್‌ ಖರೀದಿ ಮಾಡಿಸಿ ಹಂಚಿಸಿದ್ದ ಆರೋಪ ಪ್ರೀತಂಗೌಡ ಅವರ ಮೇಲಿದೆ. ಹಾಗಾಗಿ ಎಸ್‌‍ಐಟಿ ನೋಟಿಸ್‌‍ ನೀಡುವ ಸಾಧ್ಯತೆ ಇದೆ. +ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಜಿಲ್ಲೆಯಾದ್ಯಂತ ಪ್ರಜ್ವಲ್‌ ರೇವಣ್ಣಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು.ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಹೆಚ್ಚಿನ ತನಿಖೆಗಾಗಿ ಎಸ್‌‍ಐಟಿ ತನಿಖೆ ಮಾಡಿದೆ. \ No newline at end of file diff --git a/eesanje/url_46_97_3.txt b/eesanje/url_46_97_3.txt new file mode 100644 index 0000000000000000000000000000000000000000..f4d1fae06b0fd2ecf607d41017d4fe5f6ff63c91 --- /dev/null +++ b/eesanje/url_46_97_3.txt @@ -0,0 +1,4 @@ +ನಿರ್ಮಾಪಕ ಉಮಾಪತಿಗೌಡಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿ ಬಂಧನ, ಬಿಡುಗಡೆ +ಬೆಂಗಳೂರು, ಜೂ.25– ನಿರ್ಮಾಪಕ ಉಮಾಪತಿ ಗೌಡ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿಯೊಬ್ಬನನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ. +ಕಮಲಾನಗರದ ನಿವಾಸಿ ಚೇತನ್(36) ಎಂಬಾತನನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಈತ ದರ್ಶನ್ ಅಭಿಮಾನಿ. ನಟ ದರ್ಶನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಂತರ ಉಮಾಪತಿ ಗೌಡ ಪ್ರತಿಕ್ರಿಯೆ ನೀಡಿದ್ದಕ್ಕೆ ಈತ ಕೋಪಗೊಂಡಿದ್ದನು. +ಸಾಮಾಜಿಕ ಜಾಲತಾಣದಲ್ಲಿ ಉಮಾಪತಿ ಅವರಿಗೆ ಬೆದರಿಕೆ ಹಾಕಿದ್ದನು. ಅಲ್ಲದೆ, ದರ್ಶನ್ ಅಭಿಮಾನಿಗಳನ್ನು ಪ್ರಚೋದಿಸುತ್ತಿದ್ದನು. ಈ ಬಗ್ಗೆ ಉಮಾಪತಿ ಗೌಡ ಅವರು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕಮಲಾನಗರದ ಚೇತನ್ನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ನಂತರ ಬಿಡುಗಡೆ ಮಾಡಿದ್ದಾರೆ. \ No newline at end of file diff --git a/eesanje/url_46_97_4.txt b/eesanje/url_46_97_4.txt new file mode 100644 index 0000000000000000000000000000000000000000..647954a7ad7623d7178bffc0d2642ee69baae78e --- /dev/null +++ b/eesanje/url_46_97_4.txt @@ -0,0 +1,12 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್‍ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ +ಬೆಂಗಳೂರು, ಜೂ.25-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರರು ಈಗಾಗಲೇ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದು, ಇತ್ತ ವಿಜಯನಗರ ಉಪವಿಭಾಗದ ಪೊಲೀಸರು ಆದಷ್ಟು ಶೀಘ್ರ ಚಾರ್ಜ್‍ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದ್ದಾರೆ. +ಪೊಲೀಸರು ವಿಶ್ರಾಂತಿ ಪಡೆಯದೆ ತಮಗಿರುವ ಸಮಯಾ ವಕಾಶದಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಲು ಶರವೇಗದಲ್ಲಿ ಹಲವು ಹೊಸ ಸಾಕ್ಷ್ಯಗಳನ್ನು ಸಂಗ್ರಹಿಸಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. +ತಂಡ ರಚನೆ:ಪೊಲೀಸರು ಪ್ರತ್ಯೇಕ ತಂಡಗಳನ್ನಾಗಿ ರಚಿಸಿಕೊಂಡು ಪರಸ್ಪರ ಸಹಕಾರದೊಂದಿಗೆ ಕರ್ತವ್ಯದಲ್ಲಿ ತೊಡಗಿದ್ದಾರೆ.ಈಗಾಗಲೇ ದರ್ಶನ್ ಹಾಗೂ ಆತನ ಗ್ಯಾಂಗ್ಅನ್ನು ಬಂಧಿಸಿ ಸತತ 12 ದಿನಗಳ ಕಾಲ ತಮ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿ ಸಾಕಷ್ಟು ಹೇಳಿಕೆಗಳನ್ನು ದಾಖಲಿಸಿ ಬರೋಬ್ಬರಿ 139 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. +ಸದ್ಯ ಆರೋಪಿಗಳೆಲ್ಲರೂ ನ್ಯಾಯಂಗ ಬಂಧನದ ಬಳಿಕವೂ ಈ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ.ಈ ಪ್ರಕರಣವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಿದ್ದು, ಒಂದು ತಂಡ ಆನ್ಫೀಲ್‌್ಡನಲ್ಲಿ ಇನ್ನೊಮೆ ಸಾಕ್ಷ್ಯ ಸಂಗ್ರಹಿಸುತ್ತಿದ್ದರೆ, ಮತ್ತೊಂದು ತಂಡ ಡಿಜಿಟಲ್ ಸಾಕ್ಷ್ಯ, ಇನ್ನೊಂದು ತಂಡ ಪೇಪರ್ ವರ್ಕ್ ಮತ್ತು ಚಾರ್ಜ್ಶೀಟ್ ತಯಾರಿಯಲ್ಲಿ ನಿರತವಾಗಿದೆ. +ಅನುಭವಿಗಳ ನೆರವು:ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ತಯಾರಿಕೆಗೆ ಕೆಲವು ಅನುಭವಿಗಳ ನೆರವನ್ನೂ ಸಹ ಪಡೆಯಲಾಗಿದೆ ಎಂದು ತಿಳಿದುಬಂದಿದೆ. +ಟೆಕ್ನಿಕಲ್ ಸಾಕ್ಷ್ಯ:ಇದರ ನಡುವೆ ಮಹತ್ವದ ಟೆಕ್ನಿಕಲ್ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿರುವ ತನಿಖಾ ತಂಡಗಳು ಎಲ್ಲ 17 ಆರೋಪಿಗಳ ಮೊಬೈಲ್ಗಳ ಡಾಟಾ ರಿಟ್ರೀವ್ ಕಾರ್ಯ ನಡೆಸಲಾಗಿದೆ.ಸಿಐಡಿ ಟೆಕ್ನಿಕಲ್ ಸೆಲ್ನಲ್ಲಿ ದರ್ಶನ್, ಪವಿತ್ರಾಗೌಡ, ಪವನ್ ಹಾಗೂ ವಿನಯ್ ಮೊಬೈಲ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್ ನಡೆಸಿ ಸಾಕ್ಷ್ಯಗಳ ಸಂಗ್ರಹ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ. +ಸಿಸಿಟಿವಿ ದೃಶ್ಯ ಸಂಗ್ರಹ:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಸಹ ಮಹತ್ವದ ಕಾರ್ಯ ನಿರ್ವಹಿಸಿದ್ದು, ಅದರಲ್ಲಿನ ದೃಶ್ಯಗಳ ಸಂಗ್ರಹದಲ್ಲಿ ತನಿಖಾ ತಂಡ ತೊಡಗಿದೆ.ಇದುವರೆಗೂ 62 ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗುತ್ತಿದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ ಪಟ್ಟಣಗೆರೆ ಶೆಡ್ಗೆ ಕರೆತಂದ ಮಾರ್ಗಗಳಲ್ಲಿನ ಸಿಸಿ ಕ್ಯಾಮೆರಾಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. +ಅಲ್ಲದೆ, ಪಟ್ಟಣಗೆರೆ ಶೆಡ್ನಿಂದ ಸುಮನಹಳ್ಳಿ, ರಾಜಕಾಲುವೆವರೆಗೂ ರೇಣುಕಾಸ್ವಾಮಿ ಶವ ಸಾಗಿಸಲಾದ ಮಾರ್ಗದಲ್ಲಿನ 36 ಸಿಸಿಟಿವಿ ದೃಶ್ಯಗಳ ಸಂಗ್ರಹ ಮಾಡಲಾಗಿದೆ. ಮೃತದೇಹ ತೆಗೆದುಕೊಂಡು ಹೋಗಿದ್ದ ಕಾರ್ತಿಕ್ ಮತ್ತು ಆತನ ತಂಡದ ಒಂದು ಕಾರನ್ನು ಪ್ರದೋಶ್ ಮತ್ತು ವಿನಯ್ ತಂಡ ಹಿಂದೆ ಹಿಂಬಾಲಿಸಿಕೊಂಡು ಬಂದಿದ್ದರು. +ಪಟ್ಟಣಗೆರೆ ಶೆಡ್ನಿಂದ ಆರ್ಆರ್ ನಗರ ಮುಖ್ಯಸ್ತೆಯಿಂದ ನಾಯಂಡಹಳ್ಳಿ ಜಂಕ್ಷನ್ಗೆ ಬಂದಿದ್ದ ಕಾರುಗಳು, ನಾಯಂಡಹಳ್ಳಿಯಿಂದ ಸುಮನಹಳ್ಳಿ ಮಾರ್ಗವಾಗಿ ಆರೋಪಿಗಳು ಹೋಗಿದ್ದರು.ಸುಮನಹಳ್ಳಿ ಮಾರ್ಗವಾಗಿ ನೇರವಾಗಿ ಹೋಗಿ ರಾಜ್ಕುಮಾರ್ ರಸ್ತೆ ಕಡೆಗೆ ಕಾರನ್ನು ತಿರುಗಿಸಿಕೊಂಡಿದ್ದರು. ನಂತರ ಸುಮನಹಳ್ಳಿ ಬ್ರಿಡ್‌್ಜನ ರಾಜಕಾಲುವೆ ಬಳಿ ತಲುಪಿದ್ದರು.ಇಲ್ಲಿನ ಅಪಾರ್ಟಮೆಂಟ್ ರಸ್ತೆಯಲ್ಲಿ ಹೋಗಿ ಯು ಟರ್ನ್ ತೆಗೆದುಕೊಂಡು ಮುಂದೆ ಸಾಗಿ ರಸ್ತೆ ಕೊನೆಗೆ ಹೋಗಿ ಮತ್ತೆ ಯು ಟರ್ನ್ ತೆಗೆದುಕೊಂಡಾಗ ಮೊದಲು ಹೋಗಿದ್ದ ಪ್ರದೋಶ್ ಮತ್ತು ವಿನಯ್ ಕಾಲುವೆಗೆ ಮೊಬೈಲ್ ಬಿಸಾಡಿದ್ದ. +ಆ ಬಳಿಕ ಮೃತದೇಹ ತೆಗೆದುಕೊಂಡು ಹಿಂದೆ ಬರುತ್ತಿದ್ದ ಆರೋಪಿಗಳು ರಾಜಕಾಲುವೆಗೆ ಎಸೆದು ಪರಾರಿಯಾಗುವಾಗ ಒಂದೇ ದಾರಿಯಲ್ಲಿ ಹೋಗಿ ಬರುವಾಗ ಬದಲಿ ಮಾರ್ಗಗಳನ್ನು ಬದಲಿಸಿದ್ದುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಪ್ರಕರಣದಲ್ಲಿ ಆರೋಪಿಗಳ ಬಂಧನದ ವೇಳೆ ಹಾಗೆಯೇ ತನಿಖೆ ಸಮಯದಲ್ಲಿಯೂ ಸಾಕಷ್ಟು ಒತ್ತಡಗಳು ಬಂದಿದ್ದವು. ಹಾಗಾಗಿ ಇದನ್ನೆಲ್ಲ ಪರಿಗಣಿಸಿ ಆದಷ್ಟು ಶೀಘ್ರದಲ್ಲಿ ಚಾರ್ಜ್ಶೀಟ್ ಹಾಕಲು ಸಿದ್ಧತೆ ನಡೆಸಲಾಗುತ್ತಿದೆ. +ತಮಗೆ ದೊರೆತಿರುವ 50 ರಿಂದ 60 ದಿನಗಳೊಳಗೆ ಚಾರ್ಜ್ಶೀಟ್ ಸಿದ್ಧತೆಗೆ ಯೋಜನೆ ಹಾಕಲಾಗಿದೆ. ಒಂದು ವೇಳೆ ಚಾರ್ಜ್ಶೀಟ್ ಸಲ್ಲಿಸಲು ತಡ ಮಾಡಿದರೆ ಸಾಕ್ಷ್ಯಗಳ ಮೇಲೆ ಆರೋಪಿಗಳು ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯನಗರ ಉಪವಿಭಾಗದ ಪೊಲೀಸರು ಬಹಳ ಜಾಗರೂಕತೆಯಿಂದ ಹಗಲಿರುಳೆನ್ನದೆ ಕರ್ತವ್ಯ ನಿರತರಾಗಿದ್ದಾರೆ. \ No newline at end of file diff --git a/eesanje/url_46_97_5.txt b/eesanje/url_46_97_5.txt new file mode 100644 index 0000000000000000000000000000000000000000..fe784c2e26f2bb10fb855ad1db8322e353bb24f9 --- /dev/null +++ b/eesanje/url_46_97_5.txt @@ -0,0 +1,9 @@ +ತಕ್ಷಣವೇ ಹಾಲಿನ ದರ ಏರಿಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟ : ಬಿಜೆಪಿ ಎಚ್ಚರಿಕೆ +ಬೆಂಗಳೂರು, ಜೂ.25-ಹೆಚ್ಚಿಸಿರುವ ಹಾಲಿನ ದರವನ್ನು ತಕ್ಷಣವೇ ಹಿಂಪಡೆಯದಿದ್ದರೆ ರಾಜ್ಯಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದು ಉಗ್ರ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಬಿಜೆಪಿ ಎಚ್ಚರಿಕೆ ಕೊಟ್ಟಿದೆ.ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್‌‍, ಮತದಾರರ ಮೇಲಿರುವ ಸಿಟ್ಟನ್ನು ಬೆಲೆ ಏರಿಕೆ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತದೆ ಎಂದು ಕಿಡಿಕಾರಿದೆ. +ಈ ಸಂಬಂಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿ ಹಾಲಿನ ದರ ಹೆಚ್ಚಳ ಮಾಡಿರುವ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ. +ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ತಮ ಪೋಸ್ಟ್‌ನಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಒತ್ತಾಯಿಸಿದ್ದಾರೆ. +ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್‌‍ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್‌ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟೋಲ್‌ ಡೀಸೆಲ್‌ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ ಎಂದು ಅಶೋಕ್‌ ಟೀಕಾ ಪ್ರಹಾರ ನಡೆಸಿದ್ದಾರೆ. +ಸರ್ಕಾರದ ವಿರುದ್ಧ ನಿರಂತರ ಹೋರಾಟ :ರಾಜ್ಯಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಮ ಎಕ್‌್ಸ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. +ಇತ್ತ ಬಡವರಿಗೂ ಉಪಕಾರಿಯಾಗಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್‌ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. \ No newline at end of file diff --git a/eesanje/url_46_97_6.txt b/eesanje/url_46_97_6.txt new file mode 100644 index 0000000000000000000000000000000000000000..6b8d3ae14d86cfdf72f0a2177859a75032043d88 --- /dev/null +++ b/eesanje/url_46_97_6.txt @@ -0,0 +1,4 @@ +ಮಂಗಳಮುಖಿಯ ಕಿರುಕುಳದಿಂದ ನೊಂದ ಬಾಲಕ ಆತ್ಮಹತ್ಯೆ +ಮೈಸೂರು, ಜೂ.25– ಮಂಗಳಮುಖಿಯ ಕಿರುಕುಳದಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ರಾಹುಲ್‌ ಮೌರ್ಯ (17) ಮೃತಪಟ್ಟ ಬಾಲಕ. +ಹುಣಸೂರಿನ ಕಿರಾಜಾಜಿ ಸರ್ಕಲ್‌ ಬಳಿ ಎಳೆನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್‌ ಮೌರ್ಯಗೆ ಮಂಗಳಮುಖಿ ಜೊತೆ ಸ್ನೇಹವಾಗಿತ್ತು. ಆಗಾಗ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ರಾಹುಲ್‌ ಮೌರ್ಯ ಕಳೆದ ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದನು. ಈ ನಡುವೆ ತಾಯಿ ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದ. ಆದರೆ ತಾನು ಇರುವ ಜಾಗ ತಿಳಿಸಿರಲಿಲ್ಲ. +ಜೂ.21ರಂದು ರಾಹುಲ್‌ ಮೌರ್ಯ ಊರಿಗೆ ಹಿಂದುರುಗಿದ್ದನು. ಈ ಮಧ್ಯೆ ಮಂಗಳಮುಖಿಯರು ಈತನ ಮನೆಗೆ ಬಂದು, ನಮ್ಮ ಹುಡುಗಿಯೊಬ್ಬಳನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾರೆ. ಇದರಿಂದ ನೊಂದ ರಾಹುಲ್‌ ಮೌರ್ಯ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. \ No newline at end of file diff --git a/eesanje/url_46_97_7.txt b/eesanje/url_46_97_7.txt new file mode 100644 index 0000000000000000000000000000000000000000..bdce5d5ac4f5a8575596a42011cbe31db1854b94 --- /dev/null +++ b/eesanje/url_46_97_7.txt @@ -0,0 +1,10 @@ +ಹಾಲಿನ ದರ ಪ್ರತಿ ಲೀಟರ್‌ಗೆ 2ರೂ. ಹೆಚ್ಚಳ, ನಾಳೆಯಿಂದಲೇ ಹೊಸ ದರ ಜಾರಿ +ಬೆಂಗಳೂರು, ಜೂ.25-ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ದಿನನಿತ್ಯ ಬಳಕೆಯ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ನಾಳೆಯಿಂದ ತಟ್ಟಲಿದೆ.ನಂದಿನಿ ಹಾಲಿನ ಅರ್ಧ ಮತ್ತು ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಮಿಲಿ ಹೆಚ್ಚುವರಿ ಹಾಲನ್ನು ಸೇರಿಸಿದ್ದು, ಪ್ರತಿ ಲೀಟರ್‌ಗೆ 2ರೂ.ನಂತೆ ನಾಳೆಯಿಂದ ಹೆಚ್ಚಳ ಮಾಡಿರುವುದಾಗಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಭೀಮಾನಾಯಕ್‌ ತಿಳಿಸಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ ಜತೆಗೆ 50 ಮಿಲಿ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿದ್ದು, ಹೆಚ್ಚುವರಿ ನೀಡಲಾಗುವ ಹಾಲಿಗೆ ತಗಲುವ ವೆಚ್ಚವನ್ನು ಮಾತ್ರ ಹೆಚ್ಚಳ ಮಾಡಲಾಗಿದೆಯೇ ಹೊರತು ಹಾಲಿನ ದರದಲ್ಲಿ ಏರಿಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. +ಪ್ರತಿ ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ ದರವನ್ನು 2ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಹಕರಿಗೂ ಹೆಚ್ಚುವರಿ ಹಾಲು ದೊರೆತಂತಾಗಿದೆ ಎಂದು ಸಮರ್ಥಿಸಿಕೊಂಡರು. ಪ್ರತಿ ಅರ್ಧ ಲೀಟರ್‌ ಟೋನ್ಡ್ ಹಾಲಿನ ದರ 22 ರಿಂದ 24ರೂ., ಒಂದು ಲೀಟರ್‌ ಹಾಲಿನ ದರ 42 ರಿಂದ 44ರೂ., ಹೋಮೋಜಿನೈಸ್ಡ್‌ ಟೋನ್ಡ್ ಹಾಲಿನ ದರ ಅರ್ಧ ಲೀಟರ್‌ಗೆ 22 ರಿಂದ 44ರೂ., ಒಂದು ಲೀಟರ್‌ಗೆ 43ರೂ. ನಿಂದ 45ರೂ., ಹೋಮೋಜಿನೈಸ್ಡ್‌ ಹಸುವಿನ ಹಾಲು ಅರ್ಧ ಲೀಟರ್‌ಗೆ 24ರೂ. ನಿಂದ 26ರೂ., ಒಂದು ಲೀಟರ್‌ಗೆ 46ರೂ. ನಿಂದ 48ರೂ., ಸ್ಪೆಷಲ್‌ ಹಾಲು ಅರ್ಧ ಲೀಟರ್‌ಗೆ 25ರೂ. ನಿಂದ 27ರೂ., ಒಂದು ಲೀಟರ್‌ಗೆ 48ರೂ. ನಿಂದ 50ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದರು. +ಸಮೃದ್ಧಿ ಹಾಲು ಅರ್ಧ ಲೀಟರ್‌ಗೆ 26ರೂ. ನಿಂದ 28ರೂ., ಒಂದು ಲೀಟರ್‌ಗೆ 51ರೂ. ನಿಂದ 53ರೂ., ಹೋಮೋಜಿನೈಸ್ಡ್‌ ಶುಭಂ ಹಾಲು ಅರ್ಧ ಲೀಟರ್‌ಗೆ 25ರೂ. ನಿಂದ 27ರೂ., ಒಂದು ಲೀಟರ್‌ಗೆ 49ರೂ. ನಿಂದ 51ರೂ., ಸಂತೃಪ್ತಿ ಹಾಲು ಅರ್ಧ ಲೀಟರ್‌ಗೆ 28ರೂ. ನಿಂದ 30ರೂ., ಒಂದು ಲೀಟರ್‌ಗೆ 55ರೂ. ನಿಂದ 57ರೂ., ಶುಭಂ ಟೋನ್ಡ್ ಹಾಲು ಅರ್ಧ ಲೀಟರ್‌ಗೆ 26ರೂ.ನಿಂದ 28ರೂ., ಒಂದು ಲೀಟರ್‌ಗೆ 49ರೂ. ನಿಂದ 51ರೂ., ಡಬಲ್‌ ಟೋನ್‌್ಡ ಹಾಲು ಅರ್ಧ ಲೀಟರ್‌ಗೆ 21ರೂ. ನಿಂದ 23ರೂ., ಒಂದು ಲೀಟರ್‌ಗೆ 41ರೂ. ನಿಂದ 43ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು. +ಹೆಚ್ಚಳ ಮಾಡಿರುವ ದರವು ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ. ಒಕ್ಕೂಟಗಳಲ್ಲಿ ಹಳೆಯ ದರ ಮುದ್ರಿತವಾಗಿರುವ ಹಾಲಿನ ಪ್ಯಾಕೆಟ್‌ಗಳ ದಾಸ್ತಾನು ಮುಗಿಯುವವರೆಗೂ ಹಳೆಯ ದರದಲ್ಲಿ ಮುದ್ರಿತ ಹಾಲಿನ ಪ್ಯಾಕೆಟ್‌ಗಳು ಸರಬರಾಜಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಅವರು ಕೋರಿದ್ದಾರೆ. +ಪರಿಷ್ಕೃತ ದರವು ಒಂದು ಲೀಟರ್‌ಗೆ 44ರೂ. 10 ಪೈಸೆಯಾಗಲಿದೆ. ಗ್ರಾಹಕರ ಹಿತದೃಷ್ಟಿಯಿಂದ 44ರೂ.ಗೆ ಮಾರಾಟ ಮಾಡಲಾಗುವುದು. ಆದರೆ, ಮೊಸರು ಹಾಗೂ ಇತರೆ ನಂದಿನಿ ಉತ್ಪನ್ನಗಳ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಹೊರರಾಜ್ಯಗಳ ಹಾಲಿನ ದರಕ್ಕೆ ಹೋಲಿಸಿದರೆ ನಮ ರಾಜ್ಯದ ಹಾಲಿನ ದರವು ಕಡಿಮೆಯಿದೆ ಎಂದು ಅವರು ತಿಳಿಸಿದರು. +ಸುಗ್ಗಿ ಕಾಲವಾಗಿರುವುದರಿಂದ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ವ್ಯಾಪ್ತಿಯಲ್ಲಿ ಹಾಲಿನ ಶೇಖರಣೆ ಹೆಚ್ಚಾಗುತ್ತಿದೆ. 98, 87,000ದಷ್ಟು ಹಾಲನ್ನು ಶೇಖರಣೆ ಮಾಡುತ್ತಿದ್ದೇವೆ. ಸದ್ಯದಲ್ಲೇ ಹಾಲಿನ ಶೇಖರಣೆ ಪ್ರಮಾಣ ಒಂದು ಕೋಟಿ ಲೀಟರ್‌ ತಲುಪಲಿದೆ. ಹಾಲು ಉತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 28 ಲಕ್ಷ ರೈತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. +ಸುಮಾರು 30 ಲಕ್ಷ ಲೀಟರ್‌ ಹಾಲನ್ನು ಪೌಡರ್‌ ಉತ್ಪಾದಿಸಲು ಕಳುಹಿಸುತ್ತಿದ್ದೇವೆ. ಇದರಿಂದ ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ಸಕಾಲಕ್ಕೆ ಹಣ ಪಾವತಿ ಮಾಡಲು ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ಪ್ರತಿ ಲೀಟರ್‌ ಹಾಲಿನ ದರವನ್ನು 42ರೂ.ನಿಂದ 44ರೂ.ಗೆ ಹೆಚ್ಚಳ ಮಾಡಿದ್ದೇವೆ ಎಂದು ಅವರು ತಿಳಿಸಿದರು. +ಸುದ್ದಿಗೋಷ್ಠಿಯಲ್ಲಿ ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್‌, ಮಂಡಳಿ ನಿರ್ದೇಶಕರಾದ ವೀರಭದ್ರಬಾಬು ಬರಮಣ್ಣನವರ್‌, ಮಾರುಕಟ್ಟೆ ನಿರ್ದೇಶಕ ರಘುನಂದನ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_97_8.txt b/eesanje/url_46_97_8.txt new file mode 100644 index 0000000000000000000000000000000000000000..f4cc94a36ed1fb2e0a15dac293ff21e51d232d47 --- /dev/null +++ b/eesanje/url_46_97_8.txt @@ -0,0 +1,10 @@ +ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ +ಬೆಂಗಳೂರು, ಜೂ.25– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳೆಲ್ಲಾ ಒಟ್ಟಿಗೇ ಇದ್ದರೆ ಸರಿ ಕಾಣಿಸುವುದಿಲ್ಲ ಎಂಬ ಕಾರಣಕ್ಕಾಗಿ ಮೂವರು ಆರೋಪಿಗಳನ್ನು ತುಮಕೂರಿಗೆ ಸ್ಥಳಾಂತರಿಸಲಾಗಿದೆ. ನಟ ದರ್ಶನ್‌ ಅವರನ್ನು ಸ್ಥಳಾಂತರಿಸಬೇಕೇ ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುಂದುವರೆಸಬೇಕೆ ಎಂಬ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂವರ ಸ್ಥಳಾಂತರಕ್ಕೆ ಬಂಧೀಖಾನೆ ಅಧಿಕಾರಿಗಳು ಹಾಗೂ ತನಿಖಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ದರ್ಶನ್‌ ಅವರ ಸ್ಥಳಾಂತರಿಸುವ ಚರ್ಚೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.ಸಂಪುಟ ಪುನರ್‌ ರಚನೆ ಬಗ್ಗೆ ಕೆಲವು ಶಾಸಕರು ಬೇಡಿಕೆ ಇಟ್ಟಿರುವ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ. ಹೈಕಮಾಂಡ್‌ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. +ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕೆ ನಡೆದ ನೀಟ್‌ ಪರೀಕ್ಷೆ ಅಕ್ರಮದಿಂದ ದೇಶದಲ್ಲಿ ಲಕ್ಷಾಂತರ ಮಕ್ಕಳ ಭವಿಷ್ಯ ಹಾಳಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ದೆಹಲಿಯಲ್ಲಿ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಹುಲ್‌ಗಾಂಧಿಯವರು ಕಾಂಗ್ರೆಸ್‌‍ನ ಮುಖಂಡರಿಗೆ ಈ ಬಗ್ಗೆ ವಿವರಣೆ ನೀಡಿದ್ದಾರೆ. ಕೇಂದ್ರ ಸರ್ಕಾರ ಈ ವಿಚಾರವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. +ಮರು ಪರೀಕ್ಷೆ ನಡೆಸುವುದು ಅಥವಾ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿಸುವ ಭರವಸೆ ನೀಡಬೇಕಿದೆ. ಪ್ರಕರಣದ ತನಿಖೆಯಾಗಬೇಕು. ಈ ಬಗ್ಗೆ ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಮಂತ್ರಿ ಹಾಗೂ ಶಿಕ್ಷಣ ಸಚಿವರಾಗಲೀ ತೀರ್ಮಾನ ಪ್ರಕಟಿಸಬೇಕಿತ್ತು ಎಂದು ಹೇಳಿದರು.ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ನೀಟ್‌ ಪರೀಕ್ಷೆಯಲ್ಲಿ ಯಶಸ್ಸು ಗಳಿಸಿದ ವಿದ್ಯಾರ್ಥಿಗಳ ಪ್ರವೇಶ ಈ ವೇಳೆಗೆ ಆರಂಭವಾಗಬೇಕಿತ್ತು. ಇಂಜಿನಿಯರಿಂಗ್‌ ಪ್ರವೇಶದಲ್ಲೂ ಗೊಂದಲಗಳಿವೆ. ಈ ಎಲ್ಲದಕ್ಕೂ ಉತ್ತರ ಕೊಟ್ಟು, ಸ್ಪಷ್ಟನೆ ನೀಡಬೇಕಿದೆ ಎಂದರು. +ವಿದ್ಯಾರ್ಥಿಗಳಿಗೆ ಸುಲಭವಾಗಿ ಸೀಟು ಸಿಕ್ಕುವಂತೆ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕಿದೆ. ಕರ್ನಾಟಕದಲ್ಲಿ, ದೇಶದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಸಿಇಟಿಯನ್ನು ನಡೆಸಲಾಗಿತ್ತು. ನೀಟ್‌ ಬದಲಾಗಿ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರ ನೀಡಬೇಕು. ಬೇರೆ ರಾಜ್ಯಗಳ ವಿದ್ಯಾರ್ಥಿಗಳು ತಮಗಿಷ್ಟ ಬಂದ ಕಾಲೇಜಿನಲ್ಲಿ ಓದಲು ಬಯಸಿದರೆ ಪರೀಕ್ಷೆ ಬರೆದು ಸೀಟು ಪಡೆದುಕೊಳ್ಳುತ್ತಾರೆ. ಅದಕ್ಕೆ ವ್ಯವಸ್ಥಿತವಾಗಿ ಅವಕಾಶವನ್ನು ಕಲ್ಪಿಸಬೇಕು ಎಂದು ಅಭಿಪ್ರಾಯ ಪಟ್ಟರು. +ಹೇಮಾವತಿ ನಾಲಾ ತಿರುವು ಯೋಜನೆಗೆ ಸಂಬಂಧಪಟ್ಟಂತೆ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿನ್ನೆ ಸಭೆ ನಡೆಸಿ ಚರ್ಚಿಸಿದ್ದಾರೆ. ತುಮಕೂರು ಜಿಲ್ಲೆಯ ಜನರಿಗೆ ನೀರಿನ ಹಂಚಿಕೆಯಲ್ಲಿ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಅದಕ್ಕೆ ಸಭೆಯಲ್ಲಿದ್ದ ನೀರಾವರಿ ತಜ್ಞರು ಹಾಗೂ ವಿವಿಧ ಸಂಘಟನೆಗಳು ಸಹಮತ ವ್ಯಕ್ತಪಡಿಸಿದರು. ಈಗ ಪ್ರತಿಭಟನೆಯ ಮಾರ್ಗ ಹಿಡಿದಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಡಿ.ಕೆ.ಶಿವಕುಮಾರ್‌ರವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು. +ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಯ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಪ್ರತಿಕ್ರಿಯಿಸಲು ಪರಮೇಶ್ವರ್‌ ನಿರಾಕರಿಸಿದರು.ನಿಗಮ ಮಂಡಳಿಗಳ ನಿರ್ದೇಶಕರ ಆಯ್ಕೆಗೆ ತಮ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಇದಕ್ಕೂ ಮೊದಲು ನಿಗಮಮಂಡಳಿ ನೇಮಕಾತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ತಮ ಅಭಿಪ್ರಾಯ ಕೇಳಿಲ್ಲ ಎಂದು ನಾನು ಹೇಳಿದ್ದೆ. +ಆ ಉದ್ದೇಶಕ್ಕಾಗಿ ಈಗ ಸಮಿತಿ ಮಾಡಿದ್ದಾರೆಯೇ? ಅಥವಾ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಲಿ ಎಂಬ ಕಾರಣಕ್ಕೆ ಸಮಿತಿ ಮಾಡಿದ್ದಾರೋ? ಗೊತ್ತಿಲ್ಲ. ಮುಖ್ಯಮಂತ್ರಿಯವರು ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಎಂಟೂವರೆ ವರ್ಷಗಳ ಕಾಲ ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ಇದೆ. ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ನಿರ್ದೇಶಕರುಗಳ ನೇಮಕಾತಿ ಮಾಡಿಯೂ ಅನುಭವ ಇದೆ. ಒಂದು ತಿಂಗಳ ಮೊದಲೇ ಪಟ್ಟಿಯನ್ನು ಸಲ್ಲಿಸುತ್ತೇನೆ ಎಂದು ಹೇಳಿದರು. +ಬೆಂಗಳೂರಿನಲ್ಲಿ ಬಿಬಿಎಂ ವಿದ್ಯಾರ್ಥಿನಿ ಪ್ರಭುದ್ದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿದ್ಯಾರ್ಥಿನಿಯ ತಾಯಿ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ತಮನ್ನೂ ಸೇರಿದಂತೆ ಹಲವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು. \ No newline at end of file diff --git a/eesanje/url_46_97_9.txt b/eesanje/url_46_97_9.txt new file mode 100644 index 0000000000000000000000000000000000000000..102888d7c50ced9ccc64674b6f2d1cd95fa737d2 --- /dev/null +++ b/eesanje/url_46_97_9.txt @@ -0,0 +1,9 @@ +ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌‍ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ : ಬೊಮ್ಮಾಯಿ +ನವದೆಹಲಿ,ಜೂ.25– ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್‌‍ ಸಂಸತ್‌ನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ ಹೇಳಿದ್ದಾರೆ. +ನವದೆಹಲಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇದೊಂದು ಕರಾಳ ದಿನ. ಅಂದಿನ ಪ್ರಧಾನಿ ಇಂದಿರಾಗಾಂಧಿಯವರು ಪಧಾನಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರು ಮಾತನಾಡವಂತೆ ಮಾಡಿದರು. +ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು ಮತ್ತು ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು ಎಂದು ಹೇಳಿದರು. +ಕಾಂಗ್ರೆಸ್‌‍ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್‌‍ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೆವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್‌‍ನ ಭಂಡತನ ಎಂದು ಹೇಳಿದರು. +ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿವೆ. ಅದಕ್ಕೆ ಸುಪ್ರೀಂ ಕೋರ್ಟಿನ ತೀರ್ಪುಗಳು ಹಾಗೂ ಅಂದಿನ ಸಂಸತ್ತಿನಲ್ಲಿ ಇನ್ನು ಮುಂದೆ ಯಾರೂ ತುರ್ತು ಪರಿಸ್ಥಿತಿ ಹೇರಬಾರದು ಎಂದು ತಿದ್ದುಪಡಿ ಮಾಡಿದರು. ಅದರ ಪ್ರಕಾರ, ಯಾರೂ ಕೂಡ ಮೂಲ ಸಂವಿಧಾನ ತಿರುಚುವುದು ಹಾಗೂ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎನ್ನವುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್‌‍ ಪಕ್ಷ ಇದನ್ನು ದೊಡ್ಡ ಬಂಡವಾಳ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. +ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ. ನಮದು ಅತ್ಯಂತ ಶೇಷ್ಠವಾದ ಸಂವಿಧಾನ, ಹಲವಾರು ದೇಶಗಳಲ್ಲಿ ನೋಡಿದಾಗ ಇದು ಅತ್ಯಂತ ಸಂವೇದನಾಶೀಲ ಇರುವ ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆ ಮಾಡುವ ಸಂವಿಧಾನ ಇರುವುದರಿಂದ ಕಾಂಗ್ರೆಸ್‌‍ನವರು ಭ್ರಮೆಯನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಭ್ರಮೆ ಜನರಲ್ಲಿ ಇಲ್ಲ. +ಹೀಗಾಗಿ ಜನರು ಮತ್ತೊಮೆ ನರೇಂದ್ರಮೋದಿಯವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು.ಸಂವಿಧಾನ ವಿರೋಧಿಗಳೇ ಸಂಸತ್‌ನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಹೇಳಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್‌‍ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ. +ವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆಯಾ, ಪತಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪ್ರಜಾಪ್ರಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತ್ತ ಬ್ಯಾಂಕ್‌ಗಳನ್ನು ಸೃಷ್ಟಿಸಲು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. \ No newline at end of file diff --git a/eesanje/url_46_98_1.txt b/eesanje/url_46_98_1.txt new file mode 100644 index 0000000000000000000000000000000000000000..98de2c15bc8c646cb4cdded72e0082e9a7118582 --- /dev/null +++ b/eesanje/url_46_98_1.txt @@ -0,0 +1,6 @@ +ಶೆಟ್ಟರ್‌ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನದ ಉಪ ಚುನಾವಣೆ ಅಧಿಸೂಚನೆ ಪ್ರಕಟ +ಬೆಂಗಳೂರು, ಜೂ.25-ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತರೆವಾಗಿರುವ ವಿಧಾನಪರಿಷತ್‌ನ ಒಂದು ಸದಸ್ಯ ಸ್ಥಾನದ ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. +ಇಂದಿನಿಂದ ಜುಲೈ ಎರಡರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿಯು 2028ರ ಜೂ.14 ರವರೆಗೆ ಇರಲಿದೆ. +ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಅಸಮಾಧಾನಗೊಂಡು ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ್ದರು. ಕಾಂಗ್ರೆಸ್‌‍ನಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ನಂತರ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. +ಈಗ ಮತ್ತೆ ಕಾಂಗ್ರೆಸ್‌‍ ತೊರೆದು ಬಿಜೆಪಿಗೆ ಮರಳಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶೆಟ್ಟರ್‌ ಚುನಾಯಿತರಾಗಿದ್ದಾರೆ. ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್‌‍ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ. ಹೀಗಾಗಿ ಜೆಡಿಎಸ್‌‍ ಮತ್ತು ಬಿಜೆಪಿ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ. +ಈ ಉಪ ಚುನಾವಣೆಗೆ ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ಜು.3ರಂದು ನಡೆಯಲಿದ್ದು, ನಾಮಪತ್ರ ವಾಪಸ್ಸಿಗೆ ಜು.5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಜು.12ರಂದು ಬೆಳಿಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದು 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜು.16ರವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. \ No newline at end of file diff --git a/eesanje/url_46_98_10.txt b/eesanje/url_46_98_10.txt new file mode 100644 index 0000000000000000000000000000000000000000..21c2554e576528a6867c805cb6dc78c768cf626e --- /dev/null +++ b/eesanje/url_46_98_10.txt @@ -0,0 +1,7 @@ +ವಿಧಾನ ಪರಿಷತ್‌ ಸದಸ್ಯರಾಗಿ 17 ಮಂದಿ ಪ್ರಮಾಣ ವಚನ ಸ್ವೀಕಾರ +ಬೆಂಗಳೂರು, ಜೂ.24-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ 11 ಮಂದಿ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ 6 ಮಂದಿ ಸೇರಿದಂತ ಒಟ್ಟು 17 ಮಂದಿ ವಿಧಾನ ಪರಿಷತ್‌ ನೂತನ ಸದಸ್ಯರಾಗಿ ಇಂದು ಪ್ರಮಾವಣ ವಚನ ಸ್ವೀಕರಿಸಿದರು. +ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ ಮೂವರು ಹಾಗೂ ಪದವೀಧರ ಕ್ಷೇತ್ರಗಳಿಂದ ಮೂವರು ಸದಸ್ಯರು ಚುನಾಯಿತರಾಗಿದ್ದರು. +ಆಡಳಿತಾರೂಢ ಕಾಂಗ್ರೆಸ್‌‍ನಿಂದ ಸಚಿವ ಎನ್‌.ಎಸ್‌‍.ಬೋಸರಾಜು, ಕೆ.ಗೋವಿಂದರಾಜು, ಎ.ವಸಂತಕುಮಾರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಐವಾನ್‌ ಡಿಸೋಜ, ಜಗದೇವ ಗುತ್ತೇದಾರ್‌, ಬಲ್ಕೀಸ್‌‍ ಬಾನು, ಡಿ.ಟಿ.ಶ್ರೀನಿವಾಸ, ರಾಮೋಜಿಗೌಡ, ಡಾ. ಚಂದ್ರಶೇಖರ ಬಸವರಾಜ ಪಾಟೀಲ ಸೇರಿದಂತೆ 10 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. + +ಬಿಜೆಪಿಯಿಂದ ಸಿ.ಟಿ.ರವಿ, ಎನ್‌.ರವಿಕುಮಾರ್‌, ಮೂಳೆ ಮಾರುತಿರಾವ್‌, ಡಾ.ಧನಂಜಯ ಸರ್ಜಿ ಸೇರಿದಂತೆ ನಾಲ್ಕು ಮಂದಿ ಹಾಗೂ ಜೆಡಿಎಸ್‌‍ನಿಂದ ಟಿ.ಎನ್‌.ಜವರಾಯಿಗೌಡ, ಎಸ್‌‍.ಎಲ್‌.ಭೋಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಮೂವರು ಮೇಲನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. +ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ಹಾಗೂ ಕುಟುಂಬದವರು ಹಾಜರಿದ್ದು, ನೂತನ ಮೇಲನೆ ಸದಸ್ಯರನ್ನು ಅಭಿನಂದಿಸಿದರು. \ No newline at end of file diff --git a/eesanje/url_46_98_11.txt b/eesanje/url_46_98_11.txt new file mode 100644 index 0000000000000000000000000000000000000000..757f28634eda9365751848019a0f3622b040184b --- /dev/null +++ b/eesanje/url_46_98_11.txt @@ -0,0 +1,5 @@ +ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ +ಕಲಬುರಗಿ, ಜೂ.24-ಇಲ್ಲಿನ ವಿಮಾನನಿಲ್ದಾಣ ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿ ಇ-ಮೇಲ್‌ ಮಾಡಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.ವಿಮಾನ ನಿಲ್ದಾಣದ ಕಟ್ಟಡದಲ್ಲಿ ಬಾಂಬ್‌ ಇಡಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ಚಿಲಕಾ ಮಹೇಶ್‌ ಅವರಿಗೆ ಇ ಮೇಲ್‌ ಬಂದಿದೆ. +ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಸ್ಥಳಕ್ಕೆ ದೌಡಾಯಿಸಿ ವಿಮಾನನಿಲ್ದಾಣವನ್ನು ಪರಿಶೀಲಿಸಿದರಾದರೂ ಯಾವುದೇ ಬಾಂಬ್‌ ಪತ್ತೆಯಾಗಿಲ್ಲ. +ಇದು ಹುಸಿ ಸಂದೇಶವೆಂದು ಅರಿತು ನಿಟ್ಟುಸಿರು ಬಿಡುವಂತಾಯಿತು. ಇದರಿಂದಾಗಿ ಕೆಲಕಾಲ ವಿಮಾನ ಪ್ರಯಾಣಿಕರಲ್ಲೂ ಸಹ ಗೊಂದಲ ಉಂಟಾಯಿತು. ಅಲ್ಲದೆ, ವಿಮಾನ ಪ್ರಯಾಣಿಕರ ಬ್ಯಾಗ್‌ಗಳನ್ನೂ ಸಹ ಸಿಬ್ಬಂದಿ ತಪಾಸಣೆ ನಡೆಸಿದರು. +ಈ ಹಿಂದೆಯೂ ಈ ರೀತಿಯ ಹುಸಿ ಸಂದೇಶಗಳು ಬೆಂಗಳೂರಿನ ವಿಮಾನನಿಲ್ದಾಣ, ಆಸ್ಪತ್ರೆಗಳು, ಶಾಲಾ-ಕಾಲೇಜುಗಳಿಗೆ ಬಂದಿದ್ದವು. ಕಳೆದ ತಿಂಗಳು ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿತ್ತು. \ No newline at end of file diff --git a/eesanje/url_46_98_12.txt b/eesanje/url_46_98_12.txt new file mode 100644 index 0000000000000000000000000000000000000000..fe444c2f4ed1a292fe6600d3a7a2ed035ac5aedd --- /dev/null +++ b/eesanje/url_46_98_12.txt @@ -0,0 +1,6 @@ +ಕರಾವಳಿ-ಮಲೆನಾಡು ಭಾಗದಲ್ಲಿ ಮುಂದಿನ 3 ದಿನ ಭಾರಿ ಮಳೆ ಮುನ್ಸೂಚನೆ +ಬೆಂಗಳೂರು, ಜೂ.24-ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಧಾರವಾಡ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳನ್ನು ಹವಾಮಾನ ಇಲಾಖೆ ನೀಡಿದೆ. +ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಪ್ರಮಾಣದ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಆರೆಂಜ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮುಂಗಾರು ಚೇತರಿಕೆ ಕಂಡಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆಯಾಗಿಲ್ಲ. +ಚದುರಿದಂತೆ ಕೆಲವೆಡೆ ಮಳೆಯಾಗಿರುವುದನ್ನು ಹೊರತುಪಡಿಸಿದರೆ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿಲ್ಲ.ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಉತ್ತಮ ಮಳೆಯಾಗಿಲ್ಲ. ಹವಾಮಾನ ಮುನ್ಸೂಚನೆ ಪ್ರಕಾರ, ಜೂ.27 ರಂದು ರಾಜ್ಯದಲ್ಲಿ ಮುಂಗಾರು ಪ್ರಬಲವಾಗಿದ್ದು, ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. +ಅರಬ್ಬೀ ಸಮುದ್ರದಲ್ಲಿ ಟ್ರಪ್‌ ನಿರ್ಮಾಣವಾಗಿರುವುದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ. ಆದರೆ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಬಲವಾದ ಮೇಲೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. +ಜೂ.1 ರಿಂದ ಈತನಕ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೆ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಒಳನಾಡಿನಲ್ಲಿ ಮಾತ್ರ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಾಗುವ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ನಿರ್ದೇಶನ ನೀಡಿದೆ. \ No newline at end of file diff --git a/eesanje/url_46_98_2.txt b/eesanje/url_46_98_2.txt new file mode 100644 index 0000000000000000000000000000000000000000..5d2bd6fd17c3d35a35e4cd53ffa60fd7bf8dffd1 --- /dev/null +++ b/eesanje/url_46_98_2.txt @@ -0,0 +1,6 @@ +ಜನ ವಿಶ್ರಾಂತಿ ನೀಡಿದ್ದಾರೆ, ಯಾವುದೇ ಚುನಾವಣೆಗೂ ಸ್ಪರ್ಧಿಸಲ್ಲ : ಡಿ.ಕೆ.ಸುರೇಶ್‌ +ಬೆಂಗಳೂರು, ಜೂ.24-ಜನಾದೇಶದಂತೆ ನಾನು ವಿಶ್ರಾಂತಿ ಪಡೆಯುತ್ತೇನೆ. ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಸ್ಪಷ್ಟಪಡಿಸಿದ್ದಾರೆ. +ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಸಾಕಷ್ಟು ಒತ್ತಡದಲ್ಲಿದ್ದೆ. ವಿಶ್ರಾಂತಿಯ ಅಗತ್ಯವಿತ್ತು. ಲೋಕಸಭಾ ಚುನಾವಣೆಯಲ್ಲಿ ಜನ ತಮಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇನೆ. ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇರಾದೆ ಇಲ್ಲ ಎಂದಿದ್ದಾರೆ. +ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಬೇಕು ಎಂದು ಯಾರೂ ನನ್ನ ಬಳಿ ಚರ್ಚೆ ಮಾಡಿಲ್ಲ. ಎಐಸಿಸಿ ಅಧ್ಯಕ್ಷರೂ ಕೂಡ ಪ್ರಸ್ತಾಪಿಸಿಲ್ಲ. ಪಕ್ಷ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ನಾನು ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು. +ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಬಳಿಕ ಈಗಷ್ಟೇ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರ ತೆರವಾದ ಬಳಿಕ ಅದಕ್ಕೆ ಉಪಚುನಾವಣೆ ಘೋಷಣೆಯಾಗಬೇಕಿದೆ. ಸದ್ಯಕ್ಕೆ ಅಲ್ಲಿಂದ ಸ್ಪರ್ಧೆ ಮಾಡುವ ಪ್ರಸ್ತಾಪ ನನ್ನ ಮುಂದಿಲ್ಲ ಎಂದರು. +ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರ ಹೇಳಿಕೆಗೆ ತಾವು ಪ್ರಾಮುಖ್ಯತೆ ನೀಡುವುದಿಲ್ಲ. ನಟ, ನಿರ್ಮಾಪಕರಾಗಿರುವ ಅವರ ಹೇಳಿಕೆಗಳು ಯಾವಾಗ ಬೇಕಾದರೂ ಬದಲಾಗಬಹುದು. ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_46_98_3.txt b/eesanje/url_46_98_3.txt new file mode 100644 index 0000000000000000000000000000000000000000..9643aea9c87daf0aa83093ce437e310a7b903cea --- /dev/null +++ b/eesanje/url_46_98_3.txt @@ -0,0 +1,9 @@ +ಚನ್ನಪಟ್ಟಣಕ್ಕೆ ಒಂದೇ ವಾರದಲ್ಲಿ 2 ಬಾರಿ ಡಿಕೆಶಿ ಭೇಟಿ +ಬೆಂಗಳೂರು, ಜೂ.24– ಉಪಚುನಾವಣೆ ನಡೆಯುವ ಮೂರು ವಿಧಾನಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದಾರೆ. +ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರ ಡಿ.ಕೆ. ಸಹೋದರರಿಗೆ ಪ್ರತಿಷ್ಠೆಯ ಕಣವಾಗಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಚನ್ನಪಟ್ಟಣದಲ್ಲಿ ನಿಂತು ಸೇಡು ತೀರಿಸಿಕೊಳ್ಳಲು ಕಾಂಗ್ರೆಸ್‌‍ ಪಡೆ ಹವಣಿಸುತ್ತಿದೆ.ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಯಾರು ಎಂಬ ಸುಳಿವನ್ನೂ ಕಾಂಗ್ರೆಸ್‌‍ ಬಿಟ್ಟುಕೊಟ್ಟಿಲ್ಲ. +ಕಳೆದ ಒಂದು ವಾರದಲ್ಲಿ ಡಿ.ಕೆ.ಶಿವಕುಮಾರ್‌ರವರು ಎರಡನೇ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ವಾರ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದ ಡಿ.ಕೆ.ಶಿವಕುಮಾರ್‌ರವರು ಕಾಂಗ್ರೆಸ್‌‍ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. +ಇಂದು ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದು, ಜನಸ್ಪಂದನ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ಜನಸ್ಪಂದನ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್‌ ಒತ್ತು ನೀಡಿದ್ದರು. ಬೆಂಗಳೂರಿನಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲೂ ಜನಸ್ಪಂದನ ಕಾರ್ಯಕ್ರಮಗಳು ಸರಣಿಯಾಗಿ ನಡೆದಿದ್ದವು. ನೀತಿ ಸಂಹಿತೆ ಹಿನ್ನೆಲೆಯಲಿ ಕಳೆದ ಮೂರು ತಿಂಗಳಿನಿಂದಲೂ ಜನಸ್ಪಂದನ ನಡೆದಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸುವ ಜನಸ್ಪಂದನವೂ ಸ್ಥಗಿತಗೊಂಡಿತ್ತು. +ಚುನಾವಣಾ ಪ್ರಕ್ರಿಯೆ ಸ್ಥಗಿತಗೊಂಡ ಬಳಿಕ ಮೊಟ್ಟಮೊದಲನೆಯದಾಗಿ ಡಿ.ಕೆ.ಶಿವಕುಮಾರ್‌ರವರು ಚನ್ನಪಟ್ಟಣದಿಂದಲೇ ಜನಸ್ಪಂದನವನ್ನು ಆರಂಭಿಸಿದ್ದಾರೆ.ಈ ಮೂಲಕ ಮುಂದೆ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು ಸ್ಪಷ್ಟವಾಗುತ್ತಿದೆ. +ಉಪಚುನಾವಣೆಯಲ್ಲಿ ಅಭ್ಯರ್ಥಿಯ ವಿಷಯವಾಗಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಒಂದು ಹಂತದಲ್ಲಿ ಡಿ.ಕೆ.ಶಿವಕುಮಾರ್‌ರವರು ತಾವೇ ಅಭ್ಯರ್ಥಿಯಾಗುವುದಾಗಿ ಹೇಳುವ ಮೂಲಕ ರಾಜಕೀಯವಾಗಿ ತೀರಾ ಕುತೂಹಲ ಕೆರಳಿಸಿದ್ದರು. +ನಂತರದ ದಿನಗಳಲ್ಲಿ ತಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದು, ಯಾರೇ ಸ್ಪರ್ಧೆ ಮಾಡಿದರೂ ನಾನೇ ಅಭ್ಯರ್ಥಿ ಎಂದು ಹೇಳುವ ಮೂಲಕ ಕ್ಷೇತ್ರವನ್ನು ಎಷ್ಟರ ಮಟ್ಟಿಗೆ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂಬುದರ ಮುನ್ಸೂಚನೆ ನೀಡಿದರು. +ಮೂಲಗಳ ಪ್ರಕಾರ, ಮಾಜಿ ಸಂಸದ ಡಿ.ಕೆ.ಸುರೇಶ್‌ ಕ್ಷೇತ್ರದಲ್ಲಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿಕೂಟ ಕೂಡ ಪ್ರಬಲ ಅಭ್ಯರ್ಥಿಯ ಹುಡುಕಾಟ ನಡೆಸಿದೆ.ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಈಗಾಗಲೇ ವಿಧಾನಪರಿಷತ್‌ ಸದಸ್ಯರಾಗಿದ್ದಾರೆ. ಮತ್ತೆ ಅವರೇ ಸ್ಪರ್ಧೆ ಮಾಡುವ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ನಡೆಯುತ್ತಿವೆ. \ No newline at end of file diff --git a/eesanje/url_46_98_4.txt b/eesanje/url_46_98_4.txt new file mode 100644 index 0000000000000000000000000000000000000000..a1cfb37a7d2303ebbb5f5442a265bbd2415fabf0 --- /dev/null +++ b/eesanje/url_46_98_4.txt @@ -0,0 +1,9 @@ +ಪೋಕ್ಸೊ ಪ್ರಕರಣದ ಅಪರಾಧಿಯ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ಮಾರ್ಪಡಿಸಿದ ಹೈಕೋರ್ಟ್ +ಬೆಂಗಳೂರು, ಜೂ.24– ಪೋಕ್ಸೋ ಕಾಯ್ದೆಯಡಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗೆ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಮಾರ್ಪಡಿಸಿ ಹೈಕೋರ್ಟ್ ದ್ವಿಸದಸ್ಯರ ಪೀಠ ತೀರ್ಪು ನೀಡಿದೆ. ಇದೇ ವೇಳೆ ನ್ಯಾಯಾಲಯವು ಆರೋಪಿಗೆ ಗರಿಷ್ಠ ದಂಡವನ್ನು ವಿಧಿಸುವಾಗ ಸರಿಯಾದ ಕಾರಣಗಳನ್ನು ನೀಡಬೇಕೆಂದು ಹೇಳಿದೆ. +ಚಿಕ್ಕಮಗಳೂರಿನ ಆರೋಪಿಗೆ ಹೈಕೋರ್ಟ್‌ ಈ ಹಿಂದೆ ಪೋಕ್ಸೊ ಕಾಯ್ದೆಯಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನ ದ್ವಿಸದಸ್ಯ ಪೀಠಕ್ಕೆ ಮೇಲನವಿ ಅರ್ಜಿ ಸಲ್ಲಿಸಲಾಗಿತ್ತು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಶ್ರೀನಿವಾಸ್‌‍ ಹರೀಶ್‌ಕುಮಾರ್‌ ಮತ್ತು ಸಿ.ಎಂ.ಜೋಶಿ ಅವರನ್ನೊಳಗೊಂಡ ದ್ವಿಸದ್ಸಯ ಪೀಠ ಜೀವಾವಧಿ ಶಿಕ್ಷೆಯನ್ನು 10 ವರ್ಷಕ್ಕೆ ಕಡಿತ ಮಾಡಿದೆ.ಅಲ್ಲದೆ ಆರೋಪಿಗೆ ವಿಧಿಸಲಾಗಿದ್ದ 5 ಸಾವಿರ ರೂ. ದಂಡವನ್ನು 25 ಸಾವಿರಕ್ಕೆ ಹೆಚ್ಚಳ ಮಾಡಿದೆ. +ಪ್ರಕರಣದ ಹಿನ್ನಲೆ: +ಆರೋಪಿಯು 2016 ಜೂನ್‌ನಲ್ಲಿ ತನ್ನ ನೆರೆಹೊರೆಯ ಅಪ್ರಾಪ್ತ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದ. ಡಿಎನ್‌ಎ ಪರೀಕ್ಷೆಯು ಆರೋಪಿಯನ್ನು ಜೈವಿಕ ತಂದೆ ಎಂದು ದೃಢಪಡಿಸಿದೆ.ಪೊಲೀಸರು ತಮ ತನಿಖೆಯ ನಂತರ ಎಫ್‌ಐಆರ್‌ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. +2018ರ ಜೂನ್‌ 11ರಂದು ಜಿಲ್ಲಾ ಕೇಂದ್ರ ಪಟ್ಟಣದ ಚಿಕ್ಕಮಗಳೂರಿನ ವಿಶೇಷ ನ್ಯಾಯಾಲಯವು ಆರೋಪಿಗೆ ಪೋಕ್ಸೋ ಕಾಯ್ದೆಯ ಸೆಕ್ಷನ್‌ 6ರಡಿ ಜೀವಾವಧಿ ಶಿಕ್ಷೆ ಮತ್ತು ಕ್ರಿಮಿನಲ್‌ ಬೆದರಿಕೆ ಆರೋಪದ ಮೇಲೆ ಆರೋಪಿಗೆ 5,000 ರೂ. ವಿಧಿಸಿ ತೀರ್ಪು ನೀಡಿತ್ತು.ಆರೋಪಿ ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸೂಕ್ತ ದಾಖಲೆಗಳೊಂದಿಗೆ ಬಾಲಕಿಯ ವಯಸ್ಸು ಸಾಬೀತಾಗಿಲ್ಲ ಎಂದು ವಾದಿಸಿದ್ದರು. +ಪ್ರಕರಣವನ್ನು ಪರಿಶೀಲಿಸಿದ ದ್ವಿಸದಸ್ಯ ಪೀಠ, ಮೌಖಿಕ ಸಾಕ್ಷ್ಯವು ಹುಡುಗಿಯ ಒಪ್ಪಿಗೆಯನ್ನು ಸೂಚಿಸಿದೆ ಎಂಬುದನ್ನು ಗಮನಿಸಿತು. ಆದರೂ ಘಟನೆಯ ಸಮಯದಲ್ಲಿ ಆಕೆಯ ನಿಜವಾದ ವಯಸ್ಸು 12 ಅನ್ನು ಗಮನಿಸಿದರೆ ಅದು ಕಾನೂನುಬದ್ಧವಾಗಿ ಅಪ್ರಸ್ತುತವಾಗಿದೆ. ಈ ಒಪ್ಪಿಗೆಯ ಸೂಚನೆಯು ಕಾಯಿದೆಯ ಸೆಕ್ಷನ್‌ 6ರಡಿ ಗರಿಷ್ಠ ಶಿಕ್ಷೆ ವಿಧಿಸುವುದನ್ನು ವಿರೋಧಿಸುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. +ವಿಶೇಷ ನ್ಯಾಯಾಲಯವು ಗರಿಷ್ಠ ಜೀವಾವಧಿ ಶಿಕ್ಷೆಯನ್ನು ವಿಧಿಸಲು ಸಾಕಷ್ಟು ಕಾರಣಗಳನ್ನು ಒದಗಿಸಿಲ್ಲ ಎಂಬುದನ್ನು ಗಮನಿಸಿದೆ. ಅಪರಾಧದ ದಿನಾಂಕದಂದು ಕಾನೂನಿನ ಪ್ರಕಾರ, ಕಾಯಿದೆಯ ಸೆಕ್ಷನ್‌ 6 ಕನಿಷ್ಠ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಗರಿಷ್ಠ ಜೀವಾವಧಿ ಶಿಕ್ಷೆಗೆ ಅವಕಾಶ ನೀಡುತ್ತದೆ. +ವಿಶೇಷ ನ್ಯಾಯಾಲಯದ ತೀರ್ಪಿನಲ್ಲಿ ಗೈರುಹಾಜರಾದ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಮಾನ್ಯ ಕಾರಣಗಳ ಅಗತ್ಯವಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಪರಿಣಾಮವಾಗಿ, ನ್ಯಾಯಾ ಲಯವು ತನ್ನ ಆದೇಶದಲ್ಲಿ ಜೀವಾವಧಿ ಶಿಕ್ಷೆಯಿಂದ 10 ವರ್ಷಗಳ ಜೈಲು ಶಿಕ್ಷೆಗೆ ಮಾರ್ಪಡಿಸಿದೆ. \ No newline at end of file diff --git a/eesanje/url_46_98_5.txt b/eesanje/url_46_98_5.txt new file mode 100644 index 0000000000000000000000000000000000000000..942a2411912662fafecae4a69fae0b0d587c6cb7 --- /dev/null +++ b/eesanje/url_46_98_5.txt @@ -0,0 +1,7 @@ +ಪಾರ್ಟಿಯಲ್ಲಿ ಎಣ್ಣೆ ಹಂಚಿಕೆ ವಿಷಯಕ್ಕೆ ನಡೀತಾ ಆಕಾಶ್‌ ಮಠಪತಿ ಕೊಲೆ..? +ಹುಬ್ಬಳ್ಳಿ, ಜೂ.24-ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಪುತ್ರ ಆಕಾಶ್‌ ಕೊಲೆ ಹಿಂದಿನ ಕಾರಣ ಬಹಿರಂಗಗೊಂಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ-ಹುಬ್ಬಳ್ಳಿ ಠಾಣೆ ಪೋಲಿಸರು ಎಂಟು ಜನರನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸಿದಾಗ ಆರೋಪಿಗಳು ಬಾಯಿಬಿಟ್ಟಿದ್ದಾರೆ. +ಕೊಲೆಯಾದ ಆಕಾಶ್‌ ಸ್ನೇಹಿತ ರಾಹುಲ್‌ ಪೊಲೀಸರ ಮುಂದೆ ಕೊಲೆಗೆ ಮದ್ಯ ಹಂಚಿಕೆಯಿಂದ ಶುರುವಾದ ಗಲಾಟೆ ಕಾರಣ ಅಂತ ಹೇಳಿದ್ದಾನೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಆಕಾಶ್‌ ಹಾಗೂ ಸ್ನೇಹಿತರು ಲೋಹಿಯಾ ನಗರದ ಪವನ್‌ ಶಾಲೆಯ ಹಿಂಭಾಗ ಪಾರ್ಟಿ ಮಾಡತ್ತಿದ್ದರು. ಮದ್ಯ ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆ. +ಕೊಲೆಯಾದ ಆಕಾಶ್‌ ಮಠಪತಿ ಮದ್ಯವನ್ನು ಜಾಸ್ತಿ ಹಾಕಿಕೊಂಡಿದ್ದಾರೆ. ನಿನಗೆ ಯಾಕೆ ಜಾಸ್ತಿ ಎಂದು ಕೇಳಿದಾಗ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ರಾಹುಲ್‌ ಆಕಾಶ್‌ನ ಕಪಾಳಕ್ಕೆ ಹೊಡೆದಿದ್ದಾನೆ. ಕೂಡಲೆ ಆಕಾಶ್‌ ಕೆಳಗೆ ಬಿದ್ದಿದ್ದಾನೆ. ಕುಡಿಯುವ ವಿಚಾರಕ್ಕೆ ನಾನು ಹೊಡೆದಿದ್ದೇನೆ ಎಂದು ರಾಹುಲ್‌ ತಪ್ಪೊಪ್ಪಿಕೊಂಡಿದ್ದಾನೆ. +ಆಕಾಶ್‌ ಕೆಳಗೆ ಬಿದ್ದ ತಕ್ಷಣ ರಾಹುಲ್‌ ಅಲ್ಲಿಂದ ಓಡಿ ಹೋಗಿದ್ದಾನೆ. ಕುಡಿದ ಮತ್ತಿನಲ್ಲಿ ಆಕಾಶ್‌ ಮೃತಪಟ್ಟಿರುವ ಬಗ್ಗೆ ಸ್ನೇಹಿತರ ಗಮನಕ್ಕೆ ಬಂದಿರಲಿಲ್ಲ. ಅರ್ಜುನ್‌ ಮಳಗಿ, ಸಂಜು ಕೊಪ್ಪದ, ರಾಹುಲ್‌ ಕಾಂಬ್ಳೆ, ವಿನಾಯಕ ತಾಳಿಕೊಟಿ, ಮನೋಜ್‌, ಚಮಕ್‌ ಅಲಿಯಾಸ್‌‍ ಮೌನೇಶ್‌, ಮಹೇಶ್‌ ಹಾಗೂ ಕಾರ್ತಿಕ ಬಂಧಿತ ಆರೋಪಿಗಳು. ಶೇಖರಯ್ಯ ಮಠಪತಿ ಆಕಾಶ್‌ ಪತ್ನಿ, ಅತ್ತೆ ಮತ್ತು ಮಾವನ ವಿರುದ್ಧವೂ ದೂರು ನೀಡಿದ್ದರು. +ಮೃತ ಆಕಾಶ್‌ನದ್ದು ಪ್ರೇಮ ವಿವಾಹ. ಆಕಾಶ್‌ ಮತ್ತು ಪತ್ನಿ ಕಾವ್ಯ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಾಸವಾಗಿದ್ದರು.ಹುಬ್ಬಳ್ಳಿಯಲ್ಲಿ ಕಳೆದ 3 ತಿಂಗಳಲ್ಲಿ ಮೂರು ಕೊಲೆಗಳಾದವು. ಏಪ್ರಿಲ್ ತಿಂಗಳಲ್ಲಿ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಕೊಲೆಯಾಗಿತ್ತು. ನಂತರ ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಮೇ ತಿಂಗಳಲ್ಲಿ ವೀರಾಪುರ ಓಣಿಯಲ್ಲಿ ಅಂಜಲಿಅಂಬಿಗೇರ ಕೊಲೆಯಾಗಿದೆ. +ಈ ಎರಡೂ ಪ್ರಕರಣದಿಂದ ಬೆಚ್ಚಿ ಬಿದ್ದಿರುವ ಹುಬ್ಬಳ್ಳಿ ಜನತೆ ಮತ್ತೊಂದು ಕೊಲೆಯ ಸುದ್ದಿ ಕೇಳಿದ್ದಾರೆ. ಅದು, ಆಟೋ ಚಾಲಕರ ಪರವಾಗಿ ಸತತ ಹೋರಾಟ ಮಾಡುತ್ತ ಬಂದಿರುವ ಆಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಹಿರೇಮಠ ಪುತ್ರ ಆಕಾಶ್ ಕೊಲೆ. ಸರಣಿ ಕೊಲೆಗಳಾಗಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹುಬ್ಬಳ್ಳಿ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. \ No newline at end of file diff --git a/eesanje/url_46_98_6.txt b/eesanje/url_46_98_6.txt new file mode 100644 index 0000000000000000000000000000000000000000..e6d7f7d33ab892058ba19e41c70ad38f772af47a --- /dev/null +++ b/eesanje/url_46_98_6.txt @@ -0,0 +1,4 @@ +ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣ 8 ದಿನಗಳ ಪೊಲೀಸ್ ಕಸ್ಟಡಿಗೆ +ಬೆಂಗಳೂರು, ಜೂ.24-ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಎಂಟು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. +ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಂಧನವಾಗಿದ್ದ ಸೂರಜ್ ರೇವಣ್ಣ ಅವರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು. +ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಸಿಐಡಿಪೊಲೀಸರು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾ„ೀಶರಾದ ಶಿವಕುಮಾರ್‍ರವರು 8 ದಿನಗಳ ಕಾಲ ಸೂರಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದರು. \ No newline at end of file diff --git a/eesanje/url_46_98_7.txt b/eesanje/url_46_98_7.txt new file mode 100644 index 0000000000000000000000000000000000000000..f9c8b9d1964677f93a8c68da51a634f7bea14814 --- /dev/null +++ b/eesanje/url_46_98_7.txt @@ -0,0 +1,6 @@ +ಜೈಲಲ್ಲಿರುವ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ ಮತ್ತು ನಟ ವಿನೋದ ಪ್ರಭಾಕರ್ +ಬೆಂಗಳೂರು, ಜೂ.24-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ನೋಡಲು ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ವಿನೋದ ಪ್ರಭಾಕರ್ ಅವರು ಜೈಲಿಗೆ ಆಗಮಿಸಿದ್ದರು. +ಜೈಲಿನಲ್ಲಿರುವ ತಮ ಪತಿಯನ್ನು ಭೇಟಿ ಮಾಡಲು ಆಗಮಿಸಿದ್ದ ವಿಜಯಲಕ್ಷ್ಮೀ ಹಾಗೂ ದರ್ಶನ್ ಪುತ್ರ ಮಾಧ್ಯಮದವರ ಕ್ಯಾಮೆರಾಗಳನ್ನು ನೋಡಿ ತುಸು ದೂರದಲ್ಲೇ ಕಾರು ನಿಲ್ಲಿಸಿದ್ದರು.ಅಲ್ಲಿಗೆ ತೆರಳಿದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ಅವರನ್ನು ಜೈಲಿನ ಬಳಿ ಕರೆದೊಯ್ದು ಜೈಲಿನ ಒಳಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು ಎನ್ನಲಾಗಿದೆ. +ನಂತರ ದರ್ಶನ್ ಆಪ್ತ ಸ್ನೇಹಿತ ನಟ ವಿನೋದ್ ಪ್ರಭಾಕರ್ ಕೂಡ ಆಗಮಿಸಿ ಗೇಟಿನ ಹೊರಗೆ ಕಾರು ನಿಲ್ಲಿಸಿ ಸಾಮಾನ್ಯ ಜನರಂತೆ ನಡೆದುಕೊಂಡು ಹೋಗಿದ್ದಾರೆ.ತಪಾಸಣೆ ಮಾಡಿ ನಂತರ ಜೈಲಿನ ಒಳಗೆ ದರ್ಶನ್ ಅವರನ್ನು ನೋಡಲು ಸಿಬ್ಬಂದಿ ಅವಕಾಶ ಮಾಡಿಕೊಟ್ಟರು ಎಂದು ತಿಳಿದುಬಂದಿದೆ. +ಇನ್ನು ಹಲವು ಅಭಿಮಾನಿಗಳು, ಸ್ನೇಹಿತರು ಅವರನ್ನು ನೋಡಲು ಬರುತ್ತಿದ್ದಾರೆ. ಕೆಲವರು ಹೊರಗಡೆ ಕಾಯುತ್ತಿದ್ದಾರೆ. ಈ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಮನವಿ ಮಾಡಿರುವ ಅರ್ಜಿ ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. +ಈ ಪ್ರಕರಣದ ಆರೋಪಿಗಳು ಒಂದೇ ಕಡೆ ಇರವುದು ಸುರಕ್ಷಿತವಲ್ಲ. ಕೆಲವರನ್ನು ತುಮಕೂರು ಜೈಲಿಗೆ ಸ್ಥಳಾಂತರಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.ಇವರ ಮನವಿಗೆ ದರ್ಶನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_46_98_8.txt b/eesanje/url_46_98_8.txt new file mode 100644 index 0000000000000000000000000000000000000000..367161339595552dbd6523f4dcb489dd790b84cd --- /dev/null +++ b/eesanje/url_46_98_8.txt @@ -0,0 +1,5 @@ +ಸಾರ್ವಜನಿಕ ಸ್ಥಳದಲ್ಲಿ ಲಾಂಗ್‌ ಝಳಪಿಸಿ ವಿಡಿಯೋ ಮಾಡಿದ್ದ ಪುಡಾರಿಗಳು ಅರೆಸ್ಟ್ +ಚಿಕ್ಕಮಗಳೂರು,ಜೂನ್‌.24-ಸಾರ್ವಜನಿಕ ಸ್ಥಳದಲ್ಲಿ ಲಾಂಗ್‌ ಝಳಪಿಸುತ್ತ ಸೆರೆಹಿಡಿದ ಚಿತ್ರವನ್ನು ಸಾಮಾಜಿಕ ಜಾಲತಾನದಲ್ಲಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಆರೋಪದ ಮೇಲೆ ಯುವಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. +ಎನ್‌‍.ಆರ್‌.ಪುರ ಪಟ್ಟಣದ 6ನೇ ವಾರ್ಡ್‌ ಬೆಟ್ಟಗೆರೆ ನಿವಾಸಿಗಳಾದ ಮೆಕಾನಿಕ್‌ ಸೈಯದ್‌ ಸಲ್ಮಾನ್‌ (22) ಮತ್ತು ಕಾರ್ಪೆಂಟರ್‌ ಮಹಮ್ಮದ್‌ ಸಾದಿಕ್‌ (25) ಬಂಧಿತರು. +ಇಬ್ಬರು ಆರೋಪಿಗಳು ಕಪ್ಪು ಕಾರಿನಲ್ಲಿ ಲಾಂಗ್‌ ಇರಿಸಿಕೊಂಡು ಹೆದರಿಕೆ ಹುಟ್ಟಿಸುವ ರೀತಿಯಲ್ಲಿ ಶೆಟ್ಟಿಕೊಪ್ಪ ಗ್ರಾಮದ ಕಡೆಯಿಂದ ಬರುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್‌ ಗುರುದತ್‌ ಕಾಮತ್‌ ನೇತೃತ್ವದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ ತಾಲ್ಲೂಕಿನ ಸೌತಿಕೆರೆ ಗ್ರಾಮದ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಲಾಂಗ್‌ ಕಂಡುಬಂದಿತ್ತು. +ಆಯುಧ ಮತ್ತು ಕಾರು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಯುವರಾಜ್‌‍, ದೇವರಾಜ್‌‍, ಚೈತ್ರಾ ಪಾಲ್ಗೊಂಡಿದ್ದರು. \ No newline at end of file diff --git a/eesanje/url_46_98_9.txt b/eesanje/url_46_98_9.txt new file mode 100644 index 0000000000000000000000000000000000000000..b80b7a8cf414234cddc3a7db912bba66329b23bf --- /dev/null +++ b/eesanje/url_46_98_9.txt @@ -0,0 +1,4 @@ +ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ +ನವದೆಹಲಿ, ಜೂ.24-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು. +ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ ಮಹತಾಬ್‌ ಅವರ ಸಮಕ್ಷಮದಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದೆ. +ಇದು ನನ್ನ ಬದುಕಿನ ಅವಿಸರಣೀಯ, ಹೆಮೆಯ ಕ್ಷಣ ಎಂದಿದ್ದಾರೆ.ಭಾರತದ ಪ್ರಜಾಪ್ರಭುತ್ವದ ದೇಗುಲದಲ್ಲಿ ಈ ಧನ್ಯತೆಯ ಕ್ಷಣಕ್ಕೆ ಕಾರಣೀಭೂತರಾದ ಮಂಡ್ಯ ಲೋಕಸಭಾ ಕ್ಷೇತ್ರದ ಎಲ್ಲಾ ತಂದೆ-ತಾಯಂದಿರು, ಅಣ್ಣ-ತಮಂದಿರು, ಅಕ್ಕ-ತಂಗಿಯರು ಹಾಗೂ ಸಮಸ್ತ ಕನ್ನಡಿಗರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ಹೇಳಿದ್ದಾರೆ. \ No newline at end of file diff --git a/eesanje/url_46_99_1.txt b/eesanje/url_46_99_1.txt new file mode 100644 index 0000000000000000000000000000000000000000..69ea7d07f766ef7f36f79e97091153c2342adb6b --- /dev/null +++ b/eesanje/url_46_99_1.txt @@ -0,0 +1,4 @@ +ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್, ಚರಂಡಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ +ಹುಬ್ಬಳ್ಳಿ,ಜೂ.24-ನಗರದಲ್ಲಿ ಮೊನ್ನೆ ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್‌ ಮಠಪತಿ ಕೊಲೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ನಗರದ ಇಂದಿರಾನಗರದ ಚರಂಡಿಯಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. +ಕಸಬಾಪೇಟೆ ಪೊಲೀಸ್‌‍ ಠಾಣೆಯಲ್ಲಿ ಅಸಹಜ ಸಾವು ಕೇಸ್‌‍ ದಾಖಲಾಗಿದೆ.ವಿದ್ಯಾರ್ಥಿನಿ ನೇಹಾ ನಿರಂಜನ್‌ ಹಿರೇಮಠ್‌ ಕೊಲೆ ಹಾಗೂ ಅಂಜಲಿ ಅಂಬೇಗರ್‌ ಕೊಲೆ ಪ್ರಕರಣಗಳು ನಡೆದು ಹುಬ್ಬಳ್ಳಿ ಕೊತಕೊತ ಕುದಿಯುತ್ತಿರುವ ಬೆನ್ನಲ್ಲೇ ಆಟೋ ಚಾಲಕ ಅಧ್ಯಕ್ಷನ ಪುತ್ರ ಮಠಪತಿ ಕೊಲೆ ನಡೆದಿತ್ತು. +ಇದೀಗ ಮತ್ತೊಬ್ಬ ವ್ಯಕ್ತಿಯ ಮೃತದೇಹ ಚರಂಡಿಯಲ್ಲಿ ಕೊಲೆ ಮಾಡಿದ ಶಂಕೆಯಲ್ಲಿ ಪತ್ತೆಯಾಗಿರುವುದು ಹುಬ್ಬಳ್ಳಿ ಮಂದಿ ಭೀತಿಗೊಳಗಾಗಿದ್ದಾರೆ. \ No newline at end of file diff --git a/eesanje/url_46_99_10.txt b/eesanje/url_46_99_10.txt new file mode 100644 index 0000000000000000000000000000000000000000..e48d461baf29aa4512563f946c376421e2df2ce6 --- /dev/null +++ b/eesanje/url_46_99_10.txt @@ -0,0 +1,8 @@ +ಬಿಜೆಪಿ ರಾಜಕಾರಣ ರಾಷ್ಟ್ರಹಿತಕ್ಕಾಗಿ : ಸಿ.ಟಿ. ರವಿ +ಬೆಂಗಳೂರು,ಜೂನ್‌.23-ರಾಷ್ಟ್ರಹಿತವನ್ನು ಬಿಟ್ಟುಕೊಡದೆ ರಾಷ್ಟ್ರಹಿತದ ಹಿನ್ನೆಲೆಯಲ್ಲೇ ಬಿಜೆಪಿ ರಾಜಕಾರಣ ಮಾಡುತ್ತ ಬಂದಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಏರ್ಪಡಿಸಿದ್ದ ಜಗನ್ನಾಥ ರಾವ್‌ ಜೋಶಿಯವರ ಜನ ದಿನ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಬಲಿದಾನ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. +ಮಧ್ಯಪ್ರದೇಶದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಜಗನ್ನಾಥ ರಾವ್‌ ಜೋಶಿ ಅವರು ಕಾರ್ಯಕರ್ತರಿಗೆ ಪ್ರೇರಕರು. ಅವರ ಹೆಸರನ್ನೀ ಈ ಭವನಕ್ಕೂ ಇಟ್ಟಿದ್ದೇವೆ ಎಂದು ವಿವರಿಸಿದರು. ಸಂಘಟಕ, ಮಾರ್ಗದರ್ಶಕರಾಗಿ ಪಕ್ಷದ ರಾಜ್ಯ ಮತ್ತು ದೇಶದ ಸಂಘಟನೆಯ ನಾಯಕತ್ವ ವಹಿಸಿ ಅವರು ಕರ್ನಾಟಕ ಕೇಸರಿ ಎಂಬ ಹೆಸರಿಗೆ ತಕ್ಕಂತೆ ಬದುಕಿದವರು ಎಂದು ತಿಳಿಸಿದರು. +ನರಗುಂದದಲ್ಲಿ ಅವರು ಹುಟ್ಟಿದ ಮನೆಯನ್ನು ಸಾರಕವಾಗಿ ಪರಿವರ್ತನೆ ಮಾಡಲಾಗಿದೆೆ. ಅಲ್ಲಿ ಅವರ ಬದುಕಿನ ಸಂಗತಿಗಳ ಚಿತ್ರಣ ಲಭಿಸುತ್ತದೆ. ವರ್ತಮಾನ ಮತ್ತು ಭವಿಷ್ಯದ ಪೀಳಿಗೆಗೂ ಅವರ ಜೀವನಾನುಭವ ಸಿಗಲಿ ಎಂದು ಸಾರಕ ಮಾಡಲಾಗಿದೆ ಎಂದು ಹೇಳಿದರು. +ಶ್ಯಾಮಪ್ರಸಾದ ಮುಖರ್ಜಿಯವರು ತಕ್ಕಮಟ್ಟಿನ ಶ್ರೀಮಂತ ಮನೆತನದಲ್ಲಿ ಅವರ ಜನ ಆಗಿತ್ತು. ಕಿರಿಯ ವಯಸ್ಸಿಗೇ ಕಲ್ಕತ್ತ ವಿಶ್ವವಿದ್ಯಾಲಯದ ಕುಲಪತಿಯಾಗಿ ಅವರು ಕೆಲಸ ಮಾಡಿದ್ದರು. ಹಿಂದೂ ಮಹಾಸಭೆಯ ಕಾರ್ಯಕಾರಿ ಅಧ್ಯಕ್ಷ, ಅಧ್ಯಕ್ಷರಾಗಿದ್ದರು. ರಾಷ್ಟ್ರೀಯ ಸರಕಾರದಲ್ಲಿ ಸಚಿವರಾಗಿದ್ದರು. ಇವರು ಕೇವಲ ಸುಶಿಕ್ಷಿತ, ವಾಗಿಯಲ್ಲ; ರಾಜನೀತಿ ಕ್ಷೇತ್ರದ ಕುಶಲ ಸಂಘಟಕನೂ ಆಗಿದ್ದು, ಅಪ್ರತಿಮ ರಾಷ್ಟ್ರವಾದಿಯಾಗಿ ಕಾರ್ಯನಿರ್ವಹಿಸಿದವರು ಎಂದು ವಿಶ್ಲೇಷಿಸಿದರು. ರಾಷ್ಟ್ರಹಿತದ ಜೊತೆ ಯಾವತ್ತೂ ರಾಜಿ ಮಾಡಿಕೊಳ್ಳದ ವ್ಯಕ್ತಿತ್ವ ಅವರದು ಎಂದು ತಿಳಿಸಿದರು. +ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಜನಸಂಘದ ಸಂಸ್ಥಾಪಕ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ ಹಾಗೂ ಕರ್ನಾಟಕದ ಕೇಸರಿ ದಿವಂಗತ ಜಗನ್ನಾಥ ರಾವ್ ಜೋಷಿ ಅವರ ಜನ್ಮ ಜಯಂತಿಯನ್ನು ಆಚರಿಸಲಾಯಿತು.ಭಾರತದ ಏಕತೆಯ ರಕ್ಷಣೆಯಲ್ಲಿ ದಿವಂಗತ ಶಾಮ ಪ್ರಸಾದ್ ಮುಖರ್ಜಿಯವರ ಪಾತ್ರ ಅತ್ಯಂತ ಅಮೂಲ್ಯವಾದದ್ದು. ಬಂಗಾಳವನ್ನು ಮತ್ತು…../gSJaABu2a9 +370ನೇ ವಿಧಿ ರದ್ದು ಮಾಡುವ ಜನಸಂಘದ ಮೊದಲ ಹೋರಾಟ ನಡೆದು 69 ವರ್ಷಗಳ ಬಳಿಕ, ಅವರ ಬಲಿದಾನವಾಗಿ 69 ವರ್ಷಗಳ ನಂತರ ನಾವು 370ನೇ ವಿಧಿ ರದ್ದುಪಡಿಸಿ, ಕಾಶೀರಕ್ಕೂ ಭಾರತದ ಸಂವಿಧಾನ, ಕಾಶೀರಕ್ಕೂ ಮೀಸಲಾತಿ ಅನುಕೂಲ, ಕಾಶೀರದ ಜನರೂ ಭಾರತೀಯತೆಯ ಒಂದು ಭಾಗ ಎಂಬುದನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈಡೇರಿಸಿದ್ದೇವೆ ಎಂದು ತಿಳಿಸಿದರು. +ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್‌ ಕುಮಾರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್‌ ಗೌಡ, ಶಾಸಕ ಬಸವರಾಜ್‌ ಮತ್ತಿಮೂಡ್‌, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್‌ ಅಂಬೆಕಲ್ಲು, ವಿಭಾಗ ಸಂಘಟನಾ ಕಾರ್ಯದರ್ಶಿ ಉದಯ್‌ ಕುಮಾರ್‌ ಶೆಟ್ಟಿ, ವಿಭಾಗ ಪ್ರಭಾರಿ ರಾಜೇಶ್‌ ಕಾವೇರಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪಕ್ಷದ ಪ್ರಮುಖರು ಕಾರ್ಯಕರ್ತರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು. \ No newline at end of file diff --git a/eesanje/url_46_99_11.txt b/eesanje/url_46_99_11.txt new file mode 100644 index 0000000000000000000000000000000000000000..4cc560809dfa50a4c4eeb27efea922483069f066 --- /dev/null +++ b/eesanje/url_46_99_11.txt @@ -0,0 +1,7 @@ +ನಾಳೆ ಪರಿಷತ್‌ನ 17 ನೂತನ ಪರಿಷತ್‌ ಸದಸ್ಯರ ಪ್ರಮಾಣ ವಚನ +ಬೆಂಗಳೂರು, ಜೂ.23-ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಿರುವ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಂದ ಆಯ್ಕೆಯಾಗಿರುವ ಒಟ್ಟು 17 ಮಂದಿ ವಿಧಾನ ಪರಿಷತ್‌ನ ನೂತನ ಸದಸ್ಯರು ನಾಳೆ ಪ್ರಮಾವಣ ವಚನ ಸ್ವೀಕರಿಸಲಿದ್ದಾರೆ. +ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ.ವಿಧಾನಸಭೆಯ ಸದಸ್ಯರಿಂದ 11 ಮಂದಿ, ಶಿಕ್ಷಕರ ಕ್ಷೇತ್ರಗಳಿಂದ ಮೂವರು ಹಾಗೂ ಪದವೀಧರ ಕ್ಷೇತ್ರಗಳಿಂದ ಮೂವರು ಸದಸ್ಯರು ಚುನಾಯಿತರಾಗಿದ್ದಾರೆ. +ಆಡಳಿತಾರೂಢ ಕಾಂಗ್ರೆಸ್‌‍ನಿಂದ ಸ್ಫರ್ಧಿಸಿ ಸಚಿವ ಎನ್‌.ಎಸ್‌‍.ಬೋಸರಾಜು, ಕೆ.ಗೋವಿಂದರಾಜು, ಎ.ವಸಂತಕುಮಾರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಐವಾನ್‌ ಡಿಸೋಜ, ಜಗದೇವ ಗುತ್ತೇದಾರ್‌, ಬಲ್ಕೀಸ್‌‍ ಬಾನು, ಡಿ.ಟಿ.ಶ್ರೀನಿವಾಸ, ರಾಮೋಜಿಗೌಡ, ಡಾ. ಚಂದ್ರಶೇಖರ ಬಸವರಾಜ ಪಾಟೀಲ ಸೇರಿದಂತೆ 10 ಮಂದಿ ಚುನಾಯಿತರಾಗಿದ್ದಾರೆ. +ಬಿಜೆಪಿಯಿಂದ ಸ್ಪರ್ಧಿಸಿ ಸಿ.ಟಿ.ರವಿ, ಎನ್‌.ರವಿಕುಮಾರ್‌, ಮೂಳೆ ಮಾರುತಿರಾವ್‌, ಡಾ.ಧನಂಜಯ ಸರ್ಜಿ ಸೇರಿದಂತೆ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. +ಜೆಡಿಎಸ್‌‍ನಿಂದ ಟಿ.ಎನ್‌.ಜವರಾಯಿಗೌಡ, ಎಸ್‌‍.ಎಲ್‌.ಭೋಜೇಗೌಡ, ಕೆ. ವಿವೇಕಾನಂದ ಸೇರಿದಂತೆ ಮೂವರು ಚುನಾಯಿತರಾಗಿದ್ದಾರೆ.ಆಡಳಿತ ಪಕ್ಷದ 10 ಮಂದಿ ಹಾಗೂ ವಿರೋಧ ಪಕ್ಷಗಳ 7 ಮಂದಿ ಸದಸ್ಯತ್ವದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. +ಮೂರು ರಾಜಕೀಯ ಪಕ್ಷಗಳ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವುದರಿಂದ ಸಚಿವರು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ನೂತನ ಸದಸ್ಯರ ಕುಟುಂಬದವರು, ಅಭಿಮಾನಿಗಳು ಹಾಜರಿದ್ದು, ಅಭಿನಂದಿಸಲಿದ್ದಾರೆ. \ No newline at end of file diff --git a/eesanje/url_46_99_12.txt b/eesanje/url_46_99_12.txt new file mode 100644 index 0000000000000000000000000000000000000000..c1c4507647b5ef9d44115e3f3a48a86701e694d6 --- /dev/null +++ b/eesanje/url_46_99_12.txt @@ -0,0 +1,9 @@ +ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್‌ ರೇವಣ್ಣ ಅರೆಸ್ಟ್ +ಹಾಸನ, ಜೂ.23-ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣರನ್ನು ಸೆನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹೊಳೆನರಸೀಪುರದ ಠಾಣೆಯಲ್ಲಿ ನಿನ್ನೆ ಸಂಜೆ ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. +ಈ ಸಂಬಂಧ ಪ್ರಕರಣದ ಬಗ್ಗೆ ವಿವರಣೆ ನೀಡಲು ಸೂರಜ್‌ ರೇವಣ್ಣ ಸೆನ್‌ ಪೊಲೀಸ್‌‍ ಠಾಣೆಗೆ ನಿನ್ನೆ ಸಂಜೆ ಹೋಗಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.ಇಂದು ಮುಂಜಾನೆ 4 ಗಂಟೆವರೆಗೂ ಅವರ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಬಳಿಕ ಬಂಧಿಸಿದ್ದಾರೆ. +ಪ್ರಕರಣದ ವಿಚಾರಣೆಗಾಗಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್‌ ಕುಮಾರ್‌ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಹಾಸನದ ಮಾಜಿ ಸಂಸದ, ಸೂರಜ್‌ ರೇವಣ್ಣ ಸಹೋದರ ಪ್ರಜ್ವಲ್‌ ರೇವಣ್ಣ ಈಗಾಗಲೇ ಎಸ್‌‍ಐಟಿ ಕಸ್ಟಡಿಯಲ್ಲಿದ್ದಾರೆ. ಅವರು ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ. ಈಗ ಸೂರಜ್‌ ರೇವಣ್ಣ ಸಹ ಬಂಧನವಾಗಿದ್ದು, ರೇವಣ್ಣ ಅವರ ಇಬ್ಬರು ಪುತ್ರರು ಗಂಭೀರ ಆರೋಪ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ. +ಇಂದು ಮುಂಜಾನೆ 4 ಗಂಟೆವರೆಗೂ ಸೂರಜ್‌ ರೇವಣ್ಣ ವಿಚಾರಣೆಯನ್ನು ಠಾಣೆಯಲ್ಲಿ ನಡೆಸಿದ್ದ ತನಿಖಾಧಿಕಾರಿ ಬಳಿಕ ನಗರದ ಸೆನ್‌ ಠಾಣೆಯಲ್ಲೇ ಸೂರಜ್‌ ಮಲಗಲು ವ್ಯವಸ್ಥೆ ಮಾಡಿದ್ದರು. ಇಂದು ಅವರ ವಿಚಾರಣೆ ಮುಂದುವರೆಯಲಿದೆ. ಅದಕ್ಕೂ ಮೊದಲು ಅವರನ್ನು ಪೊಲೀಸರು ಬಂಧಿಸಿದ್ದಾರೆ. +ಸದ್ಯ ಹಾಸನದ ಸೆನ್‌ ಠಾಣೆಯಲ್ಲಿ ಸೂರಜ್‌ ರೇವಣ್ಣ ಇದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಅವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿ ಮತ್ತೆ ತಮ ವಶಕ್ಕೆ ಪಡೆಯಲಿದ್ದಾರೆ. ಇಂದು ಕೋರ್ಟ್‌ ರಜೆ ಇರುವ ಕಾರಣ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಿ ಹಾಜರುಪಡಿಸಲಿದ್ದಾರೆ. +ಭದ್ರತೆ:ಸೂರಜ್‌ ಬಂಧನದ ಹಿನ್ನೆಲೆಯಲ್ಲಿ ಸೆನ್‌ ಠಾಣೆ ಮುಂದೆ ಪೊಲೀಸ್‌‍ ಭದ್ರತೆ ಹೆಚ್ಚಿಸಲಾಗಿದ್ದು, 3 ಕೆಎಸ್‌‍ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ.ಸೂರಜ್‌ ರೇವಣ್ಣ ಹಾಲಿ ವಿಧಾನ ಪರಿಷತ್‌ ಸದಸ್ಯರಾಗಿರುವ ಕಾರಣ ಅವರ ವಿರುದ್ಧದ ಪ್ರಕರಣದ ವಿಚಾರಣೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದೆ. +ಸದ್ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ ಕೂಡ ವರ್ಗಾವಣೆ ಅಗುವ ನಿರೀಕ್ಷೆ ಇದ್ದು, ಈ ಕುರಿತು ಪೊಲೀಸರು ಕಾನೂನು ತಜ್ಞರ ಜೊತೆ ಚರ್ಚೆ ನಡೆೆಸಿದ್ದಾರೆ. +ಕಾರು ತೆಗೆದುಕೊಂಡು ಹೋದ ಚಾಲಕ :ನಿನ್ನೆ ಸಂಜೆ ಸೂರಜ್‌ ತಮ ಮೇಲಿನ ಆರೋಪದ ಬಗ್ಗೆ ದಾಖಲಾಗಿರುವ ಪ್ರಕರಣ ಸಂಬಂಧ ವಿಚಾರಿಸಲು ಠಾಣೆಗೆ ಕಾರಿನಲ್ಲಿ ಬಂದಿದ್ದರು. ಇಂದು ಮುಂಜಾನೆ ಅವರನ್ನು ಬಂಧಿಸಿದ ಕಾರಣ ಠಾಣೆ ಮುಂದೆ ನಿಲ್ಲಿಸಲಾಗಿದ್ದ ಕಾರನ್ನು ಇಂದು ಬೆಳಿಗ್ಗೆ ಅವರ ಚಾಲಕ ತೆಗೆದುಕೊಂಡು ಮನೆಗೆ ಹೋಗಿದ್ದಾರೆ.ಸೂರಜ್‌ ರೇವಣ್ಣ ವಿರುದ್ಧ ದೂರು ನೀಡಿರುವ ಸಂತ್ರಸ್ತ ಯುವಕನಿಗೆ ಇಂದು ವೈದ್ಯಕೀಯ ಪರೀಕ್ಷೆ ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ನಡೆಯಿತು. \ No newline at end of file diff --git a/eesanje/url_46_99_2.txt b/eesanje/url_46_99_2.txt new file mode 100644 index 0000000000000000000000000000000000000000..b641c85ed9ae9d9cc7afe08bdb4366bd221af341 --- /dev/null +++ b/eesanje/url_46_99_2.txt @@ -0,0 +1,5 @@ +ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ +ಬೆಳ್ತಂಗಡಿ,ಜೂ.24-ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಿನ್ನೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. +ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು. +ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮ ಭಾಗದಲ್ಲಿ ಬರಗಾಲವಿದ್ದು, ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ ಎಂದ ಅವರು ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ. +ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌‍ ರಾವ್‌ ಸೇರಿದಂತೆ ಇನ್ನು ಅನೇಕರು ಜೊತೆಯಲ್ಲಿದ್ದರು. \ No newline at end of file diff --git a/eesanje/url_46_99_3.txt b/eesanje/url_46_99_3.txt new file mode 100644 index 0000000000000000000000000000000000000000..7511c0c32e889a2cfcd4576423b9949890ad2d70 --- /dev/null +++ b/eesanje/url_46_99_3.txt @@ -0,0 +1,6 @@ +ವಿಧಾನಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಜೂ. 25ರಂದು ಅಧಿಸೂಚನೆ +ಬೆಂಗಳೂರು, ಜೂ.23-ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತರೆವಾಗಿರುವ ವಿಧಾನಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಜೂ. 25ರಂದು ಅಧಿಸೂಚನೆ ಹೊರಬೀಳಲಿದೆ. +ಅಂದಿನಿಂದ ಜುಲೈ ಎರಡರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ವಿಧಾನಸಭೆ ಸದಸ್ಯರಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. 2028ರ ಜೂ.14 ರವರೆಗೆ ಈ ಚುನಾವಣೆಯಲ್ಲಿ ಆಯ್ಕೆಯಾಗುವ ಸದಸ್ಯರ ಅವಧಿ ಇರಲಿದೆ. +ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್‌ ನೀಡಲಿಲ್ಲ ಎಂದು ಅಸಮಾಧಾನಗೊಂಡು ಜಗದೀಶ್‌ ಶೆಟ್ಟರ್‌ ಬಿಜೆಪಿ ತೊರೆದು ಕಾಂಗ್ರೆಸ್‌‍ ಸೇರಿದ್ದರು. ಕಾಂಗ್ರೆಸ್‌‍ನಿಂದ ಸ್ಪರ್ಧಿಸಿದ್ದ ಅವರು ಪರಾಭವಗೊಂಡಿದ್ದರು. ನಂತರ ವಿಧಾನಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. +ಈಗ ಮತ್ತೆ ಕಾಂಗ್ರೆಸ್‌‍ ತೊರೆದು ಬಿಜೆಪಿಗೆ ಮರಳಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶೆಟ್ಟರ್‌ ಚುನಾಯಿತರಾಗಿದ್ದಾರೆ.ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯುವುದರಿಂದ ಆಡಳಿತಾರೂಢ ಕಾಂಗ್ರೆಸ್‌‍ ಅಭ್ಯರ್ಥಿ ಚುನಾಯಿತರಾಗಲಿದ್ದಾರೆ. ಹೀಗಾಗಿ ಜೆಡಿಎಸ್‌‍ ಮತ್ತು ಬಿಜೆಪಿ ಈ ಉಪಚುನಾವಣೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ. +ಈ ಉಪ ಚುನಾವಣೆಗೆ ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ಜು.3ರಂದು ನಡೆಯಲಿದ್ದು, ನಾಮಪತ್ರ ವಾಪಸ್ಸಿಗೆ ಜು.5ರವರೆಗೂ ಅವಕಾಶವಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿ ಉಳಿದರೆ, ಜು.12ರಂದು ಬೆಳಿಗ್ಗೆ 9ರಿಂದ ಸಂಜೆ ನಾಲ್ಕು ಗಂಟೆವರೆಗೆ ಮತದಾನ ನಡೆಯಲಿದೆ. ಅಂದು 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಜು.16ರವೇಳೆಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. \ No newline at end of file diff --git a/eesanje/url_46_99_4.txt b/eesanje/url_46_99_4.txt new file mode 100644 index 0000000000000000000000000000000000000000..ff4343d56a651a676551e0f2571d1496fb10e930 --- /dev/null +++ b/eesanje/url_46_99_4.txt @@ -0,0 +1,7 @@ +ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಸೆಡ್ಡುಹೊಡೆದ ಈಶ್ವರ್ ಖಂಡ್ರೆ +ಬೆಂಗಳೂರು, ಜೂ.23-ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆಗೆ ಗಣಿಗಾರಿಕೆ ನಡೆಸಲು ಬಳ್ಳಾರಿ ಬಳಿ ಮಂಜೂರು ಮಾಡಲಾಗಿದ್ದ 401 ಎಕರೆಯನ್ನು ಹಸ್ತಾಂತರಿಸುವುದನ್ನು ತಡೆಹಿಡಿಯಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಭೂಮಿ ನೀಡುವಂತೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ 2018 ರ ಮಾ. 16 ರಂದು ಮನವಿ ಸಲ್ಲಿಸಿತ್ತು. 2018 ರ ಜು. 27 ರಂದು ನೋಡೆಲ್‌ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಿದ್ದರು. 2020 ರ ಫೆ.18 ರಂದು ಅರಣ್ಯ ಇಲಾಖೆ ಈ ವಿಚಾರವಾಗಿ ತನ್ನ ನಿಲುವನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದರು. +ಸಲ್ಲಿಕೆಯಾದ ವರದಿಯಲ್ಲಿ ವಲಯ ಅರಣ್ಯಾಧಿಕಾರಿ, ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಹೆಚ್ಚುವರಿ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದರೆ ನೈಸರ್ಗಿಕ ಕಾಡು ನಾಶವಾಗುತ್ತದೆ. ಜಲಮೂಲ ಹಾಗೂ ನೀರಿನ ಹರಿವಿಗೆ ಹಾನಿಯಾಗುವುದರಿಂದ ಗಣಿಗಾರಿಕೆಗೆ ಅನುಮೋದನೆ ನೀಡಬಾರದು ಎಂದು ನಿವೇದಿಸಿಕೊಂಡಿದ್ದಾರೆ ಎಂದು ಹೇಳಿದರು. ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯವರು 2020ರ ಅ. 9 ರಂದು ಅರಣ್ಯಾಧಿಕಾರಿಗಳು ನೀಡಿದ ಅಭಿಪ್ರಾಯವನ್ನು ಬದಿಗೊತ್ತಿ ಮೊದಲ ಹಂತದ ಗಣಿಗಾರಿಕೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. +2021 ಜೂ. 24 ರಂದು ಕೇಂದ್ರ ಸರ್ಕಾರ ಕೆಲ ಷರತ್ತುಗಳೊಂದಿಗೆ ಗಣಿಗಾರಿಕೆಗೆ ಪರವಾನಗಿಗೆ ಅನುಮತಿ ನೀಡಿದೆ. ಅದರ ಆಧಾರದ ಮೇಲೆ ನೈಜ್ಯ ಬೆಲೆ 32 ಕೋಟಿ ರೂ. ಹಾಗೂ ಪರಿಹಾರ ಕಾಮಗಾರಿಗಳಿಗೆ 147 ಕೋಟಿ ರೂ. ಸೇರಿ ಸರಿಸುಮಾರು 194 ಕೋಟಿ ರೂ.ಗಳನ್ನು ಪಾವತಿಸಲಾಗಿದೆ. ಈ ಹಣ ಕೇಂದ್ರ ಸರ್ಕಾರದ ಬಳಿ ಇರಲಿದ್ದು, ರಾಜ್ಯಕ್ಕೆ ಶೇ.90 ರಷ್ಟು ಪಾಲು ದೊರೆಯಲಿದೆ. ಇದರ ಬಳಿಕ 2ನೇ ಹಂತದ ಅನುಮತಿ ದೊರೆಯಲಿದೆ ಎಂದು ಹೇಳಿದರು. +ಕುದುರೆಮುಖ ಕಬ್ಬಿಣದ ಅದಿರು ಕಂಪನಿಯವರು ಹಿಂದೆ ಗಣಿಗಾರಿಕೆ ನಡೆಸುವ ವೇಳೆ ಅನೇಕ ಷರತ್ತುಗಳನ್ನು ಹಾಗೂ ಇತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಇದಕ್ಕಾಗಿ ದಂಡ ವಿಧಿಸಲಾಗಿದೆ. ಕಂಪನಿ ಷರತ್ತುಗಳನ್ನು ಪೂರೈಸುವವರೆಗೂ ಕುದುರೆಮುಖ ಸಂಸ್ಥೆಗೆ ಗಣಿಗಾರಿಕೆ ನಡೆಸಲು 401 ಎಕರೆ ಭೂಮಿಯನ್ನು ಹಸ್ತಾಂತರಿಸಬಾರದು ಎಂದು ತಡೆಹಿಡಿದಿದ್ದೇನೆ ಎಂದರು. +ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರು ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆಯನ್ನು ಪುನಶ್ಚೇತನಗೊಳಿಸುವುದಾಗಿ ಹೇಳಿದರು. ಸಚಿವ ಈಶ್ವರ್‌ ಖಂಡ್ರೆಯವರ ಹೇಳಿಕೆ ಇದಕ್ಕೆ ಹಿನ್ನಡೆ ಉಂಟುಮಾಡಿದಂತಾಗಿದೆ. \ No newline at end of file diff --git a/eesanje/url_46_99_5.txt b/eesanje/url_46_99_5.txt new file mode 100644 index 0000000000000000000000000000000000000000..11ae8e077d6a2521fae322d4f191d544885f63e2 --- /dev/null +++ b/eesanje/url_46_99_5.txt @@ -0,0 +1,6 @@ +ಪರಪ್ಪನ ಅಗ್ರಹಾರ ಜೈಲಲ್ಲಿ ಊಟ, ನಿದ್ದೆ ಮಾಡದೆ ರಾತ್ರಿ ಕಳೆದ ದರ್ಶನ್ +ಬೆಂಗಳೂರು,ಜೂ.23-ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಚಿತ್ರನಟ ದರ್ಶನ್‌ ಸರಿಯಾಗಿ ಊಟ ಮಾಡದೆ ಹಾಗೂ ನಿದ್ದೆ ಮಾಡದೆ ರಾತ್ರಿ ಕಳೆದಿದ್ದಾರೆ.ದರ್ಶನ್‌ ಹಾಗೂ ನಾಲ್ವರು ಆರೋಪಿಗಳನ್ನು ನ್ಯಾಯಾಲಯ ನಿನ್ನೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. +ದರ್ಶನ್‌ ಜೈಲು ಸೇರುತ್ತಿದ್ದಂತೆ ವಿಚಾರಣಾಧೀನ ಕೈದಿ ನಂಬರ್‌ ನೀಡಿ ಬ್ಯಾರೆಕ್‌ಗೆ ಕಳುಹಿಸಲಾಯಿತು. ನಿನ್ನೆ ರಾತ್ರಿ ಊಟಕ್ಕೆ ಚಪಾತಿ, ಅನ್ನ-ಸಾಂಬಾರ್‌, ಮಜ್ಜಿಗೆ ಜೈಲೂಟ ನೀಡಲಾಯಿತು. ಆದರೆ ದರ್ಶನ್‌ ಸರಿಯಾಗಿ ಊಟ ಮಾಡಿಲ್ಲ. +ಪೊಲೀಸ್‌‍ ಕಸ್ಟಡಿ ವಿಚಾರಣೆಯಲ್ಲಿ ಹಣ್ಣುಗಾಯಿ ನೀರುಗಾಯಿ ಆಗಿದ್ದ ದರ್ಶನ್‌ ಅವರು, ಮೊದಲ ದಿನ ರಾತ್ರಿ ಸರಿಯಾಗಿ ಊಟ, ನಿದ್ರೆ ಮಾಡದೆ ಜೈಲಿನಲ್ಲಿ ಸುಮನೆ ಕುಳಿತಿದ್ದರು. ತಡರಾತ್ರಿ ನಿದ್ರೆಗೆ ಜಾರಿದರು ಎಂದು ತಿಳಿದುಬಂದಿದೆ. ಬೆಳಗ್ಗೆ 6 ಗಂಟೆಗೆ ಎದ್ದು ಅವರು ನಿತ್ಯಕರ್ಮ ಮುಗಿಸಿ ಚಿಂತಾಕ್ರಾಂತರಾಗಿಯೇ ಕುಳಿತಿದ್ದರು. ಜೈಲಿನ ಮೆನು ಪ್ರಕಾರ ಅವರಿಗೆ ಬೆಳಗಿನ ತಿಂಡಿ ಪಲಾವ್‌ ನೀಡಲಾಯಿತು. +13 ವರ್ಷಗಳ ಹಿಂದೆ 2011ರಲ್ಲಿ ತನ್ನ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿ ಹಲವು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಈಗ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. +ರೇಣುಕಾಸ್ವಾಮಿ ಹಲ್ಲೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈವರೆಗೆ ನಟ ದರ್ಶನ್‌ , ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದಾರೆ. \ No newline at end of file diff --git a/eesanje/url_46_99_6.txt b/eesanje/url_46_99_6.txt new file mode 100644 index 0000000000000000000000000000000000000000..0e91e9ff9cee5421f6e8c08bbee29a95b74c7020 --- /dev/null +++ b/eesanje/url_46_99_6.txt @@ -0,0 +1,7 @@ +ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಗೆ ಯಾವುದೇ ಆತುರವಿಲ್ಲ : ಹೆಚ್ಡಿಕೆ +ಬೆಂಗಳೂರು,ಜೂ.23-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಆತುರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಧಾನವಾಗಿ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ. ಸದ್ಯಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಆತುರ ನಮಗಿಲ್ಲ ಎಂದರು. +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಸ್ಪರ್ಧಿಸಬೇಡಿ ಎಂದು ತಡೆದಿರುವವರು ಯಾರು ಎಂದು ಪ್ರಶ್ನಿಸಿದರು. +ಚನ್ನಪಟ್ಟಣಕ್ಕೆ ಶಿವಕುಮಾರ್ ಭೇಟಿ ಕೊಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಹೋದರೆ ತಪ್ಪೇನಿದೆ? ಅವರನ್ನು ಹಿಡಿದುಕೊಂಡಿರುವವರು ಯಾರು? ಈಗಲಾದರೂ ಚನ್ನಪಟ್ಟಣದ ಬಗ್ಗೆ ಕಾಳಜಿ ಬಂದಿದ್ದು, ಗಮನಹರಿಸುತ್ತಿರುವುದಕ್ಕೆ ಅಭಿನಂದಿಸೋಣ ಎಂದು ಹೇಳಿದರು. +ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಾಗಿದ್ದಾರೆ. ಅವರನ್ನು ಚನ್ನಪಟ್ಟಣಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಂಡಿರುವುದಕ್ಕೆ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿ ಸೇಡು ತೀರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗಮನ ಸೆಳೆದಾಗ ಅವರು ರಾಜಕಾರಣ ಮಾಡುತ್ತಾರೆ. ಮಾಡಲಿ ಬನ್ನಿ ಎಂದಷ್ಟೇ ಹೇಳಿದರು. +ಎಚ್ಡಿಕೆ ಗರಂ:ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನನಗೆ ಆ ರೀತಿಯ ಪ್ರಶೆ ಕೇಳುತ್ತೀರಾ? ಅಂತಹ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವ ಅಗತ್ಯವಿಲ್ಲ ಎಂದು ಗರಮಾದರು. +ಆರೋಪ ಕೇಳಿಬಂದಿದ್ದು ಕಾನೂನು ರೀತಿ ಕ್ರಮ ಆಗಲಿದೆ. ಅವರ ಮೇಲಿನ ಆರೋಪಕಕ್ಕೂ ನಮಗೂ ಏನು ಸಂಬಂಧ? ಈ ವಿಚಾರದ ಬಗ್ಗೆ ಅನಂತರ ಮಾತನಾಡೋಣ ಬನ್ನಿ ಎಂದರು. \ No newline at end of file diff --git a/eesanje/url_46_99_7.txt b/eesanje/url_46_99_7.txt new file mode 100644 index 0000000000000000000000000000000000000000..21300e03a91eb87679fbc62a96816dfa84489b38 --- /dev/null +++ b/eesanje/url_46_99_7.txt @@ -0,0 +1,7 @@ +ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿಗಳ ಮೊಬೈಲ್‌ಗಳ ಪರಿಶೀಲನೆ +ಬೆಂಗಳೂರು, ಜೂ.23-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಇದುವರೆಗೂ 139 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಇದೀಗ ಆರೋಪಿಗಳ ಮೊಬೈಲ್ಗಳನ್ನು ಪರಿಶೀಲನೆಗೆ ಒಳಪಡಿಸಲಿದ್ದಾರೆ.ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿ 12 ದಿನಗಳ ಕಾಲ ತಮ ಕಸ್ಟಡಿಯಲ್ಲಿಟ್ಟುಕೊಂಡು ಸುದೀರ್ಘ ವಿಚಾರಣೆ ನಡೆಸಿರುವ ವಿಜಯನಗರ ಉಪವಿಭಾಗದ ಪೊಲೀಸರು ಹಲವು ಸ್ಥಳಗಳಲ್ಲಿ ಮಹಜರು ನಡೆಸಿ ನೂರಾರು ಸಾಕ್ಷ್ಯಗಳನ್ನು ಜಪ್ತಿ ಮಾಡಿದ್ದಾರೆ. +ಪ್ರಮುಖ ಸಾಕ್ಷ್ಯ ಕಲೆ ಹಾಕಲು ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ಮೊಬೈಲ್ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇದೀಗ ಅವುಗಳನ್ನು ಎಫ್ಎಸ್ಎಲ್ಗೆ ಕಳುಹಿಸಿ ಡಾಟಾ ರಿಟ್ರೀವ್ ಮಾಡಿಸಲಾಗುತ್ತಿದೆ.ರೇಣುಕಾಸ್ವಾಮಿ ಕೊಲೆಯಾದ ದಿನ ಬಂಧಿತರಾಗಿರುವ ಆರೋಪಿಗಳ ಪೈಕಿ ಯಾರ್ಯಾರು ಎಲ್ಲಿದ್ದರು, ಯಾರಿಗೆ ಕರೆ ಮಾಡಿದರು, ಅಂದು ಘಟನೆಯ ವಿಡಿಯೋ ಮಾಡಲಾಗಿತ್ತೇ?, ಯಾರು ಯಾರಿಗೆ ಎಷ್ಟು ಹಣ ಕಳುಹಿಸಿದರು ಎಬೆಂಲ್ಲಾ ಮಾಹಿತಿಗಾಗಿ ಆರೋಪಿಗಳ ಮೊಬೈಲ್ ಪರಿಶೀಲನೆ ಮಾಡಲಾಗುತ್ತಿದ್ದು, ಇದರಿಂದ ಇನ್ನಷ್ಟು ವಿಷಯಗಳು ಬೆಳಕಿಗೆ ಬರಲಿವೆ. +ಆರೋಪಿ ರಾಘವೇಂದ್ರ ಹಾಗೂ ಕೊಲೆಯಾಗಿರುವ ರೇಣುಕಾಸ್ವಾಮಿ ಮೊಬೈಲ್ಗಳು ಸುಮನಹಳ್ಳಿ ರಾಜಕಾಲುವೆಗೆ ಎಸೆದಿರುವುದರಿಂದ ಸತತ ಹುಡುಕಾಟ ನಡೆಸಿದರೂ ಆ ಮೊಬೈಲ್ಗಳು ಇದುವರೆಗೂ ಪತ್ತೆಯಾಗಿಲ್ಲ. +ಸಿಮ್ ಖರೀದಿ:ಈ ಇಬ್ಬರ ಮೊಬೈಲ್ಗಳು ದೊರೆಯದ ಕಾರಣ ಅವರ ಸಿಮ್ಗಳನ್ನು ಹೊಸದಾಗಿ ಪಡೆದು ಅದರಲ್ಲಿ ಇರುವಂತಹ ಸಂದೇಶಗಳು, ಕರೆ ಮಾಹಿತಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. +ಒಂದು ವೇಳೆ ಆ ಎರಡು ಮೊಬೈಲ್ಗಳು ಸಿಕ್ಕಿದ್ದಲ್ಲಿ ಪೊಲೀಸರ ತನಿಖೆಗೆ ಸಾಕಷ್ಟು ಸಹಕಾರಿ ಆಗಲಿದೆ.ಈ ಪ್ರಕರಣದಲ್ಲಿ ಈಗಾಗಲೇ 139 ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದು, ಈ ಪೈಕಿ ಕೆಲವು ವಸ್ತುಗಳನ್ನು ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಬಂದಲ್ಲಿ ಇನ್ನಷ್ಟು ವಿವರಗಳು ಲಭ್ಯವಾಗಲಿವೆ. +ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇದುವರೆಗೂ 17 ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯ ಮುಂದೆ ಹಾಜರು ಪಡಿಸಿದಾಗ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಒಟ್ಟಾರೆ ಈ ಪ್ರಕರಣದಲ್ಲಿ ದೊರೆತಿರುವ ಎಲ್ಲಾ ಸಾಕ್ಷ್ಯಗಳನ್ನು ಹೇಗೆ ಕ್ರೂಢೀಕರಿಸಿ ಪೊಲೀಸರು, ಹೇಗೆ ಚಾರ್ಜ್ಶೀಟ್ ತಯಾರಿಸುತ್ತಾರೆ ಎಂಬುದರ ಮೇಲೆ ದರ್ಶನ್ ಪ್ರಕರಣ ನಿಂತಿದೆ. \ No newline at end of file diff --git a/eesanje/url_46_99_8.txt b/eesanje/url_46_99_8.txt new file mode 100644 index 0000000000000000000000000000000000000000..97dcf20b5f8d1417dbadf0dd478c3e5ee902be78 --- /dev/null +++ b/eesanje/url_46_99_8.txt @@ -0,0 +1,8 @@ +ಸೂರಜ್‌ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ +ಬೆಂಗಳೂರು, ಜೂ.23-ಜೆಡಿಎಸ್‌‍ನ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪವನ್ನು ರಾಜ್ಯಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್‌‍ ಮಹಾ ನಿರ್ದೇಶಕ ಆರ್‌.ಹಿತೇಂದ್ರ ಅವರು ಸಿಐಡಿಯ ವಿಶೇಷ ಘಟಕ ಮತ್ತು ಆರ್ಥಿಕ ಅಪರಾಧಗಳ ವಿಭಾಗಕ್ಕೆ ಇಂದು ಬೆಳಿಗ್ಗೆ ತುರ್ತು ಸಂದೇಶ ರವಾನೆ ಮಾಡಿದ್ದು, ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. +ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್‌‍ ಮುಖ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡತವನ್ನು ತಕ್ಷಣವೇ ಸಿಐಡಿಯ ತನಿಖಾಧಿಕಾರಿಗಳಿಗೆ ಖುದ್ದು ಹಸ್ತಾಂತರಿಸುವಂತೆ ಆದೇಶಿಸಲಾಗಿದೆ. ವಿಚಾರಣೆ ಮುಗಿದ ಬಳಿಕ ವರದಿ ನೀಡುವಂತೆ ಸಿಐಡಿಗೆ ಸಲಹೆ ನೀಡಲಾಗಿದೆ. +ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ ಗ್ರಾಮದ ಜೆಡಿಎಸ್‌‍ ಯುವ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು, ಸಹಾಯ ಕೇಳಿಕೊಂಡು ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಅವರನ್ನು ತಾವು ಭೇಟಿ ಮಾಡಿದ ವೇಳೆ, ತಮನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಮಾನುಷ ಹಾಗೂ ಅಸಹಜವಾಗಿ ತಮೊಂದಿಗೆ ವರ್ತಿಸಲಾಗಿದೆ ಎಂದು ದೂರಿದ್ದರು. +ಈ ಕುರಿತು ಐಪಿಸಿ 377 (ಅಸಹಜ ಲೈಂಗಿಕ ಕ್ರಿಯೆ), 342 (ಬಲವಂತವಾಗಿ ಕೂಡಿ ಹಾಕುವುದು), 506 (ಜೀವ ಬೆದರಿಕೆ) ಮತ್ತು 34 ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ಇಂದು ಮುಂಜಾನೆ ಸೂರಜ್‌ ರೇವಣ್ಣ ಅವರನ್ನು ಬಂಧಿಸಿದ್ದಾರೆ. +ಇದಕ್ಕೂ ಮೊದಲು ಸೂರಜ್‌ ರೇವಣ್ಣ ಅವರ ಆಪ್ತ ಶಿವಕುಮಾರ್‌ ಎಂಬುವರು ಹೊಳೆನರಸೀಪುರ ನಗರ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು, ಸಹಾಯ ಕೇಳಿಕೊಂಡು ಬಂದ ವ್ಯಕ್ತಿ ತಮನ್ನು ಹಾಗೂ ಸೂರಜ್‌ ರೇವಣ್ಣ ಅವರನ್ನು ಬ್ಲಾಕ್‌ಮೇಲ್‌ ಮಾಡುತ್ತಿದ್ದು, 5 ಕೋಟಿ ರೂ. ಗಳನ್ನು ನೀಡದೇ ಇದ್ದರೆ ಸುಳ್ಳು ಆರೋಪ ಮಾಡಿ, ಪ್ರಕರಣ ದಾಖಲಿಸುವುದಾಗಿ ಬೆದರಿಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಕುರಿತು ಪ್ರಕರಣ ದಾಖಲಿಸಲಾಗಿದೆ. +ನಿನ್ನೆ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರ ಹೇಳಿಕೆ ಪ್ರಕಾರ, ಸಂತ್ರಸ್ತ ಯುವಕನಾಗಲೀ, ಸೂರಜ್‌ ರೇವಣ್ಣ ಆಗಲೀ ಅಧಿಕೃತವಾಗಿ ದೂರು ನೀಡಿರಲಿಲ್ಲ. ಆದರೆ ಸಂತ್ರಸ್ತ ಯುವಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್‌, ಡಿಜಿಪಿ, ಹಾಸನದ ಎಸ್ಪಿ ಅವರಿಗೆ ಪತ್ರ ಬರೆದು ತಮಗಾಗಿರುವ ಅನ್ಯಾಯಗಳ ಬಗ್ಗೆ ವಿವರಣೆ ನೀಡಿದರು. +ಪತ್ರ ಬರೆಯುವುದರಿಂದ ಪ್ರಕರಣದ ಮಾಹಿತಿ ನೀಡಲು ಸಾಧ್ಯ. ದೂರು ಬಂದರೆ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಸಾಕ್ಷ್ಯ ಸಂಗ್ರಹಿಸುವುದಾಗಿ ಹೇಳಿದ್ದರು. ಇಂದು ಏಕಾಏಕಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.ಈ ಮೊದಲು ಸೂರಜ್‌ ರೇವಣ್ಣ ಅವರ ಸಹೋದರ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಎಸ್‌‍ಐಟಿ ತನಿಖೆ ನಡೆಯುತ್ತಿದೆ. ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಗುರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೆಲಕಾಲ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಇತ್ತೀಚೆಗೆ ಭಾರತಕ್ಕೆ ಬಂದ ಅವರನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_46_99_9.txt b/eesanje/url_46_99_9.txt new file mode 100644 index 0000000000000000000000000000000000000000..9a934e1e692a7fc8ca7db4265ecb000f2e4e72a5 --- /dev/null +++ b/eesanje/url_46_99_9.txt @@ -0,0 +1,11 @@ +ರಾಜ್ಯಸರ್ಕಾರ ಸುಭದ್ರವಾಗಿದೆ, ಬಹುಮತವಿಲ್ಲದೆ ಕೇಂದ್ರ ಸರ್ಕಾರ ಅತಂತ್ರವಾಗಿದೆ : ಚೆಲುವರಾಯಸ್ವಾಮಿ +ಮಂಡ್ಯ, ಜೂ.23-ರಾಜ್ಯಸರ್ಕಾರ ಸುಭದ್ರವಾಗಿದ್ದು, ಬಹುಮತವಿಲ್ಲದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅತಂತ್ರವಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ವ್ಯಾಖ್ಯಾನಿಸಿದ್ದಾರೆ. ರಾಜ್ಯಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರು ಪದೇ ಪದೇ ಟೀಕೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, 112 ಸ್ಥಾನಗಳಿಗೆ ಎದುರಾಗಿ ಕಾಂಗ್ರೆಸ್‌‍ 136 ಶಾಸಕರನ್ನು ಹೊಂದಿದೆ. ನಮ ಸರ್ಕಾರ ಸುಭದ್ರವಾಗಿದೆ. ಕೇಂದ್ರದಲ್ಲಿ ಬಿಜೆಪಿ 240 ಸ್ಥಾನಗಳನ್ನು ಮಾತ್ರ ಪಡೆದಿದೆ. ನಿತೀಶ್‌ಕುಮಾರ್‌ ಮತ್ತು ಚಂದ್ರಬಾಬು ನಾಯ್ಡು ಅವರ ಬೆಂಬಲದಲ್ಲಿ ಸರ್ಕಾರ ರಚಿಸಿದೆ. +ಕಾಂಗ್ರೆಸ್‌‍ ಕೇಂದ್ರದಲ್ಲಿ ಸರ್ಕಾರ ರಚಿಸುವ ಯತ್ನವನ್ನು ಮಾಡಲಿಲ್ಲ. ಬಿಜೆಪಿಗೆ ಅವಕಾಶ ಬಿಟ್ಟುಕೊಟ್ಟಿದೆ. ಮೋದಿಯವರ ಸರ್ಕಾರ ಕಳೆದ ಹತ್ತು ವರ್ಷದಲ್ಲಿ ಮಾಡದೇ ಇರುವುದನ್ನು ಈ ಅವಧಿಯಲ್ಲಿ ಮಾಡುತ್ತದೆ ಎಂದು ಪ್ರಯತ್ನಿಸುತ್ತಿದೆ. ಸಂತೋಷ. ಒಟ್ಟಿನಲ್ಲಿ ಅಭಿವೃದ್ಧಿಯಾಗಬೇಕು ಎಂದು ಹೇಳಿದರು. +ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ, ಮಾಜಿ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದರಿಂದ ನಮಗೂ ಮುಜುಗರವಾಗಿದೆ. ಆದರೆ ಯಾರೂ, ಏನೂ ಮಾಡಲು ಸಾಧ್ಯವಿಲ್ಲ. ಕಾನೂನು ಪ್ರಕಾರ, ಕ್ರಮಗಳಾಗುತ್ತವೆ. ಸೂರಜ್‌ ಪ್ರಕರಣದಲ್ಲಿ ದೂರು, ಪ್ರತಿದೂರು ದಾಖಲಾಗಿವೆೆ. ಎರಡು ಪ್ರಕರಣಗಳೂ ತನಿಖೆಯಾಗಲಿವೆ ಎಂದರು. +ದೂರು ಕೊಟ್ಟ ಮೇಲೆ ಪ್ರಕರಣ ದಾಖಲಿಸಬೇಕು. ನಂತರ ಸತ್ಯಾಂಶ ತನಿಖೆಯಲ್ಲಿ ಬೆಳಕಿಗೆ ಬರಲಿದೆ. ಈ ವಿಚಾರದಲ್ಲಿ ಹೆಚ್ಚು ಚರ್ಚೆಯಾಗದೇ ಇರುವುದು ಒಳ್ಳೆಯದು ಎಂದು ಹೇಳಿದರು. +ದಿನಬೆಳಗಾದರೆ ಪೆನ್‌ಡ್ರೈವ್‌ ಇದೆ ಎಂದು ಹೇಳುತ್ತಿದ್ದವರು ನಾವಲ್ಲ. ಬಡವರ ಮಕ್ಕಳು ನಾವು, ನೆಮದಿಯಾಗಿರಬಾರದೆ, ಏನು ಮಾತನಾಡದೇ ಇದ್ದರೂ ಇಂತಹ ವಿಚಾರದಲ್ಲೇ ನಮನ್ನೇ ಏಕೆ ಪ್ರಶ್ನಿಸಲಾಗುತ್ತದೆ? ಎಂದು ಅಸಮಾಧಾನ ವ್ಯಕ್ತಪಡಿಸಿದರು. +ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜಕಾರಣದಲ್ಲಿ ವೈಯಕ್ತಿಕವಾಗಿ ಟೀಕೆ ಮಾಡುವ ಬದಲಾಗಿ ವಿಷಯಾಧಾರಿತ ಟೀಕೆ ಮಾಡುವಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಲವು ಬಾರಿ ಸಲಹೆ ನೀಡಿದ್ದರು. ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿಯವರು ಈಗಲಾದರೂ ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸಲಿ ಎಂದು ಹೇಳಿದರು. +ಕಾಂಗ್ರೆಸ್‌‍ ಶಾಸಕ ಉದಯ್‌ ಅವರ ಗನ್‌ಮ್ಯಾನ್‌ ಮೇಲೆ ದರ್ಶನ್‌ ಅವರ ಅಂಗರಕ್ಷಕರು ಹಲ್ಲೆ ಮಾಡಿದ್ದಾರೆ ಎಂದು ಮಾಧ್ಯಮದವರು ಹೇಳಿದ್ದಾರೆ. ಆದರೆ ಯಾವುದೇ ದೂರು ದಾಖಲಾಗಿಲ್ಲ. ಒಂದು ವೇಳೆ ಘಟನೆ ನಡೆದಿದ್ದರೆ ಪೊಲೀಸ್‌‍ ಇಲಾಖೆಯವರು ಸುಮನೇ ಇರುತ್ತಿರಲಿಲ್ಲ ಎಂದು ಹೇಳಿದರು. ಹಾಗೂ ಸುಮನಾಗದಿದ್ದರೆ ಬಹುಷಃ ಸಣ್ಣ ಘಟನೆಯೆಂದು ರಾಜಿ ಸಂಧಾನ ನಡೆದಿರಬಹುದೇನೋ? ಗೊತ್ತಿಲ್ಲ ಎಂದರು. +ಈ ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಕುದುರೆಮುಖ ಹಾಗೂ ಬಳ್ಳಾರಿಯ ಕುಮಾರಬೆಟ್ಟದಲ್ಲಿನ ಗಣಿಗಾರಿಕೆ ಬೇಡ ಎಂದು ಹೇಳುತ್ತಿದ್ದರು. ಈಗ ಕೇಂದ್ರ ಸಚಿವರಾದ ಬಳಿಕ ಗಣಿಗಾರಿಕೆ ಪುನರ್‌ ಆರಂಭಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ವಿಚಾರದಲ್ಲಿ ಜನರ ಒಳಿತನ್ನು ಗಮನದಲ್ಲಿಟ್ಟುಕೊಳ್ಳಬೇಕು. ಕುಮಾರಬೆಟ್ಟಕ್ಕೆ ಕೈ ಇಟ್ಟವರು ಸಂಕಷ್ಟ ಅನುಭವಿಸಿದ್ದಾರೆ. ಆ ಬಗ್ಗೆಯೂ ಗಮನ ಹರಿಸಲಿ. ಕಾನೂನು ಪ್ರಕಾರವಾಗಿ ಯಾವುದೇ ಯೋಜನೆ ಕೈಗೆತ್ತಿಕೊಂಡರೂ ರಾಜ್ಯಸರ್ಕಾರ ಸಹಕರಿಸಲಿದೆ ಎಂದರು. +ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಚರ್ಚೆಯಿಲ್ಲ. ಯಾವುದೇ ನಿರ್ಧಾರವಾದರೂ ಹೈಕಮಾಂಡ್‌ ಮಾತ್ರ ತೆಗೆದುಕೊಳ್ಳಲು ಸಾಧ್ಯ. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅನ್ಯೋನ್ಯತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು. +ಕೆಆರ್‌ಎಸ್‌‍ನಲ್ಲಿ ನೀರಿನ ಸಂಗ್ರಹ ಕಡಿಮೆ ಇದೆ. ಕೊಳವೆ ಬಾವಿಯಲ್ಲಿ ಮಳೆಗಾಗಿ 110 ಅಡಿ ಮೇಲ್ಪಟ್ಟು ನೀರು ನಿಂತರೆ ಆಗ ಕೃಷಿಗೆ ನೀರೊದಗಿಸುವ ಬಗ್ಗೆ ಚರ್ಚೆ ಮಾಡಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. \ No newline at end of file diff --git a/eesanje/url_46_9_1.txt b/eesanje/url_46_9_1.txt new file mode 100644 index 0000000000000000000000000000000000000000..c657d22e973d9d934fe638e686e5a59760915cd7 --- /dev/null +++ b/eesanje/url_46_9_1.txt @@ -0,0 +1,4 @@ +ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ : ಡಿಕೆಶಿ +ಬೆಂಗಳೂರು, ಸೆ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುದಿಲ್ಲವೆಂದು ಸ್ಪಷ್ಟಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿರುವ ಕಳಂಕಿತ ಸಚಿವರು ಮೊದಲು ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ದೆಹಲಿಯಿಂದ ಇಲ್ಲಿಯ ವರೆಗೂ ಪ್ರತಿಯೊಬ್ಬ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಇದ್ದಾರೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿ ಸುವುದಿಲ್ಲ ಎಂದರು. +ಜೆಡಿಎಸ್‌‍ ಮತ್ತು ಬಿಜೆಪಿ ನಾಯಕರು ರಾಜಕೀಯವಾಗಿ ನಡೆಸುತ್ತಿರುವ ಷಢ್ಯಂತ್ರ ಎಲ್ಲರಿಗೂ ಗೊತ್ತಿದೆ. ಈ ಹಂತದಲ್ಲಿ ರಾಜೀನಾಮೆ ಎಂಬುದೇ ಅಪ್ರಸ್ತುತ. ಕಾಂಗ್ರೆಸ್‌‍ ಸರ್ಕಾರ ಜಾರಿಗೊಳಿಸಿರುವ ಪಂಚಖಾತ್ರಿ ಯೋಜನೆಗಳಿಂದ ಜನರಿಗೆ ಆಗುತ್ತಿರುವ ಅನೂಕೂಲಗಳನ್ನು ಸಹಿಸಿಕೊಳ್ಳಲು ವಿರೋಧ ಪಕ್ಷದವರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. +ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿರುವ ಹಲವು ಮಂದಿ ಸಚಿವರುಗಳ ಮೇಲೆ ಎಫ್‌ಐಆರ್‌ಗಳು ದಾಖಲಾಗಿವೆ. ವಿಚಾರಣೆಗಳು ನಡೆಯುತ್ತಿವೆ. ಅಂತಹವರಿಂದ ಮೊದಲು ರಾಜೀನಾಮೆ ಪಡೆಯಲಿ ಎಂದು ಡಿಕೆ ಶಿವಕುಮಾರ್‌ ಸವಾಲು ಹಾಕಿದರು. \ No newline at end of file diff --git a/eesanje/url_46_9_10.txt b/eesanje/url_46_9_10.txt new file mode 100644 index 0000000000000000000000000000000000000000..741b53645a32924147401986ae1410c8d7b873c8 --- /dev/null +++ b/eesanje/url_46_9_10.txt @@ -0,0 +1,10 @@ +ಮಹಾಲಕ್ಷ್ಮಿಗೆ ಮುಳುವಾಯ್ತೇ ಅನ್ಯಕೋಮಿನ ಯುವಕನ ಸಹವಾಸ..? + ' : - ' +ಬೆಂಗಳೂರು,ಸೆ.25-ಅನ್ಯಕೋಮಿನ ಯುವಕನ ಜೊತೆ ಸಲುಗೆಯಿಂದ ಇದ್ದದ್ದೇ ಮಹಾಲಕ್ಷ್ಮಿ ಕೊಲೆಗೆ ಕಾರಣವಾಯಿತೇ..! ಕೊಲೆ ಪ್ರಕರಣ ದಾಖಲಿಸಿಕೊಂಡಿ ರುವ ವಯ್ಯಾಲಿಕಾವಲ್‌ ಠಾಣೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಒಂದು ತಂಡ ಹಲವು ಮಾಹಿತಿಗಳನ್ನು ಕಲೆ ಹಾಕುತ್ತಿದೆ. +ತನ್ನ ಪತಿಯಿಂದ ದೂರವಾದ ಮೇಲೆ ವಯ್ಯಾಲಿಕಾವಲ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಒಂಟಿಯಾಗಿ ವಾಸವಾಗಿದ್ದ ಮಹಾಲಕ್ಷ್ಮಿ ಮಾಲ್‌ವೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್‌ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕ ಸೇರಿದಂತೆ ಮೂವರು ಯುವಕರ ಜೊತೆ ಮಹಾಲಕ್ಷ್ಮಿ ಸ್ನೇಹ ಬೆಳೆಸಿಕೊಂಡಿದ್ದಳು. +ಒಬ್ಬಾತ ಈಕೆಯನ್ನು ಪಿಕಪ್‌, ಡ್ರಾಪ್‌ ಮಾಡುತ್ತಿದ್ದನು. ಮತ್ತೊಬ್ಬನ ಜೊತೆ ಸಲುಗೆಯಿಂದ ಇದ್ದಳು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಆಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.ಈ ಕೊಲೆ ಪ್ರಕರಣದಲ್ಲಿ ಆರೋಪಿಯ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಪೊಲೀಸರಿಗೆ ಲಭಿಸಿವೆ. ಮಹಾಲಕ್ಷ್ಮಿ ವಾಸವಾಗಿದ್ದ ಮನೆಯ ಬಾಗಿಲು, ಗೋಡೆ, ಫ್ರಿಡ್‌್ಜ ಮೇಲೆ ಆರೋಪಿಯ ಬೆರಳಚ್ಚು ಪತ್ತೆಯಾಗಿವೆ. ಅವುಗಳನ್ನೆಲ್ಲ ಬೆರಳಚ್ಚು ತಜ್ಞರು ಸಂಗ್ರಹಿಸಿ ಈ ಬಗ್ಗೆ ಉಪಯುಕ್ತ ಮಾಹಿತಿಯನ್ನು ತನಿಖಾಧಿಕಾರಿಗಳಿಗೆ ನೀಡಿದ್ದಾರೆಂಬುದು ಗೊತ್ತಾಗಿದೆ. +ಮಹಾಲಕ್ಷ್ಮಿ ಯನ್ನು ಕೊಲೆ ಮಾಡಿದ ಸಂದರ್ಭದಲ್ಲಿ ಆರೋಪಿ ಗೋಡೆ ಮುಟ್ಟಿರುವುದು, ನಂತರ ದೇಹವನ್ನು ಪೈಶಾಚಿಕವಾಗಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಜೋಡಿಸುವಾಗ ಫ್ರಿಡ್ಜ್ ನ್ನು ಕೈಗಳಿಂದ ಮುಟ್ಟಿರುವುದರಿಂದ ಆತನ ಬೆರಳು ಮುದ್ರೆಗಳು ಪತ್ತೆಯಾಗಿವೆ. +ವಾರದ ರಜೆ ದಿನವೇ ಕೊಲೆ:ಸೆಪ್ಟೆಂಬರ್‌ 2ರಂದು ಮಹಾಲಕ್ಷ್ಮಿಗೆ ವಾರದ ರಜೆ. ಹಾಗಾಗಿ ಆಕೆ ಮಾಲ್‌ಗೆ ಹೋಗಿರಲಿಲ್ಲ. ಸೆ.3ರಿಂದಲೂ ಸಹ ಕೆಲಸಕ್ಕೆ ಹೋಗಿರಲಿಲ್ಲ. ಹಾಗಾಗಿ ದುಷ್ಕರ್ಮಿ ಆಕೆಯನ್ನು ಸೆ.2ರಂದೇ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂಬುದು ಇದುವರೆಗಿನ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. +ಆರೋಪಿ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿ ದೇಹವನ್ನು ತುಂಡಾಗಿ ಕತ್ತರಿಸಿ ಅವುಗಳಿಗೆಲ್ಲ ಯಾವುದೋ ರಾಸಾಯನಿಕ ಸಿಂಪಡಿಸಿ, ಮನೆಯನ್ನೆಲ್ಲ ಸ್ವಚ್ಚಗೊಳಿಸಿ ಯಾರಿಗೂ ಅನುಮಾನ ಬಾರದಂತೆ ಮನೆಗೆ ಬೀಗಿ ಹಾಕಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾನೆ.ತದನಂತರ ತನ್ನ ಅಣ್ಣನಿಗೆ ನಡೆದ ವಿಷಯವನ್ನು ತಿಳಿಸಿ ಊರಿಗೆ ಹೋಗುವುದಾಗಿ ಹೇಳಿ ತನ್ನ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ಊರಿಗೂ ಹೋಗದೆ ಈಶಾನ್ಯ ರಾಜ್ಯಗಳಿಗೆ ಹೋಗಿ ತಲೆಮರೆಸಿಕೊಂಡಿದ್ದಾನೆ. +ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಚಿಸಲಾಗಿದ್ದ ಆರು ವಿಶೇಷ ತಂಡಗಳ ಪೈಕಿ ಒಂದು ತಂಡ ಪಶ್ಚಿಮ ಬಂಗಾಳಕ್ಕೆ ಹೋಗಿ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದರೆ ಮತ್ತೊಂದು ತಂಡ ಒರಿಸ್ಸಾಗೆ ಹೋಗಿ ಶೋಧ ನಡೆಸುತ್ತಿದೆ. +ಆರೋಪಿ ಆಗಾಗ ಸ್ಥಳ ಬದಲಾವಣೆ ಮಾಡುತ್ತಿರುವುದಲ್ಲದೆ, ಮೊಬೈಲ್‌ ಬಳಸುತ್ತಿಲ್ಲ. ಬೇರೆಯವರ ಮೊಬೈಲ್‌ನಿಂದ ತನ್ನ ಕುಟುಂಬವನ್ನು ಸಂಪರ್ಕಿಸುತ್ತಿದ್ದಾನೆ. ಹಾಗಾಗಿ ಈತನ ಬಂಧನ ಕಾರ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಒಟ್ಟಾರೆ ಈ ಪ್ರಕರಣವನ್ನು ಸವಾಲಾಗಿ ಪರಿಗಣಿಸಿರುವ ನಗರ ಪೊಲೀಸರು ಶತಾಯಗತಾಯ ದುಷ್ಕರ್ಮಿಯನ್ನು ಬಂಧಿಸಲು ಹಗರಲಿರುಳು ಶ್ರಮಿಸುತ್ತಿದ್ದಾರೆ. diff --git a/eesanje/url_46_9_11.txt b/eesanje/url_46_9_11.txt new file mode 100644 index 0000000000000000000000000000000000000000..3708c0944c2a6c7d8420f93703c655596de4bd6a --- /dev/null +++ b/eesanje/url_46_9_11.txt @@ -0,0 +1,7 @@ +ವಿಚ್ಛೇಧನ ಕೋರಿ ಕೋರ್ಟ್ ಮೆಟ್ಟಿಲೇರಿದ 75 ವರ್ಷದ ವೃದ್ಧ ದಂಪತಿ + 75-- +ಅಲಹಾಬಾದ್‌(ಗುಜರಾತ್‌),ಸೆ.26-ಜೀವನಾಂಶಕ್ಕಾಗಿ 75ರಿಂದ 80 ವರ್ಷ ವಯಸ್ಸಿನ ದಂಪತಿ, ಸುದೀರ್ಘ ದಾಂಪತ್ಯದ ನಂತರ ವಿಚ್ಛೇಧನ ಕೋರಿ ಕಾನೂನು ಹೋರಾಟ ನಡೆಸುತ್ತಿರುವ ಅಪರೂಪದ ಘಟನೆಗೆ ಅಲಹಾಬಾದ್‌ ಹೈಕೋರ್ಟ್‌ ಸಾಕ್ಷಿ ಆಗಿದೆ. +ಕೆಲ ದಿನಗಳ ಹಿಂದೆಯಷ್ಟೇ ರಾಜ್ಯದ ಪ್ರಕರಣವೊಂದರಲ್ಲಿ ವಿಚ್ಛೇಧನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಸ್ವಾಮೀಜಿ ಬಳಿ ಹೋಗಿ ಸಮಾಲೋಚಿಸಿ ಎಂದು ನ್ಯಾಯಾಧೀಶರು ಸಲಹೆ ನೀಡಿದ ವಿಡಿಯೋ ವೈರಲ್‌ ಆಗಿತ್ತು. +ಅಂತಹದ್ದೇ ಘಟನೆ ಈಗ ಗುಜರಾತ್‌ನಲ್ಲಿ ನಡೆದಿದೆ. 75 ವರ್ಷ ದಾಟಿದ ದಂಪತಿ ಅಲ್ಲದೆ ದೀರ್ಘ ಕಾಲ ದಾಂಪತ್ಯ ಅನುಭವಿಸಿದವರಲ್ಲಿ ವೈಮನಸ್ಸು ಉಂಟಾಗಿರುವುದು, ಅದಕ್ಕಾಗಿ ಜೀವನಾಂಶ ಕೋರುತ್ತಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿ, ಕಲಿಯುಗ ಬಂದಂತೆ ತೋರುತ್ತಿದೆ ಎಂದು ವಿಷಾಧಿಸಿದ್ದಾರೆ. +ಪತ್ನಿ ಪರವಾಗಿ ಕೌಟುಂಬಿಕ ನ್ಯಾಯಾಲಯ ನೀಡಿರುವ ಆದೇಶದ ವಿರುದ್ಧ ಪತಿ ಅಲಿಘರ್‌ನ ಮುನೇಶ್‌ ಕುಮಾರ್‌ ಗುಪ್ತಾ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೌರಭ್‌ ಶ್ಯಾಮ್‌ ಶಂಶೇರಿ, ನಿಮ ಕಾನೂನು ಹೋರಾಟದ ಕಳವಳಕಾರಿ ವಿಷಯ ಎಂದು ದಂಪತಿಗೆ ಸಲಹೆ ನೀಡಲು ಪ್ರಯತ್ನಿಸಿದರು. +ಪತಿಯಿಂದ ವೃದ್ಧೆ ಪತ್ನಿ ಜೀವನಾಂಶ ಕೋರಿದ್ದು, ಕೌಟುಂಬಿಕ ನ್ಯಾಯಾಲಯವು ಅವರ ಪರವಾಗಿ ತೀರ್ಪು ನೀಡಿತ್ತು. ಪತಿ ಮುನೇಶ್‌ಕುಮಾರ್‌ ಆದೇಶವನ್ನು ಪ್ರಶ್ನಿಸಿದ್ದು, ಪತ್ನಿಗೆ ನೋಟಿಸ್‌‍ ಜಾರಿಗೊಳಿಸಲಾಗಿದೆ. ಮುಂದಿನ ವಿಚಾರಣೆಯ ದಿನಾಂಕದೊಳಗೆ ಅವರು ಒಪ್ಪಂದಕ್ಕೆ ಬರುತ್ತಾರೆ ಎಂದು ಭಾವಿಸುವುದಾಗಿ ಹೈಕೋರ್ಟ್‌ ಹೇಳಿದೆ. \ No newline at end of file diff --git a/eesanje/url_46_9_12.txt b/eesanje/url_46_9_12.txt new file mode 100644 index 0000000000000000000000000000000000000000..306a936d7d811d12e4e0aea21c669ee070b30be7 --- /dev/null +++ b/eesanje/url_46_9_12.txt @@ -0,0 +1,5 @@ +ಮಹಾಲಕ್ಷ್ಮಿ ಹಂತಕನಿಗಾಗಿ ಒಡಿಶಾದಲ್ಲಿ ಪೊಲೀಸರ ಶೋಧ + ' +ಬೆಂಗಳೂರು,ಸೆ.25– ನಗರದಲ್ಲಿ ನಡೆದ ಮಹಾಲಕ್ಷ್ಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಮೂರ್ನಾಲ್ಕು ಮಂದಿ ವಿಚಾರಣೆ ಬಳಿಕ ಮಹತ್ವದ ಮಾಹಿತಿಗಳು ದೊರೆತಿದ್ದು, ಆರೋಪಿಯ ಬಂಧನಕ್ಕೆ ಒಡಿಸ್ಸಾ ಸೇರಿದಂತೆ ಹಲವು ಕಡೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾದ ವ್ಯಕ್ತಿ ಒಡಿಸ್ಸಾದಲ್ಲಿರುವ ಮಾಹಿತಿ ಇದ್ದು, ಆತನನ್ನು ಬಂಧಿಸಲು ನಾಲ್ಕು ತಂಡಗಳನ್ನು ಕಳುಹಿಸಲಾಗಿದೆ. +ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು-ಮೂರು ಮಂದಿಯನ್ನು ವಶಕ್ಕೆ ಪಡೆಯಲು ವಿಚಾರಣೆ ನಡೆಸಲಾಗಿತ್ತು. ಅವರು ನೀಡಿದ ಮಾಹಿತಿಯ ಆಧಾರದ ಮೇಲೆ ಒಡಿಸ್ಸಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾದ ವ್ಯಕ್ತಿಯೇ ಕೊಲೆ ಮಾಡಿರಬಹುದು ಎಂಬ ಅನುಮಾನ ಬಂದಿದೆ. ಹೀಗಾಗಿ ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_46_9_2.txt b/eesanje/url_46_9_2.txt new file mode 100644 index 0000000000000000000000000000000000000000..8abca7f97d191d0245127488196eb1965a54ba57 --- /dev/null +++ b/eesanje/url_46_9_2.txt @@ -0,0 +1,4 @@ +ಪ್ರತಿಭಟನೆಯತ್ತ ಸುಳಿಯದ ಬಿಜೆಪಿ ಭಿನ್ನಮತೀಯರು +ಬೆಂಗಳೂರು,ಸೆ.26- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಿಜೆಪಿ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲೂ ಭಿನ್ನಮತ ಸ್ಪೋಟಗೊಂಡಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಗುರುವಾರ ಬೆಳಗ್ಗೆ 10.30ಕ್ಕೆ ನಡೆಯಲಿರುವ ಪ್ರತಿಭಟನೆಗೆ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಕಡ್ಡಾಯವಾಗಿ ಬರಬೇಕೆಂದು ಖುದ್ದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೂಚನೆ ಕೊಟ್ಟಿದ್ದರು. +ಅದರಂತೆ ಪ್ರತಿಭಟನೆಗೆ ಶಾಸಕರು ಆಗಮಿಸಿದ್ದರಾದರೂ ವಿಜಯೇಂದ್ರ ವಿರೋಧಿ ಬಣದವರು ಅಪ್ಪಿತಪ್ಪಿಯೂ ಪ್ರತಿಭಟನೆ ಕಡೆ ತಲೆ ಹಾಕಲಿಲ್ಲ. ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕರೆಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ, ಕುಮಾರ್‌ ಬಂಗಾರಪ್ಪ, ಪ್ರತಾಪ್‌ ಸಿಂಹ, ಅರವಿಂದ್‌ ಲಿಂಬಾವಳಿ ಸೇರಿದಂತೆ ಮತ್ತಿತರರು ಗೈರು ಹಾಜರಾಗಿದ್ದರು.ವಿಜಯೇಂದ್ರ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಅಶೋಕ್‌ ಕರೆಕೊಟ್ಟ ಪ್ರತಿಭಟನೆಗೆ ನಾವೇಕೆ? ಹೋಗಬೇಕೆಂದು ಇವರೆಲ್ಲರೂ ದೂರ ಉಳಿದಿದ್ದರು. +ಕೆಲ ದಿನಗಳ ಹಿಂದೆ ಭಿನ್ನಮತೀಯರು ಮತ್ತು ವಿಜಯೇಂದ್ರ ನಡುವೆ ಆರ್‌ಎಸ್‌‍ಎಸ್‌‍ ನಾಯಕ ಸಂಧಾನ ಸಭೆ ನಡೆಸಿ ಬರುವ ದಿನಗಳಲ್ಲಿ ಭಿನ್ನಮತಕ್ಕೆ ಅವಕಾಶ ಇಲ್ಲದಂತೆ ಪಕ್ಷ ಮುನ್ನಡೆಸಬೇಕೆಂದು ಸೂಚನೆ ಕೊಟ್ಟಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಬಹುತೇಕರು ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಪಕ್ಷದ ನಿರ್ದೇಶನವನ್ನು ಪಾಲನೆ ಮಾಡುವುದಾಗಿ ಹೇಳಿದ್ದರು. ಆದರೆ ಕೆಲವೇ ದಿನಗಳಲ್ಲಿ ವಿಜಯೇಂದ್ರ ಟೀಂಗೆ ತಾವು ಬೆಂಬಲಿಸುವುದಿಲ್ಲ ಎಂಬುದನ್ನು ಮತ್ತೊಮೆ ಸಾಬೀತು ಮಾಡಿದಂತಾಗಿದೆ. diff --git a/eesanje/url_46_9_3.txt b/eesanje/url_46_9_3.txt new file mode 100644 index 0000000000000000000000000000000000000000..d3cc1dae26750cb24d1ba95096b4342c6f5115d3 --- /dev/null +++ b/eesanje/url_46_9_3.txt @@ -0,0 +1,6 @@ +ಸಿಎಂ ರಾಜೀನಾಮೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದೊಳಗೆ ನುಗ್ಗಲು ಯತ್ನ +ಬೆಂಗಳೂರು,ಸೆ.26-ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಬೃಹತ್‌ ಪ್ರತಿಭಟನೆ ನಡೆಸಿತು. ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯಭಾಗದಲ್ಲಿರುವ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌, ಉಪನಾಯಕ ಅರವಿಂದ್‌ ಬೆಲ್ಲದ್‌, ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಅರಗ ಜ್ಞಾನೇಂದ್ರ, ಸುನೀಲ್‌ಕುಮಾರ್‌, ಜನಾರ್ಧನ ರೆಡ್ಡಿ, ಗೋಪಾಲಯ್ಯ, ಸಿದ್ದು ಸವದಿ, ಬಿ.ಸಿ.ಪಾಟೀಲ್‌ ಸೇರಿದಂತೆ ಬಹುತೇಕ ಎಲ್ಲಾ ಶಾಸಕರು ಭಾಗಿಯಾಗಿದ್ದರು. +ಅನಾರೋಗ್ಯದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರು ಹಾಜರಾಗಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಹುತೇಕ ಶಾಸಕರು ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಜೀನಾಮೆಗೆ ಒತ್ತಾಯಿಸಿದರು. ಬೇಕೇ ಬೇಕು ರಾಜೀನಾಮೆ ಬೇಕು. ಕೊಡಬೇಕು, ಕೊಡಬೇಕು ರಾಜೀನಾಮೆ ಕೊಡಬೇಕು, ಮುಡಾ ಸೈಟು ಹೊಡೆದ ಸಿದ್ದರಾಮಯ್ಯ, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಕೂಗಿ ರಾಜೀನಾಮೆಗೆ ಆಗ್ರಹಿಸಿದರು. +ಪ್ರತಿಭಟನೆಯಲ್ಲಿ ಮಾತನಾಡಿದ ಬಹುತೇಕ ನಾಯಕರು ನ್ಯಾಯಾಲಯವೇ ಎಫ್‌ಐಆರ್‌ ದಾಖಲಿಸಲು ಸಿದ್ದರಾಮಯ್ಯ ವಿರುದ್ಧ ಆದೇಶ ನೀಡಿದೆ. ಇನ್ಯಾವ ಮುಖ ಹೊತ್ತು ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ ಎಂದು ಪ್ರಶ್ನೆ ಮಾಡಿದರು. ಇನ್ನೊಬ್ಬರ ನೈತಿಕತೆ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಮುಂದುವರೆಯಲು ಭಂಡತನ ತೋರಬಾರದು. 40 ವರ್ಷ ರಾಜಕೀಯ ಜೀವನದಲ್ಲಿ ನನ್ನ ವಿರುದ್ಧ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುತ್ತಿದ್ದ ಅವರ ಮುಖಕ್ಕೆ ಈಗ ಅಳಿಸಲಾಗದ ದೊಡ್ಡ ಕಪ್ಪುಚುಕ್ಕೆ ಅಂಟಿಕೊಂಡಿದೆ. ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಭಟನಾನಿರತರು ವಾಗ್ದಾಳಿ ನಡೆಸಿದರು. +ಸಿದ್ದರಾಮಯ್ಯನವರಿಗೆ ದೇಶದ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಇದ್ದರೆ ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಒಂದು ವೇಳೆ ಪ್ರಕರಣದಲ್ಲಿ ಅವರ ಪಾತ್ರ ಏನೂ ಇಲ್ಲ ಎಂದು ಸಾಬೀತಾದರೆ ಪುನಃ ಅವರೇ ಅಧಿಕಾರದಲ್ಲಿ ಮುಂದುವರೆಯಲಿ. ಅವರು ಅಧಿಕಾರದಲ್ಲಿರುವಾಗ ನಿಷ್ಪಕ್ಷಪಾತ ತನಿಖೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಲಿ. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು. +ಪ್ರತಿಭಟನೆ ಬಳಿಕ ಶಾಸಕರು ವಿಧಾನಸೌಧದೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಕೆಂಗಲ್‌ ಗೇಟ್‌ ಬಳಿಯೇ ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಬಿಜೆಪಿ ನಾಯಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರಲ್ಲದೆ, ತೀವ್ರ ಪ್ರತಿಭಟನೆಗಿಳಿದ ಅಶೋಕ್‌, ಛಲವಾದಿ, ಸಿಟಿ ರವಿ, ಸುನೀಲ್‌ ಕುಮಾರ್‌ ಸೇರಿ ಹಲವು ನಾಯಕರನ್ನು ಹೊತ್ತೊಯ್ದ ಬಸ್‌‍ನೊಳಗೆ ಬಲವಂತವಾಗಿ ನುಗ್ಗಿಸಿದರು. \ No newline at end of file diff --git a/eesanje/url_46_9_4.txt b/eesanje/url_46_9_4.txt new file mode 100644 index 0000000000000000000000000000000000000000..00a95daffd3afdd73ae25f64fdb5ea9f0e2d5319 --- /dev/null +++ b/eesanje/url_46_9_4.txt @@ -0,0 +1,6 @@ +ಚೂರಿ ಇರಿದು ಪರಾರಿಯಾಗಲು ಯತ್ನಿಸಿದವನಿಗೆ ಪೊಲೀಸರ ಗುಂಡೇಟು.. +ಹುಬ್ಬಳ್ಳಿ,ಸೆ.26- ತಾನು ಪ್ರೀತಿಸುತ್ತಿದ್ದ ಯುವತಿ ತಾಯಿಗೆ ಚಾಕುವಿನಿಂದ ಇರಿದಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆದೊಯ್ಯುತ್ತಿದ್ದಾಗ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿ ಬಿದಿದ್ದಾನೆ. ಆರೋಪಿ ಮಹೇಶ ಮೇಟಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. +ಲೋಹಿಯಾ ನಗರದ ನಿವಾಸಿ ನೀಲಾ ಅವರಿಗೆ ನಾಲ್ಕು ಮಂದಿ ಮಕ್ಕಳಿದ್ದು, ಒಬ್ಬ ಮಗಳನ್ನು ಆರೋಪಿ ಪ್ರೀತಿಸುತ್ತಿದ್ದನು. ಆದರೆ ಯುವತಿ ಹಾಗೂ ಆಕೆಯ ತಾಯಿಗೂ ಇಷ್ಟವಿರಲಿಲ್ಲ. ಆದರೂ ಆರೋಪಿ ಮಹೇಶ ಇವರ ಮನೆಗೆ ಹೋಗಿ ತಮ ಮಗಳನ್ನು ಮದುವೆ ಮಾಡಿಕೊಡುವಂತೆ ನೀಲಾ ಅವರನ್ನು ಪೀಡಿಸಿದ್ದಾನೆ. ಮಹೇಶನಿಗೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ಯುವತಿಯ ತಾಯಿ ನೀಲಾ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದನು. +ಚಾಕು ಇರಿತದಿಂದ ಗಂಭೀರ ಗಾಯಗೊಂಡಿರುವ ನೀಲಾ ಅವರನ್ನು ಕಿಮ್ಸೌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಕುರಿತು ಮಾಹಿತಿ ಪಡೆದು ಆರೋಪಿಯ ಬಂಧನಕ್ಕೆ ಬಲೆ ಬೀಸಿ ನಿನ್ನೆ ಸಂಜೆ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. +ವಿಚಾರಣೆ ವೇಳೆ ಈ ಕೃತ್ಯ ಎಸಗಿ ಪರಾರಿಯಾಗಲು ಸ್ನೇಹಿತರ ಬಳಿ ಹಣ ಪಡೆದಿರುವುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದು, ನಂತರ ಸ್ನೇಹಿತರನ್ನು ತೋರಿಸುವುದಾಗಿ ಹೇಳಿದ್ದಾನೆ. ಪೊಲೀಸರು ಆತನನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. +ಆ ಸಂದರ್ಭದಲ್ಲಿ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್‌ ಸುರೇಶ ಯಳ್ಳೂರು ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದರಾದರೂ ಪೊಲೀಸರ ಮಾತಿಗೆ ಕಿವಿಗೊಡದೆ ಮತ್ತೆ ಹಲ್ಲೆಗೆ ಯತ್ನಿಸಿದಾಗ ಇನ್‌ಸ್ಪೆಕ್ಟರ್‌ ಹಾರಿಸಿದ ಗುಂಡು ಆರೋಪಿ ಕಾಲಿಗೆ ತಗುಲಿ ಕುಸಿದುಬಿದಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸುತ್ತುವರೆದು ವಶಕ್ಕೆ ಪಡೆದು ಚಿಕಿತ್ಸೆಗೆ ದಾಖಲಿಸಿದ್ದಾರೆ.ಕಾರ್ಯಾಚರಣೆ ವೇಳೆ ಹಳೇ ಹುಬ್ಬಳ್ಳಿ ಇನ್‌ಸ್ಪೆಕ್ಟರ್‌ ಸುರೇಶ ಹಾಗೂ ಸಿಬ್ಬಂದಿ ಗಾಯಗೊಂಡಿದ್ದು ಅವರು ಸಹ ಕಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. \ No newline at end of file diff --git a/eesanje/url_46_9_5.txt b/eesanje/url_46_9_5.txt new file mode 100644 index 0000000000000000000000000000000000000000..9635df638aed72880b5bff837af89a46dde62765 --- /dev/null +++ b/eesanje/url_46_9_5.txt @@ -0,0 +1,7 @@ +ಮಹಾಲಕ್ಷ್ಮಿ ವರ್ತನೆಗೆ ಬೇಸತ್ತು ಬರ್ಬರ ಕೊಲೆ.. +ಬೆಂಗಳೂರು, ಸೆ.26- ಆಕೆಯ ವರ್ತನೆಯಿಂದ ಬೇಸತ್ತು ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿಯನ್ನು ಆರೋಪಿ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಬಂಧನದ ಭೀತಿಯಿಂದ ಆರೋಪಿ ಮುಕ್ತಿ ರಂಜನ್‌ ರಾಯ್‌ ತನ್ನ ಊರಾದ ಒಡಿಶಾಗೆ ಹೋಗಿ ಆತಹತ್ಯೆಗೆ ಶರಣಾಗಿದ್ದು, ಆತಹತ್ಯೆಗೂ ಮುನ್ನ ಆರೋಪಿ ಬರೆದಿರುವ ಡೆತ್‌ನೋಟ್‌ನಲ್ಲಿ ಈ ಅಂಶ ಕಂಡು ಬಂದಿದೆ. +ಸೆ. 2ರಂದು ಮಹಾಲಕ್ಷ್ಮೀಗೆ ವಾರದ ರಜೆ ಇದ್ದ ಕಾರಣ ಮನೆಯಲ್ಲೇ ಇದ್ದರು. ಆ ಸಂದರ್ಭದಲ್ಲಿ ಮುಕ್ತಿ ರಂಜನ್‌ ಆಕೆಯ ಮನೆಗೆ ಹೋಗಿದ್ದಾನೆ. ಯಾವುದೋ ವಿಚಾರಕ್ಕೆ ಅವರಿಬ್ಬರ ನಡುವೆ ಜಗಳವಾಗಿದ್ದು, ಆ ವೇಳೆ ಮಹಾಲಕ್ಷ್ಮೀ ಆತನ ಮೇಲೆ ಹಲ್ಲೆ ಮಾಡಿದ್ದಾಳೆ.ಇದರಿಂದ ಕೋಪಕೊಂಡ ಮುಕ್ತಿ ರಂಜನ್‌ ಚಾಕು ತೆಗೆದುಕೊಂಡು ಮಹಾಲಕ್ಷ್ಮೀಯ ಕತ್ತು ಕೊಯ್ದು ಕೊಲೆ ಮಾಡಿ ನಂತರ ಸ್ನಾನದ ಮನೆಗೆ ಶವವನ್ನು ಎಳೆದೊಯ್ದು ಆಕ್ಸಲ್‌ ಬ್ಲೇಡ್‌ನಿಂದ ಬರೋಬ್ಬರಿ 59 ತುಂಡುಗಳಾಗಿ ಕೊಯ್ದು ವಾಸನೆ ಬಾರದಂತೆ ಯಾವುದೋ ರಾಸಾಯನಿಕ ಸಿಂಪಡಿಸಿ ಫ್ರಿಡ್‌್ಜನಲ್ಲಿ ತರಕಾರಿ ಜೋಡಿಸುವಂತೆ ಜೋಡಿಸಿ ಮನೆಯನ್ನೆಲ್ಲಾ ರಾಸಾಯನಿಕದಿಂದ ಸ್ವಚ್ಛಗೊಳಿಸಿ ಬೀಗ ಹಾಕಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದ. +ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ವೈಯ್ಯಾಲಿಕಾವಲ್‌ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ಆರು ತಂಡಗಳನ್ನು ರಚಿಸಿ ತನಿಖೆ ಕೈಗೊಂಡು ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆಹಾಕಿ ಕಾರ್ಯಾನುಖರಾಗಿದ್ದರು. ಆರೋಪಿಯು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಒಂದು ತಂಡ ಒಡಿಶಾಗೆ ಹೋಗಿ ಹುಡುಕಾಟ ನಡೆಸುತ್ತಿರುವಾಗಲೇ ಆತ ಆತಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. +ಒಡಿಶಾದ ಫಂಡಿ ಗ್ರಾಮದ ನಿವಾಸಿಯಾದ ಮುಕ್ತಿ ರಂಜನ್‌ ರಾಯ್‌ ಮೊನ್ನೆ ತನ್ನ ಮನೆಗೆ ಹೋಗಿ ಕೆಲ ಹೊತ್ತು ಅಲ್ಲೇ ಇದ್ದು, ರಾತ್ರಿ ತನ್ನ ಲ್ಯಾಪ್‌ಟಾಪ್‌ ಸಮೇತ ಸ್ಕೂಟಿ ದ್ವಿಚಕ್ರ ವಾಹನ ತೆಗೆದುಕೊಂಡು ಹೊರಗೆ ಹೋಗಿದ್ದನು. ಆದರೆ ಈತ ಎಲ್ಲಿಗೆ ಹೋದ ಎಂಬುವುದು ಕುಟುಂಬದವರ್ಯಾರಿಗೂ ಗೊತ್ತಾಗಿಲ್ಲ. +ಈ ನಡುವೆ ನಿನ್ನೆ ಕುಳೆಪಾದ ಎಂಬ ಸಶಾನದಲ್ಲಿ ಆರೋಪಿ ಮುಕ್ತಿ ರಂಜನ್‌ ರಾಯ್‌ ಶವ ಮರದ ಕೊಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಂಬಂಧ ಅಲ್ಲಿನ ದುಶಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಂಧನಕ್ಕಾಗಿ ಒಡಿಶಾಕ್ಕೆ ತೆರಳಿದ್ದ ನಗರ ಪೊಲೀಸ್‌‍ ತಂಡಕ್ಕೆ ಸ್ಥಳೀಯ ಪೊಲೀಸರಿಂದ ಮಾಹಿತಿ ಗೊತ್ತಾಗಿದೆ. ಆರೋಪಿ ಆತಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಸಿಕ್ಕಿರುವ ಡೈರಿಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. +ಡೆತ್‌ನೋಟ್‌ ಸಾರಾಂಶ:ಸೆ. 2ರಂದು ನಾನು ಆಕೆಯ ಮನೆಗೆ ಹೋದಾಗ ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ನನ್ನ ಮೇಲೆ ಆಕೆ ಹಲ್ಲೆ ನಡೆಸಿದಳು. ಇದರಿಂದ ನಾನು ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್‌‍ಗಳನ್ನಾಗಿ ಮಾಡಿ ಫ್ರಿಡ್‌್ಜನಲ್ಲಿರಿಸಿದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಕೊಲೆ ಮಾಡಲು ಕಾರಣವೇನೆಂಬುವುದನ್ನು ಆರೋಪಿ ಬಹಿರಂಗ ಪಡಿಸಿದ್ದಾನೆ. ಇನ್ನು ಮುಕ್ತಿ ರಂಜನ್‌ ರಾಯ್‌ ಊರಿನಲ್ಲಿ ಬೆಂಗಳೂರು ಪೊಲೀಸರ ತಂಡ ಬೀಡುಬಿಟ್ಟಿದ್ದು, ಸ್ಥಳೀಯ ಪೊಲೀಸರಿಂದ ಆರೋಪಿಯ ಬೆರಳಚ್ಚು ಹಾಗೂ ಡೆತ್‌ನೋಟ್‌ ಪ್ರತಿಯನ್ನು ಪಡೆಯಲಿದ್ದಾರೆ. \ No newline at end of file diff --git a/eesanje/url_46_9_6.txt b/eesanje/url_46_9_6.txt new file mode 100644 index 0000000000000000000000000000000000000000..ae50ef9c264cf5446cffd48c19b3cde8b1a21803 --- /dev/null +++ b/eesanje/url_46_9_6.txt @@ -0,0 +1,4 @@ +ಭೀಕರ ಕಾರು ಅಪಘಾತದಲ್ಲಿ ನಾಲ್ವರ ದುರ್ಮರಣ +ಬಾಗಲಕೋಟೆ, ಸೆ.26- ಕ್ಯಾಂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆಯ ಬಿದರಕುಂದಿ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ವಡ್ಡರ್‌(55), ಬೈಲಪ್ಪ ಬಿರದಾರ್‌(45), ರಾಮಣ್ಣ ನಾಯಕ(50), ಚಾಲಕ ರಫಿಕ್‌ ಮುಲ್ಲಾ(25) ಮೃತಪಟ್ಟ ದುರ್ದೈವಿಗಳೆಂದು ತಿಳಿದುಬಂದಿದೆ. +ಮೃತರು ಹೊಸಪೇಟೆ ಬಳಿಯ ಹುಲಿಗೆಮ ದೇವಾಲಯಕ್ಕೆ ತೆರಳಿ ದರ್ಶನ ಮುಗಿಸಿಕೊಂಡು ತಡರಾತ್ರಿ 2 ಗಂಟೆ ಸುಮಾರಿನಲ್ಲಿ ವಾಪಸ್‌‍ ಬರುತ್ತಿದ್ದಾಗ ಮುದ್ದೆಬಿಹಾಳದಿಂದ ಹುನಗುಂದ ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ತಡರಾತ್ರಿವರೆಗೂ ನಿರಂತರವಾಗಿ ಕಾರು ಚಾಲನೆ ಮಾಡಿಕೊಂಡು ಬಂದಿದ್ದು, ಒಂದು ಕ್ಷಣ ನಿದ್ದೆ ಮಂಪರಿಗೆ ಚಾಲಕ ಜಾರಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. +ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸುದ್ದಿ ತಿಳಿದ ಕೂಡಲೇ ಹುನಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_46_9_7.txt b/eesanje/url_46_9_7.txt new file mode 100644 index 0000000000000000000000000000000000000000..03a1c3386eae2859c65ffd2556a628ada8159fe9 --- /dev/null +++ b/eesanje/url_46_9_7.txt @@ -0,0 +1,6 @@ +ರಾಜೀನಾಮೆಗೆ ಒತ್ತಾಯಿಸುವುದು ಅವರ ಕರ್ತವ್ಯ ಅದಕ್ಕೆ ನಮ್ಮ ಆಕ್ಷೇಪಣೆ ಇಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ +ಬೆಂಗಳೂರು, ಸೆ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಸೂಚಿಸಿರುವಂತೆ ಸಿಆರ್‌ಪಿಸಿ ಅಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿಲ್ಲ. ಹೊಸದಾಗಿ ಜಾರಿಯಲ್ಲಿರುವ ಬಿಎನ್‌ಎಸ್‌‍ಎಸ್‌‍ ನಿಯಮಗಳ ಅಡಿ ಪ್ರಕರಣ ದಾಖಲಿಸಲು ಆದೇಶಿಸಿದ್ದರೆ ಸೂಕ್ತವಾಗುತ್ತಿತ್ತು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಸಿಆರ್‌ಪಿಸಿ 156/3ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಆದೇಶಿಸಿದೆ. ಆದರೆ ಈಗ ಸಿಆರ್‌ಪಿಸಿ ಅಸ್ತಿತ್ವದಲ್ಲಿ ಇಲ್ಲ ಎಂದು ಹೇಳಿದರು. ಬಿಎನ್‌ಎಸ್‌‍ಎಸ್‌‍ ನಿಯಮಗಳು 2024ರ ಜುಲೈ 1 ರಿಂದಲೂ ಚಾಲ್ತಿಯಲ್ಲಿದೆ. ಅದರ ಅಡಿ ಪ್ರಕರಣ ದಾಖಲಿಸಿ ಕಾನೂನು ಪ್ರಕ್ರಿಯೆ ಮುಂದುವರಿಸಲು ಅವಕಾಶವಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನ ಕುರಿತು ಚರ್ಚೆಗಳು ನಡೆಯುತ್ತಿವೆ. ಕಾನೂನು ತಜ್ಞರ ತಂಡ ಪರಿಶೀಲನೆ ನಡೆಸಿ ಯಾವ ರೀತಿಯ ವರದಿ ನೀಡಲಿದೆ ಎಂದು ಕಾಯುತ್ತಿದ್ದೇವೆ. ವರದಿಯ ಬಳಿಕ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. +ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್‌ನ ವಿಭಾಗೀಯ ಪೀಠ, ಸುಪ್ರೀಂ ಕೋರ್ಟ್‌ ಸೇರಿ ಬೇರೆ ಬೇರೆ ಹಂತಗಳಲ್ಲಿ ಪ್ರಶ್ನಿಸಲು ಅವಕಾಶ ಇದೆ ಎಂದು ಹೇಳಿದರು. ಬಿಜೆಪಿಯವರು ಟೀಕೆಗಳು ಹಾಗೂ ರಾಜೀನಾಮೆಯ ಒತ್ತಡಗಳ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ದೇಶದಲ್ಲಿ ಕಾನೂನು ಎಂಬುದು ಅಸ್ತಿತ್ವದಲ್ಲಿದೆ. +ಯಾರು ಏನೇ ಹೇಳಿದರೂ ಕಾನೂನಿನ ಪ್ರಕಾರ ನಡೆದುಕೊಳ್ಳಬೇಕು. ಬಿಜೆಪಿಯವರು ಹೇಳಿದಾಕ್ಷಣ ಅದೇ ರೀತಿ ಮಾಡಲಾಗುವುದಿಲ್ಲ. ಯಾರೆ ಏನೇ ಅಭಿಪ್ರಾಯ ಹೇಳಿದರೂ ಕಾನೂನು ಮೀರಿ ಜರುಗುವುದಿಲ್ಲ. ವಿರೋಧಪಕ್ಷವಾಗಿ ಬಿಜೆಪಿಯವರು ಪ್ರತಿಭಟನೆ ಮಾಡುವುದು, ರಾಜೀನಾಮೆಗೆ ಒತ್ತಾಯಿಸುವುದು ಅವರ ಕರ್ತವ್ಯ ಅದಕ್ಕೆ ನಮ್ಮ ಆಕ್ಷೇಪಣೆ ಇಲ್ಲ ಎಂದರು. +ಹೈಕೋರ್ಟ್‌ನ ತೀರ್ಪಿನಿಂದ ನಮಗೆ ಸಮಾಧಾನವಾಗಿಲ್ಲ. ನಾವು ನೀಡಿದ ಸಾಕ್ಷ್ಯಗಳು, ಪುರಾವೆಗಳನ್ನು ತೀರ್ಪು ನೀಡುವ ವೇಳೆ ಪರಿಗಣಿಸಲಾಗಿಲ್ಲ. ಹೀಗಾಗಿ ತೀರ್ಪನ್ನು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪ್ರತಿನಿತ್ಯ ಕ್ಷುಲ್ಲಕ ವಿಚಾರಗಳಿಗೂ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದರೆ, ಎಲ್ಲದ್ದಕ್ಕೂ ಉತ್ತರ ನೀಡಲು ಸಾಧ್ಯವಿಲ್ಲ. ಸಾಂವಿಧಾನಿಕ ಬಾಧ್ಯತೆಯನ್ನು ಹೊಂದಿರುವ ರಾಜ್ಯಪಾಲರು ಪ್ರಸ್ತಾಪಿಸುವ ಗಂಭೀರ ವಿಚಾರಗಳಿಗೆ ಸರ್ಕಾರ ಪ್ರತಿಕ್ರಿಯಿಸಲಿದೆ ಎಂದು ಹೇಳಿದರು. \ No newline at end of file diff --git a/eesanje/url_46_9_8.txt b/eesanje/url_46_9_8.txt new file mode 100644 index 0000000000000000000000000000000000000000..8c2c07c2caa365dd0bf4e7afdf63303775995950 --- /dev/null +++ b/eesanje/url_46_9_8.txt @@ -0,0 +1,6 @@ + ಸಿದ್ದರಾಮಯ್ಯ ರಾಜೀನಾಮೆಗೆ ಸ್ವಪಕ್ಷೀಯರ ಆಗ್ರಹ +ಬೆಂಗಳೂರು, ಸೆ.26- ಸದ್ಯದಲ್ಲಿ ನಡೆಯುತ್ತಿರುವ ಹರಿಯಾಣ, ಜಮು ಕಾಶೀರ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಾತ್ಕಾಲಿಕವಾಗಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಚಾರಣೆ ಎದುರಿಸಬೇಕೆಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಬಿ. ಕೋಳಿವಾಡ ಹೇಳಿದ್ದಾರೆ. +ಈ ಹೇಳಿಕೆಯ ಮೂಲಕ ಇತ್ತೀಚಿನ ಬೆಳವಣಿಗೆ ನಂತರ ಕಾಂಗ್ರೆಸ್‌‍ ಪಕ್ಷದಲ್ಲಿ ಮೊಟ್ಟಮೊದಲ ಬಾರಿಗೆ ಸ್ವಪಕ್ಷೀಯರಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಕೆ.ಬಿ.ಕೋಳಿವಾಡ ಧ್ವನಿ ಎತ್ತಿದ್ದಂತಾಗಿದೆ. ಮುಡಾ ಪ್ರಕರಣದಲ್ಲಿ ಕಾಂಗ್ರೆಸ್‌‍ ಪಕ್ಷದ ಹೈಕಮಾಂಡ್‌, ಸಚಿವರು, ಶಾಸಕರಾದಿಯಾಗಿ ಎಲ್ಲರೂ ಸಿದ್ದರಾಮಯ್ಯ ಅವರ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದು, ಕೆ.ಬಿ.ಕೋಳಿವಾರ ಅಪಸ್ವರ ಹೊಸ ಬೆಳವಣಿಗೆಗಳಿಗೆ ನಾಂದಿಹಾಡಿದೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಬಿ. ಕೋಳಿವಾಡ ಅವರು 40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕಿ ಇಲ್ಲದ್ದಂತೆ ಕಳಂಕರಹಿತವಾಗಿ ನಡೆದುಕೊಂಡಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಬಡವರ ಪರವಾಗಿ ಆಡಳಿತ ನಡೆಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. +ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ಸೇರಿದಂತೆ ಎಲ್ಲರ ಹಾಗೂ 136 ಶಾಸಕರ ಸಂಪೂರ್ಣ ಬೆಂಬಲವಿದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಜೆಡಿಎಸ್‌‍, ಬಿಜೆಪಿಯವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ. +ಆ ಪ್ರಕರಣ ರಾಜ್ಯಪಾಲರು, ಅಲ್ಲಿಂದ ನ್ಯಾಯಾಲಯದವರೆಗೂ ತಲುಪಿದೆ. ಇದೆಲ್ಲವೂ ಕಣ್ಣುದುರಿಗೆ ಇದೆ. ಈಗ ಹರಿಯಾಣ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ದರಾಮಯ್ಯ ಅವರ ಪ್ರಕರಣವನ್ನೇ ಬಹು ಮುಖ್ಯವಾಗಿ ಪ್ರಸ್ತಾಪಿಸಿದ್ದಾರೆ. ಇದರಿಂದ ಕಾಂಗ್ರೆಸ್‌‍ಗೆ ಮುಜುಗರವಾಗಿದೆ ಎಂದು ಹೇಳಿದರು. ಸದ್ಯದ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌‍ ಪಕ್ಷಕ್ಕೆ ಆಗುತ್ತಿರುವ ಮುಜುಗರವನ್ನು ತಪ್ಪಿಸಬೇಕು. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ತಮಗಿದೆ. ಹಾಗೂ ವಿಧಾನಸಭೆಗಳ ಚುನಾವಣೆಗಳ ಬಳಿಕ ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಯಾಗಬೇಕೆಂದು ಕೋಳಿವಾಡ ಪ್ರತಿಪಾದಿಸಿದರು. +ಸಿದ್ದರಾಮಯ್ಯ ಅವರು ಹಿಂದುಳಿದ, ದಲಿತ ಹಾಗೂ ಎಲ್ಲಾ ವರ್ಗಗಳ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ಆಡಳಿತ ನಡೆಸಲು ಸೂಕ್ತವ್ಯಕ್ತಿ. ನನ್ನ 50 ವರ್ಷಗಳ ರಾಜಕೀಯ ಅನುಭವದಲ್ಲಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್‌‍ನಲ್ಲಿ ಮುಖ್ಯಮಂತ್ರಿ ಆಗಬೇಕೆಂಬ ನಿಲುವನ್ನು ಹೊಂದಿದ್ದೇನೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಜೀನಾಮೆ ನೀಡುವುದು ಸೂಕ್ತ ಎಂದರು. \ No newline at end of file diff --git a/eesanje/url_46_9_9.txt b/eesanje/url_46_9_9.txt new file mode 100644 index 0000000000000000000000000000000000000000..bf74593dfb4ccc8d8ef5a227dabcb41d4937b3e5 --- /dev/null +++ b/eesanje/url_46_9_9.txt @@ -0,0 +1,6 @@ +ಕಲ್ಯಾಣ ಕರ್ನಾಟಕಕ್ಕೆ ನೇಮಕಾತಿಯಲ್ಲಿ ಪಾಲು ನೀಡುವ ಕುರಿತು ಮಹತ್ವದ ಸಭೆ + +ಬೆಂಗಳೂರು,ಸೆ.25-ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನದಡಿ ಅಗತ್ಯ ಪಾಲು ನೀಡುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಯಿತು. +ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ. ಪಾಟೀಲ, ಈಶ್ವರ್‌ಖಂಡ್ರೆ, ಕೆ. ಸುಧಾಕರ್‌, ಡಾ. ಎಂ.ಸಿ. ಸುಧಾಕರ್‌, ಎನ್‌.ಎಸ್‌‍. ಬೋಸರಾಜು, ಪ್ರಿಯಾಂಕ ಖರ್ಗೆ, ಡಿ.ಸುಧಾಕರ್‌ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. +ಪಿಎಸ್‌‍ಐ ಸೇರಿದಂತೆ ಹಲವಾರು ಹುದ್ದೆಗಳ ನೇಮಕಾತಿ ಚಾಲ್ತಿಯಲ್ಲಿದೆ. ಅದರ ಕುರಿತು ಪ್ರಗತಿಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು ನೇಮಕಾತಿ ಪ್ರಕ್ರಿಯೆಗಳು ಚುರುಕುಗೊಳ್ಳಬೇಕು. ಅದೇ ಸಂದರ್ಭದಲ್ಲಿ 371 ಜೆ ಸ್ಥಾನಮಾನದ ಅಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನೇಮಕಾತಿಯಲ್ಲಿ ಸೂಕ್ತ ಪಾಲು ನೀಡಬೇಕು ಎಂದು ಸೂಚಿಸಿದರು. +ಇತ್ತೀಚೆಗೆ ನಡೆದಿರುವ ಪಿಎಸ್‌‍ಐ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿರ್ದಿಷ್ಟ ಸ್ಥಾನಗಳ ನಿಗದಿಯಲ್ಲಿ ಅನ್ಯಾಯವಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಂಭವನೀಯ ನೇಮಕಾತಿ ಪಟ್ಟಿಯನ್ನು ತಡೆಹಿಡಿಯುವಂತೆ ಪತ್ರ ಬರೆದಿದ್ದರು.ಈ ಹಿನ್ನೆಲೆಯಲ್ಲಿ ಇಂದು ಮಹತ್ವದ ಸಭೆ ನಡೆಸಲಾಗಿದೆ. \ No newline at end of file diff --git a/eesanje/url_47_100_1.txt b/eesanje/url_47_100_1.txt new file mode 100644 index 0000000000000000000000000000000000000000..2c2f18f7d1554e6c3e991dcfb828fca90d7ce05d --- /dev/null +++ b/eesanje/url_47_100_1.txt @@ -0,0 +1,8 @@ +ಉತ್ತರಪ್ರದೇಶದಲ್ಲಿ ಗುಂಡಿಕ್ಕಿ ಪತ್ರಕರ್ತನ ಹತ್ಯೆ +ಜೌನ್‌ಪುರ (ಯುಪಿ), ಮೇ 13– ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಜೌನ್‌ಪುರ ಜಿಲ್ಲೆಯ ಶಹಗಂಜ್‌ ಪ್ರದೇಶದಲ್ಲಿ ನಡೆದಿದೆ. ಸಬರ್ಹಾದ್‌ ಗ್ರಾಮದ ಅಶುತೋಷ್‌ ಶ್ರೀವಾಸ್ತವ (43)ಕೊಲೆಯಾದ ಪತ್ರಕರ್ತ. +ಇಂದು ಬೆಳಿಗ್ಗೆ 9.30 ರ ಸುಮಾರಿಗೆ ಇಮ್ರಂಗಂಜ್‌ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಜೌನ್‌ಪುರ್‌-ಶಾಹ್‌ಗಂಜ್‌‍ ರಸ್ತೆಯ ಸಮೀಪವಿರುವ ಛೇದಕದಲ್ಲಿ ಗುಂಡು ಹಾರಿಸಿದ್ದಾರೆ ಎಂದು ಸರ್ಕಲ್‌ ಇನ್ಸ್ ಪೆಕ್ಟರ್‌ ಅಜಿತ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ. +ಶ್ರೀವಾಸ್ತವ ಅವರು ಒಂದು ತಿಂಗಳ ಹಿಂದೆ ಶಹಗಂಜ್‌ ಪೊಲೀಸ್‌‍ ಠಾಣೆಯ ಅಧಿಕಾರಿಗಳಿಗೆ ಪತ್ರ ಬರೆದು ರಕ್ಷಣೆಗಾಗಿ ವಿನಂತಿಸಿದ್ದರು ಆದರೆ ಪೊಲೀಸರು ಅವರ ಮನವಿಗೆ ಗಮನ ಕೊಡಲಿಲ್ಲ ಎಂದು ಕುಟುಂಬದ ಮೂಲಗಳು ಆರೋಪಿಸಿದೆ. +ಪತ್ರಕರ್ತನ ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯ ಜನರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಕಠಿಣ ಕ್ರಮದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. +ಶ್ರೀವಾಸ್ತವ ಅವರು ಈ ಪ್ರದೇಶದಲ್ಲಿ ನಡೆಯುತ್ತಿದ್ದ ಗೋಹತ್ಯೆ ವಿರುದ್ಧ ಲೇಖನ ಬರೆಯುತ್ತಿದ್ದರು ಎಂದು ಸ್ಥಳೀಯ ಪತ್ರಕರ್ತರು ಹೇಳಿದ್ದಾರೆ. ಕಳ್ಳಸಾಗಾಣಿಕೆದಾರರಿಂದ ಹಲವು ಬಾರಿ ಬೆದರಿಕೆಗಳು ಬಂದಿದ್ದು, ಈ ಬಗ್ಗೆ ಪೊಲೀಸರಿಗೆ ಲಿಖಿತವಾಗಿ ತಿಳಿಸಿದ್ದರು. ಈ ಸಂಭಂದ ದಾಳಿಕೋರರನ್ನು ಬಂಧಿಸಲು ತಂಡವನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಅಜಯ್‌ ಪಾಲ್‌ ಶರ್ಮಾ ತಿಳಿಸಿದ್ದಾರೆ. +ಜೌನಪುರ ಪತ್ರಕರ್ತರ ಸಂಘವು ಹತ್ಯೆಯನ್ನು ಖಂಡಿಸಿದ್ದು, ಆದಷ್ಟು ಬೇಗ ಹಂತಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ. ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. +ಪೊಲೀಸರ ಅಸಡ್ಡೆ ಕಾರ್ಯವೈಖರಿಯಿಂದ ಶ್ರೀವಾಸ್ತವ್‌ ಹತ್ಯೆಯಾಗಿದೆ. ಇದಕ್ಕೆ ಕಾರಣರಾದ ಪೊಲೀಸ್‌‍ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪತ್ರಕರ್ತರ ಸಂಘ ಒತ್ತಾಯಿಸಿದೆ. \ No newline at end of file diff --git a/eesanje/url_47_100_10.txt b/eesanje/url_47_100_10.txt new file mode 100644 index 0000000000000000000000000000000000000000..5a5c8a0f18c858ec8a742261734726bca1917384 --- /dev/null +++ b/eesanje/url_47_100_10.txt @@ -0,0 +1,10 @@ +1 ಮತ ಹಾಕಿದರೆ ವರ್ಷಕ್ಕೆ 1 ಲಕ್ಷ ರೂ. ಕೊಡ್ತೀವಿ : ಮಹಿಳೆಯರಿಗೆ ಸೋನಿಯಾ ಗ್ಯಾರಂಟಿ +ನವದೆಹಲಿ, ಮೇ 13-ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಪಕ್ಷವು ಪಟ್ಟಿ ಮಾಡಿರುವ ಖಾತರಿಗಳು ಈ ಕಷ್ಟದ ಸಮಯದಲ್ಲಿ ತಮ್ಮ ಪರಿಸ್ಥಿತಿಗಳನ್ನು ಬದಲಾಯಿಸುತ್ತವೆ ಎಂದು ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ಜನರಿಗೆ ಭರವಸೆ ನೀಡಿದ್ದಾರೆ. +ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್‌ ಹಂಚಿಕೊಂಡಿರುವ ವೀಡಿಯೋ ಸಂದೇಶದಲ್ಲಿ, ತೀವ್ರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಮಹಿಳೆಯರು ಕಠಿಣ ಸಮಯವನ್ನು ಎದುರಿಸುತ್ತಿದ್ದಾರೆ. ಅವರಿಗಾಗಿ ಪಕ್ಷದ ಮಹಾಲಕ್ಷ್ಮಿ ಯೋಜನೆ ಅವರ ಜೀವನವನ್ನು ಬದಲಾಯಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. +ನನ್ನ ಪ್ರೀತಿಯ ಸಹೋದರಿಯರೇ, ಸ್ವಾತಂತ್ರ್ಯ ಹೋರಾಟದಿಂದ ಆಧುನಿಕ ಭಾರತ ನಿರ್ಮಾಣದವರೆಗೆ ಮಹಿಳೆಯರು ಅಪಾರ ಕೊಡುಗೆ ನೀಡಿದ್ದಾರೆ. ಆದರೆ, ಇಂದು ನಮ್ಮ ಮಹಿಳೆಯರು ತೀವ್ರ ಹಣದುಬ್ಬರದ ನಡುವೆ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಅವರ ಶ್ರಮ ಮತ್ತು ತಪಸ್ಸಿಗೆ ನ್ಯಾಯ ಸಲ್ಲಿಸಲು ಕ್ರಾಂತಿಕಾರಿ ಭರವಸೆಯೊಂದಿಗೆ, ಕಾಂಗ್ರೆಸ್‌ ಬಂದಿದೆ ಎಂದಿದ್ದಾರೆ. + ’ ' . , 1 = 1 . 🇮🇳###Phase4pic../JGDTyHo5MI +ಕಾಂಗ್ರೆಸ್‌ನ ಮಹಾಲಕ್ಷ್ಮಿ ಯೋಜನೆಯು ಬಡ ಕುಟುಂಬದ ಮಹಿಳೆಗೆ ನಾವು ಪ್ರತಿ ವರ್ಷ 1 ಲಕ್ಷ ರೂಪಾಯಿಗಳನ್ನು ನೀಡುತ್ತೇವೆ ಎಂದು ಖಾತರಿಪಡಿಸುತ್ತದೆ. ಏಳು ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ನಡೆಯುತ್ತಿರುವ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಜನರಿಗೆ ಮನವಿ ಮಾಡಿದ್ದಾರೆ. +ಕಾಂಗ್ರೆಸ್‌ನ ಖಾತರಿ ಈಗಾಗಲೇ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕೋಟ್ಯಂತರ ಕುಟುಂಬಗಳ ಜೀವನವನ್ನು ಬದಲಾಯಿಸಿದೆ. ಇದೇ ರೀತಿ ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು ಅಥವಾ ಆಹಾರ ಭದ್ರತೆಯಂತಹ ಯೋಜನೆಗಳ ಮೂಲಕ ಕಾಂಗ್ರೆಸ್‌ ಪಕ್ಷವು ಲಕ್ಷಾಂತರ ಭಾರತೀಯರನ್ನು ಸಬಲೀಕರಣಗೊಳಿಸಿದೆ. ಮಹಾಲಕ್ಷ್ಮಿ ನಮ್ಮ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುವ ಇತ್ತೀಚಿನ ಭರವಸೆಯಾಗಿದೆ ಎಂದು ತಿಳಿಸಿದ್ದಾರೆ. +ಈ ಕಷ್ಟದ ಸಮಯದಲ್ಲಿ, ಕಾಂಗ್ರೆಸ್‌ನ ಕೈ ನಿಮ್ಮೊಂದಿಗಿದೆ ಮತ್ತು ಈ ಕೈ ನಿಮ್ಮ ಪರಿಸ್ಥಿತಿಯನ್ನು ಬದಲಾಯಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ. ಧನ್ಯವಾದಗಳು. ಜೈ ಹಿಂದ್‌ ಎಂದು ಎಐಸಿಸಿ ಮಾಜಿ ಅಧ್ಯಕ್ಷರು ತಮ್ಮ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿ ಹೇಳಿದರು. +ಸೋನಿಯಾಗಾಂಧಿ ಅವರ ಮನವಿಯನ್ನು ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಎಕ್ಸ್ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.ರಾಹುಲ್‌ ಗಾಂಧಿ ಅವರು ಬಡ ಕುಟುಂಬದ ಮಹಿಳೆಯರು ನೆನಪಿಸಿಕೊಳ್ಳಿ – ನಿಮ್ಮ ಒಂದು ಮತವು ನಿಮ್ಮ ಖಾತೆಯಲ್ಲಿ ವಾರ್ಷಿಕ 1 ಲಕ್ಷ ರೂ. ತರಲಿದೆ. +ಕಾಂಗ್ರೆಸ್‌ನ ಮಹಾಲಕ್ಷ್ಮಿ ಯೋಜನೆಯು ಭೀಕರ ಹಣದುಬ್ಬರ ಮತ್ತು ನಿರುದ್ಯೋಗದ ನಡುವೆ ಹೋರಾಡುತ್ತಿರುವ ಮಹಿಳೆಯರಿಗೆ ಜೀವರಕ್ಷಕವಾಗಲಿದೆ. ಪ್ರತಿ ತಿಂಗಳು 8,500 ರೂ.ಗಳನ್ನು ನೇರವಾಗಿ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡುವುದರಿಂದ, ಭಾರತದ ಮಹಿಳೆಯರು ಆರ್ಥಿಕ ಅವಲಂಬನೆಯಿಂದ ಮುಕ್ತರಾಗುತ್ತಾರೆ ಮತ್ತು ಅವರ ಸ್ವಂತ ಕುಟುಂಬದ ಹಣೆಬರಹ. ಬರೆಯಲು ಸಾಧ್ಯವಾಗುತ್ತದೆ. ಹಾಗಾಗಿ ಮತ ಚಲಾಯಿಸಿ ಮತ್ತು ನಿಮ್ಮ ಪರಿಸ್ಥಿತಿಗಳನ್ನು ಬದಲಾಯಿಸಿ ಎಂದು ಸೋನಿಯಾ ಗಾಂಧಿ ಅವರ ಸಂದೇಶವನ್ನು ಹಂಚಿಕೊಳ್ಳುವ ಸಂದರ್ಭದಲ್ಲಿ ಹೇಳಿದ್ದಾರೆ. \ No newline at end of file diff --git a/eesanje/url_47_100_11.txt b/eesanje/url_47_100_11.txt new file mode 100644 index 0000000000000000000000000000000000000000..ec5ba075f71189340b2a41ef1b0e79083aee2dc1 --- /dev/null +++ b/eesanje/url_47_100_11.txt @@ -0,0 +1,11 @@ +“ಚಾರ್ ಸೊ ಪಾರ್” ಬರೀ ಘೋಷಣೆಯಲ್ಲ, ಅದೇ ನಿಜವಾಗಲಿದೆ : ಪ್ರಧಾನಿ ಮೋದಿ +ನವದೆಹಲಿ,ಮೇ 13-ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ. ಮತದಾನದ ವೇಳೆ ಜನರ ಉತ್ಸಾಹವನ್ನು ಕಂಡು ಇದನ್ನು ಹೇಳುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಬಹುತೇಕ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿದ್ದೇನೆ ಮತ್ತು ಬಿಜೆಪಿ ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಸಾಧಿಸುವುದನ್ನು ಖಚಿತಪಡಿಸಿಕೊಳ್ಳಲು ದೇಶದಾದ್ಯಂತ ಬಲವಾದ ಸಂಕಲ್ಪವಿದೆ. ಈ ಚುನಾವಣೆಗಳಲ್ಲಿ ಎನ್‌ಡಿಎಯನ್ನು 400 ಸೀಟುಗಳ ಗಡಿ ಮೀರಿ ಕೊಂಡೊಯ್ಯಲು ದೇಶ ಸಂಕಲ್ಪ ಮಾಡಿದೆ ಎಂದು ಹೇಳಿದರು. +ನಾನು ಮತದಾನದ ಕೇಂದ್ರದಲ್ಲಿಲ್ಲ, 140 ಕೋಟಿ ಜನರಿದ್ದಾರೆ. ಮೊದಲ ಮೂರು ಹಂತಗಳಲ್ಲಿನ ಮತದಾನಕ್ಕೆ ಸಂಬಂಧಿಸಿದಂತೆ, 400 ಪಾರ್‌ ಎಂಬುದು ಕೇವಲ ಘೋಷಣೆಯಾಗಿಲ್ಲ ಮತ್ತು ವಾಸ್ತವವಾಗುತ್ತಿರುವುದನ್ನು ನಾನು ಸ್ಪಷ್ಟವಾಗಿ ನೋಡುತ್ತಿದ್ದೇನೆ. ಎನ್‌ಡಿಎಯಂತಹ ಬಲಿಷ್ಠ ಸರ್ಕಾರವನ್ನು ಆಯ್ಕೆ ಮಾಡಲು ಜನರು ಬದ್ಧರಾಗಿದ್ದಾರೆ. ದೇಶದ ಭವಿಷ್ಯವನ್ನು ಭದ್ರಪಡಿಸಲು ಜನರು ಬಿಸಿಗಾಳಿಯ ನಡುವೆಯೂ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಎನ್‌ಡಿಎ 400 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದರು. ಅವರ ಪುತ್ರ ರಾಹುಲ್‌ ಗಾಂಧಿ ಅಮೇಥಿಯಿಂದ ಸ್ಪರ್ಧಿಸದ ಉದಾಹರಣೆಗಳನ್ನು ಉಲ್ಲೇಖ ಮಾಡಿದರು. +ಅವರ ದೊಡ್ಡ ನಾಯಕಿ ರಾಜ್ಯಸಭೆಗೆ ಹೋಗಿದ್ದಾರೆ. ಅವರು (ರಾಹುಲ್‌ ಗಾಂಧಿ ) ಎರಡನೇ ಸ್ಥಾನಕ್ಕೆ (ರಾಯಬರೇಲಿಯಲ್ಲಿ) ಸ್ಪರ್ಧಿಸಿದರೆ ಅವರು (ರಾಹುಲ್‌ ಗಾಂಧಿ ) ವಯನಾಡಿನಿಂದ ಓಡಿಹೋಗುತ್ತಾರೆ. ಅಮೇಥಿಯಲ್ಲಿ ಹೋರಾಡುವ ಧೈರ್ಯ ಅವರಿಗೆ ಇಲ್ಲ, ನಾನು ಇಲ್ಲಿಯವರೆಗೆ ಏನು ಹೇಳಿದ್ದೇನೆ ನಿಜವಾಗಲಿ ಎಂದು ಭವಿಷ್ಯ ನುಡಿದರು. +ಅವರಿಗೆ ಜನರ ಸೇವೆಯಲ್ಲಿ ಆಸಕ್ತಿ ಇಲ್ಲ, ಅವರು ತಮ್ಮ ಕುಟುಂಬದ ಬಗ್ಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ದೇಶದ ಬಗ್ಗೆ ಯೋಚಿಸುವುದಿಲ್ಲ. ಈ ದೇಶವು ಅತಿ ಹೆಚ್ಚು ಹಣದುಬ್ಬರವನ್ನು ಎದುರಿಸಿದ್ದು ಇಂದಿರಾಗಾಂಧಿ ಅವರ ಅಧಿ ಕಾರಾವಧಿಯಲ್ಲಿ. ಕೆಂಪು ಕೋಟೆಯ ಆವರಣದಿಂದ ಮಾಡಿದ ಭಾಷಣದಲ್ಲಿ, ಜವಾಹರಲಾಲ್‌ ನೆಹರು, ರಾಜೀವ್‌ ಗಾಂಧಿ ಮತ್ತು ಇಂದಿರಾ ಗಾಂಧಿಯವರು ನಮ್ಮ ಹಣದುಬ್ಬರ ದರವನ್ನು ಉತ್ತರ ಕೊರಿಯಾದ ದರದೊಂದಿಗೆ ಹೋಲಿಸಿದರು. +ಮಹಿಳೆಯರ ಸಬಲೀಕರಣ ನನ್ನ ಬದ್ಧತೆಯಾಗಿದೆ. ನಾನು ಜಿ-20 ಶೃಂಗಸಭೆಯಲ್ಲಿ ಮುನ್ನಡೆ ಸಾಧಿಸಿದ್ದೇನೆ. ಮಹಿಳೆಯರ ಅಭಿವೃದ್ಧಿಗಾಗಿ ನಾವು ಮಹಿಳೆಯರಿಗೆ ಅವಕಾಶಗಳನ್ನು ಒದಗಿಸಬೇಕು. ನಾವು ಸೇನೆಯಲ್ಲಿ ಮಹಿಳೆಯರಿಗಾಗಿ ಬಾಗಿಲು ತೆರೆದಿದ್ದೇವೆ. ಅವರನ್ನು ವಾಯುಪಡೆಯ ಪೈಲಟ್‌ಗಳನ್ನಾಗಿ ಮಾಡಿದೆವು. ನಾವು ಅವರನ್ನು ಗಡಿಗೆ ದೇಶ ಕಾಯಲು ಕಳುಹಿಸಿದ್ದೇವೆ, ಈಗ ನಮ್ಮ ಹೆಣ್ಣುಮಕ್ಕಳು ಸಿಯಾಚಿನ್‌ನಲ್ಲಿ ದೇಶವನ್ನು ರಕ್ಷಿಸುತ್ತಿದ್ದಾರೆ. ನಾನು ಮಹಿಳೆಯರಲ್ಲಿ ಮಾನಸಿಕ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾಗಿದ್ದೇನೆ. ಮಹಿಳಾ ಶಕ್ತಿ ಹೆಚ್ಚಾಗುತ್ತದೆ. ದೇಶದ ಅಭಿವೃದ್ಧಿ ವೇಗವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. +ಪೂರ್ವ ಭಾರತದಲ್ಲಿ ಬಿಜೆಪಿಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ 2013ರ ಭಾಷಣವನ್ನು ಮೆಲುಕು ಹಾಕಿದರು. ಆಗ ನಾನು ಪ್ರಧಾನಿ ಅಭ್ಯರ್ಥಿಯಾಗಿರಲಿಲ್ಲ. ನಾವು ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ನಾವು ಈಸ್‌್ಟ ಇಂಡಿಯಾವನ್ನು ಬೆಳವಣಿಗೆಯ ಎಂಜಿನ್‌ ಮಾಡಬೇಕು ಎಂದು ನಾನು ಹೇಳಿದ್ದೆ. ಕಳೆದ 10 ವರ್ಷಗಳಲ್ಲಿ ನಾನು ಮೂಲಸೌಕರ್ಯಕ್ಕೆ ಸಂಬಂಧಿಸಿದ ಪೂರ್ವ ಭಾರತದಲ್ಲಿನ ಯೋಜನೆಗಳಿಗೆ ಸತತವಾಗಿ ಒತ್ತು ನೀಡಿದ್ದೇನೆ. ನಾವು ಮೊದಲಿಗಿಂತ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೇವೆ ಎಂಬ ನಂಬಿಕೆಯಿದೆ ಎಂದು ಅವರು ಹೇಳಿದ್ದಾರೆ. +2019ರ ಚುನಾವಣೆಯಲ್ಲಿ, ಬಿಜೆಪಿ, ಜೆಡಿಯು ಮತ್ತು ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಎಲ್‌‍ಜೆಪಿಯನ್ನು ಒಳಗೊಂಡಿರುವ ಎನ್‌ಡಿಎ ಮೈತ್ರಿಕೂಟವು ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳನ್ನು ಗೆದ್ದಿತ್ತು. ನಾನು ನಮ್ಮ ಸ್ನೇಹಿತರ ಬಳಿ ಮಾತನಾಡಿದ್ದೇನೆ, ಕಳೆದ ಬಾರಿ ನಾವು 1 ಸ್ಥಾನವನ್ನು ಕಳೆದುಕೊಂಡಿದ್ದೇವೆ. ಈ ಬಾರಿ ನಾವು ಆ 1 ಸ್ಥಾನವನ್ನು ಸಹ ಕಳೆದುಕೊಳ್ಳುವುದಿಲ್ಲ ಎಂದು ಮೋದಿ ಹೇಳಿದ್ದಾರೆ. +ಬಿಹಾರದಲ್ಲಿ ಮೈತ್ರಿಗೆ ಕ್ಲೀನ್‌ ಸ್ವೀಪ್‌ ಎಂದು ಭವಿಷ್ಯ ನುಡಿದ ಮೋದಿ ಅವರು, ನಾನು ಬಿಹಾರದಲ್ಲಿ ನಮ್ಮ ಮಿತ್ರಪಕ್ಷಗಳೊಂದಿಗೆ ಮಾತನಾಡಿದ್ದೇನೆ. ನಾವು ಒಂದು ಸ್ಥಾನವನ್ನು (2019 ರಲ್ಲಿ) ಕಳೆದುಕೊಂಡಿದ್ದೇವೆ ಮತ್ತು ನಾವು ಇಲ್ಲದಿರಬಹುದು. ಈ ಬಾರಿ ಒಂದನ್ನು ಕಳೆದುಕೊಳ್ಳಬಹುದು. ನಾನು ಸಂಘಟನಾ ಕಾರ್ಯಕ್ಕಾಗಿ ಆಗಾಗ್ಗೆ ಇಲ್ಲಿಗೆ ಬಂದಿದ್ದೇನೆ ಮತ್ತು ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇನೆ. ನನಗೆ ಇಲ್ಲಿ ಹಳೆಯ ಸಂಪರ್ಕಗಳಿವೆ ಎಂದರು. \ No newline at end of file diff --git a/eesanje/url_47_100_12.txt b/eesanje/url_47_100_12.txt new file mode 100644 index 0000000000000000000000000000000000000000..658f1d05658f86db6554e34349f4f7d0a779fc99 --- /dev/null +++ b/eesanje/url_47_100_12.txt @@ -0,0 +1,10 @@ +ಭಾರತದ ರಾಜಕೀಯ ಪಕ್ಷಗಳು ಶಿಕ್ಷಣ ಕ್ಷೇತ್ರದತ್ತ ಗಮನಹರಿಸಬೇಕು: ವಿಶ್ವನಾಥನ್‌ +ವಾಷಿಂಗ್ಟನ್‌, ಮೇ 13 (ಪಿಟಿಐ)– ದೇಶದ ಆರ್ಥಿಕತೆಯು ಶಿಕ್ಷಣದೊಂದಿಗೆ ನೇರವಾಗಿ ಸಂಬಂಧ ಹೊಂದಿರುವುದರಿಂದ ಭಾರತದ ರಾಜಕೀಯ ಪಕ್ಷಗಳು ಶಿಕ್ಷಣ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಷ್ಠಿತ ವೆಲ್ಲೂರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಕುಲಪತಿ ಗೋವಿಂದಸ್ವಾಮಿ ವಿಶ್ವನಾಥನ್‌ ಹೇಳಿದ್ದಾರೆ. +ಪಿಟಿಐಗೆ ನೀಡಿದ ಸಂದರ್ಶನದಲ್ಲಿ, 2047 ರ ವೇಳೆಗೆ ಭಾರತವು ಅಭಿವದ್ಧಿ ಹೊಂದಿದ ರಾಷ್ಟ್ರ ಎಂಬ ಗುರಿಯನ್ನು ಸಾಧಿಸಲು ಶಿಕ್ಷಣ ಕ್ಷೇತ್ರಕ್ಕೆ ರಾಷ್ಟ್ರದ ಜಿಡಿಪಿಯ ಶೇ. 6 ರಷ್ಟು ಖರ್ಚು ಮಾಡುವ ಅವಶ್ಯಕತೆಯಿದೆ ಎಂದು ಹೇಳಿದರು. +2023 ರಲ್ಲಿ ಭಾರತದ ತಲಾ ಆದಾಯವು 2,600 ಬಿಲಿಯನ್‌ ಡಾಲರ್‌ ಆಗಿದೆ. ದಕ್ಷಿಣದ ರಾಜ್ಯಗಳು ಅಥವಾ ಪಾಶ್ಚಿಮಾತ್ಯ ರಾಜ್ಯಗಳಂತಹ ಶಿಕ್ಷಣದಲ್ಲಿ ಉತ್ತಮವಾಗಿರುವ ರಾಜ್ಯಗಳು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿವೆ ಎಂದು ಅವರು ತಿಳಿಸಿದರು. ದಕ್ಷಿಣ ರಾಜ್ಯಗಳಲ್ಲಿ, ಇದು 3,500 ಬಿಲಿಯನ್‌ ಡಾಲರ್‌ನಿಂದ 4,000 ಬಿಲಿಯನ್‌ ಡಾಲರ್‌ಗೆ ಬದಲಾಗುತ್ತದೆ. +ಕೇರಳ ಮೊದಲ ಸ್ಥಾನದಲ್ಲಿದೆ, ತೆಲಂಗಾಣ ಎರಡನೇ ಸ್ಥಾನದಲ್ಲಿದೆ ಮತ್ತು ತಮಿಳುನಾಡು ಮೂರನೇ ಸ್ಥಾನದಲ್ಲಿದೆ… ಇವೆಲ್ಲವೂ ಸುಮಾರು 4,000 ಬಿಲಿಯನ್‌ ಡಾಲರ್‌ ಇದ್ದರೆ ಬಿಹಾರ ಮತ್ತು ಉತ್ತರ ಪ್ರದೇಶಗಳು 1,000 ಕ್ಕಿಂತ ಕಡಿಮೆ ಇವೆ ಏಕೆಂದರೆ ಅವು ಶಿಕ್ಷಣದಲ್ಲಿ ಹಿಂದುಳಿದಿವೆ ಎಂದು ಅವರು ಹೇಳಿದರು. +ಇದು ಜನರಿಗೆ ತಿಳಿದಿಲ್ಲ. ಈ ಬಗ್ಗೆ ಜನರಿಗೆ ತಿಳಿಹೇಳಬೇಕು. ರಾಜಕೀಯ ಪಕ್ಷಗಳು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಶಿಕ್ಷಣದತ್ತ ಗಮನ ಹರಿಸದ ಹೊರತು ಆರ್ಥಿಕವಾಗಿ ಮೇಲೇರಲು ಸಾಧ್ಯವಿಲ್ಲ. ಇದು ಕುಟುಂಬಗಳು, ಸಮಾಜ, ರಾಜ್ಯಗಳು ಮತ್ತು ದೇಶಕ್ಕೆ ಅನ್ವಯಿಸುತ್ತದೆ. ಅಲ್ಲಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರಗಳು ಒಟ್ಟಿಗೆ ಕುಳಿತು ಶಿಕ್ಷಣಕ್ಕಾಗಿ ಸಾಕಷ್ಟು ಹಣವನ್ನು ಮೀಸಲಿಡುವುದನ್ನು ನೋಡಬೇಕೆಂದು ನಾನು ತುಂಬಾ ಬಯಸುತ್ತೇನೆ ಎಂದು ಅವರು ಹೇಳಿದರು. +ವಿಐಟಿಯ ಸಂಸ್ಥಾಪಕರೂ ಆಗಿರುವ ವಿಶ್ವನಾಥನ್‌ ಅವರು ಅಂತರರಾಷ್ಟ್ರೀಯ ಉನ್ನತ ಶಿಕ್ಷಣಕ್ಕೆ ನೀಡಿದ ಕೊಡುಗೆಗಳಿಗಾಗಿ ಮೇ 10 ರಂದು ಬಿಂಗ್‌ಹ್ಯಾಮ್‌ಟನ್‌ನಲ್ಲಿರುವ ಸ್ಟೇಟ್‌ ಯೂನಿವರ್ಸಿಟಿ ಆಫ್‌ ನ್ಯೂಯಾರ್ಕ್‌ನಿಂದ ಗೌರವ ಡಾಕ್ಟರ್‌ ಆಫ್‌ ಲಾಸ್‌‍ ಪದವಿಯನ್ನು ಪಡೆದರು. +ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಶ್ವನಾಥನ್‌‍, ಶಿಕ್ಷಣಕ್ಕೆ ಜಿಡಿಪಿಯ ಶೇ 6ರಷ್ಟು ವೆಚ್ಚ ಮಾಡಬೇಕೆಂಬ ಬೇಡಿಕೆ ಬಹಳ ದಿನಗಳಿಂದ ಇದೆ. ಆದರೆ ಕಳೆದ 76 ವರ್ಷಗಳ ಸ್ವಾತಂತ್ರ್ಯದಲ್ಲಿ ಇದು ಎಂದೂ ಶೇ.3 ದಾಟಿಲ್ಲ ಎಂದು ವಿಷಾದಿಸಿದರು. +ಈ ವರ್ಷ ಅದು ಕಡಿಮೆಯಾಗಿದೆ. ಕಳೆದ ವರ್ಷ ಶಿಕ್ಷಣಕ್ಕೆ ಆದ್ಯತೆ ನೀಡದ ಕಾರಣ ಈ ವರ್ಷ ಅದು 2.9 ಶೇಕಡಾವಾಗಿದೆ. ಇತರ ಪ್ರದೇಶಗಳಿಗೆ ಆದ್ಯತೆ ಸಿಗುತ್ತದೆ. ಇದು ಬದಲಾಗಬೇಕು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಎರಡೂ ಒಟ್ಟಾಗಿ ಕುಳಿತು, ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗಬೇಕು ಎಂದು ನಿರ್ಧರಿಸುತ್ತದೆ ಎಂದು ಅವರು ಹೇಳಿದರು. +ಎಲ್ಲಾ ಮುಂದುವರಿದ ದೇಶಗಳು, ಇದು ಜಿಡಿಪಿಯ 5 ಪ್ರತಿಶತದಿಂದ 7 ಪ್ರತಿಶತದವರೆಗೆ ಬದಲಾಗುತ್ತದೆ. ನಾವು ಅವರೊಂದಿಗೆ ಸ್ಪರ್ಧಿಸಬೇಕಾಗಿದೆ. ಈಗ ಹೊಸ ಶಿಕ್ಷಣ ನೀತಿಯಲ್ಲಿ ಜಿಡಿಪಿಯ ಶೇ 6ರಷ್ಟನ್ನು ಶಿಕ್ಷಣಕ್ಕೆ ವಿನಿಯೋಗಿಸಬೇಕು ಇದು ಸಾಕಾಗುವುದಿಲ್ಲ. ನಾವು ಅದನ್ನು ಹೆಚ್ಚಿಸಬೇಕಾಗಿದೆ ಎಂದು ಸಲಹೆ ನೀಡಿದರು. \ No newline at end of file diff --git a/eesanje/url_47_100_2.txt b/eesanje/url_47_100_2.txt new file mode 100644 index 0000000000000000000000000000000000000000..a79ddb7b372ec6b9bf1d9dd450c58233f5e2984e --- /dev/null +++ b/eesanje/url_47_100_2.txt @@ -0,0 +1,5 @@ +ಸಿಬಿಎಸ್‌‍ಇ ತರಗತಿ 12ನೇ ತರಗತಿ ಫಲಿತಾಂಶ ಪ್ರಕಟ +ನವದೆಹಲಿ,ಮೇ 13– ಸಿಬಿಎಸ್‌‍ಇ 12ನೇ ತರಗತಿಯ ಬೋರ್ಡ್‌ ಪರೀಕ್ಷೆ ಪಲಿತಾಂಶ ಪ್ರಕಟಿಸಲಾಗಿದೆ. ಮತ್ತೆ ಬಾಲಕಿಯರೇ ಮುಂದಿದ್ದು, ಒಟ್ಟಾರೆ ಶೇಕಡಾ 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆದರೆ ಪಲಿತಾಂಶದಲ್ಲಿ ಕಳೆದ ಸಾಲಿಗೆ ಹೊಲಿಸಿದರೆ ಸ್ವಲ್ಪ ಕುಸಿದಿದೆ. +ಒಟ್ಟು 24,068 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಮತ್ತು 1,16,145 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈ ಬಾರಿ 7,126 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ ದೇಶಾದಾದ್ಯಂತ 16,21000ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ 91.52 ರಷ್ಟು ಹುಡುಗಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ, +ಈ ನಡುವೆ 1.22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪಲಿತಾಂಶ ತಡೆಹಿಡಿಯಲಾಗಿದೆ. ಕಳೆದ ವರ್ಷ ಒಟ್ಟು ತೇರ್ಗಡೆ ಪ್ರಮಾಣ ಶೇ.87.33 ಆಗಿತ್ತು. \ No newline at end of file diff --git a/eesanje/url_47_100_3.txt b/eesanje/url_47_100_3.txt new file mode 100644 index 0000000000000000000000000000000000000000..a5225cf184e7bf734a0dafa6e7c1d2f13460d12f --- /dev/null +++ b/eesanje/url_47_100_3.txt @@ -0,0 +1,5 @@ +ಮುಂಬೈ ವಿಮಾನ ನಿಲ್ದಾಣದಲ್ಲಿ 13 ಕೋಟಿ ಮೌಲ್ಯದ ಚಿನ್ನ ವಶ +ಮುಂಬೈ, ಮೇ 13 (ಪಿಟಿಐ) –ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಪ್ರಯಾಣಿಕರು ಅಕ್ರಮವಾಗಿ ತಂದಿದ್ದ 13.56 ಕೋಟಿ ರೂಪಾಯಿ ಮೌಲ್ಯದ 22.14 ಕೆಜಿ ಚಿನ್ನವನ್ನು ಕಸ್ಟಮ್ಸ್‌‍ ಇಲಾಖೆ ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 20 ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿ 11 ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಯಾಣಿಕರು ಗುದನಾಳ, ಒಳ ಉಡುಪು, ದೇಹದ ಮೇಲೆ ಮತ್ತು ರಟ್ಟಿನ ಹಾಳೆಯಲ್ಲಿ ಬಚ್ಚಿಟ್ಟಿದ್ದ ಅಮೂಲ್ಯ ಲೋಹ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಒಂದು ಪ್ರಕರಣದಲ್ಲಿ, ಪ್ರಯಾಣಿಕರೊಬ್ಬರು ಧರಿಸಿದ್ದ ಬುರ್ಖಾದ ಅಡಿಯಲ್ಲಿ ಚಿನ್ನಾಭರಣಗಳನ್ನು ಬಚ್ಚಿಡಲಾಗಿತ್ತು ಮತ್ತು ಇನ್ನೊಂದು ಪ್ರಕರಣದಲ್ಲಿ, ಬೆಲೆಬಾಳುವ ಲೋಹದ ಬಾರ್‌ಗಳನ್ನು ಒಳ ಉಡುಪುಗಳಲ್ಲಿ ಮರೆಮಾಡಲಾಗಿತ್ತು ಎನ್ನಲಾಗಿದೆ. +ಪ್ರಯಾಣಿಕರು ಬೆಲ್ಟ್‌‍ ಆಗಿ ಧರಿಸಿರುವ ಬಳೆ ಮತ್ತು ಬಕಲ್‌ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು, ಆದರ ಜತೆಗೆ ಮೇಣದ ರೂಪದಲ್ಲಿ ಚಿನ್ನದ ಧೂಳನ್ನು ಪ್ರಯಾಣಿಕರು ಗುದನಾಳದಲ್ಲಿ ಮರೆಮಾಡಿಕೊಂಡಿದ್ದರು ಎಂದು ಅವರು ಹೇಳಿದರು \ No newline at end of file diff --git a/eesanje/url_47_100_4.txt b/eesanje/url_47_100_4.txt new file mode 100644 index 0000000000000000000000000000000000000000..b1782dad53bbf30871f105cb91292a6693990d95 --- /dev/null +++ b/eesanje/url_47_100_4.txt @@ -0,0 +1,6 @@ +ದಕ್ಷಿಣ ಭಾರತದಲ್ಲಿ ಈ ಬಾರಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ : ಶಾ ಭವಿಷ್ಯ +ನವದೆಹಲಿ,ಮೇ.13-ದಕ್ಷಿಣ ಭಾರತದಲ್ಲಿ ಈ ಬಾರಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭವಿಷ್ಯ ನುಡಿದಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡುಗಳಲ್ಲಿ ದೊಡ್ಡ ಗೆಲುವಿನತ್ತ ಬಿಜೆಪಿ ಸಾಗುತ್ತಿದೆ ಎಂದು ಶಾ ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ. +ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡುಗಳ 109 ಕ್ಷೇತ್ರಗಳಲ್ಲಿ ಕಳೆದ ಬಾರಿ ಬಿಜೆಪಿ 29 ಸ್ಥಾನಗಳನ್ನು ಗೆದ್ದಿತ್ತು. ಕರ್ನಾಟಕದಿಂದ 25 ಮತ್ತು ತೆಲಂಗಾಣದಿಂದ ನಾಲ್ವರು. ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ಎರಡರಲ್ಲೂ ಬಿಜೆಪಿ ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ, ಈ ಬಾರಿ ನಮಗೆ ಈ ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಿಗಲಿದೆ ಎಂದು ಅವರು ಹೇಳಿದರು. +200 ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ, ಹರಿಯಾಣ, ಮತ್ತು ಗುಜರಾತ್‌ ರಾಜ್ಯಗಳಲ್ಲೂ ಬಿಜೆಪಿಗೆ ಭರ್ಜರಿ ಗೆಲುವು ಗ್ಯಾರಂಟಿ ಎಂದಿದ್ದಾರೆ. +2019 ರಲ್ಲಿ ಪಕ್ಷವು ಈ ರಾಜ್ಯಗಳಲ್ಲಿ 190 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತು, ಈ ಬಾರಿಯೂ ಅದೇ ಪ್ರಬಲ ಫಲಿತಾಂಶವನ್ನು ಪಡೆಯಬೇಕು ಮತ್ತು ಅದರ ಗುರಿಯನ್ನು ಮುಟ್ಟಲು ದಕ್ಷಿಣ (ಮತ್ತು ಪೂರ್ವ) ಭಾಗಗಳಿಂದ ಹೆಚ್ಚು ಸುಧಾರಿತ ಸ್ಕೋರ್‌ ಅಗತ್ಯವಿದೆ ಎಂದರು. +ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ನಾವು ಕಾಂಗ್ರೆಸ್‌‍ಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕ ಮತ್ತು ತೆಲಂಗಾಣ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಕೆ ಚಂದ್ರಶೇಖರ್‌ ರಾವ್‌ ಅವರ ಭಾರತ್‌ ರಾಷ್ಟ್ರ ಸಮಿತಿಯನ್ನು ಸೋಲಿಸುವ ಮೂಲಕ ಕಾಂಗ್ರೆಸ್‌‍ ಎರಡು ಭರ್ಜರಿ ಗೆಲುವುಗಳನ್ನು ಸಾಧಿಸಿದ ನಂತರ ದಕ್ಷಿಣ ಭಾರತದ ಕದನವು ಈ ಚುನಾವಣೆಯಲ್ಲಿ ಪ್ರಮುಖ ಮುಖ್ಯಾಂಶಗಳಲ್ಲಿ ಒಂದಾಗಿದೆ. \ No newline at end of file diff --git a/eesanje/url_47_100_5.txt b/eesanje/url_47_100_5.txt new file mode 100644 index 0000000000000000000000000000000000000000..baeb4314e1a22ec4a106c0e903eb7a718e16c3ed --- /dev/null +++ b/eesanje/url_47_100_5.txt @@ -0,0 +1,5 @@ +ಸಿಎಂ ಸ್ಥಾನದಿಂದ ಕೇಜ್ರಿವಾಲ್‌ ವಜಾ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ +ನವದೆಹಲಿ,ಮೇ 13-ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿದೆ. +ದೆಹಲಿ ಲೆಪ್‌್ಟನೆಂಟ್‌ ಜನರಲ್‌ ಅವರು ಬಯಸಿದಲ್ಲಿ ಕಾರ್ಯನಿರ್ವಹಿಸಲು ಬಿಟ್ಟದ್ದು ಆದರೆ ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠ ಹೇಳಿತು. +ಇದು ಔಚಿತ್ಯದ ವಿಷಯವಾಗಿದೆ ಆದರೆ ಕೇಜ್ರಿವಾಲ್‌ ಅವರನ್ನು ಬಂಧಿಸಿದ ನಂತರ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಯಾವುದೇ ಕಾನೂನು ಹಕ್ಕಿಲ್ಲ. ವಿಷಯವನ್ನು ಕೇಳಿದಾಗ ನಾವು ಅವರಿಗೆ ಅದೇ ಪ್ರಶ್ನೆಯನ್ನು ಕೇಳಿದ್ದೇವೆ. ಅಂತಿಮವಾಗಿ, ಇದು ಔಚಿತ್ಯದ ವಿಷಯವಾಗಿದೆ ಮತ್ತು ಯಾವುದೇ ಕಾನೂನು ಹಕ್ಕಿಲ್ಲ ಎಂದು ಪೀಠವು ಅರ್ಜಿದಾರರಿಗೆ ತಿಳಿಸಿದೆ. +ಏಪ್ರಿಲ್‌ 10 ರಂದು ದೆಹಲಿ ಹೈಕೋರ್ಟ್‌ ತನ್ನ ಮನವಿಯನ್ನು ವಜಾಗೊಳಿಸಿದ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಕಾಂತ್‌ ಭಾಟಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. \ No newline at end of file diff --git a/eesanje/url_47_100_6.txt b/eesanje/url_47_100_6.txt new file mode 100644 index 0000000000000000000000000000000000000000..6983d61003a496bf359879126366396ead451709 --- /dev/null +++ b/eesanje/url_47_100_6.txt @@ -0,0 +1,7 @@ +ಹೇಮಂತ್‌ ಸೊರೆನ್‌ ಮೇಲ್ಮನವಿ ಅರ್ಜಿ : ಮೇ.17ರೊಳಗೆ ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ +ನವದೆಹಲಿ, ಮೇ 13-ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಜಾರ್ಖಂಡ್‌ ಮುಕ್ತಿ ಮೋರ್ಚಾ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸಂಬಂಧ ಮೇ 17 ರೊಳಗೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಇಂದು ಕೋರಿದೆ. +ಆರಂಭದಲ್ಲಿ ಮೇ 20 ರಂದು ಪ್ರಕರಣವನ್ನು ಪಟ್ಟಿ ಮಾಡಿದ್ದ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್‌ ದತ್ತಾ ಅವರ ಪೀಠವು ಮೇ 17 ಕ್ಕೆ ದಿನಾಂಕವನ್ನು ಬದಲಾಯಿಸಬೇಕಾಗಿತ್ತು, ಹಿರಿಯ ವಕೀಲ ಕಪಿಲ್‌ ಸಿಬಲ್‌ ಆ ಹೊತ್ತಿಗೆ ಚುನಾವಣೆ ಮುಗಿಯುತ್ತದೆ ಮತ್ತು ದೀರ್ಘ ದಿನಾಂಕದ ವೇಳೆ ಅವರು ಪೂರ್ವಾಗ್ರಹಕ್ಕೆ ಒಳಗಾಗುತ್ತಾರೆ ಎಂದು ಹೇಳಿದರು. +ನಮ್ಮ ಪ್ರಕರಣ ಅರವಿಂದ್‌ ಕೇಜ್ರಿವಾಲ್‌ ಅವರ ಆದೇಶದ ವ್ಯಾಪ್ತಿಗೆ ಒಳಪಟ್ಟಿದ್ದು, ಚುನಾವಣಾ ಪ್ರಚಾರಕ್ಕಾಗಿ ನಮ್ಮ ಕಕ್ಷೀದಾರರಿಗೆ ಜಾಮೀನು ಬೇಕು ಎಂದು ಸಿಬಲ್‌ ಪೀಠಕ್ಕೆ ಮನವಿ ಮಾಡಿದರು. +ಈ ವಾರ ತುಂಬಾ ಕೆಲಸವಿದ್ದು, ಬಹಳಷ್ಟು ವಿಷಯಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೀಠ ಹೇಳಿದೆ.ಮೇ 20 ರಿಂದ ದಿನಾಂಕವನ್ನು ಬದಲಾಯಿಸಲು ಇಷ್ಟವಿಲ್ಲ ಎಂದು ಅದು ವ್ಯಕ್ತಪಡಿಸಿತು ಆದರೆ ಸಿಬಲ್‌ ಮತ್ತು ಹಿರಿಯ ವಕೀಲ ಅರುಣಾಭ್‌ ಚೌಧರಿ, ಸೊರೆನ್‌ ಪರವಾಗಿ ವಾದಿಸಿದ ನಂತರ, ದಿನಾಂಕವನ್ನು ಮೇ 17 ಕ್ಕೆ ಬದಲಾಯಿಸಲಾಯಿತು. +ನಾವು ವಿಷಯವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆಯೇ ಎಂದು ನಮಗೆ ತಿಳಿದಿಲ್ಲ ಆದರೆ ನಾವು ಅದನ್ನು ಮೇ 17 ಕ್ಕೆ ಮುಂದೂಡುತ್ತಿದ್ದೇವೆ ಎಂದು ಪೀಠ ಹೇಳಿದೆ.ಬಂಧನದ ವಿರುದ್ಧದ ತನ್ನ ಅರ್ಜಿಯನ್ನು ವಜಾಗೊಳಿಸಿದ ಜಾರ್ಖಂಡ್‌ ಹೈಕೋರ್ಟ್‌ನ ಮೇ 3 ರ ಆದೇಶವನ್ನು ಸೋರೆನ್‌ ತನ್ನ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಬಂಧನದ ವಿರುದ್ಧ ನ್ಯಾಯಾಲಯವು ತೀರ್ಪು ನೀಡುವವರೆಗೆ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಅವರು ಮಧ್ಯಂತರ ಜಾಮೀನು ಕೋರಿದ್ದರು. +ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಕೇಜ್ರಿವಾಲ್‌ಗೆ ಮೇ 10 ರಂದು ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್‌ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. \ No newline at end of file diff --git a/eesanje/url_47_100_7.txt b/eesanje/url_47_100_7.txt new file mode 100644 index 0000000000000000000000000000000000000000..fa6c85d61604b5f1d35cfbe63153e6776f39fd09 --- /dev/null +++ b/eesanje/url_47_100_7.txt @@ -0,0 +1,10 @@ +ಇಂಡಿಯಾ ಮೈತ್ರಿಕೂಟದ ಹೇಡಿಗಳು ಪಾಕ್ ಪರಮಾಣು ಶಕ್ತಿಗೆ ಹೆದರಿದ್ದಾರೆ : ಮೋದಿ ವಾಗ್ದಾಳಿ +ಮುಜಾಫರ್ಪುರ/ಹಾಜಿಪುರ, ಮೇ 13– ಪ್ರತಿಪಕ್ಷ ಇಂಡಿಯಾ ಮೈತ್ರಿಕೂಟದ ನಾಯಕರು ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ಹೇಡಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಳಿ ನಡೆಸಿದ್ದಾರೆ. ಬಿಹಾರದ ಮುಜಾಫರ್ಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಕ್‌ ಅಬ್ದುಲ್ಲಾ ಅವರ ಹೆಸರನ್ನು ಉಲ್ಲೇಖಿಸದೆ ಅವರ ಇತ್ತೀಚಿನ ಹೇಳಿಕೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಿ, ಇಂಡಿಯಾ ಮೈತ್ರಿಕೂಟವು ಪಾಕಿಸ್ತಾನಕ್ಕೆ ಹೆದರುವ ಮತ್ತು ಅದರ ಪರಮಾಣು ಶಕ್ತಿಯ ದುಃಸ್ವಪ್ನಗಳನ್ನು ಹೊಂದಿರುವ ನಾಯಕರನ್ನು ಹೊಂದಿರುವಂತೆ ತೋರುತ್ತಿದೆ ಎಂದು ವ್ಯಂಗ್ಯವಾಡಿದರು. +ಪಾಕಿಸ್ತಾನದಲ್ಲಿ ಅಣುಬಾಂಬ್‌ಗಳಿವೆ ಮತ್ತು ಅವರು ಬಳೆಗಳನ್ನು ತೊಟ್ಟಿಲ್ಲ ಎಂಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರ ಹೇಳಿಕೆ ಹಿನ್ನೆಲೆಯಲ್ಲಿ ಮೋದಿ ಅವರು ತಮ್ಮದೇ ಆದ ಮಾತಿನಲ್ಲಿ ತಿರುಗೇಟು ನೀಡಿದರು. +ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ದೇಶವನ್ನು ಧರಿಸುವಂತೆ ಮಾಡುತ್ತೇವೆ. ಅವರ ಬಳಿ ಆಹಾರಧಾನ್ಯಗಳಿಲ್ಲ ಎಂಬುದು ನನಗೆ ಗೊತ್ತಿತ್ತು. ಅವರ ಬಳಿ ಸಾಕಷ್ಟು ಬೆಳೆಗಳ ಪೂರೈಕೆಯೂ ಇಲ್ಲ ಎಂದು ಈಗ ನನಗೆ ತಿಳಿದು ಬಂದಿದೆ. ಆದರೆ, ಭಯೋತ್ಪಾದನೆಯ ಬಗ್ಗೆ ಪಾಕಿಸ್ತಾನಕ್ಕೆ ಕ್ಲೀನ್‌ ಚಿಟ್‌ ನೀಡುವ, ಸರ್ಜಿಕಲ್‌ ಸೆ್ಟ್ರೖಕ್‌ಗಳ ಬಗ್ಗೆ ಅನುಮಾನಗಳನ್ನು ಎತ್ತುವ ಹೇಡಿಗಳು ಮತ್ತು ಅಂಜುಬುರುಕವಾಗಿರುವ ಜನರಿಂದ ತುಂಬಿರುವ ವಿರೋಧವನ್ನು ನಾವು ಎಚ್ಚರಿಕೆಯಿಂದ ನೋಡಬೇಕು … ಅವರ ಎಡ ಮಿತ್ರರು ನಮ್ಮ ಪರಮಾಣು ಶಸಾ್ತ್ರಗಾರವನ್ನು ಕಿತ್ತೊಗೆಯಬೇಕೆಂದು ಬಯಸುತ್ತಾರೆ ಅವರು ಹೇಳಿದರು. +ಇದಕ್ಕೂ ಮುನ್ನ ಹಾಜಿಪುರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ರಾಜಕಾರಣಿಗಳ ವಿರುದ್ಧದ ದಾಳಿಯಲ್ಲಿ ವಶಪಡಿಸಿಕೊಂಡ ಹಣ ದೇಶದ ಬಡವರಿಗೆ ಸೇರಿದ್ದು ಎಂದು ಸಮರ್ಥಿಸಿಕೊಂಡರು. +ಇಡಿ ಯಂತಹ ಸಂಸ್ಥೆಗಳ ಕ್ರಮದ ವಿರುದ್ಧ ಅವರು ಏಕೆ ಗಟ್ಟಿಯಾಗಿ ಅಳುತ್ತಿದ್ದಾರೆ ಎಂಬುದನ್ನು ನಾನು ನಿಮಗೆ ಹೇಳುತ್ತೇನೆ. ಹಿಂದಿನ ಕಾಂಗ್ರೆಸ್‌ ಆಡಳಿತದಲ್ಲಿ ಶಾಲಾ ಬ್ಯಾಗ್‌ನಲ್ಲಿ ಇಡಬಹುದಾದ 35 ಲಕ್ಷ ರೂಪಾಯಿಗಳನ್ನು ಮಾತ್ರ ಇಡಿ ವಶಪಡಿಸಿಕೊಂಡಿತ್ತು. ನಾವು ಅಧಿಕಾರ ವಹಿಸಿಕೊಂಡಾಗಿನಿಂದ, ಈ ಸಂಸ್ಥೆಯವರು 2,200 ಕೋಟಿ ರೂ.ಗಳನ್ನು ವಸೂಲಿ ಮಾಡಿದೆ, ಇದಕ್ಕೆ 70 ಸಣ್ಣ ಟ್ರಕ್‌ಗಳನ್ನು ಸಾಗಿಸಲು ಅಗತ್ಯವಿರುತ್ತದೆ ಎಂದು ಪ್ರಧಾನಿ ಮೋದಿ ಕೆಂಡಕಾರಿದರು. +ತಮ್ಮ ಸಂತತಿಯನ್ನು ಉತ್ತೇಜಿಸುವ ಬಗ್ಗೆ ಕಾಳಜಿ ವಹಿಸುವ ವಿರೋಧಿ ಗಳಂತಲ್ಲದೆ, ನನಗೆ ವಾರಿಸ್‌ (ಉತ್ತರಾಧಿ ಕಾರಿ). ಸಾಮಾನ್ಯ ಜನರೇ ನನ್ನ ವಾರಿಗಳು.ಅಧಿ ಕಾರದಲ್ಲಿದ್ದಾಗ ಸುಲಿಗೆ ಮತ್ತು ಅಪಹರಣವನ್ನು ಪ್ರವರ್ಧಮಾನಕ್ಕೆ ತರಲು ಅವಕಾಶ ಮಾಡಿಕೊಟ್ಟ ಕಾಂಗ್ರೆಸ್‌ ಮತ್ತು ಆರ್ಜೆಡಿಯಂತಹ ಪಕ್ಷಗಳು ಮುಸ್ಲಿಮರಿಗೆ ತಮ್ಮ ವೋಟ್‌ ಬ್ಯಾಂಕ್‌ ರಾಜಕೀಯವನ್ನು ಮುಂದುವರಿಸಲು ಮೀಸಲು ನೀಡುತ್ತವೆ ಆದರೆ ನಾನು ಎಲ್ಲಿಯವರೆಗೆ ನಾನು ಜೀವಂತವಾಗಿದ್ದೇನೆ, ಇದನ್ನು ಆಗಲು ನಾನು ಬಿಡುವುದಿಲ್ಲ ಎಂದು ತಮ್ಮ ವಿರೋಧಿ ಗಳಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದರು. +ಬಿಹಾರದಲ್ಲಿ ಆರ್‌ಜೆಡಿ ಆಳ್ವಿಕೆಯಲ್ಲಿ ಅಪಹರಣ ಮತ್ತು ಸುಲಿಗೆ ಪ್ರವರ್ಧಮಾನಕ್ಕೆ ಬಂದಿತ್ತು. ಸಾಮಾಜಿಕ ನ್ಯಾಯಕ್ಕಾಗಿ ಎನ್‌ಡಿಎ ಹೋರಾಡುತ್ತದೆ, ಒಬಿಸಿ/ಎಸ್ಸಿ/ಎಸ್ಟಿ ವರ್ಗಗಳಿಂದ ಶೇಕಡಾ 60 ರಷ್ಟು ಕೇಂದ್ರ ಸಚಿವರು ಎಂದು ಅವರು ಪ್ರತಿಪಾದಿಸಿದರು.ವಿರೋಧ ಪಕ್ಷಗಳು ಅಯೋಧ್ಯೆಯಲ್ಲಿ ರಾಮಮಂದಿರದ ಬಗ್ಗೆ ಅಸಹ್ಯಕರ ಹೇಳಿಕೆಗಳನ್ನು ನೀಡುವ ಮೂಲಕ ಜನರ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸುತ್ತಿವೆ ಎಂದು ಪ್ರಧಾನಿ ಆರೋಪಿಸಿದ್ದಾರೆ. +ಬಲಿಷ್ಠ ಸರ್ಕಾರ ರಚನೆಗೆ ಅನುವು ಮಾಡಿಕೊಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎನ್‌ಡಿಎಗೆ ಮತ ನೀಡಬೇಕು. ತಮ್ಮ ಸರ್ಕಾರದ ಅಭಿವೃದ್ಧಿಯ ದಾಖಲೆಯನ್ನು ಮುಟ್ಟಿದರು, ತ್ವರಿತ ದರದಲ್ಲಿ ಹೆದ್ದಾರಿಗಳ ನಿರ್ಮಾಣ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಬದ್ಧತೆಯನ್ನು ಒತ್ತಿಹೇಳಿದರು. +ಆದರೆ ಮಹಿಳಾ ಮೀಸಲಾತಿಯಂತಹ ಕ್ರಮಗಳಿಗೆ ಪ್ರತಿಪಕ್ಷಗಳು ಅಡೆತಡೆಗಳನ್ನು ಹಾಕಲು ಪ್ರಯತ್ನಿಸುತ್ತಿವೆ. ಮಾಜಿ ಸಚಿವ ದಿ. ರಾಮ್‌ ವಿಲಾಸ್‌ ಪಾಸ್ವಾನ್‌, ಅವರ ಮಗ ಚಿರಾಗ್‌ ಹಾಜಿಪುರದಿಂದ ಸ್ಪರ್ಧಿಸುತ್ತಿರುವುದನ್ನು ನೆನಪಿಸಿಕೊಂಡ ಮೋದಿ, ಯುವ ನಾಯಕನಿಗೆ ಮತ ನೀಡಿ ಮತ್ತು ಅವರ ತಂದೆಯ ದಾಖಲೆ ಮುರಿಯುವ ಗೆಲುವನ್ನು ಸೋಲಿಸುವ ಅಂತರದಿಂದ ಗೆಲ್ಲುವಂತೆ ಜನರಿಗೆ ಕರೆ ನೀಡಿದರು. \ No newline at end of file diff --git a/eesanje/url_47_100_8.txt b/eesanje/url_47_100_8.txt new file mode 100644 index 0000000000000000000000000000000000000000..a0c1fc61f68d85e492d5afccc0f8bd5f5134d2eb --- /dev/null +++ b/eesanje/url_47_100_8.txt @@ -0,0 +1,9 @@ +48 ಗಂಟೆಯೊಳಗೆ ಮತದಾನದ ಅಂಕಿಅಂಶ ಅಪ್ಲೋಡ್‌ ಮಾಡುವಂತೆ ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ +ನವದೆಹಲಿ,ಮೇ 13-ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿ ಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್ಲೋಡ್‌ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಸಲ್ಲಿಸಿರುವ ಮನವಿಯನ್ನು ಮೇ 17ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಇಂದು ಸಮ್ಮತಿಸಿದೆ. +ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾಮ್ರ್ಸೌ(ಎಡಿಆರ್‌) ಪರವಾಗಿ ವಕೀಲ ಪ್ರಶಾಂತ್‌ ಭೂಷಣ್‌ ಅವರು ಅರ್ಜಿಯನ್ನು ತುರ್ತು ಪಟ್ಟಿಗೆ ಕೋರಿದ ನಂತರ ಶುಕ್ರವಾರ ಈ ವಿಷಯವನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರಿದ್ದ ದ್ವಿಸದಸ್ಯ ಪೀಠ ತಿಳಿಸಿದೆ. +ಕಳೆದ ವಾರ ಎಡಿಆರ್‌ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದು, ಎಲ್ಲಾ ಮತಗಟ್ಟೆಗಳ ಫಾರ್ಮ್‌ 17 ಫಾರಂ ಅನ್ನು ಮತದಾನದ ನಂತರ ತಕ್ಷಣವೇ ಅಪ್ಲೋಡ್‌ ಮಾಡುವಂತೆ ಚುನಾವಣಾ ಸಮಿತಿಗೆ ನಿರ್ದೇಶನಗಳನ್ನು ಕೋರಿ ಅರ್ಜಿ ಸಲ್ಲಿಸಿದೆ. 2024 ರ ಲೋಕಸಭಾ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಫಾರ್ಮ್‌ 17ಅ ಭಾಗ-1 ರಲ್ಲಿ ದಾಖಲಾದ ಮತಗಳ ಸಂಖ್ಯೆಯ ಸಂಪೂರ್ಣ ಅಂಕಿಅಂಶಗಳಲ್ಲಿ ಮತಗಟ್ಟೆವಾರು ಅಂಕಿಅಂಶಗಳನ್ನು ಒದಗಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಿ ಮತ್ತು ಕ್ಷೇತ್ರವಾರು ಪಟ್ಟಿ ನಡೆಯುತ್ತಿರುವ 2024 ರ ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಸಂಖ್ಯೆಯಲ್ಲಿ ಮತದಾರರ ಮತದಾನದ ಅಂಕಿಅಂಶಗಳು ಎಂದು ಎನ್‌ಜಿಒ ಹೇಳಿದೆ. +ಚುನಾವಣಾ ಅಕ್ರಮಗಳಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಈ ಮನವಿ ಸಲ್ಲಿಸಲಾಗಿದೆ ಎಂದು ಅದು ಹೇಳಿದೆ. ಏಪ್ರಿಲ್‌ 30 ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ 2024 ರ ಲೋಕಸಭಾ ಚುನಾವಣೆಯ ಮೊದಲ ಎರಡು ಹಂತಗಳ ಮತದಾರರ ಮತದಾನದ ಡೇಟಾವನ್ನು ಏಪ್ರಿಲ್‌ 19 ರಂದು ನಡೆದ ಮೊದಲ ಹಂತದ ಮತದಾನದ 11 ದಿನಗಳ ನಂತರ ಮತ್ತು ಏಪ್ರಿಲ್‌ನಲ್ಲಿ ನಡೆದ ಎರಡನೇ ಹಂತದ ಮತದಾನದ ನಾಲ್ಕು ದಿನಗಳ ನಂತರ ಪ್ರಕಟಿಸಲಾಗಿದೆ. +ಆಯೋಗ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಏಪ್ರಿಲ್‌ 30, 2024 ರಂದು ಪ್ರಕಟಿಸಿದ ಮಾಹಿತಿಯು ಮತದಾನದ ದಿನದಂದು ಸಂಜೆ 7 ಗಂಟೆಗೆ ಘೋಷಿಸಿದ ಆರಂಭಿಕ ಶೇಕಡಾವಾರುಗಳಿಗೆ ಹೋಲಿಸಿದರೆ (ಸುಮಾರು 5-6% ರಷ್ಟು) ತೀವ್ರ ಹೆಚ್ಚಳವನ್ನು ತೋರಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. +ಏಪ್ರಿಲ್‌ 30, 2024 ರ ಚುನಾವಣಾ ಸಮಿತಿಯ ಪತ್ರಿಕಾ ಟಿಪ್ಪಣಿಯಲ್ಲಿ ಅಸಾಧಾರಣವಾಗಿ ಶೇಕಡಾ ಐದಕ್ಕಿಂತ ಹೆಚ್ಚಿನ ಪರಿಷ್ಕರಣೆಯೊಂದಿಗೆ ಅಂತಿಮ ಮತದಾರರ ಮತದಾನದ ದತ್ತಾಂಶ ಬಿಡುಗಡೆಯಲ್ಲಿ ಅತಿಯಾದ ವಿಳಂಬವು ಕಳವಳ ಮತ್ತು ಸಾರ್ವಜನಿಕ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಅರ್ಜಿ ಹೇಳಿದೆ. +ಮತದಾನದ ಸಂಪೂರ್ಣ ಸಂಖ್ಯೆಯ ಮತಗಳನ್ನು ಬಿಡುಗಡೆ ಮಾಡದಿರುವುದು, ಮತದಾನದ ಮಾಹಿತಿಯ ಬಿಡುಗಡೆಯಲ್ಲಿ ಅಸಮಂಜಸ ವಿಳಂಬದೊಂದಿಗೆ, ಏಪ್ರಿಲ್‌ 30 ರಂದು ಬಿಡುಗಡೆಯಾದ ಆರಂಭಿಕ ಡೇಟಾ ಮತ್ತು ಡೇಟಾದ ನಡುವಿನ ತೀವ್ರ ಹೆಚ್ಚಳದ ಬಗ್ಗೆ ಮತದಾರರ ಮನಸ್ಸಿನಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಆತಂಕಗಳನ್ನು ಪರಿಹರಿಸಬೇಕು ಮತ್ತು ವಿಶ್ರಾಂತಿ ಪಡೆಯಬೇಕು. +ಮತದಾರರ ವಿಶ್ವಾಸವನ್ನು ಎತ್ತಿಹಿಡಿಯಲು ಎಲ್ಲಾ ಮತದಾನದ ಫಾರ್ಮ್‌ 17 ಅನ್ನು ಸ್ಕ್ಯಾನ್‌ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸಲು ನಿರ್ದೇಶಿಸುವುದು ಅವಶ್ಯಕ. ಮತದಾನ ಮುಕ್ತಾಯವಾದ 48 ಗಂಟೆಗಳ ಒಳಗೆ ಮತದಾನದ ಮತಗಳ ದೃಢೀಕೃತ ಅಂಕಿಅಂಶಗಳನ್ನು ಹೊಂದಿರುವ ಕೇಂದ್ರಗಳು ಎಂದು ಎಡಿಆರ್‌ ಅರ್ಜಿಯಲ್ಲಿ ಹೇಳಿದೆ. \ No newline at end of file diff --git a/eesanje/url_47_100_9.txt b/eesanje/url_47_100_9.txt new file mode 100644 index 0000000000000000000000000000000000000000..e14da3b99d4f71baab5f8d85c764ac414427b487 --- /dev/null +++ b/eesanje/url_47_100_9.txt @@ -0,0 +1,8 @@ +ಆಮ್‌ ಆದ್ಮಿ ಪಕ್ಷದ ನಾಯಕಿ ಮೇಲೆ ಕೇಜ್ರಿವಾಲ್‌ ಆಪ್ತ ಸಹಾಯಕನಿಂದ ಹಲ್ಲೆ ಆರೋಪ +ನವದೆಹಲಿ,ಮೇ 13-ಆಮ್‌ ಆದ್ಮಿ ಪಕ್ಷದ ನಾಯಕಿ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್‌ ಅವರು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಂದು ಆರೋಪಿಸಿದ್ದಾರೆ. +ಮೂಲಗಳ ಪ್ರಕಾರ, ಮುಖ್ಯಮಂತ್ರಿ ನಿವಾಸದಿಂದ ಬೆಳಗ್ಗೆ 10 ಗಂಟೆಗೆ ಮಲಿವಾಲ್‌ ಅವರಿಗೆ ಪಿಸಿಆರ್‌ ಕರೆ ಮಾಡಲಾಗಿತ್ತು. ಕರೆಯನ್ನು ಅನುಸರಿಸಿ, ದೆಹಲಿ ಪೊಲೀಸರು ಸಿವಿಲ್‌ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸವನ್ನು ತಲುಪಿದರು. ಈ ಬಗ್ಗೆ ಪೊಲೀಸರು ಇನ್ನೂ ಅಧಿಕೃತ ದೂರು ಸ್ವೀಕರಿಸಿಲ್ಲ ಎನ್ನಲಾಗಿದೆ. +ಅಕ್ರಮ ನೇಮಕಾತಿಯನ್ನು ಉಲ್ಲೇಖಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿ ಸ್ಥಾನದಿಂದ ದೆಹಲಿ ವಿಜಿಲೆನ್‌್ಸ ಇಲಾಖೆ ಅವರನ್ನು ವಜಾಗೊಳಿಸಿತ್ತು. +2007ರಲ್ಲಿ ಸಾರ್ವಜನಿಕ ನೌಕರನೊಬ್ಬನ ಕರ್ತವ್ಯಕ್ಕೆ ಅಡ್ಡಿಪಡಿಸಲು ಕ್ರಿಮಿನಲ್‌ ಬಲವನ್ನು ಬಳಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್‌ ಕುಮಾರ್‌ ಅವರನ್ನು ವಜಾಗೊಳಿಸಲಾಗಿತ್ತು. ಏತನ್ಮಧ್ಯೆ, ಫೆಬ್ರವರಿಯಲ್ಲಿ, ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಿಂದ ಬಿಭವ್‌ಗೆ ಸಮನ್‌್ಸ ನೀಡಲಾಗಿತ್ತು. +ಬಿಜೆಪಿ ತಿರುಗೇಟು :ಮಲಿವಾಲ್‌ ಅವರ ಮೇಲಿನ ಹಲ್ಲೆ ಆರೋಪದ ಕುರಿತು ಎಎಪಿ ವಿರುದ್ಧ ಹರಿಹಾಯ್ದ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ, ಪಕ್ಷದ ವರಿಷ್ಠ ಅರವಿಂದ್‌ ಕೇಜ್ರಿವಾಲ್‌ ಬಂಧನದ ಬಗ್ಗೆ ಮಲಿವಾಲ್‌ ಮೌನ ವಹಿಸಿದ್ದಾರೆ ಮತ್ತು ಆಗ ಭಾರತದಲ್ಲಿ ಇರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. +ದೆಹಲಿ ಸಿಎಂ ಪಿಎ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ಆರ್‌ಎಸ್‌ ಸಂಸದ ಮತ್ತು ಮಾಜಿ ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್‌ ಆರೋಪಿಸಿದ್ದಾರೆ. ದೆಹಲಿ ಸಿಎಂ ಮನೆಯಿಂದ ಕರೆ ಮಾಡಲಾಗಿದೆ. ನೆನಪಿರಲಿ, ಕೇಜ್ರಿವಾಲ್‌ ಬಂಧನದ ಬಗ್ಗೆ ಸ್ವಾತಿ ಮಲಿವಾಲ್‌ ರೇಡಿಯೊ ಮೌನ ವಹಿಸಿದ್ದರು. ಆ ಸಮಯದಲ್ಲಿ ಅವಳು ಭಾರತದಲ್ಲಿ ಇರಲಿಲ್ಲ ಮತ್ತು ಬಹಳ ಸಮಯದವರೆಗೆ ಹಿಂತಿರುಗಲಿಲ್ಲ ಎಂದು ಮಾಲ್ವಿಯಾ ಎಕ್‌್ಸನಲ್ಲಿ ಬರೆದಿದ್ದಾರೆ. +ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಅವರು ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಹೇಳಿದ್ದಾರೆ. ಕೇಜ್ರಿವಾಲ್‌ ಅವರ ಪಿಎ ಬಿಭವ್‌ ಸ್ವಾತಿ ಮಲಿವಾಲ್‌ ಅವರನ್ನು ಥಳಿಸಿದ್ದೀರಾ? ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟೀಕರಣ ನೀಡುವುದೇ? ರಾಜ್ಯಸಭಾ ಮಹಿಳಾ ಸಂಸದೆಯೊಬ್ಬರನ್ನು ಮುಖ್ಯಮಂತ್ರಿ ಮನೆಯಲ್ಲಿ ಥಳಿಸಿರುವ ಸುದ್ದಿ ಸುಳ್ಳು ಎಂದು ದೇವರು ದಯಪಾಲಿಸಲಿ ಎಂದರು. \ No newline at end of file diff --git a/eesanje/url_47_101_1.txt b/eesanje/url_47_101_1.txt new file mode 100644 index 0000000000000000000000000000000000000000..16749e9fede33e99d4ee8d4ca2fd77552df1c758 --- /dev/null +++ b/eesanje/url_47_101_1.txt @@ -0,0 +1,10 @@ +ಕೇಜ್ರಿವಾಲ್‌ ‘ವಿದ್ಯುತ್‌ ಬಿಲ್‌ ಮನ್ನಾ’ ಭರವಸೆಗೆ ಅಮಿತ್‌ ಶಾ ವ್ಯಂಗ್ಯ +ನವದೆಹಲಿ,ಮೇ.13-ಆಮ್‌ ಆದಿ ಪಕ್ಷದ (ಎಎಪಿ) ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರು ಘೋಷಿಸಿದ 10 ಭರವಸೆಗಳ ಮೇಲೆ ವಾಗ್ದಾಳಿ ನಡೆಸಿರುವ ಕೇಂದ್ರ ಗಹ ಸಚಿವ ಅಮಿತ್‌ ಶಾ ಅವರು 22 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಪಕ್ಷವು ದೇಶಾದ್ಯಂತ ವಿದ್ಯುತ್‌ ಬಿಲ್‌ಗಳನ್ನು ಮನ್ನಾ ಮಾಡುವ ಭರವಸೆ ಹೇಗೆ ನೀಡಲು ಸಾಧ್ಯ ಎಂದು ವ್ಯಂಗ್ಯವಾಡಿದ್ದಾರೆ. +ಎಎಪಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ? 22. ಸರ್ಕಾರ ರಚಿಸಲು ನಿಮಗೆ 270 ಕ್ಕಿಂತ ಹೆಚ್ಚು ಸಂಸದರು ಬೇಕು. ನೀವು ಏನು ಖಾತರಿ ನೀಡುತ್ತಿದ್ದೀರಿ? ನೀವು 22 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದೀರಿ ಮತ್ತು ನೀವು ದೇಶಾದ್ಯಂತ ವಿದ್ಯುತ್‌ ಬಿಲ್‌ಗಳನ್ನು ಮನ್ನಾ ಮಾಡುವುದಾಗಿ ಹೇಳುತ್ತಿದ್ದೀರಿ ಇದು ಹೇಗೆ ಸಾಧ್ಯ ಎಂದು ಶಾ ಪ್ರಶ್ನಿಸಿದ್ದಾರೆ. +ಎಎಪಿ ಘೋಷಿಸಿದ 10 ಖಾತರಿಗಳಲ್ಲಿ ದಿನದ 24 ಗಂಟೆ ವಿದ್ಯುತ್‌ ಸರಬರಾಜು, ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಮತ್ತು ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳ ಸಷ್ಟಿ ಸೇರಿವೆ. ಅಗ್ನಿವೀರ್‌ ಯೋಜನೆಯನ್ನು ಕೊನೆಗೊಳಿಸುವುದಾಗಿ ಮತ್ತು ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ರೈತರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಎಎಪಿ ಭರವಸೆ ನೀಡಿದೆ. +ಚೀನಾ ನಮ ಭೂಮಿಯನ್ನು ಆಕ್ರಮಿಸಿಕೊಂಡಿದೆ ಮತ್ತು ನಾವು ಅದನ್ನು ಅವರ ಆಕ್ರಮಣದಿಂದ ಮುಕ್ತಗೊಳಿಸುತ್ತೇವೆ ಎಂದು ಕೇಜ್ರಿವಾಲ್‌ ನಿನ್ನೆ ಹೇಳಿದ್ದರು ಹಾಗೂ ದೆಹಲಿಗೆ ಸಂಪೂರ್ಣ ರಾಜ್ಯತ್ವ ತಂದು ಕೊಡುವ ಗ್ಯಾರಂಟಿ ನೀಡಿದ್ದರು. ಎಎಪಿ ನಾಯಕ ಕಳೆದ ಚುನಾವಣೆಯಲ್ಲೂ ಇಂತಹ ಸಾಹಸಗಳನ್ನು ಮಾಡಿದ್ದರಿ ಆದರೆ ಅವರು ಕೇವಲ ಒಂದು ಸ್ಥಾನವನ್ನು ಗೆದ್ದಿದ್ದಾರೆ ಎಂದು ಶಾ ಹೇಳಿದರು. +ಕೇಂದ್ರೀಯ ಸಂಸ್ಥೆಗಳನ್ನು ಆಡಳಿತಾರೂಢ ಬಿಜೆಪಿ ದುರುಪಯೋಗಪಡಿಸಿಕೊಂಡಿದೆ ಎಂಬ ಪ್ರತಿಪಕ್ಷಗಳ ಆರೋಪದ ಕುರಿತು ಕೇಳಿದ ಪ್ರಶ್ನೆಗೆ, ಕೇಜ್ರಿವಾಲ್‌ ಅವರು ಇಂತಹ ಆರೋಪಗಳನ್ನು ಮಾಡುತ್ತಿದ್ದರೆ, ಅವರು ಒಂಬತ್ತು ಬಾರಿ ಸಮನ್‌್ಸ ಅನ್ನು ಧಿಕ್ಕರಿಸಿದ್ದಾರೆ. ಬಂಧನದ ಮತ್ತು ನಂತರ ಅವರನ್ನು ಚುನಾವಣಾ ಸಮಯದಲ್ಲಿ ನನ್ನನ್ನು ಬಂಧಿಸಲಾಗಿದೆ ಎಂದು ನಾಟಕವಾಡುತ್ತಿದ್ದಾರೆ ಎಂದು ಶಾ ತಿಳಿಸಿದರು. +ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಲಾಗಿಲ್ಲ, ಆದರೆ ಕೇವಲ ಮಧ್ಯಂತರ ಪರಿಹಾರವಾಗಿದೆ ಎಂದು ಶಾ ಹೇಳಿದರು. ತಮ ಬಂಧನ ತಪ್ಪು ಎಂಬುದು ಅವರ ಮನವಿಯಾಗಿತ್ತು. ಸುಪ್ರೀಂ ಕೋರ್ಟ್‌ ಅದನ್ನು ಸ್ವೀಕರಿಸಲಿಲ್ಲ. ನಂತರ ಅವರು ಜಾಮೀನು ಕೋರಿದರು. ನ್ಯಾಯಾಲಯ ಅದನ್ನೂ ಸ್ವೀಕರಿಸಲಿಲ್ಲ. +ನಂತರ ಅವರು ಪ್ರಚಾರಕ್ಕೆ ಅನುಮತಿ ಕೇಳಿದರು. ಸುಪ್ರೀಂ ಕೋರ್ಟ್‌ ಕೆಲವು ಷರತ್ತುಗಳನ್ನು ವಿಧಿಸಿ ಅವರಿಗೆ ರಜೆ ನೀಡಿದೆ ಜೂನ್‌ 1 ಅಥವಾ ಜೂನ್‌ 2 ರಂದು ತಿಹಾರ್‌ (ಜೈಲು) ಗೆ ಹಿಂತಿರುಗಬೇಕು. ಇದು ಅವರ ಪರವಾದ ತೀರ್ಪು ಎಂದು ಹೇಗೆ ಭಾವಿಸುವುದು ಎಂದು ಶಾ ಕೇಳಿದರು. +ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್‌‍ ಮೈತ್ರಿ ಬಿಜೆಪಿಯ ಚುನಾವಣಾ ಭವಿಷ್ಯಕ್ಕೆ ಹೊಡೆತ ನೀಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಗಹ ಸಚಿವರು, ಕಳೆದ ಬಾರಿ ಬಿಜೆಪಿ ಪ್ರತಿ ಸ್ಥಾನದಲ್ಲೂ ಶೇ.50 ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದೆ, ಆದ್ದರಿಂದ ಎಷ್ಟು ಜನರು ಒಟ್ಟಿಗೆ ಸೇರುತ್ತಿದ್ದಾರೆ ಎಂಬುದು ಮುಖ್ಯವಲ್ಲ ಎಂದಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ ಅವರು 75 ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಮುಂದಿನ ವರ್ಷ ನಿವತ್ತಿ ಆಗಲಿದ್ದಾರೆ ಎಂಬ ದೆಹಲಿ ಮುಖ್ಯಮಂತ್ರಿಯವರ ಹೇಳಿಕೆಗೆ ಶಾ, ಅವರನ್ನು ಅಷ್ಟು ಗಂಭೀರವಾಗಿ ಪರಿಗಣಿಸಬೇಡಿ, ಮೋದಿಜಿ ರಾಜಕೀಯದಲ್ಲಿ ಉಳಿಯಲು ಅವರು ಬಯಸುವುದಿಲ್ಲ. ಆದರೆ ನಾನು ಹೇಳಲು ಬಯಸುತ್ತೇನೆ. ನೀವು 2029 ರವರೆಗೆ ಪ್ರಧಾನಿಯಾಗಿರುತ್ತೀರಿ ಮತ್ತು ನಂತರವೂ ಅವರು ಬಿಜೆಪಿಯ ಚುನಾವಣಾ ಪ್ರಚಾರವನ್ನು ಮುನ್ನಡೆಸುತ್ತಾರೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_47_101_10.txt b/eesanje/url_47_101_10.txt new file mode 100644 index 0000000000000000000000000000000000000000..8dccf1775da8a2ea2f09032a20d53b19f6029208 --- /dev/null +++ b/eesanje/url_47_101_10.txt @@ -0,0 +1,7 @@ +ಪಿಓಕೆ ಅಲ್ಲೋಲ ಕಲ್ಲೊಲ +ಶ್ರೀನಗರ,ಮೇ.12- ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ನಾಗರಿಕ ಅಶಾಂತಿಗೆ ತುತ್ತಾಗಿದ್ದು, ಆಕ್ರಮಿತ ಪ್ರದೇಶದಾದ್ಯಂತ ಹರಡಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ಭಾರಿ ದಬ್ಬಾಳಿಕೆ ನಡೆಸಿದ್ದಾರೆ.ನಿನ್ನೆ ನಡೆದ ಹೊಸ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು 90 ಮಂದಿ ಗಾಯಗೊಂಡಿದ್ದಾರೆ. +ಹಣದುಬ್ಬರ, ಹೆಚ್ಚಿನ ತೆರಿಗೆ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರಾರಂಭವಾದ ಪ್ರತಿಭಟನೆಗಳು ಪಿಒಕೆಯಾದ್ಯಂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಚಳುವಳಿಯಾಗಿ ಮಾರ್ಪಟ್ಟಿವೆ. ಪ್ರತಿಭಟನಾಕಾರರು ಆಜಾದಿ (ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತಿದ್ದಾರೆ. ಅವರು ಮುಜಪರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳೊಂದಿಗೆ ಘರ್ಷಣೆ ನಡೆಸಿದರು. +ಪ್ರತಿಭಟನೆಯ ನೇತೃತ್ವವನ್ನು ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿಯು ನಡೆಸುತ್ತಿದೆ, ವ್ಯಾಪಾರಿಗಳು ಮುಂಚೂಣಿಯಲ್ಲಿದ್ದಾರೆ. ಮುಷ್ಕರಕ್ಕೆ ಕರೆ ನೀಡಿದ ನಂತರ ಹತ್ತಾರು ನಾಯಕರು ಮತ್ತು ಕ್ರಿಯಾ ಸಮಿತಿಯ ಸದಸ್ಯರನ್ನು ಬಂಧಿಸಲಾಗಿದೆ. +ದಡ್ಯಾಲ್‍ನಲ್ಲಿ ನಮ್ಮ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ಪೊಲೀಸ್ ದೌರ್ಜನ್ಯದ ವಿರುದ್ಧ ಪಿಒಕೆ ಮತ್ತು ನಿರ್ದಿಷ್ಟವಾಗಿ ಮುಜಾಫರಾಬಾದ್‍ನಲ್ಲಿ ಸಂಪೂರ್ಣ ಶಟರ್‍ಡೌನ್ ಮತ್ತು ವೀಲ-ಜಾಮ್ ಮುಷ್ಕರವನ್ನು ಆಚರಿಸಲಾಗುವುದು ಎಂದು ಮುಜಾಫರಾಬಾದ್ ವರ್ತಕರ ಸಂಘದ ಅಧ್ಯಕ್ಷ ಸೌಕತ್ ನವಾಜ್ ಮಿರ್ ಹೇಳಿದ್ದಾರೆ. +ಪಾಕಿಸ್ತಾನದ ಸ್ಥಾಪನೆಯಿಂದ ಸ್ವಾತಂತ್ರ್ಯವನ್ನು ಕೋರುವ ಸ್ಥಳೀಯರ ವೀಡಿಯೊಗಳು ವೈರಲ್ ಆಗುತ್ತಿದ್ದಂತೆ ಇಂದು ಎಲ್ಲರೂ ಹೊರಗೆ ಬನ್ನಿ ಮತ್ತು ನಿಮ್ಮ ಹಕ್ಕುಗಳಿಗಾಗಿ ನಿಮ್ಮ ಧ್ವನಿಯನ್ನು ಎತ್ತುವಂತೆ ನಾನು ಕರೆ ನೀಡುತ್ತೇನೆ ಎಂದು ಅವರು ಹೇಳಿದರು. ವಿದ್ಯುತ್ ಬಿಲ್‍ಗಳ ಮೇಲೆ ತೆರಿಗೆ ವಿಧಿಸುವುದನ್ನು ನಾವು ತಿರಸ್ಕರಿಸುತ್ತೇವೆ. ಬದಲಿಗೆ, ಈ ಪ್ರದೇಶದ ಜಲವಿದ್ಯುತ್ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಗ್ರಾಹಕರಿಗೆ ವಿದ್ಯುತ್ ನೀಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಶೌಕತ್ ನವಾಜ್ ಮಿರ್ ಹೇಳಿದರು. +ಮೇ 5 ರಂದು, ಪಿಒಕೆ ಯಾವಾಗಲೂ ಭಾರತದ ಭಾಗವಾಗಿದೆ ಎಂದು ಒತ್ತಿಹೇಳುತ್ತಾ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು, ಸ್ವಾತಂತ್ರ್ಯದ ನಂತರ ಪಾಕಿಸ್ತಾನವು ಈ ಪ್ರದೇಶವನ್ನು ಖಾಲಿ ಮಾಡುವುದನ್ನು ಹಿಂದಿನ ಸರ್ಕಾರಗಳು ಖಚಿತಪಡಿಸಿಕೊಳ್ಳದ ಕಾರಣ ವ್ಯವಹಾರಗಳ ಅತ್ಯಂತ ವಿಷಾದಕರ ಸ್ಥಿತಿ ಮುಂದುವರೆದಿದೆ ಎಂದು ಹೇಳಿದ್ದರು. \ No newline at end of file diff --git a/eesanje/url_47_101_11.txt b/eesanje/url_47_101_11.txt new file mode 100644 index 0000000000000000000000000000000000000000..f8c60ee44aae9dedb0c9c022aa2e787b7df08b70 --- /dev/null +++ b/eesanje/url_47_101_11.txt @@ -0,0 +1,8 @@ +ನಾಳೆ ಆಂಧ್ರ ವಿಧಾನಸಬೆ, ಲೋಕಸಭೆಗಳಿಗೆ ಚುನಾವಣೆ +ಅಮರಾವತಿ, ಮೇ 12 (ಪಿಟಿಐ) ನಾಳೆ ಆಂಧ್ರ ಪ್ರದೇಶ ವಿಧಾನಸಭೆ ಮತ್ತು ಲೋಕಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯುತ್ತಿದೆ. 175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿರುವುದು ಈ ಬಾರಿಯ ವಿಶೇಷವಾಗಿದೆ. +ವೈಎಸ್‍ಆರ್‍ಸಿಪಿ ಪಕ್ಷದ ಅಧ್ಯಕ್ಷ ಜಗನ್ (ಪುಲಿವೆಂದುಲ), ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು (ಕುಪ್ಪಂ) ಮತ್ತು ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ (ಪಿಠಾಪುರಂ) ಮತ್ತಿತರ ಗಣ್ಯರು ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಸಿದ್ದರಾಗಿದ್ದಾರೆ. ಎಪಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಜಗನ್ ಅವರ ಸಹೋದರಿ ವೈಎಸ್ ಶರ್ಮಿಳಾ (ಕಡಪ) ಮತ್ತು ಬಿಜೆಪಿ ರಾಜ್ಯ ಮುಖ್ಯಸ್ಥೆ ಪುರಂದೇಶ್ವರಿ (ರಾಜಮಹೇಂದ್ರವರಂ) ಇತರರು ಲೋಕಸಭೆ ಚುನಾವಣೆ ಕಣದಲ್ಲಿದ್ದಾರೆ. +ವೈಎಸ್‍ಆರ್‍ಸಿಪಿಯು ರಾಜ್ಯದ ಎಲ್ಲಾ 175 ವಿಧಾನಸಭಾ ಸ್ಥಾನಗಳು ಮತ್ತು 25 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಎನ್‍ಡಿಎ ಪಾಲುದಾರರ ನಡುವಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ, ಟಿಡಿಪಿಗೆ 144 ಅಸೆಂಬ್ಲಿ ಮತ್ತು 17 ಲೋಕಸಭಾ ಕ್ಷೇತ್ರಗಳನ್ನು ಹಂಚಿಕೆ ಮಾಡಲಾಗಿದ್ದು, ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭೆ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. +ಪ್ರಧಾನಿ ಮೋದಿಯವರಲ್ಲದೆ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳಿಗಾಗಿ ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದರು. ಚುನಾವಣೆಯನ್ನು ಸುಗಮವಾಗಿ ನಡೆಸಲು ಚುನಾವಣಾ ಆಯೋಗವು 1.06 ಲಕ್ಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದು, ಇದರಲ್ಲಿ 3,500 ಕರ್ನಾಟಕ ಪೊಲೀಸರು, 4,500 ತಮಿಳುನಾಡು ಪೊಲೀಸರು, 1,614 ಮಾಜಿ ಸೈನಿಕರು ಮತ್ತು 246 ನಿವೃತ್ತ ಪೊಲೀಸ್ ಸಿಬ್ಬಂದಿಗಳು ಸೇರಿದ್ದಾರೆ. +ಈ ರಾಜ್ಯದಲ್ಲಿ ಒಟ್ಟು ಮತದಾರರ ಸಂಖ್ಯೆ 4.14 ಕೋಟಿ, ಇದರಲ್ಲಿ 2.02 ಕೋಟಿ ಪುರುಷ, 2.1 ಕೋಟಿ ಮಹಿಳೆ, 3,421 ತೃತೀಯ ಲಿಂಗ ಮತದಾರರು ಮತ್ತು 68,185 ಸೇವಾ ಮತದಾರರು ಇದ್ದಾರೆ. ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ಎಂಕೆ ಮೀನಾ ಪ್ರಕಾರ, ಲೋಕಸಭೆಗೆ 454 ಮತ್ತು ವಿಧಾನಸಭೆ ಚುನಾವಣೆಗೆ 2,387 ಅಭ್ಯರ್ಥಿಗಳು ಕಣದಲ್ಲಿದ್ದಾರೆ. +ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ ವೈಎಸ್‍ಆರ್‍ಸಿಪಿ ಮುಖ್ಯಸ್ಥರು ವಿರೋಧ ಪಕ್ಷಗಳು ರೂಪಿಸಿರುವ ರಾಜಕೀಯ ಪಿತೂರಿಗಳಿಗೆ ಬಲಿಯಾಗಲು ತಾನು ಅಭಿಮನ್ಯು ಅಲ್ಲ ಎಂದು ಪ್ರತಿಪಾದಿಸಿದರು.ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ, ರೆಡ್ಡಿ ತನ್ನನ್ನು ಅರ್ಜುನ್ ಎಂದು ಕರೆದುಕೊಂಡರು, ಅವರು ವಿಜಯಶಾಲಿಯಾಗಿ ಹೊರಹೊಮ್ಮಲು ಶ್ರೀಕೃಷ್ಣನಂತಹ ಜನ ನನ್ನೊಂದಿಗೆ ಇದ್ದಾರೆ ಎಂದಿದ್ದಾರೆ. ವಿಪಕ್ಷ ನಾಯಕ ನಾಯ್ಡು ಅವರು ಎಕ್ಸ್ ಪೋಸ್ಟ್‍ನಲ್ಲಿ ಮೇ 13 ರಂದು ಆಂಧ್ರಪ್ರದೇಶದ ಭವಿಷ್ಯದ ದಿಕ್ಕಿಗೆ ನಿರ್ಣಾಯಕವಾಗಿರುವುದರಿಂದ ತಮ್ಮ ಹಕ್ಕು ಚಲಾಯಿಸುವಂತೆ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ. +ಕಳೆದ ವಿಧಾನಸಭೆ ಚುನಾವಣೆಯಲ್ಲಿ ವೈಎಸ್‍ಆರ್‍ಸಿಪಿ 151, ಟಿಡಿಪಿ-23 ಮತ್ತು ಜನಸೇನಾ-1 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, 2019ರ ಚುನಾವಣೆಯಲ್ಲಿ ಆಡಳಿತ ಪಕ್ಷ 22 ಮತ್ತು ಚಂದ್ರಬಾಬು ನಾಯ್ಡು ನೇತೃತ್ವದ ಮೂರು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. \ No newline at end of file diff --git a/eesanje/url_47_101_12.txt b/eesanje/url_47_101_12.txt new file mode 100644 index 0000000000000000000000000000000000000000..554464ec9af18c0185416f0c6c86782771f7b903 --- /dev/null +++ b/eesanje/url_47_101_12.txt @@ -0,0 +1,5 @@ +ಬದರಿನಾಥ ಧಾಮ ಸಾರ್ವಜನಿಕರಿಗೆ ಮುಕ್ತ +ನವದೆಹಲಿ,ಮೇ.12- ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮವು ಇಂದಿನಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಇಂದು ಬೆಳಿಗ್ಗೆ 6 ಗಂಟೆಗೆ ಆರ್ಮಿ ಬ್ಯಾಂಡ್‍ನ ಸುಮಧುರ ನಾದದ ನಡುವೆ ಸಂಪೂರ್ಣ ಧಾರ್ಮಿಕ ಕ್ರಿಯೆಗಳೊಂದಿಗೆ ಭಕ್ತರಿಗೆ ದೇವಾಲಯ ತನ್ನ ಬಾಗಿಲು ತೆರೆಯಿತು. ಭಕ್ತರನ್ನು ಸ್ವಾಗತಿಸುವಾಗ, ವೇದ ಘೋಷಗಳು ಮತ್ತು ಬದ್ರಿ ವಿಶಾಲ್ ಲಾಲ್ ಕೀ ಜೈ ಘೋಷಣೆಗಳು ದೇವಸ್ಥಾನದಾದ್ಯಂತ ಪ್ರತಿಧ್ವನಿಸಿದವು. +ನಿನ್ನೆ ಚಮೋಲಿ ಜಿಲ್ಲೆಯಲ್ಲಿ ಚಾರ್ ಧಾಮ್ ಯಾತ್ರೆಗಾಗಿ ಭಕ್ತರಿಗಾಗಿ ತನ್ನ ಪೋರ್ಟಲ್‍ಗಳನ್ನು ತೆರೆಯುವ ಮುನ್ನ ಅಲಂಕರಿಸಿದ ಬದರಿನಾಥ ದೇವಾಲಯದಲ್ಲಿ ಇಂದು ಬೆಳಗ್ಗೆ ನೂರಾರು ಭಕ್ತರು ಬದರಿನಾಥ ಧಾಮದ ಪ್ರವೇಶದ್ವಾರವನ್ನು ಹೂವಿನಿಂದ ಅಲಂಕರಿಸಿದರು. +ಆರು ತಿಂಗಳ ವಿರಾಮದ ನಂತರ ಬದರಿನಾಥ ಧಾಮ್ ತನ್ನ ದ್ವಾರಗಳನ್ನು ಭಕ್ತರಿಗಾಗಿ ತೆರೆಯಿತು. ನವೆಂಬರ್ 18 ರಿಂದ ಚಳಿಗಾಲದಲ್ಲಿ ದೇವಾಲಯದ ದ್ವಾರಗಳನ್ನು ಮುಚ್ಚಲಾಗಿತ್ತು. +ಉತ್ತರಾಖಂಡದ ನಾಲ್ಕು ಧಾಮಗಳ ಪೈಕಿ ಮೂರು ಧಾಮಗಳಾದ ಕೇದಾರನಾಥ, ಗಂಗೋತ್ರಿ, ಯಮುನೋತ್ರಿ ಧಾಮಗಳ ಬಾಗಿಲುಗಳನ್ನು ಕಳೆದ ಶುಕ್ರವಾರ ಅಕ್ಷಯ ತೃತೀಯ ಸಂದರ್ಭದಲ್ಲಿ ತೆರೆಯಲಾಗಿತ್ತು. ಬಾಗಿಲು ತೆರೆಯುವ ಸಿದ್ಧತೆಗಳನ್ನು ಬದರಿನಾಥ ಕೇದಾರನಾಥ ದೇವಾಲಯ ಸಮಿತಿ ಪೂರ್ಣಗೊಳಿಸಿದೆ. \ No newline at end of file diff --git a/eesanje/url_47_101_2.txt b/eesanje/url_47_101_2.txt new file mode 100644 index 0000000000000000000000000000000000000000..9f08521d9222bc8eef0ca202d56cb8e076e4c364 --- /dev/null +++ b/eesanje/url_47_101_2.txt @@ -0,0 +1,6 @@ +ಮೆಟ್ರೋ ನಿಲ್ದಾಣಗಳ ಕಂಬಗಳ ಮೇಲೆ ಖಲಿಸ್ತಾನ್‌ ಪರ ಗೀಚುಬರಹ +ನವದೆಹಲಿ, ಮೇ 12 (ಪಿಟಿಐ)ದೆಹಲಿಯ ಕರೋಲ್‌ ಬಾಗ್‌ ಮತ್ತು ಝಾಂಡೇವಾಲನ್‌ ಮೆಟ್ರೋ ನಿಲ್ದಾಣಗಳ ಕೆಲವು ಕಂಬಗಳಲ್ಲಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಖಲಿಸ್ತಾನ್‌ ಪರ ಗೀಚುಬರಹ ಮತ್ತು ಘೋಷಣೆಗಳು ಕಾಣಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಬೆಳ್ಳಂ ಬೆಳಿಗ್ಗೆ ಮೆಟ್ರೋ ನಿಲ್ದಾಣಗಳ ಕೆಲ ಕಂಬಗಳ ಮೇಲೆ ಖಲಿಸ್ತಾನ್‌ ಪರ ಗೀಚು ಬರಹಗಳು ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬರಹದಲ್ಲಿ ಮೋದಿ ಅವರ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ತಿಳಿದುಬಂದಿದೆ. +ಗೋಡೆ ಬರಹ ಮತ್ತು ಘೋಷಣೆಗಳನ್ನು ತೆಗೆದುಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ನಾವು ವಿಷಯದ ತನಿಖೆಗಾಗಿ ತಂಡಗಳನ್ನು ರಚಿಸಿದ್ದೇವೆ. ಪೊಲೀಸ್‌‍ ತಂಡಗಳು ಅಪರಾಧಿಗಳನ್ನು ಗುರುತಿಸಲು ಮತ್ತು ಅವರನ್ನು ಹಿಡಿಯಲು ಪ್ರದೇಶ ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಕ್ಯಾನ್‌ ಮಾಡುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಕಿಡಿಗೇಡಿಗಳು ಎಲ್ಲೇ ಇದ್ದರೂ ಅವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_47_101_3.txt b/eesanje/url_47_101_3.txt new file mode 100644 index 0000000000000000000000000000000000000000..5b2393be376e1f16e4b7ef8b1cd3d07c97008bad --- /dev/null +++ b/eesanje/url_47_101_3.txt @@ -0,0 +1,5 @@ +4ನೇ ಹಂತದ ಚುನಾವಣೆ : ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ +ನವದೆಹಲಿ, ಮೇ 13-ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸುವುದು ಪ್ರತಿಯೊಬ್ಬರ ಕರ್ತವ್ಯಮಾಡೋಣ ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. +ದೇಶದ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯುತ್ತಿದ್ದು, ಮತದಾರರು ದಾಖಲೆ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸುವಂತೆ ಮೋದಿ ಮನವಿ ಮಾಡಿದರು. +ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಮತ್ತು ಯುವ ಮತದಾರರು ಮತ್ತು ಮಹಿಳಾ ಮತದಾರರು ಮತದಾನದಲ್ಲಿ ಈ ಉಲ್ಬಣವನ್ನು ಹೆಚ್ಚಿಸುತ್ತಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ, ಎಲ್ಲರೂ ನಮ ಕರ್ತವ್ಯವನ್ನು ಮಾಡೋಣ ಮತ್ತು ನಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ! ಎಂದು ಎಕ್ಸ್ ನಲ್ಲಿ ವಿನಂತಿಸಿದ್ದಾರೆ. +ಆಂಧ್ರಪ್ರದೇಶದ ಜನರು, ವಿಶೇಷವಾಗಿ ಮೊದಲ ಬಾರಿಗೆ ಮತದಾರರು, ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಒತ್ತಾಯಿಸುತ್ತಾರೆ. ಈ ಸಮೀಕ್ಷೆಗಳು ನಮ್ಮ ಪ್ರಜಾಪ್ರಭುತ್ವದ ಉತ್ಸಾಹವನ್ನು ಇನ್ನಷ್ಟು ಹೆಚ್ಚಿಸಲಿ.ಇದರ ಜೊತಡಗೆ ಒಡಿಶಾ ಮತದಾರರಿಗೆ, ನಿಮ ಮತ ನಿಮ ಧ್ವನಿ, ಅದನ್ನು ಜೋರಾಗಿ ಮತ್ತು ಸ್ಪಷ್ಟವಾಗಿ ಕೇಳಲಿ ಎಂದು ಪ್ರಧಾನಿ ಮತ್ತೊಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ. \ No newline at end of file diff --git a/eesanje/url_47_101_4.txt b/eesanje/url_47_101_4.txt new file mode 100644 index 0000000000000000000000000000000000000000..1615cd4f8d39ee95bc14a3b28ef1c4a47ccb1a1a --- /dev/null +++ b/eesanje/url_47_101_4.txt @@ -0,0 +1,6 @@ +ನಾಳೆ ವಾರಣಾಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ, ಭರ್ಜರಿ ರೋಡ್‌ ಶೋಗೆ ತಯಾರಿ +ನವದೆಹಲಿ,ಮೇ 13-ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕಾಲ ಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಾರೆ ಮತ್ತು ನಂತರ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದು, ಪ್ರಧಾನಿ ಮೋದಿಯವರ ರೋಡ್‌ ಶೋ ಮತ್ತು ನಾಮನಿರ್ದೇಶನ ಪ್ರಕ್ರಿಯೆಯ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಗೃಹ ಸಚಿವ ಅಮಿತ್‌ ಶಾ ವಾರಣಾಸಿಯಲ್ಲಿದ್ದಾರೆ. +ಬಿಜೆಪಿಯ ಹಿರಿಯ ನಾಯಕ ಸುನಿಲ್‌ ಬನ್ಸಾಲ್‌ ಕೂಡ ವಾರಣಾಸಿಯಲ್ಲಿ ಹಲವು ದಿನಗಳಿಂದ ಬೀಡು ಬಿಟ್ಟಿದ್ದಾರೆ. ವಾರಣಾಸಿಗೆ ಎರಡು ದಿನಗಳ ಭೇಟಿಯ ವೇಳೆ ಪ್ರಧಾನಿಗಳು ಕಾಶಿ ವಿಶ್ವನಾಥ ದೇವಾಲಯ ಮತ್ತು ಕಾಲ ಭೈರವ ದೇವಾಲಯಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. +ಮೋದಿಯವರನ್ನು ಸ್ವಾಗತಿಸಲು ಗುಜರಾತಿ, ಮರಾಠಿ, ತಮಿಳು, ಬೆಂಗಾಲಿ, ಪಂಜಾಬಿ ಮತ್ತು ಇತರ ಸಮುದಾಯಗಳ ಜನರು ಪ್ರಧಾನಿಯವರ ರೋಡ್‌ ಶೋ ಮಾರ್ಗದಲ್ಲಿ ಭಾರತದ ವೈವಿಧ್ಯತೆಯನ್ನು ವಿವಿಧ ಹಂತಗಳಲ್ಲಿ ಪ್ರದರ್ಶಿಸಲಾಗುತ್ತದೆ. ರೋಡ್‌ ಶೋ ಸಮಯದಲ್ಲಿ, ಪ್ರಧಾನಿಯವರು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ (ಬಿಎಚ್ಯು) ಗೇಟಿನಿಂದ ಕಾಶಿ ವಿಶ್ವನಾಥ ಕಾರಿಡಾರ್‌ವರೆಗಿನ ಐದು ಕಿಲೋಮೀಟರ್‌ ವ್ಯಾಪ್ತಿಯನ್ನು ಸರಿಸುಮಾರು ನಾಲ್ಕು ಗಂಟೆಗಳಲ್ಲಿ ಕ್ರಮಿಸಲಿದ್ದಾರೆ. +ರೋಡ್‌ ಶೋದಲ್ಲಿ ವಿವಿಧ ಕಲಾವಿದರು ಡಮರುಗ ಮತ್ತು ಶಂಖಗಳನ್ನು ನುಡಿಸಲಾಗುತ್ತದೆ. ಈ ರೋಡ್‌ ಶೋ ಕಾರ್ಯಕ್ರಮಕ್ಕಾಗಿ ಬಿಜೆಪಿ ಕ್ವಿಂಟಾಲ್‌‍ಗಟ್ಟಲೆ ಹೂವಿನ ದಳಗಳನ್ನು ಬಳಕೆ ಮಾಡಲಾಗಿದೆ. ಪ್ರಧಾನಿ ನಾಮನಿರ್ದೇಶನಕ್ಕೆ ಸಂಭಾವ್ಯ ಪ್ರಸ್ತಾಪಕರ ಪಟ್ಟಿಯನ್ನು ರಚಿಸಲಾಗಿದೆ ಮತ್ತು ಅದರಲ್ಲಿ ನಾಲ್ಕು ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ. +ಮೋದಿ ಅವರು 2014 ಮತ್ತು 2019ರಲ್ಲಿ ವಾರಣಾಸಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಸತತ 3ನೇ ಅವಧಿ ಗೆ ವಾರಣಾಸಿಯಿಂದಲೇ ಸ್ಪರ್ಧಿಸುತ್ತಿರುವ ಮೋದಿ ಹ್ಯಾಟ್ರಿಕ್‌ ಗೆಲುವಿನೊಂದಿಗೆ 3ನೇ ಬಾರಿಗೆ ಪ್ರಧಾನಿಯಾಗುವ ನಿರೀಕ್ಷೆಯಲ್ಲಿದ್ದಾರೆ. \ No newline at end of file diff --git a/eesanje/url_47_101_5.txt b/eesanje/url_47_101_5.txt new file mode 100644 index 0000000000000000000000000000000000000000..89461c2b516ab570db73a935d60538fc5fb083f9 --- /dev/null +++ b/eesanje/url_47_101_5.txt @@ -0,0 +1,5 @@ +ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದ ತಮಿಳುನಾಡು ಸಂಸದ ಸೆಲ್ವರಾಜ್‌ ನಿಧನ +ಚೆನ್ನೈ,ಮೇ.13-ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದ ನಾಗಪಟ್ಟಿನಂ ಲೋಕಸಭಾ ಕ್ಷೇತ್ರದ ಸಂಸದ ಸೆಲ್ವರಾಜ್‌ (67) ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತಹ ತಿರುವರೂರ್‌ ಜಿಲ್ಲೆಯ ನೀದಮಂಗಳಮ್‌ನ ಕಪ್ಪಲುಡಯನ್‌ ಗ್ರಾಮದಲ್ಲಿ 1957ರ ಮಾರ್ಚ್‌ 16ರಂದು ಜನಿಸಿದ್ದ ಸೆಲ್ವರಾಜ್‌ ಅವರು ಶಾಲಾ ವಿದ್ಯಾಭ್ಯಾಸದ ವೇಲೆ ಬಾಲ್ಯದಲ್ಲೇ ಕಮ್ಯುನಿಸ್ಟ್‌ ಸಿದ್ಧಾಂತಕ್ಕೆ ಆಕರ್ಷಿತರಾಗಿದ್ದರು ನಂತರದ ದಿನದಲ್ಲಿ ಕಾಲೇಜಿನಲ್ಲಿ ಓದುವಾಗಲೇ ಭಾರತೀಯ ಕಮ್ಯೂನಿಸ್ಟ್‌ ಪಕ್ಷ ಸೇರಿದ್ದರು. +ಹಲವು ಹೋರಾಟದಲ್ಲಿ ಬಾಗಿಯಾಗಿ ಪಕ್ಷದ ಜಿಲ್ಲಾ ಕಾರ್ಯದರ್ಶಿಯಾದರು.1989ರಲ್ಲಿ ನೆಡೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮೊದಲ ಬಾರಿಗೆ ನಾಗಪಟ್ಟಿನಂ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು. ಕಮ್ಯುನಿಸ್ಟ್‌ ಪಕ್ಷದಿಂದ ಲೋಕಸಭಾ ಚುನಾವಣೆಗೆ 6 ಬಾರಿ ಸ್ಪರ್ಧಿಸಿರುವ ಸೆಲ್ವರಾಜ್‌, 3 ಬಾರಿ ಜಯ ಗಳಿಸಿದ್ದರು. ಭಾರತೀಯ ಕಮ್ಯೂನಿಸ್ಟ್‌ ಪಕ್ಷದ ರಾಷ್ಟ್ರೀಯ ಸದಸ್ಯನಾಗಿಯೂ ಇವರು ಕೆಲಸ ಮಾಡಿದ್ದಾರೆ. +ಇತ್ತೀಚೆಗೆ, ಉಸಿರಾಟದ ತೊಂದರೆ ಮತ್ತು ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ತಿರುವರೂರ್‌ ಸರ್ಕಾರಿ ಮೆಡಿಕಲ್‌ ಕಾಲೇಜಿಗೆ ದಾಖಲಿಸಲಾಗಿತ್ತು. ಇಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಚೆನ್ನೃನ ಮಿಯಾಟ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ನಸುಕಿನ ಜಾವ ಅಂದಾಜು 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. +ಹುಟ್ಟೂರು ನಾಗಪಟ್ಟಿನಂಗೆ ಪಾರ್ಥಿವ ಶರೀರವನ್ನು ರವಾನಿಸಲಾಗಿದೆ.ತಮಿಳು ನಾಡು ಸಿಎಂ ಸ್ಟಾಲಿನ್‌ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_101_6.txt b/eesanje/url_47_101_6.txt new file mode 100644 index 0000000000000000000000000000000000000000..ff307539957f19983b0cc40371677f52017e1ab1 --- /dev/null +++ b/eesanje/url_47_101_6.txt @@ -0,0 +1,5 @@ +ರಾಜಸ್ತಾನದ ಜೈಪುರದಲ್ಲಿ ನಾಲ್ಕು ಶಾಲೆಗಳಿಗೆ ಬಾಂಬ್‌ ಬೆದರಿಕೆ +ಜೈಪುರ, ಮೇ 13-ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಾಲ್ಕು ಶಾಲೆಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆಗಳು ಬಂದು ಆತಮಕ ಸೃಷ್ಠಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. +ಕೂಡಲೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಶಾಲೆ ಪ್ರವೇಶ ಮಾಡಲು ಬಿಡದೆ ಬಾಂಬ್‌ ತಪಾಸಣಾ ಮತ್ತು ಶ್ವಾನ ದಳಗಳೊಂದಿಗೆ ಪೊಲೀಸ್‌‍ ತಂಡಗಳು ಆಗಮಿಸಿ ಪರಿಶೀಲನೆ ನಡೆಸಿದೆ. +ಪ್ರಾಥಮಿಕ ಮಾಹಿತಿ ಪ್ರಕಾರ 5 ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಿದ್ದು, ತಪಾಸಣೆ ನಂತರ ಇದು ಹುಸಿ ಬೆದರಿಕೆ ಎಂದು ಗೊತ್ತಾಗಿದೆ ಎಮದು ಜೈಪುರ ಪೊಲೀಸ್‌‍ ಕಮಿಷನರ್‌ ಬಿಜು ಜಾರ್ಜ್‌ ಜೋಸೆಫ್‌ ತಿಳಿಸಿದ್ದಾರೆ. +ಇಮೇಲ್‌ ಮೂಲಕ ಬೆದರಿಕೆಯನ್ನುಕಳುಹಿಸುವವರನ್ನು ಗುರುತಿಸಲು ತಂಡ ಪ್ರಯತ್ನಿಸುತ್ತಿದೆ ,ಮಕ್ಕಳು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_101_7.txt b/eesanje/url_47_101_7.txt new file mode 100644 index 0000000000000000000000000000000000000000..9bbf43d3ffba6592c3bcca0dbbaa951f2df29b40 --- /dev/null +++ b/eesanje/url_47_101_7.txt @@ -0,0 +1,4 @@ +ಕೇರಳ ಕರಾವಳಿಯಲ್ಲಿ ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಸಾವು +ಮಲಪ್ಪುರಂ (ಕೇರಳ), ಮೇ 13-ಇಂದು ಮುಂಜಾನೆ ಕೇರಳ ಕರಾವಳಿಯಲ್ಲಿ ಮೀನುಗಾರಿಕಾ ದೋಣಿಗೆ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅದು ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. +ರಾಜ್ಯದ ಮೀನುಗಾರರು ಮೀನುಗಾರಿಕೆಗೆ ತೆರಳುತ್ತಿದ್ದಾಗ ತ್ರಿಶೂರ್‌ ಜಿಲ್ಲೆಯ ಮಣಕ್ಕಕಡವು ಕರಾವಳಿ ಪೊಲೀಸ್‌‍ ಠಾಣೆಯ ಮಿತಿಯಿಂದ 16 ನಾಟಿಕಲ್‌ ಮೈಲು ದೂರದಲ್ಲಿ ಈ ಅವಘಡ ಸಂಭವಿಸಿದೆ. +ಢಿಕ್ಕಿಯ ರಭಸಕ್ಕೆ ದೋಣಿ ಎರಡು ಭಾಗವಾಗಿ ನೀರಿನಲ್ಲಿ ಮುಳುಗಿದೆ. ಈ ದೋಣಿಯಲ್ಲಿ ಆರು ಮಂದಿ ಇದ್ದರು ಅದರಲ್ಲಿ ನಾಲ್ವರನ್ನು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ. ಶೋಧ ಕಾರ್ಯಾಚರಣೆಯ ನಂತರ, ನಾಪತ್ತೆಯಾದ ಇಬ್ಬರು ಮೀನುಗಾರರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_101_8.txt b/eesanje/url_47_101_8.txt new file mode 100644 index 0000000000000000000000000000000000000000..b4a5020191b311d83063bcb739d92d9e045563f9 --- /dev/null +++ b/eesanje/url_47_101_8.txt @@ -0,0 +1,5 @@ +ಕೇಜ್ರಿವಾಲ್ ಜೈಲು ಪಾಲಾದ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ : ಚೌಹಾಣ್ +ವಿದಿಶಾ, ಮೇ12- ಜೈಲು ಸೇರಿದ ನಂತರ ಅರವಿಂದ್ ಕೇಜ್ರಿವಾಲ್ ಅವರು ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಲೇವಡಿ ಮಾಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲು ಸೇರಿದ ನಂತರ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಇದೀಗ ಅವರು ಜಾಮೀನಿನ ಮೇಲೆ ಇದ್ದಾರೆ ಮತ್ತು ಅದು ಕೂಡ ಚುನಾವಣೆಯವರೆಗೆ ಮಾತ್ರ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಿಗೆ ರಾಜಕೀಯವು ಸ್ಥಾನ ಪಡೆಯಲು ಅಥವಾ ಸ್ವಹಿತಾಸಕ್ತಿಗಳನ್ನು ಸಾಧಿಸುವ ಮಾಧ್ಯಮವಲ್ಲ ಎಂದಿದ್ದಾರೆ. +ನಾವು ದೇಶಕ್ಕೆ ಸೇವೆ ಸಲ್ಲಿಸಲು ರಾಜಕೀಯ ಮಾಡಿ ಮತ್ತು ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತೇವೆ, ಪಕ್ಷವು ನಮಗೆ ಯಾವುದೇ ಕೆಲಸ ನೀಡಿದರೂ ಅದನ್ನು ನಾವು ಸಂಪೂರ್ಣ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತೇವೆ ಎಂದು ಚೌಹಾಣ್ ಹೇಳಿದರು. +ನನ್ನ ಸ್ಥಾನವನ್ನು ಹೊರತುಪಡಿಸಿ, ನಾನು ಮಧ್ಯಪ್ರದೇಶದ ಹಲವು ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಪಕ್ಷದ ಪ್ರಚಾರ ಮಾಡಿದ್ದೇನೆ. ನಾವೆಲ್ಲರೂ ಪ್ರಧಾನಿ ನೇತೃತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಭ್ರಷ್ಟಾಚಾರ ತೊಲಗಿಸುವ ಬಗ್ಗೆ ಮಾತನಾಡುವ ಮೂಲಕ ಅ„ಕಾರಕ್ಕೆ ಬಂದ ಕೇಜ್ರಿವಾಲ, ಇಂದು ಅವರೇ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು. +ಇದಕ್ಕೂ ಮುನ್ನ ಎಎಪಿ ರಾಷ್ಟ್ರೀಯ ಸಂಚಾಲಕರು ಪ್ರಧಾನಿ ಮೋದಿ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಧಾನಿಯಾಗಿಸಲು ದಾರಿ ಮಾಡಿಕೊಡುತ್ತಿದ್ದಾರೆ ಎಂದು ಹೇಳಿದ್ದರು.ತಮ್ಮ ಸರ್ಕಾರ ರಚನೆಯಾದರೆ ಮೊದಲು ಯೋಗಿ ಆದಿತ್ಯನಾಥ್ ಅವರನ್ನು ಕಿತ್ತೊಗೆದು ನಂತರ ಅಮಿತ್ ಶಾ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತಾರೆ. ಪ್ರಧಾನಿ ಮೋದಿ ಅಮಿತ್ ಶಾಗೆ ಮತ ಕೇಳುತ್ತಿದ್ದಾರೆ. ಅಮಿತ್ ಶಾ ಮೋದಿ ಭರವಸೆ ಈಡೇರಿಸುತ್ತಾರಾ? ಎಂದು ಪ್ರಶ್ನಿಸಿದ್ದರು. \ No newline at end of file diff --git a/eesanje/url_47_101_9.txt b/eesanje/url_47_101_9.txt new file mode 100644 index 0000000000000000000000000000000000000000..3738cee27df24757527384ce3e575ef064245bf7 --- /dev/null +++ b/eesanje/url_47_101_9.txt @@ -0,0 +1,6 @@ +ಜಗತ್ತಿಗೆ ಭಾರತೀಯ ನಾಯಕತ್ವದ ಅಗತ್ಯವಿದೆ: ನಿಶಿಯಾಮಾ +ಬೆಂಗಳೂರು,ಮೇ.12- ಜಗತ್ತಿಗೆ ಭಾರತೀಯ ನಾಯಕತ್ವದ ಅಗತ್ಯವಿದೆ. ಇಲ್ಲಿನ ವೈವಿಧ್ಯತೆಯಿಂದ ನಾನು ಆಶ್ಚರ್ಯಚಕಿತನಾಗಿದ್ದೇನೆ ಎಂದು ಟೆಕ್ ಜಪಾನ್ ಸಂಸ್ಥೆ ಸಂಸ್ಥಾಪಕ ನೌಟಾಕ ನಿಶಿಯಾಮಾ ತಿಳಿಸಿದ್ದಾರೆ.ಟೆಕ್ ಜಪಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಬೆಂಗಳೂರಿಗೆ ಬಂದಿಳಿದಿರುವ ನಿಶಿಯಾಮಾ ಅವರು ಭಾರತದ ಜಾಗತೀಕ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. +ಜಗತ್ತಿಗೆ ಭಾರತೀಯ ನಾಯಕತ್ವದ ಅಗತ್ಯವಿದೆ, ನಾನು ಭಾರತಕ್ಕೆ ಬಂದು ಒಂದು ತಿಂಗಳಾಗಿದೆ, ಮತ್ತು ಭಾರತದಲ್ಲಿನ ಮೌಲ್ಯಗಳ ವೈವಿಧ್ಯತೆಯನ್ನು ಮತ್ತೊಮ್ಮೆ ನಾನು ಆಶ್ಚರ್ಯ ಪಡುತ್ತೇನೆ. ಭಾರತವು ವಿವಿಧ ಧರ್ಮಗಳು, ಜನಾಂಗಗಳನ್ನು ಹೊಂದಿರುವ ದೊಡ್ಡ ದೇಶವಾಗಿದ್ದರೂ ಒಂದೇ ದೇಶವಾಗಿರುವುದು ಅದ್ಭುತವಾಗಿದೆ. , ಮತ್ತು ಮೌಲ್ಯಗಳು ನಾಯಕತ್ವದ ಬಗ್ಗೆ ಯೋಚಿಸಲು ಇದು ಉತ್ತಮ ಅವಕಾಶವಾಗಿದೆ, ಏಕೆಂದರೆ ಭಾರತವು ಈಗ ಚುನಾವಣಾ ಋತುವಿನಲ್ಲಿದೆ ಎಂದು ಅವರು ಲಿಂಕ್ಡ್‍ಇನ್ ಪೋಸ್ಟ್‍ನಲ್ಲಿ ಅವರು ತಿಳಿಸಿದ್ದಾರೆ. +ನಿಶಿಯಾಮಾ ಅವರು ಸಾಮೂಹಿಕ ಪ್ರಯತ್ನದ ಪ್ರಾಮುಖ್ಯತೆಯನ್ನು ಚರ್ಚಿಸಿದರು, ಇದು ಹೊಸ ಮತ್ತು ವೈವಿಧ್ಯಮಯ ಆಲೋಚನೆಗಳನ್ನು ತರಲು ಸಹಾಯ ಮಾಡುತ್ತದೆ. ಸಮಾಜವಾದಿ ರಾಷ್ಟ್ರಗಳು ಮತ್ತು ಮಿಲಿಟರಿ-ತರಹದ ಸಂಸ್ಥೆಗಳಲ್ಲಿ, ಸಾಂಪ್ರದಾಯಿಕ ಟಾಪ್‍ಡೌನ್ ವಿಧಾನವು ಪರಿಣಾಮಕಾರಿಯಾಗಿದೆ. ಆದಾಗ್ಯೂ, ಇಂದಿನ ಅಸ್ಥಿರ ಮತ್ತು ಅನಿಶ್ಚಿತ ಸಮಾಜದಲ್ಲಿ, ವೈವಿಧ್ಯಮಯ ಆಲೋಚನೆಗಳ ಲಾಭವನ್ನು ಪಡೆದುಕೊಳ್ಳುವ ಮೂಲಕ ಸಹಕಾರಿ ರೀತಿಯಲ್ಲಿ ಮುಂದುವರಿಯುವುದು ಅವಶ್ಯಕ. ಯಾವಾಗ ಉನ್ನತ- ಡೌನ್ ಅಪ್ರೋಚ್ ಸರ್ವಾಧಿಕಾರಿಯ ಕಲ್ಪನೆಗಳನ್ನು ಆಧರಿಸಿದೆ, ಅನೇಕ ಕುರುಡು ಕಲೆಗಳು ಸಂಭವಿಸುತ್ತವೆ ಎಂದು ಅವರು ಹೇಳಿದರು. +ಜಪಾನ್‍ನಲ್ಲಿನ ನಿರ್ವಹಣೆಯು ಇತರ ಜನರನ್ನು ತಮ್ಮದೇ ಆದ ಆಲೋಚನಾ ವಿಧಾನದಲ್ಲಿ ಲಾಕ್ ಮಾಡುವ ಮತ್ತು ಅವರನ್ನು ನಿಯಂತ್ರಿಸುವ ಸೂಕ್ಷ್ಮವಾದ ಅರ್ಥವನ್ನು ಹೊಂದಿದೆ. ಅದೇ ಒಂದು ಸಣ್ಣ ಚೌಕಟ್ಟಿನೊಳಗೆ ಇರುತ್ತದೆ. ಭಾರತವು ನೆರೆಯ ದೇಶಗಳೊಂದಿಗೆ ಸಮಸ್ಯೆಗಳಿರುವ ದೊಡ್ಡ ದೇಶ, ಸ್ವಾತಂತ್ರ್ಯದ ಇತಿಹಾಸ ಮತ್ತು ವಿವಿಧ ಧರ್ಮಗಳು, ಜನಾಂಗಗಳು ಮತ್ತು ಮೌಲ್ಯಗಳನ್ನು ಕೇವಲ ಒಂದು ಸೆಟ್‍ಗೆ ಸೀಮಿತಗೊಳಿಸಲು ಪ್ರಯತ್ನಿಸುವುದು ಇಲ್ಲಿ ಕೆಲಸ ಮಾಡುವುದಿಲ್ಲ, ಅದಕ್ಕಾಗಿಯೇ ಅವರು ವಿಭಿನ್ನ ವಿಷಯಗಳನ್ನು ಹೊಂದಿಸುವ ಬದಲು ಸಾಧ್ಯವಾದಷ್ಟು ಎಲ್ಲವನ್ನೂ ಸೇರಿಸಲು ಪ್ರಯತ್ನಿಸುತ್ತಾರೆ ಅವರ ಒಂದು ಸಣ್ಣ ಚೌಕಟ್ಟಿನೊಳಗೆ ಮತ್ತು ಅವುಗಳಲ್ಲಿ ಪ್ರತಿಯೊಂದೂ ಪ್ರತ್ಯೇಕವಾಗಿ ಭಿನ್ನವಾಗಿದ್ದರೂ, ವ್ಯತ್ಯಾಸಗಳನ್ನು ಬಳಸಿಕೊಂಡು ಮುಂದುವರಿಯಲು ಸಾಧ್ಯವಾಗುತ್ತದೆ. +ಭಾರತದ ವೈವಿಧ್ಯಮಯ ಪರಿಸರ ವನ್ನು ಶ್ಲಾಸಿದ ನಿಶಿಯಾಮಾ ವಿಜಾತೀಯ ಮೌಲ್ಯಗಳನ್ನು ಒಳಗೊಂಡಿರುವ ದೊಡ್ಡ ಯೋಜನೆಯನ್ನು ರಚಿಸುವ ಮೂಲಕ ಮುಂದುವರಿಯಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಸಮರೂಪದ ವಾತಾವರಣ ಇರುವ ಜಪಾನ್‍ನಲ್ಲಿ ಇದು ವಿಭಿನ್ನವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_102_1.txt b/eesanje/url_47_102_1.txt new file mode 100644 index 0000000000000000000000000000000000000000..45fa968c47ccd7ce58e5e8dbc36467c8a174c269 --- /dev/null +++ b/eesanje/url_47_102_1.txt @@ -0,0 +1,7 @@ +ಭಾರತವೂ ಮಧ್ಯಸ್ಥಿಕೆ ಸ್ಥಳವಾಗಿ ಹೊರಹೊಮ್ಮುತ್ತಿದೆ; ಜೈಶಂಕರ್ +ನವದೆಹಲಿ,ಮೇ.12- ಕಳೆದ ಕೆಲವು ದಶಕಗಳಲ್ಲಿ ಜಾಗತಿಕ ಕ್ರಮವು ತನ್ನ ಹೊಸ ದಿಕ್ಕುಗಳನ್ನು ರೂಪಿಸುವ ಮರು-ಸಮತೋಲನಕ್ಕೆ ಸಾಕ್ಷಿಯಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. +ಆರ್ಬಿಟ್ರೇಷನ್ ಬಾರ್ ಆಫ್ಇಂಡಿಯಾದ ಉದ್ಘಾಟನಾ ಸಮಾರಂಭದಲ್ಲಿ ಇಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಜೈಶಂಕರ್, ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಸಮನ್ವಯಗೊಳಿಸುವ, ಮಧ್ಯಸ್ಥಿಕೆ ವಹಿಸುವ ಮತ್ತು ಇತ್ಯರ್ಥಪಡಿಸುವ ಅವಶ್ಯಕತೆಯು ನಾವು ವಿಕಸಿತ್ ಭಾರತ್ ಕಡೆಗೆ ಆ ಪ್ರಯಾಣದಲ್ಲಿ ಪ್ರಗತಿ ಹೊಂದುತ್ತಿರುವಾಗ ಇನ್ನಷ್ಟು ಹೆಚ್ಚಾಗಿರುತ್ತದೆ ಎಂದು ಹೇಳಿದರು. ಭಾರತವು ಮಧ್ಯಸ್ಥಿಕೆ ಸ್ಥಳವಾಗಿ ಹೊರಹೊಮ್ಮುವಲ್ಲಿ ಇದು ಅತ್ಯಂತ ಮಹತ್ವದ ಹೆಜ್ಜೆ ಎಂದು ಅವರು ಹೇಳಿದರು. +ನನಗಿಂತ ನೀವೆಲ್ಲರೂ ಅದರ ಪ್ರಾಮುಖ್ಯತೆಯನ್ನು ಮೆಚ್ಚುತ್ತೀರಿ ಎಂದು ನನಗೆ ತಿಳಿದಿದೆ. ಆದರೆ ವಿದೇಶಾಂಗ ಸಚಿವನಾಗಿ ನಾನು ಇಂದು ಅದನ್ನು ದೊಡ್ಡ ಸನ್ನಿವೇಶದಲ್ಲಿ ಇರಿಸುತ್ತೇನೆ ಮತ್ತು ಎಜಿ (ಅಟಾರ್ನಿ ಜನರಲï) ಅವರ ಉಲ್ಲೇಖದಿಂದ ನಾನು ಮತ್ತೊಮ್ಮೆ ಎರವಲು ಪಡೆಯುತ್ತೇನೆ ಎಂದಿದ್ದಾರೆ. +ಕಳೆದ ಕೆಲವು ದಶಕಗಳಲ್ಲಿ, ಜಾಗತಿಕ ಕ್ರಮವು ಅದರ ಹೊಸ ದಿಕ್ಕುಗಳನ್ನು ರೂಪಿಸುವ ಮರು-ಸಮತೋಲನಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು. ಅದರ ಒಂದು ಮುಖವು ಸಂಸ್ಥೆಗಳು ಮತ್ತು ಚಟುವಟಿಕೆಗಳ ಪ್ರಜಾಪ್ರಭುತ್ವೀಕರಣವಾಗಿದೆ. ಆರ್ಥಿಕ ಸಾಮಥ್ರ್ಯಗಳು ಹೊರಹೊಮ್ಮಿದಂತೆ ಅಥವಾ, ನಮ್ಮ ಸಂದರ್ಭದಲ್ಲಿ, ಮರು-ಹೊರಹೊಮ್ಮುತ್ತಿದ್ದಂತೆ, ಅದರ ಜೊತೆಗಿನ ಹಲವು ಆಯಾಮಗಳು ಸಹ ಜಗತ್ತಿನಲ್ಲಿ ಹೆಚ್ಚು ಹರಡಿರುವುದು ಸಹಜ. ಆ ಅರ್ಥದಲ್ಲಿ, ನಾವು ಬಂದಿರುವ ಘಟನೆಯು ಜಗತ್ತಿನಲ್ಲಿ ಅಧಿಕಾರ, ಪ್ರಭಾವ ಮತ್ತು ಸಾಮಥ್ರ್ಯಗಳ ದೊಡ್ಡ ಪುನರ್ವಿತರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಹೇಳಿದರು. +ನಿಸ್ಸಂಶಯವಾಗಿ, ಇದು ತಾನಾಗಿಯೇ ಆಗುವುದಿಲ್ಲ ಮತ್ತು ಇದಕ್ಕೆ ನಾಯಕತ್ವದ ದೃಷ್ಟಿ ಮತ್ತು ಅದನ್ನು ಮಾಡಲು ಮಧ್ಯಸ್ಥಗಾರರ ಬದ್ಧತೆಯ ಅಗತ್ಯವಿರುತ್ತದೆ. ಮತ್ತು ಅದು ಇಂದು ದೇಶದಲ್ಲಿ ಸಾಕ್ಷಿಯಾಗುತ್ತಿದೆ ಎಂದು ಜೈಶಂಕರ್ ಹೇಳಿದರು. +ಭಾರತವು ಪ್ರಸ್ತುತ ಜಿಡಿಪಿಯಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಾಧ್ಯತೆಯಿದೆ. ಅಂತರಾಷ್ಟ್ರೀಯ ಆರ್ಥಿಕತೆಗೆ ಮಧ್ಯಸ್ಥಿಕೆಯಷ್ಟೇ ನಿರ್ಣಾಯಕವಾದ ಡೊಮೇನ್ ಇಲ್ಲಿ ಸಾಕಷ್ಟು ಅಭಿವ್ಯಕ್ತಿಯನ್ನು ಕಂಡುಕೊಳ್ಳಬೇಕು ಎಂದು ನಿರೀಕ್ಷಿಸಬಹುದು ಎಂದು ಸಚಿವರು ಹೇಳಿದರು. ಅಷ್ಟೇ ಅಲ್ಲ, ಇತರ ಕ್ಷೇತ್ರಗಳಂತೆ, ನಾವು ಉತ್ತಮ ಗುಣಮಟ್ಟದ ಸಾಮಥ್ರ್ಯಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ, ಇದರಿಂದಾಗಿ ಭಾರತವೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎದ್ದು ಕಾಣುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_102_10.txt b/eesanje/url_47_102_10.txt new file mode 100644 index 0000000000000000000000000000000000000000..fe645dea23a6f2386e4f92fdd88979c49d301e8f --- /dev/null +++ b/eesanje/url_47_102_10.txt @@ -0,0 +1,8 @@ +ಬಾಲಕೊಟ್‌ ವಾಯುದಾಳಿ ಬಗ್ಗೆ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ +ಹೈದರಾಬಾದ್‌,ಮೇ11-ಪಾಕ್‌ ಆಕ್ರಮಿತ ಬಾಲಕೊಟ್‌ ಮೇಲೆ ಭಾರತ ವಾಯುದಾಳಿ ನಡೆಸಿರುವ ಬಗ್ಗೆ ಯಾರಿಗೂ ಖಚಿತವಾದ ಮಾಹಿತಿ ಇಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. +ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ 2019ರಲ್ಲಿ ಉಗ್ರರು ಆರ್‌ಡಿಎಕ್ಸ್ ಬಾಂಬ್‌ ಬಳಸಿ 40 ಮಂದಿ ಸಿಆರ್‌ಪಿಎಫ್‌ ಯೋಧರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಭಾರತ ಪ್ರತಿಯಾಗಿ ಪಿಒಕೆಯಲ್ಲಿರುವ ಬಾಲಕೋಟ್‌ನಲ್ಲಿ ವಾಯು ದಾಳಿ ನಡೆಸಿ ಪ್ರತೀಕಾರ ತೀರಿಸಿಕೊಂಡಿತ್ತು. ಈ ದಾಳಿಯಲ್ಲಿ ಅನೇಕ ಉಗ್ರರು ಸಾವನ್ನಪ್ಪಿದ್ದರು. ಈ ಬಗ್ಗೆ ಕಾಂಗ್ರೆಸ್‌‍ ಸೇರಿದಂತೆ ಪ್ರತಿಪಕ್ಷಗಳು ಇದರ ಬಗ್ಗೆ ಅನುಮಾನವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದವು. +ಈ ದಾಳಿ ನಿಜವಾಗಿಯೂ ನಡೆದಿತ್ತೇ? ಎಷ್ಟು ಉಗ್ರರು ಸತ್ತಿದ್ದರು. ಅದಕ್ಕೆ ಸಾಕ್ಷಿ ಎಲ್ಲಿದೆ ಎಂಬ ಪ್ರಶ್ನೆಗಳನ್ನು ಮುಂದಿಡುತ್ತಲೇ ಬಂದಿದ್ದರು. ಇದೀಗ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಕೂಡ ದನಿಗೂಡಿಸಿದ್ದು, ಸಿಆರ್‌ಪಿಎಫ್‌ನ 40 ಸೈನಿಕರನ್ನು ಹತ್ಯೆಗೈದಿದ್ದಕ್ಕೆ ಪ್ರತಿಯಾಗಿ ಪುಲ್ವಾಮಾದಲ್ಲಿ ವಾಯುದಾಳಿ ನಡೆಸಲಾಗಿದೆ ಎಂದು ಹೇಳುತ್ತಾರೆ. ಇದರ ಬಗ್ಗೆ ಯಾರಿಗೂ ಖಚಿತವಾದ ಮಾಹಿತಿ ಇಲ್ಲ ಎಂದು ಅನುಮಾನವನ್ನು ಹೊರ ಹಾಕಿದ್ದಾರೆ. +ವಾಯುದಾಳಿ ಆದ ನಂತರ ಬಿಜೆಪಿ ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿತ್ತು. ಪ್ರಧಾನಿ ನರೇಂದ್ರಮೋದಿ ಅವರು ಪ್ರತಿಯೊಂದನ್ನು ರಾಜಕೀಯಗೊಳಿಸುವುದೇ ಅವರ ಉದ್ದೇಶವಾಗಿದೆ. +ಚುನಾವಣೆಯನ್ನು ಗೆಲ್ಲಲ್ಲು ಏನು ಬೇಕಾದರೂ ಮೋದಿ ಮತ್ತು ಅವರ ತಂಡ ಮಾಡುತ್ತದೆ. ಇದಕ್ಕೆ ಪುಲ್ವಾಮ ದಾಳಿ ಒಂದು ನಿದರ್ಶನ. ಸಿಆರ್‌ಪಿಎಫ್‌ ಯೋಧರ ಮೇಲೆ ಬಾಂಬ್‌ ಸ್ಪೋಟಕಗೊಂಡಾಗ ಕೇಂದ್ರದ ಗುಪ್ತಚರ ವಿಭಾಗ ಏನು ಮಾಡುತ್ತಿತ್ತು? ಇದು ಕೇಂದ್ರ ಸರ್ಕಾರದ ಅಧೀನದಲ್ಲಿದೆ ಅಲ್ಲವೆ? ಇದಕ್ಕೆ ಮೋದಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು. +ಪುಲ್ವಾಮ ದಾಳಿ ನಡೆದಿರುವುದರ ಬಗ್ಗೆಯೇ ಅನುಮಾನವಿದೆ. ಹೇಗೆ ನಡೆಯಿತು? ಯಾವಾಗ ನಡೆಯಿತು? ಯಾವ ಮಾಹಿತಿಯೂ ಇಲ್ಲ. ಯೋಧರನ್ನು ಬಾಂಬ್‌ ಸ್ಫೋಟಿಸಿ ಹತ್ಯೆ ಮಾಡುತ್ತಾರೆ ಎಂದರೆ ಆಂತರಿಕ ಭದ್ರತಾ ವಿಭಾಗ ಏನು ಮಾಡುತ್ತಿತ್ತು? 320 ಕೆಜಿ ಆರ್‌ಡಿಎಕ್‌್ಸ ಬಾಂಬ್‌ ಬಳಸಲಾಗಿದೆ ಎಂದು ಹೇಳಲಾಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಇವು ದೇಶದೊಳಗೆ ಬರಲು ಹೇಗೆ ಸಾಧ್ಯವಾಯಿತು? ಗುಪ್ತಚರ ವಿಭಾಗ, ಸಂಚಾರ ಮತ್ತು ವಿಶ್ಲೇಷಣೆ ವಿಭಾಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು. +ರಾಮಮಂದಿರ ವಿಷಯದಲ್ಲೂ ಬಿಜೆಪಿ ರಾಜಕೀಯ ಲಾಭ ಪಡೆದುಕೊಳ್ಳಲು ಹವಣಿಸುತ್ತಿದೆ. ನಾವು ಕೂಡ ರಾಮ ಭಕ್ತರೇ. ಮಂದಿರವನ್ನು ಕಟ್ಟಬೇಡಿ ಎಂದು ನಾವೇನು ಹೇಳಿದ್ದೇವಾ? ಎಂದು ರೇವಂತ್‌ ರೆಡ್ಡಿ ಪಿಎಂ ಮೋದಿಗೆ ಪ್ರಶ್ನೆ ಮಾಡಿದ್ದಾರೆ. \ No newline at end of file diff --git a/eesanje/url_47_102_11.txt b/eesanje/url_47_102_11.txt new file mode 100644 index 0000000000000000000000000000000000000000..b6b5169ff6cd7f5c89b1bd4a80707ffa59a5bb74 --- /dev/null +++ b/eesanje/url_47_102_11.txt @@ -0,0 +1,5 @@ +ದೆಹಲಿಯಲ್ಲಿ ಚಂಡಮಾರುತ, ಮಳೆಗೆ ಇಬ್ಬರು ಸಾವು, 23 ಮಂದಿಗೆ ಗಾಯ +ನವದೆಹಲಿ, ಮೇ 11-ತಡರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ಧೂಳಿನ ಬಿರುಗಾಳಿ ಬೀಸಿದ್ದರಿಂದ ಹಲವು ಪ್ರದೇಶಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು ಉರುಳಿಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ, +ಬಲವಾದ ಗಾಳಿ ಮಳೆಗೆ ಹೋರ್ಡಿಂಗ್‌ಗಳು ಕೂಡು ಕಿತ್ತು ಬಂದಿದ್ದು,ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. ದೆಹಲಿ ಅಗ್ನಿಶಾಮಕ ಠಾಣೆಗೆ 152 ಕರೆಗಳು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹಲವಡೆ ಮನೆಗಳಿಗೂ ಹಾನಿಯಾಗಿದ್ದು ಸಂಚಾರ ವ್ಯತ್ಯಯ ಉಂಟಾಗಿತ್ತು ಪ್ರತಿಕೂಲ ಹವಾಮಾನದ ಕಾರಣ ದೆಹಲಿ ವಿಮಾನ ನಿಲ್ದಾಣದಲ್ಲೂ ಕೂಡ ವಿಮಾನಗಳ ಸೇವೆ ವ್ಯತ್ಯಯವಾಗಿದ್ದು ಹಲವಾರು ವಿಮಾನಗಳನ್ನು ಬೇರೆಡಗೆ ತಿರುಗಿಸಲಾಗಿದೆ ಎಂದು ಹೇಳಿದರು. +ಗೋಡೆ ಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದರೆ,ಮರ ಬಿದ್ದು ಹಲವರು ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ಧೂಳಿನ ಬಿರುಗಾಳಿ ಭಾರಿ ಅವಾಂತರ ಸೃಷ್ಠಿಸಿದೆ.ಇಂದು ಬೆಳಿಗ್ಗೆ ಅಗ್ನಿಶಾಮಕ ಸಿಬ್ಬಂಧಿ ಹಾಗು ತುರ್ತು ಪರಿಹಾರ ತಂಡ ಕಾರ್ಯಾಚರಣೆ ಆರಂಭಿಸಿದೆ. \ No newline at end of file diff --git a/eesanje/url_47_102_12.txt b/eesanje/url_47_102_12.txt new file mode 100644 index 0000000000000000000000000000000000000000..cced9a0279d59dd906172d23eae1ec1df311c0cb --- /dev/null +++ b/eesanje/url_47_102_12.txt @@ -0,0 +1,5 @@ +ಬಿಹಾರ : ನೀಟ್‌‍-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 13 ಮಂದಿ ಬಂಧನ +ಪಾಟ್ನಾ, ಮೇ. 11-ಕಳೆದ ಮೇ 5 ರಂದು ಇಲ್ಲಿ ನಡೆದ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪರೀಕ್ಷಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ 13 ಜನರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. +ಪ್ರಶ್ನೆ ಪತ್ರಿಕೆ ಸೋರಿಕೆ ಕಾಗದ ಸೋರಿಕೆ ಬೆಳಕಿಗೆ ಬರುತ್ತಿದ್ದಂತೆ ತನಿಖೆಯನ್ನು ಸರ್ಕಾರ ಬಿಹಾರ ಪೊಲೀಸ್‌‍ನ ಆರ್ಥಿಕ ಅಪರಾಧಗಳ ಘಟಕಕ್ಕೆ (ಇಒಯು) ಹಸ್ತಾಂತರಿಸಲಾಗಿದೆ. ತನಿಖೆ ರಮಬಿಸುತ್ತಿದಂತೆ ಇದುವರೆಗೆ ನಾಲ್ವರು ಪರೀಕ್ಷಾರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಬಂಧಿತ ಆರೋಪಿಗಳಲ್ಲಿ ಒಬ್ಬರು ಬಿಹಾರದಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. +ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ಪ್ರಮುಖ ಆರೋಪಿ ವಿಚಾರಣೆ ನಡೆದಿದ್ದು ಈಗಾಗಲೇ ಆರೋಪಿಗಳಿಂದ ದೋಷಾರೋಪಣೆ ದಾಖಲೆಗಳು ಎಲೆಕ್ಟ್ರಾನಿಕ್‌ ಸಾಧನಗಳನ್ನು ವಶಪಡಿಸಿಕೊಳ್ಲಲಾಗಿದೆ. +ಇದುವರೆಗಿನ ತನಿಖೆಯಲ್ಲಿ ತಿಳಿದಿರುವುದೇನೆಂದರೆ ಮೇ 5 ರ ಪರೀಕ್ಷೆಯ ಮೊದಲು ಸುಮಾರು 35 ಆಕಾಂಕ್ಷಿಗಳಿಗೆ ಉತ್ತರ ಒದಗಿಸಲಾಗಿದೆ ಮತ್ತು ಇಂತದ್ದೇ ಪ್ರಶ್ನೆಗೆ ಇದೇ ಉತ್ತರ ಎಂದು ಪಾಠ ಮಾಡಲಾಗಿದೆ. ಘಟನೆ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ \ No newline at end of file diff --git a/eesanje/url_47_102_2.txt b/eesanje/url_47_102_2.txt new file mode 100644 index 0000000000000000000000000000000000000000..13df990178c35fa4f62ee142a57f87583b201d2f --- /dev/null +++ b/eesanje/url_47_102_2.txt @@ -0,0 +1,6 @@ +ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲು +ಹೈದರಾಬಾದ್,ಮೇ.12- ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಪುಷ್ಪ ಖ್ಯಾತಿಯ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ನಟ ಅಲ್ಲು ಅರ್ಜುನ್ ಮತ್ತು ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‍ಆರ್‍ಸಿಪಿ) ಶಾಸಕ ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ. +ರವಿಚಂದ್ರ ಅವರ ನಿವಾಸದಲ್ಲಿ ಯಾವುದೆ ಅನುಮತಿ ಪಡೆಯದೆ ಬೃಹತ್ ಸಾರ್ವಜನಿಕ ಸಭೆ ನಡೆಸಿದ ಆರೋಪದ ಮೇಲೆ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಸಕ ರವಿಚಂದ್ರ ರೆಡ್ಡಿ ಅವರು ಈ ಸಭೆಗೆ ಅನುಮತಿ ಪಡೆಯದೇ ಅಲ್ಲು ಅರ್ಜುನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ ನಟ ಅಲ್ಲು ಅರ್ಜುನ್ ಮತ್ತು ರವಿಚಂದ್ರ ಕಿಶೋರ್ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. +ಆಂಧ್ರಪ್ರದೇಶದ ನಂದ್ಯಾಲ ಕ್ಷೇತ್ರದ ಚುನಾವಣಾ ಉಸ್ತುವಾರಿಗಾಗಿ ನಿಯೋಜಿಸಲಾದ ನಂದ್ಯಾಲ ಗ್ರಾಮಾಂತರದ ಉಪ ತಹಸೀಲ್ದಾರ್ ಪಿ ರಾಮಚಂದ್ರರಾವ್ ಅವರು ಪ್ರಕರಣ ದಾಖಲಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ನಾಳೆ ನಡೆಯಲಿರುವ ಮತದಾನಕ್ಕೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಜಾರಿಯಲ್ಲಿರುವ ಸೆಕ್ಷನ್ 144 ಅನ್ನು ಉಲ್ಲಂಸಿದ್ದಕ್ಕಾಗಿ ದಾಖಲಿಸಲಾಗಿದೆ. ಅಲ್ಲು ಅರ್ಜುನ್ ಜೊತೆಗೆ, ಅವರ ಪತ್ನಿ ಸ್ನೇಹಾ ಕೂಡ ಬಂದಿದ್ದರು. ಸ್ಟಾರ್ ಹೀರೋ ತನ್ನ ಸ್ನೇಹಿತನಿಗಾಗಿ ಪ್ರಚಾರ ಮಾಡಿದ್ದು ನೋಡಿ ಅಭಿಮಾನಿಗಳು ಸೂಪರ್ ಥ್ರಿಲ್ ಆಗಿದ್ದಾರೆ. +ಅದರಲ್ಲೂ ತಮ್ಮ ಹತ್ತಿರದ ಸಂಬಂಧಿಯಾಗಿರುವ ಪವನ್ ಕಲ್ಯಾಣ್ ನೇತೃತ್ವದ ಪಕ್ಷದ ವಿರುದ್ದ ಮತ ಪ್ರಚಾರ ನಡೆಸಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಲ್ಲು ಅರ್ಜುನ್ ಅವರು ನನ್ನೆ ಸ್ನೇಹಿತರಿಗೆ ಸಹಾಯ ಮಾಡಲು ನಂದ್ಯಾಲಕ್ಕೆ ಭೇಟಿ ನೀಡಿದ್ದೇನೆ ಮತ್ತು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ನಾನೊಬ್ಬನೇ ಇಲ್ಲಿಗೆ ಬಂದಿದ್ದೇನೆ. ನನ್ನ ಸ್ನೇಹಿತರಲ್ಲಿ ಅವರು ಯಾವುದೇ ಕ್ಷೇತ್ರದಲ್ಲಿದ್ದರೂ ಅವರಿಗೆ ನನ್ನ ಸಹಾಯ ಬೇಕಾದರೆ ನಾನು ಅವರಿಗೆ ಸಹಾಯ ಮಾಡುತ್ತೇನೆ. ಇದು ನಾನು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತೇನೆ ಎಂದು ಅರ್ಥವಲ್ಲ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ. \ No newline at end of file diff --git a/eesanje/url_47_102_3.txt b/eesanje/url_47_102_3.txt new file mode 100644 index 0000000000000000000000000000000000000000..47394e86f13196772db54574764e1fd233a2b15a --- /dev/null +++ b/eesanje/url_47_102_3.txt @@ -0,0 +1,5 @@ +ಮೋದಿ ನಾಯಕತ್ವಕ್ಕೆ ನಾವೆಲ್ಲಾ ಶರಣು; ಯೋಗಿ ಆದಿತ್ಯನಾಥ್‌ +ಲಕ್ನೋ,ಮೇ.12- ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಪ್ರಧಾನಿ ಮೋದಿ ಅವರ 75 ನೇ ವಯಸ್ಸಿನಲ್ಲಿ ನಿವೃತ್ತಿ ಹೇಳಿಕೆಗೆ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ಲೋಕಸಭೆ ಚುನಾವಣೆಯಲ್ಲಿ ತಮ್ಮ ಸೋಲು ತಿಳಿದ ಹತಾಶ ಪ್ರತಿಪಕ್ಷಗಳು ವ್ಯರ್ಥ ಪ್ರಯತ್ನಗಳನ್ನು ಮಾಡುತ್ತಿವೆ ಎಂದು ದೂರಿದ್ದಾರೆ. +ಈ ಹಿಂದೆ, ಕೇಜ್ರಿವಾಲ್‌ ಅವರು ಮುಂದಿನ ವರ್ಷ 75 ನೇ ವರ್ಷಕ್ಕೆ ಕಾಲಿಟ್ಟ ನಂತರ ಪ್ರಧಾನಿ ಮೋದಿ ಗೃಹ ಸಚಿವ ಅಮಿತ್‌ ಶಾಗೆ ದಾರಿ ಮಾಡಿಕೊಡುತ್ತಾರೆ ಎಂದು ಹೇಳಿದ್ದರು ಮತ್ತು ಸಾರ್ವತ್ರಿಕ ಚುನಾವಣೆಯ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಕಡೆಗಣಿಸಲಾಗುವುದು ಎಂದಿದ್ದರು. +ಎಕ್‌್ಸನಲ್ಲಿನ ತಮ್ಮ ಪೋಸ್ಟ್‌ನಲ್ಲಿ, ಸಿಎಂ ಯೋಗಿ, ಭಾರತದ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರು ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಪಡೆಯುತ್ತಿರುವ ಅಪಾರ ಜನಬೆಂಬಲದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಅಪಪ್ರಚಾರದಲ್ಲಿ ಮುಳುಗಿವೆ. ಲೋಕಸಭೆ ಚುನಾವಣೆಯಲ್ಲಿ ಸೋಲು ಖಚಿತ ಎಂದು ಗೊತ್ತಿದ್ದೂ ಹತಾಶರಾಗಿರುವ ಪ್ರತಿಪಕ್ಷಗಳು ಮೋದಿಯವರ ವಯೋಮಾನದ ನೆಪ ಹೇಳಿಕೊಂಡು ಹುಸಿ ದಾಳಿ ನಡೆಸಲು ವಿಫಲ ಯತ್ನ ನಡೆಸುತ್ತಿವೆ ಎಂದು ಬರೆದುಕೊಂಡಿದ್ದಾರೆ. ಇದಲ್ಲದೆ, ಮೋದಿ ಜಿ ಅವರ ಪ್ರತಿ ಕ್ಷಣವೂ ಭಾರತಮಾತೆಯನ್ನು ಅಂತಿಮ ವೈಭವಕ್ಕೆ ಕೊಂಡೊಯ್ಯಲು ಸಮರ್ಪಿತವಾಗಿದೆ ಎಂದು ಭಾರತದ ಜನರಿಗೆ ತಿಳಿದಿದೆ ಎಂದು ಅವರು ಪ್ರತಿಪಾದಿಸಿದರು. +ಗೌರವಾನ್ವಿತ ಪ್ರಧಾನಿ ಮೋದಿ ಜಿಯವರ ಯಶಸ್ವಿ ನಾಯಕತ್ವದಲ್ಲಿ, ವಿಕಸಿತ್‌ ಭಾರತ್‌, ಆತನಿರ್ಭರ್‌ ಭಾರತ್‌ ಮತ್ತು ಏಕ್‌ ಭಾರತ್‌‍-ಶ್ರೇಷ್ಠ ಭಾರತದ ಪರಿಕಲ್ಪನೆಗಳು ಸಾಕಾರಗೊಳ್ಳುತ್ತಿವೆ. ಖಂಡಿತವಾಗಿಯೂ, ಮೋದಿ ಜಿಯವರ ಮೂರನೇ ಅವಧಿಯಲ್ಲಿ, ಭಾರತವು ಹೊಸ ಎತ್ತರವನ್ನು ಮುಟ್ಟಲಿದೆ. ಜಾಗತಿಕ ಸೂಪರ್‌ ಪವರ್‌ ಮೋದಿ ಜೀ 140 ಕೋಟಿ ಭಾರತೀಯರ ಸ್ವೀಕಾರಾರ್ಹ ನಾಯಕ ಮತ್ತು ನಾವು ಮೋದಿ ಜಿ ಅವರ ಕುಟುಂಬದ ಸದಸ್ಯರು ಎಂದು ನಾವು ಹೆಮ್ಮೆ ಪಡುತ್ತೇವೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_102_4.txt b/eesanje/url_47_102_4.txt new file mode 100644 index 0000000000000000000000000000000000000000..682db4be22473e07ae16a215b5966572e42f0017 --- /dev/null +++ b/eesanje/url_47_102_4.txt @@ -0,0 +1,11 @@ +ಸೋಮವಾರ 4ನೇ ಹಂತದ ಚುನಾವಣೆ, 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ +ನವದೆಹಲಿ,ಮೇ11-ದೇಶದ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳ 96 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದ್ದು, ಇದೇ ಸಮಯದಲ್ಲಿ ಆಂಧ್ರಪ್ರದೇಶ ವಿಧಾನಸಭೆಗೂ ಚುನಾವಣೆ ನಡೆಯಲಿದೆ. +ನಾಲ್ಕನೇ ಹಂತದ ಲೋಕಸಭೆ ಹಾಗೂ ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 13ರಂದು ಆಂಧ್ರಪ್ರದೇಶದ 25, ತೆಲಂಗಾಣದ 17 ಸೇರಿ 43 ಕ್ಷೇತ್ರಗಳಿಗೆ ಒಂದೇ ಅವಧಿಗೆ ಚುನಾವಣೆ ನಡೆಯಲಿದೆ. +ಬಿಹಾರದ 40 ಕ್ಷೇತ್ರಗಳ ಪೈಕಿ 5, ಜಾರ್ಖಂಡ್‌ನ 14 ಕ್ಷೇತ್ರಗಳ ಪೈಕಿ 4, ಮಧ್ಯಪ್ರದೇಶದ 29 ಕ್ಷೇತ್ರಗಳ ಪೈಕಿ 8, ಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ 11, ಒಡಿಶಾದ 21 ಕ್ಷೇತ್ರಗಳ ಪೈಕಿ 4, ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 13, ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ 8, ಜಮ್ಮು ಕಾಶ್ಮೀರದ 5 ಕ್ಷೇತ್ರಗಳ ಪೈಕಿ 1 ಸೇರಿ ಒಟ್ಟು 96 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ಉತ್ತರಪ್ರದೇಶದ ಕನೂಜ್‌ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌, ಪಶ್ಚಿಮ ಬಂಗಾಳದ ಕೃಷ್ಣಾನಗರದಲ್ಲಿ ಟಿಎಂಸಿಯಿಂದ ಸಂಸದೆ ಮಹು ಮೋಹಿತ್ರಾ, ಬಿಹಾರದ ಬೇಗುಸರಾಯ್‌ ಕ್ಷೇತ್ರದಿಂದ ಗಿರಿರಾಜ ಸಿಂಗ್‌ ಬಿಜೆಪಿಯಿಂದ, ಆಂಧ್ರಪ್ರದೇಶದ ಕಡಪದಲ್ಲಿ ಕಾಂಗ್ರೆಸ್‌‍ನಿಂದ, ಹಾಲಿ ಮುಖ್ಯಮಂತ್ರಿ ವೈ.ಎಸ್‌‍.ಜಗನ್‌ ಮೋಹನ್‌ ರೆಡ್ಡಿ ಅವರ ಸಹೋದರಿ ವೈ.ಎಸ್‌‍.ಶರ್ಮಿಳಾ, ಪಶ್ಚಿಮ ಬಂಗಾಳದ ಅಸ್ನೋಲ್‌ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಿರಿಯ ನಟರೂ ಆದ ಶತ್ರುಘ್ನ ಸಿನ್ಹಾ , ತೆಲಂಗಾಣದ ಹೈದರಾಬಾದ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಧವಿ ಲತಾ ಕಣದಲ್ಲಿರುವ ಪ್ರಮುಖರಾಗಿದ್ದಾರೆ. +ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಏ.25ರವರೆಗೆ 4,264 ಉಮೇದುವಾರಿಕೆಗಳು ಸಲ್ಲಿಕೆಯಾಗಿದ್ದವು. ಪರಿಶೀಲನೆ ಬಳಿಕ 1970 ನಾಮಪತ್ರಗಳು ಊರ್ಜಿತಗೊಂಡಿದ್ದು, 1717 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. +ಜಿದ್ದಾಜಿದ್ದಿನ ಕಣ:ಲೋಕಸಭೆಯ ಜೊತೆಗೆ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದರಿಂದ ಆಂಧ್ರಪ್ರದೇಶ ಜಿದ್ದಾಜಿದ್ದಿನ ಕಣವಾಗಿದೆ. 175 ವಿಧಾನಸಭಾ ಕ್ಷೇತ್ರಗಳಿಗೆ ಏಕಕಾಲಕ್ಕೆ ಒಂದೇ ಅವಧಿಗೆ ಚುನಾವಣೆ ನಡೆಯುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಮುಖವಾಗಿರುವ ತೆಲಂಗಾಣ, ಆಂಧ್ರಪ್ರದೇಶದಲ್ಲಿ ತೆಲುಗು ನಾಡಿನ ಒಲವು ಗಳಿಸಬೇಕು ಎಂಬ ಕಾರಣಕ್ಕಾಗಿ ಪ್ರಾದೇಶಿಕ ಪಕ್ಷಗಳೊಂದಿಗೆ ರಾಷ್ಟ್ರೀಯ ಪಕ್ಷಗಳು ಜಿದ್ದಿಗೆ ಬಿದ್ದಿವೆ. +ವೈಎಸ್‌‍ಆರ್‌ ಕಾಂಗ್ರೆಸ್‌‍ನ ಆಡಳಿತವನ್ನು ಹತ್ತಿಕ್ಕಿ ವಿಧಾನಸಭೆಯನ್ನು ಗೆಲ್ಲಲು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತಾಲಿವುಡ್‌ನ ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿವೆ. +ಕಾಂಗ್ರೆಸ್‌‍ ಏಕಾಂಗಿಯಾಗಿ ಸ್ಪರ್ಧೆ ನಡೆಸಿದೆ. ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಷಾ ತಮ ಮಿತ್ರಕೂಟದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಕಾಂಗ್ರೆಸ್‌‍ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. +ಕರ್ನಾಟಕದಿಂದ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್‌ ಅವರು ಆಂಧ್ರಪ್ರದೇಶಕ್ಕೆ ತೆರಳಿ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದಾರೆ. +4ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ರಾಜ್ಯಗಳ ಬಹುತೇಕ ಕ್ಷೇತ್ರಗಳು ಜನಾಭಿಪ್ರಾಯ ಪಡೆಯಲಿವೆ. ಹೀಗಾಗಿ ಸೋಮವಾರ ನಡೆಯುವ ಮತದಾನ ತೀವ್ರ ಕುತೂಹಲ ಕೆರಳಿಸಿವೆ. \ No newline at end of file diff --git a/eesanje/url_47_102_5.txt b/eesanje/url_47_102_5.txt new file mode 100644 index 0000000000000000000000000000000000000000..88f82f40b7d1424c9a000b682bec88ea54bfe66e --- /dev/null +++ b/eesanje/url_47_102_5.txt @@ -0,0 +1,4 @@ +ಹನುಮಾನ್‌ ದೇವಸ್ಥಾನದಲ್ಲಿ ಕೇಜ್ರಿವಾಲ್‌ ಪ್ರಾರ್ಥನೆ +ನವದೆಹಲಿ, ಮೇ 11 –ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಮತ್ತು ಭಗವಂತ್‌ ಮಾನ್‌ ಅವರೊಂದಿಗೆ ಕೇಂದ್ರ ದೆಹಲಿಯ ಕನ್ನಾಟ್‌ ಪ್ಲೇಸ್‌‍ನಲ್ಲಿರುವ ಹನುಮಾನ್‌ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. +ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ, ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್‌ ತಮ್ಮ ನಮನ ಸಲ್ಲಿಸಲು ಐತಿಹಾಸಿಕ ದೇವಾಲಯವನ್ನು ತಲುಪಿದರು. +ಕೇಜ್ರಿವಾಲ್‌ ಅವರೊಂದಿಗೆ ದೆಹಲಿ ಆರೋಗ್ಯ ಸಚಿವ ಸೌರಭ್‌ ಭಾರದ್ವಾಜ್‌ ಸೇರಿದಂತೆ ಎಎಪಿ ನಾಯಕರು ಇದ್ದರು.ಶುಕ್ರವಾರ, ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರಬಂದ ಹನುಮಂತನಿಗೆ ಮುಖ್ಯಮಂತ್ರಿ ಪ್ರಾರ್ಥನೆ ಸಲ್ಲಿಸಿದರು. \ No newline at end of file diff --git a/eesanje/url_47_102_6.txt b/eesanje/url_47_102_6.txt new file mode 100644 index 0000000000000000000000000000000000000000..0003d1b42dbedb798c9e142bd5e43fd7b00a4dbc --- /dev/null +++ b/eesanje/url_47_102_6.txt @@ -0,0 +1,10 @@ +ಉತ್ತರಪ್ರದೇಶದಲ್ಲಿ ಕಾರು ಅಪಘಾತ : ಮದುವೆ ವರ ಸೇರಿ ನಾಲ್ವರ ಸಾವು +ಝಾನ್ಸಿ (ಯುಪಿ), ಮೇ 11-ಇಲ್ಲಿನ ಪರಿಚ್ಚಾ ಪ್ರದೇಶದ ಬಳಿ ಕಾರು ಮತ್ತು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ವರ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ವರನ ಜೊತೆ ಆರು ಮಂದಿ ಕಾರಿನಲ್ಲಿ ಮದುವೆ ಮಂಟಪ್ಪಕ್ಕೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಈ ಅಪಘಾತ ಸಂಭವಿಸಿದೆ. +ಬಿಲಾಟಿ ಗ್ರಾಮದಿಂದ ಛಪ್ರಾ ಗ್ರಾಮಕ್ಕೆ ಮದುವೆಗೆ ಬರುತ್ತಿದ್ದಾಗ ಹಿಂದಿನಿಂದ ಕಾರಿಗೆ ಟ್ರಕ್‌ಡಿಕ್ಕಿ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್‌ ತಿಳಿಸಿದ್ದಾರೆ. +ಅಪಘಾತದ ನಂತರ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರು. ಆದರೆ, ಆ ವೇಳೆಗಾಗಲೇ ವರ ಸೇರಿದಂತೆ ನಾಲ್ವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು ಎಂದು ಮಾಹಿತಿ ನೀಡಿದ್ದಾರೆ. +ಮೃತರನ್ನು ಆಕಾಶ್‌ ಅಹಿರ್ವಾರ್‌ (25), ಅವರ ಸಹೋದರ ಆಶಿಶ್‌ (20), ಸೋದರಳಿಯ ಮಯಾಂಕ್‌ (7) ಮತ್ತು ಕಾರು ಚಾಲಕ ಜೈಕಾರನ್‌ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಸಂಬಂಧಿಕರಾದ ರವಿ ಅಹಿರ್ವಾರ್‌ ಮತ್ತು ರಮೇಶ್‌ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. +ಅಪಘಾತದ ನಂತರ ಟ್ರಕ್‌ ಚಾಲಕ ಸ್ಥಳದಿಂದ ಓಡಿಹೋಗಿದ್ದು ಆತನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ಹೇಳಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರು. ಆದರೆ, ಆ ವೇಳೆಗಾಗಲೇ ವರ ಸೇರಿದಂತೆ ನಾಲ್ವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ. +ಮೃತರನ್ನು ಆಕಾಶ್‌ ಅಹಿರ್ವಾರ್‌ (25), ಅವರ ಸಹೋದರ ಆಶಿಶ್‌ (20), ಸೋದರಳಿಯ ಮಯಾಂಕ್‌ (7) ಮತ್ತು ಕಾರು ಚಾಲಕ ಜೈಕಾರನ್‌ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಸಂಬಂಧಿಕರಾದ ರವಿ ಅಹಿರ್ವಾರ್‌ ಮತ್ತು ರಮೇಶ್‌ ಗಾಯಗೊಂಡಿದ್ದು, ಅವರನ್ನು ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರ ಸ್ಥಳದಿಂದ ಓಡಿಹೋದ ಟ್ರಕ್‌ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ಹೇಳಿದರು. +ಶುಕ್ರವಾರ ರಾತ್ರಿ ವರ ಸೇರಿದಂತೆ ಆರು ಮಂದಿ ಕಾರಿನಲ್ಲಿ ಮದುವೆ ಸ್ಥಳಕ್ಕೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬಿಲಾಟಿ ಗ್ರಾಮದಿಂದ ಛಪ್ರಾ ಗ್ರಾಮಕ್ಕೆ ಮದುವೆ ಮೆರವಣಿಗೆ ಬರುತ್ತಿದ್ದಾಗ ಹಿಂದಿನಿಂದ ಟ್ರಕ್‌ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್‌ ತಿಳಿಸಿದ್ದಾರೆ. +ಅಪಘಾತದ ನಂತರ ಕಾರಿನ ಸಿಎನ್‌ಜಿ ಟ್ಯಾಂಕ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಿದರು. ಆದರೆ, ಆ ವೇಳೆಗಾಗಲೇ ವರ ಸೇರಿದಂತೆ ನಾಲ್ವರು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದರು ಎಂದು ಅವರು ತಿಳಿಸಿದ್ದಾರೆ. +ಮೃತರನ್ನು ಆಕಾಶ್‌ ಅಹಿರ್ವಾರ್‌ (25), ಅವರ ಸಹೋದರ ಆಶಿಶ್‌ (20), ಸೋದರಳಿಯ ಮಯಾಂಕ್‌ (7) ಮತ್ತು ಕಾರು ಚಾಲಕ ಜೈಕಾರನ್‌ ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಸಂಬಂಧಿಕರಾದ ರವಿ ಅಹಿರ್ವಾರ್‌ ಮತ್ತು ರಮೇಶ್‌ ಗಾಯಗೊಂಡಿದ್ದು, ಅವರನ್ನು ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸ್ಥಳೀಯ ಆಸ್ಪತ್ರೆಗೆ.ಅಪಘಾತದ ನಂತರ ಸ್ಥಳದಿಂದ ಓಡಿಹೋದ ಟ್ರಕ್‌ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್ಪಿ ಹೇಳಿದರು. \ No newline at end of file diff --git a/eesanje/url_47_102_7.txt b/eesanje/url_47_102_7.txt new file mode 100644 index 0000000000000000000000000000000000000000..817758949c911de21d76435e2c25a6f60a008295 --- /dev/null +++ b/eesanje/url_47_102_7.txt @@ -0,0 +1,5 @@ +30ಲಕ್ಷ ರೂ. ಹಣಕ್ಕಾಗಿ ತಾಯಿಯನ್ನೇ ಕೊಂದು ಸುಟ್ಟು ಹಾಕಿದ ದತ್ತು ಪುತ್ರ +ಭೂಪಾಲ್‌,ಮೇ11-ತಾಯಿ ಬ್ಯಾಂಕ್‌ನಲ್ಲಿಟ್ಟಿದ್ದ 30 ಲಕ್ಷ ರೂ.ಗಳಿಗಾಗಿ ದತ್ತು ಮಗನೇ ಆಕೆಯನ್ನು ಕೊಂದು ಬಾತ್‌ರೂಮ್‌ನಲ್ಲಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶ ಶಿಯೋಪುರ್‌ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉಷಾ(65) ಕೊಲೆಯಾದ ತಾಯಿ. ದೀಪಕ್‌ ಪಚೌರಿ(24) ಕೊಲೆ ಮಾಡಿರುವ ಮಗ. +ಬ್ಯಾಂಕ್‌ನಲ್ಲಿ ಉಷಾ ಅವರು ತನ್ನ ಬ್ಯಾಂಕ್‌ನ ಸ್ಥಿರ ಖಾತೆಯಲ್ಲಿ 30 ಲಕ್ಷ ರೂಗಳನ್ನು ಠೇವಣಿ ಇಟ್ಟಿದ್ದರು. ಈ ಹಣಕ್ಕಾಗಿ ಆಕೆಯನ್ನು ಕೊಲೆ ಮಾಡಿದ ದತ್ತುಪುತ್ರ ದೀಪಕ್‌, ಏನೂ ತಿಳಿಯದವನಂತೆ ಕೊತ್ವಾಲಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಅಭಿಷೇಕ್‌ ಆನಂದ್‌ ತಿಳಿಸಿದ್ದಾರೆ. +ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ, ಆತನ ಸಂಬಂಧಿಕರು ಮತ್ತು ನೆರೆಹೊರೆಯವರ ವಿಚಾರಣೆ ನಡೆಸಲಾಗಿತ್ತು. ಯಾವುದೆ ಸುಳಿವು ಸಿಕ್ಕಿರಲಿಲ್ಲ.ಈ ನಡುವೆ ಆರೋಪಿ ದೀಪಕ್‌ ವ್ಯತಿರಿಕ್ತ ಹೇಳಿಕೆಗಳನ್ನು ನೀಡಲಾರಂಭಿಸಿದಾಗ ಅನುಮಾನಗೊಂಡ ಪೊಲೀಸರು, ವಶಕ್ಕೆ ವಿಚಾರಣೆ ನಡೆಸಿದಾಗ, ಷೇರು ಮಾರುಕಟ್ಟೆಯಲ್ಲಿ 15 ಲಕ್ಷ ರೂ. ಕಳೆದುಕೊಂಡಿದ್ದು, ಹಣದ ಅಗತ್ಯವಿತ್ತು. ತನ್ನ ತಾಯಿ ಅವರ ಖಾತೆಯಲ್ಲಿ 30 ಲಕ್ಷ ಫಿಕ್ಸೆಡ್‌ ಡೆಪಾಸಿಟ್‌ ಮಾಡಿದ್ದರು. ಅದರಲ್ಲಿ ನನ್ನನ್ನು ನಾಮಿನಿ ಮಾಡಿದ್ದರು. ಹೀಗಾಗಿ ಅವರನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. +ಆರೋಪಿಯು ನೀಡಿದ ಮಾಹಿತಿ ಮೇರೆಗೆ ಮನೆಯ ಸ್ನಾನಗೃಹದಲ್ಲೇ ರೂಮ್‌ ಕೊರೆದಿರುವುದನ್ನು ಪೊಲೀಸ್‌‍ ತಂಡ ಪತ್ತೆ ಹಚ್ಚಿ, ಪ್ಲಾಸ್ಟರ್‌ ತೆಗೆದಾಗ ಮಹಿಳೆಯ ಶವ ಪತ್ತೆಯಾಗಿದೆ. ಸಂತ್ರಸ್ತೆ ಮತ್ತು ಆಕೆಯ ಪತಿ ಭುವೇಂದ್ರ ಪಚೌರಿ 23 ವರ್ಷಗಳ ಹಿಂದೆ ದೀಪಕ್‌ ಅನ್ನು ಅನಾಥಾಶ್ರಮದಿಂದ ದತ್ತು ಪಡೆದಿದ್ದರು ಎಂದು ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಅಭಿಷೇಕ್‌ ಆನಂದ್‌ ತಿಳಿಸಿದ್ದಾರೆ. \ No newline at end of file diff --git a/eesanje/url_47_102_8.txt b/eesanje/url_47_102_8.txt new file mode 100644 index 0000000000000000000000000000000000000000..b9a3f15cf3ef74ce4da1d502dce50fb14565efad --- /dev/null +++ b/eesanje/url_47_102_8.txt @@ -0,0 +1,5 @@ +ಕಾಂಗ್ರೆಸ್‌‍ 50 ಸ್ಥಾನಗಳನ್ನೂ ಗೆಲ್ಲಲ್ಲ : ಪ್ರಧಾನಿ ಮೋದಿ +ನವದೆಹಲಿ, ಮೇ 11-ಮತ್ತೆ ಕಾಂಗ್ರೆಸ್‌‍ ಪ್ರತಿಪಕ್ಷದ ಸ್ಥಾನದ ಅರ್ಹತೆ ಪಡೆಯುವುದಿಲ್ಲ. 50 ಸ್ಥಾನವನ್ನೂ ಗೆಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಗುಡುಗಿದ್ದಾರೆ. ಒಡಿಶಾದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಜನತೆ ಈಗಾಗಲೇ ಬಿಜೆಪಿಯ ಅಭಿವೃದ್ಧಿ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‌‍ನ ಯಾವುದೇ ಪೊಳ್ಳು ಆಶ್ವಾಸನೆಗಳಿಗೆ ಕಿವಿಗೊಡದೆ ದೇಶ ಕಟ್ಟುವ ಕಾಯಕಕ್ಕೆ ಕೈ ಜೋಡಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಅವರು ತಿಳಿಸಿದ್ದಾರೆ. ತುಷ್ಟೀಕರಣ ರಾಜಕಾರಣದಿಂದ ಮತ್ತು ದೇಶ ಒಡೆಯುವ ಕಾಯಕದಲ್ಲಿ ಈಗ ವಿರೋಧ ಪಕ್ಷಗಳು ಹುನ್ನಾರ ನಡೆಸುತ್ತಿವೆ.ಮೋದಿಯನ್ನು ಹೇಗಾದರೂ ಮಾಡಿ ಮಣಿಸಬೇಕು ಎಂಬ ತವಕದಲ್ಲಿ ಏನೆಲ್ಲಾ ಮಾಡಬೇಕೋ ಅದನ್ನು ನಡೆಸುತ್ತಿದೆ. ಆದರೆ, ದೇಶದ ಜನತೆ ನನ್ನ ಪರವಿದ್ದಾರೆ ಎಂದು ಅವರು ಹೇಳಿದ್ದಾರೆ. +ಭಾರತದ ಶಕ್ತಿಯನ್ನು ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಪೋಕ್ರಾನ್‌ ಅಣು ಪರೀಕ್ಷೆ ನಡೆಸುವ ಮೂಲಕ ಸಾಬೀತುಪಡಿಸಿದ್ದರು. ಅದಕ್ಕೆ ಈಗ 26 ವರ್ಷ ಘಟಿಸಿದೆ. 500 ವರ್ಷಗಳ ಕಾಲ ಕಾದು ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿದೆ. ಇದು ಬಹಳಷ್ಟು ಭಾರತೀಯರ ಕನಸನ್ನು ನನಸು ಮಾಡಿದೆ ಎಂದು ತಿಳಿಸಿದರು. +ಒಡಿಶಾದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸುತ್ತಿದೆ. ಹೊಸ ಇತಿಹಾಸ ಸೃಷ್ಟಿಯಾಗಲಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಡಬಲ್‌ ಇಂಜಿನ್‌ ಸರ್ಕಾರ ಅಸ್ತಿತ್ವದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಲಿದೆ ಎಂದು ಹೇಳಿದರು. \ No newline at end of file diff --git a/eesanje/url_47_102_9.txt b/eesanje/url_47_102_9.txt new file mode 100644 index 0000000000000000000000000000000000000000..27e60f04b932ebda175252cc7a6866c01301bcb0 --- /dev/null +++ b/eesanje/url_47_102_9.txt @@ -0,0 +1,9 @@ +ಓವೈಸಿ ಸಹೋದರರಿಗೆ ನವನೀತ್‌ ರಾಣಾ ಸವಾಲ್ +ಮುಂಬೈ, ಮೇ11-ದೇಶದ ಮೂಲೆ ಮೂಲೆಯಲ್ಲೂ ಶ್ರೀರಾಮನ ಭಕ್ತರು ಇದ್ದಾರೆ. ತಾಕತ್ತಿದ್ದರೆ ಅಸಾದುದ್ದೀನ್‌ ಓವೈಸಿ ಸಹೋದರ ನಮನ್ನು ತಡೆದು ನೋಡಲಿ ಎಂದು ಬಿಜೆಪಿ ಫೈಯರ್‌ ಬ್ರ್ಯಾಂಡ್‌ ನಾಯಕಿ ನವನೀತ್‌ ರಾಣಾ ಬಹಿರಂಗ ಸವಾಲು ಹಾಕಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಸಹೋದರನಾಗಿರುವ ಅಕ್ಬರ್‌ ಉದ್ದೀನ್‌ ಓವೈಸಿ ನಮ್ಮ ಬಳಿ ಪಿರಂಗಿಗಿಗೆ ಎಂದು ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಣಾ, ಅಂತಹ ಫಿರಂಗಿಗಳನ್ನು ತನ್ನ ಮನೆಯ ಹೊರಗೆ ಅಲಂಕಾರಕ್ಕಾಗಿ ಇಡಲಾಗಿದೆ ಎಂದು ಹೇಳಿದರು. +ತಾನು ಸೈನಿಕನ ಮಗಳು ಎಂದು ಪ್ರತಿಪಾದಿಸಿದ ಅವರು, ನಾವು ಅಲಂಕಾರಕ್ಕಾಗಿ ನಾವು ಫಿರಂಗಿಗಳನ್ನು ಇಡುತ್ತೇವೆ … ಓವೈಸಿ ಅವರು ತಮ್ಮ ಸಹೋದರನನ್ನು ಹಿಡಿತದಲ್ಲಿಟ್ಟಿದ್ದಾರೆ ಎಂದು ಹೇಳುತ್ತಾರೆ. ಅದು ಒಳ್ಳೆಯದು, ಇಲ್ಲದಿದ್ದರೆ ರಾಮಭಕ್ತರು ಮತ್ತು ಮೋದಿ ಜಿ ಸಿಂಹಗಳು ಅಡ್ಡಲಾಗಿರುವ ಪ್ರತಿಯೊಂದು ರಸ್ತೆಯಲ್ಲಿಯೂ ತಿರುಗಾಡುತ್ತಿವೆ. ನಾನು ಶೀಘ್ರದಲ್ಲೇ ಹೈದರಾಬಾದ್‌ಗೆ ಬರುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. +ನಾನು ಚೋಟ್ಟೆ (ಅಕ್ಬರುದ್ದೀನ್‌‍) ನಿಲ್ಲಿಸಿದ್ದೇನೆ. ಚೋಟ್ಟೆ ಯಾರೆಂದು ನಿಮಗೆ ತಿಳಿದಿಲ್ಲ. ಅವನು ಒಬ್ಬ ಕ್ಯಾನನ್‌‍. ಸಾಲರ್‌ ಮಗ. ನಿನಗೆ ಏನು ಬೇಕು? ನಾನು ಅವನನ್ನು ಸಡಿಲವಾಗಿ ಕತ್ತರಿಸಬೇಕೇ? ಎಂದು ಪ್ರಶ್ನಿಸಿದ್ದಾರೆ. +ಬಿಜೆಪಿಯ ಹೈದರಾಬಾದ್‌ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಪರ ಪ್ರಚಾರ ನಡೆಸುತ್ತಿದ್ದ ರಾಣಾ, ಪೊಲೀಸರನ್ನು 15 ಸೆಕೆಂಡುಗಳ ಕಾಲ ಕರ್ತವ್ಯಯದಿಂದ ತೆಗೆದುಹಾಕಿದರೆ, ಓವೈಸಿ ಸಹೋದರರಿಗೆ ಅವರು ಎಲ್ಲಿಂದ ಬಂದರು ಮತ್ತು ಎಲ್ಲಿಗೆ ಹೋದರು ಎಂದು ತಿಳಿಯುವುದಿಲ್ಲ ಎಂದು ಹೇಳಿದ ಕೆಲವೇ ದಿನಗಳಲ್ಲಿ ಈ ಮಾತಿನ ಸಮರ ನಡೆಯಿತು. +ಎಐಎಂಐಎಂ ಶಾಸಕ ಅಕ್ಬರುದ್ದೀನ್‌ ಓವೈಸಿಯ 2013ರ ವಿವಾದಾತ್ಮಕ ಭಾಷಣಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕಿ, ಪೊಲೀಸರನ್ನು ತೆಗೆದುಹಾಕಿದರೆ ದೇಶದಲ್ಲಿ ಹಿಂದೂ-ಮುಸ್ಲಿಂ ಅನುಪಾತವನ್ನು ಸಮತೋಲನಗೊಳಿಸಲು ಕೇವಲ 15 ನಿಮಿಷಗಳು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. +15 ನಿಮಿಷಗಳ ಕಾಲ ಪೊಲೀಸರನ್ನು ತೆಗೆದುಹಾಕಿ, ನಂತರ ನಾವು ಏನು ಮಾಡಬಹುದೆಂದು ಅವರಿಗೆ ತೋರಿಸುತ್ತೇವೆ ಎಂದು ಅಕ್ಬರ್‌ ಉದ್ದೀನ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ನಿಮಗೆ 15 ನಿಮಿಷಗಳನ್ನು ತೆಗೆದುಕೊಳ್ಳಬಹುದು, ಆದರೆ ಇದು ನಮಗೆ ಕೇವಲ 15 ಸೆಕೆಂಡು ಸಾಕು. 15 ಸೆಕೆಂಡುಗಳ ಕಾಲ ಪೊಲೀಸರನ್ನು ತೆಗೆದುಹಾಕಿದರೆ, ಸಹೋದರರಿಬ್ಬರಿಗೂ ಅವರು ಎಲ್ಲಿಂದ ಬಂದರು ಅಥವಾ ಎಲ್ಲಿಗೆ ಹೋದರು? ಎಂದು ತಿಳಿಯುವುದಿಲ್ಲ ಎಂದು ರಾಣಾ ಗುಡುಗಿದ್ದರು. +ರಾಣಾ ಅವರ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದ ಅಸಾದುದ್ದೀನ್‌ ಓವೈಸಿ, ಪ್ರಧಾನಿ ನರೇಂದ್ರಮೋದಿ ಅವರಿಗೆ 15 ಸೆಕೆಂಡುಗಳ ಬದಲಿಗೆ ಒಂದು ಗಂಟೆ ನೀಡುವಂತೆ ಕೇಳಿದರು ಮತ್ತು ಬಿಜೆಪಿ ನಾಯಕರ ಬಗ್ಗೆ ನಾನು ಹೆದರುವುದಿಲ್ಲ ಎಂದು ಒತ್ತಿ ಹೇಳಿದರು.ನಾನು ಪ್ರಧಾನಿ ಮೋದಿಯವರಿಗೆ 15 ಸೆಕೆಂಡ್‌ ನೀಡುತ್ತೇನೆ. 15 ಸೆಕೆಂಡುಗಳಲ್ಲ, ಆದರೆ ಒಂದು ಗಂಟೆ ತೆಗೆದುಕೊಳ್ಳಿ. +ನಾವು ಹೆದರುವುದಿಲ್ಲ, ನಿಮಲ್ಲಿ ಎಷ್ಟು ಮಾನವೀಯತೆ ಉಳಿದಿದೆ ಎಂದು ನಾವು ನೋಡಬೇಕು ಎಂದು ಓವೈಸಿ ಹೇಳಿದ್ದರು. ನವನೀತ್‌ ರಾಣಾ ಅವರು ಕಾಂಗ್ರೆಸ್‌‍ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಎಂಬ ಹೇಳಿಕೆಗಾಗಿ ಪ್ರಕರಣ ದಾಖಲಿಸಲಾಗಿದೆ. ತೆಲಂಗಾಣ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_103_1.txt b/eesanje/url_47_103_1.txt new file mode 100644 index 0000000000000000000000000000000000000000..754d29e2e25559a5c02afba1d86092c55b9a8a9f --- /dev/null +++ b/eesanje/url_47_103_1.txt @@ -0,0 +1,4 @@ +ಪಾಕಿಸ್ತಾನದಿಂದ ಬಂದ ಡ್ರೋನ್‌ ಮೇಲೆ ಬಿಎಸ್‌‍ಎಫ್‌ ಯೋಧರಿಂದ ಗುಂಡಿನ ದಾಳಿ +ಜಮು, ಮೇ 11-ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿ ಪಾಕಿಸ್ತಾನದ ಕಡೆಯಿಂದ ಬಂದ ಡ್ರೋನ್‌ಮೇಲೆ ಬಿಎಸ್‌‍ಎಫ್‌ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. +ಗಡಿ ಭದ್ರತಾ ಪಡೆ ಪಡೆಗಳು ತಡರಾತ್ರಿ ಪಾಕಿಸ್ತಾನದ ಕಡೆಯಿಂದ ಬರುತ್ತಿದ್ದ ಡ್ರೋನ್‌ನ ಪತ್ತೆ ಹಚ್ಚಿ ನಮ್ಮ ಪ್ರದೇಶ ಬರುವುದಕ್ಕೆ ಮುಂಚೆಯೇ ಗುಂಡು ಹಾರಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ನಂತರ ಡ್ರೋನ್‌ ಮತ್ತೆ ಪಾಕಿಸ್ತಾನದ ಕಡೆಗೆ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡ್ರೋನ್‌ ಯಾವುದೇ ಶಸಾ್ತ್ರಸ್ತ್ರಗಳು ಅಥವಾ ಮಾದಕ ದ್ರವ್ಯ ಬೀಳಿಸಿದ್ದೆ ಎಂದು ಖಚಿತಪಡಿಸಿಕೊಳ್ಳಲು ಗಡಿ ಔಟ್‌ಪೋಸ್ಟ್‌ ಪ್ರದೇಶವನ್ನು ತಪಾಸನೆ ಮಾಡಲಾಗಿದೆ ಇಂದು ಬೆಳಿಗ್ಗೆ ಕೂಡ ರಾಮಗಢ ವಲಯದ ನಾರಾಯಣಪುರದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು. \ No newline at end of file diff --git a/eesanje/url_47_103_10.txt b/eesanje/url_47_103_10.txt new file mode 100644 index 0000000000000000000000000000000000000000..c8f8ce8e056bca8e3dd59e4e12fc49f999d2b9bf --- /dev/null +++ b/eesanje/url_47_103_10.txt @@ -0,0 +1,5 @@ +ಪಾಕಿಸ್ತಾನಕ್ಕೆ ಮರ್ಯಾದೆ ಕೊಡಿ, ಅವರ ಬಳಿ ಅಣುಬಾಂಬ್‌ ಇದೆ : ಮಣಿಶಂಕರ್‌ ಅಯ್ಯರ್‌ +ನವದೆಹಲಿ,ಮೇ.10-ಪಾಕಿಸ್ತಾನದೊಂದಿಗೆ ಹುಡುಗಾಟಿಕೆ ಬೇಡ ಅವರು ಅಣುಬಾಂಬ್‌ ಹೊಂದಿದ್ದಾರೆ ಅವರೊಂದಿಗೆ ಭಾರತ ಮಾತುಕತೆಗೆ ಮುಂದಾಗಬೇಕು ಇಲ್ಲದಿದ್ದರೆ ಅವರು ನಮ್ಮ ಮೇಲೆ ಬಾಂಬ್‌ ಹಾಕಲಿದ್ದಾರೆ ಎಂದು ಕಾಂಗ್ರೆಸ್‌‍ ಪಕ್ಷದ ಹಿರಿಯ ಮುಖಂಡ ಮಣಿಶಂಕರ್‌ ಅಯ್ಯರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. +ನೀವು ಅವರೊಂದಿಗೆ ಮಾತನಾಡಬೇಕು. ಆದರೆ ಬದಲಿಗೆ, ನಾವು ನಮ ಮಿಲಿಟರಿ ಶಕ್ತಿಯನ್ನು ಬಗ್ಗಿಸುತ್ತಿದ್ದೇವೆ. ಮತ್ತು ಇದು ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದೆ. ಮತ್ತು ಅವರ ಬಳಿ ಪರಮಾಣು ಬಾಂಬ್‌ಗಳಿವೆ. ಒಬ್ಬ ಹುಚ್ಚ ಬಾಂಬ್‌ಗಳನ್ನು (ಭಾರತದಲ್ಲಿ) ಉಡಾಯಿಸಲು ನಿರ್ಧರಿಸಿದರೆ ಏನಾಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ. ನಾವು ಅಂತವರನ್ನೂ ಹೊಂದಿದ್ದೇವೆ, ನಾವು ಲಾಹೋರ್‌ ಮೇಲೆ ಬಾಂಬ್‌ ಹಾಕಲು ನಿರ್ಧರಿಸಿದರೆ, ಅವರ ವಿಕಿರಣವು ಅಮತಸರವನ್ನು ತಲುಪಲು 8 ಸೆಕೆಂಡುಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. +ಭಾರತೀಯ ಜನತಾ ಪಕ್ಷ (ಬಿಜೆಪಿ) ಅಯ್ಯರ್‌ ಅವರ ಟೀಕೆಗಳಿಗಾಗಿ ಇದು ಕಾಂಗ್ರೆಸ್‌‍ನ ಭಾರತಕ್ಕಾಗಿ ಸಿದ್ಧಾಂತ ವನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದೆ.ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಎಕ್ಸ್ ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದು, ರಾಹುಲ್‌ ಅವರ ಕಾಂಗ್ರೆಸ್‌‍ ಸಿದ್ಧಾಂತ ಈ ಚುನಾವಣೆಗಳಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ. ಸಿಯಾಚಿನ್‌ ಬಿಟ್ಟುಕೊಡಲು ಪಾಕಿಸ್ತಾನಕ್ಕೆ ಬೆಂಬಲ ನೀಡಿ, ಜನರನ್ನು ವಿಭಜಿಸುವುದು, ಸುಳ್ಳು, ನಿಂದನೆ ಮತ್ತು ಬಡವರನ್ನು ದಾರಿ ತಪ್ಪಿಸುವ ನಕಲಿ ಭರವಸೆಗಳು ಎಂದು ಕಿಡಿಕಾರಿದ್ದಾರೆ. +ಬಿಜೆಪಿ ನಾಯಕ ಮತ್ತು ಭೋಜ್‌ಪುರಿ ನಟ ರವಿ ಕಿಶನ್‌ ಕೂಡ ಅಯ್ಯರ್‌ ಅವರನ್ನು ತರಾಟೆಗೆ ತೆಗೆದುಕೊಂಡರು, ಪಾಕಿಸ್ತಾನವು ಪ್ರಸ್ತುತ ಆಹಾರಕ್ಕಾಗಿ ಹೆಣಗಾಡುತ್ತಿರುವ ಕಾರಣ ಕಾಂಗ್ರೆಸ್‌‍ ನಾಯಕನಿಗೆ ಎಲ್ಲಿಯಾದರೂ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.ಯಾವುದೇ ಭಯೋತ್ಪಾದಕರು ತಪ್ಪಿಸಿಕೊಂಡು ಬಂದರೆ ಅವರನ್ನು ಕೊಲ್ಲಲು ಭಾರತೀಯ ಪಡೆಗಳು ಪಾಕಿಸ್ತಾನವನ್ನು ಪ್ರವೇಶಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಲವು ಬಿಜೆಪಿ ನಾಯಕರು ಎಚ್ಚರಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್‌‍ ನಾಯಕನ ಈ ಹೇಳಿಕೆಗಳು ಬಂದಿವೆ. \ No newline at end of file diff --git a/eesanje/url_47_103_11.txt b/eesanje/url_47_103_11.txt new file mode 100644 index 0000000000000000000000000000000000000000..6fef6a4705119ff8dcd08ec244f9cefcc8facf46 --- /dev/null +++ b/eesanje/url_47_103_11.txt @@ -0,0 +1,4 @@ +10ನೇ ತರಗತಿ ಪರೀಕ್ಷೆ ಬರೆದು ಉತ್ತೀರ್ಣಳಾದ ಅತ್ಯಾಚಾರ ಸಂತ್ರಸ್ತೆ +ಹೈದರಾಬಾದ್‌, ಮೇ9-ತೆಲಂಗಾಣದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತ ಬಾಲಕಿಯೊಬ್ಬಳು 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ತೀವ್ರ ಆಘಾತದ ಸಂದರ್ಭದಲ್ಲೂ ತಮ ದೃಢತೆಯನ್ನು ಪ್ರದರ್ಶಿಸಿದ್ದಾರೆ. +2023ರಲ್ಲಿ 15 ಬಾಲಕಿಯೊಬ್ಬಳು ತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದರು. ಆಕೆಯ ಹೊಟ್ಟೆ ನೋವಿನ ಬಗ್ಗೆ ಅಜ್ಜಿಗೆ ತಿಳಿಸಿದಾಗ ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ ವೈದ್ಯರು ಆಕೆ ಗರ್ಭಿಣೆಯಾಗಿದ್ದಾಳೆ ಎಂದು ತಿಳಿಸಿದ್ದರು. +ಆಕೆಯ ಗರ್ಭಾವಸ್ಥೆಯು ಮುಂದುವರಿದ ಹಂತದಲ್ಲಿದ್ದುದರಿಂದ ಅದನ್ನು ಸ್ಥಗಿತಗೊಳಿಸಲಾಗಲಿಲ್ಲ. ಆಕೆ ಒಂಬತ್ತನೇ ತಿಂಗಳಲ್ಲಿ ಮಗುವಿಗೆ ಜನ ನೀಡಿದ್ದಾಳೆ. ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾಳೆ ಎಂದು ಪೊಲೀಸ್‌‍ ಅಧಿಕಾರಿ ಎಂ. ಮಹೇಂದರ್‌ ರೆಡ್ಡಿ ತಿಳಿಸಿದ್ದಾರೆ. \ No newline at end of file diff --git a/eesanje/url_47_103_12.txt b/eesanje/url_47_103_12.txt new file mode 100644 index 0000000000000000000000000000000000000000..a3b98c100c3d0bb21785d9b0a018fad2093829cd --- /dev/null +++ b/eesanje/url_47_103_12.txt @@ -0,0 +1,6 @@ +ಸಿಬ್ಬಂದಿಗಳ ಸಿಕ್‌ ಲೀವ್‌ ಎಫೆಕ್ಟ್‌, ಮತ್ತೆ 74 ವಿಮಾನಗಳ ಹಾರಾಟ ರದ್ದು +ನವದೆಹಲಿ,ಮೇ.9ಏರ್‌ಲೈನ್ಸ್ ನ ಸುಮಾರು 300 ಉದ್ಯೋಗಿಗಳ ಸಾಮೂಹಿಕ ಸಿಕ್‌ ಲೀವ್‌ನಿಂದಾಗಿ ಇಂದು ಕೂಡ 74 ವಿಮಾನಗಳ ಹಾರಾಟ ರದ್ದಾಗಿದೆ. ಆರೋಗ್ಯ ಸರಿ ಇಲ್ಲ ಎಂದು ಸಿಕ್‌ ಲೀವ್‌ ಪಡೆದ ನಂತರ ಅವರುಗಳು ತಮ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿದ ಒಂದು ದಿನದ ಏರ್‌ ಇಂಡಿಯಾ ಎಕ್ಸ್ ಪ್ರೆಸ್‌‍ ಇಂದು ಕನಿಷ್ಠ 74 ವಿಮಾನಗಳನ್ನು ರದ್ದುಗೊಳಿಸಿದೆ. +ರದ್ದಾದ ವಿಮಾನಗಳು ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿವೆ ಮತ್ತು ಚೆನ್ನೈನಿಂದ ಕೋಲ್ಕತ್ತಾಗೆ, ಚೆನ್ನೈನಿಂದ ಸಿಂಗಾಪುರಕ್ಕೆ, ತಿರುಚ್ಚಿಯಿಂದ ಸಿಂಗಾಪುರಕ್ಕೆ ಮತ್ತು ಜೈಪುರದಿಂದ ಮುಂಬೈಗೆ ಹಾರಲು ನಿರ್ಧರಿಸಲಾಗಿತ್ತು. ಇದರ ಜತೆಗೆ ಪ್ರಮುಖ ಮಾರ್ಗಗಳಲ್ಲಿ ಹಲವಾರು ವಿಮಾನಗಳು ವಿಳಂಬಗೊಂಡವು. +ಇದೀಗ ಟಾಟಾ ಸಮೂಹದ ಒಡೆತನದಲ್ಲಿರುವ ಏರ್‌ ಇಂಡಿಯಾದ ಅಂಗಸಂಸ್ಥೆಯಾದ ಕಡಿಮೆ ದರದ ಏರ್‌ಲೈನ್‌ನಲ್ಲಿ ಕ್ಯಾಬಿನ್‌ ಸಿಬ್ಬಂದಿ ಕೊರತೆಯಿಂದಾಗಿ ಮೂರು ದಿನಗಳಿಂದ 100 ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ ಮತ್ತು ಸುಮಾರು 15,000 ಪ್ರಯಾಣಿಕರ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. +ಮೂಲಗಳ ಪ್ರಕಾರ ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ಉದ್ಯೋಗಿಗಳು ಹೊಸ ಉದ್ಯೋಗ ನಿಯಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸಿಬ್ಬಂದಿಯ ಚಿಕಿತ್ಸೆಯಲ್ಲಿ ಸಮಾನತೆಯ ಕೊರತೆಯನ್ನು ಆರೋಪಿಸಿದ್ದಾರೆ ಮತ್ತು ಹಿರಿಯ ಹ್ದುೆಗಳಿಗೆ ಸಂದರ್ಶನಗಳನ್ನು ತೆರವುಗೊಳಿಸಿದರೂ ಕೆಲವು ಸಿಬ್ಬಂದಿಗೆ ಕಡಿಮೆ ಕೆಲಸದ ಪಾತ್ರಗಳನ್ನು ನೀಡಲಾಗಿದೆ ಎಂದು ಸಿಬ್ಬಂದಿಗಳು ಆರೋಪಿಸಿದ್ದಾರೆ. +ವಿಮಾನ ವಿಳಂಬ ಮತ್ತು ರದ್ದತಿಗಳು ಪೂರ್ಣ ಪ್ರಮಾಣದ ಬಿಕ್ಕಟ್ಟಿಗೆ ಸಿಲುಕಿರುವುದರಿಂದ, ಮುಂದಿನ ಕೆಲವು ದಿನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾನಗಳ ಸಂಖ್ಯೆಯನ್ನು ಕಡಿಮೆಗೊಳಿಸಲಾಗುವುದು ಎಂದು ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ಸಿಇಒ ಅಲೋಕ್‌ ಸಿಂಗ್‌ ಹೇಳಿದ್ದಾರೆ. \ No newline at end of file diff --git a/eesanje/url_47_103_2.txt b/eesanje/url_47_103_2.txt new file mode 100644 index 0000000000000000000000000000000000000000..0fb14d744c9ea96623e48f8848b038da3ee03d0f --- /dev/null +++ b/eesanje/url_47_103_2.txt @@ -0,0 +1,7 @@ +ಮಾಲ್ಡಿವ್ಸ್‌ನಿಂದ ವಾಪಸ್ಸಾದ ಭಾರತೀಯ ಸೇನೆ +ಮಾಲೆ, ಮೇ 10 (ಪಿಟಿಐ)ಮಾಲ್ಡೀವ್ಸ್ ನಿಂದ ಭಾರತೀಯ ಸೇನಾ ಸಿಬ್ಬಂದಿಯನ್ನು ಸಂಪೂರ್ಣವಾಗಿ ಹಿಂಪಡೆಯಲು ಅಧ್ಯಕ್ಷ ಮೊಹಮದ್‌ ಮುಯಿಝು ಅವರು ನಿಗದಿಪಡಿಸಿದ ಮೇ 10 ರ ಗಡುವಿನ ಮೊದಲು ಭಾರತವು ತನ್ನ ಎಲ್ಲಾ ಸೈನಿಕರನ್ನು ಮಾಲ್ಡೀವ್‌್ಸನಿಂದ ಹಿಂಪಡೆದಿದೆ ಎಂದು ಇಲ್ಲಿನ ಸರ್ಕಾರ ತಿಳಿಸಿದೆ. +ಚೀನಾ ಪರ ನಾಯಕನಾಗಿ ವ್ಯಾಪಕವಾಗಿ ಕಂಡುಬರುವ ಅಧ್ಯಕ್ಷ ಮುಯಿಝು, ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಯನ್ನು ಹಿಂಪಡೆಯಲು ಮೇ 10 ಅನ್ನು ಗಡುವು ಎಂದು ನಿಗದಿಪಡಿಸಿದ್ದರು. ಮಾಲ್ಡೀವ್ಸ್ ನಲ್ಲಿ ನೆಲೆಸಿರುವ ಸುಮಾರು 90 ಭಾರತೀಯ ಸೇನಾ ಸಿಬ್ಬಂದಿಯನ್ನು ವಾಪಸು ಕಳುಹಿಸುವುದು ಕಳೆದ ವರ್ಷ ಅವರ ಅಧ್ಯಕ್ಷೀಯ ಪ್ರಚಾರದ ಸಮಯದಲ್ಲಿ ಮುಯಿಝು ಅವರ ಪ್ರಮುಖ ಪ್ರತಿಜ್ಞೆಯಾಗಿತ್ತು. +ಮಾಲ್ಡೀವ್ಸ್‌ ನಲ್ಲಿ ನೆಲೆಸಿದ್ದ ಕೊನೆಯ ಬ್ಯಾಚ್‌ ಭಾರತೀಯ ಸೈನಿಕರನ್ನು ವಾಪಸ್‌‍ ಕಳುಹಿಸಲಾಗಿದೆ ಎಂದು ಹೀನಾ ವಲೀದ್‌ ಖಚಿತಪಡಿಸಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮುಖ್ಯ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಭಾರತವು ಈ ಹಿಂದೆ ಉಡುಗೊರೆಯಾಗಿ ನೀಡಿದ ಎರಡು ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್‌ ವಿಮಾನಗಳನ್ನು ನಿರ್ವಹಿಸಲು ಮತ್ತು ನಿರ್ವಹಿಸಲು ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲ್ಡೀವ್‌್ಸನಲ್ಲಿ ನೆಲೆಸಿದ್ದರು. +ಈ ಮೊದಲು, ಈ ಪೈಕಿ 51 ಸೈನಿಕರನ್ನು ಸೋಮವಾರ ಭಾರತಕ್ಕೆ ವಾಪಸ್‌‍ ಕಳುಹಿಸಲಾಗಿದೆ ಎಂದು ಮಾಲ್ಡೀವ್ಸ್‌‍ ಸರ್ಕಾರ ಘೋಷಿಸಿತು.=ಅಧಿಕತ ದಾಖಲೆಗಳನ್ನು ಉಲ್ಲೇಖಿಸಿ ಮಾಲ್ಡೀವ್ಸ್ ನಲ್ಲಿ 89 ಭಾರತೀಯ ಸೈನಿಕರ ಉಪಸ್ಥಿತಿಯನ್ನು ಸರ್ಕಾರ ಈ ಹಿಂದೆ ಘೋಷಿಸಿತು. +ಮೇ 10 ರ ಮೊದಲು ಉಳಿದ ಭಾರತೀಯ ಸೈನಿಕರನ್ನು ಹಿಂಪಡೆಯಲು ಭಾರತ ಮತ್ತು ಮಾಲ್ಡೀವ್ಸ್‌‍ ಒಪ್ಪಿಕೊಂಡಿವೆ ಎಂದು ನವದೆಹಲಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌‍ ತಿಳಿಸಿದ್ದರು. +ಭಾರತೀಯ ಸಿಬ್ಬಂದಿಯ ಮೊದಲ ಮತ್ತು ಎರಡನೇ ಬ್ಯಾಚ್‌ ಭಾರತಕ್ಕೆ ಮರಳಿದೆ ಮತ್ತು ಮೂರು ಭಾರತೀಯ ವಾಯುಯಾನ ವೇದಿಕೆಗಳನ್ನು ನಿರ್ವಹಿಸಲು ಈಗ ಸಮರ್ಥ ಭಾರತೀಯ ತಾಂತ್ರಿಕ ಸಿಬ್ಬಂದಿಯ ನಿಯೋಜನೆ ನಡೆದಿದೆ ಎಂದು ಹೇಳಿದರು. .ಮಾಲ್ಡೀವ್‌್ಸ ವಿದೇಶಾಂಗ ಸಚಿವ ಮೂಸಾ ಜಮೀರ್‌ ಭಾರತಕ್ಕೆ ಭೇಟಿ ನೀಡುತ್ತಿದ್ದಂತೆ ಈ ಬೆಳವಣಿಗೆ ನಡೆದಿದೆ. ಅವರು ನಿನ್ನೆ ವಿದೇಶಾಂಗ ಸಚಿವ ಎಸ್‌‍ ಜೈಶಂಕರ್‌ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾದೇಶಿಕ ಭದ್ರತಾ ವಿಷಯಗಳ ಕುರಿತು ವಿಸ್ತೃತ ಚರ್ಚೆಗಳನ್ನು ನಡೆಸಿದ್ದರು \ No newline at end of file diff --git a/eesanje/url_47_103_3.txt b/eesanje/url_47_103_3.txt new file mode 100644 index 0000000000000000000000000000000000000000..fa0bc5b418f0c39f373caa27bb0bcb1f41b9d35f --- /dev/null +++ b/eesanje/url_47_103_3.txt @@ -0,0 +1,6 @@ +ಎಪಿಎಸ್‌‍ಆರ್‌ಟಿಸಿ ಬಸ್‌‍ನಲ್ಲಿ ರಾಹುಲ್‌ ಮತಯಾಚನೆ +ಹೈದರಾಬಾದ್‌, ಮೇ.10-ಸರ್ಕಾರಿ ಬಸ್‌‍ನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ರಾಹುಲ್‌ಗಾಂಧಿ ಸಂವಾದ ನಡೆಸುವ ಮೂಲಕ ವಿನೂತನವಾಗಿ ಮತ ಯಾಚನೆ ಮಾಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. +ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ನಿನ್ನೆ ರಾತ್ರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಗ್ರೇಟರ್‌ ಹೈದರಾಬಾದ್‌ನಲ್ಲಿ ರಾಜ್ಯ ರಸ್ತೆ ಮಾರ್ಗಗಳ ಬಸ್‌‍ನಲ್ಲಿ ಪ್ರಯಾಣಿಸಿ ಆಶ್ಚರ್ಯಚಕಿತರಾದ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. +ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರದ ಸರೂರ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯ ನಂತರ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಅವರೊಂದಿಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‌‍ಆರ್‌ಟಿಸಿ) ಬಸ್‌‍ ಹತ್ತಿದ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ಪಂಚ ನ್ಯಾಯ ಕರಪತ್ರಗಳನ್ನು ಪ್ರಯಾಣಿಕರಿಗೆ ವಿತರಿಸಿದರು ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರದ ಉಚಿತ ಬಸ್‌‍ ಪ್ರಯಾಣ ಯೋಜನೆ ಅನುಷ್ಠಾನದ ಬಗ್ಗೆ ವಿಚಾರಿಸಿದರು. +ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಕಾಂಗ್ರೆಸ್‌‍ ಮುಖಂಡರು, ಮಹಿಳೆಯರು, ಯುವಕರು, ರೈತರು ಮತ್ತು ಕಾರ್ಮಿಕರಂತಹ ವಿವಿಧ ವರ್ಗಗಳಿಗೆ ಕಾಂಗ್ರೆಸ್‌‍ ತನ್ನ ರಾಷ್ಟ್ರೀಯ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಅವರಿಗೆ ವಿವರಿಸಿದರು.ರಾಹುಲ್‌ ಗಾಂಧಿ ಅವರೊಂದಿಗೆ ಪ್ರಯಾಣಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಆಶ್ಚರ್ಯಚಕಿತರಾದರು ಮತ್ತು ಹಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು. +ಇದಕ್ಕೂ ಮೊದಲು, ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿಯವರು ತಮ ಭಾಷಣದಲ್ಲಿ, ಸಂವಿಧಾನವನ್ನು ತೊಡೆದುಹಾಕಲು ಬಿಜೆಪಿ ಯೋಜಿಸುತ್ತಿದೆ ಎಂದು ಮತ್ತೊಮೆ ಆರೋಪಿಸಿದರು ಮತ್ತು ಅದನ್ನು ರಕ್ಷಿಸುವ ಪ್ರತಿಜ್ಞೆ ಮಾಡಿದರು. ಅವರು ಮೀಸಲಾತಿಯನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದರು ಮತ್ತು ಇಂಡಿ ಬ್ಲಾಕ್‌ ಸರ್ಕಾರವು ಅಧಿಕಾರಕ್ಕೆ ಬಂದರೆ, ವಿವಿಧ ವರ್ಗಗಳ ಜನರ ಅನುಕೂಲಕ್ಕಾಗಿ ಮತ್ತು ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಮತ್ತು ಉದ್ಯೋಗಗಳನ್ನು ಒದಗಿಸುವ ವಿವಿಧ ಭರವಸೆಗಳನ್ನು ಪಟ್ಟಿ ಮಾಡಿದರು. \ No newline at end of file diff --git a/eesanje/url_47_103_4.txt b/eesanje/url_47_103_4.txt new file mode 100644 index 0000000000000000000000000000000000000000..e742ac468ab8fe96bfcb862f38570e9ba7e40ba3 --- /dev/null +++ b/eesanje/url_47_103_4.txt @@ -0,0 +1,6 @@ +ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದವನ ಬಂಧನ +ಭರೂಚ್‌, ಮೇ.10-ಪಾಕಿಸ್ತಾನದ ಗುಪ್ತಚರ ಸಂಸ್ಥೆಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಭರೂಚ್‌ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಬಂಧಿತ ಆರೋಪಿಯನ್ನು ಪ್ರವೀಣ್‌ ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಭಾರತೀಯ ಸಶಸ್ತ್ರ ಪಡೆಗಳು ಮತ್ತು ರಕ್ಷಣೆಗೆ ಸಂಬಂಧಿಸಿದ ಆರ್‌ ಡಿ ಸಂಸ್ಥೆಗಳ ಬಗ್ಗೆ ಅತ್ಯಂತ ಗೌಪ್ಯ ಮಾಹಿತಿಯನ್ನು ಸಂಗ್ರಹಿಸಿದ್ದ ಎಂದು ಗುಜರಾತ್‌ ಅಪರಾಧ ತನಿಖಾ ಇಲಾಖೆ (ಸಿಐಡಿ) ತಿಳಿಸಿದೆ. +ಉಧಂಪುರದ ಮಿಲಿಟರಿ ಗುಪ್ತಚರ ದಳದಿಂದ ಬಂದ ಸುಳಿವಿನ ಮೇರೆಗೆ ಸಿಐಡಿ ತನ್ನ ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿದೆ.ಭರೂಚ್‌ ಜಿಲ್ಲೆಯ ಅಂಕಲೇಶ್ವರ ನಿವಾಸಿ ಮತ್ತು ಬಿಹಾರದ ಮುಜಾಫರ್‌ಪುರದ ನಿವಾಸಿಯಾಗಿರುವ ಮಿಶ್ರಾ ಅವರು ಗಂಭೀರ ಭದ್ರತಾ ಪರಿಣಾಮಗಳನ್ನು ಉಂಟುಮಾಡುವ ದೇಶದ ವಿರುದ್ಧ ಕ್ರಿಮಿನಲ್‌ ಪಿತೂರಿ ನಡೆಸಲು ವಾಟ್ಸಾಪ್‌ ಕರೆಗಳು ಮತ್ತು ಆಡಿಯೊ ಚಾಟ್‌ ಮೂಲಕ ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಸಿಐಡಿ ಹೇಳಿದೆ. ಪಾಕಿಸ್ತಾನದಲ್ಲಿರುವ ಗುಪ್ತಚರ ಸಂಸ್ಥೆಗೆ ಮಾಹಿತಿ ರವಾನಿಸುತ್ತಿರುವುದು ಪತ್ತೆಯಾಗಿದೆ ಎಂದು ಸಿಐಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. +ಭಾರತೀಯ ವಾಟ್ಸಾಪ್‌ ಸಂಖ್ಯೆ ಮತ್ತು ಸೋನಲ್‌ ಗಾರ್ಗ್‌ನ ನಕಲಿ ಫೇಸ್‌‍ಬುಕ್‌ ಐಡಿ ಬಳಸಿದ ಮಿಶ್ರಾ ಮತ್ತು ಪಾಕಿಸ್ತಾನಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅದು ಹೇಳಿದೆ.ವಾಟ್ಸಾಪ್‌ ನಂಬರ್‌ನಲ್ಲಿ ಆಪರೇಟಿವ್‌ನೊಂದಿಗೆ ಸಂಪರ್ಕದಲ್ಲಿದ್ದ ಕ್ರಿಮಿನಲ್‌ ಪಿತೂರಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಮತ್ತು ಉದ್ಯೋಗಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. +ಸಶಸ್ತ್ರ ಪಡೆಗಳು, ರಕ್ಷಣಾ ಸಂಶೋಧನೆ ಮತ್ತು ಅಭಿವದ್ಧಿ ಸಂಸ್ಥೆ (ಡಿಆರ್‌ಡಿಒ), ಹಿಂದೂಸ್ತಾನ್‌ ಏರೋನಾಟಿಕ್ಸ್‌‍ ಲಿಮಿಟೆಡ್‌ (ಎಚ್‌ಎಎಲ್‌‍) ಮತ್ತು ಕ್ಷಿಪಣಿ ವ್ಯವಸ್ಥೆಯ ಅಭಿವದ್ಧಿಯ ಆರ್‌ ಡಿಗೆ ಸಂಬಂಧಿಸಿದ ಉದ್ಯೋಗಿಗಳ ಪ್ರಸ್ತುತ ಅಥವಾ ನಿವತ್ತ ಉದ್ಯೋಗಿಗಳ ಗೌಪ್ಯ ಮಾಹಿತಿಯನ್ನು ಪಡೆಯಲು ಮಿಲಿಟರಿ ಗುಪ್ತಚರವು ಸಿಐಡಿಗೆ ಎಚ್ಚರಿಕೆ ನೀಡಿತ್ತು. \ No newline at end of file diff --git a/eesanje/url_47_103_5.txt b/eesanje/url_47_103_5.txt new file mode 100644 index 0000000000000000000000000000000000000000..b28ba10df4b584efb1c16fa78fd1d42ab269dab0 --- /dev/null +++ b/eesanje/url_47_103_5.txt @@ -0,0 +1,5 @@ +ಎರಡು ಬಸ್‌‍ಗಳ ನಡುವೆ ಸಿಲುಕಿ ಪ್ರಾಣ ಕಳೆದುಕೊಂಡ ಬೈಕ್‌ ಸವಾರರು +ಕೊಚ್ಚಿ, ಮೇ 10 (ಪಿಟಿಐ)ಎರಡು ಬಸ್‌‍ಗಳ ನಡುವೆ ಬೈಕ್‌ ಸಿಕ್ಕಿದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ. +ಇಲ್ಲಿನ ಪಲರಿವಟ್ಟಂ ಬಳಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‌‍ಗಳ ನಡುವೆ ದ್ವಿಚಕ್ರ ವಾಹನ ಸಿಲುಕಿ ಇಬ್ಬರು ವ್ಯಕ್ತಿಗಳು ಮತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.ಎಂದು ಪೊಲೀಸರು ತಿಳಿಸಿದ್ದಾರೆ. +ದ್ವಿಚಕ್ರ ವಾಹನವು ಒಂದು ಬಸ್‌‍ನ ಹಿಂದೆ ಇದ್ದಾಗ ಇನ್ನೊಂದು ಬಸ್‌‍ ಹಿಂದಿನಿಂದ ಬಂದು ಮೋಟಾರ್‌ಸೈಕಲ್‌ ಮತ್ತು ಅದರ ಮುಂಭಾಗದಲ್ಲಿದ್ದ ಬಸ್‌‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. +ಬಸ್‌‍ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿಯಿಂದ ಬಂದ ಬಸ್‌‍ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದಿನಿಂದ ಬಂದ ಬಸ್‌‍ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_103_6.txt b/eesanje/url_47_103_6.txt new file mode 100644 index 0000000000000000000000000000000000000000..0139632a860056e0c449c2aaad3e81506644bb5a --- /dev/null +++ b/eesanje/url_47_103_6.txt @@ -0,0 +1,7 @@ +ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತ ನಿರ್ಮಾಣ ಬಿಜೆಪಿ ಗುರಿ ; ರಾಜನಾಥ್‌ ಸಿಂಗ್‌ +ಲಕ್ನೋ,ಮೇ.10-ಜ್ಞಾನ, ವಿಜ್ಞಾನ ಮತ್ತು ಆಧ್ಯಾತಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಶ್ರೀಮಂತ ಭಾರತವನ್ನು ನಿರ್ಮಿಸಲು ಬಿಜೆಪಿ ಬಯಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. +ಲಕ್ನೋ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಸಿಂಗ್‌ ಅವರು ಕೆಲವರ ನಡೆ ಮತ್ತು ಮಾತಿನ ನಡುವಿನ ವ್ಯತ್ಯಾಸದಿಂದಾಗಿ ರಾಜಕೀಯ ನಾಯಕರ ಬಗ್ಗೆ ಸ್ವತಂತ್ರ ಭಾರತದಲ್ಲಿ ವಿಶ್ವಾಸದ ಬಿಕ್ಕಟ್ಟು ಉದ್ಭವಿಸಿದೆ ಎಂದು ಹೇಳಿದರು. +ಆದರೆ ನಾನು ಇರುವ ಪಕ್ಷದ ಬಗ್ಗೆ ಮಾತನಾಡಲು ಬಯಸುತ್ತೇನೆ. ನಾವು (ಬಿಜೆಪಿ) ನಾವು ಭರವಸೆ ನೀಡಿದ್ದನ್ನು ಮಾಡಿದ್ದೇವೆ. ನಾವು ನಮ ಚುನಾವಣಾ ಪ್ರಣಾಳಿಕೆಯ ಪ್ರತಿಯೊಂದು ಭರವಸೆಯನ್ನು ಈಡೇರಿಸಿದ್ದೇವೆ, ಅದು ಆರ್ಟಿಕಲ್‌ 370 ರದ್ದತಿ ಅಥವಾ ರಾಮಮಂದಿರ ನಿರ್ಮಾಣದ ಭರವಸೆ ಪೂರೈಸಿದ್ದೇವೆ ಎಂದು ಅವರು ಇಲ್ಲಿನ ಗೋಮತಿ ನಗರದ ಖಾಸಗಿ ಶಾಲೆಯೊಂದರಲ್ಲಿ ಆಯೋಜಿಸಿದ್ದ ಪ್ರಬುದ್ಧ ನಾಗರೀಕ ಸಂಗೋಷ್ಠಿಯಲ್ಲಿ ಹೇಳಿದರು. +ಜನರಲ್ಲಿ ಜವಾಬ್ದಾರಿಯ ಪ್ರಜ್ಞೆ ಮೂಡಿದಾಗ ಭಾರತದಲ್ಲಿ ರಾಮರಾಜ್ಯ ಪ್ರಾರಂಭವಾಗುತ್ತದೆ. ಜವಾಬ್ದಾರಿಯಿಲ್ಲದೆ ಅಧಿಕಾರದ ಭಾವನೆ ಇದ್ದರೆ, ರಾಮರಾಜ್ಯ ಬಂದಿಲ್ಲ ಮತ್ತು ಅದು ಕಲಿಯುಗ ಎಂದು ಪರಿಗಣಿಸಿ ಎಂದು ಸಿಂಗ್‌ ಹೇಳಿದರು.ತಮನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ಎಂದು ಕರೆದುಕೊಂಡ ರಕ್ಷಣಾ ಸಚಿವರು, ಸಂಘವು ಹಿಂದೂ-ಮುಸ್ಲಿಂ (ಧರ್ಮ) ಬಗ್ಗೆ ಎಂದಿಗೂ ಮಾತನಾಡಲಿಲ್ಲ ಎಂದು ಹೇಳಿದರು. ಮುಂದುವರೆದು ಮಾತನಾಡಿದ ಅವರು, ಬಿಜೆಪಿಯವರು ದೇಶ ಕಟ್ಟಲು ರಾಜಕೀಯ ಮಾಡುತ್ತಾರೆ ಎಂದಿದ್ದಾರೆ. +ಶ್ರೀಮಂತ ಮತ್ತು ಅದೇ ಸಮಯದಲ್ಲಿ ಜ್ಞಾನ, ವಿಜ್ಞಾನ ಮತ್ತು ಆಧ್ಯಾತಿಕ ಕ್ಷೇತ್ರದಲ್ಲಿ ಇಡೀ ಜಗತ್ತನ್ನು ಮುನ್ನಡೆಸಬಲ್ಲ ಅಂತಹ ಭಾರತವನ್ನು ನಾವು ನಿರ್ಮಿಸಲು ಬಯಸುತ್ತೇವೆ ಎಂದು ಅವರು ಹೇಳಿದರು. +ಬಿಜೆಪಿ ಸರ್ಕಾರವು ಯಾವುದೇ ತಾರತಮ್ಯವಿಲ್ಲದೆ ಉಚಿತ ಗ್ಯಾಸ್‌‍ ಸಿಲಿಂಡರ್‌ಗಳು, ಮನೆಗಳು, ನಲ್ಲಿ ನೀರು ಮುಂತಾದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಒದಗಿಸಿದೆ ಎಂದು ಸಿಂಗ್‌ ಹೇಳಿದರು. ರಕ್ಷಣಾ ಉಪಕರಣಗಳ ತಯಾರಿಕೆಯಲ್ಲಿ ಸ್ವಾವಲಂಬಿಯಾಗುತ್ತಿರುವ ದೇಶದಿಂದ ಭಯೋತ್ಪಾದನೆಯನ್ನು ನಿರ್ನಾಮ ಮಾಡಲಾಗಿದೆ ಎಂದು ಸಿಂಗ್‌ ಹೇಳಿದ್ದಾರೆ.ಮೇ 20 ರಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಲಕ್ನೋದಲ್ಲಿ ಮತದಾನ ನಡೆಯಲಿದೆ. \ No newline at end of file diff --git a/eesanje/url_47_103_7.txt b/eesanje/url_47_103_7.txt new file mode 100644 index 0000000000000000000000000000000000000000..c7704f2b4cb348b89cd00253a7de0fdd1f80c59d --- /dev/null +++ b/eesanje/url_47_103_7.txt @@ -0,0 +1,9 @@ +ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್, ಜೂ1 ರವರೆಗೆ ಮಧ್ಯಂತರ ಜಾಮೀನು ಮಂಜೂರು +ನವದೆಹಲಿ, ಮೇ 10 –ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಜೂನ್‌ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ.ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲರುವ ಕೇಜ್ರಿವಾಲ್‌ ಅವರು ಜೂನ್‌ 2 ರಂದು ಶರಣಾಗಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠ ಹೇಳಿದೆ. +ಜೂನ್‌ 5ರವರೆಗೆ ಮಧ್ಯಂತರ ಜಾಮೀನು ನೀಡುವಂತೆ ಕೇಜ್ರಿವಾಲ್‌ ಪರವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರ ಮನವಿಯನ್ನು ಪೀಠ ತಿರಸ್ಕರಿಸಿತು.ಏಳು ಹಂತದ ಚುನಾವಣೆಗೆ ಜೂನ್‌ 1 ಕೊನೆಯ ದಿನವಾಗಿದೆ. ಜೂನ್‌ 4 ರಂದು ಮತ ಎಣಿಕೆ ನಡೆಯಲಿದೆ.ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಕಾರಣಗಳನ್ನು ಅನುಸರಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ. +ಜಾರಿ ನಿರ್ದೇಶನಾಲಯದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌‍ ವಿ ರಾಜು, ಚುನಾವಣಾ ಪ್ರಚಾರದ ಆಧಾರದ ಮೇಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರಿಗೆ ಮಧ್ಯಂತರ ಜಾಮೀನು ನೀಡುವುದನ್ನು ವಿರೋಧಿಸಿದರು. +ಆದರೂ 21 ದಿನಗಳ ಕಾಲ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದರಿಂದ ಹೆಚ್ಚಿನ ವ್ಯತ್ಯಾಸವಾಗುವುದಿಲ್ಲ ಎಂದು ಗಮನಿಸಿದ ಪೀಠ ಪ್ರಚಾರಕ್ಕೆ ಅವಕಾಶ ನೀಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಏನನ್ನೂ ಹೇಳುವುದಿಲ್ಲ ಎಂಬುದು ಸೇರಿದಂತೆ ಜಾಮೀನು ಷರತ್ತುಗಳನ್ನು ವಿಧಿಸುವಂತೆ ಕಾನೂನು ಅಧಿಕಾರಿಗಳು ನ್ಯಾಯಾಲಯವನ್ನು ಒತ್ತಾಯಿಸಿದರು. +ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಜಾಮೀನು ಪಡೆದಿದ್ದ ಎಎಪಿ ನಾಯಕ ಸಂಜಯ್‌ ಸಿಂಗ್‌ ಅವರಿಗೆ ವಿಧಿಸಿರುವ ಷರತ್ತುಗಳಂತೆಯೇ ಇರಲಿದೆ ಎಂದು ಪೀಠ ಹೇಳಿದೆ. +ನಾವು ಇನ್ನೂ ಲಿಖಿತ ಆದೇಶವನ್ನು ನೋಡಿಲ್ಲ. ಹಾಗಾಗಿ ಲಿಖಿತ ಆದೇಶದ ನಿಖರವಾದ ವಿಷಯಗಳು ನಮಗೆ ತಿಳಿದಿಲ್ಲ. ಕೇಜ್ರಿವಾಲ್‌ ಅವರನ್ನು ಜೂನ್‌ 2 ರವರೆಗೆ ಮಧ್ಯಂತರ ಬಿಡುಗಡೆ / ಜಾಮೀನಿನ ಮೇಲೆ ಬಿಡುಗಡೆ ಮಾಡುತ್ತಿದ್ದೇವೆ ಮತ್ತು ಅವರು ಏನು ಮಾಡಬಹುದು ಎಂಬುದರ ಕುರಿತು ಯಾವುದೇ ಷರತ್ತುಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. +ಪ್ರಚಾರದ ಸಮಯದಲ್ಲಿ ಮತ್ತು ಈ 20-22 ದಿನಗಳಲ್ಲಿ ಅವರು ಹೊರಗಿರುವಾಗ ಅವರು ಏನು ಹೇಳಲು ಸಾಧ್ಯವಿಲ್ಲಈ ಆದೇಶವನ್ನು ಇಂದು ಅಪ್‌ಲೋಡ್‌ ಮಾಡಲಾಗುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ನಂತರ ನಾವು ಅವರ ಬಿಡುಗಡೆಗೆ ಸೂಕ್ತವಾದ ಕಾರ್ಯವಿಧಾನವನ್ನು ನವೀಕರಿಸುತ್ತೇವೆ ಎಂದು ಫರಾಸತ್‌ ಹೇಳಿದ್ದಾರೆ. +ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ ಕಳೆದ ತಿಂಗಳು ನೀಡಿದ ತೀರ್ಪನ್ನು ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.ಬಂಧನದ ವಿರುದ್ಧ ಕೇಜ್ರಿವಾಲ್‌ ಅವರ ಮನವಿಯ ಮೇಲಿನ ವಾದಗಳು ಮುಂದಿನ ವಾರ ಮುಂದುವರಿಯಲಿದೆ ಮತ್ತು ಮೇ 20 ರಿಂದ ಪ್ರಾರಂಭವಾಗುವ ಬೇಸಿಗೆ ರಜೆಯ ಮೊದಲು ಅರ್ಜಿಯ ತೀರ್ಪನ್ನು ಪ್ರಕಟಿಸಲು ಪ್ರಯತ್ನಿಸುತ್ತೇವೆ ಎಂದು ಪೀಠ ಹೇಳಿದೆ.ಇಂದು ರಾತ್ರಿ ಅಥವಾ ಸೋಮವಾರ ಅರವಿಂದ್‌ ಕೇಜ್ರಿವಾಲ್‌ ಜೈಲಿನಿಂದ ಹೊರಗೆ ಬರಬಹುದು. \ No newline at end of file diff --git a/eesanje/url_47_103_8.txt b/eesanje/url_47_103_8.txt new file mode 100644 index 0000000000000000000000000000000000000000..648326baf3cae60885aa394b9f3d1958ec63fede --- /dev/null +++ b/eesanje/url_47_103_8.txt @@ -0,0 +1,6 @@ +ಬಸವಣ್ಣನವರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ +ನವದೆಹಲಿ, ಮೇ 10 (ಪಿಟಿಐ)– ಹನ್ನೆರಡನೇ ಶತಮಾನದ ದಾರ್ಶನಿಕ ಬಸವೇಶ್ವರ ಜನ ದಿನಾಚರಣೆಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಸವಣ್ಣನವರಿಗೆ ನಮನ ಸಲ್ಲಿಸಿದ್ದಾರೆ. +ಬಸವ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಲಕ್ಷಾಂತರ ಜೀವನವನ್ನು ಬೆಳಗಿಸುತ್ತವೆ. ಅವರ ನ್ಯಾಯಯುತ ಮತ್ತು ಸಮದ್ಧ ಸಮಾಜದ ಕನಸುಗಳನ್ನು ನನಸಾಗಿಸಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮೋದಿ ಎಕ್‌್ಸನಲ್ಲಿ ಹೇಳಿಕೊಂಡಿದ್ದಾರೆ. +ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ.../ +ಬಸವ ಎಂದೂ ಕರೆಯಲ್ಪಡುವ ಅವರು ಮಾನವರಲ್ಲಿ ಸಮಾನತೆಯನ್ನು ಪ್ರತಿಪಾದಿಸಿದರು ಮತ್ತು ಯಾವುದೇ ರೀತಿಯ ತಾರತಮ್ಯದ ವಿರುದ್ಧ ಮಾತನಾಡಿದರು. ಅವರು ಪೂಜ್ಯ ವ್ಯಕ್ತಿಯಾಗಿದ್ದಾರೆ, ವಿಶೇಷವಾಗಿ ಕರ್ನಾಟಕದಲ್ಲಿ ಹೆಚ್ಚಾಗಿ ಕೇಂದ್ರೀಕತವಾಗಿರುವ ಲಿಂಗಾಯತರಲ್ಲಿ ಅವರ ಬಗ್ಗೆ ಭಕ್ತಿಭಾವವಿದೆ ಎಂದು ಅವರು ಹೇಳಿದ್ದಾರೆ. +ಪ್ರತ್ಯೇಕ ಪೋಸ್ಟ್‌ಗಳಲ್ಲಿ, ಪ್ರಧಾನ ಮಂತ್ರಿಗಳು ಅಕ್ಷಯ ತತೀಯ ಮತ್ತು ಸಂತ ಪರಶುರಾಮರ ಜನದಿನದ ಶುಭ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರಿದ್ದಾರೆ. \ No newline at end of file diff --git a/eesanje/url_47_103_9.txt b/eesanje/url_47_103_9.txt new file mode 100644 index 0000000000000000000000000000000000000000..90efd7d258f9334ce824324cb9c8e89c9e877400 --- /dev/null +++ b/eesanje/url_47_103_9.txt @@ -0,0 +1,11 @@ +ವಿಚಾರವಾದಿ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸಚಿನ್‌ ಅಂದುರೆ ಮತ್ತು ಸರದ್‌ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ +ಪುಣೆ, ಮೇ 10-ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಅವರ ಹತ್ಯೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಇಬ್ಬರು ಆರೋಪಿಗಳಾದ ಸಚಿನ್‌ ಅಂದುರೆ ಮತ್ತು ಸರದ್‌ ಕಲಾಸ್ಕರ್‌ ಅವರನ್ನು ದೋಷಿಗಳೆಂದು ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆ ವಿಧಿಸಿದೆ. +ಪ್ರಕರಣದಲ್ಲಿ ಆರೋಪಿಗಳೆಂದು ಹೇಳಲ್ಪಟ್ಟಿದ್ದ ವೀರೇಂದ್ರ ತಾವಡೆ, ವಕೀಲ ಸಂಜೀವ್‌ ಪುನಾಲೇಕರ್‌ ಮತ್ತು ವಿಕ್ರಮ್‌ ಭಾವೆ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ತವಡೆ ಪ್ರಕರಣದ ಪ್ರಮುಖ ಸಂಚುಕೋರ ಎಂದು ಆರೋಪಿಸಿತ್ತು. +ಕಿಕ್ಕಿರಿದ ನ್ಯಾಯಾಲಯದಲ್ಲಿ ಆದೇಶವನ್ನು ಓದಿದ ಹೆಚ್ಚುವರಿ ಸೆಷನ್‌್ಸ ನ್ಯಾಯಾಧೀಶ (ವಿಶೇಷ ನ್ಯಾಯಾಲಯ) ಪಿಪಿ ಜಾಧವ್‌, ಸಚಿನ್‌ ಅಂದುರೆ ಮತ್ತು ಶರದ್‌ ಕಲಾಸ್ಕರ್‌ ವಿರುದ್ಧದ ಕೊಲೆ ಮತ್ತು ಪಿತೂರಿಯ ಆರೋಪಗಳನ್ನು ಪ್ರಾಸಿಕ್ಯೂಷನ್‌ ಸಾಬೀತುಪಡಿಸಿದೆ ಮತ್ತು ಅವರಿಗೆ ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ದಂಡ ವಿಧಿಸಲಾಗಿದೆ ಎಂದು ಪ್ರಕಟಿಸಿದರು. +ಮಹಾರಾಷ್ಟ್ರ ಅಂಧಶ್ರಾದ್ಧ ನಿರ್ಮೂಲನ ಸಮಿತಿಯ ಮುಖ್ಯಸ್ಥರಾಗಿದ್ದ ನರೇಂದ್ರ ದಾಭೋಲ್ಕರ್‌ ಅವರನ್ನು ಪುಣೆಯಲ್ಲಿ ಆಗಸ್‌್ಟ 20, 2013ರಂದು ಕೆಲವು ಮೂಲಭೂತವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. +ಪುಣೆಯಲ್ಲಿ ದಾಭೋಲ್ಕರ್‌ ಅವರ ಹತ್ಯೆಯ ನಂತರ ಫೆಬ್ರವರಿ 2015ರಲ್ಲಿ ಗೋವಿಂದ್‌ ಪನ್ಸಾರೆ ಮತ್ತು ಅದೇ ವರ್ಷ ಆಗಸ್‌್ಟನಲ್ಲಿ ಕೊಲ್ಲಾಪುರದಲ್ಲಿ ಎಂಎಂ ಕಲ್ಬುರ್ಗಿ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಗೌರಿ ಲಂಕೇಶ್‌ ಅವರನ್ನು ಸೆಪ್ಟೆಂಬರ್‌ 2017ರಲ್ಲಿ ಬೆಂಗಳೂರಿನ ತಮ್ಮ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು. +ಆರಂಭದಲ್ಲಿ ಪುಣೆ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ಬಾಂಬೆ ಹೈಕೋರ್ಟ್‌, ಆದೇಶದ ನಂತರ ಸಿಬಿಐ 2014ರಲ್ಲಿ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಸನಾತನ ಸಂಸ್ಥೆಗೆ ಸಂಬಂಧಿಸಿರುವ ಇಎನ್‌ಟಿ ಶಸ್ತ್ರಚಿಕಿತ್ಸಕ ಡಾ, ವೀರೇಂದ್ರಸಿನ್‌್ಹ ತಾವಡೆ ಅವರನ್ನು ಜೂನ್‌ 2016 ರಲ್ಲಿ ಬಂಧಿಸಿತ್ತು. +ತಾವಡೆ ಮತ್ತು ಇತರ ಕೆಲವು ಆರೋಪಿಗಳು ನಂಟು ಹೊಂದಿರುವ ಸನಾತನ ಸಂಸ್ಥೆಯು ದಾಭೋಲ್ಕರ್‌ ಅವರ ಸಂಘಟನೆಯಾದ ಮಹಾರಾಷ್ಟ್ರ ಅಂಧಶ್ರದ್ಧ ನಿರ್ಮೂಲನ ಸಮಿತಿ (ಮೂಢನಂಬಿಕೆ ನಿರ್ಮೂಲನಾ ಸಮಿತಿ, ಮಹಾರಾಷ್ಟ್ರ) ನಡೆಸಿದ ಕೆಲಸವನ್ನು ವಿರೋಧಿಸಿದೆ ಎಂದು ಅದು ಹೇಳಿಕೊಂಡಿದೆ.ಮೂಢನಂಬಿಕೆ ನಿರ್ಮೂಲನೆಗಾಗಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿ ಕಾರ್ಯಾಗಾರಗಳನ್ನು ಕೈಗೊಂಡಾಗ ಹಲವು ವರ್ಷಗಳಿಂದ ಸಮಿತಿಯನ್ನು ನಡೆಸುತ್ತಿದ್ದರು. +ನಂತರ ಈ ಪ್ರಕರಣದಲ್ಲಿ ಐವರು ಆರೋಪಿಗಳಾದ ವೀರೇಂದ್ರ ಸಿಂಗ್‌ ತಾವಡೆ, ಸಚಿನ್‌ ಅಂದುರೆ, ಶರದ್‌ ಕಲಾಸ್ಕರ್‌, ವಿಕ್ರಮ್‌ ಭಾವೆ ಮತ್ತು ವಕೀಲ ಸಂಜೀವ್‌ ಪುನಾಲೇಕರ್‌ ಅವರನ್ನು ಬಂಧಿಸಲಾಗಿತ್ತು.ಕೊಲೆ ಮತ್ತು ಕ್ರಿಮಿನಲ್‌ ಪಿತೂರಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್‌ 16 (ಭಯೋತ್ಪಾದನಾ ಕೃತ್ಯ) ಮತ್ತು ಶಸಾ್ತ್ರಸ್ತ್ರ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ 120 ಅಥವಾ 34 ಸೆಕ್ಷನ್‌ 302ರ ಅಡಿಯಲ್ಲಿ ಐವರ ಮೇಲೆ ಆರೋಪ ಹೊರಿಸಲಾಗಿದೆ. +ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 201ರ ಅಡಿಯಲ್ಲಿ ಸಾಕ್ಷ್ಯವನ್ನು ವಿರೂಪಗೊಳಿಸಿದ ಆರೋಪವನ್ನೂ ಹೊರಿಸಲಾಗಿದೆ.ಎಲ್ಲಾ ಐವರು ಆರೋಪಿಗಳ ವಿರುದ್ಧ ಸೆಪ್ಟೆಂಬರ್‌ 15, 2021ರಂದು ಪುಣೆ ಸೆಷನ್‌್ಸ ನ್ಯಾಯಾಲಯವು ಪ್ರಕರಣದ ಆರೋಪಗಳನ್ನು ಮಾಡಿತ್ತು. +ಅಂಧಶ್ರದ್ಧ ನಿರ್ಮೂಲನ ಸಮಿತಿಯ ಕೆಲಸವನ್ನು ಯಾರೂ ಕೈಗೆತ್ತಿಕೊಳ್ಳಬಾರದು ಎಂದು ಜನರ ಮನಸ್ಸಿನಲ್ಲಿ ಭಯ ಹುಟ್ಟಿಸಲು ದಾಭೋಲ್ಕರ್‌ರನ್ನು ನಿರ್ಮೂಲನೆ ಮಾಡಲು ಸಂಚು ರೂಪಿಸಲಾಗಿದೆ ಎಂದು ನ್ಯಾಯಾಲಯವು ಹೇಳಿದೆ.ತಾವಡೆ, ಅಂದುರೆ ಮತ್ತು ಕಲಾಸ್ಕರ್‌ ನ್ಯಾಯಾಂಗ ಬಂಧನದಲ್ಲಿದ್ದರೆ, ಪುನಾಲೇಕರ್‌ ಮತ್ತು ಭಾವೆ ಜಾಮೀನಿನ ಮೇಲೆ ಹೊರಗಿದ್ದರು. \ No newline at end of file diff --git a/eesanje/url_47_104_1.txt b/eesanje/url_47_104_1.txt new file mode 100644 index 0000000000000000000000000000000000000000..bc039db3467a03b9eaf93bb6b248b4ad39ef594b --- /dev/null +++ b/eesanje/url_47_104_1.txt @@ -0,0 +1,7 @@ +ಆಸ್ಟ್ರೇಲಿಯಾದಲ್ಲಿ ಎಂಟೆಕ್‌ ವಿದ್ಯಾರ್ಥಿ ಕೊಂದಿದ್ದ ಸಹೋದರರ ಬಂಧನ +ನವದೆಹಲಿ,ಮೇ.9-ಭಾರತದ 22 ವರ್ಷದ ಎಂಟೆಕ್‌ ವಿದ್ಯಾರ್ಥಿಯೊಬ್ಬನನ್ನು ಇರಿದು ಕೊಂದ ಹರಿಯಾಣ ಮೂಲದ ಇಬ್ಬರು ಸಹೋದರರನ್ನು ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. +ಮೆಲ್ಬೋರ್ನ್‌ ಉಪನಗರ ಒರ್ಮಂಡ್‌ನಲ್ಲಿ ನವಜೀತ್‌ ಸಂಧು ಅವರನ್ನು ಮಾರಣಾಂತಿಕವಾಗಿ ಇರಿದ ಎರಡು ದಿನಗಳ ನಂತರ ನ್ಯೂ ಸೌತ್‌ ವೇಲ್‌್ಸನ ಗೌಲ್ಬರ್ನ್‌ನಲ್ಲಿ ಅಭಿಜೀತ್‌ ಮತ್ತು ರಾಬಿನ್‌ ಗಾರ್ಟನ್‌ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಎನ್‌ಎಸ್‌‍ಡಬ್ಲ್ಯೂ ಪೊಲೀಸರ ನೆರವಿನೊಂದಿಗೆ ಸಹೋದರರಾದ ಅಭಿಜೀತ್‌ ಮತ್ತು ರಾಬಿನ್‌ ಗಾರ್ಟನ್‌ ಅವರನ್ನು ಗೌಲ್‌ಬರ್ನ್‌ನಲ್ಲಿ ಬಂಧಿಸಲಾಗಿದೆ ಎಂದು ವಿಕ್ಟೋರಿಯಾ ಪೊಲೀಸರು ಅಧಿಕತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹತ್ಯೆಗೀಡಾದ ಸಂಧು ಮತ್ತು ಆರೋಪಿಗಳು ಹರಿಯಾಣದ ಕರ್ನಾಲ್‌ ನಿವಾಸಿಗಳು. +ಭಾರತೀಯ ವಿದ್ಯಾರ್ಥಿಗಳ ಗುಂಪಿನ ನಡುವಿನ ಬಾಡಿಗೆ ಸಂಬಂಧಿತ ವಿವಾದದಲ್ಲಿ ಘರ್ಷಣೆಗೆ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸುತ್ತಿದ್ದಾಗ ಸಂಧುವನ್ನು ಇನ್ನೊಬ್ಬ ವಿದ್ಯಾರ್ಥಿಯು ಚಾಕುವಿನಿಂದ ಎದೆಗೆ ಮಾರಣಾಂತಿಕವಾಗಿ ಇರಿದಿದ್ದಾನೆ. ಘಟನೆಯಲ್ಲಿ ನವಜೀತ್‌ ಅವರ 30 ವರ್ಷದ ಸ್ನೇಹಿತನಿಗೂ ಗಾಯಗಳಾಗಿವೆ ಎಂದು ಬಲಿಪಶುವಿನ ಚಿಕ್ಕಪ್ಪ ತಿಳಿಸಿದ್ದಾರೆ. +ನವಜೀತ್‌ನ ಸ್ನೇಹಿತ (ಮತ್ತೊಬ್ಬ ಭಾರತೀಯ ವಿದ್ಯಾರ್ಥಿ) ತನ್ನ ಬಳಿ ಕಾರನ್ನು ಹೊಂದಿದ್ದರಿಂದ ಅವನ ಸಾಮಾನುಗಳನ್ನು ತೆಗೆದುಕೊಳ್ಳಲು ಅವನ ಮನೆಗೆ ಹೋಗುವಂತೆ ಕೇಳಿದ್ದನು. ಅವನ ಸ್ನೇಹಿತ ಒಳಗೆ ಹೋದಾಗ, ನವಜೀತ್‌ ಕೆಲವು ಕೂಗುಗಳನ್ನು ಕೇಳಿದನು ಮತ್ತು ಜಗಳವಾಡುವುದನ್ನು ನೋಡಿದನು. +ನವಜೀತ್‌ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಜಗಳವಾಡಬೇಡಿ ಎಂದು ಹೇಳಿ ಎದೆಗೆ ಚಾಕುವಿನಿಂದ ಮಾರಣಾಂತಿಕವಾಗಿ ಇರಿದಿದ್ದಾರೆ ಎಂದು ಸಂಧು ಅವರ ಚಿಕ್ಕಪ್ಪ ಯಶ್ವೀರ್‌ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.ನವಜೀತ್‌ ಒಂದೂವರೆ ವರ್ಷಗಳ ಹಿಂದೆ ಅಧ್ಯಯನ ವೀಸಾದ ಮೇಲೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು ಮತ್ತು ಅವರ ತಂದೆ, ಕಷಿಕರು ತಮ ಒಂದೂವರೆ ಎಕರೆ ಜಮೀನನ್ನು ಮಾರಾಟ ಮಾಡಿದ್ದು, ಅವರ ಶಿಕ್ಷಣಕ್ಕೆ ಹಣ ನೀಡಿದ್ದರು. \ No newline at end of file diff --git a/eesanje/url_47_104_10.txt b/eesanje/url_47_104_10.txt new file mode 100644 index 0000000000000000000000000000000000000000..8d205e76efc32553567502a1f2c9446b91a00eed --- /dev/null +++ b/eesanje/url_47_104_10.txt @@ -0,0 +1,6 @@ +ಆಸ್ತಿಗಾಗಿ ಹೆತ್ತವರನ್ನೇ ಇರಿದು ಕೊಂದ ಪಾಪಿ ಪುತ್ರ +ಕೋಟಾ (ರಾಜಸ್ಥಾನ) ಮೇ 8-ಕೋಟಾ ಜಿಲ್ಲೆಯ ಬರಾನ್‌ ನಗರದಲ್ಲಿ ಪಿಂಚಣಿ ಮತ್ತು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಗನೇ ತನ್ನ ಹೆತ್ತವರ ಮೇಲೆ ಹಲ್ಲೆ ನಡೆಸಿ ಚೂಪಾದ ಆಯುಧದಿಂದ ಇರಿದು ಕೊಂದಿದ್ದಾನೆ. +ಪಾಪಿ ಮಗನನ್ನು ಗಗೇಂದ್ರ ಗೌತಮ್‌ (50) ಎಂದು ಪೊಲೀಸರು ತಿಳಿಸಿದ್ದು ಆತ ತನ್ನತಂದೆ ಪ್ರೇಂಬಿಹಾರಿ ಗೌತಮ್‌ (75)ಮತ್ತು ತಾಯಿ ದೇವಕಿ ಬಾಯಿ (72)ಅವರನ್ನು ಹತ್ಯೆ ಮಾಡಿದ್ದಾನೆ. +ಕಳೆದ ರಾತ್ರಿ ನಕೋಡ ಕಾಲೋನಿಯಲ್ಲಿರುವ ಮನೆಯಲ್ಲಿ ಜಗಳ ನಡೆದಿದೆ ಇದು ವಿಕೋಪಕ್ಕೆ ತಿರುಗಿ ತಂದೆ -ತಾಯಿಯನ್ನು ಗೋಡೆಗೆ ತಲಲ್ಳಿ ಚಾಕುವಿನಿಂದ ಇರಿದು ಕೊಂದು ನಂತರ ಬೆಳಿಗೆ ಆರೋಪಿ ಮಗ ಗಗೇಂದ್ರ ಪೊಲೀಸ್‌‍ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಸರ್ಕಲ್‌ ಇನ್ಸ್ ಪೆಕ್ಟರ್‌ ರಾಮ್‌ವಿಲಾಸ್‌‍ ಮೀನಾ ತಿಳಿಸಿದ್ದಾರೆ. +ಮೃತ ಪ್ರೇಂಬಿಹಾರಿ ಗೌತಮ್‌ (75) ಗ್ರಾಮ ಪಂಚಾಯಿತಿ ನಿವೃತ್ತ ಕಾರ್ಯದರ್ಶಿಯಾಗಿದ್ದಾರೆ.ಘಟನೆ ನಡೆದಾಗ ಗಗೇಂದ್ರ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.. +ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಗಗೇಂದ್ರ ಅವರ ಪತ್ನಿ ಮತ್ತು ಮಕ್ಕಳು ಈಗಾಗಲೇ ಮನೆಯಿಂದ ಪರಾರಿಯಾಗಿದಾರೆ. \ No newline at end of file diff --git a/eesanje/url_47_104_11.txt b/eesanje/url_47_104_11.txt new file mode 100644 index 0000000000000000000000000000000000000000..b4740d558f945a672936183d2c48c83a5fbf373b --- /dev/null +++ b/eesanje/url_47_104_11.txt @@ -0,0 +1,6 @@ +ಕಾಂಗ್ರೆಸ್‌ ಶಹಜಾದೆ ಇದ್ದಕ್ಕಿದ್ದಂತೆ ಅಂಬಾನಿ-ಅದಾನಿ ಜಪ ನಿಲ್ಲಿಸಿದ್ದೇಕೆ..? : ಮೋದಿ ವಾಗ್ದಾಳಿ +ಹೈದರಾಬಾದ್‌, ಮೇ 8-ಐದು ವರ್ಷದಿಂದ ಅಂಬಾನಿ ಮತ್ತು ಅದಾನಿಯನ್ನು ಬಯ್ಯುತ್ತಲೇ ಬಂದಿದ್ದ ಕಾಂಗ್ರೆಸ್‌ ಶಹಜಾದೆ (ರಾಹುಲ್‌ ಗಾಂಧಿ ) ರಾತ್ರೋರಾತ್ರಿ ಬಯ್ಯೋದನ್ನೇ ನಿಲ್ಲಿಸಿದ್ದಾರೆ. ಅವರಿಂದ ಎಷ್ಟು ಕಪ್ಪು ಹಣ ಇವರಿಗೆ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. +ತೆಲಂಗಾಣದ ರಾಜನ್ನ ಸಿರಿಸಿಲ್ಲ ಜಿಲ್ಲೆಯ ವೇಮುಲವಾಡ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ನರೇಂದ್ರಮೋದಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ, ಅದಾನಿ ಜಪ ಮಾಡುವುದನ್ನು ರಾಹುಲ್‌ ಗಾಂಧಿ ನಿಲ್ಲಿಸಿದ್ದು ಯಾಕೆ ಎಂದು ಕೇಳಿದ್ದಾರೆ. ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಬಳಸುತ್ತಿದ್ದ ಅಂಬಾನಿ, ಅದಾನಿ ಅಸ್ತ್ರವನ್ನು ಅವರಿಗೇ ತಿರುಗಿಸಿದ್ದಾರೆ. +ಕಾಂಗ್ರೆಸ್‌ನ ಶಹಜಾದೆ ಕಳೆದ 5 ವರ್ಷದಿಂದ ಬೆಳಗ್ಗೆಯಾದರೆ ಜಪ ಮಾಡುತ್ತಿದ್ದ ರಫೇಲ್‌ ವಿಚಾರ ಬಿದ್ದುಹೋಯಿತು?. ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಐದು ವರ್ಷದಿಂದ ಒಂದೇ ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ, ಅಂಬಾನಿ ಅಡಾಣಿ, ಅಂಬಾನಿ ಅಡಾಣಿ ಎಂದು ಹೇಳೋಕೆ ಶುರು ಮಾಡಿದರು? +ಚುನಾವಣೆ ಘೋಷಣೆ ಆದ ಬಳಿಕ ಅಂಬಾನಿ ಅದಾಣಿ ಅವರನ್ನು ಬಯ್ಯೋದು ನಿಲ್ಲಿಸಿ ಬಿಟ್ಟರು. ಅಂಬಾನಿ, ಅದಾನಿಯಿಂದ ನೀವು ಎಷ್ಟು ಹಣ ಪಡೆದಿದ್ದೀರಿ ಹೇಳಿ? ರಾತ್ರೋರಾತ್ರಿ ಇವರು ಅಂಬಾನಿ ಅಡಾಣಿ ಬಯ್ಯೋದನ್ನು ನಿಲ್ಲಿಸಿದ್ದಾರೆಂದರೆ ಏನೋ ಇರಬೇಕು. ಯಾವುದೋ ಕಳ್ಳ ಮಾಲು ಟೆಂಪೋದೊಳಗೆ ತುಂಬಿ ಬಂದಿರಬೇಕು ಎಂದು ನರೇಂದ್ರಮೋದಿ ಶಂಕಿಸಿದ್ದಾರೆ. +ಪ್ರಧಾನಿ ಮೋದಿ ಅವರು ಸಿರಿಸಿಲ್ಲ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮುನ್ನ ವೇಮುಲವಾಡದ ರಾಜನ್ನ ದೇವಸ್ಥಾನದಲ್ಲಿ ನಂದಿಯ ದರ್ಶನ ಮಾಡಿದರು. ದರಾಬಾದ್‌ನಿಂದ ಇಲ್ಲಿಗೆ ಬಂದ ಮೋದಿ, ಬಳಿಕ ರಾಜಂಪೇಟಾಗೆ ತೆರಳಲಿದ್ದಾರೆ.ಬಳಿಕ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆ ಮತ್ತು ವಿಜಯವಾಡ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಇಂದು ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_47_104_12.txt b/eesanje/url_47_104_12.txt new file mode 100644 index 0000000000000000000000000000000000000000..481efe7b82c86ecf9bcdfb15ce2f19ff0f4a5711 --- /dev/null +++ b/eesanje/url_47_104_12.txt @@ -0,0 +1,5 @@ +ಸಿಬ್ಬಂದಿ ಸಾಮೂಹಿಕ ರಜೆ, 86ಕ್ಕೂ ಹೆಚ್ಚು ಏರ್‌ ಇಂಡಿಯಾ ವಿಮಾನಗಳ ಹಾರಾಟ ರದ್ದು +ನವದೆಹಲಿ,ಮೇ8-ಅನಾರೋಗ್ಯದ ಕಾರಣ ನೀಡಿ ಏರ್‌ ಇಂಡಿಯಾ ಎಕ್ಸ್ ಪ್ರೆಸ್‌ ಸಿಬ್ಬಂದಿ ಸಾಮೂಹಿಕ ರಜೆ ಹಾಕಿರುವ ಪರಿಣಾಮ ಏರ್‌ ಇಂಡಿಯಾದ 86ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಂಡಿದೆ. +ಸುಮಾರು 300 ಹಿರಿಯ ಕ್ಯಾಬಿನ್‌ ಸಿಬ್ಬಂದಿ ಕೊನೆಯ ಕ್ಷಣದಲ್ಲಿ ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದಾರೆ. ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳ ಕಾರ್ಯಾಚರಣೆ ರದ್ದುಗೊಳಿಸಲಾಗಿದೆ. +ಸಂಬಳದ ವಿಚಾರದಲ್ಲಿ ಅಸಮಾಧಾನ ಹೊಂದಿರುವ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಯಾವುದೇ ನೋಟಿಸ್‌ ನೀಡದೇ ಕೆಲಸಕ್ಕೆ ಗೈರಾಗಿದ್ದಾರೆ. ಅನಾರೋಗ್ಯ ಕಾರಣ ನೀಡಿ ಸಾಮೂಹಿಕವಾಗಿ ಸಿಬ್ಬಂದಿ ರಜೆ ಹಾಕಿದ್ದಾರೆ. +ಈ ಅನಿರೀಕ್ಷಿತ ಅಡಚಣೆಗಾಗಿ ನಾವು ನಮ್ಮ ಅತಿಥಿಗಳಿಗೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಈಗ ಎದುರಾಗಿರುವ ಪರಿಸ್ಥಿತಿಯು, ಇದುವರೆಗೆ ನಾವು ಒದಗಿಸಿರುವ ಸೇವೆಯ ಗುಣಮಟ್ಟವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.ವಿಮಾನ ರದ್ದತಿಯಿಂದ ತೊಂದರೆ ಅನುಭವಿಸುತ್ತಿರುವ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುವುದು. ಪ್ರಯಾಣಕ್ಕೆ ದಿನಾಂಕವನ್ನು ಮರು ಹೊಂದಾಣಿಕೆ ಮಾಡಿಕೊಡಲಾಗುವುದು ಎಂದು ಏರ್‌ಲೈನ್‌್ಸ ತಿಳಿಸಿದೆ. \ No newline at end of file diff --git a/eesanje/url_47_104_2.txt b/eesanje/url_47_104_2.txt new file mode 100644 index 0000000000000000000000000000000000000000..ebe2457ff8775c5b616c7dd2a903d7821f772c94 --- /dev/null +++ b/eesanje/url_47_104_2.txt @@ -0,0 +1,5 @@ +ರಾಮಮಂದಿರಕ್ಕೆ ಭೇಟಿ ನೀಡಿದ ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌ +ಅಯೋಧ್ಯೆ,ಮೇ.9-ಕೇರಳ ರಾಜ್ಯಪಾಲ ಆರಿಫ್‌ ಮೊಹಮದ್‌ ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ ರಾಜ್ಯಪಾಲರು ರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದ ಬಗ್ಗೆ ಮಾಹಿತಿ ನೀಡಲಾಗಿದೆ. +ಜನವರಿಯಲ್ಲಿ ಎರಡು ಬಾರಿ ಅಯೋಧ್ಯೆಗೆ ಬಂದ್ದೆಿ. ಅಂದಿನ ಭಾವನೆ ಇಂದಿಗೂ ಹಾಗೆಯೇ ಇದೆ. ನಾನು ಅಯೋಧ್ಯೆಗೆ ಹಲವು ಬಾರಿ ಬಂದಿದ್ದೇನೆ. ಇದು ನಮಗೆ ಸಂತೋಷದ ವಿಷಯವಲ್ಲ, ಬದಲಾಗಿ ಹೆಮೆಯ ವಿಷಯವಾಗಿದೆ. ಅಯೋಧ್ಯೆ ಮತ್ತು ಶ್ರೀರಾಮನನ್ನು ಪೂಜಿಸುತ್ತಿದ್ದೇನೆ ಎಂದು ರಾಜ್ಯಪಾಲರು ಸುದ್ದಿಗಾರರಿಗೆ ತಿಳಿಸಿದರು. + ' - ? , & !../4ajbj9TF04 +ಕೇರಳ ರಾಜ್ಯಪಾಲರ ಅಧಿಕತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಮಾಡಲಾದ ವೀಡಿಯೋದಲ್ಲಿ ಖಾನ್‌ ಅವರು, ರಾಮ್‌ ಲಲ್ಲಾನ ವಿಗ್ರಹದ ಮುಂದೆ ನಮಸ್ಕರಿಸುತ್ತಿರುವುದನ್ನು ತೋರಿಸುತ್ತಾ ಜೈ ಶ್ರೀ ರಾಮ್‌‍ ಎಂಬ ಘೋಷಣೆ ಕೇಳಿಬರುತ್ತಿರುವ ಕಂಡು ಬರುತ್ತದೆ. \ No newline at end of file diff --git a/eesanje/url_47_104_3.txt b/eesanje/url_47_104_3.txt new file mode 100644 index 0000000000000000000000000000000000000000..2b6d7e5c94c5d2f6d3d04811ebf89fc280f347a1 --- /dev/null +++ b/eesanje/url_47_104_3.txt @@ -0,0 +1,11 @@ +ಶೂಟರ್‌ಗಳಿಗೆ ತಮ್ಮ ಗುರಿ ಸಲ್ಮಾನ್ ಖಾನ್‌ ನಿವಾಸ ಎಂದು ಗೊತ್ತಾಗಿದ್ದು ಕೊನೆ ಕ್ಷಣದಲ್ಲಂತೆ +ಮುಂಬೈ,ಮೇ.9-ಬಾಲಿವುಡ್‌ ಸೂಪರ್‌ಸ್ಟಾರ್‌ ಸಲ್ಮಾನ್ ಖಾನ್‌ ಅವರ ಮುಂಬೈನ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಬಂಧಿಸಲಾದ ಇಬ್ಬರಿಗೆ ಪನ್ವೇಲ್‌ನಲ್ಲಿರುವ ಅವರ ಬಾಡಿಗೆ ಮನೆಗೆ ಶಸ್ತ್ರಾಸ್ತ್ರಗಳು ಮತ್ತು ಗುಂಡುಗಳನ್ನು ತಲುಪಿಸುವವರೆಗೆ ಗುರಿಯ ಬಗ್ಗೆ ತಿಳಿದಿರಲಿಲ್ಲ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಆಪಾದಿತ ಶೂಟರ್‌ಗಳಾದ ಬಿಹಾರದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರನ್ನು ಗುಜರಾತ್‌ನಿಂದ ಏಪ್ರಿಲ್‌ 14 ರಂದು ಉನ್ನತ ಮಟ್ಟದ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ಖಾನ್‌ ಅವರ ಮನೆಯ ಹೊರಗೆ ಗುಂಡು ಹಾರಿಸಿದ 48 ಗಂಟೆಗಳ ಒಳಗೆ ಬಂಧಿಸಲಾಗಿತ್ತು. +ಮುಂಬೈ ಪೊಲೀಸ್‌‍ ಕ್ರೈಂ ಬ್ರಾಂಚ್‌ನ ವಿಚಾರಣೆಯ ಸಮಯದಲ್ಲಿ, ಪಾಲ್‌ ಮತ್ತು ಗುಪ್ತಾ ಅವರಿಗೆ ಜೈಲಿನಲ್ಲಿರುವ ದರೋಡೆಕೋರ ಲಾರೆನ್‌್ಸ ಬಿಷ್ಣೋಯ್‌ ಅವರ ಕಿರಿಯ ಸಹೋದರ ಅನೋಲ್‌ ಬಿಷ್ಣೋಯ್‌ ಅವರು ಈ ಕೆಲಸವನ್ನು ನೀಡಿದ್ದರು. ಆದರೆ ಶಸ್ತ್ರಾಸ್ತ್ರಗಳನ್ನು ತಲುಪಿಸುವವರೆಗೆ ಸಲಾನ್‌ ಖಾನ್‌ ಅವರ ನಿವಾಸದ ಮೇಲೆ ಗುಂಡು ಹಾರಿಸಬೇಕೆಂದು ಅವರಿಗೆ ತಿಳಿದಿರಲಿಲ್ಲ ಎಂದು ಅಧಿಕಾರಿ ಹೇಳಿದರು. +ಪಾಲ್‌ ಅವರನ್ನು ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್‌ನಲ್ಲಿ ಅಂಕಿತ್‌ ಎಂಬಾತ ನೇಮಿಸಿಕೊಂಡಿದ್ದಾನೆ. ಪಾಲ್‌ ಮತ್ತು ಅಂಕಿತ್‌ ಒಟ್ಟಿಗೆ ಕ್ರಿಕೆಟ್‌ ಆಡುತ್ತಿದ್ದರು ನಂತರ ಆತ ಪಾಲ್‌ನನ್ನು ವಾಟ್ಸಾಪ್‌ ಗ್ರೂಪ್‌ಗೆ ಸೇರಿಸಿದ್ದ.ಕೆಲವು ದಿನಗಳ ನಂತರ, ಗ್ಯಾಂಗ್‌ಗೆ ಇನ್ನೂ ಒಬ್ಬ ವ್ಯಕ್ತಿಯ ಅಗತ್ಯವಿರುವ ನಿಯೋಜನೆಯ ಬಗ್ಗೆ ಅಂಕಿತ್‌ ಪಾಲ್‌ಗೆ ತಿಳಿಸಿದರು. ನಂತರ ಎರಡನೇ ಶೂಟರ್‌ ಗುಪ್ತಾ ಅವರನ್ನು ಗುಂಪಿಗೆ ಸೇರಿಸಲಾಯಿತು. +ಅಂಕಿತ್‌ ಟಾಸ್ಕ್‌ ಪೂರ್ಣಗೊಳಿಸಲು ಮುಂಬೈಗೆ ಹೋಗುವಂತೆ ಇಬ್ಬರಿಗೆ ಹೇಳಿದನು ಮತ್ತು ಪ್ರತಿಯಾಗಿ ಉತ್ತಮ ಮೊತ್ತದ ಭರವಸೆ ನೀಡಿದನು. ಇಬ್ಬರೂ ಶೂಟರ್‌ಗಳನ್ನು ವಿದೇಶದಲ್ಲಿರುವ ಅನೋಲ್‌ ಬಿಷ್ಣೋಯ್‌ ಅವರ ಸೂಚನೆಯ ಮೇರೆಗೆ ವ್ಯಕ್ತಿಯೊಬ್ಬರು ಈ ಕಾರ್ಯ ನಿರ್ವಹಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಆರಂಭದಲ್ಲಿ ಅವರಿಗೆ 30,000 ನೀಡಲಾಯಿತು ಮತ್ತು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮುಂಬೈಗೆ ಹೋಗಿ ಮುಂಬೈನ ಹೊರವಲಯದಲ್ಲಿರುವ ಖಾನ್‌ ಅವರ ತೋಟದ ಮನೆ ಇರುವ ಪನ್ವೆಲ್‌ ಬಳಿ ಬಾಡಿಗೆ ಮನೆಯನ್ನು ಹುಡುಕುವಂತೆ ಸೂಚಿಸಲಾಗಿತ್ತು. +ಪಾಲ್‌ ಮತ್ತು ಗುಪ್ತಾ ನಗರಕ್ಕೆ ಬಂದು ಎರಡು ತಿಂಗಳಿಗೂ ಹೆಚ್ಚು ಕಾಲ ಇಲ್ಲಿಯೇ ಇದ್ದರು, ಈ ಸಮಯದಲ್ಲಿ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು ಮತ್ತು ಅವರ ಹಣ ಖಾಲಿಯಾದಾಗ ಬಿಹಾರದ ತಮ ಹಳ್ಳಿಗೆ ಮರಳಿದರು ಎಂದು ಅಧಿಕಾರಿ ಹೇಳಿದರು. +ಫೆಬ್ರವರಿಯಲ್ಲಿ ಇಬ್ಬರನ್ನೂ ಮತ್ತೆ ಗ್ಯಾಂಗ್‌ ಸಂಪರ್ಕಿಸಿ 40,000 ನೀಡಿ ವಾಸಕ್ಕೆ ಬಾಡಿಗೆ ಮನೆ ಕೊಡಿಸುವಂತೆ ಹೇಳಿದ್ದರು. ಈ ಬಾರಿ ಅವರು ಮುಂಬೈನಿಂದ 60 ಕಿಮೀ ದೂರದಲ್ಲಿರುವ ಪನ್ವೆಲ್‌ಗೆ ಬಂದು ಹರಿಗ್ರಾಮ್‌ ಪ್ರದೇಶದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡಿದ್ದರು. +ಕೆಲವು ದಿನಗಳ ನಂತರ, ಮೋಟಾರುಬೈಕನ್ನು ಖರೀದಿಸಲು ಅವರನ್ನು ಕೇಳಲಾಯಿತು, ಅದಕ್ಕಾಗಿ ಅವರ ಬ್ಯಾಂಕ್‌ ಖಾತೆಗೆ ಹಣವನ್ನು ಜಮಾ ಮಾಡಲಾಗಿದೆ ಮತ್ತು ಸ್ವಲ್ಪ ಹಣವನ್ನು ಸಹ ಅವರಿಗೆ ನೀಡಲಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದರು.ಶಸಾ್ತ್ರಸ್ತ್ರಗಳನ್ನು ತಲುಪಿಸುವ ಕೆಲವು ದಿನಗಳ ಮೊದಲು, ಬಾಂದ್ರಾದಲ್ಲಿರುವ 58 ವರ್ಷದ ನಟನ ನಿವಾಸ ಮತ್ತು ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್‌‍ನಲ್ಲಿ ಸಮೀಕ್ಷೆ ನಡೆಸಲು ಅವರನ್ನು ಕೇಳಲಾಯಿತು. +ಎರಡು ಪಿಸ್ತೂಲ್‌ಗಳು ಮತ್ತು ಲೈವ್‌ ರೌಂಡ್‌ಗಳನ್ನು ಮಾರ್ಚ್‌ 15 ರಂದು ಇಬ್ಬರು ವ್ಯಕ್ತಿಗಳಾದ ಸೋನು ಬಿಷ್ಣೋಯ್‌ ಮತ್ತು ಅನುಜ್‌ ಥಾಪನ್‌ ಅವರ ಬಾಡಿಗೆ ಮನೆಯಲ್ಲಿ ಅವರಿಗೆ ತಲುಪಿಸಿದರು ಮತ್ತು ಈ ಹಂತದಲ್ಲಿ ಅವರಿಗೆ ಗುರಿಯ ಬಗ್ಗೆ ತಿಳಿಸಲಾಯಿತು ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_104_4.txt b/eesanje/url_47_104_4.txt new file mode 100644 index 0000000000000000000000000000000000000000..7a569aeaeb412622f4dae4c0d6b288a1960fe818 --- /dev/null +++ b/eesanje/url_47_104_4.txt @@ -0,0 +1,5 @@ +ಮಣಿಪುರದ ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರು ಪತ್ತೆ : ಸಿಎಂ +ಇಂಫಾಲ್‌‍, ಮೇ 9– ಮಣಿಪುರ ಸರ್ಕಾರವು ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಪತ್ತೆಹಚ್ಚಿದೆ ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಹೇಳಿದ್ದಾರೆ. 5,173 ಜನರ ಬಯೋಮೆಟ್ರಿಕ್‌ ಡೇಟಾವನ್ನು ಸಂಗ್ರಹಿಸಲಾಗಿದೆ ಎಂದು ಅವರು ಎಕ್‌್ಸನಲ್ಲಿ ಅವರು ಬರೆದಿದ್ದಾರೆ. +ಫೈಕೋಹ್‌, ಹುಯಿಮಿ ಥಾನಾ/ಸಂಗಲೋಕ್‌ ನಿರಾಶ್ರಿತರ ಶಿಬಿರಗಳಲ್ಲಿ ತಂಗಿರುವವರ ಬಯೋಮೆಟ್ರಿಕ್‌ಗಳನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಮ್ಮ ಸರ್ಕಾರ ಎಲ್ಲಾ ಅಕ್ರಮ ವಲಸಿಗರಿಗೆ ಮಾನವೀಯ ನೆರವು ನೀಡುತ್ತಿದೆ ಎಂದು ಸಿಎಂ ಹೇಳಿದರು.ನಾವು ಈ ಪರಿಸ್ಥಿತಿಯನ್ನು ಅತ್ಯಂತ ಸೂಕ್ಷ್ಮತೆಯಿಂದ ನಿಭಾಯಿಸುತ್ತಿದ್ದೇವೆ ಎಂದು ಅವರು ಹೇಳಿದರು. +ಈ ತಿಂಗಳ ಆರಂಭದಲ್ಲಿ, ಮಣಿಪುರಕ್ಕೆ ದಾಟಿದ ಮ್ಯಾನ್ಮಾರ್‌ನಿಂದ ಕನಿಷ್ಠ 38 ಅಕ್ರಮ ವಲಸಿಗರನ್ನು ತೆಂಗ್ನೌಪಾಲ್‌ ಜಿಲ್ಲೆಯ ಮೊರೆಹ್‌ ಪಟ್ಟಣದ ಮೂಲಕ ಗಡೀಪಾರು ಮಾಡಲಾಗಿದೆ ಎಂದು ಸಿಂಗ್‌ ಮಾಹಿತಿ ನೀಡಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 77 ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ಹೇಳಿದರು ಮಣಿಪುರ ಸರ್ಕಾರವು ಕಾಮ್‌ಜಾಂಗ್‌‍ ಜಿಲ್ಲೆಯಲ್ಲಿ 5,457 ಅಕ್ರಮ ವಲಸಿಗರನ್ನು ಪತ್ತೆಹಚ್ಚಿದೆ ಮತ್ತು ಅವರನ್ನು ಗಡಿಪಾರು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಹೇಳಿದ್ದಾರೆ. +ಫೈಕೋಹ್‌, ಹುಯಿಮಿ ಥಾನಾ/ಸಂಗಲೋಕ್‌ ನಿರಾಶ್ರಿತರ ಶಿಬಿರಗಳಲ್ಲಿ ತಂಗಿರುವವರ ಬಯೋಮೆಟ್ರಿಕ್‌ಗಳನ್ನು ಪಡೆಯಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 77 ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಅವರು ಹೇಳಿದರು \ No newline at end of file diff --git a/eesanje/url_47_104_5.txt b/eesanje/url_47_104_5.txt new file mode 100644 index 0000000000000000000000000000000000000000..ae6be9f027226219ab3c57dc8822634aefce11f2 --- /dev/null +++ b/eesanje/url_47_104_5.txt @@ -0,0 +1,8 @@ +ಜೂ.4ರ ನಂತರ ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಸರ್ಕಾರ ಮಾಯವಾಗಲಿದೆ : ಮೋದಿ +ವಿಜಯವಾಡ,ಮೇ9-ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಮಾಫಿಯಾರಾಜ್‌ನಿಂದ ಆಂಧ್ರಪ್ರದೇಶದ ಜನತೆ ಬೇಸತ್ತಿದ್ದಾರೆ. ಇದರಿಂದ ಜೂನ್‌ 4ರ ನಂತರ ವೈಎಸ್‌ಆರ್‌ಸಿಪಿ ಸರ್ಕಾರ ಮಾಯವಾಗಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಾಗ್ದಾಳಿ ನಡೆಸಿದ್ದಾರೆ. +ಆಂಧ್ರಪ್ರದೇಶದ 25 ಲೋಕಸಭಾ ಕ್ಷೇತ್ರಗಳು ಮತ್ತು 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13ರಂದು ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ, ಟಿಡಿಪಿ ಅಧ್ಯಕ್ಷ ಎನ್‌.ಚಂದ್ರಬಾಬು ನಾಯ್ಡು, ಜನಸೇನಾ ಮುಖ್ಯಸ್ಥ, ನಟ ಪವನ್‌ ಕಲ್ಯಾಣ್‌ ಅವರೊಂದಿಗೆ ರೋಡ್‌ ಶೋ ನಡೆಸಿದ್ದಾರೆ. +ರೋಡ್‌ ಶೋ ಬಳಿಕ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ಸರ್ಕಾರದ ಆಡಳಿತದ ಬಗ್ಗೆ ಟೀಕಿಸಿದ್ದಾರೆ. +ಕಾಂಗ್ರೆಸ್‌ ಸಂಸ್ಕೃತಿಯೊಂದಿಗೆ ಗಟ್ಟಿಯಾದ ನಂಟಿನಿಂದಾಗಿ ವೈಎಸ್‌ಆರ್‌ಸಿಪಿಯು ಭ್ರಷ್ಟಾಚಾರ, ಕುತಂತ್ರ ಮತ್ತು ಮಾಫಿಯಾ ರಾಜ್‌ ಹೆಚ್ಚಿಸಿದೆ. ಆಂಧ್ರಪ್ರದೇಶವು ವೈಎಸ್‌ಆರ್‌ಸಿಪಿಯಿಂದ ಸಂಪೂರ್ಣವಾಗಿ ಬೇಸತ್ತಿದೆ. ಜೂನ್‌ 4ರಂದು ಈ ಸರ್ಕಾರವು ಕಳೆದುಹೋಗಲಿದೆ. ಅಲ್ಲದೇ, ಇತ್ತೀಚಿಗೆ ರಾಜ್ಯದಾದ್ಯಂತ ಪ್ರವಾಸ ಮಾಡಿದ ನಂತರ ಜನರು ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಎನ್‌ಡಿಎ ಮೈತ್ರಿಕೂಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕುತ್ತಿದ್ದಾರೆ ಎಂದು ನನಗೆ ಮನವರಿಕೆಯಾಗಿದೆ ಎಂದಿದ್ದಾರೆ. +ಬಿಜೆಪಿ ಮತ್ತು ಟಿಡಿಪಿ ಈ ಹಿಂದೆ ಒಟ್ಟಿಗೆ ಕೆಲಸ ಮಾಡಿದೆ. ನಮ್ಮ ಮೈತ್ರಿ ಭವಿಷ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ಈಗ ಜನಸೇನೆಯ ಸಕ್ರಿಯ ಬೆಂಬಲವು ನಮ್ಮ ಒಕ್ಕೂಟವನ್ನು ಮತ್ತಷ್ಟು ಬಲಪಡಿಸಿದೆ. ಆಂಧ್ರಪ್ರದೇಶದ ಜನರ ಆಕಾಂಕ್ಷೆಗಳನ್ನು ಈಡೇರಿಸುವ ಸಾಮರ್ಥ್ಯವನ್ನು ಎನ್‌ಡಿಎ ಮೈತ್ರಿಕೂಟ ಹೊಂದಿದೆ. +ನಾವು ಕೃಷಿ ಉತ್ಪಾದಕತೆಯನ್ನು ಸುಧಾರಿಸಲು, ಕೈಗಾರಿಕಾ ಬೆಳವಣಿಗೆಯನ್ನು ಹೆಚ್ಚಿಸಲು ಮತ್ತು ಆಂಧ್ರಪ್ರದೇಶದ ಸೇವಾ ವಲಯದಲ್ಲಿಯೂ ಛಾಪು ಮೂಡಿಸುವುದನ್ನು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ. ಈ ರಾಜ್ಯದ ಜನರು ಆಶೀರ್ವದಿಸಿರುವ ಉದ್ಯಮಶೀಲ ಶಕ್ತಿಗೆ ರೆಕ್ಕೆಗಳನ್ನು ಒದಗಿಸಲು ನಾವು ಸಿದ್ಧವಾಗಿದ್ದೇವೆ ಎಂದು ಹೇಳಿದ್ದಾರೆ. +ಪ್ರಗತಿಗಾಗಿ ಆಂಧ್ರಪ್ರದೇಶದ ಕರಾವಳಿಯನ್ನು ಎನ್‌ಡಿಎ ಮೈತ್ರಿಕೂಟ ಸದುಪಯೋಗಪಡಿಸಿಕೊಳ್ಳುತ್ತದೆ. ರಾಜ್ಯದ ಬಂದರು ಪ್ರದೇಶವು ಅಭಿವೃದ್ಧಿ ಕೆಲಸಕ್ಕೆ ನೇತೃತ್ವ ವಹಿಸುತ್ತದೆ ಮತ್ತು ಮೀನುಗಾರಿಕೆ ಕ್ಷೇತ್ರವನ್ನು ಉತ್ತೇಜಿಸುತ್ತದೆ. ಜೊತೆಗೆ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗುವುದು. ರಸ್ತೆ, ರೈಲು ಮತ್ತು ವಿಮಾನ ಸಂಪರ್ಕ, ಡಿಜಿಟಲ್‌ ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_47_104_6.txt b/eesanje/url_47_104_6.txt new file mode 100644 index 0000000000000000000000000000000000000000..d46fd30fe9fb11f706f87a10433b96229b30564d --- /dev/null +++ b/eesanje/url_47_104_6.txt @@ -0,0 +1,8 @@ +ಚರ್ಚೆಗೆ ಬರುವಂತೆ ರಾಹುಲ್‌-ಪ್ರಿಯಾಂಕಾಕೆ ಸ್ಮೃತಿ ಇರಾನಿ ಪಂಥಾಹ್ವಾನ +ಅಮೇಥಿ,ಮೇ.9-ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ಪ್ರಿಯಾಂಕಾ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವೆ ಸ್ಮೃತಿಇರಾನಿ ಈ ಕುರಿತಂತೆ ಮಾತನಾಡಲು ಚರ್ಚೆಗೆ ಬರುವಂತೆ ಗಾಂಧಿಗಳಿಗೆ ಪಂಥಾಹ್ವಾನ ನೀಡಿದ್ದಾರೆ. +ಈ ಕುರಿತ ಚರ್ಚೆಗೆ ನಾನು ಯಾವುದೇ ದೂರದರ್ಶನ ವಾಹಿನಿಗಳಿಗೆ ಬರಲು ಸಿದ್ದಳಿದ್ದೇನೆ ನೀವೆ ಸಮಯ ಮತ್ತು ಸ್ಥಳ ನಿಗದಿಪಡಿಸಿ ಎಂದು ಅವರು ಸವಾಲು ಹಾಕಿದ್ದಾರೆ.ಬಿಜೆಪಿಯೊಂದಿಗೆ ಚರ್ಚೆಗೆ ಯಾವುದೇ ಚಾನೆಲ್‌‍, ಆಂಕರ್‌, ಸ್ಥಳ, ಸಮಯ ಮತ್ತು ಸಮಸ್ಯೆಯನ್ನು ಆಯ್ಕೆ ಮಾಡಿಕೊಳ್ಳುವಂತೆ ನಾನು ಅವರಿಗೆ (ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್‌ ಗಾಂಧಿ) ಸವಾಲು ಹಾಕುತ್ತೇನೆ. +ದೋನೋ ಭಾಯಿ-ಬೆಹೆನ್‌ ಏಕ್‌ ತರಫ್‌ ಔರ್‌ ಬಿಜೆಪಿ ಕಾ ಏಕ್‌ ಪ್ರವಕ್ತ ಏಕ್‌ ತರಫ್‌, ದೂದ್‌ ಕಾ ದೂಧ್‌ ಪಾನಿ ಕಾ ಪಾನಿ ಹೋ ಜಾಯೇಗಾ (ಒಂದೆಡೆ ಸಹೋದರ-ಸಹೋದರಿ ಜೋಡಿ ಇರುತ್ತಾರೆ, ಮತ್ತೊಂದೆಡೆ ಬಿಜೆಪಿಯ ವಕ್ತಾರರು ಇರುತ್ತಾರೆ; ಎಲ್ಲವೂ ಸ್ಪಷ್ಟವಾಗುತ್ತದೆ)…ನಮ ಪಕ್ಷದಿಂದ ಸುಧಾಂಶು ತ್ರಿವೇದಿ ಅವರೇ ಸಾಕು ಅವರಿಂದಲೇ ಉತ್ತರವನ್ನು ಪಡೆಯಿರಿ ಎಂದು ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸುತ್ತಿರುವ ಇರಾನಿ ಕರೆ ನೀಡಿದ್ದಾರೆ. +ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿಯನ್ನು 55,000 ಮತಗಳಿಂದ ಸೋಲಿಸಿ ಗಾಂಧಿ ಕುಟುಂಬದ ಸ್ಥಾನವನ್ನು ಕೊನೆಗೊಳಿಸಿದ್ದರು. +ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳು ಗಾಂಧಿ ಕುಟುಂಬದ ಹಳೆಯ ಟರ್ಫ್‌ಗಳೆಂದು ಪರಿಗಣಿಸಲಾದ ಎರಡು ಕ್ಷೇತ್ರಗಳು ಮತ್ತೆ ಕೇಂದ್ರಬಿಂದುವಾಗಿದ್ದು, ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ರಾಯ್‌ಬರೇಲಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ ಮತ್ತು ಕುಟುಂಬದ ಆಪ್ತ ಸಹಾಯಕ ಕಿಶೋರಿ ಲಾಲ್‌ ಶರ್ಮಾ ಅಮೇಥಿಯಲ್ಲಿ ಸತಿ ಇರಾನಿ ವಿರುದ್ಧ ಕಣಕ್ಕಿಳಿದಿದ್ದಾರೆ. +ಅಖಿಲ ಭಾರತ ಕಾಂಗ್ರೆಸ್‌‍ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೇಲ್ಕಂಡ ಕ್ಷೇತ್ರಗಳಲ್ಲಿ ಪ್ರಚಾರದ ಮೂಲಕ ಯಾವಾಗಲೂ ಸಕ್ರಿಯರಾಗಿದ್ದಾರೆ, ಸೋಮವಾರದಿಂದ ರಾಯ್‌ ಬರೇಲಿಯಲ್ಲಿ ಬೀಡುಬಿಟ್ಟಿದ್ದಾರೆ ಮತ್ತು ತಂತ್ರ, ನಿರ್ವಹಣೆ ಮತ್ತು ಪ್ರಚಾರದಿಂದ ಚುನಾವಣಾ ಕಣವನ್ನು ಮುನ್ನಡೆಸುತ್ತಿದ್ದಾರೆ. +ಸೋನಿಯಾ ಗಾಂಧಿ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್‌ ಬರೇಲಿಯಿಂದ ಸ್ಪರ್ಧಿಸಿದರು ಮತ್ತು ಭಾರತೀಯ ಜನತಾ ಪಕ್ಷದ ದಿನೇಶ್‌ ಪ್ರತಾಪ್‌ ಸಿಂಗ್‌ ಅವರನ್ನು 1.6 ಲಕ್ಷ ಮತಗಳ ಅಂತರದಿಂದ ಸೋಲಿಸಿದರು, ಆದಾಗ್ಯೂ, ಅವರ ಗೆಲುವಿನ ಅಂತರವು 2014 ಕ್ಕೆ ಹೋಲಿಸಿದರೆ ಶೇಕಡಾ 13 ರಷ್ಟು ಕಡಿಮೆಯಾಗಿತ್ತು. \ No newline at end of file diff --git a/eesanje/url_47_104_7.txt b/eesanje/url_47_104_7.txt new file mode 100644 index 0000000000000000000000000000000000000000..df8440f3a64fcb3af5838c064d58a8f6d740e77a --- /dev/null +++ b/eesanje/url_47_104_7.txt @@ -0,0 +1,5 @@ +ವಿಮಾನ ಹಾರಾಟ ರದ್ದಿಗೆ ಕಾರಣರಾದ 25 ಸಿಬ್ಬಂದಿಗಳನ್ನು ವಜಾಗೊಳಿಸಿದ ಏರ್‌ ಇಂಡಿಯಾ +ನವದೆಹಲಿ, ಮೇ 9 (ಪಿಟಿಐ)ಅನಾರೋಗ್ಯದ ನೆಪವೊಡ್ಡಿ ಸಾಮೂಹಿಕ ರಜೆ ಹಾಕುವ ಮೂಲಕ 90ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಿಗೆ ಕಾರಣಕರ್ತರು ಎನ್ನಲಾದ ಸುಮಾರು 25 ಕ್ಯಾಬಿನ್‌ ಸಿಬ್ಬಂದಿಗಳನ್ನು ಏರ್‌ ಇಂಡಿಯಾ ಸಂಸ್ಥೆ ವಜಾಗೊಳಿಸಿದೆ ಎಂದು ಏರ್‌ಲೈನ್‌ ಮೂಲಗಳು ತಿಳಿಸಿವೆ. +ಟಾಟಾ ಗ್ರೂಪ್‌ ಒಡೆತನದ ವಿಮಾನಯಾನ ಸಂಸ್ಥೆಯು ಉಳಿದ ಕ್ಯಾಬಿನ್‌ ಸಿಬ್ಬಂದಿಗಳಿಗೆ ಇಂದು ಸಂಜೆ 4 ಗಂಟೆಯೊಳಗೆ ಮತ್ತೆ ಕರ್ತವ್ಯಕ್ಕೆ ಹಾಜರಾಗಬೇಕು ಇಲ್ಲದಿದ್ದರೆ ನಿಮನ್ನು ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. +ಕ್ಯಾಬಿನ್‌ ಸಿಬ್ಬಂದಿಯ ಲಭ್ಯತೆಯಿಲ್ಲದ ಕಾರಣ ಏರ್‌ ಇಂಡಿಯಾ ಸಂಸ್ಥೆ ಕನಿಷ್ಠ 60 ವಿಮಾನ ಯಾನಗಳನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ ಮತ್ತು ಕ್ಯಾಬಿನ್‌ ಸಿಬ್ಬಂದಿಯ ಒಂದು ವಿಭಾಗದಿಂದ ಸಾಮೂಹಿಕ ರಜೆಗಳು ಪ್ರಯಾಣಿಕರಿಗೆ ಅಪಾರ ಅನಾನುಕೂಲತೆಯನ್ನು ಉಂಟುಮಾಡಿದೆ. +ಏರ್‌ಲೈನ್‌ನಲ್ಲಿ ಹಿರಿಯ ಮಟ್ಟದಲ್ಲಿ ಸುಮಾರು 500 ಮಂದಿ ಸೇರಿದಂತೆ ಸುಮಾರು 1,400 ಕ್ಯಾಬಿನ್‌ ಸಿಬ್ಬಂದಿ ಇದ್ದಾರೆ.90 ಕ್ಕೂ ಹೆಚ್ಚು ವಿಮಾನಗಳ ರದ್ದತಿಗೆ ಕಾರಣವಾದ ಏರ್‌ಲೈನ್‌ನಲ್ಲಿನ ದುರುಪಯೋಗದ ವಿರುದ್ಧ ಪ್ರತಿಭಟಿಸಲು 200 ಕ್ಕೂ ಹೆಚ್ಚು ಕ್ಯಾಬಿನ್‌ ಸಿಬ್ಬಂದಿ ಮಂಗಳವಾರ ರಾತ್ರಿಯಿಂದ ಅಸ್ವಸ್ಥರಾಗಿದ್ದಾರೆಂದು ವರದಿ ಮಾಡಲು ಪ್ರಾರಂಭಿಸುವ ಮೂಲಕ ಸಾಮೂಹಿಕ ರಜೆ ಹಾಕಿದ್ದರಿಂದ ಇಂತಹ ಸನ್ನಿವೇಶ ನಿರ್ಮಾಣವಾಗಿತ್ತು. \ No newline at end of file diff --git a/eesanje/url_47_104_8.txt b/eesanje/url_47_104_8.txt new file mode 100644 index 0000000000000000000000000000000000000000..6d19928e851ce3047448c316d25d0804502a1298 --- /dev/null +++ b/eesanje/url_47_104_8.txt @@ -0,0 +1,7 @@ +ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಮೋಸ್ಟ್ ವಾಂಟೆಡ್‌ ಉಗ್ರ ಸೇರಿ ಮೂವರ ಎನ್‌ಕೌಂಟರ್‌ +ಶ್ರೀನಗರ,ಮೇ9-ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್‌ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್‌ ಸೇರಿ ಮೂವರ ಹತ್ಯೆಯಾಗಿದೆ. +ರೆಡ್ವಾನಿ ಪಯೀನ್‌ನ ನಿವಾಸಿ ಬಸಿತ್‌ ಅಹ್ಮದ್‌ ದಾರ್‌, ಲಷ್ಕರ್‌-ಎ-ತೈಬಾ (ಎಲ್‌ಇಟಿ) ಆಫ್‌ಶೂಟ್‌ ಗ್ರೂಪ್‌ ಮತ್ತು ದಿ ರೆಸಿಸ್ಟೆಂಟ್‌ ಫ್ರಂಟ್‌ (ಟಿಆರ್‌ಎಫ್‌)ನ ಕಮಾಂಡರ್‌ ಆಗಿದ್ದ. ನಾಗರಿಕರು ಮತ್ತು ಭದ್ರತಾ ಸಿಬ್ಬಂದಿಯ ಹತ್ಯೆಗಳಲ್ಲಿ ಭಾಗಿಯಾಗಿದ್ದರು. ದಾರ್‌ ಜೊತೆ ಹತ್ಯೆಗೊಳಗಾದ ಇಬ್ಬರು ಎಲ್‌ಇಟಿ ಭಯೋತ್ಪಾದಕರು ಮೋಮಿನ್‌ ಗುಲ್ಜಾರ್‌ ಮತ್ತು ಫಾಹಿಮ್‌ ಅಹ್ಮದ್‌ ಬಾಬಾ ಎಂದು ಗುರುತಿಸಲಾಗಿದೆ. +ಕುಲ್ಗಾಮ್‌ನ ರೆಡ್ವಾನಿ ಪ್ರದೇಶದಲ್ಲಿ ಎನ್‌ಕೌಂಟರ್‌ ಸೈಟ್‌ನ ಸಮೀಪವಿರುವ ಮನೆಗಳ ಹುಡುಕಾಟದ ಸಮಯದಲ್ಲಿ ಭದ್ರತಾ ಪಡೆಗಳು ಮತ್ತು ಅಲ್ಲಿ ಅಡಗಿದ್ದ ಭಯೋತ್ಪಾದಕನ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. +18 ಹತ್ಯೆಗಳಲ್ಲಿ ಭಾಗಿಯಾಗಿದ್ದವರನ್ನು ಎನ್‌ಕೌಂಟರ್‌ ಮಾಡಿರುವುದು ನಮಗೆ ದೊಡ್ಡ ಸಾಧನೆಯಾಗಿದೆ. ಈ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ, ನಾಗರಿಕರು ಮತ್ತು ಅಲ್ಪಸಂಖ್ಯಾತರು ಸೇರಿದ್ದಾರೆ ಎಂದು ಕಾಶ್ಮೀರದ ಪೊಲೀಸ್‌ ಮಹಾನಿರೀಕ್ಷಕ ವಿ ಕೆ ಬಿರ್ಡಿ ತಿಳಿಸಿದ್ದಾರೆ. +ಕೊಲ್ಲಲ್ಪಟ್ಟ ಭಯೋತ್ಪಾದಕರಲ್ಲಿ ಒಬ್ಬನನ್ನು ಎ ವರ್ಗದ ಭಯೋತ್ಪಾದಕ ಬಸಿತ್‌ ದಾರ್‌ ಎಂದು ಗುರುತಿಸಲಾಗಿದೆ. ಭಯೋತ್ಪಾದಕರಿಗೆ ಶರಣಾಗಲು ಅವಕಾಶ ನೀಡಲಾಗಿತ್ತು. ಆದರೆ ಅವರು ಭದ್ರತಾ ಸಿಬ್ಬಂದಿಯ ಮೇಲೆ ತಮ್ಮ ಗುಂಡಿನ ದಾಳಿಯನ್ನು ಮುಂದುವರೆಸಿದರು ಎಂದು ಬಿರ್ಧಿ ಹೇಳಿದ್ದಾರೆ. +ರೆಡ್ವಾನಿ ಗ್ರಾಮದಲ್ಲಿ ಭಯೋತ್ಪಾದಕರ ಚಲನವಲನದ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದ ನಂತರ ಅಲ್ಲಿ ಕಾರ್ಡನ್‌ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_104_9.txt b/eesanje/url_47_104_9.txt new file mode 100644 index 0000000000000000000000000000000000000000..4230cb629064c8fd60134e57a7fa663c044cf8c8 --- /dev/null +++ b/eesanje/url_47_104_9.txt @@ -0,0 +1,5 @@ +ಚುನಾವಣಾ ಕರ್ತವ್ಯಯದಲ್ಲಿದ್ದ ಕಾನ್‌ ಸ್ಟೇಬಲ್‌ ಹೃದಯಾಘಾತದಿಂದ ಸಾವು +ಮುಂಬೈ, ಮೇ 8-ಮಧ್ಯ ಮುಂಬೈನ ದಾದರ್‌ನಲ್ಲಿ ಚುನಾವಣಾ ಕರ್ತವ್ಯಯದಲ್ಲಿದ್ದ ಪೊಲೀಸ್‌‍ ಪೇದೆಯೊಬ್ಬರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 7.40ಕ್ಕೆ ಈ ಘಟನೆ ಸಂಭವಿಸಿದ್ದು, ನೆರೆಯ ಥಾಣೆ ಜಿಲ್ಲೆಯ ಡೊಂಬಿವಿಲಿ ನಿವಾಸಿ ವಿಲಾಸ್‌‍ ಯಾದವ್‌(38)ಸಾವನ್ನಪ್ಪಿದ ಪೇದೆ ಎಂದು ಗುರುತಿಸಲಾಗಿದೆ. +ಸೆಂಟ್ರಲ್‌ ಮುಂಬೈನ ಶಿವಾಜಿ ಪಾರ್ಕ್‌ ಪೊಲೀಸ್‌‍ ಠಾಣೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯಾದವ್‌ ಅವರನ್ನು ಕಳೆದೆರಡು ದಿನಗಳಿಂದ ಸ್ಟ್ರಾಂಗ್‌ ರೂಮ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಇಂದು ಬೆಳಿಗ್ಗೆ ಅವರು ಡಿಸಿಲ್ವಾ ಹೈಸ್ಕೂಲ್‌ ಸ್ಟ್ರಾಂಗ್‌ ರೂಂಗೆ ಕರ್ತವ್ಯಕ್ಕೆ ಹೋಗಿದ್ದರು, ಅಲ್ಲಿ ಅವರು ಫ್ಲೈಯಿಂಗ್‌ ಸ್ಕ್ವಾಡ್‌ನ ಭಾಗವಾಗಿದ್ದರು. ಆದರೆ ಸ್ಥಳವನ್ನು ತಲುಪಿದ ನಂತರ ಅವರು ಅಸ್ವಸ್ಥಗೊಂಡರು. +ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ವೈದ್ಯಕೀಯ ಸೌಲಭ್ಯಕ್ಕೆ ತಲುಪಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವಾಜಿ ಪಾರ್ಕ್‌ ಪೊಲೀಸ್‌‍ ಠಾಣೆಯಲ್ಲಿ ಆಕಸಿಕ ಸಾವಿನ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದರು. \ No newline at end of file diff --git a/eesanje/url_47_105_1.txt b/eesanje/url_47_105_1.txt new file mode 100644 index 0000000000000000000000000000000000000000..9977be05a24fc4cc15a2aac488ec484c65d0d4fa --- /dev/null +++ b/eesanje/url_47_105_1.txt @@ -0,0 +1,6 @@ +ಭಾರತೀಯರ ಬಗ್ಗೆ ಸ್ಯಾಮ್‌ ಪಿತ್ರೋಡಾ ಮತ್ತೊಂದು ವಿವಾದಾತ್ಮಕ ಹೇಳಿಕೆ +ನವದೆಹಲಿ,ಮೇ8-ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣುತ್ತಾರೆ ಎಂದು ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್ ಮನ್‌ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್‌ ಪಿತ್ರೋಡಾ ಈ ಹೇಳಿಕೆ ನೀಡಿದ್ದಾರೆ. +ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ, ಉತ್ತರದ ಜನರು ಬಿಳಿಯರಂತೆ ಮತ್ತು ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುವ ಭಾರತದಂತಹ ವೈವಿಧ್ಯಮಯ ದೇಶವನ್ನು ನಾವು ಒಟ್ಟಿಗೆ ಹಿಡಿದಿಟ್ಟುಕೊಳ್ಳಬಹುದು ಪರವಾಗಿಲ್ಲ ನಾವೆಲ್ಲರೂ ಸಹೋದರ ಸಹೋದರಿಯರು ನಾವು ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ ಎಂದಿದ್ದಾರೆ. +ಭಾರತವು ಅತ್ಯಂತ ವೈವಿಧ್ಯಮಯ ದೇಶ ಎಂದು ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಇತ್ತೀಚೆಗಷ್ಟೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಚುನಾವಣೆಯ ನಂತರ ನಮ್ಮ ಸರ್ಕಾರ ಅಧಿ ಕಾರಕ್ಕೆ ಬಂದರೆ ಸಮೀಕ್ಷೆ ನಡೆಸಿ ಯಾರ ಬಳಿ ಎಷ್ಟು ಹಣ ಇದೆ ಎಂಬುದನ್ನು ಪತ್ತೆ ಮಾಡಲಾಗುವುದು ಎಂದು ಹೇಳಿದ್ದರು. +ಈ ಕುರಿತು ಸ್ಯಾಮ್‌?ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ ಅಮೆರಿಕದಲ್ಲಿ ವಿಧಿಸಲಾದ ಪಿತ್ರಾರ್ಜಿತ ತೆರಿಗೆ ಕುರಿತು ಪ್ರಸ್ತಾಪಿಸಿದ್ದರು.ಅಮೆರಿಕದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಇದೆ ಎಂದು ಹೇಳಿದ್ದರು. ಒಬ್ಬ ವ್ಯಕ್ತಿ 100 ಮಿಲಿಯನ್‌ ಡಾಲರ್‌ ಮೌಲ್ಯದ ಆಸ್ತಿಯನ್ನು ಹೊಂದಿದ್ದರೆ ಅವರ ಮರಣದ ನಂತರ 45ರಷ್ಟು ಆಸ್ತಿಯನ್ನು ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ ಮತ್ತು ಶೇ.55ರಷ್ಟು ಆಸ್ತಿ ಸರ್ಕಾರದ ಮಾಲೀಕತ್ವದಲ್ಲಿರುತ್ತದೆ. ಇದೊಂದು ಕುತೂಹಲಕಾರಿ ಕಾನೂನು ಎಂದು ಪಿತ್ರೋಡಾ ಹೇಳಿದ್ದರು. +ನಿಮ್ಮ ತಲೆಮಾರಿನಲ್ಲಿ ಆಸ್ತಿ ಸಂಪಾದಿಸಿ ಅದನ್ನು ಬಿಟ್ಟು ಹೋಗುತ್ತಿದ್ದೀರೆಂದರೆ, ಸಾರ್ವಜನಿಕರಿಗೆ ನೀವು ಆಸ್ತಿ ಬಿಟ್ಟುಹೋಗಬೇಕಾಗುತ್ತದೆ. ಎಲ್ಲಾವೂ ಅಲ್ಲ, ಅರ್ಧದಷ್ಟು ಆಸ್ತಿ ಮಾತ್ರ. ಇದು ನನಗೆ ನ್ಯಾಯಯುತ ಎನಿಸುತ್ತದೆ ಎಂದು ಹೇಳಿದ್ದರು.ಭಾರತದಲ್ಲಿ ಈ ಕಾನೂನು ಇಲ್ಲ. ಇಲ್ಲಿ 10 ಬಿಲಿಯನ್‌ ಹೊಂದಿರುವ ಯಾರಾದರೂ ವ್ಯಕ್ತಿ ಸತ್ತರೆ ಆತನ ಮಕ್ಕಳಿಗೆ ಎಲ್ಲಾ 10 ಬಿಲಿಯನ್‌ ಹಣ ಹೋಗುತ್ತದೆ. ಸಾರ್ವಜನಿಕರಿಗೆ ಏನೂ ಸಿಕ್ಕಲ್ಲ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_47_105_10.txt b/eesanje/url_47_105_10.txt new file mode 100644 index 0000000000000000000000000000000000000000..71497757073a17b1b194832c25c5f3bac36e1b1a --- /dev/null +++ b/eesanje/url_47_105_10.txt @@ -0,0 +1,7 @@ +ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ರೈಲು ಡಿಕ್ಕಿ ಹೊಡೆದು ಕಾಡಾನೆ ಸಾವು +ಪಾಲಕ್ಕಾಡ್‌ , ಮೇ 7 (ಪಿಟಿಐ)ಇಲ್ಲಿನ ಕಂಜಿಕೋಡ್‌ ಬಳಿ ತಡರಾತ್ರಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಯಸ್ಕ ಹೆಣ್ಣು ಕಾಡಾನೆಯೊಂದು ಸಾವನ್ನಪ್ಪಿದೆ. ಪಾಲಕ್ಕಾಡ್‌ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. +ನಿನ್ನೆ ರಾತ್ರಿ 10.30 ರ ಸುಮಾರಿಗೆ ತಿರುವನಂತಪುರಂ-ಚೆನ್ನೈ ಮೇಲ್‌ ಹಳಿಗಳ ಸಮೀಪ ಬಂದ ಜಂಬೋಗೆ ರೈಲು ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಒಂದು ತಿಂಗಳೊಳಗೆ ಪಾಲಕ್ಕಾಡ್‌ ಜಿಲ್ಲೆಯಲ್ಲಿ ನಡೆದ ಇಂತಹ ಎರಡನೇ ಘಟನೆ ಇದಾಗಿದ್ದು, ಈ ಪ್ರದೇಶದಲ್ಲಿ ಫೆನ್ಸಿಂಗ್‌ ಹಾಕುವುದು ಸೇರಿದಂತೆ ಸಂಭವನೀಯ ಪರಿಹಾರಗಳ ಕುರಿತು ಚರ್ಚಿಸಲು ಅರಣ್ಯ ಇಲಾಖೆಯು ದಕ್ಷಿಣ ರೈಲ್ವೆಯೊಂದಿಗೆ ಸಭೆ ನಡೆಸಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ರೈಲು ನಿಗದಿತ ವೇಗದ ಮಿತಿಯನ್ನು ಗಂಟೆಗೆ 45 ಕಿಲೋಮೀಟರ್‌ (ಕಿಮೀ) ಮೀರಿದೆಯೇ ಎಂದು ಅರಣ್ಯ ಇಲಾಖೆ ಪರಿಶೀಲಿಸುತ್ತದೆ ಎಂದು ಅವರು ಹೇಳಿದರು.ಹೈಕೋರ್ಟ್‌ ಆದೇಶದ ಪ್ರಕಾರ ಈ ಪ್ರದೇಶದಲ್ಲಿ ವೇಗವನ್ನು ಗಂಟೆಗೆ 45 ಕಿ.ಮೀ.ಗೆ ನಿಯಂತ್ರಿಸಲಾಗಿದೆ. ರೈಲು ಅದೇ ವೇಗವನ್ನು ಮೀರಿದೆಯೇ ಎಂಬುದನ್ನು ನಾವು ಪರಿಶೀಲಿಸುತ್ತೇವೆ ಎಂದು ಅವರು ಹೇಳಿದರು. +ರೈಲಿಗೆ ಡಿಕ್ಕಿ ಹೊಡೆದ ನಂತರ ಆನೆ ಸುಮಾರು 30 ನಿಮಿಷಗಳ ಕಾಲ ಸುತ್ತಾಡಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ ಎಂದು ಅಧಿಕಾರಿ ಹೇಳಿದರು. ಇದಕ್ಕೂ ಮುನ್ನ ಏಪ್ರಿಲ್‌ 13 ರಂದು ಪಾಲಕ್ಕಾಡ್‌ ಜಿಲ್ಲೆಯಲ್ಲಿ ಮತ್ತೊಂದು ಹೆಣ್ಣು ಕಾಡು ಆನೆ ರೈಲಿಗೆ ಸಿಕ್ಕಿ ಸಾವನ್ನಪ್ಪಿತ್ತು. +ಜಂಬೂ ಕೆಲವು ದಿನಗಳವರೆಗೆ ಜೀವಂತವಾಗಿತ್ತು, ಆದರೆ ಅದರ ಗಾಯಗಳಿಂದಾಗಿ ಎದ್ದು ನಿಲ್ಲಲು ಸಾಧ್ಯವಾಗಲಿಲ್ಲ.ಅರಣ್ಯ ಇಲಾಖೆಯು ಅದಕ್ಕೆ ಆಹಾರ, ನೀರು ಮತ್ತು ವೈದ್ಯಕೀಯ ಸಹಾಯವನ್ನು ಒದಗಿಸಿದೆ, ಆದರೆ ಆನೆಯನ್ನು ಮೇಲಕ್ಕೆತ್ತಲು ಅವರು ಮಾಡಿದ ಪ್ರಯತ್ನ ವಿಫಲವಾಯಿತು ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_105_11.txt b/eesanje/url_47_105_11.txt new file mode 100644 index 0000000000000000000000000000000000000000..5ebda5a9cddd4aa7427be6fd4bd7a7ad973c2b83 --- /dev/null +++ b/eesanje/url_47_105_11.txt @@ -0,0 +1,6 @@ +ಚುನಾವಣೆಯಲ್ಲಿ ಮುಸ್ಲಿಮರ ಮತ ಕೇಳ್ತಾರೆ, ಆದರೆ ಟಿಕೆಟ್ ಕೊಡಲ್ಲ : ಓವೈಸಿ ರೋಧನೆ +ಛತ್ರಪತಿ ಸಂಭಾಜಿನಗರ, ಮೇ 7 (ಪಿಟಿಐ)ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಎಲ್ಲಾ ಪಕ್ಷಗಳು ಮುಸ್ಲಿಂ ಮತಗಳನ್ನು ಬಯಸುತ್ತವೆ ಆದರೆ ಸಮುದಾಯದ ಅಭ್ಯರ್ಥಿಗಳನ್ನು ಯಾರು ನಿಲ್ಲಿಸಿಲ್ಲ ಎಂದು ಆಲ್‌ ಇಂಡಿಯಾ ಮಜ್ಲಿಸ್‌‍-ಎ-ಇತ್ತೆಹಾದುಲ್‌ ಮುಸ್ಲಿಮೀನ್‌ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ. +ಇಲ್ಲಿನ ಅವ್ಖಾಸ್‌‍ ಮೈದಾನದಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ತಮ್ಮ ಔರಂಗಾಬಾದ್‌ ಸಂಸದ ಇಮ್ತಿಯಾಜ್‌ ಜಲೀಲ್‌ ಅವರ ಸೋಲನ್ನು ಖಚಿತಪಡಿಸಿಕೊಳ್ಳಲು ವಿವಿಧ ಪಕ್ಷಗಳು ಒಗ್ಗೂಡಿವೆ ಎಂದು ಹೇಳಿದ್ದಾರೆ. +ರಾಜಕೀಯ ಪಕ್ಷಗಳು ಮುಸ್ಲಿಮರ ಮತಗಳನ್ನು ಕೇಳುತ್ತಿವೆ ಆದರೆ ಮಹಾರಾಷ್ಟ್ರದ 48 ಸ್ಥಾನಗಳಲ್ಲಿ ನಮ್ಮ ಸಮುದಾಯದ ಒಬ್ಬನೆ ಒಬ್ಬ ಅಭ್ಯರ್ಥಿಗಳನ್ನು ಹುಡುಕಲು ಸಾಧ್ಯವಾಗಲಿಲ್ಲ. ಅವರು ಬೇರೆಡೆ ಫಲಿತಾಂಶಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಆದರೆ ಎರಡು ಶಿವಸೇನೆ, ಎರಡು ಎನ್‌ಸಿಪಿ ಮತ್ತು ಅರ್ಧ ಕಾಂಗ್ರೆಸ್‌‍ ಜಲೀಲ್‌ ಅವರನ್ನು ಸೋಲಿಸಲು ಇಲ್ಲಿವೆ ಎಂದು ಅವರು ಹೇಳಿಕೊಂಡಿದ್ದಾರೆ. +ಶಿವಸೇನಾ (ಯುಬಿಟಿ) ಅಭ್ಯರ್ಥಿ ಚಂದ್ರಕಾಂತ್‌ ಖೈರೆ ಅವರನ್ನು ಟೀಕಿಸಿದ ಎಐಎಂಐಎಂ ಮುಖ್ಯಸ್ಥರು, ಅವರು ತಮನ್ನು ಹಿಂದುತ್ವದ ನಾಯಕ ಎಂದು ಕರೆದುಕೊಳ್ಳುತ್ತಿದ್ದರು ಆದರೆ (ಮುಸ್ಲಿಂ) ಮತದಾರರ ಪ್ರಾಮುಖ್ಯತೆಯನ್ನು ಅರಿತುಕೊಂಡ ನಂತರ ಇಲ್ಲಿನ ಈದ್ಗಾಕ್ಕೆ ಆಗಮಿಸಿದರು ಎಂದು ಹೇಳಿದರು. +ಈ ಹಿಂದೆ ಖಾನ್‌ ಯಾ ಬಾನ್‌ (ಮುಸ್ಲಿಮರು ಮತ್ತು ಹಿಂದೂಗಳು) ಆಧರಿಸಿದ ರಾಜಕೀಯದವರು ಈಗ ನಮಾಜ್‌ ಬಗ್ಗೆ ಮಾತನಾಡುತ್ತಿದ್ದಾರೆ, ಎಂದು ಅವರು ಹೇಳಿದರು.ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಹೊಸ ಜಾತ್ಯತೀತ ಎಂದು ಬಣ್ಣಿಸಿದ ಓವೈಸಿ, ಮಾಜಿ ಮುಖ್ಯಮಂತ್ರಿ ಬಾಬರಿ ಮಸೀದಿ ಧ್ವಂಸದ ಬಗ್ಗೆ ತಮ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಅದು ಪಾಪವೇ ಅಥವಾ ಅಲ್ಲವೇ ಎಂದು ಹೇಳಬೇಕು ಎಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_47_105_12.txt b/eesanje/url_47_105_12.txt new file mode 100644 index 0000000000000000000000000000000000000000..6c97a9134c1354ebc3064c670893143e497a2ae2 --- /dev/null +++ b/eesanje/url_47_105_12.txt @@ -0,0 +1,8 @@ +ಸಂದೇಶಖಾಲಿ ಕುರಿತ ಟಿಎಂಸಿ ಕುಟುಕು ಕಾರ್ಯಾಚರಣೆಗೆ ಬಿಜೆಪಿ ಖಂಡನೆ +ಕೋಲ್ಕತ್ತಾ, ಮೇ 7 (ಪಿಟಿಐ) –ಸಂದೇಶಖಾಲಿ ಮೇಲಿನ ಕುಟುಕು ಕಾರ್ಯಾಚರಣೆಯ ವಿಡಿಯೋ ಸತ್ಯವನ್ನು ಹತ್ತಿಕ್ಕುವುದು ಟಿಎಂಸಿಯ ಪ್ರಯತ್ನವಾಗಿದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್‌ ಆರೋಪಿಸಿದ್ದಾರೆ. +ಟಿಎಂಸಿ ತನ್ನ ಅಮಾನತುಗೊಂಡ ನಾಯಕ ಶಾಜಹಾನ್‌ ಶೇಖ್‌ಗೆ ಕ್ಲೀನ್‌ ಚಿಟ್‌ ನೀಡಲು ಅದನ್ನು ಬಳಸುತ್ತದೆ ಎಂದು ಹೇಳುವ ಮಜುಂದಾರ್‌ ವೀಡಿಯೊ ಬಿಡುಗಡೆಯ ಸಮಯವನ್ನು ಸಹ ಪ್ರಶ್ನಿಸಿದ್ದಾರೆ. +ಸಂದೇಶಖಾಲಿ ಸತ್ಯವನ್ನು ಹತ್ತಿಕ್ಕಲು ಟಿಎಂಸಿ ಈ ವೀಡಿಯೋವನ್ನು ಮುಂಚೂಣಿಗೆ ತಂದಿದೆ. ಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಕುಟುಕು ಕಾರ್ಯಾಚರಣೆಯನ್ನು ಏಕೆ ನಡೆಸಲಾಯಿತು? ಆದರೆ, ಪಶ್ಚಿಮ ಬಂಗಾಳದ ಜನರನ್ನು ಮರುಳು ಮಾಡುವುದು ಅಷ್ಟು ಸುಲಭವಲ್ಲ. ಈ ಸಮಯದಲ್ಲಿ ವೀಡಿಯೊವನ್ನು ಏಕೆ ಪ್ರಕಟಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಅವರು ರಾಜಕೀಯವಾಗಿ ಪ್ರಬುದ್ಧರಾಗಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. +ಟಿಎಂಸಿ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ವೀಡಿಯೊವನ್ನು ಹಂಚಿಕೊಂಡಿದೆ, ಇದರಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ವಿರೋಧ ಪಕ್ಷದ ನಾಯಕ ಇಡೀ ಪಿತೂರಿಯ ಹಿಂದೆ ಸುವೆಂದು ಅಧಿಕಾರಿ ಇದ್ದಾರೆ ಎಂದು ಹೇಳುತ್ತಿರುವುದು ಕೇಳಿಬಂದಿದೆ. +ವೀಡಿಯೊ ನಕಲಿ ಎಂದು ಮಜುಂದಾರ್‌ ಹೇಳಿದರು ಮತ್ತು ಇದನ್ನು ತಯಾರಿಸಲು ಕತಕ ಬುದ್ಧಿಮತ್ತೆ (ಎಐ) ಅನ್ನು ಬಳಸಲಾಗಿದೆ ಎಂದು ಶಂಕಿಸಿದ್ದಾರೆ.ನಮ ನಾಯಕ ಗಂಗಾಧರ್‌ ಕಯಾಲ್‌ (ಬಿಜೆಪಿ ಮಂಡಲ ಅಧ್ಯಕ್ಷ) ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ. ಮತ್ತು ವೀಡಿಯೊ ಹೊರಬಂದ ಕೂಡಲೇ ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿ ಅವರು ಶಾಜಹಾನ್‌ ಶೇಖ್‌ ಅವರನ್ನು ಅಮಾನತುಗೊಳಿಸುವ ಮೊದಲು ತಮ ಪಕ್ಷವು ಎರಡು ಬಾರಿ ಯೋಚಿಸಬೇಕಿತ್ತು ಎಂದು ಮಜುಂದಾರ್‌ ಹೇಳಿದ್ದಾರೆ. +ಈಗ ಈ ವೀಡಿಯೊವನ್ನು ಶಾಜಹಾನ್‌ಗೆ ಕ್ಲೀನ್‌ ಚಿಟ್‌ ನೀಡಲು ಬಳಸಲಾಗುವುದು. ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಪ್ರಕರಣಗಳಲ್ಲಿ ಆತನ ಪಾಲ್ಗೊಳ್ಳುವಿಕೆಯನ್ನು ತೆರವುಗೊಳಿಸಲು ಇದನ್ನು ಬಳಸಲಾಗುತ್ತದೆ ಎಂದು ಅವರು ಹೇಳಿದರು.ಬಾಳೂರುಘಟ್ಟದ ಸಂಸದ ಮಜುಂದಾರ್‌ ಮಾತನಾಡಿ, ಸಂದೇಶಖಾಲಿಯಿಂದ 600-700 ಜನರು ದೂರು ದಾಖಲಿಸಿದ್ದಾರೆ. +ಈ ಬಹತ್‌ ಸಂಖ್ಯೆಯ ಜನರ ಹಕ್ಕುಗಳನ್ನು ತಿರಸ್ಕರಿಸುವ ಒಬ್ಬ ವ್ಯಕ್ತಿಯ ಆವತ್ತಿಯನ್ನು ನಾವು ಏಕೆ ಸ್ವೀಕರಿಸಬೇಕು ಎಂದು ಅವರು ಕೇಳಿದರು.ಅತ್ಯಾಚಾರದ ಘಟನೆ ನಡೆದಾಗಲೆಲ್ಲಾ ಟಿಎಂಸಿ ನಾಯಕರು ಸಂತ್ರಸ್ತೆಯ ಪಾತ್ರವನ್ನು ಹತ್ಯೆ ಮಾಡಲು ಪ್ರಾರಂಭಿಸುತ್ತಾರೆ ಎಂದು ಅವರು ಆರೋಪಿಸಿದ್ದಾರೆ. \ No newline at end of file diff --git a/eesanje/url_47_105_2.txt b/eesanje/url_47_105_2.txt new file mode 100644 index 0000000000000000000000000000000000000000..87f0774b54f24a17058e497ed233c84ec9bf7285 --- /dev/null +++ b/eesanje/url_47_105_2.txt @@ -0,0 +1,7 @@ +ಹಮಾಸ್‌ ಪರ ಪೋಸ್ಟ್ ಮಾಡಿದ್ದ ಪ್ರಾಂಶುಪಾಲೆ ರಾಜೀನಾಮೆಗೆ ಆಡಳಿತ ಮಂಡಳಿ ಸೂಚನೆ +ನವದೆಹಲಿ,ಮೇ8-ಇಸ್ರೇಲ್ ಸಂಘರ್ಷದ ಕುರಿತು ಪೋಸ್ಟ್ ಮಾಡಿದ್ದ ಮುಂಬೈನ ಸೋಮಯ್ಯ ಶಾಲೆಯ ಪ್ರಾಂಶುಪಾಲೆ ಪರ್ವೀನ್‌ ಶೇಖ್‌ ಅವರಿಗೆ ರಾಜೀನಾಮೆ ನೀಡುವಂತೆ ಆಡಳಿತ ಮಂಡಳಿ ಸೂಚನೆ ನೀಡಿದೆ. +ಪರ್ವೀನ್‌ ಹಮಾಸ್‌ ಪರವಾಗಿ ಪೋಸ್ಟ್ ಮಾಡಿದ್ದು, ಇಸ್ಲಾಮಿಕ್‌ ಮೂಲಭೂತವಾದಿಗಳ ಬಗ್ಗೆ ತಮ್ಮ ಸಹಾನುಭೂತಿಯನ್ನು ವ್ಯಕ್ತಪಡಿಸಿದ್ದರು. ಇದೀಗ ಶಾಲಾ ಆಡಳಿತ ಮಂಡಳಿ ಅವರ ರಾಜೀನಾಮೆಯನ್ನು ಕೇಳಿದ್ದು, ಪರ್ವೀನ್‌ ಅದನ್ನು ನಿರಾಕರಿಸಿದ್ದಾರೆ. +ಪರ್ವೀನ್‌ ಕಳೆದ 12 ವರ್ಷಗಳಿಂದ ಆ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, 7 ವರ್ಷಗಳಿಂದ ಶಾಲೆಯ ಪ್ರಾಂಶುಪಾಲರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಶಾಲೆಯು ಮುಂಬೈನ ವಿದ್ಯಾವಿಹಾರ್‌ ಪ್ರದೇಶದಲ್ಲಿದೆ. +ನಾನು ಪ್ರಜಾಸತ್ತಾತ್ಮಕ ಭಾರತದಲ್ಲಿ ವಾಸಿಸುತ್ತಿದ್ದೇನೆ, ನಾನು ಅಭಿವ್ಯಕ್ತಿ ಸ್ವಾತಂತ್ರ್ಯದ ತತ್ವವನ್ನು ಆಳವಾಗಿ ಗೌರವಿಸುತ್ತೇನೆ ಏಕೆಂದರೆ ಅದು ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ನಾನು ರಾಜೀನಾಮೆ ನೀಡುವುದಿಲ್ಲ ಏಕೆಂದರೆ ನಾನು ಈ ಸಂಸ್ಥೆಗೆ ಸರ್ವಸ್ವವನ್ನೂ ನೀಡಿದ್ದೇನೆ ಎಂದು ಹೇಳಿದ್ದಾರೆ. +ಆಕೆಯ ವೈಯಕ್ತಿಕ ಸಾಮಾಜಿಕ ಮಾಧ್ಯಮ ಚಟುವಟಿಕೆಗಳು ಶಿಕ್ಷಣ ಸಂಸ್ಥೆಯು ಪಾಲಿಸುವ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಮೇ 2ರಂದು ಅವರ ಸಾಮಾಜಿಕ ಮಾಧ್ಯಮದ ಚಟುವಟಿಕೆಗಳಿಂದಾಗಿ ರಾಜೀನಾಮೆ ನೀಡುವಂತೆ ಶೇಖ್‌ ಅವರಿಗೆ ಸೂಚಿಸಲಾಗಿದೆ. +ಕಳೆದ ವಾರದ ಆರಂಭದಲ್ಲಿ ಸೋಮಯ್ಯ ಶಾಲಾ ಆಡಳಿತವು ಶೇಖ್‌ ಅವರಿಂದ ಲಿಖಿತ ಸ್ಪಷ್ಟೀಕರಣವನ್ನು ಕೇಳಿದೆ ಮತ್ತು ಅವರ ಉತ್ತರಕ್ಕಾಗಿ ಕಾಯುತ್ತಿದೆ.ಶಾಲಾ ಆಡಳಿತ ಮಂಡಳಿಯು ತನ್ನ ಪರವಾಗಿ ನಿಲ್ಲದಿರಲು ನಿರ್ಧರಿಸಿದ್ದರಿಂದ ಮತ್ತು ಕಠಿಣ ಮತ್ತು ಅನಪೇಕ್ಷಿತ ಕ್ರಮ ತೆಗೆದುಕೊಂಡಿದ್ದರಿಂದ ತಾನು ನಿರಾಶೆಗೊಂಡಿದ್ದೇನೆ ಎಂದು ಪರ್ವೀನ್‌ ಹೇಳಿದ್ದಾರೆ. \ No newline at end of file diff --git a/eesanje/url_47_105_3.txt b/eesanje/url_47_105_3.txt new file mode 100644 index 0000000000000000000000000000000000000000..32d39fd4e2a91bdbae174dd9ca2b84f7d173d06c --- /dev/null +++ b/eesanje/url_47_105_3.txt @@ -0,0 +1,11 @@ +ಅಡ್ಡಪರಿಣಾಮ ಒಪ್ಪಿಕೊಂಡ ಅಸ್ಟ್ರಾಜೆನೆಕಾ, ಜಾಗತಿಕವಾಗಿ ಲಸಿಕೆ ಹಿಂಪಡೆಯಲು ಮುಂದಾದ ಕಂಪೆನಿ +ನವದೆಹಲಿ,ಮೇ8-ಲಸಿಕೆಯಿಂದ ಅಪರೂಪದ ಅಡ್ಡಪರಿಣಾಮ ಉಂಟಾಗಬಹುದು ಎಂದು ಒಪ್ಪಿಕೊಂಡ ಬಳಿಕ ಕೋವಿಡ್‌ ಲಸಿಕೆಯನ್ನು ಜಾಗತಿಕವಾಗಿ ಹಿಂತೆಗೆದುಕೊಳ್ಳಲು ಅಸ್ಟ್ರಾಜೆನೆಕಾ ಕಂಪನಿ ತೀರ್ಮಾನಿಸಿದೆ. ಜೊತೆಗೆ ಲಸಿಕೆಯನ್ನು ಇನ್ನು ಮುಂದೆ ತಯಾರಿಸಲಾಗುವುದಿಲ್ಲ ಎಂದು ಕಂಪೆನಿ ಹೇಳಿದೆ. +ಕೋವಿಶೀಲ್‌್ಡ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಇತ್ತೀಚೆಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಇದಾದ ಬಳಿಕ ಕಂಪನಿಯು ಈ ನಿರ್ಧಾರ ಮಾಡಿದೆ. ವಾಣಿಜ್ಯ ಕಾರಣಗಳಿಗಾಗಿ ಲಸಿಕೆಯನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳಲಾಗುತ್ತಿದೆ. ಲಸಿಕೆಯನ್ನು ಇನ್ಮುಂದೆ ತಯಾರಿಸಲಾಗುವುದಿಲ್ಲ ಅಥವಾ ಸರಬರಾಜು ಮಾಡಲಾಗುವುದಿಲ್ಲ ಎಂದು ಕಂಪನಿ ಹೇಳಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. +ಸಾಂಕ್ರಾಮಿಕ ರೋಗಗಳ ಬಳಿಕ ಬೇಡಿಕೆಯು ಕಡಿಮೆಯಾಗಿದೆ. ಇದಲ್ಲದೆ ಉತ್ಪಾದನೆ ಹಾಗೂ ಪೂರೈಕೆಯನ್ನು ಕೂಡ ನಿಲ್ಲಿಸಲಾಗಿದೆ. ಕೋವಿಡ್‌-19 ಸಾಂಕ್ರಾಮಿಕ ರೋಗದ ನಂತರ ನವೀಕರಿಸಿದ ಲಸಿಕೆಗಳ ಹೆಚ್ಚುವರಿಯಾಗಿ ಲಭ್ಯವಿದೆ. ಇದು ಲಸಿಕೆಗೆ ಬೇಡಿಕೆಯಲ್ಲಿ ಕುಸಿತಕ್ಕೆ ಕಾರಣವಾಗಿದೆ. ಹೀಗಾಗಿ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಕಂಪನಿ ತಿಳಿಸಿದೆ. +ಅಸ್ಟ್ರಾಜೆನೆಕಾ ಸ್ವೀಡಿಶ್‌ ಬಹುರಾಷ್ಟ್ರೀಯ ಔಷಧೀಯ ಮತ್ತು ಜೈವಿಕ ತಂತ್ರಜ್ಞಾನ ಕಂಪನಿಯಾಗಿದ್ದು, ಕೇಂಬ್ರಿಡ್ಜ್ ಬಯೋಮೆಡಿಕಲ್‌ ಕ್ಯಾಂಪಸ್ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ಕಂಪನಿಯು ತನ್ನ ಕೋವಿಡ್‌ ಲಸಿಕೆಗಳನ್ನು ಪ್ರಪಂಚದಾದ್ಯಂತದ ಮಾರುಕಟ್ಟೆಗಳಿಂದ ಹಿಂಪಡೆಯುತ್ತಿದೆ. ಹೆಚ್ಚುವರಿಯಾಗಿ ಇದು ಯುರೋಪ್‌ನಲ್ಲಿ ಮಾರ್ಕೆಟಿಂಗ್‌ ಅನುಮೋದನೆಯನ್ನು ಹಿಂಪಡೆಯಲು ಯೋಜಿಸಿದೆ. +ಲಸಿಕೆ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ಮಾನವರಲ್ಲಿ ಕಡಿಮೆ ರಕ್ತದ ಪ್ಲೇಟ್ಲೆಟ್‌ಗೆ ಕಾರಣವಾಗುತ್ತದೆ ಮತ್ತು ಯುಎನಲ್ಲಿ 81ಕ್ಕೂ ಹೆಚ್ಚು ಸಾವುಗಳಿಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ. ಆದರೆ ಕೋವಿಶೀಲ್‌್ಡನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು ಅಸ್ಟ್ರಾಜೆನೆಕಾ ಹೇಳಿದೆ. +ಬ್ರಿಟಿಷ್‌ ಹೈಕೋರ್ಟ್‌ನಲ್ಲಿ ಸಲ್ಲಿಸಿದ ದಾಖಲೆಗಳ ಪ್ರಕಾರ, ಕಂಪನಿಯು ತನ್ನ ಕೊರೊನಾ ಲಸಿಕೆ ಥ್ರಂಬೋಸಿಸ್‌, ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ಗೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು, ಇದು ತೀವ್ರತರವಾದ ಪ್ರಕರಣಗಳಲ್ಲಿ ಪಾಶ್ರ್ವವಾಯು ಮತ್ತು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಹೇಳಿತ್ತು. +ಕಂಪನಿಯು ತನ್ನ ಮಾರ್ಕೆಟಿಂಗ್‌ ಅಧಿ ಕಾರವನ್ನು ಸ್ವಯಂಪ್ರೀರಣೆಯಿಂದ ಹಿಂತೆಗೆದುಕೊಂಡಿರುವುದರಿಂದ ಲಸಿಕೆಯನ್ನು ಇನ್ಮುಂದೆ ಯುರೋಪಿಯನ್‌ ಒಕ್ಕೂಟದಲ್ಲಿ ಬಳಸಲು ಅಧಿ ಕೃತಗೊಳಿಸಲಾಗಿಲ್ಲ. ಹಿಂಪಡೆಯಲು ಅರ್ಜಿಯನ್ನು ಮಾರ್ಚ್‌ 5 ರಂದು ಸಲ್ಲಿಸಲಾಗಿತ್ತು. +ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್ಲೆಟ್‌ ಎಣಿಕೆಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮದಿಂದಾಗಿ ವ್ಯಾಕ್ಸೆವ್ರಿಯಾ ಜಾಗತಿಕ ಪರಿಶೀಲನೆಯಲ್ಲಿದೆ. ಫೆಬ್ರವರಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ನ್ಯಾಯಾಲಯದ ದಾಖಲೆಗಳಲ್ಲಿ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಟಿಟಿಎಸ್‌ಗೆ ಕಾರಣವಾಗಬಹುದು ಎಂದು ಅಸ್ಟ್ರಾಜೆನೆಕಾ ಒಪ್ಪಿಕೊಂಡಿತು. +ಜಾಗತಿಕ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವಲ್ಲಿ ವ್ಯಾಕ್ಸೆವ್ರಿಯಾ ವಹಿಸಿದ ಪಾತ್ರದ ಬಗ್ಗೆ ನಾವು ನಂಬಲಾಗದಷ್ಟು ಹೆಮ್ಮೆಪಡುತ್ತೇವೆ. ಅಂದಾಜಿನ ಪ್ರಕಾರ, ಬಳಕೆಯ ಮೊದಲ ವರ್ಷದಲ್ಲಿಯೇ 6.5 ಮಿಲಿಯನ್‌ಗಿಂತಲೂ ಹೆಚ್ಚು ಜೀವಗಳನ್ನು ಉಳಿಸಲಾಗಿದೆ ಮತ್ತು ಜಾಗತಿಕವಾಗಿ ಮೂರು ಬಿಲಿಯನ್‌ ಡೋಸ್‌ಗಳನ್ನು ಪೂರೈಸಲಾಗಿದೆ. ನಮ್ಮ ಪ್ರಯತ್ನಗಳನ್ನು ಪ್ರಪಂಚದಾದ್ಯಂತದ ಸರ್ಕಾರಗಳು ಗುರುತಿಸಿವೆ ಮತ್ತು ಜಾಗತಿಕ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ನಿರ್ಣಾಯಕ ಅಂಶವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ ಎಂದು ಅಸ್ಟ್ರಾಜೆನೆಕಾ ಸಂಸ್ಥೆ ತಿಳಿಸಿದೆ. +ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್ಲೆಟ್‌ಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮದಿಂದಾಗಿ ವ್ಯಾಕ್ಸೆವ್ರಿಯಾ ಲಸಿಕೆಯು ಜಾಗತಿಕ ಪರಿಶೀಲನೆಯಲ್ಲಿದೆ. ಫೆಬ್ರವರಿಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಿದ ನ್ಯಾಯಾಲಯದ ದಾಖಲೆಗಳಲ್ಲಿ, ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಅಸ್ಟ್ರಾಜೆನೆಕಾ ಒಪ್ಪಿಕೊಂಡಿತ್ತು. \ No newline at end of file diff --git a/eesanje/url_47_105_4.txt b/eesanje/url_47_105_4.txt new file mode 100644 index 0000000000000000000000000000000000000000..20d491e822e96a4bffc329239b75e77938b0c9f0 --- /dev/null +++ b/eesanje/url_47_105_4.txt @@ -0,0 +1,9 @@ +ಮೋದಿ ಮತ್ತೆ ಪ್ರಧಾನಿಯಾಗಬೇಕೆನ್ನುವುದು ಎನ್‌ಆರ್‌ಐಗಳ ಆಶಯ ; ಭತುರಿಯಾ +ಸಾಂಟಾಕ್ಲಾರಾ, ಮೇ 8 (ಪಿಟಿಐ) :ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ನೀತಿಗಳು ಭಾರತವನ್ನು ಪರಿವರ್ತಿಸುತ್ತಿರುವ ಕಾರಣದಿಂದ ಹೆಚ್ಚಿನ ಭಾರತೀಯ ಅಮೆರಿಕನ್ನರು ಮೂರನೇ ಅವಧಿಗೆ ಅವರ ಬಗ್ಗೆ ಒಲವು ತೋರಿದ್ದಾರೆ ಎಂದು ಪ್ರಭಾವಿ ಸಮುದಾಯದ ನಾಯಕರೊಬ್ಬರು ಹೇಳಿದ್ದಾರೆ. +ಭಾರತೀಯರು ಯುನೈಟೆಡ್‌ ಸ್ಟೇಟ್ಸ್ ನ ಆಳವಾದ ಆರ್ಥಿಕ ಬೆಳವಣಿಗೆಯ ಭಾಗವಾಗಿದ್ದಾರೆ ಮತ್ತು ಅವರು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲು ಶ್ರಮಿಸುತ್ತಿದ್ದಾರೆ ಎಂದು ಭಾರತೀಯ-ಅಮೆರಿಕನ್‌ ಡೆಮಾಕ್ರಟಿಕ್‌ ನಿಧಿಸಂಗ್ರಹಕ ಅಜಯ್‌ ಜೈನ್‌ ಭತುರಿಯಾ ಹೇಳಿದ್ದಾರೆ. +ಭಾರತದಲ್ಲಿ ಇದೇ ರೀತಿಯ ಆರ್ಥಿಕ ಬೆಳವಣಿಗೆಯನ್ನು ನೋಡಿದಾಗ ಅದರ ಬಗ್ಗೆ ತುಂಬಾ ಹೆಮೆ ಅನಿಸುತ್ತದೆ. ಬಹುಪಾಲು ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿಯವರು ಹಿಂತಿರುಗಬೇಕೆಂದು ಬಯಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಭಾರತ ಬೆಳಗಿದಾಗ ಅವರು ಮಿಂಚುತ್ತಾರೆ ಎಂಬುದು ಅವರಿಗೆ ಹೆಮೆಯ ಭಾವನೆಯಾಗಿದೆ ಎಂದು ಭತುರಿಯಾ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. +ಭಾರತವು ಬೆಳೆಯುತ್ತಿದೆ ಎಂದು ಎನ್‌ಆರ್‌ಐಗಳು ಹೆಮೆಪಡುತ್ತಾರೆ. ಭಾರತವು ಆರರಿಂದ ಏಳು ಪ್ರತಿಶತದಷ್ಟು ಆರ್ಥಿಕ ಬೆಳವಣಿಗೆಯ ವೇಗದಲ್ಲಿ ಬೆಳೆಯುತ್ತಿದೆ. ನಾನು ಅಂಕಿಅಂಶಗಳನ್ನು ಓದುತ್ತಿರುವಾಗ, ಇದು ಈ ವರ್ಷದ ಅಂತ್ಯದ ವೇಳೆಗೆ ಜಪಾನ್‌ ಅನ್ನು ಹಿಂದಿಕ್ಕಿ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳುತ್ತದೆ. ಮತ್ತು ಬಹುಶಃ 2027 ರ ವೇಳೆಗೆ, ಭಾರತವು ಯುಎಸ್‌‍ ಮತ್ತು ಚೀನಾದ ನಂತರ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳಿದರು. +ಬಹುಪಾಲು ಭಾರತೀಯ ಅಮೆರಿಕನ್ನರು ಮೋದಿಯವರನ್ನು ಮೂರನೇ ಅವಧಿಗೆ ಒಲವು ತೋರುತ್ತಿದ್ದಾರೆಂದು ಗಮನಿಸಿದ ಭತುರಿಯಾ, ಸರ್ಕಾರದ ನೀತಿಗಳು ವಾಣಿಜ್ಯ ಅಥವಾ ಸಣ್ಣ ಉದ್ಯಮಗಳು ಅಥವಾ ದೊಡ್ಡ ಉದ್ಯಮಗಳು ರೈಲ್ವೆ ಅಭಿವದ್ಧಿ ಅಥವಾ ರಸ್ತೆ ಮೂಲಸೌಕರ್ಯದಲ್ಲಿ ಭಾರತವನ್ನು ಪರಿವರ್ತಿಸುತ್ತಿವೆ ಎಂದು ಹೇಳಿದರು. +ಆದ್ದರಿಂದ ಈ ಬೆಳವಣಿಗೆಯನ್ನು ಮುಂದುವರಿಸಿ, ಪ್ರಧಾನಿ ಮೋದಿ ಮತ್ತು ಅವರ ತಂಡವನ್ನು ಮರು ಆಯ್ಕೆ ಮಾಡಬೇಕು ಮತ್ತು ಭಾರತವು ಯಶಸ್ಸಿನ ಕಥೆಯಲ್ಲಿ ಮುಂದುವರಿಯಬೇಕು ಎಂದು ಸಮುದಾಯವು ಸರಿಯಾಗಿ ಭಾವಿಸುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ ಎಂದು ಭುಟೋರಿಯಾ ಹೇಳಿದರು. +ಭಾರತದಲ್ಲಿನ ಜನರು, ಯುಎಸ್‌‍ ಅಥವಾ ಅನೇಕ ಯುರೋಪಿಯನ್‌ ರಾಷ್ಟ್ರಗಳು ಒಟ್ಟುಗೂಡಿಸುವುದಕ್ಕಿಂತ ಹೆಚ್ಚು ನಗದು ರಹಿತ ವ್ಯವಹಾರಗಳನ್ನು ಮಾಡುತ್ತಿದ್ದಾರೆ ಎಂದು ಅವರು ಗಮನಿಸಿದರು. ಜನರಿಗೆ ಆರೋಗ್ಯ ವಿಮೆಗೆ ಪ್ರವೇಶವಿದೆ. ಜನರಿಗೆ ಉತ್ತಮ ಜೀವ ವಿಮೆ ಸೌಲಭ್ಯವಿದೆ ಎಂದರು. +ಈ ಇಡೀ ಸಮುದಾಯವು ಭಾರತದೊಂದಿಗೆ ಭಾವನಾತಕವಾಗಿ ಸಂಪರ್ಕ ಹೊಂದಿದೆ. ಭಾರತದಿಂದ ಬಂದ ಜನರು, ಇಲ್ಲಿ ಜನಿಸಿದ ಎರಡನೇ ತಲೆಮಾರಿನವರಿಗಿಂತ ಹೆಚ್ಚು ಭಾವನಾತಕವಾಗಿ ಸಂಪರ್ಕ ಹೊಂದಿದ್ದಾರೆ. ಅವರು ಭಾರತದ ಆರ್ಥಿಕ ಬೆಳವಣಿಗೆಯನ್ನು ನೋಡಿದಾಗ, ಗ್ರಾಮೀಣ ಭಾರತದ ಅಭಿವದ್ಧಿಯನ್ನು ಅವರು ನೋಡಿದಾಗ ಕಳೆದ 10 ವರ್ಷಗಳಲ್ಲಿ ಭಾರತದ ಭದ್ರತೆ ಸುಧಾರಿಸಿದೆ ಎಂದು ನೋಡಿದಾಗ … ಪ್ರಸ್ತುತ ಮೋದಿ ಸರ್ಕಾರವು ಭಯೋತ್ಪಾದಕ ಬೆದರಿಕೆ ಅಥವಾ ಭಯೋತ್ಪಾದನೆಯ ಘಟನೆಗಳನ್ನು ನಿರ್ಮೂಲನೆ ಮಾಡಿದೆ ಎಂಬ ವಿಶ್ವಾದಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/eesanje/url_47_105_5.txt b/eesanje/url_47_105_5.txt new file mode 100644 index 0000000000000000000000000000000000000000..96f8bb3e7ed3a5711413d24b522b16f19fd6d28a --- /dev/null +++ b/eesanje/url_47_105_5.txt @@ -0,0 +1,5 @@ +ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನ್ದಾರನ ಕುತ್ತಿಗೆ ಕೊಯ್ದು ಕೊಂದ ಅಪ್ರಾಪ್ತ ಬಾಲಕಿ +ಲಕ್ನೋ,ಮೇ.8-ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಜಮೀನುದಾರನನ್ನು 13 ವರ್ಷದ ಬಾಲಕಿ ತನ್ನ ಗೆಳೆಯನೊಂದಿಗೆ ಸಂಚು ರೂಪಿಸಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮೂರು ತಿಂಗಳ ಹಿಂದೆ ನಡೆದಿದ್ದ ಕೊಲೆ ರಹಸ್ಯವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಲಕ್ನೋ ಪೊಲೀಸರು ಅಪ್ರಾಪ್ತ ಆರೋಪಿಗಳನ್ನು ಬಂಧಿಸುವಲ್ಲಿ ಯಶ ಸಾಧಿಸಿದ್ದಾರೆ. +ವಜೀರ್‌ಗಂಜ್‌ ಪ್ರದೇಶದಲ್ಲಿ ದೀರ್ಘಕಾಲದವರೆಗೆ ಕಿರುಕುಳ ನೀಡುತ್ತಿದ್ದ ತನ್ನ ಜಮೀನುದಾರನನ್ನು ಕೊಂದ ಅಪ್ರಾಪ್ತ ಬಾಲಕಿ ಮತ್ತು ಆಕೆಯ 19 ವರ್ಷದ ಗೆಳೆಯ ಬಂಟಿ ಕಶ್ಯಪ್‌ ಕೊಲೆ ಆರೋಪಿಗಳೆಂದು ಗುರುತಿಸಲಾಗಿದೆ. +ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಭಾರತೀಯ ದಂಡ ಸಂಹಿತೆ (ಐಪಿಸಿ) 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ಈಗಾಗಲೇ ಈ ವಿಷಯದಲ್ಲಿ ದಾಖಲಿಸಲಾಗಿದೆ ಎಂದು ಪಶ್ಚಿಮ ವಲಯ ಎಡಿಸಿಪಿ ವಿಶ್ವಜೀತ್‌ ಶ್ರೀವಾಸ್ತವ ತಿಳಿಸಿದ್ದಾರೆ.ಜಮೀನುದಾರ ಶ್ಯಾಮ್‌ ಚಂದ್ರ ಗುಪ್ತಾ ಅಪ್ರಾಪ್ತ ಬಾಲಕಿಯನ್ನು ಪದೇ ಪದೇ ಬೇಟೆಯಾಗುತ್ತಿದ್ದ ಮತ್ತು ಆಕೆಯ ಕೋಣೆಗೆ ಆಗಾಗ್ಗೆ ಭೇಟಿ ನೀಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. +ಅವನ ಕತ್ಯಗಳಿಂದ ಬೇಸತ್ತು, ಅಪ್ರಾಪ್ತ ಬಾಲಕಿ ತನ್ನ ಪ್ರೇಮಿ ಬಂಟಿಗೆ ಎಲ್ಲವನ್ನೂ ಹೇಳಿದಳು ಮತ್ತು ಇಬ್ಬರು ಅವನನ್ನು ತೊಡೆದುಹಾಕಲು ನಿರ್ಧರಿಸಿದರು. ಅಪ್ರಾಪ್ತ ಬಾಲಕಿ ಆತನ ಕತ್ತು ಕೊಯ್ದು, ನಂತರ ಶವವನ್ನು ಬೆಡ್‌ಶೀಟ್‌ ಕವರ್‌ನಲ್ಲಿ ತುಂಬಿ ಮನೆಯ ಹಿಂದಿನ ಚರಂಡಿಗೆ ಎಸೆದಿದ್ದಾಳೆ ಎಂದು ಎಡಿಸಿಪಿ ತಿಳಿಸಿದ್ದಾರೆ. \ No newline at end of file diff --git a/eesanje/url_47_105_6.txt b/eesanje/url_47_105_6.txt new file mode 100644 index 0000000000000000000000000000000000000000..8b69b1589835d389f585f983599f802d9094cbc1 --- /dev/null +++ b/eesanje/url_47_105_6.txt @@ -0,0 +1,5 @@ +ಹೈದರಾಬಾದ್‌ನಲ್ಲಿ ಭಾರೀ ಮಳೆಯಿಂದ ಗೋಡೆ ಕುಸಿದು 7 ಮಂದಿ ಸಾವು +ಹೈದರಾಬಾದ್‌, ಮೇ.8 :ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್‌ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರು ಒಡಿಶಾ ಮತ್ತು ಛತ್ತೀಸ್‌‍ಗಢಕ್ಕೆ ಸೇರಿದ ವಲಸೆ ಕಾರ್ಮಿಕರಾಗಿದ್ದಾರೆ ಎಂದು ಬಾಚುಪಲ್ಲಿ ಪೊಲೀಸರು ತಿಳಿಸಿದ್ದಾರೆ. +ಅವಶೇಷಗಳಲ್ಲಿ ಸಿಲುಕಿದ್ದ ದೇಹಗಳನ್ನು ಜೆಸಿಬಿ ಯಂತ್ರವನ್ನು ಬಳಸಿ ಹೊರತೆಗೆಯಲಾಗಿದೆ. ತೆಲಂಗಾಣದ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ ಮತ್ತು ನಗರದ ಹಲವೆಡೆ ಜಲಾವೃತಗೊಂಡು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಮೃತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಲಾಗಿದೆ. ಅಪಾರ್ಟ್‌ಮೆಂಟ್‌ ಮಾಲೀಕರ ವಿರುದ್ದ ಪ್ರಕರಣ ದಾಖಲಾಗಿದೆ. +ಇನ್ನು ವಿಪತ್ತು ಪರಿಹಾರ ಪಡೆ ತಂಡಗಳನ್ನು ಮಳೆ ಹಾನಿ ಪ್ರದೇಶದಲ್ಲಿ ನಿಯೋಜಿಸಲಾಗಿದ್ದು, ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಅಧಿಕಾರಿಗಳು ತಿಳಿಸಿದ್ದಾರೆ. +ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ದಾನಕಿಶೋರ್‌ ಅವರು ಜಿಎಚ್‌ಎಂಸಿ ಆಯುಕ್ತ ರೊನಾಲ್‌್ಡ ರೋಸ್‌‍ ಅವರೊಂದಿಗೆ ವಿವಿಧ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ \ No newline at end of file diff --git a/eesanje/url_47_105_7.txt b/eesanje/url_47_105_7.txt new file mode 100644 index 0000000000000000000000000000000000000000..a64d6b816ef52b48c6ef13cd465df02d3055970b --- /dev/null +++ b/eesanje/url_47_105_7.txt @@ -0,0 +1,6 @@ +ಮತಗಟ್ಟೆ ಸಿಬ್ಬಂದಿ ಸಾಗಿಸುತ್ತಿದ್ದ ಬಸ್‌‍ಗೆ ಬೆಂಕಿ +ಬೆತುಲ್‌, ಮೇ.8-ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್‌ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌‍ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಜಿಲ್ಲೆಯ ಗೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಆದರೆ, ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಮತ್ತು ಬಸ್‌‍ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಬೆತುಲ್‌ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ. +ಬೂತ್‌ ಸಂಖ್ಯೆ 275, 276, 277, 278, 279 ಮತ್ತು 280 ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಬೆಂಕಿಯಿಂದ ಹಾನಿಯಾಗಿದೆ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದ್ದು ಅಷ್ಟರಲ್ಲಿ ಬಸ್‌‍ ಸಂಪೂರ್ಣವಾಗಿ ಸುಟ್ಟುಹಾಕಿದೆ ಎಂದು ಅವರು ಹೇಳಿದರು. +ಘಟನೆಯ ಸಮಯದಲ್ಲಿ ಬಸ್‌‍ನಲ್ಲಿ ಆರು ಮತಗಟ್ಟೆಗಳು ಮತ್ತು ಅಷ್ಟೂ ಇವಿಎಂಗಳು ಇದ್ದವು, ಅವುಗಳಲ್ಲಿ ನಾಲ್ಕು ಇವಿಎಂಗಳು ಹಾನಿಗೊಳಗಾಗಿವೆ ಮತ್ತು ಎರಡು ಸುರಕ್ಷಿತವಾಗಿವೆ ಎಂದು ಸೂರ್ಯವಂಶಿ ಹೇಳಿದರು. +ಪರಿಣಾಮ ನಾಲ್ಕು ಇವಿಎಂಗಳಲ್ಲಿ ಕಂಟ್ರೋಲ್‌ ಯೂನಿಟ್‌ ಅಥವಾ ಬ್ಯಾಲೆಟ್‌ ಯೂನಿಟ್‌ ಹಾನಿಯಾಗಿದೆ ಘಟನೆಯಿಂದ ಇವಿಎಂಗಳಲ್ಲಿ ದಾಖಲಾದ ಮತ ಎಣಿಕೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಈ ಕುರಿತು ಚುನಾವಣಾ ಆಯೋಗಕ್ಕೆ ತಮ್ಮ ವರದಿಯನ್ನು ಕಳುಹಿಸಲಾಗುವುದು ಮತ್ತು ಹಾನಿಗೊಳಗಾದ ಮತಗಟ್ಟೆಗಳಲ್ಲಿ ಮರು ಮತದಾನದ ಬಗ್ಗೆ ಚುನಾವಣಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಬೇತುಲ್‌ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ನಡೆದ ಚುನಾವಣೆಯಲ್ಲಿ ಒಟ್ಟು ಶೇ.72.65ರಷ್ಟು ಮತದಾನವಾಗಿದೆ \ No newline at end of file diff --git a/eesanje/url_47_105_8.txt b/eesanje/url_47_105_8.txt new file mode 100644 index 0000000000000000000000000000000000000000..7bd449c8fb792614a1675e7d8e3bead2c277f199 --- /dev/null +++ b/eesanje/url_47_105_8.txt @@ -0,0 +1,7 @@ +ಹೆಚ್ಚು ಹೆಚ್ಚು ಮತ ಚಲಾಯಿಸಲು ಪ್ರಿಯಾಂಕಾ ಗಾಂಧಿ ಮನವಿ +ನವದೆಹಲಿ, ಮೇ 7 (ಪಿಟಿಐ) :ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ ಮಾತ್ರವಲ್ಲ ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ. +ಸಂಸತ್ತಿನ ಮೂರನೇ ಹಂತದ ಮತದಾನದಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.ಎಕ್ಸ್ ನಲ್ಲಿ ಹಿಂದಿಯಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ಪ್ರಿಯ ದೇಶದ ಜನರೇ, ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ. +ಇದು ಐತಿಹಾಸಿಕ ನಿರುದ್ಯೋಗ, ವಿಪರೀತ ಹಣದುಬ್ಬರ, ಸಾಂಸ್ಥಿಕ ಭ್ರಷ್ಟಾಚಾರ ಮತ್ತು ಆರ್ಥಿಕತೆಯನ್ನು ಸೋಲಿಸುವ ಚುನಾವಣೆಯಾಗಿದೆ ಎಂದಿದ್ದಾರೆ. +प्रिय देशवासियों, यह चुनाव देश के लोकतंत्र और संविधान को बचाने का चुनाव है। यह ऐतिहासिक बेरोजगारी, प्रचंड महंगाई, संस्थागत भ्रष्टाचार और आर्थिक संकट को हराने का चुनाव है। आपका एक-एक वोट महत्वपूर्ण है। सोच-समझ कर, अपने विवेक का इस्तेमाल करते हुए भारी संख्या में मतदान करें। अपने और… +ಪ್ರತಿಯೊಂದು ಮತವೂ ಮುಖ್ಯವಾಗಿದೆ. ಆಳವಾದ ಚಿಂತನೆಯ ನಂತರ ಮತ ಚಲಾಯಿಸಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ನಿಮ ವಿವೇಚನೆಯನ್ನು ಬಳಸಿ. ನಿಮ ಮತ್ತು ನಿಮ ಮಕ್ಕಳ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. +ಮೂರನೇ ಹಂತದ ಚುನಾವಣೆಯಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಹಂತದಲ್ಲಿ 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತದಾನ ಮಾಡಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳಿಂದ 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. \ No newline at end of file diff --git a/eesanje/url_47_105_9.txt b/eesanje/url_47_105_9.txt new file mode 100644 index 0000000000000000000000000000000000000000..2c6400ddde21c708736d82dbed00365f42431da2 --- /dev/null +++ b/eesanje/url_47_105_9.txt @@ -0,0 +1,4 @@ +ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಮೂವರು ಉಗ್ರರ ಎನ್‌ಕೌಂಟರ್‌ +ಶ್ರೀನಗರ,ಮೇ7-ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಕುಲ್ಗಾಮ್‌ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ತಡರಾತ್ರಿ ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿ ಬೆಳಗ್ಗೆವರೆಗೂ ಮುಂದುವರೆಯಿತು. +ಭಯೋತ್ಪಾದಕರ ಶವಗಳನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ಹೊರತೆಗೆಯಬೇಕಾಗಿದೆ.ಏಪ್ರಿಲ್‌ 28ರಂದು ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಗ್ರಾಮ ರಕ್ಷಣಾ ಸಿಬ್ಬಂದಿ (ವಿಡಿಜಿ) ಕೊಲ್ಲಲ್ಪಟ್ಟ ನಂತರ ಎರಡು ಗುಂಪುಗಳ ಭಯೋತ್ಪಾದಕರನ್ನು ಪತ್ತೆಹಚ್ಚಲು ಮೇ 1ರಂದು ಭದ್ರತಾ ಏಜೆನ್ಸಿಗಳು ಕಥುವಾ ಜಿಲ್ಲೆಗೆ ಶೋಧ ಕಾರ್ಯಾಚರಣೆಯ ವ್ಯಾಪ್ತಿಯನ್ನು ವಿಸ್ತರಿಸಿದ್ದವು. ಚೋಚ್ರು ಗಾಲಾ ಎತ್ತರದ ದೂರದ ಪನಾರಾ ಗ್ರಾಮದಲ್ಲಿ ಎನ್‌ಕೌಂಟರ್‌ ನಡೆದಿದೆ. +ಏಪ್ರಿಲ್‌ 29ರಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಜಮ್ಮು ವಲಯ) ಆನಂದ್‌ ಜೈನ್‌ ಅವರು, ಇತ್ತೀಚೆಗೆ ಗಡಿಯಿಂದ ನುಸುಳಿದ ನಂತರ ಎರಡು ಗುಂಪುಗಳ ಭಯೋತ್ಪಾದಕರು ಈ ಪ್ರದೇಶದಲ್ಲಿ ಇದ್ದಾರೆ ಎಂದು ನಂಬಲಾಗಿದೆ. \ No newline at end of file diff --git a/eesanje/url_47_106_1.txt b/eesanje/url_47_106_1.txt new file mode 100644 index 0000000000000000000000000000000000000000..d40197f21bfb495da871e7595903da624467d204 --- /dev/null +++ b/eesanje/url_47_106_1.txt @@ -0,0 +1,5 @@ +ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ +ಅಹಮದಾಬಾದ್‌,ಮೇ.7ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಅಹಮದಾಬಾದ್‌ನ ರಾನಿಪ್‌ ಪ್ರದೇಶದಲ್ಲಿರುವ ನಿಶಾನ್‌ ಹೈಯರ್‌ ಸೆಕೆಂಡರಿ ಶಾಲೆಯನ್ನು ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. +ಬೆಳಗ್ಗೆ 7.30ರ ನಂತರ ಮತದಾನ ಕೇಂದ್ರಕ್ಕೆ ಬಂದ ಮೋದಿ ಅವರನ್ನು ಕೇಂದ್ರ ಸಚಿವ ಅಮಿತ್‌ ಶಾ ಅವರನ್ನು ಸ್ವಾಗತಿಸಿ ಇಬ್ಬರು ನಾಯಕರು ಬೂತ್‌ಗೆ ತೆರಳಿದರು. ಪ್ರಧಾನಿ ಮೋದಿಯವರ ದರ್ಶನ ಪಡೆಯಲು ನೆರೆದಿದ್ದ ಅಪಾರ ಜನಸ್ತೋಮ ರಸ್ತೆಬದಿಯಿಂದ ಹರ್ಷೋದ್ಘಾರ ಮಾಡಿ ಅವರಿಗಾಗಿ ಘೋಷಣೆಗಳನ್ನು ಕೂಗಿದರು. +ಬೂತ್‌ನ ಹೊರಗೆ, ಪ್ರಜಾಪ್ರಭುತ್ವದಲ್ಲಿ ಇದು ದೊಡ್ಡ ಪ್ರಾಮುಖ್ಯತೆಯನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ದೇಶದ ನಾಗರಿಕರನ್ನು ಒತ್ತಾಯಿಸಿದರು. ನಮ ದೇಶದಲ್ಲಿ ದಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಮತ್ತು ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ನಾಲ್ಕು ಸುತ್ತಿನ ಮತದಾನ ಇನ್ನೂ ಮುಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು. +ಚುನಾವಣೆಗಳ ತಡೆರಹಿತ ಪ್ರಸಾರವನ್ನು ಒದಗಿಸುವ ಮಾಧ್ಯಮ ಪ್ರತಿನಿಧಿಗಳಿಗೆ ಅವರಿಗೆ ನೀವು ನಿಮ ಆರೋಗ್ಯವನ್ನು ನೋಡಿಕೊಳ್ಳಿ ಮತ್ತು ಸಾಕಷ್ಟು ನೀರು ಕುಡಿಯಿರಿ ಎಂದು ಸಲಹೆ ನೀಡಿದರು. \ No newline at end of file diff --git a/eesanje/url_47_106_10.txt b/eesanje/url_47_106_10.txt new file mode 100644 index 0000000000000000000000000000000000000000..d5fda7d6ffdd0e27963b23d4a4c5dadcf84fc9b0 --- /dev/null +++ b/eesanje/url_47_106_10.txt @@ -0,0 +1,7 @@ +ಚುನಾವಣಾ ಆಯೋಗದಿಂದ ಆಂಧ್ರ ಡಿಜಿಪಿ ಎತ್ತಂಗಡಿ +ಅಮರಾವತಿ,ಮೇ6-ಆಂಧ್ರಪ್ರದೇಶದ ವಿಧಾನಸಭಾ, ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಡಿಜಿಪಿ ಕೆ.ವಿ.ರಾಜೇಂದ್ರನಾಥ ರೆಡ್ಡಿ ಅವರನ್ನು ಚುನಾವಣಾ ಆಯೋಗ ವರ್ಗಾವಣೆ ಮಾಡಿದೆ. ಮುಂದಿನ ಶ್ರೀಣಿಯ ಅಧಿಕಾರಿಗೆ ತಕ್ಷಣವೇ ಅಧಿಕಾರ ಹಸ್ತಾಂತರಿಸು ವಂತೆಯೂ ಸೂಚಿಸಲಾಗಿದೆ. +2024ರ ಲೋಕಸಭೆ ಚುನಾವಣೆಯೊಂದಿಗೆ ಆಂಧ್ರಪ್ರದೇಶ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಕ್ಕೆ ಡಿಜಿಪಿ ಮತ್ತು ಇತರ ಹಲವು ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ ಎಂಬ ಪ್ರತಿಪಕ್ಷಗಳ ದೂರಿನ ಮೇರೆಗೆ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಂಡಿದೆ. +ಮುಂದಿನ ಡಿಜಿಪಿ ಆಯ್ಕೆಗಾಗಿ ಸೋಮವಾರ ಬೆಳಗ್ಗೆ 11 ಗಂಟೆಯೊಳಗೆ ಮೂವರು ಡಿಜಿಪಿ ಶ್ರೀಣಿಯ ಅಧಿ ಕಾರಿಗಳ ಪಟ್ಟಿಯನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ. ರಾಜೇಂದ್ರನಾಥ ರೆಡ್ಡಿ ಅವರಿಗೆ ಯಾವುದೇ ಚುನಾವಣಾ ಕರ್ತವ್ಯ ನೀಡದಂತೆಯೂ ನಿರ್ದೇಶನ ನೀಡಲಾಗಿದೆ. +ಎರಡೂ ಚುನಾವಣೆಗಳಿಗೆ ವೈಎಸ್‌ಆರ್‌ಪಿ ಮತ್ತು ಟಿಡಿಪಿ-ಬಿಜೆಪಿ-ಜನಸೇನಾ ಮೈತ್ರಿಕೂಟದ ನಡುವೆ ಪ್ರಬಲ ಹೋರಾಟ ನಡೆಯುತ್ತಿದೆ. ಈ ಸಮಯದಲ್ಲಿ ಡಿಜಿಪಿ ರಾಜೇಂದ್ರನಾಥ ರೆಡ್ಡಿ ಅವರ ವರ್ಗಾವಣೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ರಾಜೇಂದ್ರನಾಥ ರೆಡ್ಡಿ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ವೈಎಸ್‌ಆರ್‌ಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ವಿಪಕ್ಷಗಳಿಂದ ಮೊದಲಿನಿಂದಲೂ ಟೀಕೆಗಳು ವ್ಯಕ್ತವಾಗಿದ್ದವು. +ರಾಜೇಂದ್ರನಾಥ ರೆಡ್ಡಿಯವರ ಅಧಿಕಾರಾವಧಿಯಲ್ಲಿ ಪ್ರತಿಪಕ್ಷ ನಾಯಕರನ್ನು ಅಕ್ರಮವಾಗಿ ಬಂಧಿಸಲು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂಬ ಆರೋಪವನ್ನೂ ಪಕ್ಷಗಳ ನಾಯಕರು ಮಾಡಿದ್ದರು. ಆಡಳಿತಾರೂಢ ವೈಎಸ್‌ಆರ್‌ಪಿ ನಾಯಕರ ದೌರ್ಜನ್ಯದ ವಿರುದ್ಧ ನೀಡಲಾದ ನಿಜವಾದ ದೂರುಗಳನ್ನೂ ನಿರ್ಲಕ್ಷಿಸಲಾಗಿದೆ ಎಂದು ಟಿಡಿಪಿ-ಬಿಜೆಪಿ-ಜನಸೇನಾ ನಾಯಕರು ಆರೋಪಿಸಿದ್ದರು. +ಆಂಧ್ರಪ್ರದೇಶದ 175 ಸದಸ್ಯ ಬಲದ ವಿಧಾನಸಭಾ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಹೊರಬರಲಿದೆ. \ No newline at end of file diff --git a/eesanje/url_47_106_11.txt b/eesanje/url_47_106_11.txt new file mode 100644 index 0000000000000000000000000000000000000000..f248a1201aabe7e40d4913771d2feea5dbc129d9 --- /dev/null +++ b/eesanje/url_47_106_11.txt @@ -0,0 +1,5 @@ +5 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ +ಪಾಟ್ನಾ, ಮೇ6-ಅವಳಿ, ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವುದನ್ನೇ ಕೇಳಿದ್ದೇವೆ. ಆದರೆ ಬಿಹಾರದ ಪಾಟ್ನಾದಲ್ಲಿ ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಜನಿಸಿದ ಅಷ್ಟೂ ಮಕ್ಕಳು ಹೆಣ್ಣು ಶಿಶುಗಳಾಗಿವೆ. +ಠಾಕೂರ್‌ಗಂಜ್‌ ಕನಕಪುರ ಪಂಚಾಯತ್‌ನ ಜಲ್ಮಿಲಿಕ್‌ ಗ್ರಾಮದ ನಿವಾಸಿ ತಾಹಿರಾ ಬೇಗಂ(20) ಎಂಬ ಮಹಿಳೆ ಬರೋಬ್ಬರಿ ಐದು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಶಿಶುಗಳು 1 ಕೆಜಿಗಿಂತ ಕಡಿಮೆ ಹೊಂದಿವೆ. ಸದ್ಯ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ. ಅಂದಹಾಗೆ ಈ ಬಾರಿ ತಾಹಿರಾ ಎರಡನೇ ಬಾರಿಗೆ ತಾಯಿಯಾಗಿದ್ದು, ಈಗಾಗಲೇ ಮೂರು ವರ್ಷದ ಮಗ ಇದ್ದಾನೆ. ಒಟ್ಟು ಆರು ಮಕ್ಕಳ ತಾಯಿಯಾಗಿದ್ದಾರೆ. +ಕಿಶನ್‌ಗಂಜ್‌ ಜಿಲ್ಲೆಯ ಪೋಥಿಯಾ ಬ್ಲಾಕ್‌ ಖಾಸಗಿ ನರ್ಸಿಂಗ್‌ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾಹಿರಾ ಅವರು 2 ತಿಂಗಳ ಗರ್ಭಿಣಿಯಾಗಿದ್ದಾಗ ಹೊಟ್ಟೆಯಲ್ಲಿ ನಾಲ್ಕು ಮಕ್ಕಳಿರುವುದು ಗೊತ್ತಾಗಿದೆ. ಬಳಿಕ ವೈದ್ಯರ ಬಳಿ ತಪಾಸಣೆಗೆ ಹೋದಾಗ ನಾಲ್ಕಲ್ಲ ಐದು ಮಕ್ಕಳಿರುವುದು ಗೊತ್ತಾಯಿತು. +ಈ ಪ್ರಕರಣ ಸವಾಲಿನದ್ದಾಗಿದ್ದು, ಇಂತಹ ಪ್ರಕರಣಗಳು ತೀರಾ ವಿರಳ. ಅಚ್ಚರಿಯ ವಿಷಯ ಎಂದರೆ ಎಲ್ಲಾ ಮಕ್ಕಳು ಶಸ್ತ್ರ ಚಿಕಿತ್ಸೆ ಇಲ್ಲದೆ ಸಾಮಾನ್ಯ ಹೆರಿಗೆಯ ಮೂಲಕ ಜನಿಸಿವೆ ಎಂದು ಇವೈದ್ಯೆ ಡಾ.ಫರ್ಜಾನಾ ಹೇಳಿದ್ದಾರೆ. \ No newline at end of file diff --git a/eesanje/url_47_106_12.txt b/eesanje/url_47_106_12.txt new file mode 100644 index 0000000000000000000000000000000000000000..2717b8ce5bb820975259ce464ff629559f8cf7d4 --- /dev/null +++ b/eesanje/url_47_106_12.txt @@ -0,0 +1,5 @@ +ಭಾರಿ ಮಳೆ : ಮಣಿಪುರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ +ಇಂಫಾಲ, ಮೇ 6-ಭಾರಿ ಮಳೆಯಿಂದಾಗಿ ಮಣಿಪುರ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳನ್ನು 2 ದಿನ ಮುಚ್ಚುವಂತೆ ಮಣಿಪುರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಭಾರೀ ಮಳೆ ಸುರಿದಿದ್ದು, ಇಂಫಾಲ್‌ ಪಶ್ಚಿಮ ಜಿಲ್ಲೆಯ ಕಾಂಚೀಪುರ ಮತ್ತು ತೇರಾ ಮತ್ತು ತೌಬಾಲ್‌ ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಭಾನುವಾರ ಶುರುವಾದ ಆಲಿಕಲ್ಲು ಮಳೆಯಿಂದಾಗಿ ರಾಜ್ಯದಾದ್ಯಂತ ಅನೇಕ ಕಡೆ ಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ನಿರ್ದೇಶನಾಲಯವು ಹೊರಡಿಸಿದ ಆದೇಶದಲ್ಲಿ ಶಿಕ್ಷಣ ಸಮಸ್ತೆಗಳನ್ನು ಮುಚ್ಚಲು ತಿಳಿಸಿದೆ. +ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರು ಫೇಸ್‌‍ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ಪ್ರಸ್ತುತ ಹವಾಮಾನ ಪರಿಸ್ಥಿತಿಗಳಿಂದ ಉಂಟಾಗುವ ಅಪಾಯಗಳ ವಿರುದ್ಧ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮನೆಯೊಳಗೆ ಸುರಕ್ಷಿತವಾಗಿರಲು ನಾನು ಎಲ್ಲರನ್ನು ಕೋರುತ್ತೇನೆ. ರಾಜ್ಯ ಸರ್ಕಾರವು ಎಲ್ಲ ಸುರಕ್ಷತಾ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ. +ರಾಜ್ಯದಲ್ಲಿ, ವಿಶೇಷವಾಗಿ ಇಂಫಾಲ್‌ ಕಣಿವೆಯಲ್ಲಿ ಸುರಿದ ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ನೂರಾರು ಮನೆಗಳಿಗೆ ಹಾನಿಯಾಗಿದೆ.ಇದರ ಬಗ್ಗೆ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವು ಜಿಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. \ No newline at end of file diff --git a/eesanje/url_47_106_2.txt b/eesanje/url_47_106_2.txt new file mode 100644 index 0000000000000000000000000000000000000000..e8b51924cdf431fb8c962895e7b7c401820b3c4f --- /dev/null +++ b/eesanje/url_47_106_2.txt @@ -0,0 +1,9 @@ +ಇಂದು ರವೀಂದ್ರನಾಥ ಟ್ಯಾಗೋರ್‌ ಅವರ ಜನ್ಮ ದಿನಾಚರಣೆ +ನವದೆಹಲಿ, ಮೇ 7-ಇಂದು ರಾಷ್ಟ್ರಗೀತೆ ಬರೆದ ನೊಬೆಲ್‌ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್‌ ಅವರ ಜನ್ಮ ದಿನಾಚರಣೆ. ಪಶ್ಚಿಮ ಬಂಗಾಳದಲ್ಲಿ ಟ್ಯಾಗೋರ್‌ ಅವರ ಜನ್ಮ ದಿನಾಚರಣೆಯನ್ನು ಪಚಿಶೆ ಬೋಯಿಸಾಖ್‌ ಎಂದು ಕರೆಯಲಾಗುತ್ತದೆ. ಕವಿ, ಕಾದಂಬರಿಕಾರ, ಪ್ರಬಂಧಕಾರ, ತತ್ವಜ್ಞಾನಿ ಮತ್ತು ಸಂಗೀತಗಾರರಾಗಿದ್ದ ಟ್ಯಾಗೋರ್‌ ಅವರು 1861 ರಲ್ಲಿ ಕೊಲ್ಕತ್ತಾದಲ್ಲಿ (ಆಗ ಕಲ್ಕತ್ತಾ ಎಂದು ಕರೆಯಲ್ಪಡುತ್ತಿದ್ದರು) ಮೇ.7ರಂದು ಜನಿಸಿದರು. +ರವೀಂದ್ರನಾಥ ಟ್ಯಾಗೋರ್‌ ಅವರು ಬಂಗಾಳಿ ಸಾಹಿತ್ಯ ಮತ್ತು ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅವರ ಕವಿತೆಗಳು, ಸಣ್ಣ ಕಥೆಗಳು, ಹಾಡುಗಳು (ರವೀಂದ್ರ ಸಂಗೀತ ಎಂದು ಉಲ್ಲೇಖಿಸಲಾಗುತ್ತದೆ), ನಾಟಕಗಳು ಮತ್ತು ಕಾದಂಬರಿಗಳು ಇನ್ನೂ ಕಲೆಯ ವಿವಿಧ ಕ್ಷೇತ್ರಗಳಲ್ಲಿ ಗೌರವಿಸಲ್ಪಡುತ್ತವೆ ಮತ್ತು ವಿಶ್ಲೇಷಿಸಲ್ಪಡುತ್ತವೆ. +ಅವರು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ನೊಬೆಲ್‌ ಪ್ರಶಸ್ತಿಯನ್ನು (1913) ಪಡೆದ ಮೊದಲ ಯುರೋಪಿಯನ್‌ ಹೊರತುಪಡಿಸಿದ ವ್ಯಕ್ತಿಯಾಗಿದ್ದರು. ಈ ವರ್ಷ ರವೀಂದ್ರನಾಥ ಟ್ಯಾಗೋರ್‌ ಅವರ 163ನೇ ಜನದಿನವನ್ನು ಜಗತ್ತು ಆಚರಿಸುತ್ತಿದೆ. ಅವರು 2,000 ಕ್ಕೂ ಹೆಚ್ಚು ಹಾಡುಗಳು ಮತ್ತು ಹಲವಾರು ಕಾದಂಬರಿಗಳು, ನತ್ಯ ನಾಟಕಗಳು ಮತ್ತು ಸಣ್ಣ ಕಥೆಗಳನ್ನು ಬರೆದಿದ್ದಾರೆ. ಗೋರಾ, ಗೀತಾಂಜಲಿ, ರಕ್ತ ಕರಾಬಿ, ಘರೆ ಬೈರೆ, ಶೇಷರ್‌ ಕೊಬಿತಾ, ರಾಜಾ ಓ ರಾಣಿ, ತಶೇರ್‌ ದೇಶ್‌‍, ದೇನಾ ಪವೋನಾ ಮತ್ತು ಶಂಚಾಯಿತಾ ಟಾಗೋರ್‌ ಅವರ ಕೆಲವು ಅತ್ಯುತ್ತಮ ಕತಿಗಳಾಗಿವೆ. +ನೊಬೆಲ್‌ ಪ್ರಶಸ್ತಿಯ ಅಧಿಕತ ಹ್ಯಾಂಡಲ್‌ ಈ ದಿನದಂದು ಟ್ಯಾಗೋರ್‌ ಅವರಿಗೆ ಗೌರವವನ್ನು ಪೋಸ್ಟ್‌ ಮಾಡಿದೆ, ಅವರು ಅವರ ಆಳವಾದ ಸೂಕ್ಷ್ಮ, ತಾಜಾ ಮತ್ತು ಸುಂದರವಾದ ಪದ್ಯದಿಂದಾಗಿ ಬಹುಮಾನವನ್ನು ಸ್ವೀಕರಿಸಿದ್ದಾರೆ. +ಟಾಗೋರ್‌ 16 ನೇ ವಯಸ್ಸಿನಲ್ಲಿ ಸಣ್ಣ ಕಥೆಗಳನ್ನು ಬರೆಯಲು ಪ್ರಾರಂಭಿಸಿದರು. ಅವರ ಮೊದಲ ಸಣ್ಣ ಕಥೆ 1877 ರಲ್ಲಿ ಬಿಡುಗಡೆಯಾಯಿತು. ಅವರು 1891 ಮತ್ತು 1895 ರ ನಡುವೆ ಅನೇಕ ಕಥೆಗಳನ್ನು ಬರೆದರು. ಅವರು ಬರೆದ ಪ್ರಸಿದ್ಧ ಸಣ್ಣ ಕಥೆಗಳು ಕಾಬೂಲಿವಾಲಾ, ಕ್ಷುದಿತಾ ಪಾಶನ್‌ ಮತ್ತು ಅತಿಥಿ ಮುಖ್ಯವಾದವುಗಳಾಗಿವೆ. +ಟಾಗೋರ್‌ ಅವರು ಭಾರತದ ರಾಷ್ಟ್ರಗೀತೆ (ಜನ ಗಣ ಮನ) ಮತ್ತು ಬಾಂಗ್ಲಾದೇಶ (ಅಮರ್‌ ಶೋನರ್‌ ಬಾಂಗ್ಲಾ) ಬರೆದಿದ್ದಾರೆ. ರವೀಂದ್ರನಾಥ ಟ್ಯಾಗೋರ್‌ ಅವರ ಜನದಿನವನ್ನು ಆಚರಿಸಲು ಪಶ್ಚಿಮ ಬಂಗಾಳದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇವುಗಳಲ್ಲಿ ನಾಟಕಗಳು, ಹಾಡುಗಳು, ವಾಚನಗೋಷ್ಠಿಗಳು ಮತ್ತು ಅನೇಕ ಪ್ರದೇಶಗಳು ಸೇರಿವೆ. +ಸಾಮಾಜಿಕ ಸುಧಾರಣೆ ಮತ್ತು ಸಾರ್ವತ್ರಿಕ ಮಾನವತಾವಾದದ ಚಾಂಪಿಯನ್‌ ಆಗಿದ್ದ ಟ್ಯಾಗೋರ್‌ ಅವರ ಕತಿಗಳು ಸಾಮರಸ್ಯ, ಸಹಾನುಭೂತಿ ಮತ್ತು ವೈವಿಧ್ಯತೆಯ ಆಚರಣೆಯನ್ನು ಪ್ರತಿಪಾದಿಸುತ್ತವೆ. +ಒಬ್ಬ ದಾರ್ಶನಿಕನಾಗಿ, ಶಿಕ್ಷಣದ ಕುರಿತಾದ ಟ್ಯಾಗೋರ್‌ರ ವಿಚಾರಗಳು ಚಿಂತನೆಯನ್ನು ಕೆರಳಿಸುವ ಮತ್ತು ಪ್ರವಚನವನ್ನು ಪ್ರೇರೇಪಿಸುವ ಮೂಲಕ ಆಧುನಿಕ ಭಾರತೀಯ ಚಿಂತನೆಯ ಮೇಲೆ ಅಳಿಸಲಾಗದ ಛಾಪು ಮೂಡಿಸುತ್ತಲೇ ಇರುತ್ತವೆ. \ No newline at end of file diff --git a/eesanje/url_47_106_3.txt b/eesanje/url_47_106_3.txt new file mode 100644 index 0000000000000000000000000000000000000000..62967a3edff18c466527831d40ad6f8ae0c69e30 --- /dev/null +++ b/eesanje/url_47_106_3.txt @@ -0,0 +1,8 @@ +ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ, ತಾರತಮ್ಯ ಮಾಡಿಲ್ಲ ; ಮೋದಿ +ನವದೆಹಲಿ,ಮೇ.7-ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. +ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ಭಾರತೀಯ ಜನತಾ ಪಕ್ಷವು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. +ಕೆಲ ದಿನಗಳ ಹಿಂದೆ ಮೋದಿ ಅವರು ಮುಸಲಾನರನ್ನು ನುಸುಳುಕೋರರು ಎಂದು ಆರೋಪಿಸಿದ ನಂತರ ಅವರನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸಲಾಗಿತ್ತು. ಹೀಗಾಗಿ ಅವರು ನಾನು ಎಂದಿಗೂ ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. +ಕಾಂಗ್ರೆಸ್‌‍ನವರು ನೆಹರೂ ಕಾಲದಿಂದಲೂ ನಮನ್ನು ಮುಸ್ಲಿಂ ವಿರೋಧಿ ಎಂದು ನಿಂದಿಸುತ್ತಿದ್ದಾರೆ. ಹಾಗೂ ತಮನ್ನು ಮುಸ್ಲಿಂ ಸ್ನೇಹಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಏಕೆಂದರೆ ಅವರು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಮೋದಿ ಆರೋಪಿಸಿದರು ಅದಕ್ಕಾಗಿಯೇ ಅವರು ಈ ಭಯದ ವಾತಾವರಣವನ್ನು ಸಷ್ಟಿಸಿದರು. +ಅವರು ಭಯಭೀತರಾಗಿ ಲಾಭವನ್ನು ಪಡೆಯುತ್ತಿದ್ದರು. ಆದರೆ ಮುಸ್ಲಿಂ ಸಮುದಾಯ ಈಗ ಜಾಗತವಾಗಿದೆ. ನಾನು ತ್ರಿವಳಿ ತಲಾಖ್‌ ಅನ್ನು ರದ್ದುಗೊಳಿಸಿದಾಗ ಮತ್ತು ಆ ಅಭ್ಯಾಸವನ್ನು ಕೊನೆಗೊಳಿಸಿದಾಗ, ಮುಸ್ಲಿಂ ಸಹೋದರಿಯರು ತಮ್ಮ ಕಳವಳಗಳ ಬಗ್ಗೆ ನಾನು ನಿಜ ಎಂದು ಭಾವಿಸುತ್ತಾರೆ. +ನಾನು ಆಯುಷಾನ್‌ ಕಾರ್ಡ್‌ಗಳನ್ನು ನೀಡಿದಾಗ, ಅವರು ನಾನು ನಿಜವಾದ ಮನುಷ್ಯ ಎಂದು ಹೇಳುತ್ತಾರೆ. ನಾನು ಕೋವಿಡ್‌ ಲಸಿಕೆಗಳನ್ನು ನೀಡಿದಾಗ, ಅವರು ನಾನು ನಿಜವಾದ ಮನುಷ್ಯ ಎಂದು ಹೇಳುತ್ತಾರೆ. ನಾನು ಯಾರ ವಿರುದ್ಧವೂ ತಾರತಮ್ಯ ಮಾಡುತ್ತಿಲ್ಲ ಎಂದು ಅವರು ಅರಿತುಕೊಂಡಿದ್ದಾರೆ. +ಪ್ರತಿಪಕ್ಷಗಳ ಸಮಸ್ಯೆ ಎಂದರೆ ಅವರ ಸುಳ್ಳುಗಳು ಸಿಕ್ಕಿಬಿದ್ದಿರುವುದು. ಅದಕ್ಕಾಗಿಯೇ ಅವರು ತಪ್ಪುದಾರಿಗೆಳೆಯಲು, ಅವರು ಎಲ್ಲಾ ರೀತಿಯ ಸುಳ್ಳುಗಳನ್ನು ಹೇಳುತ್ತಲೇ ಇರುತ್ತಾರೆ, ಎಂದು ಮೋದಿ ಅವರು ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯ ಬಗ್ಗೆ ಕೇಳಿದಾಗ ಹೇಳಿದರು. \ No newline at end of file diff --git a/eesanje/url_47_106_4.txt b/eesanje/url_47_106_4.txt new file mode 100644 index 0000000000000000000000000000000000000000..5b9533844b3278bc581138f24c82c2ef7cdf05f6 --- /dev/null +++ b/eesanje/url_47_106_4.txt @@ -0,0 +1,5 @@ +ಸಂವಿಧಾನ ಉಳಿಸಲು ಹೆಚ್ಚು ಮತದಾನ ಮಾಡಿ ; ಖರ್ಗೆ ಕರೆ +ನವದೆಹಲಿ, ಮೇ 7 (ಪಿಟಿಐ) :ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಸಂವಿಧಾನ ಉಳಿಸಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖಗೆರ್ ಕರೆ ನೀಡಿದ್ದಾರೆ. +ಎಕ್‌್ಸನಲ್ಲಿನ ಪೋಸ್ಟ್‌ನಲ್ಲಿ ಖರ್ಗೆ ಅವರು, ದೇಶವೂ ಸರ್ವಾಧಿಕಾರದ ಕಡೆಗೆ ತಿರುಗುವುದನ್ನು ಕಡೆಗಣಿಸಿ ಸಂವಿಧಾನವನ್ನು ಉಳಿಸಲು ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಮತ ಚಲಾಯಿಸಿ! 93 ಕ್ಷೇತ್ರಗಳಲ್ಲಿ 11 ಕೋಟಿ ಜನರು ತಮ ಪ್ರಜಾಸತ್ತಾತಕ ಹಕ್ಕನ್ನು ಚಲಾಯಿಸುತ್ತಾರೆ, ಕೇವಲ ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅಲ್ಲ, ಆದರೆ ಅವರು ತಮ ಸಾಂವಿಧಾನಿಕ ಹಕ್ಕುಗಳನ್ನು ಪಡೆಯಲು ಬಯಸುತ್ತಾರೆಯೇ ಎಂದು ನಿರ್ಧರಿಸುತ್ತಾರೆ ಎಂದಿದ್ದಾರೆ. +ಯುವ ನ್ಯಾಯ ರೋಜ್ಗಾರ್‌ ಕ್ರಾಂತಿ (ಉದ್ಯೋಗ ಕ್ರಾಂತಿ) ಯನ್ನು ಖಚಿತಪಡಿಸುತ್ತದೆ, ಅಲ್ಲಿ ಯುವಕರ ಭವಿಷ್ಯವು ಉಜ್ವಲ ಮತ್ತು ಸುರಕ್ಷಿತವಾಗುತ್ತದೆ ಎಂದು ಖರ್ಗೆ ಹೇಳಿದರು. ನಾರಿ ನ್ಯಾಯ್‌ ನಮ ಜನಸಂಖ್ಯೆಯ ಶೇ. 50 ರಷ್ಟು ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯವನ್ನು ಖಚಿತಪಡಿಸುತ್ತದೆ – ನಮ ಸಹೋದರಿಯರು ಮತ್ತು ತಾಯಂದಿರು. +ಕಿಸಾನ್‌ ನ್ಯಾಯ್‌ ನಮ ಅನ್ನದಾತ ರೈತರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ, ನಮಗೆ ಆಹಾರಕ್ಕಾಗಿ ಬೆವರು ಸುರಿಸುತ್ತಾನೆ, ಅವರು ಹೇಳಿದರು.ಶ್ರಮಿಕ್‌ ನ್ಯಾಯ ಭಾರತವನ್ನು ನಿರ್ಮಿಸುವ ಕೈಗಳನ್ನು ಸಾಮಾಜಿಕವಾಗಿ ರಕ್ಷಿಸುವುದನ್ನು ಖಚಿತಪಡಿಸುತ್ತದೆ ಎಂದು ಕಾಂಗ್ರೆಸ್‌‍ ನಾಯಕ ಹೇಳಿದರು. ಹಿಸ್ಸೆದಾರಿ ನ್ಯಾಯ ಎಲ್ಲರಿಗೂ ಸಮಾನತೆ ಮತ್ತು ಸಮಾನತೆಯನ್ನು ಖಚಿತಪಡಿಸುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_106_5.txt b/eesanje/url_47_106_5.txt new file mode 100644 index 0000000000000000000000000000000000000000..22dbd75782a8207b1bf60f1db7489c6fd19cc803 --- /dev/null +++ b/eesanje/url_47_106_5.txt @@ -0,0 +1,6 @@ +ಸ್ಥಿರ ಸರ್ಕಾರವನ್ನು ಆಯ್ಕೆ ಮಾಡುವಂತೆ ಅಮಿತ್‌ ಶಾ ಮನವಿ +ಅಹಮದಾಬಾದ್‌, ಮೇ 7 (ಪಿಟಿಐ) :ಕೇಂದ್ರ ಗಹ ಸಚಿವ ಅಮಿತ್‌ ಶಾ ಅವರು ಇಂದು ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಅಹಮದಾಬಾದ್‌ನ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಅವರು ದೇಶವನ್ನು ಸಮದ್ಧಗೊಳಿಸಲು ಬದ್ಧವಾಗಿರುವ ಸ್ಥಿರ ಸರ್ಕಾರವನ್ನು ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು. +ಗಾಂಧಿನಗರ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಷಾ ಅವರು ಇಲ್ಲಿನ ನಾರಣಪುರ ಪ್ರದೇಶದ ಉಪ ಕೇಂದ್ರದ ಮತಗಟ್ಟೆಗೆ ಆಗಮಿಸುತ್ತಿದ್ದಂತೆ ತಮ ಬೆಂಬಲಿಗರನ್ನು ಸ್ವಾಗತಿಸಿ, ಅವರೊಂದಿಗೆ ಸಂವಾದ ನಡೆಸಿ ಹಸ್ತಾಕ್ಷರಕ್ಕೆ ಸಹಿ ಹಾಕಿದರು. ಅವರು ತಮ ಮತ ಚಲಾಯಿಸುವಾಗ ಅವರ ಪತ್ನಿ ಸೋನಾಲ್‌ ಶಾ, ಮಗ ಜಯ್‌ ಶಾ ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ಬಂದಿದ್ದರು. ಮತ ಚಲಾಯಿಸಿದ ನಂತರ ಅಮಿತ್‌ ಶಾ ಅವರು ತಮ ಶಾಯಿಯ ಬೆರಳು ಮತ್ತು ವಿಜಯದ ಚಿಹ್ನೆಯನ್ನು ತೋರಿಸಿದರು. +ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ನಾನು ದೇಶಾದ್ಯಂತ ಎಲ್ಲಾ ಮತದಾರರಿಗೆ ಮತ್ತು ಗುಜರಾತ್‌ನ ಮತದಾರರಿಗೆ ಮನವಿ ಮಾಡಲು ಬಯಸುತ್ತೇನೆ. ಬಡವರ ಕಲ್ಯಾಣಕ್ಕಾಗಿ ಕೆಲಸ ಮಾಡುವ ದೇಶವನ್ನು ಸುರಕ್ಷಿತ ಮತ್ತು ಸಮದ್ಧಗೊಳಿಸಲು ಸಮರ್ಪಿತವಾದ ಸ್ಥಿರ ಸರ್ಕಾರವನ್ನು ಆರಿಸಿ. ಮತ್ತು ಭಾರತದ ಹೆಮೆ ಎಂದು ಕೇಂದ್ರ ಸಚಿವರು ಸುದ್ದಿಗಾರರಿಗೆ ತಿಳಿಸಿದರು. +ಭ್ರಷ್ಟಾಚಾರದ ವಿರುದ್ಧ ಮತ್ತು ಬಡತನವನ್ನು ತೊಡೆದುಹಾಕಲು, ದೇಶವನ್ನು ಸ್ವಾವಲಂಬಿಯಾಗಿ, ಅಭಿವದ್ಧಿ ಹೊಂದಲು ಮತ್ತು ವಿಶ್ವದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಥಮ ಸ್ಥಾನದಲ್ಲಿರಲು ಬಯಸುವ ಸರ್ಕಾರವನ್ನು ಆಯ್ಕೆ ಮಾಡುವಂತೆ ಅವರು ಜನರಲ್ಲಿ ಮನವಿ ಮಾಡಿದರು. +ಪ್ರಜಾಪ್ರಭುತ್ವದ ಈ ಹಬ್ಬದಂದು ನಾಡಿನ ಸಮಸ್ತ ಜನತೆಗೆ ನಾನು ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ ಮತ್ತು ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಉತ್ಸಾಹದಿಂದ ಮತದಾನ ಮಾಡುವ ಮೂಲಕ ಭಾಗವಹಿಸುವಂತೆ ಮತ್ತೊಮೆ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು. ನಂತರ ಅವರು ಅನುಸರಿಸುವ ಸಂಪ್ರದಾಯದ ಭಾಗವಾಗಿ ತಮ ಕುಟುಂಬ ಸದಸ್ಯರೊಂದಿಗೆ ಪ್ರಾರ್ಥನೆ ಸಲ್ಲಿಸಲು ಹತ್ತಿರದ ದೇವಸ್ಥಾನಕ್ಕೆ ತೆರಳಿದರು. \ No newline at end of file diff --git a/eesanje/url_47_106_6.txt b/eesanje/url_47_106_6.txt new file mode 100644 index 0000000000000000000000000000000000000000..e09ca7546206bbc1cfdc48ba5008cec66093fbe1 --- /dev/null +++ b/eesanje/url_47_106_6.txt @@ -0,0 +1,4 @@ +ರಾಧಿಕಾ ಖೇರಾ, ನಟ ಶೇಖರ್‌ ಸುಮನ್‌ ಬಿಜೆಪಿ ಸೇರ್ಪಡೆ +ನವದೆಹಲಿ, ಮೇ 7-ಲೋಕಸಭೆ ಚುನಾವಣೆಯ ನಡುವೆಯೇ ಕಾಂಗ್ರೆಸ್‌‍ನ ನಾಯಕಿ ರಾಧಿಕಾ ಖೇರಾ ಮತ್ತು ನಟ ಶೇಖರ್‌ ಸುಮನ್‌ ಇಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್‌‍ನ ಮಾಧ್ಯಮ ವಿಭಾಗದ ಮಾಜಿ ರಾಷ್ಟ್ರೀಯ ಸಂಯೋಜಕರಾದ ಖೇರಾ ಅವರು ಪಕ್ಷದ ಛತ್ತೀಸ್‌‍ಗಢದ ಕಚೇರಿಯಲ್ಲಿ ಮತ್ತೊಬ್ಬ ನಾಯಕನೊಂದಿಗೆ ವಾಗ್ವಾದ ನಡೆಸಿದ ದಿನಗಳ ನಂತರ ಭಾನುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. +ಕಾಂಗ್ರೆಸ್‌‍ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ, ಖೇರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕಾಗಿ ಪಕ್ಷದಲ್ಲಿ ವಿರೋಧವನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. +ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವ್ಡೆ ಮತ್ತು ರಾಷ್ಟ್ರೀಯ ಮಾಧ್ಯಮ ವಿಭಾಗದ ಉಸ್ತುವಾರಿ ಅನಿಲ್‌ ಬಲುನಿ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಖೇರಾ ಮತ್ತು ಸುಮನ್‌ ಇಬ್ಬರೂ ಬೆಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಬಿಜೆಪಿ ಸೇರಿಕೊಂಡರು. \ No newline at end of file diff --git a/eesanje/url_47_106_7.txt b/eesanje/url_47_106_7.txt new file mode 100644 index 0000000000000000000000000000000000000000..66f6b818f37e073bb5d255aac4fdbcb7eefa3d70 --- /dev/null +++ b/eesanje/url_47_106_7.txt @@ -0,0 +1,6 @@ +ಜಾರ್ಖಂಡ್‌ : ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಸಚಿವ ಅಲಂಗೀರ್‌ ಆಲಂ ಆಪ್ತನ ಸೆರೆ +ರಾಂಚಿ,ಮೇ7-ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್‌ ಆಲಂ ಅವರನ್ನು ಜಾರಿನಿರ್ದೇಶನಾಲಯ ತಡರಾತ್ರಿ ಬಂಧಿಸಿದೆ. +ದಾಳಿ ವೇಳೆ ಸಿಕ್ಕ 35 ಕೋಟಿ ರೂ.ಗಳಷ್ಟು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸಂಜೀವ್‌ ಲಾಲ್‌ ಮತ್ತು ಜಹಾಂಗೀರ್‌ ಆಲಂ ಇಬ್ಬರನ್ನೂ ರಾತ್ರಿಯಿಡೀ ವಿಚಾರಣೆ ನಡೆಸಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. +ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸೋಮವಾರ ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಗ್ರಾಮೀಣಾಭಿವೃದ್ಧಿ ಮಂತ್ರಿಯೂ ಆಗಿರುವ ಕಾಂಗ್ರೆಸ್‌ ಮುಖಂಡ ಆಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಸಹಾಯಕನ ಮನೆಯಲ್ಲಿ ಈ ದುಡ್ಡಿನ ರಾಶಿ ಕಂಡುಬಂದಿತ್ತು. +ಯಾವುದೇ ದಾಖಲೆಗಳನ್ನು ಒಳಗೊಂಡಿರದ ಈ ಹಣವನ್ನು 12 ಗಂಟೆಗಳ ಕಾಲ 6 ಮಷಿನ್‌ಗಳ ಮೂಲಕ ಅಧಿಕಾರಿಗಳು ಎಣಿಕೆ ಮಾಡಿದ್ದರು. ಸತತ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಇದೇ ವೇಳೆ ಕೇಂದ್ರಿಯ ತನಿಖಾ ದಳ ನಡೆಸಿದ್ದ ದಾಳಿಯಲ್ಲೂ 3 ಕೋಟಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. +ಮೋದಿ ಹೇಳಿದ್ದೇನು?:ಜಾರ್ಖಂಡ್‌ನಲ್ಲಿ ದುಡ್ಡಿನ ಪರ್ವತವೇ ಪತ್ತೆಯಾಗಿದೆ. ಇದು ಜನರಿಂದ ಲೂಟಿ ಹೊಡೆದ ಹಣ. ಭ್ರಷ್ಟಾಚಾರದ ವಿರುದ್ಧ ಮೋದಿ ಕ್ರಮ ತಗೋತಾರೆ ಅನ್ನೊದಕ್ಕೇ ಇದೆ ಸಾಕ್ಷಿ. ಆದರೆ ಇದಕ್ಕೂ ತಮಗೂ ಸಂಬಂಧವೇ ಇಲ್ಲ ಎಂದು ಆಲಂಗೀರ್‌ ಸ್ಪಷ್ಟಪಡಿಸಿದ್ದಾರೆ. ಸಂಜೀವ್‌ ಲಾಲ್‌ ಸರ್ಕಾರ ಒದಗಿಸಿದ್ದ ಆಪ್ತ ಕಾರ್ಯದರ್ಶಿ ಅಷ್ಟೇ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ ಎಂದು ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ. \ No newline at end of file diff --git a/eesanje/url_47_106_8.txt b/eesanje/url_47_106_8.txt new file mode 100644 index 0000000000000000000000000000000000000000..ac730874ff3fffe635ad24b436f3c41af8b6e0fc --- /dev/null +++ b/eesanje/url_47_106_8.txt @@ -0,0 +1,6 @@ +ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ : ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕರೆ +ಅಹಮದಾಬಾದ್‌,ಮೇ7 –ದೇಶದಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮತದಾನ ಅನ್ನೋದು ಸಾಮಾನ್ಯ ದಾನ ಅಲ್ಲ, ಶ್ರೀಷ್ಠ ದಾನಗಳಲ್ಲಿ ಒಂದು. ಎಲ್ಲರೂ ಮತದಾನದ ಪ್ರಕ್ರಿಯೆಯಲ್ಲಿ ಭಾಗಿಯಾಗಿ. ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು ಎಂದು ಪ್ರಧಾನಿ ನರೇಂದ್ರಮೋದಿ ದೇಶದ ಮತದಾರರಿಗೆ ಕರೆಕೊಟ್ಟರು. +ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಸಕ್ರಿಯ ಭಾಗಿತ್ವ ಚುನಾವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತದೆ. ಮತದಾನದ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಅಭಿನಂದನೆ. ಬಿಸಿಲಿನ ತಾಪ ಹೆಚ್ಚಿದ್ದು ಮತದಾರರು ಹೆಚ್ಚು ನೀರು ಕುಡಿದು ದಣಿವಾರಿಸಿಕೊಳ್ಳಿ ಎಂದರು. +ಮಾಧ್ಯಮ ಪ್ರತಿನಿಧಿ ಗಳು ಹಗಲು-ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುತ್ತೀರಿ. ಬಿಸಿಲು ಜಾಸ್ತಿ ಇದೆ, ನಿಮ್ಮ ಆರೋಗ್ಯದ ಬಗ್ಗೆ ಲಕ್ಷ ವಹಿಸಿ. ನೀರು ಜಾಸ್ತಿ ಕುಡಿಯಿರಿ ಎಂದು ಸಲಹೆ ನೀಡಿದರು. +ಕನ್ನಡದಲ್ಲಿ ಟ್ವೀಟ್‌:ಮತ ಚಲಾಯಿಸುವುದಕ್ಕೂ ಮುನ್ನ ಪ್ರಧಾನಿ ಮೋದಿ, ಸಾಮಾಜಿಕ ಜಾಲತಾಣ ಎಕ್‌್ಸ ಖಾತೆಯಲ್ಲಿ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿ. ಮತದಾರರ ಸಕ್ರಿಯ ಭಾಗವಹಿಸುವಿಕೆ ಚುನಾವಣೆಯನ್ನು ಮತ್ತಷ್ಟು ಮಾಂಚಕಗೊಳಿಸುತ್ತದೆ ಎಂದು ತಿಳಿಸಿದ್ದಾರೆ. +ಇದಕ್ಕೂ ಮುನ್ನ ಪ್ರಧಾನಿ ಮೋದಿಯವರು ಬರುತ್ತಿದ್ದಂತೆ ಮತಗಟ್ಟೆ ಬಳಿ ನೆರೆದಿದ್ದ ಜನರು ಮೋದಿ ಮೋದಿ ಅಂತ ಕೂಗಲು ಆರಂಭಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮತದಾನ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ವಿಶೇಷವಾಗಿತ್ತು. \ No newline at end of file diff --git a/eesanje/url_47_106_9.txt b/eesanje/url_47_106_9.txt new file mode 100644 index 0000000000000000000000000000000000000000..b8f0ba8239e5164b7ff182f3e632e36ef3302f0a --- /dev/null +++ b/eesanje/url_47_106_9.txt @@ -0,0 +1,6 @@ +ಸಿಐಎಸ್‌‍ಸಿಇ ಪಲಿತಾಂಶ ಪ್ರಕಟ : 10ನೇ ತರಗತಿಯ 99.47% ವಿದ್ಯಾರ್ಥಿಗಳು,12ನೇ ತರಗತಿಯ 98.19% ಉತ್ತೀರ್ಣ +ನವದೆಹಲಿ, ಮೇ 6-ಸಿಐಎಸ್‌‍ಸಿಇ (ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್ ) 10 ಮತ್ತು 12 ನೇ ತರಗತಿಯ ಬೋರ್ಡ್‌ ಪರೀಕ್ಷೆಗಳಲ್ಲಿ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಇಂದು ಬೆಳಿಗ್ಗೆ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು ಶೇ. 99.47 ರಷ್ಟು ವಿದ್ಯಾರ್ಥಿಗಳು 10 ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದರೆ, 98.19 ರಷ್ಟು ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +10ನೇ ತರಗತಿಯಲ್ಲಿ ಬಾಲಕರ ಉತ್ತೀರ್ಣ ಪ್ರಮಾಣ ಶೇ.99.31ರಷ್ಟಿದ್ದರೆ, ಬಾಲಕಿಯರ ಪಾಸಾದ ಪ್ರಮಾಣ ಶೇ.99.65. ಅದೇ ರೀತಿ 12ನೇ ತರಗತಿ ಪರೀಕ್ಷೆಯಲ್ಲಿ ಬಾಲಕರು ಶೇ.97.53ರಷ್ಟು ಉತ್ತೀರ್ಣರಾಗಿದ್ದರೆ, ಬಾಲಕಿಯರ ಉತ್ತೀರ್ಣ ಪ್ರಮಾಣ ಶೇ.98.92ರಷ್ಟಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಜೋಸೆಫ್‌ ಇಮ್ಯಾನುಯೆಲ್‌‍ ತಿಳಿಸಿದ್ದಾರೆ. +10 ನೇ ತರಗತಿಯಲ್ಲಿ, ಇಂಡೋನೇಷ್ಯಾ, ಸಿಂಗಾಪುರ್‌ ಮತ್ತು ದುಬೈನಿಂದ ವಿದೇಶದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಶಾಲೆಗಳು ಶೇಕಡಾ 100 ರಷ್ಟು ಉತ್ತೀರ್ಣವಾಗಿವೆ. 12 ನೇ ತರಗತಿಯಲ್ಲಿ, ಸಿಂಗಾಪುರ ಮತ್ತು ದುಬೈನಿಂದ ಉತ್ತಮ ಪ್ರದರ್ಶನ ನೀಡುವ ಶಾಲೆಗಳು ಎಂದು ಮಾಹಿತಿ ನೀಡಿದ್ದಾರೆ. +ಪರೀಕ್ಷೆಯನ್ನು (10 ನೇ ತರಗತಿ) 60 ಲಿಖಿತ ವಿಷಯಗಳಲ್ಲಿ ನಡೆಸಲಾಯಿತು, ಅದರಲ್ಲಿ 20 ಭಾರತೀಯ ಭಾಷೆಗಳು, 13 ವಿದೇಶಿ ಭಾಷೆಗಳು ಮತ್ತು ಒಂದು ಶಾಸ್ತ್ರೀಯ ಭಾಷೆಗಳಿದ್ದವು. ಪರೀಕ್ಷೆಗಳು ಫೆಬ್ರವರಿ 21 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್‌ 28 ರಂದು ಮುಕ್ತಾಯವಾಯಿತು. +12 ನೇ ತರಗತಿಯಲ್ಲಿ 47 ಲಿಖಿತ ವಿಷಯಗಳಲ್ಲಿ ನಡೆಸಲಾಯಿತು, ಅದರಲ್ಲಿ 12 ಭಾರತೀಯ ಭಾಷೆಗಳು, ನಾಲ್ಕು ವಿದೇಶಿ ಭಾಷೆಗಳು ಮತ್ತು ಎರಡು ಶಾಸ್ತ್ರೀಯ ಭಾಷೆಗಳು ಇದ್ದವು \ No newline at end of file diff --git a/eesanje/url_47_107_1.txt b/eesanje/url_47_107_1.txt new file mode 100644 index 0000000000000000000000000000000000000000..5f8bf256c783705178a1b427bb15707b9fa18f6a --- /dev/null +++ b/eesanje/url_47_107_1.txt @@ -0,0 +1,6 @@ +ತೆಲಂಗಾಣದ ಸರ್ಕಾರ ಚುನಾವಣಾ ಖರ್ಚಿಗೆ “ರಾಹುಲ್‌ ರೇವಂತ್‌ ತೆರಿಗೆ’ ಸಂಗ್ರಹಿಸುತ್ತಿದೆ ; ಅಮಿತ್‌ ಶಾ +ಹೈದರಾಬಾದ್‌, ಮೇ.6-ತೆಲಂಗಾಣದ ಕಾಂಗ್ರೆಸ್‌‍ ಸರ್ಕಾರವು ದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಹಣ ನೀಡಲು ರಾಹುಲ್‌ ರೇವಂತ್‌ ತೆರಿಗೆ ಸಂಗ್ರಹಿಸುತ್ತಿದೆ ಎಂದು ಕೇಂದ್ರ ಗಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ. ಸಿಕಂದರಾಬಾದ್‌ನಲ್ಲಿ ಬಿಜೆಪಿಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ತೆಲಂಗಾಣವನ್ನು ಕಾಂಗ್ರೆಸ್‌‍ನ ಎಟಿಎಂ ಆಗಿ ಪರಿವರ್ತಿಸಿದ್ದಾರೆ ಎಂದು ಆರೋಪಿಸಿದರು. ತೆಲಂಗಾಣದ ಜನರು ಆರ್‌ಆರ್‌ ತೆರಿಗೆಯಲ್ಲಿ ತಮ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಗಹ ಸಚಿವ ಶಾ ಹೇಳಿದ್ದಾರೆ. +ನಮ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಈ ಎಟಿಎಂನಲ್ಲಿ ಹಣ ಖಾಲಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಗಹ ಸಚಿವರು ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರ ಮತ್ತು ಸಿಕಂದರಾಬಾದ್‌ ಕಂಟೋನೆಂಟ್‌ ವಿಧಾನಸಭಾ ಕ್ಷೇತ್ರಕ್ಕೆ (ಉಪಚುನಾವಣೆ) ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು. . +ಇದಕ್ಕೂ ಮುನ್ನ ನಿಜಾಮಾಬಾದ್‌ನಲ್ಲಿ ಮಾತನಾಡಿದ ಅಮಿತ್‌ ಶಾ, ತೆಲಂಗಾಣದಿಂದ ದೆಹಲಿ ದರ್ಬಾರ್‌ಗೆ ಪ್ರತಿನಿತ್ಯ ನೂರಾರು ಕೋಟಿ ರವಾನೆಯಾಗುತ್ತಿದೆ. ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಮಕ್ಕಳನ್ನು ಸೇರಿಸಿಕೊಳ್ಳುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಅಮಿತ್‌ ಶಾ ಉಲ್ಲೇಖಿಸಿದ್ದಾರೆ. +ರೇವಂತ್‌ ರೆಡ್ಡಿ ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾದರು. ಇತ್ತೀಚೆಗಷ್ಟೇ ಕೇಸ್‌‍ ದಾಖಲಿಸಿದ್ದರು. ಆದರೆ ನಾನು ರೇವಂತ್‌ ರೆಡ್ಡಿಯಂತೆ ಅಳುವುದಿಲ್ಲ. ಅದನ್ನು ರದ್ದುಪಡಿಸಲು ನಾನು ಹೈಕೋರ್ಟ್‌ಗೆ ಹೋಗುತ್ತೇನೆ ಎಂದು ಅವರು ಹೇಳಿದರು. +ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಸ್‌‍ಸಿ, ಎಸ್‌‍ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಸಿದುಕೊಳ್ಳುತ್ತೇವೆ ಎಂದು ಕಾಂಗ್ರೆಸ್‌‍ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು. ಕಳೆದ 10 ವರ್ಷಗಳಿಂದ ನಾವು ಬಹುಮತ ಹೊಂದಿದ್ದೇವೆ, ಆದರೆ ನಾವು ಮೀಸಲಾತಿಯನ್ನು ರದ್ದುಗೊಳಿಸಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_107_10.txt b/eesanje/url_47_107_10.txt new file mode 100644 index 0000000000000000000000000000000000000000..288551aeb17b70b51bb5f3250c806355f99ead16 --- /dev/null +++ b/eesanje/url_47_107_10.txt @@ -0,0 +1,8 @@ +ಉಜ್ವಲ್‌ ನಿಕಮ್‌ ದೇಶವಿರೋಧಿ ಎಂದವರ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು +ಮುಂಬೈ, ಮೇ 6 (ಪಿಟಿಐ) :ಬಿಜೆಪಿ ಪಕ್ಷದ ಮುಂಬೈ ನಾರ್ತ್‌ ಸೆಂಟ್ರಲ್‌ ಅಭ್ಯರ್ಥಿ ಮತ್ತು ವಕೀಲ ಉಜ್ವಲ್‌ ನಿಕಮ್‌ ಅವರನ್ನು ಮಾನಹಾನಿ ಮಾಡಿದ ಆರೋಪದ ಮೇಲೆ ಕಾಂಗ್ರೆಸ್‌‍ ಮತ್ತು ಅದರ ನಾಯಕ ವಿಜಯ್‌ ವಾಡೆತ್ತಿವಾರ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಕೇಸರಿ ಪಕ್ಷ ಪತ್ರ ಬರೆದಿದೆ. +ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಡೆತ್ತಿವಾರ್‌ ಅವರು ನಿಕಮ್‌ ಅವರನ್ನು ದೇಶವಿರೋಧಿ ಎಂದು ಕರೆದರು ಮತ್ತು 26/11 ಭಯೋತ್ಪಾದಕ ದಾಳಿಯ ಸಮಯದಲ್ಲಿ ಮಹಾರಾಷ್ಟ್ರ ಎಟಿಎಸ್‌‍ ಮುಖ್ಯಸ್ಥ ಹೇಮಂತ್‌ ಕರ್ಕರೆ ಭಯೋತ್ಪಾದಕ ಅಜಲ್‌ ಕಸಬ್‌ನ ಗುಂಡಿಗೆ ಕೊಲ್ಲಲ್ಪಟ್ಟಿಲ್ಲ ಎಂಬ ಮಾಹಿತಿಯನ್ನು ಮರೆಮಾಚಿದ್ದಾರೆ ಮಾತ್ರವಲ್ಲ ಅವರಿಗೆ ಆರ್‌ಎಸ್‌‍ಎಸ್‌‍ಗೆ ಸೇರಿದ ಪೊಲೀಸ್‌‍ ಅಧಿಕಾರಿ ಗುಂಡು ಹಾರಿಸಿದ್ದರು ಎಂದು ಆರೋಪಿಸಿದ್ದರು. +ನಿವತ್ತ ಪೊಲೀಸ್‌‍ ಅಧಿಕಾರಿ ಎಸ್‌‍.ಎಂ.ಮುಶ್ರೀಫ್‌ ಅವರು ಬರೆದಿರುವ ಹೂ ಕಿಲ್ಡ್‌‍ ಕರ್ಕರೆ ಪುಸ್ತಕವನ್ನು ಆಧರಿಸಿ ಅವರು ಇಂತಹ ಆರೋಪ ಮಾಡಿದ್ದಾರೆ. ಜವಾಬ್ದಾರಿಯುತ ನಾಯಕನಾಗಿ, ವಿರೋಧ ಪಕ್ಷದ ನಾಯಕ ಶತ್ರು ರಾಷ್ಟ್ರಕ್ಕೆ ಸಹಾಯ ಮಾಡುವ ಇಂತಹ ಕಾಮೆಂಟ್‌ಗಳನ್ನು ಮಾಡುವುದನ್ನು ನಿಲ್ಲಿಸಬೇಕು ಎಂದು ನಿಕಮ್‌ ತಿರುಗೇಟು ನೀಡಿದ್ದರು. +ವಾಡೆತ್ತಿವಾರ್‌ ಅವರ ಹೇಳಿಕೆಗಳು ಸುಳ್ಳು ಮತ್ತು ಸತ್ಯಗಳನ್ನು ಆಧರಿಸಿಲ್ಲ ಎಂದು ಬಣ್ಣಿಸಿದ ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್‌ ಶೆಲಾರ್‌ ಅವರು ನಿಕಮ್‌ ಅವರನ್ನು ಮಾನಹಾನಿ ಮಾಡುವ ಮತ್ತು ಭಾವನೆಗಳನ್ನು ಪ್ರಚೋದಿಸುವ ಗುರಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. +ತಾರಾ ಪ್ರಚಾರಕ (ಕಾಂಗ್ರೆಸ್‌‍ನ) ವಾಡೆತ್ತಿವಾರ್‌ ವಿರುದ್ಧ ಮತ್ತು ಸುಳ್ಳಿನ ಪ್ರಚಾರಕ್ಕಾಗಿ ಕಾಂಗ್ರೆಸ್‌‍ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ ಎಂದು ಅವರು ಹೇಳಿದರು. +ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಅಮಾಯಕರನ್ನು ಕೊಂದಿದ್ದಕ್ಕಾಗಿ ಕಸಬ್‌ಗೆ ಮರಣದಂಡನೆ ವಿಧಿಸಲಾಯಿತು ಎಂದು ಶೇಲಾರ್‌ ಹೇಳಿದರು. ಪಾಕಿಸ್ತಾನಿ ಭಯೋತ್ಪಾದಕರು 26/11 ರ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಕನಿಷ್ಠ 166 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡ ಸಂದರ್ಭದಲ್ಲಿ ಮುಂಬೈ ಪೊಲೀಸರಿಂದ ಜೀವಂತವಾಗಿ ಸೆರೆಹಿಡಿಯಲ್ಪಟ್ಟ ಏಕೈಕ ಭಯೋತ್ಪಾದಕ ಕಸಬ್‌‍. +ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಕಾಂಗ್ರೆಸ್‌‍ ನಾಯಕನ ಹೇಳಿಕೆಯನ್ನು ಬೆಂಬಲಿಸುತ್ತಾರೆಯೇ ಎಂದು ಶೆಲಾರ್‌ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್‌‍, ಶಿವಸೇನೆ (ಯುಬಿಟಿ) ಮತ್ತು ಶರದ್‌ ಪವಾರ್‌ ನೇತತ್ವದ ಎನ್‌ಸಿಪಿ (ಎಸ್‌‍ಪಿ) ವಿರೋಧ ಪಕ್ಷದ ಮಹಾ ವಿಕಾಸ್‌‍ ಅಘಾಡಿ (ಎಂವಿಎ) ಯ ಘಟಕಗಳಾಗಿವೆ. \ No newline at end of file diff --git a/eesanje/url_47_107_11.txt b/eesanje/url_47_107_11.txt new file mode 100644 index 0000000000000000000000000000000000000000..cc6e56b140cec57394c24ecf7ac42d91850afafe --- /dev/null +++ b/eesanje/url_47_107_11.txt @@ -0,0 +1,11 @@ +ಇಡಿ ದಾಳಿ : ಜಾರ್ಖಂಡ್‌ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 30 ಕೋಟಿಗೂ ಆಧಿಕ ನಗದು ಪತ್ತೆ +ರಾಂಚಿ,ಮೇ6-ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ಮನೆಯ ಮೇಲೆ ಜಾರಿನಿರ್ದೇಶನಾಲಯ(ಇಡಿ) ದಾಳಿ ನಡೆಸಿದ್ದು, ಸುಮಾರು 30 ಕೋಟಿಗೂ ಆಧಿಕ ನಗದು ಪತ್ತೆ ಮಾಡಿದೆ. +ಲೋಕಸಭಾ ಚುನಾವಣೆಯಲ್ಲಿ ಇಡಿ ಅಧಿ ಕಾರಿಗಳು ನಡೆಸಿರುವ ಅತೀ ದೊಡ್ಡ ದಾಳಿ ಇದಾಗಿದೆ ಎಂದು ಹೇಳಲಾಗುತ್ತಿದೆ.ರಾಂಚಿಯ ಸೈಲ್‌ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ನಡೆಸಿತ್ತು. +ಇಡಿಯ ಒಂದು ತಂಡ ಇಂದು ಬೆಳಗ್ಗೆ ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್‌ ವಿಕಾಸ್‌ಕುಮಾರ್‌ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ದಾಳಿ ನಡೆಸಿದೆ. +ಸುಮಾರು 30 ಕೋಟಿ ಹಣ ಇರಬಹುದು ಎಂದು ಅಧಿ ಕಾರಿಗಳು ಅಂದಾಜಿಸಿದ್ದಾರೆ. ಮನೆಯಲ್ಲಿನ ಬ್ಯಾಗ್‌, ಕಮೋಡ್‌, ಅಲ್ಮೇರಾಗಳಲ್ಲಿ ಸಿಕ್ಕ ಹಣವನ್ನು ಎಣಿಕೆ ಮಾಡಲು ಜಾರಿ ನಿರ್ದೇಶನಾಲಯ ಅಧಿ ಕಾರಿಗಳು ಒಂದು ಕಡೆ ರಾಶಿ ಹಾಕಿದ್ದಾರೆ. +⚡️⚡️ . – .../cY8fwKBY6F +ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸದ್ಯ ಇಡಿ ತನಿಖೆ ನಡೆಸುತ್ತಿರುವ ವೀರೇಂದ್ರ.ಕೆ ರಾಮ್‌ ಪ್ರಕರಣದ ಹಣ ಇದಾಗಿದೆ ಎಂದು ಜಾರಿನಿರ್ದೇಶನಾಲಯ ತಿಳಿಸಿದೆ.ಜಾರ್ಖಂಡ್‌ನಲ್ಲಿ ಮುಖ್ಯ ಎಂಜಿನಿಯರ್‌ ಆಗಿದ್ದ ವೀರೇಂದ್ರ. ಕೆ ರಾಮ್‌ ಅವರು 100 ಕೋಟಿ ರೂ. ಮೌಲ್ಯದ ಆಸ್ತಿ ಸಂಪಾದಿಸಿದ ಆರೋಪವಿದೆ. +ಜಾರ್ಖಂಡ್‌ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್‌ ಆಗಿದ್ದ ಇವರನ್ನು ಫೆಬ್ರವರಿ 2023ರಲ್ಲಿ ಇಡಿ ಬಂಧಿಸಿತ್ತು. ಕೆಲವು ಯೋಜನೆಗಳ ಅನುಷ್ಠಾನದಲ್ಲಿನ ಅಕ್ರಮ ಎಸಗಲು ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಬಂಧಿಸಲಾಗಿತ್ತು. +ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವ್ಯವಹಾರದ ವಿವರಗಳನ್ನು ಹೊಂದಿದ್ದ ಪೆನ್‌ಡ್ರೈವ್‌ನ್ನು ವೀರೇಂದ್ರ.ಕೆ ರಾಮ್‌ನಿಂದ ವಶಪಡಿಸಿಕೊಳ್ಳಲಾಗಿದೆ. +ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ವ್ಯಾಪಕ ಭ್ರಷ್ಟಾಚಾರ ಎಸಗಿರುವ ಗಂಭೀರ ಆರೋಪಗಳು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ಇವರ ಮೇಲಿವೆ. ಇದೇ ಪ್ರಕರಣದಲ್ಲಿ ಇಡಿ ಮತ್ತಷ್ಟು ತನಿಖೆ ಕೈಗೊಂಡಿದೆ. +ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್‌ ಬಿಜೆಪಿ ವಕ್ತಾರ ಪ್ರತುಲ್‌ ಶಾಹದೇವ್‌, ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ, ಈ ಹಣಗಳನ್ನು ಇವರು ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_107_12.txt b/eesanje/url_47_107_12.txt new file mode 100644 index 0000000000000000000000000000000000000000..418081aba143468b04a11fe2d8eda072c0028161 --- /dev/null +++ b/eesanje/url_47_107_12.txt @@ -0,0 +1,7 @@ +ಮುಂಬೈ ವಿಮಾನ ನಿಲ್ದಾಣದಲ್ಲಿ 8.37 ಕೋಟಿ ರೂ ಚಿನ್ನ, ಎಲೆಕ್ಟ್ರಾನಿಕ್‌ ವಸ್ತುಗಳು ವಶ ; 10 ಜನ ಅರೆಸ್ಟ್ +ಮುಂಬೈ, ಮೇ 6 (ಪಿಟಿಐ) –ಕಸ್ಟಮ್ಸ ಇಲಾಖೆಯ ಅಧಿಕಾರಿಗಳು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ದಿನಗಳ ಕಾರ್ಯಾಚರಣೆಯಲ್ಲಿ 8.37 ಕೋಟಿ ರೂಪಾಯಿ ಮೌಲ್ಯದ 12.47 ಕೆಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ವಶಪಡಿಸಿಕೊಂಡಿದೆ. +ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದ 10 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರನದಲ್ಲಿ ವಿವಿಧ ಪ್ರಯಾಣಿಕರು ಚಿನ್ನವನ್ನು ಮೇಣದ ರೂಪದಲ್ಲಿ ಧೂಳು, ಚಿನ್ನದ ಪದರದ ಬಟ್ಟೆಗಳು, ಕಚ್ಚಾ ಆಭರಣಗಳು ಮತ್ತು ಗಟ್ಟಿಗಳು , ನೀರಿನ ಬಾಟಲಿಯಲ್ಲಿ, ದೇಹ ವಿವಿಧ ಭಾಗದಲ್ಲಿ ಅಂಟಿಸಿಕೊಂಡು ಮತ್ತು ಗುದನಾಳದಲ್ಲಿ ಬಚ್ಚಿಟ್ಟಿಕೊಂಡು ಬಂದಿದ್ದು ಕಂಡುಬಂದಿದೆ. +ಇದೇ ವೇಳೆ ವಿಮಾನ ನಿಲ್ದಾಣದಲ್ಲಿ ಗುತ್ತಿಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಭಾರತೀಯ ಪ್ರಜೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌‍ಎಫ್‌) ವಶಕ್ಕೆ ಪಡೆದು ಕಸ್ಟಮ್ಸೌ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ. ಆತನನ್ನು ಪರೀಕ್ಷೀಸುವ ವೇಳೆ ಆತನ ನೀರಿನ ಬಾಟಲಿಯಲ್ಲಿ 2.58 ಕೆಜಿ ತೂಕದ ಮೇಣದ ರೂಪದಲ್ಲಿ (ಎಂಟು ತುಂಡುಗಳು) ಚಿನ್ನದ ಬಚ್ಚಿಟ್ಟಿರುವುದು ಪತ್ತೆಯಾಗಿದೆ. +ಮತ್ತೊಂದು ಪ್ರಕರಣದಲ್ಲಿ, ದುಬೈನಿಂದ ಬಂದ ನಾಲ್ವರು ಭಾರತೀಯ ಪ್ರಜೆಗಳನ್ನು ತಡೆ ಪರಿಶೀಲಿಸಿದಾಗ ಒಳ ಉಡುಪು, ಗುದನಾಳದಲ್ಲಿ ಬಚ್ಚಿಟ್ಟಿದ್ದ 3.335 ಕೆಜಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. +ಇದಲ್ಲದೆ ವಿಮಾನದ ಸೀಟಿನ ಕೆಳಗಿನ ಪೈಪ್‌ಗಳಿಂದ 1.5 ಕೆಜಿ ತೂಕದ ಆರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ ಇದ್ದಕ್ಕೆ ಸಂಬಂಧಿಸಿದಂತೆ ಕಸ್ಟಮ್ಸೌ ಸಿಬ್ಬಂದಿ ದುಬೈನಿಂದ ಬಂದ 10, ಮಸ್ಕತ್‌ನಿಂದ ಇಬ್ಬರು ಮತ್ತು ಅಬುಧಾಬಿ, ಬಹ್ರೇನ್‌ ಮತ್ತು ಜೆಡ್ಡಾದಿಂದ ತಲಾ ಒಬ್ಬರು ಪ್ರಯಾಣಿಕರೂ ಸೇರಿದಂತೆ 15 ಇತರ ಭಾರತೀಯರನ್ನು ವಶಕ್ಕೆ ಪಡೆಯಲಾಗಿದೆ. ಇವರೂ ಕೂಡ ಒಳ ಉಡುಪುಗಳು, ಜೀನ್ಸ್ ಪಾಕೆಟ್‌ಗಳು, ವಿಮಾನ ನಿಲ್ದಾಣದ ಬ್ಯಾಗೇಜ್‌ ಟ್ರಾಲಿಯ ಬುಟ್ಟಿಯಲ್ಲಿ, ಚ್ಚಿಟ್ಟ 5.32 ಕೆಜಿ ಚಿನ್ನ ಕಳ್ಳಸಾಗನೆ ಪತ್ತೆಯಾಗಿದೆ ಎಂದು ತಿಳಿಸಿದೆ. +ಮತ್ತೊಂದು ಪ್ರಕರಣದಲ್ಲಿ ದುಬೈನಿಂದ ಬಂದ ಪ್ರಯಾಣಿಕನಿಂದ 14.21 ಲಕ್ಷ ರೂಪಾಯಿ ಮೌಲ್ಯದ 9 ಐಫೋನ್‌ಗಳು ಮತ್ತು ಇತರ ಎಲೆಕ್ಟ್ರಾನಿಕ್‌ ವಸ್ತುಗಳು ಮತ್ತು ಕೈಚೀಲಗಳು ಮತ್ತು ಚೆಕ್‌ಇನ್‌ ಲಗೇಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_107_2.txt b/eesanje/url_47_107_2.txt new file mode 100644 index 0000000000000000000000000000000000000000..fafc1852ec3f1576f6e2904fab86202fcd069648 --- /dev/null +++ b/eesanje/url_47_107_2.txt @@ -0,0 +1,7 @@ +ಪಿಒಕೆ ತಂಟೆಗೆ ಹೋದರೆ ಭಾರತ ಮೇಲೆ ಅಣುಬಾಂಬ್‌ ಬೀಳುತ್ತೆ : ಫಾರೂಕ್‌ ಅಬ್ದುಲ್ಲಾ +ಶ್ರೀನಗರ,ಮೇ.6-ಪಾಕ್‌ ಆಕ್ರಮಿತ ಕಾಶೀರ ಭಾರತದಲ್ಲಿ ವೀಲಿನವಾಗಲು ಪಾಕಿಸ್ತಾನ ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದು ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್ ನಾಯಕ ಫಾರೂಕ್‌ ಅಬ್ದುಲ್ಲಾ ವಿವಾದಾತಕ ಹೇಳಿಕೆ ನೀಡಿದ್ದಾರೆ. +ಪಿಒಕೆಯನ್ನು ಭಾರತದೊಂದಿಗೆ ವಿಲೀನಗೊಳಿಸಲಾಗುವುದು ಎಂಬ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಮು ಮತ್ತು ಕಾಶೀರ ನ್ಯಾಷನಲ್‌ ಕಾನ್ಫರೆನ್ಸ್‌‍ ನಾಯಕ ಫಾರೂಕ್‌ ಅಬ್ದುಲ್ಲಾ ಅವರು ಪಾಕಿಸ್ತಾನವು ಬಳೆಗಳನ್ನು ಧರಿಸಿಲ್ಲ ಮತ್ತು ನಮ ಮೇಲೆ ಅಣುಬಾಂಬ್‌ಗಳನ್ನು ಸಹ ಹೊಂದಿದೆ ಎಂದು ಹೇಳಿದ್ದಾರೆ. +ರಕ್ಷಣಾ ಸಚಿವರು ಹೇಳುತ್ತಿದ್ದರೆ, ಮುಂದುವರಿಯಿರಿ. ನಾವು ನಿಲ್ಲಿಸಲು ಯಾರು? ಆದರೆ ನೆನಪಿಡಿ, ಅವರು (ಪಾಕಿಸ್ತಾನ) ಬಳೆಗಳನ್ನು ಧರಿಸಿಲ್ಲ, ಅವರಲ್ಲಿ ಪರಮಾಣು ಬಾಂಬ್‌ಗಳಿವೆ, ಮತ್ತು ದುರದಷ್ಟವಶಾತ್‌ ಆ ಆಟಂ ಬಾಂಬ್‌ ನಮ್ಮ ಮೇಲೆ ಬೀಳುತ್ತದೆ ಎಂದು ಅವರು ಹೇಳಿದ್ದಾರೆ. +ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾರತದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಪರಿಗಣಿಸಿ, ಪಾಕ್‌ ಆಕ್ರಮಿತ ಕಾಶೀರದ (ಪಿಒಕೆ) ಜನರು ಸ್ವತಃ ಭಾರತದೊಂದಿಗೆ ಇರಲು ಒತ್ತಾಯಿಸುತ್ತಾರೆ ಎಂದು ಹೇಳಿದ್ದರು. +ಭಾರತದ ಶಕ್ತಿ ಹೆಚ್ಚುತ್ತಿದೆ. ಪ್ರಪಂಚದಾದ್ಯಂತ ಭಾರತದ ಪ್ರತಿಷ್ಠೆ ಹೆಚ್ಚುತ್ತಿದೆ, ಮತ್ತು ನಮ್ಮ ಆರ್ಥಿಕತೆಯು ವೇಗವಾಗಿ ಪ್ರಗತಿಯಲ್ಲಿದೆ. ಈಗ ಪಿಒಕೆಯಲ್ಲಿರುವ ನಮ ಸಹೋದರ ಸಹೋದರಿಯರು ಭಾರತದೊಂದಿಗೆ ಬರಲು ಒತ್ತಾಯಿಸುತ್ತಾರೆ ಎಂದು ಸಿಂಗ್‌ ಹೇಳಿದ್ದರು. ಪಾಕ್‌ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಿದೆ ಎಂದು ವಿದೇಶಾಂಗ ಸಚಿವ ಎಸ್‌‍ ಜೈಶಂಕರ್‌ ಭಾನುವಾರ ಹೇಳಿದ್ದಾರೆ ಮತ್ತು ಪಿಒಕೆ ದೇಶದ ಭಾಗ ಎಂದು ಹೇಳುವ ಭಾರತೀಯ ಸಂಸತ್ತಿನ ನಿರ್ಣಯವಿದೆ ಎಂದು ಹೇಳಿದರು. +ಕಟಕ್‌ನಲ್ಲಿ ನಡೆದ ಸಂವಾದಾತಕ ಅಧಿವೇಶನದಲ್ಲಿ ಭಾರತದ ಪಿಒಕೆ ಯೋಜನೆಗಳ ಬಗ್ಗೆ ಕೇಳಿದಾಗ ಜೈಶಂಕರ್‌ ಪ್ರತಿಕ್ರಿಯಿಸಿ, ಪಿಒಕೆ ಈ ದೇಶದಿಂದ ಎಂದಿಗೂ ಹೊರಬಂದಿಲ್ಲ. ಇದು ಈ ದೇಶದ ಭಾಗವಾಗಿದೆ. ಭಾರತೀಯ ಸಂಸತ್ತಿನ ನಿರ್ಣಯವಿದೆ, ಪಿಒಕೆ ತುಂಬಾ ಭಾಗವಾಗಿದೆ ಎಂದಿದ್ದರು. \ No newline at end of file diff --git a/eesanje/url_47_107_3.txt b/eesanje/url_47_107_3.txt new file mode 100644 index 0000000000000000000000000000000000000000..df152cd412502a57cff5f26adec2b5a5430787af --- /dev/null +++ b/eesanje/url_47_107_3.txt @@ -0,0 +1,8 @@ +ಕಾಂಗ್ರೆಸ್‌‍, ಬಿಜೆಡಿ ಲೂಟಿಕೋರ ಪಕ್ಷಗಳು ; ನರೇಂದ್ರ ಮೋದಿ +ಬಹರಂಪುರ,ಮೇ.6-ಸ್ವಾತಂತ್ರ್ಯದ ನಂತರ ಏಳು ದಶಕಗಳ ಕಾಲ ಕಾಂಗ್ರೆಸ್‌‍ ನಂತರ ಬಿಜು ಜನತಾ ದಳದ ಲೂಟಿ ಸಂಪನೂಲಗಳಿಂದ ಸಮದ್ಧವಾಗಿದ್ದ ಒಡಿಶಾ ಇಂದು ಬಡವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದರು. ಬೆಹ್ರಾಂಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಡಿದ ಅವರು, ಸಾರ್ವತ್ರಿಕ ಚುನಾವಣೆಯ ಜೊತೆಗೆ ಒಡಿಶಾದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೂ ಮುನ್ನ ಪ್ರಧಾನಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದರು. +ಒಡಿಶಾದಲ್ಲಿ ನೀರು, ಫಲವತ್ತಾದ ಭೂಮಿ, ಖನಿಜಗಳು, ಸುದೀರ್ಘ ಕರಾವಳಿ, ಇತಿಹಾಸ, ಸಂಸ್ಕೃತಿ ಇದೆ, ದೇವರು ಇಷ್ಟೆಲ್ಲಾ ಕೊಟ್ಟಿದ್ದಾನೆ. ಆದರೆ ಒಡಿಶಾದ ಜನರು ಏಕೆ ಬಡವರು? ಇದಕ್ಕೆ ಉತ್ತರವೆಂದರೆ ಲೂಟಿ, ಮೊದಲು ಕಾಂಗ್ರೆಸ್‌‍ ನಾಯಕರು ಮತ್ತು ನಂತರ ಬಿಜೆಡಿ ನಾಯಕರು. ಬಿಜೆಡಿಯ ಸಣ್ಣ ನಾಯಕರೂ ದೊಡ್ಡ ಬಂಗಲೆಗಳನ್ನು ಹೊಂದಿದ್ದಾರೆ, ಎಂದು ಅವರು ಹೇಳಿದರು. +ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ವಿರುದ್ಧ ಅಪರೂಪದ ದಾಳಿಯಲ್ಲಿ, ಗಂಜಾಮ್‌ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ತಮ ಕ್ಷೇತ್ರವಾದ ಹಿಂಜಿಲಿಯಿಂದ ಕಾರ್ಮಿಕರು ಬೇರೆ ರಾಜ್ಯಗಳಿಗೆ ಏಕೆ ವಲಸೆ ಹೋಗುತ್ತಾರೆ ಎಂದು ಕೇಳಿದರು. ಇಲ್ಲಿನ ಹೆಚ್ಚಿನ ಆಸ್ಪತ್ರೆಗಳಲ್ಲಿ ವೈದ್ಯರ ಹ್ದುೆಗಳು ಏಕೆ ಖಾಲಿ ಇವೆ? ಹೆಚ್ಚಿನ ಮಕ್ಕಳು ಶಾಲೆಯಿಂದ ಏಕೆ ಹೊರಗುಳಿಯುತ್ತಾರೆ? ಅಭಿವದ್ಧಿ ಕಾರ್ಯಗಳಿಗಾಗಿ ಒಡಿಶಾಗೆ ಬಜೆಟ್‌ ನೀಡಲು ಅವರು ಎಂದಿಗೂ ಹಿಂಜರಿಯುವುದಿಲ್ಲ ಎಂದು ಒತ್ತಿ ಹೇಳಿದರು. +ಹಿಂದಿನ ಮನಮೋಹನ್‌ ಸಿಂಗ್‌ ಸರ್ಕಾರದ ವಿರುದ್ಧ ರಿಮೋಟ್‌ ಕಂಟ್ರೋಲ್‌ ಸ್ವೈಪ್‌ ಮಾಡಿದ ಪ್ರಧಾನಿ, ಕೇಂದ್ರದಲ್ಲಿ ಸೋನಿಯಾ ಗಾಂಧಿ ಅವರ ರಿಮೋಟ್‌ ಕಂಟ್ರೋಲ್‌ ಸರ್ಕಾರ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ಮತ್ತು ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ಒಡಿಶಾಗೆ 10 ವರ್ಷಗಳಲ್ಲಿ 1 ಲಕ್ಷ ಕೋಟಿ ಸಿಕ್ಕಿತು. ಮೋದಿ 10 ವರ್ಷಗಳಲ್ಲಿ 3.5 ಲಕ್ಷ ಕೋಟಿ ನೀಡಿದ್ದಾರೆ ಆದರೆ ಹಣ ಮಾತ್ರ ಕೆಲಸ ಮಾಡುವುದಿಲ್ಲ. +ಒಡಿಶಾ ಸರ್ಕಾರಕ್ಕೆ ಮಹಿಳೆಯರ ಕಲ್ಯಾಣದ ಬಗ್ಗೆ ಕಾಳಜಿ ಇಲ್ಲ ಎಂದು ಪ್ರಧಾನಿ ಹೇಳಿದರು. ಕೇಂದ್ರವು ಪ್ರತಿ ಗರ್ಭಿಣಿಯರಿಗೆ 6,000 ಸಹಾಯವನ್ನು ನೀಡುತ್ತದೆ, ಒಡಿಶಾ ಸರ್ಕಾರವು ಈ ಮಹತ್ವದ ಯೋಜನೆಯನ್ನು ಸ್ಥಗಿತಗೊಳಿಸಿರುವುದು ನಿಮಗೆ ಆಶ್ಚರ್ಯವಾಗುತ್ತದೆ ಎಂದು ಅವರು ಹೇಳಿದರು. +ಜಲ ಜೀವನ್‌ ಮಿಷನ್‌ಗೆ ಕೇಂದ್ರದಿಂದ 10,000 ಕೋಟಿ ಕಳುಹಿಸಲಾಗಿದೆ. ಆ ಹಣವನ್ನು ಖರ್ಚು ಮಾಡಲು ಇಲ್ಲಿಯ ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಮೋದಿ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ನಿರ್ಮಿಸಲು ಹಣ ಕಳುಹಿಸುತ್ತಾರೆ, ಆದರೆ ಇಲ್ಲಿನ ರಸ್ತೆಗಳು ಕೆಟ್ಟ ಸ್ಥಿತಿಯಲ್ಲಿವೆ. ಮೋದಿ ಅವರು ಉಚಿತ ಅಕ್ಕಿಗೆ ಹಣ ಕಳುಹಿಸುತ್ತಾರೆ, ಈ ಸರ್ಕಾರವು ಪ್ಯಾಕೆಟ್‌ಗಳ ಮೇಲೆ ತನ್ನದೇ ಆದ ಛಾಯಾಚಿತ್ರವನ್ನು ಅಂಟಿಸುತ್ತದೆ ಎಂದು ಪ್ರಧಾನಿ ಹೇಳಿದರು. +ಒಡಿಶಾದ ಜನತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಮನಸ್ಸು ಮಾಡಿದ್ದಾರೆ ಎಂದು ಪ್ರಧಾನಿ ಹೇಳಿದರು. ಜೂನ್‌ 4 ಬಿಜೆಡಿ ಸರ್ಕಾರದ ಮುಕ್ತಾಯ ದಿನಾಂಕವಾಗಿದೆ. ಬಿಜೆಪಿ ಒಡಿಶಾಗೆ ಹೊಸ ಅವಕಾಶಗಳ ಸೂರ್ಯ ಎಂದು ಅವರು ಹೇಳಿದರು. ದೂರದಷ್ಟಿಯ ಪ್ರಣಾಳಿಕೆಯನ್ನು ಮಂಡಿಸಿದ್ದಕ್ಕಾಗಿ ಬಿಜೆಪಿಗೆ ಒಡಿಶಾ ಘಟಕವನ್ನು ಅವರು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು. \ No newline at end of file diff --git a/eesanje/url_47_107_4.txt b/eesanje/url_47_107_4.txt new file mode 100644 index 0000000000000000000000000000000000000000..5adc41902e653ad1c1819d61b1b7b8591ecd8290 --- /dev/null +++ b/eesanje/url_47_107_4.txt @@ -0,0 +1,4 @@ +ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡ ಎನ್‌ಐಟಿ ವಿದ್ಯಾರ್ಥಿ +ಕೋಝಿಕ್ಕೋಡ್‌, ಮೇ 6 (ಪಿಟಿಐ) :ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ವಿದ್ಯಾರ್ಥಿಯೊಬ್ಬ ಉತ್ತರ ಕೇರಳ ಜಿಲ್ಲೆಯ ವಿವಿ ಕ್ಯಾಂಪಸ್‌‍ನೊಳಗಿನ ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾನೆ. +ಮೃತರನ್ನು ಯೋಗೇಶ್ವರ್‌ ನಾಥ್‌ ಎಂದು ಗುರುತಿಸಲಾಗಿದ್ದು, ಇವರು ಕೇರಳದ ಹೊರಗಿನವರು ಎಂದು ಕುನ್ನಮಂಗಲಂ ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕವಾಗಿ, ಇದು ಆತಹತ್ಯೆಯ ಪ್ರಕರಣವಾಗಿದೆ. ಅವರು ಕಟ್ಟಡದಿಂದ ಜಿಗಿದ ನಂತರ ಶವವಾಗಿ ಪತ್ತೆಯಾಗಿದ್ದಾರೆ. +ಅವರು ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಕಟ್ಟಡದಿಂದ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿವರವಾದ ತನಿಖೆಯ ನಂತರವೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_107_5.txt b/eesanje/url_47_107_5.txt new file mode 100644 index 0000000000000000000000000000000000000000..4da851c41bfa44e1aa17114acbc84b931dd9294f --- /dev/null +++ b/eesanje/url_47_107_5.txt @@ -0,0 +1,8 @@ +ಕಾರುಗಳ ಮೇಲಿನ ದಾಳಿ ಹಿಂದೆ ಸ್ಮೃತಿ ಇರಾನಿ ಕೈವಾಡ: ಕಾಂಗ್ರೆಸ್‌‍ +ಲಕ್ನೋ,ಮೇ.6-ಅಮೇಥಿಯ ಗೌರಿಗಂಜ್‌ನಲ್ಲಿರುವ ಕಾಂಗ್ರೆಸ್‌‍ ಕಚೇರಿ ಬಳಿ ನಿಲ್ಲಿಸಿದ್ದ ಹಲವು ವಾಹನಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ. ಈ ದಾಳಿಯನ್ನು ಹಾಲಿ ಸಂಸದೆ ಹಾಗೂ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. +ಬಿಜೆಪಿ ಗೂಂಡಾಗಳು ತನ್ನ ಕಾರ್ಯಕರ್ತರ ಮೇಲೆ ದಾಳಿ ಮಾಡಿದ್ದಾರೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿ ಆರೋಪವನ್ನು ತಳ್ಳಿಹಾಕಿದೆ. +ತಡರಾತ್ರಿ ಹಲವಾರು ಕಾರುಗಳ ವಿಂಡ್‌ಸ್ಕ್ರೀನ್‌ಗಳು ಒಡೆದು ಹೋಗಿರುವ ವೀಡಿಯೊವನ್ನು ಕಾಂಗ್ರೆಸ್‌‍ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಅಮೇಠಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ತೀವ್ರ ಭಯಭೀತರಾಗಿದ್ದಾರೆ. ಸೋಲಿನ ಮುನ್ನೆಚ್ಚರಿಕೆಯಿಂದ ಬಿಜೆಪಿ ಗೂಂಡಾಗಳು ಲಾಠಿ ಮತ್ತು ರಾಡ್‌ಗಳೊಂದಿಗೆ ಅಮೇಥಿಯ ಕಾಂಗ್ರೆಸ್‌‍ ಕಚೇರಿಯ ಹೊರಗೆ ಆಗಮಿಸಿ ಅಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದರು. ಕಾಂಗ್ರೆಸ್‌‍ ಕಾರ್ಯಕರ್ತರು ಮತ್ತು ಅಮೇಠಿಯ ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಈ ದಾಳಿಯಲ್ಲಿ ಅನೇಕ ಜನರು ತೀವ್ರವಾಗಿ ಗಾಯಗೊಂಡಿದ್ದಾರೆ, ಸ್ಥಳೀಯ ಜನರ ವಾಹನಗಳು ಸಹ ಹಾನಿಗೊಳಗಾಗಿವೆ ಎಂದು ಕೈ ಮುಖಂಡರು ದೂರಿದ್ದಾರೆ. +ಪೊಲೀಸರು ಮೂಕಪ್ರೇಕ್ಷಕರಾಗಿದ್ದಾರೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. ಇಡೀ ಘಟನೆಯ ಸಮಯದಲ್ಲಿ ಪೊಲೀಸ್‌‍ ಆಡಳಿತವು ಮೂಕ ಪ್ರೇಕ್ಷಕರಾಗಿ ಉಳಿದಿದೆ. ಬಿಜೆಪಿ ಅಮೇಥಿಯಲ್ಲಿ ಹೀನಾಯವಾಗಿ ಸೋಲಲಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. +ಅಮೇಥಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌‍ ಕೊಳಕು ತಂತ್ರಗಳನ್ನು ಬಳಸುತ್ತಿದೆ ಎಂದು ಬಿಜೆಪಿ ವಕ್ತಾರ ರಾಕೇಶ್‌ ತ್ರಿಪಾಠಿ ತಿಳಿಸಿದ್ದಾರೆ. ವಿಧ್ವಂಸಕ ಘಟನೆಯು ಕಾಂಗ್ರೆಸ್‌‍ ಅನುಕಂಪದ ಮತಗಳನ್ನು ಪಡೆಯುವ ಪ್ರಯತ್ನವಾಗಿದೆ ಎಂದು ಅವರು ಹೇಳಿದರು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುತ್ತೇವೆ ಮತ್ತು ಕಾರುಗಳನ್ನು ಧ್ವಂಸ ಮಾಡಿದವರ ಹೆಸರನ್ನು ಬಹಿರಂಗಗೊಳಿಸುತ್ತೇವೆ ಎಂದು ಅವರು ಹೇಳಿದರು. +ಕೆಲವು ವೀಡಿಯೋಗಳಲ್ಲಿ ಸ್ಥಳೀಯ ನಿವಾಸಿಗಳು ಘಟನೆಯ ಬಗ್ಗೆ ಪೊಲೀಸ್‌‍ ಅಧಿಕಾರಿಗಳಿಗೆ ತಿಳಿಸುವುದನ್ನು ತೋರಿಸಿದರು ಮತ್ತು ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಇಂತಹ ಘಟನೆ ಹೇಗೆ ಸಂಭವಿಸಿತು ಎಂದು ಅವರನ್ನು ಪ್ರಶ್ನಿಸಿದರು. ಲೋಕಸಭೆ ಚುನಾವಣೆಯ ಮೂರನೇ ಹಂತದಲ್ಲಿ ನಾಳೆ ಅಮೇಥಿಯಲ್ಲಿ ಮತದಾನ ನಡೆಯುತ್ತಿದೆ. +ತಿಂಗಳುಗಟ್ಟಲೆ ಊಹಾಪೋಹಗಳು ಮತ್ತು ಸಸ್ಪೆನ್ಸ್ ಗಳ ನಂತರ, ಕಾಂಗ್ರೆಸ್‌‍ ಕಳೆದ ವಾರ ದೀರ್ಘಕಾಲದ ತಳಮಟ್ಟದ ಕಾರ್ಯಕರ್ತ ಕೆಎಲ್‌ ಶರ್ಮಾ ಅವರನ್ನು ಅಮೇಥಿಯಲ್ಲಿ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿತು, ಇದನ್ನು ಹಿಂದೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರತಿನಿಧಿಸಿದ್ದರು. \ No newline at end of file diff --git a/eesanje/url_47_107_6.txt b/eesanje/url_47_107_6.txt new file mode 100644 index 0000000000000000000000000000000000000000..45aea51ccfaf0d50ec32fea38856f1796775c893 --- /dev/null +++ b/eesanje/url_47_107_6.txt @@ -0,0 +1,7 @@ +ಭಾರತದಲ್ಲಿ ಡಿಜಿಟಲ್‌ ಕ್ರಾಂತಿಯಾಗಿದೆ ; ವಿದೇಶಾಂಗ ಸಚಿವ ಜೈಶಂಕರ್‌ +ಭುವನೇಶ್ವರ,ಮೇ.6– ದೇಶದಲ್ಲಿ ಡಿಜಿಟಲ್‌ ಕ್ರಾಂತಿಯಾಗಿದ್ದು ಪ್ರತಿ ತಿಂಗಳು 12 ಬಿಲಿಯನ್‌ ನಗದು ರಹಿತ ಪಾವತಿ ಮಾಡಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್‌‍.ಜೈಶಂಕರ್‌ ಹೇಳಿದ್ದಾರೆ. +ಅನೇಕ ದೇಶಗಳಿವೆ, ಅಲ್ಲಿ ನಾವು ನಮ ವ್ಯವಹಾರವನ್ನು ಮುಗಿಸಿದಾಗ, ಅವರು ನಮ ಡಿಜಿಟಲ್‌ ಮೂಲಸೌಕರ್ಯವನ್ನು ಚರ್ಚಿಸಲು ನಮೊಂದಿಗೆ ಕುಳಿತುಕೊಳ್ಳುತ್ತಾರೆ. ಇದು ವಿಶ್ವದಲ್ಲಿ ಭಾರತದ ಗುರುತಾಗಿದೆ. ಪ್ರತಿ ತಿಂಗಳು, ಭಾರತೀಯರು 10-12 ಬಿಲಿಯನ್‌ ನಗದು ರಹಿತ ಪಾವತಿಗಳನ್ನು ಮಾಡುತ್ತಾರೆ. ಇದಕ್ಕೆ ವಿರುದ್ಧವಾಗಿ , ಯುಎಸ್‌‍ ಇಡೀ ವರ್ಷದಲ್ಲಿ 4 ಶತಕೋಟಿ ನಗದು ರಹಿತ ಪಾವತಿಗಳನ್ನು ಮಾಡುತ್ತದೆ ಎಂದು ಸಂಬಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಜೈಶಂಕರ್‌ ಹೇಳಿದರು. +ಡಿಜಿಟಲ್‌ ಮೂಲಸೌಕರ್ಯದ ಅರ್ಥವೇನು? ಒಂದು, ನಾವೆಲ್ಲರೂ ಮೊಬೈಲ್‌ ಫೋನ್‌ ಮೂಲಕ ಪಾವತಿ ಮಾಡುತ್ತೇವೆ. ಇದು ನಮ ಅಭ್ಯಾಸವಾಗಿದೆ. ನಾಲ್ಕೈದು ವರ್ಷಗಳ ಹಿಂದೆ ಮೊಬೈಲ್‌ ಮತ್ತು ಹಣದ ನಡುವಿನ ಲಿಂಕ್‌ ಬಗ್ಗೆ ನಮಗೆ ಅನುಮಾನವಿತ್ತು. ಹಾಗೆಯೇ ಇತ್ತು. ಪಾವತಿ ಮಾಡಿದ ನಂತರ ಏನಾದರೂ ಆಗಬಹುದೆಂಬ ಭಯ ಇತ್ತು ಎಂದು ಅವರು ಹೇಳಿದರು. +10 ವರ್ಷಗಳ ಹಿಂದೆ ವಿಶ್ವವೇ ಭಾರತದ ಆರ್ಥಿಕತೆಯ ಬಗ್ಗೆ ಚಿಂತಿತರಾಗಿದ್ದರು… ಇಂದು ಅದೇ ಜನರು ಭಾರತವು ವಿಶ್ವದ ಐದು ಪ್ರಮುಖ ಆರ್ಥಿಕತೆಗಳಲ್ಲಿ ಒಂದಾಗಿದೆ ಮತ್ತು ಮುಂದಿನ ದಿನಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಅವರು ಹೇಳುತ್ತಿದ್ದಾರೆ ಎಂದು ಅವರು ವಿವರಿಸಿದರು. +ಭಾರತವು ತನ್ನ ರಚನಾತಕ ಸದಢತೆಯ ಬಲದಿಂದಾಗಿ ಜಾಗತಿಕ ಆರ್ಥಿಕ ಅಭಿವದ್ಧಿಯಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಜೈಶಂಕರ್‌ ಹೇಳಿದರು. ಅಂತರರಾಷ್ಟ್ರೀಯ ಹಣಕಾಸು ನಿಧಿಯು ಮುಂದಿನ 20 ವರ್ಷಗಳಲ್ಲಿ ಭಾರತದ ರಚನಾತಕ ಸದಢತೆಯ ಬಲದಿಂದಾಗಿ, ಜಾಗತಿಕ ಆರ್ಥಿಕ ಅಭಿವದ್ಧಿಯಲ್ಲಿ ಭಾರತವು ದೊಡ್ಡ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು. +ಕೋವಿಡ್‌ ನಂತರ ಅನೇಕ ರಾಷ್ಟ್ರಗಳು ಆರ್ಥಿಕ ಚೇತರಿಸಿಕೊಂಡಿಲ್ಲ. ದೊಡ್ಡ ಆರ್ಥಿಕತೆಗಳಲ್ಲಿ, 7 ಶೇಕಡಾ ಬೆಳವಣಿಗೆ ದರವನ್ನು ಮಾಡಿದ ಏಕೈಕ ದೇಶ ಭಾರತವಾಗಿದೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/eesanje/url_47_107_7.txt b/eesanje/url_47_107_7.txt new file mode 100644 index 0000000000000000000000000000000000000000..2f5ccb749b324637bde8777c28005a8bd091c2ed --- /dev/null +++ b/eesanje/url_47_107_7.txt @@ -0,0 +1,12 @@ +ಪ್ರಜ್ವಲ್‌ ರೇವಣ್ಣ ಪೆನ್‌ಪ್ರೈಡ್‌ ಪ್ರಕರಣ ಕಾಂಗ್ರೆಸ್‌ಗೆ ತಿರುಗುಬಾಣವಾಗಲಿದೆ : ಅಮಿತ್‌ ಷಾ +ನವದೆಹಲಿ,ಮೇ6-ಕರ್ನಾಟಕದ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ಲೈಂಗಿಕ ಪೆನ್‌ಪ್ರೈಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಇದು ಅವರಿಗೆ ತಿರುಗುಬಾಣವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್‌ ಷಾ ಎಚ್ಚರಿಸಿದ್ದಾರೆ. +ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಪ್ರಕರಣದ ಬಗ್ಗೆ ಕಾಂಗ್ರೆಸ್‌ ನಾಯಕರಿಗೆ ಸಂಪೂರ್ಣವಾದ ಮಾಹಿತಿ ಇತ್ತು. ಮೊದಲ ಹಂತದ ಲೋಕಸಭಾ ಚುನಾವಣೆ ವೇಳೆ ಬಹಿರಂಗಪಡಿಸಿದರೆ ಒಕ್ಕಲಿಗ ಮತಗಳು ಕೈ ಕೊಡಬಹುದೆಂಬ ಭೀತಿಯಿಂದ ಕಾಂಗ್ರೆಸ್‌ ಮುಚ್ಚಿಟ್ಟಿತ್ತೆಂದು ಆರೋಪಿಸಿದ್ದಾರೆ. +ರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ರೇವಣ್ಣ ಮತ್ತು ಪ್ರಜ್ವಲ್‌ ರೇವಣ್ಣ ಅವರನ್ನು ರಕ್ಷಣೆ ಮಾಡಿರುವುದೇ ಕಾಂಗ್ರೆಸ್‌ ಸರ್ಕಾರ. ಮತದಾನ ನಡೆಯಲು ಎರಡು ದಿನ ಇರುವಾಗ ಪೆನ್‌ಡ್ರೈವ್‌ ಬಹಿರಂಗೊಂಡಿದ್ದು ಹಾಗೂ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳುವುದಕ್ಕೆ ಕಾಂಗ್ರೆಸ್‌ ಕಾರಣ ಎಂದು ಆಪಾದಿಸಿದ್ದಾರೆ. +ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಸಂಬಂಧ ಹೇಗಿದೆ ಎಂಬುದು ರಾಜಕಾರಣ ತಿಳಿದುಕೊಂಡಿರುವ ಪ್ರತಿಯೊಬ್ಬರಿಗೂ ಗೊತ್ತು. ಈ ಪ್ರಕರಣ ಆಚೆ ಬಂದರೆ ಒಕ್ಕಲಿಗ ಮತಗಳು ಕಾಂಗ್ರೆಸ್‌ ವಿರುದ್ಧವಾಗಿ ಚಲಾವಣೆಯಾಗಬಹುದೆಂಬ ಭೀತಿಯಿಂದ ಆಚೆಗೆ ಬಿಟ್ಟಿರಲಿಲ್ಲ. ಮತದಾನ ಸಮೀಪಿಸುತ್ತಿದ್ದಂತೆ ಏಕಾಏಕಿ ಪೆನ್‌ಡ್ರೈವ್‌ ಹೊರಬರಲು ಕಾರಣವೇನಾದರೂ ಏನು ಎಂದು ಅಮಿತ್‌ ಷಾ ಪ್ರಶ್ನಿಸಿದ್ದಾರೆ. +ರಾಜಕೀಯ ಲಾಭ ಪಡೆದುಕೊಳ್ಳುವ ಉದ್ದೇಶದಿಂದಲೇ ಕಾಂಗ್ರೆಸ್‌ ಪ್ರಕರಣವನ್ನು ಮುಚ್ಚಿಡುವ ಪ್ರಯತ್ನ ನಡೆಸಿತ್ತು. ಈಗ ನಮ್ಮ ಮೇಲೆ ವೃಥಾ ಆರೋಪ ಮಾಡುವವರು ಇಷ್ಟೆಲ್ಲಾ ನಡೆದಿದ್ದರೂ ನಿಮಗೆ ಗೊತ್ತಿರಲಿಲ್ಲವೇ? ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ದಾಖಲಾದ ಮೇಲೆ ಅವರು ತಲೆಮರೆಸಿಕೊಳ್ಳಬಹುದೆಂಬ ಸಣ್ಣ ಮಾಹಿತಿಯನ್ನು ಗುಪ್ತಚರ ವಿಭಾಗ ಕಲೆ ಹಾಕುವಲ್ಲಿ ವಿಫಲವಾಯಿತೇ? ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಯಾರ ಕೈಯಲ್ಲಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +ಈ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಇರಲಿ, ಎಚ್‌.ಡಿ.ರೇವಣ್ಣನೇ ಇರಲಿ ಕಾನೂನು ಎಲ್ಲರಿಗೂ ಒಂದೇ.ಜೆಡಿಎಸ್‌ ನಮ್ಮ ಮೈತ್ರಿ ಪಕ್ಷ ಎಂಬ ಒಂದೇ ಕಾರಣಕ್ಕಾಗಿ ಅವರದೇ ಪಕ್ಷದ ಸಂಸದ ನಡೆಸಿದ್ದಾರೆ ಎನ್ನಲಾದ ಈ ಪ್ರಕರಣವನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಕಾನೂನು ಪ್ರಕಾರವೇ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. +ಈ ವಿಷಯದಲ್ಲಿ ಬಿಜೆಪಿ ನಿಲುವು ತುಂಬ ಸ್ಪಷ್ಟವಾಗಿದೆ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಜರುಗಿಸುವುದಾಗಿ ಸ್ವತಃ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರೇ ಹೇಳಿದ್ದಾರೆ. ಈಗಾಗಲೇ ಒಬ್ಬರನ್ನು ಪಕ್ಷದಿಂದ ಅಮಾನತುಪಡಿಸಿದ್ದಾರೆ. +ನಾವು ಎಲ್ಲಿಯೂ ಕೂಡ ಆರೋಪಿಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಿಲ್ಲ. ಆದರೆ ಕಾಂಗ್ರೆಸ್‌ ರಾಜಕೀಯ ಲಾಭ ಪಡೆದುಕೊಳ್ಳಲು ಮುಂದಾಗಿರುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಹೇಳಿದ್ದಾರೆ. +ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬುದಕ್ಕಿಂತ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ಎಷ್ಟು ಲಾಭವಾಗುತ್ತದೆ ಎಂದು ನೋಡುತ್ತಿದೆ. ಸೋಲಿನ ಭೀತಿಯಲ್ಲಿರುವ ಶತಮಾನಗಳ ಇತಿಹಾಸವಿರುವ ಪಕ್ಷ ಕ್ಷುಲ್ಲಕ ರಾಜಕೀಯ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಈ ಪ್ರಕರಣದಿಂದಾಗಿ ಬಿಜೆಪಿ, ಜೆಡಿಎಸ್‌ ಮೈತ್ರಿಗೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ತಮ್ಮ ಕುಟುಂಬದ ಸದಸ್ಯರ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಕಾನೂನು ಮೂಲಕವೇ ಹೋರಾಟ ನಡೆಸುತ್ತೇವೆ ಎಂದು ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಇದರಲ್ಲಿ ನಮ್ಮ ಪಕ್ಷದ ಪಾತ್ರ ಏನೂ ಇಲ್ಲ ಎಂದು ಅಮಿತ್‌ ಷಾ ಸ್ಪಷ್ಟಪಡಿಸಿದ್ದಾರೆ. +ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಸ್ವದೇಶಕ್ಕೆ ಕರೆತರಬೇಕಾದರೆ ಕಾನೂನು ಪ್ರಕ್ರಿಯೆಗಳು ಜರುಗಬೇಕು. ಪ್ರಧಾನಮಂತ್ರಿಗೆ ಪತ್ರ ಬರೆಯುವುದರಿಂದ ಯಾವ ಪ್ರಯೋಜನವೂ ಇಲ್ಲ. ನಿಮಗೆ ನಿಜವಾಗಲೂ ಸಂತ್ರಸ್ತರಿಗೆ ನ್ಯಾಯ ಕೊಡಬೇಕೆಂಬ ಕಳಕಳಿ ಇದ್ದರೆ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆಯಬೇಕಾಗಿರುವುದು ಸಿಬಿಐ ನಿರ್ದೇಶಕರು ಹಾಗೂ ಇಂಟರ್‌ ಪೋಲ್‌ ಮುಖ್ಯಸ್ಥರಿಗೆ. ಮೋದಿಯವರಿಗೆ ಪತ್ರ ಬರೆದ ಉದ್ದೇಶವೇ ರಾಜಕಾರಣ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕೆಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_107_8.txt b/eesanje/url_47_107_8.txt new file mode 100644 index 0000000000000000000000000000000000000000..ba5350530a074cda1fdf9cdb260df2f56cbf3638 --- /dev/null +++ b/eesanje/url_47_107_8.txt @@ -0,0 +1,8 @@ +ನಾಳೆ 3ನೇ ಹಂತದ ಲೋಕಸಭಾ ಚುನಾವಣೆ : 93 ಕ್ಷೇತ್ರಗಳಲ್ಲಿ ಮತದಾನ +ಬೆಂಗಳೂರು,ಮೇ 6-ಲೋಕಸಭೆಯ 18ನೇ ಅವಧಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ 3ನೇ ಹಂತದಲ್ಲಿ ನಾಳೆ 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ಮಾರ್ಚ್‌ 16 ರಂದು ಘೋಷಣೆಯಾಗಿದ್ದ ವೇಳಾಪಟ್ಟಿಯ ಪ್ರಕಾರ, 94 ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಈಗಾಗಲೇ ಗುಜರಾತಿನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ ಬಾಕಿ ಉಳಿದ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ಇವುಗಳ ಪೈಕಿ ಜಮ್ಮು ಮತ್ತು ಕಾಶ್ಮೀರ ಭಾಗದ ಅನಂತನಾಗ್‌ ರಚೋರಿ ಕ್ಷೇತ್ರದ ಚುನಾವಣೆ ಮೇ 25ಕ್ಕೆ ಮುಂದೂಡಿಕೆಯಾಗಿದೆ. ಈ ನಡುವೆ ಮಧ್ಯಪ್ರದೇಶದ ಬೇತಲ್‌ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಏ.26 ರಂದು ಮತದಾನವೇಗಬೇಕಿತ್ತು. ಅದನ್ನು ಮೇ 7 ಕ್ಕೆ ಮುಂದೂಡಲಾಗಿದೆ. ಈ ಹೊಂದಾಣಿಕೆಯ ಭಾಗವಾಗಿ ಒಟ್ಟು 93 ಕ್ಷೇತ್ರಗಳಿಗೆ ನಾಳೆ ಚುನಾವಣೆ ನಡೆಯಲಿದೆ. +ಗುಜರಾತಿಯನಲ್ಲಿರುವ 25 ಕ್ಷೇತ್ರಗಳಿಗೆ, ದಾದರ್‌ ಮತ್ತು ನಾಗರಬೇಲಿ ಹಾಗೂ ದಾಮನ್‌-ದಯುನ 2 ಕ್ಷೇತ್ರಗಳಿಗೆ, ಗೋವಾದ ಉತ್ತರ ಗೋವಾ ಮತ್ತು ದಕ್ಷಿಣ ಗೋವಾದ 2 ಕ್ಷೇತ್ರಗಳಿಗೆ ಒಂದೇ ಬಾರಿ ಚುನಾವಣೆ ಪೂರ್ಣಗೊಳ್ಳಲಿದೆ. +ಅಸ್ಸಾಂನ 14 ಕ್ಷೇತ್ರಗಳ ಪೈಕಿ ಕೋಕ್ರಾಜಾರ್‌, ಧುಬ್ರಿ, ಬರ್ಬೇಟ್‌, ಗೌಹಾತಿ ಸೇರಿ 4 ಕ್ಷೇತ್ರಗಳಿಗೆ ಬಿಹಾರದ 40 ಕ್ಷೇತ್ರಗಳ ಪೈಕಿ ಜಹಂಜರ್‌ಪುರ್‌, ಸುಪೌಲ್‌, ಅರೈರಿಯಾ, ಮಾದೇಪುರ, ಕಗ್ರಾರಿಯಾ, ಛತ್ತೀಸ್‌ಗಡದ 11 ಕ್ಷೇತ್ರಗಳ ಪೈಕಿ ಸುರ್ಗುಜ, ಜಾಂಗೀರ್‌-ಚಂಪಾ, ಕೋರ್ಬಾ, ಬಿಸ್ಲಾಪುರ್‌, ದುರ್ಗ್‌, ರಾಯ್ಪುರ್‌, ರಾಯ್ಘರ್‌ ಸೇರಿ 7 ಕ್ಷೇತ್ರಗಳಿಗೆ ಮಧ್ಯಪ್ರದೇಶದ 29 ಕ್ಷೇತ್ರಗಳ ಪೈಕಿ ಮೊರೇನಾ, ಗ್ವಾಲಿಯರ್‌, ಗುನ, ಸಾಗರ್‌, ವಿದಿಷ, ಭೂಪಾಲ್‌, ರಾಜ್ಘರ್‌, ಬಿಂದ್‌, ಬೇತಲ್‌, ಮಹಾರಾಷ್ಟ್ರದ 48 ಕ್ಷೇತ್ರಗಳ ಪೈಕಿ ರಾಯ್ಘಡ, ಬಾರಾಮತಿ, ಓಸ್ಮಾನಾಬಾದ್‌, ಲಾಥೂರ್‌, ಸೋಲಾಪುರ್‌, ಮಘಾ, ಸಾಂಗ್ಲಿ, ಸತಾರ, ರತ್ನಗಿರಿ -ಸಿಂಧುದುರ್ಗ, ಕೊಲ್ಲಾಪುರ, ಹತ್ಕನಾಂಗ್ಲೆ ಸೇರಿ 9 ಕ್ಷೇತ್ರಗಳಿಗೆ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ ಸಂಭಾಲ್‌, ಹತ್ರಾಸ್‌, ಆಗ್ರಾ, ಫತೇಪುರ್‌ ಸಿಕ್ರಿ, ಫಿರೋಜಾಬಾದ್‌, ಮೈನಾಪುರಿ, ಇಟಾಹ್‌, ಬದೌನ್‌, ಔನ್ಲಾ, ಬರೇಲಿ ಸೇರಿ 10 ಕ್ಷೇತ್ರಗಳಿಗೆ ಪಶ್ಚಿಮ ಬಂಗಾಳದ 42 ಕ್ಷೇತ್ರಗಳ ಪೈಕಿ ಮಲ್ದಹಾ ಉತ್ತರ, ಮಲ್ದಹಾ ದಕ್ಷಿಣ, ಸಾಮಾನ್ಯ, ಜಂಗಿಪುರ್‌, ಮುಷಿದಾಬಾದ್‌ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. +3ನೇ ಹಂತದಲ್ಲಿ 1351 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 2963 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಪರಿಶೀಲನೆ ಬಳಿಕ 1563 ಊರ್ಜಿತಗೊಂಡಿವೆ. ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಜರಾತಿನ ಗಾಂಧಿನಗರದಿಂದ , ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ ಹುಬ್ಬಳ್ಳಿ-ಧಾರವಾಡದಿಂದ, ಭಗವಂತ್‌ ಖೂಬಾ ಬೀದರ್‌ನಿಂದ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾವೇರಿಯಿಂದ, ಜಗದೀಶ್‌ ಶೆಟ್ಟರ್‌ ಬೆಳಗಾವಿಯಿಂದ ಸ್ಪರ್ಧಿಸಿದ್ದಾರೆ. +ಅತ್ತ ಮಧ್ಯಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್‌ ಸಿಂಗ್‌ ಚೌವ್ಹಾಣ್‌ ವಿದೀಶದಿಂದ, ದಿಗ್ವಿಜಯ್‌ ಸಿಂಗ್‌ ರಾಜ್ಘರ್‌ನಿಂದ, ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ಪತ್ನಿ ಡಿಂಪಲ್‌ ಯಾದವ್‌ ಉತ್ತರಪ್ರದೇಶದ ಮೈನಾಪುರದಿಂದ, ಎನ್‌ಸಿಪಿಯ ನಾಯಕಿ ಸುಪ್ರಿಯಾ ಸುಳೆ ಮಹಾರಾಷ್ಟ್ರದ ಭಾರಾಮತಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈಗಾಗಲೇ ಏ.19 ರಂದು ಮೊದಲ ಹಂತದಲ್ಲಿ 102 ಕ್ಷೇತ್ರಗಳಿಗೆ ಏ.26 ರಂದು 88 ಕ್ಷೇತ್ರಗಳಿಗೆ ಮತದಾನ ನಡೆದಿದೆ. \ No newline at end of file diff --git a/eesanje/url_47_107_9.txt b/eesanje/url_47_107_9.txt new file mode 100644 index 0000000000000000000000000000000000000000..0ca9090318f98d892979569b260579aa13e2a6f4 --- /dev/null +++ b/eesanje/url_47_107_9.txt @@ -0,0 +1,9 @@ +ವಿಶ್ವಕ್ಕೆ ಮಾದರಿ ವೈವಿಧ್ಯ, ವೈಶಿಷ್ಯಗಳ ಭಾರತದ ಚುನಾವಣೆ : ನ್ಯೂಯಾರ್ಕ್‌ ಟೈಮ್ಸ್ ಪ್ರಶಂಸೆ +ನಮ್ಮದೇ ಆದ ಹಲವಾರು ಪತ್ರಿಕೆಗಳು ಮತ್ತು ಟಿವಿ ವಾಹಿನಿಗಳು ಭಾರತವನ್ನು ಹೀಗಳೆಯುತ್ತಿರುವ ಸನ್ನಿವೇಶದಲ್ಲಿ ಭಾರತದ ಚುನಾವಣೆಗಳ ಕುರಿತು ನ್ಯೂಯಾರ್ಕ್‌ ಟೈಮ್ಸೌ ಪತ್ರಿಕೆಯ ಪ್ರಶಂಸೆಯ ವರದಿಯ ನೋಟ ಇಲ್ಲಿದೆ. ಭಾರತೀಯ ಚುನಾವಣೆ ನಿಜಕ್ಕೂ ಭೂಮಿಯ ಮೇಲಿನ ಅತ್ಯುನ್ನತ ಪ್ರದರ್ಶನವಾಗಿದೆ. ವೈವಿಧ್ಯ ಮತ್ತು ಪ್ರಜಾಪ್ರಭುತ್ವ ನೀತಿಗೆ ಮಾದರಿಯಾಗಿದೆ. ಅಲ್ಲಿ 970 ದಶಲಕ್ಷಕ್ಕೂ ಅಧಿಕ ಮಂದಿ ಮತಚಲಾಯಿಸುತ್ತಾರೆ. ಅವರ ಪ್ರಾಚೀನ ನಾಗರಿಕತೆಯನ್ನು ಭವಿಷ್ಯದೆಡೆಗೆ ಕೊಂಡೊಯ್ಯುವ ಸಣ್ಣ ಭಾಗ ಇದಾಗಿದೆ, +ಹಿಂಸಾತಕ ನೆರೆರಾಷ್ಟ್ರಗಳಾದ ಪಾಕಿಸ್ತಾನ, ಚೀನಾ ಮತ್ತು ಮ್ಯಾನಾರ್‌ಗಳ ಅಸ್ಥಿರಗೊಳಿಸುವ ಪ್ರಯತ್ನಗಳ ನಡುವೆ ಭಾರತದ ಚುನಾವಣೆ ನಡೆದಾಗ ಅದರ ಪ್ರಭಾವ ಕಡಿಮೆಯದ್ದಲ್ಲ.ಭಾರತದ ಮುಂದೆ ಸವಾಲುಗಳು ಅಧಿಕವಾಗಿವೆ. ಎಲ್ಲಕ್ಕಿಂತ ಹೆಚ್ಚಾಗಿ ಭಯೋತ್ಪಾದನೆಯನ್ನು ಹಿಮೆಟ್ಟಿಸುವುದು ಮತ್ತು ಅಭಿವೃದ್ಧಿ ಬೃಹತ್‌ ಸವಾಲಾಗಿದೆ. ಆದರೆ ಸವಾಲುಗಳನ್ನು ಮತ್ತು ನೆರೆ ರಾಷ್ಟ್ರಗಳನ್ನು ಪರಿಗಣಿಸಿದರೆ ನೂರಾರು ಭಾಷೆಗಳು ಮತ್ತು ಹಲವಾರು ಧರ್ಮಗಳನ್ನು ಒಳಗೊಂಡಿರುವ ಭೂಮಿಯ ಮೇಲಿನ ಅತ್ಯಂತ ವೈವಿಧ್ಯಮಯ ರಾಷ್ಟ್ರ ಇದಾಗಿದೆ. ವಿಸ್ಮಯವೆಂದರೆ ಇದರ ಸಂಸ್ಕೃತಿಗಳು ಪ್ರಾಚೀನ ಕಾಲದಿಂದ ಉಳಿದುಕೊಂಡು ಬಂದಿರುವುದಷ್ಟೇ ಅಲ್ಲ. ಬೆಳವಣಿಗೆ ಹೊಂದುತ್ತಲ್ಲೂ ಇವೆ. +ರಾಷ್ಟ್ರ:ಭಾರತವು ಹಿಂದೂ ಧರ್ಮ, ಬೌದ್ಧ, ಜೈನ ಮತ್ತು ಸಿಖ್ ಧರ್ಮಗಳೂ ಹುಟ್ಟಿದ ದೇಶವಾಗಿದೆ. ಭೂಮಿಯ ಮೇಲಿನ ಎರಡನೇ ಅತಿ ದೊಡ್ಡ ಮುಸ್ಲಿಂ ಬಾಹುಳ್ಯದ ದೇಶವಾಗಿದೆ. +ಅಲ್ಲಿ ಕ್ರೈಸ್ತ ಧರ್ಮವು 2000 ವರ್ಷಗಳಿಂದ ಅಸ್ತಿತ್ವದಲ್ಲಿದೆ. ರೋಮನ್ನರು ತಮ ಎರಡನೇ ದೇಗುಲವನ್ನು ದಹಿಸಿದಾಗಿನಿಂದ ಪ್ರಾಚೀನ ಯಹೂದಿ ಸಿನಗಾಗ್‌ಗಳು ನೆಲೆಗೊಂಡಿವೆ. ಯಹೂದಿ ಸಮುದಾಯಗಳು ವಾಸಿಸುತ್ತಿವೆ. ಅದು ದಲೈಲಾಮ ಮತ್ತು ದೇಶ ಭ್ರಷ್ಟ ಟಿಬೇಟಿಯನ್ನರಿಗೆ ಆಶ್ರಯ ನೀಡಿದೆ. +ಪ್ರಾಚೀನ ತಾಯ್ನಾಡಾದ ಪರ್ಷಿಯನ್‌ನಿಂದ ಹೊರಹಾಕಿದ ಝೋ ರಾಷ್ಟ್ರಿಯನ್ನರು ಇಲ್ಲಿ ಪ್ರವಧರ್ಮಾನಕ್ಕೆ ಬಂದಿದ್ದಾರೆ. ಅಲ್ಲಿ ಆರ್ಮೇನಿಯನ್ನರು, ಸಿರಿಯನ್ನರು ಮತ್ತು ಪ್ಯಾರಿಸ್‌‍ ಮೂಲದ ಒಸಿಇಡಿ ಸೇರಿದಂತೆ ಹಲವಾರು ದೇಶಗಳ ಮೂಲನಿವಾಸಿಗಳು ನೆಲೆಕಂಡುಕೊಂಡಿದ್ದಾರೆ. ಕಳೆದ 2000 ಸಾವಿರ ವರ್ಷಗಳಲ್ಲಿ 1500 ವರ್ಷ ಕಾಲ ಇದು ಭೂಮಿಯ ಮೇಲಿನ ಅತಿದೊಡ್ಡ ಆರ್ಥಿಕತೆ ಎನಿಸಿದೆ. +ಕೇವಲ 200 ವರ್ಷಗಳ ಹಿಂದೆ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿತ್ತು. ಅಲ್ಲಿ ಮೂವರು ಮುಸ್ಲಿಂ ರಾಷ್ಟ್ರಪತಿಗಳು ಆಯ್ಕೆಯಾಗಿದ್ದಾರೆ. ಓರ್ವ ಸಿಖ್‌್ಖ ಪ್ರಧಾನ ಮಂತ್ರಿ ಮತ್ತು ಕ್ಯಾಥೋಲಿಕ್‌ ಇಟಾಲಿಯನ್‌ ಮಹಿಳೆ ಆಡಳಿತ ಪಕ್ಷದ ಮುಖ್ಯಸ್ಥರಾಗಿದ್ದರು. ಅಲ್ಲಿ ಓರ್ವ ಮಹಿಳೆ ಕೂಡ ರಾಷ್ಟ್ರಾಧ್ಯಕ್ಷರಾಗಿದ್ದು, ರಾಕೆಟ್‌ ವಿಜ್ಞಾನಿಯಾಗಿ ರಾಷ್ಟ್ರದಲ್ಲಿ ಹೀರೋ ಆಗಿದ್ದ ಓರ್ವ ಮುಸ್ಲಿಂ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. +ಅಲ್ಲಿನ ಪ್ರವರ್ಧಮಾನ ಆರ್ಥಿಕತೆ ಪ್ರತೀವರ್ಷ 40 ದಶಲಕ್ಷ ಜನರನ್ನು ಬಡತನದಿಂದ ಮೇಲೆತ್ತುತ್ತಿದೆ. 2025ರ ವೇಳೆಗೆ ಅಮೆರಿಕಾದ ಇಡೀ ಜನಸಂಖ್ಯೆಯಷ್ಟು ಜನರನ್ನು ಮಧ್ಯಮ ವರ್ಗದ ಮಟ್ಟಕ್ಕೆ ತರುವ ನಿರೀಕ್ಷೆಯಿದೆ. ಎಲ್ಲಾ ಅಸಾಧ್ಯ ಸವಾಲುಗಳು ಮತ್ತು ಸಂಕಷ್ಟದ ನಡುವೆಯೂ ಚಲನಚಿತ್ರ ಮತ್ತು ಕಲೆಗಳಲ್ಲಿ ಅದರ ಸಂಸ್ಕೃತಿ ವೈವಿಧ್ಯ ಅನಾವರಣಗೊಂಡಿದೆ. ಆರ್ಥಿಕ ಬೆಳವಣಿಗೆ ಆಶಾದಾಯಕವಾಗಿದೆ. +ಮತದಾನದಲ್ಲಿ ಉತ್ಸಾಹ ಕಂಡುಬರುತ್ತಿದೆ. ಅಲ್ಲಿ ಎಲ್ಲ ಮಹತ್ತರ ಶಕ್ತಿಗಳು ಪ್ರಭಾವಕ್ಕಾಗಿ ಸ್ಪರ್ಧಿಸುತ್ತಿವೆ. ಏಕೆಂದರೆ ಜಗತ್ತಿನಲ್ಲಿ ಭಾರತ ತನ್ನ ಸ್ಥಾನ ಗುರುತಿಸಿಕೊಳ್ಳುತ್ತಿದೆ. ಇದೆಲ್ಲಾ ನಡೆಯುತ್ತಿರುವುದು ಭಾರತದಲ್ಲಿ ಮತ್ತು ಜಗತ್ತಿನ ಜನಸಂಖ್ಯೆಯ 10 ನೇ 1 ಭಾಗದಷ್ಟು ಜನರು ಮತದಾನಕ್ಕೆ ಸಿದ್ಧರಾಗುತ್ತಿರುವುದು ಇಡೀ ವಿಶ್ವಕ್ಕೆ ಸ್ಫೂರ್ತಿದಾಯಕವಾಗಿದೆ. \ No newline at end of file diff --git a/eesanje/url_47_108_1.txt b/eesanje/url_47_108_1.txt new file mode 100644 index 0000000000000000000000000000000000000000..ccf9aaaff2e1a9bdb8e04db0b6fdfa4751813906 --- /dev/null +++ b/eesanje/url_47_108_1.txt @@ -0,0 +1,8 @@ +ಗುಜರಾತ್‌ನಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿಗೂ ಟಿಕೆಟ್ ನೀಡದ ಕಾಂಗ್ರೆಸ್‌‍ +ಅಹಮದಾಬಾದ್‌, ಮೇ 5 (ಪಿಟಿಐ)ಗುಜರಾತ್‌ನಲ್ಲಿ 35 ಮುಸ್ಲಿಂ ಅಭ್ಯರ್ಥಿಗಳು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಆದರೆ ಕಾಂಗ್ರೆಸ್‌‍ ಈ ಬಾರಿ ತನ್ನ ಸಂಪ್ರದಾಯವನ್ನು ಮುರಿದು ರಾಜ್ಯದಲ್ಲಿ ಒಬ್ಬ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಕಣಕ್ಕಿಳಿಸದಿರುವುದು ವಿಶೇಷವಾಗಿದೆ.ಸಾಂಪ್ರದಾಯಿಕವಾಗಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದ ಭರೂಚ್‌ ಲೋಕಸಭಾ ಕ್ಷೇತ್ರವು ಈ ಬಾರಿ ಆಮ್‌ ಆದಿ ಪಕ್ಷ (ಎಎಪಿ) ಪಾಲಾಗಿದೆ ಎಂದು ಕಾಂಗ್ರೆಸ್‌‍ ವಾದಿಸಿದೆ. +ರಾಷ್ಟ್ರೀಯ ಪಕ್ಷಗಳ ಪೈಕಿ ಬಹುಜನ ಸಮಾಜ ಪಕ್ಷ (ಬಿಎಸ್‌‍ಪಿ) ಮಾತ್ರ ಮೇ 7 ರಂದು ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಗಾಂಧಿನಗರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.2019 ರ ಲೋಕಸಭೆ ಚುನಾವಣೆಯಲ್ಲಿ ಪಂಚಮಹಲ್‌ನಿಂದ ಬಿಎಸ್‌‍ಪಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. +ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2019 ರಲ್ಲಿ ಸಮುದಾಯದಿಂದ 43 ನಾಮನಿರ್ದೇಶಿತರಿಗೆ ಹೋಲಿಸಿದರೆ ಈ ಬಾರಿ, ಗುಜರಾತ್‌ನ 26 ಸ್ಥಾನಗಳ ಪೈಕಿ 25 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ 35 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ. +ಸಮುದಾಯದ ಬಹುತೇಕ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ ಅಥವಾ ಕಡಿಮೆ ಹೆಸರಾದ ಪಕ್ಷಗಳಿಂದ ಕಣಕ್ಕಿಳಿದಿದ್ದಾರೆ.ಗುಜರಾತ್‌ ಕಾಂಗ್ರೆಸ್‌‍ನ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ವಜೀರಖಾನ್‌ ಪಠಾಣ್‌ ಪಿಟಿಐಗೆ ಮಾತನಾಡಿ, ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಸಾಂಪ್ರದಾಯಿಕವಾಗಿ ಮುಸ್ಲಿಂ ಸಮುದಾಯದಿಂದ ಕನಿಷ್ಠ ಒಬ್ಬ ಅಭ್ಯರ್ಥಿಯನ್ನು, ವಿಶೇಷವಾಗಿ ಭರೂಚ್‌ನಿಂದ ಕಣಕ್ಕಿಳಿಸುತ್ತಿದೆ. ಈ ಬಾರಿ ಸ್ಥಾನ ಎಎಪಿಗೆ ಹೋಗಿದ್ದರಿಂದ ಅದು ಸಾಧ್ಯವಾಗಲಿಲ್ಲ ಎಂದಿದ್ದಾರೆ. +ಗುಜರಾತ್‌ನ ಒಂದು ಸ್ಥಾನದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌‍ ಮುಂದಾಗಿತ್ತು, ಆದರೆ ಸಮುದಾಯದ ಸದಸ್ಯರು ಗೆಲುವಿನ ಕಡಿಮೆ ಅವಕಾಶವನ್ನು ನೀಡಿ ನಿರಾಕರಿಸಿದರು ಎಂದು ಅವರು ಹೇಳಿದ್ದಾರೆ. +ಮುಸ್ಲಿಂ ಅಭ್ಯರ್ಥಿಗೆ ಬೇರೆ ಯಾವುದೇ ಸ್ಥಾನದಿಂದ ಸ್ಪರ್ಧಿಸಲು ಅವಕಾಶವಿಲ್ಲ. ಅಹಮದಾಬಾದ್‌ ಪಶ್ಚಿಮ ಮತ್ತು ಕಚ್‌ – ಸಾಕಷ್ಟು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಎರಡು ಸ್ಥಾನಗಳು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಾಗಿದೆ ಎಂದು ಪಠಾಣ್‌ ಹೇಳಿದರು. +ಭರೂಚ್‌ ಹೊರತುಪಡಿಸಿ, ಕಾಂಗ್ರೆಸ್‌‍ ಈ ಹಿಂದೆ ನವಸಾರಿ ಮತ್ತು ಅಹಮದಾಬಾದ್‌ನಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ (ಅದನ್ನು ಅಹಮದಾಬಾದ್‌ ಪೂರ್ವ ಮತ್ತು ಪಶ್ಚಿಮ ಸ್ಥಾನಗಳಾಗಿ ವಿಂಗಡಿಸಲಾಗಿಲ್ಲ). \ No newline at end of file diff --git a/eesanje/url_47_108_10.txt b/eesanje/url_47_108_10.txt new file mode 100644 index 0000000000000000000000000000000000000000..8810512e312db356fdcdc688ed52feace81d1a5d --- /dev/null +++ b/eesanje/url_47_108_10.txt @@ -0,0 +1,9 @@ +ಮೇ.14ರಂದು ವಾರಾಣಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ +ವಾರಾಣಸಿ,ಮೇ5-ಪ್ರಧಾನಿ ನರೇಂದ್ರಮೋದಿ ಅವರು ಮೇ 14ರಂದು ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮನ್ನ ಮೇ 13ರಂದು ಜಿಲ್ಲೆಯಲ್ಲಿ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಅವರ ನಾಮಪತ್ರ ಸಲ್ಲಿಕೆ ದಿನವನ್ನು ಐತಿಹಾಸಿಕ ದಿನವನ್ನಾಗಿ ಮಾಡಲು ಬಿಜೆಪಿ ಬೃಹತ್‌ ಯೋಜನೆ ಹಾಕಿಕೊಂಡಿದೆ. +ಅರ್ಧ ಡಜನ್‌ಗಿಂತಲೂ ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳು, ಹತ್ತಕ್ಕೂ ಹೆಚ್ಚು ಕೇಂದ್ರ ಸಚಿವರು ಮತ್ತು ಅಷ್ಟೇ ಸಂಖ್ಯೆಯ ಕ್ಯಾಬಿನೆಟ್‌ ಮಂತ್ರಿಗಳು ಮೋದಿ ಅವರ ರೋಡ್‌ ಶೋ ಮತ್ತು ನಾಮಪತ್ರ ಸಲ್ಲಿಕೆಯ ದಿನಕ್ಕೆ ಸಾಕ್ಷಿಯಾಗಲಿದ್ದಾರೆ. +ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಎನ್‌ಡಿಎ ಮೈತ್ರಿಕೂಟದ ರಾಷ್ಟ್ರೀಯ ನಾಯಕರು ಮತ್ತು ಮುಖ್ಯಮಂತ್ರಿಗಳ ಉಪಸ್ಥಿತಿಗೆ ಸಿದ್ಧತೆ ನಡೆಸಲಾಗಿದೆ. ಇವರೊಂದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ, ಕೈಗಾರಿಕಾ ಸಚಿವ ಡಾ.ಮಹೇಂದ್ರ ನಾಥ್‌ ಪಾಂಡೆ, ಕೃಷಿ ಸಚಿವ ಅರ್ಜುನ್‌ ಮುಂಡಾ, ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್‌ ಸೇರಿದಂತೆ ಅನೇಕ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. +ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್‌ ಯಾದವ್‌, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್‌ ಸಾಯಿ, ರಾಜಸ್ಥಾನ ಸಿಎಂ ಭಜನಲಾಲ್‌ ಶರ್ಮಾ, ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್‌ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಕೂಡ ಉಪಸ್ಥಿತರಿರುವರು. +ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಲೋಕ್‌ ಜನಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌ ಅವರಿಗೂ ಆಹ್ವಾನ ನೀಡಲಾಗಿದೆ. ಮೇ 13ರಂದು ನಡೆಯಲಿರುವ ಪ್ರಧಾನಿ ನರೇಂದ್ರಮೋದಿ ಅವರ ರೋಡ್‌ಶೋಗೆ 5 ಲಕ್ಷಕ್ಕೂ ಹೆಚ್ಚು ಜನರನ್ನು ಒಟ್ಟುಗೂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. 13ರಂದು ವಾರಾಣಸಿಗೆ ಬರುವ ಪ್ರಧಾನಿ ಮೋದಿ, ಬನಾರಸ್‌ ಲೋಕೋಮೋಟಿವ್‌ ವರ್ಕ್‌ಶಾಪ್‌ನ ಅತಿಥಿ ಗೃಹದಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದ್ದು, ಇಲ್ಲಿಂದ ಹೊರಟು ಮರುದಿನ ಬೆಳಗ್ಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ನೇರವಾಗಿ ನಾಮಪತ್ರ ಸಲ್ಲಿಕೆಗೆ ತೆರಳಲಿದ್ದಾರೆ. +ಅಂದೇ ನಾಮಪತ್ರ ಸಲ್ಲಿಸಲು ಕಾರಣ ಏನು?:ಪ್ರಧಾನಿ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಸಲು ಬಲವಾದ ಕಾರಣವೂ ಇದೆ. ಮೇ 14 ಅತ್ಯಂತ ಮಂಗಳಕರ ದಿನ. ಗಂಗಾ ಸಪ್ತಮಿ ಕೂಡ ಇದೆ. ಈ ದಿನವು ಗಂಗೆಯ ಅವತಾರ ದಿನದ ಪವಿತ್ರ ಹಬ್ಬ. ಪಂಡಿತ್‌ ಋಷಿ ದ್ವಿವೇದಿ ಅವರ ಜ್ಯೋತಿಷ್ಯದ ದೃಷ್ಟಿಯಿಂದ ಮೇ14 ಬಹಳ ಒಳ್ಳೆಯ ದಿನ ಕೂಡ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಕೂಡ ಹೌದು. ಹಾಗಾಗಿ ಅಂದೇ ನಾಮಪತ್ರ ಸಲ್ಲಿಸಲು ಮೋದಿ ಸಿದ್ಧತೆ ನಡೆಸಿದ್ದಾರೆ. +ಇದೇ ಕ್ಷೇತ್ರದಿಂದ ಹಾಸ್ಯನಟ ಶ್ಯಾಮ್‌ ರಂಗೀಲಾ, ಕಾಂಗ್ರೆಸ್‌ನ ಅಜಯ್‌ ರಾಯ್‌ ಮತ್ತು ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಅಥರ್‌ ಅಲಿ ಲಾರಿ ಕಣಕ್ಕಿಳಿದಿದ್ದು ಅವರ ವಿರುದ್ಧ ಮೋದಿ ಅವರು ಸ್ಪರ್ಧಿಸಲಿದ್ದಾರೆ. ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದು 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಅವರು ಭರ್ಜರಿ ಜಯ ಸಾಧಿಸಿದ್ದರು. +ವಾರಾಣಸಿ ಲೋಕಸಭೆ ಚುನಾವಣೆ 2024ರ ಕೊನೆಯ ಮತ್ತು ಏಳನೇ ಹಂತದ ಚುನಾವಣೆಯಾಗಿದ್ದು ಜೂನ್‌ 1 ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಹೊರಬೀಳಲಿದೆ. ಏಳನೇ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಮೇ 7 ರಿಂದ ಪ್ರಾರಂಭವಾಗಿ ಮೇ 14 ರಂದು ಕೊನೆಗೊಳ್ಳಲಿದೆ. \ No newline at end of file diff --git a/eesanje/url_47_108_11.txt b/eesanje/url_47_108_11.txt new file mode 100644 index 0000000000000000000000000000000000000000..d95857523e54e790275f6d93cbbffa93ab2e760a --- /dev/null +++ b/eesanje/url_47_108_11.txt @@ -0,0 +1,7 @@ +ಇಂದು ಅಯೋಧ್ಯೆಯಲ್ಲಿ ಮೋದಿ ರಾಮಲಲ್ಲಾ ದರ್ಶನ, ರೋಡ್‌ ಶೋ +ಆಯೋಧ್ಯೆ,ಮೇ5-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇಂದು ಸಂಜೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್‌ ಶೋ ನಡೆಸಲಿದ್ದಾರೆ. +ಅಯೋಧ್ಯೆಯಲ್ಲಿ 2 ಕಿಲೋಮೀಟರ್‌ ರೋಡ್‌ ಶೋ ನಡೆಯಲಿದ್ದು, ಪ್ರಧಾನಿಯವರ ಅಯೋಧ್ಯೆ ಭೇಟಿಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. +ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಇಟಾವಾ ಮತ್ತು ಧೌರಾಹರಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಇದಾದ ಬಳಿಕ ಮೋದಿ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿದ್ದು, ಮೊದಲು ಅಲ್ಲಿ ಮೆಗಾ ರೋಡ್‌ ಶೋ ನಡೆಸಲಿದ್ದಾರೆ. +ಮಧ್ಯಾಹ್ನ 2.45 ರ ಸುಮಾರಿಗೆ ಇಟಾವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಅನಂತರ ಅವರು ಧೌರಾಹರಾಗೆ ತೆರಳುತ್ತಾರೆ, ಅಲ್ಲಿ ಅವರು ಸಂಜೆ 4.45ರ ಸುಮಾರಿಗೆ ಮತ್ತೊಂದು ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. +ಸಂಜೆ 7 ಗಂಟೆಗೆ, ಪ್ರಧಾನಿ ಅವರು ಈ ವರ್ಷದ ಜನವರಿಯಲ್ಲಿ ಉದ್ಘಾಟಿಸಿದ ಅಯೋಧ್ಯೆಯ ರಾಮ ಮಂದಿರದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ. ರಾತ್ರಿ 7:15 ರ ಸುಮಾರಿಗೆ, ಮೋದಿ ನಗರದಲ್ಲಿ ಮೆಗಾ ರೋಡ್‌ಶೋ ನಡೆಸಲಿದ್ದಾರೆ, ಇದು ಭಾರೀ ಜನಸಮೂಹವನ್ನು ಸೆಳೆಯುವ ನಿರೀಕ್ಷೆಯಿದೆ. +ಸಂಭಾಲ್‌, ಹತ್ರಾಸ್‌, ಆಗ್ರಾ, ಫತೇಪುರ್‌ ಸಿಕ್ರಿ, ಫಿರೋಜಾಬಾದ್‌, ಮೈನ್‌ಪುರಿ, ಎತಾಹ್‌, ಬದೌನ್‌, ಬರೇಲಿ ಮತ್ತು ಅಒನ್ಲಾ ಸೇರಿದಂತೆ ಹತ್ತು ಕ್ಷೇತ್ರಗಳಿಗೆ ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನಕ್ಕೆ ಮುಂಚಿತವಾಗಿ ಮೋದಿ ಭೇಟಿ ನೀಡಲಿದ್ದಾರೆ. \ No newline at end of file diff --git a/eesanje/url_47_108_12.txt b/eesanje/url_47_108_12.txt new file mode 100644 index 0000000000000000000000000000000000000000..cc9cee7f5a6f7850690639d64dba39f0799d636f --- /dev/null +++ b/eesanje/url_47_108_12.txt @@ -0,0 +1,7 @@ +ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು +ಬೆಂಗಳೂರು,ಮೇ5-ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 44.7 ಡಿ.ಸೆ.ನಷ್ಟು ದಾಖಲಾಗಿದೆ. ಕಲ್ಯಾಣ ಕರ್ನಾಟಕ ಅಕ್ಷರಶಃ ಬಿಸಿಲ ನಾಡಾಗಿ ಪರಿಣಮಿಸಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ 3ರಿಂದ 4 ಡಿ.ಸೆ.ನಷ್ಟು ಸರಾಸರಿಗಿಂತ ಹೆಚ್ಚು ದಾಖಲಾಗುತ್ತಿದ್ದು, ಜನರು ತತ್ತರಿಸುವಂತೆ ಮಾಡಿದೆ. +ರಾಜ್ಯದಲ್ಲಿ ಒಣಹವೆ ಮುಂದುವರೆದಿದ್ದು, ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳೆರಡರಲ್ಲೂ 2ರಿಂದ 3 ಡಿ.ಸೆ.ನಷ್ಟು ಹೆಚ್ಚಳವಾಗಿರುವುದು ಕಂಡುಬರುತ್ತಿದೆ. +ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಕಲಬುರಗಿಯಲ್ಲಿ 44.7 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿದ್ದರೆ, ಧಾರವಾಡದಲ್ಲಿ 20.4 ಡಿ.ಸೆ ಕನಿಷ್ಠ ತಾಪಮಾನ ದಾಖಲಾಗಿದೆ. ರಾಜ್ಯದಲ್ಲಿ ಈಗಾಗಲೇ ಒಂದೆರಡು ಜಿಲ್ಲೆಗಳ ಹೊರತುಪಡಿಸಿದರೆ ಗರಿಷ್ಠ ತಾಪಮಾನ 37 ಡಿ.ಸೆ ಗಡಿ ದಾಟಿದೆ. +ಕಲ್ಯಾಣ ಕರ್ನಾಟಕ ಭಾಗದ ಬೀದರ್‌ 42, ವಿಜಯಪುರ, ಬಾಗಲಕೋಟೆ 42.5, ಕೊಪ್ಪಳ 43.3, ರಾಯಚೂರು 44.4, ಕಾರವಾರ 34.4, ಬೆಳಗಾವಿ ನಗರ 39, ಧಾರವಾಡ 39.6, ಹಾವೇರಿ 37.2, ಗದಗ 40.2, ಬೆಂಗಳೂರು 37.6, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 39.2, ಚಾಮರಾಜನಗರ 38.1, ಚಿತ್ರದುರ್ಗ 38.9, ದಾವಣಗೆರೆ 38.5, ಹಾಸನ 37.2, ಮಂಡ್ಯ 38.2, ಮೈಸೂರು 38.1, ಶಿವಮೊಗ್ಗದಲ್ಲಿ 38.4 ಡಿ.ಸೆ.ನಷ್ಟು ಗರಿಷ್ಠ ತಾಪಮಾನ ದಾಖಲಾಗಿವೆ. +ಹವಾಮಾನ ಮುನ್ಸೂಚನೆ ಪ್ರಕಾರ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. +ಕೆಲವೆಡೆ ಚದುರಿದಂತೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಬಹುದು. ಕೆಲವೆಡೆ ಗಾಳಿಯ ಆರ್ಭಟವು ಹೆಚ್ಚಾಗಿರುವ ಸಾಧ್ಯತೆಗಳಿವೆ. ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಮೇ 7ರಿಂದ 9ರ ನಡುವಿನ ಅವಧಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. \ No newline at end of file diff --git a/eesanje/url_47_108_2.txt b/eesanje/url_47_108_2.txt new file mode 100644 index 0000000000000000000000000000000000000000..65858d5995f3669e70ef7eca4a01699bd64b79be --- /dev/null +++ b/eesanje/url_47_108_2.txt @@ -0,0 +1,6 @@ +ವೇಮುಲಾ ಆತಹತ್ಯೆಯಲ್ಲಿ ರಾಜಕೀಯ ಮಾಡಿದ ರಾಹುಲ್‌ ಕ್ಷಮೆಯಾಚಿಸಬೇಕು ; ನಿರ್ಮಲಾ +ಪುಣೆ,ಮೇ.5-ಕಳೆದ 2016ರಲ್ಲಿ ಮತಪಟ್ಟ ಹೈದರಾಬಾದ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್‌ ವೇಮುಲಾ ಅವರ ಆತಹತ್ಯೆಯನ್ನು ರಾಜಕೀಯಗೊಳಿಸಿದ್ದಕ್ಕಾಗಿ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆಗ್ರಹಿಸಿದ್ದಾರೆ. +ತೆಲಂಗಾಣ ಪೊಲೀಸರು ವೇಮುಲನ ಸಾವಿನ ತನಿಖೆಯ ನಂತರ ನ್ಯಾಯಾಲಯದ ಮುಂದೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ, ಅವನು ದಲಿತನಲ್ಲ ಮತ್ತು ತನ್ನ ನಿಜವಾದ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಪ್ರತಿಪಾದಿಸಿದ್ದಾರೆ. +ಪುಣೆಯಲ್ಲಿ ಆಯ್ದ ಪತ್ರಕರ್ತರ ಗುಂಪಿನೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಆಡಳಿತದ ರಾಜ್ಯದಲ್ಲಿ ಪೊಲೀಸ್‌‍ ವರದಿಯನ್ನು ದಾಖಲಿಸಲಾಗಿದೆ ಎಂದು ಸೂಚಿಸಿದರು.ಪೊಲೀಸರ ವರದಿಯಲ್ಲಿ ಅವರು ಎಸ್‌‍ಸಿ (ಪರಿಶಿಷ್ಟ ಜಾತಿ) ಎಂಬ ತಪ್ಪು ಪ್ರಮಾಣಪತ್ರವನ್ನು ಹೊಂದಿದ್ದಾರೆ ಮತ್ತು ಅವರು ಎಸ್‌‍ಸಿ ಅಲ್ಲ ಎಂದು ಹೇಳುತ್ತದೆ. ಆದರೂ ರಾಹುಲ್‌ ಗಾಂಧಿ ಅವರು ಸಾರ್ವಜನಿಕವಾಗಿ ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸಿದರು ಎಂದು ಕೇಂದ್ರ ಸಚಿವರು ಆರೋಪಿಸಿದರು. +ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ ಭಾಷಣಗಳನ್ನು ಆಲಿಸಬೇಕು ಮತ್ತು ದೇಶದ ಕ್ಷಮೆಯಾಚಿಸಬೇಕು ಎಂದು ಸೀತಾರಾಮನ್‌ ಆಗ್ರಹಿಸಿದರು. ಎಸ್‌‍ಸಿ ಸಮುದಾಯವನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕಾಗಿ ಅವರು ಕ್ಷಮೆ ಯಾಚಿಸಬೇಕು. +ಇದು ದಲಿತರ ಸಮಸ್ಯೆ ಅಲ್ಲ (ಗಾಂಧಿ) ಇದನ್ನು ದಲಿತರ ಸಮಸ್ಯೆಯಂತೆ ಕಾಣುವಂತೆ ಮಾಡಿದ್ದಾರೆ. ಈಗ ಅವರು ಮೊಹಬ್ಬತ್‌ ಕಿ ದುಕಾನ್‌ ನಡೆಸುತ್ತಿದ್ದಾರೆ, ಆದರೆ ಆಗ ಅವರು ನಡೆಸುತ್ತಿದ್ದಾರೆ ವಿಷಕಾರಿ ದುಕಾನ್‌ ಮತ್ತು ಅದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು. \ No newline at end of file diff --git a/eesanje/url_47_108_3.txt b/eesanje/url_47_108_3.txt new file mode 100644 index 0000000000000000000000000000000000000000..263df9b1a26a2a2b07a2b94ca6ad9fbea5e28285 --- /dev/null +++ b/eesanje/url_47_108_3.txt @@ -0,0 +1,9 @@ +ಬಂಧಿತರಾದ ನಿಜ್ಜರ್‌ ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿಗಾಗಿ ಕಾಯುತ್ತಿದ್ದೇವೆ: ಜೈಶಂಕರ್‌ +ಭುವನೇಶ್ವರ,ಮೇ.5-ಕಳೆದ ವರ್ಷ ಖಲಿಸ್ತಾನಿ ಭಯೋತ್ಪಾದಕನನ್ನು ಹತ್ಯೆಗೈದ ಆರೋಪದಲ್ಲಿ ಬಂಧಿಸಿರುವ ಮೂವರು ಭಾರತೀಯರ ಮಾಹಿತಿಯನ್ನು ಕೆನಡಾದ ಪೊಲೀಸರು ಹಂಚಿಕೊಳ್ಳುವುದನ್ನು ಭಾರತ ಕಾಯುತ್ತಿದೆ ಎಂದು ವಿದೇಶಾಂಗ ಸಚಿವ ಎಸ್‌‍ ಜೈಶಂಕರ್‌ ಹೇಳಿದ್ದಾರೆ. +ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಗೆ ಸಂಬಂಧಿಸಿದಂತೆ ಕೆನಡಾದ ಪೊಲೀಸರು ಮೂವರ ಮೇಲೆ ಆರೋಪ ಹೊರಿಸಿದ್ದಾರೆ ಮತ್ತು ಶಂಕಿತರು ಭಾರತ ಸರ್ಕಾರದೊಂದಿಗೆ ಸಂಪರ್ಕ ಹೊಂದಿದ್ದಾರೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. +ಜೈಶಂಕರ್‌ ಅವರು ಬಂಧನದ ಸುದ್ದಿಯನ್ನು ನೋಡಿರುವುದಾಗಿ ಹೇಳಿದರು ಮತ್ತು ಶಂಕಿತರು ಸ್ಪಷ್ಟವಾಗಿ ಕೆಲವು ರೀತಿಯ ಗ್ಯಾಂಗ್‌ ಹಿನ್ನೆಲೆಯ ಭಾರತೀಯರು. ಈ ಬಗ್ಗೆ ಕೆನಡಾ ಪೊಲೀಸರು ನಮಗೆ ತಿಳಿಸಲು ನಾವು ಕಾಯಬೇಕಾಗಿದೆ ಎಂದು ಹೇಳಿದರು. +ಆದರೆ, ನಾನು ಹೇಳಿದಂತೆ, ನಾವು ಅವರಿಗೆ ಹೇಳುತ್ತಿರುವ ನಮ ಕಾಳಜಿಯೆಂದರೆ, ಅವರು ಭಾರತದಿಂದ ನಿರ್ದಿಷ್ಟವಾಗಿ ಪಂಜಾಬ್‌ನಿಂದ ಕೆನಡಾದಲ್ಲಿ ಕಾರ್ಯನಿರ್ವಹಿಸಲು ಸಂಘಟಿತ ಅಪರಾಧಗಳನ್ನು ಅನುಮತಿಸಿದ್ದಾರೆ ಎಂಬುದು ನಿಮಗೆ ತಿಳಿದಿದೆ ಎಂದು ಜೈಶಂಕರ್‌ ಹೇಳಿದರು. +ಬಂಧಿತ ಮೂವರು ಭಾರತೀಯರ ಬಗ್ಗೆ ಕೆನಡಾದ ಅಧಿಕಾರಿಗಳಿಂದ ನಿಯಮಿತವಾಗಿ ನವೀಕರಣಗಳನ್ನು ಪಡೆಯುವ ಭರವಸೆ ಇದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನರ್‌ ಸಂಜಯ್‌ ವರ್ಮಾ ಹೇಳಿದ್ದಾರೆ. ಸಂಬಂಧಿತ ಕೆನಡಾದ ಕಾನೂನು ಜಾರಿ ಸಂಸ್ಥೆಗಳು ನಡೆಸಿದ ತನಿಖೆಗಳ ಪರಿಣಾಮವಾಗಿ ಬಂಧನಗಳನ್ನು ಮಾಡಲಾಗಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. +ಈ ಸಮಸ್ಯೆಯು ಕೆನಡಾದ ಆಂತರಿಕವಾಗಿದೆ ಮತ್ತು ಆದ್ದರಿಂದ ಈ ವಿಷಯದಲ್ಲಿ ನಾವು ಯಾವುದೇ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ವರ್ಮಾ ಹೇಳಿದ್ದಾರೆ. +ಎಲ್ಲಾ ಭಾರತೀಯ ಪ್ರಜೆಗಳನ್ನು ಆಲ್ಬರ್ಟಾದ ಎಡಂಟನ್‌ ನಗರದಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.45 ವರ್ಷದ ನಿಜ್ಜರ್‌ ಅವರನ್ನು ಜೂನ್‌ನಲ್ಲಿ ದೊಡ್ಡ ಸಿಖ್‌ ಜನಸಂಖ್ಯೆಯನ್ನು ಹೊಂದಿರುವ ವ್ಯಾಂಕೋವರ್‌ ಉಪನಗರವಾದ ಸರ್ರೆಯ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು. +ಕೆಲವು ತಿಂಗಳುಗಳ ನಂತರ, ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್‌ ಟ್ರುಡೊ ಭಾರತ ಸರ್ಕಾರದ ಒಳಗೊಳ್ಳುವಿಕೆಯನ್ನು ಆರೋಪಿಸಿದರು, ಇದು ಹೊಸ ದೆಹಲಿಯೊಂದಿಗೆ ರಾಜತಾಂತ್ರಿಕ ಬಿಕ್ಕಟ್ಟನ್ನು ಪ್ರೇರೇಪಿಸಿತು \ No newline at end of file diff --git a/eesanje/url_47_108_4.txt b/eesanje/url_47_108_4.txt new file mode 100644 index 0000000000000000000000000000000000000000..cca4d3843c187567a8346efd57ac84d99eca21f7 --- /dev/null +++ b/eesanje/url_47_108_4.txt @@ -0,0 +1,8 @@ +ವಾಯುಪಡೆ ಯೋಧರ ಮೇಲೆ ದಾಳಿಮಾಡಿದ ಉಗ್ರರಿಗಾಗಿ ಬೃಹತ್‌ ಶೋಧ +ಜಮ್ಮು,ಮೇ.5-ವಾಯುಪಡೆಯ ಬೆಂಗಾವಲು ಪಡೆಯ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ವಾಯು ಯೋಧ ಸಾವನ್ನಪ್ಪಿದ ನಂತರ ಜಮು ಮತ್ತು ಕಾಶೀರದ ಪೂಂಚ್‌ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಬಹತ್‌ ಶೋಧ ಕಾರ್ಯಾಚರಣೆ ನಡೆಸುತ್ತಿವೆ. +ಜಿಲ್ಲೆಯ ಸುರನ್‌ಕೋಟೆ ತಹಸಿಲ್‌ನ ಬಕ್ರಬಲ್‌ ಮೊಹಲ್ಲಾ (ಸನೈ) ಪ್ರದೇಶದಲ್ಲಿ ಶನಿವಾರ ಸಂಜೆ ಭಯೋತ್ಪಾದಕರು ವಾಯುಪಡೆಯ ಎರಡು ವಾಹನಗಳ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದರು. +ಏರ್‌ ಫೋರ್ಸ್‌ ತನ್ನ ಎಕ್ಸ್ -ಪೋಸ್ಟ್‌ ಹ್ಯಾಂಡಲ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ, ಏರ್‌ ವಾರಿಯರ್ಸ್‌ ಮತ್ತೆ ಗುಂಡಿನ ದಾಳಿಯ ಮೂಲಕ ಹೋರಾಡಿದರು. ಈ ಪ್ರಕ್ರಿಯೆಯಲ್ಲಿ, ಐವರು ಐಎಎಫ್‌ ಸಿಬ್ಬಂದಿಗೆ ಬುಲೆಟ್‌ ಗಾಯಗಳಾಗಿದ್ದು, ತಕ್ಷಣದ ವೈದ್ಯಕೀಯ ಆರೈಕೆಗಾಗಿ ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಒಬ್ಬ ಏರ್‌ ವಾರಿಯರ್‌ ನಂತರ ಗಾಯಗೊಂಡು ಸಾವನ್ನಪ್ಪಿದರು. ಸ್ಥಳೀಯ ಭದ್ರತಾ ಪಡೆಗಳಿಂದ ಮುಂದಿನ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಹೇಳಿಕೊಂಡಿದೆ. +ಗಾಯಗೊಂಡ ನಾಲ್ವರು ವಾಯು ಯೋಧರನ್ನು ಉತ್ತರ ಕಮಾಂಡ್‌ನ ಉಧಮ್‌ಪುರ ಪ್ರಧಾನ ಕಮಾಂಡ್‌ನಲ್ಲಿರುವ ಕಮಾಂಡ್‌ ಆಸ್ಪತ್ರೆಗೆ ಏರ್‌ಲಿಫ್‌್ಟ ಮಾಡಲಾಗಿದೆ. ಗಾಯಗೊಂಡ ಒಬ್ಬ ವಾಯು ಯೋಧ ಚಿಂತಾಜನಕವಾಗಿದ್ದು, ಉಳಿದ ಮೂವರು ವೈದ್ಯರ ಪ್ರಕಾರ ಸ್ಥಿರರಾಗಿದ್ದಾರೆ. +ಭಯೋತ್ಪಾದಕ ದಾಳಿಯು ಡಿಸೆಂಬರ್‌ 21, 2023 ರಂದು ಸಂಭವಿಸಿದ ದಾಳಿಯನ್ನು ಹೋಲುತ್ತದೆ, ಇದರಲ್ಲಿ ಭಯೋತ್ಪಾದಕರು ಸೇನಾ ವಾಹನವನ್ನು ಹೊಂಚು ಹಾಕಿ ನಾಲ್ವರು ಸೈನಿಕರನ್ನು ಕೊಂದರು. ಪೂಂಚ್‌ ಜಿಲ್ಲೆಯ ಬಫ್ಲಿಯಾಜ್‌ನ ಡೇರಾ ಕಿ ಗಲಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. +ನಂತರ ನಿಗೂಢ ಪರಿಸ್ಥಿತಿಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದು, ಪ್ರತೀಕಾರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಆ ಪ್ರದೇಶಕ್ಕೆ ಭೇಟಿ ನೀಡಿ ನಾಗರಿಕರ ಪ್ರಾಣ ಮತ್ತು ಆಸ್ತಿಯನ್ನು ರಕ್ಷಿಸಲು ಸೈನ್ಯವಿದೆ ಎಂದು ಖಚಿತಪಡಿಸಿದರು. +ಆರೋಪದ ನಂತರ, ಅನೇಕ ಉನ್ನತ ಸೇನಾ ಅಧಿಕಾರಿಗಳನ್ನು ಪೂಂಚ್‌ನಿಂದ ಸ್ಥಳಾಂತರಿಸಲಾಯಿತು ಮತ್ತು ನಾಗರಿಕರಲ್ಲಿ ವಿಶ್ವಾಸವನ್ನು ತುಂಬಲು ಆಜ್ಞೆಯನ್ನು ಸಹ ಕೂಲಂಕಷವಾಗಿ ಪರಿಶೀಲಿಸಲಾಯಿತು. ಭಯೋತ್ಪಾದಕರ ಪತ್ತೆಗೆ ಇಂದು ಬೆಳಗ್ಗೆ ಆರಂಭವಾದ ಬಹತ್‌ ಶೋಧ ಕಾರ್ಯಾಚರಣೆಯನ್ನು ಸಂಬಂಧಪಟ್ಟ ಜಿಲ್ಲೆಯ ಜಿಒಸಿ, ಡಿಐಜಿ ಮತ್ತು ಎಸ್‌‍ಎಸ್‌‍ಪಿ ಸೇರಿದಂತೆ ಹಿರಿಯ ಸೇನೆ ಮತ್ತು ಪೊಲೀಸ್‌‍ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ. \ No newline at end of file diff --git a/eesanje/url_47_108_5.txt b/eesanje/url_47_108_5.txt new file mode 100644 index 0000000000000000000000000000000000000000..b04ca6cd67c3f28b1c19b771aa10353e4af8e7cf --- /dev/null +++ b/eesanje/url_47_108_5.txt @@ -0,0 +1,13 @@ +ಪಿಒಕೆ ಜನರೇ ಭಾರತ ಸೇರಲಿಚ್ಚಿಸುವ ದಿನ ಬರಲಿದೆ ; ರಾಜನಾಥ್‌ಸಿಂಗ್‌ +ನವದೆಹಲಿ, ಮೇ 5 (ಪಿಟಿಐ) :ಪಾಕ್‌ ಆಕ್ರಮಿತ ಕಾಶ್ಮೀರದ ಮೇಲಿನ ಹಕ್ಕನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ ಹಾಗಂತ ಬಲವಂತವಾಗಿ ಅದನ್ನು ವಶಪಡಿಸಿಕೊಳ್ಳಲು ಹೋಗುವುದಿಲ್ಲ. ಕಾಶೀರದ ಬೆಳವಣಿಗೆ ಹಿನ್ನೆಲೆಯಲ್ಲಿ ಅಲ್ಲಿನ ಜನರೇ ಸ್ವಇಚ್ಚೆಯಿಂದ ಭಾರತದ ಭಾಗವಾಗಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. +ಪಿಟಿಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು, ಜಮು ಮತ್ತು ಕಾಶೀರದಲ್ಲಿ ನೆಲದ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಇನ್ನು ಮುಂದೆ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಅಗತ್ಯವಿಲ್ಲದ ಸಮಯ ಬರುತ್ತದೆ ಎಂದು ಸಿಂಗ್‌ ಪ್ರತಿಪಾದಿಸಿದರು. +ಆದಾಗ್ಯೂ, ಈ ವಿಷಯವು ಕೇಂದ್ರ ಗಹ ಸಚಿವಾಲಯದ ನಿರ್ಧಾರಕ್ಕೆ ಒಳಪಟ್ಟಿದ್ದು, ಅದು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ರಕ್ಷಣಾ ಸಚಿವರು ಹೇಳಿದ್ದಾರೆ. ಅಲ್ಲಿಯೂ ಖಂಡಿತವಾಗಿಯೂ ಚುನಾವಣೆ ನಡೆಯಲಿದೆ, ಆದರೆ ಕಾಲಮಿತಿ ನೀಡುವುದಿಲ್ಲ ಎಂದರು. +ಭಾರತವು ಏನನ್ನೂ ಮಾಡಬೇಕಾಗಿಲ್ಲ ಎಂದು ನಾನು ಭಾವಿಸುತ್ತೇನೆ. ಜಮು ಮತ್ತು ಕಾಶೀರದಲ್ಲಿ ನೆಲದ ಪರಿಸ್ಥಿತಿ ಬದಲಾಗಿರುವ ರೀತಿ, ಈ ಪ್ರದೇಶವು ಆರ್ಥಿಕ ಪ್ರಗತಿಗೆ ಸಾಕ್ಷಿಯಾಗುತ್ತಿರುವ ರೀತಿ ಮತ್ತು ಅಲ್ಲಿ ಶಾಂತಿ ಮರಳಿದ ರೀತಿಯಿಂದ ಪಿಒಕೆ ಜನರಿಂದ ಭಾರತದ ಭಾಗವಾಗುವ ಬೇಡಿಕೆಗಳು ಹೊರಹೊಮುತ್ತವೆ ಎಂದು ನಾನು ಭಾವಿಸುತ್ತೇನೆ. +ಜಮು ಮತ್ತು ಕಾಶೀರದಲ್ಲಿ ಪಾಕಿಸ್ತಾನದ ಪ್ರಾಕ್ಸಿ ಯುದ್ಧವನ್ನು ಉಲ್ಲೇಖಿಸಿದ ರಕ್ಷಣಾ ಸಚಿವರು, ಇಸ್ಲಾಮಾಬಾದ್‌ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸಬೇಕು ಎಂದು ಹೇಳಿದರು. ಅವರು ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ನಾವು ಇದನ್ನು ಮಾಡಲು ಬಿಡುವುದಿಲ್ಲ ಎಂದು ಅವರು ಹೇಳಿದರು. +ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ 2019 ರ ಫೆಬ್ರವರಿಯಲ್ಲಿ ಪಾಕಿಸ್ತಾನದ ಬಾಲಾಕೋಟ್‌ನಲ್ಲಿನ ಜೈಶ್‌‍-ಎ-ಮೊಹಮದ್‌ ಭಯೋತ್ಪಾದಕ ತರಬೇತಿ ಶಿಬಿರವನ್ನು ಭಾರತದ ಯುದ್ಧ ವಿಮಾನಗಳು ಹೊಡೆದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳು ತೀವ್ರವಾಗಿ ಹದಗೆಟ್ಟಿವೆ. +ಕಾಂಗ್ರೆಸ್‌‍ನಿಂದು ಹಿಂದೂ-ಮುಸ್ಲಿಂ ವಿಭಜನೆ ಯತ್ನ : ಬಿಜೆಪಿಯು ಸತತ ಮೂರನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಂಡರೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಒಂದು ರಾಷ್ಟ್ರ ಒಂದು ಚುನಾವಣೆಯಂತಹ ದೊಡ್ಡ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಸಿಂಗ್‌ ಹೇಳಿದರು. +ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) 400 ಸ್ಥಾನಗಳನ್ನು ದಾಟಲಿದೆ ಮತ್ತು ಬಿಜೆಪಿ 370 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ರಕ್ಷಣಾ ಸಚಿವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಏಕೆಂದರೆ ಈ ಪ್ರಕ್ಷೇಪಗಳು ನೆಲದ ಪರಿಸ್ಥಿತಿಯ ವಿವರವಾದ ಮೌಲ್ಯಮಾಪನದ ನಂತರ ಮಾಡಲ್ಪಟ್ಟಿದೆ ಮತ್ತು ಸಾರ್ವಜನಿಕ ಬಳಕೆಗೆ ಮಾತ್ರ ಮಾಡಲಾಗಿಲ್ಲ. +ಒಟ್ಟಾರೆ ರಾಜಕೀಯ ಭೂದಶ್ಯದಲ್ಲಿ, ಸಾಮಾಜಿಕ ಸಾಮರಸ್ಯವನ್ನು ಕದಡಲು ಕಾಂಗ್ರೆಸ್‌‍ ಪ್ರಯತ್ನಿಸುತ್ತಿದೆ ಮತ್ತು ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆಯನ್ನು ಸಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಕ್ಷಣಾ ಸಚಿವರು ಆರೋಪಿಸಿದರು. ಅವರು ಚುನಾವಣಾ ಲಾಭಕ್ಕಾಗಿ ಹಿಂದೂ-ಮುಸ್ಲಿಂ ವಿಭಜನೆಯನ್ನು ಸಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌‍ ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆಯನ್ನು ಸಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. +ಕಾಂಗ್ರೆಸ್‌‍ ಸಾಮಾಜಿಕ ಸಾಮರಸ್ಯವನ್ನು ಕದಡಲು ಬಯಸುತ್ತದೆ. ಅವರು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್‌ ಬ್ಯಾಂಕ್‌ ಆಗಿ ನೋಡುತ್ತಾರೆ. ಅವರಿಗೆ ನನ್ನದೊಂದು ಸಲಹೆ ಇದೆ ಸರ್ಕಾರ ರಚನೆಗಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕೀಯದ ಗುರಿ ರಾಷ್ಟ್ರ ನಿರ್ಮಾಣಕ್ಕೆ ಇರಬೇಕು. ಅವರು ಹೇಳಿದರು. +ಸಂವಿಧಾನ ಬದಲಿಸಲ್ಲ: ಬಿಜೆಪಿ ಸರ್ಕಾರವು ಸಂವಿಧಾನವನ್ನು ಎಂದಿಗೂ ಬದಲಾಯಿಸುವುದಿಲ್ಲ ಅಥವಾ ಮೀಸಲಾತಿಯನ್ನು ಕೊನೆಗೊಳಿಸುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ, ಕಾಂಗ್ರೆಸ್‌‍ ಪಕ್ಷದವರು ವೋಟ್‌ ಬ್ಯಾಂಕ್‌‍ ರಾಜಕೀಯಕ್ಕಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಬಿಜೆಪಿ ಎಂದಿಗೂ ಸಂವಿಧಾನವನ್ನು ಬದಲಾಯಿಸುವುದಿಲ್ಲ. ಸಂವಿಧಾನ ರಚನೆಕಾರರು ಪೀಠಿಕೆಯಲ್ಲಿ ಬದಲಾವಣೆಗಳಾಗಬಹುದು ಎಂದು ಊಹಿಸಿರಲಿಲ್ಲ. ನೀವು (ಕಾಂಗ್ರೆಸ್‌‍) ಕೇವಲ ಸಂವಿಧಾನದ ಮೂಲ ಕಲ್ಪನೆಯನ್ನು ಘಾಸಿಗೊಳಿಸುವ ಕೆಲಸ ಮಾಡಿದ್ದೀರಿ ಎಂದು ಸಿಂಗ್‌ ಹೇಳಿದರು. \ No newline at end of file diff --git a/eesanje/url_47_108_6.txt b/eesanje/url_47_108_6.txt new file mode 100644 index 0000000000000000000000000000000000000000..85f4d8eb4fabbe4280ed38340d193dcceeee00dc --- /dev/null +++ b/eesanje/url_47_108_6.txt @@ -0,0 +1,8 @@ +ಸಲ್ಮಾನ್ ಖಾನ್ ಮನೆಮೇಲೆ ಗುಂಡಿನ ದಾಳಿ ಆರೋಪಿ ಆತಹತ್ಯೆ, ಕೋರ್ಟ್‌ ಮೊರೆ ಹೋದ ತಾಯಿ +ಮುಂಬೈ, ಮೇ 5 (ಪಿಟಿಐ) :ಬಾಲಿವುಡ್‌ ಸೂಪರ್‌ಸ್ಟಾರ್‌ ಸಲಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದಲ್ಲಿ ಬಂಧನದ ನಂತರ ಪೊಲೀಸ್‌‍ ಕಸ್ಟಡಿಯಲ್ಲಿದ್ದಾಗ ಸಾವನ್ನಪ್ಪಿದ ಅನುಜ್‌ ಥಾಪನ್‌ ಸಾವಿನ ಕುರಿತು ಸಿಬಿಐ ತನಿಖೆಗೆ ಕೋರಿ ಅವರ ಕುಟುಂಬ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. +ಥಾಪನ್‌ ಲಾಕ್‌ಅಪ್‌ನಲ್ಲಿ ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರೆ, ಅವರ ತಾಯಿ ರೀಟಾ ದೇವಿ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಉದ್ದೇಶಪೂರ್ವಕವಾಗಿ ನನ್ನ ಮಗನನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +ಮುಂದಿನ ದಿನಗಳಲ್ಲಿ ವಿಚಾರಣೆಗೆ ಬರಲಿರುವ ಅರ್ಜಿಯಲ್ಲಿ ದೇವಿ ಅವರು ತಮ ಮಗನ ಸಾವಿನ ಕುರಿತು ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶಿಸುವಂತೆ ಹೈಕೋರ್ಟ್‌ಗೆ ಕೋರಿದ್ದಾರೆ.ಕಸ್ಟಡಿಯಲ್ಲಿದ್ದ ಪೊಲೀಸರು ಥಾಪನ್‌ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಮತ್ತು ಚಿತ್ರಹಿಂಸೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. +ಥಾಪನ್‌ನನ್ನು ಬಂಧಿಸಿರುವ ಪೊಲೀಸ್‌‍ ಠಾಣೆ ಮತ್ತು ಲಾಕ್‌ಅಪ್‌ನ ಸಿಸಿಟಿವಿ ದಶ್ಯಾವಳಿಗಳನ್ನು ಹಸ್ತಾಂತರಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡುವಂತೆ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದಾರೆ. ಏಪ್ರಿಲ್‌ 24 ರಿಂದ ಮೇ 2 ರವರೆಗೆ ಗುಂಡಿನ ದಾಳಿಯ ತನಿಖೆ ನಡೆಸುತ್ತಿರುವ ಪೊಲೀಸ್‌‍ ಅಧಿಕಾರಿಗಳ ಕರೆ ಡೇಟಾ ದಾಖಲೆಗಳನ್ನು (ಸಿಡಿಆರ್‌) ಸಂರಕ್ಷಿಸುವಂತೆ ಅರ್ಜಿದಾರರು ಕೋರಿದ್ದಾರೆ.ಥಾಪನ್‌ನ ಸಾವಿನ ಕುರಿತು ಹೊಸದಾಗಿ ಮರಣೋತ್ತರ ಪರೀಕ್ಷೆಗೆ ನಿರ್ದೇಶನಗಳನ್ನು ಕೇಳಿದೆ. +ಗುಂಡು ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ಥಾಪನ್‌, ಸೋನು ಬಿಷ್ಣೋಯ್‌‍, ಆಪಾದಿತ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ದರೋಡೆಕೋರ ಲಾರೆನ್ಸ್ ಬಿಷ್ಣೋಯ್‌ ಮತ್ತು ಅವರ ಸಹೋದರ ಅನೋಲ್‌ ಬಿಷ್ಣೋಯ್‌ ಅವರನ್ನು ಪೊಲೀಸರು ಬೇಕಾಗಿರುವ ಆರೋಪಿಗಳೆಂದು ಘೋಷಿಸಿದ್ದಾರೆ. +ಗುಂಡಿನ ಘಟನೆಗೆ ಬಂದೂಕು ಮತ್ತು ಗುಂಡುಗಳನ್ನು ಸರಬರಾಜು ಮಾಡಿದ ಆರೋಪಿ ಥಾಪನ್‌ ಅವರನ್ನು ಏಪ್ರಿಲ್‌ 26 ರಂದು ಪಂಜಾಬ್‌ನಿಂದ ಸೋನು ಬಿಷ್ಣೋಯ್‌ ಜೊತೆಗೆ ಬಂಧಿಸಲಾಯಿತು ಮತ್ತು ಏಪ್ರಿಲ್‌ 30 ರವರೆಗೆ ಪೊಲೀಸ್‌‍ ಕಸ್ಟಡಿಗೆ ನೀಡಲಾಯಿತು. ಏಪ್ರಿಲ್‌ 29 ರಂದು, ಪೊಲೀಸರು ಥಾಪನ್‌ ಸೇರಿದಂತೆ ಎಲ್ಲಾ ನಾಲ್ವರು ಆರೋಪಿಗಳನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು, ಅದು ಅವರನ್ನು ಮೇ 8 ರವರೆಗೆ ಪೊಲೀಸ್‌‍ ಕಸ್ಟಡಿಗೆ ನೀಡಿದೆ. +ಮೇ 1 ರಂದು ಇಲ್ಲಿನ ಕ್ರಾಫರ್ಡ್‌ ಮಾರ್ಕೆಟ್‌ನಲ್ಲಿರುವ ಕಮಿಷನರೇಟ್‌ ಕಾಂಪ್ಲೆಕ್‌್ಸನಲ್ಲಿರುವ ಅಪರಾಧ ವಿಭಾಗದ ಲಾಕ್‌ಅಪ್‌ನ ಶೌಚಾಲಯದಲ್ಲಿ ಥಾಪನ್‌ ಶವವಾಗಿ ಪತ್ತೆಯಾಗಿದ್ದರು. ಏಪ್ರಿಲ್‌ 14 ರಂದು ಮುಂಬೈನ ಬಾಂದ್ರಾ ಪ್ರದೇಶದಲ್ಲಿ ಸಲಾನ್‌ ಖಾನ್‌ ಅವರ ನಿವಾಸದ ಹೊರಗೆ ಮೋಟಾರ್‌ ಬೈಕ್‌ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು. \ No newline at end of file diff --git a/eesanje/url_47_108_7.txt b/eesanje/url_47_108_7.txt new file mode 100644 index 0000000000000000000000000000000000000000..3aab86661cc9b9e8079014143c86ea0e970884eb --- /dev/null +++ b/eesanje/url_47_108_7.txt @@ -0,0 +1,5 @@ +9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ 72 ವರ್ಷದ ವೃದ್ದನ ಬಂಧನ +ಥಾಣೆ, ಮೇ 5 (ಪಿಟಿಐ) :ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಕರಿ ಮಾಲೀಕ 72 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. +ಕಳೆದ ಏಪ್ರಿಲ್‌ 30 ರಂದು ಸಂಜೆ ಸಂತ್ರಸ್ತೆ ಕಲ್ಯಾಣ್‌ ಪ್ರದೇಶದಲ್ಲಿರುವ ಬೇಕರಿ ಅಂಗಡಿಗೆ ಕೆಲವು ತಿಂಡಿಗಳನ್ನು ಖರೀದಿಸಲು ಹೋದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಆ ವ್ಯಕ್ತಿ ಬಾಲಕಿಯನ್ನು ಚಾಕಲೇಟ್‌ಗಳ ಆಮಿಷವೊಡ್ಡಿ ಅಂಗಡಿಯೊಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಕಲ್ಯಾಣ್‌ನ ಎಂಎಫ್‌ಸಿ ಪೊಲೀಸ್‌‍ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.ಅಪರಾಧದ ಬಗ್ಗೆ ಬಾಲಕಿಯ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. +ನಂತರ ಘಟನೆಯ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು, ಅವರು ಪೊಲೀಸ್‌‍ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪೊಲೀಸರು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ವೃದ್ಧನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_108_8.txt b/eesanje/url_47_108_8.txt new file mode 100644 index 0000000000000000000000000000000000000000..d59720e6d597d924943f29e160067e92b9e974ef --- /dev/null +++ b/eesanje/url_47_108_8.txt @@ -0,0 +1,5 @@ +ಟ್ರ್ಯಾಕ್ಟರ್‌ ಹರಿಸಿ ಪೊಲೀಸ್ ಪೇದೆಯನ್ನು ಕೊಂದ ಮರಳು ಮಾಫಿಯಾ +ಭೂಪಾಲ್‌,ಮೇ.5-ಅಕ್ರಮ ಮರಳು ಸಾಗಾಣಿಕೆ ಮಾಫಿಯಾಗೆ ಪೊಲೀಸ್‌‍ ಪೇದೆಯೊಬ್ಬರು ಬಲಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ತಡೆಯಲು ಬಂದ ಪೊಲೀಸ್‌‍ ಪೇದೆ ಮೇಲೆ ಹರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮರಳು ಮಾಫಿಯಾಗೆ ಬಲಿಯಾಗಿರುವ ವ್ಯಕ್ತಿಯನ್ನು ಶೆಹ್ಡೋಲ್‌ನ ಸಹಾಯಕ ಸಬ್‌ ಇನ್ಸ್ ಪೆಕ್ಟರ್‌ ಮಹೇಂದ್ರ ಬಗ್ರಿ ಎಂದು ಗುರುತಿಸಲಾಗಿದೆ.ಬಗ್ರಿ ಅವರು ಇಬ್ಬರು ಕಾನ್‌ಸ್ಟೆಬಲ್‌ಗಳಾದ ಪ್ರಸಾದ್‌ ಕಾನೋಜಿ ಮತ್ತು ಸಂಜಯ್‌ ದುಬೆ ಅವರೊಂದಿಗೆ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಸ್ಥಳಕ್ಕೆ ಹೋಗಿದ್ದರು. +ಈ ಸಂದರ್ಭದಲ್ಲಿ ವೇಗವಾಗಿ ಬಂದ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಬಗ್ರಿ ಮೇಲೆ ಹರಿಸಲಾಯಿತು ಹೀಗಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಅವರ ಜತೆಯಲ್ಲಿದ್ದ ಕಾನೋಜಿ ಮತ್ತು ದುಬೆ ಅವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ಚಾಲಕ ಮತ್ತು ಟ್ರಕ್‌ ಮಾಲೀಕನ ಮಗನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಟ್ರ್ಯಾಕ್ಟರ್‌ ಮಾಲೀಕರು ಪರಾರಿಯಾಗಿದ್ದಾರೆ. ಟ್ರಾಕ್ಟರ್‌ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯಲ್ಲಿ ಟ್ರ್ಯಾಕ್ಟರ್‌ ಮಾಲೀಕನ ಮಗನೂ ಇದರಲ್ಲಿ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ಆತನನ್ನೂ ಬಂಧಿಸಲಾಗಿದೆ ಎಂದು ಹೆಚ್ಚುವರಿ ಮಹಾನಿರ್ದೇಶಕ ಡಿಸಿ ಸಾಗರ್‌ ತಿಳಿಸಿದ್ದಾರೆ. ಟ್ರಕ್‌ನ ಮಾಲೀಕ ಸುರೇಂದ್ರ ಸಿಂಗ್‌ಗೆ ಮಾಹಿತಿ ನೀಡುವವರಿಗೆ 30,000 ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. \ No newline at end of file diff --git a/eesanje/url_47_108_9.txt b/eesanje/url_47_108_9.txt new file mode 100644 index 0000000000000000000000000000000000000000..5d4af1509f749593b255c87eca17cd9a6cc3f1c9 --- /dev/null +++ b/eesanje/url_47_108_9.txt @@ -0,0 +1,8 @@ +ಶಿಕ್ಷಕರಿಂದ ಬೆತ್ತದ ಏಟು ತಿಂದಿದ್ದನ್ನು ನೆನಪಿಸಿಕೊಂಡ ಸಿಜೆಐ ಚಂದ್ರಚೂಡ್‌ +ನವದೆಹಲಿ,ಮೇ.5-ಶಾಲೆಯಲ್ಲಿ ಸಣ್ಣ ತಪ್ಪಿಗೆ ಶಿಕ್ಷಕರಿಂದ ಬೆತ್ತದ ರುಚಿ ನೋಡಿದ್ದನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಸರಿಸಿಕೊಂಡಿದ್ದಾರೆ.ಕಠಂಡುವಿನಲ್ಲಿ ನೇಪಾಳದ ಸುಪ್ರೀಂ ಕೋರ್ಟ್‌ ಆಯೋಜಿಸಿದ್ದ ಬಾಲಾಪರಾಧಿ ನ್ಯಾಯ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡುವಾಗ ಭಾರತದ ಮುಖ್ಯ ನ್ಯಾಯಮೂರ್ತಿಗಳು ತಾವು ಮಾಡಿದ ಸಣ್ಣ ತಪ್ಪಿಗೆ ಶಾಲೆಯಲ್ಲಿ ಬೆತ್ತದಿಂದ ಹಲ್ಲೆ ನಡೆಸಿದ್ದನ್ನು ಸರಿಸಿಕೊಂಡು ಮಕ್ಕಳನ್ನು ನೀವು ಹೇಗೆ ನಡೆಸಿಕೊಳ್ಳುತ್ತೀರಿ ಎಂಬುದು ಅವರ ಜೀವನದುದ್ದಕ್ಕೂ ಅವರ ಮನಸ್ಸಿನ ಮೇಲೆ ಆಳವಾದ ಪ್ರಭಾವ ಬೀರುತ್ತದೆ ಎಂದಿದ್ದಾರೆ. +ಶಾಲೆಯಲ್ಲಿ ಆ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ. ನನ್ನ ಕೈಗಳನ್ನು ಬೆತ್ತದಿಂದ ಹೊಡೆದಾಗ ನಾನು ಬಾಲಾಪರಾಧಿಯಾಗಿರಲಿಲ್ಲ. ನಾನು ಕ್ರಾಫ್‌್ಟ ಕಲಿಯುತ್ತ್ದೆಿ ಎಂದು ಅವರು ಹೇಳಿಕೊಂಡಿದ್ದಾರೆ. ಆಗ 5 ನೇ ತರಗತಿಯಲ್ಲಿದ್ದ ಮುಖ್ಯ ನ್ಯಾಯಾಧೀಶರು, ಜನರು ಮಕ್ಕಳನ್ನು ನಡೆಸಿಕೊಳ್ಳುವ ರೀತಿ ಅವರ ಮನಸ್ಸಿನ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರುತ್ತದೆ ಎಂದು ಹೇಳಿದರು. +ಶಿಕ್ಷಕರು ಹೊಡೆದ ದೈಹಿಕ ಗಾಯವು ವಾಸಿಯಾಗಿದೆ, ಆದರೆ ಮನಸ್ಸು ಮತ್ತು ಆತದ ಮೇಲೆ ಶಾಶ್ವತವಾದ ಮುದ್ರೆಯನ್ನು ಬಿಟ್ಟಿದೆ. ನಾನು ನನ್ನ ಕೆಲಸವನ್ನು ಮಾಡುವಾಗ ಅದು ಇನ್ನೂ ನನ್ನೊಂದಿಗೆ ಇರುತ್ತದೆ. ಮಕ್ಕಳ ಮೇಲೆ ಇಂತಹ ವಿಡಂಬನೆಯ ಪ್ರಭಾವವು ತುಂಬಾ ಆಳವಾಗಿದೆ ಎಂದು ಸಿಜೆಐ ಹೇಳಿದರು. +ಬಾಲಾಪರಾಧಿಗಳ ನ್ಯಾಯವನ್ನು ಚರ್ಚಿಸುವಾಗ, ಕಾನೂನು ವಿವಾದಗಳಲ್ಲಿ ಸಿಲುಕಿರುವ ಮಕ್ಕಳ ದುರ್ಬಲತೆಗಳು ಮತ್ತು ಅನನ್ಯ ಅಗತ್ಯಗಳನ್ನು ನಾವು ಗುರುತಿಸಬೇಕು ಮತ್ತು ನಮ ನ್ಯಾಯ ವ್ಯವಸ್ಥೆಗಳು ಸಹಾನುಭೂತಿ, ಪುನರ್ವಸತಿ ಮತ್ತು ಸಮಾಜದಲ್ಲಿ ಮರುಸೇರ್ಪಡೆಗೊಳ್ಳುವ ಅವಕಾಶಗಳೊಂದಿಗೆ ಪ್ರತಿಕ್ರಿಯಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಜೆಐ ಚಂದ್ರಚೂಡ್‌ ಹೇಳಿದರು. +ಹದಿಹರೆಯದ ಬಹುಮುಖಿ ಸ್ವರೂಪ ಮತ್ತು ಸಮಾಜದ ವಿವಿಧ ಆಯಾಮಗಳೊಂದಿಗೆ ಅದರ ಪರಸ್ಪರ ಸಂಬಂಧವನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದರು. ಸೆಮಿನಾರ್‌ನಲ್ಲಿ ಸಿಜೆಐ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯನ್ನು ಸಹ ಪ್ರಸ್ತಾಪಿಸಿದರು. +ಭಾರತದ ಬಾಲಾಪರಾಧಿ ನ್ಯಾಯ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳ ಬಗ್ಗೆಯೂ ಅವರು ಮಾತನಾಡಿದರು. ಪ್ರಮುಖ ಸವಾಲು ಎಂದರೆ ಅಸಮರ್ಪಕ ಮೂಲಸೌಕರ್ಯ ಮತ್ತು ಸಂಪನೂಲಗಳು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ, ಇದು ಕಿಕ್ಕಿರಿದ ಮತ್ತು ಗುಣಮಟ್ಟವಿಲ್ಲದ ಬಾಲಾಪರಾಧಿ ಬಂಧನ ಕೇಂದ್ರಗಳಿಗೆ ಕಾರಣವಾಗಿದೆ, ಇದರಿಂದಾಗಿ ಬಾಲಾಪರಾಧಿಗಳಿಗೆ ಸರಿಯಾದ ಬೆಂಬಲವನ್ನು ಒದಗಿಸುವುದು ಮತ್ತು ಪುನರ್ವಸತಿ ಒದಗಿಸುವ ಪ್ರಯತ್ನಗಳಿಗೆ ಅಡ್ಡಿಯಾಗಬಹುದು ಎಂದು ಅವರು ಹೇಳಿದರು. +ಅನೇಕ ಮಕ್ಕಳು ಗ್ಯಾಂಗ್‌ಗಳಿಂದ ಅಪರಾಧ ಚಟುವಟಿಕೆಗಳಿಗೆ ತಳ್ಳಲ್ಪಟ್ಟಿರುವುದರಿಂದ ಸಾಮಾಜಿಕ ವಾಸ್ತವತೆಗಳನ್ನು ಸಹ ಪರಿಗಣಿಸಬೇಕು ಎಂದು ಸಿಜೆಐ ಹೇಳಿದರು, ವಿಕಲಾಂಗ ಹದಿಹರೆಯದವರು ಸಹ ದುರ್ಬಲರಾಗಿದ್ದಾರೆ – ಭಾರತದಲ್ಲಿ ಕ್ರಿಮಿನಲ್‌ ಸಿಂಡಿಕೇಟ್‌ಗಳಿಂದ ದಷ್ಟಿಹೀನ ಮಕ್ಕಳನ್ನು ಭಿಕ್ಷಾಟನೆಗೆ ಹೇಗೆ ಬಳಸಿಕೊಳ್ಳಲಾಗುತ್ತದೆ ಎಂಬುದನ್ನು ನೋಡಬಹುದು ಎಂದಿದ್ದಾರೆ. \ No newline at end of file diff --git a/eesanje/url_47_109_1.txt b/eesanje/url_47_109_1.txt new file mode 100644 index 0000000000000000000000000000000000000000..958377ba3c2a629e10d2d8af521e948ae7d650da --- /dev/null +++ b/eesanje/url_47_109_1.txt @@ -0,0 +1,6 @@ +ಹೆಚ್ಚು ಮೊಬೈಲ್‌ ಬಳಸಬೇಡ ಎಂದ ಅಣ್ಣನನ್ನು ಕೊಚ್ಚಿ ಕೊಂದ ತಂಗಿ +ರಾಜ್‌ನಂದಗಾಂವ್‌, ಮೇ 5-ಮೊಬೈಲ್‌ ಫೋನ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದೀಯ ಎಂದು ನಿಂದಿಸಿದ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ತಂಗಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ಚುಯಿಖಾಡನ್‌ನಲ್ಲಿ ನಡೆದಿದೆ. +ಕೊಲೆ ಸಂಬಂದ 14 ವರ್ಷದ ಬಾಲಕಿಯನ್ನು ಚುಯಿಖಾಡನ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕುಟುಂಬ ಸದಸ್ಯರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದಾಗ ಈ ದುತಂತ ಸಂಭವಿಸಿದೆ.ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ತಂಗಿ ಮೊಬೈಲ್‌ ಫೋನ್‌ನಲ್ಲಿ ಹುಡುಗರೊಂದಿಗೆ ಮಾತನಾಡುತ್ತಿದ್ದಳು ಇದರಿಂದ ಆಕೆಯ ಸಹೋದರ ಕೋಪಗೊಂಡಿದ್ದ ಆಕೆಗೆ ಬುದ್ದಿವಾದ ಹೇಳಿದ್ದ . +ಇನ್ನು ಮುಂದೆ ಫೋನ್‌ ಬಳಸದಂತೆ ಎಚ್ಚರಿಸಿದ್ದ ಇದರಿಂದ ಕೋಪಗೊಂಡ ಬಾಲಕಿ ತನ್ನ ಸಹೋದರ ನಿದ್ರೆಗೆ ಜಾರಿದಾಗ ಆತನ ಕುತ್ತಿಗೆಗೆ ಕೊಡಲಿಯಿಂದ ಹೊಡೆದಿದ್ದಾಳೆ,ಇದರಿಂದ ಸಹೋದರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ನಂತರ ಬಾಲಕಿ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ತನ್ನ ಸಹೋದರನನ್ನು ಕೊಲೆ ಮಾಡಲಾಗಿದೆ ಎಂದು ನೆರೆಹೊರೆಯವರಿಗೆ ತಿಳಿಸಿದ್ದಾಳೆ. +ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಅನುಮಾನಗೊಂಡು ಪೊಲೀಸರ ವಿಚಾರಣೆ ವೇಳೆ ಬಾಲಕಿ ತನ್ನ ತಪ್ಪು ಒಪ್ಪಿಕೊಂಡಿದ್ದಾಳೆ.ಹೀಗೂ ಉಂಟೆ ಎಂದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಪೋಷಕರ,ಸಂಬಂಧಿಕರ ಆಕ್ರಂದನ ಮುಗಿಲುಮಟ್ಟಿದೆ. \ No newline at end of file diff --git a/eesanje/url_47_109_10.txt b/eesanje/url_47_109_10.txt new file mode 100644 index 0000000000000000000000000000000000000000..f7e3defd295f6e4db8ebec0e323ccce0f73ef752 --- /dev/null +++ b/eesanje/url_47_109_10.txt @@ -0,0 +1,7 @@ +ಇಸ್ರೇಲ್‌-ಇರಾನ್‌ಗೆ ಪ್ರಯಾಣಿಸುವ ಭಾರತೀಯರೇ ಹುಷಾರಾಗಿರಿ +ನವದೆಹಲಿ,ಮೇ.4-ಇಸ್ರೇಲ್‌ ಮತ್ತು ಇರಾನ್‌ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಉಭಯ ದೇಶಗಳಿಗೆ ಪ್ರಯಾಣಿಸುವ ಭಾರತೀಯರಿಗೆ ಜಾಗರೂಕರಾಗಿರಿ ಮತ್ತು ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ಸಲಹೆ ನೀಡಿದೆ. +ಇರಾನ್‌ ಮತ್ತು ಇಸ್ರೇಲ್‌ಗೆ ಪ್ರಯಾಣ ಸಲಹೆ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಂಇಎ ವಕ್ತಾರ ರಣಧೀರ್‌ ಜೈಸ್ವಾಲ್‌‍ ಅವರು, ನಾವು ಈ ಪ್ರದೇಶದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಇರಾನ್‌ ಮತ್ತು ಇಸ್ರೇಲ್‌ ಹಲವಾರು ದಿನಗಳಿಂದ ತಮ ವಾಯುಪ್ರದೇಶವನ್ನು ತೆರೆದಿರುವುದನ್ನು ನಾವು ಗಮನಿಸಿದ್ದೇವೆ. ಈ ದೇಶಗಳಿಗೆ ಪ್ರಯಾಣಿಸುವಾಗ ಜಾಗರೂಕರಾಗಿರಲು ಮತ್ತು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಿದ್ದಾರೆ. +ಇದಕ್ಕೂ ಮೊದಲು ಏಪ್ರಿಲ್‌ 14 ರಂದು, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಇಸ್ರೇಲ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಶಾಂತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್‌ಗಳಿಗೆ ಬದ್ಧವಾಗಿರಲು ಸಲಹೆಯನ್ನು ನೀಡಿತು. ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಇಸ್ರೇಲ್‌ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಯಭಾರ ಕಚೇರಿ ಮತ್ತಷ್ಟು ಹೈಲೈಟ್‌ ಮಾಡಿದೆ. +ಪ್ರದೇಶದಲ್ಲಿನ ಇತ್ತೀಚಿನ ಘಟನೆಗಳ ಬೆಳಕಿನಲ್ಲಿ, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಶಾಂತವಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳು ನೀಡಿದ ಸುರಕ್ಷತಾ ಪ್ರೋಟೋಕಾಲ್‌ಗಳಿಗೆ ಬದ್ಧವಾಗಿರಲು ಸೂಚಿಸಲಾಗಿದೆ. +ರಾಯಭಾರ ಕಚೇರಿ ನಿಕಟವಾಗಿದೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ನಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. +ರಾಯಭಾರ ಕಚೇರಿಯು ಇಸ್ರೇಲ್‌ನಲ್ಲಿರುವ ಭಾರತೀಯ ನಾಗರಿಕರಿಗೆ ತುರ್ತು ಸಹಾಯವಾಣಿ ಸಂಖ್ಯೆಯನ್ನು ಉಲ್ಲೇಖಿಸಿದೆ. ದೂರವಾಣಿ: +972-547520711, +972-543278392 ಸಂಪರ್ಕಿಸಬಹುದಾಗಿದೆ. \ No newline at end of file diff --git a/eesanje/url_47_109_11.txt b/eesanje/url_47_109_11.txt new file mode 100644 index 0000000000000000000000000000000000000000..cd598bf7bbd8d2ed50304be30550631920679497 --- /dev/null +++ b/eesanje/url_47_109_11.txt @@ -0,0 +1,8 @@ +ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ನಮನ +ನವದೆಹಲಿ, ಮೇ 4 (ಪಿಟಿಐ)-ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನು ಅವರಿಗೆ ಗೂಗಲ್‌ನ ಡೂಡಲ್‌ನಲ್ಲಿ ಗೌರವ ಸಲ್ಲಿಸಲಾಗಿದೆ. 1954 ರಲ್ಲಿ ಇದೇ ದಿನ ಹಮೀದಾ ಬಾನು ಖ್ಯಾತ ಕುಸ್ತಿಪಟು ಬಾಬಾ ಪಹಲ್ವಾನ್‌ ಅವರನ್ನು ಕೇವಲ ಒಂದು ನಿಮಿಷ ಮತ್ತು 34 ಸೆಕೆಂಡುಗಳಲ್ಲಿ ಸೋಲಿಸಿದ ಸವಿನೆನಪಿಗಾಗಿ ಈ ಗೌರವ ಸಮರ್ಪಿಸಲಾಗಿದೆ. +ಈ ಪಂದ್ಯ ಬಾಬಾ ಪಹಲ್ವಾನ್‌ ವತ್ತಿಪರ ಕುಸ್ತಿಯಿಂದ ನಿವತ್ತಿ ಹೊಂದಲು ಸೂಕ್ತವೆಂದು ಭಾವಿಸಿದರೆ, ಬಾನು ಅವರ ವತ್ತಿಜೀವನವು ಅಂತರರಾಷ್ಟ್ರೀಯ ರಂಗಗಳಿಗೆ ವಿಸ್ತರಿಸಲು ಸಹಕಾರಿಯಾಗಿತ್ತು. +ಬಾನು ಅವರ ವಿಜಯವನ್ನು ಸ್ಮರಿಸುತ್ತ ಮತ್ತು ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂದು ಅವರಿಗೆ ಗೌರವ ಸಲ್ಲಿಸಲು, ಗೂಗಲ್‌ ಇಂದು ತನ್ನ ಮುಖಪುಟದಲ್ಲಿ ವರ್ಣರಂಜಿತ ಡೂಡಲ್‌ ಅನ್ನು ಹಾಕಿದೆ. +ಉತ್ತರ ಪ್ರದೇಶದ ಅಲಿಘರ್‌ ಬಳಿ 1900 ರ ದಶಕದ ಆರಂಭದಲ್ಲಿ ಕುಸ್ತಿಪಟುಗಳ ಕುಟುಂಬದಲ್ಲಿ ಜನಿಸಿದ ಬಾನು ಕುಸ್ತಿಯಲ್ಲಿ ಬೆಳೆದರು, 1940 ಮತ್ತು 1950 ರ ದಶಕದಲ್ಲಿ ಅಥ್ಲೆಟಿಕ್‌್ಸನಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಬಲವಾಗಿ ವಿರೋಧಿಸಿದ ಸಮಯದಲ್ಲಿ ತನ್ನ ವತ್ತಿಜೀವನದುದ್ದಕ್ಕೂ 300 ಕ್ಕೂ ಹೆಚ್ಚು ಸ್ಪರ್ಧೆಗಳನ್ನು ಗೆದ್ದರು. +ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಬಾನು ಅವರ ಯಶಸ್ಸು ಮತ್ತಷ್ಟು ಮೆಚ್ಚುಗೆಯನ್ನು ಗಳಿಸಿತು. ಈ ಪಂದ್ಯಗಳಲ್ಲಿ ಒಂದು ರಷ್ಯಾದ ಮಹಿಳಾ ಕುಸ್ತಿಪಟು ವೆರಾ ಚಿಸ್ಟಿಲಿನ್‌ ವಿರುದ್ಧದ ಪಂದ್ಯವಾಗಿತ್ತು, ಅವರು ಎರಡು ನಿಮಿಷಗಳಲ್ಲಿ ಸೋಲಿಸಿದರು. +ವರ್ಷಗಳ ಕಾಲ ಪತ್ರಿಕೆಗಳ ಮುಖ್ಯಾಂಶಗಳನ್ನು ಮಾಡಿದ ಬಾನು ಅಮೆಜಾನ್‌ ಆಫ್‌ ಅಲಿಘರ್‌ ಎಂದು ಕರೆಯಲ್ಪಟ್ಟರು. ಬಾನು ಅವರ ಆಹಾರ ಪದ್ಧತಿ ಮತ್ತು ಅವಳ ತರಬೇತಿ ಕಟ್ಟುಪಾಡುಗಳು ವ್ಯಾಪಕವಾಗಿ ಆವರಿಸಲ್ಪಟ್ಟವು. ಬಿಬಿಸಿ ವರದಿಯ ಪ್ರಕಾರ, ಆಕೆಯ ತೂಕ 108 ಕೆಜಿ ಮತ್ತು 5 ಅಡಿ 3 ಇಂಚು ಎತ್ತರವಿದ್ದರು. +ಅವಳ ದೈನಂದಿನ ಆಹಾರದಲ್ಲಿ 5.6 ಲೀಟರ್‌ ಹಾಲು, 2.8 ಲೀಟರ್‌ ಸೂಪ್‌, 1.8 ಲೀಟರ್‌ ಹಣ್ಣಿನ ರಸ, ಒಂದು ಕೋಳಿ, ಸುಮಾರು 1 ಕೆಜಿ ಮಟನ್‌ ಮತ್ತು ಬಾದಾಮಿ, ಅರ್ಧ ಕಿಲೋ ಬೆಣ್ಣೆ, 6 ಮೊಟ್ಟೆ, ಎರಡು ದೊಡ್ಡ ಬ್ರೆಡ್‌ ಮತ್ತು ಎರಡು ಪ್ಲೇಟ್‌ಬಿರಿಯಾನಿಗಳು ಸೇರಿವೆ ಎಂದು ಬ್ರಿಟಿಷ್‌ ಮಾಧ್ಯಮ ವರದಿ ಮಾಡಿದೆ. ಬಾನು ಅವರು ಒಂಬತ್ತು ಗಂಟೆಗಳ ಕಾಲ ಮಲಗಿದರೆ ಆರು ಗಂಟೆಗಳ ಕಾಲ ತರಬೇತಿ ಪಡೆಯುತ್ತಿದ್ದರು ಎಂದು ರಾಯಿಟರ್ಸ್‌ ಗಮನಿಸಿದೆ. \ No newline at end of file diff --git a/eesanje/url_47_109_12.txt b/eesanje/url_47_109_12.txt new file mode 100644 index 0000000000000000000000000000000000000000..6edddd6d481fd62267c930a72426bc389b602190 --- /dev/null +++ b/eesanje/url_47_109_12.txt @@ -0,0 +1,8 @@ +ಈರುಳ್ಳಿ ರಫ್ತು ನಿಷೇಧ ತೆಗೆದುಹಾಕಿದ ಸರ್ಕಾರ, ಪ್ರತಿ ಟನ್‌ಗೆ $550 ಬೆಲೆ ನಿಗದಿ +ನವದೆಹಲಿ,ಮೇ4-ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಮಧ್ಯೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸರ್ಕಾರ ಶನಿವಾರ ತೆಗೆದುಹಾಕಿದೆ ಆದರೆ ಪ್ರತಿ ಟನ್‌ಗೆ ಕನಿಷ್ಠ ರಫ್ತು ಬೆಲೆ (ಎಂಇಪಿ) 550 ಡಾಲರ್‌ಗಳನ್ನು ವಿಧಿಸಿದೆ. +ನಿನ್ನೆ ರಾತ್ರಿ ಸರ್ಕಾರ ಈರುಳ್ಳಿ ರಫ್ತಿಗೆ ಶೇ.40ರಷ್ಟು ಸುಂಕ ವಿಧಿಸಿತ್ತು. ಕಳೆದ ವರ್ಷ ಆಗಸ್ಟ್ ನಲ್ಲಿ, ಭಾರತವು ಡಿಸೆಂಬರ್‌ 31, 2023 ರವರೆಗೆ ಈರುಳ್ಳಿಯ ಮೇಲೆ ಶೇ.40ರಷ್ಟು ರಫ್ತು ಸುಂಕವನ್ನು ವಿಧಿಸಿತ್ತು. +ಈರುಳ್ಳಿಯ ರಫ್ತು ನೀತಿಯನ್ನು ತಕ್ಷಣವೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಪ್ರತಿ ಮೆಟ್ರಿಕ್‌ ಟನ್‌ಗೆ ಯುಎಸ್‌ಡಿ 550 ಎಂಇಪಿಗೆ ಒಳಪಟ್ಟು ನಿಷೇಧಿತದಿಂದ ಉಚಿತವಾಗಿ ತಿದ್ದುಪಡಿ ಮಾಡಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (ಡಿಜಿಎಫ್‌ಟಿ) ಅಧಿಸೂಚನೆಯಲ್ಲಿ ತಿಳಿಸಿದೆ. +ಡಿಸೆಂಬರ್‌ 8, 2023 ರಂದು, ಸರ್ಕಾರವು ಈ ವರ್ಷ ಮಾರ್ಚ್‌ 31 ರಿಂದ ಈರುಳ್ಳಿ ರಫ್ತು ನಿಷೇಧಿಸಿತು. ಮಾರ್ಚ್‌ನಲ್ಲಿ ರಫ್ತು ನಿಷೇಧವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಲಾಯಿತು. ಮಾರ್ಚ್‌ನಲ್ಲಿ ಕೇಂದ್ರ ಕೃಷಿ ಸಚಿವಾಲಯ ಈರುಳ್ಳಿ ಉತ್ಪಾದನೆಯ ಅಂಕಿಅಂಶಗಳನ್ನು ಬಿಡುಗಡೆ ಮಾಡಿತ್ತು. +ಮಾಹಿತಿಯ ಪ್ರಕಾರ, 2023-24ರಲ್ಲಿ ಈರುಳ್ಳಿ ಉತ್ಪಾದನೆ (ಮೊದಲ ಮುಂಗಡ ಅಂದಾಜುಗಳು) ಕಳೆದ ವರ್ಷ ಸುಮಾರು 302.08 ಲಕ್ಷ ಟನ್‌ಗಳಿಗೆ ಹೋಲಿಸಿದರೆ ಸುಮಾರು 254.73 ಲಕ್ಷ ಟನ್‌ಗಳಾಗುವ ನಿರೀಕ್ಷೆಯಿದೆ. ಇದು ಮಹಾರಾಷ್ಟ್ರದಲ್ಲಿ 34.31 ಲಕ್ಷ ಟನ್‌, ಕರ್ನಾಟಕದಲ್ಲಿ 9.95 ಲಕ್ಷ ಟನ್‌, ಆಂಧ್ರಪ್ರದೇಶದಲ್ಲಿ 3.54 ಲಕ್ಷ ಟನ್‌ ಮತ್ತು ರಾಜಸ್ಥಾನದಲ್ಲಿ 3.12 ಲಕ್ಷ ಟನ್‌ ಉತ್ಪಾದನೆ ಕಡಿಮೆಯಾಗಿದೆ ಎಂದು ಅಂಕಿಅಂಶಗಳು ತೋರಿಸಿವೆ. +ಕಳೆದ ತಿಂಗಳು, ಅಧಿಕೃತ ಹೇಳಿಕೆಯಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಬಾಂಗ್ಲಾದೇಶ, ಯುಎಇ, ಭೂತಾನ್‌, ಬಹ್ರೀನ್‌, ಮಾರಿಷಸ್‌ ಮತ್ತು ಶ್ರೀಲಂಕಾದ ಆರು ನೆರೆಯ ದೇಶಗಳಿಗೆ 99,150 ಟನ್‌ ಈರುಳ್ಳಿ ರಫ್ತು ಮಾಡಲು ಸರ್ಕಾರ ಅನುಮತಿ ನೀಡಿದೆ. +ರಫ್ತು ನಿಷೇಧದ ವಿರುದ್ಧ ಮಹಾರಾಷ್ಟ್ರದ ರೈತರು ಪ್ರತಿಭಟನೆ ನಡೆಸಿದ್ದರು. ಈರುಳ್ಳಿ ರಫ್ತಿನ ಮೇಲಿನ ನಿಷೇಧದಿಂದಾಗಿ ತತ್ತರಿಸಿರುವ ಮಹಾರಾಷ್ಟ್ರದ ಈರುಳ್ಳಿ ರೈತರನ್ನು ನರೇಂದ್ರಮೋದಿ ಸರ್ಕಾರ ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್‌ ಕಳೆದ ತಿಂಗಳು ಆರೋಪಿಸಿದೆ ಮತ್ತು ರೈತರ ಮೇಲೆ ವಿಧಿಸಲಾಗುವ ದುರಂತದ ಕೊನೆಯ ಕ್ಷಣದ ನೀತಿಗಳನ್ನು ತಡೆಯಲು ಆಮದು-ರಫ್ತು ನೀತಿಯನ್ನು ಊಹಿಸಬಹುದಾದ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ನೀಡಿದೆ ಎಂದು ಹೇಳಿದೆ. \ No newline at end of file diff --git a/eesanje/url_47_109_2.txt b/eesanje/url_47_109_2.txt new file mode 100644 index 0000000000000000000000000000000000000000..3d0d6199e5e9fe4ccd80994aff29a56cc071fa75 --- /dev/null +++ b/eesanje/url_47_109_2.txt @@ -0,0 +1,5 @@ +ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಸೇನಾ ಹೆಲಿಕಾಪ್ಟರ್‌ ತುರ್ತ ಲ್ಯಾಂಡಿಂಗ್‌ +ಸಾಂಗ್ಲಿ (ಮಹಾರಾಷ್ಟ್ರ), ಮೇ 5-ಭಾರತೀಯ ಸೇನೆಯ ಅಧ್ಯದುನಿಕ ಲಘು ಹೆಲಿಕಾಪ್ಟರ್‌ ಇಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಮೀನೊಂದರಲ್ಲಿ ಮುನ್ನೆಚ್ಚರಿಕೆಯಿಂದ ತುರ್ತ ಲ್ಯಾಂಡಿಂಗ್‌‍ ಮಾಡಿದೆ. +ಮೂವರು ಸೇನಾ ಸಿಬ್ಬಂದಿ ಇಬ್ಬರು ಪೈಲಟ್‌ಗಳು ಮತ್ತು ತಂತ್ರಜ್ಞರು ವಿಮಾನದಲ್ಲಿದ್ದರು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಆರ್ಮಿ ಏವಿಯೇಷನ್‌ ಕಾರ್ಫ್ಸ್ ಗೆ ಸೇರಿದ ಹೆಲಿಕಾಪ್ಟರ್‌ ಮಹಾರಾಷ್ಟ್ರದ ನಾಸಿಕ್‌ನಿಂದ ಬೆಂಗಳೂರಿಗೆ ಹೋಗುತ್ತಿತ್ತು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ತಾಂತ್ರಿಕ ಸಮಸ್ಯೆಯಿಂದಾಗಿ ಸಾಂಗ್ಲಿ ಜಿಲ್ಲೆಯ ಮೀರಜ್‌ ತಹಸಿಲ್‌ನ ಎರಂಡೋಲಿ ಗ್ರಾಮದ ಬಳಿಯ ಜಮೀನಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಲ್ಯಾಂಡಿಂಗ್‌ ಮಾಡಲಾಗಿದೆ ಎಂದು ಅವರು ಹೇಳಿದರು. +ಒಂದೆರಡು ಗಂಟೆಗಳ ನಂತರ, ಮತ್ತೊಂದು ಹೆಲಿಕಾಪ್ಟರ್‌ ತಾಂತ್ರಿಕ ಸಹಾಯದಿಂದ ಬಂದಿತು. ನಂತರ ಸಮಸ್ಯೆಯನ್ನು ಸರಿಪಡಿಸಲಾಯಿತು ಮತ್ತು ಎರಡೂ ಹೆಲಿಕಾಪ್ಟರ್‌ಗಳು ನಂತರ ಟೇಕಾಫ್‌ ಆದವು ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_109_3.txt b/eesanje/url_47_109_3.txt new file mode 100644 index 0000000000000000000000000000000000000000..7c9c1c615b77f7806069a132fcd042a0695f8845 --- /dev/null +++ b/eesanje/url_47_109_3.txt @@ -0,0 +1,7 @@ +ಗಂಡನ ಸಾಲಕ್ಕೆ ಹೆಂಡತಿಯನ್ನು ಅಡ ಇಟ್ಟುಕೊಂಡ ಬ್ಯಾಂಕ್‌ ಅಧಿಕಾರಿಣಿ +ಸೇಲಂ, ಮೇ 3 :ಇಲ್ಲಿನ ಖಾಸಗಿ ಬ್ಯಾಂಕ್‌ನ ಅಧಿಕಾರಿಗಳು ಗಂಡ ಸಾಲ ವಾಪಸ್‌‍ ತೀರಿಸಲು ವಿಳಂಬ ಮಾಡಿದ ಎಂದು ಆತನ ಪತ್ನಿಯನ್ನುಅಡ ಇಟ್ಟ ವಸ್ತುವಂತೆ ರಾತ್ರಿಯಾಗುವ ವರೆಗೂ ಇರಿಸಿಕೊಂಡ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆ. +ಸೇಲಂನ ವಳಪ್ಪಾಡಿ ಎಂಬಲ್ಲಿ ಈ ಘಟನೆ ನಡೆದಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಖಾಸಗಿ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದ ಕೂಲಿ ಕಾರ್ಮಿಕ ಸಾಲದ ಕಂತು ಕಟ್ಟಿರಲಿಲ್ಲ ಈ ಸಂದರ್ಭದಲ್ಲಿ ಬ್ಯಾಂಕ್‌ನ ಉದ್ಯೋಗಿಯೊಬ್ಬರು ಆತನ ಮನೆಗೆ ಹೋಗಿ ಆತನ ಹೆಂಡತಿಯನ್ನು ಬ್ಯಾಂಕ್‌ಗೆ ಕರೆತಂದಿದ್ದಾನೆ . +ವಳಪ್ಪಾಡಿ ಬಳಿಯ ತುಕ್ಕಿಯಂಪಾಳಯಂ ನಿವಾಸಿ ಪ್ರಶಾಂತ್‌ ಕಳೆದ ನಾಲ್ಕು ತಿಂಗಳ ಹಿಂದೆ ಖಾಸಗಿ ಬ್ಯಾಂಕ್‌ನಿಂದ 35,000 ರೂ ಸಾಲ ಪಡೆದುಕೊಂಡಿರುತ್ತಾನೆ. ವಾರಕ್ಕೆ 770 ರೂನಂತೆ 52 ತಿಂಗಳು ಕಂತುಗಳಲ್ಲಿ ಸಾಲ ಮರುಪಾವತಿಗೆ ಒಪ್ಪಂದ ಆಗಿರುತ್ತದೆ. ಇನ್ನು ಕೇವಲ 10 ವಾರದ ಕಂತು ಮಾತ್ರವೇ ಬಾಕಿ ಇತ್ತು ಎನ್ನಲಾಗಿದೆ. +ಬ್ಯಾಂಕ್‌ನವರು ಪತ್ನಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದ ಪ್ರಶಾಂತ್‌ ಸಂಜೆ 7:30ಕ್ಕೆ ಓಡಡಿ ಬಂದು ಹಣ ಕಟ್ಟಿದ್ದಾರೆ ಬಳಿಕವಷ್ಟೇ ಹೆಂಡತಿಯನ್ನು ಬ್ಯಾಂಕ್‌ನಿಂದ ಆಚೆಗೆ ಕಳುಹಿಸಲಾಗಿದೆ. +ವರದಿ ಪ್ರಕಾರ ಶುಭಾ ಎನ್ನುವ ಬ್ಯಾಂಕ್‌ ಉದ್ಯೋಗಿ ಏಪ್ರಿಲ್‌ 30ರಂದು ಸಾಲದ ವಿಚಾರವಾಗಿ ಪ್ರಶಾಂತ್‌ಗೆ ಫೋನ್‌ ಮಾಡಿದ್ದಾಳೆ. ಫೋನ್‌ ಎತ್ತದಾಗ ಆತನ ಮನೆಗೆ ಹೋಗಿದ್ದಾಳೆ. ಇಲ್ಲಿ ಪ್ರಶಾಂತ್‌ ಇರಲಿಲ್ಲ. ಆತನ ಹೆಂಡತಿ ಗೌರಿ ಶಂಕರಿಯನ್ನು ಬ್ಯಾಂಕ್‌ ಕಚೇರಿಗೆ ಕರೆ ತರುತ್ತಾಳೆ. ಪ್ರಶಾಂತ್‌ ಬಂದು ಸಾಲದ ಕಂತು ಕಟ್ಟುವವರೆಗೂ ಆಕೆಯನ್ನು ಕಚೇರಿಯಲ್ಲೇ ಇರಿಸಲಾಗುತ್ತದೆ. +ಪ್ರಶಾಂತ್‌ ಪೊಲೀಸ್‌‍ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ. ಆರ್‌ಬಿಐ ನಿಯಮದ ಪ್ರಕಾರ ಸಂಜೆ 6 ಗಂಟೆಯ ಬಳಿಕ ಗ್ರಾಹಕರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಬಾರದು. ಆದರೆ ಇಲ್ಲಿನ ಬ್ಯಾಂಕ್‌ ಅಧಿಕಾರಿ ವಿರುದ್ದ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_47_109_4.txt b/eesanje/url_47_109_4.txt new file mode 100644 index 0000000000000000000000000000000000000000..fe2823d7efac43f0c2cdc5173cc33697e069a738 --- /dev/null +++ b/eesanje/url_47_109_4.txt @@ -0,0 +1,7 @@ +ಅಂತಾರಾಷ್ಟ್ರೀಯ ಮಟ್ಟದಲ್ಲಿ ಟ್ರೋಲ್ ಆದ ರಾಹುಲ್ ಗಾಂಧಿ +ನವದೆಹಲಿ :ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಮಾಜಿ ವಿಶ್ವ ಚೆಸ್ ಚಾಂಪಿಯನ್ ಗ್ಯಾರಿ ಕಾಸ್ಪರೋವ್ ಮಾಡಿರುವ ಟ್ವೀಟ್ ಇದೀಗರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ . ಕಾಸ್ಪರೋ ವ್ ನನ್ನ ನೆಚ್ಚಿನ ಚೆಸ್ ಆಟಗಾರ ಎಂದು ರಾಹುಲ್ ಗಾಂಧಿ ಹೇಳಿದ್ದರು ಇದೀಗ ಅವರಿಂದಲೇ ಟೀಕೆಗೆ ಗುರಿಯಾಗಿರುವುದು ಕಾಂಗ್ರೆಸ್​​ “ಶಹಜಾದೆ”ಗೆ ಜಾಗತಿಕ ಮಟ್ಟದಲ್ಲಿ ಮಖಭಂಗವಾದಂತಾಗಿದೆ. +ಪ್ರಧಾನಿ ಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್‌ಬರೇಲಿಯಲ್ಲಿ ಗೆಲ್ಲಿ,ಎಂದು ರಾಹುಲ್​​​ಗೆ ರಷ್ಯಾ ರಾಜಕೀಯ ವಿಮರ್ಶಕ ಗ್ಯಾರಿ ಕ್ಯಾಸ್ಪರೋವ್ ಸಲಹೆ ನೀಡಿದ್ದಾರೆ. ರಷ್ಯಾ ರಾಜಕೀಯ ವಿಮರ್ಶಕ ಗ್ಯಾರಿ ಕಾಸ್ಪರೋವ್ ಅವರು ತಮ್ಮ ಎಕ್ಸ್​​​ ಖಾತೆಯಲ್ಲಿ ರಾಹುಲ್​​​ ಗಾಂಧಿ ಅವರ ಬಗ್ಗೆ ಒಂದು ಪೋಸ್ಟ್​​​ನ್ನು ಹಾಕಿಕೊಂಡಿದ್ದಾರೆ. ರಾಹುಲ್​​ ಗಾಂಧಿ ಅವರೇ ನೀವು ಪ್ರಧಾನಿ ಆಗುವ ಕನಸು ಕಾಣುವ ಮೊದಲು ಹೆಚ್ಚಿನ ಸ್ಥಾನದಲ್ಲಿ ರಾಯ್ ಬರೇಲಿಯಿಂದ ಗೆಲ್ಲಬೇಕು ಎಂದು ಗ್ಯಾರಿ ಅವರು ಎಕ್ಸ್​​​​​​ ವ್ಯಂಗ್ಯವಾಗಿ ಟ್ವೀಟ್​​​​​ ಮಾಡಿದ್ದಾರೆ. +ಕಾಂಗ್ರೆಸ್​​ “ಶಹಜಾದೆ” ರಾಹುಲ್​​ ಗಾಂಧಿ ಅವರು ಅಮೇಥಿ ಬದಲಿಗೆ ರಾಯ್ ಬರೇಲಿಯಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಇದೀಗ ಅದರಂತೆ ನೆನ್ನೆ (ಮೇ3) ನಾಮಪತ್ರ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್​​​ ರಾಜಕೀಯದಲ್ಲಿ ರಾಹುಲ್​​ ಇಟ್ಟಿರುವ ಬಹುದೊಡ್ಡ ಹೆಜ್ಜೆಯಾಗಿದೆ ಎಂದು ಹೇಳಲಾಗಿತ್ತು. ಇವರ ಈ ನಡೆಯಿಂದ ಬಿಜೆಪಿಯನ್ನು ಅಲ್ಲಿ ಸೋಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಅವರ ಈ ನಿರ್ಧಾರಕ್ಕೆ ರಷ್ಯಾ ಚೆಸ್ ಚಾಂಪಿಯನ್ ಆಗಿರುವ ಗ್ಯಾರಿ ಕ್ಯಾಸ್ಪರೋವ್ ಅವರು ಸಲಹೆ ನೀಡಿದ್ದಾರೆ. +ಮಾಜಿ ವಿಶ್ವ ಚೆಸ್ ಚಾಂಪಿಯನ್, ಬರಹಗಾರ, ರಾಜಕೀಯ ತಜ್ಞ, ರಷ್ಯಾದ ಗ್ರ್ಯಾಂಡ್ ಮಾಸ್ಟರ್ ಗ್ಯಾರಿ ಕ್ಯಾಸ್ಪರೋವ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಾಜಕೀಯ ವಿಮರ್ಶಕರು. ಇವರು ಒಂದು ಸಂಧರ್ಭದಲ್ಲಿ ಪುಟಿನ್ ಅವರನ್ನು ವಿಶ್ವದ ಅತ್ಯಂತ ಅಪಾಯಕಾರಿ ವ್ಯಕ್ತಿ ಎಂದು ಕರೆದಿದ್ದರು. ಇದೀಗ ರಾಹುಲ್​​ ಗಾಂಧಿ ರಾಜಕೀಯ ಭವಿಷ್ಯದ ಬಗ್ಗೆ ಹೇಳಿದ್ದಾರೆ. +ರಾಹುಲ್​​​ ಗಾಂಧಿ ಅವರ ಬಗ್ಗೆ ವ್ಯಂಗ್ಯವಾಗಿ ಎಕ್ಸ್​​ನಲ್ಲಿ ಟ್ವೀಟ್​​​ ಮಾಡಿದ ನಂತರ ಗ್ಯಾರಿ ಕಾಸ್ಪರೋವ್ ಅವರು ತಮ್ಮ ಪೋಸ್ಟ್​​​ಗೆ ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ರಾಜಕೀಯದ ಕುರಿತಾದ ತಮ್ಮ “ಚಿಕ್ಕ ಜೋಕ್” ಇದಾಗಿದ್ದು, ನಾನು ರಾಜಕೀಯ ಪಂಡಿತನಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಹೇಳಿದ ಹೇಳಿಕೆಯನ್ನು ತಮಾಷೆಯಾಗಿ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. +2004 ರಲ್ಲಿ, ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧಿಸುವ ಮೂಲಕ ರಾಜಕೀಯ ಕ್ಷೇತ್ರಕ್ಕೆ ಬಂದರು. ಇಲ್ಲಿ ರಾಹುಲ್​​ ಅವರು 10 ವರ್ಷಗಳ ಕಾಲ ಕಾಂಗ್ರಸ್​​​​ ಅಧಿಕಾರದಲ್ಲಿ ಇದ್ದ ಕಾರಣ ಇಲ್ಲಿ ಸುಲಭವಾಗಿ ಗೆಲ್ಲುತ್ತಿದ್ದರು. ಆದರೆ ಕಳೆದ 10 ವರ್ಷಗಳು ಅವರಿಗೆ ಈ ಕ್ಷೇತ್ರ ತುಂಬಾ ಸವಾಲಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರನ್ನು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು. ನಂತರ 2019ರಲ್ಲಿ ಸ್ಮೃತಿ ಕಾಂಗ್ರೆಸ್​​ನ ಭದ್ರಕೋಟೆಯಲ್ಲಿ 55,000 ಮತಗಳಿಂದ ಗೆಲುವು ಸಾಧಿಸಿದರು. \ No newline at end of file diff --git a/eesanje/url_47_109_5.txt b/eesanje/url_47_109_5.txt new file mode 100644 index 0000000000000000000000000000000000000000..6ade58ef34c5c6d5ce232bf65635e8ad4984d89f --- /dev/null +++ b/eesanje/url_47_109_5.txt @@ -0,0 +1,5 @@ +ರಾಹುಲ್‌ ಬಣದಿಂದ ಪ್ರಿಯಾಂಕಾ, ರಾಬರ್ಟ್‌ ವಾದ್ರಾ ಕಡೆಗಣನೆ ; ಬಿಜೆಪಿ ಆರೋಪ +ನವದೆಹಲಿ,ಮೇ.4-ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್‌ ವಾದ್ರಾ ಅವರನ್ನು ರಾಹುಲ್‌ಗಾಂಧಿ ಬಣ ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ರಾಬರ್ಟ್‌ ವಾದ್ರಾ ಅವರು ಉತ್ತರಪ್ರದೇಶದಲ್ಲಿ ಜನಪ್ರಿಯತೆ ಗಳಿಸಿದ ನಂತರವೂ ಅಮೇಥಿ ಸ್ಥಾನಕ್ಕಾಗಿ ರಾಹುಲ್‌ ಗಾಂಧಿ ಶಿಬಿರ ಅವರನ್ನು ಕಡೆಗಣಿಸಿದೆ ಎಂದು ಬಿಜೆಪಿ ನಾಯಕ ಅಮಿತ್‌ ಮಾಳವಿಯಾ ಹೇಳಿದ್ದಾರೆ. +ಕಿಶೋರಿ ಲಾಲ್‌ ಶರ್ಮಾ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ, ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದೆ. ರಾಹುಲ್‌ ಗಾಂಧಿ ಬಣದ ನಿರ್ಧಾರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಶೀಘ್ರದಲ್ಲೇ ಕಾಂಗ್ರೆಸ್‌‍ ನಾಯಕತ್ವದ ವಿರುದ್ಧ ದಂಗೆ ಏಳಬಹುದು ಎಂದು ಅಮಿತ್‌ ಮಾಳವೀಯ ಹೇಳಿದ್ದಾರೆ. +ಅಮೇಥಿಯಲ್ಲಿ ಅಪಾರ ಜನಪ್ರಿಯತೆ ಹೊಂದಿದ್ದರೂ, ಸ್ಥಾನಕ್ಕಾಗಿ ಕಡೆಗಣಿಸಲ್ಪಟ್ಟಿರುವ ರಾಬರ್ಟ್‌ ವಾದ್ರಾಗೆ ಸ್ವಲ್ಪ ಸಮಯ ನೀಡಿ. ರಾಹುಲ್‌ ಗಾಂಧಿ ಪಾಳಯವು ಕಾಂಗ್ರೆಸ್‌‍ನಲ್ಲಿ ಪ್ರಿಯಾಂಕಾ ವಾದ್ರಾ ಮತ್ತು ಅವರ ಪತಿ ಇಬ್ಬರನ್ನೂ ವ್ಯವಸ್ಥಿತವಾಗಿ ಮೂಲೆಗುಂಪು ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಮಾಳವೀಯ ಎಕ್‌್ಸ ಮಾಡಿದ್ದಾರೆ. +ಕೆಲ ದಿನಗಳ ಹಿಂದೆ ರಾಬರ್ಟ್‌ ವಾದ್ರಾ ತಾನು ಅಮೇಥಿಯಲ್ಲಿ ಜನಪ್ರಿಯನಾಗಿದ್ದೇನೆ ಎಂದು ಹೇಳಿಕೊಂಡಿದ್ದರು. ಅವರು ಸಕ್ರಿಯ ರಾಜಕಾರಣದಲ್ಲಿ ಇರಬೇಕೆಂದು ರಾಷ್ಟ್ರ ಬಯಸಿದೆ ಎಂದು ಹೇಳಿಕೊಂಡಿದ್ದರು ಅವರಿಗೆ ಟಿಕೆಟ್‌ ನೀಡದಿರುವುದನ್ನು ಉಲ್ಲೇಖಿಸಿ ಬಿಜೆಪಿ ಈ ದಾಳಿ ನಡೆಸಿದೆ. \ No newline at end of file diff --git a/eesanje/url_47_109_6.txt b/eesanje/url_47_109_6.txt new file mode 100644 index 0000000000000000000000000000000000000000..ace423fc5e92b9351b41b91bad48010cfe3a818b --- /dev/null +++ b/eesanje/url_47_109_6.txt @@ -0,0 +1,6 @@ +ಎಚ್‌ಸಿಯು ವಿದ್ಯಾರ್ಥಿ ರೋಹಿತ್‌ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ +ಹೈದರಾಬಾದ್‌,ಮೇ4-ಎಚ್‌ಸಿಯು ವಿದ್ಯಾರ್ಥಿ ರೋಹಿತ್‌ ವೇಮುಲಾ ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಕುರಿತಂತೆ ಪೊಲೀಸ್‌ ಇಲಾಖೆ ಮರು ತನಿಖೆ ನಡೆಸಲು ನಿರ್ಧರಿಸಿದೆ. +ಇತ್ತೀಚೆಗಷ್ಟೇ ಪೊಲೀಸರು ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದು, ಈ ವಿಚಾರದಲ್ಲಿ ವಿವಿ ವಿಸಿ ಹಾಗೂ ಹಲವು ಮುಖಂಡರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ರೋಹಿತ್‌ ಅವರ ತಾಯಿ, ವಿದ್ಯಾರ್ಥಿಗಳು ವರದಿ ಕುರಿತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯು ಪ್ರಕರಣವನ್ನು ಮರು ತನಿಖೆ ಮಾಡಲು ಈ ನಿರ್ಧಾರ ಕೈಗೊಂಡಿದೆ. +ವೇಮುಲಾ ರೋಹಿತ್‌ 2016 ರಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದರು. ಈ ಘಟನೆಯ ಬಗ್ಗೆ ವಿದ್ಯಾರ್ಥಿ ಸಂಘಗಳು ಮತ್ತು ಹೆಚ್‌ಸಿಯು ವಿದ್ಯಾರ್ಥಿಗಳು ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ಕೈಗೊಂಡಿದ್ದರು. +ದೇಶಾದ್ಯಂತ ಹಲವು ರಾಜಕೀಯ ಪಕ್ಷಗಳು ಪ್ರತಿಕ್ರಿಯಿಸಿದ್ದವು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎರಡು ಬಾರಿ ಹೈದರಾಬಾದ್‌ಗೆ ಭೇಟಿ ನೀಡಿದ್ದರು. ಆ ಸಮಯದಲ್ಲಿ ಸೈಬರಾಬಾದ್‌ನ ಗಚಿಬೌಲಿ ಪೊಲೀಸ್‌ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನವೆಂಬರ್‌ 2023ರಲ್ಲಿ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದರು. +ತನಿಖಾಧಿ ಕಾರಿ ಈ ವರ್ಷ ಮಾರ್ಚ್‌ 21ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಈ ವಿಚಾರವಾಗಿ ಇತ್ತೀಚೆಗೆ ಮತ್ತೆ ಎಲ್ಲರಲ್ಲೂ ಆತಂಕ ಶುರುವಾಗಿದೆ. ಡಿಜಿಪಿ ರವಿಗುಪ್ತ ಶುಕ್ರವಾರ ಈ ಪ್ರಕರಣದ ಮರು ತನಿಖೆಗೆ ನಿರ್ಧರಿಸಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ. ರೋಹಿತ್‌ ಆತ್ಮಹತ್ಯೆ ಪ್ರಕರಣದ ಮರು ತನಿಖೆ ಮುಂದುವರಿಯಲಿದೆ ಎಂದು ಡಿಜಿಪಿ ತಿಳಿಸಿದ್ದಾರೆ. \ No newline at end of file diff --git a/eesanje/url_47_109_7.txt b/eesanje/url_47_109_7.txt new file mode 100644 index 0000000000000000000000000000000000000000..54c9a5b3641affcacc579dd345c761cd70936d5b --- /dev/null +++ b/eesanje/url_47_109_7.txt @@ -0,0 +1,11 @@ +ಖರ್ಚಿಗೆ ಕಾಸಿಲ್ಲ ಎಂದು ಚುನಾವಣಾ ಕಣದಿಂದ ಹಿಂದೆಸರಿಯಲು ತೀರ್ಮಾನಿಸಿದ ಕಾಂಗ್ರೆಸ್‌ ಅಭ್ಯರ್ಥಿ +ನವದೆಹಲಿ,ಮೇ4-ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಏಕೋ ನಸೀಬೇ ಸರಿ ಇಲ್ಲ ಅನಿಸುತ್ತದೆ.! ಏಕೆಂದರೆ ಈಗಾಗಲೇ ಎರಡು ಕ್ಷೇತ್ರಗಳನ್ನು ಫಲಿತಾಂಶಕ್ಕೂ ಮುನ್ನವೇ ಕಳೆದುಕೊಂಡಿದ್ದ ಆ ಪಕ್ಷಕ್ಕೆ ಇದೀಗ ಮ್ತತೊಂದು ಹಿನ್ನಡೆಯಾಗಿದೆ. ಒಂದು ಕಾಲದಲ್ಲಿ ಪತ್ರೆಕರ್ತೆಯಾಗಿ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದ ಕಾಂಗ್ರೆಸ್‌ ಅಭ್ಯರ್ಥಿಗೆ ಹಣಕಾಸಿನ ತೊಂದರೆಯಿಂದ ಸ್ಪರ್ಧ ಕಣದಿಂದಲೇ ಹಿಂದೆ ಸರಿಯವ ತೀರ್ಮಾನಕ್ಕೆ ಬಂದಿದ್ದಾರೆ. +ಈ ಬೆಳವಣಿಗೆ ಕೈ ಪಕ್ಷಕ್ಕೆ ಭಾರೀ ಮುಜುಗರ ಉಂಟು ಮಾಡಿದೆ. ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುಚರಿತಾ ಮೊಹಂತಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ಪತ್ರ ಬರೆದು ತಮಗೆ ಹಣಕಾಸಿನ ಕೊರತೆಯಿರುವ ಕಾರಣ ತಮ್ಮ ಪ್ರಚಾರಕ್ಕೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. +ಅಸಮರ್ಪಕ ಹಣದ ಕಾರಣ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದು, ಪಕ್ಷದಿಂದ ಹಣಕಾಸಿನ ನೆರವು ಪಡೆಯುತ್ತಿಲ್ಲ ಎಂದು ಆಳಲು ತೋಡಿಕೊಂಡಿದ್ದಾರೆ.ಮೊಹಾಂತಿ ಅವರು ತಮ್ಮ ಪತ್ರದಲ್ಲಿ, ಪಕ್ಷವು ನನಗೆ ಧನಸಹಾಯವನ್ನು ನಿರಾಕರಿಸಿದ ಕಾರಣ ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ಭಾರಿ ಹಿನ್ನಡೆಯಾಗಿದೆ. +ಎಐಸಿಸಿ ಒಡಿಶಾ ಉಸ್ತುವಾರಿ ಡಾ.ಅಜೋಯ್‌ ಕುಮಾರ್‌.ಜಿ ಅವರು ನನ್ನನ್ನು ನಾನು ರಕ್ಷಿಸಿಕೊಳ್ಳುವಂತೆ ಸ್ಪಷ್ಟವಾಗಿ ಹೇಳಿರುವುದಾಗಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. +ತನ್ನ ಪ್ರಚಾರಕ್ಕೆ ಧನಸಹಾಯ ನೀಡಲು ವಿಫಲವಾದ ಕಾರಣಗಳನ್ನು ಉಲ್ಲೇಖಿಸಿ, ಮೊಹಾಂತಿ ತನ್ನ ಎಲ್ಲಾ ಉಳಿತಾಯವನ್ನು ಪ್ರಚಾರಕ್ಕಾಗಿ ಖರ್ಚು ಮಾಡಿದ್ದೇನೆ ಮತ್ತು ಹೆಚ್ಚಿನದನ್ನು ನೀಡಲು ಸಾಧ್ಯವಾಗಲಿಲ್ಲ. ನಾನು 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದ ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತನಾಗಿದ್ದೆ. ಪುರಿಯಲ್ಲಿ ನನ್ನ ಪ್ರಚಾರಕ್ಕೆ ನನ್ನ ಬಳಿಯಿದ್ದೆಲ್ಲವನ್ನೂ ನೀಡಿದ್ದೇನೆ. +ಪ್ರಗತಿಪರ ರಾಜಕೀಯಕ್ಕಾಗಿ ನನ್ನ ಅಭಿಯಾನವನ್ನು ಬೆಂಬಲಿಸಲು ನಾನು ಸಾರ್ವಜನಿಕ ದೇಣಿಗೆ ಅಭಿಯಾನವನ್ನು ಪ್ರಯತ್ನಿಸಿದೆ ಇದುವರೆಗೆ ಹೆಚ್ಚು ಯಶಸ್ವಿಯಾಗಲಿಲ್ಲ. ಯೋಜಿತ ಪ್ರಚಾರದ ವೆಚ್ಚವನ್ನು ಕನಿಷ್ಠಕ್ಕೆ ಕಡಿತಗೊಳಿಸಲು ನಾನು ಪ್ರಯತ್ನಿಸಿದೆ, ಎಂದು ಅವರು ಹೇಳಿದ್ದಾರೆ. +ಗಮನಾರ್ಹವೆಂದರೆ, ಮೊಹಾಂತಿ ಅವರು ಲೋಕಸಭೆ ಚುನಾವಣೆಗೆ ಇನ್ನೂ ನಾಮಪತ್ರ ಸಲ್ಲಿಸಿಲ್ಲ ಹಾಗೂ ನಾಮಪತ್ರ ಸಲ್ಲಿಸಲು ನಿರಾಕರಿಸಿದ್ದಾರೆ. ಮತ್ತೊಂದೆಡೆ ಒಡಿಶಾ ಕ್ಷೇತ್ರದಿಂದ ಬಿಜೆಡಿಯ ಅರೂಪ್‌ ಪಟ್ನಾಯಕ್‌ ಮತ್ತು ಬಿಜೆಪಿಯ ಸಂಬಿತ್‌ ಪಾತ್ರಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. +ಏತನ್ಮಧ್ಯೆ, ಬಿಜೆಡಿ ನಾಯಕ ವಿ ಕೆ ಪಾಂಡಿಯನ್‌ ಅವರ ಪತ್ನಿ ಒಡಿಶಾದ ಹಿರಿಯ ಅಧಿಕಾರಿ ಸುಜಾತಾ ಆರ್‌ ಕಾರ್ತಿಕೇಯನ್‌ ಅವರನ್ನು ಸಾರ್ವಜನಿಕವಲ್ಲದ ಇಲಾಖೆಗೆ ವರ್ಗಾಯಿಸಲು ಚುನಾವಣಾ ಆಯೋಗವು ಆದೇಶ ನೀಡಿದೆ, ಸಾರ್ವಜನಿಕ ಕಚೇರಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಬಗ್ಗೆ ಬಿಜೆಪಿ ದೂರು ನೀಡಿದ ಗಂಟೆಗಳ ನಂತರ, ಮೂಲಗಳು ತಿಳಿಸಿವೆ. +ಪಾಂಡಿಯನ್‌ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ನಿಕಟವರ್ತಿಯಾಗಿದ್ದರು. ಕಾರ್ತಿಕೇಯನ್‌ ಅವರು ಒಡಿಶಾದ ಮಿಷನ್‌ ಶಕ್ತಿ ಇಲಾಖೆಯಲ್ಲಿ ಕಮಿಷನರ್‌-ಕಮ್‌-ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದರು. ಸಾರ್ವಜನಿಕ ಕಚೇರಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇರೆಗೆ ಕಾರ್ತಿಕೇಯನ್‌ ಅವರನ್ನು ತಕ್ಷಣದಿಂದ ಜಾರಿಗೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ. +ಈಗಾಗಲೇ ಗುಜರಾತ್‌ನ ಸೂರತ್‌ನಲ್ಲಿ ಕಾಂಗ್ರೆಸ್‌ ಅಧಿಕೃತ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತ ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ನಾಮಪತ್ರವನ್ನು ಹಿಂಪಡೆದು ಬಿಜೆಪಿ ಸೇರಿಕೊಂಡಿದ್ದಾರೆ. \ No newline at end of file diff --git a/eesanje/url_47_109_8.txt b/eesanje/url_47_109_8.txt new file mode 100644 index 0000000000000000000000000000000000000000..a3dc9a4d31ba8b1a807a0e67c39dc7d834e64a9d --- /dev/null +++ b/eesanje/url_47_109_8.txt @@ -0,0 +1,8 @@ +ಅಮಿತ್‌ ಶಾ ನಕಲಿ ವಿಡಿಯೋ ಮಾಡಿದ ಕಾಂಗ್ರೆಸ್ ಮುಖಂಡ ಪೊಲೀಸ್‌‍ ಕಸ್ಟಡಿಗೆ +ನವದೆಹಲಿ,ಮೇ.4-ಕೇಂದ್ರ ಗಹ ಸಚಿವ ಅಮಿತ್‌ ಶಾ ಅವರ ನಕಲಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಿರಿಟ್‌ ಆಫ್‌ ಕಾಂಗ್ರೆಸ್‌‍ ಎಕ್ಸ್ ಖಾತೆಯನ್ನು ನಿರ್ವಹಿಸುತ್ತಿರುವ ಮತ್ತು ಪಕ್ಷದ ಸಾಮಾಜಿಕ ಮಾಧ್ಯಮದ ರಾಷ್ಟ್ರೀಯ ಸಂಯೋಜಕರಾಗಿರುವ ಕಾಂಗ್ರೆಸ್‌‍ ನಾಯಕ ಅರುಣ್‌ ರೆಡ್ಡಿ ಅವರನ್ನು 3 ದಿನಗಳ ಪೊಲೀಸ್‌‍ ಕಸ್ಟಡಿಗೆ ಕಳುಹಿಸಲಾಗಿದೆ. . +ದೆಹಲಿ ಪೊಲೀಸರ ಐಎಫ್‌ಎಸ್‌‍ಒ ಘಟಕವು ತಡರಾತ್ರಿ ಅವರನ್ನು ಬಂಧಿಸಿದ ನಂತರ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು 3 ದಿನಗಳ ಪೊಲೀಸ್‌‍ ಕಸ್ಟಡಿಗೆ ನೀಡಲಾಗಿದೆ. +ತಿರುಚಿದ ವೀಡಿಯೊದಲ್ಲಿ ಕೇಂದ್ರ ಗಹ ಸಚಿವರು ದೇಶದಲ್ಲಿ ಮೀಸಲಾತಿಯ ವಿರುದ್ಧ ಬಿಜೆಪಿ ನಿಂತಿದೆ ಎಂದು ಹೇಳುತ್ತಿರುವುದು ಕೇಳಿಬರುತ್ತಿತ್ತು. ಆದರೆ, ವಾಸ್ತವದಲ್ಲಿ ಕಾಂಗ್ರೆಸ್‌‍ ಆಡಳಿತವಿರುವ ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಬಿಜೆಪಿ ಇಲ್ಲಿ ಸರ್ಕಾರ ರಚಿಸಿದರೆ, ನಾವು ಮುಸ್ಲಿಮರಿಗೆ ಅಸಂವಿಧಾನಿಕ ಮೀಸಲಾತಿಯನ್ನು ಹಿಂಪಡೆಯುತ್ತೇವೆ. ಎಸ್‌‍ಸಿ, ಎಸ್‌‍ಟಿ ಮತ್ತು ಒಬಿಸಿಗಳಿಗೆ ನಾವು ಖಚಿತಪಡಿಸುತ್ತೇವೆ. ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಿದ ಕೋಟಾಗಳನ್ನು ಪಡೆಯಿರಿ ಎಂದು ಹೇಳಿದ್ದರು. +ತೆಲಂಗಾಣ ಕಾಂಗ್ರೆಸ್‌‍ ಉಸ್ತುವಾರಿಯಾಗಿರುವ ಕಾಂಗ್ರೆಸ್‌‍ ಸಂಸದ ಮಾಣಿಕ್ಕಂ ಠಾಗೋರ್‌ ಅವರು ಈ ಬಂಧನ ಕೇಂದ್ರ ಸರ್ಕಾರದ ಅಧಿಕಾರ ದುರ್ಬಳಕೆಯಾಗಿದೆ ಎಂದು ಆರೋಪಿಸಿದ್ದಾರೆ. +ಶಾ ಅವರ ನಕಲಿ ವೀಡಿಯೊ ಪ್ರಸಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್‌‍ನ ಇಂಟೆಲಿಜೆನ್ಸ್‌‍ ಫ್ಯೂಷನ್‌ ಮತ್ತು ಸ್ಟ್ರಾಟೆಜಿಕ್‌ ಆಪರೇಷನ್‌ ಘಟಕವು ಏಳರಿಂದ ಎಂಟು ರಾಜ್ಯಗಳ 16 ವ್ಯಕ್ತಿಗಳಿಗೆ ಸಮನ್ಸ್ ಜಾರಿ ಮಾಡಿದೆ. +ಕ್ರಿಮಿನಲ್‌ ಪೊಸೀಜರ್‌ ಕೋಡ್‌ ಅಡಿಯಲ್ಲಿ ಸಂಬಂಧಪಟ್ಟ ವ್ಯಕ್ತಿಗಳು ತನಿಖೆಗೆ ಸೇರಲು ಮತ್ತು ಸಂಬಂಧಿತ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್‌ ಸಾಧನಗಳನ್ನು ಸಾಕ್ಷ್ಯವಾಗಿ ಒದಗಿಸುವಂತೆ ಕೇಳಿಕೊಳ್ಳಲಾಗಿದೆ.ಪೊಲೀಸ್‌‍ ಮೂಲಗಳ ಪ್ರಕಾರ, ಸಮನ್ಸ್ ಪಡೆದವರಲ್ಲಿ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಸೇರಿದಂತೆ ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್‌‍ನ ಆರು ಸದಸ್ಯರು ಸೇರಿದ್ದಾರೆ. +ಬಿಜೆಪಿಯ ತೆಲಂಗಾಣ ಘಟಕವು ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌‍ನ ರಾಜ್ಯ ಮುಖ್ಯಸ್ಥ ರೇವಂತ್‌ ರೆಡ್ಡಿ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಕ್ಷವು ಅಮಿತ್‌ ಶಾ ಅವರ ಭಾಷಣವನ್ನು ನಿರ್ಮಿಸಿ ಮಾರ್ಫಿಂಗ್‌ ಮಾಡಿದೆ ಎಂದು ಆರೋಪಿಸಿತ್ತು. \ No newline at end of file diff --git a/eesanje/url_47_109_9.txt b/eesanje/url_47_109_9.txt new file mode 100644 index 0000000000000000000000000000000000000000..d9bca0c7928c5d77c154c66b2df6da579aa33597 --- /dev/null +++ b/eesanje/url_47_109_9.txt @@ -0,0 +1,8 @@ +ಸಿಎಎ, ಪಿಎಫ್‌ಐ ಬಗ್ಗೆ ಉತ್ತರಿಸಲು ಉದ್ಧವ್‌ ಠಾಕ್ರೆಗೆ ಅಮಿತ್‌ ಶಾ ಸವಾಲು +ಸಾಂಗ್ಲಿ,ಮೇ.4-ಹೊಸ ಮತ ಬ್ಯಾಂಕ್‌ಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಮೇಲಿನ ನಿಷೇಧಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಉತ್ತರ ನೀಡದ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ ವಿರುದ್ಧ ಕೇಂದ್ರ ಗಹ ಸಚಿವ ಅಮಿತ್‌ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. +ಶರದ್‌ ಪವಾರ್‌ ಮತ್ತು ಕಾಂಗ್ರೆಸ್‌‍ನ ವೋಟ್‌ ಬ್ಯಾಂಕ್‌ ಈಗ ಉದ್ಧವ್‌ ಠಾಕ್ರೆ ಅವರ ಹೊಸ ವೋಟ್‌ ಬ್ಯಾಂಕ್‌ ಆಗಿ ಮಾರ್ಪಟ್ಟಿದೆ ಎಂದು ಶಾ ಹೇಳಿಕೊಂಡಿದ್ದಾರೆ. ಸಾಂಗ್ಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ನಾನು ನಕಲಿ ಶಿವಸೇನೆಯ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಕೇಳಲು ಬಯಸುತ್ತೇನೆ, ನೀವು ಮಹಾರಾಷ್ಟ್ರದ ಜನರ ಮುಂದೆ ಸ್ಪಷ್ಟಪಡಿಸಬೇಕು, ಸಿಎಎ ಜಾರಿಗೊಳಿಸಬೇಕೇ ಅಥವಾ ಬೇಡವೇ? ಪಿಎಫ್‌ಐ ಬೇಕೇ ಬೇಡವೇ? ತ್ರಿವಳಿ ತಲಾಖ್‌ ಅನ್ನು ತೆಗೆದುಹಾಕುವುದು ಒಳ್ಳೆಯದಾಗಿದೆಯೋ ಅಥವಾ ಇಲ್ಲವೋ? ಎಂದು ಪ್ರಶ್ನಿಸಿದ್ದಾರೆ. +ಮುಂಬರುವ ಚುನಾವಣೆಯು ಜಿಹಾದ್‌ಗೆ ಮತ ನೀಡುವವರು ಮತ್ತು ಅಭಿವದ್ಧಿಗೆ ಆದ್ಯತೆ ನೀಡುವವರ ನಡುವೆ ನಡೆಯಲಿದೆ ಎಂದು ಶಾ ಹೇಳಿದರು. ಇಂದು ದೇಶದಲ್ಲಿ ಎರಡು ಪಾಳೆಯಗಳಿವೆ- ಮೊದಲನೆಯದು ರಾಮಮಂದಿರದ ವಿರುದ್ಧ, ಎರಡನೆಯದು – ಮೋದಿ ಜಿ, ಎನ್‌ಡಿಎ ವಿರುದ್ಧ. ರಾಮಮಂದಿರವನ್ನು ಯಾರು ನಿರ್ಮಿಸಲು ಹೊರಟಿದ್ದಾರೆ. +ಒಂದು ಕಡೆ ಜಿಹಾದ್‌ಗೆ ಮತ ಹಾಕುವ ಜನರಿದ್ದಾರೆ. ಮತ್ತೊಂದೆಡೆ, ಅಭಿವದ್ಧಿಗಾಗಿ ಮತ ಹಾಕುವ ಜನರಿದ್ದಾರೆ, ತಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕಾಳಜಿವಹಿಸುವ ಜನರಿದ್ದಾರೆ, ಮತ್ತೊಂದೆಡೆ, ಮೋದಿ ಜಿ ನಾಯಕತ್ವದಲ್ಲಿ ದೇಶದ ಕಲ್ಯಾಣಕ್ಕಾಗಿ ಕೆಲಸ ಮಾಡುವ ಜನರಿದ್ದಾರೆ ಎಂದು ಅವರು ಹೇಳಿದರು. +ಹಿಂದಿನ ಕಾಂಗ್ರೆಸ್‌‍ ಸರ್ಕಾರ ಭಯೋತ್ಪಾದನೆಯನ್ನು ನಿರ್ಲಕ್ಷಿಸಿದೆ ಎಂದು ಅಮಿತ್‌ ಶಾ ಪ್ರತಿಪಾದಿಸಿದರು, ಆದರೆ ಪ್ರಧಾನಿ ಮೋದಿ ಸರ್ಕಾರ ಉರಿ ಮತ್ತು ಪುಲ್ವಾಮಾ ದಾಳಿಯ 10 ದಿನಗಳಲ್ಲಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿತು ಎಂದು ಶಾ ತಿಳಿಸಿದರು. +ಕಾಂಗ್ರೆಸ್‌‍ ಸರಕಾರದಲ್ಲಿ, ಸೋನಿಯಾ-ಮನಮೋಹನ್‌ ಸರಕಾರದಲ್ಲಿ ಆಲಿಯಾ, ಮಾಲಿಯಾ, ಜಮಾಲಿಯಾ ಪಾಕಿಸ್ತಾನದಿಂದ ದಿನಕ್ಕೊಂದು ದಿನ ಬಂದು ಬಾಂಬ್‌ ಸ್ಫೋಟ ಮಾಡಿ ಹೋಗುತ್ತಿದ್ದರು… ಯಾರೂ ಏನೂ ಹೇಳುತ್ತಿರಲಿಲ್ಲ. +2014ರಲ್ಲಿ ಮೋದಿಯವರು ಪ್ರಧಾನಿಯಾದಾಗ ಉರಿ ಮತ್ತು ಪುಲ್ವಾಮಾದ ಮೇಲೆ ಪಾಕಿಸ್ತಾನ ದಾಳಿ ನಡೆಸಿತು, ಆದರೆ ಈಗ ಮನಮೋಹನ್‌ ಸಿಂಗ್‌ ಪ್ರಧಾನಿ ಅಲ್ಲ ಎಂಬುದನ್ನು ಮರೆತಿದ್ದಾರೆ ಮತ್ತು ಕೇವಲ 10 ದಿನಗಳಲ್ಲಿ ಮೋದಿಜಿ ನಮ ಸೇನೆಯ ನಾಯಕತ್ವದಲ್ಲಿ ಪ್ರಧಾನಿಯಾಗಿದ್ದಾರೆ ಪಾಕಿಸ್ತಾನಕ್ಕೆ ನುಗ್ಗಿ ಸೇಡು ತೀರಿಸಿಕೊಂಡರು ಎಂದು ಹೇಳಿದರು. \ No newline at end of file diff --git a/eesanje/url_47_10_1.txt b/eesanje/url_47_10_1.txt new file mode 100644 index 0000000000000000000000000000000000000000..834a577beada5667cb6953878f97991ba88b5a35 --- /dev/null +++ b/eesanje/url_47_10_1.txt @@ -0,0 +1,8 @@ +ಮಹಾರಾಷ್ಟ್ರ : ಇಡೀ ಕುಟುಂಬ ಮನೆಯಲ್ಲಿ ಶವವಾಗಿ ಪತ್ತೆ +4 ' +ಧುಲೆ, ಸೆ.20-ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮಹಾರಾಷ್ಟ್ರದ ಧುಲೆಯ ಪ್ರಮೋದ್ ನಗರ ಪ್ರದೇಶದಲ್ಲಿನ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. +ಮೃತರನ್ನು ಕಷಿ ರಸಗೊಬ್ಬರ ಮಾರಾಟಗಾರ ಪ್ರವೀಣ್ ಮಾನಸಿಂಗ್ ಗಿರಾಸೆ, ಅವರ ಪತ್ನಿ ಗೀತಾ ಪ್ರವೀಣ್ ಗಿರಾಸೆ, ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದು, ಅವರ ಇಬ್ಬರು ಮಕ್ಕಳಾದ ಮಿತೇಶ್ ಪ್ರವೀಣ್ ಗಿರಾಸೆ ಮತ್ತು ಸೋಹಂ ಪ್ರವೀಣ್ ಗಿರಾಸೆ ಎಂದು ಗುರುತಿಸಲಾಗಿದೆ. +ಧುಲೆ ಜಿಲ್ಲೆಯ ದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥ ಕಾಲೋನಿಯ ಪ್ರಮೋದ್ ನಗರ ಪ್ರದೇಶದ ಅವರ ಮನೆಯಲ್ಲಿ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಮನೆಯಿಂದ ದುರ್ವಾಸನೆ ಬರುತ್ತಿದ್ದರಿಂದ ಮೂರ್ನಾಲ್ಕು ದಿನಗಳ ಹಿಂದೆ ಮತಪಟ್ಟಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. +ಪ್ರವೀಣ್ ಗಿರಾಸೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳು ವಿಷ ಸೇವಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕುಟುಂಬ ಏಕೆ ಈ ತೀವ್ರ ಕ್ರಮ ಕೈಗೊಂಡಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಸಮದ್ಧ ಕುಟುಂಬವಾಗಿದ್ದರೂ ಈ ಭೀಕರ ಘಟನೆ ಧುಲೆ ಜನತೆಯನ್ನು ಬೆಚ್ಚಿ ಬೀಳಿಸಿದೆ. +ಇದು ಸಾಮೂಹಿಕ ಆತಹತ್ಯೆಯೇ ಅಥವಾ ಇನ್ನೇನಾದರೂ ಆಗಿದೆಯೇ ಎಂದು ತಿಳಿಯಲು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮನೆಗೆಲಸಕ್ಕೆ ಬರುತ್ತಿದ್ದ ಮಹಿಳೆಯೂ ಕುಟುಂಬಸ್ಥರು ಸ್ವಗ್ರಾಮಕ್ಕೆ ಹೋಗಿರಬೇಕು ಎಂದು ಭಾವಿಸಿ ಎರಡು ಬಾರಿ ವಾಪಸ್ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ನಾಲ್ಕು ದಿನ ಕಳೆದರೂ ಮನೆಯಿಂದ ಸದ್ದು ಕೇಳಿಸದೇ ಇದ್ದಾಗ ಸುತ್ತಮುತ್ತಲಿನವರಿಗೆ ಕೆಲವರು ಪ್ರವೀಣ್ ಗಿರಸೆ ಅವರ ಸಹೋದರಿ ಸಂಗೀತಾ ಅವರಿಗೆ ಮಾಹಿತಿ ನೀಡಿದ್ದಾರೆ.ಸಂಗೀತಾ ಪ್ರವೀಣ್ ಮನೆಗೆ ಬಂದು ಜನರ ಸಹಾಯದಿಂದ ಬಾಗಿಲು ತೆರೆದು ನೋಡಿದಾಗ ಪ್ರವೀಣ್ ಶವ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ಪತ್ನಿ ಮತ್ತು ಮಕ್ಕಳ ಮತದೇಹಗಳು ನೆಲದ ಮೇಲೆ ಬಿದ್ದಿರುವುದು ಕಂಡುಬಂದಿತ್ತು. \ No newline at end of file diff --git a/eesanje/url_47_10_10.txt b/eesanje/url_47_10_10.txt new file mode 100644 index 0000000000000000000000000000000000000000..322f9de93fc9ad0fce1648dde83ca53fa22bfd44 --- /dev/null +++ b/eesanje/url_47_10_10.txt @@ -0,0 +1,5 @@ +ಮೋದಿ ಗಿಫ್ಟ್‌ ಹರಾಜಿನ ಹಣ ನಮಾಮಿ ಗಂಗೆ ಯೋಜನೆಗೆ + ' , +ನವದೆಹಲ, ಸೆ.19 (ಪಿಟಿಐ)– ತಾವು ಪಡೆದಿರುವ ಸರಣಿಕೆಗಳಿಗೆ ಹರಾಜು ಹಾಕುವಂತೆ ಜನರನ್ನು ಒತ್ತಾಯಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಆದಾಯವನ್ನು ನಮಾಮಿ ಗಂಗೆ ಉಪಕ್ರಮಕ್ಕೆ ಬಳಸಲಾಗುವುದು ಎಂದು ತಿಳಿಸಿದ್ದಾರೆ. +ಪ್ರತಿ ವರ್ಷ, ನಾನು ಸಾರ್ವಜನಿಕ ಕಾರ್ಯಕ್ರಮಗಳ ಸಮಯದಲ್ಲಿ ನಾನು ಸ್ವೀಕರಿಸುವ ವಿವಿಧ ಸರಣಿಕೆಗಳನ್ನು ಹರಾಜು ಮಾಡುತ್ತೇನೆ. ಹರಾಜಿನ ಆದಾಯವು ನಮಾಮಿ ಗಂಗೆ ಉಪಕ್ರಮಕ್ಕೆ ಹೋಗುತ್ತದೆ ಎಂದು ಅವರು ಎಕ್ಸ್‌ ಮಾಡಿದ್ದಾರೆ. +ಈ ವರ್ಷದ ಹರಾಜು ಪ್ರಾರಂಭವಾಗಿದೆ ಎಂದು ಹಂಚಿಕೊಳ್ಳಲು ನಾನು ಸಂತೋಷಪಡುತ್ತೇನೆ. ಬಿಡ್‌‍ ಮಾಡಿ ನೀವು ಆಸಕ್ತಿದಾಯಕವಾಗಿ ಕಾಣುವ ಸಾರಕಗಳು! ಪಡೆದುಕೊಂಡು ನವಾಮಿ ಗಂಗೆ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.ನಮಾಮಿ ಗಂಗೆಯು ಗಂಗಾ ನದಿಯ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕಾಗಿ ಸರ್ಕಾರದ ಉಪಕ್ರಮವಾಗಿದೆ \ No newline at end of file diff --git a/eesanje/url_47_10_11.txt b/eesanje/url_47_10_11.txt new file mode 100644 index 0000000000000000000000000000000000000000..948a146c2ad797130a3bd1dffe0b71a855594876 --- /dev/null +++ b/eesanje/url_47_10_11.txt @@ -0,0 +1,7 @@ +ಕಾಂಗ್ರೆಸ್‌‍ನ ಹಿರಿಯ ನಾಯಕರಿಗೆ ಸೂಕ್ತ ಸ್ಥಾನಮಾನ + +ನವದೆಹಲಿ, ಸೆ 19 (ಪಿಟಿಐ)ಹಿರಿಯ ಕಾಂಗ್ರೆಸ್‌‍ ನಾಯಕ ಶಶಿ ತರೂರ್‌ ಅವರು ಬಾಹ್ಯ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಮತ್ತು ಹಿರಿಯ ನಾಯಕ ದಿಗ್ವಿಜಯ ಸಿಂಗ್‌ ಅವರು ಶಿಕ್ಷಣ ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಪಂಜಾಬ್‌ ಮಾಜಿ ಮುಖ್ಯಮಂತ್ರಿ ಚರಂಜಿತ್‌ ಸಿಂಗ್‌ ಚನ್ನಿ ಕಷಿ ಸಂಸದೀಯ ಸ್ಥಾಯಿ ಸಮಿತಿಯ ನೇತತ್ವ ವಹಿಸಲಿದ್ದು, ಕೊರಾಪುಟ್‌ ಸಂಸದ ಸಪ್ತಗಿರಿ ಉಲಕಾ ಗ್ರಾಮೀಣಾಭಿವದ್ಧಿ ಸಮಿತಿಯ ನೇತತ್ವ ವಹಿಸಲಿದ್ದಾರೆ. ದಲಿತರಾಗಿರುವ ಚನ್ನಿ ಮತ್ತು ಬುಡಕಟ್ಟು ಸಮುದಾಯದಿಂದ ಬಂದ ಉಲಕ ಅವರನ್ನು ಇತ್ತೀಚಿನ ಎಲ್ಲಾ ನೇಮಕಾತಿಗಳಲ್ಲಿ ಸಾಮಾಜಿಕ ನ್ಯಾಯದ ಕೇಂದ್ರಬಿಂದುವಾಗಿ ಪಕ್ಷವು ಆಯ್ಕೆ ಮಾಡಿದೆ. +ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಆಡಳಿತದಲ್ಲಿ ವಂಚಿತ ವರ್ಗಗಳ ಭಾಗವಹಿಸುವಿಕೆಯನ್ನು ಒತ್ತಿಹೇಳುತ್ತಿದ್ದಾರೆ ಮತ್ತು ಪಕ್ಷದ ಸಂಘಟನೆಯನ್ನು ಹೆಚ್ಚು ಒಳಗೊಳ್ಳುವಂತೆ ಕರೆ ನೀಡಿದ್ದಾರೆ.ತನಗೆ ನೇತತ್ವ ವಹಿಸಿರುವ ನಾಲ್ಕು ಇಲಾಖೆ ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿಗಳ ಮುಖ್ಯಸ್ಥರಾಗಿ ನಾಲ್ವರು ನಾಯಕರ ಹೆಸರನ್ನು ಕಾಂಗ್ರೆಸ್‌‍ ರವಾನಿಸಿದೆ ಎಂದು ಮೂಲಗಳು ತಿಳಿಸಿವೆ. +ಸಂಸದೀಯ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದ ಕುರಿತು ಯಾವುದೇ ಅಧಿಕತ ಅಧಿಸೂಚನೆ ಹೊರಬಿದ್ದಿಲ್ಲವಾದರೂ, ಶೀಘ್ರದಲ್ಲೇ ಅದು ಹೊರಬೀಳುವ ನಿರೀಕ್ಷೆಯಿದೆ. ಕಾಂಗ್ರೆಸ್‌‍ ವಿದೇಶಾಂಗ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿರುತ್ತಾರೆ; ಕಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ; ಲೋಕಸಭೆಯಲ್ಲಿ ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್‌ ರಾಜ್‌‍; ಮತ್ತು ರಾಜ್ಯಸಭೆಯಲ್ಲಿ ಶಿಕ್ಷಣ, ಮಹಿಳೆಯರು, ಮಕ್ಕಳು, ಯುವಕರು ಮತ್ತು ಕ್ರೀಡೆಗಳು. +ಸಮಿತಿಗಳ ಅಧ್ಯಕ್ಷ ಸ್ಥಾನದ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದದ ನಂತರ ಇದನ್ನು ನಿರ್ಧರಿಸಲಾಯಿತು.ರಾಜ್ಯಸಭೆಯಲ್ಲಿ ಕಾಂಗ್ರೆಸ್‌‍ನ ಮುಖ್ಯ ಸಚೇತಕ ಜೈರಾಮ್‌ ರಮೇಶ್‌ ಮತ್ತು ಲೋಕಸಭೆಯಲ್ಲಿ ಪಕ್ಷದ ಉಪ ನಾಯಕ ಗೌರವ್‌ ಗೊಗೊಯ್‌ ಅವರು ಒಮತಕ್ಕೆ ಬರಲು ಸರ್ಕಾರದೊಂದಿಗೆ ಸಂಧಾನದಲ್ಲಿ ತೊಡಗಿದ್ದರು. \ No newline at end of file diff --git a/eesanje/url_47_10_12.txt b/eesanje/url_47_10_12.txt new file mode 100644 index 0000000000000000000000000000000000000000..bd1c7f701a7f01a09f543480acfcb1b97c6afee3 --- /dev/null +++ b/eesanje/url_47_10_12.txt @@ -0,0 +1,7 @@ +ಜಾರಿ ನಿರ್ದೇಶನಾಲಯ ಅಧಿಕಾರದ ಕುರಿತ ವಿಚಾರಣೆ ಅ.3ಕ್ಕೆ ಮುಂದೂಡಿಕೆ + ' 3 +ನವದೆಹಲಿ, ಸೆ.18 (ಪಿಟಿಐ)-ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಆಸ್ತಿ ವಶಪಡಿಸಿಕೊಳ್ಳುವ ಮತ್ತು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಎತ್ತಿಹಿಡಿಯುವ 2022ರ ತೀರ್ಪಿಗೆ ಮರುಪರಿಶೀಲನೆಯ ಅಗತ್ಯವಿದೆಯೇ ಎಂಬ ಪ್ರಶ್ನೆಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇಂದು ಅಕ್ಟೋಬರ್‌ 3ಕ್ಕೆ ಮುಂದೂಡಿದೆ. +ಜಾರಿ ನಿರ್ದೇಶನಾಲಯ (ಇಡಿ) ಪರ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ನ್ಯಾಯಮೂರ್ತಿ ಸೂರ್ಯ ಕಾಂತ್‌ ನೇತತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿ, ಮುಂದೂಡುವಂತೆ ಕೋರಿದರು. +ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌‍, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಸುಪ್ರೀಂ ಕೋರ್ಟ್‌ ಪ್ರಕರಣವನ್ನು ಮುಂದೂಡಲು ಒಪ್ಪಿಕೊಂಡಿತು ಮತ್ತು ಅಕ್ಟೋಬರ್ 3 ರಂದು ವಿಚಾರಣೆಗೆ ಮುಂದೂಡಿತು. +ನ್ಯಾಯಾಲಯವು ಜುಲೈ 27, 2022 ರಂದು ಕೆಲವು ನಿಯತಾಂಕಗಳ ಮೇಲೆ ಮೂವರು ನ್ಯಾಯಾಧೀಶರ ಪೀಠದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಒಂದು ಬ್ಯಾಚ್‌ ಮನವಿಯನ್ನು ಆಲಿಸುತ್ತಿದೆ. +ತನ್ನ 2022 ರ ತೀರ್ಪಿನಲ್ಲಿ, ಪಿಎಂಎಲ್‌ಎ ಅಡಿಯಲ್ಲಿ ಅಕ್ರಮ ಹಣ ವರ್ಗಾವಣೆ, ಹುಡುಕಾಟ ಮತ್ತು ವಶಪಡಿಸಿಕೊಳ್ಳುವಲ್ಲಿ ಒಳಗೊಂಡಿರುವ ಆಸ್ತಿಯನ್ನು ಬಂಧಿಸುವ ಮತ್ತು ಲಗತ್ತಿಸುವ ಇಡಿಯ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. \ No newline at end of file diff --git a/eesanje/url_47_10_2.txt b/eesanje/url_47_10_2.txt new file mode 100644 index 0000000000000000000000000000000000000000..51a81dd3ac9280f234fe697ce1a6f43735c542b9 --- /dev/null +++ b/eesanje/url_47_10_2.txt @@ -0,0 +1,7 @@ +ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ಮೂವರು ಉಗ್ರರ ಬಂಧನ + : 3 , +ಇಂಫಾಲ್, ಸೆ 20 (ಪಿಟಿಐ)ಮಣಿಪುರದಲ್ಲಿ ಭದ್ರತಾ ಪಡೆಗಳು ನಿಷೇಧಿತ ಉಗ್ರಗಾಮಿ ಸಂಘಟನೆಯ ಮೂವರು ಉಗ್ರರನ್ನು ಬಂಧಿಸಿದ್ದು, ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಹಲವಾರು ಐಇಡಿಗಳು, ಶಸಾ್ತ್ರಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಕಾನೂನುಬಾಹಿರವಾದ ಕಂಗ್ಲೇ ಯಾವೋಲ್ ಕನ್ಬಾ ಲುಪ್ (ಕೆವೈಕೆಎಲ್) ಸಂಘಟನೆಗೆ ಸೇರಿದ ಮೂವರು ಕಾರ್ಯಕರ್ತರನ್ನು ಇಂಫಾಲ್ ಪಶ್ಚಿಮದ ಘರಿ ಪ್ರದೇಶದಲ್ಲಿ ಸೆಕಾಯಿ ಮತ್ತು ತಂಗೇಬಾಂಡ್ ಪ್ರದೇಶಗಳಲ್ಲಿ ಸುಲಿಗೆಯಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಬಂಧಿಸಲಾಗಿದೆ. +ಬಂಧಿತರನ್ನು ಮೈಬಮ್ ಬ್ರಾನ್ಸನ್ ಸಿಂಗ್ (24), ಯುಮ್ನಮ್ ಲಾಂಚೆನ್ಬಾ (21) ಮತ್ತು ಸೌಬಮ್ ನೊಂಗ್ಪೊಕ್‌ಂಗನ್ಬಾ ಮೈತೆ (52) ಎಂದು ಗುರುತಿಸಲಾಗಿದ್ದು, ಅವರ ವಶದಿಂದ 9 ಎಂಎಂ ಪಿಸ್ತೂಲ್ ಮತ್ತು ವ್ಯಾಗಜೀನ್ ಮತ್ತು ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಇಂಫಾಲ್ ಪೂರ್ವದ ಬೊಂಗ್ಜಾಂಗ್ನಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸೇನೆ ಮತ್ತು ಮಣಿಪುರ ಪೊಲೀಸರು 28.5 ಕೆಜಿ ತೂಕದ ಏಳು ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ವಶಪಡಿಸಿಕೊಂಡಿದ್ದಾರೆ ಎಂದು ಅಧಿಕತ ಹೇಳಿಕೆ ತಿಳಿಸಿದೆ.ಕಳೆದ ಮೂರು ತಿಂಗಳಲ್ಲಿ ಭದ್ರತಾ ಪಡೆಗಳಿಗೆ ಐಇಡಿಗಳ ಮರುಪಡೆಯುವಿಕೆ ಎರಡನೇ ಪ್ರಮುಖ ಹಂತವಾಗಿದೆ ಎಂದು ಅದು ಹೇಳಿದೆ. +ಜುಲೈ 20 ರಂದು, ಇಂಫಾಲ್ ಪೂರ್ವದ ಸೈಚಾಂಗ್ ಇಥಮ್ನ ಗುಡ್ಡಗಾಡು ಪ್ರದೇಶಗಳಲ್ಲಿ ಭಾರತೀಯ ಸೇನೆಯ ಬಾಂಬ್ ನಿಷ್ಕ್ರಿಯ ತಂಡವು 33 ಕೆಜಿ ತೂಕದ ಎಂಟು ಐಇಡಿಗಳನ್ನು ವಶಪಡಿಸಿಕೊಂಡರು ಮತ್ತು ತಟಸ್ಥಗೊಳಿಸಿದರು. \ No newline at end of file diff --git a/eesanje/url_47_10_3.txt b/eesanje/url_47_10_3.txt new file mode 100644 index 0000000000000000000000000000000000000000..7e8495bb22f43c3e19b204dcf1a171c834898f40 --- /dev/null +++ b/eesanje/url_47_10_3.txt @@ -0,0 +1,6 @@ +ಸೂಟ್‌ಕೇಸ್‌‍ನಲ್ಲಿತ್ತು ಮಹಿಳೆ ಶವ.! +: ' , +ಚೆನ್ನೈ,ಸೆ.19-ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಆಕೆಯ ಶವವನ್ನು ಸೂಟ್‌ಕೇಸ್‌‍ನಲ್ಲಿಟ್ಟು ಅದನ್ನು ಜನವಸತಿ ಪ್ರದೇಶದಲ್ಲಿ ಇಟ್ಟು ಪರಾರಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. +ಇಂದು ಬೆಳಗ್ಗೆ ಚೆನ್ನೈನಲ್ಲಿ ಎಸೆದಿದ್ದ ಸೂಟ್‌ಕೇಸ್‌‍ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಆಕೆಯನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌‍ನಲ್ಲಿ ಇಟ್ಟು ಅದನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಇಟ್ಟು ಕೊಲೆಗುಡುಕರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ನಾವು ಮುಂಜಾನೆಯಿಂದಲೂ ಪ್ರದೇಶದಲ್ಲಿ ಬೀಟ್‌ ಮಾಡುತ್ತಿದ್ದೇವೂ ಆದರೆ, ಕೊಲೆಗುಡುಕರು ಮಹಿಳೆಯನ್ನು ಬೇರೆ ಕಡೆ ಕೊಲೆ ಮಾಡಿ ಶವವನ್ನು ಇಲ್ಲಿ ಎಸೆಯಲಾಗಿದೆ ಎಂದು ನಾವು ಶಂಕಿಸಿದ್ದೇವೆ ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಸಂತ್ರಸ್ತೆಯ ಗುರುತು ಇನ್ನೂ ತಿಳಿದುಬಂದಿಲ್ಲ ಮತ್ತು ಆರೋಪಿಗಳನ್ನು ಬಂಧಿಸಲು ಅಧಿಕಾರಿಗಳು ಕಾರ್ಯಪ್ರವತ್ತರಾಗಿದ್ದಾರೆ.ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಪ್ರತಿಪಕ್ಷಗಳ ಟೀಕೆಗಳ ನಡುವೆ ಈ ಘಟನೆ ನಡೆದಿದೆ, ಆಡಳಿತಾರೂಢ ಡಿಎಂಕೆ ಆರೋಪವನ್ನು ನಿರಾಕರಿಸಿದೆ. \ No newline at end of file diff --git a/eesanje/url_47_10_4.txt b/eesanje/url_47_10_4.txt new file mode 100644 index 0000000000000000000000000000000000000000..44551dae35358e85f1959796978f79e4bbe69308 --- /dev/null +++ b/eesanje/url_47_10_4.txt @@ -0,0 +1,7 @@ +ಸೆ.21ಕ್ಕೆ ದೆಹಲಿ ನೂತನ ಸಿಎಂ ಆಗಿ ಅತಿಶಿ ಪ್ರಮಾಣ + 3rd : 21 +ನವದೆಹಲಿ,ಸೆ.19– ಆಮ್‌ ಆದಿ ಪಕ್ಷದ ನಾಯಕಿ ಮತ್ತು ದೆಹಲಿ ಸಚಿವೆ ಅತಿಶಿ ಅವರು ಸೆ.21ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ಎಲ್‌.ಜಿ.ಗೆ ಬರೆದ ಪತ್ರದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಯಾವುದೇ ಆದ್ಯತೆಯ ದಿನಾಂಕವನ್ನು ನಮೂದಿಸಿಲ್ಲ. +ಸಚಿವ ಸಚಿವರ ಹೆಸರನ್ನು ನಂತರ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ. ಹೀಗಾಗಿ, ಅತಿಶಿ ಒಬ್ಬರೇ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಅರವಿಂದ್‌ ಕೇಜ್ರಿವಾಲ್‌ ಅವರ ರಾಜೀನಾಮೆಯ ನಂತರ ವಿ.ಕೆ.ಸಕ್ಸೇನಾ ಇಂದು ನಿಯೋಜಿತ ಮುಖ್ಯಮಂತ್ರಿ ಅತಿಶಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸೆ.21ರಂದು ದಿನಾಂಕವನ್ನು ಪ್ರಸ್ತಾಪಿಸಿದ್ದಾರೆ. +ಅರವಿಂದ್‌ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆಯಾದ ಅತಿಶಿ ದೆಹಲಿಯ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. +ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾರ್ಯತಂತ್ರದ ಕ್ರಮದಲ್ಲಿ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ ನೀಡಿದ ನಂತರ ಅವರು ನಾಯಕತ್ವವನ್ನು ವಹಿಸಿಕೊಂಡರು. +ಅರವಿಂದ್‌ ಕೇಜ್ರಿವಾಲ್‌ ಮತ್ತು ಮನೀಶ್‌ ಸಿಸೋಡಿಯಾ ಅವರ ಆಪ್ತ ಮಿತ್ರರಾದ ಅತಿಶಿ ಅವರು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮತ್ತೆ ಸಿಎಂ ಆಗಿ ತರಲು ಪಣ ತೊಟ್ಟಿದ್ದಾರೆ. ಸೆಪ್ಟೆಂಬರ್‌ 26-27ರವರೆಗೆ ಅಧಿವೇಶನ ನಡೆಯಲಿದ್ದು, ದೆಹಲಿ ವಿಧಾನಸಭೆಯಲ್ಲಿ ಅವರು ತಮ ಸರ್ಕಾರದ ಬಹುಮತವನ್ನು ಸಾಬೀತು ಪಡಿಸಬೇಕಾಗಿದೆ. \ No newline at end of file diff --git a/eesanje/url_47_10_5.txt b/eesanje/url_47_10_5.txt new file mode 100644 index 0000000000000000000000000000000000000000..56ddb18f7972dcea892eef709c20bd8e54c2a910 --- /dev/null +++ b/eesanje/url_47_10_5.txt @@ -0,0 +1,8 @@ +ರಾಹುಲ್ ನಿಂದನೆ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಖರ್ಗೆಗೆ ನಡ್ಡಾ ತಿರುಗೇಟು + ' ' ' +ನವದೆಹಲಿ,ಸೆ.19-ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. +ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿರುವ ನಡ್ಡಾ, ಜನರು ಹಲವಾರು ಬಾರಿ ತಿರಸ್ಕರಿಸಿದ ವಿಫಲ ಉತ್ಪನ್ನವನ್ನು ಕಾಂಗ್ರೆಸ್ ಮತ್ತೆ ಹೊಳಪು ಮಾಡಲು ಮತ್ತು ಮರುಪ್ರಾರಂಭಿಸಲು ಪ್ರಯತ್ನಿಸಿದೆ ಎಂದು ಬರೆದಿದ್ದಾರೆ. +ಮೋದಿಜಿಗೆ ಮೌತ್ ಕಾ ಸೌದಾಗರ್ (ಸಾವಿನ ವ್ಯಾಪಾರಿ) ಎಂಬ ಅವಹೇಳನಕಾರಿ ಪದವನ್ನು ಬಳಸಿದ್ದು ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅಲ್ಲವೇ? ನೀವು ಮತ್ತು ನಿಮ ಪಕ್ಷವು ಇಂತಹ ನಾಚಿಕೆಯಿಲ್ಲದ ಹೇಳಿಕೆಗಳನ್ನು ವೈಭವೀಕರಿಸಿದ್ದೀರಿ. ಆಗ ಕಾಂಗ್ರೆಸ್ ರಾಜಕೀಯ ಸೌಹಾರ್ದತೆಯನ್ನು ಮರೆತುಬಿಟ್ಟಿದೆಯೇ? ಎಂದು ಕೇಂದ್ರ ಆರೋಗ್ಯ ಸಚಿವರೂ ಆದ ನಡ್ಡಾ ಪ್ರಶ್ನಿಸಿದ್ದಾರೆ. +ನಡ್ಡಾ ಅವರು ಗಾಂಧಿಯವರ ಒತ್ತಡದಿಂದಾಗಿ ದೇಶದ ಅತ್ಯಂತ ಹಳೆಯ ಪಕ್ಷವು ಕಾಪಿ ಪೇಸ್ಟ್ ಪಕ್ಷವಾಗಿ ಮಾರ್ಪಟ್ಟಿದೆ ಮತ್ತು ಅವರ ಅನಾರೋಗ್ಯವನ್ನು ಹೀರಿಕೊಳ್ಳುತ್ತದೆ ಎಂದು ಆರೋಪಿಸಿದ್ದಾರೆ. +ಕಾಂಗ್ರೆಸ್ ನಾಯಕರು, ಪ್ರಧಾನಿಯನ್ನು ಹಾವು, ಚೇಳು, ರಾಕ್ಷಸ, ಪಿಕ್ ಪಾಕೆಟ್ ಮತ್ತು ಹೇಡಿ ಎಂದು ಕರೆದಿದ್ದಾರೆ ಎಂದು ಬರೆದಿದ್ದಾರೆ. ಅವರ ಪೋಷಕರನ್ನು ಸಹ ಅವಮಾನಿಸಲಾಗಿದೆ ಎಂದು ನಡ್ಡಾ ಹೇಳಿದ್ದಾರೆ. +ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ಅವರು ಮೀಸಲಾತಿ ಮತ್ತು ಜಾತಿಯ ರಾಜಕೀಯವನ್ನು ಆಶ್ರಯಿಸಿದ್ದಾರೆ ಮತ್ತು ಜನರನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರು ಆರೋಪಿಸಿದರು. ನಂತರ ಅವರು ವಿದೇಶಕ್ಕೆ ಹೋಗಿ ಮೀಸಲಾತಿಯನ್ನು ಕೊನೆಗೊಳಿಸುವ ಮತ್ತು ದಲಿತ, ಹಿಂದುಳಿದ ವರ್ಗಗಳು ಮತ್ತು ಬುಡಕಟ್ಟು ಸಮುದಾಯಗಳ ಜನರ ಹಕ್ಕುಗಳನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಾರೆ ಎಂದು ಅವರು ಬರೆದಿದ್ದಾರೆ. \ No newline at end of file diff --git a/eesanje/url_47_10_6.txt b/eesanje/url_47_10_6.txt new file mode 100644 index 0000000000000000000000000000000000000000..ad37a6fe9275ae3674b609109cab326c030cf476 --- /dev/null +++ b/eesanje/url_47_10_6.txt @@ -0,0 +1,6 @@ +ಸಂಸದರು,ಶಾಸಕರಿದ್ದ ದೋಣಿ ಪಲ್ಟಿ, ಎಲ್ಲರೂ ಪ್ರಾಣಾಪಾಯದಿಂದ ಪಾರು + : , ; +ಕೋಲ್ಕತ್ತಾ,ಸೆ.19– ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆಂದು ತೆರಳಿದ್ದಾಗ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿಯಾಗಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಬಿರ್‌ಭೂಮ್‌ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುವ ವೇಳೆ ಈ ಅವಘಡ ಸಂಭವಿಸಿದೆ. +ದೋಣಿಯಲ್ಲಿ ಸಂಸದರು, ಶಾಸಕರು, ಉನ್ನತ ಅಧಿಕಾರಿಗಳು ಸೇರಿ ಒಟ್ಟು 13 ಮಂದಿ ಇದ್ದರು. ಲಾಬ್‌ಪುರ್‌ನ ಟಿಎಂಸಿ ಶಾಸಕ ಅಭಿಜಿತ್‌ ಸಿಂಗ್‌, ಸಂಸದರಾದ ಅಸಿತ್‌ ಮಲ್‌ ಮತ್ತು ಶಮೀರುಲ್‌ ಇಸ್ಲಾಂ, ಬಿರ್‌ಭೂಮ್‌ನ ಜಿಲ್ಲಾ ವ್ಯಾಜಿಸ್ಟ್ರೇಟ್‌ ಬಿಧನ್‌ ರಾಯ್‌ ಮತ್ತು ಇತರ ಅಧಿಕಾರಿಗಳು ಬೋಟ್‌ನಲ್ಲಿ ಬೀರ್‌ಭಮ್‌ನ ಬಲರಾಮ್‌ಪುರ ಮತ್ತು ಲ್ಯಾಬ್‌ಪುರದ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. +ಘಟನೆಯ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಜನಪ್ರತಿನಿಧಿಗಳು ಮತ್ತು ಸ್ಥಳೀಯ ಅಧಿಕಾರಿಗಳನ್ನು ರಕ್ಷಿಸಿದರು. ಭಾರೀ ಮಳೆಯ ನಂತರ ಪಶ್ಚಿಮ ಬಂಗಾಳದ ಹಲವಾರು ಜಿಲ್ಲೆಗಳು ಪ್ರವಾಹದಂತಹ ಪರಿಸ್ಥಿತಿಗೆ ಸಾಕ್ಷಿಯಾಗಿದೆ ಮತ್ತು ಇದರ ಪರಿಣಾಮವಾಗಿ ಅಲ್ಪಾವಧಿಯಲ್ಲಿಯೇ ಬ್ಯಾರೇಜ್‌ಗಳಿಂದ ನೀರು ಹೊರಸೂಸುವಿಕೆ ಹೆಚ್ಚಾಗಿದೆ. +ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ದುರ್ಗಾಪುರ ಬ್ಯಾರೇಜ್‌ನಿಂದ 1,33,750 ಕ್ಯೂಸೆಕ್‌, ಕಂಗಸಾಬತಿ ಅಣೆಕಟ್ಟಿನಿಂದ 40,000 ಕ್ಯೂಸೆಕ್‌್ಸ, ಮೈಥಾನ್‌ ಅಣೆಕಟ್ಟಿನಿಂದ 2,00,000 ಕ್ಯೂಸೆಕ್‌ ಮತ್ತು ಪಂಚೇಟ್‌ ಅಣೆಕಟ್ಟಿನಿಂದ 50,000 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗಿದೆ. \ No newline at end of file diff --git a/eesanje/url_47_10_7.txt b/eesanje/url_47_10_7.txt new file mode 100644 index 0000000000000000000000000000000000000000..096e4d42a98153fc48ee4e9132e10ab17c5aefb8 --- /dev/null +++ b/eesanje/url_47_10_7.txt @@ -0,0 +1,6 @@ +ಜಮೀನು ವಿವಾದದ ಹಿನ್ನೆಲೆಯಲ್ಲಿ 21 ಮನೆಗಳಿಗೆ ಬೆಂಕಿಯಿಟ್ಟ ದುಷ್ಟರು +21 ' ; +ನವಾಡ, ಸೆ.19-ಜಮೀನು ವಿವಾದದ ತೀವ್ರ ಮಟ್ಟಕ್ಕೆ ಹೋಗಿ ಅಲ್ಲಿದ್ದ 21 ಮನೆಗಳಿಗೆ ಬೆಂಕಿ ಹಚ್ಚಿದ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ಮಾಂಝಿ ತೋಲಾದ ಬಳಿ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮುಫಾಸಿಲ್‌ ಠಾಣೆ ಪೊಲೀಸರು ತಿಳಿಸಿದ್ದಾರೆ . +ಘಟನೆಗೆ ಸಂಬಂಧಿಸಿದಂತೆ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಹೇಳಿದರು.ಕಳೆದ ರಾತ್ರಿಮಾಂಝಿ ಟೋಲಾದಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಬಂದು ಪೊಲೀಸರೊಂದಿಗೆ ಸೇರಿ ಬೆಂಕಿಯನ್ನು ನಂದಿಸಿದ್ದಾರೆ. +ಗ್ರಾಮಸ್ಥರ ಪ್ರಕಾರ, ಕೆಲ ಜನರ ಗುಂಪು ಮನೆಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಎಸ್ಪಿ ಅಭಿನವ್‌ ಧಿಮಾನ್‌ ಹೇಳಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಘಟನೆಗೆ ಜಮೀನು ವಿವಾದವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದರು. +ಮನೆಗಳಿಗೆ ಬೆಂಕಿ ಹಚ್ಚುವಾಗ ಗಾಳಿಯಲ್ಲಿ ಗುಂಡು ಹಾರಿಸಲಾಯಿತು ಎಂದು ಮತ್ತೊಬ್ಬ ಪೊಲೀಸ್‌‍ ಅಧಿಕಾರಿ ತಿಳಿಸಿದ್ದಾರೆ.ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಮತ್ತು ಘರ್ಷಣೆ ಭುಗಿಲೆದ್ದಂತೆ ತಡೆಯಲು ಪೊಲೀಸ್‌‍ ಪಡೆಯನ್ನು ನಿಯೋಜಿಸಲಾಗಿದೆ ಎಂದು ಧೀಮಾನ್‌ ಹೇಳಿದರು. \ No newline at end of file diff --git a/eesanje/url_47_10_8.txt b/eesanje/url_47_10_8.txt new file mode 100644 index 0000000000000000000000000000000000000000..7f52e79adf3787902da6d12c5b0188165728acc4 --- /dev/null +++ b/eesanje/url_47_10_8.txt @@ -0,0 +1,14 @@ +ತಿರುಪತಿ ಲಡ್ಡುವಿಗೆ ಪ್ರಾಣಿಗಳ ಕೊಬ್ಬು ಬಳಕೆ : ಸಿಎಂ ನಾಯ್ಡು ಸ್ಪೋಟಕ ಆರೋಪ + +ಅಮರಾವತಿ, ಸೆ.19 (ಪಿಟಿಐ)ಹಿಂದಿನ ವೈಎಸ್‌‍ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. +ತಿರುಪತಿ ಲಡ್ಡು ಪ್ರಸಾದವನ್ನು ತಿರುಪತಿಯ ಪೂಜ್ಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತದೆ, ಇದನ್ನು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಅಡಿಯಲಲ್ಲಿ (ಟಿಟಿಡಿ) ನಡೆಸುತ್ತದೆ.ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಸಿಎಂ ನಾಯು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. +ನಮ ಸರ್ಕಾರ ಬಂದ ಮೇಲೆ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ಧೀಕರಿಸಲಾಗಿದೆ, ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಪ್ರತಿಪಾದಿಸಿದರು. +ಹಿರಿಯ ವೈಎಸ್‌‍ಆರ್‌ಸಿಪಿ ನಾಯಕ ಮತ್ತು ಮಾಜಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನಾಯ್ಡು ಅವರ ಆರೋಪವನ್ನು ದುರುದ್ದೇಶಪೂರಿತ ಎಂದು ಬಣ್ಣಿಸಿದ್ದಾರೆ ಮತ್ತು ಟಿಡಿಪಿ ನಾಯಕರು ರಾಜಕೀಯ ಲಾಭಕ್ಕಾಗಿ ಯಾವುದೇ ಹಂತಕ್ಕೆ ಇಳಿಯುತ್ತಾರೆ ಎಂದು ಹೇಳಿದರು. +ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ನಾರಾ ಲೋಕೇಶ್‌ ಕೂಡ ಈ ವಿಷಯದ ಬಗ್ಗೆ ಮಾತನಾಡಿ ಜಗನ್‌ ಮೋಹನ್‌ ರೆಡ್ಡಿ ಆಡಳಿತಾವಧಿಯನ್ನು ಗುರಿಯಾಗಿಸಿ,ಟೀಕಾಪ್ರಹಾರ ನಡೆಸಿದ್ದಾರೆ. +ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯವು ನಮ ಅತ್ಯಂತ ಪವಿತ್ರವಾದ ದೇವಾಲಯವಾಗಿದೆ. ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ಆಡಳಿತವು ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ತಿಳಿದು ನನಗೆ ಆಘಾತವಾಗಿದೆ, ಇದನ್ನು ನಮ ಸರ್ಕಾರ ಗಂಬೀರವಾಗಿ ಪರಿಗಣಿಸಿದೆ ಎಂದು ಹೇಳಿದರು +ಅಮರಾವತಿ, ಸೆ.19 (ಪಿಟಿಐ) ಹಿಂದಿನ ವೈಎಸ್‌‍ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. +ತಿರುಪತಿ ಲಡ್ಡು ಪ್ರಸಾದವನ್ನು ತಿರುಪತಿಯ ಪೂಜ್ಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ನೀಡಲಾಗುತ್ತದೆ, ಇದನ್ನು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಅಡಿಯಲಲ್ಲಿ (ಟಿಟಿಡಿ) ನಡೆಸುತ್ತದೆ.ಅವರು ತುಪ್ಪದ ಬದಲಿಗೆ ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಸಿಎಂ ನಾಯು ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೇಳಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. +ನಮ ಸರ್ಕಾರ ಬಂದ ಮೇಲೆ ಈಗ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಮತ್ತು ದೇವಸ್ಥಾನದಲ್ಲಿ ಎಲ್ಲವನ್ನೂ ಶುದ್ಧೀಕರಿಸಲಾಗಿದೆ, ಇದು ಸುಧಾರಿತ ಗುಣಮಟ್ಟಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಪ್ರತಿಪಾದಿಸಿದರು. +ಹಿರಿಯ ವೈಎಸ್‌‍ಆರ್‌ಸಿಪಿ ನಾಯಕ ಮತ್ತು ಮಾಜಿ ಟಿಟಿಡಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ನಾಯ್ಡು ಅವರ ಆರೋಪವನ್ನು ದುರುದ್ದೇಶಪೂರಿತ ಎಂದು ಬಣ್ಣಿಸಿದ್ದಾರೆ ಮತ್ತು ಟಿಡಿಪಿ ನಾಯಕರು ರಾಜಕೀಯ ಲಾಭಕ್ಕಾಗಿ ಯಾವುದೇ ಹಂತಕ್ಕೆ ಇಳಿಯುತ್ತಾರೆ ಎಂದು ಹೇಳಿದರು. +ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ನಾರಾ ಲೋಕೇಶ್‌ ಕೂಡ ಈ ವಿಷಯದ ಬಗ್ಗೆ ಮಾತನಾಡಿ ಜಗನ್‌ ಮೋಹನ್‌ ರೆಡ್ಡಿ ಆಡಳಿತಾವಧಿಯನ್ನು ಗುರಿಯಾಗಿಸಿ,ಟೀಕಾಪ್ರಹಾರ ನಡೆಸಿದ್ದಾರೆ. +ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯವು ನಮ ಅತ್ಯಂತ ಪವಿತ್ರವಾದ ದೇವಾಲಯವಾಗಿದೆ. ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ಆಡಳಿತವು ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ತಿಳಿದು ನನಗೆ ಆಘಾತವಾಗಿದೆ, ಇದನ್ನು ನಮ ಸರ್ಕಾರ ಗಂಬೀರವಾಗಿ ಪರಿಗಣಿಸಿದೆ ಎಂದು ಹೇಳಿದರು \ No newline at end of file diff --git a/eesanje/url_47_10_9.txt b/eesanje/url_47_10_9.txt new file mode 100644 index 0000000000000000000000000000000000000000..98c0641c7fb6968fc57ad16f136f3c6d847c10f5 --- /dev/null +++ b/eesanje/url_47_10_9.txt @@ -0,0 +1,6 @@ +ಕಾಶ್ಮೀರದ ಮೊದಲ ಮುಸ್ಲಿಂ ಐಎಎಸ್‌‍ ಅಧಿಕಾರಿ ಮೊಹಮದ್‌ ಶಫಿ ಪಂಡಿತ್‌ ಇನ್ನಿಲ್ಲ + , , +ಶ್ರೀನಗರ, ಸೆ.19 (ಪಿಟಿಐ): ಕಾಶೀರದ ಮೊದಲ ಮುಸ್ಲಿಂ ಐಎಎಸ್‌‍ ಅಧಿಕಾರಿ ಮೊಹಮದ್‌ ಶಫಿ ಪಂಡಿತ್‌ ನಿಧನರಾಗಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ ಕ್ಯಾನ್ಸರ್‌ ಪತ್ತೆಯಾದ ನಂತರ ಪಂಡಿತ್‌ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಕುಟುಂಬ ತಿಳಿಸಿದೆ. +ಪಂಡಿತ್‌ ಅವರು 1969 ರಲ್ಲಿ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಕಾಶೀರದಿಂದ ಮೊದಲ ಮುಸ್ಲಿಂ ಆಗಿದ್ದರು. ಸರ್ಕಾರದೊಂದಿಗೆ ಅವರ ಅಂತಿಮ ನಿಯೋಜನೆಯು ಸ್ವಾಯತ್ತ ಜಮು ಮತ್ತು ಕಾಶೀರ ಸಾರ್ವಜನಿಕ ಸೇವಾ ಆಯೋಗದ ಮುಖ್ಯಸ್ಥರಾಗಿದ್ದರು. +ಮದುಭಾಷಿ ಪಂಡಿತರು ಕಾಶೀರದಲ್ಲಿ ಅನೇಕ ನಾಗರಿಕ ಸಮಾಜ ಮತ್ತು ಲೋಕೋಪಕಾರಿ ಉಪಕ್ರಮಗಳ ಭಾಗವಾಗಿದ್ದರು. ಅವರು 1992 ರಲ್ಲಿ ಭಾರತ ಸರ್ಕಾರದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದ ಕಾರಣ ಮಂಡಲ್‌ ಆಯೋಗದ ವರದಿಯನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. +ಐಎಎಸ್‌‍ ಅಧಿಕಾರಿ ನಿಧನಕ್ಕೆ ಕಾಂಗ್ರೆಸ್‌‍ ಮುಖಂಡ ಜೈರಾಮ್‌ ರಮೇಶ್‌ ಸಂತಾಪ ಸೂಚಿಸಿದ್ದಾರೆ.ನನ್ನ ಹಲವು ವರ್ಷಗಳ ಉತ್ತಮ ಸ್ನೇಹಿತ. ಮೊಹಮದ್‌ ಶಫಿ ಪಂಡಿತ್‌ ಅವರು ಈಗಷ್ಟೇ ನಿಧನರಾಗಿದ್ದಾರೆ. ಅವರು 1969-ಬ್ಯಾಚ್‌ನ ಐಎಎಸ್‌‍ ಅಧಿಕಾರಿಯಾಗಿದ್ದರು, ಅವರು ಜೆ ಕೆ ಮತ್ತು ಕೇಂದ್ರದಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ ಎಂದು ರಮೇಶ್‌ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. \ No newline at end of file diff --git a/eesanje/url_47_110_1.txt b/eesanje/url_47_110_1.txt new file mode 100644 index 0000000000000000000000000000000000000000..fd1d99913b7a1f3ff95bff2397988710b5063f64 --- /dev/null +++ b/eesanje/url_47_110_1.txt @@ -0,0 +1,7 @@ +ಭಾರತ ಮಾತೆಗೆ ಅಗೌರವವನ್ನು ಸಹಿಸಲ್ಲ : ರಾಹುಲ್ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ +ಪಲಮು (ಜಾರ್ಖಂಡ್‌), ಮೇ 4 –ಭಯೋದ್ಪಾದಕರ ವಿರುದ್ದ ತಮ್ಮ ಸರ್ಕಾರದ ಸರ್ಜಿಕಲ್‌ ವೈಮಾನಿಕ ದಾಳಿಗಳು ಬೆಚ್ಚಿಬಿದ್ದದ್ದ ಪಾಕ್‌ ನಾಯಕರು ಈಗ ಕಾಂಗ್ರೆಸ್‌‍ ಶೆಹಜಾದಾ ಭಾರತದ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಗುಡುಗಿದ್ದಾರೆ. +ಪಲಮುದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರ ಹೆಸರನ್ನು ತೆಗೆದುಕೊಳ್ಳದೆಯೇ ತರಾಟೆಗೆ ತೆಗೆದುಕೊಂಡರು ಮತ್ತು ನೆರೆಯ ದೇಶವು ಅವರನ್ನು ಪ್ರಧಾನಿಯಾಗಲು ಬಯಸಬಹುದು, ಆದರೆ ಭಾರತದ ಜನತೆ ಸದೃಢ ಪ್ರಧಾನಿ ಹೊಂದಿರುವ ಬಲಿಷ್ಠ ದೇಶವನ್ನು ಬಯಸುತ್ತದೆ ಎಂದು ಹೇಳಿದರು. +ಭಾರತ ಮಾತೆಗೆ ಅಗೌರವವನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಗುಡುಗಿದ ಅವರು ಹೊಸ ಭಾರತದ ತನ್ನ ದಿಟ್ಟ ನಿಲುವಿನಿಂದ ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ,ಮತ್ತೆ ಕಾಂಗ್ರೆಸ್‌‍ ಆಡಳಿತದಲ್ಲಿ ಭಾರತದ ಮೇಲೆ ಭಯೋತ್ಪಾದಕ ದಾಳಿ ನಡೆಸಲು ಹೊಂಚುಹಾಕುತ್ತಿದ್ದರೆ ಎಂದು ಆರೋಪಿಸಿದರು. +ನವ ಭಾರತಕ್ಕೆ ಶತ್ರು ಪ್ರದೇಶವನ್ನು ಹೇಗೆ ಪ್ರವೇಶಿಸುವುದು ಮತ್ತು ದಾಳಿ ಮಾಡುವುದು ಹೇಗೆಂದು ತಿಳಿದಿದೆ ಅದಕ್ಕಾಗಿ ನಿಮ ಒಂದೊಂದು ಮತದ ಪ್ರಾಮುಖ್ಯತೆವಾಗಿದ್ದು ಬಿಜೆಪಿ ಬೆಂಬಲಿಸಿ ಎಂದು ಮತದಾರರ ಬಳಿ ಮನವಿ ಮಾಡಿದರು . +ಹಲವಾರು ತಲೆಮಾರುಗಳು, 500 ವರ್ಷಗಳ ಕಾಲ ಹೋರಾಡಿದ ನಂತರ ರಾಮ ಮಂದಿರವನ್ನು ನಿರ್ಮಿಸುವಲ್ಲಿ ಕೊಡುಗೆ ನೀಡಿತು, ಜೊತೆಗೆ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಎಂದರು. ಮುಸ್ಲಿಮರಿಗೆ ಮೀಸಲಾತಿ ಒದಗಿಸುವ ಸಂವಿಧಾನವನ್ನು ಬದಲಾಯಿಸುವಲ್ಲಿ ಕಾಂಗ್ರೆಸ್‌‍ನ ಯಾವುದೇ ವಿನ್ಯಾಸ ಯಶಸ್ವಿಯಾಗಲು ತಾನು ಬಿಡುವುದಿಲ್ಲ ಎಂದು ಮೋದಿ ಪ್ರತಿಪಾದಿಸಿದರು. +ಕಳೆದ 25 ವರ್ಷಗಳಲ್ಲಿ ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಕಲೆ ಇಲ್ಲ. ನನಗೆ ಸ್ವಂತ ಮನೆ ಇಲ್ಲ, ಬೈಸಿಕಲ್‌ ಕೂಡ ಇಲ್ಲ… ಆದರೆ ಭ್ರಷ್ಟ ಜೆಎಂಎಂ ಮತ್ತು ಕಾಂಗ್ರೆಸ್‌‍ ನಾಯಕರು ತಮ ಮಕ್ಕಳಿಗಾಗಿ ಅಪಾರ ಪ್ರಮಾಣದ ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಟೀಕಿಸಿದರು. \ No newline at end of file diff --git a/eesanje/url_47_110_10.txt b/eesanje/url_47_110_10.txt new file mode 100644 index 0000000000000000000000000000000000000000..224ee1af38147133de8df19a64719884e9e28985 --- /dev/null +++ b/eesanje/url_47_110_10.txt @@ -0,0 +1,4 @@ +ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್‌ ಪತನ, ಪೈಲಟ್‌ ಪಾರು +ರಾಯಗಢ, ಮೇ 3-ಶಿವಸೇನೆ ಉಪನಾಯಕಿ ಸುಷಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಹಠಾತ್‌ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹೆಲಿಕಾಪ್ಟರ್‌ ಅಪರಿಚಿತ ಸ್ಥಳದಲ್ಲಿ ಲ್ಯಾಂಡಿಂಗ್‌ ಮಾಡಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅದು ತಿರುಗಿ ನಡುಗಿತು ಮತ್ತು ಸಮತೋಲನವನ್ನು ಕಳೆದುಕೊಂಡು ತೆರೆದ ಮೈದಾನದಲ್ಲಿ ಧೂಳಿನ ಮೋಡದಲ್ಲಿ ದೊಡ್ಡ ಶಬ್ದದೊಂದಿಗೆ ಅಪ್ಪಳಿಸಿತು ಎಂದು ವರದಿಯಾಗಿದೆ. +ಹೆಲಿಕಾಪ್ಟರ್‌ನ ಪೈಲಟ್‌ ಅದೃಷ್ಟವಶಾತ್‌ ಹೆಲಿಕಾಪ್ಟರ್‌ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳೂ ತಿಳಿಸಿದ್ದಾರೆ. ಘಟನೆಯ ತನಿಖೆಗಾಗಿ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅದೇ ಹೆಲಿಕಾಪ್ಟರ್‌ನಿಂದ ಹಾರಲು ನಿಗದಿಯಾಗಿದ್ದ ಅಂಧರೆ ಅವರು ಜಿಲ್ಲೆಯ ವಿವಿಧ ಭಾಗಗಳಲ್ಲಿ ತನ್ನ ನಿಗದಿತ ಚುನಾವಣಾ ಸಭೆಗಳಿಗಾಗಿ ಕಾರಿನಲ್ಲಿ ತೆರಳಿದರು. \ No newline at end of file diff --git a/eesanje/url_47_110_11.txt b/eesanje/url_47_110_11.txt new file mode 100644 index 0000000000000000000000000000000000000000..10f8f87db0f307f9128df89242add74bdc5063d6 --- /dev/null +++ b/eesanje/url_47_110_11.txt @@ -0,0 +1,6 @@ +ಸಿಸೋಡಿಯಾ ಜಾಮೀನು ಕುರಿತು ಸಿಬಿಐ-ಇಡಿಗೆ ನೋಟೀಸ್‌ +ನವದೆಹಲಿ, ಮೇ 3-ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರು ಸಲ್ಲಿಸಿರುವ ಮನವಿಗಳ ಕುರಿತು ದೆಹಲಿ ಹೈಕೋರ್ಟ್‌ ಇಂದು ಸಿಬಿಐ ಮತ್ತು ಇಡಿಗೆ ಪ್ರತಿಕ್ರಿಯೆ ಕೇಳಿದೆ. +ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ತಮ್ಮ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಏಪ್ರಿಲ್‌ 30 ರ ಆದೇಶವನ್ನು ಪ್ರಶ್ನಿಸಿ ಸಿಸೋಡಿಯಾ ಅವರ ಮನವಿಯ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಗೆ ನೋಟಿಸ್‌ ಜಾರಿ ಮಾಡಿದರು. +ಮೇ 8 ರಂದು ಹೆಚ್ಚಿನ ವಿಚಾರಣೆಗೆ ಹೈಕೋರ್ಟ್‌ ಈ ವಿಷಯವನ್ನು ಪಟ್ಟಿ ಮಾಡಿದೆ. ಸಿಸೋಡಿಯಾ ಅವರು ಮಧ್ಯಂತರ ಅರ್ಜಿಯಲ್ಲಿ, ತಮ್ಮ ಅರ್ಜಿಗಳು ಬಾಕಿ ಇರುವಾಗ ವಾರಕ್ಕೊಮ್ಮೆ ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾಗಲು ಅವಕಾಶ ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಮುಂದುವರಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. +ವಿಚಾರಣಾ ನ್ಯಾಯಾಲಯದ ಆದೇಶವನ್ನು ಮುಂದುವರಿಸಿದರೆ ತನಿಖಾ ಸಂಸ್ಥೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಇಡಿ ಪರ ವಕೀಲರು ಅರ್ಜಿ ಸಲ್ಲಿಸಿದ್ದರಿಂದ, ನ್ಯಾಯಮೂರ್ತಿ ಶರ್ಮಾ ಅವರು ಮನವಿಯನ್ನು ಅನುಮತಿಸಿದರು. +2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಕ್ರಮವಾಗಿ ಸಲ್ಲಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳನ್ನು ವಿಚಾರಣಾ ನ್ಯಾಯಾಲಯವು ವಜಾಗೊಳಿಸಿದೆ. \ No newline at end of file diff --git a/eesanje/url_47_110_12.txt b/eesanje/url_47_110_12.txt new file mode 100644 index 0000000000000000000000000000000000000000..fc3484ef6102174aa3d51be5ab744d5aa3e413ac --- /dev/null +++ b/eesanje/url_47_110_12.txt @@ -0,0 +1,7 @@ +ಅಮೇಥಿಯಲ್ಲಿ 26 ವರ್ಷಗಳ ನಂತರ ಗಾಂಧಿಯೇತರ ಕುಟುಂಬದವರ ಸ್ಪರ್ಧೆ +ಅಮೇಥಿ,ಮೇ3-ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ 26 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬ ಹೊರತುಪಡಿಸಿದ ಅಭ್ಯರ್ಥಿಯೊಬ್ಬರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪಧಿರ್ಸುತ್ತಿದ್ದಾರೆ. +ಗಾಂಧಿ ಕುಟುಂಬದ ಹಿಡಿತದಲ್ಲಿದ್ದ ಉತ್ತರಪ್ರದೇಶದ ಅಮೇಥಿ ಕ್ಷೇತ್ರವೂ 2019ರಲ್ಲಿ ಬಿಜೆಪಿ ಪಾಲಾಗಿತ್ತು ಅಂತಹ ಕ್ಷೇತ್ರವನ್ನು ಮರು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. +ಈ ಬಾರಿ ರಾಹುಲ್‌ಗಾಂಧಿ ಅವರೇ ಸ್ಪಧಿರ್ಸುವ ಮೂಲಕ ಕ್ಷೇತ್ರವನ್ನು ಮರುವಶ ಮಾಡಿಕೊಳ್ಳಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಕೈ ಮುಖಂಡರು ಗಾಂಧಿ ಕುಟುಂಬ ಆಪ್ತರಾಗಿರುವ ಕಿಶೋರಿ ಲಾಲ್‌ ಶರ್ಮಾ ಅವರಿಗೆ ಟಿಕೆಟ್‌ ನೀಡಿದೆ.ಮೂರು ದಶಕಗಳಲ್ಲಿ ಕನಿಷ್ಠ ನಾಲ್ವರು ಗಾಂಧಿ ಕುಟುಂಬದ ಸದಸ್ಯರು ವಿವಿಧ ಸಮಯಗಳಲ್ಲಿ ಸ್ಪಧಿರ್ಸಿದ ಈ ಕ್ಷೇತ್ರದ ಎರಡನೇ ಗಾಂಧಿಯೇತರ ಕಾಂಗ್ರೆಸ್‌ ಅಭ್ಯರ್ಥಿ ಎಂಬ ಖ್ಯಾತಿಗೆ ಶರ್ಮಾ ಒಳಗಾಗಿದ್ದಾರೆ. +ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ ಹತ್ಯೆಯ ನಂತರ ತೆರವಾದ ನಂತರ ಗಾಂಧಿಯೇತರ ಕುಟುಂಬದ ಸತೀಶ್‌ ಶರ್ಮಾ ಅವರು ಎರಡು ಬಾರಿ ಗೆದ್ದಿದ್ದು, 1998ರ ಚುನಾವಣೆಯಲ್ಲಿ ಸೋಲಿನ ರುಚಿ ಕಂಡಿದ್ದರು. +ಸಂಜಯ್‌ ಗಾಂಧಿ 1990 ರಲ್ಲಿ ಈ ಸ್ಥಾನವನ್ನು ಗೆದ್ದರು, ಆದರೆ ಆ ವರ್ಷ ವಿಮಾನ ಅಪಘಾತದಲ್ಲಿ ಅವರ ಮರಣದ ನಂತರ 1981 ರಲ್ಲಿ ಉಪಚುನಾವಣೆಗಳಿಗೆ ಕಾರಣವಾಯಿತು. ರಾಜೀವ್‌ ಗಾಂಧಿ ಅವರು ಸ್ಥಾನವನ್ನು ಪಡೆದರು ಮತ್ತು 1991 ರಲ್ಲಿ ಅವರ ಹತ್ಯೆಯಾಗುವವರೆಗೂ ನಾಲ್ಕು ಬಾರಿ ಗೆದ್ದಿದ್ದರು. +ಆ ನಂತರ 2004, 2009 ಹಾಗೂ 2014ರಲ್ಲಿ ಈ ಕ್ಷೇತ್ರದಿಂದ ರಾಹುಲ್‌ ಸತತವಾಗಿ ಗೆಲುವು ಸಾಧಿಸಿದ್ದರೂ ಆದರೆ, ಕಳೆದ 2019ರಲ್ಲಿ ಅವರು ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಇದೀಗ ಅಮೇಥಿಗೆ ಮತ್ತೆ ಚುನಾವಣೆ ನಡೆಯುತ್ತಿದ್ದು ಎರಡನೇ ಬಾರಿಗೆ ಗಾಂಧಿಯೇತರ ಕುಟುಂಬದ ವ್ಯಕ್ತಿಯಾಗಿರುವ ಶರ್ಮಾ ಅವರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. \ No newline at end of file diff --git a/eesanje/url_47_110_2.txt b/eesanje/url_47_110_2.txt new file mode 100644 index 0000000000000000000000000000000000000000..797ceba01885e441bc7729f57153cdce4c31ffa8 --- /dev/null +++ b/eesanje/url_47_110_2.txt @@ -0,0 +1,6 @@ +ಪಂಚಾಯತ್‌ ರಾಜ್‌ ವ್ಯವಸ್ಥೆ ಲಿಂಗ ಸಮಾನತೆಗೆ ಭಾರತದ ಬದ್ಧತೆಯನ್ನು ತೋರಿಸುತ್ತದೆ : ರುಚಿರಾ ಕಾಂಬೋಜ್‌ +ನ್ಯೂ ಯಾರ್ಕ್‌, ಮೇ.4-ಭಾರತದ ಪಂಚಾಯತ್‌ ರಾಜ್‌ ವ್ಯವಸ್ಥೆಯಲ್ಲಿ ಮಹಿಳಾ ನಾಯಕತ್ವದಲ್ಲಿ ಮಾಡಿರುವ ಗಮನಾರ್ಹ ಪ್ರಗತಿಯ ಬಗ್ಗೆ ಬೆಳಕು ಚೆಲ್ಲಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಅವರು, ಭಾರತವು ಪಂಚಾಯತ್‌ ರಾಜ್‌ ಎಂದು ಕರೆಯಲ್ಪಡುವ ಗ್ರಾಮೀಣ ಆಡಳಿತದ ವಿಶಿಷ್ಟ ವ್ಯವಸ್ಥೆಯ ಬಗ್ಗೆ ಹೆಮ್ಮೆಪಡುತ್ತದೆ ಎಂದಿದ್ದಾರೆ. +ಭಾರತದ ಸಿಪಿಡಿ57 ಸೈಡ್‌ ಈವೆಂಟ್‌ನಲ್ಲಿ ಮಾತನಾಡಿದ ಅವರು, ಪಂಚಾಯತಿ ರಾಜ್‌ ಗ್ರಾಮ ಸಭೆಯ ಮೂಲಕ ಪಂಚಾಯತ್‌ನ ಎಲ್ಲಾ ನಿವಾಸಿಗಳಿಂದ ಸಕ್ರಿಯವಾಗಿ ಭಾಗವಹಿಸಲು ಅನುಕೂಲವಾಗುವ ನೇರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಹೇಳಿದರು. +ಈ ವಿಶಿಷ್ಟ ಅಂಶವು ಪ್ರಪಂಚದ ಬೇರೆಡೆ ಕಂಡುಬರುವ ಸಾಂಪ್ರದಾಯಿಕ ಪುರಸಭೆಯ ಆಡಳಿತ ಮಾದರಿಗಳಿಂದ ಇದನ್ನು ಪ್ರತ್ಯೇಕಿಸುತ್ತದೆ, ಇದು ಅಂತರ್ಗತ ನಿರ್ಧಾರ-ಮಾಡುವ ಪ್ರಕ್ರಿಯೆಗಳನ್ನು ಉತ್ತೇಜಿಸುವ ಮಾದರಿಯಾಗಿದೆ. +ಲಿಂಗ ಸಮಾನತೆಗೆ ಭಾರತದ ಬದ್ಧತೆಯನ್ನು ಎತ್ತಿ ತೋರಿಸುತ್ತಾ, 1992 ರಲ್ಲಿ ಸಾಂವಿಧಾನಿಕ ತಿದ್ದುಪಡಿಯೊಂದಿಗೆ ಮಹತ್ವದ ಮೈಲಿಗಲ್ಲು ಸಾಧಿಸಲಾಯಿತು, ಇದು ಸ್ಥಳೀಯ ಆಡಳಿತದಲ್ಲಿ ಎಲ್ಲಾ ಚುನಾಯಿತ ಪಾತ್ರಗಳಲ್ಲಿ ಕನಿಷ್ಠ ಮೂರನೇ ಒಂದು ಭಾಗವನ್ನು ಮಹಿಳೆಯರಿಗೆ ಮೀಸಲಿಡಬೇಕೆಂದು ಆದೇಶಿಸಿತು. ಈ ಸಾಂವಿಧಾನಿಕ ನಿಬಂಧನೆಯು ತಳಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಸಮಾನ ಪ್ರಾತಿನಿಧ್ಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಒಂದು ಹೆಗ್ಗುರುತಾಗಿದೆ ಎಂದಿದ್ದಾರೆ. +ಕಾಂಬೋಜ್‌ ಅವರು ಭಾರತದೊಳಗಿನ 21 ರಾಜ್ಯಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಶೇ. 50 ಕ್ಕೆ ಏರಿಸಿರುವುದನ್ನು ಪ್ರಸ್ತಪಿಸಿದರು.ಇಂದು, 3.1 ಮಿಲಿಯನ್‌ ಚುನಾಯಿತ ಪ್ರತಿನಿಧಿಗಳಲ್ಲಿ 1.4 ಮಿಲಿಯನ್‌ಗಿಂತಲೂ ಹೆಚ್ಚು ಮಹಿಳೆಯರು. ಮಹಿಳೆಯರ ಭಾಗವಹಿಸುವಿಕೆಯಲ್ಲಿನ ಈ ಉಲ್ಬಣವು ಆಡಳಿತ ಮತ್ತು ಸಮುದಾಯದ ಅಭಿವದ್ಧಿಗೆ ಮಹಿಳೆಯರ ಕೊಡುಗೆಗಳನ್ನು ಗುರುತಿಸುವ ಮತ್ತು ಮೌಲ್ಯೀಕರಿಸುವ ಕಡೆಗೆ ವಿಶಾಲವಾದ ಸಾಮಾಜಿಕ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದರೆ. \ No newline at end of file diff --git a/eesanje/url_47_110_3.txt b/eesanje/url_47_110_3.txt new file mode 100644 index 0000000000000000000000000000000000000000..e6c64e2252b5be61591fe8745bdd899da5c591fc --- /dev/null +++ b/eesanje/url_47_110_3.txt @@ -0,0 +1,6 @@ +ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಮಾಜಿ ಬಾಕ್ಸರ್‌ ಅಖಿಲ್‌ ಕುಮಾರ್‌ +ನವದೆಹಲಿ,ಮೇ 4-ಕಾಮನ್‌ವೆಲ್ತ್‌‍ ಗೇಮ್ಸ್ ನಲ್ಲಿ ಚಿನ್ನ ಗೆದ್ದಿದ್ದ ಮಾಜಿ ಬಾಕ್ಸರ್‌ ಅಖಿಲ್‌ ಕುಮಾರ್‌ ಅವರು ಜಜ್ಜರ್‌ವಲಯದ ಸಹಾಯಕ ಕಮಿಷನರ್‌ ಹುದ್ದೆ ಪಡೆದಿದ್ದು ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾದಕ ದ್ರವ್ಯದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನ ನಡೆಸಿದ್ದಾರೆ. ಜಜ್ಜರ್‌ನ ಜವಾಹರಲಾಲ್‌ ಬಾಗ್‌ ಸ್ಟೇಡಿಯಂನಲ್ಲಿ ನಡೆದ ಸಂವಾದದಲ್ಲಿ ಪ್ರಸ್ತುತ ಡ್ರಗ್ಸ್ ನಿಂದ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಟಕ್ಕೆ ಮುಂದಾಗಿದ್ದಾರೆ ಮತ್ತು ಕ್ರೀಡಾಪಟುಗಳಿಗೆ ತಮ ಆರೋಗ್ಯದ ಬಗ್ಗೆ ಸಲಹೆ ನೀಡಿದ್ದಾರೆ. +2006ರಲ್ಲಿ ಚಿನ್ನ ಗೆದ್ದು 2008ರ ಬೀಜಿಂಗ್‌ ಒಲಿಂಪಿಕ್ಸ್ ನಿಂದ ಕ್ವಾರ್ಟರ್‌ಫೈನಲಿಸ್ಟ್‌ವರೆಗೆ ಬಂದ ಪದಕಗಳಿಸುವುದರಲ್ಲಿ ಕೂದಲೆಳೆ ಅಂತರದಲ್ಲಿ ವಂಚಿತರಾಗಿದ್ದರು ಪ್ರಸ್ತುತ ಅವರು ಬಾಕ್ಸರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಿದರು. +ಕ್ರೀಡಾಪಟು ಮತ್ತು ರಾಷ್ಟ್ರೀಯ ಡೋಪಿಂಗ್‌ ವಿರೋಧಿ ಏಜೆನ್ಸಿ ಪ್ಯಾನೆಲಿಸ್ಟ್‌ ಆಗಿ, ನಾನು ಈ ಅಪಾಯವನ್ನು ಅರ್ಥಮಾಡಿಕೊಂಡಿದ್ದೇನೆ. ಹಾಗಾಗಿ, ನಾನು ಅವರಿಗೆ ಹೇಗೆ ಅದರಿಂದ ದೂರವರಬೇಕುಎಂಬುದರ ಕುರಿತು ಮೂಲಭೂತ ಸಲಹೆಯನ್ನು ನೀಡಿದ್ದೇನೆ. ಕ್ರೀಡಾಕೂಟದ ಸಂದರ್ಭದಲ್ಲಿ ವಾಡಿಕೆಯಂತೆ ವೈದ್ಯಕೀಯ ತಪಾಸಣೆಯ ಸಮಯದಲ್ಲಿ ವೈದ್ಯಜಾಗೃತರಾಗಿರಬೇಕು, ಅಥ್ಲೀಟ್‌ಗಳಿಗೆ ಯಾವುದೇ ನಿಷೇಧಿತ ಔಷಧವನ್ನು ಶಿಫಾರಸು ಮಾಡಬಾರದು ಎಂದು ತಿಳಿಸಿದರು. +ಡ್ರಗ್‌್ಸನಲ್ಲಿ ಸಿಕ್ಕಿಬಿದ್ದಿರುವ ಯುವಕರು ತಮ್ಮ ವೃತ್ತಿಯನ್ನು ಹಾಳುಮಾಡಿಕೊಳ್ಳುವುದು ಮಾತ್ರವಲ್ಲ, ಪೋಷಕರ ನಿರೀಕ್ಷೆಗಳನ್ನು ಹುಸಿಗೊಳಿಸುತ್ತಿದ್ದಾರೆ. ಇದಲ್ಲದೆ ಕುಡಿತದಿಂದ ಯಾರಿಗೂ ಪ್ರಯೋಜನವಾಗಿಲ್ಲ, ಅದು ಅವನತಿಗೆ ಮಾತ್ರ ಕಾರಣವಾಗುತ್ತದೆ ಎಂದು ಅವರು ಹೇಳಿದರು. +ಮಾದಕ ವ್ಯಸನಕ್ಕೆ ಬೀಳುವ ಮೂಲಕ, ಯುವಕರು ತಮ್ಮನ್ನು ತಾವು ನಾಶಪಡಿಸಿಕೊಳ್ಳುತ್ತಿದ್ದಾರೆ, ಅವರು ಕುಟುಂಬವನ್ನು ಸಹ ನಾಶಪಡಿಸುತ್ತಿದ್ದಾರೆ ಯುವ ಸಮುದಾಯವನ್ನು ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಅಖಿಲ್‌‍, ನರೇಶ್‌ ಸಂಧು ಅವರು ಸಂಚಾರ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು ಹರಿಯಾಣ ಡಿಜಿಪಿ ಐಪಿಎಸ್‌‍ ಶತ್ರುಜೀತ್‌ ಕಪೂರ್‌ ಮತ್ತು ಸೋನೆಪತ್‌ ಮತ್ತು ಜಜ್ಜರ್‌ ಪೊಲೀಸ್‌‍ ಆಯುಕ್ತ ಐಪಿಎಸ್‌‍ ಬಿ ಸತೀಶ್‌ ಬಾಲನ್‌ ಅವರು ಈ ಜಾಗೃತಿ ಅಭಿಯಾನವನ್ನು ಭಾಗವಹಿಸಿದ್ದರು. \ No newline at end of file diff --git a/eesanje/url_47_110_4.txt b/eesanje/url_47_110_4.txt new file mode 100644 index 0000000000000000000000000000000000000000..68f54fd71cd8088089a6e081c78711d1c6f08932 --- /dev/null +++ b/eesanje/url_47_110_4.txt @@ -0,0 +1,7 @@ +ಪ್ರಚಾರದ ವೇಳೆ ಮಹಿಳೆಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್‌‍ ಅಭ್ಯರ್ಥಿ +ಹೈದರಾಬಾದ್‌, ಮೇ.4-ಹಿರಿಯ ಕಾಂಗ್ರೆಸ್‌‍ ನಾಯಕ ಮತ್ತು ನಿಜಾಮಾಬಾದ್‌ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಟಿ.ಜೀವನ್‌ ರೆಡ್ಡಿ ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. +ಪ್ರಚಾರದ ವೇಳೆ ಮಾಜಿ ಸಚಿವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.ಆರ್ಮೂರ್‌ ವಿಧಾನಸಭಾ ಕ್ಷೇತ್ರದ ಗ್ರಾಮವೊಂದರಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಇತರ ಕೆಲವು ಮುಖಂಡರೊಂದಿಗೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. + (#) ! ' ???? !! ' “ )../0bb6hOplZN +ಮೇ 13 ರಂದು ನಡೆಯಲಿರುವ ಚುನಾವಣೆಯಲ್ಲಿ ಹೂವಿನ ಚಿಹ್ನೆಗೆ ಮತ ಹಾಕುವುದಾಗಿ ಹೇಳಿದಾಗ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕ ಮಹಿಳೆಗೆ ಜೀವನ್‌ ರೆಡ್ಡಿ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. +ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍ಗೆ ಮತ ಹಾಕಿದ್ದರೂ ಪಿಂಚಣಿ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್‌‍ ಅಭ್ಯರ್ಥಿ ಪಿ.ವಿನಯ್‌ ಕುಮಾರ್‌ ರೆಡ್ಡಿ ಅವರೊಂದಿಗೆ ವಿಧಾನಸಭೆ ಚುನಾವಣೆಯಲ್ಲಿ ಆರ್ಮೂರ್‌ ನಿಂದ ಸೋತಿದ್ದರು. +ನಿಜಾಮಾಬಾದ್‌ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆರ್ಮೂರ್‌ ಕೂಡ ಒಂದು.ಬಿಜೆಪಿಯ ಹಾಲಿ ಸಂಸದ ಡಿ.ಅರವಿಂದ್‌ ವಿರುದ್ಧ ಕಾಂಗ್ರೆಸ್‌‍ ಜೀವನ್‌ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. \ No newline at end of file diff --git a/eesanje/url_47_110_5.txt b/eesanje/url_47_110_5.txt new file mode 100644 index 0000000000000000000000000000000000000000..eeac50700eff0229ef0a59801ad733d4d958e1fb --- /dev/null +++ b/eesanje/url_47_110_5.txt @@ -0,0 +1,7 @@ +ಎಎಪಿ ಚುನಾವಣಾ ಪ್ರಚಾರ ಹಾಡಿಗೆ ಚುನಾವಣಾ ಆಯೋಗ ಅನುಮೋದನೆ +ನವದೆಹಲಿ, ಮೇ 4 (ಪಿಟಿಐ) :ಪಕ್ಷವು ಮಾರ್ಪಾಡುಗಳನ್ನು ಮಾಡಿದ ನಂತರ ದೆಹಲಿ ಚುನಾವಣಾ ಆಯೋಗ ಎಎಪಿಯ ಲೋಕಸಭಾ ಚುನಾವಣಾ ಪ್ರಚಾರದ ಹಾಡಿಗೆ ಅನುಮೋದನೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹಾಡನ್ನು ಬರೆದು ಧ್ವನಿ ನೀಡಿರುವ ಎಎಪಿ ಶಾಸಕ ದಿಲೀಪ್‌ ಪಾಂಡೆ ಅವರು ಹಾಡನ್ನು ಅನುಮೋದಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಚುನಾವಣಾ ಆಯೋಗವು ತನ್ನ ಪ್ರಚಾರ ಗೀತೆ ಜೈಲ್‌ ಕಾ ಜವಾಬ್‌ ವೋಟ್‌ ಸೆ ಡೆಂಗೆ ಅನ್ನು ನಿಷೇಧಿಸಿದೆ ಎಂದು ಪಕ್ಷವು ಏಪ್ರಿಲ್‌ 28 ರಂದು ಹೇಳಿಕೊಂಡಿತ್ತು. +ಆದಾಗ್ಯೂ, ದೆಹಲಿ ಚುನಾವಣಾ ಆಯೋಗದ ಅಧಿಕಾರಿಗಳು, ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಜಾಹೀರಾತು ಕೋಡ್‌ಗಳನ್ನು ಉಲ್ಲಂಘಿಸಿರುವುದರಿಂದ ಹಾಡಿನ ವಿಷಯಗಳನ್ನು ಮಾರ್ಪಡಿಸಲು ಎಎಪಿಯನ್ನು ಕೇಳಲಾಗಿತ್ತು. +ಮಾರ್ಪಾಡುಗಳನ್ನು ಮಾಡಿದ ನಂತರ ಪಕ್ಷವು ತನ್ನ ಪ್ರಸ್ತಾವನೆಯನ್ನು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಗೆ ಸಲ್ಲಿಸಿತು ಅದರ ನಂತರ ಹಾಡನ್ನು ಅನುಮೋದಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಎಕ್ಸ್ ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ ಪಾಂಡೆ ಅವರು, ಸತ್ಯವನ್ನು ತೊಂದರೆಗೊಳಿಸಬಹುದು, ಸೋಲಿಸಲಾಗುವುದಿಲ್ಲ! ಜೈಲ್‌ ಕಾ ಜವಾಬ್‌ ವೋಟ್‌ ಸೆ ಕೇವಲ ಎಎಪಿಯ ಪ್ರಚಾರ ಗೀತೆಯಲ್ಲ, ಆದರೆ ಇದು ಜನರ ಮನಸ್ಸಿನಲ್ಲಿ ನಡೆಯುತ್ತಿರುವ ಭಾವನೆಯ ಸಾರವಾಗಿದೆ. ಹಾಗಾಗಿಯೇ, ಅಂತಿಮವಾಗಿ ಸತ್ಯವೇ ಮೇಲುಗೈ ಸಾಧಿಸಿತು ಮತ್ತು ಚುನಾವಣಾ ಆಯೋಗವು ಚುನಾವಣೆಯಲ್ಲಿ ಸತ್ಯಮೇವ ಜಯತೇ ಅನ್ನು ಅನುಮೋದಿಸಿತು ಎಂದು ಬರೆದುಕೊಂಡಿದ್ದಾರೆ. +ದೆಹಲಿ ಸಿಇಒ ಕಚೇರಿಯ ಮೂಲಗಳು ಈ ಹಾಡನ್ನು ನಿಷೇಧಿಸಿಲ್ಲ ಎಂದು ತಿಳಿಸಿವೆ ಆದರೆ ಕೇಬಲ್‌ ಟೆಲಿವಿಷನ್‌ ನೆಟ್‌ವರ್ಕ್‌ ನಿಯಮಗಳು, 1994 ರ ಅಡಿಯಲ್ಲಿ ಸೂಚಿಸಲಾದ ಜಾಹೀರಾತು ಕೋಡ್‌ಗಳು ಮತ್ತು ಪತ್ರದ ಮೂಲಕ ಪ್ರಸಾರವಾದ ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ನಿಯಮಗಳ ಪ್ರಕಾರ ಕೆಲವು ಮಾರ್ಪಾಡುಗಳೊಂದಿಗೆ ತನ್ನ ಪ್ರಸ್ತಾವನೆಯನ್ನು ಮರುಸಲ್ಲಿಸುವಂತೆ ಕೇಳಿಕೊಂಡಿತ್ತು. \ No newline at end of file diff --git a/eesanje/url_47_110_6.txt b/eesanje/url_47_110_6.txt new file mode 100644 index 0000000000000000000000000000000000000000..5e1a45c0c3ab9a25310cfdb7699521252cbfb791 --- /dev/null +++ b/eesanje/url_47_110_6.txt @@ -0,0 +1,9 @@ +ರಾಜಕೀಯದಲ್ಲಿ ತ್ವರಿತ ಫಲಿತಾಂಶ ನಿರೀಕ್ಷಿಸಬಾರದು ; ಪವನ್‌ ಕಲ್ಯಾಣ್‌ +ವಿಶಾಖಪಟ್ಟಣಂ, ಮೇ 4 (ಪಿಟಿಐ) :ರಾಜಕೀಯವು ಐದು ನಿಮಿಷದ ನೂಡಲ್ಸ್‌‍ ಅಲ್ಲ ಮತ್ತು ನಾಯಕರು ಪ್ರಕ್ಷುಬ್ಧತೆ ಮತ್ತು ಹಿನ್ನಡೆಗಳನ್ನು ತಡೆದುಕೊಳ್ಳುವ ಮೂಲಕ ಜನರ ವಿಶ್ವಾಸವನ್ನು ಗಳಿಸಬೇಕಾಗಿರುವುದರಿಂದ ತ್ವರಿತ ಫಲಿತಾಂಶವನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್‌ ಕಲ್ಯಾಣ್‌ ಅಭಿಪ್ರಾಯಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮೇ 13 ರಂದು ನಡೆಯಲಿರುವ ಚುನಾವಣೆಗೆ ಜನಸೇನೆ, ಟಿಡಿಪಿ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ. +ಕಳೆದ ಐದು ವರ್ಷಗಳಲ್ಲಿ ಮುಖ್ಯಮಂತ್ರಿ ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ರಾಜ್ಯವನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಮತ್ತು ಅವ್ಯವಸ್ಥೆ ಮಾಡಿದ್ದಾರೆ ಎಂದು ಆರೋಪಿಸಿ ಮೈತ್ರಿಗೆ ಮತ ನೀಡುವಂತೆ ಅವರು ಮನವಿ ಮಾಡಿದರು. +ನೀವು ಅರ್ಥಮಾಡಿಕೊಳ್ಳಬೇಕು. ರಾಜಕೀಯವು ಫಾಸ್ಟ್‌ ಫುಡ್‌ ಫಲಿತಾಂಶ ಎಂದು ನಾವೆಲ್ಲರೂ ಭಾವಿಸುತ್ತೇವೆ. ನೀವು ಅದನ್ನು ತಕ್ಷಣ ಮಾಡಲು ಬಯಸುತ್ತೀರಿ. ನಿಮಗೆ ತಕ್ಷಣ ಫಲಿತಾಂಶ ಬೇಕು. ಇದು ಐದು ನಿಮಿಷಗಳ ನೂಡಲ್ಸ್‌‍ ಅಲ್ಲ . ಇಲ್ಲಿ ಎಂತೆಂತಹ ಮಹಾನುಭಾವರು ಸೋತಿದ್ದಾರೆ ಎಂದು ಅವರು ತಿಳಿಸಿದರು. +ತಮ್ಮ ನಾಯಕ ರಾಜಕೀಯ ವಿರೋಧಾಭಾಸಗಳು, ಅಡೆತಡೆಗಳು ಮತ್ತು ಪ್ರಕ್ಷುಬ್ಧತೆಯನ್ನು ತಡೆದುಕೊಳ್ಳಬಲ್ಲರು ಎಂಬುದನ್ನು ಜನರು ನಂಬಬೇಕು. ನಾನು ಈಗ ಆ ಭಾಗವನ್ನು ಸಾಧಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಫಲಿತಾಂಶವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಜನಸೇನಾ ನಾಯಕ ಹೇಳಿದರು. +ದಕ್ಷಿಣದ ರಾಜ್ಯ ವಿಭಜನೆಯ ಸಂದರ್ಭದಲ್ಲಿ ಕಾಂಗ್ರೆಸ್‌‍ ಮತ್ತು ಬಿಜೆಪಿ ಭರವಸೆ ನೀಡಿದ್ದ ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ವಿಷಯದ ಕುರಿತು ಕಲ್ಯಾಣ್‌ ಅವರು ಚೆಲ್ಲಿದ ಹಾಲು ಮತ್ತು ವಿಭಿನ್ನ ರೂಪವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು. +ಕಾಂಗ್ರೆಸ್‌‍ ಪಕ್ಷದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕನ್ಯಾಕುಮಾರಿಯಿಂದ ಕಾಶೀರದವರೆಗೆ ವ್ಯಾರಥಾನ್‌ ನಡಿಗೆ ರಾಹುಲ್‌ ಗಾಂಧಿಯನ್ನು ವೈಯಕ್ತಿಕವಾಗಿ ಮೆಚ್ಚಿದರೂ, ಒಂದು ಕಾಲದಲ್ಲಿ ಆಂಧ್ರಪ್ರದೇಶಕ್ಕೆ ಬೆನ್ನೆಲುಬಾಗಿದ್ದ ಹಳೆಯ ಪಕ್ಷವು ರಾಜ್ಯಕ್ಕೆ ಬಹುದೊಡ್ಡ ತಪ್ಪು ಮಾಡಿದೆ ಎಂದರು. +ಕಾಂಗ್ರೆಸ್‌‍ ನಿಜವಾಗಿಯೂ ದೊಡ್ಡ ತಪ್ಪನ್ನು ಮಾಡಿದೆ, ವಾಸ್ತವವಾಗಿ, ಆಂಧ್ರಪ್ರದೇಶವು ಕಾಂಗ್ರೆಸ್‌‍ಗೆ ಬೆನ್ನೆಲುಬಾಗಿತ್ತು ಮತ್ತು ಅವರು ತಮದೇ ಆದ ಬೆಂಬಲ ವ್ಯವಸ್ಥೆಯನ್ನು ಕಡಿತಗೊಳಿಸಿದ್ದಾರೆ. ಮತ್ತೆ, ಅವರು ಅದನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ ಮತ್ತು ಜನರು ದೂರ ಹೋಗಿದ್ದಾರೆ. ವೈಯಕ್ತಿಕವಾಗಿ, ಜನರು ಅವರನ್ನು ಇಷ್ಟಪಡಬಹುದು. (ರಾಹುಲ್‌ ಗಾಂಧಿ), ಆದರೆ ಪಕ್ಷವಾಗಿ, ಅದು ಇನ್ನೂ ಜನರೊಂದಿಗೆ ಪ್ರತಿಧ್ವನಿಸುವುದಿಲ್ಲ, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. +ಬಿಜೆಪಿಯೊಂದಿಗಿನ ಅವರ ಉತ್ತಮ ಸಂಬಂಧದ ಬಗ್ಗೆ, ಕಲ್ಯಾಣ್‌ ಅವರು ರಾಜ್ಯದ ಒಳಿತಿಗಾಗಿ ಅವುಗಳನ್ನು ಬಳಸುತ್ತಾರೆ ಎಂದು ಹೇಳಿದರು. ವೈಎಸ್‌‍ಆರ್‌ ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಬಾರಿ ಎಚ್ಚರಿಕೆಯಿಂದ ಆಯ್ಕೆ ಮಾಡಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದರು. \ No newline at end of file diff --git a/eesanje/url_47_110_7.txt b/eesanje/url_47_110_7.txt new file mode 100644 index 0000000000000000000000000000000000000000..4cbd635470b921e58c7623227f5224df1432c00c --- /dev/null +++ b/eesanje/url_47_110_7.txt @@ -0,0 +1,7 @@ +ಇರಾನ್‌ ವಶದಲ್ಲಿದ್ದ 16 ಭಾರತೀಯರ ಬಿಡುಗಡೆ +ನವದೆಹಲಿ,ಮೇ4-ಭಾರತೀಯರು ಸೇರಿದಂತೆ ಒಟ್ಟು 25 ಸಿಬ್ಬಂದಿಯಿದ್ದ ಇಸ್ರೀಲ್‌ಗೆ ಸೇರಿದ್ದ ಪೋರ್ಚುಗೀಸ್‌ ಧ್ವಜವುಳ್ಳ ಕಾರ್ಗೋ ನೌಕೆ ಎಂಎಸ್ಸಿ ಏರೀಸ್‌ನ ಎಲ್ಲಾ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಇರಾನ್‌ ತಿಳಿಸಿದೆ. ಇರಾನ್‌ ವಿದೇಶಾಂಗ ಸಚಿವ ಹುಸೇನ್‌ ಅಮಿರ್‌- ಬ್ಡೊಲ್ಲಾಹಿಯಾನ್‌ ಮತ್ತು ಎಸ್ಟೋನಿಯನ್‌ನ ಸಚಿವ ಮಾರ್ಗಸ್‌ ತ್ಸಾಹ್ಕ್ನಾ ನಡುವೆ ಶುಕ್ರವಾರ ನಡೆದ ದೂರವಾಣಿ ಸಂಭಾಷಣೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. +ದೂರವಾಣಿ ಸಂಭಾಷಣೆಯ ಸಮಯದಲ್ಲಿ ಉಭಯ ಕಡೆಯವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಇತ್ತೀಚಿನ ಸ್ಥಿತಿ, ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಇರಾನ್‌ ವಿದೇಶಾಂಗ ಸಚಿವಾಲಯ ಹೇಳಿದೆ. +ಇದಕ್ಕೂ ಮೊದಲು ಇಸ್ರೀಲ್‌ನ ಸರಕು ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರಾದ ಕೇರಳದ ತ್ರಿಶೂರ್‌ನ ಆನ್‌ ಟೆಸ್ಸಾ ಜೋಸೆಫ್‌ ಅವರನ್ನು ಬಿಡುಗಡೆ ಮಾಡಲಾಗಿತ್ತು. ಅವರು ಏಪ್ರಿಲ್‌ 18ರಂದು ಸುರಕ್ಷಿತವಾಗಿ ಮನೆಗೆ ಮರಳಿದ್ದರು. 17 ಭಾರತೀಯ ಸಿಬ್ಬಂದಿ ಪೈಕಿ ಒಬ್ಬರು ಭಾರತಕ್ಕೆ ಮರಳಿದ್ದಾರೆ ಮತ್ತು ಇತರರು ಸುರಕ್ಷಿತರಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಏಪ್ರಿಲ್‌ 25ರಂದು ಹೇಳಿತ್ತು. ಕೆಲವು ಒಪ್ಪಂದಗಳನ್ನು ಪೂರೈಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು. ಅದರಂತೆ ಇದೀಗ ಎಲ್ಲರನ್ನೂ ಬಿಡುಗಡೆ ಮಾಡಲಾಗಿದೆ. +ನಮ್ಮ ಪ್ರಾದೇಶಿಕ ಜಲಪ್ರದೇಶದಲ್ಲಿ ತನ್ನ ರಾಡಾರ್‌ ಅನ್ನು ಆಫ್‌ ಮಾಡಿದ ಮತ್ತು ನೌಕಾಯಾನದ ಭದ್ರತೆಗೆ ಅಪಾಯವನ್ನುಂಟು ಮಾಡಿದ ಕಾರಣಕ್ಕೆ ಹಡಗನ್ನು ನ್ಯಾಯಾಂಗ ನಿಯಮಗಳ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಇರಾನ್‌ ಹೇಳಿತ್ತು. ಎಸ್ಟೋನಿಯನ್‌ ಅಧಿ ಕಾರಿಗಳ ನಡುವಿನ ದೂರವಾಣಿ ಚರ್ಚೆಯ ಸಮಯದಲ್ಲಿ ಇರಾನ್‌, ಮಾನವೀಯ ಆಧಾರದ ಮೇಲೆ ಈಗಾಗಲೇ ಹಡಗಿನ ಎಲ್ಲ ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲ ದೇಶಗಳ ಸಿಬ್ಬಂದಿ ತಮ್ಮ ತಾಯ್ನಾಡಿಗೆ ತೆರಳಬಹುದು ಎಂದು ಹೇಳಿತ್ತು. +ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್‌ನ ದೂತಾವಾಸ ಕಚೇರಿ ಮೇಲೆ ದಾಳಿ ನಡೆಸಿದ ಇಸ್ರೀಲ್‌ ಕ್ರಮವನ್ನು ಖಂಡಿಸಿ ಇರಾನ್‌ ಯುದ್ಧ ಪ್ರಾರಂಭಿಸಲು ಮುಂದಾಗಿತ್ತು. ಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆಯೇ ಹಡಗನ್ನು ವಶಪಡಿಸಿಕೊಂಡಿದ್ದು ಆತಂಕ ಸೃಷ್ಟಿಸಿತ್ತು. ಇದೀಗ ಆತಂಕ ನಿವಾರಣೆಯಾಗಿದೆ. +ನಾವು ಈ ಎಲ್ಲಾ 16 ನಾವಿಕರ ಸಂಪರ್ಕವನ್ನು ಸ್ಥಾಪಿಸಲು ಸಾಧ್ಯವಾಗಿದೆ. ಅವರು ಆರೋಗ್ಯವಾಗಿದ್ದಾರೆ, ನಾವು ಕಾನ್ಸುಲರ್‌ ಪ್ರವೇಶವನ್ನು ಹೊಂದಿದ್ದೇವೆ. ಅವರು ಭಾರತಕ್ಕೆ ಹಿಂದಿರುಗುವ ಬಗ್ಗೆ, ಇದು ಅವರ ಒಪ್ಪಂದದ ಬಾಧ್ಯತೆಗಳನ್ನು ಒಳಗೊಂಡಂತೆ ಹಲವಾರು ಅಂಶಗಳ ಮೇಲೆ ಅವಲಂಬಿತವಾಗಿದೆ. ಅವರ ಬಿಡುಗಡೆಗಾಗಿ ನಾವು ಅವರೊಂದಿಗೆ ಮತ್ತು ಇರಾನ್‌ ಅಧಿ ಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಎಂಇಎ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿದ್ದಾರೆ. \ No newline at end of file diff --git a/eesanje/url_47_110_8.txt b/eesanje/url_47_110_8.txt new file mode 100644 index 0000000000000000000000000000000000000000..958d8c15eeb9575c897b3f18f61d93f9f0b3d3ab --- /dev/null +++ b/eesanje/url_47_110_8.txt @@ -0,0 +1,7 @@ +ಚಲಿಸುವ ರೈಲಿನಲ್ಲೇ ತ್ರಿವಳಿ ತಲಾಖ್‌ ಹೇಳಿ ಪರಾರಿಯಾದವನಿಗಾಗಿ ಶೋಧ +ಝಾನ್ಸಿ,ಮೇ 3-ಚಲಿಸುತ್ತಿರುವ ರೈಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್‌ ನೀಡಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಏಪ್ರಿಲ್‌ 29 ರಂದು ಮೊಹಮ್ಮದ್‌ ಅರ್ಷದ್‌ (28) ತನ್ನ ಪತ್ನಿ ಅಫ್ಸನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಝಾನ್ಸಿ ಜಂಕ್ಷನ್‌ಗೆ ಸ್ವಲ್ಪ ಮೊದಲು ಈ ಘಟನೆ ಸಂಭವಿಸಿದೆ. +ರೈಲು ಝಾನ್ಸಿ ನಿಲ್ದಾಣಕ್ಕೆ ನುಗ್ಗುತ್ತಿದ್ದಂತೆ ಅರ್ಷದ್‌ ತನ್ನ ಪತ್ನಿಗೆ ತ್ರಿವಳಿ ತಲಾಖ್‌ ನೀಡಿ ರೈಲಿನಿಂದ ಇಳಿದ ಕೂಡಲೆ ಆಕೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಘಟನೆಗಳ ಹಠಾತ್‌ ತಿರುವಿನಿಂದ ಆಘಾತಕ್ಕೊಳಗಾದ ಅಫ್ಸನಾ ಸರ್ಕಾರಿ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದರು, ಅವರು ಆ ದಿನ ಮುಂಚೆಯೇ ಅವಳು ಭೋಪಾಲ್‌ಗೆ ರೈಲು ಹತ್ತಿದ ಕಾನ್ಪುರ್‌ ದೇಹತ್‌ನಲ್ಲಿರುವ ಪುಖ್ರಾಯನ್‌ಗೆ ಅವಳನ್ನು ಕಳುಹಿಸಿದರು. +ಕೊನೆಗೂ ಎಫ್‌ಐಆರ್‌ ದಾಖಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಲಾಗಿದೆ. ಭೋಪಾಲ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿ ಯಾಗಿರುವ ಕಂಪ್ಯೂಟರ್‌ ಎಂಜಿನಿಯರ್‌ ಅರ್ಷದ್‌ ಅವರು ಮ್ಯಾಟ್ರಿಮೋಲ್‌ ಸಹಾಯದಿಂದ ಈ ವರ್ಷ ಜನವರಿ 12 ರಂದು ರಾಜಸ್ಥಾನದ ಕೋಟಾ ಮೂಲದ ಪದವೀಧರ ಅಫ್ಸಾನಾ ಅವರನ್ನು ವಿವಾಹವಾಗಿದ್ದರು. +ಕಳೆದ ವಾರ ದಂಪತಿಗಳು ಪುಖ್ರಾಯನ್‌ನಲ್ಲಿರುವ ಅರ್ಷದ್‌ ಅವರ ಪೂರ್ವಜರ ಮನೆಗೆ ಭೇಟಿ ನೀಡಿದಾಗ, ಅರ್ಷದ್‌ ಈಗಾಗಲೇ ಮದುವೆಯಾಗಿರುವುದನ್ನು ಕಂಡು ಅಫ್ಸನಾ ಆಘಾತಕ್ಕೊಳಗಾಗಿದ್ದರು. +ಆಕೆ ಆತನನ್ನು ಎದುರಿಸಿದಾಗ, ಅವನು ಮತ್ತು ಅವನ ತಾಯಿ ವರದಕ್ಷಿಣೆಗಾಗಿ ಕಿರುಕುಳ ನೀಡಲು ಪ್ರಾರಂಭಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಅರ್ಷದ್‌ ಅಂತಿಮವಾಗಿ ತ್ರಿವಳಿ ತಲಾಖ್‌ ಘೋಷಿಸುವವರೆಗೂ ಅವರಿಬ್ಬರ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. +ಮಾತ್ರವಲ್ಲ, ಅಫ್ಸಾನಾ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಹಾಯ ಮಾಡುವಂತೆ ಮತ್ತು ಮಹಿಳೆಯರಿಗೆ ವಿಚ್ಛೇದನ ನೀಡುವ ಮತ್ತು ಅವರನ್ನು ತ್ಯಜಿಸುವ ಅಂತಹ ಜನರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಆಕೆಯ ಪತಿ ಅರ್ಷದ್‌, ಅವರ ತಾಯಿಯ ಚಿಕ್ಕಪ್ಪ ಅಖೀಲ್‌‍, ತಂದೆ ನಫೀಸುಲ್‌ ಹಸನ್‌ ಮತ್ತು ತಾಯಿ ಪರ್ವೀನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಲ್‌ ಅಧಿಕಾರಿ ಪ್ರಿಯಾ ಸಿಂಗ್‌ ತಿಳಿಸಿದ್ದಾರೆ. \ No newline at end of file diff --git a/eesanje/url_47_110_9.txt b/eesanje/url_47_110_9.txt new file mode 100644 index 0000000000000000000000000000000000000000..ead6de3b23d837414495570488fb0ba7291228a4 --- /dev/null +++ b/eesanje/url_47_110_9.txt @@ -0,0 +1,10 @@ +ಅಮೇಥಿ ಬಿಟ್ಟು ರಾಯ್‌ಬರೇಲಿಗೆ ರಾಹುಲ್‌ ಓಡಿ ಹೋಗಿದ್ದಾರೆ : ಮೋದಿ ವ್ಯಂಗ್ಯ +ಕೋಲ್ಕತ್ತಾ,ಮೇ.3-ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಓಡಿದ್ದಾರೆ. ನೀವು ಭಯಪಡಬೇಡಿ, ಓಡಿಹೋಗಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾಸ್ಯಾಸ್ಪದವಾಗಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದ ಬರ್ಧಮಾನ್‌-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಚುನಾವಣೆಯ ಫಲಿತಾಂಶವು ಸ್ಪಷ್ಟವಾಗಿದೆ, ಯಾವುದೇ ಸಮೀಕ್ಷೆಯ ಅಗತ್ಯವಿಲ್ಲ, ನಾನು ಈ ಹಿಂದೆಯೇ ಹೇಳಿದ್ದೆ, ಶೆಹಜಾದಾ (ರಾಹುಲ್‌ ಗಾಂಧಿ) ವಯನಾಡಿನಿಂದಲೂ ಸೋಲುತ್ತಾರೆ. +ಆದ್ದರಿಂದ ಎರಡನೇ ಸ್ಥಾನಕ್ಕಾಗಿ ನೋಡುತ್ತೇನೆ ಮತ್ತು ಈಗ ಅವರು ಅಮೇಥಿಯಲ್ಲಿ ಹೋರಾಡಲು ಹೆದರುತ್ತಾರೆ ಮತ್ತು ರಾಯ್‌ಬರೇಲಿಗೆ ಓಡಿಹೋಗಿದ್ದಾರೆ. ನಾನು ಅವರಿಗೆ ದಾರೋ ಮತ್‌, ಭಾಗೋ ಮತ್‌ (ಹೆದರಬೇಡಿ, ಓಡಿಹೋಗಬೇಡಿ) ಎಂದು ಹೇಳಲು ಬಯಸುತ್ತೇನೆ ಎಂದು ವ್ಯಂಗ್ಯವಾಡಿದರು. +39 ನಿಮಿಷಗಳ ಭಾಷಣದಲ್ಲಿ ಮೋದಿ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ, ಸಂದೇಶಖಾಲಿ, ರಾಮಮಂದಿರ, ರಾಮನವಮಿ, ವೋಟ್‌ ಜಿಹಾದ್‌, ರಾಹುಲ್‌ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಚುನಾವಣೆಗೆ ರ್ಸ್ಪಧಿಸುವ ಕುರಿತು ಮಾತನಾಡಿದರು. ಸಂವಿಧಾನವನ್ನು ಬದಲಾಯಿಸಲು, ದಲಿತ ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾಗಳನ್ನು ಕಸಿದುಕೊಂಡು ಜಿಹಾದಿ ವೋಟ್‌ ಬ್ಯಾಂಕ್‌ಗೆ ಮೀಸಲಾತಿ ನೀಡಲು ಕಾಂಗ್ರೆಸ್‌ ಬಯಸಿದೆ. ಅವರಿಗೆ (ವಿರೋಧ) ಅಭಿವೃದ್ಧಿಯನ್ನು ತರಲು ಸಾಧ್ಯವಿಲ್ಲ, ಅವರಿಗೆ ಮತಕ್ಕಾಗಿ ಸಮಾಜವನ್ನು ವಿಭಜಿಸುವುದು ಹೇಗೆ ಎಂದು ತಿಳಿದಿದೆ. +ತೃಣಮೂಲ ಶಾಸಕ ಹುಮಾಯೂನ್‌ ಕಬೀರ್‌ ಅವರನ್ನು ಉಲ್ಲೇಖಿಸಿದ ಪ್ರಧಾನಿ, ಟಿಎಂಸಿ ಶಾಸಕರೊಬ್ಬರು ಬಹಿರಂಗ ಬೆದರಿಕೆ ಹಾಕಿದರು. ಅವರು ಕೇವಲ ಎರಡು ಗಂಟೆಗಳಲ್ಲಿ ಭಾಗೀರಥಿಯಲ್ಲಿ ಹಿಂದೂಗಳನ್ನು ಮುಳುಗಿಸುತ್ತಾರೆ ಎಂದು ಹೇಳಿದರು. ಇದು ಏನು ಭಾಷೆ ಮತ್ತು ರಾಜಕೀಯ ಸಂಸ್ಕೃತಿ? ಬಂಗಾಳದಲ್ಲಿ ಹಿಂದೂಗಳಿಗೆ ಏನಾಗುತ್ತಿದೆ? ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಹಿಂದೂಗಳನ್ನು ಎರಡನೇ ಪ್ರಜೆಯನ್ನಾಗಿ ಮಾಡಿದೆ ಎಂದು ತೋರು ತ್ತಿದೆ ಎಂದು ವಾಗ್ದಳಿ ನಡೆಸಿದರು. +ಸಂದೇಶಖಾಲಿಯಲ್ಲಿ ದಲಿತ ಸಹೋದರಿಯರಿಗೆ ಚಿತ್ರಹಿಂಸೆ ನೀಡ ಲಾಗುತ್ತಿದೆ ಮತ್ತು ಇಲ್ಲಿನ ಸರ್ಕಾರ ಆರೋಪಿಗಳನ್ನು ರಕ್ಷಿಸುವಲ್ಲಿ ನಿರತ ವಾಗಿದೆ ಎಂದರು.ಎರಡು ಹಂತದ ಮತದಾನದ ನಂತರ ಪ್ರತಿಪಕ್ಷಗಳು ಮೋದಿ ವಿರುದ್ಧ ಮತ ಜಿಹಾದ್‌ ಮಾಡುತ್ತಿದ್ದಾರೆ. ದೇಶದ ಜನತೆಗೆ ಜಿಹಾದ್‌ ಅರ್ಥ ಚೆನ್ನಾಗಿ ಅರ್ಥವಾಗಿದೆ ಎಂದರು. +ಕಾಂಗ್ರೆಸ್‌ಗೆ ಮೂರು ಸವಾಲು ಕಳೆದ 10 ದಿನಗಳಿಂದ ಕಾಂಗ್ರೆಸ್‌ಗೆ ಮೂರು ಸವಾಲುಗಳನ್ನು ನೀಡುತ್ತಿದ್ದೇನೆ, ಆದರೆ ಅವರು ಮೌನವಾಗಿದ್ದಾರೆ. ಮೊದಲನೆ ಯದಾಗಿ- ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವುದಿಲ್ಲ ಎಂದು ಕಾಂಗ್ರೆಸ್‌ ಮತ್ತು ಭಾರತ ಮೈತ್ರಿಕೂಟ ದೇಶಕ್ಕೆ ಲಿಖಿತ ಭರವಸೆ ನೀಡಬೇಕು. +ಎರಡನೆಯದು- ಎಸ್ಸಿ/ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಸಿದುಕೊಳ್ಳುವುದಿಲ್ಲ ಮತ್ತು ಅದನ್ನು ಧರ್ಮದ ಆಧಾರದ ಮೇಲೆ ಯಾರ ನಡುವೆಯೂ ಹಂಚುವುದಿಲ್ಲ ಎಂದು ಅವರು ದೇಶಕ್ಕೆ ಲಿಖಿತವಾಗಿ ಭರವಸೆ ನೀಡಬೇಕು. ಮೂರನೆಯದು? ರಾಜ್ಯ ಸರ್ಕಾರಗಳು ಇರುವಲ್ಲಿ ಒಬಿಸಿ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದಿಲ್ಲ ಎಂದು ಅವರು ಲಿಖಿತವಾಗಿ ನೀಡಬೇಕು. +ಎಡಪಕ್ಷಗಳು, ತೃಣಮೂಲ ಕಾಂಗ್ರೆಸ್‌ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಅಭಿವೃದ್ಧಿಯ ದೃಷ್ಟಿ ಇಲ್ಲ. ಎಡಪಕ್ಷಗಳು ತ್ರಿಪುರಾವನ್ನು ಸಂಪೂರ್ಣವಾಗಿ ನಾಶಪಡಿಸಿದರು. ಅವರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ತ್ರಿಪುರವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಅದು ಅವರದಲ್ಲ. ದೇಶದ ಅಭಿವೃದ್ಧಿಗೆ ಒಂದು ಕಪ್‌ ಚಹಾ ಎಂದು ಪ್ರಧಾನಿ ಮೋದಿ ಹೇಳಿದರು. +ನಾನು ತೃಣಮೂಲವನ್ನು ಕೇಳಲು ಬಯಸುತ್ತೇನೆ, ಸಂದೇಶಖಾಲಿಯಲ್ಲಿ ನಮ್ಮ ದಲಿತ ಸಹೋದರಿಯರಿಗೆ ಭಾರಿ ಅನ್ಯಾಯವಾಗಿದೆ, ಇಡೀ ದೇಶವು ಕ್ರಮಕ್ಕೆ ಒತ್ತಾಯಿಸುತ್ತಿದೆ. ತೃಣಮೂಲ ಕಾಂಗ್ರೆಸ್‌ ಅನ್ನು ರಕ್ಷಿಸಲಾಗಿದೆ. ಅಪರಾಯ ಹೆಸರು ಶೇಖ್‌ ಷಹಜಹಾನ್‌ ಎಂಬುದಕ್ಕೆ ಕಾರಣವೇ? ತೃಣಮೂಲ ತುಷ್ಟೀಕರಣ ದಲ್ಲಿ ನಿರತವಾಗಿದೆ. ಮತ ಬ್ಯಾಂಕ್‌ ಮಾನವೀಯತೆಯ ಮೇಲೆ ಇರಬಹುದೇ? ಎಂದು ಕೇಳಿದರು. \ No newline at end of file diff --git a/eesanje/url_47_111_1.txt b/eesanje/url_47_111_1.txt new file mode 100644 index 0000000000000000000000000000000000000000..bd7f1dbc0c51de6f9fb2518923182064d9aa33a3 --- /dev/null +++ b/eesanje/url_47_111_1.txt @@ -0,0 +1,8 @@ +ಜಾಮೀನುರಹಿತ ವಾರೆಂಟ್‌ ಕುರಿತು ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ +ಬೆಂಗಳೂರು,ಮೇ.3-ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನುರಹಿತ ವಾರೆಂಟ್‌ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್‌ ಎಚ್ಚರಿಕೆ ನೀಡಿದೆ. +ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ ಅಥವಾ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದೆನಿಸದ ಅಥವಾ ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದೆನಿಸದ ಆರೋಪಿಗಳ ವಿರುದ್ಧ ನೇರವಾಗಿ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಬಾರದೆಂದು ಸುಪ್ರೀಂಕೋರ್ಟ್‌ ಹೇಳಿದೆ. +ಮೇ.1 ರಂದು ನ್ಯಾಯಮೂರ್ತಿಗಳಾದ ಸಂಜೀವ್‌ಖನ್ನಾ ಹಾಗೂ ನ್ಯಾಯಮೂರ್ತಿ ಎಸ್‌.ವಿ.ಎನ್‌.ಭಟ್‌ ಅವರನ್ನೊಳಗೊಂಡ ಪೀಠ ತಮ್ಮ ತೀರ್ಪಿನಲ್ಲಿ ಜಾಮೀನುರಹಿತ ವಾರೆಂಟ್‌ಗಳನ್ನು ನೀಡಲು ಯಾವುದೇ ಮಾರ್ಗಸೂಚಿಗಳಿಲ್ಲದಿದ್ದರೂ ಆರೋಪಿಯನ್ನು ಘೋರ ಅಪರಾಧದ ಆರೋಪ ಹೊರಿಸದ ಹೊರತು ಜಾಮೀನುರಹಿತ ವಾರೆಂಟ್‌ಗಳನ್ನು ಹೊರಡಿಸಬಾರದು ಎಂದು ಹೇಳಿದೆ. +ಅಲ್ಲದೆ ಆರೋಪಿ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿದ್ದಾನೆ ಮತ್ತು ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ ಎಂದೆನಿಸಿದರೆ ಅಥವಾ ಸಾಕ್ಷ್ಯವನ್ನು ತಿರುಚುವ, ನಾಶಪಡಿಸುವ ಸಾಧ್ಯತೆಯಿದೆ ಎಂದೆನಿಸದ ಹೊರತು ಜಾಮೀನುರಹಿತ ವಾರೆಂಟ್‌ಗಳನ್ನು ವಾಡಿಕೆಯಂತೆ ಜಾರಿ ಮಾಡಬಾರದು ಎಂದು ಹೇಳಿದೆ. +ಪ್ರಕರಣವು ಸಾರ್ವಜನಿಕ ಅಥವಾ ರಾಜ್ಯದ ಹಿತಾಸಕ್ತಿ ಹೊಂದಿಲ್ಲದ ಹೊರತು ವ್ಯಕ್ತಿಯ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗದು. ಅದರಂತೆ ಜಾಮೀನುರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗದು ಎಂಬುದು ಕಾನೂನಿನ ನಿಲುವು ಎಂದು ಸುಪ್ರೀಂಕೋರ್ಟ್‌ ಸ್ಪಷ್ಟಪಡಿಸಿದೆ. +ಖಾಸಗಿ ವ್ಯಕ್ತಿಗಳ ನಡುವಿನ ಹಣಕಾಸು ವಿವಾದ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐಪಿಸಿ ಸೆಕ್ಷನ್‌ 323, 504, 506, 120 ಬಿ, 308, 325 ಅಡಿಯಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. +ಈ ಪ್ರಕರಣದಲ್ಲಿ ನ್ಯಾಯಾಲಯ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಿತ್ತು. ಹಾಗಿದ್ದರೂ ಆರೋಪಿ ನ್ಯಾಯಾಲಯದ ಮುಂದೆ ಹಾಜರಾಗದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ಮೇಲ್ಮನವಿದಾರನ ವಿರುದ್ಧ ಜಾಮೀನುರಹಿತ ವಾರೆಂಟ್‌ ಜಾರಿ ಮಾಡಿತ್ತು. ಕೋರ್ಟ್‌ ಜಾರಿ ಮಾಡಿದ್ದ ವಾರೆಂಟ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದರಿಂದ ಮೇಲ್ಮನವಿದಾರರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. \ No newline at end of file diff --git a/eesanje/url_47_111_10.txt b/eesanje/url_47_111_10.txt new file mode 100644 index 0000000000000000000000000000000000000000..b21f9ffe45ec84a3ce0c8823f3a74b869801b36b --- /dev/null +++ b/eesanje/url_47_111_10.txt @@ -0,0 +1,5 @@ +ನೇಮಕಾತಿ ಹಗರಣ ಟಿಎಂಸಿಗೆ ಮೊದಲೇ ತಿಳದಿತ್ತು: ಕುಣಾಲ್ ಘೋಷ್ +ಕೋಲ್ಕತ್ತಾ, ಮೇ 2- ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಪಶ್ಚಿಮ ಬಂಗಾಳ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಪದಚ್ಯುತಗೊಳಿಸಿದ ಬಳಿಕ ಕುಣಾಲ್ ಘೋಷ್ ಅವರು 2021ರ ವಿಧಾನಸಭಾ ಚುನಾವಣೆಗೂ ಮುನ್ನವೇ ಟಿಎಂಸಿಗೆ ಶಾಲಾ ನೇಮಕಾತಿ ಹಗರಣದ ಅರಿವಿತ್ತು ಎಂದು ಪ್ರತಿಪಾದಿಸಿದ್ದಾರೆ. +ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ನಿಕಟವರ್ತಿ ಎಂದೇ ಹೆಸರಾಗಿರುವ ಘೋಷ್ ಅವರಿಂದ ಈ ಹೇಳಿಕೆ ಲೋಕಸಭಾ ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಹೊರಬಿದ್ದಿದೆ. ಚುನಾವಣೆಯಲ್ಲಿ ಎಸ್‍ಎಸ್‍ಸಿ ಹಗರಣ ಮಹತ್ತರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ಲೋಕಸಭಾ ಅಭ್ಯರ್ಥಿ ಯೊಬ್ಬರ ಜೊತೆ ವೇದಿಕೆ ಹಂಚಿಕೊಂಡು ಅವರನ್ನು ಹೊಗಳಿದ ಘೋಷ್ ಅವರನ್ನು ಕೆಲ ಗಂಟೆಗಳ ತರುವಾಯ ರಾಜ್ಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಯಿತು. +ಎರಡನೇ ತಲೆಮಾರಿನ ಟಿಎಂಸಿ ನಾಯಕರಾಗಿ ಬೆಳೆಯುವ ಲಕ್ಷಣ ತೋರಿದ್ದ ಮತ್ತು ಪಕ್ಷದ ಹಿರಿಯರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಘೋಷ್ ಅವರು ಶಾಲಾ ಶಿಕ್ಷಣ ಇಲಾಖೆಯ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಮಾಹಿತಿ ಇದ್ದದ್ದರಿಂದಲೇ ಉದ್ಯೋಗ ನೇಮಕಾತಿಯಲ್ಲಿ 2021ರಲ್ಲಿ ಪಕ್ಷವು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಸಚಿವಾಲಯದಿಂದ ಪಾರ್ಥ ಚಟರ್ಜಿ ಅವರನ್ನು ಕೈಗಾರಿಕಾ ಇಲಾಖೆಗೆ ಎತ್ತಂಗಡಿ ಮಾಡಲಾಯಿತು ಎಂದು ಬಂಗಾಳಿ ಸುದ್ದಿ ವಾಹಿನಿ ಎಬಿಪಿ ಆನಂದಾಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. +ರಾಜ್ಯಮಟ್ಟದ ಆಯ್ಕೆ ಪರೀಕ್ಷೆ (ಎಸ್‍ಎಲ್‍ಎಸ್‍ಟಿ)- 2016 ಅನ್ನು ಕಲ್ಕತ್ತಾ ಹೈಕೋರ್ಟ್ ರದ್ದುಪಡಿಸಿದ ಒಂದು ವಾರದ ಬಳಿಕ ಘೋಷ್ ಹೇಳಿಕೆ ಹೊರಬಿದ್ದಿದೆ. ನ್ಯಾಯಾಲಯದ ಆದೇಶದ ಬಳಿಕ ಸುಮಾರು 26000 ಜನರು ಕೆಲಸ ಕಳೆದುಕೊಂಡಿದ್ದಾರೆ. \ No newline at end of file diff --git a/eesanje/url_47_111_11.txt b/eesanje/url_47_111_11.txt new file mode 100644 index 0000000000000000000000000000000000000000..c9cc498fe906ad1435016f95fd4472890b005694 --- /dev/null +++ b/eesanje/url_47_111_11.txt @@ -0,0 +1,12 @@ +ದೇಶವನ್ನು ಶರೀಯ ಕಾನೂನಿನ ಮೂಲಕ ಮುನ್ನಡೆಸುತ್ತೀರಾ?: ಅಮಿತ್ ಷಾ ಕಿಡಿ +ನವದೆಹಲಿ,ಮೇ2- ದೇಶವನ್ನು ಶರೀಯ ಕಾನೂನಿನ ಮೂಲಕ ಮುನ್ನಡೆಸುತ್ತೀರಾ ಎಂಬುದನ್ನು ಜನತೆಯ ಮುಂದೆ ಕಾಂಗ್ರೆಸ್ ಬಹಿರಂಗಪಡಿಸಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಷಾ ಸವಾಲು ಹಾಕಿದ್ದಾರೆ.ನಾನು ಕಾಂಗ್ರೆಸ್ ನಾಯಕರಿಗೆ ನಿಮ್ಮ ಪ್ರಣಾಳಿಕೆಯು ಮುಸ್ಲಿಂ ಲೀಗ್ ಮತ್ತು ಎಡಪಂಥೀಯರು ಸಿದ್ದಪಡಿಸಿಕೊಟ್ಟಿದ್ದಾರಾ ಎಂದು ಪ್ರಶ್ನಿಸುತ್ತೇನೆ. ಏಕೆಂದರೆ ನಿಮ್ಮ ಎಲ್ಲ ವಿಚಾರಧಾರೆಗಳು ಅವರ ಸಿದ್ದಾಂತಕ್ಕೆ ಹೋಲುವಂತಿದೆ. ಬರುವ ದಿನಗಳಲ್ಲಿ ನೀವು ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತೀರೋ ಇಲ್ಲವೆ ಶರಿಯ ಕಾನೂನಿನ ಮೂಲಕ ಆಡಳಿತ ಮಾಡುತ್ತಿರೋ ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದು ಸವಾಲು ಎಸೆದಿದ್ದಾರೆ. +ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿ ಪ್ರಣಾಳಿಕೆ ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ವ್ಯತ್ಯಾಸಗಳನ್ನು ದೇಶದ ಜನತೆ ತುಲನೆ ಮಾಡಬೇಕು. ಕಾಂಗ್ರೆಸ್ ಮುಸ್ಲಿಂ ಲೀಗ್‍ಗೆ ಹತ್ತಿರವಾಗುವಂತೆ ಪ್ರಣಾಳಿಕೆ ಸಿದ್ದಪಡಿಸಿದೆ. ಇದು ಶರಿಯ ಕಾನೂನಲ್ಲದೆ ಮತ್ತೇನು ಎಂದು ಪ್ರಶ್ನಿಸಿದ್ದಾರೆ. +ಬಿಜೆಪಿ ಪ್ರಣಾಳಿಕೆಯು ಹೇಗಿದೆ ಎಂಬುದನ್ನು ನೀವೇ ನೋಡಿ. ನಮ್ಮ ಪ್ರಣಾಳಿಕೆಯಲ್ಲಿ ನಾವು ಏಕರೂಪ ನಾಗರಿಕ ಸಂಹಿತೆ ತರುವ ಬಗ್ಗೆ ಮಾತನಾಡುತ್ತೇವೆ. ವೈಯಕ್ತಿಕ ಕಾನೂನುಗಳನ್ನು ಉತ್ತೇಜಿಸುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಕಾಂಗ್ರೆಸ್ ಉತ್ತರಿಸಬೇಕು ಏಕೆಂದರೆ ಇದು ಬಹಳ ಮುಖ್ಯವಾದ ವಿಷಯ ಎಂದಿದ್ದಾರೆ. +ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‍ನ ಛಾಪನ್ನು ಹೊಂದಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ನಿಲುವನ್ನು ಪುನರುಚ್ಚರಿಸಿದ ಗೃಹ ಸಚಿವರು, ದೇಶದ ಒಪ್ಪಂದಗಳಿಗೆ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವುದಾಗಿ ಅವರು ಹೇಳುತ್ತಿದ್ದಾರೆ. ಯಾರು ಮೊದಲು ಕೀಳು, ಹಿಂದಿನ ಸಾಧನೆ ಏನು, ಅವರಿಗೆ ಕೆಲಸ ಮಾಡುವ ಸಾಮಥ್ರ್ಯವಿದೆಯೇ ಅಥವಾ ಇಲ್ಲವೇ, ಒಪ್ಪಂದಗಳನ್ನು ಈ ಆಧಾರದ ಮೇಲೆ ಅಥವಾ ಧರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ? ಅವರು ದೇಶವನ್ನು ಹೇಗೆ ನಡೆಸಬೇಕೆಂದು ಬಯಸುತ್ತಾರೆ? ದೇಶದ ಜನತೆ ನಿರ್ಧರಿಸಬೇಕು. ಬಹಳ ದಿನಗಳ ನಂತರ ನರೇಂದ್ರಮೋದಿಯವರು ದೇಶವನ್ನು ತುಷ್ಟೀಕರಣದ ರಾಜಕಾರಣದಿಂದ ಹೊರತಂದಿದ್ದಾರೆ. ಕಾಂಗ್ರೆಸ್‍ಗೆ ಗೆಲ್ಲುವ ವಿಶ್ವಾಸವಿಲ್ಲದ ಕಾರಣ ಅವರು ಅದನ್ನು ಮತ್ತೆ ಅದೇ ದಿಕ್ಕಿನಲ್ಲಿ ಕೊಂಡೊಯ್ಯಲು ಬಯಸಿದ್ದಾರೆ ಎಂದು ದೂರಿದ್ದಾರೆ. +ಅಲ್ಪಸಂಖ್ಯಾತರಿಗೆ ಹಂಚಿಕೆ ಮಾಡಲು ಸಂಪನ್ಮೂಲಗಳು ಎಲ್ಲಿಂದ ಬರುತ್ತವೆ ಎಂಬುದರ ಬಗ್ಗೆ ಯಾವುದೇ ಅಸ್ಪಷ್ಟತೆ ಇಲ್ಲ, ಇದು ದೇಶದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯಿಂದ ಬಂದಿದೆ. ಇದು ಈ ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತರಿಗೆ ಮತ್ತು ಅಲ್ಪಸಂಖ್ಯಾತರಲ್ಲಿ, ವಿಶೇಷವಾಗಿ ಮುಸ್ಲಿಮರಲ್ಲಿ ಮೊದಲ ಹಕ್ಕು ಎಂದು ಬಹಳ ಪ್ರಸಿದ್ಧವಾದ ಹೇಳಿಕೆಯಾಗಿದೆ. +ಈಗ ಸಂಪತ್ತನ್ನು ಹಂಚುವ ವಿಷಯಕ್ಕೆ ಬಂದರೆ ಅದು ಸಂಪನ್ಮೂಲಗಳಿಂದ ಮಾತ್ರ. ಜನರ ಆಸ್ತಿಯನ್ನು ಪಡೆದು ಸರ್ಕಾರ ಹಂಚುತ್ತದೆ. ಮತ್ತು ಇದು ನಿಜವಲ್ಲದಿದ್ದರೆ, ಕಾಂಗ್ರೆಸ್ ಪಕ್ಷವು ಇದರ ಅರ್ಥವನ್ನು ಸ್ಪಷ್ಟಪಡಿಸಬೇಕು ಎಂದು ನಾನು ಹೇಳುತ್ತೇನೆ. +ಜನರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ನಿರ್ಧರಿಸಲು ಮತ್ತು ಅದಕ್ಕೆ ಅನುಗುಣವಾಗಿ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಯವರ ರಾಷ್ಟ್ರವ್ಯಾಪಿ ಎಕ್ಸ್-ರೇ ಕಲ್ಪನೆಯ ಕುರಿತು ಪ್ರತಿಕ್ರಿಯಿಸಿದ ಶಾ, ಅದು ಅವರ ಆಲೋಚನೆ. ಅಂತಹ ಹಳೆಯ ಪಕ್ಷವು ತನ್ನ ಪ್ರಣಾಳಿಕೆಯನ್ನು ಅಲ್ಪಸಂಖ್ಯಾತರು ಮತ್ತು ತೀವ್ರ ಎಡಪಂಥೀಯ ಜನರಿಗೆ ಹೊರಗುತ್ತಿಗೆ ನೀಡಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ. +ಬಿಜೆಪಿ ಮತ್ತು ಮೋದಿಯವರ ಮಂಗಲಸೂತ್ರಗಳನ್ನು ಕಸಿದುಕೊಳ್ಳಲಾಗುವುದು ಎಂಬ ಪ್ರತಿಪಾದನೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಸಂಪತ್ತಿನ ವಿಷಯವು ಜನರ ಉಳಿತಾಯ, ಆಸ್ತಿ ಮತ್ತು ಸ್ತ್ರೀಧಾನ್ ಅನ್ನು ಒಳಗೊಂಡಿದೆ ಎಂದು ತಿಳಿಸಿದರು. +ಸಂಪತ್ತಿನ ಮರುಹಂಚಿಕೆ ವಿಚಾರದಲ್ಲಿ ಇತ್ತೀಚೆಗೆ ಯುಎಸ್‍ನಲ್ಲಿ ಪಿತ್ರಾರ್ಜಿತ ತೆರಿಗೆ ಕುರಿತು ಮಾತನಾಡಿದ್ದ ಕಾಂಗ್ರೆಸ್‍ನ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರನ್ನು ತರಾಟೆಗೆ ತೆಗೆದುಕೊಂಡ ಶಾ, ಸ್ಯಾಮ್ ಪಿತ್ರೋಡಾ ಅವರು ದಂತದ ಗೋಪುರದಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಈ ದೇಶದ ಸಂಸ್ಕೃತಿ, ಜನರ ಮನಸ್ಥಿತಿ, ಈ ದೇಶದ ಸಂಪ್ರದಾಯಗಳಿಗೆ ಯಾವುದೇ ಸಂಬಂಧವಿಲ್ಲ ಎಂದರು. +ಭಾರತೀಯ ಜನತಾ ಪಕ್ಷ (ಬಿಜೆಪಿ) ಏನು ಮಾಡಲು ಯೋಜಿಸಿದೆ ಎಂಬುದನ್ನು ನಮ್ಮ ಪ್ರಣಾಳಿಕೆಯಲ್ಲಿ ಬರೆಯಲಾಗಿದೆ. ಬಿಜೆಪಿಯ ಸಿದ್ಧಾಂತವು ಸ್ಪಷ್ಟವಾಗಿದೆ. ನಾವು ನಮ್ಮ ಪ್ರಣಾಳಿಕೆ ಮತ್ತು ಕೆಲಸಗಳೊಂದಿಗೆ ದೇಶದ ಮುಂದೆ ಹೋಗುತ್ತೇವೆ. ದಯವಿಟ್ಟು ಅವರ ಶ್ರೇಷ್ಠ ಚಿಂತನೆಗಳನ್ನು ನಮ್ಮ ಮೇಲೆ ಹೇರಬೇಡಿ ಎಂದು ಹೇಳಿದರು. +ನಾನು ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪರಂಪರೆಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಣಾಳಿಕೆಯಲ್ಲಿ ಹೇಳಿದ್ದನ್ನು ಮಾಡುವುದೇ ಅವರ ಇಂದಿನ ಇತಿಹಾಸ. ದೇಶವನ್ನು ಈ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದು ದೇಶವಾಸಿಗಳಿಗೆ ತಿಳಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದರು. \ No newline at end of file diff --git a/eesanje/url_47_111_12.txt b/eesanje/url_47_111_12.txt new file mode 100644 index 0000000000000000000000000000000000000000..3d975c08ff555f1d589c40e12a989bc70f025e74 --- /dev/null +++ b/eesanje/url_47_111_12.txt @@ -0,0 +1,5 @@ +ನಿಯಮಬಾಹಿರ ನೇಮಕ: 223 ಮಹಿಳಾ ಉದ್ಯೋಗಿಗಳ ವಜಾ +ನವದೆಹಲಿ, ಮೇ2- ನಿಯಮಗಳಿಗೆ ವಿರುದ್ಧವಾಗಿ ನೇಮಕ ಮಾಡಿಕೊಂಡಿರುವ ಆರೋಪದ ಹಿನ್ನಲೆಯಲ್ಲಿ ದೆಹಲಿಯ ಮಹಿಳಾ ಆಯೋಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 223 ಮಹಿಳಾ ಉದ್ಯೋಗಿಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ಆಯೋಗದಲ್ಲಿದ್ದ 223 ಮಹಿಳಾ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. +ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಾರ, ಡಿಸಿಡಬ್ಲ್ಯು ಆಗಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಸರ್ಕಾರದ ಅನುಮತಿಯಿಲ್ಲದೆ ಮತ್ತು ನಿಯಮಗಳಿಗೆ ವಿರುದ್ಧವಾಗಿ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಯನ್ನು ನೇಮಿಸಿದ್ದರು. ಡಿಸಿಡಬ್ಲು ಕಾಯಿದೆ, 1994ರ ಶಾಸನಬದ್ಧ ನಿಬಂಧನೆಗಳನ್ನು ಉಲ್ಲಂಘಿಸಿದೆ ಮತ್ತು ಹಣಕಾಸು ಮತ್ತು ಯೋಜನಾ ಇಲಾಖೆ, ಜಿಎನ್‍ಸಿಟಿಡಿಯ ವಿವಿಧ ಸ್ಥಾಯಿ ಸೂಚನೆಗಳನ್ನು 223 ಹುದ್ದೆಗಳನ್ನು ರಚಿಸುವ ಮೂಲಕ ಮತ್ತು ಸರಿಯಾದ ಕಾರ್ಯ ವಿಧಾನವನ್ನು ಅನುಸರಿಸದೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಅಂದರೆ ಹೆಚ್ಚುವರಿ ಸಿಬ್ಬಂದಿಯ ನಿಜವಾದ ಅಗತ್ಯವನ್ನು ನಿರ್ಣಯಿಸಲು ಯಾವುದೇ ಅಧ್ಯಯನ ನಡೆಸಲಾಗಿಲ್ಲ. +ಪ್ರತಿ ಹುದ್ದೆಗೆ ಅರ್ಹತೆಯ ಮಾನದಂಡಗಳು, ಅಂತಹ ಮಾನವಶಕ್ತಿಯನ್ನು ತೊಡಗಿಸಿಕೊಳ್ಳಲು ಜಿಎನ್‍ಸಿಟಿಡಿಯಿಂದ ಯಾವುದೇ ಆಡಳಿತಾತ್ಮಕ ಅನುಮೋದನೆ ಮತ್ತು ವೆಚ್ಚವನ್ನು ಪಡೆಯಲಾಗಿಲ್ಲ ಮತ್ತು ಅಂತಹ ಹುದ್ದೆಗಳಿಗೆ ಅರ್ಜಿಗಳನ್ನು ಔಪಚಾರಿಕವಾಗಿ ಆಹ್ವಾನಿಸಲಾಗಿಲ್ಲ. ಅಲ್ಲದೆ ಈ ಯಾವುದೇ ಹುದ್ದೆಗಳಿಗೆ ಪಾತ್ರ ಮತ್ತು ಜವಾಬ್ದಾರಿಯನ್ನು ನಿಯೋಜಿಸಲಾಗಿಲ್ಲ ಮತ್ತು ಕೆಲವು ಪದಾಧಿಕಾರಿಗಳಿಗೆ ವೇತನವನ್ನು ನಿಗದಿಪಡಿಸಲಾಗಿಲ್ಲ. ಆರಂಭಿಕ ನೇಮಕಾತಿಯ ಸಮಯದಲ್ಲಿ ನಿರ್ಧರಿಸಲಾದ, ಅತ್ಯಂತ ತೀಕ್ಷ್ಣವಾಗಿ ಮತ್ತು ಅನಿಯಂತ್ರಿತವಾಗಿ ರ್ವಸಲಾಗಿದೆ ಆದೇಶವನ್ನು ಓದಲಾಗಿದೆ. +ಮಹಿಳಾ ಆಯೋಗ, ಗುತ್ತಿಗೆ ಸಿಬ್ಬಂದಿಯ ನೇಮಕಾತಿಗಳನ್ನು ಮಂಜೂರಾತಿ ಹುದ್ದೆಗಳಿಲ್ಲದೆ ಮತ್ತು ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸದೆ, ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ.ಡಿಸಿಡಬ್ಲ್ಯು ತನ್ನ ನಿಯೋಜಿತ ಅಧಿಕಾರವನ್ನು ಮೀರಿ ಮತ್ತು ವಿವಿಧ ಕಾರ್ಯವಿಧಾನಗಳನ್ನು ಅನುಸರಿಸದೆ ಯಾವುದೇ ಸಮಯದಲ್ಲಿ ನೇಮಕಗೊಂಡಿರುವ ಎಲ್ಲಾ ಗುತ್ತಿಗೆ ಸಿಬ್ಬಂದಿಯ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ದೆಹಲಿ ಮಹಿಳಾ ಆಯೋಗಕ್ಕೆ ಸರ್ಕಾರದ ಅನುಮೋದನೆಯನ್ನು ಈ ಮೂಲಕ ತಿಳಿಸಲಾಗಿದೆ.ಸರ್ಕಾರವು ಹೊರಡಿಸಿದ ಆದೇಶದಲ್ಲಿ ಕಾಯಿದೆ/ನಿಯಮಗಳು/ನಿಯಮಾವಳಿಗಳು/ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದೆ. \ No newline at end of file diff --git a/eesanje/url_47_111_2.txt b/eesanje/url_47_111_2.txt new file mode 100644 index 0000000000000000000000000000000000000000..48705d497eea8b88390881acba8b56a80fb3cc09 --- /dev/null +++ b/eesanje/url_47_111_2.txt @@ -0,0 +1,13 @@ +ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ, ಅಮೇಥಿಯಿಂದ ಕೆ.ಎಲ್‌.ಶರ್ಮಾ ಕಣಕ್ಕೆ +ನವದೆಹಲಿ,ಮೇ.3– ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿಯಿಂದ ಸಂಸದ ರಾಹುಲ್‌ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆ.ಎಲ್‌.ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. +11 ಗಂಟೆಗಳ ಸುದೀರ್ಘ ಸಮಾಲೋಚನೆ ಬಳಿಕ ಅಮೇಥಿ ಮತ್ತು ರಾಯ್‌ಬರೇಲಿ ಲೋಕಸಭಾ ಕ್ಷೇತ್ರಗಳ ನಿರ್ಧಾರವನ್ನು ಶುಕ್ರವಾರ ಮುಂಜಾನೆ ಪ್ರಕಟಿಸಿದ್ದು, ಕೈ ಪಕ್ಷ ಅಚ್ಚರಿಯ ನಡೆ ಅನುಸರಿಸಿದೆ. ಅಮೇಥಿ ಲೋಕಸಭೆ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದ ರಾಹುಲ್‌ ಗಾಂಧಿ , ರಾಯ್‌ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಕಾಂಗ್ರೆಸ್‌ ಘೋಷಿಸಿದೆ. +ಸೋನಿಯಾ ಗಾಂಧಿ ಅವರು ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಯ್ಬರೇಲಿ ಕ್ಷೇತ್ರ ಖಾಲಿಯಾಗಿತ್ತು.ರಾಹುಲ್‌ ಗಾಂಧಿ ಮತ್ತು ಕಿಶೋರಿ ಲಾಲ್‌ ಶರ್ಮಾ ಇಬ್ಬರೂ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುವ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು. +ಈ ಎರಡೂ ಕ್ಷೇತ್ರಗಳಲ್ಲಿ ಮೇ 20ರಂದು ಐದನೇ ಹಂತದ ಚುನಾವಣೆ ನಡೆಯಲಿದೆ. ರಾಹುಲ್‌ ಗಾಂಧಿ ಅವರು ಹಾಲಿ ಸಂಸದರಾಗಿರುವ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದು, ಈಗಾಗಲೇ ಅಲ್ಲಿ ಮತದಾನ ನಡೆದಿದೆ. ಆದರೆ ಎಡಪಕ್ಷಗಳು ಮೈತ್ರಿ ಒಪ್ಪಂದಕ್ಕೆ ಒಪ್ಪದೆ ಅಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಹೀಗಾಗಿ ರಾಹುಲ್‌ ಗಾಂಧಿ ಅವರಿಗೆ ಅಲ್ಲಿ ಗೆಲುವು ಸುಲಭವಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. +ಈ ಹಿನ್ನೆಲೆಯಲ್ಲಿ ಅವರು ಇನ್ನೊಂದು ಸುರಕ್ಷಿತ ಕ್ಷೇತ್ರ ಹುಡುಕುವುದು ಅನಿವಾರ್ಯವಾಗಿತ್ತು. ರಾಯ್ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸುವ ಬಗ್ಗೆ ವದಂತಿ ದಟ್ಟವಾಗಿತ್ತು. ಆದರೆ ತಾಯಿ ಸೋನಿಯಾ ಪರವಾಗಿ ಈ ಕ್ಷೇತ್ರದಲ್ಲಿ ದಶಕದಿಂದಲೂ ಹೆಚ್ಚು ಸಮಯದಿಂದ ಓಡಾಡಿದ್ದ ಪ್ರಿಯಾಂಕಾ, ಚುನಾವಣಾ ಅಖಾಡಕ್ಕೆ ಇಳಿಯಲು ಈ ಬಾರಿ ಕೂಡ ನಿರಾಕರಿಸಿದ್ದಾರೆ. +ಎರಡೂ ಸ್ಥಾನಗಳನ್ನು ಗಾಂಧಿ -ನೆಹರು ಕುಟುಂಬದ ಸಾಂಪ್ರದಾಯಿಕ ಭದ್ರಕೋಟೆ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಗಾಂಧಿ ಕುಟುಂಬಸ್ಥರು ಹಲವಾರು ದಶಕಗಳಿಂದ ಈ ಕ್ಷೇತ್ರಗಳನ್ನು ಪ್ರತಿನಿಧಿಸಿದ್ದಾರೆ. +ರಾಯ್‌ಬರೇಲಿ ಕ್ಷೇತ್ರವು ಕಾಂಗ್ರೆಸ್‌ಗೆ ಪ್ರತಿಷ್ಠಿತ ಕ್ಷೇತ್ರವಾಗಿದೆ ಏಕೆಂದರೆ ಇದನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಮೂರು ಬಾರಿ ಮತ್ತು ಇಂದಿರಾ ಅವರ ಪತಿ ಫಿರೋಜ್‌ ಗಾಂಧಿ ಯವರು 1952 ಮತ್ತು 1957 ರಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಸೋನಿಯಾ ಗಾಂಧಿ 2004 ರಿಂದ 2024 ರವರೆಗೆ ಪ್ರತಿನಿಧಿಸಿದ್ದರು. +ರಾಹುಲ್‌ ಗಾಂಧಿಯವರು 2004 ರಿಂದ 2019 ರವರೆಗೆ ಮೂರು ಬಾರಿ ಅಮೇಥಿಯನ್ನು ಪ್ರತಿನಿಧಿಸಿದ್ದರು ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು 50,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ಇರಾನಿ ವಿರುದ್ಧ ಗಾಂಧಿ ಕುಟುಂಬದ ಆಪ್ತ ಕೆ.ಎಲ್‌.ಶರ್ಮಾ ಕಣಕ್ಕಿಳಿದಿದ್ದಾರೆ. ಮೇ 20 ರಂದು ಐದನೇ ಹಂತದಲ್ಲಿ ಅಮೇಥಿ ಮತ್ತು ರಾಯ್‌ ಬರೇಲಿ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಿಗದಿಯಾಗಿದೆ. +ರಾಹುಲ್‌ಗೆ ದಿನೇಶ್‌ ಪ್ರತಾಪ್‌ ಸಿಂಗ್‌ ಸವಾಲು :ಸೋನಿಯಾ ಗಾಂಧಿ ಅವರು ಸತತ ನಾಲ್ಕು ಬಾರಿ ಲೋಕಸಭೆ ಪ್ರವೇಶಿಸಿದ್ದ ರಾಯ್‌ಬರೇಲಿ ಕ್ಷೇತ್ರದಿಂದ ಬಿಜೆಪಿಯು ದಿನೇಶ್‌ ಪ್ರತಾಪ್‌ ಸಿಂಗ್‌ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ದಿನೇಶ್‌ ಪ್ರತಾಪ್‌ ಸಿಂಗ್‌ ಅವರು ಪ್ರಸ್ತುತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರದಲ್ಲಿ ಸಚಿವರಾಗಿದ್ದಾರೆ. +2019ರ ಲೋಕಸಭೆ ಚುನಾವಣೆಯಲ್ಲಿಯೂ ಅವರು ಸೋನಿಯಾ ಗಾಂಧಿ ಎದುರು ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಅವರ ಮಗನಿಗೆ ಸವಾಲು ಹಾಕುತ್ತಿದ್ದಾರೆ. ಸಿಂಗ್‌ ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದವರು. 2010 ಮತ್ತು 2016ರಲ್ಲಿ ವಿಧಾನ ಪರಿಷತ್‌ ಸದಸ್ಯರಾಗಿದ್ದರು. 2018ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. 2019ರ ಚುನಾವಣೆಯಲ್ಲಿ ಸೋತ ಅವರನ್ನು 2022ರಲ್ಲಿ ಮತ್ತೆ ವಿಧಾನ ಪರಿಷತ್‌ ಸದಸ್ಯರನ್ನಾಗಿ ಬಿಜೆಪಿ ಆಯ್ಕೆ ಮಾಡಿತ್ತು. +ನಾನು ಸೋನಿಯಾ ಗಾಂಧಿ ವಿರುದ್ಧ ಹೋರಾಡಿದ್ದೇನೆ. ಹೀಗಾಗಿ ಈಗ ಪ್ರಿಯಾಂಕಾ ಅಥವಾ ರಾಹುಲ್‌ ಗಾಂಧಿ ಯಾರೇ ಬರಲಿ, ನನಗೆ ಮುಖ್ಯವಲ್ಲ. ಯಾವ ಗಾಂಧಿ ಬಂದರೂ ರಾಯ್ಬರೇಲಿಯಲ್ಲಿ ಸೋಲುತ್ತಾರೆ ಎಂದು ಸಿಂಗ್‌ ಹೇಳಿದ್ದಾರೆ. +ಅಮೇಥಿಯಲ್ಲಿ ಸ್ಮೃತಿಗೆ ಸುಲಭ ತುತ್ತು? :2019ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿ ಅವರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಎದುರು ಸೋಲು ಅನುಭವಿಸಿದ್ದರು. ಈ ಬಾರಿ ಅಮೇಥಿಯಲ್ಲಿ ಮತ್ತೆ ವಿಜಯಮಾಲೆ ಧರಿಸಲು ಸ್ಮೃತಿ ಇರಾನಿ ಬಯಸಿದ್ದಾರೆ. ಅವರಿಗೆ ಕಿಶೋರಿ ಲಾಲ್‌ ಶರ್ಮಾ ಪ್ರಬಲ ಎದುರಾಳಿಯಾಗುತ್ತಾರೆಯೇ ಎನ್ನುವುದು ಕುತೂಹಲ ಮೂಡಿಸಿದೆ. \ No newline at end of file diff --git a/eesanje/url_47_111_3.txt b/eesanje/url_47_111_3.txt new file mode 100644 index 0000000000000000000000000000000000000000..920e599a2c123c1a6273cb08eae447be71f11bb8 --- /dev/null +++ b/eesanje/url_47_111_3.txt @@ -0,0 +1,7 @@ +ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದವರಿಗೆ ಜಾಮೀನು ಮಂಜೂರು +ಪ್ರಯಾಗರಾಜ್‌‍, ಮೇ.3-ಉತ್ತರ ಪ್ರದೇಶ ವಿಧಾನಸಭೆಯ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರ ವಾಹನದ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. +ನ್ಯಾಯಮೂರ್ತಿ ಪಂಕಜ್‌ ಭಾಟಿಯಾ ಅವರು ಆರೋಪಿಗಳಿಗೆ ಜಾಮೀನು ನೀಡುವಾಗ ಆರೋಪಿಗಳಾದ ಸಚಿನ್‌ ಶರ್ಮಾ ಮತ್ತು ಸುಭಮ್‌ ಗುರ್ಜಾರ್‌ ಅವರನ್ನು ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್‌) ಹೆಸರಿಸಲಾಗಿಲ್ಲ ಎಂದು ಹೇಳಿದರು. +ಸಿಸಿಟಿವಿ ದಶ್ಯಾವಳಿಗಳನ್ನು ವಿಶ್ಲೇಷಿಸಿದ ನಂತರ ತನಿಖಾಧಿಕಾರಿ ವ್ಯಕ್ತಪಡಿಸಿದ ಅಭಿಪ್ರಾಯದ ಆಧಾರದ ಮೇಲೆ ಅವರನ್ನು ಅಪರಾಧದೊಂದಿಗೆ ಸಂಪರ್ಕಿಸಲಾಗಿದೆ ಎಂದು ನ್ಯಾಯಾಲಯವು ಹೇಳಿದೆ. ಅರ್ಜಿದಾರರನ್ನು ಪ್ರಶ್ನಾರ್ಹ ಅಪರಾಧದೊಂದಿಗೆ ಜೋಡಿಸುವ ಸಾಕ್ಷ್ಯಗಳು ಪ್ರಾಥಮಿಕವಾಗಿ ದುರ್ಬಲ ಸಾಕ್ಷ್ಯಗಳಾಗಿವೆ ಎಂದು ನ್ಯಾಯಾಲಯವು ಹೇಳಿದೆ. +ಸಿಸಿಟಿವಿ ದಶ್ಯಾವಳಿಗಳಲ್ಲಿ ಕಂಡುಬರುವ ವ್ಯಕ್ತಿಗಳ ಗುರುತನ್ನು ಪರಿಶೀಲಿಸುವ ಮತ್ತು ನಿಜವಾದ ಛಾಯಾಚಿತ್ರಗಳೊಂದಿಗೆ ಹೊಂದಿಸುವ ವಸ್ತುವು ಪ್ರಕರಣದ ಡೈರಿಯಿಂದ ಕಾಣೆಯಾಗಿದೆ. ಹೀಗಾಗಿ, ಅರ್ಜಿದಾರರನ್ನು ಪ್ರಶ್ನಾರ್ಹ ಅಪರಾಧದೊಂದಿಗೆ ಜೋಡಿಸುವ ಸಾಕ್ಷ್ಯವು ಪ್ರಾಥಮಿಕವಾಗಿ ದುರ್ಬಲವಾಗಿದೆ. +ಇಲ್ಲಿಯವರೆಗೆ ದಾಖಲಿಸಲಾದ ಮೂರು ಹೇಳಿಕೆಗಳಲ್ಲಿ ಆರೋಪಿಗಳ ಹೆಸರುಗಳು ಹೊರಬಿದ್ದಿಲ್ಲ ಮತ್ತು ಸಂತ್ರಸ್ಥ ಹಾಗೂ ಕಾರಿನಲ್ಲಿ ಅವರೊಂದಿಗಿದ್ದ ಇಬ್ಬರು ವ್ಯಕ್ತಿಗಳಿಗೆ ಆರೋಪಿಗಳ ಪರಿಚಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. +2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಹಾಪುರ್‌ ಜಿಲ್ಲೆಯ ಪಿಲ್ಖುವಾದಲ್ಲಿ ಅಸಾದುದ್ದೀನ್‌ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. \ No newline at end of file diff --git a/eesanje/url_47_111_4.txt b/eesanje/url_47_111_4.txt new file mode 100644 index 0000000000000000000000000000000000000000..211c69a13e02f252a8dd6f1b85423fb3db110348 --- /dev/null +++ b/eesanje/url_47_111_4.txt @@ -0,0 +1,7 @@ +ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಿಯಾಂಕಾ ಗಾಂಧಿ ನಕಾರ +ನವದೆಹಲಿ,ಮೇ.3-ಅಮೇಥಿ ಇಲ್ಲವೇ ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಒಂದರಲ್ಲಿ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾಡಿಕೊಂಡ ಮನವಿಯನ್ನು ಪ್ರಿಯಾಂಕಾ ಗಾಂಧಿ ನಿರಾಕರಿಸಿದ್ದಾರೆ ಇದರೊಂದಿಗೆ ಅವರು ಈ ಬಾರಿಯೂ ಚುನಾವಣಾ ರಾಜಕೀಯಕ್ಕೆ ಕಾಲಿಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. +ಬಿಜೆಪಿಯ ವಂಶಾಡಳಿತ ರಾಜಕಾರಣದ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಪ್ರಿಯಾಂಕಾ ಅವರು ನಾನು ರಾಜಕಾರಣಕ್ಕೆ ಎಂಟ್ರಿ ಪಡೆದರೆ ನಮ್ಮದು ವಂಶಾಡಳಿತಕ್ಕೆ ಕಾರಣವಾಗುತ್ತದೆ ಎಂಬ ಕಾರಣದಿಂದ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರೆ ಎಂದು ಮೂಲಗಳು ತಿಳಿಸಿವೆ. +ಈಗಾಗಲೇ ಸೋನಿಯಾಗಾಂಧಿ ಅವರು ರಾಜ್ಯಸಭೆ ಸದಸ್ಯರಾಗಿದ್ದರೆ ಇದರ ಜೊತೆಗೆ ರಾಹುಲ್‌ಗಾಂಧಿ ಕೇರಳದ ವಯನಾಡು ಹಾಗೂ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿರುವುದರಿಂದ ನಾನು ಚುನಾವಣಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. +ಆದರೆ ಆಕೆಯ ಈ ನಿರ್ಧಾರವು ಮತದಾರರಲ್ಲಿ ನಕಾರಾತ್ಮಕ ಗ್ರಹಿಕೆಯನ್ನು ಉಂಟುಮಾಡಬಹುದು ಎಂದು ಕೆಲವು ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಮಂಗಲಸೂತ್ರ ಆರೋಪದ ನಂತರ ಅವರು ಕಾಂಗ್ರೆಸ್‌‍ ಪರ ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾ ಇಂತಹ ಸಂದರ್ಭದಲ್ಲಿ ಪ್ರಿಯಾಂಕಾ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೆ ಅಪಾಯ ಸಾಧ್ಯತೆ ಇದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. +ರಾಯ್‌ ಬರೇಲಿಯಲ್ಲಿ ರಾಹುಲ್‌ಗಾಂಧಿ ಅವರು ಬಿಜೆಪಿಯ ದಿನೇಶ್‌ ಪ್ರತಾಪ್‌ ಸಿಂಗ್‌ ಅವರನ್ನು ಎದುರಿಸಲಿದ್ದಾರೆ ಮತ್ತು ಶರ್ಮಾ ಅವರು ಅಮೇಥಿಯಲ್ಲಿ ಕೇಂದ್ರ ಸಚಿವೆ ಸತಿ ಇರಾನಿ ಅವರನ್ನು ಎದುರಿಸಲಿದ್ದಾರೆ. 2019 ರ ಚುನಾವಣೆಯಲ್ಲಿ ಗಾಂಧಿ ವಿರುದ್ಧ ಇರಾನಿ ಆಘಾತಕಾರಿ ಗೆಲುವು ಸಾಧಿಸಿದ್ದರು ಮತ್ತು ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದಾರೆ. +ರಾಯ್‌ ಬರೇಲಿಯಲ್ಲಿ ರಾಹುಲ್‌ಗಾಂಧಿ ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್‌‍ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೇಥಿಯಲ್ಲೂ ಶರ್ಮಾ ಒಬ್ಬ ತಳಮಟ್ಟದ ನಾಯಕರಾಗಿದ್ದು ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಅವರು ಹೇಳುತ್ತಾರೆ.ಇದರ ಜೊತೆಗೆ ಅಮೇಥಿಯಿಂದ ಸ್ಪರ್ಧಿಸುತ್ತಿರುವ ಶರ್ಮಾ ಅವರನ್ನು ಪ್ರಿಯಾಂಕಾ ಗಾಂಧಿ ಅವರು ಸಾಮಾಜಿಕ ಜಾಲತಾಣದ ಮೂಲಕ ಶುಭಾಷಯ ಕೋರಿದ್ದಾರೆ. \ No newline at end of file diff --git a/eesanje/url_47_111_5.txt b/eesanje/url_47_111_5.txt new file mode 100644 index 0000000000000000000000000000000000000000..c85ce21f62d8135be3deb1da198c7ec46376c0e3 --- /dev/null +++ b/eesanje/url_47_111_5.txt @@ -0,0 +1,7 @@ +ಕೋವಿಶೀಲ್ಡ್ ಲಸಿಕೆ ತಯಾರಿಕಾ ಸಂಸ್ಥೆ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ದಂಪತಿ +ನವದೆಹಲಿ,ಮೇ.3-ತನ್ನ ಮಗಳ ಸಾವಿಗೆ ಕಾರಣ ಅಸ್ಟ್ರಾಜೆನೆಕಾ ಸಂಸ್ಥೆ ತಯಾರಿಸಿದ ಕೋವಿಡ್‌ ಲಸಿಕೆ ಕೋವಿಶೀಲ್ಡ್ ಎಂದು ಆರೋಪಿಸಿರುವ ದಂಪತಿ ಔಷಧಿ ತಯಾರಕ ಸಂಸ್ಥೆ ವಿರುದ್ಧ ಪ್ರಕರಣ ದಾಖಲಿಸಲು ತೀರ್ಮಾನಿಸಿದ್ದಾರೆ. +ಬ್ರಿಟಿಷ್‌ ಫಾರ್ಮಾ ದೈತ್ಯ ಸಂಸ್ಥೆ ತಯಾರಿಸಿದ್ದ ಕೋವಿಶೀಲ್ಡ್ ಲಸಿಕೆಯಿಂದ ತಮ ಮಗಳು ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಅಸ್ಟ್ರಾಜೆನಿಕಾ ಸಂಸ್ಥೆ ವಿರುದ್ಧ ಮೊಕದ್ದಮೆ ಹೂಡಲು ದಂಪತಿ ಯೋಜಿಸುತ್ತಿದ್ದಾರೆ. +ಕೋವಿಶೀಲ್ಡ್ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್‌ ಎಣಿಕೆಗೆ ಕಾರಣವಾಗುವ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಅಸ್ಟ್ರಾಜೆನೆಕಾ ಸಂಸ್ಥೆ ಯುಕೆ ನ್ಯಾಯಾಲಯದ ದಾಖಲೆಗಳಲ್ಲಿ ಒಪ್ಪಿಕೊಂಡ ನಂತರ ದಂಪತಿ ಈ ತೀರ್ಮಾನ ಕೈಗೊಂಡಿದ್ದಾರೆ. +ಅಸ್ಟ್ರಾಜೆನೆಕಾ ಲಸಿಕೆಯನ್ನು ಭಾರತದಲ್ಲಿ ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌‍ಐಐ) ಸಹಯೋಗದಲ್ಲಿ ಕೋವಿಶೀಲ್ಡ್‌‍ಎಂಬ ಹೆಸರಿನಲ್ಲಿ ಲಸಿಕೆ ತಯಾರಿಸಿತ್ತು. 2021 ರಲ್ಲಿ ತನ್ನ 20 ವರ್ಷದ ಮಗಳು ಕಾರುಣ್ಯಳನ್ನು ಕಳೆದುಕೊಂಡ ವೇಣುಗೋಪಾಲನ್‌ ಗೋವಿಂದನ್‌ ದಂಪತಿ ಸಾಮಾಜಿಕ ಜಾಲತಾಣದ ಮೂಲಕ ತಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. +15 ಯುರೋಪಿಯನ್‌ ದೇಶಗಳು ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾಗುವ ಸಾವುಗಳ ಮೇಲೆ ಅದರ ಬಳಕೆಯನ್ನು ನಿರ್ಬಂಧಿಸಿದ ನಂತರ ಸೀರಮ್‌ ಇನ್‌ಸ್ಟಿಟ್ಯೂಟ್‌ ಲಸಿಕೆ ಪೂರೈಕೆಯನ್ನು ನಿಲ್ಲಿಸಬೇಕಿತ್ತು ಎಂದು ದಂಪತಿ ಮನವಿ ಮಾಡಿಕೊಂಡಿದ್ದಾರೆ. ಸಾಕಷ್ಟು ಪರಿಹಾರಗಳನ್ನು ಪಡೆಯದಿದ್ದರೆ, ನ್ಯಾಯಕ್ಕಾಗಿ ಮತ್ತು ಸಾರ್ವಜನಿಕ ಆರೋಗ್ಯದ ಹೆಸರಿನಲ್ಲಿ ನಡೆಸಲಾದ ಈ ದುಷ್ಕೃತ್ಯವು ಮರುಕಳಿಸುವುದನ್ನು ತಡೆಯಲು, ನಾವು ಯಾವುದೇ ಮತ್ತು ಎಲ್ಲಾ ಅಪರಾಧಿಗಳ ವಿರುದ್ಧ ಹೊಸ ಪ್ರಕರಣಗಳನ್ನು ದಾಖಲಿಸುತ್ತೇವೆ. +ನಮ ಮಕ್ಕಳು ಎಂಟು ಸಂತ್ರಸ್ತರ ಕುಟುಂಬಗಳನ್ನು ಸಂಪರ್ಕಿಸಿದ್ದಾರೆ ಮತ್ತು ನಾನು ನಮೆಲ್ಲರ ಸಾಮಾನ್ಯ ಭಾವನೆಗಳನ್ನು ಪ್ರತಿಧ್ವನಿಸುತ್ತಿದ್ದೇನೆ ಎಂದು ಅವರು ಹೇಳಿದರು. ನಮ ಈ ಆರೋಪಗಳಿಗೆ ಸೆರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾದ ಮಾಲಿಕ ಪೂನಾವಾಲಾ ಉತ್ತರಿಸಬೇಕಾಗುತ್ತದೆ ಎಂದು ಗೋವಿಂದನ್‌ ಆನ್‌ಲೈನ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ, ಲಸಿಕೆ ರೋಲ್‌ಔಟ್‌ ಅನ್ನು ಅನುಮೋದಿಸಿದ್ದಕ್ಕಾಗಿ ಸರ್ಕಾರಿ ಅಧಿಕಾರಿಗಳನ್ನು ಅವರು ದೂಷಿಸಿದ್ದಾರೆ. \ No newline at end of file diff --git a/eesanje/url_47_111_6.txt b/eesanje/url_47_111_6.txt new file mode 100644 index 0000000000000000000000000000000000000000..e905d9adc276fb6e9f7866395485aa24489f566e --- /dev/null +++ b/eesanje/url_47_111_6.txt @@ -0,0 +1,4 @@ +ಪೊಲೀಸ್‌‍ ಪ್ರಧಾನ ಕಚೇರಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಕಳುಹಿಸಿದ್ದ ಬಾಲಕನ ಬಂಧನ +ನವದೆಹಲಿ, ಮೇ 3-ದೆಹಲಿಯ ನಂಗ್ಲೋಯ್‌ ಪ್ರದೇಶದಲ್ಲಿ ಬಾಂಬ್‌ ಇಡಲಾಗಿದೆ ಎಂದು ದೆಹಲಿ ಪೊಲೀಸ್‌‍ ಪ್ರಧಾನ ಕಚೇರಿಗೆ ಇಮೇಲ್‌ ಕಳುಹಿಸಿದ್ದ ಆರೋಪದ ಮೇಲೆ ಬಾಲಕನೊಬ್ಬ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಈ ಪ್ರದೇಶದಲ್ಲಿ ಕೂಲಂಕುಷವಾಗಿ ತಪಾಸಣೆ ನಡೆಸಿದ ಬಳಿಕ ಬಾಲಕನ ಕೃತ್ಯ ಎಂದು ತಿಳಿದುಬಂದಿದೆ. ಮಧ್ಯ ದೆಹಲಿಯ ಜೈ ಸಿಂಗ್‌ ರಸ್ತೆಯಲ್ಲಿರುವ ದೆಹಲಿ ಪೊಲೀಸ್‌‍ ಪ್ರಧಾನ ಕಛೇರಿಯು ನಂಗ್ಲೋಯಿಯಿಂದ ಸುಮಾರು 18 ಕಿಲೋಮೀಟರ್‌ ದೂರದಲ್ಲಿದೆ.ಇಮೇಲ್‌ ಕಳುಹಿಸುವವರು ಅಪ್ರಾಪ್ತ ಬಾಲಕನಾಗಿದ್ದು ಆದ್ದರಿಂದ ಆತನ ವಿವರಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಇದು ಕಿಡಿಗೇಡಿತನದ ಕೃತ್ಯವೆಂದು ಬಾಲಾಪರಾಧಿ, ಸರಿಯಾದ ಕೌನ್ಸೆಲಿಂಗ್‌ ನಂತರ ಪೋಷಕರಿಗೆ ಹಸ್ತಾಂತರಿಸಲಾಗುವುದು ತಿಳಿಸಿದ್ದಾರೆ. ಬಾಲಕ ಹೀಗೆ ಮಾಡಲು ಕಾರಣವೇನು ಎಮಬುದು ನಿಗೂಢವಾಗಿದೆ ಆದರೂ ಪೋಷಕರ ನಿರ್ಲಕ್ಷ ಕಾಣುತ್ತಿದೆ ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ. \ No newline at end of file diff --git a/eesanje/url_47_111_7.txt b/eesanje/url_47_111_7.txt new file mode 100644 index 0000000000000000000000000000000000000000..7d7a2ed5edd9101ea62ffdb579158897c2706a25 --- /dev/null +++ b/eesanje/url_47_111_7.txt @@ -0,0 +1,9 @@ +ಥ್ರೆಡ್‍ಮಿಲ್ ಮೇಲೆ ಓಡಿಸಿ ಮಗನ ಸಾವಿಗೆ ಕಾರಣನಾಗಿದ್ದ ತಂದೆಗೆ ಶಿಕ್ಷೆ +ನ್ಯೂಜೆರ್ಸಿ,ಮೇ.2- ಮಗ ದಪ್ಪಗಿದ್ದಾನೆ ಎಂಬ ಕಾರಣಕ್ಕೆ ಆತನ ದೈಹಿಕ ಕ್ಷಮತೆಯನ್ನು ಸದೃಢಗೊಳಿಸಲು ಥ್ರೆಡ್‍ಮಿಲ್ ಮೇಲೆ ಅತಿವೇಗವಾಗಿ ಓಡಿಸಿ ತಂದೆಯೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆಯ ವಿಡಿಯೋ ವೈರಲ್ ಆಗಿದೆ. ಆರು ವರ್ಷದ ಬಾಲಕ ಕೋರೆ ಮಿಕಿಲೋಲನನ್ನು ಆತನ ತಂದೆ ಕ್ಲಿಸ್ಟೋಫರ್ ಜಾರ್ಜ್(31) ಥ್ರೆಡ್‍ಮಿಲ್ ಮೇಲೆ ನಿಲ್ಲಿಸಿ ಓಡುವಂತೆ ಸೂಚಿಸಿದ್ದಾರೆ. ಬಾಲಕ ಓಡಲಾರಂಭಿಸುತ್ತಿದ್ದಂತೆ ಥ್ರೆಡ್‍ಮಿಲ್‍ನ ವೇಗವನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಲಾಗಿದೆ. ಅದರ ವೇಗವನ್ನು ಸರಿಗಟ್ಟಲಾಗದೆ ಬಾಲಕ ಜಾರಿ ಕೆಳಗೆ ಬಿದ್ದಿದ್ದಾನೆ. +ಆದರೆ ತಂದೆ ಪುತ್ರನನ್ನು ಎತ್ತಿ ಮತ್ತೆ ಥ್ರೆಡ್‍ಮಿಲ್ ಮೇಲೆ ನಿಲ್ಲಿಸಿ ಮತ್ತೆ ಓಡುವಂತೆ ಒತ್ತಾಯ ಮಾಡಿದ್ದಾರೆ. ಕೆಲವೇ ಸೆಕೆಂಡ್‍ಗಳಲ್ಲಿ ಬಾಲಕ ಮತ್ತೆ ಕೆಳಗೆ ಬಿದ್ದಿದ್ದಾನೆ. ಅನಂತರವೂ ಥ್ರೆಡ್‍ಮಿಲ್‍ನ ವೇಗವನ್ನು ಕಡಿಮೆ ಮಾಡಲಿಲ್ಲ. ಬಾಲಕ ಪದೇ ಪದೇ ಥ್ರೆಡ್‍ಮಿಲ್ ಮೇಲೆ ಹತ್ತಲು ಸಾಧ್ಯವಾಗದೇ ಜಾರಿ ಬಿದ್ದಿದ್ದಾನೆ. +ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ನಾರಾಯಣ ಸ್ವಾಮಿ +ಈ ದೃಶ್ಯಾವಳಿಗಳು ಹೃದಯ ವಿದ್ರಾವಕವಾಗಿದೆ.2021 ರ ಮಾ.21 ರಂದು ಕ್ಲಿಸ್ಟೋಫರ್ ಜಾರ್ಜ್ ತನ್ನ ಪುತ್ರನನ್ನು ಅಮೆರಿಕದ ನ್ಯೂಜೆರ್ಸಿಯ ಅಟ್ಲಾಂಟಿಕ್ ಹೈಯೆಸ್ಟ್ ಕ್ಲಬ್ ಹೌಸ್ ಫಿಟ್‍ನೆಸ್ ಸೆಂಟರ್‍ಗೆ ಕರೆದುಕೊಂಡು ಹೋಗಿ ಆತನ ತಲೆ ಮೇಲೆ ಬಲವಾಗಿ ಹೊಡೆದು, ಥ್ರೆಡ್‍ಮಿಲ್ ಮೇಲೆ ಓಡುವಂತೆ ಒತ್ತಾಯ ಮಾಡಿದ್ದಾನೆ. ಈ ಘಟನೆಯಿಂದ ಘಾಸಿಗೊಂಡ ಬಾಲಕ ಮಾರನೆಯ ದಿನ ಹಾಸಿಗೆಯಿಂದ ಏಳುವಾಗ ಮುಗ್ಗರಿಸಿದ್ದಾನೆ. +ಮಾತಿನಲ್ಲಿ ತೊದಲು ಕಂಡಿದೆ. ಆತನ ಉಸಿರಾಟದಲ್ಲಿ ಏರಿಳಿತವಾಗಿದ್ದು, ವಾಕರಿಕೆ ಹೆಚ್ಚಾಗಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ವೈದ್ಯರು ಬಾಲಕ ಕೋರೆ ಮಿಕಿಲೋಲನನಿಗೆ ಹೃದಯ ಮತ್ತು ಯಕೃತ್‍ಗೆ ತೀವ್ರ ಪ್ರಮಾಣದ ಹಾನಿಯಾಗಿರುವುದನ್ನು ಗುರುತಿಸಿದ್ದಾರೆ. ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಕೊಟ್ಟಿದ್ದಾರೆ. ಆದರೆ ಸತತ ಪ್ರಯತ್ನದ ಬಳಿಕ ಬಾಲಕ ಏ.2 ರಂದು ಮೃತಪಟ್ಟಿದ್ದಾನೆ. +ಮರಣೋತ್ತರ ಪರೀಕ್ಷೆಯಲ್ಲಿ ಬಲ ಪ್ರಯೋಗದಿಂದಾಗಿ ಹೃದಯ ಮತ್ತು ಯಕೃತ್‍ಗೆ ಹಾನಿಯಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಬಾಲಕ ಸಾಯುವ ಮುನ್ನ ನೀಡಿದ್ದ ಹೇಳಿಕೆ ಆಧರಿಸಿ ವ್ಯಾಯಾಮ ಶಾಲೆಯ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಖುದ್ದು ತಂದೆಯೇ ಬಾಲಕನ ಮೇಲೆ ವಿಕೃತ ಬಲಪ್ರಯೋಗ ಮಾಡಿರುವುದು ಕಂಡುಬಂದಿದೆ. 2021 ರ ಜುಲೈನಲ್ಲಿ ಕ್ಲಿಸ್ಟೋಫರ್‍ನನ್ನು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ ಓಶಿಯನ್ ಸಿಟಿಯ ನ್ಯಾಯಾಲಯ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದೆ. +ಕಾಂಗ್ರೆಸ್ ಪಾಕಿಸ್ತಾನದ ಶಿಷ್ಯ: ಮೋದಿ ವ್ಯಂಗ್ಯ +ವ್ಯಾಯಾಮ ಶಾಲೆಯಲ್ಲಿನ ದೃಶ್ಯಾವಳಿಗಳನ್ನು ನ್ಯಾಯಾಲಯ ನಿನ್ನೆ ಪ್ರದರ್ಶನ ಮಾಡಿದ್ದು, ಅದನ್ನು ನೋಡುತ್ತಿದ್ದಂತೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿ ಆಕೆ ಕುಸಿದುಬಿದ್ದಿದ್ದಾರೆ. ಮುದ್ದಾದ ಕೋರೆ ಮಿಕಿಲೋಲನನ್ನು ಸಣ್ಣ ಮಾಡುವ ಸಲುವಾಗಿ ಅತಿಯಾದ ಬಲಪ್ರಯೋಗ ಮಾಡಿ ತಂದೆಯೇ ಮಗನನ್ನು ಕೊಂದಿದ್ದಾನೆ ಎಂಬ ಆರೋಪ ಸಾಬೀತಾಗಿದೆ. \ No newline at end of file diff --git a/eesanje/url_47_111_8.txt b/eesanje/url_47_111_8.txt new file mode 100644 index 0000000000000000000000000000000000000000..cb9f7164b2d7b279ada9d88e4e2d8e4140b214ca --- /dev/null +++ b/eesanje/url_47_111_8.txt @@ -0,0 +1,8 @@ +2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದ ಮರು ವಿಚಾರಣೆಗೆ ಸುಪ್ರೀಂ ನಿರಾಕರಣೆ +ನವದೆಹಲಿ,ಮೇ 2- ಕೇಂದ್ರ ಸರ್ಕಾರ 2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 2012 ರಲ್ಲಿ ನೀಡಿದ್ದ ತೀರ್ಪನ್ನು ಪರಿಷ್ಕರಿಸುವಂತೆ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.2008 ರ ಜನವರಿಯಿಂದ ಆಗಿನ ಕೇಂದ್ರ ದೂರ ಸಂಪರ್ಕ ಸಚಿವ ಎ.ರಾಜ ಅವರ ಅಧಿಕಾರವಧಿಯಲ್ಲಿ ವಿವಿಧ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದ್ದ 2ಜಿ ಸ್ಪೆಕ್ಟ್ರಮ್ ಪರವಾನಗಿಗಳನ್ನು ಸುಪ್ರೀಂಕೋರ್ಟ್ ಅಸಿಂಧುಗೊಳಿಸಿ 2012 ಫೆ.2 ರಂದು ತೀರ್ಪು ನೀಡಿತ್ತು. +ಈ ತೀರ್ಪನ್ನು ಪರಿಷ್ಕರಿಸಬೇಕು ಎಂದು ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಎ.ವೆಂಕಟರಮಣಿ ಏ.22 ರಂದು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಬಿವಾಲ ಅವರನ್ನೊಳಗೊಂಡ ಸುಪ್ರೀಂಕೋರ್ಟ್‍ನ ಪೀಠ 2013 ರ ಸುಪ್ರೀಂಕೋರ್ಟ್ ನಿಯಮಾವಳಿಗಳ ಅನುಸಾರ ತೀರ್ಪನ್ನು ಮರು ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. +ಅರ್ಜಿಯಲ್ಲಿ ಸಕಾರಣಗಳಿಲ್ಲ. ಅದರ ಹೊರತಾಗಿಯೂ ಅರ್ಜಿದಾರರು 15 ದಿನದೊಳಗಾಗಿ ಬೇರೆ ರೂಪದಲ್ಲಿ ನ್ಯಾಯಾಲಯದ ಪರಿಷ್ಕರಣೆಗೆ ಮನವಿ ಮಾಡಬಹುದು ಎಂದು ಸಲಹೆ ನೀಡಿದೆ. 12 ವರ್ಷಗಳ ಬಳಿಕ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇಂದ್ರ ಸರ್ಕಾರ ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿತ್ತು. ವಾಣಿಜ್ಯೇತರ ಉದ್ದೇಶಗಳಿಗೆ 2ಜಿ ಸ್ಪೆಕ್ಟ್ರಮ್ ಅನ್ನು ಹರಾಜು ಹೊರತಾದ ಪ್ರಕ್ರಿಯೆಗಳ ಮೂಲಕ ಹಂಚಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿತ್ತು. ಆದರೆ ಇದನ್ನು ಒಪ್ಪದ ಸುಪ್ರೀಂಕೋರ್ಟ್ ಸ್ಪೆಕ್ಟ್ರಮ್ ಸೇರಿದಂತೆ ನೈಸರ್ಗಿಕ ಸಂಪನ್ಮೂಲವನ್ನು ಹಂಚಿಕೆ ಮಾಡುವಾಗ ಹರಾಜು ಪ್ರಕ್ರಿಯೆಗಳ ನಿಯಮಾವಳಿಗಳನ್ನು ಪಾಲನೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. +ಪ್ರಕರಣದಲ್ಲಿ ವಾದ ಮಂಡಿಸಿದ ಅಟಾರ್ನಿ ಜನರಲ್ ಅವರು ಆಡಳಿತಾತ್ಮಕ ಪ್ರಕ್ರಿಯೆಗಳಡಿ ಸರ್ಕಾರ ಸ್ಪೆಕ್ಟ್ರಮ್‍ನ ಹಂಚಿಕೆಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಸರ್ಕಾರ ಕಾರ್ಯ ನಿರ್ವಹಣೆಗೆ ಸಹಾಯವಾಗಲಿದೆ. ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹರಾಜು ಪ್ರಕ್ರಿಯೆ ತಾಂತ್ರಿಕ ಮತ್ತು ಆರ್ಥಿಕ ಕಾರಣಗಳಿಗಾಗಿ ಪರಿಗಣನೆಗೆ ಸೂಕ್ತವಲ್ಲ ಎಂದು ಹೇಳಿದರು. +ಸ್ವಯಂ ಸೇವಾ ಸಂಸ್ಥೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಪರವಾಗಿ ವಾದಿಸಿದ್ದ ವಕೀಲ ಪ್ರಶಾಂತ್ ಭೂಷಣ್ ಕೇಂದ್ರ ಸರ್ಕಾರದ ಅರ್ಜಿಯನ್ನು ವಿರೋಸಿದ್ದರು. 2012 ರ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯುತ್ತಮ ಇತ್ಯರ್ಥವಾಗಿದೆ. ಸ್ಪೆಕ್ಟ್ರಮ್ ಸೇರಿದಂತೆ ನೈಸರ್ಗಿಕ ಸಂಪನ್ಮೂಲಗಳ ಹಂಚಿಕೆಗೆ ಹರಾಜು ಪ್ರಕ್ರಿಯೆಯೇ ಸೂಕ್ತ ಎಂದು ಹೇಳಿದರು. +ಅಟಾರ್ನಿ ಜನರಲ್ ಅವರಿಗೆ ಮುಖ್ಯ ನ್ಯಾಯಮೂರ್ತಿಗಳು ನಿಮ್ಮ ಮನವಿಯನ್ನು ಇ-ಮೇಲ್ ಮೂಲಕ ಕಳುಹಿಸಿ ನಾವು ಪರಿಶೀಲಿಸುತ್ತೇವೆ ಎಂದು ಹೇಳಿದ್ದರು. ಈ ನಡುವೆ ಮಾ.22 ರಂದು ದೆಹಲಿಯ ಹೈಕೋರ್ಟ್ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆಗೆ ಅಂಗೀಕರಿಸಿದೆ. 2 ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ ಎ.ರಾಜ ಮತ್ತು 16 ಮಂದಿಯ ವಿರುದ್ಧ ಇದ್ದ ಆರೋಪಗಳನ್ನು ಸಿಬಿಐ ವಿಶೇಷ ನ್ಯಾಯಾಲಯ 2017ರ ಡಿಸೆಂಬರ್ 21 ರಂದು ವಜಾಗೊಳಿಸಿತ್ತು. +ಈ ಮೂಲಕ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಮಾಡಿದ್ದ ಆರೋಪಗಳು ಖುಲಾಸೆಗೊಂಡಿದ್ದವು. ಅದನ್ನು ಪ್ರಶ್ನಿಸಿ ಸಿಬಿಐ 2018ರ ಮಾ.22 ರಂದು ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದೆ. 2014 ರ ಲೋಕಸಭಾ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ್ದ 2ಜಿ ಸ್ಪೆಕ್ಟ್ರಮ್ ಹಗರಣದ ತನಿಖೆ ನಡೆಸಿದ್ದ ಸಿಬಿಐ ಪರವಾನಗಿ ಹಂಚಿಕೆಯಲ್ಲಿ 30,984 ಕೋಟಿ ರೂ.ಗಳು ನಷ್ಟವಾಗಿದೆ ಎಂದು ಆರೋಪಿಸಿತ್ತು. \ No newline at end of file diff --git a/eesanje/url_47_111_9.txt b/eesanje/url_47_111_9.txt new file mode 100644 index 0000000000000000000000000000000000000000..f8ef7eb1cf2cefddd708b088681de2f0467bc243 --- /dev/null +++ b/eesanje/url_47_111_9.txt @@ -0,0 +1,8 @@ +ಕಾಂಗ್ರೆಸ್ ಪಾಕಿಸ್ತಾನದ ಶಿಷ್ಯ: ಮೋದಿ ವ್ಯಂಗ್ಯ +ಆನಂದ್ (ಗುಜರಾತ್), ಮೇ2- ಕಾಂಗ್ರೆಸ್ ಪಕ್ಷವನ್ನು ಪಾಕಿಸ್ತಾನದ ಶಿಷ್ಯ ಎಂದಿರುವ ಪ್ರಧಾನಿ ನರೇಂದ್ರಮೋದಿ, ಇಲ್ಲಿನ ಯುವರಾಜ (ರಾಹುಲ್)ನನ್ನು ಪ್ರಧಾನಿ ಮಾಡಲು ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ.ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಅವರ ಸಂಪುಟದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನೊಳಗೊಂಡವೀಡಿಯೋವೊಂದನ್ನು ಹಂಚಿಕೊಂಡು ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ ಎಂಬ ವರದಿಗಳ ನಡುವೆಯೇ ಮೋದಿಯವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. +ಆನಂದ್ ಮತ್ತು ಖೇಡಾ ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಕೇಂದ್ರ ಗುಜರಾತ್‍ನ ಆನಂದ್ ಪಟ್ಟಣದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇಲ್ಲಿ ಸಾಯುತ್ತಿದೆ ಎಂದು ಪಾಕಿಸ್ತಾನ ಅಳುತ್ತಿದೆ. ಪಾಕಿಸ್ತಾನದ ನಾಯಕರು ಕಾಂಗ್ರೆಸ್‍ಗಾಗಿ ಪ್ರಾರ್ಥಿಸುತ್ತಿದ್ದಾರೆ. +ಪಾಕಿಸ್ತಾನವು ಶೆಹಜದಾ (ರಾಹುಲ್ ಗಾಂಧಿಯನ್ನು ಉಲ್ಲೇಖಿಸಿ) ಮುಂದಿನ ಪ್ರಧಾನಿ ಮಾಡಲು ಉತ್ಸುಕವಾಗಿದೆ. ಇದು ಆಶ್ಚರ್ಯವೇನಿಲ್ಲ. ಏಕೆಂದರೆ ಕಾಂಗ್ರೆಸ್ ಪಾಕಿಸ್ತಾನದ ಮುರೀಡ್ ಎಂದು ನಮಗೆ ಈಗಾಗಲೇ ತಿಳಿದಿದೆ. ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಪಾಲುದಾರಿಕೆಯನ್ನು ಬಹಿರಂಗಪಡಿಸಲಾಗಿದೆ, ಇದು ದೇಶದ ಶತ್ರುಗಳು ಭಾರತದಲ್ಲಿ ದುರ್ಬಲ ಸರ್ಕಾರವನ್ನು ಬಯಸುತ್ತಾರೆ ಎಂದಿದ್ದಾರೆ. +ಇದೇ ವೇಳೆ ವಿಪಕ್ಷ ನಾಯಕ ಸಲ್ಮಾನ್ ಖುರ್ಷಿದ್ ಅವರ ಸೋದರ ಸೊಸೆ ಮರಿಯಾ ಆಲಂ ಅವರ ವೋಟ್ ಜಿಹಾದ್ ಕರೆ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಈಗ ಇಂಡಿ ಮೈತ್ರಿಕೂಟವು ವೋಟ್ ಜಿಹಾದ್ ಎಂದು ಕರೆಯುತ್ತದೆ. ನಾವು ಇಲ್ಲಿಯವರೆಗೆ ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ಬಗ್ಗೆ ಕೇಳಿದ್ದೇವೆ. ಇದನ್ನು (ವೋಟ್ ಜಿಹಾದ್) ಒಬ್ಬ ವಿದ್ಯಾವಂತ ಮುಸ್ಲಿಂ ಕುಟುಂಬಕ್ಕೆ ಸೇರಿದ ವ್ಯಕ್ತಿ ಹೇಳಿದ್ದಾನೆ, ಯಾರೋ ಅಲ್ಲ ಎಂದು ಕಿಡಿಕಾರಿದ್ದಾರೆ. +ಮದರಸಾದಲ್ಲಿ ಓದಿದ ಜಿಹಾದ್ ಎಂದರೆ ಏನು ಎಂದು ನಿಮ್ಮಗೆಲ್ಲರಿಗೂ ತಿಳಿದಿದೆ ಎಂದು ನಾನು ಭಾವಿಸುತ್ತೇನೆ, ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ ಮತ್ತು ಇದನ್ನು ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಲಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಗಳಿಗೆ ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ದೇಶದ ಸಂವಿಧಾನವನ್ನು ಬದಲಾಯಿಸಲು ಬಯಸಿದೆ ಎಂದು ಅವರು ಆರೋಪಿಸಿದ್ದಾರೆ. +ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವುದಿಲ್ಲ ಹಾಗೂ ತಾನು ಮತ್ತು ಅದರ ಮಿತ್ರಪಕ್ಷಗಳು ಅಜಾಕಾರದಲ್ಲಿರುವ ರಾಜ್ಯಗಳಲ್ಲಿ ಮುಸ್ಲಿಮರಿಗೆ ಹಿಂಬಾಗಿಲು ಕೋಟಾ ನೀಡುವುದಿಲ್ಲ ಎಂದು ಕಾಂಗ್ರೆಸ್ ಲಿಖಿತವಾಗಿ ನೀಡಲಿ ಎಂದು ಕಾಂಗ್ರೆಸ್‍ಗೆ ಸವಾಲು ಹಾಕಿದರು.ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ 14 ಕೋಟಿ ಮನೆಗಳಿಗೆ ನಲ್ಲಿ ಸಂಪರ್ಕ ನೀಡಿದ್ದರೆ, ಕಾಂಗ್ರೆಸ್ ನೇತೃತ್ವದ ಆಡಳಿತವು ತನ್ನ 60 ವರ್ಷಗಳ ಆಡಳಿತದಲ್ಲಿ ಕೇವಲ 3 ಕೋಟಿ ಮನೆಗಳಿಗೆ ನಲ್ಲಿ ನೀಡಿದೆ ಎಂದು ವ್ಯಂಗ್ಯವಾಡಿದರು. +ಭಾರತವನ್ನು ಇಂದು ವಿಶ್ವದಲ್ಲಿ ಶಾಂತಿ ಸ್ಥಾಪನೆ ಮಾಡುವ ದೇಶವನ್ನಾಗಿ ನೋಡುತ್ತಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು 24*7 ಕೆಲಸ ಮಾಡುತ್ತೇನೆ ಎಂಬ ಭರವಸೆ ಇದೆ ಎಂದು ಮೋದಿ ಹೇಳಿದರು. \ No newline at end of file diff --git a/eesanje/url_47_112_1.txt b/eesanje/url_47_112_1.txt new file mode 100644 index 0000000000000000000000000000000000000000..44b03e2f25aa5307990fbffa0cd6411f54190e13 --- /dev/null +++ b/eesanje/url_47_112_1.txt @@ -0,0 +1,4 @@ +ಬ್ರಿಜ್ ಭೂಷಣ್ ಸಿಂಗ್‍ ಕೈ ತಪ್ಪಿದ ಬಿಜೆಪಿ ಟಿಕೆಟ್ +ನವದೆಹಲಿ,ಮೇ2- ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿದ್ದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಿಲುಕಿದ್ದ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‍ಗೆ ಈ ಬಾರಿ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದೆ. ಟಿಕೆಟ್ ನೀಡಿದರೆ ವಿರೋಧ ಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಳ್ಳಬಹುದೆಂಬ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಬಿಜೆಪಿ ಬ್ರಿಜ್ ಭೂಷಣ್‍ಗೆ ಟಿಕೆಟ್ ನಿರಾಕರಿಸಿ ಬದಲಿಗೆ ಅವರ ಪುತ್ರನಿಗೆ ಟಿಕೆಟ್ ನೀಡುವ ಸಂಭವವಿದೆ ಎಂದು ತಿಳಿದುಬಂದಿದೆ. +ಈ ಬಾರಿ ನಿಮಗೆ ಕೆಲವು ಕಾರಣಗಳಿಂದ ಟಿಕೆಟ್ ನೀಡಲು ಸಾಧ್ಯವಿಲ್ಲ. ನೀವು ಒಪ್ಪಿದರೆ ನಿಮ್ಮ ಕ್ಷೇತ್ರಕ್ಕೆ ನಿಮ್ಮ ಪುತ್ರನನ್ನು ಕಣಕ್ಕಿಳಿಸುತ್ತೇವೆ ಎಂದು ಪಕ್ಷದ ವರಿಷ್ಠರು ಹೇಳಿರುವುದಾಗಿ ತಿಳಿದುಬಂದಿದೆ. ಉತ್ತರಪ್ರದೇಶದ ಕೈಸರ್‍ಗಂಜ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಭಾರತೀಯ ಕುಸ್ತಿಪಟು ಸಂಘದ ಅಧ್ಯಕ್ಷರಾಗಿದ್ದರು. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ ಆರೋಪ ಅವರ ಮೇಲಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕುಸ್ತಿಪಟುಗಳು ತಿಂಗಳುಗಟ್ಟಲೇ ಹೋರಾಟ ನಡೆಸಿದ್ದರು. ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕೆಲವು ಮಹಿಳಾ ಕುಸ್ತಿಪಟುಗಳು ಪದಕಗಳನ್ನು ಹಿಂತಿರುಗಿಸಿದ್ದರು. +ಈ ವಿವಾದದಿಂದ ಅಂತರ ಕಾಪಾಡಿಕೊಂಡಿದ್ದ ಬಿಜೆಪಿ ಬ್ರಿಜ್ ಭೂಷಣ್‍ಗೆ ಟಿಕೆಟ್ ನಿರಾಕರಿಸುವ ಮೂಲಕ ತಪ್ಪು ಮಾಡಿದರೆ ಯಾರನ್ನೂ ಸಮರ್ಥಿಸಿಕೊಳ್ಳುವುದಿಲ್ಲ ಎಂಬ ಎಚ್ಚರಿಕೆ ಸಂದೇಶವನ್ನು ಪರೋಕ್ಷವಾಗಿ ರವಾನಿಸಿದೆ.ಕೈಸರ್‍ಗಂಜ್ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮೇ 20ರಂದು ಮತದಾನ ನಡೆಯಲಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಇಂದು ಬಿಜೆಪಿ ತನ್ನ ಅಭ್ಯರ್ಥಿಯ ಘೋಷಣೆ ಮಾಡುವ ನಿರೀಕ್ಷೆ ಇದೆ. \ No newline at end of file diff --git a/eesanje/url_47_112_10.txt b/eesanje/url_47_112_10.txt new file mode 100644 index 0000000000000000000000000000000000000000..94f5d4e75049b992345c85b596a4df541b09f1ba --- /dev/null +++ b/eesanje/url_47_112_10.txt @@ -0,0 +1,8 @@ +10 ಲಕ್ಷ ಮಂದಿಯಲ್ಲಿ 7-8 ಮಂದಿಗೆ ಮಾತ್ರ ಕೋವಿಶೀಲ್ಡ್ ಅಡ್ಡ ಪರಿಣಾಮ +ನವದೆಹಲಿ,ಮೇ1-ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಕರೋನಾ ವೈರಸ್‌ ಲಸಿಕೆ ಕೋವಿಶೀಲ್ಡ್ ಅನ್ನು ಪಡೆದ 10 ಲಕ್ಷ ಜನರಲ್ಲಿ 7ರಿಂದ 8 ಮಂದಿಗೆ ಥ್ರಂಬೋಸಿಸ್‌ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್‌ (ಟಿಟಿಎಸ್‌) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮ ಉಂಟಾಗಬಹುದೆಂದು ಏಮ್ಸೌನ ಮಾಜಿ ನಿರ್ದೇಶಕರೊಬ್ಬರು ಹೇಳಿದ್ದಾರೆ. +ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆಯ ಮಾಜಿ ನಿರ್ದೇಶಕರಾಗಿರುವ ವಿಜ್ಞಾನಿ ಡಾ ರಾಮನ್‌ ಗಂಗಾಖೇಡ್ಕರ್‌ ಅವರ ಪ್ರಕಾರ, ಕರೋನವೈರಸ್‌ ಲಸಿಕೆ ಕೋವಿಶೀಲ್ಡ್ ಲಸಿಕೆಯನ್ನು ಪಡೆದವರಿಗೆ ಯಾವುದೇ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ಕಳೆದ ಮೂರು ದಿನಗಳಿಂದ ವಿಶ್ವಾದ್ಯಂತ ಕರೋನ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ ಉಂಟಾಗುತ್ತದೆ ಎಂದು ಈ ಲಸಿಕೆಯನ್ನು ತಯಾರಿಸಿದ ಅಸ್ಟ್ರಾಜೆನೆಕಾ ಔಷಧಿ ಸಂಸ್ಥೆ ಹೇಳಿತ್ತು. ಇದರಿಂದ ಸಹಜವಾಗಿ ಸಾರ್ವಜನಿಕರಲ್ಲಿ ಆತಂಕ ಉಂಟಾಗಿತ್ತು. ಈ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿರುವ ಗಂಗಾಖೇಡ್ಕರ್‌, ನೀವು ಮೊದಲ ಲಸಿಕೆ ಪಡೆದಾಗ ಅಪಾಯವು ಅತ್ಯಧಿ ಕವಾಗಿರುತ್ತದೆ. ಆದರೆ ಅದು ಎರಡನೇ ಲಸಿಕೆಯಲ್ಲಿ ಕಡಿಮೆಯಾಗುತ್ತದೆ ಮತ್ತು ಮೂರನೆಯದರೊಂದಿಗೆ ಕಡಿಮೆಯಾಗಿದೆ. ಒಂದು ಅಡ್ಡ ಪರಿಣಾಮ ಸಂಭವಿಸಿದಲ್ಲಿ, ಇದು ಆರಂಭಿಕ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ ಎಂದು ಹೇಳಿದ್ದಾರೆ. +ಯುಕೆ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ದೇಶದಲ್ಲಿ ಪ್ರಧಾನ ಕಛೇರಿ ಹೊಂದಿರುವ ಅಸ್ಟ್ರಾಜೆನೆಕಾ, ತನ್ನ ಕೋವಿಡ್‌ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿತ್ತು. +ಟಿಟಿಎಸ್‌ ಎಂದು ಕರೆಯಲ್ಪಡುವ ಲಸಿಕೆಯನ್ನು ಸೀರಮ್‌ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸಹ ಉತ್ಪಾದಿಸುತ್ತದೆ ಮತ್ತು ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರಿಗೆ ಲಸಿಕೆ ಹಾಕುತ್ತಾರೆ ಎಂದು ತಿಳಿಸಿತ್ತು. +ಲಸಿಕೆಯನ್ನು ಪ್ರಾರಂಭಿಸಿದ ಆರು ತಿಂಗಳೊಳಗೆ, ಟಿಟಿಎಸ್‌ ಅನ್ನು ಅಡೆನೊವೈರಸ್‌ ವೆಕ್ಟರ್‌ ಲಸಿಕೆಯ ಅಪರೂಪದ ಅಡ್ಡ ಪರಿಣಾಮವೆಂದು ಗುರುತಿಸಲಾಗಿದೆ. ಲಸಿಕೆಯ ತಿಳಿವಳಿಕೆಯಲ್ಲಿ ಯಾವುದೇ ಹೊಸ ಅಥವಾ ಬದಲಾವಣೆ ಇಲ್ಲ. ಲಸಿಕೆ ಪಡೆಯುವ 10 ಲಕ್ಷ ಜನರಲ್ಲಿ ಕೇವಲ 7 ರಿಂದ 8 ಜನರಿಗೆ ಅಪಾಯವಿದೆ ಎಂದು ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ಗಂಗಾಖೇಡ್ಕರ್‌ ಹೇಳಿದ್ದಾರೆ. +ಲಕ್ಷಾಂತರ ಜನರ ಮೇಲೆ ಈ ಲಸಿಕೆಯ ಸಕಾರಾತ್ಮಕ ಪರಿಣಾಮವನ್ನು ಗಮನಿಸಿದರೆ, ಸಂಬಂಧಿತ ಅಪಾಯವು ಕಡಿಮೆಯಾಗಿದೆ. 51 ಹಕ್ಕುದಾರರನ್ನು ಒಳಗೊಂಡ ಗುಂಪು ಕ್ರಮಕ್ಕಾಗಿ ಫೆಬ್ರವರಿಯಲ್ಲಿ ಲಂಡನ್‌ನ ಹೈಕೋರ್ಟ್‌ಗೆ ಸಲ್ಲಿಸಿದ ಕಾನೂನು ದಾಖಲೆಯಲ್ಲಿ ಅಸ್ಟ್ರಾಜೆನೆಕಾ, ಕೋವಿಡ್‌ -19 ಅನ್ನು ಎದುರಿಸಲು ಆಕ್ಸ್ ಫರ್ಡ್‌ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ಒಪ್ಪಿಕೊಂಡಿದೆ ಎಂದು ಬ್ರಿಟಿಷ್‌ ಸುದ್ದಿವಾಹಿನಿ ದಿ ಡೈಲಿ ಟೆಲಿಗ್ರಾಫ್‌ ವರದಿ ಮಾಡಿತ್ತು. \ No newline at end of file diff --git a/eesanje/url_47_112_11.txt b/eesanje/url_47_112_11.txt new file mode 100644 index 0000000000000000000000000000000000000000..dd42471e57c566d20a61c835dedf567653d108f5 --- /dev/null +++ b/eesanje/url_47_112_11.txt @@ -0,0 +1,4 @@ +ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 19ರೂ. ಕಡಿತ +ನವದೆಹಲಿ,ಮೇ.1-ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ತೈಲ ಕಂಪನಿಗಳು 19ರೂ ಕಡಿತಗೊಳಿಸಿದೆ. ಮೇ ತಿಂಗಳ ಮೊದಲ ದಿನವೇ ಬೆಲೆ ಇಳೆಕೆ ಹೋಟಲ್‌ಗಳು ,ವಾಣಿಜ್ಯ ಕಾರ್ಖಾನೆಗಳಿಗೆ ಸ್ವಲ್ಪ ಮಟ್ಟಿಗೆ ಖುಷಿ ಕೊಟ್ಟಿದೆ. 19 ರೂ.ಗಳಷ್ಟು ಕಡಿತದ ನಂತರ ದೆಹಲಿಯಲ್ಲಿ ಪ್ರತಿ ವಾಣಿಜ್ಯ ಸಿಲಿಂಡರ್‌ ಬೆಲೆ 1745.50 ರೂಗೆ ಇಳಿದಿದೆ. +ತಿಂಗಳು ಸಹ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿದ್ದವು ಮತ್ತು ಏಪ್ರಿಲ್‌ 1 ರಂದು 30.50 ರೂ. ತೈಲ ಮಾರುಕಟ್ಟೆ ಕಂಪನಿಗಳು, ಕೋಲ್ಕತ್ತಾದಲ್ಲಿ ವಾಣಿಜ್ಯ ಸಿಲಿಂಡರ್‌ ಬೆಲೆ 1859 ರೂ.ಮುಂಬೈನಲ್ಲಿ 1698.50 ರೂ.ಗೆ ಮತ್ತು ಚೆನ್ನೈನಲ್ಲಿ 1911 ರೂ.ಗೆ ಲಭ್ಯವಾಗಲಿದೆ. ಪ್ರಸ್ತುತ ಗೃಹ ಬಳಕೆಗೆ ಬಳಸುವ 14.2 ಕೆಜಿ ಗ್ಯಾಸ್‌‍ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. +ಇದೇ ವೇಲೆ ತೈಲ ಕಂಪನಿಗಳು ವಿಮಾನ ಇಂಧನದ ಬೆಲೆಯನ್ನು ಲೀಟರ್‌ಗೆ 749.25 ರೂ.ಗಳಷ್ಟು ಹೆಚ್ಚಿಸಿವೆ. ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಈ ಹಿಂದೆ, ಏಪ್ರಿಲ್‌ನಲ್ಲಿ ರೂ 502.91/ಕೆಜಿ ಲೀಟರ್‌ಗೆ ಇಳಿಕೆಯಾಗಿದ್ದರೆ, ಮಾರ್ಚ್‌ನಲ್ಲಿ ವಿಮಾನ ಇಂಧನ ಬೆಲೆ ಲೀಟರ್‌ಗೆ ರೂ 624.37/ಕೆಜಿ ಏರಿಕೆಯಾಗಿತ್ತು. \ No newline at end of file diff --git a/eesanje/url_47_112_12.txt b/eesanje/url_47_112_12.txt new file mode 100644 index 0000000000000000000000000000000000000000..178eb8ede65829840639f975862c3ba0b06b4e28 --- /dev/null +++ b/eesanje/url_47_112_12.txt @@ -0,0 +1,4 @@ +ಕೋಲುಗಳಿಂದ ಹೊಡೆದು ಅರ್ಚಕನ ಕೊಲೆ +ಡಿಯೋರಿಯಾ (ಯುಪಿ), ಮೇ 1-ದೇವಸ್ಥಾನದ ಅರ್ಚಕರು ಜೋರಾಗಿ ಸಂಗೀತ ನುಡಿಸುತ್ತಿತ್ತಾಗ ಅಲ್ಲಿಗೆ ಬಂದ ಕೆಲವರು ಕೋಲುಗಳಿಂದ ಹೊಡೆದು ಕೊಂದಿರುವ ಘಟನೆ ತೆನುಬಾ ಚೌಬೆ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಅಶೋಕ್‌ ಚೌಬೆ (60) ಕೊಲೆಯಾದ ಅರ್ಚಕ. +ಸಂಗೀತ ನುಡಿಸುವ ವಿಚಾರದಲ್ಲಿ ಅಲ್ಲಿಗೆ ಬಂದ ಕೆಲವರು ವಾಗ್ವಾದ ನಡೆಸಿ ಲಾಠಿಯಿಂದ ಥಳಿಸಿದ್ದಾರೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಚೌಬೆಯನ್ನು ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು, ಅಲ್ಲಿ ಅವನು ಕೊನೆಯುಸಿರೆಳೆದಿದ್ದಾರೆ ಎಂದು ಘೋಷಿಸಲಾಯಿತು ಎಂದು ಎಸ್ಪಿ ಹೇಳಿದರು. +ಸ್ಥಳೕಯ ಗ್ರಾಮದ ಹೌಸ್ಲಾ ಪಾಸ್ವಾನ್‌ ಎಂಬಾತ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ .ಯಾವುದೇ ಅಹಿತಕರ ಘಟನೆ ನಡೆಯದಂತೆ ಗ್ರಾಮದಲ್ಲಿ ಹಾಗೂ ದೇವಸ್ಥಾನದಲ್ಲಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ ಎಂದರು. ಘಟನೆ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_112_2.txt b/eesanje/url_47_112_2.txt new file mode 100644 index 0000000000000000000000000000000000000000..0c603fa99538d33497d6ea4d4518c1f1f5dcec6f --- /dev/null +++ b/eesanje/url_47_112_2.txt @@ -0,0 +1,7 @@ +ಕೋವಿಡ್ ಲಸಿಕೆ ಪ್ರಮಾಣ ಪತ್ರ: ಕಾಣದಂತೆ ಮಾಯವಾದ ಮೋದಿ ಫೋಟೋ +ನವದೆಹಲಿ,ಮೇ2- ಕೋವಿಡ್ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ನರೇಂದ್ರಮೋದಿಯವರ ಫೋಟೊವನ್ನು ತೆಗೆದು ಹಾಕಲಾಗಿದ್ದು, ಹಲವು ಅನುಮಾನಗಳು ಮೂಡಿವೆ. ಈ ಹಿಂದೆ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯವರ ಫೋಟೊ ಹಾಕಲಾಗಿತ್ತು. ಭಾರತವು ಕೊರೊನಾ ಸೋಂಕನ್ನು ಹಿಮ್ಮೆಟ್ಟಿಸುತ್ತದೆ ಎಂದು ಬರೆಯಲಾಗಿತ್ತು. ಆದರೆ ಈಗ ಪ್ರಧಾನಿ ಮೋದಿ ಹೆಸರನ್ನು ಕೈಬಿಡಲಾಗಿದೆ. +ಇದೀಗ ಕೊರೊನಾ ಲಸಿಕೆ ತಯಾರಕ ಬ್ರಿಟಿಷ್ ಕಂಪನಿ ಅಸ್ಟ್ರಾಜೆನೆಕಾ ವಿರುದ್ಧ ಕೆಲವು ಅನುಮಾನಗಳು ಹುಟ್ಟಿಕೊಂಡಿವೆ, ಈ ಲಸಿಕೆಯು ರಕ್ತಹೆಪ್ಪುಗಟ್ಟುವಿಕೆಯಂತಹ ಕೆಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಲಾಗಿದ್ದು, ಕೆಲವೊಂದು ವಿಚಾರಗಳನ್ನು ಸಂಸ್ಥೆ ಕೂಡ ಒಪ್ಪಿಕೊಂಡಿದೆ. ಆದರೆ ಲಕ್ಷದಲ್ಲಿ ಒಂದು ಅಥವಾ ಎರಡು ಮಂದಿಗೆ ಮಾತ್ರ ಈ ಬಗೆಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ಸಂಸ್ಥೆ ಹೇಳಿದೆ. ಅಸ್ಟ್ರಾಜೆನೆಕಾ ಸಂಸ್ಥೆ ವಿರುದ್ಧ ಹಲವು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‍ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್)ನಲ್ಲಿನ ಕೆಲವು ಬಳಕೆದಾರರು ಗಮನಾರ್ಹ ಬದಲಾವಣೆಯನ್ನು ಗಮನಿಸಿದ್ದಾರೆ. +ಬಿಸಿಲ ಬೇಗೆ : ಏಸಿ-ಏರ್‌ಕೂಲರ್‌ಗಳ ಖರೀದಿಗೆ ಮುಗಿಬಿದ್ದಿ ಜನ +ಭಾರತದಲ್ಲಿ ನೀಡಲಾದ ಕೋವಿಡ್ -19 ಲಸಿಕೆ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಫೋಟೋ ಇಲ್ಲದಿರುವುದು ತಿಳಿದುಬಂದಿದೆ. ಜತೆಗೆ ಫೋಟೊ ಬದಲಿಗೆ ಕ್ಯೂ ಆರ್ ಕೋಡ್ ಮಾತ್ರವೇ ಇದೆ. +ಆರೋಗ್ಯ ಇಲಾಖೆ ಹೇಳುವುದೇನು? :ಆದಾಗ್ಯೂ , ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ ಕಾರಣ ಲಸಿಕೆ ಪ್ರಮಾಣಪತ್ರದಿಂದ ಚಿತ್ರವನ್ನು ತೆಗೆದುಹಾಕಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಿಂದ ಮೋದಿ ಅವರ ಫೋಟೋವನ್ನು ತೆಗೆದುಹಾಕಿರುವುದು ಇದೇ ಮೊದಲಲ್ಲ ಎಂಬುದು ಗಮನಿಸಬೇಕಾದ ಸಂಗತಿ. +2022ರಲ್ಲಿ, ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ರಾಜ್ಯಗಳಲ್ಲಿ ನೀಡಲಾದ ಲಸಿಕೆ ಪ್ರಮಾಣಪತ್ರದಿಂದ ಮೋದಿಯವರ ಭಾವಚಿತ್ರವನ್ನು ತೆಗೆದುಹಾಕಲಾಯಿತು. ಆ ರಾಜ್ಯಗಳ ವಿಧಾನಸಭಾ ಚುನಾವಣೆಯ ತಯಾರಿಗಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಕ್ರಮವನ್ನು ಕಡ್ಡಾಯಗೊಳಿಸಿದೆ. \ No newline at end of file diff --git a/eesanje/url_47_112_3.txt b/eesanje/url_47_112_3.txt new file mode 100644 index 0000000000000000000000000000000000000000..6bd4ac30b9246576fe283f1082382967e36fa706 --- /dev/null +++ b/eesanje/url_47_112_3.txt @@ -0,0 +1,4 @@ +ರಸ್ತೆ ಅಪಘಾತದಲ್ಲಿ ಒಬ್ಬ ಸಾವು, 11 ಮಂದಿ ಗಾಯ +ಜಮ್ಮು, ಮೇ 2 – ಕೇರಳದ ಪ್ರವಾಸಿಗರಿದ್ದ ಟೆಂಪೋ ಟ್ರಾವೆಲರ್‍ನಲ್ಲಿ ಇಲ್ಲಿನ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‍ಗೆ ಡಿಕ್ಕಿ ಹೊಡೆದು ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. +ತಡರಾತ್ರಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಬನಿಹಾಲ್‍ನ ಶಾಬನ್‍ಬಾಸ್ ಪ್ರದೇಶದಲ್ಲಿ ಎದುರಿಗೆ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದಾರೆ. ಟೆಂಪೋ ಟ್ರಾವೆಲರ್‍ನಲ್ಲಿ ಕೇರಳದ 12 ಪ್ರವಾಸಿಗರು ಸೇರಿದಂತೆ 16 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದ್ದು ಒಬ್ಬ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಹನ್ನೊಂದು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಪ್ರವಾಸಿಗರ ಬಗ್ಗೆ ಹೆಚ್ಚನ ಮಾಹಿತಿ ಕಲೆ ಹಾಕಲಾಗುತ್ತಿದೆ ಮತ್ತು ರಸ್ತೆ ಪಕ್ಕ ಅಪಘಾತಗೊಂಡ ವಾಹನವನ್ನು ಸರಿಸಿ ಬೇರೆ ವಾಹನಗಳ ಸಂಚಾರಕ್ಕೆ ಅನುವು ಮಾಡಲಾಗಿದೆ. \ No newline at end of file diff --git a/eesanje/url_47_112_4.txt b/eesanje/url_47_112_4.txt new file mode 100644 index 0000000000000000000000000000000000000000..7245a32e79155c630a020d381504c77954edccad --- /dev/null +++ b/eesanje/url_47_112_4.txt @@ -0,0 +1,7 @@ +ಶ್ರೀರಾಮ ಲಲ್ಲಾ ಸಮಾರಂಭಕ್ಕೆ ರಾಷ್ಟ್ರಪತಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ರಾಹುಲ್‌ ಹೇಳಿದ್ದು ಸುಳ್ಳು +ನವದೆಹಲಿ.ಮೇ1-ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರಾಕರಿಸಿದೆ. +ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಟ್ರಸ್‌್ಟ , ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ತಮ್ಮ ಭಾಷಣ ದಲ್ಲಿ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಮೂಲದ ಕಾರಣಕ್ಕಾಗಿ ಆಹ್ವಾನಿಸಲಾಗಿಲ್ಲ ಎಂದು ಹೇಳಿದ್ದರು. ಅವರ ಈ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದಾರಿತಪ್ಪಿಸುವಂತಿದೆ ಎಂದು ಆಕ್ಷೇಪಿಸಿದರು. +ಅಯೋಧ್ಯೆಯಲ್ಲಿ ನಡೆದ ಶುಭ ಸಮಾರಂಭಕ್ಕೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ಶ್ರೀರಾಮ್‌ ನಾಥ್‌ ಕೋವಿಂದ್‌ ಅವರನ್ನು ಆಹ್ವಾನಿಸಲಾಗಿತ್ತು ಎಂಬುದನ್ನು ರಾಹುಲ್‌ ಗಾಂಧಿ ಗಮನಕ್ಕೆ ತರಲು ಬಯಸುತ್ತೇವೆ. +ಭಾರತದ ಪ್ರಗತಿಗೆ ಕೊಡುಗೆ ನೀಡಿದ ವಿವಿಧ ಕ್ಷೇತ್ರಗಳ ಸಂತರು, ಕುಟುಂಬಗಳು ಮತ್ತು ಗಣ್ಯರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರನ್ನು ಆಹ್ವಾನಿಸಲಾಯಿತು ಎಂದು ಗೊಂದಲಗಳಿಗೆ ತೆರೆ ಎಳೆದಿದೆ. +ಅಲ್ಲದೆ ಮಂದಿರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಶ್ರಮಿಕರೂ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಪ್ರಾಣ ಪ್ರತಿಷ್ಠಾ ಆಚರಣೆಯ ಸಮಯದಲ್ಲಿಯೂ ಸಹ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ಜಾತಿಗಳಿಗೆ ಸೇರಿದ ಅನೇಕ ಕುಟುಂಬಗಳಿಗೆ ಶ್ರೀ ರಾಮ ಜನ್ಮಭೂಮಿ ಮಂದಿರದ ಮಂಟಪದಲ್ಲಿ ಪೂಜೆ ಮಾಡಲು ಅವಕಾಶ ನೀಡಲಾಯಿತು ಎಂದು ಟ್ರಸ್‌್ಟ ಸಮರ್ಥನೆ ಮಾಡಿಕೊಂಡಿದೆ. +ಸತ್ಯಾಂಶಗಳ ಬಗ್ಗೆ ಸರಿಯಾದ ಅರಿವಿಲ್ಲದೆ ಇಂತಹ ಸುಳ್ಳು, ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಭಾಷಣಗಳನ್ನು ಮಾಡುವುದು ಸಮಾಜದಲ್ಲಿ ಗಂಭೀರ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಬಹುದು. ಆದ್ದರಿಂದ ರಾಹುಲ್‌ ಗಾಂಧಿ ಭಾಷಣದ ದ ಬಗ್ಗೆ ನಮಗೆ ಆಕ್ಷೇಪವಿದೆ ಎಂದು ಟ್ರಸ್‌್ಟ ಅಸಮಾಧಾನ ಹೊರಹಾಕಿದೆ. \ No newline at end of file diff --git a/eesanje/url_47_112_5.txt b/eesanje/url_47_112_5.txt new file mode 100644 index 0000000000000000000000000000000000000000..382589534563a1a16b26de336a359423006b2caf --- /dev/null +++ b/eesanje/url_47_112_5.txt @@ -0,0 +1,11 @@ +ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಪೊಲೀಸರೇ ಕಾರಣ +ಇಂಫಾಲ್‌,ಮೇ1-ಸಂಘರ್ಷ ಪೀಡಿತ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪೊಲೀಸರು ಸಂತ್ರಸ್ತರಿಗೆ ನೆರವಾಗದೇ ಇರುವುದೇ ಕೃತ್ಯಕ್ಕೆ ಕಾರಣ ಎಂದು ಎಂದು ಉಲ್ಲೇಖಿಸಿದ್ದಾರೆ. +ಅಂದು ಸಂತ್ರಸ್ತ ಮಹಿಳೆಯರು ನೆರವು ಕೋರಿ ಪೊಲೀಸರ ವಾಹನ ಏರಿದ್ದರು, ಆದರೆ ಪೊಲೀಸರು ವಾಹನದ ಕೀ ಇಲ್ಲ ಎನ್ನುವ ನೆಪ ಹೇಳಿ ನೆರವು ನೀಡಲು ನಿರಾಕರಿಸಿದ್ದಾರೆ. ಮಹಿಳೆಯರು ಮಾತ್ರವಲ್ಲ ಇಬ್ಬರು ಪುರುಷರೂ ಪೊಲೀಸರ ವಾಹನ ಏರಿದ್ದರು. ಆದರೆ ಸಂಘರ್ಷನಿರತರು ಅವರನ್ನು ವಾಹನದಿಂದ ಎಳೆದು ಥಳಿಸುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತರು ಎಂದು ಕೇಂದ್ರೆಯ ತನಿಖಾ ದಳ ತನ್ನ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. +ಘಟನೆ ಹಿನ್ನಲೆ: +2023ರ ಮೇ 3-4ರಂದು ನಡೆದಿದ್ದ ಹಿಂಚಾಚಾರದ ವೇಳೆ ಸಾರ್ವಜನಿಕರ ಮೇಲೆ ಭಾರೀ ಹಲ್ಲೆ ನಡೆದಿತ್ತು. ಈ ವೇಳೆ ಸಂತ್ರಸ್ತರು ಕಿಡಿಗೇಡಿಗಳಿಂದ ತಪ್ಪಿಸಿಕೊಳ್ಳಲು ಕಾಡಿನತ್ತ ಓಡಿದ್ದರು. ಆದರೆ ಅವರನ್ನು ಶಸಾ್ತ್ರಸ್ತ್ರ ಹಿಡಿದುಕೊಂಡೇ ಹಿಂಬಾಲಿಸಿದ್ದ ದಾಳಿಕೋರರು ಕಾಡಿನೊಳಗೆ ಹೊಕ್ಕಿದ್ದವರನ್ನೆಲ್ಲ ಬಲವಂತವಾಗಿ ರಸ್ತೆಗೆ ಎಳೆದು ತಂದು ಥಳಿಸ ತೊಡಗಿದ್ದರು. +ಅಷ್ಟೇ ಅಲ್ಲ ಸಂತ್ರಸ್ತೆಯರಿಬ್ಬರನ್ನು ಒಂದು ಕಡೆ, ಇನ್ನಿಬ್ಬರು ಮಹಿಳೆಯರು, ಅವರ ತಂದೆ ಹಾಗೂ ಗ್ರಾಮದ ಯಜಮಾನನನ್ನು ಮತ್ತೊಂದು ಕಡೆ ನಿಲ್ಲಿಸಿ ಕಿರುಕುಳ ನೀಡಲು ಶುರು ಮಾಡಿದ್ದರು ಎಂದು ಸಿಬಿಐ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ. +ಕಿರುಕುಳ ತಾಳಲಾರದೇ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಸಂತ್ರಸ್ತರು ರಕ್ಷಣೆಗಾಗಿ ಪೊಲೀಸ್‌ ವಾಹನಕ್ಕೆ ನುಗ್ಗಿದ್ದರು. ವಾಹನ ಚಾಲನೆ ಮಾಡುವಂತೆ, ಇಲ್ಲಿಂದ ಕರೆದೊಯ್ದು ರಕ್ಷಣೆ ಕೊಡುವಂತೆ ಬೇಡಿಕೊಂಡಿದ್ದರು. ಆದರೆ ವಾಹನದ ಕೀ ಇಲ್ಲ ಎಂದು ಹೇಳಿ ಪೊಲೀಸರು ನೆರವಾಗಲು ನಿರಾಕರಿಸಿದ್ದರು. +ಹೀಗೆ ಹೇಳಿದ ಕ್ಷಣಾರ್ಧದಲ್ಲೇ ಕಾರು ಚಾಲನೆ ಮಾಡಿದ ಚಾಲಕ, ಸಾವಿರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಸಮೀಪವೇ ವಾಹನ ನಿಲ್ಲಿಸಿದ್ದ. ಇದರಿಂದ ಭಯಗೊಂಡ ಸಂತ್ರಸ್ತರು, ಬೇರೆಡೆಗೆ ಕರೆದೊಯ್ಯುವಂತೆ ಅಂಗಲಾಚಿದ್ದರು. ಈ ಮಧ್ಯೆ ಸಂತ್ರಸ್ತ ಮಹಿಳೆಯ ತಂದೆಯನ್ನು ಹತ್ಯೆ ಮಾಡಲಾಗಿತ್ತು. ಬಳಿಕ ವಾಹನದಲ್ಲಿದ್ದವರನ್ನು ಉದ್ರಿಕ್ತರು ಹೊರಗೆಳೆದು ಮನಸ್ಸೋ ಇಚ್ಛೆ ಹಲ್ಲೆ ಮಾಡಿದರು. ಅಷ್ಟರಲ್ಲಿ ಪೊಲೀಸರು ಅಲ್ಲಿಂದ ಕಾಲ್ಕಿತ್ತು ದೌಡಾಯಿಸಿದ್ದರು. +ನಂತರ ಉದ್ರಿಕ್ತರ ಗುಂಪು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿತ್ತು, ಇದೇ ವೇಳೆ ಅಲ್ಲಿದ್ದ ಇಬ್ಬರು ಪುರುಷರ ಮೇಲೆ ಹಲ್ಲೆ ನಡೆಸಿತ್ತು ಎಂದು ಸಿಬಿಐ ಹೇಳಿದೆ. +ಮುಂದುವರಿದ ತನಿಖೆ:ಇದರ ಬೆನ್ನಲ್ಲೇ ರಾಜ್ಯದಾದ್ಯಂತ ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು. ಕೃಷ್ಣ ಸಂಬಂಧ ಮಣಿಪುರ ಸರ್ಕಾರದ ಶಿಫಾರಸ್ಸು ಮತ್ತು ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ತನಿಖೆ ಆರಂಭಿಸಿದೆ. ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಕೊಲೆ, ಕೋಮುಗಲಭೆಗೆ ಸಂಚು ಸೇರಿದಂತೆ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. +ಜನಾಂಗೀಯ ಹಿಂಸಾಚಾರಕ್ಕೆ ಕಾರಣ ಏನು?:ಮಣಿಪುರದಲ್ಲಿ ಬಹುಸಂಖ್ಯೆಯಲ್ಲಿರುವ ಮೈಥೇಯಿ ಸಮುದಾಯದವರು ತಮಗೆ ಎಸ್ಟಿ ಮೀಸಲಾತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗಾ ಮತ್ತು ಕುಕಿ ಬುಡಕಟ್ಟು ಸಮುದಾಯಗಳು ಇದನ್ನು ವಿರೋಧಿಸಿದ್ದವು. ಇದರಿಂದ ಸೃಷ್ಟಿಯಾದ ಬಿಕ್ಕಟ್ಟು ರಾಜ್ಯದಲ್ಲಿ ಭೀಕರ ಹಿಂಸಾಚಾರಕ್ಕೆ ಕಾರಣವಾಗಿತ್ತು. \ No newline at end of file diff --git a/eesanje/url_47_112_6.txt b/eesanje/url_47_112_6.txt new file mode 100644 index 0000000000000000000000000000000000000000..6811a30a5f24ec0f18ae17899be0a1fa9c2e15f4 --- /dev/null +++ b/eesanje/url_47_112_6.txt @@ -0,0 +1,8 @@ +1 ಮತ್ತು 2ನೇ ಹಂತದ ಚುನಾವಣೆ ಮತದಾನ ಪ್ರಮಾಣ ಬಿಡುಗಡೆ +ನವದೆಹಲಿ,ಮೇ1-ಮೊದಲ ಮತ್ತು 2ನೇ ಹಂತದ ಒಟ್ಟು ಶೇಕಡಾವಾರು ಮತದಾನ ಕುರಿತು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಕೇಂದ್ರ ಚುನಾವಣಾ ಆಯೋಗ ಕೊನೆಗೂ ಶೇಕಡಾವಾರು ಮತದಾನವನ್ನು ಬಿಡುಗಡೆ ಮಾಡಿದೆ. +ಕಳೆದ ಏಪ್ರಿಲ್‌ 19ರಂದು ನಡೆದ ಮೊದಲ ಹಂತದ ಮತದಾನದಲ್ಲಿ ಶೇ.66.14 ಮತ್ತು ಏ.26ರಂದು ನಡೆದ ಎರಡನೇ ಹಂತದ ಮತದಾನದಲ್ಲಿ ಶೇ.66.71ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಇದು ಮೊದಲ ಹಂತದಲ್ಲಿ ಶೇ.4 ಮತ್ತು 2 ಹಂತಕ್ಕೆ ಹೋಲಿಸಿದರೆ ಶೇ.2ರಷ್ಟು ಕುಸಿತವಾಗಿದೆ. +2019ರಲ್ಲಿ ಒಟ್ಟು 102 ಸ್ಥಾನಗಳಿಗೆ ಮೊದಲ ಹಂತದಲ್ಲಿ ಶೇ.70ರಷ್ಟು ಮತದಾನವಾಗಿತ್ತು ಮತ್ತು 2ನೇ ಹಂತದಲ್ಲಿ 83 ಸ್ಥಾನಗಳಲ್ಲಿ ಶೇ.69.64ರಷ್ಟು ಮತದಾನವಾಗಿತ್ತು. ಚುನಾವಣಾ ಸಂಸ್ಥೆಯು 1ನೇ ಹಂತದ ಮತದಾನದ ಆರಂಭಿಕ ದತ್ತಾಂಶವನ್ನು 65.5% ಮತ್ತು ಹಂತ 2ನೇ ಹಂತದಲ್ಲಿ 66.7% ಎಂದು ನಿಗದಿಪಡಿಸಿದೆ. +ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿಯ ಪ್ರಕಾರ, ಪುರುಷ ಮತದಾರರು ಈ ಬಾರಿ ಉತ್ತಮ ಕಾರ್ಯಕ್ಷಮತೆಯನ್ನು ದಾಖಲಿಸಿದ್ದಾರೆ. ಮೊದಲ ಹಂತದಲ್ಲಿ ಶೇ.66.07ರಷ್ಟು ಮತದಾನವಾಗಿದೆ. ಮಹಿಳೆಯರಿಗೆ ಹೋಲಿಸಿದರೆ ಅವರ ಮತದಾನವು ಶೇ.66.22ರಷ್ಟಾಗಿತ್ತು. ಎರಡನೇ ಹಂತದಲ್ಲಿ ಶೇ.66.42ರಷ್ಟು ಮತದಾನವಾಗಿದೆ. ಇದು ಮಹಿಳೆಯರಿಗೆ ಹೋಲಿಸಿದರೆ ಶೇ.66.99ರಷ್ಟು ಪುರುಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. +ಆದಾಗ್ಯೂ, ಪ್ರತಿ ಸಂಸದೀಯ ಕ್ಷೇತ್ರದ ಮತದಾರರ ಸಂಖ್ಯೆಗೆ ಸಂಬಂಧಿಸಿದ ದತ್ತಾಂಶ ಇಲ್ಲದಿರುವುದನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು, ಪ್ರತಿ ಸಂಸತ್ತಿನ ಕ್ಷೇತ್ರದಲ್ಲಿ ಮತದಾರರ ಸಂಪೂರ್ಣ ಸಂಖ್ಯೆಯನ್ನು ಏಕೆ ಬಹಿರಂಗಪಡಿಸಲಾಗಿಲ್ಲ. ಈ ಅಂಕಿಅಂಶ ತಿಳಿಯದ ಹೊರತು ಶೇಕಡಾವಾರು ಅರ್ಥಹೀನವಾಗಿದೆ. ಎಣಿಕೆಯ ಸಮಯದಲ್ಲಿ ಒಟ್ಟು ಮತದಾರರ ಸಂಖ್ಯೆಯನ್ನು ಬದಲಾಯಿಸಬಹುದಾದ್ದರಿಂದ ಫಲಿತಾಂಶದ ದುರ್ಬಳಕೆಯಾಗಬಹುದು. 2014ರವರೆಗೆ ಇಸಿಐ ವೆಬ್‌ಸೈಟ್‌ನಲ್ಲಿ ಪ್ರತಿ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆಯು ಯಾವಾಗಲೂ ಲಭ್ಯವಿತ್ತು. +ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಪ್ರಭಾರ ಸಂವಹನ) ಜೈರಾಮ್‌ ರಮೇಶ್‌ ಮಾತನಾಡಿ, ಮೊದಲ ಹಂತದ ಮತದಾನದ 11 ದಿನಗಳು ಮತ್ತು ಎರಡನೇ ಹಂತದ ಮತದಾನದ ನಾಲ್ಕು ದಿನಗಳ ನಂತರವೂ ಚುನಾವಣಾ ಆಯೋಗವು ಅಂತಿಮ ಮತದಾನದ ಪ್ರಮಾಣವನ್ನು ಪ್ರಕಟಿಸಿಲ್ಲ. ಮತದಾನದ ನಂತರ ಅಥವಾ 24 ಗಂಟೆಗಳ ಒಳಗೆ ಚುನಾವಣಾ ಆಯೋಗ ಅಂತಿಮ ಮತದಾನದ ಅಂಕಿಅಂಶಗಳನ್ನು ಮಾತ್ರ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಹೇಳಿದ್ದಾರೆ. +ಹೆಚ್ಚುವರಿಯಾಗಿ ಪ್ರತಿ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿನ ನೋಂದಾಯಿತ ಮತದಾರರ ಸಂಖ್ಯೆ ಆ ಲೋಕಸಭಾ ಕ್ಷೇತ್ರವು ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿಲ್ಲ ಮತ್ತು ಇದು ಪ್ರತಿ ಬೂತ್‌ನಲ್ಲಿನ ಮತದಾರರ ಸಂಖ್ಯೆಯನ್ನು ಮಾತ್ರ ತೋರಿಸುತ್ತದೆ ಎಲ್ಲಾ ಚುನಾವಣಾ ಸಂಬಂಧಿತ ಡೇಟಾದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_112_7.txt b/eesanje/url_47_112_7.txt new file mode 100644 index 0000000000000000000000000000000000000000..9f047c79625131a42e2859415057ef59f1d27805 --- /dev/null +++ b/eesanje/url_47_112_7.txt @@ -0,0 +1,5 @@ +ಭಾರತದ ಚುನಾವಣೆ ನೋಡಲು 10 ದೇಶ, 18 ರಾಜಕೀಯ ಪಕ್ಷಗಳ ಪ್ರತಿನಿಧಿ ಭಾರತಕ್ಕೆ ಭೇಟಿ +ನವದೆಹಲಿ, ಮೇ 1-ಹತ್ತು ರಾಷ್ಟ್ರಗಳ 18 ರಾಜಕೀಯ ಪಕ್ಷಗಳ ಪ್ರತಿನಿಧಿ ಗಳು ಬಿಜೆಪಿ ಪಕ್ಷದ ಆಹ್ವಾನದ ಮೇರೆಗೆ ಲೋಕಸಭಾ ಚುನಾವಣೆಗಳ ಖುದ್ದು ಅನುಭವ ಪಡೆಯುವ ಸಲುವಾಗಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಲಿದ್ದಾರೆ.ವಿದೇಶಿ ಪ್ರತಿನಿಧಿ ಗಳಿಗೆ ಬಿಜೆಪಿ ಕಾರ್ಯತಂತ್ರಗಳು ಮತ್ತು ಒಟ್ಟಾರೆ ಚುನಾವಣಾ ಪ್ರಕ್ರಿಯೆ ಕುರಿತು ವಿವರಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ. +ವಿದೇಶಿ ಪ್ರತಿನಿಧಿ ಗಳು ಬುಧವಾರ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಕೇಂದ್ರ ಚಿವ ಅಶ್ವಿನಿ ವೈಷ್ಣವ್‌ ಅವರನ್ನು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.ಆಸೆ್ಟ್ರೕಲಿಯಾದ ಲಿಬರಲ್‌ ಪಾರ್ಟಿ, ವಿಯೆಟ್ನಾಂನ ಕಮ್ಯುನಿಸ್ಟ್ ಪಾರ್ಟಿ, ಬಾಂಗ್ಲಾದೇಶದ ಆವಾಮಿ ಲೀಗ್‌, ಇಸ್ರೇಲ್‌ನ ಲಿಕುಡ್‌ ಪಾರ್ಟಿ, ಉಗಾಂಡಾದ ನ್ಯಾಷನಲ್‌ ರೆಸಿಸ್ಟೆನ್‌್ಸ ಮೂವ್‌ಮೆಂಟ್‌, ತಾಂಜಾನಿಯಾದ ಚಮಾ ಚ ಮಪಿಂಡುಝಿ ಮತ್ತು ರಷ್ಯಾದ ಯುನೈಟೆಡ್‌ ರಷ್ಯಾ ಪಕ್ಷಗಳ ಪ್ರತಿನಿಧಿ ಗಳು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. +ಶ್ರೀಲಂಕಾದಿಂದ ಶ್ರೀಲಂಕಾ ಪೊಡುಜನ ತೆರಮುನ ಮತ್ತು ಯುನೈಟೆಡ್‌ ನ್ಯಾಷನಲ್‌ ಪಾರ್ಟಿ, ಮಿಲಿಟೆಂಟ್‌ ಸೋಷಿಯಲಿಸ್ಟ್ ಮೂವ್‌ಮೆಂಟ್‌, ಮಾರಿಷಸ್‌ ಲೇಬರ್‌ ಪಾರ್ಟಿ, ಮಾರಿಷಿಯನ್‌ ಮಿಲಿಟೆಂಟ್‌ ಮೂವ್‌ಮೆಂಟ್‌ ಮತ್ತು ಪಾರ್ಟಿ ಮಾರಿಷಿಯನ್‌ ಸೋಷಿಯಲ್‌ ಡೆಮಾಕ್ರಾಟ್‌- ಮಾರಿಷ್‌ನಿಂದ, ನೇಪಾಳಿ ಕಾಂಗ್ರೆಸ್‌, ಜನಮತ್‌ ಪಾರ್ಟಿ, ಕಮ್ಯುನಿಸ್‌್ಟ ಪಾರ್ಟಿ ಆಫ್‌ ನೇಪಾಳ (ಯೂನಿಫೈಡ್‌ ಮಾರ್ಕ್ಸಿಸ್ಟ್ -ಲೆನಿನಿಸ್ಟ್), ಕಮ್ಯುನಿಸ್ಟ್ ಪಾರ್ಟಿ ಆಫ್‌ ನೇಪಾಳ್‌ (ಮಾರ್ಕ್ಸಿಸ್ಟ್ ) ಮತ್ತು ರಾಷ್ಟ್ರೀಯ ಸ್ವತಂತ್ರ ಪಾರ್ಟಿ ನೇಪಾಳದಿಂದ ಬಿಜೆಪಿ ಆಹ್ವಾನದ ಮೇರೆಗೆ ಭಾರತಕ್ಕೆ ಪ್ರತಿನಿಧಿ ಗಳನ್ನು ಕಳುಹಿಸುತ್ತಿರುವ ಇತರ ಪಕ್ಷಗಳಾಗಿವೆ. +ಈ ಭೇಟಿಯು ಬಿಜೆಪಿ ತಿಳಿಯಿರಿ ಜಾಗತಿಕ ಪ್ರಚಾರಾಂದೋಲನದ ಭಾಗವಾಗಿದೆ ಎಂದು ಪಕ್ಷದ ವಿದೇಶಾಂಗ ವ್ಯವಹಾರಗಳ ವಿಭಾಗವ ಉಸ್ತುವಾರಿ ವಿಜಯ್‌ ಚೌತಾಯಿವಾಲೆ ತಿಳಿಸಿದರು.ಕಳೆದ ವರ್ಷ ಬಿಜೆಪಿ 43ನೆ ಸಂಸ್ಥಾಪನಾ ದಿನದಂದು ನಡ್ಡಾ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. \ No newline at end of file diff --git a/eesanje/url_47_112_8.txt b/eesanje/url_47_112_8.txt new file mode 100644 index 0000000000000000000000000000000000000000..31f941fbc77daf94132338e7a0183158f973d298 --- /dev/null +++ b/eesanje/url_47_112_8.txt @@ -0,0 +1,6 @@ +ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ದಾಖಲೆಯ ಜಿಎಸ್‌ಟಿ ಸಂಗ್ರಹ +ನವದೆಹಲಿ, ಮೇ1– ದೇಶದ ಒಟ್ಟು ಜಿಎಸ್‌ಟಿ ಸಂಗ್ರಹವು ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ. ತಲುಪಿದೆ. ದೇಶೀಯ ವಹಿವಾಟುಗಳು ಮತ್ತು ಆಮದುಗಳಲ್ಲಿನ ಹೆಚ್ಚಳದಿಂದ ವರ್ಷಕ್ಕೆ 12.4 ಶೇಕಡಾ ಬೆಳವಣಿಗೆಯಾಗಿದೆ.2 ಲಕ್ಷ ಕೋಟಿ ರೂ.ಗಳ ಜಿಎಸ್‌ಟಿ ಸಂಗ್ರಹ ಒಂದು ಮೈಲಿಗಲ್ಲು ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. +ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹಗಳು ಏಪ್ರಿಲ್‌ 2024ರಲ್ಲಿ 2.10 ಲಕ್ಷ ಕೋಟಿ ರೂ.ಗಳಲ್ಲಿ ದಾಖಲೆಯ ಏರಿಕೆ ಕಂಡಿದೆ. ಇದು ದೇಶೀಯ ವಹಿವಾಟುಗಳಲ್ಲಿನ ಬಲವಾದ ಹೆಚ್ಚಳದಿಂದ (ಪ್ರತಿಶತ 13.4ರಷ್ಟು ಏರಿಕೆ) ವರ್ಷದಿಂದ ವರ್ಷಕ್ಕೆ ಗಮನಾರ್ಹವಾದ 12.4 ಶೇಕಡಾ ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಶೇ.) ಮತ್ತು ಆಮದು (ಶೇ. 8.3) ಎಂದು ಸಚಿವಾಲಯ ತಿಳಿಸಿದೆ. +ಕಳೆದ ವರ್ಷ 1.78 ಲಕ್ಷ ಕೋಟಿಗೂ ಅಧಿ ಕ ಸಂಗ್ರಹವಾಗಿದ್ದರೆ, 2023ರ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತ. ಮರುಪಾವತಿಯನ್ನು ಲೆಕ್ಕಹಾಕಿದ ನಂತರ, ಏಪ್ರಿಲ್‌ 2024ರ ನಿವ್ವಳ ಜಿಡಿಪಿ ಆದಾಯವು ರೂ 1.92 ಲಕ್ಷ ಕೋಟಿಗಳಷ್ಟಿತ್ತು, ಇದು ಕಳೆದ ವರ್ಷದ ಇದೇ ಅವಧಿ ಗೆ ಹೋಲಿಸಿದರೆ ಪ್ರಭಾವಶಾಲಿ 17.1 ಶೇಕಡಾ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ. +ಏಪ್ರಿಲ್‌ನಲ್ಲಿ ಕೇಂದ್ರ ಜಿಎಸ್‌ಟಿ ಸಂಗ್ರಹ 43,846 ಕೋಟಿ ರೂ. ರಾಜ್ಯ ಜಿಎಸ್‌ಟಿ 53,538 ಕೋಟಿ ರೂ. ಇಂಟಿಗ್ರೀಟೆಡ್‌ ಜಿಎಸ್‌ಟಿಯು 99,623 ಕೋಟಿ ರೂ.ಗಳಾಗಿದ್ದು, ಆಮದು ಮಾಡಿಕೊಂಡ ವಸ್ತುಗಳ ಮೇಲೆ ಸಂಗ್ರಹಿಸಲಾದ 37,826 ಕೋಟಿ ರೂ, ಆಮದು ಮಾಡಿಕೊಂಡ ವಸ್ತುಗಳ ಮೇಲೆ ಸಂಗ್ರಹವಾದ 1,008 ಕೋಟಿ ಸೇರಿದಂತೆ ಸೆಸ್‌ ಸಂಗ್ರಹವು 13,260 ಕೋಟಿ ರೂ.ಗಳಾಗಿವೆ. +0 \ No newline at end of file diff --git a/eesanje/url_47_112_9.txt b/eesanje/url_47_112_9.txt new file mode 100644 index 0000000000000000000000000000000000000000..5f126d284d57c67fbfd576e704a0c1b66b5183dd --- /dev/null +++ b/eesanje/url_47_112_9.txt @@ -0,0 +1,5 @@ +ಬಿಜೆಪಿ ಸೇರಿದ ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ +ನವದೆಹಲಿ,ಮೇ1-ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖಂಡರಾದ ವಿನೋದ್‌ ತಾವ್ಡೆ ಮತ್ತು ಅನಿಲ್‌ ಬಲುನಿ ಅವರ ಉಪಸ್ಥಿತಿಯಲ್ಲಿ ಇಂದು ಅವರು ಬಿಜೆಪಿಗೆ ಸೇರಿದ್ದಾರೆ. +ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ನೇತೃತ್ವದಲ್ಲಿ ದೇಶದಲ್ಲಿನ ಅಭಿವೃದ್ಧಿಯಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಅಭಿವೃದ್ಧಿಯ ಈ ಮಹಾಯಜ್ಞವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅನಿಸುತ್ತದೆ. ನಾನು ಏನೇ ಮಾಡಿದರೂ ಸರಿಯಾಗಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು ಎಂದು ಅವರು ಹೇಳಿದ್ದಾರೆ. +ಈ ಮಾರ್ಚ್‌ನಲ್ಲಿ ರೂಪಾಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು, ಬಳಿಕ ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನ, ಎಂದೂ ಮರೆಯಲು ಸಾಧ್ಯವಾಗದು, ಮೋದಿಯವರನ್ನು ಭೇಟಿಯಾಗುವ ಕನಸು ನನಸಾಯಿತು ಎಂದು ಬರೆದಿದ್ದರು. +ನಟರಾದ ಕಂಗನಾ ರಣಾವತ್‌, 6 ಬಾರಿ ಮಧ್ಯಪ್ರದೇಶದ ಶಾಸಕ ರಾಮ್‌ನಿವಾಸ್‌ ರಾವತ್‌ ಮತ್ತು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ತಜೀಂದರ್‌ಭಿಟ್ಟು ಈ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. \ No newline at end of file diff --git a/eesanje/url_47_113_1.txt b/eesanje/url_47_113_1.txt new file mode 100644 index 0000000000000000000000000000000000000000..6fcb1a927bb8dc852751657b3703604eff7dd3f1 --- /dev/null +++ b/eesanje/url_47_113_1.txt @@ -0,0 +1,5 @@ +ದೆಹಲಿಯ ಶಾಲೆಗಳಿಗೆ ಬಾಂಬ್‌ ಬೆದರಿಕೆ +ನವದೆಹಲಿ , ಮೇ 1-ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಐದು ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದು ವಿದ್ಯಾರ್ಥಿಗಳು, ಶಿಕ್ಚಕರು ಹಾಗು ಪೋಷಕಎಲದಲಿ ಭೀತಿ ಆವರಿಸಿದೆ. +ಮಯೂರ್‌ ವಿಹಾರ್‌ನಲ್ಲಿರುವ ಮದರ್‌ ಮೇರಿ ಶಾಲೆ, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್‌ ಸ್ಕೂಲ್‌‍, ಚಾಣಕ್ಯಪುರಿಯ ಸಂಸ್ಕೃತಿ ಶಾಲೆ, ವಸಂತ್‌ ಕುಂಜ್‌ನಲ್ಲಿರುವ ದೆಹಲಿ ಪಬ್ಲಿಕ್‌ ಸ್ಕೂಲ್‌ ಮತ್ತು ಸಾಕೇತ್‌ನ ಅಮಿಟಿ ಸ್ಕೂಲ್‌ಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎಂದು ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. +ಇಮೇಲ್‌ಗಳ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಎಲ್ಲಾ ಐದು ಶಾಲೆಗಳಿಗೆ ಬಾಂಬ್‌ ಪತ್ತೆ ತಂಡ, ಬಾಂಬ್‌ ನಿಷ್ಕ್ರಿಯ ದಳ ಮತ್ತು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ಶಾಲೆಗೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. +ಇನ್ನು ಹೆಚ್ಚಿನ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಮೇಲ್‌ ಬಂದಿದೆ ಎಂದು ಹೇಳಲಾಗಿದ್ದು, ಇದರ ಹಿಂದೆ ಒಬ್ಬ ವ್ಯಕ್ತಿಯ ಕೈವಾಡವಿದೆ ಎಂದು ಶಂಕಿಸಲಾಗಿದೆ ದೆಹಲಿ ಪೊಲೀಸ್‌‍ ವಿಶೇಷ ಸೆಲ್‌ ಸೇರಿದಂತೆ ಭದ್ರತಾ ಸಂಸ್ಥೆಗಳು ಇಮೇಲ್‌ನ ಮೂಲವನ್ನು ಹುಡುಕುತ್ತಿದೆ. \ No newline at end of file diff --git a/eesanje/url_47_113_10.txt b/eesanje/url_47_113_10.txt new file mode 100644 index 0000000000000000000000000000000000000000..2ba933639676acbb5e294ea6689263b5a17809f2 --- /dev/null +++ b/eesanje/url_47_113_10.txt @@ -0,0 +1,6 @@ +ಮತದಾನ ಹೆಚ್ಚಳಕ್ಕೆ ಬಿಜೆಪಿ ಪ್ಲಾನ್‌ +ನವದೆಹಲಿ,ಏ.29-ಮೊದಲನೇ ಮತ್ತು ಎರಡನೇ ಹಂತದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮತದಾನವಾಗದ ಹಿನ್ನೆಲೆ, ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಮುಂಬರುವ ಹಂತಗಳಲ್ಲಿ ಮತದಾರರನ್ನು ಮತಗಟ್ಟೆಗೆ ಕರೆತಂದು ಮತ ಚಲಾಯಿಸಲು ಪ್ರೇರೇಪಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದೆ. +ನಮ್ಮ ನಿರೀಕ್ಷೆಗೆ ತಕ್ಕಂತೆ ಮೊದಲನೇ ಮತ್ತು 2ನೇ ಹಂತದಲ್ಲಿ ಶೇಕಡವಾರು ಮತದಾನವಾಗಿಲ್ಲ. ಆಡಳಿತ ವಿರೋಧಿ ಅಲೆ ಇಲ್ಲ ಎಂದು ಕೈಕಟ್ಟಿ ಕೂರುವ ಬದಲು ಮತಗಟ್ಟೆಗೆ ಮತದಾರರನ್ನು ಕರೆತಂದು ಮತ ಚಲಾಯಿಸುವಂತೆ ಪ್ರೇರಿಪಿಸಲು ಮುಂದಾಗಬೇಕೆಂದು ಕಾರ್ಯಕರ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. +ಏಳು ಹಂತದ ಲೋಕಸಭೆ ಚುನಾವಣೆಗಳಲ್ಲಿ ಮೊದಲೆರಡು ಚುನಾವಣೆಗಳಲ್ಲಿ ಮತದಾರರ ಸಂಖ್ಯೆಯಲ್ಲಿನ ಕುಸಿತದಿಂದ ಬಿಜೆಪಿ ಕಳವಳಗೊಂಡಿದೆ ಎಂದು ತಿಳಿದುಬಂದಿದೆ. ಪಕ್ಷದ ಪ್ರಮುಖರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮತದಾರರನ್ನು ಪ್ರೀರೇಪಿಸುವ ಕಾರ್ಯವನ್ನು ತೀವ್ರಗೊಳಿಸಬೇಕೆಂದು ಸೂಚಿಸಿದ್ದಾರೆ. +ಒಂದೆಡೆ, ಪಕ್ಷವು ಅದರ ವಿರುದ್ಧ ಯಾವುದೇ ಆಡಳಿತ ವಿರೋಧಿ ಇಲ್ಲ ಎಂದು ಹೇಳುತ್ತದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ. ಆದರೆ ಮತ್ತೊಂದೆಡೆ, 543 ಸದಸ್ಯರ ಲೋಕಸಭೆಯಲ್ಲಿ 400 ಪ್ಲಸ್‌ ಸೀಟುಗಳನ್ನು ಗೆಲ್ಲುವ ಮತ್ತು ಮತದ ಪ್ರಮಾಣವನ್ನು ಶೇ.50ರಷ್ಟು ಹೆಚ್ಚಿಸುವ ಗುರಿಯ ಮೇಲೆ ಮತದಾರರ ಮತದಾನದ ಕುಸಿತವು ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಿದೆ. +ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಚಾರದಲ್ಲಿ ಯಾವುದೇ ಸಡಿಲಿಕೆ ಇಲ್ಲ ಮತ್ತು ಬೂತ್‌ ಕಾರ್ಯಕರ್ತರನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ನಡೆಸುವ ಬದಲು ಮತಗಟ್ಟೆಗೆ ಕರೆತರಬೇಕು, ಮತ ಪ್ರಮಾಣ ಹೆಚ್ಚಾದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದೆ. \ No newline at end of file diff --git a/eesanje/url_47_113_11.txt b/eesanje/url_47_113_11.txt new file mode 100644 index 0000000000000000000000000000000000000000..18880c8bc4bf9f771991203073c376ee2e2eae52 --- /dev/null +++ b/eesanje/url_47_113_11.txt @@ -0,0 +1,10 @@ +ನಾಮಪತ್ರ ಹಿಂಪಡೆದ ಇಂದೋರ್‌ನ ಕಾಂಗ್ರೆಸ್‌ ಅಭ್ಯರ್ಥಿ +ಭೂಪಾಲ್‌,ಏ.29-ಕಾಂಗ್ರೆಸ್‌ಗೆ ಗುಜರಾತ್‌ನಂತೆ ಮತ್ತೆ ಮುಖಭಂಗವಾಗಿದ್ದು, ಮಧ್ಯಪ್ರದೇಶದ ಇಂದೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಾಂತಿಬಾಮ್‌ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. +ಮತದಾನಕ್ಕೆ ಇನ್ನು 15 ದಿನಗಳ ಸಮಯ ಅವಕಾಶ ಇರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಕಾಂಗ್ರೆಸ್‌ಗೆ ಭಾರೀ ಮರ್ಮಾಘಾತವಾಗಿದೆ. ಮೂಲಗಳ ಪ್ರಕಾರ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ. ಇಂದೋರ್‌ ಜಿಲ್ಲಾಧಿಕಾರಿ ಅಶಿಶ್‌ ಸಿಂಗ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಾಂತಿಬಾಮ್‌ ಅವರು ನಾಮಪತ್ರ ಹಿಂಪಡೆದಿರುವುದನ್ನು ಖಚಿತಪಡಿಸಿದ್ದಾರೆ. +ಈ ಮೂಲಕ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಬಿಜೆಪಿಯು ಮಾಜಿ ಸಂಸದ ಶಂಕರ್‌ ಲಲ್ವಾನಿ ಅವರ ಹಾದಿಯನ್ನು ಸುಗಮಗೊಳಿಸಿದ್ದಾರೆ. ಒಂದು ವೇಳೆ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದರೆ ಲಲ್ವಾನಿ ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ. ಮಧ್ಯಪ್ರದೇಶ ಸಚಿವ ಹಾಗೂ ಬಿಜೆಪಿ ನಾಯಕ ಕೈಲಾಶ್‌ ವಿಜಯ ವರ್ಗೀಯ ಅವರ ಜೊತೆ ಇರುವ ಕಾಂಗ್ರೆಸ್‌ ಅಭ್ಯರ್ಥಿಯ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪಕ್ಷಕ್ಕೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ. +ಸ್ಥಳೀಯ ಬಿಜೆಪಿ ಶಾಸಕ ರಮೇಶ್‌ ಮೆಂಡೋಲ ಕೂಡ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕಾಂಗ್ರೆಸ್‌ನ ಇಂದೋರ್‌ ಅಭ್ಯರ್ಥಿ ಅಕ್ಷಯ್‌ ಕಾಂತಿಬಾಮ್‌ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ ಎಂದು ಕೈಲಾಶ್‌ ವಿಜ!ಯ ವರ್ಗೀಯ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. +ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಮೋಹನ್‌ ಯಾದವ್‌ ಮತ್ತು ರಾಜ್ಯಾಧ್ಯಕ್ಷ ವಿ.ಡಿ.ಶರ್ಮಾ ನೇತೃತ್ವದಲ್ಲಿ ಇಂದೋರ್‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಕ್ಷಯ್‌ ಕಾಂತಿಬಾಮ್‌ ಅವರನ್ನು ಬಿಜೆಪಿಗೆ ಸ್ವಾಗತಿಸಲಾಗಿದೆ ಎಂದು ಅವರು ಪೋಸ್ಟ್ ನಲ್ಲಿ ತಿಳಿಸಿದ್ದಾರೆ. +ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆದಿರುವುದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ ಇಂದೋರ್‌ನ ಪತ್ರಕರ್‌ ಕಾಲೋನಿಯಲ್ಲಿರುವ ಕಾಂತಿಬಾಮ್‌ ಅವರ ನಿವಾಸಕ್ಕೆ ಹೆಚ್ಚಿನ ಪೊಲೀಸ್‌ ಭದ್ರತೆಯನ್ನು ನಿಯೋಜಿಸಲಾಗಿದೆ. +ಸ್ಥಳೀಯ ಕಾಂಗ್ರೆಸ್‌ ಕಾರ್ಯಕರ್ತರು ದೌಡಾಯಿಸಿದ್ದು, ನಾಮಪತ್ರ ಹಿಂಪಡೆದಿರುವ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಬಹುದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ.ಇಂದೋರ್‌ ಲೋಕಸಭಾ ಕ್ಷೇತ್ರವು ಮಧ್ಯಪ್ರದೇಶದಲ್ಲಿ ಅತಿದೊಡ್ಡ ಕ್ಷೇತ್ರವಾಗಿದೆ. ಇದು ಬಿಜೆಪಿಯ ಭದ್ರಕೋಟೆಯಾಗಿದ್ದು, ಲೋಕಸಭೆಯ ಮಾಜಿ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸತತವಾಗಿ ಎಂಟು ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದರು. +ಗುಜರಾತ್‌ನ ಸೂರತ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನೀಲೇಶ್‌ ಕುಂಬಾನಿಯವರ ನಾಮಪತ್ರವು ತಾಂತ್ರಿಕ ಕಾರಣಗಳಿಂದ ತಿರಸ್ಕೃತಗೊಂಡಿತ್ತು. ನಾಮಪತ್ರದಲ್ಲಿ ಸೂಚಕರಾಗಿ ಸಹಿ ಹಾಕಿದ್ದ ಮೂವರ ಹೆಸರು ನಕಲಿ ಎಂದು ಸಾಬೀತಾದ ಹಿನ್ನಲೆಯಲ್ಲಿ ಆಯೋಗ ನಾಮಪತ್ರವನ್ನು ತಿರಸ್ಕರಿಸಿತ್ತು. ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು. +ಮತ್ತೊಂದು ಬೆಳವಣಿಗೆಯಲ್ಲಿ ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಯುವ ಮುನ್ನವೆ ಬಿಜೆಡಿಯ ಸೋರು ಶಾಸಕ ಪರಶುರಾಮ್‌ ದಾಡ ಬಿಜೆಪಿಗೆ ಸೇರ್ಪಡೆಯಾಗಿದ್ದರು. \ No newline at end of file diff --git a/eesanje/url_47_113_12.txt b/eesanje/url_47_113_12.txt new file mode 100644 index 0000000000000000000000000000000000000000..9657bcc90f26b73f9c2f397f81addcb491a5a248 --- /dev/null +++ b/eesanje/url_47_113_12.txt @@ -0,0 +1,7 @@ +ಪಶ್ಚಿಮ ಬಂಗಾಳದ ದೀದಿ ಸರ್ಕಾರಕ್ಕೆ ಸುಪ್ರೀಂ ಛೀಮಾರಿ +ನವದೆಹಲಿ,ಏ.29-ಸಂದೇಶಖಾಲಿ ಪ್ರಕರಣದ ಸಿಬಿಐ ತನಿಖೆಯನ್ನು ವಿರೋಧಿಸಿದ್ದಕ್ಕಾಗಿ ಸುಪ್ರೀಂಕೋರ್ಟ್‌ ಇಂದು ಪಶ್ಚಿಮ ಬಂಗಾಳ ಸರ್ಕಾರವನ್ನು ಛೀಮಾರಿ ಹಾಕಿದೆ. ಒಬ್ಬ ವ್ಯಕ್ತಿಯ ಹಿತಾಸಕ್ತಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು ಹೇಗೆ ಉನ್ನತ ನ್ಯಾಯಾಲಯವನ್ನು ಸಂಪರ್ಕಿಸುತ್ತದೆ ಎಂದು ಪ್ರಶ್ನಿಸಿದೆ. +ಸಿಬಿಐ ತನಿಖೆಗೆ ನಿರ್ದೇಶಿಸುವ ಹೈಕೋರ್ಟ್‌ನ ಆದೇಶಕ್ಕೆ ಯಾವುದೇ ತಡೆಯಾಜ್ಞೆ ನೀಡಲು ನ್ಯಾಯಾಲಯ ನಿರಾಕರಿಸಿತು ಮತ್ತು ಆ ವ್ಯಕ್ತಿಯ ಹಿತಾಸಕ್ತಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಅನ್ನು ಹೇಗೆ ಸಂಪರ್ಕಿಸಬಹುದು? ಎಂದು ಪ್ರಶ್ನಿಸಿದೆ. +ತೃಣಮೂಲದ ಮಾಜಿ ನಾಯಕ ಶೇಖ್‌ ಶಹಜಾನಾ ಅವರು ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ, ಏಪ್ರಿಲ್‌ 10 ರ ಹೈಕೋರ್ಟ್‌ನ ಆದೇಶವು ಪೊಲೀಸ್‌ ಪಡೆ ಸೇರಿದಂತೆ ಇಡೀ ರಾಜ್ಯದ ಆಡಳಿತ ಯಂತ್ರವನ್ನು ನಿತ್ರಾಣಗೊಳಿಸಿದೆ ಎಂದು ಹೇಳಿದೆ. +ಯಾವುದೇ ಮಾರ್ಗಸೂಚಿಗಳಿಲ್ಲದೆ ಸಿಬಿಐಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಂತೆ ಹೈಕೋರ್ಟ್‌ ಅತ್ಯಂತ ಸಾಮಾನ್ಯ ಆದೇಶದಲ್ಲಿ ರಾಜ್ಯಕ್ಕೆ ನಿರ್ದೇಶಿಸಿದೆ, ಇದು ಸಂದೇಶಖಾಲಿ ಪ್ರದೇಶದಲ್ಲಿ ಯಾವುದೇ ಕಾಗ್ನಿಸೆಬಲ್‌ ಅಪರಾಧವನ್ನು ತನಿಖೆ ಮಾಡಲು ರಾಜ್ಯ ಪೊಲೀಸರ ಅಧಿ ಕಾರವನ್ನು ಕಸಿದುಕೊಳ್ಳುತ್ತದೆ, ಅದು ಇಲ್ಲದಿದ್ದರೂ ಸಹ ಅರ್ಜಿದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದೆ ಎಂದು ಮನವಿಯಲ್ಲಿ ವಾದಿಸಿದರು. +ಬೇಸಿಗೆ ರಜೆಯ ನಂತರ ವಿಚಾರಣೆ ಪುನರಾರಂಭವಾದಾಗ ಉನ್ನತ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಲಿದೆ.ಈಗಾಗಲೇ ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿ ಕಾರಿಗಳ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ, ಕೃಷಿ ಭೂಮಿಯನ್ನು ಅಕ್ರಮವಾಗಿ ಜಲಮೂಲಗಳಾಗಿ ಪರಿವರ್ತಿಸಿದ ಆರೋಪದ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಮತ್ತು ಅಪರಾಧಗಳ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಹೈಕೋರ್ಟ್‌ ಸೂಚಿಸಿದೆ. +ಮಹಿಳೆಯರು ಮತ್ತು ಭೂ ಕಬಳಿಕೆ ವಿರುದ್ಧ. ಮೇ 2ರಂದು ನಡೆಯುವ ಮುಂದಿನ ವಿಚಾರಣೆಗೂ ಮುನ್ನ ಸಮಗ್ರ ವರದಿ ಸಲ್ಲಿಸುವಂತೆ ಅಧಿ ಕಾರಿಗಳಿಗೆ ಸೂಚಿಸಲಾಗಿದೆ. \ No newline at end of file diff --git a/eesanje/url_47_113_2.txt b/eesanje/url_47_113_2.txt new file mode 100644 index 0000000000000000000000000000000000000000..334f631fd994eb3e6db983cc6f9e0b9cab1502ea --- /dev/null +++ b/eesanje/url_47_113_2.txt @@ -0,0 +1,8 @@ +ಪೆನ್ ಡ್ರೈವ್ ಪ್ರಕರಣ : 3 ದಿನದೊಳಗೆ ಸಮಗ್ರ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ +ನವದೆಹಲಿ,ಏ.30-ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ಹಗರಣ ಮತ್ತು ಮಹಿಳೆಯರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣ ಕುರಿತಂತೆ ಪೊಲೀಸರು ತೆಗೆದುಕೊಂಡಿರುವ ಕ್ರಮಗಳ ಕುರಿತು ಮೂರು ದಿನಗಳ ಒಳಗೆ ಸಮಗ್ರ ವರದಿ ನೀಡಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. +ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮ ಅವರು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕ ಹಾಗೂ ಇನ್‌ಸ್ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ಅಲೋಕ್‌ ಮೋಹನ್‌ ಅವರಿಗೆ ಪತ್ರ ಬರೆದಿದ್ದು, ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದ ಆರೋಪಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ವಿವರವಾದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸಬೇಕೆಂದು ಸೂಚಿಸಿದ್ದಾರೆ. +ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಆಯೋಗವು ಇಂತಹ ಘಟನೆಗಳು ಮಹಿಳೆಯರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವುದಲ್ಲದೆ ಅವರ ವಿರುದ್ಧ ಅಗೌರವ ಮತ್ತು ಹಿಂಸಾ ಸಂಸ್ಕೃತಿಯನ್ನು ಬೆಳೆಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. +ಪ್ರಕರಣ ಕೇಳಿಬಂದ ನಂತರ ಆರೋಪಿ ಸ್ಥಾನದಲ್ಲಿರುವವರು ದೇಶ ಬಿಟ್ಟು ಹೊರ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಪರಾರಿಯಾಗಿರುವ ಆರೋಪಿಯನ್ನು ಶೀಘ್ರವಾಗಿ ಬಂಧಿಸಲು ಸಂಬಂಧಪಟ್ಟ ಪೊಲೀಸ್‌ ಪ್ರಾಧಿಕಾರದಿಂದ ತ್ವರಿತ ಮತ್ತು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರಕರಣವನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. +ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪಗಳು ಅತ್ಯಂತ ಗಂಭೀರವಾಗಿವೆ. ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದು ಮಹಿಳೆಯರ ಘನತೆಗೆ ಕುತ್ತು ತಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. +ಡಿಯೋಗಳು ವೈರಲ್‌ ಆಗದಂತೆ ತಡೆಯಿರಿ. ವಿಡಿಯೋ ಲೀಕ್‌ ಮಾಡಿದ್ದು ಯಾರು? ಎಲ್ಲಿಂದ ಲೀಕ್‌ ಮಾಡಿದ್ದಾರೆ? ಎಂಬುದನ್ನು ಪತ್ತೆ ಮಾಡಬೇಕು. ಪ್ರಕರಣವನ್ನು ಕ್ರಿಮಿನಲ್‌ ಮೊಕದ್ದಮೆಯಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ. ಇನ್ನು ಮಹಿಳಾ ಆಯೋಗ ಸೈಬರ್‌ ಕ್ರೈಂ ಜೊತೆ ಸಭೆ ನಡೆಸಿದ್ದು, ವಿಡಿಯೋ ವೈರಲ್‌ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ. ವಿಡಿಯೋಗಳು ಹೆಚ್ಚು ಶೇರ್‌ ಆಗದಂತೆ ತಡೆಯಿರಿ ಎಂದು ಹೇಳಿದೆ. +ಮಹಿಳೆಯರ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಂದು ಸರ್ಕಾರದ ಆದ್ಯಕರ್ತವ್ಯ. ಈ ಹಿನ್ನಲೆಯಲ್ಲಿ ತಪ್ಪಿತಸ್ಥ ಆರೋಪಿ ಪ್ರಜ್ವಲ್‌ ವಿರುದ್ಧ ಪೊಲೀಸರು ಈವರೆಗೂ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಆಯೋಗಕ್ಕೆ ಮೂರು ದಿನದೊಳಗೆ ವಿಸ್ತೃತ ವರದಿ ನೀಡಬೇಕೆಂದು ರೇಖಾ ಶರ್ಮ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಬರೆದಿರುವ ಪತ್ರದಲ್ಲಿ ಸೂಚನೆ ಕೊಟ್ಟಿದ್ದಾರೆ. \ No newline at end of file diff --git a/eesanje/url_47_113_3.txt b/eesanje/url_47_113_3.txt new file mode 100644 index 0000000000000000000000000000000000000000..7b2f34311e15a5cdf5ecb3e8254eb2ca58b47ac5 --- /dev/null +++ b/eesanje/url_47_113_3.txt @@ -0,0 +1,5 @@ +ಇಂಡೋ-ಮಯನ್ಮಾರ್ ಗಡಿಯಲ್ಲಿ ಭಾರಿ ಶಸ್ತ್ರಾಸ್ತ್ರ ಪತ್ತೆ +ಇಟಾನಗರ,ಏ.30-ನಾಗಾಲ್ಯಾಂಡ್‌ನ ಮೋನ್‌ ಜಿಲ್ಲೆಯ ಇಂಡೋ-ಮಯನ್ಮಾರ್ ಗಡಿಯ ಸಮೀಪ ಆಸ್ಸಾಂ ರೈಫಲ್ಸ್ ಪಡೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಗಳನ್ನು ವಶಪಡಿಸಿಕೊಂಡಿದೆ. ಗಡಿ ಪ್ರದೇಶದ ಬಳಿ ಶಸ್ತ್ರಾಸ್ತ್ರಗಳ ಬಗ್ಗೆ ಒಳಹರಿವಿನ ಬಗ್ಗೆ ಬಂದ ಖಚಿತ ಮಾಹಿತಿಯನ್ನಾಧರಿಸಿ ಅಸ್ಸಾಂ ರೈಫಲ್ಸ್‌‍ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದವು. +ಈ ಸಂದರ್ಭದಲ್ಲಿ 11 ಮಾರ್ಟರ್‌ ಟ್ಯೂಬ್‌ಗಳು ((82 ಮಿಮೀ), 04 ಟ್ಯೂಬ್‌ಗಳು (106 ಮಿಮೀ), 10 ಪಿಸ್ತೂಲ್‌ಗಳು, 198 ಹ್ಯಾಂಡ್‌ ಹೆಲ್ಡ್‌‍ ರೇಡಿಯೊವನ್ನು ಒಳಗೊಂಡಿರುವ ಸೆಟ್‌ಗಳು ಮತ್ತು ಒಂದು ಉಪಗ್ರಹ ಫೋನ್‌ ಅಪಾರ ಪ್ರಮಾಣದ ಶಸಾ್ತ್ರಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡವು. +ಶೋಧ ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್‌‍ ಒಂದು ಕೆನ್ಬೋ ಬೈಕ್‌‍, ಒಂದು ಬೊಲೆರೊ ವಾಹನ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ. ದಾಳಿಯ ವೇಳೆ ಸೈನಿಕರು ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಿದ್ದಾರೆ. ವಶಪಡಿಸಿಕೊಂಡ ವಸ್ತುಗಳು ಮತ್ತು ಬಂಧಿತ ವ್ಯಕ್ತಿಯನ್ನು ನಾಗಾಲ್ಯಾಂಡ್‌ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. +ಬಾರ್ಡರ್‌ ಸೀಲಿಂಗ್‌ನ ಭಾಗವಾಗಿ ಅಸ್ಸಾಂ ರೈಫಲ್ಸ್ ನ ಯಶಸ್ವಿ ಕಾರ್ಯಾಚರಣೆಯು ಈ ಪ್ರದೇಶದಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ಕೈಗೊಳ್ಳಲು ಶತ್ರು ಅಂಶಗಳ ಕೆಟ್ಟ ವಿನ್ಯಾಸಗಳಿಗೆ ದೊಡ್ಡ ಹೊಡೆತವನ್ನು ನೀಡಿದೆ ಎಂದು ಸ್ಪಿಯರ್‌ ಕಾರ್ಪ್ಸ್‌ ಎಕ್ಸ್ ನಲ್ಲಿ ಹೇಳಿದೆ. \ No newline at end of file diff --git a/eesanje/url_47_113_4.txt b/eesanje/url_47_113_4.txt new file mode 100644 index 0000000000000000000000000000000000000000..f97ddc9be6ab221eab3c74d49451bb07a57cbba3 --- /dev/null +++ b/eesanje/url_47_113_4.txt @@ -0,0 +1,5 @@ +ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ ; ಜೈರಾಮ್ ರಮೇಶ್‌ +ನವದೆಹಲಿ, ಏ. 30 (ಪಿಟಿಐ) :ಸೂರತ್‌ ಮತ್ತು ಇಂದೋರ್‌ ಎರಡರಲ್ಲೂ ತನ್ನ ಅಭ್ಯರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ನಾಮಪತ್ರ ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. +ಬಿಜೆಪಿ ಭದ್ರಕೋಟೆಯಾಗಿರುವ ಸೂರತ್‌ ಮತ್ತು ಇಂದೋರ್‌ನಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ಅಷ್ಟು ಆತಂಕ ಮತ್ತು ಭಯಪಡುತ್ತಿದ್ದಾರೆ ಎಂದು ಕಾಂಗ್ರೆಸ್‌‍ ಪ್ರಶ್ನಿಸಿದೆ. ಕಾಂಗ್ರೆಸ್‌‍ನ ಇಂದೋರ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಷಯ್‌ ಬಾಮ್‌ ಕ್ಷೇತ್ರದಲ್ಲಿ ಮತದಾನಕ್ಕೆ ಹದಿನೈದು ದಿನಗಳ ಮೊದಲು ತಮ ನಾಮಪತ್ರವನ್ನು ಹಿಂಪಡೆದಿದ್ದಾರೆ. +ಇದಕ್ಕೂ ಮೊದಲು, ಕಾಂಗ್ರೆಸ್‌‍ನ ಸೂರತ್‌ ಅಭ್ಯರ್ಥಿಯ ನಾಮಪತ್ರವನ್ನು ಭಿನ್ನಾಭಿಪ್ರಾಯಗಳ ಮೇಲೆ ತಿರಸ್ಕರಿಸಲಾಯಿತು, ಇದು ಗುಜರಾತ್‌ನ ಸ್ಥಾನದಿಂದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲು ದಾರಿ ಮಾಡಿಕೊಟ್ಟಿತು. + ನಲ್ಲಿನ ಪೋಸ್ಟ್‌ನಲ್ಲಿ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು, 1984 ರಿಂದ ಕಾಂಗ್ರೆಸ್‌‍ ಸೂರತ್‌ ಮತ್ತು ಇಂದೋರ್‌ ಲೋಕಸಭಾ ಕ್ಷೇತ್ರಗಳನ್ನು ಗೆದ್ದಿಲ್ಲ. ಆದರೂ 2024 ರಲ್ಲಿ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗಳನ್ನು ಬೆದರಿಸಿ ತಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಪ್ರೇರಿಪಿಸಲಾಗಿದೆ ಎಂದು ಆರೋಪಿಸಿದ್ದಾರೆ. ಸಾಂಪ್ರದಾಯಿಕ ಬಿಜೆಪಿ ಭದ್ರಕೋಟೆಗಳಲ್ಲಿಯೂ ಪ್ರಧಾನಿ ಏಕೆ ಭಯಪಡುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_47_113_5.txt b/eesanje/url_47_113_5.txt new file mode 100644 index 0000000000000000000000000000000000000000..22a889487af38ff4f7d0a8fc2e94a9273e8acd01 --- /dev/null +++ b/eesanje/url_47_113_5.txt @@ -0,0 +1,7 @@ +ಅಮೇಥಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಡೌಟ್ +ನವದೆಹಲಿ,ಏ.30-ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳು ಕ್ಷೀಣಿಸಿವೆ. +ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ಬರೇಲಿ ಎರಡೂ ಮೇ 20ರಂದು ಚುನಾವಣೆ ನಡೆಯಲಿದೆ. ಈ ಎರಡೂ ಲೋಕಸಭಾ ಕ್ಷೇತ್ರಗಳಿಂದ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಎಐಸಿಸಿ ಗಂಭೀರವಾಗಿ ಚಿಂತನೆ ನಡೆಸಿತ್ತು. +ಆದರೆ ಇದೀಗ ಈ ವದಂತಿಗಳಿಗೆ ತೆರೆಬಿದ್ದಿದು ಪ್ರಿಯಾಂಕ ವಾದ್ರಾ ಅವರು ರಾಯ್‌ಬರೇಲಿಯಿಂದ ಸ್ಪರ್ಧೆ ಮಾಡದೆ ಕೇವಲ ಚುನಾವಣಾ ಪ್ರಚಾರವನ್ನು ನಡೆಸಲು ಸಮ್ಮತಿಸಿದ್ದಾರೆಂದು ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅಮೇಥಿ ಅಥವಾ ರಾಯ್ಬರೇಲಿಯಿಂದ ಸ್ಪರ್ಧಿಸುವ ಬಗ್ಗೆ ಅಂತಿಮ ನಿರ್ಧಾರವನ್ನು 24 ಗಂಟೆಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಎಐಸಿಸಿ ಮೂಲಗಳು ಖಚಿತಪಡಿಸಿವೆ. +ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅಮೇಥಿ ಮತ್ತು ರಾಯ್‌ಬರೇಲಿ ಅಭ್ಯರ್ಥಿಗಳನ್ನಾಗಿ ಮಾಡಲು ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಚಿಸಲಾಗಿದೆ. +ಸಭೆಯಲ್ಲಿ ಉತ್ತರಪ್ರದೇಶದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪಕ್ಷದ ಅಭ್ಯರ್ಥಿ ಮಾಡಬೇಕೆಂದು ಬಲವಾದ ಒತ್ತಡ ಬಂದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ, ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು 2004ರಿಂದ 2014ರವರೆಗೆ ಪ್ರತಿನಿಧಿಸಿದ್ದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಲ್ಲಿ ರಾಹುಲ್‌ ಗಾಂಧಿಯನ್ನು ಪರಾಭವಗೊಳ್ಳಿಸಿದ್ದರು. +ಏಪ್ರಿಲ್‌ 26ರಂದು ಚುನಾವಣೆ ನಡೆದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ರಾಹುಲ್‌ಗಾಂಧಿ ಎರಡನೇ ಅವಧಿ ಗೆ ಸ್ಪರ್ಧಿಸುತ್ತಿದ್ದಾರೆ.ಏತನ್ಮಧ್ಯೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಸ್ಥಳಾಂತರಗೊಂಡ ಕಾರಣ ಈ ತಿಂಗಳ ಆರಂಭದಲ್ಲಿ 2004 ರಿಂದ ಪ್ರತಿನಿಧಿಸುತ್ತಿದ್ದ ರಾಯ್ಬರೇಲಿ ಸ್ಥಾನವನ್ನು ತೆರವು ಮಾಡಿದರು. \ No newline at end of file diff --git a/eesanje/url_47_113_6.txt b/eesanje/url_47_113_6.txt new file mode 100644 index 0000000000000000000000000000000000000000..4beeb0c243c52c4c5bff520ddce011a288a80e9e --- /dev/null +++ b/eesanje/url_47_113_6.txt @@ -0,0 +1,7 @@ +ಪನ್ನುನ್‌ ಹತ್ಯೆಗೆ ಹಿಟ್‌ ತಂಡ ನೇಮಿಸಿಕೊಂಡಿದ್ದಾರೆಂಬುದು ಆಧಾರರಹಿತ : ಭಾರತ +ನವದೆಹಲಿ,ಏ.30-ಅಮೆರಿಕ ಮೂಲದ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್‌ ಸಿಂಗ್‌ ಪನ್ನೂನ್‌ನನ್ನು ಕೊಲ್ಲಲು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಹಿಟ್‌ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ದಿ ವಾಷಿಂಗ್ಟನ್‌ ಪೋಸ್ಟ್‌ ಮಾಡಿರುವ ಆರೋಪಗಳನ್ನು ಭಾರತವು ಅನರ್ಜಿ ಮತ್ತು ಆಧಾರರಹಿತ ಎಂದು ತಳ್ಳಿಹಾಕಿದೆ. +ಈ ವರದಿಯು ಪನ್ನುನ್‌ನನ್ನು ಕೊಲ್ಲುವ ಕಾರ್ಯಾಚರಣೆಯನ್ನು ಭಾರತದ ಬೇಹುಗಾರಿಕಾ ಸಂಸ್ಥೆ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗದ (ರಾ ) ಮುಖ್ಯಸ್ಥ ಸಮಂತ್‌ ಗೋಯೆಲ್‌ ಅನುಮೋದಿಸಿದ್ದಾರೆ ಎಂದು ಯುಎಸ್‌‍ ಗುಪ್ತಚರ ಸಂಸ್ಥೆಗಳು ಮೌಲ್ಯಮಾಪನ ಮಾಡಿವೆ. ಪ್ರಶ್ನೆಯಲ್ಲಿರುವ ವರದಿಯು ಗಂಭೀರ ವಿಷಯದ ಮೇಲೆ ಅನಗತ್ಯ ಮತ್ತು ಆಧಾರರಹಿತ ಆರೋಪಗಳನ್ನು ಮಾಡುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಸಂಘಟಿತ ಅಪರಾಧಿಗಳು, ಭಯೋತ್ಪಾದಕರು ಮತ್ತು ಇತರರ ನೆಟ್‌ವರ್ಕ್‌ಗಳಲ್ಲಿ ಯುಎಸ್‌‍ ಸರ್ಕಾರವು ಹಂಚಿಕೊಂಡಿರುವ ಭದ್ರತಾ ಕಾಳಜಿಗಳನ್ನು ಪರಿಶೀಲಿಸಲು ಭಾರತ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಸಮಿತಿಯ ತನಿಖೆ ನಡೆಯುತ್ತಿದೆ ಎಂದು ಜೈಸ್ವಾಲ್‌ ಹೇಳಿದರು. ಅದರ ಬಗ್ಗೆ ಊಹಾತಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಪ್ರಯೋಜನಕಾರಿಯಲ್ಲ ಎಂದು ಅವರು ಹೇಳಿದರು. +ಭಯೋತ್ಪಾದಕರು ಬೇರೆ ದೇಶಗಳಿಗೆ ಪರಾರಿಯಾಗಿದ್ದರೂ ಅವರನ್ನು ಹಿಂಬಾಲಿಸುವುದಾಗಿ ಭಾರತ ಇತ್ತೀಚಿನ ದಿನಗಳಲ್ಲಿ ಸೂಚಿಸಿದೆ. ಪಾಕಿಸ್ತಾನದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದ ನಂತರ ಗಡಿಯಿಂದ ತಪ್ಪಿಸಿಕೊಳ್ಳುವವರನ್ನು ಕೊಲ್ಲಲು ಭಾರತವು ಪಾಕಿಸ್ತಾನವನ್ನು ಪ್ರವೇಶಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದರು. +ಉಗ್ರು ಪಾಕಿಸ್ತಾನಕ್ಕೆ ಓಡಿಹೋದರೆ, ಅವರನ್ನು ಕೊಲ್ಲಲು ನಾವು ಪಾಕಿಸ್ತಾನವನ್ನು ಪ್ರವೇಶಿಸುತ್ತೇವೆ ಎಂದು ಸಿಂಗ್‌ ಹೇಳಿದ್ದಾರೆ. ಭಾರತವು ಯಾವಾಗಲೂ ತನ್ನ ನೆರೆಯ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧವನ್ನು ಉಳಿಸಿಕೊಳ್ಳಲು ಬಯಸುತ್ತದೆ … ಆದರೆ ಯಾರಾದರೂ ಭಾರತಕ್ಕೆ ಕೋಪದ ಕಣ್ಣುಗಳನ್ನು ಮತ್ತೆ ಮತ್ತೆ ತೋರಿಸಿದರೆ, ಭಾರತಕ್ಕೆ ಬಂದು ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಪ್ರಯತ್ನಿಸಿದರೆ, ನಾವು ಅವರನ್ನು ಬಿಡುವುದಿಲ್ಲ ಎಂದು ಸಿಂಗ್‌ ಹೇಳಿದರು. +ಬ್ರಿಟಿಷ್‌ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರು ಭಾಗಿಯಾಗಿದ್ದಾರೆ ಎಂದು ಕೆನಡಾ ಆರೋಪಿಸಿದೆ. ಕೆನಡಾ ಭಾರತ ವಿರೋಧಿ ಉಗ್ರರಿಗೆ ನಿರಂತರವಾಗಿ ಜಾಗ ನೀಡುತ್ತಿದೆ ಎಂದು ಭಾರತ ನಿಯಮಿತವಾಗಿ ಗಮನಸೆಳೆದಿದೆ. \ No newline at end of file diff --git a/eesanje/url_47_113_7.txt b/eesanje/url_47_113_7.txt new file mode 100644 index 0000000000000000000000000000000000000000..e2b4d35250afdc4b69aac3fd4771792c8e3422a3 --- /dev/null +++ b/eesanje/url_47_113_7.txt @@ -0,0 +1,6 @@ +ದೇಶದ 30 ವಿಮಾನ ನಿಲ್ದಾಣಗಳಲ್ಲಿ ಬಾಂಬ್‌ ದಾಳಿ ನಡೆಸುವುದಾಗಿ ಬೆದರಿಕೆ ಸಂದೇಶ +ವಾರಾಣಸಿ (ಉತ್ತರ ಪ್ರದೇಶ),ಏ.30-ಬನಾರಸ್‌ ಸೇರಿದಂತೆ ದೇಶದ 30 ವಿಮಾನ ನಿಲ್ದಾಣಗಳಲ್ಲಿ ಬಾಂಬ್‌ ದಾಳಿ ನಡೆಸುವುದಾಗಿ ವಿಮಾನ ನಿಲ್ದಾಣದ ಅಧಿಕೃತ ಇ-ಮೇಲ್‌ಗೆ ಬೆದರಿಕೆ ಸಂದೇಶ ಬಂದಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್‌ ಅಳವಡಿಸಿ ರಿಮೋಟ್‌ನಲ್ಲಿ ಬಟನ್‌ ಒತ್ತಿದ ತಕ್ಷಣವೇ ಸ್ಫೋಟ ಆಗಲಿದೆ ಎಂದು ಇ- ಮೇಲ್‌ನಲ್ಲಿ ತಿಳಿಸಲಾಗಿದೆ. +ಬೆದರಿಕೆ ಹಿನ್ನೆಲೆ ವಿಮಾನ ನಿಲ್ದಾಣದ ಎಲ್ಲ ಗೇಟ್‌ಗಳ ಮೇಲೆ ನಿಗಾ ಹೆಚ್ಚಿಸಿ ತಡರಾತ್ರಿವರೆಗೂ ತಪಾಸಣೆ ನಡೆಸಲಾಯಿತು. ಆದರೆ ತಡರಾತ್ರಿಯವರೆಗೂ ಬೆದರಿಕೆ ಹಾಕಿರುವ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. +ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಸೋಮವಾರ ಸಂಜೆ ವಾರಾಣಸಿ ವಿಮಾನ ನಿಲ್ದಾಣದ ಅಧಿಕೃತ ಇ-ಮೇಲ್‌ ಐಡಿಗೆ ಮೇಲ್‌ ಬಂದಿದೆ. ಎಲ್ಲ 30 ವಿಮಾನ ನಿಲ್ದಾಣಗಳಲ್ಲಿ ಬಾಂಬ್‌ಗಳನ್ನು ಅಳವಡಿಸಿದ್ದೇವೆ. ಮತ್ತು ರಿಮೋಟ್‌ ಬಟನ್‌ ಒತ್ತಿದರೆ, ಒಂದರ ನಂತರ ಒಂದರಂತೆ ಸ್ಫೋಟಗೊಳ್ಳಲು ಪ್ರಾರಂಭವಾಗುತ್ತವೆ ಎಂದು ಕಳುಹಿಸಿದ ಮೇಲ್ನಲ್ಲಿ ಬರೆಯಲಾಗಿದೆ. +ಇ- ಮೇಲ್‌ ಬಂದ ನಂತರ, ವಿಮಾನ ನಿಲ್ದಾಣದಲ್ಲಿ ಹೈ ಸೆಕ್ಯುರಿಟಿ ತಂಡವು ತಕ್ಷಣವೇ ಸಭೆ ನಡೆಸಿ ಹೈ ಅಲರ್ಟ್‌ ಘೋಷಣೆ ಮಾಡಿದೆ. ವಿಮಾನ ನಿಲ್ದಾಣದ ಎಲ್ಲಾ ಗೇಟ್‌ಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಜೊತೆಗೆ ತೀವ್ರ ತಪಾಸಣೆಯನ್ನು ಸಹ ಮುಂದುವರಿಸಲಾಗಿದೆ.ತಡರಾತ್ರಿಯವರೆಗೂ, ಬೆದರಿಕೆ ಹಾಕುವ ವ್ಯಕ್ತಿಯ ಬಗ್ಗೆ ದೆಹಲಿ ಅಥವಾ ಇತರ ಯಾವುದೇ ಕೇಂದ್ರ ಕಚೇರಿಗೆ ಯಾವುದೇ ಮಾಹಿತಿ ಲಭಿಸಿಲ್ಲ. ಹಿಂದಿಯಲ್ಲಿ ಒಂದು ಸಾಲು ಬರೆಯುವುದರೊಂದಿಗೆ, ಬಾಂಬ್ನ ಎಮೋಜಿಯನ್ನು ಸಹ ಇ-ಮೇಲ್‌ ಮಾಡಲಾಗಿದೆ. +ಮೇಲ್‌ ಬಂದ ನಂತರ ವಿಮಾನ ನಿಲ್ದಾಣದ ಕಾನ್ಫರೆನ್‌್ಸ ಹಾಲ್‌ನಲ್ಲಿ ತುರ್ತು ಸಭೆ ಕರೆಯಲಾಯಿತು. ಈ ಸಂದರ್ಭದಲ್ಲಿ, ಸಿಐಎಸ್‌ಎಫ್‌ ಮತ್ತು ಉತ್ತರ ಪ್ರದೇಶ ಪೊಲೀಸರ ಭದ್ರತಾ ಅಧಿಕಾರಿಗಳ ಸಮ್ಮುಖದಲ್ಲಿ ವಿಮಾನ ನಿಲ್ದಾಣದಲ್ಲಿ ಅಲರ್ಟ್‌ ಘೋಷಿಸಲಾಯಿತು. ವಿಮಾನ ನಿಲ್ದಾಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಂಟಿ ತಪಾಸಣೆ ಅಭಿಯಾನವನ್ನು ಸಹ ಪ್ರಾರಂಭಿಸಲಾಯಿತು. ಸೋಮವಾರ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಅಪರಿಚಿತ ಇ-ಮೇಲ್‌ ಬಂದಿದೆ ಎಂದು ವಿಮಾನ ನಿಲ್ದಾಣದ ಹಿರಿಯ ಸಿಐಎಸ್‌ಎಫ್‌ ಕಮಾಂಡೆಂಟ್‌ ಅಜಯ್‌ ಕುಮಾರ್‌ ಹೇಳಿದ್ದಾರೆ. \ No newline at end of file diff --git a/eesanje/url_47_113_8.txt b/eesanje/url_47_113_8.txt new file mode 100644 index 0000000000000000000000000000000000000000..de8b94df26fc3dc7b04ff1240996b62958c486ff --- /dev/null +++ b/eesanje/url_47_113_8.txt @@ -0,0 +1,15 @@ +ಹಾಸನ ಅಶ್ಲೀಲ ವಿಡಿಯೋ ಪ್ರಕರಣ ಕುರಿತು ಅಮಿತ್ ಶಾ ಶಾಕಿಂಗ್ ಹೇಳಿಕೆ..! +ಗೌವಾಹಟಿ,ಏ.30-ಕರ್ನಾಟಕದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಪ್ರಕರಣವನ್ನು ಯಾವುದೇ ಕಾರಣಕ್ಕೂ ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಈವರೆಗೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಷಾ ಪ್ರಶ್ನಿಸಿದ್ದಾರೆ. +ದೇಶದ ಕಾನೂನಿನ ಮುಂದೆ ನಾನೇ ಇರಲಿ, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನೇ ಇರಲಿ. ಎಲ್ಲರೂ ಒಂದೇ. ತಪ್ಪು ಮಾಡಿದ ಮೇಲೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಪ್ರಕರಣವನ್ನು ಬಿಜೆಪಿ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ನಾರಿ ಶಕ್ತಿ(ಮಹಿಳೆಯರು)ಗೆ ಅತ್ಯಂತ ಉನ್ನತ ಗೌರವಗಳನ್ನು ನೀಡುತ್ತದೆ. ಮಾತೃಶಕ್ತಿ(ತಾಯಂದಿರಿಗೆ)ಗೆ ಅವಮಾನ ಆಗುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ನೆಲದ ಕಾನೂನಿನ ಪ್ರಕಾರವೇ ಶಿಕ್ಷೆಯಾಗುತ್ತದೆ ಎಂದು ಅಮಿತ್‌ ಷಾ ಹೇಳಿದ್ದಾರೆ. +ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದಿದ್ದಾರೆ. +ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋಗಳು ಹೊರಬಂದ ನಂತರ ವಿಶೇಷ ತನಿಖಾ ದಳ(ಎಸ್‌ಐಟಿ) ರಚನೆ ಮಾಡಿದೆ. ಪ್ರಕರಣ ದಾಖಲಾದ ನಂತರ ಅವರ ಮೇಲೆ ಏಕೆ ಕ್ರಮ ಜರುಗಿಸಲಿಲ್ಲ ಏಕೆ? ನಾನೇನು ಪ್ರಕರಣ ಮುಚ್ಚಿ ಹಾಕಲು ಹೇಳಿದ್ದೇವೆ. ಇಲ್ಲವೇ ಅವರ ಮೇಲೆ ಕ್ರಮ ತೆಗೆದುಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಡ ಹಾಕಿದ್ದೇವೆಯೇ ಎಂದು ಪ್ರಶ್ನಿಸಿದರು. +ಕಾಂಗ್ರೆಸ್‌ ನಾಯಕರು ನಮ್ಮ ಮೇಲೆ ಮಾತನಾಡುವ ಮೊದಲು 2019ರಲ್ಲಿ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಯಾವ ಪಕ್ಷ. ಅಂದು ಲೋಕಸಭೆ ಚುನಾವಣೆಯಲ್ಲಿ ಇದೇ ಪ್ರಜ್ವಲ್‌ ರೇವಣ್ಣಗೆ ನೀವು ಬೆಂಬಲ ನೀಡಿರಲಿಲ್ಲವೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಅವರಿಗೆ ನಾನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. +ನೀವು ಪ್ರಧಾನಿ ನರೇಂದ್ರಮೋದಿ ಅವರನ್ನು ಪ್ರಶ್ನಿಸುವ ಮೊದಲು ಕರ್ನಾಟಕದಲ್ಲಿ ನಿಮ್ಮದೇ ಪಕ್ಷದ ಮುಖ್ಯಮಂತ್ರಿ ಅವರನ್ನು ಕ್ರಮ ಜರುಗಿಸಲು ಏಕೆ ವಿಳಂಬ ಮಾಡಿದ್ದೀರಿ ಎಂದು ಪ್ರಶ್ನಿಸಿ. ಅವರು ವಿದೇಶಕ್ಕೆ ಹೋಗಲು ನಾವೇನು ಪಾಸ್‌ಪೋರ್ಟ್‌ ಕೊಟ್ಟಿದ್ದೇವಾ? ಕರ್ನಾಟಕದಲ್ಲಿ ಗುಪ್ತಚರ ವಿಭಾಗ ಯಾರ ಕೈಯಲ್ಲಿದೆ ಎಂದು ಪ್ರಶ್ನಿಸಿದರು. +ನಾವು ತನಿಖೆಯ ಪರವಾಗಿ ಇದ್ದೇವೆ. ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅವಮಾನವನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್‌ ನಾಯಕರು ಈ ಪ್ರಕರಣವನ್ನು ಬಿಜೆಪಿ ತಲೆಗೆ ಕಟ್ಟಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದಿದ್ದಾರೆ. +ಈ ಪ್ರಕರಣ ತುಂಬ ಗಂಭೀರವಾಗಿದೆ. ನಾನು ಈವರೆಗೂ ಅಲ್ಲಿರುವ ಅಶ್ಲೀಲ ವಿಡಿಯೋಗಳನ್ನು ನೋಡಿಲ್ಲ. ನನಗಿರುವ ಮಾಹಿತಿಯಂತೆ ಇದು ಯಾರು ಕೂಡ ಸಹಿಸಲು ಸಾಧ್ಯವಾಗದ ಪ್ರಕರಣ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗೆ ಶಿಕ್ಷೆಯಾಗಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಇದರಲ್ಲಿ ರಾಜಕೀಯ ಮಾಡಲು ಕಾಂಗ್ರೆಸ್‌ ಹೊರಟರೆ ನಾವು ಕೂಡ ಸುಮ್ಮನಿರುವುದಿಲ್ಲ . ಪ್ರಧಾನಿಯವರನ್ನು ಪ್ರಶ್ನಿಸುವ ಬದಲು ಪ್ರಿಯಾಂಕ ಗಾಂಧಿ ಕರ್ನಾಟಕದ ಸಿಎಂ ಮತ್ತು ಡಿಸಿಎಂ ಅವರನ್ನು ಪ್ರಶ್ನಿಸಲಿ ಎಂದು ಒತ್ತಾಯಿಸಿದ್ದಾರೆ. +ಜೆಡಿಎಸ್‌ನವರು ಈಗಾಗಲೇ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥ ಸ್ಥಾನದಲ್ಲಿರುವವರ ಮೇಲೆ ಕ್ರಮ ಜರುಗಿಸಲು ಮುಂದಾಗಿದೆ. ನಮ್ಮ ಮೈತ್ರಿ ಪಕ್ಷ ಎಂಬ ಕಾರಣಕ್ಕೆ ತಪ್ಪು ಮಾಡಿದವರನ್ನು ಸಮರ್ಥಿಸಿಕೊಳ್ಳುವುದಿಲ್ಲ ಎಂದು ಅಮಿತ್‌ ಷಾ ಸ್ಪಷ್ಟಪಡಿಸಿದರು. +ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ:ಇನ್ನು ಅಮಿತ್‌ ಷಾ ಕಾಂಗ್ರೆಸ್‌ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದು, ಬಿಜೆಪಿ 3ನೇ ಬಾರಿಗೆ ಅಧಿ ಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸಿ ಮೀಸಲಾತಿಯನ್ನು ರದ್ದುಪಡಿಸುತ್ತದೆ ಎಂಬ ಹುಸಿ ಸುಳ್ಳುಗಳನ್ನು ಸೃಷ್ಟಿಸುತ್ತಿದೆ. ದೇಶದ ಮತದಾರರು ಇದನ್ನು ನಂಬುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. +ಈ ಬಾರಿ ಬಿಜೆಪಿ ದೇಶದ ಮತದಾರರ ಆಶೀರ್ವಾದ ಪಡೆದು 400 ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವ ಅನುಮಾನವೂ ಇಲ್ಲ. ನಾವು ಕೇಂದ್ರದಲ್ಲಿ ಸ್ಪಷ್ಟ ಬಹುಮತ ಪಡೆದು ಎರಡು ಬಾರಿ ಅಧಿ ಕಾರಕ್ಕೆ ಬಂದರೂ ಸಂವಿಧಾನದ ಬಗ್ಗೆ ಅತ್ಯಂತ ಗೌರವ ಇಟ್ಟುಕೊಂಡಿದ್ದೇವೆ. ಕಾಂಗ್ರೆಸ್‌ನ ರಾಹುಲ್‌ ಗಾಂಧಿ , ಪ್ರಿಯಾಂಕ ಗಾಂಧಿ , ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವರು ಪ್ರತಿನಿತ್ಯ ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬ ಸುಳ್ಳು ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಅಂತಹ ದುಸ್ಸಾಹಸವನ್ನು ಬಿಜೆಪಿ ಮಾಡುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು. +ನಾನು ತೆಲಂಗಾಣದಲ್ಲಿ ಮಾಡಿದ ಭಾಷಣವನ್ನು ತಮಗೆ ಇಷ್ಟಕ್ಕೆ ಬಂದಂತೆ ತಿರುಚಿ ಅಲ್ಲಿನ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಸೇರಿದಂತೆ ಕಾಂಗ್ರೆಸ್‌ನ ಅನೇಕ ನಾಯಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕಾಗಿಯೇ ನಾವು ದೆಹಲಿ ಪೊಲೀಸರಿಗೆ ದೂರು ನೀಡಿದ್ದೇವೆ. ಸುಳ್ಳು ವದ್ದಂತಿಗಳನ್ನು ಹಬ್ಬಿಸುವವರಿಗೆ ಕಾನೂನಿನ ಮೂಲಕವೇ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದರು. +ಬಿಜೆಪಿ ಎಂದಿಗೂ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದನ್ನು ಒಪ್ಪುವುದಿಲ್ಲ. ಈಗಿರುವ ವ್ಯವಸ್ಥೆ ಯಥಾ ಪ್ರಕಾರ ಮುಂದುವರೆಯಲಿದೆ. ನಾವು ಅಧಿ ಕಾರಕ್ಕೆ ಬಂದ ತಕ್ಷಣ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡುತ್ತೇವೆ. ಈ ಬಾರಿ ದಕ್ಷಿಣ ಭಾರತದಲ್ಲಿ ನಮಗೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_113_9.txt b/eesanje/url_47_113_9.txt new file mode 100644 index 0000000000000000000000000000000000000000..c171854dc778ac65f8af680f5c60e0b7b1aad0e8 --- /dev/null +++ b/eesanje/url_47_113_9.txt @@ -0,0 +1,6 @@ +ಹೇಮಂತ್‌ ಸೊರೆನ್‌ ಜಾಮೀನು ಅರ್ಜಿ ಕುರಿತು ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ +ನವದೆಹಲಿ,ಏ.29-ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಅವರ ಮಧ್ಯಂತರ ಜಾಮೀನು ಅರ್ಜಿಯ ಕುರಿತು ಇಂದು ಸುಪ್ರೆಂಕೋರ್ಟ್‌ ಜಾರಿ ನಿರ್ದೇಶನಾಲಯ(ಇಡಿ)ದಿಂದ ಪ್ರತಿಕ್ರಿಯೆ ಕೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತಾ ಅವರ ಪೀಠವು ಇಡಿಗೆ ನೋಟಿಸ್‌ ಜಾರಿಗೊಳಿಸಿ ಮೇ 6 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. +ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸೋರೆನ್‌ ಸಲ್ಲಿಸಿರುವ ಜಾಮೀನು ಅರ್ಜಿಯ ಕುರಿತು ಜಾರ್ಖಂಡ್‌ ಹೈಕೋರ್ಟ್‌ ತನ್ನ ತೀರ್ಪನ್ನು ನೀಡಬಹುದೆಂದು ದ್ವಿಸದಸ್ಯ ಪೀಠ ಹೇಳಿದೆ.ಸೊರೆನ್‌ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಅರುಣಾಭ್‌ ಚೌಧರಿ ಅವರು ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಬಯಸಿದ್ದಾರೆ. ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಉಚ್ಚ ನ್ಯಾಯಾಲಯವು ಪ್ರಕಟಿಸುತ್ತಿಲ್ಲ ಎಂದು ಸೋರೆನ್‌ ಏಪ್ರಿಲ್‌ 24 ರಂದು ಸುಪ್ರೆಂಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. +ಸೋರೆನ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಜನವರಿ 31ರಂದು ಬಂಸಲಾಯಿತು ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್‌ ಅವರನ್ನು ಅವರ ಉತ್ತರಾಧಿಕಾರಿ ಎಂದು ಹೆಸರಿಸಲಾಯಿತು. +ಸೋರೆನ್‌ ವಿರುದ್ಧದ ತನಿಖೆಯು ರಾಂಚಿಯ 8.86 ಎಕರೆ ಭೂಮಿಗೆ ಸಂಬಂಸಿದೆ, ಅವರು ಅಕ್ರಮವಾಗಿ ಭೂಮಿಯನ್ನು ಸ್ವೕಾಧಿನಪಡಿಸಿ ಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.ಮನಿ ಲಾಂಡರಿಂಗ್‌ ತನಿಖೆಯು ಜಾರ್ಖಂಡ್‌ ಪೊಲೀಸರು ರಾಜ್ಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವಾರು ಜನರ ವಿರುದ್ಧ ಭೂ ಹಗರಣ ಪ್ರಕರಣಗಳಲ್ಲಿ ದಾಖಲಿಸಿದ ಬಹು ಎಫ್‌ಐಆರ್‌ಗಳಿಂದ ಹುಟ್ಟಿಕೊಂಡಿದೆ. +ನಕಲಿ ಮಾರಾಟಗಾರರು ಮತ್ತು ಖರೀದಿದಾರರಿಗೆ ನಕಲಿ/ಬೋಗಸ್‌ ದಾಖಲೆಗಳ ನೆಪದಲ್ಲಿ ಕೋಟಿಗಟ್ಟಲೆ ಮೌಲ್ಯದ ಭೂಮಿಯನ್ನು ಸ್ವೕಾನಪಡಿಸಿ ಕೊಳ್ಳಲು ಅಕೃತ ದಾಖಲೆಗಳನ್ನು ಕುಶಲತೆ ಯಿಂದ ಸೃಷ್ಟಿಸಿ ನಡೆಸಿರುವ ಅಕ್ರಮಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ. \ No newline at end of file diff --git a/eesanje/url_47_114_1.txt b/eesanje/url_47_114_1.txt new file mode 100644 index 0000000000000000000000000000000000000000..23a59713bfe10d9c4f2e6d987c6df683a47f6fde --- /dev/null +++ b/eesanje/url_47_114_1.txt @@ -0,0 +1,8 @@ +ಮೀಸಲಾತಿ ರದ್ದುಪಡಿಸಲಾಗುತ್ತದೆ ಎಂಬ ಅಮಿತ್‌ ಶಾ ಅವರ ತಿರುಚಿದ ವಿಡಿಯೋ ವೈರಲ್‌ : ದೆಹಲಿ ಪೊಲೀಸರಿಂದ ಎಫ್‌ಐಆರ್‌ +ನವದೆಹಲಿ,ಏ.29-ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿ/ವರ್ಗ ಹಾಗೂ ಒಬಿಸಿಗಳಿಗೆ ಮೀಸಲಾತಿಯನ್ನು ರದ್ದುಪಡಿಸಲಾಗುತ್ತದೆ ಎಂಬ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಹೇಳಿಕೆಯನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ತಿರುಚುತ್ತಿರುವುದರ ಬಗ್ಗೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. +ಸಾಮಾಜಿಕ ಜಾಲತಾಣದಲ್ಲಿ ಅಮಿತ್‌ ಷಾ ಹೇಳಿಕೆಯನ್ನು ಕೆಲವರು ತಿರುಚುತ್ತಿದ್ದು, ಬಿಜೆಪಿ ಅಧಿ ಕಾರಕ್ಕೆ ಬಂದರೆ ಎಸ್ಸಿ-ಎಸ್ಟಿ ಹಾಗೂ ಒಬಿಸಿಗಳ ಮೀಸಲಾತಿ ಕೋಟಾವನ್ನು ರದ್ದುಪಡಿಸುತ್ತೇವೆ ಎಂಬ ಅವರ ಹೇಳಿಕೆಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಕೆಲವರು ವೈರಲ್‌ ಮಾಡುತ್ತಿದ್ದಾರೆ. +ಬಿಜೆಪಿ ವಕ್ತಾರ ಅಮಿತ್‌ ಮಾಳವಿಯಾ ಅವರ ಪ್ರಕಾರ, ತೆಲಂಗಾಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ಕೋಟಾಗಳ ವಿಷಯದ ಕುರಿತು ಶಾ ಅವರ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲು ಪ್ರಶ್ನೆಯಲ್ಲಿರುವ ವೀಡಿಯೊವನ್ನು ಬದಲಾಯಿಸಲಾಗಿದೆ. +.@ , . , , / …../5plMsEHCe3 +ಕಾಂಗ್ರೆಸ್‌ ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿರುವ ಎಡಿಟ್‌ ಮಾಡಿದ ವೀಡಿಯೊವನ್ನು ಹರಡುತ್ತಿದೆ. ಗೃಹ ಸಚಿವ ಅಮಿತ್‌ ಶಾ ಅವರು ಎಸ್‌ಸಿ/ಎಸ್‌ಟಿಗಳ ಪಾಲನ್ನು ಕಡಿಮೆ ಮಾಡಿದ ನಂತರ, ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾದ ಅಸಂವಿಧಾನಿಕ ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಮಾತನಾಡಿದರು. ಈ ನಕಲಿ ವೀಡಿಯೊವನ್ನು ಹಲವಾರು ಕಾಂಗ್ರೆಸ್‌ ವಕ್ತಾರರು ಪೋಸ್‌್ಟ ಮಾಡಿದ್ದಾರೆ, ಅವರು ಕಾನೂನು ಪರಿಣಾಮಗಳಿಗೆ ಸಿದ್ಧರಾಗಿರಬೇಕು. +ಕಾಂಗ್ರೆಸ್‌ನೊಂದಿಗೆ ಸಂಯೋಜಿತವಾಗಿರುವ ಅಧಿಕೃತ ಖಾತೆಗಳು ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಡಾಕ್ಟರೇಟ್‌ ಮಾಡಿದ ದೃಶ್ಯಗಳನ್ನು ಹಂಚಿಕೊಂಡಿದ್ದರಿಂದ ವೀಡಿಯೊ ಸುತ್ತಲಿನ ವಿವಾದವು ಉಲ್ಬಣಗೊಂಡಿತು, ಇದು ಬಿಜೆಪಿಯ ಎಸ್‌ಸಿ/ಎಸ್‌ಟಿ ಮೀಸಲಾತಿ ಕೋಟಾಗಳನ್ನು ರದ್ದುಗೊಳಿಸುವ ಕಾರ್ಯಸೂಚಿಯನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿದೆ. ಈ ಹೇಳಿಕೆಗಳು ಬಿಜೆಪಿ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸಾಮಾಜಿಕ ಅಪಶ್ರುತಿಯನ್ನು ಪ್ರಚೋದಿಸುವ ಸಾಮರ್ಥ್ಯದೊಂದಿಗೆ ಕಾಂಗ್ರೆಸ್‌ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. +ಅಮಿತ್‌ ಶಾ ಹೇಳಿಕೆಯನ್ನು ತಿರುಚಿ ವೈರಲ್‌ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿ ಮನವಿ ಮಾಡಿದ್ದು, ಈ ದೂರಿನ ಮೇರೆಗೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಈಗ ದಾಖಲಾದ ಎಫ್‌ಐಆರ್‌ನೊಂದಿಗೆ ದೆಹಲಿ ಪೊಲೀಸ್‌ ವಿಶೇಷ ಕೋಶದ ಗುಪ್ತಚರ ಫ್ಯೂಷನ್‌ ಮತ್ತು ಸ್ಟ್ರಾಟೆಜಿಕ್‌ ಆಪರೇಷನ್‌್ಸ (ಐಎಫ್‌ಎಸ್‌ಒ) ಘಟಕವು ಫ್ಯಾಬ್ರಿಕೇಟೆಡ್‌ ವೀಡಿಯೋ ಮೂಲದ ಬಗ್ಗೆ ತನ್ನ ತನಿಖೆಯನ್ನು ಪ್ರಾರಂಭಿಸಿದೆ. \ No newline at end of file diff --git a/eesanje/url_47_114_10.txt b/eesanje/url_47_114_10.txt new file mode 100644 index 0000000000000000000000000000000000000000..ac20f1a3d7cb0e01284405f7119352615ad17bbe --- /dev/null +++ b/eesanje/url_47_114_10.txt @@ -0,0 +1,8 @@ +ಪ್ರಧಾನಿ ಮೋದಿ ವಿರುದ್ಧ ಪಿ.ಚಿದಂಬರಂ ವಾಗ್ದಾಳಿ +ನವದೆಹಲಿ,ಏ.28-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್‌ ಹಿರಿಯ ನಾಯಕ ಪಿ.ಚಿದಂಬರಂ ಅವರು, ತಮ್ಮ ಭೂತ ಭಾಷಣಕಾರರೊಬ್ಬರು ಬರೆದಿರುವ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಪ್ರಧಾನಿ ಕಲ್ಪಿಸಿಕೊಂಡಿದ್ದಾರೆ, ಅದರಲ್ಲಿ ಒಳಗೊಂಡಿರುವ ನೈಜ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. +ಸಂಪತ್ತಿನ ಮರುಹಂಚಿಕೆ ವಿಷಯದ ಕುರಿತು ಗದ್ದಲದ ನಡುವೆ ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತೋಡಾ ಅವರ ಪಿತ್ರಾರ್ಜಿತ ತೆರಿಗೆ ಹೇಳಿಕೆಗಳ ಕುರಿತು ಪ್ರಧಾನಿಯವರು ಪದೇ ಪದೇ ದಾಳಿ ನಡೆಸುತ್ತಿರುವ ಮಧ್ಯೆ ಚಿದಂಬರಂ ಅವರು ಈ ಹೇಳಿಕೆ ನೀಡಿದ್ದಾರೆ. +ಗೌರವಾನ್ವಿತ ಪ್ರಧಾನಿಯವರು ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಇಲ್ಲದ ಪದಗಳು ಮತ್ತು ವಾಕ್ಯಗಳನ್ನು ಕಂಡುಹಿಡಿದು ಓದುವುದನ್ನು ಮುಂದುವರೆಸಿದ್ದಾರೆ! ಅವರು ತಮ್ಮ ಭೂತ ಭಾಷಣಕಾರರೊಬ್ಬರು ಬರೆದ ಕಾಂಗ್ರೆಸ್‌ನ ಪ್ರಣಾಳಿಕೆಯನ್ನು ಕಲ್ಪಿಸಿಕೊಂಡಿದ್ದಾರೆ ಎಂದು ಚಿದಂಬರಂ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ ಪ್ರಣಾಳಿಕೆಯನ್ನು ಸಿದ್ಧಪಡಿಸಿದ ಸಮಿತಿ ಹೇಳಿದೆ. +ಪಿತ್ರಾರ್ಜಿತ ತೆರಿಗೆ ಎಂಬ ಪದವು ಪ್ರಣಾಳಿಕೆಯಲ್ಲಿ ಎಲ್ಲಿಯೂ ಕಂಡುಬರುವುದಿಲ್ಲ ಎಂದು ಕೇಂದ್ರದ ಮಾಜಿ ಹಣಕಾಸು ಸಚಿವರೂ ಆಗಿರುವ ಚಿದಂಬರಂ ತಮ್ಮ ಪೋಸ್‌್ಟ ಎಕ್‌್ಸನಲ್ಲಿ ತಿಳಿಸಿದ್ದಾರೆ. +ತೆರಿಗೆಯ ಕುರಿತಾದ ಕಾಂಗ್ರೆಸ್‌ನ ಭರವಸೆಗಳು ಸಾಕಷ್ಟು ಸ್ಪಷ್ಟವಾಗಿವೆ: ನೇರ ತೆರಿಗೆಗಳ ಪಾರದರ್ಶಕತೆ, ಇಕ್ವಿಟಿ, ಸ್ಪಷ್ಟತೆ ಮತ್ತು ನಿಷ್ಪಕ್ಷಪಾತ ತೆರಿಗೆ ಆಡಳಿತದ ಯುಗವನ್ನು ತನ್ನಿ; 5 ವರ್ಷಗಳ ಅವಧಿ ಗೆ ಸ್ಥಿರ ವೈಯಕ್ತಿಕ ಆದಾಯ ತೆರಿಗೆ ದರಗಳನ್ನು ನಿರ್ವಹಿಸಿ; ಇವುಗಳ ಮೇಲಿನ ತೆರಿಗೆಯ ಹೊರೆಯನ್ನು ಕಡಿಮೆ ಮಾಡಿ ಎಂದು ಚಿದಂಬರಂ ಹೇಳಿದ್ದಾರೆ. +ಮೋದಿ ಸರ್ಕಾರದ ದ್ವಂದ್ವ ಸೆಸ್‌ ರಾಜ್‌ ಅನ್ನು ಕೊನೆಗೊಳಿಸಲು ಕಾಂಗ್ರೆಸ್‌ ಭರವಸೆ ನೀಡುತ್ತದೆ ಮತ್ತು ಅಂಗಡಿಕಾರರು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಗಮನಾರ್ಹ ತೆರಿಗೆ ವಿನಾಯಿತಿ ನೀಡಲಾಗುವುದು ಮತ್ತು ಜಿಎಸ್ಟಿ 2.0 ಅನ್ನು ಪರಿಚಯಿಸಲಾಗುವುದು. ಪ್ರಧಾನಿಯವರು ಕಾಲ್ಪನಿಕ ಭೂತಗಳ ವಿರುದ್ಧ ಹೋರಾಡುವುದನ್ನು ನೋಡುವುದು ನಿರಾಶಾದಾಯಕವಾಗಿದೆ. ಅವರು ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿ ಒಳಗೊಂಡಿರುವ ನೈಜ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಚಿದಂಬರಂ ಹೇಳಿದರು. +ಗುರುವಾರದ ಹೇಳಿಕೆಯಲ್ಲಿ, ಚಿದಂಬರಂ ಅವರು ಸಂಪತ್ತಿನ ಮರುಹಂಚಿಕೆ ಮತ್ತು ಪಿತ್ರಾರ್ಜಿತ ತೆರಿಗೆ ಕುರಿತಾದ ತಯಾರಿಸಿದ ವಿವಾದಗಳು ಬಿಜೆಪಿಗೆ ಭಯವನ್ನು ಆವರಿಸಿದೆ ಎಂದು ತೋರಿಸಿದೆ, ಅದು ವಿರೂಪ, ಸುಳ್ಳು ಮತ್ತು ನಿಂದನೆಯಿಂದ ಹಿಂದೆ ಬಿದ್ದಿದೆ ಎಂದು ಮೋದಿ ಕಿ ಗ್ಯಾರಂಟಿ ಎಂದು ಹೇಳಿದ್ದಾರೆ. ಒಂದು ಕುರುಹು ಇಲ್ಲದೆ ಕಣ್ಮರೆಯಾಯಿತು. ಈ ದಾಖಲೆಯು ಧರ್ಮ-ತಟಸ್ಥವಾಗಿದೆ ಮತ್ತು ಎಲ್ಲಾ ವರ್ಗದ ಜನರಿಗೆ ನ್ಯಾಯದ ಭರವಸೆ ನೀಡುತ್ತದೆ ಎಂದು ಚಿದಂಬರಂ ಪ್ರತಿಪಾದಿಸಿದ್ದರು. \ No newline at end of file diff --git a/eesanje/url_47_114_11.txt b/eesanje/url_47_114_11.txt new file mode 100644 index 0000000000000000000000000000000000000000..dc24a010ae95064f631ee966c2e27c0d27c25d6a --- /dev/null +++ b/eesanje/url_47_114_11.txt @@ -0,0 +1,5 @@ +ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ ಪ್ರಕರಣದಲ್ಲಿ ಛತ್ತೀಸ್‌‍ಗಢದ ನಟ ಸಾಹಿಲ್‌ ಖಾನ್‌ ಬಂಧನ +ಮುಂಬೈ, ಏ. 28-ಮಹಾದೇವ್‌ ಬೆಟ್ಟಿಂಗ್‌ ಆಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್‌ ಸೆಲ್‌ನ ವಿಶೇಷ ತನಿಖಾ ತಂಡವು ಛತ್ತೀಸ್‌‍ಗಢದ ನಟ ಸಾಹಿಲ್‌ ಖಾನ್‌ ಅವರನ್ನು ಬಂಧಿಸಿದೆ.ಬಾಂಬೆ ಹೈಕೋರ್ಟ್‌ಗೆ ನಟ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಛತ್ತೀಸ್‌‍ಗಢದ ಜಗದಲ್‌ಪುರದಿಂದ ಅವರನ್ನು ಬಂಧಿಸಲಾಯಿತು ಎಂದು ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. +ರಾಜ್ಯದ ಕೆಲವು ಹಣಕಾಸು ಮತ್ತು ರಿಯಲ್‌ ಎಸ್ಟೇಟ್‌ ಸಂಸ್ಥೆಗಳು ಮತ್ತು ವಿವಾದಿತ ಮಹಾದೇವ್‌ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರ ನಡುವಿನ ಅಕ್ರಮ ವಹಿವಾಟಿನ ಕುರಿತು ಎಸ್‌‍ಐಟಿ ತನಿಖೆ ನಡೆಸುತ್ತಿದೆ.ಪ್ರಕರಣದಲ್ಲಿ ಪೊಲೀಸರು ದಾಖಲಿಸಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ಪ್ರಕಾರ ಹಗರಣದ ಗಾತ್ರ ಸುಮಾರು 15,000 ಕೋಟಿ ರೂ ಎಂದು ಹೇಳಲಾಗಿದೆ. +ಖಾನ್‌ ಸೇರಿರಂತೆ ಇತರ 31 ವ್ಯಕ್ತಿಗಳ ವಿರುದ್ಧ ತನಿಖೆ ನಡೆಯುತ್ತಿದೆ. ತನಿಖೆಯು ಅವರ ಬ್ಯಾಂಕ್‌ ಖಾತೆಗಳು, ಮೊಬೈಲ್‌ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಎಲ್ಲಾ ತಾಂತ್ರಿಕ ಸಾಧನಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. +ಪ್ರಕರಣದಲ್ಲಿ ಇಲ್ಲಿಯವರೆಗೆ ಒಬ್ಬರನ್ನು ಮಾತ್ರಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಬಂಧಿತ ನಟ ಸಾಹಿಲ್‌ ಖಾನ್‌ ಅವರನ್ನು ರಾಯಪುರ ಮಾರ್ಗವಾಗಿ ಮುಂಬೈಗೆ ಕರೆತರಲಾಗುತ್ತಿದೆ.ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_114_12.txt b/eesanje/url_47_114_12.txt new file mode 100644 index 0000000000000000000000000000000000000000..0184391f860085ac7e50a8899635ef18d4a5299b --- /dev/null +++ b/eesanje/url_47_114_12.txt @@ -0,0 +1,6 @@ +ಗುಜರಾತ್‌ ಮತ್ತು ರಾಜಸ್ಥಾನದಲ್ಲಿ ಎಟಿಎಸ್‌‍ ದಾಳಿ : 230 ಕೋಟಿ ಮೌಲ್ಯದ ನಿಷೇಧಿತ ಮೆಫೆಡ್ರೋನ್‌ ದ್ರಾವಣ ವಶ, 13 ಜನರ ಬಂಧನ +ಅಹಮದಾಬಾದ್‌, ಏ.28-ಗುಜರಾತ್‌ ಮತ್ತು ರಾಜಸ್ಥಾನದ ನಾಲ್ಕು ಔಷಧ ತಯಾರಿಕಾ ಘಟಕಗಳ ಮೇಲೆ ಎಟಿಎಸ್‌‍ ಅಧಿಕಾರಿಗಳು ದಾಳಿ ನಡೆಸಿ 230 ಕೋಟಿ ಮೌಲ್ಯದ ನಿಷೇಧಿತ ಮೆಫೆಡ್ರೋನ್‌ ದ್ರಾವಣವನ್ನು ವಶಪಡಿಸಿಕೊಂಡು 13 ಜನರನ್ನು ಬಂಧಿಸಿದ್ದಾರೆ. +ಅಹಮದಾಬಾದ್‌ ನಿವಾಸಿ ಮನೋಹರಲಾಲ್‌ ಎನಾನಿ ಮತ್ತು ರಾಜಸ್ಥಾನದ ಕುಲದೀಪ್‌ ಸಿಂಗ್‌ ರಾಜಪುರೋಹಿತ್‌ ಅವರು ಮೆಫೆಡ್ರೋನ್‌ ತಯಾರಿಕಾ ಘಟಕಗಳನ್ನು ಸ್ಥಾಪಿಸಿದ್ದಾರೆ ಎಂದು ಎಟಿಎಸ್‌‍ಗೆ ಸುಳಿವು ದೊರೆತ ನಂತರ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ ಮತ್ತು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಜಂಟಿಯಾಗಿ ದಾಳಿ ನಡೆಸಿವೆ ಎಂದು ಅಧಿಕಾರಿಯೊಬ್ಬ ತಿಳಿಸಿದ್ದಾರೆ. +ಚಲನವಲನಗಳ ಮೇಲೆ ನಿಗಾವಹಿಸಿ ರಾಜಸ್ಥಾನದ ಸಿರೋಹಿ ಮತ್ತು ಜೋಧ್‌ಪುರದ ಘಟಕಗಳು ಮತ್ತು ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಗಾಂಧಿನಗರದ ಪಿಪ್ಲಾಜ್‌ ಮತ್ತು ಭಕ್ತಿನಗರ ಕೈಗಾರಿಕಾ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. 22.028 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್‌ (ಘನ ರೂಪದಲ್ಲಿ) ಮತ್ತು 124 ಕಿಲೋಗ್ರಾಂಗಳಷ್ಟು ದ್ರವ ಮೆಫೆಡ್ರೋನ್‌ ಅನ್ನು ವಶಪಡಿಸಿಕೊಂಡಿದೆ, ಒಟ್ಟಾರೆಯಾಗಿ 230 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಹೇಳಿದರು. +ರಾಜಪುರೋಹಿತ್‌ ಅವರನ್ನು ಗಾಂಧಿನಗರದಲ್ಲಿ ಮತ್ತು ಎನಾನಿಯನ್ನು ಸಿರೋಹಿಯಿಂದ ಬಂಧಿಸಲಾಗಿದೆ ತನಿಖೆಯ ಸಂದರ್ಭದಲ್ಲಿ ರಾಜಸ್ಥಾನದ ಕೈಗಾರಿಕಾ ಘಟಕದಲ್ಲಿ ಈ ಹಿಂದೆ ಮೆಫೆಡ್ರೋನ್‌ ಉತ್ಪಾದನೆಯಲ್ಲಿ ತೊಡಗಿದ್ದಕ್ಕಾಗಿ 2015 ರಲ್ಲಿ ಡೈರೆಕ್ಟರೇಟ್‌ ಆಫ್‌ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ನಿಂದ ಎನಾನಿ ಅವರನ್ನು ಬಂಧಿಸಿದ ನಂತರ ಏಳು ವರ್ಷಗಳ ಕಾಲ ಜೈಲಿನಲ್ಲಿದ್ದರು. +ಎಲ್ಲಾ ಆರೋಪಿಗಳು ಪರಸ್ಪರ ಸಂಪರ್ಕ ಹೊಂದಿದ್ದು, ವಲ್ಸಾದ್‌ ಜಿಲ್ಲೆಯ ವಾಪಿ ಕೈಗಾರಿಕಾ ಪ್ರದೇಶದಲ್ಲಿನ ಕಂಪನಿಯಿಂದ ಕಚ್ಚಾ ವಸ್ತುಗಳನ್ನು ಖರೀದಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರು ಔಷಧವನ್ನು ಯಾವಾಗ ಉತ್ಪಾದಿಸುತ್ತಿದ್ದಾರೆ, ಅವರು ಅದನ್ನು ಹಿಂದೆ ಮಾರಾಟ ಮಾಡಿದ್ದಾರೆಯೇ ಮತ್ತು ಇಡೀ ಕಾರ್ಟೆಲ್‌ನ ಭಾಗವಾಗಿರುವವರು ಯಾರು ಎಂಬುದನ್ನು ಕಂಡುಹಿಡಿಯಲು ತನಿಖೆಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_114_2.txt b/eesanje/url_47_114_2.txt new file mode 100644 index 0000000000000000000000000000000000000000..3f2aee22ba2b29d0bf34b0f2af68d6a5867419fb --- /dev/null +++ b/eesanje/url_47_114_2.txt @@ -0,0 +1,4 @@ +ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ +ಹೈದರಾಬಾದ್‌,ಏ.29-ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದು ಆಲ್‌ ಇಂಡಿಯಾಮಜ್ಲಿ ಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ. +ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ? ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು. +ಕಳೆದ ವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಹಿಂದೂಗಳ ಮಂಗಳ ಸೂತ್ರ ಮುಸ್ಲಿಮರ ಪಾಲಾಗಲಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಹಿಂದೂ ಮಹಿಳೆಯ ಮಂಗಳಸೂತ್ರ ಸಹ ಉಳಿಯೋದಿಲ್ಲ ಎಂದು ಮೋದಿ ಹೇಳಿಕೆ ಕೊಟ್ಟಿದ್ದರು. \ No newline at end of file diff --git a/eesanje/url_47_114_3.txt b/eesanje/url_47_114_3.txt new file mode 100644 index 0000000000000000000000000000000000000000..b85116c33f0f505eaa2eca65934e8125a8276658 --- /dev/null +++ b/eesanje/url_47_114_3.txt @@ -0,0 +1,8 @@ +ಕೇಜ್ರಿವಾಲ್‌ ಭೇಟಿಗೆ ಪತ್ನಿ ಸುನೀತಾಗೆ ಅನುಮತಿ ನಿರಾಕರಣೆ +ನವದೆಹಲಿ,ಏ.29-ತಿಹಾರ್‌ ಜೈಲಿನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ನಿಗದಿತ ಭೇಟಿಗೆ ಜೈಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ ಎಂದುಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಲಿರುವ ದೆಹಲಿ ಸಚಿವೆ ಅತಿಶಿ ಅವರ ಭೇಟಿಯನ್ನು ತಿಹಾರ್‌ ಜೈಲಿನ ಆಡಳಿತ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. +ನಾಳೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಆಗಮಿಸುತ್ತಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗಲು ಏಕಕಾಲಕ್ಕೆ ಇಬ್ಬರು ಬರಬಹುದು ಎಂದು ಜೈಲು ನಿಯಮಗಳು ಹೇಳುತ್ತವೆ ಎಂದು ಮೂಲಗಳು ತಿಳಿಸಿವೆ. ಏ.15ರಂದು ಮಾನ್‌ ಅವರು ತಿಹಾರ್‌ಜೈಲಿನಲ್ಲಿ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಲು ಹೋದಾಗ, ಎಎಪಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಂದೀಪ್‌ ಪಾಠಕ್‌ ಅವರೊಂದಿಗೆ ಇದ್ದರು. +ಅತಿಶಿ ಮತ್ತು ಭಗವಂತ್‌ ಮಾನ್‌ ಅವರೊಂದಿಗಿನ ಭೇಟಿಯ ನಂತರ, ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಲು ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನೀಡಬಹುದು ಎಂದು ಜೈಲು ಮೂಲಗಳು ತಿಳಿಸಿವೆ. +ಜೈಲು ನಿಯಮಗಳ ಪ್ರಕಾರ ಒಂದು ವಾರದಲ್ಲಿ ಎರಡು ಭೇಟಿಗಳನ್ನು ಮಾತ್ರ ಅನುಮತಿಸಬಹುದು ಎಂದು ಹೇಳುತ್ತದೆ. ಹಾಗಾಗಿ ಅತಿಶಿ ಸೋಮವಾರ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಿದರೆ ಮತ್ತು ಭಗವಂತ್‌ ಮಾನ್‌ ಅವರನ್ನು ಮಂಗಳವಾರ ಭೇಟಿ ಮಾಡಿದರೆ, ಈ ವಾರದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರೊಂದಿಗೆ ಬೇರೆ ಯಾವುದೇ ಸಭೆ ನಡೆಸಲು ಸಾಧ್ಯವಿಲ್ಲ. +ಸುನೀತಾ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಲು ಮುಂದಿನ ವಾರವಷ್ಟೇ ಅವಕಾಶ ನೀಡುವ ಸಾಧ್ಯತೆ ಇದೆ. ಕೇಜ್ರಿವಾಲ್‌ ಏಪ್ರಿಲ್‌ 1 ರಿಂದ ಜೈಲಿನಲ್ಲಿದ್ದಾರೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಮಾರ್ಚ್‌ 21 ರಂದು ಅವರನ್ನು ಬಂಧಿಸಲಾಯಿತು. +ತಿಹಾರ್‌ ಜೈಲಿನಲ್ಲಿ ಅವರ ವಾಸ್ತವ್ಯವು ಅವರ ಮಧುಮೇಹ ಮತ್ತು ಔಷಧಿ ಗಳ ಬಗ್ಗೆ ಭಾರಿ ಗದ್ದಲದಿಂದ ಗುರುತಿಸಲ್ಪಟ್ಟಿದೆ, ಮುಖ್ಯಮಂತ್ರಿ ಮತ್ತು ಅವರ ಪಕ್ಷವು ಅವರನ್ನು ಬಂಧಿಸಿದಾಗಿನಿಂದ ಅಧಿಕಾರಿಗಳು ಔಷಧಿ ಗಳನ್ನು ತಡೆಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಜ್ರಿವಾಲ್‌ ಅವರು ಮಧುಮೇಹಿಗಳಿಗೆ ಸೂಕ್ತವಲ್ಲದ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. +ಕೇಜ್ರಿವಾಲ್‌ ಅವರ ಅನುಪಸ್ಥಿತಿಯಲ್ಲಿ ಸುನಿತಾ ಅವರು ದೆಹಲಿ, ಪಂಜಾಬ್‌‍, ಹರಿಯಾಣ ಮತ್ತು ಗುಜರಾತ್ನಲ್ಲಿ ಪಕ್ಷದ ಪ್ರಚಾರವನ್ನು ಮುನ್ನಡೆಸುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_114_4.txt b/eesanje/url_47_114_4.txt new file mode 100644 index 0000000000000000000000000000000000000000..f1083542281ba38c115d43dd7efbc8a059f8cebb --- /dev/null +++ b/eesanje/url_47_114_4.txt @@ -0,0 +1,4 @@ +6ನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ +ನವದೆಹಲಿ, ಅ 29 (ಪಿಟಿಐ) :ಬರುವ ಮೇ 25 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಆರನೇ ಹಂತದ ಚುನಾವಣೆಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ದೆಹಲಿಯ ಏಳು ಕ್ಷೇತ್ರಗಳು ಸೇರಿದಂತೆ 57 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ನಾಮನಿರ್ದೇಶನ ಪ್ರಕ್ರಿಯೆಗೆ ಚಾಲನೆ ನೀಡಿ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.ಅಧಿಸೂಚನೆಯ ಪ್ರಕಾರ, ಮೇ 6 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಮೇ 7 ರಂದು ದಾಖಲೆಗಳ ಪರಿಶೀಲನೆ ನಡೆಯಲಿದೆ.ಮೇ 9 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. +ದೆಹಲಿ ಅಲ್ಲದೆ, ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್‌, ಒಡಿಶಾ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಆರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಎರಡು ಹಂತದ ಲೋಕಸಭೆ ಚುನಾವಣೆ ಮುಗಿದಿದೆ. \ No newline at end of file diff --git a/eesanje/url_47_114_5.txt b/eesanje/url_47_114_5.txt new file mode 100644 index 0000000000000000000000000000000000000000..db8f4b99ff1ec78946b786f3e984ea69d98916a3 --- /dev/null +++ b/eesanje/url_47_114_5.txt @@ -0,0 +1,4 @@ +ಹೊಂಡಕ್ಕೆ ಕಾರು ಬಿದ್ದು ದಂಪತಿ ದುರ್ಮರಣ +ಚೆನ್ನೈ,ಏ.29-ನೀರು ತುಂಬಿದ್ದ ಹೊಂಡಕ್ಕೆ ಕಾರು ಬಿದ್ದು ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತೆಂಕಶಿ ಜಿಲ್ಲೆಯ ಶಂಕರಕೋಯಿಲ್‌ ಬಳಿ ತಿರುನಲ್ವೇಲಿ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. +ರಸ್ತೆ ಬದಿಯ ನೀರು ತುಂಬಿದ್ದ ಹೊಂಡಕ್ಕೆ ಕಾರು ಬಿದ್ದ ಪರಿಣಾಮ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ದಂಪತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಹೊಂಡಕ್ಕೆ ಬಿದ್ದು ಮೃತಪಟ್ಟ ದಂಪತಿಯನ್ನು ವೆಂಕಟೇಶ್‌ ಮತ್ತು ಸುಮಿತ್ರಾ ಎಂದು ಗುರುತಿಸಲಾಗಿದೆ. ದಂಪತಿ ಪಳಯಂಕೊಟ್ಟೈನಲ್ಲಿರುವ ಸಂಬಂಧಿಕರ ನಿವಾಸದಿಂದ ಹಿಂತಿರುಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. \ No newline at end of file diff --git a/eesanje/url_47_114_6.txt b/eesanje/url_47_114_6.txt new file mode 100644 index 0000000000000000000000000000000000000000..757677c20e6bc88d541f9eff1eaed08cc2159826 --- /dev/null +++ b/eesanje/url_47_114_6.txt @@ -0,0 +1,6 @@ +ಛತ್ತೀಸ್‌ಘಡದ ಸುಕ್ಮಾ ಜಿಲ್ಲೆಯಲ್ಲಿ ಎನ್‌ಕೌಂಟರ್‌ಗೆ ನಕ್ಸಲ್‌ ಬಲಿ +ರಾಯ್‌ಪುರ,ಏ.29 (ಪಿಟಿಐ) :ಛತ್ತೀಸ್‌ಘಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್‌ನಲ್ಲಿ ನಕ್ಸಲೀಯನೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಜಿಲ್ಲಾ ರಿಸರ್ವ್‌ ಗಾರ್ಡ್‌ (ಡಿಆರ್‌ಜಿ) ಮತ್ತು ಕಮಾಂಡೋ ಬೆಟಾಲಿಯನ್‌ ಫಾರ್‌ ರೆಸಲ್ಯೂಟ್‌ ಆಕ್ಷನ್‌ (ಕೋಬ್ರಾ- ಸಿಆರ್‌ಪಿಎಫ್‌ನ ಗಣ್ಯ ಘಟಕ) ನ ಪ್ರತ್ಯೇಕ ತಂಡಗಳು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಕಿಸ್ತಾರಾಮ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಸುಕ್ಮಾ ಪೊಲೀಸ್‌ ಅಧೀಕ್ಷಕರು ಕಿರಣ್‌ ಜಿ ಚವಾಣ್‌ ಪಿಟಿಐಗೆ ತಿಳಿಸಿದ್ದಾರೆ. +ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುಮಾರು 450 ಕಿಮೀ ದೂರದಲ್ಲಿರುವ ಅರಣ್ಯದಲ್ಲಿ ನಕ್ಸಲೀಯರು ಮತ್ತು ಡಿಆರ್‌ಜಿ ತಂಡದ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದರು. +ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಸ್ಥಳದಿಂದ ನಕ್ಸಲೀಯರ ಶವ ಮತ್ತು ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಹೇಳಿದರು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು. +ಈ ಘಟನೆಯೊಂದಿಗೆ, ಸುಕ್ಮಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್‌ ಪ್ರದೇಶದಲ್ಲಿ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 81 ನಕ್ಸಲೀಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್‌ 16 ರಂದು, ಪ್ರದೇಶದ ಕಂಕೇರ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಕಾರ್ಯಚರಣೆಯಲ್ಲಿ 29 ನಕ್ಸಲೀಯರನ್ನು ಕೊಲ್ಲಲಾಗಿತ್ತು. \ No newline at end of file diff --git a/eesanje/url_47_114_7.txt b/eesanje/url_47_114_7.txt new file mode 100644 index 0000000000000000000000000000000000000000..44729fdfd20dc247b3f97608e220e37394f09683 --- /dev/null +++ b/eesanje/url_47_114_7.txt @@ -0,0 +1,5 @@ +ಮಿನಿ ಟ್ರಕ್‌ಗೆ ಸರಕು ಸಾಗಣೆ ವಾಹನ ಡಿಕ್ಕಿಯಾಗಿ 8 ಮಂದಿ ಸಾವು, 23 ಜನರಿಗೆ ಗಾಯ +ಬೆಮೆತಾರಾ, ಅ.29-ಛತ್ತೀಸ್‌‍ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಕಥಿಯಾ ಗ್ರಾಮದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.ಮೃತರಲ್ಲಿ ಮೂವರು ಮಕ್ಕಳು ಸೇರಿದ್ದು ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. +ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಿನಿ ಟ್ರಕ್‌ಗೆ ಹಿಂತಿರುಗುತ್ತಿದ್ದಾಗ ಕಥಿಯಾ ಗ್ರಾಮದ ಬಳಿ ನಿಲ್ಲಿಸಲಾಗಿತ್ತು ಈ ವೇಲೆ ಹಿಂದಿನಿಂದ ಸರಕು ಸಾಗಣೆ ಲಾರಿ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮೃತರನ್ನು ಪಥರಾ ಗ್ರಾಮದ ಭೂರಿ ನಿಶಾದ್‌ (50), ನೀರಾ ಸಾಹು (55), ಗೀತಾ ಸಾಹು (60), ಅಗ್ನಿಯಾ ಸಾಹು (60), ಖುಷ್ಬು ಸಾಹು (39), ಮಧು ಸಾಹು (5), ರಿಕೇಶ್‌ ನಿಶಾದ್‌ (6) ಮತ್ತು ಟ್ವಿಂಕಲ್‌ ನಿಶಾದ್‌ ಎಂದು ಗುರುತಿಸಲಾಗಿದೆ. 6) ಎಂದು ಗುರುತಿಸಲಾಗಿದೆ. ಇವರು ಮಿನಿ ಟ್ರಕ್‌ನಲ್ಲಿ ತಿರೈಯಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. +ಗಾಯಗೊಂಡವರನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಂತರ, ತೀವ್ರವಾಗಿ ಗಾಯಗೊಂಡ ನಾಲ್ವರನ್ನು ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌‍ ಆಫ್‌ ಮೆಡಿಕಲ್‌ ಸೈನ್ಸಸ್‌‍ ರಾಯ್‌ಪುರಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು. \ No newline at end of file diff --git a/eesanje/url_47_114_8.txt b/eesanje/url_47_114_8.txt new file mode 100644 index 0000000000000000000000000000000000000000..ff526f6ab1b9588a905c4723c5f71b09bd9adbfa --- /dev/null +++ b/eesanje/url_47_114_8.txt @@ -0,0 +1,10 @@ +ಟಿಕೆಟ್ ಕೈತಪ್ಪಿದ್ದಕ್ಕೆ ಭಾವುಕರಾದ ಸಂಸದೆ ಪೂನಂ ಮಹಾಜನ್‌ +ಮುಂಬೈ,ಏ.28-ಈ ಬಾರಿ ಬಿಜೆಪಿಯಿಂದ ಟಿಕೇಟ್‌ ನಿರಾಕರಿಸಿದ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದೆ ಪೂನಂ ಮಹಾಜನ್‌, ಕ್ಷೇತ್ರದ ಜನರು 10 ವರ್ಷಗಳ ಕಾಲ ತನ್ನನ್ನು ಕುಟುಂಬದಂತೆ ನೋಡಿಕೊಂಡಿದ್ದು, ಮತ್ತು ಈ ಸಂಬಂಧವು ಯಾವಾಗಲೂ ಮುಂದುವರಿಯುತ್ತದೆ ಎಂದು ನಾನು ಭಾವಿಸುತ್ತಿರುವುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ. +ತಮ್ಮ ಅಧಿ ಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪೂನಂ ಮಹಾಜನ್‌, ವಕೀಲ ಉಜ್ವಲ್‌ ನಿಕಮ್‌ ಅವರಿಗೆ ಟಿಕೆಟ್‌ ನೀಡಿರುವ ಪಕ್ಷದ ತೀರ್ಮಾನಕ್ಕೆ ಎಲ್ಲಿಯೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಬದಲಿಗೆ ಮುಂಬೈ ಉತ್ತರ ಸೆಂಟ್ರಲ್‌ ಕ್ಷೇತ್ರದ ಜನರಿಗೆ 10 ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ನೀಡಿದ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. +ನನ್ನ ತಂದೆ ದಿ. ಪ್ರಮೋದ್‌ ಮಹಾಜನ್‌ ಅವರು ತೋರಿಸಿದ `ರಾಷ್ಟ್ರದ ಮೊದಲು’ ಹಾದಿಯಲ್ಲಿ ಮುಂದುವರಿಯಲು ನಾನು ಬಯಸುತ್ತೇನೆ. ಆ ಹಾದಿಯಲ್ಲಿ ನಾನು ಯಾವಾಗಲೂ ನಡೆಯುತ್ತೇನೆ ಎಂದು ಅವರು ಹೇಳಿದರು.ಬಿಜೆಪಿ ಮಹಾಜನ್‌ಗೆ ಟಿಕೆಟ್‌ ನಿರಾಕರಿಸಿದ್ದು, ಮುಂಬೈ ಭಯೋತ್ಪಾದನಾ ದಾಳಿ ಮತ್ತು 1993ರ ಸರಣಿ ಸ್ಫೋಟ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿದ್ದ ನಿಕಮ್‌ ಅವರನ್ನು ಮುಂಬೈ ಉತ್ತರ ಕೇಂದ್ರ ಸ್ಥಾನದಿಂದ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಕಾಂಗ್ರೆಸ್‌ ನಾಯಕಿ ವರ್ಷಾ ಗಾಯಕ್ವಾಡ್‌ ವಿರುದ್ಧ ನಿಕಮ್‌ ಕಣಕ್ಕಿಳಿದಿದ್ದಾರೆ. +10 वर्षों तक एक सांसद के रूप में मुंबई उत्तर मध्य लोकसभा क्षेत्र की सेवा का मौक़ा देने के लिए@BJP4Indiaऔर प्रधानमंत्री श्री@narendramodiजी का धन्यवाद।मुझे एक सांसद ही नहीं बल्कि एक बेटी की तरह भी स्नेह देने के लिए मैं क्षेत्र की परिवार समान जनता की सदैव ऋणी रहूँगी, और यही… +ನನ್ನನ್ನು ಸಂಸದಳನ್ನಾಗಿ ನಡೆಸಿಕೊಳ್ಳದೆ ಮಗಳಂತೆ ಪ್ರೀತಿಯನ್ನು ನೀಡಿದ ಮುಂಬೈ ಉತ್ತರ ಮಧ್ಯದ ಕುಟುಂಬದಂತಹ ಜನರಿಗೆ ನಾನು ಋಣಿಯಾಗಿದ್ದೇನೆ ತನ್ನ ಜೀವನದ ಪ್ರತಿಯೊಂದು ಕ್ಷಣವನ್ನು ರಾಷ್ಟ್ರ ಸೇವೆಗೆ ಮೀಸಲಿಡುವುದಾಗಿ ಮಹಾಜನ್‌ ಹೇಳಿದ್ದಾರೆ. +ಬಿಜೆಪಿ ಈ ಬಾರಿ ಮುಂಬೈನಲ್ಲಿ ತನ್ನ ಎಲ್ಲಾ ಮೂರು ಹಾಲಿ ಸಂಸದರನ್ನು ಕೈಬಿಟ್ಟಿದೆ. ಮುಂಬೈ ಉತ್ತರ ಕ್ಷೇತ್ರದಲ್ಲಿ ಗೋಪಾಲ್‌ ಶೆಟ್ಟಿ ಬದಲಿಗೆ ಪೀಯೂಷ್‌ ಗೋಯಲ್‌ ಮತ್ತು ಮುಂಬೈ ಈಶಾನ್ಯ ಕ್ಷೇತ್ರದಲ್ಲಿ ಮನೋಜ್‌ ಕೋಟಕ್‌ ಅವರ ಬದಲಾಗಿ ಮಿಹಿರ್‌ ಕೊಟೆಚಾ ಅವರನ್ನು ನೇಮಿಸಲಾಗಿದೆ. +2019 ರಲ್ಲಿ, ಮುಂಬೈನ ಒಟ್ಟು ಆರು ಸ್ಥಾನಗಳಲ್ಲಿ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಶಿವಸೇನೆ (ಅವಿಭಜಿತ) ತಲಾ ಮೂರು ಸ್ಥಾನಗಳನ್ನು ಗೆದ್ದಿದ್ದವು. ಮುಂಬೈ ಸೌತ್‌, ಮುಂಬೈ ಸೌತ್‌ ಸೆಂಟ್ರಲ್‌ ಮತ್ತು ಮುಂಬೈ ನಾರ್ತ್‌ ವೆಸ್‌್ಟ ಅನ್ನು ಶಿವಸೇನೆ ಗೆದ್ದಿತ್ತು.ಪಕ್ಷದ ವಿಭಜನೆಯ ನಂತರ, ಮುಂಬೈ ದಕ್ಷಿಣ ಮಧ್ಯ ಸಂಸದ ರಾಹುಲ್‌ ಶೆವಾಲೆ ಮತ್ತು ಮುಂಬೈ ವಾಯವ್ಯ ಸಂಸದ ಗಜಾನನ ಕೀರ್ತಿಕರ್‌ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆಯತ್ತ ವಾಲಿದರು. +ಶೆವಾಲೆ ಅವರನ್ನು ಮಾತ್ರ ಶಿಂಧೆ ನೇತೃತ್ವದ ಶಿವಸೇನೆ ಮರುನಾಮಕರಣ ಮಾಡಿದೆ ಮತ್ತು ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಮುಂಬೈ ದಕ್ಷಿಣದಿಂದ ಅರವಿಂದ್‌ ಸಾವಂತ್‌ ಅವರನ್ನು ಮರುನಾಮಕರಣ ಮಾಡಿದೆ. +ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನೆ ಮೈತ್ರಿಕೂಟ ಮುಂಬೈ ದಕ್ಷಿಣ ಮತ್ತು ಮುಂಬೈ ವಾಯವ್ಯ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ.ಮುಂಬೈ ಉತ್ತರ ಕ್ಷೇತ್ರದಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಮುಂಬೈನ ಎಲ್ಲಾ ಆರು ಲೋಕಸಭಾ ಕ್ಷೇತ್ರಗಳಿಗೆ ಮೇ 2 ರಂದು ಮತದಾನ ನಡೆಯಲಿದೆ. \ No newline at end of file diff --git a/eesanje/url_47_114_9.txt b/eesanje/url_47_114_9.txt new file mode 100644 index 0000000000000000000000000000000000000000..49f615ec81b6a84ac3a32dffb7b4faa828307f7e --- /dev/null +++ b/eesanje/url_47_114_9.txt @@ -0,0 +1,9 @@ +ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್‌ ಸಿಂಗ್‌ ಲವ್ಲಿ ರಾಜೀನಾಮೆ +ನವದೆಹಲಿ,ಏ.28-ಪಕ್ಷದ ಪ್ರಧಾನ ಕಾರ್ಯದರ್ಶಿ ಉಸ್ತುವಾರಿ ದೀಪಕ್‌ ಬಬಾರಿಯಾ ಅವರ ಸತತ ಹಸ್ತಕ್ಷೇಪದಿಂದ ಬೇಸತ್ತು ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್‌ ಸಿಂಗ್‌ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ದೆಹಲಿ ಕಾಂಗ್ರೆಸ್‌ನ ಶಿಸ್ತು ಸಮಿತಿಯ ಸಭೆಯ ನಂತರ ದೆಹಲಿಯ ಮಾಜಿ ಸಚಿವ ಮತ್ತು ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಸದಸ್ಯ ರಾಜ್‌ಕುಮಾರ್‌ ಚೌಹಾಣ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್‌ ಸಿಂಗ್‌ ಲವ್ಲಿ ಅವರ ರಾಜೀನಾಮೆ ಬಂದಿದೆ. +ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಲವ್ಲಿ ಅವರು ಅಂಗವಿಕಲತೆ ಅನುಭವಿಸುತ್ತಿದ್ದಾರೆ ಮತ್ತು ದೆಹಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +ಅನೇಕ ದೆಹಲಿ ಕಾಂಗ್ರೆಸ್‌ ನಾಯಕರು ಬಬಾರಿಯಾ ಅವರ ರಾಜ್ಯ ಆಡಳಿತ ವ್ಯವಹಾರಗಳನ್ನು ನಡೆಸುವುದನ್ನು ವಿರೋಧಿಸಿದ ಹಲವಾರು ನಿದರ್ಶನಗಳನ್ನು ಉಲ್ಲೇಖ ಮಾಡಲಾಗಿದ್ದು, ಬಬಾರಿಯಾ ವಿರುದ್ಧ ಇರುವ ಅತೃಪ್ತ ನಾಯಕರನ್ನು ಹೊರಹಾಕಲು ನಾನು ಪ್ರಬಲ ಒತ್ತಡದಲ್ಲಿದ್ದೆ ಎಂದು ಲವ್ಲಿ ಹೇಳಿದರು. +ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿಯನ್ನು ಉಲ್ಲೇಖಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್‌ ಘಟಕವು ವಿರುದ್ಧವಾಗಿತ್ತು. ಅದರ ಹೊರತಾಗಿಯೂ, ಪಕ್ಷವು ದೆಹಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿತು. ., ಎಂದು ಅರವಿಂದರ್‌ ಸಿಂಗ್‌ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. +ಲವ್ಲಿ ಕಳೆದ ವರ್ಷ ಆಗಸ್‌್ಟನಲ್ಲಿ ಹುದ್ದೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ದೆಹಲಿಯಲ್ಲಿನ ಇಂಡಿಯಾ ಬ್ಲಾಕ್‌ ಪಾಲುದಾರರಾದ ಎಎಪಿ ಮತ್ತು ಕಾಂಗ್ರೆಸ್‌ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಫೆಬ್ರವರಿಯಲ್ಲಿ ಅಂತಿಮಗೊಳಿಸಲಾಯಿತು. ಎಎಪಿ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. +ನವದೆಹಲಿ, ದಕ್ಷಿಣ ದೆಹಲಿ, ಪಶ್ಚಿಮ ದೆಹಲಿ ಮತ್ತು ಪೂರ್ವ ದೆಹಲಿಯಲ್ಲಿ ಎಎಪಿ ಹೋರಾಡುತ್ತಿದೆ, ಆದರೆ ಚಾಂದಿನಿ ಚೌಕ್‌, ಈಶಾನ್ಯ ದೆಹಲಿ ಮತ್ತು ವಾಯವ್ಯ ದೆಹಲಿ ಕಾಂಗ್ರೆಸ್‌ ಪಾಲಾಗಿದೆ. ಇದಕ್ಕೂ ಮುನ್ನ ಎಎಪಿ ಕಾಂಗ್ರೆಸ್‌ಗೆ ಏಳು ಲೋಕಸಭಾ ಸ್ಥಾನಗಳಲ್ಲಿ ಒಂದನ್ನು ಮಾತ್ರ ನೀಡಿತ್ತು, ಇದು ಚರ್ಚೆಯನ್ನು ಬಿಕ್ಕಟ್ಟಿಗೆ ತಂದಿತು. ಹಿಂದಿನ ಎರಡು ಲೋಕಸಭಾ ಚುನಾವಣೆಗಳಲ್ಲಿ, 2014 ಮತ್ತು 2019 ರಲ್ಲಿ, ಬಿಜೆಪಿ ದೆಹಲಿಯ ಎಲ್ಲಾ ಏಳು ಸ್ಥಾನಗಳನ್ನು ಗೆದ್ದುಕೊಂಡಿತು, ಮತ ಹಂಚಿಕೆ ಶೇಕಡಾ 50 ಅನ್ನು ಮೀರಿದೆ. +ಅರವಿಂದ್‌ ಕೇಜ್ರಿವಾಲ್‌ ಅವರ ಪಕ್ಷವು ಪಂಜಾಬ್‌ ಮತ್ತು ಚಂಡೀಗಢದ ಎಲ್ಲಾ 14 ಲೋಕಸಭಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಎರಡು ಪಕ್ಷಗಳ ನಡುವಿನ ಬಾಂಧವ್ಯಕ್ಕೆ ಹೊಡೆತ ಬಿದ್ದಿದೆ. +ಎಐಸಿಸಿ ದೆಹಲಿ ಉಸ್ತುವಾರಿ ದೀಪಕ್‌ ಬಾಬ್ರಿಯಾ ಅವರೊಂದಿಗೆ ಭಾನುವಾರ ಬದಲಾವಣೆಯಲ್ಲಿ ತೊಡಗಿದ್ದ ಚೌಹಾಣ್‌ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.ದೆಹಲಿ ಕಾಂಗ್ರೆಸ್‌ನ ಶಿಸ್ತು ಸಮಿತಿಯು ಮಂಗಳವಾರ ಸಭೆ ನಡೆಸಿದ್ದು, ಚೌಹಾಣ್‌ ವಿರುದ್ಧದ ದೂರುಗಳ ಬಗ್ಗೆ ಯಾವ ಕ್ರಮ ಕೈಗೊಳ್ಳಬೇಕು ಎಂದು ನಿರ್ಧರಿಸುವುದು ಎಐಸಿಸಿಗೆ ಬಿಟ್ಟಿದೆ. \ No newline at end of file diff --git a/eesanje/url_47_115_1.txt b/eesanje/url_47_115_1.txt new file mode 100644 index 0000000000000000000000000000000000000000..47c0a5055bc2d55d6af47743b7311aff478fd0a0 --- /dev/null +++ b/eesanje/url_47_115_1.txt @@ -0,0 +1,5 @@ +ಖ್ಯಾತ ನಟ ಗುರುಚರಣ್‌ಸಿಂಗ್‌ ನಾಪತ್ತೆ +ನವದೆಹಲಿ,ಏ.27– ಖ್ಯಾತ ನಟ ಗುರುಚರಣ್‌ ಸಿಂಗ್‌ ಅಪಹರಣಗೊಂಡಿರುವ ಶಂಕೆ ವ್ಯಕ್ತವಾಗಿದೆ.ಜನಪ್ರಿಯ ಭಾರತೀಯ ಸಿಟ್‌ಕಾಂನಲ್ಲಿ ರೋಷನ್‌ ಸಿಂಗ್‌ ಸೋಧಿ ಪಾತ್ರವನ್ನು ನಿರ್ವಹಿಸಿದ್ದ ತಾರಕ್‌ ಮೆಹ್ತಾ ಕಾ ಊಲ್ತಾ ಚಶಾ ಖ್ಯಾತಿಯ ನಟ ಗುರುಚರಣ್‌ ಸಿಂಗ್‌ ಐದು ದಿನಗಳಿಂದ ನಾಪತ್ತೆಯಾಗಿದ್ದಾರೆ. +ಗುರುಚರಣ್‌ ಸಿಂಗ್‌ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಇದೀಗ ಅಪಹರಣ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಳೆದ ಸೋಮವಾರ ದೆಹಲಿಯಿಂದ ಮುಂಬೈಗೆ ಪ್ರಯಾಣಿಸಿದ್ದ ಗುರುಚರಣ್‌ಸಿಂಗ್‌ ಮುಂಬೈ ತಲುಪಿಲ್ಲ ಅಂದಿನಿಂದ ಅವರ ಫೋನ್‌ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅವರ ತಂದೆ ದೂರಿನಲ್ಲಿ ತಿಳಿಸಿದ್ದಾರೆ. +ಅವನು ಮಾನಸಿಕವಾಗಿ ಸ್ಥಿರನಾಗಿದ್ದಾನೆ, ನಾವು ಅವನನ್ನು ಹುಡುಕುತ್ತಿದ್ದೆವು, ಆದರೆ ಈಗ ನಾವು ಕಾಣೆಯಾದ ದೂರು ದಾಖಲಿಸುತ್ತಿದ್ದೇವೆ ಎಂದು ಗುರುಚರಣ್‌ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಸೋಮವಾರ ರಾತ್ರಿ ಪಾಲಂ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಭದ್ರತಾ ಕ್ಯಾಮೆರಾದಲ್ಲಿ ಸೆರೆಯಾದ ದಶ್ಯಾವಳಿಯಲ್ಲಿ 50 ವರ್ಷದ ವ್ಯಕ್ತಿ ರಸ್ತೆ ದಾಟುತ್ತಿರುವುದು ಕಂಡುಬಂದಿದೆ. +ಸೋಮವಾರ ರಾತ್ರಿ 8.30 ಕ್ಕೆ ಅವರ ವಿಮಾನವನ್ನು ನಿಗದಿಪಡಿಸಲಾಗಿತ್ತು, ಆದರೆ ಅವರು ರಾತ್ರಿ 9.14 ರ ಸುಮಾರಿಗೆ ಪಾಲಂನ ಟ್ರಾಫಿಕ್‌ ಛೇದಕದಲ್ಲಿ ಕಾಣಿಸಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಸಿಟಿವಿ ದಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_115_10.txt b/eesanje/url_47_115_10.txt new file mode 100644 index 0000000000000000000000000000000000000000..fa3f803609814d1e5d07cfca811b1da1a42b9980 --- /dev/null +++ b/eesanje/url_47_115_10.txt @@ -0,0 +1,5 @@ +ನಾನು ರಾಜಕಾರಣಕ್ಕೆ ಬರಬೇಕು ಎಂದು ದೇಶ ಬಯಸುತ್ತಿದೆ ; ರಾಬರ್ಟ್‌ ವಾದ್ರಾ +ರಿಷಿಕೇಶ್‌,ಏ.27-ನಾನು ರಾಜಕಾರಣಕ್ಕೆ ಬರಬೇಕು ಎಂದು ಇಡಿ ದೇಶವೇ ಬಯಸುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಪ್ರತಿಪಾದಿಸಿದ್ದಾರೆ. ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಅವರು ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ತಮ್ಮ ಭರವಸೆಗಳನ್ನು ಈಡೇರಿಸಿಲ್ಲ ಎಂದು ರಾಬರ್ಟ್‌ ವಾದ್ರಾ ಆರೋಪಿಸಿದ್ದಾರೆ. +ಇಡೀ ದೇಶದಿಂದ ಧ್ವನಿ ಬರುತ್ತಿದೆ, ನಾನು ಯಾವಾಗಲೂ ದೇಶದ ಜನರ ನಡುವೆ ಇದ್ದೇನೆ, ನಾನು ಸಕ್ರಿಯ ರಾಜಕಾರಣಕ್ಕೆ ಬರಬೇಕೆಂದು ಅವರು ಬಯಸುತ್ತಾರೆ. ಜನರು ಯಾವಾಗಲೂ ನಾನು ಅವರ ಪ್ರದೇಶದಲ್ಲಿ ಇರಬೇಕೆಂದು ಬಯಸುತ್ತಾರೆ. ನಾನು 1999 ರಿಂದ ಅಲ್ಲಿ (ಅಮೇಥಿ) ಪ್ರಚಾರ ಮಾಡಿದ್ದೇನೆ. ಹಾಲಿ ಸಂಸದೆ ಇರಾನಿ ಅವರು ತಮ್ಮ ಭರವಸೆಗಳನ್ನು ಈಡೇರಿಸಿಲ್ಲ ಎಂದು ವಾದ್ರಾ ಹೇಳಿದ್ದಾರೆ. +ಲೋಕಸಭೆ ಚುನಾವಣೆಯ ಎರಡು ಹಂತಗಳು ಮುಗಿದ ನಂತರ ಕಾಂಗ್ರೆಸ್‌‍ ಬಿಜೆಪಿಗಿಂತ ಆರಾಮವಾಗಿ ಮುಂದಿದೆ ಎಂದು ರಾಬರ್ಟ್‌ ವಾದ್ರಾ ಹೇಳಿದ್ದಾರೆ. ಜನರು ಬದಲಾವಣೆ ಬಯಸುತ್ತಾರೆ. +ಅವರು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಬಿಜೆಪಿಯನ್ನು ತೊಡೆದುಹಾಕಲು ಬಯಸುತ್ತಾರೆ. ರಾಹುಲ್‌ ಮತ್ತು ಪ್ರಿಯಾಂಕಾ ಅವರ ಶ್ರಮವನ್ನು ನೋಡುತ್ತಿರುವ ಭಾರತದ ಜನರು ಗಾಂಧಿ ಕುಟುಂಬದೊಂದಿಗೆ ಇದ್ದಾರೆ ಎಂದು ಅವರು ಪ್ರತಿಪಾದಿಸಿದರು. \ No newline at end of file diff --git a/eesanje/url_47_115_11.txt b/eesanje/url_47_115_11.txt new file mode 100644 index 0000000000000000000000000000000000000000..6ebb4f50f9ed7526d65e95e807bc026aa6f21000 --- /dev/null +++ b/eesanje/url_47_115_11.txt @@ -0,0 +1,8 @@ +ದಕ್ಷಿಣ ಭಾರತದಲ್ಲಿ ‘ಜಲ’ಕಂಟಕ : ಕೇಂದ್ರ ಜಲ ಆಯೋಗದ ಶಾಕಿಂಗ್ ವರದಿ +ನವದೆಹಲಿ,ಏ.27-ದಕ್ಷಿಣ ಭಾರತದಲ್ಲಿ ನೀರಿಗೆ ಹಾಹಾಕಾರ ಉಂಟಾಗಿದೆ. ಇದರ ಪರಿಣಾಮವನ್ನು ಆಯಾ ರಾಜ್ಯಗಳು ಎದುರಿಸಲು ಸನ್ನದ್ಧರಾಗಬೇಕು ಎಂದು ಕೇಂದ್ರ ಜಲ ಆಯೋಗ ಎಚ್ಚರಿಸಿದೆ. ಕರ್ನಾಟಕ, ಆಂಧ್ರ, ತೆಲಂಗಾಣ, ಕೇರಳ, ತಮಿಳುನಾಡು ರಾಜ್ಯಗಳ ಜಲಾಶಯದ ಸಾಮರ್ಥ್ಯದ ಕೇವಲ 17 ಪ್ರತಿಶತದಷ್ಟು ನೀರಿನ ಸಂಗ್ರಹವನ್ನು ಗಮನಾರ್ಹವಾಗಿ ಕಡಿಮೆ ಮಾಡಿದೆ ಎಂದು ಕೇಂದ್ರ ಜಲ ಆಯೋಗದ ಇತ್ತೀಚಿನ ಬುಲೆಟಿನ್‌ ತಿಳಿಸಿದೆ. +ಭಾರತದ ವಿವಿಧ ಪ್ರದೇಶಗಳಲ್ಲಿನ ಜಲಾಶಯದ ಶೇಖರಣಾ ಮಟ್ಟಗಳಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ, ದಕ್ಷಿಣ ಪ್ರದೇಶದಲ್ಲಿ ಆಯೋಗದ ಮೇಲ್ವಿಚಾರಣೆಯಲ್ಲಿರುವ 42 ಜಲಾಶಯಗಳು ಒಟ್ಟು 53.334 ಬಿಲಿಯನ್‌ ಕ್ಯೂಬಿಕ್‌ ಮೀಟರ್‌ ನೇರ ಸಂಗ್ರಹಣಾ ಸಾಮರ್ಥ್ಯವನ್ನು ಹೊಂದಿವೆ ಎಂದು ವರದಿಯಾಗಿದೆ. +ಇತ್ತೀಚಿನ ವರದಿಯ ಪ್ರಕಾರ, ಈ ಜಲಾಶಯಗಳಲ್ಲಿ ಲಭ್ಯವಿರುವ ಒಟ್ಟು ನೇರ ಸಂಗ್ರಹಣೆಯು 8.865 ಬಿಸಿಎಂ ಆಗಿದೆ, ಇದು ಅವುಗಳ ಒಟ್ಟು ಸಾಮರ್ಥ್ಯದ ಕೇವಲ 17 ಪ್ರತಿಶತವನ್ನು ಪ್ರತಿನಿಧಿಸುತ್ತದೆ. ಈ ಅಂಕಿ ಅಂಶವು ಕಳೆದ ವರ್ಷದ ಇದೇ ಅವಧಿಯಲ್ಲಿ (ಶೇ.29) ಮತ್ತು ಅನುಗುಣವಾದ ಅವಧಿಯ ಹತ್ತು ವರ್ಷಗಳ ಸರಾಸರಿ (ಶೇ.23) ಶೇಖರಣಾ ಮಟ್ಟಗಳಿಗೆ ಹೋಲಿಸಿದರೆ ಗಣನೀಯವಾಗಿ ಕಡಿಮೆಯಾಗಿದೆ. +ದಕ್ಷಿಣ ಪ್ರದೇಶದಲ್ಲಿ ಕಡಿಮೆಯಾದ ನೀರಿನ ಶೇಖರಣಾ ಮಟ್ಟವು ನೀರಿನ ಕೊರತೆಯನ್ನು ಹದಗೆಡಿಸುತ್ತದೆ ಮತ್ತು ಈ ರಾಜ್ಯಗಳಲ್ಲಿ ನೀರಾವರಿ, ಕುಡಿಯುವ ನೀರು ಸರಬರಾಜು ಮತ್ತು ಜಲವಿದ್ಯುತ್‌ ಉತ್ಪಾದನೆಗೆ ಸಂಭಾವ್ಯ ಸವಾಲುಗಳನ್ನು ಸೂಚಿಸುತ್ತದೆ ಎಂದು ಎಚ್ಚರಿಸಲಾಗಿದೆ. +ಇದಕ್ಕೆ ವ್ಯತಿರಿಕ್ತವಾಗಿ ಅಸ್ಸಾಂ, ಒಡಿಶಾ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳನ್ನು ಒಳಗೊಂಡಿರುವ ಪೂರ್ವ ಪ್ರದೇಶವು ಕಳೆದ ವರ್ಷ ಮತ್ತು ಹತ್ತು ವರ್ಷಗಳ ಸರಾಸರಿಗೆ ಹೋಲಿಸಿದರೆ ನೀರಿನ ಸಂಗ್ರಹಣೆಯ ಮಟ್ಟದಲ್ಲಿ ಧನಾತಕ ಸುಧಾರಣೆಯನ್ನು ತೋರಿಸಿದೆ.ಇದು ಕಳೆದ ವರ್ಷದ ಇದೇ ಅವಧಿಯಲ್ಲಿ (ಶೇ 34) ಮತ್ತು ಹತ್ತು ವರ್ಷಗಳ ಸರಾಸರಿ (ಶೇ,34) ಗಿಂತ ಶೇಖರಣಾ ಮಟ್ಟಕ್ಕಿಂತ ಸುಧಾರಣೆಯನ್ನು ಸೂಚಿಸುತ್ತದೆ. ಇತರ ಪ್ರದೇಶಗಳಲ್ಲಿ ಪರಿಸ್ಥಿತಿ ಕಡಿಮೆ ಆಶಾದಾಯಕವಾಗಿದೆ. +ಗುಜರಾತ್‌ ಮತ್ತು ಮಹಾರಾಷ್ಟ್ರವನ್ನು ಒಳಗೊಂಡಿರುವ ಪಶ್ಚಿಮ ಪ್ರದೇಶವು 11.771 ಬಿಸಿಎಂ ಸಂಗ್ರಹ ಮಟ್ಟವನ್ನು ವರದಿ ಮಾಡಿದೆ, ಇದು 49 ಮೇಲ್ವಿಚಾರಣೆ ಜಲಾಶಯಗಳ ಒಟ್ಟು ಸಾಮರ್ಥ್ಯದ 31.7 ಪ್ರತಿಶತವಾಗಿದೆ. ಹಿಂದಿನ ವರ್ಷದ (38 ಪ್ರತಿಶತ) ಮತ್ತು ಹತ್ತು ವರ್ಷಗಳ ಸರಾಸರಿ (32.1 ಪ್ರತಿಶತ) ಶೇಖರಣಾ ಮಟ್ಟಗಳಿಗೆ ಹೋಲಿಸಿದರೆ ಇದು ಗಮನಾರ್ಹವಾಗಿ ಕಡಿಮೆಯಾಗಿದೆ. ಅದೇ ರೀತಿ, ಉತ್ತರ ಮತ್ತು ಮಧ್ಯ ಪ್ರದೇಶಗಳು ಐತಿಹಾಸಿಕ ಸರಾಸರಿಗಳಿಗೆ ಹೋಲಿಸಿದರೆ ನೀರಿನ ಸಂಗ್ರಹಣೆಯ ಮಟ್ಟದಲ್ಲಿ ಕುಸಿತವನ್ನು ತೋರಿಸುತ್ತವೆ. +ಗಮನಾರ್ಹವಾಗಿ, ಬ್ರಹಪುತ್ರ, ನರ್ಮದಾ ಮತ್ತು ತಾಪಿಯಂತಹ ನದಿ ಜಲಾನಯನ ಪ್ರದೇಶಗಳು ಸಾಮಾನ್ಯಕ್ಕಿಂತ ಉತ್ತಮವಾದ ಶೇಖರಣಾ ಮಟ್ಟವನ್ನು ಹೊಂದಿವೆ ಎಂದು ಗುರುತಿಸಲಾಗಿದೆ, ಆದರೆ ಕಾವೇರಿ ಮತ್ತು ಮಹಾನದಿ ಮತ್ತು ಪೆನ್ನಾರ್‌ ನಡುವೆ ಪೂರ್ವಕ್ಕೆ ಹರಿಯುವ ನದಿಗಳಂತಹ ಜಲಾನಯನ ಪ್ರದೇಶಗಳು ಹೆಚ್ಚು ಕೊರತೆಯಿದೆ ಎಂದು ವರ್ಗೀಕರಿಸಲಾಗಿದೆ. \ No newline at end of file diff --git a/eesanje/url_47_115_12.txt b/eesanje/url_47_115_12.txt new file mode 100644 index 0000000000000000000000000000000000000000..5b1e574dab75f981403b3648aae9f232a4a33af9 --- /dev/null +++ b/eesanje/url_47_115_12.txt @@ -0,0 +1,6 @@ +ಸಲ್ಮಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಅನ್ಮೋಲ್ ಬಿಷ್ಣೋಯ್‌ಗೆ ಲುಕ್‌ಔಟ್‌ ನೋಟೀಸ್‌‍ +ಮುಂಬೈ, ಏ,27 (ಪಿಟಿಐ) :ನಟ ಸಲಾನ್‌ ಖಾನ್‌ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್‌ ಅವರ ಕಿರಿಯ ಸಹೋದರ ಅನೋಲ್‌ ಬಿಷ್ಣೋಯ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌‍ ಹೊರಡಿಸಲಾಗಿದೆ. +ಪ್ರಸ್ತುತ ಗುಜರಾತ್‌ನ ಸಬರಮತಿ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್‌ ಅವರನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಮತ್ತು ಈ ಪ್ರಕರಣದಲ್ಲಿ ಕಟ್ಟುನಿಟ್ಟಾದ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಯನ್ನು ಜಾರಿಗೊಳಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಗುಂಡಿನ ದಾಳಿಯ ಹೊಣೆಯನ್ನು ಅನೋಲ್‌ ಬಿಷ್ಣೋಯ್‌ ವಹಿಸಿಕೊಂಡಿದ್ದರು ಮತ್ತು ತನಿಖೆಯು ಅವರ ಸಹಭಾಗಿತ್ವವನ್ನು ತೋರಿಸಿದೆ, ಅದರ ನಂತರ ಮುಂಬೈ ಪೊಲೀಸರು ಲುಕ್‌ಔಟ್‌ ನೋಟೀಸ್‌‍ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದಲ್ಲಿ ಅನೋಲ್‌ ಮತ್ತು ಲಾರೆನ್ಸ್‌‍ ಬಿಷ್ಣೋಯ್‌ ಅವರನ್ನು ವಾಂಟೆಡ್‌ ಆರೋಪಿಗಳೆಂದು ಹೆಸರಿಸಲಾಗಿದೆ. +ಅನೋಲ್‌ ಬಿಷ್ಣೋಯ್‌ ಕೆನಡಾದಲ್ಲಿ ಉಳಿದು ಯುಎಸ್‌‍ಎಗೆ ಪ್ರಯಾಣಿಸುತ್ತಿದ್ದಾರೆ. ಆದರೆ, ಫೇಸ್‌‍ಬುಕ್‌ ಪೋಸ್ಟ್‌ನ ಐಪಿ ವಿಳಾಸವನ್ನು ಪೋರ್ಚುಗಲ್‌ಗೆ ಪತ್ತೆಹಚ್ಚಲಾಗಿದೆ. ಏಪ್ರಿಲ್‌ 14 ರ ಮುಂಜಾನೆ ಸಲಾನ್‌ ಖಾನ್‌ ಅವರ ನಿವಾಸದ ಬಾಂದ್ರಾದಲ್ಲಿನ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ಮೋಟಾರ್‌ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ ನಂತರ ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್‌ 307 (ಕೊಲೆಗೆ ಯತ್ನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ದಾಖಲಿಸಿದ್ದಾರೆ. +ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್‌ ಪಾಲ್‌ (21) ಆರೋಪಿಗಳಾದ ಸೋನು ಕುಮಾರ್‌ ಸುಭಾಷ್‌ ಚಂದರ್‌ ಬಿಷ್ಣೋಯ್‌ (37) ಮತ್ತು ಅನುಜ್‌ ಥಾಪನ್‌ (32) ಅವರನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_47_115_2.txt b/eesanje/url_47_115_2.txt new file mode 100644 index 0000000000000000000000000000000000000000..71b411c26313d1ffe6832993787eac08363ee125 --- /dev/null +++ b/eesanje/url_47_115_2.txt @@ -0,0 +1,6 @@ +ಟಿಎಂಸಿಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ, ದೀದಿಯನ್ನು ಬಂಧಿಸಿ : ಸುವೇಂದು +ಕೋಲ್ಕತ್ತಾ,ಏ.27– ಶೇಖ್‌ನಂತಹ ಭಯೋತ್ಪಾದಕರನ್ನು ಬೆಳೆಸಿರುವ ಮಮತಾ ಬ್ಯಾನರ್ಜಿ ಅವರು ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸುವೆಂದು ಅಧಿಕಾರಿ ಹೇಳಿದ್ದಾರೆ. +ಅಮಾನತುಗೊಂಡ ಪಕ್ಷದ ನಾಯಕ ಶೇಖ್‌ ಷಹಜಹಾನ್‌ ಅವರ ಆವರಣದಿಂದ ವಿದೇಶಿ ನಿರ್ಮಿತ ರಿವಾಲ್ವರ್‌ಗಳು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ನಂತರ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುವೇಂದು ಅಧಿಕಾರಿ ಟಿಎಂಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಹಾಗೂ ಸಂದೇಶಖಾಲಿಯಲ್ಲಿ ಆಡಳಿತ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು. +ಇಂತಹ ಶಸಾ್ತ್ರಸ್ತ್ರಗಳು ಮತ್ತು ಸ್ಫೋಟಕಗಳನ್ನು ದೇಶ ವಿರೋಧಿ ಚಟುವಟಿಕೆಗಳಲ್ಲಿ ಬಳಸಲಾಗುತ್ತಿದೆ ಮತ್ತು ಶೇಖ್‌ನಂತಹ ಭಯೋತ್ಪಾದಕರನ್ನು ಬೆಳೆಸಿದ ನಂತರ ಪಕ್ಷದ ವರಿಷ್ಠರು ರಾಜ್ಯದ ಸಿಎಂ ಆಗಿ ಮುಂದುವರಿಯುವ ನೈತಿಕ ಅಧಿಕಾರವನ್ನು ಕಳೆದುಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. +ಸಂದೇಶಖಾಲಿಯಲ್ಲಿ ಸಿಕ್ಕಿರುವ ಎಲ್ಲಾ ಶಸ್ತ್ರಾಸ್ತ್ರಗಳು ವಿದೇಶಿ. ಆರ್‌ಡಿಎಕ್‌್ಸನಂತಹ ಸ್ಫೋಟಕಗಳನ್ನು ಭೀಕರ ದೇಶವಿರೋಧಿ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ. ಈ ಎಲ್ಲಾ ಶಸ್ತ್ರಾಸ್ತ್ರಗಳನ್ನು ಅಂತರರಾಷ್ಟ್ರೀಯ ಭಯೋತ್ಪಾದಕರು ಬಳಸುತ್ತಾರೆ. ತಣಮೂಲ ಕಾಂಗ್ರೆಸ್‌‍ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ನಾನು ಒತ್ತಾಯಿಸುತ್ತೇನೆ . +ಈ ರಾಜ್ಯವು ಸ್ವರ್ಗವಾಗಿದೆ ಈಗ್ರಾದ ಖಾದಿಕುಲ್‌ನಲ್ಲಿ ನಡೆದ ಘಟನೆಯ ಟ್ರೇಲರ್‌ ವೀಕ್ಷಿಸಿದ ಜನರು, ಸಂದೇಶಖಾಲಿಯಲ್ಲಿ ಆರ್‌ಡಿಎಕ್ಸ್‌‍ ಮತ್ತು ಮಾರಣಾಂತಿಕ ಶಸಾ್ತ್ರಸ್ತ್ರಗಳನ್ನು ವಶಪಡಿಸಿಕೊಳ್ಳುವ ನಡುವೆಯೇ ಚಲನಚಿತ್ರವನ್ನು ವೀಕ್ಷಿಸಿದರು, ಈ ಘಟನೆಗೆ ಮಮತಾ ಬ್ಯಾನರ್ಜಿಯನ್ನು ಬಂಧಿಸಿ ತಣಮೂಲ ಕಾಂಗ್ರೆಸ್‌‍ ಅನ್ನು ಭಯೋತ್ಪಾದಕ ಎಂದು ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_47_115_3.txt b/eesanje/url_47_115_3.txt new file mode 100644 index 0000000000000000000000000000000000000000..90afcfb320b183f667dae353fc5f98dbf254b8f8 --- /dev/null +++ b/eesanje/url_47_115_3.txt @@ -0,0 +1,11 @@ +ಚುನಾವಣೆ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಸಿಬಿಐ ರೇಡ್‌ : ದೀದಿ ದೂರು +ಕೋಲ್ಕತ್ತಾ,ಏ.27 (ಪಿಟಿಐ) :ಎರಡನೇ ಹಂತದ ಚುನಾವಣೆ ಸಂದರ್ಭದಲ್ಲಿ ಸಂದೇಶಖಾಲಿಯಲ್ಲಿರುವ ಖಾಲಿ ಸ್ಥಳದಲ್ಲಿ ಸಿಬಿಐ ಉದ್ದೇಶಪೂರ್ವಕವಾಗಿ ಅನೈತಿಕ ದಾಳಿ ನಡೆಸಿದೆ ಎಂದು ತಣಮೂಲ ಕಾಂಗ್ರೆಸ್‌‍ ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರಿಗೆ ದೂರು ನೀಡಿದೆ. +ಡಾರ್ಜಿಲಿಂಗ್‌, ರಾಯ್‌ಗಂಜ್‌ ಮತ್ತು ಬಲೂರ್‌ಘಾಟ್‌ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿರುವಾಗ ಕೇಂದ್ರೀಯ ಸಂಸ್ಥೆ ಸಂದೇಶ್‌ಖಾಲಿಯ ಖಾಲಿ ಸ್ಥಳದಲ್ಲಿ ಅನೈತಿಕ ದಾಳಿ ನಡೆಸಿದೆ ಎಂದು ಟಿಎಂಸಿ ಹೇಳಿದೆ. +ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಈಗ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್‌ ಶೇಖ್‌ ಅವರ ಸಹಚರನ ಎರಡು ಆವರಣದಲ್ಲಿ ಶೋಧ ನಡೆಸಿದಾಗ ಸಿಬಿಐ ಪೊಲೀಸ್‌‍ ಸೇವಾ ರಿವಾಲ್ವರ್‌ ಮತ್ತು ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಶಸಾ್ತ್ರಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. +ಪ್ರಕರಣದಲ್ಲಿ ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ ಶೇಖ್‌ನಿಂದ ಪ್ರಚೋದನೆಗೆ ಒಳಗಾದ ಜನಸಮೂಹದಿಂದ ಜನವರಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಈ ಶೋಧಗಳನ್ನು ನಡೆಸಲಾಯಿತು. ಎನ್‌ಎಸ್‌‍ಜಿ ಬಾಂಬ್‌ ಸ್ಕ್ವಾಡ್‌ ಸೇರಿದಂತೆ ಸಿಬಿಐ ಹೆಚ್ಚುವರಿ ಪಡೆಗಳನ್ನು ಕರೆಸಿದೆ ಎಂದು ಮಾಧ್ಯಮ ವರದಿಗಳು ಸೂಚಿಸಿವೆ ಎಂದು ತಣಮೂಲ ಕಾಂಗ್ರೆಸ್‌‍ ಸಿಇಒಗೆ ಪತ್ರ ಬರೆದಿದೆ. +ಕೇಂದ್ರ ಏಜೆನ್ಸಿಯ ಇಂತಹ ದಾಳಿಯ ಸಮಯದಲ್ಲಿ ಮನೆಯೊಂದರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಅದು ಹೇಳಿದೆ. ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಡೊಮೇನ್‌ಗೆ ಒಳಪಟ್ಟಿದ್ದರೂ, ಅಂತಹ ದಾಳಿ ನಡೆಸುವ ಮೊದಲು ಸಿಬಿಐ ತನಗೆ ಅಥವಾ ಪೊಲೀಸ್‌‍ ಅಧಿಕಾರಿಗಳಿಗೆ ಯಾವುದೇ ಸೂಚನೆ ನೀಡಿಲ್ಲ ಎಂದು ಪಕ್ಷ ಹೇಳಿದೆ. +ಪಶ್ಚಿಮ ಬಂಗಾಳ ಪೊಲೀಸರು ಸಂಪೂರ್ಣ ಕಾರ್ಯನಿರ್ವಹಣೆಯ ಬಾಂಬ್‌ ನಿಷ್ಕ್ರಿಯ ದಳವನ್ನು ತನ್ನ ನೇತತ್ವದಲ್ಲಿ ಹೊಂದಿದೆ ಎಂದು ಟಿಎಂಸಿ ಹೇಳಿದೆ, ದಾಳಿಯ ಸಮಯದಲ್ಲಿ ಸಿಬಿಐ ನಿಜವಾಗಿಯೂ ತನ್ನ ಅಗತ್ಯವನ್ನು ಭಾವಿಸಿದ್ದರೆ ಅದು ಕಾರ್ಯಾಚರಣೆಯಲ್ಲಿ ಸಹಾಯ ಮಾಡಬಹುದಿತ್ತು. +ಆದಾಗ್ಯೂ, ಅಂತಹ ಯಾವುದೇ ಸಹಾಯವನ್ನು ಕೋರಲಾಗಿಲ್ಲ. ಆದರೆ, ಆಶ್ಚರ್ಯಕರವಾಗಿ, ದಾಳಿಯ ಸಮಯದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳುವ ಮೂಲಕ ದಾಳಿಗಳು ರಾಷ್ಟ್ರವ್ಯಾಪಿ ಸುದ್ದಿಯಾಗಿದೆ ಎಂದು ಟಿಎಂಸಿ ಹೇಳಿದೆ. +ಶೋಧನೆಯ ಸಮಯದಲ್ಲಿ ಈ ಶಸ್ತ್ರಾಸ್ತ್ರಗಳು ನಿಜವಾಗಿಯೂ ವಶಪಡಿಸಿಕೊಂಡಿವೆಯೇ ಅಥವಾ ಸಿಬಿಐ ಅಥವಾ ಎನ್‌ಎಸ್‌‍ಜಿ ಗುಟ್ಟಾಗಿ ಹುದುಗಿದೆಯೇ ಎಂದು ಖಚಿತವಾಗಿ ತಿಳಿದುಕೊಳ್ಳಲು ಯಾವುದೇ ಮಾರ್ಗವಿಲ್ಲ ಎಂದು ಪಕ್ಷವು ಅನುಮಾನಿಸಿದೆ. +ಚುನಾವಣಾ ಸಮಯದಲ್ಲಿ ಟಿಎಂಸಿ ಮತ್ತು ಅದರ ಅಭ್ಯರ್ಥಿಗಳ ವಿರುದ್ಧ ರಾಷ್ಟ್ರವ್ಯಾಪಿ ದ್ವೇಷವನ್ನು ಹುಟ್ಟುಹಾಕಲು ಸಿಬಿಐ ನಡೆಸಿದ ಪ್ರಯತ್ನದ ಸಂಪೂರ್ಣ ಕಸರತ್ತುಗಳನ್ನು ಟಿಎಂಸಿ ಆರೋಪಿಸಿದೆ, ಆದರೆ ಈ ಸ್ಥಳವು ಪಕ್ಷದ ಬೆಂಬಲಿಗರಿಗೆ ಸೇರಿದೆ ಎಂಬ ತಪ್ಪು ಮಾಹಿತಿಯನ್ನು ನೀಡುತ್ತಿದೆ. +ಪಕ್ಷದ ವಿರುದ್ಧ ಅಪಪ್ರಚಾರ ನಡೆಸಲು ಸಿಬಿಐ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಿಜೆಪಿ ಅಸ್ತ್ರಗೊಳಿಸಿದೆ ಎಂಬುದನ್ನು ಈ ಘಟನೆ ಮತ್ತೊಮೆ ಸಾಬೀತುಪಡಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_115_4.txt b/eesanje/url_47_115_4.txt new file mode 100644 index 0000000000000000000000000000000000000000..0771d408e671d2ea3a5bb2fba9c51eb13280d747 --- /dev/null +++ b/eesanje/url_47_115_4.txt @@ -0,0 +1,6 @@ +ಮೋದಿಯವರು ಮತಬ್ಯಾಂಕ್‌ ರಾಜಕೀಯ ಮಾಡಲ್ಲ, ಅಭಿವೃದ್ಧಿಯೇ ಅವರ ರಾಜಕೀಯ : ನಡ್ಡಾ +ಬೆಂಗಳೂರು,ಏ.27-ಹಿಂದೆ ಪ್ರಾದೇಶಿಕತೆ, ಜಾತಿವಾದದಂಥ ಮತಬ್ಯಾಂಕ್‌ ರಾಜಕೀಯ ನಡೆಯುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಆ ಜಾಗದಲ್ಲಿ ಅಭಿವೃದ್ಧಿಪರ ರಾಜಕೀಯವನ್ನು ಜಾರಿಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದರು. +ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಬೃಹತ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಜಾತಿ, ಪ್ರಾದೇಶಿಕತೆಯ ಚಿಂತನೆ ಅಲ್ಲಿಲ್ಲ. ಸಬ್‌ ಕಾ ಸಾಥ್‌‍, ಸಬ್‌ ಕಾ ವಿಕಾಸ್‌ ಮಂತ್ರದೊಂದಿಗೆ ಅವರು ದೇಶವನ್ನು ಮುನ್ನಡೆಸುತ್ತಿ ದ್ದಾರೆ ಎಂದು ವಿಶ್ಲೇಷಿಸಿದರು. ಎಲ್ಲರಿಗೂ ನ್ಯಾಯ ಕೊಡುವ ಮತ್ತು ಯಾರದೇ ಓಲೈಕೆ- ತುಷ್ಟೀಕರಣ ಇಲ್ಲದ ಆಡಳಿತ ನಮ್ಮದು , ಶೋಷಿತರು, ಬಡವರು, ವಂಚಿತರು, ದಲಿತರು, ಮಹಿಳೆಯರು, ಯುವಜನತೆಗೆ ಹಾಗೂ ರೈತರ ಸಶಕ್ತೀಕರಣವೇ ನಮ್ಮ ಧ್ಯೇಯ ಎಂದು ತಿಳಿಸಿದರು. +ದೇಶವನ್ನು ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿಯತ್ತ ಮೋದಿಯವರು ಮುನ್ನಡೆಸಿದ್ದಾರೆ ,ಅಮೆರಿಕ, ಯುರೋಪ್‌‍, ಜಪಾನ್‌ ಸೇರಿದಂತೆ ಅನೇಕ ದೇಶಗಳಲ್ಲಿ ಆರ್ಥಿಕ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಆದರೆ, ಕಳೆದ 10 ವರ್ಷಗಳಲ್ಲಿ ಭಾರತದ ಅರ್ಥವ್ಯವಸ್ಥೆ ಬಲಶಾಲಿಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು. +11ನೇ ಸ್ಥಾನ ದಲ್ಲಿದ್ದ ಭಾರತವು ಬ್ರಿಟನ್‌ ಸೇರಿ ಅನೇಕ ದೇಶಗಳನ್ನು ಹಿಂದಿಕ್ಕಿ 5ನೇ ಬೃಹತ್‌ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು. ನಿಮ್ಮ ಆಶೀರ್ವಾದ ಮತ್ತು ಮತಶಕ್ತಿಯಿಂದ ಭಗವಂತ್‌ ಖೂಬಾ ಅವರು ಮತ್ತೊಮ್ಮೆ ಸಂಸದರಾಗಲಿದ್ದಾರೆ. ಮೋದಿಜೀ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. +ಎರಡು ವರ್ಷಗಳಲ್ಲಿ ಭಾರತವು ಜಗತ್ತಿನ 3ನೇ ಅತಿದೊಡ್ಡ ಆರ್ಥಿಕ ಶಕ್ತಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಸಚಿವ ಭಗವಂತ ಖೂಬಾ, ಸ್ಥಳೀಯ ಮುಖಂಡರು, ಶಾಸಕರು, ಜಿಲ್ಲಾಧ್ಯಕ್ಷ, ಪದಾಧಿ ಕಾರಿಗಳು ಭಾಗವಹಿಸಿದ್ದರು. \ No newline at end of file diff --git a/eesanje/url_47_115_5.txt b/eesanje/url_47_115_5.txt new file mode 100644 index 0000000000000000000000000000000000000000..ee9e92365e1525d5ad4950bd9ecf46c7d908594e --- /dev/null +++ b/eesanje/url_47_115_5.txt @@ -0,0 +1,6 @@ +ಎಎಪಿಯಿಂದ “ಜೈಲ್‌ ಕಾ ಜವಾಬ್‌ ವೋಟ್‌ ಸೆ” ಅಭಿಯಾನ +ನವದೆಹಲಿ,ಏ. 27 (ಪಿಟಿಐ) :ಅರವಿಂದ್‌ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ಕಾರ್ಯಕರ್ತರು ರಾಷ್ಟ್ರ ರಾಜಧಾನಿಯ ಲಕ್ಷ್ಮೀನಗರದಲ್ಲಿ ಇಂದು ಬೃಹತ್‌ ಪ್ರತಿಭಟನೆ ನಡೆಸಿದರು.ಕೇಜ್ರಿ ಅವರ ಗೈರಿನಲ್ಲಿ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರು ಪ್ರಚಾರದ ನೇತೃತ್ವ ವಹಿಸಿರುವ ಸಂದರ್ಭದಲ್ಲೇ ಎಎಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿ ಗಮನ ಸೆಳೆದರು. +ಆಮ್‌ ಆದ್ಮಿ ಪಕ್ಷದ (ಎಎಪಿ) ಜೈಲ್‌ ಕಾ ಜವಾಬ್‌ ವೋಟ್‌ ಸೆ ಅಭಿಯಾನದ ಭಾಗವಾಗಿ ಪೂರ್ವ ದೆಹಲಿ ಪ್ರದೇಶದ ಟ್‌ ಓವರ್‌ ಬ್ರಿಡ್ಜ್‌‍ ಬಳಿ ಈ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಬಿಜೆಪಿ ತೋರಿದ ಸರ್ವಾಧಿಕಾರ ಮತ್ತು ಕೇಜ್ರಿವಾಲ್‌ ಬಂಧನಕ್ಕೆ ತಕ್ಕ ಉತ್ತರ ನೀಡಲು ದೆಹಲಿಯ ಜನತೆ ಸಿದ್ಧರಾಗಿದ್ದಾರೆ ಎಂದು ಸುನೀತಾ ಕೇಜ್ರಿವಾಲ್‌ ಶನಿವಾರ ಪ್ರಚಾರ ನಡೆಸಲಿರುವ ಎಎಪಿಯ ಪೂರ್ವ ದೆಹಲಿ ಲೋಕಸಭಾ ಚುನಾವಣಾ ಅಭ್ಯರ್ಥಿ ಕುಲದೀಪ್‌ ಕುಮಾರ್‌ ತಿಳಿಸಿದ್ದಾರೆ. +ಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಎಪಿ ಕಾರ್ಯಕರ್ತರು ಭಿತ್ತಿಪತ್ರಗಳನ್ನು ಹಿಡಿದು ಜೈಲ್‌ ಕಾ ಜವಾಬ್‌ ವೋಟ್‌ ಸೇ ಘೋಷಣೆ ಕೂಗಿದರು. +ಪ್ರಸ್ತುತ ತಿಹಾರ್‌ ಜೈಲಿನಲ್ಲಿರುವ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಮಾರ್ಚ್‌ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಈಗ ರದ್ದುಗೊಳಿಸಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು. +ಸುನೀತಾ ಕೇಜ್ರಿವಾಲ್‌ ರಾಷ್ಟ್ರ ರಾಜಧಾನಿ ಮತ್ತು ಇತರ ರಾಜ್ಯಗಳಲ್ಲಿ ಎಎಪಿಯ ಲೋಕಸಭಾ ಪ್ರಚಾರವನ್ನು ಮುನ್ನಡೆಸಲಿದ್ದಾರೆ ಮತ್ತು ಪೂರ್ವ ದೆಹಲಿಯಲ್ಲಿ ಕುಮಾರ್‌ ಅವರನ್ನು ಬೆಂಬಲಿಸುವ ರೋಡ್‌ಶೋ ಮೂಲಕ ಪಕ್ಷದ ಪ್ರಚಾರ ಕಾರ್ಯವು ಪ್ರಾರಂಭವಾಗುತ್ತದೆ. \ No newline at end of file diff --git a/eesanje/url_47_115_6.txt b/eesanje/url_47_115_6.txt new file mode 100644 index 0000000000000000000000000000000000000000..9ca27109af3358eb4193bc99633bc54e8d68bf68 --- /dev/null +++ b/eesanje/url_47_115_6.txt @@ -0,0 +1,5 @@ +ರಾಮನ ಅಸ್ಥಿತ್ವ ಪ್ರಶ್ನಿಸಿದವರು ರಾಮಮಂದಿರಕ್ಕೆ ಭೇಟಿ ನೀಡುತ್ತಿರುವುದೇಕೆ..? : ಸ್ಮೃತಿ ಇರಾನಿ +ಲಕ್ನೋ,ಏ.27-ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲು ನಿರ್ಧರಿಸಿರುವ ರಾಹುಲ್‌ಗಾಂಧಿ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ. ರಾಮನ ಅಸ್ಥಿತ್ವವನ್ನು ಪ್ರಶ್ನಿಸುವವರು ಈಗ ಕೇವಲ ಮತ ಯಾಚನೆ ಉದ್ದೇಶದಿಂದ ರಾಮಮಂದಿರಕ್ಕೆ ಭೇಟಿ ನೀಡುತ್ತಿರುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ. +ಅಮೇಥಿ ಭೇಟಿಗೂ ಮುನ್ನ ರಾಹುಲ್‌ಗಾಂಧಿ ರಾಮಮಂದಿರಕ್ಕೆ ಭೇಟಿ ನೀಡಲು ನಿರ್ಧರಿಸಿರುವುದರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ರಾಮಲಲ್ಲಾನ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದ ನಿಮಗೆ ಈಗ ದೇವಾಲಯಕ್ಕೆ ಭೇಟಿ ನೀಡುವುದರ ಅವಶ್ಯಕತೆ ಏನಿದೆ ಎಂದಿದ್ದಾರೆ. +ಅಮೇಥಿಯೊಂದಿಗೆ ಆಳವಾದ ಸಂಪರ್ಕವನ್ನು ಹೊಂದಿರುವ ಬಗ್ಗೆ ಮಾತನಾಡುವ ರಾಹುಲ್‌ಗಾಂಧಿ ಅವರು ಚುನಾವಣೆಗೆ ಬಂದಾಗ ವಯನಾಡ್‌ ತನ್ನ ಮನೆ ಎಂದು ಹೇಳಿಕೊಳ್ಳುತ್ತಾರೆ ಎಂದು ಹೇಳಿದರು. +ಅವರು ಇಲ್ಲಿ (ಅಮೇಥಿಯಲ್ಲಿ) ಸಂಬಂಧಗಳ ಬಗ್ಗೆ ಮಾತನಾಡಿದರು ಮತ್ತು ಅವರು ವಯನಾಡಿಗೆ ಹೋದರು. ಅಲ್ಲಿ ನಾಮಪತ್ರ ಸಲ್ಲಿಸುವಾಗ ಅವರು (ರಾಹುಲ್‌ ಗಾಂಧಿ) ವಯನಾಡನ್ನು ತನ್ನ ಮನೆ ಎಂದು ಘೋಷಿಸಿದರು, ಜನರು ಬಣ್ಣ ಬದಲಾಯಿಸುವುದನ್ನು ನಾವು ನೋಡಿದ್ದೇವೆ, ಆದರೆ ಮೊದಲ ಬಾರಿಗೆ ಕುಟುಂಬವನ್ನು ಬದಲಾಯಿಸುವುದನ್ನು ನಾವು ನೋಡಿದ್ದೇವೆ. ಮೇ 25 ರಂದು ಕಮಲಕ್ಕೆ (ಬಿಜೆಪಿ ಪಕ್ಷದ ಚಿಹ್ನೆ) ನಿಮ್ಮ ಒಂದು ಮತವು ಉಚಿತ ಪಡಿತರಕ್ಕೆ ಕಾರಣವಾಗುತ್ತದೆ ಎಂದು ನಿಮಗೆಲ್ಲರಿಗೂ ತಿಳಿದಿದೆ ಎಂದಿದ್ದಾರೆ. \ No newline at end of file diff --git a/eesanje/url_47_115_7.txt b/eesanje/url_47_115_7.txt new file mode 100644 index 0000000000000000000000000000000000000000..4d91070a1303b051319e54f71e770e12b30b497a --- /dev/null +++ b/eesanje/url_47_115_7.txt @@ -0,0 +1,8 @@ +ಸಿಪಿಐ(ಎಂ) ನಿಂದ ಚುನಾವಣಾ ಯಂತ್ರ ಹೈಜಾಕ್‌ ; ಕಾಂಗ್ರೆಸ್‌‍ ಆರೋಪ +ತಿರುವನಂತಪುರಂ,ಏ.27-ಮತದಾನದ ಶೇಕಡಾವಾರು ಪ್ರಮಾಣವನ್ನು ತಗ್ಗಿಸಲು ಸಿಪಿಐ(ಎಂ) ಚುನಾವಣಾ ಯಂತ್ರಗಳನ್ನು ಹೈಜಾಕ್‌ ಮಾಡಿದೆ ಎಂದು ಕಾಂಗ್ರೆಸ್‌‍ ಆರೋಪಿಸಿದೆ. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಮತದಾನ ಮುಗಿದ ಒಂದು ದಿನದ ನಂತರ, ಮತದಾರರಿಗೆ ಕಿರುಕುಳ ನೀಡಲಾಗುತ್ತಿದೆ ಮತ್ತು ಚುನಾವಣಾ ಯಂತ್ರವನ್ನು ರಾಜ್ಯದಲ್ಲಿ ಆಡಳಿತಾರೂಢ ಸಿಪಿಐ(ಎಂ) ಹೈಜಾಕ್‌ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್‌ ಆರೋಪಿಸಿದ್ದಾರೆ. +ಆಡಳಿತಾರೂಢ ಸಿಪಿಐ(ಎಂ) ಪಕ್ಷವು ಚುನಾವಣಾ ಯಂತ್ರವನ್ನು ಹೈಜಾಕ್‌ ಮಾಡಿರುವುದು 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ ಈ ವರ್ಷ ಮತದಾನದ ಶೇಕಡಾವಾರು ಇಳಿಕೆಗೆ ಒಂದು ಕಾರಣವಾಗಿದೆ. +ಕೇರಳದ 20 ಲೋಕಸಭಾ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆಗಳ ಬಗ್ಗೆ ಹೆಚ್ಚಿನ ರಾಜಕೀಯ ಉತ್ಸಾಹ ಮತ್ತು ನಿರೀಕ್ಷೆಯ ಹೊರತಾಗಿಯೂ, ಮತದಾನದ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಯೊಂದಿಗೆ ಪ್ರಕ್ರಿಯೆಯು ಮುಕ್ತಾಯಗೊಂಡಿತು, ಏಕೆಂದರೆ ಈ ಅಂಕಿ ಅಂಶವು ನಿನ್ನೆ ರಾತ್ರಿ 8 ಗಂಟೆಗೆ ಶೇ.70.22 ರಷ್ಟಿತ್ತು. +ಈ ಅಂಕಿ ಅಂಶವು ಗಮನಾರ್ಹವಾಗಿದ್ದರೂ, 2019 ರ ಲೋಕಸಭೆ ಚುನಾವಣೆಯಲ್ಲಿ ದಾಖಲಾದ ಶೇಕಡಾ 77.84 ರ ಮತದಾನದ ಶೇಕಡಾವಾರು ಪ್ರಮಾಣಕ್ಕಿಂತ ಸಾಕಷ್ಟು ಕುಸಿತವಾಗಿದೆ. +ರಾಜ್ಯದ ಶೇಕಡಾ ಮೂರರಿಂದ ಐದು ಮತಗಟ್ಟೆಗಳಲ್ಲಿ ವಿದ್ಯುನಾನ ಮತಯಂತ್ರಗಳಲ್ಲಿ (ಇವಿಎಂ) ದೋಷಗಳಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ದೀರ್ಘ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ವೇಣುಗೋಪಾಲ್‌ ಪ್ರತಿಪಾದಿಸಿದರು, ಇದರಿಂದಾಗಿ ದೀರ್ಘ ಸರದಿಯಲ್ಲಿ ನಿಲ್ಲಬೇಕಾದ ಮತದಾರರಿಗೆ ತೊಂದರೆಯಾಯಿತು ಎಂದಿದ್ದಾರೆ. +ಯುಡಿಎಫ್‌ ಪ್ರಬಲವಾಗಿರುವ ಬೂತ್‌ಗಳಲ್ಲಿ ಶೇ.90 ರಷ್ಟು ಇವಿಎಂ ದೋಷಗಳು ಸಂಭವಿಸಿವೆ ಎಂದು ಹಿರಿಯ ಕಾಂಗ್ರೆಸ್‌‍ ನಾಯಕ ಆರೋಪಿಸಿದ್ದಾರೆ. ಇವಿಎಂ ದೋಷದಿಂದ ಮತದಾನ ಮಾಡಲು ಗಂಟೆಗಟ್ಟಲೆ ಕಾದು ಕುಳಿತಿದ್ದ ಬೂತ್‌ಗಳಲ್ಲಿ ಕುಡಿಯುವ ನೀರು, ಕುಳಿತುಕೊಳ್ಳಲು, ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ಮತದಾರರಿಗೆ ಕಿರಿಕಿರಿಯಾಗಿದೆ. ಮತದಾನದ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಸಿಪಿಐ(ಎಂ) ಪಕ್ಷವು ಚುನಾವಣಾ ಯಂತ್ರವನ್ನು ಸಂಪೂರ್ಣವಾಗಿ ಹೈಜಾಕ್‌ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ. +ಆಡಳಿತಾರೂಢ ಎಡಪಕ್ಷಗಳ ಇಂತಹ ಆಪಾದಿತ ನಡೆಗಳ ಹೊರತಾಗಿಯೂ, ಯುಡಿಎಫ್‌ ಪರ ಅಲೆ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಆಡಳಿತ ವಿರೋಧಿ ಭಾವನೆಯು ಕೇರಳದಲ್ಲಿ ಎಲ್‌ಡಿಎಫ್‌ ಮತ್ತು ಬಿಜೆಪಿ ನೇತತ್ವದ ಎನ್‌ಡಿಎ ಯಾವುದೇ ಸ್ಥಾನಗಳನ್ನು ಗೆಲ್ಲದಂತೆ ನೋಡಿಕೊಳ್ಳುತ್ತದೆ ಎಂದು ವೇಣುಗೋಪಾಲ್‌ ಹೇಳಿದರು. \ No newline at end of file diff --git a/eesanje/url_47_115_8.txt b/eesanje/url_47_115_8.txt new file mode 100644 index 0000000000000000000000000000000000000000..cacf9f6eeb764c236c31875828a7b77b0c2b7523 --- /dev/null +++ b/eesanje/url_47_115_8.txt @@ -0,0 +1,7 @@ +ಕಾಂಗ್ರೆಸ್‌‍ ಮುಸ್ಲಿಮರ ವೋಟ್ ಬೇಕು ಆದರೆ ಸೀಟ್ ಮಾತ್ರ ನೀಡಲ್ಲ : ಖಾನ್‌ +ನವದೆಹಲಿ,ಏ.27-ಕಾಂಗ್ರೆಸ್‌‍ ಪಕ್ಷಕ್ಕೆ ಮುಸ್ಲಿಂರ ಮತ ಬೇಕು ಆದರೆ, ಅವರಿಗೆ ಸೀಟು ಮಾತ್ರ ನೀಡುವುದಿಲ್ಲ ಎಂದು ಆರೋಪಿಸಿ ಮುಸಲಾನ್‌ ನಾಯಕರೊಬ್ಬರು ಪ್ರಚಾರ ಸಮಿತಿಯಿಂದ ಕೆಳಗಿಳಿದಿರುವುದು ಇದೀಗ ಬಹಿರಂಗ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್‌‍ ನಾಯಕ ಮುಹಮದ್‌ ಆರಿಫ್‌ ನಸೀಮ್‌‍ ಖಾನ್‌ ಅವರು ಪಕ್ಷದ ಪ್ರಚಾರ ಸಮಿತಿಯಿಂದ ಕೆಳಗಿಳಿದಿದ್ದು, ರಾಜ್ಯದಲ್ಲಿ ಯಾವುದೇ ಮುಸ್ಲಿಂ ನಾಯಕರನ್ನು ಪಕ್ಷವು ನಾಮನಿರ್ದೇಶನ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ವಿರೋಧ ಪಕ್ಷದ ಮಹಾ ವಿಕಾಸ್‌‍ ಅಘಾಡಿ (ಎಂವಿಎ) ಬಣವು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವುದಿಲ್ಲ ಎಂದು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಒಟ್ಟು 48 ಲೋಕಸಭಾ ಸ್ಥಾನಗಳಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಿಲ್ಲ ಎಂದು ಮಾಜಿ ರಾಜ್ಯ ಸಚಿವರು ಪತ್ರದಲ್ಲಿ ಆರೋಪಿಸಿದ್ದಾರೆ. +ಮಹಾರಾಷ್ಟ್ರದಾದ್ಯಂತ ಅನೇಕ ಮುಸ್ಲಿಂ ಸಂಘಟನೆಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಅಲ್ಪಸಂಖ್ಯಾತ ಸಮುದಾಯದಿಂದ ಕನಿಷ್ಠ ಒಬ್ಬ ಅಭ್ಯರ್ಥಿಯನ್ನು ಕಾಂಗ್ರೆಸ್‌‍ ನಾಮನಿರ್ದೇಶನ ಮಾಡುತ್ತದೆ ಎಂದು ನಿರೀಕ್ಷಿಸುತ್ತಿದ್ದರು, ಆದರೆ ದುರದಷ್ಟವಶಾತ್‌ ಇದು ಸಂಭವಿಸಲಿಲ್ಲ ಎಂದು ಅವರು ಹೇಳಿದ್ದಾರೆ. +ಈ ಎಲ್ಲಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಈಗ ತಮನ್ನು ಕಾಂಗ್ರೆಸ್‌‍ ಕೋ ಮುಸ್ಲಿಂ ಮತ ಚಾಹಿಯೇ, ಅಭ್ಯರ್ಥಿ ಕ್ಯೂಂ ನಹೀ (ಕಾಂಗ್ರೆಸ್‌‍ಗೆ ಮುಸ್ಲಿಂ ಮತಗಳು ಬೇಕು, ಆದರೆ ಅಭ್ಯರ್ಥಿಗಳು ಏಕೆ ಬೇಡ ಎಂದು ಕೇಳುತ್ತಿದ್ದಾರೆ ಎಂದು 60 ವರ್ಷದ ರಾಜಕಾರಣಿ ಹೇಳಿದರು.ಈ ಎಲ್ಲಾ ಕಾರಣಗಳಿಗೆ ನನ್ನ ಬಳಿ ಉತ್ತರವಿಲ್ಲ ಎಂದು ಖಾನ್‌ ಪತ್ರದಲ್ಲಿ ಬರೆದಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್‌‍ ಪ್ರಚಾರ ಸಮಿತಿಗೆ ರಾಜೀನಾಮೆ ನೀಡುವುದಾಗಿಯೂ ಖಾನ್‌ ಹೇಳಿದ್ದಾರೆ. +ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍ 17ರಲ್ಲಿ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್‌ಚಂದ್ರ ಪವಾರ್‌) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿದೆ. ಅವರು ವಿರೋಧ ಪಕ್ಷದ ಮಹಾ ವಿಕಾಸ್‌‍ ಅಘಾಡಿ ಯ ಘಟಕಗಳಾಗಿವೆ. +ಮುಹಮದ್‌ ಆರಿಫ್‌ ಖಾನ್‌ ಮುಂಬೈ ನಾರ್ತ್‌ ಸೆಂಟ್ರಲ್‌ನಿಂದ ಟಿಕೆಟ್‌ಗಾಗಿ ರೇಸ್‌‍ನಲ್ಲಿದ್ದರು, ಆದರೆ ಪಕ್ಷವು ನಗರ ಘಟಕದ ಅಧ್ಯಕ್ಷೆ ವರ್ಷಾ ಗಾಯಕ್ವಾಡ್‌ ಅವರನ್ನು ಕ್ಷೇತ್ರಕ್ಕೆ ಆಯ್ಕೆ ಮಾಡಿದೆ. ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈನ ಚಂಡಿವಾಲಿಯಿಂದ ಸ್ಪರ್ಧಿಸಿದ್ದರು ಅಲ್ಲಿ ಅವರು 409 ಮತಗಳಿಂದ ಸೋತಿದ್ದರು. ಪಿಟಿಐಗೆ ಪ್ರತ್ಯೇಕವಾಗಿ ಮಾತನಾಡಿದ ಖಾನ್‌‍, ಕಾಂಗ್ರೆಸ್‌‍ ತನ್ನ ದೀರ್ಘಾವಧಿಯ ಒಳಗೊಳ್ಳುವಿಕೆಯ ಸಿದ್ಧಾಂತದಿಂದ ವಿಮುಖವಾಗಿದೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_47_115_9.txt b/eesanje/url_47_115_9.txt new file mode 100644 index 0000000000000000000000000000000000000000..23189f114403a2b7f31115a5f2fd7a4930a6caff --- /dev/null +++ b/eesanje/url_47_115_9.txt @@ -0,0 +1,7 @@ +ಸ್ಯಾಮ್‌ ಪಿತ್ರೋಡಾ ಜನ್ಮ ಜಾಲಾಡಿದ ಶಿವರಾಜ್‌ ಸಿಂಗ್‌ ಚೌಹಾಣ್‌ +ರೈಸೆನ್‌,ಏ.27-ಉತ್ತರಾಧಿಕಾರ ತೆರಿಗೆ ಕುರಿತು ಕಾಂಗ್ರೆಸ್‌‍ನ ಸಾಗರೋತ್ತರ ಅಧ್ಯಾಯದ ಮುಖ್ಯಸ್ಥ ಸ್ಯಾಮ್‌ ಪಿತ್ರೋಡಾ ವಿರುದ್ಧ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ವ್ಯಂಗ್ಯವಾಡಿದ್ದಾರೆ ಮತ್ತು ಭಾರತದ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳು ಅಮೆರಿಕದ ರೀತಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ. +ರೈಸನ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಭಾರತವನ್ನು ಅಮೆರಿಕದೊಂದಿಗೆ ಹೋಲಿಸಿದ್ದಕ್ಕಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಅಮೆರಿಕದಂತಹ ದೇಶದಲ್ಲಿ ಸಾವಿನ ನಂತರ ಸರ್ಕಾರ ಶೇ. 55 ಆಸ್ತಿಯನ್ನು ಕಸಿದುಕೊಳ್ಳುವ ನಿಬಂಧನೆ ಇದೆ. ಸ್ಯಾಮ್‌ ಪಿತ್ರೋಡಾ, ಇದು ಅಮೆರಿಕ ಅಲ್ಲ, ಇದು ಭಾರತದ ಸಂಸ್ಕೃತಿ, ಸಂಪ್ರದಾಯ ಮತ್ತು ನೈತಿಕ ಮೌಲ್ಯಗಳನ್ನು ಆರ್ಥ ಮಾಡಿಕೊಳ್ಳಿ ಎಂದಿದ್ದಾರೆ. +ಇದಕ್ಕೂ ಮೊದಲು, ಸಂಪತ್ತಿನ ಮರುಹಂಚಿಕೆಗೆ ನೀತಿಯ ಅಗತ್ಯವನ್ನು ಒತ್ತಿಹೇಳುತ್ತಾ, ಸ್ಯಾಮ್‌ ಪಿತ್ರೋಡಾ ಅಮೆರಿಕಾದಲ್ಲಿ ಚಾಲ್ತಿಯಲ್ಲಿರುವ ಪಿತ್ರಾರ್ಜಿತ ತೆರಿಗೆಯ ಪರಿಕಲ್ಪನೆಯ ಬಗ್ಗೆ ಮಾತನಾಡಿದರು ಮತ್ತು ಇವುಗಳು ಚರ್ಚಿಸಬೇಕಾದ ವಿಷಯಗಳಾಗಿವೆ ಎಂದು ಹೇಳಿದರು. +ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್‌ ಅಮೆರಿಕನ್‌ ಡಾಲರ್‌ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಮತ್ತು ಅವನು ಸತ್ತಾಗ ಅವನು ಬಹುಶಃ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು, 55 ಪ್ರತಿಶತವನ್ನು ಸರ್ಕಾರಕ್ಕೆ ಬಿಟ್ಟುಕೊಡಬೇಕು.ಭಾರತದಲ್ಲಿ ನೀವು ಅದನ್ನು ಹೊಂದಿಲ್ಲ. +ಯಾರಾದರೂ 10 ಬಿಲಿಯನ್‌ ಮೌಲ್ಯದ ಮತ್ತು ಅವರು ಸತ್ತರೆ, ಅವರ ಮಕ್ಕಳು 10 ಬಿಲಿಯನ್‌ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ . ಆದ್ದರಿಂದ ಈ ರೀತಿಯ ಸಮಸ್ಯೆಗಳು ಜನರು ಚರ್ಚೆ ಮತ್ತು ಚರ್ಚಿಸಬೇಕಾಗಿದೆ. ಯಾವಾಗ ನಾವು ಸಂಪತ್ತಿನ ಮರುಹಂಚಿಕೆ ಬಗ್ಗೆ ಮಾತನಾಡುತ್ತೇವೆ, ನಾವು ಹೊಸ ನೀತಿಗಳು ಮತ್ತು ಹೊಸ ಕಾರ್ಯಕ್ರಮಗಳ ಬಗ್ಗೆ ಮಾತನಾಡುತ್ತಿದ್ದೇವೆ ಅದು ಜನರ ಹಿತಾಸಕ್ತಿಯಾಗಿದೆಯೇ ಹೊರತು ಕೇವಲ ಅತಿ ಶ್ರೀಮಂತರ ಹಿತಾಸಕ್ತಿಯಲ್ಲ ಎಂದು ಅವರು ಹೇಳಿದರು. +ಕಾಂಗ್ರೆಸ್‌‍ ಅನ್ನು ಟೀಕಿಸಿದ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಅದು ರೈತರಾಗಿರಲಿ ಅಥವಾ ಬಡವರಾಗಿರಲಿ ಅವರು ಹಣವನ್ನು ಉಳಿಸುತ್ತಾರೆ, ಆದ್ದರಿಂದ ಅವರು ತಮ್ಮ ಮರಣದ ನಂತರ ಅವರು ತಮ್ಮ ಮಕ್ಕಳಿಗೆ ಏನನ್ನಾದರೂ ನೀಡಬಹುದು. ಆದರೆ ಕಾಂಗ್ರೆಸ್‌‍ ಈ ಸಂಪ್ರದಾಯವನ್ನು ಕೊನೆಗೊಳಿಸಲು ಬಯಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_47_116_1.txt b/eesanje/url_47_116_1.txt new file mode 100644 index 0000000000000000000000000000000000000000..1b6267effbf9206787b4da40c120e883bfc018bf --- /dev/null +++ b/eesanje/url_47_116_1.txt @@ -0,0 +1,5 @@ +ರಾಹುಲ್‌ ಗಾಂಧಿ ವಿರುದ್ಧ ಟೀಕೆ : ಎಲ್‌ಡಿಎಫ್‌ ಶಾಸಕನ ವಿರುದ್ಧ ಪ್ರಕರಣ ದಾಖಲು +ಪಾಲಕ್ಕಾಡ್‌ (ಕೇರಳ), ಅ 27-ರಾಹುಲ್‌ ಗಾಂಧಿ ನಾಲ್ಕನೇ ದರ್ಜೆಯ ಪ್ರಜೆ ಮತ್ತು ಅವರು ಡಿಎನ್‌ಎ ಆಗಿರಬೇಕು ಟೀಕಿಸಿದ ಎಲ್‌ಡಿಎಫ್‌ ಶಾಸಕ ಪಿ ವಿ ಅನ್ವರ್‌ ವಿರುಧ್ಧ ಪ್ರಕರಣ ದಾಖಲಾಗಿದೆ. +ಕಳೆದ ಏ22 ರಂದು ಕೇರಳದ ಪಾಲಕ್ಕಾಡ್‌ ಜಿಲ್ಲೆಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಶಾಸಕ ಅನ್ವರ್‌, ಕಾಂಗ್ರೆಸ್‌‍ ನಾಯಕನಿಗೆ ಗಾಂಧಿ ಎಂಬ ಉಪನಾಮದಿಂದ ಕರೆಯುವ ಅರ್ಹತೆ ಇಲ್ಲ ಆತ ನಾಲ್ಕನೇ ದರ್ಜೆಯ ಪ್ರಜೆ ಮತ್ತು ಅವರು ಡಿಎನ್‌ಎ ಆಗಿರಬೇಕು ಎಂದು ಹೇಳಿದ್ದರು. +ಘಟನೆಯ ನಂತರ ದ್ವೇಷ ಬಾಷಣ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನಿರ್ದೇಶನದ ಮೇರೆಗೆ ಶಾಸಕರ ವಿರುದ್ಧ ನಟ್ಟುಕಲ್‌ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನ್ವರ್‌ ವಿರುದ್ಧ ಐಪಿಸಿಯ ಸೆಕ್ಷನ್‌ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 125 (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ. +ವಕೀಲ ಬೈಜು ನೋಯೆಲ್‌ ರೊಸಾರಿಯೊ ಸಲ್ಲಿಸಿದ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನಿರ್ದೇಶನ ಬಂದಿದೆ.ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರನ್ನು ಕೇಂದ್ರ ತನಿಖಾ ಸಂಸ್ಥೆ ಏಕೆ ವಿನಾಯಿತಿ ನೀಡಿದೆ ಎಂದು ಪ್ರಶ್ನಿಸಿದ ಕಾಂಗ್ರೆಸ್‌‍ ನಾಯಕರ ಹೇಳಿಕೆಗೆ ಹಿನ್ನೆಲೆಯಲ್ಲಿ ರಾಹುಲ್‌ ವಿರುದ್ಧ ಅನ್ವರ್‌ ಟೀಕೆಗಳ ಸುರಿಮಳೆ ಹರಿದಿತ್ತು. ಎಲ್‌ಡಿಎಫ್‌ ಶಾಸಕರ ಟೀಕೆಗಳನ್ನು ನಂತರ ವಿಜಯನ್‌ ಸಮರ್ಥಿಸಿಕೊಂಡರು, ಅವರು ಕಾಂಗ್ರೆಸ್‌‍ ನಾಯಕ ಟೀಕೆಗೆ ಮೀರಿದವರಲ್ಲ ಎಂದು ಹೇಳಿ \ No newline at end of file diff --git a/eesanje/url_47_116_10.txt b/eesanje/url_47_116_10.txt new file mode 100644 index 0000000000000000000000000000000000000000..bcf66e5030400a41f20929d86618ce9ff5045db8 --- /dev/null +++ b/eesanje/url_47_116_10.txt @@ -0,0 +1,6 @@ +ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧೆ..? +ನವದೆಹಲಿ,ಏ.25-ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕ್ರಮವಾಗಿ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಮೂಲಗಳ ಪ್ರಕಾರ ಏಪ್ರಿಲ್ 26ರ ನಂತರ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ನಾಳೆ 2ನೇ ಹಂತದ ಚುನಾವಣೆ ಮುಗಿದ ನಂತರ ಮುಂದಿನ ವಾರ ನಾಮಪತ್ರ ಸಲ್ಲಿಸಬಹುದು ಎನ್ನಲಾಗಿದೆ. +ಎರಡನೇ ಹಂತದಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡಿ ನಲ್ಲಿ ಚುನಾವಣೆ ನಡೆಯುತ್ತಿದೆ.ಇನ್ನು ಅಮೇಥಿಯಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವೆ ಸ್ಮತಿ ಇರಾನಿ ವಿರುದ್ದ ಸೋಲು ಅನುಭವಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮತ್ತೆ ಇರಾನಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಸೀಟು ಒಪ್ಪಂದದ ಪ್ರಕಾರ, ಚುನಾವಣಾ ನಿರ್ಣಾಯಕ ರಾಜ್ಯದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಮತ್ತು ಸಮಾಜವಾದಿ ಪಕ್ಷ ಉಳಿದ 63 ಸ್ಥಾನಗಳಲ್ಲಿ ರ್ಸ್ಪಸುತ್ತಿದೆ. +ಕಾಂಗ್ರೆಸ್ ತನ್ನ ಸಾಂಪ್ರದಾಯಿಕ ಭದ್ರಕೋಟೆಗಳಾದ ರಾಯ್ ಬರೇಲಿ ಮತ್ತು ಅಮೇಥಿಯ ಹೊರತಾಗಿ ವಾರಣಾಸಿ, ಘಾಜಿಯಾಬಾದ್ ಮತ್ತು ಕಾನ್ಪುರದಲ್ಲೂ ರ್ಸ್ಪಧಿಸುತ್ತಿದೆ. ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಿಗೆ ಮೇ 20 ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ. +ರಾಯ್ ಬರೇಲಿ 1960 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಫಿರೋಜ್ ಗಾಂಧಿ ಮತ್ತು ಇಂದಿರಾ ಗಾಂಧಿ ಇಬ್ಬರೂ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ನಂತರ 2006 ರಿಂದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಕ್ಷೇತ್ರದ ಸಂಸದರಾಗಿದ್ದಾರೆ. ಸೋನಿಯಾ ಗಾಂಧಿ ಅವರು ಇತ್ತೀಚಿಗೆ ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ತಾಯಿ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. +ಸೋನಿಯಾ ಗಾಂಧಿ ಅವರು ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಬಾರಿ ಲೋಕಸಭೆ ಚುನಾವಣೆಗೆ ರ್ಸ್ಪಧಿಸುವುದಿಲ್ಲ ಎಂದು ಕಳೆದ ತಿಂಗಳು ಮತದಾರರಿಗೆ ತಿಳಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಅವರು ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. \ No newline at end of file diff --git a/eesanje/url_47_116_11.txt b/eesanje/url_47_116_11.txt new file mode 100644 index 0000000000000000000000000000000000000000..402a3242b861356bf749fff378279a420e17d34a --- /dev/null +++ b/eesanje/url_47_116_11.txt @@ -0,0 +1,8 @@ +ರಾಹುಲ್ ಗಾಂಧಿ, ಮೋದಿಗೆ ಚುನಾವಣಾ ಆಯೋಗ ನೋಟಿಸ್ +ಬೆಂಗಳೂರು,ಏ.25-ದೇಶ ಮತ್ತು ವಿಭಜನೆ ಆಧಾರದ ಮೇಲೆ ಮತ ಯಾಚನೆ ಮಾಡಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೇಳಿ ಚುನಾವಣಾ ಆಯೋಗ ಪ್ರಧಾನಿ ನರೇಂದ್ರಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದೆ. +ಇದೇ ತಿಂಗಳ 29ರ ಒಳಗೆ ನಮ್ಮ ನೋಟಿಸ್ಗೆ ಸ್ಪಷ್ಟನೆ ನೀಡಬೇಕೆಂದು ಚುನಾವಣಾ ಆಯೋಗ ನೀಡಿರುವ ನೋಟೀಸ್ನಲ್ಲಿ ಪ್ರಧಾನಿ ನರೇಂದ್ರಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂಚನೆ ನೀಡಿದೆ. ರಾಹುಲ್ ಗಾಂಧಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಕೂಡ ಪ್ರಧಾನಿ ಮೋದಿ ವಿರುದ್ಧವೂ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನಲೆಯಲ್ಲಿ ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿ ದೂರು ದಾಖಲಿಸಿತ್ತು. +ಎರಡೂ ಕಡೆಯಿಂದ ಬಂದ ದೂರುಗಳನ್ನು ಪರಿಶೀಲಿಸಿದ ಆಯೋಗ ಉಭಯ ನಾಯಕರಿಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿದೆ. ಪ್ರಧಾನಿ ಮೋದಿಯವರು ಕಳೆದ ಒಂದು ವಾರದಿಂದ ಉತ್ತರ ಭಾರತದ ರಾಜ್ಯಗಳಾದ ರಾಜಸ್ಥಾನ, ಛತ್ತೀಸ್ಗಢ, ಉತ್ತರಪ್ರದೇಶ, ಮಧ್ಯಪ್ರದೇಶ, ಕರ್ನಾಟಕ ಮತ್ತಿತರ ಕಡೆ ಪ್ರಚಾರ ನಡೆಸುವ ವೇಳೆ ಕಾಂಗ್ರೆಸ್ನಿಂದ ಒಂದು ಸಮುದಾಯವನ್ನು ಓಲೈಕೆ ಮಾಡುವ ತುಷ್ಟೀಕರಣ ನಡೆಯುತ್ತಿದೆ ಎಂದು ಆರೋಪಿಸಿದ್ದರು. +ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಸ್ಸಿ-ಎಸ್ಟಿ , ಓಬಿಸಿ, ಆದಿವಾಸಿ, ಬುಡಕಟ್ಟು ಸೇರಿದಂತೆ ಮತ್ತಿತರ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿ ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ನೀಡುವ ಹುನ್ನಾರ ನಡೆದಿದೆ ಎಂದು ಮೋದಿಯವರು ವಾಗ್ದಾಳಿ ನಡೆಸಿದ್ದರು. +ಒಂದು ಹಂತದಲ್ಲಿ ಹೆಚ್ಚು ಮಕ್ಕಳನ್ನು ಹೆರುವವರು ಅಧಿಕಾರಕ್ಕೆ ಬಂದರೆ ನಮ್ಮ ಮಹಿಳೆಯರ ಮಾಂಗಲ್ಯವು ಕೂಡ ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದರು. ಒಳನುಸುಳುವವರಿಗೆ ಮೀಸಲಾತಿಯನ್ನು ಕೊಡಲು ಕಾಂಗ್ರೆಸ್ ಹುನ್ನಾರ ನಡೆಸಿದೆ ಎಂಬುದು ಮೋದಿಯವರ ಆರೋಪವಾಗಿತ್ತು. ಚುನಾವಣಾ ಆಯೋಗಕ್ಕೆ ಮೋದಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ದೂರು ಕೊಟ್ಟಿತ್ತು. +ಬಿಜೆಪಿ ಪ್ರತಿ ದೂರು:ಕಾಂಗ್ರೆಸ್ನ ದೂರಿಗೆ ಬಿಜೆಪಿ ಪ್ರತಿದೂರು ನೀಡಿತ್ತು. ಹೈದರಾಬಾದ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾಷಣದ ತುಣುಕುಗಳನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ದೂರು ಕೊಟ್ಟಿತ್ತು. ಅಂದರೆ ರಾಹುಲ್ ಗಾಂಧಿ ಅವರು ದೇಶದ ಸಂಪತ್ತು ಕೆಲವೇ ವ್ಯಕ್ತಿಗಳ ಬಳಿ ಇದೆ. ನಾವು ಪ್ರತಿಯೊಂದನ್ನು ಎಕ್ಸ್ ರೇ ಹಾಕಿ ತನಿಖೆ ನಡೆಸಿ ಸಂಪತ್ತನ್ನು ಮರು ಹಂಚಿಕೆ ಮಾಡುತ್ತೇವೆ ಎಂದು ಹೇಳಿದ್ದರು. +ರಾಹುಲ್ ಗಾಂಧಿಯವರ ಹೇಳಿಕೆ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕೆಂದು ಬಿಜೆಪಿ ದೂರು ನೀಡಿತ್ತು. ಎರಡೂ ಕಡೆ ದೂರುಗಳನ್ನು ಪರಿಶೀಲಿಸಿದ ಆಯೋಗ ಮೋದಿ ಮತ್ತು ರಾಹುಲ್ ಗಾಂಧಿ ಅವರಿಗೆ ಸ್ಪಷ್ಟನೆ ಕೇಳಿ 29ರೊಳಗೆ ಉತ್ತರ ನೀಡಬೇಕೆಂದು ನೋಟಿಸ್ ಜಾರಿ ಮಾಡಿದೆ. \ No newline at end of file diff --git a/eesanje/url_47_116_12.txt b/eesanje/url_47_116_12.txt new file mode 100644 index 0000000000000000000000000000000000000000..9c43d60738025c20bcacb37603fde487683a9534 --- /dev/null +++ b/eesanje/url_47_116_12.txt @@ -0,0 +1,8 @@ +ಮಂಗಳಸೂತ್ರ ಹೇಳಿಕೆ : ಪ್ರಧಾನಿ ಮೋದಿ ವಿರುದ್ಧ 20,000ಕ್ಕೂ ಅಧಿಕ ದೂರು ದಾಖಲು +ಬೆಂಗಳೂರು,ಏ.25-ಮಂಗಳಸೂತ್ರವನ್ನು ಕೀಳುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆಯ ವಿರುದ್ಧ ದೇಶಾದ್ಯಂತ 20,000 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ ಎಂದು ಕಾಂಗ್ರೆಸ್ ತಿಳಿಸಿದೆ. ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಎಲ್.ಹನುಮಂತಯ್ಯ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ ಬಾಬು ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. +ಪ್ರಧಾನಿಯವರು ಮಾಂಗಲ್ಯ ಸೂತ್ರದ ಬಗ್ಗೆ ಹೇಳಿಕೆ ನೀಡುವ ಮೂಲಕ ದೇಶದ ಸಂಸ್ಕೃತಿ ಹಾಗೂ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ ತಂದು ಅಪಮಾನ ಮಾಡಿದ್ದಾರೆ ಎಂಬ ಟೀಕೆಗಳಿವೆ. ಈ ಹಿನ್ನೆಲೆಯಲ್ಲಿ ದಾಖಲಾಗಿರುವ ದೂರುಗಳ ವಿಷಯದಲ್ಲಿ ಆಯೋಗ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪಿಸಿದರು. +ವಿರೋಧಪಕ್ಷಗಳ ವಿರುದ್ಧ ದೂರು ದಾಖಲಾದರೆ ತಕ್ಷಣವೇ ನೋಟೀಸ್ ನೀಡುವ ಆಯೋಗ ಈವರೆಗೂ ಒಂದು ನೋಟೀಸ್ ನೀಡಿಲ್ಲ. ಎಲ್ಲರಿಗೂ ಒಂದೇ ರೀತಿಯ ಕಾನೂನು ಅನ್ವಯವಾಗಬೇಕು. ಆಯೋಗ ಕೂಡಲೇ ಪ್ರಧಾನಿಯವರನ್ನು ಪ್ರಚಾರ ಹಾಗೂ ಚುನಾವಣಾ ಕಾರ್ಯದಿಂದ ವಿಮುಕ್ತಿಗೊಳಿಸಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದರು. +ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುತ್ತಿರುವ ಬಿಜೆಪಿ, ಜೆಡಿಎಸ್ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿವೆ. ಪಂಚಖಾತ್ರಿ ಯೋಜನೆಗಳಡಿ ರಾಜ್ಯಸರ್ಕಾರ 40 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ರಾಜ್ಯದ 5 ಕೋಟಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿವೆ. ಬಿಜೆಪಿ ಮತ್ತು ಜೆಡಿಎಸ್ನವರ ಅಪಪ್ರಚಾರಗಳಿಗೆ ಕಿವಿಗೊಡದೆ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. +ಎಲ್.ಹನುಮಂತಯ್ಯ ಮಾತನಾಡಿ, ಜಾಗತಿಕ ಮಾನವ ಸೂಚ್ಯಂಕ ಅಭಿವೃದ್ಧಿಯಲ್ಲಿ ಭಾರತ, ಶ್ರೀಲಂಕಾ, ಭೂತಾನ್, ಬಾಂಗ್ಲಾ ದೇಶಕ್ಕಿಂತಲೂ ಕೆಳಗಿನ ಸ್ಥಾನದಲ್ಲಿವೆ. ದೇಶದಲ್ಲಿ ಬಡವ-ಶ್ರೀಮಂತರ ನಡುವಿನ ಅಂತರ ಹೆಚ್ಚಾಗುತ್ತಿದೆ. ಬಡ ಹಾಗೂ ಮಧ್ಯಮ ವರ್ಗದವರ ತಲಾ ಆದಾಯವನ್ನು ಹೆಚ್ಚಿಸುವ ಅಗತ್ಯವಿದೆ ಎಂಬುದು ರಾಹುಲ್ಗಾಂಧಿಯವರ ಅಭಿಪ್ರಾಯ. ಇದನ್ನು ತಿರುಚಿ ಪ್ರಧಾನಿ ಸೇರಿದಂತೆ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. +ವೈಯಕ್ತಿಕ ಆಸ್ತಿಗಳನ್ನು ಕಿತ್ತುಕೊಂಡು ಇಲ್ಲದವರಿಗೆ ಹಂಚಬೇಕು ಎಂಬುದು ರಾಹುಲ್ಗಾಂಧಿಯವರ ಅಭಿಪ್ರಾಯವಲ್ಲ. ಬಡ ಹಾಗೂ ಮಧ್ಯಮ ವರ್ಗದವರ ಜೀವನಮಟ್ಟ ಸುಧಾರಣೆಯಾಗುವಂತಹ ಕ್ರಮಗಳನ್ನು ಅನುಷ್ಠಾನ ಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಇದನ್ನು ಬಿಜೆಪಿಯವರಿಂದ ಸಹಿಸಲಾಗುತ್ತಿಲ್ಲ ಎಂದರು. +ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ತನ್ನ ಅಭಿವೃದ್ಧಿ ಯೋಜನೆಗಳ ಆಧಾರಿತವಾಗಿ ಮತ ಕೇಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಪಪ್ರಚಾರದ ಮೂಲಕ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿದೆ. ಬಿಜೆಪಿಯವರಿಗೆ ಮುಂದಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ನೀಲನಕ್ಷೆಯೇ ಇಲ್ಲ ಎಂದು ಲೇವಡಿ ಮಾಡಿದರು.ಸ್ಯಾಂ ಪಿಟ್ರೋಡಾ ಅವರ ಹೇಳಿಕೆ ಸಂಪೂರ್ಣ ವೈಯಕ್ತಿಕವಾಗಿದೆ. ಅದು ಪಕ್ಷದ ಅಭಿಪ್ರಾಯವಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_116_2.txt b/eesanje/url_47_116_2.txt new file mode 100644 index 0000000000000000000000000000000000000000..f80840d9d95cc520a388aa43c927af66fd09aded --- /dev/null +++ b/eesanje/url_47_116_2.txt @@ -0,0 +1,4 @@ +ಮಣಿಪುರದಲ್ಲಿ ಉಗ್ರರ ದಾಳಿಗೆ ಇಬ್ಬರು ಸಿಆರ್‌ಪಿಎಫ್‌‍ ಯೋಧರು ಹುತಾತ್ಮ +ಇಂಫಾಲ, ಅ 27-ಮಣಿಪುರದ ಬಿಷ್ಣುಪುರ್‌ ಜಿಲ್ಲೆಯಲ್ಲಿ ಇಂದು ಮುಂಜಾನೆ ಉಗ್ರರು ಭದ್ರತಾ ಪಡೆಗಳ ಶಿಬಿರದ ಮೇಲೆ ದಾಳಿ ನಡೆಸಿದ್ದು, ಇಬ್ಬರು ಸಿಆರ್‌ಪಿಎಫ್‌‍ ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೊಯಿರಾಂಗ್‌ ಪೊಲೀಸ್‌‍ ಠಾಣಾ ವ್ಯಾಪ್ತಿಯ ನರನ್ಸೇನಾದಲ್ಲಿ ಐಆರ್‌ಬಿಎನ್‌(ಇಂಡಿಯಾ ರಿಸರ್ವ್‌ ಬೆಟಾಲಿಯನ್‌) ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅವರು ಎಂದು ಪೊಲೀಸರು ತಿಳಿಸಿದ್ದಾರೆ. +ಉಗ್ರರು ಭದ್ರತಾ ಶಿಬಿರವನ್ನು ಗುರಿಯಾಗಿಸಿಕೊಂಡು ಬೆಟ್ಟದ ತುದಿಯಿಂದ ಮನಬಂದಂತೆ ಗುಂಡು ಹಾರಿಸಿದರು. ಇದು ಮಧ್ಯರಾತ್ರಿ 12.30 ರ ಸುಮಾರಿಗೆ ಪ್ರಾರಂಭವಾಗಿ 2.15 ರವರೆಗೂ ಮುಂದುವರೆಯಿತು ಎಂದು ಮೂಲಗಳು ತಿಳಿಸಿವೆ. ಉಗ್ರರು ಬಾಂಬ್‌ಗಳನ್ನು ಎಸೆದಿದ್ದು ಅವುಗಳಲ್ಲಿ ಒಂದು ಸಿಆರ್‌ಪಿಎಫ್‌ನ 128 ಬೆಟಾಲಿಯನ್‌ನ ಔಟ್‌ಪೋಸ್ಟ್‌ನಲ್ಲಿ ಸ್ಫೋಟಗೊಂಡಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮೃತರನ್ನು ಸಿಆರ್‌ಪಿಎಫ್‌‍ ಸಬ್‌ ಇನ್‌ಸ್ಪೆಕ್ಟರ್‌ ಎನ್‌ ಸರ್ಕಾರ್‌ ಮತ್ತು ಹೆಡ್‌ ಕಾನ್‌ಸ್ಟೆಬಲ್‌‍ ಅರೂಪ್‌ ಸೈನಿ ಎಂದು ಗುರುತಿಸಲಾಗಿದೆ.ಗಾಯಗೊಂಡವರು ಇನ್‌ಸ್ಪೆಕ್ಟರ್‌ ಜಾದವ್‌ ದಾಸ್‌‍ ಮತ್ತು ಕಾನ್‌ಸ್ಟೆಬಲ್‌‍ ಅಫ್ತಾಬ್‌ ದಾಸ್‌‍ ಅವರಿಗೆ ಗಾಯಗಳಾಗಿವೆ. ಶಿಬಿರಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_116_3.txt b/eesanje/url_47_116_3.txt new file mode 100644 index 0000000000000000000000000000000000000000..bbb6f7620ddd34de3202978330cf893ce3accf28 --- /dev/null +++ b/eesanje/url_47_116_3.txt @@ -0,0 +1,5 @@ +ಪೆಂಡಾಲ್‌ಗೆ ಬೆಂಕಿ ಬಿದ್ದು ಐವರ ಸಜೀವ ದಹನ +ಪಾಟ್ನಾ,ಏ.26-ಮದುವೆ ಪೆಂಡಾಲ್‌ಗೆ ಬೆಂಕಿ ಬಿದ್ದು ಆರು ಮಂದಿ ಸಜೀವ ದಹನವಾಗಿರುವ ಘಟನೆ ಬಿಹಾರದ ದರ್ಬಾಂಗಾ ಜಿಲ್ಲೆಯಲ್ಲಿ ಸಂಭವಿಸಿದೆ. ಬಹೇರಾ ಪೊಲೀಸ್‌‍ ಠಾಣೆ ವ್ಯಾಪ್ತಿಯ ಅಲಿನಗರದಲ್ಲಿ ತಡರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮದುವೆ ಸಂಭ್ರಮದಲ್ಲಿ ಕೆಲ ಯುವಕರು ಪೆಂಡಾಲ್‌ ಸಮೀಪ ಪಟಾಕಿ ಸಿಡಿಸುತ್ತಿದ್ದಾಗ ಆಕಸಿಕವಾಗಿ ಪೆಂಡಾಲ್‌ಗೆ ಬೆಂಕಿ ತಗುಲಿತು. ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ಏಕಾಏಕಿ ಇಡಿ ಪೆಂಡಾಲ್‌ಗೆ ಆವರಿಸಿದಾಗ ಪೆಂಡಾಲ್‌ ಕೆಳಗೆ ಕುಳಿತಿದ್ದ ಆರು ಮಂದಿ ಸಜೀವದಹನವಾಗಿದ್ದಾರೆೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. +ಪೆಂಡಾಲ್‌ ಒಳಭಾಗದಲ್ಲಿ ಇರಿಸಲಾಗಿದ್ದ ಕೆಲವು ದಹನಕಾರಿ ವಸ್ತುಗಳು ಬೆಂಕಿ ವೇಗವಾಗಿ ಹರಡಲು ಸಹಾಯ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮತರನ್ನು ಸುನೀಲ್‌ ಪಾಸ್ವಾನ್‌ (26), ಲೀಲಾದೇವಿ (23), ಕಾಂಚನ್‌ ದೇವಿ (26), ಸಿದ್ದಾಂತ್‌ ಕುಮಾರ್‌ (4), ಶಶಾಂಕ್‌ ಕುಮಾರ್‌ (3) ಮತ್ತು ಸಾಕ್ಷಿ ಕುಮಾರಿ (5) ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಮೂರು ಹಸುಗಳೂ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಿದ್ದೇನೆ, ಈ ನಡುವೆ ವಿಪತ್ತು ನಿರ್ವಹಣಾ ಮಾರ್ಗಸೂಚಿಯಂತೆ ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೀವ್‌ ರೋಷನ್‌ ಪಿಟಿಐಗೆ ತಿಳಿಸಿದ್ದಾರೆ. \ No newline at end of file diff --git a/eesanje/url_47_116_4.txt b/eesanje/url_47_116_4.txt new file mode 100644 index 0000000000000000000000000000000000000000..b4ab379d3816fe15eb46fba2162aea6f225b8c0d --- /dev/null +++ b/eesanje/url_47_116_4.txt @@ -0,0 +1,6 @@ +ಏ.29ಕ್ಕೆ ಮೋದಿ ಅನರ್ಹತೆ ಕೋರಿದ ಅರ್ಜಿ ವಿಚಾರಣೆ +ನವದೆಹಲಿ, ಏ.26-ಹಿಂದೂ-ಸಿಖ್‌ ದೇವರುಗಳು ಮತ್ತು ಆರಾಧನಾ ಸ್ಥಳಗಳ ಹೆಸರಿನಲ್ಲಿ ಬಿಜೆಪಿಗೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ .ಏ.29ರಂದು ವಿಚಾರಣೆ ನಡೆಸಲಿದೆ. +ವಕೀಲ ಆನಂದ್‌.ಎಸ್‌‍ ಜೊಂಧಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಪ್ರಜಾಪ್ರತಿನಿಧಿ ಕಾಯ್ದೆಯಡಿ ಆರು ವರ್ಷಗಳ ಕಾಲ ಪ್ರಧಾನಿ ನರೇಂದ್ರಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ. +ಏ.9ರಂದು ಉತ್ತರಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್‌ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದಿದ್ದಾರೆ. ರಾಮಮಂದಿರ ನಿರ್ಮಾಣ, ಕರ್ತಾರ್‌ಪುರ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ ಹಾಗೂ ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್‌ನ ಪ್ರತಿಗಳನ್ನು ವಾಪಸ್‌‍ ತಂದಿರುವುದಾಗಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ. +ಪ್ರಧಾನಿಯವರ ಭಾಷಣಗಳು ಮತದಾರರಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಬಿತ್ತುವ ಸಾಮರ್ಥ್ಯಹೊಂದಿವೆ. ಪ್ರಧಾನಿ ಹೇಳಿಕೆಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸುತ್ತವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153 ಎ ಅಡಿ ಮೋದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರಡಿ ಆರು ವರ್ಷಗಳ ಕಾಲ ಚುನಾವಣೆಯಿಂದ ಅವರನ್ನು ಅನರ್ಹಗೊಳಿಸುವಂತೆ ಆಯೋಗಕ್ಕೆ ಮನವಿ ಮಾಡಿದ್ದಾರೆ. +ಲೋಕಸಭೆ ಚುನಾವಣೆಯ ಮತದಾನದ ದಿನಾಂಕವು ಅತ್ಯಂತ ವೇಗವಾಗಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ನ್ಯಾಯಯುತ ಕ್ರಮಕ್ಕೆ ತಕ್ಷಣ ನಿರ್ದೇಶಿಸಲು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_47_116_5.txt b/eesanje/url_47_116_5.txt new file mode 100644 index 0000000000000000000000000000000000000000..7e5ff02d5c2c003dd795728bf2c7d3ad87affc25 --- /dev/null +++ b/eesanje/url_47_116_5.txt @@ -0,0 +1,15 @@ + ಇವಿಎಂ-ವಿವಿಪ್ಯಾಟ್‌ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ +ನವದೆಹಲಿ,ಏ.26-ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. +ನಮಗೆ ಇವಿಎಂನಲ್ಲಿ ಯಾವುದೇ ರೀತಿಯ ದೋಷ ಕಂಡುಬಂದಿಲ್ಲ. ಶೇ.100ರಷ್ಟು ವಿವಿಪ್ಯಾಟ್‌ಗಳನ್ನು ಹೊಂದಾಣಿಕೆ ಮಾಡಲು ಸಾಧ್ಯವಿಲ್ಲ. ಪುನಃ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದೆ. +ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸೌ ಹಾಗೂ ಇತರೆ ಸಂಸ್ಥೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಒಂದೇ ರೀತಿಯ ತೀರ್ಪು ನೀಡಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತು. +ಮತಪತ್ರಗಳನ್ನು(ಬ್ಯಾಲೆಟ್‌ ಪೇಪರ್‌) ತರುವುದಕ್ಕೆ ಸಂಬಂಧಿಸಿದ ಎಲ್ಲಾ ರಾಜ್ಯಗಳನ್ನು ನಾವು ವಜಾಗೊಳಿಸುತ್ತಿದ್ದೇವೆ. ನಮ್ಮ ಮನಸ್ಸಿನಲ್ಲಿದ್ದ ಅನುಮಾನಗಳನ್ನು ಆಯೋಗ ಬಗೆಹರಿಸಿದೆ. ಎಲ್ಲವನ್ನೂ ಅನುಮಾನದಿಂದ ನೋಡುವುದು ಬೇಡ ಎಂದು ಅರ್ಜಿದಾರರಾದ ಅಭಯ್‌ ಭಕ್ಚಂದ್‌ , ಅರುಣ್‌ಕುಮಾರ್‌ ಅಗರವಾಲ್‌ ಅವರುಗಳಿಗೆ ಸಲಹೆ ಮಾಡಿತು. +ಇದೇ ವೇಳೆ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ಎರಡು ನಿರ್ದೇಶನಗಳನ್ನು ನೀಡಿದೆ. ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಪೂರ್ಣಗೊಂಡ ನಂತರ ಯೂನಿಟ್‌ ಅನ್ನು ಸೀಲ್‌ ಮಾಡಬೇಕು ಹಾಗೂ ಎಸ್‌ಎಲ್‌ಯು ಕನಿಷ್ಠ 45 ದಿನಗಳ ಅವಧಿವರೆಗೆ ಸಂಗ್ರಹಿಸಬೇಕೆಂದು ನಿರ್ದೇಶನ ನೀಡಿದೆ. +ಮೈಕ್ರೋ ಕಂಟ್ರೋಲರ್‌ ಇವಿಎಂನಲ್ಲಿ ಸುಟ್ಟ ಮೆಮೊರಿಯನ್ನು ಇಂಜಿನಿಯರ್‌ಗಳ ತಂಡವು ಫಲಿತಾಂಶ ಘೋಷಣೆಯಾದ ನಂತರ ಅಭ್ಯರ್ಥಿಗಳ ಕೋರಿಕೆ ಮೇರೆಗೆ ಪರಿಶೀಲಿಸುತ್ತಿದೆ. ಇದಕ್ಕೆ 7 ದಿನಗಳವರೆಗೆ ಅವಕಾಶ ನೀಡಬೇಕು. ಕಾಗದದ ಚೀಟಿಗಳನ್ನು ಎಣಿಸಲು ಎಲೆಕ್ಟ್ರಾನಿಕ್‌ ಯಂತ್ರದ ಸಲಹೆಯನ್ನು ಪರಿಶೀಲಿಸಲು ಚಿಹ್ನೆಯ ಜೊತೆಗೆ ಪ್ರತಿಪಕ್ಷಕ್ಕೂ ಬಾರ್‌ ಕೋಡ್‌ ಇರಬಹುದೇ ಎಂದು ನ್ಯಾಯಮೂರ್ತಿ ಖನ್ನಾ ಅವರು ಆಯೋಗದ ಪರ ವಕೀಲರನ್ನು ಪ್ರಶ್ನಿಸಿದರು. +ಒಂದು ವೇಳೆ ಇವಿಎಂ ಟ್ಯಾಂಪರ್‌ ಆಗಿರುವುದು ಕಂಡುಬಂದಲ್ಲಿ ಅಭ್ಯರ್ಥಿಗಳು ಪರಿಶೀಲನೆಗಾಗಿ ಆಯೋಗಕ್ಕೆ ವೆಚ್ಚವನ್ನು ಭರಿಸಬೇಕು ಎಂದು ಹೇಳಿದ ನ್ಯಾಯಪೀಠ, ವ್ಯವಸ್ಥೆಯನ್ನು ಕುರುಡಾಗಿ ಅಪನಂಬಿಕೆ ಮಾಡುವುದು ಅನಗತ್ಯ ಅನುಮಾನಗಳಿಗೆ ಕಾರಣವಾಗುತ್ತದೆ ಎಂದು ಸೂಚ್ಯವಾಗಿ ಹೇಳಿತ್ತು. +ಮತ್ತೋರ್ವ ನ್ಯಾಯಾಧೀಶರಾದ ದತ್ತಾ ಅವರು, ಪ್ರಜಾಪ್ರಭುತ್ವವು ಎಲ್ಲ ಸ್ತಂಭಗಳ ನಡುವೆ ಸಾಮರಸ್ಯ ಮತ್ತು ವಿಶ್ವಾಸವನ್ನು ಕಾಪಾಡಿಕೊಳ್ಳುವಂತೆ ತಿಳಿ ಹೇಳುತ್ತದೆ. ನಂಬಿಕೆ ಮತ್ತು ಸಹಯೋಗದ ಸಂಸ್ಕೃತಿಯನ್ನು ಪೋಷಿಸುವ ಮೂಲಕ ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಹೇಳಿದರು. +ತೀರ್ಪಿನ ಹಿನ್ನೆಲೆ:ಮುಂದುವರಿದ ದೇಶಗಳಲ್ಲಿ ಇವಿಎಂ ಬಳಕೆ ಇಲ್ಲ. ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಲಾಗುತ್ತದೆ. ಹೀಗಾಗಿ ಭಾರತದಲ್ಲಿ ಬ್ಯಾಲೆಟ್‌ ಪೇಪರ್‌ನಲ್ಲಿ ಚುನಾವಣೆ ನಡೆಸಬೇಕು. ಇದರ ಜೊತೆ ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಎಲ್ಲಾ ಸ್ಲಿಪ್‌ಗಳನ್ನು ಎಣಿಕೆ ಮಾಡಬೇಕೆಂದು ಕೆಲವರು ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ ವಿವಿಪ್ಯಾಟ್‌ನಲ್ಲಿ ಮುದ್ರಣವಾದ ಸ್ಲಿಪ್‌ಗಳನ್ನು ಮತದಾರರ ಕೈಗೆ ನೀಡಿ ಆತ ಅದನ್ನು ಬಾಕ್ಸ್ ಹಾಕಬೇಕೆಂದು ಕೋರಿ ಹಲವು ಮಂದಿ ಅರ್ಜಿ ಸಲ್ಲಿಸಿದ್ದರು. +ವಕೀಲೆ ನೇಹಾ ರಾಠಿ ಅವರ ಮೂಲಕ ಸಲ್ಲಿಸಲಾದ ಮನವಿಯಲ್ಲಿ, ವಿವಿಪ್ಯಾಟ್‌ ಪರಿಶೀಲನೆಯನ್ನು ಅನುಕ್ರಮವಾಗಿ, ಅಂದರೆ ಒಂದರ ನಂತರ ಒಂದರಂತೆ ಮಾಡಬೇಕೆಂದು ಕಡ್ಡಾಯಗೊಳಿಸುವ ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಪ್ರಶ್ನಿಸಲಾಗಿದೆ. ಮತ್ತು ಇದು ಅನಗತ್ಯ ವಿಳಂಬವನ್ನು ಉಂಟುಮಾಡುತ್ತದೆ ಎಂದು ಸೇರಿಸಲಾಗಿತ್ತು. +ವಿವಿಪಿಎಟಿಯ ಎಲ್ಲಾ ಪೇಪರ್‌ ಸ್ಲಿಪ್‌ಗಳನ್ನು ಎಣಿಕೆ ದಿನದಂದು ಗಂಟೆಗಳಲ್ಲಿ ಎಣಿಕೆ ಮಾಡದಿರಲು ಯಾವುದೇ ಸಮರ್ಥನೀಯ ಕಾರಣವಿಲ್ಲ. ಎನ್‌. ಚಂದ್ರಬಾಬು ನಾಯ್ಡು ವರ್ಸಸ್‌ ಯೂನಿಯನ್‌ ಆಫ್‌ ಇಂಡಿಯಾದಲ್ಲಿ 50% ಭೌತಿಕ ಎಣಿಕೆಯನ್ನು ವಿರೋಧಿಸುವಾಗ ಚುನಾವಣಾ ಆಯೋಗವು ನೀಡಿದ ಏಕೈಕ ಕಾರಣವೆಂದರೆ ಅದು ಸಮಯ ತೆಗೆದುಕೊಳ್ಳುತ್ತದೆ ಮತ್ತು 50% ಮತಗಳನ್ನು ಎಣಿಸಲು 6 ರಿಂದ 8 ದಿನಗಳನ್ನು ತೆಗೆದುಕೊಳ್ಳುತ್ತದೆ. ಇಲ್ಲಿ ಅರ್ಜಿದಾರರ ಗೌರವಾನ್ವಿತ ಸಲ್ಲಿಕೆಯಲ್ಲಿ ನಿಜವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿತ್ತು. +ಇವಿಎಂ ಮತ್ತು ವಿವಿಪಿಎಟಿ, 2023 ರ ಕೈಪಿಡಿಯ ಮಾರ್ಗಸೂಚಿ 14.7(ಎಚ್‌) ಯಾದೃಚ್ಛಿಕವಾಗಿ ಆಯ್ಕೆಮಾಡಿದ 5(ಐದು) ಮತಗಟ್ಟೆಗಳ ವಿವಿಪ್ಯಾಟ್‌ ಪೇಪರ್‌ ಸ್ಲಿಪ್‌ನ ಪರಿಶೀಲನಾ ಎಣಿಕೆಯನ್ನು ಅನುಕ್ರಮವಾಗಿ ಅಂದರೆ ಒಂದರ ನಂತರ ಒಂದರಂತೆ ನಡೆಸಲು ಇಸಿಐ ಹೇಳುತ್ತದೆ. ವಿವಿಪ್ಯಾಟ್‌ ಸ್ಲಿಪ್‌ಗಳ ಅನುಕ್ರಮ ಪರಿಶೀಲನಾ ಎಣಿಕೆಯು ಸಂಪೂರ್ಣವಾಗಿ ಅನಿಯಂತ್ರಿತವಾಗಿದೆ, ವಿವಿಪ್ಯಾಟ್‌ ಸ್ಲಿಪ್‌ಗಳ ಪರಿಶೀಲನಾ ಎಣಿಕೆಯ ಉದ್ದೇಶದೊಂದಿಗೆ ಯಾವುದೇ ಸಾಮೀಪ್ಯವನ್ನು ಹೊಂದಿಲ್ಲ ಮತ್ತು ಯಾವುದೇ ತರ್ಕಬದ್ಧತೆಯನ್ನು ಹೊಂದಿಲ್ಲ ಎಂದು ಮನವಿಯಲ್ಲಿ ಕೋರಲಾಗಿತ್ತು. +ಚುನಾವಣೆಯು ನ್ಯಾಯಸಮ್ಮತವಾಗಿರುವುದು ಮಾತ್ರವಲ್ಲದೆ ಎಲ್ಲಾ ವಿವಿಪ್ಯಾಟ್‌ ಪೇಪರ್‌ ಸ್ಲಿಪ್‌ಗಳನ್ನು ಎಣಿಸುವ ಮೂಲಕ ವಿವಿಪ್ಯಾಟ್‌ಗಳ ಮೂಲಕ ಮತದಾರರಿಂದ ಪರಿಶೀಲಿಸಬಹುದಾದ ಚಲಾಯಿಸಲಾಗಿದೆ ಎಂದು ದಾಖಲಾದ ಮತಗಳೊಂದಿಗೆ ಇವಿಎಂಗಳಲ್ಲಿನ ಎಣಿಕೆಯನ್ನು ಕಡ್ಡಾಯವಾಗಿ ಕ್ರಾಸ್‌ ಪರಿಶೀಲಿಸಲು ಇಸಿಐಗೆ ನಿರ್ದೇಶನವನ್ನು ಮನವಿ ಕೇಳಿತ್ತು. +ಮತದಾರನ ಮತವನ್ನು ದಾಖಲಿಸಿದಂತೆ ಎಂದು ಖಚಿತಪಡಿಸಿಕೊಳ್ಳಲು ಮತಪೆಟ್ಟಿಗೆಯಲ್ಲಿ ವಿವಿಪ್ಯಾಟ್‌ ಮೂಲಕ ರಚಿಸಲಾದ ಇಸಿಐಗೆ ಸ್ಲಿಪ್‌ ಅನ್ನು ಭೌತಿಕವಾಗಿ ಬಿಡಲು ಮತದಾರರಿಗೆ ಅವಕಾಶ ನೀಡುವಂತೆ ಮನವಿಯಲ್ಲಿ ಕೋರಲಾಗಿತ್ತು. \ No newline at end of file diff --git a/eesanje/url_47_116_6.txt b/eesanje/url_47_116_6.txt new file mode 100644 index 0000000000000000000000000000000000000000..801c9ff4555d2ecbccdca29129a21d0d47a759b1 --- /dev/null +++ b/eesanje/url_47_116_6.txt @@ -0,0 +1,5 @@ +ಸಲಾನ್‌ಖಾನ್‌ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ +ಮುಂಬೈ, ಏ. 26-ಮುಂಬೈನಲ್ಲಿರುವ ನಟ ಸಲಾನ್‌ ಖಾನ್‌ ಅವರ ಮನೆಯ ಹೊರಗೆ ಇತ್ತೀಚೆಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಪಂಜಾಬ್‌ನಲ್ಲಿ ಬಂಧಿಸಿದ್ದಾರೆ. +ಬಂಧಿತರನ್ನು ಸುಭಾಷ್‌ ಚಂದರ್‌ (37) ಮತ್ತು ಅನುಜ್‌ ಥಾಪನ್‌ (32) ಎಂದು ಗುರುತಿಸಲಾಗಿದೆ. ಇವರು ಗುಂಡು ಹಾರಿಸಿದ್ದವರಿಗೆ ಶಸಾ್ತ್ರಸ್ತ್ರ ಮತ್ತು ಕಾಟ್ರಿಡ್‌್ಜಗಳನ್ನು ಒದಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರನ್ನೂ ಕ್ರೈಂ ಬ್ರಾಂಚ್‌ ತಂಡ ಬಂಧಿಸಿದ್ದು, ಮುಂಬೈಗೆ ಕರೆ ತರಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. +ಸಲಾನ್‌ಖಾನ್‌ ನಿವಾಸದ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದ ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್‌ ಪಾಲ್‌ (21) ಅವರ ಪೊಲೀಸ್‌‍ ಕಸ್ಟಡಿ ಅವಧಿಯನ್ನು ಏ.29ರವರೆಗೆ ವಿಸ್ತರಿಸಲಾಗಿದೆ.ಅವರನ್ನು ಏಪ್ರಿಲ್‌ 16 ರಂದು ಗುಜರಾತ್‌ನ ಕಚ್‌ ಜಿಲ್ಲೆಯ ಮಾತಾ ನೊ ಮಧ್‌ ಗ್ರಾಮದಿಂದ ಬಂಧಿಸಲಾಯಿತು. +ಗುಂಡಿನ ದಾಳಿಗೆ ಬಳಸಿದ ಆಯುಧಗಳನ್ನು ಪತ್ತೆ ಹಚ್ಚಲು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ತಂಡವು ಗುಜರಾತ್‌ನ ತಾಪಿ ನದಿಯಿಂದ ಎರಡು ಪಿಸ್ತೂಲ್‌ಗಳು, ವ್ಯಾಗಜೀನ್‌ಗಳು ಮತ್ತು ಬುಲೆಟ್‌ಗಳನ್ನು ವಶಪಡಿಸಿಕೊಂಡಿದೆ. \ No newline at end of file diff --git a/eesanje/url_47_116_7.txt b/eesanje/url_47_116_7.txt new file mode 100644 index 0000000000000000000000000000000000000000..3c8af113b9e1868428cb1cd830248996444dccf2 --- /dev/null +++ b/eesanje/url_47_116_7.txt @@ -0,0 +1,12 @@ +ಆಕ್ಸಫರ್ಡ್‌ ಯೂನಿಯನ್‌ನಲ್ಲಿ ಪತ್ರಕರ್ತೆ ಪಾಲ್ಕಿ ಶರ್ಮಾ ಭಾಷಣ ವೈರಲ್, ಎಲ್ಲೆಡೆ ಪ್ರಶಂಸೆ +ನವದೆಹಲಿ,ಏ.26-ಆಕ್ಸಫರ್ಡ್‌ ಯೂನಿಯನ್‌ನಲ್ಲಿ ಪತ್ರಕರ್ತ ಪಾಲ್ಕಿ ಶರ್ಮಾ ಅವರು ಮಾಡಿದ ಭಾಷಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪತ್ರಕರ್ತೆ ಪಲ್ಕಿ ಶರ್ಮಾ ಅವರು ಮೋದಿ ಅವರ ಕಾಲದಲ್ಲಿ ಭಾರತ ಹೇಗೆ ಸರಿಯಾದ ಹಾದಿಯಲ್ಲಿದೆ ಎಂಬುದರ ಪರವಾಗಿ ವಿಷಯ ಮಂಡಿಸಿದ್ದರು. +ಅವರ ಭಾಷಣವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ನಂತರ ಶರ್ಮಾ ಅವರು ತಮ್ಮ ಭಾಷಣ ಹಲವು ಜನರು ಹಂಚಿಕೊಂಡಿರುವುದನ್ನು ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ. ಪಾಲ್ಕಿ ಶರ್ಮಾ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ನೀವು ಭಾರತದಾದ್ಯಂತ ನಡೆಯುತ್ತಿರುವ ಬೃಹತ್‌ ಪರಿವರ್ತನೆಗಳ ಅದ್ಭುತ ನೋಟವನ್ನು ನೀಡಿದ್ದೀರಿ ಎಂದು ಎಕ್ಸ್ ನಲ್ಲಿ ಬರೆದಿದ್ದಾರೆ. +ಪಾಲ್ಕಿ ಶರ್ಮಾ ಅವರು ತಮ್ಮ ಭಾಷಣದಲ್ಲಿ , ನಾನು ಶ್ವೇತಭವನದಿಂದ ಎರವಲು ಪಡೆದ ಒಂದು ವಾಕ್ಯದಲ್ಲಿ ನನ್ನ ವಾದವನ್ನು ಮುಚ್ಚಬಹುದು: ನವದೆಹಲಿಗೆ ಹೋಗಿ ಮತ್ತು ಅದನ್ನು ನೀವೇ ನೋಡಿ. ಅವರು ಜೂನ್‌ 2023ರ ಜಾನ್‌ ಕಿರ್ಬಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪ್ರಾರಂಭಿಸಿದರು. +ಒಂದು ಘಟನೆಯನ್ನು ನೆನಪಿಸಿಕೊಳ್ಳುತ್ತಾ, ಶರ್ಮಾ ಅವರು ಭಾರತದಲ್ಲಿನ ಹಲವಾರು ಬೆಳವಣಿಗೆಗಳಲ್ಲಿ ಮೂರರ ಬಗ್ಗೆ ಹೇಳಿದ್ದು ಆರ್ಥಿಕ ಸೇರ್ಪಡೆ, ಇಂಟರ್ನೆಟ್‌ ಮತ್ತು ಮೊಬೈಲ್‌ ಹೆಚ್ಚಳ ಮತ್ತು ಬೆಳೆಯುತ್ತಿರುವ ವಿಮಾನ ನಿಲ್ದಾಣದ ದಟ್ಟಣೆ ಕುರಿತು ಮಾತನಾಡಿದರು. + – , ❤️🇮🇳../tgPHAPSv5a +ನಾನು ಭಾರತದಲ್ಲಿ ವಾಸಿಸುತ್ತಿದ್ದೇನೆ. ರೋಚಕ ನೀತಿಗಳು ಮತ್ತು ಸ್ಥಾನಗಳನ್ನು ತ್ಯಜಿಸಿದ ಭಾರತ. ಸ್ವಯಂ-ಅನುಮಾನದ ಭಾರತ, ಅಲ್ಲಿ ಜಾಗತಿಕ ಅಭಿಪ್ರಾಯಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ವಿಶ್ವವು ನಾಯಕತ್ವ ಮತ್ತು ಸ್ಫೂರ್ತಿಗಾಗಿ ಬರುವ ಹೆಚ್ಚು ಆತ್ಮವಿಶ್ವಾಸದ ಭಾರತವಾಗಿದೆ. +ಭಾರತೀಯರು ಸ್ವದೇಶದಲ್ಲಿ ಸಮೃದ್ಧರಾಗಿದ್ದಾರೆ ಮತ್ತು ವಿದೇಶದಲ್ಲಿ ಹೆಚ್ಚು ಆತ್ಮವಿಶ್ವಾಸ ಹೊಂದಿದ್ದಾರೆ. ದೇಶವನ್ನು ಮೃದು ಶಕ್ತಿಯ ದೈತ್ಯ ಎಂದು ವಿವರಿಸುತ್ತಾ, ಅದೇ ಸಮಯದಲ್ಲಿ, ಇನ್ನು ಮುಂದೆ ಭಯೋತ್ಪಾದನೆ ಅಥವಾ ದ್ರೋಹವನ್ನು ಸಹಿಸಿಕೊಳ್ಳುವ ಅಂಜುಬುರುಕವಾಗಿರುವ ಪ್ರಜಾಪ್ರಭುತ್ವವಲ್ಲ ಎಂದು ಶರ್ಮಾ ಫೆಬ್ರವರಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲ್‌ಕೋಟ್‌ನೊಳಗೆ ಭಾರತೀಯ ವಾಯುಪಡೆಯ (ಐಎಎಫ್‌) ದಾಳಿಯನ್ನು ಸ್ಮರಿಸಿದ್ದಾರೆ. +ಸುಮಾರು 13 ನಿಮಿಷಗಳ ಕಾಲ ಮಾಡಿದ ತನ್ನ ಭಾಷಣದಲ್ಲಿ, ಅವರು ಭಾರತದ ಹೊಸ ವಿಧಾನದ ಬಗ್ಗೆಯೂ ಮಾತನಾಡಿದರು, ಹೆಚ್ಚು ಹಣವನ್ನು ಜೇಬಿನಲ್ಲಿ ಇಡುವುದು ಮಾತ್ರವಲ್ಲ, ಇದು ಜನರನ್ನು ಸಬಲೀಕರಣಗೊಳಿಸುವ ಬಗ್ಗೆ ಅವರ ವಾದವನ್ನು ಬೆಂಬಲಿಸಿದರು. +ನಂತರ ಶರ್ಮಾ ಅವರು ಪಪುವಾ ನ್ಯೂಗಿನಿಯಾದ ಪ್ರಧಾನಿ ಜೇಮ್ಸೌ ಮರಾಪೆ ಅವರು ಪಿಎಂ ಮೋದಿಯವರ ಪಾದಗಳನ್ನು ಮುಟ್ಟುವುದನ್ನು ಪ್ರಸ್ತಾಪಿಸಿದರು. ಭಾರತವು ಕೋವಿಡ್‌ -19 ಲಸಿಕೆಯನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿದ್ದಕ್ಕಾಗಿ ಇದನ್ನು ಧನ್ಯವಾದಗಳ ಮತ ಎಂದು ಕರೆದರು. +ಆರ್ಟಿಕಲ್‌ 370 ರ ರದ್ದತಿಯಾದ ಆಗಸ್ಟ್ 2019 ರ ನಂತರ ಜಮ್ಮು ಮತ್ತು ಕಾಶ್ಮೀರದ ಪ್ರಗತಿಯನ್ನು ಅವರು ಸೂಚಿಸಿದರು.ದೇಶದ ಮಾರ್ಗವನ್ನು ನಿರ್ಣಯಿಸಲು, ನೀವು ಕಾರ್ಯಸೂಚಿ-ಚಾಲಿತ ನಿರೂಪಣೆಯನ್ನು ಸತ್ಯಗಳಿಂದ ಪ್ರತ್ಯೇಕಿಸಲು ಸಾಧ್ಯವಾಗುತ್ತದೆ. ಯಾವುದೇ ದೇಶಕ್ಕೆ, ಯಾವಾಗಲೂ ತಪ್ಪು ದಾರಿ ಇರುತ್ತದೆ. ಸಾಕಷ್ಟು ಸರ್ವಾಧಿ ಕಾರಿಗಳು ಮತ್ತು ನಿರಂಕುಶಾಧಿ ಕಾರಿಗಳು ನಮಗೆ ತೋರಿಸಿದ್ದಾರೆ. ಆದರೆ ಒಂದೇ ಸರಿಯಾದ ಮಾರ್ಗವಿಲ್ಲ. ಎಲ್ಲಿಯವರೆಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಗೌರವಿಸಲಾಗುತ್ತದೆಯೋ ಅಲ್ಲಿಯವರೆಗೆ ನಾನು ಹೇಳುತ್ತೇನೆ, ಪ್ರತಿಯೊಬ್ಬರಿಗೂ ಅವರವರದ್ದು ಮುಖ. +ಒಂದು ದೇಶವನ್ನು ಇನ್ನೊಂದು ದೇಶದ ಮಾನದಂಡಗಳ ಮೇಲೆ ನಿರ್ಣಯಿಸುವುದು ತಪ್ಪು. ಅಂತಿಮವಾಗಿ, ಸರಿಯಾದ ದಿಕ್ಕಿನ ವಿಶಿಷ್ಟ ಲಕ್ಷಣವೆಂದರೆ ಸಾರ್ವಜನಿಕ ಅನುಮೋದನೆ, ನೀವು ಸರಿಯಾದ ಹಾದಿಯಲ್ಲಿದ್ದೀರಿ ಎಂದು ಜನರು ಭಾವಿಸುತ್ತಾರೆಯೇ? ಭಾರತದ ಜನರು 2019ರಲ್ಲಿ ಆ ಪ್ರಶ್ನೆಗೆ ಉತ್ತರಿಸಿದರು ಎಂದು ಅವರು ಪ್ರೀಕ್ಷಕರಿಂದ ಉತ್ಸಾಹಭರಿತ ಚಪ್ಪಾಳೆಯೊಂದಿಗೆ ಮುಕ್ತಾಯಗೊಳಿಸಿದರು. \ No newline at end of file diff --git a/eesanje/url_47_116_8.txt b/eesanje/url_47_116_8.txt new file mode 100644 index 0000000000000000000000000000000000000000..1427f354ccadd8f359ccca545c5791768d421783 --- /dev/null +++ b/eesanje/url_47_116_8.txt @@ -0,0 +1,6 @@ +ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಸಂದೇಶ +ನವದೆಹಲಿ,ಏ.26-ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ. ಕರ್ನಾಟಕದ 14 ಕ್ಷೇತ್ರಗಳಲ್ಲಿಯೂ ಮತದಾನ ನಡೆಯುತ್ತಿರುವುದರಿಂದ ಕನ್ನಡದಲ್ಲಿಯೇ ಸಂದೇಶ ಪ್ರಕಟಿಸಿ ಮೋದಿ ಮನವಿ ಮಾಡಿದ್ದಾರೆ. +ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ ಎಂದು ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ. +ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ… +ಮತ್ತೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕೂಡ ಟ್ವೀಟ್‌ ಮಾಡಿದ್ದು, ಲೋಕಸಭೆ ಚುನಾವಣೆಯ ಎರಡನೇ ಹಂತ ಇಂದು ಆರಂಭವಾಗುತ್ತಿದ್ದು, ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಪೂರ್ಣ ಉತ್ಸಾಹದಿಂದ ಚಲಾಯಿಸಲು ಮತ್ತು ಪ್ರಜಾಪ್ರಭುತ್ವವನ್ನು ಮತದಾನದ ಮೂಲಕ ಎತ್ತಿ ಹಿಡಿಯಲು ನಾನು ನಮ್ಮ ನಾಗರಿಕರಲ್ಲಿ, ವಿಶೇಷವಾಗಿ ಯುವಕರಲ್ಲಿ ಮನವಿ ಮಾಡುತ್ತೇನೆ. +ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡುವ ಮತ್ತು ವಿಕಸಿತ ಭಾರತ ಮಾಡುವ ನಮ್ಮ ಕನಸಿಗೆ ವೇಗ ನೀಡುವ ಸರ್ಕಾರವನ್ನು ಆಯ್ಕೆ ಮಾಡಲು ಎಲ್ಲಾ ಮತದಾರರಿಗೆ ಇದು ಸುವರ್ಣಾವಕಾಶವಾಗಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_116_9.txt b/eesanje/url_47_116_9.txt new file mode 100644 index 0000000000000000000000000000000000000000..eed68115fb8e715602f337effc57543d411f4de7 --- /dev/null +++ b/eesanje/url_47_116_9.txt @@ -0,0 +1,6 @@ +ಹೊಟೇಲ್‌ಗೆ ಬೆಂಕಿ ಬಿದ್ದು ಆರು ಮಂದಿ ಸಾವು +ಪಾಟ್ನಾ, ಅ.25-ಪಾಟ್ನಾ ಜಂಕ್ಷನ್‌ ಬಳಿಯ ಹೋಟೆಲ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಸಸಾರಾಮ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಮಹಿಳೆ ಮತ್ತು ಆಕೆಯ 12 ವರ್ಷದ ಮೊಮ್ಮಗ ಸಂಜೆ ಅವರ ಗುಡಿಸಲಿಗೆ ಬೆಂಕಿ ಹಚ್ಚಿದಾಗ ಸುಟ್ಟು ಕರಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಿಹಾರದ ರಾಜ್ಯಪಾಲ ರಾಜೇಂದ್ರ ವಿ ಅರ್ಲೇಕರ್‌ ಮತ್ತು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಪಾಟ್ನಾ ಘಟನೆಯಲ್ಲಿ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.ಪಾಟ್ನಾ ಜಂಕ್ಷನ್‌ ಬಳಿಯ ಬಹುಮಹಡಿ ಕಟ್ಟಡದಲ್ಲಿ ನಡೆದ ದುರಂತ ಘಟನೆ ಅತ್ಯಂತ ದುಃಖಕರವಾಗಿದೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ತಿಳಿಸಿದೆ. +ಪಾಟ್ನಾ ಜಂಕ್ಷನ್‌ ಬಳಿಯ ಹೋಟೆಲ್‌ ಪಾಲ್‌ ನಲ್ಲಿ ಬೆಂಕಿ ಅವಘಡದಲ್ಲಿ ಪ್ರಾಣಹಾನಿಯಾಗಿರುವ ಬಗ್ಗೆ ಸಿಎಂ ತೀವ್ರ ಸಂತಾಪ ವ್‌ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಮೃತರ ಕುಟುಂಬ ಸದಸ್ಯರಿಗೆ ಸಿಎಂ ಸಾಂತ್ವನ ಹೇಳಿದ್ದಾರೆ. ಶೀಘ್ರವಾಗಲಿ ಎಂದು ಹಾರೈಸುತ್ತೇನೆ. ಸುಟ್ಟ ಗಾಯಗಳಿಗೆ ಒಳಗಾದವರ ಚೇತರಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.ಪಾಟ್ನಾ ಎಸ್‌‍ಪಿ (ಸಿಟಿ ಸೆಂಟ್ರಲ್‌‍) ಚಂದ್ರ ಪ್ರಕಾಶ್‌ ಪ್ರಕಾರ, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡ ಹೋಟೆಲ್‌ನಲ್ಲಿ ರಕ್ಷಣಾ ಕಾರ್ಯ ಮುಗಿದಿದೆ. +ಮೃತ ಆರು ಮಂದಿಯಲ್ಲಿ ಮೂವರು ಮಹಿಳೆಯರೂ ಸೇರಿದ್ದಾರೆ. ಜೊತೆಗೆ ತೀವ್ರ ಸುಟ್ಟ ಗಾಯಗಳಾಗಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕಾಶ್‌ ಸುದ್ದಿಗಾರರಿಗೆ ತಿಳಿಸಿದರು. ಘಟನೆಗೆ ಕಾರಣ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.ಜಿಲ್ಲಾ ಮ್ಯಾಜಿಸ್ಟ್ರೇಟ್‌ ಶಿರ್ಸತ್‌ ಕಪಿಲ್‌ ಅಶೋಕ್‌ ಪಿಟಿಐಗೆ ತಿಳಿಸಿದರು, ಪಾಟ್ನಾ ಜಂಕ್ಷನ್‌ ಬಳಿ ಇರುವಂತಹ ದಟ್ಟಣೆಯ ಪ್ರದೇಶಗಳಲ್ಲಿ ಇರುವ ಎಲ್ಲಾ ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ತನಿಕೆಗೆ ಆದೇಶಿಸಲಾಗಿದೆ. +ಸಸಾರಾಮ್‌ ಘಟನೆಯಲ್ಲಿ ದಿನಾರಾ ಪೊಲೀಸ್‌‍ ಠಾಣೆ ವ್ಯಪ್ತಿಯ ಡೋಂಗ್ರಾ ಟೋಲಾದಲ್ಲಿ ಅವರ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಾಗ ಮಹಿಳೆ ಮತ್ತು ಅವರ 12 ವರ್ಷದ ಮೊಮ್ಮಗ ಸುಟ್ಟು ಕರಕಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮೃತರನ್ನು ರಾಜಮುನಿ ಕುನ್ವರ್‌ (70) ಮತ್ತು ಆಕೆಯ ಮೊಮ್ಮಗ ಅಜೀತ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಬೆಂಕಿಗೆ ಕಾರಣ ತಿಳಿದುಬಂದಿಲ್ಲ ಎಂದು ದಿನಾರ ಎಸ್‌‍ಎಚ್‌ಒ ವಿನಯ್‌ಕುಮಾರ್‌ ತಿಳಿಸಿದ್ದಾರೆ \ No newline at end of file diff --git a/eesanje/url_47_117_1.txt b/eesanje/url_47_117_1.txt new file mode 100644 index 0000000000000000000000000000000000000000..e67c6e13ed5e51e26706e0de6d34ec7681cd5e0c --- /dev/null +++ b/eesanje/url_47_117_1.txt @@ -0,0 +1,6 @@ +ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಕೇಜ್ರಿವಾಲ್ ಪತ್ನಿ ಸುನಿತಾ +ನವದೆಹಲಿ,ಏ.25-ದೆಹಲಿ ಮುಖ್ಯಂಮತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣಾ ಪ್ರಚಾರ ಅಖಾಡಕ್ಕೆ ಇಳಿಸಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ಹಿನ್ನಲೆ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಆಪ್ ಅಭ್ಯರ್ಥಿಗಳ ಪರವಾಗಿ ನಾಳೆಯಿಂದ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಸುನೀತಾ ಕೇಜ್ರಿವಾಲ್ ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇದಕ್ಕೂ ಮುನ್ನ ಅವರು ರಾಜಕೀಯವಾಗಿ ಎಲ್ಲೂ ಗುರುತಿಸಿಕೊಂಡವರಲ್ಲ. +ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಸುನೀತಾ ಕೇಜ್ರಿವಾಲ್ ಅವರು ವೀಡಿಯೊ ಸಂದೇಶಗಳು ಮತ್ತು ಪತ್ರಿಕಾಗೋಷ್ಠಿಗಳ ಮೂಲಕ ಮುನ್ನಲೆಗೆ ಬಂದಿದ್ದಾರೆ. ಕೇಜ್ರಿವಾಲ್ ಬಂಧನ ಖಂಡಿಸಿ ದೆಹಲಿಯಲ್ಲಿ ವಿಪಕ್ಷಗಳು ನಡೆಸಿದ ಸಮಾವೇಶದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಇತ್ತಿಚೇಗೆ ಛತ್ತಿಸ್‍ಘಡದಲ್ಲಿ ನಡೆದ ಇಂಡಿಯಾ ಒಕ್ಕೂಟದ ಸಭೆಯಲ್ಲಿ ಅವರು ಪಕ್ಷವನ್ನು ಪ್ರತಿನಿಧಿಸಿದ್ದರು. +ಈ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಅರವಿಂದ್ ಕೇಜ್ರಿವಾಲ್ ತಮ್ಮ ಬಂಧನವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಇಡಿ ಈಗ ಅಫಿಡವಿಟ್ ಸಲ್ಲಿಸಿದೆ. 9 ಬಾರಿ ಸಮನ್ಸ್ ನೀಡಿದ್ದರೂ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಸಹಕರಿಸಲಿಲ್ಲ, ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದರು ಈ ಕಾರಣಕ್ಕೆ ಅವರನ್ನು ಬಂಧಿಸುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಹೇಳಿದೆ. +ಅಕ್ರಮ ಹಣ ವರ್ಗಾವಣೆಯ ಅಪರಾಧದಲ್ಲಿ ತಪ್ಪಿತಸ್ಥನೆಂದು ಸಾಬೀತುಪಡಿಸಲು ಜಾರಿನಿರ್ದೇಶನಾಲಯದ ಬಳಿ ಸಾಕ್ಷ್ಯಗಳಿದೆ. ಕೇಜ್ರಿವಾಲ್ ಅವರನ್ನು ಪ್ರಾಮಾಣಿಕವಾಗಿ ಬಂಧಿಸಲಾಗಿದೆಯೇ ಹೊರತು ಯಾವುದೇ ದುರುದ್ದೇಶ ಅಥವಾ ಬಾಹ್ಯ ಕಾರಣಗಳಿಗಾಗಿ ಅಲ್ಲ ಎಂದಿರುವ ಇಡಿ, ದುರುದ್ದೇಶಪೂರ್ವಕವಾಗಿ ಬಂಧಿಸಿದೆ ಎನ್ನುವ ಆರೋಪ ನಿರಾಕರಿಸಿದೆ. ಈ ಅಂಶಗಳ ಮೇಲೆ ಕೋರ್ಟ್ ಶೀಘ್ರದಲ್ಲಿ ವಿಚಾರಣೆ ನಡೆಸಲಿದೆ. \ No newline at end of file diff --git a/eesanje/url_47_117_10.txt b/eesanje/url_47_117_10.txt new file mode 100644 index 0000000000000000000000000000000000000000..80562c36902e90dc7e842baac1beb88f2fd68043 --- /dev/null +++ b/eesanje/url_47_117_10.txt @@ -0,0 +1,3 @@ +ನೆಲ್ಲೂರು ಜಿಲ್ಲೆಯ ಸೋಮಶಿಲಾ ಅರಣ್ಯದಲ್ಲಿ ಕಾಡ್ಗಿಚ್ಚು, ಅಪಾರ ವನ್ಯ ಸಂಪತ್ತು ನಾಶ +ನೆಲ್ಲೂರು,ಏ.24-ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸೋಮಶಿಲಾ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಅಪಾರ ವನ್ಯ ಸಂಪತ್ತು ನಾಶವಾಗಿದೆ.ಅಗ್ನಿ ಶಾಮಕ ಸಿಬ್ಭಂದಿ ಹಾಗು ಅರಣ್ಯಇಲಾಖೆ ಬೆಂಕಿಯನ್ನು ನಿಯಂತ್ರಿಸುವ ಹರಸಾಹಸ ಪಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಿಸಿಲಿನ ತಾಪಕ್ಕೆ ಒಣಗಿದ್ದ ಹುಲ್ಲಿನ ರಾಶಿಗೆ ಬೆಂಕಿ ಬಿದ್ದಿದೆ ಎಲ್ಲೆಡೆ ಆವರಿಸಿದೆ.ರಾತ್ರಿ ಬೆಂಕಿಯ ಕೆನ್ನಾಲಿಗೆ ಹೆಚ್ಚನ ಪ್ರದೇಶ ವ್ಯಾಪಿಸಿ ಮುಗಿಲೆತ್ತರಕ್ಕೆ ಬೆಂಕಿ ಜ್ವಾಲೆ ಕಾಣಿಸುತ್ತಿದೆ .ಈ ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಎಚ್ಚರಿಕೆ ನೀಡಲಾಗಿದೆ. ಅರಣ್ಯ ಇಲಾಖೆ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲು ಕಾರ್ಯಾಚರಣೆ ಮುಂದುವರೆದಿದೆ. \ No newline at end of file diff --git a/eesanje/url_47_117_11.txt b/eesanje/url_47_117_11.txt new file mode 100644 index 0000000000000000000000000000000000000000..30c2915314131f4a6a47116aeae831f7bb38a3b0 --- /dev/null +++ b/eesanje/url_47_117_11.txt @@ -0,0 +1,10 @@ +ಅಮೇಥಿಯಿಂದ ಸ್ಪರ್ಧಿಸುವರೇ ಸೋನಿಯಾ ಅಳಿಯ ರಾಬರ್ಟ್ ವಾದ್ರಾ..? +ಅಮೇಥಿ,ಏ.24-ಒಂದು ಕಾಲದಲ್ಲಿ ಭದ್ರಕೋಟೆ ಎನಿಸಿಕೊಂಡಿದ್ದ ಅಮೇಥಿ ಕ್ಷೇತ್ರದಲ್ಲಿ ರಾಬರ್ಟ್ ವಾದ್ರಾ ಸ್ಪರ್ಧಿಸಬೇಕು ಎಂಬ ಒತ್ತಡ ಕಂಡುಬರುತ್ತಿದೆ. ಅಮೇಥಿ ಕ್ಷೇತ್ರಕ್ಕೆ ಇದುವರೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡದಿರುವ ಸಂದರ್ಭದಲ್ಲೇ ಕ್ಷೇತ್ರದಲ್ಲಿ ಅಮೇಥಿ ಕಿ ಜನತಾ ಕರೇ ಪುಕಾರ್, ರಾಬರ್ಟ್ ವಾದ್ರಾ ಅಬ್ ಕಿ ಬಾರ್ ಎಂಬ ಪೋಸ್ಟರ್‍ಗಳು ರಾರಾಜಿಸುತ್ತಿವೆ. ಅಂದರೆ ಅಮೇಥಿಯ ಜನರು ಈ ಬಾರಿ ರಾಬರ್ಟ್ ವಾದ್ರಾ ಅವರನ್ನು ಬಯಸುತ್ತಾರೆ ಎಂದು ಬರೆಯಲಾಗಿದೆ. +ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನದಲ್ಲಿ ಮೇ 20 ರಂದು ಅಮೇಥಿ ಮತದಾನ ನಡೆಯಲಿದ್ದು, ಮೇ 3 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬಿಜೆಪಿ ಹಾಲಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತನ್ನ ಅಭ್ಯರ್ಥಿ ಎಂದು ಘೋಷಿಸಿದ್ದರೂ, ಕಾಂಗ್ರೆಸ್ ತನ್ನ ಆಯ್ಕೆಯನ್ನು ಇನ್ನೂ ಹೆಸರಿಸಿಲ್ಲ. +ಅಮೇಥಿಯು ಗಾಂಧಿಯವರ ಕುಟುಂಬದ ಸ್ಥಾನವಾಗಿದ್ದು, ಹಿಂದೆ ಸಂಜಯ್ ಗಾಂಧಿ, ರಾಜೀವ್ ಗಾಂಧಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರು. 2019 ರ ಚುನಾವಣೆಯಲ್ಲಿ, ಕೇರಳದ ವಯನಾಡಿನಲ್ಲಿ ಗೆಲುವು ಸಾಧಿಸಲು ಯಶಸ್ವಿಯಾದ ರಾಹುಲ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಸ್ಮೃತಿ ಇರಾನಿ ಅದ್ಭುತ ಜಯ ಸಾಧಿಸಿದರು. +ಈ ವರ್ಷವೂ, ರಾಹುಲ್ ಗಾಂಧಿ ವಯನಾಡ್‍ನಿಂದ ಸ್ಪರ್ಧಿಸುತ್ತಿದ್ದಾರೆ. ಮೇ 3 ರವರೆಗೆ ಅಮೇಥಿಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಕೇರಳದ ಚುನಾವಣೆಯ ನಂತರ ಗಾಂಧಿ ಅವರು ಅಮೇಥಿಯಿಂದಲೂ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಬೆಳವಣಿಗೆ ಬೆನ್ನಲ್ಲೇ ಅಮೇಥಿ ಕ್ಷೇತ್ರದ ಕೈ ಅಭ್ಯರ್ಥಿಯಾಗಿ ರಾಬರ್ಟ್ ವಾದ್ರಾ ಅವರು ಆಯ್ಕೆಯಾದರೂ ಅಚ್ಚರಿಪಡುವಂತಿಲ್ಲ. +ಏತನ್ಮಧ್ಯೆ, ಶ್ರೀ ವಾದ್ರಾ ಅವರು ಅಮೇಥಿಯಲ್ಲಿ ಸ್ಪರ್ಧಿಸಿದರೆ, ಸ್ಮೃತಿಜಿ ಅವರನ್ನು ಆಯ್ಕೆ ಮಾಡುವ ತಮ್ಮ ತಪ್ಪನ್ನು ಸರಿಪಡಿಸುವ ಆಯ್ಕೆ ಅವರಿಗೆ ಇರುತ್ತದೆ ಎಂದು ಅಮೇಥಿಯ ಜನರು ಭಾವಿಸುತ್ತಾರೆ ಎಂದು ಹೇಳಿದ ನಂತರ ಅವರು ಕಿಡಿ ಕಾರಿದ್ದಾರೆ. ನಾನು ಸ್ಪರ್ಧಿಸಿದರೆ ಅವರು ನನ್ನ ಗೆಲುವನ್ನು ಭಾರಿ ಅಂತರದಿಂದ ಖಚಿತಪಡಿಸುತ್ತಾರೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಮೊದಲು ಹೇಳಿದರು. ಇದಾದ ಬೆನ್ನಲ್ಲೇ, ಕಾಂಗ್ರೆಸ್ ಅಭ್ಯರ್ಥಿ ಎಂದು ಆಗ್ರಹಿಸಿ ಕೆಲವು ಪೋಸ್ಟರ್‍ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದವು. +ಇರಾನಿ ಅವರ ಪ್ರಚಾರವು ಭರದಿಂದ ಸಾಗುತ್ತಿದೆ, ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸುವಲ್ಲಿ ವಿಳಂಬವಾಗಿದೆ ಎಂದು ಟೀಕಿಸಿದ್ದಾರೆ ಮತ್ತು ಶ್ರೀ ಗಾಂಧಿ ಮತ್ತು ಅವರ ಸೋದರ ಮಾವ ಶ್ರೀ ವಾದ್ರಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ಜಿಜಾಜಿ ಕಿ ನಜರ್ ಹೈ, ಸಾಲೇ ಸಾಹಬ್ ಕ್ಯಾ ಕರೆಂಗೆ. (ಸೋದರ ಮಾವ ಸೀಟಿನ ಮೇಲೆ ಕಣ್ಣಿಟ್ಟಿದ್ದಾರೆ, ಅವರು (ಗಾಂಧಿ) ಏನು ಮಾಡುತ್ತಾರೆ?) ಬಸ್‍ಗಳಲ್ಲಿ ಪ್ರಯಾಣಿಸುವ ಜನರು ತಮ್ಮ ಆಸನವನ್ನು ಗುರುತಿಸಲು ತಮ್ಮ ಕರವಸವನ್ನು ಬಿಡುವ ಕಾಲವಿತ್ತು. ಅವರ ಸೋದರ ಮಾವ ಈ ಆಸನದ ಮೇಲೆ ಕಣ್ಣಿಟ್ಟಿರುವ ಕಾರಣ ರಾಹುಲ್ ಗಾಂಧಿ ಕೂಡ ತಮ್ಮ ಆಸನವನ್ನು ಗುರುತಿಸಲು ಬರುವುದಿಲ್ಲ ಎಂದು ಅವರು ಇತ್ತೀಚೆಗೆ ಅಮೇಥಿಯಲ್ಲಿ ಹೇಳಿದರು. +ಇದು ಎಂದಾದರೂ ನಡೆದಿದೆಯೇ? ಚುನಾವಣೆಗೆ ಕೇವಲ 27 ದಿನಗಳು ಉಳಿದಿವೆ, ಆದರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. ಅಂತಹ ದುರಹಂಕಾರ. ನಾನು ಐದು ವರ್ಷಗಳಲ್ಲಿ ಏನು ಮಾಡಬಲ್ಲೇ, ರಾಹುಲ್ ಗಾಂಧಿ 15 ವರ್ಷಗಳಲ್ಲಿ ಮಾಡಲು ಸಾಧ್ಯವಾಗಲಿಲ್ಲ, ಎಂದು ಅವರು ಹೇಳಿದರು. +ಏಪ್ರಿಲ್ 26 ರ ನಂತರ ಶ್ರೀ ಗಾಂಧಿ ಅಮೇಥಿಗೆ ಬರುತ್ತಾರೆ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಒಡೆಯಲು ಪ್ರಯತ್ನಿಸುತ್ತಾರೆ ಎಂದು ಕೇಂದ್ರ ಸಚಿವರು ಆರೋಪಿಸಿದ್ದಾರೆ. \ No newline at end of file diff --git a/eesanje/url_47_117_12.txt b/eesanje/url_47_117_12.txt new file mode 100644 index 0000000000000000000000000000000000000000..0c932f3ae5af0e5955792970c62312aec28ffa70 --- /dev/null +++ b/eesanje/url_47_117_12.txt @@ -0,0 +1,4 @@ +ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಧ್ಯಾಪಕ ಅರೆಸ್ಟ್ +ಚೆನ್ನೈ, ಏ.24 (ಪಿಟಿಐ) :ಇಬ್ಬರು ಮಾಜಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 51 ವರ್ಷದ ಕಲಾಕ್ಷೇತ್ರ ಫೌಂಡೇಶನ್ ನ ಮಾಜಿ ಅಧ್ಯಾಪಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಶೀಜಿತ್ ಕೃಷ್ಣ ಎಂದು ಗುರುತಿಸಲಾಗಿದೆ. +1995-2007ರ ಅವಧಿಯಲ್ಲಿ ಕಲಾಕ್ಷೇತ್ರದ ವಿದ್ಯಾರ್ಥಿಗಳಾಗಿದ್ದಾಗ ಕೃಷ್ಣ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಇಬ್ಬರು ಮಹಿಳೆಯರ ದೂರಿನ ಮೇರೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. +ನೀಲಂಕರೈ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇನ್ಸ್‍ಪೆಕ್ಟರ್ ನೇತೃತ್ವದ ತಂಡ ಆತನನ್ನು ಬಂಧಿಸಿದೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ \ No newline at end of file diff --git a/eesanje/url_47_117_2.txt b/eesanje/url_47_117_2.txt new file mode 100644 index 0000000000000000000000000000000000000000..d83627e8a1cf120d7597e917cb6463906c818193 --- /dev/null +++ b/eesanje/url_47_117_2.txt @@ -0,0 +1,6 @@ +ಮೊಬೈಲ್ ಸಂದೇಶಗಳ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಬೆಸ್ಕಾಂ +ಬೆಂಗಳೂರು,ಏ.25-ಪ್ರಸಕ್ತ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಗ್ಗೆ ಬೆಸ್ಕಾಂ ವತಿಯಿಂದ ಚುನಾವಣಾ ಜಾಗೃತಿ ಮೂಡಿಸುವ ಮೊಬೈಲ್ ಸಂದೇಶವನ್ನು ನೀಡಲಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸಲು ಪ್ರತಿಯೊಬ್ಬರೂ ಮತದಾನ ಮಾಡುವಂತೆ ಬೆಸ್ಕಾಂ ಸಂದೇಶದಲ್ಲಿ ಮನವಿ ಮಾಡಿದೆ. +ಜವಾಬ್ದಾರಿಯುತ ಪ್ರತಿಯೊಬ್ಬ ನಾಗರಿಕರೂ ನಾಳೆ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯುವ ಮತದಾನದಲ್ಲಿ ಪಾಲ್ಗೊಂಡು ತಮ್ಮ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕೆಂದು ಕೋರಿದೆ. ಇದೇ ರೀತಿ ಕೆಎಸ್‍ಆರ್‍ಟಿಸಿ ಪ್ರಯಾಣಿಕರಿಗೆ ನೀಡುವ ಟಿಕೆಟ್‍ನಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸಂದೇಶವನ್ನು ಮುದ್ರಿಸುತ್ತಿದೆ. +ಬಿಬಿಎಂಪಿಯು ಪ್ರತಿನಿತ್ಯ ಮನೆಮನೆಯಿಂದ ಸಂಗ್ರಹಿಸುವ ಕಸದ ವಾಹನಗಳ ಮೇಲೂ ಮತದಾನದ ಜಾಗೃತಿ ಸಂದೇಶದ ಫಲಕವನ್ನು ಹಾಕಲಾಗಿದೆ. ವಿವಿಧ ಸಂಘ, ಸಂಸ್ಥೆಗಳು ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಥಾ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದನ್ನು ಸ್ಮರಿಸಬಹುದು. +ಭಾರತದ ಚುನಾವಣಾ ಆಯೋಗವು ವೈವಿಧ್ಯಮಯವಾದ ಕಾರ್ಯಕ್ರಮಗಳ ಮೂಲಕ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದೆ. ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಈ ಬಾರಿ ಮತದಾರರಿಗೆ ನೀಡುವ ವೋಟರ್ ಸ್ಲಿಪ್‍ನಲ್ಲಿ ಕ್ಯೂಆರ್‍ಕೋಡ್ ನೀಡುವ ವ್ಯವಸ್ಥೆ ಜಾರಿಗೆ ತಂದಿದೆ. +ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಮತದಾರರಿಗೆ ಮತಗಟ್ಟೆಗೆ ಹೋಗಲು ಮಾರ್ಗಸೂಚಿ ನೀಡುವುದಲ್ಲದೆ, ಮತಗಟ್ಟೆಯಲ್ಲಿರುವ ಸರತಿ, ಸಾಲು, ಅಲ್ಲಿನ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆಯೂ ಮಾಹಿತಿ ಲಭ್ಯವಾಗಲಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_117_3.txt b/eesanje/url_47_117_3.txt new file mode 100644 index 0000000000000000000000000000000000000000..153bfa0d416fe9318b542d4f2a8766e6f26a7def --- /dev/null +++ b/eesanje/url_47_117_3.txt @@ -0,0 +1,4 @@ +ಒಡಿಶಾದಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ +ಭುವನೇಶ್ವರ,ಏ. 25 (ಪಿಟಿಐ) :ಒಡಿಶಾದ ಬೌಧ್ ಜಿಲ್ಲಾಯಲ್ಲಿ ಕೆಂಪು ಬಂಡುಕೋರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮುಂಜಾನೆ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಾವೋವಾದಿಗಳು ಮತ್ತು ಒಡಿಶಾದ ಗಣ್ಯ ವಿಶೇಷ ಕಾರ್ಯಾಚರಣೆ ಗುಂಪಿನ (ಎಸ್‍ಒಜಿ) ಸಿಬ್ಬಂದಿ ನಡುವೆ ಕಾಂಟಮಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪರ್ಹೆಲ್ ಮೀಸಲು ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಾರ್ಯಾಚರಣೆ ಸ್ಥಳದಿಂದ ಮಾವೋವಾದಿಗಳ ಎರಡು ಶವಗಳು, ಶಸಾಸಗಳು, ಗ್ರೆನೇಡ್‍ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_117_4.txt b/eesanje/url_47_117_4.txt new file mode 100644 index 0000000000000000000000000000000000000000..7a2f26353f772b6e2f16536bef6fa5a7da8078a7 --- /dev/null +++ b/eesanje/url_47_117_4.txt @@ -0,0 +1,6 @@ +ಪ್ರಧಾನಿ ಮೋದಿಯವರು ಸಂವಿಧಾನ ಬದಲಿಸುವುದಿಲ್ಲ ; ಅಶೋಕ್ ಚವಾಣ್ +ಮುಂಬೈ,ಏ. 25 (ಪಿಟಿಐ)ಸಂವಿಧಾನದ ಬಗ್ಗೆ ನಿರೂಪಣೆಗೆ ಬಂದಾಗ ವ್ಯಕ್ತಿಯ ಅಭಿಪ್ರಾಯ ಮುಖ್ಯವಲ್ಲ ಮತ್ತು ಶಾಸನ ಪುಸ್ತಕವನ್ನು ಬದಲಾಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಚವಾಣ್ ಹೇಳಿದ್ದಾರೆ. +ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡಿದ ಪಕ್ಷದ ಸಹೋದ್ಯೋಗಿ ಮತ್ತು ಹಾಲಿ ಸಂಸದರಿಗೆ ಕರ್ನಾಟಕದಲ್ಲಿ ತಮ್ಮ ಸ್ಥಾನದಿಂದ ಮರು ನಾಮನಿರ್ದೇಶನವನ್ನು ನಿರಾಕರಿಸಲಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ನನ್ನ ಪಕ್ಷದ ಉನ್ನತ ನಾಯಕರು (ಪಿಎಂ) ಅದರ ಬಗ್ಗೆ (ಸಂವಿಧಾನ) ಏನು ಹೇಳುತ್ತಾರೆ ಎಂಬುದು ನಮಗೆ ಮುಖ್ಯವಾಗಿದೆ (ಈ ವಿಷಯದ ಬಗ್ಗೆ ವ್ಯಕ್ತಿಯ ಕಾಮೆಂಟ್‍ಗಳಿಗಿಂತ) ಎಂದು ಅವರು ಪ್ರತಿಪಾದಿಸಿದರು. +ಫೆಬ್ರವರಿಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಚವಾಣ್ ಅವರು ತಮ್ಮ ತವರು ಜಿಲ್ಲೆ ನಾಂದೇಡ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು, ಅಲ್ಲಿ ನಾಳೆ ಮಹಾರಾಷ್ಟ್ರದ ಇತರ ಏಳು ಲೋಕಸಭಾ ಕ್ಷೇತ್ರಗಳೊಂದಿಗೆ ಮತದಾನ ನಡೆಯಲಿದೆ. +ದೇಶದ ಸಂವಿಧಾನ ಬದಲಾವಣೆ ತರುವುದಾಗಿ ಮಾತನಾಡಿದವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ, ಕರ್ನಾಟಕದಲ್ಲಿ ನಡೆದಿದೆ ಎಂದು ನನಗನ್ನಿಸುತ್ತದೆ. ವ್ಯಕ್ತಿಯ ಅಭಿಪ್ರಾಯ ಮುಖ್ಯವಲ್ಲ. ನನ್ನ ಪಕ್ಷದ ವರಿಷ್ಠರು ಏನು ಹೇಳುತ್ತಾರೆ? ಇದು ನಮಗೆ ಹೆಚ್ಚು ಮುಖ್ಯವಾಗಿದೆ ಎಂದು ಅವರು ಹೇಳಿದರು. +ಬಿಜೆಪಿಯ ಉತ್ತರ ಕನ್ನಡ ಲೋಕಸಭಾ ಸದಸ್ಯ ಅನಂತಕುಮಾರ್ ಹೆಗಡೆ ಸಂವಿಧಾನದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ಚವಾಣ್ ಉಲ್ಲೇಖಿಸಿದ್ದಾರೆ.ನಮ್ಮ ಪಕ್ಷದ ಉನ್ನತ ನಾಯಕ ಮತ್ತು ಪ್ರಧಾನಿ ಮೋದಿ ಅವರು ಸಂವಿಧಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಪ್ರಧಾನಿಯವರ ಹೇಳಿಕೆ ನಮಗೆ ನೀತಿ ವಿಷಯವಾಗಿದೆ ಎಂದು ಚವಾಣ್ ಒತ್ತಿ ಹೇಳಿದರು. \ No newline at end of file diff --git a/eesanje/url_47_117_5.txt b/eesanje/url_47_117_5.txt new file mode 100644 index 0000000000000000000000000000000000000000..b6759b397052f009cbea1ddeee6c875b699a8a80 --- /dev/null +++ b/eesanje/url_47_117_5.txt @@ -0,0 +1,6 @@ +ಛತ್ತೀಸ್‍ಗಢ : ಆಕಸ್ಮಿಕ ಗುಂಡು ಹಾರಿ ಜಿಲ್ಲಾ ಮೀಸಲು ಪಡೆ ಕಾನ್ಸ್‌ಟೇಬಲ್‌ ಸಾವು +ರಾಯ್‍ಪುರ, ಅ 24-ಛತ್ತೀಸ್‍ಗಢದ ದಾಂತೇವಾಡ ಜಿಲ್ಲೆಯಲ್ಲಿ ಆಕಸ್ಮಿಕವಾಗಿ ಬಂದೂಕು ಗುಂಡು ಹಾರಿ ಜಿಲ್ಲಾ ಮೀಸಲು ಪಡೆ (ಡಿಆರ್‍ಜಿ) ಕಾನ್ಸ್‌ಟೇಬಲ್‌ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮತ್ತೊಬ್ಬ ಪೊಲೀಸ್ ಪೇದೆ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ. +ಸುಮಾರು ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ರಾಜ್ಯ ಪೊಲೀಸ್‍ನ ಎರಡೂ ಘಟಕಗಳಾದ ಡಿಆರ್‍ಜಿ ಮತ್ತು ಬಸ್ತಾರ್ ಫೈಟರ್‍ನ ಜಂಟಿ ತಂಡವು ಬಾರ್ಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ದಂತೇವಾಡ-ನಾರಾಯಣಪುರ ಜಿಲ್ಲೆಗಳ ಗಡಿಯಲ್ಲಿರುವ ಹಂದವಾಡ ಮತ್ತು ಹಿತವಾಡ ಗ್ರಾಮಗಳಲ್ಲಿ ಶಸ್ತ್ರಸಜ್ಜಿತ ನಕ್ಸಲೀಯರು ಇರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. +ಗಸ್ತು ತಿರುಗುತ್ತಿದ್ದಾಗ, ಇಬ್ಬರು ಡಿಆರ್‍ಜಿ ಕಾನ್‍ಸ್ಟೆಬಲ್‍ಗಳಾದ ಜೋಗರಾಜ್ ಕರ್ಮಾ ಮತ್ತು ಪರಶುರಾಮ್ ಅಲಾಮಿ ಆಕಸ್ಮಿಕ ಗುಂಡು ಹಾರಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಲಾಮಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು ಮತ್ತು ಹೆಚ್ಚಿನ ಔಷಧಿಗಾಗಿ ರಾಯ್‍ಪುರಕ್ಕೆ ವಿಮಾನದಲ್ಲಿ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. +ಯಾರ ಆಯುಧವು ಆಕಸ್ಮಿಕವಾಗಿ ಗುಂಡು ಹಾರಿತು ಎಂಬುದನ್ನು ನಿರ್ದಿಷ್ಟಗೊಂಡಿಲ್ಲ ಮತ್ತು ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಹೇಳಿದರು \ No newline at end of file diff --git a/eesanje/url_47_117_6.txt b/eesanje/url_47_117_6.txt new file mode 100644 index 0000000000000000000000000000000000000000..841336a34348be97c43101badac3d1e610c84fa8 --- /dev/null +++ b/eesanje/url_47_117_6.txt @@ -0,0 +1,4 @@ +ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ, ಆರು ಮಂದಿ ಸಾವು +ಸೂರ್ಯಪೇಟ್ (ತೆಲಂಗಾಣ), ಅ 25-ನಿಂತಿದ್ದ ಟ್ರಕ್‍ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಹೆಣ್ಣು ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರು ಘಟನೆ ಜಿಲ್ಲೆಯ ಕೊಡಾದ ಪಟ್ಟಣದ ಬಳಿ ಅಪಘಾತ ಸಂಭವಿಸಿದೆ. +ಹೈದರಾಬಾದ್‍ನಿಂದ ಸುಮಾರು 180 ಕಿಮೀ ದೂರದಲ್ಲಿರುವ ಈ ಪಟ್ಟಣ ಸಮೀಪ ಇಂದು ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಹೈದರಾಬಾದ್-ವಿಜಯವಾಡ ಹೆದ್ದಾರಿಯಲ್ಲಿ ದುರಸ್ತಿ ನೆಡೆಯುತ್ತಿದ್ದು ಬೇಜವಾಬ್ದಾರಿಯಾಗಿ ರಸ್ತೆಬದಿಯಲ್ಲಿ ಟ್ರಕ್ ನಿಲ್ಲಿಸಲಾಗಿತ್ತು ಎಂದು ಡಿಎಸ್‍ಪಿ ಶ್ರೀಧರ್ ರೆಡ್ಡಿ ತಿಳಿಸಿದ್ದಾರೆ. +ಕಾರಿನಲ್ಲಿ ಒಟ್ಟು 10 ಮಂದಿ ಇದ್ದರು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಕಾರಿನಲ್ಲಿದ್ದವರು ಹೈದರಾಬಾದ್‍ನಿಂದ ವಿಜಯವಾಡಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. \ No newline at end of file diff --git a/eesanje/url_47_117_7.txt b/eesanje/url_47_117_7.txt new file mode 100644 index 0000000000000000000000000000000000000000..c3b7f2dcbe5375709228e8cfbc0a66c73ff19e2a --- /dev/null +++ b/eesanje/url_47_117_7.txt @@ -0,0 +1,4 @@ +ಇಂಡಿಯಾ ಗೇಟ್ ಬಳಿ ಐಸ್ ಕ್ರೀಮ್ ಮಾರಾಟಗಾರನ ಹತ್ಯೆ +ನವದೆಹಲಿ, ಅ 25-ಕಳೆದ ರಾತ್ರಿ ಇಲ್ಲಿನ ಇಂಡಿಯಾ ಗೇಟ್ ಬಳಿ ಐಸ್ ಕ್ರೀಮ್ ಮಾರಾಟಗಾರರೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಕೊಲೆಯಾದವನನ್ನು ಪ್ರಭಾಕರ್ (25) ಎಂದು ಗುರುತಿಸಲಾದೆ. ಉತ್ತರ ಪ್ರದೇಶದ ಇಟಾವಾ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ +ಘಟನೆಯು ಹಿಂದೆ ವೈಯಕ್ತಿಕ ದ್ವೇಷ ಇರಬಹುದೆಂದು ಎಂದು ಪೊಲೀಸರು ಶಂಕಿಸಿದ್ದು ಆರೋಪಿಯೊಬ್ಬನನ್ನು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಐಸ್ ಕ್ರೀಮ್ ಮಾರಾಟಗಾರನು ತನ್ನ ಟ್ರಾಲಿ ಬಳಿ ನಿಂತಿದ್ದಾಗ ವ್ಯಕ್ತಿಯೊಬ್ಬ ಏಕಾಏಕಿ ಆತನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾನೆ ನಂತರ ಕುಸಿದುಬಿದ್ದ ನಂತರ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. +ಸ್ಥಳದಲ್ಲೇ ಪ್ರಭಾಕರ್ ಮೃತಪಟ್ಟಿದ್ದು ಪ್ರಾಥಮಿಕ ತನಿಖೆಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಮುಂದಿನ ತನಿಖೆ ನಡೆಯುತ್ತಿದೆ ಎಂದರು. \ No newline at end of file diff --git a/eesanje/url_47_117_8.txt b/eesanje/url_47_117_8.txt new file mode 100644 index 0000000000000000000000000000000000000000..1329228b6b306291d84ad55aba4a13dabd8c4535 --- /dev/null +++ b/eesanje/url_47_117_8.txt @@ -0,0 +1,7 @@ +ಥೈಲ್ಯಾಂಡ್‍ನಲ್ಲಿ ಸಿಕ್ಕಿಬಿದ್ದ ಕೋಟಿ ಕೋಟಿ ಲೂಟಿ ಹೊಡೆದಿದ್ದ ಗ್ಯಾಂಗ್‍ಸ್ಟರ್ +ನವದೆಹಲಿ,ಏ.24-ಉತ್ತರ ಪ್ರದೇಶದ ದರೋಡೆಕೋರ ಹಾಗೂ ಸ್ಕ್ರಾಪ್ ಮೆಟಲ್ ಮಾಫಿಯಾದ ಕಿಂಗ್‍ಪಿನ್ ರವಿ ಕಾನಾ ಥೈಲ್ಯಾಂಡ್‍ನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಗೆಳತಿ ಕಾಜಲ್ ಝಾಳೊಂದಿಗೆ ಥೈಲ್ಯಾಂಡ್‍ನಲ್ಲಿ ತಲೆಮರೆಸಿಕೊಂಡಿದ್ದ ಕಾನಾನನ್ನು ಬಂಧಿಸಲಾಗಿದೆ. ಈತ ಹಲವಾರು ಪ್ರಕರಣಗಳಲ್ಲಿ ನೋಯ್ಡಾ ಪೊಲೀಸರಿಗೆ ಬೇಕಾಗಿದ್ದ ವ್ಯಕ್ತಿ ಎನ್ನಲಾಗಿದೆ. +ಮೂಲಗಳ ಪ್ರಕಾರ, ನೋಯ್ಡಾ ಪೊಲೀಸರು ಥಾಯ್ಲೆಂಡ್ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾನಾಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಅವರಿಗೆ ನೀಡಿದ್ದರು. ಜನವರಿಯಲ್ಲಿ ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.ಜನವರಿ 2 ರಂದು ಗ್ರೇಟರ್ ನೋಯ್ಡಾದಲ್ಲಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಆತನ ವಿರುದ್ಧ ಉತ್ತರ ಪ್ರದೇಶ ದರೋಡೆಕೋರರು ಮತ್ತು ಸಾಮಾಜಿಕ ವಿರೋಧಿ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. +ರವೀಂದ್ರ ನಗರ ಎಂದೂ ಕರೆಯಲ್ಪಡುವ ಕಾನಾ, ರೀಬಾರ್ ಮತ್ತು ಸ್ಕ್ರ್ಯಾಪ್ ವಸ್ತುಗಳ ಅಕ್ರಮ ಸಂಗ್ರಹಣೆ ಮತ್ತು ಮಾರಾಟದಲ್ಲಿ ತೊಡಗಿರುವ 16 ಸದಸ್ಯರ ಗ್ಯಾಂಗ್ ಅನ್ನು ನಡೆಸುತ್ತಿದ್ದರು. ಸ್ಕ್ರ್ಯಾಪ್ ಡೀಲರ್ ಆಗಿದ್ದ ಕಾನಾ, ದೆಹಲಿ-ಎನ್‍ಸಿಆರ್ ಪ್ರದೇಶದಲ್ಲಿ ವ್ಯವಹಾರಗಳನ್ನು ಸುಲಿಗೆ ಮಾಡಿದ ನಂತರ ಅಕ್ರಮವಾಗಿ ಸ್ಕ್ರ್ಯಾಪ್ ವಸ್ತುಗಳನ್ನು ಸಂಪಾದಿಸಲು ಮತ್ತು ಮಾರಾಟ ಮಾಡಲು ಗ್ಯಾಂಗ್ ಅನ್ನು ರಚಿಸಿದ ನಂತರ ಮಿಲಿಯನೇರ್ ಆದರು ಎಂದು ವರದಿಯಾಗಿದೆ. +ದರೋಡೆಕೋರ ಮತ್ತು ಆತನ ಸಹಚರರ ವಿರುದ್ಧ ಅಪಹರಣ ಮತ್ತು ಕಳ್ಳತನದ ಆರೋಪ ಸೇರಿದಂತೆ 11 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಗ್ಯಾಂಗ್‍ನ ಆರು ಸದಸ್ಯರನ್ನು ಈಗಾಗಲೇ ಬಂಧಿಸಲಾಗಿದೆ ಮತ್ತು ಗ್ರೇಟರ್ ನೋಯ್ಡಾದಾದ್ಯಂತ ಗ್ಯಾಂಗ್ ಬಳಸುತ್ತಿದ್ದ ಹಲವಾರು ಸ್ಕ್ರ್ಯಾಪ್ ಗೋಡೌನ್‍ಗಳನ್ನು ಸೀಲ್ ಮಾಡಲಾಗಿದೆ. +ಕಾನಾ ಮತ್ತು ಆತನ ಸಹಚರರ ರೂ. 120 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ನೋಯ್ಡಾ ಪೊಲೀಸರು ಇತ್ತೀಚೆಗೆ ಹೇಳಿದ್ದರು. ಜನವರಿಯಲ್ಲಿ, ದರೋಡೆಕೋರ ತನ್ನ ಗೆಳತಿ ಕಾಜಲ್ ಝಾಗೆ ಉಡುಗೊರೆಯಾಗಿ ನೀಡಿದ್ದ ? 100 ಕೋಟಿ ಮೌಲ್ಯದ ದಕ್ಷಿಣ ದೆಹಲಿಯ ಬಂಗಲೆಯ ಮೇಲೆ ನೋಯ್ಡಾ ಪೊಲೀಸರು ದಾಳಿ ನಡೆಸಿ ಸೀಲ್ ಮಾಡಿದ್ದರು. +ಕಾಜಲ್ ಝಾ ಕೆಲಸದ ಹುಡುಕಾಟದಲ್ಲಿ ದರೋಡೆಕೋರರನ್ನು ಸಂಪರ್ಕಿಸಿದರು, ಆದರೆ ಶೀಘ್ರದಲ್ಲೇ ಅವರ ಗ್ಯಾಂಗ್ ಅನ್ನು ಸೇರಿಕೊಂಡರು ಮತ್ತು ಪ್ರಮುಖ ಸದಸ್ಯರಾದರು. ಅವನ ಎಲ್ಲಾ ಬೇನಾಮಿ ಆಸ್ತಿಗಳ ಪುಸ್ತಕಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಅವಳು ಹೊಂದಿದ್ದಳು. \ No newline at end of file diff --git a/eesanje/url_47_117_9.txt b/eesanje/url_47_117_9.txt new file mode 100644 index 0000000000000000000000000000000000000000..520ceaf9ed100f9d78d2f01e026f84a38e3ea0e1 --- /dev/null +++ b/eesanje/url_47_117_9.txt @@ -0,0 +1,8 @@ +ಹೆಚ್ಚುತ್ತಿರುವ ನೈಸರ್ಗಿಕ ವಿಕೋಪಗಳನ್ನು ಎದುರಿಸಲು ಜಗತ್ತು ಒಂದುಗೂಡಬೇಕು ; ಮೋದಿ +ನವದೆಹಲಿ, ಏ. 24 (ಪಿಟಿಐ) :ನೈಸರ್ಗಿಕ ವಿಕೋಪಗಳು ಹೆಚ್ಚುತ್ತಿರುವುದು ಜನರ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂತಹ ಪರಿಸ್ಥಿತಿ ಎದುರಿಸಲು ಜಗತ್ತು ಒಂದುಗೂಡಬೇಕು ಎಂದು ಕರೆ ನೀಡಿದರು. +ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದ 6ನೇ ಆವೃತ್ತಿಯಲ್ಲಿ ಆಡಿದ ಧ್ವನಿಮುದ್ರಿತ ಸಂದೇಶದಲ್ಲಿ ಅವರು, ಉತ್ತಮ ನಾಳೆಗಾಗಿ ದೇಶಗಳು ಇಂದು ಚೇತರಿಸಿಕೊಳ್ಳುವ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಬೇಕು. ಸ್ಥಿತಿಸ್ಥಾಪಕತ್ವವು ಹೊಸ ಮೂಲಸೌಕರ್ಯ ಸೃಷ್ಟಿಗೆ ಅಂಶಗಳ ಅಗತ್ಯವಿದೆ ಇದರ ಜೊತೆಗೆ ವಿಪತ್ತುಗಳ ನಂತರದ ವಿಪತ್ತಿನ ಪುನರ್ನಿರ್ಮಾಣದ ಭಾಗವಾಗಿರಿ ಎಂದು ಕರೆ ನೀಡಿದ್ದಾರೆ. +ನಾವೆಲ್ಲರೂ ಸಾಕ್ಷಿಯಾಗಿರುವಂತೆ, ನೈಸರ್ಗಿಕ ವಿಕೋಪಗಳು ಹೆಚ್ಚು ತೀವ್ರವಾಗುತ್ತಿವೆ. ಅವು ಉಂಟುಮಾಡುವ ಹಾನಿಯನ್ನು ಸಾಮಾನ್ಯವಾಗಿ ಡಾಲರ್‍ಗಳಲ್ಲಿ ವರದಿ ಮಾಡಲಾಗುತ್ತದೆ, ಆದರೆ ಜನರು, ಕುಟುಂಬಗಳು ಮತ್ತು ಸಮುದಾಯಗಳ ಮೇಲೆ ಅವುಗಳ ನಿಜವಾದ ಪ್ರಭಾವವು ಕೇವಲ ಸಂಖ್ಯೆಗಳನ್ನು ಮೀರಿದೆ. +ಭೂಕಂಪಗಳು ಮನೆಗಳನ್ನು ನಾಶಮಾಡುತ್ತವೆ, ಸಾವಿರಾರು ಜನರನ್ನು ನಿರಾಶ್ರೀತರನ್ನಾಗಿ ಮಾಡುತ್ತವೆ. ನೈಸರ್ಗಿಕ ವಿಕೋಪಗಳು ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಡ್ಡಿಪಡಿಸಬಹುದು, ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಬಹುದು. ಕೆಲವು ವಿಪತ್ತುಗಳು ಶಕ್ತಿ ಸ್ಥಾವರಗಳ ಮೇಲೆ ಪರಿಣಾಮ ಬೀರಬಹುದು, ಇದು ಸಂಭಾವ್ಯ ಅಪಾಯಕಾರಿ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಈ ವಿಷಯಗಳು ಮಾನವ ಪ್ರಭಾವವನ್ನು ಹೊಂದಿವೆ ಮೋದಿ ಎಂದರು. +ಪ್ರಕೃತಿ ಮತ್ತು ವಿಪತ್ತುಗಳಿಗೆ ಯಾವುದೇ ಗಡಿಗಳಿಲ್ಲ ಮತ್ತು ವಿಪತ್ತುಗಳು ಅಂತರ್ಸಂಪರ್ಕಿತ ಜಗತ್ತಿನಲ್ಲಿ ವ್ಯಾಪಕ ಪರಿಣಾಮವನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದರು. ಪ್ರತಿಯೊಂದು ದೇಶವು ಪ್ರತ್ಯೇಕವಾಗಿ ಚೇತರಿಸಿಕೊಂಡಾಗ ಮಾತ್ರ ಜಗತ್ತು ಸಾಮೂಹಿಕವಾಗಿ ಚೇತರಿಸಿಕೊಳ್ಳಬಹುದು. ಹಂಚಿಕೆಯ ಅಪಾಯಗಳ ಕಾರಣ ಹಂಚಿಕೆಯ ಸ್ಥಿತಿಸ್ಥಾಪಕತ್ವವು ಮುಖ್ಯವಾಗಿದೆ. ಈ ಸಮ್ಮೇಳನವು ಈ ಸಾಮೂಹಿಕ ಮಿಷನ್‍ಗಾಗಿ ಒಗ್ಗೂಡಲು ನಮಗೆ ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ಹೇಳಿದರು. +ಸಣ್ಣ ದ್ವೀಪ ಅಭಿವೃದ್ಧಿ ಹೊಂದುತ್ತಿರುವ ರಾಜ್ಯಗಳಲ್ಲಿ ವಿಪತ್ತುಗಳ ಹೆಚ್ಚಿನ ಅಪಾಯವನ್ನು ಉಲ್ಲೇಖಿಸಿದ ಮೋದಿ, ಹಂಚಿಕೆಯ ಸ್ಥಿತಿಸ್ಥಾಪಕತ್ವವನ್ನು ಸಾ„ಸಲು ದೇಶಗಳು ಹೆಚ್ಚು ದುರ್ಬಲರನ್ನು ಬೆಂಬಲಿಸಬೇಕು ಎಂದು ಹೇಳಿದರು. +ಸಿಡಿಆರ್‍ಐಗಳಂತಹ 13 ಸ್ಥಳಗಳಲ್ಲಿ ಯೋಜನೆಗಳಿಗೆ ಧನಸಹಾಯ ನೀಡುವ ಕಾರ್ಯಕ್ರಮವನ್ನು ಹೊಂದಿದೆ. ಡೊಮಿನಿಕಾದಲ್ಲಿ ಸ್ಥಿತಿಸ್ಥಾಪಕ ವಸತಿ, ಪಪುವಾ ನ್ಯೂಗಿನಿಯಾದಲ್ಲಿ ಚೇತರಿಸಿಕೊಳ್ಳುವ ಸಾರಿಗೆ ಜಾಲಗಳು ಕೆಲವು ಉದಾಹರಣೆಗಳಾಗಿವೆ ಎಂದು ಮೋದಿ ಹೇಳಿದರು. \ No newline at end of file diff --git a/eesanje/url_47_118_1.txt b/eesanje/url_47_118_1.txt new file mode 100644 index 0000000000000000000000000000000000000000..96c137edd8f4e701e801fb0bd2fbf8e2a92441b3 --- /dev/null +++ b/eesanje/url_47_118_1.txt @@ -0,0 +1,5 @@ +ಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಿದ್ದಾರೆ ; ಖರ್ಗೆ ವಾಗ್ದಾಳಿ +ತಿರುವನಂತಪುರಂ, ಏ. 24 (ಪಿಟಿಐ) :ಲೋಕಸಭೆ ಚುನಾವಣೆಯ ಮೊದಲ ಸುತ್ತಿನ ಮತದಾನ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅದೃಶ್ಯ ಮತದಾರರಿಗೆ ಹೆದರುತ್ತಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಯಾವಾಗಲೂ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆ ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. +ಕಾಂಗ್ರೆಸ್ ಏನೂ ಆಗಿಲ್ಲ ಎಂದಾದರೆ, ಹಳೆಯ ಪಕ್ಷದ ಬಗ್ಗೆ ಪ್ರಧಾನಿ ಏಕೆ ತಲೆ ಕೆಡಿಸಿಕೊಂಡಿದ್ದಾರೆ ಎಂದು ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು. ತಾವು ಸುಮಾರು 10-12 ರಾಜ್ಯಗಳಿಗೆ ಪ್ರವಾಸ ಮಾಡಿದ್ದು, ಅಲ್ಲಿನ ಮತದಾರರಿಂದ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು. +ನಾನು ಹೇಳಬಹುದಾದ ಅಂಡರ್‍ಕರೆಂಟ್ ಕಾಣಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ ಆದರೆ ಮೋದಿಜಿ ಈ ಅದೃಶ್ಯ ಮತದಾರರಿಗೆ ಹೆದರುತ್ತಾರೆ ಮತ್ತು ಅದಕ್ಕಾಗಿಯೇ ಅವರು ಯಾವಾಗಲೂ ಕಾಂಗ್ರೆಸ್ ಅನ್ನು ಟೀಕಿಸುತ್ತಾರೆ ಎಂದು ಖರ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದರು. +ಪ್ರಧಾನಿಯವರು ಕ್ಷುಲ್ಲಕ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ ಎಐಸಿಸಿ ಅಧ್ಯಕ್ಷರು ಈ ದೇಶದ ಇತಿಹಾಸವನ್ನು ಇನ್ನಷ್ಟು ಓದಬೇಕು ಮತ್ತು ರಾಷ್ಟ್ರವನ್ನು ಹೇಗೆ ಒಗ್ಗೂಡಿಸಬೇಕು ಎಂಬುದನ್ನು ಕಲಿಯಬೇಕು ಎಂದು ಬಯಸಿದ್ದರು. \ No newline at end of file diff --git a/eesanje/url_47_118_10.txt b/eesanje/url_47_118_10.txt new file mode 100644 index 0000000000000000000000000000000000000000..ab53e5ed54fa2ddb156d186677acd3f9f213b15b --- /dev/null +++ b/eesanje/url_47_118_10.txt @@ -0,0 +1,6 @@ +ರೈಲಿನ ಖಾಲಿ ಕೋಚ್‍ನಿಂದ ಬರುತ್ತಿದ್ದ ಹೊಗೆ ನಿಯಂತ್ರಿಸುವ ವೇಳೆ ಕಾನ್ಸ್‌ಟೇಬಲ್‌ ಸಾವು +ಮುಜಾಫರಪುರ್ (ಬಿಹಾರ), ಅ 22 –ಇಲ್ಲಿನ ಮುಜಾಫರಪುರ್ ರೈಲು ನಿಲ್ದಾಣದಲ್ಲಿ ರೈಲಿನ ಖಾಲಿ ಕೋಚ್‍ನಿಂದ ಬರುತ್ತಿದ್ದ ಹೊಗೆಯನ್ನು ನಿಯಂತ್ರಿಸುವ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್‍ಪಿಎಫ್ ) ಕಾನ್ಸ್‌ಟೇಬಲ್‌ ಒಬ್ಬರು ಮೃತಪಟ್ಟಿದ್ದಾರೆ. +ಮೃತ ಆರ್‍ಪಿಎಫ್ ಕಾನ್‍ಸ್ಟೆಬಲ್‍ನನ್ನು ವಿನೋದ್ ಯಾದವ್ ಎಂದು ಗುರುತಿಸಲಾಗಿದೆ ಎಂದುಪೂರ್ವ ಮಧ್ಯ ರೈಲ್ವೆಯ ಸಿಪಿಆರ್‍ಒ ಬೀರೇಂದ್ರ ಕುಮಾರ್ ಅವರು ತಿಳಿಸಿದ್ದಾರೆ, ಬೆಳಿಗ್ಗೆ 7 ಗಂಟೆ ಸುಮಾರಿಗೆ ಮುಜಾಫರಪುರ್ ರೈಲು ನಿಲ್ದಾಣದಲ್ಲಿ ಖಾಲಿ ವಲ್ಸಾದ್-ಮುಜಾಫರಪುರ್ ರೈಲಿನ ಕೋಚ್‍ನಿಂದ ಹೊಗೆ ಹೊರ ಹೊಮ್ಮುತ್ತಿರುವುದನ್ನು ವಿನೋದ್ ಯಾದವ್ ಗಮನಿಸಿ ತಕ್ಷಣವೇ ಬೆಂಕಿ ನಿಯಂತ್ರಿಸುವ ಅಗ್ನಿಶಾಮಕ ಸಾಧನ ತೆರೆಯಲು ಪ್ರಯತ್ನಿಸಿದಾಗ, ಅದು ಸಿಡಿಯಿತು ಇದು ಅವರಿಗೆ ತೀವ್ರ ಗಾಯಗಳನ್ನು ಉಂಟುಮಾಡಿತು. +ಘಟನೆ ನಡೆದಾಗ ಇಡೀ ರೈಲು ಖಾಲಿಯಾಗಿತ್ತು ಎಂದು ಸಿಪಿಆರ್‍ಒ ತಿಳಿಸಿದ್ದಾರೆ, ರೈಲು ಮುಜಾಫರಪುರ್ ರೈಲು ನಿಲ್ದಾಣದಲ್ಲಿ ಕೊನೆಗೊಂಡಿತು.ಇದು ಬೆಂಕಿಯಲ್ಲ. ಇದು ಕೇವಲ ಕೋಚ್‍ನಿಂದ ಹೊಗೆ ಹೊರಹೊಮ್ಮುತ್ತಿದೆ. ಗಾಯಗೊಂಡ ಆರ್‍ಪಿಎ-ï ಕಾನ್‍ಸ್ಟೆಬಲ್ ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. +ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಸಾವನ್ನಪ್ಪಿದರು. ಖಾಲಿ ಕೋಚ್‍ನಿಂದ ಹೊಗೆ ಹೊರಬಿತ್ತು. ಘಟನೆಯ ನಿಖರವಾದ ಕಾರಣವನ್ನು ತಕ್ಷಣವೇ ನಿಯಂತ್ರಣಕ್ಕೆ ತರಲಾಗುವುದು, ಘಟನೆಯ ಕಾರಣವನ್ನು ಖಚಿತಪಡಿಸಿಕೊಳ್ಳಲು ತನಿಖೆಗೆ ಆದೇಶಿಸಲಾಗುವುದು. +ಮುಜಾಫರಪುರ್ ರೈಲು ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮರೇಶ್ ಕುಮಾರ್ ಇದೊಂದು ಅತ್ಯಂತ ದುರಂತ ಘಟನೆ, ಘಟನೆಯ ನಿಖರವಾದ ಕಾರಣವನ್ನು ವಿಚಾರಣೆ ಮುಗಿದ ನಂತರ ತಿಳಿಯಬಹುದು. ಸ್ಥಳದಿಂದ ಸಂಗ್ರಹಿಸಲಾದ ಎಲ್ಲಾ ಸಾಕ್ಷ್ಯಗಳನ್ನು ಕಳುಹಿಸಲಾಗಿದೆ ಎಂದರು. \ No newline at end of file diff --git a/eesanje/url_47_118_11.txt b/eesanje/url_47_118_11.txt new file mode 100644 index 0000000000000000000000000000000000000000..3587dc5d988572f228b38a837bbf04d0a541a60b --- /dev/null +++ b/eesanje/url_47_118_11.txt @@ -0,0 +1,5 @@ +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶುಭಾರಂಭ : ಸೂರತ್‍ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ +ಸೂರತ್,ಏ,22-ತೀವ್ರ ಕುತೂಹಲ ಕೆರಳಿಸಿರುವ ಭಾರತದ ಲೋಕಸಭೆ ಚುನಾವಣೆ ನಡುವೆಯೇ ಬಿಜೆಪಿ ಖಾತೆ ತೆರೆದು ಶುಭಾರಂಭ ಮಾಡಿದೆ.ಗುಜರಾತ್‍ನ ಸೂರತ್‍ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. +ನಿನ್ನೆ ನಾಮಪತ್ರಪರಿಶೀಲನೆ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನೀಲೇಶ್ ಕುಂಭಾಣಿ ತಮ್ಮ ಪರವಾಗಿ ನಾಮಪತ್ರಕ್ಕೆ ಸಹಿ ಮಾಡಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರ ನಾಮಪತ್ರ ತಿರಸ್ಕøತಗೊಳಿಸಿದ್ದರು. ಇದಾದ 24 ಗಂಟೆಯಲ್ಲಿ ನಡೆದ ಬೆಳವಣಿಗೆಯಲ್ಲಿ ಪಕ್ಷೇತರರು ಸೇರಿ ಎಲ್ಲಾ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಂಡರು. +ಇದರಿಂದಾಗಿ ಪರಮುಖೇಶ್ ದಲಾಲ್ ಅವರು ಸೂರತ್ ಲೋಕಸಭಾ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾದರು.ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಲವಾರು ದೋಷಗಳು ಕಂಡು ಬಂದ ಹಿನ್ನಲೆಯಲ್ಲಿ ನಾಮಪತ್ರ ತಿರಸ್ಕಾರ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗೆ ಅಫಿಡವಿಟ್‍ನಲ್ಲಿ ಹೇಳಿದ್ದಾರೆ. +ಸೂರತ್ ಬಿಜೆಪಿ ಭದ್ರ ಕೋಟೆಯಾಗಿದ್ದು ಕೇಸರಿ ಪಡೆ ನಾಗಾಲೋಟ ಮುಂದುವರೆದಿದೆ ಸೂರತ್ ಕ್ಷೇತ್ರಕ್ಕೆ ಏ.22ಕ್ಕೆ ನಿಗದಿಯಾಗಿದ್ದ ಚುನಾವಣೆ ಈಗ ರದ್ದಾಗಿದೆ.ಕಾಂಗ್ರೆಸ್ ತಂತ್ರಗಾರಿಕೆ ವಿಫಲಗೊಂಡಿದೆ.ಬಿಜೆಪಿ ಪಾಳಯ ಹರ್ಷಗೊಂಡಿದ್ದು ಈ ಗೆಲವು ಪ್ರಧಾನಿ ಮೋದಿಗೆ ಸಲ್ಲುತ್ತದೆ ಎಂದು ಗುಜರಾತ್ ಸಿಎಂ ಹಾಗು ಪಕ್ಷದ ನಾಯಕರು ಹೇಳಿದ್ದಾರೆ.ಒಟ್ಟಾರೆ ಬಿಜೆಪಿಗೆ ಶುಭಾರಂಭವಂತೆ ಮೊದಲ ಗೆಲವು ಸಿಕ್ಕಿದ್ದು ಖಾತೆ ತೆರೆದಿದೆ \ No newline at end of file diff --git a/eesanje/url_47_118_12.txt b/eesanje/url_47_118_12.txt new file mode 100644 index 0000000000000000000000000000000000000000..dcca7d7c3d1ce8ed758c1ffe0135058195b57925 --- /dev/null +++ b/eesanje/url_47_118_12.txt @@ -0,0 +1,6 @@ +ಹಿಂದೂ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ಯುವಕ ಅರೆಸ್ಟ್, ಮನೆ ನೆಲಸಮ +ಗುಣಾ, ಎ. 22ತನ್ನ ಸ್ನೇಹಿತೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ನಂತರ ಆತನ ಮನೆಯ ಅಕ್ರಮ ಭಾಗವನ್ನು ಕೆಡವಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ. +ಅಯಾನ್ ಖಾನ್ (20)ಬಂಧಿತ ಆರೋಪಿಯಾಗಿದ್ದು ಈತ 23 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡುವ ಮುನ್ನ ಕಣ್ಣಿಗೆ ಅಂಟನ ರಸಾಯನಿಕ ಹಾಕಿದ್ದ ಹಿನ್ನಲೆಯಲ್ಲಿ ಆಕೆಯ ಒಂದು ಕಣ್ಣಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. + () ' , & . . … @DrMohanYadav51ji.../ +ಕಳೆದ 10 ದಿನಗಳಿಂದ ಆರೋಪಿಯೊಂದಿಗೆ ಇದ್ದೆ, ತನ್ನನ್ನು ಮದುವೆಯಾಗುವಂತೆ ಕೇಳಿದಾಗ ದೌರ್ಜನ್ಯ ಎಸಗಿದ್ದಾನೆ, ಬೆಲ್ಟ್‍ನಿಂದ ಥಳಿಸಿದ್ದಾನೆ ಮತ್ತು ಆಕೆಯ ಕಣ್ಣಿಗೆ ಬಲವಾದ ಅಂಟು ಹಾಕಿದ್ದಾನೆ ಎಂದು ಸಂತ್ರಸ್ಥೆ ದೂರನ್ನು ಉಲ್ಲೇಖಿಸಿದ್ದಾಳೆಏಪ್ರಿಲ್ 18 ರಂದು ತನ್ನ ಬೈಕ್‍ನಲ್ಲಿ 60 ಲೀಟರ್ ಮದ್ಯವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಯಿತು.ಅಬಕಾರಿ ಕಾಯ್ದೆ. +ಅತ್ಯಾಚಾರ, ಹಲ್ಲೆ ಸೇರಿ ವಿವಿಧ ಕಾಯ್ಧೆಯಡಿ ಪ್ರಕರಣ ದಾಖಲಿಸಲಾಗಿದೆ ಮತ್ತು ಇದೇ ವೇಳೆ ಆತನ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಹಿಳೆಗೆ ಚಿಕಿತ್ಸೆ ನೀಡಿದ ಗುಣಾ ಮೂಲದ ಖಾಸಗಿ ಆಸ್ಪತ್ರೆಯ ನೇತ್ರಶಾಸ್ತ್ರಜ್ಞರು ಆಕೆಯ ಒಂದು ಕಣ್ಣಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದರು. ಆಕೆಯನ್ನು ಸುಧಾರಿತ ಆರೈಕೆಗಾಗಿ ಗ್ವಾಲಿಯರ್‍ಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_118_2.txt b/eesanje/url_47_118_2.txt new file mode 100644 index 0000000000000000000000000000000000000000..9f5b2bd54bddce52e88eb4cb75c06acc8477b707 --- /dev/null +++ b/eesanje/url_47_118_2.txt @@ -0,0 +1,7 @@ +ಪುಟಿನ್ ಅವರನ್ನು ಮೋದಿ ಅನುಸರಿಸುತ್ತಿದ್ದಾರೆ : ಶರದ್ ಪವಾರ್ +ಅಮರಾವತಿ,ಏ.23-ಮಾಜಿ ಪ್ರಧಾನಿಗಳು ನವ ಭಾರತ ನಿರ್ಮಾಣಕ್ಕೆ ಶ್ರಮಿಸಿದ್ದರು ಆದರೆ ಪ್ರಧಾನಿ ನರೇಂದ್ರ ಮೋದಿ ಇತರರನ್ನು ಮಾತ್ರ ಟೀಕಿಸುತ್ತಾರೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ತಮ್ಮ ಸರ್ಕಾರ ಜನರಿಗೆ ಏನು ಮಾಡಿದೆ ಎಂಬುದರ ಬಗ್ಗೆ ಮಾತನಾಡುವುದಿಲ್ಲ ಎಂದು ಎನ್ಸಿಪಿ (ಎಸ್ಪಿ) ನಾಯಕ ಶರದ್ ಪವಾರ್ ಆರೋಪಿಸಿದ್ದಾರೆ. +ಅಮರಾವತಿಯಲ್ಲಿ ಮಹಾ ವಿಕಾಸ್ ಅಘಾಡಿ ಅಭ್ಯರ್ಥಿ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವಾರ್, ದೇಶಕ್ಕೆ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕೊಡುಗೆಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದಿದ್ದಾರೆ. +ಕೆಲವು ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ ಮತ್ತು ಭಾರತದಲ್ಲಿ ನಿರಂಕುಶಾಕಾರವು ರೂಪುಗೊಳ್ಳಲು ಅವಕಾಶ ನೀಡದಂತೆ ಜನರಿಗೆ ಅವರು ಮನವಿ ಮಾಡಿದರು. ಅಮರಾವತಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ಕಾಂಗ್ರೆಸ್ನ ಬಲವಂತ ವಾಂಖೆಡೆ ವಿರುದ್ಧ 2019 ರ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ಹಾಲಿ ಸಂಸದ ನವನೀತ್ ರಾಣಾ ಅವರನ್ನು ಕಣಕ್ಕಿಳಿಸಿದೆ. +ಪ್ರಧಾನಿ ಮೋದಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಅನುಕರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪವಾರ್ ಆರೋಪಿಸಿದ್ದಾರೆ. ಅವರ ಅಭ್ಯರ್ಥಿಯನ್ನು (ನವನೀತ್ ರಾಣಾ) ಬೆಂಬಲಿಸುವ ಮೂಲಕ 2019 ರ ಚುನಾವಣೆಯಲ್ಲಿ ಮಾಡಿದ ತಪ್ಪಿಗೆ ಅಮರಾವತಿಯ ಜನರಲ್ಲಿ ಕ್ಷಮೆಯಾಚಿಸಲು ಬಂದಿದ್ದೇನೆ ಎಂದು ಪವಾರ್ ಹೇಳಿದರು. +ಕಳೆದ ಚುನಾವಣೆಯಲ್ಲಿ, ನಾನು ಜನರ ಬೆಂಬಲವನ್ನು ಕೋರಿದ್ದೆ ಮತ್ತು (ರಾಣಾ ಅವರನ್ನು ಆಯ್ಕೆ ಮಾಡಲು) ಮನವಿ ಮಾಡಿದ್ದೇನೆ. ಜನರು ನಾನು ಮನವಿ ಮಾಡಿದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಆ ತಪ್ಪನ್ನು ಸರಿಪಡಿಸುವ ಸಮಯ ಬಂದಿದೆ ಎಂದು ಅವರು ಹೇಳಿದರು.ಕಾಂಗ್ರೆಸ್ಗೆ ಸೇರಿದ ವಾಂಖೆಡೆ ಅವರು ಶಿವಸೇನೆ (ಯುಬಿಟಿ), ಎನ್ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡಿರುವ ತ್ರಿಪಕ್ಷೀಯ ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. +ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ನಂತರ, ಇಂದಿರಾಗಾಂಧಿ, ರಾಜೀವ್ ಗಾಂಧಿ ಮತ್ತು ನರಸಿಂಹರಾವ್ನಿಂದ ಹಿಡಿದು ಮನಮೋಹನ್ ಸಿಂಗ್ವರೆಗಿನ ಎಲ್ಲಾ ಪ್ರಧಾನ ಮಂತ್ರಿಗಳ ಕೆಲಸವನ್ನು ನಾನು ನೋಡಿದ್ದೇನೆ. ಅವರ ಪ್ರಯತ್ನಗಳು ನವ ಭಾರತವನ್ನು ನಿರ್ಮಿಸುವುದಾಗಿತ್ತು, ಆದರೆ ಅಧಿಕಾರದಲ್ಲಿರುವ ಪ್ರಧಾನಿ ಕೇವಲ ಟೀಕಿಸುವುದನ್ನೆ ಕಾಯಕ ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಅವರ ಈ ಕಾರ್ಯಶೈಲಿಯನ್ನು ನೋಡಿದರೆ ಭಾರತದಲ್ಲಿ ಹೊಸ ಪುಟಿನ್ ತಯಾರಿಕೆಯಲ್ಲಿದೆ ಎಂದು ನಾವು ಭಯಪಡುತ್ತೇವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_118_3.txt b/eesanje/url_47_118_3.txt new file mode 100644 index 0000000000000000000000000000000000000000..621b3629938715aa3953baf500d9079e7d5635db --- /dev/null +++ b/eesanje/url_47_118_3.txt @@ -0,0 +1,13 @@ +ಮೀಸಲಾತಿಗಾಗಿ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವುದು ಸಂವಿಧಾನದ ತತ್ವಗಳಿಗೆ ವಿರುದ್ಧ +ನವದೆಹಲಿ,ಏ.23-ಕರ್ನಾಟಕದಲ್ಲಿ ಮೀಸಲಾತಿಯ ಉದ್ದೇಶಕ್ಕಾಗಿ ಇದೇ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವ ರಾಜ್ಯ ಸರ್ಕಾರದ ನಿರ್ಧಾರವು ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ ಎಂದು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಹೇಳಿದೆ. +ಕರ್ನಾಟಕ ಸರ್ಕಾರ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸಲು ಮುಂದಾಗಿರುವುದು ಸಂವಿಧಾನದ ಮೂಲ ತತ್ವವನ್ನು ಹಾಳು ಮಾಡುತ್ತಿದೆ ಎಂದು ಆಯೋಗ ಅಸಮಾಧಾನ ವ್ಯಕ್ತಪಡಿಸಿದೆ. +ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಮುಸ್ಲಿಂ ಧರ್ಮದೊಳಗಿನ ಎಲ್ಲಾ ಜಾತಿಗಳು ಮತ್ತು ಸಮುದಾಯಗಳನ್ನು ಹಿಂದುಳಿದ ವರ್ಗಗಳ ರಾಜ್ಯ ಪಟ್ಟಿಯಲ್ಲಿ ವರ್ಗ 2ಎ ಅಡಿಯಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಾಗಿ ಸೇರಿಸಲಾಗಿತ್ತು. +ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ (ಎನ್‍ಸಿಬಿಸಿ ) ಕಳೆದ ಬಾರಿ ರಾಜ್ಯಕ್ಕೆ ಭೇಟಿಯ ಸಂದರ್ಭದಲ್ಲಿ, ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ತರೆ ಹಿಂದುಳಿದ ಸಮುದಾಯಗಳಿಗೆ ನೀಡಿರುವ ಮೀಸಲಾತಿಯನ್ನು ಪರಿಶೀಲಿಸಿತ್ತು. +ಕರ್ನಾಟಕದಲ್ಲಿ ಮುಸ್ಲಿಂ ಧರ್ಮದ ಎಲ್ಲಾ ಜಾತಿಗಳು/ಸಮುದಾಯಗಳನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ನಾಗರಿಕರೆಂದು ಎಂದು ಪಟ್ಟಿ ಮಾಡಲಾಗಿದೆ. ಅವರಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಮತ್ತು ನೇಮಕಾತಿಗಳಲ್ಲಿ ಮೀಸಲಾತಿ ಒದಗಿಸಲು ಹಿಂದುಳಿದ ವರ್ಗಗಳ ರಾಜ್ಯ ಪಟ್ಟಿಯಲ್ಲಿ ವರ್ಗ 2ಬಿ ಅಡಿಯಲ್ಲಿ ಪ್ರತ್ಯೇಕವಾಗಿ ಮುಸ್ಲಿಂ ಜಾತಿ ಎಂದು ಪಟ್ಟಿ ಮಾಡಲಾಗಿದೆ. +ಭಾರತದ ಸಂವಿಧಾನದ 15(4) ಮತ್ತು 16(4) ವಿಗಳ ಉದ್ದೇಶಕ್ಕಾಗಿ ರಾಜ್ಯದ ಸೇವೆಗಳಲ್ಲಿ ಹುದ್ದೆಗಳು ಮತ್ತು ಖಾಲಿ ಹುದ್ದೆಗಳನ್ನು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಕೂಲಂಕುಷವಾಗಿ ಪರಿಶೀಲನೆ ನಡೆಸಿದೆ. +ಈ ವರ್ಗೀಕರಣವು ಪ್ರವರ್ಗ 1ರಡಿಯಲ್ಲಿ 17 ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳಿಗೆ ಮತ್ತು ವರ್ಗ 2ಎ ಅಡಿಯಲ್ಲಿ 19 ಜಾತಿಗಳಿಗೆ ಕ್ರಮವಾಗಿ ಮೀಸಲಾತಿ ಪ್ರಯೋಜನಗಳನ್ನು ಒದಗಿಸಲು ಕಾರಣವಾಗಿದೆ. +ಮುಸ್ಲಿಮರನ್ನು ಹಿಂದುಳಿದ ಜಾತಿ ಎಂದು ವರ್ಗೀಕರಿಸುವುದು ಸಾಮಾಜಿಕ ನ್ಯಾಯದ ತತ್ವಗಳನ್ನು ದುರ್ಬಲಗೊಳಿಸುತ್ತದೆ, ವಿಶೇಷವಾಗಿ ಅಂಚಿನಲ್ಲಿರುವ ಮುಸ್ಲಿಂ ಜಾತಿಗಳು ಮತ್ತು ಸಮುದಾಯಗಳಿಗೆ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಎನ್‍ಸಿಬಿಸಿ ಹೇಳಿದೆ. +ಆದಾಗ್ಯೂ, ಎನ್‍ಸಿಬಿಸಿ ಮುಸ್ಲಿಂ ಸಮುದಾಯದೊಳಗೆ ಹಿಂದುಳಿದ ಮತ್ತು ಐತಿಹಾಸಿಕವಾಗಿ ಅಂಚಿನಲ್ಲಿರುವ ವಿಭಾಗಗಳಿದ್ದರೂ, ಇಡೀ ಧರ್ಮವನ್ನು ಹಿಂದುಳಿದಂತೆ ಪರಿಗಣಿಸುವುದು ಮುಸ್ಲಿಂ ಸಮಾಜದ ವೈವಿಧ್ಯತೆ ಮತ್ತು ಸಂಕೀರ್ಣತೆಗಳನ್ನು ಕಡೆಗಣಿಸುತ್ತದೆ ಎಂದು ಒತ್ತಿ ಹೇಳಿದೆ. +ಧರ್ಮ-ಆಧಾರಿತ ಮೀಸಲಾತಿಯು ವರ್ಗ-1 (17 ಮುಸ್ಲಿಂ ಜಾತಿಗಳು) ಮತ್ತು ವರ್ಗ 2ಎ (19 ಮುಸ್ಲಿಂ ಜಾತಿಗಳು) ಅಡಿಯಲ್ಲಿ ವರ್ಗೀಕರಿಸಲ್ಪಟ್ಟ ಮುಸ್ಲಿಂ ಜಾತಿಗಳು/ಸಮುದಾಯಗಳು ಮತ್ತು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಮುಸ್ಲಿಂ ಜಾತಿಗಳು/ಸಮುದಾಯಗಳಿಗೆ ಸಾಮಾಜಿಕ ನ್ಯಾಯದ ನೈತಿಕತೆಯ ವಿರುದ್ಧ ಪರಿಣಾಮ ಬೀರುತ್ತದೆ ಮತ್ತು ಕಾರ್ಯನಿರ್ವಹಿಸುತ್ತದೆ. ಆದ್ದರಿಂದ, ಹಿಂದುಳಿದ ವರ್ಗಗಳ ರಾಜ್ಯ ಪಟ್ಟಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಾತಿಗಳು/ಸಮುದಾಯಗಳನ್ನು ಇಡೀ ಧರ್ಮಕ್ಕೆ ಸಮಾನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಎನ್‍ಸಿಬಿಸಿ ಹೇಳಿದೆ. +ಸಾಮಾಜಿಕ ನ್ಯಾಯದ ಒಟ್ಟಾರೆ ಚೌಕಟ್ಟಿನ ಮೇಲೆ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಅಂತಹ ಮೀಸಲಾತಿಗಳ ಪ್ರಭಾವದ ಬಗ್ಗೆ ಎನ್‍ಸಿಬಿಸಿ ಕೂಡ ಕಳವಳ ವ್ಯಕ್ತಪಡಿಸಿತು. +ಕರ್ನಾಟಕವು ಮುಸ್ಲಿಮರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ 32 ಪ್ರತಿಶತ ಮೀಸಲಾತಿಯನ್ನು ಒದಗಿಸಿದರೆ, ಆಯೋಗವು ಈ ಸಮುದಾಯಗಳೊಳಗಿನ ವೈವಿಧ್ಯತೆಗೆ ಕಾರಣವಾಗುವ ಸೂಕ್ಷ್ಮ ವಿಧಾನದ ಅಗತ್ಯವನ್ನು ಒತ್ತಿಹೇಳಿತು. 2011ರ ಜನಗಣತಿಯ ಪ್ರಕಾರ, ಕರ್ನಾಟಕದ ಜನಸಂಖ್ಯೆಯಲ್ಲಿ ಮುಸ್ಲಿಮರು ಶೇಕಡಾ 12.92 ರಷ್ಟಿದ್ದಾರೆ. \ No newline at end of file diff --git a/eesanje/url_47_118_4.txt b/eesanje/url_47_118_4.txt new file mode 100644 index 0000000000000000000000000000000000000000..96220f22d12b516bf534ac0c929d3013d550813c --- /dev/null +++ b/eesanje/url_47_118_4.txt @@ -0,0 +1,13 @@ +‘ಹಿಂದೂ ವಿರೋಧಿ’ ಅಸ್ತ್ರ ಝಳಪಿಸಿ ಕಾಂಗ್ರೆಸ್ ವಿರುದ್ಧ ಮೋದಿ ಸಿಡಿಲಬ್ಬರದ ಭಾಷಣ +ಜೈಪುರ,ಆ.23-ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನುಡಿಸುವಂತಿಲ್ಲ. ಜೈಶ್ರೀರಾಮ್ ಎನ್ನುವವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮತ್ತೆ ಕೈ ಪಕ್ಷದ ಮೇಲೆ ಬೆಂಕಿ ಉಗುಳಿದ್ದಾರೆ. +ಕರ್ನಾಟಕದ ರಾಜಧಾನಿ ಬೆಂಗಳೂರಿನ ಎಚ್‍ಎಎಲ್ ಬಳಿಯ ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣವನ್ನು ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಆಡಳಿತ ಇರುವ ಕಡೆ ಬಾಂಬ್ ದಾಳಿಯಾಗುತ್ತದೆ. ಯಾರೊಬ್ಬರಿಗೂ ನೆಮ್ಮದಿಯಾಗಿ ಬದುಕುವ ಗ್ಯಾರಂಟಿ ಇಲ್ಲ ಎಂದು ಕೆಂಡಕಾರಿದರು. +ರಾಜಸ್ಥಾನದ ಬನ್ಸ್ವಾರದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ ನರೇಂದ್ರಮೋದಿ ಅವರು ಮತ್ತೆ ಕಾಂಗ್ರೆಸ್ ವಿರುದ್ಧ ಅಕ್ಷರಶಃ ಸಿಡಿಲಬ್ಬರದ ಭಾಷಣ ಮಾಡಿದರು.ತಮ್ಮ ಭಾಷಣದಲ್ಲಿ ಕರ್ನಾಟಕದಲ್ಲಿ ನಡೆದ ಕೆಲವು ಘಟನೆಗಳನ್ನು ಪ್ರಸ್ತಾಪಿಸಿದ ಮೋದಿ, ಕಾಂಗ್ರೆಸ್ ಆಡಳಿತವಿರುವ ಈ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಿಸಿದರೆ ಮಹಾನ್ ಅಪರಾಧ, ಜೈ ಶ್ರೀರಾಮ್ ಎಂದು ಹೇಳಬೇಡಿ ಎಂದು ನಮ್ಮ ಯುವಕರ ಮೇಲೆ ಹಲ್ಲೆಯಾಗುತ್ತದೆ, ಎಲ್ಲೆಂದರಲ್ಲಿ ಬಾಂಬ್ ಸ್ಪೋಟವಾಗುತ್ತಿದೆ, ವಿದ್ಯಾರ್ಥಿನಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಜನರಿಗೆ ಬದುಕುವ ಗ್ಯಾರಂಟಿ ಕಾಂಗ್ರೆಸ್ ಕೊಡುತ್ತದೆಯೇ ಎಂದು ಪ್ರಶ್ನೆ ಮಾಡಿದರು. +ರಾಮನವಮಿಯಂದು ಶೋಭಾಯಾತ್ರೆಯ ಮೆರಣವಣಿಗೆಗೆ ಕೆಲವರು ಅಡ್ಡಿಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಮನವಮಿ ಹಬ್ಬವನ್ನು ನಿಷೇಧಿಸಿತ್ತು. ಸಂಪತ್ತಿನ ಮರುಹಂಚಿಕೆ ಮಾಡುತ್ತೇವೆ ಎಂದು ನಾನು ಹೇಳಿದ್ದಕ್ಕೆ ಕಾಂಗ್ರೆಸ್ ಮಾತ್ರವಲ್ಲದೆ ಇಂಡಿಯಾ ಮೈತ್ರಿಕೂಟದ ನಾಯಕರು ನನ್ನ ವಿರುದ್ಧ ವೈಯಕ್ತಿಕ ಚಾರಿತ್ರ್ಯ ಹರಣ ಮಾಡುತ್ತಿದ್ದಾರೆ. +ನನ್ನ ಮಾತು ಅವರಿಗೆ ಎಷ್ಟು ಕೆರಳಿಸಿದೆ ಎಂದರೆ ಎಲ್ಲೆಡೆ ಮೋದಿ ನಿಂದನೆ ಮಾಡುವ ಒಂದಂಶದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಿಮ್ಮ ಸಂಪತ್ತನ್ನು ಕಿತ್ತುಕೊಂಡು ಬೇರೆಯವರಿಗೆ ಹಂಚುತ್ತೇನೆ ಎಂದರೆ ನಾವು ಸುಮ್ಮನಿರಬೇಕೆ ಎಂದು ಮತದಾರರನ್ನು ಪ್ರಶ್ನಿಸಿದರು. +ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ನೀತಿಯನ್ನು ನಾನು ಬಹಿರಂಗಪಡಿಸಿದ್ದಕ್ಕೆ ನನ್ನ ವಿರುದ್ಧ ಬಳಸಬಾರದ ಪದಗಳನ್ನೆಲ್ಲ ಬಳಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸತ್ಯ ಹೇಳಿದರೆ ಸಹಿಸಿಕೊಳ್ಳುವುದಿಲ್ಲ. ಏಕೆಂದರೆ ಅವರು ಅಧಿಕಾರದುದ್ದಕ್ಕೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದರು. +ಅವರ ಹಿಡನ್ ಅಜೆಂಡಾವನ್ನು ನಾನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಆಧಾರ ರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ. ಅವರು ಎಷ್ಟು ಟೀಕೆ ಮಾಡುತ್ತಾರೋ ನನಗೆ ಮತದಾರರ ಆಶೀರ್ವಾದ ಸಿಗುತ್ತದೆ ಎಂದು ಹೇಳಿದರು. +ಧರ್ಮ ಆಧರಿತ ಮೀಸಲಾತಿ ಇಲ್ಲ:ಇನ್ನು ನರೇಂದ್ರಮೋದಿ ಅವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಎಸ್ಸಿ-ಎಸ್ಟಿ ಮತ್ತು ಒಬಿಸಿಗಳ ಮೀಸಲಾತಿಯನ್ನು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ನೀಡಲು ಮುಂದಾಗಿದೆ. ನೀವು ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ನಿಮ್ಮ ಮಕ್ಕಳು ಬದುಕುವುದೇ ಕಷ್ಟವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. +ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಆದರೆ ಕಾಂಗ್ರೆಸ್ ನಾಯಕರು ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರಿಗೆ ಸಂವಿಧಾನಬದ್ದವಾಗಿ ನೀಡುವ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಲು ಹೊರಟಿದೆ ಎಂದು ನೇರವಾಗಿಯೇ ವಾಗ್ದಾಳಿ ನಡೆಸಿದರು. +2004ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತಕ್ಷಣವೇ ಆಂಧ್ರಪ್ರದೇಶದಲ್ಲಿ ಎಸ್ಸಿ-ಎಸ್ಟಿ ಮೀಸಲಾತಿಯನ್ನು ಸ್ಥಗಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ ಮಾಡುವುದೇ ಅವರ ಕಾರ್ಯಕ್ರಮಗಳಲ್ಲಿ ಒಂದಾಗಿತ್ತು. ಆದರೆ ಇದಕ್ಕೆ ನ್ಯಾಯಾಲಯ ಅವಕಾಶ ಕೊಡಲಿಲ್ಲ ಎಂದು ಮೋದಿ ನೆನಪಿಸಿದರು. +ಯಾವುದೇ ಕಾರಣಕ್ಕೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಕಿತ್ತುಕೊಳ್ಳಲು ಅವಕಾಶ ನೀಡುವುದಿಲ್ಲ. ಇದಲ್ಲದೆ ಧರ್ಮದ ಹೆಸರಿನಲ್ಲಿ ವಿಭಜಿಸುವುದಕ್ಕೂ ಅವಕಾಶ ಕೊಡುವುದಿಲ್ಲ. ನಾನು ಇದನ್ನು ನನ್ನ ಹೃದಯಾಂತರಾಳದಿಂದ ಹೇಳುತ್ತಿದ್ದೇನೆ. ನಿಮ್ಮೆಲ್ಲರ ಹಿತ ಕಾಪಾಡೇ ಕಾಪಾಡುತ್ತೇವೆ ಎಂದು ಭರವಸೆ ನೀಡಿದರು. +ಸಂವಿಧಾನವನ್ನು ಅರ್ಥ ಮಾಡಿಕೊಳ್ಳದ ಕೆಲವರು ಬಾಯಿಗೆ ಬಂದಂತೆ ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಆರಾಸುವವರು. ಅವರು ದೇಶಕ್ಕೆ ಕೊಟ್ಟ ಸಂವಿಧಾನದಲ್ಲಿ ನಂಬಿಕೆ ಇಟ್ಟು ಮುನ್ನಡೆಯುತ್ತಿದ್ದೇವೆ. ನಮ್ಮ ಸರ್ಕಾರ ಸಂವಿಧಾನಕ್ಕೆ ಸಮರ್ಪಕವಾಗಿಯೇ ನಡೆದುಕೊಂಡು ಹೋಗುತ್ತಿದೆ ಎಂದು ಮೋದಿ ಹೇಳಿದರು. \ No newline at end of file diff --git a/eesanje/url_47_118_5.txt b/eesanje/url_47_118_5.txt new file mode 100644 index 0000000000000000000000000000000000000000..06ed270ad5d8c2ba056ddc270027b6c19ac9383d --- /dev/null +++ b/eesanje/url_47_118_5.txt @@ -0,0 +1,5 @@ +ದೇಶದಲ್ಲಿ ಶೇ.40ರಷ್ಟು ಸಂಪತ್ತು ಶೇ.1ರಷ್ಟು ಜನರಿಗೆ ಹೋಗಿದೆ : ಕಾಂಗ್ರೆಸ್ +ನವದೆಹಲಿ,ಏ. 23 (ಪಿಟಿಐ)-ದೇಶದಲ್ಲಿ ಸೃಷ್ಟಿಯಾಗಿರುವ ಶೇ.40 ರಷ್ಟು ಸಂಪತ್ತು ಕೇವಲ ಶೇ.1 ರಷ್ಟಿರುವ ಜನಸಂಖ್ಯೆಗೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ಜನರ ಸಂಪತ್ತನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮರುಹಂಚಿಕೆ ಮಾಡುವುದಾಗಿ ಮೋದಿ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದೀಗ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿದೆ. +ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‍ನಲ್ಲಿ ಪ್ರಧಾನಿ ನಿಮಗೆ ಎಂದಿಗೂ ಹೇಳುವುದಿಲ್ಲ: 2012 ರಿಂದ 2021 ರವರೆಗೆ ದೇಶದಲ್ಲಿ ಸೃಷ್ಟಿಯಾದ ಶೇ.40ಕ್ಕಿಂತ ಹೆಚ್ಚು ಸಂಪತ್ತು ಕೇವಲ ಶೇ.1ರಷ್ಟಿರುವ ಜನಸಂಖ್ಯೆಗೆ ಹೋಗಿದೆ. +ದೇಶದ ಒಟ್ಟು ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‍ಟಿ) ಸರಿಸುಮಾರು ಶೇ.64 ರಷ್ಟು ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಮಧ್ಯಮ ವರ್ಗದವರಿಂದ ಬರುತ್ತದೆ ಎಂದು ಅವರು ಹೇಳಿದರು. +ಕಳೆದ ಹತ್ತು ವರ್ಷಗಳಲ್ಲಿ ಮಾರಾಟವಾದ ಹೆಚ್ಚಿನ ಸಾರ್ವಜನಿಕ ಆಸ್ತಿಗಳು ಮತ್ತು ಸಂಪನ್ಮೂಲಗಳು ಒಂದು ಅಥವಾ ಎರಡು ಕಂಪನಿಗಳಿಗೆ ಹೋಗಿವೆ – ಆರ್ಥಿಕತೆಯ ಬೆಳೆಯುತ್ತಿರುವ ಏಕಸ್ವಾಮ್ಯವು ಹೆಚ್ಚಿನ ಹಣದುಬ್ಬರಕ್ಕೆ ಕಾರಣವಾಗಿದೆ ಎಂದು ಅರ್ಥಶಾಸಜ್ಞರು ತೋರಿಸಿದ್ದಾರೆ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_47_118_6.txt b/eesanje/url_47_118_6.txt new file mode 100644 index 0000000000000000000000000000000000000000..caf90910a18863c28673454bd38230aecfcea07a --- /dev/null +++ b/eesanje/url_47_118_6.txt @@ -0,0 +1,5 @@ +ಕೇಜ್ರಿವಾಲ್ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಳ, ಇನ್ಸುಲಿನ್ ನೀಡಿದ ಜೈಲಿನ ಅಧಿಕಾರಿಗಳು +ನವದೆಹಲಿ, ಏ. 23 (ಪಿಟಿಐ) :ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಿದ ನಂತರ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ನಿನ್ನೆ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಎರಡು ಘಟಕಗಳನ್ನು ನೀಡಲಾಗಿದೆ ಎಂದು ತಿಹಾರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ರಾತ್ರಿ 7 ಗಂಟೆ ಸುಮಾರಿಗೆ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 217 ರಷ್ಟಿದ್ದು, ತಿಹಾರ್‍ನ ವೈದ್ಯರು ಅವರಿಗೆ ಇನ್ಸುಲಿನ್ ನೀಡಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಏಪ್ರಿಲ್ 20 ರಂದು ಮುಖ್ಯಮಂತ್ರಿಯವರೊಂದಿಗೆ ವಿಡಿಯೋ ಕಾನರೆನ್ಸ್ ನಡೆಸಿದ ಏಮ್ಸ ತಜ್ಞರು ತಿಹಾರ್ ವೈದ್ಯರಿಗೆ ಸಕ್ಕರೆಯ ಮಟ್ಟವು ಒಂದು ನಿರ್ದಿಷ್ಟ ಮಟ್ಟವನ್ನು ದಾಟಿದರೆ ಅವರಿಗೆ ಇನ್ಸುಲಿನ್ ನೀಡಬಹುದು ಎಂದು ಸಲಹೆ ನೀಡಿದ್ದರು ಎಂದು ಅವರು ಹೇಳಿದರು. +ಏತನ್ಮಧ್ಯೆ, ತಿಹಾರ್‍ನಲ್ಲಿ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 320 ದಾಟಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಶುಗರ್ ಲೆವೆಲ್ ಹೆಚ್ಚಾಗುತ್ತಿದ್ದರೂ ಜೈಲಿನಲ್ಲಿ ಅವರಿಗೆ ಇನ್ಸುಲಿನ್ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. +ದೆಹಲಿ ಸರ್ಕಾರವು ಈಗ ರದ್ದುಗೊಳಿಸಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಅವರು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿದ್ದಾರೆ. \ No newline at end of file diff --git a/eesanje/url_47_118_7.txt b/eesanje/url_47_118_7.txt new file mode 100644 index 0000000000000000000000000000000000000000..2e38102c5f80415b37da07adfdb8b750a9a1d1a9 --- /dev/null +++ b/eesanje/url_47_118_7.txt @@ -0,0 +1,7 @@ +ಚುನಾವಣಾ ಆಯೋಗದ ಕಾರ್ಯವೈಖರಿಗೆ ಕೇರಳ ಸಿಎಂ ವಿಜಯನ್ ಟೀಕೆ +ಕಣ್ಣೂರು, ಏ. 23 (ಪಿಟಿಐ) :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. +ಇತ್ತೀಚೆಗಷ್ಟೇ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ದುರದುಷ್ಟಕರ ಎಂದಿದ್ದಾರೆ. ಚುನಾವಣಾ ಆಯೋಗವು ಅದನ್ನು ಪಕ್ಷಾತೀತವಾಗಿ ತೋರಿಸಬೇಕಿತ್ತು. ಅದು ತಕ್ಷಣವೇ ಕಾರ್ಯನಿರ್ವಹಿಸಬೇಕಿತ್ತು ಎಂದು ಮಾಕ್ರ್ಸ್‍ವಾದಿ ಅನುಭವಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. +ಇದು ಸುಪ್ರೀಂ ಕೋರ್ಟ್‍ನಲ್ಲಿ ಪ್ರಸ್ತಾಪವಾಗಬೇಕಾದ ವಿಷಯವಾಗಿದೆ ಎಂದು ವಿಜಯನ್ ಹೇಳಿದರು.ಅದೇ ಸಮಯದಲ್ಲಿ, ಪ್ರಧಾನಿಯವರ ಇಂತಹ ಹೇಳಿಕೆಗಳಿಂದಾಗಿ ರಾಷ್ಟ್ರದಲ್ಲಿ ಬಿಜೆಪಿ ವಿರೋಧಿ ಭಾವನೆ ಬಲಗೊಳ್ಳುತ್ತಿದೆ ಮತ್ತು ಕೇಸರಿ ಪಕ್ಷವು ಮತ್ತಷ್ಟು ಪ್ರತ್ಯೇಕಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. +ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುವುದಾಗಿ ಹೇಳಿದ್ದರು. +ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಅವರು ಆರೋಪಿಸಿದ್ದರು. +ಅವರ ಈ ಹೇಳಿಕೆಯನ್ನು ಟೀಕಸಿದ ವಿಜಯನ್ ಜನರಲ್ಲಿ ಮುಸ್ಲಿಂ ವಿರೋಧಿ ದ್ವೇಷವನ್ನು ಹುಟ್ಟುಹಾಕಲು ಕಾಲ್ಪನಿಕ ಕಥೆಗಳನ್ನು ನಿರ್ಮಿಸುವ ಮೂಲಕ ಪ್ರಧಾನಿಯವರು ಕೋಮು ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_47_118_8.txt b/eesanje/url_47_118_8.txt new file mode 100644 index 0000000000000000000000000000000000000000..30393d0291e7eafbc81ddef8ae2540533636f0a5 --- /dev/null +++ b/eesanje/url_47_118_8.txt @@ -0,0 +1,6 @@ +ಶಶಿ ತರೂರ್ ಸೋಲು ಖಚಿತ ; ಜೆ.ಪಿ.ನಡ್ಡಾ +ನವದೆಹಲಿ, ಏ. 23 (ಪಿಟಿಐ):ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ನಾಯಕ ಮತ್ತು ಅದರ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಶಿ ತರೂರ್ ಅವರ ತಿರಸ್ಕಾರ, ಗಣ್ಯತೆ ಮತ್ತು ದುರಹಂಕಾರ ಕ್ಕಾಗಿ ವಾಗ್ದಾಳಿ ನಡೆಸಿದ್ದು, ಕೇರಳದ ಜನರು ಅವರನ್ನು ಸೋಲಿಸುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. +ರಾಜತಾಂತ್ರಿಕ-ರಾಜಕಾರಣಿಯು ಬಿಜೆಪಿಯನ್ನು ಕೆಣಕುತ್ತಿರುವುದನ್ನು ತೋರಿಸುವ ಮಾಧ್ಯಮ ವರದಿಗಳನ್ನು ಟ್ಯಾಗ್ ಮಾಡಿದ ನಡ್ಡಾ, ರಾಜ್ಯದಲ್ಲಿ ಪಕ್ಷವು ತೆರೆಯಬಹುದಾದ ಏಕೈಕ ಖಾತೆ ಬ್ಯಾಂಕ್ ಖಾತೆಗಳು ಎಂದು ಹೇಳಿದರು. +ಇದುವರೆಗೆ ಸೀಟು ಗೆಲ್ಲದ ಕೇರಳದಲ್ಲಿ ಬಿಜೆಪಿ ತನ್ನ ಲೋಕಸಭಾ ಖಾತೆ ತೆರೆಯುವ ಪ್ರಯತ್ನದಲ್ಲಿ ಪಾಲ್ಗೊಳ್ಳಲು ದೇಶಾದ್ಯಂತ ಬಡವರ ಬ್ಯಾಂಕ್ ಖಾತೆಗಳನ್ನು ತೆರೆಯಲು ಕೇಂದ್ರ ಸರ್ಕಾರದ ಸಹಿ ಕಾರ್ಯಕ್ರಮವನ್ನು ತರೂರ್ ಉಲ್ಲೇಖಿಸಿದ್ದಾರೆ. +ನಮ್ಮ ಸರ್ಕಾರ ಬಡವರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯುತ್ತದೆ ಎಂಬುದು ನಮಗೆ ಹೆಮ್ಮೆ! ಕಾಂಗ್ರೆಸ್ ಎಂದಿಗೂ ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಏಕೆಂದರೆ ಅವರು ಕೇವಲ ಒಂದು ರಾಜವಂಶದ ಮತ ಬ್ಯಾಂಕ್ ಮತ್ತು ಬ್ಯಾಂಕ್ ಖಾತೆಗಳ ಬಗ್ಗೆ ಕಾಳಜಿ ವಹಿಸುತ್ತಾರೆ ಎಂದು ನಡ್ಡಾ ಎಕ್ಸ್ ಮಾಡಿದ್ದಾರೆ. +ಅಂತಹ ಸಂಪರ್ಕ ಕಡಿತಗೊಂಡ ಅಂಶಗಳನ್ನು ಕೇರಳ ಸೋಲಿಸುತ್ತದೆ! ತರೂರ್ ಅವರನ್ನು ಸತತ ಮೂರು ಬಾರಿ ಲೋಕಸಭೆಗೆ ಕಳುಹಿಸಿದ ಹೈ ಪ್ರೊಫೈಲ್ ಸ್ಥಾನದಿಂದ ಬಿಜೆಪಿಯು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಅವರ ವಿರುದ್ಧ ಕಣಕ್ಕಿಳಿಸಿದೆ. \ No newline at end of file diff --git a/eesanje/url_47_118_9.txt b/eesanje/url_47_118_9.txt new file mode 100644 index 0000000000000000000000000000000000000000..659c05c4da2937a491d527359d782bc4edaaa6d4 --- /dev/null +++ b/eesanje/url_47_118_9.txt @@ -0,0 +1,7 @@ +ಸಂಶೋಧನೆ, ಕಲಿಕೆಗೆ ಹೆಚ್ಚು ಒತ್ತು : ಪ್ರಧಾನಿ ಮೋದಿ +ನವದೆಹಲಿ, ಏ. 23 (ಪಿಟಿಐ): ಭಾರತೀಯ ವಿಶ್ವವಿದ್ಯಾನಿಲಯಗಳಲ್ಲಿನ ಕಾರ್ಯಕ್ಷಮತೆ ಸುಧಾರಣೆಯನ್ನು ಕ್ಯೂಎಸ್ ಅಧ್ಯಕ್ಷ ನುಂಜಿಯೊ ಕ್ವಾಕ್ವಾರೆಲ್ಲಿ ಶ್ಲಾಸಿದ ಒಂದು ದಿನದ ನಂತರ, ತಮ್ಮ ಸರ್ಕಾರವು ಸಂಶೋಧನೆ, ಕಲಿಕೆ ಮತ್ತು ನಾವೀನ್ಯತೆಗಳ ಮೇಲೆ ದೊಡ್ಡ ರೀತಿಯಲ್ಲಿ ಗಮನಹರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. +ಭಾರತೀಯ ವಿಶ್ವವಿದ್ಯಾನಿಲಯಗಳು ಈ ವರ್ಷ ಎಲ್ಲಾ ಜಿ20 ರಾಷ್ಟ್ರಗಳಲ್ಲಿ ಅತ್ಯಧಿಕ ಕಾರ್ಯಕ್ಷಮತೆಯ ಸುಧಾರಣೆಯನ್ನು ಪ್ರದರ್ಶಿಸಿವೆ, ಅವುಗಳ ಸರಾಸರಿ ಶ್ರೇಯಾಂಕದಲ್ಲಿ ವರ್ಷದಿಂದ ವರ್ಷಕ್ಕೆ ಗಮನಾರ್ಹವಾಗಿ ಶೇ.14ರಷ್ಟು ಸುಧಾರಣೆಯಾಗಿದೆ ಎಂದು ಕ್ವಾಕ್ವಾರೆಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. +ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ ಮೋದಿ, ಇದು ನೋಡಲು ಉತ್ತೇಜನಕಾರಿಯಾಗಿದೆ! ನಮ್ಮ ಸರ್ಕಾರವು ಸಂಶೋಧನೆ, ಕಲಿಕೆ ಮತ್ತು ನಾವೀನ್ಯತೆಗಳ ಮೇಲೆ ದೊಡ್ಡ ರೀತಿಯಲ್ಲಿ ಗಮನಹರಿಸುತ್ತಿದೆ. ಮುಂಬರುವ ದಿನಗಳಲ್ಲಿ, ಈ ಒತ್ತು ಇನ್ನಷ್ಟು ಆಳವಾಗಿ ನಮ್ಮ ಯುವ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದಿದ್ದಾರೆ. + ! , . , , .://./EUz9pwWYLf +ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯವು (ಜೆಎನ್‍ಯು) ಲಂಡನ್ ಮೂಲದ ಉನ್ನತ ಶಿಕ್ಷಣ ವಿಶ್ಲೇಷಣಾ ಸಂಸ್ಥೆಯಾದ ಕ್ವಾಕ್ವೆರೆಲ್ಲಿ ಸೈಮಂಡ್ಸ್ (ಕ್ಯೂಎಸ್) ಈ ತಿಂಗಳ ಆರಂಭದಲ್ಲಿ ಘೋಷಿಸಿದ ಅಸ್ಕರ್ ಶ್ರೇಯಾಂಕಗಳಲ್ಲಿ ಭಾರತದಲ್ಲಿ ಅತ್ಯುನ್ನತ ಶ್ರೇಣಿಯ ವಿಶ್ವವಿದ್ಯಾಲಯವಾಗಿದೆ. +ವಿಶ್ವವಿದ್ಯಾನಿಲಯವು ಅಭಿವೃದ್ಧಿ ಅಧ್ಯಯನಕ್ಕಾಗಿ ಜಾಗತಿಕವಾಗಿ 20 ನೇ ಸ್ಥಾನದಲ್ಲಿದೆ. ಐಐಎಂ-ಅಹಮದಾಬಾದ್ ಜಾಗತಿಕವಾಗಿ ವ್ಯಾಪಾರ ಮತ್ತು ನಿರ್ವಹಣಾ ಅಧ್ಯಯನಕ್ಕಾಗಿ ಟಾಪ್ 25 ಸಂಸ್ಥೆಗಳಲ್ಲಿ ಸ್ಥಾನ ಪಡೆದಿದ್ದರೆ, ಐಐಎಂ-ಬೆಂಗಳೂರು ಮತ್ತು ಐಐಎಂ-ಕಲ್ಕತ್ತಾ ಟಾಪ್ 50 ರಲ್ಲಿರುವುದು ವಿಶೇಷವಾಗಿದೆ. \ No newline at end of file diff --git a/eesanje/url_47_119_1.txt b/eesanje/url_47_119_1.txt new file mode 100644 index 0000000000000000000000000000000000000000..620375374fe6fb55853e1a22560c016787003e1f --- /dev/null +++ b/eesanje/url_47_119_1.txt @@ -0,0 +1,5 @@ +ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‍ಗೆ ರಾಜನಾಥ್ ಸಿಂಗ್ ಭೇಟಿ +ನವದೆಹಲಿ, ಅ 22-ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‍ಗೆ ಭೇಟಿ ನೀಡಿ ಈ ಪ್ರದೇಶದಲ್ಲಿ ಭಾರತದ ಒಟ್ಟಾರೆ ಮಿಲಿಟರಿ ಸನ್ನದ್ಧತೆಯನ್ನು ಪರಿಶೀಲಿಸಿದ್ದಾರೆ. ಆಯಕಟ್ಟಿನ ಪ್ರಮುಖ ಪ್ರದೇಶದಲ್ಲಿ ಭಾರತೀಯ ಸೇನೆಯು ತನ್ನ ಅಸ್ತಿತ್ವದ 40 ನೇ ವರ್ಷವನ್ನು ಗುರುತಿಸಿದ ಒಂದು ವಾರದ ನಂತರ ಸಚಿವ ಸಿಂಗ್ ಅವರ ಸಿಯಾಚಿನ್ ಭೇಟಿ ನೀಡಿದ್ದಾರೆ. +ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೊಂದಿಗೆ ರಕ್ಷಣಾ ಸಚಿವರು ಈ ಪ್ರದೇಶದ ಒಟ್ಟಾರೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು ಎಂದು ಅದಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಸಿಂಗ್ ಅವರು ಸಿಯಾಚಿನ್‍ನಲ್ಲಿ ನಿಯೋಜಿಸಲಾದ ಸೈನಿಕರೊಂದಿಗೆ ಸಂವಾದ ನಡೆಸಿದರು. ಕಾರಕೋರಂ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್ ಹಿಮನದಿಯು ವಿಶ್ವದ ಅತಿ ಎತ್ತರದ ಮಿಲಿಟರಿ ವಲಯ ಎಂದು ಕರೆಯಲ್ಪಡುತ್ತದೆ, ಅಲ್ಲಿ ಸೈನಿಕರು ಹಿಮಪಾತ ಮತ್ತು ಹೆಚ್ಚಿನ ಗಾಳಿಯೊಂದಿಗೆ ಹೋರಾಡಬೇಕಾಗುತ್ತದೆ. +ಆಪರೇಷನ್ ಮೇಘದೂತ್ ಅಡಿಯಲ್ಲಿ ಭಾರತೀಯ ಸೇನೆಯು ಏಪ್ರಿಲ್, 1984 ರಲ್ಲಿ ಸಿಯಾಚಿನ್ ಹಿಮನದಿಯ ಮೇಲೆ ತನ್ನ ಸಂಪೂರ್ಣ ನಿಯಂತ್ರಣವನ್ನು ಸ್ಥಾಪಿಸಿತು. ಕಳೆದ ಕೆಲವು ವರ್ಷಗಳಿಂದ ಭಾರತೀಯ ಸೇನೆಯು ಸಿಯಾಚಿನ್‍ನಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸಿದೆ.ಕಳೆದ ವರ್ಷ ಜನವರಿಯಲ್ಲಿ, ಸೇನೆಯ ಕಾಪ್ರ್ಸ್ ಆಫ್ ಇಂಜಿನಿಯರ್ಸ್‍ನ ಕ್ಯಾಪ್ಟನ್ ಶಿವ ಚೌಹಾಣ್ ಅವರನ್ನು ಸಿಯಾಚಿನ್ ಗ್ಲೇಸಿಯರ್‍ನಲ್ಲಿ ಮುಂಚೂಣಿಯ ಪೋಸ್ಟ್ ನಲ್ಲಿ ನಿಯೋಜಿಸಲಾಯಿತು, ಪ್ರಮುಖ ಯುದ್ಧಭೂಮಿಯಲ್ಲಿ ಮಹಿಳಾ ಸೇನಾ ಅಧಿಕಾರಿಯ ಮೊದಲ ಕಾರ್ಯಾಚರಣೆಯ ನಿಯೋಜನೆ ಕೂಡ ಬರಲಿದೆ. +ಸಿಯಾಚಿನ್ ಹಿಮನದಿಯ ಮೇಲಿನ ಭಾರತೀಯ ಸೇನೆಯ ನಿಯಂತ್ರಣವು ಸಾಟಿಯಿಲ್ಲದ ಶೌರ್ಯ ಮತ್ತು ನಿರ್ಣಯದ ಕಥೆ ಮಾತ್ರವಲ್ಲದೆ ತಾಂತ್ರಿಕ ಪ್ರಗತಿಗಳು ಮತ್ತು ವ್ಯವಸ್ಥಾಪನಾ ಸುಧಾರಣೆಗಳ ಅದ್ಭುತ ಪ್ರಯಾಣವಾಗಿದೆ, ಅದು ಅತ್ಯಂತ ಭೀಕರವಾದ ಭೂಪ್ರದೇಶದಿಂದ ಅದಮ್ಯ ಚೈತನ್ಯ ಮತ್ತು ನಾವೀನ್ಯತೆಯ ಸಂಕೇತವಾಗಿ ಪರಿವರ್ತಿಸಿತು ಎಂದು ಸೇನೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. \ No newline at end of file diff --git a/eesanje/url_47_119_10.txt b/eesanje/url_47_119_10.txt new file mode 100644 index 0000000000000000000000000000000000000000..3e76585294a5df2675f14294908bd1779f49084e --- /dev/null +++ b/eesanje/url_47_119_10.txt @@ -0,0 +1,5 @@ +ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ, 9 ಮಂದಿ ಸಾವು +ಜಲಾವರ್,(ರಾಜಸ್ಥಾನ)ಏ.21-ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರ ಅಕ್ಲೇರಾ ಬಳಿ ತಡರಾತ್ರಿ ನಡೆದಿದೆ. +ಮೃತರೆಲ್ಲರೂ ಕಾರಿನಲ್ಲಿದ್ದರು, ಮಧ್ಯಪ್ರದೇಶಕ್ಕೆ ಮದುವೆಗೆ ತೆರಳಿ ರಾತ್ರಿ ಹಿಂದಿರುಗುತ್ತಿದ್ದಾಗ ಅಕ್ಲೇರಾ ಸಮೀಪದ ಪಂಚೋಲಾ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲೇ ಮೂವರು ಹಾಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 6 ಯುವಕರು ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದರು ಪ್ರಸ್ತುತ ತನಿಖೆ ಮುಂದುವರಿದಿದೆ. +ಪ್ರಾಥಮಿಕ ಮಾಹಿತಿ ಪ್ರಕಾರ ಮೃತಪಟ್ಟ ಯುವಕರು ಬಗ್ರಿ ಸಮುದಾಯದವರು ಎನ್ನಲಾಗಿದೆ. ಅತಿವೇಗದ ಚಾಲನೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರಿಗೆ ಗೆ ಡಿಕ್ಕಿ ಹೊಡೆದಿದೆ. +ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದು ಲಾರಿ ಹರ್ಯಾಣ ಮೂಲದ್ದಾಗಿದೆ. ಮೃತರನ್ನು ಗುರುತಿಸುವ ಪ್ರಯತ್ನ ಮುಂದುವರೆದಿದೆ.ಅಪಘಾತದ ಹಿಂದಿನ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಅಪಘಾತದ ಸುದ್ದಿ ತಿಳಿದ ನಂತರ ವಧು-ವರರ ಮನೆಯಲ್ಲಿ ಗದ್ದಲ ಉಂಟಾಗಿದೆ ಮದುವೆಗೆ ಬಂದವರೆಲ್ಲರೂ ತಮ್ಮ ಕೆಲಸ ಬಿಟ್ಟು ಘಟನಾ ಸ್ಥಳದ ಕಡೆಗೆ ಬಂದಿದ್ದಾರೆ . ಈ ಅವಘಡದಿಂದ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ. \ No newline at end of file diff --git a/eesanje/url_47_119_11.txt b/eesanje/url_47_119_11.txt new file mode 100644 index 0000000000000000000000000000000000000000..7e755e79e4e812f5a2e83271a59bf2eba6067eae --- /dev/null +++ b/eesanje/url_47_119_11.txt @@ -0,0 +1,14 @@ +ದಕ್ಷಿಣ ಭಾರತದತ್ತ ಮೋದಿ ದಂಡಯಾತ್ರೆ +ನವದೆಹಲಿ,ಏ.20-ಉತ್ತರಭಾರತದಲ್ಲಿ ಪ್ರಬಲವಾಗಿ ರುವ ಬಿಜೆಪಿ ಈ ಬಾರಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ವಿಶೇಷ ರಣತಂತ್ರವನ್ನು ರೂಪಿಸುತ್ತಿದ್ದು, ಪ್ರಧಾನಿ ನರೇಂದ್ರಮೋದಿ ಅವರು ಬರುವ ದಿನಗಳಲ್ಲಿ ಮತ್ತಷ್ಟು ದಂಡಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಹಿಂದಿ ರಾಜ್ಯಗಳಾದ ಉತ್ತರಪ್ರದೇಶ, ಉತ್ತರಖಂಡ್, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಛತ್ತೀಸ್ಗಢ ಸೇರಿದಂತೆ ಮತ್ತಿತರ ಕಡೆ ಬಿಜೆಪಿ ಸಂಘಟನೆ ಹಿಂದೆಂದಿಗಿಂತಲೂ ಪ್ರಬಲವಾಗಿದೆ. +ಕೇಂದ್ರದಲ್ಲಿ ತಮ್ಮ ಉದ್ದೇಶಿತ 400 ಸ್ಥಾನಗಳನ್ನು ಗೆದ್ದು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿರುವ ಬಿಜೆಪಿಗೆ ದ್ರಾವಿಡ ರಾಜ್ಯಗಳಾದ ದಕ್ಷಿಣ ಭಾರತದಲ್ಲಿ ಖಾತೆ ತೆರೆಯುವುದು ಸವಾಲಾಗಿ ಪರಿಣಿಮಿಸಿದೆ. ಕರ್ನಾಟಕ ಮತ್ತು ಗೋವಾ ಹೊರತುಪಡಿಸಿದರೆ ಉಳಿದ ರಾಜ್ಯಗಳಾದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. +ತೆಲಂಗಾಣದಲ್ಲಿ ಒಂದಿಷ್ಟು ಸ್ಥಾನಗಳನ್ನು ಗೆದ್ದಿದೆಯಾದರೂ ಅಲ್ಲೇನು ಪಕ್ಷದ ಸಾಧನೆ ಹೇಳಿಕೊಳ್ಳುವಂತಿಲ್ಲ. ಇದೆಲ್ಲವನ್ನು ಅವಲೋಕಿಸಿರುವ ಬಿಜೆಪಿ ಚಿಂತಕರ ಛಾವಡಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದರೆ ಮಾತ್ರ ಉದ್ದೇಶಿತ 400 ಸ್ಥಾನಗಳನ್ನು ಗೆಲ್ಲಲು ಸಾಧ್ಯ ಎಂಬ ಕಿವಿಮಾತು ಹೇಳಿದೆ. +ಹೀಗಾಗಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾಸ್ ಸೇರಿದಂತೆ ಅನೇಕರು ದಕ್ಷಿಣ ಭಾರತದ ರಾಜ್ಯಗಳನ್ನು ಗುರಿಯಾಗಿಟ್ಟುಕೊಂಡು ದಾಂಗುಡಿ ಇಡಲಿದ್ದಾರೆ ಎಂದು ತಿಳಿದುಬಂದಿದೆ. +ಎನ್ಡಿಎ 400 ಸ್ಥಾನಗಳ ಗುರಿಯನ್ನು ತಲುಪಬೇಕಾದರೆ 130 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಭಾರತದಲ್ಲಿ ಉತ್ತಮವಾದ ಸಾಧನೆಮಾಡಲೇಬೇಕಿದೆ. ಉತ್ತರ ಭಾರತದಲ್ಲಿ ಬಿಜೆಪಿಗೆ ಇರುವಷ್ಟು ನೆಲೆ ದಕ್ಷಿಣ ಭಾರತದಲ್ಲಿ ಇದುವರೆಗೂ ಸಿಕ್ಕಿಲ್ಲ. ಆದ್ದರಿಂದ ಈ ಬಾರಿ ದಕ್ಷಿಣ ಭಾರತವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ರಣತಂತ್ರ ರೂಪಿಸಿದೆ. +ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ 130 ಕ್ಷೇತ್ರಗಳ ಪೈಕಿ ಕೇವಲ 29 ಕ್ಷೇತ್ರಗಳಲ್ಲಿ ಮಾತ್ರ ವಿಜಯದ ನಗೆ ಬೀರಿತ್ತು. ಅದರಲ್ಲಿ 25 ಕರ್ನಾಟಕ, ಉಳಿದ 4 ತೆಲಂಗಾಣದಿಂದ ಬಂದಿದ್ದವು. ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳದಲ್ಲಿ ಬಿಜೆಪಿಯ ಸಾಧನೆ ಶೂನ್ಯ ಆಗಿತ್ತು. ಈ ಹಿನ್ನೆಲೆ ದಕ್ಷಿಣ ಭಾರತದಲ್ಲಿ ಕೇಸರಿ ನೆಲೆಯನ್ನು ವಿಸ್ತರಿಸುವ ಶತಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಗೆ ನೆಲೆ ಇದ್ದು, ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಜನಬೆಂಬಲ ನಿಧಾನವಾಗಿ ಹೆಚ್ಚಾಗುತ್ತಿದೆ. ಆದರೆ, ಬಿಜೆಪಿಗೆ ನಿಜವಾದ ಸವಾಲು ಎದುರಾಗಿರುವುದು ತಮಿಳುನಾಡು ಮತ್ತು ಕೇರಳದಲ್ಲಿ. +ಚುನಾವಣಾ ವರ್ಷದ ಹಿನ್ನೆಲೆ ಪ್ರಧಾನಿ ನರೇಂದ್ರಮೋದಿ ಈ ವರ್ಷದ ಆರಂಭದಿಂದಲೇ ದಕ್ಷಿಣ ಭಾರತಕ್ಕೆ 24ಕ್ಕಿಂತ ಹೆಚ್ಚು ಬಾರಿ ಬಂದಿದ್ದಾರೆ. ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಂಕುಸ್ಥಾಪನೆ, ಅಭ್ಯರ್ಥಿಗಳ ಪರ ರ್ಯಾಲಿ ನಡೆಸಲು ದಕ್ಷಿಣ ಭಾರತಕ್ಕೆ ಹಿಂದೆಂದಿಗಿಂತಲೂ ಹೆಚ್ಚಾಗಿ ಭೇಟಿ ನೀಡಿದ್ದು, ಡಿಎಂಕೆ, ಕಾಂಗ್ರೆಸ್, ಬಿಆರ್ಎಸ್ ಹಾಗೂ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೋದಿ ಅಷ್ಟೇ ಅಲ್ಲದೇ ಕೇಂದ್ರದ ಇತರೆ ಸಚಿವರು, ಬಿಜೆಪಿಯ ಹಿರಿಯ ನಾಯಕರು ಕೂಡ ದಕ್ಷಿಣ ಭಾರತಕ್ಕೆ ನಿಯಮಿತವಾಗಿ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. +ಸಂಸತ್ನ ಚಳಿಗಾಲದ ಅಧಿವೇಶನದ ಬೆನ್ನಲ್ಲೇ ದಕ್ಷಿಣ ಭಾರತದ 84 ಕ್ಷೇತ್ರಗಳನ್ನು ಗುರುತಿಸಿ ಅಲ್ಲಿಗೆ ವಿಸ್ತಾರಕರನ್ನು ಕಳುಹಿಸಿತ್ತು. ಈ ಮೂಲಕ ಕಳಪೆ ಸಾಧನೆ ಮಾಡಿದ ಕ್ಷೇತ್ರಗಳಲ್ಲಿ ತನ್ನ ನೆಲೆಯನ್ನು ಗಟ್ಟಿಮಾಡಿಕೊಳ್ಳುವ ಪ್ರಯತ್ನವನ್ನು ಮಾಡಿತ್ತು. ಅದಲ್ಲದೇ ದಕ್ಷಿಣ ಭಾರತದ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರ ನಾಮಬಲವನ್ನೇ ನೆಚ್ಚಿಕೊಂಡಿದ್ದು, ಅವರ ಹೆಸರಲ್ಲಿಯೇ ಚುನಾವಣೆ ಎದುರಿಸುತ್ತಿದ್ದಾರೆ. +ದ್ರಾವಿಡರ ನೆಲದಲ್ಲಿ ಕದನ:ಉತ್ತರಭಾರತದಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ವೋಟ್ ಬ್ಯಾಂಕ್ ಹೆಚ್ಚಿಸಿಕೊಳ್ಳುತ್ತಿರುವ ಬಿಜೆಪಿಯ ಮತ ಗಳಿಕೆ ತಮಿಳುನಾಡಿನಲ್ಲಿ ಶೇ.5ಕ್ಕಿಂತ ಕಡಿಮೆಯಿದೆ. ಇಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಾಬಲ್ಯವಿದ್ದು, ಬಿಜೆಪಿಯ ಪ್ಯಾನ್ ಇಂಡಿಯಾ ಪಕ್ಷದ ಕನಸಿಗೆ ತಮಿಳುನಾಡು ಅಡ್ಡಿಯಾಗಿದೆ. ಆದರೆ ಈ ಬಾರಿ ಹೊಸ ಮುಖ ಅಣ್ಣಾಮಲೈ ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ಪ್ರಚಾರದಿಂದ ಬಿಜೆಪಿಗೆ ಹೊಸ ನಿರೀಕ್ಷೆ ಸೃಷ್ಟಿಯಾಗಿದೆ. ಮತಗಳಿಕೆ ಪ್ರಮಾಣ ಹೆಚ್ಚಳ ಮಾಡುವುದರೊಂದಿಗೆ ಒಂದಿಷ್ಟು ಕ್ಷೇತ್ರಗಳನ್ನು ಬಾಚಿಕೊಳ್ಳುವ ನಿಟ್ಟಿನಲ್ಲಿ ಕೇಸರಿ ಪಡೆ ಕೆಲಸ ಮಾಡಿದೆ. +ತಮಿಳುನಾಡಿಗೆ ಈ ವರ್ಷ ಬರೋಬ್ಬರಿ 8 ಬಾರಿ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ತಮಿಳಿಗರ ಮತ ಸೆಳೆಯಲು ಹಲವು ಕೆಲಸ ಮಾಡಿದ್ದಾರೆ. ದೇವಸ್ಥಾನಕ್ಕೆ ಭೇಟಿ, ತಮಿಳು ಭಾಷೆಗೆ ಆದ್ಯತೆ, ತಿರುವಳ್ಳುವರ್ ಅವರಂತಹ ಸ್ಮರಣೆ, ಕಚ್ಛತೀವು ಪ್ರದೇಶದ ವಿವಾದಗಳನ್ನು ನೆನಪಿಸುವ ಮೂಲಕ ಮತ ಸೆಳೆಯುವ ಯತ್ನ ಮಾಡಿದ್ದಾರೆ. ಅದಲ್ಲದೇ ಅಣ್ಣಾಮಲೈ ಅವರ ತಳಹಂತದ ಹೋರಾಟ ಆಡಳಿತಾರೂಢ ಡಿಎಂಕೆಗೆ ಒಂದಿಷ್ಟು ಸವಾಲನ್ನು ತಂದಿದೆ. +ಈ ಸಲ ಸಾಂಪ್ರದಾಯಿಕ ಮಿತ್ರ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳದೇ 6 ಸಣ್ಣ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿರುವುದು ಮತ್ತೊಂದು ವಿಶೇಷ.ದೇವರ ನಾಡು ಕೇರಳದ ರಾಜಕೀಯದಲ್ಲಿ ಯುಡಿಎಫ್ ಮತ್ತು ಎಲ್ಡಿಎಫ್ ಪ್ರಾಬಲ್ಯವಿದ್ದು, ಇಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಈ ನಿಟ್ಟಿನಲ್ಲಿ ಈ ಬಾರಿ ಏನಾದರೂ ಮಾಡಿ ಬದಲಾವಣೆ ತರಬೇಕು ಎಂದುಕೊಂಡಿರುವ ಬಿಜೆಪಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ತಿರುವನಂತಪುರಂನಲ್ಲಿ ಮೂರು ಬಾರಿ ಗೆದ್ದಿರುವ ಸಂಸದ ಶಶಿ ತರೂರ್ ಎದುರು ಕಣಕ್ಕಿಳಿಸಿದೆ. +ವಿ.ಮುರುಳೀಧರನ್ ಅವರನ್ನು ಯುಡಿಎಫ್ ಸಂಸದ ಅದೂರ್ ಪ್ರಕಾಶ್ ಎದುರು ಅತ್ತಿಂಗಲ್ನಲ್ಲಿ ಕಣಕ್ಕಿಳಿಸಿದೆ. ಇದರ ಜೊತೆ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್ ಪುತ್ರಿ ಪದ್ಮಜಾ ವೇಣುಗೋಪಾಲ್, ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಪುತ್ರ ಅನಿಲ್ ಆಂಟನಿಯಂತಹ ಹಲವು ಪ್ರಮುಖ ಕಾಂಗ್ರೆಸ್ ನಾಯಕರನ್ನು ತನ್ನ ಕಡೆ ಸೆಳೆದುಕೊಂಡಿದೆ. +ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ಈ ವರ್ಷ ಒಟ್ಟು 7 ಬಾರಿ ಕೇರಳಕ್ಕೆ ಬಂದಿದ್ದಾರೆ. ಜೊತೆಗೆ ನಾರಾಯಣಗುರು ಅವರಂತಹ ಸ್ಥಳೀಯ ಗಣ್ಯರನ್ನು ಸ್ಮರಿಸುವ ಕೆಲಸವನ್ನು ಮೋದಿ ಮಾಡಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅದಲ್ಲದೇ ಎಸ್ಡಿಪಿಐ ಬೆಂಬಲ ಪಡೆಯುವ ಕಾಂಗ್ರೆಸ್ ನಡೆಯನ್ನು ಕೂಡ ಮೋದಿ ವಿರೋಧಿಸಿದ್ದು, ಮತದಾರರನ್ನು ಸೆಳೆಯಲು ಎಲ್ಲ ರೀತಿಯ ಪ್ರಯತ್ನ ಮಾಡಿದ್ದಾರೆ. ಚುನಾವಣಾ ಫಲಿತಾಂಶ ಬಂದ ದಿನವೇ ಎಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬುದು ಸ್ಪಷ್ಟವಾಗಲಿದೆ. \ No newline at end of file diff --git a/eesanje/url_47_119_12.txt b/eesanje/url_47_119_12.txt new file mode 100644 index 0000000000000000000000000000000000000000..94c1944df2714c64015d1bf4a58bc57071047936 --- /dev/null +++ b/eesanje/url_47_119_12.txt @@ -0,0 +1,9 @@ +ರಾಹುಲ್ ಗಾಂಧಿಗೆ ಸೋಲಿನ ರುಚಿ ತೋರಿಸಲು ವಯನಾಡು ಜನ ಕಾತುರರಾಗಿದ್ದಾರೆ : ಮೋದಿ ಭವಿಷ್ಯ +ನಾಂದೇಡ್, ಏ.20-ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಪ್ರಧಾನಿ ನರೇಂದ್ರಮೋದಿಯವರು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಯುವ ನಾಯಕ ಉತ್ತರಪ್ರದೇಶ ಬಿಟ್ಟು ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡಿದ್ದಾರೆ. ಆದರೆ ಅವರಿಗೆ ನೆನಪಿರಲಿ ಅಲ್ಲಿನ ಮತದಾರರು ಸೋಲಿನ ರುಚಿ ತೋರಿಸಲು ಕಾತುರರಾಗಿದ್ದಾರೆ ಸೋಲು 100ಕ್ಕೆ ನೂರು ಖಚಿತ ಎಂದು ಹೇಳಿದರು. +ಮಹಾರಾಷ್ಟ್ರದ ನಾಂದೇಡ್ ಮತ್ತು ಹಿಂಗೋಲಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ಅವರು, ರಾಹುಲ್ ಗಾಂಧಿಯನ್ನು ಉಲ್ಲೇಖಿಸಿ, ಅಮೇತಿಯಲ್ಲಿ ಸೋತ ನಂತರ ಕಾಂಗ್ರೆಸ್‍ನ ಯುವ ನಾಯಕ ವಯನಾಡನ್ನೂ ಕಳೆದುಕೊಳ್ಳುತ್ತಾರೆ. ಆದ್ದರಿಂದ ಅವರು ಏ.26ರ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಲೇವಡಿ ಮಾಡಿದರು. +ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಉಲ್ಲೇಖಿಸಿ, ಕೆಲವು ಇಂಡಿ ಮೈತ್ರಿಕೂಟದ ನಾಯಕರು ಚುನಾವಣೆಯಲ್ಲಿ ಸ್ರ್ಪಧಿಸಲು ಧೈರ್ಯವಿಲ್ಲದ ಕಾರಣ ಲೋಕಸಭೆಯನ್ನು ತೊರೆದು ರಾಜ್ಯಸಭೆಗೆ ತೆರಳಿದ್ದಾರೆ ಎಂದು ಹೆಸರು ಹೇಳದೆ ಕಿಡಿಕಾರಿದರು. ಮೊದಲ ಬಾರಿಗೆ ಕುಟುಂಬಸ್ಥರು ತಾವು ಬೆಳೆದುಬಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದಿಲ್ಲ, ಏಕೆಂದರೆ ಅಲ್ಲಿ ಪಕ್ಷದ ಅಭ್ಯರ್ಥಿಯೇ ಇಲ್ಲ . ಕಾಂಗ್ರೆಸ್ ಆಡಳಿತದ ಕೆಟ್ಟ ಆಡಳಿತವನ್ನು ಸರಿಪಡಿಸಲು 10 ವರ್ಷಗಳನ್ನು ಕಳೆದಿದ್ದೇನೆ. ಸಾಕಷ್ಟು ಕೆಲಸ ಮಾಡಬೇಕಾಗಿದೆ ಎಂದು ಎಂದು ಹೇಳಿದರು. +ರೈತರು ಮತ್ತು ಬಡವರ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಿಯಾಗಿದೆ. ಕೃಷಿ ಬಿಕ್ಕಟ್ಟು ಈಗ ಸಂಭವಿಸಿಲ್ಲ, ಇದು ಕಾಂಗ್ರೆಸ್‍ನ ದೋಷಪೂರಿತ ನೀತಿಗಳಿಂದಾಗಿ ಸಂಭವಿಸಿದೆ ಎಂದು ಟೀಕಿಸಿದರು. +ಇಂಡಿ ಮೈತ್ರಿಕೂಟವನ್ನು ಗುರಿಯಾಗಿಸಿಕೊಂಡು ವಾಗ್ದಾಳಿನಡೆಸಿದ ಮೋದಿ, ಯೋಜನೆಗಳಿಗೆ ಯಾವುದೇ ಮುಖವಿಲ್ಲ ಮತ್ತು ದೇಶದ ಭವಿಷ್ಯವನ್ನು ಯಾರಿಗೆ ಒಪ್ಪಿಸಬೇಕೆಂದು ಜನರಿಗೆ ತಿಳಿದಿಲ್ಲ. ಅವರು ಏನು ಬೇಕಾದರೂ ಹೇಳಿಕೊಳ್ಳಬಹುದು, ಆದರೆ ವಾಸ್ತವವೆಂದರೆ ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಕುಹುಕವಾಡಿದರು. +ತಮ್ಮ ಭ್ರಷ್ಟಾಚಾರಗಳನ್ನು ರಕ್ಷಿಸಲು ಒಗ್ಗೂಡಿರುವ ಸ್ವಾರ್ಥಿಗಳ ಗುಂಪು ವಿರೋಧ ಪಕ್ಷದ ಮೈತ್ರಿಕೂಟ ಎಂದು ಟೀಕಾ ಪ್ರಹಾರ ನಡೆಸಿದರು. ಲೋಕಸಭೆ ಚುನಾವಣೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಆಗಮಿಸಬೇಕು. ನೀವು ಮತ ಚಲಾಯಿಸುವ ಮೂಲಕ ಯಾವುದೇ ಪ್ರಯೋಜನವನ್ನು ಮಾಡುತ್ತಿಲ್ಲ, ನೀವು ದೇಶದ ಭವಿಷ್ಯವನ್ನು ಭದ್ರಪಡಿಸುತ್ತಿದ್ದೀರಿ. +ವಿರೋಧ ಪಕ್ಷದಿಂದ ಪಕ್ಷದ ಕಾರ್ಯಕರ್ತರ ನೈತಿಕತೆಯನ್ನು ಹೆಚ್ಚಿಸಲು ನಾನು ಬಯಸುತ್ತೇನೆ. ನೀವು (ವಿಪಕ್ಷ ನಾಯಕರು) ಚುನಾವಣೆಯಲ್ಲಿ ಸೋಲುವುದು ಖಚಿತ, ಆದರೆ ನಿಮಗೆ ಕೆಲವು ಅವಕಾಶಗಳು ಸಿಗುತ್ತವೆ. ಆದರೆ ನೀವು ಮತದಾರರಿಗೆ ಮತ ಹಾಕುವಂತೆ ಮನವಿ ಮಾಡಬೇಕು ಎಂದರು. +25ರಷ್ಟು ಸೀಟುಗಳಲ್ಲಿ ಇಂಡಿ ಕೂಟ ಪರಸ್ಪರರ ವಿರುದ್ಧ ಚುನಾವಣೆಯಲ್ಲಿ ಸ್ರ್ಪಧಿಸುತ್ತಿವೆ. ಜೂನ್ 4ರಂದು ನಂತರ ಅವರು ಪರಸ್ಪರ ಹೆಚ್ಚು ಜಗಳವಾಡುತ್ತಾರೆ. ಪೌರತ್ವ (ತಿದ್ದುಪಡಿ) ಕಾಯಿದೆ ಇಲ್ಲದಿದ್ದರೆ, ಅಫ್ಘಾನಿಸ್ತಾನದಿಂದ ಬಂದ ಸಿಖ್ಖರಿಗೆ ಏನಾಗುತ್ತಿತ್ತು ಎಂದು ಮೋದಿ ಪ್ರಶ್ನೆ ಮಾಡಿದರು. \ No newline at end of file diff --git a/eesanje/url_47_119_2.txt b/eesanje/url_47_119_2.txt new file mode 100644 index 0000000000000000000000000000000000000000..744ff4069c4ad6de2318d955ae16c137e139bf28 --- /dev/null +++ b/eesanje/url_47_119_2.txt @@ -0,0 +1,8 @@ +ಮೊದಲ ಹಂತದ ಚುನಾವಣೆಯ ನಿರಾಸೆಯಲ್ಲಿ ಮೋದಿ ವಿಷ ಕಾರುತ್ತಿದ್ದಾರೆ : ಕಾಂಗ್ರೆಸ್ +ನವದೆಹಲಿ,ಏ. 22 (ಪಿಟಿಐ) :ಪ್ರಧಾನಿ ನರೇಂದ್ರ ಮೋದಿ ಅವರು ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಮತ್ತು ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಹಲವಾರು ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. +ಸಂಪತ್ತಿನ ಮರುಹಂಚಿಕೆ ಹೇಳಿಕೆಗಳ ಬಗ್ಗೆ ಪ್ರಧಾನಿ ಮೋದಿಯವರ ವಿರುದ್ಧ ಕಾಂಗ್ರೆಸ್ ತಿರುಗೇಟು ನೀಡಿದ್ದು, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ನಿರಾಶೆ ಎದುರಿಸಿದ ನಂತರ, ಪ್ರಧಾನಿ ಈಗ ಸುಳ್ಳು ಮತ್ತು ಸುಳ್ಳಿನ ವರದಿ ಆಶ್ರಯಿಸಿದ್ದಾರೆ. ನಿಜವಾದ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ತಿರುಗಿಸಲು ದ್ವೇಷ ಭಾಷಣ ಮಾಡುತ್ತಿದ್ದಾರೆ ಎಂದಿದೆ. +ಏರುತ್ತಿರುವ ಬೆಲೆಗಳು ಮತ್ತು ನಿರುದ್ಯೋಗದ ಮೇಲೆ ಕೇಂದ್ರೀಕರಿಸುವ ಕಾಂಗ್ರೆಸ್‍ನ ಇತ್ತೀಚಿನ ಜಾಹೀರಾತನ್ನು ಹಂಚಿಕೊಂಡ ಕಾಂಗ್ರೆಸ್‍ನ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ, ದೇಶದಲ್ಲಿ ನಿರುದ್ಯೋಗ ಮತ್ತು ಹಣದುಬ್ಬರವು ಉತ್ತುಂಗದಲ್ಲಿದೆ ಮತ್ತು ನರೇಂದ್ರ ಮೋದಿ ಅವರು ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಾರೆ ಎಂದು ಆರೋಪಿಸಿದ್ದಾರೆ. +ಅವರು (ಮೋದಿ) ಸಮಸ್ಯೆಗಳಿಂದ ಬೇರೆಡೆಗೆ ವಿಷಯ ತಿರುಗಿಸಲು ಹಲವಾರು ಹೊಸ ತಂತ್ರಗಳನ್ನು ಹೊಂದಿದ್ದಾರೆ, ಆದರೆ ಸುಳ್ಳಿನ ವ್ಯವಹಾರದ ಅಂತ್ಯವು ಹತ್ತಿರದಲ್ಲಿದೆ ಎಂದು ಗಾಂಧಿ ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕೂಡ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಅವರು ಬಹಳಷ್ಟು ವಿಷಯಗಳ ಬಗ್ಗೆ ವಿಷಕಾರಿ ಭಾಷೆಯಲ್ಲಿ ಮಾತನಾಡುತ್ತಾರೆ. +ಅವರು ಸರಳವಾದ ಪ್ರಶ್ನೆಗೂ ಉತ್ತರಿಸಬೇಕು – 1951 ರಿಂದ, ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಯ ನೈಜ ಡೇಟಾವನ್ನು ಬಹಿರಂಗಪಡಿಸುತ್ತದೆ. 2021 ರಲ್ಲಿ ಮಾಡಲಾಗಿತ್ತು ಆದರೆ ಇಲ್ಲಿಯವರೆಗೆ ಮಾಡಿಲ್ಲ ಈ ಬಗ್ಗೆ ಪ್ರಧಾನಿ ಏಕೆ ಮೌನವಾಗಿದ್ದಾರೆ? ರಮೇಶ್ ಎಕ್ಸ್‍ನಲ್ಲಿ ಪ್ರಶ್ನಿಸಿದ್ದಾರೆ. +ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮುಸ್ಲಿಮರಿಗೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುವುದಾಗಿ ಅವರು ಸಲಹೆ ನೀಡಿದ ನಂತರ ಕಾಂಗ್ರೆಸ್ ತನ್ನ ದಾಳಿಯನ್ನು ಹೆಚ್ಚಿಸಿದೆ ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದೆ. +ರಾಜಸ್ಥಾನದಲ್ಲಿ ಮಾತನಾಡಿದ ಮೋದಿ, ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸಿದೆ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_47_119_3.txt b/eesanje/url_47_119_3.txt new file mode 100644 index 0000000000000000000000000000000000000000..787701229b601b4f180759e2127f4eedfd067aac --- /dev/null +++ b/eesanje/url_47_119_3.txt @@ -0,0 +1,6 @@ +ಕಾಶ್ಮೀರದಲ್ಲಿ 9 ಕಡೆ ಎನ್‍ಐಎ ದಾಳಿ +ನವದೆಹಲಿ,ಏ.22-ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಒಂಬತ್ತು ಸ್ಥಳಗಳಲ್ಲಿ ಶೋಧ ನಡೆಸಿದೆ.2022 ರಲ್ಲಿ ಏಜೆನ್ಸಿ ದಾಖಲಿಸಿದ ಪ್ರಕರಣದ ಭಾಗವಾಗಿ ಭಯೋತ್ಪಾದನೆಗೆ ಸಂಬಂಧಿಸಿದ ವ್ಯಕ್ತಿಗಳಿಗೆ ಸಂಬಂಧಿಸಿದ ವಿವಿಧ ಸೈಟ್‍ಗಳಲ್ಲಿ ಭದ್ರತಾ ಪಡೆಗಳ ಸಹಯೋಗದೊಂದಿಗೆ ಈ ದಾಳಿ ನಡೆಸಲಾಗಿದೆ. +ಶ್ರೀನಗರದಲ್ಲಿ ನೆಲೆಸಿರುವ ಕೆಲವು ಶಂಕಿತರ ಬಗ್ಗೆ ಪಡೆದ ನಿರ್ದಿಷ್ಟ ಮಾಹಿತಿಯ ಮೇರೆಗೆ ಭಯೋತ್ಪಾದನಾ ನಿಗ್ರಹ ದಳವು ಹುಡುಕಾಟವನ್ನು ಪ್ರಾರಂಭಿಸಿದೆ. ಕೋಕರ್ನಾಗ್ (ಜಮ್ಮು ಮತ್ತು ಕಾಶ್ಮೀರ) ಎನ್‍ಕೌಂಟರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎನ್‍ಐಎ ಚಾರ್ಜ್‍ಶೀಟ್ ಮಾಡಿದ ಸುಮಾರು ಒಂದು ತಿಂಗಳ ನಂತರ ಶೋಧ ಕಾರ್ಯಾಚರಣೆಯನ್ನು ನಡೆಸಲಾಯಿತು. +ಪ್ರಕರಣದ ಶಂಕಿತರು ಲಷ್ಕರ್-ಎ-ತೊಯ್ಬಾದ (ಎಲ್‍ಇಟಿ) ಶಾಖೆಯಾದ ದಿ ರೆಸಿಸ್ಟೆಂಟ್ ಫ್ರಂಟ್ (ಟಿಆರ್‍ಎಫ್ ) ಗೆ ಸಂಪರ್ಕ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್‍ಇಟಿ ಮತ್ತು ಟಿಆರ್‍ಎಫ್ ಎರಡೂ ನಿಷೇಧಿತ ಸಂಘಟನೆಗಳಾಗಿವೆ ಮತ್ತು ಕಾಶ್ಮೀರಿ ಯುವಕರನ್ನು ಜಿಹಾದ್ ಹೆಸರಿನಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ನಿರಂತರ ಪ್ರಚೋದನೆ ಮತ್ತು ಪ್ರೇರಣೆಯಲ್ಲಿ ತೊಡಗಿಸಿಕೊಂಡಿವೆ ಎಂದು ಆರೋಪಿಸಲಾಗಿದೆ. +ಟ್ವಿಟರ್, ಟೆಲಿಗ್ರಾಮ್ ಮತ್ತು ಯುಟ್ಯೂಬ್ ಚಾನೆಲ್‍ಗಳಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್‍ಗಳಲ್ಲಿ ತಮ್ಮ ಉದ್ದೇಶವನ್ನು ಉತ್ತೇಜಿಸಲು ಮತ್ತು ನಿರುದ್ಯೋಗಿ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಎರಡು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. +ಎಲ್‍ಇಟಿಯು 1990 ರ ದಶಕದ ಆರಂಭದಲ್ಲಿ ರೂಪುಗೊಂಡ ಅತಿದೊಡ್ಡ ಭಯೋತ್ಪಾದಕ ಗುಂಪು ಮತ್ತು ಅನಂತನಾಗ್ ಪ್ರದೇಶದಲ್ಲಿ ಜಾಲವನ್ನು ಪುನರುಜ್ಜೀವನಗೊಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಇದು ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ವಿವಿಧ ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿದೆ. \ No newline at end of file diff --git a/eesanje/url_47_119_4.txt b/eesanje/url_47_119_4.txt new file mode 100644 index 0000000000000000000000000000000000000000..fa479bb3357e88543d95bcbd49dcfd27595f3706 --- /dev/null +++ b/eesanje/url_47_119_4.txt @@ -0,0 +1,7 @@ +ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ಬೇಕು : ಓವೈಸಿ +ಕಿಶನ್‍ಗಂಜ್, ಏ. 22 (ಪಿಟಿಐ)-ರಾಜಕೀಯದಲ್ಲಿ ಮುಸ್ಲಿಂ ಮಹಿಳೆಯರಿಗೂ ಮೀಸಲಾತಿ ನೀಡುವ ಅವಶ್ಯಕತೆ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ. +ಎಐಎಂಐಎಂನ ಪ್ರಾಂತೀಯ ಘಟಕದ ಮುಖ್ಯಸ್ಥ ಮತ್ತು ಶಾಸಕ ಅಖ್ತರುಲ್ ಇಮಾನ್ ಕಣದಲ್ಲಿರುವ ರಾಜ್ಯದ ಏಕೈಕ ಮುಸ್ಲಿಂ ಬಹುಸಂಖ್ಯಾತ ಲೋಕಸಭಾ ಕ್ಷೇತ್ರವಾಗಿರುವ ಬಿಹಾರದ ಕಿಶನ್‍ಗಂಜ್‍ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತ ಅವರು ಈ ವಿಷಯ ಪ್ರಸ್ತಾಪಿಸಿದರು. +ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯ ವಿರುದ್ಧ ಎಐಎಂಐಎಂ ವಿರುದ್ಧ ಬಿಜೆಪಿ-ಆರ್‍ಎಸ್‍ಎಸ್ ಸುಳ್ಳು ಆರೋಪ ಮಾಡುತ್ತಿದೆ. 2004ರಲ್ಲೇ ನಾವು ಸಿಕಂದರಾಬಾದ್‍ನಲ್ಲಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಆಕೆಗೆ ಶಾಂತಿ ಸಿಗಲಿ ಎಂದು ದಿವಂಗತ ನಾಯಕಿ ಹುಮೇರಾ ಅಜೀಜ್ ಅವರನ್ನು ಉಲ್ಲೇಖಿಸಿ ಓವೈಸಿ ಹೇಳಿದ್ದಾರೆ. +ನಮ್ಮ ವಿಚಾರ ಏನೆಂದರೆ, ದೇಶದಲ್ಲಿ 17 ಲೋಕಸಭೆ ಚುನಾವಣೆಗಳು ನಡೆದಿವೆ, ಆದರೆ ಸಂಸದರಾದ ಮುಸ್ಲಿಂ ಮಹಿಳೆಯರ ಸಂಖ್ಯೆ ಕೇವಲ 20 ಆಗಿದೆ. ಹಾಗಾದರೆ ಮುಸ್ಲಿಂ ಮಹಿಳೆಯರಿಗೆ ಏಕೆ ಮೀಸಲಾತಿ ನೀಡಬಾರದು ಎಂದು ಅವರು ಪ್ರಶ್ನಿಸಿದ್ದಾರೆ.ಲಂಡನ್‍ನಲ್ಲಿರುವ ಲಿಂಕನ್ಸ್ ಇನ್‍ನ ಹಳೆಯ ವಿದ್ಯಾರ್ಥಿ ಮತ್ತು ಬ್ಯಾರಿಸ್ಟರ್ ಎಂಬ ಪೂರ್ವಪ್ರತ್ಯಯದೊಂದಿಗೆ ಸಂಬೋಧಿಸಲು ಇಷ್ಟಪಡುವ ಓವೈಸಿ, ಲೋಕಸಭೆಯಲ್ಲಿ ನರೇಂದ್ರ ಮೋದಿ ತಂದ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ತಿದ್ದುಪಡಿಯನ್ನು ತರುವಾಗ ಅವರು ಎದುರಿಸಿದ ಅಪಹಾಸ್ಯವನ್ನು ವಿವರಿಸಿದರು. +ಸ್ಪೀಕರ್ ಓಂ ಬಿರ್ಲಾ ಅವರು ನನಗೆ ತಿದ್ದುಪಡಿಯನ್ನು ತರಲು ಬಯಸುತ್ತೀರಿ ಆದರೆ ನಿಮ್ಮನ್ನು ಬೆಂಬಲಿಸಲು ಯಾರೂ ಇಲ್ಲ ಎಂದು ಹೇಳಿದರು. ನಾನು ಅಲ್ಲಾ ನನ್ನೊಂದಿಗಿದ್ದಾನೆ ಎಂದು ನಾನು ಉತ್ತರಿಸಿದೆ ಎಂದು ಎಐಎಂಐಎಂ ಮುಖ್ಯಸ್ಥರು ನೆನಪಿಸಿಕೊಂಡರು. +ಒವೈಸಿಯ ಕಿಶನ್‍ಗಂಜ್ ಭಾಷಣದ ಕ್ಲಿಪ್ ಅನ್ನು ಅವರ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ನನ್ನ ವಾದವೆಂದರೆ ಮುಸ್ಲಿಮರು ಮತ್ತು ಹಿಂದುಳಿದ ವರ್ಗಗಳು ಒಟ್ಟಾಗಿ ಒಟ್ಟು ಜನಸಂಖ್ಯೆಯ ಶೇ.65 ರಷ್ಟಿದ್ದಾರೆ. ಈ ವಿಶಾಲ ಸಾಮಾಜಿಕ ವಿಭಾಗದ ಮಹಿಳೆಯರ ಹಕ್ಕುಗಳನ್ನು ನಾವು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಓವೈಸಿ ಹೇಳಿದರು. \ No newline at end of file diff --git a/eesanje/url_47_119_5.txt b/eesanje/url_47_119_5.txt new file mode 100644 index 0000000000000000000000000000000000000000..fd4fd6f66dabf3e65fc2dd9276f9caebf06aed2f --- /dev/null +++ b/eesanje/url_47_119_5.txt @@ -0,0 +1,9 @@ +ಶಾಸಕರು, ಸಂಸದರ ವಿರುದ್ಧದ 2 ಸಾವಿರಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳ ಇತ್ಯರ್ಥ +ನವದೆಹಲಿ,ಏ.22- (ಪಿಟಿಐ)ಸಂಸತ್ ಸದಸ್ಯರು ಮತ್ತು ವಿಧಾನಸಭೆಯ ಸದಸ್ಯರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳು 2023 ರಲ್ಲಿ 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿವೆ ಎಂದು ಸುಪ್ರೀಂ ಕೋರ್ಟ್‍ಗೆ ತಿಳಿಸಲಾಗಿದೆ. +ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಅವರು ಸಲ್ಲಿಸಿರುವ ಅಫಿಡವಿಟ್‍ನಲ್ಲಿ, ಬಾಕಿ ಉಳಿದಿರುವ ವಿಚಾರಣೆಗಳ ತ್ವರಿತ ತೀರ್ಪು ಮತ್ತು ತನಿಖೆಯ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಹೆಚ್ಚಿನ ನಿರ್ದೇಶನಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಆಯಾ ಹೈಕೋರ್ಟ್‍ಗಳು, ಮೊದಲ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸುಮಾರು 501 ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅಭ್ಯರ್ಥಿಗಳು ಇದ್ದಾರೆ. +ಎನ್‍ಜಿಒ ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್ಸರ್ಸ ಲೋಕಸಭೆ ಚುನಾವಣೆ 2024ರ ಹಂತ ಒಂದು ಮತ್ತು ಹಂತ 11 ರ ವರದಿಯನ್ನು ಉಲ್ಲೇಖಿಸಿ, ಹನ್ಸಾರಿಯಾ ಅವರು 2,810 ಅಭ್ಯರ್ಥಿಗಳಲ್ಲಿ (ಹಂತ 1- 1618 ಅಭ್ಯರ್ಥಿಗಳು ಮತ್ತು ಹಂತ 11 – 1192 ಅಭ್ಯರ್ಥಿಗಳು. ), 501 (ಶೇ. 18) ಅಭ್ಯರ್ಥಿಗಳು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೊಂದಿದ್ದಾರೆ, ಅದರಲ್ಲಿ 327 (ಶೇ. 12) ಗಂಭೀರ ಕ್ರಿಮಿನಲ್ ಮೊಕದ್ದಮೆಗಳು (5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯೊಂದಿಗೆ ದಂಡನೀಯ). ಇವೆ ಎಂದು ತಿಳಿಸಿದ್ದಾರೆ. +2019 ರ ಲೋಕಸಭೆ ಚುನಾವಣೆಯಲ್ಲಿ ಇದೇ ಸ್ಥಿತಿ ಇತ್ತು, ಇದರಲ್ಲಿ 7928 ಅಭ್ಯರ್ಥಿಗಳಲ್ಲಿ 1500 ಅಭ್ಯರ್ಥಿಗಳು (19%) ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದರು, ಅದರಲ್ಲಿ 1070 ಅಭ್ಯರ್ಥಿಗಳು (13%) ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಆದಾಗ್ಯೂ, 514 ಚುನಾಯಿತ ಸದಸ್ಯರಲ್ಲಿ 17 ನೇ ಲೋಕಸಭೆ (2019-2024), 225 ಸದಸ್ಯರು (44%) ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಹೊಂದಿದ್ದರು. +ಹೀಗಾಗಿ, ಕ್ರಿಮಿನಲ್ ಪ್ರಕರಣಗಳಿಲ್ಲದ ಅಭ್ಯರ್ಥಿಗಳಿಗಿಂತ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಅಭ್ಯರ್ಥಿಗಳು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದಾರೆ. ಈ ಸಂದರ್ಭದಲ್ಲಿ, ಆಯಾ ಹೈಕೋರ್ಟ್‍ಗಳ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ಬಾಕಿ ಉಳಿದಿರುವ ವಿಚಾರಣೆಗಳು ಮತ್ತು ತನಿಖೆಯ ತ್ವರಿತ ವಿಲೇವಾರಿಗೆ ಈ ನ್ಯಾಯಾಲಯವು ಹೆಚ್ಚಿನ ಆದೇಶಗಳನ್ನು ನೀಡುವುದು ಅವಶ್ಯಕ ಎಂದು ಅಫಿಡವಿಟ್ ಹೇಳಿದೆ. +ಶಾಸಕರ ವಿರುದ್ಧದ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುತ್ತಿರುವ ಹನ್ಸಾರಿಯಾ ಅವರು, ಈ ನ್ಯಾಯಾಲಯವು ಪ್ರಸ್ತುತ ಪ್ರಕ್ರಿಯೆಯಲ್ಲಿ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಂಡು, ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದನ್ನು ಗಮನಿಸಬಹುದು. +ಅವರು ವಿವಿಧ ಹೈಕೋರ್ಟ್‍ಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಕೋಷ್ಟಕ ಚಾರ್ಟ್ ಅನ್ನು ನೀಡಿದರು, ಅದರ ಅಡಿಯಲ್ಲಿ ಜನವರಿ 1, 2023 ರವರೆಗೆ ಶಾಸಕರ ವಿರುದ್ಧ 4,697 ಕ್ರಿಮಿನಲ್ ಪ್ರಕರಣಗಳು ಮತ್ತು ಕಳೆದ ವರ್ಷ 2,018 ಪ್ರಕರಣಗಳನ್ನು ತೀರ್ಮಾನಿಸಲಾಗಿದೆ. +ಸಂಸದರು ಮತ್ತು ಶಾಸಕರ ವಿರುದ್ಧ 2023 ರಲ್ಲಿ 1,746 ಹೊಸ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಮತ್ತು ಆದ್ದರಿಂದ ಒಟ್ಟು 4,474 ಪ್ರಕರಣಗಳು ಜನವರಿ 1, 2024 ಕ್ಕೆ ಬಾಕಿ ಉಳಿದಿವೆ ಎಂದು ಅಫಿಡವಿಟ್ ಹೇಳಿದೆ. \ No newline at end of file diff --git a/eesanje/url_47_119_6.txt b/eesanje/url_47_119_6.txt new file mode 100644 index 0000000000000000000000000000000000000000..b5780f78e1a7999560804004338017a5ea89fd62 --- /dev/null +++ b/eesanje/url_47_119_6.txt @@ -0,0 +1,6 @@ +ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಗಂಟಲು ಸೀಳಿ ಇಬ್ಬರ ಕೊಲೆ +ನವದೆಹಲಿ,ಏ.21-ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಶಂಕೆ ಮೇರೆಗೆ ಯುವತಿ ಮತ್ತು ಆಕೆಯ ದೂರದ ಸಂಬಂಧಿಯೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವಿವಾಹಿತರಾಗಿದ್ದ ಶೈನಾ(22) ಹಾಗೂ ಡ್ಯಾನಿಶ್(35) ಕೊಲೆಯಾಗಿರುವವರು. +ಶೈನಾಳ ತಂದೆ ಮೊಹಮ್ಮದ್ ಶಹೀದ್ (46) ಮತ್ತು ಈತನ ಪುತ್ರ ಕುದುಶ್(20) ಕೊಲೆ ಮಾಡಿರುವ ಆರೋಪಿಗಳು. ಮೊಹಮ್ಮದ್ ಶಹೀದ್ ಕುಟುಂಬ ಹಣ್ಣು ವ್ಯಾಪಾರಿಗಳಾಗಿದ್ದು, ಕೊಲೆಯಾದ ಡ್ಯಾನಿಶ್, ಶಹೀದ್‍ನ ಸೋದರ ಸಂಬಂಧಿಯಾಗಿದ್ದಾನೆ. +ಘಟನೆ ವಿವರ:ಭಜನಪುರ ಪ್ರದೇಶದಲ್ಲಿ ಶೈನಾ ಮತ್ತು ಡ್ಯಾನಿಶ್ ಇಬ್ಬರು ಹೆಣವಾಗಿ ಪತ್ತೆಯಾಗಿದ್ದರು. ಶೈನಾ ಕುತ್ತಿಗೆಯಲ್ಲಿ ಆಳವಾದ ಕೊಯ್ದಿರುವ ಗಾಯಗಳಾಗಿರುವುದು ಕಂಡುಬಂದಿದೆ. ಆಕೆಯ ಕೈ ಕಾಲುಗಳನ್ನು ದುಪ್ಪಟ್ಟಾ ಮತ್ತು ಲುಂಗಿಯಿಂದ ಕಟ್ಟಿ ಕೊಲೆ ಮಾಡಲಾಗಿತ್ತು. ಡ್ಯಾನಿಶ್‍ನ ಗಂಟಲನ್ನು ಹಣ್ಣು ಕತ್ತರಿಸುವ ದೊಡ್ಡ ಚಾಕುವಿನಿಂದ ಸೀಳಲಾಗಿತ್ತು. +ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಬಂದಿದ್ದು, ತನ್ನ ಸಹೋದರಿ ಹಾಗೂ ಚಿಕ್ಕಪ್ಪನನ್ನು ಕೊಲೆ ಮಾಡಿರುವುದಾಗಿ ಖುದ್ದು ಕುದೂಶ್‍ನೇ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಕೊಲೆಯಾಗಿರುವ ಡ್ಯಾನೀಶ್ ಕೂಡ ಹಣ್ಣು ವ್ಯಾಪಾರಿಯಾಗಿದ್ದು, ಈತ ಶೈನಾಳೊಂದಿಗೆ ಸಂಬಂಧವಿಟ್ಟುಕೊಂಡಿದ್ದಾನೆ ಎಂದು ಶಹೀದ್ ಮತ್ತು ಮಗ ಕುದೂಶ್ ಅನುಮಾನ ಹೊಂದಿದ್ದರು. ಶಂಕೆ ಮೇರೆಗೆ ಅವರಿಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎಂದು ಉಪಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ತಿಳಿಸಿದ್ದಾರೆ. +ಕೂಡಲೇ ಉತ್ತರ ಘೋಂಡಾದ ರಾಮ್ ಗಲಿಯಲ್ಲಿರುವ ಸ್ಥಳಕ್ಕೆ ತಕ್ಷಣವೇ ಪೊಲೀಸ್ ತಂಡವನ್ನು ತೆರಳಿ ಎರಡನೇ ಮಹಡಿಯಲ್ಲಿರುವ ಮನೆಯನ್ನು ಪರಿಶೀಲನೆ ನಡೆಸಿ ಆರೋಪಿಗಳಾದ ತಂದೆ ಮತ್ತು ಮಗನನ್ನು ಬಂಧಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_119_7.txt b/eesanje/url_47_119_7.txt new file mode 100644 index 0000000000000000000000000000000000000000..7131d7efeaca08e23288c218fcf92b4addcf90ab --- /dev/null +++ b/eesanje/url_47_119_7.txt @@ -0,0 +1,7 @@ +ಕಳೆದ ಬಾರಿಗಿಂತ ಈ ಬಾರಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ : ಸುರ್ಜಿತ್ ಭಲ್ಲಾ +ನವದೆಹಲಿ,ಏ.21-2019ರ ಲೋಕಸಭೆ ಚುನಾವಣೆಯಲ್ಲಿ ಸಾಧಿಸಿದ್ದಕ್ಕಿಂತ ಈ ಬಾರಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿ 330ರಿಂದ 350 ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಹಿರಿಯ ಆರ್ಥಿಕ ತಜ್ಞ ಮತ್ತು ಫೋಷಾಲಜಿಸ್ಟ್ ಸುರ್ಜಿತ್ ಭಲ್ಲಾ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿ ನೀಡಿರುವ ಸಂದರ್ಶದನಲ್ಲಿ ಮಾತನಾಡಿರುವ ಅವರು, ಈ ಬಾರಿ ಬಿಜೆಪಿ ಒಂದೇ 330 ರಿಂದ 350 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ. ಮೈತ್ರಿ ಪಕ್ಷಗಳು ಜೊತೆಗಿರುವುದರಿಂದ ಅದರ ಸ್ಥಾನಗಳು ಇನ್ನಷ್ಟು ಏರಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. +ಈ ಬಾರಿಯ ಚುನಾವಣೆಯನ್ನು ಪ್ರಧಾನಿ ನರೇಂದ್ರಮೋದಿ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿ ದೇಶದೆಲ್ಲೆಡೆ ಅವರು ತಮ್ಮ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ. ನನ್ನ ಅಂದಾಜಿನ ಪ್ರಕಾರ 2019ರ ಫಲಿತಾಂಶಕ್ಕೆ ಹೋಲಿಸಿದರೆ ಮತ ಗಳಿಕೆಯಲ್ಲಿ ಬಿಜೆಪಿ 5ರಿಂದ 7ರಷ್ಟು ಹೆಚ್ಚಳ ಮಾಡಿಕೊಳ್ಳುವ ಸಂಭವವಿದೆ. ಇದನ್ನು ಅಂಕಿಅಂಶಗಳಿಗೆ ಪರಿವರ್ತಿಸಿದರೆ 330 ರಿಂದ 350 ಆಗಬಹುದು ಎಂದು ಅಂದಾಜಿಸಿದ್ದಾರೆ. +ಕಳೆದ ನಾಲ್ಕು ದಶಕಗಳಿಂದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ತುಂಬ ಅರ್ಥಗರ್ಭಿತವಾಗಿ ವಸ್ತುನಿಷ್ಠ ಆಧಾರದ ಮೇಲೆ ವಿಶ್ಲೇಷಣೆ ಮಾಡುವ ಸುರ್ಜಿತ್ ಭಲ್ಲಾ ಅವರು, ದೇಶದಲ್ಲಿ ಮತ್ತೆ ಮೂರನೇ ಬಾರಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಯಾವ ಕಾರಣದಿಂದ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ತಮ್ಮದೇ ಆದ ಉದಾಹರಣೆಗಳನ್ನು ನೀಡಿದ್ದಾರೆ. +ವಿರೋಧ ಪಕ್ಷಗಳ ದೌರ್ಬಲ್ಯವೇ ಮೋದಿ ಗೆಲುವಿನ ಪ್ರಮುಖ ಶಕ್ತಿ. ಮೋದಿ ಅವರ ನಾಯಕತ್ವಕ್ಕೆ ಸರಿಸಾಟಿಯಾಗುವ ಪ್ರಬಲ ನಾಯಕತ್ವ ಇಂಡಿಯಾ ಮೈತ್ರಿಕೂಟ ಇಲ್ಲವೇ ತೃತೀಯ ಬಣದಲ್ಲೂ ಇಲ್ಲ. ಇದು ಬಿಜೆಪಿ ಗೆಲುವಿಗೆ ಮೊದಲ ಹೆಜ್ಜೆ ಆಗಲಿದೆ ಎಂದಿದ್ದಾರೆ. ಕಳೆದ ಎರಡು ಅವಧಿಯಲ್ಲಿ ಮೋದಿಯವರು ದೊಡ್ಡ ಮಟ್ಟದಲ್ಲಿ ಸುಧಾರಣೆ ಮಾಡಿಲ್ಲವಾದರೂ ಕೆಲವು ಕಾರ್ಯಕ್ರಮಗಳು ಜನರಿಗೆ ಮನಸೋತಿದ್ದಾರೆ. ನೆಹರು, ಇಂದಿರಾಗಾಂಧಿ ನಂತರ ಪ್ರಾಯಶಃ ದೇಶದ ಜನ ಮಾನಸದಲ್ಲಿ ಇಷ್ಟು ಆಳವಾಗಿ ಬೇರೂರಿದ ಹೆಸರು ಎಂದರೆ ಅದು ನರೇಂದ್ರಮೋದಿ. ಹೀಗಾಗಿ ಗೆಲುವಿಗೆ ದಾರಿ ಸುಲಭವಾಗಲಿದೆ ಎಂದಿದ್ದಾರೆ. +ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಕುಸಿತ, ಜಿಡಿಪಿ ಇವುಗಳು ಒಂದಿಷ್ಟು ಪ್ರಮಾಣದಲ್ಲಿ ಮತದಾರರ ಮೇಲೆ ಪರಿಣಾಮ ಬೀರಬಹುದು. ಆದರೆ ಇದನ್ನು ಹೇಗೆ ವಿಷಯಾಂತರ ಮಾಡಬಹುದು ಎಂಬುದನ್ನು ಮೋದಿ ಕಳೆದ ಚುನಾವಣೆಯಲ್ಲೇ ಸಾಧಿಸಿ ತೋರಿಸಿದ್ದಾರೆ. ಮೋದಿ ಅಬ್ಬರದ ಪ್ರಚಾರದ ಮುಂದೆ ವಿರೋಧ ಪಕ್ಷಗಳ ಪ್ರಚಾರ ತೀರಾ ಪೇಲವ ಎನಿಸುತ್ತಿದೆ. ಈ ಎಲ್ಲ ಅಂಶಗಳು ಬಿಜೆಪಿಗೆ ಪೂರಕವಾಗಲಿದೆ ಎಂದು ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ 44 ಸ್ಥಾನಗಳನ್ನು ಪಡೆಯಬಹುದು ಅಥವಾ 2014ರ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತಲೂ ಕಡಿಮೆ ಸ್ಥಾನಗಳನ್ನು ಪಡೆಯಬಹುದು. +ಬಿಜೆಪಿ ಸಾಂಪ್ರದಾಯಿಕವಾಗಿ ದುರ್ಬಲ ಪಕ್ಷವಾಗಿರುವ ತಮಿಳುನಾಡಿನಲ್ಲಿ ಬಿಜೆಪಿ ಕನಿಷ್ಠ ಐದು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕೇರಳದಲ್ಲಿ, ಬಹುಶಃ ಒಂದು ಅಥವಾ ಎರಡು ಸ್ಥಾನ ಗೆಲ್ಲಬಹುದು ಎಂದು ಭಲ್ಲಾ ಹೇಳಿದ್ದಾರೆ. ಜನರ ಜೀವನದಲ್ಲಿ ಎಷ್ಟು ಸುಧಾರಣೆಯಾಗಿದೆ ಎಂಬುದರ ಆಧಾರದ ಮೇಲೆ ಭಾರತವು ಮತ ಚಲಾಯಿಸುತ್ತದೆ. ಅದು ಮೂಲ ಆಧಾರವಾಗಿದೆ. ಇದು ಜಾತಿ ಅಲ್ಲ, ಲಿಂಗವಲ್ಲ, ಜನರು ಆರೋಪಿಸುವ ವಿವಿಧ ಅಂಶಗಳಲ್ಲ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_119_8.txt b/eesanje/url_47_119_8.txt new file mode 100644 index 0000000000000000000000000000000000000000..e6bd242da20dfc0b438a5ec4d9d884801ede765e --- /dev/null +++ b/eesanje/url_47_119_8.txt @@ -0,0 +1,6 @@ +ಮಣಿಪುರ : 11 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ +ಇಂಫಾಲ,ಏ.21-ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ.ಏಪ್ರಿಲ್ 19ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಈ ಬೂತ್‍ಗಳಲ್ಲಿ ಬೆಂಕಿ, ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳು ನಡೆದಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿದೆ. ನೂತನ ಮತದಾನವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. +ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ, ಕ್ಷೇತ್ರಗಾವೊದಲ್ಲಿ 4, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ 1 ಮತ್ತು ಉರಿಪೋಕ್ನಲ್ಲಿ 3 ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್‍ನಲ್ಲಿ 1 ಮತಗಟ್ಟೆಗಳು ಬಾತವಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಮತದಾನದ ದಿನ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದವು. ಬೂತ್ ವಶಪಡಿಸಿಕೊಂಡ ಆರೋಪಗಳು ಸಂಘರ್ಷ ಪೀಡಿತ ಮಣಿಪುರದಲ್ಲಿ ವರದಿಯಾಗಿತ್ತು. ಇದಕ್ಕೂ ಮುನ್ನ 47 ಮತಗಟ್ಟೆಗಳಲ್ಲಿ ಬೂತ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮರುಮತದಾನಕ್ಕೆ ಒತ್ತಾಯಿಸಿತ್ತು. +ಮಣಿಪುರದ ಒಳ ಕ್ಷೇತ್ರದ 36 ಮತ್ತು ಹೊರ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಒತ್ತಾಯಿಸಿ ಮುಖ್ಯ ಚುನಾವಣಾಧಿಕಾರಿಗೆ ಪಕ್ಷವು ದೂರು ನೀಡಿದೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ.ಮೇಘಚಂದ್ರ ತಿಳಿಸಿದ್ದಾರೆ. +ಮಣಿಪುರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಬಿಜೆಪಿ ರಾಜ್ಯದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ, ಬಿಜೆಪಿ ಇನ್ನರ್ ಮಣಿಪುರದಿಂದ ಮಾತ್ರ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಆದರೆ, ಮಣಿಪುರದ ಹೊರಭಾಗದಲ್ಲಿ ಬಿಜೆಪಿ ನಾಗಾ ಪೀಪಲ್ಸ್ ಫ್ರಂಟ್‍ಗೆ ಬೆಂಬಲ ನೀಡುತ್ತಿದೆ. \ No newline at end of file diff --git a/eesanje/url_47_119_9.txt b/eesanje/url_47_119_9.txt new file mode 100644 index 0000000000000000000000000000000000000000..f22176b2bc52fffb603c0c14ac43918291a01681 --- /dev/null +++ b/eesanje/url_47_119_9.txt @@ -0,0 +1,6 @@ +ಬಹುಕೋಟಿ ಮದ್ಯ ಹಗರಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅರೆಸ್ಟ್ +ರಾಯ್‍ಪುರ, ಏ. 21-ಸುಮಾರು 2,000 ಕೋಟಿ ರೂಪಾಯಿ ಮದ್ಯದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಛತ್ತೀಸ್‍ಗಢದ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ತುತೇಜಾ ಅವರನ್ನು ಬಂಧಿಸಿದೆ . 2003 ರ ಬ್ಯಾಚ್ ಅಧಿಕಾರಿಯನ್ನು ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯು)/ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ರಾಯ್‍ಪುರದ ಕಚೇರಿಯಿಂದ ಬಂಧಿಸಿದೆ. +ಅನಿಲ್ ತುತೇಜಾ ಮತ್ತು ಅವರ ಮಗ ಯಶ್ ತುತೇಜಾ ತಮ್ಮ ಹೇಳಿಕೆಗಳನ್ನು ದಾಖಲಿಸಿಕೊಂಡ ನಂತರ ಅವರನ್ನು ಬಂಧಿಸಲಾಗಿದೆ. ನಿವೃತ್ತ ಐಎಎಸ್ ಅಧಿಕಾರಿಯನ್ನು ವಿಚಾರಣೆಗೊಳಪಡಿಸಲಾಯಿತು ಮತ್ತು ನಂತರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ಬಳಿಕ ಯಶ್ ತುತೇಜಾಗೆ ತೆರಳಲು ಅವಕಾಶ ನೀಡಲಾಯಿತು. +ಅನಿಲ್ ತುತೇಜಾ ಅವರನ್ನು ನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ, ಕಸ್ಠಡಿಗೆ ಕೋರುತ್ತದೆ ಎಂದು ಮೂಲಗಳು ತಿಳಿಸಿವೆ.ಅಧಿಕಾರಿ ಕಳೆದ ವರ್ಷ ಸೇವೆಯಿಂದ ನಿವೃತ್ತರಾಗಿದ್ದರು. ಅವರನ್ನು ಕೊನೆಯದಾಗಿ ಛತ್ತೀಸ್‍ಗಢದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. +ಆದಾಯ ತೆರಿಗೆ ಇಲಾಖೆಯ ದೂರಿನ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ತನ್ನ ಹಿಂದಿನ ಎಫ್‍ಐಆರ್ ಅನ್ನು ರದ್ದುಗೊಳಿಸಿದ ನಂತರ ಇಡಿ ಆಪಾದಿತ ಮದ್ಯ ಹಗರಣ ಪ್ರಕರಣದಲ್ಲಿ ಹೊಸ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ. ಯಾವುದೇ ನಿಗದಿತ ಅಪರಾಧವಿಲ್ಲ ಮತ್ತು ಆದ್ದರಿಂದ ಮನಿ ಲಾಂಡರಿಂಗ್ ಪ್ರಕರಣವು ನಿಲ್ಲುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. +ಈ ಪ್ರಕರಣದಲ್ಲಿ 2,161 ಕೋಟಿ ರೂ.ಗಳಷ್ಟು ಅಪರಾಧದ ಆದಾಯ ಇದೆ ಎಂದು ಇಡಿ ಅಂದಾಜಿಸಿದೆ. ಛತ್ತೀಸ್‍ಗಢದಲ್ಲಿ ಮಾರಾಟವಾದ ಪ್ರತಿ ಮದ್ಯದ ಬಾಟಲಿಯಿಂದ ಕಾನೂನುಬಾಹಿರವಾಗಿ ಹಣವನ್ನು ಸಂಗ್ರಹಿಸಲಾಗಿದೆ ಮತ್ತು ರಾಯ್‍ಪುರ ಮೇಯರ್ ಮತ್ತು ಕಾಂಗ್ರೆಸ್ ನಾಯಕ ಐಜಾಜ್ ಅವರ ಹಿರಿಯ ಸಹೋದರ ಅನ್ವರ್ ಧೇಬರ್ ನೇತೃತ್ವದ ಮದ್ಯದ ಸಿಂಡಿಕೇಟ್‍ನಿಂದ ಭ್ರಷ್ಟಾಚಾರ ಮತ್ತು 2,000 ಕೋಟಿ ರೂ. ಧೇಬಾರ್ ಪತ್ತೆಯಾಗಿದೆ ಎಂದು ಇಡಿ ಆರೋಪಿಸಿತ್ತು. \ No newline at end of file diff --git a/eesanje/url_47_11_1.txt b/eesanje/url_47_11_1.txt new file mode 100644 index 0000000000000000000000000000000000000000..3832015b94ffd098ff9effe09dc71334be579184 --- /dev/null +++ b/eesanje/url_47_11_1.txt @@ -0,0 +1,6 @@ +ಭಾರತದ ಮೊದಲ ಮಹಿಳಾ ಫೈಟರ್‌ ಪೈಲಟ್‌ ಆದ ಮೋಹನಾ ಸಿಂಗ್ + +ಜೋಧಪುರ್‌,ಸೆ.18-ಸ್ಕ್ವಾಡ್ರನ್‌ ಲೀಡರ್‌ ಮೋಹನಾ ಸಿಂಗ್‌ ಅವರು ಎಲೈಟ್‌ 18 ಫ್ಲೈಯಿಂಗ್‌ ಬುಲೆಟ್‌್ಸ ಸ್ಕ್ವಾಡ್ರನ್‌ಗೆ ಸೇರಿದ ಮೊದಲ ಮಹಿಳಾ ಫೈಟರ್‌ ಪೈಲಟ್‌ ಆಗಿದ್ದಾರೆ. +ಅವರು ಭಾರತದ ಸ್ಥಳೀಯವಾಗಿ ಮೇಡ್‌ ಇನ್‌ ಇಂಡಿಯಾ ಯೋಜನೆಯಡಿ ನಿರ್ಮಿಸಿರುವ ಎಲ್‌ಸಿಎ ತೇಜಸ್‌‍ ಫೈಟರ್‌ ಜೆಟ್‌ನ ಸ್ಕ್ವಾಡ್ರನ್‌ ಅಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ದೇಶದ ಮೊದಲ ಮಹಿಳಾ ಫೈಟರ್‌ ಪೈಲಟ್‌ಗಳಲ್ಲಿ ಒಬ್ಬರಾದ ಮೋಹನ ಸಿಂಗ್‌ ಅವರ ಈ ಗಮನಾರ್ಹ ಸಾಧನೆಯು ಭಾರತೀಯ ವಾಯುಪಡೆಯ ಲಿಂಗ ಸಮಾನತೆ ಮತ್ತು ಸಬಲೀಕರಣದ ಬದ್ಧತೆಯನ್ನು ಒತ್ತಿಹೇಳುತ್ತದೆ. +ಈ ಅಧಿಕಾರಿಯು ಜೋಧ್‌ಪುರದಲ್ಲಿ ಇತ್ತೀಚೆಗೆ ನಡೆದ ತರಂಗ್‌ ಶಕ್ತಿ ವ್ಯಾಯಾಮದ ಭಾಗವಾಗಿದ್ದರು, ಅಲ್ಲಿ ಅವರು ಮೂರು ಪಡೆಗಳ ಮೂವರು ಉಪ ಮುಖ್ಯಸ್ಥರ ಐತಿಹಾಸಿಕ ಹಾರಾಟದ ಭಾಗವಾಗಿದ್ದರು. +ಮೋಹನ ಸಿಂಗ್‌ ಅವರು ಭಾರತೀಯ ವಾಯುಪಡೆಯಲ್ಲಿ ಫೈಟರ್‌ ಪೈಲಟ್‌ಗಳಾದ ಮೂವರು ಮಹಿಳೆಯರ ಮೊದಲ ಗುಂಪಿನ ಭಾಗವಾಗಿದ್ದರು. ಮೋಹನ ಸಿಂಗ್‌ ಅವರ ಇತರ ಇಬ್ಬರು ಮಹಿಳಾ ದೇಶಬಾಂಧವರು, ಭಾವನಾ ಕಾಂತ್‌ ಮತ್ತು ಅವ್ನಿ ಚತುರ್ವೇದಿ ಈಗ ಪಶ್ಚಿಮ ಮರುಭೂಮಿಯಲ್ಲಿ ಎಸ್‌‍ಯು-30 ಎಂಕೆಐ ಫೈಟರ್‌ ಜೆಟ್‌ಗಳನ್ನು ಹಾರಿಸುತ್ತಿದ್ದಾರೆ. \ No newline at end of file diff --git a/eesanje/url_47_11_10.txt b/eesanje/url_47_11_10.txt new file mode 100644 index 0000000000000000000000000000000000000000..bb7ad8967456d28e8e2fe8321c2db41d5976a59e --- /dev/null +++ b/eesanje/url_47_11_10.txt @@ -0,0 +1,6 @@ +ಪಟಾಕಿ ಸ್ಫೋಟದಿಂದ ಕಟ್ಟಡ ಕುಸಿದು ನಾಲ್ವರ ಸಾವು + 4, 3--; 6 +ಫಿರೋಜಾಬಾದ್‌,ಸೆ.17– ಫಿರೋಜಾ ಬಾದ್‌ನ ನೌಶೇರಾದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡ ಆರು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. +ಸ್ಫೋಟದಿಂದಾಗಿ ಕಟ್ಟಡ ಕುಸಿದಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಆತಂಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಿಕೋಹಾಬಾದ್‌ ಪಿಎಸ್‌‍ ಪ್ರದೇಶದಲ್ಲಿ, ಮನೆಯೊಂದರಲ್ಲಿ ಪಟಾಕಿಗಳನ್ನು ಸಂಗ್ರಹಿಸಲಾಗಿದೆ ಮತ್ತು ಅಲ್ಲಿ ಸ್ಫೋಟ ಸಂಭವಿಸಿದೆ. +ಸ್ಫೋಟದ ಪ್ರಭಾವದಿಂದ, ಹತ್ತಿರದ ಮನೆಯ ಮೇಲ್ಛಾವಣಿ ಕುಸಿದಿದೆ. ಪೊಲೀಸರು ಅವಶೇಷಗಳಿಂದ 10 ಜನರನ್ನು ಹೊರತೆಗೆದರು . 6 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಮತ್ತು 4 ಜನರು ಸಾವನ್ನಪ್ಪಿದ್ದಾರೆ. ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಐಜಿ ದೀಪಕ್‌ ಕುಮಾರ್‌ ಹೇಳಿದ್ದಾರೆ. +ಏತನಧ್ಯೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಫಿರೋಜಾಬಾದ್‌ ಜಿಲ್ಲಾ ವ್ಯಾಜಿಸ್ಟ್ರೇಟ್‌ ರಮೇಶ್‌ ರಂಜನ್‌ ಹೇಳಿದ್ದಾರೆ.ಘಟನಾ ಸ್ಥಳದಲ್ಲಿ ರಕ್ಷಣಾ ತಂಡವಿದೆ. ಜಿಲ್ಲಾ ಆಸ್ಪತ್ರೆ ಮತ್ತು ಉಪ ಜಿಲ್ಲಾಸ್ಪತ್ರೆ, ಎರಡೂ ಹೈ ಅಲರ್ಟ್‌ನಲ್ಲಿವೆ… ವೈದ್ಯರ ತಂಡ, ಆಂಬ್ಯುಲೆನ್‌್ಸ, ಅಗ್ನಿಶಾಮಕ ತಂಡ, ವಿಪತ್ತು ತಂಡ, ಎಲ್ಲರೂ ಸ್ಥಳದಲ್ಲಿದ್ದಾರೆ ಎಂದು ಫಿರೋಜಾಬಾದ್‌ ಜಿಲ್ಲಾ ವ್ಯಾಜಿಸ್ಟ್ರೇಟ್‌ ರಮೇಶ್‌ ರಂಜನ್‌ ಹೇಳಿದ್ದಾರೆ. \ No newline at end of file diff --git a/eesanje/url_47_11_11.txt b/eesanje/url_47_11_11.txt new file mode 100644 index 0000000000000000000000000000000000000000..0960f8371b24cf42a20e92c16bd9e22416097f9f --- /dev/null +++ b/eesanje/url_47_11_11.txt @@ -0,0 +1,7 @@ +ಪತ್ನಿ ರುಂಡ ಕಡಿದು ಕೈಯಲ್ಲಿ ಹಿಡಿದು ಓಡಾಡಿದ್ದ ಪತಿಯ ಬಂಧನ + ' +ಪಾಟ್ನಾ,ಸೆ.17-ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ, ಆಕೆಯ ತಲೆಯನ್ನು ಕೈಯಲ್ಲಿ ಹಿಡಿದು ಊರೂರು ಸುತ್ತುತ್ತಿದ್ದ ವ್ಯಕ್ತಿಯನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. +ಮಾಧೇಪುರದ ಶ್ರೀನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪೊಖಾರಿಯಾದಲ್ಲಿ ಘಟನೆ ನಡೆದಿದ್ದು, ಅರ್ಜುನ್‌ ಶರ್ಮಾ ಎಂಬಾತ ತನ್ನ ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. +ಆತ ತನ್ನ ಪತ್ನಿ ಪೂಜಾದೇವಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆಗೈದಿದ್ದಾನೆ ಎನ್ನುವ ಮಾಹಿತಿ ನಮಗೆ ಸಿಕ್ಕಿತ್ತು ತಕ್ಷಣ ಕಾರ್ಯಚರಣೆ ನಡೆಸಿ ಆತನನ್ನು ಬಂಧಿಸಲಾಗಿದೆ ಎಂದು ಡಿಎಸ್‌‍ಪಿ ಮನೋಜ್‌ ಮೋಹನ್‌ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದರ್‌ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಘಟನೆಗೆ ಬಳಸಿದ್ದ ಆಯುಧ ವಶಪಡಿಸಿಕೊಳ್ಳಲಾಗಿದೆ. +ಆರೋಪಿ ಅರ್ಜುನ್‌ ಕೈಯಲ್ಲಿ ಬ್ಯಾಗ್‌ ಹಿಡಿದು ಪೊಲೀಸ್‌‍ ಠಾಣೆಗೆ ಬರುತ್ತಿದ್ದ ಎಂದು ನಜೀರ್‌ ತಿಳಿಸಿದ್ದಾನೆ. ಚೀಲದಿಂದ ರಕ್ತ ಸೋರುತ್ತಿತ್ತು. ಅಷ್ಟರಲ್ಲಿ ಒಬ್ಬ ಪೋಲೀಸ್‌‍ ಅವನನ್ನು ತಡೆದಿದ್ದರು, ಆಗ ಬ್ಯಾಗ್‌ ನಲ್ಲಿ ತುಂಡರಿಸಿದ ತಲೆಯನ್ನು ನೋಡಿ ಎಲ್ಲರೂ ಬೆಚ್ಚಿಬಿದ್ದರು. +ಇದಾದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪತ್ನಿಯನ್ನು ಏಕೆ ಕೊಂದಿದ್ದೀರಿ ಎಂದು ಪ್ರಶ್ನಿಸಿದಾಗ ಆಕೆಗೆ ಬೇರೊಬ್ಬ ವ್ಯಕ್ತಿಯ ಜತೆ ಅಕ್ರಮ ಸಂಬಂಧವಿತ್ತು ಎಂದು ಹೇಳಿದ್ದಾನೆ ಎಂದು ವರದಿಯಾಗಿದೆ. \ No newline at end of file diff --git a/eesanje/url_47_11_12.txt b/eesanje/url_47_11_12.txt new file mode 100644 index 0000000000000000000000000000000000000000..dc1d2c44782af88a8b7ad2cbe79ece2f3461d54d --- /dev/null +++ b/eesanje/url_47_11_12.txt @@ -0,0 +1,8 @@ +ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಯಾರ ಅನುಮತಿ ಕೇಳಬೇಕಿತ್ತು..? : ಡಿಕೆಶಿ + ..? : +ಬೆಂಗಳೂರು,ಸೆ.17-ಅಮೆರಿಕದಲ್ಲಿ ರಾಹುಲ್‌ ಗಾಂಧಿ ಅವರ ಭೇಟಿ ಮಾಡಲು ಯಾರ ಅನುಮತಿಯನ್ನು ಕೇಳಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. +ಅಮೇರಿಕ ಪ್ರವಾಸದಿಂದ ಮರಳಿದ ನಂತರ ಇಂದು ಮುಂಜಾನೆ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್‌ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು. +ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ, ಸರ್ಕಾರ, ಪೊಲೀಸ್‌‍ ಇಲಾಖೆಯು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೊ ಅದನ್ನು ಮಾಡುತ್ತದೆ ಎಂದು ಹೇಳಿದರು. +ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ಅವರು ಆಡಿರುವ ಮಾತಿನ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್‌ ಹಾಗೂ ಬಿಜೆಪಿ ನಾಯಕರು ಮಾತನಾಡಬೇಕು ಎಂದರು. +ಶಾಸಕ ಮುನಿರತ್ನ ಅವರ ಹೇಳಿಕೆಗಳ ಬಗ್ಗೆ ಬಿಜೆಪಿಯಲ್ಲಿರುವ ದೊಡ್ಡ ದೊಡ್ಡ ನಾಯಕರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು. ಸರಿಯಿದ್ದರೆ ಸರಿ, ತಪ್ಪಿದ್ದರೆ ತಪ್ಪು ಎಂದು ಹೇಳಬೇಕು ಎಂದರು. +ಪೊಲೀಸರ ಬಂಧನಕ್ಕೆ ಮುಂಚಿತವಾಗಿ ನನ್ನ ವಿಚಾರದಲ್ಲಿ ಅಣ್ಣ- ತಮಂದಿರ ಆಟ ಶುರುವಾಗಿದೆ ಎನ್ನುವ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ, ನನಗೆ ಈ ವಿಚಾರ ಗೊತ್ತೇ ಇಲ್ಲ, ತಿಳಿದು ಮಾತಾಡುತ್ತೇನೆ. ನನಗೆ ಇನ್ನು ಸರಿಯಾಗಿ ಮಾಹಿತಿ ಗೊತ್ತಿಲ್ಲ. ಸಾಂವಿಧಾನಿಕ ಹ್ದುೆ ಹೊಂದಿರುವ ಆರ್‌.ಅಶೋಕ್‌, ವಿಜಯೇಂದ್ರ, ಕೇಂದ್ರ ಸಚಿವರು ಇದ್ದಾರೆ. ಅವರು ದೊಡ್ಡ ನಾಯಕರಿದ್ದಾರೆ. ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಬೇಕು ಎಂದರು. \ No newline at end of file diff --git a/eesanje/url_47_11_2.txt b/eesanje/url_47_11_2.txt new file mode 100644 index 0000000000000000000000000000000000000000..aae8ed72891bad251939a5f8879da665c268d086 --- /dev/null +++ b/eesanje/url_47_11_2.txt @@ -0,0 +1,13 @@ +ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತ ಮತದಾನ + +ಶ್ರೀನಗರ, ಸೆ 18-ಜಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ ಪ್ರಾರಂಭವಾಯಿತು, 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ ಮತದಾನ ಉತ್ತಮ ರೀತಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇದು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆಯಾಗಿದೆ.24 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ ಇಂದು ಪಿರ್‌ ಪಂಜಾಲ್‌ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳು ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲಿದ್ದಾರೆ. 90 ಪಕ್ಷೇತರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸಲಿದ್ದಾರೆ. +ಚುನಾವಣಾ ಆಯೋಗದ ಪ್ರಕಾರ, 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯಲಿಂಗಿ ಮತದಾರರನ್ನು ಒಳಗೊಂಡಂತೆ ಒಟ್ಟು 23,27,580 ಮತದಾರರು ಹಂತ 1 ರಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು.ಸರಿ ಸುಮಾರು ಶೇ.60 ರಷ್ಟು ಮತದಾನ ನಿರೀಕ್ಷಿಸಲಾಗಿದೆ. +18 ರಿಂದ 19 ವರ್ಷ ವಯಸ್ಸಿನ 1.23 ಲಕ್ಷ ಯುವಕರು, 28,309 ವಿಕಲಾಂಗ ವ್ಯಯಕ್ತಿಗಳು (ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 15,774 ಹಿರಿಯ ಮತದಾರರು ಸಹ ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದಾರೆ. +ಒಟ್ಟಾರೆ 3,276 ಮತಗಟ್ಟೆಗಳಲ್ಲಿ ಒಟ್ಟು 14,000 ಮತಗಟ್ಟೆ ಸಿಬ್ಬಂದಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲಿದ್ದಾರೆ 302 ನಗರ ಮತಗಟ್ಟೆಗಳು ಮತ್ತು 2,974 ಗ್ರಾಮೀಣ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲಿ ಒಬ್ಬ ಉಸ್ತುವಾರಿ ಸೇರಿದಂತೆ ನಾಲ್ವರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸುಮಾರು 14,000 ಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿಯನ್ನು ಚುನಾವಣೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು. +ಭದ್ರತಾ ವ್ಯವಸ್ಥೆಗಳಲ್ಲಿ ಬಿಎಸ್‌‍ಎಫ್‌,ಕೇಂದ್ರೀಯ ಸಶಸ್ತ್ರ ಅರೆಸೇನಾ ಪಡೆ (ಸಿಎಪಿಎಫ್‌), ಜಮು ಮತ್ತು ಕಾಶೀರ ಸಶಸ್ತ್ರಪೊಲೀಸ್‌‍ಪಡೆ ಮತ್ತು ಜೆ-ಕೆ ಪೊಲೀಸರ ಬಹು ಹಂತದ ಪಡೆಗಳು ಸೇರಿವೆ. +ಕಾಶ್ಮೀರದ ಪ್ರಮುಖ ಅಭ್ಯರ್ಥಿಗಳ ಪೈಕಿ ಬುಧವಾರದಂದು ಸಿಪಿಐ (ಎಂ)ನ ಮೊಹಮ್ಮದ್‌ ಯೂಸುಫ್‌ ತರಿಗಾಮಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್‌ ಅಹದ್‌, ನ್ಯಾಷನಲ್‌ ಕಾನ್ಫರೆನ್‌್ಸನ ಸಕೀನಾ ಇಟೂ ಮತ್ತು ಪಿಡಿಪಿಯ ಸರ್ತಾಜ್‌ ಮದ್ನಿ ಮತ್ತು ಅಬ್ದುಲ್‌ ರೆಹಮಾನ್‌ ವೀರಿಗೆ ಬಿಜೆಪಿ ಸವಾಲೊಡ್ಡಿದೆ. +ಜಮುವಿನಲ್ಲಿ, ತಮ ಅದೃಷ್ಟ ಪರೀಕ್ಷೆಗೆ ಮಾಜಿ ಸಚಿವರಾದ ಸಜ್ಜದ್‌ ಕಿಚ್ಲೂ (ಎನ್‌ಸಿ), ಖಾಲಿದ್‌ ನಜೀಬ್‌ ಸುಹರ್ವದಿರ್‌(ಎನ್‌ಸಿ) ವಿಕಾರ್‌ ರಸೂಲ್‌ ವಾನಿ (ಕಾಂಗ್ರೆಸ್‌‍), ಅಬ್ದುಲ್‌ ಮಜಿದ್‌ ವಾನಿ (ಡಿಪಿಎಪಿ), ಸುನಿಲ್‌ ಶರ್ಮಾ (ಬಿಜೆಪಿ), ಶಕ್ತಿ ರಾಜ್‌ ಪರಿಹಾರ್‌ (ದೋಡಾ ಪಶ್ಚಿಮ), ಮತ್ತು ಎರಡು ವರ್ಷಗಳ ಹಿಂದೆ ಗುಲಾಂ ನಬಿ ಆಜಾದ್‌ ಅವರನ್ನು ಬೆಂಬಲಿಸಿ ಕಾಂಗ್ರೆಸ್‌‍ ತೊರೆದ ನಂತರ ಡಿಪಿಎಪಿಯಿಂದ ಟಿಕೆಟ್‌ ನಿರಾಕರಿಸಿದ ನಂತರ ಮೂರು ಬಾರಿ ಶಾಸಕರಾಗಿರುವ ಗುಲಾಂ ಮೊಹಮ್ಮದ್‌ ಸರೂರಿ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. +ಮಾಜಿ ಶಾಸಕ ದಲೀಪ್‌ ಸಿಂಗ್‌ ಪರಿಹಾರ್‌ (ಬಿಜೆಪಿ), ಮಾಜಿ ಎಂಎಲ್‌ಸಿ ಫಿರ್ದೌಸ್‌‍ ತಕ್‌ ಮತ್ತು ಇಮ್ತಿಯಾಜ್‌ ಶಾನ್‌ (ಪಿಡಿಪಿ), ಎನ್‌ಸಿಯ ಪೂಜಾ ಠಾಕೂರ್, ಜಿಲ್ಲಾ ಅಭಿವೃದ್ಧಿ ಮಂಡಳಿಯ ಹಾಲಿ ಅಧ್ಯಕ್ಷೆ ಕಿಶಾ್ತ್ವರ್, ಬಿಜೆಪಿಯ ಯುವ ಮುಖ ಶಗುನ್‌ ಪರಿಹಾರ್‌ ಅದೃಷ್ಠ ಪರೀಕ್ಷೆ ನಡೆಸುತ್ತಿದ್ದಾರೆ. +ಇಂದು ಪಂಪೋರ್‌ಟ್ರಾಲ್‌‍, ಪುಲ್ವಾಮಾ, ರಾಜ್‌ಪೋರಾ, ಜೈನಾಪೋರಾ, ಶೋಪಿಯಾನ್‌, ಡಿಎಚ್‌ ಪೋರಾ, ಕುಲ್ಗಾಮ್‌‍, ದೇವ್‌ಸರ್‌ ದೂರು, ಕೋಕರ್‌ನಾಗ್‌(ಎಸ್‌‍ಟಿ), ಅನಂತನಾಗ್‌ ಪಶ್ಚಿಮ, ಅನಂತನಾಗ್‌, ಶ್ರೀಗುಫ್ವಾರಾ-ಬಿಜ್‌ಬೆಹರಾ, ಶಾಂಗಸ್‌‍-ಅನಂತ್‌ನಾಗ್‌ ಪೂರ್ವ, ಪಹಲ್ಗಾಮ್‌‍, ಇಂದರ್ವಾಲ್‌‍, ಕಿರ್ಶ್ತ್ವ ಪಡ್ಡರ್‌,ನಾಗ್ಸೇನಿ, ಭದವಾರ್‌, ದೋಡಾ, ದೋಡಾ , ರಾಂಬನ್‌ ಮತ್ತು ಬನಿಹಾಲ್‌‍ ಮತದಾನ ನಡೆಯುತ್ತಿದ್ದು ,ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. +ಇನ್ನೆರಡು ಹಂತಗಳು ಚುನಾವಣೆ ಸೆಪ್ಟೆಂಬರ್‌ 25 ಮತ್ತು ಅಕ್ಟೋಬರ್‌ 1 ರಂದು ನಡೆಯಲಿದ್ದು, ಮತಗಳ ಎಣಿಕೆ ಅಕ್ಟೋಬರ್‌ 8 ರಂದು ನಡೆಯಲಿದೆ. \ No newline at end of file diff --git a/eesanje/url_47_11_3.txt b/eesanje/url_47_11_3.txt new file mode 100644 index 0000000000000000000000000000000000000000..cd89e80cbb167822a1d2389ea52a26ec1c6e6004 --- /dev/null +++ b/eesanje/url_47_11_3.txt @@ -0,0 +1,8 @@ +ರಾಹುಲ್‌ ಗಾಂಧಿ ನಿಂದಿಸಿದ ಬಿಜೆಪಿ ನಾಯಕರ ವಿರುದ್ಧ ಮೋದಿಗೆ ಪತ್ರ ಬರೆದ ಖರ್ಗೆ +‘ ’: ' ' +ನವದೆಹಲಿ,ಸೆ.18-ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿಯ ಕೆಲವು ಸದಸ್ಯರು ಇತ್ತೀಚೆಗೆ ನೀಡಿರುವ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್‌‍ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. +ಪತ್ರ ಬರೆದ ಬೆನ್ನಲ್ಲೇ, ರಾಹುಲ್‌ ಗಾಂಧಿಯನ್ನು ನಂಬರ್‌ ಒನ್‌ ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಕಾರಣರಾದ ಕೇಂದ್ರ ಸಚಿವ ರವನೀತ್‌ ಸಿಂಗ್‌ ಬಿಟ್ಟು ಮತ್ತೊಮೆ ಪಪ್ಪು ಎಂದು ಗೇಲಿ ಮಾಡಿದ್ದಾರೆ. +ಕಾಂಗ್ರೆಸ್‌‍ನವರು ರಾಹುಲ್‌ ಗಾಂಧಿಯನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಪಪ್ಪು ಪಪ್ಪುವಾಗಿಯೇ ಉಳಿದುಬಿಟ್ಟರು. ಇತರರಿಗೆ ಉಪನ್ಯಾಸ ನೀಡುವ ಬದಲು ಮಲ್ಲಿಕಾರ್ಜುನ ಖರ್ಗೆ ಪಪ್ಪುಗೆ ಕಲಿಸಬೇಕು. ನನ್ನ ಕಾಳಜಿಯು ರಾಜಕಾರಣಿಯಾಗಿ ಅಲ್ಲ, ಆದರೆ ಸಿಖ್‌ ಆಗಿ ಎಂದು ಹೇಳಿದ್ದಾರೆ. +ರಾಹುಲ್‌ ಗಾಂಧಿಯವರು ಇತ್ತೀಚೆಗೆ ಯುನೈಟೆಡ್‌ ಸ್ಟೇಟ್‌್ಸಗೆ ಮೂರು ದಿನಗಳ ಭೇಟಿ ನೀಡಿದ್ದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಅವರ ಚೊಚ್ಚಲ ವಿದೇಶಿ ಪ್ರವಾಸದಲ್ಲಿ ರಾಹುಲ್‌, ಸಿಖ್‌ ಸಮುದಾಯದ ಬಗ್ಗೆಯೂ ಮಾತನಾಡಿದ್ದಾರೆ. +ಈ ಹೋರಾಟವು ಭಾರತದಲ್ಲಿ ಸಿಖ್‌ಗೆ ಪೇಟಾ ಧರಿಸಲು ಅನುಮತಿಸುವುದೇ ಅಥವಾ ಸಿಖ್‌ಗೆ ಭಾರತದಲ್ಲಿ ಕಡಾವನ್ನು ಧರಿಸಲು ಅನುಮತಿಸುವುದೇ ಅಥವಾ ಸಿಖ್‌ಗೆ ಗುರುದ್ವಾರಕ್ಕೆ ಹೋಗಲು ಅನುಮತಿಸುವುದೇ ಎಂಬುದಾಗಿದೆ. ಇದು ಎಲ್ಲ ಧರ್ಮಗಳ ಹೋರಾಟವಾಗಿದೆ ಎಂದು ರಾಹುಲ್‌ ಗಾಂಧಿ ವರ್ಜೀನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. +ಮಾರ್ಚ್‌ನಲ್ಲಿ ಕಾಂಗ್ರೆಸ್‌‍ನಿಂದ ಬಿಜೆಪಿಗೆ ಸೇರ್ಪಡೆಯಾದ ಬಿಟ್ಟು ರಾಹುಲ್‌ ಹೇಳಿಕೆಗೆ ಕಿಡಿ ಕಾರಿದ್ದು ಆ ಬಾಂಬ್‌ಗಳನ್ನು ತಯಾರಿಸುವವರು ಅವನನ್ನು (ಗಾಂಧಿ) ಬೆಂಬಲಿಸುತ್ತಿದ್ದರೆ, ಅವನು ನಂಬರ್‌ ಒನ್‌ ಭಯೋತ್ಪಾದಕ. ಅವನು ತನ್ನ ದೇಶವನ್ನು ಹೆಚ್ಚು ಪ್ರೀತಿಸುವುದಿಲ್ಲ ಏಕೆಂದರೆ ಅವನು ವಿದೇಶಕ್ಕೆ ಹೋಗಿ ಎಲ್ಲವನ್ನೂ ತಪ್ಪಾಗಿ ಹೇಳುತ್ತಾನೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_11_4.txt b/eesanje/url_47_11_4.txt new file mode 100644 index 0000000000000000000000000000000000000000..e03d5efe3be2167bcd07331315e53fc73c088230 --- /dev/null +++ b/eesanje/url_47_11_4.txt @@ -0,0 +1,7 @@ +ಸ್ವತಂತ್ರ ಅಭ್ಯರ್ಥಿಗಳು ಕಣಿವೆ ವಿಭಜನೆಯ ಗುರಿ ಹೊಂದಿದ್ದಾರೆ ; ಒಮರ್‌ ಅಬ್ದುಲ್ಲಾ + : , - +ಶ್ರೀನಗರ, ಸೆ 18 (ಪಿಟಿಐ)ಜಮು ಮತ್ತು ಕಾಶೀರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸ್ವತಂತ್ರ ಅಭ್ಯರ್ಥಿಗಳು ಕಣಿವೆ ವಿಭಜನೆಯ ಗುರಿ ಹೊಂದಿದ್ದಾರೆ. ಹೀಗಾಗಿ ಮತದಾರರು ಎನ್‌ಸಿ-ಕಾಗ್ರೆಸ್‌‍ ಮೈತ್ರಿಕೂಟಕ್ಕೆ ಮತ ಚಲಾಯಿಸುವಂತೆ ಒಮರ್‌ ಅಬ್ದುಲ್ಲಾ ಮನವಿ ಮಾಡಿಕೊಂಡಿದ್ದಾರೆ. +ಜನರು ಇದನ್ನು (ಬಹತ್‌ ಸಂಖ್ಯೆಯ ಸ್ವತಂತ್ರ ಅಭ್ಯರ್ಥಿಗಳು) ಮನಸ್ಸಿನಲ್ಲಿಟ್ಟುಕೊಳ್ಳಬೇಕು, ಏಕೆಂದರೆ ಈ ಅಭ್ಯರ್ಥಿಗಳಲ್ಲಿ ಹೆಚ್ಚಿನವರು ಕಾಶೀರದಲ್ಲಿದ್ದಾರೆ. ಇದು ಮತಗಳನ್ನು ವಿಭಜಿಸುವ ಮತ್ತು ಜನರನ್ನು ವಿಭಜಿಸುವ ಪ್ರಯತ್ನವೆಂದು ತೋರುತ್ತದೆ. ಮತದಾರರು ಇವುಗಳ ಬಗ್ಗೆ ಜಾಗರೂಕರಾಗಿರುತ್ತಾರೆ ಮತ್ತು ಈ ಚುನಾವಣೆಯಲ್ಲಿ ತಮ ಮತಗಳ ವಿಘಟನೆಯನ್ನು ತಪ್ಪಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಬ್ದುಲ್ಲಾ ಇಲ್ಲಿ ಪಿಟಿಐ ವಿಡಿಯೋಗಳಿಗೆ ತಿಳಿಸಿದರು. +ಎನ್‌ಸಿ-ಕಾಂಗ್ರೆಸ್‌‍ ಚುನಾವಣಾ ಪೂರ್ವ ಮೈತ್ರಿಯ ಪರವಾಗಿ ಜನರು ಮತ ಹಾಕುತ್ತಾರೆ ಎಂಬ ಭರವಸೆ ಇದೆ ಎಂದು ಎನ್‌ಸಿ ನಾಯಕ ಹೇಳಿದರು. ಸಿಪಿಐ(ಎಂ) ಸದಸ್ಯರೂ ಸಹ ಭಾಗವಾಗಿರುವ ಎನ್‌ಸಿ-ಕಾಂಗ್ರೆಸ್‌‍ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ನಾವು ಭಾವಿಸುತ್ತೇವೆ, ಆದರೆ ಮತದಾರರು ನಿರ್ಧರಿಸುತ್ತಾರೆ. +ನಾವು ಕಣಿವೆಗಾಗಿ ನಮ ಕಾರ್ಯಸೂಚಿಯನ್ನು ತೆಗೆದುಕೊಳ್ಳಲು ಪ್ರಯತ್ನಿಸಿದ್ದೇವೆ. ಮುಂದಿನ ಐದು ವರ್ಷಗಳ ಕಾಲ ಮತದಾರರಿಗೆ, ಏನಾಗುತ್ತದೆ ಎಂದು ನೋಡೋಣ, ಎಂದು ಅವರು ಹೇಳಿದರು. +ಈ ಚುನಾವಣೆಗಳ ಪ್ರಾಮುಖ್ಯತೆಯ ಬಗ್ಗೆ ನಾವು ಹೆಚ್ಚು ಮಾತನಾಡುತ್ತೇವೆ, ಅದು ಕಡಿಮೆಯಾಗುತ್ತದೆ. ಅವು 10 ವರ್ಷಗಳ ನಂತರ ನಡೆಯುತ್ತಿವೆ ಮತ್ತು ಈ 10 ವರ್ಷಗಳಲ್ಲಿ ಬಹಳಷ್ಟು ಬದಲಾಗಿದೆ. ಜಮು ಮತ್ತು ಕಾಶೀರವನ್ನು ಎರಡು ಭಾಗ ಮಾಡಲಾಯಿತು, ಲಡಾಖ್‌ ಅನ್ನು ನಮಿಂದ ಬೇರ್ಪಡಿಸಲಾಯಿತು, ನಾವು ಯುಟಿ ಸ್ಥಾನಮಾನವನ್ನು ನೀಡಿದೆ, ಅದು ನಮಗೆ ಹೇಗೆ ಪ್ರಯೋಜನವಾಯಿತು ಎಂಬುದನ್ನು ಅರ್ಥಮಾಡಿಕೊಳ್ಳಲು ನಾವು ವಿಫಲರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_11_5.txt b/eesanje/url_47_11_5.txt new file mode 100644 index 0000000000000000000000000000000000000000..aeb3fcb3320a9e7fae60a6d875ce3669ef36bd09 --- /dev/null +++ b/eesanje/url_47_11_5.txt @@ -0,0 +1,9 @@ +ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಮಾಡಿದವರನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿ : ಕಣಿವೆ ಜನರಿಗೆ ಖರ್ಗೆ ಮನವಿ + : +ನವದೆಹಲಿ, ಸೆ.18 (ಪಿಟಿಐ)ಜಮ್ಮು ಮತ್ತು ಕಾಶ್ಮಿರದ ಮತದಾರರು ತಮ್ಮ ಮತ ಚಲಾಯಿಸುವಾಗ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶದಿಂದ ಕೆಳಮಟ್ಟಕ್ಕಿಳಿಸಿರುವ ಅಪಹಾಸ್ಯಕ್ಕೆ ಯಾರು ಹೊಣೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ. +ಜಮು ಮತ್ತು ಕಾಶೀರದ ಜನರು ತಮ ಹಕ್ಕುಗಳನ್ನು ಕಾಪಾಡಲು ಮತ್ತು ನಿಜವಾದ ಅಭಿವದ್ಧಿ ಮತ್ತು ಸಂಪೂರ್ಣ ರಾಜ್ಯತ್ವದ ಹೊಸ ಯುಗವನ್ನು ಪ್ರಾರಂಭಿಸಲು ಉತ್ಸುಕರಾಗಿದ್ದಾರೆ ಎಂದು ಖರ್ಗೆ ಪ್ರತಿಪಾದಿಸಿದರು. +24 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದ್ದು, ಪ್ರತಿಯೊಬ್ಬರೂ ತಮ ಪ್ರಜಾಸತ್ತಾತಕ ಹಕ್ಕನ್ನು ಚಲಾಯಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಖರ್ಗೆ ಅವರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ. + . 24 , .… +ಪ್ರತಿಯೊಂದು ಮತವೂ ಭವಿಷ್ಯವನ್ನು ರೂಪಿಸುವ ಶಕ್ತಿಯನ್ನು ಹೊಂದಿದೆ ಮತ್ತು ಶಾಂತಿ, ಸ್ಥಿರತೆ, ನ್ಯಾಯ, ಪ್ರಗತಿ ಮತ್ತು ಆರ್ಥಿಕ ಸಬಲೀಕರಣದ ಯುಗವನ್ನು ತರುತ್ತದೆ ಎಂದು ಕಾಂಗ್ರೆಸ್‌‍ ಅಧ್ಯಕ್ಷರು ಹೇಳಿದರು. ಈ ನಿರ್ಣಾಯಕ ಚುನಾವಣೆಯಲ್ಲಿ ಭಾಗವಹಿಸಲು ಮತ್ತು ಬದಲಾವಣೆಗೆ ವೇಗವರ್ಧಕಗಳಾಗಿರಲು ನಾವು ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿಗೆ ಮತದಾರರಿಗೆ ಮನವಿ ಮಾಡುತ್ತೇವೆ ಎಂದು ಅವರು ಹೇಳಿದರು. +ಮೊದಲ ಬಾರಿಗೆ, ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಇಳಿಸಲಾಗಿದೆ, ನೀವು ಮತ ಚಲಾಯಿಸಿದಾಗ, ಈ ಅಪಹಾಸ್ಯಕ್ಕೆ ಯಾರು ಹೊಣೆ ಎಂದು ನೆನಪಿಸಿಕೊಳ್ಳಿ ಎಂದು ಖರ್ಗೆ ಹೇಳಿದರು. +ನಾವು ಒಂದಾಗೋಣ ಮತ್ತು ಜಮು ಮತ್ತು ಕಾಶೀರಕ್ಕೆ ಉಜ್ವಲ ಭವಿಷ್ಯವನ್ನು ರೂಪಿಸೋಣ, ಅಲ್ಲಿ ಎಲ್ಲಾ ನಾಗರಿಕರ ಧ್ವನಿಯನ್ನು ಕೇಳಲಾಗುತ್ತದೆ ಎಂದು ಅವರು ಹೇಳಿದರು. ಜಮು ಮತ್ತು ಕಾಶೀರದಲ್ಲಿ ಕೇಂದ್ರಾಡಳಿತ ಪ್ರದೇಶವಾಗಿ ಇದು ಚೊಚ್ಚಲ ವಿಧಾನಸಭಾ ಚುನಾವಣೆಯಾಗಿದೆ. ಕಳೆದ 10 ವರ್ಷಗಳಲ್ಲಿ ವಿಧಾನಸಭೆಯನ್ನು ಆಯ್ಕೆ ಮಾಡಿದ ಮೊದಲ ಸಮೀಕ್ಷೆಯಾಗಿದೆ. \ No newline at end of file diff --git a/eesanje/url_47_11_6.txt b/eesanje/url_47_11_6.txt new file mode 100644 index 0000000000000000000000000000000000000000..93b3bb878727d8b1ccdd9e0b2c8aefcedce969df --- /dev/null +++ b/eesanje/url_47_11_6.txt @@ -0,0 +1,6 @@ +ಪ್ರತ್ಯೇಕತಾವಾದ ಕೊನೆಗಾಣಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಅಮಿತ್‌ ಶಾ ಕರೆ + & +ನವದೆಹಲಿ, ಸೆ 18 (ಪಿಟಿಐ)ಯುವಕರ ಶಿಕ್ಷಣ, ಉದ್ಯೋಗ, ಮಹಿಳೆಯರ ಸಬಲೀಕರಣ ಮತ್ತು ಪ್ರತ್ಯೇಕತಾವಾದವನ್ನು ಕೊನೆಗಾಣಿಸಲು ಬದ್ಧವಾಗಿರುವ ಸರಕಾರ ರಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಜಮು ಮತ್ತು ಕಾಶೀರದ ಜನತೆಗೆ ಕೇಂದ್ರ ಗಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ. +ಬಲವಾದ ಇಚ್ಛಾಶಕ್ತಿ ಹೊಂದಿರುವ ಸರ್ಕಾರ ಮಾತ್ರ ಭಯೋತ್ಪಾದನೆ ಮುಕ್ತ ಜಮು ಮತ್ತು ಕಾಶೀರವನ್ನು ರಚಿಸಲು, ಅಲ್ಲಿನ ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಅಭಿವದ್ಧಿ ಕಾರ್ಯಗಳನ್ನು ವೇಗಗೊಳಿಸಲು ಸಾಧ್ಯ ಎಂದು ಶಾ ಹೇಳಿದರು. +ಇಂದು, ಜಮು ಮತ್ತು ಕಾಶೀರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನದಲ್ಲಿ ಮತದಾರರಿಗೆ ನನ್ನ ಮನವಿಯು ಯುವಜನರ ಶಿಕ್ಷಣ, ಉದ್ಯೋಗ, ಮಹಿಳಾ ಸಬಲೀಕರಣ ಮತ್ತು ಪ್ರತ್ಯೇಕತಾವಾದವನ್ನು ಕೊನೆಗೊಳಿಸಲು ಬದ್ಧವಾಗಿರುವ ಸರ್ಕಾರವನ್ನು ರಚಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು. ಮತ್ತು ಈ ಪ್ರದೇಶದಲ್ಲಿ ಸ್ವಜನಪಕ್ಷಪಾತ ಎಂದು ಬಿಜೆಪಿ ನಾಯಕ ಹಿಂದಿಯಲ್ಲಿ ಎಕ್ಸ್ ನಲ್ಲಿ ಬರೆದಿದ್ದಾರೆ. +ಗಹ ಸಚಿವರು ಉಪಾಹಾರ ಸೇವಿಸುವ ಮೊದಲು ಪೆಹ್ಲೆ ಮಟ್ದಾನ್‌ ಫಿರ್‌ ಜಲ್ಪಾನ್‌ ಎಂದು ಹೇಳುವ ಮೂಲಕ ಮತ ಚಲಾಯಿಸಲು ಜನರನ್ನು ಕೇಳಿದರು. ಜಮು ಮತ್ತು ಕಾಶೀರದಲ್ಲಿ ಬುಧವಾರ ವಿಧಾನಸಭೆ ಚುನಾವಣೆಗೆ ಮತದಾನ ಪ್ರಾರಂಭವಾಯಿತು, 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಮೊದಲ ಬಾರಿಗೆ, ಕೇಂದ್ರಾಡಳಿತ ಪ್ರದೇಶದ ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. \ No newline at end of file diff --git a/eesanje/url_47_11_7.txt b/eesanje/url_47_11_7.txt new file mode 100644 index 0000000000000000000000000000000000000000..d2fafb8eade3cfd88f1ce1e295d6423f840cfcae --- /dev/null +++ b/eesanje/url_47_11_7.txt @@ -0,0 +1,6 @@ +ಜಮ್ಮು-ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತದಾನ, ಹಕ್ಕು ಚಲಾಯಿಸಲು ಕಣಿವೆ ಜನರಿಗೆ ಮೋದಿ ಕರೆ + +ನವದೆಹಲಿ, ಸೆ.18 (ಪಿಟಿಐ)ಜಮ್ಮು ಮತ್ತು ಕಾಶ್ಮೀರದ ಜನತೆ ಅದರಲ್ಲೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. +ಅರ್ಟಿಕಲ್‌ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಜಮು-ಕಾಶೀರದಲ್ಲಿ ಚುನಾವಣೆ ನಡೆಯುತ್ತಿದ್ದು, ಕಣಿವೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸುವಂತೆ ನಾನು ವಿನಂತಿಸುತ್ತೇನೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. +ನಾನು ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾರರಿಗೆ ತಮ ಹಕ್ಕು ಚಲಾಯಿಸಲು ಕರೆ ನೀಡುತ್ತೇನೆ ಎಂದು ಅವರು ಹೇಳಿದರು. ಮೂರು ಹಂತದ ಚುನಾವಣೆಯ ಮೊದಲ ಹಂತದಲ್ಲಿ, ಪಿರ್‌ ಪಂಜಾಲ್‌ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮು ಮತ್ತು ಕಾಶೀರದ ಏಳು ಜಿಲ್ಲೆಗಳು ತಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುತ್ತಿವೆ. +ಜಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶೀರ ಕಣಿವೆಯ ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರರು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ನಿರ್ಧರಿಸುತ್ತಾರೆ.ಇನ್ನೆರಡು ಹಂತಗಳು ಸೆಪ್ಟೆಂಬರ್‌ 25 ಮತ್ತು ಅಕ್ಟೋಬರ್‌ 1 ರಂದು ನಡೆಯಲಿದ್ದು, ಮತಗಳ ಎಣಿಕೆ ಅಕ್ಟೋಬರ್‌ 8 ರಂದು ನಡೆಯಲಿದೆ. \ No newline at end of file diff --git a/eesanje/url_47_11_8.txt b/eesanje/url_47_11_8.txt new file mode 100644 index 0000000000000000000000000000000000000000..d259a3400ae66c56f7973a8ecdf9f1d2b476b68e --- /dev/null +++ b/eesanje/url_47_11_8.txt @@ -0,0 +1,7 @@ +ಸಿಕ್ಕಿಂನಲ್ಲಿ ಚೀನಾ ಗಡಿವರೆಗೆ ರಸ್ತೆ ಸಂಪರ್ಕ ಮರುಸ್ಥಾಪನೆ + +ಗ್ಯಾಂಗ್ಟಾಕ್‌, ಸೆ 18 (ಪಿಟಿಐ) :ಲಾಚೆನ್‌ ಕಣಿವೆಯ ಉದ್ದಕ್ಕೂ ಚೀನಾ ಗಡಿಗೆ ರಸ್ತೆ ಸಂಪರ್ಕವನ್ನು ಮರುಸ್ಥಾಪಿಸಲು ಸಿಕ್ಕಿಂನ ಮಂಗನ್‌ ಜಿಲ್ಲೆಯ ಝೀಮಾದಲ್ಲಿ ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಹೊಸ ಬೈಲಿ ಸೇತುವೆಯನ್ನು ನಿರ್ಮಿಸಿದೆ ಎಂದು ಅಧಿಕತ ಪ್ರಕಟಣೆ ತಿಳಿಸಿದೆ. +ಈ ವರ್ಷ ಮೇ 29 ರಂದು ಉತ್ತರ ಸಿಕ್ಕಿಂನ ಝೀಮಾದಲ್ಲಿನ ನಿರ್ಣಾಯಕ ಬೈಲಿ ಸೇತುವೆಯು ಲಾಚೆನ್‌ ಚು ನದಿಯಲ್ಲಿ ಹಠಾತ್‌ ಪ್ರವಾಹದಲ್ಲಿ ಹಾನಿಗೊಳಗಾಗಿತ್ತು. +ಸ್ವಸ್ತಿಕ್‌ ಯೋಜನೆಯಡಿಯಲ್ಲಿ ಬಿಆರ್‌ಒ ಕಾರ್ಯಕರ್ತರು ಆ. 24 ರಂದು ಹೊಸ ಬೈಲಿ ಸೇತುವೆಯ ನಿರ್ಮಾಣವನ್ನು ಪ್ರಾರಂಭಿಸಿದರು ಮತ್ತು ಸೆಪ್ಟೆಂಬರ್‌ 16 ರಂದು ಒಂದು ತಿಂಗಳೊಳಗೆ ಪೂರ್ಣಗೊಂಡಿತು ಎಂದು ಪ್ರಕಟಣೆ ತಿಳಿಸಿದೆ. +ಪ್ರಮುಖವಾದ ಬೈಲಿ ಸೇತುವೆಯ ನಿರ್ಮಾಣವು ಸ್ಥಳೀಯರಿಗೆ ಮಾತ್ರವಲ್ಲದೆ ಚೀನಾ ಗಡಿಯ ಕಡೆಗೆ ಈ ಪ್ರದೇಶದಲ್ಲಿ ನಿಯೋಜಿಸಲಾದ ಸಶಸ್ತ್ರ ಪಡೆಗಳ ಲಾಜಿಸ್ಟಿಕ್‌ ಪೋಷಣೆಯನ್ನು ಸಕ್ರಿಯಗೊಳಿಸುತ್ತದೆ. +ಇದು ಕಳೆದ ವರ್ಷ ಅಕ್ಟೋಬರ್‌ನಿಂದ ಕಡಿತಗೊಂಡಿರುವ ಪ್ರಮುಖ ಪ್ರವಾಸಿ ತಾಣವಾದ ಗುರುದೋಂಗ್‌ಮಾರ್ಗ್‌ ಸರೋವರಕ್ಕೆ ವಾಹನ ಸಂಪರ್ಕವನ್ನು ಒದಗಿಸುವ ಮೂಲಕ ಉತ್ತರ ಸಿಕ್ಕಿಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_11_9.txt b/eesanje/url_47_11_9.txt new file mode 100644 index 0000000000000000000000000000000000000000..aa65b5d5737d0bb1fa4eec66234b61be9232084a --- /dev/null +++ b/eesanje/url_47_11_9.txt @@ -0,0 +1,9 @@ +ನಮ್ಮ ಕಾರ್ಯಕ್ರಮಕ್ಕೆ ಕಾಂಗ್ರೆಸ್‌‍ ನಾಯಿಗಳು ಬಂದ್ರೆ ಸಮಾಧಿ ಮಾಡ್ತೀವಿ: ಸಂಜಯ್‌ ಗಾಯಕ್ವಾಡ್‌ + : ' ' , +ಮುಂಬೈ, ಸೆ.18 (ಪಿಟಿಐ)– ತಮ್ಮ ಕಾರ್ಯಕ್ರಮಕ್ಕೆ ಬರುವ ಯಾವುದೇ ಕಾಂಗ್ರೆಸ್‌‍ ನಾಯಿಯನ್ನು ಸಮಾಧಿ ಮಾಡುವುದಾಗಿ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಮತ್ತೊಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. +ಕೆಲ ದಿನಗಳ ಹಿಂದೆ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದು ರಾಜಕೀಯ ಸಂಚಲನ ಮೂಡಿಸಿದ್ದ ಗಾಯಕ್ವಾಡ್‌ ಇದೀಗ ಮತ್ತೊಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ. +ಶಿವಸೇನೆಯ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರು ತಮ ಜಿಲ್ಲೆಯ ಮಹಿಳೆಯರಿಗಾಗಿ ಸರ್ಕಾರದ ಪ್ರಮುಖ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆ ಕುರಿತು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ ಎಂದು ವೀಡಿಯೊದಲ್ಲಿ ಹೇಳಲಾಗಿದೆ. +ನನ್ನ ಕಾರ್ಯಕ್ರಮಕ್ಕೆ ಕಾಂಗ್ರೆಸ್‌‍ನ ಯಾವುದೇ ನಾಯಿ ಬರಲು ಯತ್ನಿಸಿದರೆ, ಅಲ್ಲಿಯೇ ಸಮಾಧಿ ಮಾಡುತ್ತೇನೆ ಎಂದು ಗಾಯಕ್‌ವಾಡ್‌ ಹೇಳುತ್ತಿದ್ದಾರೆ. ಮೀಸಲು ವ್ಯವಸ್ಥೆಯನ್ನು ರದ್ದುಪಡಿಸುವ ಕುರಿತು ರಾಹುಲ್‌ ಗಾಂಧಿ ಅವರ ಹೇಳಿಕೆಗಾಗಿ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ 11 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಶಾಸಕರು ಈ ಹಿಂದೆ ಘೋಷಿಸಿದ್ದರು. +ನಾನು ಹೇಳಿಕೆ ನೀಡಿದ್ದೇನೆ, ನಾನು ಕ್ಷಮೆಯಾಚಿಸದಿದ್ದರೆ, ಸಿಎಂ ಏಕೆ ಹೀಗೆ ಮಾಡಬೇಕು?….ದೇಶದ 140 ಕೋಟಿ ಜನರಲ್ಲಿ, ಜನಸಂಖ್ಯೆಯ ಶೇ.50 ರಷ್ಟು ಜನರು ಮೀಸಲಾತಿ ಪಡೆಯುತ್ತಾರೆ ಮತ್ತು ನಾನು ನೀಡಿದ ಹೇಳಿಕೆಗೆ ನಾನು ದಢವಾಗಿದ್ದೇನೆ. ಮೀಸಲಾತಿಯನ್ನು ತೆಗೆದುಹಾಕುವ ಬಗ್ಗೆ ಮಾತನಾಡಿದ ವ್ಯಕ್ತಿಯ ಬಗ್ಗೆಗಿನ ವಿವಾದದ ಬಗ್ಗೆ ಕೇಳಿದಾಗ ಗಾಯಕ್ವಾಡ್‌ ಹೇಳಿದರು. +ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಬಗ್ಗೆ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಗಾಯಕ್‌ವಾಡ್‌ಗೆ ವಿವಾದಗಳು ಹೊಸದೇನಲ್ಲ. ಕಳೆದ ತಿಂಗಳು, ಪೊಲೀಸರು ತಮ ಕಾರನ್ನು ತೊಳೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಒಳಗೆ ವಾಂತಿ ಮಾಡಿಕೊಂಡ ನಂತರ ಪೊಲೀಸರು ಅದನ್ನು ಸ್ವಂತವಾಗಿ ಸ್ವಚ್ಛಗೊಳಿಸಿದರು ಎಂದು ಶಾಸಕರು ಹೇಳಿದ್ದರು. +ಫೆಬ್ರವರಿಯಲ್ಲಿ, ಗಾಯಕ್ವಾಡ್‌ ಅವರು 1987 ರಲ್ಲಿ ಹುಲಿಯನ್ನು ಬೇಟೆಯಾಡಿರುವುದಾಗಿ ಹೇಳಿಕೊಂಡರು ಮತ್ತು ಅದರ ಹಲ್ಲಿನ ಕುತ್ತಿಗೆಗೆ ಧರಿಸಿದ್ದರು ಎಂದು ಹೇಳಿದರು. ನಂತರ ಅರಣ್ಯ ಇಲಾಖೆಯು ದಂತವನ್ನು ಫೋರೆನ್ಸಿಕ್‌ ಗುರುತಿಗಾಗಿ ಕಳುಹಿಸಿತು ಮತ್ತು ಗಾಯಕ್ವಾಡ್‌ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪ ಹೊರಿಸಲಾಗಿತ್ತು. \ No newline at end of file diff --git a/eesanje/url_47_120_1.txt b/eesanje/url_47_120_1.txt new file mode 100644 index 0000000000000000000000000000000000000000..b794315da90dfb5af06b7a6723a74224793bd240 --- /dev/null +++ b/eesanje/url_47_120_1.txt @@ -0,0 +1,8 @@ +ಮೋದಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ ; ರಾಹುಲ್‍ಗಾಂಧಿ +ನವದೆಹಲಿ,ಏ. 20 (ಪಿಟಿಐ) :ಚುನಾವಣಾ ಬಾಂಡ್‍ಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ ಮತ್ತು ಇಡೀ ವಿಷಯದ ಎಲ್ಲಾ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. +ಸೋಷಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಎಕ್ಸ್ ನಲ್ಲಿ ಗಾಂಧಿ ಅವರು ಚುನಾವಣಾ ಬಾಂಡ್‍ಗಳ ಸಮಸ್ಯೆಯ ಕುರಿತು ಬಿಜೆಪಿಯನ್ನು ಸ್ವೈಪ್ ಮಾಡುವ ಹೊಸ ಕಾಂಗ್ರೆಸ್ ಜಾಹೀರಾತಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. +ನರೇಂದ್ರ ಮೋದಿ ಅವರು ದೇಶದಲ್ಲಿ ಭ್ರಷ್ಟಾಚಾರದ ಶಾಲೆ ನಡೆಸುತ್ತಿದ್ದಾರೆ, ಅಲ್ಲಿ ಅವರು ಇಡೀ ಭ್ರಷ್ಟಾಚಾರ ವಿಜ್ಞಾನ ವಿಷಯದ ಅಡಿಯಲ್ಲಿ ಅವರು ದೇಣಿಗೆ ವ್ಯವಹಾರ ಸೇರಿದಂತೆ ಪ್ರತಿ ಅಧ್ಯಾಯವನ್ನು ವಿವರವಾಗಿ ಬೋಧಿಸುತ್ತಿದ್ದಾರೆ ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. +नरेंद्र मोदी देश में ‘भ्रष्टाचार का स्कूल’ चला रहे हैं!जहां ‘ ’ विषय के तहत ‘चंदे का धंधा’ समेत हर एक चैप्टर वह खुद डिटेल में पढ़ा रहे हैं।जैसे:– छापा डालकर चंदे की वसूली कैसे होती है?– चंदा लेकर ठेका कैसे बांटा जाता है?– भ्रष्टाचारियों को धुलने…../pHvmxr9BO8 +ದಾಳಿಗಳ ಮೂಲಕ ದೇಣಿಗೆ ಸಂಗ್ರಹವನ್ನು ಹೇಗೆ ಮಾಡಲಾಗುತ್ತದೆ ಮತ್ತು ದೇಣಿಗೆ ಪಡೆದ ನಂತರ ಹೇಗೆ ಒಪ್ಪಂದಗಳನ್ನು ವಿತರಿಸಲಾಗುತ್ತದೆ ಎಂಬುದರ ಕುರಿತು ಪ್ರಧಾನ ಮಂತ್ರಿ ಅಧ್ಯಾಯಗಳನ್ನು ಕಲಿಸುತ್ತಿದ್ದಾರೆ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ. +ಭ್ರಷ್ಟರನ್ನು ತೊಳೆಯುವ ವಾಷಿಂಗ್ ಮೆಷಿನ್ ಹೇಗೆ ಕೆಲಸ ಮಾಡುತ್ತದೆ?, ಏಜೆನ್ಸಿಗಳನ್ನು ರಿಕವರಿ ಏಜೆಂಟ್‍ಗಳನ್ನಾಗಿ ಮಾಡುವ ಜಾಮೀನು ಮತ್ತು ಜೈಲು ಆಟ ಹೇಗೆ ನಡೆಯುತ್ತಿದೆ ಎಂದು ಅವರು ಹೇಳಿದರು. +ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದೇ ಜಾಹೀರಾತನ್ನು ಎಕ್ಸ್‍ನಲ್ಲಿ ಹಂಚಿಕೊಂಡಿದ್ದು, ಹಫ್ತಾ ವಸೂಲಿ ಸರ್ಕಾರವನ್ನು ಆಯ್ಕೆ ಮಾಡಬೇಡಿ, ಬದಲಾವಣೆಯನ್ನು ಆರಿಸಿ, ಕಾಂಗ್ರೆಸ್‍ಗೆ ಮತ ನೀಡಿ ಎಂದು ಹೇಳಿದ್ದಾರೆ.ಭ್ರಷ್ಟರ ಗುಹೆಯಾಗಿ ಮಾರ್ಪಟ್ಟಿರುವ ಬಿಜೆಪಿ ತನ್ನ ನಾಯಕರಿಗೆ ಈ ಕ್ರ್ಯಾಶ್ ಕೋರ್ಸ್ ಅನ್ನು ಕಡ್ಡಾಯಗೊಳಿಸಿದೆ ಮತ್ತು ಅದಕ್ಕೆ ದೇಶವೇ ಬೆಲೆ ತೆರುತ್ತಿದೆ ಎಂದು ಗಾಂಧಿ ಆರೋಪಿಸಿದ್ದಾರೆ. \ No newline at end of file diff --git a/eesanje/url_47_120_10.txt b/eesanje/url_47_120_10.txt new file mode 100644 index 0000000000000000000000000000000000000000..3ad11c3a848d32ccf34d817ae82dc93945c4abf7 --- /dev/null +++ b/eesanje/url_47_120_10.txt @@ -0,0 +1,4 @@ +ಜಮ್ಮು-ಕಾಶ್ಮೀರದಲ್ಲಿ ಯಾರೊಬ್ಬರಿಗೂ ಈಗ ಕಲ್ಲು ಎಸೆಯುವ ಧೈರ್ಯ ಇಲ್ಲ : ಶಾ +ನವದೆಹಲಿ,ಏ.20-ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಈಗ ಯಾರೊಬ್ಬರಿಗೂ ಕಲ್ಲು ಎಸೆಯುವ ಧೈರ್ಯ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಮಾತನಾಡಿರುವ ಅವರು, 370 ನೇ ವಿಧಿಯನ್ನು ತೆಗೆದುಹಾಕುವುದರಿಂದ ಕಾಶ್ಮೀರದಲ್ಲಿ ಪ್ರಕ್ಷುಬ್ಧತೆ ಉಂಟಾಗುತ್ತದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಸ್ಮರಿಸಿ ತರಾಟೆಗೆ ತೆಗೆದುಕೊಂಡರು. +ಕಾಶ್ಮೀರದಲ್ಲಿ (ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥ) ಮೆಹಬೂಬಾ ಮುಫ್ತಿ ಮತ್ತು (ಕಾಂಗ್ರೆಸ್ ನಾಯಕ) ರಾಹುಲ್ ಬಾಬಾ (ಗಾಂಧಿ) ಅವರು ಆರ್ಟಿಕಲ್ 370 ಅನ್ನು ತೆಗೆದುಹಾಕಿದ ನಂತರ ಇಲ್ಲಿ ರಕ್ತಪಾತವಾಗುತ್ತದೆ ಎಂದು ಹೇಳುತ್ತಿದ್ದರು. +ರಾಹುಲ್ ಬಾಬಾ, ಐದು ವರ್ಷಗಳು ಕಳೆದಿವೆ (ಆರ್ಟಿಕಲ್ 370 ರದ್ದತಿಯಿಂದ). ಇದು ಪ್ರಧಾನಿ ನರೇಂದ್ರಮೋದಿಯವರ ಸರ್ಕಾರ. ರಕ್ತಪಾತದ ಮಾತು ಬಿಡಿ, ಅಲ್ಲಿ ಕಲ್ಲು ಎಸೆಯುವ ಧೈರ್ಯ ಯಾರಿಗೂ ಇಲ್ಲ ಎಂದು ಕಿಡಿಕಾರಿದರು. \ No newline at end of file diff --git a/eesanje/url_47_120_11.txt b/eesanje/url_47_120_11.txt new file mode 100644 index 0000000000000000000000000000000000000000..6202faab0bdef99adf3fdd1499c4714dd4869274 --- /dev/null +++ b/eesanje/url_47_120_11.txt @@ -0,0 +1,4 @@ +ಮತಗಟ್ಟೆ ಬಳಿ ಗುಂಡಿನ ದಾಳಿ ನಡೆಸಿದ್ದ ಮೂವರ ಬಂಧನ +ಇಂಫಾಲ್, ಅ 20 –ಇಲ್ಲಿನ ಮತದಾನ ಕೇಂದ್ರದ ಬಳಿ ಗುಂಡಿನ ದಾಳಿ ನಡೆಸಿದ ಮೂವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಮೂವರು ವ್ಯಕ್ತಿಗಳು ಇಂಫಾಲ್ ಪೂರ್ವ ಜಿಲ್ಲೆಯ ಮೊಯಿರಂಗ್ಯಾಂಪು ಸಾಜೆಬ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಇದರಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಗುಂಡಿನ ದಾಳಿ ಮಡೆಸಿ ಮೂವರು ಆರೋಪಿಗಳು ವಾಹನದಲ್ಲಿ ಪರಾರಿಯಾಗಿದ್ದರು,ಕಳೆದ ರಾತ್ರಿಯೇ ಬಂಧಿಸಿ ಅವರ ಬಳಿಯಿದ್ದ ಒಂದು .32 ಪಿಸ್ತೂಲ್ ಸಹಿತ ಮದ್ದುಗುಂಡು ಮತ್ತು 1 5 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು. +ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಯಲ್ಲಿ ಮಣಿಪುರದ ಎರಡು ಕ್ಷೇತ್ರಳಲ್ಲಿ ಶೇ.68 ಕ್ಕಿಂತ ಹೆಚ್ಚು ಮತದಾನವಾಗಿದೆ \ No newline at end of file diff --git a/eesanje/url_47_120_12.txt b/eesanje/url_47_120_12.txt new file mode 100644 index 0000000000000000000000000000000000000000..34f156ff5d719b45825f645e1c10d626c449e4ac --- /dev/null +++ b/eesanje/url_47_120_12.txt @@ -0,0 +1,4 @@ +ಬಸ್ ಪಲ್ಟಿಯಾಗಿ 21 ಪೊಲೀಸರಿಗೆ ಗಾಯ +ಬೆತುಲ್ , ಅ 20-ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಬಸ್ ಪಲ್ಟಿಯಾಗಿ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಚುನಾವಣಾ ಕರ್ತವ್ಯ ಮುಗಿಸಿ ರಾಜ್ಯದ ತಮ್ಮ ತವರು ಜಿಲ್ಲೆ ರಾಜ್‍ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಅಕಾರಿ ತಿಳಿಸಿದ್ದಾರೆ. +ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಛಿಂದ್ವಾರಾದಲ್ಲಿ ಚುನಾವಣಾ ಕರ್ತವ್ಯದ ನಂತರ ರಾಜ್‍ಗಢಕ್ಕೆ ತೆರಳುತ್ತಿದ್ದರು ಎಂದು ಅವರು ಹೇಳಿದರು. +ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್‍ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. \ No newline at end of file diff --git a/eesanje/url_47_120_2.txt b/eesanje/url_47_120_2.txt new file mode 100644 index 0000000000000000000000000000000000000000..29aa9f42938aabc5f82e2be613d5a75e9cc32fb6 --- /dev/null +++ b/eesanje/url_47_120_2.txt @@ -0,0 +1,6 @@ +ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನ ಬದಲಿಸಲು ಕಾಂಗ್ರೆಸ್ ಯತ್ನಿಸಿತ್ತು ; ರವಿಶಂಕರ್ +ಪಾಟ್ನಾ, ಏ.20-ದೇಶದಲ್ಲಿ ಕಾಂಗ್ರೆಸ್ ತುರ್ತುಪರಿಸ್ಥಿತಿಯನ್ನು ಹೇರಿದಾಗ ಮತ್ತು ಅದನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದಾಗ ಸಂವಿಧಾನವು ಅಪಾಯದಲ್ಲಿತ್ತು ಎಂದು ಭಾರತೀಯ ಜನತಾ ಪಕ್ಷದ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‍ಡಿಎ) 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ಸೂಚನೆಗಳಿವೆ ಎಂದು ಅವರು ಹೇಳಿದರು. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಶುಕ್ರವಾರ ನಡೆಯಿತು. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು 400 ಪಾರು ಎಂದು ಮಾತನಾಡುತ್ತೇವೆ ಮತ್ತು ಈಗ ಅಂಕಿಅಂಶವು ಇನ್ನೂ ಹೆಚ್ಚಿನದಕ್ಕೆ ಹೋಗುವ ಸೂಚನೆಗಳಿವೆ. ಪ್ರತಿಪಕ್ಷಗಳು ಸೋಲಿನ ಹತಾಶೆಯ ಲಕ್ಷಣಗಳನ್ನು ತೋರಿಸುತ್ತಿವೆ, ಅವರು ಒಂದೇ ಒಂದು ಮಾತನ್ನು ಹೇಳುತ್ತಾರೆ: ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರು ಯಾರು?ಪ್ರಧಾನಿ ಮತ್ತು ನಾವೆಲ್ಲರೂ ಈ ರೀತಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. +ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದಾಗ ಸಂವಿಧಾನ ಅಪಾಯದಲ್ಲಿತ್ತು ಎಂದು ಅವರು ಹೇಳಿದರು.ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಡೀ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನ ಬದಲಿಸುವ ಪ್ರಯತ್ನ ನಡೆದಿತ್ತು. ಇದು ಅವರ ಇತಿಹಾಸ. ಸಂವಿಧಾನ ಬದಲಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲಾ ಪ್ರಯತ್ನಗಳನ್ನು ಮಾಡಿದೆ ಮತ್ತು ಎಡಪಂಥೀಯ ಪಕ್ಷಗಳು ಅವರೊಂದಿಗೆ ಇದ್ದವು; ಇಂದು, ಲಾಲು ಯಾದವ್ ಅವರೊಂದಿಗಿದ್ದಾರೆ ಸಂವಿಧಾನಕ್ಕೆ ಅಪಾಯ ಎದುರಾಗಿರುವುದು ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಯಿಂದಲ್ಲ ಎಂದಿದ್ದಾರೆ. +2019 ರ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ, ಜೆಡಿ (ಯು) (ಜನತಾ ದಳ-ಯುನೈಟೆಡ), ಮತ್ತು ಎಲ್‍ಜೆಪಿ (ಲೋಕ ಜನಶಕ್ತಿ ಪಕ್ಷ) ಗಳಿಂದ ಕೂಡಿದ ಎನ್‍ಡಿಎ 40 ರಲ್ಲಿ 39 ಸ್ಥಾನಗಳನ್ನು ಗೆಲ್ಲುವ ಮೂಲಕ ಗೆಲುವು ಸಾಧಿಸಿತು. \ No newline at end of file diff --git a/eesanje/url_47_120_3.txt b/eesanje/url_47_120_3.txt new file mode 100644 index 0000000000000000000000000000000000000000..7e1e9cd28e932e9a314c9fa8d87c7c622135f2b2 --- /dev/null +++ b/eesanje/url_47_120_3.txt @@ -0,0 +1,7 @@ +‘ಕೈ’ಬಿಟ್ಟು ಬಿಜೆಪಿ ಸೇರಿದ ಪ್ರಿಯಾಂಕಾ ಗಾಂಧಿ ಆಪ್ತ ತಜೇಂದರ್ ಸಿಂಗ್ ಬಿಟ್ಟು +ನವದೆಹಲಿ,ಏ.20-ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೇಂದರ್ ಸಿಂಗ್ ಬಿಟ್ಟು ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಪಕ್ಷದ ಹಿರಿಯ ನಾಯಕರ ನಿರ್ಗಮನದಿಂದ ಕಾಂಗ್ರೆಸ್‍ಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. +ಹಿಮಾಚಲಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಯಾಗಿದ್ದ ತೇಜೇಂದರ್ ಸಿಂಗ್‍ಬಿಟ್ಟು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. +ಇದಕ್ಕೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ , ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಐಸಿಸಿ, ಹಿಮಾಚಲ ಪ್ರದೇಶದ ಸಹ-ಪ್ರಭಾರಿ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. +ಭಾರವಾದ ಹೃದಯದಿಂದ, 35 ವರ್ಷಗಳ ನಂತರ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಶೀರ್ಷಿಕೆಯೊಂದಿಗೆ ತೇಜೆಂದರ್ ತನ್ನ ರಾಜೀನಾಮೆ ಪತ್ರವನ್ನು ಫೇಸ್‍ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. +ಮಾರ್ಚ್‍ನಲ್ಲಿ ಕಾಂಗ್ರೆಸ್ ವಕ್ತಾರ ರೋಹನ್ ಗುಪ್ತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ಕೆಲವು ನಾಯಕರಿಂದ ಕಿರುಕುಳ ಮತ್ತು ಚಾರಿತ್ರ್ಯ ವಧೆಯಾಗುತ್ತಿದೆ ಎಂದು ಕಾರಣ ನೀಡಿದ್ದರು. ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ರೋಹನ್ ಗುಪ್ತಾ ಅವರನ್ನು ಹೆಸರಿಸಲಾಯಿತು. ಆದರೆ ಅವರು ಕಣದಿಂದ ಹೊರಗುಳಿದಿದ್ದಾರೆ. +ಈ ಹಿಂದೆ, ವಕ್ತಾರ ಗೌರವ್ ವಲ್ಲಭ್ ಮತ್ತು ಒಲಿಂಪಿಕ್ ಪದಕ ವಿಜೇತ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರು. ಮುಂಬೈನ ಹಿರಿಯ ನಾಯಕ ಸಂಜಯ್ ನಿರುಪಮ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದ್ದರೂ ಸಹ ರಾಜೀನಾಮೆ ನೀಡಿದ್ದರು. \ No newline at end of file diff --git a/eesanje/url_47_120_4.txt b/eesanje/url_47_120_4.txt new file mode 100644 index 0000000000000000000000000000000000000000..d3856c0691772568dfa64650f91a0c5159febd3a --- /dev/null +++ b/eesanje/url_47_120_4.txt @@ -0,0 +1,6 @@ +931 ಕೋಟಿ ಆಸ್ತಿ ಒಡೆಯ ಚಂದ್ರಬಾಬು ನಾಯ್ಡು +ಹೈದರಾಬಾದ್, ಏ.20-ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ಅವರ ಪತ್ನಿ ನಾರಾ ಭುವನೇಶ್ವರಿ ಅವರು ತಮ್ಮ ಒಟ್ಟು ಚರ ಮತ್ತು ಸ್ಥಿರ ಆಸ್ತಿ ಮೌಲ್ಯ ರೂ.931.83 ಕೋಟಿ ಎಂದು ಘೋಷಿಸಿಕೊಂಡಿದ್ದಾರೆ. +ಚಿತ್ತೂರು ಜಿಲ್ಲೆಯ ಕುಪ್ಪಂ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಚುನಾವಣಾ ಅಫಿಡವಿಟ್‍ನಲ್ಲಿ ನಾಯ್ಡು ಅವರು ಇದನ್ನು ಬಹಿರಂಗಪಡಿಸಿದ್ದಾರೆ. +ಕುಪ್ಪಂ ಪುರಸಭೆ ಕಚೇರಿಯಲ್ಲಿ ಮಧ್ಯಾಹ್ನ ಟಿಡಿಪಿ ಕಾರ್ಯಕರ್ತರ ಬೃಹತ್ ರ್ಯಾಲಿ ನಡೆಸಿದ ನಂತರ ಭುವನೇಶ್ವರಿ ಅವರು ತಮ್ಮ ಪತಿ ಪರವಾಗಿ ನಾಮಪತ್ರ ಸಲ್ಲಿಸಿದರು.ನಾಯ್ಡು ಸಲ್ಲಿಸಿರುವ ಅಫಿಡವಿಟ್ ಪ್ರಕಾರ, 1994ರ ಅಂಬಾಸಿಡರ್ ಕಾರು ರೂ. 2.25 ಲಕ್ಷ ಮೌಲ್ಯದ ಜೊತೆಗೆ ಕೈಯಲ್ಲಿ ರೂ.11,560 ನಗದು ಮತ್ತು ವಿವಿಧ ಬ್ಯಾಂಕ್‍ಗಳಲ್ಲಿ ಠೇವಣಿ ಸೇರಿದಂತೆ ಒಟ್ಟು ರೂ. 4,80,438 ಮೌಲ್ಯದ ಚರ ಆಸ್ತಿಯನ್ನು ಹೊಂದಿದ್ದಾರೆ. +ಆದರೆ, ಅವರ ಪತ್ನಿ ಭುವನೇಶ್ವರಿ ಅವರ ಚರ ಆಸ್ತಿ ಮೌಲ್ಯ ರೂ.810.37 ಕೋಟಿಗೂ ಹೆಚ್ಚು. ಈ ಸ್ವತ್ತುಗಳು ಹೆರಿಟೇಜ್ -ಫಾಡ್ಸ್‍ನ 2,26,11,525 ಷೇರುಗಳನ್ನು ಒಳಗೊಂಡಿದ್ದು, ಪ್ರತಿ ಷೇರಿನ ಬೆಲೆ ರೂ.337.85, ಒಟ್ಟು ಮೌಲ್ಯ ರೂ.763.93 ಕೋಟಿ, ಜೊತೆಗೆ 3,435 ಗ್ರಾಂ ಚಿನ್ನ, 41.49 ಕೆಜಿ ಬೆಳ್ಳಿ ಮತ್ತು ಅಮೂಲ್ಯ ಕಲ್ಲುಗಳು ಮತ್ತು ರೂ.1.09 ಕೋಟಿ ಮೌಲ್ಯದ ಮುತ್ತುಗಳು ಇವೆ. +ಸ್ಥಿರಾಸ್ತಿಗೆ ಸಂಬಂಧಿಸಿದಂತೆ, ನಾಯ್ಡು ಅವರು ಕುಪ್ಪಂನ ಶಾಂತಿಪುರಂನ ಕಡಪಲ್ಲಿ ಗ್ರಾಮದಲ್ಲಿ 95.23 ಸೆಂಟ್ಸ್ ಭೂಮಿಯನ್ನು ಹೊಂದಿದ್ದು, ಅಲ್ಲಿ ಅವರು ಮನೆಯನ್ನು ನಿರ್ಮಿಸುತ್ತಿದ್ದಾರೆ, ಅದರ ಮಾರುಕಟ್ಟೆ ಮೌಲ್ಯ ಸುಮಾರು ರೂ.77.33 ಲಕ್ಷ ಮತ್ತು ಅವರ ಮಗ ನಾರಾ ಲೋಕೇಶ್ ಅವರ ಸಹಭಾಗಿತ್ವದಲ್ಲಿ ಹೈದರಾಬಾದ್‍ನ ಜುಬಿಲಿ ಹಿಲ್ಸ್‍ನಲ್ಲಿ 1,225 ಚದರ ಗಜ ಭೂಮಿಯಲ್ಲಿ 14,950 ಚದರ ಅಡಿ ವಿಸ್ತೀರ್ಣದ ವಸತಿ ಕಟ್ಟಡವನ್ನು ನಿರ್ಮಿಸಲಾಗಿದೆ. ಜಮೀನು ಮತ್ತು ಮನೆಯ ಒಟ್ಟು ಮೌಲ್ಯ ರೂ.70.20 ಕೋಟಿ ಆಗಿದ್ದು, ಅದರಲ್ಲಿ ಅರ್ಧದಷ್ಟು ಅವರ ಮಗನದ್ದಾಗಿದೆ. \ No newline at end of file diff --git a/eesanje/url_47_120_5.txt b/eesanje/url_47_120_5.txt new file mode 100644 index 0000000000000000000000000000000000000000..0c320131e3029baa8375250bf0308c67329e1d16 --- /dev/null +++ b/eesanje/url_47_120_5.txt @@ -0,0 +1,8 @@ +ಮತದಾನದ ಅವಕಾಶ ಕಳೆದುಕೊಳ್ಳಬೇಡಿ : ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ +ನವದೆಹಲಿ, ಏ. 20 (ಪಿಟಿಐ) :ಸಂವಿಧಾನಾತ್ಮಕ ಪ್ರಜಾಪ್ರಭುತ್ವದಲ್ಲಿ ಇದು ಅತ್ಯಂತ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳುವ ಮೂಲಕ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕರೆ ನೀಡಿದ್ದಾರೆ. +2024 ರ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗದ ಮೈ ವೋಟ್ ಮೈ ವಾಯ್ಸ್ ಮಿಷನ್‍ಗಾಗಿ ವೀಡಿಯೊ ಸಂದೇಶದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರು, ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಜೆಗಳು, ಅದು ನಮ್ಮ ದೇಶ ಎಂದು ಹೇಳಿಕೊಂಡಿದ್ದಾರೆ. +ಸಂವಿಧಾನವು ನಮಗೆ ನಾಗರಿಕರಾಗಿ ಬಹುಸಂಖ್ಯೆಯ ಹಕ್ಕುಗಳನ್ನು ನೀಡುತ್ತದೆ ಆದರೆ ನಾವು ಪ್ರತಿಯೊಬ್ಬರೂ ನಮ್ಮ ಮೇಲೆ ಹೊರಿಸಲಾದ ಕರ್ತವ್ಯವನ್ನು ನಿರ್ವಹಿಸುತ್ತೇವೆ ಎಂದು ಅದು ನಿರೀಕ್ಷಿಸುತ್ತದೆ. ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸುವುದು ಪೌರತ್ವದ ಪ್ರಮುಖ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. . +ನಾನು ನಿಮ್ಮಲ್ಲಿ ಪ್ರತಿಯೊಬ್ಬರನ್ನು ವಿನಂತಿಸುತ್ತೇನೆ, ದಯವಿಟ್ಟು ನಮ್ಮ ಮಹಾನ್ ತಾಯ್ನಾಡಿನ ಪ್ರಜೆಗಳಾಗಿ ಜವಾಬ್ದಾರಿಯುತವಾಗಿ ಮತದಾನ ಮಾಡಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಐದು ನಿಮಿಷಗಳು, ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ದೇಶಕ್ಕಾಗಿ. ಇದು ಸಾಧ್ಯ, ಅಲ್ಲವೇ? ಹೆಮ್ಮೆಯಿಂದ ಮತ ಚಲಾಯಿಸೋಣ. ನನ್ನ ಮತ, ನನ್ನ ಧ್ವನಿ, ಸಿಜೆಐ ಹೇಳಿದರು. +ಸರ್ಕಾರವನ್ನು ಚುನಾಯಿಸುವಲ್ಲಿ ನಾಗರಿಕರು ಸಹಭಾಗಿತ್ವದ ಪಾತ್ರವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ಈ ಸರ್ಕಾರವು ಜನರ ಸರ್ಕಾರ, ಜನರಿಂದ ಮತ್ತು ಜನರಿಗಾಗಿ ಎಂದು ಹೇಳಲಾಗುತ್ತದೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. +ಮೊದಲ ಬಾರಿಗೆ ಮತದಾರರಾಗಿ ಮತ ಚಲಾಯಿಸಲು ಮತಗಟ್ಟೆಗೆ ಸರತಿ ಸಾಲಿನಲ್ಲಿ ನಿಂತಿದ್ದನ್ನು ಅವರು ತಮ್ಮ ಉತ್ಸಾಹವನ್ನು ಸ್ಮರಿಸಿದರು.ನಾನು ಮತ ಚಲಾಯಿಸುವಾಗ ಬೆರಳಿನ ಶಾಯಿಯು ದೇಶಭಕ್ತಿಯ ಪ್ರಚಂಡ ಭಾವನೆಗಳನ್ನು ಮತ್ತು ರಾಷ್ಟ್ರದೊಂದಿಗಿನ ಒಡನಾಟವನ್ನು ನೀಡುತ್ತದೆ ಎಂದು ಅವರು ಹೇಳಿದರು. +ಆದ್ದರಿಂದ ನಮ್ಮ ಸಂವಿಧಾನ ಮತ್ತು ನಮ್ಮ ಕಾನೂನು ಒಬ್ಬ ನಾಗರಿಕ, ಒಂದು ಮತ ಮತ್ತು ಒಂದು ಮೌಲ್ಯವನ್ನು ಒದಗಿಸುತ್ತದೆ. ಇದು ಸಾಂವಿಧಾನಿಕ ಪ್ರಜಾಪ್ರಭುತ್ವವಾಗಿ ನಮ್ಮ ರಾಷ್ಟ್ರದ ದೊಡ್ಡ ದೃಢತೆ ಮತ್ತು ಶಕ್ತಿ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_120_6.txt b/eesanje/url_47_120_6.txt new file mode 100644 index 0000000000000000000000000000000000000000..d3101ea6a424ef2e4bb6b0c97e0396f138b770df --- /dev/null +++ b/eesanje/url_47_120_6.txt @@ -0,0 +1,6 @@ +ಬಿಜೆಪಿಯ 400 ಪಾರ್ ಸಿನಿಮಾ ಪ್ಲಾಪ್ ಆಗಿದೆ ; ತೇಜಸ್ವಿ ಯಾದವ್ +ಪಾಟ್ನಾ, ಏ.20-ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ನಂತರ ಬಿಜೆಪಿಯ 400 ಪಾರ್ ಚಿತ್ರವು ಮೊದಲ ದಿನವೇ ಸೂಪರ್ ಪ್ಲಾಪ್ ಆಗಿದೆ ಎಂದು ರಾಷ್ಟ್ರೀಯ ಜನತಾ ದಳ () ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ. +ಮಹಾಘಟಬಂಧನ್ ಮೊದಲ ಹಂತದಲ್ಲಿ ಎಲ್ಲಾ ನಾಲ್ಕು ಸ್ಥಾನಗಳನ್ನು ಗೆಲ್ಲುತ್ತಿದೆ. ನಾವು ಬ್ಲಾಕ್‍ವಾರು ಸಭೆಗಳನ್ನು ನಡೆಸಿದ್ದೇವೆ ಮತ್ತು ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ. ಬಿಜೆಪಿಯ 400 ಪಾರ್ ಚಿತ್ರವು ಮೊದಲ ದಿನವೇ ಸೂಪರ್ ಪ್ಲಾಪ್ ಆಗಿದೆ. ಬಿಹಾರದ ಜನರು ಜಾಗೃತರಾಗಿದ್ದು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದಿದ್ದಾರೆ. +ಬಿಹಾರ ಈ ಬಾರಿ ಆಘಾತಕಾರಿ ಫಲಿತಾಂಶಗಳನ್ನು ನೀಡುವುದರಿಂದ ಮೊದಲ ಹಂತದಲ್ಲಿ ಯಾವುದೇ ಸ್ಪರ್ಧೆಯಿಲ್ಲ ಎಂದು ಯಾದವ್ ಸುದ್ದಿಸಂಸ್ಥೆಗೆ ತಿಳಿಸಿದರು. ಮೊದಲ ಹಂತದಲ್ಲಿ ಯಾವುದೇ ಪೈಪೋಟಿ ಇಲ್ಲ. ಬಿಹಾರ ಈ ಬಾರಿ ಆಘಾತಕಾರಿ ಫಲಿತಾಂಶ ನೀಡಲಿದೆ ಎಂದು ನಾವು ಮೊದಲೇ ಸಾಕಷ್ಟು ಬಾರಿ ಹೇಳಿದ್ದೆವು. ಅವರು ಬಿಹಾರದ ಜನರಿಗೆ ಏನನ್ನೂ ಮಾಡಿಲ್ಲ. +2014 ಮತ್ತು 2019 ರಲ್ಲಿ ಮೋದಿ ಜಿ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈಗ ಅವರ ಹೇಳಿಕೆಗಳು ಮತ್ತು ಸುಳ್ಳು ಭರವಸೆಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ, ನಾವು ಬಿಹಾರಕ್ಕೆ ವಿಶೇಷ ಸ್ಥಾನಮಾನದ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತೇವೆ ಎಂದು ಭರವಸೆ ನೀಡಿದ್ದೇವೆ. +ಇಡೀ ಮಹಾಘಟಬಂಧನ್ ಮತ್ತು ಇಂಡಿ ಬಣ ಒಟ್ಟಾಗಿ ಕೆಲಸ ಮಾಡುತ್ತಿವೆ. ಹಣದುಬ್ಬರ, ಬಡತನ ಮತ್ತು ಹೂಡಿಕೆಯ ಜೊತೆಗೆ ಬಿಹಾರದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿದೆ. ವಲಸೆ ಮತ್ತು ಪ್ರವಾಹಗಳು ಸಹ ಸಮಸ್ಯೆಗಳಾಗಿವೆ. ಈ ಬಾರಿ ಬಿಜೆಪಿ ತುಂಬಾ ಚಿಂತಿತವಾಗಿದೆ. ಅವರು ಸಂವಿಧಾನವನ್ನು ರದ್ದುಗೊಳಿಸುವುದಾಗಿ ಅವರು ಹೇಳುತ್ತಾರೆ. ಯಾರು ಸಂವಿಧಾನವನ್ನು ನಾಶಪಡಿಸುತ್ತಾರೋ ಅವರೇ ನಾಶವಾಗುತ್ತಾರೆ ಎಂದು ಯಾದವ್ ಹೇಳಿದ್ದಾರೆ. \ No newline at end of file diff --git a/eesanje/url_47_120_7.txt b/eesanje/url_47_120_7.txt new file mode 100644 index 0000000000000000000000000000000000000000..de7a35e6660e046b63d0c7aa9cddb31233a74014 --- /dev/null +++ b/eesanje/url_47_120_7.txt @@ -0,0 +1,6 @@ +ಪಾಕ್ ಹಸಿವಿನಿಂದ ನರಳುತ್ತಿದ್ದರೆ, ಭಾರತದಲ್ಲಿ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ ; ಯೋಗಿ +ಅಮ್ರೋಹಾ, ಏ.20-ನೆರೆಯ ಪಾಕಿಸ್ತಾನದಲ್ಲಿ ಜನ ಹಸಿವಿನಿಂದ ಕಂಗಲಾಗಿದ್ದರೆ ನಮ್ಮ ದೇಶದಲ್ಲಿ 80 ಕೋಟಿ ಜನ ಉಚಿತ ಪಡಿತರ ಪಡೆಯುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು. +ಪಶ್ಚಿಮ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಸರಿ ಪಕ್ಷದ ಫಿರ್ ಏಕ್ ಬಾರ್ ಮೋದಿ ಸರ್ಕಾರ್ ಘೋಷಣೆಯು ದೇಶಾದ್ಯಂತ ಪ್ರತಿಧ್ವನಿಸುತ್ತಿದೆ ಎಂದು ಹೇಳಿದರು. +ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಅಮ್ರೋಹಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕನ್ವರ್ ಸಿಂಗ್ ತನ್ವಾರ್ ಅವರನ್ನು ಬೆಂಬಲಿಸಿ ಆಯೋಜಿಸಿದ್ದ ರ್ಯಾಲಿಯಲ್ಲಿ ಆದಿತ್ಯನಾಥ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ಮಾತನಾಡಿದರು. +23 ರಿಂದ 24 ಕೋಟಿ ಜನಸಂಖ್ಯೆಯನ್ನು ಹೊಂದಿರುವ ಪಾಕಿಸ್ತಾನವು 1947 ರ ವಿಭಜನೆಯ ನಂತರ ರೂಪುಗೊಂಡಿತು ಮತ್ತು ಇಂದು ಹಸಿವಿನಿಂದ ನರಳುತ್ತಿದೆ, ಇದು ಒಂದು ಉದಾಹರಣೆಯಾಗಿದೆ — ಒಂದು ಕಡೆ, ಪಾಕಿಸ್ತಾನವಿದೆ, ಮತ್ತು ಇನ್ನೊಂದು ಕಡೆ, 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ ಭರವಸೆಯಾಗಿದೆ ಎಂದು ಅವರು ಹೇಳಿದರು. +ಬಿಜೆಪಿ ತನ್ನ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ ನೀಡುವುದನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ ಎಂದರು. \ No newline at end of file diff --git a/eesanje/url_47_120_8.txt b/eesanje/url_47_120_8.txt new file mode 100644 index 0000000000000000000000000000000000000000..085f02df7a903a04b06c743f1076199a96fc7912 --- /dev/null +++ b/eesanje/url_47_120_8.txt @@ -0,0 +1,7 @@ +ಪಾಕ್ ಕೂಡ ಮೋದಿ ಅಂತಹ ನಾಯಕರನ್ನು ಬಯಸುತ್ತಿದೆ ; ಮಧ್ಯಪ್ರದೇಶ ಸಿಎಂ ಯಾದವ್ +ಭೋಪಾಲ್ ,ಏ. 20 (ಪಿಟಿಐ)– ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಗಿಸಿದ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಪಾಕಿಸ್ತಾನದ ರಾಜಕಾರಣಿಗಳು ಕೂಡ ತಮ್ಮ ದೇಶಕ್ಕೆ ಅವರಂತಹ ನಾಯಕನನ್ನು ಹೊಂದಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದಾರೆ. ಮಧ್ಯಪ್ರದೇಶದ ಹೋಶಂಗಾಬಾದ್ ಲೋಕಸಭಾ ಕ್ಷೇತ್ರದ ಪ್ರಚಾರದ ವೇಳೆ ಮಾತನಾಡಿದ ಯಾದವ್ ಅವರು ಕಾಂಗ್ರೆಸ್ ಬಿತ್ತಿದ ಬೀಜಗಳಿಂದ ಭಾರತ ಇಬ್ಭಾಗವಾಗಿದೆ ಎಂದು ಆರೋಪಿಸಿದರು. +ನೆರೆಯ ದೇಶದಲ್ಲಿ ಬದುಕುಳಿಯುವ ಬಿಕ್ಕಟ್ಟು ಇರುವುದರಿಂದ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಸಹ ಭಾರತದ ಭಾಗವಾಗಲು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.(ಮಾಜಿ ಪ್ರಧಾನಿ) ನವಾಜ್ ಷರೀಫ್ ಸೇರಿದಂತೆ ಪಾಕಿಸ್ತಾನದ ನಾಯಕರು ನಿರಂತರವಾಗಿ ನರೇಂದ್ರ ಮೋದಿ ಅವರಂತಹ ನಾಯಕ ಪಾಕಿಸ್ತಾನದಲ್ಲಿ ಇರಬೇಕಿತ್ತು ಎಂದು ಅವರು ನಿರಂತರವಾಗಿ ಹೇಳುತ್ತಿದ್ದಾರೆ. +ನೀವು ನಾಯಕರಾಗಿದ್ದರೆ, ನಿಮ್ಮ ಶತ್ರುವೂ ನಿಮ್ಮನ್ನು ಹೊಗಳುವ ಹಾಗೆ ಇರಬೇಕು. ಈ ನಾಯಕ (ಮೋದಿ) ಇದು ನಮಗೆ ಹೆಮ್ಮೆ ತಂದಿದೆ ಎಂದು ಯಾದವ್ ತಮ್ಮ ಭಾಷಣವೊಂದರಲ್ಲಿ ಹೇಳಿದ್ದಾರೆ. ದೇಶವನ್ನು ಭಾರತ ಮತ್ತು ಪಾಕಿಸ್ತಾನ ಎಂದು ವಿಭಜಿಸುವ ಕಳಂಕ ಕಾಂಗ್ರೆಸ್ ಮೇಲಿದೆ ಎಂದು ಅವರು ವಾಗ್ದಾಳಿ ನಡೆಸಿದರು. +ದೇಶ ವಿಭಜನೆಯ ಸಮಯದಲ್ಲಿ ಬಿಜೆಪಿ ಅಥವಾ ಜನಸಂಘ ಇರಲಿಲ್ಲ. ಕಾಂಗ್ರೆಸ್ ಬಿತ್ತಿದ ಬೀಜಗಳಿಂದ ದೇಶ ವಿಭಜನೆಯಾಯಿತು. ಪಂಜಾಬ್‍ನ ಅರ್ಧದಷ್ಟು ಜನರು ಅಲ್ಲಿಗೆ (ಪಾಕಿಸ್ತಾನದಲ್ಲಿ) ಹೋದರು ಎಂದು ಯಾದವ್ ಹೇಳಿದರು. +370 ನೇ ವಿಧಿಯನ್ನು ರದ್ದುಪಡಿಸುವಾಗ, ಇದು ಸಂಭವಿಸಿದರೆ ದೇಶದಲ್ಲಿ ರಕ್ತದ ನದಿಗಳು ಹರಿಯುತ್ತವೆ ಎಂದು ಕಾಂಗ್ರೆಸ್ ಹೇಳಿದೆ, ರಕ್ತನಾಳಗಳಲ್ಲಿ ರಕ್ತ ಇದ್ದಾಗ ಮಾತ್ರ ರಕ್ತದ ನದಿಗಳು ಹರಿಯುತ್ತವೆ, ನಿಮ್ಮ (ಕಾಂಗ್ರೆಸ್ ) ರಕ್ತನಾಳಗಳಲ್ಲಿ ನೀರಿದೆ. 370 ನೇ ವಿಧಿಯ ಕಳಂಕವನ್ನು ಅಳಿಸಿಹಾಕಲಾಯಿತು ಎಂದು ದೇಶವು ಸಂಭ್ರಮಿಸುತ್ತಿದೆ ಎಂದು ಯಾದವ್ ಹೇಳಿದರು. +ಕಾಶ್ಮೀರದ ಜನರು ತುಂಬಾ ಸಂತೋಷವಾಗಿದ್ದಾರೆಂದರೆ, ಪಿಒಕೆಯಲ್ಲಿರುವವರು ಸಹ ಅವರನ್ನು ಭಾರತಕ್ಕೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ, ಏಕೆಂದರೆ ಪಾಕಿಸ್ತಾನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_120_9.txt b/eesanje/url_47_120_9.txt new file mode 100644 index 0000000000000000000000000000000000000000..54a5c60925c8f9889f99d15c6e74047355440ec2 --- /dev/null +++ b/eesanje/url_47_120_9.txt @@ -0,0 +1,7 @@ +3ನೇ ಬಾರಿಗೆ ಅಧಿಕಾರಕ್ಕೆ ಬರುತ್ತೇವೆ, ಯುಸಿಸಿ ಜಾರಿ ಮಾಡಿಯೇ ತೀರುತ್ತೇವೆ : ಅಮಿತ್ ಶಾ +ನವದೆಹಲಿ,ಏ.20-ಕೇಂದ್ರದಲ್ಲಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವ ಬಿಜೆಪಿಯ ಭರವಸೆಯನ್ನು ಪುನರುಚ್ಚರಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರವು ವೈಯಕ್ತಿಕ ಕಾನೂನುಗಳನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದ್ದಾರೆ. +ಖಾಸಗಿ ಸುದ್ದಿ ವಾಹನಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು, ದೇಶವನ್ನು ಷರಿಯಾ ಆಧಾರದ ಮೇಲೆ ನಡೆಸಬೇಕೇ? ವೈಯಕ್ತಿಕ ಕಾನೂನಿನ ಆಧಾರದ ಮೇಲೆ? ಯಾವುದೇ ದೇಶವು ಈ ರೀತಿ ನಡೆದುಕೊಂಡಿಲ್ಲ. ಯಾವುದೇ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ವೈಯಕ್ತಿಕ ಕಾನೂನುಗಳಿಲ್ಲ. ಜಗತ್ತಿನಲ್ಲಿ ಭಾರತದಲ್ಲಿ ಏಕೆ ಇದೆ? ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. +ಕಾಲ ಮುಂದೆ ಹೋಗಿದೆ ಈಗ ಭಾರತವೂ ಮುನ್ನಡೆಯಬೇಕಾಗಿದೆ. ಹಲವಾರು ಮುಸ್ಲಿಂ ರಾಷ್ಟ್ರಗಳು ಷರಿಯಾ ಕಾನೂನನ್ನು ಅನುಸರಿಸುವುದಿಲ್ಲ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಚುನಾವಣಾ ಭರವಸೆಗಳಲ್ಲಿ ಒಂದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. +ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಏಕರೂಪ ನಾಗರಿಕ ಸಂಹಿತೆಯನ್ನು ಹೊಂದಿದ್ದು, ಭಾರತವೂ ಅದೇ ರೀತಿ ಮಾಡುವ ಸಮಯ ಬಂದಿದೆ. ಯುಸಿಸಿಯು ಸಂವಿಧಾನವನ್ನು ರಚಿಸುವಾಗ ಸಂವಿಧಾನ ಸಭೆಯು ದೇಶಕ್ಕೆ ನೀಡಿದ ಭರವಸೆಯಾಗಿದೆ ಎಂದು ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಕುರಿತಾಗಿ ಟೀಕೆ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಜಾತ್ಯತೀತ ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು ಇರಬೇಕಲ್ಲವೇ? ಇದು ಜಾತ್ಯತೀತತೆಯ ಬಹುದೊಡ್ಡ ಸಂಕೇತವಾಗಿದೆ. +ಧ್ರುವೀಕರಣಕ್ಕೆ ಕಾಂಗ್ರೆಸ್ ಹೆದರುವುದಿಲ್ಲ. ರಾಜಕೀಯದಲ್ಲಿ ಮತಬ್ಯಾಂಕ್‍ನ್ನು ಕ್ರೋಢೀಕರಿಸಲು ಬಯಸುತ್ತದೆ. ಮತ ಬ್ಯಾಂಕ್ ರಾಜಕೀಯದಿಂದಾಗಿ ಸಂವಿಧಾನ ಸಭೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ ಎಂದು ದೂರಿದ್ದಾರೆ. +ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾದ ನಂತರ ಸಾಮಾಜಿಕ, ನ್ಯಾಯಾಂಗ ಮತ್ತು ಸಂಸದೀಯ ದೃಷ್ಟಿಕೋನದಿಂದ ಕಾನೂನಿನ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.ಸ್ವಾತಂತ್ರ್ಯದನಂತರ ಏಕರೂಪ ನಾಗರಿಕ ಸಂಹಿತೆಯನ್ನು ಹೊಂದಿರುವ ಮೊದಲ ರಾಜ್ಯ ಉತ್ತರಾಖಂಡವಾಗಿದೆ. \ No newline at end of file diff --git a/eesanje/url_47_121_1.txt b/eesanje/url_47_121_1.txt new file mode 100644 index 0000000000000000000000000000000000000000..a0d168306d8dbac99fcd6a3c49b504ddbdb4392b --- /dev/null +++ b/eesanje/url_47_121_1.txt @@ -0,0 +1,5 @@ +ಗುಲಾಮರಾಗುವುದು ಬೇಡ, ಹಿಂದೂ ಎಂದು ಹೆಮ್ಮೆಯಿಂದ ಹೇಳಿ : ಮೋಹನ್ ಭಾಗವತ್ +ನಾಗ್ಪುರ, ಏ.19-ದೇಶವಾಸಿಗಳಲ್ಲಿ ನಮ್ಮ ಅಸ್ಮಿತೆಯ ಅರಿವಿನ ಕೊರತೆಯಿದೆ ಎಂದು ಗಂಭೀರ ಆರೋಪ ಮಾಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ () ಮುಖ್ಯಸ್ಥ ಮೋಹನ್ ಭಾಗವತ್ ಅವರು ಜನರು ತಮ್ಮ ಗುರುತನ್ನು ಹಿಂದೂ ಎಂದು ಹೆಮ್ಮೆಯಿಂದ ಒಪ್ಪಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. +ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಆರ್‍ಎಸ್‍ಎಸ್ ಮುಖ್ಯಸ್ಥರು ಮಾತನಾಡಿದರು.ಮತ್ತೆ ಮತ್ತೆ ಯಾರಾದರೂ ಬಂದರೆ ನಮ್ಮ ತಪ್ಪುಗಳಿಂದ ನಾವು ಗುಲಾಮರಾಗುತ್ತೇವೆ. ಇದನ್ನು ಪರಿಹರಿಸಬೇಕಾಗಿದೆ. ಈ ಕಾಯಿಲೆಗೆ ಚಿಕಿತ್ಸೆ ನೀಡಬೇಕು, ಇಲ್ಲದಿದ್ದರೆ, ಅಂತಹವುಗಳು ನಡೆಯುತ್ತಲೇ ಇರುತ್ತವೆ. ನಾವು ಕೆಲವರಿಗೆ ಚಿಕಿತ್ಸೆ ನೀಡಬೇಕಾಗಿದೆ ಎಂದು ಅವರು ಹೇಳಿದರು. +ದೇಶವು ಇಡೀ ಸಮಾಜವನ್ನು ಸಾಮಾನ್ಯ ಥ್ರೆಡ್‍ನೊಂದಿಗೆ ಸಂಘಟಿಸುವ ಅಗತ್ಯವಿದೆ ಆದ್ದರಿಂದ ನಾವು ನಮ್ಮ ಗುರುತನ್ನು ಸ್ಪಷ್ಟಪಡಿಸಬಹುದು ಎಂದು ಅವರು ಹೇಳಿದರು. ದಿಕ್ಕರಣೆಯಿಂದಾಗಿ, ನಮ್ಮ ದೇಶದಲ್ಲಿ ನಾವು ಯಾರು ಮತ್ತು ನಮ್ಮವರು, ನಮ್ಮ ಗುರುತಿನ ಬಗ್ಗೆ ಜ್ಞಾನದ ಕೊರತೆಯಿದೆ ಮತ್ತು ಅದರ ಬಗ್ಗೆ ಸ್ಪಷ್ಟತೆ ಇಲ್ಲ. ಹಲವಾರು ವರ್ಷಗಳ ಗುಲಾಮಗಿರಿಯಿಂದಾಗಿ ಮಾನಸಿಕ ನಿಗ್ರಹವಿದೆ ಎಂದು ಅವರು ಆರೋಪಿಸಿದರು. +ಆದ್ದರಿಂದ, ನಾವು ನಮ್ಮೆಲ್ಲರನ್ನೂ ಒಂದುಗೂಡಿಸುವ ಸಾಮಾನ್ಯ ಸೂತ್ರದೊಂದಿಗೆ ಇಡೀ ಸಮಾಜವನ್ನು ಸಂಘಟಿಸಬೇಕಾಗಿದೆ. ನಾವು ನಮ್ಮ ಗುರುತನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಮತ್ತು ಜಗತ್ತಿಗೆ ತಿಳಿಸಬೇಕು. ನಾವು ಯಾರೆಂದು ನಮಗೆ ತಿಳಿದಿದ್ದರೆ ಆಗ ನಮಗೆ ಯಾರು ನಮ್ಮದು ಮತ್ತು ನಮ್ಮ ಗುರುತು ಎಂದು ತಿಳಿಯುತ್ತದೆ. ಹಿಂದೂಗಳು ಮತ್ತು ನಾವು ಹಿಂದೂಗಳು ಎಂದು ಹೆಮ್ಮೆಯಿಂದ ಹೇಳಬೇಕು ಎಂದು ಅವರು ಹೇಳಿದರು. \ No newline at end of file diff --git a/eesanje/url_47_121_10.txt b/eesanje/url_47_121_10.txt new file mode 100644 index 0000000000000000000000000000000000000000..55a87f8ffbcd7abb6e48a1f01c1f7c26cb5a2960 --- /dev/null +++ b/eesanje/url_47_121_10.txt @@ -0,0 +1,6 @@ +ಶಿಲ್ಪಾಶೆಟ್ಟಿ ದಂಪತಿಯ 98 ಕೋಟಿ ರೂ.ಆಸ್ತಿ ಜಪ್ತಿ +ಮುಂಬೈ,ಏ.18-ಬಾಲಿವುಡ್ನ ಸ್ಟಾರ್ನಟಿ ಶಿಲ್ಪಾ ಶೆಟ್ಟಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿಲ್ಪಾ ಹಾಗೂ ಪತಿ ರಾಜ್ ಕುಂದ್ರಾಗೆ ಸೇರಿದ ಸುಮಾರು 98 ಕೋಟಿ ರೂ. ಬೆಲೆ ಬಾಳುವ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. +ಬಿಟ್ಕಾಯಿನ್ ಪೊಂಜಿ ಹಗರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 97.79 ಕೋಟಿ ಮËಲ್ಯದ ಸ್ಥಿರ ಮತ್ತು ಚರ ಆಸ್ತಿಗಳನ್ನು 2002ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ), 2002ರ ನಿಬಂಧನೆಗಳಡಿ ಇಡಿ ಜಪ್ತಿ ಮಾಡಿದೆ. ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಜಪ್ತಿ ಮಾಡಲಾಗಿದೆ. +ಒಂದು ವೇರಿಯೇಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಮತ್ತು ಆರೋಪಿಗಳು – ದಿವಂಗತ ಅಮಿತ್ ಭಾರದ್ವಾಜ್, ಅಜಯ್ ಭಾರದ್ವಾಜ್, ವಿವೇಕ್ ಭಾರದ್ವಾಜ್, ಸಿಂಪಿ ಭಾರದ್ವಾಜ್, ಮಹೇಂದರ್ ಭಾರದ್ವಾಜ್ ಮತ್ತು ಇತರರ ವಿರುದ್ಧ ಮಹಾರಾಷ್ಟ್ರ ಪೊಲೀಸರು ಮತ್ತು ದೆಹಲಿ ಪೊಲೀಸರು ದಾಖಲಿಸಿದ ಬಹು ಎಫ್ಐಆರ್ಗಳನ್ನು ಆಧರಿಸಿ ಇಡಿ ತನಿಖೆ ಪ್ರಾರಂಭಿಸಿತ್ತು. +ಆರೋಪಿಗಳು ಬಿಟ್ ಕಾಯಿನ್ ರೂಪದಲ್ಲಿ ತಿಂಗಳಿಗೆ ಶೇ.10ರಷ್ಟು ರಿಟರ್ನ್ ನೀಡುವುದಾಗಿ ಸುಳ್ಳು ಭರವಸೆ ನೀಡಿ ಜನರಿಂದ ಬಿಟ್ ಕಾಯಿನ್ ರೂಪದಲ್ಲಿ (2017ರಲ್ಲಿಯೇ 6,600 ಕೋಟಿ ರೂ. ಮೌಲ್ಯ) ಭಾರೀ ಮೊತ್ತದ ಹಣ ಸಂಗ್ರಹಿಸಿದ್ದರು. +ಸಂಗ್ರಹಿಸಿದ ಬಿಟ್ಕಾಯಿನ್ಗಳಲ್ಲಿ ಹೂಡಿಕೆದಾರರು ಕ್ರಿಪೊ್ರೀ ಸ್ವತ್ತುಗಳಲ್ಲಿ ಭಾರೀ ಆದಾಯವನ್ನು ಪಡೆಯಬೇಕಿತ್ತು. ಆದರೆ ಪ್ರವರ್ತಕರು ಹೂಡಿಕೆದಾರರನ್ನು ವಂಚಿಸಿದ್ದಾರೆ ಮತ್ತು ಅಸ್ಪಷ್ಟ ಆನ್ಲೈನ್ ವ್ಯಾಲೆಟ್ಗಳಲ್ಲಿ ಅಕ್ರಮವಾಗಿ ಗಳಿಸಿದ ಬಿಟ್ಕಾಯಿನ್ಗಳನ್ನು ಮರೆಮಾಡುತ್ತಿದ್ದಾರೆ ಎಂಬ ಆರೋಪಿಸಲಾಗಿದೆ. \ No newline at end of file diff --git a/eesanje/url_47_121_11.txt b/eesanje/url_47_121_11.txt new file mode 100644 index 0000000000000000000000000000000000000000..df067c334e8aeeabf3fd072e83602c5c00260a65 --- /dev/null +++ b/eesanje/url_47_121_11.txt @@ -0,0 +1,4 @@ +ದೇಶದಲ್ಲಿ ಮತ್ತೆ ಹೆಚ್ಚಿದ ಹಕ್ಕಿಜ್ವರದ ಭೀತಿ +ಅಲಪ್ಪುಳ,ಏ.18-ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಶುರುವಾಗಿದೆ.ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಸ್ಥಳಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎಡತ್ವ ಗ್ರಾಮ ಪಂಚಾಯಿತಿಯ ವಾರ್ಡ್ 1ರ ಪ್ರದೇಶದಲ್ಲಿ ಮತ್ತು ಚೆರುತನ ಗ್ರಾಮ ಪಂಚಾಯಿತಿಯ ವಾರ್ಡ್ 3ರ ಮತ್ತೊಂದು ಪ್ರದೇಶದಲ್ಲಿ ಸಾಕಿರುವ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ ಎಂದು ಅವರು ಹೇಳಿದರು. +ಹಕ್ಕಿ ಜ್ವರದ ಲಕ್ಷಣಗಳನ್ನು ತೋರಿಸುವ ಬಾತುಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಭೋಪಾಲ್ನ ಲ್ಯಾಬ್ಗೆ ಕಳುಹಿಸಿದಾಗ ಎಚ್5ಎನ್1 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ದೃಢಪಡಿಸಿದರು.ಈ ಪರಿಸ್ಥಿತಿಯಲ್ಲಿ, ಭಾರತ ಸರ್ಕಾರದ ಕ್ರಿಯಾ ಯೋಜನೆಯ ಪ್ರಕಾರ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಹಕ್ಕಿಜ್ವರ ಕಾಣಿಸಿಕೊಂಡ ಒಂದು ಕಿಲೋಮೀಟರ್ ವ್ಯಾಪ್ತಿಯೊಳಗೆ ದೇಶೀಯ ಪಕ್ಷಿಗಳನ್ನು ಕೊಂದು ನಾಶಪಡಿಸುವ (ಕೊಲ್ಲುವ) ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿರ್ಧರಿಸಿತು. +ಹೊಸ ಸಂಶೋಧನೆಯು ವ್ಯಾಪಕವಾದ ಪರಿಣಾಮವನ್ನು ಬಹಿರಂಗಪಡಿಸಿದಂತೆ ಬರ್ಡ್ ಫ್ಲೂ ಸಾಂಕ್ರಾಮಿಕ ಬೆದರಿಕೆಯು ಹೊರಹೊಮ್ಮುತ್ತದೆ. ಕ್ಷಿಪ್ರ ಕ್ರಿಯಾ ಪಡೆ ರಚಿಸಲಾಗುವುದು ಮತ್ತು ಆದಷ್ಟು ಬೇಗ ಪ್ರಾಣಿ ಕಲ್ಯಾಣ ಇಲಾಖೆಯಿಂದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಮನುಷ್ಯರಿಗೆ ರೋಗ ಹರಡುವ ಸಾಧ್ಯತೆ ಇಲ್ಲದಿರುವುದರಿಂದ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ. \ No newline at end of file diff --git a/eesanje/url_47_121_12.txt b/eesanje/url_47_121_12.txt new file mode 100644 index 0000000000000000000000000000000000000000..88d33325bf53361edc02d850f56baaa1794effe7 --- /dev/null +++ b/eesanje/url_47_121_12.txt @@ -0,0 +1,8 @@ +ನಾನು ಶ್ರೀಕೃಷ್ಣನ ಗೋಪಿಕೆ : ಹೇಮಾಮಾಲಿನಿ +ಮಥುರಾ,ಏ.18- (ಪಿಟಿಐ)-ಮಥುರಾದಿಂದ ಲೋಕಸಭೆಗೆ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಟಿ-ರಾಜಕಾರಣಿ ಹೇಮಾ ಮಾಲಿನಿ ಅವರು ತಮ್ಮನ್ನು ತಾವು ಶ್ರೀ ಕೃಷ್ಣನ ಗೋಪಿಕೆ ಎಂದು ಪರಿಗಣಿಸುವುದಾಗಿ ಹೇಳಿಕೊಂಡಿದ್ದಾರೆ.ನಾನು ಹೆಸರಿಗಾಗಿ ಅಥವಾ ಖ್ಯಾತಿಗಾಗಿ ರಾಜಕೀಯಕ್ಕೆ ಸೇರಲಿಲ್ಲ. ನಾನು ಯಾವುದೇ ಭೌತಿಕ ಲಾಭಕ್ಕಾಗಿ ರಾಜಕೀಯಕ್ಕೆ ಸೇರಿಲ್ಲ ಎಂದು ಮಥುರಾ ಸಂಸದರಾದ ಹೇಮಮಾಲಿನಿ ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ತನ್ನನ್ನು ತಾನು ಕೃಷ್ಣನ ಗೋಪಿಕೆ ಎಂದು ಕರೆದುಕೊಳ್ಳುವ ಹೇಮಾ ಮಾಲಿನಿ, ಭಗವಾನ್ ಕೃಷ್ಣನು ಬ್ರಿಜ್ವಾಸಿಗಳನ್ನು ಪ್ರೀತಿಸುವುದರಿಂದ, ಅವರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ ಮಾತ್ರ ತನ್ನ ಆಶೀರ್ವಾದವನ್ನು ತನ್ನ ಮೇಲೆ ಧಾರೆ ಎರೆಯುತ್ತಾರೆ ಎಂದು ಅವರು ಭಾವಿಸಿದ್ದರು. ಮತ್ತು ನಾನು ಅದರ ಪ್ರಕಾರ ಬ್ರಿಜ್ವಾಸಿಗಳಿಗೆ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಅವರು ಹೇಳಿದರು. +ಮಥುರಾದಿಂದ ಮೂರನೇ ಬಾರಿಗೆ ಬ್ರಿಜ್ವಾಸಿಗಳಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಅವರು ಕೃತಜ್ಞತೆ ಸಲ್ಲಿಸಿದರು.ಶೋಚನೀಯ ಸ್ಥಿತಿಯಲ್ಲಿರುವ ಬ್ರಾಜ್ 84 ಕೋಸ್ ಪರಿಕ್ರಮದ ಅಭಿವೃದ್ಧಿಯು ತನ್ನ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು. +ಬ್ರಾಜ್ 84 ಕಾಸ್ ಪರಿಕ್ರಮವನ್ನು ಪ್ರವಾಸಿಗರಿಗೆ ಹಿತವಾದ, ಆಕರ್ಷಣೀಯ ಮತ್ತು ಆಕರ್ಷಕವಾಗಿಸಲು ಪ್ರಯತ್ನಿಸಲಾಗುವುದು ಎಂದು ಮಥುರಾದಿಂದ ಎರಡು ಅವಧಿಯ ಸಂಸದರಾದ ಹೇಮಾ ಮಾಲಿನಿ ಹೇಳಿದರು.ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ತಮ್ಮ ಮನವಿಯನ್ನು ಪರಿಗಣಿಸಲು ಸಾಕಷ್ಟು ದಯೆ ತೋರಿದ್ದಾರೆ ಮತ್ತು ಅವರು ಬ್ರಜ್ 84 ಕಾಸ್ ಪರಿಕ್ರಮದ ನವೀಕರಣಕ್ಕಾಗಿ 5,000 ಕೋಟಿ ರೂ.11,000 ಕೋಟಿ ರೂ.ಗೆ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧಗೊಂಡಿರುವುದರಿಂದ, ಯಾತ್ರಿಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಕರ್ಷಕ ಮತ್ತು ಮೋಡಿಮಾಡುವ ಆದರ್ಶ ಮೂಲಸೌಕರ್ಯಕ್ಕಾಗಿ ನಾನು ಉಳಿದ ಮೊತ್ತವನ್ನು ಮಂಜೂರು ಮಾಡುತ್ತೇನೆ. ಪ್ರವಾಸಿಗರು, ಅವರು ಹೇಳಿದರು. +ಪ್ರವಾಸೋದ್ಯಮವು ಸ್ಥಳೀಯರಿಗೆ ಉದ್ಯೋಗದ ದ್ವಾರಗಳನ್ನು ತೆರೆಯುತ್ತದೆ ಎಂದು ಅವರು ಹೇಳಿದರು.ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸ ಮಾಡುವುದು ಅವರ ಎರಡನೇ ಆದ್ಯತೆಯಾಗಿದೆ ಎಂದು ಅವರು ಹೇಳಿದರು.ನಮಾಮಿ ಗಂಗೆ ಯೋಜನೆಗೆ ಚಾಲನೆ ನೀಡುವ ಮುನ್ನವೇ ಗಂಗಾ ಮತ್ತು ಯಮುನಾ ನದಿಗಳ ಮಾಲಿನ್ಯದ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ್ದೆ ಎಂದು ಹೇಮಾ ಮಾಲಿನಿ ಹೇಳಿಕೊಂಡಿದ್ದಾರೆ. +ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರು ನಮಾಮಿ ಗಂಗೆ ಯೋಜನೆಯಲ್ಲಿ ಆಸಕ್ತಿ ವಹಿಸಿದಾಗಿನಿಂದ, ಪ್ರಯಾಗರಾಜ್ನಲ್ಲಿ ಗಂಗಾ ನೀರು ಪಾರದರ್ಶಕ ಮತ್ತು ಮಾಲಿನ್ಯ ಮುಕ್ತವಾಗಿದೆ ಎಂದು ಅವರು ಹೇಳಿದರು. ಆದರೆ ಯಮುನಾ ನದಿಯ ಮಾಲಿನ್ಯ ಸಮಸ್ಯೆಯನ್ನು ಪರಿಹರಿಸಲು ದೆಹಲಿ ಸರ್ಕಾರ ಆಸಕ್ತಿ ವಹಿಸಲಿಲ್ಲ ಮತ್ತು ಮಥುರಾದಲ್ಲಿ ಪವಿತ್ರ ನದಿ ಕಲುಷಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ. +ಮಥುರಾ ಸಂಸದರ ಪ್ರಕಾರ, ದೆಹಲಿ ಮತ್ತು ಹರಿಯಾಣದಲ್ಲಿ ಯಮುನಾವನ್ನು ಸ್ವಚ್ಛಗೊಳಿಸದೆ, ಮಥುರಾದಲ್ಲಿ ಸ್ವಚ್ಛ ಯಮುನೆಯ ಕನಸನ್ನು ವಾಸ್ತವಕ್ಕೆ ಅನುವಾದಿಸಲು ಸಾಧ್ಯವಿಲ್ಲ. ಪ್ರಸ್ತುತ, ಯಮುನೋತ್ರಿ ನೀರನ್ನು ದೆಹಲಿ ಮತ್ತು ಹರಿಯಾಣ ಬಳಸುತ್ತಿದೆ ಮತ್ತು ಎರಡೂ ರಾಜ್ಯಗಳ ಒಳಚರಂಡಿ ನೀರನ್ನು ಯಮುನಾಕ್ಕೆ ಬಿಡಲಾಗುತ್ತದೆ, ಹೇಮಾ ಮಾಲಿನಿ ಅವರು ಸ್ವಚ್ಛ ಯಮುನಾಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡುವುದಾಗಿ ಹೇಳಿದರು. \ No newline at end of file diff --git a/eesanje/url_47_121_2.txt b/eesanje/url_47_121_2.txt new file mode 100644 index 0000000000000000000000000000000000000000..c718c0960f7408846319cf2b74c1860fbb2fb11d --- /dev/null +++ b/eesanje/url_47_121_2.txt @@ -0,0 +1,6 @@ +ಫಿಲಿಫೈನ್ಸ್ ತಲುಪಿದ ಭಾರತದ ಬ್ರಹ್ಮೋಸ್ ಸೂಪರ್-ಸೋನಿಕ್ ಕ್ರೂಸ್ ಕ್ಷಿಪಣಿಗಳು +ನವದೆಹಲಿ,ಏ.19-ಆಗ್ನೇಯ ಏಷ್ಯಾದ ದೇಶದೊಂದಿಗೆ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಪೂರೈಸಲು 375 ಮಿಲಿಯನ್ ಅಮೆರಿಕನ್ ಡಾಲರ್ ಒಪ್ಪಂದಕ್ಕೆ ಸಹಿ ಹಾಕಿದ ಎರಡು ವರ್ಷಗಳ ನಂತರ ಇಂದು ಫಿಲಿಪ್ಪೀನ್ಸ್‍ಗೆ ಮೊದಲ ಬ್ಯಾಚ್ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ತಲುಪಿಸಲು ಭಾರತ ಸಜ್ಜಾಗಿದೆ ಎಂದು ತಿಳಿದುಬಂದಿದೆ. +ಭಾರತೀಯ ವಾಯುಪಡೆಯ ಮಿಲಿಟರಿ ಸಾರಿಗೆ ವಿಮಾನವು ಕ್ಷಿಪಣಿ ಮತ್ತು ಲಾಂಚರ್‍ಗಳನ್ನು ದೇಶದ ಸಾಗರ ಪಡೆಗಳಿಗೆ ತಲುಪಿಸಲು ಫಿಲಿಪೈನ್ಸ್‍ಗೆ ಸಾಗಿಸುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.ಜನವರಿ 2022 ರಲ್ಲಿ, ಕ್ಷಿಪಣಿಯ ಮೂರು ಬ್ಯಾಟರಿಗಳನ್ನು ಪೂರೈಸಲು ಭಾರತವು ಫಿಲಿಪೈನ್ಸ್‍ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿತು. ಇದು ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಯ ಮೊದಲ ರಫ್ತ್ತು ಎಂಬುದು ವಿಶೇಷವಾಗಿದೆ. +ಅರ್ಜೆಂಟೀನಾ ಸೇರಿದಂತೆ ಇತರ ಕೆಲವು ದೇಶಗಳು ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಗಳನ್ನು ಪಡೆಯಲು ಆಸಕ್ತಿ ತೋರಿಸಿವೆ.ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಭಾರತ-ರಷ್ಯಾದ ಜಂಟಿ ಉದ್ಯಮವಾಗಿದ್ದು, ಜಲಾಂತರ್ಗಾಮಿ ನೌಕೆಗಳು, ಹಡಗುಗಳು, ವಿಮಾನಗಳು ಅಥವಾ ಭೂ ವೇದಿಕೆಗಳಿಂದ ಉಡಾವಣೆ ಮಾಡಬಹುದಾದ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಉತ್ಪಾದಿಸುತ್ತದೆ. +ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾದ ಹೆಚ್ಚುತ್ತಿರುವ ಮಿಲಿಟರಿ ದೃಢೀಕರಣದ ಬಗ್ಗೆ ಜಾಗತಿಕ ಕಳವಳಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತವು ಫಿಲಿಪೈನ್ಸ್‍ನೊಂದಿಗೆ ರಕ್ಷಣಾ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ನೋಡುತ್ತಿದೆ. +ಹೈಡ್ರೋಕಾರ್ಬನ್‍ಗಳ ಬೃಹತ್ ಮೂಲವಾದ ದಕ್ಷಿಣ ಚೀನಾ ಸಮುದ್ರದ ಮೇಲೆ ಚೀನಾದ ಸಾರ್ವಭೌಮತ್ವದ ವ್ಯಾಪಕ ಹಕ್ಕುಗಳ ಬಗ್ಗೆ ಜಾಗತಿಕ ಕಳವಳಗಳು ಹೆಚ್ಚುತ್ತಿವೆ. ವಿಯೆಟ್ನಾಂ, ಫಿಲಿಪೈನ್ಸ್ ಮತ್ತು ಬ್ರೂನಿ ಸೇರಿದಂತೆ ಹಲವಾರು ದೇಶಗಳು ಪ್ರತಿವಾದವನ್ನು ಹೊಂದಿವೆ.ಫಿಲಿಪೈನ್ಸ್‍ನೊಂದಿಗೆ ಮಿಲಿಟರಿ ಬಾಂಧವ್ಯವನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿ, ಇಥಿಯೋಪಿಯಾ, ಮೊಜಾಂಬಿಕ್, ಪೋಲೆಂಡ್ ಮತ್ತು ಐವರಿ ಕೋಸ್ಟ್‍ನೊಂದಿಗೆ ಆ ದೇಶಕ್ಕೆ ರಕ್ಷಣಾ ಅಟ್ಯಾಚ್ ಅನ್ನು ಪೋಸ್ಟ್ ಮಾಡಲು ಭಾರತ ನಿರ್ಧರಿಸಿದೆ. \ No newline at end of file diff --git a/eesanje/url_47_121_3.txt b/eesanje/url_47_121_3.txt new file mode 100644 index 0000000000000000000000000000000000000000..882a73f0852d2fc41af335366de2e320b453acb9 --- /dev/null +++ b/eesanje/url_47_121_3.txt @@ -0,0 +1,7 @@ +ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಸಿಆರ್‌ಪಿಎಫ್‌ ಸೈನಿಕ ಶವವಾಗಿ ಪತ್ತೆ +ಕೂಚ್‍ಬೆಹಾರ್,ಏ.19-ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ವಾಶ್‍ರೂಮ್‍ನಲ್ಲಿ ಕಾಲು ಜಾರಿ ಬಿದ್ದು ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಇಂದು ಬೆಳಿಗ್ಗೆ ತಿಳಿಸಿವೆ.ಇಂದು ಮತದಾನ ನಡೆಯಲಿರುವ ಕೂಚ್‍ಬೆಹರ್‍ನ ಮಠಭಂಗದಲ್ಲಿರುವ ಮತಗಟ್ಟೆಯಲ್ಲಿ ಈ ಘಟನೆ ಸಂಭವಿಸಿದ್ದು, ಅವರ ಸಾವು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. +ಮತದಾನ ಆರಂಭವಾಗುವ ಮುನ್ನವೇ ಸಿಆರ್‍ಪಿಎಫ್ ಸಿಬ್ಬಂದಿ ನಿರ್ಜೀವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಅಲ್ಲಿ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು. +ಅವರು ವಾಶ್ ರೂಂನಲ್ಲಿ ಜಾರಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.ಯಾವುದೇ ಅಪರಾಧದ ಕೋನವನ್ನು ಶಂಕಿಸಲಾಗಿಲ್ಲ, ಆದರೆ ಇಂದು ಶವಪರೀಕ್ಷೆ ನಡೆದ ನಂತರ ಅವರ ಸಾವಿನ ಹಿಂದಿನ ನಿಜವಾದ ಕಾರಣವನ್ನು ಕಂಡುಹಿಡಿಯಬಹುದು. +ಕೂಚ್‍ಬೆಹಾರ್‍ನಲ್ಲಿ ಇಂದು ಬೆಳಗ್ಗೆ ಭಾರೀ ಭದ್ರತೆಯಲ್ಲಿ ಮತದಾನ ಆರಂಭವಾಗಿದೆ. ಬಿಜೆಪಿಯು ಹಾಲಿ ಸಂಸದ ನಿಸಿತ್ ಪ್ರಮಾಣಿಕ್ ಅವರನ್ನು ಇಲ್ಲಿಂದ ಪುನರಾವರ್ತನೆ ಮಾಡಿದ್ದು, ತೃಣಮೂಲ ಜಗದೀಶ್ ಬಸುನಿಯಾ ಎದುರಾಳಿಯಾಗಿದ್ದಾರೆ. +ಉತ್ತರ ಬಂಗಾಳದ ಕೂಚ್‍ಬೆಹರ್ 2021 ರಲ್ಲಿ ನಡೆದ ರಾಜ್ಯ ಚುನಾವಣೆಯ ಸಮಯದಲ್ಲಿ ಘರ್ಷಣೆಯನ್ನು ಕಂಡಿತ್ತು. ಸಿತಾಲ್ಕುಚಿಯ ಮತಗಟ್ಟೆಯ ಹೊರಗೆ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ನಾಲ್ವರು ಗುಂಡು ಹಾರಿಸಿ ಕೊಲ್ಲಲಾಗಿತ್ತು. ಆ ನಂತರ ಚುನಾವಣಾ ಆಯೋಗವು ಮತದಾನವನ್ನು ನಿಲ್ಲಿಸಿತು. +ಇಂದು ಬಂಗಾಳದ ಅಲಿಪುರ್ದುವಾರ್ಸ್ ಮತ್ತು ಜಲ್ಪೈಗುರಿ ಸ್ಥಾನಗಳಿಗೆ ಚುನಾವಣೆಗಳು ನಡೆಯುತ್ತಿವೆ, ಇವೆರಡೂ 2019 ರಲ್ಲಿ ಬಿಜೆಪಿ ಗೆದ್ದಿವೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಒಟ್ಟು 22 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 18 ಸ್ಥಾನಗಳನ್ನು ಗಳಿಸಿತು. \ No newline at end of file diff --git a/eesanje/url_47_121_4.txt b/eesanje/url_47_121_4.txt new file mode 100644 index 0000000000000000000000000000000000000000..f8106e5ae583f6085e22407592f1e67be47717dd --- /dev/null +++ b/eesanje/url_47_121_4.txt @@ -0,0 +1,12 @@ +ದೇಶದಲ್ಲಿ ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ +ನವದೆಹಲಿ,ಏ.19-ಲೋಕಸಭೆಯ 18ನೇ ಅವಧಿಗೆ ಇಂದು ಮೊದಲ ಹಂತದ ಮತದಾನ ನಡೆದಿದ್ದು, ದೇಶದ 21 ರಾಜ್ಯಗಳ 102 ಕ್ಷೇತ್ರಗಳಲ್ಲಿ 16 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.ಒಟ್ಟು 7 ಹಂತಗಳಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೊದಲನೆಯ ಹಂತದಲ್ಲೇ ಅತೀ ಹೆಚ್ಚು ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. +ಚುನಾವಣಾ ಆಯೋಗ ಇದೇ ವೇಳೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದ ವಿಧಾನಸಭೆಗಳಿಗೂ ಮತದಾನ ಆಯೋಜಿಸಿತ್ತು.ಬೆಳಿಗ್ಗೆಯಿಂದಲೇ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿರುಬೇಸಿಗೆಯ ಬಿಸಿಲು ಮಧ್ಯಾಹ್ನದ ಮೇಲೆ ಹೆಚ್ಚಾಗುವುದರಿಂದ ಬೆಳಗಿನ ಕಡಿಮೆ ಉಷ್ಣಾಂಶವಿದ್ದಾಗ ಮತದಾನ ಮಾಡಲು ಸಾರ್ವಜನಿಕರು ಆಸಕ್ತಿ ತೋರಿಸಿದ್ದಾರೆ. ಸಾಲುಗಟ್ಟಿ ಮತಗಟ್ಟೆಗಳ ಮುಂದೆ ನಿಂತು ಹಕ್ಕು ಚಲಾಯಿಸಿದ್ದಾರೆ. +ಬಳಿಕ ಮತದಾನ ಮಾಡಿದ್ದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ ಎಂಬ ಫೋಟೊಶೂಟ್ ವ್ಯವಸ್ಥೆ ಮಾಡಲಾಗಿತ್ತು. ಅದರಲ್ಲಿ ಫೋಟೊ ತೆಗೆಸಿಕೊಂಡು ಸಾಕಷ್ಟು ಮಂದಿ ಖುಷಿಪಟ್ಟರು.ಮೊದಲ ಹಂತದ ಯುವ ಮತದಾರರಲ್ಲಿ ಹೆಚ್ಚಿನ ಉತ್ಸುಕತೆ ಕಂಡುಬಂದರೆ, ಹಿರಿಯ ನಾಗರಿಕರು ತಾವೇನೂ ಕಡಿಮೆಯಿಲ್ಲ ಎಂಬಂತೆ ಸಹಾಯಕರ ನೆರವಿನಲ್ಲಿ ಬಂದು ಮತ ಚಲಾಯಿಸಿದರು. +ಅರುಣಾಚಲ ಪ್ರದೇಶ ಕುರುಂಗ್ ಕುಮೆ ಜಿಲ್ಲೆಯಲ್ಲಿ ಸಶಸ್ತ್ರ ಪಡೆಗಳ ಬಿಗಿ ಪಹರೆಯಲ್ಲಿ ಸಾರ್ವಜನಿಕರು ಅದರಲ್ಲೂ ಹಿರಿಯ ನಾಗರಿಕರು ಮತದಾನ ಮಾಡಿದರು.ಮಣಿಪುರದಲ್ಲಿ ಪ್ರತಿ ಮತಗಟ್ಟೆಗೂ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿತ್ತು. ಸಾರ್ವಜನಿಕರು ನಿರ್ಭೀತಿಯಿಂದ ಮತದಾನ ಮಾಡಲು ವಿಶ್ವಾಸ ಮೂಡುವಂತೆ ವ್ಯವಸ್ಥೆ ಕಲ್ಪಿಸಲಾಗಿತ್ತು.ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಇಂದು ಮದುವೆ ಮಂಟಪದಿಂದ ನವ ದಂಪತಿಗಳ ಜೋಡಿಯೊಂದು ಹಾರ, ತುರಾಯಿಗಳ ಜೊತೆಯಲ್ಲೇ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿರುವುದು ವಿಶೇಷವಾಗಿತ್ತು. +ಮರಳುಗಾಡು ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಹಲವು ಕಡೆ ಬಿಸಿಲಿನ ತಾಪ ತೀವ್ರ ಹೆಚ್ಚಾದ ಹಿನ್ನೆಲೆಯಲ್ಲಿ ಆಯೋಗ ಪೆಂಡಾಲ್‍ಗಳನ್ನು ಹಾಕಿ ನೆರಳಿನ ವ್ಯವಸ್ಥೆ ಮಾಡಿತ್ತು.ಪಶ್ಚಿಮ ಬಂಗಾಳದಲ್ಲಿ ಮತಗಟ್ಟೆಗಳನ್ನು ತಳಿರು-ತೋರಣ ಹಾಗೂ ಹೂಗಳಿಂದ ಅಲಂಕರಿಸಲಾಗಿತ್ತು ಮತ್ತು ವ್ಯಾಪಕ ಬಿಗಿಭದ್ರತೆಯನ್ನು ಆಯೋಜಿಸಲಾಗಿತ್ತು. ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳಲ್ಲಿ ಮತದಾರರು ಲೋಕಸಭೆ ಹಾಗೂ ವಿಧಾನಸಭೆ ಎರಡಕ್ಕೂ ತಮ್ಮ ಹಕ್ಕು ಚಲಾಯಿಸಿದರು. +ದ್ರಾವಿಡನಾಡು ತಮಿಳುನಾಡಿನಲ್ಲಿ ಜನ ಆಸಕ್ತಿಯಿಂದ ಮತದಾನದಲ್ಲಿ ಪಾಲ್ಗೊಂಡಿದ್ದರು. ಚುನಾವಣಾ ಆಯೋಗ ಮತಗಟ್ಟೆಗಳ ವಿವರಗಳಿರುವ ಚೀಟಿಯನ್ನು ಪ್ರತಿಯೊಬ್ಬರಿಗೂ ತಲುಪಿಸಿತ್ತು. ಮತದಾನಕ್ಕೆ ಆಗಮಿಸಿದವರ ಕೈಯಲ್ಲಿ ಗುರುತಿನ ಚೀಟಿ ಹಾಗೂ ಆಯೋಗ ನೀಡಿದ ಮಾಹಿತಿ ಪತ್ರಗಳು ಗಮನ ಸೆಳೆದವು. ಅಸಕ್ತರು ಹಾಗೂ ಹಿರಿಯರಿಗಾಗಿ ಮತಕೇಂದ್ರಗಳಲ್ಲಿ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ಅವರಿಗೆ ನೆರವು ನೀಡಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ನಿಯೋಜಿಸಲಾಗಿತ್ತು. +ಅರುಣಾಚಲ ಪ್ರದೇಶ, ಮೇಘಾಲಯದಲ್ಲಿ ತಲಾ 2, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ಅಂಡಮಾನ್-ನಿಕೋಬಾರ್, ಲಕ್ಷದೀಪ್, ಪುದುಚೇರಿ, ಕ್ಷೇತ್ರಗಳಲ್ಲಿ ತಲಾ 1, ಉತ್ತರಾಖಾಂಡ್‍ನಲ್ಲಿ 5 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈ ಭಾಗದಲ್ಲಿ ಇರುವ ಎಲ್ಲಾ ಕ್ಷೇತ್ರಗಳಿಗೂ ಮೊದಲ ಅವಯಲ್ಲೇ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದೆ. ಉಳಿದಂತೆ ಅಸ್ಸಾಂನ 14 ಕ್ಷೇತ್ರಗಳಲ್ಲಿ 5 ಕ್ಕೆ, ಬಿಹಾರದ 40 ಕ್ಷೇತ್ರಗಳಲ್ಲಿ 4 ಕ್ಕೆ, ಛತ್ತೀಸ್‍ಗಡದ 11 ಕ್ಷೇತ್ರಗಳಲ್ಲಿ 1 ಕ್ಕೆ, ಮಧ್ಯಪ್ರದೇಶದ 21 ಕ್ಷೇತ್ರಗಳಲ್ಲಿ 6ಕ್ಕೆ, ಮಹಾರಾಷ್ಟ್ರದ 48 ಕ್ಷೇತ್ರಗಳಲ್ಲಿ 5 ಕ್ಕೆ, ಮಣಿಪುರದಲ್ಲಿ 2 ಕ್ಷೇತ್ರಗಳ ಪೈಕಿ 1 ಮತ್ತು ಅರ್ಧ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ.ರಾಜಸ್ಥಾನದ 25 ರಲ್ಲಿ 12 ಕ್ಕೆ ಮತದಾನ ನಡೆದರೆ, ತಮಿಳುನಾಡಿನ 39 ಕ್ಷೇತ್ರಗಳಿಗೂ ಮೊದಲ ಹಂತದಲ್ಲೇ ಚುನಾವಣಾ ನಡೆದಿದೆ. +ಉತ್ತರ ಪ್ರದೇಶದ 80 ರ ಪೈಕಿ 8 ಕ್ಷೇತ್ರಗಳಿಗೆ, ಪಶ್ಚಿಮಬಂಗಾಳದ 42 ಕ್ಷೇತ್ರಗಳ ಪೈಕಿ 3ಕ್ಕೆ, ಜಮ್ಮು-ಕಾಶ್ಮೀರದ 5 ಕ್ಷೇತ್ರಗಳ ಪೈಕಿ 1 ಕ್ಕೆ ಮತದಾನ ನಡೆದಿದೆ.ಮೊದಲ ಹಂತದ ಚುನಾವಣೆಗೆ 1.87 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 18 ಲಕ್ಷ ಸಿಬ್ಬಂದಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. +ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಲು ಮುಕ್ತ, ನಿಸ್ಪಕ್ಷಪಾತ, ಶಾಂತಿಯುತ, ನಿರ್ಭೀತ ಮತ್ತು ಸುಲಭ ಮತದಾನಕ್ಕೆ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ನೆರವಿನಲ್ಲಿ ಆಯೋಗ ಬಿಗಿ ಕ್ರಮಗಳನ್ನು ಕೈಗೊಂಡಿತ್ತು. +ಅರುಣಾಚಲ ಪ್ರದೇಶ ಹಾಗೂ ಮತ್ತಿತರ ಕಡೆಗಳಲ್ಲಿ ದುರ್ಗಮ ಪ್ರದೇಶಗಳಿಗೆ ತಲುಪಲು ಆಯೋಗ ಸಿಬ್ಬಂದಿ ಹರಸಾಹಸ ಪಟ್ಟಿರುವ ವಿಡಿಯೋವನ್ನು ಹಂಚಿಕೊಂಡಿರುವ ಚುನಾವಣಾ ಆಯೋಗ ಪ್ರಜಾಪ್ರಭುತ್ವದ ಸ್ಥಿರತೆಗೆ ತಮ್ಮ ಬದ್ಧತೆಯನ್ನು ದೃಢಪಡಿಸಲಾಗುತ್ತಿದೆ ಎಂದು ಹೇಳಿಕೊಂಡಿದೆ. +ಇಂದು ಚುನಾವಣೆ ನಡೆದ ಲೋಕಸಭಾ ಕ್ಷೇತ್ರಗಳಲ್ಲಿ 73 ಸಾಮಾನ್ಯ ಕ್ಷೇತ್ರಗಳಾಗಿದ್ದರೆ, 11 ಪರಿಶಿಷ್ಟ ಪಂಗಡ, 18 ಪರಿಶಿಷ್ಟ ಜಾತಿ ಕ್ಷೇತ್ರಗಳಾಗಿವೆ. ಅರುಣಾಚಲ ಪ್ರದೇಶ, ಸಿಕ್ಕಿಂನ 92 ವಿಧಾನಸಭಾ ಕ್ಷೇತ್ರಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೂ ಮತದಾನ ನಡೆದಿದೆ. \ No newline at end of file diff --git a/eesanje/url_47_121_5.txt b/eesanje/url_47_121_5.txt new file mode 100644 index 0000000000000000000000000000000000000000..36424edeb05e88cb6abc72452755ae8361248f21 --- /dev/null +++ b/eesanje/url_47_121_5.txt @@ -0,0 +1,7 @@ +ಕಾಂಗ್ರೆಸ್‍ ಪರ ಪ್ರಚಾರ ಮಾಡದಿರಲು ನವಜೋತ್ ಸಿಂಗ್ ಸಿದ್ಧು ನಿರ್ಧಾರ +ಚಂಡೀಗಢ,ಏ.19-ಲೋಕಸಭಾ ಚುನಾವಣೆಯಲ್ಲಿ ನವಜೋತ್ ಸಿಂಗ್ ಸಿದ್ಧು ಹಾಗೂ ಅವರ ಗುಂಪಿನ ಯಾವುದೇ ಕಾರ್ಯಕರ್ತರು ಕಾಂಗ್ರೆಸ್ ಪರ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರಲ್ಲದೆ, ಪಂಜಾಬ್ ಮಾಜಿ ಕಾಂಗ್ರೆಸ್ ಅಧ್ಯಕ್ಷ ಶಂಶೇರ್ ಸಿಂಗ್ ಡುಲ್ಲೋ, ಮಾಜಿ ಶಾಸಕ ನಾಜರ್‍ಸಿಂಗ್ ಮನ್ಶಾಹಿಯಾ, ಜಗದೇವ್ ಸಿಂಗ್ ಕಮಲು, ಮಹೇಶ್ ಇಂದರ್ ಸಿಂಗ್ ಮತ್ತು ಬಟಿಂಡಾ ಗ್ರಾಮಾಂತರ ಕಾಂಗ್ರೆಸ್ ಉಸ್ತುವಾರಿ ಹರ್ಬಿಂದರ್ ಲಾಡಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಈ ತೀರ್ಮಾನ ಕೈಗೊಂಡಿದ್ದಾರೆ. +ಪಕ್ಷಕ್ಕೆ ಅಗತ್ಯವಿರುವಾಗ ನವಜೋತ್ ಸಿಂಗ್ ಸಿಧು ಅವರನ್ನು ನೆನಪಿಸಿಕೊಳ್ಳುತ್ತಾರೆ. ಆದರೆ ಚುನಾವಣೆಯ ನಂತರ ಅವರನ್ನು ಕಡೆಗಣಿಸಲಾಗುತ್ತದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. +ಲೋಕಸಭೆ ಚುನಾವಣೆಗೆ ಪಕ್ಷವು ತನ್ನ ಅಭ್ಯರ್ಥಿಗಳನ್ನು ನಿರ್ಧರಿಸುವಾಗ ನವಜೋತ್ ಸಿಂಗ್ ಸಿದ್ಧು ಅವರೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಈಗ ಚುನಾವಣಾ ಪ್ರಚಾರಕ್ಕಾಗಿ ಅಭ್ಯರ್ಥಿಗಳು ಸಿದ್ಧು ಅವರನ್ನು ಸಂಪರ್ಕಿಸಿ ಪ್ರಚಾರಕ್ಕಾಗಿ ರ್ಯಾಲಿಗಳನ್ನು ನಡೆಸುವಂತೆ ಮನವಿ ಮಾಡುತ್ತಿದ್ದಾರೆ ಎಂದಿದ್ದಾರೆ. +ಪಕ್ಷದ ಮೇಲೆ ಸಿದ್ಧುಗೆ ಸಿಟ್ಟು :ನವಜೋತ್ ಸಿಂಗ್ ಸಿದ್ಧು ಅವರು ಪಕ್ಷವನ್ನು ಬಲಪಡಿಸಲು ಪಂಜಾಬ್‍ನಾದ್ಯಂತ ರ್ಯಾಲಿಗಳನ್ನು ನಡೆಸುತ್ತಿದ್ದಾಗ, ಸಿದ್ಧು ಅವರ ರ್ಯಾಲಿಗಳನ್ನು ಆಯೋಜಿಸಿದ ಅನೇಕ ನಾಯಕರನ್ನು ಅನಗತ್ಯವಾಗಿ ಪಕ್ಷದಿಂದ ಹೊರಹಾಕಲಾಯಿತು ಎಂದು ಕೆಲ ಕಾರ್ಯಕರ್ತರು ದೂರಿದ್ದಾರೆ. +ಟಿಕೆಟ್ ನಿರಾಕರಣೆ ನವಜೋತ್ ಸಿಂಗ್ ಸಿದ್ಧು ಅವರು ತಮ್ಮ ಪತ್ನಿಯ ಅನಾರೋಗ್ಯದ ಕಾರಣಕ್ಕಾಗಿ ಕಾಂಗ್ರೆಸ್ ಟಿಕೆಟ್‍ನಲ್ಲಿ ಪಟಿಯಾಲ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ರ್ಪಸಲು ನಿರಾಕರಿಸಿದ್ದರು ಮತ್ತು ನಂತರ ಅವರು ತಮ್ಮ ಆರ್ಥಿಕ ಸ್ಥಿತಿಯನ್ನು ಉಲ್ಲೇಖಿಸಿ ಐಪಿಎಲ್‍ಗೆ ಸೇರಿದ್ದರು. +ಸದ್ಯ ಸಿಧು ಐಪಿಎಲ್‍ನಲ್ಲಿ ಕಾಮೆಂಟೇಟರ್ ಆಗಿ ತೊಡಗಿಸಿಕೊಂಡಿದ್ದಾರೆ. ಐಪಿಎಲ್‍ನಲ್ಲಿ ತೊಡಗಿಸಿಕೊಂಡಿರುವ ಕಾರಣ ಸಿದ್ಧು ರಾಜಕೀಯ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ನವಜೋತ್ ಸಿಂಗ್ ಸಿಧು ಅವರ ಗುಂಪಿನ ನಾಯಕರ ಜೊತೆಗಿನ ಈ ಸಭೆಯು ಮತ್ತೊಮ್ಮೆ ಪಂಜಾಬ್ ಕಾಂಗ್ರೆಸ್‍ನಲ್ಲಿ ನವಜೋತ್ ಸಿಂಗ್ ಸಿದ್ಧು ವರ್ಸಸ್ ಆಲ್ ಎಂಬ ಪರಿಸ್ಥಿತಿಯನ್ನು ಸೃಷ್ಟಿಸಬಹುದು ಎಂಬ ನಿರೀಕ್ಷೆ ಇದೆ. \ No newline at end of file diff --git a/eesanje/url_47_121_6.txt b/eesanje/url_47_121_6.txt new file mode 100644 index 0000000000000000000000000000000000000000..f1122235a0aebdb9fc4b877558bfe2307b4bfb31 --- /dev/null +++ b/eesanje/url_47_121_6.txt @@ -0,0 +1,4 @@ +ಮೊದಲ ಹಂತದ ಚುನಾವಣೆ : ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಮೋದಿ ಮನವಿ +ನವದೆಹಲಿ,ಏ.19-ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ. +ಲೋಕಸಭೆ ಚುನಾವಣೆ 2024 ಇಂದಿನಿಂದ ಆರಂಭವಾಗಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿದಂತೆ 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈ ಕ್ಷೇತ್ರಗಳಲ್ಲಿರುವ ಎಲ್ಲ ಮತದಾರರು ದಾಖಲೆ ಸಂಖ್ಯೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. +ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ ಎಂದು ವಿವಿಧ ಭಾಷೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_121_7.txt b/eesanje/url_47_121_7.txt new file mode 100644 index 0000000000000000000000000000000000000000..e723772011e75e2b4d51156ebabf1bb49f9ecbb4 --- /dev/null +++ b/eesanje/url_47_121_7.txt @@ -0,0 +1,5 @@ +ಕೊಯಮತ್ತೂರಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆಯಿಂದ 1,000 ಕೋಟಿ ರೂ. ಖರ್ಚು : ಅಣ್ಣಾಮಲೈ +ಚೆನ್ನೈ,ಏ.19-ಮತದಾರರ ಮೇಲೆ ಪ್ರಭಾವ ಬೀರಲು ಡಿಎಂಕೆ ಮತ್ತು ಎಐಎಡಿಎಂಕೆ ಕೊಯಮತ್ತೂರಿನಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಮತ್ತು ಕೊಯಮತ್ತೂರು ಅಭ್ಯರ್ಥಿ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಕರೂರಿನ ಉತ್ತುಪಟ್ಟಿಯಲ್ಲಿನ ಮತಗಟ್ಟೆಯಲ್ಲಿ ವೋಟ್ ಮಾಡಿದ ನಂತರ ಮಾತನಾಡಿದ ಅವರು, ಬಿಜೆಪಿಯ ವ್ಯಕ್ತಿಯೊಬ್ಬರು ತಮ್ಮ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುವ ಯಾವುದೇ ವ್ಯಕ್ತಿಯನ್ನು ವಿರೋಧ ಪಕ್ಷಗಳು ಕರೆತರಲು ಸಾಧ್ಯವಾದರೆ, ಅವರು ಆ ದಿನವೇ ರಾಜಕೀಯವನ್ನು ತೊರೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. +ಇಂದು ತಮಿಳುನಾಡಿನ ಎಲ್ಲಾ 39 ಸ್ಥಾನಗಳಲ್ಲಿ ಮತದಾನ ನಡೆಯುತ್ತಿದೆ. ಕೊಯಮತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವಿರುದ್ಧ ಡಿಎಂಕೆ ನಾಯಕ ಗಣಪತಿ ಪಿ.ರಾಜ್‍ಕುಮಾರ್ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಎಐಎಡಿಎಂಕೆಯ ಸಿಂಗೈ ರಾಮಚಂದ್ರನ್ ಸ್ರ್ಪಸಿದ್ದಾರೆ. +ಕೊಯಮತ್ತೂರಿನಲ್ಲಿ ಡಿಎಂಕೆ, ಎಐಎಡಿಎಂಕೆ ನಾಯಕರು ಏನು ಮಾಡುತ್ತಿದ್ದಾರೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಕೊಯಮತ್ತೂರಿನಲ್ಲಿ 1,000 ಕೋಟಿ ರೂ.ಗೂ ಹೆಚ್ಚು ಖರ್ಚು ಮಾಡಿವೆ. ಆದರೆ, ಬಿಜೆಪಿಯವರು ತಮ್ಮ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಯಾರಾದರೂ ಒಬ್ಬ ಮತದಾರನನ್ನು ಮಾಧ್ಯಮದ ಮುಂದೆ ಕರೆತಂದು ಹೇಳಿಸಿದರೆ, ನಾನು ಅದೇ ದಿನ ರಾಜಕೀಯ ತೊರೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. +ನಾನು ಈ ಚುನಾವಣೆಯಲ್ಲಿ ನಿಯಮದ ಪ್ರಕಾರ ಸ್ಪರ್ಧೆ ಮಾಡಿದ್ದೇನೆ. ಹಣದಿಂದ ಜನರನ್ನು ಖರೀದಿಸಬಹುದು ಎಂದು ಡಿಎಂಕೆ ಭಾವಿಸುತ್ತದೆ. ಎಐಎಡಿಎಂಕೆ ಕೂಡ ಅದೇ ದೋಣಿಯಲ್ಲಿ ಸಾಗಿದೆ ಎಂದು ದೂರಿದ್ದಾರೆ. ಕೊಯಮತ್ತೂರಿನಲ್ಲಿ ಕಳೆದ 2-3 ದಿನಗಳಿಂದ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ನಮ್ಮ ಜನರು ಪದೇ ಪದೇ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ಕಿಡಿಕಾರಿದ್ದಾರೆ. \ No newline at end of file diff --git a/eesanje/url_47_121_8.txt b/eesanje/url_47_121_8.txt new file mode 100644 index 0000000000000000000000000000000000000000..6c5ed786f71d3b143c62c0faa69eb0701fd3e1bb --- /dev/null +++ b/eesanje/url_47_121_8.txt @@ -0,0 +1,9 @@ +ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು : ಸುಪ್ರೀಂ ಕೋರ್ಟ್ +ನವದೆಹಲಿ,ಏ.18-ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಅನುಸರಿಸಿದ ಕ್ರಮಗಳನ್ನು ವಿವರವಾಗಿ ವಿವರಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಇದು ಮಹತ್ವದ ಚುನಾವಣಾ ಪ್ರಕ್ರಿಯೆ. ಪವಿತ್ರತೆ ಇರಬೇಕು. ನಿರೀಕ್ಷಿತವಾದದ್ದನ್ನು ಮಾಡಲಾಗುತ್ತಿಲ್ಲ ಎಂಬ ಆತಂಕ ಯಾರಿಗೂ ಬೇಡ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಹೇಳಿದೆ. +ವಿವಿಪ್ಯಾಟ್ ವ್ಯವಸ್ಥೆಯ ಮೂಲಕ ರಚಿಸಲಾದ ಪೇಪರ್ ಸ್ಲಿಪ್‍ಗಳೊಂದಿಗೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್‍ಗಳಲ್ಲಿ (ಇವಿಎಂ) ಚಲಾವಣೆಯಾದ ಮತಗಳ ಅಡ್ಡ-ಪರಿಶೀಲನೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. +ಹಿರಿಯ ವಕೀಲ ಮಣಿಂದರ್ ಸಿಂಗ್, ಚುನಾವಣಾ ಆಯೋಗದ ವಕೀಲರು ಮತ್ತು ಚುನಾವಣಾ ಅಧಿಕಾರಿಗಳು ನ್ಯಾಯಾಲಯದಲ್ಲಿ ಹಾಜರಿದ್ದ ಸಂದರ್ಭದಲ್ಲಿ ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ವಕೀಲ ನಿಜಾಮ್ ಪಾಷಾ, ಮತದಾರರು ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಸ್ಲಿಪ್ ತೆಗೆದುಕೊಂಡು ಮತಪೆಟ್ಟಿಗೆಗೆ ಹಾಕಲು ಅವಕಾಶ ನೀಡಬೇಕು ಎಂದರು. +ನಂತರ ವಕೀಲ ಪ್ರಶಾಂತ್ ಭೂಷಣ್ ಅವರು ವಿವಿಪಿಎಟಿ ಯಂತ್ರದ ಮೇಲಿನ ಬೆಳಕು ಎಲ್ಲಾ ಸಮಯದಲ್ಲೂ ಆನ್ ಆಗಿರಬೇಕು – ಈಗ ಅದು ಏಳು ಸೆಕೆಂಡುಗಳವರೆಗೆ ಇರುತ್ತದೆ. ಒಂದು ಸಂಭವನೀಯ ಪರಿಹಾರವೆಂದರೆ ಅವರು ಈ ಹಂತದಲ್ಲಿ ಗಾಜನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ, ಕನಿಷ್ಠ ಬೆಳಕು ಎಲ್ಲಾ ಸಮಯದಲ್ಲೂ ಆನ್ ಆಗಿರಬೇಕು, ಹಾಗಾಗಿ ಸ್ಲಿಪ್ ಕತ್ತರಿಸುವುದು ಮತ್ತು ಬೀಳುವುದನ್ನು ನಾನು ನೋಡಬಹುದು. ಯಾವುದೇ ಗೌಪ್ಯತೆಗೆ ಧಕ್ಕೆಯಾಗುವುದಿಲ್ಲ ಎಂದರು. +ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ, ಮತ ಎಣಿಕೆ ಪ್ರಕ್ರಿಯೆಗೆ ಹೆಚ್ಚಿನ ವಿಶ್ವಾಸಾರ್ಹತೆ ನೀಡಲು ಪ್ರತ್ಯೇಕ ಲೆಕ್ಕ ಪರಿಶೋಧನೆ ನಡೆಸಬೇಕು ಎಂದರು.ಕೇರಳದಲ್ಲಿ ಬಿಜೆಪಿಗೆ ಹೆಚ್ಚುವರಿ ಮತಗಳು ದಾಖಲಾಗಿರುವ ಅಣಕು ಸಮೀಕ್ಷೆಯ ಫಲಿತಾಂಶಗಳ ವರದಿಯನ್ನು ವಕೀಲ ಭೂಷಣ್ ಉಲ್ಲೇಖಿಸಿ ಈ ಬಗ್ಗೆ ವಿವರಣೆ ನೀಡುವಂತೆ ಕೋರ್ಟ್ ಸೂಚಿಸಿದಾಗ . +ಈ ವರದಿ ಸಂಪೂರ್ಣ ಸುಳ್ಳು ಎಂದು ಚುನಾವಣಾ ಆಯೋಗ ಹೇಳಿದೆ.ಮತದಾನ ಪ್ರಕ್ರಿಯೆಯ ವಿವರಣೆಯಲ್ಲಿ, ಇವಿಎಂ ನಿಯಂತ್ರಣ ಘಟಕವು ಅದರ ಕಾಗದದ ಚೀಟಿಯನ್ನು ಮುದ್ರಿಸಲು ವಿವಿಪಿಎಟಿ ಘಟಕಕ್ಕೆ ಆದೇಶಿಸುತ್ತದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಈ ಸ್ಲಿಪ್ ಮುಚ್ಚಿದ ಪೆಟ್ಟಿಗೆಯಲ್ಲಿ ಬೀಳುವ ಮೊದಲು ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುತ್ತದೆ ಎಂದು ಸಿಂಗ್ ಹೇಳಿದರು. ಮತಯಂತ್ರಗಳನ್ನು ಇಂಜಿನಿಯರ್‍ಗಳ ಸಮ್ಮುಖದಲ್ಲಿ ಮತದಾನಕ್ಕೆ ಮುನ್ನ ಪರಿಶೀಲಿಸಲಾಗುತ್ತದೆ ಎಂದು ವಾದಿಸಿದರು. +ಪ್ರಿಂಟರ್‍ನಲ್ಲಿ ಯಾವುದಾದರೂ ಸಾಫ್ಟ್ ವೇರ್ ಇದೆಯೇ ಎಂದು ನ್ಯಾಯಾಲಯವು ಕೇಳಿದಾಗ, ಚುನಾವಣಾ ಆಯೋಗವು. ಚಿಹ್ನೆಗಳನ್ನು ಸಂಗ್ರಹಿಸುವ 4 ಮೆಗಾಬೈಟ್ ಫ್ಲ್ಯಾಶ್ ಮೆಮೊರಿ ಇದೆ. ಚುನಾವಣಾ ಅಧಿಕಾರಿ ಎಲೆಕ್ಟ್ರಾನಿಕ್ ಮತಯಂತ್ರವನ್ನು ಸಿದ್ಧಪಡಿಸುತ್ತಾರೆ, ಅದನ್ನು ಚಿಹ್ನೆ ಲೋಡಿಂಗ್ ಘಟಕಕ್ಕೆ ಲೋಡ್ ಮಾಡಲಾಗುತ್ತದೆ. ಇದು ಸರಣಿ ಸಂಖ್ಯೆ, ಅಭ್ಯರ್ಥಿಯ ಹೆಸರು ಮತ್ತು ಚಿಹ್ನೆಯನ್ನು ನೀಡುತ್ತದೆ. ಯಾವುದನ್ನೂ ಮೊದಲೇ ಲೋಡ್ ಮಾಡಲಾಗಿಲ್ಲ. ಇದು ಡೇಟಾ ಅಲ್ಲ, ಇದು ಇಮೇಜ್ ಫಾರ್ಮ್ಯಾಟ್ ಎಂದು ತಿಳಿಸಿದರು. +ಮತದಾನಕ್ಕಾಗಿ ಎಷ್ಟು ಸಿಂಬಲ್ ಲೋಡಿಂಗ್ ಯೂನಿಟ್‍ಗಳನ್ನು ರಚಿಸಲಾಗಿದೆ ಎಂದು ನ್ಯಾಯಾಲಯವು ಕೇಳಿದಾಗ, ಚುನಾವಣಾ ಸಂಸ್ಥೆಯ ಅಧಿಕಾರಿಯೊಬ್ಬರು, ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಒಂದು. ಅದು ಚುನಾವಣೆ ಮುಗಿಯುವವರೆಗೆ ಚುನಾವಣಾಧಿಕಾರಿಯ ವಶದಲ್ಲಿರುತ್ತದೆ ಎಂದು ಉತ್ತರಿಸಿದರು. ನಂತರ ನ್ಯಾಯಾಲಯವು ಯಾವುದೇ ಅಕ್ರಮಗಳನ್ನು ಖಚಿತಪಡಿಸಿಕೊಳ್ಳಲು ಈ ಘಟಕವನ್ನು ಸೀಲ್ ಮಾಡಲಾಗಿದೆಯೇ ಎಂದು ಕೇಳಿದಾಗ, ಅಂತಹ ಯಾವುದೇ ಪ್ರಕ್ರಿಯೆಯು ಪ್ರಸ್ತುತ ಜಾರಿಯಲ್ಲಿಲ್ಲ ಎಂದು ಚುನಾವಣಾ ಆಯೋಗವು ತಿಳಿಸಿತು. \ No newline at end of file diff --git a/eesanje/url_47_121_9.txt b/eesanje/url_47_121_9.txt new file mode 100644 index 0000000000000000000000000000000000000000..775494b38719ba5c4204c8a5f526365e2259a67c --- /dev/null +++ b/eesanje/url_47_121_9.txt @@ -0,0 +1,8 @@ +ದೇಶ ದುರ್ಬಲಗೊಳಿಸಲು ಸಿಪಿಐ, ಕಾಂಗ್ರೆಸ್ ಹುನ್ನಾರ ನಡೆಸುತ್ತಿವೆ : ರಾಜನಾಥ್ ಸಿಂಗ್ +ನವದೆಹಲಿ,ಏ.18-ಸಿಪಿಐ(ಎಂ)ಮತ್ತು ಕಾಂಗ್ರೆಸ್ ಪಕ್ಷಗಳು ದೇಶವನ್ನು ದುರ್ಬಲ ಗೊಳಿಸಲು ಪಿತೂರಿ ನಡೆಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಇದರ ಜೊತೆಗೆ ಸಿಪಿಐ (ಎಂ) ಚುನಾವಣಾ ಪ್ರಣಾಳಿಕೆಯು ದೇಶದಲ್ಲಿನ ಎಲ್ಲಾ ಪರಮಾಣು ಶಸಾಸಗಳನ್ನು ಕಿತ್ತೊಗೆ ಯುವ ಭರವಸೆಯ ಹಿಂದಿನ ಉದ್ದೇಶವನ್ನು ಅವರು ಪ್ರಶ್ನಿಸಿದ್ದಾರೆ. +ಈ ವಿಷಯದ ಬಗ್ಗೆ ಕಾಂಗ್ರೆಸ್ನ ನಿಲುವನ್ನು ತಿಳಿಯಲು ಸಿಂಗ್ ಒತ್ತಾಯಿಸಿದರು ಮತ್ತು ನಮ್ಮ ಪರಮಾಣು ಶಸಾಸಗಳನ್ನು ನಾಶಪಡಿಸುವ ಬಗ್ಗೆ ಮಾತನಾಡುವುದು ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುವುದಕ್ಕಿಂತ ಕಡಿಮೆಯಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. +ಸಿಪಿಐಎಂನ ಈ ಹೇಳಿಕೆಯ ಬಗ್ಗೆ ಅವರು ಏನು ಹೇಳುತ್ತಾರೆಂದು ನಾನು ನಿರ್ದಿಷ್ಟವಾಗಿ ಕಾಂಗ್ರೆಸ್ಗೆ ಕೇಳಲು ಬಯಸುತ್ತೇನೆ. ನಾನು ಅವರನ್ನು ಸ್ಪಷ್ಟಪಡಿಸಲು ಕೇಳಲು ಬಯಸುತ್ತೇನೆ. ಸಿಪಿಐಎಂ ಅವರು ಅ„ಕಾರಕ್ಕೆ ಬಂದರೆ ಎಲ್ಲಾ ಅಣ್ವಸಗಳನ್ನು ನಾಶಪಡಿಸುತ್ತೇವೆ ಎಂದು ಹೇಳುತ್ತದೆ. ಭಾರತದ ಮೊದಲ ಪರಮಾಣು ಪರೀಕ್ಷೆಗಳನ್ನು 1974 ರಲ್ಲಿ ನಡೆಸಲಾಯಿತು. +ಇಂದಿರಾ ಗಾಂಧಿಯವರಿಂದ ಚೀನಾ ನಿರಂತರವಾಗಿ ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಮತ್ತು ಪಾಕಿಸ್ತಾನವು ಸಹ ತನ್ನ ಪರಮಾಣು ಪ್ರಯೋಗಗಳನ್ನು ಪ್ರಾರಂಭಿಸಿದ್ದರಿಂದ ಈ ಅಗತ್ಯವು ಉದ್ಭವಿಸಿತು ಎಂದು ರಕ್ಷಣಾ ಸಚಿವರು ಕೇರಳದ ಕಾಸರಗೋಡಿನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಹೇಳಿದರು. +ನಂತರ ಅಟಲ್ ಬಿಹಾರ್ ವಾಜಪೇಯಿ ಸರ್ಕಾರವು ಐದು ಯಶಸ್ವಿ ಪರಮಾಣು ಪರೀಕ್ಷೆಗಳನ್ನು ನಡೆಸಿತು ಮತ್ತು ಭಾರತವನ್ನು ವಿಶ್ವದಲ್ಲಿ ಪರಮಾಣು ಶಕ್ತಿಯ ಸ್ಥಾನಮಾನವನ್ನು ಗಳಿಸಿತು. ಎಡ ಮತ್ತು ಕಾಂಗ್ರೆಸ್ ಭಾರತವನ್ನು ದುರ್ಬಲಗೊಳಿಸಲು ಬಯಸುತ್ತವೆ ಎಂದು ಅವರು ಸೇರಿಸಿದರು. +ಇಂಡಿ ಒಕ್ಕೂಟದ ಭಾಗವಾಗಿರುವ ಸಿಪಿಐ (ಮಾಕ್ರ್ಸ್ವಾದಿ) ಕಳೆದ ವಾರ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ ರಾಸಾಯನಿಕ ಮತ್ತು ಜೈವಿಕ ಶಸಾಸಗಳನ್ನು ಒಳಗೊಂಡಂತೆ ಪರಮಾಣು ಶಸಾಸಗಳು ಮತ್ತು ಇತರ ಸಾಮೂಹಿಕ ವಿನಾಶಕಾರಿ ಶಸಾಸಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಾಗಿ ಭರವಸೆ ನೀಡಿದೆ. +ಭಾರತದ ನೆರೆಯ ರಾಷ್ಟ್ರಗಳು ಪರಮಾಣು ಶಕ್ತಿಗಳಾಗಿರುವ ಸಮಯದಲ್ಲಿ, ನಮ್ಮ ಪರಮಾಣು ಅಸಗಳನ್ನು ನಾಶಪಡಿಸುವ ಬಗ್ಗೆ ಮಾತನಾಡುವುದು ಭಾರತದ ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡುವುದಕ್ಕಿಂತ ಕಡಿಮೆಯಿಲ್ಲ. ಇದು ದೇಶವನ್ನು ದುರ್ಬಲಗೊಳಿಸುವ ಆಳವಾದ ಬೇರೂರಿರುವ ಪಿತೂರಿಯಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು. \ No newline at end of file diff --git a/eesanje/url_47_122_1.txt b/eesanje/url_47_122_1.txt new file mode 100644 index 0000000000000000000000000000000000000000..555202fd15d6afa0811af097f77bc9e81d80a569 --- /dev/null +++ b/eesanje/url_47_122_1.txt @@ -0,0 +1,6 @@ +ಅಸ್ಸಾಂನ ಇಂಡೋ-ಬಾಂಗ್ಲಾ ಗಡಿಯಲ್ಲಿ ನಿಷೇಧಾಜ್ಞೆ ಜಾರಿ +ಸಿಲ್ಚಾರ್ (ಅಸ್ಸಾಂ), ಮಾ. 18 :ಮುಂದಿನ ಏಪ್ರಿಲ್ 26 ರಂದು ನಡೆಯಲಿರುವ ಎರಡನೇ ಹಂತದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಒಳನುಸುಳುವಿಕೆ, ಜಾನುವಾರು ಕಳ್ಳಸಾಗಣೆ ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕ್ಯಾಚಾರ್ ಜಿಲ್ಲಾಡಳಿತವು ಬಾಂಗ್ಲಾದೇಶದೊಂದಿಗಿನ 33.6 ಕಿಮೀ ಗಡಿಯಲ್ಲಿ ನಿಷೇಧಾಜ್ಞೆ ವಿಧಿಸಿದೆ. +ಜಿಲ್ಲಾಧಿಕಾರಿ ರೋಹನ್ ಕುಮಾರ್ ಝಾ ಆದೇಶ ಹೊರಡಿಸಿದ್ದು ,ಇದರ ಪ್ರಕಾರ, ಇಂಡೋ-ಬಾಂಗ್ಲಾದೇಶ ಗಡಿಯ 1 ಕಿಮೀ ಪ್ರದೇಶದಲ್ಲಿ ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ಸೆಕ್ಷನ್ 144 ಅಡಿಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. +ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಎರಡು ತಿಂಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.ಸುರ್ಮಾ ನದಿಯ ಉದ್ದಕ್ಕೂ ಚಲನೆಯನ್ನು ನಿರ್ಬಂಧಿಸಲಾಗಿದೆ. ಮತ್ತು ನದಿಯಲ್ಲಿ ಮೀನುಗಾರಿಕೆಯನ್ನು ಕಟಿಗೋರಾ ವೃತ್ತದ ಅಕಾರಿಯ ಅನುಮತಿಯೊಂದಿಗೆ ಮಾತ್ರ ಮಾಡಬಹುದು. +ಅಲ್ಲದೆ, ಅಗತ್ಯ ವಸ್ತುಗಳನ್ನು ಸಾಗಿಸುವ ವಾಹನಗಳ ಸಂಚಾರವು ಅಂತರಾಷ್ಟ್ರೀಯ ಗಡಿಯಿಂದ ಐದು ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸಲು ಕಾಟಿಗೋರಾ ವೃತ್ತದ ಅಧಿಕಾರಿ ನೀಡಿದ ಪರವಾನಗಿ ಅಂತ್ಯ ಆದಾಗ್ಯೂ, ನಿರ್ಬಂಧಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. +ಚುನಾವಣೆಯ ಅವಧಿಯಲ್ಲಿ ಶಾಂತಿ, ಸಾರ್ವಜನಿಕ ನೆಮ್ಮದಿ ಮತ್ತು ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುವ ಆತಂಕದಲ್ಲಿ ಜಿಲ್ಲೆಯಾದ್ಯಂತ ಏಪ್ರಿಲ್ 2 ರಂದು ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. \ No newline at end of file diff --git a/eesanje/url_47_122_10.txt b/eesanje/url_47_122_10.txt new file mode 100644 index 0000000000000000000000000000000000000000..23bd2c09e2cbdb58c9ff8452c179ded63476313b --- /dev/null +++ b/eesanje/url_47_122_10.txt @@ -0,0 +1,11 @@ +ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಮೊದಲ ರಾಮನವಮಿ ಸಂಭ್ರಮ +ಉತ್ತರ ಪ್ರದೇಶ,ಏ.16-ನಾಳೆ ಶ್ರೀ ರಾಮನ ಜನ್ಮ ದಿನ. ಅಯೋಧ್ಯೆಯ ಬಾಲರಾಮನಿಗೆ ಇದು ಮೊದಲ ರಾಮನವಮಿ. ಹೀಗಾಗಿ ಅಯೋಧ್ಯೆಯಲ್ಲಿ ನಾಳೆಯ ದಿನ ಬಾಲರಾಮನ ದರ್ಶನಕ್ಕೆ ಭಕ್ತರ ಒಳ ಹರಿವು ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದಲ್ಲಿ ಬಾಲರಾಮನಿಗೆ ಬೆಳಗ್ಗೆ 3.30ಕ್ಕೆ ಮಂಗಳಾರತಿಯಾದ ನಂತರ ರಾತ್ರಿ 11ರವರೆಗೆ ಅಂದರೆ ಒಟ್ಟು 19 ಗಂಟೆಗಳ ಕಾಲ ದೇವಸ್ಥಾನ ತೆರೆದಿರುತ್ತದೆ. ಶ್ರೀ ರಾಮನಿಗೆ ಭೋಗ್ ನೈವೇದ್ಯಗಳನ್ನು ಸಮರ್ಪಿಸುವ ಸಮಯದಲ್ಲಿ ದೇವಾಲಯದ ಪರದೆಗಳನ್ನು ತಲಾ ಐದು ನಿಮಿಷಗಳ ಕಾಲ ಎಳೆಯಲಾಗುತ್ತದೆ. +ವಿಐಪಿಗಳಿಗೆ ಏಪ್ರಿಲ್ 19ರ ನಂತರ ದರ್ಶನ ಭಾಗ್ಯ :ರಾಮನವಮಿ ಹಿನ್ನೆಲೆ ಭಕ್ತರು ಅಧಿಕ ಸಂಖ್ಯೆಯಲ್ಲಿ ಆಗಮಿಸುವುದರಿಂದ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಗಣ್ಯ ಅಥಿತಿಗಳು ಏಪ್ರಿಲ್ 19ರ ನಂತರವೇ ರಾಮಲ್ಲಾನ ದರ್ಶನಕ್ಕಾಗಿ ಅಯೋಧ್ಯೆಗೆ ಭೇಟಿ ನೀಡುವಂತೆ ಮನವಿ ಮಾಡಿದೆ. ಜತೆಗೆ ರಾಮ ಮಂದಿರ ಪ್ರವೇಶಿಸಲು ಉಳಿದ ಭಕ್ತರು ಅನುಸರಿಸುವ ಮಾರ್ಗವನ್ನೇ ಎಲ್ಲರೂ ಪಾಲಿಸಬೇಕು ಎಂದು ಹೇಳಿದೆ. +ರಾಮ ನವಮಿಯ ದಿನ, ಬ್ರಹ್ಮ ಮುಹೂರ್ತದ ಸಮಯದಲ್ಲಿ ಬೆಳಗ್ಗೆ 3:30ಕ್ಕೆ ಗರ್ಭಗುಡಿ ತೆರೆಯಲಾಗುತ್ತದೆ. ಬಾಲರಾಮನ ದರ್ಶನ ಆ ಸಮಯದಿಂದ ಆರಂಭವಾಗಲಿದ್ದು, ರಾತ್ರಿ 11 ಗಂಟೆಯವರೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತೆ. ದರ್ಶನಕ್ಕೆ ಭಕ್ತರು ಸರತಿ ಸಾಲಿನಲ್ಲಿ ಬರಬೇಕು ಹಾಗೇ ರಾತ್ರಿ ಕೂಡ ದರ್ಶನ ಇರುವುದರಿಂದ ತಮ್ಮ ಮೊಬೈಲ್ ಫೋನ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. +ಸುಗ್ರೀವ್ ಕ್ವಿಲಾದಲ್ಲಿ ಟ್ರಸ್ಟ್‍ನಿಂದ ಯಾತ್ರಾರ್ಥಿಗಳಿಗಾಗಿ ಸೇವಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮತ್ತು ಪ್ರಸಾರ ಭಾರತಿ ದೂರದರ್ಶನದಲ್ಲಿ ರಾಮಮಂದಿರದ ಆಚರಣೆಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ. ರಾಮ ಟ್ರಸ್ಟ್ ಪ್ರಕಾರ ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ರಾಮ ಮಂದಿರದಲ್ಲಿ ರಾಮನವಮಿ ಆಚರಣೆಯ ನೇರ ಪ್ರಸಾರಕ್ಕಾಗಿ ಅಯೋಧ್ಯೆಯಾದ್ಯಂತ ಸುಮಾರು 100 ಪರದೆಗಳನ್ನು ಹಾಕಲಿದೆ. +ಭಕ್ತರ ಸುರಕ್ಷತೆಗೆ ಟ್ರಸ್ಟ್‍ನಿಂದ ಹಲವು ಕ್ರಮ:ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಕಾಲ್ತುಳಿತ ಉಂಟಾಗುವ ಸಾಧ್ಯತೆ ಹೆಚ್ಚು. ಹೀಗಾಗಿ ಅಧಿಕಾರಿಗಳು ದೇವಾಲಯಕ್ಕೆ ಸುರಕ್ಷಿತ ಆಗಮನ ಮತ್ತು ನಿರ್ಗಮನಕ್ಕೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಬಿಸಿಗಾಳಿ ವಾತಾವರಣ ಇರುವುದರಿಂದ ತೆರೆದ ಮಹಡಿಗಳಲ್ಲಿ ಭಕ್ತರಿಗೆ ನೀರು ಮತ್ತು ಚಾಪೆಗಳನ್ನು ಒದಗಿಸಲಾಗುತ್ತಿದೆ. +ನಾವು ಸರ್ಕಾರಿ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆಗಳೊಂದಿಗೆ ವೈದ್ಯಕೀಯ ಸೌಲಭ್ಯಗಳ 24 ಗಂಟೆಗಳ ಲಭ್ಯತೆಗಾಗಿ ವ್ಯವಸ್ಥೆಯನ್ನು ಮಾಡಿದ್ದೇವೆ. ಸಂಚಾರವನ್ನು ಸುಗಮಗೊಳಿಸಲಾಗಿದೆ ಮತ್ತು ಸಾಕಷ್ಟು ಭದ್ರತಾ ತಪಾಸಣೆಗಳನ್ನು ಇರಿಸಲಾಗಿದೆ. ಟೆಂಟ್‍ಗಳು, ಧರ್ಮಶಾಲೆಗಳು ಮತ್ತು ಯಾತ್ರಾರ್ಥಿಗಳು ತಂಗಿರುವ ಹೋಟೆಲ್‍ಗಳಲ್ಲಿ ಹಾಲು, ಸಕ್ಕರೆ, ಚಹಾ, ಆಹಾರಧಾನ್ಯಗಳು ಮತ್ತು ತರಕಾರಿಗಳಂತಹ ಅಗತ್ಯ ವಸ್ತುಗಳ ಲಭ್ಯತೆ ಮತ್ತು ನಿಯಮಿತ ಪೂರೈಕೆಯನ್ನು ನಾವು ಖಚಿತಪಡಿಸಿಕೊಳ್ಳುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. +ವಿಶೇಷ ವ್ಯವಸ್ಥೆಗಳೇನು?:ರಾಮನವಮಿಗೆ ವಿಶೇಷವಾಗಿ ಸರಯೂ ನದಿಯಲ್ಲಿ ಭಕ್ತಾದಿಗಳ ಸ್ನಾನಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕ ಶೌಚಾಲಯಗಳನ್ನು ಒದಗಿಸಲು ಮತ್ತು ನಿಯಮಿತವಾಗಿ ಶುಚಿಗೊಳಿಸುವಿಕೆಯತ್ತ ವಿಶೇಷ ಗಮನವನ್ನು ನೀಡಲಾಗುತ್ತಿದೆ. 2,000 ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರನ್ನು ಸ್ವಚ್ಛತೆಗಾಗಿ ನೇಮಿಸಲಾಗಿದೆ. +ರಾಮ್ ಟೆಂಪಲ್ ಟ್ರಸ್ಟ್ ನ ಟ್ರಸ್ಟಿ ಅನಿಲ್ ಮಿಶ್ರಾ ಈ ಬಗ್ಗೆ, ಭಕ್ತರಿಗೆ ಸುಲಭ ದರ್ಶನವನ್ನು ಖಚಿತಪಡಿಸಿಕೊಳ್ಳಲು ಮತ್ತು ಯಾವುದೇ ಸಮಸ್ಯೆ ಬಂದೊದಗದಂತೆ ಮುಂಚಿತವಾಗಿ ಯೋಜನೆಯನ್ನು ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರು. +ರಾಮನವಮಿಯಂದು ಅಯೋಧ್ಯೆಯ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ಏಪ್ರಿಲ್ 17 ರಂದು ನೈವೇದ್ಯ ಮತ್ತು ವಿತರಣೆಗಾಗಿ ಕಳುಹಿಸಲಾಗುವುದು ಎಂದು ದೇವ್ರಹ ಹನ್ಸ್ ಬಾಬಾ ಟ್ರಸ್ಟ್‍ನ ಟ್ರಸ್ಟಿ ಅತುಲ್ ಕುಮಾರ್ ಸಕ್ಸೇನಾ ತಿಳಿಸಿದ್ದಾರೆ.ಕಾಶಿ ವಿಶ್ವನಾಥ ದೇಗುಲ ಅಥವಾ ತಿರುಪತಿ ಬಾಲಾಜಿ ದೇಗುಲಕ್ಕೂ ಪ್ರತಿ ವಾರ ವಿವಿಧ ದೇವಸ್ಥಾನಗಳಿಗೂ ಲಡ್ಡು ಪ್ರಸಾದವನ್ನು ಕಳುಹಿಸಲಾಗುತ್ತದೆ ಎಂದು ಸಕ್ಸೇನಾ ಹೇಳಿದ್ದಾರೆ. +ಜ.22 ರಂದು ಅಯೋಧ್ಯೆಯಲ್ಲಿ ನಡೆದಿದ್ದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನ ದೇವ್ರಹ ಹಂಸ ಬಾಬಾ ಆಶ್ರಮವು ನೈವೇದ್ಯಕ್ಕಾಗಿ 40,000 ಕೆಜಿ ಲಡ್ಡುವನ್ನು ಕೊಡುಗೆಯಾಗಿ ನೀಡಿತ್ತು. \ No newline at end of file diff --git a/eesanje/url_47_122_11.txt b/eesanje/url_47_122_11.txt new file mode 100644 index 0000000000000000000000000000000000000000..24d601bbd3abd00ec968749bb0624935c75d5ed1 --- /dev/null +++ b/eesanje/url_47_122_11.txt @@ -0,0 +1,7 @@ +ಬಾಲ್ಯ ವಿವಾಹದಿಂದ ಬಚಾವಾಗಿದ್ದ ಬಾಲಕಿ ವಿದ್ಯಾಭ್ಯಾಸದಲ್ಲಿ ಈಗ ರಾಜ್ಯಕ್ಕೆ ಪ್ರಥಮ +ಅಮರಾವತಿ, ಏ.15-ಬಾಲ್ಯ ವಿವಾಹ ದಿಂದ ಬಚಾವಾಗಿದ್ದ ಬಾಲಕಿಯೊಬ್ಬಳು ಆಂಧ್ರಪ್ರದೇಶದ ಒಂದನೇ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು ಗಮನ ಸೆಳೆದಿದ್ದಾರೆ. +ಒಮ್ಮೆ ಬಲವಂತದ ಬಾಲ್ಯ ವಿವಾಹದಿಂದ ಪಾರಾಗಿದ್ದ ಕರ್ನೂಲ್ನ ಕಸ್ತೂರಬಾ ಗಾಂ ಬಾಲಿಕಾ ವಿದ್ಯಾಲಯದ ಕೆಜಿಬಿವಿ ವಿದ್ಯಾರ್ಥಿನಿ ಜಿ ನಿರ್ಮಲಾ ಈ ಸಾಧನೆ ಮಾಡಿದ್ದಾರೆ.ಹಿಂದುಳಿದ ವರ್ಗಗಳ ಶಿಕ್ಷಣ ಸಚಿವಾಲಯವು ನಡೆಸುವ ವಸತಿ ಬಾಲಕಿಯರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ನಿರ್ಮಲಾ 1 ನೇ ವರ್ಷದ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ 440 ರಲ್ಲಿ 421 ಅಂಕಗಳನ್ನು ಗಳಿಸಿದ್ದಾರೆ. +ಆಂಧ್ರದ 1 ನೇ ವರ್ಷದ ಮಧ್ಯಂತರ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಗಳಿಸಿದ್ದಕ್ಕಾಗಿ ಭಾರತದಲ್ಲಿ ಹಿಂದುಳಿದ ವರ್ಗಗಳಿಗಾಗಿ ಶಿಕ್ಷಣ ಸಚಿವಾಲಯವು ನಡೆಸುತ್ತಿರುವ ವಸತಿ ಬಾಲಕಿಯರ ಶಾಲೆಯಾದ ಕರ್ನೂಲ್ ಕಸ್ತೂರಬಾ ಗಾಂ ಬಾಲಿಕಾ ವಿದ್ಯಾಲಯ (ಕೆಜಿಬಿವಿ) ಯಿಂದ ನಿರ್ಮಲಾ ಅವರಿಗೆ ಅಭಿನಂದನೆಗಳು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಅಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೊಸ್ಟ್ ಮಾಡಿದೆ. +ಬಾಲ್ಯವಿವಾಹದಿಂದ ಪಾರಾದಂತಹ ಸವಾಲು ಗಳನ್ನು ಮೀರಿಸಿದ್ದರೂ, ಅವರು 440 ರಲ್ಲಿ 421 ಅಂಕಗಳನ್ನು ಗಳಿಸಿದ್ದಾರೆ. ಐಪಿಎಸ್ ಅಧಿಕಾರಿಯಾಗಬೇಕೆಂಬ ಆಕೆಯ ಆಕಾಂಕ್ಷೆಯು ಸಾಮಾಜಿಕ ನ್ಯಾಯಕ್ಕಾಗಿ ಅವರ ಸಮರ್ಪಣೆ ಯನ್ನು ತೋರಿಸುತ್ತದೆ. ಆಕೆಯ ಧೈರ್ಯವನ್ನು ಕೊಂಡಾ ಡೋಣ ಮತ್ತು ಆಕೆಯ ಮುಂದಿನ ಅನ್ವೇಷಣೆಗಳಿಗೆ ಶುಭ ಹಾರೈ ಸೋಣ ಎಂದು ಬರೆಯಲಾಗಿದೆ. +ವೈಎಸ್ಆರ್ಸಿಪಿ ಶಾಸಕ ವೈ ಸಾಯಿಪ್ರಸಾದ್ ರೆಡ್ಡಿ ಪ್ರಕಾರ, ಜೀವನದಲ್ಲಿ ತನ್ನ ಶೈಕ್ಷಣಿಕ ಗುರಿಗಳನ್ನು ಸಾಸಲು ಹಠ ಹಿಡಿದಿದ್ದ ಜಿ ನಿರ್ಮಲಾ ಅವರು ಕಳೆದ ವರ್ಷ ಗಡಪ ಗಡಿಪಾರು ಮನ ಪ್ರಭುತ್ವ ಕಾರ್ಯಕ್ರಮದಲ್ಲಿ ಅವರನ್ನು ಸಂಪರ್ಕಿಸಿದರು, ಜೀವನದಲ್ಲಿ ತನ್ನ ಗುರಿಗಳನ್ನು ಸಾಸಲು ಸಹಾಯ ಮಾಡುವಂತೆ ಮನವಿ ಮಾಡಿದರು. +ಬಾಲಕಿಯ ದುಸ್ಥಿತಿ ಕಂಡು ಮನನೊಂದ ಆದೋನಿ ಶಾಸಕರು ಜಿಲ್ಲಾಧಿಕಾರಿ ಜಿ.ಸೃಜನ ಅವರಿಗೆ ಪರಿಸ್ಥಿತಿ ತಿಳಿಸಿದ್ದು, ಅವರು ಮಧ್ಯಪ್ರವೇಶಿಸಿ ಜಿ.ನಿರ್ಮಲಾ ಅವರನ್ನು ಸನ್ನಿಹಿತ ಬಾಲ್ಯವಿವಾಹದಿಂದ ರಕ್ಷಿಸಿದ್ದರು. \ No newline at end of file diff --git a/eesanje/url_47_122_12.txt b/eesanje/url_47_122_12.txt new file mode 100644 index 0000000000000000000000000000000000000000..b4ce29cd3a8a22b46116d6b483b89b782e3fa3b6 --- /dev/null +++ b/eesanje/url_47_122_12.txt @@ -0,0 +1,7 @@ +ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಪ್ರತ್ಯೇಕ ರಾಜ್ಯ ರಚನೆ : ಮಾಯಾವತಿ +ಲಖ್ನೋ, ಏ.15-ಒಂದೊಮ್ಮೆ ನಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಲಾಗುವುದು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. +ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವುದಾಗಿ ಮಾಯಾವತಿ ಘೋಷಿಸಿದ್ದಾರೆ. ನಮ್ಮ ಪಕ್ಷ ಕೆಲಸ ಮಾಡುವುದರಲ್ಲಿ ನಂಬಿಕೆ ಇಟ್ಟಿದೆ ಹಾಗಾಗಿ ಪ್ರಣಾಳಿಕೆ ಬಿಡುಗಡೆ ಮಾಡುವುದಿಲ್ಲ ಎಂದು ಮಾಯಾವತಿ ಹೇಳಿದರು. +ಉತ್ತರಪ್ರದೇಶದಲ್ಲಿ ನನ್ನ ನೇತೃತ್ವದಲ್ಲಿ 4 ಬಾರಿ ಸರ್ಕಾರ ರಚನೆಯಾಗಿದೆ, ನಮ್ಮ ಸರ್ಕಾರದಲ್ಲಿ ಯಾವುದೇ ಕೋಮುಗಲಭೆಗಳು ಇರಲಿಲ್ಲ, ಆದರೆ ಎಸ್ಪಿ ಸರ್ಕಾರದಲ್ಲಿ, ಜಾಟ್ ಮತ್ತು ಮುಸ್ಲಿಂ ಸಮುದಾಯಗಳನ್ನು ಪರಸ್ಪರ ಹೊಡೆದಾಡುವಂತೆ ಮಾಡಲಾಯಿತು. +ಇಲ್ಲಿ ತೀರಾ ಹಿಂದುಳಿದ ಸಮುದಾಯದ ಒಬ್ಬರಿಗೆ ಟಿಕೆಟ್ ನೀಡಿ ಈ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮತ್ತು ಜಾಟ್ ಸಮುದಾಯದ ನಡುವೆ ಬಾಂಧವ್ಯ ಮೂಡಿಸಿದ್ದೇವೆ. ನಾನು ಮುಜಾಫರ್ನಗರದಿಂದ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಯಸಿದ್ದೆ ಆದರೆ ಮುಸ್ಲಿಂ ಸಮುದಾಯದಿಂದ ಯಾರೂ ಸ್ಪರ್ಧಿಸಲು ಸಿದ್ಧರಿರಲಿಲ್ಲ ಎಂದರು. +2024 ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಮಾಯಾವತಿ ಅವರ ಮೊದಲ ರ್ಯಾಲಿ ಇದಾಗಿದ್ದು, ಈ ರ್ಯಾಲಿಯ ಮೂಲಕ ಅವರು ವಿರೋಧ ಪಕ್ಷಗಳನ್ನು ಗುರಿಯಾಗಿಸಿದ್ದಾರೆ. ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. +ಬಿಜೆಪಿ ಈಗ ಯುಪಿಯಲ್ಲಿ ಚುನಾವಣಾ ಕಣಕ್ಕೆ ಸಂಪೂರ್ಣವಾಗಿ ಪ್ರವೇಶಿಸಿದೆ. ಯುಪಿಯ 80 ಸ್ಥಾನಗಳಲ್ಲಿ ಬಿಎಸ್ಪಿ ಏಕಾಂಗಿಯಾಗಿದ್ದು, ಮಾಯಾವತಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ 2024 ರ ಮೊದಲ ಹಂತವು ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ಕೊನೆಯ ಹಂತದ ಮತದಾನವು ಜೂನ್ 1, 2024 ರಂದು ನಡೆಯಲಿದೆ. ಮತಗಳ ಎಣಿಕೆಯು ಜೂನ್ 4, 2024 ರಂದು ನಡೆಯಲಿದೆ. \ No newline at end of file diff --git a/eesanje/url_47_122_2.txt b/eesanje/url_47_122_2.txt new file mode 100644 index 0000000000000000000000000000000000000000..e80bf734df7970c9d399c86fd125d8da09ebb36c --- /dev/null +++ b/eesanje/url_47_122_2.txt @@ -0,0 +1,5 @@ +ಚುನಾವಣಾ ಕಣದಿದ ಹಿಂದೆಸರಿದ ಗುಲಾಂ ನಬಿ ಆಜಾದ್, ನಾಮಪತ್ರ ವಾಪಸ್ +ನವದೆಹಲಿ,ಏ.18-ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದಿಂದ ಗುಲಾಂ ನಬಿ ಆಜಾದ್ ಅವರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಪಕ್ಷ ತಿಳಿಸಿದೆ. +ಆಜಾದ್ ಅವರು ಹಿಂದೆ ಸರಿದ ಬಳಿಕ ಇದೀಗ ಮೊಹಮ್ಮದ್ ಸಲೀಂ ಪರ್ರೆ ಅನಂತನಾಗ್-ರಾಜೌರಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಬಹುದು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕಾಶ್ಮೀರದ ಡಿಪಿಎಪಿಯ ಪ್ರಾಂತೀಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಭಟ್ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆಯನ್ನು ಆಜಾದ್ ಖಚಿತಪಡಿಸಿದ್ದಾರೆ. ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಅನಂತನಾಗ್-ರಜೌರಿ ಕ್ಷೇತ್ರಕ್ಕೆ ವಕೀಲ ಸಲೀಂ ಪರ್ರೆ ಡಿಪಿಎಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಿದರು. +ಆಜಾದ್ ಯೂಟರ್ನ್:ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸಲು ಮತ್ತು ಅಲ್ಲಿನ ನಿವಾಸಿಗಳ ಭೂಮಿ ಮತ್ತು ಉದ್ಯೋಗ ಹಕ್ಕುಗಳ ರಕ್ಷಣೆಗಾಗಿ ತನ್ನ ಹೋರಾಟವನ್ನು ಮುಂದುವರಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಕೊಟ್ಟ ಕೆಲವೇ ದಿನಗಳಲ್ಲಿ ಆಜಾದ್ ಗುಲಾಂ ನಬಿ ಆಜಾದ್ ಯೂಟರ್ನ್ ಹೊಡೆದಿದ್ದಾರೆ. +ಆಜಾದ್ ಅವರು 2022ರಲ್ಲಿ ಕಾಂಗ್ರೆಸ್ ತೊರೆದಿದ್ದರು. ಈ ಮೂಲಕ ಪಕ್ಷದೊಂದಿಗಿನ ಐದು ದಶಕಗಳ ಸಂಬಂಧವನ್ನು ಕೊನೆಗೊಳಿಸಿ ಡಿಪಿಎಪಿಯನ್ನು ಸೇರಿಕೊಂಡರು. \ No newline at end of file diff --git a/eesanje/url_47_122_3.txt b/eesanje/url_47_122_3.txt new file mode 100644 index 0000000000000000000000000000000000000000..40bd73e6efa925acca149e895583c3f0d8f66fe2 --- /dev/null +++ b/eesanje/url_47_122_3.txt @@ -0,0 +1,8 @@ +ಛತ್ತೀಸ್‌ಗಢದಲ್ಲಿ 29 ಮಾವೋವಾದಿಗಳ ಹತ್ಯೆ, ಕಾರ್ಯಾಚರಣೆ ವೀಡಿಯೋ ವೈರಲ್ +ರಾಯ್ಪುರ,ಏ.17-ಛತ್ತೀಸ್ಗಢದಲ್ಲಿ ಮಾವೋವಾದಿ ಹಿರಿಯ ನಾಯಕ ಶಂಕರ್ ರಾವ್ ಸೇರಿದಂತೆ 29 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಛತ್ತೀಸ್ಗಢದ ಈ ಅತಿದೊಡ್ಡ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಕಂಕೇರ್ ಜಿಲ್ಲೆಯ ಬಿನಗುಂದ ಗ್ರಾಮದ ಬಳಿಯ ಹಪಟೋಲಾ ಅರಣ್ಯದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ರಾಜ್ಯ ಪೊಲೀಸ್ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಜಂಟಿ ತಂಡ ಈ ಕಾರ್ಯಚರಣೆ ನಡೆಸಿದ್ದು, ಮೂವರು ಯೋಧರು ಗಾಯಗೊಂಡಿದ್ದಾರೆ. +ಒಂದು ನಿಮಿಷದ ಅವಧಿಯ ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಕಾಡಿನ ಮೂಲಕ ನಡೆದುಕೊಂಡು ಹೋಗುತ್ತಿರುವಾಗ, 20 ಸೆಕೆಂಡುಗಳಲ್ಲಿ ಇದ್ದಕ್ಕಿದ್ದಂತೆ, ಅವರಲ್ಲಿ ಒಬ್ಬರು ತನ್ನ ರೈಫಲ್ ನಿಂದ ಎರಡು ಗುಂಡು ಹಾರಿಸಿದ್ದಾರೆ. ವಿವಿಧ ಕಡೆಯಿಂದ ಕೂಗು ಕೇಳಿಬರುತ್ತಿದೆ ಮತ್ತು ವೀಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿ ನಂತರ ತನ್ನ ಮುಂದಿರುವ ಸಿಬ್ಬಂದಿಯನ್ನು ಎಚ್ಚರಿಕೆಯಿಂದ ಹೆಜ್ಜೆ ಹಾಕುವಂತೆ ಮತ್ತು ಮುಂದೆ ಧಾವಿಸದಂತೆ ಎಚ್ಚರಿಸುತ್ತಾನೆ. + #BSF_Intelligence, .#& 29 ##. .##../O0VAVMvlUW +ಪೀಚೆ ಸೆ ಕೋಯಿ ಫೈರ್ ನಹಿಂ ಕರೇಗಾ ಭಾಯ್ (ಯಾರೂ ಹಿಂದಿನಿಂದ ಗುಂಡು ಹಾರಿಸಬಾರದು), ಎಂದು ಅವನು ತನ್ನ ಸಹ ಸಿಬ್ಬಂದಿಯನ್ನು ಎಚ್ಚರಿಸುತ್ತಾನೆ ಮತ್ತು ಅವನು ಎಚ್ಚರಿಕೆಯನ್ನು ಪುನರಾವರ್ತಿಸುವುದರೊಂದಿಗೆ ವೀಡಿಯೊ ಕೊನೆಗೊಳ್ಳುತ್ತದೆ.ಎನ್ಕೌಂಟರ್ನಲ್ಲಿ ಭಾಗಿಯಾಗಿರುವ ತಂಡವನ್ನು ರಾಷ್ಟ್ರಪತಿ ಪ್ರಶಸ್ತಿ ವಿಜೇತ ಲಕ್ಷ್ಮಣ್ ಕೇವತ್ ನೇತೃತ್ವ ವಹಿಸಿದ್ದರು, ಅವರು ಆರು ಇತರ ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಟ್ಟಿದ್ದಾರೆ. +ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಈತ ಇದುವರೆಗೆ 44 ಮಾವೋವಾದಿಗಳನ್ನು ಕೊಂದಿದ್ದಾನೆ. ಛತ್ತೀಸ್ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಮಾವೋವಾದಿಗಳ ವಿರುದ್ಧದ ರಾಜ್ಯದ ಹೋರಾಟದಲ್ಲಿ ಈ ಕಾರ್ಯಾಚರಣೆಯು ಇದುವರೆಗಿನ ಅತಿದೊಡ್ಡ ಯಶಸ್ಸು ಎಂದು ಬಣ್ಣಿಸಿದ್ದಾರೆ. +ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ ಮತ್ತು ಅವರ ಧೈರ್ಯವನ್ನು ವಂದಿಸುತ್ತೇನೆ. ಮಾವೋವಾದಿಗಳು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿಲ್ಲ ಮತ್ತು ಅವರು ಚುನಾವಣೆಯ ಮೇಲೆ ಪ್ರಭಾವ ಬೀರಲು ಬಯಸುತ್ತಿರುವ ಸಾಧ್ಯತೆಯಿದೆ. ಗುಂಡಿನ ಚಕಮಕಿ ನಡೆದ ಸ್ಥಳ ಬಸ್ತಾರ್ ಮತ್ತು ಕಂಕೇರ್ ಲೋಕಸಭಾ ಕ್ಷೇತ್ರಗಳ ಸಮೀಪದಲ್ಲಿದೆ ಮತ್ತು ಬಸ್ತಾರ್ನಲ್ಲಿ ಶುಕ್ರವಾರ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. +ಗೃಹ ಸಚಿವ ಅಮಿತ್ ಶಾ ಕೂಡ ಮಾವೋವಾದಿ ಮುಕ್ತ ಬಸ್ತಾರ್ ಪ್ರದೇಶಕ್ಕೆ ಕರೆ ನೀಡಿದ್ದಾರೆ ಮತ್ತು ಪ್ರತಿಜ್ಞೆ ಮಾಡಿದ್ದಾರೆ. ಈ ಕಾರ್ಯಾಚರಣೆಯು ಶಾಂತಿಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಒಂದು ದೊಡ್ಡ ಯಶಸ್ಸನ್ನು ಹೊಂದಿದೆ. \ No newline at end of file diff --git a/eesanje/url_47_122_4.txt b/eesanje/url_47_122_4.txt new file mode 100644 index 0000000000000000000000000000000000000000..1b8e03e622f32566a9f2b6536e920963d025b8ab --- /dev/null +++ b/eesanje/url_47_122_4.txt @@ -0,0 +1,10 @@ +500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ಆಚರಣೆ +ಈ ನೆಲದ ದೈವಿಕ ದೃಢತೆ, ಎಲ್ಲರ ಮನಸ್ಸಿನ ಆರಾಧನೆ, ಕೋಟ್ಯಂತರ ಜನರ ಸಂಕಲ್ಪ ಈಡೇರಿದ ಕ್ಷಣವಿದು. 500 ವರ್ಷಗಳಿಂದ ಪರಿತಪಿಸುತ್ತಿದ್ದ ಭಕ್ತರ ಕನಸು ನನಸಾಗಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದೊಂದಿಗೆ ನವ ಪೀಳಿಗೆ ಈ ಬಾರಿಯ ರಾಮನವಮಿಯನ್ನು ಸಾರ್ಥಕತೆಯೊಂದಿಗೆ ಆಚರಿಸುವಂತಾಗಿದೆ. +ಅಯೋಧ್ಯೆಯಲ್ಲಾದ ಅನ್ಯಾಯದ ಇತಿಹಾಸವೇ ಒಂದು ಅಪಥ್ಯವಾದ ದೃಷ್ಟಾಂತ. ಕ್ರಿ.ಶ.1500ರಲ್ಲಿ ಮೊಘಲ್ ದೊರೆ ಬಾಬರ್ ಭಾರತಕ್ಕೆ ಬಂದ ಕಾಲಮಾನ. ಭಾರತಕ್ಕೆ ಬಂದು ಎರಡು ವರ್ಷಗಳ ನಂತರ, ಬಾಬರನ ಸುಬೇದಾರ್ ಮಿರ್ಬಕಿ ಅಯೋಧ್ಯೆಯಲ್ಲಿ ಮಸೀದಿಯನ್ನು ನಿರ್ಮಿಸಿದನು. ಈ ಮಸೀದಿಯನ್ನು ರಾಮನು ಜನಿಸಿದ ಸ್ಥಳದಲ್ಲಿಯೇ ನಿರ್ಮಾಣ ಮಾಡಲಾಗಿತ್ತು. ಅದಕ್ಕಾಗಿ ಮೂಲ ಸ್ಥಾನದಲ್ಲಿದ್ದ ರಾಮಮಂದಿರವನ್ನು ನೆಲಸಮಗೊಳಿಸಲಾಗಿತ್ತು. +ಅಂದಿನಿಂದ ಇಂದಿನವರೆಗೂ ಅಯೋಧ್ಯೆಯಲ್ಲಿ ರಾಮನ ಜನ್ಮ ದಿನವಾದ ರಾಮನವಮಿಯೇ ರದ್ದಾಗಿತ್ತು. ಮೊಘಲರ ಆಳ್ವಿಕೆ ದೇಶಾದ್ಯಂತ ಹರಡುತ್ತಿದ್ದ ಕಾಲವದು. 1528 ರಿಂದ 1853 ರವರೆಗೆ ಮೊಘಲರು, ನವಾಬರ ಆಳ್ವಿಕೆಯಲ್ಲಿ ಅನೇಕ ದೇವಾಲಯಗಳನ್ನು ನಾಶ ಮಾಡಲಾಯಿತು. 19ನೆ ಶತಮಾನದಲ್ಲಿ ಮೊಘಲರು ಮತ್ತು ನವಾಬರ ಆಳ್ವಿಕೆಯು ದುರ್ಬಲಗೊಳ್ಳುತ್ತಾ ಬಂದಿತ್ತು, ಬ್ರಿಟಿಷರ ಆಳ್ವಿಕೆ ಶುರುವಾಗಿತ್ತು. ಈ ಅವಯಲ್ಲಿ ಭಗವಾನ್ ಶ್ರೀ ರಾಮನ ಜನ್ಮಸ್ಥಳದಲ್ಲಿ ರಾಮಮಂದಿರ ಪುನರ್ ನಿರ್ಮಾಣವಾಗಬೇಕು ಎಂದು ಜನ ಹಂಬಲಿಸಿದರು, ಹೋರಾಟಕ್ಕಿಳಿದರು. +ದಿನ ಕಳೆದಂತೆ ರಾಮಲಲ್ಲಾ ಜನ್ಮಸ್ಥಳವನ್ನು ಮರಳಿ ಪಡೆಯಬೇಕೆಂಬ ತುಡಿತ ಪ್ರಬಲವಾಯಿತು. ಹಂತ ಹಂತವಾಗಿ ರಾಮಮಂದಿರ ಚಳವಳಿ, ಅಭಿಯಾನವಾಗಿ ರೂಪಾಂತರವಾಯಿತು. ಹಿಂದೂಗಳ ಸತತ ಹೋರಾಟದ ಫಲ, ಕಾನೂನಿನ ಸಂಘರ್ಷ, ರಾಜಕೀಯ ಇಚ್ಛಾಶಕ್ತಿಯ ಫಲವಾಗಿ ಇದೇ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಿ ಬಾಲರಾಮ ವಿರಾಜಮಾನನಾಗಿದ್ದು, ಭಕ್ತರಿಗೆ ದರ್ಶನ ನೀಡುತ್ತಿದ್ದಾನೆ. ಸುಮಾರು 500 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನವ ಪೀಳಿಗೆ ರಾಮ ಜನ್ಮಭೂಮಿಯಲ್ಲಿ ಸ್ವ ಅಸ್ಮಿತೆಯ ರಾಮನವಮಿಯನ್ನು ಆಚರಿಸುತ್ತಿದೆ. +ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮಮಂದಿರ ಲೋಕಾರ್ಪಣೆ ಬಳಿಕ ಇದೇ ಮೊದಲ ಬಾರಿಗೆ ನಡೆಯುತ್ತಿರುವ ರಾಮನವಮಿಗೆ ವಿಶೇಷ ಸಿದ್ಧತೆ ಕೈಗೊಳ್ಳಲಾಗಿದೆ. ದೇವಾಲಯವನ್ನು ವಿವಿಧ ರೀತಿಯ ಹೂವುಗಳಿಂದ ಅಲಂಕರಿಸಲಾಗಿದೆ. ಇದಕ್ಕಾಗಿ 45 ಕ್ವಿಂಟಾಲ್‍ಗೂ ಅಕವಾದ ಅಗತ್ಯ ಹೂವುಗಳನ್ನು ದೇಶದ ನಾನಾ ಭಾಗಗಳಿಂದ ತರಿಸಲಾಗಿದೆ. ವಿಶೇಷವಾದ ವಿದ್ಯುತ್ ದೀಪಾಲಂಕಾರಗಳಿಂದ ರಾಮಮಂದಿರ ಮನೋಲ್ಲಾಸ ಪೂರ್ವಕವಾಗಿ ಕಂಗೊಳಿಸುತ್ತಿದೆ. +ಇಂದು ಬೆಳಗ್ಗೆ 3.30ಕ್ಕೆ ಮಹಾಮಂಗಳಾರತಿ ಆರಂಭಗೊಂಡು ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ರಾತ್ರಿ 11 ಗಂಟೆವರೆಗೂ ನಿರಂತರವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡಿರುವುದರಿಂದ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಅಯೋಧ್ಯೆಗೆ ಬಂದಿದ್ದಾರೆ. +ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ದೇವಲೋಕವೇ ಧರೆಗಿಳಿದುಬಂದಂತಹ ವಾತಾವರಣ ಸೃಷ್ಟಿಯಾಗಿದೆ. ಇಡೀ ನಗರ ತಳಿರುತೋರಣಗಳಿಂದ ಕಂಗೊಳಿಸುತ್ತಿದ್ದು, ಬರುವ ಭಕ್ತಾದಿಗಳಿಗೆ ಸ್ವಯಂ ಸೇವಕರಾಗಿ ನೂರಾರು ಸಂಸ್ಥೆಗಳು ಆಹಾರ ವಿತರಿಸುತ್ತಿವೆ. ಇನ್ನೊಂದೆಡೆ ಪಾನಕ, ಮಜ್ಜಿಗೆ ಕೂಡ ವಿತರಿಸಲಾಗುತ್ತಿದೆ.ಜೈ ಶ್ರೀರಾಮ್ ಘೋಷಣೆ ಮುಗಿಲು ಮುಟ್ಟುತ್ತಿದ್ದು, ಎಲ್ಲೆಡೆ ಶ್ರೀರಾಮನಾಮ ಪಸರಿಸಿದೆ. +ಬಾಲರಾಮನ ಹಣೆಗೆ ಸೂರ್ಯರಶ್ಮಿ: +ಶ್ರೀ ರಾಮ ಜನ್ಮದಿನೋತ್ಸವ ಸಂದರ್ಭದಲ್ಲಿ ಏ.17ರಂದು ಮಧ್ಯಾಹ್ನ 12 ಗಂಟೆಗೆ ಸೂರ್ಯನ ಕಿರಣಗಳ ತಿಲಕ ರಾಮಲಲ್ಲಾನ ಹಣೆಯಲ್ಲಿ ರಾರಾಜಿಸಲಿದೆ. ಈ ಸೂರ್ಯ ತಿಲಕವು 75 ಮಿ.ಮೀ. ಆಕಾರದಲ್ಲಿ ಇರಲಿದೆ. ಬೆಂಗಳೂರಿನ ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸಂಸ್ಥೆಯ ತಜ್ಞರು ಈ ಕುರಿತು ಅಣಕು ಪ್ರಯೋಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಬಾಲರಾಮನ ಮೂರ್ತಿಯ ಮೇಲೆ ಮೂರು ಕನ್ನಡಿಗಳ ಸಹಾಯದಿಂದ ಎರಡೂವರೆ ನಿಮಿಷಗಳ ಕಾಲ ಸೂರ್ಯರಶ್ಮಿ ಬೀಳುವುದನ್ನು ನೋಡಿ ಎಲ್ಲರೂ ಪುಳಕಿತರಾಗಿದ್ದಾರೆ. \ No newline at end of file diff --git a/eesanje/url_47_122_5.txt b/eesanje/url_47_122_5.txt new file mode 100644 index 0000000000000000000000000000000000000000..782bbfd15ad45ac12689018eae5e8015280f4924 --- /dev/null +++ b/eesanje/url_47_122_5.txt @@ -0,0 +1,7 @@ +“ಮೋದಿಯನ್ನು 400 ಅಡಿ ಕೆಳಗೆ ಸಮಾಧಿ ಮಾಡ್ತಾರೆ” ಎಂಬ ವಿವಾದಿತ ಹೇಳಿಕೆ ಕೊಟ್ಟ ನಜ್ರುಲ್ ಇಸ್ಲಾಂ +ರಾಂಚಿ, ಏ.17- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಜೆಎಂಎಂ ನಾಯಕರೊಬ್ಬರನ್ನು ಉನ್ನತ ಮಟ್ಟದ ತನಿಖೆ ನಡೆಸಿ ಬಂಧಿಸುವಂತೆ ಬಿಜೆಪಿ ಒತ್ತಾಯಿಸಿದೆ. ಪಕ್ಷದ ರಾಜ್ಯ ವಕ್ತಾರ ಪ್ರತುಲ್ ಸಹದೇವ್ ಅವರು ಉದ್ದೇಶಿತ ವೀಡಿಯೊವನ್ನು ಬಿಡುಗಡೆ ಮಾಡಿದರು, ಇದರಲ್ಲಿ ಜೆಎಂಎಂ ಕೇಂದ್ರ ಸಮಿತಿಯ ಸದಸ್ಯ ನಜ್ರುಲ್ ಇಸ್ಲಾಂ ಅವರು ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಬದಲು 400 ಅಡಿ ಕೆಳಗೆ ಸಮಾಧಿ ಮಾಡುತ್ತಾರೆ ಎಂದು ಹೇಳಿದರು. +ಸಾಹೇಬ್‍ಗಂಜ್‍ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಇಸ್ಲಾಂ ಅವರು ಪ್ರಧಾನಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಆದರೆ, ಪೊಲೀಸರು ಅವರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಹದೇವ್ ಹೇಳಿದ್ದಾರೆ. ಪ್ರತಿಪಕ್ಷ ಇಂಡಿಯಾ ಒಕ್ಕೂಟ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ಒಪ್ಪಿಕೊಂಡಿದೆ ಮತ್ತು ಅದಕ್ಕಾಗಿಯೇ ಅವರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದರು. +ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಮತ್ತು ಇಸ್ಲಾಂನ ತಕ್ಷಣದ ಬಂಧನವನ್ನು ಖಚಿತಪಡಿಸಿಕೊಳ್ಳುತ್ತೇವೆ. ನಾವು ಈ ವಿಷಯದಲ್ಲಿ ಚುನಾವಣಾ ಆಯೋಗದ ಮೊರೆ ಹೋಗುತ್ತೇವೆ ಎಂದು ಅವರು ಹೇಳಿದರು. +" 400 : " , -- … ?../e7FW2LQDt3 +ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಕಂಡು ಜೆಎಂಎಂನ ಮಾನಸಿಕ ಸಮತೋಲನ ಹದಗೆಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಕಿಡಿಕಾರಿದ್ದಾರೆ. ಯಾವುದೇ ನಾಯಕರ ಇಂತಹ ಹೇಳಿಕೆಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹೇಳಿದೆ. +ಅವರು (ಇಸ್ಲಾಂ) ನಿಜವಾಗಿಯೂ ಅಂತಹ ಹೇಳಿಕೆಯನ್ನು ನೀಡಿದ್ದರೆ, ಅವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ನಾವು ಬಿಜೆಪಿಯಂತಹ ಅಸಭ್ಯ ಹೇಳಿಕೆಗಳನ್ನು ಪ್ರೊತ್ಸಾಹಿಸುವುದಿಲ್ಲ ಎಂದು ಜೆಎಂಎಂ ವಕ್ತಾರ ಮನೋಜ್ ಪಾಂಡೆ ಹೇಳಿದ್ದಾರೆ. \ No newline at end of file diff --git a/eesanje/url_47_122_6.txt b/eesanje/url_47_122_6.txt new file mode 100644 index 0000000000000000000000000000000000000000..a269fc3522e9be35974537c9d85d5cbedabab596 --- /dev/null +++ b/eesanje/url_47_122_6.txt @@ -0,0 +1,9 @@ +ಮೋದಿ ಭ್ರಷ್ಟಾಚಾರದ ವಿಶ್ವ ಚಾಂಪಿಯನ್ ; ರಾಹುಲ್ +ಗಾಜಿಯಾಬಾದ್, ಏ. 17 (ಪಿಟಿಐ) :ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದಲ್ಲೆ ಅತ್ಯಂತ ದೊಡ್ಡ ಸುಲಿಗೆ ಯೋಜನೆಯಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. +ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. +ಪಶ್ಚಿಮ ಉತ್ತರ ಪ್ರದೇಶದ ಗಾಜಿಯಾಬಾದ್‍ನಿಂದ ಗಾಜಿಪುರದವರೆಗೆ ಬದಲಾವಣೆಯ ಗಾಳಿ ಬೀಸಲಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ವಿದಾಯ ನೀಡಲಾಗುವುದು ಎಂದು ಯಾದವ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಮತವೂ ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಯಾದವ್ ಹೇಳಿದರು. +ಈಗ ರದ್ದುಗೊಂಡಿರುವ ಚುನಾವಣಾ ಬಾಂಡ್‍ಗಳನ್ನು ಟೀಕಿಸಿದ ಗಾಂಧಿ ಚುನಾವಣಾ ನಿಧಿಯಲ್ಲಿ ಪಾರದರ್ಶಕತೆಯನ್ನು ತರಲು ಈ ಯೋಜನೆಯನ್ನು ತರಲಾಗಿದೆ ಎಂದು ಪ್ರಧಾನಿ ಹೇಳಿಕೊಳ್ಳುತ್ತಾರೆ ಆದರೆ ಅದನ್ನು ಸುಪ್ರೀಂ ಕೋರ್ಟ್ ಏಕೆ ತಳ್ಳಿಹಾಕಿತು ಎಂದು ಪ್ರಶ್ನಿಸಿದ್ದಾರೆ. ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದ ಅತಿದೊಡ್ಡ ಸುಲಿಗೆ ಯೋಜನೆಯಾಗಿದೆ. +ಭಾರತದ ಉದ್ಯಮಿಗಳಿಗೆ ಅದು ಚೆನ್ನಾಗಿ ತಿಳಿದಿದೆ. ಪ್ರಧಾನಿ ಎಷ್ಟೇ ಸ್ಪಷ್ಟಪಡಿಸಿದರೂ ಯಾವುದೇ ಪರಿಣಾಮ ಬೀರುವುದಿಲ್ಲ ಏಕೆಂದರೆ ಪ್ರಧಾನಿ ಭ್ರಷ್ಟಾಚಾರದ ಚಾಂಪಿಯನ್ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿದೆ ಎಂದು ಗಾಂಧಿ ಹೇಳಿದರು. +ಕಾಂಗ್ರೆಸ್ ಯಾವುದೇ ಸಮಯದಲ್ಲಿ ಬಡತನವನ್ನು ಕೊನೆಗೊಳಿಸುತ್ತದೆ ಎಂಬ ಮೋದಿಯವರ ಟೀಕೆಗಳ ಕುರಿತು ಗಾಂಧಿ ಬಡತನವು ಒಂದೇ ಬಾರಿಗೆ ಕೊನೆಗೊಳ್ಳುತ್ತದೆ ಎಂದು ಯಾರೂ ಹೇಳಲಿಲ್ಲ ಆದರೆ ನಾವು ಅದಕ್ಕಾಗಿ ಬಲವಾದ ಪ್ರಯತ್ನಗಳನ್ನು ಮಾಡಬಹುದು ಎಂದು ಹೇಳಿದರು. +ಉತ್ತರ ಪ್ರದೇಶದ ಅಮೇಥಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ತಮ್ಮ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು. ಅಂತಹ ನಿರ್ಧಾರಗಳನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು. +ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಎಸ್‍ಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿವೆ. 80 ಸದಸ್ಯರನ್ನು ಲೋಕಸಭೆಗೆ ಕಳುಹಿಸುವ ರಾಜಕೀಯವಾಗಿ ನಿರ್ಣಾಯಕ ಉತ್ತರಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಹೋರಾಡುತ್ತಿದ್ದರೆ, ಎಸ್‍ಪಿ ಮತ್ತು ಇತರ ಕೆಲವು ಮಿತ್ರಪಕ್ಷಗಳು ಉಳಿದ 63 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಏಳು ಹಂತದ ಲೋಕಸಭೆ ಚುನಾವಣೆ ಏಪ್ರಿಲ್ 19 ರಂದು ಆರಂಭವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ \ No newline at end of file diff --git a/eesanje/url_47_122_7.txt b/eesanje/url_47_122_7.txt new file mode 100644 index 0000000000000000000000000000000000000000..8eb6e7b9fc2b538f5c8ae6c4df6dd73564cfd44c --- /dev/null +++ b/eesanje/url_47_122_7.txt @@ -0,0 +1,11 @@ +144 ಕೋಟಿ ತಲುಪಿದ ಭಾರತದ ಜನಸಂಖ್ಯೆ..! +ನವದೆಹಲಿ, ಏ.17 (ಪಿಟಿಐ)ಭಾರತದ ಜನಸಂಖ್ಯೆ 144ಕೋಟಿಗೆ ತಲುಪಿದೆ ಎಂದು ವಿಶ್ವ ಜನಸಂಖ್ಯಾ ನಿಧಿ (ಯುಎನ್‍ಎಫ್ ಪಿಎ) ಯ ವರದಿ ತಿಳಿಸಿದೆ.ಯುಎನ್‍ ಫ್ ಪಿಎಯ ಸ್ಟೇಟ್ ಆಫ್ ವಲ್ಡರ್ ಪಾಪ್ಯುಲೇಶನ್ ವರದಿ ಈ ವಿಷಯ ಬಹಿರಂಗಪಡಿಸಿದ್ದು, ಭಾರತದ ಜನಸಂಖ್ಯೆಯು 77 ವರ್ಷಗಳಲ್ಲಿ ದ್ವಿಗುಣಗೊಳ್ಳಲಿದೆ ಎಂದು ಅಂದಾಜಿಸಿದೆ. +ಅಂದಾಜು 144.17 ಕೋಟಿ ಜನಸಂಖ್ಯೆಯೊಂದಿಗೆ ಭಾರತ ಜಾಗತಿಕವಾಗಿ ಮುಂಚೂಣಿಯಲ್ಲಿದ್ದರೆ, ಚೀನಾ ಜನಸಂಖ್ಯೆ 142.5 ಕೋಟಿಯಷ್ಟಿದೆ ಎಂದು ವರದಿ ತಿಳಿಸಿದೆ. 2011 ರಲ್ಲಿ ನಡೆಸಿದ ಕೊನೆಯ ಜನಗಣತಿಯ ಸಮಯದಲ್ಲಿ ಭಾರತದ ಜನಸಂಖ್ಯೆಯು 121 ಕೋಟಿ ಎಂದು ದಾಖಲಾಗಿದೆ. +ಭಾರತದ ಜನಸಂಖ್ಯೆಯ ಅಂದಾಜು 24 ಪ್ರತಿಶತದಷ್ಟು ಜನರು 0-14 ವರ್ಷ ವಯಸ್ಸಿನವರಾಗಿದ್ದರೆ, 17 ಪ್ರತಿಶತ 10-19 ವಯಸ್ಸಿನ ವ್ಯಾಪ್ತಿಯಲ್ಲಿದ್ದಾರೆ ಎಂದು ವರದಿಯು ಮತ್ತಷ್ಟು ವಿವರಿಸಿದೆ. +10-24 ವಯಸ್ಸಿನ ವಿಭಾಗವು ಶೇ.26 ರಷ್ಟಿದೆ ಎಂದು ಅಂದಾಜಿಸಲಾಗಿದೆ, 15-64 ವಯಸ್ಸಿನವರು ಶೇ.68 ರಷ್ಟಿದ್ದಾರೆ. ಹೆಚ್ಚುವರಿಯಾಗಿ, ಭಾರತದ ಜನಸಂಖ್ಯೆಯ ಶೇ.7 ರಷ್ಟು ಜನರು 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ, ಪುರುಷರ ಜೀವಿತಾವಧಿ 71 ವರ್ಷಗಳು ಮತ್ತು ಮಹಿಳೆಯರ ಆಯುಷ್ಯ ಸರಾಸರಿ 74 ವರ್ಷಗಳಂತೆ. +ಲೈಂಗಿಕ ಮತ್ತು ಸಂತಾನೋತ್ಪತ್ತಿ ಆರೋಗ್ಯದಲ್ಲಿ 30 ವರ್ಷಗಳ ಪ್ರಗತಿಯು ಪ್ರಪಂಚದಾದ್ಯಂತ ಅತ್ಯಂತ ಅಂಚಿನಲ್ಲಿರುವ ಸಮುದಾಯಗಳನ್ನು ನಿರ್ಲಕ್ಷಿಸಿದೆ ಎಂದು ವರದಿಯು ಕಂಡುಹಿಡಿದಿದೆ. ವರದಿಯ ಪ್ರಕಾರ, 2006-2023 ರ ನಡುವೆ ಭಾರತದಲ್ಲಿ ಬಾಲ್ಯ ವಿವಾಹದ ಪ್ರಮಾಣ ಶೇ. 23 ರಷ್ಟಿತ್ತು. +ಭಾರತದಲ್ಲಿ ತಾಯಂದಿರ ಮರಣಗಳು ಗಣನೀಯವಾಗಿ ಕುಸಿದಿವೆ ಎಂದು ವರದಿಯು ಗಮನಿಸಿದೆ, ವಿಶ್ವಾದ್ಯಂತ ಅಂತಹ ಎಲ್ಲಾ ಸಾವುಗಳಲ್ಲಿ 8 ಪ್ರತಿಶತದಷ್ಟಿದೆ. ಭಾರತದ ಯಶಸ್ಸಿಗೆ ಸಾಮಾನ್ಯವಾಗಿ ಕೈಗೆಟುಕುವ, ಗುಣಮಟ್ಟದ ತಾಯಿಯ ಆರೋಗ್ಯ ಸೇವೆಗಳಿಗೆ ಸುಧಾರಿತ ಪ್ರವೇಶ ಮತ್ತು ಆರೋಗ್ಯ ಫಲಿತಾಂಶಗಳ ಮೇಲೆ ಲಿಂಗ ತಾರತಮ್ಯದ ಪರಿಣಾಮವನ್ನು ಪರಿಹರಿಸುವ ಪ್ರಯತ್ನಗಳು ಕಾರಣವಾಗಿವೆ ಎಂದು ವರದಿ ಹೇಳಿದೆ. +ಆದಾಗ್ಯೂ, ತಾಯಿಯ ಮರಣದ ಅಪಾಯದಲ್ಲಿ ಭಾರತವು ನಾಟಕೀಯ ಅಸಮಾನತೆಯನ್ನು ನೋಡುವುದನ್ನು ಮುಂದುವರೆಸಿದೆ ಎಂದು ವರದಿಯು ಗಮನಿಸಿದೆ. ಗ್ಲೋಬಲ್ ಪಬ್ಲಿಕ್ ಹೆಲ್ತ್‍ನಿಂದ ಭಾರತದಲ್ಲಿ ಜಿಲ್ಲಾ ಮಟ್ಟದ ತಾಯಿಯ ಮರಣ ಅನುಪಾತದ ಅಂದಾಜುಗಳು ಮತ್ತು ಪರಸ್ಪರ ಸಂಬಂಧಗಳು ಎಂಬ ವರದಿಯನ್ನು ಉಲ್ಲೇಖಿಸಲಾಗಿದೆ. +ಭಾರತದ 640 ಜಿಲ್ಲೇಗಳಲ್ಲಿ ಇತ್ತೀಚಿನ ಸಂಶೋಧನೆಯು ಸುಮಾರು ಮೂರನೇ ಒಂದು ಭಾಗದಷ್ಟು ತಾಯಂದಿರ ಮರಣ ಅನುಪಾತವನ್ನು ಕಡಿಮೆ ಮಾಡುವ ಸುಸ್ಥಿರ ಅಭಿವೃದ್ಧಿ ಗುರಿಯನ್ನು ಸಾಧಿಸಿದೆ ಎಂದು ತಿಳಿಸಿದೆ. 100,000 ಜೀವಂತ ಜನನಗಳಿಗೆ 70, 114 ಜಿಲ್ಲೇಗಳು ಇನ್ನೂ 210 ಅಥವಾ ಅದಕ್ಕಿಂತ ಹೆಚ್ಚಿನ ಅನುಪಾತಗಳನ್ನು ಹೊಂದಿವೆ. +100,000 ಜನನಗಳಿಗೆ 1,671 ಸ್ಥಳೀಯ ಜನರ ಹೆಚ್ಚಿನ ಪ್ರಮಾಣವನ್ನು ಹೊಂದಿರುವ ಗ್ರಾಮೀಣ ಪ್ರದೇಶವಾದ ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ಕಂಡುಬರುತ್ತದೆ. ಈ ಅಂಕಿಅಂಶಗಳನ್ನು ಸಾಮಾಜಿಕ ಆರ್ಥಿಕ ಗುಂಪು, ಜನಾಂಗೀಯತೆ, ಜಾತಿ ಅಥವಾ ಧರ್ಮದ ಮೂಲಕ ವಿಂಗಡಣೆ ಮಾಡುವಾಗ, ಈ ಅಂಶಗಳು ಸ್ಪಷ್ಟವಾಗಿ ಸವಾಲಾಗಿದೆ. ಆರೋಗ್ಯದ ಫಲಿತಾಂಶಗಳಲ್ಲಿ ಪಾತ್ರವನ್ನು ವಹಿಸುತ್ತದೆ ಎಂದು ಅದು ಹೇಳಿದೆ. +ವಿಕಲಾಂಗ ಮಹಿಳೆಯರು ವಿಕಲಾಂಗತೆ ಇಲ್ಲದ ತಮ್ಮ ಗೆಳೆಯರಿಗಿಂತ ಲಿಂಗ ಆಧಾರಿತ ಹಿಂಸೆಯನ್ನು ಅನುಭವಿಸುವ ಸಾಧ್ಯತೆ 10 ಪಟ್ಟು ಹೆಚ್ಚು ಎಂದು ವರದಿ ಗಮನಿಸಿದೆ. ಆರೋಗ್ಯ ಸೇವೆಯಲ್ಲಿನ ಸುಧಾರಣೆಗಳು ಪ್ರಾಥಮಿಕವಾಗಿ ಶ್ರೀಮಂತ ಮಹಿಳೆಯರಿಗೆ ಮತ್ತು ಈಗಾಗಲೇ ಆರೋಗ್ಯ ರಕ್ಷಣೆಗೆ ಉತ್ತಮ ಪ್ರವೇಶವನ್ನು ಹೊಂದಿರುವ ಜನಾಂಗೀಯ ಗುಂಪುಗಳಿಗೆ ಸೇರಿದವರಿಗೆ ಪ್ರಯೋಜನವನ್ನು ನೀಡಿವೆ. \ No newline at end of file diff --git a/eesanje/url_47_122_8.txt b/eesanje/url_47_122_8.txt new file mode 100644 index 0000000000000000000000000000000000000000..b4687b1f672c4a971fc5406c2e693f7bd4c1206d --- /dev/null +++ b/eesanje/url_47_122_8.txt @@ -0,0 +1,8 @@ +ಶ್ರೀರಾಮನ ಆದರ್ಶವೇ ವಿಕಸಿತ ಭಾರತಕ್ಕೆ ಮುನ್ನುಡಿ ; ಪ್ರಧಾನಿ ಮೋದಿ +ನವದೆಹಲಿ,ಏ. 17 (ಪಿಟಿಐ)ರಾಮ ಮಂದಿರದ ಪ್ರತಿಷ್ಠಾಪನೆಯ ನಂತರ ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ಉತ್ಸವವನ್ನು ಆಚರಿಸಲಾಗುತ್ತಿದ್ದು, ಅಯೋಧ್ಯೆಯು ಹೋಲಿಸಲಾಗದ ಆನಂದದಲ್ಲಿದೆ ಎಂದು ಹೇಳುವ ಮೂಲಕ ಪ್ರಧಾನ ನರೇಂದ್ರ ಮೋದಿ ಅವರು ನಾಡಿನ ಜನರಿಗೆ ರಾಮನವಮಿ ಶುಭಾಷಯ ಕೋರಿದ್ದಾರೆ. +ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ನಂತರದ ಮೊದಲ ರಾಮನವಮಿ ಒಂದು ಪೀಳಿಗೆಯ ಮೈಲಿಗಲ್ಲು, ಭರವಸೆ ಮತ್ತು ಪ್ರಗತಿಯ ಹೊಸ ಯುಗದೊಂದಿಗೆ ಶತಮಾನಗಳ ಭಕ್ತಿಯನ್ನು ಒಟ್ಟುಗೂಡಿಸುತ್ತದೆ. ಇದು ಕೋಟಿಗಟ್ಟಲೆ ಭಾರತೀಯರು ಕಾಯುತ್ತಿರುವ ದಿನ ಎಂದು ಮೋದಿ ಎಕ್ಸ್ ಮಾಡಿದ್ದಾರೆ. +ಇದು ದೇಶದ ಜನತೆ ಹಲವು ವರ್ಷಗಳಿಂದ ಮಾಡಿದ ಶ್ರಮ ಮತ್ತು ತ್ಯಾಗದ ಫಲ ಎಂದರು. ರಾಮ ನವಮಿಯು ಭಗವಾನ್ ರಾಮನ ಜನ್ಮವನ್ನು ಆಚರಿಸುತ್ತದೆ ಮತ್ತು ಅಯೋಧ್ಯೆಯಲ್ಲಿ ಅವನು ಜನಿಸಿದನೆಂದು ನಂಬಲಾದ ಸ್ಥಳದಲ್ಲಿ ಇತ್ತೀಚೆಗೆ ದೇವಾಲಯ ಸ್ಥಾಪಿಸಲಾಗಿದೆ. +ಪ್ರಭು ಶ್ರೀರಾಮನ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಮತ್ತು ಸದಾಚಾರ ಮತ್ತು ಶಾಂತಿಯ ಕಡೆಗೆ ನಮ್ಮ ಮಾರ್ಗಗಳನ್ನು ಮಾರ್ಗದರ್ಶಿಸಲಿ, ನಮ್ಮ ಜೀವನವನ್ನು ಬುದ್ಧಿವಂತಿಕೆ ಮತ್ತು ಧೈರ್ಯದಿಂದ ಬೆಳಗಿಸಲಿ ಎಂದು ಮೋದಿ ಹೇಳಿದರು. +ಅಯೋಧ್ಯೆಯಲ್ಲಿ ನಡೆದ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ದೇಶದ ಹೆಚ್ಚಿನ ಸಂಖ್ಯೆಯ ಜನರೊಂದಿಗೆ ಸಾಕ್ಷಿಯಾಗಿರುವುದರಿಂದ ಈ ಸಂದರ್ಭದಲ್ಲಿ ನಾನು ಅತೀವ ಮತ್ತು ಕೃತಜ್ಞತೆಯನ್ನು ಅನುಭವಿಸುತ್ತೇನೆ ಎಂದು ಅವರು ಹೇಳಿದರು.ಆ ಕ್ಷಣದ ನೆನಪುಗಳು ಅದೇ ಶಕ್ತಿಯಿಂದ ತನ್ನೊಳಗೆ ಮಿಡಿಯುತ್ತಲೇ ಇರುತ್ತವೆ ಎಂದರು. +ಭಗವಾನ್ ರಾಮನು ಭಾರತೀಯರ ಹೃದಯದಲ್ಲಿ ಆಳವಾಗಿ ಹುದುಗಿದ್ದಾನೆ. ರಾಮ ನವಮಿಯು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಂತರು ಮತ್ತು ಭಕ್ತರನ್ನು ಸ್ಮರಿಸುವ ಮತ್ತು ಗೌರವಿಸುವ ಸಮಯವಾಗಿದೆ ಎಂದು ಮೋದಿ ಹೇಳಿದರು. +ಮರ್ಯಾದಾ ಪುರುಷೋತ್ತಮ ಭಗವಾನ್ ರಾಮ್ ಅವರ ಜೀವನ ಮತ್ತು ಆದರ್ಶಗಳು ವಿಕಸಿತ ಭಾರತ ನಿರ್ಮಿಸಲು ಬಲವಾದ ಆಧಾರವಾಗಲಿದೆ ಎಂದು ನನಗೆ ವಿಶ್ವಾಸವಿದೆ. ಅವರ ಆಶೀರ್ವಾದವು ಆತ್ಮನಿರ್ಭರ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_122_9.txt b/eesanje/url_47_122_9.txt new file mode 100644 index 0000000000000000000000000000000000000000..f6cee6906e38015d4d28a21d72e545b9b7511949 --- /dev/null +++ b/eesanje/url_47_122_9.txt @@ -0,0 +1,7 @@ +ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ್ದ ದಾಳಿಕೋರರು ಗುಜರಾತ್‌ನಲ್ಲಿ ಅರೆಸ್ಟ್ +ಕಚ್,ಏ. 16 (ಪಿಟಿಐ) –ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡು ಹಾರಿಸಿದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಗುಜರಾತ್ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಇಬ್ಬರು ವ್ಯಕ್ತಿಗಳನ್ನು ತಡರಾತ್ರಿ ಗುಜರಾತ್ನ ಕಚ್ ಜಿಲ್ಲೆಯ ಮಾತಾ ನೊ ಮಧ್ ಗ್ರಾಮದಿಂದ ಬಂಧಿಸಲಾಗಿದೆ ಎಂದು ಕಚ್ -ಪಶ್ಚಿಮದ ಉಪ ಇನ್ಸ್ಪೆಕ್ಟರ್ ಜನರಲ್ ಮಹೇಂದ್ರ ಬಗಾಡಿಯಾ ತಿಳಿಸಿದ್ದಾರೆ. +ತಾಂತ್ರಿಕ ಕಣ್ಗಾವಲು ಆಧರಿಸಿ, ಕಚ್, ಪಶ್ಚಿಮ ಮತ್ತು ಮುಂಬೈ ಪೊಲೀಸರ ಜಂಟಿ ತಂಡಗಳು ಇಬ್ಬರನ್ನು ಬಂಧಿಸಿವೆ ಎಂದು ಅವರು ಹೇಳಿದರು.ದೂರು ದಾಖಲಾಗುತ್ತಿದ್ದಂತೆ ಅವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಬಗಾಡಿಯಾ ತಿಳಿಸಿದ್ದಾರೆ. ಪಾಲ್ ಮತ್ತು ಗುಪ್ತಾ ಇಬ್ಬರನ್ನೂ ಬಂಧಿತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ತಂಡವು ಖಾನ್ ಅವರ ಮನೆಗೆ ಗುಂಡು ಹಾರಿಸಲು ನೇಮಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆ ಸೂಚಿಸಿದೆ ಎಂದು ಅವರು ಹೇಳಿದರು. +ಪಾಲ್ ಗುಂಡು ಹಾರಿಸಿದಾಗ, ಗುಪ್ತಾ ತಂಡದ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಬಗಾಡಿಯಾ ಹೇಳಿದರು. ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿರುವ 58 ವರ್ಷದ ಖಾನ್ ಅವರ ಮನೆಯ ಹೊರಗೆ ಮೋಟಾರ್ಸೈಕಲ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. +ಅವರು ನವಿ ಮುಂಬೈನ ಪನ್ವೆಲ್ನಲ್ಲಿ ಒಂದು ತಿಂಗಳ ಕಾಲ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದರು, ಅಲ್ಲಿ ನಟ ಫಾರ್ಮ್ ಹೌಸ್ ಹೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಗುಂಡು ಹಾರಿಸಿದ ಘಟನೆಯ ತನಿಖೆಯ ಭಾಗವಾಗಿ ಪೊಲೀಸರು ನವಿ ಮುಂಬೈನಿಂದ ಮೂವರನ್ನು ವಿಚಾರಣೆಗೊಳಪಡಿಸಿದರು, ಇದರಲ್ಲಿ ಮನೆ ಮಾಲೀಕರು, ಅಪರಾಧಕ್ಕೆ ಬಳಸಿದ ದ್ವಿಚಕ್ರ ವಾಹನದ ಹಿಂದಿನ ಮಾಲೀಕರು, ಮಾರಾಟಕ್ಕೆ ಸಹಕರಿಸಿದ ಏಜೆಂಟ್ ಮತ್ತು ಇತರ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. +ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರು ಫೇಸ್ಬುಕ್ ಪೊಸ್ಟ್ನಲ್ಲಿ ಘಟನೆಗೆ ನಾವೇ ಕಾರಣ ಎಂದು ಒಪ್ಪಿಕೊಂಡಿದ್ದ. \ No newline at end of file diff --git a/eesanje/url_47_123_1.txt b/eesanje/url_47_123_1.txt new file mode 100644 index 0000000000000000000000000000000000000000..4a22c824232ee189de562c7b3302229a9f16e9fc --- /dev/null +++ b/eesanje/url_47_123_1.txt @@ -0,0 +1,5 @@ +ಮೂವರು ಮಕ್ಕಳನ್ನು ಬಾವಿಗೆ ಎಸೆದು ಕೊಂದ ಪಾಪಿ ತಂದೆ +ಜಲ್ನಾ, ಏ.15 –ಪಾಪಿ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನನ್ನು ಬಾವಿಗೆ ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಅಂಬಾದ್ ತಹಸಿಲ್ನ ಡೊಮೆಗಾಂವ್ ಗ್ರಾಮದಲ್ಲಿ ನಡೆದಿದೆ. +ಘಟನೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿ ಸಂತೋಷ್ ಧೋಂಡಿರಾಮ್ ಟಕ್ವಾಲೆನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ಮಕ್ಕಳನ್ನು ಸೋಹಮ್ (12),ಶಿವಾನಿ (8) ಮತ್ತು ದೀಪಾಲಿ (7) ಎಂದು ಗುರುತಿಸಲಾಗಿದ್ದು ,ಪಾಪಿ ತಂದೆ ತಕ್ವಾಲೆ ಎರಡನೇ ಮದುವೆಯಾಗಿದ್ದು ಈಗ ತನ್ನ ಮೊದಲ ಪತ್ನಿ ಮಕ್ಕಳನ್ನು ಕೊಲೆ ಮಾಡಿದ್ದಾನೆ ಎಂದು ಅಂಬಾಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಘುನಾಥ್ ನಾಚನ್ ತಿಳಿಸಿದ್ದಾರೆ. +ಮೂಲಗಳ ಪ್ರಕಾರ, ಆರೋಪಿ ಗಳು ಛತ್ರಪತಿ ಸಂಭಾಜಿ ನಗರದ ಕಚ್ನೇರ್ ಗ್ರಾಮದ ನಿವಾಸಿಯಾಗಿದ್ದು, ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ವಾರಾಂತ್ಯದಲ್ಲಿ ಮಕ್ಕಳೊಂದಿಗೆ ಡೊಮೆಗಾಂವ್ಗೆ ಆಗಮಿಸಿದ್ದರು. +ಆರೋಪಿಯೇ ಸ್ವತಃ ಪೊಲೀಸರಿಗೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿ ನಂತರ ಫೋನ್ ಸ್ವಿಚ್ ಆಫ್ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ.ಅಪರಾಧದ ಹಿಂದಿನ ಉದ್ದೇಶವನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು \ No newline at end of file diff --git a/eesanje/url_47_123_10.txt b/eesanje/url_47_123_10.txt new file mode 100644 index 0000000000000000000000000000000000000000..6361122a63d7630c745a5923d5c90c4d60ddf131 --- /dev/null +++ b/eesanje/url_47_123_10.txt @@ -0,0 +1,6 @@ +ಮೋದಿ ಇರದಿದ್ದರೆ ರಾಮಮಂದಿರ ನಿರ್ಮಾಣವಾಗುತ್ತಿರಲಿಲ್ಲ : ರಾಜ್‍ಠಾಕ್ರೆ +ಮುಂಬೈ,ಏ.14-ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಅಯೋಧ್ಯೆ ರಾಮಮಂದಿರ ನಿರ್ಮಾಣವಾಗುತ್ತಿರಲಿಲ್ಲ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ. +ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿಗೆ ಬೇಷರತ್ ಬೆಂಬಲ ಘೋಷಿಸಿರುವ ಠಾಕ್ರೆ ಅವರು ಮಹಾಯುತಿ ಮೈತ್ರಿಕೂಟವು ಚುನಾವಣಾ ಸಮನ್ವಯಕ್ಕಾಗಿ ಸಂಪರ್ಕಿಸಬಹುದಾದ ನಾಯಕರ ಪಟ್ಟಿಯನ್ನು ಎಂಎನ್‍ಎಸ್ ಸಿದ್ಧಪಡಿಸಲಿದೆ ಎಂದು ಹೇಳಿದರು. +ನವೆಂಬರ್ 2019 ರಲ್ಲಿ ಐತಿಹಾಸಿಕ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ಅಡೆತಡೆಗಳನ್ನು ತೆರವುಗೊಳಿಸಿತು. ಈ ವರ್ಷದ ಜನವರಿ 22 ರಂದು ರಾಮಮಂದಿರದ ಶಂಕುಸ್ಥಾಪನೆ ನಡೆಯಿತು. +1992ರಲ್ಲಿ ಬಾಬರಿ ಮಸೀದಿಯನ್ನು ಕೆಡವಿದಾಗಿನಿಂದ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ವಿಷಯ ಬಾಕಿ ಉಳಿದಿತ್ತು ಎಂದು ಠಾಕ್ರೆ ಹೇಳಿದರು.ನಡೆಯುವ ಕೆಲವು ಒಳ್ಳೆಯ ಸಂಗತಿಗಳನ್ನು ಶ್ಲಾಸಬೇಕಾಗಿದೆ. ಒಂದೆಡೆ, ಅಸಮರ್ಥ (ನಾಯಕತ್ವ) ಮತ್ತು ಮತ್ತೊಂದೆಡೆ, ಪ್ರಬಲ ನಾಯಕತ್ವವಿದೆ. ಆದ್ದರಿಂದ ನಾವು ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಯೋಚಿಸಿದ್ದೇವೆ ಎಂದು ಠಾಕ್ರೆ ತಮ್ಮ ಪಕ್ಷದ ನಿರ್ಧಾರಕ್ಕೆ ಸಮಜಾಯಿಷಿ ನೀಡಿದರು. +ಇದೇ ಸಂದರ್ಭದಲ್ಲಿ ಅವರು ತಮ್ಮ ಸೋದರ ಸಂಬಂಧಿ ಉದ್ಧವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದರು. ಮರಾಠಿಗೆ ಶಾಸೀಯ ಭಾಷಾ ಸ್ಥಾನಮಾನ ನೀಡುವುದು ಮತ್ತು ರಾಜ್ಯದಲ್ಲಿ ಕೋಟೆಗಳ ಮರುಸ್ಥಾಪನೆ ಸೇರಿದಂತೆ ಮಹಾರಾಷ್ಟ್ರದ ಬಗ್ಗೆ ಕೆಲವು ಬೇಡಿಕೆಗಳನ್ನು ಬಿಜೆಪಿಗೆ ತಿಳಿಸಲಾಗುವುದು ಎಂದು ಠಾಕ್ರೆ ಹೇಳಿದರು. \ No newline at end of file diff --git a/eesanje/url_47_123_11.txt b/eesanje/url_47_123_11.txt new file mode 100644 index 0000000000000000000000000000000000000000..dcf56f8186e9cd1415a03fc904ce6e2984cafbb6 --- /dev/null +++ b/eesanje/url_47_123_11.txt @@ -0,0 +1,4 @@ +10 ವರ್ಷಗಳಲ್ಲಿ ಬಡವರಿಗೆ ಬಿಜೆಪಿ ಏನನ್ನೂ ಮಾಡಿಲ್ಲ ; ಖರ್ಗೆ +ನವದೆಹಲಿ,ಏ.14-ಭಾರತೀಯ ಜನತಾ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಳೆದ 10 ವರ್ಷಗಳಲ್ಲಿ ನೀವು ಬಡವರಿಗಾಗಿ ಏನನ್ನೂ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. +ಪ್ರಧಾನಿ ಮೋದಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು, ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‍ಪಿ) ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಘೋಷಿಸಿದ್ದರು. ಇವೆಲ್ಲವನ್ನೂ ನೀಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದಾರೆ. ಈ ವರ್ಷಾರಂಭದಲ್ಲಿ ರೈತರು ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನೂ ನಡೆಸಿದ್ದರು. +ಯುವಕರು ಉದ್ಯೋಗವನ್ನು ಹುಡುಕುತ್ತಿದ್ದಾರೆ. ಹಣದುಬ್ಬರ ಹೆಚ್ಚುತ್ತಿದೆ…ಅವರು ಈ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿಲ್ಲ. ಅವರು ತಮ್ಮ ಅಧಿಕಾರಾವಧಿಯಲ್ಲಿ ದೇಶದ ಎಲ್ಲ ಜನರಿಗೆ ಅನುಕೂಲವಾಗುವಂತಹ ಯಾವುದೇ ಕೆಲಸವನ್ನು ಮಾಡಲಿಲ್ಲ . ಇದು ಜನರಿಗೆ ನೀಡಲು ಏನೂ ಇಲ್ಲ ಎಂದು ಸಾಬೀತುಪಡಿಸುತ್ತದೆ ಎಂದು ಖರ್ಗೆ ಮಾಧ್ಯಮಗಳಿಗೆ ತಿಳಿಸಿದರು. \ No newline at end of file diff --git a/eesanje/url_47_123_12.txt b/eesanje/url_47_123_12.txt new file mode 100644 index 0000000000000000000000000000000000000000..604f8b7686117ae80010a474c69f82024ae3429e --- /dev/null +++ b/eesanje/url_47_123_12.txt @@ -0,0 +1,6 @@ +10 ವರ್ಷಗಳ ಸಾಧನೆಗಳಿಂದ ಬಿಜೆಪಿಗೆ ಮತ್ತೆ ಜನಾದೇಶ ಸಿಗಲಿದೆ ; ನಡ್ಡಾ +ನವದೆಹಲಿ,ಏ.14-ಕಳೆದ 10 ವರ್ಷಗಳ ಬಿಜೆಪಿ ಸರ್ಕಾರದ ಸಾಧನೆಗಳಾದ ಸಂವಿಧಾನದ 370 ನೇ ವಿಧಿ ರದ್ದತಿ ಮತ್ತು ಮಹಿಳಾ ಮೀಸಲಾತಿ ಕಾನೂನ ಜಾರಿಯಿಂದಾಗಿ ಜನರು ಈ ಬಾರಿಯೂ ತಮ್ಮ ಪಕ್ಷಕ್ಕೆ ಬಹುಮತ ನೀಡಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಕಳೆದ 10 ವರ್ಷಗಳ ಸಾಧನೆಗಳು ಸ್ಪಷ್ಟ ಜನಾದೇಶದ ಫಲಿತಾಂಶವಾಗಿದೆ ಎಂದು ನಡ್ಡಾ ಅವರು ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಮಾರಂಭದಲ್ಲಿ ಹೇಳಿದರು. +ಗ್ರಾಮ ರಸ್ತೆ, ಶೌಚಾಲಯ ನಿರ್ಮಾಣ, 25 ಕೋಟಿ ಜನರನ್ನು ಬಡತನದಿಂದ ಮುಕ್ತಗೊಳಿಸಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕೆಲವು ಸಾಧನೆಗಳೆಂದು ಅವರು ಪಟ್ಟಿ ಮಾಡಿದರು. ಇದೇ ಸಂದರ್ಭದಲ್ಲಿ ನಡ್ಡಾ ಅವರು 2029 ರಲ್ಲಿ 33 ರಷ್ಟು ಲೋಕಸಭಾ ಸದಸ್ಯರು ಮಹಿಳೆಯರಾಗಿರುತ್ತಾರೆ ಎನ್ನುವುದನ್ನುಯಾರು ಮರೆಯುವುದಿಲ್ಲ ಎಂದಿದ್ದಾರೆ. +ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಸಾಮಾಜಿಕ ನ್ಯಾಯದ ಆದರ್ಶಗಳನ್ನು ಬಿಜೆಪಿ ಪಾಲಿಸಿದ್ದು, ಅವರ ಜನ್ಮ ದಿನಾಚರಣೆಯಂದು ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. +ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು. \ No newline at end of file diff --git a/eesanje/url_47_123_2.txt b/eesanje/url_47_123_2.txt new file mode 100644 index 0000000000000000000000000000000000000000..f0142a84ce1d187a24f660594d4794f89cb6d386 --- /dev/null +++ b/eesanje/url_47_123_2.txt @@ -0,0 +1,6 @@ +ಬರೋಬ್ಬರಿ 1200 ಜನರಿರುವ ಬಹುದೊಡ್ಡ ಕುಟುಂಬದಲ್ಲಿ 350 ಮತದಾರರು +ಸೋನಿತ್ಪುರ್(ಅಸ್ಸಾಂ), ಏ.15-ಬರೋಬ್ಬರಿ 1200 ಜನ ಇರುವ ಬಹು ದೊಡ್ಡ ಕುಟುಂಬ. ಇಲ್ಲಿ ಅರ್ಹ ಮತದಾರರೇ 350. ಇದೇ ಏ.19ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಲು ಸಜ್ಜಾಗಿದ್ದಾರೆ, ಅಸ್ಸಾಂನ ಸೋನಿತ್ಪುರ್ ಜಿಲ್ಲೆಯ ಪುಲೋಗುರಿಯಲ್ಲಿರುವ ನೇಪಾಳಿ ಕುಟುಂಬವೊಂದರಲ್ಲೇ ಬರೋಬ್ಬರಿ 350 ಮತದಾರರಿದ್ದಾರೆ. ಈ ಮೂಲಕ ಹೆಚ್ಚು ಮತದಾರರಿರುವ ಅತಿದೊಡ್ಡ ಕುಟುಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. +ಈ ಮೂಲಕ ಅಸ್ಸಾಂ ನ ಈ ಥಾಪಾ ಕುಟುಂಬ ದೇಶದ ಗಮನ ಸೆಳೆದಿದೆ. ದಿವಂಗತ ರಾನ್ಬಹದ್ದೂರ್ ಥಾಪಾ ಅವರ ಕುಟುಂಬ ಸೋನಿತ್ಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಂಗಪಾರ ವಿಧಾನಸಭಾ ಕ್ಷೇತ್ರದಲ್ಲಿದೆ.ರಾನ್ ಬಹದ್ದೂರ್ ಥಾಪಾ ಅವರಿಗೆ 5 ಹೆಂಡತಿಯರಿದ್ದರು. 12 ಪುತ್ರರು ಮತ್ತು 9 ಪುತ್ರಿಯರು ಅಗಲಿದ್ದಾರೆ. ಒಟ್ಟು 1200 ಸದಸ್ಯರಿರುವ ಈ ಕುಟುಂಬದಲ್ಲಿ 350 ಸದಸ್ಯರು ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ. +ಸೋನಿತ್ಪುರ ಲೋಕಸಭಾ ಕ್ಷೇತ್ರದ ಪುಲೋಗುರಿ ನೇಪಾಳಿ ಪಾಮ್ ಪ್ರದೇಶದಲ್ಲಿ ಒಂದೇ ಪೂರ್ವಜರ 300 ಕುಟುಂಬಗಳು ವಾಸಿಸುತ್ತಿವೆ ಎಂದು ಪಾಮ್ ಗ್ರಾಮದ ಮುಖ್ಯಸ್ಥ ರಾನ್ ಬಹದ್ದೂರ್ ಅವರ ಪುತ್ರ ಟಿಲ್ ಬಹದ್ದೂರ್ ತಿಳಿಸಿದ್ದಾರೆ. ನನ್ನ ತಂದೆ 1964ರಲ್ಲಿ ನನ್ನ ಅಜ್ಜನ ಜೊತೆ ಅಸ್ಸಾಂಗೆ ಬಂದು ನೆಲೆಸಿದ್ದರು. ನನ್ನ ತಂದೆಗೆ ಐವರು ಹೆಂಡತಿಯರು ಮತ್ತು ನನಗೆ 12 ಸೋದರರು ಮತ್ತು 9 ಸೋದರಿಯರು. ರಾನ್ ಬಹದ್ದೂರ್ ಅವರು 54 ಮೊಮ್ಮಕ್ಕಳನ್ನು ಹೊಂದಿದ್ದರು. +ಒಟ್ಟಾರೆ ನಮ್ಮ ಕುಟುಂಬದಲ್ಲಿ 1200 ಸದಸ್ಯರಿದ್ದು 350 ಸದಸ್ಯರು ಮತದಾನ ಹಕ್ಕು ಪಡೆದಿದ್ದೇವೆ. ಇಷ್ಟಾದರೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ನಮಗೆ ಸಾಧ್ಯವಾಗಿಲ್ಲ. ನಮ್ಮ ಮಕ್ಕಳು ಉನ್ನತ ಶಿಕ್ಷಣ ಪಡೆದಿದ್ದಾರೆ. ಆದರೂ ಸರ್ಕಾರಿ ಕೆಲಸ ಸಿಕ್ಕಿಲ್ಲ. ಕೆಲವರು ಬೆಂಗಳೂರು ಹಾಗೂ ಬೇರೆ ನಗರಗಳಿಗೆ ಹೋಗಿ ಖಾಸಗಿ ಉದ್ಯೋಗಗಳನ್ನು ಮಾಡುತ್ತಿದ್ದಾರೆ. ಕೆಲವರು ದಿನಗೂಲಿ ಕೆಲಸ ಮಾಡುತ್ತಿದ್ದಾರೆ. +1989ರಿಂದ ನಾನು ಪ್ರಧಾನನಾಗಿ ಕೆಲಸ ಮಾಡುತ್ತಿದ್ದೇನೆ. ನನಗೂ 8 ಮಕ್ಕಳಿದ್ದಾರೆ ಎಂದು ಟಿಲ್ ಬಹದ್ದೂರ್ ತಿಳಿಸಿದರು.ನಮ್ಮ ತಂದೆ ಸರ್ಕಾರದ ಯಾವುದೇ ಸಹಾಯವಿಲ್ಲದೇ 21 ಮಕ್ಕಳನ್ನು ಬೆಳೆಸಿದರು. ಅವರು 1997ರಲ್ಲಿ ನಿಧನರಾದರು. 9 ವಿಧಾನ ಸಭಾ ಕ್ಷೇತ್ರಗಳನ್ನು ಒಳಗೊಂಡ ಸೋನಿತ್ಪುರ್ ಲೋಕಸಭಾ ಕ್ಷೇತ್ರಗಳಲ್ಲಿ 16.25 ಲಕ್ಷಕ್ಕೂ ಅ„ಕ ಮತದಾರರಿದ್ದಾರೆ. ಅಸ್ಸಾಂನ 14 ಲೋಕಸಭಾ ಕ್ಷೇತ್ರಗಳಿಗೆ 3 ಹಂತಗಳಲ್ಲಿ ಅಂದರೆ ಏ.19, ಏ.26 ಹಾಗೂ ಮೇ.7ರಂದು ಮತದಾನ ನಡೆಯಲಿದೆ. \ No newline at end of file diff --git a/eesanje/url_47_123_3.txt b/eesanje/url_47_123_3.txt new file mode 100644 index 0000000000000000000000000000000000000000..ff043783a51dc6ded40608c2241fe1682c574c2f --- /dev/null +++ b/eesanje/url_47_123_3.txt @@ -0,0 +1,13 @@ +ಚುನಾವಣಾ ಅಕ್ರಮ : 4,658 ಕೋಟಿಗೂ ಹೆಚ್ಚು ಚಿನ್ನ, ನಗದು ಜಪ್ತಿ, ದೇಶದ ಇತಿಹಾಸದಲ್ಲೇ ಹೊಸ ದಾಖಲೆ +ನವದೆಹಲಿ,ಏ.15-ದೇಶದ ಇತಿಹಾಸದಲ್ಲೇ ಪ್ರಸ್ತುತ ನಡೆಯುತ್ತಿರುವ 18ನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತಿಹೆಚ್ಚು ನಗದು, ಮದ್ಯ, ಮಾದಕವಸ್ತುಗಳು, ಚಿನ್ನಾಭರಣಗಳು, ಉಚಿತ ಉಡುಗೊರೆಗಳು ಸೇರಿದಂತೆ ಈವರೆಗೂ ಬರೋಬ್ಬರಿ 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. +ಈವರೆಗೂ ನಡೆದಿರುವ 17 ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಇಷ್ಟು ದೊಡ್ಡ ಪ್ರಮಾಣದ ನಗದು, ಮದ್ಯ, ಡ್ರಗ್ಸ್ ಪತ್ತೆಯಾಗಿರಲಿಲ್ಲ ಎಂದು ಭಾರತ ಚುನಾವಣಾ ಆಯೋಗ ತಿಳಿಸಿದೆ. ಕಳೆದ ಮಾ.1ರಿಂದ ಏ.13ರವರೆಗೆ ದೇಶದ ವಿವಿಧ ಭಾಗಗಳಲ್ಲಿ 395.39 ಕೋಟಿ ನಗದು, 489.31 ಕೋಟಿ ರೂ. ಮೌಲ್ಯದ ಮದ್ಯ, 2068.85 ಕೋಟಿ ಡ್ರಗ್ಸ್, 562.10 ಕೋಟಿ ಮೌಲ್ಯದ ಬೆಲೆಬಾಳುವ ವಸ್ತುಗಳು ಹಾಗೂ 1042.49 ಕೋಟಿ ಮೌಲ್ಯದ ಉಚಿತ ಉಡುಗೊರೆ ಸೇರಿದಂತೆ ಒಟ್ಟು 4,658.16 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಚುನಾವಣಾ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. +2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮೊದಲ ಹಂತದ ಮತದಾನ ನಡೆಯುವ ಮೊದಲೇ ಜಪ್ತಿಯಾದ ಹಣ, ವಸ್ತುಗಳ ಮೌಲ್ಯ ಶೇ.45ರಷ್ಟು ಏರಿಕೆಯಾಗಿದೆ. ಚುನಾವಣಾ ಆಯೋಗ ಅತ್ಯಂತ ಬಿಗಿಯಾದ ಕ್ರಮಗಳನ್ನು ತೆಗೆದುಕೊಂಡು ದೇಶದೆಲ್ಲೆಡೆ ಚೆಕ್ ಪೋಸ್ಟ್, ಸಿಸಿಕ್ಯಾಮೆರಾ ಅಳವಡಿಕೆ, ಡ್ರೋಣ್ ಕ್ಯಾಮೆರಾಗಳ ಬಳಕೆ ಹೊರತಾಗಿಯೂ ಕಣದಲ್ಲಿರುವ ಅಭ್ಯರ್ಥಿಗಳು ಮತದಾರರಿಗೆ ಈ ಬಾರಿ ವ್ಯಾಪಕ ಪ್ರಮಾಣದಲ್ಲಿ ಹಣ, ಬೆಲೆ ಬಾಳುವ ವಸ್ತುಗಳು, ಮದ್ಯ ಮತ್ತಿತರ ವಸ್ತುಗಳನ್ನು ಹಂಚಿಕೆ ಮಾಡಲು ಮುಂದಾಗಿರುವುದು ಜಪ್ತಿಯಾಗಿರುವ ಅಂಕಿಅಂಶಗಳಿಂದಲೇ ಗೊತ್ತಾಗುತ್ತದೆ. +ಆದಾಯ ತೆರಿಗೆ, ರಾಜ್ಯ ಪೊಲೀಸ್, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಎಸ್ಎಲ್ಬಿಸಿ, ಎಎಐ, ಬಿಸಿಎಎಸ್, ಜಾರಿ ನಿರ್ದೇಶನಾಲಯ, ಸಿಐಎಸ್ಎಫ್ ಸೇರಿದಂತೆ ಮತ್ತಿತರ ಸಂಸ್ಥೆಗಳು ನಗದು ಮತ್ತು ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿವೆ. +ರಾಜ್ಯ ಪೊಲೀಸರು, ಅಬಕಾರಿ ಇಲಾಖೆ, ಆರ್ಪಿಎಫ್ ಸಿಬ್ಬಂದಿಯವರು ಮದ್ಯ ಹಾಗೂ ರಾಜ್ಯ ಪೊಲೀಸರು, ಎನ್ಸಿಬಿ, ಐಸಿಜಿ, ಡಿಆರ್ಐ ಸಂಸ್ಥೆಯವರು ಮಾದಕದ್ರವ್ಯ, ಸಿಜಿಎಸ್ಟಿ, ಎಸ್ಜಿಎಸ್ಟಿ, ರಾಜ್ಯ ಸಾರಿಗೆ, ಸುಂಕ, ರಾಜ್ಯ ಪೊಲೀಸರು ಉಚಿತ ಉಡುಗೊರೆಗಳು, ಅಸ್ಸಾಂ ರೈಫೆಲ್ಸ್, ಬಿಎಸ್ಎಫ್, ಎಸ್ಎಸ್ಬಿ, ಐಟಿಬಿಟಿ, ಸಿಆರ್ಪಿಎಫ್, ಅರಣ್ಯ ಇಲಾಖೆ ಮತ್ತು ರಾಜ್ಯ ಪೊಲೀಸರು ಗಡಿ ಭಾಗದಲ್ಲಿ ತಪಾಸಣೆ ನಡೆಸಿದ್ದಾರೆ. +ರಾಜಸ್ಥಾನ ರಾಜ್ಯವೊಂದರಲ್ಲೇ ಈವರೆಗೂ 778, 52,65,100 ರೂ. ಮೌಲ್ಯದ ಅತಿ ಹೆಚ್ಚು ನಗದು, ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಾಗಿದೆ. ಪ್ರಧಾನಿ ನರೇಂದ್ರಮೋದಿ ಅವರ ತವರು ಜಿಲ್ಲೆ ಗುಜರಾತ್ನಲ್ಲಿ ಚುನಾವಣಾ ಆಯೋಗ 605,33,55,170 ನಗದು, ಮಾದಕವಸ್ತುಗಳೂ, ಮದ್ಯ, ಉಡುಗೊರೆಗಳನ್ನು ವಶಪಡಿಸಿಕೊಳ್ಳಲಾಗಿದೆ. +ತಮಿಳುನಾಡು- 460,84,94,280 ರೂ. ಮಹಾರಾಷ್ಟ್ರ- 431,34,77,720 ರೂ. ಪಂಜಾಬ್-311,84,49,060 ರೂ. ಕರ್ನಾಟಕ 281,43,28,440 ಹಾಗೂ ನವದೆಹಲಿಯಲ್ಲಿ 236,06,96,950 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಒಟ್ಟು 36 ರಾಜ್ಯಗಳಲ್ಲಿ ಆಯೋಗವು 446,58,16,74,510 ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಅಮಾನತ್ತು: ಕೆಲವು ಕಡೆ ಕರ್ತವ್ಯ ನಿರ್ಲಕ್ಷ್ಯ ಆರೋಪದ ಹಿನ್ನಲೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. +ಸೂಚನೆ: ದಿನದಿಂದ ದಿನಕ್ಕೆ ದೇಶದೆಲ್ಲೆಡೆ ಮತದಾರರಿಗೆ ಹಂಚಲು ಹಣ, ಮದ್ಯ, ಮಾದಕವಸ್ತುಗಳು, ಬೆಲೆ ಬಾಳುವ ಉಡುಗೊರೆಗಳು ಸಿಕ್ಕಿಬೀಳುತ್ತಿರುವ ಹಿನ್ನಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೇಂದ್ರ ಚುನಾವಣಾ ಆಯೋಗ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ಕೊಟ್ಟಿದೆ. +ಆಯೋಗದ ಕೆಲವು ಬಿಗಿಯಾದ ಕ್ರಮದ ಹೊರತಾಗಿಯೂ ಇಷ್ಟು ದೊಡ್ಡ ಮೊತ್ತದ ನಗದು ಸೇರಿದಂತೆ ಇತರ ವಸ್ತುಗಳು ಸಿಕ್ಕಿರುವುದು ವಿಷಾದಕರ. ನಿಮ್ಮ ನಿಮ್ಮ ರಾಜ್ಯಗಳ ವ್ಯಾಪ್ತಿಯಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ತುರ್ತು ಹಾಗೂ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ಕುಮಾರ್ ಸೂಚಿಸಿದ್ದಾರೆ. +ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸುವುದು, ಆಧುನಿಕ ತಂತ್ರಜ್ಞಾನವಿರುವ ಸಿಸಿಟಿವಿ, ಡ್ರೋಣ್ ಅಳವಡಿಕೆ, ಹೆಚ್ಚಿನ ಸಿಬ್ಬಂದಿ ನಿಯೋಜನೆ ಸೇರಿದಂತೆ ಹೀಗೆ ಹಲವು ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ. +ಒಟ್ಟು ನಗದು – 395.39 ಕೋಟಿ ರೂ.ಮದ್ಯ – 489.31 ಕೋಟಿ ರೂ.ಮಾದಕವಸ್ತುಗಳು – 2,068.85 ಕೋಟಿಬೆಲೆ ಬಾಳುವ ವಸ್ತುಗಳು – 562.10 ಕೋಟಿಉಡುಗೊರೆ , ಮತ್ತಿತರವಸ್ತುಗಳು – 1,142.49 ಕೋಟಿಒಟ್ಟು 4,658.16 ಕೋಟಿ ರೂ. +ಅತಿಹೆಚ್ಚು ಮೊತ್ತ ವಶಪಡಿಕೊಂಡಿರುವ ರಾಜ್ಯಗಳುರಾಜಸ್ಥಾನ -778, 52,65,100 ರೂ.ಗುಜರಾತ್- 605,33,55,170 ರೂ.ತಮಿಳುನಾಡು- 460,84,94,280 ರೂ.ಮಹಾರಾಷ್ಟ್ರ- 431,34,77,720 ರೂ.ಪಂಜಾಬ್-311,84,49,060 ರೂ.ಕರ್ನಾಟಕ 281, 43,28,440ನವದೆಹಲಿ- 236,06,96,950 \ No newline at end of file diff --git a/eesanje/url_47_123_4.txt b/eesanje/url_47_123_4.txt new file mode 100644 index 0000000000000000000000000000000000000000..9e31da3c422b892aa775d1299ec1ef23882b4d33 --- /dev/null +++ b/eesanje/url_47_123_4.txt @@ -0,0 +1,5 @@ +ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟು ಪೊಲೀಸರ ಅತಿಥಿಯಾದ ವ್ಯಕ್ತಿ +ಬಿಲಾಸ್‍ಪುರ,ಏ.15-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕಾಗಿ ಛತ್ತೀಸ್‍ಗಢದ ಬಿಲಾಸ್‍ಪುರ ಜಿಲ್ಲೆಯಲ್ಲಿ 26 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅರವಿಂದ್ ಕುಮಾರ್ ಸೋನಿ ಅವರನ್ನು ಮಸ್ತೂರಿ ಪಟ್ಟಣದಿಂದ ಬಂಧಿಸಲಾಗಿದೆ ಎಂದು ಬಿಲಾಸ್‍ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅರ್ಚನಾ ಝಾ ತಿಳಿಸಿದ್ದಾರೆ. +ಭಡೋರಾ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯ ನಂತರ ಕಾಂಗ್ರೆಸ್ ನಾಯಕ ಕನ್ಹಯ್ಯಾ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದಾಗ ಸೋನಿ ಅವರು ಪ್ರಧಾನಿ ಮೋದಿಯವರ ಮೇಲೆ ಟೀಕಾಪ್ರಹಾರ ಮಾಡಿದ್ದರು ಎಂದು ಝಾ ತಿಳಿಸಿದ್ದಾರೆ. +ಕನ್ಹಯ್ಯಾ ಕುಮಾರ್ ತಮ್ಮ ಪಕ್ಷದ ಅಭ್ಯರ್ಥಿ ದೇವೇಂದ್ರ ಸಿಂಗ್ ಯಾದವ್ ಪರ ಪ್ರಚಾರ ಮಾಡಲು ಬಿಲಾಸ್‍ಪುರ ಜಿಲ್ಲೆಯಲ್ಲಿದ್ದರು. ಭಾರತೀಯ ದಂಡ ಸಂಹಿತೆಯಡಿಯಲ್ಲಿ ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಸಾರ್ವಜನಿಕವಾಗಿ ಅಶ್ಲೀಲ ಪದಗಳನ್ನು ಮತ್ತು ಉದ್ದೇಶಪೂರ್ವಕ ಅವಮಾನಕ್ಕಾಗಿ ಸೋನಿ ವಿರುದ್ಧ ಬಿಜೆಪಿ ನಾಯಕ ಬಿಪಿ ಸಿಂಗ್ ಅವರು ಸಲ್ಲಿಸಿದ ದೂರಿನ ಮೇರೆಗೆ ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‍ಪಿಸಿ) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. +ಛತ್ತೀಸ್‍ಗಢದ 11 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ಮತ್ತು ಮೇ 7 ರ ನಡುವೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಭಿಲಾಯ್‍ನ ಹಾಲಿ ಕಾಂಗ್ರೆಸ್ ಶಾಸಕ ದೇವೇಂದ್ರ ಸಿಂಗ್ ಯಾದವ್ ಅವರು ಬಿಲಾಸ್‍ಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ತೋಖಾನ್ ಸಾಹು ವಿರುದ್ಧ ಸ್ಪರ್ಧಿಸಿದ್ದು, ಮೇ 7 ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_47_123_5.txt b/eesanje/url_47_123_5.txt new file mode 100644 index 0000000000000000000000000000000000000000..6c85619ffbeed3cad6837039e8dceee6f07011a6 --- /dev/null +++ b/eesanje/url_47_123_5.txt @@ -0,0 +1,7 @@ +ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ : ಭಾರತೀಯರ ರಕ್ಷಣೆಗೆ ಆಧ್ಯತೆ : ಪ್ರಧಾನಿ ಮೋದಿ +ನವದೆಹಲಿ,ಏ.15-ವಿಶ್ವ ಸಂಘರ್ಷದಲ್ಲಿ ಭಾರತೀಯ ಜೀವ ರಕ್ಷಿಸುವುದಕ್ಕೆ ನಮ್ಮ ಮೊದಲ ಆಧ್ಯತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಗಳ ನಡುವೆ, ಇರಾನ್ ಸಿರಿಯಾದಲ್ಲಿನ ತನ್ನ ರಾಯಭಾರ ಕಚೇರಿಯ ಮೇಲೆ ವೈಮಾನಿಕ ದಾಳಿಗೆ ಪ್ರತಿಯಾಗಿ ಇಸ್ರೇಲ್ ಕಡೆಗೆ 300 ಕ್ಕೂ ಹೆಚ್ಚು ಸ್ಪೋಟಕಗಳನ್ನು ಉಡಾಯಿಸಿದ ಯುದ್ಧ ಭೀತಿ ಸೃಷ್ಟಿಯಾಗಿರುವ ಸಂದರ್ಭದಲ್ಲಿ ಮೋದಿ ಅವರು ವಿದೇಶದಲ್ಲಿ ನೆಲೆಸಿರುವ ಭಾರತೀಯರಿಗೆ ಈ ಭರವಸೆ ನೀಡಿದ್ದಾರೆ. +ಕೇಂದ್ರದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾಗತಿಕ ಸವಾಲುಗಳನ್ನು ನ್ಯಾವಿಗೇಟ್ ಮಾಡಲು ಮತ್ತು ವಿದೇಶದಲ್ಲಿ ಸಿಕ್ಕಿಬಿದ್ದ ಮತ್ತು ಸಂಕಷ್ಟದಲ್ಲಿರುವ ಭಾರತೀಯ ಸ್ಥಳೀಯರನ್ನು ರಕ್ಷಿಸಲು ಮೊದಲ ಆಧ್ಯತೆ ನೀಡುವುದಾಗಿ ಘೋಷಿಸಿದ್ದಾರೆ. +ಇಂದು ಪ್ರಪಂಚದಾದ್ಯಂತ ಅನಿಶ್ಚಿತತೆಯ ಮೋಡಗಳು ಸುಳಿದಾಡುತ್ತಿವೆ. ಹಲವಾರು ಪ್ರದೇಶಗಳು ಯುದ್ಧದಂತಹ ಪರಿಸ್ಥಿತಿಯನ್ನು ನೋಡುತ್ತಿವೆ ಮತ್ತು ಜಗತ್ತು ಉದ್ವಿಗ್ನವಾಗಿದೆ ಮತ್ತು ಶಾಂತಿಯಿಂದಲ್ಲ. ಅಂತಹ ಸಮಯದಲ್ಲಿ, ನಮ್ಮ ನಾಗರಿಕರ ಸುರಕ್ಷತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಆದ್ಯತೆ ಮತ್ತು ಪ್ರಮುಖ ಕಾರ್ಯವಾಗಿದೆ. ಯಾವುದೇ ಸರ್ಕಾರ ಬಂದರೂ, ನಾವು ಇನ್ನೊಂದು ಅವಧಿಗೆ ಮರಳಿದರೆ ನಮ್ಮ ಜನರ ಸುರಕ್ಷತೆಯೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. +ಯುದ್ಧದ ಭಯವು ಜಗತ್ತನ್ನು ಹಿಡಿದಿಟ್ಟುಕೊಂಡಿರುವ ಸಮಯದಲ್ಲಿ, ಪೂರ್ಣ ಬಹುಮತದೊಂದಿಗೆ ಚುನಾಯಿತವಾದ ಬಲವಾದ ಮತ್ತು ಸ್ಥಿರ ಸರ್ಕಾರಕ್ಕೆ ಇದು ಹೆಚ್ಚು ಅವಶ್ಯಕವಾಗಿದೆ. ನಾವು ದೇಶವನ್ನು ಆರ್ಥಿಕವಾಗಿ ಬಲಿಷ್ಠಗೊಳಿಸುವ ಮತ್ತು ಹೆಚ್ಚು ಚೇತರಿಸಿಕೊಳ್ಳುವ ಸರ್ಕಾರವನ್ನು ಹೊಂದಿರಬೇಕು. ಜಾಗತಿಕ ಸವಾಲುಗಳ ಮುಖಾಂತರ ನಮ್ಮ ಅಂತಿಮ ಗುರಿಯಾದ ವಿಕಸಿತ್ ಭಾರತ್ (ಅಭಿವೃದ್ಧಿ ಹೊಂದಿದ ದೇಶ) ದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಬಿಜೆಪಿಯು ಮತ್ತೊಮ್ಮೆ ಚುನಾಯಿತರಾದರೆ, ನಮ್ಮ ಪ್ರಣಾಳಿಕೆಯ ಗ್ಯಾರಂಟಿ ಬರುತ್ತದೆ ಸರ್ಕಾರ ಎಂದು ಪ್ರಧಾನಿ ಮೋದಿ ಸೇರಿಸಿದರು. +ಪೂರ್ವ ಯುರೋಪ್‍ನಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಘರ್ಷಣೆಗಳು ಮತ್ತು ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲಿ ಆಕ್ರಮಣದ ಸಂದರ್ಭದಲ್ಲಿ ನೋಡಿದಾಗ ಮತ್ತು ವ್ಯಾಖ್ಯಾನಿಸಿದಾಗ ಅವರ ಹೇಳಿಕೆಗಳು ಮಹತ್ವವನ್ನು ಪಡೆದುಕೊಳ್ಳುತ್ತವೆ. ಬಿಜೆಪಿ ನೇತೃತ್ವದ ಎನ್‍ಡಿಎ ತನ್ನ ಎರಡನೇ ಅವಧಿಯಲ್ಲೂ ಸಹ, ಸಂಘರ್ಷದ ವಲಯಗಳಿಂದ ಸಂಕಷ್ಟದಲ್ಲಿರುವ ಭಾರತೀಯರನ್ನು ವಿಮಾನದ ಮೂಲಕ ಹೊರತರುವ ಉದ್ದೇಶ ಮತ್ತು ಕ್ರಮವನ್ನು ಪ್ರದರ್ಶಿಸಿತ್ತು. +ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಯು ಪೂರ್ಣ ಪ್ರಮಾಣದ ಮಿಲಿಟರಿ ಸಂಘರ್ಷಕ್ಕೆ ವಿಕಸನಗೊಂಡಂತೆ, ಉಕ್ರೇನ್‍ನಲ್ಲಿ ಸಿಲುಕಿರುವ ನಾಗರಿಕರನ್ನು ಉಳಿಸಲು ಭಾರತ ಸರ್ಕಾರವು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. \ No newline at end of file diff --git a/eesanje/url_47_123_6.txt b/eesanje/url_47_123_6.txt new file mode 100644 index 0000000000000000000000000000000000000000..041d4f9b42de101e6634d453d304d1460173cf48 --- /dev/null +++ b/eesanje/url_47_123_6.txt @@ -0,0 +1,6 @@ +ಕವಿತಾಗೆ ಏ.23ರವರೆಗೆ ನ್ಯಾಯಾಂಗ ಬಂಧನ +ನವದೆಹಲಿ,ಏ.15-ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಆರ್‍ಎಸ್ ನಾಯಕಿ ಕೆ ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿಯನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. +ಈ ಹಿಂದೆ ನ್ಯಾಯಾಧೀಶರು ನೀಡಿದ್ದ ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಬಿಐ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಆಕೆಯ ನ್ಯಾಯಾಂಗ ಬಂಧನಕ್ಕೆ ಮನವಿ ಮಾಡಿತ್ತು. ಆಕೆಯನ್ನು ಹೆಚ್ಚಿನ ಕಸ್ಟಡಿ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. +ಕವಿತಾ ಅವರನ್ನು ಪ್ರತಿನಿಧಿಸುವ ವಕೀಲ ನಿತೇಶ್ ರಾಣಾ ಅವರು ಪೊಲೀಸ್ ಮನವಿಯನ್ನು ವಿರೋಧಿಸಿದರು, ಕಸ್ಟಡಿ ವಿಚಾರಣೆಗೆ ಇನ್ನು ಮುಂದೆ ಅಗತ್ಯವಿಲ್ಲದ ಕಾರಣ ಅವರನ್ನು ಕಸ್ಟಡಿಯಲ್ಲಿ ಇರಿಸಲು ಆಧಾರಗಳು ಸಾಕಾಗುವುದಿಲ್ಲ ಎಂದು ವಾದಿಸಿದ್ದರು. +ಸಿಬಿಐ ಅಧಿಕಾರಿಗಳು ಇತ್ತೀಚೆಗೆ ವಿಶೇಷ ನ್ಯಾಯಾಲಯದಿಂದ ಅನುಮತಿ ಪಡೆದ ನಂತರ ಕವಿತಾ ಅವರನ್ನು ಜೈಲಿನೊಳಗೆ ವಿಚಾರಣೆ ನಡೆಸಿದ್ದರು. ಸಹ-ಆರೋಪಿ ಬುಚ್ಚಿ ಬಾಬು ಅವರ ಫೋನ್ ಮತ್ತು ಭೂ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳಿಂದ ವಶಪಡಿಸಿಕೊಂಡಿರುವ ವಾಟ್ಸಾಪ್ ಚಾಟ್‍ಗಳ ಬಗ್ಗೆ ಬಿಆರ್‍ಎಸ್ ನಾಯಕನನ್ನು ಪ್ರಶ್ನಿಸಲಾಗಿತ್ತು. +ಈ ನಂತರ ಅಧಿಕಾರಿಯನ್ನು ತಿರುಗಿಸಲು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿಯನ್ನು ಪಾವತಿಸಲಾಗಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15 ರಂದು ಹೈದರಾಬಾದ್‍ನ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಕವಿತಾ (46) ಅವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದರು. \ No newline at end of file diff --git a/eesanje/url_47_123_7.txt b/eesanje/url_47_123_7.txt new file mode 100644 index 0000000000000000000000000000000000000000..01c5a96a0d77650878eeff47aeccb0a1a0f11111 --- /dev/null +++ b/eesanje/url_47_123_7.txt @@ -0,0 +1,8 @@ +ನ್ಯಾಯಾಂಗ ವ್ಯವಸ್ಥೆ ಕಾಪಾಡುವಂತೆ ಸಿಜೆಐಗೆ ಪತ್ರ ಬರೆದ ನಿವೃತ್ತ ನ್ಯಾಯಮೂರ್ತಿಗಳು +ನವದೆಹಲಿ, ಏ. 15 (ಪಿಟಿಐ)ಲೆಕ್ಕಾಚಾರದ ಒತ್ತಡ, ತಪ್ಪು ಮಾಹಿತಿ ಮತ್ತು ಸಾರ್ವಜನಿಕ ಅವಹೇಳನದ ಮೂಲಕ ನ್ಯಾಯಾಂಗವನ್ನು ದುರ್ಬಲಗೊಳಿಸಲು ಕೆಲವು ಬಣಗಳು ನಡೆಸುತ್ತಿರುವ ಪ್ರಯತ್ನಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‍ಗಳ 21 ನಿವೃತ್ತ ನ್ಯಾಯಾಧೀಶರ ಗುಂಪು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದೆ. +ಪತ್ರದಲ್ಲಿ ಸಂಕುಚಿತ ರಾಜಕೀಯ ಹಿತಾಸಕ್ತಿ ಮತ್ತು ವೈಯಕ್ತಿಕ ಲಾಭಗಳಿಂದ ಕೆಲವರು ಪ್ರೇರಿತರಾಗಿದ್ದಾರೆ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಲು ಶ್ರಮಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. +ಸುಪ್ರೀಂ ಕೋರ್ಟ್‍ನ ನಾಲ್ವರು ಸೇರಿದಂತೆ ನಿವೃತ್ತ ನ್ಯಾಯಮೂರ್ತಿಗಳು ಸಿಜೆಐಗೆ ಪತ್ರ ಬರೆಯಲು ಪ್ರೇರೇಪಿಸಿದ ಘಟನೆಗಳನ್ನು ನಿರ್ದಿಷ್ಟಪಡಿಸದಿದ್ದರೂ, ಕೆಲವು ಪ್ರತಿಪಕ್ಷ ನಾಯಕರ ವಿರುದ್ಧದ ಕ್ರಮಗಳ ಬಗ್ಗೆ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ಮಾತಿನ ಸಮರದ ನಡುವೆ ಅವರ ಪತ್ರ ಬಂದಿದೆ. +ಸಂತ್ರಸ್ತ ನಾಯಕರು ಮತ್ತು ಅವರ ಪಕ್ಷಗಳು ಪರಿಹಾರವನ್ನು ಪಡೆಯಲು ನ್ಯಾಯಾಲಯಕ್ಕೆ ಹೋಗುವುದರೊಂದಿಗೆ, ಬಿಜೆಪಿಯವರು ನ್ಯಾಯಾಂಗ ನಿರ್ಧಾರಗಳನ್ನು ಆಯುಧವಾಗಿ ಬಳಸುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಮತ್ತು ಪ್ರತಿಪಕ್ಷಗಳ ಟೀಕೆಗಳನ್ನು ನಿರಾಕರಿಸಲು ಹಲವಾರು ಬಂಧಿತ ನಾಯಕರಿಗೆ ಯಾವುದೇ ಪರಿಹಾರದ ಕೊರತೆಯನ್ನು ಉಲ್ಲೇಖಿಸಿದ್ದಾರೆ. +ನ್ಯಾಯಮೂರ್ತಿಗಳಾದ (ನಿವೃತ್ತ) ದೀಪಕ್ ವರ್ಮಾ, ಕೃಷ್ಣ ಮುರಾರಿ, ದಿನೇಶ್ ಮಾಹೇಶ್ವರಿ ಮತ್ತು ಎಂ ಆರ್ ಷಾ ಸೇರಿದಂತೆ ನಿವೃತ್ತ ನ್ಯಾಯಾಧೀಶರು ಈ ಪತ್ರ ಬರೆದಿದ್ದಾರೆ. ಇಂತಹ ಕ್ರಮಗಳು ನಮ್ಮ ನ್ಯಾಯಾಂಗದ ಪಾವಿತ್ರ್ಯವನ್ನು ಅಗೌರವಗೊಳಿಸುವುದಲ್ಲದೆ, ನ್ಯಾಯಾಂಗದ ಪಾಲಕರಾದ ನ್ಯಾಯಾಧೀಶರು ಎತ್ತಿಹಿಡಿಯಲು ಪ್ರಮಾಣ ಮಾಡಿದ ನ್ಯಾಯಸಮ್ಮತತೆ ಮತ್ತು ನಿಷ್ಪಕ್ಷಪಾತದ ತತ್ವಗಳಿಗೆ ನೇರ ಸವಾಲನ್ನು ಒಡ್ಡುತ್ತದೆ ಎಂದು ಅವರು ನ್ಯಾಯಾಂಗವನ್ನು ರಕ್ಷಿಸುವ ಅಗತ್ಯವಿದೆ ಎಂಬ ಶೀರ್ಷಿಕೆಯ ಪತ್ರದಲ್ಲಿ ತಿಳಿಸಿದ್ದಾರೆ. +ನ್ಯಾಯಾಂಗದ ಪ್ರತಿಷ್ಠೆಯನ್ನು ಕೆಡಿಸುವ ಉದ್ದೇಶದಿಂದ ಆಧಾರರಹಿತ ಸಿದ್ಧಾಂತಗಳ ಪ್ರಚಾರದಿಂದ ಹಿಡಿದು ನ್ಯಾಯಾಂಗದ ಫಲಿತಾಂಶಗಳನ್ನು ತಮ್ಮ ಪರವಾಗಿ ಪ್ರಭಾವಿಸುವ ಬಹಿರಂಗ ಮತ್ತು ರಹಸ್ಯ ಪ್ರಯತ್ನಗಳಲ್ಲಿ ತೊಡಗಿಸಿಕೊಳ್ಳುವವರೆಗೆ ಈ ಗುಂಪುಗಳು ಬಳಸುತ್ತಿರುವ ತಂತ್ರವು ಆಳವಾಗಿ ತೊಂದರೆಗೀಡಾಗಿದೆ ಎಂದು ಅವರು ಹೇಳಿದರು. +ಸುಪ್ರೀಂ ಕೋರ್ಟ್ ನೇತೃತ್ವದ ನ್ಯಾಯಾಂಗವು ಇಂತಹ ಒತ್ತಡಗಳ ವಿರುದ್ಧ ಗಟ್ಟಿಗೊಳಿಸಬೇಕು ಮತ್ತು ಕಾನೂನು ವ್ಯವಸ್ಥೆಯ ಪಾವಿತ್ರ್ಯತೆ ಮತ್ತು ಸ್ವಾಯತ್ತತೆಯನ್ನು ಕಾಪಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.ನ್ಯಾಯಾಂಗವು ಪ್ರಜಾಪ್ರಭುತ್ವದ ಆಧಾರಸ್ತಂಭವಾಗಿ ಉಳಿಯುವುದು ಅತ್ಯಗತ್ಯವಾಗಿದೆ, ಅಸ್ಥಿರ ರಾಜಕೀಯ ಹಿತಾಸಕ್ತಿಗಳ ಹುಚ್ಚಾಟಿಕೆಗಳು ಮತ್ತು ಕಲ್ಪನೆಗಳಿಗೆ ನಿರೋಧಕವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_123_8.txt b/eesanje/url_47_123_8.txt new file mode 100644 index 0000000000000000000000000000000000000000..95fa724ad30436d720c09c4acd4c7383dbaf4ee8 --- /dev/null +++ b/eesanje/url_47_123_8.txt @@ -0,0 +1,8 @@ +ಸಲ್ಮಾನ್‍ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆಸಿದವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನವರು +ಮುಂಬೈ,ಏ.15-ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನ ಸದಸ್ಯರೆಂದು ಗುರುತಿಸಲಾಗಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಇಬ್ಬರು ದುಷ್ಕರ್ಮಿಗಳನ್ನು ಹರ್ಯಾಣದ ಗುರುಗ್ರಾಮದವರು ಮತ್ತು ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‍ಗೆ ಸೇರಿದವರು ಎಂದು ಶಂಕಿಸಲಾಗಿದೆ. +ವಿಶಾಲ್ ಎಂದು ಗುರುತಿಸಲಾದ ವ್ಯಕ್ತಿಗಳಲ್ಲಿ ಒಬ್ಬರು ಕುಖ್ಯಾತ ಬಿಷ್ಣೋಯ್ ಗ್ಯಾಂಗ್ ಸದಸ್ಯ ರೋಹಿತ್ ಗೋಡಾರಾ ಅವರೊಂದಿಗೆ ಸಂಬಂಧ ಹೊಂದಿದ್ದಾರೆಂದು ವರದಿಯಾಗಿದೆ, ಅವನು ಹಿಂಸಾತ್ಮಕ ಅಪರಾಧಗಳ ಸರಣಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಹೆಸರುವಾಸಿಯಾಗಿದ್ದಾನೆ. +ಪೊಲೀಸ್ ಮೂಲಗಳ ಪ್ರಕಾರ, ಗುರುಗ್ರಾಮ್ ಮೂಲದ ಉದ್ಯಮಿ ಸಚಿನ್ ಮುಂಜಾಲ್ ಅವರ ಮಾರ್ಚ್ ಹತ್ಯೆಗೆ ಸಂಬಂಧಿಸಿದಂತೆ ವಿಶಾಲ್ ಬೇಕಾಗಿದ್ದಾರೆ. ಪ್ರಸ್ತುತ ವಿದೇಶದಲ್ಲಿ ನೆಲೆಸಿರುವ ರೋಹಿತ್ ಗೋದಾರಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಮುಂಜಾಲ್ ಹತ್ಯೆಯನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. +ಇಬ್ಬರೂ ವ್ಯಕ್ತಿಗಳು ಟೋಪಿಗಳನ್ನು ಧರಿಸಿದ್ದರು ಮತ್ತು ಬ್ಯಾಕ್‍ಪ್ಯಾಕ್‍ಗಳನ್ನು ಕೊಂಡೊಯ್ಯುತ್ತಿದ್ದರು ಎಂದು ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗಪಡಿಸಿವೆ. ಅವರು ಸಲ್ಮಾನ್‍ಖಾನ್ ನಿವಾಸದ ಕಡೆಗೆ ಗುಂಡು ಹಾರಿಸುವುದನ್ನು ತೋರಿಸಿದೆ. ಶಂಕಿತರಲ್ಲಿ ಒಬ್ಬರು ಕಪ್ಪು ಜಾಕೆಟ್ ಮತ್ತು ಡೆನಿಮ್ ಪ್ಯಾಂಟ್‍ಗಳೊಂದಿಗೆ ಬಿಳಿ ಟಿ-ಶರ್ಟ್ ಅನ್ನು ಧರಿಸಿದ್ದರೆ, ಇನ್ನೊಬ್ಬರು ಡೆನಿಮ್ ಪ್ಯಾಂಟ್‍ನೊಂದಿಗೆ ಕೆಂಪು ಟೀ ಶರ್ಟ್‍ನಲ್ಲಿ ಧರಿಸಿದ್ದರು. +ದಾಳಿಯ ಮೊದಲು, ಇಬ್ಬರು ಶಂಕಿತರು ಖಾನ್ ಅವರ ನಿವಾಸವಾದ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ನ ಸುತ್ತಮುತ್ತಲಿನ ಪ್ರದೇಶದಲ್ಲಿ ವಿಚಕ್ಷಣ ಕಾರ್ಯಾಚರಣೆ ನಡೆಸಿದರು. ಬಾಂದ್ರಾದ ಮೌಂಟ್ ಮೇರಿ ಚರ್ಚ್ ಬಳಿ ತಮ್ಮ ಮೋಟಾರು ಸೈಕಲ್ ಅನ್ನು ಕಳವು ಮಾಡಿದ ಅದರಲ್ಲಿಯೇ ಸಲ್ಮಾನ್ ಮನೆ ಬಳಿಗೆ ತೆರಳಿ ಗುಂಡು ಹಾರಿಸಿ ನಂತರ ಬೈಕ್‍ನ್ನು ಸ್ವಲ್ಪ ದೂರದಲ್ಲಿ ಬಿಟ್ಟು ನಂತರ ಆಟೋ ಮೂಲಕ ರೈಲು ನಿಲ್ದಾಣಕ್ಕೆ ತೆರಳಿ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿಯ ಘಟನೆಯ ನಂತರ, ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರು ಆನ್‍ಲೈನ್ ಪೋಸ್ಟ್ ನಲ್ಲಿ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. +ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಮಾನ್ ಖಾನ್ ಅವರನ್ನು ಭೇಟಿಯಾಗಿ ಅಚಲ ಬೆಂಬಲ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುವ ಬದ್ಧತೆಯ ಭರವಸೆಯನ್ನು ನೀಡಿದ್ದಾರೆ. \ No newline at end of file diff --git a/eesanje/url_47_123_9.txt b/eesanje/url_47_123_9.txt new file mode 100644 index 0000000000000000000000000000000000000000..1ad4e7efc05f8f06e4cdce114ebd7e8412336acd --- /dev/null +++ b/eesanje/url_47_123_9.txt @@ -0,0 +1,5 @@ +ದೆಹಲಿಯ ನಡುರಸ್ತೆಯಲ್ಲಿ ಗುಂಡಿಕ್ಕಿ ಕ್ಯಾಬ್ ಚಾಲಕನ ಹತ್ಯೆ +ನವದೆಹಲಿ ,ಅ 15 –ನಡುರಸ್ತೆಯಲ್ಲಿ ನಡೆದ ಜಗಳದ ವೇಳೆ ಕ್ಯಾಬ್ ಚಾಲಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ಇಲ್ಲಿ ನಡೆದಿದೆ. ಅಂಗೂರಿ ಬಾಗ್‍ನ ಟ್ರಾಫಿಕ್ ಸಿಗ್ನಲ್ ಸಮೀಪ ಮಧ್ಯರಾತ್ರಿಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರಂಭದಲ್ಲಿ, ಕ್ಯಾಬ್ ಚಾಲಕ ಮತ್ತು ರಿಕ್ಷಾ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ ಅಷ್ಟರಲ್ಲಿ, ಇಬ್ಬರು ಯುವಕರು ಸ್ಕೂಟರ್‍ನಲ್ಲಿ ಅಲ್ಲಿಗೆ ಬಂದು ಅವರಲ್ಲಿ ಒಬ್ಬರು ಕ್ಯಾಬ್ ಚಾಲಕನ ಮೇಲೆ ಗುಂಡು ಹಾರಿಸಿದರು. +ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ತಲ್ಷಣ ಚಾಲಕನನ್ನು ಹತ್ತಿರದ ಎಲ್‍ಎನ್‍ಜೆಪಿ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ವೈದ್ಯರು ಆತ ಸತ್ತಿದ್ದಾನೆ ಎಂದು ಘೋಷಿಸಿದ್ದಾರೆ. +ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಆರಂಭಿಸಲಾಗಿದೆ ಮತ್ತು ಆರೋಪಿಯನ್ನು ಹಿಡಿಯಲು ತಂಡಗಳನ್ನು ರಚಿಸಲಾಗಿದೆ,ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_124_1.txt b/eesanje/url_47_124_1.txt new file mode 100644 index 0000000000000000000000000000000000000000..23f1ba8a49a0e302f1ce7c268f47477bc62e5053 --- /dev/null +++ b/eesanje/url_47_124_1.txt @@ -0,0 +1,4 @@ +ಮೋದಿ ಭರವಸೆಗಳು 24 ಕ್ಯಾರೆಟ್ ಚಿನ್ನದಂತೆ ಪರಿಶುದ್ಧವಾಗಿದೆ : ರಾಜಾನಾಥ್‍ಸಿಂಗ್ +ನವದೆಹಲಿ,ಏ, 14 (ಪಿಟಿಐ)ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ನೀಡಿರುವ ಭರವಸೆಗಳು 24 ಕ್ಯಾರೆಟ್ ಚಿನ್ನದಂತೆ ಪರಿಶುದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. +ಪಕ್ಷದ ಸಂಕಲ್ಪ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಸಿಂಗ್, ಬಿಜೆಪಿಯ ಪ್ರಣಾಳಿಕೆಯನ್ನು ವಿಶ್ವ ರಾಜಕೀಯದಲ್ಲಿ ಚಿನ್ನದ ಮಾನದಂಡವಾಗಿ ನೋಡಲಾಗುತ್ತದೆ ಎಂದಿದ್ದಾರೆ. ಬಿಜೆಪಿ ತನ್ನ ಬದ್ಧತೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ ಎಂದಿರುವ ಅವರು, ಮಹಿಳಾ ಮೀಸಲಾತಿ ಕಾನೂನು ಜಾರಿ, ಆರ್ಟಿಕಲ್ 370 ರದ್ದತಿ ಮತ್ತು ರಾಮ ಮಂದಿರ ನಿರ್ಮಾಣದ ಜೊತೆಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಹಲವಾರು ಅಭಿವೃದ್ಧಿ ಕ್ರಮಗಳನ್ನು ಅವರು ಉಲ್ಲೇ ಖಿಸಿ ಆಡಳಿತ ಪಕ್ಷವು ತನ್ನ ಭರವಸೆಗಳನ್ನು ಈಡೇರಿಸಿದೆ ಎಂದು ಪ್ರತಿಪಾದಿಸಿದರು. +ಸಿಂಗ್ ಅವರು ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯು 15 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_124_10.txt b/eesanje/url_47_124_10.txt new file mode 100644 index 0000000000000000000000000000000000000000..511bd2214748ea0481e88663b5ef307dc2a650db --- /dev/null +++ b/eesanje/url_47_124_10.txt @@ -0,0 +1,8 @@ +ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ರಾಷ್ಟ್ರಪತಿ, ಪ್ರಧಾನಿ ಶ್ರದ್ಧಾಂಜಲಿ +ನವದೆಹಲಿ,ಏ.13-ಕಳೆದ 1919ರ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಪ್ರಾಣ ಕಳೆದುಕೊಂಡವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ಸಿಂಗ್ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ ಅವರು 1919 ರಲ್ಲಿ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಕೊಲ್ಲಲ್ಪಟ್ಟ ಜನರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಘಟನೆಯನ್ನು ವಿವರಿಸುವ ಮತ್ತು ಬಲಿಪಶುಗಳ ಅಪ್ರತಿಮ ಧೈರ್ಯ ಮತ್ತು ತ್ಯಾಗವನ್ನು ಪ್ರದರ್ಶಿಸುವ ವೀಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. +ದೇಶಾದ್ಯಂತ ನನ್ನ ಕುಟುಂಬ ಸದಸ್ಯರ ಪರವಾಗಿ ಜಲಿಯನ್ವಾಲಾ ಬಾಗ್ ಹತ್ಯಾಕಾಂಡದ ಎಲ್ಲಾ ವೀರ ಹುತಾತ್ಮರಿಗೆ ನನ್ನ ಹೃತ್ಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ. +ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹತ್ಯಾಕಾಂಡದ ಸಂತ್ರಸ್ತರನ್ನು ಸ್ಮರಿಸುತ್ತಾ, ಜಲಿಯನ್ ವಾಲಾಬಾಗ್ನಲ್ಲಿ ಮಾತೃಭೂಮಿಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಹೃತ್ಪೂರ್ವಕ ನಮನಗಳು! ಸ್ವರಾಜ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲಾ ಮಹಾನ್ ಚೇತನಗಳಿಗೆ ದೇಶವಾಸಿಗಳು ಯಾವಾಗಲೂ ಋಣಿಯಾಗಿರುತ್ತಾರೆ. ಆ ಹುತಾತ್ಮರ ದೇಶಭಕ್ತಿಯ ಮನೋಭಾವವು ಮುಂದಿನ ಪೀಳಿಗೆಗೆ ಯಾವಾಗಲೂ ಸೂರ್ತಿ ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದಿದ್ದಾರೆ. +ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂತ್ರಸ್ತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೇಶದ ಸ್ವಾತಂತ್ರ್ಯ ಚಳವಳಿಗೆ ಅಮೂಲ್ಯ ಕೊಡುಗೆ ನೀಡಿದ ಜಲಿಯನ್ ವಾಲಾಬಾಗ್ನ ವೀರ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಿದ್ದಾರೆ. +जलियांवाला बाग नरसंहार के सभी वीर शहीदों को देशभर के मेरे परिवारजनों की ओर से कोटि-कोटि नमन।../Ow1jtjXdd0 +ಜಲಿಯನ್ ವಾಲಾಬಾಗ್ ಬ್ರಿಟಿಷರ ಕ್ರೌರ್ಯ ಮತ್ತು ಅಮಾನವೀಯತೆಯ ಜೀವಂತ ಸಂಕೇತ ವಾಗಿದೆ. ಈ ಹತ್ಯಾಕಾಂಡವು ದೇಶವಾಸಿಗಳ ಹೃದಯದಲ್ಲಿ ಅಡಗಿರುವ ಕ್ರಾಂತಿಕಾರಿ ಜ್ವಾಲೆಯನ್ನು ಜಾಗೃತಗೊಳಿಸಿತು ಮತ್ತು ಸ್ವಾತಂತ್ರ್ಯ ಚಳುವಳಿ ಯನ್ನು ಜನರ ಹೋರಾಟವನ್ನಾಗಿ ಮಾಡಿದೆ. \ No newline at end of file diff --git a/eesanje/url_47_124_11.txt b/eesanje/url_47_124_11.txt new file mode 100644 index 0000000000000000000000000000000000000000..509c79cc346e611ad2f6b37d0b61967d44f95e5a --- /dev/null +++ b/eesanje/url_47_124_11.txt @@ -0,0 +1,5 @@ +ವಿಶ್ವಾಸಾರ್ಹ ನಾಯಕರಾಗಿ ಬದಲಾಗುತ್ತಿದ್ದಾರೆ ರಾಹುಲ್‍ಗಾಂಧಿ : ಎ.ಕೆ.ಆಂಟನಿ +ತಿರುವನಂತಪುರಂ,ಏ.13-ರಾಹುಲ್ ಗಾಂಧಿ ಅವರು ದೃಢಸಂಕಲ್ಪ ಮತ್ತು ಧೈರ್ಯಶಾಲಿ ನಾಯಕರಾಗಿದ್ದು, ಅವರು ಯಾವುದೇ ಪ್ರತಿಕೂಲ ಪರಿಸ್ಥಿತಿಗೆ ತಮ್ಮ ನಿರ್ಧಾರಗಳಿಗೆ ಮಣಿಯುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅಭಿಪ್ರಾಯಪಟ್ಟಿದ್ದಾರೆ. +ತಮ್ಮ ತಂದೆ ರಾಜೀವ್ ಗಾಂಧಿಯವರಂತೆ ರಾಜಕೀಯದಲ್ಲಿ ಆಸಕ್ತಿಯಿಲ್ಲದ ರಾಹುಲ್ ಗಾಂಧಿ ಅವರು ಈಗ ಬಿಜೆಪಿ ವಿರುದ್ಧ ಹೋರಾಡುತ್ತಿರುವುದು ಪ್ರಧಾನಿಯಾಗಲು ಅಲ್ಲ, ಬದಲಿಗೆ ಭಾರತೀಯ ಸಂವಿಧಾನದ ಮೂಲ ರಚನೆಯನ್ನು ಕಾಪಾಡಲು ಎಂದು ಆಂಟನಿ ಹೇಳಿದರು. ಅವರು ಭಾರತದ ಅತ್ಯಂತ ವಿಶ್ವಾಸಾರ್ಹ ನಾಯಕರಾಗಿ ಬದಲಾಗುತ್ತಿದ್ದಾರೆ ಎಂದು ಅವರು ಹೇಳಿದರು. +ಹಿರಿಯ ಮಾಧ್ಯಮ ಪ್ರತಿನಿಧಿ ಎನ್ ಅಶೋಕನ್ ಅವರು ರಾಹುಲ್ ಗಾಂಧಿ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಾಂಗ್ರೆಸ್ ಧುರೀಣ ಮಾತನಾಡಿದರು. ತಮ್ಮ ರಾಜಕೀಯ ಜೀವನದ ಆರಂಭದ ದಿನಗಳು, ನೆಹರು ಕುಟುಂಬಕ್ಕೆ ಹೇಗೆ ಆತ್ಮೀಯರಾದರು ಮತ್ತು ದೆಹಲಿಯ ರಾಜ್ ಘಾಟ್‍ನಲ್ಲಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ಅವರಿಗೆ ಗೌರವ ಸಲ್ಲಿಸುವ ಸ್ಮಾರಕ ಶಕ್ತಿ ಸ್ಥಳದಲ್ಲಿ ಮೊದಲು ನೋಡಿದ ಯುವ ರಾಹುಲ್ ಗಾಂಧಿ ಅವರ ನೆನಪುಗಳನ್ನು ನೆನಪಿಸಿಕೊಂಡರು. +ನೆಹರು ಕುಟುಂಬವು ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಹೆಸರುವಾಸಿಯಾಗಿದೆ ಮತ್ತು ಇಂದಿರಾ ಗಾಂಧಿ ಮತ್ತು ಅವರ ಮಗ ರಾಜೀವ್ ಇಬ್ಬರೂ ಇದಕ್ಕೆ ಉದಾಹರಣೆ ಎಂದು ಆಂಟನಿ ಹೇಳಿದರು.ಇಂದಿರಾ ಗಾಂಧಿಯವರು ತಮ್ಮ ಸಿಖ್ ಅಂಗರಕ್ಷಕರನ್ನು ತಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದು ಹೇಳಿದ್ದರೂ ಅವರನ್ನು ತೆಗೆದುಹಾಕಲು ನಿರಾಕರಿಸಿದರು ಎಂದು ಅವರು ನೆನಪಿಸಿಕೊಂಡರು. \ No newline at end of file diff --git a/eesanje/url_47_124_12.txt b/eesanje/url_47_124_12.txt new file mode 100644 index 0000000000000000000000000000000000000000..190767fe5a64996a74775431b400451d5eb36419 --- /dev/null +++ b/eesanje/url_47_124_12.txt @@ -0,0 +1,4 @@ +67ಸಾವಿರ ಕೋಟಿ ರೂ.ವೆಚ್ಚದಲ್ಲಿ 97 ಲಘು ಯುದ್ಧ ವಿಮಾನ ಖರೀದಿಗೆ ತೀರ್ಮಾನ +ನವದೆಹಲಿ,ಏ.13-ಭಾರತೀಯ ವಾಯುಸೇನೆಗಾಗಿ ಇನ್ನೂ 97 ಲಘು ಯುದ್ಧ ವಿಮಾನ (ಎಲ್‍ಸಿಎ ಎಂಕೆ-1ಎ) ತೇಜಸ್‍ಗಳನ್ನು ಖರೀದಿಸಲು ರಕ್ಷಣಾ ಸಚಿವಾಲಯವು ಸರ್ಕಾರಿ ಸ್ವಾಮ್ಯದ ಏರೋಸ್ಪೇಸ್ ಪ್ರಮುಖ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ಗೆ ಟೆಂಡರ್ ನೀಡಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. +ಫೈಟರ್ ಜೆಟ್‍ಗಳಿಗೆ ಸುಮಾರು ರೂ. 67,000 ಕೋಟಿ ವೆಚ್ಚವಾಗಲಿದೆ ಎಂದು ಎಚ್‍ಎಎಲ್ ಮೂಲಗಳು ತಿಳಿಸಿವೆ. ತೇಜಸ್ ವಿಮಾನವು ವಾಯು ಯುದ್ಧ ಮತ್ತು ಆಕ್ರಮಣಕಾರಿ ವಾಯು ಬೆಂಬಲ ಕಾರ್ಯಾಚರಣೆಗಳಿಗೆ ಪ್ರಬಲವಾದ ವೇದಿಕೆಯಾಗಿದೆ ಆದರೆ ವಿಚಕ್ಷಣ ಮತ್ತು ಹಡಗು ವಿರೋಧಿ ಕಾರ್ಯಾಚರಣೆಗಳು ಅದರ ದ್ವಿತೀಯಕ ಪಾತ್ರಗಳಾಗಿವೆ. +ನವೆಂಬರ್‍ನಲ್ಲಿ ಡಿಫೆನ್ಸ್ ಅಕ್ವಿಸಿಷನ್ ಕೌನ್ಸಿಲ್ (ಡಿಎಸಿ) ಭಾರತೀಯ ವಾಯುಪಡೆಗೆ () 97 ತೇಜಸ್ ಜೆಟ್‍ಗಳನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಗೆ ಅನುಮತಿ ನೀಡಿತ್ತು. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‍ಎಎಲ್) ನಿಂದ ತನ್ನಎಸ್‍ಯು- 30 -ಫೈಟರ್ ಫ್ಲೀಟ್ ಅನ್ನು ನವೀಕರಿಸಲು ಐಎಎಫ್ ನ ಪ್ರಸ್ತಾವನೆಯನ್ನು ರಕ್ಷಣಾ ಸ್ವಾಧಿ„ೀನ ಮಂಡಳಿಯು ಅನುಮೋದಿಸಿತು. \ No newline at end of file diff --git a/eesanje/url_47_124_2.txt b/eesanje/url_47_124_2.txt new file mode 100644 index 0000000000000000000000000000000000000000..56c8cc5b7bc4354663d76f11fcf2e2effc0cae67 --- /dev/null +++ b/eesanje/url_47_124_2.txt @@ -0,0 +1,4 @@ +ನದಿಗೆ ಕಾರು ಬಿದ್ದು ನಾಲ್ವರ ಸಾವು +ಡೆಹ್ರಾಡೂನ್, ಏ. 14 (ಪಿಟಿಐ) :ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಾರು ನದಿಗೆ ಬಿದ್ದ ಪರಿಣಾಮ ಇಬ್ಬರು ಸಹೋದರರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಚಿದಾಗ್ ಬಳಿಯ ರಿಮಾ-ಘರಂಘರ್ ಮೋಟಾರು ರಸ್ತೆಯಲ್ಲಿ ಮುಂಜಾನೆ 4 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಬಾಗೇಶ್ವರ್ ಕೊಟ್ವಾಲಿ ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಕೈಲಾಶ್ ನೇಗಿ ತಿಳಿಸಿದ್ದಾರೆ. +ಕಾರು ಸುಮಾರು 250 ಮೀಟರ್ ರಸ್ತೆಯಲ್ಲಿ ನದಿಗೆ ಬಿದ್ದಿದೆ ಎಂದು ಅವರು ಹೇಳಿದರು. ಅಪಘಾತದಲ್ಲಿ ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದರು.ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‍ಡಿಆರ್‍ಎಎಫ್ ) ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಅವರನ್ನು ನದಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿ ಹೇಳಿದರು. +ಬಲಿಯಾದವರನ್ನು ಕಮಲ್ ಪ್ರಸಾದ್, ನೀರಜ್ ಕುಮಾರ್, ದೀಪಕ್ ಆರ್ಯ ಮತ್ತು ಕೈಲಾಶ್ ರಾಮ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಬಲಿಯಾದವರು ವಡ್ಯುಡಾ ರಿಮಾ ಮತ್ತು ಜುನ್ಯಾಲ್ ದೋಫಡ್ ನಿವಾಸಿಗಳು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_124_3.txt b/eesanje/url_47_124_3.txt new file mode 100644 index 0000000000000000000000000000000000000000..1d50a8d06b636474aa2d1343c46180e2a50db6cb --- /dev/null +++ b/eesanje/url_47_124_3.txt @@ -0,0 +1,6 @@ +ಕೃತಕ ಬುದ್ಧಿಮತ್ತೆ ಬಳಕೆಯಿಂದ ತ್ವರಿತ ನ್ಯಾಯ ವಿತರಣೆ ಸಾಧ್ಯ : ಚಂದ್ರಚೂಡ್ +ನವದೆಹಲಿ,ಏ.14-ಕೃತಕ ಬುದ್ಧಿಮತ್ತೆ ತ್ವರಿತ ನ್ಯಾಯ ವಿತರಣೆಗೆ ಸಹಾಯ ಮಾಡುವ ಸಾಮಥ್ರ್ಯ ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.ಇದೇ ಸಂದರ್ಭದಲ್ಲಿ ಅವರು ಕೃತಕ ಬುದ್ಧಿಮತ್ತೆಯ ವಿವೇಚನಾರಹಿತ ಬಳಕೆ ಮತ್ತು ವ್ಯವಸ್ಥಿತ ಸವಾಲುಗಳ ವಿರುದ್ಧ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. +ಇಂಡೋ-ಸಿಂಗಾಪುರ್ ನ್ಯಾಯಾಂಗ ಸಮ್ಮೇಳನದಲ್ಲಿ ತಮ್ಮ ಆರಂಭಿಕ ಭಾಷಣದಲ್ಲಿ, ಮುಖ್ಯ ನ್ಯಾಯಾಧೀಶರು ಭಾರತದ ರೋಮಾಂಚಕ ತಂತ್ರಜ್ಞಾನ ಪರಿಸರ ವ್ಯವಸ್ಥೆ ಮತ್ತು ಶ್ರೀಮಂತ ಕಾನೂನು ಪರಂಪರೆಯು ನ್ಯಾಯಾಂಗದೊಳಗೆ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಅವಕಾಶಗಳನ್ನು ಹೇಗೆ ಪ್ರಸ್ತುತಪಡಿಸುತ್ತದೆ ಎಂಬುದನ್ನು ಪ್ರಸ್ತಾಪಿಸಿದರು. +ನ್ಯಾಯಾಲಯದ ಪ್ರಕ್ರಿಯೆಗಳನ್ನು ಡಿಜಿಟಲೀಕರಣಗೊಳಿಸುವ ಮತ್ತು ನ್ಯಾಯದ ಪ್ರವೇಶವನ್ನು ಸುಧಾರಿಸುವಲ್ಲಿ ಇ-ಕೋರ್ಟ್‍ಗಳ ಯೋಜನೆ ಮತ್ತು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್‍ನಂತಹ ಯೋಜನೆಗಳ ಮಹತ್ವವನ್ನು ಅವರು ವಿವರಿಸಿದರು.ಎಐ ಹೊಸತನದ ಮುಂದಿನ ಗಡಿಯನ್ನು ಪ್ರತಿನಿಧಿಸುತ್ತದೆ, ಇದು ಅಪಾರ ಪ್ರಮಾಣದ ಡೇಟಾವನ್ನು ವಿಶ್ಲೇಷಿಸಲು, ಮಾದರಿಗಳನ್ನು ಗುರುತಿಸಲು ಮತ್ತು ಹೆಚ್ಚುತ್ತಿರುವ ಸ್ವಾಯತ್ತತೆಯೊಂದಿಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದೊಂದಿಗೆ ವಿವಿಧ ಡೊಮೇನ್‍ಗಳನ್ನು ಕ್ರಾಂತಿಗೊಳಿಸಲು ಭರವಸೆ ನೀಡುತ್ತದೆ ಎಂದು ಅವರು ಹೇಳಿದರು. +ಕಾನೂನು ವಲಯದಲ್ಲಿ, ಕಾನೂನು ಸಂಶೋಧನೆ ಮತ್ತು ಪ್ರಕರಣದ ವಿಶ್ಲೇಷಣೆಯನ್ನು ಹೆಚ್ಚಿಸುವುದರಿಂದ ಹಿಡಿದು ನ್ಯಾಯಾಲಯದ ಪ್ರಕ್ರಿಯೆಗಳ ದಕ್ಷತೆಯನ್ನು ಸುಧಾರಿಸುವವರೆಗೆ ಕಾನೂನು ವೃತ್ತಿಪರರು ಕೆಲಸ ಮಾಡುವ ವಿಧಾನವನ್ನು ಪರಿವರ್ತಿಸಲು ಕೃತಕ ಬುದ್ಧಿಮತ್ತೆ ಅಪಾರ ಸಾಮರ್ಥ್ಯವನ್ನು ಹೊಂದಿದೆ ಎಂದರು. +ಎಐ ಚಾಲಿತ ಸಾಧನಗಳನ್ನು ನಿಯಂತ್ರಿಸುವ ಮೂಲಕ, ನ್ಯಾಯಾಲಯಗಳು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುಗಮಗೊಳಿಸಬಹುದು, ದಾಖಲೆಗಳನ್ನು ಕಡಿಮೆ ಮಾಡಬಹುದು ಮತ್ತು ಕಾನೂನು ವಿವಾದಗಳ ಪರಿಹಾರವನ್ನು ತ್ವರಿತಗೊಳಿಸಬಹುದು ಎಂದು ಮುಖ್ಯ ನ್ಯಾಯಾಧೀಶರು ಹೇಳಿದರು. \ No newline at end of file diff --git a/eesanje/url_47_124_4.txt b/eesanje/url_47_124_4.txt new file mode 100644 index 0000000000000000000000000000000000000000..1bcdc4a499ee1ea44edfdf6a0eb7b8a880d60110 --- /dev/null +++ b/eesanje/url_47_124_4.txt @@ -0,0 +1,10 @@ +ಪೂಜೆ ಹೆಸರಲ್ಲಿ 6 ಲಕ್ಷ ಮೌಲ್ಯದ ಚಿನ್ನಾಭರಣ ಮಂಗಮಾಯ ಮಾಡಿದ ಜ್ಯೋತಿಷಿಗಳು..! +ಮುಂಬೈ,ಏ.14-ಹಸ್ತ ನೋಡಿ ನಿಮ್ಮ ಮನೆಯಲ್ಲಿನ ನಕಾರಾತ್ಮಕ ಶಕ್ತಿಯನ್ನು ಹೋಗಲಾಡಿಸುವುದಾಗಿ ಗುತ್ತಿಗೆ ನೌಕರನಿಗೆ ಶಾಸ್ತ್ರ ಹೇಳಿದ ಜ್ಯೋತಿಷ್ಯಾ ದಂಪತಿ, ಆತನ ಮನೆಗೆ ಬಂದು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಮಂಗಮಾಯ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. +ಬೃಹನ್‍ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ)ನ ಗುತ್ತಿಗೆದಾರನ ಅಂಗೈ ನೋಡುವ ಮೂಲಕ ಭವಿಷ್ಯ ಹೇಳಿದ ಈ ಜ್ಯೋತಿಷಿಗಳು ಕೆಟ್ಟ ಶಕ್ತಿಯನ್ನು ದೂರವಿಡುವ ನೆಪದಲ್ಲಿ ಆತನ ಮನೆಗೆ ಪ್ರವೇಶಿಸಿ, ವಿಶೇಷ ಪೂಜೆ, ವ್ರತಾಚರಣೆ ಎಂದ್ಹೇಳಿ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ ಎಂದು ಗುತ್ತಿಗೆದಾರ ಆಂಟೊಪ್ ಹಿಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. +ವ್ಯಕ್ತಿ ತನ್ನ ಮಕ್ಕಳಿಗೆ ಕೆಲವು ಸಿಹಿತಿಂಡಿಗಳನ್ನು ಖರೀದಿಸಲು ಪರೇಲ್‍ನಲ್ಲಿರುವ ಅಂಗಡಿಗೆ ಹೋಗಿದ್ದಾಗ ಈ ನಕಲಿ ಜ್ಯೋತಿಷಿ ದಂಪತಿಗಳು ಅವನ ಬಳಿಗೆ ನಡೆದು 30 ರೂ.ಗೆ ಶಾಸ್ತ್ರ ಹೇಳುವುದಾಗಿ ತಿಳಿಸಿದ್ದಾರೆ. ಮೊತ್ತವು ತುಂಬಾ ಅಗ್ಗವಾದ ಕಾರಣ ದೂರುದಾರರು ತಮ್ಮ ಅಂಗೈ ತೋರಿಸಿ ಭವಿಷ್ಯ ಕೇಳಿದ್ದಾರೆ. +ಶಾಸ್ತ್ರ ಹೇಳಲು ಶುರುವಿಟ್ಟುಕೊಂಡು ದಂಪತಿ, ಕಷ್ಟಪಟ್ಟು ಕೆಲಸ ಮಾಡಿದರೂ ಅದಕ್ಕೆ ತಕ್ಕ ಹಣ ಪಡೆಯುತ್ತಿಲ್ಲ ಎಂದಿದ್ದಾರೆ. ನಿಜ ಎಂದು ಒಪಿಕೊಂಡು ಗುತ್ತಿಗೆದಾರ ಪರಿಸ್ಥಿತಿ ಸುಧಾರಿಸಲು ಏನು ಮಾಡಬೇಕೆಂದು ಕೇಳಿದ್ದಾರೆ. ನಿಮ್ಮಲ್ಲಿನ ಕೆಟ್ಟ ಶಕ್ತಿಯನ್ನು ಹೊರಹಾಕಲು ಧಾರ್ಮಿಕ ಪೂಜೆಯೊಂದನ್ನು ಮಾಡಬೇಕು. ಅದಕ್ಕೆ 1,500 ರೂ. ತಗಲುತ್ತದೆ ಎಂದು ಹೇಳಿದ್ದಾರೆ. +ನಂತರ ಗುತ್ತಿಗೆದಾರ ನಕಲಿ ಜ್ಯೋತಿಷಿ ದಂಪತಿಯನ್ನು ತನ್ನ ಮನೆಗೆ ಆಹ್ವಾನಿಸಿದ್ದು, ಅಲ್ಲಿ ಅವರು ಧಾರ್ಮಿಕ ಕ್ರಿಯೆ ನಡೆಸಿದ್ದಾರೆ. ಜ್ಯೋತಿಷಿ ದಂಪತಿಗಳು ಧಾರ್ಮಿಕ ಕ್ರಿಯೆಗಳನ್ನು ಮಾಡಲು ಗುತ್ತಿಗೆದಾರನ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. +ಮತ್ತೆ ಗುತ್ತಿಗೆದಾರನ ಮನೆಗೆ ಬಂದ ಜ್ಯೋತಿಷಿ ದಂಪತಿ, ಈ ಬಾರಿ ತಮ್ಮ ಪೂಜೆ ಮುಗಿಯುವವರೆಗೂ ಮನೆಯಿಂದ ಹೊರಗಿರುವಂತೆ ಹೇಳಿದ್ದಾರೆ. ಅದರಂತೆ ಗುತ್ತಿಗೆ ನೌಕರ ಅಪಾರ್ಟ್‍ಮೆಂಟ್‍ನ ನೆಲ ಮಹಡಿಗೆ ಬಂದು ಕುಳಿತಿದ್ದಾರೆ. +ಈ ವೇಳೆ ಜ್ಯೋತಿಷಿ ಗುತ್ತಿಗೆದಾರನ ಹೆಂಡತಿಗೆ ಅವಳ ಬಳಿ ಇರುವ ಆಭರಣವನ್ನು ಪಡೆದುಕೊಳ್ಳುವಂತೆ ಕೇಳಿದ್ದಾರೆ. ಆಕೆ ಆಭರಣವನ್ನು ಒಂದು ತುಂಡು ಬಟ್ಟೆಯಲ್ಲಿ ಸುತ್ತಿ ಗಂಟು ಹಾಕಿ ಕೊಟ್ಟಿದ್ದಾರೆ. ಒಂಬತ್ತು ದಿನಗಳವರೆಗೂ ಈ ಗಂಟನ್ನು ತೆರೆಯಬಾರದೆಂದು ಹೇಳಿ ಅಲ್ಲಿಂದ ಹೊರಟುಹೋಗಿದ್ದಾರೆ. +ದೂರುದಾರರು ವಾಪಸ್ ಬಂದು ಗಂಟು ಕಟ್ಟಿದ ಬುತ್ತಿಯ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಏನೋ ತಪ್ಪಾಗಿದೆ ಗಂಟು ಬಿಚ್ಚಿ ನೋಡಿದಾಗ ಬುತ್ತಿಯಲ್ಲಿ ಚಿನ್ನಾಭರಣ ಇರಲಿಲ್ಲ. ಆನಂತರ ಅವರು ಆ ಜ್ಯೋತಿಷಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತನ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ನಂತರ ಪೊಲೀಸರಿಗೆ ಹೋಗಿ ದೂರು ದಾಖಲಿಸಿದ್ದಾರೆ. +ಎನ್‍ಎಂ ಜೋಶಿ ಠಾಣೆ ಪೊಲೀಸರು ವಂಚನೆ ಮತ್ತು ಕ್ರಿಮಿನಲ್ ನಂಬಿಕೆ ದ್ರೋಹ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ. ಜ್ಯೋತಿಷಿಗಳನ್ನು ಗುರುತಿಸಲು ಅಪಾರ್ಟ್‍ಮೆಂಟ್ ಮತ್ತು ಪಕ್ಕದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_124_5.txt b/eesanje/url_47_124_5.txt new file mode 100644 index 0000000000000000000000000000000000000000..2dc51defb56e68d31e8c99b9f88a963d78eb5dd2 --- /dev/null +++ b/eesanje/url_47_124_5.txt @@ -0,0 +1,15 @@ +ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಇಲ್ಲಿದೆ ಹೈಲೈಟ್ಸ್ +ನವದೆಹಲಿ,ಏ.14-ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ, ಒಂದು ರಾಷ್ಟ್ರ ಒಂದು ಚುನಾವಣೆ, ಬಡವರಿಗೆ 5 ವರ್ಷ ಉಚಿತ ಅಕ್ಕಿ ವಿತರಣೆ, ಮುದ್ರಾಂಕ ಸಾಲ ಹೆಚ್ಚಳ, ವಿಶ್ವದಲ್ಲಿ ಭಾರತ 3ನೇ ಬೃಹತ್ ಆರ್ಥಿಕ ರಾಷ್ಟ್ರದ ಗುರಿ, 3 ಕೋಟಿ ಮಹಿಳೆಯರಿಗೆ ಲಕ್‍ಪತಿ ದೀದಿ ಸೇರಿದಂತೆ ಮಹಿಳೆಯರು, ಯುವಕರು, ಹಿರಿಯ ನಾಗರಿಕರು, ರೈತರು ಸೇರಿದಂತೆ ಎಲ್ಲಾ ಸಮುದಾಯಕ್ಕೂ ಮೋದಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಭರವಸೆಗಳ ಮಹಾಪೂರವನ್ನೇ ಹರಿಸಿದೆ. +ಕೇಂದ್ರದಲ್ಲಿ ಮತ್ತೆ ಮೂರನೇ ಬಾರಿಗೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಹೆಗ್ಗುರಿಯೊಂದಿಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ, ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವ ಭರವಸೆಯನ್ನು ಕೊಟ್ಟಿದೆ. ಮೋದಿ ಕಿ ಗ್ಯಾರಂಟಿ ಎಂಬ ಅಡಿಬರಹದೊಂದಿಗೆ ದೇಶದ ಅಭಿವೃದ್ಧಿ, ಮಹಿಳಾ ಕಲ್ಯಾಣ ಮತ್ತು ವಿಕ್ಷಿತ್ ಭಾರತ್ (ಅಭಿವೃದ್ಧಿ ಹೊಂದಿದ ಭಾರತ)ದ ಮಾರ್ಗಸೂಚಿಗಳೊಂದಿಗೆ ಜನತೆಯ ಮುಂದೆ ನೀಡಿದೆ. +ನವದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರಮೋದಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ರಾಜನಾಥ್‍ಸಿಂಗ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅಮಿತ್ ಷಾ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರತಿ ಕ್ಷಣವೂ ದೇಶಕ್ಕಾಗಿ ಎಂಬ ಚುನಾವಣಾ ಘೋಷವಾಕ್ಯದೊಂದಿಗೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಪ್ರಧಾನಿ ಮೋದಿ ಅವರ 10 ವರ್ಷಗಳ ಸಾಧನೆ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು. + : ಪ್ರಧಾನಿ ಶ್ರೀ@narendramodiಅವರ ಉಪಸ್ಥಿತಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ@JPNaddaಅವರಿಂದ ಲೋಕಸಭಾ ಚುನಾವಣೆ 2024 ರ ಸಂಕಲ್ಪ ಪತ್ರ ಬಿಡುಗಡೆ##BJPSankalpPatra2024https://./SVV7iCUTIz +ಪ್ರಣಾಳಿಕೆಯಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲರನ್ನೂ ಹಾಗೂ ತೃತೀಯ ಲಿಂಗಿಗಳನ್ನು ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಸೇರ್ಪಡೆ ಮಾಡುವ ಭರವಸೆ ನೀಡಲಾಗಿದ್ದು, ಆ ಮೂಲಕ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ಸೌಲಭ್ಯ, 3 ಕೋಟಿ ಮನೆ ನಿರ್ಮಾಣ, ಪೈಪ್ ಮೂಲಕ ಮನೆಗೆ ಅಡುಗೆ ಅನಿಲ, 3 ಕೋಟಿ ಗ್ರಾಮೀಣ ಮಹಿಳೆಯರು ಲಖ್‍ಪತಿ ದೀದಿ ಯೋಜನೆ ಫಲಾನುಭವಿಗಳಾಗಲಿದ್ದಾರೆ ಎಂಬ ಭರವಸೆಯನ್ನು ಬಿಜೆಪಿ ನೀಡಿದೆ. +ಗರ್ಭಕಂಠ ಕ್ಯಾನ್ಸರ್ ತಡೆಗೆ ವಿಶೇಷ ಯೋಜನೆ, ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ತಡೆಯಲು ಕಠಿಣ ಕಾನೂನು, ಹಿರಿಯ ನಾಗರಿಕರಿಗೆ ಜ್ಞಾನ ಹಂಚಿಕೆ ಪೋರ್ಟಲ್ ಹಾಗೂ ಬಡವರಿಗೆ ಉಚಿತ ಪಡಿತರ, ನೀರು ಮತ್ತು ಗ್ಯಾಸ್ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದೆ. +ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು, ಅಂಚೆ ಮತ್ತು ಡಿಜಿಟಲ್ ನೆಟ್ವರ್ಕ್ ಸಹಯೋಗ, ಹಿರಿಯ ನಾಗರಿಕರಿಗೆ ಯುಪಿಐ ಬಗ್ಗೆ ತರಬೇತಿ, ಮೋಸ-ವಂಚನೆಗಳಿಂದ ತಪ್ಪಿಸಲು ಕ್ರಮಕೈಗೊಳ್ಳುವುದು, ಹಿರಿಯ ನಾಗರಿಕರಿಗೆ ಆಯುಷ್ ಕ್ಯಾಂಪ್ ಆಯೋಜನೆ, ರಾಜ್ಯ ಸರ್ಕಾರಗಳ ಜೊತೆ ಸೇರಿ ಹಿರಿಯ ನಾಗರಿಕರಿಗೆ ಸುಗಮ ತೀರ್ಥಯಾತ್ರೆ ವ್ಯವಸ್ಥೆ, ಕಾಲಕ್ಕೆ ತಕ್ಕಂತೆ ಎಂಎಸ್ಪಿ ಜಾರಿ, ಭಾರತವನ್ನು ಅಂತಾರಾಷ್ಟ್ರೀಯ ನ್ಯೂಟ್ರಿ ಹಬ್ ಮಾಡುವುದು, ಕೃಷಿಗಾಗಿ ಪ್ರತ್ಯೇಕ ಸ್ಯಾಟಲೈಟ್ ಮೊದಲಾದ ಭರವಸೆಗಳನ್ನು ಜನರಿಗೆ ನೀಡಿದೆ. +ಒಂದು ರಾಷ್ಟ್ರ, ಒಂದು ಚುನಾವಣೆ ಮತ್ತು ಸಾಮಾನ್ಯ ಮತದಾರರ ಪಟ್ಟಿಯನ್ನು ತರುವುದು, ಏಕರೂಪ ನಾಗರಿಕ ಸಂಹಿತೆ ಜಾರಿ, ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್, ಮಹಿಳೆಯರಿಗಾಗಿ ಶೌಚಾಲಯಗಳ ಸಂಖ್ಯೆ ಹೆಚ್ಚಳ ಮತ್ತು ಮಹಿಳಾ ಶಕ್ತಿ ವಂದನ್ ಕಾಯ್ದೆಯ ಅನುಷ್ಠಾನ, ವಂದೇ ಭಾರತ್ ರೈಲು ಜಾಲದ ವಿಸ್ತರಣೆ, ಅಮೃತ್ ಭಾರತ್ ಮತ್ತು ನಮೋ ಭಾರತ್ ರೈಲುಗಳು ಬರಲಿವೆ ಎಂದು ತಿಳಿಸಲಾಗಿದೆ. +ವಿಕಸಿತ ಭಾರತವನ್ನು ಕಟ್ಟುವ ಸಲುವಾಗಿ, ದೇಶದಲ್ಲಿ ಉದ್ಯೋಗ ಸೃಷ್ಟಿ, ಉದ್ಯಮ ಸೃಷ್ಟಿಯ ಜೊತೆ ಜೊತೆಗೆ ದೇಶವಾಸಿಗಳ ಬದುಕನ್ನು ಶ್ರೀಮಂತಗೊಳಿಸಲು ಸಂಕಲ್ಪ ತೊಟ್ಟಿರುವ ಪ್ರಧಾನಿ ಶ್ರೀ@narendramodiಅವರು, ಇವೆಲ್ಲವನ್ನು ಒಳಗೊಂಡ ‘ಸಂಕಲ್ಪ ಪತ್ರ’ವನ್ನು ಇಂದು ಬಿಡುಗಡೆ ಮಾಡಿದ್ದಾರೆ. ಇದು ಭಾರತವನ್ನು ವಿಶ್ವಶಕ್ತಿಯನ್ನಾಗಿಸುವ ಅಮೃತಕಾಲದ…../iLPlQny0eh +ಹೊಸ ವಿಮಾನ ನಿಲ್ದಾಣ, ಹೆದ್ದಾರಿಗಳು, ಮೆಟ್ರೋ ಮತ್ತು ನೀರಿನ ಮೆಟ್ರೋಗಳು ಬರಲಿವೆ. ಹೆದ್ದಾರಿಗಳಲ್ಲಿ ಟ್ರಕ್ ಚಾಲಕರಿಗೆ ಆಧುನಿಕ ಸೌಲಭ್ಯಗಳು, ವಿಶ್ವಾದ್ಯಂತ ರಾಮಾಯಣ ಉತ್ಸವ ಆಚರಿಸಲಾಗುವುದು ಎಂದು ಉಲ್ಲೇಖಿಸಲಾಗಿದೆ. +70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದು, 70 ವರ್ಷ ಮೇಲ್ಪಟ್ಟವರೂ ಕೂಡ ಇನ್ನು ಮುಂದೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಜನೌಷ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ, ದೇಶದ 10 ಕೋಟಿ ರೈತರು ಭವಿಷ್ಯದಲ್ಲಿಯೂ ಪಿಎಂ-ಕಿಸಾನ್ ಸಮ್ಮಾನ್ ನಿಯ ಪ್ರಯೋಜನಗಳನ್ನು ಪಡೆಯಲಿದ್ದಾರೆ. +ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ನರೇಂದ್ರಮೋದಿ, ಸಹಕಾರದ ಮೂಲಕ ಸಮೃದ್ಧಿ ಎಂಬ ದೂರದೃಷ್ಟಿಯೊಂದಿಗೆ ಬಿಜೆಪಿ ರಾಷ್ಟ್ರೀಯ ಸಹಕಾರ ನೀತಿ ಯನ್ನು ಪರಿಚಯಿಸಲಿದೆ. ಈ ಮೂಲಕ ಕ್ರಾಂತಿಕಾರಿ ದಿಕ್ಕಿನಲ್ಲಿ ಮುನ್ನಡೆಯಲಿದ್ದೇವೆ. ದೇಶಾದ್ಯಂತ ಹೈನುಗಾರಿಕೆ ಮತ್ತು ಸಹಕಾರ ಸಂಘಗಳ ಸಂಖ್ಯೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗುವುದು ಎಂದರು. +ಪೈಪ್ ಮೂಲಕ ಗ್ಯಾಸ್ ತಲುಪಿಸುವ ಕೆಲಸ ಮಾಡಲಾಗುವುದು, ಬಿಜೆಪಿ ಸರ್ಕಾರ ಬಡವರಿಗಾಗಿ 4 ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಿದೆ. ಈಗ ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಹೆಚ್ಚುವರಿ ಮಾಹಿತಿಯನ್ನು ಪರಿಗಣಿಸಿ, ಆ ಕುಟುಂಬಗಳ ಬಗ್ಗೆ ಚಿಂತಿಸುವುದರೊಂದಿಗೆ ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಭರವಸೆಯೊಂದಿಗೆ ನಾವು ಮುಂದುವರಿಯುತ್ತೇವೆ. +ಇಲ್ಲಿಯವರೆಗೆ ನಾವು ಪ್ರತಿ ಮನೆಗೆ ಅಗ್ಗದ ಸಿಲಿಂಡರ್‍ಗಳನ್ನು ತಲುಪಿಸಿದ್ದೇವೆ, ಈಗ ನಾವು ಪ್ರತಿ ಮನೆಗೆ ಅಗ್ಗದ ಪೈಪ್ಡ್ ಅಡುಗೆ ಅನಿಲವನ್ನು ತಲುಪಿಸಲು ತ್ವರಿತವಾಗಿ ಕೆಲಸ ಮಾಡುತ್ತೇವೆ ಎಂದು ವಾಗ್ದನ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಕೇಂದ್ರ ನಾಯಕರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನವನ್ನು ಸಲ್ಲಿಸಿ ಪ್ರಣಾಳಿಕೆ ಪತ್ರ ಬಿಡುಗಡೆ ಮಾಡಿದರು. \ No newline at end of file diff --git a/eesanje/url_47_124_6.txt b/eesanje/url_47_124_6.txt new file mode 100644 index 0000000000000000000000000000000000000000..09573afdd9df45c5a6849a14f7498cc38bd2f38e --- /dev/null +++ b/eesanje/url_47_124_6.txt @@ -0,0 +1,6 @@ +ಲೀವ್‍ಇನ್ ಪಾರ್ಟನರ್ ಹಾಗೂ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟ್ರಕ್ ಚಾಲಕ +ನಾಗ್ಪುರ,ಏ.14-ಟ್ರಕ್ ಚಾಲಕನೊಬ್ಬ ತನ್ನ ಲೀವ್ ಇನ್ ಪಾರ್ಟನರ್ ಹಾಗೂ ಆಕೆಯ ಮೂರು ವರ್ಷದ ಮಗುವನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಸಚಿನ್ ವಿನೋದಕುಮಾರ್ ರಾವುತ್ ಎಂಬಾತ ವಿವಾಹೇತರ ಸಂಬಂಧ ಹೊಂದಿದ್ದ ನಾಜ್ನಿನ್ (29) ಮತ್ತು ಅವರ ಮಗ ಯುಗ್ ಅವರನ್ನು ಹತ್ಯೆ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತದೇಹಗಳು ಎಂಐಡಿಸಿ ಪ್ರದೇಶದ ಗಜಾನನ ಕಾಲೋನಿ ಬಳಿಯ ಗೋಲ್ಡನ್ ಕೀ ಹೋಟೆಲ್‍ನಲ್ಲಿನ ಕೊಠಡಿಯಲ್ಲಿ ಸಿಬ್ಬಂದಿಗೆ ಪತ್ತೆಯಾಗಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ರಾವುತ್ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಅವರ ಲೀವ್‍ಇನ್ ಪಾಲುದಾರ ನಾಜ್ನಿನ್ ತಲೆಗೆ ಗಾಯ ಮತ್ತು ಸುತ್ತಿಗೆ ರಕ್ತದ ಕಲೆಗಳೊಂದಿಗೆ ಹತ್ತಿರದಲ್ಲಿ ಬಿದ್ದಿರುವುದು ಕಂಡುಬಂದಿದೆ. ಯುಗ್ ಅವರ ದೇಹದಲ್ಲಿ ಯಾವುದೇ ಗಾಯಗಳು ಕಂಡುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪ್ರಾಥಮಿಕ ತನಿಖೆಯ ಪ್ರಕಾರ, ರಾವುತ್ ನಾಜ್ನಿನ್ ಮೇಲೆ ಸುತ್ತಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ನಂತರ ಆಕೆಯ ಮಗನಿಗೆ ವಿಷಪೂರಿತ ಆಹಾರ ತಿನಿಸಿ ಇಲ್ಲವೇ ಕತ್ತು ಹಿಸುಕಿ ಕೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. +ರಾವುತ್‍ಗೆ ವಿವಾಹವಾಗಿದ್ದು ಆತ ತನ್ನ ಪತ್ನಿಗೆ ವಿಚ್ಛೇದನ ನೀಡದೆ ನಾಜ್ನಿನ್ ಜೊತೆ ವಾಸಿಸಲು ಪ್ರಾರಂಭಿಸಿದ್ದ ಕಾಲಕ್ರಮೇಣ ನಾಜ್ನಿನ್ ಕೂಡ ಆತನಿಂದ ಅಂತರ ಕಾಯ್ದುಕೊಳ್ಳಲು ಯತ್ನಿಸಿದ್ದಳು ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಇಬ್ಬರು ಪ್ರತ್ಯೇಕವಾಗಿ ವಾಸಿಸಲು ಸಮ್ಮತಿಸಿ 500 ರೂ.ಗಳ ಸ್ಪಾಂಪ್ ಪೇಪರ್ ಮೇಲೆ ಸಹಿ ಹಾಕಿದ್ದರು ಎನ್ನಲಾಗಿದೆ. +ಇಬ್ಬರ ನಡುವಿನ ಒಪ್ಪಂದ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾವುತ್, ನಾಜ್ನಿನ್ ಮತ್ತು ಹುಡುಗ ನಿನ್ನೆ ಮಧ್ಯಾಹ್ನ ಹೋಟೆಲ್‍ನಲ್ಲಿ ಚೆಕ್ ಇನ್ ಮಾಡಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_124_7.txt b/eesanje/url_47_124_7.txt new file mode 100644 index 0000000000000000000000000000000000000000..079c7b02e1695f9a9dbb69ac603124a12fa00403 --- /dev/null +++ b/eesanje/url_47_124_7.txt @@ -0,0 +1,5 @@ +ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದವನ ವಿರುದ್ಧ ಎಫ್‍ಐಆರ್ +ತಿರುವನಂತಪುರಂ,ಏ.14-ಲೋಕಸಭೆ ಚುನಾವಣೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರಮೋದಿಯವರ ವರ್ಚಸ್ಸಿಗೆ ಕಳಂಕ ತರುವ ಪೋಸ್ಟ್ ಗಳನ್ನು ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನ ವಿರುದ್ಧ ಕೇರಳ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. +ಆರೋಪಿ ನಬೀಲ್ ನಾಸರ್ ಇತ್ತೀಚೆಗೆ ಫೇಸ್‍ಬುಕ್ ಹ್ಯಾಂಡಲ್‍ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳ ಕುರಿತು ಸ್ಥಳೀಯ ಬಿಜೆಪಿ ಕಾರ್ಯಕರ್ತ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಪಾಲೊಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ಮೋದಿಯವರ ವರ್ಚಸ್ಸಿಗೆ ಕಳಂಕ ತರುವ ಉದ್ದೇಶದಿಂದ ಮೋದಿ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದರು. +ಮಾರ್ಚ್ 20ರಿಂದ ಹಲವು ದಿನಗಳ ಕಾಲ ಅದೇ ಹ್ಯಾಂಡಲ್‍ನಿಂದ ಅವರು ಇಂತಹ ಆಕ್ಷೇಪಾರ್ಹ ಸರಣಿ ಪೋಸ್ಟ್ ಗಳನ್ನು ಹಾಕುತ್ತಿದ್ದರು ಮತ್ತು ಅವು ರಾಜಕೀಯ ಪಕ್ಷದ ಕಾರ್ಯಕರ್ತರಲ್ಲಿ ಉದ್ವಿಗ್ನತೆ ಉಂಟುಮಾಡುತ್ತವೆ ಎಂದು ಎಫ್‍ಐಆರ್‍ನಲ್ಲಿ ಹೇಳಲಾಗಿದೆ. +ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಗಳನ್ನು ನೀಡಿರುವುದಕ್ಕೆ ನಬೀಲ್ ನಾಸರ್ ವಿರುದ್ಧ ಕೇರಳ ಪೊಲೀಸ್ ಕಾಯಿದೆಯ ಐಪಿಸಿ ಸೆಕ್ಷನ್ 153 ಮತ್ತು 171 ಜಿ ಮತ್ತು 120 (ಒ)ರಡಿ ಪ್ರಕರಣ ದಾಖಲಿಸಲಾಗಿದೆ. \ No newline at end of file diff --git a/eesanje/url_47_124_8.txt b/eesanje/url_47_124_8.txt new file mode 100644 index 0000000000000000000000000000000000000000..cd0c332528c6b85ae70d0bfdfce1701129a46932 --- /dev/null +++ b/eesanje/url_47_124_8.txt @@ -0,0 +1,9 @@ +ಕಲ್ಲುತೂರಾಟದಿಂದ ಗಾಯ : ಜಗನ್ ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ +ನವದೆಹಲಿ,ಏ.14-ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ನಡೆದ ಕಲ್ಲುತೂರಾಟದ ಘಟನೆಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. +ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‍ಗೆ ಕರೆದೊಯ್ದ ಪಿಎಂ ಮೋದಿ, ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್‍ಗಾರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. +ವಿಜಯವಾಡದಲ್ಲಿ ಮೇಮಂತ ಸಿದ್ದಂ ಬಸ್ ಯಾತ್ರೆಯ ವೇಳೆ ಕಲ್ಲು ತೂರಾಟದ ನಂತರ ಸಿಎಂ ಜಗನ್ ಅವರ ಹುಬ್ಬಿನ ಕೆಳಗೆ ಆಳವಾದ ಗಾಯವಾಗಿತ್ತು. ಆಡಳಿತಾರೂಢ ವೈಎಸ್‍ಆರ್ ಕಾಂಗ್ರೆಸ್‍ನ ಮೂಲಗಳ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ಮುಖ್ಯಮಂತ್ರಿ ಮೇಲೆ ಕಲ್ಲು ತೂರಾಟ ನಡೆಸಿದ್ದು ಅವರ ಎಡ ಹುಬ್ಬಿನ ಮೇಲೆ ಗಾಯವಾಗಿದೆ. + @. +ತಕ್ಷಣ ಸಿಎಂಗೆ ಬಸ್‍ನಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಸಿಎಂ ಜಗನ್ ಬಸ್ ಪ್ರಯಾಣ ಮುಂದುವರಿಸಿದರು.ಏತನ್ಮಧ್ಯೆ, ಆಡಳಿತಾರೂಢ ವೈಎಸ್‍ಆರ್‍ಸಿಪಿ ನಾಯಕ ಮತ್ತು ಉತ್ತರ ಕ್ಷೇತ್ರದ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಕೆಕೆ ರಾಜು ಅವರು ಶನಿವಾರ ವಿಜಯವಾಡದಲ್ಲಿ ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ವಿರುದ್ಧ ಪ್ರತಿಭಟನೆ ನಡೆಸಿದರು. +ಆಡಳಿತ ಪಕ್ಷದ ನೂರಾರು ಬೆಂಬಲಿಗರೊಂದಿಗೆ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿದ್ದ ರಾಜು, ಆಂಧ್ರಪ್ರದೇಶದ ಸಾಂಪ್ರದಾಯಿಕವಲ್ಲದ ಇಂಧನ ಅಭಿವೃದ್ಧಿ ನಿಗಮದ (ಎನ್‍ಆರ್‍ಇಡಿಸಿಎಪಿ) ಅಧ್ಯಕ್ಷರೂ ಆಗಿರುವ ರಾಜು ಅವರು ದಾಳಿಯನ್ನು ಖಂಡಿಸಿ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು. +ರಾಜ್ಯದ ಪ್ರಮುಖ ಪ್ರತಿಪಕ್ಷ ಶಕ್ತಿಯಾದ ಟಿಡಿಪಿ, ಅದರ ಎನ್‍ಡಿಎ ಪಾಲುದಾರರಾದ ಬಿಜೆಪಿ ಮತ್ತು ನಟ ಕಮ್ ರಾಜಕಾರಣಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಕಲ್ಲು ತೂರಾಟವನ್ನು ಆಯೋಜಿಸಿದೆ ಎಂದು ಆರೋಪಿಸಲಾಗಿದೆ. +ವೈಎಸ್‍ಆರ್‍ಸಿಪಿ ನಾಯಕ ಸುದ್ದಿಗಾರರಿಗೆ, ಟಿಡಿಪಿ ಮತ್ತು ಅದರ ಮಿತ್ರಪಕ್ಷಗಳು (ಬಿಜೆಪಿ ಮತ್ತು ಜೆಎಸ್‍ಪಿ) ಈ ದಾಳಿಯ ಹಿಂದೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲು ತೂರಾಟ ನಡೆಸಿವೆ ಎಂದು ಆರೋಪಿಸಿರುವ ನಡುವೆಯೇ ಮೋದಿ ಅವರು ಜಗನ್ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. \ No newline at end of file diff --git a/eesanje/url_47_124_9.txt b/eesanje/url_47_124_9.txt new file mode 100644 index 0000000000000000000000000000000000000000..56a21aed731d66f4594237a8d640399a26c37253 --- /dev/null +++ b/eesanje/url_47_124_9.txt @@ -0,0 +1,6 @@ +ಸಲ್ಮಾನ್‍ಖಾನ್ ಮನೆ ಮುಂದೆ ಗುಂಡು ಹಾರಿಸಿ ಪರಾರಿಯಾದ ದುಷ್ಕರ್ಮಿಗಳು +ಮುಂಬೈ,ಏ. 14 (ಪಿಟಿಐ) :ಮೋಟಾರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇಂದು ಮುಂಜಾನೆ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡಿರುವ ಪೊಲೀಸರು ಅವರ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ನ ಹೊರಗೆ ಮುಂಜಾನೆ 5 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಖಾನ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ವ್ಯಕ್ತಿಗಳನ್ನು ಗುರುತಿಸಲು ಪೊಲೀಸರು ಅವರ ಮನೆಯ ಸಮೀಪ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಹೇಳಿದರು. +ಸ್ಥಳೀಯ ಪೊಲೀಸರು, ಕ್ರೈಂ ಬ್ರಾಂಚ್ ಸಿಬ್ಬಂದಿ ಮತ್ತು ವಿಧಿವಿಜ್ಞಾನ ತಜ್ಞರ ತಂಡವು ಸ್ಥಳಕ್ಕೆ ಧಾವಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲು ಮತ್ತು ಘಟನೆಯ ಬಗ್ಗೆ ತನಿಖೆ ಆರಂಭಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ನಟ ಮನೆಯಲ್ಲಿದ್ದರು ಎಂಬುದರ ಕುರಿತು ಪೊಲೀಸರು ಅಥವಾ ಖಾನ್ ಅವರ ಕುಟುಂಬದಿಂದ ಯಾವುದೇ ಅಧಿಕೃತ ಮಾತುಗಳು ಬಂದಿಲ್ಲ. +ಕಳೆದ ವರ್ಷ ಮಾರ್ಚ್‍ನಲ್ಲಿ, ಖಾನ್ ಅವರ ಕಚೇರಿಗೆ ಬೆದರಿಕೆಯ ಇ-ಮೇಲ್ ಬಂದ ನಂತರ ಮುಂಬೈ ಪೊಲೀಸರು ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 506-ಸೆಕ್ಷನ್ ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. (ಅಪರಾಧ ಬೆದರಿಕೆ) ಮತ್ತು 34 (ಸಾಮಾನ್ಯ ಉದ್ದೇಶ). +ಪ್ರಶಾಂತ್ ಗುಂಜಾಲ್ಕರ್ ಎಂಬಾತ ಬಾಂದ್ರಾ ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ಮಾಡಲಾಗಿದೆ, ಪೊಲೀಸರು ಖಾನ್ ಅವರ ಬಾಂದ್ರಾ ಮೂಲದ ನಿವಾಸಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದರು ಮತ್ತು ಕಲಾವಿದರ ನಿರ್ವಹಣಾ ಕಂಪನಿಯನ್ನು ನಡೆಸುತ್ತಿದ್ದರು. \ No newline at end of file diff --git a/eesanje/url_47_125_1.txt b/eesanje/url_47_125_1.txt new file mode 100644 index 0000000000000000000000000000000000000000..65fe8cbf02bd407173a35871267b6abd100bf9fe --- /dev/null +++ b/eesanje/url_47_125_1.txt @@ -0,0 +1,6 @@ +ಭಯೋತ್ಪಾದನೆಗೆ ನಿಯಮಗಳಿಲ್ಲ , ಅದನ್ನು ಎದುರಿಸಲು ನಿಯಮಗಳು ಬೇಕಿಲ್ಲ : ಜೈಶಂಕರ್ +ಪುಣೆ,ಏ.13-ಕಳೆದ 2014 ರಿಂದ ಭಾರತದ ವಿದೇಶಾಂಗ ನೀತಿಯಲ್ಲಿ ಬದಲಾವಣೆಯಾಗಿದೆ ಮತ್ತು ಭಯೋತ್ಪಾದನೆಯನ್ನು ಎದುರಿಸುವ ವಿಧಾನವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಪುಣೆಯಲ್ಲಿ ನಡೆದ ವೈ ಭಾರತ್ ಮ್ಯಾಟರ್ಸ್ ಯುವಕರಿಗೆ ಅವಕಾಶ ಮತ್ತು ಜಾಗತಿಕ ಸನ್ನಿವೇಶದಲ್ಲಿ ಭಾಗವಹಿಸುವಿಕೆ ಎಂಬ ಶೀರ್ಷಿಕೆಯ ಕಾರ್ಯಕ್ರಮದಲ್ಲಿ ಅವರು ಯುವಕರೊಂದಿಗೆ ಸಂವಾದ ನಡೆಸುತ್ತಿದ್ದರು. +ಭಾರತವು ಯಾವ ದೇಶಗಳೊಂದಿಗೆ ಸಂಬಂಧವನ್ನು ಉಳಿಸಿಕೊಳ್ಳಲು ಕಷ್ಟಕರವಾಗಿದೆ ಎಂದು ಕೇಳಿದಾಗ, ಪಾಕಿಸ್ತಾನವು ನೆರೆಹೊರೆಯಲ್ಲಿದೆ ಮತ್ತು ಅದಕ್ಕೆ ನಾವು ಮಾತ್ರ ಜವಾಬ್ದಾರರು ಎಂದು ಹೇಳಿದರು.1947 ರಲ್ಲಿ ಪಾಕಿಸ್ತಾನವು ಕಾಶ್ಮೀರವನ್ನು ಆಕ್ರಮಿಸಿತು ಮತ್ತು ಭಾರತೀಯ ಸೇನೆಯು ಅವರನ್ನು ಎದುರಿಸಿತು ಮತ್ತು ರಾಜ್ಯದ ಏಕೀಕರಣವು ನಡೆಯಿತು ಎಂದು ಅವರು ಹೇಳಿದರು. +ಭಾರತೀಯ ಸೇನೆಯು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತಿರುವಾಗ, ನಾವು ನಿಲ್ಲಿಸಿ ವಿಶ್ವಸಂಸ್ಥೆಗೆ ಹೋದೆವು ಮತ್ತು ಭಯೋತ್ಪಾದನೆ (ಲಷ್ಕರ್) ಬದಲಿಗೆ ಬುಡಕಟ್ಟು ಆಕ್ರಮಣಕಾರರ ಕೆಲಸವನ್ನು ಪ್ರಸ್ತಾಪಿಸಿದ್ದೇವೆ. ಪಾಕಿಸ್ತಾನವು ಭಯೋತ್ಪಾದನೆಯನ್ನು ಬಳಸುತ್ತಿದೆ ಎಂದು ನಾವು ಮೊದಲಿನಿಂದಲೂ ಸ್ಪಷ್ಟವಾಗಿ ತಿಳಿದಿದ್ದರೆ ಬಹಳ ವಿಭಿನ್ನವಾದ ನೀತಿಯನ್ನು ಹೊಂದಿತ್ತು ಎಂದ ಅವರು ಯಾವುದೇ ಸಂದರ್ಭದಲ್ಲೂ ಭಯೋತ್ಪಾದನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. +ದೇಶದ ವಿದೇಶಾಂಗ ನೀತಿಯಲ್ಲಿ ನಿರಂತರತೆಯ ಕುರಿತು ಕೇಳಲಾದ ಪ್ರಶ್ನೆಗೆ ಅವರು, ನನ್ನ ಉತ್ತರ ಹೌದು 50 ಪ್ರತಿಶತ ನಿರಂತರತೆ ಮತ್ತು 50 ಪ್ರತಿಶತ ಬದಲಾವಣೆಯಿದೆ. ಆ ಒಂದು ಬದಲಾವಣೆಯು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ಹೇಳಿದರು. +ಮುಂಬೈ ದಾಳಿಯ ನಂತರ, ನಾವು ಪ್ರತಿಕ್ರಿಯಿಸಬಾರದು ಎಂದು ಭಾವಿಸುವ ಒಬ್ಬ ವ್ಯಕ್ತಿಯೂ ಇರಲಿಲ್ಲ. ಆದರೆ ಪಾಕಿಸ್ತಾನದ ಮೇಲೆ ದಾಳಿ ಮಾಡದಿದ್ದಕ್ಕಿಂತ ಪಾಕಿಸ್ತಾನದ ಮೇಲೆ ದಾಳಿ ಮಾಡುವ ವೆಚ್ಚ ಹೆಚ್ಚು ಎಂದು ಆ ಸಮಯದಲ್ಲಿ ಭಾವಿಸಲಾಗಿತ್ತು ಎಂದು ಅವರು ಹೇಳಿದರು.-ಭಯೋತ್ಪಾದಕರು ಗಡಿಯಾಚೆ ಇರುವ ಕಾರಣ ಅವರನ್ನು ಯಾರೂ ಸ್ಪರ್ಶಿಸಬಾರದು ಎಂದು ಭಾವಿಸಬಾರದು. ಭಯೋತ್ಪಾದಕರು ಯಾವುದೇ ನಿಯಮಗಳ ಮೂಲಕ ಆಟವಾಡುವುದಿಲ್ಲ ಆದ್ದರಿಂದ ಭಯೋತ್ಪಾದಕರಿಗೆ ಉತ್ತರವು ಯಾವುದೇ ನಿಯಮಗಳನ್ನು ಹೊಂದಿರುವುದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_125_10.txt b/eesanje/url_47_125_10.txt new file mode 100644 index 0000000000000000000000000000000000000000..a8cd0e59327296b18b6d117648314e5a6166c2a9 --- /dev/null +++ b/eesanje/url_47_125_10.txt @@ -0,0 +1,7 @@ +21ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ +ಗಾಜಿಯಾಬಾದ್, ಏ.12-ಎಟಿಎಸ್ ಅಡ್ವಾಂಟೇಜ್ ಸೊಸೈಟಿಯ ವಸತಿ ಕಟ್ಟಡದ 21 ನೇ ಮಹಡಿಯಿಂದ ಬಿದ್ದು 11 ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗಾಜಿಯಾಬಾದ್‍ನಲ್ಲಿ ನಡೆದಿದೆ. +ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಗಳು ಆತ್ಮಹತ್ಯೆಯ ಸಾಧ್ಯತೆಯನ್ನು ಸೂಚಿಸುತ್ತವೆ, ಏಕೆಂದರೆ ಬಾಲಕನ ಜೇಬಿನಿಂದ ಡೆತ್‍ನೋಟ್ ವಶಪಡಿಸಿಕೊಳ್ಳಲಾಗಿದೆ. ಆದಾಗ್ಯೂ, ಘಟನೆಯ ಸುತ್ತಲಿನ ಎಲ್ಲಾ ಸಂಭಾವ್ಯ ಕೋನಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. +ಕಟ್ಟಡದ 24 ನೇ ಮಹಡಿಯಲ್ಲಿ ಹುಡುಗ ತನ್ನ ಇಬ್ಬರು ಸ್ನೇಹಿತರೊಂದಿಗೆ ಮಾತನಾಡುತ್ತಾ ಮತ್ತು ಛಾಯಾಚಿತ್ರಗಳನ್ನು ತೆಗೆದುಕೊಳ್ಳುವುದನ್ನು ಕೊನೆಯದಾಗಿ ನೋಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. +ಸಂತ್ರಸ್ತ ತನಗೆ ಕೆಲಸವಿದೆ ಎಂದು ಹೇಳಿ ಹೊರನಡೆದರು ಎಂದು ಸ್ನೇಹಿತರೊಬ್ಬರು ಹೇಳಿದರು. ಕೆಲವು ನಿಮಿಷಗಳ ನಂತರ, ಅವರು ಕಟ್ಟಡದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. +ತಕ್ಷಣ ಬಾಲಕನನ್ನು ಶಾಂತಿ ಗೋಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆತನ ಜೇಬಿನಲ್ಲಿ ಸೂಸೈಡ್ ನೋಟ್ ಅನ್ನು ಪೊಲೀಸರಿಗೆ ನೀಡಿದ್ದಾರೆ.ಹುಡುಗ 21ನೇ ಮಹಡಿಯಿಂದ ಜಿಗಿದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. +ಹುಡುಗನಿಗೆ 17 ವರ್ಷ. ಆತ ಈ ಸ್ನೇಹಿತನನ್ನು ಭೇಟಿಯಾಗಲು ಎಟಿಎಸ್ ಸೊಸೈಟಿಗೆ ಹೋಗಿದ್ದ. ಆತ ಯಾವುದೋ ಕೆಲಸದ ನಿಮಿತ್ತ ಕೆಳಗೆ ಹೋಗುತ್ತಿದ್ದ ಎಂದು ಆತನ ಸ್ನೇಹಿತರು ಹೇಳುತ್ತಾರೆ ಎಂದು ಇಂದಿರಾಪುರಂ ಪೊಲೀಸ್ ವರಿಷ್ಠಾಧಿಕಾರಿ ಸ್ವತಂತ್ರ ಕುಮಾರ್ ಹೇಳಿದ್ದಾರೆ. \ No newline at end of file diff --git a/eesanje/url_47_125_11.txt b/eesanje/url_47_125_11.txt new file mode 100644 index 0000000000000000000000000000000000000000..b0f5cd3cceb7475dc7f71414d1dff05c212d856b --- /dev/null +++ b/eesanje/url_47_125_11.txt @@ -0,0 +1,5 @@ +ಬಂಗಾಳದ ಸಂದೇಶ್‍ಖಾಲಿಯಲ್ಲಿ ಮಹಿಳೆಯರ ದೂರುಗಳಿಗಾಗಿ ಈ-ಮೇಲ್ ಆರಂಭಿಸಿದ ಸಿಬಿಐ +ಕೋಲ್ಕತ್ತಾ,ಏ. 12 (ಪಿಟಿಐ):ಪಶ್ಚಿಮ ಬಂಗಾಳದ ಸಂದೇಶ್‍ಖಾಲಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಮತ್ತು ಭೂಕಬಳಿಕೆಗೆ ಸಂಬಂಧಿಸಿದ ದೂರುಗಳ ನೋಂದಣಿಗಾಗಿ ಸಿಬಿಐ ಮೀಸಲಾದ ಇಮೇಲ್ ವಿಳಾಸವನ್ನು ಪ್ರಕಟಿಸಿದೆ.ಇಮೇಲ್ ವಿಳಾಸsandeshkhali@..inಆಗಿದೆ. ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‍ಖಾಲಿ ಜನರು ತಮ್ಮ ದೂರುಗಳನ್ನು ಸಲ್ಲಿಸಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಏಪ್ರಿಲ್ 10, 2024 ರಂದು ಕಲ್ಕತ್ತಾ ಹೈಕೋರ್ಟ್‍ನ ವಿಭಾಗೀಯ ಪೀಠವು ನೀಡಿದ ಆದೇಶದ ಅನುಸಾರವಾಗಿ, ಸಿಬಿಐಗೆ ಮೀಸಲಾದ ಇಮೇಲ್ ಅನ್ನು ರಚಿಸಿದೆ, ಇದರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಬಲವಂತವಾಗಿ ಭೂಮಿಯನ್ನು ವಶಪಡಿಸಿಕೊಳ್ಳುವ ಬಗ್ಗೆ ಸಂದೇಶಖಾಲಿಯ ವ್ಯಕ್ತಿಗಳ ವಿರುದ್ಧ ದೂರುಗಳನ್ನು ಸಲ್ಲಿಸಬಹುದು ಎಂದು ಸಿಬಿಐ ಪ್ರಕಟಣೆಯಲ್ಲಿ ತಿಳಿಸಿದೆ. +ಇ-ಮೇಲ್ ಐಡಿಯನ್ನು ಪ್ರದೇಶದೊಳಗೆ ವ್ಯಾಪಕವಾಗಿ ಪ್ರಚಾರ ಮಾಡಲು ಮತ್ತು ವ್ಯಾಪಕ ಪ್ರಸರಣದೊಂದಿಗೆ ದೇಶೀಯ ಪತ್ರಿಕೆಗಳಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳನ್ನು ಸೂಚಿಸಲಾಗಿದೆ. +ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಆರೋಪಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿಸಿದೆ, ನ್ಯಾಯ ಮತ್ತು ನ್ಯಾಯಯುತ ಆಟದ ಹಿತದೃಷ್ಟಿಯಿಂದ ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ ಎಂದು ಹೇಳಿದೆ. \ No newline at end of file diff --git a/eesanje/url_47_125_12.txt b/eesanje/url_47_125_12.txt new file mode 100644 index 0000000000000000000000000000000000000000..56aa8839268e5ab223ab7dfefb644d6856a5eef7 --- /dev/null +++ b/eesanje/url_47_125_12.txt @@ -0,0 +1,6 @@ +ರಾಮಮಂದಿರ ನಿರ್ಮಾಣ ತ್ಯಾಗ ಬಲಿದಾನದ ಪರಾಕಾಷ್ಠೆ; ಮೋಹನ್ ಭಾಗವತ್ +ಛತ್ರಪತಿ ಸಂಭಾಜಿನಗರ, ಏ.12 (ಪಿಟಿಐ) :ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು 30 ವರ್ಷಗಳ ಹೋರಾಟ ಮತ್ತು ತ್ಯಾಗ ಬಲಿದಾನದ ಪರಾಕಾಷ್ಠೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ದತ್ತಾಜಿ ಭಲೇ ಸ್ಮೃತಿ ಸಮಿತಿ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಆರ್‍ಎಸ್‍ಎಸ್ ಮುಖ್ಯಸ್ಥ ರಾಮ್ ಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಿದಾಗ ಇಡೀ ದೇಶ ಸಂಭ್ರಮಿಸಿದೆ ಎಂದಿದ್ದಾರೆ. +ರಾಮ ಮಂದಿರ ನಿರ್ಮಾಣಕ್ಕೆ ಜನ ದೇಣಿಗೆ ನೀಡಿದ್ದಾರೆ. 30 ವರ್ಷಗಳ ಹೋರಾಟದಿಂದಾಗಿ (ದೇವಾಲಯ ನಿರ್ಮಾಣವಾಗಿದೆ)…. ರಾಮಜನ್ಮಭೂಮಿಯಲ್ಲಿ 500 ವರ್ಷಗಳಿಂದ ದೇವಸ್ಥಾನ ಬೇಕು ಎಂದು ಬಯಸಿದ್ದೆವು. ಜನರು ಹಣವನ್ನು ದೇಣಿಗೆ ನೀಡಲು ಸಿದ್ಧರಾಗಿದ್ದರು ಮತ್ತು ದೇವಾಲಯವನ್ನು ಉದ್ಘಾಟಿಸಿದಾಗ (ಜನವರಿ 2024 ರಲ್ಲಿ) ಇಡೀ ದೇಶವು ಸಂಭ್ರಮದಲ್ಲಿ ಮುಳುಗಿತ್ತು ಎಂದು ಭಾಗವತ್ ತಮ್ಮ ಭಾಷಣದಲ್ಲಿ ಹೇಳಿದರು. +ಅನೇಕ ಜನರ ತಪಸ್ಯ (ತಪಸ್ಸು/ಹೋರಾಟ) ಮತ್ತು ಸಮರ್ಪಣ (ಅರ್ಪಣ ಮತ್ತು ತ್ಯಾಗ) ಇದಕ್ಕೆ ಕಾರಣವಾಯಿತು ಎಂದು ಸಂಘದ ಮುಖ್ಯಸ್ಥರು ಸೇರಿಸಿದರು.ಕಳೆದ ಕೆಲವು ವರ್ಷಗಳಲ್ಲಿ ಭಾರತದ ಹಿರಿಮೆ ಜಾಗತಿಕ ಮಟ್ಟದಲ್ಲಿ ಏರಿದ್ದು, ಅದರ ಪರಂಪರೆ ಮತ್ತು ಸಂಸ್ಕøತಿಗೆ ಮನ್ನಣೆ ದೊರೆಯುತ್ತಿದೆ ಎಂದರು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಉತ್ತಮ ಬದಲಾವಣೆಗಳನ್ನು ತರುವ ಸಮಯ ಬಂದಿದೆ ಎಂದು ಅವರು ಹೇಳಿದರು.ಅಚ್ಛೇ ದಿನ್ ಬಂದಾಗ ಸಂತೋಷವನ್ನು ಅನುಭವಿಸುವವರು ಅದರಲ್ಲಿ ಮಾಡಿದ ಶ್ರಮವನ್ನು ನೋಡಬೇಕಾಗಿಲ್ಲ ಎಂದು ಭಾಗವತ್ ಟೀಕಿಸಿದ್ದಾರೆ. +ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಸಾಕಷ್ಟು ಶ್ರಮವಿದೆ. ನಿಸ್ವಾರ್ಥ ಜನರು ಫಲಿತಾಂಶಗಳ ಬಗ್ಗೆ ಯೋಚಿಸದೆ ಶ್ರಮಿಸುತ್ತಾರೆ. ಅವರು ತಮ್ಮ ಜೀವಿತಾವಧಿಯಲ್ಲಿ ಬರದಿದ್ದರೂ ಫಲಿತಾಂಶಗಳನ್ನು ಬಯಸುತ್ತಾರೆ ಎಂದು ಭಾಗವತ್ ತಿಳಿಸಿದರು. +ಕೆಲವರು ದೇಶಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡಿದ್ದಾರೆ. ಹಾಗಾಗಿ ನಾವು ಇಂದು ವಿಶ್ವದಲ್ಲಿ ಉದಯೋನ್ಮುಖ ದೇಶವಾಗಿ ನಿಲ್ಲಬಹುದು. ಕೆಲವರು (ಇಂದಿನ ಭಾರತದಲ್ಲಿ) ಅವರನ್ನು (ನಿಸ್ವಾರ್ಥದಿಂದ ದೇಶಕ್ಕಾಗಿ ದುಡಿದವರನ್ನು) ನೋಡಿದ್ದಾರೆ, ಕೆಲವರು ನೋಡಿಲ್ಲ. ದೇಶದಲ್ಲಿ ಶೇ 57ರಷ್ಟು ಜನರು ಹೊಸ ಪೀಳಿಗೆಗೆ ಸೇರಿದವರು. ಅವರಿಗೆ ತುರ್ತು ಪರಿಸ್ಥಿತಿಯ ಬಗ್ಗೆ ತಿಳಿದಿಲ್ಲ, ಅವರಿಗೆ ವಿಭಜನೆ ಮತ್ತು ಸ್ವಾತಂತ್ರ್ಯ ಹೋರಾಟದ ಬಗ್ಗೆಯೂ ತಿಳಿದಿಲ್ಲ ಎಂದು ಭಾಗವತ್ ಹೇಳಿದರು. \ No newline at end of file diff --git a/eesanje/url_47_125_2.txt b/eesanje/url_47_125_2.txt new file mode 100644 index 0000000000000000000000000000000000000000..cde51eee47ab2792669af7394b813fdef8883803 --- /dev/null +++ b/eesanje/url_47_125_2.txt @@ -0,0 +1,6 @@ +ತಮಿಳುನಾಡು : ಮನೆಯಲ್ಲಿಟ್ಟಿದ್ದ ಒಂದು ಕೋಟಿ ಹಣ ಸೀಜ್ +ತಿರುಚಿರಾಪಳ್ಳಿ,ಏ.13-ತಮಿಳುನಾಡಿನಲ್ಲಿ ಲೋಕಸಭೆ ಮತದಾನಕ್ಕೂ ಮುನ್ನ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಡರಾತ್ರಿ ತಿರುಚಿರಾಪಳ್ಳಿಯ ಎತ್ತರೈ ಗ್ರಾಮದ ಮನೆಯೊಂದರಿಂದ ರೂ.1 ಕೋಟಿ ಹಣವನ್ನು ವಶಪಡಿಸಿಕೊಂಡಿದ್ದಾರೆ. +ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಿರುಚಿರಾಪಳ್ಳಿಯ ಎತ್ತರೈ ಗ್ರಾಮದ ಮನೆಗೆ ನುಗ್ಗಿ ಪರಿಶೀಲನೆ ನಡೆಸಿದ್ದು, ಬ್ಯಾಗ್‍ನಲ್ಲಿ ತುಂಬಿದ್ದ ರೂ.1 ಕೋಟಿ ಮೌಲ್ಯದ ನೋಟುಗಳು ಪತ್ತೆಯಾಗಿವೆ. ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರದೀಪ್‍ಕುಮಾರ್ ತಿಳಿಸಿದ್ದಾರೆ. +ತಿರುಚ್ಚಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಬಂದಿದ್ದು, ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಕುಮಾರ್ ಹೇಳಿದರು. ಮನೆಯೊಂದರಲ್ಲಿ ಕರೆನ್ಸಿ ನೋಟುಗಳನ್ನು ಇಟ್ಟಿರುವ ಬಗ್ಗೆ ಮಾಹಿತಿ ಪಡೆದ ಚುನಾವಣಾ ಫ್ಲೈ ಸ್ಕ್ವಾಡ್ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಒಂದು ಕೋಟಿ ರೂ. ವಶಪಡಿಸಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. +ಇಷ್ಟೊಂದು ದೊಡ್ಡ ಮೊತ್ತದ ನಗದನ್ನು ಮನೆಯಲ್ಲಿ ಇಟ್ಟಿರುವವರು ಯಾರು ಮತ್ತು ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ಅದನ್ನು ಬಳಸಿಕೊಳ್ಳಲು ಉದ್ದೇಶಿಸಲಾಗಿದೆಯೇ ಎಂಬ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. +ತಮಿಳುನಾಡಿನ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಸಾರ್ವತ್ರಿಕ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ.ಜೂನ್ 4 ರಂದು ಮತ ಎಣಿಕೆ ನಿಗದಿಯಾಗಿದೆ. \ No newline at end of file diff --git a/eesanje/url_47_125_3.txt b/eesanje/url_47_125_3.txt new file mode 100644 index 0000000000000000000000000000000000000000..83565a76503cfa567bbb5efcba51ab133d1d052f --- /dev/null +++ b/eesanje/url_47_125_3.txt @@ -0,0 +1,6 @@ +ದೇಶದ ಜನ ಬಯಸುವವರೆಗೆ ಇರಲಿದೆ ಮೋದಿ ಸರ್ಕಾರ : ರಾಜನಾಥ್ ಸಿಂಗ್ +ನವದೆಹಲಿ,ಏ.12-ದೇಶವಾಸಿಗಳು ಬಯಸುವವರೆಗೆ ಮೋದಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಹ್ಯಾಟ್ರಿಕ್ ಸಾಧಿಸಲು ಪ್ರಯತ್ನಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಮತ್ತು ನಾಲ್ಕನೇ ಅವಧಿಯಲ್ಲೂ ಸರ್ಕಾರವನ್ನು ಮುನ್ನಡೆಸುತ್ತಾರೆ ಮತ್ತು ಅಲ್ಲಿಯವರೆಗೆ ಸೇವೆ ಸಲ್ಲಿಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು. +ಅಂತರರಾಷ್ಟ್ರೀಯ ಸಮುದಾಯದಲ್ಲಿ ಭಾರತದ ಘನತೆಯನ್ನು ಯಾರು ಹೆಚ್ಚಿಸುತ್ತಿದ್ದಾರೆ ಎಂಬುದನ್ನು ಜನರು ನೋಡುತ್ತಿದ್ದಾರೆ ಮತ್ತು ಅದನ್ನು ಮತ್ತಷ್ಟು ಹೆಚ್ಚಿಸುತ್ತಾರೆ ಎಂದು ಹೇಳಿದರು.ಸ್ವಾಭಾವಿಕವಾಗಿ ಜನ ಮೋದಿಜಿಯತ್ತ ನೋಡುತ್ತಾರೆ, ಇದು ದೊಡ್ಡ ಆಕರ್ಷಣೆಯಾಗಿದೆ, ಜನರು ನಮ್ಮೊಂದಿಗೆ ಇದ್ದಾರೆ … ಅವರು ಎಲ್ಲಿಗೆ ಹೋಗುತ್ತಿದ್ದಾರೆ … ಅವರು ಇರುತ್ತಾರೆ, ಅವರು ಇರುತ್ತಾರೆ, ಇದು ಮೂರನೇ ಅವಧಿಗೆ ಇರುತ್ತಾರೆ, ಅವರು ನಾಲ್ಕನೇ ಅವಧಿಗೂ ಇರುತ್ತಾರೆ. … ಅವರು ಸಮರ್ಥರಾಗುವವರೆಗೆ ರಾಷ್ಟ್ರವು ಅವರನ್ನು ಬಯಸುವವರೆಗೆ (ಕಚೇರಿಯಲ್ಲಿ) ಇರುತ್ತಾರೆ ಎಂದು ಅವರು ಹೇಳಿದರು. +ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಪಕ್ಷವು ವಿಶ್ವಾಸ ವ್ಯಕ್ತಪಡಿಸಿದೆ, ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಅವಧಿಯನ್ನು ಪೂರೈಸಲು ಅನುವು ಮಾಡಿಕೊಡುತ್ತದೆ. ಸ್ವತಃ ಬಿಜೆಪಿ 370 ಸ್ಥಾನಗಳ ಗುರಿಯನ್ನು ಹೊಂದಿದೆ ಎಂದಿದ್ದಾರೆ. +ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಸ್ವೀಪ್ ಮಾಡಲಿದೆ ಮತ್ತು ಕೇರಳ ಮತ್ತು ತಮಿಳುನಾಡಿನಲ್ಲಿ ಉತ್ತಮ ಪ್ರದರ್ಶನ ನೀಡಲಿದೆ ಎಂದು ರಾಜನಾಥ್ ಸಿಂಗ್ ಪ್ರತಿಪಾದಿಸಿದರು.ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಸರ್ಕಾರ ರಚನೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. +ನಮ್ಮ ಕುಟುಂಬಕ್ಕೆ ಯಾರಾದರೂ ಬರಲು ಬಯಸಿದರೆ ನಾವೇಕೆ ವಿರೋಧಿಸುತ್ತೇವೆ?…ನಮ್ಮ ಸಂದೇಶವು ದುರ್ಬಲಗೊಳ್ಳುತ್ತಿಲ್ಲ. ನಾವು ಸಿದ್ಧಾಂತ, ಕೆಲವು ಕಾರ್ಯಕ್ರಮಗಳನ್ನು ಆಧರಿಸಿ ನಿರ್ದಿಷ್ಟ ಗುರಿಯೊಂದಿಗೆ ಕೆಲಸ ಮಾಡುತ್ತೇವೆ. ನಾವು ವಿಕಸಿತ್ ಭಾರತವನ್ನು ರಚಿಸಲು ಬಯಸುತ್ತೇವೆ ನಮ್ಮಲಿಗೆ ಬರಲು ಇಚ್ಛಿಸುವವರಿಗೆ ಸ್ವಾಗತ ಎಂದರು. \ No newline at end of file diff --git a/eesanje/url_47_125_4.txt b/eesanje/url_47_125_4.txt new file mode 100644 index 0000000000000000000000000000000000000000..c3fed6357daee9f0e251d8d440d23f95a521d82d --- /dev/null +++ b/eesanje/url_47_125_4.txt @@ -0,0 +1,7 @@ +ಭಾರತದಲ್ಲಿ 4ನೇ ಹಂತದ ಕ್ಯಾನ್ಸರ್‌ನಿಂದ ಗುಣಮುಖನಾದ ಇರಾಕ್ ಪ್ರಜೆ +ನವದೆಹಲಿ,ಏ.12-ನಾಲ್ಕನೇ ಹಂತದ ಗುದನಾಳದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇರಾಕ್ ನ 47 ವರ್ಷದ ವ್ಯಕ್ತಿಯೊಬ್ಬರಿಗೆ ಭಾರತದಲ್ಲಿ ವೈದ್ಯರು ನಡೆಸಿದ ಸಂಕೀರ್ಣ ಶಸ್ತ್ರಚಿಕಿತ್ಸೆಯ ನಂತರ ಹೊಸ ಜೀವನ ಸಿಕ್ಕಿದೆ. ಈ ವ್ಯಕ್ತಿಗೆ ಆರಂಭದಲ್ಲಿ ಪೈಲ್ಸ್ ಇರುವುದು ಪತ್ತೆಯಾಯಿತು ಮತ್ತು ಅವರ ದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದಾಗ್ಯೂ, ಅವರು ಈ ಹಿಂದೆ ತಪ್ಪಾಗಿ ರೋಗನಿರ್ಣಯ ಮಾಡಿದ ಗುದನಾಳದ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ ಎಂದು ನಂತರ ಕಂಡುಹಿಡಿಯಲಾಯಿತು. ಸ್ಥೂಲಕಾಯದ ರೋಗಿಯನ್ನು ದ್ವಾರಕಾದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವ ಮೊದಲು ಅನೇಕ ಕೀಮೋಥೆರಪಿ ಮತ್ತು ವಿಕಿರಣ ಸೆಷನ್ಗಳನ್ನು ಮಾಡಲಾಯಿತು. +ರೋಗಿಗೆ ಈ ಹಿಂದೆ ತಪ್ಪಾಗಿ ರೋಗನಿರ್ಣಯ ಮಾಡಲಾಗಿದ್ದರಿಂದ ಇದು ಸವಾಲಿನ ಪ್ರಕರಣವಾಗಿತ್ತು ಮತ್ತು ಅವರು 122 ಕೆಜಿ ತೂಕ ಹೊಂದಿದ್ದು ಚಿಕಿತ್ಸೆಗೆ ಸಂಕೀರ್ಣತೆಯನ್ನು ಸೇರಿಸಿತು ಎಂದು ಮಣಿಪಾಲ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರ ಡಾ. ಸಂಜೀವ್ ಕುಮಾರ್ ತಿಳಿಸಿದ್ದಾರೆ. +ಮೌಲ್ಯಮಾಪನದ ನಂತರ, ವೈದ್ಯರು ಗುದನಾಳದ ಕ್ಯಾನ್ಸರ್ (ಹಂತ ನಾಲ್ಕು) ಜೊತೆಗೆ ಪೆರಿಟೋನಿಯಲ್ ಕಾಯಿಲೆಯನ್ನು ಸಹ ಕಂಡುಕೊಂಡರು.ಪೆರಿಟೋನಿಯಲ್ ಕಾಯಿಲೆಯು ಒಂದು ಕ್ಯಾನ್ಸರ್ ಆಗಿದ್ದು ಅದು ಹೊಟ್ಟೆಯೊಳಗಿನ ಅಂಗದಲ್ಲಿ ಪ್ರಾರಂಭವಾಗುತ್ತದೆ ಮತ್ತು ನಂತರ ಕಿಬ್ಬೊಟ್ಟೆಯ ಗೋಡೆಯ ಒಳಪದರ ಮತ್ತು ಮೇಲ್ಮೈಗೆ ಹರಡುತ್ತದೆ. ಸಾಮಾನ್ಯವಾಗಿ, ಹಂತ ನಾಲ್ಕರ ಕ್ಯಾನ್ಸರ್ ಗುಣಪಡಿಸಲಾಗದು. ಆದರೆ ಪೆರಿಟೋನಿಯಲ್ ಕಾಯಿಲೆಗೆ ಚಿಕಿತ್ಸೆ ನೀಡಬಹುದು. +ಪ್ರಕರಣದ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ಮಣಿಪಾಲದ ವೈದ್ಯರು ಸೈಟೋರೆಡಕ್ಟಿವ್ ಸರ್ಜರಿ ಮತ್ತು ಹೈಪರ್ಥರ್ಮಿಕ್ ಇಂಟ್ರಾಪೆರಿಟೋನಿಯಲ್ ಕಿಮೊಥೆರಪಿ ಸರ್ಜರಿಯಂತಹ ಅತ್ಯಂತ ಸಂಕೀರ್ಣ ಮತ್ತು ಸವಾಲಿನ ಕಾರ್ಯವಿಧಾನ ಗಳನ್ನು ಕೈಗೊಳ್ಳಲು ನಿರ್ಧರಿಸಿದರು. +ಈ ಕಾರ್ಯವಿಧಾನಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ಕ್ಯಾನ್ಸರ್ ಗಡ್ಡೆ ಯನ್ನು ತೆಗೆದುಹಾಕುವುದು ಮತ್ತು ಹೊಟ್ಟೆಗೆ ಬಿಸಿಯಾದ ಕಿಮೊಥೆರಪಿಯ ಆಡಳಿತದೊಂದಿಗೆ ಸಂಯೋಜಿಸಲಾಗಿದೆ, ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ಹೆಚ್ಚಿಸ ಲಾಯಿತು ಡಾ. ಸಂಜೀವ್ ವಿವರಿಸಿದರು. +ಪ್ರತಿಕೂಲವಾದ ಆರಂಭಿಕ ಮುನ್ನರಿವಿನ ಹೊರತಾಗಿಯೂ, ನಮ್ಮ ತಂಡದ ಮಾರ್ಗದರ್ಶನದಲ್ಲಿ ರೋಗಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು ಮತ್ತು ಉತ್ತಮ ಗುಣಮಟ್ಟದ ಜೀವನದೊಂದಿಗೆ ಮನೆಗೆ ಮರಳಿದರು. ಅವರ ಚಿಕಿತ್ಸೆಯ ಯಶಸ್ಸು ಕ್ಯಾನ್ಸರ್ನಂತಹ ಸಂಕೀರ್ಣ ಸಮಸ್ಯೆಗಳಿಗೆ ಸುಧಾರಿತ ವೈದ್ಯಕೀಯ ಪರಿಹಾರಗಳ ಪ್ರಾಮುಖ್ಯತೆ ಯನ್ನು ಎತ್ತಿ ತೋರಿಸುತ್ತದೆ ಎಂದು ವೈದ್ಯರು ಹೇಳಿದರು. \ No newline at end of file diff --git a/eesanje/url_47_125_5.txt b/eesanje/url_47_125_5.txt new file mode 100644 index 0000000000000000000000000000000000000000..c734f6717a523fcade37815ba59e5b812ea4df84 --- /dev/null +++ b/eesanje/url_47_125_5.txt @@ -0,0 +1,5 @@ +ಟ್ಯಾಂಕ್ ವಿಧ್ವಂಸಕ ಕ್ಷಿಪಣಿಗಳ ಯಶಸ್ವಿ ಉಡಾವಣೆ +ಗುವಾಹಟಿ,ಏ.12-ಭಾರತೀಯ ಸೇನೆಯ ತ್ರಿಶಕ್ತಿ ಕಾಪ್ರ್ಸ್ನವರು ಸಿಕ್ಕಿಂನ 17,000 ಅಡಿ ಎತ್ತರದ ಪ್ರದೇಶದಲ್ಲಿ ಟ್ಯಾಂಕ್ ವಿರೋಧಿ ಮಾರ್ಗದರ್ಶಿ ಕ್ಷಿಪಣಿಗಳ (ಎಟಿಜಿಎಂ) ಉಡಾವಣೆ ಒಳಗೊಂಡ ತರಬೇತಿ ವ್ಯಾಯಾಮವನ್ನು ನಡೆಸಿತು ಎಂದು ರಕ್ಷಣಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. +ಸಂಪೂರ್ಣ ಪೂರ್ವ ಕಮಾಂಡ್ನ ಯಾಂತ್ರೀಕೃತ ಮತ್ತು ಪದಾತಿ ದಳಗಳಿಂದ ಕ್ಷಿಪಣಿ-ಗುಂಡು ಹಾರಿಸುವ ಬೇರ್ಪಡುವಿಕೆಗಳು ತರಬೇತಿ ವ್ಯಾಯಾಮದಲ್ಲಿ ಭಾಗವಹಿಸಿದ್ದವು ಎಂದು ಮಾಹಿತಿ ನೀಡಲಾಗಿದೆ. ಈ ವ್ಯಾಯಾಮವು ಸಮಗ್ರ ನಿರಂತರತೆಯ ತರಬೇತಿ ಮತ್ತು ವಿವಿಧ ವೇದಿಕೆಗಳಿಂದ ಚಲಿಸುವ ಮತ್ತು ಯುದ್ಧಭೂಮಿಯ ಪರಿಸ್ಥಿತಿಗಳನ್ನು ಚಿತ್ರಿಸುವ ಸ್ಥಿರ ಗುರಿಗಳ ಲೈವ್ ಫೈರಿಂಗ್ ಅನ್ನು ಒಳಗೊಂಡಿತ್ತು ಎನ್ನಲಾಗಿದೆ. +ಎಟಿಜಿಎಂ ಬೇರ್ಪಡುವಿಕೆಗಳು ಸಾಟಿಯಿಲ್ಲದ ಮಾರಣಾಂತಿಕತೆಯೊಂದಿಗೆ ಶಸಸಜ್ಜಿತ ಬೆದರಿಕೆಗಳನ್ನು ತಟಸ್ಥಗೊಳಿಸುವ ಸಾಮಥ್ರ್ಯವನ್ನು ಪ್ರದರ್ಶಿಸಿದವು, ವಿಶ್ವಾಸಘಾತುಕ ಪರ್ವತಗಳ ಮೇಲೆ ಮಿಷನ್ ಯಶಸ್ಸನ್ನು ಖಾತ್ರಿಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ. +ಎತ್ತರದ ಪರಿಸರದಲ್ಲಿ ಎಟಜಿಎಂ ವ್ಯವಸ್ಥೆಯ ಕಾರ್ಯಕ್ಷಮತೆಯು ಏಕ್ ಮಿಸೈಲ್ ಏಕ್ ಟ್ಯಾಂಕ್ನ ಗುರಿಯನ್ನು ಪುನರುಚ್ಚರಿಸುತ್ತದೆ ಮತ್ತು ಸೂಪರ್ ಎತ್ತರದ ಭೂಪ್ರದೇಶದಲ್ಲಿ ಎಟಿಜಿಎಂ ವ್ಯವಸ್ಥೆಯ ನಿಖರತೆ ಮತ್ತು ಪರಿಣಾಮಕಾರಿತ್ವವನ್ನು ಪ್ರದರ್ಶಿಸುತ್ತದೆ ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_47_125_6.txt b/eesanje/url_47_125_6.txt new file mode 100644 index 0000000000000000000000000000000000000000..a054ecce3572fb4eeee58deb9b8bc2ecf1616387 --- /dev/null +++ b/eesanje/url_47_125_6.txt @@ -0,0 +1,7 @@ +ಮತ್ತೊಬ್ಬ ಐಐಟಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು +ಗುವಾಹಟಿ,ಏ.12-ಗುವಾಹಟಿ ಐಐಟಿಯಲ್ಲಿ ಬಿಟೆಕ್ ಮೊದಲ ವರ್ಷ ವ್ಯಾಸಂಗ ಮಾಡುತ್ತಿರುವ 20 ವರ್ಷದ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ತನ್ನ ರೂಮ್‍ಮೇಟ್ ಇಲ್ಲದಿದ್ದಾಗ ಭದ್ರತಾ ಸಿಬ್ಬಂದಿಗೆ ವಿದ್ಯಾರ್ಥಿಯ ಶವ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅವರ ಕೊಠಡಿಯಿಂದ ಒಂದು ಟಿಪ್ಪಣಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ ಮತ್ತು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಬಿಹಾರ ಮೂಲದ ವಿದ್ಯಾರ್ಥಿಯ ಕುಟುಂಬದವರು ಸಂಸ್ಥೆಯ ನಿರ್ಲಕ್ಷ್ಯದಿಂದ ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಒತ್ತಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ನಾವು ಎಲ್ಲಾ ಸಂಭಾವ್ಯ ಕೋನಗಳನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಶವಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.ಐಐಟಿ ಗುವಾಹಟಿ ವಿದ್ಯಾರ್ಥಿಯ ಸಾವಿಗೆ ಶೋಕ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. ಏಪ್ರಿಲ್ 10 ರಂದು ಐಐಟಿ ಗುವಾಹಟಿ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಯೊಬ್ಬನ ಸಾವಿನ ದುರದೃಷ್ಟಕರ ಸುದ್ದಿಯನ್ನು ಹಂಚಿಕೊಳ್ಳಲು ತೀವ್ರ ವಿಷಾದವಿದೆ. +ಕುಟುಂಬಕ್ಕೆ ನಮ್ಮ ಹೃತ್ಪೂರ್ವಕ ಸಂತಾಪಗಳು ಹೊರಡುತ್ತವೆ ಮತ್ತು ಈ ಕಷ್ಟದ ಸಮಯದಲ್ಲಿ ನಾವು ಅವರಿಗೆ ಅಗತ್ಯ ಬೆಂಬಲವನ್ನು ನೀಡುತ್ತಿದ್ದೇವೆ. ಈ ದುರದೃಷ್ಟಕರ ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮ ಆಲೋಚನೆಗಳು ದುಃಖಿತ ಕುಟುಂಬದೊಂದಿಗೆ ಇವೆ. +ವಿದ್ಯಾರ್ಥಿಯ ಗೌಪ್ಯತೆ ಮತ್ತು ಈ ಘಟನೆಯ ಸೂಕ್ಷ್ಮತೆಯನ್ನು ಪರಿಗಣನೆಯಲ್ಲಿಟ್ಟುಕೊಂಡು, ಈ ಘಟನೆಯ ಬಗ್ಗೆ ವರದಿ ಮಾಡುವಾಗ ಮಾಧ್ಯಮಗಳು ವಿವೇಚನೆಯನ್ನು ಕಾಪಾಡಿಕೊಳ್ಳಲು ವಿನಂತಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. +ಕಳೆದ ಜನವರಿಯಲ್ಲಿ ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ಹೊಸ ವರ್ಷದ ಪಾರ್ಟಿಯ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಸಾಗಿಸಲ್ಪಟ್ಟಳು, ಅಲ್ಲಿ ಅವಳು ಸತ್ತಿದ್ದಾಳೆ ಎಂದು ವೈದ್ಯರು ಘೋಷಿಸಿದ್ದರು. ಇತ್ತೀಚೆಗೆ ಐಐಟಿ ಗುವಾಹಟಿಯ ಮತ್ತೊಬ್ಬ ವಿದ್ಯಾರ್ಥಿಯನ್ನು ಐಸಿಸ್‍ಗೆ ನಿಷ್ಠೆ ತೋರಿದ ಆರೋಪದ ಮೇಲೆ ಬಂ„ಸಲಾಗಿತ್ತು. \ No newline at end of file diff --git a/eesanje/url_47_125_7.txt b/eesanje/url_47_125_7.txt new file mode 100644 index 0000000000000000000000000000000000000000..5b2640819aa6cc213b16a06f5033267d18c6d3d8 --- /dev/null +++ b/eesanje/url_47_125_7.txt @@ -0,0 +1,6 @@ +ತಮಿಳುನಾಡಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮಶ್ರೀ ಪುರಸ್ಕೃತ +ತಿರುಚಿರಾಪಳ್ಳಿ, ಏ.12-ತಮಿಳುನಾಡಿನ ತಿರುಚಿರಾಪಳ್ಳಿ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ವ್ಯಕ್ತಿಯೊಬ್ಬರು ಸ್ಪರ್ಧಿಸಿದ್ದಾರೆ. ತಿರುಚಿರಾಪಳ್ಳಿ ಮೂಲದ ಎಸ್ ದಾಮೋದರನ್ (62) ಅವರು ಈ ಬಾರಿಯ ಚುನಾವಣೆಯಲ್ಲಿ ಗ್ಯಾಸ್ ಸ್ಟೌವ್ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದು, ನಗರದ ಗಾಂಧಿ ಮಾರುಕಟ್ಟೆಯಲ್ಲಿ ಜನರು ಮತ್ತು ತರಕಾರಿ ಮಾರಾಟಗಾರರಿಂದ ಮತ ಯಾಚಿಸಿದರು. +ನಾನು ತಿರುಚ್ಚಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ. ನಾನು ಮಣ್ಣಿನ ಮಗ. ನಾನು ತಿರುಚ್ಚಿ ನಗರಕ್ಕೆ ಸೇರಿದವನು. ನಾನು ನೈರ್ಮಲ್ಯ ಕೇಂದ್ರದಲ್ಲಿ ಸಹಾಯಕ ಸೇವಾ ಸ್ವಯಂಸೇವಕನಾಗಿ 40 ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದೇನೆ. ನಾನು ನನ್ನ ವೃತ್ತಿಜೀವನವನ್ನು ನನ್ನ 21ವಯಸ್ಸಿನಲ್ಲಿ ಪ್ರಾರಂಭಿಸಿದೆ. +ಈಗ ನನಗೆ 62 ವರ್ಷ. 60 ನೇ ವಯಸ್ಸಿನಲ್ಲಿ ನೈರ್ಮಲ್ಯ ಕ್ಷೇತ್ರದಲ್ಲಿ ನನ್ನ ಕೆಲಸಕ್ಕಾಗಿ ನಾನು ಅಂದಿನ ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದೇನೆ ಎಂದು ದಾಮೋದರನ್ ತಮ್ಮ ವೃತ್ತಿಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. +ದಾಮೋದರನ್ ಅವರು ತಮ್ಮ 21 ನೇ ವಯಸ್ಸಿನಲ್ಲಿ ತಮ್ಮ ಸಮಾಜ ಸೇವೆಯನ್ನು ಪ್ರಾರಂಭಿಸಿದರು ಮತ್ತು ತಮ್ಮ ಜೀವಿತಾವಧಿಯಲ್ಲಿ ಒಂಬತ್ತು ಪ್ರಧಾನ ಮಂತ್ರಿಗಳ ಅಧಿಕಾರಾವಧಿಯಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ. +ನಾನು 21 ನೇ ವಯಸ್ಸಿನಲ್ಲಿ ರಾಜೀವ್ ಗಾಂಧಿ ಭಾರತದ ಪ್ರಧಾನಿಯಾಗಿದ್ದಾಗ ನನ್ನ ಸಮಾಜ ಸೇವೆಯನ್ನು ಪ್ರಾರಂಭಿಸಿದೆ, ನನ್ನ ಜೀವನದಲ್ಲಿ ನಾನು ಒಂಬತ್ತು ಪ್ರಧಾನಿಗಳನ್ನು ಕಂಡಿದ್ದೇನೆ. ನಾನು ಎಲ್ಲಾ ಕೇಂದ್ರ ಪ್ರಾಯೋಜಿತ ಗ್ರಾಮೀಣ ನೈರ್ಮಲ್ಯ ಕಾರ್ಯಕ್ರಮಗಳ ಅಡಿಯಲ್ಲಿ ಕೆಲಸ ಮಾಡಿದ್ದೇನೆ ಮತ್ತು ಪ್ರತಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಿದ್ದೇನೆ. ಈ ಬಾರಿ ನನ್ನನ್ನು ಗೆಲ್ಲಿಸುವ ಮೂಲಕ ಮತ್ತಷ್ಟು ಸಮಾಜ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_47_125_8.txt b/eesanje/url_47_125_8.txt new file mode 100644 index 0000000000000000000000000000000000000000..6d6420bbccec2c9a3e07044e53549aac7cb9ee25 --- /dev/null +++ b/eesanje/url_47_125_8.txt @@ -0,0 +1,7 @@ +ಲೋಕಸಭೆ ಚುನಾವಣೆ: ಇಂದಿನಿಂದ 3ನೇ ಹಂತದ ನಾಮಪತ್ರ ಸಲ್ಲಿಕೆ ಆರಂಭ +ನವದೆಹಲಿ,ಏ.12-ಮುಂದಿನ ತಿಂಗಳು ಮೇ 7 ರಂದು ನಡೆಯಲಿರುವ 12 ರಾಜ್ಯಗಳ 94 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಮೂರನೇ ಹಂತದ ನಾಮನಿರ್ದೇಶನ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. +ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ ನಂತರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಏಪ್ರಿಲ್ 19 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. +ಪ್ರತ್ಯೇಕವಾಗಿ, ಮಧ್ಯಪ್ರದೇಶದ ಬೇತುಲ್ ಕ್ಷೇತ್ರದಲ್ಲಿ ಮುಂದೂಡಲ್ಪಟ್ಟ ಚುನಾವಣೆಗೆ ಮತ್ತೊಂದು ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಬಿಎಸ್‍ಪಿ ಅಭ್ಯರ್ಥಿಯ ಸಾವಿನ ನಂತರ ಬೇತುಲ್ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. +ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿಯು ಮತದಾನದ ಮೊದಲು ಮರಣಹೊಂದಿದರೆ, ಪಕ್ಷಕ್ಕೆ ಹೊಸ ಅಭ್ಯರ್ಥಿಯನ್ನು ಗುರುತಿಸಲು ಮತ್ತು ಕಣಕ್ಕಿಳಿಸಲು ಅವಕಾಶ ಕಲ್ಪಿಸಲು ಚುನಾವಣೆಯನ್ನು ಮುಂದೂಡಲಾಗುತ್ತದೆ. +ಮೂರನೇ ಹಂತದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಸ್ಸಾಂ, ಬಿಹಾರ, ಛತ್ತೀಸ್‍ಗಢ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು, ಗೋವಾ, ಗುಜರಾತ್, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಚುನಾವಣೆ ನಡೆಯಲಿದೆ. +18ನೇ ಲೋಕಸಭೆಯನ್ನು ಆಯ್ಕೆ ಮಾಡಲು ಏಳು ಹಂತದ ಮತದಾನಕ್ಕೆ ಏಪ್ರಿಲ್ 19 ರಂದು ಪ್ರಾರಂಭವಾಗಿ ಜೂನ್ 1 ರಂದು ಮುಕ್ತಾಯವಾಗುತ್ತದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_125_9.txt b/eesanje/url_47_125_9.txt new file mode 100644 index 0000000000000000000000000000000000000000..d6a9f400eb92f67e0f62129e8ff5e00995857c7c --- /dev/null +++ b/eesanje/url_47_125_9.txt @@ -0,0 +1,9 @@ +ಈ ಬಾರಿಯೂ ‘ಎನ್‍ಡಿಎ ಸರ್ಕಾರ್’ ಎಂಬುದು ಪ್ರತಿಪಕ್ಷಗಳಿಗೂ ತಿಳಿದಿದೆ : ಮೋದಿ +ನವದೆಹಲಿ,ಏ. 12 (ಪಿಟಿಐ) :ದೇಶವನ್ನು ಬಲಪಡಿಸಲು ಬಿಜೆಪಿ ಸತತ ಎರಡು ಅವಧಿಗೆ ಲೋಕಸಭೆಯಲ್ಲಿ ತನ್ನ ಬಹುಮತ ಪಡೆದುಕೊಂಡಿದ್ದರೆ, ಕಾಂಗ್ರೆಸ್ ತನ್ನ ಕುಟುಂಬವನ್ನು ಬಲಪಡಿಸಲು ದಶಕಗಳ ಬಹುಮತವನ್ನು ಬಳಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಮಾತ್ರವಲ್ಲ, ವಿಪಕ್ಷಗಳಿಗೂ ತಿಳಿದಿದೆ ಈ ಬಾರಿಯೂ ನಮ್ಮ ಸರ್ಕಾರವೇ ಬರುವುದು ಎಂದಿದ್ದಾರೆ. +ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ತಮ್ಮ ನಾಯಕರನ್ನು ಗುರಿಯಾಗಿಸಲು ತಮ್ಮ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂಬ ವಿರೋಧ ಪಕ್ಷಗಳ ಟೀಕೆಗಳ ನಡುವೆ ಭ್ರಷ್ಟರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದ್ಧತೆಯನ್ನು ಮೋದಿ ಒತ್ತಿ ಹೇಳಿದರು. +ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿಯೂ ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದ ಅವರು, ತನಿಖಾ ಸಂಸ್ಥೆಗಳ ಕತ್ತಿಯ ಅಡಿಯಲ್ಲಿರುವ ಜನರಿಂದ ರಾಜಕೀಯ ಭ್ರಷ್ಟಾಚಾರವನ್ನು ಮಾತ್ರ ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂಬ ನಿರೂಪಣೆಯನ್ನು ಪ್ರಸಾರ ಮಾಡಲಾಗುತ್ತಿದೆ. +ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕೇವಲ ಶೇ. 3ರಷ್ಟು ಮಂದಿ ಮಾತ್ರ ರಾಜಕೀಯ ಸಂಬಂಧ ಹೊಂದಿದ್ದಾರೆ. ಉಳಿದ ಶೇ.97ರಷ್ಟು ಪ್ರಕರಣಗಳು ಅಧಿಕಾರಿಗಳು ಮತ್ತು ಕ್ರಿಮಿನಲ್‍ಗಳಿಗೆ ಸಂಬಂಧಿಸಿದ್ದವು ಎಂದು ಅವರು ತಿಳಿಸಿದ್ದಾರೆ. +2014 ರಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ನಿರ್ಮೂಲನೆಯು ಅದರ ಆದ್ಯತೆಯಾಗಿದೆ ಎಂದು ಅವರು ಹೇಳಿದರು, ಗ್ರೂಪ್ ಸಿ ಮತ್ತು ಗ್ರೂಪ್ ಡಿ ಉದ್ಯೋಗಗಳಿಗೆ ಸಂದರ್ಶನಗಳನ್ನು ಕೊನೆಗೊಳಿಸುವುದು, ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆ, ಸರ್ಕಾರಿ ಸೇವೆಗಳನ್ನು ಸಾಧ್ಯವಾದಷ್ಟು ಮುಖರಹಿತವಾಗಿಸುವ ಪ್ರಯತ್ನಗಳು ಮತ್ತು ಪ್ರಾರಂಭದಂತಹ ಹಂತಗಳನ್ನು ಉಲ್ಲೇ ಖಿಸಿದರು. ಬಡವರ ಹಣ ಮಧ್ಯವರ್ತಿಗಳ ಜೇಬಿಗೆ ಹೋಗುವುದನ್ನು ತಡೆಯಲು ಡಿಬಿಟಿ (ನೇರ ಲಾಭ ವರ್ಗಾವಣೆ) ವ್ಯವಸ್ಥೆ ಮಾಡಲಾಗಿದೆ. +ಪರಿಣಾಮವಾಗಿ, ನಾವು 10 ಕೋಟಿಗೂ ಹೆಚ್ಚು (100 ಮಿಲಿಯನ) ನಕಲಿ ಫಲಾನುಭವಿಗಳ ಹೆಸರನ್ನು ತೆಗೆದುಹಾಕಿದ್ದೇವೆ, ಈ ಮೂಲಕ ಸರ್ಕಾರವು 22.75 ಲಕ್ಷ ಕೋಟಿಯನ್ನು ತಪ್ಪು ಕೈಗೆ ಹೋಗದಂತೆ ಉಳಿಸಿದೆ. ನಾನು ಕಟ್ಟುನಿಟ್ಟಾಗಿ ತೆಗೆದುಕೊಳ್ಳಲು ಬದ್ಧನಾಗಿದ್ದೇವೆ ಎಂದರು. 2014 ರ ಮೊದಲು, ಇಡಿ ಕೇವಲ 25,000 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು, ಆದರೆ ಕಳೆದ 10 ವರ್ಷಗಳಲ್ಲಿ ಅನುಗುಣವಾದ ವಶಪಡಿಸಿಕೊಳ್ಳುವಿಕೆ ಒಂದು ಲಕ್ಷ ಕೋಟಿಗೆ ಏರಿದೆ ಎಂದು ಅವರು ಹೇಳಿದರು. +ಈ ದೇಶದ ಜನರ ಕಲ್ಯಾಣಕ್ಕಾಗಿ ಮೀಸಲಾದ ಹಣವನ್ನು ಕದಿಯುವ ಅಂತಹ ಜನರ ವಿರುದ್ಧ ಕ್ರಮ ಕೊನೆಗೊಳ್ಳುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ಭರವಸೆ ನೀಡಿದರು. +ಏಪ್ರಿಲ್ 19 ರಿಂದ ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಮತದಾರರಲ್ಲಿ ಹೆಚ್ಚಿನ ಉತ್ಸಾಹವಿಲ್ಲ ಮತ್ತು ಯಾವುದೇ ಅಲೆಯಿಲ್ಲ ಎಂದು ಹೇಳಲಾಗುತ್ತಿದೆ ಎಂಬ ಪ್ರಶ್ನೆಗೆ, ಮೋದಿ ಅವರು ತಮ್ಮ ಖಚಿತವಾದ ಸೋಲಿನಿಂದಾಗಿ ಚುನಾವಣೆಯಲ್ಲ ಆದರೆ ಪ್ರತಿಪಕ್ಷಗಳ ಪಾಳೆಯವು ನೀರಸವಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_126_1.txt b/eesanje/url_47_126_1.txt new file mode 100644 index 0000000000000000000000000000000000000000..b4349d6db68ce70915183d0efe9a27df17dfcb47 --- /dev/null +++ b/eesanje/url_47_126_1.txt @@ -0,0 +1,5 @@ +ಸೈಬರ್ ವಂಚಕರ ದಾಳಿ : 82.55 ಲಕ್ಷ ರೂ. ಕಳೆದುಕೊಂಡ ಶಾಲೆ +ಮುಂಬೈ, ಅ.12 (ಪಿಟಿಐ) –ಮ್ಯಾನ್ ಇನ್ ದಿ ಮಿಡಲ್ ಆನ್‍ಲೈನ್ ಮೂಲಕ ದಕ್ಷಿಣ ಮುಂಬೈ ಮೂಲದ ಪ್ರಮುಖ ಅಂತರರಾಷ್ಟ್ರೀಯ ಶಾಲೆ ಅಕ್ರಮ ಧಂಧೆಯಲ್ಲಿ 82.55 ಲಕ್ಷ ರೂ ಕಳೆದುಕೊಂಡಿದೆ. ಮ್ಯಾನ್ ಇನ್ ದ ಮಿಡಲ್ ಮೂಲಕ ಸಂದೇಶಗಳನ್ನು ರಹಸ್ಯವಾಗಿಡುವ ಮಾರ್ಗವಾಗಿದ್ದು ಇದಕ್ಕಾಗಿ ಶಾಲೆಯು ಕೇಂದ್ರ ನಿರ್ಮಿಸಲು ವಸ್ತುಗಳನ್ನು ಸಂಗ್ರಹಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದಾಗ ಕಳೆದ ಫೆಬ್ರವರಿ 23 ಮತ್ತು ಮಾರ್ಚ್ 16 ರ ನಡುವೆ ಆನ್‍ಲೈನ್ ವಂಚನೆ ನಡೆದಿದೆ. +ಶಾಲೆಯು ಯುಎಇ ಮೂಲದ ಸಂಸ್ಥೆಗೆ ಒಪ್ಪಂದವನ್ನು ನೀಡಿತು, ಅದು ಒಪ್ಪಂದದ ಭಾಗವಾಗಿ ತನ್ನ ಬ್ಯಾಂಕ್ ವಿವರಗಳನ್ನು ಕಳುಹಿಸಿತು ಎಂದು ಮುಂಬೈ ಪೊಲೀಸ್‍ನ ಸೈಬರ್ ಸೆಲ್‍ನ ಅಧಿಕಾರಿ ತಿಳಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬರು ಇದೇ ರೀತಿಯ ಐಡಿಯನ್ನು ರಚಿಸಿದ್ದಾರೆ ಮತ್ತು ಯುಎಸ್ ಮೂಲದ ಬ್ಯಾಂಕ್‍ನ ವಿವರಗಳನ್ನು ಒದಗಿಸಿದ್ದಾರೆ. +ಯುಎಇ ಮೂಲದ ಸಂಸ್ಥೆಯಿಂದ ಇಮೇಲ್ ಕಳುಹಿಸಲಾಗಿದೆ ಎಂದು ಭಾವಿಸಿ, ಶಾಲೆಯು 87.26 ಲಕ್ಷ ರೂ ಕಳಿಸಿತ್ತು ಸ್ವಲ್ಪ ಸಮಯದ ನಂತರ ಏನೋ ತಪ್ಪಾಗಿದೆ ಎಂದು ಅರಿತುಕೊಂಡು ಕೇಂದ್ರ ಪ್ರದೇಶದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದರು ಎಂದು ಅವರು ಅಧಿಕಾರಿಗಳು ಹೇಳಿದರು. +ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯಡಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಬ್ಯಾಂಕ್‍ನ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲಾಗಿದೆ. ಇಂತಹ ದಾಳಿಗಳನ್ನು ತಪ್ಪಿಸಲು ನಾಗರಿಕರು ಮತ್ತು ಘಟಕಗಳು ಕಾಲಕಾಲಕ್ಕೆ ತಮ್ಮ ವ್ಯವಸ್ಥೆಯನ್ನು ನವೀಕರಿಸಬೇಕು. ಅಂತಹ ವ್ಯವಹಾರಗಳನ್ನು ನಡೆಸುವ ಮೊದಲು ಇಮೇಲ್ ಐಡಿಗಳು ಇತ್ಯಾದಿಗಳನ್ನು ಪರಿಶೀಲಿಸಬೇಕು ಎಂದು ಅವರು ಹೇಳಿದರು. \ No newline at end of file diff --git a/eesanje/url_47_126_10.txt b/eesanje/url_47_126_10.txt new file mode 100644 index 0000000000000000000000000000000000000000..68c6aad7a9b6d8e1b259554d1e130834e76e7d2e --- /dev/null +++ b/eesanje/url_47_126_10.txt @@ -0,0 +1,7 @@ +ಭಾರತದ ಜಿಡಿಪಿ ಬೆಳವಣಿಗೆಯನ್ನು ಶೇ.7ಕ್ಕೆ ಹೆಚ್ಚಿಸಿದ ಎಡಿಬಿ +ನವದೆಹಲಿ,ಏ.11 (ಪಿಟಿಐ) :ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್ (ಎಡಿಬಿ) ಹಿಂದಿನ ಶೇ.6.7 ರಿಂದ ಶೇ.7 ಕ್ಕೆ ಏರಿಸಿದೆ. ಮತ್ತು ಗ್ರಾಹಕರ ಬೇಡಿಕೆಯಲ್ಲಿ ಕ್ರಮೇಣ ಸುಧಾರಣೆಯಿಂದಾಗಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಹೂಡಿಕೆಯ ಬೇಡಿಕೆಯಿಂದ ದೃಢವಾದ ಬೆಳವಣಿಗೆಯನ್ನು ನಡೆಸಲಾಗುವುದು ಎಂದು ಹೇಳಿದೆ. +2024-25ರ ಬೆಳವಣಿಗೆಯ ಅಂದಾಜಿನ ಪ್ರಕಾರ, 2022-23ರ ಆರ್ಥಿಕ ವರ್ಷದಲ್ಲಿ 7.6 ಪ್ರತಿಶತಕ್ಕಿಂತ ಕಡಿಮೆಯಿದೆ. ಬಲವಾದ ಹೂಡಿಕೆಯು 2022-23ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಗೆ ಕಾರಣವಾಯಿತು, ಏಕೆಂದರೆ ಬಳಕೆಯನ್ನು ಮ್ಯೂಟ್ ಮಾಡಲಾಗಿದೆ ಎಂದು ಎಡಿಬಿ ಹೇಳಿದೆ. +ಎಡಿಬಿ ಕಳೆದ ವರ್ಷ ಡಿಸೆಂಬರ್‍ನಲ್ಲಿ ಭಾರತೀಯ ಆರ್ಥಿಕತೆಯು 2024-25 ರ ಆರ್ಥಿಕ ವರ್ಷದಲ್ಲಿ ಶೇ.6.7 ರಷ್ಟು ವಿಸ್ತರಿಸಲಿದೆ ಎಂದು ಅಂದಾಜಿಸಿತ್ತು.ಆರ್ಥಿಕತೆಯು 2023 ರ ಆರ್ಥಿಕ ವರ್ಷದಲ್ಲಿ ಉತ್ಪಾದನೆ ಮತ್ತು ಸೇವೆಗಳಲ್ಲಿ ಬಲವಾದ ಆವೇಗದೊಂದಿಗೆ ದೃಢವಾಗಿ ಬೆಳೆಯಿತು. ಇದು ಮುನ್ಸೂಚನೆಯ ದಿಗಂತದಲ್ಲಿ ವೇಗವಾಗಿ ಬೆಳೆಯುವುದನ್ನು ಮುಂದುವರಿಸುತ್ತದೆ. +ಬೆಳವಣಿಗೆಯು ಪ್ರಾಥಮಿಕವಾಗಿ ದೃಢವಾದ ಹೂಡಿಕೆಯ ಬೇಡಿಕೆ ಮತ್ತು ಸುಧಾರಣೆ ಬಳಕೆ ಬೇಡಿಕೆಯಿಂದ ಪ್ರೇರೇಪಿಸಲ್ಪಡುತ್ತದೆ. ಹಣದುಬ್ಬರ ಕಡಿಮೆಯಾದಂತೆ ವಿತ್ತೀಯ ನೀತಿಯು ಬೆಳವಣಿಗೆಗೆ ಬೆಂಬಲವಾಗಿ ಉಳಿಯುತ್ತದೆ ಎಂದು ನಿರೀಕ್ಷಿಸಲಾಗಿದೆ, ಆದರೆ ಹಣಕಾಸಿನ ನೀತಿಯು ಬಲವರ್ಧನೆಗಾಗಿ ಗುರಿಯನ್ನು ಹೊಂದಿದೆ ಆದರೆ ಬಂಡವಾಳ ಹೂಡಿಕೆಗೆ ಬೆಂಬಲವನ್ನು ಉಳಿಸಿಕೊಂಡಿದೆ. +ಸಮತೋಲನದ ಮೇಲೆ,2024 ರಲ್ಲಿ ಬೆಳವಣಿಗೆಯು ಶೇಕಡಾ 7 ಕ್ಕೆ ನಿಧಾನವಾಗುತ್ತದೆ ಆದರೆ 2025 ರಲ್ಲಿ 7.2 ಶೇಕಡಾಕ್ಕೆ ಸುಧಾರಿಸುತ್ತದೆ ಎಂದು ಹೇಳಲಾಗಿದೆ. ಮಧ್ಯಮಾವಧಿಯಲ್ಲಿ ರಫ್ತುಗಳನ್ನು ಹೆಚ್ಚಿಸಲು, ಭಾರತವು ಜಾಗತಿಕ ಮೌಲ್ಯ ಸರಪಳಿಗಳಿಗೆ ಹೆಚ್ಚಿನ ಏಕೀಕರಣದ ಅಗತ್ಯವಿದೆ ಎಂದು ಎಡಿಬಿ ಸೇರಿಸಿದೆ. +ಸಾಮಾನ್ಯ ಮಾನ್ಸೂನ್ ನಿರೀಕ್ಷೆಗಳು, ಹಣದುಬ್ಬರದ ಒತ್ತಡವನ್ನು ನಿಯಂತ್ರಿಸುವುದು ಮತ್ತು ಉತ್ಪಾದನೆ ಮತ್ತು ಸೇವಾ ವಲಯಗಳಲ್ಲಿನ ನಿರಂತರ ಆವೇಗದ ಮೇಲೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ ಏಳು ಎಂದು ಅಂದಾಜಿಸಲಾಗಿದೆ ಎಂದು ಆರ್‍ಬಿಐ ಕಳೆದ ವಾರ ಹೇಳಿತ್ತು \ No newline at end of file diff --git a/eesanje/url_47_126_11.txt b/eesanje/url_47_126_11.txt new file mode 100644 index 0000000000000000000000000000000000000000..5ab218ab254b1dafd03b112b7f3bd1ffa38053de --- /dev/null +++ b/eesanje/url_47_126_11.txt @@ -0,0 +1,4 @@ +ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳ ಸಾವು +ಅಜಂಗಢ, ಅ.11 –ಉತ್ತರ ಪ್ರದೇಶದ ಅಜಂಗಢ ಜಿಲ್ಲೆ ಬರ್ದಾನ್ ಪ್ರದೇಶದ ಕುಶಾಲ್‍ಗಾಂವ್ ಗ್ರಾಮದ ಕೊಳದಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮನೆಯ ಸಮೀಪವೇ ಇರುವ ಕೊಳದಲ್ಲಿ ನೆನ್ನೆ ಸಂಜೆ ಸ್ನಾನ ಮಾಡಲು ಬಾಲಕರು ತೆರಳಿದ್ದು ರಾತ್ರಿಯಾದರೂ ಮಕ್ಕಳು ಕಾಣದಿದ್ದಾಗ ಪೋಷಕರು ಆತಂಕಗೊಂಡಿದ್ದಾರೆ. +ನಂತರ ಕೊಳದ ಬಳಿ ಇದ್ದ ಬಟ್ಟೆಯನ್ನು ನೋಡಿ ನೀರಿನಲ್ಲಿ ಮುಳುಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಏಳರಿಂದ 10 ವರ್ಷದೊಳಗಿನ ಮಕ್ಕಳ ಶವಗಳನ್ನು ನಂತರ ಗ್ರಾಮಸ್ಥರು ನೀರಿನಿಂದ ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ದುರಂತ ಸಾವಿಗೆ ಇಡೀ ಗ್ರಾಮದ ಜನರು ಕಂಬನಿ ಮಿಡಿದಿದ್ದಾರೆ. +ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಕರೆ ನೀರು ಕಮ್ಮಿಯಿತ್ತು ಆದರೆ ಕೆಸರಿನಲ್ಲಿ ಸಿಲುಗಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_47_126_12.txt b/eesanje/url_47_126_12.txt new file mode 100644 index 0000000000000000000000000000000000000000..fe0f47ccc1c50fc74c9627556332d11db16708ee --- /dev/null +++ b/eesanje/url_47_126_12.txt @@ -0,0 +1,6 @@ +ದೇಶದ ಮೊದಲ ಹಂತದ ಚುನಾವಣೆಯಲ್ಲಿ ನಕುಲ್ ನಾಥ್ ಶ್ರಿಮಂತ ಅಭ್ಯರ್ಥಿ +ನವದೆಹಲಿ,ಏ.10-ದೇಶದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರ ಪುತ್ರ ನಕುಲ್ ನಾಥ್ ಅವರು ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದಾರೆ. +ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾಮ್ಸರ್ (ಎಡಿಆರ್) ಸಂಸ್ಥೆ ನಡೆಸಿದ ವಿಶ್ಲೇಷಣೆಯ ಪ್ರಕಾರ, ಕಾಂಗ್ರೆಸ್ ಸಂಸದ ನಕುಲ್ ನಾಥ್ ಅವರು 717 ಕೋಟಿ ಆಸ್ತಿಯೊಂದಿಗೆ ಶ್ರೀಮಂತ ಅಭ್ಯರ್ಥಿಯಾಗಿ ಹೊರ ಹೊಮ್ಮಿದ್ದಾರೆ. +ನಕುಲ್ ನಾಥ್ ಅವರು ಛಿಂದ್ವಾರಾ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳಲು ನಾಮನಿರ್ದೇಶನಗೊಂಡಿದ್ದಾರೆ. ಎಐಎಡಿಎಂಕೆಯ ಅಶೋಕ್ ಕುಮಾರ್ ಅವರು ತಮಿಳುನಾಡಿನ ಈರೋಡ್ನಿಂದ ಸ್ಪರ್ಧಿಸುತ್ತಿದ್ದಾರೆ, ಅವರು ? 662 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಶಿವಗಂಗಾ ಬಿಜೆಪಿ ಅಭ್ಯರ್ಥಿ ಧೇವನಾಥನ್ ಯಾದವ್ ಟಿ ? 304 ಕೋಟಿ ಆಸ್ತಿ ಹೊಂದಿದ್ದಾರೆ. +ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಏಪ್ರಿಲ್ 19ರಿಂದ ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ. +ಚುನಾವಣೆಗೆ ಎರಡು ವಾರಗಳಿಗಿಂತ ಕಡಿಮೆ ಅವ„ಯಿದ್ದು, ನಾಮಪತ್ರ ಸಲ್ಲಿಸಲಿರುವ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಆಸ್ತಿ, ಅಪರಾಧ ಹಿನ್ನೆಲೆ ಅಥವಾ ಪ್ರಕರಣಗಳು, ಹಣಕಾಸಿನ ಪರಿಸ್ಥಿತಿ ಸೇರಿದಂತೆ ಇತರ ಮಾಹಿತಿ ಸೇರಿದಂತೆ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಾರೆ.ಏಪ್ರಿಲ್ 19ರ ಚುನಾವಣೆಯಲ್ಲಿ ಸ್ಪರ್„ಸುವ ಪ್ರತಿ ಅಭ್ಯರ್ಥಿಯ ಸರಾಸರಿ ಆಸ್ತಿ ? 4.51 ಕೋಟಿ ಮೌಲ್ಯದ್ದಾಗಿದೆ. \ No newline at end of file diff --git a/eesanje/url_47_126_2.txt b/eesanje/url_47_126_2.txt new file mode 100644 index 0000000000000000000000000000000000000000..0bcc0aae153f3357814125268dadce9cda9588b2 --- /dev/null +++ b/eesanje/url_47_126_2.txt @@ -0,0 +1,4 @@ +ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು +ಚಂಡಿಗಢ,ಏ.11-ಶಾಲಾ ಬಸ್ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಹರಿಯಾಣದ ನರ್ನಾಲ್ನ ಹಳ್ಳಿಯೊಂದರ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಇನ್ನಿತರ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಈದ್-ಉಲ-ಫಿತರ್ ರಜೆಯ ಹೊರತಾಗಿಯೂ ಶಾಲೆಯು ಕಾರ್ಯನಿರ್ವಹಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಎಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಕನಿನಾದ ಉನ್ಹಾನಿ ಗ್ರಾಮದ ಬಳಿ ಪಲ್ಟಿಯಾಗಿದೆ. +ಪ್ರಾಥಮಿಕ ತನಿಖೆಯ ನಂತರ ಬಸ್ ಚಾಲಕ ಕುಡಿದು ವಾಹನವನ್ನು ಮರಕ್ಕೆ ಡಿಕ್ಕಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಆರು ವರ್ಷಗಳ ಹಿಂದೆ 2018 ರಲ್ಲಿ ಬಸ್ನ ಫಿಟ್ನೆಸ್ ಪ್ರಮಾಣಪತ್ರದ ಅವಧಿ ಮುಗಿದಿದೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. \ No newline at end of file diff --git a/eesanje/url_47_126_3.txt b/eesanje/url_47_126_3.txt new file mode 100644 index 0000000000000000000000000000000000000000..ec20cfd10881e0f83b03f5d51c0d1722bfd988a1 --- /dev/null +++ b/eesanje/url_47_126_3.txt @@ -0,0 +1,6 @@ +ಸಿಎಎ ಜಾರಿಗೆ ಅವಕಾಶ ನೀಡಲ್ಲ : ಮುಸ್ಲಿಮರಿಗೆ ಮಮತಾ ಬ್ಯಾನರ್ಜಿ ಅಭಯ +ಕೋಲ್ಕತ್ತಾ,ಏ. 11 (ಪಿಟಿಐ) –ರಾಜ್ಯದಲ್ಲಿ ಸಿಎಎ, ಎನ್ಆರ್ಸಿ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. +ಈದ್-ಉಲ್-ಫಿತರ್ ಸಂದರ್ಭದಲ್ಲಿ ಇಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವರು ಚುನಾವಣಾ ಸಮಯದಲ್ಲಿ ಗಲಭೆ ಮಾಡಲು ಪ್ರಯತ್ನಿಸುತ್ತಾರೆ ಎಂದು ಹೇಳಿದರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂಚುಗಳಿಗೆ ಬಲಿಯಾಗಬೇಡಿ ಎಂದು ಅವರು ಒತ್ತಾಯಿಸಿದರು. +ನಾವು ಪೌರತ್ವ (ತಿದ್ದುಪಡಿ) ಕಾಯಿದೆ, ನಾಗರಿಕರ ರಾಷ್ಟ್ರೀಯ ನೋಂದಣಿ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪಿಕೊಳ್ಳುವುದಿಲ್ಲ. ನಾವು ಒಗ್ಗಟ್ಟಾಗಿ ಬದುಕಿದರೆ, ಯಾರೂ ನಮಗೆ ಹಾನಿ ಮಾಡಲು ಸಾಧ್ಯವಿಲ್ಲ ಎಂದು ರೆಡ್ ರೋಡ್ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ ಹೇಳಿದರು. ತಮ್ಮ ಪಕ್ಷದ ಟಿಎಂಸಿಯ ಹೋರಾಟ ಬಿಜೆಪಿ ವಿರುದ್ಧ ಎಂದು ಪ್ರತಿಪಾದಿಸಿದರು. +ನಾವು ಇಂಡಿಯಾ ಒಕ್ಕೂಟದ ಜತೆಯಲ್ಲಿ ಕಾಣಿಸಿಕೊಂಡಿದ್ದರೂ ಬಂಗಾಳದಲ್ಲಿ ದಯವಿಟ್ಟು ಯಾವುದೇ ಮತವು ಯಾವುದೇ ಪಕ್ಷಕ್ಕೆ ಹೋಗದಂತೆ ನೋಡಿಕೊಳ್ಳಿ ಎಂದು ಟಿಎಂಸಿ ಮುಖ್ಯಸ್ಥರು ಹೇಳಿದ್ದಾರೆ. +ಕೇಂದ್ರದ ಬಿಜೆಪಿ ಸರ್ಕಾರವು ಕೇಂದ್ರ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳ ವಿರುದ್ಧ ಬಳಸುತ್ತಿದೆ ಎಂದು ಅವರು ಟೀಕಿಸಿದರು. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಆಕೆಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಈದ್ ಮೀಟ್ನಲ್ಲಿ ಅವರ ಜೊತೆಗಿದ್ದರು. \ No newline at end of file diff --git a/eesanje/url_47_126_4.txt b/eesanje/url_47_126_4.txt new file mode 100644 index 0000000000000000000000000000000000000000..9d5d16f7f9bf9150aabf72de488d29406405a818 --- /dev/null +++ b/eesanje/url_47_126_4.txt @@ -0,0 +1,8 @@ +ಕೊರೊನಾ ಕಾಲದಲ್ಲಿ ಮಧ್ಯರಾತ್ರಿ ಮೋದಿ ಕರೆ ಮಾಡಿದ್ದನ್ನು ಸ್ಮರಿಸಿಕೊಂಡ ಜಿತೇಂದ್ರ ಸಿಂಗ್ ಶುಂಠಿ +ನವದೆಹಲಿ,ಏ.11-ಮಾಜಿ ಶಾಸಕ ಮತ್ತು ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶುಂಟಿ ಅವರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಫೋನ್ ಕರೆಯನ್ನು ನೆನಪಿಸಿಕೊಂಡಿದ್ದಾರೆ ಮತ್ತು ಅವರ ಶ್ಲಾಘನೆಯ ಮಾತುಗಳು ಹೆಚ್ಚು ಸಾಮಾಜಿಕ ಸೇವೆ ಮಾಡಲು ಹೇಗೆ ಪ್ರೇರೇಪಿಸಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ. +ಸಾಂಕ್ರಾಮಿಕ ಸಮಯದಲ್ಲಿ ತನ್ನ ನಿಸ್ವಾರ್ಥ ಕೆಲಸಕ್ಕಾಗಿ ಬೆಳಗಿನ ಜಾವ 2.30 ಸಮಯದಲ್ಲಿ ಮೋದಿಯಿಂದ ಫೋನ್ ಕರೆಯನ್ನು ಸ್ವೀಕರಿಸಿದ ಸಾಮಾಜಿಕ ಕಾರ್ಯಕರ್ತರ ಕಥೆಯನ್ನು ಅವರು ಎಕ್ಸ್‍ನಲ್ಲಿ ಹಂಚಿಕೊಂಡಿದ್ದಾರೆ. +ಸಾಂಕ್ರಾಮಿಕ ಸಮಯದ ತಮ್ಮ ಅನುಭವಗಳನ್ನು ಹಂಚಿಕೊಂಡ ಶುಂಟಿ, ಸೀಮಾಪುರಿ ಸ್ಮಶಾನದಲ್ಲಿ ಪ್ರತಿದಿನ ನೂರಾರು ಶವಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಹೇಳಿದರು. ಅವರು ಹಕ್ಕು ಪಡೆಯದ ದೇಹಗಳನ್ನು ಸುಡುವ ಕಾರಣ, ಅವರು 21 ದಿನಗಳವರೆಗೆ ಮನೆಗೆ ಹೋಗಲು ಸಾಧ್ಯವಾಗಲಿಲ್ಲ. +ಅವರ ನೆರೆಹೊರೆಯವರು ಸ್ಮಶಾನಕ್ಕೆ ಪುನರಾವರ್ತಿತ ಭೇಟಿಗಳ ಬಗ್ಗೆ ಆಕ್ಷೇಪಣೆಗಳನ್ನು ಎತ್ತುತ್ತಿದ್ದರು ಎಂದು ಅವರು ಬಹಿರಂಗಪಡಿಸಿದರು ಏಕೆಂದರೆ ಇದು ಅವರ ಮನೆಗಳಿಗೆ ವೈರಸ್ ಅನ್ನು ಸಾಗಿಸುವ ಅಪಾಯವನ್ನು ಎದುರಿಸುತ್ತಿದೆ. +ಶುಂಟಿ ತಮ್ಮ ಆಸಕ್ತಿದಾಯಕ ಘಟನೆಯನ್ನು ನೆನಪಿಸಿಕೊಳ್ಳುತ್ತಾ, ಅವರು ಬೆಳಗಿನ ಜಾವ 2.30ಕ್ಕೆ ಅಂತಿಮ ವಿಧಿಗಳನ್ನು ನಡೆಸುತ್ತಿದ್ದಾಗ, ಅವರ ಚಾಲಕ ಅವರಿಗೆ ಹೇಳಿದರು, ಸರ್ ನಿಮಗಾಗಿ ಪ್ರಧಾನ ಮಂತ್ರಿಗಳ ಕಚೇರಿಯಿಂದ -ಫೋನ್ ಕರೆ ಬಂದಿದೆ ಎಂದು ತಿಳಿಸುತ್ತಾರೆ. ಆಗ ಶುಂಟಿ ತನ್ನ ಡ್ರೈವರ್‍ಗೆ, ನನ್ನ ಕೈಗಳು ಕೊಳಕಾಗಿದೆ, ನೀವು ಫೋನ್ ಅನ್ನು ನನ್ನ ಕಿವಿಗೆ ಹಿಡಿಯಿರಿ ಎಂದು ಕೇಳಿಕೊಳ್ಳುತ್ತಾರೆ ಆಗ ಇನ್ನೊಂದು ಕಡೆಯ ಧ್ವನಿ ಕೇಳಿ ನನಗೆ ಗಾಬರಿ ಮತ್ತು ಆಶ್ಚರ್ಯವಾಯಿತು ಎಂದಿದ್ದಾರೆ. +ಪ್ರಧಾನಿ ಮೋದಿ ಅವರು ನನಗೆ ಹೇಳಿದರು, ನಾನು ನಿಮ್ಮನ್ನು ದೂರದರ್ಶನದಲ್ಲಿ ನೋಡುತ್ತಿದ್ದೇನೆ. ನೀವು ಹಕ್ಕು ಪಡೆಯದ ದೇಹಗಳನ್ನು ಸುಡುವ ಮೂಲಕ ಉದಾತ್ತ ಕೆಲಸ ಮಾಡುತ್ತಿದ್ದೀರಿ. ಇಡೀ ದೇಶವು ನಿಮ್ಮೊಂದಿಗಿದೆ. ನೀವು ಈ ಕೆಲಸವನ್ನು ಪೂರ್ಣ ಸಂಕಲ್ಪದಿಂದ ಮಾಡುತ್ತಿರಿ.ನಿಮಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸುವುದನ್ನು ಅವರು ಸ್ಮರಿಸಿಕೊಂಡಿದ್ದಾರೆ. +ಪಿಎಂ ಮೋದಿಯವರು ಪ್ರತಿ ಘಟನೆಯನ್ನು ಎಷ್ಟು ಸೂಕ್ಷ್ಮವಾಗಿ ಗಮನಿಸುತ್ತಿದ್ದರು ಮತ್ತು ಅವರು ಪ್ರತಿ ವಿವರವನ್ನು ಹೇಗೆ ನೋಡುತ್ತಾರೆ ಎಂದು ನನಗೆ ಆಗ ಅರಿವಾಯಿತು ಎಂದಿದ್ದಾರೆ. ಅವರ ಆಜ್ಞೆಯ ಮೇರೆಗೆ ಎಲ್ಲಾ ಶಕ್ತಿ ಮತ್ತು ಶಕ್ತಿಯ ಹೊರತಾಗಿಯೂ ವ್ಯಕ್ತಿಯು ಯಾವಾಗಲೂ ಬೇರೂರಿರಬೇಕು ಮತ್ತು ನೆಲೆಗೊಳ್ಳಬೇಕು ಎಂಬುದು ನನಗೆ ಉತ್ತಮ ಕಲಿಕೆಯ ಅನುಭವವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_126_5.txt b/eesanje/url_47_126_5.txt new file mode 100644 index 0000000000000000000000000000000000000000..118fc830f6f17b709aa72e75472eb943b0c91e9e --- /dev/null +++ b/eesanje/url_47_126_5.txt @@ -0,0 +1,6 @@ +ಡಿಜಿಟಲ್ ಪಾವತಿಯಲ್ಲಿ ಅಮೆರಿಕವನ್ನು ಮೀರಿಸಿದ ಭಾರತದ ಯುಪಿಐ : ಜೈಶಂಕರ್ +ನವದೆಹಲಿ,ಏ.11-ದೇಶದ ಡಿಜಿಟಲ್ ಪಾವತಿ ಬೆಳವಣಿಗೆ ಅಮೆರಿಕಕ್ಕಿಂತ ಹೆಚ್ಚಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ. ಡಿಜಿಟಲ್ ಪಾವತಿಯಲ್ಲಿ ಭಾರತದ ಬೆಳವಣಿಗೆಯು ರೂ.120 ಕೋಟಿ ಮೌಲ್ಯದ ಯುಪಿಐ ವಹಿವಾಟು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. +ಅಮೆರಿಕದಲ್ಲಿ ವರ್ಷದಲ್ಲಿ ಕೇವಲ ರೂ. 40 ಕೋಟಿ ಮೌಲ್ಯದ ಡಿಜಿಟಲ್ ವಹಿವಾಟುಗಳನ್ನು ಮಾಡುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.ಇಂದು, ನಾವು ಯುಪಿಐ ಮೂಲಕ ನಗದು ರಹಿತ ಪಾವತಿಗಳನ್ನು ಮಾಡುತ್ತೇವೆ. ಒಂದು ತಿಂಗಳಲ್ಲಿ ರೂ.120 ಕೋಟಿ ಮೌಲ್ಯದ ವಹಿವಾಟು ನಡೆಸಿದ್ದೇವೆ. +ಯುಎಸ್ ಒಂದು ವರ್ಷದಲ್ಲಿ ರೂ.40 ಕೋಟಿ ಮೌಲ್ಯದ ಡಿಜಿಟಲ್ ವಹಿವಾಟು ನಡೆಸುತ್ತದೆ. ಕೆಲವು ಕ್ಷೇತ್ರಗಳಲ್ಲಿ ನಾವು ಹೇಗೆ ಪ್ರಗತಿ ಸಾಧಿಸಿದ್ದೇವೆ ಎಂಬುದನ್ನು ನೀವು ನೋಡಬೇಕು ಮತ್ತು ಜಗತ್ತು ಅದನ್ನು ಪ್ರಶಂಸಿಸುತ್ತದೆ ಎಂದು ರಾಜಸ್ಥಾನದ ಬಿಕಾನೇರ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೈಶಂಕರ್ ಹೇಳಿದರು. +ಕಳೆದ ವಾರ, ಆರ್‍ಬಿಐ ಯುನಿಫೈಡ್ ಪೇಮೆಂಟ್ಸ್ ಇಂಟೆರ್ ಫೇಸ್ (ಯುಪಿಐ) ಮೂಲಕ ನಗದು ಠೇವಣಿ ಯಂತ್ರಗಳಲ್ಲಿ (ಸಿಡಿಎಂ) ಹಣವನ್ನು ಠೇವಣಿ ಮಾಡಲು ಬಳಕೆದಾರರಿಗೆ ಅವಕಾಶ ನೀಡಲು ಪ್ರಸ್ತಾಪಿಸಿತು. +ಪ್ರಸಕ್ತ ಹಣಕಾಸು ವರ್ಷದ ಮೊದಲ ಹಣಕಾಸು ನೀತಿಯ ದೃಷ್ಟಿಕೋನವನ್ನು ಪ್ರಕಟಿಸಿದ ಆರ್‍ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ನಗದು ಠೇವಣಿ ಯಂತ್ರಗಳ (ಸಿಡಿಎಂ) ಮೂಲಕ ನಗದು ಠೇವಣಿ ಪ್ರಾಥಮಿಕವಾಗಿ ಡೆಬಿಟ್ ಕಾರ್ಡ್‍ಗಳ ಬಳಕೆಯ ಮೂಲಕ ಮಾಡಲಾಗುತ್ತಿದೆ. ಎಟಿಎಂಗಳಲ್ಲಿ ಯುಪಿಐ ಬಳಸಿ ಕಾರ್ಡ್‍ರಹಿತ ನಗದು ಹಿಂಪಡೆಯುವಿಕೆಯಿಂದ ಪಡೆದ ಅನುಭವವನ್ನು ನೀಡಿದರೆ, ಯುಪಿಐ ಬಳಸಿ ಸಿಡಿಎಂಗಳಲ್ಲಿ ಹಣವನ್ನು ಠೇವಣಿ ಮಾಡಲು ಈಗ ಪ್ರಸ್ತಾಪಿಸಲಾಗಿದೆ. \ No newline at end of file diff --git a/eesanje/url_47_126_6.txt b/eesanje/url_47_126_6.txt new file mode 100644 index 0000000000000000000000000000000000000000..0e21c71069addec9c026a0e5496e2b256fd790c6 --- /dev/null +++ b/eesanje/url_47_126_6.txt @@ -0,0 +1,5 @@ +ಮತಾಂತರಕ್ಕೆ ಆಯಾ ಧರ್ಮದ ಪೂರ್ವಾನುಮತಿ ಕಡ್ಡಾಯಗೊಳಿಸಿದ ಗುಜರಾತ್ ಸರ್ಕಾರ +ಅಹಮದಾಬಾದ್, ಏ.11-ಈ ವಾರದ ಆರಂಭದಲ್ಲಿ ಬೌದ್ಧ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಗೊತ್ತುಪಡಿಸುವ ಸುತ್ತೋಲೆಯನ್ನು ಹೊರಡಿಸಿದ ಗುಜರಾತ್ ಸರ್ಕಾರವು, ಧರ್ಮದ ಸ್ವಾತಂತ್ರ್ಯ ಕಾಯಿದೆ 2003 ರ ಅಡಿಯಲ್ಲಿ ಹಿಂದೂ ಧರ್ಮದಿಂದ ಬೌದ್ಧ, ಜೈನ ಮತ್ತು ಸಿಖ್ ಧರ್ಮಕ್ಕೆ ಮತಾಂತರಗೊಳ್ಳಲು ಆಯಾ ಧರ್ಮದಿಂದ ಪೂರ್ವಾನುಮತಿ ಅಗತ್ಯ ಎಂದು ಘೋಷಿಸಿದೆ. +ಏ. 8 ರಂದು ರಾಜ್ಯ ಗೃಹ ಇಲಾಖೆ ಬಿಡುಗಡೆ ಮಾಡಿದ ಈ ನಿರ್ದೇಶನವು ಪರಿವರ್ತನೆ ಅರ್ಜಿಗಳ ನಿರ್ವಹಣೆಗೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗಳಿಂದ ಗುಜರಾತ್ ಧರ್ಮದ ಸ್ವಾತಂತ್ರ್ಯ ಕಾಯಿದೆಯ ವ್ಯಾಖ್ಯಾನದಲ್ಲಿನ ವ್ಯತ್ಯಾಸಗಳನ್ನು ಎತ್ತಿ ತೋರಿಸುತ್ತಾ, ಪರಿವರ್ತನಾ ಅರ್ಜಿಗಳಿಗೆ ನಿಗದಿತ ಕಾರ್ಯವಿಧಾನಗಳನ್ನು ಅನುಸರಿಸುವ ಅಗತ್ಯವನ್ನು ಸುತ್ತೋಲೆ ಒತ್ತಿಹೇಳಿದೆ. +ಅರ್ಜಿದಾರರು ಮತ್ತು ಸ್ವಾಯತ್ತ ಸಂಸ್ಥೆಗಳು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ಪೂರ್ವಾನುಮತಿ ಅಗತ್ಯವನ್ನು ವಿರೋಧಿಸುವ ನಿದರ್ಶನಗಳನ್ನು ಅದು ಅಂಗೀಕರಿಸಿದೆ. +ಧಾರ್ಮಿಕ ಮತಾಂತರದ ಸುತ್ತಲಿನ ಕಾನೂನು ನಿಬಂಧನೆಗಳ ಅಸಮರ್ಪಕ ತಿಳುವಳಿಕೆಯಿಂದ ಉಂಟಾಗುವ ಸಂಭಾವ್ಯ ಕಾನೂನು ಸವಾಲುಗಳ ವಿರುದ್ಧ ಸುತ್ತೋಲೆ ಎಚ್ಚರಿಸಿದೆ. ಪರಿವರ್ತನೆ ಅರ್ಜಿಗಳನ್ನು ಮೌಲ್ಯಮಾಪನ ಮಾಡುವಾಗ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗಳಿಂದ ಕಾನೂನು ಚೌಕಟ್ಟಿನ ಸಂಪೂರ್ಣ ಪರಿಶೀಲನೆಯ ಅಗತ್ಯವನ್ನು ಇದು ಒತ್ತಿಹೇಳಿದೆ. \ No newline at end of file diff --git a/eesanje/url_47_126_7.txt b/eesanje/url_47_126_7.txt new file mode 100644 index 0000000000000000000000000000000000000000..512256a19c5cb771c360b00ad587ec8078c34a5c --- /dev/null +++ b/eesanje/url_47_126_7.txt @@ -0,0 +1,5 @@ +ಜೈಲುವಾಸಿ ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ +ನವದೆಹಲಿ,ಏ.11-ದೆಹಲಿ ಆಡಳಿತದ ಮದ್ಯನೀತಿ ಹಗರಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ಅವರು ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ನಿನ್ನೆ ಭೇಟಿಯಾಗಿದ್ದರು. +ಅರವಿಂದ್ ಕೇಜ್ರಿವಾಲ್ ಅವರ ಖಾಸಗಿ ಕಾರ್ಯದರ್ಶಿ ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್ ಇಲಾಖೆ ಅವರ ವಿರುದ್ಧ ಕ್ರಮ ಕೈಗೊಂಡಿದೆ. +ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಏಪ್ರಿಲ್ 8 ರಂದು ಜಾರಿ ನಿರ್ದೇಶನಾಲಯವು ವಿಭವ್ ಕುಮಾರ್ ಅವರನ್ನು ವಿಚಾರಣೆ ನಡೆಸಿತ್ತು. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಈ ಸಂಬಂಧ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. +ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಹಾಗೂ ವಿಭವ್ ಕುಮಾರ್ ಕೂಡ ತಿಹಾರ್ ಜೈಲಿಗೆ ಹೋಗಿದ್ದರು. \ No newline at end of file diff --git a/eesanje/url_47_126_8.txt b/eesanje/url_47_126_8.txt new file mode 100644 index 0000000000000000000000000000000000000000..51eecc8a4ac7f72535dda7e6bec93f9b8a18e740 --- /dev/null +++ b/eesanje/url_47_126_8.txt @@ -0,0 +1,5 @@ +ಲವ್ ಜಿಹಾದ್ ಆರೋಪ: ಪುಣೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೇಲೆ ಹಲ್ಲೆ +ಪುಣೆ, ಅ 11 (ಪಿಟಿಐ) :ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ ಲವ್ ಜಿಹಾದ್‍ನಲ್ಲಿ ತೊಡಗಿದ್ದೀಯ ಎಂದು ಆರೋಪಿಸಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಬಂಧಿಸಲು ಪುಣೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇತ್ತೀಚೆಗೆ ಸಾವಿತ್ರಿಬಾಯಿ ಎಂಬ ವಿದ್ಯಾರ್ಥಿನಿ ಫುಲೆ ಪುಣೆ ವಿಶ್ವವಿದ್ಯಾಲಯದ (ಎಸ್‍ಪಿಪಿಯು) ಕ್ಯಾಂಪಸ್‍ನಲ್ಲಿ ತನ್ನು ಇಬ್ಬರು ಸಹಪಾಠಿಗಳ ಜೊತೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ವಿದ್ಯಾರ್ಥಿಯು ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಊಟ ಮುಗಿಸಿ ಹಿಂತಿರುಗುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ನಾಲ್ಕೈದು ಅಪರಿಚಿತ ವ್ಯಕ್ತಿಗಳು ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ತಡೆದು ಪ್ರಶ್ನಿಸಲು ಪ್ರಾರಂಭಿಸಿದರು, ಆಧಾರ್ ಕಾರ್ಡ್ ತೋರಿಸಲು ಕೇಳಿದ್ದಾರೆ. +ಒಬ್ಬ ಲವ್ ಜಿಹಾದ್‍ನಲ್ಲಿ ತೊಡಗಿಸಿಕೊಳ್ಳಲು ವಿಶ್ವವಿದ್ಯಾಲಯಕ್ಕೆ ಬಂದಿದ್ದಾನೆ ಎಂದು ಅಲ್ಲಿಯೇ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಈ ಕುರಿತು ಮಾತನಾಡಿ ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. +ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಅವರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಘಟನೆಯ ತನಿಖೆಗಾಗಿ ವಿಶ್ವವಿದ್ಯಾನಿಲಯವು ಸತ್ಯಶೋಧನಾ ಸಮಿತಿಯನ್ನು ರಚಿಸಿದೆ ಎಂದು ಎಸ್‍ಪಿಪಿಯು ರಿಜಿಸ್ಟ್ರಾರ್ ವಿಜಯ್ ಖರೆ ಹೇಳಿದ್ದಾರೆ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ. \ No newline at end of file diff --git a/eesanje/url_47_126_9.txt b/eesanje/url_47_126_9.txt new file mode 100644 index 0000000000000000000000000000000000000000..8de8b0781f91b10597a3b9ec17de24c3150acfde --- /dev/null +++ b/eesanje/url_47_126_9.txt @@ -0,0 +1,5 @@ +ಜ್ಯೋತಿರಾವ್ ಫುಲೆಯನ್ನು ಸ್ಮರಿಸಿದ ಮೋದಿ +ನವದೆಹಲಿ, 11 (ಪಿಟಿಐ) :ಖ್ಯಾತ ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಅನ್ಯಾಯದ ವಿರುದ್ಧ ಹೋರಾಡಲು ಮತ್ತು ಸಮಾನತೆಯನ್ನು ಉತ್ತೇಜಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಮತ್ತು ಅವರ ಚಿಂತನೆಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತವೆ ಎಂದು ಮೋದಿ ಎಕ್ಸ್‍ನಲ್ಲಿ ಬಣ್ಣಿಸಿದ್ದಾರೆ. +ಶಿಕ್ಷಣ ಕ್ಷೇತ್ರದಲ್ಲಿ ಮತ್ತು ಮಹಿಳಾ ಸಬಲೀಕರಣದಲ್ಲಿ ಅವರ ಅವಿರತ ಪ್ರಯತ್ನಗಳು ಸಮಾಜದ ಮೇಲೆ ಅಳಿಸಲಾಗದ ಛಾಪು ಮೂಡಿಸಿವೆ. ಇಂದು ಬಡವರು ಮತ್ತು ಅಂಚಿನಲ್ಲಿರುವವರನ್ನು ಸಬಲೀಕರಣಗೊಳಿಸುವ ಅವರ ದೃಷ್ಟಿಕೋನವನ್ನು ಪೂರೈಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ಸಂದರ್ಭವಾಗಿದೆ ಎಂದು ಅವರು ಹೇಳಿದರು. +ಸಮಾಜದ ಹಿಂದುಳಿದ ಮತ್ತು ವಂಚಿತ ವರ್ಗಗಳ ವಿಮೋಚನೆಗಾಗಿ ಚಳುವಳಿಯ ಐಕಾನ್ ಆಗಿದ್ದ ಫುಲೆ ಅವರು 19 ನೇ ಶತಮಾನದ ಸುಧಾರಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ತನ್ನ ಜೀವನವನ್ನು ಮುಡಿಪಾಗಿಟ್ಟಿದ್ದರು. +ಅವರ ಪತ್ನಿ ಸಾವಿತ್ರಿಬಾಯಿ ಫುಲೆ ಕೂಡ ಪ್ರವರ್ತಕ ಸಮಾಜ ಸುಧಾರಕರಾಗಿದ್ದರು, ವಿಶೇಷವಾಗಿ ಮಹಿಳಾ ಶಿಕ್ಷಣದಲ್ಲಿ ಅವರ ಪಾತ್ರಕ್ಕಾಗಿ ಶ್ಲಾಸಿದರು. \ No newline at end of file diff --git a/eesanje/url_47_127_1.txt b/eesanje/url_47_127_1.txt new file mode 100644 index 0000000000000000000000000000000000000000..87dfef6a1b115e38eb397f1699f01cf95b7cd4cb --- /dev/null +++ b/eesanje/url_47_127_1.txt @@ -0,0 +1,5 @@ +ಡ್ರಗ್ಸ್ ದಂಧೆ : ಪಂಜಾಬ್ ಮಾಜಿ ಸಚಿವರ ಪುತ್ರ ಸೇರಿ ಐವರ ಬಂಧನ +ಶಿಮ್ಲಾ, ಏ. 10 (ಪಿಟಿಐ)-ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಪಂಜಾಬ್ನ ಮಾಜಿ ಸಚಿವ ಸುಚಾ ಸಿಂಗ್ ಅವರ ಪುತ್ರ ಸೇರಿದಂತೆ ಐವರನ್ನು 42.89 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಇಲ್ಲಿನ ಹಳೆ ಬಸ್ ನಿಲ್ದಾಣದ ಪಂಚಾಯತ್ ಘರ್ ಬಳಿಯ ಹೋಟೆಲ್ನ ಕೊಠಡಿಯೊಂದರ ಮೇಲೆ ಪೊಲೀಸ್ ಗಸ್ತು ತಿರುಗುತ್ತಿದ್ದ ತಂಡವು ದಾಳಿ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಂಜೀವ್ ಕುಮಾರ್ ಗಾಂ„ ಪಿಟಿಐಗೆ ತಿಳಿಸಿದ್ದಾರೆ. +ಪ್ರಮುಖ ಆರೋಪಿಯನ್ನು ಪಂಜಾಬ್ ಮಾಜಿ ಸಚಿವ ಸುಚಾ ಸಿಂಗ್ ಅವರ ಪುತ್ರ ಪ್ರಕಾಶ್ ಸಿಂಗ್ (37) ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳು ಪಂಜಾಬ್ ಮೂಲದ ಅಜಯ್ ಕುಮಾರ್ (27), ಶುಭಂ ಕೌಶಲ್ (26) ಮತ್ತು ಬಲ್ಬಿಂದರ್ (22) ಮತ್ತು ಕಿನ್ನೌರ್ ಜಿಲ್ಲೆಯ ಅಬ್ನಿ (19) ಎಂದು ಎಸ್ಪಿ ತಿಳಿಸಿದ್ದಾರೆ. +ಆರೋಪಿಗಳ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮೊದಲು ಪಂಜಾಬ್ನ ಗುರುದಾಸ್ಪುರದಲ್ಲಿ ಹೆರಾಯಿನ್ ಹೊಂದಿದ್ದ ಮತ್ತು ಸೇವಿಸಿದ್ದಕ್ಕಾಗಿ ಪ್ರಕಾಶ್ ಸಿಂಗ್ ಅವರನ್ನು ಬಂಸಲಾಗಿತ್ತು. \ No newline at end of file diff --git a/eesanje/url_47_127_10.txt b/eesanje/url_47_127_10.txt new file mode 100644 index 0000000000000000000000000000000000000000..df899f432fb79913cb231a3e3b0ccc3c9db27c0d --- /dev/null +++ b/eesanje/url_47_127_10.txt @@ -0,0 +1,5 @@ +ಛತ್ತೀಸ್‍ಗಢ : ಮಣ್ಣಿನ ಗಣಿಗೆ ಬಸ್ ಬಿದ್ದು 12 ಮಂದಿ ದುರ್ಮರಣ +ದುರ್ಗ್, ಏ 10 (ಪಿಟಿಐ) :ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ಬಸ್ಸೊಂದು ಮುರುಮ್ ಮಣ್ಣಿನ ಗಣಿ ಗುಂಡಿಗೆ ಬಿದ್ದಿದ್ದರಿಂದ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ.ಕುಮ್ಹಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಾಪ್ರಿ ಗ್ರಾಮದ ಬಳಿ ತಡರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತರು ಡಿಸ್ಟಿಲರಿಯಿಂದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ತಿಳಿಸಿದ್ದಾರೆ. +ಪ್ರಾಥಮಿಕ ಮಾಹಿತಿಯ ಪ್ರಕಾರ 30 ಕ್ಕೂ ಹೆಚ್ಚು ಜನರಿದ್ದ ಬಸ್ ರಸ್ತೆಯಿಂದ ಸ್ಕಿಡ್ ಆಗಿ 40 ಅಡಿ ಆಳದ ಮುರುಮï ಗಣಿಯಲ್ಲಿ ಮುಳುಗಿತು ಎಂದು ಅವರು ಹೇಳಿದರು.ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಶುಕ್ಲಾ ಈ ಹಿಂದೆ ಸಾವಿನ ಸಂಖ್ಯೆ 15 ಎಂದು ದೃಢಪಡಿಸಿದ್ದರು. ಮುರುಮ್ , ಒಂದು ರೀತಿಯ ಮಣ್ಣನ್ನು ಹೆಚ್ಚಾಗಿ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ. +ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ದುರ್ಗ್ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಸುದ್ದಿಗಾರರಿಗೆ ತಿಳಿಸಿದರು.ಬಸ್ ಕುಮ್ಹಾರಿ ಪ್ರದೇಶದಲ್ಲಿ ನೆಲೆಗೊಂಡಿರುವ ಕೆಡಿಯಾ ಡಿಸ್ಟಿಲರೀಸ್‍ನ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು. ಇದುವರೆಗೆ 12 ಜನರ ಸಾವು ದೃಢಪಟ್ಟಿದೆ. ಗಾಯಗೊಂಡ 14 ಮಂದಿಯಲ್ಲಿ 12 ಮಂದಿಯನ್ನು ರಾಯ್‍ಪುರದ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‍ಗೆ ಕೊಂಡೊಯ್ಯಲಾಗಿದ್ದು, ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. +ಸಂತ್ರಸ್ತರಿಗೆ ಕಂಪನಿಯು ಪರಿಹಾರವನ್ನು ನೀಡಿದೆ, ಅವರು ಆಡಳಿತದಿಂದ ಇದೇ ರೀತಿಯ ಸಹಾಯವನ್ನು ಪಡೆಯುತ್ತಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚೌಧರಿ ಹೇಳಿದರು. \ No newline at end of file diff --git a/eesanje/url_47_127_11.txt b/eesanje/url_47_127_11.txt new file mode 100644 index 0000000000000000000000000000000000000000..9951c3a4be6e2d56dbe585210ee82edb1e916a22 --- /dev/null +++ b/eesanje/url_47_127_11.txt @@ -0,0 +1,4 @@ +71 ಸಾವಿರದ ಗಡಿ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ +ಬೆಂಗಳೂರು,ಏ.8-ಸತತ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಗರಿಷ್ಠ ಹೆಚ್ಚಳ ಕಂಡಿದ್ದು, ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. 10 ಗ್ರಾಂ ಶುದ್ದ ಚಿನ್ನದ ದರವು 71 ಸಾವಿರ ಗಡಿ ದಾಟುವ ಮೂಲಕ ಹೊಸ ದಾಖಲೆಯನ್ನು ನಿರ್ಮಾಣ ಮಾಡಿದೆ. 24 ಕ್ಯಾರೆಟ್‍ನ 10 ಗ್ರಾಂ ಚಿನ್ನಕ್ಕೆ 71,080 ರೂ.ಗೆ ತಲುಪಿದ್ದು ಇದುವರೆಗಿನ ಎಲ್ಲ ದಾಖಲೆಗಳನ್ನು ಮುರಿದಂತಾಗಿದೆ. +ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಭಾರೀ ಹೆಚ್ಚಳ ಕಂಡಿದ್ದು, 10 ಗ್ರಾಂ ಚಿನ್ನಕ್ಕೆ 440 ರೂ. ಹೆಚ್ಚಳವಾಗಿದೆ. ಅದೇ ರೀತಿ ಬೆಳ್ಳಿಯೂ ಕೂಡ ಗಣನೀಯ ಏರಿಕೆ ಕಂಡಿದ್ದು, 1 ಕೆಜಿ 1076 ರೂ.ನಷ್ಟು ಹೆಚ್ಚಳವಾಗಿದ್ದು, 82,064 ರೂ. ಗರಿಷ್ಠ ಧಾರಣೆ ತಲುಪಿದೆ. +ಚಿನ್ನದ ಮೇಲಿನ ಹೂಡಿಕೆ ಹೆಚ್ಚಳ, ಆಭರಣ ಪ್ರಿಯರ ಖರೀದಿಯಿಂದಾಗಿ ಚಿನ್ನಬೆಳ್ಳಿ ದರಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿವೆ.ರಾಜಧಾನಿ ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 300 ರೂ. ಏರಿಕೆಯಾಗಿದ್ದರೆ ಶುದ್ದ ಚಿನ್ನದ ಬೆಲೆ 10 ಗ್ರಾಂಗೆ 330 ರೂ. ಹೆಚ್ಚಾಗಿದೆ. ಚಿನ್ನ, ಬೆಳ್ಳಿ ಹೆಚ್ಚಳ ಗರಿಷ್ಠ ಮಟ್ಟ ಮುಟ್ಟಿರುವ ಹಿನ್ನಲೆಯಲ್ಲಿ ಆಭರಣ ಖರೀದಿ ಕಡಿಮೆಯಾಗುವ ಆತಂಕ ವರ್ತಕರನ್ನು ಕಾಡುತ್ತಿದೆ. \ No newline at end of file diff --git a/eesanje/url_47_127_12.txt b/eesanje/url_47_127_12.txt new file mode 100644 index 0000000000000000000000000000000000000000..b351c4b1c03029d44b35637697e99308deb0c253 --- /dev/null +++ b/eesanje/url_47_127_12.txt @@ -0,0 +1,10 @@ +ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಜಾಮೀನು ಅರ್ಜಿ ವಜಾ +ನವದೆಹಲಿ,ಏ.8-ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ತಿಹಾರ್ ಜೈಲಿನಲ್ಲಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್‍ಎಸ್) ನಾಯಕಿ ಕೆ.ಕವಿತಾ ಸಲ್ಲಿಸಿದ್ದ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ರೋಸ್ ಅವೆನ್ಯೂ ಕೋರ್ಟ್ ಇಂದು ವಜಾಗೊಳಿಸಿದೆ. +ಕವಿತಾ ಅವರ ಸಾಮಾನ್ಯ ಜಾಮೀನು ಅರ್ಜಿಯು ನ್ಯಾಯಾಲಯದ ಮುಂದೆ ಬಾಕಿ ಉಳಿದಿದ್ದು, ಏಪ್ರಿಲ್ 20ರಂದು ವಾದ ಆಲಿಸಲು ಪಟ್ಟಿ ಮಾಡಲಾಗಿದೆ.ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು. ಏಪ್ರಿಲ್ 2ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಏ.15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. +ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಕೀಲರು ಹೇಳಿದ್ದರು.ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯದ ಪರವಾಗಿ ವಾದ ಮಂಡಿಸಿದ ವಕೀಲ ಜೊಹೆಬ್ ಹುಸೇನ್, ಕವಿತಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. +ತನ್ನ ಮೊಬೈಲ್‍ನಲ್ಲಿ ಸಿಕ್ಕಿದ್ದ ಸಾಕ್ಷ್ಯಗಳು ಸೇರಿದಂತೆ ತನ್ನ ವಿರುದ್ಧದ ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಪ್ರತಿಪಾದಿಸಿದ್ದಾರೆ. +ಕವಿತಾ ಅವರ ಮಗನ 12ನೇ ತರಗತಿ 7 ಪರೀಕ್ಷೆಗಳು ಈಗಾಗಲೇ ಮುಗಿದಿವೆ. ಅವನು ಒಬ್ಬಂಟಿಯಲ್ಲ, ಏಕೆಂದರೆ ಅವನ ತಂದೆ ಮತ್ತು ಅಣ್ಣ ಸಹ ಅವನೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ.ಮಾರ್ಚ್ 15ರಂದು ಹೈದರಾಬಾದ್‍ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕೆ ಕವಿತಾ ಅವರನ್ನು ಬಂಧಿಸಿತ್ತು. +ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ಸೌತ್ ಗ್ರೂಪ್‍ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ. ಇದು ಮದ್ಯದ ದೊಡ್ಡ ಷೇರಿಗೆ ಪ್ರತಿಯಾಗಿ ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷಕ್ಕೆ 100 ಕೋಟಿ ಕಿಕ್‍ಬ್ಯಾಕ್ ನೀಡಿದೆ ಎಂದು ಆರೋಪಿಸಲಾಗಿದೆ. ಕಳೆದ ಮಂಗಳವಾರ ಆಕೆಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. +ಈ ಪ್ರಕರಣದಲ್ಲಿ ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಅವರು ಎರಡು ಸಮನ್ಸ್‍ಗಳಿಗೆ ಹಾಜರಾಗಿರಲಿಲ್ಲ. ಹೀಗಾಗಿ ಹೈದರಾಬಾದ್‍ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. +ಸೌತ್ ಗ್ರೂಪ್ ಎಂಬುದು ಕವಿತಾ, ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ರೆಡ್ಡಿ, ವೈಎಸ್‍ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಮತ್ತು ಇತರರೊಂದಿಗೆ ಸಂಪರ್ಕ ಹೊಂದಿದ ಮದ್ಯದ ಕಾರ್ಟೆಲ್ ಆಗಿದೆ. ಪಿಳ್ಳೈ ಅವರು ಕವಿತಾ ಅವರ ಬೇನಾಮಿ ಹೂಡಿಕೆಗಳನ್ನು ಪ್ರತಿನಿಸುತ್ತಿದ್ದಾರೆ ಎಂದು ಇಡಿ ಆರೋಪಿಸಿದೆ. +ದೆಹಲಿ ಮದ್ಯ ನೀತಿ ಹಗರಣದಲ್ಲಿ ಸೌತ್ ಗ್ರೂಪ್ ಪ್ರಮುಖ ಪಾತ್ರ ವಹಿಸಿತ್ತು. ಕೆ. ಕವಿತಾ ಇದರ ಭಾಗವಾಗಿದ್ದರು ಎಂಬ ಆರೋಪವಿತ್ತು. ಜತೆಗೆ ಹೈದರಾಬಾದ್ ಉದ್ಯಮಿ ಶರತ್ ರೆಡ್ಡಿ, ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ ಮತ್ತು ಅವರ ಮಗ ರಾಘವ್ ಮಾಗುಂಟ ರೆಡ್ಡಿ ಕೂಡ ಸೌತ್ ಗ್ರೂಪ್ ಭಾಗವಾಗಿದ್ದರು ಎನ್ನಲಾಗಿದೆ. \ No newline at end of file diff --git a/eesanje/url_47_127_2.txt b/eesanje/url_47_127_2.txt new file mode 100644 index 0000000000000000000000000000000000000000..3c0473da1b683df21db06e3ff8c7bec6a2525f16 --- /dev/null +++ b/eesanje/url_47_127_2.txt @@ -0,0 +1,4 @@ +ಭಾರತದಲ್ಲಿ ಉತ್ಪಾದನೆಯಾಗಿದೆ 14 ಶತಕೋಟಿ ಮೌಲ್ಯದ ಐಫೋನ್‌ಗಳು +ನವದೆಹಲಿ,ಏ.10-ಆಪಲ್ ಸಂಸ್ಥೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತದಲ್ಲಿ 14 ಶತಕೋಟಿ ಮೌಲ್ಯದ ಐಪೊನ್ಗಳನ್ನು ಉತ್ಪಾದಿಸಿದೆ ಎಂದು ವರದಿಯಾಗಿದೆ.ಭಾರತದಲ್ಲಿರುವ ಫಾಕ್ಸ್ಕಾನ್ ಸಂಸ್ಥೆ ಶೇ.17 ರಷ್ಟು ಐಫೋನ್ಗಳನ್ನು ತಯಾರಿಸಿದೆ ಎಂದು ಬ್ಲೂಮ್ಬರ್ಗ್ ವರದಿ ಉಲ್ಲೇಖಿಸಿದೆ. ಆಪಲ್ ಸಪ್ಲೈಯರ್ ಪೆಗಾಟ್ರಾನ್ ತನ್ನ ಏಕೈಕ ಭಾರತದ ಐಫೋನ್ ಪ್ಲಾಂಟ್ ಅನ್ನು ಮಾರಾಟ ಮಾಡಲು ಟಾಟಾ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ. +ಆಪಲ್ ಸಪ್ಲೈಯರ್ ಪೆಗಾಟ್ರಾನ್ ತನ್ನ ಏಕೈಕ ಭಾರತದ ಐಫೋನ್ ಪ್ಲಾಂಟ್ ಅನ್ನು ಮಾರಾಟ ಮಾಡಲು ಟಾಟಾ ಜೊತೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ. ಬೀಜಿಂಗ್ ಮತ್ತು ವಾಷಿಂಗ್ಟನ್ ನಡುವಿನ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ ಮಧ್ಯೆ ಆಪಲ್ ಚೀನಾವನ್ನು ಮೀರಿ ತನ್ನ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಹೆಚ್ಚು ನೋಡುತ್ತಿದೆ, ಚೀನಾ ವಿಶ್ವದ ಅತಿದೊಡ್ಡ ಐಫೋನ್ ತಯಾರಿಕೆ ಕೇಂದ್ರವಾಗಿ ಉಳಿದಿದೆ. +ಚೆನ್ನೈ ಬಳಿ ಇರುವ ತನ್ನ ಏಕೈಕ ಐಫೋನ್ ಉತ್ಪಾದನಾ ಸೌಲಭ್ಯದ ನಿಯಂತ್ರಣವನ್ನು ಟಾಟಾ ಗ್ರೂಪ್ಗೆ ಹಸ್ತಾಂತರಿಸಲು ಪೆಗಾಟ್ರಾನ್ ಸುಧಾರಿತ ಮಾತುಕತೆ ನಡೆಸುತ್ತಿದೆ ಎಂದು ರಾಯಿಟರ್ಸ್ ಸಂಸ್ಥೆ ವರದಿ ಮಾಡಿದೆ. ಗ್ರಾಹಕ ಸರಕುಗಳ ಸಮೂಹವು ತಮಿಳುನಾಡಿನ ಹೊಸೂರಿನಲ್ಲಿ ಮತ್ತೊಂದು ಸ್ಥಾವರವನ್ನು ನಿರ್ಮಿಸುತ್ತಿದೆ, ಪೆಗಾಟ್ರಾನ್ ಅದರ ಜಂಟಿ ಪಾಲುದಾರಿಕೆಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ. \ No newline at end of file diff --git a/eesanje/url_47_127_3.txt b/eesanje/url_47_127_3.txt new file mode 100644 index 0000000000000000000000000000000000000000..01a176744f1071ccf7c3ed32730a052fd2fdd501 --- /dev/null +++ b/eesanje/url_47_127_3.txt @@ -0,0 +1,7 @@ +ಭವಿಷ್ಯ ನೋಡಬೇಕಾದರೆ ಭಾರತಕ್ಕೆ ಬನ್ನಿ : ಅಮೆರಿಕ ರಾಯಭಾರಿ ಎರಿಕ್ +ನವದೆಹಲಿ,ಏ.10-ಯಾರಾದರೂ ಭವಿಷ್ಯವನ್ನು ನೋಡಲು ಬಯಸಿದರೆ ಅವರು ಭಾರತ ದೇಶಕ್ಕೆ ಬರಬೇಕು ಎಂದು ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಕರೆ ನೀಡಿದ್ದಾರೆ. ಅವರು ಭಾರತ ಮಾಡಿರುವ ಅಭಿವೃದ್ಧಿಯ ದಾಪುಗಾಲುಗಳನ್ನು ಮತ್ತು ವಿಶ್ವದ ಭವಿಷ್ಯವನ್ನು ರೂಪಿಸುವಲ್ಲಿ ಅದರ ಪಾತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. +ಭಾರತವನ್ನು ತನ್ನ ಮನೆ ಎಂದು ಕರೆಯಲು ನಾನು ಅದೃಷ್ಟಶಾಲಿಯಾಗಿದ್ದೇನೆ ಮತ್ತು ಇಲ್ಲಿನ ಅನುಭವವನ್ನು ಮಹಾನ್ ಸವಲತ್ತು ಎಂದು ಬಣ್ಣಿಸಿದರು. ನಾನು ಆಗಾಗ್ಗೆ ಹೇಳುತ್ತೇನೆ, ನೀವು ಭವಿಷ್ಯವನ್ನು ನೋಡಲು ಬಯಸಿದರೆ, ಭಾರತಕ್ಕೆ ಬನ್ನಿ, ನೀವು ಭವಿಷ್ಯವನ್ನು ಅನುಭವಿಸಲು ಬಯಸಿದರೆ, ಭಾರತಕ್ಕೆ ಬನ್ನಿ ಮತ್ತು ನೀವು ಭವಿಷ್ಯದಲ್ಲಿ ಕೆಲಸ ಮಾಡಲು ಬಯಸಿದರೆ, ಭಾರತಕ್ಕೆ ಬನ್ನಿ. ನನಗೆ ಮಾಡಲು ಸಾಧ್ಯವಾಗುವ ದೊಡ್ಡ ಸವಲತ್ತು ಇದೆ ಎಂದು ಅವರು ಹೇಳಿದ್ದಾರೆ. +ಗಾರ್ಸೆಟ್ಟಿ ಅವರು ಬಾಲ್ಯದಲ್ಲಿ ಭಾರತದಲ್ಲಿ ಕಳೆದ ಸಮಯದ ಬಗ್ಗೆ ಮಾತನಾಡಿದರು ಮತ್ತು ಭಾರತದೊಂದಿಗಿನ ಅವರ ಆಳವಾದ ಭಾವನಾತ್ಮಕ ಸಂಪರ್ಕ ಅವರ ಆತ್ಮವನ್ನು ಎಂದಿಗೂ ಬಿಡಲಿಲ್ಲ ಎಂದು ಹೇಳಿದರು. +ಉಭಯ ದೇಶಗಳ ನಡುವಿನ ಬಾಂಧವ್ಯಕ್ಕಾಗಿ ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಸಂದೇಶವನ್ನು ಪುನರುಚ್ಚರಿಸಿದ ಅವರು, ಭಾರತವು ವಿಶ್ವದ ಅತ್ಯಂತ ಪ್ರಮುಖ ದೇಶ ಮತ್ತು ವಾಷಿಂಗ್ಟನ್ನ ಬಾಂಧವ್ಯಗಳು ಜಗತ್ತನ್ನು ರೂಪಿಸಲು ಅತ್ಯಂತ ಪರಿಣಾಮವಾಗಿದೆ ಎಂದು ಅವರು ಹೇಳಿದರು. +ರಾಯಭಾರಿ ಗಾರ್ಸೆಟ್ಟಿ ಅವರು ಯುಎಸ್ ಮತ್ತು ಭಾರತದ ನಡುವಿನ ಸಂಬಂಧಗಳು ಪ್ರಪಂಚದ ಎರಡು ದೊಡ್ಡ ಪ್ರಜಾಪ್ರಭುತ್ವಗಳ ನಡುವಿನ ಸಂಯೋಜಕ ಸಂಬಂಧವಲ್ಲ ಆದರೆ ಗುಣಿಸುವ ಸಂಬಂಧ ಎಂದು ಅಭಿಪ್ರಾಯಪಟ್ಟರು. +ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರು ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಪಾಲುದಾರಿಕೆಯು ತಂತ್ರಜ್ಞಾನದ ಸಹಯೋಗದೊಂದಿಗೆ ಹೊಸ ಎತ್ತರವನ್ನು ತಲುಪಿದೆ ಎಂದು ಹೈಲೈಟ್ ಮಾಡಿದ್ದರಿಂದ ಗಾರ್ಸೇಟ್ಟಿ ಅವರಿಂದ ಈ ಕಾಮೆಂಟ್ ಬಂದಿದೆ. \ No newline at end of file diff --git a/eesanje/url_47_127_4.txt b/eesanje/url_47_127_4.txt new file mode 100644 index 0000000000000000000000000000000000000000..7d04003bf3b2406ee1e37c52be73c659578e2712 --- /dev/null +++ b/eesanje/url_47_127_4.txt @@ -0,0 +1,4 @@ +ಮತದಾನದ ವೇಳೆ ಮತದಾರರ ಉಸಿರಾಟ ಪರೀಕ್ಷೆ ಸಾಧ್ಯವಿಲ್ಲ : ಸುಪ್ರಿಂ ಕೋರ್ಟ್ +ನವದೆಹಲಿ,ಏ. 10 (ಪಿಟಿಐ) :ಚುನಾವಣೆಯ ಸಂದರ್ಭದಲ್ಲಿ ಪ್ರತಿ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತ ಮತದಾರರಿಗೆ ಉಸಿರಾಟ ಪರೀಕ್ಷೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಅರ್ಜಿಯನ್ನು ವಜಾಗೊಳಿಸಿದೆ. +ಆಂಧ್ರಪ್ರದೇಶ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿತು ಮತ್ತು ಇದು ಹೆಚ್ಚು ಪ್ರಚಾರದ ಹಿತಾಸಕ್ತಿ ದಾವೆ ಎಂದು ಪೀಠ ಅಭಿಪ್ರಾಯಪಟ್ಟಿದೆ.ಜನವಾಹಿನಿ ಪಕ್ಷದ ಆಂಧ್ರಪ್ರದೇಶ ಘಟಕದ ಪರ ವಾದ ಮಂಡಿಸಿದ ವಕೀಲರು, ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಯಾವುದೇ ಮತದಾರರು ಮದ್ಯಪಾನ ಮಾಡಿ ಮತದಾನ ಮಾಡಬಾರದು ಎಂದು ವಾದಿಸಿದ್ದನ್ನು ಮನ್ನಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. +ಜನವಾಹಿನಿ ಪಕ್ಷದ ಆಂಧ್ರ ಪ್ರದೇಶ ಘಟಕವು ಆರಂಭದಲ್ಲಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಫೆಬ್ರವರಿ 28 ರಂದು ಅರ್ಜಿಯನ್ನು ವಜಾಗೊಳಿಸಲಾಗಿತ್ತು.ಮತಗಟ್ಟೆಗೆ ಪ್ರವೇಶಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ವ್ಯಕ್ತಿಯ ಮೊದಲು ಉಸಿರಾಟದ ಪರೀಕ್ಷೆಗೆ ಒಳಪಡಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಚುನಾವಣಾ ಆಯೋಗಕ್ಕೆ ಕಡ್ಡಾಯಗೊಳಿಸುವ ಯಾವುದೇ ನಿರ್ದಿಷ್ಟ ಕಾನೂನು ನಿಬಂಧನೆಗಳ ಬಗ್ಗೆ ತನ್ನ ಗಮನವನ್ನು ಸೆಳೆಯಲು ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು. \ No newline at end of file diff --git a/eesanje/url_47_127_5.txt b/eesanje/url_47_127_5.txt new file mode 100644 index 0000000000000000000000000000000000000000..92953eec9094de0d7be32b9c7fae67d9e9895afa --- /dev/null +++ b/eesanje/url_47_127_5.txt @@ -0,0 +1,4 @@ +ಮಧ್ಯರಾತ್ರಿ ಮನೆಗೆ ನುಗ್ಗಿ ಪಕ್ಕದ್ಮನೆ ಮಹಿಳೆ ಮೇಲೆ ಅತ್ಯಾಚಾರ +ಅಮೇಥಿ, ಏ. 10 (ಪಿಟಿಐ) :ಮಧ್ಯರಾತ್ರಿ ಟೆರೆಸ್ ಮೂಲಕ ಪಕ್ಕದ ಮನೆಗೆ ನುಗ್ಗಿ ನಿದ್ರಿಸುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಅಮೇಥಿಯಲ್ಲಿ ನಡೆದಿದೆ. 20 ವರ್ಷದ ಮಹಿಳೆಯ ಮೇಲೆ ಟೆರೇಸ್ ಮೂಲಕ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಶುಕುಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸಲ್ಮಾನ್ ವಿರುದ್ಧ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಟೆರೇಸ್ ಮೂಲಕ ಮಹಿಳೆಯ ಮನೆಗೆ ನುಗ್ಗಿದ ಸಲ್ಮಾನ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. +ಮಹಿಳೆಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಸಲ್ಮಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಸರ್ಕಲ್ ಆಫೀಸರ್ ಅತುಲ್ ಸಿಂಗ್ ಹೇಳಿದ್ದಾರೆ.ಅತ್ಯಾಚಾರ ನಡೆಸಿ ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_47_127_6.txt b/eesanje/url_47_127_6.txt new file mode 100644 index 0000000000000000000000000000000000000000..56c53f9d90763a67845be67e3d068f80f8b9190d --- /dev/null +++ b/eesanje/url_47_127_6.txt @@ -0,0 +1,7 @@ +ಓವರ್ ಡೋಸ್ ಡ್ರಗ್ಸ್ ಸೇವನೆಯಿಂದ ಯುವತಿ ಸಾವು, ಸ್ನೇಹಿತನ ಬಂಧನ +ನವದೆಹಲಿ,ಏ.10-ಥ್ರಿಲ್‍ಗಾಗಿ ಬಾಯ್-ಫ್ರೆಂಡ್ ನೀಡಿದ ಮಾದಕ ವಸ್ತು ಸೇವನೆ ಓವರ್ ಡೋಸ್ ಆಗಿ 18 ವರ್ಷದ ಯುವತಿ ಮೃತಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿದೆ.ಸ್ನೇಹಿತ ಆಕೆಯನ್ನು ಲಕ್ನೋದ ತಿವಾರಿಗಂಜ್‍ನಲ್ಲಿರುವ ಖಾಲಿ ಜಾಗಕ್ಕೆ ಕರೆದೊಯ್ದು ಔಷಧ ಮತ್ತು ವ್ಯಸನಕಾರಿ ಔಷಧದ ಮಿಶ್ರಣವನ್ನು ಚುಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಹಿಳೆ ಬೆಂಗಳೂರಿನಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು ಮತ್ತು ಏಪ್ರಿಲ್ 3 ರಂದು ಲಕ್ನೋಗೆ ಬಂದಿದ್ದರು ಎನ್ನಲಾಗಿದೆ. ಏಪ್ರಿಲ್ 7 ರಂದು ಬೆಂಗಳೂರಿಗೆ ರೈಲು ಹಿಡಿಯಲು ಮಹಾನಗರದ ನಿವಾಸದಿಂದ ಹೊರಟಿದ್ದಾಗ ಈ ಘಟನೆ ನಡೆದಿದೆ.ಬಾರಾಬಂಕಿಯ ಆರೋಪಿ ವಿವೇಕ್ ಮೌರ್ಯ (28) ಎಂಬಾತನನ್ನು ಬಂಧಿಸಲಾಗಿದೆ. ಅವರು ಮಹಾನಗರದಲ್ಲಿ ನೆಲೆಸಿದ್ದರು ಮತ್ತು ಸಂತ್ರಸ್ತೆಯೊಂದಿಗೆ ಸ್ನೇಹಿತರಾಗಿದ್ದರು ಎಂದು ಎಸಿಪಿ (ವಿಭೂತಿ ಖಂಡ್) ಅನಿಂಧ್ಯಾ ವಿಕ್ರಮ್ ಸಿಂಗ್ ಹೇಳಿದ್ದಾರೆ. +ಆರೋಪಿ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ, ಆದರೆ ತನಿಖೆಯ ಸಮಯದಲ್ಲಿ ಅದನ್ನು ಐಪಿಸಿ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ ಅಪರಾಧಿ ನರಹತ್ಯೆ) ಗೆ ಪರಿವರ್ತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮಹಿಳೆಯ ಕುಟುಂಬವು ಡ್ರಗ್ ಓವರ್ ಡೋಸ್ ಉದ್ದೇಶಪೂರ್ವಕವಾಗಿ ಅವಳನ್ನು ಕೊಲೆ ಮಾಡಿರಬಹುದು ಎಂದು ಆತಂಕ ವ್ಯಕ್ತಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ವಿಚಾರಣೆಯ ಸಮಯದಲ್ಲಿ, ಆರೋಪಿಯು ತನ್ನ ಥ್ರಿಲ್ -ಸೀಕಿಂಗ್ ಪ್ರಯೋಗ ತಪ್ಪಾಗಿದೆ ಎಂದು ಪೊಲೀಸರಿಗೆ ತಿಳಿಸಿದನು. ಮನೆಯಿಂದ ಹೊರ ಹೋಗುವಾಗ ಆಕೆ ತನಗೆ ಕರೆ ಮಾಡಿ ವ್ಯಸನಕಾರಿ ಮಾದಕ ದ್ರವ್ಯತರಲು ತಿಳಿಸಿದ್ದಳು. +ಮೌರ್ಯ ಅವರು ತಿವಾರಿಗಂಜ್‍ನಲ್ಲಿರುವ ಸ್ನೇಹಿತನ ಖಾಲಿ ಪ್ಲಾಟ್‍ಗೆ ಅವಳನ್ನು ಕರೆದೊಯ್ದರು, ಅಲ್ಲಿ ಅವರು ಅವಿಲ್ ಇಂಜೆಕ್ಷನ್‍ನಲ್ಲಿ ಸ್ಮ್ಯಾಕ್ ಅನ್ನು ಬೆರೆಸಿದರು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಮೊದಲು ತಾವೇ ಅದನ್ನು ಚುಚ್ಚಿಕೊಂಡು ನಂತರ ಬಾಲಕಿಗೆ ಚುಚ್ಚುಮದ್ದು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಮೃತನ ತಾಯಿ ನೀಡಿದ ದೂರಿನ ಮೇರೆಗೆ ಬಿಬಿಡಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಎಫ್ ಐಆರ್ ದಾಖಲಿಸಿ ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. \ No newline at end of file diff --git a/eesanje/url_47_127_7.txt b/eesanje/url_47_127_7.txt new file mode 100644 index 0000000000000000000000000000000000000000..6fb5bfb9e60fab524f17b2bf8d4dafca6283134a --- /dev/null +++ b/eesanje/url_47_127_7.txt @@ -0,0 +1,7 @@ +ರಾಮ್‍ದೇವ್ ಕ್ಷಮಾಪಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್ +ನವದೆಹಲಿ,ಏ.10-ಕಂಪನಿಯ ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‍ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಾವು ಕುರುಡರಲ್ಲ ಮತ್ತು ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ ಎಂದು ಹೇಳಿದೆ. +ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ಲೈಸೆನ್ಸ್ ಪ್ರಾ„ಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಮತ್ತು ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಸಹ ತಿಳಿಸಿದೆ. +ಕ್ಷಮಾಪಣೆಯು ಕಾಗದದ ಮೇಲಿದೆ. ಅವರ ಬೆನ್ನು ಗೋಡೆಗೆ ಎದುರಾಗಿದೆ. ನಾವು ಇದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತೇವೆ, ನಾವು ಉದ್ದೇಶಪೂರ್ವಕ ಒಪ್ಪಂದದ ಉಲ್ಲಂಘನೆ ಎಂದು ಪರಿಗಣಿಸುತ್ತೇವೆ ಎಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠ ಹೇಳಿದೆ. +ವಿಚಾರಣೆಯ ಆರಂಭದಲ್ಲಿ ರಾಮ್‍ದೇವ್ ಮತ್ತು ಬಾಲಕೃಷ್ಣ ಅವರು ಮೊದಲು ಮಾಧ್ಯಮಗಳಿಗೆ ಕ್ಷಮೆಯಾಚಿಸಿದರು ಎಂದು ಪೀಠವು ಗಮನಿಸಿತು. ವಿಷಯವು ನ್ಯಾಯಾಲಯದ ಮೆಟ್ಟಿಲೇರುವವರೆಗೂ, ನಮಗೆ ಅಫಿಡವಿಟ್‍ಗಳನ್ನು ಕಳುಹಿಸುವುದು ಸೂಕ್ತವೆಂದು ಕಂಟೆಂಟ್‍ಗಳು ಕಂಡುಬಂದಿಲ್ಲ. ಅವರು ಅದನ್ನು ಮೊದಲು ಮಾಧ್ಯಮಗಳಿಗೆ ಕಳುಹಿಸಿದರು, ನಿನ್ನೆ ಸಂಜೆ 7.30 ರವರೆಗೆ ಅದನ್ನು ನಮಗೆ ಅಪ್‍ಲೋಡ್ ಮಾಡಿಲ್ಲ. ಅವರು ಪ್ರಚಾರವನ್ನು ಸ್ಪಷ್ಟವಾಗಿ ನಂಬುತ್ತಾರೆ ಎಂದು ನ್ಯಾಯಮೂರ್ತಿ ಕೊಹ್ಲಿ ಹೇಳಿದರು. . +ಪತಂಜಲಿ ಸಂಸ್ಥಾಪಕರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ನೋಂದಾವಣೆ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಮತ್ತು ಕ್ಷಮೆ ಕೇಳಲಾಗಿದೆ ಎಂದು ಹೇಳಿದರು. +ಅಫಿಡವಿಟ್‍ಗಳನ್ನು ಓದುತ್ತಿದ್ದಂತೆ ನ್ಯಾಯಮೂರ್ತಿ ಅಮಾನುಲ್ಲಾ ಅವರು, ನೀವು ಅಫಿಡವಿಟ್ ಅನ್ನು ವಂಚಿಸುತ್ತಿದ್ದೀರಿ, ಯಾರು ಅದನ್ನು ಕರಡು ರಚಿಸಿದ್ದಾರೆ, ನನಗೆ ಆಶ್ಚರ್ಯವಾಗಿದೆ ಎಂದು ಹೇಳಿದರು. ರೋಹಟಗಿ ಅವರು ಅದು ಕಳೆಗುಂದಿದೆ ಎಂದು ಹೇಳಿದರು, ಅದಕ್ಕೆ ನ್ಯಾಯಾಲಯವು ತುಂಬಾ ಸಣ್ಣ ಮಾತು ಎಂದು ಉತ್ತರಿಸಿತು. \ No newline at end of file diff --git a/eesanje/url_47_127_8.txt b/eesanje/url_47_127_8.txt new file mode 100644 index 0000000000000000000000000000000000000000..86c934bc0159b397f96d76abcbbdcc23ba94a4b0 --- /dev/null +++ b/eesanje/url_47_127_8.txt @@ -0,0 +1,10 @@ +ಬಂಧನ ಪ್ರಶ್ನಿಸಿದ್ದ ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ +ನವದೆಹಲಿ,ಏ.10-ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅರವಿಂದ ಕೇಜ್ರಿವಾಲ್ ಅವರ ಬಂಧನವು ಕಾನೂನು ನಿಬಂಧನೆಗೆ ವಿರುದ್ದವಾಗಿಲ್ಲ. ಹೀಗಾಗಿ ಅವರ ರಿಮ್ಯಾಂಡ್ ಅನ್ನು ಕಾನೂನು ಬಾಹಿರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರು ತೀರ್ಪಿನಲ್ಲಿ ಹೇಳಿದ್ದಾರೆ. +ತನ್ನ ತೀರ್ಪನ್ನು ಪ್ರಕಟಿಸುವಾಗ, ಜಾರಿ ನಿರ್ದೇಶನಾಲಯವು ಹಂಚಿಕೊಂಡ ವಿಷಯದ ಪ್ರಕಾರ, ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಹೈಕೋರ್ಟ್ ಗಮನಿಸಿದೆ. +ಅರವಿಂದ್ ಕೇಜ್ರಿವಾಲ್ ಅವರು ಇತರರೊಂದಿಗೆ ಪಿತೂರಿ ನಡೆಸಿದ್ದಾರೆ ಮತ್ತು ಅಪರಾಧದ ಆದಾಯವನ್ನು ಬಳಸಿಕೊಳ್ಳುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹಂಚಿಕೊಂಡ ವಿವರವನ್ನು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.ರದ್ದುಗೊಂಡಿರುವ ಮದ್ಯ ನೀತಿಯನ್ನು ರೂಪಿಸುವಲ್ಲಿ ಮತ್ತು ಕಿಕ್‍ಬ್ಯಾಕ್‍ಗೆ ಬೇಡಿಕೆಯಿಡುವಲ್ಲಿ ಕೇಜ್ರಿವಾಲ್ ಭಾಗಿಯಾಗಿದ್ದಾರೆ. ಪೂರಕ ಸಾಕ್ಷ್ಮಧಾರಗಳಿರುವ ಹಿನ್ನಲೆಯಲ್ಲಿ ಕೇಜ್ರಿವಾಲ್ ಬಂಧನ ಕಾನೂನು ಬದ್ಧವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. +ತನಿಖಾ ಸಂಸ್ಥೆ ಯಾರನ್ನು ಬೇಕಾದರೂ ತನಿಖೆ ನಡೆಸಬಹುದು ಎಂದು ನ್ಯಾಯಾಲಯ ಹೇಳಿದೆ. ಅಮಾನತುಲ್ಲಾ ಖಾನ್ ಅವರ ಪ್ರಕರಣದ ಉದಾಹರಣೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ಸಾರ್ವಜನಿಕ ವ್ಯಕ್ತಿಗಳನ್ನು ಸಹ ಬಿಡಬಾರದು. ನಾವು ವಿಚಾರಣಾ ನ್ಯಾಯಾಲಯವನ್ನು ಬದಲಿಸಲು ಸಾಧ್ಯವಿಲ್ಲ. ಕೇಜ್ರಿವಾಲ್ ಅವರನ್ನು ವಿಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಬಹುದಿತ್ತು ಎಂಬ ವಾದವನ್ನು ತಿರಸ್ಕರಿಸಲಾಗಿದೆ. ತನಿಖೆ ಹೇಗೆ ನಡೆಸಬೇಕು ಎಂಬುದನ್ನು ನಿರ್ಧರಿಸುವುದು ಆರೋಪಿಗಳ ಕೆಲಸವಲ್ಲ. ಇದು ಆರೋಪಿಯ ಅನುಕೂಲಕ್ಕೆ ತಕ್ಕಂತೆ ಇರುವಂತಿಲ್ಲ ಎಂದಿದೆ. +ಕೇಜ್ರಿವಾಲ್ ಮಾರ್ಚ್‍ನಿಂದ ಸಮನ್ಸ್ ನಿರ್ಲಕ್ಷಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಹೀಗಿರುವಾಗ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಂಧನ ಮಾಡಲಾಗಿದೆ ಎಂದು ಹೇಳಲಾಗದು. ನ್ಯಾಯಾಲಯವು ಕಾನೂನಿಗೆ ಬದ್ಧವಾಗಿದೆ, ರಾಜಕೀಯದಿಂದಲ್ಲ. ನ್ಯಾಯಾೀಶರು ಸಂವಿಧಾನಕ್ಕೆ ಬದ್ಧರಾಗಿದ್ದಾರೆ. ನ್ಯಾಯಾಂಗದ ಕೆಲಸವೆಂದರೆ ಕಾನೂನನ್ನು ಅರ್ಥೈಸುವುದು ಮತ್ತು ಇದರಲ್ಲಿ ಅದು ಯಾರ ಪರವಾಗಿಯೂ ನಿಲ್ಲುವುದಿಲ್ಲ, ರಾಜಕೀಯದಲ್ಲಿ ತೊಡಗುವುದಿಲ್ಲ. ರಾಜಕೀಯ ವ್ಯಕ್ತಿಗಳ ಪ್ರಕರಣಗಳಲ್ಲಿ ನ್ಯಾಯಾಲಯವು ಕಾನೂನಿನತ್ತ ಮಾತ್ರ ನೋಡಬೇಕು ಮತ್ತು ಅದಕ್ಕೆ ರಾಜಕೀಯ ಅಗತ್ಯವಿಲ್ಲ. +ನ್ಯಾಯಾಲಯದ ಕಾಳಜಿ ಸಾಂವಿಧಾನಿಕ ನೈತಿಕತೆಯೇ ಹೊರತು, ರಾಜಕೀಯ ನೈತಿಕತೆಯಲ್ಲ. ಈ ಪ್ರಕರಣದಲ್ಲಿ ನ್ಯಾಯಾಲಯವು ಕಾನೂನು ಸಂಗತಿಗಳನ್ನು ಮಾತ್ರ ಪರಿಗಣಿಸಿದೆ ಎಂದಿದೆ. ಕೇಜ್ರಿವಾಲ್ ಮಾರ್ಚ್ 23 ರಂದು ತಮ್ಮ ಬಂಧನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 3 ರಂದು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮೊದಲು ಏಪ್ರಿಲ್ 1 ರಂದು ರೂಸ್ ಅವೆನ್ಯೂ ಕೋರ್ಟ್ ಕೇಜ್ರಿವಾಲ್ ಅವರ ಅರ್ಜಿಯನ್ನು ತಿರಸ್ಕರಿಸಿ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. +ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಮದ್ಯ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿತ್ತು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇದೀಗ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ, ಹೈಕೋರ್ಟ್ ಆದೇಶದ ಪ್ರತಿ ಕೈಗೆ ಸಿಕ್ಕ ತಕ್ಷಣ, ಆದಷ್ಟು ಬೇಗ ಸುಪ್ರೀಂನಲ್ಲಿ ಪ್ರಶ್ನಿಸುವುದಾಗಿ ಕೇಜ್ರಿವಾಲ್ ಪರ ವಕೀಲರು ಹೇಳಿದ್ದಾರೆ. ಇನ್ನು ಎಎಪಿ ಮೂಲಗಳು ಸುಪ್ರೀಂಕೋರ್ಟ್‍ಗೆ ಹೋಗುವುದಾಗಿ ಹೇಳಿದ್ದು, ನಮಗೆ ಅಲ್ಲಿ ನ್ಯಾಯ ಸಿಗುತ್ತದೆ ಎಂದು ವಿಶ್ವಾಸ ಕೂಡಾ ವ್ಯಕ್ತಪಡಿಸಿದ್ದಾರೆ. +ಸದ್ಯ ಕೇಜ್ರಿವಾಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 21 ರ ರಾತ್ರಿ ಅವರನ್ನು ಬಂಸಲಾಗಿತ್ತು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು, ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 01 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. +ಎಎಸ್ಜಿ ಎಸ್ವಿ ರಾಜು ಇಡಿಯನ್ನು ಪ್ರತಿನಿಸಿದ್ದರು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಕೇಂದ್ರ ತನಿಖಾ ಸಂಸ್ಥೆಯು ಸೆಕ್ಷನ್ 50 ಪಿಎಂಎಲ್‍ಎಗೆ ಅನುಗುಣವಾಗಿಲ್ಲ ಎಂದು ವಾದಿಸಿದರು, ಅದು ಸಮನ್ಸ್ ನೀಡಲು, ಸಾಕ್ಷ್ಯ ಸಂಗ್ರಹಿಸಲು ಇತ್ಯಾದಿಗಳಿಗೆ ಅಧಿಕಾರ ನೀಡುತ್ತದೆ.ಜಾರಿ ನಿರ್ದೇಶನಾಲಯವು ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಮದ್ಯ ನೀತಿ ಪ್ರಕರಣದ ಕಿಂಗ್‍ಪಿನ್ ಎಂದು ಕರೆದಿದೆ ದೆಹಲಿ ರೂಸ್ ಅವೆನ್ಯೂ ನ್ಯಾಯಾಲಯದ ಹಿಂದಿನ ಆದೇಶದ ಪ್ರಕಾರ ಏಪ್ರಿಲ್ 15 ರವರೆಗೆ ತಿಹಾರ್ ಜೈಲಿನಲ್ಲಿ ಇರಬೇಕಾಗಿದೆ. \ No newline at end of file diff --git a/eesanje/url_47_127_9.txt b/eesanje/url_47_127_9.txt new file mode 100644 index 0000000000000000000000000000000000000000..5582a31193fc931012f121232b930c16746a2054 --- /dev/null +++ b/eesanje/url_47_127_9.txt @@ -0,0 +1,7 @@ +ತಮಿಳಿಗರ ಮೇಲೆ ತನ್ನ ಇಚ್ಚೆ ಹೇರಲು ಪ್ರಯತ್ನಿಸುತ್ತಿದೆ ಬಿಜೆಪಿ ; ಕಾಂಗ್ರೆಸ್ +ನವದೆಹಲಿ,ಏ. 10 (ಪಿಟಿಐ) :ತಮಿಳುನಾಡಿನ ಜನರ ಮೇಲೆ ಬಿಜೆಪಿ ಪದೇ ಪದೇ ತನ್ನ ಇಚ್ಛೆಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ ಮತ್ತು ರಾಜ್ಯದಲ್ಲಿ ನೀಟ್‍ನ ವಿನಾಶಕಾರಿ ಪರಿಣಾಮಗಳು ಮತ್ತು ಕೇಂದ್ರದಿಂದ ಸಾಕಷ್ಟು ತೆರಿಗೆ ವಿಕೇಂದ್ರೀಕರಣದಂತಹ ವಿಷಯಗಳನ್ನು ಅದು ಪಟ್ಟಿ ಮಾಡಿದೆ. +ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕೊಯಮತ್ತೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗೆ ಮುನ್ನ ಈ ವಾಗ್ದಾಳಿ ನಡೆಸಿದರು ಮತ್ತು ರಾಜ್ಯದ ಮೇಲೆ ಪರಿಣಾಮ ಬೀರುವ ಪ್ರಮುಖ ವಿಷಯಗಳ ಬಗ್ಗೆ ಪ್ರಶ್ನೆಗಳನ್ನು ಹಾಕಿದರು. +ಇಂದು, ಪ್ರಧಾನಿ ಮೋದಿ ತಮಿಳುನಾಡಿನ ಕೊಯಮತ್ತೂರಿನಲ್ಲಿ ಇರುತ್ತಾರೆ. ಸಹಕಾರಿ ಫೆಡರಲಿಸಂಗಾಗಿ ಸುದೀರ್ಘ ಇತಿಹಾಸವನ್ನು ಹೊಂದಿರುವ ರಾಜ್ಯದಲ್ಲಿ, ಬಿಜೆಪಿ ತನ್ನ ಇಚ್ಛೆಯನ್ನು ಜನರ ಮೇಲೆ ಹೇರಲು ಪದೇ ಪದೇ ಪ್ರಯತ್ನಿಸುತ್ತಿದೆ ಎಂದು ರಮೇಶ್ ಹೇಳಿದರು. +ತಮಿಳುನಾಡಿನಲ್ಲಿ ಮೋದಿ ಸರ್ಕಾರದ ದಾಖಲೆಯು ಪ್ರಶ್ನೆಯನ್ನು ಕೇಳುತ್ತದೆ. ಪ್ರಧಾನಿ ಮೋದಿ ಜನರನ್ನು ಪ್ರತಿನಿ„ಸಲು ಬಯಸುತ್ತಾರೆಯೇ ಅಥವಾ ಅವರನ್ನು ಆಳಲು ಬಯಸುತ್ತಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ. +2017 ರಲ್ಲಿ ಬಿಜೆಪಿ ಸರ್ಕಾರವು ನೀಟ್ ಪರೀಕ್ಷೆಯನ್ನು ಪರಿಚಯಿಸಿತು ಮತ್ತು ಇದು ಬಡ ಮತ್ತು ಅಂಚಿನಲ್ಲಿರುವ ಸಮುದಾಯಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿ ಅನನುಕೂಲವಾಗುತ್ತದೆ ಎಂಬ ಭಯದಿಂದ ಇದು ವ್ಯಾಪಕವಾದ ಸಾರ್ವಜನಿಕ ಹಿನ್ನಡೆಯನ್ನು ಎದುರಿಸಿತು ಎಂದು ರಮೇಶ್ ಹೇಳಿದರು. +ಬಹಳ ಬೇಗ, ಈ ಭಯಗಳು ದೃಢಪಟ್ಟಿವೆ. 2019 ರ ಅಂಕಿಅಂಶಗಳ ಪ್ರಕಾರ, ಪರೀಕ್ಷೆಗೆ ಅರ್ಹತೆ ಪಡೆದ ಶೇ.2 ರಷ್ಟು ವಿದ್ಯಾರ್ಥಿಗಳು ಮಾತ್ರ ಖಾಸಗಿ ಕೋಚಿಂಗ್‍ಗೆ ದಾಖಲಾಗದೆ ಹಾಗೆ ಮಾಡಿದ್ದಾರೆ. ಕೋಚಿಂಗ್ ಸೆಂಟರ್‍ಗಳು ಪ್ರತಿ ವಿದ್ಯಾರ್ಥಿಗೆ 2.5 ಲಕ್ಷದಿಂದ 5 ಲಕ್ಷದವರೆಗೆ ಶುಲ್ಕ ವಿಧಿಸುವುದರಿಂದ, ಇದು ಅಸಾಧ್ಯವಾಗಿದೆ ಎಂದರು. \ No newline at end of file diff --git a/eesanje/url_47_128_1.txt b/eesanje/url_47_128_1.txt new file mode 100644 index 0000000000000000000000000000000000000000..c4a39fd595e7b461e1ae9026a8db155f7131a847 --- /dev/null +++ b/eesanje/url_47_128_1.txt @@ -0,0 +1,6 @@ +ನಾಪತ್ತೆಯಾಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವವಾಗಿ ಪತ್ತೆ +ಪುಣೆ, ಅ.8 –ಇತ್ತೀಚೆಗೆ ನಿಗೂಢವಾಗಿ ನಾಪತ್ತೆಯಾಗಿದ್ದ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶವ ರಾಜ್ಯದ ಅಹ್ಮದ್‍ನಗರ ಜಿಲ್ಲೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಲೇಜು ಸ್ನೇಹಿತರು ಸೇರಿದಂತೆ ಮೂವರು ಆಕೆಯನ್ನು ಅಪಹರಿಸಿ ನಂತರ ಕತ್ತು ಹಿಸುಕಿ ಕೊಂದಿದ್ದಾರೆಎಂದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಯುವತಿಯ ಶವ ನಿನ್ನೆ ಅಹ್ಮದ್‍ನಗರದಲ್ಲಿ ಪತ್ತೆಯಾಗುತ್ತಿದ್ದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ವಿದ್ಯಾರ್ಥಿಯು ಪುಣೆಯ ವಘೋಲಿ ಪ್ರದೇಶದ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಳು. ಕಳೆದ ಮಾರ್ಚ್ 29 ರಂದು ಸ್ನೇಹಿತ ಮತ್ತು ಇತರ ಇಬ್ಬರು ಅವಳನ್ನು ಭೇಟಿಯಾಗಿ ಸುತ್ತಾಡಿ ನಂತರ ಹಾಸ್ಟೆಲ್‍ಗೆ ಬಿಟ್ಟದ್ದರು. +ನಂತರ ಮಾರ್ಚ್ 30 ರಂದು ಯಾರರಿಗೂ ತಿಳಿಯದಂತೆ ಅಕೆಯನ್ನು ಅಹ್ಮದ್‍ನಗರಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ನಂತರ ಆಕೆಯನ್ನು ಕತ್ತು ಹಿಸುಕಿ ಕೊಂದು ಶವವನ್ನು ಅಹಮದ್‍ನಗರದ ಹೊರವಲಯದಲ್ಲಿ ಹೂತುಹಾಕಿ ಆಕೆಯ ಸೆಲ್‍ ಫೋನ್ ನ ಸಿಮ್ ಕಾರ್ಡ್ ತೆಗೆದು ಬಿಸಾಡಿದ್ದಾರೆ. +ಇನ್ನು ವಿದ್ಯಾರ್ಥಿನಿ ಕುಟುಂಬ ಸದಸ್ಯರು ಆಕೆಯೊಂದಿಗೆ ಸಂಪರ್ಕಮಡಲು ಸಾಧ್ಯವಾಗದ ಕಾರಣ, ಅವರು ಕಾಲೇಜು ಮತ್ತು ಹಾಸ್ಟೆಲ್‍ಗೆ ಬಂದು ವಿಚಾರಿಸಿದ್ದರು ಆದರೆ ಆಕೆಯನ್ನು ಕಾಣದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಆರೋಪಿಗಳು ಆಕೆಯ ಪೋಷಕರಿಗೆ 9 ಲಕ್ಷ ರೂಪಾಯಿ ಹಣ ನೀಡುವಂತೆ ಸಂದೇಶ ಕಳುಹಿಸಿದ್ದರು. ನಂತರ ಕುಟುಂಬವು ಪೊಲೀಸರಿಗೆ ತಿಳಿಸಿದ್ದರು ತನಿಖೆ ಚುರುಕುಗೊಳಿಸಿ ತಾಂತ್ರಿಕ ನೆರೆವಿನೊಂದಿಗೆ ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಅಧಿಕಾರಿ ಹೇಳಿದರು. \ No newline at end of file diff --git a/eesanje/url_47_128_10.txt b/eesanje/url_47_128_10.txt new file mode 100644 index 0000000000000000000000000000000000000000..7e9500ce939896d32e705b617de292df85512246 --- /dev/null +++ b/eesanje/url_47_128_10.txt @@ -0,0 +1,6 @@ +ಬಿಆರ್‌ಎಸ್‌, ಬಿಜೆಪಿ ವಿರುದ್ಧ ರಾಹುಲ್ ಕಿಡಿ +ಹೈದರಾಬಾದ್, ಏ.7- ಲೋಕಸಭೆ ಚುನಾವಣೆಗೂ ಮುನ್ನ ತೆಲಂಗಾಣ ಫೋನ್ ಕದ್ದಾಲಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ರಾಷ್ಟ್ರ ಸಮಿತಿ ಮತ್ತು ಬಿಜೆಪಿ ವಿರುದ್ಧ ದ್ವಿಮುಖ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಮಾಜಿ ಮುಖ್ಯಮಂತ್ರಿ (ಕೆ ಚಂದ್ರಶೇಖರ ) ಇಲ್ಲಿ ಏನು ಮಾಡಿದರು, ಪ್ರಧಾನಿ ಮತ್ತು ಬಿಜೆಪಿ ದೆಹಲಿಯಲ್ಲಿ ಏನು ಮಾಡುತ್ತಿದ್ದಾರೆ, ಜಾರಿ ನಿರ್ದೇಶನಾಲಯವು ಸುಲಿಗೆ ನಿರ್ದೇಶನಾಲಯವಾಗಿದೆ ಎಂದು ವಾಗ್ದಾಳಿ ನಡೆಸಿದರು. +ಕೇಂದ್ರೀಯ ಸಂಸ್ಥೆಯ ಕುರಿತಾದ ಗಾಂಧಿಯವರ ಹೇಳಿಕೆಗಳು ನರೇಂದ್ರ ಮೋದಿ ಸರ್ಕಾರದ ಮೇಲೆ ಪ್ರತಿಪಕ್ಷಗಳ ಆರೋಪದ ಭಾಗವಾಗಿದೆ, ಇದು ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ್ಯಾಯಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಈ ವಿಷಯದ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು. +ಹಿರಿಯ ಪೊಲೀಸ್ ಅಧಿಕಾರಿಗಳು ಹಾಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಮತ್ತು ಹಲವಾರು ಸೆಲೆಬ್ರಿಟಿಗಳು ಮತ್ತು ಉದ್ಯಮಿಗಳ ಫೋನ್‍ಗಳನ್ನು ಕದ್ದಾಲಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೆಸಿಆರ್ ನೇತೃತ್ವದ ಬಿಆರ್‍ಎಸ್ ಸರ್ಕಾರ ಭಾರಿ ವಿವಾದದ ಕೇಂದ್ರಬಿಂದುವಾಗಿದೆ.ರೆಡ್ಡಿ ಪ್ರಕರಣದ ತನಿಖೆಗೆ ಆದೇಶಿಸಿದ ನಂತರ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಬಿಆರ್‍ಎಸ್ ಪಕ್ಷದ ನಿvಗೆ ಕೊಡುಗೆ ನೀಡುವಂತೆ ಬ್ಲ್ಯಾಕ್‍ಮೇಲ್ ಮಾಡಲು ಉದ್ಯಮಿಗಳ ಕಣ್ಗಾವಲು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. +ಒಂದು ವೇಳೆ ಫೋನ್ ಕದ್ದಾಲಿಕೆ ನಡೆದಿದ್ದರೆ ಅದು ಕೆಲ ಗೊಂದಲಿಗರಿಗೆ ಅಥವಾ ಕ್ರಿಮಿನಲ್‍ಗಳಿಗೆ ಸೀಮಿತವಾಗಿರಬಹುದು ಎಂದು ಮಾಜಿ ಸಚಿವ ಹಾಗೂ ಕೆಸಿಆರ್ ಪುತ್ರ ಕೆಟಿ ರಾಮರಾವ್ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಇದನ್ನು ಅಂತರರಾಷ್ಟ್ರೀಯ ಹಗರಣ ಎಂದು ಉತ್ಪ್ರೇಕ್ಷಿಸುತ್ತಿದೆ ಎಂದು ಪಕ್ಷದ ಸಭೆಯಲ್ಲಿ ಹೇಳಿದರು. ಇದು ಮುಖ್ಯಮಂತ್ರಿಯಿಂದ ತೀಕ್ಷ್ಣವಾದ ಪ್ರತಿಕ್ರಿಯೆಯನ್ನು ಪಡೆಯಿತು, ಕೆಟಿಆರ್ ಫೋನ್ ಟ್ಯಾಪಿಂಗ್ ಮಾಡುವುದನ್ನು ನಾಚಿಕೆಯಿಲ್ಲದೆ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಹೇಳಿದರು ಮತ್ತು ಹೊಣೆಗಾರಿಕೆಗೆ ಕರೆ ನೀಡಿದರು. +ತೆಲಂಗಾಣದ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಆರೋಪಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಬಿಆರ್‍ಎಸ್ ಮಾನ್ಯತೆಯನ್ನು ಮರುಪರಿಶೀಲಿಸಬೇಕು ಎಂದು ಹೇಳಿದ್ದಾರೆ. ಇದು ಸಾಮಾನ್ಯ ಪ್ರಕರಣವಲ್ಲ, ಇದು ತುಂಬಾ ಗಂಭೀರವಾದ ವಿಷಯವಾಗಿದೆ. ಇದು ಕೇವಲ ರಾಜಕೀಯ ಸೇಡಿನ ಕ್ರಮವಲ್ಲ ಮತ್ತು ಕೇವಲ ರಾಜಕೀಯ ಲಾಭಕ್ಕಾಗಿ ಫೋನ್ ಕದ್ದಾಲಿಕೆ ವಿಷಯವಲ್ಲ. ಆದರೆ, ವೈಯಕ್ತಿಕ ಗೌಪ್ಯತೆ, ವ್ಯಕ್ತಿಗಳ ಗೌರವ ಮತ್ತು ಸಂಬಂಧಿತ ನಿಯಮಗಳ ಉಲ್ಲಂಘನೆಯಾಗಿದೆ. , ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_47_128_11.txt b/eesanje/url_47_128_11.txt new file mode 100644 index 0000000000000000000000000000000000000000..43b8c191c9775f03a0adcd576fc560740f40b435 --- /dev/null +++ b/eesanje/url_47_128_11.txt @@ -0,0 +1,8 @@ +ಹವಾಮಾನ ಮುನ್ಸೂಚನೆಗೂ ಕೃತಕಬುದ್ಧಿಮತ್ತೆ ಬಳಕೆ: ಐಎಂಡಿ +ನವದೆಹಲಿ, ಏ. 7 (ಪಿಟಿಐ) ಹವಾಮಾನ ಮುನ್ಸೂಚನೆಯನ್ನು ಹೆಚ್ಚಿಸಲು ಭಾರತದ ಹವಾಮಾನ ವಿಜ್ಞಾನಿಗಳು ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯ ಶಕ್ತಿಯನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದಾರೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಹೇಳಿದ್ದಾರೆ.ಪಿಟಿಐ ಸಂಪಾದಕರೊಂದಿಗಿನ ಮುಕ್ತ-ಚಕ್ರ ಸಂವಾದದಲ್ಲಿ ಅವರು ಮುಂದಿನ ಕೆಲವು ವರ್ಷಗಳಲ್ಲಿ, ಉದಯೋನ್ಮುಖ ತಂತ್ರಜ್ಞಾನಗಳು ಹವಾಮಾನವನ್ನು ಊಹಿಸಲು ಪ್ರಸ್ತುತ ವ್ಯಾಪಕವಾಗಿ ಬಳಸಲಾಗುವ ಸಂಖ್ಯಾತ್ಮಕ ಹವಾಮಾನ ಮುನ್ಸೂಚನೆ ಮಾದರಿಗಳಿಗೆ ಪೂರಕವಾಗಿರುತ್ತವೆ ಎಂದು ಹೇಳಿದರು. +ಪಂಚಾಯತಿ ಮಟ್ಟದಲ್ಲಿ ಅಥವಾ 10 ಚದರ ಕಿಲೋಮೀಟರ್‍ಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಮೆಸೊಸ್ಕೇಲ್ ಹವಾಮಾನ ಮುನ್ಸೂಚನೆಗಳನ್ನು ತ್ವರಿತ ದರದಲ್ಲಿ ಮಾಡಲು ಹವಾಮಾನ ಕಚೇರಿಯು ವೀಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದರು. ಭಾರತದ ಹವಾಮಾನ ಇಲಾಖೆ (ಐಎಂಡಿ) 39 ಡಾಪ್ಲರ್ ಹವಾಮಾನ ರಾಡಾರ್‍ಗಳ ಜಾಲವನ್ನು ನಿಯೋಜಿಸಿದೆ, ಅದು ದೇಶದ 85 ಪ್ರತಿಶತದಷ್ಟು ಭೂಪ್ರದೇಶವನ್ನು ಆವರಿಸುತ್ತದೆ ಮತ್ತು ಪ್ರಮುಖ ನಗರಗಳಿಗೆ ಗಂಟೆಯ ಮುನ್ಸೂಚನೆಗಳನ್ನು ಶಕ್ತಗೊಳಿಸುತ್ತದೆ ಎಂದು ಮೊಹಾಪಾತ್ರ ಹೇಳಿದರು. +ನಾವು ಕೃತಕ ಬುದ್ಧಿಮತ್ತೆಯನ್ನು ಸೀಮಿತ ರೀತಿಯಲ್ಲಿ ಬಳಸಲು ಪ್ರಾರಂಭಿಸಿದ್ದೇವೆ ಆದರೆ ಮುಂದಿನ ಐದು ವರ್ಷಗಳಲ್ಲಿ, ಎಐ ನಮ್ಮ ಮಾದರಿಗಳು ಮತ್ತು ತಂತ್ರಗಳನ್ನು ಗಣನೀಯವಾಗಿ ಹೆಚ್ಚಿಸಲಿದೆ ಎಂದು ಅವರು ಹೇಳಿದರು. ಐಎಂಡಿ 1901 ರ ಹಿಂದಿನ ದೇಶದ ಹವಾಮಾನ ದಾಖಲೆಗಳನ್ನು ಡಿಜಿಟೈಸ್ ಮಾಡಿದೆ ಮತ್ತು ಹವಾಮಾನ ಮಾದರಿಗಳ ಬಗ್ಗೆ ಜ್ಞಾನವನ್ನು ಸೃಷ್ಟಿಸಲು ಈ ಸಮೃದ್ಧ ಮಾಹಿತಿಯನ್ನು ಶೋಧಿಸಲು ಕೃತಕ ಬುದ್ಧಿಮತ್ತೆಯನ್ನು ಬಳಸಬಹುದು ಎಂದು ಮೊಹಾಪಾತ್ರ ಹೇಳಿದರು. +ಬಿಜೆಪಿ ಭಾರತದ ಮೊದಲ ಆದ್ಯತೆಯ ಪಕ್ಷ : ಪ್ರಧಾನಿ ಮೋದಿ ಪ್ರತಿಪಾದನೆ +ಕೃತಕ ಬುದ್ಧಿಮತ್ತೆ ಮಾದರಿಗಳು ದತ್ತಾಂಶ ವಿಜ್ಞಾನ ಮಾದರಿಗಳಾಗಿವೆ, ಇದು ವಿದ್ಯಮಾನಗಳ ಭೌತಶಾಸಕ್ಕೆ ಹೋಗುವುದಿಲ್ಲ ಆದರೆ ಉತ್ತಮ ಮುನ್ಸೂಚನೆಗಳನ್ನು ಮಾಡಲು ಬಳಸಬಹುದಾದ ಜ್ಞಾನವನ್ನು ಉತ್ಪಾದಿಸಲು ಹಿಂದಿನ ಡೇಟಾವನ್ನು ಬಳಸಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಳ್ಳಲು ಭೂ ವಿಜ್ಞಾನ ಸಚಿವಾಲಯ ಮತ್ತು ಐಎಂಡಿಯಲ್ಲಿ ಪರಿಣಿತ ಗುಂಪುಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು. +ಕೃತಕ ಬುದ್ಧಿಮತ್ತೆ ಮತ್ತು ಸಂಖ್ಯಾತ್ಮಕ ಮುನ್ಸೂಚನೆಯ ಮಾದರಿಗಳು ಮುನ್ಸೂಚನೆಯ ನಿಖರತೆಯನ್ನು ಸುಧಾರಿಸಲು ಪರಸ್ಪರ ಪೂರಕವಾಗಿರುತ್ತವೆ. ಎರಡೂ ಕೈಜೋಡಿಸುತ್ತವೆ ಮತ್ತು ಯಾರೂ ಇನ್ನೊಂದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಮೊಹಾಪಾತ್ರ ಹೇಳಿದರು. ನಾವು ಪಂಚಾಯತ್ ಅಥವಾ ಗ್ರಾಮ ಮಟ್ಟದಲ್ಲಿ ಮುನ್ಸೂಚನೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದೇವೆ… +ಕೃಷಿ, ಆರೋಗ್ಯ, ನಗರ ಯೋಜನೆ, ಜಲವಿಜ್ಞಾನ ಮತ್ತು ಪರಿಸರದಲ್ಲಿ ವಲಯ-ನಿರ್ದಿಷ್ಟ ಅಗತ್ಯಗಳಿಗೆ ಹವಾಮಾನ ಮಾಹಿತಿಯನ್ನು ಹೊಂದಿಸುವುದು ಎಂದು ಅವರು ಹೇಳಿದರು. ಹವಾಮಾನ ಮುನ್ಸೂಚನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವದ ಮೇಲೆ, ಸ್ಥಳೀಯ ಸಮುದಾಯಗಳ ಮೇಲೆ ಪರಿಣಾಮ ಬೀರುವ ಸಣ್ಣ ಪ್ರಮಾಣದಲ್ಲಿ ಸಂವಹನ ಮೋಡಗಳಂತಹ ಮೆಸೊಸ್ಕೇಲ್ ವಿದ್ಯಮಾನಗಳ ಹೊರಹೊಮ್ಮುವಿಕೆಯನ್ನು ಮೊಹಾಪಾತ್ರ ಗಮನಿಸಿದರು. \ No newline at end of file diff --git a/eesanje/url_47_128_12.txt b/eesanje/url_47_128_12.txt new file mode 100644 index 0000000000000000000000000000000000000000..611a6009aff0227ddc819b1bcd8da2f65310b4ed --- /dev/null +++ b/eesanje/url_47_128_12.txt @@ -0,0 +1,11 @@ +ಬಿಜೆಪಿ ಭಾರತದ ಮೊದಲ ಆದ್ಯತೆಯ ಪಕ್ಷ : ಪ್ರಧಾನಿ ಮೋದಿ ಪ್ರತಿಪಾದನೆ +ನವದೆಹಲಿ, ಏ. 6 (ಪಿಟಿಐ) –ಬಿಜೆಪಿಯ 44ನೇ ಸಂಸ್ಥಾಪನಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯು ಭಾರತದ ಆದ್ಯತೆಯ ಪಕ್ಷವಾಗಿದೆ ಮತ್ತು ದೇಶವಾಸಿಗಳು ಕೇಂದ್ರದಲ್ಲಿ ಮತ್ತೊಂದು ಅವಧಿಗೆ ಪಕ್ಷವನ್ನು ಆಯ್ಕೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. +ಬಿಜೆಪಿಯ ಸದಸ್ಯರಿಗೆ ಶುಭಾಶಯ ಕೋರಿದ ಅವರು, ಭಾರತದ ಯುವಕರು ತಮ್ಮ ಆಕಾಂಕ್ಷೆಗಳನ್ನು ಈಡೇರಿಸುವ ಮತ್ತು 21 ನೇ ಶತಮಾನದಲ್ಲಿ ರಾಷ್ಟ್ರಕ್ಕೆ ನಾಯಕತ್ವವನ್ನು ನೀಡುವ ಪಕ್ಷವಾಗಿ ನೋಡುತ್ತಾರೆ ಎಂದು ಹೇಳಿದರು. +ಭ್ರಷ್ಟಾಚಾರ, ಕುತಂತ್ರ, ಜಾತೀಯತೆ, ಕೋಮುವಾದ ಮತ್ತು ವೋಟ್ ಬ್ಯಾಂಕ್ ರಾಜಕಾರಣದ ಸಂಸ್ಕøತಿಯಿಂದ ಭಾರತವನ್ನು ಬಿಜೆಪಿ ಮುಕ್ತಗೊಳಿಸಿದೆ ಎಂದು ಮೋದಿ ಪ್ರತಿಪಾದಿಸಿದ್ದಾರೆ. ಇಂದಿನ ಭಾರತದಲ್ಲಿ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗಿದ್ದು, ಯಾವುದೇ ತಾರತಮ್ಯವಿಲ್ಲದೆ ಅಭಿವೃದ್ಧಿಯ ಫಲ ಬಡವರಿಗೆ ತಲುಪುತ್ತದೆ ಎಂದು ಅವರು ಹೇಳಿದರು. +ಕೇಂದ್ರದಲ್ಲಾಗಲಿ ಅಥವಾ ರಾಜ್ಯಗಳಾಗಲಿ, ನಮ್ಮ ಪಕ್ಷವು ಉತ್ತಮ ಆಡಳಿತವನ್ನು ಮರುವ್ಯಾಖ್ಯಾನಿಸಿದೆ. ನಮ್ಮ ಯೋಜನೆಗಳು ಮತ್ತು ನೀತಿಗಳು ಬಡವರು ಮತ್ತು ದೀನದಲಿತರಿಗೆ ಬಲವನ್ನು ನೀಡಿವೆ. ದಶಕಗಳಿಂದ ಬಡತನದ ಅಂಚಿನಲ್ಲಿದ್ದವರು ನಮ್ಮ ಪಕ್ಷದಲ್ಲಿ ಧ್ವನಿ ಮತ್ತು ಭರವಸೆಯನ್ನು ಕಂಡುಕೊಂಡಿದ್ದಾರೆ ಎಂದು ಪ್ರಧಾನಿ ಮೋದಿ ಎಕ್ಸ್ ಮಾಡಿದ್ದಾರೆ. +ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ವತೋಮುಖ ಅಭಿವೃದ್ಧಿಯನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ, ಇದು ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಲಭಗೊಳಿಸುತ್ತದೆ ಎಂದು ಮೋದಿ ಹೇಳಿದರು.ವರ್ಷಗಳಲ್ಲಿ ನಮ್ಮ ಪಕ್ಷವನ್ನು ಕಟ್ಟಿದ ಎಲ್ಲಾ ಮಹಾನ್ ಮಹಿಳೆಯರು ಮತ್ತು ಪುರುಷರ ಶ್ರಮ, ಹೋರಾಟ ಮತ್ತು ತ್ಯಾಗವನ್ನು ನಾನು ಬಹಳ ಗೌರವದಿಂದ ಸ್ಮರಿಸಿಕೊಳ್ಳುತ್ತೇನೆ. +ನಮ್ಮದು ಭಾರತದ ಆದ್ಯತೆಯ ಪಕ್ಷವಾಗಿದೆ, ಅದು ಯಾವಾಗಲೂ ಧ್ಯೇಯವಾಕ್ಯದೊಂದಿಗೆ ಸೇವೆ ಸಲ್ಲಿಸಿದೆ ಎಂದು ನಾನು ಬಹಳ ವಿಶ್ವಾಸದಿಂದ ಹೇಳಬಲ್ಲೆ ನೇಷನ್ ಫಸ್ಟ್ ಎಂದು ಅವರು ಹೇಳಿದರು. +ನಮ್ಮ ಕಾರ್ಯಕರ್ತರಿಂದ ನಡೆಸಲ್ಪಡುವ ನಮ್ಮ ಪಕ್ಷವು 140 ಕೋಟಿ ಭಾರತೀಯರ ಆಕಾಂಕ್ಷೆಗಳು ಮತ್ತು ಕನಸುಗಳನ್ನು ಸಾಕಾರಗೊಳಿಸಿದೆ. ಭಾರತದ ಯುವಕರು ನಮ್ಮ ಪಕ್ಷವನ್ನು ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಮತ್ತು 21 ನೇ ಶತಮಾನದಲ್ಲಿ ಭಾರತಕ್ಕೆ ನಾಯಕತ್ವವನ್ನು ಒದಗಿಸುವ ಪಕ್ಷವಾಗಿ ನೋಡುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು. +ರಾಷ್ಟ್ರೀಯ ಪ್ರಗತಿ ಮತ್ತು ಪ್ರಾದೇಶಿಕ ಆಕಾಂಕ್ಷೆಗಳ ನಡುವೆ ಪರಿಪೂರ್ಣ ಸಾಮರಸ್ಯವನ್ನು ವ್ಯಕ್ತಪಡಿಸುವ ಎನ್ಡಿಎಯ ಅವಿಭಾಜ್ಯ ಅಂಗವಾಗಿರುವುದಕ್ಕೆ ನಾವು ಹೆಮ್ಮೆಪಡುತ್ತೇವೆ ಎಂದು ಪ್ರಧಾನಿ ಹೇಳಿದರು. ಎನ್ಡಿಎ ಭಾರತದ ವೈವಿಧ್ಯತೆಯನ್ನು ಒಳಗೊಂಡಿರುವ ರೋಮಾಂಚಕ ಮೈತ್ರಿಯಾಗಿದೆ. ನಾವು ಈ ಪಾಲುದಾರಿಕೆಯನ್ನು ಗೌರವಿಸುತ್ತೇವೆ ಮತ್ತು ನನಗೆ ಖಾತ್ರಿಯಿದೆ. +ಮುಂದಿನ ದಿನಗಳಲ್ಲಿ ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿಯನ್ನು 1980 ರಲ್ಲಿ ಹಿಂದಿನ ಭಾರತೀಯ ಜನಸಂಘದ ನಾಯಕರು ಸ್ಥಾಪಿಸಿದರು, ಇದು ತುರ್ತು ಪರಿಸ್ಥಿತಿಯ ನಂತರದ 1977 ರ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಜನತಾ ಪಕ್ಷವನ್ನು ರಚಿಸಲು ಇತರ ವಿರೋಧ ಪಕ್ಷಗಳೊಂದಿಗೆ ವಿಲೀನಗೊಂಡಿದೆ. 1984 ರಲ್ಲಿ ಸ್ಪರ್ಧಿಸಿದ ಮೊದಲ ರಾಷ್ಟ್ರೀಯ ಚುನಾವಣೆಯಲ್ಲಿ ಅದು ಕೇವಲ ಎರಡು ಲೋಕಸಭಾ ಸ್ಥಾನಗಳನ್ನು ಗೆದ್ದಿತು. +ಆದಾಗ್ಯೂ, 90 ರ ದಶಕದಲ್ಲಿ ಒಕ್ಕೂಟದ ಮುಖ್ಯಸ್ಥರಾಗಿ ಅ„ಕಾರಕ್ಕೆ ಬಂದ ಅಟಲ್ ಬಿಹಾರಿ ವಾಜಪೇಯಿ ಮತ್ತು ಎಲ್ ಕೆ ಅಡ್ವಾಣಿಯವರ ನಾಯಕತ್ವದಲ್ಲಿ ಅದು ವೇಗವಾಗಿ ಬೆಳೆಯಿತು. \ No newline at end of file diff --git a/eesanje/url_47_128_2.txt b/eesanje/url_47_128_2.txt new file mode 100644 index 0000000000000000000000000000000000000000..f4c54a80e209b188684c18c3b24ed806004323bb --- /dev/null +++ b/eesanje/url_47_128_2.txt @@ -0,0 +1,4 @@ +ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ತಯಾರಿಸಿದ್ದೇ?: ಮೋದಿ +ನೆವಾಡ (ಬಿಹಾರ),ಏ.7- ಕಾಂಗ್ರೆಸ್ ಇತ್ತೀಚೆಗೆ ಬಿಡುಗಡೆ ಮಾಡಿರುವ ಪ್ರಣಾಳಿಕೆತುಷ್ಟೀಕರಣ ರಾಜಕೀಯ ನೀತಿ'ಯಾಗಿದೆ ಎಂದು ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ನೆವಾಡ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರ್ಟಿಕಲ್ 370 ರ ರದ್ದತಿಯನ್ನು ಪ್ರಸ್ತಾಪಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷರು ಸಣ್ಣ ಹುದ್ದೆ ಹೊಂದಿಲ್ಲ. +ರಾಜಸ್ಥಾನಕ್ಕೂ 370 ನೇ ವಿಧಿಗೂ ಏನು ಸಂಬಂಧ ಎಂದು ಅವರು ಹೇಳುತ್ತಾರೆ. ಇದುತುಕ್ಡೆ ತುಕ್ಡೆ ಗ್ಯಾಂಗ್’ ನ ಮನಃಸ್ಥಿತಿ. ಅವರ ನಿಲುವುಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿಗಳೊಂದಿಗೆ ಹೋರಾಡುತ್ತ ಪ್ರಾಣಾರ್ಪಣೆ ಮಾಡಿದ ರಾಜಸ್ಥಾನದ ಮತ್ತು ಬಿಹಾರದ ಭದ್ರತಾ ಸಿಬ್ಬಂದಿಗೆ ಮಾಡಿದ ಅಪಮಾನ ಎಂದು ಪ್ರಧಾನಿ ಟೀಕಿಸಿದ್ದಾರೆ. +ಕಾಂಗ್ರೆಸ್, ಅವರ ಬಿಹಾರದ ಮಿತ್ರಪಕ್ಷ ಆರ್‍ಜೆಡಿ ಮತ್ತು ಇಂಡಿಯಾ ಒಕ್ಕೂಟದ ಪಕ್ಷಗಳು ಸಂವಿಧಾನದ ಬಗ್ಗೆ ಅಗಾಧವಾಗಿ ಮಾತನಾಡುತ್ತಾರೆ. ಆದರೆ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಏಕೆ ಜಾರಿಗೊಳಿಸಲಿಲ್ಲ? ಇದು ಮೋದಿಯಿಂದ ಮಾತ್ರ ಸಾಧ್ಯವಾಯಿತು ಎಂದು ಅವರು ಪ್ರತಿಪಾದಿಸಿದರು. \ No newline at end of file diff --git a/eesanje/url_47_128_3.txt b/eesanje/url_47_128_3.txt new file mode 100644 index 0000000000000000000000000000000000000000..fb4fa1d2277f33eecf29e7df2ca002767ba19726 --- /dev/null +++ b/eesanje/url_47_128_3.txt @@ -0,0 +1,5 @@ +ಸೊರೆನ್ ವಿರುದ್ಧದ ಆರೋಪಕ್ಕೆ ಸಾಕ್ಷಿಯಾದ ರೆಫ್ರಿಜರೇಟರ್, ಸ್ಮಾರ್ಟ್‍ಟಿವಿ ಇನ್ವಾಯ್ಸ್ +ರಾಂಚಿ, ಏ.7 (ಪಿಟಿಐ) ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು 31 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 8.86 ಎಕರೆ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ತನ್ನ ಹೇಳಿಕೆಯನ್ನು ಬೆಂಬಲಿಸಲು ರೆಫ್ರಿಜರೇಟರ್ ಮತ್ತು ಸ್ಮಾರ್ಟ್ ಟಿವಿಯ ಇನ್‍ವಾಯ್ಸ್‍ಗಳು ಸಾಕ್ಷಿಯಾಗಿಸಿಕೊಂಡಿದೆ. +ಫೆಡರಲ್ ತನಿಖಾ ಸಂಸ್ಥೆಯು ರಾಂಚಿ ಮೂಲದ ಇಬ್ಬರು ವಿತರಕರಿಂದ ಈ ರಸೀದಿಗಳನ್ನು ಪಡೆದುಕೊಂಡಿದೆ ಮತ್ತು ಕಳೆದ ತಿಂಗಳು 48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮತ್ತು ಇತರ ನಾಲ್ವರ ವಿರುದ್ಧ ಸಲ್ಲಿಸಲಾದ ಚಾರ್ಜ್ ಶೀಟ್‍ಗೆ ಲಗತ್ತಿಸಿದೆ. ರಾಂಚಿಯ ನ್ಯಾಯಾಧೀಶ ರಾಜೀವ್ ರಂಜನ್ ಅವರ ವಿಶೇಷ ಪಿಎಂಎಲ್‍ಎ ನ್ಯಾಯಾಲಯವು ಏಪ್ರಿಲ್ 4 ರಂದು ಪ್ರಾಸಿಕ್ಯೂಷನ್ ದೂರನ್ನು ಪರಿಗಣಿಸಿತು. +ಸೋರೆನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಭೂಕಬಳಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನವರಿ 31 ರಂದು ಇಡಿ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ರಾಂಚಿಯ ಹೊತ್ವಾರ್‍ನಲ್ಲಿರುವ ಬಿರ್ಸಾ ಮುಂಡಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. +ಇಡಿ ಪ್ರಕಾರ, ಎರಡು ಗ್ಯಾಜೆಟ್‍ಗಳನ್ನು ಸಂತೋಷ್ ಮುಂಡಾ ಎಂಬವರ ಕುಟುಂಬ ಸದಸ್ಯರ ಹೆಸರಿನಲ್ಲಿ ಖರೀದಿಸಲಾಗಿದೆ ಮತ್ತು ಅವರು ಏಜೆನ್ಸಿಗೆ ತಿಳಿಸಿದ್ದು, ಅವರು ಹೇಮಂತ್ ಸೊರೆನ್ ಅವರ 14 ಜಮೀನಿನಲ್ಲಿ (8.86 ಎಕರೆ) ಆಸ್ತಿಯ ಉಸ್ತುವಾರಿಯಾಗಿ ವಾಸವಾಗಿದ್ದಾರೆ. ತನಗೆ ಈ ಭೂಮಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂಬ ಸೊರೆನ್ ಹೇಳಿಕೆಯನ್ನು ಎದುರಿಸಲು ಸಂಸ್ಥೆ ಮುಂಡಾ ಹೇಳಿಕೆಯನ್ನು ಬಳಸಿಕೊಂಡಿತು. ರಾಜ್‍ಕುಮಾರ್ ಪಹಾನ್ ಎಂಬ ವ್ಯಕ್ತಿಯ ತುಂಡು ಭೂಮಿ ಮೇಲಿನ ಹಕ್ಕನ್ನು ಇಡಿ ತಿರಸ್ಕರಿಸಿತ್ತು. \ No newline at end of file diff --git a/eesanje/url_47_128_4.txt b/eesanje/url_47_128_4.txt new file mode 100644 index 0000000000000000000000000000000000000000..b30fa41be63c82cf4039ad622669d94a2376b41f --- /dev/null +++ b/eesanje/url_47_128_4.txt @@ -0,0 +1,6 @@ +ಧೋನಿಯಂತೆ ರಾಹುಲ್ ಗಾಂಧಿ ಉತ್ತಮ ಫಿನಿಶರ್: ರಾಜನಾಥ್ ಸಿಂಗ್ +ನವದೆಹಲಿ,ಏ.7- ಕ್ರಿಕೆಟ್‍ನಲ್ಲಿ ಮಹೇಂದ್ರ ಸಿಂಗ್ ಧೋನಿ ಅತ್ಯುತ್ತಮ ಫಿನಿಶರ್ ಹೇಗೋ.. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಸಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ತಿಳಿದಿರುವಂತೆ ಕ್ರಿಕೆಟ್‍ನಲ್ಲಿ ಈಗಲೂ ಅಭಿಮಾನಿಗಳು ಮಹೇಂದ್ರ ಸಿಂಗ್ ಧೋನಿಯನ್ನು ಉತ್ತಮ ಫಿನಿಶರ್ ಎನ್ನುತ್ತಾರೆ. ಅದೇ ರೀತಿ ರಾಜಕಾರಣದಲ್ಲಿ ರಾಹುಲ್ ಗಾಂಧಿ ಕೂಡ ಓರ್ವ ಉತ್ತಮ ಫಿನಿಶರ್ ಎಂದು ಕುಹುಕವಾಡಿದರು. +ಕಾಂಗ್ರೆಸ್ ಮತ್ತು ಭ್ರಷ್ಟಾಚಾರಕ್ಕೆ ಅವಿನಾಭಾವ ಸಂಬಂಧವಿದೆ. ಬಹುತೇಕ ಕಾಂಗ್ರೆಸ್ ಸರ್ಕಾರಗಳು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿದ್ದವು, ಆದರೆ ಪ್ರಧಾನಿ ನರೇಂದ್ರಮೋದಿ ಅವರ ಸರ್ಕಾರದ ಯಾವುದೇ ಸಚಿವರ ವಿರುದ್ಧ ಅಂತಹ ಆರೋಪಗಳನ್ನು ಮಾಡಲಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಒಂದು ಕಾಲದಲ್ಲಿ ಭಾರತ್ಯದಾದ್ಯಂತ ಕಾಂಗ್ರೆಸ್ ಪ್ರಾಬಲ್ಯ ಹೊಂದಿತ್ತು, ಆದರೆ ಈಗ ಅದು ದೇಶದಲ್ಲಿ ಎರಡು ಅಥವಾ ಮೂರು ಸಣ್ಣ ರಾಜ್ಯಗಳಲ್ಲಿ ಮಾತ್ರ ಆಡಳಿತ ನಡೆಸುತ್ತಿದೆ ಎಂದರು. +ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಸಂಪೂರ್ಣ ಬೆಂಬಲ ನೀಡಿದ ಅವರು, ಇದು ದೇಶದ ಸಮಯ ಮತ್ತು ಸಂಪನ್ಮೂಲಗಳನ್ನು ಉಳಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಏಕಕಾಲಿಕ ಚುನಾವಣೆಗಳು ಭಾರತೀಯ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಐದು ವರ್ಷಗಳಲ್ಲಿ ಎರಡು ಬಾರಿ, ಸ್ಥಳೀಯ ಸಂಸ್ಥೆಗಳು ಮತ್ತು ವಿಧಾನಸಭೆಗಳು ಮತ್ತು ಲೋಕಸಭೆಗಳಿಗೆ ಒಮ್ಮೆ ಚುನಾವಣೆಗಳು ನಡೆಯಬೇಕು ಎಂದು ಹೇಳಿದರು. +ಭಾರತದ ಆರ್ಥಿಕತೆಯನ್ನು ಬಲಪಡಿಸಲು ಸರ್ಕಾರ ಒತ್ತು ನೀಡಿರುವುದನ್ನು ಎತ್ತಿಹಿಡಿದ ರಾಜನಾಥ್, 2027ರ ವೇಳೆಗೆ ಭಾರತವು ವಿಶ್ವದ ಅಗ್ರ ಮೂರು ಕೆಲವು ಶ್ರೀಮಂತ ದೇಶಗಳ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯಲಿದೆ ಎಂದು ಕೆಲವು ದೊಡ್ಡ ಹಣಕಾಸು ಸಂಸ್ಥೆಗಳು ಭವಿಷ್ಯ ನುಡಿಯುತ್ತಿವೆ ಮತ್ತು ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಈಗಾಗಲೇ ದೇಶವನ್ನು ಉನ್ನತ ಮಟ್ಟಕ್ಕೆ ಏರಲು ಸಹಾಯ ಮಾಡಿದೆ ಎಂದು ಹೇಳಿದರು. +ಅಧಿಕಾರದಲ್ಲಿದ್ದಾಗ, ಕಾಂಗ್ರೆಸ್ ಹಲವಾರು ಭರವಸೆಗಳನ್ನು ನೀಡಿತು ಮತ್ತು ಅವುಗಳನ್ನು ಭಾಗಶಃ ಈಡೇರಿಸಿದ್ದರೆ, ಭಾರತವು ಬಹಳ ಹಿಂದೆಯೇ ಪ್ರಬಲ ದೇಶವಾಗುತ್ತಿತು. ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಹತ್ತು ವರ್ಷಗಳಲ್ಲಿ ಈಡೇರಿಸಿದೆ ಎಂದು ಸಮರ್ಥಿಸಿಕೊಂಡರು. ಯುಪಿಎ ಆಡಳಿತಾವಧಿಯಲ್ಲಿ ನಡೆದ ಭಯೋತ್ಪಾದನಾ ದಾಳಿಯ ಕುರಿತು ಮಾತನಾಡಿದ ಅವರು, ಭಾರತವು ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತದೆ ಆದರೆ ಪ್ರಚೋದನೆ ನೀಡಿದರೆ, ಅಗತ್ಯಬಿದ್ದರೆ ಗಡಿ ದಾಟುವ ಮೂಲಕವೂ ಭಾರತ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ದೇಶವು ಇದನ್ನು ಈಗಾಗಲೇ ಸಾಬೀತುಪಡಿಸಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_128_5.txt b/eesanje/url_47_128_5.txt new file mode 100644 index 0000000000000000000000000000000000000000..177099fb82ba5e734ae823c6f8f4e732f1bdc287 --- /dev/null +++ b/eesanje/url_47_128_5.txt @@ -0,0 +1,4 @@ +ಗೋವಾದಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ : ಸಾವಂತ್ ವಿಶ್ವಾಸ +ಪಣಜಿ,ಏ.7- ಕರಾವಳಿ ರಾಜ್ಯ ಗೋವಾದ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಲಿ ಸಂಸದ ಶ್ರೀಪಾದ್ ನಾಯಕ್ ಅವರನ್ನು ಉತ್ತರ ಗೋವಾ ಸ್ಥಾನಕ್ಕೆ ಮತ್ತು ಪಲ್ಲವಿ ಡೆಂಪೋ ಅವರನ್ನು ದಕ್ಷಿಣ ಗೋವಾ ಕ್ಷೇತ್ರದಲ್ಲಿ ಬಿಜೆಪಿ ಕಣಕ್ಕಿಳಿಸಿದೆ. +ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರದ ಮಾಜಿ ಸಚಿವ ರಮಾಕಾಂತ್ ಖಲಪ್ ಮತ್ತು ವಿರಿಯಾಟೋ ಫರ್ನಾಂಡಿಸ್ ಅವರನ್ನು ಕ್ರಮವಾಗಿ ಉತ್ತರ ಮತ್ತು ದಕ್ಷಿಣ ಗೋವಾ ಕ್ಷೇತ್ರಗಳ ತನ್ನ ಅಭ್ಯರ್ಥಿಗಳನ್ನಾಗಿ ಪ್ರಕಟಿಸಿದೆ.ಕಾಂಗ್ರೆಸ್‍ನ ಫ್ರಾನ್ಸಿಸ್ಕೋ ಸಾರ್ಡಿನ್ಹಾ ಅವರು ಪ್ರಸ್ತುತ ದಕ್ಷಿಣ ಗೋವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. +ಬಿಜೆಪಿ ಮುಂದಿನ ಎಂಟು-ಹತ್ತು ದಿನಗಳೊಳಗೆ ಗೋವಾದಲ್ಲಿ ಮುಂಬರುವ ಲೋಕಸಭಾ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ ಎಂದು ಸಾವಂತ್ ತಿಳಿಸಿದರು. ಗೋವಾದಲ್ಲಿ ಮೇ 7 ರಂದು ಒಂದೇ ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_128_6.txt b/eesanje/url_47_128_6.txt new file mode 100644 index 0000000000000000000000000000000000000000..e63944c5a6c680c6dcd900620f0fdb63ab8c0180 --- /dev/null +++ b/eesanje/url_47_128_6.txt @@ -0,0 +1,5 @@ +ಗುಜರಾತ್ ಮಾಡಲ್ ಬದಲಿಗೆ ದ್ರಾವಿಡ ಮಾದರಿ ಅನುಕರಣೆಗೆ ಕಮಲ್ ಕರೆ +ಚೆನ್ನೈ,ಏ.7- ದೇಶದ ಜನರು ಗುಜರಾತ್ ಮಾದರಿ ಬದಲಿಗೆ ದ್ರಾವಿಡ ಮಾದರಿ ಅನುಸರಿಸುವಂತೆ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಕರೆ ನೀಡಿದ್ದಾರೆ. ಮಕ್ಕಳ್ ನೀಧಿ ಮೈಯಂ (ಎಂಎನ್‍ಎಂ) ಪಕ್ಷದ ಅಧ್ಯಕ್ಷರೂ ಆಗಿರುವ ಕಮಲ್ ಹಾಸನ್ ಅವರು, ತಮಿಳುನಾಡಿನ ಮೈಲಾಪುರ್ ಪ್ರದೇಶದಲ್ಲಿ ಡಿಎಂಕೆಯ ದಕ್ಷಿಣ ಚೆನ್ನೈ ಅಭ್ಯರ್ಥಿ ತಮಿಳಚಿ ತಂಗಪಾಂಡಿಯನ್ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಈ ಕರೆ ನೀಡಿದರು. +ಜನರು ಯಾವಾಗಲೂ ಗುಜರಾತ್ ಮಾದರಿ ಶ್ರೇಷ್ಠ ಎಂದು ಹೇಳಲು ಸಾಧ್ಯವಿಲ್ಲ, ನಾವು ಈ ಮಾದರಿಗೆ ಬಂದಿದ್ದೇವೆ, ಅದು ಕೂಡ ಶ್ರೇಷ್ಠವಾಗಿದೆ (ದ್ರಾವಿಡ ಮಾದರಿ). ಮುಂದೆ ಭಾರತವು ದ್ರಾವಿಡ ಮಾದರಿಯನ್ನು ಅನುಸರಿಸಬೇಕು. ನನ್ನ ರಥವನ್ನು ಚಲಿಸಿದರೆ ಮಾತ್ರ ಸಾಕಾಗುವುದಿಲ್ಲ, ನಾವು ಒಟ್ಟಿಗೆ ರಥವನ್ನು ಚಲಿಸಬೇಕು ಎಂದಿದ್ದಾರೆ. +ನಾನು ಅವರಿಗೆ (ಡಿಎಂಕೆ) ಈ ದಕ್ಷಿಣ ಚೆನ್ನೈ ಸ್ಥಾನವನ್ನು ಕೇಳಿದ್ದರೆ, ನನಗೆ ಅದು ಸಿಗುತ್ತಿತ್ತು, ಆದರೆ ನಾನು ಇಲ್ಲಿ ಸ್ಥಾನಕ್ಕಾಗಿ ಬಂದಿಲ್ಲ, ನಾನು ನಮ್ಮ ಸಹೋದರಿಗೆ ಮತ ಕೇಳಲು ಇಲ್ಲಿಗೆ ಬಂದಿದ್ದೇನೆ, ಈ ಚಿಹ್ನೆಯನ್ನು ಮರೆಯಬೇಡಿ ಉದಯೋನ್ಮುಖ ಸೂರ್ಯ ಇದು ನಮ್ಮ ರಾಷ್ಟ್ರಕ್ಕಾಗಿ, ನಾವು ನಮ್ಮ ಹಕ್ಕುಗಳನ್ನು ಮಾಡಬೇಕು ಎಂದು ಹಾಸನ್ ಪ್ರಚಾರ ಕಾರ್ಯಕ್ರಮವನ್ನು ಉದ್ದೇಶಿಸಿ ಹೇಳಿದರು. +ಎಂಎನ್‍ಎಂ ಜೊತೆಗೆ, ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಐ ಮತ್ತು ಸಿಪಿಐ(ಎಂ) ಸೇರಿದಂತೆ ಡಿಎಂಕೆಯ ಮೈತ್ರಿ ಪಾಲುದಾರರ ಹೆಚ್ಚಿನ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_47_128_7.txt b/eesanje/url_47_128_7.txt new file mode 100644 index 0000000000000000000000000000000000000000..65ae88f8ced33aa703fcf6b5ed3d82f09a6ae726 --- /dev/null +++ b/eesanje/url_47_128_7.txt @@ -0,0 +1,4 @@ +ಕೇಜ್ರಿವಾಲ್ ಬಂಧನ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ +ನವದೆಹಲಿ,ಏ.7- ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ಆಚರಿಸುತ್ತಿದ್ದಾರೆ. +ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಭಾರತ ಮತ್ತು ವಿದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಎಎಪಿ ನಾಯಕ ಗೋಪಾಲ್ ರೈ ತಿಳಿಸಿದ್ದಾರೆ.ಜನರು ತಮ್ಮ ಮನೆಗಳಲ್ಲಿ ಉಪವಾಸವನ್ನು ಆಚರಿಸಬಹುದು ಮತ್ತು ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ. +ಎಎಪಿಯ ಎಲ್ಲಾ ಶಾಸಕರು, ಪದಾಧಿಕಾರಿಗಳು ಸಾಮೂಹಿಕ ಉಪವಾಸಕ್ಕಾಗಿ ಜಂತರ್ ಮಂತರ್‍ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡಿಂಗ್‍ನಿಂದಾಗಿ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ಕೇಜ್ರಿವಾಲ್ ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರೂ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಎಪಿ ಸಮರ್ಥಿಸಿಕೊಂಡಿದೆ. ಏತನ್ಮಧ್ಯೆ, ಬಿಜೆಪಿಯು ಕೇಜ್ರಿವಾಲ್ ಅವರ ಜೈಲಿನಿಂದ ಕೆಲಸ ಯೋಜನೆಯನ್ನು ನೆಪವಾಗಿದೆ ಎಂದು ಬಣ್ಣಿಸಿದೆ. \ No newline at end of file diff --git a/eesanje/url_47_128_8.txt b/eesanje/url_47_128_8.txt new file mode 100644 index 0000000000000000000000000000000000000000..1bb2289b56caccfe6a983da0fb826d22f6a94e53 --- /dev/null +++ b/eesanje/url_47_128_8.txt @@ -0,0 +1,5 @@ +ರಾಹುಲ್ ವಿರುದ್ಧ ಸ್ಮೃತಿ ಇರಾನಿ ವಾಗ್ದಾಳಿ +ಚೆನ್ನೈ,ಏ.7- ರಾಹುಲ್ ಗಾಂಧಿ ಅವರಂತಹ ಅನೇಕರು ಬಂದು ಹೋಗಿದ್ದಾರೆ, ಆದರೆ ಹಿಂದೂಸ್ತಾನ್ ಇದೆ, ಇತ್ತು ಮತ್ತು ಇರುತ್ತದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದರು. ನನ್ನ ಧ್ವನಿ ರಾಹುಲ್ ಗಾಂಧಿಗೆ ತಲುಪಿದರೆ, ನಿಮ್ಮಂತಹ ಅನೇಕರು ಬಂದಿದ್ದಾರೆ ಮತ್ತು ಅನೇಕರು ಹೋಗಿದ್ದಾರೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ; ಹಿಂದೂಸ್ತಾನ್ ಇದೆ, ಇತ್ತು ಮತ್ತು ಉಳಿಯುತ್ತದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ. +ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಚೆನ್ನೈನ ವೆಪ್ಪೇರಿ ಜಿಲ್ಲೆಯ ವೈಎಂಸಿಎ ಸಭಾಂಗಣದಲ್ಲಿ ಸೆಂಟ್ರಲ್ ಚೆನ್ನೈ ಬಿಜೆಪಿ ಅಭ್ಯರ್ಥಿ ವಿನೋಜ್ ಪಿ ಸೆಲ್ವಂ ಅವರನ್ನು ಬೆಂಬಲಿಸಿ ಚುನಾವಣಾ ಪ್ರಚಾರ ನಡೆಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮಹತ್ವವನ್ನು ಒತ್ತಿ ಹೇಳಿದರು. +ಜೈ ಶ್ರೀರಾಮ ಎಂದು ಹೇಳಿದ್ದಕ್ಕಾಗಿ ಇಂಡಿಯಾ ಮೈತ್ರಿಕೂಟದ ಪಾಲುದಾರರು ಜನರನ್ನು ಕೊಂದ ರಾಜ್ಯಗಳು ಈ ದೇಶದಲ್ಲಿವೆ, ಇದು ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ಸಂಭವಿಸಿದೆ, ಇಂದು ನಾವು ಇಲ್ಲಿ ಭಗವಂತನ ಪಾದಗಳಿಗೆ ತಲೆಬಾಗಿ ನಿಂತಿರುವುದು ನಮ್ಮ ದೊಡ್ಡ ಅದೃಷ್ಟ ಎಂದಿದ್ದಾರೆ. ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳಿಗೆ ಮತ್ತು ಪುದುಚೇರಿಯ ಏಕೈಕ ಕ್ಷೇತ್ರಕ್ಕೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. +2019 ರ ಸಾರ್ವತ್ರಿಕ ಚುನಾವಣೆಯ ಮತದಾನದ ಸಮಯದಲ್ಲಿ, ಕಾಂಗ್ರೆಸ್, ವಿಸಿಕೆ, ಎಂಡಿಎಂಕೆ, ಸಿಪಿಐ, ಸಿಪಿಐ(ಎಂ), ಐಯುಎಂಎಲ, ಎಂಎಂಕೆ, ಕೆಎಂಡಿಕೆ, ಟಿವಿಕೆ ಮತ್ತು ಎಐಎ-ಬಿ ಒಳಗೊಂಡಿರುವ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಮೈತ್ರಿಕೂಟವು 38 ರಲ್ಲಿ ಭರ್ಜರಿ ಗೆಲುವು ದಾಖಲಿಸಿತ್ತು. \ No newline at end of file diff --git a/eesanje/url_47_128_9.txt b/eesanje/url_47_128_9.txt new file mode 100644 index 0000000000000000000000000000000000000000..80d9f927f40c8856a9315e5d7b56e6631c020186 --- /dev/null +++ b/eesanje/url_47_128_9.txt @@ -0,0 +1,6 @@ +ಕೋಟಿ ಕೋಟಿ ಬೆಲೆಬಾಳುವ ವಾಚ್ ಕಳ್ಳಸಾಗಾಣೆ: ತೆಲಂಗಾಣ ಸಚಿವರ ಪುತ್ರನಿಗೆ ಸಮನ್ಸ್ +ಚೆನ್ನೈ, ಏ. 7 (ಪಿಟಿಐ) – ಅಧಿಕೃತ ದಾಖಲೆಗಳ ಪ್ರಕಾರ ಹಲವು ಕೋಟಿ ರೂಪಾಯಿ ಮೌಲ್ಯದ ಅತ್ಯಾಧುನಿಕ ವಾಚ್‍ಗಳ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತೆಲಂಗಾಣ ಸಚಿವ ಶ್ರೀನಿವಾಸ ರೆಡ್ಡಿ ಅವರ ಪುತ್ರ ಪೊಂಗುಲೇಟಿ ಹರ್ಷ ರೆಡ್ಡಿ ಅವರಿಗೆ ಚೆನ್ನೈ ಕಸ್ಟಮ್ಸ್ ಸಮನ್ಸ್ ಜಾರಿ ಮಾಡಿದೆ. +ಏಪ್ರಿಲ್ 4 ರಂದು ವಿಚಾರಣೆಗೆ ಹಾಜರಾಗಲು ರೆಡ್ಡಿ ಅವರನ್ನು ಕೇಳಲಾಯಿತು, ಆದರೆ ಏಪ್ರಿಲ್ 3 ರಂದು ಪತ್ರದಲ್ಲಿ ಅವರು ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವುದರಿಂದ ಹಾಜರಾಗಲು ಸಾಧ್ಯವಿಲ್ಲ ಎಂದು ಅವರು ತಮ್ಮ ಅಸಮರ್ಥತೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಕಸ್ಟಮ್ಸ್ ಮೂಲಗಳು ತಿಳಿಸಿವೆ.ಆದಾಗ್ಯೂ, ವೈದ್ಯಕೀಯ ಸಲಹೆಯಂತೆ ಅವರು ಏಪ್ರಿಲ್ 27 ರ ನಂತರ ಇಲಾಖೆಯ ಮುಂದೆ ಹಾಜರಾಗಲು ಒಪ್ಪಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಪಿಟಿಐ ಜೊತೆ ಮಾತನಾಡಿದ ರೆಡ್ಡಿ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ. ನಾನು ಇದೀಗ ಅಸ್ವಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ. ಹರ್ಷ ರೆಡ್ಡಿ ನಿರ್ದೇಶಕರಾಗಿರುವ ಹೈದರಾಬಾದ್‍ನಲ್ಲಿರುವ ಕುಟುಂಬದ ಮಾಲೀಕತ್ವದ ಸಂಸ್ಥೆಯ ಕಚೇರಿಗೆ ಮಾರ್ಚ್ 28 ರಂದು ಸಮನ್ಸ್ ಕಳುಹಿಸಲಾಗಿದೆ. ಸಿಂಗಾಪುರದಿಂದ ಚೆನ್ನೈಗೆ ಬಂದಿದ್ದ ಹಾಂಕಾಂಗ್ ಮೂಲದ ಭಾರತೀಯ ಮುಹಮ್ಮದ್ ಪಹರ್ದೀನ್ ಮುಬೀನ್ ಎಂಬಾತನಿಂದ ಎರಡು ಐಷಾರಾಮಿ ವಾಚ್‍ಗಳಾದ ಪಾಟೆಕ್ ಫಿಲಿಪ್ 5740 ಮತ್ತು ಬ್ರೆಗುಟ್ 2759 ಅನ್ನು ವಶಪಡಿಸಿಕೊಂಡಾಗ ಕಸ್ಟಮ್ಸ ಫೆಬ್ರವರಿ 5 ರಂದು ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದೆ. +ವಾಚ್‍ಗಳ ಮೂಲ ಮೌಲ್ಯವು 1.73 ಕೋಟಿ ರೂಪಾಯಿ ಎಂದು ಕಸ್ಟಮ್ಸ ಅಂದಾಜಿಸಿದೆ. ಪಾಟೆಕ್ ಫಿಲಿಪ್‍ಗೆ ಭಾರತದಲ್ಲಿ ಯಾವುದೇ ಡೀಲರ್ ಇಲ್ಲ, ಆದರೆ ಬ್ರೆಗುಟ್ ಭಾರತೀಯ ಮಾರುಕಟ್ಟೆಯಲ್ಲಿ ಸ್ಟಾಕ್ ಇಲ್ಲ ಎಂದು ಕಸ್ಟಮ್ಸ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಕಸ್ಟಮ್ಸ್‍ನ ತನಿಖೆಯ ಪ್ರಕಾರ, ಮಾರ್ಚ್ 12 ರಂದು ಕಸ್ಟಮ್ಸ್‍ನಿಂದ ವಿಚಾರಣೆಗೆ ಒಳಗಾದ ಮಧ್ಯವರ್ತಿ ಅಲೋಕಂ ನವೀನ್ ಕುಮಾರ್ ಮೂಲಕ ಹರ್ಷ ರೆಡ್ಡಿ ಮುಬೀನ್‍ನಿಂದ ವಾಚ್‍ಗಳನ್ನು ಖರೀದಿಸಿದವರು ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ವಿಚಾರಣೆಯ ವೇಳೆ ನವೀನ್ ಕುಮಾರ್ ಅವರು ಹರ್ಷ ಮತ್ತು ಮುಬೀನ್ ಎಂಬ ಐಷಾರಾಮಿ ವಾಚ್ ಡೀಲರ್ ನಡುವೆ ಮಧ್ಯವರ್ತಿಯಾಗಿ ವರ್ತಿಸಿದ್ದಾರೆ ಮತ್ತು ಯುಎಸ್‍ಡಿಟಿ-ಒಂದು ರೀತಿಯ ಕ್ರಿಪ್ರೋಕರೆನ್ಸಿ- ಮತ್ತು ನಗದು ಮೂಲಕ ಹವಾಲಾ ಮಾರ್ಗವನ್ನು ಬಳಸಿಕೊಂಡು ವ್ಯವಹಾರಕ್ಕೆ ಪಾವತಿಗಳನ್ನು ಸುಗಮಗೊಳಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ ಎಂದು ಕಸ್ಟಮ್ಸ ಮೂಲಗಳು ಹೇಳಿವೆ. \ No newline at end of file diff --git a/eesanje/url_47_129_1.txt b/eesanje/url_47_129_1.txt new file mode 100644 index 0000000000000000000000000000000000000000..431cb8a2011f5a03a072a43a5436e358c37a3064 --- /dev/null +++ b/eesanje/url_47_129_1.txt @@ -0,0 +1,5 @@ +ಒಡಿಶಾ, ಕರ್ನಾಟಕ, ಆಂಧ್ರದಲ್ಲಿ ‘ಮಿತಿ’ಮೀರಿದ ತಾಪಮಾನ ದಾಖಲು +ಒಡಿಶಾ (ಭುವನೇಶ್ವರ್), ಏ.6-ದೇಶಾದ್ಯಂತ ತಾಪಮಾನ ಹೆಚ್ಚಾಗುತ್ತಲೇ ಇದೆ. ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ 43.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಕರ್ನಾಟಕದ ಕಲಬುರಗಿಯಲ್ಲಿ ಕೂಡ 43.3ರಷ್ಟು ತಾಪಮಾನ ದಾಖಲಾಗಿ ವಾತಾವರಣ ನಿಗಿನಿಗಿ ಕೆಂಡದಂತಾಗಿದೆ. +ಭುವನೇಶ್ವರದ ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಉಮಾಶಂಕರ್ ದಾಸ್ ತನ್ನ ಟ್ವೀಟರ್ ಖಾತೆಯಲ್ಲಿ ಏಷ್ಯಾದ ಹತ್ತು ಪ್ರಮುಖ ಸ್ಥಳಗಳ ತಾಪಮಾನವನ್ನು ದಾಖಲಿಸಿದ್ದು, ಮ್ಯಾನ್ಮಾರ್ ಚೌಕ್ನಲ್ಲಿ ಬರೋಬ್ಬರಿ 45.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ ಅತ್ಯಂತ ಹೆಚ್ಚು ತಾಪಮಾನ ದಾಖಲಾದ ಸ್ಥಳವೆಂದು ಕಂಡುಬಂದಿದೆ. +ಆಂಧ್ರಪ್ರದೇಶದ ನಂದ್ಯಾಲದಲ್ಲಿ ನಿನ್ನೆ 43.7 ರಷ್ಟು ತಾಪಮಾನ ದಾಖಲಾಗಿದೆ. ದೇಶದಲ್ಲಿ ಅತಿಹೆಚ್ಚು ತಾಪಮಾನ ದಾಖಲಾದ ಸ್ಥಳ ಇದಾಗಿದೆ. ಏಷ್ಯಾದಲ್ಲೇ ನಾಲ್ಕನೇ ಅತ್ಯಂತ ಬಿಸಿಯಾದ ಸ್ಥಳವೆಂದು ಇದನ್ನು ಪಟ್ಟಿ ಮಾಡಲಾಗಿದೆ. ಐಎಂಡಿ ಮಾಹಿತಿ ಪ್ರಕಾರ ಭುವನೇಶ್ವರದಲ್ಲಿ ಇಂದು 43.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಒಡಿಶಾದ 14 ಜಿಲ್ಲೆಗಳಲ್ಲಿ ಉಷ್ಣದ ಅಲೆಗಳು ಹೆಚ್ಚಾಗಲಿವೆ ಎಂದು ಎಚ್ಚರಿಕೆ ನೀಡಲಾಗಿದೆ. +ಕರ್ನಾಟಕದ ಕಲಬುರಗಿಯಲ್ಲಿ 43.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಮೂಲಕ 9ನೇ ಸ್ಥಾನ ಪಡೆದುಕೊಂಡಿದೆ. ಈಗಾಗಲೇ ರಾಜ್ಯದ ಬಹುತೇಕ ಕಡೆ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಹಲವೆಡೆ ಬಿಸಿ ಗಾಳಿ ಬೀಸುತ್ತಿದೆ. ಜನ – ಜಾನುವಾರುಗಳ ಕುಡಿಯುವ ನೀರಿಗಾಗಿ ಸಂಕಷ್ಟ ಎದುರಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಜನರು ಮನೆಯಿಂದ ಹೊರ ಬರಬಾರದೆಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. \ No newline at end of file diff --git a/eesanje/url_47_129_10.txt b/eesanje/url_47_129_10.txt new file mode 100644 index 0000000000000000000000000000000000000000..0c693ee4e9354a929ce2ff4b4b951545d0d4bc36 --- /dev/null +++ b/eesanje/url_47_129_10.txt @@ -0,0 +1,14 @@ +ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಇಲ್ಲಿದೆ ‘ಭರವಸೆಗಳ ನ್ಯಾಯಪತ್ರ’ದ ಹೈಲೈಟ್ಸ್ +ನವದೆಹಲಿ,ಏ.5-ಹದಿನೆಂಟನೇ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಪರಿಸ್ಥಿತಿ ಕೈ ಬದಲಾಗುತ್ತಿದೆ ಎಂಬ ಘೋಷಣೆಯೊಂದಿಗೆ ಭರವಸೆಗಳ ನ್ಯಾಯಪತ್ರವನ್ನು ಇಂದು ಬಿಡುಗಡೆ ಮಾಡಿದೆ. ದೆಹಲಿಯ ಎಐಸಿಸಿಯ ಕಚೇರಿಯಲ್ಲಿಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನ್ಯಾಯಪತ್ರವನ್ನು ಅನಾವರಣಗೊಳಿಸಿದರು. ನಾಳೆ ಜೈಪುರ ಮತ್ತು ತೆಲಂಗಾಣದಲ್ಲಿ ಬೃಹತ್ ಬಹಿರಂಗ ಸಭೆಗಳಲ್ಲಿ ಪ್ರಣಾಳಿಕೆಯನ್ನು ಜನರ ಮುಂದಿಡುವುದಾಗಿ ಕಾಂಗ್ರೆಸ್ ತಿಳಿಸಿದೆ. +ಸುಮಾರು 2-3 ತಿಂಗಳಿನಿಂದಲೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ನೇತೃತ್ವದಲ್ಲಿ ಪ್ರಣಾಳಿಕಾ ಸಮಿತಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ. ಪ್ರಮುಖವಾಗಿ ಯುವಕರು, ಕೃಷಿಕರು, ಮಹಿಳೆಯರು, ಬಡವರು ಮತ್ತು ಭಾಗಿದಾರರ ವರ್ಗದಲ್ಲಿ ತಲಾ 5 ರಂತೆ 25 ಭರವಸೆಗಳನ್ನು ಜನರ ಮುಂದಿಡುತ್ತಿದೆ. ಅದರಲ್ಲಿ ನಿರುದ್ಯೋಗಿ ಯುವಕರಿಗೆ ಒಂದು ಲಕ್ಷ ರೂ. ವೆಚ್ಚದೊಂದಿಗೆ ಕೌಶಲ್ಯ ತರಬೇತಿ ನೀಡಿ ಮೊದಲ ಉದ್ಯೋಗ ದೊರಕಿಸಿಕೊಡುವ ಭರವಸೆಯನ್ನು ಘೋಷಿಸಲಾಗಿದೆ. +30 ಲಕ್ಷ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಮಾಡುವುದು, ನವೋದ್ಯಮಿಗಳಿಗೆ ಶೇ. 50 ರಷ್ಟು ಆರ್ಥಿಕ ನೆರವು ಸೇರಿದಂತೆ ಮಹತ್ವದ 8 ಭರವಸೆಗಳನ್ನು ನೀಡಲಾಗಿದೆ.ಬಡಕುಟುಂಬದ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಖಚಿತ ಆದಾಯದ ಭರವಸೆ ನೀಡಲಾಗಿದ್ದು, ಪ್ರತಿ ವರ್ಷ ಒಂದು ಲಕ್ಷ ರೂ. ಆರ್ಥಿಕ ಸೌಲಭ್ಯ ನೀಡುವುದು, ಮಹಿಳಾ ಸಬಲೀಕರಣಗಳನ್ನೊಳಗೊಂಡಂತೆ 14 ಭರವಸೆಗಳನ್ನು ಘೋಷಿಸಲಾಗಿದೆ. +ರೈತರಿಗೆ ಸಾಲಮನ್ನಾ ಮತ್ತು ಕೃಷಿ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡುವುದೂ ಸೇರಿದಂತೆ 14 ಭರವಸೆಗಳನ್ನು ನೀಡಲಾಗಿದೆ.ಸಮಾನತೆಗಾಗಿ ಜಾತಿ ಜನಗಣತಿ ನಡೆಸಿ ಎಲ್ಲಾ ಜನಾಂಗಗಳ ಬಡವರಿಗೆ ಅನುಕೂಲ ಮಾಡಿಕೊಡುವುದು, ಶೇ.50 ರಷ್ಟು ಮೀಸಲಾತಿಯ ಮಿತಿಯನ್ನು ಹೆಚ್ಚಿಸುವುದು, ಶೇ.10 ರಷ್ಟು ಮೀಸಲಾತಿ ನೀಡುವ ಇಡಬ್ಲ್ಯೂಎಸ್ ಅನ್ನು ಯಾವುದೇ ಜಾತಿ ಮತ್ತು ಧರ್ಮದ ತಾರತಮ್ಯವಿಲ್ಲದೆ ಎಲ್ಲಾ ದುರ್ಬಲ ವರ್ಗದವರಿಗೆ ವಿಸ್ತರಿಸುವುದಾಗಿ ತಿಳಿಸಲಾಗಿದೆ. +ಎಸ್‍ಸಿ, ಎಸ್ಟಿ, ಓಬಿಸಿ ಸಮುದಾಯಗಳಿಗೆ ಮೀಸಲಿಟ್ಟ ಬ್ಯಾಕ್‍ಲಾಗ್ ಹುದ್ದೆಗಳನ್ನು ಒಂದು ವರ್ಷದಲ್ಲಿ ಭರ್ತಿ ಮಾಡುವುದು ಸೇರಿದಂತೆ 23 ಭರವಸೆಗಳನ್ನು ನೀಡಲಾಗಿದೆ.ಧಾರ್ಮಿಕ, ಭಾಷಾ ಅಲ್ಪಸಂಖ್ಯಾತರಿಗಾಗಿ 9 ಭರವಸೆಗಳನ್ನು, ಹಿರಿಯ ನಾಗರಿಕರು, ವಿಶೇಷ ಚೇತನರು ಹಾಗೂ ತೃತೀಯ ಲಿಂಗಿ ಸಮುದಾಯಗಳ ಶ್ರೇಯೋಭಿವೃದ್ಧಿಗೆ 11 ಭರವಸೆಗಳನ್ನು ನೀಡಲಾಗಿದೆ. +ಆರೋಗ್ಯ ವಲಯದಲ್ಲಿ ಪ್ರಾಥಮಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವುದು, ಗರಿಷ್ಠ 25 ಲಕ್ಷ ರೂ.ವರೆಗೂ ನಗದು ರಹಿತ ಸಾರ್ವತ್ರಿಕ ಆರೋಗ್ಯ ಕಾಳಜಿ ಸೇರಿದಂತೆ 19 ಭರವಸೆಗಳನ್ನು ನೀಡಲಾಗಿದೆ. +ಎನ್‍ಇಟಿಯನ್ನು ಜನಪರವಾಗಿ ಪರಿಷ್ಕರಿಸುವುದು, ಆರ್‍ಟಿಇ ಕಾಯ್ದೆಯನ್ನು 12ನೇ ತರಗತಿಯವರೆಗೂ ವಿಸ್ತರಿಸುವುದೂ ಸೇರಿದಂತೆ ಶಿಕ್ಷಣ ವಲಯಕ್ಕೆ 25, ಕ್ರೀಡಾ ಕ್ಷೇತ್ರಕ್ಕೆ 7, ಮೀನುಗಾರರು ಮತ್ತು ಮೀನುಗಾರಿಕಾ ಸಮುದಾಯಗಳಿಗೆ 10, ಕಾರ್ಮಿಕ ವರ್ಗಕ್ಕೆ 14 ಭರವಸೆಗಳನ್ನು ನೀಡಲಾಗಿದೆ. +ಮನ್ರೇಗಾ ಯೋಜನೆಯ ಕೂಲಿಯನ್ನು 400 ರೂ.ಗೆ ಹೆಚ್ಚಳ ಮಾಡುವುದು, ಅಂಗನವಾಡಿಯಲ್ಲಿ 14 ಲಕ್ಷ ಉದ್ಯೋಗ ಸೃಷ್ಟಿ, ಕೈಗಾರಿಕೆ ಮತ್ತು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಉತ್ಪಾದನೆ ಹೆಚ್ಚಳ ಮತ್ತು ಉದ್ಯೋಗ ಸೃಷ್ಟಿಗೆ ಬೆಂಬಲ ನೀಡುವುದಾಗಿ ತಿಳಿಸಲಾಗಿದೆ. +ಸಂವಿಧಾನದ ರಕ್ಷಣೆಗೆ ಸಂಬಂಧಪಟ್ಟಂತೆ 18 ಭರವಸೆಗಳನ್ನು ನೀಡಿದರೆ, ಕಳೆದ 10 ವರ್ಷಗಳಲ್ಲಿ ಎನ್‍ಡಿಎ ಸರ್ಕಾರ ಮಾಡಿರುವ ಹಾನಿಯನ್ನು ತಪ್ಪಿಸಲು ಪಿಎಂಕೆ ಮತ್ತು ಎಲೊಕ್ಟ್ರೋಲ್ ಬಾಂಡ್, ಸಾರ್ವಜನಿಕ ಆಸ್ತಿಗಳ ಮಾರಾಟ, ಗುಪ್ತಚರ ಇಲಾಖೆಯ ವೈಫಲ್ಯದ ಪುನರಾವರ್ತನೆ, ರಕ್ಷಣಾ ಒಪ್ಪಂದಗಳಲ್ಲಿನ ಭ್ರಷ್ಟಾಚಾರವನ್ನು ತನಿಖೆಗೊಳಪಡಿಸುವುದಾಗಿ ತಿಳಿಸಲಾಗಿದೆ. +ಮಾಧ್ಯಮಗಳ ಸ್ವಾಯತ್ತತೆಗೂ 8 ಭರವಸೆಗಳನ್ನು ನೀಡಲಾಗಿದೆ. ನ್ಯಾಯಾಂಗ ಸುಧಾರಣೆಗೆ 6, ಭ್ರಷ್ಟಾಚಾರ ನಿಗ್ರಹ, ಕಲೆ, ಸಂಸ್ಕøತಿ, ಪರಂಪರೆಯ ರಕ್ಷಣೆ, ಆರ್ಥಿಕತೆ ಸುಧಾರಣೆ, ಆಸ್ತಿ ಸೃಜನೆಗೆ ಹಲವು ಭರವಸೆಗಳನ್ನು ನೀಡಲಾಗಿದೆ. +ತೆರಿಗೆ ಪದ್ಧತಿ ಮತ್ತು ತೆರಿಗೆ ವ್ಯವಸ್ಥೆ ಸುಧಾರಣೆಗೆ 12, ಕೈಗಾರಿಕಾಭಿವೃದ್ಧಿ, ಮೂಲ ಸೌಕರ್ಯಾಭಿವೃದ್ಧಿಗೆ 10, ಒಕ್ಕೂಟ ವ್ಯವಸ್ಥೆ ಸಂರಕ್ಷಣೆಗೆ 12, ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಭಿವೃದ್ಧಿಗೆ 10, ಈಶಾನ್ಯ ರಾಜ್ಯಗಳಿಗೆ 7, ರಾಷ್ಟ್ರೀಯ ಭದ್ರತೆಗೆ 11, ಆಂತರಿಕ ಸುರಕ್ಷತೆಗೆ 7, ವಿದೇಶಾಂಗ ನೀತಿಗೆ 12, ಪರಿಸರ ರಕ್ಷಣೆಗೆ 13, ನೀರಿನ ನಿರ್ವಹಣೆ ಮತ್ತು ನೈರ್ಮಲೀಕರಣಕ್ಕೆ 7 ಪ್ರಮುಖ ಭರವಸೆಗಳನ್ನು ಜನರ ಮುಂದಿಡಲಾಗಿದೆ. +ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‍ನ ನ್ಯಾಯ ಪತ್ರವನ್ನು ಬಡವರಿಗೆ ಅರ್ಪಣೆ ಮಾಡುವುದಾಗಿ ತಿಳಿಸಿದರು.ರಾಹುಲ್‍ಗಾಂಧಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ಪಡೆದಿದೆ. ಆದರೆ ಇದರಲ್ಲಿನ ಎಲ್ಲಾ ಭರವಸೆಗಳು ಮತ್ತು ಅಭಿಪ್ರಾಯಗಳು ಜನರೇ ಹೇಳಿದ್ದಾಗಿವೆ. ನಾವು ಶೇ. 98 ರಷ್ಟಿರುವ ಜನಸಂಖ್ಯೆಯನ್ನು ತಲುಪಲು ಮತ್ತು ಅವರ ಶ್ರೇಯೋಭಿವೃದ್ಧಿಗಾಗಿ ಪ್ರಣಾಳಿಕೆ ರೂಪಿಸಿದ್ದೇವೆ. +ಬಿಜೆಪಿ ಶೇ.2 ರಷ್ಟಿರುವ ಶ್ರೀಮಂತ ಉದ್ಯಮಿಗಳನ್ನು ಕೇಂದ್ರವಾಗಿಟ್ಟುಕೊಂಡು ಪ್ರಣಾಳಿಕೆ ನೀಡಬಹುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಣಾಳಿಕೆ ಸಮಿತಿಯ ಪಿ.ಚಿದಂಬರಂ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪವಾನ್ ಖೇರ, ಜಯರಾಂ ರಮೇಶ್ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_47_129_11.txt b/eesanje/url_47_129_11.txt new file mode 100644 index 0000000000000000000000000000000000000000..f57381d86924ed34fec3ec6c1f3069f9286e2872 --- /dev/null +++ b/eesanje/url_47_129_11.txt @@ -0,0 +1,9 @@ +ಇಂಡಿಯಾ ಗೆದ್ದರೆ ಪ್ರಧಾನಿ ಯಾರಾಗ್ತಾರೆ..? ಎಂಬುದಕ್ಕೆ ರಾಹುಲ್ ಸ್ಪಷ್ಟನೆ +ನವದೆಹಲಿ,ಏ.5-ಮುಂದಿನ ಪ್ರಧಾನಮಂತ್ರಿ ಯಾರು ಎಂಬ ವಿಚಲಿತಕಾರಿ ಚರ್ಚೆ ಸದ್ಯಕ್ಕೆ ಅನಗತ್ಯ. ಇಂಡಿಯಾ ಘಟಬಂಧನ್ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಒಟ್ಟಾಗಿ ಚರ್ಚಿಸಿ ನಾಯಕತ್ವದ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಕಾಂಗ್ರೆಸ್ ಪ್ರಣಾಳಿಕೆಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯ ಭಾರೀ ಪ್ರಚಾರವನ್ನು ಲೇವಡಿ ಮಾಡಿದರು. +ಈ ಮೊದಲು ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ಭಾರತ ಪ್ರಕಾಶಿಸುತ್ತದೆ ಎಂಬ ಘೋಷಣೆಯೊಂದಿಗೆ ದೊಡ್ಡ ಪ್ರಚಾರ ನಡೆಸಲಾಯಿತು. ಅದನ್ನು ಯಾರು ಮಾಡಿದ್ದರು, ಅದರ ಪರಿಣಾಮ ಏನಾಯಿತು ಎಂದು ನಮ್ಮ ಕಣ್ಣೆದುರಿಗಿದೆ. ಪ್ರಸ್ತುತ ಮೋದಿಯವರ ಸರ್ಕಾರ ಅಂತಹುದೇ ಪ್ರಚಾರ ನಡೆಸುತ್ತಿದೆ. ಅಂತಾರಾಷ್ಟ್ರೀಯ ದೃಷ್ಟಿಕೋನ ಹಾಗೂ ಮೂರ್ನಾಲ್ಕು ದಿಕ್ಕಿನಲ್ಲಿ ಜನರನ್ನು ದಾರಿ ತಪ್ಪಿಸುವ ಪ್ರಚಾರ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿದರು. +ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಆರ್ಥಿಕ ಏಕ ಸ್ವಾಮ್ಯತೆಯನ್ನು ತಮ್ಮ ಅಧೀನದಲ್ಲಿಟ್ಟುಕೊಂಡಿದ್ದಾರೆ. ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಸೇರಿದಂತೆ ಕೇಂದ್ರ ತನಿಖಾ ಸಂಸ್ಥೆಗಳನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. +ದೇಶದ ರಾಜಕಾರಣದಲ್ಲಿ ಹಿಂದೆಂದೂ ಈ ರೀತಿ ಆಗಿರಲಿಲ್ಲ. ವಿರೋಧಪಕ್ಷಗಳ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಿಪಕ್ಷಗಳ ನಾಯಕರ ಸಾಮಾಜಿಕ ಜಾಲತಾಣಗಳ ಮೇಲೂ ನಿಯಂತ್ರಣ ತರಲಾಗಿದೆ ಎಂದು ವಾಗ್ದಾಳಿ ನಡೆಸಿದರು. +ಆಡಳಿತಾರೂಢ ಬಿಜೆಪಿ ಧಮ್ಕಿ ಹಾಕಿ, ಒತ್ತಡ ಹೇರಿ, ಹಣಕಾಸು ವಸೂಲಿ ಮಾಡುತ್ತಿದೆ. ನಮ್ಮಲ್ಲಿದ್ದ ಭ್ರಷ್ಟರು ಈಗ ಬಿಜೆಪಿಗೆ ಹೋಗಿದ್ದಾರೆ. ಎಲೆಕ್ಟ್ರೋಲ್ ಬಾಂಡ್‍ನಲ್ಲಿ ಬಿಜೆಪಿಯ ಭ್ರಷ್ಟಾಚಾರದ ನೀಲನಕ್ಷೆಯೇ ಸಿಗುತ್ತಿದೆ. ಯಾವಾಗ ಆದಾಯ ತೆರಿಗೆ ಮತ್ತು ಇಡಿ ದಾಳಿಯಾಯಿತು, ಅದರ ಬಳಿಕ ಎಷ್ಟು ಹಣ ಸಂಗ್ರಹವಾಯಿತು, ಗುತ್ತಿಗೆಗಳನ್ನು ನೀಡಿದ ಬಳಿಕ ಎಷ್ಟು ಬಾಂಡ್‍ಗಳನ್ನು ಮಾರಾಟ ಮಾಡಲಾಯಿತು ಎಂಬ ಎಲ್ಲಾ ವಿಚಾರಗಳೂ ಕಣ್ಣೆದುರಿಗಿವೆ ಎಂದು ಹೇಳಿದರು. +ಈಗಿನ ಲೋಕಸಭಾ ಚುನಾವಣೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಕರು ಮತ್ತು ಅದನ್ನು ನಾಶಮಾಡಲು ಹೊರಟಿರುವವರ ನಡುವಿನ ಸಂಘರ್ಷವಾಗಿದೆ ಎಂದರು.ಇದೇ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಪಿ.ಚಿದಂಬರಂ, ಸರ್ಕಾರಿ ನೌಕರರ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವ ವಿಚಾರವನ್ನು ನಾವು ಮಾಡುತ್ತಿಲ್ಲ, ಕೇಂದ್ರ ಸರ್ಕಾರ ಆರ್ಥಿಕ ಇಲಾಖೆ ಕಾರ್ಯದರ್ಶಿ ನೇತೃತ್ವದಲ್ಲಿ ಎನ್‍ಪಿಎಸ್‍ನ ಪರಿಷ್ಕರಣೆ ಮತ್ತು ಓಪಿಎಸ್‍ನ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚಿಸಿದೆ. ಅದರ ವರದಿ ಬರುವ ಮೊದಲೇ ಓಪಿಎಸ್ ಬಗ್ಗೆ ನಮ್ಮ ನಿಲುವನ್ನು ಹೇಳುವುದು ಆತುರದ ಕ್ರಮವಾಗಲಿದೆ ಎಂಬ ಕಾರಣಕ್ಕಾಗಿ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. +ಈ ಹಿಂದೆ ಯುಪಿಎ ಸರ್ಕಾರದಲ್ಲಿ ಶೇ.7.5 ರಷ್ಟು ಬೆಳವಣಿಗೆಯ ದರ ಇತ್ತು. ಮೋದಿ ಸರ್ಕಾರ ಈ ಅಂಕಿ ಅಂಶಗಳನ್ನು ಪರಿಷ್ಕರಣೆ ಮಾಡಿ 6.7 ಎಂದು ನಂಬಿಸುವ ಯತ್ನ ಮಾಡಿದೆ. ಕಳೆದ 10 ವರ್ಷಗಳ ಎನ್‍ಡಿಎ ಆಡಳಿತದಲ್ಲಿ ಬೆಳವಣಿಗೆಯ ದರ 5.9 ಕ್ಕೆ ಕುಸಿದಿದೆ. ಶೇ. 1.6 ರಷ್ಟು ವ್ಯತ್ಯಾಸದ ಈ ಬೆಳವಣಿಗೆಯ ದರ ದೇಶದಲ್ಲಿ ಭಾರೀ ಪರಿಣಾಮವನ್ನು ಉಂಟುಮಾಡಿದೆ. ಬಡವರ ಆರ್ಥಿಕತೆಯನ್ನು ಕುಗ್ಗಿಸಿದೆ, ಉದ್ಯೋಗ ನಷ್ಟ, ಹೂಡಿಕೆ ಪ್ರಮಾಣದಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ, ಕಲ್ಯಾಣ ಯೋಜನೆಗಳು ಸಂಪೂರ್ಣ ಮೂಲೆಗುಂಪಾಗಿವೆ, ಮೋದಿ ಸರ್ಕಾರ ಶ್ರೀಮಂತರಿಂದ, ಶ್ರೀಮಂತರಿಗಾಗಿ, ಶ್ರೀಮಂತರಿಗೋಸ್ಕರ ನಡೆಯುತ್ತಿದೆ ಎಂದರು. +ಯುಪಿಎ ಅವಧಿಯಲ್ಲಿ 24 ಕೋಟಿ ಜನ ಬಡತನ ರೇಖೆಗಿಂತ ಹೊರಬಂದಿದ್ದರು. ಎನ್‍ಡಿಎ ಅವಯಲ್ಲಿ 23 ಕೋಟಿ ಜನ ಬಡತನಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಆರ್ಥಿಕ ಬೆಳವಣಿಗೆಯ ಮುಖ್ಯ ವಾಹಿನಿಗೆ ತರುವುದು ಕಾಂಗ್ರೆಸ್‍ನ ಧ್ಯೇಯೋದ್ದೇಶ ಎಂದು ಹೇಳಿದರು. ಪಕ್ಷಾಂತರಗೊಂಡ ಸಂದರ್ಭದಲ್ಲಿ ಅವರ ಸದಸ್ಯತ್ವವನ್ನು ತತ್‍ಕ್ಷಣವೇ ರದ್ದುಗೊಳ್ಳಲು ಪೂರಕವಾಗಿ ಸಂವಿಧಾನದ 10ನೇ ಶೆಡ್ಯೂಲ್ ತಿದ್ದುಪಡಿ ತಂದು ಪಕ್ಷಾಂತರ ಕಾಯ್ದೆಯನ್ನು ಬಲಿಷ್ಠಗೊಳಿಸುವುದಾಗಿ ತಿಳಿಸಿದರು. \ No newline at end of file diff --git a/eesanje/url_47_129_12.txt b/eesanje/url_47_129_12.txt new file mode 100644 index 0000000000000000000000000000000000000000..a74410561f3081b5757fb8fe039150b34bd71514 --- /dev/null +++ b/eesanje/url_47_129_12.txt @@ -0,0 +1,7 @@ +ಕಾಂಗ್ರೆಸ್ ಸಾಧಿಸಬಹುದಾದಂತ ಭರವಸೆಗಳನ್ನು ಮಾತ್ರ ನೀಡುತ್ತದೆ : ಮಲ್ಲಿಕಾರ್ಜುನ್ ಖರ್ಗೆ +ನವದೆಹಲಿ,ಏ.5-ಕಾಂಗ್ರೆಸ್ ಪಕ್ಷ ಕಾರ್ಯಸಾಧುವಾದಂತಹ ಭರವಸೆಗಳನ್ನು ಮಾತ್ರ ನೀಡುತ್ತದೆ, ಜನರನ್ನು ನಂಬಿಸಲು ಉತ್ಪ್ರೇಕ್ಷೆಯ ಆಶ್ವಾಸನೆಗಳನ್ನು ಪ್ರಕಟಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ನಾವು ಭರವಸೆಗಳನ್ನು ನೀಡಿ ಭಾಷಣ ಮಾಡಿದರೆ ಸಾಲುವುದಿಲ್ಲ. ಅದನ್ನ ಮನೆಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು. +ಕಾಂಗ್ರೆಸ್ ಪಕ್ಷ ಈ ಮೊದಲು ನೀಡಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿದೆ. ಪ್ರಸ್ತುತ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ, ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲೂ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅಧಿಕಾರ ಸಿಕ್ಕರೆ ಪ್ರಣಾಳಿಕೆಯ ಎಲ್ಲಾ ವಾಗ್ದಾನಗಳನ್ನೂ ಜಾರಿಗೆ ತರುತ್ತೇವೆ ಎಂದು ವಿವರಿಸಿದರು. +ಬಿಜೆಪಿ ಚಂದಾ ಕೊಡು, ದಂಧೆ ಮಾಡು ಎಂಬ ಧೋರಣೆ ಅನುಸರಿಸುತ್ತಿದೆ. ಪ್ರಧಾನಿಯವರು ನಮ್ಮ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ. ಆದರೆ 50ಕ್ಕೂ ಹೆಚ್ಚು ಭ್ರಷ್ಟ ನಾಯಕರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ. ನಮ್ಮಲ್ಲಿದ್ದ ಭ್ರಷ್ಟಾಚಾರಿಗಳು ಬಿಜೆಪಿ ಸೇರಿದಾಕ್ಷಣ ಸ್ವಚ್ಛಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು. +ಈ ಹಿಂದೆ ನಮ್ಮ ಸರ್ಕಾರದಲ್ಲಿ ಆರ್‍ಟಿಇ, ಆರ್‍ಟಿಐ, ಉದ್ಯೋಗ ಖಾತ್ರಿ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ರೂಪಿಸಲಾಗಿತ್ತು. ಅದರ ಹಿಂದೆ ಸೋನಿಯಾಗಾಂಧಿಯವರ ಒತ್ತಡವಿತ್ತು. ಪ್ರತಿ ಸಂಪುಟ ಸಭೆಯ ಬಳಿಕವೂ ಉದ್ಯೋಗ ಖಾತ್ರಿ ಯೋಜನೆ ಜಾರಿಯ ಬಗ್ಗೆ ಸೋನಿಯಾಗಾಂಧಿಯವರು ಸಚಿವರುಗಳನ್ನು ಪ್ರಶ್ನಿಸುತ್ತಿದ್ದರು ಎಂದು ಹೇಳಿದರು. +ಪ್ರಧಾನಿ ನರೇಂದ್ರ ಮೋದಿಯವರಿಗೆ 10 ವರ್ಷಗಳಲ್ಲಿ ಇಂತಹ ಒಂದು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿಲ್ಲ. ಇಡಿ, ಆದಾಯ ತೆರಿಗೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾವು ಬೆದರುವ ಪ್ರಶ್ನೆಯೇ ಇಲ್ಲ. ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಯಾರ ಬಳಿಯೂ ಹೆದರಿಕೆ ಎಂಬ ಪದ ಸುಳಿಯುವುದಿಲ್ಲ. ರಾಹುಲ್‍ಗಾಂಧಿಯವರು ಗಲಬಭೆಪೀಡಿತ ಮಣಿಪುರಕ್ಕೆ ಭೇಟಿ ನೀಡುವ ಧೈರ್ಯ ತೋರಿಸುವುದಾದರೆ ಪ್ರಧಾನಿಯವರಿಗೆ ಏಕೆ ಸಾಧ್ಯವಾಗುವುದಿಲ್ಲ ಎಂದು ಖರ್ಗೆ ಪ್ರಶ್ನಿಸಿದರು. +ಚುನಾವಣೆಯಲ್ಲಿ ಹೋರಾಟದ ಸಮಾನ ವೇದಿಕೆ ಇರಬೇಕು, ಆದರೆ ಪ್ರಸ್ತುತ ಅಂತಹ ವ್ಯವಸ್ಥೆಯಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಕಾನೂನು ಮೀರಿ ಆದಾಯ ತೆರಿಗೆ ಇಲಾಖೆ ದಂಡ ಹಾಕಿದೆ.ಬ್ಯಾಂಕ್ ಖಾತೆಗಳನ್ನು ಭರ್ತಿ ಮಾಡಲಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಮೀರಿ ಮೋದಿ ನಡೆದುಕೊಳ್ಳುತ್ತಿದ್ದಾರೆ. ಅವರನ್ನು ಅಧಿಕಾರದಿಂದ ದೂರವಿಡದೇ ಇದ್ದರೆ ಪ್ರಜಾಪ್ರಭುತ್ವಕ್ಕೆ ಅಪಾಯ ತಪ್ಪಿದ್ದಲ್ಲ ಎಂದು ಖರ್ಗೆ ಎಚ್ಚರಿಸಿದರು. \ No newline at end of file diff --git a/eesanje/url_47_129_2.txt b/eesanje/url_47_129_2.txt new file mode 100644 index 0000000000000000000000000000000000000000..498809099c9efe06e74051c11a5844bb52b863be --- /dev/null +++ b/eesanje/url_47_129_2.txt @@ -0,0 +1,4 @@ +ಸಮುದ್ರಕ್ಕೆ ಎಸೆದಿದ್ದ 3 ಕೋಟಿ ರೂ. ಮೌಲ್ಯದ 4.9 ಕೆಜಿ ಚಿನ್ನ ವಶ +ರಾಮನಾಥಪುರಂ,ಏ. 6 (ಪಿಟಿಐ)ಕರಾವಳಿ ಕಾವಲು ಪಡೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶ್ರೀಲಂಕಾದಿಂದ ಅಕ್ರಮವಾಗಿ ಸಾಗಿಸಿ ಸಮುದ್ರಕ್ಕೆ ಎಸೆದ ಮೂರು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. +ಏಜೆನ್ಸಿಗಳು ರಾಮನಾಥಪುರಂ ಸಮೀಪವಿರುವ ಸಮುದ್ರ ತಳದಿಂದ ಒಟ್ಟು 4.9 ಕೆಜಿ ಅಮೂಲ್ಯವಾದ ಚಿನ್ನವನ್ನು ವಶಪಡಿಸಿಕೊಂಡಿವೆ.ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಮತ್ತು ಕಸ್ಟಮ್ಸ್ ಪ್ರಿವೆಂಟಿವ್ ಯುನಿಟ್ (ಸಿಪಿಯು), ರಾಮನಾಥಪುರಂ, ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್ಐ) ಜಂಟಿ ಕಾರ್ಯಾಚರಣೆಯಲ್ಲಿ 4.9 ಕೆಜಿ ವಿದೇಶಿ ಮೂಲದ ಚಿನ್ನವನ್ನು ಮಧ್ಯ ಸಮುದ್ರದ ವೆಧಲೈ ಕರಾವಳಿಯ ಮಂಡಪಮ್ನಿಂದ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. +ಶಂಕಿತ ದೋಣಿಯನ್ನು ಗುರುತಿಸಲಾಗಿದ್ದು, ಅದನ್ನು ತಡೆಹಿಡಿಯುವ ಮೊದಲು, ಅದರಲ್ಲಿದ್ದವರು ಚಿನ್ನವನ್ನು ಸಮುದ್ರಕ್ಕೆ ಎಸೆದಿದ್ದಾರೆ. ನಂತರ ಅದನ್ನು ಸಮುದ್ರದ ತಳದಿಂದ ಹೊರತೆಗೆಯಲಾಯಿತು. ಮೂವರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_129_3.txt b/eesanje/url_47_129_3.txt new file mode 100644 index 0000000000000000000000000000000000000000..569611c75f7acc31a93efc559c8a7c8d7453b1de --- /dev/null +++ b/eesanje/url_47_129_3.txt @@ -0,0 +1,6 @@ +ಪಶ್ಚಿಮ ಬಂಗಾಳದಲ್ಲಿ ಎನ್ಐಎ ಅಧಿಕಾರಿಗಳ ಮೇಲೆ ಗ್ರಾಮಸ್ಥರ ದಾಳಿ +ಕೋಲ್ಕತ್ತಾ,ಏ.6- (ಪಿಟಿಐ)ಬಾಂಬ್ ಸ್ಪೋಟ ಪ್ರಕರಣದ ತನಿಖೆಗೆ ತೆರಳಿದ್ದ ಎನ್ಐಎ ಅಧಿಕಾರಿಗಳಿದ್ದ ವಾಹನದ ಮೇಲೆ ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಗ್ರಾಮಸ್ಥರು ದಾಳಿ ನಡೆಸಿದ್ದಾರೆ. +ಎನ್ಐಎ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಗ್ರಾಮಸ್ಥರು ಇಂದು ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಎನ್ಐಎ ಅಧಿಕಾರಿಗಳ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಕೋಲ್ಕತ್ತಾಗೆ ಹಿಂದಿರುಗುತ್ತಿದ್ದಾಗ ವಾಹನದ ಮೇಲೆ ದಾಳಿ ನಡೆಸಲಾಯಿತು ಎಂದು ಅವರು ಹೇಳಿದರು. +ಸ್ಥಳೀಯರು ವಾಹನವನ್ನು ಘೇರಾವ್ ಮಾಡಿದರು ಮತ್ತು ಅದರ ಮೇಲೆ ಕಲ್ಲು ತೂರಿದರು. ಘಟನೆಯಲ್ಲಿ ಎನ್ಐಎ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೂಡ ಪೊಲೀಸ್ ದೂರು ದಾಖಲಿಸಿದೆ. ಘಟನೆಯ ಕುರಿತು ಪ್ರತಿಕ್ರಿಯೆಗಳಿಗೆ ಫೆಡರಲ್ ತನಿಖಾ ಸಂಸ್ಥೆಯ ಅಧಿಕಾರಿಗಳು ಲಭ್ಯವಿಲ್ಲ. +ಕೇಂದ್ರ ಪೊಲೀಸ್ ಪಡೆಯ ಬೃಹತ್ ತುಕಡಿ ಭೂಪತಿನಗರ ತಲುಪಿದ್ದು, ಇಬ್ಬರು ಬಂಧಿತ ವ್ಯಕ್ತಿಗಳೊಂದಿಗೆ ಎನ್ಐಎ ತಂಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಡಿಸೆಂಬರ್ 3, 2022 ರಂದು ಭೂಪತಿನಗರದ ಕಚ್ಚಾ ಮನೆಯೊಂದರಲ್ಲಿ ಸ್ಪೋಟ ಸಂಭವಿಸಿ ಮೂವರು ಸಾವನ್ನಪ್ಪಿದರು. ನಂತರ ತನಿಖೆಯನ್ನು ಎನ್ಐಎ ಗೆ ಹಸ್ತಾಂತರಿಸಲಾಗಿತ್ತು. ಶನಿವಾರದ ಘಟನೆಯು ಜನವರಿ 5 ರಂದು ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ದಾಳಿಯ ಸಂದರ್ಭದಲ್ಲಿ ಉತ್ತರ 24 ಪರಗಣಗಳ ಸಂದೇಶಖಾಲಿ ಪ್ರದೇಶದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದವು. \ No newline at end of file diff --git a/eesanje/url_47_129_4.txt b/eesanje/url_47_129_4.txt new file mode 100644 index 0000000000000000000000000000000000000000..dc29e1ef9bfb7b1aa1e36ec02c23a51c0ecf844e --- /dev/null +++ b/eesanje/url_47_129_4.txt @@ -0,0 +1,9 @@ +ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಒಪ್ಪಿಗೆ, ಭಾರತದ ನಡೆಗೆ ಎಲ್ಲೆಡೆ ಮೆಚ್ಚುಗೆ +ಮಾಲೆ, ಏ. 6 (ಪಿಟಿಐ)ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಅವರು ತಮ್ಮ ರಾಷ್ಟ್ರಕ್ಕೆ ನಿರ್ದಿಷ್ಟ ಪ್ರಮಾಣದ ಅಗತ್ಯ ವಸ್ತುಗಳ ರಫ್ತು ಮಾಡುವ ಕೋಟಾವನ್ನು ನವೀಕರಿಸುವ ಭಾರತದ ನಿರ್ಧಾರವೂ ದೀರ್ಘಕಾಲದ ದ್ವಿಪಕ್ಷೀಯ ಸ್ನೇಹ ಮತ್ತು ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ. +ಮಾಲ್ಡೀವ್ಸ್ ಸರ್ಕಾರದ ಕೋರಿಕೆಯ ಮೇರೆಗೆ 2024-25 ನೇ ಸಾಲಿಗೆ ಭಾರತವು ನಿರ್ದಿಷ್ಟ ಪ್ರಮಾಣದ ಅಗತ್ಯ ವಸ್ತುಗಳ ರಫ್ತು ಮಾಡಲು ಅನುಮತಿ ನೀಡಿದೆ ಎಂದು ಭಾರತೀಯ ಹೈಕಮಿಷನ್ ಇಲ್ಲಿ ತಿಳಿಸಿದೆ. +ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್ನಲ್ಲಿ ಪೊಸ್ಟ್ ಮೂಲಕ ಈ ಕ್ರಮವನ್ನು ಪ್ರಕಟಿಸಿದ ಭಾರತೀಯ ಹೈಕಮಿಷನರ್ ಅವರು, ಇದನ್ನು ವಿಶಿಷ್ಟ ದ್ವಿಪಕ್ಷೀಯ ಕಾರ್ಯವಿಧಾನದ ಅಡಿಯಲ್ಲಿ ಮಾಡಲಾಗುತ್ತಿದೆ, ಅದರ ಅಡಿಯಲ್ಲಿ ಈ ಪ್ರತಿಯೊಂದು ಐಟಂಗಳ ಕೋಟಾಗಳನ್ನು ಮೇಲ್ಮುಖವಾಗಿ ಪರಿಷ್ಕರಿಸಲಾಗಿದೆ ಎಂದು ಹೇಳಿದರು. +ಈ ವ್ಯವಸ್ಥೆಯು 1981 ರಲ್ಲಿ ಜಾರಿಗೆ ಬಂದ ನಂತರ ಅನುಮೋದಿತ ಪ್ರಮಾಣಗಳು ಅತ್ಯಧಿಕವಾಗಿದೆ ಎಂದು ನಂಬಲಾಗಿದೆ. ಭಾರತದ ಈ ನಿರ್ಧಾರಕ್ಕೆ ಜಮೀರ್ ಎಕ್ಸ್ನಲ್ಲಿ ಧನ್ಯವಾದ ಅರ್ಪಿಸಿದ್ದಾರೆ.2024 ಮತ್ತು 2025 ರ ಅವಧಿಯಲ್ಲಿ ಭಾರತದಿಂದ ಅಗತ್ಯ ಸರಕುಗಳನ್ನು ಆಮದು ಮಾಡಿಕೊಳ್ಳಲು ಮಾಲ್ಡೀವ್ಸ್ ಅನ್ನು ಸಕ್ರಿಯಗೊಳಿಸಲು ಕೋಟಾವನ್ನು ನವೀಕರಿಸಿದ್ದಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಪ್ರಾಮಾಣಿಕವಾಗಿ ಧನ್ಯವಾದಗಳು ಎಂದು ಜಮೀರ್ ಬರೆದಿದ್ದಾರೆ. +ಇದು ನಿಜವಾಗಿಯೂ ದೀರ್ಘಕಾಲದ ಸ್ನೇಹವನ್ನು ಸೂಚಿಸುವ ಒಂದು ಸೂಚಕವಾಗಿದೆ ಮತ್ತು ನಮ್ಮ ಎರಡು ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮತ್ತು ವಾಣಿಜ್ಯವನ್ನು ಮತ್ತಷ್ಟು ವಿಸ್ತರಿಸುವ ಬಲವಾದ ಬದ್ಧತೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು. +ಜಮೀರ್ ಅವರ ಪೊಸ್ಟ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪ್ರತಿಕ್ರಿಯಿಸಿ, ಭಾರತವು ತನ್ನ ನೆರೆಹೊರೆಯ ಮೊದಲ ಮತ್ತು ಸಾಗರ ನೀತಿಗಳಿಗೆ ದೃಢವಾಗಿ ಬದ್ಧವಾಗಿದೆ ಎಂದು ಹೇಳಿದರು.ಪ್ರದೇಶದಲ್ಲಿ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ ಎಂಬುದು ಭಾರತದ ನೀತಿ ಅಥವಾ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರ ಸಹಕಾರದ ಸಿದ್ಧಾಂತವಾಗಿದೆ.ಭಾರತದ ನೆರೆಹೊರೆ ಮೊದಲು ನೀತಿಯು ದೇಶವು ತನ್ನ ನೆರೆಯ ರಾಷ್ಟ್ರಗಳಿಗೆ ಲಗತ್ತಿಸಲು ಬಯಸುವ ನವೀಕರಿಸಿದ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ ಎಂದಿದ್ದಾರೆ. +ಕಳೆದ ವರ್ಷ ನವೆಂಬರ್ನಿಂದ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಗದ್ದಲದ ನಡುವೆ ಕೋಟಾದ ನವೀಕರಣದ ನಡುವೆ ಈ ಘೋಷಣೆ ಬಂದಿದೆ, ಚೀನಾ ಪರ ಒಲವುಗಳಿಗೆ ಹೆಸರುವಾಸಿಯಾದ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ತನ್ನ 88 ಸೇನಾ ಸಿಬ್ಬಂದಿಯನ್ನು ಭಾರತಕ್ಕೆ ವಾಪಸ್ ಕಳುಹಿಸುವಂತೆ ಒತ್ತಾಯಿಸಿದ್ದರು. +ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ದ್ವೀಪಗಳ ಫೋಟೋಗಳು ಮತ್ತು ವೀಡಿಯೋಗಳನ್ನು ಪೊಸ್ಟ್ ಮಾಡಿದ ನಂತರ ಮಾಲ್ಡೀವ್ಸ್ನ ಮೂವರು ಅ„ಕಾರಿಗಳು ಕೆಟ್ಟ ಕಾಮೆಂಟ್ಗಳನ್ನು ಮಾಡಿದಾಗ ಸಂಬಂಧಗಳು ಮತ್ತಷ್ಟು ಹದಗೆಟ್ಟಿದ್ದವು. ಇದರ ಪರಿಣಾಮವಾಗಿ ದ್ವೀಪ ರಾಷ್ಟ್ರಕ್ಕೆ ಭಾರತೀಯ ಪ್ರವಾಸಿಗರಲ್ಲಿ ಗಮನಾರ್ಹ ಇಳಿಕೆಯಾಗಿತ್ತು. \ No newline at end of file diff --git a/eesanje/url_47_129_5.txt b/eesanje/url_47_129_5.txt new file mode 100644 index 0000000000000000000000000000000000000000..07169bc724206902c1c31d4a0cb2ec3838714b74 --- /dev/null +++ b/eesanje/url_47_129_5.txt @@ -0,0 +1,7 @@ +ಚುನಾವಣಾ ಆಯೋಗಕ್ಕೆ ದೆಹಲಿ ಸಚಿವೆ ಅತಿಶಿ ಸವಾಲು +ನವದೆಹಲಿ,ಏ.6-(ಪಿಟಿಐ)ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮವನ್ನು ಬಹಿರಂಗಪಡಿಸುವಂತೆ ದೆಹಲಿ ಸಚಿವೆ ಅತಿಶಿ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷದ (ಬಿಜೆಪಿ) ಇಚ್ಛೆಯಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು. +ಪಕ್ಷಕ್ಕೆ ಸೇರುವಂತೆ ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲು ಸಿದ್ಧರಾಗಿರಲು ಬಿಜೆಪಿ ತನ್ನನ್ನು ಸಂಪರ್ಕಿಸಿದೆ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಅತಿಶಿಗೆ ನೋಟಿಸ್ ಜಾರಿ ಮಾಡಿದೆ. +ಕೇವಲ ಅನುಮಾನದ ಆಧಾರದ ಮೇಲೆ, ಎಎಪಿ ನಾಯಕರಾದ ಸಂಜಯ್ ಸಿಂಗ್, ಮನೀಶ್ ಸಿಸೋಡಿಯಾ ಮತ್ತು ನಮ್ಮ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಜಿಅವರ ವಿರುದ್ಧ ಯಾವುದೇ ಹಣದ ಜಾಡು ಪತ್ತೆಯಾಗದಿದ್ದರೂ ಇಡಿ ಅವರನ್ನು ಬಂಧಿಸಿದೆ. +ತನಿಖಾ ಸಂಸ್ಥೆಯು ಹಣದ ಜಾಡು ಸ್ಥಾಪಿಸಲು ಸಾಧ್ಯವಾಗಿರುವ ಬಿಜೆಪಿ ನಾಯಕರ ವಿರುದ್ಧ ಇಡಿ ಏನು ಕ್ರಮ ಕೈಗೊಂಡಿದೆ ಎಂದು ಅವರು ಪ್ರಶ್ನಿಸಿದ್ದಾರೆ. ದೆಹಲಿಯ ಅಬಕಾರಿ ನೀತಿ ಹಗರಣದ ಆರೋಪಿಯಿಂದ ಚುನಾವಣಾ ಬಾಂಡ್ಗಳ ಮೂಲಕ ಕೇಸರಿ ಪಕ್ಷವು ಕೋಟ್ಯಂತರ ರೂಪಾಯಿಗಳನ್ನು ಪಡೆದಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಎಎಪಿ ಕಳೆದ ತಿಂಗಳು ಇಡಿಯನ್ನು ಕೇಳಿತ್ತು. +ಈ ಪ್ರಕರಣದ ಹಣದ ಜಾಡು ಕೇಸರಿ ಪಕ್ಷಕ್ಕೆ ತಲುಪಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಇಡಿಗೆ ಪಕ್ಷ ಸವಾಲು ಹಾಕಿದೆ.ಪತ್ರಿಕಾಗೋಷ್ಠಿಯಲ್ಲಿ ಅತಿಶಿ, ಬಿಜೆಪಿಯು ಇತರ ಕೇಂದ್ರೀಯ ಸಂಸ್ಥೆಗಳಂತೆ ಚುನಾವಣಾ ಆಯೋಗವನ್ನು ಪ್ರತಿಪಕ್ಷಗಳನ್ನು ಗುರಿಯಾಗಿಸಲು ಬಳಸುತ್ತಿದೆ ಎಂದು ಆರೋಪಿಸಿದರು. +ಬಿಜೆಪಿಯು ಎಎಪಿ ನಾಯಕರನ್ನು ಗುರಿಯಾಗಿಸಲು ಮತ್ತು ಅವರನ್ನು ಬಂಧಿಸಲು ಸಿಬಿಐ, ಇಡಿ ಮತ್ತು ಈಗ ಚುನಾವಣಾ ಆಯೋಗದಂತಹ ಏಜೆನ್ಸಿಗಳನ್ನು ಬಳಸುತ್ತಿದೆ. ಈ ಸಂಸ್ಥೆಗಳ ಹಿಂದೆ ಅಡಗಿಕೊಳ್ಳುವುದನ್ನು ಬಿಟ್ಟು ಚುನಾವಣೆಯಲ್ಲಿ ಎಎಪಿ ವಿರುದ್ಧ ಹೋರಾಡಬೇಕು ಎಂದು ನಾನು ಬಿಜೆಪಿಗೆ ಹೇಳಲು ಬಯಸುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_129_6.txt b/eesanje/url_47_129_6.txt new file mode 100644 index 0000000000000000000000000000000000000000..a813ae8d9338bac2937f72d62f7daa10364ec41d --- /dev/null +++ b/eesanje/url_47_129_6.txt @@ -0,0 +1,7 @@ +ಇನ್ನೊಂದು ವಾರದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್ ಸಿಂಗ್ +ನವದೆಹಲಿ,ಏ.6-ಇನ್ನೊಂದು ವಾರದಲ್ಲಿ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡುವುದಾಗಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ. ಸುದ್ದಿ ವಾಹಿನಿವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಇನ್ನು ಏಳೆಂಟು ದಿನದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. +ಈಗಾಗಲೇ ಬಹುತೇಕ ಕೆಲಸ ಮುಗಿದಿದ್ದು ಅಂತಿಮ ಹಂತದ ಪರಿಶೀಲನೆ ನಡೆಯುತ್ತಿದೆ. ಅಲ್ಲದೇ ಪ್ರಣಾಳಿಕೆ ಜಾರಿಗೆ ಯೋಗ್ಯವಾಗಿರಬೇಕು, ಭರವಸೆ ನೀಡಿದ ಮೇಲೆ ಈಡೇರಿಸುವಂತಿರಬೇಕು. ಆ ದೃಷ್ಟಿಕೋನದಲ್ಲಿ ನಾವು ತಯಾರಿ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. +ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳಿದೆ ಎನ್ನುವ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅವರು ಸಣ್ಣದಾದ ಸುಳಿವು ಮಾತ್ರ ಬಿಟ್ಟುಕೊಟ್ಟಿದ್ದಾರೆ. ಒಂದು ದೇಶ, ಒಂದು ಚುನಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಣಾಳಿಕೆಯಲ್ಲಿ ಏನಿದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. +ಒಂದು ದೇಶ ಒಂದು ಚುನಾವಣೆ ನಡೆಯಬೇಕು ಎನ್ನುವುದು ಎಲ್ಲರ ಅಭಿಪ್ರಾಯ. ಬಹಳಷ್ಟು ಜನರ ಇದರ ಪರವಾಗಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರಣಾಳಿಕೆಯಲ್ಲಿ ಒಂದು ದೇಶ ಒಂದು ಚುನಾವಣೆ ಉಲ್ಲೇಖವಿರುವ ಸುಳಿವು ನೀಡಿದ್ದಾರೆ. +ಆರ್ಥಿಕ ಸ್ಥಿರತೆ ಕಾಯ್ದುಕೊಳ್ಳುವುದು, ವಿಶ್ವದ ಮೂರನೇ ಬಲಿಷ್ಠ ಆರ್ಥಿಕತೆಯನ್ನಾಗಿ ಮಾಡುವುದು, ಮೂಲ ಸೌಕರ್ಯಗಳ ಅಭಿವೃದ್ದಿಗೆ ಇನ್ನಷ್ಟು ಒತ್ತು ಸೇರಿ ಹಲವು ಗ್ಯಾರಂಟಿಯನ್ನು ಪ್ರಧಾನಿ ನರೇಂದ್ರಮೋದಿ ಕೊಡಬಹುದು ಎನ್ನಲಾಗುತ್ತಿದೆ. +ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ದೇಶದ ಜನರ ಮುಂದೆ ಇಟ್ಟಿದ್ದು ಭರಪೂರ ಕೊಡುಗೆಗಳನ್ನು ಘೋಷಣೆ ಮಾಡಿದೆ. ಈ ನಡುವೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಯಾವಾಗ ಎಂಬ ಕುತೂಹಲ ಹೆಚ್ಚಿದೆ. \ No newline at end of file diff --git a/eesanje/url_47_129_7.txt b/eesanje/url_47_129_7.txt new file mode 100644 index 0000000000000000000000000000000000000000..de90ce834d1340a35ee80cf9b20ac8016c85a276 --- /dev/null +++ b/eesanje/url_47_129_7.txt @@ -0,0 +1,7 @@ +ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಪತ್ನಿ ಕುರಿತು ಸಿಧು ಭಾವನಾತ್ಮಕ ಪೋಸ್ಟ್ +ನವದೆಹಲಿ,ಏ.6-ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸ್ತನ ಕ್ಯಾನ್ಸರ್‍ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. +ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಡೇಟ್‍ಗಳನ್ನು ಹಂಚಿಕೊಂಡಿರುವ ಸಿಧು ಅಪರೂಪದ ಕಾಯಿಲೆಯಾದ ಮೆಟಾಸ್ಟಾಸಿಸ್‍ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರೋಗದಿಂದ ಪೀಡಿತ ಚರ್ಮವನ್ನು ತೆಗೆದು ಹಾಕಲಾಯಿತು ಮತ್ತು ಫ್ಲಾಪ್ ಬಳಸಿ ಮರುನಿರ್ಮಾಣ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಆಕೆಯ ಸಂಕಲ್ಪ ಬಲವಾಗಿದೆ, ಯಾವಾಗಲೂ ಮುಖದಲ್ಲಿ ನಗು ಇರುತ್ತದೆ, ಡಾ. ರೂಪಿಂದರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹಾರೈಸಿದ್ದಾರೆ ಎಂದು ಹೇಳಿದ್ದಾರೆ. + – …. … , – … ….../qsC6MJW1zE +ನವಜೋತ್ ಕೌರ್ ಕ್ಯಾನ್ಸರ್‍ನಿಂದ ಬಳಲುತ್ತಿರುವ ಬಗ್ಗೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಾಹಿತಿ ಬಹಿರಂಗವಾಗಿತ್ತು. ನನ್ನ ಪಿಇಟಿ ಸ್ಕ್ಯಾನ್ ಪ್ರಕಾರ, ನಾನು ಕ್ಯಾನ್ಸರ್ ಮುಕ್ತ ಎಂದು ಘೋಷಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಕೌರ್ ಬರೆದುಕೊಂಡಿದ್ದರು. +ಏಪ್ರಿಲ್ 4 ರಂದು, ಸಿಧು ತಮ್ಮ ಪತ್ನಿ ಎರಡನೇ ಬಾರಿಗೆ ಸ್ತನ ಕ್ಯಾನ್ಸರ್‍ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. +ಇಲ್ಲಿಯವರೆಗೆ 6 ಬಾರಿ ಕಿಮೋಥೆರಪಿಗೆ ಒಳಗಾಗಿದ್ದಾರೆ. ಇದಕ್ಕೂ ಮುನ್ನ ಅವರು ಆಪರೇಷನ್‍ಗೆ ಒಳಗಾಗಿದ್ದರು. ನವಜೋತ್ ಕೌರ್ ಚಿಕಿತ್ಸೆಗಾಗಿ ಸಿಧು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು. \ No newline at end of file diff --git a/eesanje/url_47_129_8.txt b/eesanje/url_47_129_8.txt new file mode 100644 index 0000000000000000000000000000000000000000..6c44dd64b85c76470eb8753b003b5014045d51ef --- /dev/null +++ b/eesanje/url_47_129_8.txt @@ -0,0 +1,5 @@ +ತೆಲಂಗಾಣ ಗಡಿಯಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಸಾವು +ರಾಯ್‍ಪುರ, ಅ.6-ತೆಲಂಗಾಣದ ಗಡಿಗೆ ಹೊಂದಿಕೊಂಡಿರುವ ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರು ಹತರಾಗಿದ್ದಾರೆ. +ತೆಲಂಗಾಣದ ನಕ್ಸಲ್ ವಿರೋಧಿ ಪಡೆ ಗ್ರೇಹೌಂಡ್ಸ್ ತಂಡವು ಕಾರ್ಯಾಚರಣೆಯಲ್ಲಿದ್ದಾಗ ಅಂತರರಾಜ್ಯ ಗಡಿಯಲ್ಲಿರುವ ಪೂಜಾರಿ ಕಂಕೇರ್ ಅರಣ್ಯದಲ್ಲಿ ಎನ್‍ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಗ್ರೇಹೌಂಡ್ಸ್ ತಂಡಕ್ಕೆ ಸಹಾಯಕ ಬೆಂಬಲವನ್ನು ನೀಡಲು ಛತ್ತೀಸ್‍ಗಢ ಪೊಲೀಸರ ತಂಡವೂ ಸ್ಥಳದಲ್ಲಿದೆ ಎಂದು ಅವರು ಹೇಳಿದರು.ಪ್ರಸ್ತುತ ಮಾಹಿತಿಯಂತೆ ಗುಂಡಿನ ಚಕಮಕಿಯಲ್ಲಿ ಮೂವರು ನಕ್ಸಲೀಯರು ಸಾವನ್ನಪ್ಪಿದ್ದು, ಸ್ಥಳದಿಂದ ಶಸ್ತ್ರಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. +ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ,ಈ ವಾರದ ಆರಂಭದಲ್ಲಿ, ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ 13 ನಕ್ಸಲೀಯರು ಹತರಾಗಿದ್ದರು. \ No newline at end of file diff --git a/eesanje/url_47_129_9.txt b/eesanje/url_47_129_9.txt new file mode 100644 index 0000000000000000000000000000000000000000..9cfd1f460b890340b1552bff7f3d10136424f646 --- /dev/null +++ b/eesanje/url_47_129_9.txt @@ -0,0 +1,5 @@ +ಆಂಧ್ರ ಸಿಎಂ ಜಗನ್‌ರನ್ನು ಪ್ರಾಣಿಗೆ ಹೋಲಿಸಿದ್ದ ನಾಯ್ಡುಗೆ ನೋಟೀಸ್ +ಅಮರಾವತಿ, ಏ.5-ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. +ಮಾರ್ಚ್ 31 ರಂದು ಚುನಾವಣಾ ಪ್ರಚಾರ ಭಾಷಣದಲ್ಲಿ ಸಿಎಂ ಜಗನ್ ಅವರನ್ನು ರಾಕ್ಷಸ , ಪ್ರಾಣಿ, ಕಳ್ಳ ಎಂದು ಉಲ್ಲೇಖಿಸುವ ಮೂಲಕ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಸಿದ್ದಕ್ಕಾಗಿ ಟಿಡಿಪಿ ಮುಖ್ಯಸ್ಥರಿಗೆ ನೋಟಿಸ್ ನೀಡಲಾಗಿದೆ. +ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ ನೀಡಿದ ನೋಟಿಸ್ನ ಪ್ರಕಾರ, ವೈಎಸ್ಆರ್ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ವಿರುದ್ಧ ಮಾಡಿದ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ವಿವರಣೆ ನೀಡಲು ನಾಯ್ಡು ಅವರಿಗೆ 48 ಗಂಟೆಗಳ ಕಾಲಾವಕಾಶ ನೀಡಲಾಗಿದೆ. +ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿಪಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪಿ ರೆಡ್ಡಿ ಮತ್ತು ಇನ್ನೊಬ್ಬ ವ್ಯಕ್ತಿ ಸಲ್ಲಿಸಿದ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ. ನೋಟಿಸ್ ಪ್ರಕಾರ, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಯೆಮ್ಮಿಗನೂರು, ಮಾರ್ಕಪುರಂ ಮತ್ತು ಬಾಪಟ್ಲಾ ಕ್ಷೇತ್ರಗಳಲ್ಲಿ ನಡೆದ ತಮ್ಮ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ರಾಕ್ಷಸ, ಪ್ರಾಣಿ, ಕಳ್ಳ ಮತ್ತು ಹಲವಾರು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಲ್ಲಿ ಮೇ 13 ರಂದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ನಿಗದಿಯಾಗಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_12_1.txt b/eesanje/url_47_12_1.txt new file mode 100644 index 0000000000000000000000000000000000000000..fd6e21f6a6f529601c6f41ea52b9fe38c05081a7 --- /dev/null +++ b/eesanje/url_47_12_1.txt @@ -0,0 +1,9 @@ +ಎರಡು ವಾರದಿಂದ ಕೈ ಕೊಟ್ಟ ಮಳೆ, ಒಣಗುತ್ತಿವೆ ಬೆಳೆ + +ಬೆಂಗಳೂರು, ಸೆ.17-ನೈರುತ್ಯ ಮುಂಗಾರು ಮಳೆಯು ಕಳೆದ ಎರಡು ವಾರಗಳಿಂದ ದುರ್ಬಲಗೊಂಡಿದ್ದು, ಮುಂಗಾರು ಹಂಗಾಮಿನ ಹಲವು ಬೆಳೆಗಳು ಒಣಗುತ್ತಿವೆ. ಕಳೆದ ಎರಡು ವಾರಗಳಲ್ಲಿ ಮಳೆ ಕೈಕೊಟ್ಟ ಪರಿಣಾಮವಾಗಿ ಬಿತ್ತಿರುವ ರಾಗಿ, ಶೇಂಗಾ, ಉದ್ದು, ಹೆಸರು, ಅಲಸಂದೆ, ತೊಗರಿ ಸೇರಿದಂತೆ ಹಲವು ಬೆಳೆಗಳಿಗೆ ತೇವಾಂಶದ ಕೊರತೆ ಉಂಟಾಗಿದೆ. ಇದರಿಂದ ಬೆಳೆಗಳು ಒಣಗತೊಡಗಿವೆ. ಅಲ್ಲದೆ, ಭಾಗಶಃ ಮೋಡ ಕವಿದ ವಾತಾವರಣ ಇರುವುದರಿಂದ ಕೀಟ ಬಾಧೆಯೂ ಅಧಿಕವಾಗಿದೆ. +ಕಳೆದ ವರ್ಷ ಕೈಕೊಟ್ಟಿದ ಮುಂಗಾರು ಈ ಬಾರಿ ವಾಡಿಕೆಗಿಂತ ಹೆಚ್ಚಾಗಿದ್ದು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿ ರೈತರು ಕೃಷಿ ಕಾರ್ಯದಲ್ಲಿ ತೊಡಗಿದ್ದಾರೆ. ಆಗಸ್ಟ್‌ನಲ್ಲೂ ಮಳೆ ಕಡಿಮೆಯಾಗಿತ್ತು. ಆದರೆ ಸೆಪ್ಟೆಂಬರ್‌ ತಿಂಗಳ ಎರಡೂ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿಲ್ಲ. ಹೀಗಾಗಿ ರೈತರು ಮಳೆ ನಿರೀಕ್ಷೆಯಲ್ಲೇ ಕಾಲ ನೂಕುತ್ತಿದ್ದಾರೆ. +ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಸೆಪ್ಟೆಂಬರ್‌ ಒಂದರಿಂದ ನಿನ್ನೆಯವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.7ರಷ್ಟು ಕಡಿಮೆ ಮಳೆಯಾಗಿದೆ. ಈ ಅವಧಿಯಲ್ಲಿ ಕರಾವಳಿ ಮತ್ತು ಮಲೆನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ, ರಾಜ್ಯದ ಒಳನಾಡಿನಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. +ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಮಳೆ ಪ್ರಮಾಣ 58.9 ಮಿ.ಮೀ. ಇದ್ದು, ಕೇವಲ 15.2 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ವಾಡಿಕೆಗಿಂತ ಶೇ.74ರಷ್ಟು ಕಡಿಮೆ ಮಳೆಯಾಗಿದೆ. +ಉತ್ತರ ಒಳನಾಡಿನಲ್ಲಿ ವಾಡಿಕೆ ಮಳೆ ಪ್ರಮಾಣ 60.3 ಮಿ.ಮೀ. ಇದ್ದು, 49.1 ಮಿ.ಮೀ.ನಷ್ಟು ಮಳೆಯಾಗಿದೆ. ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ಉಂಟಾಗಿದೆ.ಕಳೆದ ಎರಡು ವಾರದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.85 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಮನಗರ ಶೇ.77, ಕೋಲಾರ ಶೇ.90, ಚಿಕ್ಕಬಳ್ಳಾಪುರ ಶೇ.86, ತುಮಕೂರು ಶೇ.73, ಚಿತ್ರದುರ್ಗ ಶೇ.66, ದಾವಣಗೆರೆ ಶೇ.45, ಚಾಮರಾಜನಗರ ಶೇ.81, ಮೈಸೂರು ಶೇ.45, ಮಂಡ್ಯ ಶೇ.83 ರಷ್ಟು ಮಳೆ ಕೊರತೆಯಾಗಿದೆ. +ಉತ್ತರ ಒಳನಾಡಿನ ಬಳ್ಳಾರಿ ಶೇ.43, ವಿಜಯನಗರ ಶೇ.69, ಕೊಪ್ಪಳ ಶೇ.58, ರಾಯಚೂರು ಶೇ.24, ಧಾರವಾಡ ಶೇ.38, ಹಾವೇರಿ ಶೇ.51, ಗದಗ ಶೇ.68, ವಿಜಯಪುರ ಶೇ.37, ಬಾಗಲಕೋಟೆ ಶೇ.55, ಬೆಳಗಾವಿ ಜಿಲ್ಲೆಯಲ್ಲಿ ಶೇ.14 ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉಳಿದಂತೆ ಕೆಲವು ಜಿಲ್ಲೆಗಳಲ್ಲಿ ವಾಡಿಕೆ ಇಲ್ಲವೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. +ಹವಾಮಾನ ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಅಲ್ಲಲ್ಲಿ ಚದುರಿದಂತೆ ಹಗರುದಿಂದ ಸಾಧಾರಣ ಮಳೆಯಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ವ್ಯಾಪಕ ಪ್ರಮಾಣದಲ್ಲಿ ಒಳ್ಳೆಯ ಮಳೆಯಾದರೆ ಮಾತ್ರ ಮುಂಗಾರು ಹಂಗಾಮಿನ ಬೆಳೆಗಳ ರಕ್ಷಣೆ ಸಾಧ್ಯವಾಗಲಿದೆ. \ No newline at end of file diff --git a/eesanje/url_47_12_10.txt b/eesanje/url_47_12_10.txt new file mode 100644 index 0000000000000000000000000000000000000000..f086ea9cda277d4b3645bf03e25c3227fdc44b2d --- /dev/null +++ b/eesanje/url_47_12_10.txt @@ -0,0 +1,8 @@ +ನೀವು ಹೇಳಿದ ತಕ್ಷಣ ಚುನಾವಣೆ ನಡೆಸೋಕಾಗಲ್ಲ : ಚುನಾವಣಾ ಆಯೋಗ + +ನವದೆಹಲಿ,ಸೆ.16– ಸರ್ಕಾರ ಮತ್ತು ರಾಜಕೀಯ ಪಕ್ಷಗಳು ಹೇಳಿದ ತಕ್ಷಣವೇ ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.ಈ ಮೂಲಕ ದೆಹಲಿ ವಿಧಾನಸಭೆ ಚುನಾವಣೆಯನ್ನು ನವೆಂಬರ್ ತಿಂಗಳಿನಲ್ಲಿ ಮಹಾ ರಾಷ್ಟ್ರ ವಿಧಾನಸಭೆ ಚುನಾವಣೆಯ ಜೊತೆಯೇ ನಡೆಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕ್ರೇಜಿವಾಲ್ ಮಾಡಿಕೊಂಡಿದ್ದ ಮನವಿಯನ್ನು ಪರೋಕ್ಷವಾಗಿ ತಿರಸ್ಕರಿಸಿದೆ. +ಚುನಾವಣೆ ನಡೆಸುವುದು ಆಯೋಗದ ಮೂಲಭೂತ ಕರ್ತವ್ಯ. ಆದರೆ ರಾಜಕೀಯ ಪಕ್ಷಗಳು ಇಲ್ಲವೇ ಸರ್ಕಾರ ಹೇಳಿದ ತಕ್ಷಣ ಚುನಾವಣೆ ನಡೆಸಲು ಸಾಧ್ಯವಿಲ್ಲ. ಅದಕ್ಕೆ ಅದರದೇ ಆದ ರೀತಿನೀತಿಗಳು, ಕಾನೂನು ಪ್ರಕ್ರಿಯೆಗಳಿರುತ್ತವೆ ಎಂದು ಹೇಳಿದೆ.ಬರುವ ನವೆಂಬರ್ ತಿಂಗಳಿನಲ್ಲಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಎರಡೂ ರಾಜ್ಯಗಳಿಗೆ ಹೆಚ್ಚಿನ ಭದ್ರತೆ ಪಡೆ ಬೇಕಾಗಿರುವುದರಿಂದ ಆಯೋಗ ದೆಹಲಿಗೂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆಗಳು ಕ್ಷೀಣಿಸಿವೆ. +ದೆಹಲಿ ವಿಧಾನಸಭೆ ಅವಧಿಯು 2025 ಫೆಬ್ರವರಿ ತಿಂಗಳ ಅಂತ್ಯದವರೆಗೂ ಇರಲಿದೆ. ಒಂದು ವೇಳೆ ಅವಧಿಗೂ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿದರೆ ರಾಷ್ಟ್ರಪತಿ ಆಡಳಿತ ಜಾರಿಯಾಗಿ ನಂತರ ಸೂಕ್ತ ಸಮಯದಲ್ಲಿ ಚುನಾವಣೆ ವೇಳಾಪಟ್ಟಿಯನ್ನು ಆಯೋಗ ಪ್ರಕಟಿಸಲಿದೆ. +ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆದರೆ ವಿಧಾನಸಭೆಯನ್ನು ಅವರು ವಿಸರ್ಜನೆ ಮಾಡುವುದಾಗಿ ಘೋಷಣೆ ಮಾಡಿಲ್ಲ. ಸರ್ಕಾರದ ಅವಧಿ ಇರುವಾಗಲೇ ಆಯೋಗ ಯಾವ ಆಧಾರದ ಮೇಲೆ ದಿನಾಂಕ ಘೋಷಣೆ ಮಾಡುತ್ತದೆ ಎಂದು ಸಂವಿಧಾನ ತಜ್ಞರು ಪ್ರಶ್ನೆ ಮಾಡಿದ್ದಾರೆ. +ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರ್ಯ ಅವರು ಒಂದು ವಿಧಾನಸಭೆ ಚುನಾವಣೆಯನ್ನು ಅವಧಿಗೂ ಮುನ್ನ ವಿಸರ್ಜನೆ ಮಾಡಬೇಕೆಂದರೆ ಅದು ವಿಸರ್ಜನೆಯಾಗಿರಬೇಕು. ಸರ್ಕಾರ ಪೂರ್ಣಾವಧಿವರೆಗೂ ಇದ್ದರೆ ಆಯೋಗ ಏಕಾಏಕಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +ಕ್ರೇಜಿವಾಲ್ ನಾನು ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಹೇಳಿದ್ದಾರೆ ಹೊರತು ವಿಧಾನಸಭೆ ವಿಸರ್ಜನೆ ಮಾಡುವುದಾಗಿ ಎಲ್ಲಿಯೂ ಹೇಳಿಲ್ಲ. ಹಾಗಿರುವಾಗ ಅವಧಿಗೂ ಮುನ್ನ ಚುನಾವಣೆ ನಡೆಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_12_11.txt b/eesanje/url_47_12_11.txt new file mode 100644 index 0000000000000000000000000000000000000000..90b7729883db950e1bdb572c60c471d22c4f660e --- /dev/null +++ b/eesanje/url_47_12_11.txt @@ -0,0 +1,6 @@ +ಕಾಶಿ ವಿಶ್ವನಾಥನನ್ನು ಹಿಂದಿಕ್ಕಿದ ಅಯೋಧ್ಯೆಯ ರಾಮಲಲ್ಲಾ + , 11 2024 +ಲಖ್ನೋ,ಸೆ.16– ವಾರಣಾಸಿಯ ಕಾಶಿ ವಿಶ್ವನಾಥನ ಹಿಂದಿಕ್ಕಿದ ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಈ ವರ್ಷದ ಆರಂಭಿಕ ಆರು ತಿಂಗಳಲ್ಲೇ 11 ಕೋಟಿಗೂ ಹೆಚ್ಚು ಭಕ್ತರು ಆಗಮಿಸಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯಗೆ ಹೋಲಿಸಿದರೆ ಕಾಶಿಗೆ ಭೇಟಿ ಕೊಟ್ಟ ಭಕ್ತರ ಸಂಖ್ಯೆ 4.61 ಕೋಟಿಯಷ್ಟಿದೆ ಎಂದು ಉತ್ತರಪ್ರದೇಶದ ಪ್ರವಾಸೋದ್ಯಮ ಇಲಾಖೆ ಅಂಕಿಅಂಶವನ್ನು ಬಹಿರಂಗಗೊಳಿಸಿದೆ. +ರಾಜ್ಯಕ್ಕೆ ಕಳೆದ ಆರು ತಿಂಗಳಲ್ಲಿ ಭೇಟಿ ನೀಡಿದ ಪ್ರವಾಸಿಗರ ಅಂಕಿ ಅಂಶ ತೆರೆದಿಟ್ಟಿರುವ ಪ್ರವಾಸೋದ್ಯಮ ಇಲಾಖೆ, ಈ ಆರು ತಿಂಗಳಲ್ಲಿ ಅಯೋಧ್ಯ ಹಾಗೂ ಕಾಶಿ ಸೇರಿಸಿ ಒಟ್ಟು ಉತ್ತರಪ್ರದೇಶಕ್ಕೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆ ಒಟ್ಟಾರೆಯಾಗಿ 33 ಕೋಟಿಗೆ ತಲುಪಿದೆ. +ಒಟ್ಟು 32 ಕೋಟಿ 98 ಲಕ್ಷ 18 ಸಾವಿರದ 122 ಮಂದಿ ಭಕ್ತರು ಈ ಭಾರಿ ಉತ್ತರಪ್ರದೇಶದ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. 2022ಕ್ಕೆ ಹೋಲಿಕೆ ಮಾಡಿ ನೋಡಿದಾಗ, ಉತ್ತರಪ್ರದೇಶಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. +2022ರ ಇಡೀ ವರ್ಷದಲ್ಲಿ ಉತ್ತರಪ್ರದೇಶಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಒಟ್ಟು 31.86 ಕೋಟಿ ಎಂದು ಉತ್ತರಪ್ರದೇಶದ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಇಲಾಖೆಯ ಸಚಿವ ಜೈವೀರ್‌ ಸಿಂಗ್‌ ಹೇಳಿದ್ದಾರೆ. \ No newline at end of file diff --git a/eesanje/url_47_12_12.txt b/eesanje/url_47_12_12.txt new file mode 100644 index 0000000000000000000000000000000000000000..2473e4366aa1ba1ef3446cab25860942a1ae1f3d --- /dev/null +++ b/eesanje/url_47_12_12.txt @@ -0,0 +1,7 @@ +ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ + +ಬೆಂಗಳೂರು, ಸೆ.16-ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಭೆ ಉಂಟಾಗಿದ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಈದ್‌ ಮಿಲಾದ್‌ ಅಂಗವಾಗಿ ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. +ಈದ್‌ಮಿಲಾದ್‌ ಹಿನ್ನಲೆಯಲ್ಲಿ ಮುಸ್ಲಿಂ ಬಾಂಧವರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವ ಹಿನ್ನಲೆಯಲ್ಲಿ ಮೆರವಣಿಗೆ ಮೂಲಕ ಸಾಗಲಿದ್ದು, ಈ ಪ್ರದೇಶದಲ್ಲಿ ಮತ್ತೆ ಘರ್ಷಣೆಯಾಗದಂತೆ ಪಟ್ಟಣದಾದ್ಯಂತ ಪೊಲೀಸ್‌‍ ಸರ್ಪಗಾವಲು ಹಾಕಲಾಗಿದ್ದು, ಹೈ ಅಲರ್ಟ್‌ ಮಾಡಲಾಗಿದೆ. +ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಜಿಲ್ಲಾಡಳಿತ ನಿರ್ಧರಿಸಿದೆ. ಸರ್ಕಾರದ ಖಡಕ್‌ ಸೂಚನೆ ಅನ್ವಯ ಎಸ್‌‍ಪಿ ಮಲ್ಲಿಕಾರ್ಜುನ್‌ ಬಾಲದಂಡಿ ಅವರು ನಾಗಮಂಗಲದಲ್ಲಿ ಖುದ್ದು ಹಾಜರಿದ್ದು, ಭದ್ರತೆ ಹಾಗು ಪರಿಸ್ಥಿತಿ ನಿಯಂತ್ರಣದ ಬಗ್ಗೆ ಅವಲೋಕಿಸುತ್ತಿದ್ದಾರೆ. +ನಾಗಮಂಗಲದಲ್ಲಿ ಮೂರು ದಿನಗಳ ಹಿಂದೆ ನಡೆದ ಗಲಭೆ ಹಿನ್ನಲೆಯಲ್ಲಿ ದರ್ಗಾ, ಮಸೀದಿ ಬಳಿ ಹೆಚ್ಚಿನ ಪೊಲೀಸ್‌‍ ಭದ್ರತೆ ಮಾಡಲಾಗಿದ್ದು, ಪ್ರಮುಖವಾಗಿ ಮಂಡ್ಯ ಸರ್ಕಲ್‌, ಈದ್ಗಾ ಮೈದಾನದ ಸುತ್ತ ಪೊಲೀಸರು ಕಣ್ಗಾವಲಿನಲ್ಲಿದ್ದಾರೆ. +ಸ್ಥಳದಲ್ಲಿ ಇಬ್ಬರು ಎಸ್‌‍ಪಿ, ಇಬ್ಬರು ಎಎಸ್‌‍ಪಿ, ನಾಲ್ವರು ಡಿವೈಎಸ್ಪಿ, 20 ಇನ್‌ಸ್ಪೆಕ್ಟರ್‌, ಪಿಎಸ್‌‍ಐ ಜೊತೆಗೆ ಏಳು ಡಿಎಆರ್‌, ಕೆಎಸ್‌‍ಆರ್‌ಪಿ ತುಕಡಿ ಸೇರಿದಂತೆ 700ಕ್ಕೂ ಹೆಚ್ಚು ಪೊಲೀಸ್‌‍ ಸಿಬ್ಬಂದಿ ಬಂದೋಬಸ್ತ್‌ ನಲ್ಲಿದ್ದಾರೆ. ಇಂದು ಎಲ್ಲೆಡೆ ಈದ್‌ ಮಿಲಾದ್‌ ಇರುವುದರಿಂದ ಮುಸ್ಲಿಂ ಬಾಂಧವರು ಮೆರವಣಿಗೆ ಸಾಗುವ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. \ No newline at end of file diff --git a/eesanje/url_47_12_2.txt b/eesanje/url_47_12_2.txt new file mode 100644 index 0000000000000000000000000000000000000000..8a07d9bb373ad2723d532d5f4b83ccf47ab1f07a --- /dev/null +++ b/eesanje/url_47_12_2.txt @@ -0,0 +1,9 @@ + : ದೆಹಲಿಯ ನೂತನ ಸಿಎಂ ಆಗಿ ಅತಿಶಿ ಸಿಂಗ್‌ ಆಯ್ಕೆ + +ನವದೆಹಲಿ,ಸೆ.17-ನಿರೀಕ್ಷೆಯಂತೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಅತಿಶಿ ಮರ್ಲೆನಾ ಸಿಂಗ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನಿವಾಸದಲ್ಲಿ ನಡೆದ ಆಮ್‌ ಆದಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಲೋಕೋಪಯೋಗಿ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪ್ರವಾಸೋದ್ಯಮ, ಸಂಸ್ಕೃತಿ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಅತಿಶಿ ಅವರನ್ನು ಶಾಸಕರು ಸರ್ವ ಸಮತವಾಗಿ ಅವಿರೋಧವಾಗಿ ಆಯ್ಕೆ ಮಾಡಿದರು. +ನಂತರ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಅಧಿಕೃತವಾಗಿ ಘೋಷಣೆ ಮಾಡಿದರು.ಶಾಸಕಾಂಗ ಸಭೆಯಲ್ಲಿ ಅತಿಶಿ ಸಿಂಗ್‌ ಹೆಸರನ್ನು ಖುದ್ದು ಕೇಜ್ರಿವಾಲ್‌ ಅವರೇ ಪ್ರಸ್ತಾಪಿಸಿದರು. ಇದಕ್ಕೆ ಎಲ್ಲಾ ಶಾಸಕರು ಬೆಂಬಲ ನೀಡಿದರು. +ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕ್ರೇಜಿವಾಲ್‌ ಅವರ ಪತ್ನಿ, ಸಚಿವರಾದ ಗೋಪಾಲ್‌ ರೈ, ಸೌರವ್‌ ಭಾರದ್ವಾಜ್‌, ಕೈಲಾಸ್‌‍ ಗೆಹ್ಲೋಟ್‌ ಹೆಸರುಗಳು ಕೇಳಿಬಂದವು. ಅಂತಿಮವಾಗಿ ಕೇಜ್ರಿವಾಲ್‌ ಅವರ ಸೂಚನೆಯಂತೆ ಎಲ್ಲಾ ಶಾಸಕರು ಅತಿಶಿ ಸಿಂಗ್‌ ಅವರ ಹೆಸರಿಗೆ ಬೆಂಬಲ ಸೂಚಿಸಿದ್ದಾರೆ. +ಯಾರು ಅತಿಶಿ ಸಿಂಗ್‌?:ಆಮ್‌ ಆದಿ ಪಕ್ಷದ ರಾಷ್ಟ್ರೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿರುವ ಅತಿಶಿ ಸಿಂಗ್‌ ಕೇಜ್ರಿವಾಲ್‌ ಅವರ ನಂಬಿಗಸ್ಥ ಆಪ್ತರಲ್ಲಿ ಒಬ್ಬರಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್‌ ಮತ್ತು ಮನೀಶ್‌ ಸಿಸೋಡಿಯ ಜೈಲು ಪಾಲಾದ ಮೇಲೆ ಇಡೀ ಸರ್ಕಾರವನ್ನು ಬಲವಾಗಿ ಸಮರ್ಥಿಸಿಕೊಂಡವರಲ್ಲಿ ಇವರು ಒಬ್ಬರು. +ದೆಹಲಿಯ ಶಿಕ್ಷಣ ಸಚಿವೆಯಾಗಿ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿದ್ದು, ಉತ್ತಮ ಶಿಕ್ಷಣ, ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸಿದ್ದು ದೇಶದಲ್ಲೇ ಕ್ರಾಂತಿಕಾರಿ ಬೆಳೆವಣಿಗೆಯಾಗಿತ್ತು. ದೆಹಲಿಯಲ್ಲಿ ಈಗಲೂ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸರ್ಕಾರಿ ಶಾಲೆಗಳು ಎದ್ದು ನಿಂತಿರುವುದರ ಹಿಂದೆ ಅತಿಶಿಯವರ ಪರಿಶ್ರಮವಿದೆ. +ದೆಹಲಿಯ ಕಲ್ಯಾಜಿ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿರುವ ಅತಿಶಿ ಸಿಂಗ್‌, ಸಾರ್ವಜನಿಕ ಲೆಕ್ಕಸಮಿತಿ, ಲೆಕ್ಕಪತ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಲ್ಪಸಂಖ್ಯಾತ ಸೇರಿದಂತೆ ಹಲವು ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. +ಆಕ್‌್ಸಫರ್ಡ್‌ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ದೇಶದಲ್ಲಿ ಜಿದ್ದುಗಟ್ಟಿರುವ ಭ್ರಷ್ಟಾಚಾರ ವ್ಯವಸ್ಥೆಯನ್ನು ತೊಡೆದು ಹಾಕಲೆಂದೇ 2013ರಲ್ಲಿ ಆಮ್‌ ಆದಿ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಪಾದಾರ್ಪಣೆ ಮಾಡಿದರು. \ No newline at end of file diff --git a/eesanje/url_47_12_3.txt b/eesanje/url_47_12_3.txt new file mode 100644 index 0000000000000000000000000000000000000000..bab25e66da9b287a0305fe9b7477f8f1b5cdc508 --- /dev/null +++ b/eesanje/url_47_12_3.txt @@ -0,0 +1,8 @@ +ಅಪೌಷ್ಠಿಕತೆ ನಿವಾರಣೆಯಲ್ಲಿ ಭಾರತಕ್ಕೆ ‘ಎ’ ಸರ್ಟಿಫಿಕೇಟ್‌ ನೀಡಿದ ಬಿಲ್‌ಗೇಟ್ಸ್ +" ": ' +ವಾಷಿಂಗ್ಟನ್‌ , ಸೆ 17 (ಪಿಟಿಐ)ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಮತ್ತು ಬಿಲಿಯನೇರ್‌ ಬಿಲ್‌ ಗೇಟ್ಸ್‌‍ ಅವರು ಅಪೌಷ್ಟಿಕತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಗಮನಹರಿಸಿರುವ ಭಾರತಕ್ಕೆ ಎ ಸರ್ಟಿಫಿಕೇಟ್‌ ನೀಡುವುದಾಗಿ ಹೇಳಿದ್ದಾರೆ. +ಭಾರತವು ತನ್ನ ಆದಾಯದ ಮಟ್ಟಕ್ಕಾಗಿ, ಈ ಪೌಷ್ಟಿಕಾಂಶದ ಕೆಲವು ಸೂಚಕಗಳು ತಾನು ಬಯಸುವುದಕ್ಕಿಂತ ದುರ್ಬಲವಾಗಿವೆ ಎಂದು ಒಪ್ಪಿಕೊಳ್ಳುತ್ತದೆ. ಆ ರೀತಿಯ ನಿಷ್ಕಪಟತೆ ಮತ್ತು ಅದರ ಮೇಲೆ ಕೇಂದ್ರೀಕರಿಸುವುದು ತುಂಬಾ ಪ್ರಭಾವಶಾಲಿಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಗೇಟ್ಸ್‌‍ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು. +ಇತರ ಯಾವುದೇ ಸರ್ಕಾರಗಳಿಗಿಂತ ಭಾರತವು ಈ ವಿಷಯದ ಮೇಲೆ ಹೆಚ್ಚು ಗಮನಹರಿಸಿದೆ ಎಂದು ಅವರು ಹೇಳಿದರು, ಇದು ಸಾರ್ವಜನಿಕ ಆಹಾರ ವ್ಯವಸ್ಥೆ ಮತ್ತು ಮಧ್ಯಾಹ್ನದ ಊಟ ವ್ಯವಸ್ಥೆಯನ್ನು ಬಳಸುತ್ತಿದೆ ಮತ್ತು ಬಲವರ್ಧಿತ ಆಹಾರಗಳನ್ನು ಪಡೆಯಲು ಪ್ರಯತ್ನಿಸುತ್ತಿದೆ, ಆದರೆ ಇದು ಇನ್ನೂ ಒಂದು ದೊಡ್ಡ ಅವಕಾಶವಾಗಿದೆ ಎಂದು ಗೇಟ್ಸ್ ಹೇಳಿದರು. +ಗೇಟ್‌್ಸ ಫೌಂಡೇಶನ್‌ನ 2024 ರ ವರದಿ ಬಿಡುಗಡೆಯ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಗೇಟ್‌್ಸ ಹೀಗೆ ಹೇಳಿದರು.ಇದು ಬಹುಶಃ ಶಿಕ್ಷಣಕ್ಕಾಗಿ ಬಿ ಎಂದು ರೇಟ್‌ ಮಾಡಬಹುದೆಂದು ನಾನು ಭಾವಿಸುತ್ತೇನೆ ಆದರೆ ಇನ್ನೂ ಉತ್ತಮವಾಗಿ ಮಾಡುವ ನಿಜವಾದ ಗಂಭೀರ ಉದ್ದೇಶದಿಂದ. +ಅಪೌಷ್ಟಿಕತೆಯ ತಿಳುವಳಿಕೆಯು ಬಹಳಷ್ಟು ಸುಧಾರಿಸಿದೆ ಎಂದು ಗೇಟ್ಸ್‌‍ ಹೇಳಿದರು, ಗೇಟ್ಸ್‌‍ ಫೌಂಡೇಶನ್‌ ಅಲ್ಲಿ ದೊಡ್ಡ ಧನಸಹಾಯವಾಗಿದೆ ಎಂದು ಹೇಳಿದರು. ಅದರ ಭಾಗವು ನಿಮ ಕರುಳಿನಲ್ಲಿರುವ ಸಂಕೀರ್ಣ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುತ್ತಿದೆ, ಇದು ಬಹಳಷ್ಟು ಬ್ಯಾಕ್ಟೀರಿಯಾಗಳನ್ನು ಒಳಗೊಂಡಿರುತ್ತದೆ. +ಇದನ್ನು ಮೈಕ್ರೋಬಯೋಮ್‌ ಎಂದು ಕರೆಯಲಾಗುತ್ತದೆ. ಆದರೆ ನಾವು ನೋಡಿದ ಸಂಗತಿಯೆಂದರೆ, ನೀವು ಕೆಲವು ಜೀವಸತ್ವಗಳನ್ನು ಕಳೆದುಕೊಂಡರೆ ಅಥವಾ ನೀವು ಪ್ರೋಟೀನ್‌ ಅನ್ನು ಕಳೆದುಕೊಂಡರೆ, ಕೆಲವು ಮಕ್ಕಳು, ಅವರ ಕರುಳು ಉರಿಯುತ್ತದೆ, ಆದ್ದರಿಂದ ಅವರು ತಿನ್ನುವ ಆಹಾರವನ್ನು ಹೀರಿಕೊಳ್ಳಲು ಸಾಧ್ಯವಿಲ್ಲ ಮತ್ತು ಅವರು ಆರೋಗ್ಯದಿಂದಿರಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_47_12_4.txt b/eesanje/url_47_12_4.txt new file mode 100644 index 0000000000000000000000000000000000000000..f0810e2dbef4ee038b069fe3511acb9fdf8a90ab --- /dev/null +++ b/eesanje/url_47_12_4.txt @@ -0,0 +1,9 @@ +ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿಸುವ ವೇಳೆ ಹಳಿ ಮೇಲೆ ಬಿದ್ದ ಬಿಜೆಪಿ ಶಾಸಕಿ + , +ಇಟಾವಾ (ಯುಪಿ), ಸೆ 17-ಇಲ್ಲಿ ಆಗ್ರಾ-ವಾರಣಾಸಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ಗೆ ಹಸಿರು ಧ್ವಜವನ್ನು ಬೀಸುವ ಸ್ಪರ್ಧೆಯಲ್ಲಿ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬದೌರಿಯಾ ಅವರು ರೈಲ್ವೆ ಹಳಿಗಳ ಮೇಲೆ ಬಿದ್ದ ಗಟನೆ ನಡೆದಿದೆ. +ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್‌ ನಡುವೆ ಈ ಘಟನೆ ನಡೆದಿದೆ. 61 ವರ್ಷದ ಎರಡನೇ ಅವಧಿಯ ಬಿಜೆಪಿ ಶಾಸಕಿ ವೇದಿಕೆಯಲ್ಲಿ ನಿಂತಿದ್ದಾಗ ಹಸಿರು ಬಾವುಟವನ್ನು ಹಿಡಿದ್ದರು . +ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್‌ ರೈಲಿನ ವರ್ಚುವಲ್‌ ಉದ್ಘಾಟನೆಯ ನಂತರ, 20175 ಸಂಖ್ಯೆಯ ರೈಲಿಗೆ ಆಗ್ರಾದಿಂದ ರೈಲು ಸಚಿವ ರವನೀತ್‌ ಸಿಂಗ್‌ ಬಿಟ್ಟು ಅವರು ಫ್ಲ್ಯಾಗ್‌ ಆಫ್‌ ಮಾಡಿದರು.ಈ ವೇಲೆ ಜಾರಿ ಹಳಿ ಮೇಲೆ ಬಿದ್ದಿದ್ದಾರೆ . +ನಂತರ ರೈಲನ್ನು ನಿಲ್ಲಿಸಿ ಬಿಜೆಪಿಯ ಇಟಾವಾ ಘಟಕದ ಖಜಾಂಚಿ ಸಂಜೀವ್‌ ಭದೌರಿಯಾ,ಶಾಸಕಿಯನ್ನು ರಕ್ಷಿಸಿದ್ದಾರೆ. ನಂತರ ಅವರು ವೈದ್ಯರೊಂದಿಗೆ ಸಮಾಲೋಚಿಸಿದರು ಮತ್ತು ಈಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಯಾವುದೇ ದೈಹಿಕ ಗಾಯಗಳನ್ನು ಅನುಭವಿಸಲಿಲ್ಲ. ಯಾವುದೇ ಆಂತರಿಕ ಗಾಯವಿದ್ದರೆ, ಅದನ್ನು ಇನ್ನೂ ದೃಢೀಕರಿಸಬೇಕಾಗಿದೆ ಎಂದು ಭದೌರಿಯಾ ಹೇಳಿದರು. + 6:15 , - . 1/2pic../PXAqXX3e7Q +ಸಮಾಜವಾದಿ ಪಕ್ಷದ ಸಂಸದ ಜಿತೇಂದ್ರ ದೌವ್‌ಹಾರೆ, ಬಿಜೆಪಿಯ ಮಾಜಿ ಸಂಸದ ರಾಮ್‌ ಶಂಕರ್‌ ಮತ್ತು ಹಾಲಿ ಶಾಸಕಿ ಸರಿತಾ ಭದೌರಿಯಾ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲು ಜಮಾಯಿಸಿದಾಗ ವೇದಿಕೆಯಲ್ಲಿ ಗದ್ದಲ ಉಂಟಾಯಿತು. +ರೈಲಿನ ಹಾರ್ನ್‌ ಹೊರಡುವ ಸೂಚನೆ ನೀಡುತ್ತಿದ್ದಂತೆಯೇ ಪ್ಲಾಟ್‌ಫಾರ್ಮ್‌ ಅಸ್ತವ್ಯಸ್ತಗೊಂಡಿದ್ದು, ಬೆಂಬಲಿಗರು ಸ್ಥಾನಕ್ಕಾಗಿ ಹರಸಾಹಸ ಪಡುತ್ತಿದ್ದರು. ನಂತರದ ಗಲಿಬಿಲಿಯಲ್ಲಿ, ಶಾಸಕರನ್ನು ಪ್ಲಾಟ್‌ಫಾರ್ಮ್‌ನಿಂದ ತಳ್ಳಲಾಯಿತು ಮತ್ತು ಅವರು ರೈಲಿನ ಮುಂಭಾಗದ ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದಾರೆ.ಅದೃಷ್ಠವಷಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ . diff --git a/eesanje/url_47_12_5.txt b/eesanje/url_47_12_5.txt new file mode 100644 index 0000000000000000000000000000000000000000..aa2c05a6306a24138d91124028e2cf9fde8a216a --- /dev/null +++ b/eesanje/url_47_12_5.txt @@ -0,0 +1,10 @@ +ಚಿನ್ನಾಭರಣ ಮಳಿಗೆಯಲ್ಲಿ ದರೋಡೆ ಮಾಡಿದ್ದ ಆರೋಪಿ ಪೊಲೀಸರ ಎನ್‌ಕೌಂಟರ್‌ಗೆ ಬಲಿ + : , 2 +ಹರಿದ್ವಾರ, ಸೆ.16-ಚಿನ್ನಾಭರಣ ಮಳಿಗೆಯೊಂದರಲ್ಲಿ ದರೋಡೆ ನಡೆಸಿದ ಆರೋಪಿಯೊಬ್ಬ ಪೊಲೀಸರ ಎನ್‌ಕೌಂಟರ್‌ನಲ್ಲಿ ಹತನಾಗಿದ್ದು,ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಮೃತ ಆರೋಪಿಯನ್ನು ಪಂಜಾಬ್‌ನ ಮುಕ್ತಸರ ನಿವಾಸಿ ಸತೇಂದ್ರ ಪಾಲ್‌ ಅಲಿಯಾಸ್‌‍ ಲಕ್ಕಿ ಎಂದು ಗುರುತಿಸಲಾಗಿದ್ದು, ಆತನ ಪತ್ತೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. +ಕಳೆದ ಸೆ.1 ರಂದು ಹರಿದ್ವಾರದಲ್ಲಿ ದ್ವಿಚಕ್ರವಾಹನಗಳಲ್ಲಿ ಬಂದ ಐವರು ಆಭರಣ ಅಂಗಡಿಗೆ ನುಗ್ಗಿ ಅಲ್ಲಿನ ಕೆಲಸಗಾರರಿಗೆ ಬಂದೂಕು ತೋರಿಸಿ 5 ಕೋಟಿ ಮೌಲ್ಯದ ಚಿನ್ನ ಹಾಗು ಇತರೆ ವಸ್ತುಗಳನ್ನು ದರೋಡೆ ಮಾರಿ ಪರಾರಿಯಾಗಿದ್ದರು. +ರಾತ್ರಿ 10:30 ರ ಸುಮಾರಿಗೆ ಬಹದರಾಬಾದ್‌ನ ಧನೂರಿ ಬಳಿ, ಮುಖಕ್ಕೆ ಬಟ್ಟೆಯಿಂದ ಮುಚ್ಚಿಕೊಂಡು ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರನ್ನು ಪೊಲೀಸರು ತಡೆದಿದ್ದಾರೆ ಆದರೆ, ತಪ್ಪಿಸಿಕೊಳ್ಳುವ ಉದ್ದೇಶದಿಂದ ಪೊಲೀಸರತ್ತ ಗುಂಡು ಹಾರಿಸಲು ಪಾರಾರಿಯಾಗುವಾಗ ಇದರ ಬೆನ್ನಲ್ಲೇ ಪೊಲೀಸರು ಕೂಡ ಗುಂಡು ಹಾರಿಸಿದ್ದಾರೆ ಈ ವೇಲೆ ಒಬ್ಬ ಆರೋಪಿ ಗುಂಡು ತಗುಲಿದೆ. +ನಂತರ ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು,ಆತ ಮೃತಪಟ್ಟಿದ್ದಾನೆ,ಇದೇ ವೇಳೆ ಪ್ರಕರಣದ ಮತ್ತೊಬ್ಬ ಆರೋಪಿ ದ್ವಿಚಕ್ರವಾಹನದಲ್ಲಿ ಪರಾರಿಯಾಗಿದ್ದಾನೆ, ಅವರನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್‌‍ ವರಿಷ್ಠಾಧಿಕಾರಿ ಪ್ರಮೋದ್‌ ದೋವಲ್‌ ತಿಳಿಸಿದ್ದಾರೆ.ಆರೋಪಿಗಳಿಂದ ದೋಚಿದ್ದ ಕೆಲ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. +ಬಹದರಾಬಾದ್‌ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎನ್‌ಕೌಂಟರ್‌ ನಂತರ ಪರಿಸ್ಥಿತಿಯನ್ನು ಅವಲೋಕಿಸಿದ ಪ್ರಮೋದ್‌ ದೋವಲ್‌ ಅವರು ಆಭರಣ ಅಂಗಡಿ ಮಾಲೀಕ ಅತುಲ್‌ ಗರ್ಗ್‌ ಅವರನ್ನು ಸ್ಥಳಕ್ಕೆ ಕರೆಸಿ ಮೃತರನ್ನು ಮತ್ತು ವಶಪಡಿಸಿಕೊಂಡ ಮಾಲುಗಳನ್ನು ಪರಿಶೀಲಿಸಿದ್ದಾರೆ. +ಏತನ್ಮಧ್ಯೆ, ಡೆಹ್ರಾಡೂನ್‌ನಲ್ಲಿ, ಪೊಲೀಸ್‌‍ ಮಹಾನಿರ್ದೇಶಕ ಅಭಿನವ್‌ ಕುಮಾರ್‌ ಅವರು ದರೋಡೆಯಲ್ಲಿ ಭಾಗಿಯಾಗಿರುವ ಇತರ ಇಬ್ಬರು ದರೋಡೆಕೋರರಾದ ಗುರ್ದೀಪ್‌ ಸಿಂಗ್‌ ಅಲಿಯಾಸ್‌‍ ಮೋನಿ ಮತ್ತು ಜೈದೀಪ್‌ ಸಿಂಗ್‌ ಅಲಿಯಾಸ್‌‍ ಮನ ಅವರನ್ನುಹರಿದ್ವಾರದ ಖ್ಯಾತಿ ಧಾಬಾ ಬಳಿಯಿಂದ ಬಂಧಿಸಲಾಗಿದೆ ಎಂದು ಹೇಳಿದರು. +ಆರೋಪಿಗಳಿಂದ 50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಇದಲ್ಲದೆ, ಘಟನೆಗೆ ಬಳಸಲಾದ ಪಾಯಿಂಟ್‌ 32 ಬೋರ್‌ ಪಿಸ್ತೂಲ್‌‍, ನಾಲ್ಕು ಕಾಟ್ರಿಡ್‌್ಜಗಳು ಮತ್ತು ನಂಬರ್‌ ರಹಿತ ಮೋಟಾರ್‌ಸೈಕಲ್‌‍ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ತಲೆಮರೆಸಿಕೊಂಡಿರುವ ಇತರ ಆರೋಪಿಗಳಾದ ದೆಹಲಿಯ ಸುಭಾಷ್‌ ಮತ್ತು ಪಂಜಾಬ್‌ನ ಪಿಂಡಿಯ ಅಮನ್‌ರ ಪತ್ತೆಗಾಗಿ ಪೊಲೀಸ್‌‍ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಕುಮಾರ್‌ ಹೇಳಿದರು. \ No newline at end of file diff --git a/eesanje/url_47_12_6.txt b/eesanje/url_47_12_6.txt new file mode 100644 index 0000000000000000000000000000000000000000..8ce568f0d8ac89ada2c594311610aecb93769412 --- /dev/null +++ b/eesanje/url_47_12_6.txt @@ -0,0 +1,6 @@ +ಜಗತ್ತಿನಲ್ಲಿ ಭಾರತದ ಪ್ರತಿಷ್ಠೆ ಹೆಚ್ಚಿಸಿದ ಮೋದಿಜಿ : ಅಮಿತ್ ಶಾ ಬಣ್ಣನೆ + 74: +ನವದೆಹಲಿ, ಸೆ 17 (ಪಿಟಿಐ)ಕೇಂದ್ರ ಗಹ ಸಚಿವ ಅಮಿತ್‌ ಶಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನದಿನದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಅವರು ತಮ ದಣಿವರಿಯದ ಕೆಲಸ, ಪರಿಶ್ರಮ ಮತ್ತು ದೂರದಷ್ಟಿಯ ಮೂಲಕ ಜನರ ಜೀವನದಲ್ಲಿ ಸಕಾರಾತಕ ಬದಲಾವಣೆಗಳನ್ನು ತಂದಿದ್ದಾರೆ ಮತ್ತು ಜಗತ್ತಿನಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು. +74 ನೇ ವರ್ಷಕ್ಕೆ ಕಾಲಿಟ್ಟ ಪ್ರಧಾನಿ, ತಮ ದಶಕಗಳ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಕ್ಕಾಗಿ ತ್ಯಾಗ ಮತ್ತು ಸಮರ್ಪಣೆಯ ಹೊಸ ಮಾನದಂಡಗಳನ್ನು ಹೊಂದಿಸಿದ್ದಾರೆ ಎಂದು ಶಾ ಹೇಳಿದರು. ವಂಚಿತ ವರ್ಗದವರ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸಿದ ಮೋದಿಯವರಲ್ಲಿ ದೇಶಕ್ಕೆ ಅಂತಹ ನಿರ್ಣಾಯಕ ನಾಯಕ ಸಿಕ್ಕಿದ್ದಾರೆ ಎಂದು ಗಹ ಸಚಿವರು ಹೇಳಿದರು. +ತಮ ದಣಿವರಿಯದ ಪರಿಶ್ರಮ, ಪರಿಶ್ರಮ ಮತ್ತು ದೂರದಷ್ಟಿಯ ಮೂಲಕ ದೇಶವಾಸಿಗಳ ಜೀವನದಲ್ಲಿ ಸಕಾರಾತಕ ಬದಲಾವಣೆಗಳನ್ನು ತಂದ ಮತ್ತು ಅದರ ಹೆಮೆಯನ್ನು ಹೆಚ್ಚಿಸುವ ಮೂಲಕ ಭಾರತಕ್ಕೆ ವಿಶ್ವದಲ್ಲಿ ಹೊಸ ಗೌರವವನ್ನು ನೀಡಿದ ಜನಪ್ರಿಯ ಪ್ರಧಾನ ಮಂತ್ರಿ ಮೋದಿಜೀ ಅವರಿಗೆ ಹತ್ಪೂರ್ವಕ ಜನದಿನದ ಶುಭಾಶಯಗಳು. ನಾನು ಪ್ರಾರ್ಥಿಸುತ್ತೇನೆ. ನಿಮ ಆರೋಗ್ಯಕರ ಮತ್ತು ದೀರ್ಘಾಯುಷ್ಯಕ್ಕಾಗಿ ದೇವರಿಗೆ ಎಂದು ಶಾ ಹಿಂದಿಯಲ್ಲಿ ಎಕ್‌್ಸ ಮಾಡಿದ್ದಾರೆ. +ದೀರ್ಘಕಾಲದಿಂದ ಮೋದಿಯವರ ರಾಜಕೀಯ ಸಹೋದ್ಯೋಗಿಯಾಗಿರುವ ಶಾ, ಪ್ರಧಾನಿಯವರು ದೇಶ ಮೊದಲು ಎಂಬ ಕಲ್ಪನೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.ಸಂಘಟನೆಯಿಂದ ಸರ್ಕಾರದ ಉನ್ನತಿಗೆ ತನ್ನ ಪಯಣದಲ್ಲಿ, ಸಾರ್ವಜನಿಕ ಕಲ್ಯಾಣ ಮತ್ತು ಸಮಾಜದ ಪ್ರತಿಯೊಂದು ವಯೋಮಾನದವರ ಕಾಳಜಿ ಮೋದಿಯವರಿಗೆ ಪ್ರಮುಖವಾಗಿದೆ ಎಂದು ಶಾ ಹೇಳಿದರು. ಇಂತಹ ದಾರ್ಶನಿಕ ರಾಜಕಾರಣಿಯ ಮಾರ್ಗದರ್ಶನದಲ್ಲಿ ರಾಷ್ಟ್ರ ಹಿತಾಸಕ್ತಿಯ ಕೆಲಸಗಳಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಸೌಭಾಗ್ಯ ಎಂದರು. \ No newline at end of file diff --git a/eesanje/url_47_12_7.txt b/eesanje/url_47_12_7.txt new file mode 100644 index 0000000000000000000000000000000000000000..d0283204ee0c8d61eca13740668d9f5c95dc05b7 --- /dev/null +++ b/eesanje/url_47_12_7.txt @@ -0,0 +1,6 @@ +ವೈದ್ಯರ ಶೇ.99 ರಷ್ಟು ಬೇಡಿಕೆ ಈಡೇರಿಕೆ : ಮಮತಾ ಬ್ಯಾನರ್ಜಿ + ‘99% ’ +ಕೋಲ್ಕತ್ತಾ, ಸೆ 16 (ಪಿಟಿಐ)ಧರಣಿ ನಿರತ ಕಿರಿಯ ವೈದ್ಯರ ಬೇಡಿಕೆಗೆ ಮಣಿದು ಕೋಲ್ಕತ್ತಾ ಪೊಲೀಸ್‌‍ ಆಯುಕ್ತ ವಿನೀತ್‌ ಗೋಯಲ್‌‍, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಘೋಷಿಸಿದ್ದಾರೆ. +ವೈದ್ಯರೊಂದಿಗಿನ ಸಭೆಯ ನಂತರ, ಮಾತುಕತೆಗಳು ಫಲದಾಯಕ ಮತ್ತು ಅವರ ಬೇಡಿಕೆಗಳಲ್ಲಿ ಸುಮಾರು 99 ಪ್ರತಿಶತವನ್ನು ಅಂಗೀಕರಿಸಲಾಗಿದೆ ಎಂದು ಅವರು ಹೇಳಿದರು. +ಇಂದು ಸಂಜೆ 4 ಗಂಟೆಯ ನಂತರ ಹೊಸ ಕೋಲ್ಕತ್ತಾ ಪೊಲೀಸ್‌‍ ಆಯುಕ್ತರ ಹೆಸರನ್ನು ಪ್ರಕಟಿಸಲಾಗುವುದು ಎಂದು ಆರ್‌ಜಿ ಕರ್‌ ಬಿಕ್ಕಟ್ಟನ್ನು ಪರಿಹರಿಸಲು ತಮ ನಿವಾಸದಲ್ಲಿ ನಡೆದ ಸಭೆಯ ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು. ವೈದ್ಯರು ತಮ ಬಹುತೇಕ ಬೇಡಿಕೆಗಳನ್ನು ಸ್ವೀಕರಿಸಿರುವುದರಿಂದ ಕೆಲಸಕ್ಕೆ ಮರಳುವಂತೆ ಮುಖ್ಯಮಂತ್ರಿಗಳು ಒತ್ತಾಯಿಸಿದರು. +ವೈದ್ಯರ ವಿರುದ್ಧ ಯಾವುದೇ ದಂಡನಾತಕ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ . ಸಾಮಾನ್ಯ ಜನರು ಬಳಲುತ್ತಿರುವ ಕಾರಣ ನಾನು ಅವರನ್ನು ಮತ್ತೆ ಕೆಲಸಕ್ಕೆ ಸೇರಲು ವಿನಂತಿಸುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_12_8.txt b/eesanje/url_47_12_8.txt new file mode 100644 index 0000000000000000000000000000000000000000..cd0409d224196cecce8e61f73221afefc83697ec --- /dev/null +++ b/eesanje/url_47_12_8.txt @@ -0,0 +1,11 @@ +ರೂಪದರ್ಶಿಗೆ ಕಿರುಕುಳ : ಮೂವರು ಐಪಿಎಸ್‌‍ ಅಧಿಕಾರಿಗಳ ಅಮಾನತು +3 ‘ ’ - +ಅಮರಾವತಿ,ಸೆ.16– ಮುಂಬೈ ಮೂಲದ ಮಾಡೆಲ್‌ ಕಮ್‌ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮೂವರು ಐಪಿಎಸ್‌‍ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. +ಡೈರೆಕ್ಟರ್‌ ಜನರಲ್‌ ಶ್ರೇಣಿಯ ಒಬ್ಬರು, ಇನ್‌್ಸ ಪೆಕ್ಟರ್‌ ಜನರಲ್‌ ಮತ್ತು ಸೂಪರಿಂಟೆಂಡೆಂಟ್‌ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್‌‍ ಆರ್‌ ಆಂಜನೇಯುಲು (ಡಿಜಿ ಶ್ರೇಣಿ), ಕಂಠಿ ರಾಣಾ ಟಾಟಾ (ಐಜಿ ಶ್ರೇಣಿ) ಮತ್ತು ವಿಶಾಲ್‌ ಗುನ್ನಿ (ಎಸ್‌‍ಪಿ ಶ್ರೇಣಿ) ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ. +ವೈಎಸ್‌‍ ಜಗನ್‌ ಮೋಹನ್‌ ರೆಡ್ಡಿ ಸರ್ಕಾರದ ಆಡಳಿತದ ಇರುವಾಗ ನಟಿ ಪೊಲೀಸರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ಕಾರ್ಪೋರೇಷನ್‌ನ ಉನ್ನತ ಕಾರ್ಯನಿರ್ವಾಹಕರ ವಿರುದ್ಧ ತಾನು ಈ ಹಿಂದೆ ದಾಖಲಿಸಿದ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್‌‍ ಅಧಿಕಾರಿಗಳು ಬೆದರಿಕೆ ಹಾಕಿದ್ದರು. ಅಲ್ಲದೇ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು ಎಂದು ನಟಿ ಆರೋಪಿಸಿದ್ದರು. +ಆಂಧ್ರಪ್ರದೇಶ ಪೊಲೀಸರು ಆರೋಪಗಳ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಮತ್ತು ದುರ್ನಡತೆ ಆರೋಪದಡಿ ಅಮಾನತು ಆದೇಶ ಹೊರಡಿಸಲಾಗಿದೆ. ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲನವಿ) ನಿಯಮಗಳು, 1969 ರ ನಿಯಮ 3 (1)ರಡಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಆಗ ರಾಜ್ಯ ಗುಪ್ತಚರ ಮುಖ್ಯಸ್ಥರಾಗಿದ್ದ ಪಿಎಸ್‌‍ಆರ್‌ ಆಂಜನೇಯುಲು ಅವರು ಫೆಬ್ರವರಿ 2ರಂದು ಎಫ್‌ಐಆರ್‌ ದಾಖಲಿಸುವ ಮೊದಲೇ ಕಂಠಿ ರಾಣಾ ಟಾಟಾ ಮತ್ತು ವಿಶಾಲ್‌ ಗುನ್ನಿ ಅವರನ್ನು ಕರೆಸಿ ಜನವರಿ 31 ರಂದು ನಟನ ಬಂಧನಕ್ಕೆ ನಿರ್ದೇಶನ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. +ಅಮಾನತು ಆದೇಶದಲ್ಲಿ ಆಂಜನೇಯುಲು ಅವರು ತಮ ಅಧಿಕಾರ ಮತ್ತು ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು, ಸಮರ್ಪಕ ಪರಿಶೀಲನೆಯಿಲ್ಲದೆ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ಆದೇಶದಲ್ಲಿ ಹೇಳಲಾಗಿದೆ. +ವಿಜಯವಾಡದ ಮಾಜಿ ಕಮಿಷನರ್‌ ಆಗಿದ್ದ ಕಂಠಿ ರಾಣಾ ಟಾಟಾ ಅವರು ತನಿಖೆಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಲು ವಿಫಲರಾಗಿದ್ದಾರೆ ಮತ್ತು ಎರಡು ದಿನಗಳ ನಂತರ ಎಫ್‌ಐಆರ್‌ ದಾಖಲಿಸುವ ಮೊದಲು ಜನವರಿ 31 ರಂದು ತಮ ಮೇಲಧಿಕಾರಿಗಳ ಮೌಖಿಕ ಸೂಚನೆಯ ಮೇರೆಗೆ ನಟಿಯನ್ನು ಬಂಧಿಸಲು ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಲಾಗಿದೆ. +ಪ್ರಕರಣ ದಾಖಲಾದ 1 ಗಂಟೆ ಬಳಿಕ, ಸರಿಯಾದ ಲಿಖಿತ ಆದೇಶ ಇಲ್ಲದೇ ನಟಿಯ ಬಂಧನಕ್ಕಾಗಿ ಮುಂಬೈಗೆ ತೆರಳಲು ಪೊಲೀಸ್‌‍ ಅಧಿಕಾರಿಗಳಿಗೆ ಟಿಕೆಟ್‌ಗಳನ್ನು ಕಾಯ್ದಿರಿಸುವಂತೆ ಅವರು ಆದೇಶಿಸಿದ್ದರು ಎಂದು ವರದಿಯಾಗಿದೆ.ನಟನನ್ನು ಬಂಧಿಸುವ ಮುನ್ನ ದೂರನ್ನು ಕೂಲಂಕಷವಾಗಿ ಪರಿಶೀಲಿಸಲು ವಿಫಲವಾದ ಆರೋಪವನ್ನು ವಿಶಾಲ್‌ ಗುನ್ನಿ ಮೇಲೆ ಹೊರಿಸಲಾಗಿದೆ. +ಸರಿಯಾದ ಲಿಖಿತ ಆದೇಶವಿಲ್ಲದೆ ಬಂಧನಕ್ಕಾಗಿ ಫೆಬ್ರವರಿ 2ರಂದು ಮುಂಬೈಗೆ ಪ್ರಯಾಣಿಸಿದ್ದರು ಮತ್ತು ಮೇಲಧಿಕಾರಿಗಳ ಮೌಖಿಕ ಸೂಚನೆಯಂತೆ ಕಾರ್ಯನಿರ್ವಹಿ ಸಿದ್ದರು ಎಂದು ಆದೇಶದಲ್ಲಿ ತಿಳಿಸಲಾಗಿದೆ.ನಟಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಇಬ್ರಾಹಿಂಪಟ್ಟಣಂ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ದೂರು ದಾಖಲಿಸಿದ್ದರು. \ No newline at end of file diff --git a/eesanje/url_47_12_9.txt b/eesanje/url_47_12_9.txt new file mode 100644 index 0000000000000000000000000000000000000000..6028bdf1fa94d659a650cfd640c54e8da847edea --- /dev/null +++ b/eesanje/url_47_12_9.txt @@ -0,0 +1,13 @@ +ಮನೀಶ್‌ ಸಿಸೋಡಿಯಾ ಮುಂದಿನ ದೆಹಲಿ ಸಿಎಂ.? + ? +ನವದೆಹಲಿ,ಸೆ.16– ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್‌ ಕೇಜ್ರಿವಾಲ್‌ ರಾಜೀನಾಮೆ ಘೋಷಿಸಿದ ಬಳಿಕ ಆಮ್‌ ಆದಿ ಪಕ್ಷದ ಹಿರಿಯ ನಾಯಕ ಮನೀಶ್‌ ಸಿಸೋಡಿಯಾ ಮುಂದಿನ ಮುಖ್ಯ ಮಂತ್ರಿ ಎಂಬ ವದಂತಿ ಹಬ್ಬಿದೆ. ಕೇಜ್ರಿವಾಲ್‌ ಅವರು 48 ಗಂಟೆಗಳ ಒಳಗಾಗಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಇನ್ನೂ 24 ಗಂಟೆ ಬಾಕಿ ಉಳಿದಿದೆ. ಈ ನಡುವೆ ದೆಹಲಿಯ ಸಿಎಂ ಗದ್ದುಗೆಗೆ ಪೈಪೋಟಿ ಶುರುವಾಗಿದೆ. +ಈ ಮಧ್ಯೆ ಮನೀಶ್‌ ಸಿಸೋಡಿಯಾ, ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿ ಸಭೆ ನಡೆಸಿರುವುದು ತೀವ್ರ ಕುತೂಹಲ ಉಂಟುಮಾಡಿದೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಇಂದು ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆಯೂ ಚರ್ಚೆಯಾಗಿದೆ ಪಕ್ಷದ ವರಿಷ್ಠರ ನಿರ್ಧಾರದ ನಂತರ ಇದು ಮೊದಲ ಸಭೆಯಾಗಿದೆ. ಪಕ್ಷದ ಪದಾಧಿಕಾರಿಯೊಬ್ಬರು ಹೇಳಿದ್ದಾರೆ. +ಅಬಕಾರಿ ನೀತಿ ಪ್ರಕರಣದಲ್ಲಿ ತಿಹಾರ್‌ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕೇಜ್ರಿವಾಲ್‌, ಒಂದೆರಡು ದಿನಗಳಲ್ಲಿ ಎಎಪಿ ಶಾಸಕರ ಸಭೆ ನಡೆಸಲಿದ್ದು, ತಮ ಪಕ್ಷದ ಸಹೋದ್ಯೋಗಿಯೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಅವರ ಹಠಾತ್‌ ಘೋಷಣೆಯಿಂದಾಗಿ ಅವರ ಪತ್ನಿ ಸುನೀತಾ, ಸಚಿವರಾದ ಅತಿಶಿ ಮತ್ತು ಗೋಪಾಲ್‌ ರೈ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬಂತಹ ಮಾತುಗಳು ಕೂಡಾ ಕೇಳಿಬರುತ್ತಿದೆ. +ದೆಹಲಿ ಸಿಎಂ ಮನಸ್ಸಿನಲ್ಲಿ ಏನಿದೆ:?ಹಿರಿಯ ಎಎಪಿ ನಾಯಕರೊಬ್ಬರು ಜಾಮೀನು ಪಡೆದ ನಂತರ ರಾಜೀನಾಮೆ ನೀಡುವುದು ಮುಖ್ಯವಾಗಿತ್ತು. ಈಗ ಅವರು ಹೊರಗಿದ್ದು, ಸಿಎಂ ಸ್ಥಾನದಲ್ಲಿ ಮುಂದುವರಿಯಬಹುದು. ಆದರೆ ಯಾವುದೇ ಬಾಹ್ಯ ಒತ್ತಡಕ್ಕೆ ಒಳಗಾಗದೆ ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. +ನಮ ಮೇಲೆ ಪದೇ ಪದೇ ದಾಳಿಗಳು ನಮನ್ನು ದುರ್ಬಲ ಸ್ಥಿತಿಗೆ ತಲುಪಿಸಿರುವುದು ನಿಜ. ಹಿರಿಯ ನಾಯಕರು ಅವರ ಅನುಪಸ್ಥಿತಿಯಲ್ಲಿ ಹರಡಿದ ವದಂತಿಗಳನ್ನು ಹೊರಹಾಕಲು ಮತ್ತು ಮತದಾರರೊಂದಿಗೆ ಮರುಸಂಪರ್ಕಿಸಲು ಗಮನಹರಿಸುತ್ತಾರೆ ಎಂದು ಕ್ರೇಜಿವಾಲ್‌ ಹೇಳಿದ್ದರು. +ಈ ಘೋಷಣೆಯು ಬಿಜೆಪಿಯ ಕೆಲವರಿಗೆ ಅಚ್ಚರಿ ಮೂಡಿಸಿದೆ. ಪಕ್ಷವು ಸಾಮಾನ್ಯವಾಗಿ ಆಮ್‌ ಆದಿ ಪಕ್ಷದ ಮೇಲೆ ಮತ್ತು ವಿಶೇಷವಾಗಿ ಅದರ ಹಿರಿಯ ನಾಯಕತ್ವದ ಕೇಜ್ರಿವಾಲ್‌ ಮೇಲೆ ಭ್ರಷ್ಟಾಚಾರದ ವಿಷಯದ ಮೇಲೆ ತನ್ನ ದಾಳಿಯನ್ನು ತೀವ್ರಗೊಳಿಸಲು ಪ್ರಯತ್ನಿಸುತ್ತಿದೆ. ದೆಹಲಿ ಚುನಾವಣೆಗೆ ಪಕ್ಷವು ಇನ್ನೂ ಆರಂಭಿಕ ಹಂತದ ತಯಾರಿಯಲ್ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. +ದೆಹಲಿ ಬಿಜೆಪಿ ಕಾರ್ಯದರ್ಶಿ ಹರೀಶ್‌ ಖುರಾನಾ ಅವರು ಘೋಷಣೆಯ ಸಮಯವನ್ನು ಪ್ರಶ್ನಿಸಿದ್ದಾರೆ. ಅವರು ರಾಜೀನಾಮೆ ನೀಡಲು ಎರಡು ದಿನಗಳ ಕಾಲಾವಕಾಶವನ್ನು ಏಕೆ ಕೇಳಿದ್ದಾರೆ ಎಂಬುದು ಪ್ರಶ್ನೆಯಾಗಿದೆ. ಇದು ಹೊಸ ನಾಟಕವನ್ನು ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ತೋರುತ್ತದೆ – ನಾನು ರಾಜೀನಾಮೆ ನೀಡಲು ಬಯಸುತ್ತೇನೆ ಆದರೆ ಜನರು ನಾನು ರಾಜೀನಾಮೆ ಕೊಡುವುದನ್ನು ಬಯಸುವುದಿಲ್ಲ ಎಂದಿದ್ದಾರೆ. +ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಬರೋಬ್ಬರಿ 6 ತಿಂಗಳು ಜೈಲಿನಲ್ಲಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಇದೇ ಸೆಪ್ಟೆಂಬರ್‌ 13ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಆ ಬಳಿಕ ಮೊದಲ ಭಾಷಣ ಮಾಡಿದ ಕೇಜ್ರಿವಾಲ್‌ ರಾಜೀನಾಮೆ ಘೋಷಿಸಿದರು. ಅಲ್ಲದೇ ಜನತೆ ತೀರ್ಪು ನೀಡುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಈ ನಡುವೆ ಆಪ್‌ನಲ್ಲೇ ಇರುವ ದಿಗ್ಗಜ ನಾಯಕರ ನಡುವೆ ಪೈಪೋಟಿ ಶುರುವಾಗಿದೆ. +ಸದ್ಯ ಸಿಎಂ ರೇಸ್‌‍ನಲ್ಲಿ ಸಚಿವೆ ಅತಿಶಿ, ಮೂರು ಬಾರಿ ಶಾಸಕರಾಗಿರುವ ಸೌರಭ್‌ ಭಾರದ್ವಾಜ್, ರಾಘವ್‌ ಛಡ್ಡಾ, ಕೈಲಾಶ್‌ ಗೆಹ್ಲೋಟ್‌ ಹಾಗೂ ಸಂಜಯ್‌ ಸಿಂಗ್‌ ಅವರ ಹೆಸರು ಕೇಳಿಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ದೆಹಲಿಗೆ ನೂತನ ಸಿಎಂ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ. +ಮುಂದಿನ ನವೆಂಬರ್ನಲ್ಲೇ ಮಹಾರಾಷ್ಟ್ರ ಚುನಾವಣೆಯ ಜೊತೆಗೆ ದೆಹಲಿ ಚುನಾವಣೆ ನಡೆಸುವಂತೆ ಕೇಜ್ರಿವಾಲ್‌ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದ್ರೆ ಆಯೋಗ ಮನವಿ ತಿರಸ್ಕರಿಸಿದ್ದು, 2025ರ ಫೆಬ್ರವರಿಯಲ್ಲಿ ದೆಹಲಿಯ ವಿಧಾನಸಭಾ ಚುನಾವಣೆ ನಡೆಯಲಿದೆ. +ಈ ನಡುವೆ ಮಾತನಾಡಿರುವ ಸಿಎಂ ಕೇಜ್ರಿವಾಲ್‌, ಮಾಡಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರೊಂದಿಗೆ ನಾನು ಜನರ ಬಳಿಗೆ ಹೋಗುತ್ತೇನೆ. ಜನರ ತೀರ್ಪು ಪಡೆದ ನಂತರವೇ ಕಚೇರಿಗೆ ಮರಳುತ್ತೇನೆ ಎಂದು ಗುಡುಗಿದ್ದಾರೆ. ಇದು ಬ್ರಿಟಿಷ್‌ ವಸಾಹತುಶಾಹಿ ಆಳ್ವಿಕೆಗಿಂತ ಹೆಚ್ಚು ಸರ್ವಾಧಿಕಾರಿ ಆಡಳಿತವಾಗಿದೆ. ಕೇಂದ್ರ ಸರ್ಕಾರ ಏನೇ ಪಿತೂರಿ ಮಾಡಿದರೂ ನಮ ಸಂಕಲ್ಪ ಮುರಿಯಲು ಸಾಧ್ಯವಿಲ್ಲ, ರಾಷ್ಟ್ರಕ್ಕಾಗಿ ನಮ ಹೋರಾಟ ಮುಂದುವರಿಯುತ್ತೆ ಎಂದು ಎಚ್ಚರಿಕೆ ನೀಡಿದ್ದರು. diff --git a/eesanje/url_47_130_1.txt b/eesanje/url_47_130_1.txt new file mode 100644 index 0000000000000000000000000000000000000000..8506f063b1826f6a58f7be3d8bb9dc867a48a210 --- /dev/null +++ b/eesanje/url_47_130_1.txt @@ -0,0 +1,5 @@ +ಮಾಜಿ ಉಪಪ್ರಧಾನಿ ದಿವಂಗತ ಜಗಜೀವನ್ ರಾಮ್‌ಗೆ ಪ್ರಧಾನಿ ಮೋದಿ ನಮನ +ನವದೆಹಲಿ, ಏ. 5 (ಪಿಟಿಐ) :ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಿ ದಿವಂಗತ ಜಗಜೀವನ್ ರಾಮ್ ಅವರಿಗೆ ನಮನ ಸಲ್ಲಿಸಿದ್ದಾರೆ. ಜಗಜೀವನ್ ರಾಮ್ ಜನ್ಮದಿನದ ಪ್ರಯುಕ್ತ ಸಾರ್ವಜನಿಕ ಸೇವೆ ತಮ್ಮ ಜೀವವನ್ನೆ ಮುಡಿಪಾಗಿಟ್ಟಿದ್ದ ಧೀಮಂತ ದಲಿತ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. +ಸಾರ್ವಜನಿಕ ಸೇವೆಗೆ ಅವರ ಸಮರ್ಪಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯು ದೇಶದ ಪ್ರತಿ ಪೀಳಿಗೆಗೆ ಸೂರ್ತಿ ನೀಡುತ್ತದೆ ಎಂದು ಮೋದಿ ಎಕ್ಸ್‍ನಲ್ಲಿ ಹೇಳಿದರು, ಹಿಂದಿನ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸುವ ಆಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. +पूर्व उप प्रधानमंत्री बाबू जगजीवन राम को उनकी जयंती पर सादर नमन। जनसेवा को लेकर उनका समर्पण भाव और सामाजिक न्याय के लिए उनकी प्रतिबद्धता देश की हर पीढ़ी को प्रेरित करती रहेगी।../eMz4uSonzu +ಬಿಹಾರದಿಂದ ಬಂದ ರಾಮ್ ಅವರು ತಮ್ಮ ಆಡಳಿತ ಕೌಶಲ್ಯಕ್ಕಾಗಿ ತಮ್ಮನ್ನು ಗುರುತಿಸಿಕೊಂಡರು ಮತ್ತು 1971 ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿ ಅವರ ಪಾತ್ರವನ್ನು ಪ್ರಶಂಸಿಸಲಾಗಿದೆ. ತುರ್ತು ಪರಿಸ್ಥಿತಿ ವಿರೋಧಿಸಿ ಅವರು ಕಾಂಗ್ರೆಸ್ ತೊರೆದಿದ್ದರು. \ No newline at end of file diff --git a/eesanje/url_47_130_10.txt b/eesanje/url_47_130_10.txt new file mode 100644 index 0000000000000000000000000000000000000000..08663748f67c61dda4f1cc029e9130bbbb2c7ef9 --- /dev/null +++ b/eesanje/url_47_130_10.txt @@ -0,0 +1,7 @@ +ಸೋನಿಯಾ, ಅಶ್ವಿನಿ ವೈಷ್ಣವ್ ಸೇರಿ 14 ರಾಜ್ಯಸಭಾ ಸದಸ್ಯರು ಪ್ರಮಾಣ ವಚನ ಸ್ವೀಕಾರ +ನವದೆಹಲಿ,ಏ.4-ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯ ಸಭಾ ಪತಿ ಜಗದೀಪ್ ಧನಕರ್ ಪ್ರಮಾಣ ವಚನ ಬೋಧಿಸಿದರು. +ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ವೈಷ್ಣವ್ ಒಡಿಶಾದಿಂದ ಅದೇ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಕರ್ನಾಟಕದಿಂದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್ ಮತ್ತು ಸೈಯದ್ ನಾಸೀರ್ ಹುಸೇನ್, ಉತ್ತರಪ್ರದೇಶದ ಬಿಜೆಪಿ ನಾಯಕ ಆರ್‍ಪಿಎನ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಮಿಕ್ ಭಟ್ಟಾಚಾರ್ಯ ಸೇರಿದಂತೆ 14 ಮಂದಿ ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. +ಜೆಡಿಯುನ ಸಂಜಯ್‍ಕುಮಾರ್ ಝಾ ಬಿಹಾರದ ಸದಸ್ಯರಾಗಿಯೂ, ಬಿಜೆಡಿಯ ಸುಭಾಶಿಶ್ ಖುಂಟಿಯಾ ಮತ್ತು ದೇಬಾಶಿಶ್ ಸಮಂತರಾಯರೂ ಒಡಿಶಾದಿಂದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ಮದನ್ ರಾಥೋಡ್ ರಾಜಸ್ಥಾನವನ್ನು ಪ್ರತಿನಿಧಿಸುವ ಆರ್‍ಎಸ್‍ಎಸ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. +ವೈಎಸ್‍ಆರ್‍ಸಿಪಿ ನಾಯಕರಾದ ಗೊಲ್ಲ ಬಾಬುರಾವ್, ಮೇದಾ ರಘುನಾಥ ರೆಡ್ಡಿ ಮತ್ತು ಯರ್ರಂ ವೆಂಕಟ ಸುಬ್ಬಾ ರೆಡ್ಡಿ ಮತ್ತು ತೆಲಂಗಾಣದ ಬಿಆರ್‍ಎಸ್ ಮುಖಂಡ ರವಿಚಂದ್ರ ವಡ್ಡಿರಾಜು ಅವರು ಆಂಧ್ರಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಅವರೆಲ್ಲರೂ ಆರ್‍ಎಸ್‍ಎಸ್ ಅಧ್ಯಕ್ಷರೊಂದಿಗೆ ಗುಂಪು ಛಾಯಾಚಿತ್ರ ತೆಗೆಸಿಕೊಂಡರು. +ಒಡಿಶಾ ಮತ್ತು ರಾಜಸ್ಥಾನದ ಸದಸ್ಯರ ಅವ ಗುರುವಾರದಿಂದ ಆರಂಭವಾಗಿದೆ ಎಂದು ರಾಜ್ಯಸಭಾ ಕಾರ್ಯದರ್ಶಿ ತಿಳಿಸಿದ್ದಾರೆ. ಉಳಿದವರೆಲ್ಲರೂ ಬುಧವಾರದಿಂದ ತಮ್ಮ ಅವಧಿಯನ್ನು ಆರಂಭಿಸಿದ್ದಾರೆ.ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭಾ ಸದಸ್ಯೆಯಾಗಿದ್ದಾರೆ. +ಅವರು ಸಭಾನಾಯಕ ಪೀಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ , ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ಉಪಸ್ಥಿತರಿದ್ದರು. \ No newline at end of file diff --git a/eesanje/url_47_130_11.txt b/eesanje/url_47_130_11.txt new file mode 100644 index 0000000000000000000000000000000000000000..7b844d5b620b5f581ad680755b60e489ec08ce3a --- /dev/null +++ b/eesanje/url_47_130_11.txt @@ -0,0 +1,6 @@ +ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿದ್ದ ಪಿಐಎಲ್ ತಿರಸ್ಕೃತ +ನವದೆಹಲಿ,ಏ.4-ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ತಿರಸ್ಕರಿಸಿದೆ. +ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು ಎಂದು ಹೈಕೋರ್ಟ್ ಹೇಳಿದೆ. ಕೆಲವೊಮ್ಮೆ ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು. ಆದರೆ ಅದು ಅವರ ವೈಯಕ್ತಿಕ ನಿರ್ಧಾರವಾಗಿದೆ. +ನಾವು ನ್ಯಾಯಾಲಯ ಮತ್ತು ಕಾನೂನಿನ ಮೂಲಕ ಹೋಗಬೇಕು. ನಿಮ್ಮ ಪರಿಹಾರವು ಇಲ್ಲಿ ಸುಳ್ಳಲ್ಲ, ಅದು ಬೇರೆಡೆ ಇದೆ. ನೀವು ಸಮರ್ಥರ ಮುಂದೆ ಹೋಗುತ್ತೀರಿ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಹೇಳಿದರು. +ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಇದೇ ರೀತಿಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿರುವುದಾಗಿ ಪೀಠವು ಹೇಳಿದೆ ಮತ್ತು ಹೀಗಾಗಿ, ಇದನ್ನು ವಿಭಿನ್ನ ದೃಷ್ಟಿಕೋನದಿಂದ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. +ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯ ನಿರಾಕರಿಸಿದ್ದರಿಂದ, ಅರ್ಜಿದಾರ ವಿಷ್ಣು ಗುಪ್ತಾ ಅವರ ವಕೀಲರು, ಅರ್ಜಿಯನ್ನು ಹಿಂಪಡೆಯಲು ಅವರಿಗೆ ಸೂಚನೆಗಳಿವೆ ಮತ್ತು ಅವರು ತಮ್ಮ ಮನವಿಯೊಂದಿಗೆ ಲೆಫ್ಟಿನೆಂಟ್ ಗವರ್ನರ್ ಅವರನ್ನು ಸಂಪರ್ಕಿಸುವುತ್ತಾರೆ ಹೇಳಿದರು. ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಅವಕಾಶ ನೀಡಿಒ ನ್ಯಾಯಾಲಯವು ಅರ್ಜಿಯನ್ನು ವಿಲೇವಾರಿ ಮಾಡಿದೆ. \ No newline at end of file diff --git a/eesanje/url_47_130_12.txt b/eesanje/url_47_130_12.txt new file mode 100644 index 0000000000000000000000000000000000000000..7c25ee905a74d7f8e5b8c9a541c16d38a5a602d5 --- /dev/null +++ b/eesanje/url_47_130_12.txt @@ -0,0 +1,6 @@ +ಭಾರತದ ಬತ್ತಳಿಕೆಗೆ ಹೊಸ ಅಸ್ತ್ರ : ಅಗ್ನಿ-ಪ್ರೈಮ್ ಪರೀಕ್ಷೆ ಯಶಸ್ವಿ +ನವದೆಹಲಿ, ಏ.4-ಭಾರತವು ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಹೊಸ ತಲೆಮಾರಿನ ಬ್ಯಾಲಿಸ್ಟಿಕ್(ಖಂಡಾಂತರ) ಕ್ಷಿಪಣಿ ಅಗ್ನಿ-ಪ್ರೈಮ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. +ನಿನ್ನೆ ಸಂಜೆ ಪರೀಕ್ಷಾರ್ಥ ಉಡಾವಣೆ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದ್ದು, ಪರೀಕ್ಷೆಯು ತನ್ನ ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು ಮೌಲ್ಯೀಕರಿಸುವ ಎಲ್ಲಾ ಪ್ರಯೋಗದ ಉದ್ದೇಶಗಳನ್ನು ಪೂರೈಸಿದೆ ಎಂದು ಹೇಳಿದೆ. ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾದ ಹಲವಾರು ಶ್ರೇಣಿಯ ಸಂವೇದಕಗಳಿಂದ ಸೆರೆಹಿಡಿಯಲಾದ ಡೇಟಾದಿಂದ ದೃಢೀಕರಿಸಲ್ಪಟ್ಟಿದೆ. +ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್‍ಎಫ್‍ಸಿ), ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‍ಡಿಒ) ಜೊತೆಗೆ ಒಡಿಶಾದ ಕರಾವಳಿಯ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಹೊಸ ಪೀಳಿಗೆಯ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-ಪ್ರೈಮ್‍ನ ಯಶಸ್ವಿ ಹಾರಾಟ ಪರೀಕ್ಷೆಯನ್ನು ಏಪ್ರಿಲ್ 3 ರಂದು ಸುಮಾರು 19.00 ಗಂಟೆಗಳಲ್ಲಿ ನಡೆಸಿತು ಎಂದು ಸಚಿವಾಲಯ ತಿಳಿಸಿದೆ. +ಉಡಾವಣೆಗೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ಮುಖ್ಯಸ್ಥರು ಮತ್ತು ಡಿಆರ್‍ಡಿಒ ಮತ್ತು ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಸಾಕ್ಷಿಯಾದರು.ಯಶಸ್ವಿ ಪರೀಕ್ಷೆಗಾಗಿ ಡಿಆರ್‍ಡಿಒ, ಎಸ್‍ಎಫ್‍ಸಿ ಮತ್ತು ಸಶಸ್ತ್ರ ಪಡೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದು, ಕ್ಷಿಪಣಿಯ ಯಶಸ್ವಿ ಅಭಿವೃದ್ಧಿ ಮತ್ತು ಇಂಡಕ್ಷನ್(ಸೇರ್ಪಡೆ) ಸಶಸ್ತ್ರ ಪಡೆಗಳಿಗೆ ಅತ್ಯುತ್ತಮ ಬಲ ಗುಣಕವಾಗಲಿದೆ ಎಂದು ಹೇಳಿದ್ದಾರೆ. +ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಚೌಹಾಣ್ ಮತ್ತು ಡಿಆರ್‍ಡಿಒ ಅಧ್ಯಕ್ಷ ಸಮೀರ್ ವಿ ಕಾಮತ್ ಯಶಸ್ವಿ ಹಾರಾಟ ಪರೀಕ್ಷೆಗಾಗಿ ಎಸ್‍ಎಫ್‍ಸಿ ಮತ್ತು ಡಿಆರ್‍ಡಿಒ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. \ No newline at end of file diff --git a/eesanje/url_47_130_2.txt b/eesanje/url_47_130_2.txt new file mode 100644 index 0000000000000000000000000000000000000000..5dbae4f6ce606ea44cb74b7d7e43caf2d4d46b67 --- /dev/null +++ b/eesanje/url_47_130_2.txt @@ -0,0 +1,5 @@ +ಸತತ 7ನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ಮುಂಬೈ, ಏ. 5 (ಪಿಟಿಐ)ಭಾರತೀಯ ರಿಸರ್ವ್ ಬ್ಯಾಂಕ್ ಸತತ ಏಳನೇ ಬಾರಿಗೆ ನೀತಿ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ನಿರ್ಧರಿಸಿದೆ ಮತ್ತು ಆಹಾರ ಹಣದುಬ್ಬರದ ಮೇಲಿನ ಅಪಾಯಗಳ ಬಗ್ಗೆ ಜಾಗರೂಕವಾಗಿದೆ ಎಂದು ಹೇಳಿದೆ. +ಮೇ 2022 ರಿಂದ ಸತತ ಆರು ದರ ಏರಿಕೆಗಳ ನಂತರ 250 ಬೇಸಿಸ್ ಪಾಯಿಂಟ್‍ಗಳಿಗೆ ಒಟ್ಟುಗೂಡಿದ ನಂತರ ಕಳೆದ ವರ್ಷ ಏಪ್ರಿಲ್‍ನಲ್ಲಿ ದರ ಹೆಚ್ಚಳದ ಚಕ್ರವನ್ನು ವಿರಾಮಗೊಳಿಸಲಾಯಿತು. ಪ್ರಸಕ್ತ ಹಣಕಾಸು ವರ್ಷದ ಮೊದಲ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‍ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ವಿತ್ತೀಯ ನೀತಿ ಸಮಿತಿ (ಎಂಪಿಸಿ) ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ ಎಂದು ಹೇಳಿದರು. ಎಂಪಿಸಿಯು ಆಹಾರ ಹಣದುಬ್ಬರದ ಮೇಲೆ ನಿಗಾ ಇಡಲಿದೆ ಎಂದು ಅವರು ಹೇಳಿದರು. +5:1 ರ ಬಹುಮತದ ಮತದಿಂದ ಆರು ಸದಸ್ಯರ ದರ-ನಿಗದೀಕರಣ ಸಮಿತಿಯು ಬಡ್ಡಿದರದ ಯಥಾಸ್ಥಿತಿಗೆ ಒಲವು ತೋರಿತು, ಆದರೆ ಹೊಂದಾಣಿಕೆಯ ನಿಲುವನ್ನು ಹಿಂತೆಗೆದುಕೊಳ್ಳುವುದರ ಮೇಲೆ ಗಮನವನ್ನು ಉಳಿಸಿಕೊಂಡಿದೆ. ಫೆಬ್ರವರಿಯಲ್ಲಿ ಗ್ರಾಹಕ ಬೆಲೆ ಆಧಾರಿತ ಹಣದುಬ್ಬರ (ಸಿಪಿಐ) ಶೇ.5.1 ರಷ್ಟಿತ್ತು. +ಸಿಪಿಐ ಹಣದುಬ್ಬರವನ್ನು ಶೇಕಡಾ 4 ರಷ್ಟು ಎರಡೂ ಬದಿಗಳಲ್ಲಿ 2 ಶೇಕಡಾ ಮಾರ್ಜಿನ್‍ನೊಂದಿಗೆ ಖಚಿತಪಡಿಸಿಕೊಳ್ಳಲು ಸರ್ಕಾರವು ಆರ್‍ಬಿಐಗೆ ಆದೇಶ ನೀಡಿದೆ. diff --git a/eesanje/url_47_130_3.txt b/eesanje/url_47_130_3.txt new file mode 100644 index 0000000000000000000000000000000000000000..86ecd75ff783f75e38c725b284824f22ecf6bb43 --- /dev/null +++ b/eesanje/url_47_130_3.txt @@ -0,0 +1,7 @@ +ಕೋವಿಡ್ ಲಸಿಕೆ ಉಚಿತವಾಗಿ ಸಿಗಲು ಪ್ರತಿಪಕ್ಷಗಳು ಕಾರಣ, ಇದು ಬಿಜೆಪಿ ಸಾಧನೆ ಅಲ್ಲ : ಜೈರಾಮ್ +ನವದೆಹಲಿ, ಏ.5 (ಪಿಟಿಐ) :ವಿರೋಧ ಪಕ್ಷಗಳು ಮತ್ತು ಸುಪ್ರೀಂ ಕೋರ್ಟ್‍ನ ಒತ್ತಾಯದ ಮೇರೆಗೆ ಮೋದಿ ಸರ್ಕಾರ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡಿತ್ತು ಹಾಗೂ ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸಿದ ತಪ್ಪು ನಿರ್ವಹಣೆಯನ್ನು ಮರೆಯುವುದು ಕಷ್ಟ ಸಾಧ್ಯ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ನಮ್ಮ ಒತ್ತಾಯದಿಂದ ಹಂಚಲಾದ ಉಚಿತ ಕೋವಿಡ್-19 ಲಸಿಕೆಗಳನ್ನು ಬಿಜೆಪಿ ದೊಡ್ಡ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. +ಸತ್ಯವೆಂದರೆ ಪ್ರತಿಪಕ್ಷಗಳ ಒತ್ತಾಯ ಮತ್ತು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಯಿಂದ ಮೋದಿ ಸರ್ಕಾರವನ್ನು ಹಾಗೆ ಮಾಡಿತು. 2021ರಲ್ಲಿ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಗೆ ಪತ್ರ ಬರೆದು ಲಸಿಕೆ ನೀತಿ ಜಾರಿ ಮಾಡುವಂತೆ ಒತ್ತಾಯಿಸಿದ್ದರು ಅಲ್ಲಿಯವರೆಗೆ ಎಲ್ಲವೂ ಅಸ್ತವ್ಯಸ್ತವಾಗಿತ್ತು ಎಂದು ಅವರು ಎಕ್ಸ್ ಮಾಡಿದ್ದಾರೆ. +ಏಪ್ರಿಲ್ 19, 2021 ರಂದು, ಕೇಂದ್ರ ಸರ್ಕಾರವು ಉದಾರೀಕೃತ ಬೆಲೆ ಮತ್ತು ವೇಗವರ್ಧಿತ ರಾಷ್ಟ್ರೀಯ ಕೋವಿಡ್-19 ವ್ಯಾಕ್ಸಿನೇಷನ್ ಸ್ಟ್ರಾಟಜಿ ಅನ್ನು ಘೋಷಿಸಿತು, ಇದು 18 ಮತ್ತು 44 ವರ್ಷಗಳ ನಡುವಿನ ನಾಗರಿಕರಿಗೆ ಲಸಿಕೆಯನ್ನು ರಾಜ್ಯ ಸರ್ಕಾರಗಳ ಜವಾಬ್ದಾರಿಯನ್ನಾಗಿ ಮಾಡಿದೆ. +ಇದು ಸಾರ್ವತ್ರಿಕ ಉಚಿತ ಲಸಿಕೆ ಯೋಜನೆ ಅಲ್ಲ ಎಂದು ಅವರು ಹೇಳಿದರು. ಮೇ ಮೇ 12, 2021 ರಂದು, ವಿರೋಧ ಪಕ್ಷದ 12 ನಾಯಕರು ಪ್ರಧಾನ ಮಂತ್ರಿಗೆ ಜಂಟಿ ಪತ್ರವನ್ನು ಬರೆದರು, ಅಲ್ಲಿ ಅವರು ಉಚಿತ, ಸಾರ್ವತ್ರಿಕ ಸಾಮೂಹಿಕ ಲಸಿಕೆ ಅಭಿಯಾನ ಕ್ಕೆ ಒತ್ತಾಯಿಸಿದರು ಎಂದು ರಮೇಶ್ ಗಮನಸೆಳೆದರು. +ಮೇ 31, 2021 ರಂದು, ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಲಸಿಕೆ ತಂತ್ರವನ್ನು ಅನಿಯಂತ್ರಿತ ಮತ್ತು ಅಭಾಗಲಬ್ಧ ಎಂದು ಕರೆದಿದೆ ಮತ್ತು ಜೂನ್ 13, 2021 ರೊಳಗೆ ಅದನ್ನು ಪರಿಶೀಲಿಸುವಂತೆ ಮೋದಿ ಸರ್ಕಾರಕ್ಕೆ ಆದೇಶ ನೀಡಿದೆ ಎಂದು ಅವರು ಹೇಳಿದರು. ನಂತರವೇ, ಜೂನ್ 7, 2021 ರಂದು, ಪ್ರಧಾನಿ (ನರೇಂದ್ರ) ಮೋದಿ ಅವರು ಸಾರ್ವತ್ರಿಕ ಲಸಿಕೆ ಕಾರ್ಯಕ್ರಮವನ್ನು ಘೋಷಿಸಿದರು ಎಂದು ರಮೇಶ್ ಹೇಳಿದರು. +ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸಿದ ದುರುಪಯೋಗದ ವ್ಯಾಪ್ತಿಯನ್ನು ಮರೆಯುವುದು ಕಷ್ಟ. ಗಂಗೆಯನ್ನು ಉಸಿರುಗಟ್ಟಿಸಿದ ಶವಗಳು, ಆಮ್ಲಜನಕದ ತೀವ್ರ ಕೊರತೆ, ವ್ಯಾಕ್ಸಿನೇಷನ್‍ಗಳ ಅವಮಾನ ಮತ್ತು ಅವ್ಯವಸ್ಥೆ ಮರೆಯಲಾಗದು ಎಂದು ಅವರು ನೆನಪಿಸಿದ್ದಾರೆ. ಎಷ್ಟೇ ಪ್ರಚಾರ ಮಾಡಿದರೂ ಭಾರತದಾದ್ಯಂತ ಲಕ್ಷಾಂತರ ಕುಟುಂಬಗಳ ನೋವನ್ನು ಅಳಿಸಲು ಸಾಧ್ಯವಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_47_130_4.txt b/eesanje/url_47_130_4.txt new file mode 100644 index 0000000000000000000000000000000000000000..8f7ed61ed7f5433b842bc25a3b3407ea2997a70f --- /dev/null +++ b/eesanje/url_47_130_4.txt @@ -0,0 +1,6 @@ +ಕಾನೂನು ವಿವಿ ಅತ್ಯಾಚಾರ ಪ್ರಕರಣದ ತನಿಖೆಗೆ ಉನ್ನತಮಟ್ಟದ ಸಮಿತಿ +ಅಹಮದಾಬಾದ್, ಏ. 5 (ಪಿಟಿಐ) :ಕಳೆದ ಐದು ವರ್ಷಗಳ ಸಂಸ್ಥೆಯ ಕಾರ್ಯಕ್ಷಮತೆಯನ್ನು ನಿರ್ಣಯಿಸಲು ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶೆ ಇಂದೂ ಮಲ್ಹೋತ್ರಾ ನೇತೃತ್ವದ ಉನ್ನತ ಮಟ್ಟದ ಪರಿಶೀಲನಾ ಸಮಿತಿಯನ್ನು (ಎಚ್‍ಎಲ್‍ಆರ್‍ಸಿ) ರಚಿಸಲಾಗುವುದು ಎಂದು ಗಾಂಧಿನಗರ ಮೂಲದ ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ (ಜಿಎನ್‍ಎಲ್‍ಯು) ಹೈಕೋರ್ಟ್‍ಗೆ ತಿಳಿಸಿದೆ. +ವಿಶ್ವವಿದ್ಯಾನಿಲಯದಲ್ಲಿ ವಿಲಕ್ಷಣ ವಿದ್ಯಾರ್ಥಿಗೆ ಕಿರುಕುಳ ಮತ್ತು ವಿದ್ಯಾರ್ಥಿನಿಯ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಭರವಸೆ ನೀಡಲಾಗಿದೆ. ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಮತ್ತು ನ್ಯಾಯಮೂರ್ತಿ ಅನಿರುದ್ಧ ಪಿ ಮಾಯೆ ಅವರ ವಿಭಾಗೀಯ ಪೀಠವು ಈ ವಿಷಯದ ಕುರಿತು ಸ್ವಯಂ ಪ್ರೇರಿತ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ವಿಚಾರಣೆ ನಡೆಸುತ್ತಿದೆ. +ಇದಕ್ಕೂ ಮುನ್ನ, ವಿದ್ಯಾರ್ಥಿಗಳ ಆರೋಪಗಳನ್ನು ಪರಿಶೀಲಿಸಿದ ಸಮಿತಿಯ ಸಂಶೋಧನೆಗಳು ಭಯಾನಕ ಎಂದು ಪೀಠವು ವಿವರಿಸಿದೆ. ಸ್ವಯಂ ಪ್ರೇರಿತ ಪಿಐಎಲ್‍ನ ವಿಚಾರಣೆಯ ಸಂದರ್ಭದಲ್ಲಿ, ಜಿಎನ್‍ಎಲ್‍ಯು ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಕಮಲ್ ತ್ರಿವೇದಿ, ಮಾರ್ಚ್ 23 ರಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ ಸೇರಿ ಎಚ್‍ಎಲ್‍ಆರ್‍ಸಿಯನ್ನು ರಚಿಸಲು ನಿರ್ಧರಿಸಿದೆ ಎಂದು ಪೀಠಕ್ಕೆ ತಿಳಿಸಿದರು. +ನ್ಯಾಯಮೂರ್ತಿ ಇಂದೂ ಮಲ್ಹೋತ್ರಾ ಅವರಲ್ಲದೆ, ಸಮಿತಿಯಲ್ಲಿ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ರಾಜ್ಯ ಹಣಕಾಸು ಇಲಾಖೆಯ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂಎಂ ಶ್ರೀವಾಸ್ತವ ಸದಸ್ಯರಾಗಿರುತ್ತಾರೆ. ಇದಲ್ಲದೆ, ಪಾರದರ್ಶಕ ಮತ್ತು ಜಾಗರೂಕ ಆಂತರಿಕ ದೂರುಗಳ ಸಮಿತಿಯ ಪುನರ್ರಚನೆಗಾಗಿ ವಾರ್ಸಿಟಿಯಿಂದ ಉಪ-ಸಮಿತಿಯನ್ನು ಸಹ ನೇಮಿಸಲಾಗುವುದು ಎಂದು ತ್ರಿವೇದಿ ಹೇಳಿದರು. ಇದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಮನಿಶಾ ಲುವ್‍ಕುಮಾರ್ ಶಾ ಮತ್ತು ಹಿರಿಯ ವಕೀಲ ಅಸಿಮ್ ಪಾಂಡ್ಯ ಅವರನ್ನು ಒಳಗೊಂಡಿರುತ್ತದೆ. +ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಆಡಳಿತ ಮಂಡಳಿಯು ಹೆಚ್ಚು ಕಾಳಜಿ ವಹಿಸಿದೆ ಮತ್ತು ಆದ್ದರಿಂದ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಸುರಕ್ಷಿತ ಮತ್ತು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದ್ದರಿಂದ ಅವರು ಅಂತಹ ಅನುಭವಗಳೊಂದಿಗೆ ಮುಂದೆ ಬರಲು ಅಡ್ಡಿಯಾಗಬಾರದು ಎಂದು ತ್ರಿವೇದಿ ಹೇಳಿದರು. \ No newline at end of file diff --git a/eesanje/url_47_130_5.txt b/eesanje/url_47_130_5.txt new file mode 100644 index 0000000000000000000000000000000000000000..00e2372c97b18293de2dc48195fbb32324d2a4f8 --- /dev/null +++ b/eesanje/url_47_130_5.txt @@ -0,0 +1,6 @@ +ಅಸ್ಸಾಂನಲ್ಲಿ 210 ಕೋಟಿ ಮೌಲ್ಯದ ಹೆರಾಯಿನ್ ವಶ +ಗುವಾಹಟಿ,ಏ. 5 (ಪಿಟಿಐ) :ಅಸ್ಸಾಂನಲ್ಲಿ ನಡೆದ ಅತಿ ದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ 210 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ಕ್ಯಾಚಾರ್ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಳ್ಳುವಿಕೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ ಎಂದು ಅವರು ಹೇಳಿದರು. +ವಿಶೇಷ ಕಾರ್ಯಪಡೆ (ಎಸ್‍ಟಿಎಫ್ ) ಮತ್ತು ಕ್ಯಾಚಾರ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಿಜೋರಾಂನಿಂದ ಬಂದ ವಾಹನವನ್ನು ಸಿಲ್ಚಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಯೀದ್‍ಪುರದಲ್ಲಿ ತಡೆಹಿಡಿದು ಪರಿಶೀಲಿಸಿದಾಗ ಭಾರಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ ಎಂದು ಎಸ್‍ಟಿಎಫ್ ಇನ್ಸ್‍ಪೆಕ್ಟರ್ ಜನರಲ್ ಪಾರ್ಥಸಾರಥಿ ಮಹಂತ ಪಿಟಿಐಗೆ ತಿಳಿಸಿದ್ದಾರೆ. +ವಾಹನವನ್ನು ಶೋಧಿಸಿದಾಗ, ಅದರಿಂದ 21.5 ಕೆಜಿಗಿಂತ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಯಿತು, ಅದರಲ್ಲಿ 18 ಕೆಜಿ ಶುದ್ಧ ರೂಪದಲ್ಲಿದ್ದು ಹೆಚ್ಚಿನ ಸಂಸ್ಕರಣೆಯ ಅಗತ್ಯವಿದೆ, ಆದರೆ 3.5 ಕೆಜಿ ಸಿದ್ಧಪಡಿಸಿದ ಉತ್ಪನ್ನವಾಗಿದೆ ಎಂದು ಮಹಂತ ಹೇಳಿದರು.ವಶಪಡಿಸಿಕೊಂಡ ಮಾದಕ ವಸ್ತುಗಳ ಮೌಲ್ಯ ಅಂತಾರಾಷ್ಟ್ರೀಯ ಕಪ್ಪು ಮಾರುಕಟ್ಟೆಯಲ್ಲಿ ಸುಮಾರು 210 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. +ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು. ನಾವು ನೆರೆಯ ರಾಜ್ಯದಿಂದ ಕೆಲವು ದೊಡ್ಡ ನಗರಗಳಿಗೆ ಸರಬರಾಜು ಮಾಡಲು ಹೊರಟಿರುವ ಬಗ್ಗೆ ನಮಗೆ ಮಾಹಿತಿ ಬಂದಿತ್ತು. +ನಾವು ನಮ್ಮ ಜಾಗರೂಕತೆಯನ್ನು ಹೆಚ್ಚಿಸಿದ್ದೇವೆ ಮತ್ತು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಮಹಂತ ಹೇಳಿದರು. ವಾಹನವು ಮೂರು ದಿನಗಳ ಹಿಂದೆ ತನ್ನ ಪ್ರಯಾಣವನ್ನು ಪ್ರಾರಂಭಿಸಿತು ಮತ್ತು ನಿನ್ನೆ ಸ್ಥಳಕ್ಕೆ ತಲುಪಿತು, ಅಲ್ಲಿ ಅದನ್ನು ತಡೆಹಿಡಿಯಲಾಯಿತು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_130_6.txt b/eesanje/url_47_130_6.txt new file mode 100644 index 0000000000000000000000000000000000000000..8f8d19c46dc531d024bc9121aa18e35c6acc3728 --- /dev/null +++ b/eesanje/url_47_130_6.txt @@ -0,0 +1,6 @@ +ಕಪಾಟಿನಲ್ಲಿ ಮಹಿಳೆ ಶವ ಪತ್ತೆ, ಲಿವ್ ಇನ್ ಸಂಗಾತಿಯಿಂದ ಕೊಲೆ ಶಂಕೆ +ನವದೆಹಲಿ,ಏ.5-ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದ್ದು , ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. +ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದುರು. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿರುವ ಮಹಿಳೆಯ ಮನೆಗೆ ಹೋಗಿದ್ದಾರೆ. ಫ್ಲಾಟ್‍ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ. +ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು. ಕಳೆದ ಒಂದೂವರೆ ತಿಂಗಳಿನಿಂದ ತನ್ನ ಮಗಳು ವಿಪಾಲ್ ಜೊತೆ ಬಾಡಿಗೆ ಫ್ಲಾಟ್‍ನಲ್ಲಿ ವಾಸವಾಗಿದ್ದಳು ಎಂದು ತಿಳಿಸಿದ್ದಾರೆ. +ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.ಗುಜರಾತ್‍ನ ಸೂರತ್ ಮೂಲದ ಆರೋಪಿ ವಿಪಾಲ್ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. +ದೂರುದಾರರ ಹೇಳಿಕೆಯ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸ್ ತಂಡಗಳ ಅಧಿಕಾರಿಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_47_130_7.txt b/eesanje/url_47_130_7.txt new file mode 100644 index 0000000000000000000000000000000000000000..1993466de4df2a4af555950aaa35f57cda6bf74e --- /dev/null +++ b/eesanje/url_47_130_7.txt @@ -0,0 +1,5 @@ +ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಮೂವರು ವೈದ್ಯರ ಅಮಾನತು +ಜೈಪುರ, ಅ.5 :ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮೂವರು ವೈದ್ಯರನ್ನು ಸರ್ಕಾರ ಅಮಾನತುಗೊಳಿಸಿದೆ. +ವೈದ್ಯಕೀಯ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶುಭ್ರಾ ಸಿಂಗ್ ವಿಷಯ ತಿಳಿದು ತಕ್ಷಣದಿಂದ ಜಾರಿಗೆ ಬರುವಂತೆ ತನಿಖಾ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯ ತುರ್ತು ವರದಿಯ ಮೇಲೆ ಕ್ರಮ ಕೈಗೊಂಡು, ಕನ್ವಾಟಿಯಾ ಆಸ್ಪತ್ರೆಯ ಮೂವರು ವೈದ್ಯರಾದ ಕುಸುಮ್ ಸೈನಿ, ನೇಹಾ ರಾಜಾವತ್ ಮತ್ತು ಮನೋಜ್ ಅವರನ್ನು ಅಮಾನತುಗೊಳಿಸಲಾಗಿದೆ. +ಇವರಿಂದ ಗಂಭೀರ ನಿರ್ಲಕ್ಷ್ಯ ಮತ್ತು ಸಂವೇದನಾಶೀಲತೆ ಲೋಪ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಣದಲ್ಲಿಮೇಲ್ವಿಚಾರಣಾ ನಿರ್ಲಕ್ಷ್ಯಕ್ಕಾಗಿ ಕನ್ವಾಟಿಯಾ ಆಸ್ಪತ್ರೆಯ ಅಧೀಕ್ಷಕ ಡಾ ರಾಜೇಂದ್ರ ಸಿಂಗ್ ತನ್ವಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. +ತುಂಬು ಗರ್ಭಿಣಿಯನ್ನು ಕುಟುಂಬ ಸದಸ್ಯರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ ಆದರೆ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ ಬಳಿಕ ಬೇರೆ ಆಸ್ಪತ್ರೆಗೆಂದು ಹೊರಗೆ ಹೋಗುವಾಗ ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಯ ಗೇಟ್ ಬಳಿ ಹೆರಿಗೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_130_8.txt b/eesanje/url_47_130_8.txt new file mode 100644 index 0000000000000000000000000000000000000000..ebd11f30d653fef635f233276c844faa44cb5b72 --- /dev/null +++ b/eesanje/url_47_130_8.txt @@ -0,0 +1,7 @@ +ಚಿರತೆ ಜತೆ ಹೋರಾಡಿ ಹೊಸ ಹೀರೋ ಎನಿಸಿಕೊಂಡ ಅಧಿಕಾರಿ +ಜಮ್ಮು,ಏ.4-ನಮ್ಮ ಹೊಯ್ಸಳ ದೊರೆ ಹುಲಿಯೊಂದಿಗೆ ಕುಸ್ತಿ ಮಾಡಿದ ರೀತಿಯಲ್ಲೇ ಚಿರತೆಯೊಂದಿಗೆ ಹೋರಾಡಿ ಗೆದ್ದಿರುವ ಕಾಶ್ಮೀರದ ವನ್ಯಜೀವಿ ಇಲಾಖೆ ಅಧಿಕಾರಿಯೊಬ್ಬರು ರಾತ್ರೋರಾತ್ರಿ ಹೊಸ ಹೀರೋ ಆಗಿ ಹೊರಹೊಮ್ಮಿದ್ದಾರೆ. +ವನ್ಯಜೀವಿ ಅಧಿಕಾರಿ ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಚರಿಸುತ್ತಿದ್ದ ಚಿರತೆಯನ್ನು ಕೇವಲ ಒಂದು ಕೋಲಿನಿಂದ ಹೆದರಿಸಿ ಬಂಧಿಸಿರುವ 50 ಸೆಕೆಂಡ್ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ. + . . .###../pUNUozm7UB +50 ಸೆಕೆಂಡ್ಗಳ ವೀಡಿಯೊದಲ್ಲಿ ಆತ ಚಿರತೆಯನ್ನು ಜೀವಂತವಾಗಿ ಸೆರೆಹಿಡಿಯಲು ಪ್ರಯತ್ನಿಸುತ್ತಿರುವಾಗ ವ್ಯಕ್ತಿ ಕೇವಲ ತನ್ನ ಕೈಗಳನ್ನು ಬಳಸಿ ಚಿರತೆಯೊಂದಿಗೆ ಸೆಣಸಾಡುತ್ತಿರುವುದನ್ನು ಕಾಣಬಹುದಾಗಿದೆ. ಅವನು ಕೋಲನ್ನು ತೆಗೆದುಕೊಳ್ಳಲು ಬಗ್ಗುವವರೆಗೆ ಪ್ರಾಣಿಯಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ನಂತರ ಚಿರತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಾನೆ. +ಇದ್ದಕ್ಕಿದ್ದಂತೆ, ಚಿರತೆ ಅವನ ಮೇಲೆ ಧಾವಿಸುತ್ತದೆ, ಶಕ್ತಿಯುತ ಪ್ರಾಣಿಯ ವಿರುದ್ಧ ಹೋರಾಟವನ್ನು ಮುಂದುವರೆಸಿದಾಗಲೂ ಅವನ ಕೈಯನ್ನು ಅದರ ಬಾಯಿಯಲ್ಲಿ ಹಿಡಿಯುತ್ತದೆ. ಅಂತಿಮವಾಗಿ, ಚಿರತೆಯ ಹಿಡಿತದಿಂದ ತನ್ನ ಕೈಯನ್ನು ಬಿಡಿಸಿಕೊಂಡು ಅದನ್ನು ಸದೆಬಡಿಯುವಲ್ಲಿ ಮನುಷ್ಯ ಯಶಸ್ವಿಯಾಗುತ್ತಾನೆ ನಂತರ ಸ್ಥಳೀಯರ ನೆರವಿನೊಂದಿಗೆ ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿಯುತ್ತಾನೆ. +ಗಂದರ್ಬಾಲ್ನ ಫತೇಪೊರಾ ಗ್ರಾಮದಲ್ಲಿ ಚಿರತೆ ಸ್ವಚ್ಛಂದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ನಿವಾಸಿಗಳು ವನ್ಯಜೀವಿ ಅಧಿಕಾರಿಗಳಿಗೆ ಸೂಚನೆ ದೂರು ನೀಡುತ್ತಾರೆ. ರಕ್ಷಣಾ ಕಾರ್ಯಾಚರಣೆ ಆಗಮಿಸುವ ವನ್ಯಜೀವಿ ಅಧಿಕಾರಿಯ ಈ ಸಾಹಸಮಯ ದೃಶ್ಯ ಇದೀಗ ಭಾರಿ ವೈರಲ್ ಆಗಿದೆ. \ No newline at end of file diff --git a/eesanje/url_47_130_9.txt b/eesanje/url_47_130_9.txt new file mode 100644 index 0000000000000000000000000000000000000000..764a206ff141418a6776e38c021d92166f4c7d47 --- /dev/null +++ b/eesanje/url_47_130_9.txt @@ -0,0 +1,6 @@ +ಎಲ್ಲರ ಮನಗೆದ್ದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್- ಹಿರಿಯ ವಕೀಲ ದ್ವಿವೇದಿ ಜುಗಲ್ ಬಂದಿ +ನವದೆಹಲಿ,ಏ.4-ಹಿರಿಯ ವಕೀಲ ದಿನೇಶ್ ದ್ವಿವೇದಿ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನಲ್ಲಿ ನಡೆಸಿರುವ ಮಾತಿನ ಸಂಭಾಷಣೆ ಎಲ್ಲರ ಮನಗೆದ್ದಿದೆ. ಕೋರ್ಟ್ ಹಾಲ್ಗೆ ಬಂದ ಹಿರಿಯ ವಕೀಲ ದ್ವಿವೇದಿ ಅವರು ನನ್ನ ಬಣ್ಣ ಬಣ್ಣದ ಕೂದಲಿಗೆ ಹೋಳಿ ಹಬ್ಬ ಕಾರಣ. ನನಗೆ ಮಕ್ಕಳು, ಮೊಮ್ಮಕ್ಕಳು ಹೆಚ್ಚಾಗಿರುವುದರಿಂದ ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅದಕ್ಕಾಗಿ ವಿಷಾದಿಸುತ್ತೇನೆ ಎನ್ನುತ್ತಾರೆ. +#: - . : . . …../wPdx2T6Axf +ಆಗ ಪೀಠದಲ್ಲಿದ್ದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಹಾಸ್ಯಸ್ಪದವಾಗಿ ಮದ್ಯದೊಂದಿಗೆ ಏನೂ ಸಂಬಂಧವಿಲ್ಲವೇ ಎಂದು ಕೇಳಿದಾಗ ಹಾಲ್ನಲ್ಲಿದ್ದವರನ್ನು ನಗೆಗಡಲಲ್ಲಿ ಮುಳುಗಿಸುತ್ತದೆ.ಆಗ ದ್ವಿವೇದಿ ಅವರು ಹೋಳಿ ಎಂದರೆ ಭಾಗಶಃ ಮದ್ಯಪಾನ… ಮತ್ತು ನಾನು ತಪೊ್ಪಪ್ಪಿಕೊಳ್ಳಬೇಕು… ನಾನು ವಿಸ್ಕಿಯ ಅಭಿಮಾನಿ ಎಂದಾಗ ಮತ್ತೆ ಹಾಲ್ನಲ್ಲಿ ನಗು ಮೊಳಗುತ್ತದೆ. +ಒಂಬತ್ತು ನ್ಯಾಯಾೀಧಿಶರ ಸಂವಿಧಾನ ಪೀಠವು ಕೈಗಾರಿಕಾ ಮದ್ಯದ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಕೈಗಾರಿಕಾ ಮದ್ಯವು ಮಾರುಕಟ್ಟೆಗಳಲ್ಲಿ ಲಭ್ಯವಿರುವ ಖಾದ್ಯ ಆಲ್ಕೋ ಹಾಲ್ಗೆ ಸಮಾನವಾಗಿದೆಯೇ ಮತ್ತು ಕೈಗಾರಿಕಾ ಮದ್ಯ ಉತ್ಪಾದನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಅತಿಕ್ರಮಿಸುವ ಅಧಿಕಾರವಿದೆಯೇ ಎಂಬ ಬಗ್ಗೆ ಚರ್ಚಿಸಿತು. +ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ದ್ವಿವೇದಿ ಅವರು ಈ ಸಂದರ್ಭದಲ್ಲಿ ಎಲ್ಲಾ ರೀತಿಯ ಮದ್ಯವು ರಾಜ್ಯದ ನಿಯಂತ್ರಣಕ್ಕೆ ಬರುತ್ತದೆ ಎಂದು ವಾದಿಸಿದರು. \ No newline at end of file diff --git a/eesanje/url_47_131_1.txt b/eesanje/url_47_131_1.txt new file mode 100644 index 0000000000000000000000000000000000000000..ddec4eb316486cdffc0d50706e644421dbdff0fe --- /dev/null +++ b/eesanje/url_47_131_1.txt @@ -0,0 +1,5 @@ +ಹೇಮಮಾಲಿನಿ ಕುರಿತು ನಾಲಿಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸುರ್ಜೇವಾಲಾ +ನವದೆಹಲಿ,ಏ.4-ರಾಜ್ಯಸಭಾ ಸದಸ್ಯ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚಿತ್ರನಟಿ ಹಾಗೂ ಬಿಜೆಪಿ ಲೋಕಸಭಾ ಸದಸ್ಯೆ ಹೇಮಮಾಲಿನಿ ಕುರಿತು ನೀಡಿರುವ ಹೇಳಿಕೆ ಭಾರೀ ವಿವಾದವನ್ನು ಸೃಷ್ಟಿಸಿದೆ. +ಕಾರ್ಯಕ್ರಮವೊಂದರಲ್ಲಿ ರ್ಯಾಲಿಯನ್ನುದ್ದೇಶಿ ಮಾತನಾಡಿರುವ ಸುರ್ಜೇವಾಲಾ, ನಾವು ಏಕೆ ಎಂಎಲ್‍ಎ/ಎಂಪಿ ಆಯ್ಕೆ ಮಾಡುತ್ತೇವೆ? ಅವರು ನಮ್ಮ ಧ್ವನಿಯನ್ನು ಎತ್ತುವಂತೆ, ನಮ್ಮ ಅಭಿಪ್ರಾಯಗಳನ್ನು ಸ್ವೀಕರಿಸುತ್ತಾರೆ, ಅದಕ್ಕಾಗಿಯೇ ನಾವು ಅವರನ್ನು ಆಯ್ಕೆ ಮಾಡುತ್ತೇವೆ. ಅವರು ಹೇಮಾ ಮಾಲಿನಿ ಅಲ್ಲ, ಯಾರು?… ಎಂದು ಹೇಳಿರುವುದು ಭಾರೀ ವಿವಾದವನ್ನು ಉಂಟು ಮಾಡಿದೆ. +ಅವರ ಹೇಳಿಕೆ ಕುರಿತಂತೆ ಬಿಜೆಪಿ ತಿರುಗಿ ಬಿದ್ದಿದ್ದು, ಕೂಡಲೇ ಸುರ್ಜೇವಾಲ ಅವರು ಹೇಮಮಾಲಿನಿ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕ್ಷಮೆ ಕೇಳಬೇಕು. ಇಲ್ಲವೇ ಅವರನ್ನು ಪಕ್ಷದಿಂದ ಹೊರಹಾಕಬೇಕೆಂದು ಒತ್ತಾಯಿಸಿದೆ.ಕೆಲ ದಿನಗಳ ಹಿಂದೆ ಹಿಮಾಚಲಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ನಟಿ ಕಂಗನಾ ರಾಣಾವತ್ ಬಗ್ಗೆ ಎಐಸಿಸಿ ವ್ಯಕ್ತಾರೆ ಸುಪ್ರಿಯ ಶ್ರೀನೇತ್ ಅವರು ಇಂಥದ್ದೇ ವಿವಾದಾತ್ಮಕ ಪೋಸ್ಟ್ ಮಾಡಿದ್ದರು. ಇದು ಕೂಡ ಎಐಸಿಸಿಗೆ ತೀವ್ರ ಮುಜುಗರ ಸೃಷ್ಟಿಸಿತ್ತು. +ಸುರ್ಜೇವಾಲ ಹೇಳಿಕೆಗೆ ಕಿಡಿಕಾರಿರುವ ಕಂಗನಾ ರಾಣಾವತ್, ಅವರ ಹೇಳಿಕೆ ಕೇವಲ ಹೇಮಮಾಲಿನಿ ಅಲ್ಲ ಇಡೀ ಮಹಿಳಾ ಸಮಾಜಕ್ಕೆ ಮಾಡಿರುವ ಅವಮಾನ. ಕಾಂಗ್ರೆಸ್ ನಾಯಕರು ಇತ್ತೀಚೆಗೆ ಸೋಲುವ ಭಯದಿಂದಾಗಿ ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ನಾರಿಯರಿಗೆ ಗೌರವ ಕೊಡದವರು ದೇಶ ಆಳಲು ಸಮರ್ಥರೇ ಎಂದು ಪ್ರಶ್ನೆ ಮಾಡಿದ್ದಾರೆ. \ No newline at end of file diff --git a/eesanje/url_47_131_10.txt b/eesanje/url_47_131_10.txt new file mode 100644 index 0000000000000000000000000000000000000000..c8789b0ebb5ba0a15c6fdf9af4d32a4b87dffc69 --- /dev/null +++ b/eesanje/url_47_131_10.txt @@ -0,0 +1,6 @@ +ಹೆತ್ತ ತಾಯಿಯ ಹಂಬಲದಲ್ಲಿದೆ ಪೆಟ್ರೀಷಿಯಾ ಹೃದಯ +ನಾಗ್ಪುರ, ಏ.3- ವಿದೇಶದಲ್ಲಿ ನೆಮ್ಮದಿಯ ಜೀವನ ನಡೆಸುತ್ತಿದ್ದ ಮಹಿಳೆಯೊಬ್ಬರು ತನಗೆ ಜೀವ ಕೊಟ್ಟ ತಾಯಿಯನ್ನು ಹುಡುಕಿಕೊಂಡು ಭಾರತಕ್ಕೆ ಬಂದಿದ್ದಾರೆ. ಸ್ವೀಡನ್‍ನ 41 ವರ್ಷದ ಮಹಿಳೆ ಪೆಟ್ರೀಷಿಯಾ ಎರಿಕ್ಸನ್ ಭಾರತದ ನಾಗ್ಪುರದಲ್ಲಿದ್ದು, ನಾಲ್ಕು ದಶಕಗಳ ಹಿಂದೆ ತನ್ನನ್ನು ದತ್ತು ಪಡೆಯಲು ಬಿಟ್ಟುಕೊಟ್ಟ ಜೈವಿಕ ತಾಯಿಯನ್ನು ಹುಡುಕುತ್ತಿದ್ದಾರೆ. +ಎರಿಕ್ಸನ್ ಫೆಬ್ರವರಿ 1983 ರಲ್ಲಿ ನಾಗ್ಪುರದ ಡಾಗಾ ಆಸ್ಪತ್ರೆಯಲ್ಲಿ ಜನಿಸಿದರು ಮತ್ತು ಒಂದು ವರ್ಷದ ನಂತರ ಸ್ವೀಡಿಷ್ ದಂಪತಿಗಳು ದತ್ತು ಪಡೆದಿದ್ದರು. ಇದು ನಾಗ್ಪುರಕ್ಕೆ ಎರಿಕ್ಸನ್ ಅವರ ಎರಡನೇ ಭೇಟಿಯಾಗಿದೆ. ತನ್ನ ಹುಡುಕಾಟದಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದರೂ, ಅವಳು ತನ್ನ ಜನ್ಮ ತಾಯಿಯನ್ನು ಹುಡುಕಲು ನಿರ್ಧರಿಸಿದ್ದಾರೆ. ಅವಳು ತನ್ನ ದತ್ತು ಪಡೆದ ಪೋಷಕರಿಗೆ ಕೃತಜ್ಞಳಾಗಿದ್ದಾಳೆ ಆದರೆ ತನ್ನ ಜೈವಿಕ ಬೇರುಗಳೊಂದಿಗೆ ಸಂಪರ್ಕ ಸಾಧಿಸಲು ಬಯಸುತ್ತಿದ್ದಾರೆ ಅವರ ಭಾವಾನಾತ್ಮಕ ಹುಡುಕಾಟಕ್ಕೆ ಅಂಜಲಿ ಪವಾರ್ ಅವರು ಸಹಾಯ ಮಾಡುತ್ತಿದ್ದಾರೆ. +ಪೆಟ್ರೀಷಿಯಾ ಅವರ ಜೈವಿಕ ತಾಯಿಯ ಹುಡುಕಾಟದಲ್ಲಿ ಸಹಾಯ ಮಾಡುತ್ತಿರುವ ವಕೀಲ ಅಂಜಲಿ ಪವಾರ್ ಅವರು, ನಾವು ಪೆಟ್ರೀಷಿಯಾ ಅವರ ತಾಯಿ ಹುಡುಕಾಟದಲ್ಲಿ ಸಹಾಯ ಮಾಡುತ್ತಿದ್ದೇವೆ. 1983 ರಲ್ಲಿ ಶಾಂತಿನಗರದಲ್ಲಿ ವಾಸಿಸುತ್ತಿದ್ದವರು ಮತ್ತು ಶಾಂತಾ ಮತ್ತು ರಾಮದಾಸ್ ಅವರ ಬಗ್ಗೆ ತಿಳಿದಿರುವವರು ಅಥವಾ ತಿಳಿದಿರುವವರು ಮುಂದೆ ಬರಬೇಕು. ನಮಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. +ಬೇರೆ ದೇಶದ ಮಹಿಳೆಯೊಬ್ಬರು ಭಾರತದಲ್ಲಿ ತನ್ನ ಜೈವಿಕ ಪೋಷಕರನ್ನು ಹುಡುಕುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷದ ಡಿಸೆಂಬರ್‍ನಲ್ಲಿ ಸ್ವಿಸ್ ಮಹಿಳೆ ವಿದ್ಯಾ ಫಿಲಿಪ್ಪನ್ ಕೂಡ ಮುಂಬೈನಲ್ಲಿ ತನ್ನ ಜೈವಿಕ ತಾಯಿಯನ್ನು ಹುಡುಕುವ ಅನ್ವೇಷಣೆಯಲ್ಲಿದ್ದರು. 2023 ರ ಹೊತ್ತಿಗೆ, ಅವಳು ಒಂದು ದಶಕದಿಂದ ಹುಡುಕುತ್ತಿದ್ದಳು. ಅವಳ ಏಕೈಕ ಮುಖ್ಯ ವಿಷಯವೆಂದರೆ ಅವಳ ತಾಯಿಯ ಕೊನೆಯ ಹೆಸರು ಮತ್ತು ವಿಳಾಸ ಪತ್ತೆ ಮಾಡುವುದಾಗಿತ್ತು. +ಫಿಲಿಪ್ಪನ್ ಫೆಬ್ರವರಿ 8, 1996 ರಂದು ಜನಿಸಿದ್ದರು ಮತ್ತು ಅವರ ತಾಯಿ ಅವಳನ್ನು ಮಿಷನರೀಸ್ ಆಫ್ ಚಾರಿಟಿಯಲ್ಲಿ ತೊರೆದರು. ನಂತರ ಆಕೆಯನ್ನು 1997 ರಲ್ಲಿ ಸ್ವಿಸ್ ದಂಪತಿಗಳು ದತ್ತು ಪಡೆದರು ಮತ್ತು ಸ್ವಿಟ್ಜರ್ಲೆಂಡ್‍ಗೆ ಕರೆತಂದಿದ್ದರು. \ No newline at end of file diff --git a/eesanje/url_47_131_11.txt b/eesanje/url_47_131_11.txt new file mode 100644 index 0000000000000000000000000000000000000000..d17f5c771c5b9d8fae4abe8aa3b2b8ecf662cf42 --- /dev/null +++ b/eesanje/url_47_131_11.txt @@ -0,0 +1,6 @@ +ಮೋದಿಗೆ ಪರ್ಯಾಯ ಎಂಬುದು ಅಪ್ರಸ್ತುತ; ತರೂರ್ +ನವದೆಹಲಿ,ಏ.3- ಪ್ರಧಾನಿ ನರೇಂದ್ರ ಮೋದಿಯವರಿಗೆ ಪರ್ಯಾಯವಾಗಿ ಯಾರು ಎಂಬ ಪ್ರಶ್ನೆ ಸಂಸದೀಯ ವ್ಯವಸ್ಥೆಯಲ್ಲಿ ಅಪ್ರಸ್ತುತವಾಗಿದೆ ಏಕೆಂದರೆ ನಾವು ಒಬ್ಬ ವ್ಯಕ್ತಿಯನ್ನು ಆರಿಸುವುದಿಲ್ಲ, ಆದರೆ ಪಕ್ಷ ಅಥವಾ ಪಕ್ಷಗಳ ಒಕ್ಕೂಟವನ್ನು ಆಯ್ಕೆ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. +ಇಂದು ಬೆಳಿಗ್ಗೆ ಎಕ್ಸ್‍ಗೆ ಕರೆದೊಯ್ದು, ಪತ್ರಕರ್ತರೊಬ್ಬರು ಈ ಪ್ರಶ್ನೆಯನ್ನು ಕೇಳಿದ್ದಾರೆ ಎಂದು ತರೂರ್ ಹೇಳಿದರು. ಮತ್ತೊಮ್ಮೆ ಪತ್ರಕರ್ತರೊಬ್ಬರು ಮೋದಿಗೆ ಪರ್ಯಾಯ ವ್ಯಕ್ತಿಯನ್ನು ಗುರುತಿಸುವಂತೆ ಕೇಳಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ಈ ಪ್ರಶ್ನೆಯು ಅಪ್ರಸ್ತುತವಾಗಿದೆ. ನಾವು ಒಬ್ಬ ವ್ಯಕ್ತಿಯನ್ನು (ಅಧ್ಯಕ್ಷೀಯ ಪದ್ಧತಿಯಂತೆ) ಆಯ್ಕೆ ಮಾಡುತ್ತಿಲ್ಲ, ಆದರೆ ಪಕ್ಷ ಅಥವಾ ಒಕ್ಕೂಟವನ್ನು ಆಯ್ಕೆ ಮಾಡುತ್ತಿದ್ದೇವೆ. ಭಾರತದ ವೈವಿಧ್ಯತೆ, ಬಹುತ್ವ ಮತ್ತು ಅಂತರ್ಗತ ಬೆಳವಣಿಗೆಯನ್ನು ಸಂರಕ್ಷಿಸಲು ಅಮೂಲ್ಯವಾದ ತತ್ವಗಳು ಮತ್ತು ನಂಬಿಕೆಗಳ ಗುಂಪನ್ನು ಪ್ರತಿನಿಧಿಸುವ ಪಕ್ಷಗಳು ಎಂದು ಅವರು ಬರೆದಿದ್ದಾರೆ. +ಮೋದಿಯವರಿಗೆ ಪರ್ಯಾಯವೆಂದರೆ ಅನುಭವಿ, ಸಮರ್ಥ ಮತ್ತು ವೈವಿಧ್ಯಮಯ ಭಾರತೀಯ ನಾಯಕರ ಗುಂಪು, ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ ಮತ್ತು ವೈಯಕ್ತಿಕ ಅಹಂಕಾರದಿಂದ ನಡೆಸಲ್ಪಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಹೇಳಿದರು. +ಪ್ರಧಾನ ಮಂತ್ರಿ ಆಯ್ಕೆಯು ದ್ವಿತೀಯ ಪರಿಗಣನೆಯಾಗಿದೆ. ಯಾವ ನಿರ್ದಿಷ್ಟ ವ್ಯಕ್ತಿಯನ್ನು ಅವರು ಪ್ರಧಾನಿಯಾಗಲು ಆಯ್ಕೆ ಮಾಡುತ್ತಾರೆ ಎಂಬುದು ದ್ವಿತೀಯ ಪರಿಗಣನೆಯಾಗಿದೆ. ನಮ್ಮ ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ರಕ್ಷಿಸುವುದು ಮೊದಲನೆಯದು ಎಂದು ತರೂರ್ ಹೇಳಿದರು. +ಕೇರಳದ ತಿರುವನಂತಪುರದಿಂದ ಮೂರು ಬಾರಿ ಸಂಸದರಾಗಿರುವ ತರೂರ್ ಈಗ ಅದೇ ಕ್ಷೇತ್ರದಿಂದ ನಾಲ್ಕನೇ ಲೋಕಸಭೆಗೆ ಸ್ಪರ್„ಸಲು ಸಜ್ಜಾಗಿದ್ದಾರೆ. ಅವರು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಎಡರಂಗದ ಅಭ್ಯರ್ಥಿ ಪನ್ಯನ್ ರವೀಂದ್ರನ್ ವಿರುದ್ಧ ಸ್ಪರ್ಧಿಸಿದ್ದಾರೆ.ಕಳೆದೆರಡು ವಾರಗಳಿಂದ ತರೂರ್ ಮುಂಬರುವ ಚುನಾವಣೆಗಾಗಿ ತಮ್ಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ತಿರುವನಂತಪುರಂ ಲೋಕಸಭಾ ಚುನಾವಣೆಯಲ್ಲಿ ಏಪ್ರಿಲ್ 26 ರಂದು ಎರಡನೇ ಹಂತದ ಮತದಾನ ನಡೆಯಲಿದೆ. \ No newline at end of file diff --git a/eesanje/url_47_131_12.txt b/eesanje/url_47_131_12.txt new file mode 100644 index 0000000000000000000000000000000000000000..ef2837f118f566eb41b6f52485196c9b96e5a2be --- /dev/null +++ b/eesanje/url_47_131_12.txt @@ -0,0 +1,6 @@ +ಓದಲು ಮನಸ್ಸಾಗದೆ ಉಗ್ರ ಸಂಘಟನೆಯತ್ತ ಆಕರ್ಷಿತನಾಗಿದ್ದ ಐಐಟಿ ವಿದ್ಯಾರ್ಥಿ +ಗುವಾಹಟಿ,ಏ.3- ಭಯೋತ್ಪಾದಕ ಗುಂಪು ಐಸಿಸ್‍ಗೆ ನಿಷ್ಠೆ ತೋರಿದ ಆರೋಪದ ಮೇಲೆ ಬಂಧಿತನಾಗಿರುವ ಐಐಟಿ-ಗುವಾಹಟಿ ವಿದ್ಯಾರ್ಥಿ ವ್ಯಾಸಂಗ ಮುಂದುವರೆಸಲು ಸಾಧ್ಯವಾಗದೆ ಉಗ್ರ ಸಂಘಟನೆ ಸೇರಲು ತೀರ್ಮಾನಿಸಿದ್ದ ಎಂದು ಆತನ ತಂದೆ ತಿಳಿಸಿದ್ದಾರೆ. +ಬಯೋಸೈನ್ಸ್ ವಿಭಾಗದ ನಾಲ್ಕನೇ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದ ಆರೋಪಿ ತೌಸೀಫ್ ಅಲಿ ಫರೂಕಿ ಎಂಬಾತನನ್ನು ಮಾರ್ಚ್ 24 ರಂದು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿಯಲ್ಲಿ ಬಂಧಿಸಲಾಯಿತು. ಈಗ ಆತ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ನಾನು ಬಿಹಾರದ ಸಿವಾನ್‍ನಲ್ಲಿ ವಾಸಿಸುತ್ತಿದ್ದೇನೆ ಆದರೆ ಆತ ನನ್ನ ಪತ್ನಿಯೊಂದಿಗೆ ದೆಹಲಿಯಲ್ಲಿದ್ದ. ನನ್ನ ಮಗ ಇತರ ಯೋಜನೆಗಳನ್ನು ಹೊಂದಿದ್ದರಿಂದ ತನ್ನ ಅಧ್ಯಯನವನ್ನು ಮುಂದುವರಿಸುವುದಿಲ್ಲ ಎಂದು ಅವಳಿಗೆ ಹೇಳಿದ್ದ ಎಂದು ವಿದ್ಯಾರ್ಥಿಯ ತಂದೆ ಅಸ್ಮತ್ ಅಲಿ ಫರೂಕಿ ನ್ಯಾಯಾಲಯದ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. +ಖಂಡಿತವಾಗಿಯೂ, ಅವರ ತಾಯಿಗೆ ತಿಳಿದಿರುವ ವಿಷಯವಿದೆ ಆದರೆ ಅದನ್ನು ಇತರರಿಂದ ಮರೆಮಾಡಲಾಗಿದೆ, ಎಂದು ಫರೂಕಿ ಹೇಳಿದರು. ನ್ಯಾಯಾಲಯಕ್ಕೆ ಬಂದ ಆರೋಪಿ ತಾಯಿ ಮಾಧ್ಯಮದವರೊಂದಿಗೆ ಮಾತನಾಡಲಿಲ್ಲ. +ಫರೂಕಿ ಅವರು ತಮ್ಮ ಪತ್ನಿಯೊಂದಿಗೆ ಬೇರ್ಪಟ್ಟಿದ್ದಾರೆ ಎಂಬ ಊಹಾಪೋಹಗಳನ್ನು ನಿರಾಕರಿಸಿದರು ಮತ್ತು ಅವರು ತಮ್ಮ ಕೃಷಿ ಭೂಮಿಯನ್ನು ನೋಡಿಕೊಳ್ಳಲು ಬಿಹಾರದಲ್ಲಿ ವಾಸಿಸುತ್ತಿದ್ದರು ಎಂದು ಹೇಳಿದರು.ಆರೋಪಿಯನ್ನು ಮಾರ್ಚ್ 23 ರಂದು ಕಮ್ರೂಪ್ ಜಿಲ್ಲೆಯ ಹಜೋದಲ್ಲಿ ಬಂಧಿಸಲಾಯಿತು ಮತ್ತು ಮರುದಿನ ಭಾರತೀಯ ದಂಡ ಸಂಹಿತೆ ಮತ್ತು ಯುಎಪಿಎಯ ವಿವಿಧ ಸೆಕ್ಷನ್‍ಗಳ ಅಡಿಯಲ್ಲಿ ಬಂಧಿಸಲಾಯಿತು. +ಅಸ್ಸಾಂ ಪೊಲೀಸ್‍ನ ವಿಶೇಷ ಕಾರ್ಯಪಡೆ (ಎಸ್‍ಟಿಎಫ್) ಇನ್ಸ್‍ಪೆಕ್ಟರ್ ಜನರಲ್ ಪಾರ್ಥಸಾರಥಿ ಮಹಂತ ಅವರು ಈ ಹಿಂದೆ ಆತನನ್ನು ವಿಚಾರಣೆ ನಡೆಸಿದ ನಂತರ, ಪೊಲೀಸರು ಐಸಿಸ್ ಜೊತೆಗಿನ ಸಂಬಂಧದ ಬಗ್ಗೆ ನಂಬಲರ್ಹವಾದ ಪುರಾವೆಗಳನ್ನು ಕಂಡುಕೊಂಡರು ಮತ್ತು ಅವರನ್ನು ಬಂ„ಸಲಾಯಿತು ಎಂದು ಹೇಳಿದ್ದಾರೆ.ಐಸಿಸ್ ಭಾರತದ ಮುಖ್ಯಸ್ಥ ಹ್ಯಾರಿಸ್ ಫರೂಕಿ ಅಲಿಯಾಸ್ ಹರೀಶ್ ಅಜ್ಮಲ್ ಫರೂಖಿ ಮತ್ತು ಆತನ ಸಹಚರ ಅನುರಾಗ್ ಸಿಂಗ್ ಅಲಿಯಾಸ್ ರೆಹಾನ್ ಅವರನ್ನು ಬಾಂಗ್ಲಾದೇಶದಿಂದ ದಾಟಿದ ನಂತರ ಧುಬ್ರಿ ಜಿಲ್ಲೆಯಲ್ಲಿ ಬಂಧಿಸಿದ ಮೂರು ದಿನಗಳ ನಂತರ ವಿದ್ಯಾರ್ಥಿಯನ್ನು ಬಂಧಿಸಲಾಯಿತು. \ No newline at end of file diff --git a/eesanje/url_47_131_2.txt b/eesanje/url_47_131_2.txt new file mode 100644 index 0000000000000000000000000000000000000000..e6c4308837b8fe2f90532e0a8939f77c9bb0f5f2 --- /dev/null +++ b/eesanje/url_47_131_2.txt @@ -0,0 +1,8 @@ +ತಿಹಾರ್ ಜೈಲಿನಲ್ಲಿ ಯೋಗ-ಧ್ಯಾನ ಮಾಡಿಕೊಂಡು ಕಾಲ ಕಳೆಯುತ್ತಿರುವ ಕೇಜ್ರಿವಾಲ್ +ನವದೆಹಲಿ,ಏ.4-ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಗಾದ ನಂತರ ತಿಹಾರ್ ಜೈಲಿಗೆ ಕಳುಹಿಸಲಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸೆಲ್‍ನಲ್ಲಿ ಧ್ಯಾನ, ಪುಸ್ತಕಗಳನ್ನು ಓದುವುದು ಮತ್ತು ಯೋಗ ಮಾಡಿಕೊಂಡು ಸಮಯ ಕಳೆಯುತ್ತಿದ್ದಾರೆ. +ಏಷ್ಯಾದ ಅತಿದೊಡ್ಡ ಜೈಲಿನಲ್ಲಿ ಇರಿಸಲಾಗಿರುವ ಮೊದಲ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ತಿಹಾರ್‍ನ ಜೈಲು ಸಂಖ್ಯೆ 2 ರ ಸಾಮಾನ್ಯ ವಾರ್ಡ್ ಸಂಖ್ಯೆ 3ರಲ್ಲಿ 14×8 ಅಡಿ ಕೊಠಡಿಯಲ್ಲಿ ಇರಿಸಲಾಗಿದೆ. ಕೇಜ್ರಿವಾಲ್ ದಿನದ ಬಹುಪಾಲು ಪುಸ್ತಕಗಳನ್ನು ಓದುತ್ತಾರೆ ಮತ್ತು ಪ್ರತಿದಿನ ಎರಡು ಬಾರಿ ಯೋಗ ಮತ್ತು ಧ್ಯಾನ ಮಾಡುತ್ತಾರೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಸುಮಾರು ಒಂದೂವರೆ ಗಂಟೆ ಯೋಗ ಮಾಡುತ್ತಾರೆ ಮತ್ತು ಧ್ಯಾನ ಮಾಡುತ್ತಾರೆ. +ಕೇಜ್ರಿವಾಲ್‍ಗೆ ಒದಗಿಸಿದ ಪುಸ್ತಕಗಳಲ್ಲಿ ಹಿಂದೂ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತ ಪ್ರಮುಖವಾಗಿವೆ. ತಮ್ಮ ಸೆಲ್‍ನಲ್ಲಿ ಕುರ್ಚಿಯ ಮೇಲೆ ಕುಳಿತು ಈ ಪುಸ್ತಕಗಳನ್ನು ಓದುತ್ತಾರೆ ಮತ್ತು ಏನನ್ನಾದರೂ ಬರೆಯುತ್ತಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ. +ಕ್ರೇಜಿವಾಲ್ ಅವರ ಸೆಲ್‍ನಲ್ಲಿ 20 ಚಾನೆಲ್‍ಗಳ ಟಿವಿಯನ್ನು ಒದಗಿಸಲಾಗಿದೆ, ಆದರೆ ಅವರು ಅದನ್ನು ವೀಕ್ಷಿಸಲು ಹೆಚ್ಚು ಇಷ್ಟಪಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಅವರಿಗೆ ಟೇಬಲ್ ಮತ್ತು ಕುರ್ಚಿ ಜೊತೆಗೆ ವಿದ್ಯುತ್ ಕೆಟಲ್ ಅನ್ನು ಒದಗಿಸಲಾಗಿದೆ. ಅವರ ಕೊಠಡಿಯನ್ನು ಸ್ವಚ್ಛಗೊಳಿಸಲು ಅವರಿಗೆ ಬ್ರೂಮ್, ಬಕೆಟ್ ಮತ್ತು ಬಟ್ಟೆಯ ತುಂಡು ನೀಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. +ತಿಹಾರ್ ಅಧಿಕಾರಿಗಳು ಸೆಲ್‍ನಲ್ಲಿ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ 24 ಗಂಟೆಗಳ ಕಾಲ ಆತನ ಮೇಲೆ ನಿಗಾ ಇಡಬಹುದು. ಅವರ ಕೊಠಡಿಯ ಹೊರಗೆ ಇರುವ ಲಾಬಿಯಲ್ಲಿ ಅವರು ಕುಳಿತುಕೊಳ್ಳಲು ಅವಕಾಶವಿದೆ. +ಭದ್ರತಾ ಕಾರಣಗಳಿಂದ ಕೇಜ್ರಿವಾಲ್‍ಗೆ ಇತರ ಕೈದಿಗಳನ್ನು ಭೇಟಿಯಾಗಲು ಅವಕಾಶವಿಲ್ಲ. ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ತಮಿಳುನಾಡು ವಿಶೇಷ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಕ್ವಿಕ್ ರಿಯಾಕ್ಷನ್ ತಂಡವನ್ನು ಅವರ ವಾರ್ಡ್‍ನ ಹೊರಗೆ 24 ಗಂಟೆಯೂ ನಿಯೋಜಿಸಲಾಗಿದೆ. +ಅವರು ಪ್ರತಿದಿನ ತಮ್ಮ ವಕೀಲರನ್ನು ಭೇಟಿ ಮಾಡಲು ಹೋದಾಗಲೆಲ್ಲಾ, ಅವರನ್ನು ಕ್ಯೂಆರ್‍ಟಿ ಸಿಬ್ಬಂದಿ ಬೆಂಗಾವಲು ಮಾಡುತ್ತಾರೆ. ಚಹಾ ಮತ್ತು ಮನೆಯಲ್ಲಿ ಬೇಯಿಸಿದ ಆಹಾರವನ್ನು ಅವರಿಗೆ ದಿನನಿತ್ಯ ನಿಗದಿತ ಸಮಯಕ್ಕೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_131_3.txt b/eesanje/url_47_131_3.txt new file mode 100644 index 0000000000000000000000000000000000000000..3f134ab440aa4af126d40bb8d3d4966ba728cf31 --- /dev/null +++ b/eesanje/url_47_131_3.txt @@ -0,0 +1,6 @@ +ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಕೇರಳ ಸಿಎಂ ಪಿಣರಾಯಿ ವಿಜಯನ್ +ತಿರುವನಂತಪುರಂ, ಏ. 4 (ಪಿಟಿಐ) :ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಮರುದಿನವೇ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. +ಕಾಂಗ್ರೆಸ್ ಪಕ್ಷವು ರೋಡ್ ಶೋ ಸಂದರ್ಭದಲ್ಲಿ ತನ್ನ ಮತ್ತು ಮಿತ್ರ ಪಕ್ಷ ಐಯುಎಂಎಲ್ ಧ್ವಜವನ್ನು ತೋರಿಸಲಿಲ್ಲ ಅವರು ಬಿಜೆಪಿಗೆ ಹೆದರಿದಂತೆ ಕಾಣುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ತೆಗೆದುಕೊಂಡ ನಿಲುವು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ನ ಮತಗಳನ್ನು ಬಯಸುತ್ತದೆ ಆದರೆ ಅವರ ಧ್ವಜಗಳನ್ನು ಅಲ್ಲ ಎಂದು ಸೂಚಿಸುತ್ತದೆ ಎಂದು ವಿಜಯನ್ ಆರೋಪಿಸಿದರು. +ಇದನ್ನೆಲ್ಲಾ ನೋಡಿದರೆ ಕೋಮುವಾದಿ ಶಕ್ತಿಗಳಿಗೆ ಹೆದರುವ ಮಟ್ಟಕ್ಕೆ ಕಾಂಗ್ರೆಸ್ ಕುಸಿದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. ವಯನಾಡ್‍ನಲ್ಲಿ ರಾಹುಲ್ ಗಾಂಧಿಯವರ ರೋಡ್‍ಶೋ 2019 ರ ಕ್ಷೇತ್ರದಲ್ಲಿ ಮಿತ್ರಪಕ್ಷ ಐಯುಎಂಎಲ್‍ನ ಹಸಿರು ಬಾವುಟಗಳು ಜನಸಂದಣಿಯಲ್ಲಿ ಕಾಂಗ್ರೆಸ್‍ಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಕ್ಕಿಂತ ಭಿನ್ನವಾಗಿತ್ತು. ಈ ಬಾರಿ ಎರಡೂ ಧ್ವಜಗಳು ಗೈರುಹಾಜರಿಯಿಂದ ಎದ್ದು ಕಾಣುತ್ತಿವೆ. +ಕಳೆದ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಐಯುಎಂಎಲ್ ಧ್ವಜಗಳ ಬಗ್ಗೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರಿಂದ ಧ್ವಜಗಳು ಇಲ್ಲ ಎಂದು ವಿಜಯನ್ ಪ್ರತಿಪಾದಿಸಿದರು.2019 ರ ಚುನಾವಣಾ ಪ್ರಚಾರದ ಉತ್ತುಂಗದಲ್ಲಿ, ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಕೇರಳದ ಕ್ಷೇತ್ರದಿಂದ ಗಾಂಧಿ ಸ್ಪರ್ಧಿಸಿದ್ದಕ್ಕಾಗಿ ಟೀಕಿಸಿದ್ದರು ಮತ್ತು ಈ ಪ್ರದೇಶದಲ್ಲಿ ಮೆರವಣಿಗೆಯ ಸಮಯದಲ್ಲಿ ಐಯುಎಂಎಲ್‍ನ ಹಸಿರು ಬಾವುಟಗಳ ಉಪಸ್ಥಿತಿ ನೋಡಿದರೆ ಇದು ಭಾರತ ಅಥವಾ ಪಾಕಿಸ್ತಾನವೇ ಎಂದು ಗುರುತಿಸುವುದು ಕಷ್ಟ ಎಂದು ಟೀಕಿಸಿದರು. +ಕಾಂಗ್ರೆಸ್ ತನ್ನ ಧ್ವಜದ ಹಿಂದಿನ ಇತಿಹಾಸ ಮತ್ತು ತ್ಯಾಗವನ್ನು ಮರೆತು ಸಂಘಪರಿವಾರದ ತ್ರಿವರ್ಣ ಧ್ವಜವನ್ನು ತ್ಯಜಿಸಬೇಕೆಂಬ ಆಶಯಕ್ಕೆ ಮಣಿದಿರುವಂತೆ ತೋರುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_47_131_4.txt b/eesanje/url_47_131_4.txt new file mode 100644 index 0000000000000000000000000000000000000000..cbfe239700506d1843b53febe4068913ba6513d3 --- /dev/null +++ b/eesanje/url_47_131_4.txt @@ -0,0 +1,6 @@ +ಸನಾತನ ವಿರೋಧಿ ಘೋಷಣೆ ಕೂಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ತೊರೆದ ವಲ್ಲಭ್ +ನವದೆಹಲಿ, ಏ. 4 (ಪಿಟಿಐ): ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ್ ಅವರು ಪಕ್ಷದ ಎಲ್ಲಾ ಹುದ್ದೆಗಳು ಮತ್ತು ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದು, ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಲು ಅಥವಾ ಸಂಪತ್ತಿನ ಸೃಷ್ಟಿಕರ್ತರನ್ನುನಿಂದಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +ವಲ್ಲಭ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದಿರುವ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‍ನಲ್ಲಿ ಹಂಚಿಕೊಂಡಿದ್ದಾರೆ. ಪಕ್ಷ ಮುನ್ನಡೆಯುತ್ತಿರುವ ದಿಕ್ಕು ತೋಚದ ರೀತಿಯಲ್ಲಿ ನೆಮ್ಮದಿ ಇಲ್ಲದಂತಾಗಿದೆ ಎಂದಿದ್ದಾರೆ. +ವಲ್ಲಭ ಅವರು, ನಾನು ಸನಾತನ ಸಂಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಲಾರೆ ಅಥವಾ ಸಂಪತ್ತು ಸೃಷ್ಟಿಸುವವರನ್ನು ನಿಂದಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷದ ಎಲ್ಲ ಹುದ್ದೆಗಳಿಗೆ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಹಲವು ತಿಂಗಳಿಂದ ಪಕ್ಷದ ಪರವಾಗಿ ದೂರದರ್ಶನ ಕಾರ್ಯಕ್ರಮಗಳಿಗೆ ಹಾಜರಾಗದ ಅವರು ಬಹಳ ದಿನಗಳಿಂದ ಯಾವುದೇ ಪತ್ರಿಕಾಗೋಷ್ಠಿ ನಡೆಸಿರಲಿಲ್ಲ. +ವಲ್ಲಭ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ನಾನು ಕಾಂಗ್ರೆಸ್‍ಗೆ ಸೇರಿದಾಗ, ಯುವಕರು ಮತ್ತು ಬುದ್ಧಿಜೀವಿಗಳು ಮತ್ತು ಅವರ ಆಲೋಚನೆಗಳನ್ನು ಗೌರವಿಸುವ ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಎಂದು ನಾನು ನಂಬಿದ್ದೆ, ಆದರೆ ಕೆಲವು ಸಮಯ, ಪಕ್ಷವು ಹೊಂದಾಣಿಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ನಾನು ಭಾವಿಸಿದೆ. ಯುವಕರು ಹೊಸ ಆಲೋಚನೆಗಳನ್ನು ಹೊಂದಿದ್ದಾರೆ. +ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ ಮತ್ತು ನವ ಭಾರತದ ಆಕಾಂಕ್ಷೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಈ ಕಾರಣದಿಂದಾಗಿ ಪಕ್ಷವು ಅಧಿಕಾರಕ್ಕೆ ಬರುತ್ತಿಲ್ಲ ಅಥವಾ ಪ್ರಬಲ ಪ್ರತಿಪಕ್ಷದ ಪಾತ್ರವನ್ನು ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಲ್ಲಭ್ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಿಂದ ಪಕ್ಷವು ದೂರ ಉಳಿದಿರುವ ನಿಲುವಿನಿಂದ ಅಸಮಾಧಾನಗೊಂಡಿದ್ದೇನೆ ಎಂದು ಹೇಳಿದರು. \ No newline at end of file diff --git a/eesanje/url_47_131_5.txt b/eesanje/url_47_131_5.txt new file mode 100644 index 0000000000000000000000000000000000000000..114cbcd21dc21721b5228a4913b34da586ac0573 --- /dev/null +++ b/eesanje/url_47_131_5.txt @@ -0,0 +1,5 @@ +ನೌಕಾಪಡೆ ಸೆರೆಹಿಡಿದ 9 ಮಂದಿ ಕಡಲ್ಗಳ್ಳರು ಮುಂಬೈ ಪೊಲೀಸರಿಗೆ ಹಸ್ತಾಂತರ +ನವದೆಹಲಿ,ಏ.4- (ಪಿಟಿಐ) :ಕಳೆದ ವಾರ ಸೋಮಾಲಿಯಾದ ಪೂರ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿತರಾದ ಒಂಬತ್ತು ಕಡಲ್ಗಳ್ಳರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. +ಭಾರತೀಯ ಯುದ್ಧನೌಕೆಗಳಾದ ಐಎನ್‍ಎಸ್ ತ್ರಿಶೂಲ್ ಮತ್ತು ಐಎನ್‍ಎಸ್ ಸುಮೇಧಾ ಮಾರ್ಚ್ 29 ರಂದು ಎತ್ತರದ ಸಮುದ್ರದಲ್ಲಿ ಪ್ರಮುಖ ಕಾರ್ಯಾಚರಣೆಯನ್ನು ನಡೆಸಿತು, ಇದರ ಪರಿಣಾಮವಾಗಿ ಮೀನುಗಾರಿಕೆ ಹಡಗು ಅಲ್ ಕಂಬಾರ್ ಮತ್ತು ಅದರ ಸಿಬ್ಬಂದಿ 23 ಪಾಕಿಸ್ತಾನಿ ಪ್ರಜೆಗಳನ್ನು ರಕ್ಷಿಸಲಾಗಿತ್ತು. +ಕಡಲ್ಗಳ್ಳತನದಲ್ಲಿ ಭಾಗಿಯಾಗಿದ್ದ ಎಲ್ಲಾ ಒಂಬತ್ತು ಕಡಲ್ಗಳ್ಳರನ್ನು ಆ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ಐಎನ್‍ಎಸ್ ತ್ರಿಶೂಲ್ ಏಪ್ರಿಲ್ 3 ರಂದು ಮುಂಬೈಗೆ ಆಗಮಿಸಿತು ಮತ್ತು ಭಾರತೀಯ ಕಾನೂನುಗಳಿಗೆ ಅನುಗುಣವಾಗಿ, ನಿರ್ದಿಷ್ಟವಾಗಿ ಕಡಲ್ಗಳ್ಳತನ ವಿರೋಧಿ ಕಾಯಿದೆ 2022 ರ ಪ್ರಕಾರ ಮುಂದಿನ ಕಾನೂನು ಕ್ರಮಕ್ಕಾಗಿ ಎಲ್ಲಾ ಒಂಬತ್ತು ಕಡಲ್ಗಳ್ಳರನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ಹೇಳಿದ್ದಾರೆ. +ಭಾರತೀಯ ನೌಕಾಪಡೆಯು ಅವರ ರಾಷ್ಟ್ರೀಯತೆಯನ್ನು ಲೆಕ್ಕಿಸದೆ ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಸಾಗುತ್ತಿರುವ ಎಲ್ಲಾ ವ್ಯಾಪಾರಿ ಹಡಗು ಮತ್ತು ಸಮುದ್ರಯಾನಗಾರರನ್ನು ರಕ್ಷಿಸುವ ತನ್ನ ಸಂಕಲ್ಪವನ್ನು ಪುನರುಚ್ಚರಿಸುತ್ತದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_131_6.txt b/eesanje/url_47_131_6.txt new file mode 100644 index 0000000000000000000000000000000000000000..5aa1b24752fcc0fc43216fccfcbcd613f26e9d1c --- /dev/null +++ b/eesanje/url_47_131_6.txt @@ -0,0 +1,8 @@ +ಮೇಘಾಲಯದ ಖಾಸಿ, ಜೈನ್ತಿಯಾ ಬೆಟ್ಟ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ +ಶಿಲ್ಲಾಂಗ್, ಏ. 4 (ಪಿಟಿಐ) :ಇತ್ತೀಚೆಗೆ ಇಬ್ಬರು ವ್ಯಕ್ತಿಗಳ ಹತ್ಯೆಯಿಂದ ಉಂಟಾದ ಅಸ್ಥಿರ ಪರಿಸ್ಥಿತಿ ಯನ್ನು ಗಮನದಲ್ಲಿಟ್ಟುಕೊಂಡು ಮೇಘಾಲಯದ ಖಾಸಿ ಮತ್ತು ಜೈನ್ತಿಯಾ ಬೆಟ್ಟಗಳಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. +ಕಳೆದ ವಾರ, ಈಸ್ಟ್ ಖಾಸಿ ಹಿಲ್ಸ್ ಜಿಲ್ಲೆಯ ಭಾರತ-ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯ ಸಮೀಪವಿರುವ ಇಚಮತಿ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಶವವಾಗಿ ಪತ್ತೆಯಾಗಿದ್ದಾರೆ, ಖಾಸಿ ವಿದ್ಯಾರ್ಥಿಗಳ ಒಕ್ಕೂಟ (ಕೆಎಸ್‍ಯು) ಗಡಿ ಪಟ್ಟಣದಲ್ಲಿ ಸಿಎಎ ವಿರೋಧಿ ಪ್ರತಿಭಟನೆಯನ್ನು ನಡೆಸಿದ ನಂತರ ಈ ಕೊಲೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. +ಇಬ್ಬರು ಕೆಎಸ್‍ಯು ಸದಸ್ಯರನ್ನು ಸೊಹ್ರಾ ಪಟ್ಟಣದ ಅವರ ಮನೆಗಳಿಂದ ಕರೆದೊಯ್ದು ನಂತರ ಕೊಲೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕೆಲವರನ್ನು ಬಂಧಿಸಲಾಯಿತು ಎಂದು ಎಸ್‍ಪಿ ರಿತುರಾಜ್ ರವಿ ತಿಳಿಸಿದ್ದಾರೆ. ಪೊಲೀಸರ ಕ್ರಮವನ್ನು ಪ್ರತಿಭಟಿಸಿ ಕೆಎಸ್‍ಯು ನೇತೃತ್ವದಲ್ಲಿ ಬೃಹತ್ ಜನಸಮೂಹವು ಸ್ಥಳೀಯ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸಿತು, ತನ್ನ ಕಾರ್ಯಕರ್ತರನ್ನು ಉಗ್ರಗಾಮಿಗಳಂತೆ ಬೇಟೆಯಾಡಬೇಡಿ ಎಂದು ಒತ್ತಾಯಿಸಿತು. +ಮತ್ತೊಂದು ಬೆಳವಣಿಗೆಯಲ್ಲಿ ಶಿಲ್ಲಾಂಗ್ ನ ಮಾವ್ಲೈ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದ ನಂತರ ಪೊಲೀಸ್ ವಾಹನವನ್ನು ನಾಶಪಡಿಸಲಾಗಿದೆ ಎಂದು ರವಿ ಹೇಳಿದರು, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. +ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಡಿಎನ್‍ಆರ್ ಮರಕ್ ಅವರು ರಾಜ್ಯದ ರಾಜಧಾನಿ ಶಿಲ್ಲಾಂಗ್ ಸೇರಿದಂತೆ ಪೂರ್ವ ವ್ಯಾಪ್ತಿಯ ಏಳು ಜಿಲ್ಲೆಗಳ ಎಸ್‍ಪಿಗಳಿಗೆ ಎಚ್ಚರಿಕೆ ನೀಡಿದರು. +ಎನ್‍ಜಿಒಗಳು ಹೆಚ್ಚಿನ ಆಂದೋಲನಗಳನ್ನು ಆಶ್ರಯಿಸಬಹುದು ಮತ್ತು ಪೊಲೀಸ್ ಠಾಣೆಗಳು, ಪೊಲೀಸ್ ವಾಹನಗಳು, ಸರ್ಕಾರಿ ಆಸ್ತಿಗಳು, ಕಟ್ಟಡಗಳು ಮತ್ತು ವಾಹನಗಳನ್ನು ಗುರಿಯಾಗಿಸಬಹುದು ಮತ್ತು ಆದಿವಾಸಿಗಳಲ್ಲದವರನ್ನು ಗುರಿಯಾಗಿಸಬಹುದು ಎಂದು ಮಾರಕ್ ಆದೇಶದಲ್ಲಿ ತಿಳಿಸಿದ್ದಾರೆ. +ಪ್ರಭಾವಿ ಕೆಎಸ್‍ಯು ಇಂದು ಖಾಸಿ ಜಾಗೃತಿ ದಿನ ಎಂದು ಆಚರಿಸುತ್ತಿದೆ, ಆದರೆ ಪೂರ್ವ ಜೈನ್ತಿಯಾ ಹಿಲ್ಸ್ ಜಿಲ್ಲೆಯ ಖ್ಲೀಹ್ರಿಯತ್‍ನಲ್ಲಿ ಅದಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಅವರು ಹೇಳಿದರು. ಸೆಕ್ಷನ್ 144 ಸಿಆರ್‍ಪಿಸಿ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡುವಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. \ No newline at end of file diff --git a/eesanje/url_47_131_7.txt b/eesanje/url_47_131_7.txt new file mode 100644 index 0000000000000000000000000000000000000000..35fa01431db3622124dc5ab5ce51100ce163e93a --- /dev/null +++ b/eesanje/url_47_131_7.txt @@ -0,0 +1,6 @@ +ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಾಗ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ 30 ಪ್ರಯಾಣಿಕರು ಪರಾರಿ +ಲಕ್ನೋ, ಅ.4 (ಪಿಟಿಐ) –ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಇಲ್ಲಿನ ಲಕ್ನೋ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ ಮೂವತ್ತು ಮಂದಿ ಭದ್ರತಾ ಪಡೆ ಸಿಬ್ಬಂಧಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾರೆ. +ಅವರಲ್ಲಿ ಒಬ್ಬರು ಅನಾರೋಗ್ಯಕ್ಕೆ ಒಳಗಾಗುವಂತೆ ನಟಿಸಿ ಗೊಂದಲ ಸೃಷ್ಟಿಸಿದ್ದು ಇದಕ್ಕೆ ಕಾರಣವಾಗಿದೆ. ಆರೋಪಿಗಳ ಪತ್ತೆಗೆ ಕಸ್ಟಮ್ಸ್ ಮತ್ತು ಪೊಲೀಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಕಂದಾಯ ಗುಪ್ತಚರ ನಿರ್ದೇಶನಾಲಯ ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಕಳೆದ ಸೋಮವಾರ ಶಾರ್ಜಾದಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರಲ್ಲಿ 36 ಮಂದಿ ತಪಾಸಣೆಗೆ ಒಳಪಡಿಸಿದಾಗ, ಕೆಲವರಿಂದ 3 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಗರೇಟ್ ಮತ್ತು 23.90 ಲಕ್ಷ ರೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಶಶಾಂಕ್ ಸಿಂಗ್ ಹೇಳಿದ್ದಾರೆ. +ಇವರ ತಂಡ ಚಿನ್ನ ಕಳ್ಳಸಾಗಣೆ ಮಾಡುತ್ತಿರುವುದುತಿಳಿದು 30 ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಲ್ಲಿ ಒಬ್ಬರು ಅಸ್ವಸ್ಥರಂತೆ ನಟಿಸಿ ಗೊಂದಲ ಸೃಷ್ಟಿಸಿದ್ದರು. ಇದರ ಲಾಭ ಪಡೆದು ಎಲ್ಲರೂ ಪರಾರಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದರು. +ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬಂಧಿಸಲಾಗಿರುವ 6 ಮಂದಿಯ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. \ No newline at end of file diff --git a/eesanje/url_47_131_8.txt b/eesanje/url_47_131_8.txt new file mode 100644 index 0000000000000000000000000000000000000000..c3110bd3f94d23db47d1fd7cbbcd688859ccb011 --- /dev/null +++ b/eesanje/url_47_131_8.txt @@ -0,0 +1,5 @@ + ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ +ನವದೆಹಲಿ, ಏ.3-ವಿದ್ಯುನ್ಮಾನ ಮತ ಯಂತ್ರಗಳಲ್ಲಿ (ಇವಿಎಂ) ಚಲಾಯಿಸಿದ ಮತಗಳನ್ನು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರೈಯಲ್ (ವಿವಿಪಿಎಟಿ) ಮೂಲಕ ಖಾತ್ರಿ ಪಡಿಸಿಕೊಳ್ಳಬೇಕೆಂದು ಸರ್ಕಾರೇತರ (ಸ್ವಯಂಸೇವಾ) ಸಂಸ್ಥೆ ಯೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಯನ್ನು ಮುಂದಿನ ವಾರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ಹೇಳಿದೆ. +ಎನ್‍ಜಿಓ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್ ಅವರು ಚಿಷಯದ ವಿಚಾರಣೆಯನ್ನು ಕ್ಷಿಪ್ರವಾಗಿ ಕೈಗೆತ್ತಿಕೊಳ್ಳಬೇಕೆಂದು ಮನವಿ ಮಾಡಿದ ಬಳಿಕ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಪೀಠವು ಮುಂದಿನ ಮಂಗಳವಾರ ಅಥವಾ ಬುಧವಾರ ಈ ಮನವಿಯ ವಿಚಾರಣೆಯನ್ನು ಕೈಗೆತ್ತುಕೊಳ್ಳುವುದಾಗಿ ತಿಳಿಸಿತು. +ಚುನಾವಣೆಗಳು ಸಮೀಪಿಸುತ್ತಿರುವುದರಿಂದ ಈ ಪ್ರಕರಣದ ವಿಚಾರಣೆ ನಡೆಸದಿದ್ದರೆ ಮನವಿ ನಿರರ್ಥಕವಾಗುವುದು ಎಂದು ಈ ಪ್ರರಕಣದಲ್ಲಿ ಹಾಜರಾದ ಹಿರಿಯ ನ್ಯಾಯವಾದಿ ಗೋಪಾಲ್ ಶಂಕರನಾರಾಯಣ್‍ಅವರು ವಾದಿಸಿದರು. +ನ್ಯಾಯಾಲಯಕ್ಕೆ ಸನ್ನಿವೇಶದ ಅರಿವಿದೆ ಮತ್ತು ಮುಂದಿನ ವಾರ ಪ್ರಕರಣದ ವಿಚಾರಣೆ ನಡೆಸಲಿದೆ ಎಂದು ನ್ಯಾಯಮೂರ್ತಿಗಳಾದ ಎಂಎಂ ಸುಂದರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠದ ನೇತೃತ್ವ ವಹಿಸಿದ್ದ ನ್ಯಾಯಮೂರ್ತಿ ಖನ್ನಾ ತಿಳಿಸಿದರು. \ No newline at end of file diff --git a/eesanje/url_47_131_9.txt b/eesanje/url_47_131_9.txt new file mode 100644 index 0000000000000000000000000000000000000000..9f71e67582b7a36089c0227230c20ae5e1a4a1f2 --- /dev/null +++ b/eesanje/url_47_131_9.txt @@ -0,0 +1,6 @@ +4 ವರ್ಷದ ಮಗನನ್ನು ಕೊಂದಿದ್ದ ಸುಚನಾ ಸೇಠ್ ವಿರುದ್ಧ ಚಾರ್ಜ್‍ಶೀಟ್ +ಪಣಜಿ,ಏ.3-ಗೋವಾದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಆರೋಪದ ಮೇಲೆ ಎಐ ಸ್ಟಾರ್ಟ್ ಅಪ್‍ನ ಸಿಇಒ ಸುಚನಾ ಸೇಠ್ ವಿರುದ್ಧ ಇಲ್ಲಿನ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಳೆದ ಜ.7 ರಂದು ತನ್ನ ಮಗನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ತೆರಳುತ್ತಿದ್ದ ಸೇಠ್ (39) ಅವರನ್ನು ಕರ್ನಾಟಕದ ಚಿತ್ರದುರ್ಗದಲ್ಲಿ ಬಂಧಿಸಲಾಗಿತ್ತು.ಜನವರಿ 6 ರಂದು ರಾತ್ರಿ ಗೋವಾ ರಾಜ್ಯದ ಕ್ಯಾಂಡೋಲಿಮ್ ಪ್ರದೇಶದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಮಗುವನ್ನು ಕೊಂದ ನಂತರ ಆಕೆ ಗೋವಾ ತೊರೆದಿದ್ದಳು. ಈ ವಾರದ ಆರಂಭದಲ್ಲಿ ಕ್ಯಾಲಂಗುಟ್ ಪೊಲೀಸರು ಸೇಠ್ ವಿರುದ್ಧ 642 ಪುಟಗಳ ಆರೋಪಪಟ್ಟಿಯನ್ನು ಗೋವಾ ಮಕ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಕತ್ತು ಹಿಸುಕಿದ್ದರಿಂದ ಉಂಟಾದ ಆಘಾತ ಮತ್ತು ಉಸಿರಾಟದ ಉಸಿರುಕಟ್ಟುವಿಕೆಯಿಂದ ಮಗು ಸಾವನ್ನಪ್ಪಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸೇಠ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಕಚೇರಿಯ ಸಾಕ್ಷ್ಯಾಧಾರಗಳು ಕಣ್ಮರೆಯಾಗುವುದು) ಮತ್ತು ಗೋವಾ ಮಕ್ಕಳ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. +ಗೋವಾ ಪೊಲೀಸರು ಪ್ರಕರಣದಲ್ಲಿ 59 ಸಾಕ್ಷಿಗಳನ್ನು ಹೆಸರಿಸಿದ್ದಾರೆ ಮತ್ತು ಆರೋಪಿಯ ಪತಿಯ ಹೇಳಿಕೆಯನ್ನು ಸಹ ದಾಖಲಿಸಿಕೊಂಡಿದ್ದಾರೆ, ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಆದೇಶದ ಹೊರತಾಗಿಯೂ ಸೇಠ್ ಅವರು ತಮ್ಮ ಮಗನನ್ನು ಭೇಟಿಯಾಗಲು ಅವಕಾಶ ನೀಡಲಿಲ್ಲ ಎಂದು ಪತಿ ಆರೋಪಿಸಿದ್ದಾರೆ. +ಗೋವಾ ಮಕ್ಕಳ ನ್ಯಾಯಾಲಯವು ಜೂನ್ 14, 2024 ರಂದು ಪ್ರಕರಣದ ವಿಚಾರಣೆ ನಡೆಸಲಿದ್ದು, ಪ್ರಸ್ತುತ ಕರಾವಳಿ ರಾಜ್ಯದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯ ವಿರುದ್ಧ ಆರೋಪಗಳನ್ನು ರಚಿಸಲಾಗುವುದು. ಆರೋಪಿ ಐಲೈನರ್ ಬಳಸಿ ಟಿಶ್ಯೂ ಪೇಪರ್‍ನಲ್ಲಿ ಬರೆದಿರುವ ಗೀಚಿದ ಟಿಪ್ಪಣಿಯನ್ನೂ ಪೊಲೀಸರು ಆರೋಪಪಟ್ಟಿಯೊಂದಿಗೆ ಲಗತ್ತಿಸಿದ್ದಾರೆ. ಸೇಠ್ ಅವರ ಕೈಬರಹ ಎಂದು ಗುರುತಿಸಿದ ಕೈಬರಹ ತಜ್ಞರಿಂದ ದೃಢೀಕರಣವನ್ನು ಅವರು ಲಗತ್ತಿಸಿದ್ದಾರೆ \ No newline at end of file diff --git a/eesanje/url_47_132_1.txt b/eesanje/url_47_132_1.txt new file mode 100644 index 0000000000000000000000000000000000000000..eb3cae0e60791d4db9a52fefd7584840bbfc6653 --- /dev/null +++ b/eesanje/url_47_132_1.txt @@ -0,0 +1,6 @@ +ಜೈಲಿನಲ್ಲಿ ತೂಕ ಕಳೆದುಕೊಂಡಿದ್ದಾರಂತೆ ದೆಹಲಿ ಸಿಎಂ ಕೇಜ್ರಿವಾಲ್ +ನವದೆಹಲಿ, ಏ.3 (ಪಿಟಿಐ)-ಬಂಧನಕ್ಕೊಳಗಾದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವೇಗವಾಗಿ ತೂಕವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿರುವ ಎಎಪಿ ಹಿರಿಯ ನಾಯಕಿ ಅತಿಶಿ ಅವರು ಕೇಜ್ರಿಯನ್ನು ಜೈಲಿನಲ್ಲಿ ಇರಿಸುವ ಮೂಲಕ ಬಿಜೆಪಿ ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದ್ದಾರೆ. +ಆದಾಗ್ಯೂ, ಏಪ್ರಿಲ್ 15 ರವರೆಗೆ ಕೇಜ್ರಿವಾಲ್ ಜೈಲಿನಲ್ಲಿರುವ ತಿಹಾರ್ ಜೈಲಿನ ಆಡಳಿತವು ಹಕ್ಕುಗಳನ್ನು ನಿರಾಕರಿಸಿದೆ. ತಿಹಾರ್ ಜೈಲಿನ ಹಿರಿಯ ಅಧಿಕಾರಿಯೊಬ್ಬರು ಕೇಜ್ರಿವಾಲ್ ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. +ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಜೀ ಅವರು ತೀವ್ರ ಮಧುಮೇಹಿ. +ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ದಿನದ 24 ಗಂಟೆಗಳ ಕಾಲ ದೇಶ ಸೇವೆಯಲ್ಲಿ ನಿರತರಾಗಿದ್ದರು. ಅವರ ಬಂಧನದಿಂದ ಕೇಜ್ರಿವಾಲ್ ಅವರ ತೂಕ 4.5 ಕೆಜಿಯಷ್ಟು ಕಡಿಮೆಯಾಗಿದೆ. ಇದು ತುಂಬಾ ಕಳವಳಕಾರಿಯಾಗಿದೆ. ಬಿಜೆಪಿ ಅವರ ಆರೋಗ್ಯವನ್ನು ಹಾಳು ಮಾಡುತ್ತಿದೆ ಅವರು ಹಿಂದಿಯಲ್ಲಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಅರವಿಂದ್ ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ, ಇಡೀ ದೇಶವಲ್ಲ, ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು. ದೆಹಲಿ ಮುಖ್ಯಮಂತ್ರಿಗೆ ತಿಹಾರ್ ಜೈಲಿನಲ್ಲಿ ಮನೆಯಲ್ಲಿ ಅಡುಗೆ ಮಾಡಲು ಅವಕಾಶ ನೀಡಲಾಗಿದೆ. ಮಂಗಳವಾರ ಬೆಳಗ್ಗೆ ಕೇಜ್ರಿವಾಲ್ ಅವರ ಸಕ್ಕರೆ ಪ್ರಮಾಣ ಕಡಿಮೆಯಾಗಿತ್ತು. ಅವರ ಶುಗರ್ ಲೆವೆಲ್ ಏರುಪೇರಾಗುತ್ತಿದ್ದರಿಂದ ತಿಹಾರ್ ಜೈಲು ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_132_10.txt b/eesanje/url_47_132_10.txt new file mode 100644 index 0000000000000000000000000000000000000000..fa7aa3afbabd13fb9b180759f6eb16d4ded50769 --- /dev/null +++ b/eesanje/url_47_132_10.txt @@ -0,0 +1,6 @@ +ವಿವಿಪ್ಯಾಟ್ ಕುರಿತು ಕೇಂದ್ರಕ್ಕೆ ಸುಪ್ರೀಂ ನೋಟಿಸ್ ನೀಡಿರುವುದು ಸ್ವಾಗತಾರ್ಹ ; ಕಾಂಗ್ರೆಸ್ +ನವದೆಹಲಿ, ಏ. 2 (ಪಿಟಿಐ)ವಿವಿಪ್ಯಾಟ್ ಸ್ಲಿಪ್‍ಗಳ ಸಂಪೂರ್ಣ ಎಣಿಕೆ ಕೋರಿ ಸಲ್ಲಿಸಿದ ಮನವಿಯ ಕುರಿತು ಚುನಾವಣಾ ಆಯೋಗ ಮತ್ತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್‍ನ ನೋಟಿಸ್ ನೀಡಿರುವುದು ಪ್ರಮುಖ ಮೊದಲ ಹೆಜ್ಜೆ ಎಂದು ಕಾಂಗ್ರೆಸ್ ಶ್ಲಾಘಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್ ನ ಪೋಸ್ಟ್ ನಲ್ಲಿ ವಿವಿಪ್ಯಾಟ್‍ಗಳ ವಿಷಯವಾಗಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಚುನಾವಣಾ ಆಯೋಗವು ಇಂಡಿಯಾ ಒಕ್ಕೂಟದ ನಿಯೋಗವನ್ನು ಭೇಟಿ ಮಾಡಲು ನಿರಾಕರಿಸಿರುವುದು ನಿರಂತರ ಪುನರಾವರ್ತನೆಯಾಗಿದೆ. ಇವಿಎಂಗಳಲ್ಲಿ ಸಾರ್ವಜನಿಕ ವಿಶ್ವಾಸವನ್ನು ಹೆಚ್ಚಿಸಲು ಮತ್ತು ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು 100 ಪ್ರತಿಶತ ವಿವಿಪ್ಯಾಟ್‍ಗಳ ಎಣಿಕೆ ಮಾಡಬೇಕಿದೆ ಎಂದಿದ್ದಾರೆ. +ವಿವಿಪ್ಯಾಟ್ ಪೇಪರ್ ಸ್ಲಿಪ್‍ಗಳ ಮೂಲಕ ಯಾದೃಚ್ಛಿಕವಾಗಿ ಆಯ್ಕೆ ಮಾಡಿದ ಐದು ಇವಿಎಂಗಳನ್ನು ಪರಿಶೀಲಿಸುವ ಪ್ರಸ್ತುತ ಪದ್ಧತಿಗೆ ವಿರುದ್ಧವಾಗಿ ಚುನಾವಣೆಯಲ್ಲಿ ವಿವಿಪ್ಯಾಟ್ ಸ್ಲಿಪ್‍ಗಳ ಸಂಪೂರ್ಣ ಎಣಿಕೆಗೆ ಕೋರಿ ಸಲ್ಲಿಸಿದ ಮನವಿಯ ಕುರಿತು ನ್ಯಾಯಾಲಯವು ಆಯೋಗ ಮತ್ತು ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ. +ನೋಟಿಸ್ ಪ್ರಮುಖ ಮೊದಲ ಹೆಜ್ಜೆಯಾಗಿದೆ, ಆದರೆ ಅದು ಅರ್ಥಪೂರ್ಣವಾಗಬೇಕಾದರೆ, ಚುನಾವಣೆ ಪ್ರಾರಂಭವಾಗುವ ಮೊದಲು ವಿಷಯವನ್ನು ನಿರ್ಧರಿಸಬೇಕು ಎಂದು ರಮೇಶ್ ಹೇಳಿದರು.ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ವತಂತ್ರ ಮತ ಪರಿಶೀಲನಾ ವ್ಯವಸ್ಥೆಯಾಗಿದ್ದು, ಇದು ಮತದಾರರು ತನ್ನ ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಎಂದು ನೋಡಲು ಅನುಮತಿಸುತ್ತದೆ. +ವಿವಿಪಿಎಟಿಯು ಪೇಪರ್ ಸ್ಲಿಪ್ ಅನ್ನು ಉತ್ಪಾದಿಸುತ್ತದೆ, ಅದನ್ನು ಮತದಾರರು ವೀಕ್ಷಿಸಬಹುದು ಮತ್ತು ಪೇಪರ್ ಸ್ಲಿಪ್ ಅನ್ನು ಮುಚ್ಚಿದ ಕವರ್‍ನಲ್ಲಿ ಇರಿಸಲಾಗುತ್ತದೆ ಮತ್ತು ವಿವಾದದ ಸಂದರ್ಭದಲ್ಲಿ ತೆರೆಯಬಹುದು.ಏಪ್ರಿಲ್ 8, 2019 ರಂದು ಸುಪ್ರೀಂ ಕೋರ್ಟ, ಸಂಸತ್ತಿನ ಕ್ಷೇತ್ರದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ವಿವಿಪ್ಯಾಟ್ ಭೌತಿಕ ಪರಿಶೀಲನೆಗೆ ಒಳಗಾಗುವ ಇವಿಎಂಗಳ ಸಂಖ್ಯೆಯನ್ನು ಒಂದರಿಂದ ಐದಕ್ಕೆ ಹೆಚ್ಚಿಸುವಂತೆ ಚುನಾವಣಾ ಸಮಿತಿಗೆ ಆದೇಶಿಸಿತ್ತು. +ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ವಿವಿಪ್ಯಾಟ್ ಪೇಪರ್ ಸ್ಲಿಪ್‍ಗಳ ಮೂಲಕ ಕೇವಲ ಐದು ಯಾದೃಚ್ಛಿಕವಾಗಿ ಆಯ್ಕೆ ಮಾಡಿದ ಇವಿಎಂಗಳ ಪರಿಶೀಲನೆಗೆ ವಿರುದ್ಧವಾಗಿ ಚುನಾವಣೆಯಲ್ಲಿ ವಿವಿಪ್ಯಾಟ್ ಸ್ಲಿಪ್‍ಗಳ ಸಂಪೂರ್ಣ ಎಣಿಕೆಗೆ ಕೋರಿ ಕಾರ್ಯಕರ್ತ ಅರುಣ್ ಕುಮಾರ್ ಅಗರವಾಲ್ ಅವರನ್ನು ಪ್ರತಿನಿಧಿಸುವ ವಕೀಲರ ಸಲ್ಲಿಕೆಗಳನ್ನು ಗಮನಿಸಿತು. \ No newline at end of file diff --git a/eesanje/url_47_132_11.txt b/eesanje/url_47_132_11.txt new file mode 100644 index 0000000000000000000000000000000000000000..5868dffb4c79fd2ac3a94762d3391b6203ff4f51 --- /dev/null +++ b/eesanje/url_47_132_11.txt @@ -0,0 +1,9 @@ +ಚೀನಾಗೆ ಪೈಪೋಟಿ ನೀಡಬೇಕಾದರೆ ಉತ್ಪಾದನೆಗೆ ಆಧ್ಯತೆ ನೀಡಬೇಕು : ಜೈಶಂಕರ್ +ಸೂರತ್, ಏ. 2 (ಪಿಟಿಐ) :ಆರ್ಥಿಕ ರಂಗದಲ್ಲಿ ಚೀನಾಕ್ಕೆ ಪೈಪೋಟಿ ನೀಡಬೇಕಾದರೆ 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮೊದಲು ಸರ್ಕಾರಗಳು ನಿರ್ಲಕ್ಷಿಸಿದ ಪ್ರಮುಖ ಕ್ಷೇತ್ರವಾದ ಉತ್ಪಾದನೆಯತ್ತ ಭಾರತ ಗಮನಹರಿಸಬೇಕು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. +ಚೀನಾದೊಂದಿಗಿನ ಗಡಿಯಲ್ಲಿನ ಉದ್ವಿಗ್ನತೆಯು ನವದೆಹಲಿ ಮತ್ತು ಬೀಜಿಂಗ್ ಸಂಬಂಧಗಳಲ್ಲಿ ಅಸಹಜತೆ ಯನ್ನು ಉಂಟುಮಾಡಿದೆ ಎಂದು ಹೇಳಿರುವ ಅವರು, ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ಎರಡು ಏಷ್ಯಾದ ಶಕ್ತಿಗಳ ನಡುವಿನ ಸಂಬಂಧವು ಸುಧಾರಿಸುವುದಿಲ್ಲ ಎಂದು ಭಾರತದ ಚಿಂತನೆಯು ಸಂಪೂರ್ಣವಾಗಿ ಸ್ಪಷ್ಟವಾಗಿದೆ ಎಂದು ಹೇಳಿದರು. +ನಾವು ಚೀನಾದೊಂದಿಗೆ ಸ್ಪರ್ಧಿಸಬೇಕಾದರೆ, ಅದರ ಪರಿಹಾರವೆಂದರೆ ನಾವು ಇಲ್ಲಿ ಉತ್ಪಾದನೆಯತ್ತ ಗಮನ ಹರಿಸಬೇಕು. ಮೋದಿಜಿ ಅಧಿಕಾರಕ್ಕೆ ಬಂದ ನಂತರ ಉತ್ಪಾದನೆಯತ್ತ ನಮ್ಮ ದೃಷ್ಟಿಕೋನ ಬದಲಾಗಿದೆ. ಅದಕ್ಕೂ ಮೊದಲು ಜನರು ಉತ್ಪಾದನೆಗೆ ಹೆಚ್ಚು ಒತ್ತು ನೀಡಲಿಲ್ಲ ಎಂದು ಸೂರತ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉದ್ಯಮದ ಪ್ರಮುಖರೊಂದಿಗೆ ನಡೆಸಿದ ಸಂವಾದದಲ್ಲಿ ಜೈಶಂಕರ್ ಹೇಳಿದರು. +ಆರ್ಥಿಕ ರಂಗದಲ್ಲಿ ಚೀನಾವನ್ನು ಎದುರಿಸಲು ಬೇರೆ ಯಾವುದೇ ಮಾರ್ಗವಿಲ್ಲ ಎಂದಿರುವ ಅವರು, 5 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಸಾಗುತ್ತಿರುವಾಗ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯೊಂದಿಗೆ ಭಾರತದ ಸಂಬಂಧವನ್ನು ಹೇಗೆ ನೋಡಿದೆ ಎಂದು ಪ್ರೇಕ್ಷಕರ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸುವಾಗ ಒತ್ತಾಯಿಸಿದರು. . +ನಾವು ಏರುತ್ತಿರುವ ಭಾರತವನ್ನು ಕುರಿತು ಮಾತನಾಡಿದರೆ, ಅದು ತಂತ್ರಜ್ಞಾನದ ಮೂಲಕ ಏರುತ್ತದೆ. ದುರ್ಬಲ ಉತ್ಪಾದನೆಯ ಮೇಲೆ ನೀವು ಬಲವಾದ ತಂತ್ರಜ್ಞಾನವನ್ನು ನಿರ್ಮಿಸಲು ಸಾಧ್ಯವಿಲ್ಲ. ಯಾವುದೇ ವೆಚ್ಚದಲ್ಲಿ, ನಾವು ಉತ್ಪಾದನೆಗೆ ವಿಶೇಷ ಒತ್ತು ನೀಡಬೇಕು, ಏಕೆಂದರೆ ಅದು ಏಕೈಕ ಆರ್ಥಿಕ ಪ್ರತಿಕ್ರಿಯೆಯಾಗಿದೆ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು. +ಚೀನಾದ ಮಾಜಿ ರಾಯಭಾರಿ ಜೈಶಂಕರ್ ಅವರು ಗಡಿಯಲ್ಲಿನ ಉದ್ವಿಗ್ನತೆಯು ಚೀನಾ-ಭಾರತದ ಸಂಬಂಧಗಳ ಮೇಲೆ ಪರಿಣಾಮ ಬೀರಿದೆ ಎಂದು ಒತ್ತಿ ಹೇಳಿದರು.ನಿಮಗೆ ತಿಳಿದಿರುವಂತೆ, ಗಡಿಯಲ್ಲಿ (ಚೀನಾದೊಂದಿಗೆ) ಉದ್ವಿಗ್ನತೆ ಇದೆ ಮತ್ತು ಇದು ನಮ್ಮ ಸಂಬಂಧಗಳಲ್ಲಿ ಅಸಹಜತೆಯನ್ನು ಉಂಟುಮಾಡಿದೆ. +ಅದಕ್ಕಾಗಿ ಗಡಿಯಲ್ಲಿ ಶಾಂತಿ ಮತ್ತು ಸ್ಥಿರತೆ ಇಲ್ಲದಿದ್ದರೆ, ಸಂಬಂಧಗಳು ಒಂದೇ ಆಗಿರುತ್ತವೆ ಎಂಬುದು ನಮ್ಮ ಚಿಂತನೆಯು ತುಂಬಾ ಸ್ಪಷ್ಟವಾಗಿದೆ ಎಂದರು. ಪಾಕಿಸ್ತಾನದೊಂದಿಗಿನ ಸಂಬಂಧವು ಹದಗೆಟ್ಟಿರುವ ಬಗ್ಗೆ ಮತ್ತು ಗಡಿಯಾಚೆಯಿಂದ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ನವದೆಹಲಿಯ ಹೋರಾಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು, ಭಾರತವು ಭಯೋತ್ಪಾದನೆಯಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳಬಾರದು ಎಂದು ಪ್ರತಿಪಾದಿಸಿದರು. +ನಾವು ಸಹಿಸಿಕೊಳ್ಳುವುದು, ಸಮರ್ಥಿಸುವುದು (ಭಯೋತ್ಪಾದನೆ) ಎಲ್ಲವೂ ತಪ್ಪಾಗಿದೆ. ಭಯೋತ್ಪಾದನೆಗೆ ಏಕೈಕ ಪ್ರತಿಕ್ರಿಯೆ ಭಯೋತ್ಪಾದನೆ ನಿಗ್ರಹವಾಗಿದೆ. ಮತ್ತು ಅದನ್ನು ತಡೆಯಲು ಅವರು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. \ No newline at end of file diff --git a/eesanje/url_47_132_12.txt b/eesanje/url_47_132_12.txt new file mode 100644 index 0000000000000000000000000000000000000000..aefd3a95f9539d007a2c8b7fa2852fa58141c7cb --- /dev/null +++ b/eesanje/url_47_132_12.txt @@ -0,0 +1,9 @@ +ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ; ಹಣಕಾಸು ಸಚಿವಾಲಯ +ನವದೆಹಲಿ,ಏ.1-ಪ್ರಸಕ್ತ ಹಣಕಾಸು ವರ್ಷಕ್ಕೆ ವ್ಯಕ್ತಿಗಳಿಗೆ ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತು ವೈಯಕ್ತಿಕ ತೆರಿಗೆದಾರರು ತಮ್ಮ ಐಟಿಆರ್ ಅನ್ನು ಸಲ್ಲಿಸುವ ಸಮಯದಲ್ಲಿ ಆಡಳಿತದಿಂದ ಹೊರಗುಳಿಯಬಹುದು ಎಂದು ಹಣಕಾಸು ಸಚಿವಾಲಯ ಹೇಳಿದೆ. +ಏಪ್ರಿಲ್ 1 ರಿಂದ ಜಾರಿಗೆ ಬರುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಕ್ಲೈಮ್ ಮಾಡುವ ಸಾಮಾಜಿಕ ಮಾಧ್ಯಮ ಪೊಸ್ಟ್ಗಳಿಗೆ ಸ್ಪಷ್ಟನೆ ನೀಡಿರುವ ಸಚಿವಾಲಯ ಏ.1ರಿಂದ ಯಾವುದೇ ಹೊಸ ಬದಲಾವಣೆ ಇಲ್ಲ ಎಂದು ಹೇಳಿದೆ. +ತೆರಿಗೆ ದರಗಳು ಗಮನಾರ್ಹವಾಗಿ ಕಡಿಮೆ ಇರುವ ವ್ಯಕ್ತಿಗಳಿಗೆ ಏಪ್ರಿಲ್ 1, 2023 ರಿಂದ ಪ್ರಾರಂಭವಾಗುವ ಆರ್ಥಿಕ ವರ್ಷದಿಂದ ಮಾರ್ಪಡಿಸಿದ ಹೊಸ ಆದಾಯ ತೆರಿಗೆ ಆಡಳಿತವನ್ನು ಹೊರತರಲಾಗಿದೆ.ಆದಾಗ್ಯೂ, ವಿವಿಧ ವಿನಾಯಿತಿಗಳು ಮತ್ತು ಕಡಿತಗಳ (ವೇತನದಿಂದ ರೂ. 50,000 ಪ್ರಮಾಣಿತ ಕಡಿತ ಮತ್ತು ಕುಟುಂಬ ಪಿಂಚಣಿಯಿಂದ ರೂ. 15,000 ಹೊರತುಪಡಿಸಿ) ಪ್ರಯೋಜನವು ಹಳೆಯ ಆಡಳಿತದಲ್ಲಿ ಲಭ್ಯವಿಲ್ಲ. +ಹೊಸ ತೆರಿಗೆ ಪದ್ಧತಿಯು ಡೀಫಾಲ್ಟ್ ತೆರಿಗೆ ಪದ್ಧತಿಯಾಗಿದೆ. ಆದಾಗ್ಯೂ, ತೆರಿಗೆ ಪಾವತಿದಾರರು ತಮಗೆ ಲಾಭದಾಯಕವೆಂದು ಭಾವಿಸುವ ತೆರಿಗೆ ಪದ್ಧತಿಯನ್ನು (ಹಳೆಯ ಅಥವಾ ಹೊಸದು) ಆಯ್ಕೆ ಮಾಡಬಹುದು… ಹೊಸ ತೆರಿಗೆ ಪದ್ಧತಿಯಿಂದ ಹೊರಗುಳಿಯುವ ಆಯ್ಕೆಯು ರಿಟರ್ನ್ ಸಲ್ಲಿಸುವವರೆಗೆ ಲಭ್ಯವಿದೆ. ಎವೈ 2024-25 ಎಂದು ಸಚಿವಾಲಯ ಹೇಳಿದೆ. +3 ಲಕ್ಷದವರೆಗಿನ ಆದಾಯವನ್ನು ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ. 3-6 ಲಕ್ಷದ ನಡುವಿನ ಆದಾಯಕ್ಕೆ ಶೇ 5ರಷ್ಟು ತೆರಿಗೆ, 6-9 ಲಕ್ಷದವರೆಗಿನ ಆದಾಯಕ್ಕೆ ಶೇ 10ರಷ್ಟು ತೆರಿಗೆ ವಿಧಿಸಲಾಗುತ್ತದೆ. +9-12 ಲಕ್ಷ ಮತ್ತು 12-15 ಲಕ್ಷದ ನಡುವಿನ ಆದಾಯವು ಕ್ರಮವಾಗಿ ಶೇ.15 ಮತ್ತು ಶೇ.20 ತೆರಿಗೆಗೆ ಒಳಪಟ್ಟಿರುತ್ತದೆ. 15 ಲಕ್ಷಕ್ಕಿಂತ ಹೆಚ್ಚಿನ ಆದಾಯದ ಮೇಲೆ 30 ಪ್ರತಿಶತ ತೆರಿಗೆ ಅನ್ವಯವಾಗುತ್ತದೆ. +ಹೊಸ ತೆರಿಗೆ ಪದ್ಧತಿಯನ್ನು 2023-24 ರಿಂದ ಡೀಫಾಲ್ಟ್ ಆಡಳಿತ ಎಂದು ಹೊಂದಿಸಲಾಗಿದೆ ಮತ್ತು ಇದಕ್ಕೆ ಅನುಗುಣವಾದ ಮೌಲ್ಯಮಾಪನ ವರ್ಷವು 2024-25 ಆಗಿದೆ. ಒಬ್ಬ ವ್ಯಕ್ತಿಯಿಂದ ಆದಾಯ ತೆರಿಗೆ ರಿಟನ್ಸರ್ (ಐಟಿ) ಸಲ್ಲಿಸುವ ಸಮಯದಲ್ಲಿ ತೆರಿಗೆದಾರರಿಂದ ಇದನ್ನು ಬದಲಾಯಿಸಬಹುದು. ಯಾವುದೇ ವ್ಯಾಪಾರ ಆದಾಯವಿಲ್ಲದ ಅರ್ಹ ವ್ಯಕ್ತಿಗಳು ಪ್ರತಿ ಹಣಕಾಸು ವರ್ಷಕ್ಕೆ ಆಡಳಿತವನ್ನು ಆಯ್ಕೆ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. +ಆದ್ದರಿಂದ, ಅವರು ಒಂದು ಹಣಕಾಸು ವರ್ಷದಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಮತ್ತು ಇನ್ನೊಂದು ವರ್ಷದಲ್ಲಿ ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಬಹುದು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.ಹಳೆಯ ತೆರಿಗೆ ಪದ್ಧತಿಯು ಇನ್ನೂ ಜಾರಿಯಲ್ಲಿದೆ ಮತ್ತು ಹಲವಾರು ಕಡಿತಗಳು ಮತ್ತು ವಿನಾಯಿತಿಗಳನ್ನು ನೀಡುತ್ತದೆ, ತೆರಿಗೆಗಳಿಂದ ರೂ. 2.5 ಲಕ್ಷದವರೆಗಿನ ಆದಾಯವನ್ನು ವಿನಾಯಿತಿ ನೀಡುತ್ತದೆ. \ No newline at end of file diff --git a/eesanje/url_47_132_2.txt b/eesanje/url_47_132_2.txt new file mode 100644 index 0000000000000000000000000000000000000000..606704acd63d625989a8a69d512c94dd8150b367 --- /dev/null +++ b/eesanje/url_47_132_2.txt @@ -0,0 +1,6 @@ +ಕಚ್ಚತೀವು ವಿಚಾರದಲ್ಲಿ ಬಿಜೆಪಿಯಿಂದ ತಪ್ಪು ಮಾಹಿತಿ : ಸ್ಟಾಲಿನ್ +ವೆಲ್ಲೂರು,ಏ.3 (ಪಿಟಿಐ) :ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಿನಿಂದ ಬಿಜೆಪಿ ಕಚ್ಚತೀವು ವಿಚಾರದಲ್ಲಿ ವಿನಾ ಕಾರಣ ಅಪಪ್ರಚಾರ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆರೋಪಿಸಿದ್ದಾರೆ. +ಮೀನುಗಾರರ ಬಂಧನದ ಬಗ್ಗೆ ಶ್ರೀಲಂಕಾವನ್ನು ಖಂಡಿಸಲು ಅಥವಾ ಅರುಣಾಚಲ ಪ್ರದೇಶದ ಮೇಲೆ ಚೀನಾದ ಹಕ್ಕುಗಳನ್ನು ವಿರೋಧಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯವಿಲ್ಲ ಹೀಗಿರುವಾಗ ಕಚ್ಚತೀವು ಬಗ್ಗೆ ಹೇಗೆ ಮಾತನಾಡುತ್ತಾರೆ ಎಂದು ಸ್ಟಾಲಿನ್ ಪ್ರಶ್ನಿಸಿದ್ದಾರೆ. +ಚುನಾವಣಾ ರ್ಯಾಲಿಯಲ್ಲಿ ಕಚ್ಚತೀವು ವಿಷಯದ ಬಗ್ಗೆ ನಾಟಕ ಮತ್ತು ಕಥೆಗಳನ್ನು ಪ್ರದರ್ಶಿಸುತ್ತಿರುವ ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು ಮತ್ತು ಆರ್‍ಟಿಐ ಕಾಯ್ದೆಯಡಿಯಲ್ಲಿ ಈ ವಿಷಯದ ಬಗ್ಗೆ ಕೇಂದ್ರದ ಬಹಿರಂಗಪಡಿಸುವಿಕೆಯನ್ನು ತಪ್ಪು ಮಾಹಿತಿ ಎಂದು ಅವರು ಕರೆದರು. +ಬಿಜೆಪಿಗೆ ಸೇರಿದ ವ್ಯಕ್ತಿಗೆ (ತಮಿಳುನಾಡು ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ) ಆರ್‍ಟಿಐ ಕಾಯ್ದೆಯಡಿಯಲ್ಲಿ ರಾಷ್ಟ್ರದ ಭದ್ರತೆಗೆ ಸಂಬಂಧಿಸಿದಂತೆ ಸರ್ಕಾರವು ತಪ್ಪು ಮಾಹಿತಿ ಹೇಗೆ ನೀಡಿದೆ ಎಂದು ಅವರು ಕೇಳಿದರು. +ಬಿಜೆಪಿ ಸರ್ಕಾರವು ಕಚ್ಚತೀವು ವಿಷಯವು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ಕಾರಣ ವಿಷಯವು ಅಧೀನವಾಗಿದೆ ಎಂದು ಹೇಳುವ ಮೂಲಕ ಉತ್ತರವನ್ನು ನೀಡಲು ಈ ಹಿಂದೆ ವಿಫಲವಾಗಿತ್ತು. 2015 ರಲ್ಲಿ ಬಿಜೆಪಿ ಆಡಳಿತವು ಕಚ್ಚತೀವು ಎಂದಿಗೂ ಭಾರತದ ಭಾಗವಾಗಿರಲಿಲ್ಲ ಎಂದು ಹೇಳಿದೆ. ಆ ಮಾಹಿತಿಯನ್ನು ಆಗಿನ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ನೀಡಿದ್ದರು ಎಂದು ಸ್ಟಾಲಿನ್ ಹೇಳಿದ್ದಾರೆ. \ No newline at end of file diff --git a/eesanje/url_47_132_3.txt b/eesanje/url_47_132_3.txt new file mode 100644 index 0000000000000000000000000000000000000000..13cb3547116232dc8e4121f968712b39481d9a27 --- /dev/null +++ b/eesanje/url_47_132_3.txt @@ -0,0 +1,5 @@ +ಗೆಳತಿಯನ್ನು ಕೊಂದು 6 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಯುವಕನ ಬಂಧನ +ಥಾಣೆ, ಅ 3-ತನ್ನ ಗೆಳತಿಯನ್ನು ಕೊಂದು ಸುಮಾರು ಆರು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪನ್ವೇಲ್‍ನ ಮಲ್ಧಕ್ಕಾ ಸ್ಲಂ ಕಾಲೋನಿಯ ಪಾಂಡವ್ ಗೋರಖ್ ಜಾಧವ್ ಪಾಂಡ(21) ಬಂಧಿತ ಆರೋಪಿ. +ನವಿ ಮುಂಬೈ ಟೌನ್‍ಶಿಪ್‍ನ ಮಹಿಳೆಯನ್ನು ಪ್ರೀತಿಸಿ ಆಕೆಯೊಂದೆಗೆ ಆತ ನೆಲೆಸಿದ್ದ. ಕಳೆದ 2023,ಅಕ್ಟೋಬರ್ 10, ರಂದು, ನವಿ ಮುಂಬೈನ ಪನ್ವೆಲ್ ಪ್ರದೇಶದ ಭಿಂಗ್ರಿ ಗ್ರಾಮದ ಬಳಿ ಮಹಿಳೆ ಶವ ಕಂಡುಬಂದಿತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಯ ನಡೆಸಿದಾಗ ಪೊಲೀಸರು ಮಹಿಳೆ ಗುರುತು ಪತ್ತೆಹಚ್ಚಿ ಆಕೆಯೊಂದಿಗೆ ಇದ್ದ ಯುವಕ ನಾಪತ್ತೆಯಾಗಿರುವುದು ಗೊತ್ತಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ಶಿಂಧೆ ತಿಳಿಸಿದ್ದಾರೆ. +ಆಕೆಯ ಕತ್ತು ಹಿಸುಕಿ ಆತನೇ ಕೊಲೆ ಮಾಡಿ ನಂತರ ಪರಾರಿಯಾಗಿದ್ದಾನೆ ಎಂದು ಖಚಿತ ಪಡಿಸಿಕೊಂಡು ಆತನ ಪತ್ತೆಗೆ ಬಲೆ ಬೀಸಲಾಗಿತ್ತು.ಇತ್ತೀಚೆಗೆ ಆರೋಪಿ ಪನ್ವೇಲ್‍ನ ಮಾಲ್‍ವೊಂದಕ್ಕೆ ಬರುತ್ತಾನೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿತ್ತು ಇದರ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. +ಇಬ್ಬರು ಮದ್ಯ ಸೇವಿಸಿ ಸಣ್ಣ ವಿಚಾರಕ್ಕೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_132_4.txt b/eesanje/url_47_132_4.txt new file mode 100644 index 0000000000000000000000000000000000000000..892529df659a02390da9beccc56868d8b752e229 --- /dev/null +++ b/eesanje/url_47_132_4.txt @@ -0,0 +1,5 @@ +ಟೈಲರಿಂಗ್ ಅಂಗಡಿಗೆ ಬೆಂಕಿ: ಉಸಿರುಗಟ್ಟಿ 7 ಮಂದಿ ಸಾವು +ಛತ್ರಪತಿ ಸಂಭಾಜಿನಗರ, ಅ.3-ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಛತ್ರಪತಿ ಸಂಭಾಜಿನಗರದಲ್ಲಿ ಇಂದು ಮುಂಜಾನೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. +ಕಂಟೋನ್ಮೆಂಟ್ ಪ್ರದೇಶದ ಡಾನಾ ಬಜಾರ್‍ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಟೈಲರಿಂಗ್ ಅಂಗಡಿ ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಕಟ್ಟಡದ ನೆಲ ಮಹಡಿಯಲ್ಲಿದ್ದು, ಜನರು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದರು ಎಂದು ತಿಳಿಸಿದ್ದಾರೆ. +ಬೆಳಿಗ್ಗೆ 4 ಗಂಟೆ ಸುಮಾರಿಗೆ ಅಂಗಡಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಘಟನೆಯ ಬಗ್ಗೆ 4.15 ಕ್ಕೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬೆಂಕಿಯಿಂದಾಗಿ ಅಂಗಡಿಯ ಮೇಲೆ ಮೊದಲ ಮಹಡಿಯಲ್ಲಿ ಇದ್ದ ಕೊಟ್ಟಡಿಗಳಲ್ಲಿದ್ದ ಕುಟುಂಬವೊಂದು ದಟ್ಟ ಹೊಗೆಯಿಂದ ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ಸುದ್ದಿಗಾರರಿಗೆ ತಿಳಿಸಿದರು. +ಮೃತರನ್ನು ಅಸೀಮ್ ಶೇಖ್ (3), ಪಾರಿ ಶೇಖ್ (2), ವಾಸಿಂ ಶೇಖ್ (30), ತನ್ವೀರ್ ಶೇಖ್ (23), ಹಮೀದಾ ಬೇಗಂ (50), ಶೇಖ್ ಸೊಹೈಲ್ (35) ಮತ್ತು ರೇಷ್ಮಾ ಶೇಖ್ (22) ಎಂದು ಗುರುತಿಸಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತನಿಖೆಯ ನಂತರ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. \ No newline at end of file diff --git a/eesanje/url_47_132_5.txt b/eesanje/url_47_132_5.txt new file mode 100644 index 0000000000000000000000000000000000000000..adbf4b560f8cf9b2c03ccfd0179c2253efa2d27f --- /dev/null +++ b/eesanje/url_47_132_5.txt @@ -0,0 +1,4 @@ +ರಾಹುಲ್ ‘ಬೆಂಕಿ ಹಚ್ಚುವ ಹೇಳಿಕೆ’ಗೆ ಪ್ರಧಾನಿ ಮೋದಿ ಕಿಡಿ +ಉತ್ತರಖಂಡ ಏ.2-ಬಿಜೆಪಿ ಮೂರನೆ ಬಾರಿಗೆ ಆಯ್ಕೆಯಾದರೆ ಭಾರತಕ್ಕೆ ಬೆಂಕಿ ಹೊತ್ತಿಕೊಳ್ಳಲಿದೆ ಎಂಬ ರಾಹುಲ್ ಗಾಂಧಿ ಹೇಳಿಗೆ ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. +ಇದು ರಾಹುಲ್ ಗಾಂಧಿ ಅವರ ಪ್ರಜಾಪ್ರಭುತ್ವದ ಭಾಷೆಯೇ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ನ ಶಾಹಿ ಕುಟುಂಬದ ರಾಹುಲ್ ಆಡಿರುವ ಮಾತುಗಳನ್ನು ನೀವು ಒಪ್ಪುತ್ತೀರಾ? ದೇಶಕ್ಕೆ ಬೆಂಕಿ ಹಚ್ಚಲು ಬಿಡುತ್ತೀರಾ? ಈ ಭಾಷೆ ಸ್ವೀಕಾರಾರ್ಹವೇ? ಇದು ಪ್ರಜಾಪ್ರಭುತ್ವ ಭಾಷೆಯೇ? ಇಂತಹ ಮಾತುಗಳನ್ನಾಡುವವರನ್ನು ಶಿಕ್ಷಿಸುವುದಿಲ್ಲವೆ ಎಂದು ಇಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮೋದಿ ವಾಗ್ದಾಳಿ ನಡೆಸಿದ್ದಾರೆ. +ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಸಂಕುಚಿತ ಮನಸ್ಥಿತಿಯ ಕಾಂಗ್ರೆಸ್ಅನ್ನು ಯಾರೂ ನಂಬುವುದಿಲ್ಲ. ಪ್ರಸ್ತುತ ಜನರನ್ನು ಪ್ರಚೋದಿಸಿ ದೇಶವನ್ನು ಅಸ್ಥಿರತೆಗೆ ಕೊಂಡೊಯ್ಯುವ ಅವರ ಯೋಜನೆ ಫಲಿಸುವುದಿಲ್ಲ ಎಂದು ಗುಡುಗಿದ್ದಾರೆ. \ No newline at end of file diff --git a/eesanje/url_47_132_6.txt b/eesanje/url_47_132_6.txt new file mode 100644 index 0000000000000000000000000000000000000000..756a55c232b111dac8a6bf55402b2cba342af842 --- /dev/null +++ b/eesanje/url_47_132_6.txt @@ -0,0 +1,6 @@ +ಬಿಜೆಪಿ ಸೇರಿ, ಇಲ್ಲವೇ ಇಡಿ ದಾಳಿ ಎದುರಿಸಿ ಎಂದು ಬೆದರಿಕೆ ಹಾಕಲಾಗುತ್ತಿದೆ: ಅತಿಶಿ +ನವದೆಹಲಿ, ಏ.2 (ಪಿಟಿಐ) :ಬಿಜೆಪಿಗೆ ಸೇರಬೇಕು ಅಥವಾ ಒಂದು ತಿಂಗಳೊಳಗೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲು ಸಿದ್ಧರಾಗಿರಬೇಕು ಎಂದು ತಮ್ಮ ನಿಕಟವರ್ತಿಯೊಬ್ಬರಿಗೆ ಬೆದರಿಕೆ ಹಾಕಲಾಗಿದೆ ಎಂದುದೆಹಲಿ ಸಚಿವೆ ಅತಿಶಿ ಆರೋಪಿಸಿದ್ದಾರೆ. +ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಜೊತೆಗೆ ಆಮ್ ಆದ್ಮಿ ಪಕ್ಷದ ಮೂವರು ನಾಯಕರಾದ ದೆಹಲಿ ಸಚಿವ ಸೌರಭ್ ಭಾರದ್ವಾಜ್ , ಶಾಸಕ ದುರ್ಗೇಶ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಸಹ ಬಂಧಿಸಲಾಗುವುದು ಎಂದು ಬೆದರಿಸಲಾಗಿದೆ ಎಂದಿದ್ದಾರೆ. +ಮುಂದಿನ ದಿನಗಳಲ್ಲಿ ಇಡಿ ಅವರ ನಿವಾಸ ಮತ್ತು ಅವರ ಸಂಬಂಧಿಕರ ಮೇಲೆ ದಾಳಿ ನಡೆಸಲಿದೆ ಎಂದು ತಿಳಿಸಲಾಗಿದೆ ಎಂದು ದೆಹಲಿ ಸಚಿವರು ಹೇಳಿದ್ದಾರೆ. ಇಂಡಿಯಾ ಒಕ್ಕೂಟ ರಾಮಲೀಲಾ ಮೈದಾನದಲ್ಲಿ ನಡೆಸಿದ ರ್ಯಾಲಿಯ ಯಶಸ್ಸಿನಿಂದ ಬಿಜೆಪಿ ಜರ್ಜರಿತವಾಗಿದೆ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸುವುದರಿಂದ ಎಎಪಿ ವಿಘಟನೆಗೆ ಕಾರಣವಾಗುವುದಿಲ್ಲ ಎಂದು ಅವರು ಅರಿತುಕೊಂಡಿದ್ದಾರೆ ಎಂದು ಅವರು ಪ್ರತಿಪಾದಿಸಿದರು. +ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿದ್ದು, ಅವರ ಸರ್ಕಾರದ ಈಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ನ್ಯಾಯಾಲಯವು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. +ಬಿಜೆಪಿ ತನ್ನ ಶಾಸಕರನ್ನು ಬೇಟೆಯಾಡಿ, ಪಕ್ಷವನ್ನು ಒಡೆಯುವ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಯಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಎಎಪಿಯ ಕಿರಾರಿ ಶಾಸಕ ರಿತುರಾಜ್ ಝಾ ಅವರು ಕೇಸರಿ ಪಕ್ಷಕ್ಕೆ ಸೇರಲು 25 ಕೋಟಿ ರೂ.ಆಫರ್ ನೀಡಲಾಗಿದೆ ಎಂದು ಅವರು ದೂರಿದ್ದಾರೆ. \ No newline at end of file diff --git a/eesanje/url_47_132_7.txt b/eesanje/url_47_132_7.txt new file mode 100644 index 0000000000000000000000000000000000000000..3b662234998ae9d7ff044cf50a6e822ab20d36c0 --- /dev/null +++ b/eesanje/url_47_132_7.txt @@ -0,0 +1,7 @@ +ವರುಣ್ ಗಾಂಧಿಗೆ ಟಿಕೆಟ್ ಮಿಸ್, ಮನೇಕಾ ಗಾಂಧಿ ಪ್ರತಿಕ್ರಿಯೆ +ಸುಲ್ತಾನ್ಪುರ್, ಏ.2-ಬಿಜೆಪಿ ಸಂಸದ ವರುಣ್ ಗಾಂಧಿ ಅವರಿಗೆ ಅವರ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ಕೆಲವು ದಿನಗಳ ನಂತರ, ಅವರ ತಾಯಿ ಮತ್ತು ಬಿಜೆಪಿ ಸಂಸದೆ ಮೇನಕಾ ಗಾಂಧಿ ಅವರು ಉತ್ತರ ಪ್ರದೇಶದ ಸುಲ್ತಾನ್ಪುರಕ್ಕೆ 10 ದಿನಗಳ ಭೇಟಿ ನೀಡಿ ಮೌನ ಮುರಿದು ಪಕ್ಷದ ಭಾಗವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. +ವರುಣ್ ಗಾಂಧಿ ಈಗ ಏನು ಮಾಡುತ್ತಾರೆ ಎಂಬ ಪ್ರಶ್ನೆಗೆ, ಅವರು ಏನು ಮಾಡಬೇಕೆಂದು ಅವರನ್ನೇ ಕೇಳಿ, ಚುನಾವಣೆಯ ನಂತರ ನಾವು ಇದನ್ನು ಪರಿಗಣಿಸುತ್ತೇವೆ. ಅದಕ್ಕೆ ಇನ್ನು ಸಮಯವಿದೆ ಎಂದು ಉತ್ತರಿಸಿದ್ದಾರೆ. ನಾನು ಬಿಜೆಪಿಯಲ್ಲಿದ್ದೇನೆ ಎಂದು ನನಗೆ ತುಂಬಾ ಸಂತೋಷವಾಗಿದೆ. +ನನಗೆ ಟಿಕೆಟ್ ನೀಡಿದ್ದಕ್ಕಾಗಿ ನಾನು ಅಮಿತ್ ಶಾ, ಪ್ರಧಾನಿ ಮೋದಿ ಮತ್ತು ನಡ್ಡಾ ಜಿ ಅವರಿಗೆ ಧನ್ಯವಾದಗಳು. ಟಿಕೆಟ್ ಬಹಳ ತಡವಾಗಿ ಘೋಷಿಸಲಾಯಿತು, ಆದ್ದರಿಂದ ನಾನು ಎಲ್ಲಿ ಹೋರಾಡಬೇಕು ಎಂಬ ಸಂದಿಗ್ಧತೆ ಇತ್ತು. ಪಕ್ಷವು ಈಗ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಅವರು ಹೇಳಿದರು. +ನಾನು ಸುಲ್ತಾನ್ಪುರಕ್ಕೆ ಹಿಂತಿರುಗಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಏಕೆಂದರೆ ಈ ಸ್ಥಳವು ಸುಲ್ತಾನ್ಪುರದಲ್ಲಿ ಮತ್ತೆ ಅಧಿಕಾರಕ್ಕೆ ಬರದ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಟಿಕೆಟ್ ಸಿಕ್ಕ ನಂತರ ಸುಲ್ತಾನ್ಪುರಕ್ಕೆ ಆಕೆಯ ಮೊದಲ ಭೇಟಿಯಾಗಿತ್ತು. ಜಿಲ್ಲೆಗೆ 10 ದಿನಗಳ ಭೇಟಿಯಲ್ಲಿ ಅವರು ಇಡೀ ಲೋಕಸಭಾ ಕ್ಷೇತ್ರದ 101 ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ. +ಕಟ್ಕಾ ಗುಪ್ತರಗಂಜ್, ತತಿಯಾನಗರ, ತೆಧುಯಿ, ಗೋಲಾಘಾಟ್ , ಶಹಗಂಜ್ ಚೌಕ, ದರಿಯಾಪುರ ತಿರಾಹಾ ಮತ್ತು ಪಯಾಗಿಪುರ ಚೌಕದಂತಹ ವಿವಿಧ ಸ್ಥಳಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದರು.ಈ ವೇಳೆ ಮೇನಕಾ ಗಾಂಧಿ ಅವರು ಶ್ಯಾಮ ಪ್ರಸಾದ್ ಮುಖರ್ಜಿ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪ್ರತಿಮೆಗಳಿಗೆ ಗೌರವ ಸಲ್ಲಿಸಿದರು. +ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಆರ್.ಎ.ವರ್ಮಾ, ಬಿಜೆಪಿ ರಾಜ್ಯ ಸಚಿವೆ ಮೀನಾ ಚೌಬೆ, ಲೋಕಸಭೆ ಉಸ್ತುವಾರಿ ದುರ್ಗೇಶ್ ತ್ರಿಪಾಠಿ, ಲೋಕಸಭೆಯ ಸಂಚಾಲಕ ಜಗಜಿತ್ ಸಿಂಗ್ ಚಾಂಗು, ಶಾಸಕ ರಾಜ್ ಪ್ರಸಾದ್ ಉಪಾಧ್ಯಾಯ, ಶಾಸಕ ರಾಜೇಶ್ ಗೌತಮ್ , ವಕ್ತಾರ ವಿಜಯ ರಘುವಂಶಿ ಉಪಸ್ಥಿತರಿದ್ದರು.ಇದಕ್ಕೂ ಮುನ್ನ ವರುಣ್ ಗಾಂಧಿ ಅವರು ತಮ್ಮ ಕ್ಷೇತ್ರದ ಜನತೆಗೆ ಮನದಾಳದ ಪತ್ರ ಬರೆದು, ಉತ್ತರ ಪ್ರದೇಶದ ಪಿಲಿಭಿತ್ ಜೊತೆಗಿನ ಸಂಬಂಧ ಕೊನೆಯ ಉಸಿರಿನವರೆಗೂ ಕೊನೆಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_132_8.txt b/eesanje/url_47_132_8.txt new file mode 100644 index 0000000000000000000000000000000000000000..9389e4038a87eaf2796e2b1bc8506a20be2c0d50 --- /dev/null +++ b/eesanje/url_47_132_8.txt @@ -0,0 +1,5 @@ +ಛತ್ತೀಸಗಢದಲ್ಲಿ ಮತ್ತೆ ನಾಲ್ವರು ನಕ್ಸಲೀಯರ ಎನ್‌ಕೌಂಟರ್‌ +ರಾಯ್ಪುರ, ಏ.2 (ಪಿಟಿಐ) :-ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. +ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಸ್ಥಳದಿಂದ ನಾಲ್ವರು ನಕ್ಸಲೀಯರ ದೇಹ ಮತ್ತು ಶಸಾಸವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ತಿಳಿಸಿದರು. ಈ ಘಟನೆಯೊಂದಿಗೆ, ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಈ ವರ್ಷ ಇದುವರೆಗೆ 34 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದು, ಏಪ್ರಿಲ್ 19ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ. \ No newline at end of file diff --git a/eesanje/url_47_132_9.txt b/eesanje/url_47_132_9.txt new file mode 100644 index 0000000000000000000000000000000000000000..c62bcd734405774eb2a7f4b290a5727eda70f38c --- /dev/null +++ b/eesanje/url_47_132_9.txt @@ -0,0 +1,7 @@ +ವರದಕ್ಷಿಣೆಯಾಗಿ ಫಾರ್ಚೂನರ್ ಕಾರು ಕೊಡದಿದ್ದಕ್ಕೆ ಪತ್ನಿಯನ್ನು ಕೊಂದ ಪತಿ ಮತ್ತು ಅತ್ತೆಮಾವ +ನೋಯ್ಡಾ,ಏ.2-ವರದಕ್ಷಿಣೆಯಾಗಿ ಹೆಚ್ಚುವರಿ ಹಣ ಹಾಗೂ ಫಾರ್ಚೂನರ್ ಕಾರು ಕೊಡುವಂತೆ ಪೀಡಿಸಿ ಸೊಸೆಯನ್ನು ಬಡಿದು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಅತ್ತೆ-ಮಾವ ಹಾಗೂ ಗಂಡನನ್ನು ಪೊಲೀಸರು ಇಂದು ಬಂಧಿಸಿದ್ದಾರೆ. +ಕರಿಷ್ಮಾ ಕೊಲೆಯಾದ ದುರ್ದೈವಿ. ಕೊಲೆ ಆರೋಪಿಗಳಾದ ಪತಿ ವಿಕಾಸ್ ಭಟ ಅಲಿಯಾಸ್ ಬಿಟ್ಟು, ಈತನ ತಂದೆ ಸೊಂಪಲ್ ಭಟ್ಟಿ, ತಾಯಿ ಬಂತ ಆರೋಪಿಗಳು ಕರಿಷ್ಮಾ 2022 ಡಿಸೆಂಬರ್‍ನಲ್ಲಿ ವಿಕಾಸ್ ಎಂಬಾತನನ್ನು ಮದುವೆಯಾಗಿ ಕೇದಾಚೌಗಂಪುರ್ ಗ್ರಾಮದಲ್ಲಿ ವಾಸವಾಗಿದ್ದರು. +ಕಳೆದ ಮಾ.29ರಂದು ಕರಿಷ್ಮಾಳ ಅತ್ತೆ-ಮಾವ ಇಬ್ಬರೂ ತವರಿನಿಂದ ವರದಕ್ಷಿಣೆಯಾಗಿ ಫಾರ್ಚುನರ್ ಕಾರು ಹಾಗೂ ಒಂದಿಷ್ಟು ಹಣ ತರುವಂತೆ ಪೀಡಿಸಿದ್ದರು. ಅದು ಸಾಧ್ಯವಾಗದಿದ್ದರಿಂದ ಎಲ್ಲರೂ ಸೇರಿ ಆಕೆಗೆ ಕಿರುಕುಳ ನೀಡಿ ಹಲ್ಲೆ ಮಾಡಿರುವುದರಿಂದ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. +ಮದುವೆ ಅದ್ಧೂರಿಯಾಗೇ ಮಾಡಿಕೊಟ್ಟಿದ್ದೆವು. ಆದಾಗ್ಯೂ ಆಕೆಯ ಗಂಡನ ಮನೆಯಲ್ಲಿ ವರದಕ್ಷಿಣೆ ನೀಡುವಂತೆ ಪೀಡಿಸುತ್ತಿದ್ದರು ಎಂದು ಕೊಲೆಯಾದ ಕರಿಷ್ಮಾಳ ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. +ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 498ಎ (ವಿವಾಹಿತ ಮಹಿಳೆ ಮೇಲೆ ಕ್ರೌರ್ಯ), 304ಬಿ (ವರದಕ್ಷಿಣೆ ಸಾವು), 323 (ಸ್ವಯಂಪ್ರೇರಿತ ನೋವು ಉಂಟು ಮಾಡಿರುವುದು) ವರದಕ್ಷಿಣೆ ನಿಷೇಧ ಕಾಯಿದೆಯ ನಿಬಂಧನೆಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. +ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಇಕೋಟೆಕ್ ಪೊಲೀಸ್ ಠಾಣೆ ಪೊಲೀಸರು, ಇದೀಗ ಪ್ರಕರಣ ಸಂಬಂಧ ಕರಿಷ್ಮಾ ಅವರ ಪತಿ ಮತ್ತು ಆಕೆಯ ಅತ್ತೆಮಾವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ಇತರ ಆರೋಪಿಗಳನ್ನು ಬಂಸಲು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_133_1.txt b/eesanje/url_47_133_1.txt new file mode 100644 index 0000000000000000000000000000000000000000..c15322534cd54b7e3df9bef6ebfb1c18bb1f85c0 --- /dev/null +++ b/eesanje/url_47_133_1.txt @@ -0,0 +1,6 @@ +ಕೇಜ್ರಿವಾಲ್‍ಗೆ ಏ.15ರವರೆಗೆ ನ್ಯಾಯಾಂಗ ಬಂಧನ +ನವದೆಹಲಿ, ಎ.1-ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದಿಲ್ಲಿ ನ್ಯಾಯಾಲಯವು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. +ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ವಿಚಾರಣೆ ನಂತರ ವಿಶೇಷ ನ್ಯಾಯಾೀಧಿಶ ಕಾವೇರಿ ಬವೇಜಾ ಅವರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. +ಈ ವೇಳೆ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದು ಜಾಮೀಜಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶ ಬವೇಜಾ ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿದರು. +ಇದರ ಬೆನ್ನಲ್ಲೇ, ಆತನ ಕಸ್ಟಡಿ ವಿಚಾರಣೆಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಇಡಿ ಸಲ್ಲಿಸಿದ ಮನವಿಯನ್ನು ನ್ಯಾಯಾಲಯವು ಅಂಗೀಕರಿಸಿತು. +ತನ್ನ ರಿಮಾಂಡ್ ಅರ್ಜಿಯಲ್ಲಿ, ತನಿಖಾ ಸಂಸ್ಥೆಯು ಎಎಪಿ ನಾಯಕ ದೆಹಲಿ ಮದ್ಯ ಹಗರಣದ ಸಂಪೂರ್ಣ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ, ನೀತಿಯ ಕರಡು ಮತ್ತು ಅನುಷ್ಠಾನದಲ್ಲಿ, ಕಿಕ್‍ಬ್ಯಾಕ್ ಪಡೆಯುವ ಕ್ವಿಡ್ ಪ್ರೊಗೆ ಅನುಕೂಲ ಮತ್ತು ಲಾಭಕ್ಕಾಗಿ ಮತ್ತು ಅಂತಿಮವಾಗಿ ಆದಾಯದ ಭಾಗವನ್ನು ಬಳಸಿದ್ದಾರೆ ಎಂದು ಆರೋಪಿಸಿದೆ. \ No newline at end of file diff --git a/eesanje/url_47_133_10.txt b/eesanje/url_47_133_10.txt new file mode 100644 index 0000000000000000000000000000000000000000..4cdb03e04937a4f99eeaffe604072ace643d0484 --- /dev/null +++ b/eesanje/url_47_133_10.txt @@ -0,0 +1,5 @@ +ಬಿಜೆಪಿಯನ್ನು ಲೇವಡಿ ಮಾಡಿದ ಮಮತಾ ಬ್ಯಾನರ್ಜಿ +ಕೃಷ್ಣಾನಗರ,ಮಾ.31- ಪಶ್ಚಿಮ ಬಂಗಾಳದ ಕೃಷ್ಣಾನಗರದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ 200 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. +ಪಶ್ಚಿಮ ಬಂಗಾಳದಲ್ಲಿ ವಿವಾದಿತ ಸಿಎಎ ಮಸೂದೆಯನ್ನು ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಎಗಾಗಿ ಅರ್ಜಿ ಸಲ್ಲಿಸಿದರೆ ನೀವು ವಿದೇಶಿಯರೆಂದು ಪರಿಗಣಿಸಲ್ಪಡುತ್ತೀರಿ. ಹೀಗಾಗಿ ಯಾರೂ ಅರ್ಜಿ ಸಲ್ಲಿಸಬೇಡಿ ಎಂದು ಎಚ್ಚರಿಕೆ ನೀಡಿದರು. +400 ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಹೇಳಿಕೊಳ್ಳುತ್ತಿದ್ದಾರೆ. 200 ಸ್ಥಾನಗಳನ್ನು ದಾಟಿ ನೋಡಿ. ಕಳೆದ 2021ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 200 ಕ್ಷೇತ್ರಗಳನ್ನು ಗೆಲ್ಲುವುದಾಗಿ ಹೇಳಿದ್ದರು, 77 ಕ್ಕೇ ನಿಂತು ಹೋದರು ಎಂದು ಲೇವಡಿ ಮಾಡಿದ್ದಾರೆ. +ಸಿಎಎ ದೇಶದ ಕಾನೂನುಬದ್ಧ ನಾಗರಿಕರನ್ನು ವಿದೇಶಿಗರು ಎಂದು ಬಿಂಬಿಸುವ ವ್ಯೂಹವಾಗಿದೆ. ಹೀಗಾಗಿ ಪಶ್ಚಿಮಬಂಗಾಳದಲ್ಲಿ ಸಿಎಎ ಮತ್ತು ಎನ್‍ಆರ್‍ಸಿಗೆ ಅವಕಾಶ ನೀಡುವುದಿಲ್ಲ ಎಂದು ಸೆಡ್ಡು ಹೊಡೆದಿದ್ದಾರೆ. \ No newline at end of file diff --git a/eesanje/url_47_133_11.txt b/eesanje/url_47_133_11.txt new file mode 100644 index 0000000000000000000000000000000000000000..a930294e9baeb826cccd954873c0afa1a994b1a6 --- /dev/null +++ b/eesanje/url_47_133_11.txt @@ -0,0 +1,7 @@ +ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಶಕ್ತಿ ಪ್ರದರ್ಶನ +ನವದೆಹಲಿ,ಮಾ.31-ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಿ, ದೇಶವನ್ನು ಉಳಿಸಿ ಧ್ಯೇಯದೊಂದಿಗೆ ಇಂಡಿಯಾ ರಾಜಕೀಯ ಒಕ್ಕೂಟ ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿಂದು ಬೃಹತ್ ಶಕ್ತಿ ಪ್ರದರ್ಶನ ನಡೆಸಿದೆ.ಇಂಡಿಯಾ ಘಟ್‍ಬಂಧನ್‍ನಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ವಿರೋಧಪಕ್ಷಗಳ ನಾಯಕರು ಕಿಡಿಕಾರಿದ್ದಾರೆ. +ಆಮ್‍ಆದ್ಮಿ, ಎಡಪಕ್ಷಗಳು, ಶಿವಸೇನೆ, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ಮುಖಂಡರು ರ್ಯಾಲಿಯಲ್ಲಿ ಭಾಗವಹಿಸಿದ್ದರು.ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ತೀವ್ರವಾಗಿ ಖಂಡಿಸಲಾಯಿತು. +ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂ, ಸಿಪಿಐನ ಡಿ.ರಾಜಾ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್, ಡಿಎಂಕೆ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಮ್‍ಲೀಲಾ ಮೈದಾನದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷದ ಧ್ವಜಗಳನ್ನು ಪ್ರದರ್ಶಿಸಿದರು. +ದೆಹಲಿ ಮತ್ತು ಪಂಜಾಬ್‍ನ ಆಪ್ ಸರ್ಕಾರದ ಬಹುತೇಕ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ತಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಬಂಧನವನ್ನು ತೀವ್ರವಾಗಿ ವಿರೋಸಿದರು.ಕೇಂದ್ರ ಸರ್ಕಾರ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಕೇಂದ್ರೀಯ ಸ್ವಾಯತ್ತ ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರತಿಪಕ್ಷ ನಾಯಕರನ್ನು ಹತ್ತಿಕ್ಕಲು ಹಾಗೂ ಪ್ರಶ್ನಿಸುವವರ ಧ್ವನಿ ಅಡಗಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. +ಇದೇ ವೇಳೆ ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿ, ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಕಾರಿಗಳನ್ನು ನಿಯೋಜಿಸಿಕೊಂಡು ಹೊಸ ವಿಚಾರಣೆ ಹೆಸರಿನಲ್ಲಿ ಚಂದಾ ವಸೂಲಿ ಮಾಡುವ ಕಾಳಜಿ ಹೊಂದಿದೆ. ಇಡೀ ಜಗತ್ತಿನಲ್ಲೇ ಬಿಜೆಪಿಯಷ್ಟು ಸುಳ್ಳು ಹೇಳುವವರು ಬೇರೆ ಯಾರೂ ಇಲ್ಲ. ಅರವಿಂದ್ ಕೇಜ್ರಿವಾಲ್ ಬಂಧನವನ್ನು ಅಮೇರಿಕಾ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳು ಖಂಡಿಸಿವೆ ಎಂದು ಹೇಳಿದರು. +ಡಿ.ರಾಜಾ ಮಾತನಾಡಿ, ಇದು ಬಹುಮುಖ್ಯವಾದ ಸಮಾವೇಶವಾಗಿದೆ. ಜಾರ್ಖಂಡ್ ಮತ್ತು ದೆಹಲಿಯ ಮುಖ್ಯಮಂತ್ರಿಗಳನ್ನು ಬಂಸಿರುವ ಕೇಂದ್ರ ಸರ್ಕಾರ ಹೇಮಂತ್ ಸೊರೇನ್ ಅವರನ್ನು ಬಲವಂತವಾಗಿ ಅಕಾರದಿಂದ ಕೆಳಗಿಳಿಯುವಂತೆ ಮಾಡಲಾಯಿತು. ಹಾಲಿ ಮುಖ್ಯಮಂತ್ರಿಗಳನ್ನು ಬಂಸುವ ಮೂಲಕ ಚುನಾವಣಾ ಸಮಯದಲ್ಲೂ ವಿಪಕ್ಷಗಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಆಕ್ರಮಣ ಎಂದು ಹೇಳಿದರು. \ No newline at end of file diff --git a/eesanje/url_47_133_12.txt b/eesanje/url_47_133_12.txt new file mode 100644 index 0000000000000000000000000000000000000000..d1f2aad66d6d1b6b69563b92351167b21f77512c --- /dev/null +++ b/eesanje/url_47_133_12.txt @@ -0,0 +1,5 @@ +ಕಚ್ಛಾತೀವು ದ್ವೀಪವನ್ನು ಇಂದಿರಾಗಾಂಧಿ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರವಾಗಿ ಮೋದಿ ವಾಗ್ದಾಳಿ +ನವದೆಹಲಿ,ಮಾ.31-ಶ್ರೀಲಂಕಾಕ್ಕೆ ಭಾರತ ಕಚ್ಛಾತೀವು ದ್ವೀಪವನ್ನು ಬಿಟ್ಟುಕೊಟ್ಟಿದೆ ಎಂದು ಮಾಧ್ಯಮದ ವರದಿಯನ್ನು ಆಧರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ರಾಷ್ಟ್ರೀಯ ಭದ್ರತೆ ಚರ್ಚೆಯ ವಿಷಯವಾಗಿದ್ದು, ಚೀನಾ, ಭಾರತದ ನೆಲದ ಮೇಲೆ ಆಕ್ರಮಣ ಮಾಡುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಆರೋಪವನ್ನು ವಿರೋಧಪಕ್ಷಗಳು ಮಾಡುತ್ತಿವೆ. +ಇದಕ್ಕೆ ತಿರುಗೇಟು ಎಂಬಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 1974 ರಲ್ಲಿ ಪ್ರಧಾನಿಯಾಗಿದ್ದ ಇಂದಿರಾಗಾಂಧಿಯವರು ಪಾಕ್ ಜಲಸಂಯಲ್ಲಿನ ಪ್ರದೇಶವನ್ನು ನೆರೆಯ ದೇಶಕ್ಕೆ ಹಸ್ತಾಂತರಿಸಿರುವ ನಿರ್ಧಾರ ತೆಗೆದುಕೊಂಡಿರುವುದನ್ನು ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಆರ್‍ಟಿಐ ಮೂಲಕ ದಾಖಲೆಯನ್ನು ಪಡೆದುಕೊಂಡಿದ್ದರು. +ಈ ಕುರಿತು ವರದಿಯಾಗಿರುವುದನ್ನು ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿಯವರು ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು 75 ವರ್ಷಗಳಿಂದ ಕಾಂಗ್ರೆಸ್ ಮಾಡುತ್ತಿರುವ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. +ತಮಿಳುನಾಡಿನಲ್ಲಿ ಕಚ್ಛಾತೀವು ದ್ವೀಪದ ಹಸ್ತಾಂತರ ವಿವಾದ ಬಿಜೆಪಿಗೆ ರಾಜಕೀಯ ಲಾಭ ಉಂಟುಮಾಡಬಹುದು ಎಂಬ ನಿರೀಕ್ಷೆಗಳಿವೆ.ಭಾರತ ಮತ್ತು ಶ್ರೀಲಂಕಾದಲ್ಲಿನ ವಿವಾದದ ಮೂಲವಾದ ಈ ವಿಷಯದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಅಭಿಪ್ರಾಯಗಳನ್ನು ಖಾಸಗಿ ಸುದ್ದಿಸಂಸ್ಥೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_47_133_2.txt b/eesanje/url_47_133_2.txt new file mode 100644 index 0000000000000000000000000000000000000000..784de9392dd5e0513d950f886b49936d42ac9ba6 --- /dev/null +++ b/eesanje/url_47_133_2.txt @@ -0,0 +1,5 @@ +ಕಚ್ಚತೀವು ದ್ವೀಪದ ಬಗ್ಗೆ ಕಾಂಗ್ರೆಸ್ ಪ್ರಧಾನಿಗಳಿಗೆ ಅಸಡ್ಡೆ ಇತ್ತು ; ಜೈಶಂಕರ್ +ನವದೆಹಲಿ, ಅ.1 (ಪಿಟಿಐ) :ಕಾನೂನಾತ್ಮಕ ಅಭಿಪ್ರಾಯಗಳ ಹೊರತಾಗಿಯೂ ಕಾಂಗ್ರೆಸ್‍ನ ಪ್ರಧಾನ ಮಂತ್ರಿಗಳು ಕಚ್ಚತೀವು ದ್ವೀಪದ ಬಗ್ಗೆ ಅಸಡ್ಡೆ ಪ್ರದರ್ಶಿಸಿದ್ದಾರೆ ಮತ್ತು ಭಾರತೀಯ ಮೀನುಗಾರರ ಹಕ್ಕುಗಳನ್ನು ಬಿಟ್ಟುಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದಿಲ್ಲಿ ಹೇಳಿದ್ದಾರೆ. +ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿಯಂತಹ ಪ್ರಧಾನ ಮಂತ್ರಿಗಳು 1974 ರಲ್ಲಿ ಶ್ರೀಲಂಕಾಕ್ಕೆ ಸಮುದ್ರ ಗಡಿ ಒಪ್ಪಂದದ ಭಾಗವಾಗಿ ನೀಡಲಾದ ಕಚ್ಚತೀವುವನ್ನು ಪುಟ್ಟ ದ್ವೀಪ ಮತ್ತು ಚಿಕ್ಕ ಬಂಡೆ ಎಂದು ಕರೆದರು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. +ಡಿಎಂಕೆ ಒಪ್ಪಂದದ ವಿರುದ್ಧ ಸಾರ್ವಜನಿಕ ನಿಲುವು ವ್ಯಕ್ತಪಡಿಸಿದ ಬಗ್ಗೆ ವಾಗ್ದಾಳಿ ನಡೆಸಿದ ಜೈಶಂಕರ್ ಅವರು, 1974 ರಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಮೊದಲು ಏರ್ಪಟ್ಟ ಒಪ್ಪಂದದ ಬಗ್ಗೆ ಅದರ ನಾಯಕ ಮತ್ತು ಆಗಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿತ್ತು ಎಂದು ಹೇಳಿದರು. +ಕಾಂಗ್ರೆಸ್ ಮತ್ತು ಡಿಎಂಕೆ ಈ ವಿಷಯವನ್ನು ಸಂಸತ್ತಿನಲ್ಲಿ ಯಾವುದೇ ಹೊಣೆಗಾರಿಕೆಯನ್ನು ಹೊರುವುದಿಲ್ಲ ಎಂಬಂತೆ ಪ್ರಸ್ತಾಪಿಸಿದವು, ಆದರೆ ಅದನ್ನು ಮಾಡಿದ ಪಕ್ಷಗಳು, 1974 ರಲ್ಲಿ ಮತ್ತು ನಂತರ ಈ ಪರಿಸ್ಥಿತಿಯನ್ನು ಸೃಷ್ಟಿಸಲು ಡಿಎಂಕೆ ಕಾಂಗ್ರೆಸ್‍ನೊಂದಿಗೆ ತುಂಬಾ ಸಂಯೋಜಿತವಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_133_3.txt b/eesanje/url_47_133_3.txt new file mode 100644 index 0000000000000000000000000000000000000000..4b678bf58647745f0e8780d31c9ca42936204c7f --- /dev/null +++ b/eesanje/url_47_133_3.txt @@ -0,0 +1,9 @@ +ಪಶ್ಚಿಮ ಬಂಗಾಳದಲ್ಲಿ ಚಂಡಮಾರುತಕ್ಕೆ ಐದು ಬಲಿ, ನೂರಾರು ಮಂದಿಗೆ ಗಾಯ +ಜಲ್ಪೈಗುರಿ, ಏ.1- (ಪಿಟಿಐ) :ಉತ್ತರ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಕಾಣಿಸಿಕೊಂಡಿರುವ ವಿನಾಶಕಾರಿ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.ಜಿಲ್ಲಾ ಕೇಂದ್ರ ಪಟ್ಟಣದ ಬಹುತೇಕ ಭಾಗಗಳಲ್ಲಿ ಮತ್ತು ನೆರೆಯ ಮೈನಾಗೂರಿನ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಬಲವಾದ ಗಾಳಿ ಬೀಸಿದ್ದರಿಂದ ಹಲವಾರು ಗುಡಿಸಲುಗಳು ಮತ್ತು ಮನೆಗಳಿಗೆ ಹಾನಿಯಾಗಿದೆ. +ಮರಗಳು ಬುಡಸಮೇತ ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ತಡರಾತ್ರಿ ಜಿಲ್ಲೆಗೆ ದೌಡಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಿಲ್ಲಾಡಳಿತದಿಂದ ಎಲ್ಲ ನೆರವು ನೀಡುವುದಾಗಿ ಜನರಿಗೆ ಭರವಸೆ ನೀಡಿದರು.ಇದುವರೆಗೆ, ನಮ್ಮಲ್ಲಿ ಐದು ಜನರ ಸಾವಿನ ವರದಿಗಳಿವೆ. +ಗಾಯಗೊಂಡವರ ಸಂಖ್ಯೆ ಸಾಕಷ್ಟು ಹೆಚ್ಚಾಗಿದೆ. ನಾನು ಗಾಯಾಳುಗಳು ಮತ್ತು ಚಂಡಮಾರುತದಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಆಡಳಿತವು ಎಲ್ಲವನ್ನೂ ಮಾಡುತ್ತದೆ ಎಂದು ಅವರು ಹೇಳಿದರು. +ಇದು ದುರಂತ, ತುರ್ತು ಪರಿಸ್ಥಿತಿ. ಹತ್ಯೆಗೀಡಾದವರ ಕುಟುಂಬಗಳನ್ನು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅವರ ತ್ವರಿತ ಕ್ರಮಕ್ಕಾಗಿ ನಾನು ಆಡಳಿತಕ್ಕೆ ಧನ್ಯವಾದ ಹೇಳುತ್ತೇನೆ. ನಾವು ಜನರ ಜತೆಯಲ್ಲಿದ್ದೇವೆ ಮತ್ತು ಅವರ ಚಿಕಿತ್ಸೆಯನ್ನು ನೋಡಿಕೊಳ್ಳುತ್ತೇವೆ ಮತ್ತು ಮನೆಗಳನ್ನು ಮರುನಿರ್ಮಾಣ ಮಾಡುತ್ತೇವೆ, ಎಂದು ಬ್ಯಾನರ್ಜಿ ಹೇಳಿದರು. +ಬ್ಯಾನರ್ಜಿ ಅವರು ಟಿಎಂಸಿ ಪಕ್ಷದ ನಾಯಕರೊಂದಿಗೆ ಜಲ್ಪೈಗುರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತೆರಳಿದರು ಮತ್ತು ಅವರ ಮಾರ್ಗದಲ್ಲಿ ಇತರ ಜಿಲ್ಲೆಗಳ ಪರಿಹಾರ ಶಿಬಿರಗಳಲ್ಲಿ ವೀಡಿಯೊ ಕರೆ ಮೂಲಕ ಮಾತನಾಡಿದರು. +ರಾಜರಹತ್, ಬರ್ನಿಶ್, ಬಕಾಲಿ, ಜೋರ್ಪಾಕ್ಡಿ, ಮಧಬ್ದಂಗ ಮತ್ತು ಸಪ್ತಿಬರಿ, ಹಲವಾರು ಎಕರೆ ಕೃಷಿ ಭೂಮಿ ಮತ್ತು ಬೆಳೆ ಹಾನಿಯಾಗಿದೆ ಎಂದು ಅ„ಕಾರಿಗಳು ತಿಳಿಸಿದ್ದಾರೆ. ರಾಜ್ಯಪಾಲ ಸಿ ವಿ ಆನಂದ ಬೋಸ್ ಕೂಡ ಇಂದು ಮುಂಜಾನೆ ಬಂಗಾಳದ ಉತ್ತರ ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. +ಇದು ಅತ್ಯಂತ ದುರದೃಷ್ಟಕರ. ಚಂಡಮಾರುತದಲ್ಲಿ ಜೀವಹಾನಿಯಾಗಿದೆ. ಎಲ್ಲಾ ಏಜೆನ್ಸಿಗಳು ಒಟ್ಟಾಗಿ ಕೆಲಸ ಮಾಡುತ್ತಿವೆ. ನಾನು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತನಾಡುತ್ತೇನೆ. ಎಲ್ಲವನ್ನೂ ಮಾಡಲಾಗುವುದು ಎಂದು ಬೋಸ್ ವಿಮಾನ ಹತ್ತುವ ಮೊದಲು ಸುದ್ದಿಗಾರರಿಗೆ ತಿಳಿಸಿದರು. +ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಅ„ಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಅದರಿಂದ ಸಂತ್ರಸ್ತರಾದವರಿಗೆ ಸರಿಯಾದ ಸಹಾಯವನ್ನು ಖಚಿತಪಡಿಸಿಕೊಳ್ಳಲು ಅವರನ್ನು ಕೇಳಿದ್ದೇನೆ ಎಂದು ಹೇಳಿದರು.ವಿಪತ್ತು ಪ್ರತಿಕ್ರಿಯೆ ತಂಡವನ್ನು ನಿಯೋಜಿಸಲಾಗಿದೆ ಮತ್ತು ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಲ್ಪೈಗುರಿ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_133_4.txt b/eesanje/url_47_133_4.txt new file mode 100644 index 0000000000000000000000000000000000000000..20e03d5ceba9ab1c77cba531ab54d92083d0ffc5 --- /dev/null +++ b/eesanje/url_47_133_4.txt @@ -0,0 +1,7 @@ +ಡಿಎಂಕೆ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ +ನವದೆಹಲಿ, ಆ.1 (ಪಿಟಿಐ)-ಹಿಂದಿನ ತಮಿಳುನಾಡು ಸರ್ಕಾರವು ಕಚ್ಚತೀವು ದ್ವೀಪವನ್ನು ಶ್ರಿಲಂಕಾಗೆ ಬಿಟ್ಟುಕೊಡಲು ಸಮ್ಮತಿಸಿತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಡಳಿತರೂಢ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ತಮಿಳುನಾಡಿನ ಆಡಳಿತ ಪಕ್ಷವು ರಾಜ್ಯದ ಹಿತಾಸಕ್ತಿಗಳನ್ನು ಕಾಪಾಡಲು ಏನನ್ನೂ ಮಾಡಿಲ್ಲ ಎಂದು ಅವರು ಎಕ್ಸ್ ಮಾಡಿದ್ದಾರೆ. ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಹಸ್ತಾಂತರಿಸುವ ವಿಷಯದ ಕುರಿತು ಹೊರಹೊಮ್ಮುತ್ತಿರುವ ಹೊಸ ವಿವರಗಳು ಡಿಎಂಕೆಯ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿವೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಹಿಂದಿನ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರು ಒಪ್ಪಂದಕ್ಕೆ ಒಪ್ಪಿಗೆ ನೀಡಿದ್ದರು ಎನ್ನುವುದನ್ನು ಮೋದಿ ಬಹಿರಂಗಪಡಿಸಿದ್ದಾರೆ. +ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಭಾರತ ಮತ್ತು ಲಂಕಾ ನಡುವಿನ 1974 ರ ಒಪ್ಪಂದದ ಕುರಿತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಕೇಳಿದ ಪ್ರಶ್ನೆಗಳಿಗೆ RTIಉತ್ತರವನ್ನು ಆಧರಿಸಿ ಮಾಧ್ಯಮ ವರದಿಯಾಗಿದೆ. + , ’ . # ’ . . . ’ … +ತಮಿಳುನಾಡಿನ ಹಿತಾಸಕ್ತಿಗಳನ್ನು ಕಾಪಾಡಲು ಡಿಎಂಕೆ ಏನನ್ನೂ ಮಾಡಿಲ್ಲ. ಕಚ್ಚತೀವುನಲ್ಲಿ ಹೊರಹೊಮ್ಮುತ್ತಿರುವ ಹೊಸ ವಿವರಗಳು ಡಿಎಂಕೆಯ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿವೆ ಎಂದು ಮೋದಿ ಹೇಳಿದರು. ಡಿಎಂಕೆ ಕುಟುಂಬ ಘಟಕಗಳು. ಅವರು ತಮ್ಮ ಸ್ವಂತ ಪುತ್ರರು ಮತ್ತು ಹೆಣ್ಣುಮಕ್ಕಳು ಬೆಳೆಯಲು ಮಾತ್ರ ಕಾಳಜಿ ವಹಿಸುತ್ತಾರೆ. +ಅವರು ಬೇರೆಯವರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಕಚ್ಚತೀವು ಮೇಲಿನ ಅವರ ನಿರ್ದಯತೆ ನಮ್ಮ ಬಡ ಮೀನುಗಾರರು ಮತ್ತು ವಿಶೇಷವಾಗಿ ಮೀನುಗಾರ ಮಹಿಳೆಯರ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ ಎಂದು ಅವರು ಹೇಳಿದರು. ಭಾರತದ ಏಕತೆ, ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸುವುದು 75 ವರ್ಷಗಳಿಂದ ಕಾಂಗ್ರೆಸ್‍ನ ಕೆಲಸವಾಗಿದೆ ಎಂದು ಅವರು ಆರೋಪಿಸಿದ್ದಾರೆ. \ No newline at end of file diff --git a/eesanje/url_47_133_5.txt b/eesanje/url_47_133_5.txt new file mode 100644 index 0000000000000000000000000000000000000000..39e88b61805128ede61365198e695411695f7010 --- /dev/null +++ b/eesanje/url_47_133_5.txt @@ -0,0 +1,7 @@ +ಸಿಯೆರಾ ಲಿಯೋನ್ ಪ್ರಜೆ ಹೊಟ್ಟೆಯಲ್ಲಿತ್ತು 11 ಕೋಟಿ ಮೌಲ್ಯದ ಕೊಕೇನ್ +ಮುಂಬೈ, ಎ.1 (ಪಿಟಿಐ)– ಸುಮಾರು 11 ಕೋಟಿ ರೂ.ಮೌಲ್ಯದ 74 ಕೊಕೇನ್ ಕ್ಯಾಪ್ಸುಲ್‍ಗಳನ್ನು ತನ್ನ ಹೊಟ್ಟೆಯಲ್ಲಿ ಬಚ್ಚಿಟ್ಟುಕೊಂಡು ಸಾಗಿಸುತ್ತಿದ್ದ ಸಿಯೆರಾ ಲಿಯೋನ್ ಪ್ರಜೆಯೊಬ್ಬನನ್ನು ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. +1,108 ಗ್ರಾಂ ತೂಕದ ಡ್ರಗ್ ಕ್ಯಾಪ್ಸುಲ್‍ಗಳನ್ನು ಇಲ್ಲಿನ ಸರ್ಕಾರಿ ಜೆಜೆ ಆಸ್ಪತ್ರೆಯ ವೈದ್ಯರು ವ್ಯಕ್ತಿಯ ದೇಹದಿಂದ ಹೊರ ತೆಗೆದು ಪೊಲೀಸರಿ ನೀಡಿದ್ದಾರೆ ಎಂದು ಡಿಆರ್‍ಐ ಅಧಿಕಾರಿಗಳು ತಿಳಿಸಿದ್ದಾರೆ. +ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಮಾರ್ಚ್ 28 ರಂದು ನಗರಕ್ಕೆ ಆಗಮಿಸಿದ ನಂತರ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಂಡವು ವ್ಯಕ್ತಿಯನ್ನು ಬಂಧಿಸಿದೆ ಎಂದು ಕಳ್ಳಸಾಗಣೆ ವಿರೋಧಿ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. +ವಿಚಾರಣೆಯ ಸಮಯದಲ್ಲಿ, ನಿಷೇಧಿತ ಮಾದಕವಸ್ತುವನ್ನು ಭಾರತಕ್ಕೆ ನುಸುಳುವ ಪ್ರಯತ್ನದಲ್ಲಿ ತಾನು ಕೊಕೇನ್ ಕ್ಯಾಪ್ಸುಲ್‍ಗಳನ್ನು ಸೇವಿಸಿದ್ದೇನೆ ಎಂದು ವ್ಯಕ್ತಿ ಡಿಆರ್‍ಐ ಅಧಿಕಾರಿಗಳಿಗೆ ತಿಳಿಸಿದ್ದಾನೆ. +ನಂತರ ನ್ಯಾಯಾಲಯದ ಆದೇಶ ಪಡೆದು ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಂಡವು ಅವರ ಹೊಟ್ಟೆಯಿಂದ 74 ಕೊಕೇನ್ ಕ್ಯಾಪ್ಸುಲ್‍ಗಳನ್ನು ಹೊರತೆಗೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಂತರ ವ್ಯಕ್ತಿಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ ( ) ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಡಿಆರ್‍ಐ ಹೇಳಿಕೆ ತಿಳಿಸಿದೆ. +ಕಳೆದ ಮಾರ್ಚ್ 24 ರಂದು 19.79 ಕೋಟಿ ಮೌಲ್ಯದ 1,979 ಗ್ರಾಂ ಕೊಕೇನ್‍ನೊಂದಿಗೆ ಆಫ್ರಿಕನ್ ರಾಷ್ಟ್ರದ ಮಹಿಳೆಯನ್ನು ಬಂಧಿಸಲಾಗಿತ್ತು. ಶೂಗಳು, ಮಾಯಿಶ್ಚರೈಸರ್ ಮತ್ತು ಶಾಂಪೂ ಬಾಟಲಿಗಳು ಮತ್ತು ಆಂಟಿಪೆಸ್ರ್ಪಿರಂಟ್‍ಗಳಲ್ಲಿ ಮಾದಕವಸ್ತುವನ್ನು ಸಾಗಿಸಲಾಗುತ್ತಿತ್ತು. \ No newline at end of file diff --git a/eesanje/url_47_133_6.txt b/eesanje/url_47_133_6.txt new file mode 100644 index 0000000000000000000000000000000000000000..16d186f3ba2b3289dde6533098731cfcdd6c1a76 --- /dev/null +++ b/eesanje/url_47_133_6.txt @@ -0,0 +1,4 @@ +ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 30ರೂ.ಇಳಿಕೆ +ನವದೆಹಲಿ, ಏಪ್ರಿಲ್. 1-ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ,ಇದಲ್ಲದೆ 5 ಕೆಜಿ ಎಫ್‍ಟಿಎಲ್ (ಫ್ರೀ ಟ್ರೇಡ್ ಎಲ್‍ಪಿಜಿ)ಸಿಲಿಂಡರ್ ಬೆಲೆಯೂ ಕೂಡ 7.50 ರೂಪಾಯಿ ಕಡಿಮೆಯಾಗಿದ್ದು ಹೊಸ ಹಣಕಾಸು ವರ್ಷದ 2024-25 ಮೊದಲ ದಿನ ಎಲ್‍ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ಇದರಿಂದ ವಾಣಿಜ್ಯ ಗ್ಯಾಸ್ ಬಳಕೆದಾರರಿಗೆ ಸಿಹಿ ಸುದ್ದಿಯಾಗಿದೆ.ಈ ಪರಿಷ್ಕೃತ ದರ ಇಂದು (ಏಪ್ರಿಲ್ 01) ರಿಂದಲೇ ಅನ್ವಯವಾಗಲಿದೆ. +ದೇಶದ ಹಲವು ರಾಜ್ಯಗಳಲ್ಲಿ ತೆರಿಗೆ ಅನುಗುಣವಾಗಿ ದರ ಪರಸ್ಕರಣೆ ಮಾಡಲಾಗಿದ್ದು ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್1764.50 ರೂ. ಗಳಿಗೆ ಲಭ್ಯವಾಗಲಿದೆ. +ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‍ಬೆಲೆ 1830 ರೂಗೆ ಇಳಿದಿದೆ. 14 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. \ No newline at end of file diff --git a/eesanje/url_47_133_7.txt b/eesanje/url_47_133_7.txt new file mode 100644 index 0000000000000000000000000000000000000000..3217a1af0365b3a98e313b4b26593f7e6fa70647 --- /dev/null +++ b/eesanje/url_47_133_7.txt @@ -0,0 +1,7 @@ +ಸಂವಿಧಾನ ಉಳಿಸಲು ಅಲ್ಲ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇಂಡಿಯಾ ರ್‍ಯಾಲಿ : ಸುಧಾಂಶು ತ್ರಿವೇದಿ +ನವದೆಹಲಿ,ಮಾ.31-ಪ್ರಜಾಪ್ರಭುತ್ವವನ್ನು ರಕ್ಷಿಸಿ, ಕುಟುಂಬಗಳನ್ನು ಉಳಿಸಿ, ಭ್ರಷ್ಟಾಚಾರವನ್ನು ಮುಚ್ಚಿಹಾಕಿ ಎಂಬ ಕಾರಣಕ್ಕೆ ಇಂಡಿಯಾ ರಾಜಕೀಯ ಘಟಬಂಧನ್ ಬೃಹತ್ ರ್ಯಾಲಿ ನಡೆಸುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ. +ಬಿಜೆಪಿಯ ವಕ್ತಾರ ಸುಧಾಂಶು ತ್ರಿವೇದಿ ರ್ಯಾಲಿಯನ್ನು ಆಯೋಜಿಸುತ್ತಿರುವ ನಾಯಕರುಗಳ ವಿರುದ್ಧ ಭ್ರಷ್ಟಾಚಾರದ ಪ್ರಕರಣಗಳಿವೆ. ಕಾಂಗ್ರೆಸ್, ಡಿಎಂಕೆ, ಆರ್ಜೆಡಿ ಪಕ್ಷಗಳ ನಾಯಕರು ವಿವಿಧ ಹಗರಣಗಳಲ್ಲಿ ಬಂಧನಕ್ಕೊಳಗಾಗಿದ್ದಾರೆ. +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಕಾರಕ್ಕೆ ಬರುವ ಹಿಂದಿನಿಂದಲೂ ಈ ನಾಯಕರು ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಂತೆ ಮೋದಿ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಎಂಬ ಟೀಕೆ ಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು. +ಈ ಮೊದಲು ಅಣ್ಣಾ ಹಜಾರೆ ನೇತೃತ್ವದಲ್ಲಿ ಭಾರತ ಭ್ರಷ್ಟಾಚಾರದ ವಿರುದ್ಧ ಎಂಬ ಆಂದೋಲನ ನಡೆಯಿತು. ಇಂದು ಪ್ರತಿಯೊಬ್ಬರೂ ಭ್ರಷ್ಟಾಚಾರದ ಜೊತೆಯಲ್ಲಿ ಎಂಬ ಸಮಾವೇಶ ಮಾಡಲಾಗುತ್ತಿದೆ. ಕಳ್ಳರು, ಮೋಸಗಾರರ ಜೊತೆ ಕೈಜೋಡಿಸಿರುವ ನಾಯಕರು ಒಟ್ಟಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. +ಆಮ್ಆದ್ಮಿ ಪರವಾಗಿ ಜೊತೆಯಾಗಿ ಬಂದಿದ್ದಾರೆ ಎಂದು ಕಿಡಿಕಾರಿದರು. ಲಾಲೂ ಪ್ರಸಾದ್ ಯಾದವ್ ಹಲವು ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ಅವರೆಲ್ಲರೂ ತಮ್ಮ ಹಳೆಯ ಪಾಪಗಳನ್ನು ಮುಚ್ಚಿಡಲು ಬಯಸುತ್ತಿದ್ದಾರೆ. ರಾಮಮಂದಿರದ ನಿರ್ಮಾಣದ ವಿರುದ್ಧವಾಗಿ ಮಾತನಾಡಿದ್ದರು. ಕೆಲವರಂತೂ ಹಿಂದುತ್ವವನ್ನು ನಿರ್ಮೂಲನೆ ಮಾಡುವ ಹೇಳಿಕೆ ನೀಡಿದ್ದರು ಎಂದು ಸುಧಾಂಶು ತ್ರಿವೇದಿವಿವರಿಸಿದ್ದಾರೆ. +ಇಂತಹ ರಾಜಕೀಯ ಪಕ್ಷಗಳು ಜನರ ನಂಬಿಕೆ ಕಳೆದುಕೊಂಡರೆ ಬಿಜೆಪಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ವಿಶ್ವಾಸ ಹಾಗೂ ನಂಬಿಕೆಗೆ ಪಾತ್ರವಾಗಿದೆ. ಚುನಾವಣಾ ಕಾಲದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಇದನ್ನು ಸಹಿಸಲಾಗದೆ ವಿರೋಧಪಕ್ಷಗಳ ನಾಯಕರು ವಂಶಪಾರಂಪರ್ಯ ರಾಜಕಾರಣವನ್ನು ಮುಂದುವರೆಸಲು ಮತ್ತು ಭ್ರಷ್ಟಾಚಾರವನ್ನು ಮುಚ್ಚಿಟ್ಟುಕೊಳ್ಳಲು ಒಟ್ಟಾಗಿ ಸಮಾವೇಶ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. \ No newline at end of file diff --git a/eesanje/url_47_133_8.txt b/eesanje/url_47_133_8.txt new file mode 100644 index 0000000000000000000000000000000000000000..21eccb00d9df56470d1280d9041db884b4ea6cf3 --- /dev/null +++ b/eesanje/url_47_133_8.txt @@ -0,0 +1,10 @@ +400 ಸ್ಥಾನ ಗೆಲ್ಲುವ ಕನಸು ಕಾಣುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ : ಠಾಕ್ರೆ +ನವದೆಹಲಿ,ಮಾ.31-ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಕನಸು ಕಾಣುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಶಿವಸೇನೆಯ ಠಾಕ್ರೆ ಬಣದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ. +ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಘಟಬಂಧನ್‍ನ ಸಮಾವೇಶದಲ್ಲಿ ಮಾತನಾಡಿದ ಅವರು, ಸುಳ್ಳು ಆರೋಪದ ಮೇಲೆ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರವಾಗಿ ಅವರ ಪತ್ನಿ ಸುನೀತಾ, ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಅವರು ಹೋರಾಟ ನಡೆಸುತ್ತಿದ್ದಾರೆ. ಅವರ ಬೆಂಬಲಕ್ಕೆ ದೇಶದ ಎಲ್ಲಾ ಸಹೋದರರೂ ಇದ್ದಾರೆ ಎಂದು ಹೇಳಿದರು. +ಈ ಸಮಾವೇಶವನ್ನು ಬಿಜೆಪಿಯವರು ಕೊಲೆಗಡುಕರ ಕಾರ್ಯಕ್ರಮ ಎಂದಿದ್ದಾರೆ. ನೀವೆಲ್ಲಾ ಕೊಲೆಗಡುಕರೇ ಎಂದು ಪ್ರಶ್ನಿಸಿದ ಉದ್ಧವ್ ಠಾಕ್ರೆ, ರೈತರನ್ನು ಭಯೋತ್ಪಾದಕರು ಎಂದು ಭಾವಿಸಿ ದೆಹಲಿಗೆ ಬಾರದಂತೆ ತಡೆಯಲಾಗಿದೆ. ದೇಶಾದ್ಯಂತ ರೈತರು ಬಿಜೆಪಿಯನ್ನು ದೆಹಲಿಗೆ ಬರದಂತೆ ತಡೆಯಬೇಕಿದೆ ಎಂದರು. +ಬಿಜೆಪಿಗೆ ಸೇರಿದರೆ ಎಲ್ಲರೂ ಸ್ವಚ್ಛಗೊಳ್ಳುತ್ತಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರು ಪ್ರತಿಪಕ್ಷವನ್ನು ಹತ್ತಿಕ್ಕಲು ಮಾತ್ರ ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯ ಜೊತೆಗೆ ಇಡಿ, ಆದಾಯ ತೆರಿಗೆ, ಸಿಬಿಐ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. +ಇದು ಚುನಾವಣೆಯ ಪ್ರಚಾರದ ಸಭೆಯಲ್ಲ. ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಯುತ್ತಿರುವ ಹೋರಾಟ. ದೇಶಕ್ಕೆ ಇಂದು ಧಕ್ಕೆಯಾಗುತ್ತಿದೆ. ನಾವು ಬಲಿಷ್ಠ ದೇಶಕ್ಕಾಗಿ ಹೋರಾಡುತ್ತಿದ್ದೇವೆ. ಸರ್ವತೋಮುಖ ಅಭಿವೃದ್ಧಿ ಹಾಗೂ ಭಾವೈಕ್ಯತೆಯ ಸರ್ಕಾರ ಬೇಕಿದೆ ಎಂದರು. +ಇದೇ ವೇಳೆಯಲ್ಲಿ ಮಾತನಾಡಿದ ಜಮ್ಮು-ಕಾಶ್ಮೀರದ ಮೆಹಬೂಬಾ ಮುಫ್ತಿ, ಬಿಜೆಪಿ ಸಂವಿಧಾನ ಮತ್ತು ನಿಯಮಾವಳಿಗಳನ್ನು ಬದಿಗಿಟ್ಟು ಪ್ರಶ್ನೆ ಮಾಡುವವರನ್ನು ಜೈಲಿನಲ್ಲಿಡುತ್ತದೆ. ಜಮ್ಮು-ಕಾಶ್ಮೀರವನ್ನು ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದೆ. ಕೇಜ್ರಿವಾಲ್ ಅವರನ್ನು ಜೈಲಿಗೆ ಹಾಕಿದ್ದಾರೆ. ಅವರು ಬಿಜೆಪಿ ಸೇರಿದರೆ ಇದೇ ಮಾಧ್ಯಮಗಳು ಕೇಜ್ರಿವಾಲ್ ಪ್ರಾಮಾಣಿಕ ವ್ಯಕ್ತಿ ಎಂದು ಹೊಗಳಲಾರಂಭಿಸುತ್ತವೆ ಎಂದು ಹೇಳಿದರು. +ಬಿಜೆಪಿ ಚುನಾವಣೆಯ ಬಾಂಡ್ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ಮಾಡಿದೆ. ಆದರೆ ವಿರೋಧಪಕ್ಷಗಳನ್ನು ಭ್ರಷ್ಟರು ಎಂದು ಜನರನ್ನು ದಾರಿ ತಪ್ಪಿಸುತ್ತಿದೆ. ವಂಶಪಾರಂಪರ್ಯದ ಬಗ್ಗೆ ಮಾತನಾಡುವ ಬಿಜೆಪಿಯವರು ತಮ್ಮಲ್ಲಿರುವ ಕುಟುಂಬ ರಾಜಕಾರಣದ ಬಗ್ಗೆ ಸತ್ಯ ಮರೆಮಾಚುತ್ತಿದ್ದಾರೆ ಎಂದು ಆರೋಪಿಸಿದರು. +ಸುನೀತಾ ಕೇಜ್ರಿವಾಲ್ ಮಾತನಾಡಿ, ಅರವಿಂದ್ ಕೇಜ್ರಿವಾಲ್‍ರನ್ನು ಸುಳ್ಳು ಪ್ರಕರಣದಲ್ಲಿ ಜೈಲಿನಲ್ಲಿಡಲಾಗಿದೆ. ಅವರು ಜನರ ಪರವಾಗಿ ಕೆಲಸ ಮಾಡಿದ್ದೇ ತಪ್ಪು ಎಂಬಂತೆ ಬಿಂಬಿಸಲಾಗುತ್ತಿದೆ. ಅವರು ಸಿಂಹವಿದ್ದಂತೆ, ಹೆಚ್ಚು ದಿನ ಜೈಲಿನಲ್ಲಿಡಲು ಸಾಧ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿ ಬಲಿದಾನವಾದಂತೆ ತಮ್ಮ ಪತಿ ಅರವಿಂದ್ ಕೇಜ್ರಿವಾಲ್ ದೇಶಕ್ಕಾಗಿ ಮುಡುಪಾಗಿದ್ದಾರೆ ಎಂದರು. +ಇದೇ ವೇಳೆ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ರವಾನಿಸಿದ್ದ ಸಂದೇಶವನ್ನು ಸುನೀತಾ ಕೇಜ್ರಿವಾಲ್ ಓದಿ ಹೇಳಿದರು. ಈ ವೇಳೆ ಅವರು ಭಾವೋದ್ವೇಗಕ್ಕೆ ಒಳಗಾದ ಪ್ರಸಂಗವೂ ನಡೆಯಿತು.ಲೋಕಸಭಾ ಚುನಾವಣೆಯಲ್ಲಿ ಆಮ್‍ಆದ್ಮಿ ಪಕ್ಷ ನೀಡುವ ಭರವಸೆಗಳನ್ನು ಕೇಜ್ರಿವಾಲ್ ಪರವಾಗಿ ಸುನೀತಾ ಓದಿ ಹೇಳಿದರು.ಸಿಪಿಐಎಂಎಲ್‍ನ ದೀಪಂಕರ್ ಭಟ್ಟಾಚಾರ್ಯ ಮಾತನಾಡಿ, ಬಿಜೆಪಿ ಅತ್ಯಂತ ಭ್ರಷ್ಟ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದರು. \ No newline at end of file diff --git a/eesanje/url_47_133_9.txt b/eesanje/url_47_133_9.txt new file mode 100644 index 0000000000000000000000000000000000000000..4a629e5f151930977048f04906668edb394ca666 --- /dev/null +++ b/eesanje/url_47_133_9.txt @@ -0,0 +1,7 @@ +ಮನೆಗೆ ತೆರಳಿ ಎಲ್.ಕೆ.ಅಡ್ವಾಣಿಯವರಿಗೆ ಭಾರತರತ್ನ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು +ನವದೆಹಲಿ,ಮಾ.31-ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತರತ್ನವನ್ನು ಪ್ರದಾನ ಮಾಡಿದರು.ಅಡ್ವಾಣಿಯವರ ಮನೆಗೆ ತೆರಳಿದ ರಾಷ್ಟ್ರಪತಿಯವರು ಹಿರಿಯ ನಾಯಕರಿಗೆ ಗೌರವ ಸಲ್ಲಿಸಿದರು. ಈ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನ್‍ಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹಸಚಿವ ಅಮಿತ್ ಷಾ ಹಾಗೂ ಅಡ್ವಾಣಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. +ದೇಶದ ರಾಜಕಾರಣದಲ್ಲಿ ಅಡ್ವಾಣಿಯವರು 7 ದಶಕಗಳ ಕಾಲ ಅಚಲವಾದ ಸಮರ್ಪಣೆ ಮತ್ತು ವಿಭಿನ್ನತೆಯಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಇಂದು ರಾಷ್ಟ್ರಪತಿಯವರು ಭಾರತರತ್ನ ಪ್ರದಾನ ಮಾಡಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. +1927 ರಲ್ಲಿ ಕರಾಚಿಯಲ್ಲಿ ಜನಿಸಿದ ಅಡ್ವಾಣಿಯವರು, 1947 ರಲ್ಲಿ ರಾಷ್ಟ್ರ ವಿಭಜನೆಯ ಹಿನ್ನೆಲೆಯಲ್ಲಿ ಭಾರತಕ್ಕೆ ವಲಸೆ ಬಂದರು. ಸಾಂಸ್ಕøತಿಕ ರಾಷ್ಟ್ರೀಯತೆಯ ದೃಷ್ಟಿಯೊಂದಿಗೆ ಅವರು ದಶಕಗಳ ಕಾಲ ದೇಶದ ಉದ್ದಗಲಕ್ಕೂ ಶ್ರಮಿಸಿದರು. +ಸಾಮಾಜಿಕ-ರಾಜಕೀಯ ಭೂದೃಶ್ಯದಲ್ಲಿ ರೂಪಾಂತರವನ್ನು ತಂದರು. ತುರ್ತು ಪರಿಸ್ಥಿತಿಯಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕಿದಾಗ, ಸರ್ವಾಕಾರಿ ಧೋರಣೆಯ ವಿರುದ್ಧ ಅವಿರತವಾದ ಹೋರಾಟ ನಡೆಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ. +ಸಂಸದರಾಗಿ ಸಂವಾದಕ್ಕೆ ಅವರು ನೀಡಿದ ಒತ್ತು ಸಂಸದೀಯ ಸಂಪ್ರದಾಯಗಳನ್ನು ಪುಷ್ಟೀಕರಿಸಿದೆ. ಗೃಹ ಸಚಿವರಾಗಿರಲಿ ಅಥವಾ ಉಪಪ್ರಧಾನಿಯಾಗಿರಲಿ, ಅವರು ಯಾವಾಗಲೂ ಎಲ್ಲಕ್ಕಿಂತ ಹೆಚ್ಚಾಗಿ ರಾಷ್ಟ್ರೀಯ ಹಿತಾಸಕ್ತಿಗೆ ಆದ್ಯತೆ ನೀಡಿದರು, ಪಕ್ಷಾತೀತವಾಗಿ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿದರು. ಭಾರತದ ಸಾಂಸ್ಕøತಿಕ ಪುನರುತ್ಥಾನಕ್ಕಾಗಿ ಅವರ ಸುದೀರ್ಘ ಮತ್ತು ದಣಿವರಿಯದ ಹೋರಾಟವು ಸೂರ್ತಿದಾಯಕ ಎಂದಿದ್ದಾರೆ. +ಅಡ್ವಾಣಿಯವರ ಹೋರಾಟದ ಪ್ರತಿಫಲವಾಗಿಯೇ 2024 ರಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪುನರ್‍ನಿರ್ಮಾಣವಾಗಿದೆ ಎಂದು ತಿಳಿಸಲಾಗಿದ್ದು, ರಾಷ್ಟ್ರೀಯ ಕಾರ್ಯಸೂಚಿಯನ್ನು ಮರುರೂಪಿಸುವಲ್ಲಿ ಮತ್ತು ಅದನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವಲ್ಲಿ ಯಶಸ್ವಿಯಾದ ಬೆರಳೆಣಿಕೆಯ ನಾಯಕರಲ್ಲಿ ಅಡ್ವಾಣಿ ಪ್ರಮುಖರು.ಸ್ವಾತಂತ್ರ್ಯೋತ್ತರದ ರಾಜಕೀಯ ನಾಯಕತ್ವದಲ್ಲಿ ಅವರ ಸಾಧನೆಗಳು ಭಾರತದ ಪ್ರತಿಭೆ ಮತ್ತು ಅದರ ಅಂತರ್ಗತ ಸಂಪ್ರದಾಯಗಳ ಅತ್ಯುತ್ತಮ ಅಭಿವ್ಯಕ್ತಿಯಾಗಿವೆ ಎಂದು ವಿವರಿಸಲಾಗಿದೆ. \ No newline at end of file diff --git a/eesanje/url_47_134_1.txt b/eesanje/url_47_134_1.txt new file mode 100644 index 0000000000000000000000000000000000000000..aef12e369ffc9bf5f22a1faec4dcb295551be4ee --- /dev/null +++ b/eesanje/url_47_134_1.txt @@ -0,0 +1,6 @@ +ಕಾಂಗ್ರೆಸ್ ಪ್ರಣಾಳಿಕೆ ಸಿದ್ದಗೊಂಡ ಬೆನ್ನಲ್ಲೇ, ತರಾತುರಿಯಲ್ಲಿ ಬಿಜೆಪಿ ಪ್ರಣಾಳಿಕಾ ಸಮಿತಿ ರಚನೆ +ನವದೆಹಲಿ,ಮಾ.31-ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಗಾಗಿ ದೇಶದ ಜನರಿಗೆ ಭರವಸೆ ನೀಡುವ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡಲು ಮುಂದಾಗುತ್ತಿದ್ದಂತೆ ಬಿಜೆಪಿ ತರಾತುರಿಯಲ್ಲಿ ಪ್ರಣಾಳಿಕಾ ಸಮಿತಿಯನ್ನು ರಚಿಸಿದೆ.ಶನಿವಾರ ಬಿಜೆಪಿ 27 ಸದಸ್ಯರ ಪ್ರಣಾಳಿಕಾ ಸಮಿತಿಯನ್ನು ರಚಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಮಿತಿಯಲ್ಲಿ ಹಲವು ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಸದಸ್ಯರಾಗಿದ್ದಾರೆ.ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಂಚಾಲಕರಾಗಿದ್ದು, ಕೇಂದ್ರ ಸಚಿವ ಪಿಯುಷ್ ಘೋಯಲ್ ಸಹ ಸಂಚಾಲಕರಾಗಿದ್ದಾರೆ. +ಗುಜರಾತ್, ಅಸ್ಸಾಂ, ಮಧ್ಯಪ್ರದೇಶದ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಅಶ್ವಿನಿ ವೈಷ್ಣವ್, ಭೂಪೇಂದ್ರ ಯಾದವ್, ಕಿರಣ್ ರೀಜೀಜು, ಅರ್ಜುನ್ ಮುಂದ, ಅರ್ಜುನ್ ರಾಮ್ ಮೇಘವಾಲ್, ಸ್ಮೃತಿ ಇರಾನಿ, ರಾಜೀವ್ ಚಂದ್ರಶೇಖರ್ ಸದಸ್ಯರಾಗಿದ್ದಾರೆ. +ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಈಗಾಗಲೇ ಸಿದ್ಧಪಡಿಸಿದೆ. ಆ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ರಮೇಶ್, ಈಗಾಗಲೇ ನಮ್ಮ ಪಕ್ಷ ಪಂಚನ್ಯಾಯ್, 50 ಗ್ಯಾರಂಟಿಗಳನ್ನು ಮಾ.16 ರಂದು ಬಿಡುಗಡೆ ಮಾಡಿದೆ. ಇದನ್ನು ಆಧಾರವಾಗಿಟ್ಟುಕೊಂಡು ಮನೆಮನೆಗೆ ಗ್ಯಾರಂಟಿ ಎಂಬ ಪ್ರಚಾರ ನಡೆಯುತ್ತಿದೆ. ದೇಶಾದ್ಯಂತ 8 ಕೋಟಿ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಅಭಿಯಾನ ಏ.3 ರಿಂದ ಆರಂಭಗೊಳ್ಳಲಿದೆ. ಏ.5 ರಂದು ಪಕ್ಷದ ಪ್ರಣಾಳಿಕೆ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. +ಬಿಜೆಪಿ ಕೊನೆಕ್ಷಣದಲ್ಲಿ ತನ್ನ ಪ್ರಣಾಳಿಕೆ ತಯಾರಿಸಲು ಮುಂದಾಗಿದೆ. ಇದು ಕೇವಲ ಜನರನ್ನು ಮರಳು ಮಾಡುವ ಪ್ರಯತ್ನ. ಇದರಿಂದಾಗಿಯೇ ಬಿಜೆಪಿಗೆ ಜನರ ಮೇಲೆ ಎಷ್ಟು ಕಾಳಜಿ ಇದೆ ಎಂದು ಅರ್ಥವಾಗುತ್ತದೆ ಎಂದು ಕಿಡಿಕಾರಿದ್ದಾರೆ. +ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯನ್ನು ತಯಾರಿಸುವ ಮುನ್ನ ಹಲವು ತಿಂಗಳುಗಳ ಕಾಲ ವಿವಿಧ ಸಮಾಲೋಚನೆಯನ್ನು ನಡೆಸಿತ್ತು. ಇ-ಮೇಲ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಲಹೆಗಳನ್ನು ಪಡೆಯಲಾಗಿತ್ತು. ಭಾರತದ ಧ್ವನಿ ಎಂಬ ವೆಬ್‍ಸೈಟ್ ಮೂಲಕವೂ ಜನರಿಗೆ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ನಮ್ಮ ಪ್ರಣಾಳಿಕೆ ಜನರ ಧ್ವನಿಯಾಗಿದೆ. ಬಿಜೆಪಿಯವರದು ಮುಚ್ಚಿದ ಪೆಟ್ಟಿಗೆಯಲ್ಲಿನ ಕಡತವಾಗಿದೆ ಎಂದು ಲೇವಡಿ ಮಾಡಿದ್ದಾರೆ. \ No newline at end of file diff --git a/eesanje/url_47_134_10.txt b/eesanje/url_47_134_10.txt new file mode 100644 index 0000000000000000000000000000000000000000..a8a6aeef4874918fe73744e98f184796c9a1811f --- /dev/null +++ b/eesanje/url_47_134_10.txt @@ -0,0 +1,8 @@ +ಸಂಸತ್ ಚುನಾವಣೆ ಬಹಿಷ್ಕರಿಸಿದ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ +ಕೋಹಿಮಾ,ಮಾ.30-ಪ್ರತ್ಯೇಕ ರಾಜ್ಯದ ಬೇಡಿಕೆ ಈಡೇರಿಸುವವರೆಗೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ ಬೆದರಿಕೆ ಹಾಕಿದೆ. +ನಾಗಾಲ್ಯಾಂಡ್‍ನ ಆರು ಜಿಲ್ಲೆಗಳನ್ನು ಒಳಗೊಂಡಿರುವ ಪ್ರತ್ಯೇಕ ಆಡಳಿತ ಅಥವಾ ರಾಜ್ಯಕ್ಕೆ ನಮ್ಮ ಒತ್ತಾಯವಿದೆ. ಕೇಂದ್ರದಿಂದ ತನ್ನ ಬೇಡಿಕೆಯನ್ನು ಈಡೇರಿಸುವವರೆಗೆ ನಾಗಾಲ್ಯಾಂಡ್‍ನ ಏಕೈಕ ಲೋಕಸಭಾ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅದು ಹೇಳಿದೆ. +ತುಯೆನ್ಸಾಂಗ್‍ನಲ್ಲಿ 20 ಶಾಸಕರು ಮತ್ತು ವಿವಿಧ ಸಂಘಟನೆಗಳೊಂದಿಗೆ ನಡೆದ ಸಮನ್ವಯ ಸಭೆಯ ನಂತರ ಸಂಘಟನೆ ನಾಯಕರು ಏಪ್ರಿಲ್ 19 ರ ಸಂಸತ್ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದರು.20 ಶಾಸಕರನ್ನು ಒಳಗೊಂಡ ಪೂರ್ವ ನಾಗಾಲ್ಯಾಂಡ್ ಶಾಸಕರ ಒಕ್ಕೂಟವು ಈ ಹಿಂದೆ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸಂಘಟನೆಗ ಮನವಿ ಮಾಡಿತ್ತು. +ಸಾರ್ವಜನಿಕ ತುರ್ತುಸ್ಥಿತಿ ಸಮಯದಲ್ಲಿ, ಪ್ರದೇಶದ ಏಳು ನಾಗಾ ಬುಡಕಟ್ಟುಗಳ ಮುಖಂಡರುಗಳು ಯಾವುದೇ ಚುನಾವಣಾ ಪ್ರಚಾರಕ್ಕೆ ಅನುಮತಿ ನೀಡುತ್ತಿಲ್ಲ. +ಆರು ಜಿಲ್ಲೆಗಳ ಪ್ರಮುಖ ನಾಗಾ ಸಂಸ್ಥೆ ಮತ್ತು ಅದರ ಸಂಬಂ„ತ ಸಂಘಟನೆಗಳು, ಅದರ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಬೆಂಬಲಿಸಿ, ಕಳೆದ ವರ್ಷದ (ಫೆಬ್ರವರಿ 27) ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದವು ಆದರೆ ನಂತರ ಕೇಂದ್ರ ಗೃಹ ಸಚಿವ ಅಮಿತ್ ಅವರ ಭರವಸೆಯ ನಂತರ ಅದನ್ನು ಹಿಂತೆಗೆದುಕೊಂಡಿದ್ದವು. +ಇವರ ಬೇಡಿಕೆ ಈಡೇರಿಕೆಗೆ ಸ್ಪಂದಿಸಿದ ಕೇಂದ್ರ ಗೃಹ ಸಚಿವಾಲಯ ಕಳೆದ ವರ್ಷ ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದು, ಈಶಾನ್ಯ ಸಲಹೆಗಾರ ಎ.ಕೆ. ಮಿಶ್ರಾ ಅವರ ಬೇಡಿಕೆಯನ್ನು ಅಧ್ಯಯನ ಮಾಡಲು, ಮತ್ತು ಸಮಿತಿಯು ನಾಗಾಲ್ಯಾಂಡ್‍ಗೆ ಹಲವಾರು ಬಾರಿ ಭೇಟಿ ನೀಡಿ ಎಲ್ಲಾ ಕಡೆಯೊಂದಿಗೆ ಮಾತುಕತೆ ನಡೆಸಿತು. +ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಇತ್ತೀಚೆಗೆ ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರಕ್ಕೆ ಶಿಫಾರಸು ಮಾಡಿದೆ, ಪೂರ್ವ ಪ್ರದೇಶಕ್ಕೆ ಸೇರಿದ ಜನರಿಗೆ ಸ್ವಾಯತ್ತ ಪ್ರದೇಶವನ್ನು ಸ್ಥಾಪಿಸಬೇಕು ಎಂದು ಹೇಳಿದ್ದರು. \ No newline at end of file diff --git a/eesanje/url_47_134_11.txt b/eesanje/url_47_134_11.txt new file mode 100644 index 0000000000000000000000000000000000000000..41c3239b37a20e688f3d069d7d5bc2a907273eee --- /dev/null +++ b/eesanje/url_47_134_11.txt @@ -0,0 +1,7 @@ +ರೋಜಗಾರ್ ಕ್ರಾಂತಿಗೆ ನಾಂದಿ ಹಾಡಲಿದೆ ಕಾಂಗ್ರೆಸ್ ಗ್ಯಾರಂಟಿ : ಖರ್ಗೆ +ನವದೆಹಲಿ, ಮಾ.30 (ಪಿಟಿಐ) –ಉದ್ಯೋಗಾವಕಾಶಗಳನ್ನು ಹೆಚ್ಚಿಸಲು, ಉದ್ಯಮಶೀಲತೆಯನ್ನು ಸಕ್ರಿಯಗೊಳಿಸಲು ಮತ್ತು ಯುವಕರ ಆಕಾಂಕ್ಷೆಗಳನ್ನು ಸಾಕಾರಗೊಳಿಸುವ ಮೂಲಕ ಕಾಂಗ್ರೆಸ್ ರೋಜ್ಗಾರ್ ಕ್ರಾಂತಿಗೆ ನಾಂದಿ ಹಾಡಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ. +ಯುವಕರ ಭವಿಷ್ಯವು ಕತ್ತಲಿನಿಂದ ಉಜ್ವಲವಾಗುವುದನ್ನು ಕಾಂಗ್ರೆಸ್ ಖಾತರಿಪಡಿಸುತ್ತದೆ ಎಂದು ಹೇಳಿರುವ ಅವರು ಪಕ್ಷವು ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೊಳಿಸುವ ಯುವ ನ್ಯಾಯ ಭರವಸೆಗಳನ್ನು ನೀಡಲಾಗುವುದು ಎಂದು ಪುನರುಚ್ಚರಿಸಿದರು. +ಕಾಂಗ್ರೆಸ್ ಪಕ್ಷವು ಯುವ ನ್ಯಾಯ್ ಖಾತರಿಯ ಮೂಲಕ ರೋಜ್ಗಾರ್ ಕ್ರಾಂತಿ (ಉದ್ಯೋಗ ಕ್ರಾಂತಿ)ಗೆ ನಾಂದಿ ಹಾಡಲಿದೆ! ಉದ್ಯೋಗಾವಕಾಶಗಳನ್ನು ಹೆಚ್ಚಿಸಲು, ಉದ್ಯಮಶೀಲತೆಯನ್ನು ಸಕ್ರಿಯಗೊಳಿಸಲು ಮತ್ತು ನಮ್ಮ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸಲು ನಾವು ಕಾಂಕ್ರೀಟ್ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಎಕ್ಸ್ ಮಾಡಿದ್ದಾರೆ. +ಭಾರತಿ ಭರೋಸಾ ಗ್ಯಾರಂಟಿ ಅಡಿಯಲ್ಲಿ, ತಮ್ಮ ಪಕ್ಷವು ಉದ್ಯೋಗ ಕ್ಯಾಲೆಂಡರ್ ಪ್ರಕಾರ 30 ಲಕ್ಷ ಹೊಸ ಕೇಂದ್ರ ಸರ್ಕಾರದ ಉದ್ಯೋಗಗಳನ್ನು ನೀಡುತ್ತದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು. ಪೆಹ್ಲಿ ನೌಕ್ರಿ ಪಕ್ಕಿ ಅಂಗವಾಗಿ ಪಕ್ಷವು ಎಲ್ಲಾ ವಿದ್ಯಾವಂತ ಯುವಕರಿಗೆ ವರ್ಷಕ್ಕೆ 1 ಲಕ್ಷ ರೂ.ಗಳಂತೆ ಒಂದು ವರ್ಷದ ಅಪ್ರೆಂಟಿಸ್‍ಶಿಪ್ ಹಕ್ಕನ್ನು ನೀಡುತ್ತದೆ ಎಂದು ಖರ್ಗೆ ಹೇಳಿದರು. +ಪೇಪರ್ ಲೀಕ್ ಸೆ ಮುಕ್ತಿ ಖಾತ್ರಿಯಡಿ, ಎಲ್ಲಾ ಪೇಪರ್ ಸೋರಿಕೆಯನ್ನು ಸಂಪೂರ್ಣವಾಗಿ ಕೊನೆಗೊಳಿಸಲು ಪಕ್ಷವು ಕಾನೂನನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಪಕ್ಷವು ಉತ್ತಮ ಕೆಲಸದ ಪರಿಸ್ಥಿತಿಗಳು ಮತ್ತು ಗಿಗ್ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ಮತ್ತು ಯುವಕರಿಗೆ 5,000 ಕೋಟಿ ರೂಪಾಯಿಗಳ ಆರಂಭಿಕ ನಿ„ಯನ್ನು ಭರವಸೆ ನೀಡಿದೆ ಎಂದು ಖರ್ಗೆ ತಿಳಿಸಿದರು. +ನಾರಿ ನ್ಯಾಯ್ ಯುವ ನ್ಯಾಯ್ , ಶ್ರಮಿಕ್ ನ್ಯಾಯ್ , ಕಿಸಾನ್ ನ್ಯಾಯ್ ಮತ್ತು ಹಿಸ್ಸೆದಾರಿ ನ್ಯಾಯ್ ಎಂಬ ಐದು ನ್ಯಾಯಗಳ ಅಡಿಯಲ್ಲಿ 25 ಭರವಸೆಗಳ ಮೇಲೆ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣೆಯನ್ನು ಪಿಚ್ ಮಾಡಿದೆ. ಅಧಿಕಾರಕ್ಕೆ ಬಂದರೆ ಕೂಡಲೇ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_47_134_12.txt b/eesanje/url_47_134_12.txt new file mode 100644 index 0000000000000000000000000000000000000000..a4ccb3be0665002d4940b91ef787cebe6e8ef6b4 --- /dev/null +++ b/eesanje/url_47_134_12.txt @@ -0,0 +1,6 @@ +ಕಳೆದುಹೋದ ಪಾನ್‍ಕಾರ್ಡ್‍ನಿಂದ 46ಕೋಟಿ ರೂ. ವ್ಯವಹಾರ..! +ಗ್ವಾಲಿಯರ್,ಮಾ.30-ಪಾನ್ ಕಾರ್ಡ್ ದುರುಪಯೋಗದ ಪರಿಣಾಮ ವಿದ್ಯಾರ್ಥಿಯೊಬ್ಬನಿಗೆ 46 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಗ್ವಾಲಿಯರ್ ನಿವಾಸಿಯಾಗಿರುವ ವಿದ್ಯಾರ್ಥಿ ಪ್ರಮೋದ್ ಕುಮಾರ್ ದಂಡೋಟಿಯಾ ಎಂಬಾತನಿಗೆ ಐಟಿ ಇಲಾಖೆಯಿಂದ ನೋಟೀಸ್ ಬಂದಾಗಲೇ ನನ್ನ ಬ್ಯಾಂಕ್ ಖಾತೆಯಿಂದ 46 ಕೋಟಿ ರೂ.ಗಳ ವ್ಯವಹಾರ ನಡೆಸಿರುವುದು ಗೊತ್ತಾಗಿರುವುದು. +ತಕ್ಷಣ ಎಚ್ಚೆತ್ತುಕೊಂಡ ವಿದ್ಯಾರ್ಥಿ ನನ್ನ ಪಾನ್ ಕಾರ್ಡ್ ಕಳೆದುಹೋಗಿದೆ. ಅದನ್ನು ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಪಾನ್ ಕಾರ್ಡ್ ಮೂಲಕ ಕಂಪನಿಯನ್ನು ನೋಂದಾಯಿಸಲಾಗಿದೆ ಮತ್ತು ಮುಂಬೈ ಮತ್ತು ದೆಹಲಿಯಲ್ಲಿ 2021 ರಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆತ ದೂರಿನಲ್ಲಿ ತಿಳಿಸಿದ್ದಾನೆ. +ನಾನು ಗ್ವಾಲಿಯರ್‍ನಲ್ಲಿ ಕಾಲೇಜು ವಿದ್ಯಾರ್ಥಿಯಾಗಿದ್ದೇನೆ. ಆದಾಯ ತೆರಿಗೆ ಮತ್ತು ಜಿಎಸ್‍ಟಿಯ ಸೂಚನೆಯ ನಂತರ, ಮುಂಬೈ ಮತ್ತು ದೆಹಲಿಯಲ್ಲಿ 2021 ರಲ್ಲಿ ಕಾರ್ಯನಿರ್ವಹಿಸುತ್ತಿರುವ ನನ್ನ ಪಾನ್ ಕಾರ್ಡ್ ಮೂಲಕ ಕಂಪನಿಯೊಂದು ನೋಂದಾಯಿಸಲಾಗಿದೆ ಎಂದು ನನಗೆ ತಿಳಿಯಿತು. ಹೇಗೆ ಎಂದು ನನಗೆ ತಿಳಿದಿಲ್ಲ. ನನ್ನ ಪಾನ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಮತ್ತು ವಹಿವಾಟುಗಳನ್ನು ಹೇಗೆ ಮಾಡಲಾಗಿದೆ ಎಂಬುದೇ ತಿಳಿದಿಲ್ಲ ಎಂದಿದ್ದಾನೆ. +ಆದಾಯ ತೆರಿಗೆ ಇಲಾಖೆಯಿಂದ ಮಾಹಿತಿ ಪಡೆದ ಕೂಡಲೇ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು. ಬಳಿಕ ಹಲವು ಬಾರಿ ಪೊಲೀಸರಿಗೆ ದೂರು ನೀಡಲು ಯತ್ನಿಸಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಹೀಗಾಗಿ ಮತ್ತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ಮತ್ತೆ ದೂರು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. +ಯುವಕನಿಂದ ರೂ.46 ಕೋಟಿಗೂ ಹೆಚ್ಚು ಮೊತ್ತದ ವ್ಯವಹಾರವನ್ನು ತನ್ನ ಬ್ಯಾಂಕ್ ಖಾತೆಯಿಂದ ಮಾಡಲಾಗಿದೆ ಎಂದು ಅರ್ಜಿ ಸ್ವೀಕರಿಸಲಾಗಿದೆ, ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಪಾನ್ ಕಾರ್ಡ್ ದುರುಪಯೋಗಪಡಿಸಿಕೊಂಡಿದೆ, ಅದರ ಮೂಲಕ ಕಂಪನಿಯನ್ನು ನೋಂದಾಯಿಸಲಾಗಿದೆ ಮತ್ತು ಇಷ್ಟು ದೊಡ್ಡ ಮೊತ್ತದ ವ್ಯವಹಾರಗಳನ್ನು ಮಾಡಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‍ಪಿ) ಶಿಯಾಜ್ ಕೆಎಂ ತಿಳಿಸಿದ್ದಾರೆ. \ No newline at end of file diff --git a/eesanje/url_47_134_2.txt b/eesanje/url_47_134_2.txt new file mode 100644 index 0000000000000000000000000000000000000000..95c4cadc55a179c9ce7cd207cefdfb0f9db1df5f --- /dev/null +++ b/eesanje/url_47_134_2.txt @@ -0,0 +1,5 @@ +ಹುಟ್ಟುಹಬ್ಬದ ಕೇಕ್ ತಿಂದ 10 ವರ್ಷದ ಬಾಲಕಿ ಸಾವು +ನವದೆಹಲಿ, ಮಾ.31-ಪಂಜಾಬ್‍ನ ಪಟಿಯಾಲಾದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ತನ್ನ ಹುಟ್ಟುಹಬ್ಬದ ಕೇಕ್ ತಿಂದ ನಂತರ ಶಂಕಿತ ಆಹಾರ ವಿಷದಿಂದಾಗಿ ಸಾವನ್ನಪ್ಪಿದ್ದಾಳೆ. +ಕುಟುಂಬದವರ ಪ್ರಕಾರ ಮಾನ್ವಿ ಮತ್ತು ಆಕೆಯ ಸಹೋದರಿ ಹುಟ್ಟುಹಬ್ಬ ಆಚರಣೆಗಾಗಿ ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿ ತರಿಸಲಾಗಿದ್ದ ಕೇಕ್ ಅನ್ನು ತಿಂದಿದ್ದರು. ರಾತ್ರಿ ಅಸ್ವಸ್ಥರಾಗಿದ್ದರು. ವಾಂತಿಭೇದಿ ನಿಯಂತ್ರಣಕ್ಕೆ ಬಾರದೆ ನಿತ್ರಾಣರಾದ ಕಾರಣಕ್ಕೆ ಮುಂಜಾನೆ 3 ಗಂಟೆಗೆ ಅವರಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾನ್ವಿ ತಾತ ತಿಳಿಸಿದ್ದಾರೆ. +ಆಸ್ಪತ್ರೆಯಲ್ಲಿ ಮಾನ್ವಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕಿರಿಯ ಸಹೋದರಿ ತಕ್ಷಣ ವಾಂತಿ ಮಾಡಿಕೊಂಡಿದ್ದರಿಂದ ಬಹುಶಃ ಬದುಕುಳಿದಿರಬಹುದು ಎಂದು ಆಕೆಯ ಮನೆಯವರು ಹೇಳಿದ್ದಾರೆ. ಮಾನ್ವಿ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ. +ಕೇಕ್ ತಯಾರಿಸಿದವರ ವಿರುದ್ಧ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಹುಟ್ಟುಹಬ್ಬದ ಆಚರಣೆಯ ವಿಡಿಯೋದಲ್ಲಿ ಹುಡುಗಿಗೆ ಆಕೆಯ ಕುಟುಂಬ ಸದಸ್ಯರು ಕೇಕ್ ತಿನ್ನಿಸುತ್ತಿರುವುದನ್ನು ತೋರಿಸಲಾಗಿದೆ. ಕೇಕ್ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_134_3.txt b/eesanje/url_47_134_3.txt new file mode 100644 index 0000000000000000000000000000000000000000..ca62741af0ed5ee8029118982d5fd799adea718d --- /dev/null +++ b/eesanje/url_47_134_3.txt @@ -0,0 +1,5 @@ +ಪತ್ನಿ ಆತ್ಮಹತ್ಯೆ ಸುದ್ದಿಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ಪತಿ +ಮೈಸೂರು,ಮಾ31-ಸಾವಿಗೆ ಶರಣಾದ ಪತ್ನಿಯ ಸಾವಿನ ಸುದ್ದಿ ತಿಳಿದು ಪತಿ ಶಾಕ್‍ಗೆ ಒಳಗಾಗಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಂಪುರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(52) ಸಾವಿಗೆ ಶರಣಾದ ಪತ್ನಿಯಾಗಿದ್ದು ಪತಿ ಮಂಜುನಾಥ್(58) ಹೃದಯ ಘಾತದಿಂದ ಸಾವನ್ನಪ್ಪಿದ್ದಾರೆ. +ಕಳೆದ ಹಲವು ದಿನಗಳಿಂದ ವಿಜಯಲಕ್ಷ್ಮಿ ಅನಾರೋಗ್ಯದಿಂದ ಬಳಲುತ್ತಿದ್ದರು.ಚಿಕಿತ್ಸೆಯಿಂದ ಗುಣಮುಖರಾಗದ ಹಿನ್ನಲೆ ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. +ಪತ್ನಿಯ ಅಗಲಿಕೆ ಸುದ್ದಿ ಅರಿತ ಪತಿ ಮಂಜುನಾಥ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಮಂಜುನಾಥ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಾವಿನಲ್ಲೂ ಪತ್ನಿಯ ಜೊತೆ ಪತಿ ಒಂದಾಗಿದ್ದಾರೆ. +ಅಶೋಕಾಪುರಂ ನಲ್ಲಿರುವ ರೈಲ್ವೆ ವರ್ಕ್ ಷಾಪ್ ನಲ್ಲಿ ಮಂಜುನಾಥ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ.ದಂಪತಿಗೆ ಇಬ್ಬರು ಮಕ್ಕಳಿದ್ದ ಮಗ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಗಳು ಮೈಸೂರಿನಲ್ಲಿ ವಿಧ್ಯಾಭ್ಯಾಸ ಮುಂದೆವರೆಸಿದ್ದಾರೆ.ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. \ No newline at end of file diff --git a/eesanje/url_47_134_4.txt b/eesanje/url_47_134_4.txt new file mode 100644 index 0000000000000000000000000000000000000000..1cbdc89ddd647d03bdf6d7bdcb9209334a431c07 --- /dev/null +++ b/eesanje/url_47_134_4.txt @@ -0,0 +1,6 @@ +ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ಬಿದ್ದು ಉಸಿರುಗಟ್ಟಿ ಕುಟುಂಬದ 4 ಮಂದಿ ಸಾವು +ದ್ವಾರಕಾ, ಮಾ.31 (ಪಿಟಿಐ) –ಗುಜರಾತ್‍ನ ದೇವಭೂಮಿ ದ್ವಾರಕಾ ನಗರದಲ್ಲಿ ಇಂದು ಬೆಳಿಗ್ಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ತೀವರ ಹೊಗೆಯಿಂದ ಶಿಶು ಸೇರಿದಂತೆ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. +ದ್ವಾರಕಾ ನಗರದ ಆದಿತ್ಯ ರಸ್ತೆಯಲ್ಲಿರುವ ಮನೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಕುಟುಂಬ ಸದಸ್ಯರು ಮಲಗಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಪಟೇಲ್ ತಿಳಿಸಿದ್ದಾರೆ. +ಮೃತರನ್ನು ಪವನ್ ಉಪಾಧ್ಯಾಯ (39), ಅವರ ಪತ್ನಿ ತಿಥಿ (29), ಮಗಳು ಧ್ಯಾನ ಮತ್ತು ತಾಯಿ ಭವಾನಿಬೆನ್ (69) ಎಂದು ಗುರುತಿಸಲಾಗಿದೆ ಎರಡಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿದೆ.ನಂತರ ಮನೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ ಇದರಿಂದಾಗಿ ಕುಟುಂಬ ಸದಸ್ಯರು ನಂತರ ಹೊರಗೆ ಬರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. +ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮನೆ ಪ್ರವೀಶಿಸಿದ್ದಾಗ ದಂಪತಿಗಳು, ಅವರ 8 ತಿಂಗಳ ಮಗಳು ಮತ್ತು ಮನೆಯ ಮೊದಲ ಮಹಡಿಯಲ್ಲಿ ಹಿರಿಯ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡುಹಿಡಿದರು.ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಮನೆಯ ನೆಲ ಅಂತಸ್ತಿನ ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿಯ ಅಜ್ಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.ಅಕ ಬಿಸಿಯಾದ ನಂತರ ಏರ್ ಕಂಡಿಷನರ್‍ನಲ್ಲಿ ಸ್ಪೋಟಗೊಂಡ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ವಿವಿಜ್ಞಾನ ತಜ್ಞರು ಬೆಂಕಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತೊಡಗಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_134_5.txt b/eesanje/url_47_134_5.txt new file mode 100644 index 0000000000000000000000000000000000000000..3d286eb0b5ce4cccab1a020f4780e4666b6ee60e --- /dev/null +++ b/eesanje/url_47_134_5.txt @@ -0,0 +1,6 @@ +ವನ್ಯಜೀವಿ ಟ್ರೋಫಿಯನ್ನು ಅಕ್ರಮವಾಗಿ ಸಾಗಿಸಲೆತ್ನಿಸಿದ ಎನ್‌ಆರ್‌ಐ ಬಂಧನ +ನವದೆಹಲಿ,ಮಾ.3-ವನ್ಯಜೀವಿ ಟ್ರೋಫಿಯನ್ನು ದೇಶದಿಂದ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ ಅನಿವಾಸಿ ಭಾರತೀಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 60 ವರ್ಷದ ಪಾಲ್ಜಿತ್ಸಿಂಗ್ ಪಾಲ್ ಲಾಲ್ವಾನಿ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. +ಪಾಲ್ಜಿತ್ ಸಿಂಗ್ ಪಾಲ್ ಲಾಲ್ವಾನಿ ಬಳಿ ಇದ್ದ ಟ್ರೋಫಿಯನ್ನು ಬೇಟೆಯಾಡಿದ ಪ್ರಾಣಿಯ ತಲೆ ಅಥವಾ ಚರ್ಮದಿಂದ ತಯಾರಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯಿದೆಯ ಅಡಿಯಲ್ಲಿ ಒಳಗೊಂಡಿರುವ ಹುಲ್ಲೇ ಎಂಬ ಪ್ರಾಣಿಯ ಅಂಗಗಳಿಂದ ಟ್ರೋಫಿ ತಯಾರಿಸಲಾಗಿರುವುದ ಅನುಮಾನ ವ್ಯಕ್ತವಾಗಿದೆ. +ಅರಣ್ಯ ಮತ್ತು ವನ್ಯಜೀವಿ ಇಲಾಖೆ ನೀಡಿದ ದೂರಿನ ಮೇರೆಗೆ ದೆಹಲಿ ಪೊಲೀಸರು ಮಾರ್ಚ್ 26 ರಂದು ಅಮೆರಿಕದ ನ್ಯೂಯಾರ್ಕ್ ನಿವಾಸಿ ಲಾಲ್ವಾನಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. +ವಿಮಾನ ನಿಲ್ದಾಣದಲ್ಲಿ ಲಾಲ್ವಾನಿ ಅವರ ಸಾಮಾನು ಸರಂಜಾಮುಗಳನ್ನು ಸ್ಕ್ಯಾನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ ಮತ್ತು ಅವರ ಸೂಟ್ಕೇಸ್ ಒಂದರಲ್ಲಿ ಅನುಮಾನಾಸ್ಪದ ವಸ್ತುವನ್ನು ಗಮನಿಸಲಾಯಿತು ಎಂದು ಎಫ್ ಐಆರ್ನಲ್ಲಿ ತಿಳಿಸಲಾಗಿದೆ. ಲಾಲ್ವಾನಿ ಅವರನ್ನು ಆರಂಭದಲ್ಲಿ ಕಸ್ಟಮ್ಸ ಆಕ್ಟ್ 1962 ರ ಅಡಿಯಲ್ಲಿ ದಾಖಲಿಸಲಾಯಿತು, ಆದರೆ ನಂತರ ಪ್ರಕರಣವನ್ನು ವನ್ಯಜೀವಿ ಇಲಾಖೆಗೆ ವರ್ಗಾಯಿಸಲಾಗಿದೆ. +ಲಾಲ್ವಾನಿ ಅವರನ್ನು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಸ್ಟಮ್ಸ್ ಕಾಯಿದೆಗಳ ಅಡಿಯಲ್ಲಿ ಜಾಮೀನು ನೀಡಲಾಗಿದೆ. ಈ ಕಾಯಿದೆಯು ವನ್ಯಜೀವಿ (ರಕ್ಷಣೆ) ಕಾಯಿದೆಯ ಹಲವಾರು ವಿಭಾಗಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_134_6.txt b/eesanje/url_47_134_6.txt new file mode 100644 index 0000000000000000000000000000000000000000..dad05da6f88f9492c0f2719f67827bc92d79d363 --- /dev/null +++ b/eesanje/url_47_134_6.txt @@ -0,0 +1,5 @@ +ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಮುರ್ಮು +ನವದೆಹಲಿ, ಮಾ 30 (ಪಿಟಿಐ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮಾಜಿ ಪ್ರಧಾನಿಗಳಾದ ಪಿ ವಿ ನರಸಿಂಹರಾವ್ ಮತ್ತು ಚೌಧರಿ ಚರಣ್ ಸಿಂಗ್, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮಾಜಿ ಮುಖ್ಯಮಂತ್ರಿಗಳಾಗಿದದ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಮೃತರ ಕುಟುಂಬ ವರ್ಗದವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. +ಮಾಜಿ ಪ್ರಧಾನಿ ರಾವ್ ಅವರ ಪುತ್ರ ಪಿ ವಿ ಪ್ರಭಾಕರ್ ರಾವ್ ಅವರು ರಾಷ್ಟ್ರಪತಿಗಳಿಂದ ತಮ್ಮ ತಂದೆಗೆ ಪ್ರದಾನ ಮಾಡಿದ ಪ್ರಶಸ್ತಿಯನ್ನು ಸ್ವೀಕರಿಸಿದರು.ಸಿಂಗ್ ಅವರ ಮೊಮ್ಮಗ ಮತ್ತು ರಾಷ್ಟ್ರೀಯ ಲೋಕದಳ (ಆರ್ಎಲ್ಡಿ) ಅಧ್ಯಕ್ಷ ಜಯಂತ್ ಚೌಧರಿ ಅವರು ಮುರ್ಮು ಅವರಿಂದ ಗೌರವವನ್ನು ಸ್ವೀಕರಿಸಿದರು. +ಸ್ವಾಮಿನಾಥನ್ ಅವರ ಪುತ್ರಿ ನಿತ್ಯಾ ರಾವ್ ಮತ್ತು ಠಾಕೂರ್ ಅವರ ಪುತ್ರ ರಾಮ್ ನಾಥ್ ಠಾಕೂರ್ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು. ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. +ಸರ್ಕಾರವು ಈ ವರ್ಷ ಐದು ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದೆ, ಇದರಲ್ಲಿ ಒಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) „ೀಮಂತ ಮತ್ತು ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಸೇರಿದೆ. \ No newline at end of file diff --git a/eesanje/url_47_134_7.txt b/eesanje/url_47_134_7.txt new file mode 100644 index 0000000000000000000000000000000000000000..7a7c18621a95bcd2d2223b9c6200081b03c7d58e --- /dev/null +++ b/eesanje/url_47_134_7.txt @@ -0,0 +1,4 @@ +ಇವಿಎಂ ತಿದ್ದಲು ಲಾಕ್‌ಡೌನ್ ಘೋಷಣೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದ ವ್ಯಕ್ತಿ ಬಂಧನ +ತಿರುವನಂತಪುರಂ,ಮಾ.30-ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿದ್ದಲು ಮೂರು ವಾರಗಳ ಕಾಲ ದೇಶದಲ್ಲಿ ಲಾಕ್ಡೌನ್ ಘೋಷಿಸಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡಿದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. +ಬಂಧಿತ ವ್ಯಕ್ತಿ ಎಂವಿ ಶರಫುದ್ದೀನ್ ಎಂಬಾತನನ್ನು ಮಲಪ್ಪುರಂ ಜಿಲ್ಲೆಯವರು ಎಂದು ರಾಜ್ಯ ಪೊಲೀಸ್ ಮಾಧ್ಯಮ ಕೋಶ ಹೇಳಿಕೆಯಲ್ಲಿ ತಿಳಿಸಿದೆ. ಆ ವ್ಯಕ್ತಿ ತನ್ನ ಪ್ರಚಾರದ ಭಾಗವಾಗಿ ಕೋವಿಡ್ -19 ಲಾಕ್ಡೌನ್ ಸಮಯದಲ್ಲಿ ಪ್ರಕಟವಾದ ಸುದ್ದಿಯ ಸ್ಕ್ರೀನ್ಶಾಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಕೇರಳ ಪೊಲೀಸ್ನ ಕೊಚ್ಚಿ ಸೈಬರ್ಡೋಮ್ ಶಾಖೆಯು ನಡೆಸಿದ ಸಾಮಾಜಿಕ ಮಾಧ್ಯಮ ಗಸ್ತು ಸಮಯದಲ್ಲಿ ಇದು ಪತ್ತೆಯಾಗಿದೆ ಎಂದು ಹೇಳಿಕೆ ತಿಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಪೊಸ್ಟ್ ಮಾಡುವ ಮತ್ತು ಹರಡುವವರನ್ನು ಪತ್ತೆಹಚ್ಚಲು ಸೈಬರ್ ವಿಭಾಗದ ನೇತೃತ್ವದಲ್ಲಿ ಸೈಬರ್ ಪೊಲೀಸ್ ಪ್ರಧಾನ ಕಚೇರಿ, ಎಲ್ಲಾ ಶ್ರೇಣಿಗಳು ಮತ್ತು ಎಲ್ಲಾ ಪೊಲೀಸ್ ಜಿಲ್ಲೆಗಳಲ್ಲಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಕೋಶಗಳನ್ನು ರಚಿಸಲಾಗಿದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_134_8.txt b/eesanje/url_47_134_8.txt new file mode 100644 index 0000000000000000000000000000000000000000..c1f9f6d1f40c8b6187587ddd175959f6e5c2b6b7 --- /dev/null +++ b/eesanje/url_47_134_8.txt @@ -0,0 +1,4 @@ +ದೆಹಲಿಯ ಮತ್ತೊಬ್ಬ ಸಚಿವರಿಗೆ ಇಡಿ ನೋಟೀಸ್ +ನವದೆಹಲಿ, ಮಾ.30 (ಪಿಟಿಐ) :ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ಇಂದು ವಿಚಾರಣೆಗೆ ಕರೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ನಜಾಫ್ ಗಢದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಗಹ್ಲೋಟ್ (49), ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದಲ್ಲಿ ಸಾರಿಗೆ, ಗೃಹ ಮತ್ತು ಕಾನೂನು ಸಚಿವರಾಗಿದ್ದಾರೆ.ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳುವಂತೆ ಗಹ್ಲೋಟ್ಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ಈ ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಈ ಹಿಂದೆಯೇ ಇಡಿ ಬಂಧಿಸಿದ್ದು, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. \ No newline at end of file diff --git a/eesanje/url_47_134_9.txt b/eesanje/url_47_134_9.txt new file mode 100644 index 0000000000000000000000000000000000000000..a38dbecdb6ee4eea103c3d72f09169170c405731 --- /dev/null +++ b/eesanje/url_47_134_9.txt @@ -0,0 +1,7 @@ +ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ +ನವದೆಹಲಿ, ಮಾ.30 (ಪಿಟಿಐ) :ಹದಿನಾಲ್ಕು ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲ ಪಡೆಯುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಪರಿಹಾರ ನೀಡುವ ಬದಲು ಸರಕಾರ ಜನರನ್ನು ಏಕೆ ಸಾಲದಲ್ಲಿ ಮುಳುಗಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ. +ಕಳೆದ ತಿಂಗಳು ತಮ್ಮ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಏಪ್ರಿಲ್ 1 ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದಲ್ಲಿ ಆದಾಯ ಕೊರತೆಯನ್ನು ಪೂರೈಸಲು ದಿನಾಂಕದ ಭದ್ರತೆಗಳನ್ನು ನೀಡುವ ಮೂಲಕ 14.13 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿ ಘೋಷಿಸಿರುವುದನ್ನು ಪ್ರಿಯಾಂಕಾ ಪ್ರಶ್ನಿಸಿದ್ದಾರೆ. +ಎಕ್ಸ್ನಲ್ಲಿ ಹಿಂದಿಯಲ್ಲಿ ಬರೆದ ಪೊಸ್ಟ್ನಲ್ಲಿ ಗಾಂಧಿ ಅವರು, ಪ್ರಸ್ತುತ ಹಣಕಾಸು ವರ್ಷದಲ್ಲಿ ಸರ್ಕಾರವು 14 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಸಾಲವನ್ನು ಪಡೆಯಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಏಕೆ?ಸ್ವಾತಂತ್ರ್ಯದ ನಂತರ 2014 ರವರೆಗಿನ 67 ವರ್ಷಗಳಲ್ಲಿ ದೇಶದ ಒಟ್ಟು ಸಾಲವು 55 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರವು ಅದನ್ನು 205 ಲಕ್ಷ ಕೋಟಿ ರೂಪಾಯಿಗಳಿಗೆ ಹೆಚ್ಚಿಸಿದೆ ಎಂದು ಅವರು ಆರೋಪಿಸಿದ್ದಾರೆ. +ಇಂದು, ದೇಶದ ಪ್ರತಿಯೊಬ್ಬ ಪ್ರಜೆಯು ಸರಾಸರಿ 1.5 ಲಕ್ಷ ರೂ. ಸಾಲವನ್ನು ಹೊಂದಿದ್ದಾನೆ. ಈ ಹಣವನ್ನು ರಾಷ್ಟ್ರ ನಿರ್ಮಾಣದ ಯಾವ ಅಂಶಕ್ಕಾಗಿ ಬಳಸಲಾಗಿದೆ? ಎಂದು ಮೈಕ್ರೋಬ್ಲಾಗಿಂಗ್ ವೇದಿಕೆಯಲ್ಲಿ ಗಾಂಧಿ ಪ್ರಶ್ನಿಸಿದ್ದಾರೆ. +ಉದ್ಯೋಗಗಳು ದೊಡ್ಡ ಪ್ರಮಾಣದಲ್ಲಿ ಸೃಷ್ಟಿಯಾಗಿದೆಯೇ ಅಥವಾ ಉದ್ಯೋಗಗಳು ಕಣ್ಮರೆಯಾಗಿವೆಯೇ ಎಂದು ಕೇಳಿರುವ ಅವರು, ರೈತರ ಆದಾಯ ದ್ವಿಗುಣಗೊಂಡಿದೆಯೇ? ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಹೊಸ ರೂಪ ನೀಡಲಾಗಿದೆಯೇ? ಸಾರ್ವಜನಿಕ ವಲಯವನ್ನು ಬಲಪಡಿಸಲಾಗಿದೆಯೇ ಅಥವಾ ದುರ್ಬಲಗೊಳಿಸಲಾಗಿದೆಯೇ? ದೊಡ್ಡ ಕಾರ್ಖಾನೆಗಳು ಮತ್ತು ಕೈಗಾರಿಕೆಗಳನ್ನು ಸ್ಥಾಪಿಸಲಾಗಿದೆಯೇ? ಎಂದು ಕೇಳಿದ್ದಾರೆ. ಇದು ಸಂಭವಿಸದಿದ್ದರೆ, ಆರ್ಥಿಕತೆಯ ಪ್ರಮುಖ ಕ್ಷೇತ್ರಗಳು ದುರವಸ್ಥೆಯ ಸ್ಥಿತಿಯಲ್ಲಿದ್ದರೆ, ಕಾರ್ಮಿಕ ಶಕ್ತಿ ಕುಸಿದಿದ್ದರೆ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನಾಶವಾಗಿದ್ದರೆ,? ಹಾಗಾದರೆ ಈ ಹಣ ಎಲ್ಲಿ ಹೋಯಿತು ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನಿಸಿದರು. +ಯಾರಿಗೆ ಖರ್ಚಾಗಿದೆ? ಇದರಲ್ಲಿ ಎಷ್ಟು ಹಣ ಬರೆಯಲಾಗಿದೆ? ದೊಡ್ಡ ಕೋಟ್ಯಾ„ಪತಿಗಳ ಸಾಲ ಮನ್ನಾಕ್ಕೆ ಎಷ್ಟು ಹಣ ಖರ್ಚು ಮಾಡಲಾಗಿದೆ? ಈಗ ಕೇಂದ್ರವು ಸಾಲ ಮಾಡಲು ತಯಾರಿ ನಡೆಸುತ್ತಿರುವಾಗ, ಕಳೆದ 10 ವರ್ಷಗಳಲ್ಲಿ ನಿರುದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಬಿಕ್ಕಟ್ಟಿನ ಹೊರೆ ಹೆಚ್ಚುತ್ತಲೇ ಇರುವಾಗ ಬಿಜೆಪಿ ಸರ್ಕಾರ ಜನರಿಗೆ ಪರಿಹಾರ ನೀಡುವ ಬದಲು ಅವರನ್ನು ಸಾಲದ ಸುಳಿಯಲ್ಲಿ ಮುಳುಗಿಸುತ್ತಿರುವುದು ಏಕೆ ಎಂದು ಅವರು ಕೇಳಿದ್ದಾರೆ. \ No newline at end of file diff --git a/eesanje/url_47_135_1.txt b/eesanje/url_47_135_1.txt new file mode 100644 index 0000000000000000000000000000000000000000..b6800813cdc5d4d54f62bce4aa41804a7c08eab5 --- /dev/null +++ b/eesanje/url_47_135_1.txt @@ -0,0 +1,7 @@ +ಕಡಲ್ಗಳ್ಳರಿಂದ 23 ಪಾಕ್ ಪ್ರಜೆಗಳನ್ನು ರಕ್ಷಿಸಿದ ಭಾರತೀಯ ನೌಕಾಪಡೆ +ನವದೆಹಲಿ,ಮಾ.30-ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ನೌಕಾಪಡೆಯು 12 ಗಂಟೆಗಳ ಕಾಲ ನಡೆದ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯಲ್ಲಿ ಇರಾನ್ ಮೀನುಗಾರಿಕಾ ಹಡಗು ಮತ್ತು 23 ಪಾಕಿಸ್ತಾನಿ ಪ್ರಜೆಗಳ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. +ಮಾ. 28 ರಂದು ತಡರಾತ್ರಿ ಇರಾನಿನ ಮೀನುಗಾರಿಕಾ ನೌಕೆ ಅಲ-ಕಂಬಾರ್ 786 ನಲ್ಲಿ ಸಂಭಾವ್ಯ ಕಡಲ್ಗಳ್ಳತನ ಘಟನೆಯ ಒಳಹರಿವಿನ ಆಧಾರದ ಮೇಲೆ, ಎರಡು ಭಾರತೀಯ ನೌಕಾಪಡೆಯ ಹಡಗುಗಳು ಪಾಕ್ ಪ್ರಜೆಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. +12 ಗಂಟೆಗಳಿಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಂತರ ಹಡಗಿನಲ್ಲಿದ್ದ ಕಡಲ್ಗಳ್ಳರನ್ನು ಶರಣಾಗುವಂತೆ ಸೂಚಿಸಲಾಯಿತು. ಅವರು ಶರಣಾದ ನಂತರ 23 ಪಾಕಿಸ್ತಾನಿ ಪ್ರಜೆಗಳನ್ನು ಒಳಗೊಂಡಿರುವ ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ನೌಕಾಪಡೆ ಹೇಳಿದೆ. +ನೌಕೆಯು ಹಿಂದೂ ಮಹಾಸಾಗರದ ಯೆಮೆನ್ ದ್ವೀಪವಾದ ಸೊಕೊಟ್ರಾದ ನೈಋತ್ಯಕ್ಕೆ ಸುಮಾರು 90 ನಾಟಿಕಲ್ ಮೈಲುಗಳಷ್ಟು ದೂರದಲ್ಲಿದ್ದು ಒಂಬತ್ತು ಶಾಸ್ತ್ರಸಜ್ಜಿತ ಕಡಲ್ಗಳ್ಳರು ಹಡಗನ್ನು ಲೂಟಿ ಮಾಡಲು ನಿರ್ಧರಿಸಿದ್ದರು.ಈ ತಿಂಗಳ ಆರಂಭದಲ್ಲಿ, ಭಾರತೀಯ ನೌಕಾಪಡೆಯು ಮತ್ತೊಂದು ಧೈರ್ಯಶಾಲಿ ಕಾರ್ಯಾಚರಣೆಯನ್ನು ನಡೆಸಿತ್ತು ಮತ್ತು ಕಡಲ್ಗಳ್ಳರು ದಾಳಿ ಮಾಡಿದಾಗ ಭಾರತೀಯ ಕರಾವಳಿ ತೀರದಿಂದ ಸುಮಾರು 2,600 ಕಿಮೀ ದೂರದಲ್ಲಿ ಸಾಗುತ್ತಿದ್ದ ರುಯೆನ್ ಎಂಬ ಹಡಗನ್ನು ತಡೆಹಿಡಿಯಿತು. ನೌಕಾಪಡೆಯು ಕಡಲುಗಳ್ಳರ ಹಡಗನ್ನು ಮಾಪನಾಂಕ ನಿರ್ಣಯದ ಕ್ರಮಗಳ ಮೂಲಕ ನಿಲ್ಲಿಸಲು ಒತ್ತಾಯಿಸಿತು. +40 ಗಂಟೆಗಳ ರಕ್ಷಣಾ ಕಾರ್ಯಾಚರಣೆಯಲ್ಲಿ, ಐಎನ್‍ಎಸ್ ಕೋಲ್ಕತ್ತಾ ಎಲ್ಲಾ 35 ಕಡಲ್ಗಳ್ಳರನ್ನು ಯಶಸ್ವಿಯಾಗಿ ಶರಣಾಗುವಂತೆ ಒತ್ತಾಯಿಸಿತು ಮತ್ತು ಯಾವುದೇ ಗಾಯಗಳಿಲ್ಲದೆ ಹಡಗಿನಿಂದ 17 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿತ್ತು. +ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ಕಡಲ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರೀಯತೆಯನ್ನು ಲೆಕ್ಕಿಸದೆ ಸಮುದ್ರಯಾನಗಾರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_135_10.txt b/eesanje/url_47_135_10.txt new file mode 100644 index 0000000000000000000000000000000000000000..a4c5954e7ca97818e1a28841b2756e694c8a8151 --- /dev/null +++ b/eesanje/url_47_135_10.txt @@ -0,0 +1,5 @@ +300 ಅಡಿ ಆಳದ ಕಮರಿಗೆ ಕಾರು ಉರುಳಿ ಬಿದ್ದು 10 ಮಂದಿ ಸಾವು +ಬನಿಹಾಲ್/ಜಮ್ಮು, ಮಾ.29-ಜಮ್ಮು-ಶ್ರೀನಗರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಾರೊಂದು 300 ಅಡಿ ಕಮರಿಗೆ ಬಿದ್ದು 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. +ಐಷಾರಾಮಿ ಕಾರು ಶ್ರೀನಗರದಿಂದ ಜಮ್ಮುವಿಗೆ ತೆರಳುತ್ತಿತ್ತಾಗ ಬ್ಯಾಟರಿ ಚೆಶ್ಮಾ ಪ್ರದೇಶದ ಬಳಿ ಮುಂಜಾನೆ 1.15 ರ ಸುಮಾರಿಗೆ 300 ಅಡಿ ಕಮರಿಗೆ ಬಿದ್ದಿದೆ ಎಂದು ಅವರು ಪೊಲೀಸರು ತಿಳಿಸಿದ್ದಾರೆ. +ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಭಾರೀ ಮಳೆಯ ಸುರಿದಿದ್ದು ಇದರ ನಡುವೆಯೇ 10 ಪ್ರಯಾಣಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪ್ರಾಥಮಿಕ ಮಾಹಿತಿ ಪ್ರಕಾರ ಕಾರಿನ ಚಾಲಕ ಜಮ್ಮುವಿನ ಅಂಬ್ ಘೋಥಾದ ಬಲ್ವಾನ್ ಸಿಂಗ್ (47) ಮತ್ತು ಬಿಹಾರದ ಪಶ್ಚಿಮ ಚಂಪಾರಣ್‍ನ ವಿಪಿನ್ ಮುಖಿಯಾ ಭೈರಗಾಂಗ್ ಮೃತಪಟ್ಟವರಲ್ಲಿ ಸೇರಿದ್ದಾರೆ ಎಂದು ಅವರು ಹೇಳಿದರು. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಮೃತರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು. \ No newline at end of file diff --git a/eesanje/url_47_135_11.txt b/eesanje/url_47_135_11.txt new file mode 100644 index 0000000000000000000000000000000000000000..1a092cce23dbdff577f92037b3712f33bf3d3b90 --- /dev/null +++ b/eesanje/url_47_135_11.txt @@ -0,0 +1,7 @@ +ಜಗನ್ ಜನ್ಮ ಜಾಲಾಡಿದ ನಾಯ್ಡು +ಪಲಮನೇರು, ಮಾ 28 (ಪಿಟಿಐ) :ವೈಎಸ್ಆರ್ಸಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯದ ರಾಯಲಸೀಮಾ ಪ್ರದೇಶದ ನೀರಾವರಿ ಕ್ಷೇತ್ರವನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾರೆ ಎಂದು ಟಿಡಿಪಿ ವರಿಷ್ಠ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. +ಕಳೆದ ಐದು ವರ್ಷಗಳಲ್ಲಿ ಒಂದೇ ಒಂದು ಎಕರೆಗೂ ನೀರು ಸರಬರಾಜು ಮಾಡಿಲ್ಲ ಎಂದು ಆರೋಪಿಸಿದ ನಾಯ್ಡು, ರೆಡ್ಡಿ ಅವರು ಪ್ರತಿ ಹಳ್ಳಿಯಲ್ಲಿ ನಕಲಿ ಮದ್ಯ, ಗಾಂಜಾ (ಗಾಂಜಾ) ಮತ್ತು ಇತರ ಮಾದಕ ದ್ರವ್ಯಗಳನ್ನು ಮುಕ್ತವಾಗಿ ಹರಿಯುವಂತೆ ಪೊ್ರೀತ್ಸಾಹಿಸಿದರು ಎಂದು ಆರೋಪಿಸಿದರು. +ಪಲಮನೇರುವಿನಲ್ಲಿ ನಡೆದ ಪ್ರಜಾಗಳಂ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಬ್ಬರ ಆಸ್ತಿಯನ್ನು ಸೃಷ್ಟಿಸುವುದು ಮತ್ತು ಆದಾಯವನ್ನು ಹೆಚ್ಚಿಸುವುದು ನನ್ನ ದೃಷ್ಟಿಯಾಗಿದೆ, ಆದರೆ ಜಗನ್ ಯಾವಾಗಲೂ ತನ್ನ ಜೇಬು ತುಂಬಲು ಜನರನ್ನು ಲೂಟಿ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು. +ಇದಲ್ಲದೆ, ವೈಎಸ್ಆರ್ಸಿಪಿಯ ಆಪಾದಿತ ದುಷ್ಟ ಮತ್ತು ಕ್ರೂರ ಶಕ್ತಿಗೆ ಅಂತ್ಯ ಹಾಡುವ ಸಮಯ ಬಂದಿದೆ ಎಂದು ನಾಯ್ಡು ಹೇಳಿದರು. ಆಡಳಿತ ಪಕ್ಷವನ್ನು ಸೋಲಿಸಲು ಯಾವುದೇ ಕೃಷಿ ಉತ್ಪನ್ನಕ್ಕೆ ಸಬ್ಸಿಡಿಗಳು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಸಹ ಪಡೆಯದ ರೈತರು ಸೇರಿದಂತೆ ಎಲ್ಲರೂ ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. +ಸಮಾಜದ ವಿವಿಧ ವರ್ಗಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಭರವಸೆ ನೀಡಿದ ನಾಯ್ಡು, ರಾಜ್ಯದಲ್ಲಿ ಎನ್ಡಿಎ ಸರ್ಕಾರ ರಚಿಸುವ ಇತರ ಭರವಸೆಗಳಲ್ಲಿ ತಕ್ಷಣವೇ ವಿದ್ಯುತ್ ಶುಲ್ಕವನ್ನು ಕ್ರಮಬದ್ಧಗೊಳಿಸಲಾಗುವುದು ಎಂದು ಭರವಸೆ ನೀಡಿದರು. +ಆಂಧ್ರಪ್ರದೇಶದ 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭೆ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ದಕ್ಷಿಣ ರಾಜ್ಯದಲ್ಲಿ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಪಾಲುದಾರರಾಗಿದ್ದಾರೆ. \ No newline at end of file diff --git a/eesanje/url_47_135_12.txt b/eesanje/url_47_135_12.txt new file mode 100644 index 0000000000000000000000000000000000000000..d5793e7d1e45d1e15bddaf19c2057d672c4b6721 --- /dev/null +++ b/eesanje/url_47_135_12.txt @@ -0,0 +1,6 @@ +ಮತ್ತೆ ಕೇಜ್ರಿವಾಲ್ ವಿಚಾರ ಕೆದಕಿದ ಅಮೆರಿಕ +ನವದೆಹಲಿ,ಮಾ.28-ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ಕುರಿತು ಅಮೆರಿಕ ಮತ್ತೆ ಮಾತನಾಡಿದೆ. ಕೇಜ್ರಿವಾಲ್ ಬಂಧನ ಕುರಿತಂತೆ ಅಮೆರಿಕ ಮಾತನಾಡಿದ್ದನ್ನು ಪ್ರಶ್ನಿಸಿ ಭಾರತವು ಅಮೆರಿಕದ ರಾಜತಾಂತ್ರಿಕರನ್ನು ಕರೆಸಿ ಎಚ್ಚರಿಕೆ ನೀಡಿದ ನಂತರವೂ ಅಮೆರಿಕ ಮತ್ತೆ ಕೇಜ್ರಿವಾಲ್ ಬಂಧನದಲ್ಲಿ ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ನಡೆಸುವಂತೆ ಪುನರುಚ್ಚರಿಸಿದೆ. +ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಸೇರಿದಂತೆ ಈ ಕ್ರಮಗಳನ್ನು ನಾವು ನಿಕಟವಾಗಿ ಅನುಸರಿಸುತ್ತಿದ್ದೇವೆ ಎಂದು ಯುಎಸ್ ಸ್ಟೇಟ್ ಡಿಪಾಟ್ರ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್ ತಿಳಿಸಿದ್ದಾರೆ. ಭಾರತವು ನವದೆಹಲಿಯಲ್ಲಿನ ಯುಎಸ್ ಆಕ್ಟಿಂಗ್ ಡೆಪ್ಯುಟಿ ಚೀಫ್ ಆಫ್ ಮಿಷನ್ ಗ್ಲೋರಿಯಾ ಬರ್ಬೆನಾ ಅವರನ್ನು ಭಾರತಕ್ಕೆ ಸಮನ್ಸ್ ಮಾಡಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. +ವಿದೇಶಾಂಗ ಸಚಿವಾಲಯದ ಸೌತ್ ಬ್ಲಾಕ್ ಕಛೇರಿಯಲ್ಲಿ ನಿನ್ನೆ ನಡೆದ ಸಭೆಯು ಸುಮಾರು 40 ನಿಮಿಷಗಳ ಕಾಲ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗಳಿಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. +ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಿಲ್ಲರ್, ಮುಂಬರುವ ದಿನಗಳಲ್ಲಿ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಸವಾಲಾಗುವ ರೀತಿಯಲ್ಲಿ ತೆರಿಗೆ ಅಧಿಕಾರಿಗಳು ತಮ್ಮ ಕೆಲವು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆಯೂ ನಮಗೆ ತಿಳಿದಿದೆ ಎಂದಿದ್ದಾರೆ. +ಈ ಪ್ರತಿಯೊಂದು ಸಮಸ್ಯೆಗಳಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಅಮೆರಿಕ ಪ್ರೋತ್ಸಾಹಿಸುತ್ತದೆ ಎಂದು ಅವರು ಹೇಳಿದರು. ನಿಮ್ಮ ಮೊದಲ ಪ್ರಶ್ನೆಗೆ ಸಂಬಂಧಿಸಿದಂತೆ, ನಾನು ಯಾವುದೇ ಖಾಸಗಿ ರಾಜತಾಂತ್ರಿಕ ಸಂಭಾಷಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ, ಆದರೆ ನಾವು ಸಾರ್ವಜನಿಕವಾಗಿ ಹೇಳಿರುವುದು ನಾನು ಇಲ್ಲಿಂದ ಹೇಳಿದ್ದೇನೆ, ನಾವು ನ್ಯಾಯಯುತ, ಪಾರದರ್ಶಕ, ಸಮಯೋಚಿತ ಕಾನೂನು ಪ್ರಕ್ರಿಯೆಗಳನ್ನು ಪ್ರೋತ್ಸಾಹಿಸುತ್ತೇವೆ ಎಂದಿದ್ದಾರೆ. ಮನೀಷ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನಂತರ ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಕೇಜ್ರಿವಾಲ್ ಅವರನ್ನು ಇಡಿ ಕಳೆದ ವಾರ ಬಂಧಿಸಿತ್ತು. diff --git a/eesanje/url_47_135_2.txt b/eesanje/url_47_135_2.txt new file mode 100644 index 0000000000000000000000000000000000000000..ef30f8e9a7faaf9ad28cb6638115e6ae4b0227fe --- /dev/null +++ b/eesanje/url_47_135_2.txt @@ -0,0 +1,5 @@ +ಕಾಂಗ್ರೆಸ್‌ಗೆ 1700 ಕೋಟಿ ರೂ.ಗಳ ಐಟಿ ನೋಟೀಸ್ +ನವದೆಹಲಿ,ಮಾ.29-ತೆರಿಗೆ ನೋಟಿಸ್ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷ ಆದಾಯ ತೆರಿಗೆ ಇಲಾಖೆಯಿಂದ 1,700 ಕೋಟಿ ರೂ.ಗಳ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. +ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.ಕಳೆದ ಫೆಬ್ರವರಿಯಲ್ಲಿ ಐಟಿ ಇಲಾಖೆಯು ಪಕ್ಷದ ತೆರಿಗೆ ರಿಟನ್ರ್ಸ್ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ 200 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿತ್ತು. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಪಕ್ಷಕ್ಕೆ ಬಾಕಿ ಪಾವತಿಸಲು ಮತ್ತು ಅವರ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಕೇಳಿತ್ತು. +ಲೋಕಸಭೆ ಚುನಾವಣೆಗೆ ಮುನ್ನ ಈ ಆದೇಶ ಬಂದಿರುವುದರಿಂದ ತೆರಿಗೆ ನ್ಯಾಯಮಂಡಳಿ ತನ್ನ ಹಣವನ್ನು ಸ್ಥಗಿತಗೊಳಿಸಿದ ಆದೇಶವು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ ಹೈಕೋರ್ಟ್ ನಾಲ್ಕು ವರ್ಷಗಳ ಅವಧಿಗೆ ತನ್ನ ವಿರುದ್ಧ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಿತ್ತು. +ರಾಜಕೀಯ ಪಕ್ಷಗಳಿಗೆ ಧನಸಹಾಯವು ಈ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ, ವಿಶೇಷವಾಗಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ಗಳನ್ನು ರದ್ದುಗೊಳಿಸಿದ ನಂತರ ಇದು ವ್ಯಕ್ತಿಗಳು ಅಥವಾ ವ್ಯವಹಾರಗಳಿಗೆ ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅವಕಾಶ ನೀಡುತ್ತದೆ ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಸಿದಂತೆ ಎಂದು ಅಭಿಪ್ರಾಯಪಟ್ಟಿತ್ತು. \ No newline at end of file diff --git a/eesanje/url_47_135_3.txt b/eesanje/url_47_135_3.txt new file mode 100644 index 0000000000000000000000000000000000000000..d4c3fd1714f570fef840c1ceec77cfe8be594431 --- /dev/null +++ b/eesanje/url_47_135_3.txt @@ -0,0 +1,5 @@ +ಚುನಾವಣಾ ಕಾರ್ಯತಂತ್ರದ ಮಾಹಿತಿಗಾಗಿ ಕೇಜ್ರಿ ಫೋನ್ ಹಿಂದೆ ಬಿದ್ದಿದೆಯಂತೆ ಇಡಿ +ನವದೆಹಲಿ, ಮಾ 29 (ಪಿಟಿಐ): ಜಾರಿ ನಿರ್ದೇಶನಾಲಯವು ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ -ಫೋನ್ ಅನ್ನು ಪ್ರವೇಶಿಸುವ ಮೂಲಕ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರದ ವಿವರಗಳನ್ನು ಪಡೆಯಲು ಅದು ಬಯಸಿದೆ ಎಂದು ಎಎಪಿ ಸಚಿವೆ ಅತಿಶಿ ಆರೋಪಿಸಿದ್ದಾರೆ. +ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಂದ್ರ ತನಿಖಾ ಸಂಸ್ಥೆ ಬಂಧಿಸಿತ್ತು.ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವರ ಮೊಬೈಲ್ -ಫೋನ್ ಅನ್ನು ಪರಿಶೀಲಿಸಲು ಒತ್ತಾಯಿಸುತ್ತದೆ, ಅದು ಕೆಲವು ತಿಂಗಳ ಹಳೆಯದು ಮತ್ತು ನೀತಿಯನ್ನು ರೂಪಿಸಿ ಜಾರಿಗೆ ತಂದಾಗ ಅಸ್ತಿತ್ವದಲ್ಲಿಲ್ಲ, ಈ ಸಂಸ್ಥೆ ಬಿಜೆಪಿಯ ರಾಜಕೀಯ ಅಸ್ತ್ರವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. +ಕೇಜ್ರಿವಾಲ್ ಸರ್ಕಾರದಲ್ಲಿ ಸಚಿವರಾಗಿರುವ ಅತಿಶಿ ವಾಸ್ತವವಾಗಿ ಇದು ಬಿಜೆಪಿಯೇ ಹೊರತು ಕೇಜ್ರಿವಾಲ್ ಅವರ -ಫೋನ್ನಲ್ಲಿ ಏನಿದೆ ಎಂದು ತಿಳಿಯಲು ಇಡಿ ಬಯಸುವುದಿಲ್ಲ ಎಂದು ಹೇಳಿದರು.ಅಬಕಾರಿ ನೀತಿಯನ್ನು 2021-22ರಲ್ಲಿ ಜಾರಿಗೆ ತರಲಾಗಿದ್ದು, ಮುಖ್ಯಮಂತ್ರಿಯವರ ಪ್ರಸ್ತುತ -ಫೋನ್ ಕೆಲವೇ ತಿಂಗಳು ಹಳೆಯದು ಎಂದು ಅವರು ಹೇಳಿದ್ದಾರೆ. ಆ ಅವಧಿಯ ಕೇಜ್ರಿವಾಲ್ ಅವರ -ಫೋನ್ ಲಭ್ಯವಿಲ್ಲ ಎಂದು ಇಡಿ ಹೇಳಿದೆ ಮತ್ತು ಈಗ ಅವರ ಹೊಸ -ಫೋನ್ನ ಪಾಸ್ವರ್ಡ್ ಬೇಕು ಎಂದು ಅತಿಶಿ ಹೇಳಿದರು. +ಅವರು ಅದನ್ನು ಬಯಸುತ್ತಾರೆ ಏಕೆಂದರೆ ಅವರು ಅದರಲ್ಲಿ ಎಎಪಿಯ ಲೋಕಸಭಾ ಚುನಾವಣಾ ಕಾರ್ಯತಂತ್ರ, ಪ್ರಚಾರ ಯೋಜನೆಗಳು, ಇಂಡಿಯಾ ಬ್ಲಾಕ್ ನಾಯಕರೊಂದಿಗಿನ ಮಾತುಕತೆಗಳು ಮತ್ತು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಕಾಣಬಹುದು ಎಂದು ಅವರು ಹೇಳಿದರು. \ No newline at end of file diff --git a/eesanje/url_47_135_4.txt b/eesanje/url_47_135_4.txt new file mode 100644 index 0000000000000000000000000000000000000000..3c4b2244bcd248e74d341206bf8db78aef8b5a19 --- /dev/null +++ b/eesanje/url_47_135_4.txt @@ -0,0 +1,5 @@ +ಯುಪಿಯಲ್ಲಿ ಮತ್ತೊಂದು ಅತ್ಯಾಚಾರ +ಶಹಜಹಾನ್ಪುರ, ಮಾ 29 (ಪಿಟಿಐ) :ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯ ಮೇಲೆ ಆಕೆಯ ಗ್ರಾಮದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೀರನ್ಪುರ ಕತ್ರಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಮನೋಜ್ ಅವಸ್ತಿ ತಿಳಿಸಿದ್ದಾರೆ. +ಬಾಲಕಿಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಆಕೆಯನ್ನು ಜಮೀನಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. +ಆಕೆ ವಿರೋಧಿಸಿದಾಗ ಆರೋಪಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ ಎಂದು ಅವಸ್ತಿ ಹೇಳಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ \ No newline at end of file diff --git a/eesanje/url_47_135_5.txt b/eesanje/url_47_135_5.txt new file mode 100644 index 0000000000000000000000000000000000000000..6bf1dd4c7928c7f05c6789e3705f14cc3a672eba --- /dev/null +++ b/eesanje/url_47_135_5.txt @@ -0,0 +1,7 @@ +ಪನ್ನುನ್ ವಿಚಾರದಲ್ಲಿ ಚೀನಾ ಮೂಗು ತೂರಿಸುವುದು ಬೇಡ : ಭಾರತ +ನವದೆಹಲಿ,ಮಾ.29-ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚು ವಿಫಲವಾದ ಪ್ರಕರಣದ ತನಿಖೆಯ ಕುರಿತು ಚೀನಾ ಹೇಳಿಕೆಗೆ ತಿರುಗೇಟು ನೀಡಿರುವ ವಿದೇಶಾಂಗ ಸಚಿವಾಲಯ ಭಾರತ ಮತ್ತು ಅಮೆರಿಕ ಉಭಯ ದೇಶಗಳ ನಡುವಿನ ಯಾವುದೇ ಸಮಸ್ಯೆಗಳನ್ನು ನಿಭಾಯಿಸಲು ಸಮರ್ಥವಾಗಿವೆ ಎಂದು ಹೇಳಿಕೊಂಡಿದೆ. +ಎಂಇಎ ವಕ್ತಾರ ರಣಭೀರ್ ಜೈಸ್ವಾಲ್ ಅವರು, ಸಂಬಂಧವಿಲ್ಲದ ಮೂರನೇ ವ್ಯಕ್ತಿಗಳ ಯಾವುದೇ ಊಹಾತ್ಮಕ ಕಾಮೆಂಟ್ಗಳು ಮತ್ತು ಅನಪೇಕ್ಷಿತ ಸಲಹೆಗಳಿಗೆ ಯಾವುದೇ ಮಹತ್ವವಿಲ್ಲ ಎನ್ನುವ ಮೂಲಕ ಚೀನಾಗೆ ತಿರುಗೇಟು ನೀಡಿದ್ದಾರೆ. +ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಪತ್ರಿಕಾಗೋಷ್ಠಿಯಲ್ಲಿ, ಸಂಬಂಧಿತ ದೇಶಗಳು ಅಂತರರಾಷ್ಟ್ರೀಯ ಕಾನೂನು ಮತ್ತು ಅಂತರರಾಷ್ಟ್ರೀಯ ಸಂಬಂಧಗಳನ್ನು ನಿಯಂತ್ರಿಸುವ ಮೂಲ ಮಾನದಂಡಗಳನ್ನು ಗಮನಿಸಬೇಕು ಎಂದು ಹೇಳಿದ ನಂತರ ಭಾರತದ ಈ ಹೇಳಿಕೆ ಹೊರಬಿದ್ದಿದೆ. +ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರರು, ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ , ಕಾನೂನು ನಿಯಮಕ್ಕೆ ಬದ್ಧವಾಗಿರುವ ಎರಡು ದೇಶಗಳು, ನಮ್ಮ ನಡುವೆ ಇರುವ ಯಾವುದೇ ಸಮಸ್ಯೆಗಳನ್ನು ಎದುರಿಸಲು ಸಮರ್ಥವಾಗಿವೆ. ಯಾವುದೇ ಊಹಾಪೊಹದ ಪಾತ್ರವಿಲ್ಲ. ಸಂಬಂಧವಿಲ್ಲದ ಮೂರನೇ ವ್ಯಕ್ತಿಗಳಿಂದ ಕಾಮೆಂಟ್ಗಳು ಮತ್ತು ಅನಪೇಕ್ಷಿತ ಸಲಹೆ ಬೇಕಿಲ್ಲ ಎಂದಿದ್ದಾರೆ. +ಪನ್ನುನ್ ಭಾರತದಿಂದ ಗೊತ್ತುಪಡಿಸಿದ ಭಯೋತ್ಪಾದಕರಾಗಿದ್ದು, ಅವರು ಅಮೇರಿಕನ್ ಮತ್ತು ಕೆನಡಾದ ಪೌರತ್ವವನ್ನು ಹೊಂದಿದ್ದಾರೆ. ಯುಎಸ್ ನ್ಯಾಯಾಂಗ ಇಲಾಖೆಯ ದೋಷಾರೋಪಣೆಯ ಪ್ರಕಾರ, ಪ್ರಸ್ತುತ ಬಂಧನದಲ್ಲಿರುವ ಭಾರತೀಯ ನಿಖಿಲ್ ಗುಪ್ತಾ ಎಂಬಾತನ ಮೇಲೆ ಪನ್ನುನ್ ಹತ್ಯೆಯ ಆರೋಪ ಹೊರಿಸಲಾಗಿದೆ. +ಸಲ್ಲಿಸಿದ ದೋಷಾರೋಪಣೆಯಲ್ಲಿ ಗುರುತಿಸಲ್ಪಡದ ಭಾರತೀಯ ಸರ್ಕಾರಿ ಉದ್ಯೋಗಿಯೊಬ್ಬರು, ಪನ್ನುನ್ ಹತ್ಯೆಯನ್ನು ನಡೆಸಲು ಹಿಟ್ಮ್ಯಾನ್ ಅನ್ನು ನೇಮಿಸಿಕೊಳ್ಳಲು ಭಾರತೀಯ ಪ್ರಜೆಯನ್ನು ನೇಮಿಸಿಕೊಂಡಿದ್ದಾರೆ ಎಂದು ಯುಎಸ್ ನ್ಯಾಯಾಂಗ ಇಲಾಖೆ ಹೇಳಿಕೊಂಡಿದೆ, ಇದನ್ನು ಯುಎಸ್ ಅಧಿಕಾರಿಗಳು ನಿರಾಕರಿಸಿದ್ದರು. \ No newline at end of file diff --git a/eesanje/url_47_135_6.txt b/eesanje/url_47_135_6.txt new file mode 100644 index 0000000000000000000000000000000000000000..ffbcfb919385531bebe4b53767d5b3bfcc986aed --- /dev/null +++ b/eesanje/url_47_135_6.txt @@ -0,0 +1,8 @@ +ಬಿಲ್ ಗೇಟ್ಸ್-ಮೋದಿ ಭೇಟಿ, ಸ್ವಾರಸ್ಯಕರ ಮಾತುಕತೆ +ನವದೆಹಲಿ,ಮಾ.29-ಇತ್ತಿಚೆಗೆ ನಡೆದ ಜಿ20 ಶೃಂಗಸಭೆಯಲ್ಲಿ ತಮ್ಮ ಭಾಷಣಗಳನ್ನು ವಿವಿಧ ಭಾಷೆಗಳಲ್ಲಿ ಭಾಷಾಂತರಿಸಲು ಕೃತಕ ಬುದ್ಧಿಮತ್ತೆ ಅಥವಾ ಎಐ ತಂತ್ರಜ್ಞಾನ ಸಹಾಯ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. +ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ಮಾತನಾಡಿದ ಪ್ರಧಾನಿ, ಇಂದಿನ ಜಗತ್ತಿನಲ್ಲಿ ಎಐ ಪ್ರಮುಖ ಪಾತ್ರ ವಹಿಸುತ್ತದೆ. ಎಐ ಬಹಳ ಮುಖ್ಯ, ಕೆಲವೊಮ್ಮೆ, ನಾನು ತಮಾಷೆಯಾಗಿ ಹೇಳುತ್ತೇನೆ, ನಮ್ಮ ದೇಶದಲ್ಲಿ ನಾವು ನಮ್ಮ ತಾಯಿಯನ್ನು ಆಯಿ ಎಂದು ಕರೆಯುತ್ತೇವೆ. ಈಗ ನಾನು ಹೇಳುತ್ತೇನೆ ಅದರ ಜೊತೆಗೆ ಈಗಿನ ಮಕ್ಕಳು ಎಐ ಎಂದು ಕರೆಯುತ್ತಾರೆ ಎಂದಿದ್ದಾರೆ. +ಅವರು ತಮ್ಮ ನಮೋ ಅಪ್ಲಿಕೇಶನ್ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಬಿಲ್ ಗೇಟ್ಸ್ಗೆ ಕೇಳಿದರು ಮತ್ತು ನಂತರ ಅದನ್ನು ಮುಖ ಗುರುತಿಸುವ ತಂತ್ರಜ್ಞಾನದ ಮೂಲಕ ಹೇಗೆ ಕಂಡುಹಿಡಿಯಬಹುದು ಎಂಬುದನ್ನು ತೋರಿಸಿದರು. ವಿವಿಧ ಎಐ ಪರಿಕರಗಳ ಮೂಲಕ ಉತ್ಪತ್ತಿಯಾಗುವ ಡೀಪ್ ಫೇಕ್ ವಿಷಯವನ್ನು ಸಹ ಪ್ರಧಾನಿ ಸೂಚಿಸಿದರು ಮತ್ತು ತಂತ್ರಜ್ಞಾನದ ದುರುಪಯೋಗವನ್ನು ನಿಭಾಯಿಸಲು ಕ್ರಮಗಳಿಗೆ ಕರೆ ನೀಡಿದರು. +ಭಾರತದಂತಹ ಪ್ರಜಾಸತ್ತಾತ್ಮಕ ದೇಶದಲ್ಲಿ, ಯಾರಾದರೂ ಡೀಪ್ ಫೇಕ್ ಅನ್ನು ಬಳಸಬಹುದು. ಡೀಪ್ ಫೇಕ್ ವಿಷಯವು ಎಐನಿಂದ ರಚಿತವಾಗಿದೆ ಎಂದು ಒಪ್ಪಿಕೊಳ್ಳುವುದು ನಿರ್ಣಾಯಕವಾಗಿದೆ. ನಾವು ಕೆಲವು ಮಾಡಬೇಕಾದ ಮತ್ತು ಮಾಡಬಾರದ ಕೆಲಸದ ಬಗ್ಗೆ ಯೋಚಿಸಬೇಕಾಗಿದೆ ಎಂದು ಅವರು ಹೇಳಿದರು. ಇದರ ಜೊತೆಗೆ ಎಐ ಬಗ್ಗೆ ಜನರನ್ನು ತಪ್ಪುದಾರಿಗೆಳೆಯಬಾರದು ಎಂದು ಅವರು ಕೇಳಿಕೊಂಡರು. +ನಾವು ಎಐ ಅನ್ನು ಮಾಂತ್ರಿಕ ಸಾಧನವಾಗಿ ಬಳಸಿದರೆ, ಅದು ಬಹುಶಃ ಘೋರ ಅನ್ಯಾಯಕ್ಕೆ ಕಾರಣವಾಗಬಹುದು. ಸೋಮಾರಿತನದಿಂದ ಎಐ ಅನ್ನು ಅವಲಂಬಿಸಿದ್ದರೆ ಅದು ತಪ್ಪು ದಾರಿ ಎಂದು ಪ್ರಧಾನಿ ಸೇರಿಸಿದರು.ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣದಲ್ಲಿ ನನಗೆ ನಂಬಿಕೆಯಿದೆ, ಅದು ಎಲ್ಲರಿಗೂ ಸಮಾನ ಅವಕಾಶವನ್ನು ನೀಡುತ್ತದೆ ಮತ್ತು ಅವರು ತಂತ್ರಜ್ಞಾನವನ್ನು ಹಳ್ಳಿಗಳಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಹೇಳಿದರು. +ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ನಾನು ಕೇಳಿದಾಗ, ನನ್ನ ದೇಶದಲ್ಲಿ ಅಂತಹದ್ದನ್ನು ನಾನು ಅನುಮತಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವು ಸ್ವತಃ ಪ್ರಮುಖ ಅವಶ್ಯಕತೆಯಾಗಿದೆ ಎಂದು ಅವರು ಹೇಳಿದರು.ಭಾರತದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮಹಿಳೆಯರು ಹೆಚ್ಚು ಮುಕ್ತರಾಗಿದ್ದಾರೆ ಎಂದು ಅವರು ಹೇಳಿದರು. +ನಾನು ನಮೋ ಡ್ರೋನ್ ದೀದಿ ಯೋಜನೆಯನ್ನು ಪ್ರಾರಂಭಿಸಿದ್ದೇನೆ. ಇದು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ, ನಾನು ಅವರೊಂದಿಗೆ ಸಂವಹನ ನಡೆಸುತ್ತೇನೆ, ಅವರು ಸಂತೋಷಪಡುತ್ತಾರೆ, ಅವರು ಬೈಸಿಕಲ್ ಓಡಿಸಲು ತಿಳಿದಿರಲಿಲ್ಲ ಆದರೆ ಅವರು ಈಗ ಪೈಲಟ್ ಆಗಿದ್ದಾರೆ ಮತ್ತು ಡ್ರೋನ್ಗಳನ್ನು ಹಾರಿಸಬಹುದು ಎಂದು ಅವರು ಹೇಳುತ್ತಾರೆ. ಮನಸ್ಥಿತಿ ಬದಲಾಗಿದೆ ಎಂದು ಅವರು ಹೇಳಿದರು \ No newline at end of file diff --git a/eesanje/url_47_135_7.txt b/eesanje/url_47_135_7.txt new file mode 100644 index 0000000000000000000000000000000000000000..ef2232821982889f9f849a853987b3bd1bd27af9 --- /dev/null +++ b/eesanje/url_47_135_7.txt @@ -0,0 +1,8 @@ +ಭರದಿಂದ ಸಾಗುತ್ತಿದೆ ಬುಲೆಟ್ ರೈಲು ಯೋಜನೆ, ವಿಡಿಯೋಗಳನ್ನು ಹಂಚಿಕೊಂಡ ರೈಲ್ವೆ ಸಚಿವ +ನವದೆಹಲಿ,ಮಾ.29-ದೇಶದ ಪ್ರಪ್ರಥಮ ಬುಲೆಟ್ ರೈಲು ಯೋಜನೆಯ ಕೆಲವು ವಿಡಿಯೋಗಳನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಭಾರತದ ಮೊದಲ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ನ ವೀಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. +320 ಕಿಮೀ ವೇಗದ ತಡೆಗೋಡೆ ಹೊಂದಿರುವ ಬುಲೆಟ್ ರೈಲಿಗೆ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಸಚಿವರು ಬಹಿರಂಗಪಡಿಸಿದ್ದಾರೆ. ಅವರ ಪ್ರಕಾರ, 295.5 ಕಿಮೀ ಪಿಯರ್ಗಳು ಮತ್ತು 153 ಕಿಮೀ ವಯಡಕ್ಟ್ಗಳು ಈಗಾಗಲೇ ಪೂರ್ಣಗೊಂಡಿವೆ. +’ #!✅320 ✅153 ✅295.5 3.0pic../YV6vP4tbXS +ಅವರು ತಮ್ಮ ಎಕ್ಸ್ ಖಾತೆಯಲ್ಲಿ ಅದೇ ವೀಡಿಯೊವನ್ನು ಪೊಸ್ಟ್ ಮಾಡಿದ್ದಾರೆ ಮತ್ತು ಬುಲೆಟ್ ಟ್ರೈನ್ಗಾಗಿ ಭಾರತ್ನ ಮೊದಲ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ 320 ಕಿಮೀ ವೇಗದ ಮಿತಿ, 153 ಕಿಮೀ ವಯಡಕ್ಟ್ ಪೂರ್ಣಗೊಂಡಿದೆ, 295.5 ಕಿಮೀ ಪಿಯರ್ ಕೆಲಸ ಪೂರ್ಣಗೊಂಡಿದೆ. ಇದರ ಜೊತೆಗೆ ಮೋದಿ 3.0 ರಲ್ಲಿ ಮತ್ತಷ್ಟು ಯೋಜನೆಗಳು ಬರಲಿವೆ ಎಂದು ಬರೆದುಕೊಂಡಿದ್ದಾರೆ. +ನಿಲುಭಾರವಿಲ್ಲದ ಟ್ರ್ಯಾಕ್ ಅಥವಾ ಸ್ಲ್ಯಾಬ್ ಟ್ರ್ಯಾಕ್ ಕೆಲವು ದೇಶಗಳಲ್ಲಿ ಹೆಚ್ಚಿನ ವೇಗದ ಮಾರ್ಗಗಳಿಗಾಗಿ ಜನಪ್ರಿಯತೆಯನ್ನು ಗಳಿಸುತ್ತಿದೆ. ಗಮನಾರ್ಹವಾಗಿ, ಇದು ಮೊದಲ ಬಾರಿಗೆ, ಭಾರತದಲ್ಲಿ ಜೆ-ಸ್ಲ್ಯಾಬ್ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಅನ್ನು ಬಳಸಲಾಗುತ್ತಿದೆ. ನವೀನ ಟ್ರ್ಯಾಕ್ ವ್ಯವಸ್ಥೆಯು ಪೂರ್ವ-ಕಾಸ್ಟ್ಟ್ರ್ಯಾಕ್ ಸ್ಲ್ಯಾಬ್ಗಳನ್ನು ನಿಖರವಾಗಿ ಜೋಡಿಸುವ ಸಾಧನಗಳು ಮತ್ತು ಹಳಿಗಳನ್ನು ಹೊಂದಿದೆ. +ಬುಲೆಟ್ ಟ್ರೈನ್ ಯೋಜನೆಯನ್ನು ಸಮಗ್ರ ಆರ್ಥಿಕತೆಯ ದೃಷ್ಟಿಕೋನದಿಂದ ನೋಡಬೇಕು. ಭಾರತೀಯ ರೈಲ್ವೆ ಮಾಡುತ್ತಿರುವ ಮೊದಲ ಕಾರಿಡಾರ್ನಲ್ಲಿ ಮುಂಬೈ, ಥಾಣೆ, ವಾಪಿ, ಬರೋಡಾ, ಸೂರತ್ , ಆನಂದ್ ಮತ್ತು ಅಹಮದಾಬಾದ್ – ಈ ಎಲ್ಲಾ ಆರ್ಥಿಕತೆಗಳು ಒಂದೇ ಆರ್ಥಿಕತೆಯಾಗುತ್ತವೆ. ನೀವು ಸೂರತ್ನಲ್ಲಿ ಉಪಹಾರ ಸೇವಿಸಬಹುದು, ಹೋಗಿ ಮುಂಬೈನಲ್ಲಿ ನಿಮ್ಮ ಕೆಲಸವನ್ನು ಪೂರ್ಣಗೊಳಿಸಿ ಮತ್ತು ರಾತ್ರಿಯಲ್ಲಿ ನಿಮ್ಮ ಕುಟುಂಬದೊಂದಿಗೆ ಹಿಂತಿರುಗಬಹುದಾಗಿದೆ ಎಂದಿದ್ದಾರೆ. +ಅಂದಾಜು ರೂ. 1.08 ಲಕ್ಷ ಕೋಟಿ ವೆಚ್ಚವಾಗಿದ್ದು, ಇದರಲ್ಲಿ ರೂ. 10,000 ಕೋಟಿ ನೀಡಲು ಕೇಂದ್ರ ಬದ್ಧವಾಗಿದ್ದರೆ, ಗುಜರಾತ್ ಮತ್ತು ಮಹಾರಾಷ್ಟ್ರ ತಲಾ ರೂ. 5,000 ಕೋಟಿ ನೀಡಲಿವೆ. ಉಳಿದ ಹಣವನ್ನು ಜಪಾನ್ನಿಂದ ಶೇ.0.1 ಬಡ್ಡಿ ದರದಲ್ಲಿ ಸಾಲ ಮಾಡಲಾಗಿದೆ. \ No newline at end of file diff --git a/eesanje/url_47_135_8.txt b/eesanje/url_47_135_8.txt new file mode 100644 index 0000000000000000000000000000000000000000..3833db1e1a4ea35bfaf129b8e3f4d4d3cf71d09b --- /dev/null +++ b/eesanje/url_47_135_8.txt @@ -0,0 +1,6 @@ +ಗ್ಯಾಂಗಸ್ಟರ್ ಅನ್ಸಾರಿ ಸಾವನ್ನಪಿದ ಬೆನ್ನಲ್ಲೇ, ಉತ್ತಪ್ರದೇಶದಲ್ಲಿ ಹೈ ಅಲರ್ಟ್ +ಲಖ್ನೋ,ಮಾ.29-ರಾಜಕಾರಣಿಯಾಗಿ ಪರಿವರ್ತತರಾಗಿದ್ದ ಗ್ಯಾಂಗಸ್ಟರ್ ಮುಖ್ತರ್ ಅನ್ಸಾರಿ ಬಂಡಾದ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದ ಒಂದು ದಿನದ ಬಳಿಕ ಉತ್ತರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಕಟ್ಟೆಚ್ಚರದಲ್ಲಿರಸಲಾಗಿದೆ. +ರಾಜ್ಯಾದ್ಯಂತ ಸೆಷನ್ 144 ಅಡಿ ನಿಷೇಧಾಜ್ಞೆ ವಿಧಿಸಲಾಗಿದ್ದು, ಬಂಡಾ, ಮಾಉ, ಫಾಜಿಪುರ್ ಮತ್ತು ವಾರಾಣಾಸಿಯಲ್ಲಿ ಸ್ಥಳೀಯ ಪೊಲೀಸರೊಂದಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಉತ್ತರಪ್ರದೇಶ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್‍ಕುಮಾರ್ ತಿಳಿಸಿದರು. +ಫಾಜಿಪುರದ ಅನ್ಸಾರಿ ಅವರ ಮನೆಯ ಮುಂದೆ ಜನರು ಗುಂಪುಗೂಡಲಾರಂಭಿಸಿದ್ದರು ಮತ್ತು ಮನೆಯ ಸುತ್ತ ಭಾರೀ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಬಂಡಾ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ತಂಡವು ಮರಣೋತ್ತರ ಪರೀಕ್ಷೆ ನಡೆಸಲಿದೆ ಮತ್ತು ಇಡೀ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡಲಾಗುವುದು ಎಂದು ಪೊಲೀಸ್ ಕೇಂದ್ರಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. +63 ವರ್ಷ ವಯಸ್ಸಿನ ಅನ್ಸಾರಿಯವರನ್ನು ಜಿಲ್ಲಾ ಕಾರಾಗೃಹದಿಂದ ಬಂಡಾದಲ್ಲಿನ ರಾಣಿ ದುರ್ಗಾವ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಗುರುವಾರ ಸಂಜೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕರೆತರಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಹೃದಯಸ್ತಂಭನದಿಂದ ನಿಧನರಾದರು ಎಂದು ಕಾಲೇಜು ಪ್ರಾಂಶುಪಾಲ ಸುನೀಲ್ ಕೌಶಲ್ ಹೇಳಿದರು. +ಪುತ್ರ ಉಮರ್ ಅನ್ಸಾರಿ ಸೇರಿದಂತೆ ಅನ್ಸಾರಿ ಕುಟುಂಬದ ಸದಸ್ಯರು ಇಂದು ಮುಂಜಾನೆ ಆಸ್ಪತ್ರೆಗೆ ತಲುಪಿದರು. ಜೈಲಿನಲ್ಲಿ ಅನ್ಸಾರಿಗೆ ನಿಧಾನ ವಿಷಪ್ರಾಶನ ಮಾಡಲಾಗಿದೆ ಎಂದು ಉಮರ್ ಅನ್ಸಾರಿ ಆರೋಪಿಸಿದ್ದಾರೆ. ಅಧಿಕಾರಿಗಳು ಈ ಆರೋಪವನ್ನು ನಿರಾಕರಿಸಿದ್ದಾರೆ. \ No newline at end of file diff --git a/eesanje/url_47_135_9.txt b/eesanje/url_47_135_9.txt new file mode 100644 index 0000000000000000000000000000000000000000..df2780c899ac0abff1566a7ff4ce63278941513e --- /dev/null +++ b/eesanje/url_47_135_9.txt @@ -0,0 +1,7 @@ +ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ..? +ನವದೆಹಲಿ,ಮಾ.29-ಉತ್ತರಪ್ರದೇಶದಲ್ಲಿ ಸ್ಪರ್ಧಿಸಲಿರುವ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಬಾಕಿ ಉಳಿದಿರುವ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಏಪ್ರಿಲ್ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಮೂಲಗಳು ಹೇಳಿವೆ. ಐದನೇ ಹಂತದ ಮತದಾನದಲ್ಲಿ ಬರುವ ಈ ಕ್ಷೇತ್ರಗಳಿಗೆ ಏಪ್ರಿಲ್ 26ರಿಂದ ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದೆ. ಈ ಹಿನ್ನಲೆ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. +ಮೂಲಗಳ ಪ್ರಕಾರ ರಾಯ್ ಬರೇಲಿ ಮತ್ತು ಅಮೇಥಿ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ. ಆದರೆ ಯಾವುದೇ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ. ಉತ್ತರಪ್ರದೇಶದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಾಗ ಐದನೇ ಹಂತದ ಮತದಾನದ ಕಾರಣ ರಾಯ್‍ಬರೇಲಿ ಮತ್ತು ಅಮೇಥಿಯ ಅಭ್ಯರ್ಥಿಗಳ ಪಟ್ಟಿಯನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. +ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ರಾಯ್‍ಬರೇಲಿಯಲ್ಲಿ ಗಾಂಧಿ ಕುಟುಂಬದ ಸದಸ್ಯರೊಬ್ಬರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಮೂಲಗಳ ಪ್ರಕಾರ ಈ ಎರಡು ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಲು ಗಾಂಧಿ ಕುಟುಂಬದಿಂದ ಯಾರೂ ಮುಂದೆ ಬಂದಿಲ್ಲ. ಆದರೆ ರಾಯ್ ಬರೇಲಿ ಕ್ಷೇತ್ರದಲ್ಲಿ ಮೂರು ಬಾರಿ ಸಮೀಕ್ಷೆ ನಡೆಸಲಾಗಿದೆ. ಇದರಲ್ಲಿ ವೈಯಕ್ತಿಕವಾಗಿ ದೂರವಾಣಿ ಮೂಲಕವೂ ಹೆಚ್ಚಿನ ಸಂಖ್ಯೆಯಲ್ಲಿ ಸಮೀಕ್ಷೆ ನಡೆಸಲಾಗಿದೆ. ಸೋನಿಯಾ ಗಾಂಧಿ ಅನುಪಸ್ಥಿತಿಯಲ್ಲಿ ಗಾಂಧಿ ಕುಟುಂಬಕ್ಕೆ ಈ ಸ್ಥಾನ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸಮೀಕ್ಷೆಯಲ್ಲೂ ಪರಿಶೀಲಿಸಿದೆ. +ರಾಯ್‍ಬರೇಲಿ ಮತ್ತು ಅಮೇಥಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಹಿಂದೆಂದೂ ಇಷ್ಟೊಂದು ವಿಳಂಬ ಆಗಿರಲಿಲ್ಲ. ಈ ಬಾರಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಪತ್ರ ಬರೆದ ಕೂಡಲೇ ಗಾಂಧಿ ಕುಟುಂಬದಿಂದ ಅಭ್ಯರ್ಥಿ ಯಾರಾಗುತ್ತಾರೆ ಎಂಬ ಊಹಾಪೋಹ ಶುರುವಾಗಿದೆ. ಇದಲ್ಲದೆ ರಾಹುಲ್ ಗಾಂಧಿ ಚುನಾವಣೆಯಲ್ಲಿ ಸೋತ ನಂತರ ಅಮೇಥಿಯಲ್ಲಿ ರಾಹುಲ್ ಮತ್ತೆ ಸ್ರ್ಪಧಿಸುತ್ತಾರೋ ಇಲ್ಲವೋ ಎಂಬ ಊಹಾಪೋಹಗಳಿವೆ. +ಉತ್ತರಪ್ರದೇಶದಲ್ಲಿ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್ ಸ್ಥಾನಗಳನ್ನು ಈಗ ನಿರ್ಧರಿಸಲಾಗಿದ್ದು, ಕಾಂಗ್ರೆಸ್ ಈಗಾಗಲೇ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದಿಂದ ಯಾರೂ ಚುನಾವಣೆಗೆ ಸ್ಪರ್ಧಿಸದಿದ್ದರೆ ಅದು ಕಾರ್ಯಕರ್ತರ ನೈತಿಕತೆಯ ಮೇಲೆ ಪರಿಣಾಮ ಬೀರುವುದು ಖಚಿತ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಲ್ಲಿ ಒಬ್ಬರು ಅಥವಾ ಇಬ್ಬರೂ ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. +ಗೆಲುವು ಅಥವಾ ಸೋಲು ತನ್ನದೇ ಆದ ಸ್ಥಾನವನ್ನು ಹೊಂದಬಹುದು. ಆದರೆ ಚುನಾವಣಾ ಕಣಕ್ಕೆ ಪ್ರವೇಶಿಸುವ ಮೂಲಕ, ಸಕಾರಾತ್ಮಕ ಸಂದೇಶವು ಖಂಡಿತವಾಗಿಯೂ ಕಾರ್ಯಕರ್ತರನ್ನು ತಲುಪುತ್ತದೆ ಎಂದು ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ \ No newline at end of file diff --git a/eesanje/url_47_136_1.txt b/eesanje/url_47_136_1.txt new file mode 100644 index 0000000000000000000000000000000000000000..685ee4db291d36279535a1d40c5ec654cdc6f6f4 --- /dev/null +++ b/eesanje/url_47_136_1.txt @@ -0,0 +1,7 @@ +ಭೂಮಿ ತಿರುಗುವಿಕೆಯನ್ನೇ ನಿಧಾನಗೊಳಿಸಿದ ಏರುತ್ತಿರುವ ತಾಪಮಾನ..! +ನವದೆಹಲಿ,ಮಾ.28-ಜಾಗತೀಕ ತಾಪಮಾನ ಏರಿಕೆಯಿಂದಾಗಿ ಭೂಮಿಯು ನಿಧಾನವಾಗಿ ತಿರುಗುತ್ತಿದೆ ಮತ್ತು ಈ ಬದಲಾವಣೆಯು ನಮ್ಮ ಗಡಿಯಾರಗಳ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ನೇಚರ್ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಈ ವರದಿ ಬಹಿರಂಗಗೊಂಡಿದೆ ಆದರೆ ಗಡಿಯಾರದ ಮೇಲೆ ಪರಿಣಾಮ ಬೀರುವುದು ಕೇವಲ ಒಂದು ಸೆಕೆಂಡ್ ಮಾತ್ರ ಹೀಗಾಗಿ ಯಾರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಲಾಗಿದೆ. +ಏರುತ್ತಿರುವ ತಾಪಮಾನವು ಧ್ರುವೀಯ ಮಂಜುಗಡ್ಡೆಯನ್ನು ಕರಗಿಸಲು ಕಾರಣವಾಗಿದೆ, ಇದರಿಂದಾಗಿ ಭೂಮಿಯು ಇತರರಿಗಿಂತ ಕಡಿಮೆ ವೇಗವಾಗಿ ತಿರುಗುತ್ತಿದೆ. ಇದು 2029 ರ ವೇಳೆಗೆ ನಮ್ಮ ಗಡಿಯಾರಗಳಿಂದ ಸೆಕೆಂಡ್ ಅನ್ನು ಕಳೆಯುವುದನ್ನು ಪರಿಗಣಿಸಲು ವಿಶ್ವ ಸಮಯಪಾಲಕರು ಕಾರಣವಾಗಬಹುದು ಎಂದು ಅಧ್ಯಯನವು ಹೇಳಿದೆ. +ಇದು ಕಂಪ್ಯೂಟರ್ ನೆಟ್‍ವರ್ಕ್ ಟೈಮಿಂಗ್‍ಗೆ ಅಭೂತಪೂರ್ವ ಸಮಸ್ಯೆಯನ್ನು ಉಂಟುಮಾಡುತ್ತದೆ ಮತ್ತು ಯುಟಿಸಿಯಲ್ಲಿ ಯೋಜಿಸಿರುವುದಕ್ಕಿಂತ ಮುಂಚೆಯೇ ಬದಲಾವಣೆಗಳನ್ನು ಮಾಡಬೇಕಾಗಬಹುದು ಎಂದು ಬರೆಯಲಾಗಿದೆ. +ಕ್ಯಾಲಿಫೋರ್ನಿಯಾ ಸ್ಯಾನ್ ಡಿಯಾಗೋ ವಿಶ್ವವಿದ್ಯಾಲಯದ ಸ್ಕ್ರಿಫ್ಸ್ ಇನ್ಸ್ಟಿಟ್ಯೂಷನ್ ಆಫ್ ಓಷಿಯಾನೋಗ್ರಫಿಯಲ್ಲಿ ಭೂ ಭೌತಶಾಸಜ್ಞರಾಗಿರುವ ಅಧ್ಯಯನದ ಲೇಖಕರಾದ ಡಂಕನ್ ಆಗ್ನ್ಯೂ ಅವರು, ಧ್ರುವಗಳಲ್ಲಿನ ಮಂಜುಗಡ್ಡೆ ಕರಗಿದಂತೆ, ಭೂಮಿಯ ದ್ರವ್ಯರಾಶಿಯು ಕೇಂದ್ರೀಕೃತವಾಗಿರುವ ಸ್ಥಳದಲ್ಲಿ ಅದು ಬದಲಾಗುತ್ತದೆ. ಬದಲಾವಣೆಯು ಗ್ರಹದ ಕೋನೀಯ ವೇಗದ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ. +ಧ್ರುವೀಯ ಮಂಜುಗಡ್ಡೆ ಕರಗುತ್ತಿರುವುದರಿಂದ, ಭೂಮಿಯ ಸಮಭಾಜಕದ ಸುತ್ತಲಿನ ದ್ರವ್ಯರಾಶಿಯು ಹೆಚ್ಚುತ್ತಿದೆ, ಇದು ಗ್ರಹದ ತಿರುಗುವಿಕೆಯ ಮೇಲೆ ಪರಿಣಾಮ ಬೀರುತ್ತದೆ. ಅಂಟಾಕ್ರ್ಟಿಕಾ ಮತ್ತು ಗ್ರೀನ್‍ಲ್ಯಾಂಡ್‍ನಂತಹ ಸ್ಥಳಗಳಲ್ಲಿ ಘನೀಕರಿಸಿದ ನೀರನ್ನು ನೀವು ತೆಗೆದುಕೊಳ್ಳುತ್ತಿರುವಿರಿ ಮತ್ತು ಹೆಪ್ಪುಗಟ್ಟಿದ ನೀರು ಕರಗುತ್ತಿದೆ ಮತ್ತು ನೀವು ದ್ರವಗಳನ್ನು ಗ್ರಹದ ಇತರ ಸ್ಥಳಗಳಿಗೆ ವರ್ಗಾಯಿಸುತ್ತೀರಿ. ನೀರು ಹರಿಯುತ್ತದೆ. ಸಮಭಾಜಕದ ಕಡೆಗೆ ಎಂದು ಮ್ಯಾಸಚೂಸೆಟ್ಸ್ ಇನ್‍ಸ್ಟಿಟ್ಯೂಟ್ ಆ-ï ಟೆಕ್ನಾಲಜಿಯಲ್ಲಿ ಜಿಯೋಫಿಸಿಕ್ಸ್‍ನ ಪ್ರಾಧ್ಯಾಪಕ ಥಾಮಸ್ ಹೆರಿಂಗ್ ಅವರು ತಿಳಿಸಿದ್ದಾರೆ. +ಇದು ಒಂದು ರೀತಿಯ ಪ್ರಭಾವಶಾಲಿಯಾಗಿದೆ, ನನಗೂ ಸಹ, ಭೂಮಿಯು ಎಷ್ಟು ವೇಗವಾಗಿ ತಿರುಗುತ್ತದೆ ಎಂಬುದನ್ನು ಅಳೆಯುವ ರೀತಿಯಲ್ಲಿ ಬದಲಾಯಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಅಭೂತಪೂರ್ವವಾದ ಸಂಗತಿಗಳು ಸಂಭವಿಸುತ್ತಿವೆ, ಆಗ್ನ್ಯೂ ಹೇಳಿದರು. \ No newline at end of file diff --git a/eesanje/url_47_136_10.txt b/eesanje/url_47_136_10.txt new file mode 100644 index 0000000000000000000000000000000000000000..51b2eec1db6d9a604f79ee990ff8853762ea0921 --- /dev/null +++ b/eesanje/url_47_136_10.txt @@ -0,0 +1,8 @@ +ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ರದ್ದು ; ಅಮಿತ್ ಶಾ +ನವದೆಹಲಿ,ಮಾ.27-ಜಮ್ಮು ಮತ್ತು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ಸಶಸ್ತ್ರ ಪಡೆಗಳನ್ನು ಹಿಂತೆಗೆದುಕೊಳ್ಳಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾತ್ರ ಬಿಡಲು ಸರ್ಕಾರವು ಯೋಜಿಸಿದೆ ಎಂದು ಶಾ ಹೇಳಿದರು. +ನಾವು ಸೈನ್ಯವನ್ನು ಹಿಂದೆಗೆದುಕೊಳ್ಳಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾತ್ರ ಬಿಡಲು ಯೋಜಿಸಿದ್ದೇವೆ. ಮೊದಲು ಜಮ್ಮು ಮತ್ತು ಕಾಶ್ಮೀರ ಪೊಲೀಸರನ್ನು ನಂಬಲಾಗಲಿಲ್ಲ ಆದರೆ ಇಂದು ಅವರು ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. +ವಿವಾದಾತ್ಮಕ ಕುರಿತು ಗೃಹ ಸಚಿವರು, ನಾವು ರದ್ದುಗೊಳಿಸುವ ಬಗ್ಗೆಯೂ ಯೋಚಿಸುತ್ತೇವೆ ಎಂದು ಹೇಳಿದರು. ಸಶಸ್ತ್ರ ಪಡೆಗಳ ಸಿಬ್ಬಂದಿಗೆ, ತೊಂದರೆಗೊಳಗಾದ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ, ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ ಗಾಗಿ ಅವರು ಅಗತ್ಯವೆಂದು ಭಾವಿಸಿದರೆ ಹುಡುಕಲು, ಬಂಧಿಸಲು ಮತ್ತು ಗುಂಡು ಹಾರಿಸಲು ವ್ಯಾಪಕ ಅಧಿಕಾರವನ್ನು ನೀಡುತ್ತದೆ. +ಸಶಸ್ತ್ರ ಪಡೆಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಕಾನೂನಿನಡಿಯಲ್ಲಿ ತೊಂದರೆಗೊಳಗಾದ ಪ್ರದೇಶ ಅಥವಾ ಜಿಲ್ಲೆಗೆ ಸೂಚನೆ ನೀಡಲಾಗುತ್ತದೆ. ಈ ಯೋಜನೆ ಕಣಿವೆಯಲ್ಲಿ ಜಾರಿಯಲ್ಲಿದ್ದರೂ ಈಶಾನ್ಯ ರಾಜ್ಯಗಳಲ್ಲಿ ಶೇ.70 ರಷ್ಟು ಪ್ರದೇಶಗಳಲ್ಲಿ ಎಎಫ್ ಎಸ್ಪಿಎ ತೆಗೆದುಹಾಕಲಾಗಿದೆ ಎಂದು ಶಾ ಈ ಹಿಂದೆ ಹೇಳಿದ್ದರು. +ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಪ್ರತಿಷ್ಠಾಪಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆ ಮತ್ತು ಅದನ್ನು ಈಡೇರಿಸಲಾಗುವುದು. ಆದರೆ, ಈ ಪ್ರಜಾಪ್ರಭುತ್ವವು ಕೇವಲ ಮೂರು ಕುಟುಂಬಗಳಿಗೆ ಸೀಮಿತವಾಗುವುದಿಲ್ಲ ಮತ್ತು ಜನರ ಪ್ರಜಾಪ್ರಭುತ್ವವಾಗಲಿದೆ, ಎಂದು ಅವರು ಹೇಳಿದರು. ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆಯನ್ನು ಸೆಪ್ಟೆಂಬರ್ಗೆ ಮುನ್ನ ನಡೆಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. +ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಮೀಸಲಾತಿಯ ಸುತ್ತ ಉದ್ಭವಿಸಿರುವ ವಿಷಯಗಳ ಕುರಿತು, ಶಾ ಅವರು ಮೊದಲ ಬಾರಿಗೆ, ಜೆ-ಕೆ ಯ ಒಬಿಸಿಗಳಿಗೆ ಮೋದಿ ಸರ್ಕಾರದಿಂದ ಮೀಸಲಾತಿ ನೀಡಲಾಗಿದೆ ಮತ್ತು ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಮೀಸಲಾತಿ ನೀಡಲಾಗಿದೆ ಎಂದು ಹೇಳಿದರು. +ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ನೀಡಲಾಗಿದೆ. ಎಸ್ಸಿ ಮತ್ತು ಎಸ್ಟಿಗಳಿಗೆ ನಾವು ಜಾಗ ನೀಡಿದ್ದೇವೆ. ಗುಜ್ಜರ್ ಮತ್ತು ಬಕರ್ವಾಲ್ಗಳ ಪಾಲನ್ನು ಕಡಿಮೆ ಮಾಡದೆ ಪಹಾಡಿಗಳಿಗೆ ಶೇ.10 ರಷ್ಟು ಮೀಸಲಾತಿ ನೀಡಲಾಗಿದೆ ಮತ್ತು ವಿಶೇಷ ನಿಬಂಧನೆಗಳನ್ನು ನೀಡಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ಸ್ಥಳಾಂತರಗೊಂಡ ಜನರಿಗೆ ವಸತಿ ಕಲ್ಪಿಸಲು ಮಾಡಲಾಗಿದೆ, ಎಂದು ಅವರು ಹೇಳಿದರು. ಈ ಸವಲತ್ತುಗಳು ತಳ ಮಟ್ಟಕ್ಕೆ ತಲುಪುವಂತೆ ಮಾಡಲು ಕೇಂದ್ರ ನಿರ್ಧರಿಸಿದೆ ಎಂದರು. \ No newline at end of file diff --git a/eesanje/url_47_136_11.txt b/eesanje/url_47_136_11.txt new file mode 100644 index 0000000000000000000000000000000000000000..ad6a9d3ea9ac78fa28b3f46e5596e361081a48fd --- /dev/null +++ b/eesanje/url_47_136_11.txt @@ -0,0 +1,5 @@ +ಬಂಧನ ಪ್ರಶ್ನಿಸಿದ ಕೇಜ್ರಿವಾಲ್ ಮನವಿ ಉತ್ತರಿಸಲು ಕಾಲಾವಕಾಶ ಕೇಳಿದ ಇಡಿ +ನವದೆಹಲಿ, ಮಾ.27 (ಪಿಟಿಐ) :ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿರುವ ಮನವಿಗೆ ಉತ್ತರಿಸಲು ಸಮಯಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯ ಬುಧವಾರ ದೆಹಲಿ ಹೈಕೋರ್ಟ್ ಅನ್ನು ಕೇಳಿಕೊಂಡಿದೆ. +ಏಜೆನ್ಸಿ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ಬೃಹತ್ ಅರ್ಜಿಯನ್ನು ಮಂಗಳವಾರವಷ್ಟೇ ಅವರಿಗೆ ಸಲ್ಲಿಸಲಾಗಿದ್ದು, ತಮ್ಮ ನಿಲುವನ್ನು ದಾಖಲಿಸಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಎಎಪಿ ನಾಯಕನ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಂಗ್ವಿ , ಪ್ರತಿಕ್ರಿಯೆ ಸಲ್ಲಿಸಲು ಕೋರಿರುವುದು ವಿಳಂಬ ತಂತ್ರ ಎಂದು ಆರೋಪಿಸಿದರು. +ಬಂಧನದ ಅಡಿಪಾಯಕ್ಕೆ ಸವಾಲು ಇದೆ ಮತ್ತು ಹಲವಾರು ಪ್ರಜ್ವಲಿಸುವ ಸಮಸ್ಯೆಗಳು ಇವೆ, ಎರಡೂ ರೀತಿಯಲ್ಲಿ ಹೈಕೋರ್ಟ್ನಿಂದ ತಕ್ಷಣದ ನಿರ್ಧಾರದ ಅಗತ್ಯವಿದೆ ಎಂದು ಹಿರಿಯ ವಕೀಲರು ಹೇಳಿದರು. +ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ, ಬಂಧನ ಮತ್ತು ನಂತರದ ಇಡಿ ರಿಮಾಂಡ್ ಖಾತೆಯಲ್ಲಿ ಅವರನ್ನು ತಕ್ಷಣ ಬಿಡುಗಡೆ ಮಾಡಲು ಕೋರಿದ್ದಾರೆ, ಅವರನ್ನು ಮಾರ್ಚ್ 21 ರಂದು ಬಂಧಿಸಲಾಯಿತು ಮತ್ತು ನಂತರ ದೆಹಲಿ ನ್ಯಾಯಾಲಯವು ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತು. \ No newline at end of file diff --git a/eesanje/url_47_136_12.txt b/eesanje/url_47_136_12.txt new file mode 100644 index 0000000000000000000000000000000000000000..6bd7d41984535aa9d18cdd8e36d06ddbef5c0fe4 --- /dev/null +++ b/eesanje/url_47_136_12.txt @@ -0,0 +1,5 @@ +ಉತ್ತರ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಚೀನಿಯರ ಬಂಧನ +ಸಿದ್ದಾರ್ಥನಗರ,ಮಾ.27-ಭಾರತ-ನೇಪಾಳ ಗಡಿಯಲ್ಲಿರುವ ಸಿದ್ಧಾರ್ಥನಗರದ ಕಕ್ರಾವಾ ಪೊಸ್ಟ್ ಮೂಲಕ ಉತ್ತರ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಇಬ್ಬರು ಚೀನಾ ಪ್ರಜೆಗಳನ್ನು ಬಂಧಿಸಲಾಗಿದೆ. ಬಂದಿತರನ್ನು ಚೀನಾದ ಸಿಚುವಾನ್ ಮೂಲದ ಝೌ ಪುಲಿನ್ ಎಂದು ಗುರುತಿಸಲಾಗಿದ್ದು, ಮಹಿಳೆಯನ್ನು ಚೀನಾದ ಚಾಂಗ್ಕಿಂಗ್ ಮೂಲದ ಯುವಾನ್ ಯುಹಾನ್ ಎಂದು ಗುರುತಿಸಲಾಗಿದೆ. +ಎರಡು ಚೈನೀಸ್ ಪಾಸ್ಪೋರ್ಟ್ ಗಳು , ನೇಪಾಳಕ್ಕೆ ಪ್ರವಾಸಿ ವೀಸಾ, ಮೊಬೈಲ್ -ಫೋನ್ ಗಳು , ಎರಡು ಚೀನಾದ ಸಿಮ್ ಕಾರ್ಡ್ಗಳು ಮತ್ತು ಎರಡು ಸಣ್ಣ ಚೀಲಗಳಲ್ಲಿ ಒಟ್ಟು ಒಂಬತ್ತು ವಿವಿಧ ರೀತಿಯ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. +ನಿನ್ನೆ ಇಬ್ಬರು ಚೀನೀ ಪ್ರಜೆಗಳನ್ನು (ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ) ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವಾಗ ಬಂಧಿಸಲಾಯಿತು. ವಿದೇಶಿಯರ ಕಾಯಿದೆ 1946 ರ ಸೆಕ್ಷನ್ 14 (ಎ) ಅಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. +ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಮತ್ತು ಆರೋಪಿಗಳನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಕಳುಹಿಸಲಾಗಿದೆ ಎಂದು ಸಂಬಂಧಪಟ್ಟ ಅಧಕಾಧಿರಿಗಳು ಮಾಹಿತಿ ನೀಡಿದ್ದಾರೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. \ No newline at end of file diff --git a/eesanje/url_47_136_2.txt b/eesanje/url_47_136_2.txt new file mode 100644 index 0000000000000000000000000000000000000000..5955eaf8f5dfdd542a55b9de2317ae2f885332df --- /dev/null +++ b/eesanje/url_47_136_2.txt @@ -0,0 +1,4 @@ +ಅರುಣಾಚಲ ಪ್ರದೇಶ : ವಿಧಾನಸಭೆಗೆ ಐವರು ಬಿಜೆಪಿ ಅಭ್ಯರ್ಥಿಗಳ ಅವಿರೋಧ ಆಯ್ಕೆ +ಇಟಾನಗರ,ಮಾ.28-ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಯ ಡೆಡ್‍ಲೈನ್ ಇಂದು ಮುಕ್ತಾಯವಾಗಿದ್ದು, 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. +ಚುನಾವಣಾ ಆಯೋಗ ಇನ್ನೂ ಅಧಿಕೃತವಾಗಿ ಐವರು ವಿಜಯಿ ಆಗಿದ್ದಾರೆ ಎಂದು ಘೋಷಣೆ ಮಾಡಿಲ್ಲ. ಹಲವು ಕ್ಷೇತ್ರಗಳಲ್ಲಿ ವಿರೋಧ ಪಕ್ಷಗಳು ದುರ್ಬಲಗೊಂಡಿದ್ದು ಈ ಬಾರಿ ಆಡಳಿತ ಸರ್ಕಾರ ಕ್ಲೀನ್ ಸ್ವೀಪ್ ಮಾಡುವ ಸಾಧ್ಯತೆಯಿದೆ. +ಕೇಂದ್ರ ಸಚಿವ ಕಿರಣ್ ರಿಜಿಜು ಎಕ್ಸ್‍ನಲ್ಲಿ ಪೋಸ್ಟ್ ಮಾಡಿ, ರಾಷ್ಟ್ರದ ಚಿತ್ತವನ್ನು ತೋರಿಸುವಲ್ಲಿ ಅರುಣಾಚಲ ಪ್ರದೇಶ ಮುಂದಿದೆ. ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಿಎಂ ನೇತೃತ್ವದಲ್ಲಿ ಬಿಜೆಪಿ 5 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಅಗಾಧ ಅಭಿವೃದ್ಧಿಯಾಗಿದೆ ಎಂದು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_136_3.txt b/eesanje/url_47_136_3.txt new file mode 100644 index 0000000000000000000000000000000000000000..1505bba80a2dae0b8a9b8856f4dd68cfe58b7e2b --- /dev/null +++ b/eesanje/url_47_136_3.txt @@ -0,0 +1,10 @@ +ಓವೈಸಿ ವಿರುದ್ಧ ಸಾನಿಯಾ ಮಿರ್ಜಾ..? : ಕಾಂಗ್ರೆಸ್ ಮಾಸ್ಟರ್ ಪ್ಲಾನ್ +ಹೈದರಾಬಾದ್,ಮಾ.28-ಲೋಕಸಭಾ ಚುನಾವಣೆಯ ರಂಗು ಕಾವೇರಿದೆ. ಎತ್ತ ನೋಡಿದರತ್ತ ಎಲ್ಲಾ ಪಕ್ಷಗಳ ಪ್ರಚಾರದ ಕಾರ್ಯ ಭರದಿಂದ ನಡೆಯುತ್ತಿದೆ. ಒಂದೊಂದು ಲೋಕಸಭಾ ಕ್ಷೇತ್ರವೂ ಒಂದಿಲ್ಲೊಂದು ಕಾರಣಕ್ಕೆ ಮಹತ್ವ ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸ್ರ್ಪಧಿಸುವ ಕ್ಷೇತ್ರ ಭಾರೀ ರಂಗು ಪಡೆಯುವ ಸಾಧ್ಯತೆ ಇದೆ. +ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿರಿಯ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಮಣಿಸಲು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಪ್ರಯತ್ನ ಪಡುತ್ತಿವೆ. ಹೀಗಾಗಿ ಓವೈಸಿಯನ್ನು ಸೋಲಿಸಲು ದೇಶದ ಹಿರಿಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಕಣಕ್ಕಿಳಿಸಿ ಹೈದರಾಬಾದ್‍ನಲ್ಲಿ ನೇರಾನೇರಾ ಫೈಟ್‍ಗೆ ದಾರಿ ಮಾಡಿಕೊಡಲು ರಾಜಕೀಯ ಪಕ್ಷವೊಂದು ಪ್ಲಾನ್ ಮಾಡಿದೆ. +ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಜನಪ್ರಿಯತೆಯ ಲಾಭ ಪಡೆದು ಓವೈಸಿಗೆ ಟಕ್ಕರ್ ನೀಡಲು ಪಕ್ಷವೊಂದು ಮುಂದಾಗಿದ್ದು, ಹೀಗಾಗಿ ಹೈದರಾಬಾದ್‍ನಲ್ಲಿ ಈ ಬಾರಿ ಕದನ ಕುತೂಹಲ ಸೃಷ್ಟಿಸುವ ಸಾಧ್ಯತೆ ಇದೆ. ಸಾನಿಯಾ ಮಿರ್ಜಾ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿಗೆ ನೇರ ಸ್ಪರ್ಧೆ ನೀಡುವ ಸಾಧ್ಯತೆ ಇದ್ದು, ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಸಾನಿಯಾ ಮಿರ್ಜಾ ಅವರ ಜನಪ್ರಿಯತೆಯ ಲಾಭವನ್ನು ಪಡೆಯಲು ಬಯಸಿದೆ. +ಸಾನಿಯಾ ಮಿರ್ಜಾ ಅವರನ್ನು ಹೈದರಾಬಾದ್‍ನಿಂದ ಅಸಾದುದ್ದೀನ್ ಓವೈಸಿ ವಿರುದ್ಧ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದು, ಇದಕ್ಕಾಗಿ ಸಾನಿಯಾ ಮಿರ್ಜಾ ಅವರನ್ನು ಒಪ್ಪಿಸಲು ಕಾಂಗ್ರೆಸ್ ನಾಯಕರು ಮನೆ ಬಾಗಿಲ ಕದ ತಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಸಾದುದ್ದೀನ್ ಓವೈಸಿ ಕಳೆದ ನಾಲ್ಕು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಕಾರಣ ಹೈದರಾಬಾದ್‍ನಿಂದ ಸ್ಪರ್ಧೆ ಕುತೂಹಲ ಮೂಡಿಸಲಿದೆ. +ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಇದರಲ್ಲಿ ಲೋಕಸಭಾ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಸಭೆಯಲ್ಲಿ ಮೊಹಮ್ಮದ್ ಅಜರುದ್ದೀನ್ ಅವರು ಹೈದರಾಬಾದ್‍ನಿಂದ ಸಾನಿಯಾ ಮಿರ್ಜಾಗೆ ಟಿಕೆಟ್ ನೀಡಲು ಮುಂದಾಗಿದ್ದರು. +ಮೊಹಮ್ಮದ್ ಅಜರುದ್ದೀನ್ ಅವರು ಸಾನಿಯಾ ಮಿರ್ಜಾ ಅವರೊಂದಿಗೆ ಕೌಟುಂಬಿಕ ಸಂಬಂಧ ಹೊಂದಿದ್ದಾರೆ. ಅಜರುದ್ದೀನ್ ಅವರ ಪುತ್ರ ಅಸಾದುದ್ದೀನ್ ಅವರು ಸಾನಿಯಾ ಮಿರ್ಜಾ ಅವರ ತಂಗಿ ಅನಮ್ ಮಿರ್ಜಾ ಅವರನ್ನು ವಿವಾಹವಾಗಿದ್ದಾರೆ. ಹೈದರಾಬಾದ್‍ನ ಲೋಕಸಭಾ ಸ್ಥಾನವು ವಿಶೇಷ ಪ್ರಾಮುಖ್ಯತೆ ಹೊಂದಿದೆ. ಈ ಕ್ಷೇತ್ರ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ವೈವಿಧ್ಯಮಯ ಜನಸಂಖ್ಯಾ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. +ಈ ಸ್ಥಾನವು ಅನೇಕ ವರ್ಷಗಳಿಂದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ-ಮುಸ್ಲಿಮೀನ್ (ಎಐಎಂಐಎಂ) ನ ಭದ್ರಕೋಟೆಯಾಗಿದೆ. ಆದಾಗ್ಯೂ, ಇತ್ತೀಚೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆಯೂ ಉಂಟಾಗಿದೆ ಎಂದು ಸಾಬೀತಾಗಿದೆ, ಇಲ್ಲಿ ಕಾಂಗ್ರೆಸ್ ಮತ್ತು ಎಐಎಂಐಎಂ ಮಧ್ಯೆ ಪ್ರಬಲ ಸವಾಲು ಎಲ್ಲಾ ಚುನಾವಣೆಗಳಲ್ಲಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಹೈದರಾಬಾದ್ ಮೈದಾನ ಈ ಬಾರಿ ವಿಶೇಷ ಎನಿಸಿಕೊಂಡಿದೆ. +ಕಾಂಗ್ರೆಸ್ ಪಕ್ಷ ಸಾನಿಯಾ ಮಿರ್ಜಾ ಜನಪ್ರಿಯತೆಯ ಲಾಭ ಪಡೆಯಲು ಬಯಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸಾನಿಯಾ ಮಿರ್ಜಾ ಅವರು ಭಾರತ್ ರಾಷ್ಟ್ರ ಸಮಿತಿ ಅಡಿಯಲ್ಲಿ ಹೈದರಾಬಾದ್ ನಗರದ ಬ್ರಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. ಅವರು ಮಹಿಳೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿನ್ನೆಲೆ ಇರುವ ಕಾರಣ, ಈ ವಿಷಯದಲ್ಲಿ ಅವರು ಕಾಂಗ್ರೆಸ್ ಆಹ್ವಾನವನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ. ಆದರೆ, ಸಾನಿಯಾ ಮಿರ್ಜಾ ಕುರಿತ ಚರ್ಚೆಯ ನಂತರ ಎಐಎಂಐಎಂ ನಾಯಕರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. +ಸಾನಿಯಾ ಮಿರ್ಜಾ ಹೆಸರು ಕೇಳಿ ಬಂದ ಮೇಲೆ ನಗರದ ಜನರಲ್ಲಿ ಕುತೂಹಲ ಮೂಡಿದೆ. ನಿಸ್ಸಂಶಯವಾಗಿ, ಅವರು ಸಾಕಷ್ಟು ಜನಪ್ರಿಯರಾಗಿದ್ದಾರೆ. ಆದರೆ ಅವರು ರಾಜಕೀಯ ಕ್ಷೇತ್ರಕ್ಕೆ ಬಂದರೆ ಅದು ಅವರಿಗೆ ಹೊಸದು ಮತ್ತು ಅವರು ಅನುಭವಿಯೊಬ್ಬರನ್ನು ಎದುರಿಸಲಿದ್ದಾರೆ. ಆದ್ದರಿಂದ ಇದು ಸಾಕಷ್ಟು ಸವಾಲಾಗಬಹುದು. \ No newline at end of file diff --git a/eesanje/url_47_136_4.txt b/eesanje/url_47_136_4.txt new file mode 100644 index 0000000000000000000000000000000000000000..89d9a988d17a1a9cfef6f2b11b2dffcc30102bd5 --- /dev/null +++ b/eesanje/url_47_136_4.txt @@ -0,0 +1,5 @@ +ಗಡಿ ಸಮಸ್ಯೆ ಕುರಿತಂತೆ ಭಾರತ-ಚೀನಾ ಮಹತ್ವದ ಚರ್ಚೆ +ನವದೆಹಲಿ, ಮಾ 28 (ಪಿಟಿಐ) :ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯಕ್ಕಾಗಿ ಕಾರ್ಯಾಚರಣಾ ಕಾರ್ಯವಿಧಾನದ 29ನೇ ಸಭೆಯನ್ನು ನಡೆಸಲಾಯಿತು ಮತ್ತು ಎರಡು ಕಡೆಯವರು ಸಂಪೂರ್ಣ ನಿರ್ಲಿಪ್ತತೆಯನ್ನು ಸಾಧಿಸುವುದು ಮತ್ತು ಗಡಿ ಸಮಸ್ಯೆ ಪರಿಹರಿಸುವುದು ಹೇಗೆ ಎಂಬದು ಕುರಿತಂತೆ ಮಹತ್ವದ ಚರ್ಚೆ ನಡೆಸಿದರು. +ನಿನ್ನೆ ಬೀಜಿಂಗ್‍ನಲ್ಲಿ ನಡೆದ ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪಶ್ಚಿಮ ವಲಯದ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‍ಎಸಿ) ಉದ್ದಕ್ಕೂ ಸಂಪೂರ್ಣ ನಿರ್ಲಿಪ್ತತೆಯನ್ನು ಸಾಧಿಸುವುದು ಮತ್ತು ಉಳಿದ ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು ಎಂಬುದರ ಕುರಿತು ಉಭಯ ಕಡೆಯವರು ಆಳವಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. +ವಿದೇಶಾಂಗ ಇಲಾಖೆ ಜಂಟಿ ಕಾರ್ಯದರ್ಶಿ (ಪೂರ್ವ ಏಷ್ಯಾ) ಭಾರತೀಯ ನಿಯೋಗವನ್ನು ಮುನ್ನಡೆಸಿದರು. ಚೀನಾದ ವಿದೇಶಾಂಗ ಸಚಿವಾಲಯದ ಗಡಿ ಮತ್ತು ಸಾಗರ ವಿಭಾಗದ ಮಹಾನಿರ್ದೇಶಕರು ಚೀನಾದ ನಿಯೋಗವನ್ನು ಮುನ್ನಡೆಸಿದರು ಎಂದು ಹೇಳಿಕೆ ತಿಳಿಸಿದೆ. +ಮಧ್ಯಂತರದಲ್ಲಿ, ಎರಡೂ ಕಡೆಯವರು ರಾಜತಾಂತ್ರಿಕ ಮತ್ತು ಮಿಲಿಟರಿ ಚಾನೆಲ್‍ಗಳ ಮೂಲಕ ನಿಯಮಿತ ಸಂಪರ್ಕವನ್ನು ಕಾಪಾಡಿಕೊಳ್ಳಲು ಮತ್ತು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಒಪ್ಪಂದಗಳು ಮತ್ತು ಪ್ರೊಟೋಕಾಲ್‍ಗಳಿಗೆ ಅನುಗುಣವಾಗಿ ಗಡಿ ಪ್ರದೇಶಗಳಲ್ಲಿ ನೆಲದ ಮೇಲೆ ಶಾಂತಿ ಮತ್ತು ನೆಮ್ಮದಿಯನ್ನು ಎತ್ತಿಹಿಡಿಯುವ ಅಗತ್ಯತೆಯ ಬಗ್ಗೆ ಒಪ್ಪಿಕೊಂಡರು ಎಂದು ಅದು ಹೇಳಿದೆ. ಭಾರತ-ಚೀನಾ ಗಡಿ ವ್ಯವಹಾರಗಳ ಸಮಾಲೋಚನೆ ಮತ್ತು ಸಮನ್ವಯಕ್ಕಾಗಿ ವರ್ಕಿಂಗ್ ಮೆಕ್ಯಾನಿಸಂನ 28 ನೇ ಸಭೆಯು ಕಳೆದ ವರ್ಷ ನವೆಂಬರ್ 30 ರಂದು ನಡೆದಿತ್ತು. \ No newline at end of file diff --git a/eesanje/url_47_136_5.txt b/eesanje/url_47_136_5.txt new file mode 100644 index 0000000000000000000000000000000000000000..2bb21e228dfe792c48feb1ba5eb6c67e96946c8e --- /dev/null +++ b/eesanje/url_47_136_5.txt @@ -0,0 +1,5 @@ +ಆತ್ಮಹತ್ಯೆಗೆ ಯತ್ನಿಸಿದ ಈರೋಡ್ ಸಂಸದ ಎ.ಗಣೇಶಮೂರ್ತಿ ಸಾವು +ಈರೋಡ್ ಮಾ 28 (ಪಿಟಿಐ) :ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ ಈರೋಡ್ ಕ್ಷೇತ್ರದ ಸಂಸದ ಎ.ಗಣೇಶಮೂರ್ತಿ( 77) ಬೆಳಗ್ಗೆ ಚಿಕಿತ್ಸೆ ಫಲಿಸದೆ ಕೊಯಮತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಮಾರ್ಚ್ 24 ರಂದು ಈರೋಡ್‍ನಲ್ಲಿನ ತಮ್ಮ ಮನೆಯಲ್ಲಿ ಕೆಲವು ವಿಷಯುಕ್ತ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಎ.ಗಣೇಶಮೂರ್ತಿ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೊಯಮತ್ತೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. +ಈರೋಡ್ ಟೌನ್ ಪೊಲೀಸರು ಈಗಾಗಲೇ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದರು ಈಗ ಆಸ್ಪತ್ರೆ ವೈದ್ಯಾಧಿಕಾರಿಗಳು ಶವವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದು, ಶವಪರೀಕ್ಷೆಗಾಗಿ ಇನ್‍ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್‍ಪೋರ್ಟ್ (ಐಆರ್‍ಟಿ) ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತರಲಾಗಿದೆ. +ಮರಣೋತ್ತರ ಪರೀಕ್ಷೆ ಬಳಿಕ ಇಲ್ಲಿಂದ 15 ಕಿ.ಮೀ ದೂರದ ಕುಮಾರವಲಸು ಗ್ರಾಮಕ್ಕೆ ಕೊಂಡೊಯ್ದು ಅಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಡಿಎಂಕೆ ಪಕ್ಷದ ಮೂಲಗಳು ತಿಳಿಸಿವೆ. ಗಣೇಶಮೂರ್ತಿ ಅವರು 2019 ರಲ್ಲಿ ಡಿಎಂಕೆ ಪಕದಷದಿಂದ ಸ್ರ್ಪಧಿಸಿ ಸಂಸದರಾಗಿ ಆಯ್ಕೆಯಾದರು. ಅವರು ಈ ಹಿಂದೆ 1998 ರಲ್ಲಿ ಪಳನಿ ಮತ್ತು 2009 ರಲ್ಲಿ ಈರೋಡ್‍ನಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದರು.ಗಣೇಶಮೂರ್ತಿ ಅವರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. +ಘಟನೆ ಸಂಬಂಧ ಹಲವಾರು ಮಾತುಗಳು ಕೇಳಿಬರುತ್ತಿದೆ.ಈರೋಡ್ ಟೌನ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಎ.ಗಣೇಶಮೂರ್ತಿ ಅಕಾಲಿಕ ನಿಧನಕ್ಕೆ ಸಿಎಂ ಸ್ಟಾಲೀನ್ ,ಮಾಜಿ ಸಿಎಂ ಪಳನಿಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_136_6.txt b/eesanje/url_47_136_6.txt new file mode 100644 index 0000000000000000000000000000000000000000..9752f4a6376865e4efb68a384357da4b17d97315 --- /dev/null +++ b/eesanje/url_47_136_6.txt @@ -0,0 +1,7 @@ +2ನೇ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ +ನವದೆಹಲಿ, ಮಾ.28 (ಪಿಟಿಐ)– ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕ ಸೇರಿದಂತೆ 12 ರಾಜ್ಯಗಳ 88 ಸಂಸದೀಯ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. +ಏಪ್ರಿಲ್ 26 ರಂದು ನಡೆಯಲಿರುವ ಸಂಸತ್ತಿನ ಎರಡನೇ ಹಂತದ ಚುನಾವಣೆಗೆ ಇಂದು ಮುಂಜಾನೆ ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. +ಏಪ್ರಿಲ್ 5 ರಂದು, ಜಮ್ಮು ಮತ್ತು ಕಾಶ್ಮೀರವನ್ನು ಹೊರತುಪಡಿಸಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 6 ರಂದು ಪರಿಶೀಲನೆ ನಡೆಯಲಿದೆ. +ಈ ಹಂತದಲ್ಲಿ ಹೊರ ಮಣಿಪುರ ಲೋಕಸಭಾ ಕ್ಷೇತ್ರದ ಒಂದು ಭಾಗದಲ್ಲಿ ಮತದಾನವೂ ನಡೆಯಲಿದೆ. ಹೊರ ಮಣಿಪುರ ಕ್ಷೇತ್ರದ ಚುನಾವಣೆಯ ಅಧಿಸೂಚನೆಯನ್ನು ಮಾರ್ಚ್ 20 ರಂದು ಮೊದಲ ಹಂತದ ಗೆಜೆಟ್ ಅಧಿಸೂಚನೆಯಲ್ಲಿ ಸೇರಿಸಲಾಗಿದೆ. +ಹೊರ ಮಣಿಪುರ ಲೋಕಸಭಾ ಕ್ಷೇತ್ರದ ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಕ್ಷೇತ್ರದ ಹದಿಮೂರು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. +ಅಸ್ಸಾಂ, ಬಿಹಾರ, ಛತ್ತೀಸ್‍ಗಢ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ತ್ರಿಪುರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಹೊರ ಭಾಗದ ಹೊರತಾಗಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾಗಿವೆ. \ No newline at end of file diff --git a/eesanje/url_47_136_7.txt b/eesanje/url_47_136_7.txt new file mode 100644 index 0000000000000000000000000000000000000000..de382d1b35d94159b8d39a6f1bb7ac26bc8a051c --- /dev/null +++ b/eesanje/url_47_136_7.txt @@ -0,0 +1,6 @@ +ಒಡಿಶಾದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಇಬ್ಬರಿಗೆ ಗಾಯ +ಸಂಬಲ್ಪುರ, ಮಾ.27 (ಪಿಟಿಐ) :ಒಡಿಶಾದ ಸಂಬಲ್ಪುರ ನಗರದಲ್ಲಿ ಅಪರಿಚಿತರು ಕಚ್ಚಾ ಬಾಂಬ್ಗಳನ್ನು ಎಸೆದ ಪರಿಣಾಮ ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ತಡರಾತ್ರಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಿರಬಾಬ ಚಕ್ ಎಂಬಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕಚ್ಚಾ ಬಾಂಬ್ಗಳನ್ನು ಎಸೆದ ಪರಿಣಾಮ ವಾಹನದ ಬಳಿ ನಿಂತಿದ್ದ ಇಬ್ಬರಿಗೆ ಗಾಯಗಳಾಗಿವೆ. +ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ ಎಂದು ಸಂಬಲ್ಪುರ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಕುಮಾರ್ ಭಾಮೂ ಸುದ್ದಿಗಾರರಿಗೆ ತಿಳಿಸಿದ್ದಾರೆ. +ಸಂಬಲ್ಪುರ ಜಿಲ್ಲಾಧಿಕಾರಿ ಅಕ್ಷಯ್ ಸುನಿಲ್ ಅಗರ್ವಾಲ್ ಜನರು ಶಾಂತಿ ಕಾಪಾಡುವಂತೆ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ, ಭಯಪಡಬೇಡಿ ಮತ್ತು ಆಡಳಿತದೊಂದಿಗೆ ಸಹಕರಿಸಿ ಎಂದು ಕಲೆಕ್ಟರ್ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. +ಘಟನೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ ಮತ್ತು ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೋಟಾರ್ಸೈಕಲ್ನ ಮೇಲೆ ಬಾಂಬ್ ಬಿದ್ದಿದ್ದರಿಂದ ಸೀಟು ಸುಟ್ಟು ಕರಕಲಾಗಿದೆ.ಭಾಮೂ ಹಾಗೂ ಉತ್ತರ ವಲಯದ ಐಜಿ ಹಿಮಾಂಶುಕುಮಾರ್ ಲಾಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. +ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳವನ್ನು ಸುತ್ತುವರಿಯಲಾಗಿದೆ ಮತ್ತು ಕೇಂದ್ರ ಪಡೆಗಳನ್ನು ಸಹ ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಏಪ್ರಿಲ್ 2023 ರಲ್ಲಿ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ನಗರವು ಕೋಮು ಘರ್ಷಣೆಗೆ ಸಾಕ್ಷಿಯಾಯಿತು. ಗಲಭೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವಾರು ಅಂಗಡಿಗಳು ಸುಟ್ಟು ಕರಕಲಾಗಿದ್ದವು. \ No newline at end of file diff --git a/eesanje/url_47_136_8.txt b/eesanje/url_47_136_8.txt new file mode 100644 index 0000000000000000000000000000000000000000..b68880fe5767e1a369b876aa7d9cf8338f3a3a94 --- /dev/null +++ b/eesanje/url_47_136_8.txt @@ -0,0 +1,5 @@ +ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಆರು ನಕ್ಸಲರ ಎನ್‌ಕೌಂಟರ್‌ +ಬಿಜಾಪುರ, ಮಾ.27 (ಪಿಟಿಐ) :ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ ನಲ್ಲಿ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಕಾಡಿನಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜï) ಸುಂದರರಾಜ್ ಪಿಟಿಐಗೆ ತಿಳಿಸಿದರು. +ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ಸೆಂಟ್ರಲ್ ರಿಸರ್ವ್ ಪೊಲೀಸ್ -ಫೋರ್ಸ್ ಮತ್ತು ಅದರ ಗಣ್ಯ ಘಟಕ ಕಮಾಂಡೋ ಬೆಟಾಲಿಯನ್ -ಫಾರ್ ರೆಸಲ್ಯೂಟ್ ಆಕ್ಷನ್ಗೆ ಸೇರಿದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. +ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಮಹಿಳೆ ಸೇರಿದಂತೆ ಆರು ನಕ್ಸಲೀಯರ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ಬಿಜಾಪುರ ಜಿಲ್ಲೆಯು ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯಲಿದೆ \ No newline at end of file diff --git a/eesanje/url_47_136_9.txt b/eesanje/url_47_136_9.txt new file mode 100644 index 0000000000000000000000000000000000000000..e4eb86cae493761a12129a9ffdadbbb18f8a2d23 --- /dev/null +++ b/eesanje/url_47_136_9.txt @@ -0,0 +1,5 @@ +ಸುಖ ಸಮೃದ್ಧಿಗಾಗಿ ಪುರುಷರು ಮಹಿಳೆ ವೇಷದಲ್ಲಿ ಕಾಮದೇವನನ್ನು ಪೂಜಿಸಬೇಕಂತೆ..! +ಕರ್ನೂಲ್, ಮಾ.27-ಕಾಮದೇವನನ್ನು ಪುರುಷರು ಮಹಿಳೆಯರ ವೇಷಭೂಷಣದಲ್ಲಿ ಪೂಜಿಸಿದರೆ ಅವರಿಗೆ ಸುಖ ಸಮೃದ್ಧಿ ಸಿಗುತ್ತದ್ದಂತೆ. ಏನಪ್ಪಾ ಇದು ಹೊಸ ಐಡಿಯಾ ಅಂದುಕೊಂಡೀರಾ…. ಇದು ಕೇವಲ ಐಡಿಯಾ ಅಲ್ಲಿ ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆಯ ಅದೋನಿ ಮಂಡಲದ ಸಂತೆಕೂಡ್ಲೂರು ಗ್ರಾಮದ ಜನರ ನಂಬಿಕೆ. +ಹೌದು ಈ ಗ್ರಾಮದ ಜನರು ಅನಾದಿ ಕಾಲದಿಂದಲೂ ಪ್ರತಿ ಹೋಳಿ ಹಬ್ಬದ ಸಂದರ್ಭದಲ್ಲಿ ಈ ವಿಶಿಷ್ಟ ಸಂಪ್ರದಾಯವನ್ನು ಪಾಲಿಸಿಕೊಂಡು ಬರುತ್ತಿದ್ದಾರೆ.ಇಲ್ಲಿನ ಪುರುಷರು ಹೋಳಿ ಹಬ್ಬದ ದಿನ ಮಹಿಳೆಯರಂತೆ ಆಕರ್ಷಕವಾಗಿ ಸೀರೆ, ರವಿಕೆ ತೊಟ್ಟು ಒಡವೆ ಹಾಕಿಕೊಂಡು ಮಹಿಳೆಯರು ನಾಚುವಂತೆ ರೆಡಿಯಾಗಿ ಕಾಮದೇವನನ್ನು ವಿಧ ವಿಧವಾಗಿ ಪೂಜಿಸಿಕೊಂಡು ಬರುತ್ತಿದ್ದಾರೆ. +ಪುರುಷರು ಮಹಿಳೆಯರ ವೇಷಭೂಷಣದಲ್ಲಿ ರತಿ ಮನ್ಮಥ ದೇವರಿಗೆ ಗೌರವ ಸಲ್ಲಿಸುವ ದೃಶ್ಯವು ಸಂಪ್ರದಾಯ ಮತ್ತು ನಂಬಿಕೆಯ ನಿರಂತರ ಮನೋಭಾವವನ್ನು ಸಂಕೇತಿಸುತ್ತದೆ ಎಂದು ಅಲ್ಲಿನವರು ಹೇಳಿಕೊಂಡಿದ್ದಾರೆ.ಹೋಳಿ ಹಬ್ಬದಂದು ಕಾಮದೇವನನ್ನು ಪುರುಷರು ಮಹಿಳೆಯರ ವೇಷಭೂಷಣದಲ್ಲಿ ಪೂಜಿಸಿದರೆ, ಕುಟುಂಬವು ಸಂತೋಷ ಮತ್ತು ಸಮೃದ್ಧಿಯನ್ನು ಭಗವಂತನಿಂದ ಆಶೀರ್ವದಿಸುತ್ತದೆ ಎಂದು ಅಲ್ಲಿನ ಜನ ನಂಬಿದ್ದಾರೆ. +ಅನಾದಿ ಕಾಲದಿಂದಲೂ ಈ ವಿಶಿಷ್ಠ ಆಚರಣೆ ನಡೆಸಿಕೊಂಡು ಬರುತ್ತಿದ್ದೇವೆ ಆಧುನಿಕ ಕಾಲದಲ್ಲೂ ನಮ್ಮ ಸಂಪ್ರದಾಯಗಳನ್ನು ಬಿಟ್ಟುಕೊಡಲು ನಾವು ಸಿದ್ದರಿಲ್ಲ. ಹೀಗಾಗಿ ಈಗಲೂ ನಾವು ಹೋಳಿ ಹಬ್ಬದ ಸಮಯದಲ್ಲಿ ಕಾಮದೇವನನ್ನು ಪೂಜಿಸಿಕೊಂಡು ಬರುತ್ತಿದ್ದೇವೆ ಮುಂದಿನ ದಿನಗಳಲ್ಲೂ ನಮ್ಮ ಈ ಸಂಪ್ರದಾಯ ಮುಂದುವರೆಸಿಕೊಂಡು ಹೋಗುತ್ತೇವೆ ಎನ್ನುತ್ತಾರೆ ಸಂತೆಕೂಡ್ಲೂರು ಗ್ರಾಮದ ಜನ. \ No newline at end of file diff --git a/eesanje/url_47_137_1.txt b/eesanje/url_47_137_1.txt new file mode 100644 index 0000000000000000000000000000000000000000..9b0fe3aef377f232bf3ec6a8f93e33e64e44564d --- /dev/null +++ b/eesanje/url_47_137_1.txt @@ -0,0 +1,6 @@ +ಮದ್ರಾಸ್ ಐಐಟಿ ವಿದ್ಯಾರ್ಥಿ ಈಗ ಮೈಕ್ರೋಸಾಫ್ಟ್ ವಿಂಡೋಸ್‌ನ ಮುಖ್ಯಸ್ಥ +ನವದೆಹಲಿ,ಮಾ.27-ಐಐಟಿ ಮದ್ರಾಸಿನ ಹಳೆಯ ವಿದ್ಯಾರ್ಥಿಯಾಗಿರುವ ಪವನ್ ದಾವುಲೂರಿ ಅವರು ಮೈಕ್ರೋಸಾಫ್ಟ್ ವಿಂಡೋಸ್ ಮತ್ತು ಸರ್ಫೆಸ್ ನ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಅವರು ಗೂಗಲ್ನ ಸುಂದರ್ ಪಿಚೈ ಮತ್ತು ಮೈಕ್ರೋಸಾಫ್ಟ್ ನ ಸತ್ಯ ನಾಡೆಲ್ಲಾ ಅವರಂತಹ ಬಿಗ್ ಟೆಕ್ ಕಂಪನಿಯಲ್ಲಿ ನಾಯಕತ್ವದ ಪಾತ್ರವನ್ನು ವಹಿಸಿದ ಇತ್ತೀಚಿನ ಭಾರತೀಯರಾಗಿದ್ದಾರೆ. +ಕಳೆದ ವರ್ಷ ಅಮೆಜಾನ್ಗೆ ಸೇರಲು ಇಲಾಖೆಯನ್ನು ತೊರೆದ ದೀರ್ಘಕಾಲದ ಉತ್ಪನ್ನ ಮುಖ್ಯಸ್ಥ ಪನೋಸ್ ಪನಾಯ್ ಅವರಿಂದ ದಾವುಲುರಿ ಅಧಿಕಾರ ವಹಿಸಿಕೊಂಡರು. ಈ ಹಿಂದೆ, ದಾವುಲುರಿ ಸರ್ಫೆಸ್ ಗುಂಪನ್ನು ಮೇಲ್ವಿಚಾರಣೆ ಮಾಡಿದ್ದರೆ, ಮಿಖಾಯಿಲ್ ಪರಾಖಿನ್ ವಿಂಡೋಸ್ ವಿಭಾಗದ ಮುಖ್ಯಸ್ಥರಾಗಿದ್ದರು. ಪರಖಿನ್ ಮತ್ತು ಪನಾಯ್ ಅವರು ಸಂಸ್ಥೆ ತೊರೆದ ನಂತರ ಅವರು ವಿಂಡೋಸ್ ಮತ್ತು ಸರ್ಫೆಸ್ ವಿಭಾಗಗಳನ್ನು ವಹಿಸಿಕೊಂಡಿದ್ದಾರೆ. +ಮೈಕ್ರೋಸಾಫ್ಟ್ ನ ಅನುಭವಗಳು ಮತ್ತು ಸಾಧನಗಳ ಮುಖ್ಯಸ್ಥ ರಾಜೇಶ್ ಝಾ ಅವರ ಆಂತರಿಕ ಜ್ಞಾಪಕವನ್ನು ದಿ ವರ್ಜ್ನಿಂದ ಪ್ರವೇಶಿಸಲಾಗಿದೆ, ಸಂಸ್ಥೆಯಲ್ಲಿನ ಹೊಸ ಶ್ರೇಣಿಯನ್ನು ವಿವರಿಸಿದೆ. ಈ ನಿರ್ಧಾರವು ಸಂಸ್ಥೆಯು ತನ್ನ ಸಾಧನಗಳು ಮತ್ತು ಅನುಭವಗಳನ್ನು ಅಐ ಯುಗದಲ್ಲಿ ನಿರ್ಮಿಸಲು ಸಮಗ್ರ ವಿಧಾನವನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. +ಈ ಬದಲಾವಣೆಯ ಭಾಗವಾಗಿ, ನಾವು ಅನುಭವಗಳು + ಸಾಧನಗಳು ವಿಭಾಗದ ಪ್ರಮುಖ ಭಾಗವಾಗಿ ವಿಂಡೋಸ್ ಅನುಭವಗಳು ಮತ್ತು ವಿಂಡೋಸ್ + ಸಾಧನಗಳ ತಂಡಗಳನ್ನು ಒಟ್ಟುಗೂಡಿಸುತ್ತಿದ್ದೇವೆ. ಇದು ಸಿಲಿಕಾನ್, ಸಿಸ್ಟಮ್ಗಳನ್ನು ನಿರ್ಮಿಸಲು ಸಮಗ್ರ ವಿಧಾನವನ್ನು ತೆಗೆದುಕೊಳ್ಳಲು ನಮಗೆ ಅನುವು ಮಾಡಿಕೊಡುತ್ತದೆ ಎಂದಿದ್ದಾರೆ. +ದಾವುಲುರಿ ಮೈಕ್ರೋಸಾಫ್ಟ್ ನಲ್ಲಿ 23 ವರ್ಷಗಳಿಂದ ಕೆಲಸ ಮಾಡಿದ್ದಾರೆ ಮತ್ತು ಸ-ಸರ್ಫೆಸ್ ಗಾಗಿ ಪೊ್ರಸೆಸರ್ಗಳನ್ನು ರಚಿಸಲು ಕ್ವಾಲ್ಕಾಮ್ ಮತ್ತು ಎಎಮ್ಡಿಯೊಂದಿಗೆ ಅದರ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.ಗೂಗಲ್ ಡೀಪ್ಮೈಂಡ್ ಸಹ-ಸಂಸ್ಥಾಪಕ ಮತ್ತು ಮಾಜಿ ಇನ್ ಫ್ಲೇಕ್ಷನ್ ಎಐ ಸಿಇಒ ಮುಸ್ತಫ್ ಸುಲೇಮಾನ್ ಮೈಕ್ರೋಸಾಫ್ಟ್ ತನ್ನ ಹೊಸ ಎಐ ತಂಡದ ಸಿಇಒ ಆಗಿ ಸೇರಿದ ಕೆಲವು ದಿನಗಳ ನಂತರ ಮರುಸಂಘಟನೆಯ ಪ್ರಕಟಣೆ ಬಂದಿದೆ. \ No newline at end of file diff --git a/eesanje/url_47_137_10.txt b/eesanje/url_47_137_10.txt new file mode 100644 index 0000000000000000000000000000000000000000..1c2416d55470046fd319b18bfeaef4f75822a694 --- /dev/null +++ b/eesanje/url_47_137_10.txt @@ -0,0 +1,5 @@ +ಪ್ರಧಾನಿ ಮೋದಿ ನಿವಾಸಕ್ಕೆ ಭದ್ರತೆ ಹೆಚ್ಚಳ +ನವದೆಹಲಿ,ಮಾ.26-ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿ ಘೇರಾವ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಹಲವು ಭಾಗಗಳಲ್ಲೂ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ನಾವು ಭದ್ರತೆಯ ಪದರಗಳನ್ನು ಸ್ಥಾಪಿಸಿದ್ದೇವೆ ಎಂದು ದೆಹಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಪ್ರಧಾನಿ ನಿವಾಸದ ಸುತ್ತಲೂ ಈಗಾಗಲೇ ಸೆಕ್ಷನ್ 144 (ಸಿಆರ್ಪಿಸಿ) ವಿಧಿಸಲಾಗಿದೆ ಮತ್ತು ಯಾರಿಗೂ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದರು. ದೆಹಲಿ ಸಚಿವ ಗೋಪಾಲ್ ರೈ ಅವರು ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಇಂದು ಪ್ರಧಾನಿ ನಿವಾಸಕ್ಕೆ ಘೇರಾವ್ ಮಾಡುವ ಯೋಜನೆಯನ್ನು ಘೋಷಿಸಿದ್ದರು. ರಾಷ್ಟ್ರವ್ಯಾಪಿ ಮೆಗಾ ಪ್ರತಿಭಟನೆ ನಡೆಸಲಾಗುವುದು ಎಂದೂ ರೈ ಹೇಳಿದ್ದಾರೆ. +ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರದ್ದುಪಡಿಸಿದ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಅವರು ಗುರುವಾರದವರೆಗೆ ಏಜೆನ್ಸಿಯ ಕಸ್ಟಡಿಯಲ್ಲಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕರು ಮದ್ಯದ ವ್ಯಾಪಾರಿಗಳಿಂದ ಲಾಭಕ್ಕಾಗಿ ಕಿಕ್ಬ್ಯಾಕ್ಗಳನ್ನು ಕೋರಿದ್ದಾರೆ ಎಂದು ಕೇಂದ್ರೀಯ ಸಂಸ್ಥೆ ಹೇಳಿಕೊಂಡಿದೆ. +ಕೇಜ್ರಿವಾಲ್ ಅವರು ಕೆಲ ಸಚಿವರು ಮತ್ತು ಇತರ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಈಗ ರದ್ದಾದ ನೀತಿಯಲ್ಲಿ ಪ್ರಮುಖ ಕಿಂಗ್ ಪಿನ್ ಮತ್ತು ಪಿತೂರಿದಾರರಾಗಿದ್ದಾರೆ ಎಂದು ಇಡಿ ಆರೋಪಿಸಿದೆ. ಕೇಜ್ರಿವಾಲ್ ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರವು ರಾಜಕೀಯ ಉದ್ದೇಶಗಳಿಗಾಗಿ ತನಿಖಾ ಸಂಸ್ಥೆಗಳನ್ನುದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಏತನ್ಮಧ್ಯೆ, ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ವಾಹನಗಳ ಸುಗಮ ಸಂಚಾರಕ್ಕಾಗಿ ದೆಹಲಿ ಟ್ರಾಫಿಕ್ ಪೊಲೀಸರು ಏಳು ಡೈವರ್ಶನ್ ಪಾಯಿಂಟ್ಗಳನ್ನು ವ್ಯವಸ್ಥೆ ಮಾಡಿದ್ದಾರೆ. \ No newline at end of file diff --git a/eesanje/url_47_137_11.txt b/eesanje/url_47_137_11.txt new file mode 100644 index 0000000000000000000000000000000000000000..673da4ee56ae080efcc21948b0175b1ba2596e80 --- /dev/null +++ b/eesanje/url_47_137_11.txt @@ -0,0 +1,8 @@ +ಕೆ.ಕವಿತಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ +ನವದೆಹಲಿ,ಮಾ.26-ದೆಹಲಿ ಅಬಕಾರಿ ನೀತಿ ಪರಿಷ್ಕರಣೆ ಪ್ರಕರಣದಲ್ಲಿ ಜಾರಿನಿರ್ದೇಶನಾಲಯದಿಂದ ಬಂಧನಕ್ಕೊಳಪಟ್ಟಿರುವ ಬಿಆರ್ಎಸ್ ಪಕ್ಷದ ನಾಯಕಿ ಕೆ.ಕವಿತಾ ಅವರ ಬಂಧನದ ಅವಧಿಯನ್ನು ನ್ಯಾಯಾಲಯ ಏಪ್ರಿಲ್ 9ರವೆಗೆ ವಿಸ್ತರಿಸಿದೆ. +ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಏಪ್ರಿಲ್ 1ರಂದು ವಿಚಾರಣೆ ನಡೆಸಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆಗೆ ಕವಿತಾ ಅವರನ್ನು ವಿಚಾರಣೆಗೊಳಪಡಿಸಲು ಅವಧಿಯನ್ನು ವಿಸ್ತರಿಸುವಂತೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡರು. +ಇದನ್ನು ಮನ್ನಿಸಿದ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಏ.1ಕ್ಕೆ ನಿಗದಿಪಡಿಸಿ 9ರವರೆಗೂ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿತು. ಇದಕ್ಕೂ ಮುನ್ನ ಕವಿತಾ ಅವರ ಪರ ವಕೀಲರು, ನಮ್ಮ ಕಕ್ಷಿದಾರರ ಅಪ್ರಾಪ್ತ ಮಗುವಿನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದರು. +ರಿಮಾಂಡ್ ಅವಧಿಯಲ್ಲಿ ಇಡಿ ಬಿಆರ್ಎಸ್ ನಾಯಕಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ, ಅವರನ್ನು ವಿಚಾರಣೆಗೊಳಪಡಿಸಿದ್ದು, ಹಲವಾರು ವ್ಯಕ್ತಿಗಳು ಮತ್ತು ಡಿಜಿಟಲ್ ದಾಖಲೆಗಳೊಂದಿಗೆ ವಿಚಾರಣೆಯನ್ನು ನಡೆಸಲಾಗಿದೆ ಎಂದು ಇಡಿ ನ್ಯಾಯಾಲಯದ ಗಮನಕ್ಕೆ ತಂದಿತು. ಈ ಹಿಂದೆ ವಿಶೇಷ ನ್ಯಾಯಾೀಧಿಶ ಕಾವೇರಿ ಬವೇಜಾ ಅವರು ಇಡಿ ವಿಚಾರಣೆಗೆ ಅವಕಾಶ ನೀಡಿದ್ದರು. +ಕವಿತಾ ಬಂಧನ:ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಾವತಿಸಿದ ಆರೋಪ ಎದುರಿಸುತ್ತಿರುವ ಸೌತ್ ಗ್ರೂಪ್ನ ಪ್ರಮುಖ ಸದಸ್ಯೆ ಎಂದು ಇಡಿ ಆರೋಪಿಸಿದೆ. +ಇದಕ್ಕೂ ಮುನ್ನ ಕೋರ್ಟ್ ಹಾಲ್ಗೆ ಪ್ರವೇಶಿಸಿದ ಬಿಆರ್ಎಸ್ ಎಂಎಲ್ಸಿ, ಇದು ಅಕ್ರಮ ಹಣ ವರ್ಗಾವಣೆ ಪ್ರಕರಣವಲ್ಲ, ರಾಜಕೀಯ ಅಕ್ರಮ ಹಣ ವರ್ಗಾವಣೆ ಪ್ರಕರಣ. ಇದೊಂದು ಕಪೊಲಕಲ್ಪಿತ ಮತ್ತು ಸುಳ್ಳು ಪ್ರಕರಣ. ನಾವು ಸ್ವಚ್ಛವಾಗಿ ಹೊರಬರುತ್ತೇವೆ ಎಂದು ವಿಶ್ವಾಸದಿಂದ ಹೇಳಿದ್ದರು. +ಮಾರ್ಚ್ 23ರಂದು ಕವಿತಾ ಅವರ ಸೋದರಳಿಯ ಮೇಕಾ ಶ್ರೀ ಶರಣ್ ರಾವ್ ಮತ್ತು ಸೊಸೆ ಅಖಿಲಾ ಅವರ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. ಮೂಲಗಳ ಪ್ರಕಾರ ಇಡಿ ಕವಿತಾ ಅವರ ಕುಟುಂಬ ಸದಸ್ಯರನ್ನೂ ಬಂಧಿಸುವ ಸಾಧ್ಯತೆಯಿದೆ. \ No newline at end of file diff --git a/eesanje/url_47_137_12.txt b/eesanje/url_47_137_12.txt new file mode 100644 index 0000000000000000000000000000000000000000..46b7c240fe0df6b8284c3a4ee82f2e7edd825a81 --- /dev/null +++ b/eesanje/url_47_137_12.txt @@ -0,0 +1,7 @@ +ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಶಕ್ತಿ ಅನಾವರಣ +ನವದೆಹಲಿ,ಮಾ.26-ಅರಬ್ಬಿ ಸಮುದ್ರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಮರಾಭ್ಯಾಸದಲ್ಲಿ ಎಂಟು ಜಲಾಂತರ್ಗಾಮಿ ನೌಕೆಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿ ರುವುದಕ್ಕೆ ಪಶ್ಚಿಮ ಸಮುದ್ರ ತೀರವು ಸಾಕ್ಷಿಯಾಗಿತ್ತು. ಇದು ತಮ್ಮ ಉನ್ನತ ಮಟ್ಟದ ಕಾರ್ಯಾಚರಣೆಯ ಸಿದ್ಧತೆಗೆ ಶಕ್ತಿ ತುಂಬಿದೆ ಎಂದು ನೌಕಾಪಡೆ ಅಧಿಕಾರಿಗಳು ತಿಳಿಸಿದ್ದಾರೆ. +ವೆಸ್ಟರ್ನ್ ನೇವಲ್ ಕಮಾಂಡ್ನ ವೈಸ್ ಅಡ್ಮಿರಲ್ ಸಂಜಯ್ ಜೆ ಸಿಂಗ್ ಅವರು ಸಮುದ್ರದ ಹಲವಾರು ಘಟಕಗಳನ್ನು ಪ್ರಾರಂಭಿಸಿದರು ಮತ್ತು ವ್ಯಾಯಾಮದ ನಡವಳಿಕೆಯನ್ನು ಪರಿಶೀಲಿಸಿದರು. ಅವರ ವೃತ್ತಿಪರತೆ ಮತ್ತು ಅದ್ಭುತ ನಡವಳಿಕೆ ಗಮನ ಸೆಳೆಯಿತು ಎಂದು ನೌಕಾಪಡೆ ಎಕ್ಸ್ ಮಾಡಿದೆ. +ಪ್ರದರ್ಶನದ ಭಾಗವಾಗಿ, ವೈಸ್ ಅಡ್ಮಿರಲ್ ಅವರು ಜಲಾಂತರ್ಗಾಮಿ ನೌಕೆಯ ತಳಹದಿಯನ್ನು ವೀಕ್ಷಿಸಿದರು ಮತ್ತು ಜಲಾಂತರ್ಗಾಮಿ ಸಂಪ್ರದಾಯದ ಪ್ರಕಾರ ಸಮುದ ನೀರಿನ ರುಚಿ ನೋಡಿದರು ಎಂದು ಪೊಸ್ಟ್ನಲ್ಲಿ ಸೇರಿಸಲಾಗಿದೆ. +ಗಲ ಆ ಅಡೆನ್, ಅರೇಬಿಯನ್ ಸಮುದ್ರ ಮತ್ತು ಕೆಂಪು ಸಮುದ್ರದಲ್ಲಿ ಡ್ರೋನ್ ವಿರೋಧಿ, ಕ್ಷಿಪಣಿ ವಿರೋಧಿ ಮತ್ತು ಕಡಲ್ಗಳ್ಳತನ ವಿರೋಧಿ ದಾಳಿಯ ಕಾರ್ಯಾಚರಣೆಗಳ ವಿರುದ್ಧ ನೌಕಾಪಡೆಯ ನೂರು ದಿನಗಳ ಕಾರ್ಯಾಚರಣೆಯನ್ನು ಶನಿವಾರ ಪೂರ್ಣಗೊಳಿಸಿದ ಕುರಿತು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಹರಿ ಅಂತಹ ಘಟನೆಗಳನ್ನು ತಡೆಯಲು ನೌಕಾಪಡೆಯು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. +ಈ ಪ್ರದೇಶದಲ್ಲಿನ ಅಸ್ವಸ್ಥತೆಯಿಂದ ಲಾಭ ಪಡೆಯಲು ಕಡಲ್ಗಳ್ಳತನವು ಒಂದು ಉದ್ಯಮವಾಗಿ ಮರುಕಳಿಸಿದೆ. ಅದನ್ನು ತಡೆಯಲು ನಾವು ದೃಢವಾದ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ನೌಕಾಪಡೆಯ ಮುಖ್ಯಸ್ಥರು ಹೇಳಿದರು. +ಆಪರೇಷನ್ ಸಂಕಲ್ಪ ಸಣ್ಣ ಮತ್ತು ಕ್ಷಿಪ್ರ ಕಾರ್ಯಾಚರಣೆಗಳ ಪುರಾಣವನ್ನು ಮುರಿದಿದೆ ಮತ್ತು ಸಾಗರಗಳಲ್ಲಿ ಸುರಕ್ಷತೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ನಿರಂತರ ಕಾರ್ಯಾಚರಣೆಗಳ ಅಗತ್ಯವನ್ನು ಒತ್ತಿಹೇಳಿದೆ. ಕಾರ್ಯಾಚರಣೆಗಳ ವೇಗವು ಸಾಕಷ್ಟು ಹೆಚ್ಚಾಗಿದೆ ಮತ್ತು ನಾವು 11 ಜಲಾಂತರ್ಗಾಮಿ ನೌಕೆಗಳು ಮತ್ತು 30 ಯುದ್ಧನೌಕೆಗಳು ಸಾಗರದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_137_2.txt b/eesanje/url_47_137_2.txt new file mode 100644 index 0000000000000000000000000000000000000000..aac3c5eebfc4e8d62142d6aa0e77944a6de7c787 --- /dev/null +++ b/eesanje/url_47_137_2.txt @@ -0,0 +1,9 @@ +ಮೂರು ರಾಜ್ಯಗಳಿಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ +ನವದೆಹಲಿ,ಮಾ.27-ಲೋಕಸಭೆ ಚುನಾವಣೆಯ ಮತ ಸಮರಕ್ಕೆ ದಿನಗಣನೆ ಆರಂಭವಾಗಿರುವಂತೆ ಬಿಜೆಪಿ ಮೂರು ರಾಜ್ಯಗಳಿಗೆ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂರು ಪಟ್ಟಿಗಳಲ್ಲಿ ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ರಾಜ್ಯ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದ್ದಾರೆ. +ಆಯಾ ರಾಜ್ಯಗಳ ಅನೇಕ ಪ್ರಮುಖ ಬಿಜೆಪಿ ನಾಯಕರನ್ನು ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. ವಿಶೇಷ ಅಂದ್ರೆ ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೂಡ ಸಿಗದ ಕೆಲವು ನಾಯಕರ ಹೆಸರು ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇದೆ. +ಮೊದಲ ಹಂತದ ಚುನಾವಣೆಗೆ ಇನ್ನು ಕೇವಲ 25 ದಿನಗಳು ಬಾಕಿ ಉಳಿದಿರುವುದು ಗಮನಾರ್ಹ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ದೇಶದ ವಿವಿಧೆಡೆ ನಡೆಯಲಿದೆ. ಬಿಹಾರ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಸ್ಟಾರ್ ಪ್ರಚಾರಕರ ಹೆಸರನ್ನು ಬಿಡುಗಡೆ ಮಾಡಲಾಗಿದ್ದು, ಬಿಹಾರದ ಪಟ್ಟಿ ಗಮನಿಸುವುದಾದರೆ, ಇಲ್ಲಿ ಅಶ್ವನಿ ಚೌಬೆ ಸ್ಟಾರ್ ಪ್ರಚಾರಕರಾಗಿದ್ದಾರೆ. ಚುನಾವಣೆಗೆ ಟಿಕೆಟ್ ಸಿಗದಿದ್ದರೂ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅನೇಕ ಹೆಸರುಗಳು ಸೇರಿದೆ. ಇನ್ನು ಇತರ ಚುನಾವಣೆಗಳಂತೆ ಈ ಚುನಾವಣೆಯಲ್ಲೂ ಸೈಯದ್ ಶಾನವಾಜ್ ಹುಸೇನ್ ಬಿಹಾರದಿಂದ ಸ್ಟಾರ್ ಪ್ರಚಾರಕರಾಗಿದ್ದಾರೆ. +ಪ್ರಮುಖ ಕೇಂದ್ರ ನಾಯಕರಲ್ಲದೆ, ಬಿಹಾರದ ನಾಯಕರಾದ ಸುಶೀಲ್‍ಕುಮಾರ್ ಮೋದಿ, ಮಂಗಲ್ ಪಾಂಡೆ, ಸಂಜಯ್ ಜೈಸ್ವಾಲ್, ರೇಣುದೇವಿ, ಸಾಮ್ರಾಟ್ ಚೌಧರಿ, ವಿಜಯ್‍ಕುಮಾರ್ ಸಿನ್ಹಾ, ಅನಿಲ್ ಶರ್ಮಾ, ನಿವೇದಿತಾ ಸಿಂಗ್ ಮತ್ತು ನಿಕ್ಕಿ ಹೆಂಬ್ರೆನ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. +ಕಳೆದ 10 ವರ್ಷಗಳಿಂದ ದೆಹಲಿ ಸಂಸದರಾಗಿರುವ ಭೋಜ್‍ಪುರಿ ನಟ ಮನೋಜ್ ತಿವಾರಿ ಕೂಡ ಬಿಹಾರದ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಕೂಡ ಬಿಹಾರದಲ್ಲಿ ಸ್ಟಾರ್ ಪ್ರಚಾರಕರಾಗಿದ್ದಾರೆ.ಮಧ್ಯಪ್ರದೇಶದಿಂದ ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ರಾಜ್ಯದ ಮಾಜಿ ಗೃಹ ಸಚಿವ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ನರೋತ್ತಮ್ ಮಿಶ್ರಾ ಅವರ ಹೆಸರೂ ಸೇರಿದೆ. ಇದರೊಂದಿಗೆ ಇತರ ರಾಜ್ಯಗಳ ಹಲವು ಮುಖ್ಯಮಂತ್ರಿಗಳು ಮಧ್ಯಪ್ರದೇಶದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದಾರೆ. +ಮಧ್ಯಪ್ರದೇಶದಲ್ಲಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಛತ್ತೀಸ್‍ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ವಿಶ್ವ ಶರ್ಮಾ, ರಾಜಸ್ಥಾನ ಮುಖ್ಯಮಂತ್ರಿ ಭಜನ್‍ಲಾಲ್ ಶರ್ಮಾ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಸ್ಟಾರ್ ಪ್ರಚಾರಕರು. ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ್ದ ಸುರೇಶ್ ಪಚೌರಿ ಕೂಡ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸೇರಿದ್ದಾರೆ. +ಮಿಥುನ್ ಚಕ್ರವರ್ತಿ-ಅಮಿತ್ ಮಾಳವೀಯ ಸ್ಟಾರ್ ಪ್ರಚಾರಕರುಬಿಜೆಪಿಗೆ ಸವಾಲಿನ ರಾಜ್ಯವಾಗಿರುವ ಪಶ್ಚಿಮ ಬಂಗಾಳದಲ್ಲಿ ಪಕ್ಷವು ತನ್ನ ಸಂಸದರ ಸಂಖ್ಯೆಯನ್ನು ಹೆಚ್ಚಿಸಲು ಬಯಸಿದೆ. ಹೀಗಾಗಿ, ಬಿಜೆಪಿ ಬಿಡುಗಡೆ ಮಾಡಿರುವ ಪಶ್ಚಿಮ ಬಂಗಾಳದ 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಚಲನಚಿತ್ರ ನಟ ಮಿಥುನ್ ಚಕ್ರವರ್ತಿ ಮತ್ತು ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರ ಹೆಸರೂ ಸೇರಿದೆ. ಪ್ರಧಾನಿ ಮೋದಿ ಮತ್ತು ಪ್ರಮುಖ ಕೇಂದ್ರ ನಾಯಕರಲ್ಲದೆ, ಶುವೇಂದು ಅಕಾರಿ, ದಿಲೀಪ್ ಘೋಷ್, ಸ್ವಪನ್ ದಾಸ್ ಗುಪ್ತಾ, ಮುಫುಜಾ ಖಾತೂನ್, ರುದ್ರನೀಲ್ ಘೋಷ್, ಅಮಿತಾಬ್ ಚಕ್ರವರ್ತಿ, ಸುಕುಮಾರ್ ರೈ, ಸಿದ್ಧಾರ್ಥ್ ಟಿರ್ಕಿ, ದೇವಶ್ರೀ ಚೌಧುರಿ ಸೇರಿದಂತೆ ಅನೇಕ ದೊಡ್ಡ ನಾಯಕರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ಸ್ಟಾರ್ ಪ್ರಚಾರಕರಾಗಿದ್ದಾರೆ. +ಈ ಮೂರು ಪಟ್ಟಿಗಳಲ್ಲಿ ಪ್ರಧಾನಿ ನರೇಂದ್ರಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಮತ್ತು ರಾಜ್ಯ ಸಚಿವ ನಿತಿನ್ ಗಡ್ಕರಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದ್ದಾರೆ. diff --git a/eesanje/url_47_137_3.txt b/eesanje/url_47_137_3.txt new file mode 100644 index 0000000000000000000000000000000000000000..33f60ff724ba35446649d1bce074dba6745b9d27 --- /dev/null +++ b/eesanje/url_47_137_3.txt @@ -0,0 +1,6 @@ +ರಷ್ಯಾ ಸೇನೆಯಲ್ಲಿದ್ದ ಇಬ್ಬರು ಭಾರತೀಯರು ಶೀಘ್ರ ವಾಪಸ್ ; ವಿ.ಮುರಳೀಧರನ್ +ತಿರುವನಂತಪುರಂ, ಮಾ 27 (ಪಿಟಿಐ) :ಖಾಸಗಿ ಏಜೆನ್ಸಿಗಳಿಂದ ರಷ್ಯಾದ ಸೇನೆಗೆ ನೇಮಕಗೊಂಡ ನಂತರ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಿದ ಕೇರಳ ಮೂಲದ ನಾಲ್ವರು ಯುವಕರ ಪೈಕಿ ಇಬ್ಬರು ಶೀಘ್ರದಲ್ಲೇ ತಮ್ಮ ಕುಟುಂಬಗಳಿಗೆ ಮರಳಲಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಹೇಳಿದ್ದಾರೆ. +ಭಾರತೀಯ ರಾಯಭಾರ ಕಚೇರಿಯು ರಷ್ಯಾದಿಂದ ಮರಳಲು ಅವರ ಪ್ರಯಾಣದ ದಾಖಲೆಗಳನ್ನು ಸಿದ್ಧಪಡಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅವರು ಶೀಘ್ರದಲ್ಲೇ ಮನೆಗೆ ಮರಳುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಮುಂಬರುವ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಅಟ್ಟಿಂಗಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಸುಧಿತ್ತಿರುವ ಮುರಳೀಧರನ್ ಸುದ್ದಿಗಾರರಿಗೆ ತಿಳಿಸಿದರು. +ರಾಜ್ಯದ ಉಳಿದ ಇಬ್ಬರು ನಿವಾಸಿಗಳಿಗೆ ಸಂಬಂಧಿಸಿದಂತೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅವರನ್ನೂ ಮರಳಿ ಕರೆತರಲು ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಅವರು ತಿಳಿಸಿದರು.ಅವರು ಹಿಂತಿರುಗುವುದನ್ನು ಖಚಿತಪಡಿಸಿಕೊಳ್ಳಲು ನಾವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಖಚಿತವಾಗಿರಿ ಎಂದು ಅವರು ಹೇಳಿದರು. +ಮೂವರ ಸಂಬಂಧಿಕರ ಪ್ರಕಾರ, 2.5 ಲಕ್ಷ ರೂಪಾಯಿಗಳ ದೊಡ್ಡ ಸಂಬಳದ ಭರವಸೆಯೊಂದಿಗೆ ನೇಮಕಾತಿ ಏಜೆನ್ಸಿಯಿಂದ ರಷ್ಯಾಕ್ಕೆ ಕರೆದೊಯ್ದು ಯುದ್ಧಕ್ಕೆ ದೂಡಲಾಗಿದೆ ಎಂದು ಆರೋಪಿಸಲಾಗಿದೆ. ರಷ್ಯಾದಲ್ಲಿ ಲಾಭದಾಯಕ ಉದ್ಯೋಗಗಳ ಭರವಸೆಯೊಂದಿಗೆ ಭಾರತೀಯರನ್ನು ಯುದ್ಧ ಪೀಡಿತ ಉಕ್ರೇನ್‍ಗೆ ಹೋಗಲು ನೇಮಿಸಿದ ಏಜೆನ್ಸಿಗಳ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಮುರಳೀಧರನ್ ಈ ಹಿಂದೆ ಹೇಳಿದ್ದರು. +ಸಂಘರ್ಷ ವಲಯದಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಅವರನ್ನು ನೇಮಕ ಮಾಡಿದ ಏಜೆನ್ಸಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_137_4.txt b/eesanje/url_47_137_4.txt new file mode 100644 index 0000000000000000000000000000000000000000..797c9b775fc97090bb8ccbd7e74c947afd79a6cb --- /dev/null +++ b/eesanje/url_47_137_4.txt @@ -0,0 +1,5 @@ +ಭಾರತ್ ಮಾತಾ ಕೀ ಜೈ ಘೋಷಣೆ ನಮ್ಮ ಹಕ್ಕು ; ಪ್ರಕಾಶ್ ಜಾವಡೇಕರ್ +ತಿರುವನಂತಪುರಂ, ಮಾ 27 (ಪಿಟಿಐ) :ನಾವು ಸಮಾಜವನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ನೋಡುವುದಿಲ್ಲ ನಾವು ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಕೂಗುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಕೇರಳ ಸಿಎಂ ಪಿಣರಾಯಿ ವಿಜಯನ್‍ಗೆ ತಿರುಗೇಟು ನೀಡಿದ್ದಾರೆ. +ಸಿಎಎ ವಿರುದ್ಧ ಮಲಪ್ಪುರಂನಲ್ಲಿ ಸಿಪಿಐ(ಎಂ) ಆಯೋಜಿಸಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ವಿಜಯನ್ ಅವರು ಭಾರತ್ ಮಾತಾ ಕಿ ಜೈ ಮತ್ತು ಜೈ ಹಿಂದ್ ಎಂಬ ಘೋಷಣೆಗಳ ಸೃಷ್ಟಿಕರ್ತರು ಮುಸಲ್ಮಾನರು. ಭಾರತ್ ಮಾತಾ ಕಿ ಜೈ ಘೋಷಣೆಯನ್ನು ಮುಸ್ಲಿಂ ಕವಿಯೊಬ್ಬರು ರಚಿಸಿದ್ದಾರೆ ಎಂದು ತಿಳಿದ ನಂತರ ಬಿಜೆಪಿಯವರು ಭಾರತ್ ಮಾತಾ ಕಿ ಜೈ ಘೋಷಣೆ ಕೂಗುತ್ತಾರೆಯೇ ಎಂದು ಕೇರಳ ಸಿಎಂ ಬಿಜೆಪಿಯನ್ನು ಪ್ರಶ್ನಿಸಿದ್ದರು. +ಪಿಣರಾಯಿ ನಾವು ಸಮಾಜವನ್ನು ಜಾತಿ, ಧರ್ಮ ಅಥವಾ ಧರ್ಮದ ಪರಿಧಿಯಿಂದ ನೋಡುವುದಿಲ್ಲ. ನಾವು ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಮಾಡುತ್ತೇವೆ. ನೀವು ಜಪ ಮಾಡುತ್ತೀರಾ? ಎಂದು ಪಕ್ಷದ ಕೇರಳ ಉಸ್ತುವಾರಿಯೂ ಆಗಿರುವ ಜಾವಡೇಕರ್ ಅವರು ಎಕ್ಸ್ ಮಾಡಿದ್ದಾರೆ. +ನಮಗೆ ದೇಶದಲ್ಲಿರುವ ಜನರೆಲ್ಲಾ ಒಂದೇ ಎಂಬ ಭಾವನೆಯಿಂದ ಬದುಕುತ್ತಿದ್ದೇವೆ ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಯಾರೇ ಸೃಷ್ಟಿಸಿರಲಿ ಅದು ನಮ್ಮ ತಾಯ್ನಾಡಿಗೆ ನೀಡಿರುವ ಗೌರವ ಅದನ್ನು ನಾವು ಗೌರವಿಸುತ್ತೇವೆ ಎಂದು ಅವರು ಹೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_137_5.txt b/eesanje/url_47_137_5.txt new file mode 100644 index 0000000000000000000000000000000000000000..6a611ad72cabac7aa580e8837e01d86649ad9a77 --- /dev/null +++ b/eesanje/url_47_137_5.txt @@ -0,0 +1,4 @@ +ಫೋನ್‍ನಲ್ಲಿ ಜೋರಾಗಿ ಮಾತಾಡಿದ ಮಗನನ್ನು ಕೊಂದ ತಂದೆ +ನಾಗ್ಪುರ, ಮಾ 27-ಫೋನ್‍ನಲ್ಲಿ ಜೋರಾಗಿ ಮಾತನಾಡುವ ವಿಚಾರದಲ್ಲಿ ನಡೆದು ಜಗಳದಲ್ಲಿ ತಂದೆಯೇ ತನ್ನ ಮಗನನ್ನು ಕೊಂದಿರುವ ಘಟನೆ ಪಿಪ್ರಾ ಗ್ರಾಮದಲ್ಲಿ ನಡೆದಿದೆ.ನಾಗ್ಪುರ ನಗರದಿಂದ ಸುಮಾರು 30 ಕಿಮೀ ದೂರದಲ್ಲಿರುವ ಪಿಪ್ರಾ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಘಟನೆಯ ನಂತರ ಆರೋಪಿ ರಾಮರಾವ್ ಕಾಕ್ಡೆಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. +ಕಳೆದ ರಾತ್ರಿ ಜೋರಾಗಿ ಫೋನ್‍ನಲ್ಲಿ ಮಾತನಾಡುತ್ತಿದ್ದ ಮಗ ಸೂರಜ್‍ಗೆ ಸ್ಟೀಲ್(22)ಗೆ ತಂದೆ ರಾಮರಾವ್ ಮೆತ್ತಗೆ ಮಾತಾಡು ಎಂದು ಗದರಿದ್ದಾರೆ.ಇದರಿಂದ ತಂದೆ -ಮಗನ ನಡುವೆ ವಾಗ್ವಾದ ಮಡೆದು ಅದು ಬಡಿದಾಟಗೆ ಹೋಗಿದೆ.ಈ ವೇಳೆ ರಾಡ್‍ನಿಂದ ಸೂರಜ್ ತಲೆಗೆ ಹೊಡೆದಾಗ ಆತ ಕುಸಿದುಬಿದ್ದಿದ್ದಾನೆ ನಂತರ ಕುಟುಂಬ ಸದಸ್ಯರು ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಎಂದು ಬೇಲಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. . +ಘಟನೆ ವೇಳೆ ತಂದೆ-ಮಗ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣ ಖಲಿಸಲಾಗಿದ್ದು,ರಾಮರಾವ್ ಕಾಕ್ಡೆಯನ್ನು ಬಂಧಿಸಲಾಗಿದೆ,ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_137_6.txt b/eesanje/url_47_137_6.txt new file mode 100644 index 0000000000000000000000000000000000000000..fd2625af2c06dc847143f503e72c44f061f634f5 --- /dev/null +++ b/eesanje/url_47_137_6.txt @@ -0,0 +1,5 @@ +ದೆಹಲಿ : ರೆಸ್ಟೋರೆಂಟ್ ಮಾಲೀಕನ ಗುಂಡಿಕ್ಕಿ ಹತ್ಯೆ +ನವದೆಹಲಿ, ಮಾ 27-ರೆಸ್ಟೋರೆಂಟ್ ಮಾಲೀಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಘಟನೆ ಕಳೆದ ರಾತ್ರಿ ಈಶಾನ್ಯ ದೆಹಲಿಯ ನ್ಯೂ ಉಸ್ಮಾನ್‍ಪುರ ಪ್ರದೇಶದಲ್ಲಿ ನಡೆದಿದೆ.ಸಂಜಯ್ ಸಿಂಗ್ (32)ಕೊಲೆಯಾದ ರೆಸ್ಟೋರೆಂಟ್ ಮಾಲೀಕ ಎಂದು ಗುರುತಿಸಲಾಗಿದೆ. +ಮಧ್ಯರಾತ್ರಿ ರೆಸ್ಟೋರೆಂಟ್‍ನಿಂದ ಹಿಂತಿರುಗುತ್ತಿದ್ದಾಗ ಅವರ ಮನೆಯ ಬಳಿ ದಾಳಿ ನಡೆಸಿದ್ದರು.ಸಿಂಗ್‍ನ ಸ್ನೇಹಿತರೊಬ್ಬರು ರಸ್ತೆಯಲ್ಲಿ ಗಾಯಗೊಂಡು ಬಿದ್ದಿರುವುದನ್ನು ಕಂಡು ಸಂಜಯ್ ಸಿಂಗ್‍ನ ಕಿರಿಯ ಸಹೋದರ ನಿತಿನ್‍ಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ನಿತಿನ್ ಸ್ಥಳಕ್ಕೆ ಧಾವಿಸಿದಾಗ ಸಿಂಗ್ ಹನುಮಾನ್ ಮಂದಿರ ವಾಲಿ ಗಾಲಿ ಸರ್ವಿಸ್ ರಸ್ತೆಯ ಬಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆತಂಕಗೊಂಡಿದ್ದಾರೆ.ಸಿಂಗ್ ಅವರ ತಲೆ, ಬಲ ಭುಜ ಮತ್ತು ಮೊಣಕೈ ಮತ್ತು ಹೊಟ್ಟೆಗೆ ಗಾಯವಾಗಿ ಆತನನ್ನು ತಕ್ಷಣವೇ ಜಗ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. +ಸ್ಥಳದಲ್ಲಿ ಏಳು ಖಾಲಿ ಬುಲೆಟ್ ಶೆಲ್‍ಗಳುಹಾಗು ಇತರ ವಸ್ತು ಪತ್ತೆಯಾಗಿದೆ ರವೀಂದರ್ ಎಂಬ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು ಇದೇ ದ್ವೇಷಕ್ಕೆ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ,ಪ್ರಕರಣದ ಎಲ್ಲಾ ಕೋನಗಳನ್ನು ನೋಡಲಾಗುತ್ತಿದೆ ಮತ್ತು ಕೊಲೆಗಾರರ ಪತ್ತೆಗೂ ಮುಂದಾಗಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_47_137_7.txt b/eesanje/url_47_137_7.txt new file mode 100644 index 0000000000000000000000000000000000000000..e4361d3890a5a2864f43ffb21dad5bcdcc58cd22 --- /dev/null +++ b/eesanje/url_47_137_7.txt @@ -0,0 +1,6 @@ +ಎನ್‍ಐಎ ಮಹಾನಿರ್ದೇಶಕರಾಗಿ ಸದಾನಂದ ವಸಂತ್ ನೇಮಕ +ನವದೆಹಲಿ, ಮಾ.27 (ಪಿಟಿಐ) :ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಸದಾನಂದ ವಸಂತ್ ದಾಟೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‍ಐಎ) ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. ಮಹಾರಾಷ್ಟ್ರ ಕೇಡರ್‍ನ 1990-ಬ್ಯಾಚ್ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿರುವ ಸದಾನಂದ ಅವರು ಡಿಸೆಂಬರ್ 31, 2026 ರಂದು ಅವರ ನಿವೃತ್ತಿಯ ಅವಧಿಯವರೆಗೆ ಎನ್‍ಐಎಯ ಡೈರೆಕ್ಟರ್ ಜನರಲ್ (ಡಿಜಿ) ಆಗಿ ಸೇವೆ ಸಲ್ಲಿಸಲಿದ್ದಾರೆ. ಅವರು ಮಾರ್ಚ್ 31 ರಂದು ನಿವೃತ್ತರಾಗಲಿರುವ ದಿನಕರ್ ಗುಪ್ತಾ ಅವರ ಉತ್ತರಾಧಿಕಾರಿಯಾಗಲಿದ್ದಾರೆ. +ರಾಜಸ್ಥಾನ ಕೇಡರ್‍ನ 1990-ಬ್ಯಾಚ್ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಶರ್ಮಾ ಅವರನ್ನು ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋದ ಮಹಾನಿರ್ದೇಶಕರನ್ನಾಗಿ ನೇಮಿಸಿತು. ಅವರು ಜೂನ್ 30, 2026 ರಂದು ತಮ್ಮ ನಿವೃತ್ತಿಯಾಗುವವರೆಗೆ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. +ಮಾರ್ಚ್ ಅಂತ್ಯಕ್ಕೆ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸುವ ಬಾಲಾಜಿ ಶ್ರೀವಾಸ್ತವ ಅವರ ನಂತರ ಶರ್ಮಾ ಅವರು ಅಧಿಕಾರ ವಹಿಸಿಕೊಳ್ಳುತ್ತಾರೆ.ಪಿಯೂಷ್ ಆನಂದ್ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ನೂತನ ಮುಖ್ಯಸ್ಥರಾಗಲಿದ್ದಾರೆ. +ಉತ್ತರ ಪ್ರದೇಶ ಕೇಡರ್‍ನ 1991-ಬ್ಯಾಚ್‍ನ ಐಪಿಎಸ್ ಅಧಿಕಾರಿ, ಆನಂದ್ ಪ್ರಸ್ತುತ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‍ಎಫ್) ವಿಶೇಷ ಡಿಜಿಯಾಗಿದ್ದಾರೆ. ಅವರನ್ನು ಎರಡು ವರ್ಷಗಳ ಅವಧಿಗೆ ನ ಡಿಜಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಅತುಲ್ ಕರ್ವಾಲ್ ಅವರ ಸ್ಥಾನಕ್ಕೆ ಆನಂದ್ ಅವರು ಮಾರ್ಚ್ 31 ರಂದು ನಿವೃತ್ತರಾಗಲಿದ್ದಾರೆ. +ಎಸಿಸಿಯು ಕೇರಳ ಕೇಡರ್‍ನ 1995-ಬ್ಯಾಚ್ ಐಪಿಎಸ್ ಅಧಿಕಾರಿ ಎಸ್ ಸುರೇಶ್ ಅವರನ್ನು ವಿಶೇಷ ರಕ್ಷಣಾ ಗುಂಪಿನ (ಎಸ್‍ಪಿಜಿ) ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಿದೆ. \ No newline at end of file diff --git a/eesanje/url_47_137_8.txt b/eesanje/url_47_137_8.txt new file mode 100644 index 0000000000000000000000000000000000000000..35d19fad6cfc0470479f712e660fb2001dfe63c0 --- /dev/null +++ b/eesanje/url_47_137_8.txt @@ -0,0 +1,6 @@ +ಗಾಂಧಿಗಳ ಆಸ್ಥಾನಿಕ ಜೈರಾಮ್ ರಮೇಶ್ : ಇರಾನಿ +ನವದೆಹಲಿ,ಮಾ.26-ಭಾರತೀಯ ಜನತಾ ಪಕ್ಷದ ನಾರಿ ಶಕ್ತಿ ಘೋಷಣೆಗಳು ನಿಜವಾದ ಕ್ರಿಯೆಯಿಲ್ಲದ ಪದಗಳಾಗಿ ಉಳಿದಿವೆ ಎಂದು ಆರೋಪಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ. +ಮಹಿಳೆಯರಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಜೈರಾಮ್ ರಮೇಶ್ ಅವರನ್ನು ಗಾಂಧಿಗಳ ಆಸ್ಥಾನಿಕ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ. +ಭಾರತದ ನಿಜವಾದ ವಾರಸುದಾರರು ಅದರ ಸಂಪತ್ತನ್ನು ಲೂಟಿ ಮಾಡಿದ್ದಾರೆ, ಅವರ ಪತನದ ನಂತರವೂ, ಅವರ ಆಸ್ಥಾನಿಕರು ಸತ್ಯಗಳನ್ನು ತಿರುಚುವುದನ್ನು ಮುಂದುವರೆಸಿದ್ದಾರೆ, ಮಹಿಳಾ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರದ ಪ್ರಯತ್ನಗಳನ್ನು ಹಾಳುಮಾಡಲು ಅಂಕಿಅಂಶಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಇರಾನಿ ವಾಗ್ದಾಳಿ ನಡೆಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ದೊಡ್ಡ ವೈಫಲ್ಯ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸೋಮವಾರ ಆರೋಪಿಸಿದ್ದರು. +ಜೂನ್ 2024 ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯು ಮಹಿಳೆಯರಿಗೆ 10 ವರ್ಷಗಳ ಅನ್ಯಾಯ-ಕಾಲ ಕೊನೆಗೊಳ್ಳುತ್ತದೆ ಎಂದು ಅವರು ಹೇಳಿದರು. 10 ವರ್ಷಗಳಿಂದ, ಸಚಿವಾಲಯವು ಅಸಮರ್ಥತೆ, ನಿರಾಸಕ್ತಿ ಮತ್ತು ಮಹಿಳಾ ವಿರೋ ಮನಸ್ಥಿತಿಯನ್ನು ಮಾತ್ರ ನೋಡಿದೆ ಎಂದು ಅವರು ಆರೋಪಿಸಿದ್ದರು. +ಕಾಂಗ್ರೆಸ್ನ ಆರೋಪದ ನಂತರ, ಸ್ಮೃತಿ ಇರಾನಿ ಎಕ್ಸ್ನಲ್ಲಿ ಸುದೀರ್ಘ ಸಂದೇಶದ ಥ್ರೆಡ್ ಅನ್ನು ಪೊಸ್ಟ್ ಮಾಡಿ, ಮೂರ್ಖರು ಇತರರನ್ನು ಮರುಳು ಮಾಡಲು ಪ್ರಯತ್ನಿಸಿದಾಗ, ಅವರು ಎಷ್ಟು ಮೂರ್ಖರು ಎಂಬುದನ್ನು ಅವರು ನಿಜವಾಗಿ ತೋರಿಸುತ್ತಾರೆ. ಶಾಶ್ವತ ಉತ್ತರಾಧಿಕಾರಿಯ ಪರವಾಗಿ ದಯಪಾಲಿಸುವ ಅಬ್ಬರದ ಮತ್ತು ಸ್ವಲ್ಪ ಕರುಣಾಜನಕ ಪ್ರಯತ್ನದಲ್ಲಿ, ಒಬ್ಬ ನಿರ್ದಿಷ್ಟ ಆಸ್ಥಾನಿಕನು ಅರಿವಿಲ್ಲದೆ ತನ್ನದೇ ಆದ ಪ್ರಜ್ವಲಿಸುವ ಅಸಾಮಥ್ರ್ಯವನ್ನು ಬಹಿರಂಗಪಡಿಸಿದ್ದಾನೆ, ಬೌದ್ಧಿಕತೆಯ ಸೋಗಿನಲ್ಲಿ ಅವನ ದಾರಿತಪ್ಪಿದ ಪ್ರಯತ್ನಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಪಾತ್ರ ಮತ್ತು ಆದೇಶದ ಮುಜುಗರದ ತಪ್ಪು ವ್ಯಾಖ್ಯಾನಕ್ಕೆ ಕಾರಣವಾಗಿವೆ ಎಂದಿದ್ದಾರೆ. \ No newline at end of file diff --git a/eesanje/url_47_137_9.txt b/eesanje/url_47_137_9.txt new file mode 100644 index 0000000000000000000000000000000000000000..d02f4fd16008f8032912305315c5711f65e98edf --- /dev/null +++ b/eesanje/url_47_137_9.txt @@ -0,0 +1,5 @@ +ಹೋಳಿ ಹಬ್ಬದ ವೇಳೆ ಪತ್ನಿಯ ಕತ್ತು ಸೀಳಿ ರಕ್ತದೊಕುಳಿಯಾಡಿದ ಪತಿ..! +ನವದೆಹಲಿ,ಮಾ.26-ಹೋಳಿ ಹಬ್ಬದ ಸಂದರ್ಭದಲ್ಲೇ ನೀಚ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ರಕ್ತದೊಕುಳಿ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಂದ ಆರೋಪದ ಮೇಲೆ ಮಂಜೀತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಹೋಳಿ ಹಬ್ಬದ ದಿನವೇ ತನ್ನ ಪತ್ನಿ ಆರತಿ ಎಂಬಾಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರು ವರ್ಷಗಳ ಹಿಂದೆ ಮದುವೆಯಾಗಿರುವ ದಂಪತಿಗೆ ಕ್ರಮವಾಗಿ 5 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ ಆದ್ದರಿಂದ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ 176 ಅಡಿಯಲ್ಲಿ ಕಾರ್ಯವಿಧಾನಗಳನ್ನು ಪ್ರಾರಂಭಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ಗೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ದೇಶವೇ ಹೋಳಿ ಹಬ್ಬವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ ಅಲಿಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬಖ್ತಾವರ್ಪುರದ ಬಲ್ಧಾವರ್ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ನಿನ್ನೆ ಸಂಜೆ 6:50 ಕ್ಕೆ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ಸ್ಥಳಕ್ಕೆ ತಲುಪಿದಾಗ ಮಹಿಳೆ ಆರತಿ ಗಂಟಲು ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂತು ಎಂದು ಪೊಲೀಸರು ತಿಳಿಸಿದ್ದಾರೆ. +ಅಪರಾಧದ ಸ್ಥಳದ ತಪಾಸಣೆ ಮತ್ತು ಅಪರಾಧದ ಸ್ಥಳದಲ್ಲಿ ಹಾಜರಿದ್ದ ಜನರೊಂದಿಗೆ ವಿಚಾರಣೆ ನಡೆಸಿದಾಗ ಆರತಿಯನ್ನು ಆಕೆಯ ಪತಿ ಮಂಜೀತ್ ಮುಂಜಾನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ಮತ್ತು 304 ಬಿ ಅಡಿಯಲ್ಲಿ ಅಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_138_1.txt b/eesanje/url_47_138_1.txt new file mode 100644 index 0000000000000000000000000000000000000000..69c3c3a52fe4d801250bdc9871847090d4513483 --- /dev/null +++ b/eesanje/url_47_138_1.txt @@ -0,0 +1,5 @@ +ಮಸೀದಿ ಮೇಲೆ ರಾಮ ನಾಮ : ಮುಸ್ಲಿಂಮರಿಂದ ಭಾರೀ ಪ್ರತಿಭಟನೆ, ಎಫ್‍ಐಆರ್ ದಾಖಲು +ಮುಂಬೈ,ಮಾ.26-ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪ್ರಮುಖ ಮಸೀದಿಯೊಂದರ ಗೋಡೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಧಾರ್ಮಿಕ ಘೋಷವಾಖ್ಯ ಬರೆದು ಕೋಮು ಗಲಭೆಗೆ ಕಾರಣವಾಗಿದ್ದು, ಸ್ಥಳದಲ್ಲಿ ಇನ್ನೂ ಉದ್ವಿಗ್ನ ವಾತಾವರಣವಿದೆ. +ಮಜಲ್‍ಗಾಂವ್‍ನ ಮರ್ಕಝಿ ಮಸೀದಿಯ ಗೋಡೆಯ ಮೇಲೆ ನಿನ್ನೆ ಸಂಜೆಯ ಈ ಘೋಷಣೆಯನ್ನು ಬರೆಯಲಾಗಿತ್ತು. ಇದರಿಂದ ರೊಚ್ಚುಗೆದ್ದ ಮುಸ್ಲಿಂ ಸಮುದಾಯದವರು ಮಸೀದಿ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಸಾಕಷ್ಟು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. +ಈ ಸಂಬಂಧ ಎಫ್‍ಐಆರ್ ದಾಖಲಾಗಿದ್ದು, ಕೆಲವು ಸಮಾಜ ವಿರೋಧಿಗಳು ಮಸೀದಿಯ ಗೋಡೆಯ ಮೇಲೆ ಶ್ರೀರಾಮ ಎಂದು ಬರೆದಿದ್ದಾರೆ. ನಾವು ಸೆಕ್ಷನ್ 295 (ಉದ್ದೇಶಪೂರ್ವಕವಾಗಿ ಪೂಜಾ ಸ್ಥಳವನ್ನು ನಾಶಪಡಿಸಲು ಅಥವಾ ಅಪವಿತ್ರಗೊಳಿಸಲು)ರಡಿ ದೂರು ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. +ನಾವು ದುಷ್ಕರ್ಮಿಯನ್ನು ಪತ್ತೆಹಚ್ಚುತ್ತಿದ್ದೇವೆ ಮತ್ತು ಘಟನೆಗೆ ಕಾರಣರಾದವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಮಜಲಗಾಂವ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಧೀರಜ್ ಕುಮಾರ್ ತಿಳಿಸಿದ್ದಾರೆ. \ No newline at end of file diff --git a/eesanje/url_47_138_10.txt b/eesanje/url_47_138_10.txt new file mode 100644 index 0000000000000000000000000000000000000000..016b806d88804a4d1289a396cac5d076aeeedf76 --- /dev/null +++ b/eesanje/url_47_138_10.txt @@ -0,0 +1,7 @@ +ಗೋವಾದಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿ ಕಣಕ್ಕೆ +ಪಣಜಿ,ಮಾ.25-ಚಿಕ್ಕರಾಜ್ಯ ಗೋವಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿಯಿಂದ ಮಹಿಳಾ ಅಭ್ಯರ್ಥಿಯೊಬ್ಬರು ಕಣಕ್ಕಿಳಿಯುತ್ತಿದ್ದಾರೆ. ಡೆಂಪೊ ಇಂಡಸ್ಟ್ರೀಸ್‍ನ ಕಾರ್ಯ ನಿರ್ವಾಹಕ ನಿರ್ದೇಶಕಿ ಪಲ್ಲವಿ ಡೆಂಪೊ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. +ಗೋವಾದ ವಾಣಿಜ್ಯೋದ್ಯಮಿ ಹಾಗೂ ಶಿಕ್ಷಣತಜ್ಞೆಯೂ ಆಗಿರುವ ಪಲ್ಲವಿ ಡೆಂಪೊ ಅವರು ಪುಣೆಯ ಎಂಐಟಿಯಿಂದ ರಸಾಯನಶಾಸ್ತ್ರದಲ್ಲಿ ಪದವಿ ಮತ್ತು ವ್ಯವಹಾರ ನಿರ್ವಹಣೆಯಲ್ಲಿ (ಎಂಬಿಎ) ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ 49 ವರ್ಷದ ಪಲ್ಲವಿ ಅವರು, ಡೆಂಪೊ ಇಂಡಸ್ಟ್ರೀಸ್‍ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಹಾಗೂ ಮಾಧ್ಯಮ ಮತ್ತು ರಿಯಲ್ ಎಸ್ಟೇಟ್ ವಿಭಾಗವನ್ನು ನಿರ್ವಹಣೆ ಮಾಡುತ್ತಿದ್ದಾರೆ. +ಇಂಡೋ-ಜರ್ಮನ್ ಎಜುಕೇಶನಲ್ ಅಂಡ್ ಕಲ್ಚರಲ್ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ, ಇದು ಜರ್ಮನಿ ಮತ್ತು ಗೋವಾ ನಡುವಿನ ಸಾಂಸ್ಕೃತಿಕ ಬಾಂಧವ್ಯವವನ್ನು ಮತ್ತಷ್ಟು ಇಮ್ಮಡಿಗೊಳಿಸುತ್ತಿದೆ. ಅಲ್ಲದೇ ಪಲ್ಲವಿ ಅವರು ಪ್ರಾರಂಭಿಸಿದ ಫ್ಯಾಷನ್ ಮತ್ತು ಜವಳಿ ವಸ್ತುಸಂಗ್ರಹಾಲಯವಾದ ಮೋಡಾ ಗೋವಾ ಫೌಂಡೇಶನ್‍ನ ಟ್ರಸ್ಟಿಯಾಗಿದ್ದಾರೆ. +ಜೊತೆಗೆ 2012ರಿಂದ 2016ರವರೆಗೆ ಗೋವಾ ವಿಶ್ವವಿದ್ಯಾಲಯದ ಸಂಯೋಜಿತ ಶೈಕ್ಷಣಿಕ ಮಂಡಳಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಗೋವಾ ಕ್ಯಾನ್ಸರ್ ಸೊಸೈಟಿಯ ವ್ಯವಸ್ಥಾಪಕ ಸಮಿತಿಯ ಭಾಗವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. +ಪಲ್ಲವಿ ಡೆಂಪೊಅವರ ಪತಿ ಶ್ರೀನಿವಾಸ್ ಡೆಂಪೊ ಗೋವಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಮುಖ್ಯಸ್ಥರಾಗಿದ್ದಾರೆ. ಇದರೊಂದಿಗೆ ಡೆಂಪೊ ಕುಟುಂಬವು ಬಡ ಹೆಣ್ಣುಮಕ್ಕಳಿಗೆ ಗ್ರಾಮೀಣ ಶಾಲೆ ದತ್ತು ಕಾರ್ಯಕ್ರಮದಡಿ ಸರ್ಕಾರಿ ಪ್ರೌಢ ಶಾಲೆಗಳನ್ನು ದತ್ತು ಪಡೆದಿದೆ. ಈ ಮೂಲಕ ವೃತ್ತಿಪರ ತರಬೇತಿ ನೀಡುವ ಕೆಲಸ ಮಾಡುತ್ತಿದೆ. +ದಕ್ಷಿಣ ಗೋವಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಫ್ರಾನ್ಸಿಸ್ಕೊ ಸರ್ದಿನ್ಹಾ ಪ್ರತಿನಿಧಿಸುತ್ತಿದ್ದಾರೆ. 1962 ರಿಂದ ಕಾಂಗ್ರೆಸ್ ಭದ್ರಕೋಟೆಯಾಗಿರುವ ಕ್ಷೇತ್ರದಲ್ಲಿ ಬಿಜೆಪಿ ಕೇವಲ ಎರಡು ಬಾರಿ (1999 ಮತ್ತು 2014 ರಲ್ಲಿ) ಗೆದ್ದಿದೆ. ಈ ಬಾರಿ ಪಲ್ಲವಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. \ No newline at end of file diff --git a/eesanje/url_47_138_11.txt b/eesanje/url_47_138_11.txt new file mode 100644 index 0000000000000000000000000000000000000000..332b71922f076594db2b6282e56b70dde7248145 --- /dev/null +++ b/eesanje/url_47_138_11.txt @@ -0,0 +1,5 @@ +ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಪತ್ನಿಯ ಕಾರು ಕಳವು +ನವದೆಹಲಿ,ಮಾ.25-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿಯ ಬಿಳಿ ಬಣ್ಣದ ಫಾರ್ಚುನರ್ ಕಾರು ಕಳ್ಳತನವಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ಚಾಲಕ, ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಸರ್ವೀಸ್‍ಗೆ ತೆಗೆದುಕೊಂಡು ಹೋಗಿದ್ದರು. ಕಳೆದ ಮಾರ್ಚ್ 19ರಂದು ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯೊಳಗೆ ಅರೋರಾ ಪ್ರಾಪರ್ಟೀಸ್ ಆರ್‍ಡಿ ಮಾರ್ಗದ ಮುಂಭಾಗದಲ್ಲಿರುವ ಗೋವಿಂದಪುರಿಯಿಂದ ಎಚ್‍ಪಿ03ಡಿ0021 ಸಂಖ್ಯೆಯ ಕಾರು ಕಳವಾಗಿದೆ. +ಜೆ.ಪಿ.ನಡ್ಡಾ ಅವರ ಪತ್ನಿಯ ಕಾರು ಸಂಖ್ಯೆ ಹಿಮಾಚಲ ಪ್ರದೇಶದ್ದು ಎಂಬ ಮಾಹಿತಿ ಲಭಿಸಿದೆ. ಕಾರು ಚಾಲಕ ಸರ್ವೀಸ್ ಸೆಂಟರ್‍ನಲ್ಲಿ ಕಾರನ್ನು ನಿಲ್ಲಿಸಿ ಊಟ ಮಾಡಲು ಮನೆಗೆ ತೆರಳಿದ್ದ. ಆದರೆ ವಾಪಸ್ ಬಂದಾಗ ಕಾರು ನಾಪತ್ತೆಯಾಗಿತ್ತು. +ಕೂಡಲೇ ಚಾಲಕ ಜೋಗಿಂದರ್ ಸ್ಥಳೀಯ ಪೂಲೀಸ್ ಠಾಣೆಗೆ ದೂರು ನೀಡಿದ್ದು, ಕಾರ್ಯಾಚರಣೆ ಕೈಗೊಂಡಿರುವ ಪೂಲೀಸರು ಸರ್ವೀಸ್ ಸೆಂಟರ್ ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ, ಅಲ್ಲದೆ ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. +2022 ಮತ್ತು 2023ರ ನಡುವೆ ಭಾರತದಲ್ಲಿ ವಾಹನ ಕಳ್ಳತನ ಘಟನೆಗಳು 2.5% ರಷ್ಟು ಹೆಚ್ಚಾಗಿದೆ.ದೆಹಲಿ ಸೇರಿದಂತೆ ಹಲವು ಮಹಾನಗರಗಳಲ್ಲಿ ವಾಹನ ಕಳ್ಳತನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವುದು ಗಮನಾರ್ಹ. ದೆಹಲಿ-ಎನ್‍ಸಿಆರ್‍ನಲ್ಲಿ ಪ್ರತಿ 14 ನಿಮಿಷಕ್ಕೆ ಒಂದು ವಾಹನ ಕಳ್ಳತನವಾಗುತ್ತದೆ. \ No newline at end of file diff --git a/eesanje/url_47_138_12.txt b/eesanje/url_47_138_12.txt new file mode 100644 index 0000000000000000000000000000000000000000..a296b391f566184e720c460e598630c96e3e1500 --- /dev/null +++ b/eesanje/url_47_138_12.txt @@ -0,0 +1,5 @@ +ಚುನಾವಣಾ ಬಾಂಡ್ ಹಗರಣದ ಮರೆಮಾಚಲು ಕೇಜ್ರಿವಾಲ್ ಬಂಧನ ; ಪಿಣರಾಯಿ ವಿಜಯನ್ +ಕಣ್ಣೂರು, ಮಾ.25 (ಪಿಟಿಐ) –ಚುನಾವಣಾ ಬಾಂಡ್ ಹಗರಣದ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. +ವಿವಾದಿತ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧ ಸಿಪಿಐ(ಎಂ) ಇಲ್ಲಿ ಆಯೋಜಿಸಿದ್ದ ಸತತ ಮೂರನೇ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ವಿಜಯನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರವು ಕಾನೂನು ಸುವ್ಯವಸ್ಥೆಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು. ಸಂಘಪರಿವಾರವು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದೆ ಮತ್ತು ದೇಶದ ನ್ಯಾಯಾಂಗಕ್ಕೆ ಬೆದರಿಕೆ ಹಾಕುತ್ತಿದೆ ಎಂದು ಅವರು ಆರೋಪಿಸಿದರು. +ಕೇಂದ್ರ ಸರ್ಕಾರ, ಬಿಜೆಪಿ, ಸಂಘಪರಿವಾರ, ಚುನಾವಣಾ ಬಾಂಡ್ ಹಗರಣದ ಸುಪ್ರೀಂ ಕೋರ್ಟ್ ಆದೇಶವು ತಮಗೆ ಹಾನಿಕರ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ. ಅವರು ಈ ವಿಷಯದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸಿದ್ದರು ಮತ್ತು ಅದಕ್ಕಾಗಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ ಎಂದು ವಿಜಯನ್ ಹೇಳಿದರು.ಚುನಾವಣಾ ಬಾಂಡ್‍ಗಳ ಕಲ್ಪನೆಯನ್ನು ತೇಲಿಬಿಟ್ಟಾಗ, ಸಿಪಿಐ(ಎಂ) ಭ್ರಷ್ಟಾಚಾರದ ಸಾಧನವಾಗಿರುವುದರಿಂದ ಅದನ್ನು ವಿರೋಧಿಸಿತು ಮತ್ತು ಅದರ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಹೋಗಿತ್ತು ಎಂದು ಮುಖ್ಯಮಂತ್ರಿ ಹೇಳಿದರು. +ಚುನಾವಣಾ ಬಾಂಡ್ ಹಗರಣವು ಭಾರತದಲ್ಲಿ ಇದುವರೆಗೆ ಕಂಡಿರುವ ಅತಿದೊಡ್ಡ ಭ್ರಷ್ಟಾಚಾರವಾಗಿದೆ. ಅಂತಹ ಘೋರ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಳ್ಳಲು ಅವರಿಗೆ ಹೇಗೆ ಧೈರ್ಯ ಬಂತು? ಅವರು (ಬಿಜೆಪಿ) ತಮ್ಮನ್ನು ಎಂದಿಗೂ ಪ್ರಶ್ನಿಸುವುದಿಲ್ಲ ಎಂದು ಭಾವಿಸಿದ್ದರು ಎಂದು ತೋರುತ್ತದೆ ಎಂದಿದ್ದಾರೆ.ಕೇಜ್ರಿವಾಲ್ ಅವರ ಬಂಧನದೊಂದಿಗೆ, ಸಂಘಪರಿವಾರವು ತಾವು ದೇಶದ ಕಾನೂನಿಗಿಂತ ಮೇಲಿದ್ದೇವೆ ಮತ್ತು ತಮ್ಮ ಕಾರ್ಯಸೂಚಿಯನ್ನು ಜಾರಿಗೆ ತರಲು ಏನು ಬೇಕಾದರೂ ಮಾಡಲಿದೆ ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸುತ್ತಿದೆ ಎಂದು ವಿಜಯನ್ ಹೇಳಿದರು.. \ No newline at end of file diff --git a/eesanje/url_47_138_2.txt b/eesanje/url_47_138_2.txt new file mode 100644 index 0000000000000000000000000000000000000000..98f99481c971eec23b0e2432ab117433a16fb92f --- /dev/null +++ b/eesanje/url_47_138_2.txt @@ -0,0 +1,6 @@ +ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆಸ್ಪತ್ರೆಗೆ ದಾಖಲು +ಲಖ್ನೋ,ಮಾ.26-ಉತ್ತರಪ್ರದೇಶದ ಬಂದಾ ಜೈಲಿನಲ್ಲಿರುವ ದರೋಡೆಕೋರ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಮೂರು ದಿನಗಳಿಂದ ಮೂತ್ರದ ಸೋಂಕಿನಿಂದ ಬಳಲುತ್ತಿದ್ದ ಅನ್ಸಾರಿ ಮುಖ್ತಾರ್ ಪ್ರಸ್ತುತ ವೈದ್ಯಕೀಯ ಕಾಲೇಜಿನ ತುರ್ತು ನಿಗಾಘಟಕದಲ್ಲಿ(ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ. +ನಿನ್ನೆ ಮುಖ್ತಾರ್ ಅನ್ಸಾರಿಗೆ ಸ್ವಲ್ಪ ಹೊಟ್ಟೆ ನೋವು ಕಾಣಿಸಿಕೊಂಡಿತು ಮತ್ತು ಶೌಚಾಲಯಕ್ಕೆ ಹೋಗುವಾಗ ಬಿದ್ದಿದ್ದಾರೆ. ಇದಾದ ಬಳಿಕ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಸದ್ಯ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಮತ್ತು ಮುಖ್ತಾರ್ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜೈಲು ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಮುಖ್ತಾರ್ ಕುಟುಂಬಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಅವರನ್ನು ಆಸ್ಪತ್ರೆಗೆ ತಲುಪುವಂತೆ ತಿಳಿಸಲಾಗಿದೆ ಎಂದು ಜೈಲು ಆಡಳಿತ ತಿಳಿಸಿದೆ. +ಇತ್ತೀಚೆಗಷ್ಟೇ ಮುಖ್ತಾರ್ ಅನ್ಸಾರಿ ಬಂದಾ ಜೈಲಿನಲ್ಲಿ ತನಗೆ ಜೀವ ಬೆದರಿಕೆಯ ಕುರಿತು ಹೇಳಿದ್ದು, ಸ್ಲೋ ಪಾಯ್ಸನ್ ನೀಡಿರುವುದಾಗಿ ಆರೋಪಿಸಿದ್ದರು. ಆದರೆ ಬಂದಾ ಜೈಲು ಆಡಳಿತವು ಮುಕ್ತಾರ್ ಅನ್ಸಾರಿ ಆರೋಪವನ್ನು ತಳ್ಳಿಹಾಕಿದೆ. +ಸೋದರನ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡುತ್ತಿಲ್ಲ:ಮುಕ್ತರ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಬಂದಾದ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ನಮಗೆ ಮೊಹಮ್ಮದಾಬಾದ್ ಪೊಲೀಸ್ ಠಾಣೆಯಿಂದ ಸಂದೇಶ ಬಂದಿದೆ. ಅವರ ಸಹಾಯಕ್ಕೆ ಬರುವಂತೆ ಕುಟುಂಬ ಸದಸ್ಯರನ್ನು ಕೇಳಲಾಗಿದೆ ಎಂದು ಅಫ್ಜಲ್ ಅನ್ಸಾರಿ ತಿಳಿಸಿದ್ದಾರೆ. +ಆದರೆ ಜಿಲ್ಲಾ, ಜೈಲು ಮತ್ತು ಆಸ್ಪತ್ರೆ ಅಧಿಕಾರಿಗಳು ಮುಖ್ತಾರ್ ಆರೋಗ್ಯ ಸ್ಥಿತಿಯ ಕುಟುಂಬದ ವಿವರಗಳನ್ನು ನೀಡುತ್ತಿಲ್ಲ. ಇದಷ್ಟೇ ಅಲ್ಲ, ಮುಖ್ತಾರ್ ಅವರ ವಕೀಲರಿಗೂ ಅವರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಬಂದಾಗೆ ತೆರಳುವ ಮೊದಲು ಮುಖ್ಯಮಂತ್ರಿ ಕಚೇರಿಗೆ ಕರೆ ಮಾಡಿದ್ದೆ ಆದರೆ ಗೋರಖ್‍ಪುರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ. ಬಂದಾ ಮೆಡಿಕಲ್ ಕಾಲೇಜಿನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಮುಖ್ತಾರ್ ಅವರನ್ನು ಲಕ್ನೋದ ಮೇದಾಂತ ಆಸ್ಪತ್ರೆಗೆ ಅಥವಾ ಇನ್ನಾವುದೇ ದೊಡ್ಡ ಆಸ್ಪತ್ರೆಗೆ ದಾಖಲಿಸುವಂತೆ ಮನವಿ ಮಾಡಲು ಮುಖ್ಯಮಂತ್ರಿಗಳ ಕಚೇರಿಗೆ ಕರೆ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_138_3.txt b/eesanje/url_47_138_3.txt new file mode 100644 index 0000000000000000000000000000000000000000..537358228d0b8f365d1575a20d7aa76dbaeaeddf --- /dev/null +++ b/eesanje/url_47_138_3.txt @@ -0,0 +1,10 @@ +ಕಂಗನಾ ವಿರುದ್ಧ ಅಶ್ಲೀಲ ಪೋಸ್ಟ್ ಮಾಡಿದ್ದ ಸುಪ್ರಿಯಾ ಶ್ರಿನೇಟ್ ವಿರುದ್ಧ ದೂರು +ನವದೆಹಲಿ,ಮಾ.26-ಬಾಲಿವುಡ್ ನಟಿ ಕಂಗನಾ ರಾವತ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿ ವಿವಾದಕ್ಕೆ ಸಿಲುಕಿರುವ ಎಐಸಿಸಿ ವಕ್ತಾರೆ ಸುಪ್ರಿಯ ಶ್ರಿನೇಟ್ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. +ಇಂತಹ ವರ್ತನೆಯನ್ನು ಹಾಗೂ ಮಹಿಳೆಯರ ಘನತೆಯನ್ನು ಕುಂದಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಕೂಡಲೇ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಎಲ್ಲಾ ಮಹಿಳೆಯರ ಗೌರವ ಹಾಗೂ ಘನತೆಯನ್ನು ಎತ್ತಿಹಿಡಿಯೋಣ ಎಂದು ಆಯೋಗ ತಿಳಿಸಿದೆ. ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥೆಯಾಗಿರುವ ಸುಪ್ರಿಯಾ ಶ್ರೀನೇಟ್ ಅವರು, ಕಂಗನಾ ಅಲ್ಪ ಬಟ್ಟೆ ಧರಿಸಿರುವ ಫೋಟೊ ಒಂದನ್ನು ಇನ್ಸ್ಟ್ರಾಗ್ರಾಂನಲ್ಲಿ ಹಂಚಿಕೊಂಡು, ಅಕ್ಷೇಪಾರ್ಹ ಶೀರ್ಷಿಕೆ ನೀಡಿದ್ದರು. +ಶ್ರೀನೇಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ತಿರುಗೇಟು ನೀಡಿದ ಬಿಜೆಪಿ ನಾಯಕರು, ಕಾಂಗ್ರೆಸ್ ನಾಯಕರ ಮನಸ್ಥಿತಿ ತೀರಾ ಕೆಳಮಟ್ಟಕ್ಕೆ ಇಳಿದಿದೆ. ಒಬ್ಬ ಮಹಿಳೆಯಾಗಿ ಮತ್ತೊಬ್ಬ ಮಹಿಳೆಯನ್ನು ಹೀನವಾಗಿ ನೋಡುವ ನಾಯಕರು ಪಕ್ಷದ ಸಾಮಾಜಿಕ ಜಾಲತಾಣದ ಹೊಣೆ ಹೊತ್ತಿದ್ದಾರೆ ಎಂದು ಟೀಕಿಸಿದ್ದಾರೆ. +ಸುಪ್ರಿಯಾ ಶ್ರೀನೇಟ್ ಅವರಿಗೆ ಮರುತ್ತರ ನೀಡಿರುವ ಕಂಗನಾ ರಣಾವತ್, ಕಳೆದ 20 ವರ್ಷದಿಂದ ನಾನು ಚಿತ್ರರಂಗದಲ್ಲಿದ್ದೇನೆ. ಹಲವು ಪಾತ್ರ ನಿಭಾಯಿಸಿದ್ದೇನೆ. ಕ್ವೀನ್‍ನ ನಿಷ್ಕಪಟ ಹುಡುಗಿ ಪಾತ್ರದಿಂದ ಹಿಡಿದು ಧಾಕಡ್‍ನ ಮೋಹಕ ಗೂಢಚಾರಿಣಿ ಪಾತ್ರದವರೆಗೂ, ದೇವಕನ್ಯೆ ಮಣಿಕರ್ಣಿಕದಿಂದ ಹಿಡಿದು ರಾಕ್ಷಸಿ ಅವತಾರದ ಚಂದ್ರಮುಖಿವರೆಗೆ, ರಜ್ಜೋದ ವೇಶ್ಯೆ ಪಾತ್ರದಿಂದ ಕ್ರಾಂತಿಕಾರಿ ತಲೈವಿಯ ಪಾತ್ರಗಳವರೆಗೆ ವೈವಿಧ್ಯಮಯ ಪಾತ್ರ ನಿರ್ವಹಿಸಿರುವೆ. +ನಾವು ನಮ್ಮ ಹೆಣ್ಣು ಮಕ್ಕಳನ್ನು ಪೂರ್ವಾಗ್ರಹ ಮನಸ್ಥಿತಿಯ ಸಂಕೋಲೆಯಿಂದ ಬಿಡುಗಡೆ ಮಾಡಬೇಕು. ದೇಹದ ಭಾಗಗಳ ಮೇಲಿರುವ ಕುತೂಹಲ ಮೀರಿ ಮುನ್ನಡೆಯಬೇಕು. ದಿನ ನಿತ್ಯ ಜೀವನದಲ್ಲಿ ಹೆಣ್ಣು ಅನುಭವಿಸುವ ನಿಂದನೆಯನ್ನು ತಡೆಯಲು ಗಮನ ಕೊಡಬೇಕು. ಎಲ್ಲಾ ಮಹಿಳೆಯರು ತಮ್ಮ ಘನತೆಗೆ ಅರ್ಹರು, ಎಂದಿದ್ದಾರೆ. +ಕಂಗನಾ ಅವರ ಬಗ್ಗೆ ಆಕ್ಷೇಪಾರ್ಹ ಫೋಟೋ ಹಾಕಿ ಅವಹೇಳನಕಾರಿ ಶೀರ್ಷಿಕೆ ನೀಡಿದ ಸುಪ್ರಿಯಾ ಶ್ರೀನೇಟ್ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಗ್ರಹಿಸಿದ್ದಾರೆ. +ತಮ್ಮ ಚುನಾವಣಾ ಪ್ರವೇಶ ಕುರಿತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರ ಕೀಳು ಮಟ್ಟದ ಸಂಭಾಷಣೆಯ ಸ್ಕ್ರೀನ್‍ಶಾಟ್‍ನ್ನು ಕೂಡ ಕಂಗನಾ ಹಂಚಿಕೊಂಡಿದ್ದಾರೆ. ವಿಕ್ರಮ್ ಎಂಬುವವರ ಪೋಸ್ಟ್ ಗೆ ಗುಜರಾತ್ ಕಾಂಗ್ರೆಸ್ ನಾಯಕ ಎಚ್‍ಎಸ್ ಅಹೀರ್ ನಗುವಿನ ಮೋಜಿ ಹಾಕಿದ್ದರು. +ಯುವ ನಾಯಕನಿಗೆ ಟಿಕೆಟ್ ದೊರೆತರೆ, ಆತನ ಸಿದ್ಧಾಂತದ ಮೇಲೆ ದಾಳಿ ನಡೆಯುತ್ತದೆ. ಯುವ ನಾಯಕಿಗೆ ಟಿಕೆಟ್ ಸಿಕ್ಕರೆ, ಆಕೆಯ ಮೇಲೆ ಲೈಂಗಿಕವಾಗಿ ದಾಳಿ ನಡೆಸಲಾಗುತ್ತದೆ. ವಿಚಿತ್ರ! ಜತೆಗೆ, ಕಾಂಗ್ರೆಸ್ ನಾಯಕರು ಸಣ್ಣ ಪಟ್ಟಣದ ಹೆಸರನ್ನೂ ಲೈಂಗಿಕಗೊಳಿಸುತ್ತಿದ್ದಾರೆ. ಮಂಡಿಯಲ್ಲಿ ಯುವ ಮಹಿಳೆ ಅಭ್ಯರ್ಥಿಯಾಗಿದ್ದಾಳೆ ಎಂಬ ಕಾರಣಕ್ಕಾಗಿಯೇ ಎಲ್ಲಾ ಕಡೆ ಆ ಪಟ್ಟಣವನ್ನು ಲೈಂಗಿಕ ಕಂಟೆಕ್ಸ್‍ನಲ್ಲಿ ಬಳಸಲಾಗುತ್ತಿದೆ. ಸೆಕ್ಸಿಸ್ಟ್ ಪ್ರವೃತ್ತಿಯನ್ನು ಪ್ರದರ್ಶಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗಬೇಕು ಎಂದು ಕಂಗನಾ ಕಿಡಿಕಾರಿದ್ದಾರೆ. +ನಕಲಿ ಅಕೌಂಟ್ ಎಂದ ಸುಪ್ರಿಯಾವೈರಲ್ ಪೋಸ್ಟ್ ಬಗ್ಗೆ ಸ್ಪಷ್ಟೀಕರಣ ನೀಡಿರುವ ಸುಪ್ರಿಯಾ ಶ್ರೀನೇಟ್, ನನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ ಮಾಡಲಾಗಿದೆ. ಈ ಮೋಜಿ ಸಂಬಂಧ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಯಾರೋ ನಕಲಿ ಖಾತೆಯಿಂದ ಆ ಪೋಸ್ಟ್ ಅನ್ನು ಕಾಪಿ ಮಾಡಿ, ನನ್ನ ಇನ್ಸ್ಟಗ್ರಾಂ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ಖಾತೆಗೆ ಪ್ರವೇಶ ಹೊಂದಿರುವ ಯಾರು ಈ ಕೆಲಸ ಮಾಡಿದ್ದಾರೆ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_138_4.txt b/eesanje/url_47_138_4.txt new file mode 100644 index 0000000000000000000000000000000000000000..c32f331d48a84332e178f2553a0458c9f1c599e9 --- /dev/null +++ b/eesanje/url_47_138_4.txt @@ -0,0 +1,7 @@ +ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಸದ್ದು +ಹೈದರಾಬಾದ್,ಮಾ.26-ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಪ್ರಕರಣ ವರದಿಯಾಗಿದೆ. ರಾಜ್ಯದ ಕೆಲ ಪೊಲೀಸರು ಹಿಂದಿನ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಅಣತಿ ಮೇರೆಗೆ ಹಾಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವಾರು ಪ್ರತಿಪಕ್ಷಗಳ ನಾಯಕರ ಫೋನ್ ಕದ್ದಾಲಿಕೆ ನಡೆಸಿದ್ದರು ಎಂದು ತಿಳಿದುಬಂದಿದೆ. ಇದರ ಜೊತೆಗೆ ಬಿಆರ್‍ಎಸ್ ಪಕ್ಷದ ನಿಧಿಗೆ ಬೃಹತ್ ಮೊತ್ತದ ಕೊಡುಗೆ ನೀಡುವಂತೆ ಉದ್ಯಮಿಗಳನ್ನು ಬ್ಲ್ಯಾಕ್‍ಮೇಲ್ ಮಾಡಲು ಸಹ ಕಣ್ಗಾವಲು ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಆರೋಪಗಳಿಗೆ ಬಿಆರ್‍ಎಸ್ ಇನ್ನೂ ಪ್ರತಿಕ್ರಿಯಿಸಿಲ್ಲ. +ಈ ಸಂಬಂಧ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಇದೀಗ ಅಮೆರಿಕದಲ್ಲಿರುವ ರಾಜ್ಯ ಗುಪ್ತಚರ ವಿಭಾಗದ ಮಾಜಿ ಮುಖ್ಯಸ್ಥ ಟಿ ಪ್ರಭಾಕರ ರಾವ್ ವಿರುದ್ಧ ಲುಕ್‍ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇಬ್ಬರು ಹಿರಿಯ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭುಜಂಗ ರಾವ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿರುಪತಣ್ಣ ಅವರುಗಳು ಅಕ್ರಮ ಕಣ್ಗಾವಲು ಮತ್ತು ಸಾಕ್ಷ್ಯ ನಾಶವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಆಗಿನ ಬಿಆರ್‍ಎಸ್ ಸರ್ಕಾರದ ಅಡಿಯಲ್ಲಿ ರಾಜ್ಯ ಗುಪ್ತಚರ ಬ್ಯೂರೋದ ತಾಂತ್ರಿಕ ಸಲಹೆಗಾರ ರವಿ ಪಾಲ್ ಅವರು, ರೆಡ್ಡಿ ಅವರ ಸಂಭಾಷಣೆಗಳನ್ನು ಕೇಳಲು ಅವರ ನಿವಾಸದ ಬಳಿ -ಫೋನ್ ಟ್ಯಾಪಿಂಗ್ ಉಪಕರಣಗಳನ್ನು ಆಮದು ಮಾಡಿಕೊಳ್ಳಲು ಮತ್ತು ಸ್ಥಾಪಿಸಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. +ಸಾಫ್ಟ್ ವೇರ್ ಕಂಪನಿಯನ್ನು ಮುಂಭಾಗವಾಗಿ ಬಳಸಿಕೊಂಡು ಇಸ್ರೇಲ್‍ನಿಂದ ಉಪಕರಣಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಅಂತಹ ಆಮದುಗಳಿಗೆ ಕೇಂದ್ರದಿಂದ ಯಾವುದೇ ಅನುಮತಿಯನ್ನು ತೆಗೆದುಕೊಳ್ಳಲಾಗಿಲ್ಲ ಎಂದು ತಿಳಿದುಬಂದಿದೆ. ಈ ಸೆಟಪ್‍ನೊಂದಿಗೆ, 300 ಮೀಟರ್ ವ್ಯಾಪ್ತಿಯಲ್ಲಿ ಮಾತನಾಡುವ ಯಾವುದನ್ನಾದರೂ ಕೇಳಬಹುದು ಎಂದು ವರದಿಗಳು ಹೇಳುತ್ತವೆ. +ರವಿ ಪಾಲ್ ಅವರು ರೆಡ್ಡಿ ನಿವಾಸದ ಬಳಿ ಕಚೇರಿಯನ್ನು ಸ್ಥಾಪಿಸಿ ಸಾಧನವನ್ನು ಅಳವಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆತನನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ.ತೆಲುಗು ಟಿವಿ ಚಾನೆಲ್ ಐ ನ್ಯೂಸ್ ನಡೆಸುತ್ತಿರುವ ಶರ್ವಣ್ ರಾವ್ ಮತ್ತು ಸಿಟಿ ಟಾಸ್ಕ್ -ಫೋರ್ಸ್ ನ ಪೊಲೀಸ್ ಅಧಿಕಾರಿ ರಾಧಾ ಕಿಶನ್ ರಾವ್ ಅವರಿಗೂ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. +ಕಣ್ಗಾವಲು ವಿರೋಧ ಪಕ್ಷದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ರಿಯಲ್ ಎಸ್ಟೇಟ್ ವ್ಯಾಪಾರಿಗಳು ಮತ್ತು ಆಭರಣ ವ್ಯಾಪಾರಿಗಳು ಸೇರಿದಂತೆ ಪ್ರಮುಖ ಉದ್ಯಮಿಗಳು ಮತ್ತು ಸೆಲೆಬ್ರಿಟಿಗಳ ಮೇಲೂ ನಿಗಾ ಇರಿಸಲಾಗಿತ್ತು. ವಾಸ್ತವವಾಗಿ, -ಫೋನ್ ಸಂಭಾಷಣೆಗಳ ಕದ್ದಾಲಿಕೆಯು ಸೆಲೆಬ್ರಿಟಿ ದಂಪತಿಗಳ ವಿಚ್ಛೇದನಕ್ಕೆ ಕಾರಣವಾಗಿತ್ತು ಎಂದು ವರದಿಗಳು ಹೇಳುತ್ತವೆ. \ No newline at end of file diff --git a/eesanje/url_47_138_5.txt b/eesanje/url_47_138_5.txt new file mode 100644 index 0000000000000000000000000000000000000000..9aafe589900912cefe9da26dc6f3e4f6ebcd120a --- /dev/null +++ b/eesanje/url_47_138_5.txt @@ -0,0 +1,4 @@ +ಮರಕ್ಕೆ ಜೀಪ್ ಡಿಕ್ಕಿಯಾಗಿ ಮೂವರ ಸಾವು +ದಾಮೋಹ್, ಮಾ 26-ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ದೇವದೋಗರ ಗ್ರಾಮದ ಬಳಿ ಜೀಪೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ,ಇಬ್ಬರು ಗಾಯಗೊಂಡಿದ್ದಾರೆ.ಪಟೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪಟೇರಾ ಪೊಲೀಸ್ ಠಾಣೆ ಉಸ್ತುವಾರಿ ಅಮಿತ್ ಮಿಶ್ರಾ ಹೇಳಿದ್ದಾರೆ. +ವೇಗವಾಗಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. +ಇನ್ನೂ ಗಾಯಗೊಂಡ ಇಬ್ಬರನ್ನು ಜಬಲ್‍ಪುರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ. ಮೃತರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಅಪಘಾತ ಸಂಭಂದ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_138_6.txt b/eesanje/url_47_138_6.txt new file mode 100644 index 0000000000000000000000000000000000000000..9c9d778bc99479fa24aa95f1ff208974486b826f --- /dev/null +++ b/eesanje/url_47_138_6.txt @@ -0,0 +1,5 @@ +ಜಗಳದ ವೇಳೆ ಯುವಕನಿಗೆ ಗುಂಡಿಕ್ಕಿ ಹತ್ಯೆ +ನವದೆಹಲಿ, ಮಾ.26-ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‍ನ ಮನೆಯೊಂದರಲ್ಲಿ ಕಳೆದ ರಾತ್ರಿ ನಡೆದ ಜಗಳದ ವೇಳೆ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಮಾಡಲಾಗಿದೆ. ಚಾಂದಿನಿ ಚೌಕ್‍ನ ಗಾಮೆರ್ಂಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ತಾಕಿಮ್(22) ಕೊಲೆಯಾದ ಯುವಕ . +ಅತನ ಎದೆಗೆ ಗುಂಡು ಹಾರಿ ಕೊಂದ ಆರೋಪಿ ಯಾಸೀನ್ (24) ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿ, ಮುಸ್ತಾಕಿಮ್ ಬಾರ್‍ನಲ್ಲಿ ಕೆಲಸ ಮಾಡುವ ಇಶ್ರತ್ ಎಂಬಾಕೆಯ ಮನೆಗೆ ಹೋಗಿದ್ದರು ಅಲ್ಲಿ ಯಾಸೀನ್ ಕೂಡ ಬಂದಿದ್ದ .ಈ ವೇಳೆ ವಾಗ್ವಾದ ನಡೆದು ಜಗಳ ಶುರುವಾಗಿದೆ. +ಇದು ವಿಕೋಪಕ್ಕೆ ತಿರುಗಿ ಯಾಸೀನ್ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಮುಸ್ತಾಕಿಮ್ ಮೇಲೆ ಮೂರು ಬಾರಿ ಗುಂಡು ಹಾರಿಸಿದ್ದಾನೆ.ಒಂದು ಗುಂಡು ಮುಸ್ತಕಿಮ್‍ನ ಎದೆಗೆ ತಗುಲಿ ಆತ ಕುಸಿದು ಬಿದ್ದಿದ್ದಾನೆ ನಂತರ ಆತನನ್ನು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. +ಮಾಹಿತಿ ಪಡೆದು ಸ್ಥಳಕ್ಕೆ ದಾವಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ದೇಹವನ್ನು ಜಿಟಿಬಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಉಪ ಪೊಲೀಸ್‍ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ.ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ ಪರಾರಿಯಾಗಿರುವ ಯಾಸೀನ್‍ನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.ಪೊಲೀಸರ ಪ್ರಕಾರ, ಕಳೆದ ವರ್ಷ ನವೆಂಬರ್‍ನಲ್ಲಿ ಸೊಹೈಲ್ ಮತ್ತು ಇಶ್ರತ್ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_138_7.txt b/eesanje/url_47_138_7.txt new file mode 100644 index 0000000000000000000000000000000000000000..11d299abf56065b4e0b22b79938751b40bef01f1 --- /dev/null +++ b/eesanje/url_47_138_7.txt @@ -0,0 +1,7 @@ + ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷನಾದ ದಲಿತ ವಿದ್ಯಾರ್ಥಿ +ನವದೆಹಲಿ, ಮಾ 25 (ಪಿಟಿಐ)-ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟವು (ಜೆಎನ್ಯುಎಸ್ಯು) ಸುಮಾರು ಮೂರು ದಶಕಗಳ ನಂತರ ಎಡ ಬೆಂಬಲಿತ ಗುಂಪುಗಳಿಂದ ತನ್ನ ಮೊದಲ ದಲಿತ ಅಧ್ಯಕ್ಷರನ್ನು ಆಯ್ಕೆ ಮಾಡಿದೆ. ಯುನೈಟೆಡ್ ಲೆಫ್ಟ್ ಪ್ಯಾನೆಲ್ ಜೆಎನ್ಯುಎಸ್ಯು ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದೆ, ಅದರ ಸಮೀಪದ ಪ್ರತಿಸ್ರ್ಪ ಆರ್ಎಸ್ಎಸ್-ಸಂಯೋಜಿತ ಎಬಿವಿಪಿ ಅಭ್ಯರ್ಥಿಯನ್ನು ಸೋಲಿಸಿದೆ. +ನಾಲ್ಕು ವರ್ಷಗಳ ವಿರಾಮದ ನಂತರ ನಡೆದ ಚುನಾವಣೆಯಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್ಎ) ಧನಂಜಯ್ ಅವರು 1,676 ಮತಗಳನ್ನು ಗಳಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ (ಎಬಿವಿಪಿ) ಉಮೇಶ್ ಸಿ ಅಜ್ಮೀರಾ ವಿರುದ್ಧ 2,598 ಮತಗಳನ್ನು ಪಡೆಯುವ ಮೂಲಕ ಜೆಎನ್ಯುಎಸ್ಯು ಅಧ್ಯಕ್ಷ ಸ್ಥಾನವನ್ನು ಗೆದ್ದರು. +ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈವಾರ್ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ, ಈ ಗೆಲುವು ಜೆಎನ್ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. +ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ. ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಮೇಲೆ ಕೆಲಸ ಮಾಡುತ್ತೇವೆ ಎಂದಿದ್ದಾರೆ. ಕ್ಯಾಂಪಸ್ನಲ್ಲಿ ಮಹಿಳೆಯರ ಸುರಕ್ಷತೆ, ನಿಧಿ ಕಡಿತ, ವಿದ್ಯಾರ್ಥಿವೇತನ ಹೆಚ್ಚಳ, ಮೂಲಸೌಕರ್ಯ ಮತ್ತು ನೀರಿನ ಬಿಕ್ಕಟ್ಟು ಪ್ರಾರಂಭವಾಗುವ ವಿದ್ಯಾರ್ಥಿಗಳ ಒಕ್ಕೂಟದ ಪ್ರಮುಖ ಆದ್ಯತೆಗಳಲ್ಲಿ ಸೇರಿವೆ ಎಂದು ಅವರು ಹೇಳಿದರು. +ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಸಿದರು. ಅಭ್ಯರ್ಥಿಗಳ ಗೆಲುವಿಗಾಗಿ ವಿದ್ಯಾರ್ಥಿಗಳು ಕೆಂಪು, ಬಿಳಿ ಮತ್ತು ನೀಲಿ ಬಾವುಟಗಳನ್ನು ಬೀಸಿದರು. +ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ ಐ) ಅವಿಜಿತ್ ಘೋಷ್ ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳಿಂದ ಸೋಲಿಸಿ ಉಪಾಧ್ಯಕ್ಷ ಸ್ಥಾನವನ್ನು ಗೆದ್ದಿದ್ದಾರೆ. ಶರ್ಮಾ ಅವರ 1,482 ಮತಗಳ ವಿರುದ್ಧ ಘೋಷ್ ಅವರು 2,409 ಮತಗಳನ್ನು ಪಡೆದರು. ಎಡಪಕ್ಷಗಳ ಬೆಂಬಲಿತ ಬಿರ್ಸಾ ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘದ (ಬಾಪ್ಸಾ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಅವರು ಎಬಿವಿಪಿಯ ಅರ್ಜುನ್ ಆನಂದ್ ಅವರನ್ನು 926 ಮತಗಳಿಂದ ಸೋಲಿಸುವ ಮೂಲಕ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಗೆದ್ದಿದ್ದಾರೆ. ಆರ್ಯ 2,887 ಮತಗಳನ್ನು ಪಡೆದರೆ, ಆನಂದ್ 1961 ಮತಗಳನ್ನು ಪಡೆದರು. \ No newline at end of file diff --git a/eesanje/url_47_138_8.txt b/eesanje/url_47_138_8.txt new file mode 100644 index 0000000000000000000000000000000000000000..2b8efa28fd94eae90b19609ea5445f87939ef44c --- /dev/null +++ b/eesanje/url_47_138_8.txt @@ -0,0 +1,7 @@ +ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸಣ್ಣ ರಾಮಲಲ್ಲಾ ವಿಗ್ರಹ ವೈರಲ್ +ಲಕ್ನೋ,ಮಾ.25-ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಸಣ್ಣ ರಾಮ ಲಲ್ಲಾ ವಿಗ್ರಹ ಕೆತ್ತನೆ ಕಾರ್ಯ ಇದೀಗ ಭಾರಿ ವೈರಲ್ ಆಗಿದೆ. ರಾಮ ಲಲ್ಲಾನ ಮುಖ್ಯ ಮೂರ್ತಿಯನ್ನು ಆಯ್ಕೆ ಮಾಡಿದ ನಂತರ, ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮಲಲ್ಲಾ ಮೂರ್ತಿಯನ್ನು (ಕಲ್ಲು) ಕೆತ್ತಿದ್ದೇನೆ ಎಂದು ಯೋಗಿರಾಜ್ ಎಕ್ಸ್ನಲ್ಲಿ ಹೇಳಿಕೊಂಡು ವಿಡಿಯೋ ಹಂಚಿಕೊಂಡಿದ್ದಾರೆ. +ಇದಕ್ಕೂ ಮೊದಲು ಅವರು ಪ್ರತಿಮೆಯ ಕಣ್ಣುಗಳನ್ನು ಕೆತ್ತಲು ಬಳಸಿದ ವಿಶೇಷ ಸಾಧನಗಳ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ನಾನು ಅಯೋಧ್ಯೆಯ ರಾಮ್ ಲಲ್ಲಾನ ದಿವ್ಯ ಕಣ್ಣುಗಳನ್ನು (ನೆಟ್ರೋನ್ಮಿಲನ) ಕೆತ್ತಿದ ಚಿನ್ನದ ಉಳಿಯೊಂದಿಗೆ ಈ ಬೆಳ್ಳಿಯ ಸುತ್ತಿಗೆಯನ್ನು ಬಳಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. +51 ಇಂಚಿನ ಎತ್ತರದ ವಿಗ್ರಹವನ್ನು ರಾಮ ಲಲ್ಲಾ ಐದು ವರ್ಷದ ಕಮಲದ ಮೇಲೆ ನಿಂತಿರುವಂತೆ ತೋರಿಸುತ್ತದೆ, ಇದನ್ನು ಯೋಗಿರಾಜ್ ಅವರು ಕೃಷ್ಣ ಶಿಲಾದಿಂದ ರಚಿಸಿದ್ದಾರೆ. ಕೃಷಿ ಪ್ಲಾಟ್ನಲ್ಲಿ ನೆಲಸಮಗೊಳಿಸುವ ಕಾರ್ಯದಲ್ಲಿ ಬಂಡೆಯನ್ನು ಪತ್ತೆ ಮಾಡಿ ಅಗೆದ ನಂತರ ಕರ್ನಾಟಕದಿಂದ ಬಂಡೆಯನ್ನು ತರಲಾಗಿತ್ತು. +ವಿಗ್ರಹವನ್ನು ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದ ಗರ್ಭಗುಡಿ ಅಥವಾ ಗರ್ಭ ಗೃಹ ದಲ್ಲಿ ಇರಿಸಿದ ನಂತರ, ಕರ್ನಾಟಕ ಮೂಲದ ಶಿಲ್ಪಿ ತಾನು ಭೂಮಿಯ ಮೇಲಿನ ಅದೃಷ್ಟ ವ್ಯಕ್ತಿ ಎಂದು ಪರಿಗಣಿಸುತ್ತೇನೆ ಎಂದು ಹೇಳಿಕೊಂಡಿದ್ದರು. ನಾನು ಈಗ ಭೂಮಿಯ ಮೇಲಿನ ಅತ್ಯಂತ ಅದೃಷ್ಟಶಾಲಿ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ. ನನ್ನ ಪೂರ್ವಜರು, ಕುಟುಂಬ ಸದಸ್ಯರು ಮತ್ತು ಭಗವಾನ್ ರಾಮನ ಆಶೀರ್ವಾದ ಯಾವಾಗಲೂ ನನ್ನೊಂದಿಗಿದೆ. ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆ ಎಂದು ನನಗೆ ಅನಿಸುತ್ತದೆ ಎಂದು ಯೋಗಿರಾಜ್ ತಿಳಿಸಿದ್ದರು. +ದೇಶದ ಅತ್ಯಂತ ಬೇಡಿಕೆಯ ಶಿಲ್ಪಿಗಳಲ್ಲಿ ಒಬ್ಬರಾದ ಅರುಣ್ ಯೋಗಿರಾಜ್ ಅವರು ಕುಶಲತೆಯ ಶ್ರೀಮಂತ ಪರಂಪರೆಯನ್ನು ಹೊಂದಿರುವ ಕುಟುಂಬದಿಂದ ಬಂದವರು. ಅವರ ತಂದೆ ಮತ್ತು ಅಜ್ಜ ಪ್ರಸಿದ್ಧ ಶಿಲ್ಪಿಗಳಾಗಿದ್ದರು. ಪದವಿ ಮುಗಿಸಿದ ನಂತರ ಯೋಗಿರಾಜ್ ಸ್ವಲ್ಪ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದರು. ಆದರೆ ತಮ್ಮ ಪೂರ್ವಜರ ಪರಂಪರೆಯನ್ನು ಅನುಸರಿಸಲು ಬಯಸಿದ್ದರು. 2008 ರಿಂದ ಅವರು ಪ್ರತಿಮೆಗಳನ್ನು ರಚಿಸು ತ್ತಿದ್ದಾರೆ, ರಾಷ್ಟ್ರವ್ಯಾಪಿ ಮನ್ನಣೆಯನ್ನು ಗಳಿಸಿದ್ದಾರೆ. +ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ್ ಜ್ಯೋತಿಯ ಹಿಂಭಾಗದ ಭವ್ಯವಾದ ಮೇಲಾವರಣದಲ್ಲಿ ಆಕರ್ಷಣೆಯ ಕೇಂದ್ರವಾದ ಸುಭಾಷ್ ಚಂದ್ರ ಬೋಸ್ ಅವರ 30 ಅಡಿ ಪ್ರತಿಮೆಯನ್ನು ಯೋಗಿರಾಜ್ ಅವರು ರಚಿಸಿದ್ದಾರೆ.ಅವರ ಇತರ ಕೃತಿಗಳಲ್ಲಿ, ಕೇದಾರನಾಥದಲ್ಲಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಮತ್ತು ಮೈಸೂರು ಜಿಲ್ಲೆಯ ಚುಂಚನಕಟ್ಟೆಯಲ್ಲಿರುವ 21 ಅಡಿ ಎತ್ತರದ ಹನುಮಾನ್ ಪ್ರತಿಮೆಯು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. \ No newline at end of file diff --git a/eesanje/url_47_138_9.txt b/eesanje/url_47_138_9.txt new file mode 100644 index 0000000000000000000000000000000000000000..a3726f7ca180553f2ef27e327a4857a4978c48ef --- /dev/null +++ b/eesanje/url_47_138_9.txt @@ -0,0 +1,6 @@ +ಕೇಜ್ರಿವಾಲ್ ಮೊಬೈಲ್ ಫೋನ್ ನಾಪತ್ತೆ..! +ನವದೆಹಲಿ,ಮಾ.25-ಎರಡು ವರ್ಷಗಳ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ಹಗರಣ ನಡೆದಾಗ ಬಳಸಿದ್ದ ಫೋನ್ ನಾಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ. +ಈ ಬಗ್ಗೆ ಕೇಳಿದಾಗ, ಅದು ಎಲ್ಲಿದೆ ಎಂದು ನನಗೆ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು 171 ನೇ ಫೋನ್ ಆಗಿರಬಹುದು ಎಂದು ಮೂಲಗಳು ತಿಳಿಸಿವೆ, ಇದು ದೆಹಲಿ ಮದ್ಯದ ಪ್ರಕರಣದಲ್ಲಿ ನಾಪತ್ತೆಯಾಗಿರುವ ಸಂಬಂಧಿತ ಡೇಟಾವನ್ನು ಒಳಗೊಂಡಿರುತ್ತದೆ. ಈ ಹಿಂದೆ 36 ಆರೋಪಿಗಳಿಗೆ ಸೇರಿದ ಇಂತಹ 170 -ಫೋನ್ಗಳು ಪತ್ತೆಯಾಗಿಲ್ಲ ಎಂದು ಇಡಿ ಹೇಳಿಕೊಂಡಿದೆ. +ಅಂತಿಮವಾಗಿ, ಸಂಸ್ಥೆಯು 17 -ಫೋನ್ಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ, ಅವರು ಡೇಟಾವನ್ನು ಮರುಪಡೆದುಕೊಂಡು ಪ್ರಕರಣವನ್ನು ಒಟ್ಟಿಗೆ ಸೇರಿಸಿದ್ದಾರೆ, ಇಡಿ ತನ್ನ ಆರೋಪಪಟ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿದೆ. +ಸಾಕ್ಷ್ಯ ನಾಶಪಡಿಸಲು ಉಳಿದ -ಫೋನ್ಗಳನ್ನು ಒಡೆಯಲಾಗಿದೆ ಎಂದು ತನಿಖಾ„ಕಾರಿಗಳು ಆರೋಪಿಸಿದ್ದಾರೆ. ಇಲ್ಲಿಯವರೆಗೆ, -ಫೋನ್ಗಳು ಮತ್ತು ಲ್ಯಾಪ್ಟಾಪ್ಗಳು ಪ್ರಕರಣದಲ್ಲಿ ಗರಿಷ್ಠ ಪ್ರಮಾಣದ ಸಾಕ್ಷ್ಯವನ್ನು ಒದಗಿಸಿವೆ ಎಂದು ಸಂಸ್ಥೆ ಆರೋಪಪಟ್ಟಿಯಲ್ಲಿ ತಿಳಿಸಿದೆ.ಆದರೆ ಮೇ 2022 ಮತ್ತು ಆಗಸ್ಟ್ 2022 ರ ನಡುವೆ ಗರಿಷ್ಠ ಸಂಖ್ಯೆಯ ಆರೋಪಿಗಳು ತಮ್ಮ -ಫೋನ್ ಮತ್ತು ಲ್ಯಾಪ್ಟಾಪ್ಗಳನ್ನು ಬದಲಾಯಿಸಿದ್ದಾರೆ ಎಂದು ಸಂಸ್ಥೆ ತಿಳಿಸಿದೆ. +ಇಡಿಯ ಈ ಆರೋಪಕ್ಕೆ ಎಎಪಿ ಅಪಹಾಸ್ಯ ಮಾಡಿದೆ. ಜಾರಿ ನಿರ್ದೇಶನಾಲಯದ ತನಿಖೆಯನ್ನು ಬಿಜೆಪಿ ಕಚೇರಿಯಿಂದಲೇ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ಆರೋಪಿಸಿವೆ. ಜಾರಿ ನಿರ್ದೇಶನಾಲಯ ಬಿಜೆಪಿಯ ರಾಜಕೀಯ ಪಾಲುದಾರ ಎಂದು ದೂರಿವೆ. \ No newline at end of file diff --git a/eesanje/url_47_139_1.txt b/eesanje/url_47_139_1.txt new file mode 100644 index 0000000000000000000000000000000000000000..b5f8824e49e71c20129b8b7d487fd835534243dc --- /dev/null +++ b/eesanje/url_47_139_1.txt @@ -0,0 +1,4 @@ +ರಥದ ಚಕ್ರಕ್ಕೆ ಸಿಲುಕಿ ಬಾಲಕಿ ಬಲಿ +ಕೊಲ್ಲಂ, ಮಾ 25 (ಪಿಟಿಐ) –ಇಲ್ಲಿಗೆ ಸಮೀಪದ ಪ್ರಸಿದ್ಧ ಕೊಟ್ಟನ್‍ಕುಲಂಗರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಐದು ವರ್ಷದ ಮಗವೊಂದು ರಥದ ಚಕ್ರಗಳ ಅಡಿಯಲ್ಲಿ ಸಿಕ್ಕಿ ಸಾವನ್ನಪ್ಪಿದೆ. ಭಕ್ತರು ಎಳೆಯುವ ವಿಧಿವತ್ತಾದ ರಥದ ದೊಡ್ಡ ಟೈರ್‍ಗಳ ಅಡಿಯಲ್ಲಿ ಆಕಸ್ಮಿಕವಾಗಿ ಬಿದ್ದು ಚವರ ನಿವಾಸಿ ದಂಪತಿಯ ಪುತ್ರಿ ಕ್ಷೇತ್ರ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. +ತಡರಾತ್ರಿ 11.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಆಕೆ ತನ್ನ ಪೋಷಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಥ ಎಳೆಯುತ್ತಿದ್ದ ಬಯಲಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಕೆಲವೊಮ್ಮೆ ಮಕ್ಕಳು ರಥಕ್ಕೆ ಕಟ್ಟಿದ ಹಗ್ಗವನ್ನು ಎಳೆಯುತ್ತಾರೆ ಕ್ಷೇತ್ರ ಆಕಸ್ಮಿಕವಾಗಿ ಬಿದ್ದಿದ್ದಾಳೆಂದು ತೋರುತ್ತದೆ ಎಂದು ಪೊಲೀಸರು ಹೇಳಿದರು. ಮಗುವನ್ನು ದ್ದಾಷಕರು ಮತ್ತು ಪೊಲೀಸರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಆದರೆ ಉಳಿಸಲು ಸಾಧ್ಯವಾಗಲಿಲ್ಲ. \ No newline at end of file diff --git a/eesanje/url_47_139_10.txt b/eesanje/url_47_139_10.txt new file mode 100644 index 0000000000000000000000000000000000000000..4176d1062d45ce408135a7a83e833908895b909b --- /dev/null +++ b/eesanje/url_47_139_10.txt @@ -0,0 +1,4 @@ +ಇಡಿ ಕಸ್ಟಡಿಯಿಂದಲೇ ಮೊದಲ ನಿರ್ದೇಶನ ನೀಡಿದ ಕೇಜ್ರಿವಾಲ್ +ನವದೆಹಲಿ,ಮಾ.24-ಇಡಿ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನಗರಾಡಳಿತ ಸಂಬಂಧ ತಮ್ಮ ಮೊದಲ ನಿರ್ದೇಶನ ನೀಡಿದ್ದಾರೆ ಎಂದು ಎಎಪಿ ಮೂಲಗಳು ಭಾನುವಾರ ತಿಳಿಸಿವೆ. +ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂವಿದ್ದ ಅಬಕಾರಿ ನೀತಿಯ ಆರೋಪದ ಮೇಲೆ ಕೇಜ್ರಿವಾಲ್ ಅವರನ್ನು ಅವರ ಅಧಿಕೃತ ನಿವಾಸದಿಂದ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ವು ಬಂಧಿಸಿತ್ತು. ನ್ಯಾಯಾಲಯವ ಶ್ರುಕವಾರ ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್‍ರನ್ನು ಮಾರ್ಚ್ 28ರವರೆಗೆ ಇಡಿ ವಶಕ್ಕೆ ಒಪ್ಪಿಸಿತು. +ಅವರು(ಕೇಜ್ರಿವಾಲ್) ಇಡಿ ಕಸ್ಟಡಿಯಿಂದಲೇ ತಮ್ಮ ಮೊದಲ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಜಲಸಂಪನ್ಮೂಲ ಇಲಾಖೆಗೆ ಸಂಬಂಸಿದಂತೆ ಈ ನಿರ್ದೇಶನ ನೀಡಲಾಗಿದೆ. ಜಲಸಂಪನ್ಮೂಲ ಸಚಿವೆ ಆತಿಶಿ ಅವರು ಮುಂದೆ ಈ ನಿರ್ದೇಶನಗಳನ್ನು ಪ್ರಕಟಿಸುತ್ತಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಕೇಜ್ರಿವಾಲ್ ಅವರನ್ನು ಜೈಲಿಗೆ ಕಳುಹಿಸಿದರೂ ಮುಖ್ಯಮಂತ್ರಿಯನ್ನಾಗಿಯೇ ಮುಂದುವರೆಸಲಾಗುವುದು ಎಂದು ಎಎಪಿ ಪ್ರತಿಪಾದಿಸಿದೆ. \ No newline at end of file diff --git a/eesanje/url_47_139_11.txt b/eesanje/url_47_139_11.txt new file mode 100644 index 0000000000000000000000000000000000000000..ef0dddfd45ee57fd7a3821ef7902778069d23929 --- /dev/null +++ b/eesanje/url_47_139_11.txt @@ -0,0 +1,5 @@ +ದೆಹಲಿಯಲ್ಲಿ 3 ಕೋಟಿ ರೂ. ನಗದು ಹೊಂದಿದ್ದ ನಾಲ್ವರ ಬಂಧನ +ನವದೆಹಲಿ,ಮಾ.24-ಸುಮಾರು 3 ಕೋಟಿ ರೂ. ನಗದು ಹೊಂದಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ನೈಋತ್ಯ ದೆಹಲಿಯ ಝರೇರಾ ಮೇಲ್ಸೇತುವೆ ಬಳಿ ನಡೆದಿದೆ. +ಬಂಧಿತ ನಾಲ್ವರು ನಗರದ ಶಹದಾರಾದ ನಿವಾಸಿಗಳು. ಇವರು 22 ಮತ್ತು 27 ರ ನಡುವಿನ ವಯಸ್ಸಿನವರಾಗಿದ್ದಾರೆ. ಹವಾಲಾ ಹಣ ಶಹದಾರಾದಲ್ಲಿನ ಸ್ಕ್ರ್ಯಾಪ್ ಡೀಲರ್‍ಗೆ ಸೇರಿದ್ದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಪ್ರಕರಣ ಸಂಬಂಧ ಬಂಧಿತರ ದ್ವಿಚಕ್ರವಾಹನಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಎರಡು ದೊಡ್ಡ ಕಪ್ಪು ಚೀಲಗಳನ್ನು ಹೊತ್ತ ನಾಲ್ವರಿದ್ದ ಎರಡು ಮೋಟಾರ್‍ಸೈಕಲ್‍ಗಳನ್ನು ತಂಡವು ಅಡ್ಡಗಟ್ಟಿತು. ತಂಡವು ಎರಡು ಬ್ಯಾಗ್‍ಗಳಲ್ಲಿ ಸುಮಾರು 3 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ. ಇದು ಹವಾಲಾ ಹಣ ಎಂಬುದು ನಮ್ಮ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸಿ, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು. \ No newline at end of file diff --git a/eesanje/url_47_139_12.txt b/eesanje/url_47_139_12.txt new file mode 100644 index 0000000000000000000000000000000000000000..09cb998bf439f2a6fc6171d81e075f4c9703bdd1 --- /dev/null +++ b/eesanje/url_47_139_12.txt @@ -0,0 +1,3 @@ +ಎಎಪಿ ಎಂಎಲ್ಎ ಗುಲಾಬ್ ಸಿಂಗ್ ಯಾದವ್ ಮನೆ ಮೇಲೆ ಐಟಿ ದಾಳಿ +ನವದೆಹಲಿ, ಮಾ 23 (ಪಿಟಿಐ) –ತೆರಿಗೆ ವಂಚನೆ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದೆಹಲಿಯಲ್ಲಿ ಎಎಪಿ ಶಾಸಕ ಗುಲಾಬ್ ಸಿಂಗ್ ಯಾದವ್ ಮತ್ತು ಇತರ ಕೆಲವರ ವಿರುದ್ಧ ಶೋಧ ನಡೆಸಿದ್ದಾರೆ.ಗುಲಾಬ್ಸಿಂಗ್ ಯಾದವ್ (45) ಅವರು ಎರಡು ಬಾರಿ ಶಾಸಕರಾಗಿದ್ದಾರೆ ಮತ್ತು ದೆಹಲಿ ವಿಧಾನಸಭೆಯಲ್ಲಿ ಮಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. +ತೆರಿಗೆ ವಂಚನೆ ತನಿಖೆಯ ಭಾಗವಾಗಿ ದೆಹಲಿಯ ಘುಮ್ಮನ್ಹೆಡಾ ಗ್ರಾಮದಲ್ಲಿರುವ ಎಎಪಿ ಶಾಸಕ ಮತ್ತು ಇತರ ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ತೆರಿಗೆ ಅಧಿಕಾರಿಗಳನ್ನು ದೆಹಲಿ ಪೊಲೀಸರು ಬೆಂಗಾವಲು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಕೆಲವು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_139_2.txt b/eesanje/url_47_139_2.txt new file mode 100644 index 0000000000000000000000000000000000000000..340731e2e51d013d8b0076531076f388bf27109e --- /dev/null +++ b/eesanje/url_47_139_2.txt @@ -0,0 +1,8 @@ +ಕಮಲ್ ಮೌಲಾ ಮಸೀದಿ ಸರಸ್ವತಿ ದೇವಸ್ಥಾನವಾಗಿತ್ತು : ಕೆ.ಕೆ.ಮುಹಮ್ಮದ್ +ಗ್ವಾಲಿಯರ್,ಮಾ.25 (ಪಿಟಿಐ)-ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಅಥವಾ ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಮೊದಲು ಸರಸ್ವತಿ ದೇವಸ್ಥಾನವಾಗಿತ್ತು ಮತ್ತು ನಂತರ ಅದನ್ನು ಇಸ್ಲಾಮಿಕ್ ಪೂಜಾ ಸ್ಥಳವಾಗಿ ಪರಿವರ್ತಿಸಲಾಗಿತ್ತು ಎಂದು ಖ್ಯಾತ ಪುರಾತತ್ವಶಾಸಜ್ಞ ಕೆ ಕೆ ಮುಹಮ್ಮದ್ ತಿಳಿಸಿದ್ದಾರೆ. +ಹಿಂದೂಗಳು ಮತ್ತು ಮುಸ್ಲಿಮರು ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು ಮತ್ತು ಪೂಜಾ ಸ್ಥಳಗಳ ಕಾಯಿದೆ 1991 ಅನ್ನು ಗೌರವಿಸಬೇಕು ಮತ್ತು ಅಂತಹ ಸ್ಥಳಗಳ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಒಟ್ಟಿಗೆ ಕುಳಿತುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಮಥುರಾ ಮತ್ತು ಕಾಶಿಯಲ್ಲಿ ಹಿಂದೂಗಳ ಭಾವನೆಗಳನ್ನು ಮುಸ್ಲಿಮರು ಗೌರವಿಸಬೇಕು ಎಂದು ಅವರು ಹೇಳಿದರು. +ಮಧ್ಯಪ್ರದೇಶ ಹೈಕೋರ್ಟ್‍ನ ನಿರ್ದೇಶನದ ನಂತರ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಸಮೀಕ್ಷೆಯನ್ನು ನಡೆಸುತ್ತಿದೆ.ಹಿಂದೂಗಳು ಇದು ವಾಗ್ದೇವಿ (ಸರಸ್ವತಿ) ದೇವಿಯ ದೇವಸ್ಥಾನ ಎಂದು ನಂಬುತ್ತಾರೆ ಮತ್ತು ಮುಸ್ಲಿಂ ಸಮುದಾಯವು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ. +ಧಾರ್ (ಭೋಜಶಾಲಾ) ಬಗ್ಗೆ ಐತಿಹಾಸಿಕ ಸತ್ಯವೆಂದರೆ ಅದು ಸರಸ್ವತಿ ದೇವಸ್ಥಾನವಾಗಿತ್ತು. ಇದನ್ನು ನಂತರ ಇಸ್ಲಾಮಿಕ್ ಮಸೀದಿಯಾಗಿ ಪರಿವರ್ತಿಸಲಾಯಿತು. ಇದು 1947 ರಲ್ಲಿ ದೇವಾಲಯವಾಗಿದ್ದರೆ ಅದು ದೇವಾಲಯ ಮತ್ತು ಅದು ಮಸೀದಿಯಾಗಿದ್ದರೆ ಅದು ಮಸೀದಿಯಾಗಲಿದೆ ಎಂದು ಮಾಜಿ ಎಎಸ್‍ಐ ಮುಹಮ್ಮದ್ ಹೇಳಿದರು. +ಮುಹಮ್ಮದ್ ಅವರು 1976-77ರಲ್ಲಿ ಅಯೋಧ್ಯೆಯಲ್ಲಿ ಪ್ರೊಫೆಸರ್ ಬಿ ಬಿ ಲಾಲ್ ನೇತೃತ್ವದ ಮೊದಲ ಉತ್ಖನನ ತಂಡದ ಭಾಗವಾಗಿದ್ದರು. ಪದ್ಮಶ್ರೀ ಪುರಸ್ಕøತರು ಈ ಹಿಂದೆ ಬಾಬರಿ ಮಸೀದಿಯ ಕೆಳಗಿರುವ ರಾಮ ಮಂದಿರದ ಅವಶೇಷಗಳನ್ನು ಮೊದಲು ನೋಡಿರುವುದಾಗಿ ಹೇಳಿಕೊಂಡಿದ್ದರು. +ಈ ಸಂಕೀರ್ಣವು ಸರಸ್ವತಿ ದೇವಸ್ಥಾನವಾಗಿತ್ತು ಎಂಬುದರಲ್ಲಿ ಸಂದೇಹವಿಲ್ಲ ಎಂದು ಮುಹಮ್ಮದ್ ಹೇಳಿದರು. ಎಲ್ಲರಿಗೂ ಸಮಸ್ಯೆಗಳನ್ನು ಸೃಷ್ಟಿಸುವ ಯಾವುದನ್ನೂ ಮಾಡಬೇಡಿ ಎಂದು ಅವರು ಎರಡೂ ಕಡೆಯವರಿಗೆ ಸಲಹೆ ನೀಡಿದರು.ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಮುಹಮ್ಮದ್ , ಮಥುರಾ ಮತ್ತು ಕಾಶಿ ಹಿಂದೂಗಳಿಗೆ ಎಷ್ಟು ಮುಖ್ಯವೋ ಹಾಗೆಯೇ ಮುಸ್ಲಿಮರಿಗೆ ಮೆಕ್ಕಾ ಮತ್ತು ಮದೀನವೂ ಅಷ್ಟೇ ಮುಖ್ಯ. +ಮುಸ್ಲಿಮರು ಹಿಂದೂಗಳ ಭಾವನೆಗಳನ್ನು ಅರ್ಥಮಾಡಿಕೊಳ್ಳಬೇಕು. ಕಾಶಿಯು ಭಗವಾನ್ ಶಿವನೊಂದಿಗೆ ಸಂಬಂಧ ಹೊಂದಿದೆ ಮತ್ತು ಮಥುರಾ ಭಗವಾನ್ ಕೃಷ್ಣನ ಜನ್ಮಸ್ಥಳವಾಗಿದೆ. ಹಿಂದೂಗಳು ಅವರನ್ನು ಇತರ ಸ್ಥಳಗಳಿಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಆದರೆ ಇದು ಮುಸ್ಲಿಮರಿಗೆ ಮಾತ್ರ ಮಸೀದಿಗಳು, ಇದು ಪ್ರವಾದಿ ಮೊಹಮ್ಮದ್ ಅಥವಾ ಔಲಿಯಾಗಳೊಂದಿಗೆ ನೇರವಾಗಿ ಸಂಬಂಧ ಹೊಂದಿಲ್ಲ. ಅವುಗಳನ್ನು (ಮಸೀದಿಗಳನ್ನು) ಬೇರೆಡೆಗೆ ಸ್ಥಳಾಂತರಿಸಬಹುದು, ಎಂದು ಅವರು ಹೇಳಿದರು. \ No newline at end of file diff --git a/eesanje/url_47_139_3.txt b/eesanje/url_47_139_3.txt new file mode 100644 index 0000000000000000000000000000000000000000..5fa4d82c511464b96d99aa41fb67c576295fcead --- /dev/null +++ b/eesanje/url_47_139_3.txt @@ -0,0 +1,4 @@ +ಅಸ್ಸಾಂನಲ್ಲಿ “ಕೈ”ಬಿಟ್ಟ ಮತ್ತೊಬ್ಬ ಶಾಸಕ +ಗುವಾಹಟಿ, ಮಾ 25 (ಪಿಟಿಐ) :ಅಸ್ಸಾಂನ ಲಖಿಂಪುರ ಜಿಲ್ಲೆಯ ನೌಬೋಚಾದ ಶಾಸಕ ಭರತ್ ಚಂದ್ರ ನರಹ್ ಅವರು ಇಂದು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಉದಯ್ ಶಂಕರ್ ಹಜಾರಿಕಾ ಅವರನ್ನು ಲಖಿಂಪುರ ಲೋಕಸಭಾ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ ಎರಡು ದಿನಗಳ ನಂತರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. +ನರಹ್ ಅವರು ತಮ್ಮ ಪತ್ನಿ ರಾನೀ ನರಹ್ ಅವರನ್ನು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಭರವಸೆ ಹೊಂದಿದ್ದರು. ಅವರು ಪಿಟಿಐ ಜೊತೆ ಹಂಚಿಕೊಂಡ ಒಂದು ಸಾಲಿನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ. +ತಕ್ಷಣದಿಂದ ಜಾರಿಗೆ ಬರುವಂತೆ ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ಗೆ ರಾಜೀನಾಮೆ ನೀಡುತ್ತೇನೆ ಎಂದು ಶಾಸಕರು ಪತ್ರದಲ್ಲಿ ತಿಳಿಸಿದ್ದಾರೆ. ನಿನ್ನೆ ಅಸ್ಸಾಂ ಕಾಂಗ್ರೆಸ್‍ನ ಮಾಧ್ಯಮ ಘಟಕದ ಅಧ್ಯಕ್ಷ ಸ್ಥಾನಕ್ಕೂ ಅವರು ರಾಜೀನಾಮೆ ನೀಡಿದ್ದರು. \ No newline at end of file diff --git a/eesanje/url_47_139_4.txt b/eesanje/url_47_139_4.txt new file mode 100644 index 0000000000000000000000000000000000000000..ee0bc8b2720bbaffe426206fd7659af593c4f2e2 --- /dev/null +++ b/eesanje/url_47_139_4.txt @@ -0,0 +1,5 @@ +ಇವನು ಸಾಮಾನ್ಯ ಕಳ್ಳನಲ್ಲ, ‘ಫೈವ್ ಸ್ಟಾರ್’ ಕಳ್ಳ..! +ಭುವನೇಶ್ವರ, ಮಾ.25 –ಹಗಲು ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡಿ ರಾತ್ರಿ ಪಂಚತಾರಾ ಹೋಟೆಲ್‍ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದ ಖತರ್‍ನಾಕ್ ಕಳ್ಳನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹಲವಾರು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಪರಶುರಾಮ ಗಿರಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಥಾಪಿಸಿದ್ದ ಚೆಕ್‍ ಪೋಸ್ಟ್ ನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸ್ ಕಮಿಷನರ್ ಸಂಜೀಬ್ ಪಾಂಡಾ ತಿಳಿಸಿದ್ದಾರೆ. +ಕಳೆದ ಒಂದು ವರ್ಷದಲ್ಲಿ ನಗರದಲ್ಲಿ ನಡೆದಿರುವ ಕನಿಷ್ಠ 21 ಕಳ್ಳತನ ಪ್ರಕರಣಗಳಲ್ಲಿ ಪರಶುರಾಮ ಗಿರಿ ಬೇಕಾಗಿದ್ದ,ಸಾಮಾನ್ಯವಾಗಿ ನಗರದಲ್ಲಿ ಬೀಗ ಹಾಕಿರುವ ವಸತಿ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ಕಿಟಕಿಗಳನ್ನು ಒಡೆದು ಒಳನುಗ್ಗಿ ನಗದು ಮತ್ತು ಚಿನ್ನಾಭರಣ ದೋಚುತ್ತಿದ್ದ ಆತ ಏಕಾಂಗಿಯಾಗಿ ಕಳ್ಳತನ ಮಾಡುತ್ತಿದ್ದ ಎಂದು ಹೇಳಿದ್ದಾರೆ. +ಆತನಿಂದ 21 ಲಕ್ಷ ರೂಪಾಯಿ ನಗದು, ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಎರಡು ಅತ್ಯಾಧುನಿಕ ಮೋಟಾರ್ ಸೈಕಲ್‍ಗಳು ಮತ್ತು ರಾಜ್ಯ ರಾಜಧಾನಿಯ ಐದು ಫ್ಲಾಟ್‍ಗಳ ದಾಖಲೆಗಳು ಸೇರಿವೆ. +ಈ ಕೆಲವು ಫ್ಲಾಟ್‍ಗಳನ್ನು ಅತ ಬಾಡಿಗೆಗೆ ನೀಡಿದ್ದಾರೆ. ಬಾಲಸೋರ್ ಜಿಲ್ಲೆಯ ಸೊರೊದಲ್ಲಿ ತಮ್ಮ ಸ್ಥಳೀಯರಿನಲ್ಲಿ ಬಂಗಲೆ ಸಹ ನಿರ್ಮಿಸುತ್ತಿದ್ದಾರೆ ಎಂದು ತನಿಖೆ ವೇಳೆ ತಿಳಿದುಂದಿದೆ.ಕದ್ದ ವಸ್ತುಗಳನ್ನು ಮಾರಿ ಅದ್ದೂರಿ ಜೀವನಶೈಲಿಯನ್ನು ನಿರ್ವಹಿಸುತ್ತಿದ್ದರು ಮತ್ತು ವಿವಿಧ ಮಹಾನಗರಗಳಲ್ಲಿನ ಪಂಚತಾರಾ ಹೋಟೆಲ್‍ಗಳಲ್ಲಿ ತಂಗುವುದು ಆತನ ಖಯಾಲಿಯಾಗಿತು, ಬಾರ್, ಪಬ್ ಗಳಲ್ಲೂ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. diff --git a/eesanje/url_47_139_5.txt b/eesanje/url_47_139_5.txt new file mode 100644 index 0000000000000000000000000000000000000000..3ac06bc7daac37fb0d9f274b9e7fa3d14fa2e855 --- /dev/null +++ b/eesanje/url_47_139_5.txt @@ -0,0 +1,4 @@ +ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಆರತಿ ವೇಳೆ ಬೆಂಕಿ ತಗುಲಿ 13 ಮಂದಿ ಅರ್ಚಕರಿಗೆ ಗಾಯ +ಉಜ್ಜಯಿನಿ, ಮಾ 25- ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಭಸ್ಮ ಆರತಿ ವೇಳೆ ಸಂಭವಿಸಿದ ಬೆಂಕಿಯಲ್ಲಿ 13 ಮಂದಿ ಅರ್ಚಕರು ಗಾಯಗೊಂಡಿದ್ದಾರೆ. +ದೇವಾಲಯದ ಗರ್ಭಗೃಹ ದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಕಲೆಕ್ಟರ್ ನೀರಜ್ ಕುಮಾರ್ ಸಿಂಗ್ ಹೇಳಿದ್ದಾರೆ. ಹದಿಮೂರು ಪುರೋಹಿತರಿಗೆ ಸುಟ್ಟ ಗಾಯಗಳಾಗಿದ್ದು, ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಂಗ್ ಸೇರಿಸಲಾಗಿದೆ. +ಹೋಳಿ ಹಬ್ಬದ ಅಂಗವಾಗಿ ಧಾರ್ಮಿಕ ಸಮಾರಂಭದ ನಡೆಯುತ್ತಿತ್ತು ಈ ಸಮಯದಲ್ಲಿ ಬಳಸುವ ಬಣ್ಣದ ಪುಡಿ ಎಸೆಯುವ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. \ No newline at end of file diff --git a/eesanje/url_47_139_6.txt b/eesanje/url_47_139_6.txt new file mode 100644 index 0000000000000000000000000000000000000000..2e6339e7fe81c3756b561caa96f12070e2157b70 --- /dev/null +++ b/eesanje/url_47_139_6.txt @@ -0,0 +1,5 @@ +ನಾಲ್ವರು ಮಕ್ಕಳನ್ನು ಬಲಿ ಪಡೆದ ಮೊಬೈಲ್ ಚಾರ್ಜರ್..! +ಮೀರುತ್ (ಉತ್ತರಪ್ರದೇಶ), ಮಾ.24-ಮೊಬೈಲ್ ಚಾರ್ಜರ್‍ನಿಂದ ಕಾಣಿಸಿಕೊಂಡ ಬೆಂಕಿ ಮನೆಗೆ ವ್ಯಾಪಿಸಿಕೊಂಡು ನಾಲ್ವರು ಸಹೋದರರು ಸಾವನ್ನಪ್ಪಿ , ಪೋಷಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಪಲ್ಲವಪುರ ಪ್ರದೇಶದಲ್ಲಿ ಸಂಭವಿಸಿದೆ. +ಕಳೆದ ತಡರಾತ್ರಿ ಪಲ್ಲವಪುರದ ಜನತಾ ಕಾಲೋನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೊಬೈಲ್ ಚಾರ್ಜರ್‍ನಿಂದ ಕಾಣಿಸಿಕೊಂಡ ಬೆಂಕಿ ಮನೆಯೆಲ್ಲಾ ವ್ಯಾಪಿಸಿದ ಪರಿಣಾಮ ಈ ದುರಂತ ಸಂಭವಿಸಿದೆ.ದುರ್ಘಟನೆಯಲ್ಲಿ ಮೃತಪಟ್ಟವರನ್ನು ಸಾರಿಕಾ (10), ನಿಹಾರಿಕಾ (8), ಶಾಶಂಕರ್ (6), ಕಲು (6) ಮೃತಪಟ್ಟಿದ್ದು , ಪೋಷಕರಾದ ಜಾನ್ (41) ಹಾಗೂ ಬಾಬಿತಾ (37) ಗಂಭೀರವಾಗಿ ಗಾಯ ಗೊಂಡಿದ್ದಾರೆ. +ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಪೋಷಕರು ಹಾಗೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ನಾಲ್ವರು ಮಕ್ಕಳು ಮೃತಪಟ್ಟರೆ, ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೊಬೈಲ್ ಫೋನ್ ಚಾರ್ಜರ್‍ನಿಂದ ಕಾಣಿಸಿಕೊಂಡ ಬೆಂಕಿ ಹಾಸಿಗೆ ಮತ್ತು ಬೆಡ್‍ಶಿಟ್‍ಗೂ ವ್ಯಾಪಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ಚಿಕಿತ್ಸೆ ಪಡೆಯುತ್ತಿರುವ ಜಾನ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪಲ್ಲಮಪುರ ಠಾಣೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.ನಾಲ್ವರು ಮಕ್ಕಳನ್ನು ಕಳೆದುಕೊಂಡ ಪೋಷಕರು ಹಾಗೂ ಸಂಬಂಕರ ಆಕ್ರಂದನ ಮುಗಿಲು ಮುಟ್ಟಿದೆ. \ No newline at end of file diff --git a/eesanje/url_47_139_7.txt b/eesanje/url_47_139_7.txt new file mode 100644 index 0000000000000000000000000000000000000000..3c4d5252cb21e98bd032c74a4c9570cce57539a6 --- /dev/null +++ b/eesanje/url_47_139_7.txt @@ -0,0 +1,3 @@ +ಬಿಜೆಪಿ ಸೇರಿದ ಭಾರತೀಯ ವಾಯುಪಡೆ ಮಾಜಿ ಮುಖ್ಯಸ್ಥ ಬದೌರಿಯಾ +ನವದೆಹಲಿ, ಮಾ.24- ಭಾರತೀಯ ವಾಯುಪಡೆಯ(ಐಎಎಫ್) ಮಾಜಿ ಮುಖ್ಯಸ್ಥ ಆರ್‍ಕೆಎಸ್ ಬದೌರಿಯಾ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು. ಭಾರತೀಯ ವಾಯುಪಡೆಯಲ್ಲಿ ಭದೌರಿಯಾ ಅವರ ಸುದೀರ್ಘ ಸೇವೆಯನ್ನು ಶ್ಲಾಘಿಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು, ರಕ್ಷಣಾ ಪಡೆಗಳಲ್ಲಿ ಸಕ್ರಿಯ ಪಾತ್ರವಹಿಸಿದ ನಂತರ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೊಡುಗೆ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಭದೌರಿಯಾ ಅವರು ಐಎಎಫ್‍ನಲ್ಲಿ ಸುಮಾರು 40 ವರ್ಷಗಳನ್ನು ಕಳೆದಿದ್ದಾರೆ ಮತ್ತು ಪ್ರಧಾನಿ ನರೇಂದ್ರಮೋದಿಯವರ ಆತ್ಮನಿರ್ಭರ್ ಭಾರತ್ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ಭದೌರಿಯಾ ಉತ್ತರ ಪ್ರದೇಶದವರು. ಲೋಕಸಭೆ ಚುನಾವಣೆಗೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಹೆಸರಿಸಿಲ್ಲ. \ No newline at end of file diff --git a/eesanje/url_47_139_8.txt b/eesanje/url_47_139_8.txt new file mode 100644 index 0000000000000000000000000000000000000000..e99a6f754962ccf3668da586972a7e805d09aeff --- /dev/null +++ b/eesanje/url_47_139_8.txt @@ -0,0 +1,4 @@ +ಡೇಟಾ ನಾಶ, ಫೋನ್ ಕದ್ದಾಲಿಕೆ ಆರೋಪದಲ್ಲಿ ಮತ್ತಿಬ್ಬರು ತೆಲಂಗಾಣ ಪೊಲೀಸರ ಬಂಧನ +ಹೈದರಾಬಾದ್, ಮಾ 24 (ಪಿಟಿಐ) -:ಫೋನ್ ಟ್ಯಾಪಿಂಗ್ ಮತ್ತು ಕೆಲವು ಕಂಪ್ಯೂಟರ್ ಸಿಸ್ಟಮ್‍ಗಳು ಮತ್ತು ಅಧಿಕೃತ ಡೇಟಾವನ್ನು ನಾಶಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. +ತನಿಖೆಯ ಸಂದರ್ಭದಲ್ಲಿ, ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಎನ್ ಭುಜಂಗ ರಾವ್ ಅವರನ್ನು ಬಂಸಲಾಗಿದೆ ಎಂದು ಹೈದರಾಬಾದ್ ಪೊಲೀಸರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳು ಈ ಹಿಂದೆ ಕ್ರಮವಾಗಿ ವಿಶೇಷ ಇಂಟೆಲಿಜೆನ್ಸ್ ಬ್ಯೂರೋ (ಎಸ್‍ಐಬಿ) ಮತ್ತು ಗುಪ್ತಚರ ಇಲಾಖೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕೆಲಸ ಮಾಡಿದ್ದರು. +ಹಿಂದಿನ ಬಿಆರ್‍ಎಸ್ ಆಡಳಿತದ ಅವಯಲ್ಲಿ ವಿವಿಧ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳಿಂದ ಗುಪ್ತಚರ ಮಾಹಿತಿಯನ್ನು ಅಳಿಸಿಹಾಕಿದ ಆರೋಪದಲ್ಲಿ ಹಾಗೂ ಆಪಾದಿತ ಫೋನ್ ಟ್ಯಾಪಿಂಗ್ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಈ ಹಿಂದೆ ಬಂಸಲ್ಪಟ್ಟಿದ್ದ ಎಸ್‍ಐಬಿಯ ಅಮಾನತುಗೊಂಡ ಡಿಎಸ್‍ಪಿ ಡಿ ಪ್ರಣೀತ್ ರಾವ್ ಅವರೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. \ No newline at end of file diff --git a/eesanje/url_47_139_9.txt b/eesanje/url_47_139_9.txt new file mode 100644 index 0000000000000000000000000000000000000000..6a9b650565e699c2c8be64be7b3f840755a0ff66 --- /dev/null +++ b/eesanje/url_47_139_9.txt @@ -0,0 +1,5 @@ +ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..? +ಲಖ್ನೋ,ಮಾ.24-ಸ್ವಪಕ್ಷೀಯರ ವಿರುದ್ಧವೇ ಆಗಾಗ್ಗೆ ಗುಡುಗುತ್ತಿದ್ದ ಗಾಂಧಿ ಕುಟುಂಬದ ಕುಡಿ ಹಾಗೂ ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ ಪುತ್ರ ವರುಣ್ ಗಾಂಧಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಉತ್ತರಪ್ರದೇಶದ ಫಿಲಿಬಿಟ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ವರುಣ್ ಗಾಂಧಿ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಘೋಷಣೆ ಮಾಡಿರುವ ಪಟ್ಟಿಯಲ್ಲಿ ಅವರ ಹೆಸರನ್ನು ಬಿಡುಗಡೆ ಮಾಡಿಲ್ಲ. +ಮೂಲಗಳ ಪ್ರಕಾರ ಈ ಬಾರಿ ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳು ಕ್ಷೀಣಿಸಿದ್ದು ಹೊಸ ಮುಖಕ್ಕೆ ಈ ಕ್ಷೇತ್ರದಿಂದ ಟಿಕೆಟ್ ನೀಡಲು ಪಕ್ಷ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. +ಇನ್ನೊಂದು ಮೂಲಗಳ ಪ್ರಕಾರ ವರುಣ್ ಗಾಂಧಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು ಇದೇ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದ ವರುಣ್ ಗಾಂಧಿ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು. ನಂತರ ಅವರು ಸರ್ಕಾರದ ಕೆಲವು ತೀರ್ಮಾನಗಳ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಸೃಷ್ಟಿಸುತ್ತಿದ್ದರು. +ಕಾಂಗ್ರೆಸ್ ಸೇರಲು ಒಂದು ಹೆಜ್ಜೆ ಮುಂದಿಟ್ಟಿರುವ ವರುಣ್ ಗಾಂಧಿಗೆ ಫಿಲಿಪಿಟ್ ಕ್ಷೇತ್ರದಿಂದ ಟಿಕೆಟ್ ನೀಡದೆ ಸ್ಥಳೀಯ ಅಭ್ಯರ್ಥಿಗೆ ಮಣೆ ಹಾಕಲು ಬಿಜೆಪಿ ಮುಂದಾಗಿದೆ. ಈ ಹಿಂದೆ ವರುಣ್ ಗಾಂಧಿ ಅವರ ತಾಯಿ ಮನೇಕಾ ಗಾಂಧಿ ಬಿಜೆಪಿಯಿಂದ ಗೆದ್ದು 2014ರಲ್ಲಿ ಕೇಂದ್ರದ ಸಚಿವರಾಗಿದ್ದರು. ಆ ನಂತರ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. \ No newline at end of file diff --git a/eesanje/url_47_13_1.txt b/eesanje/url_47_13_1.txt new file mode 100644 index 0000000000000000000000000000000000000000..948d436c2023e795b4a4067da149f732c9f3c7a8 --- /dev/null +++ b/eesanje/url_47_13_1.txt @@ -0,0 +1,6 @@ +ರಾಗಿಯಲ್ಲಿ ಮೂಡಿದ ಮೋದಿ ಚಿತ್ರ, ದಾಖಲೆ ಬರೆದ 13ರ ಬಾಲಕಿ +13-- 800 +ಚೆನ್ನೈ,ಸೆ.16-ಹದಿಮೂರು ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ 800 ಕೆಜಿ ತೂಕದ ರಾಗಿಯನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು 12 ಗಂಟೆಗಳ ಕಾಲ ಬಿಡುವಿಲ್ಲದಂತೆ ಚಿತ್ರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾನೆ.ಪ್ರೀಸ್ಲಿ ಶೆಕಿನಾ ಅವರು ನಾಳಿನ ಅವರ ಜನದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸುವ ವಿಶ್ವದ ಅತಿದೊಡ್ಡ ರಾಗಿ ಪೇಂಟಿಂಗ್‌ ಅನ್ನು ಅನಾವರಣಗೊಳಿಸಿದರು. +ಪ್ರೀಸ್ಲಿ ಶೆಕಿನಾ ಚೆನ್ನೈನ ಕೋಲ್ಪಾಕ್ಕಂ ಪ್ರದೇಶದಲ್ಲಿ ವಾಸಿಸುತ್ತಿರುವ ಪ್ರತಾಪ್‌ ಸೆಲ್ವಂ ಮತ್ತು ಸಂಕೀರಾಣಿ ಅವರ ಮಗಳು. ಪ್ರೀಸ್ಲಿ ಶೆಕಿನಾ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದಾಳೆ. +ಶೇಕಿನಾ ಅವರು 800 ಕೆಜಿ ರಾಗಿಯನ್ನು ಬಳಸಿ 600 ಚದರ ಅಡಿಗಳಲ್ಲಿ ಪ್ರಧಾನಿ ಮೋದಿಯವರ ಬಹತ್‌ ಭಾವಚಿತ್ರವನ್ನು ಚಿತ್ರಿಸಿದ್ದಾರೆ. 12 ಗಂಟೆಗಳ ಕಠಿಣ ಪರಿಶ್ರಮದ ನಂತರ ಅವಳು ತನ್ನ ಪ್ರಯತ್ನವನ್ನು ಪೂರ್ಣಗೊಳಿಸಿದಳು. 13 ವರ್ಷ ವಯಸ್ಸಿನವರು ಬೆಳಿಗ್ಗೆ 8.30 ಕ್ಕೆ ಪ್ರಾರಂಭಿಸಿ ರಾತ್ರಿ 8.30 ಕ್ಕೆ ಪೂರ್ಣಗೊಳಿಸಿದರು. +ಪ್ರೀಸ್ಲಿಯು ಯೂಎನ್‌ಐಸಿ ವರ್ಲ್ಡ್‌ ರೆಕಾರ್ಡ್‌ನಿಂದ ಗುರುತಿಸಲ್ಪಟ್ಟಿದ್ದಾರೆ ಮತ್ತು ಇದನ್ನು ವಿದ್ಯಾರ್ಥಿ ಸಾಧನೆ ವಿಭಾಗದ ಅಡಿಯಲ್ಲಿ ನೋಂದಾಯಿಸಲಾಗಿದೆ. ಯೂಎನ್‌ಐಸಿ ವಿಶ್ವ ದಾಖಲೆಗಳ ನಿರ್ದೇಶಕ ಆರ್‌ ಶಿವರಾಮನ್‌ ಅವರು ಪ್ರೀಸ್ಲಿ ಶೆಕಿನಾ ಅವರಿಗೆ ವಿಶ್ವ ದಾಖಲೆ ಪ್ರಮಾಣಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು.ಬಾಲಕಿಯ ಸಾಧನೆಗೆ ಶಾಲೆಯ ಆಡಳಿತಾಧಿಕಾರಿ, ಪ್ರಾಂಶುಪಾಲರು, ಪೋಷಕರು, ಸಂಬಂಧಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_13_10.txt b/eesanje/url_47_13_10.txt new file mode 100644 index 0000000000000000000000000000000000000000..da1c38ec55dae041aeec7df90d2690e201eee5b3 --- /dev/null +++ b/eesanje/url_47_13_10.txt @@ -0,0 +1,5 @@ +ಯುವತಿ ಮೇಲೆ ಅತ್ಯಾಚಾರವೆಸಗಿದ ಟಿಎಂಸಿ ನಾಯಕ + +ಕೋಲ್ಕತ್ತಾ,ಸೆ.15-ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ತಣಮೂಲ ಕಾಂಗ್ರೆಸ್‌‍ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. +ಟ್ರೇಡ್‌ ಯೂನಿಯನ್‌ ನಾಯಕರಾಗಿರುವ ಆರೋಪಿ ನಾರಾಯಣ ಮಿತ್ರನನ್ನು ಯುವತಿ ಕುಟುಂಬ ನೀಡಿರುವ ದೂರಿನ ಮೇರೆಗೆ ಬಂಧಿಸಲಾಗಿದೆ, ಮಿತ್ರ ಅವರು ಬಂಕೂರಿನ ತನ್ನ ಮನೆಯಲ್ಲಿ 2-3 ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. +ಎಫ್‌ಐಆರ್‌ ದಾಖಲಾಗಿದ್ದು, ಮಿತ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ, ತಣಮೂಲ ಕಾಂಗ್ರೆಸ್‌‍ ನಾಯಕನನ್ನು ಟ್ರೇಡ್‌ ಯೂನಿಯನ್‌ನಿಂದ ಅಮಾನತುಗೊಳಿಸಲಾಗಿದೆ. \ No newline at end of file diff --git a/eesanje/url_47_13_11.txt b/eesanje/url_47_13_11.txt new file mode 100644 index 0000000000000000000000000000000000000000..b70f243d9319004d9c33aea5c9167107dfebdd8e --- /dev/null +++ b/eesanje/url_47_13_11.txt @@ -0,0 +1,6 @@ +ಮೂರು ಅಂತಸ್ತಿನ ಮನೆ ಕುಸಿದು 10 ಮಂದಿ ಸಾವು +10 ' , +ಮೀರತ್‌, ಸೆ 15 (ಪಿಟಿಐ)ಇಲ್ಲಿನ ಝಾಕಿರ್‌ ನಗರದಲ್ಲಿ ಮೂರು ಅಂತಸ್ತಿನ ಮನೆಯೊಂದು ಕುಸಿದು ಬಿದ್ದ ಪರಿಣಾಮ ಹತ್ತು ಮಂದಿ ಮೃತಪಟ್ಟಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಇನ್ನೂ ನಡೆಯುತ್ತಿದೆ ಮೀರತ್‌ ಜಿಲ್ಲಾಡಳಿತ ತಿಳಿಸಿದೆ.ಘಟನಾ ಸ್ಥಳದಲ್ಲಿಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎಂದು ಆಡಳಿತವು ಹೇಳಿಕೆಯಲ್ಲಿ ತಿಳಿಸಿದೆ. +ಮತರನ್ನು ಸಾಜಿದ್‌ (40), ಅವರ ಮಗಳು ಸಾನಿಯಾ (15), ಮಗ ಸಾಕಿಬ್‌ (11), ಸಿವ್ರಾ (ಒಂದೂವರೆ ವರ್ಷ), ರೀಜಾ (7), ನಫೊ (63), ಫರ್ಹಾನಾ (20), ಅಲಿಸಾ ಎಂದು ಗುರುತಿಸಲಾಗಿದೆ. ಅಲಿಯಾ (6) ಮತ್ತು ರಿವ್ಸಾ (5 ತಿಂಗಳು).ಸೋಫಿಯಾನ್‌ (6) ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. +ಗಾಯಗೊಂಡವರಲ್ಲಿ ನಯೀಮ್‌ (22), ನದೀಮ್‌ (26), ಸಾಕಿಬ್‌ (20) ಮತ್ತು ಸೈನಾ (38) ಲಾಲಾ ಲಜಪತ್‌ ರಾಯ್‌ ಸಾರಕ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. +ಮೀರತ್‌ ವಲಯದ ಹೆಚ್ಚುವರಿ ಪೊಲೀಸ್‌‍ ಮಹಾನಿರ್ದೇಶಕ ಡಿ ಕೆ ಠಾಕೂರ್‌, ವಿಭಾಗೀಯ ಕಮಿಷನರ್‌ ಸೆಲ್ವ ಕುಮಾರಿ ಜೆ, ಪೊಲೀಸ್‌‍ ಮಹಾನಿರೀಕ್ಷಕ ನಚಿಕೇತ ಝಾ ಮತ್ತು ಹಿರಿಯ ಪೊಲೀಸ್‌‍ ವರಿಷ್ಠಾಧಿಕಾರಿ ವಿಪಿನ್‌ ತಾಡಾ ಸೇರಿದಂತೆ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ತಲುಪಿದ್ದಾರೆ. ಎನ್‌ಡಿಆರ್‌ಎಫ್‌, ಅಗ್ನಿಶಾಮಕ ದಳ ಮತ್ತು ಪೊಲೀಸ್‌‍ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. \ No newline at end of file diff --git a/eesanje/url_47_13_12.txt b/eesanje/url_47_13_12.txt new file mode 100644 index 0000000000000000000000000000000000000000..46cc56eeed6320fada3ebf9e6fe7823f447f8472 --- /dev/null +++ b/eesanje/url_47_13_12.txt @@ -0,0 +1,6 @@ +ಕೋಹ್ಲಿ ನನ್ನ ನಾಯಕತ್ವದಲ್ಲಿ ಕ್ರಿಕೆಟ್‌ ಆಡಿದ್ದರು ; ತೇಜಸ್ವಿ ಯಾದವ್‌ +‘ …’: +ಪಾಟ್ನಾ,ಸೆ.15-ವಿರಾಟ್‌ ಕೋಹ್ಲಿ ಅವರು ನನ್ನ ನಾಯಕತ್ವದಲ್ಲಿ ಕ್ರಿಕೆಟ್‌ ಆಡಿದ್ದರು ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್‌ ಹೇಳಿದ್ದಾರೆ. +ಕೋಹ್ಲಿ ಅವರಲ್ಲದೆ ಅನೇಕ ಕ್ರಿಕೆಟಿಗರು ನನ್ನ ನಾಯಕತ್ವದಲ್ಲಿ ಕ್ರಿಕೆಟ್‌ ಆಡಿದ್ದಾರೆ ಆದರೆ, ನಾನು ಕ್ರೀಡೆಯಲ್ಲಿ ಯಶಸ್ವಿಯಾಗಲಿಲ್ಲ ಎಂದು ಅವರು ತಿಳಿಸಿದ್ದಾರೆ. ನಾನು ಕ್ರಿಕೆಟಿಗನಾಗ್ದೆಿ ಮತ್ತು ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. +ವಿರಾಟ್‌ ಕೊಹ್ಲಿ ನನ್ನ ನಾಯಕತ್ವದಲ್ಲಿ ಆಡಿದ್ದಾರೆ – ಯಾರಾದರೂ ಅದರ ಬಗ್ಗೆ ಮಾತನಾಡಿದ್ದಾರೆಯೇ? ಅವರು ಏಕೆ ಹಾಗೆ ಮಾಡುವುದಿಲ್ಲ? ವತ್ತಿಪರನಾಗಿ ನಾನು ಉತ್ತಮ ಕ್ರಿಕೆಟ್‌ ಆಡಿದ್ದೇನೆ. ಅನೇಕ ಟೀಂ ಇಂಡಿಯಾ ಆಟಗಾರರು ನನ್ನ ಬ್ಯಾಚ್‌ಮೇಟ್‌ಗಳು ಎಂದು ಅವರು ಮಾಧ್ಯಮಕ್ಕ ನೀಡಿರುವ ಸಂದರ್ಶನದಲ್ಲಿತಿಳಿಸಿದ್ದಾರೆ. +ನನ್ನ ಎರಡೂ ಅಸ್ಥಿರಜ್ಜುಗಳು ಮುರಿತಗೊಂಡಿದ್ದರಿಂದ ನಾನು ಕ್ರಿಕೆಟ್‌ ತ್ಯಜಿಸಬೇಕಾಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.ತೇಜಸ್ವಿ ಅವರು ತಮ ವತ್ತಿಜೀವನದಲ್ಲಿ ಒಟ್ಟು 1 ಪ್ರಥಮ ದರ್ಜೆ, 2 ಲಿಸ್ಟ್‌ ಎ ಮತ್ತು 4 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ದೇಶೀಯ ಸ್ಪೆಕ್ಟ್ರಮ್‌ನಲ್ಲಿ ಜಾರ್ಖಂಡ್‌ ಅನ್ನು ಪ್ರತಿನಿಧಿಸಿದರು, ನವೆಂಬರ್‌ 2009 ರಲ್ಲಿ ವಿದರ್ಭ ವಿರುದ್ಧ ಪ್ರಥಮ ದರ್ಜೆಗೆ ಪಾದಾರ್ಪಣೆ ಮಾಡಿದರು. \ No newline at end of file diff --git a/eesanje/url_47_13_2.txt b/eesanje/url_47_13_2.txt new file mode 100644 index 0000000000000000000000000000000000000000..dccc8cff7e87fba25b2804c0b9ca69d6feab5131 --- /dev/null +++ b/eesanje/url_47_13_2.txt @@ -0,0 +1,9 @@ +ವಾಮಾಚಾರ ಮಾಡುತ್ತಿದ್ದಾರೆಂಬ ಶಂಕೆಯಿಂದ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಗ್ರಾಮಸ್ಥರು +5 , 3 , ‘’ ; 5 +ಛತ್ತೀಸ್‌‍ಗಢ,ಸೆ.16-ವಾಮಾಚಾರ ನಡೆಸುತ್ತಾರೆಂಬ ಗುಮಾನಿ ಮೇರೆಗೆ ಗ್ರಾಮಸ್ಥರು ಮನೆಗೆ ನುಗ್ಗಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿರುವ ಘಟನೆ ಸುಕಾ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್‌ ಕಾನ್‌ಸ್ಟೆಬಲ್‌ ಕೂಡ ಸೇರಿದ್ದಾರೆ. +ಮೃತರನ್ನು ಮೌಸಂ ಕನ್ನಾ, ಮೌಸಂ ಬುಚ್ಚಾ, ಮೌಸಂ ಬಿರಿ, ಕರ್ಕ ಲಚ್ಚಿ ಮತ್ತು ಮೌಸಂ ಅರ್ಜೋ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದವರನ್ನು ಅದೇ ಗ್ರಾಮದ ಸವ್ಲಾಮ್‌ ರಾಜೇಶ್‌ (21), ಸವ್ಲಾಮ್‌ ಹಿದಾ, ಕರಮ್‌ ಸತ್ಯಂ (35), ಕುಂಜಮ್‌ ಮುಖೇಶ್‌ (28) ಮತ್ತು ಪೊಡಿಯಮ್‌ ಎಂಕಾ ಎಂಬ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. +ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ ಹಾನಿಯನ್ನುಂಟು ಮಾಡುತ್ತಿದೆ ಎಂದು ಗ್ರಾಮದ ಸುಮಾರು 15 ಮಂದಿಯ ತಂಡ ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದಾದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದಾಗ ಮನೆಯವರು ವಾಮಾಚಾರ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರೆಲ್ಲರೂ ಆರೋಪಿಸಿದ್ದಾರೆ. +ಇದರಿಂದ ಹಳ್ಳಿಯ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳು ಮತ್ತು ಜನರಿಗೆ ವೈಯಕ್ತಿಕ ಹಾನಿ ಉಂಟಾಗುತ್ತದೆ ಎಂದು ಅವರು ನಂಬಿದ್ದರು. ಸುಕಾ ಪೊಲೀಸ್‌‍ ವರಿಷ್ಠಾಧಿಕಾರಿ (ಎಸ್‌‍ಪಿ) ಕಿರಣ್‌ ಜಿ.ಚವಾಣ್‌ ತಿಳಿಸಿದ್ದಾರೆ. +ಮಾಟಮಂತ್ರ ಅಥವಾ ವಾಮಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಕುಟುಂಬದ ವಿರುದ್ಧ ಈ ಹಿಂದೆ ಯಾವುದಾದರೂ ವಿವಾದವಿದೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಮಾಟಮಂತ್ರದ ಶಂಕೆಯಲ್ಲಿ ಹತ್ಯೆಗೈದ ಮತ್ತೊಂದು ಘಟನೆ ಸೆಪ್ಟೆಂಬರ್‌ 13 ರಂದು ಛತ್ತೀಸ್‌‍ಗಢದ ಬಲೋಡಾ ಬಜಾರ್‌ ಜಿಲ್ಲೆಯಲ್ಲಿ ನಡೆದಿತ್ತು. ಅಂಬೆಗಾಲಿಡುವ ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಕುಟುಂಬದ ವ್ಯಕ್ತಿಯೋರ್ವ ಮಾಟಮಂತ್ರ ಮಾಡುತ್ತಿದ್ದಾನೆ ಎಂಬ ಶಂಕೆಯಿಂದ ಕೊಂದು ಹಾಕಲಾಗಿತ್ತು. \ No newline at end of file diff --git a/eesanje/url_47_13_3.txt b/eesanje/url_47_13_3.txt new file mode 100644 index 0000000000000000000000000000000000000000..b035f5c90a4a45b9f8368249c81ace25e7426278 --- /dev/null +++ b/eesanje/url_47_13_3.txt @@ -0,0 +1,5 @@ +ರಸ್ತೆ ಬದಿ ಕುಳಿತ್ತಿದ್ದವರ ಮೇಲೆ ಪಿಕಪ್‌ ಟ್ರಕ್‌ ಹರಿದು ನಾಲ್ವರ ಸಾವು +: 4 , 5 +ಸಂಭಾಲ್‌ (ಯುಪಿ), ಸೆ 16 (ಪಿಟಿಐ)ಇಂದು ಬೆಳಗ್ಗೆ ಇಲ್ಲಿ ವೇಗವಾಗಿ ಬಂದ ಪಿಕಪ್‌ ಟ್ರಕ್‌ ರಸ್ತೆ ಬದಿ ಕುಳಿತ್ತಿದ್ದವರ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದ್ದು, ವಾಹನದ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಭೋಪತ್‌ಪುರ ಗ್ರಾಮದ ಕೆಲವರು ರಸ್ತೆ ಬದಿ ಕುಳಿತಿದ್ದಾಗ ಗಾವಾದಿಂದ ಎದುರಿಗೆ ಬರುತ್ತಿದ್ದ ವಾಹನವೊಂದು ಅವರಿಗೆ ಅತಿವೇಗದಲ್ಲಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌‍ ವರಿಷ್ಠಾಧಿಕಾರಿ ಕ್ರಿಶನ್‌ ಕುಮಾರ್‌ ತಿಳಿಸಿದ್ದಾರೆ. +ಮತರನ್ನು ಲೀಲಾಧರ್‌ (60), ಧರಮಲ್‌ (40), ಓಂಪಾಲ್‌ (32), ಮತ್ತು ಪುರಾನ್‌ ಸಿಂಗ್‌ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ರಾಜಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಅಲಿಗಢಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_13_4.txt b/eesanje/url_47_13_4.txt new file mode 100644 index 0000000000000000000000000000000000000000..d0c065f6827df9f93da1adf3f13caf09d1599197 --- /dev/null +++ b/eesanje/url_47_13_4.txt @@ -0,0 +1,7 @@ +ಚಂಡೀಗಢ ಗ್ರೆನೇಡ್ ಸ್ಫೋಟ : 2ನೇ ಆರೋಪಿ ಬಂಧನ + +ಚಂಡೀಗಢ, ಸೆ 15-ನಗರದಲ್ಲಿ ಸಂಭವಿಸಿದ ಗ್ರೆನೇಡ್ ಸ್ಫೋಟ ಘಟನೆಯಲ್ಲಿ ಭಾಗಿಯಾಗಿದ್ದ ಎರಡನೇ ಶಂಕಿತ ಆರೋಪಿಯನ್ನು ಬಂಧಿಸಿರುವುದಾಗಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಗುರುದಾಸ್ಪುರದ ಬಟಾಲಾದ ರೈಮಲ್ ಗ್ರಾಮದ ನಿವಾಸಿ ವಿಶಾಲ್ ಮಸಿಹ್ ಅವರನ್ನು ದೆಹಲಿಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. +ಕಳೆದ ಸೆ.11ರಂದು ಇಲ್ಲಿನ ಚಂಡೀಗಢ ಸೆಕ್ಟರ್ 10ರ ಮನೆಯೊಂದ ಬಳಿ ಆಟೋ ರಿಕ್ಷಾದಲ್ಲಿ ಬಂದು ಇಬ್ಬರು ಶಂಕಿತರು ಗ್ರೆನೇಡ್ ಸ್ಫೋಟ ನಡೆಸಿದ್ದರು ಇದು ಭಾರಿ ಆತಂಕ ಮೂಡಿಸಿತ್ತು. +ಸ್ಫೋಟದ ಘಟನೆಯಲ್ಲಿ ಭಾಗಿಯಾಗಿರುವ ಪ್ರಮುಖ ಅಪರಾಧಿ ರೋಹನ್ ಮಸಿಹ್ ನನ್ನು ಪೊಲೀಸರು ಈಗಾಗಲೆ ಬಂಧಿಸಿದ್ದಾರೆ.ಘಟನೆ ನಡೆದ 72 ಗಂಟೆಗಳ ಒಳಗೆ ಕೇಂದ್ರೀಯ ಏಜೆನ್ಸಿಗಳ ಸಮನ್ವಯದೊಂದಿಗೆ ಸ್ಫೋಟದ ಎರಡನೇ ಅಪರಾಧಿಯನ್ನು ಬಂಧಿಸಿದೆ ಎಂದು ಯಾದವ್ ಎಕ್್ಸನಲ್ಲಿ ಪೋಸ್ಟ್ ಮಾಡಿದ್ದಾರೆ.ಸ್ಪೋಟದ ಕುರಿತ್ತು ನಡೆದಿದ್ದ ಪಿತೂರಿಯನ್ನು ಬಹಿರಂಗಪಡಿಸಲು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. +ಚಂಡೀಗಢ ಗ್ರೆನೇಡ್ ಸ್ಫೋಟದ ಮಾಸ್ಟರ್ ಮೈಂಡ್ ಅನ್ನು ಪಾಕ್ ಮೂಲದ ಭಯೋತ್ಪಾದಕ ಹರ್ವಿಂದರ್ ಸಿಂಗ್ ರಿಂದಾ, ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು ಯುಎಸ್ ಮೂಲದ ದರೋಡೆಕೋರ ಹರ್ಪ್ರೀತ್ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾ ಎಂದು ಪೊಲೀಸರು ಹೇಳಿದ್ದಾರೆ.. +ತನ್ನ ಸಹಚರರ ಮೂಲಕ ಹ್ಯಾಂಡ್ ಗ್ರೆನೇಡ್ ಮತ್ತು ಶಸ್ತ್ರಾಸ್ತ್ರಗಳನ್ನು ಒದಗಿಸಿದ ಪಾಸಿಯಾ ಅವರ ಆಜ್ಞೆಯ ಮೇರೆಗೆ ರೋಹನ್ ಗ್ರೆನೇಡ್ ಸ್ಫೋಟದಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_13_5.txt b/eesanje/url_47_13_5.txt new file mode 100644 index 0000000000000000000000000000000000000000..4ce06525f11d2fb60c15e4a21563d1a69c7a88b5 --- /dev/null +++ b/eesanje/url_47_13_5.txt @@ -0,0 +1,9 @@ +ನಾಗಮಂಗಲ ಗಲಭೆ ಹಿಂದೆ ನಿಷೇಧಿತ ಪಿಎಫ್ಐ..? + +ನವದೆಹಲಿ,ಸೆ.15-ಕರ್ನಾಟಕದ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಸಮುದಾಯಗಳ ನಡುವೆ ನಡೆದ ಕೋಮುಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ) ಕೈಗೆತ್ತಿಕೊಳ್ಳಲು ಮುಂದಾಗಿದೆ. ಏಕೆಂದರೆ ನಾಗಮಂಗಲ ಪೊಲೀಸರ್ ಎಫ್ಐಆರ್ನಲ್ಲಿ ದಾಖಲಿಸಿರುವ 76 ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ನಿಷೇಧಿತ ಪಾಪುಲರ್ ಫ್ರಂಟ್ ಆಫ್ ಇಂಡಿಯ(ಪಿಎಫ್ಐ) ಸಂಘಟನೆಗೆ ಸೇರಿದವರೆಂಬುದು ಬೆಳಕಿಗೆ ಬಂದಿದೆ. +ಕೇರಳ ರಾಜ್ಯದ ಮಲ್ಲಾಪುರಂ ನಿವಾಸಿಗಳಾದ 44ನೇ ಆರೋಪಿ ಯುಸೋಫ್ ಮತ್ತು 61ನೇ ಆರೋಪಿ ನಾಸೀರ್ ಇಬ್ಬರು ಈ ಹಿಂದೆ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಕೇರಳ ಸೇರಿದಂತೆ ದೇಶದ ಬೇರೆ ಬೇರೆ ಮಾರ್ಗಗಳಲ್ಲಿ ನಡೆದ ಕೋಮುಗಲಭೆಯಲ್ಲಿ ಈ ಇಬ್ಬರು ಭಾಗಿಯಾಗಿರುವ ಶಂಕೆಯಿದ್ದು, ಇದೀಗ ನಾಗಮಂಗಲ ಪೊಲೀಸರು ದಾಖಲಿಸಿರುವ ಎಫ್ಐಆರ್ನಲ್ಲಿ ಈ ಇಬ್ಬರು ಹೆಸರುಗಳು ಇರುವುದರಿಂದ ಎನ್ಐಎ ತನಿಖೆ ನಡೆಸುವ ಸಾಧ್ಯತೆ ಇದೆ. +ಇದೊಂದು ಪೂರ್ವನಿಯೋಜಿತ ಕೃತ್ಯ ಎಂದು ಬಿಜೆಪಿ ಮತ್ತು ಜೆಡಿಎಸ್ನ ಅನೇಕ ನಾಯಕರುಗಳು ಆರೋಪಿಸಿದ್ದರು. ಘಟನೆ ಆಕಸಿಕ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರಾದರೂ ಮೇಲ್ನೋಟಕ್ಕೆ ವ್ಯವಸ್ಥಿತ ಸಂಚು ಎಂಬ ಅನುಮಾನ ವ್ಯಕ್ತವಾಗಿದೆ. +ನಾಗಮಂಗಲ ಪಟ್ಟಣದ ಮಸೀದಿ ಬಳಿ ಗಲಭೆಗೆ ಬಳಸಿರುವ ಪೆಟ್ರೋಲ್ ಬಾಂಬ್, ತಲವಾರ್, ಗಲಾಟೆ ನಡೆದ ದಿನ ಮೆಡಿಕಲ್ ಶಾಪ್ನಲ್ಲಿ 200 ಮಾಸ್ಕ್ಗಳನ್ನು ಖರೀದಿ ಮಾಡಿರುವುದು ಪೂರ್ವ ನಿಯೋಜಿತ ಕೃತ್ಯಕ್ಕೆ ಸಾಕ್ಷಿಯಾಗಿವೆ. ದುಷ್ಕೃತ್ಯಕ್ಕೆ ಬಳಸಿರುವ ಕೆಲವು ಮಾರಕಾಸ್ತ್ರಗಳು ಕೇರಳದ ಮಲ್ಲಪುರಂನಿಂದ ಬಂದಿದ್ದವು ಎಂಬ ಶಂಕೆ ವ್ಯಕ್ತವಾಗಿದೆ. +ಈ ಹಿಂದೆ ಶಿವಮೊಗ್ಗದ ರಾಗಿಗುಡ್ಡದ ಬಳಿ ಟಿಪ್ಪು ಜಯಂತಿ ಆಚರಣೆ ವೇಳೆಯು ನಿಷೇಧಿತ ಪಿಎಫ್ಐ ಸಂಘಟನೆಯವರೇ ಗಲಭೆ ಎಬ್ಬಿಸಿದ್ದರೆಂಬುದು ತನಿಖೆಯಿಂದ ಗೊತ್ತಾಗಿತ್ತು. ಶಾಂತಿಪ್ರಿಯವಾಗಿದ್ದ ನಾಗಮಂಗಲದಲ್ಲಿ ಏಕಾಏಕಿ ಇಷ್ಟು ದೊಡ್ಡ ಮಟ್ಟದ ಕೋಮುಗಲಭೆ ನಡೆಯಲು ಹಲವು ದಿನಗಳಿಂದ ವ್ಯವಸ್ಥಿತವಾದ ಪಿತೂರಿಯನ್ನು ನಡೆಸಿರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಎನ್ಐಎ ಮೂಲಗಳು ತಿಳಿಸಿವೆ. +ಎಫ್ಐಆರ್ನಲ್ಲಿ ದಾಖಲಾಗಿರುವ ಯುಸೋಫ್ ಮತ್ತು ನಾಸೀರ್ನನ್ನು ಶೀಘ್ರದಲ್ಲೇ ಎನ್ಐಎ ವಶಕ್ಕೆ ಪಡೆಯಲಿದ್ದು, ಅಧಿಕೃತವಾಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಕಳೆದ ಸೆ.2ರಂದು ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕಾಗಿ ಎರಡು ಸಮುದಾಯಗಳ ನಡುವೆ ಗಲಭೆ ನಡೆದಿತ್ತು. ಘಟನೆಯಲ್ಲಿ ಎರಡು ಸಮುದಾಯಗಳಿಗೆ ಸೇರಿದ ಅಂಗಡಿಗಳು ಹಾಗೂ ದ್ವಿಚಕ್ರ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು. +ಈ ಪ್ರಕರಣ ಅಡಳಿತರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಇದೊಂದು ಸಣ್ಣ ಆಕಸಿಕ ಘಟನೆ ಎಂದು ಸರ್ಕಾರ ಹೇಳಿದೆ. ಆದರೆ ವ್ಯವಸ್ಥಿತ ಪೂರ್ವ ನಿಯೋಜಿತ ಕೃತ್ಯ ಎಂದು ಪ್ರತಿಪಕ್ಷಗಳ ಆರೋಪವಾಗಿದೆ.ಘಟನೆ ಸಂಬಂಧ ಪೊಲೀಸರು ಈಗಾಗಲೇ 54 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ನಾಗಮಂಗಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಮಾನತುಗೊಂಡ ಬೆನ್ನಲೇ ಗುಪ್ತಚರ ವಿಭಾಗದ ಎಡಿಜಿಪಿ ಶರತ್ಶ್ಚಂದ್ರ ಅವರನ್ನು ವರ್ಗಾವಣೆ ಮಾಡಿತ್ತು. \ No newline at end of file diff --git a/eesanje/url_47_13_6.txt b/eesanje/url_47_13_6.txt new file mode 100644 index 0000000000000000000000000000000000000000..247e630186a3ea38cdcafcbc779c6e1854e6fdaf --- /dev/null +++ b/eesanje/url_47_13_6.txt @@ -0,0 +1,7 @@ + : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್‌ ಘೋಷಣೆ + ' 2 +ನವದೆಹಲಿ,ಸೆ.15-ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿರುವುದರಿಂದ ದೆಹಲಿಯ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ಕೆರಳಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಕೂಡ ಮುಂದಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಸ್ವತಃ ಕ್ರೇಜಿವಾಲ್‌ ಸ್ಪಷ್ಟಪಡಿಸಿದ್ದಾರೆ. +ಹಾಗಾದರೆ ರಾಷ್ಟ್ರ ರಾಜಧಾನಿಯ ಮುಂದಿನ ಮುಖ್ಯಮಂತ್ರಿ ಸ್ಥಾನ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.ನಾವು ವಿಧಾನಸಭೆಯನ್ನು ವಿಸರ್ಜಿಸುವುದಿಲ್ಲ, ಕೇಂದ್ರ ಸರ್ಕಾರ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ಜೊತೆಯಲ್ಲಿ ದೆಹಲಿಗೂ ಚುನಾವಣೆ ನಡೆಸಲಿ ಎಂದು ಹೇಳಿದ್ದಾರೆ. +ಇದೀಗ ಕೇಜ್ರಿವಾಲ್‌ ರಾಜೀನಾಮೆ ನೀಡಿದರೆ ಅವರ ಸ್ಥಾನಕ್ಕೆ ಕಲ್ಕಾಜಿ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಶಿಕ್ಷಣ, ಲೋಕೋಪಯೋಗಿ, ಇಂಧನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿರುವ ಅತಿಶಿ ಸಿಂಗ್‌ ಹೆಸರು ಮುಂಚೂಣಿಯಲ್ಲಿದೆ.ಕ್ರೇಜಿವಾಲ್‌ ಮತ್ತು ಮನೀಶ್‌ ಸಿಸೋಡಿಯ ಬಂಧನಕ್ಕೊಳಪಟ್ಟ ಮೇಲೆ ಅಸ್ಥಿರತೆಯಿಂದ ಕೂಡಿದ್ದ ದೆಹಲಿ ಸರ್ಕಾರವನ್ನು ಅತ್ಯಂತ ಚಾಣಾಕ್ಷತದಿಂದ ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. +ಶಿಕ್ಷಣ ಸಚಿವರಾಗಿ ದೆಹಲಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳನ್ನು ಖಾಸಗಿಯವರು ನಾಚಿಸುವಂತೆ ಉನ್ನತೀಕರಿಸಿದ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.ವಿದೇಶದಲ್ಲಿ ಉತ್ತಮ ಶಿಕ್ಷಣ ಪಡೆದುಕೊಂಡಿರುವ ಅವರ ಮೇಲೆ ಯಾವುದೇ ರೀತಿಯ ಭ್ರಷ್ಟಾಚಾರದ ಆರೋಪಗಳಿಲ್ಲ. ಯಾವುದೇ ವಿಷಯದಲ್ಲೂ ಅತ್ಯಂತ ಎದೆಗಾರಿಕೆಯಿಂದ ಮಾತನಾಡುವ ಕೌಶಲ್ಯ ಹೊಂದಿದ್ದಾರೆ. +ಪ್ರಧಾನಿ ನರೇಂದ್ರಮೋದಿ ಮತ್ತು ಕೇಂದ್ರ ಸರ್ಕಾರವನ್ನು ಅತ್ಯಂತ ಕಠಿಣ ಪದಗಳಲ್ಲಿ ಟೀಕಿಸುತ್ತಿದ್ದ ಕೆಲವೇ ಕೆಲವು ಪ್ರಮುಖರಲ್ಲಿ ಇವರು ಕೂಡ ಒಬ್ಬರು. ಸಹಜವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಸಿಂಗ್‌ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ. \ No newline at end of file diff --git a/eesanje/url_47_13_7.txt b/eesanje/url_47_13_7.txt new file mode 100644 index 0000000000000000000000000000000000000000..d48d78b56aff60135794936fa11c021f0268ea6d --- /dev/null +++ b/eesanje/url_47_13_7.txt @@ -0,0 +1,11 @@ +ಏಕಕಾಲಕ್ಕೆ ಆರು ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ + ' +ನವದೆಹಲಿ,ಸೆ.15-ದೇಶಾದ್ಯಂತ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರು ಇಂದು ಏಕಕಾಲಕ್ಕೆ ಆರು ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲುಗಳಿಗೆ ನೀಡಿದರು. ಈ ರೈಲುಗಳು ಟಾಟಾನಗರ-ಪಾಟ್ನಾ, ಭಾಗಲ್ಪುರ್‌-ದುಮ್ಕಾ-ಹೌರಾ, ಬ್ರಹಪುರ-ಟಾಟಾನಗರ, ಗಯಾ-ಹೌರಾ, ದಿಯೋಘರ್‌-ವಾರಾಣಸಿ ಮತ್ತು ರೂರ್ಕೆಲಾ-ಹೌರಾ ಮಾರ್ಗದಲ್ಲಿ ಸಂಚರಿಸಲಿವೆ. +ಹೊಸ ಮಾರ್ಗದಲ್ಲಿ ಪರಿಚಯಿಸಲಾಗಿರುವ ವಂದೇ ಭಾರತ್‌ ಎಕ್ಸ್ಪ್ರೆಸ್‌‍ ರೈಲುಗಳು ಸಾಮಾನ್ಯ ಪ್ರಯಾಣಿಕರು, ವೃತ್ತಿಪರರು, ವ್ಯಾಪಾರ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ಅನುಕೂಲ ಒದಗಿಸಲಿವೆ. ಈ ರೈಲುಗಳು ದಿಯೋಘರ್‌ (ಜಾರ್ಖಂಡ್‌ನ ಬೈದ್ಯನಾಥ ಧಾಮ), ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನ (ಉತ್ತರ ಪ್ರದೇಶ), ಕಾಳಿಘಾಟ್‌, ಕೋಲ್ಕತ್ತಾದ ಬೇಲೂರು ಮಠ (ಪಶ್ಚಿಮ ಬಂಗಾಳ) ಮತ್ತಿತರ ಯಾತ್ರಾ ಸ್ಥಳಗಳಿಗೆ ಪ್ರಯಾಣ ಮಾಡುವ ಭಕ್ತರಿಗೆ ಅನುಕೂಲವಾಗಿದೆ ಎಂದು ರೈಲ್ವೆ ಇಲಾಖೆ ಹೇಳಿದೆ. +ಈ ಪ್ರದೇಶಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಸಹಾಯಕವಾಗಲಿದೆ. ಧನ್ಬಾದ್ನ ಕಲ್ಲಿದ್ದಲು ಗಣಿ ಉದ್ಯಮಗಳು, ಕೋಲ್ಕತ್ತಾದ ಸೆಣಬು ಕೈಗಾರಿಕೆಗಳು, ದುರ್ಗಾಪುರದಲ್ಲಿ ಕಬ್ಬಿಣ ಮತ್ತು ಉಕ್ಕಿನ ಸಂಬಂಧಿತ ಕೈಗಾರಿಕೆಗಳಿಗೆ ಸಹ ವಂದೇ ಭಾರತ್‌ ರೈಲು ಸಂಪರ್ಕದಿಂದ ಅನುಕೂಲವಾಗುವ ನಿರೀಕ್ಷೆ ಇದೆ. +ಹುಬ್ಬಳ್ಳಿ-ಪುಣೆ ರೈಲಿಗೆ ಚಾಲನೆ: ಸುಮಾರು 8,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 30 ಮೆಗಾವ್ಯಾಟ್‌ ಸೋಲಾರ್‌ ಸಿಸ್ಟಮ್‌ ಉದ್ಘಾಟಿಸಿದ್ದಾರೆ. +ಮೋದಿ ಭುಜ್‌-ಅಹಮದಾಬಾದ್‌ ಮಾರ್ಗದ ಭಾರತದ ಮೊದಲ ವಂದೇ ಮೆಟ್ರೋ ಸೇರಿದಂತೆ ಹಲವಾರು ವಂದೇ ಭಾರತ್‌ ರೈಲುಗಳ ಸಂಚಾರಕ್ಕೆ ಹಸಿರುನಿಶಾನೆ ತೋರಲಿದ್ದಾರೆ. ಇವುಗಳಲ್ಲಿ ನಾಗ್ಪುರ-ಸಿಕಂದರಾಬಾದ್‌, ಕೊಲ್ಹಾಪುರ-ಪುಣೆ, ಆಗ್ರಾ ಕ್ಯಾಂಟ್‌- ಬನಾರಸ್‌‍, ದುರ್ಗ್‌-ವಿಶಾಖಪಟ್ಟಣಂ ಮತ್ತು ಪುಣೆ-ಹುಬ್ಬಳ್ಳಿ ಮತ್ತು ವಾರಣಾಸಿ-ದೆಹಲಿಗೆ 20 ಕೋಚ್‌ಗಳಿರುವ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. +ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿ ಮತ್ತು ಮಹರಾಷ್ಟ್ರದ ಪುಣೆ ನಡುವೆ ವಂದೇ ಭಾರತ್‌ ರೈಲುಗಳ ಸಂಚಾರ ಆರಂಭವಾಗಲಿದೆ. ಈ ಮೂಲಕ ಹುಬ್ಬಳ್ಳಿ ನಗರಕ್ಕೆ 2ನೇ ವಂದೇ ಭಾರತ್‌ ರೈಲು ಸಿಕ್ಕಿದೆ. ಈಗಾಗಲೇ ಕೆಎಸ್‌‍ಆರ್‌ ಬೆಂಗಳೂರು-ಧಾರವಾಡ ರೈಲು ವಯಾ ಹುಬ್ಬಳ್ಳಿ ಸಂಚಾರವನ್ನು ನಡೆಸುತ್ತಿದೆ. +ವರ್ಧಿತ ಸಂಪರ್ಕಕ್ಕಾಗಿ ಹೊಸ ರೈಲು ಸೇವೆಗಳನ್ನು ಸೇರಿಸುವುದರೊಂದಿಗೆ ವಂದೇ ಭಾರತ್‌ ಪೋರ್ಟ್‌ ಫೋಲಿಯೊ ನಿರಂತರವಾಗಿ ವಿಸ್ತರಿಸುತ್ತಿದೆ.ಮೇಕ್‌ ಇನ್‌ ಇಂಡಿಯಾ ಉಪಕ್ರಮದಡಿ ಸ್ಥಳೀಯವಾಗಿ ವಿನ್ಯಾಸಗೊಳಿಸಲಾಗಿದೆ, ಇದು ಲಕ್ಷಾಂತರ ಪ್ರಯಾಣಿಕರಿಗೆ ಐಷಾರಾಮಿ ಮತ್ತು ದಕ್ಷತೆಯನ್ನು ತಲುಪಿಸುವ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ನೀಡುತ್ತದೆ ಎಂದು ಅದು ಸೇರಿಸಿದೆ. +ವಂದೇ ಭಾರತ್‌ ಭಾರತದ ಮೊದಲ ಸ್ವದೇಶಿ ವಿನ್ಯಾಸ ಮತ್ತು ತಯಾರಿಸಿದ ಅರೆ-ಹೈ-ವೇಗದ ರೈಲು. ಮೊದಲ ವಂದೇ ಭಾರತ್‌ ರೈಲನ್ನು ಫೆಬ್ರವರಿ 15, 2019ರಂದು ಉದ್ಘಾಟಿಸಲಾಗಿತ್ತು. ರೈಲ್ವೇಯ ಪ್ರಕಾರ, ಇದುವರೆಗೆ ದೇಶಾದ್ಯಂತ 54 ವಂದೇ ಭಾರತ್‌ ರೈಲುಗಳು ಓಡುತ್ತಿವೆ. ಅವರು ಒಟ್ಟು ಸುಮಾರು 36,000 ಟ್ರಿಪ್‌ಗಳನ್ನು ಪೂರ್ಣಗೊಳಿಸಿದ್ದಾರೆ ಮತ್ತು 3.17 ಕೋಟಿ ಪ್ರಯಾಣಿಕರನ್ನು ಪ್ರಯಾಣಿಸಿದ್ದಾರೆ. +ಮೂಲ ವಂದೇ ಭಾರತ್‌ ರೈಲು ಸೆಟ್‌ ಈಗ ವಂದೇ ಭಾರತ್‌ 2.0 ಆಗಿ ವಿಸ್ತರಿಸಿದೆ, ವೇಗದ ವೇಗವರ್ಧನೆ, ಕವಚ್‌, ಆಂಟಿ-ವೈರಸ್‌‍ ಸಿಸ್ಟಮ್‌ ಮತ್ತು ವೈಫೈ ಮುಂತಾದ ಇನ್ನಷ್ಟು ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ.ಭಾರತದ ರೈಲು ಜಾಲವು ವಿಸ್ತರಿಸುತ್ತಲೇ ಇರುವುದರಿಂದ, ಪ್ರಯಾಣಿಕರು ರಾಷ್ಟ್ರದ ವೈವಿಧ್ಯಮಯ ಅಗತ್ಯಗಳನ್ನು ಪೂರೈಸುವ ತಡೆರಹಿತ, ಆರಾಮದಾಯಕ ಮತ್ತು ಪರಿಣಾಮಕಾರಿ ಪ್ರಯಾಣದ ಭವಿಷ್ಯವನ್ನು ಎದುರು ನೋಡಬಹುದು. \ No newline at end of file diff --git a/eesanje/url_47_13_8.txt b/eesanje/url_47_13_8.txt new file mode 100644 index 0000000000000000000000000000000000000000..58cf125faa8fa62cdc710667b4fcaf729a310cb3 --- /dev/null +++ b/eesanje/url_47_13_8.txt @@ -0,0 +1,9 @@ +2025ರ ಜೂನ್‌ 30ರೊಳಗೆ ಪೂರ್ಣವಾಗಲಿದೆ ರಾಮಮಂದಿರ ಕಾಮಗಾರಿ + 2025 +ಅಯೋಧ್ಯೆ,ಸೆ.15-ರಾಮ ಮಂದಿರದ ಸಂಪೂರ್ಣ ಕಾಮಗಾರಿ 2025ರ ಜೂನ್‌ 30ರೊಳಗೆ ಪೂರ್ಣಗೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನ್ರಿಪೆಂದ್ರ ಮಿಶ್ರಾ ತಿಳಿಸಿದ್ದಾರೆ. +ರಾಮ ಮಂದಿರ ನಿರ್ಮಾಣ ಸಮಿತಿಯಿಂದ ನಡೆದ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ದೇಗುಲದ ಶಿಖರ ನಿರ್ಮಾಣಕ್ಕೆ 120 ದಿನಗಳ ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಡಿಸೆಂಬರ್‌ ಒಳಗೆ ದೇಗುಲದ ಶಿಖರ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆಯಾದರೂ ಇದು ಪೂರ್ಣಗೊಳ್ಳುವುದಿಲ್ಲ. 2025ರ ಫೆಬ್ರವರಿಯೊಳಗೆ ದೇಗುಲದ ಸಂಪೂರ್ಣವಾಗಿ ನಿರ್ಮಾಣಗೊಳ್ಳಲಿದೆ. ದೇಗುಲದೊಳಗೆ ನಿರ್ಮಾಣವಾಗುವ ಸಪ್ತ ಮಂದಿರದ ಮೂರ್ತಿಗಳನ್ನು ಜೈಪುರದಲ್ಲಿ ತಯಾರಿಸಲಾಗುತ್ತಿದೆ ಎಂದರು. +ಋಷಿ-ಸಂತರ ಮೂರ್ತಿಗಳ ನಿರ್ಮಾಣ:ಈ ಸಪ್ತ ಮಂದಿರದೊಳಗೆ ಋಷಿ ಮತ್ತು ಸಂತರ ಮೂರ್ತಿಗಳನ್ನು ನಿರ್ಮಾಣ ಮಾಡಲಾಗುವುದು. ಈ ಕೆಲಸವೂ 2024ರ ಡಿಸೆಂಬರ್‌ನೊಳಗೆ ಪೂರ್ಣ ಮಾಡಲಾಗುವುದು. ಉಳಿದ ರಾಮ ಮಂದಿರದ ಕೆಲಸಗಳು 2025, ಜೂನ್‌ 20ರೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. +ಶ್ರೀ ರಾಮ್‌ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸದಸ್ಯ ಅನಿಲ್‌ ಮಿಶ್ರಾ ಮಾತನಾಡಿ, ದೇಗುಲದ ಮೇಲಿನ ಮಹಡಿ ನಿರ್ಮಾಣ ಮಾಡಲು ಬೇಕಾದ ಶಿಲೆ, ಕಲ್ಲು ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಾರ್ಮಿಕರ ವ್ಯವಸ್ಥೆಗಾಗಿ ಟ್ರಸ್ಟ್‌ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. +ಬಿಳಿ ಮಾರ್ಬಲ್‌ನಲ್ಲಿ ಗರ್ಭಗುಡಿ:ಮೊದಲ ಮಹಡಿಯು ಇನ್ನೇನು ಮುಗಿಯುವ ಹಂತ ತಲುಪಿದ್ದು, ನೆಲ ಸಮತಟ್ಟು (ಫ್ರೋರಿಂಗ್‌) ಕಾರ್ಯ ನಡೆಯುತ್ತಿದೆ. ಎರಡನೇ ಮಹಡಿ ಅಭಿವೃದ್ಧಿಯು ಕೂಡ ವೇಗವಾಗಿ ಸಾಗುತ್ತಿದ್ದು, ಯಾವುದೆ ಕಲೆ ಇರದ ಬಿಳಿ ಬಣ್ಣ ಮಾರ್ಬಲ್‌ ಕಲ್ಲಿನಲ್ಲಿ ಗರ್ಭಗುಡಿ ನಿರ್ಮಾಣ ಮಾಡಲಾಗುವುದು. 1,600 ಕಾರ್ಮಿಕರು ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅವಿರತವಾಗಿ ಬದ್ದರಾಗಿದ್ದಾರೆ. ನಿಗದಿತ ಸಮಯದೊಳಗೆ ದೇಗುಲ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಟ್ರಸ್ಟ್‌ನ ಸದಸ್ಯರು ತಿಳಿಸಿದ್ದಾರೆ. +ಜಿಎಂಆರ್‌ ಗ್ರೂಪ್‌ನಿಂದ ಕಟ್ಟಡದ ಅಲಂಕಾರ:ಜೊತೆಗೆ ಸಪ್ತ ಮಂಟಪದ ದೇಗುಲದ ಕಾರ್ಯ ಕೂಡ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಜಿಎಂಆರ್‌ ಗ್ರೂಪ್‌, ರಾಮ ಜನಭೂಮಿ ಕಟ್ಟಡದ ಅಲಂಕಾರವನ್ನು ನಿರ್ವಹಿಸಲಿದೆ. ವರದಿ ಪ್ರಕಾರ ದೇಗುಲದಲ್ಲಿ ಹಸಿರು ಗಿಡಗಳ ಹೊದಿಕೆಯನ್ನು ನಿರ್ವಹಿಸುವ ಚಿಂತನೆ ಇದೆ ಎಂದು ನೃಪೇಂದ್ರ ಮಿಶ್ರಾ ತಿಳಿಸಿದರು. +ವಿಭಿನ್ನ ಲೈಟಿಂಗ್‌ ಪ್ರಯೋಗ:ದೇಗುಲದಲ್ಲಿ ಬರುವ ಭಕ್ತರಲ್ಲಿ ಭಕ್ತಿಭಾವ ಹೆಚ್ಚಿಸುವ ರೀತಿಯಲ್ಲಿ ಲೈಂಟಿಂಗ್‌ ವ್ಯವಸ್ಥೆ ಮಾಡಲಾಗುತ್ತಿದ್ದು, ಈ ಸಂಬಂಧ ಅನೇಕ ಬಾರಿ ಪ್ರಯೋಗಗಳನ್ನು ನಡೆಸಲಾಗಿದೆ. ಶೀಘ್ರದಲ್ಲೇ ಈ ಸಂಬಂಧ ಟೆಂಡರ್‌ ಬಿಡುಗಡೆ ಮಾಡಲಾಗುವುದು. ಭಾರತ ಮತ್ತು ವಿದೇಶದ ದೊಡ್ಡ ಕಂಪನಿಗಳಿಗೆ ಈ ಪ್ರದರ್ಶನಕ್ಕೆ ಸಮಯ ನೀಡಲಾಗುವುದು. ಈ ಯೋಜನೆ ಅಡಿ ದೇಗುಲದ ಒಳಗೆ 360 ಡಿಗ್ರಿ ಕೋನದಲ್ಲಿ ಲೈಟ್‌ ಹೊರಸೂಸುವ ಪೊಜೆಕ್ಟರ್‌ ಬಳಕೆ ಮಾಡಲಾಗಿವುದು. ಎಷ್ಟು ಪ್ರಾಜೆಕ್ಟರ್‌ ಬಳಕೆ ಮಾಡುವುದು ಎಂಬ ಕುರಿತು ನವೆಂಬರ್‌ನಲ್ಲಿ ನಿರ್ಧಿರಸಲಾಗುವುದು ಎಂದು ತಿಳಿಸಿದರು. \ No newline at end of file diff --git a/eesanje/url_47_13_9.txt b/eesanje/url_47_13_9.txt new file mode 100644 index 0000000000000000000000000000000000000000..ed9140d60e345b59a85fa460fa0c42397ac7b7e7 --- /dev/null +++ b/eesanje/url_47_13_9.txt @@ -0,0 +1,9 @@ +ಬಿಹಾರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯೊಳಗೆ ಮದ್ಯ ನಿಷೇಧ ತೆರವು +' ': +ಪಾಟ್ನಾ,ಸೆ.15– ಬಿಹಾರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಮದ್ಯದ ಮೇಲಿನ ನಿಷೇಧವನ್ನು ರದ್ದುಗೊಳಿಸುವುದಾಗಿ ಎಂದು ರಾಜಕೀಯ ತಂತ್ರಜ್ಞ ಮತ್ತು ಕಾರ್ಯಕರ್ತ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನ್‌ ಸೂರಜ್‌ ಪಕ್ಷವು ಗೆದ್ದರೆ ಮದ್ಯ ನಿಷೇಧವನ್ನು ಅಂತ್ಯಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಕ್ಟೋಬರ್‌ 2 ರಂದು ಪ್ರಾರಂಭವಾಗಲಿರುವ ತಮ ರಾಜಕೀಯ ಪಕ್ಷ ಜನ್‌ ಸೂರಾಜ್‌ ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಖಚಿತಪಡಿಸಿದರು. +ಕಳೆದ ಎರಡು ವರ್ಷಗಳಿಂದ ತಯಾರಿ ನಡೆಸುತ್ತಿದ್ದೇವೆ. ಜನ್‌ ಸೂರಜ್‌ ಸರ್ಕಾರ ರಚನೆಯಾದರೆ ಒಂದು ಗಂಟೆಯೊಳಗೆ ಮದ್ಯ ನಿಷೇಧವನ್ನು ಕೊನೆಗೊಳಿಸುತ್ತೇವೆ.ನಿತೀಶ್‌ ಕುಮಾರ್‌ ಮತ್ತು ತೇಜಸ್ವಿ ಯಾದವ್‌ ಇಬ್ಬರೂ ನಾಯಕರ ಅವಧಿಯಲ್ಲಿ ಬಿಹಾರ ನಷ್ಟ ಅನುಭವಿಸಿದೆ ಎಂದರು. +ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಮತ್ತು ನಿತೀಶ್‌ ಕುಮಾರ್‌ ನಡುವೆ ಯಾರು ಯಾರೊಂದಿಗೆ ಕೈಜೋಡಿಸಿದ್ದಾರೆ, ಯಾರ ಕಾಲಿಗೆ ಬಿದ್ದಿದ್ದಾರೆ ಎಂಬುದು ತಿಳಿದಿಲ್ಲ, ಎರಡೂ ಸಂದರ್ಭಗಳಲ್ಲಿ ಬಿಹಾರ ಸೋತಿದೆ, ಬಿಹಾರದ ಜನರು ಇಬ್ಬರನ್ನೂ ಬೆಂಬಲಿಸಿದ್ದಾರೆ ಎಂದು ಪ್ರಶಾಂತ್‌ ಕಿಶೋರ್‌ ಹೇಳಿದರು. ಬಿಹಾರದ ಜನರು 30 ವರ್ಷಗಳಿಂದ ಅವರಿಬ್ಬರನ್ನೂ ನೋಡಿದ್ದಾರೆ ಎಂದು ಹೇಳಿದ್ದಾರೆ. +ನಿಷೇಧ ಕಾನೂನು ನಿತೀಶ್‌ ಕುಮಾರ್‌ ಅವರ ಪಾಲಿಗೆ ಧಕೋಸ್ಲಾ (ಶಮ್‌) ಹೊರತು ಬೇರೇನೂ ಅಲ್ಲ ಎಂದ ಅವರು, ಪ್ರಸ್ತುತ ನಿಷೇಧವು ನಿಷ್ಪರಿಣಾಮಕಾರಿಯಾಗಿದೆ. ಇದು ಮದ್ಯದ ಅಕ್ರಮ ವಿತರಣೆಗೆ ಕಾರಣವಾಗಿದೆ ಮತ್ತು ರಾಜ್ಯಕ್ಕೆ 20,000 ಕೋಟಿ ರೂ.ಗಳ ಸಂಭಾವ್ಯ ಅಬಕಾರಿ ಆದಾಯವನ್ನು ವಂಚಿತಗೊಳಿಸಿದೆ. +ಅಕ್ರಮ ಮದ್ಯ ವ್ಯಾಪಾರದಿಂದ ರಾಜಕಾರಣಿಗಳು ಮತ್ತು ಅಧಿಕಾರಿಗಳು ಲಾಭ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.ಬಿಹಾರದ ದುಃಸ್ಥಿತಿಗೆ ನಿತೀಶ್‌ಕುಮಾರ್‌ ಮತ್ತು ಅವರ ಹಿಂದಿನ ಲಾಲು ಪ್ರಸಾದ್‌ ಕಾರಣ. ಆದರೆ ಕಾಂಗ್ರೆಸ್‌‍ ಮತ್ತು ಬಿಜೆಪಿ ಕೂಡ ಆಪಾದನೆಯನ್ನು ಹಂಚಿಕೊಂಡಿವೆ ಎಂದು ಹೇಳಿದ್ದಾರೆ. +ಜನ್‌ ಸೂರಾಜ್‌ ಎಲ್ಲಾ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ನಾನು ಸ್ಪಷ್ಟಪಡಿಸುತ್ತೇನೆ, ಒಂದು ಕಡಿಮೆ ಅಲ್ಲ ಎಂದು ಕಿಶೋರ್‌ ಹೇಳಿದರು, ಅವರ ಹಿಂದಿನ ಅವತಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಮತ್ತು ಆಮ್‌ ಆದಿ ಪಕ್ಷದಂತಹ ನಾಯಕರ ಚುನಾವಣಾ ಪ್ರಚಾರವನ್ನು ನಿರ್ವಹಿಸಿದ್ದಾರೆ. \ No newline at end of file diff --git a/eesanje/url_47_140_1.txt b/eesanje/url_47_140_1.txt new file mode 100644 index 0000000000000000000000000000000000000000..a3389ae158d85d659696eb5efbd2ba8645858651 --- /dev/null +++ b/eesanje/url_47_140_1.txt @@ -0,0 +1,4 @@ +ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆ : ಬಿಎಸ್‌ಪಿ ಸಂಸದನ ಉಚ್ಛಾಟನೆ +ಬಲರಾಂಪುರ, ಮಾ 23 (ಪಿಟಿಐ) :ಉತ್ತರ ಪ್ರದೇಶದ ಶ್ರಾವಸ್ತಿಯ ಬಹುಜನ ಸಮಾಜ ಪಕ್ಷದ ಸಂಸದ ರಾಮ್ ಶಿರೋಮಣಿ ವರ್ಮಾ ಅವರನ್ನು ಅಶಿಸ್ತು ಮತ್ತು ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ. +ವರ್ಮಾ ಅವರು ಪಕ್ಷ ವಿರೋಧಿ ಚಟುವಟಿಕೆಗಳು ಮತ್ತು ಅಶಿಸ್ತುಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಲಾಲ್ ಚಂದ್ ಕೋರಿ ತಿಳಿಸಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಅವರ ಕಾರ್ಯಶೈಲಿಯಲ್ಲಿ ಸುಧಾರಣೆ ಕಾಣಲಿಲ್ಲ. +ಇದನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಹಿತದೃಷ್ಟಿಯಿಂದ ಶ್ರಾವಸ್ತಿ ಸಂಸದರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಲಕ್ನೋದಲ್ಲಿರುವ ಪಕ್ಷದ ಕಚೇರಿಯ ನಿರ್ದೇಶನದಂತೆ ವರ್ಮಾ ಅವರನ್ನು ಉಚ್ಚಾಟಿಸಲಾಗಿದೆ ಎಂದು ಕೋರಿ ಹೇಳಿದ್ದಾರೆ. \ No newline at end of file diff --git a/eesanje/url_47_140_10.txt b/eesanje/url_47_140_10.txt new file mode 100644 index 0000000000000000000000000000000000000000..4459b95f0e7cf0e986d65c26a8f63d274a3dafb1 --- /dev/null +++ b/eesanje/url_47_140_10.txt @@ -0,0 +1,8 @@ +ಕೇಜ್ರಿವಾಲ್ ಬಂಧನ ಕುರಿತು ಅಖಿಲೇಶ್ ಏನಂತಾರೆ..? +ನವದೆಹಲಿ,ಮಾ.22-ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನ ಹೊಸ ಸಾಮೂಹಿಕ ಚಳವಳಿಗೆ ಮುನ್ನುಡಿ ಬರೆದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ. ಎಕ್ಸ್ನಲ್ಲಿನ ಪೊಸ್ಟ್ನಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯವಿದೆ ಮತ್ತು ಆದ್ದರಿಂದ ಪ್ರತಿಪಕ್ಷದ ನಾಯಕರನ್ನು ಸಾರ್ವಜನಿಕರಿಂದ ದೂರವಿರಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ. +ಸೋಲಿನ ಭೀತಿಯಲ್ಲಿ ಜೈಲು ಸೇರಿರುವವರು ಬೇರೆಯವರನ್ನು ಜೈಲಿಗೆ ಹಾಕುವ ಮೂಲಕ ಏನನ್ನು ಸಾಧಿಸುತ್ತಾರೆ? ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿಗೆ ಗೊತ್ತಿದೆ. ಈ ಭಯವನ್ನು ಹೋಗಲಾಡಿಸಿ, ಯಾವುದೇ ವಿಧಾನದಿಂದ ವಿರೋಧ ಪಕ್ಷದ ನಾಯಕರನ್ನು ಸಾರ್ವಜನಿಕರ ಕಣ್ಣಿನಿಂದ ತೆಗೆದುಹಾಕಲು ಅದು ಬಯಸುತ್ತದೆ ಎಂದು ಅವರು ಆರೋಪಿಸಿದ್ದಾರೆ. +ಕೇಜ್ರಿವಾಲ್ ಅವರ ಬಂಧನವು ತಕ್ಷಣವೇ ವಿರೋಧ ಪಕ್ಷದ ನಾಯಕರ ಕೋಪಕ್ಕೆ ಕಾರಣವಾಗಿದೆ. ಕಾಂಗ್ರೆಸ್ನ ಉನ್ನತ ನಾಯಕ ರಾಹುಲ್ ಗಾಂಧಿ ಅವರು, ಹೆದರಿರುವ ಸರ್ವಾಧಿಕಾರಿ ಸತ್ತ ಪ್ರಜಾಪ್ರಭುತ್ವವನ್ನು ರಚಿಸಲು ಬಯಸುತ್ತಾರೆ ಎಂದು ಆರೋಪಿಸಿದ್ದಾರೆ. +ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ಕರೆ :ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ ಬಿಜೆಪಿ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಎಪಿ ದೆಹಲಿ ಘಟಕ ಕರೆ ನೀಡಿದೆ. ಕೇಜ್ರಿವಾಲ್ ಅವರ ಬಂಧನವು ಪ್ರಜಾಪ್ರಭುತ್ವದ ಕೊಲೆ ಮತ್ತು ಸರ್ವಾಧಿಕಾರದ ಘೋಷಣೆ ಎಂದು ಪಕ್ಷದ ಸಂಚಾಲಕ ಗೋಪಾಲರ್ ಆರೋಪಿಸಿದ್ದಾರೆ. +ಈ ಸರ್ವಾಕಾರದ ವಿರುದ್ಧ ದೇಶಾದ್ಯಂತ ಬಿಜೆಪಿ ಕಚೇರಿಗಳ ಹೊರಗೆ ಪ್ರತಿಭಟಿಸುವಂತೆ ನಾನು ದೇಶವಾಸಿಗಳಿಗೆ ಮನವಿ ಮಾಡುತ್ತೇನೆ. ನಾವು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂದು ದೆಹಲಿ ಸರ್ಕಾರದ ಸಚಿವ ರೈ ಹೇಳಿದರು. ಕೇಜ್ರಿವಾಲ್ ಅವರನ್ನು ಬಂಧಿಸಬಹುದಾದರೆ, ಯಾರನ್ನಾದರೂ ಬಂಧಿಸಬಹುದು ಮತ್ತು ಅವರ ಧ್ವನಿಯನ್ನು ಹತ್ತಿಕ್ಕಬಹುದು. ಇಂದಿನಿಂದ, ಹೋರಾಟ ಪ್ರಾರಂಭವಾಗಿದೆ. ಅರವಿಂದ್ ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಆವರು ಒಂದು ಸಿದ್ಧಾಂತ ಎಂದು ರೈ ಹೇಳಿದರು. +ಇಂಡಿಯಾ ಒಕ್ಕೂಟ ರಚನೆಯಾದಾಗಿನಿಂದ ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಭಾವಿಸುತ್ತದೆ ಆದರೆ ಕೇವಲ 40 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು ರೈ ಹೇಳಿದ್ದಾರೆ. +ಹೀಗಾಗಿ ಕೇಸರಿ ಪಕ್ಷ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಇಂದು, ಅವರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ನೀವೆಲ್ಲರೂ ಇಂದು ರಾತ್ರಿ ಮನೆಗೆ ಹೋಗುತ್ತೀರಿ. ಹೋರಾಟದಲ್ಲಿ ಪಾಲ್ಗೊಳ್ಳುವಂತೆ ನಾನು ದೆಹಲಿಯವರಿಗೆ ಮನವಿ ಮಾಡುತ್ತೇನೆ ಎಂದು ಅವರು ಕರೆ ನೀಡಿದರು. \ No newline at end of file diff --git a/eesanje/url_47_140_11.txt b/eesanje/url_47_140_11.txt new file mode 100644 index 0000000000000000000000000000000000000000..85337237e4bd436016a3fae5994afc26d5995476 --- /dev/null +++ b/eesanje/url_47_140_11.txt @@ -0,0 +1,5 @@ + ನಾಯಕಿ ಕವಿತಾಗೆ ಜಾಮೀನು ನೀಡಲು ಸುಪ್ರಿಂ ನಕಾರ +ನವದೆಹಲಿ, ಮಾ 22 (ಪಿಟಿಐ) –ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಸಲ್ಪಟ್ಟಿರುವ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. +ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಕವಿತಾ ಅವರನ್ನು ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿದೆ, ಇದು ಈ ನ್ಯಾಯಾಲಯವು ಅನುಸರಿಸುತ್ತಿರುವ ಅಭ್ಯಾಸವಾಗಿದೆ ಮತ್ತು ಪೊ್ರೀಟೋಕಾಲ್ ಅನ್ನು ಬೈಪಾಸ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ. +ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳನ್ನು ಪ್ರಶ್ನಿಸಿ ಕವಿತಾ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಇಡಿಗೆ ನೋಟಿಸ್ ಜಾರಿ ಮಾಡುತ್ತಿದೆ ಮತ್ತು ಆರು ವಾರಗಳಲ್ಲಿ ಅದರ ಪ್ರತಿಕ್ರಿಯೆಯನ್ನು ಕೇಳುತ್ತಿದೆ ಎಂದು ಪೀಠ ಹೇಳಿದೆ. +ನಿಬಂಧನೆಗಳನ್ನು ಪ್ರಶ್ನಿಸುವ ಅರ್ಜಿಯು ಬಾಕಿ ಉಳಿದಿರುವ ವಿಷಯಗಳೊಂದಿಗೆ ಬರಲಿದೆ ಎಂದು ಕವಿತಾ ಪರ ವಾದ ಮಂಡಿಸಿದ ಪೀಠವು ಹಿರಿಯ ವಕೀಲ ಕಪಿಲ್ ಸಿಬಲ್ಗೆ ತಿಳಿಸಿದೆ. ಆರಂಭದಲ್ಲಿ, ಅನುಮೋದಕರ ಹೇಳಿಕೆಯ ಆಧಾರದ ಮೇಲೆ ಜನರನ್ನು ಬಂ„ಸಲಾಗುತ್ತಿದೆ ಎಂದು ಸಿಬಲ್ ಹೇಳಿದರು. ಸದ್ಯಕ್ಕೆ ಪ್ರಕರಣದ ಮೆರಿಟ್ಗೆ ಹೋಗುವುದಿಲ್ಲ ಎಂದು ಪೀಠ ಹೇಳಿದೆ. \ No newline at end of file diff --git a/eesanje/url_47_140_12.txt b/eesanje/url_47_140_12.txt new file mode 100644 index 0000000000000000000000000000000000000000..1e6a531beaa266e7c39fb7f1069489f1d73364e5 --- /dev/null +++ b/eesanje/url_47_140_12.txt @@ -0,0 +1,5 @@ +2ಜಿ ಹಗರಣದ ಮರು ವಿಚಾರಣೆಗೆ ದೆಹಲಿ ಹೈಕೋರ್ಟ್ ಸಮ್ಮತಿ +ನವದೆಹಲಿ,ಮಾ.22-ಹಿಂದಿನ 2ಜಿ ತರಂಗಾಂತರ ಹಂಚಿಕೆ ಹಗರಣ ಪ್ರಕರಣದಲ್ಲಿ ಮಾಜಿ ದೂರಸಂಪರ್ಕ ಸಚಿವ ಎ ರಾಜಾಮತ್ತು ಇತರರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ದೆಹಲಿ ಹೈಕೋರ್ಟ್ ಇಂದು ಮರು ವಿಚಾರಣೆಗೆ ಅಂಗೀಕರಿಸಿದೆ. +ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ದಾಖಲಾದ ವಸ್ತು ಮತ್ತು ಕಕ್ಷಿದಾರರ ಪರ ವಕೀಲರು ಸಲ್ಲಿಸಿದ ಸಲ್ಲಿಕೆಗಳ ಆಧಾರದ ಮೇಲೆ, ಸಿಬಿಐನಿಂದ ಪ್ರಾಥಮಿಕ ಪ್ರಕರಣವನ್ನು ಮಾಡಲಾಗಿದೆ, ಇದು ಆಳವಾದ ಪರಿಶೀಲನೆಯ ಅಗತ್ಯವಿರುತ್ತದೆ ಮತ್ತು ಮೇಲ್ಮನವಿಯನ್ನು ವಿವರವಾಗಿ ಆಲಿಸುವ ಅಗತ್ಯವಿದೆ ಎಂದು ಹೇಳಿದರು. +ಮೇಲ್ಮನವಿ ಸಲ್ಲಿಸಲು ರಜೆ ನೀಡಲಾಗಿದೆ. ಮೇಲ್ಮನವಿಯನ್ನು ಮೇ ತಿಂಗಳಲ್ಲಿ ವಿಚಾರಣೆಗೆ ಪಟ್ಟಿ ಮಾಡಿ ಎಂದು ನ್ಯಾಯಾಧೀಶರು ಹೇಳಿದರು. ಮೇಲ್ಮನವಿ ಸಲ್ಲಿಸಲು ಬಿಡು ಎಂಬುದು ಉನ್ನತ ನ್ಯಾಯಾಲಯದಲ್ಲಿ ನಿರ್ಧಾರವನ್ನು ಪ್ರಶ್ನಿಸಲು ಪಕ್ಷಕ್ಕೆ ನ್ಯಾಯಾಲಯವು ನೀಡಿದ ಔಪಚಾರಿಕ ಅನುಮತಿಯಾಗಿದೆ. +ವಿಶೇಷ ನ್ಯಾಯಾಲಯವು ಡಿಸೆಂಬರ್ 21, 2017 ರಂದು 2ಜಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಮತ್ತು ಇತರರನ್ನು ಖುಲಾಸೆಗೊಳಿಸಿತ್ತು. diff --git a/eesanje/url_47_140_2.txt b/eesanje/url_47_140_2.txt new file mode 100644 index 0000000000000000000000000000000000000000..771f2d8db5b658c2d72aad02394c107591c4ff4a --- /dev/null +++ b/eesanje/url_47_140_2.txt @@ -0,0 +1,6 @@ +ಹಿಮಾಚಲದ ಮಾಜಿ ಶಾಸಕರು ಬಿಜೆಪಿ ಸೇರ್ಪಡೆ +ನವದೆಹಲಿ,ಮಾ.23-ಹಿಮಾಚಲ ಪ್ರದೇಶ ವಿಧಾನ ಸಭೆಯ ಹಲವಾರು ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆ ಗೊಳ್ಳುವ ನಿರೀಕ್ಷೆಯಿದೆ ಮತ್ತು ಮುಂಬರುವ ಉಪ ಚುನಾವಣೆಯಲ್ಲಿ ಅದರ ಟಿಕೆಟ್ನಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. +ಸದನದಲ್ಲಿ ಹಾಜರಿರಲು ಮತ್ತು ಹಿಮಾಚಲ ಪ್ರದೇಶ ಸರ್ಕಾರದ ಪರವಾಗಿ ಮತ ಚಲಾಯಿಸಲು ಪಕ್ಷದ ವಿಪ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ಆರು ಬಂಡಾಯ ಕಾಂಗ್ರೆಸ್ ಶಾಸಕರಾದ ಸುೀಧಿರ್ ಶರ್ಮಾ, ರವಿ ಠಾಕೂರ್, ರಾಜಿಂದರ್ ರಾಣಾ, ಇಂದರ್ ದತ್ ಲಖನ್ಪಾಲ, ಚೆತನ್ಯ ಶರ್ಮಾ ಮತ್ತು ದೇವಿಂದರ್ ಕುಮಾರ್ ಭುಟ್ಟೊ ಅವರನ್ನು ಫೆಬ್ರವರಿ 29 ರಂದು ಅನರ್ಹಗೊಳಿಸಲಾಗಿತ್ತು. ಇದೀಗ ಚುನಾವಣಾ ಆಯೋಗ ಅವರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. +ಮೂವರು ಸ್ವತಂತ್ರ ಶಾಸಕರಾದ ಆಶಿಶ್ ಶರ್ಮಾ, ಹೋಶಿಯಾರ್ ಸಿಂಗ್ ಮತ್ತು ಕೆಎಲ್ ಠಾಕೂರ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಸ್ಥಾನಗಳಿಗೂ ಉಪಚುನಾವಣೆ ನಡೆಯುವ ನಿರೀಕ್ಷೆ ಇದೆ.ನಾವು ನಮ್ಮ ರಾಜೀನಾಮೆ ಯನ್ನು ಸಲ್ಲಿಸಿದ್ದೇವೆ. ನಾವು ಬಿಜೆಪಿಗೆ ಸೇರುತ್ತೇವೆ ಮತ್ತು ಅದರ ಟಿಕೆಟ್ನಲ್ಲಿ ಚುನಾವಣೆಗೆ ಸ್ರ್ಪಧಿಸುತ್ತೇವೆ ಎಂದು ಸಿಂಗ್ ನಂತರ ಸುದ್ದಿಗಾರರಿಗೆ ತಿಳಿಸಿದರು. +ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ತಿಂಗಳು ರಾಜ್ಯಸಭಾ ಚುನಾವಣೆಯಲ್ಲಿ ಈ ಒಂಬತ್ತು ಶಾಸಕರ ಬೆಂಬಲದಿಂದ ರಾಜ್ಯದ ಏಕೈಕ ಸ್ಥಾನಕ್ಕೆ ಬಿಜೆಪಿ ಗೆದ್ದ ನಂತರ ಬಿಕ್ಕಟ್ಟು ಸೃಷ್ಟಿಯಾಗಿತ್ತು. +ಆರು ಕಾಂಗ್ರೆಸ್ ಶಾಸಕರ ಅನರ್ಹತೆಯೊಂದಿಗೆ, ಈಗ 62 ಸದಸ್ಯರ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಬಲ 39 ರಿಂದ 33 ಕ್ಕೆ ಇಳಿದಿದೆ. ಇದರ ಮೂಲ ಬಲ 68. ಬಿಜೆಪಿ 25 ಸದಸ್ಯರನ್ನು ಹೊಂದಿದೆ. ವಿಶ್ವಾಸಮತ ಯಾಚನೆಯ ವೇಳೆ ಸಮಬಲದ ಸಂದರ್ಭದಲ್ಲಿ ಮಾತ್ರ ಮತ ಚಲಾಯಿಸುವ ಸ್ಪೀಕರ್ಕಾಂಗ್ರೆಸ್ಗೆ ಸೇರಿದ್ದಾರೆ. \ No newline at end of file diff --git a/eesanje/url_47_140_3.txt b/eesanje/url_47_140_3.txt new file mode 100644 index 0000000000000000000000000000000000000000..1608d4769db53363616ba77b73ce54cdb09243ea --- /dev/null +++ b/eesanje/url_47_140_3.txt @@ -0,0 +1,5 @@ +ಬಿಜೆಪಿಯನ್ನು ದ್ವೇಷಿಸಬೇಡಿ : ಕಾರ್ಯಕರ್ತರಿಗೆ ಕೇಜ್ರಿವಾಲ್ ಮನವಿ +ನವದೆಹಲಿ,ಮಾ.23-ನನ್ನ ಬಂಧನದ ಉದ್ದೇಶದಿಂದ ನೀವು ಬಿಜೆಪಿ ಸದಸ್ಯರನ್ನು ದ್ವೇಷಿಸಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ದೆಹಲಿ ಜನರಿಗೆ ಅರವಿಂದ್ ಕೇಜ್ರಿವಾಲ್ ಅವರು ಬರೆದಿರುವ ಭಾವನಾತ್ಮಕ ಪತ್ರವನ್ನು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಬಹಿರಂಗಪಡಿಸಿದ್ದಾರೆ. +ಪತ್ರದಲ್ಲಿ ಕೇಜ್ರಿವಾಲ್ ಯಾವುದೇ ಜೈಲು ನನ್ನನ್ನು ಒಳಗೆ ಇಡಲು ಸಾಧ್ಯವಿಲ್ಲ ಮತ್ತು ನಾನು ಹೊರಗೆ ಬಂದು ನನ್ನ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.ಸಮಾಜ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಕೆಲಸ ಮಾಡುವ ಆಮ್ ಆದ್ಮಿ ಪಕ್ಷದ (ಎಎಪಿ) ಎಲ್ಲಾ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ, ನಾನು ಜೈಲಿಗೆ ಹೋಗುವುದನ್ನು ನಿಲ್ಲಿಸಬಾರದು. +ಈ ಕಾರಣಕ್ಕಾಗಿ ಬಿಜೆಪಿ ಜನರನ್ನು ದ್ವೇಷಿಸಬೇಡಿ. ಅವರು ನಮ್ಮ ಸಹೋದರ ಸಹೋದರಿಯರು. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. +ನನ್ನ ಪ್ರೀತಿಯ ದೇಶವಾಸಿಗಳೇ, ನನ್ನನ್ನು ಬಂಧಿಸಲಾಗಿದೆ, ನಾನು ಜೈಲಿನಲ್ಲಿದ್ದರೂ ಇಲ್ಲದಿದ್ದರೂ, ನಾನು ದೇಶ ಸೇವೆಯನ್ನು ಮುಂದುವರಿಸುತ್ತೇನೆ, ನನ್ನ ಇಡೀ ಜೀವನ ದೇಶಕ್ಕಾಗಿ ಮುಡಿಪಾಗಿದೆ, ನನ್ನ ಜೀವನದಲ್ಲಿ ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ ಮತ್ತು ಇದು ನನಗೆ ತಿಳಿದಿದೆ. ಮುಂದುವರಿಯು ತ್ತದೆ. ಆದ್ದರಿಂದ, ಈ ಬಂಧನವು ನನಗೆ ಆಶ್ಚರ್ಯ ತಂದಿಲ್ಲ ಎಂದು ಕೇಜ್ರಿವಾಲ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_140_4.txt b/eesanje/url_47_140_4.txt new file mode 100644 index 0000000000000000000000000000000000000000..16b746cfd64c1821c872d39f9c7de8ae0fc5de0f --- /dev/null +++ b/eesanje/url_47_140_4.txt @@ -0,0 +1,7 @@ +ಜೈಲಿನಿಂದ ಗ್ಯಾಂಗ್‌ಗಳನ್ನು ನಡೆಸಬಹುದು ಸರ್ಕಾರವನ್ನಲ್ಲ ; ಮನೋಜ್ ತಿವಾರಿ +ನವದೆಹಲಿ,ಮಾ.23-ಅರವಿಂದ್ ಕೇಜ್ರಿವಾಲ್ ದೆಹಲಿ ಸರ್ಕಾರವನ್ನು ಜೈಲಿನಿಂದ ನಡೆಸುತ್ತಾರೆ ಎಂಬ ದೆಹಲಿ ಸಚಿವೆ ಅತಿಶಿ ಅವರ ಹೇಳಿಕೆಗೆ ಭಾರತೀಯ ಜನತಾ ಪಕ್ಷದ ಸಂಸದ ಮನೋಜ್ ತಿವಾರಿ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಗ್ಯಾಂಗ್ಗಳು ಜೈಲಿನಿಂದ ನಡೆಸಲ್ಪಡುತ್ತವೆ, ಸರ್ಕಾರಗಳಲ್ಲ ಎಂದಿದ್ದಾರೆ. +ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ತಿವಾರಿ, ಅರವಿಂದ್ ಕೇಜ್ರಿವಾಲ್ ದೆಹಲಿಯನ್ನು ಲೂಟಿ ಮಾಡಿದ್ದಾರೆ ಮತ್ತು ಅವರ ಬಂಧನದ ಬಗ್ಗೆ ಯಾರೂ ಚರ್ಚಿಸುತ್ತಿಲ್ಲ ಎಂದು ಜನರು ತುಂಬಾ ಸಂತೋಷಪಟ್ಟಿದ್ದಾರೆ ಎಂದಿದ್ದಾರೆ.ದೆಹಲಿಯನ್ನು ದುಃಸ್ಥಿತಿಗೆ ತರಲು ಕೇಜ್ರಿವಾಲ್ ಕಾರಣ, ದೆಹಲಿಯ ಜನರು ಅವರ ಮೇಲೆ ತುಂಬಾ ಕೋಪಗೊಂಡಿದ್ದಾರೆ ಮತ್ತು ಅದಕ್ಕಾಗಿಯೇ, ಅವರನ್ನು ಬಂಧಿಸಿದ ನಂತರ ಸಿಹಿ ಹಂಚಲಾಗಿದೆ. ಅವರ ಸರ್ಕಾರವು ದೆಹಲಿಯಲ್ಲಿ ಯಾವುದೇ ಕೆಲಸ ಮಾಡಲಿಲ್ಲ ಮತ್ತು ಅವರು ಕೇವಲ ಲೂಟಿ ಮಾಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. +ಎಎಪಿಯ ಪ್ರತಿಭಟನೆಗಳು ಮತ್ತು ದೆಹಲಿ ಮುಖ್ಯಮಂತ್ರಿಯ ಬಂಧನವು ಮಾಧ್ಯಮಗಳಲ್ಲಿ ಮಾತ್ರ ಎಳೆತವನ್ನು ಪಡೆಯುತ್ತಿದೆ ಮತ್ತು ದೆಹಲಿಯ ಜನರು ಅದರ ಬಗ್ಗೆ ಚರ್ಚಿಸುತ್ತಿಲ್ಲ ಎಂದು ದೆಹಲಿ ಬಿಜೆಪಿ ಸಂಸದರು ಹೇಳಿದರು.ಮದ್ಯದ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂಬ ಸತ್ಯವನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು ಈ ಹಿಂದೆ ಹೇಳಿದ್ದರು. +ಕಾನೂನು ಅದರ ಹಾದಿ ಹಿಡಿಯುತ್ತಿದೆ… ನಿನ್ನೆ ಅವರು (ಅರವಿಂದ್ ಕೇಜ್ರಿವಾಲï) ತಾವು ದೆಹಲಿಯ ಮುಖ್ಯಮಂತ್ರಿ ಎಂದು ನ್ಯಾಯಾಲಯದಲ್ಲಿ ಚೌಕಾಶಿ ಮಾಡುತ್ತಿದ್ದರು, ಆದ್ದರಿಂದ ಅವರಿಗೆ ಎರಡು ತಿಂಗಳ ಕಾಲಾವಕಾಶ ನೀಡಬೇಕು ಆದರೆ ದೇಶದಲ್ಲಿ ಕಾನೂನು ಆಡಳಿತವಿದೆ. ಕಾನೂನು ಪ್ರತಿಯೊಬ್ಬ ಅಪರಾಧಿಯನ್ನು ಒಂದೇ ರೀತಿ ಪರಿಗಣಿಸುತ್ತಾನೆ, ಅದು ಇಂದು ಸಾಬೀತಾಗಿದೆ. ಶೀಘ್ರದಲ್ಲೇ ಅರವಿಂದ್ ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಭಾಗಿಯಾಗಿರುವ ಸತ್ಯ ಎಲ್ಲರಿಗೂ ಬಹಿರಂಗವಾಗಲಿದೆ ಎಂದು ಸಚ್ದೇವ್ ಆರೋಪಿಸಿದರು. +ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯಿಂದ ಬಂ„ಸಲ್ಪಟ್ಟ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಶುಕ್ರವಾರ ಏಳು ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. +ನ್ಯಾಯಾಲಯದ ಮುಂದೆ ತನ್ನ ವಾದದಲ್ಲಿ, ಜಾರಿ ನಿರ್ದೇಶನಾಲಯವು ಉದ್ಯಮಿಗಳಿಂದ ಕಿಕ್ಬ್ಯಾಕ್ಗೆ ಬೇಡಿಕೆಯಿಡುವಲ್ಲಿ ದೆಹಲಿ ಮುಖ್ಯಮಂತ್ರಿ ಪ್ರಮುಖ ಸಂಚುಕೋರ ಮತ್ತು ಕಿಂಗ್ಪಿನ್ ಎಂದು ಆರೋಪಿಸಿದೆ. ಅಬಕಾರಿ ನೀತಿಯ ರಚನೆಯಲ್ಲಿ ಕೇಜ್ರಿವಾಲ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ. ಎಎಪಿಯ ಮಾಧ್ಯಮದ ಉಸ್ತುವಾರಿ ವಹಿಸಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಡಿ ವಕೀಲರು ಹೇಳಿದ್ದಾರೆ. \ No newline at end of file diff --git a/eesanje/url_47_140_5.txt b/eesanje/url_47_140_5.txt new file mode 100644 index 0000000000000000000000000000000000000000..93a1e48c98f5f67a828c24ba95e670639f868db3 --- /dev/null +++ b/eesanje/url_47_140_5.txt @@ -0,0 +1,5 @@ +ಪೊಲೀಸ್ ಅಧಿಕಾರಿಯಿಂದ ಅನುಚಿತ ವರ್ತನೆ : ಕೇಜ್ರಿ ಆರೋಪ +ನವದೆಹಲಿ,ಮಾ.23-ನ್ಯಾಯಾಲಯದ ಆವರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಮಾನುಷವಾಗಿ ನಡೆಸಿಕೊಂಡಿದ್ದ ದಿಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಇದೀಗ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. +ದೆಹಲಿಯ ರೂಸ್ ಅವೆನ್ಯೂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ ಎಎಪಿ ಮುಖ್ಯಸ್ಥರು ಈ ವಿಷಯ ತಿಳಿಸಿದ್ದಾರೆ, ಇದರಲ್ಲಿ ಅಧಿಕಾರಿಯನ್ನು ತಮ್ಮ ಭದ್ರತಾ ಕವಚದಿಂದ ತೆಗೆದುಹಾಕುವಂತೆ ಕೋರಿದ್ದಾರೆ. ಅರ್ಜಿಯಲ್ಲಿ ಕೇಜ್ರಿವಾಲ್ ಸಲ್ಲಿಸಿದ ರಿಮಾಂಡ್ ಅರ್ಜಿಯಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರುತ್ತಿದ್ದಾಗ ಸಹಾಯಕ ಪೊಲೀಸ್ ಕಮಿಷನರ್ ಎಕೆ ಸಿಂಗ್ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. +ಕಳೆದ ವರ್ಷ ಇದೇ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರು ಪ್ರಶ್ನೆ ಕೇಳುತ್ತಿದ್ದಾಗ ಸಿಸೋಡಿಯಾ ಅವರನ್ನು ಕುತ್ತಿಗೆಗೆ ಬಿಗಿದು ನಿಲ್ಲಿಸಿದ ಆರೋಪಕ್ಕೆ ಗುರಿಯಾಗಿದ್ದ ಅದೇ ಪೊಲೀಸ್ ಸಿಂಗ್ ವಿರುದ್ಧ ಸಿಸೋಡಿಯಾ ಅವರು ಲಿಖಿತ ದೂರು ದಾಖಲಿಸಿದ್ದರು. ದೆಹಲಿ ಪೊಲೀಸರು ಯಾವುದೇ ತಪ್ಪನ್ನು ನಿರಾಕರಿಸಿದ್ದಾರೆ ಮತ್ತು ವೀಡಿಯೊದಲ್ಲಿ ತೋರಿಸಿರುವ ಕ್ರಮವು ಭದ್ರತೆಗೆ ಅಗತ್ಯವಾಗಿದೆ ಮತ್ತು ಯಾವುದೇ ಆರೋಪಿಗಳು ಮಾಧ್ಯಮಗಳಿಗೆ ಹೇಳಿಕೆಗಳನ್ನು ನೀಡುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು. +ಕಳೆದ ವರ್ಷ -ಫೆಬ್ರವರಿಯಲ್ಲಿ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ವಶಕ್ಕೆ ತೆಗೆದುಕೊಂಡರೆ,ಕೇಜ್ರಿವಾಲ್ ಅವರನ್ನು ಗುರುವಾರ ರಾತ್ರಿ ಇಡಿ ಬಂಧಿಸಿತು, ಅಂತಹ ಕ್ರಮವನ್ನು ಎದುರಿಸಿದ ಮೊದಲ ಹಾಲಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಎಎಪಿ ಮುಖ್ಯಸ್ಥರನ್ನು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. \ No newline at end of file diff --git a/eesanje/url_47_140_6.txt b/eesanje/url_47_140_6.txt new file mode 100644 index 0000000000000000000000000000000000000000..01722aa159f848524a2faa48e404ed3d13113b42 --- /dev/null +++ b/eesanje/url_47_140_6.txt @@ -0,0 +1,5 @@ +ಮಹುವಾ ಮೊಹಿತ್ರಾ ನಿವಾಸದಲ್ಲಿ ಸಿಬಿಐ ಶೋಧ +ನವದೆಹಲಿ,ಮಾ.23-ನಗದು ಪ್ರಶ್ನೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರ ಕೋಲ್ಕತ್ತಾದ ಮನೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಶೋಧಿಸಿದೆ.ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಥಮ ಮಾಹಿತಿ ವರದಿ ದಾಖಲಿಸಿದ ಒಂದು ದಿನದ ನಂತರ ಶೋಧ ನಡೆಸಲಾಗಿದೆ. +ಮೊಯಿತ್ರಾ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಈ ವಾರದ ಆರಂಭದಲ್ಲಿ ಸಿಬಿಐಗೆ ಸೂಚಿಸಿತ್ತು. ಪ್ರತಿ ತಿಂಗಳು ತನಿಖೆಯ ಸ್ಥಿತಿಗತಿ ಕುರಿತು ನಿಯತಕಾಲಿಕ ವರದಿಗಳನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಲಾಗಿತ್ತು. +ಮಹುವಾ ಮೊಯಿತ್ರಾ ಅವರನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು. ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು ಬದಲಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದ ಆರೋಪದ ಮೇಲೆ ಮಾಜಿ ಸಂಸದೆಯನ್ನು ತೆಗೆದುಹಾಕಲು ನೈತಿಕ ಸಮಿತಿಯು ಶಿಫಾರಸು ಮಾಡಿತ್ತು. +ಮೊಯಿತ್ರಾ ಲಂಚದ ಆರೋಪಗಳನ್ನು ನಿರಾಕರಿಸಿದರು ಆದರೆ ಲಾಗ್ಇನ್ ವಿವರಗಳನ್ನು ಹಂಚಿಕೊಳ್ಳಲು ಒಪ್ಪಿಕೊಂಡರು. ಈ ವಿವರಗಳನ್ನು ಹಂಚಿಕೊಳ್ಳುವುದು ಸಂಸದರಲ್ಲಿ ಸಾಮಾನ್ಯ ಅಭ್ಯಾಸವಾಗಿದೆ ಎಂದು ಅವರು ವಾದಿಸಿದ್ದರು. \ No newline at end of file diff --git a/eesanje/url_47_140_7.txt b/eesanje/url_47_140_7.txt new file mode 100644 index 0000000000000000000000000000000000000000..3afc1f33cd058b274c07da2823c6fe2de47f4eb0 --- /dev/null +++ b/eesanje/url_47_140_7.txt @@ -0,0 +1,8 @@ +ಹಣವಿಲ್ಲದೆ ರಾಜಕೀಯ ಪಕ್ಷ ನಡೆಸುವುದು ಸಾಧ್ಯವಿಲ್ಲ : ನಿತಿನ್ ಗಡ್ಕರಿ +ಅಹಮದಾಬಾದ್, ಮಾ.23 (ಪಿಟಿಐ) :ಸಂಪನ್ಮೂಲವಿಲ್ಲದೆ ಯಾವುದೇ ರಾಜಕೀಯ ಪಕ್ಷಗಳು ಬದುಕುಳಿಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಹಣವಿಲ್ಲದೆ ರಾಜಕೀಯ ಪಕ್ಷವನ್ನು ನಡೆಸುವುದು ಸಾಧ್ಯವಿಲ್ಲ ಹೀಗಾಗಿ ಕೇಂದ್ರ ಸರ್ಕಾರವೂ ಚುನಾವಣಾ ಬಾಂಡ್ಗಳ ಯೋಜನೆಯನ್ನು ಪರಿಚಯಿಸಿದೆ, ಒಂದು ಒಳ್ಳೆಯ ಉದ್ದೇಶ ಎಂದು ಅವರು ಹೇಳಿದರು. +ಸುಪ್ರೀಂ ಕೋರ್ಟ್ ಈ ವಿಷಯದ ಬಗ್ಗೆ ಹೆಚ್ಚಿನ ನಿರ್ದೇಶನ ನೀಡಿದರೆ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚಿಸಬೇಕಾಗಿದೆ ಎಂದು ಅವರು ಗಾಂಧಿನಗರದ ಗಿಫ್ಟ್ ಸಿಟಿಯಲ್ಲಿ ಮಾಧ್ಯಮ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರು. ಅರುಣ್ ಜೇಟ್ಲಿ (ಕೇಂದ್ರ ಹಣಕಾಸು) ಸಚಿವರಾಗಿದ್ದಾಗ, ನಾನು ಆ ಚರ್ಚೆಯಲ್ಲಿ (ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದಂತೆ) ಭಾಗವಾಗಿದ್ದೇನೆ. ಸಂಪನ್ಮೂಲವಿಲ್ಲದೆ ಯಾವುದೇ ಪಕ್ಷವು ಬದುಕಲು ಸಾಧ್ಯವಿಲ್ಲ. ಕೆಲವು ದೇಶಗಳಲ್ಲಿ ಸರ್ಕಾರಗಳು ರಾಜಕೀಯ ಪಕ್ಷಗಳಿಗೆ ಹಣ ನೀಡುತ್ತವೆ. ಭಾರತದಲ್ಲಿ ಅಂತಹ ವ್ಯವಸ್ಥೆ ಇಲ್ಲ. ಹೀಗಾಗಿ, ನಾವು ರಾಜಕೀಯ ಪಕ್ಷಗಳಿಗೆ ಹಣಕಾಸು ಒದಗಿಸುವ ಈ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಗಡ್ಕರಿ ಚುನಾವಣಾ ಬಾಂಡ್ಗಳ ಕುರಿತ ಪ್ರಶ್ನೆಗೆ ಹೇಳಿದರು. +ಚುನಾವಣಾ ಬಾಂಡ್ಗಳನ್ನು ಪರಿಚಯಿಸುವುದರ ಹಿಂದಿನ ಮುಖ್ಯ ಉದ್ದೇಶವೆಂದರೆ ರಾಜಕೀಯ ಪಕ್ಷಗಳು ನೇರವಾಗಿ ಹಣವನ್ನು ಪಡೆಯುವುದು, ಆದರೆ (ದಾನಿಗಳ) ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ ಏಕೆಂದರೆ ಅಧಿಕಾರದಲ್ಲಿರುವ ಪಕ್ಷವು ಬದಲಾದರೆ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಅವರು ತಿಳಿಸಿದರು. +ಕಾರ್ಯಕ್ರಮ ನಡೆಸುವುದಕ್ಕೆ ಹಣಕಾಸು ಒದಗಿಸಲು ಮಾಧ್ಯಮ ಸಂಸ್ಥೆಗೆ ಪ್ರಾಯೋಜಕರ ಅಗತ್ಯವಿರುವಂತೆ, ರಾಜಕೀಯ ಪಕ್ಷಗಳಿಗೂ ತಮ್ಮ ವ್ಯವಹಾರಗಳನ್ನು ನಡೆಸಲು ಹಣದ ಅಗತ್ಯವಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹೇಳಿದರು.ನೀವು ನೆಲದ ವಾಸ್ತವವನ್ನು ನೋಡಬೇಕು. ಪಕ್ಷಗಳು ಹೇಗೆ ಚುನಾವಣೆಗೆ ಹೋರಾಡಬೇಕು? ನಾವು ಪಾರದರ್ಶಕತೆ ತರಲು ಈ ಚುನಾವಣಾ ಬಾಂಡ್ಗಳ ವ್ಯವಸ್ಥೆಯನ್ನು ತಂದಿದ್ದೇವೆ. +ಹಾಗಾಗಿ ನಾವು ಚುನಾವಣಾ ಬಾಂಡ್ಗಳನ್ನು ತಂದಾಗ ನಮ್ಮ ಉದ್ದೇಶ ಚೆನ್ನಾಗಿತ್ತು ಎಂದಿದ್ದಾರೆ.ನಮ್ಮ ದೇಶ ಮತ್ತು ಮೌಲ್ಯಾಧಾರಿತ ಪ್ರಜಾಪ್ರಭುತ್ವದ ಹಿತಾಸಕ್ತಿಯಲ್ಲಿ, ಪ್ರತಿಯೊಬ್ಬರೂ ಪಾರದರ್ಶಕ ಮಾರ್ಗವನ್ನು ಕಂಡುಹಿಡಿಯಬೇಕು (ಹಣಕಾಸು ಪಕ್ಷಗಳು) ಏಕೆಂದರೆ ಹಣವಿಲ್ಲದೆ, ಪಕ್ಷಗಳು ಯಾವುದೇ ಚಟುವಟಿಕೆಯನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸಚಿವರು ಪ್ರತಿಪಾದಿಸಿದರು. +ಕಳೆದ ತಿಂಗಳು ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ , ಏಪ್ರಿಲ್ -ಮೇ ಲೋಕಸಭೆ ಚುನಾವಣೆಗೆ ಮುನ್ನ ಚುನಾವಣಾ ಬಾಂಡ್ಗಳ ಯೋಜನೆಯನ್ನು ರದ್ದುಗೊಳಿಸಿತು.ಈ ಯೋಜನೆಯು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಾಂವಿಧಾನಿಕ ಹಕ್ಕು ಮತ್ತು ಮಾಹಿತಿಯ ಹಕ್ಕನ್ನು ಉಲ್ಲಂಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. +ಅಂದಿನಿಂದ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ವಿವಿಧ ಸೆಟ್ ಡೇಟಾವನ್ನು ಬಿಡುಗಡೆ ಮಾಡಿದೆ, ಈ ಯೋಜನೆಯಡಿಯಲ್ಲಿ ರಾಜಕೀಯ ಪಕ್ಷಗಳು ಪಡೆದ ಹಣದ ವಿವರಗಳನ್ನು ಚುನಾವಣಾ ಆಯೋಗಕ್ಕೆ ಬಿಡುಗಡೆ ಮಾಡಿದೆ. \ No newline at end of file diff --git a/eesanje/url_47_140_8.txt b/eesanje/url_47_140_8.txt new file mode 100644 index 0000000000000000000000000000000000000000..b0301de86cbc0c645b13128b7e2e2c1ff06fe48c --- /dev/null +++ b/eesanje/url_47_140_8.txt @@ -0,0 +1,5 @@ +ರಷ್ಯಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ +ನವದೆಹಲಿ,ಆ.23-ರಷ್ಯಾ ರಾಜಧಾನಿ ಮಾಸ್ಕೋದ ಕ್ರೋಕಸ್ ಕನ್ಸರ್ಟ್ ಹಾಲ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರಮೋದಿ ಖಂಡಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಮಾತನಾಡಿರುವ ಅವರು ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. +ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ.ಇತ್ತ ದಾಳಿಗೆ ಸಂಬಂಧಪಟ್ಟಂತೆ ರಷ್ಯಾ ಅಧ್ಯಕ್ಷ ಪುಟಿನ್, ದಾಳಿಕೋರರು ತಕ್ಕ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದಕರನ್ನು ನಾವು ಸುಮ್ಮನೆ ಬಿಡಲ್ಲ ಎಂದು ದಾಳಿಯ ಹೊಣೆ ಹೊತ್ತ ಐಸಿಸ್‍ಗೆ ಎಚ್ಚರಿಕೆ ನೀಡಿದ್ದಾರೆ. +ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬಗಳೊಂದಿಗೆ ಇವೆ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಟ್ವೀಟ್ ಮಾಡಿದ್ದಾರೆ. +ಶುಕ್ರವಾರ ಮಧ್ಯರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಈವರೆಗೆ ಕನಿಷ್ಠ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು 140 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. \ No newline at end of file diff --git a/eesanje/url_47_140_9.txt b/eesanje/url_47_140_9.txt new file mode 100644 index 0000000000000000000000000000000000000000..857702d8619e8843a3ebd1467d40255a54fb497e --- /dev/null +++ b/eesanje/url_47_140_9.txt @@ -0,0 +1,6 @@ +35 ಬಂಧಿತ ಸೊಮಾಲಿ ಕಡಲ್ಗಳ್ಳರನ್ನು ವಿಚಾರಣೆಗೆ ಭಾರತಕ್ಕೆ ಕರೆತಂದ ನೌಕಾಪಡೆ +ಮುಂಬೈ,ಮಾ.23-ಭಾರತೀಯ ನೌಕಾಪಡೆಯು ಕೋಲ್ಕತ್ತಾದ ಅರಬ್ಬಿ ಸಮುದ್ರದ ಬಳಿ 35 ಸೊಮಾಲಿಯನ್ ಕಡಲಗಳ್ಳರನ್ನು ಬಂಧಿಸಿದ್ದು, ಮುಂಬೈಗೆ ತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ, ಕಡಲ್ಗಳ್ಳತನ ವಿರೋಧಿ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ. +40 ಗಂಟೆಗಳ ಕಾಲ ನಿರಂತರವಾದ ಹೈ-ಟೆಂಪೋ ಕಾರ್ಯಾಚರಣೆಗಳ ನಂತರ ಮಾರ್ಚ್ 16ರಂದು ಕಡಲುಗಳ್ಳರ ಒಗಿ ರುಯೆನ್ ಹಡಗನ್ನು ತಡೆದು ಅದರಲ್ಲಿದ್ದ ಭಾರತೀಯ ಹಾಗೂ ಬಲ್ಗೇರಿಯಾದ ಪ್ರಜೆಗಳನ್ನು ರಕ್ಷಣೆ ಮಾಡಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಈ ಹಡಗನ್ನು 2023 ಡಿಸೆಂಬರ್‍ನಲ್ಲಿ ಅಪಹರಣ ಮಾಡಲಾಗಿತ್ತು. ಭಾರತೀಯ ನೌಕಾಪಡೆಯು ಸಮುದ್ರ ಭದ್ರತಾ ಕಾರ್ಯಾಚರಣೆಗಳ ಭಾಗವಾಗಿ ಈ ಸಮುದ್ರದಲ್ಲಿ ಭಾರೀ ಕಾರ್ಯಚರಣೆಯನ್ನು ನಡೆಸಿ, ಒಗಿ ರುಯೆನ್ ಹಡಗುನ್ನು ರಕ್ಷಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೊಮಾಲಿಯಾದಿಂದ ಪೂರ್ವಕ್ಕೆ 260 ನಾಟಿಕಲ್ ಮೈಲಿ (ಎನ್‍ಎಂ) ದೂರದಲ್ಲಿ ಹಡಗನ್ನು ತಡೆಹಿಡಿಯಲು ಐಎನ್‍ಎಸ್ ಕೋಲ್ಕತ್ತಾಗೆ ನಿರ್ದೇಶನ ನೀಡಿತ್ತು. ಈ ಮೂಲಕ 35 ಕಡಲಗಳ್ಳರನ್ನು ಪತ್ತೆ ಮಾಡಲಾಗಿತ್ತು. +ಮಾರ್ಚ್ 15ರಂದು ಐಎನ್‍ಎಸ್ ಕೋಲ್ಕತ್ತಾದಲ್ಲಿ ಎಂವಿ ರುಯೆನ್ ಹಡಗನ್ನು ಪತ್ತೆ ಮಾಡಿ, ಅದರಲ್ಲಿದ್ದ ಜನರನ್ನು ರಕ್ಷಣೆ ಮಾಡಿದೆ. ಇದರ ಜತೆಗೆ ಈ ಹಡಗಿನ ಪತ್ತೆಗಾಗಿ ಬಳಸಿದ್ದ ಭಾರತೀಯ ಡ್ರೋನ್‍ನ್ನು ಕಡಲಗಳ್ಳರು ಹೊಡೆದುರುಳಿಸಿದರು. ಇನ್ನು ಈ ರಕ್ಷಣಾ ಕಾರ್ಯಚರಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಇದೀಗ ಬಂಧನವಾಗಿರುವ 35 ಕಡಲಗಳ್ಳರನ್ನು ಮುಂಬೈಗೆ ತರಲಾಗಿದೆ. +ಮೋದಿಗೆ ಕೃತಜ್ಞತೆಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ಮತ್ತು ಅದರಲ್ಲಿದ್ದ ನಾಗಕರಿಕರ ಸಹಿತ ಸಿಬ್ಬಂದಿಯನ್ನು ಭಾರತೀಯ ನೌಕಾಪಡೆ ರಕ್ಷಣೆ ಮಾಡಿದೆ. ಈ ಬಗ್ಗೆ ಬಲ್ಗೇರಿಯ ದೇಶದ ಅಧ್ಯಕ್ಷ ರುಮೆನ್ ರಾದೇವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಬಲ್ಗೇರಿಯದ ಅಧ್ಯಕ್ಷ ರುಮೆನ್ ರಾದೇವ್, 7 ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ರುಯೆನ್ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತದ ನೌಕಾಪಡೆಯ ಕೆಚ್ಚೆದೆಯ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_141_1.txt b/eesanje/url_47_141_1.txt new file mode 100644 index 0000000000000000000000000000000000000000..3efe7ac762c514c5adde369d736b50742e836ab4 --- /dev/null +++ b/eesanje/url_47_141_1.txt @@ -0,0 +1,4 @@ +ನಮ್ಮ ವಿರುದ್ಧ ಕೇಜ್ರಿವಾಲ್ ಬೇಹುಗಾರಿಕೆ ನಡೆಸಿರುವ ಸಾಕ್ಷಗಳಿವೆ : ಇಡಿ ಹೊಸ ಆರೋಪ +ನವದೆಹಲಿ,ಮಾ.22-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ವಿರುದ್ಧ ಬೇಹುಗಾರಿಕೆ ನಡೆಸಿದ್ದು, ಈ ಕುರಿತು ಸಾಕ್ಷಾಧಾರಗಳು ಇವೆ ಎಂದು ಜಾರಿನಿರ್ದೇಶನಾಲಯ ಮತ್ತೊಂದು ಹೊಸ ಆರೋಪ ಮಾಡಿದೆ. +ಅರವಿಂದ್ ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿ ಅವರ ವಕೀಲರು ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ವೇಳೆ ನಮ್ಮ ವಾದವನ್ನು ಸಹ ಆಲಿಸಬೇಕೆಂದು ಇಡಿ ನ್ಯಾಯಾಲಯಕ್ಕೆ ಕೆವಿಯಟ್ ಸಲ್ಲಿಸಿದೆ. +ಕ್ರೇಜಿವಾಲ್ ತಮ್ಮ ವಿರುದ್ಧ ಬೇಹುಗಾರಿಕೆ ನಡೆಸಿರುವುದು ಸಾಬೀತಾಗಿದೆ. ಈ ಕುರಿತು ತಮ್ಮ ಬಳಿ ಸಾಕ್ಷ್ಯಾಧಾರಗಳು ಇವೆ. ನ್ಯಾಯಾಲಯ ಬಯಸಿದರೆ ಯಾವುದೇ ಕ್ಷಣದಲ್ಲಿ ಸಲ್ಲಿಸುತ್ತೇವೆ ಎಂದು ಇಡಿ ಪರ ವಕೀಲರು ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಿನ್ನೆ ಇಡಿ ಅಕಾರಿಗಳು 2 ಗಂಟೆ ವಿಚಾರಣೆಯ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. \ No newline at end of file diff --git a/eesanje/url_47_141_10.txt b/eesanje/url_47_141_10.txt new file mode 100644 index 0000000000000000000000000000000000000000..8348f0fc2da4c3f5018f17506b1f82c0cfcd463b --- /dev/null +++ b/eesanje/url_47_141_10.txt @@ -0,0 +1,7 @@ +ಕಾಂಗ್ರೆಸ್‌ನವರು ಪಡೆದಿರುವ ಚುನಾವಣಾ ಬಾಂಡ್ ಹಣ ಹಫ್ತಾ ವಸೂಲಿಯೇ..? : ಅಮಿತ್ ಶಾ +ನವದೆಹಲಿ,ಮಾ.21-ಚುನಾವಣಾ ಬಾಂಡ್ಗಳನ್ನು ಹಫ್ತಾ ವಸೂಲಿ ಎಂದು ರಾಹುಲ್ ಗಾಂಧಿ ಉಲ್ಲೇಖಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ನಾಯಕರು ರೂ.1,600 ಕೋಟಿಯನ್ನು ಎಲ್ಲಿಂದ ಪಡೆದರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ. +ಗಾಂಧಿ ಕೂಡ ರೂ.1,600 ಕೋಟಿ ಪಡೆದಿದ್ದಾರೆ. ಅವರು ಆ ಹಫ್ತಾ ವಸೂಲಿ ಎಲ್ಲಿಂದ ಪಡೆದರು ಎಂಬುದನ್ನು ಅವರು ಸ್ಪಷ್ಟಪಡಿಸಬೇಕು. ಇದು ಪಾರದರ್ಶಕ ದೇಣಿಗೆ ಎಂದು ನಾವು ಪ್ರತಿಪಾದಿಸುತ್ತೇವೆ, ಆದರೆ ಅವರು ಅದನ್ನು ವಸೂಲಿ ಎಂದು ಲೇಬಲ್ ಮಾಡಿದರೆ, ಅವರು ವಿವರಗಳನ್ನು ನೀಡಬೇಕು ಎಂದು ಶಾ ಅವರು ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ. +ಇತರ ಪಕ್ಷಗಳಂತೆ ಬಿಜೆಪಿಯು ತಮ್ಮ ದಾನಿಗಳ ಪಟ್ಟಿಯನ್ನು ಬಹಿರಂಗಪಡಿಸುತ್ತದೆಯೇ ಎಂದು ಕೇಳಿದಾಗ, ನಾನು ನಿಮಗೆ ಭರವಸೆ ನೀಡುತ್ತೇನೆ, ವಿವರಗಳು ಹೊರಬಂದ ನಂತರ ಇಂಡಿಯಾ ಮೈತ್ರಿಕೂಟವು ಸಾರ್ವಜನಿಕರನ್ನು ಎದುರಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ. +ಭಾರತೀಯ ರಾಜಕೀಯದಲ್ಲಿ ಕಪ್ಪುಹಣದ ಪ್ರಾಬಲ್ಯವನ್ನು ಕೊನೆಗೊಳಿಸಲು ಚುನಾವಣಾ ಬಾಂಡ್ಗಳನ್ನು ಪರಿಚಯಿಸಲಾಯಿತು, ಕಪ್ಪುಹಣವನ್ನು ನಿರ್ಮೂಲನೆ ಮಾಡಲು ಅವುಗಳನ್ನು ತರಲಾಯಿತು. ಈಗ ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಮತ್ತು ಕಪ್ಪುಹಣ ವಾಪಸಾತಿಗೆ ನಾನು ಭಯಪಡುತ್ತೇನೆ ಎಂದು ಶಾ ಹೇಳಿದರು. +ಬಾಂಡ್ ರದ್ದುಪಡಿಸುವ ಬದಲು ಸುಧಾರಣೆಗಳು ಇರಬೇಕು ಎಂದು ನಾನು ನಂಬುತ್ತೇನೆ, ಆದರೆ ಇದು ಯಾವುದೇ ಮಹತ್ವವನ್ನು ಹೊಂದಿಲ್ಲ, ಏಕೆಂದರೆ ಉನ್ನತ ನ್ಯಾಯಾಲಯವು ತನ್ನ ತೀರ್ಪನ್ನು ನೀಡಿದೆ ಮತ್ತು ನಾನು ಅದನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. +ಆದರೆ ನನ್ನ ವೈಯಕ್ತಿಕ ಅಭಿಪ್ರಾಯವೆಂದರೆ ಬಾಂಡ್ಗಳು ರಾಜಕೀಯದಲ್ಲಿ ಕಪ್ಪುಹಣವನ್ನು ಬಹುತೇಕ ಅಂತ್ಯಗೊಳಿಸಿವೆ. ಇದಕ್ಕಾಗಿಯೇ ರಾಹುಲ್ ಗಾಂ„ ನೇತೃತ್ವದ ಇಡೀ ಇಂಡಿಯಾ ಬಣವು ಬಾಂಡ್ಗಳಿಗೆ ವಿರುದ್ಧವಾಗಿತ್ತು ಮತ್ತು ಅವರು ಮತ್ತೊಮ್ಮೆ ರಾಜಕೀಯವನ್ನು ಆಳಲು ಹಳೆಯ ಕಟ್ ಮನಿ ವ್ಯವಸ್ಥೆಯನ್ನು ಬಯಸಿದ್ದರು ಎಂದಿದ್ದಾರೆ. \ No newline at end of file diff --git a/eesanje/url_47_141_11.txt b/eesanje/url_47_141_11.txt new file mode 100644 index 0000000000000000000000000000000000000000..50e65d271148a66e23685311ecda38197560b514 --- /dev/null +++ b/eesanje/url_47_141_11.txt @@ -0,0 +1,4 @@ +ಇಂದು ಮುಂಜಾನೆ ಎರಡು ಬಾರಿ ಕಂಪಿಸಿದ ಅರುಣಾಚಲ +ದಪಶ್ಚಿಮ ಕಮೆಂಗ್,ಮಾ.21-ಅರುಣಾಚಲ ಪ್ರದೇಶದಲ್ಲಿ ಇಂದು ಮುಂಜಾನೆ ಎರಡು ಭೂಕಂಪಗಳು ವರದಿಯಾಗಿವೆ ಎಂದು ಭೂಕಂಪಶಾಸದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪವು 01:49 ಕ್ಕೆ ಸಂಭವಿಸಿದೆ. +ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77 ರಲ್ಲಿ 10 ಕಿಲೋಮೀಟರ್ ಆಳದಲ್ಲಿದೆ. ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ ನಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು. ಮೊದಲ ಕಂಪನವಾದ ಕೇವಲ ಎರಡು ಗಂಟೆಗಳ ನಂತರ ಮತ್ತೆ 03:40 ಕ್ಕೆ ಎರಡನೇ ಭೂಕಂಪನ ವರದಿಯಾಗಿದೆ. +ಈ ಭೂಕಂಪವು 3.4 ರ ತೀವ್ರತೆಯನ್ನು ಹೊಂದಿದ್ದು, ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನಲ್ಲಿ ಕೇಂದ್ರೀಕೃತವಾಗಿತ್ತು. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದೊಂದಿಗೆ ಅಕ್ಷಾಂಶ 27.46 ಮತ್ತು ರೇಖಾಂಶ 92.82 ನಲ್ಲಿತ್ತು ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್ ಮಾಡಿದೆ. \ No newline at end of file diff --git a/eesanje/url_47_141_12.txt b/eesanje/url_47_141_12.txt new file mode 100644 index 0000000000000000000000000000000000000000..154108c3c28613c13066d4d1d4dbb7a9ed98be65 --- /dev/null +++ b/eesanje/url_47_141_12.txt @@ -0,0 +1,4 @@ +ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ : ಪುಟ್ಟರಾಜು +ಬೆಂಗಳೂರು,ಮಾ.21-ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ. +ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಿಂದ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರನ್ನು ಭಾರೀ ಬಹುಮತದಿಂದ ಗೆಲ್ಲಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರೆ ಸಾಕು. ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡು ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ನಾವೇ ಹೊರುತ್ತೇವೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_141_2.txt b/eesanje/url_47_141_2.txt new file mode 100644 index 0000000000000000000000000000000000000000..20073c5868835d32e390838a4b1016c2eab00682 --- /dev/null +++ b/eesanje/url_47_141_2.txt @@ -0,0 +1,10 @@ +ಭಾರತದ ಮೊದಲ ಮರುಬಳಕೆ ಉಡಾವಣಾ ವಾಹನ ‘ಪುಷ್ಪಕ್’ ಲ್ಯಾಂಡಿಂಗ್ ಪ್ರಯೋಗ ಯಶಸ್ವಿ +ನವದೆಹಲಿ,ಮಾ.22-ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಕರ್ನಾಟಕದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್(ಎಟಿಆರ್)ನಲ್ಲಿ ಪುಷ್ಪಕ ಆರ್‍ಎಲ್‍ವಿ (ಮರು ಬಳಕೆ ಉಡಾವಣಾ ವಾಹನ) ಲ್ಯಾಂಡಿಂಗ್ ಪ್ರಯೋಗ ಯಶಸ್ವಿಯಾಗಿದ್ದು, ಮತ್ತೊಂದು ಇತಹಾಸ ಸೃಷ್ಟಿಸಿದೆ. +ಬಾಹ್ಯಾಕಾಶ ಪ್ರವೇಶವನ್ನು ಅತ್ಯಂತ ಕೈಗೆಟುಕುವಂತೆ ಮಾಡುವಲ್ಲಿ ಇದು ಭಾರತದ ದಿಟ್ಟ ಹೆಜ್ಜೆ. ಕಕ್ಷೆಯಲ್ಲಿನ ಉಪಗ್ರಹಗಳಿಗೆ ಇಂಧನ ತುಂಬುವುದು, ನವೀಕರಣಕ್ಕಾಗಿ ಕಕ್ಷೆಯಿಂದ ಉಪಗ್ರಹಗಳನ್ನು ಹಿಂಪಡೆಯುವುದನ್ನು ಈ ವಾಹನದ ಮೂಲಕ ಮಾಡಬಹುದು. ಬಾಹ್ಯಾಕಾಶ ಅವಶೇಷಗಳನ್ನು ಕಡಿಮೆ ಮಾಡಲು ಇದು ಅನುಕೂಲಕಾರಿ ಎಂದು ಇಸ್ರೋ ತಿಳಿಸಿದೆ. +ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, -02 ಆರ್‍ಎಲ್‍ವಿಯನ್ನು ಬೆಳಿಗ್ಗೆ 7 ಗಂಟೆಗೆ ಚಳ್ಳಕೆರೆ ರನ್ ವೇಯಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಇದು ಆರ್‍ಲ್‍ವಿಯ ಮೂರನೇ ಲ್ಯಾಂಡಿಂಗ್ ಮಿಷನ್ ಆಗಿದೆ. +ಇಸ್ರೋ ಈ ಹಿಂದಿನ ಕಾರ್ಯಾಚರಣೆಗಳನ್ನು 2016 ಹಾಗೂ 2023ರ ಏಪ್ರಿಲ್‍ನಲ್ಲಿ ಯಶಸ್ವಿಯಾಗಿ ನಡೆಸಿತ್ತು. ರಾಮಾಯಣದಲ್ಲಿ ಬರುವ ಪೌರಾಣಿಕ ಬಾಹ್ಯಾಕಾಶ ನೌಕೆಯಂತೆಯೇ (ಆರ್‍ಲ್‍ವಿ) ಪುಷ್ಪಕ್ ಎಂಬ ಹೆಸರನ್ನಿಡಲಾಗಿದೆ. -01 ಮಿಷನ್ ಕಳೆದ ವರ್ಷ ಪೂರ್ಣಗೊಂಡ ನಂತರ, -02 ಲ್ಯಾಂಡಿಂಗ್ ಸಾಮಥ್ರ್ಯವನ್ನು ಪರಿಶೀಲಿಸಲಾಯಿತು. ಅದರಂತೆ ಯಶಸ್ವಿಯಾಗಿ ರನ್‍ವೇ ಮೇಲೆ ಇಳಿದಿದೆ. +ಭಾರತೀಯ ವಾಯುಪಡೆಯ ಚಿನೂಕ್ ಹೆಲಿಕಾಪ್ಟರ್ ಮೂಲಕ ಉಡಾವಣಾ ವಾಹನ ಪುಷ್ಪಕ್ ಅನ್ನುಸುಮಾರು 4.5 ಕಿ.ಮೀ. ಎತ್ತರಕ್ಕೆ ಕೊಂಡೊಯ್ಯಲಾಯಿತು. ನಂತರ ಪೂರ್ವನಿರ್ಧರಿತ ಪಿಲ್‍ಬಾಕ್ಸ್ ನಿಯತಾಂಕಗಳನ್ನು ಸರಿಯಾಗಿಸಿದ ಬಳಿಕ ಉಡಾವಣೆ ಮಾಡಲಾಗಿದೆ.ಈ ಯೋಜನೆಯು ಬಾಹ್ಯಾಕಾಶಕ್ಕೆ ಕಡಿಮೆ ವೆಚ್ಚದ ಪ್ರವೇಶವನ್ನು ಸಕ್ರಿಯಗೊಳಿಸಲು ಸಂಪೂರ್ಣ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನಕ್ಕಾಗಿ ಪೂರಕ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳ ಭಾಗ ಎಂದು ಇಸ್ರೋ ಹೇಳಿದೆ. +ಈ ಎರಡನೇ ಮಿಷನ್‍ನೊಂದಿಗೆ, ನ್ಯಾವಿಗೇಷನ್, ಕಂಟ್ರೋಲ್ ಸಿಸ್ಟಮ್ಸ್, ಲ್ಯಾಂಡಿಂಗ್ ಗೇರ್ ಮತ್ತು ಡಿಸೆಲರೇಶನ್ ಸಿಸ್ಟಮ್‍ಗಳಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಇಸ್ರೋ ಮರು-ಮೌಲ್ಯಮಾಪನ ಮಾಡಿದೆ. ಇದು ಆಸ್ಪೇಸ್ ರಿಟರ್ನ್ ವಾಹನದ ಹೆಚ್ಚಿನ-ವೇಗದ ಸ್ವಾಯತ್ತ ಲ್ಯಾಂಡಿಂಗ್ ಅನ್ನು ನಿರ್ವಹಿಸಲು ಅವಶ್ಯಕವಾಗಿದೆ. +ಈ ಎರಡನೇ ಮಿಷನ್‍ನೊಂದಿಗೆ, ನ್ಯಾವಿಗೇಷನ್, ಕಂಟ್ರೋಲ್ ಸಿಸ್ಟಮ್ಸ್, ಲ್ಯಾಂಡಿಂಗ್ ಗೇರ್ ಮತ್ತು ಡಿಸೆಲರೇಶನ್ ಸಿಸ್ಟಮ್‍ಗಳಲ್ಲಿ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಇಸ್ರೋ ಮರು-ಮೌಲ್ಯಮಾಪನ ಮಾಡಿದೆ. ಇದು ಆಸ್ಪೇಸ್ ರಿಟರ್ನ್ ವಾಹನದ ಹೆಚ್ಚಿನ-ವೇಗದ ಸ್ವಾಯತ್ತ ಲ್ಯಾಂಡಿಂಗ್ ಅನ್ನು ನಿರ್ವಹಿಸಲು ಅವಶ್ಯಕವಾಗಿದೆ. +ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ () ಜೊತೆಗೆ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ ಸೆಂಟರ್ () ಮತ್ತು ಐಖ್ಕu ಇನರ್ಷಿಯಲ್ ಸಿಸ್ಟಮ್ಸ್ ಯೂನಿಟ್ () ಮೂಲಕ ಈ ಕಾರ್ಯಾಚರಣೆಯನ್ನು ಸಾಸಲಾಗಿದೆ. , , ಮತ್ತು CEMILACಸೇರಿದಂತೆ ವಿವಿಧ ಏಜೆನ್ಸಿಗಳ ಸಹಯೋಗವು ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದರು. +ಈ ಯಶಸ್ಸಿನ ಮೂಲಕ, ಎಸ್‍ಆರೊ ಟೆನಿನಲ್ ಹಂತದ ಕುಶಲತೆ, ಲ್ಯಾಂಡಿಂಗ್ ಮತ್ತು ಇಂಧನ ನಿರ್ವಹಣೆಯನ್ನು ಸಂಪೂರ್ಣ ಸ್ವಾಯತ್ತ ಕ್ರಮದಲ್ಲಿ ಕರಗತ ಮಾಡಿಕೊಳ್ಳಬಹುದು, ಇದು ಭವಿಷ್ಯದ ಕಕ್ಷೀಯ ಮರುಪ್ರವೇಶ ಕಾರ್ಯಾಚರಣೆಗಳ ಕಡೆಗೆ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಲ್ಯಾಂಡಿಂಗ್ ಎಕ್ಸ್‍ಪೆರಿಮೆನ್‍ನ ನಿರ್ದೇಶಕ ವಿಎಸ್‍ಎಸ್‍ಸಿ ಡಾ ಎಸ್.ಉನ್ನಿಕೃಷ್ಣನ್ ನಾಯರ್ ಹೇಳಿದ್ದಾರೆ. \ No newline at end of file diff --git a/eesanje/url_47_141_3.txt b/eesanje/url_47_141_3.txt new file mode 100644 index 0000000000000000000000000000000000000000..65cc01f1dca5db4892787795b9b913d182f10f00 --- /dev/null +++ b/eesanje/url_47_141_3.txt @@ -0,0 +1,4 @@ +ಮನೆಯೊಂದರಲ್ಲಿ ನಿಷೇಧಿತ 2000 ಮುಖಬೆಲೆಯ 7 ಕೋಟಿ ರೂ. ಮೌಲ್ಯದ ನೋಟುಗಳು ಪತ್ತೆ +ಕಾಸರಗೋಡು,ಮಾ.22-ಮನೆಯೊಂದರ ಮೇಲೆ ಪೊಲೀಸರ ತಂಡ ದಾಳಿ ನಡೆಸಿದಾಗ ನಿಷೇಧಗೊಂಡಿರುವ 2000 ಮುಖಬೆಲೆಯ ಬರೋಬ್ಬರಿ 7 ಕೋಟಿ ರೂ. ನಗದು ಹಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯ ಗುರಪುರದ ಅಂಬಲತ್ತರ ಗ್ರಾಮದ ಮನೆಯೊಂದರಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿರುವ 2000 ಮುಖಬೆಲೆಯ ಸುಮಾರು 7 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ. +ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸದ್ಯ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದಾರೆ. ದುಬೈನಲ್ಲಿ ಉದ್ಯೋಗಿ ಕೆಪಿ ಬಾಬು ರಾಜ್ ಅವರ ಮಾಲೀಕತ್ವದ ಮನೆಯಲ್ಲಿ ಈ ಹಣ ಪತ್ತೆಯಾಗಿದ್ದು ಇವರು ಪಾಣತ್ತೂರು ನಿವಾಸಿ ಅಬ್ದುಲ್ ರಜಾಕ್ ಎಂಬುವವರಿಗೆ ಮನೆ ಬಾಡಿಗೆಗೆ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಕಳೆದ ಮೂರು ದಿನಗಳಿಂದ ಪೊಲೀಸರು ಮನೆಯ ಮೇಲೆ ನಿಗಾ ಇರಿಸಿದ್ದರು ನಂತರ ದಾಳಿ ನಡೆಸಿ ಎರಡು ಕೊಠಡಿಗಳಲ್ಲಿ ಥರ್ಮಾಕೋಲ್ ಬಾಕ್ಸ್, ರಟ್ಟಿನ ಬಾಕ್ಸ್ ಮತ್ತು ಗೋಣಿಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. \ No newline at end of file diff --git a/eesanje/url_47_141_4.txt b/eesanje/url_47_141_4.txt new file mode 100644 index 0000000000000000000000000000000000000000..2969d69654e2586a5951965b4d633948407cc120 --- /dev/null +++ b/eesanje/url_47_141_4.txt @@ -0,0 +1,4 @@ +ವಿವಾದಾತ್ಮಕ ಭೋಜ್‍ಶಾಲಾ ಸಂಕೀರ್ಣದ ಸಮೀಕ್ಷೆ ಆರಂಭ +ಧಾರ್, ಮಾ. 22 (ಪಿಟಿಐ) :ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಧಾರ್ ಜಿಲ್ಲೆಯಲ್ಲಿ ನೆಲೆಸಿರುವ ವಿವಾದಾತ್ಮಕ ಭೋಜ್‍ಶಾಲಾ ಅಥವಾ ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‍ಐ) ಇಂದಿನಿಂದ ಆರಂಭಿಸಿದೆ. +ಹತ್ತಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡ ಎಎಸ್‍ಐ ತಂಡ ಬೆಳಗ್ಗೆ ಸಂಕೀರ್ಣವನ್ನು ತಲುಪಿತು. ಇದರೊಂದಿಗೆ ಹಿರಿಯ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಇದ್ದರು. ಮಧ್ಯಪ್ರದೇಶದ ಹೈಕೋರ್ಟ್ ಮಾರ್ಚ್ 11 ರಂದು ಎಎಸ್‍ಐಗೆ ಆರು ವಾರಗಳಲ್ಲಿ ಭೋಜಶಾಲಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸುವಂತೆ ಸೂಚಿಸಿತು, ಇದು ಮಧ್ಯಕಾಲೀನ ಯುಗದ ಸ್ಮಾರಕವಾಗಿದ್ದು, ಹಿಂದೂಗಳು ವಾಗ್ದೇವಿ (ಸರಸ್ವತಿ) ದೇವಿಯ ದೇವಾಲಯವೆಂದು ನಂಬುತ್ತಾರೆ ಮತ್ತು ಮುಸ್ಲಿಂ ಸಮುದಾಯವು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ. +ಕಳೆದ ಏಪ್ರಿಲ್ 7, 2003 ರಂದು ಹೊರಡಿಸಲಾದ ಎಎಸ್‍ಐ ಆದೇಶದ ಪ್ರಕಾರ, ಹಿಂದೂಗಳಿಗೆ ಪ್ರತಿ ಮಂಗಳವಾರ ಭೋಜಶಾಲಾ ಸಂಕೀರ್ಣದೊಳಗೆ ಪೂಜೆ ಮಾಡಲು ಅನುಮತಿಸಲಾಗಿದೆ, ಆದೇ ರೀತಿ ಮುಸ್ಲಿಮರು ಶುಕ್ರವಾರದಂದು ಸ್ಥಳದಲ್ಲಿ ನಮಾಜ್ ಮಾಡಲು ಅನುಮತಿಸಲಾಗಿದೆ. \ No newline at end of file diff --git a/eesanje/url_47_141_5.txt b/eesanje/url_47_141_5.txt new file mode 100644 index 0000000000000000000000000000000000000000..755f7b674234ec995f415528e02ec096c6e29356 --- /dev/null +++ b/eesanje/url_47_141_5.txt @@ -0,0 +1,6 @@ +ಕೇಜ್ರಿವಾಲ್ ಬಂಧನ ವಿರೋಧಿಸಿ ಪ್ರತಿಭಟಿಸುತ್ತಿದ್ದ ಎಎಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ +ಮುಂಬೈ, ಮಾ 22 (ಪಿಟಿಐ) :ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಮುಂಬೈ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. +ಎಎಪಿಯ ಮಹಾರಾಷ್ಟ್ರ ಅಧ್ಯಕ್ಷೆ ಪ್ರೀತಿ ಶರ್ಮಾ ಮೆನನ್ ಅವರು, ತಮ್ಮ ಕಾರ್ಯಕರ್ತರನ್ನು ತಳ್ಳಲಾಯಿತು ಮತ್ತು ಥಳಿಸಲಾಯಿತು ಮತ್ತು ರಾತ್ರಿಯಲ್ಲಿ ಮಹಿಳೆಯರನ್ನು ಬಂಧಿಸಲಾಯಿತು ಎಂದು ಆರೋಪಿಸಿದ್ದಾರೆ. ಇಂದು ನಂಬಲಾಗದ ಪೊಲೀಸ್ ದೌರ್ಜನ್ಯ. ಮೋದಿಯವರ ಇಡಿಯಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿರುವುದನ್ನು ಪ್ರತಿಭಟಿಸುವಾಗ ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆನನ್ ಎಕ್ಸ್ ಮಾಡಿದ್ದಾರೆ. +ಎಎಪಿಯ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಿ ಇಲ್ಲಿನ ಏಜೆನ್ಸಿಯ ಪ್ರಧಾನ ಕಚೇರಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏಜೆನ್ಸಿಯ ಯಾವುದೇ ದಬ್ಬಾಳಿಕೆಯ ಕ್ರಮದಿಂದ ಎಎಪಿ ರಾಷ್ಟ್ರೀಯ ಸಂಚಾಲಕರಿಗೆ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಹಾಲಿ ಮುಖ್ಯಮಂತ್ರಿಯ ಮೊದಲ ಬಂಧನವಾಗಿದೆ. +ಲೋಕಸಭೆ ಚುನಾವಣೆಯ ಪ್ರಚಾರದ ಮಧ್ಯೆ 55 ವರ್ಷದ ನಾಯಕನ ಬಂಧನವು ಎಎಪಿಯಿಂದ ಕೋಪದ ಪ್ರತಿಕ್ರಿಯೆಗಳನ್ನು ಉಂಟುಮಾಡಿತು. ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪಕ್ಷ ಹೇಳಿದೆ. ಅಗತ್ಯವಿದ್ದರೆ, ಅವರು ಜೈಲಿನಿಂದ ಸರ್ಕಾರವನ್ನು ನಡೆಸುತ್ತಾರೆ ಎನ್ನಲಾಗಿದೆ. +ಇಂಡಿಯಾ ಬಣದ ವಿವಿಧ ಘಟಕಗಳು ಕೇಜ್ರಿವಾಲ್ ಅವರ ಬಂಧನವನ್ನು ಖಂಡಿಸಿದರು ಮತ್ತು ಮುಂಬರುವ ಲೋಕಸಭಾ ಚುನಾವಣೆಯ -ಫಲಿತಾಂಶದ ಬಗ್ಗೆ ಬಿಜೆಪಿ ಭಯಪಡುತ್ತಿದೆ ಮತ್ತು ಪ್ರತಿಪಕ್ಷಗಳಿಗೆ ಸಮಸ್ಯೆಗಳನ್ನು ಸೃಷ್ಟಿಸಲು ಭಯಭೀತರಾಗಿ ವರ್ತಿಸುತ್ತಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_141_6.txt b/eesanje/url_47_141_6.txt new file mode 100644 index 0000000000000000000000000000000000000000..6d258ed8147c860e4a5e073b46141667bbb9f54d --- /dev/null +++ b/eesanje/url_47_141_6.txt @@ -0,0 +1,4 @@ +ಮನೆಯಲ್ಲಿ ರಾಸಾಯನಿಕಗಳ ಪ್ರಯೋಗದ ವೇಳೆ ಸ್ಫೋಟ, ಬಾಲಕ ಸಾವು +ಚೆನ್ನೈ, ಮಾ.22 (ಪಿಟಿಐ)– ಮನೆಯಲ್ಲಿ ಕೆಲವು ರಾಸಾಯನಿಕಗಳ ಪ್ರಯೋಗ ನಡೆಸುತ್ತಿದ್ದಾಗ ಸಂಭವಿಸಿದ ಸ್ಪೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಲ್ಲಿನ ಕೊಳತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದಿದೆ.ಸ್ಥಳೀಯ ಕಾಲೇಜಿನಲ್ಲಿ 12 ನೇ ತರಗತಿ ವಿದ್ಯಾರ್ಥಿಯಾಗಿದ್ದ ಬಾಲಕ ತನ್ನಮನೆಯ ಕೊಠಡಿಯಲ್ಲಿ ಶೈಕ್ಷಣಿಕ ಕಾರ್ಯದಲ್ಲಿ ಈ ಪ್ರಯೋಗವನ್ನು ನಡೆಸಿದ್ದಾಗ ಈ ದುರಂತ ಸಂಭವಿಸಿದೆ. +ರಾಸಾಯನಿಕಗಳು ಸ್ಪೋಟಗೊಂಡಾಗ ಕೊಠಡಿಯ ಗೋಡೆ ಕುಸಿದಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ನಂತರ, ಮೃತರು ಬಳಸಿದ ರಾಸಾಯನಿಕ ಪದಾರ್ಥಗಳನ್ನು ತಜ್ಞರು ಪರೀಕ್ಷಿಸುತ್ತಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. +ರಾಸಾಯನಿಕ ಪದಾರ್ಥಗಳೊಂದಿಗೆ ತನ್ನ ನಿವಾಸದಲ್ಲಿ ನಿರ್ಲಕ್ಷ್ಯದ ರೀತಿಯಲ್ಲಿ ಕೆಲವು ಪ್ರಯೋಗಗಳನ್ನು ನಡೆಸಿದಂತೆ ತೋರುತ್ತಿದೆ, ಈ ಹಿನ್ನೆಲೆಯಲ್ಲಿ, ಅಸ್ವಾಭಾವಿಕ ಸಾವಿನ ಪ್ರಕರಣವನ್ನುದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ವಿಧಿವಿಜ್ಞಾನ ವಿಭಾಗದ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ ಮತ್ತು ರಾಸಾಯನಿಕ ಪದಾರ್ಥಗಳನ್ನು ವಿಶ್ಲೇಷಿಸುತ್ತಿದ್ದಾರೆ. ಪ್ರಕರಣವು ತನಿಖೆ ನಂತರ ಹೆಚ್ಚನ ಮಾಹಿತಿ ಸಿಗಲಿದೆ. \ No newline at end of file diff --git a/eesanje/url_47_141_7.txt b/eesanje/url_47_141_7.txt new file mode 100644 index 0000000000000000000000000000000000000000..6a1da6d02d6b3fd1c961d55b4c1e0399616ab7bd --- /dev/null +++ b/eesanje/url_47_141_7.txt @@ -0,0 +1,6 @@ +ಅಸ್ಸಾಂನಲ್ಲಿ ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ಸೇರಿದ ಅಲ್ಪಸಂಖ್ಯಾತ ಮುಖಂಡ +ಗುವಾಹಟಿ,ಮಾ.21-ಅಸ್ಸಾಂನಲ್ಲಿ ಲೋಕಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯ ಅಲ್ಪಸಂಖ್ಯಾತ ಉನ್ನತ ನಾಯಕ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಅಮಿನುಲ್ ಹಕ್ ಲಸ್ಕರ್ 2016 ರಲ್ಲಿ ಅಸ್ಸಾಂ ಬಿಜೆಪಿಯ ಮೊದಲ ಅಲ್ಪಸಂಖ್ಯಾತ ಶಾಸಕರಾಗಿದ್ದವರು, ಇದೀಗ ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. +ಒಮ್ಮೆ ಅಸ್ಸಾಂ ವಿಧಾನಸಭೆಯ ಉಪ ಸ್ಪೀಕರ್ ಆಗಿದ್ದ ಲಸ್ಕರ್ ಅವರನ್ನು ಅಲ್ಪಸಂಖ್ಯಾತರ ಅಸ್ಸಾಂ ರಾಜ್ಯ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 2021 ರಲ್ಲಿ, ಅವರು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ -ಫ್ರಂಟ್ ಕರೀಮ್ ಉದ್ದೀನ್ ಬರ್ಭುಯಾ ವಿರುದ್ಧ ಸೋತರು. +ಅಸ್ಸಾಂನಲ್ಲಿ ಬಿಜೆಪಿ ತನ್ನ ರಾಜಕೀಯ ಸಿದ್ಧಾಂತವನ್ನು ಕಳೆದುಕೊಂಡಿದ್ದರಿಂದ ರಾಜೀನಾಮೆ ನೀಡಲು ನಿರ್ಧರಿಸಿದೆ ಎಂದು ಅವರು ತಿಳಿಸಿದ್ದಾರೆ. ನಾನು 13 ವರ್ಷಗಳಿಂದ ಬಿಜೆಪಿಯಲ್ಲಿದ್ದೆ, ಅಂದಿನ ಬಿಜೆಪಿ ಮತ್ತು ಈಗ ಬಹಳಷ್ಟು ವಿಭಿನ್ನವಾಗಿದೆ, ಆಗ ಬಿಜೆಪಿ ಬದಲಾವಣೆಯ ಬಗ್ಗೆ ಮಾತನಾಡುತ್ತಿತ್ತು ಎಂದು ಅವರು ಹೇಳಿದರು.ಅವರು ಕಾಂಗ್ರೆಸ್ ಪಕ್ಷದ ಅಸ್ಸಾಂ ಉಸ್ತುವಾರಿ ಜಿತೇಂದ್ರ ಸಿಂಗ್ ಅಲ್ವಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು. +ಅವರ ನಿರ್ಗಮನವು ಅಲ್ಪಸಂಖ್ಯಾತ ಸಮುದಾಯದಲ್ಲಿ ಆಡಳಿತ ಪಕ್ಷದ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಲಸ್ಕರ್ ಎಚ್ಚರಿಸಿದ್ದಾರೆ ಮತ್ತು ಬಿಜೆಪಿಯ ಸಿದ್ಧಾಂತವು ಈಗ ಬದ್ರುದ್ದೀನ್ ಅಜ್ಮಲ್ ಅವರ ಎಐಯುಡಿಎ-ïನಂತೆಯೇ ಆಗುತ್ತಿದೆ ಎಂದು ಆರೋಪಿಸಿದ್ದಾರೆ. +ನಾನು 2016 ರಲ್ಲಿ ಬಿಜೆಪಿ ಶಾಸಕನಾಗಿದ್ದಾಗ, ನಾನು ಮುಸ್ಲಿಂ ಸಮುದಾಯದಿಂದ ಈ ಪ್ರದೇಶದಾದ್ಯಂತ ಒಬ್ಬನಾಗಿದ್ದೆ ಆದರೆ ಈಗ ನಾನು ಅದನ್ನು ತೊರೆದಿರುವುದರಿಂದ ಅಸ್ಸಾಂನ ಮುಸ್ಲಿಮರಲ್ಲಿ ಬಿಜೆಪಿಯ ವಿಶ್ವಾಸಾರ್ಹತೆಗೆ ಹಾನಿಯಾಗುತ್ತದೆ. ಬಿಜೆಪಿ ಈಗ ಅಸ್ಸಾಂನಲ್ಲಿ ಎಐಯುಡಿಎಫ್ ಜೊತೆ ಕೈಜೋಡಿಸಿದೆ ಎಂದು ಅವರು ಹೇಳಿದರು. ಮುಂಬರುವ ಲೋಕಸಭೆ ಚುನಾವಣೆಗೆ ಅಸ್ಸಾಂನಲ್ಲಿ ಏಪ್ರಿಲ್ 19, ಏಪ್ರಿಲ್ 26 ಮತ್ತು ಮೇ 7 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. \ No newline at end of file diff --git a/eesanje/url_47_141_8.txt b/eesanje/url_47_141_8.txt new file mode 100644 index 0000000000000000000000000000000000000000..530e10885a93591ab2eefd3e2e2c6b494ea769c3 --- /dev/null +++ b/eesanje/url_47_141_8.txt @@ -0,0 +1,8 @@ +ದೆಹಲಿ ಮಾಲಿನ್ಯದ ಬಗ್ಗೆ ಕೇಜ್ರಿವಾಲ್ ಕಾಲೇಳೆದ ಲೆಫ್ಟಿನೆಂಟ್ ಗವರ್ನರ್ +ನವದೆಹಲಿ,ಮಾ.21-ಜಗತ್ತಿನ ಅತ್ಯಂತ ಕಲುಷಿತ ರಾಜಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೆಹಲಿ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಪತ್ರ ಬರೆದಿದ್ದು, ಇದು ರಾಷ್ಟ್ರೀಯ ಅವಮಾನ ಮತ್ತು ಆರೋಗ್ಯ ತುರ್ತು ಪರಿಸ್ಥಿತಿಯಂತಹ ಗಂಭೀರ ಚಿಂತನೆಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. +ವಿಶ್ವ ವಾಯು ಗುಣಮಟ್ಟ ವರದಿ 2023 ಕಠಿಣ ಚಿತ್ರವನ್ನು ಚಿತ್ರಿಸುತ್ತದೆ ಎಂದು ಹೇಳುವ ಮೂಲಕ ಮಾಲಿನ್ಯದ ವಿಷಯದ ಬಗ್ಗೆ ಕೇಜ್ರಿವಾಲ್ ಸರ್ಕಾರದ ವಿರುದ್ಧ ಸಕ್ಸೇನಾ ವಾಗ್ದಾಳಿ ನಡೆಸಿದ್ದಾರೆ. ಈ ಸಂಶಯಾಸ್ಪದ ವ್ಯತ್ಯಾಸವು ರಾಷ್ಟ್ರೀಯ ಅವಮಾನ ಮತ್ತು ಸಾಮೂಹಿಕ ಕಾಳಜಿಯ ವಿಷಯವಾಗಿದೆ. +ದೆಹಲಿಯು 2022 ರಲ್ಲಿ ವಿಶ್ವದ ಎರಡನೇ ಅತ್ಯಂತ ಕಲುಷಿತ ರಾಜಧಾನಿ ಮತ್ತು 2021 ರಲ್ಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿಯಾಗಿರುವುದರಿಂದ, ಒಂಬತ್ತು ವರ್ಷಗಳ ಈ ವರದಿ ಕಾರ್ಡ್ ಎಂದು ನನಗೆ ಖಾತ್ರಿಯಿದೆ. ನಿಮ್ಮ ಸರ್ಕಾರವು ನೀವು ಹೆಮ್ಮೆಪಡುವಂತಹದ್ದಲ್ಲ. ದೆಹಲಿ ಮಾದರಿಯ ಬಗ್ಗೆ ಹೆಚ್ಚು ಮಾತನಾಡುವ ಹೊಗೆಯ ಮಬ್ಬು ಆವರಿಸಿದೆ ಎಂದು ಅವರು ಬರೆದಿದ್ದಾರೆ. +ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಎಲ್ಜಿ ಪತ್ರದ ಭಾಷೆಗೆ ಅಸಭ್ಯ, ಕಡಿವಾಣ ಮತ್ತು ನಿಂದನೆಯ ಗಡಿ ಎಂದು ಹೆಸರಿಸಿದೆ. ಇಂತಹ ಹೇಯ ಭಾಷೆಯ ಬಳಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಎಎಪಿ ಹೇಳಿಕೆಯಲ್ಲಿ ತಿಳಿಸಿದೆ.ಸಕ್ಸೇನಾ ಅವರು ಕಳೆದ ಎರಡು ವರ್ಷಗಳಲ್ಲಿ ವಾಯು ಮಾಲಿನ್ಯದ ಸಮಸ್ಯೆಯನ್ನು ಅವರು ಸೇರಿದಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು. +ಕಠಿಣ ಪ್ರಶ್ನೆಗಳು ಎದುರಾದಾಗಲೆಲ್ಲಾ ನಿಮ್ಮ ವಾಡಿಕೆಯಂತೆ ರಾಜಕೀಯ ದೂಷಣೆ ಆಟಕ್ಕೆ ಸಿಲುಕದಂತೆ ನಿಮ್ಮನ್ನು ತಡೆಯಲು ನಾನು ಇದನ್ನು ಒತ್ತಿಹೇಳುತ್ತಿದ್ದೇನೆ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. +ನಗರದ ಆಸ್ಪತ್ರೆಗಳಲ್ಲಿ ಮಕ್ಕಳು ಮತ್ತು ವೃದ್ಧರು ಉಸಿರಾಟದ ಕಾಯಿಲೆಗಳಿಂದ ಹೆಚ್ಚು ಬಳಲುತ್ತಿದ್ದಾರೆ ಎಂಬ ನಿಯಮಿತ ವರದಿಗಳಿವೆ. ಈ ಸ್ಥಿತಿಯು ವರ್ಷದಿಂದ ವರ್ಷಕ್ಕೆ ತುಂಬಾ ಆತಂಕಕಾರಿಯಾಗಿದೆ, ಇದು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಗಿಂತ ಕಡಿಮೆಯಿಲ್ಲ. ದೆಹಲಿಯ ಜನರ ಮೂಲಭೂತ ನೈಸರ್ಗಿಕ ಮತ್ತು ಮೂಲಭೂತ ಹಕ್ಕನ್ನು ಉಲ್ಲಂಸುತ್ತದೆ ಎಂದು ಅವರು ಹೇಳಿದರು. +ಚಳಿಗಾಲದಲ್ಲಿ ನಗರದಲ್ಲಿನ ಅಪಾಯಕಾರಿ ಗಾಳಿಯ ಗುಣಮಟ್ಟವನ್ನು ಸೂಚಿಸುತ್ತಾ ಸಕ್ಸೇನಾ ಯಾವುದೇ ಸ್ವಾಭಿಮಾನಿ ನಾಯಕ ಅದರ ಜವಾಬ್ದಾರಿಯನ್ನು ಹೊಂದಿದ್ದರು ಮತ್ತು ನಿರ್ಣಾಯಕ ಕ್ರಮಗಳು ಮತ್ತು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಈ ಕಾಳಜಿಯನ್ನು ಪರಿಹರಿಸಲು ಕಾಂಕ್ರೀಟ್ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. \ No newline at end of file diff --git a/eesanje/url_47_141_9.txt b/eesanje/url_47_141_9.txt new file mode 100644 index 0000000000000000000000000000000000000000..0b336854afc1e89cdd66fd4a6cbe61ee8ddd8434 --- /dev/null +++ b/eesanje/url_47_141_9.txt @@ -0,0 +1,8 @@ +ರೋಹಿಂಗ್ಯಾಗಳಿಗೆ ನಿರಾಶ್ರೀತರ ಸ್ಥಾನ ನೀಡಲು ಸಾಧ್ಯವಿಲ್ಲ : ಕೇಂದ್ರ ಸರ್ಕಾರ +ನವದೆಹಲಿ,ಮಾ.21-ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಅಭಿವೃದ್ಧಿಶೀಲ ರಾಷ್ಟ್ರವಾಗಿರುವ ಭಾರತವು ತನ್ನದೇ ಆದ ನಾಗರಿಕರಿಗೆ ಆದ್ಯತೆ ನೀಡಬೇಕಾಗಿದೆ ಹೀಗಾಗಿ ಅಕ್ರಮ ವಲಸೆ ಮತ್ತು ರೊಹಿಂಗ್ಯಾ ನಿರಾಶ್ರೀತರು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮ ಉಂಟು ಮಾಡುತ್ತಿರುವುದರಿಂದ ಅವರ ಬಿಡುಗಡೆ ಸಾಧ್ಯವಿಲ್ಲ ಎಂದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ, +ವಿದೇಶಿಯರ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬಂಧನದಲ್ಲಿರುವ ರೋಹಿಂಗ್ಯಾ ನಿರಾಶ್ರೀತರನ್ನು ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಗೆ ಪ್ರತಿಕ್ರಿಯೆಯಾಗಿ ನಿನ್ನೆ ಸಲ್ಲಿಸಲಾದ ಅಫಿಡವಿಟ್ನಲ್ಲಿ ಕೇಂದ್ರ ಸರ್ಕಾರ ಈ ವಿಷಯ ತಿಳಿಸಿದೆ.ರೋಹಿಂಗ್ಯಾ ನಿರಾಶ್ರೀತರು, ಅವರಲ್ಲಿ ಹೆಚ್ಚಿನವರು ಮುಸ್ಲಿಮರು, ಬೌದ್ಧರು ಬಹುಸಂಖ್ಯಾತ ಮ್ಯಾನ್ಮಾರ್ನಲ್ಲಿ ಜನಾಂಗೀಯ ಹಿಂಸಾಚಾರದಿಂದ ಓಡಿಹೋಗಿ ಭಾರತ, ಬಾಂಗ್ಲಾದೇಶ ಮತ್ತು ಇತರ ದೇಶಗಳಿಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. +ಈ ದೇಶಗಳಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನಗೈದು ಭಾರತಕ್ಕೆ ಪ್ರವೇಶಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕೇಂದ್ರದ ಅನುಷ್ಠಾನದ ಕುರಿತು ರೋಹಿಂಗ್ಯಾ ನಿರಾಶ್ರೀತರು ಈಗ ಹೊಸ ರಾಜಕೀಯ ಗದ್ದಲದ ಕೇಂದ್ರಬಿಂದುವಾಗಿದ್ದಾರೆ. +2015 ಕ್ಕಿಂತ ಮೊದಲು. ಸಿಎಎ ಅನುಷ್ಠಾನಕ್ಕೆ ಸಂಬಂ„ಸಿದಂತೆ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯನ್ನು ಎತ್ತಿದ್ದಕ್ಕಾಗಿ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ರೋಹಿಂಗ್ಯಾಗಳ ಪ್ರವೇಶವನ್ನು ವಿರೋಧ ಪಕ್ಷದ ನಾಯಕರು ಏಕೆ ವಿರೋಧಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. +ತನ್ನ ಅಫಿಡವಿಟ್ನಲ್ಲಿ, 1951 ರ ನಿರಾಶ್ರೀತರ ಸಮಾವೇಶ ಮತ್ತು ನಿರಾಶ್ರೀತರ ಸ್ಥಿತಿ, 1967 ಗೆ ಸಂಬಂಧಿಸಿದ ಪ್ರೋಟೋಕಾಲ್ ಗೆ ಭಾರತವು ಸಹಿ ಹಾಕಿಲ್ಲ ಎಂದು ಕೇಂದ್ರವು ಹೇಳಿದೆ. ಆದ್ದರಿಂದ, ಯಾವುದೇ ವರ್ಗದ ವ್ಯಕ್ತಿಗಳನ್ನು ನಿರಾಶ್ರೀತರೆಂದು ಗುರುತಿಸಬೇಕೇ ಅಥವಾ ಇಲ್ಲವೇ ಎಂಬುದು ಶುದ್ಧ ನೀತಿ ನಿರ್ಧಾರ ಎಂದು ಅದು ಹೇಳಿದೆ. +ಪರಿಣಾಮಕಾರಿಯಾಗಿ, ಅದರಲ್ಲಿರುವ ಪ್ರಾರ್ಥನೆಗಳು ಅಕ್ರಮ ರೋಹಿಂಗ್ಯಾ ವಲಸಿಗರಿಗೆ ಭಾರತದ ಭೂಪ್ರದೇಶದಲ್ಲಿ ವಾಸಿಸುವ ಹಕ್ಕನ್ನು ಒದಗಿಸಲು ಪ್ರಯತ್ನಿಸುತ್ತಿವೆ, ಇದು ಸ್ಪಷ್ಟವಾಗಿ ಆರ್ಟಿಕಲ್ 19 (ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ) ವಿರುದ್ಧವಾಗಿದೆ. ಆರ್ಟಿಕಲ್ 19 ಅದರ ಅನ್ವಯದಲ್ಲಿ ಮಾತ್ರ ಸೀಮಿತವಾಗಿದೆ ಎಂದು ಸಲ್ಲಿಸಲಾಗಿದೆ. ನಾಗರಿಕರಿಗೆ ಮತ್ತು ವಿದೇಶಿಯರಿಗೆ ಅನ್ವಯಿಸಲು ವಿಸ್ತರಿಸಲಾಗುವುದಿಲ್ಲ ಎಂದು ಅದು ಹೇಳಿದೆ. +ಶಾಸಕಾಂಗ ಚೌಕಟ್ಟಿನ ಹೊರಗೆ ಯಾವುದೇ ಸಮುದಾಯಕ್ಕೆ ನಿರಾಶ್ರೀತರ ಸ್ಥಾನಮಾನವನ್ನು ನೀಡಲಾಗುವುದಿಲ್ಲ ಮತ್ತು ಅಂತಹ ಘೋಷಣೆಯನ್ನು ನ್ಯಾಯಾಂಗ ಆದೇಶದಿಂದ ಮಾಡಲಾಗುವುದಿಲ್ಲ ಎಂದು ಕೇಂದ್ರವು ಹೇಳಿದೆ. \ No newline at end of file diff --git a/eesanje/url_47_142_1.txt b/eesanje/url_47_142_1.txt new file mode 100644 index 0000000000000000000000000000000000000000..940fd03629efdf54013784bc8f3a5d17f6544ade --- /dev/null +++ b/eesanje/url_47_142_1.txt @@ -0,0 +1,5 @@ +ಗ್ಯಾಸ್ ಸೋರಿಕೆಯಾಗಿ ಮನೆಗೆ ಬೆಂಕಿ, ಕುಟುಂಬದ ಐವರು ಸಜೀವ ದಹನ +ಜೈಪುರ, ಮಾ.21 (ಪಿಟಿಐ) – :ಮನೆಯಲ್ಲಿ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡು ಯುವ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ಸಜೀವ ದಹನವಾಗಿರುವ ದುರಂತ ಘಟನೆ ಇಲ್ಲಿ ನಡೆದಿದೆ. ಜೈಪುರದ ವಿಶ್ವಕರ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವರ ಮನೆಯ ಕೋಣೆಯಲ್ಲಿ ಬೆಂಕಿ ಜ್ವಾಲೆ ಆವರಿಸಿ ಇದರಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಸವನ್ನಪ್ಪಿದ್ದಾರೆ ಎಸ್‍ಎಚ್‍ಒ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. +ರಾಜೇಶ್ ಯಾದವ್ (25)ಅವರ ಪತ್ನಿ ರೂಬಿ (24), ಅವರ ಪುತ್ರಿಯರಾದ ಇಶು (7), ಖುಷಿಮಣಿ (4) ಮತ್ತು ಮಗ ದಿಲ್ಖುಷ್ (2) ಮೃತ ದುರ್ದೈವಿಗಳು. ಒಟ್ಟು 17-18 ಕೊಠಡಿಗಳಿರುವ ವಸತಿ ಕಟ್ಟಡದ ಕೊಠಡಿಯೊಂದರಲ್ಲಿ ಕುಟುಂಬ ಉಳಿದುಕೊಂಡಿತ್ತು,ಯಾದವ್, ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ನಾಲ್ಕು ತಿಂಗಳಿನಿಂದ ಅಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ +ಇಂದು ಬೆಳಗ್ಗೆ ರಾಜೇಶ್ ಯಾದವ್ ಗ್ಯಾಸ್ ಸಿಲಿಂಡರ್ ಬದಲಾಯಿಸುತ್ತಿದ್ದಾಗ ಸಿಲಿಂಡರ್‍ನಿಂದ ಗ್ಯಾಸ್ ಸೋರಿಕೆಯಾಗಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಇದರಿಂದ ಕುಟುಂಬದ ಎಲ್ಲರೂ ಸಜೀವ ದಹನ ಗೊಂಡಿದ್ದಾರೆ ಎಂದು ಅವರು ಹೇಳಿದರು.ರಾಜೇಶ್ ಯಾದವ್ ಬಿಹಾರದ ಮೋತಿಹಾರಿ ಮೂಲದವರು ಎಂದು ತಿಳಿದುಬ.ಂದಿದ್ದು ಘಟನೆಯಲ್ಲಿ ಬೇರೆ ಯಾವುದೇ ಕೊಠಡಿಗೆ ಹಾನಿಯಾಗಿಲ್ಲ ಅಗ್ನಿಶಾಮಕ ದಳ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯನ್ನು ನಂದಿಸಿದ್ದು,ಮೃತದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಮತ್ತು ಉಪಮುಖ್ಯಮಂತ್ರಿ ದಿಯಾ ಕುಮಾರಿ ಘಟನೆಯಲ್ಲಿ ಸಂತಾಪ ಸೂಚಿಸಿದ್ದಾರೆ. 5 ನಾಗರಿಕರು ಅಕಾಲಿಕ ಮರಣ ಹೊಂದಿದ ಸುದ್ದಿ ಹೃದಯ ವಿದ್ರಾವಕವಾಗಿದೆ, ಅಗಲಿದ ಆತ್ಮಗಳಿಗೆ ಶಾಂತಿ ಕೋರಿ ಮೃತರ ಇತರ ಕುಟುಂಬ ಸದಸ್ಯರಿಗೆ ಈ ದುರಂತದ ನೋವು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ \ No newline at end of file diff --git a/eesanje/url_47_142_10.txt b/eesanje/url_47_142_10.txt new file mode 100644 index 0000000000000000000000000000000000000000..6859cd2fd611f3c46f71073724f5c7502e88ef7f --- /dev/null +++ b/eesanje/url_47_142_10.txt @@ -0,0 +1,6 @@ +ತಮಿಳಿಗರ ಕ್ಷಮೆ ಕೋರಿದ ಶೋಭಾ ಕರದ್ಲಾಂಜೆ +ಬೆಂಗಳೂರು,ಮಾ.20-ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿಗೆ ಸೇರಿದವರು ಎಂದು ನೀಡಿದ್ದ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷಮೆಯಾಚಿಸಿದ್ದಾರೆ. +ನನ್ನ ತಮಿಳು ಸಹೋದರರು ಮತ್ತು ಸಹೋದರಿಯರಿಗೆ ನೋವುಂಟು ಮಾಡುವ ಉದ್ದೇಶದಿಂದ ನಾನು ಆ ಹೇಳಿಕೆ ನೀಡಿಲ್ಲ. ಆದರೂ ನನ್ನ ಹೇಳಿಕೆಗಳು ಕೆಲವರಿಗೆ ನೋವು ತಂದಿದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಶೋಭಾ ಎಕ್ಸ್ ಮಾಡಿದ್ದಾರೆ. +ಶಂಕಿತ ಆರೋಪಿ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದಿದ್ದು, ರಾಮೇಶ್ವರಂ ಕೆಫೆ ಸ್ಪೋಟ ಮಾಡಿದ್ದ ಎಂಬ ಮಾಹಿತಿ ಮೇರೆಗೆ ನಾನು ಆ ರೀತಿಯ ಹೇಳಿಕೆ ನೀಡಿದ್ದೇ. ನನ್ನ ಹೇಳಿಕೆಯಿಂದ ತಮಿಳುನಾಡಿನ ಯಾರಿಗಾದರೂ ನೋವುಂಟಾಗಿದ್ದಾರೆ ಅವರಿಗೆ ನನ್ನ ಹೃದಯದ ಆಳದಿಂದ ನಿಮ್ಮ ಕ್ಷಮೆ ಕೇಳುತ್ತೇನೆ ಎಂದು ಅವರು ಪೊಸ್ಟ್ ಮಾಡಿದ್ದಾರೆ. +ತಮಿಳಿಗರು ಕರ್ನಾಟಕದ ಸಾಮಾಜಿಕ ರಚನೆಯ ಅವಿಭಾಜ್ಯ ಅಂಗವಾಗಿದ್ದಾರೆ, ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ನಾವು ನಿಕಟ ಸಾಂಸ್ಕøತಿಕ ಬಂಧಗಳನ್ನು ಹೊಂದಿದ್ದೇವೆ ಮತ್ತು ಇತಿಹಾಸವನ್ನು ಹಂಚಿಕೊಂಡಿದ್ದೇವೆ ಎಂದು ಅವರು ಹೇಳಿಕೊಂಡಿದ್ದಾರೆ. +ಕರಂದ್ಲಾಜೆ ಅವರ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು, ಕೇಂದ್ರ ಸಚಿವರಿಗೆ ಇಂತಹ ಸಮರ್ಥನೆಗಳನ್ನು ಮಾಡುವ ಅಧಿಕಾರವಿಲ್ಲ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_47_142_11.txt b/eesanje/url_47_142_11.txt new file mode 100644 index 0000000000000000000000000000000000000000..f1b4102fb6d28e3a312c5e2b30a40194066745f9 --- /dev/null +++ b/eesanje/url_47_142_11.txt @@ -0,0 +1,9 @@ +ವಿಶ್ವದ ಅತಿದೊಡ್ಡ ಚುನಾವಣಾ ಹಬ್ಬ ಆರಂಭ, ಮೊದಲ ಹಂತದ ಲೋಕಸಭಾ ಚುನಾವಣೆಗೆ ಅಧಿಸೂಚನೆ ಜಾರಿ +ನವದೆಹಲಿ,ಮಾ.20-ಜಾಗತಿಕವಾಗಿ ಕುತೂಹಲ ಕೆರಳಿಸಿರುವ ದೇಶದ ಲೋಕಸಭೆ ಚುನಾವಣೆಗೆ ಇಂದಿನಿಂದ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಜಾರಿಯಾಗಿದೆ.21 ರಾಜ್ಯಗಳ 102 ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಅದಕ್ಕಾಗಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಮಾ.27 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮಾ.28 ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಮಾ.30 ಕೊನೆಯ ದಿನವಾಗಿದೆ. +ಮೊದಲ ಹಂತದಲ್ಲಿ ಅರುಣಾಚಲ ಪ್ರದೇಶದ 2, ಅಸ್ಸಾಂನ 5, ಬಿಹಾರದ 4, ಛತ್ತೀಸ್ಘಡದ 1, ಮಧ್ಯಪ್ರದೇಶದ 6, ಮಹಾರಾಷ್ಟ್ರದ 5, ಮಣಿಪುರದ ಒಂದು ಕ್ಷೇತ್ರದ ಪೂರ್ತಿ ಚುನಾವಣೆ, ಮತ್ತೊಂದು ಕ್ಷೇತ್ರದ ಅರ್ಧ ಚುನಾವಣೆ, ಮೇಘಾಲಯದ 2, ಮಿಜೋರಾಂ, ನಾಗಾಲ್ಯಾಂಡ್, ಸಿಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್, ಜಮ್ಮು-ಕಾಶ್ಮೀರ್, ಲಕ್ಷದ್ವೀಪ್, ಪಾಂಡಿಚೆರಿ ಕ್ಷೇತ್ರಗಳ ತಲಾ 1 ಕ್ಷೇತ್ರಗಳಿಗೆ, ರಾಜಸ್ಥಾನದ 12, ತಮಿಳುನಾಡಿನ 39, ಉತ್ತರ ಪ್ರದೇಶದ 8, ಉತ್ತರಾಖಾಂಡ್ನ 5, ಪಶ್ಚಿಮ ಬಂಗಾಳದ 3 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರಮುಖ ರಾಜ್ಯಗಳ ಪೈಕಿ ತಮಿಳುನಾಡಿಗೆ ಮೊದಲ ಹಂತದಲ್ಲೇ ಎಲ್ಲಾ 39 ಕ್ಷೇತ್ರಗಳಿಗೆ ಚುನಾವಣೆ ಪೂರ್ಣಗೊಳ್ಳಲಿದೆ. +ಉತ್ತರಾಖಾಂಡ್ನ 5 ಕ್ಕೆ 5 ಕ್ಷೇತ್ರಗಳಿಗೂ ಚುನಾವಣೆ ಚಾಲ್ತಿಯಲ್ಲಿದೆ. ಉಳಿದಂತೆ ಒಂದೆರೆಡು ಕ್ಷೇತ್ರಗಳಿರುವ ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ಅಂಡಮಾನ್-ನಿಕೋಬಾರ್, ಲಕ್ಷದ್ವೀಪ್, ಪಾಂಡಿಚೇರಿ ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. +ಲೋಕಸಭೆ ಚುಣಾವಣೆ ಪ್ರಕ್ರಿಯೆಯಲ್ಲಿ ಅತೀ ಹೆಚ್ಚು ಕ್ಷೇತ್ರಗಳಿಗೆ ಮೊದಲ ಹಂತದಲ್ಲೇ ಮತದಾನ ನಡೆಯುತ್ತಿರುವುದು ಗಮನಾರ್ಹ. ನಂತರದ ಹಂತದಲ್ಲಿ 89, 94, 96, 49 ಮತ್ತು ತಲಾ 57 ಕ್ಷೇತ್ರಗಳಿಗೆ ಉಳಿದ 6 ಹಂತಗಳಲ್ಲಿ ಕ್ರಮವಾಗಿ ಚುನಾವಣೆ ನಡೆಯುತ್ತಿದೆ. +2ನೇ ಮತ್ತು 3ನೇ ಹಂತದಲ್ಲಿ ಕರ್ನಾಟಕದ 28 ಕ್ಷೇತ್ರಗಳಿಗೆ ಚುನಾವಣೆ ಪ್ರಕ್ರಿಯೆಗಳು ಚಾಲನೆಗೊಳ್ಳಲಿವೆ. ಬಿಹಾರ ಲೋಕಸಭೆ ಕ್ಷೇತ್ರಗಳಿಗೆ ಚುನಾವಣಾ ಪ್ರಕ್ರಿಯೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಬಿಹಾರದ 40 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಮಾತ್ರ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಇಂದಿನಿಂದಲೇ ಆರಂಭವಾಗಿದೆ. ಆದರೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿ ಮಾ.28 ರವರೆಗೆ ಗಡುವು ನೀಡಲಾಗಿದೆ. +ನಾಮಪತ್ರಗಳ ಪರಿಶೀಲನೆಗೆ ಮಾ.30, ನಾಮಪತ್ರ ಹಿಂಪಡೆಯಲು ಏ.2 ರವರೆಗೆ ಕಾಲಾವಕಾಶ ನೀಡಲಾಗಿದೆ.ಉಳಿದಂತೆ ಮತದಾನ ಏ.19 ರಂದೇ ನಡೆಯಲಿದ್ದು, ಜೂ.4 ರಂದು ಮತ ಎಣಿಕೆ ಹಾಗೂ ಜೂ. 6 ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ. +ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆ ಪ್ರಕಾರ ಮಾರ್ಚ್ 27 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರಲಿದೆ.ಆದಾಗ್ಯೂ, ಹಬ್ಬದ ಕಾರಣ, ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಬಿಹಾರದ ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕವಾಗಿರಲಿದೆ. ಬಿಹಾರದ 40 ಸ್ಥಾನಗಳ ಪೈಕಿ ನಾಲ್ಕರಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. +18ನೇ ಲೋಕಸಭೆಯ ಚುನಾವಣೆಯು ಏಪ್ರಿಲ್ 19 ರಂದು ಪ್ರಾರಂಭವಾಗುತ್ತದೆ ಮತ್ತು ನಂತರದ ಹಂತಗಳು ಏಪ್ರಿಲ್ 26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ನಡೆಯಲಿದೆ. ಮತಗಳ ಎಣಿಕೆ ಜೂನ್ 4 ರಂದು ನಡೆಯಲಿದೆ.ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. \ No newline at end of file diff --git a/eesanje/url_47_142_12.txt b/eesanje/url_47_142_12.txt new file mode 100644 index 0000000000000000000000000000000000000000..0011cf806a44ab82d134bb338935e435d34badc4 --- /dev/null +++ b/eesanje/url_47_142_12.txt @@ -0,0 +1,4 @@ +ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆಯ ಛಾವಣಿ ಕುಸಿತ ; ಮೂವರಿಗೆ ಗಾಯ +ಥಾಣೆ, ಮಾ 20 –ಮನೆಯೊಂದರಲ್ಲಿ ಎಲೆಕ್ಟ್ರಿಕ್ ಮೋಟಾರ್ ಬೈಕ್ ಬ್ಯಾಟರಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಮತ್ತು ಪುರುಷ ಗಾಯಗೊಂಡಿರುವ ಘಟನೆ ಕಲ್ವಾ ಪ್ರದೇಶದ ಶಾಂತಿ ನಗರ ಪ್ರದೇಶದ ಚಾಲ್ ನಡೆದಿದೆ.ಕಳೆದ ರಾತ್ರಿ ಸಂಭವಿಸಿದ ಸ್ಫೋಟದ ಪರಿಣಾಮದಿಂದಾಗಿ ಮನೆಯ ಮೇಲ್ಛಾವಣಿ ಮತ್ತು ಪಕ್ಕದ ಮನೆಯ ಗೋಡೆ ಕುಸಿದಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ತಿಳಿಸಿದ್ದಾರೆ. +ರಾತ್ರಿ 10.30ರ ಸುಮಾರಿಗೆ ಬ್ಯಾಟರಿ ಸ್ಫೋಟಗೊಂಡಿದ್ದು, ಚಾಜಿರ್ಂಗ್ ಮಾಡಲು ಬೈಕ್ ಬ್ಯಾಟರಿಯನ್ನು ಮನೆಯಲ್ಲಿ ಇಟ್ಟಿದ್ದರೆ ಅಥವಾ ಹೊರಗೆ ಇತ್ತೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕುಸಿದು ಬಿದ್ದ ಮನೆಯಲ್ಲಿ ವಾಸವಿದ್ದ 28 ವರ್ಷದ ಮಹಿಳೆ ಹಾಗೂ ಪಕ್ಕದ ಮನೆಯಲ್ಲಿದ್ದ 66 ವರ್ಷದ ಪುರುಷ ಮತ್ತು 56 ವರ್ಷದ ಮಹಿಳೆ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. +ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ದಳದ ತಂಡ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಮೂವರನ್ನು ಕಲ್ವಾದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಸ್ಫೋಟದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_142_2.txt b/eesanje/url_47_142_2.txt new file mode 100644 index 0000000000000000000000000000000000000000..54126bb7dbfba2042eb846e1b31ecf999fd1d09a --- /dev/null +++ b/eesanje/url_47_142_2.txt @@ -0,0 +1,5 @@ +ಸದ್ಗುರು ಆರೋಗ್ಯದಲ್ಲಿ ಚೇತರಿಕೆ : .ಇಶಾ ಫೌಂಡೇಶನ್ +ನವದೆಹಲಿ,ಮಾ.21-ತಲೆಯಲ್ಲಿ ರಕ್ತಸ್ರಾವದಿಂದ ಬಳಲುತ್ತಿದ್ದ ಆಧ್ಯಾತ್ಮಿಕ ಸದ್ಗುರು ಜಗ್ಗಿ ವಾಸುದೇವ್ ಸದ್ಗುರು ಅವರಿಗೆ ಇಲ್ಲಿನ ಅಪೋಲೂ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಮಿದುಳಿನ ಶಸ್ತ್ರ ಚಿಕಿತ್ಸೆಗೆ ನಡೆದಿದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು ಸ್ಥಿರ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಇಶಾ ಫೌಂಡೇಶನ್ ತಿಳಿಸಿದೆ. +ಇನ್‍ಸ್ಟಾಗ್ರಾಮ್‍ನಲ್ಲಿ ಸದ್ಗುರು ಅವರ ಪುತ್ರಿ ರಾಧೆ ಜಗ್ಗಿ ಅವರು ಸದ್ಗುರುಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬರೆದಿದ್ದಾರೆ. 66 ವರ್ಷ ವಯಸ್ಸಿನ ಆಧ್ಯಾತ್ಮಿಕ ಗುರು ಇಶಾ ಫೌಂಡೇಶನ್ ನ ಸಂಸ್ಥಾಪಕರಾಗಿದ್ದಾರೆ ಮತ್ತು ಪರಿಸರ ಸಂರಕ್ಷಣೆಗಾಗಿ ಮಣ್ಣು ಉಳಿಸಿ ಮತ್ತು ನದಿಗಳ ಉಳಿವಿಗೆ ಅಭಿಯಾನಗಳನ್ನು ಪ್ರಾರಂಭಿಸಿ ವಿಶ್ವದಾದ್ಯಂತ ಭಕ್ತರನ್ನು ಹೊಂದಿದ್ದಾರೆ. +ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆ ತನ್ನ ಹೇಳಿಕೆಯಲ್ಲಿ ತಲೆಯಲ್ಲಿ ರಕ್ತಸ್ರಾವವ ಉಂಟಾಗಿತ್ತು ಇದಕ್ಕಾಗಿ ಕಳೆದ ಮಾರ್ಚ್ 17 ರಂದು ಶಸಚಿಕಿತ್ಸೆ ನಡೆಸಲಾಯಿತು. ಶಸಚಿಕಿತ್ಸೆಯ ನಂತರ ಸದ್ಗುರುಗಳನ್ನು ವೆಂಟಿಲೇಟರ್‍ನಿಂದ ಹೊರಬಂದು ಈಗ ಎಲ್ಲರೊಂದಿಗೆ ಮಾತನಡುತ್ತಿದ್ದಾರೆ. +ಉತ್ತಮವಾಗಿ ಆರೋಗ್ಯ ಸುಧಾರಿಸಿದೆ ಮತ್ತು ನಾವು ಪ್ರಮುಖ ನಿಯತಾಂಕಗಳು ಸುಧಾರಿಸಿವೆ ಎಂದು ಆಸ್ಪತ್ರೆ ಹೇಳಿದೆ.ಸದ್ಗುರುಗಳು ತಮ್ಮ ಆಸ್ಪತ್ರೆಯ ಬೆಡ್‍ನಿಂದ ವೀಡಿಯೊವನ್ನು ತಮ್ಮ ಜಾಲಜಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_142_3.txt b/eesanje/url_47_142_3.txt new file mode 100644 index 0000000000000000000000000000000000000000..a664431829d1bc0bea5b88eac97545a3e5c10594 --- /dev/null +++ b/eesanje/url_47_142_3.txt @@ -0,0 +1,9 @@ +ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನು ತಡೆಗೆ ಸುಪ್ರೀಂ ನಕಾರ +ನವದೆಹಲಿ,ಮಾ.21-ಲೋಕಸಭಾ ಚುನಾವಣೆಯ ಮತದಾನ ನಡೆಯಲು ಇನ್ನು ಕೆಲವು ವಾರಗಳು ಸನಿಹದಲ್ಲಿರುವಾಗ ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಈ ಹಂತದಲ್ಲಿ ಹಾಗೆ ಮಾಡುವುದರಿಂದ ಅವ್ಯವಸ್ಥೆ ಸೃಷ್ಟಿಯಾಗುತ್ತದೆ ಎಂದು ಮಹತ್ವದ ಆದೇಶ ನೀಡಿದೆ. +ಅರ್ಜಿಗಳನ್ನು ಅವಲೋಕನಗಳನ್ನು ಮಾಡುವಾಗ, ಹೊಸ ಕಾನೂನಿನಡಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜಾ್ಞನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ಆದೇಶ ನೀಡಿತು.2023ರ ಕಾನೂನಿನಡಿ ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠ ಆಯುಕ್ತರ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. +ಕೇಂದ್ರ ಚುನಾವಣಾ ಆಯೋಗದ ಆಯ್ಕೆ ಸಮಿತಿಯಿಂದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳನ್ನು (ಸಿಜೆಐ) ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮನವಿಯನ್ನು ತಿರಸ್ಕರಿಸಿತು. ಕಾನೂನಿನಡಿ ನೇಮಕಾತಿ ನಡೆಸಲಾಗಿದೆ. ಹೀಗಾಗಿ ಇದಕ್ಕೆ ತಡೆಯಾಜ್ಞೆ ನೀಡಲು ಆಗುವುದಿಲ್ಲ. ಚುನಾವಣಾ ಆಯೋಗವು ಕಾರ್ಯಾಂಗದ ಹೆಬ್ಬೆರಳಿನಡಿ ಇದೆ ಎಂದು ನೀವು ಹೇಳಲು ಸಾಧ್ಯವಿಲ್ಲ. ಈ ಹಂತದಲ್ಲಿ, ನಾವು ಶಾಸನವನ್ನು ತಡೆಹಿಡಿಯಲಾಗುವುದಿಲ್ಲ ಇದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣವಾಗುತ್ತದೆ. ಚುನಾವಣಾ ಆಯೋಗ ಸ್ವತಂತ್ರ ಮತ್ತು ನ್ಯಾಯಸಮ್ಮತವಾಗಿರಬೇಕು ಎಂದೂ ಹೇಳಿದೆ. +ಚುನಾವಣಾ ಆಯೋಗಗಳ ಆಯ್ಕೆಗಾಗಿ ಸಭೆಯನ್ನು ಪೂರ್ವಭಾವಿಯಾಗಿ ಮುಂದೂಡಲಾಗಿದೆ, ವಾಸ್ತವವನ್ನು ಎತ್ತಿ ತೋರಿಸಲು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸುವಂತೆ ಪೀಠ ಸೂಚನೆ ನೀಡಿದೆ.ಅರ್ಜಿದಾರ ಜಯಾ ಠಾಕೂರ್ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ವಿಕಾಸ್ ಸಿಂಗ್, ತೀರ್ಪು ನೀಡಿದಾಗ ಯಾವುದೇ ಉಲ್ಲಂಘನೆಯಾಗುವುದಿಲ್ಲ. +ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವ) ಕಾಯಿದೆ, 2023ರಲ್ಲಿ ಸ್ಪಷ್ಟವಾದ ಉಲ್ಲಂಘನೆಯಾಗಿದೆ ಎಂದು ಅವರು ಪ್ರತಿಪಾದಿಸಿದರು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. +ಇದು ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಚುನಾವಣಾ ಆಯೋಗವನ್ನು ರಾಜಕೀಯ ಮತ್ತು ಕಾರ್ಯನಿರ್ವಾಹಕ ಹಸ್ತಕ್ಷೇಪ ದಿಂದ ಪ್ರತ್ಯೇಕಿಸಬೇಕು ಎಂದು ಪ್ರತಿಪಾದಿಸಿ ಮುಖ್ಯ ನ್ಯಾಯಮೂರ್ತಿಗಳನ್ನು ಸಮಿತಿಯಿಂದ ಹೊರಗಿಡುವುದನ್ನು ಪ್ರಶ್ನಿಸಿತು.ಅರ್ಜಿದಾರರ ಪರ ವಕೀಲ ವಿಕಾಸ್ ಸಿಂಗ್ ಅವರು, ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸಿಜೆಐ ಅವರನ್ನು ಕೈಬಿಟ್ಟಿರುವ ಕಾರಣ ಚುನಾವಣಾ ಆಯುಕ್ತರ ನೇಮಕಾತಿಗೆ ತಡೆ ನೀಡಬೇಕೆಂದು ಕೋರಿದರು. +ಕೇಂದ್ರ ಚುನಾವಣಾ ಆಯೋಗದ ಆಯ್ಕೆ ಸಮಿತಿಯಲ್ಲಿ ಸಿಜೆಐ ಕಡ್ಡಾಯವಾಗಿ ಭಾಗವಹಿಸಬೇಕೆಂಬ ಈ ಹಿಂದಿನ ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರಕಾರ, ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ ಆಗಬೇಕು. ಆದರೆ ಸಿಜೆಐ ಅವರನ್ನು ಕೈಬಿಟ್ಟು, ಪ್ರಧಾನಿಯಿಂದ ನಾಮನಿರ್ದೇಶನ ಮಾಡಲಾದ ಕ್ಯಾಬಿನೆಟ್ ಮಂತ್ರಿಯನ್ನು ಸೇರಿಸಿಕೊಳ್ಳಲಾಗಿದೆ. ಈ ಮೂಲಕ ಹಿಂದಿನ ಕಾನೂನನ್ನು ಮರುಸ್ಥಾಪಿಸಲಾಗಿದೆ. ಅಂದರೆ ಕಾರ್ಯಾಂಗದ ಆಯ್ಕೆಯು ಕಾನೂನಿನ ನಿಯಮವನ್ನು ದುರ್ಬಲಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. +ಮುಖ್ಯ ಚುನಾವಣಾ ಆಯೋಗ ಮತ್ತು ಇತರ ಚುನಾವಣಾ ಆಯೋಗಗಳ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಕಚೇರಿಯ ಅವ) ಕಾಯ್ದೆ-2023ರ ಸೆಕ್ಷನ್ 7ರ ಅನುಷ್ಠಾನಕ್ಕೆ ತಡೆ ನೀಡಬೇಕು. ಚುನಾವಣಾ ಆಯೋಗವು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಮಾತ್ರವಲ್ಲದೇ ವಿವಿಧ ರಾಜಕೀಯ ಪಕ್ಷಗಳ ನಡುವೆ ನಿರ್ಣಾಯಕ ಪಾತ್ರವನ್ನು ಸಹ ವಹಿಸುತ್ತದೆ. ಆದ್ದರಿಂದ ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕಾನೂನಿನ ನಿಯಮದ ಸರಿಯಾದ ಅನುಷ್ಠಾನಕ್ಕಾಗಿ ನ್ಯಾಯದ ಹಿತಾಸಕ್ತಿಯಿಂದ ತಡೆ ನೀಡಬಹುದು ಎಂದು ಅರ್ಜಿಯಲ್ಲಿ ಸೇರಿಸಲಾಗಿತ್ತು. \ No newline at end of file diff --git a/eesanje/url_47_142_4.txt b/eesanje/url_47_142_4.txt new file mode 100644 index 0000000000000000000000000000000000000000..9cbde3a1203874548075f3e039b57a881599b359 --- /dev/null +++ b/eesanje/url_47_142_4.txt @@ -0,0 +1,10 @@ +ಕಾಂಗ್ರೆಸ್ ಖಾತೆ ಜಪ್ತಿ ಮಾಡಿ ಬಿಜೆಪಿ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ : ಖರ್ಗೆ +ದೆಹಲಿ,ಮಾ.21-ಲೋಕಸಭಾ ಚುನಾವಣೆ ಘೋಷಣೆಯಾಗುವ ಮೂರು ವಾರಗಳ ಮೊದಲು ಕಾಂಗ್ರೆಸ್ ಪಕ್ಷದ 11 ಖಾತೆಗಳನ್ನು ಜಪ್ತಿ ಮಾಡುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ, ಕಾಂಗ್ರೆಸ್ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಖಜಾಂಚಿ ಅಜಯ್ ಮಕೇನ್ ಸೇರಿದಂತೆ ಹಲವು ನಾಯಕರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. +ಖರ್ಗೆಯವರು ಮಾತನಾಡಿ, ಭಾರತ ವಿಶ್ವದಲ್ಲೇ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ. 18ನೇ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಪಕ್ಷಗಳಿಗೂ ಸಮಾನ ಸ್ಪರ್ಧೆಯ ವೇದಿಕೆ ಅಗತ್ಯವಿರುತ್ತದೆ. ಆದರೆ ಕೇಂದ್ರ ಸರ್ಕಾರ ಅಸಾಂವಿಧಾನಿಕವಾಗಿ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಚುನಾವಣಾ ಆಯೋಗಗಳನ್ನು ಏಕಸ್ವಾಮ್ಯವಾಗಿ ನಿಯಂತ್ರಿಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು. +ಕೇಂದ್ರ ಚುನಾವಣೆಯ ಚಂದಾ ವಸೂಲಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ. ಒಟ್ಟಾರೆ ಬಾಂಡ್ಗಳಲ್ಲಿ ಶೇ. 56 ರಷ್ಟು ಪಾಲನ್ನು ಬಿಜೆಪಿ ಪಡೆದಿದೆ. ಈ ಬಾಂಡ್ಗಳು ಅಸಾಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ನ್ಯಾಯಾಲಯ ಹೇಳಿದೆ. ಆಡಳಿತಾರೂಢ ಪಕ್ಷ ಅಧಿಕಾರ ದುರುಪಯೋಗಪಡಿಸಿಕೊಂಡು ಚಂದಾ ವಸೂಲಿ ಮಾಡಿರುವುದು ಆತಂಕಕಾರಿ ಮತ್ತು ನಾಚಿಕೆಗೇಡು ಎಂದು ಟೀಕಿಸಿದರು. +ಒಂದೆಡೆ ಬಿಜೆಪಿ ಚುನಾವಣಾ ಬಾಂಡ್ಗಳ ಮೂಲಕ ಸಾವಿರಾರು ಕೋಟಿ ರೂ.ಗಳನ್ನು ಸಂಗ್ರಹಿಸಿ ಚುನಾವಣೆ ನಡೆಸುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಮೇಲಿನ ಆಕ್ರಮಣವಲ್ಲ. ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಈ ಹಿಂದೆ ನೆಹರೂ ಕಾಲದಿಂದಲೂ ವಿಪಕ್ಷಗಳಿಗೆ ಚುನಾವಣೆಯಲ್ಲಿ ಸ್ರ್ಪಸಲು ಸಮಾನ ವೇದಿಕೆಯನ್ನು ಕಲ್ಪಿಸಲಾಗಿತ್ತು. ಇದೇ ಮೊದಲ ಬಾರಿಗೆ ಬಿಜೆಪಿ ಏಕಸ್ವಾಮ್ಯ ಸಾಸುವ ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು. +ಸೋನಿಯಾಗಾಂಧಿ ಮಾತನಾಡಿ, ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಮೇಲೆ ಆರ್ಥಿಕ ದೌರ್ಜನ್ಯ ನಡೆಸುತ್ತಿದೆ. ಅಸಂಸದೀಯ ಮತ್ತು ಅಪ್ರಜಾಸತ್ತಾತ್ಮಕ ಕ್ರಮಗಳನ್ನು ಅನುಸರಿಸುತ್ತಿದೆ. ಚುನಾವಣಾ ಬಾಂಡ್ಗಳ ಹಗರಣ ಗಮನಾರ್ಹವಾಗಿದೆ ಎಂದು ಕಟಕಿಯಾಡಿದರು. ರಾಹುಲ್ ಗಾಂಧಿ ಮಾತನಾಡಿ, ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹಸಚಿವರು ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಿಮಿನಲ್ ಆ್ಯಕ್ಷನ್ ನಡೆಸುತ್ತಿದ್ದಾರೆ. ಆರ್ಥಿಕ ಮೂಲಗಳನ್ನು ಸ್ಥಗಿತಗೊಳಿಸಿದರೆ ಕುಟುಂಬಗಳು ಹಸಿವಿನಿಂದ ಸಾಯುತ್ತವೆ. ವ್ಯಾಪಾರ ನಶಿಸುತ್ತದೆ. ಅಂತಹುದೇ ತಂತ್ರಗಾರಿಕೆಯನ್ನು ಕಾಂಗ್ರೆಸ್ ವಿರುದ್ಧ ಅನುಸರಿಸಲಾಗುತ್ತಿದೆ. ನಮ್ಮ ಆರ್ಥಿಕ ಗುರುತುಗಳನ್ನು ಜಪ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು. +ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲವಾಗಿದೆ. ಅತಿ ದೊಡ್ಡ ವಿರೋಧ ಪಕ್ಷದ ವಿರುದ್ಧ ಇಷ್ಟೆಲ್ಲಾ ಅನ್ಯಾಯಗಳಾಗುತ್ತಿದ್ದರೂ ಚುನಾವಣಾ ಆಯೋಗ ಮತ್ತು ನ್ಯಾಯಾಲಯಗಳು ಮೌನವಾಗಿದೆ. ಬ್ಯಾಂಕ್ ಖಾತೆ ಜಪ್ತಿಯಿಂದಾಗಿ ನಮ್ಮ ಅಭ್ಯರ್ಥಿಗಳಿಗೆ ಆರ್ಥಿಕ ಸಹಾಯ ಮಾಡಲಾಗುತ್ತಿಲ್ಲ. ಪ್ರಚಾರ ಸಾಮಗ್ರಿಗಳನ್ನು ಮುದ್ರಿಸಲಾಗುತ್ತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಕೆಲಸ ಮಾಡಲಾಗುತ್ತಿಲ್ಲ. ಒಂದೆಡೆಯಿಂದ ಮತ್ತೊಂದೆಡೆ ಮುಖಂಡರ ಪ್ರಯಾಣಕ್ಕೆ ರೈಲ್ವೆ ಹಾಗೂ ವಿಮಾನದ ಟಿಕೆಟ್ಗಳನ್ನು ಖರೀದಿಸಲಾಗುತ್ತಿಲ್ಲ. ಕಾರ್ಯಕರ್ತರಿಗೂ ಸಹಾಯ ಮಾಡಲಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು. +ಖಜಾಂಚಿ ಅಜಯ್ ಮಕೇನ್ ಮಾತನಾಡಿ, ದೇಶದ ರಾಜಕೀಯ ಪಕ್ಷಗಳಿಗೆ ಆದಾಯ ತೆರಿಗೆ ವಿನಾಯಿತಿ ಇದೆ. ಬಿಜೆಪಿ ಈವರೆಗೂ ಆದಾಯ ತೆರಿಗೆ ಪಾವತಿಸಿಲ್ಲ. 2017-18 ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ 210 ಕೋಟಿ ರೂ.ಗಳ ಹಣ ಸಂಗ್ರಹವಾಗಿದೆ ಎಂದು ಲೆಕ್ಕ ಹಾಕಲಾಗಿದೆ. ಒಟ್ಟಾರೆ ಸಂಗ್ರಹವಾಗಿರುವುದು 199 ಕೋಟಿ ರೂ., ಅದರಲ್ಲಿ ಪಕ್ಷದ ಸದಸ್ಯತ್ವ ಹಾಗೂ ಯುವ ಕಾಂಗ್ರೆಸ್ ಸದಸ್ಯತ್ವದ ಶುಲ್ಕ ಸೇರಿದೆ. 14.49 ಲಕ್ಷ ರೂ. ನಗದು ರೂಪದಲ್ಲಿ ಸ್ವೀಕರಿಸಲಾಗಿದೆ ಎಂಬ ಕಾರಣಕ್ಕೆ 2024ರ ಫೆ.13 ರಂದು ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿತ್ತು. ಒಟ್ಟು ಸಂಗ್ರಹದ ಹಣದಲ್ಲಿ ನಗದು ಸ್ವೀಕಾರದ ಪ್ರಮಾಣ ಶೇ. 0.07ರಷ್ಟು. ಇದಕ್ಕೆ ಶೇ. 106 ಪಟ್ಟು ದುಬಾರಿ ದಂಡ ವಿಧಿಸಲಾಗಿದೆ. +ಆದಾಯ ತೆರಿಗೆ ಇಲಾಖೆ ಕಾಯ್ದೆಯಲ್ಲಿ ದಂಡ ವಿಧಿಸಲು ಅವಕಾಶ ಇರುವುದು ಗರಿಷ್ಠ 10 ಸಾವಿರ ರೂ. ಮಾತ್ರ. ಆದರೆ ಆದಾಯ ತೆರಿಗೆ ಅಧಿಕಾರಿಗಳು 4 ಬ್ಯಾಂಕ್ಗಳಲ್ಲಿದ್ದ ಕಾಂಗ್ರೆಸ್ ಪಕ್ಷದ 11 ಖಾತೆಗಳನ್ನು ಜಪ್ತಿಗೊಳಿಸಿದ್ದಾರೆ ಮತ್ತು ಬ್ಯಾಂಕ್ ವ್ಯವಸ್ಥಾಪಕರನ್ನು ಬೆದರಿಸಿ 115 ಕೋಟಿ ರೂ.ಗಳನ್ನು ಬಲವಂತವಾಗಿ ಸರ್ಕಾರಕ್ಕೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. +1993-94ನೇ ಸಾಲಿನಲ್ಲಿ ಸೀತಾರಾಮ್ ಕೇಸರಿ ಖಜಾಂಚಿಯಾಗಿದ್ದಾಗಿನ ವಹಿವಾಟಿಗೆ ಸಂಬಂಧಪಟ್ಟಂತೆ 31 ವರ್ಷಗಳ ಬಳಿಕ ಕಳೆದ ವಾರ ನೋಟಿಸ್ ನೀಡಲಾಗಿದೆ ಎಂದು ವಿವರಿಸಿದರು. ನಾವು ಕೇಂದ್ರ ಸರ್ಕಾರದ ಈ ಕ್ರಮವನ್ನು ಹೈಕೋರ್ಟ್, ಸುಪ್ರೀಂಕೋರ್ಟ್ನಲ್ಲೂ ಪ್ರಶ್ನೆ ಮಾಡಿದ್ದೇವೆ. ಜನತಾ ನ್ಯಾಯಾಲಯದಲ್ಲೂ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು. \ No newline at end of file diff --git a/eesanje/url_47_142_5.txt b/eesanje/url_47_142_5.txt new file mode 100644 index 0000000000000000000000000000000000000000..73d33f1377aff4aea11c80161bbfa95d3faf9a43 --- /dev/null +++ b/eesanje/url_47_142_5.txt @@ -0,0 +1,5 @@ +ಶಾಹಿ ಈದ್ಗಾ ಕೃಷ್ಣಕೂಪ್ ನಲ್ಲಿ ಪೂಜೆ ಸಲ್ಲಿಸಲು ಮುಸ್ಲಿಂರ ಆಕ್ಷೇಪ +ಪ್ರಯಾಗ್ರಾಜ್,ಮಾ.21-ಮಥುರಾದ ಶಾಹಿ ಈದ್ಗಾದ ಆವರಣದಲ್ಲಿರುವ ಕೃಷ್ಣ ಕೂಪ್ನಲ್ಲಿ ಪೂಜೆ ಸಲ್ಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ಮುಸ್ಲಿಂ ಕಡೆಯವರು ಆಕ್ಷೇಪ ವ್ಯಕ್ತಪಡಿಸಿದ್ದು, ನಿರ್ವಹಣೆಯ ಮೊಕದ್ದಮೆ ತನ್ನ ಮುಂದೆ ಬಾಕಿ ಇರುವ ಕಾರಣ ಅರ್ಜಿಯ ಕುರಿತು ಯಾವುದೇ ಆದೇಶ ನೀಡಬಾರದು ಎಂದು ಅಲಹಾಬಾದ್ ಹೈಕೋರ್ಟ್ಗೆ ಮನವಿ ಮಾಡಿದೆ. +ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿಕೊಳ್ಳುವ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕಲು ಕೋರುವ ನಿರ್ವಹಣೆಯ ಮೊಕದ್ದಮೆಯನ್ನು ಮುಸ್ಲಿಂ ಕಡೆಯವರು ಪ್ರಶ್ನಿಸಿದ್ದಾರೆ.ಎರಡು ಕಡೆಯ ವಾದವನ್ನು ಆಲಿಸಿದ ಹೈಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ನಿಗದಿಪಡಿಸಿದೆ. +ನಿನ್ನೆ ಅಶುತೋಷ್ ಪಾಂಡೆ ಅವರು ಸಲ್ಲಿಸಿದ ಸಿವಿಲ್ ಪೊ್ರಸೀಜರ್ ಕೋಡ್ನ ಸೆಕ್ಷನ್ 151 (ನ್ಯಾಯಾಲಯದ ಅಂತರ್ಗತ ಅಧಿಕಾರ) ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ಮೇಲೆ ಮುಸ್ಲಿಂ ಕಡೆಯಿಂದ ಆಕ್ಷೇಪಣೆ ವ್ಯಕ್ತವಾಗಿದೆ. ತಮ್ಮ ಮನವಿಯಲ್ಲಿ, ಪಾಂಡೆ ಅವರು ಪ್ರತಿ ವರ್ಷ ಮಾತಾ ಸೀತಾ ಸಪ್ತಮಿ ಮತ್ತು ಮಾತಾ ಸೀತಾ ಅಷ್ಟಮಿ ಯಂದು ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದಲ್ಲಿರುವ ಕೃಷ್ಣ ಕೂಪ್(ಬಾವಿ) ನಲ್ಲಿ ಹಿಂದೂ ಭಕ್ತರು ಬಾಸೋಡ ಪೂಜೆ ಮಾಡುತ್ತಾರೆ. +ಈ ವರ್ಷ ಏಪ್ರಿಲ್ 1 ರಂದು ಮಾತಾ ಸೀತಾ ಸಪ್ತಮಿ ಮತ್ತು ಏಪ್ರಿಲ್ 2 ರಂದು ಮಾತಾ ಸೀತಾ ಅಷ್ಟಮಿ ಇದೆ. ಆ ದಿನಗಳಲ್ಲಿ ಕೃಷ್ಣ ಕೂಪಿನಲ್ಲಿ ಬಾಸೋಡ ಪೂಜೆಯನ್ನು ಫಿರ್ಯಾದಿದಾರರು ಮಾಡಬೇಕಾಗಿದ್ದರೂ ಆರೋಪಿಗಳು ಪೂಜೆ ಮಾಡದಂತೆ ತಡೆಯುತ್ತಿದ್ದಾರೆ ಎಂದು ಪಾಂಡೆ ಮನವಿಯಲ್ಲಿ ತಿಳಿಸಿದ್ದಾರೆ. ನಿರ್ವಹಣೆಯ ಮೊಕದ್ದಮೆಯ ವಿಚಾರಣೆ ಬಾಕಿ ಉಳಿದಿದ್ದು, ಅಂತಹ ಅರ್ಜಿಯ ಕುರಿತು ಯಾವುದೇ ಆದೇಶವನ್ನು ರವಾನಿಸಬೇಕಾಗಿಲ್ಲ ಎಂದು ಮುಸ್ಲಿಂ ಕಡೆಯವರು ವಾದಿಸಿದರು.ಇದು ವಕ್ಪ್ ಆಸ್ತಿ ಮತ್ತು ಮನವಿಯನ್ನು ನಿರ್ವಹಿಸಲಾಗುವುದಿಲ್ಲ ಎಂದು ಮುಸ್ಲಿಂ ಕಡೆಯಿಂದ ಅರ್ಜಿಯನ್ನು ವಿರೋಧಿಸಲಾಗಿದೆ. \ No newline at end of file diff --git a/eesanje/url_47_142_6.txt b/eesanje/url_47_142_6.txt new file mode 100644 index 0000000000000000000000000000000000000000..712c2fd8f2e48f219edec83dacbeb305ca70c529 --- /dev/null +++ b/eesanje/url_47_142_6.txt @@ -0,0 +1,4 @@ +ತಮಿಳುನಾಡಿನ ಮಾಜಿ ಸಚಿವನ ಮನೆ ಮೇಲೆ ಇಡಿ ದಾಳಿ +ಚೆನ್ನೈ,ಮಾ.21-ತಮಿಳುನಾಡಿನ ಎಐಎಡಿಎಂಕೆ ನಾಯಕ ಹಾಗೂ ಮಾಜಿ ಸಚಿವ ಸಿ.ವಿಜಯಭಾಸ್ಕರ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶಾನಾಲಯ ದಾಳಿ ನಡೆಸಿದೆ.ಪ್ರತ್ಯೇಕ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಚೆನ್ನೈ ಮೂಲದ ರಿಯಲ್ ಎಸ್ಟೇಟ್ ಗುಂಪಿನ ಹೊರತಾಗಿ ಎಐಎಡಿಎಂಕೆ ನಾಯಕ ಮತ್ತು ತಮಿಳುನಾಡಿನ ಮಾಜಿ ಸಚಿವ ಸಿ ವಿಜಯಭಾಸ್ಕರ್ ವಿರುದ್ಧ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ತಮಿಳುನಾಡಿನ ಪುದುಕೊಟೈನ ಪ್ರಬಲ ನಾಯಕರಾಗಿರುವ ವಿಜಯಭಾಸ್ಕರ್ ಅವರು ಮಾಜಿ ಆರೋಗ್ಯ ಸಚಿವರಾಗಿದ್ದವರು. ಅವರ ವಿರುದ್ಧ ರಾಜ್ಯ ವಿಜಿಲೆನ್ಸ್ (ಡಿವಿಎಸಿ) ತನಿಖೆಯ ಆಧಾರದ ಮೇಲೆ ಅಕ್ರಮ ಆಸ್ತಿಗಳನ್ನು ಹೊಂದಿರುವ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. +ರಿಯಲ್ ಎಸ್ಟೇಟ್ ಗ್ರೂಪ್ ಜಿಸ್ಕ್ವೇರ್ಗೆ ಸೇರಿದ ಆವರಣಗಳು ಮತ್ತು ಚೆನ್ನೈ ನಗರ ಮತ್ತು ಸುತ್ತಮುತ್ತಲಿನ ಸಂಬಂಧಿತ ಘಟಕಗಳನ್ನು ಕೂಡ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ನಿಬಂಧನೆಗಳ ಅಡಿಯಲ್ಲಿ ತನಿಖೆಯ ಭಾಗವಾಗಿ ಶೋಧಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_142_7.txt b/eesanje/url_47_142_7.txt new file mode 100644 index 0000000000000000000000000000000000000000..b698e89dbc998430360cfc4ebea99f3d4b533fe4 --- /dev/null +++ b/eesanje/url_47_142_7.txt @@ -0,0 +1,7 @@ +ತಪ್ಪು ಜಾಹೀರಾತಿಗಾಗಿ ಕ್ಷಮೆ ಯಾಚಿಸಿದ ಪತಂಜಲಿ ಸಂಸ್ಥೆ +ನವದೆಹಲಿ,ಮಾ.21-ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಮತ್ತು ಯೋಗ ಗುರು ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ತಮ್ಮ ಉತ್ಪನ್ನಗಳು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವದ ಬಗ್ಗೆ ಕಂಪನಿಯ ತಪ್ಪುದಾರಿಗೆಳೆಯುವ ಹಕ್ಕುಗಳಿಗಾಗಿ ಸುಪ್ರೀಂ ಕೋರ್ಟ್ನಲ್ಲಿ ಕ್ಷಮೆಯಾಚಿಸಿದ್ದಾರೆ. +ದಾರಿತಪ್ಪಿಸುವ ಜಾಹೀರಾತುಗಳ ಮೇಲಿನ ಅವಹೇಳನ ನೋಟಿಸ್ಗೆ ಪ್ರತಿಕ್ರಿಯಿಸದಿದ್ದಕ್ಕಾಗಿ ಪತಂಜಲಿ ಆಯುರ್ವೇದ ಸಂಸ್ಥೆಯನ್ನು ನ್ಯಾಯಾಲಯವು ತೀವ್ರವಾಗಿ ಖಂಡಿಸಿದ ಒಂದು ದಿನದ ನಂತರ ನಿನ್ನೆ ಅಫಿಡವಿಟ್ ಸಲ್ಲಿಸಲಾಗಿದೆ. ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ಏಪ್ರಿಲ್ 2 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಾಲಕೃಷ್ಣ ಮತ್ತು ರಾಮ್ದೇವ್ಗೆ ಸೂಚಿಸಿತ್ತು. +ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ಬಾಲಕೃಷ್ಣ ಅವರು ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಗೌರವವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ. ಅನರ್ಹ ಕ್ಷಮೆ ವಿಸ್ತರಿಸಿದ ಅವರು, ಕಂಪನಿಯು ಭವಿಷ್ಯದಲ್ಲಿ ಅಂತಹ ಜಾಹೀರಾತುಗಳನ್ನು ನೀಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ. +ಪತಂಜಲಿಯ ಉತ್ಪನ್ನಗಳನ್ನು ಸೇವಿಸುವ ಮೂಲಕ ಆರೋಗ್ಯಕರ ಜೀವನ ನಡೆಸಲು ಈ ದೇಶದ ನಾಗರಿಕರನ್ನು ಉತ್ತೇಜಿಸುವುದು ಕಂಪನಿಯ ಉದ್ದೇಶವಾಗಿದೆ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು. ಮ್ಯಾಜಿಕ್ ಕ್ಯೂರ್ ಕ್ಲೈಮ್ಗಳ ಜಾಹೀರಾತುಗಳನ್ನು ನಿಷೇಧಿಸುವ ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ನಿಬಂಧನೆಗಳು ಪ್ರಾಚೀನ ಮತ್ತು ಆಯುರ್ವೇದ ಸಂಶೋಧನೆಯಲ್ಲಿ ವೈಜ್ಞಾನಿಕ ಪುರಾವೆಗಳ ಕೊರತೆಯಿರುವಾಗ ಶಾಸನದಲ್ಲಿ ಕೊನೆಯ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು. +ಪ್ರತಿಯೊಬ್ಬ ನಾಗರಿಕನ ಉತ್ತಮ ಮತ್ತು ಆರೋಗ್ಯಕರ ಜೀವನಕ್ಕಾಗಿ ಮತ್ತು ಜೀವನಶೈಲಿ ಸಂಬಂಧಿತ ವೈದ್ಯಕೀಯ ತೊಡಕುಗಳಿಗೆ ಸಮಗ್ರ, ಸಾಕ್ಷ್ಯ ಆಧಾರಿತ ಪರಿಹಾರಗಳನ್ನು ಒದಗಿಸುವ ಮೂಲಕ ದೇಶಗಳ ಆರೋಗ್ಯ ಮೂಲಸೌಕರ್ಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಪ್ರತಿವಾದಿಯ ಏಕೈಕ ಅನ್ವೇಷಣೆಯಾಗಿದೆ ಎಂದು ವಿನಮ್ರವಾಗಿ ಸಲ್ಲಿಸಲಾಗಿದೆ. +ರಾಮ್ದೇವ್ ಮತ್ತು ಬಾಲಕೃಷ್ಣರಿಂದ 2006 ರಲ್ಲಿ ಸ್ಥಾಪಿತವಾದ ಪತಂಜಲಿ ಆಯುರ್ವೇದ ಬಹುರಾಷ್ಟ್ರೀಯ ಸಂಘಟಿತವಾಗಿದೆ, ಇದು ಆಯುರ್ವೇದ ಔಷಧದಿಂದ ಸೌಂದರ್ಯವರ್ಧಕಗಳವರೆಗೆ ಆಹಾರ ಪದಾರ್ಥಗಳವರೆಗೆ ಉತ್ಪನ್ನಗಳ ದೀರ್ಘ ಪಟ್ಟಿಯನ್ನು ತಯಾರಿಸುತ್ತದೆ. ತಮ್ಮ ಉತ್ಪನ್ನಗಳ ಪರಿಣಾಮಕಾರಿತ್ವದ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಸಂಘಟಿತ ಸಂಸ್ಥೆಯು ತೊಂದರೆಗೆ ಸಿಲುಕಿದೆ. \ No newline at end of file diff --git a/eesanje/url_47_142_8.txt b/eesanje/url_47_142_8.txt new file mode 100644 index 0000000000000000000000000000000000000000..824f9f5bfc71aeae8200c327d3e366b70b0df1e5 --- /dev/null +++ b/eesanje/url_47_142_8.txt @@ -0,0 +1,3 @@ +ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಪತ್ತೆ +ಶ್ರೀನಗರ, ಮಾ.20-ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಸಿಬ್ಬಂದಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪತ್ತೆ ಹಚ್ಚಿದ್ದಾರೆ. ಬಿಎಸ್‍ಎಫ್, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಈ ಭಾರಿ ಪ್ರಮಾಣದ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭಧ್ರತಾ ಪಡೆ ಅಧಿಕಾರಯೊಬ್ಬರು ತಿಳಿಸಿದ್ದಾರೆ. +ಗುಪ್ತಚರ ಮಾಹಿತಿ ಮೇಲೆ ಇಂದು ರಂಗವಾರ್, ಕುಪ್ವಾರ ಪ್ರದೇಶದಲ್ಲಿ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗಿಸಿಟ್ಟಿದ್ದ 9 ಎಂಎಂ ಪಿಸ್ತೂಲ್ 01 ಮ್ಯಾಗ್ 29 ಆರ್ಡಿಎಸ್, 01 ಮ್ಯಾಗ್ ಎಕೆ 47/400 ರ್‍ಡಿಎಕ್ಸ್ , 02 ಕಾಮನ್ ಸೆಟ್‍ಗಳು, ಹ್ಯಾಂಡ್ ಗ್ರೆನೇಡ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. \ No newline at end of file diff --git a/eesanje/url_47_142_9.txt b/eesanje/url_47_142_9.txt new file mode 100644 index 0000000000000000000000000000000000000000..3566014b8c574a948ca660a4bf893dac91498e21 --- /dev/null +++ b/eesanje/url_47_142_9.txt @@ -0,0 +1,4 @@ +ತಿರುಪತಿಯಲ್ಲಿ ತಿಮ್ಮಪ್ಪನಿಗೆ ಅದ್ದೂರಿ ತೆಪ್ಪೋತ್ಸವ +ತಿರುಪತಿ , ಮಾ.21 (ಪಿಟಿಐ) :ತಿರುಮಲ ತಿರುಪತಿ ದೇವಸ್ಥಾನದಲ್ಲಿ ವಾರ್ಷಿಕ ತೆಪ್ಪೋತ್ಸವ ಅದ್ದೂರಿಯಾಗಿ ಆರಂಭವಾಗಿದೆ. ಹಬ್ಬದ ಅಂಗವಾಗಿ ಮೊದಲ ದಿನ ಸೀತಾ ದೇವಿ ಮತ್ತು ಲಕ್ಷ್ಮಣನೊಂದಿಗೆ ಶ್ರೀರಾಮನನ್ನು ಪೂಜಿಸಲಾಗುತ್ತದೆ ಮತ್ತು ಸ್ವಾಮಿ ಪುಷ್ಕರಿಣಿ ನೀರಿನಲ್ಲಿ ಅಲಂಕೃತವಾದ ತೇರಿನ ಮೇಲೆ ಸ್ವರ್ಗೀಯ ಸವಾರಿ ನಡೆಸಲಾಗುತ್ತದೆ ಎಂದು ಟಿಟಿಡಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ. +ನಿನ್ನೆ ತಿರುಮಲದಲ್ಲಿ ರಾಮಚಂದ್ರುಡಿತಾಡು, ರಘುವೀರುಡು ಮತ್ತು ಇತರ ಶ್ರೀರಾಮ ಸಂಕೀರ್ತನೆಗಳನ್ನು (ಸ್ತೋತ್ರಗಳು) ಪ್ರಸ್ತುತಪಡಿಸುವುದರ ಜತೆಗೆ ವೇದಗಳು ಮತ್ತು ವೇದ ಸ್ತೋತ್ರಗಳನ್ನು ಪಠಿಸಲಾಯಿತು. ತೆಪ್ಪೋತ್ಸವದ ಎರಡನೇ ದಿನದಂದು ಇಂದು ಶ್ರೀ ಕೃಷ್ಣ ಮತ್ತು ರುಕ್ಮಿಣಿಯನ್ನು ತೇಲಲ್ಲಿ ಕರೆದೊಯ್ಯಲಾಗುತ್ತದೆ. +ಉಳಿದ ಮೂರು ದಿನಗಳಲ್ಲಿ ಶ್ರೀ ಮಲಯಪ್ಪ ಸ್ವಾಮಿಯನ್ನು ಶ್ರೀದೇವಿ ಮತ್ತು ಭೂದೇವಿಯೊಂದಿಗೆ ದೇವಾಲಯದ ತೊಟ್ಟಿಯಲ್ಲಿ ವಿಹಾರಕ್ಕೆ ಕರೆದೊಯ್ಯಲಾಗುತ್ತದೆ. ಏತನ್ಮಧ್ಯೆ, ತೆಪ್ಪೋತ್ಸವದ ನಿಮಿತ್ತ ಟಿಟಿಡಿ ಸಹಸ್ರ ದೀಪಾಲಂಕಾರ ಸೇವೆಯನ್ನು ರದ್ದುಗೊಳಿಸಿದೆ. \ No newline at end of file diff --git a/eesanje/url_47_143_1.txt b/eesanje/url_47_143_1.txt new file mode 100644 index 0000000000000000000000000000000000000000..9aa6e7c807f850f238a47d097ce282acb523dad8 --- /dev/null +++ b/eesanje/url_47_143_1.txt @@ -0,0 +1,9 @@ +2004ರ ಇಂಡಿಯಾ ಶೈನಿಂಗ್ ಘೋಷ ವಾಖ್ಯದಂತೆ ಮೋದಿ ಭರವಸೆಗಳು ಹುಸಿಯಾಗಲಿವೆ : ಖರ್ಗೆ +ದೆಹಲಿ, ಮಾ.19-ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಭರವಸೆಗಳು 2004ರ ಇಂಡಿಯಾ ಶೈನಿಂಗ್ ಎಂಬ ಘೋಷ ವಾಖ್ಯದಂತೆ ಹುಸಿಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿಂದು ನಡೆದ ಕಾಂಗ್ರೆಸ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆರಂಭದಲ್ಲಿ ಮಾತ ನಾಡಿದ ಅವರು, ಪ್ರಸ್ತುತ ಸರ್ಕಾರ ಪ್ರಸ್ತುತಪಡಿಸುತ್ತಿರುವ ಖಾತರಿಗಳು 2004 ರ ಇಂಡಿಯಾ ಶೈನಿಂಗ್ ಸ್ಲೋಗನ್ನಂತೆ ಪೊಳ್ಳಾಗಿದೆ. ನಮ್ಮ ಪ್ರಣಾಳಿಕೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರಚಾರವನ್ನು ಪಡೆಯು ತ್ತಿದೆ ಮತ್ತು ನಮ್ಮ ಬದ್ಧತೆಯನ್ನು ದೇಶಾದ್ಯಂತದ ಪ್ರತಿ ಮನೆಗಳಿಗೆ ಮತ್ತು ದೊಡ್ಡ ಜನರಿಗೆ ತಲುಪಿಸ ಲಾಗುತ್ತಿದೆ ಎಂದು ಹೇಳಿದರು. +ಕಾಂಗ್ರೆಸ್ ತನ್ನ ಪ್ರಣಾಳಿಕೆ ತಯಾರಿಕೆಯನ್ನು ಅಕಾಡೆಮಿಕ್ ಚರ್ಚೆಗೆ ಸೀಮಿತಗೊಳಿಸದೆ, ಸಾರ್ವ ಜನಿಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ರೂಪಿಸಿರು ವುದು ಹೆಗ್ಗಳಿಕೆಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ವ್ಯಾಪಕವಾದ ಸಮಾಲೋಚನೆಗಳನ್ನು ನಡೆಸ ಲಾಗಿದೆ. ಅಂತಿಮವಾಗಿ ಮಾ.6 ರಂದು ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಕರಡು ಪ್ರಣಾಳಿಕೆಯನ್ನು ಸಲ್ಲಿಸಿದ್ದಾರೆ ಎಂದು ವಿವರಿಸಿದರು. +ಅವಾಜ್ ಭಾರತ್ ಕಿ ಅಭಿಯಾನದ ಮೂಲಕ ಆನ್ಲೈನ್ ವೆಬ್ಸೈಟ್ನ ಮೂಲಕವೂ ಸಲಹೆಗಳು ಮತ್ತು ಕಾಮೆಂಟ್ಗಳನ್ನು ಪಡೆಯಲಾಗಿದೆ. ಪ್ರಣಾಳಿಕೆಯಲ್ಲಿ ಏನು ಭರವಸೆ ನೀಡಲಾಗಿದೆ, ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುವ ಮೊದಲು, ಈ ಭರವಸೆಗಳು ಕಾರ್ಯರೂಪಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ಆಳವಾದ ಚರ್ಚೆ ಮಾಡಲಾಗಿದೆ ಎಂದು ಹೇಳಿದರು. +ಸ್ವಾತಂತ್ರ್ಯದ ನಂತರ, ಕಾಂಗ್ರೆಸ್ ಪಕ್ಷದ ಮೊದಲ ಪ್ರಣಾಳಿಕೆಯನ್ನು ಪಂಡಿತ್ ಜವಾಹರಲಾಲ್ ನೆಹರು ಅವರ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸುವ ಬದ್ಧತೆ ಹೊಂದಿದೆ. ಅದೇ ಕಾರಣದಿಂದ 1926 ರಿಂದ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನಂಬಿಕೆ ಮತ್ತು ಬದ್ಧತೆಯ ಉದಾಹರಣೆಯಾಗಿದೆ ಎಂದು ಹೇಳಿದರು. +ಮಾ.16 ರಂದು ಮುಂಬೈನಲ್ಲಿ ಮುಕ್ತಾಯಗೊಂಡ 63 ದಿನಗಳ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಂಡ ಖರ್ಗೆ ಅವರು, ಮುಂಬೈ ನಮಗೆ ಪ್ರಮುಖ ಸ್ಥಳವಾಗಿದೆ. ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡಿದ್ದೆ ಅಲ್ಲಿ ಎಂದರು.ಭಾರತ್ ಜೋಡೋ ಮತ್ತು ಭಾರತ್ ನ್ಯಾಯ ಯಾತ್ರೆಗಳು ಕೇವಲ ರಾಜಕೀಯಕ್ಕೆ ಸೀಮಿತವಾಗಿರಲಿಲ್ಲ. ಐತಿಹಾಸಿಕವಾದ ದೊಡ್ಡ ಜನಸಂಪರ್ಕ ಆಂದೋಲನಗಳಾಗಿವೆ. ಜನರ ಸಮಸ್ಯೆಯನ್ನು ರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿವೆ. ಯಾತ್ರೆಯ ಸಂದರ್ಭದಲ್ಲಿ, ನಾನು ಮತ್ತು ರಾಹುಲ್ ಇಬ್ಬರೂ ಹಲವಾರು ಸಾರ್ವಜನಿಕ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಿದ್ದೇವೆ ಎಂದರು. +ಯಾತ್ರೆಯ ಐದು ಸ್ತಂಭಗಳಾದ ಕಿಸಾನ್ ನ್ಯಾಯ್, ಯುವ ನ್ಯಾಯ್, ನಾರಿ ನ್ಯಾಯ್, ಶ್ರಮಿಕ್ ನ್ಯಾಯ್ ಮತ್ತು ಹಿಸ್ಸೆದಾರಿ ನ್ಯಾಯ್ ಅಡಿಯಲ್ಲಿ ನಮ್ಮ ಖಾತರಿಗಳು ಮತ್ತು ಬದ್ಧತೆಗಳ ಬಗ್ಗೆ ಜನರಿಗೆ ವಿವರಿಸಿದ್ದೇವೆ. ಕಳೆದ ಎರಡು ತಿಂಗಳುಗಳಲ್ಲಿ, ಒಟ್ಟು 25 ಗ್ಯಾರಂಟಿಗಳು – 5 ನ್ಯಾಯ್ಗಳಿಗೆ ತಲಾ 5 ಗ್ಯಾರಂಟಿಗಳನ್ನು ಘೋಷಿಸ ಲಾಗಿದೆ. +ಈ ಗ್ಯಾರಂಟಿಗಳಿಗೆ ಸಂಬಂಧಿಸಿದಂತೆ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಹೆಚ್ಚು ಚರ್ಚೆಗಳಾಗಿವೆ. ಮುಂದಿನ 5 ವರ್ಷಗಳಲ್ಲಿ ನಮ್ಮ ಆದ್ಯತೆಗಳು, ನೀತಿಗಳು ಮತ್ತು ಕಾರ್ಯಕ್ರಮಗಳು ಏನಾಗಲಿವೆ ಎಂಬುದನ್ನು ಚುನಾವಣೆ ಕಾಲಘಟ್ಟದಲ್ಲಿ ಜನರಿಗೆ ನಾವು ವಿವರಿಸಬೇಕಿದೆ ಎಂದರು. +ಪ್ರಣಾಳಿಕೆಯ ಕರಡು ಅಂಶಗಳ ಕುರಿತು ಚರ್ಚೆ ನಡೆಯಲಿದೆ. ಆ ನಂತರ ಸಭೆಯಲ್ಲಿ ನಡೆಯುವ ಚರ್ಚೆಯ ಅಂಶಗಳನ್ನು ಆಧರಿಸಿ ಪ್ರಣಾಳಿಕೆಯನ್ನು ಅಂತಿಮಗೊಳಿಸ ಲಾಗುತ್ತದೆ. ದೇಶದಲ್ಲಿ ಬದಲಾವಣೆಯ ಕಾಲ ಬಂದಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂ ಜಿ, ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_47_143_10.txt b/eesanje/url_47_143_10.txt new file mode 100644 index 0000000000000000000000000000000000000000..b79f97a2c49c1752d550f47c3f65b92ba9e58586 --- /dev/null +++ b/eesanje/url_47_143_10.txt @@ -0,0 +1,5 @@ +ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರ ಎನ್‍ಕೌಂಟರ್, ನಾಲ್ವರು ನಕ್ಸಲರ ಹತ್ಯೆ +ಗಡ್ಚಿರೋಲಿ, ಮಾ.19 –ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‍ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯ ನಡುವೆ ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಕೆಲವು ನಕ್ಸಲೀಯರು ನೆರೆಯ ತೆಲಂಗಾಣದಿಂದ ಪ್ರಾಣಹಿತ ನದಿ ದಾಟಿ ಗಡ್ಚಿರೋಲಿಗೆ ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಅನ್ವಯ ಪೊಲೀಸರಿಗೆ ಸಿಕ್ಕ ಮಾಹಿತಿ ಅನ್ವಯಕಾರ್ಯಾಚರಣೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಾಲ್ ತಿಳಿಸಿದ್ದಾರೆ. +ಮೃತ ನಕ್ಸಲರ ಪತ್ತೆಗೆ ಬಹುಮಾನವನ್ನು ಘೋಷಿಸಲಾಗಿತ್ತು ಗಡ್ಚಿರೋಲಿ ಪೊಲೀಸರ ವಿಶೇಷ ತಂಡಗಳು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕ್ವಿಕ್ ಆಕ್ಷನ್ ತಂಡವನ್ನು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. +ಬೆಳಗ್ಗೆ ರೆಪನ್‍ಪಲ್ಲಿ ಸಮೀಪದ ಕೋಲಮಾರ್ಕ ಪರ್ವತಗಳಲ್ಲಿ ಶೋಧ ನಡೆಸುತ್ತಿದ್ದಾಗ ನಕ್ಸಲೀಯರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಗುಂಡಿನ ದಾಳಿ ನಿಂತ ನಂತರ, ಆ ಪ್ರದೇಶದಲ್ಲಿ ಶೋಧ ನಡೆಸಲಾಯಿತು ನಾಲ್ವರು ನಾಲ್ವರು ಪುರುಷ ನಕ್ಸಲೀಯರ ಮೃತದೇಹಗಳು ಪತ್ತೆಯಾಗಿವೆ, ಅವರ ತಲೆಯ ಮೇಲೆ 36 ಲಕ್ಷ ರೂಪಾಯಿಗಳ ಸಾಮೂಹಿಕ ನಗದು ಬಹುಮಾನವನ್ನು ಹೊತ್ತಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_143_11.txt b/eesanje/url_47_143_11.txt new file mode 100644 index 0000000000000000000000000000000000000000..7ded93f5b87f598594baece54517edd7334b1b51 --- /dev/null +++ b/eesanje/url_47_143_11.txt @@ -0,0 +1,4 @@ +ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್ ಅಭ್ಯರ್ಥಿ +ಅಹಮದಾಬಾದ್, ಮಾ 19-ಗುಜರಾತ್‍ನ ಅಹಮದಾಬಾದ್ ಪೂರ್ವ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೋಹನ್ ಗುಪ್ತಾ ಅವರು ಸ್ಪರ್ಧೆಯಿಂದ ಹಿಂದೆ ಸರಿಯುತ್ತಿರುವುದಾಗಿ ಹೇಳಿದ್ದಾರೆ. ಗುಪ್ತಾ ಅವರು ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರರಾಗಿದ್ದು, ಮಾರ್ಚ್ 12 ರಂದು ಪಕ್ಷವು ಘೋಷಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರಿತ್ತುಆದರೆ ಕೌಟುಂಬಿಕ ಕಾರಣ ನಾನು ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. +ನನ್ನ ತಂದೆಯ ಸ್ಥಿತಿ ಗಂಭೀರವಾದ ಕಾರಣ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಹಾಗಾಗಿ ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಸ್ರ್ಪಧಿಸುವುದಿಲ್ಲ ಹೊಸ ಅಭ್ಯರ್ಥಿಗೆ ನಾನು ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. +ಅವರು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ್ ಗೋಹಿಲ್ ಅವರಿಗೆ ತಮ್ಮ ಕೈಬರಹದ ಪತ್ರ ಮೂಲಕ ತಿಳಿಸಿರುವುದಾಗಿ ಪೋಸ್ಟ್ ಮಾಡಿದ್ದಾರೆ, ಪ್ರಸ್ತು ಗುಜರಾತ್‍ನ ಎಲ್ಲಾ 26 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.ಕಾಂಗ್ರೆಸ್ ಇನ್ನೂ 19 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ.ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಇದುವರೆಗೆ 22 ಅಭ್ಯರ್ಥಿಗಳನ್ನು ಘೋಷಿಸಿದೆ. \ No newline at end of file diff --git a/eesanje/url_47_143_12.txt b/eesanje/url_47_143_12.txt new file mode 100644 index 0000000000000000000000000000000000000000..341ce4ca229a2026f2b6858a63a1c7dee5a8a8eb --- /dev/null +++ b/eesanje/url_47_143_12.txt @@ -0,0 +1,6 @@ +ತೆಲಂಗಾಣ ರಾಜ್ಯಪಾಲೆ ತಮಿಳುಸಾಯಿ ಸೌಂದರರಾಜನ್ ರಾಜೀನಾಮೆ +ಹೈದರಾಬಾದ್,ಮಾ.18- ತೆಲಂಗಾಣದ ರಾಜ್ಯಪಾಲರಾಗಿದ್ದ ತಮಿಳುಸಾಯಿ ಸೌಂದರರಾಜನ್ ಅವರು ತಮ್ಮ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿದ್ದಾರೆ. ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಅವರು, ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. +ವೈಯಕ್ತಿಕ ಕಾರಣಗಳಿಂದ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯಮಾಡಿ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಅವರು ಮನವಿಯಲ್ಲಿ ಕೋರಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರು ಲೋಕಸಭೆ ಚುನಾವಣೆಗೆ ತಮಿಳುನಾಡಿನ ಯಾವುದಾ ದರೊಂದು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಸಂಭವವಿದೆ.ಈ ಹಿಂದೆ ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಚುನಾವಣೆಗೆ ಸಜ್ಜಾಗಬೇಕೆಂದು ಪಕ್ಷದ ವರಿಷ್ಠರೇ ಸೂಚನೆ ನೀಡಿದ್ದರು ಎಂದು ತಿಳಿದುಬದಿದೆ. +ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಮೊರೆ ಹೋದ ಬಿಜೆಪಿ +ಪುದುಚೇರಿಯಲ್ಲಿ ಎನ್‍ಆರ್ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟದ ಪರವಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸ್ರ್ಪಧಿಸಲಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ 39 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆಲವು ದಿನಗಳ ಹಿಂದೆ ತಮಿಳುಸಾಯಿ ಸೌಂದರರಾಜನ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕತ್ವದಲ್ಲಿ ಸ್ರ್ಪಧಿಸುವ ಇಚ್ಛೆ ವ್ಯಕ್ತಪಡಿಸಿದ್ದರು. +ಲೋಕಸಭೆ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿಯಲ್ಲಿ ಸೌಂದರರಾಜನ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದ್ದು,ಅವರು ಉತ್ತರ ತಮಿಳುನಾಡು, ಪುದುಚೇರಿ ಅಥವಾ ಚೆನ್ನೈ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ರ್ಪಧಿಸಬಹುದು ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_143_2.txt b/eesanje/url_47_143_2.txt new file mode 100644 index 0000000000000000000000000000000000000000..3b3ff46c39a6b7f0d86500fb1758334827bb50cd --- /dev/null +++ b/eesanje/url_47_143_2.txt @@ -0,0 +1,7 @@ +ಬಿಜೆಪಿಯಿಂದ ಚಂದಾ ಕಾ ಧಂಡಾ : ಶತ್ರುಘ್ನ ಸಿನ್ಹಾ +ಪಾಟ್ನಾ,ಮಾ.19-ಚುನಾವಣಾ ಬಾಂಡ್ ಯೋಜನೆ ಮೂಲಕ ವಿರೋಧ ಪಕ್ಷಗಳು ದೇಣಿಗೆ ಪಡೆದಿವೆ, ಆದರೆ ಬಿಜೆಪಿಯು ಸುಲಿಗೆ ಮತ್ತು ಬ್ಲ್ಯಾಕ್ಮೇಲ್ಗೆ ವ್ಯವಸ್ಥೆಯನ್ನು ಬಳಸಿಕೊಂಡಿದೆ ಎಂದು ನಟ ಕಮ್ ರಾಜಕಾರಣಿ ಶತ್ರುಘ್ನ ಸಿನ್ಹಾ ಆರೋಪಿಸಿದ್ದಾರೆ. +ಪಶ್ಚಿಮ ಬಂಗಾಳದ ಅಸನ್ಸೋಲ್ನಲ್ಲಿ ಲೋಕಸಭೆ ಕದನಕ್ಕೆ ಸಜ್ಜಾಗುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದ ಸಿನ್ಹಾ ಅವರು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.ಈಗ ರದ್ದಾಗಿರುವ ವ್ಯವಸ್ಥೆಯ ಮೂಲಕ ದೇಣಿಗೆ ಪಡೆದ ಪಕ್ಷಗಳ ಪಟ್ಟಿಯಲ್ಲಿ ತೃಣಮೂಲ ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷ ಅಥವಾ ಯಾವುದೇ ವಿರೋಧ ಪಕ್ಷವು ಸುಲಿಗೆ ಅಥವಾ ಬ್ಲ್ಯಾಕ್ಮೇಲ್ಗೆ ಆಶ್ರಯಿಸಿದೆಯೇ? ಅವರು ಒತ್ತಡ ಹೇರಿದ್ದಾರೆಯೇ? ನೀವು ದೇಣಿಗೆ ನೀಡದಿದ್ದರೆ, ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ನಿಮ್ಮ ಹಿಂದೆ ಹೋಗುತ್ತದೆಯೇ? ಎಂದು ಬೆದರಿಸಿಲ್ಲ ಎಂದಿದ್ದಾರೆ. ಚುನಾವಣಾ ಬಾಂಡ್ಗಳ ಮೂಲಕ ದೇಣಿಗೆ ನೀಡಿದವರು ಸಾವಿರಾರು ಕೋಟಿ ಮೌಲ್ಯದ ಒಪ್ಪಂದಗಳನ್ನು ಪಡೆದಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. +ರಾಜಕೀಯ ನಿಧಿಗಾಗಿ ಚುನಾವಣಾ ಬಾಂಡ್ಗಳ ಯೋಜನೆ ಪರಿಚಯಿಸಿದ್ದು ಬಿಜೆಪಿ ಎಂದು ಸಿನ್ಹಾ ಹೇಳಿದರು. ನೀವು ದಾರಿಯನ್ನು ತೆರವುಗೊಳಿಸಿದ್ದೀರಿ, ಇತರರು ಹಾರಿದರೆ ಏನು ಸಮಸ್ಯೆ? ಅವರು ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿಲ್ಲ ಅಥವಾ ಸಂಚು ರೂಪಿಸಿಲ್ಲ ಅಥವಾ ವಂಚನೆ ಮಾಡಿಲ್ಲ, ಅವರು ದೌರ್ಜನ್ಯ ಎಸಗಿಲ್ಲ ಅಥವಾ ಜನರನ್ನು ಬಂಧಿಸುವ ಬೆದರಿಕೆ ಹಾಕಿಲ್ಲ ಎಂದು ಅವರು ಹೇಳಿದರು. +ಆಡಳಿತಾರೂಢ ಬಿಜೆಪಿಯು ಚಂದಾ ಕಾ ಧಂಡಾ (ದೇಣಿಗೆಯ ವ್ಯಾಪಾರ) ಮಾಡಿದೆ ಎಂದು ಅವರು ಹೇಳಿದರು. ನೀವು ಒಪ್ಪಂದಗಳನ್ನು ನೀಡಿದ್ದೀರಿ (ದೇಣಿಗೆಯ ಆಧಾರದ ಮೇಲೆ), ಬಂಧನಗಳನ್ನು ಮಾಡಿದ್ದೀರಿ, ಜನರನ್ನು ಬೆದರಿಸಿದ್ದೀರಿ. ನಿಮ್ಮ ನಮ್ಮ ನಡುವೆ ವ್ಯತ್ಯಾಸದ ಸಮುದ್ರವಿದೆ ಎಂದು ಅವರು ಹೇಳಿದರು. +ಅದು ತೃಣಮೂಲ ಕಾಂಗ್ರೆಸ್ ಅಥವಾ ಸಮಾಜವಾದಿ ಪಕ್ಷ ಅಥವಾ ಕಾಂಗ್ರೆಸ್ ಆಗಿರಲಿ, ಅವರು ವ್ಯವಸ್ಥೆಯ ಅಡಿಯಲ್ಲಿ ಹಣವನ್ನು ಪಡೆದರು, ಆದರೆ ಅವರು ಅದನ್ನು ದುರುಪಯೋಗಪಡಿಸಿ ಕೊಳ್ಳಲಿಲ್ಲ, ಅವರು ಅದನ್ನು ಭಯವಾಗಿ ಪರಿವರ್ತಿಸಲು ಪ್ರಯತ್ನಿಸಲಿಲ್ಲ. ನೀವು ನಮ್ಮ ಮತ್ತು ಆಡಳಿತ ಪಕ್ಷದ ನಡುವೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. +ಭಾರತದ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, 2018 ರಲ್ಲಿ ಯೋಜನೆಯನ್ನು ಜಾರಿಗೊಳಿಸಿದಾಗಿನಿಂದ ಬಿಜೆಪಿಯು ಈ ಬಾಂಡ್ಗಳ ಮೂಲಕ ಗರಿಷ್ಠ ಹಣವನ್ನು (ರೂ 6,986.5 ಕೋಟಿ) ಸ್ವೀಕರಿಸಿದೆ. ತೃಣಮೂಲ ಕಾಂಗ್ರೆಸ್ ದೂರದ ಎರಡನೇ (ರೂ. 1,397 ಕೋಟಿ) ಮತ್ತು ಕಾಂಗ್ರೆಸ್ ಮೂರನೇ ಸ್ಥಾನದಲ್ಲಿದೆ ( ರೂ 1,334 ಕೋಟಿ). \ No newline at end of file diff --git a/eesanje/url_47_143_3.txt b/eesanje/url_47_143_3.txt new file mode 100644 index 0000000000000000000000000000000000000000..00f2fc85ecd99c3af4413ee8c347a10fea9dfaa3 --- /dev/null +++ b/eesanje/url_47_143_3.txt @@ -0,0 +1,5 @@ +ತಮಿಳುನಾಡಿನಲ್ಲಿ ಬಿಜೆಪಿ-ಪಿಎಂಕೆ ಮೈತ್ರಿ +ವಿಲ್ಲುಪುರಂ ,ಮಾ. 19 (ಪಿಟಿಐ) :ಬರುವ ಏಪ್ರಿಲ್ 19 ರಂದು ನಡೆಯಲಿರುವ ಲೋಕಸಭೆ ಚುನಾವಣೆಗೆ ತಮಿಳುನಾಡಿನ ಡಾ ಎಸ್ ರಾಮದಾಸ್ ನೇತೃತ್ವದ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಜೊತೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ. ಪ್ರಾದೇಶಿಕ ಪಕ್ಷಗಳಿಗೆ 10 ಸ್ಥಾನ ಬಿಟ್ಟುಕೊಡುವ ಒಪ್ಪಂದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮತ್ತು ಪಿಎಂಕೆ ಸಂಸ್ಥಾಪಕ ರಾಮದಾಸ್ ಅವರು ಇಲ್ಲಿನ ತೈಲಾಪುರಂ ನಿವಾಸದಲ್ಲಿ ಸಹಿ ಹಾಕಿದರು. +ಪಿಎಂಕೆ ವನ್ನಿಯಾರ್ ಸಮುದಾಯದ ಪ್ರಾಬಲ್ಯದ ಪಕ್ಷವಾಗಿದೆ ಮತ್ತು ರಾಜ್ಯದ ಉತ್ತರದ ಕೆಲವು ಜಿಲ್ಲೆಗಳಲ್ಲಿ ಗಮನಾರ್ಹ ಪ್ರಭಾವವನ್ನು ಹೊಂದಿದೆ. ಪಿಎಂಕೆ ಎನ್ಡಿಎಯಲ್ಲಿ ತಮಿಳುನಾಡಿನ 10 ಸ್ಥಾನಗಳಿಂದ ಸ್ಪರ್ಧಿಸಲಿದೆ ಎಂದು ಅಣ್ಣಾಮಲೈ ಮತ್ತು ಪಿಎಂಕೆ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಡಾ ಅನ್ಬುಮಣಿ ರಾಮದಾಸ್ ಅವರುಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. +ಪಿಎಂಕೆ ಕಳೆದ 10 ವರ್ಷಗಳಿಂದ ಎನ್ಡಿಎಯಲ್ಲಿದೆ, 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಬಣದ ಒಂದು ಘಟಕವಾಗಿ ಹೋರಾಡುತ್ತಿದೆ ಎಂದು ಇಬ್ಬರೂ ನಾಯಕರು ಹೇಳಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಮಾಡುತ್ತಿರುವ ಸಮಾಜದ ಹಿತದೃಷ್ಟಿಯಿಂದ ಕ್ರಾಂತಿಕಾರಿ ಆಲೋಚನೆಗಳನ್ನು ಜಾರಿಗೆ ತರಲು ಅವರು ಬಯಸಿದ್ದಾರೆ ಎಂದು ಅಣ್ಣಾಮಲೈ ರಾಮದಾಸ್ ಅವರನ್ನು ಶ್ಲಾಸಿದರು. +ಉಭಯ ಪಕ್ಷಗಳ ಪ್ರಮುಖರ ನಡುವೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಎಲ.ಮುರುಗನ್ ಉಪಸ್ಥಿತರಿದ್ದರು. ಸೇಲಂ ಜಿಲ್ಲೆಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ರಾಮದಾಸ್ ಅವರು ಪ್ರಧಾನಿಯವರೊಂದಿಗೆ ಪಾಲ್ಗೊಳ್ಳುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_143_4.txt b/eesanje/url_47_143_4.txt new file mode 100644 index 0000000000000000000000000000000000000000..a997fb11310881a382fcc53ce7f5831c07cfc0fc --- /dev/null +++ b/eesanje/url_47_143_4.txt @@ -0,0 +1,5 @@ +ಹಿಂದೂ ಮಹಾಸಾಗರದ ಭದ್ರತೆಗೆ ಭಾರತ ಬದ್ಧ ; ಪ್ರಧಾನಿ ಮೋದಿ +ನವದೆಹಲಿ, ಮಾ.19 (ಪಿಟಿಐ) :ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. +ಭಾರತೀಯ ನೌಕಾಪಡೆಯು ತನ್ನ ದೇಶದ ಹಡಗು ಮತ್ತು ಸಿಬ್ಬಂದಿಯನ್ನು ರಕ್ಷಿಸಿದ್ದಕ್ಕಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಅವರು ಮೋದಿಗೆ ಧನ್ಯವಾದ ಸಲ್ಲಿಸಿದ ನಂತರ ಮಾತನಾಡಿದ ಪ್ರಧಾನಿಗಳು ಈ ಭರವಸೆ ನೀಡಿದ್ದಾರೆ. +ಏಳು ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ರುಯೆನ್ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕೆಚ್ಚೆದೆಯ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ಎಂದು ರಾದೇವ್ ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ.ತಮ್ಮ ಉತ್ತರದಲ್ಲಿ ಮೋದಿ ಈ ಸಂದೇಶವನ್ನು ನಾನು ಪ್ರಶಂಸಿಸುತ್ತೇನೆ ಎಂದು ಹೇಳಿದರು. +ಏಳು ಬಲ್ಗೇರಿಯನ್ ಪ್ರಜೆಗಳು ಸುರಕ್ಷಿತವಾಗಿದ್ದಾರೆ ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಿದ್ದಾರೆ ಎಂದು ನಮಗೆ ಸಂತೋಷವಾಗಿದೆ. ನೌಕಾಯಾನ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಹಿಂದೂ ಮಹಾಸಾಗರದ ಪ್ರದೇಶದಲ್ಲಿ ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತ ಬದ್ಧವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_143_5.txt b/eesanje/url_47_143_5.txt new file mode 100644 index 0000000000000000000000000000000000000000..7ee351b8022f1c8d1e18a99593f096ece702eb7f --- /dev/null +++ b/eesanje/url_47_143_5.txt @@ -0,0 +1,8 @@ +ದೆಹಲಿ ವಿಶ್ವದ ಅತ್ಯಂತ ಕಲುಷಿತ ರಾಜಧಾನಿ, ಬಿಹಾರದ ಬೇಗುಸರಾಯ್ ಅತ್ಯಂತ ಕಲುಷಿತ ನಗರ +ನವದೆಹಲಿ, ಮಾ 19 (ಪಿಟಿಐ) :ಬಿಹಾರದ ಬೇಗುಸರಾಯ್ ವಿಶ್ವದ ಅತ್ಯಂತ ಕಲುಷಿತ ಮಹಾನಗರ ಪ್ರದೇಶವಾಗಿ ಹೊರಹೊಮ್ಮಿದೆ ಮತ್ತು ದೆಹಲಿಯು ಅತ್ಯಂತ ಕಳಪೆ ಗಾಳಿಯ ಗುಣಮಟ್ಟದ ರಾಜಧಾನಿಯಾಗಿ ಗುರುತಿಸಲ್ಪಟ್ಟಿದೆ ಎಂದು ಹೊಸ ವರದಿಯೊಂದು ತಿಳಿಸಿದೆ. +ಪ್ರತಿ ಘನ ಮೀಟರ್ಗೆ ಸರಾಸರಿ 54.4 ಮೈಕ್ರೋಗ್ರಾಂಗಳಷ್ಟು 2.5 ಪಿಎಂ ಸಾಂದ್ರತೆಯೊಂದಿಗೆ, ಬಾಂಗ್ಲಾದೇಶ (ಪ್ರತಿ ಘನ ಮೀಟರ್ಗೆ 79.9 ಮೈಕ್ರೋಗ್ರಾಂಗಳು) ಮತ್ತು ಪಾಕಿಸ್ತಾನ (73.7 ಮೈಕ್ರೋಗ್ರಾಂ ಪ್ರತಿ ಘನ ಮೀಟರ್) ನಂತರ 2023 ರಲ್ಲಿ 134 ದೇಶಗಳಲ್ಲಿ ಭಾರತವು ಮೂರನೇ ಕೆಟ್ಟ ಗಾಳಿಯ ಗುಣಮಟ್ಟವನ್ನು ಹೊಂದಿತ್ತು ಎಂದು ಸ್ವಿಸ್ ಸಂಸ್ಥೆ ಸಂಸ್ಥೆ ತಿಳಿಸಿದೆ. +2022 ರಲ್ಲಿ ಪ್ರತಿ ಘನ ಮೀಟರ್ಗೆ ಸರಾಸರಿ 53.3 ಮೈಕ್ರೋಗ್ರಾಂಗಳಷ್ಟು ಪಿಎಂ 2.5 ಸಾಂದ್ರತೆಯೊಂದಿಗೆ ಭಾರತವು ಎಂಟನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದೆ. ಬೇಗುಸರಾಯ್ ಪ್ರತಿ ಘನ ಮೀಟರ್ಗೆ ಸರಾಸರಿ 118.9 ಮೈಕ್ರೋಗ್ರಾಂಗಳಷ್ಟು ಪಿಎಂ 2.5 ಸಾಂದ್ರತೆಯೊಂದಿಗೆ ಜಾಗತಿಕವಾಗಿ ಅತ್ಯಂತ ಕಲುಷಿತ ಮೆಟ್ರೋಪಾಲಿಟನ್ ಪ್ರದೇಶವಾಗಿದೆ. ನಗರವು 2022 ರ ಶ್ರೇಯಾಂಕದಲ್ಲಿ ಸಹ ಕಾಣಿಸಿಕೊಂಡಿಲ್ಲ. +ದೆಹಲಿಯ ಪಿಎಂ 2.5 ಮಟ್ಟವು 2022 ರಲ್ಲಿ ಘನ ಮೀಟರ್ಗೆ 89.1 ಮೈಕ್ರೋಗ್ರಾಂನಿಂದ 2023 ರಲ್ಲಿ ಪ್ರತಿ ಘನ ಮೀಟರ್ಗೆ 92.7 ಮೈಕ್ರೋಗ್ರಾಂಗಳಿಗೆ ಹದಗೆಟ್ಟಿದೆ.2018 ರ ಆರಂಭದ ಟ್ರೊಟ್ನಲ್ಲಿ ರಾಷ್ಟ್ರೀಯ ರಾಜಧಾನಿಯು ವಿಶ್ವದ ಅತ್ಯಂತ ಕಲುಷಿತ ರಾಜಧಾನಿ ನಗರವಾಗಿ ನಾಲ್ಕು ಬಾರಿ ಸ್ಥಾನ ಪಡೆದಿದೆ. ಭಾರತದಲ್ಲಿ 1.36 ಶತಕೋಟಿ ಜನರು ಪಿಎಂ 2.5 ಸಾಂದ್ರತೆಯನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಶಿಫಾರಸು ಮಾಡಿದ ವಾರ್ಷಿಕ ಮಾರ್ಗಸೂಚಿ ಮಟ್ಟವನ್ನು ಪ್ರತಿ ಘನ ಮೀಟರ್ಗೆ 5 ಮೈಕ್ರೋಗ್ರಾಂಗಳಷ್ಟು ಮೀರಿದೆ ಎಂದು ಅಂದಾಜಿಸಲಾಗಿದೆ ಎಂದು ವರದಿ ಹೇಳಿದೆ. +ಅಲ್ಲದೆ, 1.33 ಶತಕೋಟಿ ಜನರು, ಭಾರತೀಯ ಜನಸಂಖ್ಯೆಯ 96 ಪ್ರತಿಶತ ಜನರು, ವಾರ್ಷಿಕ ಪಿಎಂ 2.5 ಮಾರ್ಗಸೂಚಿಗಿಂತ ಏಳು ಪಟ್ಟು ಹೆಚ್ಚಿದೆ. ಈ ಪ್ರವೃತ್ತಿಯು ನಗರ ಮಟ್ಟದ ದತ್ತಾಂಶದಲ್ಲಿ ಪ್ರತಿಫಲಿಸುತ್ತದೆ, ದೇಶದ 66 ಪ್ರತಿಶತಕ್ಕಿಂತಲೂ ಹೆಚ್ಚಿನ ನಗರಗಳು ಪ್ರತಿ ಘನ ಮೀಟರ್ಗೆ ವಾರ್ಷಿಕ ಸರಾಸರಿ 35 ಮೈಕ್ರೋಗ್ರಾಂಗಳಿಗಿಂತ ಹೆಚ್ಚಿನದನ್ನು ವರದಿ ಮಾಡುತ್ತವೆ. +ಈ ವರದಿಯನ್ನು ರಚಿಸಲು ಬಳಸಲಾದ ಡೇಟಾವನ್ನು 30,000 ಕ್ಕೂ ಹೆಚ್ಚು ನಿಯಂತ್ರಕ ವಾಯು ಗುಣಮಟ್ಟ ಮಾನಿಟರಿಂಗ್ ಸ್ಟೇಷನ್ಗಳು ಮತ್ತು ಸಂಶೋಧನಾ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಮತ್ತು ಶೈಕ್ಷಣಿಕ ಸೌಲಭ್ಯಗಳು, ಲಾಭರಹಿತ ಸರ್ಕಾರೇತರ ಸಂಸ್ಥೆಗಳು ನಿರ್ವಹಿಸುವ ಕಡಿಮೆ-ವೆಚ್ಚದ ಗಾಳಿಯ ಗುಣಮಟ್ಟದ ಸಂವೇದಕಗಳ ಜಾಗತಿಕ ವಿತರಣೆಯಿಂದ ಒಟ್ಟುಗೂಡಿಸಲಾಗಿದೆ ಎಂದು ಐಕಿಅಜ್ಟಿ ಹೇಳಿದೆ. ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ನಾಗರಿಕ ವಿಜ್ಞಾನಿಗಳು. +2022 ರ ವಿಶ್ವ ವಾಯು ಗುಣಮಟ್ಟ ವರದಿಯು 131 ದೇಶಗಳು, ಪ್ರದೇಶಗಳು ಮತ್ತು ಪ್ರಾಂತ್ಯಗಳಲ್ಲಿ 7,323 ಸ್ಥಳಗಳಿಂದ ಡೇಟಾವನ್ನು ಒಳಗೊಂಡಿದೆ. 2023 ರಲ್ಲಿ, ಆ ಸಂಖ್ಯೆಗಳು 134 ದೇಶಗಳು, ಪ್ರದೇಶಗಳು ಮತ್ತು ಪ್ರಾಂತ್ಯಗಳಲ್ಲಿ 7,812 ಸ್ಥಳಗಳನ್ನು ಒಳಗೊಂಡಿವೆ. \ No newline at end of file diff --git a/eesanje/url_47_143_6.txt b/eesanje/url_47_143_6.txt new file mode 100644 index 0000000000000000000000000000000000000000..24f53d72ab8c3747426b5fbc8bcbb6ee8c9859e8 --- /dev/null +++ b/eesanje/url_47_143_6.txt @@ -0,0 +1,5 @@ +ಗುಜರಾತ್ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ +ವಡೋದರಾ, ಮಾ 19 (ಪಿಟಿಐ) :ಲೋಕಸಭೆ ಚುನಾವಣೆಗೆ ಮುನ್ನ ಗುಜರಾತ್ ನ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಕೇತನ್ ಇನಾಮದಾರ್ ವಿಧಾನಸಭೆಗೆ ರಾಜೀನಾಮೆ ಸಲ್ಲಿಸಿದ್ದಾರೆ. +ವಡೋದರ ಜಿಲ್ಲೆಯ ಸಾವ್ಲಿ ಕ್ಷೇತ್ರದಿಂದ ಮೂರು ಅವಧಿಗೆ ಶಾಸಕರಾಗಿರುವ ಇನಾಮದಾರ್ ಅವರು ತಮ್ಮ ರಾಜೀನಾಮೆಯನ್ನು ವಿಧಾನಸಭಾ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಸಲ್ಲಿಸಿದ್ದಾರೆ. ಪತ್ರದಲ್ಲಿ, ಇನಾಮದಾರ್ ಅವರು ತಮ್ಮ ಒಳಗಿನ ಧ್ವನಿ ಆಲಿಸಿದ ನಂತರ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. +ಇನಾಮದಾರ್ 2012ರ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಗೆದ್ದಿದ್ದರು. ನಂತರ ಬಿಜೆಪಿ ಸೇರಿ 2017 ಮತ್ತು 2022ರಲ್ಲಿ ಎರಡು ಬಾರಿ ಗೆದ್ದಿದ್ದರು. ಇದಕ್ಕೂ ಮೊದಲು, ಅವರು 2020 ರ ಜನವರಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು, ಆದರೆ ಅದನ್ನು ಸ್ಪೀಕರ್ ಅಂಗೀಕರಿಸಲಿಲ್ಲ. +ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ಸಚಿವರು ತಮ್ಮನ್ನು ಮತ್ತು ತಮ್ಮ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಕೇಸರಿ ಪಕ್ಷದ ಅನೇಕ ಶಾಸಕರು ತಮ್ಮಂತೆ ಹತಾಶೆ ಅನುಭವಿಸುತ್ತಿದ್ದಾರೆ ಎಂದು ಇನಾಮದಾರ್ ಆಗ ಹೇಳಿಕೊಂಡಿದ್ದರು.ಗುಜರಾತ್ ವಿಧಾನಸಭೆಯ ಒಟ್ಟು 182 ಸ್ಥಾನಗಳಲ್ಲಿ ಪ್ರಸ್ತುತ ಬಿಜೆಪಿ 156 ಸ್ಥಾನಗಳನ್ನು ಹೊಂದಿದೆ. ಗುಜರಾತ್ನ ಎಲ್ಲಾ 26 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_143_7.txt b/eesanje/url_47_143_7.txt new file mode 100644 index 0000000000000000000000000000000000000000..ed420c29ab4f377f3ac1aa4732cb1d0920b531e6 --- /dev/null +++ b/eesanje/url_47_143_7.txt @@ -0,0 +1,4 @@ +ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಪೂಜಾರಿಗೆ ಜೈಲು +ಭುವನೇಶ್ವರ್, ಮಾ 19 (ಪಿಟಿಐ) :ವಿದೇಶಿ ಮಹಿಳಾ ಪ್ರವಾಸಿಗರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಒಡಿಶಾದ ರಾಜಧಾನಿಯಲ್ಲಿರುವ ಲಿಂಗರಾಜ ದೇವಸ್ಥಾನದ ಸೇವಾಯತ್ (ಪೂಜಾರಿ)ಗೆ ನ್ಯಾಯಾಲಯವು 18 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯವು ಅಪರಾಧ ನಡೆದ ನಾಲ್ಕು ವಾರಗಳಲ್ಲಿ ಈ ಮಹತ್ವದ ತೀರ್ಪು ಪ್ರಕಟಿಸಿದೆ. +ಫೆಬ್ರವರಿ 19 ರಂದು ಇಲ್ಲಿನ 11ನೇ ಶತಮಾನದ ಲಿಂಗರಾಜ ದೇವಸ್ಥಾನದ ಬಳಿ ಒಂಟಿಯಾಗಿ ತಿರುಗಾಡುತ್ತಿದ್ದ ಸ್ವೀಡನ್ ಪ್ರವಾಸಿ ಮಹಿಳೆಗೆ ಕುಂದನ್ ಮಹಾಪಾತ್ರ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದ.ಘಟನೆಯ ನಂತರ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಅದೇ ದಿನ ಅರ್ಚಕನನ್ನು ಬಂಧಿಸಲಾಗಿತ್ತು. +ಪೊಲೀಸರು ಕೇವಲ ನಾಲ್ಕು ದಿನಗಳಲ್ಲಿ (-ಫೆಬ್ರವರಿ 23) ಚಾರ್ಜ್ ಶೀಟ್ ಸಲ್ಲಿಸಿದರು ಮತ್ತು ಫೆಬ್ರವರಿ 26 ರಂದು ವಿಚಾರಣೆ ಪ್ರಾರಂಭವಾಗಿದ್ದು, ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. \ No newline at end of file diff --git a/eesanje/url_47_143_8.txt b/eesanje/url_47_143_8.txt new file mode 100644 index 0000000000000000000000000000000000000000..633dfc6ddbea119cbcc97cfcece28784ed230c10 --- /dev/null +++ b/eesanje/url_47_143_8.txt @@ -0,0 +1,5 @@ +ನಮಾಜ್ ವಿಷಯಕ್ಕೆ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡನೀಯ : ಕೇರಳ ರಾಜ್ಯಪಾಲ ಖಾನ್ +ಗಾಂಧಿನಗರ, ಮಾ 19 (ಪಿಟಿಐ) :ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಬ್ಲಾಕ್‍ನಲ್ಲಿ ನಮಾಜ್ ಮಾಡಲು ವಿದೇಶಿ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯಂತಹ ಘಟನೆಗಳು ದೇಶದ ಜನರಿಗೆ ಅದರ ಸಂಪ್ರದಾಯಗಳು ಮತ್ತು ಸಂಸ್ಕøತಿಯ ಪರಂಪರೆಯ ಬಗ್ಗೆ ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. +ಗಾಂಧಿನಗರದಲ್ಲಿರುವ ಗುಜರಾತ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ಜ್ಞಾನ ಸಂಪ್ರದಾಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಲು ಆಹ್ವಾನಿಸಿದ ಸಂದರ್ಭದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಖಾನ್ ಈ ವಿಷಯ ತಿಳಿಸಿದರು. ದಾಳಿಯ ಕುರಿತು ಪ್ರಶ್ನಿಸಿದ ಅವರು, ಇಂತಹ ಘಟನೆಗಳು ನಮ್ಮದೇ ಆದ ಸಂಪ್ರದಾಯಗಳು ಮತ್ತು ಸಂಸ್ಕøತಿ ಪರಂಪರೆಯ ಬಗ್ಗೆ ನಮಗೆ ಇನ್ನೂ ಸಂಪೂರ್ಣವಾಗಿ ತಿಳಿದಿಲ್ಲ ಎಂದು ಸೂಚಿಸುತ್ತದೆ. ಈ ರೀತಿಯ ಸಮ್ಮೇಳನಗಳು ನಮ್ಮ ಸಂಪ್ರದಾಯಗಳು ಯಾವುವು ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ. +ಜನರು ವಿಭಿನ್ನ ನಂಬಿಕೆಗಳು ಮತ್ತು ಸಂಪ್ರದಾಯಗಳನ್ನು ಅನುಸರಿಸುತ್ತಿದ್ದರೂ, ಅಂತಿಮವಾಗಿ ಅವರು ತಮ್ಮ ಆತ್ಮದಿಂದ ಒಂದಾಗುತ್ತಾರೆ ಎಂದು ಖಾನ್ ತಮ್ಮ ಭಾಷಣದಲ್ಲಿ ಹೇಳಿದರು. ನಾವೆಲ್ಲರೂ ನಮ್ಮ ಭಕ್ತಿಯನ್ನು ವ್ಯಕ್ತಪಡಿಸಲು ವಿಭಿನ್ನ ಮಾರ್ಗಗಳನ್ನು ಹೊಂದಿರಬಹುದು. ನನ್ನ ಭಾಷೆ, ಚರ್ಮದ ಬಣ್ಣ ಮತ್ತು ಸಂಪ್ರದಾಯಗಳು ಮತ್ತು ಸಂಪ್ರದಾಯಗಳು ನಿಮ್ಮಿಂದ ಭಿನ್ನವಾಗಿರಬಹುದು. ಆದರೂ, ನಾವೆಲ್ಲರೂ ನಮ್ಮ ಆತ್ಮದಿಂದ ಒಂದಾಗಿದ್ದೇವೆ, ಭಾರತೀಯ ಜ್ಞಾನ ಸಂಪ್ರದಾಯವು ನಮಗೆ ಕಲಿಸುತ್ತದೆ, ಅವರು ಹೇಳಿದರು. +ಈ ಸಂದರ್ಭದಲ್ಲಿ, ಖಾನ್ ಅವರು ವೇದಗಳು ಮತ್ತು ಭಗವದ್ಗೀತೆಯಿಂದ ಹಲವಾರು ಶ್ಲೋಕಗಳು ಮತ್ತು ಶ್ಲೋಕಗಳನ್ನು ಪಠಿಸಿದರು ಮತ್ತು ಭಾರತವು ನಿರ್ಮಿಸಿದ ಹೆಚ್ಚಿನ ವಿದ್ವಾಂಸರು ಸಂತರು ಎಂದು ಸಭಿಕರಿಗೆ ತಿಳಿಸಿದರು.ಸ್ವಾಮಿ ವಿವೇಕಾನಂದರ ಬೋಧನೆಗಳನ್ನು ಉಲ್ಲೇಖಿಸಿದ ಖಾನ್, ಸಮಾಜದಲ್ಲಿ ಗೋಚರಿಸುವ ವೈವಿಧ್ಯತೆಯ ಹಿಂದೆ ಯಾವಾಗಲೂ ಏಕತೆಯನ್ನು ಕಂಡುಕೊಳ್ಳುವ ಜ್ಞಾನವುಳ್ಳ ವ್ಯಕ್ತಿ ಎಂದು ಹೇಳಿದರು. \ No newline at end of file diff --git a/eesanje/url_47_143_9.txt b/eesanje/url_47_143_9.txt new file mode 100644 index 0000000000000000000000000000000000000000..fea30a541ce9c40cc37706f276ba3a1ab9df2545 --- /dev/null +++ b/eesanje/url_47_143_9.txt @@ -0,0 +1,6 @@ +ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು +ಕೋಲ್ಕತ್ತಾ, ಮಾ.19 (ಪಿಟಿಐ) –ವಾರಣಾಸಿಯ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರದ ಹಣವನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. +ಮುಖ್ಯ ಚುನಾವಣಾ ಆಯುಕ್ತರಿಗೆ ಬರೆದ ಪತ್ರದಲ್ಲಿ, ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ ಬ್ರೇನ್ ಅವರು, ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಮಾರ್ಚ್ 16 ರಂದು ತಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಹೈಲೈಟ್ ಮಾಡುವ ಪ್ರಧಾನಿ ಸಂದೇಶವು ಮತದಾರರನ್ನು ತಲುಪಿದೆ ಎಂದು ಹೇಳಿದರು. +ಮಾರ್ಚ್ 15 ರಂದು ಮತದಾರರಿಗೆ ಪತ್ರದ ರೂಪದಲ್ಲಿ ಮೋದಿ ಸಂದೇಶವನ್ನು ಬರೆದಿದ್ದಾರೆ ಎಂದು ಟಿಎಂಸಿ ನಾಯಕ ಹೇಳಿದ್ದಾರೆ. ಪ್ರಧಾನಿ ಕಚೇರಿಯನ್ನು ಬಳಸಿಕೊಂಡು, ಭಾರತ ಸರ್ಕಾರವು ಕಳುಹಿಸಿರುವ ಸಂದೇಶದ ನೆಪದಲ್ಲಿ ಬಿಜೆಪಿಯು ಸಾರ್ವಜನಿಕ ಖಜಾನೆ ವೆಚ್ಚದಲ್ಲಿ ಈ ಮೇಲಿನ ಪತ್ರವನ್ನು ಬಿಡುಗಡೆ ಮಾಡಿದೆ. +ಇಂತಹ ಸಾಮೂಹಿಕ ಚಲಾವಣೆಯು ಮತದಾರರಿಗೆ ಮನವಿಯಾಗಿದೆ. ಬಿಜೆಪಿ ಮತ್ತು ಮೋದಿ ಪರವಾಗಿ ಮತ್ತು ಆ ಮೂಲಕ ಭಾರತದ ಚುನಾವಣಾ ಆಯೋಗದ ಆದೇಶವನ್ನು ಉಲ್ಲಂಸಿದ್ದಾರೆ, ಎಂದು ಓ ಬ್ರೇನ್ ದೂರಿನಲ್ಲಿ ತಿಳಿಸಿದ್ದಾರೆ. +ಸಾರ್ವಜನಿಕ ಖಜಾನೆಯ ವೆಚ್ಚದಲ್ಲಿ ಭವಿಷ್ಯದ ಪ್ರಚಾರಗಳನ್ನು ತಡೆಹಿಡಿಯಲು ಮತ್ತು ಪತ್ರವನ್ನು ಹಿಂಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿ ಮೋದಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಇಸಿ ಖಚಿತಪಡಿಸಿಕೊಳ್ಳಬೇಕು. ಪ್ರಧಾನಿಯವರ ಪತ್ರವನ್ನು ಮತದಾರರಿಗೆ ಕಳುಹಿಸಲು ತಗಲುವ ವೆಚ್ಚವನ್ನು ಬಿಜೆಪಿ ಮತ್ತು ಮೋದಿಯವರ ಖಾತೆಗಳಲ್ಲಿ ಚುನಾವಣಾ ವೆಚ್ಚದಲ್ಲಿ ಸೇರಿಸಬೇಕು ಎಂದು ಓಬ್ರೇನ್ ಹೇಳಿದರು. \ No newline at end of file diff --git a/eesanje/url_47_144_10.txt b/eesanje/url_47_144_10.txt new file mode 100644 index 0000000000000000000000000000000000000000..d5eefb26b879260c856dd9ad13d1e5a9aa949b32 --- /dev/null +++ b/eesanje/url_47_144_10.txt @@ -0,0 +1,5 @@ +ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆ +ನಾಗ್ಪುರ,ಮಾ.17-ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿ ಮುಂದಿನ 3 ವರ್ಷಗಳವರೆಗೆ ಕರ್ನಾಟಕದ ಮೂಲದವರಾದ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆಗೊಂಡಿದ್ದಾರೆ. +ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭಾರತೀಯ ಪ್ರತಿನಿಧಿ ಸಭೆ ಕಳೆದ ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ ಕಾಲ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ. +ಸಭೆಯಲ್ಲಿ 2024 ರಿಂದ 2027 ರವರೆಗೆ ಆರ್‍ಎಸ್‍ಎಸ್‍ನ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಪುನರ್ ಆಯ್ಕೆ ಮಾಡಲಾಗುವುದು. 2021 ರಿಂದಲೂ ಸರಕಾರ್ಯವಾಹ ಆಗಿ ಕೆಲಸ ಮಾಡುತ್ತಿರುವ ಹೊಸಬಾಳೆ ಮತ್ತೊಂದು ಅವಗೆ ಮರು ಆಯ್ಕೆಯಾಗಿದ್ದಾರೆ. +ಭಾರತೀಯ ಪ್ರತಿನಿಧಿ ಸಭೆಯಲ್ಲಿ ದೇಶಾದ್ಯಂತ ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಪ್ರತಿನಿಧಿಗಳು ಮತ್ತು ಆರ್‍ಎಸ್‍ಎಸ್‍ನ ಮಾನ್ಯತೆ ಪಡೆದ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. \ No newline at end of file diff --git a/eesanje/url_47_144_11.txt b/eesanje/url_47_144_11.txt new file mode 100644 index 0000000000000000000000000000000000000000..8778122beec3c49bc081c622ee52090b73d26dab --- /dev/null +++ b/eesanje/url_47_144_11.txt @@ -0,0 +1,5 @@ +ಪಾಕಿಸ್ತಾನದಿಂದ ಬಂದ 18 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ +ಅಹಮದಾಬಾದ್,ಮಾ.17- ನಗರದಲ್ಲಿ ವಾಸಿಸುತ್ತಿರುವ ಪಾಕಿಸ್ತಾನದಿಂದ ಬಂದಿರುವ ಹದಿನೆಂಟು ಹಿಂದೂ ನಿರಾಶ್ರಿತರಿಗೆ ಗುಜರಾತ್ ಗೃಹಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ಅವರು ಪಾಲ್ಗೊಂಡಿದ್ದ ಶಿಬಿರದಲ್ಲಿ ಭಾರತೀಯ ಪೌರತ್ವವನ್ನು ನೀಡಲಾಯಿತು. +ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಶಿಬಿರದಲ್ಲಿ ಈ 18 ಮಂದಿಗೆ ಸಂಘ್ವಿ ಅವರು ಭಾರತೀಯ ಪೌರತ್ವವನ್ನು ಪ್ರದಾನ ಮಾಡಿ ನವಭಾರತದ ಕನಸನ್ನು ಸಾಕಾರಗೊಳಿಸಲು ಒಗ್ಗೂಡಿ ಕೆಲಸ ಮಾಡುವಂತೆ ಹೇಳಿದರು. +2016 ಮತ್ತು 2018 ರ ರಾಜ್ಯ ಪತ್ರ(ಗೆಜೆಟ್) ಅಧಿಸೂಚನೆಗಳು ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶಗಳಿಂದ ಬಂದ ಅಲ್ಪಸಂಖ್ಯಾತ ಸಮುದಾಯಗಳ ಜನತೆಗೆ ಭಾರತೀಯ ಪೌರತ್ವ ನೀಡುವ ಅಧಿಕಾರವನ್ನು ಗುಜರಾತ್‍ನ ಅಹಮದಾಬಾದ್, ಗಾಂಧಿನಗರ ಮತ್ತು ಕಛ್ ನಗರಗಳ ಜಿಲ್ಲಾಧಿಕಾರಿಗಳಿಗೆ ಕೊಡಮಾಡಿದೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ. +ಇದರೊಂದಿಗೆ ಪಾಕಿಸ್ತಾನದಿಂದ ಬಂದು ಅಹಮದಾಬಾದ್‍ನಲ್ಲಿ ವಾಸಿಸುತ್ತಿರುವ ಒಟ್ಟು 1,167 ಹಿಂದೂ ನಿರಾಶ್ರಿತರು ಭಾರತೀಯ ಪೌರತ್ವವನ್ನು ಪಡೆದಂತಾಗಿದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_144_12.txt b/eesanje/url_47_144_12.txt new file mode 100644 index 0000000000000000000000000000000000000000..af4276360b880655162da4c5e368e1a91d41075b --- /dev/null +++ b/eesanje/url_47_144_12.txt @@ -0,0 +1,6 @@ +ರಷ್ಯಾ-ಉಕ್ರೇನ್ ಯುದ್ಧದಲ್ಲಿ ಮೃತಪಟ್ಟ ಯುವಕನ ಮೃತದೇಹ ಹೈದರಾಬಾದ್‍ ಆಗಮನ +ಹೈದರಾಬಾದ್, ಮಾ 16 – ರಷ್ಯಾ ಸೇನೆಗೆ ಸಹಾಯಕ ಎಂದು ಅಲ್ಲಿಗೆ ತೆರಳಿ ಸಂಘರ್ಷದಲ್ಲಿ ಮೃತಪಟ್ಟ ಹೈದರಾಬಾದ್ ನಿವಾಸಿಯ ಮೃತದೇಹ ಕಳೆದ ರಾತ್ರಿ ಹೈದರಾಬಾದ್‍ಗೆ ಆಗಮಿಸಿದೆ.ಮೊಹಮ್ಮದ್ ಅಸಾನ್ ಅವರ ಪಾರ್ಥಿವ ಶರೀರ ಹೈದರಾಬಾದ್‍ನ ಬಜಾರ್‍ಘಾಟ್‍ನಲ್ಲಿರುವ ಅವರ ನಿವಾಸಕ್ಕೆ ಶನಿವಾರ ತಡರಾತ್ರಿ ತಲುಪಿದೆ ಎಂದು ಎಐಎಂಐಎಂ ಮೂಲಗಳು ತಿಳಿಸಿವೆ. +ಮಾರ್ಚ್ 6 ರಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಸಾನ್ ಅವರ ಸಾವನ್ನು ದೃಢಪಡಿಸಿತು ಮತ್ತು ಹೈದರಾಬಾದ್‍ನಲ್ಲಿರುವ ಅವರ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದರು. +ಉದ್ಯೋಗ ನೀಡುವ ಭರವಸೆಯ ಮೇರೆಗೆ ಏಜೆಂಟರಿಂದ ವಂಚನೆಗೊಳಗಾದ ಭಾರತೀಯರಲ್ಲಿ ಅಸಾನ್ (30) ಅವರನ್ನು ರಷ್ಯಾಕ್ಕೆ ಕರೆದೊಯ್ಯಲಾಯಿತು ಮತ್ತು ರಷ್ಯಾದ ಸೈನ್ಯದ ಸಹಾಯಕ ನಾಗಿ ಕೆಲಸ ಮಾಡಲು ಒತ್ತಾಯಿಸಲಾಯಿತು ಎಂದು ಅವರ ಸಹೋದರ ಇಮ್ರಾನ್ ಈ ಹಿಂದೆ ಹೇಳಿದ್ದರು. +ಫೆಬ್ರವರಿ 21 ರಂದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತೆಲಂಗಾಣದ ಇಬ್ಬರು ಸೇರಿದಂತೆ ಕೆಲವು ಭಾರತೀಯ ಯುವಕರ ಕುಟುಂಬ ಸದಸ್ಯರು ತಮ್ಮ ಸಂಬಂಧಿಕರನ್ನು ಉದ್ಯೋಗ ಭರವಸೆಯ ಮೇಲೆ ಏಜೆಂಟರು ವಂಚಿಸಿ ರಷ್ಯಾಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿಸಿದ್ದಾರೆ. +ಆದಾಗ್ಯೂ, ಅವರನ್ನು ರಷ್ಯಾ-ಉಕ್ರೇನ್ ಗಡಿಯಲ್ಲಿ ಯುದ್ಧದ ಮುಂಭಾಗಕ್ಕೆ ಕಳುಹಿಸಲಾಗಿದೆ ಎಂದು ಆರೋಪಿಸಲಾಗಿತ್ತು. ರಷ್ಯಾ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರ ಸುಮಾರು 50ಕ್ಕೂ ಹೆಚ್ಚು ಯುವಕರನ್ನು ಭಾರತಕ್ಕೆ ವಾಪಸ್ ಕರೆತರಲಾಗಿತ್ತು. \ No newline at end of file diff --git a/eesanje/url_47_144_2.txt b/eesanje/url_47_144_2.txt new file mode 100644 index 0000000000000000000000000000000000000000..e86eb9e802f5c552b17107e32c9252cff7220984 --- /dev/null +++ b/eesanje/url_47_144_2.txt @@ -0,0 +1,5 @@ +ಚುನಾವಣಾ ಬಾಂಡ್ ಖರೀದಿಸಿಲ್ಲ: ಕಿರಣ್ ಮಜುಂದಾರ್ ಶಾ +ನವದೆಹಲಿ,ಮಾ.18- ಯಾವುದೇ ರಾಜಕೀಯ ಪಕ್ಷಗಳಿಗೆ ನಮ್ಮ ಸಂಸ್ಥೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡಿಲ್ಲ ಎಂದು ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. ಆದಾಗ್ಯೂ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ನೇತೃತ್ವದ ಜನತಾ ದಳ (ಜಾತ್ಯತೀತ) ಸೇರಿದಂತೆ ಹಲವು ಪಕ್ಷಗಳಿಗೆ ದೇಣಿಗೆ ನೀಡಲು ವೈಯಕ್ತಿಕ ಮಟ್ಟದಲ್ಲಿ ಚುನಾವಣಾ ದೇಣಿಗೆ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. +ಚುನಾವಣೆಗಾಗಿ ಬಯೋಕಾನ್ ಜೆಡಿಎಸ್ ಅಥವಾ ಇತರ ಯಾವುದೇ ಪಕ್ಷಕ್ಕೆ ಯಾವುದೇ ರಾಜಕೀಯ ದೇಣಿಗೆ ನೀಡಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಹೇಳಿದರು. ವೈಯಕ್ತಿಕ ಮಟ್ಟದಲ್ಲಿ, ನಾನು ಜೆಡಿಎಸ್ ಮತ್ತು ಹಲವಾರು ಪಕ್ಷಗಳಿಗೆ ದೇಣಿಗೆ ನೀಡಿದ ಚುನಾವಣಾ ಬಾಂಡ್‍ಗಳನ್ನು ಖರೀದಿಸಿದೆ. ಚುನಾವಣೆಗೆ ಹಣ ನೀಡುವ ತತ್ವದ ಮೇಲೆ ನನ್ನ ದೇಣಿಗೆಗಳು ನಾಮಮಾತ್ರವಾಗಿದೆ ಎಂದು ಅವರು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಹೇಳಿದ್ದಾರೆ. +28 ಸ್ಥಾನಗಳನ್ನು ಗೆಲ್ಲುವಲ್ಲಿ ವಿಜಯೇಂದ್ರ ಯಶಸ್ವಿಯಾಗಲಿ: ಈಶ್ವರಪ್ಪ +ಎಲೆಕ್ಟೋರಲ್ ಬಾಂಡ್‍ಗಳನ್ನು ಬಳಸಿಕೊಂಡು ಅವರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದರ ಕುರಿತು ಎಕ್ಸ್‍ನಲ್ಲಿ ಬಳಕೆದಾರರಿಂದ ಲೆಕ್ಕಾಚಾರದ ದೋಷವನ್ನು ಸೂಚಿಸಿದ ಕೆಲವು ದಿನಗಳ ನಂತರ ಅವರ ಸ್ಪಷ್ಟೀಕರಣವು ಬಂದಿದೆ. ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಪ್ರತಿ ತಿಂಗಳು ? 5 ಕೋಟಿ ದೇಣಿಗೆ ನೀಡುತ್ತಿದ್ದರು ಎಂದು ಬಳಕೆದಾರರೊಬ್ಬರು ಹೇಳಿಕೊಂಡಿದ್ದರು. ಈ ಪೋಸ್ಟ್‍ಗೆ ಉತ್ತರಿಸಿರುವ ಶಾ ಅವರು ನಿಮ್ಮ ಗಣಿತ ತಪ್ಪು ನಾವು ಇದುವರೆಗೂ ಕೇವಲ 6ಕೋಟಿ ರೂ.ಗಳನ್ನು ಮಾತ್ರ ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_144_3.txt b/eesanje/url_47_144_3.txt new file mode 100644 index 0000000000000000000000000000000000000000..79413e68ad073e911e706c55ef64a9d2b57fac10 --- /dev/null +++ b/eesanje/url_47_144_3.txt @@ -0,0 +1,6 @@ +ಹಳಿತಪ್ಪಿದ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್‌ ರೈಲು +ಅಜ್ಮೀರ್, ಮಾ.18-ಇಂದು ಬೆಳಗ್ಗೆ ರಾಜಸ್ಥಾನದ ಅಜ್ಮೀರ್ ನಿಲ್ದಾಣದ ಬಳಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್‌ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ರೈಲು ಎಕ್ಸ್‍ಪ್ರೆಸ್ ರೈಲು ಆಗ್ರಾಕ್ಕೆ ತೆರಳುತ್ತಿತ್ತು,ಅಜ್ಮೀರ್ ನಿಲ್ದಾಣವನ್ನು ದಾಟಿ ಮದರ್ ನಿಲ್ದಾಣವನ್ನು ತಲುಪುವ ಹಂತದಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಹಳಿ ತಪ್ಪಲು ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ವಾಯುವ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿ ಕಿರಣ್ ತಿಳಿಸಿದ್ದಾರೆ. +ಪೊನ್ಮುಡಿಗೆ ಪ್ರಮಾಣ ವಚನ ಬೋಧಿಸಲು ರಾಜ್ಯಪಾಲರ ನಿರಾಕರಣೆ +ಪ್ರಯಾಣಿಕರಿಗೆ ಯಾವುದೇ ಗಾಯ ಅಥವಾ ಸಾವುನೋವು ವರದಿಯಾಗಿಲ್ಲ. ದೆಹಲಿಯ ಕಡೆಗೆ ಮೇಲಕ್ಕೆ/ಕೆಳಗಿನ ದಿಕ್ಕಿನಲ್ಲಿ ರೈಲು ಸಂಚಾರ ಈಗಾಗಲೇ ಪ್ರಾರಂಭವಾಗಿದೆ. ನಾವು ಉತ್ತರ ಪ್ರದೇಶ ದಿಕ್ಕಿನಲ್ಲಿಯೂ ಸೇವೆಗಳನ್ನು ಪ್ರಾರಂಭಿಸಲಿದ್ದೇವೆ ಎಂದು ಅವರು ಹೇಳಿದರು. ಅಜ್ಮೀರ್ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಿದೆ ಮತ್ತು ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಬಂಧಿಕರಿಗಾಗಿ ಸಹಾಯವಾಣಿ ಸಂಖ್ಯೆ — 0145-2429642 ಅನ್ನು ಸಹ ಬಿಡುಗಡೆ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಘಟನೆಯಿಂದಾಗಿ ಆರು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು ಎರಡು ರೈಲುಗಳನ್ನು ಬೇರೆ ಮಾರ್ಗಗಳಿಗೆ ತಿರುಗಿಸಲಾಗಿದೆ ಎಂದು ಕಿರಣ್ ಹೇಳಿದರು. \ No newline at end of file diff --git a/eesanje/url_47_144_4.txt b/eesanje/url_47_144_4.txt new file mode 100644 index 0000000000000000000000000000000000000000..60d1420ea37b83c11efb4c26b4e49894ffd2c6f8 --- /dev/null +++ b/eesanje/url_47_144_4.txt @@ -0,0 +1,6 @@ +ರಾಜಕೀಯಕ್ಕೆ ಲಾಲೂ ಪುತ್ರಿ ಎಂಟ್ರಿ +ಪಾಟ್ನಾ,ಮಾ.18- ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದು ಅವರು ಬಿಹಾರದ ಸರನ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಪಾದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ. ಇದು ಸಂಭವಿಸಿದಲ್ಲಿ, 44 ವರ್ಷದ ಲಾಲೂ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಾಲ್ಕನೇ ಮಗು ರಾಜಕೀಯಕ್ಕೆ ಪ್ರವೇಶಿಸಿದಂತಾಗುತ್ತದೆ. +ರೋಹಿಣಿ ಅವರ ಸಹೋದರ ತೇಜಸ್ವಿ ಯಾದವ್ ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಆರ್‍ಜೆಡಿ ಅಧ್ಯಕ್ಷರಾಗಿದ್ದಾರೆ. ಆಕೆಯ ಇತರ ಇಬ್ಬರು ಒಡಹುಟ್ಟಿದವರಾದ ತೇಜ್ ಪ್ರತಾಪ್ ಯಾದವ್ ಮತ್ತು ಮಿಶಾ ಭಾರತಿ ಕ್ರಮವಾಗಿ ಬಿಹಾರ ವಿಧಾನಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಯಾದವ್ ಕುಟುಂಬಕ್ಕೆ ನಿಕಟವಾಗಿರುವ ಬಿಹಾರ ವಿಧಾನ ಪರಿಷತ್ತಿನ ಸದಸ್ಯ ಸುನಿಲ್ ಕುಮಾರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ರೋಹಿಣಿ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೋಹಗಳು ಉಲ್ಬಣಗೊಂಡಿವೆ. +ಡಾ ರೋಹಿಣಿ ಆಚಾರ್ಯ ಅವರು ತಮ್ಮ ತಂದೆಯ ಮೇಲಿನ ಪ್ರೀತಿ, ಭಕ್ತಿ ಮತ್ತು ಸಮರ್ಪಣೆಯನ್ನು ಸಂಕೇತಿಸುತ್ತಾರೆ. ಸರನ್ ಪ್ರದೇಶದ ಎಲ್ಲಾ ಪಕ್ಷದ ಕಾರ್ಯಕರ್ತರು ಅವರನ್ನು ಸರನ್‍ಗೆ ಪಕ್ಷದ ಲೋಕಸಭಾ ಅಭ್ಯರ್ಥಿಯಾಗಿ ಹೆಸರಿಸಬೇಕೆಂದು ಬಯಸುತ್ತಾರೆ ಎಂದು ಸಿಂಗ್ ನಿನ್ನೆ ಪೋಸ್ಟ್ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಆರ್‍ಜೆಡಿ ರ್ಯಾಲಿಯಲ್ಲಿ ಎಂಎಸ್ ರೋಹಿಣಿ ಕೂಡ ಉಪಸ್ಥಿತರಿದ್ದರು. ಸರನ್ ಲೋಕಸಭಾ ಕ್ಷೇತ್ರವನ್ನು ಪ್ರಸ್ತುತ ಬಿಜೆಪಿಯ ರಾಜೀವ್ ಪ್ರತಾಪ್ ರೂಡಿ ಹೊಂದಿದ್ದಾರೆ. ಇದನ್ನು ಹಿಂದೆ ಲಾಲು ಪ್ರಸಾದ್ ಯಾದವ್ ಪ್ರತಿನಿಧಿಸಿದ್ದರು. +ರೋಹಿಣಿ ಆಚಾರ್ಯ ಯಾರು?ರೋಹಿಣಿ ಆಚಾರ್ಯ ಅವರು ಶಿಕ್ಷಣದಿಂದ ವೈದ್ಯರಾಗಿದ್ದಾರೆ 2002 ರಲ್ಲಿ, ಅವರು ಇಂಜಿನಿಯರ್ ಮತ್ತು ನಿವೃತ್ತ ಆದಾಯ ತೆರಿಗೆ ಅಧಿಕಾರಿ ಮತ್ತು ಲಾಲು ಯಾದವ್ ಅವರ ಸ್ನೇಹಿತ ರೈ ರಣವಿಜಯ್ ಸಿಂಗ್ ಅವರ ಮಗ ಸಮರೇಶ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಕಳೆದ ಎರಡು ದಶಕಗಳಲ್ಲಿ ಅವರು ತಮ್ಮ ಪತಿ ಜತೆ ಸಿಂಗಾಪುರ ಮತ್ತು ಯುಎಸ್‍ನಲ್ಲಿ ವಾಸಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. +ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಆಚಾರ್ಯ ಅವರು 2022 ರಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಮ್ಮ ತಂದೆ ಲಾಲೂ ಅವರಿಗೆ ತಮ್ಮ ಕಿಡ್ನಿಗಳಲ್ಲಿ ಒಂದನ್ನು ದಾನ ಮಾಡಿದ್ದರು. ಈ ಹಿಂದೆ, 2017 ರಲ್ಲೇ ಅವರು ಅಸೆಂಬ್ಲಿ ಚುನಾವಣೆಯಲ್ಲಿ ಮೂಲಕ ತಮ್ಮ ರಾಜಕೀಯ ಪಾದಾರ್ಪಣೆ ಮಾಡುತ್ತಾರೆ ಎಂಬ ಊಹಾಪೋಹವಿತ್ತು. ಆದರೆ ಅಂತಿಮವಾಗಿ ಅದು ಆಗಲಿಲ್ಲ. \ No newline at end of file diff --git a/eesanje/url_47_144_5.txt b/eesanje/url_47_144_5.txt new file mode 100644 index 0000000000000000000000000000000000000000..b66584fbb53a1e2645570abd24887efc1b9e50a6 --- /dev/null +++ b/eesanje/url_47_144_5.txt @@ -0,0 +1,8 @@ +ಪೊನ್ಮುಡಿಗೆ ಪ್ರಮಾಣ ವಚನ ಬೋಧಿಸಲು ರಾಜ್ಯಪಾಲರ ನಿರಾಕರಣೆ +ಚೆನ್ನೈ,ಮಾ.18- ಕೆ.ಪೊನ್ಮುಡಿ ಅವರನ್ನು ಮತ್ತೆ ಸಚಿವರಾಗಲು ಪ್ರಮಾಣ ವಚನ ಬೋಧಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾಡಿರುವ ಶಿಫರಸನ್ನು ತಮಿಳುನಾಡು ರಾಜ್ಯಪಾಲ ಆರ್. ಎನ್.ರವಿ ನಿರಾಕರಿಸಿದ್ದಾರೆ. +ಅನರ್ಹಗೊಂಡ ತಮಿಳುನಾಡು ಸಚಿವ ಮತ್ತು ಡಿಎಂಕೆ ಹಿರಿಯ ನಾಯಕ ಕೆ ಪೊನ್ಮುಡಿ ಅವರನ್ನು ಮಾರ್ಚ್ 13, 2024 ರಂದು ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರ ಅಪರಾಧ ಮತ್ತು ಮೂರು ವರ್ಷಗಳ ಜೈಲು ಶಿಕ್ಷೆಗೆ ತಡೆ ನೀಡಿದ ಕೆಲವು ದಿನಗಳ ನಂತರ ಅವರನ್ನು ಮರುಸೇರ್ಪಡೆ ಮಾಡಿಕೊಳ್ಳಲಾಗಿತ್ತು.ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯವು ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ವಿರುದ್ಧ 2011 ರಲ್ಲಿ ಪ್ರಕರಣ ದಾಖಲಿಸಿತ್ತು. 2006 ರಿಂದ 2011 ರವರೆಗೆ ಡಿಎಂಕೆ ಆಡಳಿತದಲ್ಲಿ ಪೊನ್ಮುಡಿ ಉನ್ನತ ಶಿಕ್ಷಣ ಮತ್ತು ಗಣಿ ಸಚಿವರಾಗಿದ್ದರು. +ರಾಜ್ಯ ವಿಧಾನಸಭಾ ಸ್ಪೀಕರ್ ಎಂ.ಅಪ್ಪಾವು ಅವರು ಪೊನ್ಮುಡಿ ಅವರನ್ನು ಮರುಸೇರ್ಪಡೆಗೊಳಿಸಿದ್ದು, ಅವರು ವಿಧಾನಸಭೆಯ ಸದಸ್ಯರಾಗಿ ಮುಂದುವರಿಯಲಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಪೊನ್ಮುಡಿ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ಹೇಳಿದ್ದರು. +ಇದೇ ವೇಳೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರಿಗೆ ಪತ್ರ ಬರೆದು ಡಿಎಂಕೆ ಹಿರಿಯ ನಾಯಕ ಪೊನ್ಮುಡಿ ಸಚಿವರಾಗಿ ಪ್ರಮಾಣ ವಚನ ಬೋದಿಸುವಂತೆ ಕೋರಿದ್ದರು.ಪೊನ್ಮುಡಿ (ಡಿಎಂಕೆ ಹಿರಿಯ ನಾಯಕ ಮತ್ತು ಮಾಜಿ ಉನ್ನತ ಶಿಕ್ಷಣ ಸಚಿವ) ಅವರ ದೋಷಾರೋಪಣೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕದ ಕಾರಣ ಅವರಿಗೆ ಪ್ರಮಾಣ ವಚನ ಬೋಧಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲ ಆರ್‍ಎನ್ ರವಿ ರಾಜ್ಯ ಸರ್ಕಾರಕ್ಕೆ ಪತ್ರ ಕಳುಹಿಸಿದ್ದಾರೆ. ಪೊನ್ಮುಡಿ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಲು ರಾಜ್ಯಪಾಲರು ಅಸಮರ್ಥತೆ ವ್ಯಕ್ತಪಡಿಸಿದ್ದಾರೆ. +ಐದಂತಸ್ತಿನ ಕಟ್ಟಡ ಕುಸಿದು ಇಬ್ಬರ ದುರ್ಮರಣ +ಕಳೆದ ಮಾರ್ಚ್ 1 ರಂದು ತಮಿಳುನಾಡು ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರು ರಾಜ್ಯ ವಿಧಾನಸಭೆಯ ಸದಸ್ಯರಾಗಿ ಕೆ.ಪೊನ್ಮುಡಿ ಅವರನ್ನು ಅನರ್ಹಗೊಳಿಸಿದ ಮತ್ತು ಅದರ ಪರಿಣಾಮವಾಗಿ ವಿಧಾನಸಭೆ ಸ್ಥಾನವನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಅಪ್ಪಾವು ಅವರಿಗೆ ಪತ್ರ ಬರೆದಿದ್ದರು. +ತಿರುಕ್ಕೊಯಿಲೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಮತ್ತು ಪ್ರಸ್ತುತ ಸರ್ಕಾರದಲ್ಲಿ ಸಚಿವರೂ ಆಗಿರುವ ಕೆ.ಪೊನ್ಮುಡಿ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಕ್ಕಾಗಿ ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಅಪರಾ„ ಎಂದು ಸಾಬೀತಾಗಿರುವ ಸಂಗತಿ ನಿಮ್ಮ ಕಚೇರಿಗೆ ತಿಳಿದಿದೆ. ಡಿಸೆಂಬರ್ 21, 2023 ರ ಆದೇಶದ ಪ್ರಕಾರ ಮದ್ರಾಸ್ ಹೈಕೋರ್ಟ್ ತಿಳಿದಿರುವ ಆದಾಯದ ಮೂಲಕ್ಕೆ ಅಸಮಾನವಾಗಿದೆ. ಹೈಕೋರ್ಟ್ ನೀಡಿದ ಶಿಕ್ಷೆಯ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿಲ್ಲ, ಎಂದು ಎಡಪ್ಪಾಡಿ ಪಳನಿಸ್ವಾಮಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_144_6.txt b/eesanje/url_47_144_6.txt new file mode 100644 index 0000000000000000000000000000000000000000..1e6dc3185e76fb5ddbbc5a5507ecdf7953098b87 --- /dev/null +++ b/eesanje/url_47_144_6.txt @@ -0,0 +1,4 @@ +ಟ್ರ್ಯಾಕ್ಟರ್ – ಜೀಪ್ ನಡುವೆ ಡಿಕ್ಕಿ: 7 ಮಂದಿ ಸಾವು +ಖಗಾರಿಯಾ, ಮಾ 18 (ಪಿಟಿಐ) ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಪಸ್ರಾಹಾ ಪ್ರದೇಶದ ಪೆಟ್ರೋಲ್ ಪಂಪ್ ಬಳಿ ಇಂದು ಬೆಳಿಗ್ಗೆ 6.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಜೀಪಿನಲ್ಲಿ ಪ್ರಯಾಣಿಸುತ್ತಿದ್ದವರು ಮದುವೆ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಟ್ರಾಕ್ಟರ್ ಓವರ್ ಲೋಡ್ ಆಗಿದ್ದು, ಅದಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ನಲ್ಲಿದ್ದವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಗಾಯಗೊಂಡ ಎಲ್ಲ ಜನರನ್ನು ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. +ಖಗಾರಿಯಾ ಪೊಲೀಸ್ ಚಂದನ್ ಕುಶ್ವಾಹ, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು. \ No newline at end of file diff --git a/eesanje/url_47_144_7.txt b/eesanje/url_47_144_7.txt new file mode 100644 index 0000000000000000000000000000000000000000..83fbd33029e790a5a32c2cb6dcf7b80b26083cd5 --- /dev/null +++ b/eesanje/url_47_144_7.txt @@ -0,0 +1,5 @@ +ಐದಂತಸ್ತಿನ ಕಟ್ಟಡ ಕುಸಿದು ಇಬ್ಬರ ದುರ್ಮರಣ +ಕೋಲ್ಕತ್ತಾ, ಮಾ 18 (ಪಿಟಿಐ) ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ನಗರದ ಮೇಯರ್ ಫಿರ್ಹಾದ್ ಹಕೀಮ್ ಹೇಳಿದ್ದಾರೆ.ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹಕೀಮ್ ಶಂಕಿಸಿದ್ದಾರೆ. +ನಗರದ ಪಶ್ಚಿಮ ಪರಿ„ಯ ಅಜಾನ್ ಮೊಲ್ಲಾ ಲೇನ್‍ನಲ್ಲಿರುವ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಶನ್‍ನ ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮನೆ ಕುಸಿತದ ದುರಂತದ ಬಗ್ಗೆ ತಿಳಿದುಕೊಳ್ಳಲು ದುಃಖವಾಗಿದೆ. +ನಮ್ಮ ಮೇಯರ್, ಅಗ್ನಿಶಾಮಕ ಸಚಿವರು, ಕಾರ್ಯದರ್ಶಿಗಳು ಮತ್ತು ಪೊಲೀಸ್ ಆಯುಕ್ತರು, ನಾಗರಿಕ, ಪೊಲೀಸ್ , ಅಗ್ನಿಶಾಮಕ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಮತ್ತು ತಂಡಗಳು ( ಎನ್‍ಡಿಆರ್‍ಎ- ಕೆಎಂಸಿ ಮತ್ತು ಕೆಪಿ ತಂಡಗಳು ಸೇರಿದಂತೆ) ವಿಪತ್ತು ತಗ್ಗಿಸಲು ರಾತ್ರಿಯಿಡೀ ಸ್ಥಳದಲ್ಲಿಯೇ ಇದ್ದವು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಕ್ಸ್‍ನಲ್ಲಿ ಬರೆದಿದ್ದಾರೆ. ಮೃತರ ಮತ್ತು ಗಾಯಗೊಂಡ ವ್ಯಕ್ತಿಗಳ ಸಂಬಂಧಿಕರಿಗೆ ಸರ್ಕಾರ ಪರಿಹಾರವನ್ನು ನೀಡುತ್ತದೆ ಎಂದು ಅವರು ಹೇಳಿದರು. +ನಾವು ಸಂಕಷ್ಟದಲ್ಲಿರುವ ಕುಟುಂಬಗಳ ಪರವಾಗಿ ನಿಲ್ಲುತ್ತೇವೆ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಬ್ಯಾನರ್ಜಿ ಮೈಕ್ರೋಬ್ಲಾಗಿಂಗ್ ಸೈಟ್‍ನಲ್ಲಿ ಹೇಳಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡವು ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ ಎಂದು ಹಕೀಮ್ ಹೇಳಿದರು. ಸ್ಥಳದಿಂದ ಕನಿಷ್ಠ 10 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_144_8.txt b/eesanje/url_47_144_8.txt new file mode 100644 index 0000000000000000000000000000000000000000..921d25077b284904f90124d2a76d86eb6d71b0ea --- /dev/null +++ b/eesanje/url_47_144_8.txt @@ -0,0 +1,5 @@ +ಇಡಿ ನೀಡಿದ ಮತ್ತೊಂದು ಸಮನ್ಸ್‍ಗೂ ಕೇಜ್ರಿ ಡೋಂಟ್‍ಕೇರ್ +ನವದೆಹಲಿ, ಮಾ 18 (ಪಿಟಿಐ) ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕೂಡ ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ. ಆಮ್ ಆದ್ಮಿ ಪಕ್ಷವು (ಎಎಪಿ) ಸಮನ್ಸ್ ಅನ್ನು ಕಾನೂನುಬಾಹಿರ ಎಂದು ಕರೆದಿದೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರವು ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸುತ್ತಿದೆ ಎಂದು ಆರೋಪಿಸಿದೆ. +ಡಿಜೆಬಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯಲ್ಲಿ ಇಡಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು. ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ 55ರ ಹರೆಯದ ರಾಜಕಾರಣಿಗೆ ಸಮನ್ಸ್ ನೀಡಲಾಗಿರುವ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. +ದೆಹಲಿ ಅಬಕಾರಿ ನೀತಿ ಸಂಬಂ„ತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಈಗಾಗಲೇ ವಿಚಾರಣೆಗೆ ಸಮನ್ಸ್ ಎದುರಿಸುತ್ತಿದ್ದಾರೆ. ಕೇಜ್ರಿವಾಲ್ ಈ ಪ್ರಕರಣದಲ್ಲಿ ಇದುವರೆಗೆ ಎಂಟು ಸಮನ್ಸ್‍ಗಳನ್ನು ಬಿಟ್ಟುಬಿಟ್ಟಿದ್ದಾರೆ, ಅವುಗಳನ್ನು ಕಾನೂನುಬಾಹಿರ ಎಂದು ಹೇಳಿದ್ದಾರೆ. +ಅಬಕಾರಿ ನೀತಿ ಪ್ರಕರಣದಲ್ಲಿ ಅಂತಹ ಹೊಸ ಮತ್ತು ಒಂಬತ್ತನೇ ನೋಟೀಸ್ ಮಾರ್ಚ್ 21 ರಂದು ಇಡಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಷರತ್ತು ವಿಧಿಸಿದೆ. \ No newline at end of file diff --git a/eesanje/url_47_144_9.txt b/eesanje/url_47_144_9.txt new file mode 100644 index 0000000000000000000000000000000000000000..090d38f9bc1cdfc79e87e7f6ec11a348d1b00661 --- /dev/null +++ b/eesanje/url_47_144_9.txt @@ -0,0 +1,4 @@ +ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ +ಪುಣೆ, ಮಾ 17-ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ಪುಣೆ ಜಿಲ್ಲೆಯ ಇಂದಾಪುರ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದಿದೆ.ಮೃತರನ್ನು ಅವಿನಾಶ್ ಧನ್ವೆ ಎಂದು ಗುರುತಿಸಲಾಗಿದ್ದು, ಸುಮಾರು 8 ಜನರ ಗುಂಪು ಏಕಾ ಏಕಿ ಆತನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಕೊಲೆಗೆ ಹೆಳೇ ದ್ವೇಷದ ಕಾರಣ ಎಂದು ಹೇಳಲಾಗುತ್ತಿದೆ,ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ಘಟನೆಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ.ಹಂತರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈತನ ಮೇಲೆ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು .ಪ್ರಾಥಮಿಕ ಮಾಹಿತ ಪ್ರಕಾರ ಪ್ರತಿಸ್ರ್ಪಗುಂಪಿನೊಂದಿಗಿನ ದ್ವೇಷ ಹತ್ಯೆಗೆ ಕಾರಣವೆಂದು ತೋರುತ್ತದೆ, ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_145_1.txt b/eesanje/url_47_145_1.txt new file mode 100644 index 0000000000000000000000000000000000000000..2087aa51343d95b91b8c0899715f9e01feb8b9ac --- /dev/null +++ b/eesanje/url_47_145_1.txt @@ -0,0 +1,38 @@ + : ಮಹಾಸಮರಕ್ಕೆ ಮಹೂರ್ತ ಫಿಕ್ಸ್, ಇಲ್ಲಿದೆ ಲೋಕಕದನದ ವೇಳಾಪಟ್ಟಿ +ನವದದೆಹಲಿ,ಮಾ.16- ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ 18ನೇ ಲೋಕಸಭೆ ಚುನಾವಣೆ ಏ.19ರಿಂದ ಜೂನ್1ರವರೆಗೆ ಏಳು ಹಂತಗಳಲ್ಲಿ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದರು. +543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು ಏಳು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಏ.19, ಎರಡನೇ ಹಂತದ ಏ.26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಹಾಗೂ ಕೊನೆಯ ಏಳನೇ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. +ಅರುಣಾಚಲ ಪ್ರದೇಶ, ಅಂಡಮಾನ್ ನಿಕೋಬಾರ್, ಛತ್ತೀಸ್‍ಘಡ, ದಾದರ್ ಮತ್ತು ಹವೇಲಿ, ದೆಹಲಿ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರಿಯಾಣ, ಕೇರಳ, ಲಕ್ಷದ್ವೀಪ, ಲಡಾಖ್, ಮಿಜೋರಾಂ, ಮೇಘಾಲಯ, ನಾಗಲ್ಯಾಂಡ್, ಪುದುಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್, ತೆಲಂಗಾಣ ಹಾಗೂ ಉತ್ತರಖಂಡ್‍ನಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ. ಕರ್ನಾಟಕ, ರಾಜಸ್ಥಾನ, ತ್ರಿಪುರ, ಮತ್ತು ಮಣಿಪುರದಲ್ಲಿ ಎರಡನೇ ಹಂತದ ಮತದಾನ ನಡೆದರೆ ಛತ್ತೀಸ್‍ಘಡ ಮತ್ತು ಅಸ್ಸಾಂನಲ್ಲಿ ಮೂರು ಹಂತದ ಮತದಾನ ನಡೆಸಲು ಆಯೋಗ ತೀರ್ಮಾನಿಸಿದೆ. +ಒಡಿಸ್ಸಾ, ಮಧ್ಯಪ್ರದೇಶ ಮತ್ತು ಜಾರ್ಖಂಡ್‍ನಲ್ಲಿ ನಾಲ್ಕು ಹಂತ, ಮಹಾರಾಷ್ಟ್ರ, ಜಮ್ಮುಕಾಶ್ಮೀರದಲ್ಲಿ 5 ಹಂತ ಹಾಗೂ ಉತ್ತರಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಬಾರಿ ದೇಶಾದ್ಯಂತ 97 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದು, ಮೊದಲ ಬಾರಿಗೆ ಅಂದರೆ 18ರಿಂದ 19 ವರ್ಷದೊಳಗಿನ ಸುಮಾರು 1.80 ಕೋಟಿ ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. +85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ 12 ರಾಜ್ಯಗಳಲ್ಲಿ ಮಹಿಳಾ ಮತದಾರರೇ ಹೆಚ್ಚಾಗಿದ್ದು, ಶೇ.40ಕ್ಕಿಂತ ಹೆಚ್ಚು ವಿಕಲಚೇತನರಿದ್ದರೆ ಅವರು ಕೂಡ ಮನೆಯಿಂದಲೇ ಮತ ಚಲಾಯಿಸಬಹುದು. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. +ಸುಳ್ಳು ಮಾಹಿತಿ ಮತ್ತು ನಕಲು ಸುದ್ದಿ, ನೀತಿಸಂಹಿತೆ ಉಲ್ಲಂಘನೆ, ತೋಳ್ಬಲ ಮತ್ತು ಹಣದ ಪ್ರಭಾವ ತಡೆಗಟ್ಟುವುದು ಚುನಾವಣಾ ಆಯೋಗಕ್ಕೆ ಈ ಬಾರಿ ಸವಾಲುಗಳಾಗಿವೆ ಎಂದು ಆಯೋಗದ ಮುಖ್ಯಸ್ಥರು ಹೇಳಿದ್ದಾರೆ. ಗಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ದ್ರೋಣ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಮತದಾರರಿಗೆ ಕುಕ್ಕರ್, ಟಿವಿ, ಫ್ರಿಡ್ಜ್, ನಗದು, ಉಡುಗೊರೆಗಳು, ಮದ್ಯ ಸೇರಿದಂತೆ ಇತರೆ ಆಮಿಷವೊಡ್ಡಿದರೆ ಕಾನೂನು ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. +ಸೂರ್ಯಾಸ್ತದ ಬಳಿಕ ಎಟಿಎಂ ವಾಹನಗಳ ಸಂಚಾರಕ್ಕೆ ಕಟ್ಟುನಿಟ್ಟಿನ ನಿಬಂಧನೆ ಹಾಕಿರುವ ಆಯೋಗ ಕಪ್ಪು ಹಣ ಸಾಗಿಸಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆ ಎಚ್ಚರಿಕೆ ನೀಡಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಆಯೋಗ ಸುಳ್ಳು ಸುದ್ದಿ ಹಬ್ಬಿಸುವುದು, ಖಾಸಗಿ ಬದುಕಿನ ಮೇಲೆ ವಾಗ್ದಾಳಿ, ಜಾತಿ, ಧರ್ಮ ಆಧಾರಿತ ಪ್ರಚಾರ ಹಾಗೂ ಸುಳ್ಳು ಜಾಹಿರಾತು ನೀಡುವುದಕ್ಕೆ ನಿರ್ಬಂಧ ಹಾಕಿದೆ. ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. +ಮೊದಲ ಹಂತ – ಏ.19ಒಟ್ಟು ಲೋಕಸಭಾ ಕ್ಷೇತ್ರಗಳು 102ಅಸೂಚನೆ ಮಾ.20ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಮಾ.27ನಾಮಪತ್ರಗಳ ಪರಿಶೀಲನೆ – ಮಾ.28ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಮಾ.30 +ಎರಡನೇ ಹಂತ – ಏ.26ಒಟ್ಟು ಲೋಕಸಭಾ ಕ್ಷೇತ್ರಗಳು 89ಅಸೂಚನೆ ಮಾ.28ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏಪ್ರಿಲ್ 4ನಾಮಪತ್ರಗಳ ಪರಿಶೀಲನೆ – ಏಪ್ರಿಲ್ 5,ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಏಪ್ರಿಲ್ 8 +ಮೂರನೇ ಹಂತ – ಮೇ7ಒಟ್ಟು ಲೋಕಸಭಾ ಕ್ಷೇತ್ರಗಳು 94ಅಸೂಚನೆ ಏಪ್ರಿಲ್12ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏಪ್ರಿಲ್ 19ನಾಮಪತ್ರಗಳ ಪರಿಶೀಲನೆ – ಏಪ್ರಿಲ್ 20ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಏಪ್ರಿಲ್ 22 +ನಾಲ್ಕನೇ ಹಂತ – ಮೇ 13ಒಟ್ಟು ಲೋಕಸಭಾ ಕ್ಷೇತ್ರಗಳು 96ಅಸೂಚನೆ ಏ.18ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏಪ್ರಿಲ್ 25ನಾಮಪತ್ರಗಳ ಪರಿಶೀಲನೆ – ಏಪ್ರಿಲ್ 26,ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಏಪ್ರಿಲ್ 29 +ಐದನೇ ಹಂತ – ಮೇ 20ಒಟ್ಟು ಲೋಕಸಭಾ ಕ್ಷೇತ್ರಗಳು 49ಅಸೂಚನೆ ಏ.26ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಮೇ 3ನಾಮಪತ್ರಗಳ ಪರಿಶೀಲನೆ – ಮೇ 4ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಮೇ 6 +ಆರನೇ ಹಂತ – ಮೇ 25ಒಟ್ಟು ಲೋಕಸಭಾ ಕ್ಷೇತ್ರಗಳು 57ಅಸೂಚನೆ ಏ.29ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಮೇ 6ನಾಮಪತ್ರಗಳ ಪರಿಶೀಲನೆ – ಮೇ 7ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಮೇ 9 +7ನೇ ಹಂತ – ಜೂನ್ 1ಒಟ್ಟು ಲೋಕಸಭಾ ಕ್ಷೇತ್ರಗಳು 57ಅಸೂಚನೆ ಮೇ 7ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಮೇ 14ನಾಮಪತ್ರಗಳ ಪರಿಶೀಲನೆ – ಮೇ 15ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಮೇ 17 +ಮತದಾರರ ವಿವರಗಳು :ಒಟ್ಟು ಮತದಾರರು 97 ಕೋಟಿ49.72 ಕೋಟಿ ಪುರುಷರು47.15 ಕೋಟಿ ಮಹಿಳೆಯರು2.18 ಶತಾಯುಷಿ ಮತದಾರರು80 ವರ್ಷ ದಾಟಿದವರು 1.98 ಕೋಟಿ20-29 ವರ್ಷದೊಳಗಿನವರು 19.74 ಕೋಟಿ18-19 ವರ್ಷದವರು 1.84 ಕೋಟಿಯುವತಿಯರು 85 ಲಕ್ಷ +88 ಲಕ್ಷ ವಿಶೇಷ ವಿಕಲ ಚೇತನರುತೃತೀಯ ಲಿಂಗಿಗಳು 48 ಸಾವಿರ +ಒಟ್ಟು ಮತಗಟ್ಟೆ 10.5 ಲಕ್ಷಇವಿಎಂ 55 ಲಕ್ಷ4 ಲಕ್ಷ ವಾಹನ2100 ವೀಕ್ಷಕರ ನೇಮಕ1.5 ಕೋಟಿ ಭದ್ರತಾ ಸಿಬ್ಬಂದಿ ನಿಯೋಜನೆ + + + + + + + + + + + + + + + + + +ಮತದಾರರ ಅಂಕಿಅಂಶ : +ಒಟ್ಟು ಮತದಾರರು 97 ಕೋಟಿ49.72 ಕೋಟಿ ಪುರುಷರು47.15 ಕೋಟಿ ಮಹಿಳೆಯರು80 ವರ್ಷ ದಾಟಿದವರು 1.98 ಕೋಟಿ20-29 ವರ್ಷದೊಳಗಿನವರು 19.74 ಕೋಟಿ18-19 ವರ್ಷದವರು 1.84 ಕೋಟಿಯುವತಿಯರು 85 ಲಕ್ಷ88 ಲಕ್ಷ ವಿಶೇಷ ವಿಕಲ ಚೇತನರು2.18 ಶತಾಯುಷಿ ಮತದಾರರು +ಒಟ್ಟು ಮತಗಟ್ಟೆ 10.5 ಲಕ್ಷಇವಿಎಂ 55 ಲಕ್ಷ4 ಲಕ್ಷ ವಾಹನ1.5 ಕೋಟಿ ಭದ್ರತಾ ಸಿಬ್ಬಂದಿ ನಿಯೋಜನೆ diff --git a/eesanje/url_47_145_10.txt b/eesanje/url_47_145_10.txt new file mode 100644 index 0000000000000000000000000000000000000000..5cb26e36aafcf12658ad4fca01080a894c6d7ac4 --- /dev/null +++ b/eesanje/url_47_145_10.txt @@ -0,0 +1,7 @@ +ಚುನಾವಣಾ ಬಾಂಡ್ ಸುಪ್ರೀಂಕೋರ್ಟ್‍ನಿಂದ ತನಿಖೆಯಾಗಲಿ: ಕಾಂಗ್ರೆಸ್ +ನವದೆಹಲಿ, ಮಾ.16 (ಪಿಟಿಐ) ಚುನಾವಣಾ ಬಾಂಡ್ ವಿಚಾರದಲ್ಲಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪಕ್ಷ ಕಾಪೆರ್ರೇಟ್ ಭಾರತದಿಂದ ಸಾವಿರಾರು ಕೋಟಿ ಸುಲಿಗೆ ಮಾಡಲಾಗಿದೆ ಹೀಗಾಗಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ ಎಂದಿದೆ. ಇದನ್ನು ಬಿಜೆಪಿಯ ನಾಲ್ಕು ಭ್ರಷ್ಟ ತಂತ್ರಗಳು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ. +ಚಂದಾ ದೋ, ಧಂಧಾ ಲೋ (ದೇಣಿಗೆ ನೀಡಿ, ವ್ಯಾಪಾರ ಪಡೆಯಿರಿ), ಹಫ್ತಾ ವಸೂಲಿ (ಸುಲಿಗೆ), ಥೇಕಾ ಲೋ-ರಿಶ್ವತ್ ದೋ (ಲಂಚ ನೀಡಿದ ನಂತರ ಗುತ್ತಿಗೆಗಳನ್ನು ಪಡೆಯಿರಿ), ಕಂಪನಿ – ದಕೈತ್ ಸಾಂಗ್ನಿ (ಶೆಲ್ ಕಂಪನಿಗಳ ಮೂಲಕ ಲೂಟಿ) — ಚುನಾವಣಾ ಬಾಂಡ್ ಹಗರಣ ದ ದತ್ತಾಂಶದ ತ್ವರಿತ ಮೊದಲ ವಿಶ್ಲೇಷಣೆಯ ನಂತರ ಹೊರಹೊಮ್ಮಿತು ಎಂದು ಅವರು ಎಕ್ಸ್ ಮಾಡಿದ್ದಾರೆ. +ಹೊರಹೊಮ್ಮಿರುವ ಭ್ರಷ್ಟಾಚಾರದ ಈ ನಾಲ್ಕು ಮಾದರಿಗಳು ತೀವ್ರ ಕಳವಳಕಾರಿಯಾಗಿದ್ದು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ಸ್ವತಂತ್ರ ತನಿಖೆಯ ಅಗತ್ಯವನ್ನು ಒತ್ತಿಹೇಳುತ್ತಿದೆ ಎಂದು ರಮೇಶ್ ಹೇಳಿದ್ದಾರೆ.ನಿನ್ನೆಯಿಂದ ಈ ರೀತಿಯ ಭ್ರಷ್ಟಾಚಾರದ ಹತ್ತಾರು ಉದಾಹರಣೆಗಳನ್ನು ನಾವು ನೋಡಿದ್ದೇವೆ. ಕಾಪೆರ್ರೇಟ್ ಇಂಡಿಯಾದಿಂದ ಸಾವಿರಾರು ಕೋಟಿ ಸುಲಿಗೆ ಮತ್ತು ಹೊರತೆಗೆಯಲಾಗಿದೆ ಮತ್ತು ಸಾವಿರಾರು ಕೋಟಿ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಸಂಬಂಧಿಸಿದ ಉದಾಹರಣೆಗಳನ್ನು ಉಲ್ಲೇಖಿಸಿದ ರಮೇಶ್, ಮೂಲಸೌಕರ್ಯ ಕಂಪನಿಗಳು ಅಪಾರ ಪ್ರಮಾಣದ ಹಣವನ್ನು ದೇಣಿಗೆ ನೀಡಿವೆ. +ಉದಾಹರಣೆಗೆ, ಎಲೆಕ್ಟೋರಲ್ ಬಾಂಡ್‍ಗಳ ಎರಡನೇ ಅತಿ ದೊಡ್ಡ ದಾನಿ ಮೇಘಾ ಇಂಜಿನಿಯರಿಂಗ್, ತೆಲಂಗಾಣದ ಕಾಳೇಶ್ವರಂ ಲಿಫ್ಟ್ ನೀರಾವರಿ ಯೋಜನೆಯಲ್ಲಿ ತೊಡಗಿಸಿಕೊಂಡಿದೆ, ಇದನ್ನು ವಿಶ್ವದ ಅತಿದೊಡ್ಡ ಬಹು-ಹಂತದ ಲಿಫ್ಟ್ ನೀರಾವರಿ ಯೋಜನೆ ಎಂದು ಲೇಬಲ್ ಮಾಡಲಾಗಿದೆ ಎಂದು ಅವರು ಹೇಳಿದರು.ಮೇಘಾ ಯೋಜನೆಯ ಪ್ರಮುಖ ಭಾಗವಾದ ಮೇಡಿಗಡ್ಡ ಬ್ಯಾರೇಜ್‍ನ ಕೆಲವು ಭಾಗವನ್ನು ನಿರ್ಮಿಸಿದೆ. ಹಾಗಾಗಿ ಬ್ಯಾರೇಜ್ ಮುಳುಗಲು ಪ್ರಾರಂಭಿಸಿದೆ, 1 ಲಕ್ಷ ಕೋಟಿ ಮೌಲ್ಯದ ತೆರಿಗೆದಾರರ ಹಣ ವ್ಯರ್ಥವಾಯಿತು ಎಂದು ಅವರು ಆರೋಪಿಸಿದರು. +ಕಳೆದ ಕೆಲವು ವರ್ಷಗಳಿಂದ ಗುಜರಾತ್‍ನ ಮೋರ್ಬಿಯಲ್ಲಿ ಇಂತಹ ಮೂಲಸೌಕರ್ಯ ವೈಫಾಲ್ಯದ ಕೆಲವು ನಿದರ್ಶನಗಳನ್ನು ಕಂಡಿದ್ದೇವೆ ಎಂದು ರಮೇಶ್ ಹೇಳಿದರು. ಭಾರತದಾದ್ಯಂತ ಕಳಪೆಯಾಗಿ ನಿರ್ಮಿಸಲಾದ ಈ ಬ್ಯಾರೇಜ್‍ಗಳು, ಕಟ್ಟಡಗಳು ಮತ್ತು ಸೇತುವೆಗಳನ್ನು ಕೆಲವು ಭಾರಿ ಚುನಾವಣಾ ಬಾಂಡ್ ದೇಣಿಗೆಗಳಿಂದ ಮುಚ್ಚಿಡಲಾಗಿದೆಯೇ? ಚಂದ ಸಂಗ್ರಹಕ್ಕಾಗಿ ಭಾರತೀಯರ ಜೀವವನ್ನು ಅಪಾಯಕ್ಕೆ ಸಿಲುಕಿಸಲಾಗಿದೆಯೇ? ರಮೇಶ್ ಪ್ರಶ್ನಿಸಿದರು. +ಚುನಾವಣಾ ಬಾಂಡ್‍ಗಳಿಗೆ ಎಷ್ಟು ಅರಣ್ಯ ಭೂಮಿಯನ್ನು ಕಳೆದುಕೊಂಡಿದ್ದಾರೆ? ಬಿಜೆಪಿಯ ಬೊಕ್ಕಸವನ್ನು ತುಂಬಿಸುವ ಹೊರೆಯನ್ನು ಯಾವ ಆದಿವಾಸಿ ಸಮುದಾಯಗಳು ಹೊರಬೇಕಾಯಿತು? ಅವರು ಹೇಳಿದರು.ಕಂಪನಿಗಳು ಚುನಾವಣಾ ಬಾಂಡ್‍ಗಳಲ್ಲಿ ಸಾವಿರಾರು ಕೋಟಿಗಳನ್ನು ನೀಡಿರುವುದನ್ನು ಗಮನಿಸಿದ ರಮೇಶ, ಅಮೆರಿಕದ ನಿಯಂತ್ರಕರು ಕಂಡುಹಿಡಿದ ಕಲ್ಮಶಗಳಿಂದಾಗಿ ಹೆಟೆರೊ ಡ್ರಗ್ಸ್‍ನಂತಹ ಕೆಲವು ದೊಡ್ಡ ದಾನಿಗಳು ಯುಎಸ್ ಮಾರುಕಟ್ಟೆಯಿಂದ ಔಷಧಿಗಳನ್ನು ಹಿಂಪಡೆಯಬೇಕಾಯಿತು.ಚುನಾವಣಾ ಬಾಂಡ್‍ಗಳಿಗೆ ಬದಲಾಗಿ ಭಾರತದ ಔಷಧ ನಿಯಂತ್ರಕರು ಕಲುಷಿತ ಔಷಧಗಳನ್ನು ಮಾರುಕಟ್ಟೆಯಲ್ಲಿ ಅನುಮತಿಸಿದ್ದಾರೆಯೇ ಎಂದು ಅವರು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_47_145_11.txt b/eesanje/url_47_145_11.txt new file mode 100644 index 0000000000000000000000000000000000000000..66b4a0657fc3438f8561ba5c1022624edf07a665 --- /dev/null +++ b/eesanje/url_47_145_11.txt @@ -0,0 +1,4 @@ +ತೆಲಂಗಾಣದ ಮಾಜಿ ಮುಖ್ಯಮಂತ್ರಿ ಪುತ್ರಿ ಕವಿತಾ ಇಡಿ ವಶಕ್ಕೆ +ಹೈದರಾಬಾದ್, ಮಾ 15- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಶುಕ್ರವಾರ ಬಿಆರ್ಎಸ್ ಪಕ್ಷದ ಎಂಎಲ್ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ ಕವಿತಾ ಅವರನ್ನು ವಶಕ್ಕೆ ತೆಗೆದುಕೊಂಡಿದೆ. +ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಕೆ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದರು. ಕವಿತಾ ಅವರನ್ನು ಇಂದು ರಾತ್ರಿ ದೆಹಲಿಗೆ ಕರೆದೊಯ್ಯಲಾಗುವುದು ಎಂದು ಇಡಿ ಅಧಿಕಾರಿಗಳನ್ನು ತಮಗೆ ತಿಳಿಸಿದರು ಎಂದು ಬಿಆರ್ಎಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪ್ರಶಾಂತ್ ರೆಡ್ಡಿ ಹೇಳಿದ್ದಾರೆ.ಕವಿತಾ ಅವರನ್ನು ರಾತ್ರಿ 8.45 ರ ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಮನೆಯಲ್ಲಿ ನಮಗೆ ತಿಳಿಸಿದ್ದರು. ಅಧಿಕಾರಿಗಳು ಇಲ್ಲಿಗೆ ಬರುವ ಮುನ್ನವೇ ವಿಮಾನದ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದಾರೆ. ಕವಿತಾ ಅವರನ್ನು ವಶಕ್ಕೆ ತೆಗೆದುಕೊಳ್ಳುವುದು ಅವರ ಪೂರ್ವ ನಿಯೋಜಿತ ಆಲೋಚನೆಯಾಗಿತ್ತು ಎನಿಸುತ್ತದೆ ಎಂದು ಪ್ರಶಾಂತ್ ಹೇಳಿದ್ದಾರೆ. +ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್, ಮಾಜಿ ಸಚಿವ ಹರೀಶ್ ರಾವ್ ಹಾಗೂ ಅಪಾರ ಸಂಖ್ಯೆಯ ಪಕ್ಷದ ಕಾರ್ಯಕರ್ತರು ಕವಿತಾ ಅವರ ನಿವಾಸದಲ್ಲಿ ಜಮಾಯಿಸಿ ಘೋಷಣೆ ಕೂಗಿದರು. ಕವಿತಾ ಅವರನ್ನು ಯಾವ ಪ್ರಕರಣದಲ್ಲಿ ಪ್ರಶ್ನಿಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ದೆಹಲಿ ಅಬಕಾರಿ ನೀತಿ ಸಂಬಂಧಿತ ಪ್ರಕರಣಕ್ಕೂ ಇಂದಿನ ವಿಚಾರಣೆಗೂ ಸಂಬಂಧವಿದೆಯೇ ಎಂಬುದು ಸ್ಪಷ್ಟವಾಗಿಲ್ಲ. 2021-22 ರ ದೆಹಲಿಯ ಅಬಕಾರಿ ನೀತಿಯ ಅಡಿಯಲ್ಲಿ ದೊಡ್ಡ ಲಾಭ ಪಡೆಯಲು ಯತ್ನಿಸುತ್ತಿರುವ ಮದ್ಯದ ವ್ಯಾಪಾರಿಗಳ ಲಾಬಿಯೊಂದಿಗೆ ಕವಿತಾ ಸಂಪರ್ಕ ಹೊಂದಿದ್ದಾರೆ ಎಂದು ಇಡಿ ಹೇಳಿಕೊಂಡಿತ್ತು. \ No newline at end of file diff --git a/eesanje/url_47_145_12.txt b/eesanje/url_47_145_12.txt new file mode 100644 index 0000000000000000000000000000000000000000..0f432056c08e7ddc90eb352bcd6fa3b874ec637d --- /dev/null +++ b/eesanje/url_47_145_12.txt @@ -0,0 +1,6 @@ +ರಾಜಸ್ಥಾನದಲ್ಲಿ ಪಾಕ್ ಬೇಹುಗಾರ ಬಂಧನ +ಜೈಪುರ, ಮಾ.15 (ಪಿಟಿಐ)-ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಸೇನಾ ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಯೊಂದನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಆನಂದ್ ರಾಜ್ ಸಿಂಗ್ (22) ಅವರನ್ನು ಸೇನೆಗೆ ಕಾರ್ಯತಂತ್ರದ ಮಹತ್ವದ ಮಾಹಿತಿ ಸಂಗ್ರಹಿಸಿ ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳ ಮೂವರು ಮಹಿಳಾ ನಿರ್ವಾಹಕರೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಸಂಜಯ್ ಅಗರ್ವಾಲ್ ತಿಳಿಸಿದ್ದಾರೆ. +ಆರೋಪಿ ಶ್ರೀಗಂಗಾನಗರದ ಸೂರತ್ಗಢ ಸೇನಾ ಕಂಟೋನ್ಮೆಂಟ್ನ ಹೊರಗೆ ಸಮವಸ್ತ್ರದ ಅಂಗಡಿಯನ್ನು ನಡೆಸುತ್ತಿದ್ದರು ಎಂದು ಅವರು ಹೇಳಿದರು.ಸಿಂಗ್ ಅವರು ಸ್ವಲ್ಪ ಸಮಯದ ಹಿಂದೆ ತಮ್ಮ ಅಂಗಡಿಯನ್ನು ಮುಚ್ಚಿದ್ದರು ಮತ್ತು ಬೆಹ್ರೋರ್ ಪ್ರದೇಶದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಗರ್ವಾಲ್ ಹೇಳಿದರು. ಈ ಅವಧಿಯಲ್ಲಿಯೂ ಅವರು ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳ ಮಹಿಳಾ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. +ಸಿಂಗ್ ಅವರು ತಮ್ಮ ಮೂಲಗಳಿಂದ ಸೇನೆಯ ಗೌಪ್ಯ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದರು ಮತ್ತು ಅದನ್ನು ಪಾಕಿಸ್ತಾನಿ ಏಜೆಂಟ್ಗಳೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ಎಡಿಜಿಪಿ ಹೇಳಿದರು, ಆರೋಪಿ ಅಂತಹ ರಹಸ್ಯ ಮಾಹಿತಿಯನ್ನು ಕಳುಹಿಸಲು ಈ ಏಜೆಂಟರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಿದರು. +ಪಾಕಿಸ್ತಾನಿ ಗುಪ್ತಚರ ಸಂಸ್ಥೆಗಳು ನಡೆಸುತ್ತಿರುವ ಬೇಹುಗಾರಿಕೆ ಚಟುವಟಿಕೆಗಳನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಅಗರ್ವಾಲ್ ಹೇಳಿದರು. \ No newline at end of file diff --git a/eesanje/url_47_145_2.txt b/eesanje/url_47_145_2.txt new file mode 100644 index 0000000000000000000000000000000000000000..10396a004cfb2be26a301668d7df2b0b077d93fa --- /dev/null +++ b/eesanje/url_47_145_2.txt @@ -0,0 +1,4 @@ +ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ +ನವದೆಹಲಿ,ಮಾ.16-ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದೆ. ವಿಕಲಚೇತನರು ಹಾಗೂ ಹಿರಿಯ ಮತದಾರರು ಫಾರಂ 12 ಡಿ ಬಳಕೆ ಮಾಡಿ ಮನೆಯಿಂದಲೇ ಮತ ಚಲಾಯಿಸಬಹುದಾಗಿದೆ ಎಂದು ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಪ್ರಕಟಿಸಿದರು. +ಇದಲ್ಲದೆ ಮತಗಟ್ಟೆಗೆ ಮತ ಚಲಾಯಿಸಲು ಬರುವ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದನ್ನು ಮತದಾರರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಆಯುಕ್ತರು ಮನವಿ ಮಾಡಿಕೊಂಡರು.80 ವರ್ಷ ಮೇಲ್ಪಟ್ಟವರು 1.98 ಕೋಟಿ ಹಾಗೂ 88 ಲಕ್ಷ ವಿಕಲಚೇತನ ಮತದಾರರಿದ್ದಾರೆ. ಮತಗಟ್ಟೆಗಳಲ್ಲಿ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಲಿದ್ದು, ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಅವರು ತಿಳಿಸಿದರು. +ಚುನಾವಣೆಯಲ್ಲಿ ಸ್ರ್ಪಸುವ ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ರ್ಪಸುವ ಎಲ್ಲಾ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ. \ No newline at end of file diff --git a/eesanje/url_47_145_3.txt b/eesanje/url_47_145_3.txt new file mode 100644 index 0000000000000000000000000000000000000000..dbc5de616c4778201b5bf4c0ab10d5e47aab426f --- /dev/null +++ b/eesanje/url_47_145_3.txt @@ -0,0 +1,8 @@ +ಚುನಾವಣಾ ಬಾಂಡ್ ರದ್ದುಗೊಳಿಸುವ ಬದಲು ವ್ಯವಸ್ಥೆ ಸುಧಾರಿಸಬೇಕಿತ್ತು : ಅಮಿತ್ ಶಾ +ನವದೆಹಲಿ,ಮಾ.16-ಚುನಾವಣಾ ಬಾಂಡ್ಗಳ ಕುರಿತು ಸುಪ್ರೀಂ ಕೋರ್ಟ್ನ ಆದೇಶವನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯದಲ್ಲಿ ಕಪ್ಪುಹಣವನ್ನು ಕೊನೆಗೊಳಿಸಲು ಈ ಯೋಜನೆಯನ್ನು ಪರಿಚಯಿಸಲಾಗಿದೆ ಮತ್ತು ಅದನ್ನು ರದ್ದುಗೊಳಿಸುವ ಬದಲು ಸುಧಾರಿಸಬೇಕಿತ್ತು ಎಂದು ಹೇಳಿದ್ದಾರೆ. +ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆಯಾಗಿದೆ ಮತ್ತು ಅದನ್ನು ಕಾರ್ಯಗತಗೊಳಿಸಿದಾಗ, ಇದು ತ್ವರಿತ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ ಮತ್ತು ಮರುಕಳಿಸುವ ವೆಚ್ಚವನ್ನು ಕೊನೆಗೊಳಿಸುತ್ತದೆ ಎಂದು ಶಾ ಹೇಳಿದರು. +ಭಾರತೀಯ ರಾಜಕೀಯದಲ್ಲಿ ಕಪ್ಪುಹಣದ ಪ್ರಭಾವವನ್ನು ಕೊನೆಗೊಳಿಸಲು ಚುನಾವಣಾ ಬಾಂಡ್ಗಳನ್ನು ಪರಿಚಯಿಸಲಾಗಿದೆ. ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ನಾನು ಸುಪ್ರೀಂ ಕೋರ್ಟ್ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುತ್ತೇನೆ. ಆದರೆ ಚುನಾವಣಾ ಬಾಂಡ್ಗಳನ್ನು ಸಂಪೂರ್ಣವಾಗಿ ರದ್ದುಪಡಿಸುವ ಬದಲು ಮಾಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಅವರು ಮಾಧ್ಯಮವೊಂದರ ಸಂವಾದದಲ್ಲಿ ಹೇಳಿದರು. +ಕಾಂಗ್ರೆಸ್ ಅನ್ನು ಉಲ್ಲೇಖಿಸಿದ ಗೃಹ ಸಚಿವರು, ವಿರೋಧ ಪಕ್ಷದ ನಾಯಕರು ರಾಜಕೀಯ ದೇಣಿಗೆಯನ್ನು ನಗದು ರೂಪದಲ್ಲಿ ತೆಗೆದುಕೊಳ್ಳುತ್ತಿದ್ದರು, ಏಕೆಂದರೆ ಅವರು ರೂ. 1,100 ದೇಣಿಗೆಯಲ್ಲಿ ರೂ. 100 ಅನ್ನು ಪಕ್ಷದ ಹೆಸರಿನಲ್ಲಿ ಠೇವಣಿ ಇಡುತ್ತಿದ್ದರು ಮತ್ತು ರೂ. 1,000 ಅನ್ನು ತಮ್ಮಲ್ಲಿ ಇಟ್ಟುಕೊಳ್ಳುತ್ತಿದ್ದರು ಎಂದಿದ್ದಾರೆ. ಕಾಂಗ್ರೆಸ್ ಪಕ್ಷವು ಈ ವ್ಯವಸ್ಥೆಯನ್ನು ವರ್ಷಗಳಿಂದ ನಡೆಸುತ್ತಿದೆ ಎಂದು ಅವರು ಹೇಳಿದರು. +ಚುನಾವಣಾ ಬಾಂಡ್ಗಳು ಬಿಜೆಪಿಗೆ ಲಾಭ ತಂದುಕೊಟ್ಟಿವೆ ಎಂದು ಹೇಳಲಾಗಿದೆ ಮತ್ತು ರಾಹುಲ್ ಗಾಂ„ ಇದು ಅತಿದೊಡ್ಡ ಸುಲಿಗೆ ಚಟುವಟಿಕೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಶಾ ಹೇಳಿದರು. ನಾನು ಈ ಬಗ್ಗೆ ನನ್ನ ನಿಲುವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ಒಟ್ಟು ರೂ. 20,000 ಕೋಟಿ ಎಲೆಕ್ಟೋರಲ್ ಬಾಂಡ್ಗಳಲ್ಲಿ ಬಿಜೆಪಿಗೆ ಅಂದಾಜು ? ರೂ.6,000 ಕೋಟಿ ಸಿಕ್ಕಿದೆ. ಉಳಿದ ಬಾಂಡ್ಗಳು ಎಲ್ಲಿ ಹೋದವು? ಟಿಎಂಸಿ ರೂ. 1,600 ಕೋಟಿ, ಕಾಂಗ್ರೆಸ್ಗೆ ರೂ.1,400 ಸಿಕ್ಕಿದೆ. ಕೋಟಿ, ಬಿಆರ್ಎಸ್ಗೆ ರೂ.1,200 ಕೋಟಿ, ಬಿಜೆಡಿಗೆ ರೂ.750 ಕೋಟಿ ಮತ್ತು ಡಿಎಂಕೆ ರೂ.639 ಕೋಟಿ ಪಡೆದುಕೊಂಡಿದೆ. +303 ಸಂಸದರನ್ನು ಹೊಂದಿದ್ದರೂ ರೂ.6,000 ಕೋಟಿ ಪಡೆದಿದ್ದೇವೆ ಮತ್ತು ಉಳಿದವರು 242 ಸಂಸದರ ವಿರುದ್ಧ ರೂ. 14,000 ಕೋಟಿ ಪಡೆದಿದ್ದೇವೆ. ಇದರ ಹುನ್ನಾರ ಏನು? ಖಾತೆಗಳನ್ನು ಇತ್ಯರ್ಥಪಡಿಸಿದ ನಂತರ ಅವರು ನಿಮ್ಮೆಲ್ಲರನ್ನು ಎದುರಿಸಲು ಸಾಧ್ಯವಾಗುವುದಿಲ್ಲ ಎಂದು ನಾನು ಹೇಳಬಲ್ಲೆ , ಅವರು ಹೇಳಿದರು.ಒಂದು ರಾಷ್ಟ್ರ, ಒಂದು ಚುನಾವಣಾ ಪ್ರಸ್ತಾಪವನ್ನು ಉಲ್ಲೇಖಿಸಿದ ಶಾ, ದೇಶದಾದ್ಯಂತ ಅನೇಕ ಬಾರಿ ಚುನಾವಣೆಗಳು ನಡೆಯುವುದರಿಂದ, ಚುನಾವಣೆ ನಡೆಸಲು ಹೆಚ್ಚಿನ ಪ್ರಮಾಣದ ಹಣವನ್ನು ಖರ್ಚು ಮಾಡಲಾಗುತ್ತದೆ ಎಂದು ಹೇಳಿದರು. +ಎಲ್ಲಕ್ಕಿಂತ ಮುಖ್ಯವಾಗಿ ಮಾದರಿ ನೀತಿ ಸಂಹಿತೆ ಜಾರಿಯಿಂದ ಸರ್ಕಾರದ ನಿರ್ಧಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎಂದರು. ಒಂದು ರಾಷ್ಟ್ರ, ಒಂದೇ ಚುನಾವಣೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಕಲ್ಪನೆಯೆಂದರೆ ಈ ದೇಶದಲ್ಲಿ ಮತ್ತೆ ಮತ್ತೆ ಚುನಾವಣೆಗಳು ನಡೆಯುತ್ತವೆ ಮತ್ತು ಜನರು ಚುನಾವಣೆಯಲ್ಲಿ ನಿರತರಾಗಿದ್ದಾರೆ ಮತ್ತು ಇದು ಪದೇ ಪದೇ ಖರ್ಚಿಗೆ ಕಾರಣವಾಗುತ್ತದೆ ಎಂಬುದಾಗಿದೆ ಎಂದಿದ್ದಾರೆ. \ No newline at end of file diff --git a/eesanje/url_47_145_4.txt b/eesanje/url_47_145_4.txt new file mode 100644 index 0000000000000000000000000000000000000000..fd7fb218048a76ea1ce5e141b8a3f2dd323aa227 --- /dev/null +++ b/eesanje/url_47_145_4.txt @@ -0,0 +1,4 @@ +ರಜೌರಿ ಜಿಲ್ಲೆಯ ಗಡಿಯಲ್ಲಿ ಪಾಕ್ ನುಸುಳುಕೋರನ ಬಂಧನ +ರಜೌರಿ, ಮಾ.16 (ಪಿಟಿಐ) :ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) 34 ವರ್ಷದ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಸಮನಿ ಗ್ರಾಮದ ನಿವಾಸಿ ಮೊಹಮ್ಮದ್ ನದೀಮ್ ತಡರಾತ್ರಿ ಗಡಿಯಾಚೆಯಿಂದ ಈ ಭಾಗಕ್ಕೆ ತೆರಳುತ್ತಿದ್ದಾಗ ನೌಶೇರಾ ಸೆಕ್ಟರ್‍ನಲ್ಲಿ ಎಚ್ಚರಿಕೆಯ ಸೇನಾ ಪಡೆಗಳು ತಡೆದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಪಡೆಗಳು ಗಸ್ತು ಕರ್ತವ್ಯದಲ್ಲಿದ್ದರು, ಅವರು ನಿರಾಯುಧ ಒಳನುಗ್ಗುವವರನ್ನು ಗಮನಿಸಿದರು ಮತ್ತು ಸ್ವಲ್ಪ ಸಮಯದ ಬೆನ್ನಟ್ಟಿದ ನಂತರ ಅವರನ್ನು ಬಂಧಿಸಿದರು. ನದೀಮ್ ಗಡಿಯಾಚೆಯಿಂದ ಈ ಭಾಗಕ್ಕೆ ನುಸುಳಿರುವ ಉದ್ದೇಶವನ್ನು ತಿಳಿಯಲು ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅ„ಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_145_5.txt b/eesanje/url_47_145_5.txt new file mode 100644 index 0000000000000000000000000000000000000000..039af94d7dfe15264d3e42c5a063ec73d5e7d426 --- /dev/null +++ b/eesanje/url_47_145_5.txt @@ -0,0 +1,5 @@ +ಪಿಎಂ-ಸೂರ್ಯ ಘರ್ ಯೋಜನೆಯಡಿ 1 ಕೋಟಿಗೂ ಹೆಚ್ಚು ಕುಟುಂಬಗಳ ನೋಂದಣಿ : ಪ್ರಧಾನಿ ಮೋದಿ +ನವದೆಹಲಿ, ಮಾ.16-ಮನೆಯ ಮೇಲ್ಛಾವಣಿಯ ಸೌರ ವಿದ್ಯತ್ ಉತ್ಪಾದನೆಯ ಪಿಎಂ-ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ ಈಗಾಗಲೇ ಒಂದು ಕೋಟಿಗೂ ಹೆಚ್ಚು ಕುಟುಂಬಗಳು ನೋಂದಾಯಿಸಿಕೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರದ ಎಲ್ಲಾ ಭಾಗಗಳಿಂದ ನೋಂದಣಿಗಳು ಹರಿದುಬರುತ್ತಿವೆ. ಅಸ್ಸಾಂ, ಬಿಹಾರ, ಗುಜರಾತ್, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳು 5 ಲಕ್ಷಕ್ಕೂ ಹೆಚ್ಚು ಕುಟುಂಬಗಳು ನಿಯಮಾವಳಿಯಂತೆ ನೊಂದಣಿ ಕಂಡಿವೆ ಎಂದು ಅವರು ಪ್ರಧಾನಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. +ಇನ್ನೂ ನೋಂದಣಿ ಮಾಡದಿರುವವರು ಆದಷ್ಟು ಬೇಗ ನೋಂದಾಯಿಸಿಕೊಳ್ಳುವಂತೆ ಪ್ರಧಾನಮಂತ್ರಿ ಮನವಿ ಮಾಡಿದಾರೆ.ಸೌರ ವಿದ್ಯುತ್ ಉತ್ಪಾದನೆಯನ್ನು ಖಾತ್ರಿಪಡಿಸುವುದರಿಂದ ನಿಮ್ಮ ಮನೆಗಳಿಗೆ ವಿದ್ಯುತ್ ವೆಚ್ಚದಲ್ಲಿ ಗಣನೀಯ ಪ್ರಮಾಣದ ಕಡಿತ ನೋಡಬಹುದು ಎಂದು ತಿಳಿಸಿದರು. +ಇದು ಹಸಿರು ಪರಿಸರಕ್ಕಾಗಿ ಸರ್ಕಾರದ ಹೋಜನೆ ,ತಮ್ಮ ಜೀವನಶೈಲಿಯನ್ನು ದೊಡ್ಡ ಪ್ರಮಾಣದಲ್ಲಿ ಪ್ರೋತ್ಸಾಹಿಸಲು ನಾವು ಸಿದ್ದರಾಗಿದ್ದೇವೆ ಉತ್ತಮ ಪರಿಸರ,ಭೂಮಿಯ ರಕ್ಷಣೆ ನೀವು ಕೊಡುಗೆ ನೀಡಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ. +ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕಳೆದ ತಿಂಗಳು ರೂ. 75,021 ಕೋಟಿ ವೆಚ್ಚದ ಒಟ್ಟು ರೂಫ್‍ಟಾಪ್ ಸೋಲಾರ್ ಪ್ಯಾನಲ್‍ಗಳನ್ನು ಸ್ಥಾಪಿಸಲು ಮತ್ತು ಒಂದು ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್‍ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ಅನುಮೋದನೆ ನೀಡಿತ್ತು. \ No newline at end of file diff --git a/eesanje/url_47_145_6.txt b/eesanje/url_47_145_6.txt new file mode 100644 index 0000000000000000000000000000000000000000..0f7c01c01ff5c2ef98c78956285af4f2b2fadbf3 --- /dev/null +++ b/eesanje/url_47_145_6.txt @@ -0,0 +1,6 @@ +ಜೆಎನ್‍ಯು ವಿವಿ ವಿದ್ಯಾರ್ಥಿ ಸಂಘದ ಚುನಾವಣೆಗೆ ವೀಕ್ಷಕರಾಗಿ ನಿವೃತ್ತ ನ್ಯಾಯಮೂರ್ತಿ ನೇಮಕ +ನವದೆಹಲಿ, ಮಾ.16 (ಪಿಟಿಐ) ಪ್ರಸಕ್ತ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಚುನಾವಣೆಗೆ ರಚಿತವಾಗಿರುವ ಚುನಾವಣಾ ಸಮಿತಿಯ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾಧೀಶ ವಿ ರಾಮಸುಬ್ರಮಣಿಯನ್ ಅವರನ್ನು ದೆಹಲಿ ಹೈಕೋರ್ಟ್ ವೀಕ್ಷಕರನ್ನಾಗಿ ನೇಮಿಸಿದೆ. +ವಿದ್ಯಾರ್ಥಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಲಿಂಗ್ಡೋ ಸಮಿತಿಯ ಶಿಫರಸುಗಳ ಪ್ರಕಾರ ಸ್ಥಾಪಿಸಲಾದ ಕುಂದುಕೊರತೆ ನಿವಾರಣಾ ಕೋಶವನ್ನು ಅಂತಿಮ ಫಲಿತಾಂಶದ ಘೋಷಣೆಯ ಮೊದಲು ಚುನಾವಣಾ ಸಮಿತಿಯ ಸಂವಿಧಾನಕ್ಕೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲು ಮತ್ತು ಆದೇಶವನ್ನು ನೀಡುವಂತೆ ಕೇಳಿಕೊಂಡರು. +ಇಸಿ (ಚುನಾವಣಾ ಸಮಿತಿ) ಯ ಸಂವಿಧಾನವು ಕಾನೂನು ಅಥವಾ ಲಿಂಗ್ಡೋ ಸಮಿತಿಯ ಶಿಫರಸುಗಳಿಗೆ (ಸುಪ್ರೀಂ ಕೋರ್ಟ್‍ನಿಂದ ಅನುಮೋದಿಸಲ್ಪಟ್ಟಂತೆ) ಸಮ್ಮತವಾಗಿಲ್ಲ ಎಂದು ಕಂಡುಬಂದರೆ, ವಿವಾದಿತ ಚುನಾವಣೆಗಳಿಗೆ ಸಂಬಂಧಿಸಿದಂತೆ ಸೂಕ್ತ ಪರಿಣಾಮದ ಆದೇಶಗಳು, ಕುಂದುಕೊರತೆ ನಿವಾರಣಾ ಕೋಶದ ಮೂಲಕವೂ ಅಂಗೀಕರಿಸಲಾಗುವುದು ಎಂದು ನ್ಯಾಯಮೂರ್ತಿ ದತ್ತಾ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.ಈ ಮಧ್ಯೆ, ನಡೆಯುತ್ತಿರುವ ಚುನಾವಣಾ ಪ್ರಕ್ರಿಯೆಯ ಉದ್ದೇಶಕ್ಕಾಗಿ, ಈ ನ್ಯಾಯಾಲಯವು ಸುಪ್ರೀಂ ಕೋರ್ಟ್‍ನ ನಿವೃತ್ತ ನ್ಯಾಯಾಧೀಶರನ್ನು ಈ ನ್ಯಾಯಾಲಯವು ಚಟುವಟಿಕೆಗಳು ಹಾಗೂ ಕಾರ್ಯಗಳ ಮೇಲೆ ಮೇಲ್ವಿಚಾರಣೆ ಮಾಡಲು ವೀಕ್ಷಕರನ್ನಾಗಿ ನೇಮಿಸುತ್ತದೆ ಎಂದು ಪಕ್ಷಗಳ ಆಯಾ ವಕೀಲರು ಸಹ ಒಪ್ಪಿದ್ದಾರೆ. +ಈ ಉದ್ದೇಶಕ್ಕಾಗಿ, ಭಾರತದ ಸುಪ್ರೀಂ ಕೋರ್ಟ್‍ನ ಮಾಜಿ ನ್ಯಾಯಾ„ೀಶರಾದ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ, ಎಂದು ನ್ಯಾಯಾಲಯ ಹೇಳಿದೆ.ಮಾರ್ಚ್ 22 ರಂದು ಜೆಎನ್‍ಯುಎಸ್‍ಯು ಚುನಾವಣೆ ನಡೆಯಲಿದ್ದು, ಮಾರ್ಚ್ 24 ರಂದುಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ನಿಯಮಗಳಿಗೆ ಸಂಪೂರ್ಣ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. +ಇಬ್ಬರು ವಿದ್ಯಾರ್ಥಿಗಳು ತಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ನಿಲುವುಗಳೊಂದಿಗೆ ಹೊಂದಾಣಿಕೆ ಮಾಡುವ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟವಾದ ಪಕ್ಷಪಾತದೊಂದಿಗೆ ಸಮಿತಿಯನ್ನು ರಚಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ವಾದಿಸಲಾಗಿತ್ತು. \ No newline at end of file diff --git a/eesanje/url_47_145_7.txt b/eesanje/url_47_145_7.txt new file mode 100644 index 0000000000000000000000000000000000000000..47e4b96c11053fd739ca951879b70175db5f23ac --- /dev/null +++ b/eesanje/url_47_145_7.txt @@ -0,0 +1,6 @@ +ಪಾಕ್‍ನ ಇಸ್ಲಾಮೋಫೋಬಿಯ ವಿರುದ್ಧ ವಿಶ್ವಸಂಸ್ಥೆಯಲ್ಲಿ ನಿರ್ಣಯ +ವಿಶ್ವಸಂಸ್ಥೆ, ಮಾರ್ಚ್ 16 (ಪಿಟಿಐ) ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಗೆ ನೀಡಿದ ಹೇಳಿಕೆಯಲ್ಲಿ ಇಸ್ಲಾಮಾಬಾದ್‍ನ ರಾಯಭಾರಿ ರಾಮ ಮಂದಿರ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖಿಸಿದ ನಂತರ ಭಾರತವು ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದೆ. +ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು ಸಭೆಯಲ್ಲಿ ಪಾಕಿಸ್ತಾನದ ರಾಯಭಾರಿ ಮುನೀರ್ ಅಕ್ರಂ ಅವರು ಮಾಡಿದ ಕಾಮೆಂಟ್‍ಗಳಿಗೆ ಪ್ರತಿಕ್ರಿಯಿಸುವಾಗ ಪಾಕಿಸ್ತಾನವು ಪರಿಚಯಿಸಿದ ಇಸ್ಲಾಮೋಫೋಬಿಯಾ ವಿರುದ್ಧದ ಕ್ರಮಗಳು ಎಂಬ ನಿರ್ಣಯವನ್ನು 193 ಸದಸ್ಯರ ಯುಎನ್ ಜನರಲ್ ಅಂಗೀಕರಿಸಿತು. +ಒಂದು ಅಂತಿಮ ಅಂಶವು ನಿಯೋಗಕ್ಕೆ ಸಂಬಂಧಿಸಿದೆ (ಮತ್ತು ಅದರ ಟೀಕೆಗಳು), ಮುರಿದ ದಾಖಲೆಯಂತೆ, ಪ್ರಪಂಚವು ಪ್ರಗತಿಯಲ್ಲಿರುವಾಗ ದುಃಖದಿಂದ ನಿಶ್ಚಲವಾಗಿರುತ್ತದೆ ಎಂದು ಅವರು ಹೇಳಿದರು.ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ಬಗ್ಗೆ ಅಕ್ರಮ್ ಉಲ್ಲೇಖಿಸಿದ್ದಾರೆ. +ಕಾಂಬೋಜ್ ಅವರು ನನ್ನ ದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಈ ನಿಯೋಗದ ಸೀಮಿತ ಮತ್ತು ತಪ್ಪು ದೃಷ್ಟಿಕೋನಕ್ಕೆ ಸಾಕ್ಷಿಯಾಗುವುದು ದುರದೃಷ್ಟಕರವಾಗಿದೆ, ಸಾಮಾನ್ಯ ಸಭೆಯು ಇಡೀ ಸದಸ್ಯತ್ವದಿಂದ ಬುದ್ಧಿವಂತಿಕೆ, ಆಳ ಮತ್ತು ಜಾಗತಿಕ ದೃಷ್ಟಿಕೋನವನ್ನು ಬೇಡುವ ವಿಷಯವನ್ನು ಪರಿಗಣಿಸಬೇಕು ಎಂದಿದ್ದಾರೆ.ಯುಎನ್‍ಜಿಎಯಲ್ಲಿ ಇಸ್ಲಾಮೋಫೋಬಿಯಾವನ್ನು ಎದುರಿಸಲು ಕ್ರಮಗಳು ಎಂಬ ನಿರ್ಣಯವನ್ನು ಅಂಗೀಕರಿಸಿದ ಸಂದರ್ಭದಲ್ಲಿ ಕಾಂಬೋಜ್ ಭಾರತದ ನಿಲುವಿನ ವಿವರಣೆಯಲ್ಲಿ ಹೇಳಿಕೆ ನೀಡಿದರು. +ಭಾರತ, ಬ್ರೆಜಿಲ, ಫ್ರಾನ್ಸ್, ಜರ್ಮನಿ, ಇಟಲಿ, ಉಕ್ರೇನ್ ಮತ್ತು ಯುಕೆ ಸೇರಿದಂತೆ 115 ರಾಷ್ಟ್ರಗಳು ಪರವಾಗಿ ಮತ ಹಾಕಿದವು, ಯಾವುದೂ ವಿರುದ್ಧವಾಗಿಲ್ಲ ಮತ್ತು 44 ರಾಷ್ಟ್ರಗಳ ಗೈರು ಹಾಜರಿಯಲ್ಲಿ ಸಾಮಾನ್ಯ ಸಭೆ ನಿರ್ಣಯವನ್ನು ಅಂಗೀಕರಿಸಿತು. \ No newline at end of file diff --git a/eesanje/url_47_145_8.txt b/eesanje/url_47_145_8.txt new file mode 100644 index 0000000000000000000000000000000000000000..1212e683688456962c5a971a004b7c5306ccdd2f --- /dev/null +++ b/eesanje/url_47_145_8.txt @@ -0,0 +1,5 @@ +ಬಿಆರ್‌ಎಸ್‌ ನಾಯಕಿ ಕವಿತಾ ದೆಹಲಿಗೆ ಶಿಫ್ಟ್ +ನವದೆಹಲಿ,ಮಾ.16- ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ನಿನ್ನೆ ಸಂಜೆ ಜಾರಿ ನಿರ್ದೇಶನಾಲಯದಿಂದ ಹೈದರಾಬಾದ್ ಮನೆಯಿಂದ ಬಂಧಿಸಲಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು ಮಧ್ಯರಾತ್ರಿಯ ಸುಮಾರಿಗೆ ರಾಷ್ಟ್ರ ರಾಜಧಾನಿಗೆ ಕರೆತರಲಾಗಿದೆ. ನಗರದಲ್ಲಿ ಇಳಿದ ನಂತರ, ಆಕೆಯನ್ನು ಏಜೆನ್ಸಿಯ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಯಿತು ಎಂದು ತಿಳಿದುಬಂದಿದೆ. +ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯನ್ನು ಇಂದು ಬೆಳಗ್ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಆಕೆಯನ್ನು ಕಸ್ಟಡಿ ವಿಚಾರಣೆಗಾಗಿ ಒಪ್ಪಿಸುವಂತೆ ಕೇಳಿಕೊಂಡಿದೆ. ಇಂದು ಬೆಳಗ್ಗೆ ಇಡಿ ಕೇಂದ್ರ ಕಚೇರಿಯ ಸುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. +ಕವಿತಾ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರ ಸಹೋದರ ಮತ್ತು ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಅವರು ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ ಅಧಿಕಾರದ ದುರುಪಯೋಗ ಮತ್ತು ರಾಜಕೀಯ ಅಂಕಗಳನ್ನು ಇತ್ಯರ್ಥಗೊಳಿಸಲು ಸಾಂಸ್ಥಿಕ ದುರುಪಯೋಗವು ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದಲ್ಲಿ ಹೆಚ್ಚು ಸಾಮಾನ್ಯವಾಗಿದೆ ಎಂದು ಆರೋಪಿಸಿದ್ದಾರೆ. +ಮಾರ್ಚ್ 19 ರಂದು ಪ್ರಕರಣವು ತೀರಾ ಸಬ-ಜುಡಿಸ್ ಆಗಿರುವಾಗ ಮತ್ತು ಒಂದೆರಡು ದಿನಗಳಲ್ಲಿ ಮರುಪರಿಶೀಲನೆಗೆ ಮುಂದಾದಾಗ ಬಂಧಿಸುವ ವಿಪರೀತ ಧಾವಂತದ ಬಗ್ಗೆ ಸುಪ್ರೀಂ ಕೋರ್ಟ್‍ಗೆ ಉತ್ತರಿಸಲು. ಅದಕ್ಕಿಂತಲೂ ಭಯಾನಕ ಸಂಗತಿಯೆಂದರೆ ಇಡಿ ತನ್ನ ಸ್ವಂತ ಜವಾಬ್ದಾರಿಯನ್ನು ದುರ್ಬಲಗೊಳಿಸುವುದು ಗೌರವಾನ್ವಿತ ಸುಪ್ರೀಂ ಕೋರ್ಟ್ ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ನಾವು ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ ಎಂದಿದ್ದಾರೆ. \ No newline at end of file diff --git a/eesanje/url_47_145_9.txt b/eesanje/url_47_145_9.txt new file mode 100644 index 0000000000000000000000000000000000000000..2a4d3d7ce8149d4f6cb06a910deb7852302b5a00 --- /dev/null +++ b/eesanje/url_47_145_9.txt @@ -0,0 +1,4 @@ +ಕೇಜ್ರಿವಾಲ್‍ಗೆ ಜಾಮೀನು ಮಂಜೂರು +ನವದೆಹಲಿ,ಮಾ.16- ತನಿಖಾ ಸಂಸ್ಥೆಯ ಸಮನ್ಸ್‍ಗಳನ್ನು ತಪ್ಪಿಸಿದ್ದಕ್ಕಾಗಿ ಬಂಧನದ ಭೀತಿಗೆ ಗುರಿಯಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಇಲ್ಲಿನ ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಪುನರಾವರ್ತಿತ ಸಮನ್ಸ್‍ಗಳನ್ನು ತಪ್ಪಿಸಿದಾಗ ದೆಹಲಿ ಮುಖ್ಯಮಂತ್ರಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 174 ಅನ್ನು ಉಲ್ಲಂಸಿದ್ದಾರೆ – ಇದು ಒಂದು ನಿರ್ದಿಷ್ಟ ಸ್ಥಳದಲ್ಲಿ ವೈಯಕ್ತಿಕವಾಗಿ ಅಥವಾ ಏಜೆಂಟ್ ಮೂಲಕ ಕಾನೂನು ಆದೇಶವನ್ನು ಉಲ್ಲಂಸಿದಂತೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. +ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಪ್ರಶ್ನಿಸಲು ಬಯಸುತ್ತಿರುವ ಜಾರಿ ನಿರ್ದೇಶನಾಲಯವು ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ನೀಡಲಾದ ಎಂಟು ಸಮನ್ಸ್‍ಗಳನ್ನು ಮುಖ್ಯಮಂತ್ರಿ ತಪ್ಪಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ನ್ಯಾಯಾಲಯವು ಎಎಪಿ ಮುಖ್ಯಸ್ಥರಿಗೆ ಸಮನ್ಸ್ ಜಾರಿ ಮಾಡಿತ್ತು. +ಇಡಿ ಸಮನ್ಸ್‍ಗಳನ್ನು ಬಿಟ್ಟುಬಿಟ್ಟ ಕೇಜ್ರಿವಾಲ, ನರೇಂದ್ರ ಮೋದಿ ಸರ್ಕಾರವು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.ಇಡಿಯ ಇತ್ತೀಚಿನ ಸಮನ್ಸ್ ಫೆಬ್ರವರಿಯಲ್ಲಿ ತಡವಾಗಿ ಬಂದಿತು ಮತ್ತು ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿಯನ್ನು ಕೇಳಲಾಗಿತ್ತು. ಆದಾಗ್ಯೂ, ಅಕ್ರಮ ಸಮನ್ಸ್‍ಗಳನ್ನು ತಪ್ಪಿಸಿದ ಕೇಜ್ರಿವಾಲ, ಅವರು ವೀಡಿಯೊ ಕಾನರೆನ್ಸಿಂಗ್ ಮೂಲಕ ಮಾತ್ರ ಹಾಜರಾಗುವುದಾಗಿ ಹೇಳಿದ್ದರು. \ No newline at end of file diff --git a/eesanje/url_47_146_1.txt b/eesanje/url_47_146_1.txt new file mode 100644 index 0000000000000000000000000000000000000000..69e47bed4c0b3042b8ce72539ab4982f9ec1b9b7 --- /dev/null +++ b/eesanje/url_47_146_1.txt @@ -0,0 +1,11 @@ +ಬ್ರೇಕಿಂಗ್ : ನಾಳೆ ಲೋಕಸಮರಕ್ಕೆ ಮಹೂರ್ತ ಫಿಕ್ಸ್ +ನವದೆಹಲಿ,ಮಾ.15-ಶತಕೋಟಿ ಭಾರತೀಯರು ಚಾತಕಪಕ್ಷಿಯಂತೆ ಎದುರು ನೋಡುತ್ತಿರುವ, ವಿವಿಧ ರಾಜಕೀಯ ಪಕ್ಷಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಿರುವ 18ನೇ ಲೋಕಸಭಾ ಚುನಾವಣಾ ಮಹಾಸಮರಕ್ಕೆ ನಾಳೆಯೇ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಲಿದೆ. ಶನಿವಾರ ಮಧ್ಯಾಹ್ನ 3 ಗಂಟೆಗೆ ನವದೆಹಲಿಯಲ್ಲಿರುವ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿ ಕರೆದಿದ್ದು, ಲೋಕಸಭೆ ಕುರುಕ್ಷೇತ್ರಕ್ಕೆ ಮುಹೂರ್ತ ನಿಗದಿಯಾಗಲಿದೆ. +ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ಹಾಗೂ ನೂತನ ಆಯುಕ್ತರಾಗಿರುವ ಜ್ಞಾನೇಶ್‍ಕುಮಾರ್ ಮತ್ತು ಸುಖ್‍ಬೀರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಯ ದಿನಾಂಕವನ್ನು ಘೋಷಿಸಲಿದ್ದಾರೆ. ಒಟ್ಟು 543 ಲೋಕಸಭಾ ಕ್ಷೇತ್ರಗಳ ಜೊತೆಗೆ ಒರಿಸ್ಸಾ, ಆಂಧ್ರಪ್ರದೇಶ ಮತ್ತು ಜಮ್ಮುಕಾಶ್ಮೀರ ವಿಧಾನಸಭೆ ಚುನಾವಣೆಗಳಿಗೂ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಆಯೋಗದ ಮೂಲಗಳು ತಿಳಿಸಿವೆ. +2019ರಲ್ಲಿ ದೇಶಾದ್ಯಂತ ಏಳು ಹಂತದ ಮತದಾನ ನಡೆದಿತ್ತು. ಈ ಬಾರಿಯೂ ಹೆಚ್ಚು ಕಡಿಮೆ ಅಷ್ಟೇ ಹಂತದ ಮತದಾನ ನಡೆಯುವ ಸಾಧ್ಯತೆ ಇದೆ. ಕಳೆದ 2019ರ ಮಾರ್ಚ್ 10ರಂದು ದಿನಾಂಕವನ್ನು ಘೋಷಣೆ ಮಾಡಲಾಗಿತ್ತು. ಏಪ್ರಿಲ್ 11ರಿಂದ ಮೇ 19ರವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆದು ಮೇ 25ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿತ್ತು. +ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮೇ 18 ಮತ್ತು ಮೇ 23 ಸೇರಿದಂತೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮೊದಲ ಹಂತದಲ್ಲಿ 14 ಹಾಗೂ 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ವಿದ್ಯಾರ್ಥಿಗಳ ಪರೀಕ್ಷೆಗಳು, ಧಾರ್ಮಿಕ ಆಚರಣೆಗಳಿಗೆ ಅಡೆತಡೆಯಾಗದಂತೆ ಆಯೋಗ ಪರಿಶೀಲಿಸಿ ದಿನಾಂಕವನ್ನು ನಿಗದಿಪಡಿಸಲಿದೆ. +ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ 80 ಲೋಕಸಭಾ ಕ್ಷೇತ್ರಗಳಿಗೆ 5 ಹಂತದ ಮತದಾನ ನಡೆಯುವ ಸಂಭವವಿದೆ. ನಕ್ಸಲ್ ಪೀಡಿತ ರಾಜ್ಯಗಳಾದ ಛತ್ತೀಸ್‍ಘಡ, ಜಾರ್ಖಂಡ್‍ನಲ್ಲೂ 5 ಹಂತ ಹಾಗೂ ಬಿಹಾರದಲ್ಲಿ 2 ಹಂತದ ಮತದಾನಕ್ಕೆ ದಿನಾಂಕವನ್ನು ಆಯೋಗ ನಿಗದಿಪಡಿಸಲಿದೆ ಎಂದು ಮೂಲಗಳು ತಿಳಿಸಿವೆ.ಉಗ್ರರ ಉಪಟಳವಿರುವ ಜಮ್ಮುಕಾಶ್ಮೀರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲದಲ್ಲಿ ನಡೆಯುವುದರಿಂದ ಆಯೋಗ 5 ಹಂತದ ಮತದಾನ ನಡೆಸಲು ಆಯೋಗ ತೀರ್ಮಾನಿಸಿದೆ. +ಚುನಾವಣಾ ತಯಾರಿಗಳನ್ನು ಚುರುಕುಗೊಳಿಸುವ ಹಾಗೂ ಸ್ಥಿತಿಗತಿಗಳ ಬಗ್ಗೆ ಮಾಹಿತಿ ತಿಳಿಯಲು ಆಯೋಗ ಕೆಲವು ತಿಂಗಳಿನಿಂದ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾ ಅಕಾರಿಗಳ (ಸಿಇಒ) ಜತೆ ಸತತವಾಗಿ ಸಭೆಗಳನ್ನು ನಡೆಸಿತ್ತು. ಸಮಸ್ಯೆ ಇರುವ ಪ್ರದೇಶಗಳು, ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ) ಸಾಗಣೆ, ತಮಗೆ ಅಗತ್ಯವಿರುವ ಭದ್ರತಾ ಪಡೆಗಳು, ಗಡಿಗಳಲ್ಲಿನ ತಪಾಸಣೆಯನ್ನು ಬಿಗಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಪಟ್ಟಿಗಳನ್ನು ಸಿಇಒಗಳು ಆಯೋಗಕ್ಕೆ ನೀಡಿದ್ದಾರೆ. +ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಕೆ:ಲೋಕಸಭೆ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ಅನುಕೂಲವಾಗುವಂತೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ನಿಯೋಜಿಸಲು ಚುನಾವಣಾ ಆಯೋಗ ನಿರ್ಧಾರ ಕೈಗೊಂಡಿದೆ. ಚುನಾವಣಾ ಆಯೋಗದಲ್ಲಿ ಕೃತಕ ಬುದ್ಧಿಮತ್ತೆಗೆ ಮೀಸಲಾದ ಘಟಕವೊಂದನ್ನು ತೆರೆಯಲಾಗಿದೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ಗುರುತಿಸಿ, ತೆರವುಗೊಳಿಸುತ್ತದೆ. +ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುಳ್ಳು ಹಾಗೂ ಪ್ರಚೋದನಾಕಾರಿ ಅಂಶಗಳನ್ನು ಬಹಳ ತ್ವರಿತವಾಗಿ ತೆಗೆದು ಹಾಕಲಾಗುತ್ತದೆ. ಯಾವುದೇ ಪಕ್ಷ ಅಥವಾ ಅಭ್ಯರ್ಥಿ ನಿಯಮಗಳ ಉಲ್ಲಂಘನೆಯನ್ನು ಮುಂದುವರಿಸಿದರೆ ಆಯೋಗವು ಖಾತೆಗಳನ್ನು ಅಮಾನತು ಅಥವಾ ಬ್ಲಾಕ್ ಮಾಡುವಂತೆ ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಸೂಚಿಸುವಂತಹ ಕಠಿಣ ಕ್ರಮ ಕೈಗೊಳ್ಳುತ್ತದೆ. ಫ್ಯಾಕ್ಟ್ ಚೆಕ್ಕಿಂಗ್, ಸುಳ್ಳು ಸುದ್ದಿಗಳನ್ನು ತಡೆಯುವುದು, ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸುವುದರತ್ತ ಆಯೋಗ ಗಮನ ಹರಿಸಿದೆ. +ಚುನಾವಣಾ ಆಯೋಗದ ಡೇಟಾ ಪ್ರಕಾರ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ದೇಶದಲ್ಲಿ 96.88 ಕೋಟಿ ಅರ್ಹ ಮತದಾರರಿದ್ದಾರೆ. ಇದು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡ ಸಂಖ್ಯೆಯಾಗಿದೆ. ಜತೆಗೆ 18- 19 ವರ್ಷ ವಯೋಮಾನದ 1.85 ಕೋಟಿ ಯುವ ಜನರು ಮತ ಚಲಾಯಿಸುವ ಹಕ್ಕಿಗಾಗಿ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. +2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014ಕ್ಕಿಂತ ದೊಡ್ಡ ಗೆಲುವನ್ನು ಸಾಸಿತ್ತು. 2014 ರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದಿದ್ದರೆ, 2019 ರಲ್ಲಿ 303 ಸ್ಥಾನಗಳನ್ನು ಗೆದ್ದಿತ್ತು. ಎನ್‍ಡಿಎ 353 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ 37.7% ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದರೆ, ಓಆಂ 45% ಮತಗಳನ್ನು ಪಡೆದಿದೆ. ಕಾಂಗ್ರೆಸ್ 52 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಕಳೆದ ಬಾರಿ ಬಿಜೆಪಿ 25, ಜೆಡಿಎಸ್- 1, ಕಾಂಗ್ರೆಸ್ – 1 ಹಾಗೂ ಮಂಡ್ಯದಲ್ಲಿ ಪಕ್ಷೇತರರ ಅಭ್ಯರ್ಥಿ ಜಯಗಳಿಸಿದ್ದರು. diff --git a/eesanje/url_47_146_10.txt b/eesanje/url_47_146_10.txt new file mode 100644 index 0000000000000000000000000000000000000000..f06ee53c26b266c4c61af366ada9eb2800dd3b32 --- /dev/null +++ b/eesanje/url_47_146_10.txt @@ -0,0 +1,6 @@ +‘ಒಂದು ದೇಶ, ಒಂದು ಚುನಾವಣೆ’ ಕುರಿತ ಅಧ್ಯಯನ ವರದಿ ರಾಷ್ಟ್ರಪತಿಗಳಿಗೆ ಸಲ್ಲಿಕೆ +ನವದೆಹಲಿ,ಮಾ.14-ಒಂದು ದೇಶ, ಒಂದು ಚುನಾವಣೆ ಧ್ಯೇಯಕ್ಕೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಿದ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿ ಸಲ್ಲಿಸಿದೆ. 191 ದಿನಗಳ ಕಾಲ ತಜ್ಞರು ಬಾಧ್ಯಸ್ಥರೊಂದಿಗೆ ಚರ್ಚೆ ನಡೆಸಿ, ವಿವಿಧ ಸಂಶೋಧನೆಗಳನ್ನು ನಡೆಸಿದ ಸಮಿತಿ ಕೊನೆಗೆ 18,626 ಪುಟಗಳ ಸಮಗ್ರ ವರದಿಯನ್ನು ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿಯವರಿಗೆ ಸಲ್ಲಿಸಿದೆ. +ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಜ್ಯಸಭೆಯ ವಿರೋಧಪಕ್ಷದ ಮಾಜಿ ನಾಯಕ ಗುಲಾಮ್ ನಬಿ ಆಜಾದ್, ಕೇಂದ್ರ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ.ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಸದಸ್ಯರಾಗಿದ್ದು, ಕೇಂದ್ರದ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್‍ವಾಲ್ ವಿಶೇಷ ಆಹ್ವಾನಿತರಾಗಿದ್ದರು. +ಸಮಿತಿಯಲ್ಲಿ ಸದಸ್ಯರಾಗಿದ್ದ ಲೋಕಸಭೆಯ ಕಾಂಗ್ರೆಸ್ ನಾಯಕ ಅೀಧಿರ್ ರಂಜನ್ ಚೌಧರಿ ಸಮಿತಿಯನ್ನು ಬಹಿಷ್ಕರಿಸಿದ್ದರು. ಕಳೆದ ವರ್ಷದ ಸೆ.2 ರಂದು ಕೇಂದ್ರ ಸರ್ಕಾರ ಉನ್ನತ ಸಮಿತಿಯನ್ನು ರಚಿಸಿತ್ತು. ಇದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿತ್ತು. ಈಗಾಗಲೇ ಒಂದು ದೇಶ, ಒಂದು ಚುನಾವಣೆ ಎಂಬ ಸೈದ್ಧಾಂತಿಕ ನಿಲುವಿಗೆ ಪೂರಕವಾಗಿ ಶಿಫಾರಸ್ಸುಗಳು ಕ್ರೂಢೀಕರಣಗೊಂಡಿವೆ ಮತ್ತು ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಚಾಲನೆಗೊಂಡಿವೆ. ಉನ್ನತ ಸಮಿತಿಯ ರಚನೆ ಕಣ್ಣೊರೆಸುವ ತಂತ್ರ ಮಾತ್ರ ಎಂದು ಅೀಧಿರ್ ರಂಜನ್ ಚೌಧರಿ ಟೀಕಿಸಿ ಸಭೆಯನ್ನು ಬಹಿಷ್ಕರಿಸಿದ್ದರು. +ಅದರ ಹೊರತಾಗಿ ಉಳಿದ ಸದಸ್ಯರು ಸಮಿತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೆಲಸ ಮಾಡಿದ್ದಾರೆ. 22ನೇ ಕಾನೂನು ಆಯೋಗ ಒಂದು ದೇಶ, ಒಂದು ಚುನಾವಣೆ ವಿಚಾರವನ್ನು ಸವಿಸ್ತಾರವಾಗಿ ಪರಿಶೀಲನೆ ನಡೆಸಿದೆ. 2029 ರ ವೇಳೆಗೆ ಲೋಕಸಭೆ ಹಾಗೂ ಎಲ್ಲಾ ರಾಜ್ಯಗಳಿಗೂ ಏಕಕಾಲಕ್ಕೆ ಸಾರ್ವತ್ರಿಕ ಚುನಾವಣೆ ನಡೆಸಬಹುದು ಎಂದು ಕಾನೂನು ಆಯೋಗ ಈ ಮೊದಲು ಶಿಫಾರಸ್ಸು ಮಾಡಿತ್ತು. +ತನ್ನ ಸಲಹೆಯನ್ನು ಕಾನೂನು ಆಯೋಗ ರಾಮನಾಥ್ ಕೋವಿಂದ್‍ರ ಸಮಿತಿ ಮುಂದೆಯೂ ಪ್ರತಿಪಾದಿಸಿದೆ. ಇಂದು ಸಲ್ಲಿಕೆಯಾಗಿರುವ ಅಂತಿಮ ವರದಿ ಕಾನೂನು ಸಚಿವಾಲಯಕ್ಕೆ ಶೀಘ್ರವಾಗಿ ರವಾನೆಯಾಗುವ ನಿರೀಕ್ಷೆಗಳಿವೆ. \ No newline at end of file diff --git a/eesanje/url_47_146_11.txt b/eesanje/url_47_146_11.txt new file mode 100644 index 0000000000000000000000000000000000000000..7f56f0f3dfa9b7b222bb9ae6b5fbdd13576d2dc6 --- /dev/null +++ b/eesanje/url_47_146_11.txt @@ -0,0 +1,6 @@ +ಪುಲ್ವಾಮಾ ದಾಳಿಯಲ್ಲಿ ಪಾಕ್ ಕೈವಾಡವಿಲ್ಲ ಎಂದು ನಾನು ಹೇಳಿಲ್ಲ : ಆಂಟೋ ಆಂಟೋನಿ +ಪತ್ತನಂತಿಟ್ಟ, ಮಾ 14 (ಪಿಟಿಐ) :ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧದ ವಿವಾದಾತ್ಮಕ ಆರೋಪಗಳಿಗಾಗಿ ತೀವ್ರ ಟೀಕೆಗಳನ್ನು ಎದುರಿಸುತ್ತಿರುವ ಕಾಂಗ್ರೆಸ್ ಸಂಸದ ಆಂಟೋ ಆಂಟೋನಿ ಅವರು ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿಲ್ಲ ಎಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಪಾತ್ರದ ಬಗ್ಗೆ ವರದಿಗಾರರೇ ಕೇಳಿದ್ದು, ಆ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ಅವರು ಹೇಳಿದ್ದಾರೆ. +ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಕೈವಾಡದ ಬಗ್ಗೆ ವರದಿಗಾರರೊಬ್ಬರು ಪ್ರಸ್ತಾಪಿಸಿದಾಗ, ಪತ್ತನಂತಿಟ್ಟ ಸಂಸದರು ಪುಲ್ವಾಮಾ ಸ್ಪೋಟದಲ್ಲಿ ಪಾಕಿಸ್ತಾನದ ಕೈವಾಡವೇನು? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದರು.2014 ರಿಂದ ಅವರು ಪ್ರತಿನಿಧಿಸುತ್ತಿರುವ ಪತ್ತನಂತಿಟ್ಟ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಂಟೋನಿ ನನ್ನ ಪ್ರತಿಕ್ರಿಯೆಯನ್ನು ಅಲ್ಲಿದ್ದವರು ತಮ್ಮ ಸ್ವಹಿತಾಸಕ್ತಿ ಮತ್ತು ಬುದ್ಧಿವಂತಿಕೆಗೆ ಅನುಗುಣವಾಗಿ ವ್ಯಾಖ್ಯಾನಿಸಿದ್ದಾರೆ ಎಂದು ಹೇಳಿದರು. +ದಾಳಿಯಲ್ಲಿ ಸಿಆರ್ಪಿಎಫ್ ಯೋಧರ ಬಲಿದಾನವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದವರು ಅಂದಿನ ಜಮ್ಮು ಮತ್ತು ಕಾಶ್ಮೀರ ಗವರ್ನರ್ ಸತ್ಯಪಾಲ್ ಮಲಿಕ್ ಎಂದು ಅವರು ಹೇಳಿದ್ದಾರೆ. ಮಲಿಕ್ ಹೇಳಿರುವುದು ನೂರಕ್ಕೆ ನೂರು ಸರಿ ಎಂದು ಅವರು ಪ್ರತಿಪಾದಿಸಿದರು. +ಸತ್ಯಪಾಲ್ ಮಲಿಕ್ ಅವರು ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದ್ದಾರೆ. ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ಏಕೆ ದಾಖಲಿಸಿಲ್ಲ? ಆಂಟನಿ ಕೇಳಿದರು. ಪುಲ್ವಾಮಾ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್ ಸಂಸದರು ದೇಶಕ್ಕೆ ಅವಮಾನ ಮಾಡಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರ ಟೀಕೆಗೆ ಅವರು ಪ್ರತಿಕ್ರಿಯಿಸಿದರು.ಆಂಟನಿ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಬಂಧಿಸಬೇಕು ಎಂದು ಸುರೇಂದ್ರನ್ ಹೇಳಿದ್ದರು. +ದೇಶವನ್ನು ಆಳುವವರು ರಾಜಕೀಯ ಲಾಭಕ್ಕಾಗಿ ಯಾವುದೇ ಹಂತಕ್ಕೂ ಹೋಗುತ್ತಾರೆ ಎಂದು ಹಿಂದಿನ ದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾಗಿ ಆಂಟನಿ ಹೇಳಿಕೊಂಡಿದ್ದಾರೆ. ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥಾಪೊರಾದಲ್ಲಿ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್ಪಿಎ-ï ಸಿಬ್ಬಂದಿಯನ್ನು ಸಾಗಿಸುತ್ತಿದ್ದ ವಾಹನಗಳ ಬೆಂಗಾವಲು ವಾಹನವನ್ನು ಆತ್ಮಾಹುತಿ ಬಾಂಬರ್ಗೆ ಗುರಿಪಡಿಸಿದಾಗ ಪುಲ್ವಾಮಾ ದಾಳಿ ನಡೆಯಿತು. ಈ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ -ಫೋರ್ಸ್ ಸಿಬ್ಬಂದಿ ಸಾವಿಗೀಡಾಗಿದ್ದರು \ No newline at end of file diff --git a/eesanje/url_47_146_12.txt b/eesanje/url_47_146_12.txt new file mode 100644 index 0000000000000000000000000000000000000000..dc7f6d028ac7052c6c4e6d591b6beb8c94f664d8 --- /dev/null +++ b/eesanje/url_47_146_12.txt @@ -0,0 +1,4 @@ +ಶೇಖ್ ಷಹಜಹಾನ್ ಸಹಚರರ ಮನೆಗಳ ಮೇಲೆ ಇಡಿ ದಾಳಿ +ಕೋಲ್ಕತ್ತಾ, ಮಾ.14-ತೃಣಮೂಲ ಕಾಂಗ್ರೆಸ್ನ ಪ್ರಬಲ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರ ವಿರುದ್ಧ ಭೂಕಬಳಿಕೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಇಂದು ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು.ತನಿಖಾ ಸಂಸ್ಥೆಯು ಅರೆಸೇನಾ ಪಡೆಗಳೊಂದಿಗೆ ಇಂದು ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿತು. +ಲೈಂಗಿಕ ದೌರ್ಜನ್ಯದ ಆರೋಪಗಳನ್ನು ಎದುರಿಸುತ್ತಿರುವ ಷಹಜಹಾನ್ ಅವರನ್ನು ಬಂಗಾಳ ಪೊಲೀಸರು ಬಂಧಿಸಿದ ಕೆಲವೇ ದಿನಗಳಲ್ಲಿ ಈ ದಾಳಿಗಳು ಬಂದಿವೆ. ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಸಂದೇಶಖಾಲಿ ಎಂಬ ದ್ವೀಪದ ನಿವಾಸಿಗಳ ಆರೋಪಗಳು ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ಆರೋಪಗಳ ಕೇಂದ್ರಬಿಂದುವಾಗಿರುವ ಷಹಜಹಾನ್ 55 ದಿನಗಳ ಕಾಲ ತಲೆಮರೆಸಿಕೊಂಡಿದ್ದು, ಆತನನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. +ಒಂದು ಸಂದರ್ಭದಲ್ಲಿ, ರಾಜ್ಯದ ಪೊಲೀಸರು ಅವರನ್ನು ಹಸ್ತಾಂತರಿಸಲು ನಿರಾಕರಿಸಿದರು, ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಹೈಕೋರ್ಟ್ಗೆ ಸಲ್ಲಿಸಿದ ಸವಾಲನ್ನು ತೋರಿಸಿದರು. ಆದಾಗ್ಯೂ, ತನ್ನ ಆದೇಶವನ್ನು ವಿರಾಮಗೊಳಿಸಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಮತ್ತು ಷಹಜಹಾನ್ ಅನ್ನು ಸಿಬಿಐಗೆ ಒಪ್ಪಿಸುವಂತೆ ಬಂಗಾಳ ಪೊಲೀಸರಿಗೆ ಸೂಚಿಸಿದೆ. \ No newline at end of file diff --git a/eesanje/url_47_146_2.txt b/eesanje/url_47_146_2.txt new file mode 100644 index 0000000000000000000000000000000000000000..883a2477acf9cd7a984bc5181c6e68a2f0ca0084 --- /dev/null +++ b/eesanje/url_47_146_2.txt @@ -0,0 +1,5 @@ +ಸಿಸೋಡಿಯಾ ಕ್ಯುರೆಟೀವ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ +ನವದೆಹಲಿ, ಮಾ 15 (ಪಿಟಿಐ) :ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕಳೆದ ವರ್ಷದ ಅಕ್ಟೋಬರ್ 30 ರ ತೀರ್ಪಿನ ವಿರುದ್ಧ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. +ಚೇಂಬರ್ನಲ್ಲಿ ಕ್ಯುರೇಟಿವ್ ಅರ್ಜಿಗಳನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು, ತೆರೆದ ನ್ಯಾಯಾಲಯದಲ್ಲಿ ಅರ್ಜಿಗಳನ್ನು ಪಟ್ಟಿ ಮಾಡಲು ಅವರ ಅರ್ಜಿಯನ್ನು ತಿರಸ್ಕರಿಸಿತು. ಕ್ಯುರೇಟಿವ್ ಅರ್ಜಿಯು ಸರ್ವೋಚ್ಚ ನ್ಯಾಯಾಲಯದಲ್ಲಿ ಕೊನೆಯ ಕಾನೂನು ಪರಿಹಾರವಾಗಿದೆ ಮತ್ತು ತೀರ್ಪಿನ ಮರುಪರಿಶೀಲನೆಗಾಗಿ ಪ್ರಾಥಮಿಕ ಪ್ರಕರಣವನ್ನು ಮಾಡದ ಹೊರತು ಸಾಮಾನ್ಯವಾಗಿ ಚೇಂಬರ್ ಎಂದು ಪರಿಗಣಿಸಲಾಗುತ್ತದೆ. +ಮುಕ್ತ ನ್ಯಾಯಾಲಯದಲ್ಲಿ ಕ್ಯುರೇಟಿವ್ ಅರ್ಜಿಗಳನ್ನು ಪಟ್ಟಿ ಮಾಡುವ ಅರ್ಜಿಯನ್ನು ವಜಾಗೊಳಿಸಲಾಗಿದೆ. ನಾವು ಕ್ಯುರೇಟಿವ್ ಅರ್ಜಿಗಳು ಮತ್ತು ಸಂಪರ್ಕಿತ ದಾಖಲೆಗಳ ಮೂಲಕ ಹೋಗಿದ್ದೇವೆ. ನಮ್ಮ ಅಭಿಪ್ರಾಯದಲ್ಲಿ, ರೂಪಾ ಅಶೋಕ್ ಹುರಾರ್ ವಿರುದ್ಧ ಅಶೋಕ್ ಅವರ ನ್ಯಾಯಾಲಯದ ತೀರ್ಪಿನಲ್ಲಿ ಸೂಚಿಸಲಾದ ನಿಯತಾಂಕಗಳಲ್ಲಿ ಯಾವುದೇ ಪ್ರಕರಣವನ್ನು ಮಾಡಲಾಗಿಲ್ಲ ಹೀಗಾಗಿ ಕ್ಯುರೇಟಿವ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಎಸ್ವಿಎನ್ ಭಟ್ಟಿ ಅವರನ್ನು ಒಳಗೊಂಡ ಪೀಠವು ಮಾರ್ಚ್ 13 ರಂದು ನೀಡಿದ ತನ್ನ ಆದೇಶದಲ್ಲಿ ತಿಳಿಸಿದೆ. +ಕಳೆದ ವರ್ಷ ಡಿಸೆಂಬರ್ 13 ರಂದು, ಸಿಸೋಡಿಯಾ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಅಕ್ಟೋಬರ್ 30, 2023 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.ಕಳೆದ ವರ್ಷ ಅಕ್ಟೋಬರ್ 30 ರಂದು, ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತ್ತು, ತನಿಖಾ ಸಂಸ್ಥೆಗಳ ಆರೋಪಗಳು 338 ಕೋಟಿ ರೂ. ಕೆಲವು ಸಗಟು ವಿತರಕರು ಪುರಾವೆಗಳಿರುವುದಕ್ಕೆ ಸಾಕ್ಷಿಯಾಗಿದೆ. \ No newline at end of file diff --git a/eesanje/url_47_146_3.txt b/eesanje/url_47_146_3.txt new file mode 100644 index 0000000000000000000000000000000000000000..55f8297c9eb099b838a3ce94119336ebac20d5ad --- /dev/null +++ b/eesanje/url_47_146_3.txt @@ -0,0 +1,6 @@ +ಎಸ್‌ಬಿಐಗೆ ಸುಪ್ರೀಂಕೋರ್ಟ್ ತೀವ್ರ ತರಾಟೆ +ನವದೆಹಲಿ,ಮಾ.15-ವ್ಯಕ್ತಿಗಳು ಮತ್ತು ಉದ್ಯಮಗಳು ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡಲು ಅವಕಾಶ ನೀಡುವ ಚುನಾವಣಾ ಬಾಂಡ್ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. +ನ್ಯಾಯಾಲಯವು ಯೋಜನೆಯನ್ನು ರದ್ದುಗೊಳಿಸಿದೆ ಮತ್ತು ಕಳೆದ 5 ವರ್ಷಗಳಲ್ಲಿ ನೀಡಲಾಗಿರುವ ದೇಣಿಗೆಗಳ ಎಲ್ಲಾ ವಿವರಗಳನ್ನು ಹಂಚಿಕೊಳ್ಳಲು ಬ್ಯಾಂಕ್ ಗೆ ನಿರ್ದೇಶಿಸಿದೆ. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಎಸ್ಬಿಐ ನೀಡಿರುವ ಅಂಕಿಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧಿಶರ ಪೀಠ, ಎಸ್ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಸೂಚಿಸಿದೆ. +ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪರವಾಗಿ ಯಾರು ಹಾಜರಾಗುತ್ತಿದ್ದಾರೆ? ಅವರು ಬಾಂಡ್ ಸಂಖ್ಯೆಗಳನ್ನು ಬಹಿರಂಗಪಡಿಸಿಲ್ಲ. ಅದನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಹಿರಂಗಪಡಿಸಬೇಕು ಎಂದು ವಿಚಾರಣೆಯ ಆರಂಭದಲ್ಲಿಯೇ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. +ಎಸ್ಬಿಐಗೆ ನೀಡಿದ ನೋಟಿಸ್ನಲ್ಲಿ, ಸುಪ್ರೀಂ ಕೋರ್ಟ್ ಪೀಠವು ಮಾರ್ಚ್ 18 ರಂದು ಮುಂದಿನ ವಿಚಾರಣೆಯ ಸಮಯದಲ್ಲಿ ಲೋಪವನ್ನು ವಿವರಿಸಲು ಬ್ಯಾಂಕ್ಗೆ ಸೂಚಿಸಿದೆ. ಚುನಾವಣಾ ಬಾಂಡ್ ಸಂಖ್ಯೆಗಳು, ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಸಂಪರ್ಕವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ. ಚುನಾವಣಾ ಬಾಂಡ್ಗಳು ವ್ಯಕ್ತಿಗಳು ಮತ್ತು ವ್ಯವಹಾರಗಳು ರಾಜಕೀಯ ಪಕ್ಷಗಳಿಗೆ ಹಣವನ್ನು ಘೋಷಿಸದೆ ದೇಣಿಗೆ ನೀಡಲು ಅವಕಾಶ ಮಾಡಿಕೊಟ್ಟವು. +ಅವುಗಳನ್ನು 2018 ರಲ್ಲಿ ಬಿಜೆಪಿ ಸರ್ಕಾರವು ನಗದು ದೇಣಿಗೆಗೆ ಪರ್ಯಾಯವಾಗಿ ಪರಿಚಯಿಸಿತು ಮತ್ತು ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಉಪಕ್ರಮವಾಗಿ ಇಬಿಯನ್ನು ಪರಿಚಯಿಸಲಾಗಿತ್ತು. ಸುಪ್ರೀಂ ಕೋರ್ಟ್ ಕಳೆದ ತಿಂಗಳು ಈ ಯೋಜನೆಯನ್ನು ರದ್ದುಗೊಳಿಸಿತು, ಇದು ಅಸಂವಿಧಾನಿಕ ಮತ್ತು ಇದು ಕ್ವಿಡ್ ಪೊ್ರ ಕೋಗೆ ಕಾರಣವಾಗಬಹುದು ಎಂಬ ಕಳವಳ ವ್ಯಕ್ತಪಡಿಸಿತ್ತು. \ No newline at end of file diff --git a/eesanje/url_47_146_4.txt b/eesanje/url_47_146_4.txt new file mode 100644 index 0000000000000000000000000000000000000000..108824947806b1201c2dfcfe6abd8a94a243d33f --- /dev/null +++ b/eesanje/url_47_146_4.txt @@ -0,0 +1,5 @@ +ಕಾರು ಅಪಘಾತದಲ್ಲಿ ಬಿಜೆಡಿ ಮುಖಂಡನಿಗೆ ಗಂಭೀರ ಗಾಯ +ಭುವನೇಶ್ವರ್, ಮಾ 15 (ಪಿಟಿಐ) :ಇಂದು ಮುಂಜಾನೆ ಒಡಿಶಾದ ಸಂಬಲ್‍ಪುರ ಜಿಲ್ಲೆಯಲ್ಲಿ ಕಾರು ಟ್ರಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಬಿಜೆಡಿ ಉಪಾಧ್ಯಕ್ಷ ಮತ್ತು ಮಾಜಿ ಸಂಸದ ಪ್ರಸನ್ನ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಾಜಿ ಸಂಸದ ಭುವನೇಶ್ವರದಿಂದ ಸಂಬಲ್‍ಪುರಕ್ಕೆ ತೆರಳುತ್ತಿದ್ದಾಗ ರೈರಾಖೋಲ್‍ನ ಬಲದಿಹ್ ಬಳಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅವರ ಕಾರು ಆಮ್ಲಜನಕ ತುಂಬಿದ ಟ್ಯಾಂಕರ್‍ಗೆ ಡಿಕ್ಕಿ ಹೊಡೆದಿದೆ. +ಆಚಾರ್ಯ ಮತ್ತು ಅವರ ಪಿಎಸ್‍ಒ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆಚಾರ್ಯ ಮತ್ತು ಅವರ ಪಿಎಸ್‍ಒ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಸಂಬಲ್‍ಪುರ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಭಾಮು ತಿಳಿಸಿದ್ದಾರೆ. +ಉತ್ತಮ ಚಿಕಿತ್ಸೆಗಾಗಿ ಅವರನ್ನು ವಿಮಾನದಲ್ಲಿ ಭುವನೇಶ್ವರಕ್ಕೆ ಕರೆದೊಯ್ಯಲಾಗುತ್ತದೆ. ಆಚಾರ್ಯ ಅವರ ತಲೆ, ಮೂಗು, ಗಲ್ಲದ ಮತ್ತು ದೇಹದ ಇತರ ಭಾಗಗಳಲ್ಲಿ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ, ಪೊಲೀಸರು ಟ್ರಕ್ ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. \ No newline at end of file diff --git a/eesanje/url_47_146_5.txt b/eesanje/url_47_146_5.txt new file mode 100644 index 0000000000000000000000000000000000000000..c077b91482963412d10c3c8bfdf81a682b912de1 --- /dev/null +++ b/eesanje/url_47_146_5.txt @@ -0,0 +1,4 @@ +ಅಧಿಕಾರ ಸ್ವೀಕರಿಸಿದ ನೂತನ ಚುನಾವಣಾ ಆಯುಕ್ತರು +ನವದೆಹಲಿ, ಮಾ.15 (ಪಿಟಿಐ) :ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಇಂದು ಅಧಿಕಾರ ಸ್ವೀಕರಿಸಿದರು. ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಇಸಿಗಳ ನೇಮಕಾತಿಯ ಹೊಸ ಕಾನೂನು ಜಾರಿಗೆ ಬಂದ ನಂತರ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಮೊದಲ ವ್ಯಕ್ತಿಗಳು ಇವರಾಗಿದ್ದಾರೆ. +ಅವರನ್ನು ಸ್ವಾಗತಿಸಿದ ಸಿಇಸಿ ರಾಜೀವ್ ಕುಮಾರ್ ಅವರು, ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ನಡೆಸಲು ಸಜ್ಜಾಗಿರುವ ಐತಿಹಾಸಿಕ ಘಟ್ಟದಲ್ಲಿ ಅವರ ಸೇರ್ಪಡೆಯ ಮಹತ್ವದ ಕುರಿತು ಮಾತನಾಡಿದರು ಎಂದು ವಕ್ತಾರರು ತಿಳಿಸಿದ್ದಾರೆ. +ಫೆಬ್ರವರಿ 14 ರಂದು ಅನುಪ್ ಚಂದ್ರ ಪಾಂಡೆ ನಿವೃತ್ತಿ ಮತ್ತು ಮಾರ್ಚ್ 8 ರಂದು ಅರುಣ್ ಗೋಯೆಲ್ ಅವರು ಹಠಾತ್ ರಾಜೀನಾಮೆ ನೀಡಿದ ನಂತರ ಚುನಾವಣಾ ಆಯೋಗದಲ್ಲಿ ಎರಡು ಆಯುಕ್ತರ ಹುದ್ದೆಗಳು ಖಾಲಿ ಇದ್ದವು. 1988ರ ಬ್ಯಾಚ್ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸಂಧು ಕ್ರಮವಾಗಿ ಕೇರಳ ಮತ್ತು ಉತ್ತರಾಖಂಡ್ ಕೇಡರ್ಗೆ ಸೇರಿದವರಾಗಿದ್ದಾರೆ. \ No newline at end of file diff --git a/eesanje/url_47_146_6.txt b/eesanje/url_47_146_6.txt new file mode 100644 index 0000000000000000000000000000000000000000..e11f2683ec5bac0d7ba7dfe6d5960dcf64bcfa03 --- /dev/null +++ b/eesanje/url_47_146_6.txt @@ -0,0 +1,12 @@ +ಚುನಾವಣಾ ಬಾಂಡ್ ಬಹಿರಂಗದಿಂದ ಬಿಜೆಪಿ ಬಂಡವಾಳ ಬಯಲಾಗಿದೆ ; ಜೈರಾಮ್ ರಮೇಶ್ +ನವದೆಹಲಿ, ಮಾ.15 (ಪಿಟಿಐ) :ಚುನಾವಣಾ ಬಾಂಡ್‍ಗಳ ಅಂಕಿಅಂಶಗಳು ಬಿಜೆಪಿಯ ಕ್ವಿಡ್ ಪ್ರೋಕೋ, ಕಂಪನಿಯ ರಕ್ಷಣೆಗಾಗಿ ದೇಣಿಗೆ, ಕಿಕ್‍ಬ್ಯಾಕ್ ಮತ್ತು ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆಯಂತಹ ಭ್ರಷ್ಟ ತಂತ್ರಗಳನ್ನು ಬಹಿರಂಗಪಡಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. +ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ ಜೈರಾಮ್ ರಮೇಶ್ ಅವರು 2019 ರಿಂದ ಬಿಜೆಪಿಗೆ 6,000 ಕೋಟಿ ಸೇರಿದಂತೆ 1,300 ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‍ಗಳನ್ನು ದೇಣಿಗೆ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ, ಚುನಾವಣಾ ಬಾಂಡ್‍ಗಳ ಡೇಟಾವು ಬಿಜೆಪಿಯ ಕನಿಷ್ಠ ನಾಲ್ಕು ಭ್ರಷ್ಟ ತಂತ್ರಗಳನ್ನು ಬಹಿರಂಗಪಡಿಸುತ್ತದೆ ಎಂದು ರಮೇಶ್ ಆರೋಪಿಸಿದ್ದಾರೆ. +ಕ್ವಿಡ್ ಪ್ರೋ ಕ್ವೋ:ಹಲವಾರು ಕಂಪನಿಗಳು ಚುನಾವಣಾ ಬಾಂಡ್‍ಗಳನ್ನು ದೇಣಿಗೆ ನೀಡಿದ ಪ್ರಕರಣಗಳಿವೆ, ಮತ್ತು ತಕ್ಷಣವೇ ಸರ್ಕಾರದಿಂದ ಭಾರಿ ಪ್ರಯೋಜನಗಳನ್ನು ಪಡೆದುಕೊಂಡಿವೆ: ಮೇಘಾ ಇಂಜಿನಿಯರಿಂಗ್ ಮತ್ತು ಇನ್ರಾ ಸಂಸ್ಥೆ ಇಬಿಗಳಲ್ಲಿ 800 ಕೋಟಿ ರೂ.ಗಳನ್ನು ನೀಡಿದೆ. ಏಪ್ರಿಲ್ 2023 ರಲ್ಲಿ, ಅವರು 140 ರೂ. ಕೋಟಿ, ಮತ್ತು ಕೇವಲ ಒಂದು ತಿಂಗಳ ನಂತರ, ಅವರಿಗೆ 14,400 ಕೋಟಿ ರೂ.ಗಳ ಥಾಣೆ-ಬೊರಿವಲಿ ಜೋಡಿ ಸುರಂಗ ಯೋಜನೆಯನ್ನು ನೀಡಲಾಗಿದೆ, ಎಂದು ಅವರು ಆರೋಪಿಸಿದರು. +ಜಿಂದಾಲ್ ಸ್ಟೀಲ್ ಮತ್ತು ಪವರ್ ರೂ. 7 ಅಕ್ಟೋಬರ್ 2022 ರಂದು ಇಬಿಗಳಲ್ಲಿ 25 ಕೋಟಿ, ಮತ್ತು ಕೇವಲ ಮೂರು ದಿನಗಳ ನಂತರ, ಅವರು 10ನೇ ಅಕ್ಟೋಬರ್ 2022 ರಂದು ಗರೇ ಪಾಲ್ಮಾ ಸಂಸ್ಥೆ 6 ಕಲ್ಲಿದ್ದಲು ಗಣಿ ಗೆದ್ದಿದ್ದಾರೆ ಎಂದು ರಮೇಶ್ ಹೇಳಿಕೊಂಡಿದ್ದಾರೆ. +ಹಫ್ತಾ ವಸೂಲಿ:ಬಿಜೆಪಿಯ ಹಫ್ತಾ ವಸೂಲಿ ತಂತ್ರವು ಇಡಿ/ಸಿಬಿಐ/ಐಟಿ ಮೂಲಕ ಸರಳವಾದ ದಾಳಿಯ ಗುರಿಯಾಗಿದೆ, ಮತ್ತು ನಂತರ ಕಂಪನಿಯ ರಕ್ಷಣೆಗಾಗಿ ಹಫ್ತಾ (ದೇಣಿಗೆ) ಪಡೆದುಕೊಳ್ಳಿ. ಟಾಪ್ 30 ದಾನಿಗಳಲ್ಲಿ ಕನಿಷ್ಠ 14 ಮಂದಿ ದಾಳಿ ನಡೆಸಿದ್ದಾರೆ, ಅವರು ಆರೋಪಿಸಿದ್ದಾರೆ. +ಈ ವರ್ಷದ ಆರಂಭದಲ್ಲಿ ಇಡಿ/ಸಿಬಿಐ/ಐಟಿ ದಾಳಿಗಳ ನಂತರ ಕಂಪನಿಗಳು ಚುನಾವಣಾ ಟ್ರಸ್ಟ್‍ಗಳ ಮೂಲಕ ಬಿಜೆಪಿಗೆ ದೇಣಿಗೆ ನೀಡುವಂತೆ ಒತ್ತಾಯಿಸಲಾಯಿತು ಎಂದು ತನಿಖೆಯು ಕಂಡುಹಿಡಿದಿದೆ ಎಂದು ರಮೇಶ್ ಹೇಳಿದರು.ಅದೇ ಕಂಪನಿಗಳು ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಇಬಿಗಳ ಮೂಲಕ ದೇಣಿಗೆ ನೀಡಿವೆ ಎಂದು ಅವರು ಗಮನ ಸೆಳೆದರು. +ಡಿಸೆಂಬರ್ 2023 ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ ಮೇಲೆ ಐಟಿ ಇಲಾಖೆ ದಾಳಿ ನಡೆಸಿತು ಮತ್ತು 2024 ರ ಜನವರಿಯಲ್ಲಿ ಅವರು ಎಲೆಕ್ಟೋರಲ್ ಬಾಂಡ್‍ಗಳ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. -ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್‍ಗಳು, 1200 ಕೋಟಿಗೂ ಹೆಚ್ಚು ದೇಣಿಗೆ ನೀಡಿದ್ದು, ಇದುವರೆಗಿನ ಡೇಟಾದಲ್ಲಿ ಅತಿ ದೊಡ್ಡ ದಾನಿಯಾಗಿದೆ. +ಕೇಂದ್ರ ಸರ್ಕಾರದಿಂದ ಕೆಲವು ಕರಪತ್ರಗಳನ್ನು ಪಡೆದ ತಕ್ಷಣ ಕಂಪನಿಗಳು ಚುನಾವಣಾ ಬಾಂಡ್‍ಗಳ ಮೂಲಕ ಮರುಪಾವತಿ ಮಾಡಿದ ಮಾದರಿಯು ಹೊರಹೊಮ್ಮುತ್ತದೆ ಎಂದು ಡೇಟಾವು ಕಿಕ್‍ಬ್ಯಾಕ್‍ಗಳನ್ನು ಸೂಚಿಸುತ್ತದೆ ಎಂದು ರಮೇಶ್ ಆರೋಪಿಸಿದ್ದಾರೆ. ಮೇಘಾ ಇಂಜಿನಿಯರಿಂಗ್ ಮತ್ತು ಇನ್ರಾ ಆಗಸ್ಟ್ 2020 ರಲ್ಲಿ ರೂ. 4,500 ಕೋಟಿ ಜೊಜಿಲಾ ಸುರಂಗ ಯೋಜನೆಯನ್ನು ಪಡೆದುಕೊಂಡಿತು, ನಂತರ ಅಕ್ಟೋಬರ್ 2020 ರಲ್ಲಿ ಎಲೆಕ್ಟೋರಲ್ ಬಾಂಡ್‍ಗಳಲ್ಲಿ ರೂ. 20 ಕೋಟಿ ದೇಣಿಗೆ ನೀಡಿದೆ ಎಂದು ರಮೇಶ್ ಹೇಳಿದರು. ಮೇಘಾ ಅವರು ಡಿಸೆಂಬರ್ 2022 ರಲ್ಲಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದರು ಮತ್ತು ರೂ. ಅದೇ ತಿಂಗಳು 56 ಕೋಟಿ ರೂ.ದೇಣಿಗೆ ನೀಡಿದ್ದಾರೆ. ಶೆಲ್ ಕಂಪನಿಗಳ ಮೂಲಕ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಅಂಕಿಅಂಶಗಳು ತೋರಿಸುತ್ತವೆ ಎಂದು ರಮೇಶ್ ಆರೋಪಿಸಿದ್ದಾರೆ. +ಚುನಾವಣಾ ಬಾಂಡ್‍ಗಳ ಯೋಜನೆಯಲ್ಲಿನ ಒಂದು ದೊಡ್ಡ ಸಮಸ್ಯೆಯೆಂದರೆ, ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಮೊತ್ತವನ್ನು ಮಾತ್ರ ದಾನ ಮಾಡಬಹುದೆಂಬ ನಿರ್ಬಂಧವನ್ನು ತೆಗೆದುಹಾಕಲಾಗಿದೆ, ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ದಾರಿ ಮಾಡಿಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ, ಉದಾಹರಣೆಗೆ ರೂ. 410 ಕೋಟಿಗಳನ್ನು ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ದೇಣಿಗೆ ನೀಡಿದೆ, ಇದರ ಸಂಪೂರ್ಣ ಷೇರು ಬಂಡವಾಳವು ಈ -ಫೈಲಿಂಗ್‍ಗಳ ಪ್ರಕಾರ ಕೇವಲ 130 ಕೋಟಿ ರೂಪಾಯಿಗಳು ಎಂದು ಅವರು ಹೇಳಿದರು. +ಮತ್ತೊಂದು ಪ್ರಮುಖ ಸಮಸ್ಯೆ ಡೇಟಾ ಕಾಣೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು.ಎಸ್‍ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019 ರಲ್ಲಿ ಮಾತ್ರ ಪ್ರಾರಂಭವಾಗುತ್ತದೆ, ಆದರೆ ಎಸ್‍ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‍ಗಳನ್ನು ಮಾರಾಟ ಮಾಡಿದೆ. +ಈ ಡೇಟಾದಿಂದ ಒಟ್ಟು ರೂ. 2,500 ಕೋಟಿ ಬಾಂಡ್‍ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗೆ ಈ ಕಾಣೆಯಾದ ಬಾಂಡ್‍ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‍ಗಳ ಮೊದಲ ಕಂತಿನಲ್ಲಿ, ಬಿಜೆಪಿ ಶೇ. 95% ಅನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಅವರು ಕೇಳಿದ್ದಾರೆ. \ No newline at end of file diff --git a/eesanje/url_47_146_7.txt b/eesanje/url_47_146_7.txt new file mode 100644 index 0000000000000000000000000000000000000000..10a5ea6822569f43a2dc4ca37060f25d73b4b0f8 --- /dev/null +++ b/eesanje/url_47_146_7.txt @@ -0,0 +1,7 @@ +ಅಸಾಧ್ಯವಾದದ್ದನ್ನು ಮಾಡಿ ತೋರಿಸಿದ್ದಾರೆ ಪ್ರಧಾನಿ ಮೋದಿ : ಅಮಿತ್ ಶಾ +ಅಹಮದಾಬಾದ್, ಮಾ 15 (ಪಿಟಿಐ) :ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯ ರದ್ದತಿ ಅಥವಾ ಒಂದು ಶ್ರೇಣಿಯ ಒಂದು ಪಿಂಚಣಿ (ಒಆರ್‍ಒಪಿ) ಅನುಷ್ಠಾನ ಸೇರಿದಂತೆ ಎಲ್ಲಾ ಅಸಾಧ್ಯವಾಗಿ ಕಾಣುವ ಕಾರ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರ್ಣಗೊಳಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. +ಗಾಂಧಿನಗರದ ಲೋಕಸಭಾ ಸಂಸದರಾದ ಶಾ ಅವರು, ಗುಜರಾತ್ ಸರ್ಕಾರದ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ. ಅವರು ಅಹಮದಾಬಾದ್ ಮತ್ತು ಗಾಂಧಿನಗರ ಜಿಲ್ಲೆಗಳಲ್ಲಿ 3,012 ಕೋಟಿ ರೂಪಾಯಿ ವೆಚ್ಚದ ಯೋಜನೆಗಳಿಗೆ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಿದರು. +ಹಿಂದಿನ ಕಾಂಗ್ರೆಸ್ ಸರ್ಕಾರಗಳಿಗಿಂತ ಭಿನ್ನವಾಗಿ, ಈ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ. ಕಳೆದ ಐದು ವರ್ಷಗಳಲ್ಲಿ ನಾನು ಭೂಮಿಪೂಜೆ ಮಾಡಿದ ಎಲ್ಲ ಯೋಜನೆಗಳಲ್ಲಿ 91 ಪ್ರತಿಶತ ಪೂರ್ಣಗೊಂಡಿದೆ. ಇದು ಬಿಜೆಪಿಯ ಕೆಲಸದ ಸಂಸ್ಕøತಿ ಎಂದು ದೆಹಲಿಯಲ್ಲಿಂದು ಷಾ ತಮ್ಮ ಭಾಷಣದಲ್ಲಿ ಹೇಳಿದರು. +2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದಾಗ, ಬಿಜೆಪಿಯ ಚುನಾವಣಾ ಪ್ರಣಾಳಿಕೆಯು ಸುಮಾರು 50 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಅಪೂರ್ಣ ಕಾಮಗಾರಿಗಳನ್ನು ಒಳಗೊಂಡಿತ್ತು ಎಂದು ಕೇಂದ್ರ ಗೃಹ ಸಚಿವರು ಗಮನಸೆಳೆದರು. +ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಿಸುವ ನಮ್ಮ ಭರವಸೆಯ ಬಗ್ಗೆ ಪ್ರತಿಪಕ್ಷಗಳು ನಮ್ಮನ್ನು ನೋಡಿ ನಗುತ್ತಿದ್ದವು. ಆದರೆ ಈಗ, ಇತ್ತೀಚೆಗೆ ದೇವರ ಪ್ರಾಣ ಪ್ರತಿಷ್ಠೆ ಮಾಡಿದ ನಂತರ ಪ್ರಧಾನಿ ಜನರಿಗೆ ದೇವಾಲಯದ ಬಾಗಿಲು ತೆರೆದಿದ್ದಾರೆ. ಒಂದು ಶ್ರೇಣಿಯ ಒಂದು ಪಿಂಚಣಿ ಇರಲಿ ಅಥವಾ ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕಲಿ, ನಮ್ಮ ಪ್ರಧಾನಿ ತಮ್ಮ ಅಧಿಕಾರಾವಧಿಯಲ್ಲಿ ಅಂತಹ ಅಸಾಧ್ಯವೆಂದು ತೋರುವ ಎಲ್ಲಾ ಕಾರ್ಯಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಶಾ ಹೇಳಿದರು. +80 ಕೋಟಿ ನಾಗರಿಕರಿಗೆ ಉಚಿತ ಪಡಿತರ, ಬಡವರಿಗೆ 12 ಕೋಟಿ ಶೌಚಾಲಯ ನಿರ್ಮಾಣ, ನಾಲ್ಕು ಕೋಟಿ ನಾಗರಿಕರಿಗೆ ಮನೆ ಹಂಚಿಕೆ, 10 ಕೋಟಿ ಮನೆಗಳಿಗೆ ಗ್ಯಾಸ್ ಸಂಪರ್ಕ ಮತ್ತು 14 ಕೋಟಿ ನಾಗರಿಕರಿಗೆ ನಲ್ಲಿ ನೀರಿನ ಸಂಪರ್ಕ ನೀಡುವುದು ಮೋದಿ ಸರ್ಕಾರದ ಇತರ ಪ್ರಮುಖ ಸಾಧನೆಗಳಾಗಿವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_146_8.txt b/eesanje/url_47_146_8.txt new file mode 100644 index 0000000000000000000000000000000000000000..9ac403ad2ee8447e898bc679aa9f74c50050da56 --- /dev/null +++ b/eesanje/url_47_146_8.txt @@ -0,0 +1,6 @@ +ಬಿದ್ದು ಹಣೆ, ಮೂಗಿಗೆ ಗಾಯ ಮಾಡಿಕೊಂಡಿದ್ದ ದೀದಿ ಆರೋಗ್ಯದಲ್ಲಿ ಚೇತರಿಕೆ +ಕೋಲ್ಕತ್ತಾ, ಮಾ.15 (ಪಿಟಿಐ) :ತಮ್ಮ ಕಾಳಿಘಾಟ್ ನಿವಾಸದಲ್ಲಿ ಬಿದ್ದು ಏಟು ಮಾಡಿಕೊಂಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 69 ವರ್ಷದ ಬ್ಯಾನರ್ಜಿ ಅವರು ನಿನ್ನೆ ಸಂಜೆ ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್ ನಿವಾಸದೊಳಗೆ ಬಿದ್ದು, ಹಣೆ ಮತ್ತು ಮೂಗಿಗೆ ದೊಡ್ಡ ಗಾಯ ಮಾಡಿಕೊಂಡಿದ್ದರು ಇದೀಗ ಅವರು ಅರಾಮಾಗಿದ್ದಾರೆ ಎಂದು ವರದಿಯಾಗಿದೆ. +ಮುಖ್ಯಮಂತ್ರಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ರಾತ್ರಿಯಿಡೀ ಉತ್ತಮ ನಿದ್ರೆಮಾಡಿದರು. ಏಕೆಂದರೆ ಹಿರಿಯ ವೈದ್ಯರು ಅವಧಿಯುದ್ದಕ್ಕೂ ಅವರ ಮೇಲೆ ತೀವ್ರ ನಿಗಾ ಇರಿಸಿದ್ದರು. ಇಂದು ಬೆಳಿಗ್ಗೆ ಅವರ ಆರೋಗ್ಯದ ಬಗ್ಗೆ ಮತ್ತೊಂದು ಮೌಲ್ಯಮಾಪನ ನಡೆಯಲಿದೆ ಎಂದು ಅಧಿಕಾರಿ ಇಂದು ಬೆಳಿಗ್ಗೆ ಪಿಟಿಐಗೆ ತಿಳಿಸಿದರು. ಬಂಗಾಳದ ಸಿಎಂ ಆಕೆಯ ಹಣೆಯ ಮೇಲೆ ಮೂರು ಮತ್ತು ಮೂಗಿನ ಮೇಲೆ ಒಂದು ಹೊಲಿಗೆ ಹಾಕಲಾಯಿತು ಮತ್ತು ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಪರೀಕ್ಷೆಗಳ ನಂತರ ಬಿಡುಗಡೆ ಮಾಡಲಾಯಿತು. +ಅವಳಿಗೆ ಸೆರೆಬ್ರಲ್ ಕನ್ಕ್ಯುಶನ್ ಇತ್ತು ಮತ್ತು ಅವಳ ಹಣೆಯ ಮತ್ತು ಮೂಗಿನ ಮೇಲೆ ತೀಕ್ಷ್ಣವಾದ ಗಾಯವಾಗಿತ್ತು, ಅದು ತೀವ್ರವಾಗಿ ರಕ್ತಸ್ರಾವವಾಗಿತ್ತು. ಆರಂಭದಲ್ಲಿ, ನಮ್ಮ ಸಂಸ್ಥೆಯ ನರಶಸಚಿಕಿತ್ಸೆ, ಔಷಧ ಮತ್ತು ಹೃದ್ರೋಗ ವಿಭಾಗದ ಹಿರಿಯ ವೈದ್ಯರು ಅವಳನ್ನು ಮೌಲ್ಯಮಾಪನ ಮಾಡಿದರು. ಮೂರು ಹೊಲಿಗೆಗಳನ್ನು ಹಾಕಲಾಗಿದೆ. ಅವರ ಹಣೆಯ ಮೇಲೆ ಮತ್ತು ಮೂಗಿನ ಮೇಲೆ ಅಗತ್ಯವಿರುವ ಡ್ರೆಸ್ಸಿಂಗ್ ಮಾಡಲಾಯಿತು. ಇಸಿಜಿ, ಎಕೋಕಾರ್ಡಿಯೋಗ್ರಾಮ್ , ಸಿಟಿ-ಸ್ಕ್ಯಾನ್ ಮತ್ತು ಡಾಪ್ಲರ್‍ನಂತಹ ತನಿಖೆಗಳನ್ನು ಮಾಡಲಾಗಿದೆ ಎಂದು ಎಸ್‍ಎಸ್‍ಕೆಎಂ ಆಸ್ಪತ್ರೆಯ ನಿರ್ದೇಶಕ ಮಣಿಮೋಯ್ ಬಂಡೋಪಾಧ್ಯಾಯ ಹೇಳಿದ್ದಾರೆ. +ಏತನ್ಮಧ್ಯೆ, ಕಾಳಿಘಾಟ್ ಪ್ರದೇಶದಲ್ಲಿನ ಬ್ಯಾನರ್ಜಿ ಅವರ ನಿವಾಸ ಮತ್ತು ಸುತ್ತಮುತ್ತಲಿನ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಿದ್ದರೂ ಮುಖ್ಯಮಂತ್ರಿ ಬೀಳಲು ಕಾರಣ ಏನೆಂಬುದು ತಿಳಿದುಬಂದಿಲ್ಲ, ಕೆಲವು ತಳ್ಳುವಿಕೆಯಿಂದಾಗಿ ಸಿಎಂ ಅವರು ಬಿದ್ದಿರಬಹುದು ಎಂದು ಎಸ್‍ಎಸ್‍ಕೆಎಂ ಆಸ್ಪತ್ರೆಯ ಬುಲೆಟಿನ್ ಅನ್ನು ಉಳ್ಳೇಖಿಸಿದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಅವರು ಸಿಎಂ ಹೇಳಿಕೆಯನ್ನು ದಾಖಲಿಸಲು ಯೋಜಿಸುತ್ತಿದ್ದೀರಾ ಅಥವಾ ಈ ಬಗ್ಗೆ ಯಾವುದೇ ಸ್ವಯಂಪ್ರೇರಿತ ದೂರು ದಾಖಲಿಸಲು ಯೋಜಿಸುತ್ತಿದ್ದಾರೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. +ಸದ್ಯಕ್ಕೆ ಸಿಎಂ ಬಿದ್ದ ಕುರಿತಂತೆ ಯಾವುದೇ ದೂರು ದಾಖಲಾಗಿಲ್ಲ, ಸಿಎಂ ನಿವಾಸದ ಸುತ್ತ ಭದ್ರತೆ ಹೆಚ್ಚಿಸಿದ್ದೇವೆ ಎಂದ ಅವರು, ಭದ್ರತಾ ಲೋಪವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತಿದ್ದೇವೆ ಎಂದು ಪಿಟಿಐಗೆ ತಿಳಿಸಿದರು. ಬ್ಯಾನರ್ಜಿಯವರು ಜಡ್ ಪ್ಲಸ್ ಭದ್ರತೆ ಪಡೆಯುತ್ತಾರೆ ಮತ್ತು ಅವರ ಭದ್ರತೆಯನ್ನು ಮತ್ತು ಅವರ ನಿವಾಸದಲ್ಲಿಯೂ ಸಹ ವಿಶೇಷ ಅಧಿಕಾರಿಗಳ ತಂಡವನ್ನು ನೋಡಿಕೊಳ್ಳುತ್ತಾರೆ. \ No newline at end of file diff --git a/eesanje/url_47_146_9.txt b/eesanje/url_47_146_9.txt new file mode 100644 index 0000000000000000000000000000000000000000..34695ea5c8ab837b131dfbbe8c4a22459c7fcbdb --- /dev/null +++ b/eesanje/url_47_146_9.txt @@ -0,0 +1,4 @@ +ಯಾವುದೇ ಕ್ಷಣದಲ್ಲಿ ಮಹಾಸಮರಕ್ಕೆ ದಿನಾಂಕ ಘೋಷಣೆ +ಬೆಂಗಳೂರು,ಮಾ.14-ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಾದರೂ ದಿನಾಂಕ ಘೋಷಣೆಯಾಗುವ ನಿರೀಕ್ಷೆಗಳಿವೆ.ಉನ್ನತ ಮೂಲಗಳ ಪ್ರಕಾರ, ಇಂದು ಸಂಜೆ ಅಥವಾ ನಾಳೆಯೊಳಗೆ ಲೋಕಸಭೆ ಚುನಾವಣೆಗೆ ದಿನಾಂಕ ಮತ್ತು ಪ್ರಕ್ರಿಯೆಗಳನ್ನು ಪ್ರಕಟಿಸಲು ತಯಾರಿ ನಡೆದಿದೆ. +ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ಅಧಿಕೃತವಾಗಿ ಇದುವರೆಗೂ ಯಾವುದೇ ಪ್ರಕಟಣೆ ನೀಡಿಲ್ಲವಾದರೂ ನಡೆಯುತ್ತಿರುವ ಬಿರುಸಿನ ಚಟುವಟಿಕೆಗಳು ದಿನಾಂಕ ಘೋಷಣೆಯ ಕಾಲ ಸಮೀಪವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತಿವೆ. +ಕೇಂದ್ರ ಚುನಾವಣಾ ಆಯೋಗ ಕಳೆದ ಬುಧವಾರ ಜಮ್ಮು-ಕಾಶ್ಮೀರದಲ್ಲಿನ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿತ್ತು. ಬಹುತೇಕ ರಾಜ್ಯಗಳಿಗೆ ರವಾನೆಯಾಗಿರುವ ಸಂದೇಶದ ಪ್ರಕಾರ ಇಂದು ಸಂಜೆಯೇ ದಿನಾಂಕ ಘೋಷಿಸುವ ಸಾಧ್ಯತೆಗಳಿವೆ. \ No newline at end of file diff --git a/eesanje/url_47_147_1.txt b/eesanje/url_47_147_1.txt new file mode 100644 index 0000000000000000000000000000000000000000..4e1337c348bebad60fbab587c3192a8205fe2b78 --- /dev/null +++ b/eesanje/url_47_147_1.txt @@ -0,0 +1,6 @@ +ಸಿಎಎ ಮುಸ್ಲಿಮರ ವಿರುದ್ಧ ಅಲ್ಲ, ವಿಪಕ್ಷಗಳು ಸುಳ್ಳಿನ ರಾಜಕೀಯ ಮಾಡುತ್ತಿವೆ ; ಶಾ +ನವದೆಹಲಿ, ಮಾ.14-ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮುಸ್ಲಿಮರ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿರೋಧ ಪಕ್ಷಗಳು ಸುಳ್ಳಿನ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ನಾನು ಸಿಎಎ ಬಗ್ಗೆ ಕನಿಷ್ಠ 41 ಬಾರಿ ವಿವಿಧ ವೇದಿಕೆಗಳಲ್ಲಿ ಮಾತನಾಡಿದ್ದೇನೆ ಮತ್ತು ದೇಶದ ಅಲ್ಪಸಂಖ್ಯಾತರು ಭಯಪಡುವ ಅಗತ್ಯವಿಲ್ಲ ಎಂದು ವಿವರವಾಗಿ ಮಾತನಾಡಿದ್ದೇನೆ ಏಕೆಂದರೆ ಯಾವುದೇ ನಾಗರಿಕನ ಹಕ್ಕುಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ ಎಂದು ಶಾ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ. +ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಗುರಿಯನ್ನು ಸಿಎಎ ಹೊಂದಿದೆ ಎಂದು ಅವರು ಹೇಳಿದರು.ಮುಸ್ಲಿಮರು, ಸಂವಿಧಾನದ ನಿಯಮಗಳ ಪ್ರಕಾರ ಭಾರತದಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಹಕ್ಕನ್ನು ಹೊಂದಿದ್ದಾರೆ, ಆದರೆ ಈ ಕಾನೂನು ಈ ದೇಶಗಳಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ಉದ್ದೇಶಿಸಲಾಗಿದೆ. +ಪ್ರತಿಭಟನೆಗಳು ಪ್ರಾರಂಭವಾದರೆ ಸಿಎಎ ಜಾರಿಗೆ ತರುವ ತನ್ನ ನಿರ್ಧಾರವನ್ನು ಸರ್ಕಾರವು ಮರುಪರಿಶೀಲಿಸಬಹುದೇ ಎಂದು ಕೇಳಿದಾಗ, ಶಾ, ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.ಕಾನೂನನ್ನು ಜಾರಿಗೊಳಿಸುವ ತನ್ನ ನಿರ್ಧಾರವನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಗೃಹ ಸಚಿವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದರು. ಅ„ಕಾರಕ್ಕೆ ಬಂದರೆ ಸಿಎಎ ಹಿಂಪಡೆಯುತ್ತೇವೆ ಎಂಬ ಕಾಂಗ್ರೆಸ್ ನಾಯಕರೊಬ್ಬರ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ ಎಂದು ತಿಳಿದಿದೆ, ಸಿಎಎ ಅನ್ನು ಬಿಜೆಪಿ ಮತ್ತು ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಂದಿದೆ. ಅದನ್ನು ರದ್ದುಗೊಳಿಸುವುದು ಅಸಾಧ್ಯ. ಅದನ್ನು ರದ್ದುಪಡಿಸಲು ಬಯಸುವವರಿಗೆ ಸ್ಥಾನ ಸಿಗದಂತೆ ನಾವು ರಾಷ್ಟ್ರದಾದ್ಯಂತ ಜಾಗೃತಿ ಮೂಡಿಸುತ್ತೇವೆ ಎಂದು ಶಾ ಹೇಳಿದರು. +ಸಿಎಎ ಅಸಂವಿಧಾನಿಕ ಎಂಬ ಟೀಕೆಯನ್ನು ಅವರು ತಳ್ಳಿಹಾಕಿದರು. ಈ ಕಾನೂನು ಆರ್ಟಿಕಲ್ 14 ಅನ್ನು ಉಲ್ಲಂಸುವುದಿಲ್ಲ. ಇಲ್ಲಿ ಸ್ಪಷ್ಟವಾದ, ಸಮಂಜಸವಾದ ವರ್ಗೀಕರಣವಿದೆ. ಇದು ವಿಭಜನೆಯ ಕಾರಣದಿಂದಾಗಿ, ಅಫ್ಘಾನಿಸ್ತಾನ , ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಉಳಿದುಕೊಂಡು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಮತ್ತು ಭಾರತಕ್ಕೆ ಬರಲು ನಿರ್ಧರಿಸಿದವರಿಗೆ ಕಾನೂನು ಎಂದು ಕೇಂದ್ರ ಸಚಿವರು ಹೇಳಿದರು. +ಕಾನೂನನ್ನು ಜಾರಿಗೊಳಿಸುವ ಸಮಯದ ಬಗ್ಗೆ ಪ್ರತಿಪಕ್ಷಗಳ ದಾಳಿಗೆ ಪ್ರತಿಯಾಗಿ, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಅಥವಾ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಎಲ್ಲಾ ಪ್ರತಿಪಕ್ಷಗಳ ನಾಯಕರು ಜೂತ್ ಕಿ ರಾಜನೀತಿ (ಸುಳ್ಳಿನ ರಾಜಕೀಯ)ಯಲ್ಲಿ ತೊಡಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. \ No newline at end of file diff --git a/eesanje/url_47_147_10.txt b/eesanje/url_47_147_10.txt new file mode 100644 index 0000000000000000000000000000000000000000..468f31707e854550833de5058b6b366dc678a21d --- /dev/null +++ b/eesanje/url_47_147_10.txt @@ -0,0 +1,4 @@ +ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ +ನವದೆಹಲಿ,ಮಾ.12- ರಾಜ್ಯಪಾಲ ಬಂಡಾರು ದತ್ತಾರೇಯ ಅವರನ್ನು ಭೇಟಿಯಾದ ಬಳಿಕ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಇಂದು ಬೆಳಗ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. +ಖಟ್ಟರ್ ಅವರ ರಾಜೀನಾಮೆ ನೀಡಿದ ತಕ್ಷಣವೇ ಇಡೀ ಕ್ಯಾಬಿನೆಟ್ 2024 ರ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದಗಳ ಬಗ್ಗೆ ಆಡಳಿತ ಮೈತ್ರಿಕೂಟದಲ್ಲಿ ವಿಭಜನೆಯ ಊಹಾಪೊಹಗಳು ಕೇಳಿ ಬಂದಿವೆ.ಅಚ್ಚರಿಯ ನಡೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಕರ್ನಾಲ್ನಿಂದ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. +40 ಸ್ಥಾನಗಳೊಂದಿಗೆ 90 ಸದಸ್ಯ ಬಲದ ವಿಧಾನಸಭೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ ಸ್ವತಂತ್ರ ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ ಎಂದು ಮೂಲಗಳು ತಿಳಿಸಿವೆ. ದುಶ್ಯಂತ್ ಚೌತಾಲಾ ಅವರ ಜೆಜೆಪಿ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಂಡ ನಂತರ ಇಲ್ಲಿಯವರೆಗೆ ಬಿಜೆಪಿ ಆಡಳಿತ ನಡೆಸುತ್ತಿತ್ತು. \ No newline at end of file diff --git a/eesanje/url_47_147_11.txt b/eesanje/url_47_147_11.txt new file mode 100644 index 0000000000000000000000000000000000000000..209b7f6eca01e70f1b5d91f18609ab36c4af73e2 --- /dev/null +++ b/eesanje/url_47_147_11.txt @@ -0,0 +1,5 @@ +NRCಗೆ ಅರ್ಜಿ ಸಲ್ಲಿಸದ ವ್ಯಕ್ತಿ ಪೌರತ್ವ ಪಡೆದರೆ ರಾಜೀನಾಮೆ ನೀಡುವ ಮೊದಲ ವ್ಯಕ್ತಿ ನಾನೇ : ಶರ್ಮಾ +ಗುವಾಹಟಿ, ಮಾ 12 (ಪಿಟಿಐ)-: ರಾಷ್ಟ್ರೀಯ ಪೌರತ್ವ ನೋಂದಣಿಗೆ () ಅರ್ಜಿ ಸಲ್ಲಿಸದ ವ್ಯಕ್ತಿಯೊಬ್ಬರು ಪೌರತ್ವ ಪಡೆದರೆ ರಾಜೀನಾಮೆ ನೀಡುವ ಮೊದಲ ವ್ಯಕ್ತಿ ನಾನೇ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ 2019 (ಸಿಎಎ) ಅನ್ನು ಜಾರಿಗೆ ತಂದಿದ್ದಕ್ಕಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ವಿರೋಧ ಪಕ್ಷಗಳು ಅಸ್ಸಾಂನಾದ್ಯಂತ ಪ್ರತಿಭಟನೆಗಳು ಭುಗಿಲೆದ್ದ ನಂತರ, ಪಾಕಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡಲು ದಾರಿ ಮಾಡಿಕೊಟ್ಟ ನಂತರ ಅವರ ಹೇಳಿಕೆ ಬಂದಿದೆ. +ನಾನು ಅಸ್ಸಾಂನ ಮಗ ಮತ್ತು ಎನ್ಆರ್ಸಿಗೆ ಅರ್ಜಿ ಸಲ್ಲಿಸದ ಒಬ್ಬ ವ್ಯಕ್ತಿ ಪೌರತ್ವವನ್ನು ಪಡೆದರೆ, ನಾನು ಮೊದಲು ರಾಜೀನಾಮೆ ನೀಡುತ್ತೇನೆ ಎಂದು ಶಿವಸಾಗರ್ನಲ್ಲಿ ನಡೆದ ಕಾರ್ಯಕ್ರಮದ ನೇಪಥ್ಯದಲ್ಲಿ ಮುಖ್ಯಮಂತ್ರಿ ಹೇಳಿದರು.ಸಿಎಎ ಜಾರಿಯಾದ ನಂತರ ಲಕ್ಷಾಂತರ ಜನರು ರಾಜ್ಯಕ್ಕೆ ಬರುತ್ತಾರೆ ಎಂದು ಪ್ರತಿಭಟನಾಕಾರರು ಹೇಳುತ್ತಿದ್ದಾರೆ. ಒಂದು ವೇಳೆ ಇದೇ ರೀತಿ ನಡೆದರೆ ನಾನೇ ಮೊದಲು ಪ್ರತಿಭಟನೆ ನಡೆಸುತ್ತೇನೆ ಎಂದರು. +ಸಿಎಎ ಬಗ್ಗೆ ಹೊಸದೇನೂ ಇಲ್ಲ, ಅದನ್ನು ಮೊದಲೇ ಜಾರಿಗೊಳಿಸಲಾಗಿದೆ, ಈಗ ಪೊರ್ಟಲ್ನಲ್ಲಿ ಅರ್ಜಿ ಸಲ್ಲಿಸುವ ಸಮಯ ಬಂದಿದೆ ಎಂದು ಮುಖ್ಯಮಂತ್ರಿ ಹೇಳಿದರು.ಪೊರ್ಟಲ್ನಲ್ಲಿರುವ ಡೇಟಾ ಈಗ ಮಾತನಾಡುತ್ತದೆ ಮತ್ತು ಕಾಯಿದೆಯನ್ನು ವಿರೋಸುವವರ ಹಕ್ಕುಗಳು ವಾಸ್ತವಿಕವಾಗಿ ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗುತ್ತದೆ ಎಂದು ಶರ್ಮಾ ಹೇಳಿದರು. +ಸಿಎಎ ನಿಯಮಗಳನ್ನು ಹೊರಡಿಸುವುದರೊಂದಿಗೆ, ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಕೇಂದ್ರ ಸರ್ಕಾರವು ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಪ್ರಾರಂಭಿಸುತ್ತದೆ. ಇವುಗಳಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಸೇರಿದ್ದಾರೆ. ಮತ್ತು ಕ್ರಿಶ್ಚಿಯನ್ನರು. ಇದುವರೆಗೆ ನಿಯಮಾವಳಿಗಳನ್ನು ಪ್ರಕಟಿಸದ ಕಾರಣ ಕಾನೂನು ಜಾರಿಗೆ ಬರಲು ಇದುವರೆಗೂ ಸಾಧ್ಯವಾಗಿಲ್ಲ. \ No newline at end of file diff --git a/eesanje/url_47_147_12.txt b/eesanje/url_47_147_12.txt new file mode 100644 index 0000000000000000000000000000000000000000..e4595d004cb5a824e4f8a56a7b8c33ca64a5036c --- /dev/null +++ b/eesanje/url_47_147_12.txt @@ -0,0 +1,11 @@ +ಸಿಎಎಗೆ ತಡೆ ನೀಡುವಂತೆ ಸುಪ್ರೀಂಗೆ ಮುಸ್ಲಿಂ ಲೀಗ್ ಅರ್ಜಿ +ನವದೆಹಲಿ,ಮಾ.12- ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಬೇಕೆಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಈ ಅಧಿಸೂಚನೆ ಅಸಂವಿಧಾನಿಕ ಮತ್ತು ತಾರತಮ್ಯದಿಂದ ಕೂಡಿದೆ. +ಹೀಗಾಗಿ ಕಾಯ್ದೆ ಅನುಷ್ಠಾನ ಮಾಡದಂತೆ ತಡೆಯಾಜ್ಞೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಈಗಲೂ 250 ಅರ್ಜಿಗಳು ಸಲ್ಲಿಕೆಯಾಗಿವೆ. ನ್ಯಾಯಾಲಯ ಅಂತಿಮ ತೀರ್ಪು ನೀಡುವವರೆಗೂ ಸಿಎಎ ಅನುಷ್ಠಾನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. +ಈ ಹಿಂದೆ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಇನ್ನು ಸಿಎಎ ನಿಯಮಗಳು ರಚನೆಯಾಗಿಲ್ಲ ಎಂದು ತಿಳಿಸಿತ್ತು. ಈಗ ಏಕಾಏಕಿ ಅಧಿಸೂಚನೆ ಹೊರಡಿಸಿ ಅನುಷ್ಠಾನ ಮಾಡಲು ಮುಂದಾಗಿದೆ. ಹೀಗಾಗಿ ತಡೆಯಾಜ್ಞೆ ನೀಡಬೇಕೆಂದು ಅರ್ಜಿದಾರರು ಮನವಿ ಮಾಡಿಕೊಂಡಿದ್ದಾರೆ. +ಸಂವಿಧಾನದ ಪೀಠಿಕೆಯು ಭಾರತವು ಜಾತ್ಯತೀತ ರಾಷ್ಟ್ರವಾಗಿದೆ. ಆದ್ದರಿಂದ ಯಾವುದೇ ಕಾನೂನು ಜಾರಿಗೆ ಬಂದರೂ ಅದು ಧರ್ಮ-ತಟಸ್ಥವಾಗಿರಬೇಕು ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ. ಕೇಂದ್ರ ಗೃಹ ಇಲಾಖೆ ನಿನ್ನೆ ಅಧಿಸೂಚನೆ ಹೊರಡಿಸಿದ ನಂತರ ಸಿಎಎ ಕಾಯ್ದೆಯನ್ನು ನಾವು ಅನುಷ್ಠಾನ ಮಾಡುವುದಿಲ್ಲ ಎಂದು ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ವಿರೋಧ ವ್ಯಕ್ತಪಡಿಸಿವೆ. +ಈಗಾಗಲೇ ಈ ಕಾಯ್ದೆ ವಿರುದ್ಧ ದೇಶದ ಹಲವು ಕಡೆಗಳಲ್ಲಿ ಪ್ರತಿಭಟನೆ ವ್ಯಕ್ತವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಿದೆ. +ಆದರೆ ಈ ಕಾಯ್ದೆಯನ್ನು ಬೆಂಬಲಿಸಿ ಬಂಗಾಳದ ಮತುವಾ ಸಮುದಾಯದ ಸದಸ್ಯರು ಮತ್ತು ಭೋಪಾಲ್ನಲ್ಲಿ ವಾಸಿಸುವ ಸಿಂ ನಿರಾಶ್ರಿತರು ಸಂಭ್ರಮಾಚರಿಸಿದ್ದಾರೆ. ಆದಾಗ್ಯೂ ಅಸ್ಸಾಂನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಕಾಯ್ದೆ ಅನುಷ್ಠಾನವಾದರೆ ಗಡಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ವಲಸೆಗೆ ಕಾರಣವಾಗುತ್ತದೆ ಎಂಬ ಕಾರಣಕ್ಕಾಗಿ ಹೊಸ ಪೌರತ್ವ ನಿಯಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. +ದೇಶದ ಇತರ ಪ್ರದೇಶಗಳಲ್ಲಿ, ಮುಸ್ಲಿಂ ಸಮುದಾಯದ ವಿರುದ್ಧ ಕಾನೂನು ತಾರತಮ್ಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.2019ರಲ್ಲಿ ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. +ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ, ಪಾಕಿಸ್ತಾ ಮತ್ತು ಬಾಂಗ್ಲಾ ದೇಶಗಳಿಂದ ವಲಸೆ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳ ವ್ಯಕ್ತಿಗಳು ಸಿಎಎ ಅಡಿ ಪೌರತ್ವ ಪಡೆಯಬಹುದಾಗಿದೆ. +2019ರಲ್ಲಿ ಕಾನೂನನ್ನು ಪ್ರಶ್ನಿಸಿದವರಲ್ಲಿ ಐಯುಎಂಎಲ್ಮೊದಲನೆಯದು. ಪೌರತ್ವಕ್ಕೆ ಅರ್ಹರಾದವರ ಪಟ್ಟಿಯಲ್ಲಿ ಮುಸ್ಲಿಮರನ್ನು ಸೇರಿಸದಿರುವುದು ಸಂವಿಧಾನದ 14 ನೇ ವಿಧಿಯ ಅಡಿಯಲ್ಲಿ ಸಮಾನತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂಬುದನ್ನು ಅರ್ಜಿಯು ಪ್ರತಿಪಾದಿಸುತ್ತದೆ. +ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗಲೇ ಈ ಕಾಯ್ದೆಯನ್ನು ಅನುಷ್ಠಾನ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. \ No newline at end of file diff --git a/eesanje/url_47_147_2.txt b/eesanje/url_47_147_2.txt new file mode 100644 index 0000000000000000000000000000000000000000..0614f39948c7bd189591face224afae243e22e4b --- /dev/null +++ b/eesanje/url_47_147_2.txt @@ -0,0 +1,5 @@ +ದೆಹಲಿ ಬಹು ಮಹಡಿಯ ಕಟ್ಟಡದಲ್ಲಿ ಬೆಂಕಿ, 2 ಮಕ್ಕಳು ಸೇರಿ 4 ಮಂದಿ ಸಾವು +ನವದೆಹಲಿ, ಮಾ 14 (ಪಿಟಿಐ) :ದೆಹಲಿಯ ಶಾಹ್ದಾರಾದ ಶಾಸ್ತ್ರಿ ನಗರ ಪ್ರದೇಶದ ವಸತಿ ನಾಲ್ಕು ಮಹಡಿಯ ಕಟ್ಟಡದಲ್ಲಿ ಇಂದು ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಮಕ್ಕಳು ಮತ್ತು ದಂಪತಿ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಮನೋಜ್ (30), ಅವರ ಪತ್ನಿ ಸುಮನ್ (28) ಮತ್ತು ಐದು ಮತ್ತು ಮೂರು ವರ್ಷದ ಇಬ್ಬರು ಬಾಲಕೀಯರು ಎಂದು ಗುರುತಿಸಲಾಗಿದೆ. +ಬೆಳಗ್ಗೆ 5:20ರ ಸುಮಾರಿಗೆ ಶಹದಾರದ ಶಾಸ್ತ್ರಿ ನಗರ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಕರೆ ಬಂದಿದ್ದು ,ಕೂಡಲೇ ಸ್ಥಳೀಯ ಪೊಲೀಸ್ ತಂಡ ನಾಲ್ಕು ಅಗ್ನಿಶಾಮಕ ಟೆಂಡರ್‍ಗಳು, ಆಂಬ್ಯುಲೆನ್ಸ್ ಗಳು ಮತ್ತು ಪಿಸಿಆರ್ ವ್ಯಾನ್‍ಗಳನ್ನು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭವಾಯಿತು ಎಂದು ಪೊಲೀಸರು ಹೇಳಿದರು. +ಪಾಕಿರ್ಂಗ್ ಸ್ಥಳದಿಂದ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಇಡೀ ಕಟ್ಟಡವನ್ನು ಆವರಿಸಿದೆ.ರಸ್ತೆ ಕಿರಿದಾಗಿದ್ದ ಕಾರಣ ಸ್ವಲ್ಪ ಅಡಚನೆಯಾದರೂ ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಪ್ರತಿ ಮಹಡಿಯಲ್ಲಿ ಹುಡುಕಾಟ ನಡೆಸಲಾಯಿತು ಮೂವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಹೆಡ್ಗೆವಾರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕಳುಹಿಸಲಾಯಿತು ಅದರೆ ಅಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಹೇಳಿದರು.ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಘಟನೆಯ ಬಗ್ಗೆ ತನಿಖೆ ಆರಂಭವಾಗಿದೆ ಬೆಂಕಿ ತಹಬದಿಗೆ ಬಂದಿದ್ದು,ಕಟ್ಟಡಕ್ಕೂ ಹಾನಿಯಾಗಿದೆ. \ No newline at end of file diff --git a/eesanje/url_47_147_3.txt b/eesanje/url_47_147_3.txt new file mode 100644 index 0000000000000000000000000000000000000000..5a05cf2e3bf96c03fc3a3738d4a45f03689e7b1c --- /dev/null +++ b/eesanje/url_47_147_3.txt @@ -0,0 +1,4 @@ +ಮೊದಲ ಮಹಿಳಾ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಆಸ್ಪತ್ರೆಗೆ ದಾಖಲು +ಪುಣೆ, ಮಾ 14 (ಪಿಟಿಐ) :ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಮಹಾರಾಷ್ಟ್ರದ ಪುಣೆ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. +ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಜ್ವರದ ಜೊತೆಗೆ ಎದೆಯಲ್ಲಿ ಸ್ವಲ್ಪ ಸೋಂಕು ಇದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರು ಚಿಕಿತ್ಸೆಯಲ್ಲಿದ್ದಾರೆ ಮತ್ತು ನಿಕಟವಾಗಿ ನಿಗಾ ವಹಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪಾಟೀಲ್ ಅವರು ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ಮೊದಲ ಮಹಿಳೆ. ಅವರು 2007 ರಿಂದ 2012 ರವರೆಗೆ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದರು. \ No newline at end of file diff --git a/eesanje/url_47_147_4.txt b/eesanje/url_47_147_4.txt new file mode 100644 index 0000000000000000000000000000000000000000..72c6c3cb33e5b16f24cb954bcfcae6c453e837e2 --- /dev/null +++ b/eesanje/url_47_147_4.txt @@ -0,0 +1,6 @@ +ತಮಿಳುನಾಡಿನಲ್ಲಿ ಎಎಂಎಂಕೆ, ಟಿಟಿವಿ ದಿನಕರನ್, ಬಿಜೆಪಿ ನಡುವೆ ಮೈತ್ರಿ +ಚೆನ್ನೈ, ಮಾ 13 (ಪಿಟಿಐ) :ಎಐಎಡಿಎಂಕೆ ಉಚ್ಚಾಟಿತ ನಾಯಕ ಓ ಪನ್ನೀರಸೆಲ್ವಂ ಮತ್ತು ಎಎಂಎಂಕೆ ಸಂಸ್ಥಾಪಕ ಟಿಟಿವಿ ದಿನಕರನ್ ಅವರು ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ತಡರಾತ್ರಿ ಸೀಟು ಹಂಚಿಕೆ ಮಾತುಕತೆ ನಡೆಸಿದ್ದು, ಒಪಿಎಸ್ ತಮ್ಮ ಅಭ್ಯರ್ಥಿಗಳು ಎರಡು ಎಲೆಗಳ ಚಿಹ್ನೆಯಿಂದ ಸ್ಪರ್ಧಿಸಬೇಕೆಂದು ಒತ್ತಾಯಿಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ (ಒಪಿಎಸ್ ) ಅವರು ಎಐಎಡಿಎಂಕೆಯ ಜನಪ್ರಿಯ ಎರಡು ಎಲೆಗಳ ಚಿಹ್ನೆಯನ್ನು ಚುನಾವಣಾ ಆಯೋಗ ತಮ್ಮ ಪಕ್ಷಕ್ಕೆ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ತಡರಾತ್ರಿ ಆರಂಭವಾದ ಮಾತುಕತೆ ಬೆಳಗಿನ ಜಾವದವರೆಗೂ ನಡೆಯಿತು. ಎರಡು ದಿನಗಳ ಹಿಂದೆ ಬಿಜೆಪಿ ನೇತೃತ್ವದ ಎನ್ಡಿಎ ಸೇರುವುದಾಗಿ ಘೋಷಿಸಿದ್ದ ಒಪಿಎಸ್ ಮತ್ತು ದಿನಕರನ್ ಅವರುಗಳೂ ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಮತ್ತು ಅದರ ತಮಿಳುನಾಡು ಮುಖ್ಯಸ್ಥ ಕೆ ಅಣ್ಣಾಮಲೈ ಸೇರಿದಂತೆ ಕೇಸರಿ ಪಕ್ಷದ ನಿಯೋಗದೊಂದಿಗೆ ಚರ್ಚೆ ನಡೆಸಿದ್ದಾರೆ. +ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಒಪಿಎಸ್ ಅವರು ಪನ್ನೀರಸೆಲ್ವಂ ಅವರನ್ನು ಉದ್ದೇಶಿಸಿ, ಎನ್ಡಿಎ ಒಕ್ಕೂಟವು ಮೆಗಾ ಮೈತ್ರಿ ಆಗಿದ್ದು, 2-3 ಜನರು (ಪಕ್ಷಗಳು) ಅದೇ ಕ್ಷೇತ್ರವನ್ನು ಹುಡುಕುವ ಸಾಧ್ಯತೆಗಳಿವೆ ಎಂದು ಹೇಳಿದರು. ಮಾತುಕತೆ ನಂತರ ಸೌಹಾರ್ದಯುತ ನಿರ್ಧಾರಕ್ಕೆ ಬರಲಾಗುವುದು ಎಂದರು.ನೀವು ಎರಡು ಎಲೆಗಳ ಚಿಹ್ನೆಯನ್ನು ಪಡೆದುಕೊಳ್ಳುತ್ತೀರಾ ಎಂಬ ಪ್ರಶ್ನೆಗೆ ಅವರು ಖಂಡಿತವಾಗಿ ಎಂದು ಹೇಳಿದ್ದಾರೆ. +ನಾವು ಎರಡು ಎಲೆಗಳನ್ನು (ಸ್ಪಷ್ಟವಾಗಿ ಇಸಿಯಿಂದ) ಹುಡುಕುತ್ತೇವೆ, ನಾವು ಅದನ್ನು ಪಡೆಯುತ್ತೇವೆ ಮತ್ತು ನಾವು ಆ ಚಿಹ್ನೆಯಿಂದ ಮಾತ್ರ ಸ್ಪರ್„ಸುತ್ತೇವೆ ಎಂದು ಅವರು ಹೇಳಿದರು.ಎಐಎಡಿಎಂಕೆ ಸದಸ್ಯನೆಂದು ಹೇಳಿಕೊಂಡು ರಾಜ್ಯದ ದಿಂಡಿಗಲ್ನ ವ್ಯಕ್ತಿಯೊಬ್ಬರು ಎಡಪ್ಪಾಡಿ ಕೆ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಗೆ ಎರಡು ಎಲೆಗಳನ್ನು ಈ ಹಿಂದೆ ಹಂಚಿಕೆ ಮಾಡಿದ್ದರ ವಿರುದ್ಧ ಇಸಿಯನ್ನು ಸಂಪರ್ಕಿಸಿದ್ದಾರೆ ಮತ್ತು ಬಾಕಿ ಇರುವ ಕಾರಣವನ್ನು ಉಲ್ಲೇಖಿಸಿ ಅದನ್ನು ಸ್ಥಗಿತಗೊಳಿಸುವಂತೆ ಕೋರಿದ ಒಂದು ದಿನದ ನಂತರ ಒಪಿಎಸ್ ಅವರ ಹೇಳಿಕೆ ಬಂದಿದೆ. +ಜುಲೈ 2022 ರಲ್ಲಿ ಎಐಎಡಿಎಂಕೆಯ ಜನರಲ್ ಕೌನ್ಸಿಲ್ನಿಂದ ಪನ್ನೀರಸೆಲ್ವಂ ಮತ್ತು ಅವರ ಬೆಂಬಲಿಗರನ್ನು ಹೊರಹಾಕಲಾಯಿತು ಮತ್ತು ನಂತರ ಪಳನಿಸ್ವಾಮಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಯಿತು. ನಗರದ ಆರ್ಕೆ ನಗರ ವಿಧಾನಸಭಾ ಕ್ಷೇತ್ರಕ್ಕೆ 2017ರಲ್ಲಿ ನಡೆದ ಉಪಚುನಾವಣೆಯಲ್ಲಿ ಪ್ರೆಶರ್ ಕುಕ್ಕರ್ ಚಿಹ್ನೆಯ ಮೇಲೆ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದ ದಿನಕರನ್ ಅವರು ಮುಂಬರುವ ಚುನಾವಣೆಯಲ್ಲೂ ಅದೇ ಚಿಹ್ನೆಗೆ ಆದ್ಯತೆ ನೀಡುವುದಾಗಿ ಹೇಳಿದ್ದಾರೆ. \ No newline at end of file diff --git a/eesanje/url_47_147_5.txt b/eesanje/url_47_147_5.txt new file mode 100644 index 0000000000000000000000000000000000000000..ac9a11322c9734581d2402f89eff0f5635a1848a --- /dev/null +++ b/eesanje/url_47_147_5.txt @@ -0,0 +1,6 @@ +ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ನಡುವೆ ಮೈತ್ರಿ.. ? +ಭುವನೇಶ್ವರ್, ಮಾ.13 (ಪಿಟಿಐ) :ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯು ಬಿಜೆಡಿಯೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.ಈ ಕುರಿತು ತನ್ನ ನಿರ್ಧಾರವನ್ನು ಬಿಜೆಪಿ ಇಂದು ಸಂಜೆ ವೇಳೆಗೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. +ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ರಾಜ್ಯ ಬಿಜೆಪಿಯ ಪ್ರಮುಖ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದಾರೆ. ಬಿಜೆಡಿ ತನ್ನ ವಿಚಾರಗಳನ್ನು ಬಹಿರಂಗಪಡಿಸಲು ಸಿದ್ಧವಾಗಿಲ್ಲ, ಆದರೆ ರಾಜ್ಯ ಬಿಜೆಪಿ ನಾಯಕರು, ಅಧ್ಯಕ್ಷ ಮನಮೋಹನ್ ಸಮಾಲï, ಚುನಾವಣಾ ಉಸ್ತುವಾರಿ ವಿಜಯ್ ಪಾಲ್ ಸಿಂಗ್ ತೋಮರ್ ಮತ್ತು ಇತರರು – ರಾಷ್ಟ್ರ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. +ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯ ನಾಯಕರು ಸರಣಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಹಿಂದಿನ ವರ್ಷ ಕಂಧಮಾಲ್ನಲ್ಲಿ ನಡೆದ ಗಲಭೆಯ ತಿಂಗಳ ನಂತರ, 2009 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಕೇಸರಿ ಪಕ್ಷವನ್ನು ತ್ಯಜಿಸಿದ ಬಿಜೆಡಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ರಾಜ್ಯ ಬಿಜೆಪಿ ನಾಯಕರ ಒಂದು ವಿಭಾಗ ವಿರೋ„ಸಿದೆ ಎಂದು ಅವರು ಹೇಳಿದರು.ಮಾರ್ಚ್ 5 ರಂದು ಪ್ರಧಾನಿ ನರೇಂದ್ರ ಮೋದಿ ಒಡಿಶಾಗೆ ಭೇಟಿ ನೀಡಿದ ನಂತರ ಬಿಜೆಡಿ ಮತ್ತು ಬಿಜೆಪಿ ನಡುವಿನ ಮೈತ್ರಿ ವಿಷಯ ಚರ್ಚೆಗೆ ಬಂದಿತು. +ಮರುದಿನ ಬಿಜೆಡಿ ತನ್ನ ಹಿರಿಯ ನಾಯಕರ ಸಭೆ ನಡೆಸಿತು.ಬಿಜೆಡಿ ಜೊತೆಗಿನ ಮೈತ್ರಿ ಸಾಧ್ಯತೆಯ ಕುರಿತು ಒಡಿಶಾ ಬಿಜೆಪಿ ನಾಯಕರೊಂದಿಗೆ ಮಾತನಾಡಲು ಪ್ರಧಾನ್ ಅವರನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಮೈತ್ರಿ ಬಗ್ಗೆ ನಮಗೆ ಯಾವುದೇ ಸಂದಿಗ್ಧತೆ ಇಲ್ಲ ಎಂದು ಬಿಜೆಡಿ ನಾಯಕ ಹಾಗೂ ಶಾಸಕ ಪರಶುರಾಮ್ ಧಾಡಾ ಹೇಳಿದ್ದಾರೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿರ್ಧಾರಕ್ಕೆ ಪಕ್ಷದ ವರಿಷ್ಠರು ಬದ್ಧರಾಗಿರುತ್ತಾರೆ. ಮೈತ್ರಿ ಹೊಸದೇನಲ್ಲ, ಇದು ಹಿಂದೆಯೂ ನಡೆದಿದೆ ಮತ್ತು ಈಗ ಆಗಬಹುದು ಎಂದಿದ್ದಾರೆ. \ No newline at end of file diff --git a/eesanje/url_47_147_6.txt b/eesanje/url_47_147_6.txt new file mode 100644 index 0000000000000000000000000000000000000000..b8579dc5449afca38d1b45a3269edbbcd5d947df --- /dev/null +++ b/eesanje/url_47_147_6.txt @@ -0,0 +1,6 @@ +ಅಸ್ಸಾಂನಲ್ಲಿ ಜೋರಾಯ್ತು ಸಿಎಎ ವಿರುದ್ಧದ ಹೋರಾಟ +ಗುವಾಹಟಿ, ಮಾ 13 (ಪಿಟಿಐ) :ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ವಿರೋಧಿಸಿ ಆಲ್ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟ (ಎಎಎಸ್ಯು) ಇಂದಿನಿಂದ ರಾಜ್ಯಾದ್ಯಂತ ಸತ್ಯಾಗ್ರಹ ಆರಂಭಿಸಿದೆ.ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ನಂತಹ ವಿರೋಧ ಪಕ್ಷಗಳು ಮತ್ತು ವಿವಿಧ ಸಂಘಟನೆಗಳಿಂದ ಸಿಎಎ ವಿರೋಧಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ಎಎಎಸ್ಯು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಗಲಿನಲ್ಲಿ ಸತ್ಯಾಗ್ರಹ ನಡೆಸಲಿದೆ ಎಂದು ವಿದ್ಯಾರ್ಥಿಗಳ ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಂಘಟನೆ ನಿನ್ನೆ ಸಂಜೆ ರಾಜ್ಯದ ಹಲವೆಡೆ ಪಂಜಿನ ಮೆರವಣಿಗೆ ನಡೆಸಿತ್ತು. +ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಅವರು ಸಿಎಎಗೆ ತಡೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಅಸ್ಸಾಂನಲ್ಲಿ ವಿರೋಧ ಪಕ್ಷಗಳ ಜೊತೆಗೆ ಹಲವಾರು ವಿದ್ಯಾರ್ಥಿ ಮತ್ತು ರಾಜಕೀಯೇತರ ಸ್ಥಳೀಯ ಸಂಸ್ಥೆಗಳು ಸಿಎಎಯನ್ನು ವಿರೋ„ಸುತ್ತಿವೆ, ಇದು 1985 ರ ಅಸ್ಸಾಂ ಒಪ್ಪಂದದ ನಿಬಂಧನೆಯನ್ನು ಉಲ್ಲಂಸುತ್ತದೆ ಎಂದು ಹೇಳಿಕೊಂಡಿದೆ. +ಮಾರ್ಚ್ 24, 1971 ರ ನಂತರ ಬಾಂಗ್ಲಾದೇಶದಿಂದ ರಾಜ್ಯವನ್ನು ಪ್ರವೇಶಿಸಿದ ಎಲ್ಲ ಜನರನ್ನು ಪತ್ತೆ ಮತ್ತು ಗಡೀಪಾರು ಮಾಡಲು ಒಪ್ಪಂದವು ಕರೆ ನೀಡಿತು.ಸಿಎಎ ನಿಯಮಗಳನ್ನು ಹೊರಡಿಸುವುದರೊಂದಿಗೆ, ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಕೇಂದ್ರ ಸರ್ಕಾರವು ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಪ್ರಾರಂಭಿಸುತ್ತದೆ. ಇವುಗಳಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಸೇರಿದ್ದಾರೆ. +ಕಾಂಗ್ರೆಸ್, ರೈಜೋರ್ ದಳ, ಅಸ್ಸಾಂ ಜಾತ್ಯತಾಬಾದಿ ಪರಿಷತ್, ಎಡ ಪಕ್ಷಗಳು ಮತ್ತು ಇತರರು ತಮ್ಮ ಪ್ರತಿಭಟನೆಯನ್ನು ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. +ತೃಣಮೂಲ ಕಾಂಗ್ರೆಸ್ನ ರಾಜ್ಯಾಧ್ಯಕ್ಷ ರಿಪುನ್ ಬೋರಾ ಮಾತನಾಡಿ, ಪಕ್ಷದ ಕಾರ್ಯಕರ್ತರು ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಯ್ದೆ ಮತ್ತು ನಿಯಮಗಳ ಪ್ರತಿಗಳನ್ನು ಸುಡಲಿದ್ದಾರೆ ಎಂದಿದ್ದಾರೆ. ಅಸ್ಸಾಂ ಪೊಲೀಸರು ವಿರೋಧ ಪಕ್ಷಗಳಿಗೆ ನೋಟಿಸ್ ನೀಡಿದ್ದು, ಸಿಎಎ ಅನುಷ್ಠಾನದ ಕುರಿತು ಹರತಾಳವನ್ನು ಹಿಂಪಡೆಯುವಂತೆ ಕೇಳಿದ್ದಾರೆ ಮತ್ತು ಅವರು ಆದೇಶವನ್ನು ಅನುಸರಿಸಲು ವಿಫಲವಾದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_47_147_7.txt b/eesanje/url_47_147_7.txt new file mode 100644 index 0000000000000000000000000000000000000000..5547d9f98cbdee4d648c7cab3adeda8ee82b0397 --- /dev/null +++ b/eesanje/url_47_147_7.txt @@ -0,0 +1,8 @@ +ಚುನಾವಣಾ ಬಾಂಡ್ ವಿಚಾರದಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ +ನವದೆಹಲಿ, ಮಾ.13 (ಪಿಟಿಐ) :ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಯಾವ ರಾಜಕೀಯ ಪಕ್ಷಕ್ಕೆ ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸುವುದನ್ನು ತಡೆಯಲು ಅಥವಾ ವಿಳಂಬಗೊಳಿಸಲು ಅವರ ಸರ್ಕಾರವು ಎಸ್‍ಬಿಐ ಮೂಲಕ ಸತತವಾಗಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. +ಆಶ್ಚರ್ಯಕರವಾಗಿ ಪ್ರಧಾನಿಯವರು ಇಂದು ನವದೆಹಲಿಯಲ್ಲಿ ನೆಲೆಸಿದ್ದಾರೆ ಮತ್ತು ಹೊಸ ಉದ್ಘಾಟನೆ, ಮರುಬ್ರಾಂಡಿಂಗ್ ಅಥವಾ ಹಿಂದಿನ ಕೆಲಸದ ಕ್ರೆಡಿಟ್ ಅನ್ನು ಪಡೆಯಲು ದೇಶಾದ್ಯಂತ ಪ್ರಯಾಣಿಸುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.ಎಕ್ಸ್‍ನಲ್ಲಿನ ಪೋಸ್ಟ್ ನಲ್ಲಿ ರಮೇಶ್ ಅವರು ಪ್ರಧಾನಿಯವರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟರು, ಅವರು ತಮ್ಮ ಸರ್ಕಾರದ ಮೂಲಭೂತ ಜವಾಬ್ದಾರಿಗಳ ಬಗ್ಗೆ ಉತ್ತರಿಸಬೇಕು ಎಂದು ಹೇಳಿದರು. +ಫೆಬ್ರವರಿ 15, 2024 ರಂದು ಚುನಾವಣಾ ಬಾಂಡ್‍ಗಳನ್ನು ಅಸಂವಿಧಾನಿಕ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ ತೀರ್ಪಿನಿಂದ, ಮೋದಿ ಸರ್ಕಾರವು ಎಸ್‍ಬಿಐ ಮೂಲಕ ಯಾವ ರಾಜಕೀಯ ಪಕ್ಷಕ್ಕೆ ಯಾರು ಎಷ್ಟು ಚಂದ ನೀಡಿದ್ದಾರೆ ಎಂಬ ಬಹಿರಂಗಪಡಿಸುವಿಕೆಯನ್ನು ತಡೆಯಲು ಅಥವಾ ವಿಳಂಬಗೊಳಿಸಲು ಸತತವಾಗಿ ಪ್ರಯತ್ನಿಸುತ್ತಿದೆ ಎಂದು ರಮೇಶ್ ಆರೋಪಿಸಿದ್ದಾರೆ. +ಪ್ರಧಾನ ಮಂತ್ರಿಗಳು ಏನು ಹೆದರುತ್ತಾರೆ ಮತ್ತು ಚುನಾವಣಾ ಬಾಂಡ್‍ಗಳ ಅಂಕಿಅಂಶಗಳು ಯಾವ ಹೊಸ ಹಗರಣವನ್ನು ಬಹಿರಂಗಪಡಿಸುತ್ತವೆ ಎಂದು ಅವರು ಕೇಳಿದರು.ಫೆಬ್ರವರಿ 20, 2024 ರಂದು, 30 ಕಂಪನಿಗಳಿಂದ ಬಿಜೆಪಿಯು 335 ಕೋಟಿ ರೂಪಾಯಿಗಳ ದೇಣಿಗೆಯನ್ನು ಪಡೆದಿದೆ ಎಂದು ಬಹಿರಂಗವಾಯಿತು, ಇಡಿ-ಸಿಬಿಐ-ಐಟಿ ತನಿಖೆಯ ಬೆದರಿಕೆಯ ಮೂಲಕ ಬಿಜೆಪಿ ಈ ಸಂಸ್ಥೆಗಳನ್ನು ಬೆದರಿಸಿ ಅವರಿಂದ ದೇಣಿಗೆ ವಸೂಲಿ ಮಾಡುತ್ತಿದೆಯೇ ಎಂದು ಪ್ರಶ್ನಿಸಿದರು. +ಈಗ ರದ್ದಾದ ಚುನಾವಣಾ ಬಾಂಡ್‍ಗಳನ್ನು ಖರೀದಿಸಿದ ಸಂಸ್ಥೆಗಳು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ವಿವರಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಒಂದು ದಿನದ ನಂತರ ಸರ್ಕಾರದ ವಿರುದ್ಧ ರಮೇಶ್ ವಾಗ್ದಾಳಿ ನಡೆಸಿದರು. ಮಾರ್ಚ್ 12 ರ ಕೆಲಸದ ಸಮಯದ ಮುಕ್ತಾಯದೊಳಗೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‍ಗಳ ವಿವರಗಳನ್ನು ಬಹಿರಂಗಪಡಿಸುವಂತೆ ಎಸ್‍ಬಿಐಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. +ಆದೇಶದ ಪ್ರಕಾರ, ಚುನಾವಣಾ ಆಯೋಗವು ಮಾರ್ಚ್ 15 ರಂದು ಸಂಜೆ 5 ಗಂಟೆಯೊಳಗೆ ಬ್ಯಾಂಕ್ ಹಂಚಿಕೊಂಡ ವಿವರಗಳನ್ನು ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕಾಗುತ್ತದೆ. ವಿವರಗಳನ್ನು ಬಹಿರಂಗಪಡಿಸಲು ಎಸ್‍ಬಿಐ ಜೂನ್ 30 ರವರೆಗೆ ಸಮಯ ಕೋರಿತ್ತು. ಆದಾಗ್ಯೂ ಅದರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. +ಸೆಬಿಯಿಂದ ಗೊತ್ತುಪಡಿಸಿದ ನಾಲ್ಕು ಶೆಲ್ ಕಂಪನಿಗಳಿಂದ 4.9 ಕೋಟಿ ರೂಪಾಯಿಗಳನ್ನು ಬಿಜೆಪಿ ಏಕೆ ಸ್ವೀಕರಿಸಿದೆ ಎಂದು ರಮೇಶ್ ತಮ್ಮ ಪೋಸ್ಟ್ ನಲ್ಲಿ ಕೇಳಿದ್ದಾರೆ. ಈ ಕಂಪನಿಗಳ ಮೂಲಕ ಯಾರ ಕಪ್ಪುಹಣವನ್ನು ಬಿಜೆಪಿಗೆ ತಲುಪಿಸಲಾಗಿದೆ ಎಂದು ಅವರು ಪ್ರಶ್ನಿಸಿದರು. ಪೌರತ್ವ (ತಿದ್ದುಪಡಿ) ಕಾಯ್ದೆ, 2019 ಅನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಸರ್ಕಾರವು ನಿಯಮಗಳನ್ನು ಅ„ಸೂಚನೆ ಮಾಡುವುದರ ಕುರಿತು ಬಿಜೆಪಿಯನ್ನು ವಾಗ್ದಾಳಿ ಮಾಡಿದ ರಮೇಶ್, ಸಂಸದೀಯ ವ್ಯವಹಾರಗಳ ಕೈಪಿಡಿ ಮತ್ತು ಸರ್ಕಾರದ ಎಲ್ಲಾ ಸ್ಥಾಪಿತ ಮಾನದಂಡಗಳ ಪ್ರಕಾರ ಯಾವುದೇ ಕಾಯ್ದೆಗೆ ನಿಯಮಗಳಿವೆ. ಅದರ ಅಂಗೀಕಾರದ ಆರು ತಿಂಗಳೊಳಗೆ ರೂಪಿಸಲಾಗುವುದು ಎಂದಿದ್ದಾರೆ. \ No newline at end of file diff --git a/eesanje/url_47_147_8.txt b/eesanje/url_47_147_8.txt new file mode 100644 index 0000000000000000000000000000000000000000..3b827bd0cbdc6cc620db33dac739459795c58990 --- /dev/null +++ b/eesanje/url_47_147_8.txt @@ -0,0 +1,6 @@ +ಕಾಂಗ್ರೆಸ್ ಸೋಲಿನ ಹೋರಾಟ ಮುಂದುವರೆದಿದೆ : ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ +ರಾಯ್‍ಪುರ, ಮಾ 13 (ಪಿಟಿಐ) :ಕಾಂಗ್ರೆಸ್ ನಿರಂತರ ಸೋಲಿನ ಹೋರಾಟದಲ್ಲಿದೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸಂಸದ ಸ್ಥಾನಗಳಿಗೆ ಯಾವುದೇ ಪ್ರಮುಖ ಅಭ್ಯರ್ಥಿಗಳಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ. +ಕೇಸರಿ ಆಡಳಿತದಲ್ಲಿರುವ ಛತ್ತೀಸ್‍ಗಢದಲ್ಲಿ ತನ್ನ ದಿನದ ಪ್ರವಾಸವನ್ನು ಮುಗಿಸಿ ಮಧ್ಯಪ್ರದೇಶಕ್ಕೆ ಮರಳುವ ಮುನ್ನ ರಾಯ್‍ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.ಲೋಕಸಭೆ ಚುನಾವಣೆಗೆ 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಸಂಜೆ ಪ್ರಕಟಿಸಿದ್ದು, 43 ಅಭ್ಯರ್ಥಿಗಳ ಪೈಕಿ 10 ಮಂದಿ ಮಧ್ಯಪ್ರದೇಶದಿಂದ ಬಂದಿದ್ದು, 2019 ರಲ್ಲಿ ಒಟ್ಟು 29 ರಲ್ಲಿ ಗ್ರ್ಯಾಂಡ್ ಓಲ್ಡ್ ಪಕ್ಷವು ಕೇವಲ ಒಂದು ಸ್ಥಾನವನ್ನು (ಚಿಂದ್ವಾರ) ಗೆಲ್ಲುವಲ್ಲಿ ಯಶಸ್ವಿಯಾಗಿದೆ. +ಕಳೆದ ವಾರ ಬಿಡುಗಡೆಯಾದ ಮೊದಲ ಕಾಂಗ್ರೆಸ್ ಪಟ್ಟಿಯು ಕೇರಳದ ವಯನಾಡ್ ಅನ್ನು ಸಂಸತ್ತಿನ ಕೆಳಮನೆಯಲ್ಲಿ ಪ್ರತಿನಿಧಿಸುವ ಪಕ್ಷದ ಸಂಸದ ರಾಹುಲ್ ಗಾಂಧಿ ಸೇರಿದಂತೆ 39 ಅಭ್ಯರ್ಥಿಗಳನ್ನು ಹೊಂದಿತ್ತು, ಆದರೆ ಅದು ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಯಾವುದೇ ಸ್ಥಾನವನ್ನು ಒಳಗೊಂಡಿರಲಿಲ್ಲ. +ಮಧ್ಯಪ್ರದೇಶದ ಲೋಕಸಭೆ ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಾದವ್ , ಕಾಂಗ್ರೆಸ್ ಸೋತ ಹೋರಾಟದಲ್ಲಿದೆ. ಈ ಪಟ್ಟಿಯಲ್ಲಿ ಯಾವುದೇ ಪ್ರಮುಖ ಹೆಸರುಗಳು ಕಾಣಿಸಿಕೊಂಡಿಲ್ಲ. ಇದಕ್ಕೆ ವಿರುದ್ಧವಾಗಿ, ಬಿಜೆಪಿಯ ಮೊದಲ ಅಭ್ಯರ್ಥಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಅವರ ಹೆಸರಿದೆ. ಮೋದಿ ಜಿ ಮತ್ತು ಇತರ ಹಲವಾರು ನಾಯಕರು. +ಪ್ರಮುಖ ಕಾಂಗ್ರೆಸ್ ರಾಜಕಾರಣಿಗಳು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂಜರಿಯುತ್ತಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.ಮುಂಬರುವ ಸಮಯವು ಕಾಂಗ್ರೆಸ್‍ಗೆ ತುಂಬಾ ಕೆಟ್ಟದಾಗಿದೆ ಎಂದು ನಾವೆಲ್ಲರೂ ಅರ್ಥಮಾಡಿಕೊಳ್ಳಬಹುದು ಏಕೆಂದರೆ ಅದರ ದೊಡ್ಡ ನಾಯಕರು ಈಗಾಗಲೇ ನೆಲವನ್ನು ತೊರೆದಿದ್ದಾರೆ ಮತ್ತು ಅದರ ಫಲಿತಾಂಶಗಳು ಗೋಚರಿಸುತ್ತಿವೆ ಎಂದು ಯಾದವ್ ಹೇಳಿದರು. \ No newline at end of file diff --git a/eesanje/url_47_147_9.txt b/eesanje/url_47_147_9.txt new file mode 100644 index 0000000000000000000000000000000000000000..84bfbb074eddc59744a0d62b349e82a6fbc52700 --- /dev/null +++ b/eesanje/url_47_147_9.txt @@ -0,0 +1,5 @@ +ಸಿಎಎ ಜಾರಿ : ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಪ್ರಮೋದ್ ಸಾವಂತ್ +ಪಣಜಿ, ಮಾ 12 (ಪಿಟಿಐ)-ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗಾಗಿ ನಿಯಮಗಳನ್ನು ತಿಳಿಸಿದ್ದಕ್ಕಾಗಿ ಮತ್ತು ಪೌರತ್ವ ಹಕ್ಕುಗಳ ಹಾದಿಯನ್ನು ವೇಗಗೊಳಿಸಿದ್ದಕ್ಕಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ. +ಸಂಸತ್ತು ಕಾನೂನನ್ನು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಸಿಎಎ 2019 ರ ಅನುಷ್ಠಾನವನ್ನು ಕೇಂದ್ರವು ಸೋಮವಾರ ಪ್ರಕಟಿಸಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವಕ್ಕೆ ದಾರಿ ಮಾಡಿಕೊಡುತ್ತದೆ. +ಇದರೊಂದಿಗೆ, ಸರ್ಕಾರವು ಈಗ ಮೂರು ದೇಶಗಳಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಪ್ರಾರಂಭಿಸುತ್ತದೆ. ಇದು ಸ್ವಾಗತಾರ್ಹ ಬೆಳವಣಿಗೆ ಎಂದು ಅವರು ಎಕ್ಸ್ನಲ್ಲಿ ಪೊಸ್ಟ್ ಮಾಡಿದ್ದಾರೆ.ಭಾರತದ ಇತಿಹಾಸದಲ್ಲಿ ಇದು ಗಮನಾರ್ಹ ದಿನವಾಗಿದೆ, ಏಕೆಂದರೆ ಪೌರತ್ವ ತಿದ್ದುಪಡಿ ಕಾಯಿದೆ ನಿಯಮಗಳನ್ನು ಅಸೂಚನೆ ಮಾಡಲಾಗಿದೆ! ಅವರು ಹೇಳಿದರು. +ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಕಿರುಕುಳಕ್ಕೊಳಗಾದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ಹಕ್ಕುಗಳನ್ನು ಪಡೆಯುವ ಮಾರ್ಗವನ್ನು ವೇಗಗೊಳಿಸಿದ ಸಿಎಎ ನಿಯಮಗಳ ಅಸೂಚನೆಗಾಗಿ ನಾನು ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಧನ್ಯವಾದ ಮತ್ತು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_148_1.txt b/eesanje/url_47_148_1.txt new file mode 100644 index 0000000000000000000000000000000000000000..4bd16ab5a998a2f3d876a3e9659aa9c8c6fc14a1 --- /dev/null +++ b/eesanje/url_47_148_1.txt @@ -0,0 +1,5 @@ +ಪೌರತ್ವ ಕಾಯ್ದೆ ಜಾರಿಗೆ ಎಐಎಡಿಎಂಕೆ ವಿರೋಧ +ಚೆನ್ನೈ, ಮಾ 12 (ಪಿಟಿಐ) : ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಸಿಎಎ ನಿಯಮಗಳ ಅಧಿಸೂಚನೆಯನ್ನು ಕಟುವಾಗಿ ಟೀಕಿಸಿದ್ದು, ಕೇಂದ್ರ ಸರ್ಕಾರವು ಅದರ ಅನುಷ್ಠಾನದೊಂದಿಗೆ ಐತಿಹಾಸಿಕ ಪ್ರಮಾದ ಮಾಡಿದೆ ಮತ್ತು ರಾಜಕೀಯ ಲಾಭಕ್ಕಾಗಿ ಕೇಂದ್ರದ ಆಡಳಿತಾರೂಢ ಬಿಜೆಪಿಯು ಹಾಗೆ ಮಾಡಿದೆ ಎಂದು ಆರೋಪಿಸಿದ್ದಾರೆ. . +ಕಳೆದ ಐದು ವರ್ಷಗಳಿಂದ ಜಾರಿಯಾಗದಿದ್ದರೂ ಲೋಕಸಭೆ ಚುನಾವಣೆಗೂ ಮುನ್ನ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಜನರನ್ನು ಒಡೆಯುವ ಈ ಕ್ರಮವನ್ನು ಎಐಎಡಿಎಂಕೆ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ. +ಕೇಂದ್ರ ಸರ್ಕಾರವು ಇದರೊಂದಿಗೆ ಐತಿಹಾಸಿಕ ಪ್ರಮಾದವನ್ನು ಎಸಗಿದೆ. ಎಐಎಡಿಎಂಕೆಯು ಸ್ಥಳೀಯ ಜನರು–ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರ ವಿರುದ್ಧ ಇದನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವನ್ನು ಎಂದಿಗೂ ಅನುಮತಿಸುವುದಿಲ್ಲ. ಎಐಎಡಿಎಂಕೆ ಇದನ್ನು ಪ್ರಜಾಸತ್ತಾತ್ಮಕವಾಗಿ ವಿರೋಧಿಸಲು ದೇಶದ ಜನರೊಂದಿಗೆ ಸೇರಿಕೊಳ್ಳುತ್ತದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. +ಪೌರತ್ವ (ತಿದ್ದುಪಡಿ) ಕಾಯ್ದೆ, 2019 ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ — ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ದಾರಿ ಮಾಡಿಕೊಡುತ್ತದೆ. ಸಿಎಎ ನಿಯಮಗಳನ್ನು ಕೇಂದ್ರವು ಸೋಮವಾರ ಪ್ರಕಟಿಸಿದೆ. \ No newline at end of file diff --git a/eesanje/url_47_148_10.txt b/eesanje/url_47_148_10.txt new file mode 100644 index 0000000000000000000000000000000000000000..f7fbf2e12cfa9a3092e150b8db9bea04936bbcd3 --- /dev/null +++ b/eesanje/url_47_148_10.txt @@ -0,0 +1,9 @@ +ಮೋದಿ ದಕ್ಷಿಣ ಭಾರತ ಪ್ರವಾಸ ವೇಳಾಪಟ್ಟಿ ಪ್ರಕಟ +ಬೆಂಗಳೂರು,ಮಾ.11- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಲೆಕ್ಕಚಾರದಲ್ಲಿರುವ ಬಿಜೆಪಿ, ಮಾರ್ಚ್ 15ರಿಂದ ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಚುನಾವಣಾ ಪ್ರಚಾರಕ್ಕೆ ರಣ ಕಹಳೆ ಮೊಳಗಿಸಲಿದೆ. ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಮೋದಿ, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧುಮುಕಲಿದ್ದಾರೆ. ಈಗಾಗಲೇ ಚುನಾವಣೆ ಪ್ರಚಾರಕ್ಕಾಗಿ ಅವರ ಪ್ರಚಾರ ಪ್ರವಾಸದ ತಾತ್ಕಾಲಿಕ ಪಟ್ಟಿಯೊಂದು ಸಿದ್ಧಗೊಂಡಿದ್ದು, ಅದರ ಪ್ರಕಾರ ಮಾರ್ಚ್ 15ರಿಂದ ಮಾ.19ರವರೆಗೆ ಪ್ರಧಾನಿ ನರೇಂದ್ರಮೋದಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಸಂಚರಿಸಿ ಪ್ರಚಾರ ಮಾಡಲಿದ್ದಾರೆ. +ತಾತ್ಕಾಲಿಕ ಪಟ್ಟಿ ಪ್ರಕಾರ ಮಾರ್ಚ್ 15ಕ್ಕೆ ಕೋಲಾರ, ಮಾರ್ಚ್ 17ಕ್ಕೆ ಶಿವಮೊಗ್ಗ, ಮಾರ್ಚ್18ಕ್ಕೆ ಬೀದರ್, ಮಾರ್ಚ್ 19ಕ್ಕೆ ಧಾರವಾಡದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಪೈಕಿ ರಾಜ್ಯದ 4 ಜಿಲ್ಲೆಗಳಲ್ಲಿ ಅದರ ಸುತ್ತಮುತ್ತಲಿನ ಕ್ಷೇತ್ರದವರೂ ಭಾಗಿಯಾಗಲಿದ್ದಾರೆ. ಆದರೆ ಚುನಾವಣೆ ದಿನಾಂಕ ನಿಗದಿ ಆಧಾರದ ಮೇಲೆ ಪಟ್ಟಿಯಲ್ಲಿ ಬದಲಾವಣೆಯಾಗುವುದು ಎನ್ನಲಾಗಿದೆ. +ಶಿವಮೊಗ್ಗದಲ್ಲಿ 4 ಕ್ಷೇತ್ರಗಳನ್ನೊಳಗೊಂಡ ಸಮಾವೇಶ ಆಯೋಜಿಸಲಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ 4 ಸಾರ್ವಜನಿಕ ರ್ಯಾಲಿ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ದಕ್ಷಿಣಕನ್ನಡ, ಉತ್ತರಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಆಡಳಿತ ವಿರೋಧಿ ಅಂಶಗಳನ್ನು ಎದುರಿಸುತ್ತಿರುವ ರಾಜ್ಯದ ಆಡಳಿತಾರೂಢ ಬಿಜೆಪಿಯು ದೇಶದ ದಕ್ಷಿಣ ಭಾಗದಲ್ಲಿ ತನ್ನ ಕೋಟೆ ಕಟ್ಟಲು ನಿರ್ಧರಿಸಿದೆ. ಇದಕ್ಕಾಗಿ ಮೋದಿ ಪ್ರಚಾರದ ಹವಾ ಸೃಷ್ಟಿಸಲು ಪಕ್ಷ ತೀರ್ಮಾನಿಸಿದೆ. +ಪ್ರಧಾನಿ ಮೋದಿ ವಾರಾಣಸಿ ಬಳಿಕ ಇದೀಗ ಗುಜರಾತ್‍ನತ್ತ ಮುಖಮಾಡಿದ್ದಾರೆ. ಮಾರ್ಚ್ 12ರಂದು ಗುಜರಾತ್ ಹಾಗೂ ರಾಜಸ್ಥಾನದಲ್ಲಿ ಮೋದಿ ಚುನಾವಣಾ ಪ್ರಚಾರ ಅಭಿಯಾನ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ದಿನಾಂಕ ಬಹುತೇಕ ಈ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಉತ್ತರ ಭಾರತದಾದ್ಯಂತ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಲವಾರು ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ ಚುನಾವಣಾ ಪ್ರಚಾರ ಅಭಿಯಾನಗಳನ್ನೂ ನಡೆಸುತ್ತಿದ್ದಾರೆ. +ಚುನಾವಣೆ ವೇಳಾಪಟ್ಟಿ ಪ್ರಕಟಗೊಳ್ಳುವುದರೊಂದಿಗೆ ಪ್ರಚಾರ ಅಭಿಯಾನ ಇನ್ನಷ್ಟು ಬಿರುಸುಕೊಳ್ಳಲಿದೆ. ಆ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಸಕಲಸಿದ್ಧತೆಗಳನ್ನು ಮಾಡಿಕೊಂಡಿದೆ. ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ದೆಹಲಿಯಲ್ಲಿ ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಇರಬಹುದು ಎಂದು ಭಾವಿಸಲಾಗಿದೆ. +ಇನ್ನು 2024ರ ಲೋಕಸಭೆ ಚುನಾವಣೆಗೆ ಮೊದಲ ಪಟ್ಟಿ ರಿಲೀಸ್ ಮಾಡಿದ್ದ ಬಿಜೆಪಿ ನಾಯಕರು ಎರಡನೇ ಪಟ್ಟಿ ಬಿಡುಗಡೆಯ ಸಿದ್ಧತೆಯಲ್ಲಿದ್ದಾರೆ. ಭಾನುವಾರ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಿಇಸಿ ಸಭೆ ನಡೆಯುವ ಸಾಧ್ಯತೆ ಇದೆ. +ಸಿಇಸಿಯಲ್ಲಿರುವ ಕೆಲವು ಸದಸ್ಯರ ಪೂರ್ವ ನಿಯೋಜಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎನ್ನಲಾಗಿದೆ. ಇನ್ನು ಇಂದಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಬಿಎಸ್ವೈ ಸೇರಿ ಹಲವು ನಾಯಕರು ಭಾಗಿಯಾಗೋ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ದೆಹಲಿಯಲ್ಲೇ ಬಿಡುಬಿಟ್ಟಿದ್ದಾರೆ. +ಮಾರ್ಚ್ 15- ಕೋಲಾರ, ಸೇಲಂ, ಪಾಲಕ್ಕಾಡ್ಮಾರ್ಚ್16 – ಕನ್ಯಾಕುಮಾರಿ, ವಿಶಾಖಪಟ್ಟಣಂ, ಜಹೀರಾಬಾದ್ಮಾರ್ಚ್ 17 – ಪತ್ತನಂತ್ತಿಟ್ಟ, ಶಿವಮೊಗ್ಗ, ಅಮರಾವತಿಮಾರ್ಚ್ 18 – ಮಲ್ಕಾಜ್‍ಗಿರಿ, ಬೀದರ್, ಕೊಯಮತ್ತೂರುಮಾರ್ಚ್ 19- ನಾಗರ್ ಕರ್ನೂಲ್, ಧಾರವಾಡ, ಏಲೂರು \ No newline at end of file diff --git a/eesanje/url_47_148_11.txt b/eesanje/url_47_148_11.txt new file mode 100644 index 0000000000000000000000000000000000000000..e96c823a5cea996c548d20885f16e303753d5e46 --- /dev/null +++ b/eesanje/url_47_148_11.txt @@ -0,0 +1,6 @@ +ವೀರಪ್ಪನ್ ಪುತ್ರಿ ಲೋಕಸಭೆ ಸಮರಕ್ಕೆ..? +ನವದೆಹಲಿ,ಮಾ.11- ಹಿಂದೊಮ್ಮೆ ಕರ್ನಾಟಕ ಮತ್ತು ತಮಿಳುನಾಡಿಗೆ ಸಿಂಹ ಸ್ವಪ್ನವಾಗಿ ಕಾಡಿದ್ದ ದಂತಚೋರ ಕಾಡುಗಳ್ಳ ವೀರಪ್ಪನ್ ಪುತ್ರಿ ಲೋಕಸಭೆ ಸಮರಕ್ಕೆ ಧುಮುಕುವ ಸಾಧ್ಯತೆ ಇದೆ. ಕಳೆದ ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ವೀರಪ್ಪನ್ ಪುತ್ರಿ ವಿದ್ಯಾರಾಣಿ ಅವರನ್ನು ತಮಿಳುನಾಡು ಇಲ್ಲವೇ ಪಾಂಡಿಚೇರಿಯ ಯಾವುದಾದರೊಂದು ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಒಲವು ತೋರಿದೆ. +ಬಿಜೆಪಿ ಯುವ ಮೋರ್ಚಾದಲ್ಲಿ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ವಿದ್ಯಾರಾಣಿ ರಾಜಕೀಯಕ್ಕೆ ಬರಬೇಕೆಂಬ ಒಲವನ್ನು ಈ ಹಿಂದೆಯೇ ವ್ಯಕ್ತಪಡಿಸಿದ್ದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಜೊತೆ ರಾಜ್ಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಸಾರ್ವಜನಿಕ ವಲಯದಲ್ಲೂ ಒಳ್ಳೆಯ ಅಭಿಪ್ರಾಯವಿದೆ. ಇದನ್ನು ಮತಗಳನ್ನಾಗಿ ಪರಿವರ್ತಿಸಲು ಮುಂದಾಗಿರುವ ಬಿಜೆಪಿ ಅಭ್ಯರ್ಥಿ ಮಾಡುವ ಚಿಂತನೆಯಲ್ಲಿದೆ ಎಂದು ತಿಳಿದುಬಂದಿದೆ. +2020ರ ಫೆಬ್ರವರಿ 23ರಲ್ಲಿ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಮತ್ತು ಮಾಜಿ ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಅವರು ವಿದ್ಯಾರಾಣಿ ಅವರನ್ನು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿದ್ದರು. ವೀರಪ್ಪನ್‍ನನ್ನು ಹೊಡೆದುರುಳಿಸಿದ ನಂತರ ಸಮಾಜದಲ್ಲಿ ಎದುರಾದ ಅವಮಾನವನ್ನು ಮೆಟ್ಟಿನಿಂತು ವಕೀಲ ವೃತ್ತಿಯಲ್ಲಿ ಪದವೀಧರರಾಗಿರುವ ವಿದ್ಯಾರಾಣಿಯನ್ನು ಬಿಜೆಪಿ, ತಮಿಳುನಾಡು ಘಟಕದ ಹಿಂದುಳಿದ ವರ್ಗದ ಉಪಾಧ್ಯಕ್ಷರನ್ನಾಗಿ ನೇಮಿಸಿತ್ತು. +2021ರಲ್ಲಿ ತಮಿಳುನಾಡು ಅಸೆಂಬ್ಲಿ ಚುನಾವಣೆಯಲ್ಲಿ ಸ್ರ್ಪಸಲು ವಿದ್ಯಾರಾಣಿಗೆ ಅವಕಾಶವಿದ್ದರೂ, ಅದನ್ನು ಒಪ್ಪಿಕೊಳ್ಳದ ಅವರು, ಈಗ ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಯಾವ ಕ್ಷೇತ್ರದಿಂದ ಇವರಿಗೆ ಟಿಕೆಟ್ ಸಿಗುತ್ತದೆ ಅಥವಾ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಂಡಿದೆಯೇ ಎಂಬ ಬಗ್ಗೆ ಇನ್ನು ಸ್ಪಷ್ಟತೆಯಿಲ್ಲ. ವಕೀಲ ವೃತ್ತಿ ಜೊತೆಗೆ ಬಿಜೆಪಿ ನಾಯಕಿಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿದ್ದ ವಿದ್ಯಾರಾಣಿ ತಮ್ಮ ಸಾಮಾಜಿಕ ಕಳಕಳಿಯ ಕೆಲಸದ ಮೂಲಕ, ತನ್ನ ಕುಟುಂಬದ ಮೇಲಿರುವ ಕಪ್ಪುಚುಕ್ಕೆಯನ್ನು ಅಳಿಸುವ ಪ್ರಯತ್ನ ಮಾಡಿದ್ದರು. +ಸಮಾಜಮುಖಿ ಕೆಲಸ ಮಾಡಲು ನನ್ನ ತಂದೆಯೇ ನನಗೆ ಹೀರೋ ಎಂದು ಹಿಂದೊಮ್ಮೆ ಹೇಳಿದ್ದ ವಿದ್ಯಾರಾಣಿ, ತನ್ನ ಜೀವನದಲ್ಲಿ ತಂದೆಯನ್ನು ನೋಡಿದ್ದು, ಮಾತನಾಡಿದ್ದು ಕೇವಲ ಮೂವತ್ತು ನಿಮಿಷ ಎಂದು ಹೇಳಿದ್ದಾರೆ. ನನ್ನ ಆ ಭೇಟಿ ಅದೇ ಮೊದಲ ಮತ್ತು ಕೊನೆಯ ಭೇಟಿಯಾಗಿತ್ತು ಎಂದು ಹೇಳಿರುವ ಅವರು, ತಮಗೆ ಬಿಜೆಪಿ ಟಿಕೆಟ್ ಸಿಗುವ ಆಶಾಭಾವನೆಯಲ್ಲಿದ್ದಾರೆ. \ No newline at end of file diff --git a/eesanje/url_47_148_12.txt b/eesanje/url_47_148_12.txt new file mode 100644 index 0000000000000000000000000000000000000000..dfd9479ab9bafb1753e4eab8d998bd95fa0fd65a --- /dev/null +++ b/eesanje/url_47_148_12.txt @@ -0,0 +1,6 @@ +ಮೋದಿ, ಚಂದ್ರಯಾನ ಜನರ ಮನಸ್ಸಿನಿಂದ ಮರೆಯಾಗಲ್ಲ : ಜೈಶಂಕರ್ +ನವದೆಹಲಿ,ಮಾ.11- ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಚಂದ್ರಯಾನ ಜನರ ಮನಸ್ಸಿನಿಂದ ಮಾಸುವುದಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ. ವಿಕಸಿತ್ ಭಾರತ್ ರಾಯಭಾರಿ ಕಲಾವಿದರ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡುವ ಸಂದರ್ಭದಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ. +ಪ್ರತಿಯೊಬ್ಬರಿಗೂ ಭಾರತದ ವೈವಿಧ್ಯತೆಯನ್ನು ಅನುಭವಿಸುವ ಅವಕಾಶ ಸಿಗಬೇಕು. ಜಿ 20 ಸಮಯದಲ್ಲಿ ನಮ್ಮ ಗುರಿ ಏನೆಂದರೆ ಅಂತರರಾಷ್ಟ್ರೀಯ ಘಟನೆಗಳು ರಾಷ್ಟ್ರ ರಾಜಧಾನಿಗೆ ಸೀಮಿತವಾಗಬಾರದು ಮತ್ತು ದೇಶಾದ್ಯಂತ ನಡೆಯಬೇಕು ಎಂಬುದಾಗಿತ್ತು. ವಿಕಸಿತ್ ಭಾರತ್ ಬಗ್ಗೆ ಎಂದರೆ ಜಗತ್ತಿನಲ್ಲಿ ಭಾರತದ ಪ್ರಭಾವವು ಹೆಚ್ಚಾಗುತ್ತದೆ ಮತ್ತು ಅದಕ್ಕಾಗಿ ಪ್ರತಿಯೊಬ್ಬರೂ ಭಾರತದ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಅವರು ತಿಳಿಸಿದ್ದಾರೆ. +ಇದೊಂದು ಉತ್ತಮ ಉಪಕ್ರಮವಾಗಿತ್ತು. ನಾನು ಇಲ್ಲಿನ ಜನರ ಆಕಾಂಕ್ಷೆಗಳನ್ನು ನೋಡಿದ್ದೇನೆ. ಚಂದ್ರಯಾನದ ಬಲವಾದ ಪ್ರಭಾವವನ್ನೂ ನಾನು ನೋಡುತ್ತೇನೆ. ಮೋದಿ ಜಿ ಮತ್ತು ಚಂದ್ರಯಾನ ಯಾವಾಗಲೂ ಜನರ ಮನಸ್ಸಿನಲ್ಲಿರುತ್ತದೆ ಎಂದು ಅವರು ಹೇಳಿದರು. ವಿಕಸಿತ್ ಭಾರತ್‍ನಲ್ಲಿ ಹಲವಾರು ಅಂಶಗಳಿವೆ. ನಾವು ನಮ್ಮನ್ನು ನಾಗರಿಕತೆಯ ರಾಜ್ಯವೆಂದು ಪರಿಗಣಿಸುತ್ತೇವೆ. ನಾವು ಪ್ರಮುಖ ಶಕ್ತಿಯಾಗಲು, ಯುಎನ್‍ಎಸ್‍ಸಿಯ ಖಾಯಂ ಸದಸ್ಯರಾಗಲು ಹಾತೊರೆಯುತ್ತೇವೆ. +ನಾವು ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಆರ್ಥಿಕ ರಂಗದಲ್ಲಿ ನಾವು ಐದನೇ ಸ್ಥಾನದಲ್ಲಿದ್ದೇವೆ. ಆದರೆ ಶೀಘ್ರದಲ್ಲೇ ಮೂರನೇ ಸ್ಥಾನ ಪಡೆಯಲಿದ್ದೇವೆ ಎಂದು ಅವರು ವಿವರಿಸಿದರು. ಜೈಶಂಕರ್ ಅವರು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದನ್ನು ಶ್ಲಾಸಿದರು ಮತ್ತು ಇದು ಅಂತರರಾಷ್ಟ್ರೀಯ ಆರ್ಥಿಕ ಸಹಯೋಗವನ್ನು ಹೆಚ್ಚಿಸುವ ಹೊಸ ಮಾರ್ಗವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. +ಐಸ್‍ಲ್ಯಾಂಡ್, ಲಿಚ್ಟೆನ್‍ಸ್ಟೈನ್, ನಾರ್ವೆ ಮತ್ತು ಸ್ವಿಟ್ಜರ್‍ಲ್ಯಾಂಡ್‍ನೊಂದಿಗಿನ ಭಾರತದ ಪಾಲುದಾರಿಕೆಗೆ ಉತ್ತಮ ದಿನ. ಈ ಸಾಧನೆಗಾಗಿ ನನ್ನ ಸಹೋದ್ಯೋಗಿಯನ್ನು ಅಭಿನಂದಿಸುತ್ತೇನೆ. ಭಾರತ-ಇಎ ಟಿಎ ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿರುವುದು ಒಂದು ದಿಟ್ಟ ಸಾಧನೆಯಾಗಿದೆ. ಇದು ಹೊಸ ಮಾರ್ಗವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_148_2.txt b/eesanje/url_47_148_2.txt new file mode 100644 index 0000000000000000000000000000000000000000..efef83cd83111fbe5297218f10905567fd61a40e --- /dev/null +++ b/eesanje/url_47_148_2.txt @@ -0,0 +1,11 @@ +ಸಿಎಎ ಅಡಿಯಲ್ಲಿ ಪೌರತ್ವ ಪಡೆಯುವುದು ಹೇಗೆ..? ಯಾರು ಅರ್ಹರು..? ಇಲ್ಲಿದೆ ಕಂಪ್ಲೀಟ್ ಮಾಹಿತಿ +ನವದೆಹಲಿ,ಮಾ.12-ಪೌರತ್ವ ಪಡೆಯಲು ಯಾರು ಆರ್ಹರು ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಗೊಂದಲವಿದೆಯೇ ಹಾಗಾದರೆ ಈ ಸುದ್ದಿ ಓದಿ. +ಪೌರತ್ವ ಪಡೆಯಲು ಯಾರು ಅರ್ಹರು?ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಅಫ್ಘಾನಿಸ್ತಾನ , ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಸಮುದಾಯಗಳ ವ್ಯಕ್ತಿಗಳು ಸಿಎಎ ಅಡಿಯಲ್ಲಿ ಪೌರತ್ವವನ್ನು ಪಡೆಯಬಹುದು. +ಭಾರತೀಯ ಪೌರತ್ವಕ್ಕಾಗಿ ಅರ್ಜಿಗಳನ್ನು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು ಸಿಎಎ-2019 ಎಂಬ ಮೊಬೈಲ್ ಅಪ್ಲಿಕೇಶನ್ ಸಹ ಕಾರ್ಯನಿರ್ವಹಿಸುತ್ತಿದೆ. ಈ ಅರ್ಜಿಯನ್ನು ನಿಯೋಜಿತ ಅಧಿಕಾರಿಯ ನೇತೃತ್ವದ ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಅಧಿಕಾರ ಸಮಿತಿಗೆ ಸಲ್ಲಿಸಲಾಗುತ್ತದೆ. +ಆನ್ಲೈನ್ ಅಪ್ಲಿಕೇಶನ್ ಪ್ರಕ್ರಿಯೆಯು ಅನೇಕ ವರ್ಗಗಳನ್ನು ಒದಗಿಸುತ್ತದೆ, ಅದರ ಅಡಿಯಲ್ಲಿ ಅರ್ಜಿದಾರರು ಭಾರತೀಯ ಪೌರತ್ವವನ್ನು ಪಡೆಯಬಹುದು.ಇವುಗಳಲ್ಲಿ ಇವು ಸೇರಿವೆ:(1) ಭಾರತೀಯ ಮೂಲದ ವ್ಯಕ್ತಿ(2) ಭಾರತದ ಪ್ರಜೆಯನ್ನು ವಿವಾಹವಾದ ವ್ಯಕ್ತಿ(3) ಭಾರತೀಯ ಪ್ರಜೆಯ ಅಪ್ರಾಪ್ತ ಮಗು(4) ಪೋಷಕರು ಭಾರತೀಯ ನಾಗರಿಕರಾಗಿರುವ ವ್ಯಕ್ತಿ ಒಬ್ಬ ವ್ಯಕ್ತಿ ಅಥವಾ ಒಬ್ಬ ವ್ಯಕ್ತಿ ಪೋಷಕರು ಸ್ವತಂತ್ರ ಭಾರತದ ಪ್ರಜೆಯಾಗಿದ್ದರು(5) ಭಾರತದ ಸಾಗರೋತ್ತರ ನಾಗರಿಕರಾಗಿ ನೋಂದಾಯಿಸಲ್ಪಟ್ಟ ವ್ಯಕ್ತಿ(6) ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ಬಯಸುವ ವ್ಯಕ್ತಿ – ಐದು ವರ್ಷಗಳಿಂದ ಭಾರತದ ಸಾಗರೋತ್ತರ ಪ್ರಜೆಯಾಗಿ ನೋಂದಾಯಿಸಲ್ಪಟ್ಟ ವಯಸ್ಕ ಮತ್ತು ಭಾರತದಲ್ಲಿ ವಾಸಿಸುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. +ಅವಶ್ಯಕ ದಾಖಲೆಗಳು:ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಈ ಕೆಳಗಿನ ಯಾವುದೇ ದಾಖಲೆಗಳನ್ನು ಸಲ್ಲಿಸಬಹುದು:(1) ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನ ಸರ್ಕಾರದಿಂದ ನೀಡಲಾದ ಪಾಸ್ಪೋರ್ಟ್ ನಕಲು(2) ಈ ದೇಶಗಳಲ್ಲಿ ಸರ್ಕಾರಿ ಪ್ರಾಧಿಕಾರದಿಂದ ನೀಡಿದ ಜನ್ಮ ಪ್ರಮಾಣಪತ್ರ(3) ಶೈಕ್ಷಣಿಕ ಪ್ರಮಾಣಪತ್ರ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಶಾಲೆ/ಕಾಲೇಜು/ಬೋರ್ಡ್ ಅಥವಾ ವಿಶ್ವವಿದ್ಯಾನಿಲಯ(4) ಈ ದೇಶಗಳಲ್ಲಿ ಸರ್ಕಾರಿ ಅಧಿಕಾರಿಗಳು ನೀಡಿದ ಯಾವುದೇ ರೀತಿಯ ಗುರುತಿನ ದಾಖಲೆ (5) ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ ಅಥವಾ ಭಾರತದಲ್ಲಿ ವಿದೇಶಿಯರ ನೋಂದಣಿ ಅಧಿಕಾರಿ ನೀಡಿದ ವಸತಿ ಪರವಾನಗಿ(6) ಯಾವುದಾದರೂ ಈ ಮೂರು ದೇಶಗಳಲ್ಲಿ ಸರ್ಕಾರಿ ಅಧಿಕಾರಿಗಳು ನೀಡಿದ ಪರವಾನಗಿ(7) ಈ ದೇಶಗಳಲ್ಲಿನ ಭೂಮಿ ಅಥವಾ ಹಿಡುವಳಿ ದಾಖಲೆಗಳು(8) ಅರ್ಜಿದಾರರ ಪೊಷಕರು ಅಥವಾ ಅಜ್ಜಿಯರು ಅಥವಾ ಮುತ್ತಜ್ಜಿಯರು ಈ ದೇಶಗಳ ನಾಗರಿಕರಾಗಿದ್ದಾರೆ ಅಥವಾ ಆಗಿದ್ದಾರೆ ಎಂದು ತೋರಿಸುವ ಯಾವುದೇ ದಾಖಲೆ. ಪರಿಣಾಮವಾಗಿ, ಅರ್ಜಿದಾರರು ಈ ಎರಡೂ ದೇಶಗಳಿಂದ ಬಂದವರು ಎಂದು ಸ್ಥಾಪಿಸಲು ಅಫ್ಘಾನಿಸ್ತಾನ ಅಥವಾ ಬಾಂಗ್ಲಾದೇಶ ಅಥವಾ ಪಾಕಿಸ್ತಾನದಲ್ಲಿ ಸರ್ಕಾರಿ ಪ್ರಾಧಿಕಾರವು ನೀಡಿದ ಯಾವುದೇ ದಾಖಲೆಯು ಪೌರತ್ವ ಪ್ರಕ್ರಿಯೆಗೆ ಮಾನ್ಯವಾಗಿರುತ್ತದೆ. ಡಾಕ್ಯುಮೆಂಟ್ ಅದರ ಮಾನ್ಯತೆಯ ಅವ„ಯನ್ನು ಮೀರಿದ್ದರೂ ಸಹ ಇದು ಅನ್ವಯಿಸುತ್ತದೆ. +ಅರ್ಜಿದಾರರು ಡಿಸೆಂಬರ್ 31, 2014 ರ ಕಟ್-ಫ್ ದಿನಾಂಕದ ಮೊದಲು ಅವನು ಅಥವಾ ಅವಳು ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗುತ್ತದೆ. + +ಇದಕ್ಕೆ ಅಗತ್ಯವಿರುವ ದಾಖಲೆಗಳು:(1) ಆಗಮನದ ವೀಸಾ ಮತ್ತು ವಲಸೆ ಸ್ಟ್ಯಾಂಪ್ನ ನಕಲು(2) ನೋಂದಣಿ ಪ್ರಮಾಣಪತ್ರ ಅಥವಾ ಭಾರತದಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ ಅಥವಾ ವಿದೇಶಿಯರ ನೋಂದಣಿ ಅಧಿಕಾರಿ ನೀಡಿದ ವಸತಿ ಪರವಾನಗಿ(3) ನೀಡಿದ ಸ್ಲಿಪ್ ಸಮೀಕ್ಷೆಗಳ ಸಮಯದಲ್ಲಿ ಭಾರತದಲ್ಲಿನ ಜನಗಣತಿ ಗಣತಿದಾರರು(4) ಭಾರತದಲ್ಲಿ ಸರ್ಕಾರವು ಪರವಾನಗಿ ಅಥವಾ ಪ್ರಮಾಣಪತ್ರ ಅಥವಾ ಪರವಾನಗಿಯನ್ನು (ಚಾಲನಾ ಪರವಾನಗಿ, ಆಧಾರ್ ಕಾರ್ಡ್ ಇತ್ಯಾದಿ ಸೇರಿದಂತೆ)(5) ಭಾರತದಲ್ಲಿ ನೀಡಲಾದ ಪಡಿತರ ಚೀಟಿ(6) ಸರ್ಕಾರ ಅಥವಾ ನ್ಯಾಯಾಲಯಕ್ಕೆ ನೀಡಿದ ಯಾವುದೇ ಪತ್ರ ಅರ್ಜಿದಾರರ ಅಧಿಕೃತ ಸ್ಟಾಂಪ್(7) ಭಾರತದಲ್ಲಿ ನೀಡಲಾದ ಅರ್ಜಿದಾರರ ಜನ್ಮ ಪ್ರಮಾಣಪತ್ರ(8) ಭೂಮಿ ಅಥವಾ ಹಿಡುವಳಿ ದಾಖಲೆಗಳು ಅಥವಾ ಅರ್ಜಿದಾರರ ಹೆಸರಿನಲ್ಲಿ ಭಾರತದಲ್ಲಿ ನೋಂದಾಯಿತ ಬಾಡಿಗೆ ಒಪ್ಪಂದ, ಪ್ಯಾನ್ ಕಾರ್ಡ್ ವಿತರಣೆಯ ದಿನಾಂಕದೊಂದಿಗೆ ನೀಡಿದ ಯಾವುದೇ ದಾಖಲೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಇತರ ಸಾರ್ವಜನಿಕ ಪ್ರಾ„ಕಾರಗಳು ನೀಡುವ ಪ್ರಮಾಣಪತ್ರವನ್ನು ಯಾವುದೇ ಗ್ರಾಮೀಣ ಅಥವಾ ನಗರ ಸಂಸ್ಥೆಯ ಚುನಾಯಿತ ಸದಸ್ಯರು ಅಥವಾ ಅಧಿಕಾರಿ ಖಾತೆಯ ವಿವರಗಳನ್ನು ಖಾಸಗಿ ಬ್ಯಾಂಕ್ಗಳು ಸೇರಿದಂತೆ ಬ್ಯಾಂಕ್ಗಳು, ಅಥವಾ ಪೋಸ್ಟ್ ಆಫೀಸ್ ಖಾತೆಗಳು ಸೇರಿದಂತೆ ಅರ್ಜಿದಾರರು, ಅರ್ಜಿದಾರರ ಹೆಸರಿನಲ್ಲಿ ವಿದ್ಯುತ್ ಸಂಪರ್ಕ ಬಿಲ್ಗಳು ಅಥವಾ ಅರ್ಜಿದಾರರ ಹೆಸರಿನಲ್ಲಿ ನ್ಯಾಯಾಲಯ ಅಥವಾ ನ್ಯಾಯಾ„ಕರಣದ ದಾಖಲೆಗಳಲ್ಲಿ ಅರ್ಜಿದಾರರ ದಾಖಲೆಯಲ್ಲಿನ ಇತರ ಯುಟಿಲಿಟಿ ಬಿಲ್ಗಳಲ್ಲಿ ಭಾರತದಲ್ಲಿನ ಕಂಪನಿಗಳು ನೀಡಿದ ವಿಮಾ ಪಾಲಿಸಿಗಳು ಉದ್ಯೋಗಿಗಳ ಭವಿಷ್ಯ ನಿಧಿ/ ಸಾಮಾನ್ಯ ಭವಿಷ್ಯ ನಿಧಿ/ ಪಿಂಚಣಿ / ಉದ್ಯೋಗಿಗಳ ರಾಜ್ಯ ವಿಮಾ ನಿಗಮ ಭಾರತದಲ್ಲಿ ನೀಡಲಾದ ಅರ್ಜಿದಾರರ ಶಾಲೆಯಿಂದ ನಿರ್ಗಮಿಸುವ ಪ್ರಮಾಣಪತ್ರ ಶಾಲೆ ಅಥವಾ ಕಾಲೇಜು ಅಥವಾ ವಿಶ್ವವಿದ್ಯಾನಿಲಯ ಅಥವಾ ಸರ್ಕಾರಿ ಸಂಸ್ಥೆಯಿಂದ ನೀಡಲಾದ ಶೈಕ್ಷಣಿಕ ಪ್ರಮಾಣಪತ್ರದಿಂದ ಭಾರತದಲ್ಲಿ ಉದ್ಯೋಗವನ್ನು ಬೆಂಬಲಿಸುವ ಪುರಸಭೆ ವ್ಯಾಪಾರ ಪರವಾನಗಿ ಅಥವಾ ಮದುವೆ ಪ್ರಮಾಣಪತ್ರ. +ಅರ್ಜಿ ಸಲ್ಲಿಸಲಾಗಿದೆ, ಮುಂದೆ ಏನು:ಅರ್ಜಿಯ ನಂತರ, -ಫಾರ್ಮ್ ಅನ್ನು ಜಿಲ್ಲಾ ಮಟ್ಟದ ಸಮಿತಿಯು ಪರಿಶೀಲಿಸುತ್ತದೆ. ಈ ಸಮಿತಿಯು ಅರ್ಜಿದಾರರಿಗೆ ಇಮೇಲ್ /ಎಸ್ಎಂಎಸ್ ಮೂಲಕ ಅವನು/ಅವಳು ಮೂಲ ದಾಖಲೆಗಳೊಂದಿಗೆ ಖುದ್ದಾಗಿ ಭೇಟಿ ನೀಡಬೇಕಾದ ದಿನಾಂಕವನ್ನು ತಿಳಿಸುತ್ತದೆ. ಎಲ್ಲವೂ ಕ್ರಮದಲ್ಲಿದ್ದರೆ, ಗೊತ್ತುಪಡಿಸಿದ ಅಧಿಕಾರಿಯು ಅರ್ಜಿದಾರರಿಗೆ ನಿಷ್ಠೆಯ ಪ್ರಮಾಣ ವನ್ನು ಬೋ„ಸುತ್ತಾರೆ. ಏನಾದರೂ ಕಾಣೆಯಾಗಿದ್ದಲ್ಲಿ, ಸಮಿತಿಯು ಅದನ್ನು ಒದಗಿಸಲು ಅರ್ಜಿದಾರರನ್ನು ಕೇಳಬಹುದು. ಆದಾಗ್ಯೂ, ಸಮಂಜಸವಾದ ಅವಕಾಶಗಳ ಹೊರತಾಗಿಯೂ ಅರ್ಜಿದಾರರು ಸಮಿತಿಯ ಮುಂದೆ ಹಾಜರಾಗದಿದ್ದರೆ, ಜಿಲ್ಲಾ ಸಮಿತಿಯು ನಿರಾಕರಣೆಗಾಗಿ ಅ„ಕಾರ ಸಮಿತಿಗೆ ಅರ್ಜಿಯನ್ನು ಸಲ್ಲಿಸಬಹುದು. +ದಾಖಲೆಗಳು ಕ್ರಮಬದ್ಧವಾಗಿದ್ದರೆ, ಗೊತ್ತುಪಡಿಸಿದ ಅಧಿಕಾರಿಯು ಪೇಪರ್ಗಳನ್ನು ಪರಿಶೀಲಿಸಲಾಗಿದೆ ಎಂದು ಆನ್ಲೈನ್ನಲ್ಲಿ ಪ್ರಮಾಣೀಕರಿಸುತ್ತಾರೆ. ಜಿಲ್ಲಾ ಸಮಿತಿಯು ನಿಷ್ಠೆಯ ಪ್ರಮಾಣ ವನ್ನು ಸಹ ಅಪ್ಲೋಡ್ ಮಾಡುತ್ತದೆ ಮತ್ತು ಅರ್ಜಿಯನ್ನು ವಿದ್ಯುನ್ಮಾನ ರೂಪದಲ್ಲಿ ಅಧಿಕಾರ -ಫಲಕಕ್ಕೆ ರವಾನಿಸುತ್ತದೆ. ಈ ಸಮಿತಿಯು ನಂತರ ಪ್ರಕರಣವನ್ನು ಪರಿಶೀಲಿಸುತ್ತದೆ ಮತ್ತು ಅರ್ಜಿಯನ್ನು ಅನುಮೋದಿಸುತ್ತದೆ ಅಥವಾ ತಿರಸ್ಕರಿಸುತ್ತದೆ. ಅನುಮೋದಿಸಲ್ಪಟ್ಟರೆ ಅರ್ಜಿದಾರರಿಗೆ ಡಿಜಿಟಲ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. \ No newline at end of file diff --git a/eesanje/url_47_148_3.txt b/eesanje/url_47_148_3.txt new file mode 100644 index 0000000000000000000000000000000000000000..63a257adf03bad5227fb99cf529e5f18ecd08705 --- /dev/null +++ b/eesanje/url_47_148_3.txt @@ -0,0 +1,5 @@ +ಸಾಂಬಾರ್ ಜಿಂಕೆ ಡಿಕ್ಕಿ ಹೊಡೆದು ಆಟೋರಿಕ್ಷಾ ಚಾಲಕ ಸಾವು +ಕೊಚ್ಚಿ, ಮಾ 12: ಎರ್ನಾಕುಲಂ ಜಿಲ್ಲೆಯ ಕೋತಮಂಗಲಂ ಬಳಿ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಟೋಗೆ ವನ್ಯ ಮೃಗ ಸಾಂಬಾರ್ ಜಿಂಕೆಯೊಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿದ್ದಾನೆ. +ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಂಕೆ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಾಗ ವಾಹನ ಪಲ್ಟಿಯಾಗಿ ಅದರಡಿ ಸಿಲುಕಿದ ಚಾಲಕನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದು, ಅದೃಷ್ಟವಶಾತ್ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. +ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಜಿಂಕೆ ಅರಣ್ಯಕ್ಕೆ ಪರಾರಿಯಾಗಿದೆ ಅಪಘಾತ ಸಂಭವಿಸಿದ ರಸ್ತೆಯು ಎರಡೂ ಬದಿಗಳಲ್ಲಿ ಅರಣ್ಯದಿಂದ ಆವೃತವಾಗಿದ್ದು, ಆನೆಗಳು ಸೇರಿದಂತೆ ಪ್ರಾಣಿಗಳು ಸಾಮಾನ್ಯವಾಗಿ ಇದನ್ನು ದಾಟುತ್ತವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಅಪಘಾತದ ಕುರಿತು ಸ್ಥಳೀಯ ನಿವಾಸಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದರು, ಇಂತಹ ಘಟನೆಗಳನ್ನು ತಡೆಯಲು, ಜನರು ರಸ್ತೆಯುದ್ದಕ್ಕೂ ಕೆಲವು ರೀತಿಯ ಬೇಲಿಗಳನ್ನು ನಿರ್ಮಿಸಲು ಪ್ರಯತ್ನಿಸಿದರು, ಆದರೆ ಅಧಿಕಾರಿಗಳು ನಮ್ಮ ಪ್ರಯತ್ನಕ್ಕೆ ಸಹಕರಿಸುತ್ತಲ್ಲ , ಕಿವಿಗೊಡಲಿಲ್ಲ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_47_148_4.txt b/eesanje/url_47_148_4.txt new file mode 100644 index 0000000000000000000000000000000000000000..23563b3ee4caf11bfa841d44bc26ee86adeb7ce4 --- /dev/null +++ b/eesanje/url_47_148_4.txt @@ -0,0 +1,10 @@ +ಆಂಧ್ರದಲ್ಲಿ ಎನ್‍ಡಿಎ ಪಕ್ಷಗಳ ಸೀಟು ಹಂಚಿಕೆ ಫೈನಲ್ +ಅಮರಾವತಿ, ಮಾ.12 (ಪಿಟಿಐ) : ಆಂಧ್ರಪ್ರದೇಶದ ಎನ್‍ಡಿಎ ಪಾಲುದಾರರ ನಡುವಿನ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯ ಚುನಾವಣೆಗೆ ತಮ್ಮ ಸೀಟು ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿದ್ದಾರೆ, ಇದರ ಅಡಿಯಲ್ಲಿ ಬಿಜೆಪಿ ಆರು ಲೋಕಸಭೆ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಟಿಡಿಪಿ 17 ಸಂಸದೀಯ ಮತ್ತು 144 ರಾಜ್ಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. +ಒಪ್ಪಂದದ ಅಡಿಯಲ್ಲಿ, ಪವನ್ ಕಲ್ಯಾಣ್ ಅವರ ಜನಸೇನಾ ಎರಡು ಲೋಕಸಭೆ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಸಭೆಯ ನಂತರ ಘೋಷಿಸಿದರು. +ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮುಂಬರುವ ಸಂಸತ್ತು ಮತ್ತು ವಿಧಾನಸಭೆ ಚುನಾವಣೆಗಳಿಗೆ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲು ಅಮರಾವತಿಯಲ್ಲಿ ಟಿಡಿಪಿ ಮುಖ್ಯಸ್ಥ ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಕಲ್ಯಾಣ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದರು. +ಅಮರಾವತಿಯಲ್ಲಿ ಬಿಜೆಪಿ, ಟಿಡಿಪಿ ಮತ್ತು ಜೆಎಸ್‍ಪಿ (ಜನಸೇನಾ) ಅಸಾಧಾರಣ ಸೀಟು ಹಂಚಿಕೆ ಸೂತ್ರವನ್ನು ರೂಪಿಸಿವೆ. ಈ ಮಹತ್ವದ ಹೆಜ್ಜೆಯೊಂದಿಗೆ ಆಂಧ್ರಪ್ರದೇಶದ ಜನರು ಈಗ ನಮ್ಮ ರಾಜ್ಯವನ್ನು ಮರಳಿ ಪಡೆಯುವ ಮತ್ತು ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡುವ ಹೊಸ್ತಿಲಲ್ಲಿ ನಿಂತಿದ್ದಾರೆ. +ನನ್ನ ಆಂಧ್ರಪ್ರದೇಶದ ಜನರು ಈ ಮೈತ್ರಿಯ ಮೇಲೆ ತಮ್ಮ ಆಶೀರ್ವಾದವನ್ನು ಹರಿಸಲು ಮತ್ತು ಅವರ ಸೇವೆ ಮಾಡಲು ನಮಗೆ ಐತಿಹಾಸಿಕ ಜನಾದೇಶವನ್ನು ನೀಡುವಂತೆ ನಾನು ವಿನಮ್ರವಾಗಿ ಕರೆ ನೀಡುತ್ತೇನೆ ಎಂದು ನಾಯ್ಡು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ರಾಜ್ಯವು 25 ಲೋಕಸಭೆ ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. +ಜನಸೇನಾ ಆರಂಭದಲ್ಲಿ 24 ವಿಧಾನಸಭೆ ಮತ್ತು ಮೂರು ಲೋಕಸಭೆ ಸ್ಥಾನಗಳಲ್ಲಿ ಸ್ಪರ್„ಸಬೇಕಿತ್ತು, ಆದರೆ ಟಿಡಿಪಿ ಇತ್ತೀಚೆಗೆ ಎನ್‍ಡಿಎ ಮೈತ್ರಿಕೂಟಕ್ಕೆ ಸೇರಿದ ನಂತರ ಸೀಟು ಹಂಚಿಕೆ ಸೂತ್ರದಲ್ಲಿ 21 ವಿಧಾನಸಭೆ ಮತ್ತು ಎರಡು ಲೋಕಸಭೆ ಸ್ಥಾನಗಳನ್ನು ಪಡೆದುಕೊಂಡಿದೆ. +2024ರ ಚುನಾವಣೆಯು ಮೊದಲ ಬಾರಿಗೆ ಮೂರು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುತ್ತಿದೆ. ಹಿಂದೆ 2014 ರಲ್ಲಿ, ಟಿಡಿಪಿ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸಿದಾಗ, ಜನಸೇನಾ ಅವರ ಹೊರಗಿನ ಮಿತ್ರವಾಗಿತ್ತು. ಟಿಡಿಪಿ ಮತ್ತು ಜನಸೇನಾ ಈಗಾಗಲೇ 100 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಆಯಾ ಪಕ್ಷಗಳು ಶೀಘ್ರದಲ್ಲೇ ಇತರ ಅಭ್ಯರ್ಥಿಗಳನ್ನು ಹೆಸರಿಸಲಿವೆ ಎಂದು ನಾಯ್ಡು ಹೇಳಿದರು. +ಏತನ್ಮಧ್ಯೆ, ಮಾರ್ಚ್ 17 ಮತ್ತು 20 ರ ನಡುವೆ ನಡೆಯಬಹುದಾದ ಚುನಾವಣಾ ಸಭೆಯಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ವಿರೋಧ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದೆ ಎಂದು ಟಿಡಿಪಿ ಮೂಲಗಳು ತಿಳಿಸಿವೆ. +ನಾವು ಮೋದಿಯನ್ನು ಸಭೆಗೆ ಆಹ್ವಾನಿಸಿದ್ದೇವೆ, ಹೆಚ್ಚಾಗಿ ಅವರು ಸಭೆಗೆ ಬರುತ್ತಾರೆ, ದಿನಾಂಕ ಇನ್ನೂ ಅಂತಿಮಗೊಂಡಿಲ್ಲ, ನಾವು ಮಾರ್ಚ್ 17 ಅನ್ನು ಪ್ರಸ್ತಾಪಿಸಿದ್ದೇವೆ ಆದರೆ ಅಲ್ಲಿ ಇಲ್ಲಿ ಒಂದು ದಿನ, ಹೆಚ್ಚಾಗಿ ಮೋದಿ ಇರುತ್ತಾರೆ, ಮಾರ್ಚ್ 17 ಮತ್ತು 20 ರ ನಡುವೆ ಅದು ನಡೆಯುತ್ತದೆ. ಪ್ರಚಾರವನ್ನು ಪ್ರಾರಂಭಿಸಲು ಇದು ಉತ್ತಮ ಮಾರ್ಗವಾಗಿದೆ. ಮೋದಿ, ನಾಯ್ಡು, ಪವನ್ , ಎಲ್ಲರೂ ಒಟ್ಟಾಗಿ ಎಂದು ಮೂಲಗಳು ಸೇರಿಸಿದವು. ಮೋದಿ ಈ ಸಭೆಯಲ್ಲಿ ಭಾಗವಹಿಸಿದರೆ, ಮೋದಿ, ನಾಯ್ಡು ಮತ್ತು ಕಲ್ಯಾಣ್ ವೇದಿಕೆ ಹಂಚಿಕೊಳ್ಳುತ್ತಿರುವುದು ದಶಕದಲ್ಲಿ ಇದೇ ಮೊದಲ ಬಾರಿಗೆ ಎಂದು ಮತ್ತೊಂದು ಟಿಡಿಪಿ ಮೂಲ ಒತ್ತಿಹೇಳಿದೆ. \ No newline at end of file diff --git a/eesanje/url_47_148_5.txt b/eesanje/url_47_148_5.txt new file mode 100644 index 0000000000000000000000000000000000000000..a9f5a2b393f8b6939efeae62a68b024309e42d00 --- /dev/null +++ b/eesanje/url_47_148_5.txt @@ -0,0 +1,5 @@ +ಪೌರತ್ವ ತಿದ್ದುಪಡಿ ಕಾಯ್ದೆ ಸ್ವಾಗತಿಸಿದ ಪಾಕ್ ಪ್ರಜೆ ಸೀಮಾ ಹೈದರ್ +ನೋಯ್ಡಾ,ಮಾ.12- ಕಳೆದ ವರ್ಷ ತನ್ನ ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತ ಪ್ರವೇಶಿಸಿ ಈಗ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸ್ವಾಗತಿಸಿದ್ದಾರೆ. +ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ ಮತ್ತು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದೇನೆ ಎಂದು ಹೇಳಿಕೊಳ್ಳುವ ಹೈದರ್, ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು. ಭಾರತೀಯ ಪೌರತ್ವವನ್ನು ಪಡೆಯಲು ಸಿಎಎ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. +ಭಾರತ ಸರ್ಕಾರವು ಇಂದು ನಮ್ಮ ದೇಶದಲ್ಲಿ ಸಿಎಎಯನ್ನು ಜಾರಿಗೆ ತಂದಿದೆ. ಈ ಕುರಿತು ನಮಗೆ ತುಂಬಾ ಸಂತೋಷವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಹೀಗಾಗಿ ನನ್ನ ಜೀವನದುದ್ದಕ್ಕೂ ಅವರಿಗೆ ಚಿರಋಣಿಯಾಗಿರುತ್ತೇನೆ ಎಂದ ಸೀಮಾ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. +2014 ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಹಾಯಕವಾಗಿದೆ. ಆದರೆ ಈಗ ಜಾರಿಗೆ ತಂದಿರುವ ಸಿಎಎಯ ನೇರ ಫಲಾನುಭವಿ ಸೀಮಾ ಹೈದರ್ ಆಗುವುದಿಲ್ಲ . \ No newline at end of file diff --git a/eesanje/url_47_148_6.txt b/eesanje/url_47_148_6.txt new file mode 100644 index 0000000000000000000000000000000000000000..0e00027617d87ebc7b3f38e90127bef591b3d6c9 --- /dev/null +++ b/eesanje/url_47_148_6.txt @@ -0,0 +1,7 @@ +ರಾಷ್ಟ್ರ ಕಟ್ಟುವ ಉದ್ದೇಶದಿಂದ ಅಭಿವೃದ್ಧಿಕಾರ್ಯ: ಮೋದಿ +ಅಹಮದಾಬಾದ್, ಮಾ 12 (ಪಿಟಿಐ) ತಮ್ಮ ಸರ್ಕಾರವು ರಾಷ್ಟ್ರವನ್ನು ಕಟ್ಟುವ ಧ್ಯೇಯದ ಭಾಗವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆಯೇ ಹೊರತು ಕೆಲವು ಜನರು ಭಾವಿಸಿದಂತೆ ಚುನಾವಣೆಗಳನ್ನು ಗೆಲ್ಲಲು ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್‍ನ ಅಹಮದಾಬಾದ್ ನಗರದ ಸಬರಮತಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ 10 ಹೊಸ ವಂದೇ ಭಾರತ್ ರೈಲುಗಳ ಪ್ರಾರಂಭ ಸೇರಿದಂತೆ 85,000 ಕೋಟಿ ರೂ.ಗಳ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. +ಕೆಲವರು ನಮ್ಮ ಪ್ರಯತ್ನಗಳನ್ನು ಚುನಾವಣಾ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತಾರೆ. ನಾವು ರಾಷ್ಟ್ರವನ್ನು ಕಟ್ಟುವ ಉದ್ದೇಶದ ಭಾಗವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತೇವೆ ಎಂದು ನಾನು ನಿಮಗೆ ಹೇಳುತ್ತೇನೆ (ಚುನಾವಣೆಯಲ್ಲಿ ಗೆಲ್ಲುವ ಮೂಲಕ) ಸರ್ಕಾರವನ್ನು ರಚಿಸಲು ಅಲ್ಲ. ಯುವಕರು ತಮ್ಮ ಹಿಂದಿನ ತಲೆಮಾರು ಅನುಭವಿಸಿದ್ದನ್ನು ಅನುಭವಿಸುವುದಿಲ್ಲ, ಇದು ಮೋದಿಯವರ ಗ್ಯಾರಂಟಿ ಎಂದು ಅವರು ಹೇಳಿದರು. +ಡ್ಯಾನ್ಸ್ ವೇಳೆ ಕಾಲು ತಾಗಿತೆಂದು ಯುವಕನ ಕೊಂದಿದ್ದ ಮೂವರು ಖಾಕಿ ಬಲೆಗೆ +ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ರೈಲ್ವೇ ಅಭಿವೃದ್ಧಿಗೆ ಈ ಹಿಂದೆ ಮಾಡಿದ್ದಕ್ಕಿಂತ ಸುಮಾರು ಆರು ಪಟ್ಟು ಹೆಚ್ಚು ಹಣವನ್ನು ಖರ್ಚು ಮಾಡಿದೆ ಎಂದು ಪ್ರಧಾನಿ ಹೇಳಿದರು. 2024 ರ ಕೇವಲ ಎರಡು ತಿಂಗಳಲ್ಲಿ ನಾವು 11 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಉದ್ಘಾಟಿಸಿದ್ದೇವೆ ಮತ್ತು ಅಡಿಪಾಯ ಹಾಕಿದ್ದೇವೆ ಎಂದು ಅವರು ಹೇಳಿದರು. +ನಾನು ನನ್ನ ಜೀವನವನ್ನು ರೈಲ್ವೇ ಹಳಿಗಳ ಮೇಲೆ ಪ್ರಾರಂಭಿಸಿದೆ, ಆದ್ದರಿಂದ ನಮ್ಮ ರೈಲ್ವೇಗಳು ಮೊದಲು ಎಷ್ಟು ಕೆಟ್ಟದಾಗಿದೆ ಎಂದು ನನಗೆ ತಿಳಿದಿತ್ತು ಎಂದು ಅವರು ಹೇಳಿದರು. ಪ್ರತ್ಯೇಕ ರೈಲ್ವೇ ಬಜೆಟ್ ಅನ್ನು ಸ್ಥಗಿತಗೊಳಿಸಿ ಕೇಂದ್ರ ಬಜೆಟ್‍ನಲ್ಲಿ ಸೇರಿಸಿದ್ದು, ರೈಲ್ವೇ ಅಭಿವೃದ್ಧಿಗೆ ಸರ್ಕಾರದ ಹಣವನ್ನು ಬಳಸಿಕೊಳ್ಳಬಹುದು ಎಂದು ಮೋದಿ ಹೇಳಿದರು. +ಇಲ್ಲಿಯವರೆಗೆ, 350 ಆಸ್ತಾ ರೈಲುಗಳು 4.5 ಲಕ್ಷ ಜನರಿಗೆ ಅಯೋಧ್ಯೆಗೆ ಭೇಟಿ ನೀಡಲು ಅನುಕೂಲ ಮಾಡಿಕೊಟ್ಟಿವೆ ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_148_7.txt b/eesanje/url_47_148_7.txt new file mode 100644 index 0000000000000000000000000000000000000000..165a0e74d9166c72b7ddb87a5a49529358d746ed --- /dev/null +++ b/eesanje/url_47_148_7.txt @@ -0,0 +1,5 @@ +ಪೌರತ್ವ ಕಾಯಿದೆಯನ್ನು ಭಾರತೀಯ ಮುಸ್ಲಿಮರು ಸ್ವಾಗತಿಸಬೇಕು : ರಜ್ವಿ +ಬರೇಲಿ,ಮಾ.12-ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವೇ ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಸಿಎಎ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಭಾರತ ಸರ್ಕಾರವು ಸಿಎಎ ಕಾನೂನನ್ನು ಜಾರಿಗೆ ತಂದಿದೆ. +ನಾನು ಈ ಕಾನೂನನ್ನು ಸ್ವಾಗತಿಸುತ್ತೇನೆ. ಇದನ್ನು ಬಹಳ ಮುಂಚೆಯೇ ಮಾಡಬೇಕಾಗಿತ್ತು ಈ ಕಾನೂನಿನ ಬಗ್ಗೆ ಮುಸ್ಲಿಮರಲ್ಲಿ ಸಾಕಷ್ಟು ತಪ್ಪು ತಿಳುವಳಿಕೆಗಳಿವೆ. ಈ ಕಾನೂನಿಗೆ ಏನೂ ಮಾಡಲು ಸಾಧ್ಯವಿಲ್ಲ. ಮುಸ್ಲಿಮರೊಂದಿಗೆ, ಧರ್ಮದ ಆಧಾರದ ಮೇಲೆ ದೌರ್ಜನ್ಯಗಳನ್ನು ಎದುರಿಸುತ್ತಿರುವ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬರುವ ಮುಸ್ಲಿಮೇತರರಿಗೆ ಪೌರತ್ವ ನೀಡಲು ಈ ಹಿಂದೆ ಯಾವುದೇ ಕಾನೂನು ಇರಲಿಲ್ಲ ಎಂದು ಮೌಲಾನಾ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. +ಕೋಟ್ಯಂತರ ಭಾರತೀಯ ಮುಸ್ಲಿಮರಿಗೆ ಈ ಕಾನೂನಿನಿಂದ ಯಾವುದೇ ಪರಿಣಾಮ ಬೀರುವುದಿಲ್ಲ … ಈ ಕಾನೂನು ಯಾವುದೇ ಮುಸಲ್ಮಾನರ ಪೌರತ್ವವನ್ನು ಕಸಿದುಕೊಳ್ಳಲು ಹೋಗುವುದಿಲ್ಲ … ಕಳೆದ ವರ್ಷಗಳಲ್ಲಿ, ಪ್ರತಿಭಟನೆಗಳು ನಡೆದಿರುವುದು ಕಂಡುಬಂದಿದೆ. ಕೆಲವು ರಾಜಕೀಯ ವ್ಯಕ್ತಿಗಳು ಮುಸ್ಲಿಮರಲ್ಲಿ ತಪ್ಪು ತಿಳುವಳಿಕೆಯನ್ನು ಹುಟ್ಟುಹಾಕಿದ್ದಾರೆ… ಭಾರತದ ಪ್ರತಿಯೊಬ್ಬ ಮುಸಲ್ಮಾನನೂ ಸಿಎಎಯನ್ನು ಸ್ವಾಗತಿಸಬೇಕು ಎಂದು ಅವರು ಹೇಳಿದರು. +ಫೆಬ್ರವರಿಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೌರತ್ವವನ್ನು ಒದಗಿಸಲು ಸಿಎಎ ಅನ್ನು ತರಲಾಗಿದೆಯೇ ಹೊರತು ಯಾರ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ ಎಂದು ವರ್ಗೀಯ ಪದಗಳಲ್ಲಿ ಹೇಳಿದರು. ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಏಕೆಂದರೆ ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರೀತರಿಗೆ ಪೌರತ್ವವನ್ನು ನೀಡುವ ಕಾಯಿದೆ ಎಂದು ಅವರು ಮನದಟ್ಟು ಮಾಡಿಕೊಟ್ಟಿದ್ದಾರೆ. \ No newline at end of file diff --git a/eesanje/url_47_148_8.txt b/eesanje/url_47_148_8.txt new file mode 100644 index 0000000000000000000000000000000000000000..01691394b5f2cc3c317347f8fd6e40e779bc1657 --- /dev/null +++ b/eesanje/url_47_148_8.txt @@ -0,0 +1,14 @@ +ನಾಳೆಯೊಳಗೆ ಚುನಾವಣಾ ಬಾಂಡ್ ಬಹಿರಂಗಕ್ಕೆ SBIಗೆ ಸುಪ್ರೀಂ ಆದೇಶ +ನವದೆಹಲಿ,ಮಾ.11- ಚುನಾವಣಾ ಬಾಂಡ್‍ಗಳ ವಿವರಗಳನ್ನು ನಾಳೆಯೇ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕೆಂದು ಸ್ಪಷ್ಟ ಆದೇಶ ನೀಡಿರುವ ಸುಪ್ರೀಂಕೋರ್ಟ್, ಮೂರು ವಾರಗಳ ಸಮಯಾವಕಾಶ ಕೋರಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. +ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪಂಚಪೀಠ , ಕಾಲಾವಕಾಶ ಕೋರಿ ಎಸ್‍ಬಿಐ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ, ಭಾರತೀಯ ಚುನಾವಣಾ ಆಯೋಗಕ್ಕೆ ಮಾರ್ಚ್ 15ರೊಳಗೆ ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ವಿವರಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ. ಕಳೆದ 26 ದಿನಗಳಲ್ಲಿ ನೀವು ಏನು ಮಾಡುತ್ತಿದ್ದಿರಿ? ನ್ಯಾಯಾಲಯದ ಆದೇಶದ ಬಗ್ಗೆ ನಿಮಗೆ ಗೌರವವಿಲ್ಲವೇ? ನೀವು ಚುನಾವಣಾ ಬಾಂಡ್‍ಗಳ ವಿವರಗಳನ್ನು ಬಹಿರಂಗಪಡಿಸಲು ಸಮಯ ಅವಕಾಶ ಕೋರಿದರೆ. ನಾವು ಇಲ್ಲಿಂದಲೇ ಆದೇಶ ನೀಡಬೇಕಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರಿಗೆ ನ್ಯಾಯಾಲಯದ ಎಚ್ಚರಿಕೆಯನ್ನು ಕೊಟ್ಟಿತು. +ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್.ಗವಾಯಿ, ಜೆ.ಬಿ.ಪರ್ದಿವಾಲ ಹಾಗೂ ಮನೋಜ್ ಮಿರ್ಶ ಅವರನ್ನೊಳಗೊಂಡ ಪೀಠ ಎಸ್‍ಬಿಐ ಧೋರಣೆಯನ್ನು ತೀವ್ರವಾಗಿ ಖಂಡಿಸಿತು. ನೀವು 26 ದಿನ ಏನು ಮಾಡುತ್ತಿದ್ದೀರಿ? ನಿಮಗೆ ನೀಡಿರುವ ಸಮಯ ಅವಕಾಶ ಎರಡು ದಿನ ಇರುವಾಗ ಬಂದು ಅರ್ಜಿ ಹಾಕಿದ್ದೀರಿ. ನ್ಯಾಯಾಲಯದ ಬಗ್ಗೆ ನಿಮಗೆ ಗೌರವವಿದೆ ಎಂದು ಭಾವಿಸಿಕೊಳ್ಳುತ್ತೇವೆ. ಚುನಾವಣಾ ಬಾಂಡ್‍ಗಳ ವಿವರಗಳ ಬಗ್ಗೆ ಆದೇಶ ನೀಡಲು ನಮಗೆ ತುಂಬಾ ವಿಷಾದವಿದೆ. +ಚುನಾವಣಾ ಆಯೋಗ ಮಾ.15ರ ಸಂಜೆ 5 ಗಂಟೆಯೊಳಗೆ ಯಾವ ಯಾವ ರಾಜಕೀಯ ಪಕ್ಷಗಳು ಎಷ್ಟೆಷ್ಟು ಚುನಾವಣಾ ಬಾಂಡ್‍ಗಳನ್ನು ಪಡೆದುಕೊಂಡಿವೆ ಎಂಬುದನ್ನು ಬಹಿರಂಗಪಡಿಸಬೇಕು. ಎರಡು ವಿಭಾಗಗಳಲ್ಲಿ ಮಾಹಿತಿ ನೀಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು. +ಒಂದು ವಿಭಾಗದಲ್ಲಿ, ಚುನಾವಣೆ ಬಾಂಡ್‍ಗಳನ್ನು ಖರೀದಿಸಿ ದೇಣಿಗೆ ನೀಡಿದವರ ಮಾಹಿತಿ, ಹೆಸರು, ಅವರು ನೀಡಿದ ಮೊತ್ತದ ದಾಖಲೆ ಇರಬೇಕು. ಎರಡನೇ ವಿಭಾಗದಲ್ಲಿ ರಾಜಕೀಯ ಪಕ್ಷಗಳು ಬಾಂಡ್‍ಗಳ ಮೂಲಕ ದೇಣಿಗೆಯನ್ನು ನಗದೀಕರಣ ಮಾಡಿಕೊಂಡಿರುವ ಕುರಿತು ಮಾಹಿತಿ ಇರಬೇಕು ಎಂದು ಸೂಚಿಸಿದೆ. ಮಾರ್ಚ್ 6ರೊಳಗೆ ಚುನಾವಣಾ ಬಾಂಡ್ ಖರೀದಿಯ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ನೀಡಿರುವ ಹಿಂದಿನ ಆದೇಶವನ್ನು ಪಾಲಿಸದೆ ವಿಳಂಬ ಧೋರಣೆ ಅನುಸರಿಸಿದ್ದಕ್ಕಾಗಿ ಎಸ್‍ಬಿಐಯನ್ನು ಕಠಿಣ ಪದಗಳಲ್ಲಿ ತರಾಟೆಗೆ ತೆಗೆದುಕೊಂಡಿತು. +ಕಳೆದ ಫೆಬ್ರವರಿ 15ರಂದು ಸುಪ್ರೀಂಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ತೀರ್ಪು ನೀಡಿ ರದ್ದುಗೊಳಿಸಿತ್ತು. ಅಲ್ಲದೆ ಏಪ್ರಿಲ್ 12, 2019ರಿಂದ ಎಲ್ಲಾ ಚುನಾವಣಾ ಬಾಂಡ್ ಖರೀದಿಗಳ ವಿವರಗಳನ್ನು ಮಾ.6ರೊಳಗೆ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಎಸ್‍ಬಿಐಗೆ ನಿರ್ದೇಶನ ನೀಡಿತು.ಈ ಎಲ್ಲ ವಿವರಗಳನ್ನು ಕಲೆ ಹಾಕಿ ಮಾಹಿತಿ ಒದಗಿಸಲು ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ನಮಗೆ ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಎಸ್‍ಬಿಐ ಪರ ವಕೀಲ ಹರೀಶ್ ಸಾಳ್ವೆ ಅರ್ಜಿಯಲ್ಲಿ ಮನವಿ ಮಾಡಿದರು. +ರಾಜಕೀಯ ಪಕ್ಷಗಳ ವಿವರಗಳು ಮತ್ತು ಪಕ್ಷಗಳು ಸ್ವೀಕರಿಸಿದ ಬಾಂಡ್‍ಗಳ ಸಂಖ್ಯೆಯನ್ನೂ ಸಹ ನೀಡಬೇಕು. 5 ವರ್ಷದಲ್ಲಿ 22 ಸಾವಿರಕ್ಕೂ ಅಕ ಚುನಾವಣಾ ಬಾಂಡ್‍ಗಳನ್ನು ಬಿಡುಗಡೆ ಮಾಡಲಾಗಿದ್ದು, ಚುನಾವಣಾ ಬಾಂಡ್‍ಗಳ ಕುರಿತ ಮಾಹಿತಿ ನೀಡಿಕೆಗೆ ಕೊಟ್ಟಿರುವ ಗಡುವನ್ನು ಮಾರ್ಚ್ 6ರಿಂದ ಜೂನ್ 30ರವರೆಗೆ ವಿಸ್ತರಿಸಿ ಎಂದು ಪಂಚಪೀಠಕ್ಕೆ ಕೋರಿಕೊಂಡರು. ಅಸೋಸಿಯೇಷನ್ ಫಾರ್ ಡೆಮೊಕ್ರಟಿಕ್ ರೀರ್ಫಾಮನ್ಸ್ ಪರವಾಗಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರು ಎಸ್‍ಬಿಐ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. +ಎಸ್‍ಬಿಐ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ, ಪ್ರಕ್ರಿಯೆಯ ಅನಾಮಧೇಯ ಸ್ವರೂಪದಿಂದಾಗಿ ವಿಷಯದ ಸೂಕ್ಷ್ಮತೆಯನ್ನು ಉಲ್ಲೇಖಿಸಿ, ಎಲ್ಲಾ ಮಾಹಿತಿಯನ್ನು ಒಟ್ಟುಗೂಡಿಸಲು ಬ್ಯಾಂಕ್‍ಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ದಾನಿಗಳ ವಿವರಗಳನ್ನು ಅನಾಮಧೇಯತೆಗಾಗಿ ಗೊತ್ತುಪಡಿಸಿದ ಶಾಖೆಗಳಲ್ಲಿ ಮುಚ್ಚಿದ ಕವರ್‍ಗಳಲ್ಲಿ ಇರಿಸಲಾಗಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. +ಈ ವೇಳೆ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು, ವಿವರಗಳನ್ನು ಮುಚ್ಚಿದ ಕವರ್‍ನಲ್ಲಿ ಇರಿಸಲಾಗಿದೆ ಮತ್ತು ಮುಂಬೈ ಶಾಖೆಗೆ ಸಲ್ಲಿಸಲಾಗಿದೆ ಎಂದು ನೀವು ಹೇಳುತ್ತೀರಿ. ನಮ್ಮ ನಿರ್ದೇಶನಗಳು ಮಾಹಿತಿಗೆ ಹೊಂದಿಕೆಯಾಗುವುದಿಲ್ಲ. ದಾನಿಗಳ ಸ್ಪಷ್ಟ ವಿವರಗಳನ್ನು ಎಸ್‍ಬಿಐ ಮಾತ್ರ ಬಹಿರಂಗಪಡಿಸಲು ನಾವು ಬಯಸಿದ್ದೇವೆ. ನೀವು ಏಕೆ ಕೋರ್ಟ್ ತೀರ್ಪನ್ನು ಅನುಸರಿಸುತ್ತಿಲ್ಲ? ಎಂದು ಮರುಪ್ರಶ್ನೆ ಮಾಡಿದರು.ನ್ಯಾಯಮೂರ್ತಿ ಜಸ್ಟಿಸ್ ಖನ್ನಾ ಅವರು, ಎಲ್ಲಾ ವಿವರಗಳು ಸೀಲ್ಡ್ ಕವರ್‍ನಲ್ಲಿವೆ ಮತ್ತು ನೀವು ಸೀಲ್ ಮಾಡಿದ ಕವರ್‍ನ್ನು ತೆರೆದು ವಿವರಗಳನ್ನು ನೀಡಬೇಕು ಎಂದು ನಿರ್ದೇಶನ ನೀಡಿದರು. +ತೀರ್ಪಿನ ಹಿನ್ನಲೆ:ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಕಳೆದ ಗುರುವಾರ ಐತಿಹಾಸಿಕ ತೀರ್ಪು ನೀಡಿ, ಇದು ಸಂವಿಧಾನದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿಯ ಹಕ್ಕಿಗೆ ವಿರುದ್ಧವಾದುದು ಎಂದು ಹೇಳಿತ್ತು. ಸರಳವಾಗಿ ಹೇಳುವುದಾದರೆ, ಚುನಾವಣಾ ಬಾಂಡ್ ಎಂದರೆ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಒಂದು ಸಾಧನ. 2017-18ರ ಬಜೆಟ್‍ನಲ್ಲಿ ಇದನ್ನು ಪರಿಚಯಿಸಲಾಗಿತ್ತು. +ಚುನಾವಣಾ ಬಾಂಡ್ ಎಂದರೆ ಪ್ರಾಮ್‍ಸರಿ ನೋಟ್‍ನ ಸ್ವರೂಪದಲ್ಲಿ ನೀಡಲಾದ ಬಾಂಡ್. ಇದರಲ್ಲಿ ಖರೀದಿದಾರ ಅಥವಾ ಪಾವತಿದಾರನ ಹೆಸರು ಇರುವುದಿಲ್ಲ. ಯಾವುದೇ ಮಾಲೀಕತ್ವದ ಮಾಹಿತಿಯನ್ನೂ ದಾಖಲಿಸಿರುವುದಿಲ್ಲ. ಇದನ್ನು ಹೊಂದಿರುವವರು (ಅಂದರೆ ರಾಜಕೀಯ ಪಕ್ಷ) ಇದರ ಮಾಲೀಕರೆಂದು ಪರಿಗಣಿಸಲಾಗುತ್ತದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ್ ವಿವರಿಸುತ್ತದೆ. +ಈ ಯೋಜನೆಯಡಿ ದೇಶದ ಪ್ರಜೆಗಳು ಅಥವಾ ಕಂಪನಿಗಳು 1 ಸಾವಿರ, 10 ಸಾವಿರ, 1 ಲಕ್ಷ, 10 ಲಕ್ಷ ರೂ. ಹಾಗೂ 1 ಕೋಟಿಯ ಅಪವರ್ತನದಲ್ಲಿ ರಾಜಕೀಯ ಪಕ್ಷಗಳಿಂದ ಬಾಂಡ್‍ಗಳನ್ನು ಖರೀದಿ ಮಾಡಬಹುದಿತ್ತು.ಚುನಾವಣಾ ಆಯೋಗದ ದತ್ತಾಂಶದ ಪ್ರಕಾರ, 2018 ಹಾಗೂ ಮಾರ್ಚ್ 2023ರ ನಡುವೆ ಈ ಬಾಂಡ್‍ಗಳ ಮೂಲಕ ಸಲ್ಲಿಸಲಾದ ದೇಣಿಗೆಯ ಶೇ.57ರಷ್ಟು ಬಿಜೆಪಿ ಪಾಲಾಗಿದೆ. 5,271 ಕೋಟಿಯಷ್ಟು ದೇಣಿಗೆ ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ಹರಿದುಬಂದಿದೆ. ಎರಡನೇ ಸ್ಥಾನದಲ್ಲಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 952 ಕೋಟಿ ದೇಣಿಗೆ ಈ ಮೂಲಕ ಪಡೆದಿದೆ. +ಕೋರ್ಟ್ ಕದ ತಟ್ಟಿದ್ದು ಯಾರು?:ಚುನಾವಣಾ ಬಾಂಡ್ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಎ.ಡಿ.ಆರ್. ಹಾಗೂ ಕಾಮನ್ ಕಾಸ್ ಎನ್ನುವ ಎರಡು ಸೇವಾ ಸಂಸ್ಥೆಗಳು ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸ್‍ವಾದ) ಸುಪ್ರೀಂ ಕೋರ್ಟ್‍ನಲ್ಲಿ 2018ರಲ್ಲಿ ಎರಡು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದವು. \ No newline at end of file diff --git a/eesanje/url_47_148_9.txt b/eesanje/url_47_148_9.txt new file mode 100644 index 0000000000000000000000000000000000000000..ec87c15faf83b32a5c6d5c83df2a9ad11d81a4ce --- /dev/null +++ b/eesanje/url_47_148_9.txt @@ -0,0 +1,8 @@ +ದೇಶೀಯ - ಸೆಲ್ ಥೆರಪಿಯಿಂದ ಕ್ಯಾನ್ಸರ್ ಮುಕ್ತನಾದ ಮೊದಲ ರೋಗಿ +ನವದೆಹಲಿ,ಮಾ.11- ಕೆಲವು ತಿಂಗಳುಗಳ ಹಿಂದೆ ಭಾರತದ ಔಷಧ ನಿಯಂತ್ರಕ ಸಂಸ್ಥೆಯಾದ ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ () - ಸೆಲ್ ಥೆರಪಿಯ ವಾಣಿಜ್ಯದ ಬಳಕೆಗೆ ಅನುಮೋದನೆ ನೀಡಿತು. ಈ ಚಿಕಿತ್ಸೆಯು ಕ್ಯಾನ್ಸರ್ ವಿರುದ್ಧ ಹೋರಾಡಲು ರೋಗಿಯ ರೋಗ ಪ್ರತಿರೋಧಕ ಶಕ್ತಿಯ ವಂಶವಾಹಿ ಪುನಶ್ಚೇತನಕ್ಕೆ ಒತ್ತು ನೀಡುತ್ತದೆ. ಇಂದು ಈ ಚಿಕಿತ್ಸೆ ಅನೇಕ ರೋಗಿಗಳ ಪಾಲಿಗೆ ಜೀವರಕ್ಷಕವಾಗಿ ಪರಿಣಮಿಸಿದೆ. +ಈ ಚಿಕಿತ್ಸೆಯಿಂದ ಪ್ರಾಣ ಉಳಿಸಿಕೊಂಡವರಲ್ಲಿ ದೆಹಲಿ ಮೂಲದ ಗ್ಯಾಸ್ಟ್ರೊಎಂಟರಾಲಜಿಸ್ಟ್, ಭಾರತೀಯ ಸೇನೆಯಲ್ಲಿ 28 ವರ್ಷಗಳಿಗೂ ಅಧಿಕ ಸೇವಾನುಭವ ಹೊಂದಿರುವ ಡಾ(ಕರ್ನಲ್) ವಿ.ಕೆ.ಗುಪ್ತಾ ಅವರು ಸೇರಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. +ಅವರು ಕೇವಲ 42 ಲಕ್ಷ ರೂ.ಗಳು ಅಥವಾ 50,000 ಅಮೆರಿಕನ್ ಡಾಲರ್‍ಗಳನ್ನು ಪಾವತಿಸಿ ಈ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೊರದೇಶಗಳಲ್ಲಿ ಈ ಚಿಕಿತ್ಸೆಗೆ 4 ಕೋಟಿ ರೂ.ಗಳು ಅಥವಾ 480,000 ಅಮೆರಿಕನ್ ಡಾಲರ್‍ಗಳಷ್ಟು ವೆಚ್ಚವಾಗುತ್ತದೆ. ಡಾ.ಗುಪ್ತಾ ಅವರು ಚಿಕಿತ್ಸೆ ಪಡೆದ ಟಾಟಾ ಮೆಮೋರಿಯಲ್ ಆಸ್ಪತ್ರೆಯ ವೈದ್ಯರು ಈಗ ಗುಪ್ತಾ ಅವರು ಕ್ಯಾನ್ಸರ್ ಕೋಶಗಳಿಂದ ಮುಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಗುಪ್ತಾ ಅವರು ಹೀಗೆ ಈ ಚಿಕಿತ್ಸೆಯಿಂದ ಪೂರ್ಣ ಗುಣಮುಖರಾದ ಮೊದಲ ರೋಗಿ. ಕೆಲವು ವರ್ಷಗಳ ಹಿಂದೆ ಇದು ಸಾಧ್ಯವಾದೀತೆಂದು ಅವರು ಕನಸನ್ನಷ್ಟೇ ಕಾಣಬಹುದಾಗಿತ್ತು. +ಈ ಚಿಕಿತ್ಸೆ ಜೀವಮಾನ ಪೂರ್ತಿ ರಕ್ಷಣೆ ಕೊಡುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲವಾದರೂ ರೋಗಿ ಈಗ ಕ್ಯಾನ್ಸರ್ ಸೆಲ್‍ಗಳಿಂದ ಮುಕ್ತರಾಗಿದ್ದಾರೆ ಎಂದು ಡಾ.ಗುಪ್ತಾ ಅವರಿಗೆ ಈ ಚಿಕಿತ್ಸೆ ನೀಡಿದ ಹೆಮಟೋ ಆಂಕಾಲಜಿಸ್ಟ್ ಮತ್ತು ಟಾಟಾ ಮೆಮೋರಿಯಲ್ ಸೆಂಟರ್ ನ ಅಡ್ವಾನ್ಸ್ಡ್ ಸೆಂಟರ್ ಫಾರ್ ಟ್ರೀಟ್‍ಮೆಂಟ್, ರಿಸರ್ಚ್ ಆ್ಯಂಡ್ ಎಜುಕೇಷನ್ ಇನ್ ಕ್ಯಾನ್ಸರ್(ಎಸಿಟಿಆರ್‍ಇಸಿ)ನ ಡಾ.ಹಸಮುಖ್ ಜೈನ್ ಅವರು ಹೇಳಿದ್ದಾರೆ. +ಹೀಗಿದ್ದರೂ ಚಿಕಿತ್ಸೆಯ ಯಶಸ್ಸಿನ ದರದ ಕುರಿತು ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದಾಗ್ಯೂ ಆರಂಭಿಕ ಶೋಧನೆಗಳು, ರೋಗಿಗಳು ಬದುಕುಳಿಯುವ ಉತ್ತಮ ಸಾಧ್ಯತೆಗಳು ಮತ್ತು ರೋಗ ಮರುಕಳಿಸುವ ಕಡಿಮೆ ಸಂಭವವನೀಯತೆಯನ್ನು ತೋರಿಸಿವೆ ಎಂದು ವೈದ್ಯ ಜೈನ್ ವಿವರಿಸಿದ್ದಾರೆ. +ಆರಂಭಿಕ ಹಂತದ ಕ್ಯಾನ್ಸರ್ ರೋಗಿಗಳಿಗೆ ರೋಗ ಉಲ್ಬಣವಾಗದಂತೆ ಈ ಚಿಕಿತ್ಸೆ ತಡೆಯಬಲ್ಲದು ಎಂದು ಅವರು ನುಡಿದಿದ್ದಾರೆ. ರೋಗಿಗಳಲ್ಲಿ ರೋಗ ಮರುಕಳಿಕೆಯ ಸಾಧ್ಯತೆಗಳನ್ನು ಗುರುತಿಸಲು ಡಾ.ಜೈನ್ ಪ್ರತಿಪಾದಿಸಿದ್ದಾರೆ. ಎನ್‍ಇಎಕ್ಸ್ ಸಿಆರ್‍ಟಿ19 ಎಂಬ ಈ ಚಿಕಿತ್ಸೆಯನ್ನು ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಡೆಕ್ನಾಲಜಿ ಬಾಂಬ್(ಐಐ-ಟಿಬಿ) ಮತ್ತು ಟಾಟಾ ಮೆಮೋರಿಯಲ್ ಹಾಸ್ಪಿಟಲ್‍ನ ಆಶ್ರಯದಲ್ಲಿರುವ ಇಮ್ಯುನೋ ಆ್ಯಕ್ಟ್ ಎಂಬ ಸಂಸ್ಥೆ ಅಭಿವೃದ್ಧಿಪಡಿಸಿದೆ. ಇದು ಬಿ-ಸೆಲ್ ಕ್ಯಾನ್ಸರ್‍ಗಳು ವಿಶೇಷವಾಗಿ ಲ್ಯೂಕೇಮಿಯಾ ಮತ್ತು ಲಿಂಫೋಮಾಗಳಂತಹ ರೋಗ ಪ್ರತಿರೋಧಕ ವ್ಯವಸ್ಥೆಯಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್‍ಗಳ ಚಿಕಿತ್ಸೆಯಲ್ಲಿ ಸಹಕಾರಿಯಾಗಲಿದೆ. +ಸಿಡಿಎಸ್‍ಸಿಒ 2023ರ ಅಕ್ಟೋಬರ್‍ನಲ್ಲಿ ಇದರ ವಾಣಿಜ್ಯ ಬಳಕೆಗೆ ಅನುಮೋದನೆ ನೀಡಿತು. ಇಂದು ಈ ಚಿಕಿತ್ಸೆ ಭಾರತದ 10ಕ್ಕೂ ಅಕ ನಗರಗಳ 30ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಲಭ್ಯ. ಬಿ-ಸೆಲ್ ಕ್ಯಾನ್ಸರ್‍ಗಳಿಂದ ಬಳಲುತ್ತಿರುವ 15 ವರ್ಷಕ್ಕಿಂತ ಹೆಚ್ಚು ವಯಸ್ಸಿನ ರೋಗಿಗಳು ಈ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ ಎಂದು ಡಾ.ಜೈನ್ ನುಡಿದಿದ್ದಾರೆ. \ No newline at end of file diff --git a/eesanje/url_47_149_1.txt b/eesanje/url_47_149_1.txt new file mode 100644 index 0000000000000000000000000000000000000000..8c6635fdc4deba991e86db559f02192ff5b4d305 --- /dev/null +++ b/eesanje/url_47_149_1.txt @@ -0,0 +1,5 @@ +ತಂದೆಯಂತೆ ದೇಶ ಕಾಯಲು ಸಿದ್ಧಳಾದ ಇನಾಯತ್ ವತ್ಸ್ +ನವದೆಹಲಿ,ಮಾ.11- ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದ ಯೋಧನ ಮಗಳು 20 ವರ್ಷಗಳ ನಂತರ ಇದೀಗ ತಂದೆಯಂತೆ ದೇಶಸೇವೆಗಾಗಿ ಸಿದ್ದರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹತ್ಯೆಯಾಗಿದ್ದ ಮೇಜರ್ ನವನೀತ್ ವತ್ಸ್ ಅವರ ಪುತ್ರಿ ಇನಾಯತ್ ವತ್ಸ್ ಅವರು 20 ವರ್ಷಗಳ ನಂತರ ಲೆಫ್ಟಿನೆಂಟ್ ಆಗಿ ಭಾರತೀಯ ಸೇನೆಗೆ ನಿಯೋಜನೆಗೊಂಡಿದ್ದಾರೆ. +ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದ ನಂತರ ಮಿಲಿಟರಿ ಇಂಟೆಲಿಜೆನ್ಸ ಕಾಪ್ರ್ಸ್‍ನಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡರು. ಪಾಸಿಂಗ್ ಔಟ್ ಪರೇಡ್‍ನಲ್ಲಿ, ಇನಾಯತ್ ಅವರು ತನ್ನ ತಂದೆ ನಾನು ಕೇವಲ ಮೂರು ವರ್ಷದವಳಿದ್ದಾಗ ಹಾಕಿದ್ದ ಆಲಿವ್ ಹಸಿರು ಬಣ್ಣದ ಸಮವಸವನ್ನೇ ಇದೀಗ ದೇಶ ಕಾಯುವ ಯೋಧರಾಗಿ ಅದೇ ರೀತಿಯ ಸಮವಸ್ತ್ರ ಧರಿಸಿದ್ದಾರೆ. +ಆರ್ಮಿ ಡಾಟರ್ ಲೆಫ್ಟಿನೆಂಟ್ ಇನಾಯತ್ ವತ್ಸ್ ಎಂದು ಭಾರತೀಯ ಸೇನೆಯು ಎಕ್ಸ್‍ನಲ್ಲಿ ಹೇಳಿದೆ ಮತ್ತು ಸಮವಸದಲ್ಲಿರುವ ಅವರ ಚಿತ್ರವನ್ನು ಪೋಸ್ಟ್ ಮಾಡಿದೆ. ಚಿತ್ರದಲ್ಲಿ ಆಕೆಯ ತಾಯಿ ಶಿವಾನಿ ವತ್ಸ್ ಕೂಡ ಆಕೆಯ ಪಕ್ಕದಲ್ಲಿ ನಿಂತಿರುವುದು ಕಂಡುಬಂದಿದೆ. ಮೇಜರ್ ನವನೀತ್ ವತ್ಸ್ ಅವರು ಚಂಡೀಗಢದಿಂದ ಬಂದವರು ಮತ್ತು 3 ಗೂರ್ಖಾ ರೈಫಲ್ಸ್ ರೆಜಿಮೆಂಟ್‍ನ ನಾಲ್ಕನೇ ಬೆಟಾಲಿಯನ್‍ಗೆ ನಿಯೋಜಿಸಲ್ಪಟ್ಟಿದ್ದರು. ನವೆಂಬರ್ 2003 ರಲ್ಲಿ ಶ್ರೂನಗರದಲ್ಲಿ ನಡೆದ ಪ್ರತಿ-ಬಂಡಾಯ ಕಾರ್ಯಾಚರಣೆಯಲ್ಲಿ ಅವರು ಕೊಲ್ಲಲ್ಪಟ್ಟರು. ಅವರ ಶೌರ್ಯ ಮತ್ತು ಅತ್ಯುನ್ನತ ತ್ಯಾಗಕ್ಕಾಗಿ ಅವರಿಗೆ ಸೇನಾ ಪದಕ ಎಂಬ ಶೌರ್ಯ ಪ್ರಶಸ್ತಿಯನ್ನು ನೀಡಲಾಗಿತ್ತು. +ಇನಾಯತ್ ವತ್ಸ್ ಅವರು ದೆಹಲಿ ವಿಶ್ವವಿದ್ಯಾಲಯದ ಲೇಡಿ ಶ್ರೀ ರಾಮ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಅವರು ಏಪ್ರಿಲ್ 2023 ರಲ್ಲಿ ಚೆನ್ನೈನಲ್ಲಿರುವ ಅಧಿಕಾರಿಗಳ ತರಬೇತಿ ಅಕಾಡೆಮಿಗೆ ಸೇರುವ ಮೊದಲು ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನಲ್ಲಿ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದರು. \ No newline at end of file diff --git a/eesanje/url_47_149_10.txt b/eesanje/url_47_149_10.txt new file mode 100644 index 0000000000000000000000000000000000000000..3f6488d83008cbcae5ea146b8e305ff90950832f --- /dev/null +++ b/eesanje/url_47_149_10.txt @@ -0,0 +1,4 @@ +ಕಾಶಿ ವಿಶ್ವನಾಥ ದೇಗುಲಕ್ಕೆ ಮೋದಿ ಭೇಟಿ +ವಾರಣಾಸಿ, ಮಾ.10- ವಿಶ್ವ ಪ್ರಸಿದ್ದ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರೆ ನನಗೆ ಯಾವಗಲೂ ಹೆಚ್ಚಿನ ತೃಪ್ತಿ ಸಿಗುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ತಿಳಿಸಿದ್ದಾರೆ. ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿದ ಒಂದು ದಿನದ ನಂತರ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಪುರಾತನ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸುವುದು ನನಗೆ ಯಾವಾಗಲೂ ಹೆಚ್ಚಿನ ತೃಪ್ತಿ ನೀಡುತ್ತದೆ ಎಂದಿದ್ದಾರೆ. +ವಾರಣಾಸಿಯ ಭವ್ಯವಾದ ಮತ್ತು ದಿವ್ಯವಾದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮನಸ್ಸಿಗೆ ಯಾವಾಗಲೂ ಹೆಚ್ಚಿನ ತೃಪ್ತಿ ಸಿಗುತ್ತದೆ. ದೇಶಾದ್ಯಂತ ನನ್ನ ಕುಟುಂಬದ ಸದಸ್ಯರ ಸಂತೋಷ, ಅದೃಷ್ಟ ಮತ್ತು ಆರೋಗ್ಯಕ್ಕಾಗಿ ಬಾಬಾ ವಿಶ್ವನಾಥ್ ಅವರನ್ನು ಪ್ರಾರ್ಥಿಸಿದೆ. ಹರ್ ಹರ್ ಮಹಾದೇವ್ ಎಂದು ಹೇಳಿದ್ದಾರೆ. +ನಿನ್ನೆ ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿದ ವೀಡಿಯೊವನ್ನು ಸಹ ಹಂಚಿಕೊಂಡಿದ್ದು, ಬಿಜೆಪಿ ಅವರನ್ನು ಮೂರನೇ ಬಾರಿಗೆ ಕ್ಷೇತ್ರದಿಂದ ಕಣಕ್ಕಿಳಿಸಿದ ಕೆಲವು ದಿನಗಳ ನಂತರ ನಿನ್ನೆ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರಕ್ಕೆ ಆಗಮಿಸಿದ ವೇಳೆ 28 ಕಿ.ಮೀ ಉದ್ದದ ರೋಡ್ ಶೋ ಕೂಡ ನಡೆಸಿದ್ದಾರೆ. \ No newline at end of file diff --git a/eesanje/url_47_149_11.txt b/eesanje/url_47_149_11.txt new file mode 100644 index 0000000000000000000000000000000000000000..b1f5a52d43f77d3ee5f16c39dee9ee1b6063bb77 --- /dev/null +++ b/eesanje/url_47_149_11.txt @@ -0,0 +1,10 @@ +ಕೇರಳದಲ್ಲಿ ಖಾತೆ ತೆರೆಯಲು ಬಿಜೆಪಿ ಹರಸಾಹಸ +ತಿರುವನಂತಪುರಂ, ಮಾ.10 (ಪಿಟಿಐ) ಮುಂಬರುವ ಲೋಕಸಭೆ ಚುನಾವಣೆಗೆ ಕೇರಳ ರಾಜ್ಯ ಸಜ್ಜಾಗುತ್ತಿರುವಂತೆಯೇ ಬಿಜೆಪಿ ತನ್ನ ಚುನಾವಣಾ ಸೋಲಿನ ಸರಪಳಿಯಿಂದ ಹೊರಬರಲು ಯತ್ನಿಸುತ್ತಿದೆ. ನಿರ್ದಿಷ್ಟವಾಗಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಸಮುದಾಯದ ಕಡೆಗೆ ಗಮನಹರಿಸುವುದರೊಂದಿಗೆ, ಪಕ್ಷವು ಕೇರಳ ರಾಜ್ಯದಲ್ಲಿ ತನ್ನ ನೆಲೆಯನ್ನು ಭದ್ರಪಡಿಸುವ ಗುರಿಯನ್ನು ಹೊಂದಿದೆ. +ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಜನಸಂಖ್ಯೆಯ ಗಮನಾರ್ಹ ಭಾಗವನ್ನು ಹೊಂದಿರುವ ಕೇರಳದ ಜನಸಂಖ್ಯಾ ಭೂದೃಶ್ಯವು ಹಿಂದೂ-ಪರ ಪಕ್ಷವೆಂದು ಗ್ರಹಿಸಲ್ಪಟ್ಟಿರುವ ಬಿಜೆಪಿಗೆ ಅಸಾಧಾರಣ ಸವಾಲನ್ನು ಒಡ್ಡಿದೆ. ಆದಾಗ್ಯೂ, ವೈವಿಧ್ಯಮಯ ಮತದಾರರ ಭಾಗಗಳಿಗೆ ಮನವಿ ಮಾಡುವ ಪ್ರಯತ್ನದಲ್ಲಿ ಪಕ್ಷವು ಯಾವುದೇ ಪ್ರಯತ್ನವನ್ನು ನಿಲ್ಲಿಸಿಲ್ಲ. +ಬಿಜೆಪಿಯು ಪ್ರಮುಖ ಕ್ರಿಶ್ಚಿಯನ್ ವ್ಯಕ್ತಿಗಳಾದ ಕಾಂಗ್ರೆಸ್ ನಾಯಕ ಎ ಕೆ ಆಂಟನಿ ಅವರ ಪುತ್ರ ಅನಿಲ್ ಕೆ ಆಂಟನಿ ಮತ್ತು ಕೇರಳದ ಅನುಭವಿ ರಾಜಕಾರಣಿ ಪಿ ಸಿ ಜಾರ್ಜ್ ಅವರನ್ನು ಪಕ್ಷಕ್ಕೆ ಸೆಳಿದುಕೊಂಡಿದೆ. ಹೆಚ್ಚುವರಿಯಾಗಿ, ಪಕ್ಷವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕೇರಳಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ ಮಾತ್ರವಲ್ಲ ರಾಜ್ಯದ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾರ್ಯಗಳನ್ನು ಘೋಷಣೆ ಮಾಡುತ್ತಿದ್ದಾರೆ. +ತನ್ನ ಚುನಾವಣಾ ಭವಿಷ್ಯವನ್ನು ಬಲಪಡಿಸಲು, ಬಿಜೆಪಿಯು ಇಬ್ಬರು ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಮತ್ತು ವಿ ಮುರಳೀಧರನ್ ಅವರನ್ನು ಜನಪ್ರಿಯ ನಟ ಕಮ್ ರಾಜಕಾರಣಿ ಸುರೇಶ್ ಗೋಪಿ ಜೊತೆಗೆ ಕಾರ್ಯತಂತ್ರವಾಗಿ ಕಣಕ್ಕಿಳಿಸಿದೆ. +ಮೋದಿ ಗ್ಯಾರಂಟಿ ಎಂಬ ಪಕ್ಷದ ಪ್ರಚಾರದ ಘೋಷಣೆಯು ಪ್ರಧಾನಿಯವರ ಜನಪ್ರಿಯತೆ ಮತ್ತು ನಾಯಕತ್ವದ ಮೇಲೆ ಅದರ ಅವಲಂಬನೆಯನ್ನು ಎತ್ತಿ ತೋರಿಸುತ್ತದೆ. ಕೇರಳದಲ್ಲಿ ಈ ಬಾರಿ ಬಿಜೆಪಿಯ ಚುನಾವಣಾ ಪ್ರಚಾರದ ಪ್ರಮುಖ ಕ್ಯಾಚ್-ಪ್ರೋಸ್ ಆಗಿರುವುದು ಮೋದಿ ಅವರ ಗ್ಯಾರಂಟಿ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. +ಬಿಜೆಪಿ ತನ್ನ ಕಾರ್ಯತಂತ್ರವು ಯೋಜಿಸಿದಂತೆ ನಡೆಯುತ್ತದೆ ಎಂದು ವಿಶ್ವಾಸ ಹೊಂದಿದ್ದರೂ, ರಾಜ್ಯ ರಾಜಕೀಯದಲ್ಲಿ ಎರಡು ಪ್ರಮುಖ ಸಾಂಪ್ರದಾಯಿಕ ಆಟಗಾರರು– ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ ಕೇಸರಿ ಪಕ್ಷವನ್ನು ಸುರಕ್ಷಿತವಾಗಿರಿಸಲು ಸಹಾಯ ಮಾಡುವುದಿಲ್ಲ ಎಂದು ನಂಬಿದ್ದಾರೆ. ಎಡಪಕ್ಷಗಳು ಮತ್ತು ಕಾಂಗ್ರೆಸ್ ಎತ್ತಿರುವ ಟೀಕೆ ಮತ್ತು ಅನುಮಾನಗಳನ್ನು ಕಡೆಗಣಿಸಿದ ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಅವರು, ಕೇರಳದ ಜನರಿಗೆ ಇನ್ನು ಮುಂದೆ ಅವರಿಬ್ಬರ ಮೇಲೆ ನಂಬಿಕೆ ಇಲ್ಲ, ಅದಕ್ಕಾಗಿಯೇ ಅವರು ಕೇಸರಿ ಪಕ್ಷಕ್ಕೆ ಮತ ಹಾಕುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. +ಇತ್ತೀಚಿನ ಕೇರಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಬಹಿರಂಗಪಡಿಸಿದಂತೆ, ರಾಜ್ಯದಲ್ಲಿ ಅತಿಕ್ರಮಣ ಮಾಡುವ ಮತ್ತು ಎರಡಂಕಿಯ ಸ್ಥಾನಗಳನ್ನು ಭದ್ರಪಡಿಸುವ ಪಕ್ಷದ ಬಯಕೆಯನ್ನು ಈಡೇರಿಸಲು, ಬಿಜೆಪಿಯು ಕೆಲಸಕ್ಕೆ ಸೂಕ್ತ ಮತ್ತು ಸರಿಹೊಂದಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಕುರಿಯನ್ ಹೇಳಿದರು. +ಕೇರಳದಿಂದ ಸ್ಪರ್ಧಿಸಲು ಅವರು ಹೆಚ್ಚು ಫಿಟ್ ಆಗಿದ್ದಾರೆ, ಸೂಕ್ತ ಅಭ್ಯರ್ಥಿಗಳು ಎಂದು ನಾವು ಭಾವಿಸಿದ್ದೇವೆ ಎಂದು ಅವರು ಪಿಟಿಐಗೆ ಪ್ರತಿಕ್ರಿಯಿಸಿದ ಅವರು ಕೇಂದ್ರ ರಾಜ್ಯ ಸಚಿವರಾದ ಮುರಳೀಧರನ್ ಮತ್ತು ರಾಜೀವ್ ಚಂದ್ರಶೇರ್ಖ, ಗೋಪಿ ಮತ್ತು ಅನಿಲ್ ಅವರನ್ನು ಏಕೆ ಕಣಕ್ಕಿಳಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದರು. +ಗೋಪಿ, ಮುರಳೀಧರನ್ ಮತ್ತು ಚಂದ್ರಶೇಖರ್ ಕ್ರಮವಾಗಿ ತ್ರಿಶೂರ್, ಅಟ್ಟಿಂಗಲ್ ಮತ್ತು ತಿರುವನಂತಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅನಿಲ್ ಆಂಟೋನಿ ಪತ್ತನಂತಿಟ್ಟ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ತ್ರಿಶೂರ್‍ನಿಂದ ಗೋಪಿ ಅವರನ್ನು ಏಕೆ ನಾಮನಿರ್ದೇಶನ ಮಾಡಲಾಗಿದೆ ಎಂದು ವಿವರಿಸಿದ ಕುರಿಯನ್ ಅವರು, ಕಳೆದ ಬಾರಿ ಆ ಕ್ಷೇತ್ರದಿಂದ ಸ್ಪರ್ಧಿಸಿದಾಗ ಪಕ್ಷದ ಮತ ಹಂಚಿಕೆಯನ್ನು ಮೂರು ಪಟ್ಟು ಹೆಚ್ಚಿಸುವಲ್ಲಿ ಯಶಸ್ವಿಯಾಗಿದ್ದರು ಎಂದಿದ್ದಾರೆ. \ No newline at end of file diff --git a/eesanje/url_47_149_12.txt b/eesanje/url_47_149_12.txt new file mode 100644 index 0000000000000000000000000000000000000000..6be4c346e4c9ad39b19c9a3b00dbe777637265ef --- /dev/null +++ b/eesanje/url_47_149_12.txt @@ -0,0 +1,7 @@ +ಐತಿಹಾಸಿಕ ಸ್ವರಾಜ್ ಆಶ್ರಮಕ್ಕೆ ರಾಹುಲ್‍ಗಾಂಧಿ ಭೇಟಿ +ಸೂರತ್, ಮಾ 10 (ಪಿಟಿಐ) ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ತನ್ನ ಗುಜರಾತ್ ಪ್ರಯಾಣದ ಕೊನೆಯ ಹಂತವನ್ನು ಪ್ರವೇಶಿಸಿದ್ದು, ಅದು ಸೂರತ್‍ನ ಬಾರ್ಡೋಲಿಗೆ ತೆರಳಿ ಅಲ್ಲಿ ರಾಹುಲ್ ಅವರು ಐತಿಹಾಸಿಕ ಸ್ವರಾಜ್ ಆಶ್ರಮಕ್ಕೆ ಭೇಟಿ ನೀಡಿದರು. +ಆಶ್ರಮವನ್ನು 1922 ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತಮ್ಮ ನಿವಾಸವಾಗಿ ನಿರ್ಮಿಸಿದರು ಮತ್ತು ಆಗಿನ ಬ್ರಿಟಿಷ್ ವಸಾಹತುಶಾಹಿ ಸರ್ಕಾರದಿಂದ ರೈತರ ಮೇಲೆ ಹೆಚ್ಚಿದ ತೆರಿಗೆಯ ವಿರುದ್ಧ ರೈತರ ಆಂದೋಲನ ಮತ್ತು ರಾಷ್ಟ್ರೀಯತಾವಾದಿ ಚಳುವಳಿಯಾದ ಬಾರ್ಡೋಲಿ ಸತ್ಯಾಗ್ರಹವನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವ ಕೇಂದ್ರವಾಗಿ ಕಾರ್ಯನಿರ್ವಹಿಸಿತು. +1936 ಮತ್ತು 1941ರಲ್ಲಿ ಮಹಾತ್ಮಾ ಗಾಂಧಿ ಕೂಡ ಒಂದು ತಿಂಗಳ ಕಾಲ ಆಶ್ರಮದಲ್ಲಿ ತಂಗಿದ್ದರು.ಇಂದು ಭಾರತ್ ಜೋಡೋ ನ್ಯಾಯ್ ಯಾತ್ರೆಯ 57 ನೇ ದಿನ ಮತ್ತು ಗುಜರಾತ್‍ನಲ್ಲಿ ಕೊನೆಯ ದಿನ. ನಾವು ಸೂರತ್ ಮತ್ತು ತಾಪಿ ಜಿಲ್ಲೆಗಳ ಮೂಲಕ ಹಾದು ಹೋಗುತ್ತೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದರು. +1909-10ರಲ್ಲಿ ಮಹಾರಾಜ ಸಯಾಜಿರಾವ್ ಗಾಯಕ್ವಾಡ್ ನಿರ್ಮಿಸಿದ ಶತಮಾನದಷ್ಟು ಪುರಾತನ ತೊಟ್ಟಿಯಾದ ಗುಜರಾತ್‍ನ ವಡೋದರಾ ಬಳಿಯ ವಾಧ್ವಾನಾ ಜಲಾಶಯಕ್ಕೆ ಯಾತ್ರೆ ಭೇಟಿ ನೀಡಿತ್ತು ಎಂದು ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಅಂದಿನಿಂದ ಇದು ಚಳಿಗಾಲದಲ್ಲಿ ವಲಸೆ ಹಕ್ಕಿಗಳಿಗೆ ಪ್ರಮುಖ ಆವಾಸಸ್ಥಾನವಾಗಿದೆ. ಪರಿಸರ ವ್ಯವಸ್ಥೆಯಾಗಿ ಅದರ ಪ್ರಾಮುಖ್ಯತೆಯಿಂದಾಗಿ ಇದನ್ನು ಈಗ ರಾಮ್ಸಾರ್ ಸೈಟ್ ಎಂದು ಗೊತ್ತುಪಡಿಸಲಾಗಿದೆ ಎಂದು ಅವರು ಹೇಳಿದರು. +12 ನೇ ಶತಮಾನದಲ್ಲಿ ಸಿದ್ಧರಾಜ್ ಜೈಸಿಂಹನ ಆಳ್ವಿಕೆಯ ಕಾಲದ ಹಿರಾ ಭಾಗೋಲ, ನಗರದ ಕೋಟೆಯ ಪೂರ್ವ ದ್ವಾರವನ್ನು ನಾವು ನೋಡಿದ್ದೇವೆ. ಇದು ಸಂಕೀರ್ಣವಾದ ಕಲ್ಲಿನ ಕೆತ್ತನೆಗಳನ್ನು ಹೊಂದಿರುವ ಭವ್ಯವಾದ ಸ್ಮಾರಕವಾಗಿದೆ. ದುರದೃಷ್ಟವಶಾತ, ಹೆಚ್ಚಿನ ಕೋಟೆಗಳನ್ನು ರಕ್ಷಿಸಲು ಬಳಸಲಾಗಿಲ್ಲ ಎಂದು ರಮೇಶ್ ಪೋಸ್ಟ್‍ನಲ್ಲಿ ತಿಳಿಸಿದ್ದಾರೆ. +ನಿನ್ನೆ ಗುಜರಾತ್‍ನ ನರ್ಮದಾ ಜಿಲ್ಲೆಯ ಕುನ್ವರ್‍ಪಾರಾದಲ್ಲಿ ತಮ್ಮ ಸಾಮೂಹಿಕ ಸಂಪರ್ಕ ಕಾರ್ಯಕ್ರಮದಲ್ಲಿ ದಲಿತ, ಬುಡಕಟ್ಟು ಮತ್ತು ರೈತ ಚಳವಳಿಗಳೊಂದಿಗೆ ಕೆಲಸ ಮಾಡುವ ಸುಮಾರು 70 ನಾಗರಿಕ ಸಮಾಜದ ಮುಖಂಡರೊಂದಿಗೆ ಗಾಂಧಿ ಸಂವಾದ ನಡೆಸಿದರು. ನಂತರ, ಭರೂಚ್ ಜಿಲ್ಲೆಯ ನೇತ್ರಂಗ್‍ನಲ್ಲಿ ತಮ್ಮ ಸಾರ್ವಜನಿಕ ಭಾಷಣದಲ್ಲಿ, ಗಾಂಧಿಯವರು ಜಾತಿ ಗಣತಿಯು ಕ್ರಾಂತಿಕಾರಿ ಹೆಜ್ಜೆಯಾಗಿದ್ದು ಅದು ಭಾರತದ ಸಂಪತ್ತು ಮತ್ತು ಸಂಸ್ಥೆಗಳಲ್ಲಿ ಪ್ರತಿಯೊಬ್ಬರ ಭಾಗವಹಿಸುವಿಕೆಯನ್ನು ಖಚಿತಪಡಿಸುತ್ತದೆ ಮತ್ತು ಶೈಕ್ಷಣಿಕ ಪ್ರವೇಶ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮೇಲಿನ ಶೇ.50ರಷ್ಟು ಮಿತಿಯನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದರು. \ No newline at end of file diff --git a/eesanje/url_47_149_2.txt b/eesanje/url_47_149_2.txt new file mode 100644 index 0000000000000000000000000000000000000000..4c3acbe47cad26da9eb46c8420d4b9eeb40830b0 --- /dev/null +++ b/eesanje/url_47_149_2.txt @@ -0,0 +1,5 @@ +ಹುಚ್ಚ ಎಂದು ಕರೆದ ತಾಯಿಯನ್ನು ಇರಿದುಕೊಂದ ಮಗ +ಗುರುಗ್ರಾಮï,ಮಾ.11- ತನ್ನನ್ನು ಹುಚ್ಚ ಎಂದು ಕರೆದ ತಾಯಿಯನ್ನು ಮಾನಸಿಕ ಅಸ್ವಸ್ಥ ಮಗ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುಗ್ರಾಮ್‍ನಲ್ಲಿ ನಡೆದಿದೆ. ಹೆತ್ತ ಮಗನಿಂದಲೇ ಹತಳಾದ ತಾಯಿಯನ್ನು ರಾನು ಶಾ ಎಂದು ಗುರುತಿಸಲಾಗಿದೆ. 59 ವರ್ಷದ ರಾನು ಶಾ ಅವರು ಪತಿ ಮತ್ತು ಮಗನೊಂದಿಗೆ ಗುರುಗ್ರಾಮ್‍ನ ಸೆಕ್ಟರ್ 48ರಲ್ಲಿರುವ ಐಷಾರಾಮಿ ವಿಪುಲ್ ಗ್ರೀನ್ಸ್ ಅಪಾರ್ಟ್‍ಮೆಂಟ್‍ನಲ್ಲಿ ವಾಸಿಸುತ್ತಿದ್ದರು. +ಆಕೆಯ ಮಗ ಅತ್ರಿಶ್ ಮಾನಸಿಕ ಅಸ್ವಸ್ಥನಾಗಿ ಬಹಳ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಆತ ಪೋಷಕರೊಂದಿಗೆ ಆಗಾಗ್ಗೆ ಜಗಳ ನಡೆಯುತ್ತಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ತಡರಾತ್ರಿ ಅವರ ಫ್ಲ್ಯಾಟ್ ಗೆ ಬೆಂಕಿ ಬಿದ್ದಿರುವುದನ್ನು ನೆರೆಹೊರೆಯವರು ನೋಡಿದ್ದಾರೆ. ಅಗ್ನಿಶಾಮಕ ದಳದವರು ಮತ್ತು ಪೊಲೀಸರನ್ನು ಕರೆಸಲಾಯಿತು. ಅವರು ಬಾಗಿಲು ಒಡೆದರು ಮತ್ತು ರಾನು ಷಾ ಅವರನ್ನು ತೀವ್ರ ಸುಟ್ಟ ಗಾಯಗಳೊಂದಿಗೆ ರಕ್ಷಿಸಿದರು. ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. +ಪ್ರಾಥಮಿಕ ತನಿಖೆಯ ಪ್ರಕಾರ ಅತ್ರಿಶ್ ಆಗಾಗ್ಗೆ ಉದ್ರೇಕಗೊಂಡು ತನ್ನ ತಾಯಿಯ ಮೇಲೆ ಹಲ್ಲೆ ಮಾಡುತ್ತಿದ್ದನು. ನಿನ್ನೆ ನಡೆದ ವಾಗ್ವಾದದ ಸಂದರ್ಭದಲ್ಲಿ ಶಾ ಅವರನ್ನು ಹುಚ್ಚು ಎಂದು ಕರೆದಿದ್ದಾರೆ ಎಂದು ವರದಿಯಾಗಿದೆ. ಇದು 27 ವರ್ಷದ ಯುವಕನನ್ನು ಪ್ರಚೋದಿಸಿತು ಮತ್ತು ಅವನು ಪದೇ ಪದೇ ತನ್ನ ತಾಯಿಗೆ ಇರಿದ. ನಂತರ ಮನೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. +ತನಿಖೆಯನ್ನು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಪೊಲೀಸರು ನಿರ್ಧಾರ ತೆಗೆದುಕೊಳ್ಳುವ ಮೊದಲು ವ್ಯಕ್ತಿಯ ಮಾನಸಿಕ ಆರೋಗ್ಯವನ್ನು ಮೌಲ್ಯಮಾಪನ ಮಾಡಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಯಾಂಕ್ ಗುಪ್ತಾ ಹೇಳಿದ್ದಾರೆ. \ No newline at end of file diff --git a/eesanje/url_47_149_3.txt b/eesanje/url_47_149_3.txt new file mode 100644 index 0000000000000000000000000000000000000000..58c9c832693bdd3884a77b7f10f4abf559c56090 --- /dev/null +++ b/eesanje/url_47_149_3.txt @@ -0,0 +1,4 @@ +ಕೇಂದ್ರ ಸರ್ಕಾರದಿಂದ ಚುನಾವಣಾ ಆಯುಕ್ತರ ನೇಮಕ ಬೇಡ +ನವದೆಹಲಿ,ಮಾ.11- ಖಾಲಿ ಇರುವ ಇಬ್ಬರು ಚುನಾವಣಾ ಆಯುಕ್ತರುಗಳನ್ನು ಕೇಂದ್ರ ಸರ್ಕಾರ ನೇಮಿಸುವುದಕ್ಕೆ ತಡೆ ನೀಡುವಂತೆ ಕಾಂಗ್ರೆಸ್ ಮುಖಂಡರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರೊಬ್ಬರು 2023 ರ ತೀರ್ಪನ್ನು ಉಲ್ಲೇಖಿಸಿ ಸರ್ಕಾರವನ್ನು ಚುನಾವಣಾ ಆಯುಕ್ತರನ್ನು ನೇಮಿಸದಂತೆ ಸೂಚಿಸಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದ್ದಾರೆ. +ಅರುಣ್ ಗೋಯೆಲ್ ಅವರ ಇತ್ತೀಚಿನ ರಾಜೀನಾಮೆ ಮತ್ತು ಕಳೆದ ತಿಂಗಳು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿ ಇವೆ. ಮೂರು ಸದಸ್ಯರ ಭಾರತೀಯ ಚುನಾವಣಾ ಆಯೋಗವು ಈಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರೊಂದಿಗೆ ಮಾತ್ರ ಉಳಿದಿದೆ. ಹೀಗಾಗಿ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ತ್ರಿಸದಸ್ಯ ಸಮಿತಿಯ ಶಿಫರಸಿನ ಮೇರೆಗೆ ರಾಷ್ಟ್ರಪತಿಗಳು ಚುನಾವಣಾ ಆಯುಕ್ತರನ್ನು ನೇಮಿಸುತ್ತಾರೆ. ಕೇಂದ್ರ ಕಾನೂನು ಸಚಿವ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರನ್ನು ಒಳಗೊಂಡಿರುವ ಉನ್ನತಾಧಿಕಾರ ಸಮಿತಿಯು ಮಾರ್ಚ್ 15 ರಂದು ಸಭೆ ಸೇರುವ ನಿರೀಕ್ಷೆಯಿದೆ. +ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ಚುನಾವಣಾ ಆಯುಕ್ತರನ್ನು ನೇಮಿಸಬೇಕು ಎಂದು ತೀರ್ಪು ನೀಡಿದ ಸಂವಿಧಾನ ಪೀಠದ 2023 ರ ಆದೇಶವನ್ನು ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 2023ರ ನಿರ್ಧಾರಕ್ಕೆ ಅನುಗುಣವಾಗಿ ಚುನಾವಣಾ ಆಯೋಗಗಳ ನೇಮಕಕ್ಕೆ ಸುಪ್ರೀಂ ಕೋರ್ಟ್‍ಗೆ ನಿರ್ದೇಶನ ನೀಡುವಂತೆ ಠಾಕೂರ್ ಕೋರಿದ್ದಾರೆ. \ No newline at end of file diff --git a/eesanje/url_47_149_4.txt b/eesanje/url_47_149_4.txt new file mode 100644 index 0000000000000000000000000000000000000000..9aa6bfa36c809f1cbc1c83541d06e792cc4f0243 --- /dev/null +++ b/eesanje/url_47_149_4.txt @@ -0,0 +1,4 @@ +ಕಾರಿಗೆ ಎಸ್‍ಯುವಿ ಡಿಕ್ಕಿ, 6 ಮಂದಿ ದುರ್ಮರಣ +ರೇವಾರಿ, ಮಾ 11 (ಪಿಟಿಐ) ಹರಿಯಾಣದಲ್ಲಿ ಎಸ್‍ಯುವಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಕಾರಿನಲ್ಲಿದ್ದವರು ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಹಿಂತಿರುಗುತ್ತಿದ್ದಾಗ ಮಸಾನಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. +ವಾಪಸ್ ಬರುವಾಗ ಕಾರಿನ ಟೈರ್ ಪಂಕ್ಚರ್ ಆಯಿತು. ಅಷ್ಟರಲ್ಲಿ ಹಿಂದಿನಿಂದ ಎಸ್‍ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿಗಳಾದ ರೋಶ್ನಿ (58), ನೀಲಂ (54), ಪೂನಂ ಜೈನ್ (50) ಮತ್ತು ಶಿಖಾ (40) ಎಂದು ಗುರುತಿಸಲಾಗಿದೆ. ಹಿಮಾಚಲ ಪ್ರದೇಶದ ನಿವಾಸಿ ಚಾಲಕ ವಿಜಯ್ (40) ಮತ್ತು ಇಲ್ಲಿನ ಖರ್ಖರ ಗ್ರಾಮದ ನಿವಾಸಿ ಸುನೀಲ್ (24) ಎಂದು ಗುರುತಿಸಲಾಗಿದೆ. +ಗಾಯಾಳುಗಳನ್ನು ರೆವಾರಿ ಮತ್ತು ಗುರುಗ್ರಾಮ್‍ನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_149_5.txt b/eesanje/url_47_149_5.txt new file mode 100644 index 0000000000000000000000000000000000000000..aea605015cb71575b50224f21c7809a98c5823f2 --- /dev/null +++ b/eesanje/url_47_149_5.txt @@ -0,0 +1,4 @@ +ಮಾ.22ಕ್ಕೆ ಜೆಎನ್‍ಯು ವಿದ್ಯಾರ್ಥಿ ಸಂಘಕ್ಕೆ ಚುನಾವಣೆ +ನವದೆಹಲಿ, ಮಾ.11 (ಪಿಟಿಐ) ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‍ಯು) ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಮಾರ್ಚ್ 22 ರಂದು ನಡೆಸಲಾಗುವುದು ಮತ್ತು ಮಾರ್ಚ್ 24 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಜೆಎನ್‍ಯುಎಸ್‍ಯು) ಚುನಾವಣೆಗಳು ಕೊನೆಯದಾಗಿ 2019 ರಲ್ಲಿ ನಡೆದಿದ್ದವು. +ಚುನಾವಣೆಯ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಹೊಂದಿರುವ ಜೆಎನ್‍ಯುನ ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ತಾತ್ಕಾಲಿಕ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಮಾರ್ಚ್ 14 ರಿಂದ ವಿದ್ಯಾರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದು ಮತ್ತು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾರ್ಚ್ 16 ರಂದು ಪ್ರದರ್ಶಿಸಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. +ಮಾರ್ಚ್ 20 ರಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸಭೆ ನಡೆಯಲಿದೆ, ನಂತರ ಅಭ್ಯರ್ಥಿಗಳು ಇತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅಧ್ಯಕ್ಷೀಯ ಚರ್ಚೆಯನ್ನು ನಡೆಸುತ್ತಾರೆ. ಮಾರ್ಚ್ 22 ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮಾರ್ಚ್ 24 ರಂದು ನಡೆಯಲಿದೆ, ನಂತರ ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಸೂಚನೆ ಹೊರಡಿಸಲಾಗಿದೆ. \ No newline at end of file diff --git a/eesanje/url_47_149_6.txt b/eesanje/url_47_149_6.txt new file mode 100644 index 0000000000000000000000000000000000000000..a2ada3450e66c40e11374a6e27485d8b8da95d35 --- /dev/null +++ b/eesanje/url_47_149_6.txt @@ -0,0 +1,5 @@ +ಅನಂತಕುಮಾರ್ ಹೆಗಡೆ ಹೇಳಿಕೆಗೆ ಚಿದಂಬರಂ ಟೀಕೆ +ನವದೆಹಲಿ, ಮಾ.11 (ಪಿಟಿಐ) ಬಿಜೆಪಿ-ಆರ್‍ಎಸ್‍ಎಸ್ ಅಜೆಂಡಾ ಪ್ರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದರೆ ಸಂಸದೀಯ ಪ್ರಜಾಪ್ರಭುತ್ವ, ಫೆಡರಲಿಸಂ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಇಂಗ್ಲಿಷ್ ಒಂದೇ ಆಗಿರುವುದು ಕೊನೆಗೊಳ್ಳುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಹೇಳಿದ್ದಾರೆ. ಸಂವಿಧಾನವನ್ನು ತಿದ್ದುಪಡಿ ಮಾಡಲು ತಮ್ಮ ಪಕ್ಷಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ಚಿದಂಬರಂ ಈ ಪ್ರತಿಕ್ರಿಯೆ ನೀಡಿದ್ದಾರೆ. +ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ ಚಿದಂಬರಂ ಅವರು, ಸಂವಿಧಾನವನ್ನು ತಿದ್ದುಪಡಿ ಮಾಡುವ ಬಿಜೆಪಿಯ ಉದ್ದೇಶವು ಎಂದಿಗೂ ರಹಸ್ಯವಾಗಿರಲಿಲ್ಲ. ಹತ್ತಾರು ಬಿಜೆಪಿ ನಾಯಕರು ಖಾಸಗಿ ಸಂಭಾಷಣೆಗಳಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿರಬೇಕು, ಹಿಂದಿ ಭಾರತದ ಏಕೈಕ ಅಧಿಕೃತ ಭಾಷೆಯಾಗಬೇಕು ಎಂದು ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಂವಿಧಾನವನ್ನು ತಿದ್ದುಪಡಿ ಮಾಡುವ ಕಲ್ಪನೆಯನ್ನು ಪೋಷಿಸುವುದನ್ನು ಮುಂದುವರೆಸಿದೆ ಎಂದು ಚಿದಂಬರಂ ಹೇಳಿದರು. +ಬಿಜೆಪಿ ಭಾನುವಾರ ಹೆಗ್ಡೆ ಅವರ ಹೇಳಿಕೆಯನ್ನು ವೈಯಕ್ತಿಕ ಅಭಿಪ್ರಾಯ ಎಂದು ಕರೆದು ಅವರಿಂದ ಸ್ಪಷ್ಟನೆ ಕೇಳಿದೆ.ಎಕ್ಸ್ ನಲ್ಲಿ ಪೋಸ್ಟ್‍ನಲ್ಲಿ ಬಿಜೆಪಿಯ ಕರ್ನಾಟಕ ಘಟಕವು, ಸಂವಿಧಾನದ ಕುರಿತು ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು ಮತ್ತು ಪಕ್ಷದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ರಾಷ್ಟ್ರದ ಸಂವಿಧಾನವನ್ನು ಎತ್ತಿಹಿಡಿಯುವ ನಮ್ಮ ಅಚಲ ಬದ್ಧತೆಯನ್ನು ಬಿಜೆಪಿ ಪುನರುಚ್ಚರಿಸುತ್ತದೆ ಮತ್ತು ವಿವರಣೆಯನ್ನು ಕೇಳುತ್ತದೆ ಎಂದಿದೆ. +ಹೆಗ್ಡೆಯವರ ಹೇಳಿಕೆಯ ನಂತರ, ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನವನ್ನು ಮರು ಬರೆಯುವ ಮತ್ತು ನಾಶಮಾಡುವ ಗುಪ್ತ ಮತ್ತು ವಂಚಕ ಅಜೆಂಡಾವನ್ನು ಹೊಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ \ No newline at end of file diff --git a/eesanje/url_47_149_7.txt b/eesanje/url_47_149_7.txt new file mode 100644 index 0000000000000000000000000000000000000000..101b318b84deba0786b3132b1b6ed56d308dcf24 --- /dev/null +++ b/eesanje/url_47_149_7.txt @@ -0,0 +1,8 @@ +ಸಬರಮತಿ ಆಶ್ರಮ ಸ್ಮಾರಕ ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ +ಅಹಮದಾಬಾದ್, ಮಾ 11 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಗುಜರಾತ್‍ನ ಅಹಮದಾಬಾದ್‍ಗೆ ಭೇಟಿ ನೀಡುವ ಸಂದರ್ಭದಲ್ಲಿ ಆಶ್ರಮ ಭೂಮಿ ವಂದನಾ ಮತ್ತು ಸಬರಮತಿ ಆಶ್ರಮ ಸ್ಮಾರಕ ಯೋಜನೆಯ ಮಾಸ್ಟರ್‌ಪ್ಲಾನ್ ಅನಾವರಣಗೊಳಿಸಲಿದ್ದಾರೆ. 1,200 ಕೋಟಿ ಬಜೆಟ್‍ನೊಂದಿಗೆ ಈ ಯೋಜನೆಯು ಮಹಾತ್ಮ ಗಾಂಧಿಯವರ ಬೋಧನೆಗಳು ಮತ್ತು ತತ್ತ್ವಶಾಸವನ್ನು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. +ಮಹತ್ವಾಕಾಂಕ್ಷೆಯ ಯೋಜನೆಯು ಸಬರಮತಿ ಆಶ್ರಮದ ಸುತ್ತಮುತ್ತಲಿನ ಮೂಲಸೌಕರ್ಯಗಳನ್ನು ನವೀಕರಿಸುವುದು, ಸಂದರ್ಶಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು ಒದಗಿಸುವುದು ಮತ್ತು ರಾಷ್ಟ್ರಪಿತನಿಗೆ ಸಮರ್ಪಿತವಾದ ವಿಶ್ವ ದರ್ಜೆಯ ಸ್ಮಾರಕವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ ಎಂದು ಅದು ಹೇಳಿದೆ. ಮಾಸ್ಟರ್‌ಪ್ಲಾನ್ ಅಡಿಯಲ್ಲಿ, ಮಹಾತ್ಮ ಗಾಂಧಿಯವರು 1917 ರಲ್ಲಿ ಅಹಮದಾಬಾದ್‍ನ ಸಬರಮತಿ ನದಿಯ ದಡದಲ್ಲಿ ಸ್ಥಾಪಿಸಿದ ಆಶ್ರಮದ ಅಸ್ತಿತ್ವದಲ್ಲಿರುವ ಐದು ಎಕರೆ ಪ್ರದೇಶವನ್ನು 55 ಎಕರೆಗಳಿಗೆ ವಿಸ್ತರಿಸಲಾಗುವುದು ಮತ್ತು ಅಸ್ತಿತ್ವದಲ್ಲಿರುವ 36 ಕಟ್ಟಡಗಳು ಬಿಡುಗಡೆಯ ಪ್ರಕಾರ ಪುನಃಸ್ಥಾಪನೆಗೆ ಒಳಗಾಗುತ್ತವೆ. +ಯೋಜನೆಯು 20 ಹಳೆಯ ಕಟ್ಟಡಗಳ ಸಂರಕ್ಷಣೆ, 13 ಕಟ್ಟಡಗಳ ನಿಖರವಾದ ಪುನಃಸ್ಥಾಪನೆ ಮತ್ತು ಆಶ್ರಮದ ಮೂಲ ವಾಸ್ತುಶಿಲ್ಪದ ಸರಳತೆ ಮತ್ತು ಸಾರವನ್ನು ಅನುಸರಿಸುವ ಪವಿತ್ರ ಗುರಿಯನ್ನು ಗಮನದಲ್ಲಿಟ್ಟುಕೊಂಡು ಮೂರು ಕಟ್ಟಡಗಳ ಪುನರಾಭಿವೃದ್ಧಿ ಒಳಗೊಂಡಿದೆ. ಎಲ್ಲಾ ಸಂದರ್ಶಕರಿಗೆ ಹಸಿರು, ಪ್ರಶಾಂತತೆ ಮತ್ತು ಸೊಂಪಾದ ನೆಮ್ಮದಿಯನ್ನು ಸಾರುತ್ತದೆ, ಎಂದು ಅದು ಹೇಳಿದೆ. +ಮಾಸ್ಟರ್‌ಪ್ಲಾನ್ ಆಡಳಿತ ಸೌಲಭ್ಯಗಳನ್ನು ಹೊಂದಲು ಹೊಸ ಕಟ್ಟಡಗಳು, ಓರಿಯಂಟೇಶನ್ ಸೆಂಟರ್‍ನಂತಹ ಸಂದರ್ಶಕರ ಸೌಲಭ್ಯಗಳು, ಚರಕ ನೂಲುವ ಸಂವಾದಾತ್ಮಕ ಕಾರ್ಯಾಗಾರಗಳು, ಕೈಯಿಂದ ಮಾಡಿದ ಕಾಗದ, ಹತ್ತಿ ನೇಯ್ಗೆ ಮತ್ತು ಚರ್ಮದ ಕೆಲಸ ಮತ್ತು ಸಾರ್ವಜನಿಕ ಉಪಯುಕ್ತತೆಗಳನ್ನು ಒಳಗೊಂಡಿದೆ. ಈ ಕಟ್ಟಡಗಳು ಮಹಾತ್ಮ ಗಾಂಧಿಯವರ ಜೀವನ ಮತ್ತು ಆಶ್ರಮದ ಪರಂಪರೆಯ ಅಂಶಗಳನ್ನು ಪ್ರದರ್ಶಿಸಲು ಸಂವಾದಾತ್ಮಕ ಪ್ರದರ್ಶನಗಳು ಮತ್ತು ಚಟುವಟಿಕೆಗಳನ್ನು ನಡೆಸುತ್ತವೆ ಎಂದು ಪ್ರಕಟಣೆ ತಿಳಿಸಿದೆ. +ಮಹಾತ್ಮಾ ಗಾಂಧಿಯವರ ವಿಚಾರಗಳನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು ಪ್ರಸಾರ ಮಾಡಲು ಮತ್ತು ಆಶ್ರಮದ ಗ್ರಂಥಾಲಯ ಮತ್ತು ಆರ್ಕೈವ್‍ಗಳನ್ನು ಬಳಸಲು ಭೇಟಿ ನೀಡುವ ವಿದ್ವಾಂಸರಿಗೆ ಸೌಲಭ್ಯಗಳನ್ನು ಸೃಷ್ಟಿಸಲು ಗ್ರಂಥಾಲಯ ಮತ್ತು ಆರ್ಕೈವ್ಸ ಕಟ್ಟಡವನ್ನು ಮಾಸ್ಟರ್‌ಪ್ಲಾನ್ ರೂಪಿಸುತ್ತದೆ. ಈ ಯೋಜನೆಯು ವಿಭಿನ್ನ ನಿರೀಕ್ಷೆಗಳೊಂದಿಗೆ ಮತ್ತು ಬಹು ಭಾಷೆಗಳಲ್ಲಿ ಸಂದರ್ಶಕರಿಗೆ ಮಾರ್ಗದರ್ಶನ ನೀಡುವ ವ್ಯಾಖ್ಯಾನ ಕೇಂದ್ರದ ರಚನೆಯನ್ನು ಸಕ್ರಿಯಗೊಳಿಸುತ್ತದೆ, ಅವರ ಅನುಭವವನ್ನು ಸಾಂಸ್ಕøತಿಕವಾಗಿ ಮತ್ತು ಬೌದ್ಧಿಕವಾಗಿ ಹೆಚ್ಚು ಉತ್ತೇಜಕ ಮತ್ತು ಸಮೃದ್ಧಗೊಳಿಸುತ್ತದೆ. +ಆಶ್ರಮ ಭೂಮಿ ವಂದನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಜೊತೆಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. 1915 ರಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ ನಂತರ ಮಹಾತ್ಮ ಗಾಂಧಿಯವರು ಸ್ಥಾಪಿಸಿದ ಮೊದಲ ಆಶ್ರಮವಾಗಿದ್ದು, ಸ್ಮಾರಕ ಮತ್ತು ಪ್ರವಾಸಿ ಸ್ಥಳವಾಗಿ ಸಂರಕ್ಷಿಸಲ್ಪಟ್ಟಿರುವ ಮರುಅಭಿವೃದ್ಧಿಪಡಿಸಿದ ಕೊಚ್ರಾಬ್ ಆಶ್ರಮವನ್ನು ಸಹ ಪ್ರಧಾನಿ ಉದ್ಘಾಟಿಸಲಿದ್ದಾರೆ ಎಂದು ಅದು ಹೇಳಿದೆ. +ಘರ್ಷಣೆಯ ಸಮಯದಲ್ಲಿಯೂ ಶಾಂತಿ ಮತ್ತು ಸತ್ಯವನ್ನು ಎತ್ತಿಹಿಡಿಯುವ ಗಾಂಧಿ„ೀಜಿಯವರ ತತ್ವದ ಬಗ್ಗೆ ಮೋದಿ ಅವರು ಆಳವಾದ ಗೌರವ ಮತ್ತು ಮೆಚ್ಚುಗೆಯನ್ನು ಹೊಂದಿದ್ದಾರೆ. ಆಶ್ರಮದ ಅಸ್ತಿತ್ವವು ಕೇವಲ ಭೌತಿಕ ಸ್ಥಳದ ಕಲ್ಪನೆಯನ್ನು ಮೀರಿದೆ ಎಂಬ ಅಂಶಕ್ಕೆ ಪುನರುಜ್ಜೀವನ ಯೋಜನೆಯನ್ನು ಅತ್ಯಂತ ಸೂಕ್ಷ್ಮತೆ ಮತ್ತು ಗೌರವದಿಂದ ಮುಂದುವರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_149_9.txt b/eesanje/url_47_149_9.txt new file mode 100644 index 0000000000000000000000000000000000000000..ef8e7dace43bb5171661c128f64a32f597833eff --- /dev/null +++ b/eesanje/url_47_149_9.txt @@ -0,0 +1,10 @@ +ಬಿಎಎಂಎಲ್‍ನಲ್ಲಿ ಸಿದ್ದವಾಗುತ್ತಿವೆ ವಂದೇ ಭಾರತ್ ಸ್ಲೀಪರ್ ಕ್ಲಾಸ್ ಬೋಗಿಗಳು +ಬೆಂಗಳೂರು,ಮಾ.10- ಅತ್ಯಾಧುನಿಕ ಸೌಲಭ್ಯದ ವಂದೇ ಭಾರತ್ ಸ್ಲೀಪರ್ ಕ್ಲಾಸ್ ಬೋಗಿಗಳ ನಿರ್ಮಾಣ ಕಾರ್ಯ ಬಿಇಎಂಎಲ್ ಸಂಸ್ಥೆಯಲಿ ಭರದಿಂದ ಸಾಗುತ್ತಿದ್ದು, ಆರು ತಿಂಗಳಲ್ಲಿ ರೈಲು ಸಂಚಾರಕ್ಕೆ ಸಿದ್ಧವಾಗಲಿದೆ. ನಿನ್ನೆ ವಂದೇ ಭಾರತ್ ಸ್ಲೀಪರ್ ರೈಲಿನ ಬೋಗಿಯ ಒಳವಿನ್ಯಾಸ ನಿರ್ಮಾಣ ಹಂತವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದ್ದರು. ವಂದೇ ಭಾರತ್ (ಚೇರ್‍ಕಾರ್), ನಮೋ ಭಾರತ್ ( ರ್ಯಾಪಿಡ್ ರೈಲ್ ಟ್ರಾನ್ಸಿಟ್ ಸಿಸ್ಟಂ) ಹಾಗೂ ಅಮೃತ್ ಭಾರತ್ ( ಪುಶ್‍ಪುಲ್ ಟೆಕ್ನಾಲಜಿ) ರೈಲುಗಳ ಯಶಸ್ಸಿನ ಬಳಿಕ ಇದೀಗ ವಂದೇ ಭಾರತ್ ಸರಣಿಯ ಸ್ಲೀಪರ್ ರೈಲು ಶೀಘ್ರವೇ ಪ್ರಯಾಣಿಕರಿಗೆ ಲಭ್ಯವಾಗಲಿದೆ. +ವಂದೇ ಭಾರತ್ ಸ್ಲೀಪರ್ ಕ್ಲಾಸ್ ಬೋಗಿಗಳು ನಗರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್‍ನಲ್ಲಿ ನಿರ್ಮಾಣವಾಗುತ್ತಿವೆ. 16 ಬೋಗಿಯ ರೈಲು ಇದಾಗಿದೆ. ಒಂದು ಬೋಗಿಯಲ್ಲಿ ಕನಿಷ್ಠ 67 ಜನ ಪ್ರಯಾಣಿಸಬಹುದಾಗಿದೆ. ಎಸಿ 3 ಟೈರ್ ಬರ್ತ್ ಗಳ 11 ಬೋಗಿ ಇದರಲ್ಲಿ 611 ಆಸನ ಇರಲಿದೆ. ಎಸಿ 2 ಟೈರ್ ಬರ್ತ್ ಗಳ 4 ಬೋಗಿ ನಿರ್ಮಾಣವಾಗುತ್ತಿದ್ದು 188 ಆಸನ ವ್ಯವಸ್ಥೆ ಇರಲಿದೆ. ಮೊದಲ ದರ್ಜೆ ಎಸಿ ಬರ್ತ್ 1 ಬೋಗಿಯಲ್ಲಿ 24 ಆಸನ ಇರಲಿದೆ. + 😍😍 : ../ +ಸಂಪೂರ್ಣ ಹೊಸ ವಿನ್ಯಾಸದಲ್ಲಿ ಈ ರೈಲು ನಿರ್ಮಾಣ ಆಗುತ್ತಿದ್ದು, ರೈಲಿನ ನಿರ್ಮಾಣ ಕಾರ್ಯ ಶೀಘ್ರವೇ ಪೂರ್ಣಗೊಳ್ಳಲಿದ್ದು, ನಾಲ್ಕರಿಂದ ಆರು ತಿಂಗಳ ಕಾಲ ವಿವಿಧ ರೀತಿಯ ತಪಾಸಣೆಗೆ ಒಳಪಡಲಿದೆ. ಬಳಿಕ ಅಗತ್ಯ ಬದಲಾವಣೆ ಜೊತೆಗೆ ಇನ್ನಷ್ಟು ರೈಲುಗಳು ನಿರ್ಮಾಣ ಆಗಲಿವೆ. ಬಿಇಎಂಎಲ್ 10 ರೈಲುಗಳನ್ನು (160 ಬೋಗಿ) ನಿರ್ಮಿಸಿ ಕೊಡಲಿದೆ. ಈಗಿನ ವಂದೇ ಭಾರತ್‍ಗಿಂತಲೂ ವಿಶೇಷ ಸೌಲಭ್ಯಗಳನ್ನು ಸ್ಲೀಪರ್ ರೈಲು ಹೊಂದಿರಲಿದೆ. +ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಆಸನಗಳ ಎತ್ತರ ವಿನ್ಯಾಸ ಮಾಡಲಾಗಿದೆ. ಕೇಂದ್ರಿತ ಹವಾನಿಯಂತ್ರಣ ವ್ಯವಸ್ಥೆ, ವೈರಸ್ ನಿಯಂತ್ರಣ ಮೆಕ್ಯಾನಿಸಂ ಇರಲಿದೆ. ತೀರಾ ಕಡಿಮೆ ಅಲುಗಾಟ ಹಾಗೂ ಕಂಪನ ವ್ಯವಸ್ಥೆ ಇರುವುದರಿಂದ ಜನ ಆರಾಮವಾಗಿ ನಿದ್ರಿಸಿ ಪ್ರಯಾಣಿಸಬಹುದು. ವಂದೇ ಭಾರತ್ ಸರಣಿಯ ಇತರೆ ರೈಲುಗಳ ಪ್ರಯಾಣಿಕರಿಂದ ಬಂದ ಎಲ್ಲ ಪ್ರತಿಕ್ರಿಯೆ ಪಡೆದು ಆ ಸಮಸ್ಯೆಗಳನ್ನು ಈ ರೈಲಿನಲ್ಲಿ ನಿವಾರಿಸಲಾಗುತ್ತಿದೆ. +ಅಗ್ನಿ ಅವಘಡ ನಿಯಂತ್ರಣ ಸೇರಿದಂತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಒಳಬಾಗಿಲುಗಳಿಗೆ ಸೆನ್ಸಾರ್ ಅಳವಡಿಕೆ, ವಾಸನೆ ಮುಕ್ತ ಶೌಚಾಲಯ, ಚಾಲನಾ ವಿಭಾಗದಲ್ಲಿ ಶೌಚಾಲಯ ಇರಲಿದೆ. ಮೊದಲ ದರ್ಜೆ ಎಸಿಕಾರ್‍ನಲ್ಲಿ ಬಿಸಿ ನೀರಿನ ಶವರ್ , ಯುಎಸ್‍ಬಿ ಚಾರ್ಜಿಂಗ್, ದೃಶ್ಯ ಮಾಹಿತಿ ಸೌಲಭ್ಯ ಇರಲಿದೆ. +ಜಾಗತಿಕ ಮಟ್ಟದಲ್ಲಿ ಹೋಲಿಸಿದರೆ ಈ ರೈಲು ಕಡಿಮೆ ವೆಚ್ಚದಲ್ಲಿ ನಿರ್ಮಾಣ ಆಗುತ್ತಿದೆ. ನಮ್ಮಲ್ಲೇ ಮೆಟ್ರೋ ರೈಲಿನ ಒಂದು ಬೋಗಿಗೆ 9 ರಿಂದ 10 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ವಂದೇ ಭಾರತ್ ಸ್ಲೀಪರ್ ಬೋಗಿಗೆ ಅಂದಾಜು 8 ರಿಂದ 9 ಕೋಟಿ ತಗಲುತ್ತಿದೆ. ವಿನ್ಯಾಸ ದೇಸಿಯ ಮಟ್ಟದಲ್ಲೇ ನಿರ್ಮಾಣ ಆಗುತ್ತಿರುವ ಕಾರಣ ಕಡಿಮೆ ವೆಚ್ಚದಾಯಕವಾಗಿದೆ. +ಸದ್ಯ ಬೆಂಗಳೂರು ಮಾಲ್ಡಾ ನಡುವೆ ಸಂಚರಿಸುತ್ತಿರುವ ಅಮೃತ್ ಭಾರತ್ ರೈಲು ಶೇ. 100 ಭರ್ತಿಯಾಗುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲ ಬದಲಾವಣೆ ಜೊತೆಗೆ ಇನ್ನೂ 100 ಅಮೃತ್ ಭಾರತ್ ರೈಲು ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ ಎಂದು ಬಿಎಇಎಂಎಲ್ ವ್ಯವಸ್ಥಾಪಕ ನಿರ್ದೇಶಕ ಶಂತನು ರಾಯ್ ಹೇಳಿದ್ದಾರೆ. +ವಂದೇ ಭಾರತ್ ಸ್ಲೀಪರ್ ಕೋಚ್ ಪ್ರಯಾಣದ ಸಮಯವನ್ನು ಕಡಿಮೆ ಮಾಡಿ, ವಿಶ್ವ ದರ್ಜೆಯ ಸೌಲಭ್ಯಗಳನ್ನು ಸುಗಮಗೊಳಿಸಲಿದೆ. ಈ ಮೈಲಿಗಲ್ಲನ್ನು ತಲುಪುತ್ತಿರುವುದಕ್ಕೆ ಸಂತೋಷಪಡುತ್ತೇವೆ ಎಂದಿದ್ದಾರೆ. ನಮ್ಮ ಉತ್ಪಾದನೆ ಪೂರ್ಣ ಸಾಮಥ್ರ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ, ವಂದೇ ಭಾರತ್ ಸ್ಲೀಪರ್ ರೈಲುಗಳು ಪ್ರಯಾಣಿಕರ ಸೌಕರ್ಯ ಮತ್ತು ಅನುಕೂಲತೆಯಲ್ಲಿ ಹೊಸ ಮಾನದಂಡವನ್ನು ಹೊಂದಲಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_14_1.txt b/eesanje/url_47_14_1.txt new file mode 100644 index 0000000000000000000000000000000000000000..fa38b1e16bc776a7420bca738f9c393761985ea9 --- /dev/null +++ b/eesanje/url_47_14_1.txt @@ -0,0 +1,7 @@ +ನೆಹರು ಕುಟುಂಬ ದಲಿತ ಮೀಸಲಾತಿ ವಿರೋಧಿ : ಪ್ರಧಾನಿ ಮೋದಿ +', , ': ' +ಕುರುಕ್ಷೇತ್ರ,ಸೆ.15– ದಲಿತರಿಗೆ ಮೀಸಲಾತಿಯನ್ನು ತೊಡೆದುಹಾಕಲು ವಿರೋಧ ಪಕ್ಷದ ರಾಜಮನೆತನವು ಬಯಸಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ಕುರುಕ್ಷೇತ್ರ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರದಲ್ಲಿದ್ದಾಗ ನಡೆದ ಕೆಲವು ಘಟನೆಗಳನ್ನು ನೆನಪಿಸಿಕೊಂಡರು ಮತ್ತು ಸಭೆಯನ್ನುದ್ದೇಶಿಸಿ ಕಾಂಗ್ರೆಸ್‌‍ನ ದಲಿತ ವಿರೋಧಿ ಮುಖವನ್ನು ಹರಿಯಾಣಕ್ಕಿಂತ ಯಾರು ಚೆನ್ನಾಗಿ ತಿಳಿದಿದ್ದಾರೆ? ಎಂದು ಅವರು ಪ್ರಶ್ನಿಸಿದರು.ಗಾಂಧಿ ಕುಟುಂಬವು ದೇಶದ ಅತಿದೊಡ್ಡ ದಲಿತ, ಒಬಿಸಿ ಮತ್ತು ಬುಡಕಟ್ಟು ವಿರೋಧಿ ಶಕ್ತಿಯಾಗಿದೆ ಎಂದು ಅವರು ಆರೋಪಿಸಿದರು. +ಅವರು ಈಗ ಅಧಿಕಾರಕ್ಕೆ ಬಂದರೆ ದಲಿತರು ಮತ್ತು ದೀನದಲಿತರ ಮೀಸಲಾತಿಯನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ. ಇದು ಈ ಕುಟುಂಬದ ಸತ್ಯ ಎಂದು ಪ್ರಧಾನಿ ಮೋದಿ ಹೇಳಿದರು.ಅವರ ರಾಜಮನೆತನದ ಕುಟುಂಬವು ದಲಿತರು, ಇತರೆ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಬುಡಕಟ್ಟು ಜನಾಂಗದವರನ್ನು ಅವಮಾನಿಸಿದೆ ಎಂದು ಪ್ರಧಾನಿ ಆರೋಪಿಸಿದ್ದಾರೆ. +ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌‍ ವಿರುದ್ಧ ವಾಗ್ದಾಳಿ ನಡೆಸುತ್ತಿದೆ, ರಾಹುಲ್‌ ಗಾಂಧಿ ಅವರು ಪರಿಶಿಷ್ಟ ಜಾತಿಗಳು (ಎಸ್‌‍ಸಿಗಳು), ಪರಿಶಿಷ್ಟ ಪಂಗಡಗಳು ಮತ್ತು ಒಬಿಸಿಗಳಿಗೆ ಮೀಸಲಾತಿಯ ವಿರುದ್ಧವಾಗಿದ್ದಾರೆ ಮತ್ತು ಅವರ ಇತ್ತೀಚಿನ ಸಂವಾದದ ಸಂದರ್ಭದಲ್ಲಿ ನಿಬಂಧನೆಯ ವಿರುದ್ಧ ಅವರ ಪೂರ್ವಾಗ್ರಹವು ಬಹಿರಂಗವಾಗಿ ಹೊರಬಂದಿದೆ ಎಂದು ಅವರು ಹೇಳಿದರು. +ದೇಶದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ, ಅವರು ಕೂಡ ಮೀಸಲಾತಿಯನ್ನು ವಿರೋಧಿಸಿದ್ದರು ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_14_10.txt b/eesanje/url_47_14_10.txt new file mode 100644 index 0000000000000000000000000000000000000000..a7fb4460748ec9184e8e33301ca0e46655a6d27a --- /dev/null +++ b/eesanje/url_47_14_10.txt @@ -0,0 +1,6 @@ +ರಾಹುಲ್ ವಿರುದ್ಧ ಅಮಿತ್ ಶಾ ಆಕ್ರೋಶ +‘ ' ': ' +ನವದೆಹಲಿ,ಸೆ.11– ದೇಶವನ್ನು ವಿಭಜಿಸುವ ಷಡ್ಯಂತ್ರ ರೂಪಿಸುವ ಶಕ್ತಿಗಳೊಂದಿಗೆ ನಿಂತು ದೇಶ ವಿರೋಧಿ ಹೇಳಿಕೆ ನೀಡುವುದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಭ್ಯಾಸವಾಗಿ ಹೋಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಟೀಕಾ ಪ್ರಹಾರ ನಡೆಸಿದ್ದಾರೆ. +ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಜಮ್ಮು ಕಾಶ್ಮೀರ ಮತ್ತು ಜೆಕೆಎನ್ಸಿಯ ರಾಷ್ಟ್ರ ವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರಲಿ. ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿರಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. +ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಮತ್ತು ಭಾವನೆಗಳನ್ನು ಘಾಸಿಗೊಳಿಸಿದ್ದಾರೆ. ಅವರ ಹೇಳಿಕೆಯು ಪ್ರಾದೇಶಿಕತೆ, ಧರ್ಮ ಮತ್ತು ಭಾಷಿಕ ಭಿನ್ನಾಭಿಪ್ರಾಯದ ರೀತಿಯಲ್ಲಿ ಬಿರುಕುಗಳನ್ನು ಉಂಟುಮಾಡುವ ಕಾಂಗ್ರೆಸ್ನ ರಾಜಕೀಯವನ್ನು ಬಯಲಿಗೆಳೆಯುತ್ತದೆ ಎಂದು ಆರೋಪಿಸಿದ್ದಾರೆ. +ದೇಶದಲ್ಲಿ ಮೀಸಲಾತಿ ರದ್ದುಪಡಿಸುವ ಬಗ್ಗೆ ಮಾತನಾಡುವ ಮೂಲಕ ರಾಹುಲ್ ಗಾಂಧಿ ಮತ್ತೊಮೆ ಕಾಂಗ್ರೆಸ್ನ ಮೀಸಲಾತಿ ವಿರೋಧಿ ಮುಖವನ್ನು ಮುನ್ನೆಲೆಗೆ ತಂದಿದ್ದಾರೆ. ಅವನ ಮನಸ್ಸಿನಲ್ಲಿದ್ದ ಆಲೋಚನೆಗಳು ಅಂತಿಮವಾಗಿ ಪದಗಳಾಗಿ ಹೊರಹೊಮಿವೆ ಎಂದು ಟೀಕಿಸಿದ್ದಾರೆ. \ No newline at end of file diff --git a/eesanje/url_47_14_11.txt b/eesanje/url_47_14_11.txt new file mode 100644 index 0000000000000000000000000000000000000000..8bee6121ca09ceeeffd2f52dab1bd40dab511f37 --- /dev/null +++ b/eesanje/url_47_14_11.txt @@ -0,0 +1,6 @@ +ಓಣಂ ಪ್ರಯುಕ್ತ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಅವಕಾಶ +: , +ತಿರುವನಂತಪುರಂ,ಸೆ.11-ಓಣಂ ಹಬ್ಬದ ಪ್ರಯುಕ್ತ ವಿಶ್ವಪ್ರಸಿದ್ದ ಭಾರತದ ಕೇರಳ ರಾಜ್ಯದ ಶ್ರೀ ಶಬರಿಮಲೆ ಅಯ್ಯಪ್ಪ ದೇವಾಲಯವು ತೆರೆಯಲಿದ್ದು, ಸ್ವಾಮಿಯ ದರ್ಶನ ಮಾಡುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. +ಶಬರಿಮಲೆ ಅಯ್ಯಪ್ಪನ ದೇವಸ್ಥಾನದಲ್ಲಿ ಓಣಂ ಆಚರಿಸಲು ಪ್ರತಿ ವರ್ಷ ಶಬರಿಮಲೆ ದೇವಸ್ಥಾನವನ್ನು ತೆರೆಯಲಾಗುತ್ತದೆ. ಅದರಂತೆ ಈ ಬಾರಿಯು ದೇವಾಯಲದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. +ಕೇರಳ ರಾಜ್ಯದಲ್ಲಿ ಈ ವರ್ಷ ಸೆ.15ರಂದು ತಿರುವೋಣಂ ಹಬ್ಬವಿದೆ. ಈ ಸಂದರ್ಭದಲ್ಲಿ 13ರಂದು ಸಂಜೆ 5 ಗಂಟೆಗೆ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ. ಓಣಂ ಹಬ್ಬದ ಪ್ರಯುಕ್ತ ಶಬರಿಮಲೆಗೆ ಬರುವ ಎಲ್ಲಾ ಅಯ್ಯಪ್ಪ ಭಕ್ತರಿಗೆ ಸೆ.15 ಮತ್ತು 16ರಂದು ಭೋಜನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಅಯ್ಯಪ್ಪ ದೇವರ ದರ್ಶನ ಭಾಗ್ಯವೂ ಸಿಗಲಿದೆ. +ಪುರತಾಸಿ ಮಾಸ ಪೂಜೆಯ ಸಂದರ್ಭದಲ್ಲಿ ದೇವಸ್ಥಾನವು 21ರವರೆಗೆ ತೆರೆದಿರುತ್ತದೆ.ಈ ಸಂದರ್ಭದಲ್ಲಿ ಎಂದಿನಂತೆ ಆನ್‌ಲೈನ್‌ ಮೂಲಕ ದರ್ಶನದ ಕಾಯ್ದಿರಿಸುವಿಕೆಯ ಆಧಾರದ ಮೇಲೆ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ದೇವಸ್ಥಾನದ ಅಡಳಿತ ಮಂಡಳಿ ತಿಳಿಸಿದೆ. \ No newline at end of file diff --git a/eesanje/url_47_14_12.txt b/eesanje/url_47_14_12.txt new file mode 100644 index 0000000000000000000000000000000000000000..a27538034d774377537e932b4834df748ac45f48 --- /dev/null +++ b/eesanje/url_47_14_12.txt @@ -0,0 +1,6 @@ + ಆಧಾರಿತ ಟೋಲ್‌ ವಸೂಲಿಗೆ ಚಾಲನೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೊದಲ 20 ಕಿ.ಮೀ.ಗೆ ಶುಲ್ಕ ಇಲ್ಲ + , 20 +ಬೆಂಗಳೂರು,ಸೆ.11- ಸ್ಯಾಟಲೈಟ್‌ (ಉಪಗ್ರಹ) ಆಧಾರಿತ ಎಲೆಕ್ಟ್ರಿಕ್‌ ಟೋಲ್‌ ವಸೂಲಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ, ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಬಂಧನೆ-2008ಕ್ಕೆ ತಿದ್ದುಪಡಿ ಮಾಡಿ ನೋಟಿಫಿಕೇಷನ್‌ ಜಾರಿ ಮಾಡಿದೆ. ಇದರ ಪ್ರಕಾರ, ಈಗಿರುವ ಟೋಲ್‌ಗಳಲ್ಲಿ ಗ್ಲೋಬಲ್‌ ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂ ಆಧಾರಿತ ಟೋಲ್‌ ಪದ್ದತಿ ಜಾರಿಗೆ ಬರಲಿದೆ. +ನ್ಯಾವಿಗೇಷನ್‌ ಸ್ಯಾಟಲೈಟ್‌ ಸಿಸ್ಟಂನ ಆನ್‌ ಬೋರ್ಡ್‌ ಯೂನಿಟ್‌ ಹೊಂದಿರುವ ವಾಹನಗಳು ಟೋಲ್‌ ಪ್ಲಾಜಾವನ್ನು ಕ್ರಾಸ್‌‍ ಮಾಡಿದಾಗ, ಪಯಣಿಸಿದ ದೂರಕ್ಕೆ ಅನುಗುಣವಾಗಿ ಆಟೋಮೆಟಿಕ್‌ ಆಗಿ ಟೋಲ್‌ ಶುಲ್ಕ ಪಾವತಿ ಆಗಲಿದೆ. +ಒಬಿಯು ಅಳವಡಿಸಿಕೊಂಡ ವಾಹನಗಳಿಗೆ ಪ್ರತ್ಯೇಕ ಲೇನ್‌ ತೆರೆಯಲಾಗುತ್ತದೆ. ಮೊದಲ 20 ಕಿ.ಮೀವರೆಗೂ ಜೀರೋ ಟೋಲ್‌ ಕಾರಿಡಾರ್‌ ಜಾರಿಗೆ ತರಲು ತೀರ್ಮಾನಿಸಲಾಗಿದೆ. ಅಂದರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೊದಲ 20 ಕಿಲೋಮೀಟರ್‌ಗೆ ಟೋಲ್‌ ಪಾವತಿಸುವ ಅಗತ್ಯ ಇರುವುದಿಲ್ಲ. ನಂತರದ ಪಯಣಕ್ಕೆ ಅನುಗುಣವಾಗಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. +ಮೊದಲಿಗೆ ರಾಷ್ಟ್ರೀಯ ಹೆದ್ದಾರಿಗಳು, ಎಕ್ಸ್ ಪ್ರೆಸ್‌‍ವೇಗಳಲ್ಲಿ ಈ ವಿಧಾನ ಜಾರಿಗೆ ತಂದು, ನಂತರ ದೇಶಾದ್ಯಂತ ಇದನ್ನು ವಿಸ್ತರಿಸಲು ಕೇಂದ್ರ ತೀರ್ಮಾನಿಸಿದೆ.ಆದರೆ ನ್ಯಾಷನಲ್‌ ಪರ್ಮಿಟ್‌ ಹೊಂದಿರುವ ವಾಹನಗಳನ್ನು ಈ ಪದ್ದತಿಯಿಂದ ಹೊರಗಿಡಲಾಗಿದೆ. ನ್ಯಾವಿಗೇಷನ್‌ ಡಿವೈಸ್‌‍ ಇಲ್ಲದ ವಾಹನಗಳಿಗೆ ಸಾಮಾನ್ಯ ಟೋಲ್‌ ಶುಲ್ಕ ವಿಧಿಸಲಾಗುತ್ತದೆ. ಜಿಎನ್‌ಎನ್‌ಎಸ್‌‍ ಜಾರಿ ಬಗ್ಗೆ ಬೆಂಗಳೂರು-ಮೈಸೂರು ಎಕ್‌್ಸಪ್ರೆಸ್‌‍ ಹೈವೇನಲ್ಲಿ ಪ್ರಾಯೋಗಿಕ ಅಧ್ಯಯನವನ್ನು ಕೇಂದ್ರ ಸರ್ಕಾರ ನಡೆಸಿತ್ತು. \ No newline at end of file diff --git a/eesanje/url_47_14_2.txt b/eesanje/url_47_14_2.txt new file mode 100644 index 0000000000000000000000000000000000000000..4c574a93fe618ab8bd59e96af90a4d1bbbcefab4 --- /dev/null +++ b/eesanje/url_47_14_2.txt @@ -0,0 +1,10 @@ +ನನಗೆ ಪ್ರಧಾನಿ ಹುದ್ದೆಯ ಆಫರ್‌ ಬಂದಿತ್ತು, ಅದನ್ನು ನಾನು ತಿರಸ್ಕರಿದೆ : ನಿತಿನ್‌ ಗಡ್ಕರಿ + , +ನವದೆಹಲಿ,ಸೆ.15- ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಜಕೀಯ ನಾಯಕರೊಬ್ಬರು ನನ್ನನ್ನು ಪ್ರಧಾನಿ ಹುದ್ದೆಗೆ ಬೆಂಬಲಿಸುವ ಭರವಸೆ ನೀಡಿದ್ದರು. ಆದರೆ ನಾನು ಆಫರ್‌ ತಿರಸ್ಕರಿದೆ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಬಹಿರಂಗಪಡಿಸಿದ್ದಾರೆ. +ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಗಡ್ಕರಿ, ರಾಜಕೀಯ ನಾಯಕರೊಬ್ಬರು ಪ್ರಧಾನಿ ಹ್ದುೆಯ ರೇಸ್‌‍ಗೆ ಪ್ರವೇಶಿಸಿದರೆ ಅವರನ್ನು ಬೆಂಬಲಿಸಲು ಪ್ರಸ್ತಾಪಿಸಿದರು. ಆದರೆ ಅವರು ಆ ಪ್ರಸ್ತಾಪವನ್ನು ನಿರಾಕರಿಸಿದ್ದು, ಅಂತಹ ಮಹತ್ವಾಕಾಂಕ್ಷೆಗಳನ್ನು ಹೊಂದಿಲ್ಲ ಎಂದು ಸ್ಷಷ್ಪಪಡಿಸಿದ್ದಾಗಿ ಹೇಳಿದ್ದಾರೆ. +ನನಗೆ ಒಂದು ಘಟನೆ ನೆನಪಿದೆ. ನಾನು ಯಾರನ್ನೂ ಹೆಸರಿಸುವುದಿಲ್ಲ. ಆ ವ್ಯಕ್ತಿ, ನೀವು ಪ್ರಧಾನಿಯಾಗಲು ಹೋದರೆ, ನಾವು ನಿಮನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು. ಸಂಭಾಷಣೆ ಯಾವಾಗ ನಡೆಯಿತು ಎಂದು ನಿರ್ದಿಷ್ಟಪಡಿಸಲಿಲ್ಲ. ಆದರೆ, ಪ್ರಧಾನಿಯಾಗುವುದು ಅವರ ಜೀವನದ ಗುರಿಯಲ್ಲ ಎಂದು ಅವರು ಹೇಳಿದ್ದಾರೆ. +ಬಳಿಕ ನೀವು ನನ್ನನ್ನು ಏಕೆ ಬೆಂಬಲಿಸಬೇಕು? ನಾನು ನಿಮ ಬೆಂಬಲವನ್ನು ಏಕೆ ಸ್ವೀಕರಿಸಬೇಕು? ಎಂದು ಕೇಳಿದೆ. ಪ್ರಧಾನಿಯಾಗುವುದು ನನ್ನ ಜೀವನದ ಗುರಿಯಲ್ಲ, ನಾನು ನನ್ನ ನಂಬಿಕೆಗಳಿಗೆ ಮತ್ತು ನನ್ನ ಸಂಘಟನೆಗೆ ನಿಷ್ಠನಾಗಿದ್ದೇನೆ. ಯಾವುದೇ ಹ್ದುೆಗಾಗಿ ನನ್ನ ತತ್ವಗಳಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲವೆಂದು ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. +2019 ಮತ್ತು 2024ರ ಲೋಕಸಭಾ ಚುನಾವಣೆ ವೇಳೆ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ನಿತಿನ್‌ ಗಡ್ಕರಿ ಅವರ ಹೆಸರು ಮುನ್ನೆಲೆಗೆ ಬಂದಿತ್ತು. ಮೋದಿ ನಂತರ ಪ್ರಧಾನಿಯಾಗಲು ಅಮಿತ್‌ ಶಾ, ಯೋಗಿ ಆದಿತ್ಯನಾಥ್‌ ನಂತರ ಗಡ್ಕರಿ ಅವರೇ 3ನೇ ಸ್ಥಾನದಲ್ಲಿದ್ದಾರೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿತ್ತು. ಇದೀಗ ಇದಕ್ಕೆಲ್ಲಾ ನಿತಿನ್‌ ಗಡ್ಕರಿ ಅವರೇ ಫುಲ್‌ಸ್ಟಾಪ್‌ ಹಾಕಿದ್ದಾರೆ. +2024 ಮತ್ತು 2019 ರ ಲೋಕಸಭಾ ಚುನಾವಣೆಗಳೆರಡರಲ್ಲೂ ಸಂಭಾವ್ಯ ಪ್ರಧಾನಿ ಅಭ್ಯರ್ಥಿಯಾಗಿ ನಿತಿನ್‌ ಗಡ್ಕರಿ ಅವರ ಹೆಸರು ಚರ್ಚೆಯಲ್ಲಿ ಹೊರಹೊಮಿತು. ಈ ವರ್ಷದ ಫೆಬ್ರವರಿಯಲ್ಲಿ ನಡೆಸಿದ ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆಯ ಪ್ರಕಾರ, ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ಗಡ್ಕರಿ ಅವರು ನರೇಂದ್ರ ಮೋದಿಯ ನಂತರ ಪ್ರಧಾನಿಯಾಗಲು ಸೂಕ್ತ ನಾಯಕ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ನಂತರ ಮೂರನೇ ಸ್ಥಾನದಲ್ಲಿದ್ದಾರೆ. +2019 ರಲ್ಲಿ ಈ ಚರ್ಚೆಗಳು ಕಾಣಿಸಿಕೊಂಡಾಗ, ಗಡ್ಕರಿ ಅವರು ಭಾರತದ ಸಾಮರ್ಥ್ಯವು ಪ್ರಧಾನಿ ನರೇಂದ್ರ ಮೋದಿಯವರ ಕೈಯಲ್ಲಿದೆ ಎಂದು ಹೇಳಿ ಅವುಗಳನ್ನು ವಜಾಗೊಳಿಸಿದರು.ನಾವೆಲ್ಲರೂ ಅವರ ಹಿಂದೆ ಇದ್ದೇವೆ (ಪ್ರಧಾನಿ ಮೋದಿ). ಅವರ ದೂರದೃಷ್ಟಿಯ ಈಡೇರಿಕೆಯಲ್ಲಿ ನಾನು ಇನ್ನೊಬ್ಬ ಕಾರ್ಯಕರ್ತ. ನಾನು ಪ್ರಧಾನಿಯಾಗುವ ಪ್ರಶ್ನೆ ಎಲ್ಲಿಂದ ಉದ್ಭವಿಸುತ್ತದೆ? ನಾನು ಪ್ರಧಾನಿಯಾಗುವ ಸ್ಪರ್ಧೆಯಲ್ಲಿ ಇಲ್ಲ. ನನಗೆ ಈ ಕನಸು ಕಾಣುತ್ತಿಲ್ಲ. , ಎಂದು ಗಡ್ಕರಿ ಮಾರ್ಚ್‌ 2019 ರಲ್ಲಿ ಹೇಳಿದರು. +ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಗೆದ್ದಿರುವ ಗಡ್ಕರಿ ಅವರು ಬಿಜೆಪಿಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ ಮತ್ತು ಆರ್‌ಎಸ್‌‍ಎಸ್‌‍ನಿಂದ ಬಲವಾದ ಬೆಂಬಲವನ್ನು ಹೊಂದಿದ್ದಾರೆ. ಅವರು ಪ್ರಸ್ತುತ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳಿಗೆ ಕೇಂದ್ರ ಸಚಿವರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಹತ್ತು ವರ್ಷಗಳ ಕಾಲ ಈ ಸ್ಥಾನವನ್ನು ಹೊಂದಿದ್ದಾರೆ. 2009ರಿಂದ 2013ರವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. \ No newline at end of file diff --git a/eesanje/url_47_14_3.txt b/eesanje/url_47_14_3.txt new file mode 100644 index 0000000000000000000000000000000000000000..bba6910e32d3be8c3b390f62c77f672e53d3d49a --- /dev/null +++ b/eesanje/url_47_14_3.txt @@ -0,0 +1,6 @@ +ಮಳೆಯಿಂದಾಗಿ ನೀರಿನಲ್ಲಿ ಮುಳುಗಿದ ತಾಜ್‌ಮಹಲ್‌ ಉದ್ಯಾನ + ' +ಆಗ್ರಾ,ಸೆ.14-ಉತ್ತರಪ್ರದೇಶದ ಕಳೆದ ಎರಡುಮೂರು ದಿನಗಳಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ ಐತಿಹಾಸ ಸ್ಮಾರಕ ಆಗ್ರಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿನೀರಿನ ಸೋರಿಕೆಯಾಗಿ ತಾಜ್‌ಮಹಲ್‌ ಆವರಣದಲ್ಲಿರುವ ಉದ್ಯಾನ ಮುಳುಗಿಹೋಗಿದೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸಾರಕದ ಉದ್ಯಾನವೊಂದು ಮಳೆನೀರಿನಲ್ಲಿ ಮುಳುಗಿರುವ ದೃಶ್ಯವನ್ನು ಪ್ರವಾಸಿಗರು ಚಿತ್ರೀಕರಿಸಿದ್ದಾರೆ. +ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದು, ಬೆಳೆಗಳು ಹಾನಿಯಾಗಿವೆ. ಸಾರ್ವಜನಿಕರ ದೈನಂದಿನ ಜೀವನಕ್ಕೆ ಅಡ್ಡಿ ಉಂಟು ಮಾಡಿದೆ.ವಿಶ್ವ ಪರಂಪರೆಯ ತಾಣವಾದ ಆಗ್ರಾದ ತಾಜ್‌ ಮಹಲ್‌ ಅನ್ನು 1632 ಮತ್ತು 1653ರ ನಡುವೆ ಮೊಘಲ್‌ ಚಕ್ರವರ್ತಿ ಷಹಜಹಾನ್‌ ಪ್ರೀತಿಯ ಮಡದಿ ಮುಮ್ತಾಜ್‌ ಮಹಲ್‌ ಅವರ ಸಮಾಧಿಯಾಗಿ ನಿರ್ಮಿಸಿದ್ದರು. +ಈ ಬಿಳಿ ಅಮೃತಶಿಲೆಯ ರಚನೆಯು ಅದರ ಅದ್ಭುತ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ, ಪರ್ಷಿಯನ್‌, ಇಸ್ಲಾಮಿಕ್‌ ಮತ್ತು ಭಾರತೀಯ ಶೈಲಿಗಳನ್ನು ಸಂಯೋಜಿಸುತ್ತದೆ. ಸಂಕೀರ್ಣವು ಭವ್ಯವಾದ ಗುಮಟ, ಮಿನಾರ್‌ಗಳು, ಉದ್ಯಾನಗಳು ಮತ್ತು ಪ್ರತಿಬಿಂಬಿಸುವ ಕೊಳವನ್ನು ಒಳಗೊಂಡಿದೆ. +ಶಾಶ್ವತ ಪ್ರೀತಿಯನ್ನು ಸಂಕೇತಿಸುವ ತಾಜ್‌ ಮಹಲ್‌ ಅನ್ನು ವಿಶ್ವದ ಅತ್ಯಂತ ಸುಂದರವಾದ ಕಟ್ಟಡಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ ಮತ್ತು ಮೊಘಲ್ ವಾಸ್ತುಶಿಲ್ಪದ ಮೇರುಕೃತಿಯಾಗಿ ಉಳಿದಿದೆ, ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತದೆ. \ No newline at end of file diff --git a/eesanje/url_47_14_4.txt b/eesanje/url_47_14_4.txt new file mode 100644 index 0000000000000000000000000000000000000000..e783524bf5e6523769f078537cab28cbff68fc2c --- /dev/null +++ b/eesanje/url_47_14_4.txt @@ -0,0 +1,8 @@ +ಬಾರಾಮುಲ್ಲಾ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ +3 2 +ಶ್ರೀನಗರ,ಸೆ.14-ಜಮ್ಮು ಮತ್ತು ಕಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಕಳೆದ ರಾತ್ರಿಯಿಂದ ನಡೆಯುತ್ತಿ ರುವ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಇಂದು ನಸುಕಿನ ಜಾವ ಹೊಡೆದುರುಳಿಸಿದ್ದಾರೆ.ಕಳದೆ ತಡರಾತ್ರಿ ಉತ್ತರ ಕಾಶೀರ ಜಿಲ್ಲೆಯ ಪಟ್ಟಾನ್‌ ಪ್ರದೇಶದ ಚಕ್‌ ಟಪ್ಪರ್‌ ಕ್ರೀರಿಯಲ್ಲಿ ಪ್ರದೇಶಗಳನ್ನು ಸುತ್ತುವರಿದ ಭದ್ರತಾ ಪಡೆ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. +ಜಮು ಮತ್ತು ಕಾಶೀರದ ಬಾರಾಮುಲ್ಲಾ ಜಿಲ್ಲೆಯ ಚಕ್‌ ಟಪ್ಪರ್‌ ಕ್ರೀರಿ ಪಟ್ಟನ್ ಪ್ರದೇಶದಲ್ಲಿ ಉಗ್ರರೊಂದಿಗೆ ಭದ್ರತಾ ಸಿಬ್ಬಂದಿ ಎನ್‌ಕೌಂಟರ್‌ ನಡೆಸಿದರು.ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಇಬ್ಬರು ಯೋಧರು ಹುತಾತರಾಗಿ ಮತ್ತಿಬ್ಬರು ಗಾಯಗೊಂಡಿದ್ದರು. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಇಂದು ಮೂವರು ಉಗ್ರರನ್ನು ಕೊಂದುಹಾಕಿದ್ದಾರೆ ಎಂದು ಪೊಲೀಸ್‌‍ ಅಧಿಕಾರಿಗಳು ತಿಳಿಸಿದ್ದಾರೆ. +ಯೋಧರು ರಾತ್ರಿಯಿಂದಲೇ ಪ್ರದೇಶವನ್ನು ಸುತ್ತುವರಿದು ನಸುಕಿನ ಜಾವ ಏರ್ಪಟ್ಟ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. +ಇಬ್ಬರು ಯೋದರು ಹುತಾತ:ಕಿಶಾ್ತ್ವರ್‌ ಜಿಲ್ಲೆಯ ಚತ್ರೂ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಸೈನಿಕರು ಹುತಾತರಾಗಿ ಇಬ್ಬರು ಗಾಯಗೊಂಡಿದ್ದರು. ಛತ್ರೂ ಬೆಲ್‌್ಟನ ನೈದ್ಗಾಮ್‌ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ಭದ್ರತಾ ತಂಡವು ಸುಳಿವು ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆಯಿತು. ಹುತಾತ ಯೋಧರನ್ನು ನಾಯಬ್‌ ಸುಬೇದಾರ್‌ ವಿಪನ್‌ ಕುಮಾರ್‌ ಮತ್ತು ಸಿಪಾಯಿ ಅರವಿಂದ್‌ ಸಿಂಗ್‌ ಎಂದು ಗುರುತಿಸಲಾಗಿದೆ. +ಈತನಧ್ಯೆ, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳನ್ನು ಘಟನಾ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ. ಛತ್ರೂ ಬೆಲ್ಟನ್‌ ನೈದ್ಗಾಮ್‌ ಪ್ರದೇಶದಲ್ಲಿ ಸೇನೆ ಮತ್ತು ಪೊಲೀಸರ ಜಂಟಿ ಭದ್ರತಾ ತಂಡವು ಸುಳಿವು ಆಧರಿಸಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆಯಿತು. +ದಕ್ಷಿಣ ಕಾಶೀರ ಜಿಲ್ಲೆಗಳಾದ ಅನಂತನಾಗ್‌, ಪುಲ್ವಾಮಾ, ಶೋಪಿಯಾನ್‌ ಮತ್ತು ಕುಲ್ಗಾಂನಲ್ಲಿ 16 ಸ್ಥಾನಗಳ ಜೊತೆಗೆ ದೋಡಾ, ಕಿಶಾ್ತ್ವರ್‌ ಮತ್ತು ರಾಂಬನ್‌ ಜಿಲ್ಲೆಗಳನ್ನು ಒಳಗೊಂಡಿರುವ ಚೆನಾಬ್‌ ಕಣಿವೆ ಪ್ರದೇಶದ ಎಂಟು ಅಸೆಂಬ್ಲಿ ಕ್ಷೇತ್ರಗಳು ಮೊದಲ ಹಂತದಲ್ಲಿ ಮತದಾನಕ್ಕೆ ಸಜ್ಜಾಗಿರುವುದರಿಂದ ಈ ಎನ್ಕೌಂಟರ್ಗಳು ಸಂಭವಿಸಿವೆ ಎಂದು ವರದಿ ಹೇಳಿದೆ.ಸೆಪ್ಟೆಂಬರ್‌ 18ರಂದು ಜಮು, ಕಥುವಾ ಮತ್ತು ಸಾಂಬಾ ಜಿಲ್ಲೆಗಳಲ್ಲಿ ಕ್ರಮವಾಗಿ ಸೆಪ್ಟೆಂಬರ್‌ 25 ಮತ್ತು ಅಕ್ಟೋಬರ್‌ 1 ರಂದು ಎರಡನೇ ಮತ್ತು ಮೂರನೇ ಹಂತದಲ್ಲಿ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_47_14_5.txt b/eesanje/url_47_14_5.txt new file mode 100644 index 0000000000000000000000000000000000000000..3f2ff227584bf439856945f404bc2151740d6a7e --- /dev/null +++ b/eesanje/url_47_14_5.txt @@ -0,0 +1,6 @@ +ಗಡಿಯಲ್ಲಿ ಉಗ್ರರ ಜೊತೆ ಗುಂಡಿನ ಕಾಳಗ, ಇಬ್ಬರು ಯೋಧರು ಹುತಾತ್ಮ +-: ; , +ಜಮು,ಸೆ.14-ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.ಕಿಶ್ತವಾರ್ ಜಿಲ್ಲೆಯಲ್ಲಿ ನಿನ್ನೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಕಿರಿಯ ಸೇನಾಧಿಕಾರಿ ಭದ್ರತಾಪಡೆ ಸಿಬ್ಬಂದಿ ಸೇರಿ ಇಬ್ಬರು ಹುತಾತರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. +ಅನಂತನಾಗ್ ಜಿಲ್ಲೆಯ ಕಿಶ್ತವಾರ್ಗೆ ಸಂಪರ್ಕಿಸುವ ನೈದ್ಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದು, ನಾಲ್ವರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದರು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೇನಾಧಿಕಾರಿ ನೈದ್ ಸುಬೆದಾರ್, ವಿಫುನ್ಕುಮಾರ್ ಮತ್ತು ಯೋಧ ಅರವಿಂದ್ ಸಿಂಗ್ ವೀರ ಮರಣವನ್ನಪ್ಪಿದ್ದಾರೆ. +ವೀರಮರಣವನ್ನು ಹೊಂದಿದ ಯೋಧರ ತ್ಯಾಗಕ್ಕೆ ಭದ್ರತಾ ಪಡೆ ವಂದನೆ ಸಲ್ಲಿಸಿದ್ದು, ಅವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ ಎಂದು ಸೇನೆ ಹೇಳಿದೆ.ಇದಕ್ಕೂ ಮುನ್ನ ನಿನ್ನೆ 3.30ರ ಸುಮಾರಿಗೆ ನಡೆದ ಭಾರಿ ಪ್ರಮಾಣದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು, ಅವರಿಗೆ ಸ್ಥಳೀಯವಾಗಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಲಿಕಾಪ್ಟರ್ ಮೂಲಕ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ. +ಎರಡು ದಿನಗಳ ಹಿಂದಷ್ಟೇ ಉದಂಪುರ್ ಜಿಲ್ಲೆಯ ಬಸಂತಗಡದಲ್ಲಿ ಭದ್ರತಾ ಕಾರ್ಯಾಚರಣೆ ನಡೆಸಿ ಜೈಶ್-ಎ-ಮಹಮದ್ ಭಯೋತ್ಪಾದನೆ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. \ No newline at end of file diff --git a/eesanje/url_47_14_6.txt b/eesanje/url_47_14_6.txt new file mode 100644 index 0000000000000000000000000000000000000000..34218685c4eaba0e76f54c771cff0a977c4c7ff3 --- /dev/null +++ b/eesanje/url_47_14_6.txt @@ -0,0 +1,6 @@ +ಕೋಲ್ಕತ್ತಾ ವಿಮಾನ ನಿಲ್ದಾಣದ ರೆಸ್ಟೋರೆಂಟ್‌ನಲ್ಲಿ ಒಂದು ಕಪ್‌ ಟೀಗೆ 340 ರೂ. : ಚಿದರಂಬರಂ ಆಕ್ಷೇಪ + ' 340 +ನವದೆಹಲಿ,ಸೆ.14-ಮಾಜಿ ಹಣಕಾಸು ಸಚಿವ ಪಿ.ಚಿದರಂಬರಂ ಅವರು ಕೋಲ್ಕತ್ತಾ ವಿಮಾನ ನಿಲ್ದಾಣದ ರೆಸ್ಟೋರೆಂಟ್‌ನಲ್ಲಿ ಒಂದು ಕಪ್‌ ಟೀಗೆ 340 ರೂ. ದರ ಇರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. +ಈ ಬಗ್ಗೆ ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಈ ಹಿಂದೆ ಚೆನ್ನೈನಲ್ಲಿ ಇಂತಹುದೇ ಅನುಭವವಾಗಿತ್ತು. ಈ ಬಗ್ಗೆ ತಮ ಖಾತೆಯಲ್ಲಿ ಪ್ರಸ್ತಾಪ ಮಾಡಿದ್ದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಕೂಡಲೇ ಕ್ರಮ ಕೈಗೊಂಡಿತ್ತು ಸರಿಸಿಕೊಂಡಿದ್ದಾರೆ. +ಈಗ ನೋಡಿದರೆ ಪಶ್ಚಿಮ ಬಂಗಾಳದಲ್ಲಿ ಒಂದು ಟೀ ಬೆಲೆ ಬರೋಬ್ಬರಿ 340 ರೂ. ಇದೆ. ಇದನ್ನು ನೋಡಿದರೆ ಕೋಲ್ಕತ್ತಾ ಏರ್‌ಪೋರ್ಟ್‌ನಲ್ಲಿ ಒಂದು ಕಪ್‌ ಚಹಾಕ್ಕೆ 340 ರೂ. ತಮಿಳುನಾಡಿಗಿಂತ ಬಂಗಾಳದಲ್ಲಿ ಹಣದುಬ್ಬರ ಹೆಚ್ಚು ಎಂದಿದ್ದಾರೆ. +ಹೈದರಾಬಾದ್‌, ಕೋಲ್ಕತ್ತಾ, ವಿಮಾನ ನಿಲ್ದಾಣದ ರೆಸ್ಟೋರೆಂಟ್‌ನಲ್ಲಿ ಚಹಾದ ಬೆಲೆ 340 ರೂ. ಇದೆ.ಕೋಲ್ಕತ್ತಾ ವಿಮಾನ ನಿಲ್ದಾನದಲ್ಲಿ ಬಿಸಿನೀರು ಮತ್ತು ಟೀ ಬ್ಯಾಗ್‌ನಿಂದ ಮಾಡಿದ ಚಹಾದ ಬೆಲೆ 340 ರೂ. ಎಂಬ ವಿಚಾರವನ್ನು ನಾನು ತಿಳಿಸಲು ಬಯಸುತ್ತೇನೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾರಾಟ ಟೀ ಬೆಲೆಯಲ್ಲಿ ಭಾರೀ ಹೆಚ್ಚಳ ಇದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_14_7.txt b/eesanje/url_47_14_7.txt new file mode 100644 index 0000000000000000000000000000000000000000..4c4a49b3435a55aab882b9f7073811befe510881 --- /dev/null +++ b/eesanje/url_47_14_7.txt @@ -0,0 +1,14 @@ +6 ತಿಂಗಳ ನಂತರ ಕೇಜ್ರಿವಾಲ್‌ಗೆ ಜಾಮೀನು, ಯಾವುದೇ ಕ್ಷಣದಲ್ಲಿ ತಿಹಾರ್ ಜೈಲಿನಿಂದ ಬಿಡುಗಡೆ + , ' +ನವದೆಹಲಿ,ಸೆ.13-ದೆಹಲಿ ಅಬಕಾರಿ ಪರಿಷ್ಕರಣ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಆರು ತಿಂಗಳ ನಂತರ ಬಿಡುಗಡೆಯ ಭಾಗ್ಯ ಲಭಿಸಿದೆ.ಸುಪ್ರೀಂಕೋರ್ಟ್ ಇಂದು ಕೇಜ್ರಿವಾಲ್ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಯಾವುದೇ ಕ್ಷಣದಲ್ಲಿ ಅವರು ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. +ಕೇಜ್ರಿವಾಲ್ ಅವರು ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಇಲ್ಲವೇ ಮಾಧ್ಯಮಗಳಿಗೆ ಹೇಳಿಕೆ ನೀಡದಿರುವುದು ಸರ್ಕಾರಿ ಕಡತಗಳಿಗೆ ಸಹಿ ಹಾಕದಿರುವುದು, ಕಚೇರಿಗಳಿಗೆ ತೆರಳದಿರುವುದು, 10 ಲಕ್ಷದ ಎರಡು ಬಾಂಡ್ಗಳು, ವಿಚಾರಣಾಧೀನ ನ್ಯಾಯಾಲಯಕ್ಕೆ ಸಹಕಾರ ಕೊಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದೆ. +ಅಬಕಾರಿ ಪರಿಷ್ಕರಣ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿದ್ದ ದೆಹಲಿ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ, ರಾಜ್ಯಸಭಾ ಸದಸ್ಯ ಸಂಜಯ್ಸಿಂಗ್, ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಪುತ್ರಿ ಕೆ. ಕವಿತ ಹಾಗೂ ವಿನಯ್ ನಾಯರ್ ಅವರುಗಳಿಗೆ ಈಗಾಗಲೇ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. +ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ, ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೇಜ್ರಿವಾಲ್ಗೆ ಜಾಮೀನು ಮಂಜೂರು ಮಾಡಿ ಅಗತ್ಯವಿದ್ದಲ್ಲಿ ತನಿಖಾ ಸಂಸ್ಥೆಗಳಿಗೆ, ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚನೆ ನೀಡಿತು. +ಆಪ್ ರಾಷ್ಟ್ರೀಯ ಸಂಚಾಲಕರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಈ ಮೊದಲು ಮಾ. 21 ರಂದು ಬೇನಾಮಿ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಜಾಮೀನು ಸಿಕ್ಕಿತ್ತಾದರೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.26 ರಂದು ತಿಹಾರ್ ಜೈಲಿನಲ್ಲಿದ್ದ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. +ತಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ರವರು ತಮ ಪರವಾಗಿ ವಾದಿಸಲು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರನ್ನು ನೇಮಿಸಿಕೊಂಡಿದ್ದರು.ಕೇಜ್ರಿವಾಲ್ ಬಂಧಿಸುವ ವೇಳೆ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಸಿಬಿಐ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. +ಸಿಬಿಐ ಪಂಜರದ ಗಿಳಿಯಲ್ಲ ಎಂಬುದನ್ನು ಜನತೆಯ ಮುಂದೆ ಸಾಬೀತುಪಡಿಸಬೇಕು. ಆರೋಪಿಯೊಬ್ಬನ ಮೇಲೆ ಆರೋಪವಿದ್ದ ತಕ್ಷಣ ಜಾಮೀನು ನೀಡಬಾರದು ಎಂದು ತಕರಾರು ತೆಗೆಯುವುದು ಸರಿಯಲ್ಲ. ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಆತುರವಾಗಿ ಬಂಧಿಸಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದೆ. +ಕೇಜ್ರಿವಾಲ್ ಅವರನ್ನು ಯಾವ ಕಾರಣಕ್ಕಾಗಿ ಅಷ್ಟೊಂದು ಆತುರದಲ್ಲಿ ಬಂಧಿಸಲಾಯಿತು. ಸಿಬಿಐನ ಉದ್ದೇಶವಾದರೂ ಏನು?, ನೀವು ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದೀರೋ, ಇಲ್ಲವೇ ಬೆದರಿಸುವ ಕೆಲಸ ಮಾಡುತ್ತಿದ್ದೀರೋ ಎಂದು ಸಿಬಿಐ ಪರ ವಕೀಲರನ್ನು ಕಠಿಣ ಪದಗಳಲ್ಲಿ ಪ್ರಶ್ನೆ ಮಾಡಿದರು. +ಜಾಮೀನು ನಿರಾಕರಿಸಿದ್ದನ್ನು ಹಾಗೂ ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್, ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಕೇಜ್ರಿವಾಲ್ ಅವರನ್ನು ಸಿಬಿಐ ಜೂ. 26ರಂದು ಬಂಧಿಸಿತ್ತು. ಅವರ ಬಂಧನವನ್ನು ದೆಹಲಿ ಹೈಕೋರ್ಟ್ ಆ. 5ರಂದು ಎತ್ತಿಹಿಡಿದಿತ್ತು.ಇದಕ್ಕೂ ಮುನ್ನ ದೆಹಲಿ ಹೈಕೋರ್ಟ್ ಆಗಸ್ಟ್ 14ರಂದು ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿತ್ತು. ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಕೇಳಿತ್ತು. ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲನವಿ ಸಲ್ಲಿಸಲು ಕಾರಣವಾಯಿತು. +ಆ.14 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಬಿಐ ಪ್ರತಿಕ್ರಿಯೆ ಕೇಳಿತ್ತು. ಆದರೆ ಆ ಹಂತದಲ್ಲಿ ಜಾಮೀನು ನಿರಾಕರಿಸಿತು. ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂ.26ರಂದು ಸಿಬಿಐ ಬಂಧಿಸಿತ್ತು. ದೆಹಲಿ ಮುಖ್ಯಮಂತ್ರಿ ಮತ್ತು ಇತರ ಹಲವು ಆಮ್ ಆದಿ ಪಕ್ಷದ (ಎಎಪಿ) ನಾಯಕರು ದೆಹಲಿಯ ಅಬಕಾರಿ ನೀತಿಯಲ್ಲಿ ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಹಣ ವರ್ಗಾವಣೆ ಮಾಡಿದ ಆರೋಪ ಹೊತ್ತಿದ್ದರು. +ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯ ಮೂಲಕ ಅಕ್ರಮ ಹಣದಿಂದ ಆಮ್ ಆದಿ ಪಕ್ಷ (ಎಎಪಿ) ಲಾಭ ಪಡೆದಿದೆ ಎಂದು ಸಿಬಿಐ ಆರೋಪಿಸಿದೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ಒಟ್ಟಾರೆ ಉಸ್ತುವಾರಿಯೂ ಆಗಿರುವ ಅರವಿಂದ್ ಕೇಜ್ರಿವಾಲ್ ಮೊದಲಿನಿಂದಲೂ ನೀತಿ ನಿರೂಪಣೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು. +ಹರ್ಯಾಣ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಂದಿದ್ದು, ಆಮ್ ಆದಿ ಪಕ್ಷಕ್ಕೆ ಹೆಚ್ಚಿನ ಬಲ ನೀಡಲಿದೆ. ಹರಿಯಾಣದಲ್ಲಿ ಆಪ್ ಪಕ್ಷವು, ಬಿಜೆಪಿ ಹಾಗೂ ಇಂಡಿಯಾ ಬ್ಲಾಕ್ನ ಪಾಲುದಾರರಾಗಿರುವ ಕಾಂಗ್ರೆಸ್ಗೆ ದೊಡ್ಡ ಸವಾಲು ನೀಡಿತ್ತಿದೆ. \ No newline at end of file diff --git a/eesanje/url_47_14_9.txt b/eesanje/url_47_14_9.txt new file mode 100644 index 0000000000000000000000000000000000000000..69e77f13c1baf1b8cfafbdc50e1f559f7a715b96 --- /dev/null +++ b/eesanje/url_47_14_9.txt @@ -0,0 +1,8 @@ +ಮೋದಿ ವಿದೇಶಾಂಗ ನೀತಿಗೆ ರಾಹುಲ್ ಬೆಂಬಲ + , +ವಾಷಿಂಗ್ಟನ್, ಸೆ.11– ಅಮೆರಿಕದೊಂದಿಗಿನ ಸಂಬಂಧ, ಹರಿವಿನ ಹೊರತು ಪಾಕಿಸ್ತಾನದ ಜತೆ ಮಾತುಕತೆಯಂತಹ ಪ್ರಮುಖ ವಿದೇಶಾಂಗ ನೀತಿ ವಿಷಯಗಳಲ್ಲಿ ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. +ಭಯೋತ್ಪಾದನೆಯನ್ನು ನಿಲ್ಲಿಸಲಾಗಿದೆ, ಬಾಂಗ್ಲಾದೇಶ ಮತ್ತು ಇಸ್ರೇಲ್ನಲ್ಲಿ ಉಗ್ರಗಾಮಿ ಅಂಶಗಳ ಬಗ್ಗೆ ಕಾಳಜಿ ಇದೆ ಎಂದಿರುವ ಅವರು, ಚೀನಾದ ಕುರಿತ ಮೋದಿಯವರ ನೀತಿಗಳೊಂದಿಗೆ ಹೊಂದಿಕೆಯಾಗಲಿಲ್ಲ, ಏಕೆಂದರೆ ದೆಹಲಿ ಗಾತ್ರದ ಲಡಾಖ್ನಲ್ಲಿರುವ ಭಾರತೀಯ ಭೂಪ್ರದೇಶವನ್ನು ಚೀನಾದ ಪಡೆಗಳು ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಆರೋಪಿಸಿದರು. +ಇಲ್ಲಿನ ಪ್ರತಿಷ್ಠಿತ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ಕುರಿತ ಮೋದಿ ನೀತಿಗಳನ್ನು ಬೆಂಬಲಿಸಿದರು.ನಮ ದೇಶದಲ್ಲಿ ಪಾಕಿಸ್ತಾನದ ಭಯೋತ್ಪಾದನೆಯ ಪ್ರಚೋದನೆಯು ಎರಡು ದೇಶಗಳನ್ನು ಹಿಡಿದಿಟ್ಟುಕೊಳ್ಳುತ್ತಿದೆ. ನಮ ದೇಶದಲ್ಲಿ ಪಾಕಿಸ್ತಾನವು ಭಯೋತ್ಪಾದಕ ಕತ್ಯಗಳನ್ನು ನಡೆಸುವುದನ್ನು ನಾವು ಒಪ್ಪುವುದಿಲ್ಲ. ನಾವು ಅದನ್ನು ಒಪ್ಪಿಕೊಳ್ಳಲೂ ಹೋಗುವುದಿಲ್ಲ. ಮತ್ತು ಅವರು ಅದನ್ನು ಮುಂದುವರಿಸುವವರೆಗೆ, ನಮ ನಡುವೆ ಸಮಸ್ಯೆಗಳಿರುತ್ತವೆ ಎಂದರು. +ಕಾಶೀರ ಸಮಸ್ಯೆಯು ದಕ್ಷಿಣ ಏಷ್ಯಾದ ಎರಡು ರಾಷ್ಟ್ರಗಳನ್ನು ಮಾತುಕತೆಯಿಂದ ದೂರವಿಡುತ್ತಿದೆಯೇ ಎಂದು ಕೇಳಿದಾಗ ಅವರು ಇಲ್ಲ ಎಂದು ಹೇಳಿದರು.ಭಾರತ-ಅಮೆರಿಕ ಸಂಬಂಧದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗಾಂಧಿ, ಎರಡೂ ದೇಶಗಳಲ್ಲಿ ಉಭಯಪಕ್ಷೀಯ ಬೆಂಬಲವಿದೆ ಎಂದು ಗಮನಿಸಿದರು. +ನಾನು ದೊಡ್ಡ ತಿರುವು ಕಾಣುತ್ತಿಲ್ಲ. ಮೋದಿಯವರು ಅಮೆರಿಕದೊಂದಿಗಿನ ನಮ ವರ್ತನೆಯಿಂದ ಹೆಚ್ಚು ದೂರ ಸರಿಯುತ್ತಿರುವುದನ್ನು ನಾನು ನೋಡುತ್ತಿಲ್ಲ. ಅವರು ಮಾಡುತ್ತಿರುವ ಕೆಲಸದಿಂದ ನಾವೇ ದಿಕ್ಕನ್ನು ಬದಲಾಯಿಸುವುದನ್ನು ನಾನು ನೋಡುತ್ತಿಲ್ಲ. ಹಾಗಾಗಿ ಅಲ್ಲಿ ನಾನು ನಿರಂತರತೆಯನ್ನು ನೋಡುತ್ತೇನೆ ಎಂದರು. +ಭಾರತ- ಅಮೆರಿಕ ಸಂಬಂಧವು ಎರಡೂ ದೇಶಗಳಿಗೆ ಪ್ರಮುಖವಾಗಿದೆ ಎಂಬ ಅಂಶವನ್ನು ಎಲ್ಲರೂ ಒಪ್ಪಿಕೊಳ್ಳುತ್ತಾರೆ ಅದನ್ನು ನಾನು ಒಪ್ಪುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_150_1.txt b/eesanje/url_47_150_1.txt new file mode 100644 index 0000000000000000000000000000000000000000..608f42d6e3b38952d010cd1cc21824ef2312a686 --- /dev/null +++ b/eesanje/url_47_150_1.txt @@ -0,0 +1,8 @@ +2014ರ ಮೊದಲು ಕರಾಳ ಯುಗದ ವಾತವರಣವಿತ್ತು : ಯೋಗಿ +ಜೌನ್‍ಪುರ,ಮಾ.10- ಕಳೆದ 2014ರ ಮೊದಲು ದೇಶದಲ್ಲಿ ಅಪನಂಬಿಕೆ, ವಂಚನೆಗಳು ಮತ್ತು ಅರಾಜಕತೆಗಳಿಂದ ಕೂಡಿದ ಕರಾಳ ಯುಗದ ವಾತಾವರಣವಿತ್ತು, ಆದರೆ ಇಂದು ಅದು ನವ ಭಾರತವಾಗಿದ್ದು, ಭದ್ರತೆಯ ಭರವಸೆ, ಸಂಸ್ಕøತಿಯನ್ನು ಉತ್ತೇಜಿಸಲಾಗುತ್ತದೆ ಮತ್ತು ಆರ್ಥಿಕತೆ ಪ್ರಗತಿಯಲ್ಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. +743 ಕೋಟಿ ರೂ. ಮೌಲ್ಯದ 78 ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಅವರು ಚಂದೌಲಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಮರಳುತ್ತಾರೆ ಮತ್ತು ಭಾರತವು ವಿಶ್ವದ ಮೂರನೇ ಅತಿದೊಡ್ಡ ಶಕ್ತಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 2014 ರಲ್ಲಿ ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಳ್ಳುವ ಮೊದಲು ಮತ್ತು ನಂತರ ದೇಶದ ಪ್ರಗತಿಯ ನಡುವೆ ಹೋಲಿಕೆ ಮಾಡಿದರು. +2014ಕ್ಕಿಂತ ಮೊದಲು ದೇಶದಲ್ಲಿ ಕರಾಳ ಯುಗದ ವಾತಾವರಣವಿತ್ತು. ಸುತ್ತಲೂ ಅಪನಂಬಿಕೆ ಇತ್ತು, ಭಾರತೀಯರ ಬಗ್ಗೆ ಗೌರವ ಕುಸಿಯುತ್ತಿದೆ ಮತ್ತು ಹಗರಣಗಳು ಮತ್ತು ಅರಾಜಕತೆಯ ಸರಮಾಲೆ ಇತ್ತು. ಭಾರತದಲ್ಲಿ ನಕ್ಸಲಿಸಂ ಮತ್ತು ಉಗ್ರವಾದವು ಚಾಲ್ತಿಯಲ್ಲಿತ್ತು. ಆದರೆ, ಇಂದು ನೀವು ನೋಡುತ್ತಿರುವ ಭಾರತ ಹೊಸ ಭಾರತವಾಗಿದೆ. ಇಲ್ಲಿ ಭದ್ರತೆಯನ್ನು ಖಾತರಿಪಡಿಸಲಾಗಿದೆ, ಸಂಸ್ಕøತಿಯನ್ನು ಉತ್ತೇಜಿಸಲಾಗುತ್ತಿದೆ ಮತ್ತು ದೇಶವು ಆರ್ಥಿಕ ಸಮೃದ್ಧಿಯ ದಾಖಲೆಯನ್ನು ಮಾಡುತ್ತಿದೆ ಎಂದು ಅವರು ಹೇಳಿದರು. +ಹಿಂದಿನ ಸರ್ಕಾರಗಳ ಮೇಲೆ ದಾಳಿ ಮಾಡಿದ ಅವರು, ಚಂದೌಲಿಯನ್ನು 1997 ರಲ್ಲಿ ಜಿಲ್ಲೆಯಾಗಿ ಸ್ಥಾಪಿಸಲಾಯಿತು ಆದರೆ 27 ವರ್ಷಗಳ ನಂತರವೂ ತಹಸಿಲ್‍ಗೆ ಪೊಲೀಸ್ ಲೈನ್ ಮತ್ತು ವಸತಿ ಮತ್ತು ವಸತಿ ರಹಿತ ಕಟ್ಟಡಗಳಂತಹ ಮೂಲಭೂತ ಸೌಕರ್ಯಗಳ ಕೊರತೆಯಿದೆ ಎಂದು ಹೇಳಿದರು. ಇಂದು ಇಲ್ಲಿ ಪೊಲೀಸ್ ಲೈನ್‍ಗಳಲ್ಲಿ ವಸತಿ ಮತ್ತು ವಸತಿಯೇತರ ಕಟ್ಟಡಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗುತ್ತಿದೆ ಎಂದರು.ಜಾನ್‍ಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 2024 ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮೋದಿ ಸರ್ಕಾರವನ್ನು ಮರು ಆಯ್ಕೆ ಮಾಡುವುದನ್ನು ಖಚಿತಪಡಿಸಿಕೊಳ್ಳುವುದು ತಮ್ಮ ಏಕೈಕ ಗುರಿಯಾಗಿದೆ ಎಂದು ಅವರು ಮತ್ತೊಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ವಿರೋಧ ಪಕ್ಷಗಳು ಅಧಿಕಾರದಲ್ಲಿದ್ದಾಗ ಕಾಶಿಯಲ್ಲಿ ಜಲಾಭಿಷೇಕದಂತಹ ಕಾರ್ಯಕ್ರಮಗಳನ್ನು ಟೀಕಿಸಿದವು ಮತ್ತು ಹಬ್ಬಗಳ ಮೊದಲು ಗಲಭೆಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು. ಇಂದು ಸರ್ಕಾರವು ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಪ್ರೋತ್ಸಾಹಿಸುತ್ತದೆ ಮತ್ತು ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಯಾವುದೇ ದುಷ್ಕøತ್ಯವನ್ನು ಸರ್ಕಾರ ಸಹಿಸುವುದಿಲ್ಲ ಮತ್ತು ಅಂತಹ ಕ್ರಮಗಳಿಗೆ ಪ್ರಯತ್ನಿಸುವವರು ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು. +ಯೋಗಿ ಆದಿತ್ಯನಾಥ್ ಅವರು ವೀರ ಶಿರೋಮಣಿ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು ಮತ್ತು ಜಾನ್‍ಪುರಕ್ಕೆ ? 899 ಕೋಟಿಗಳ 256 ಅಭಿವೃದ್ಧಿ ಯೋಜನೆಗಳನ್ನು ಘೋಷಿಸಿದರು. ಇವು ರಸ್ತೆಗಳು, ಕುಡಿಯುವ ನೀರು ಮತ್ತು ಒಟ್ಟಾರೆ ಅಭಿವೃದ್ಧಿಗೆ ಸಂಬಂ„ಸಿವೆ. ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳ ಪಲಾನುಭವಿಗಳಿಗೆ ಚೆಕ್ , ಟ್ಯಾಬ್ಲೆಟ, ಲ್ಯಾಪ್‍ಟಾಪ್ ಮತ್ತಿತರ ವಸ್ತುಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು. +ದೇಶವು ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತಿರುವಾಗ, ನಾವು ಬಯಸುವ ರೀತಿಯ ಭಾರತವನ್ನು ನಾವು ಕಲ್ಪಿಸಬೇಕಾಗಿದೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಪ್ರಧಾನಿ ಮೋದಿ ಅವರು ಐದು ನಿರ್ಣಯಗಳನ್ನು ಪ್ರತಿಜ್ಞೆ ಮಾಡಿದ್ದರು. ಮಹಾರಾಣಾ ಪ್ರತಾಪ್ ಗುಲಾಮಗಿರಿಯ ಸರಪಳಿಯನ್ನು ಮುರಿದ ಮಹಾನ್ ವೀರರಾಗಿ ನಿಂತಿದ್ದಾರೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_47_150_10.txt b/eesanje/url_47_150_10.txt new file mode 100644 index 0000000000000000000000000000000000000000..af452e6b25aa5eb34edbf81f9b1b97f9d7606c04 --- /dev/null +++ b/eesanje/url_47_150_10.txt @@ -0,0 +1,4 @@ +ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ +ಹೈದರಾಬಾದ್, ಮಾ.9- ತೆಲಂಗಾಣದಲ್ಲಿ 17 ವರ್ಷದ ಬಾಲಕಿ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಟ್ಟಡದಿಂದ ಜಿಗಿದು ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಸಾಹಿತಿ ಎಂದು ಗುರುತಿಸಲಾಗಿದೆ. ತೆಲಂಗಾಣದ ಹನಮಕೊಂಡದಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. +ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಮತ್ತು ಅದರ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಅ„ಕಾರಿಗಳು ತಿಳಿಸಿದ್ದಾರೆ. ಭೀಮಾರಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದರು. +ಕಾಲೇಜು ಆಡಳಿತ ಮಂಡಳಿ ಇಂದು ಬೆಳಗ್ಗೆ ಆಕೆಯ ಶವವನ್ನು ಪತ್ತೆ ಮಾಡಿದೆ ಎಂದು ಹನಮಕೊಂಡ ಪೊಲೀಸ್ ಇನ್ಸ್‍ಪೆಕ್ಟರ್ ಸಂಜೀವ್ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಾಲಕಿ ಕಟ್ಟಡದಿಂದ ಜಿಗಿದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_150_11.txt b/eesanje/url_47_150_11.txt new file mode 100644 index 0000000000000000000000000000000000000000..46b219323bde29c495b51fc4273c6abd69a19e8c --- /dev/null +++ b/eesanje/url_47_150_11.txt @@ -0,0 +1,4 @@ +ತಮಿಳುನಾಡಿನಲ್ಲಿ ಇಡಿ ಶೋಧ +ಚೆನ್ನೈ, ಮಾ.9 (ಪಿಟಿಐ) – ತಮಿಳುನಾಡಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿದೆ ಎನ್ನಲಾದ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ತಮಿಳುನಾಡಿನಲ್ಲಿ ವಿವಿಧ ಪ್ರದೇಶಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಅವರ ಅಳಿಯ ಆಧವ್ ಅರ್ಜುನ್ ಅವರ ಆವರಣ ಸೇರಿದಂತೆ ಚೆನ್ನೈ ಮತ್ತು ಕೊಯಮತ್ತೂರಿನಲ್ಲಿರುವ ಕೆಲವು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಸುಮಾರು 10 ನಿವೇಶನಗಳನ್ನು ಶೋಧಿಸಲಾಗುತ್ತಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‍ಎ) ಅಡಿಯಲ್ಲಿ ಇಡಿ ತನಿಖೆ ನಡೆಸುತ್ತಿದೆ. +ಸಿಕ್ಕಿಂ ಸರ್ಕಾರದ ಲಾಟರಿಗಳ ಮಾರಾಟಕ್ಕೆ ಸಂಬಂಧಿಸಿದ ಆಪಾದಿತ ಅಪರಾಧಗಳಿಗಾಗಿ ಮಾರ್ಟಿನ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣದಿಂದ ಉದ್ಭವಿಸಿದ ಮತ್ತೊಂದು ಮನಿ ಲಾಂಡರಿಂಗ್ ಪ್ರಕರಣದ ಭಾಗವಾಗಿ ಇಡಿಯಿಂದ ತನಿಖೆ ನಡೆಸಲಾಗಿದೆ. ಲಾಟರಿ ರಾಜ ಎಂದು ಕರೆಯಲ್ಪಡುವ ಮಾರ್ಟಿನ್ ಮತ್ತು ಅವರ ಕಂಪನಿ- ಗೇಮಿಂಗ್ ಸೊಲ್ಯೂಷನ್ಸ ಇಂಡಿಯಾ ಸಂಸ್ಥೆ ಸಿಕ್ಕಿಂ ಲಾಟರಿಗಳ ಮಾಸ್ಟರ್ ವಿತರಕ ಎಂದು ಹೇಳಲಾಗಿದೆ. \ No newline at end of file diff --git a/eesanje/url_47_150_12.txt b/eesanje/url_47_150_12.txt new file mode 100644 index 0000000000000000000000000000000000000000..617760c3be2be38198a2f7bf795e0173961fd494 --- /dev/null +++ b/eesanje/url_47_150_12.txt @@ -0,0 +1,10 @@ +ಕಾಜಿರಂಗದಲ್ಲಿ ಪ್ರಧಾನಿ ಮೋದಿ ಆನೆ ಮತ್ತು ಜೀಪ್ ಸಫಾರಿ +ಕಾಜಿರಂಗ (ಅಸ್ಸಾಂ), ಮಾ 9 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆ ಮತ್ತು ಜೀಪ್ ಸಫಾರಿಗಳನ್ನು ಆನಂದಿಸಿದ್ದಾರೆ. ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ತಮ್ಮ ಮೊದಲ ಭೇಟಿ ನೀಡಿದ ಪ್ರಧಾನಿ, ಉದ್ಯಾನವನದಲ್ಲಿ ಎರಡು ಗಂಟೆಗಳ ಕಾಲ ಕಳೆದರು. +ಪ್ರವಾಸದ ವೇಳೆ, ಸಂರಕ್ಷಣಾ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ಅರಣ್ಯ ಸಿಬ್ಬಂದಿ, ಆನೆ ಮಾವುತರು ಮತ್ತು ಅರಣ್ಯಾಧಿಕಾರಿಗಳ ತಂಡವಾದ ವಾನ್ ದುರ್ಗಾ ಸದಸ್ಯರೊಂದಿಗೆ ಮೋದಿ ಸಂವಾದ ನಡೆಸಿದರು. ಕಾಜಿರಂಗವು ಘೇಂಡಾಮೃಗಗಳಿಗೆ ಹೆಸರುವಾಸಿಯಾಗಿದೆ ಆದರೆ ಹಲವಾರು ಇತರ ಜಾತಿಗಳೊಂದಿಗೆ ಹೆಚ್ಚಿನ ಸಂಖ್ಯೆಯ ಆನೆಗಳು ಸಹ ಇವೆ ಎಂದು ಪ್ರಧಾನಿ ಟ್ವಿಟರ್‍ನಲ್ಲಿ ಬರೆದಿದ್ದಾರೆ. + . , .../68NEtoGAoz +ಅವರು ಮೊದಲು ಪಾರ್ಕ್‍ನ ಕೇಂದ್ರ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿ ನಡೆಸಿದರು.ಜಂಗಲ್ ಆಯಾಸ, ಜಾಕೆಟ್ ಮತ್ತು ಟೋಪಿ ಧರಿಸಿದ ಮೋದಿ, ರಾಜು ಎಂಬ ಮಾವುತ ಪ್ರದ್ಯುಮ್ನ ಎಂಬ ಆನೆಯ ಮೇಲೆ ಸವಾರಿ ಮಾಡಿದರು ಮತ್ತು ಡಾಗ್ಲ್ಯಾಂಡ್ ಮತ್ತು ಪೋಲಿಯೊಮರಿ ಪ್ರದೇಶದ ಸಫಾರಿ ಮಾರ್ಗದ ಮೂಲಕ ಹಾದುಹೋದರು ಎಂದು ಅಧಿಕಾರಿ ತಿಳಿಸಿದ್ದಾರೆ.ಅವರನ್ನು 16 ಆನೆಗಳ ದಂಡು ಹಿಂಬಾಲಿಸಿತು.ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಪ್ರವಾಸದ ಸಮಯದಲ್ಲಿ, ಅವರು ಲಖಿಮಾಯಿ, ಪ್ರದ್ಯುಮ್ನ ಮತ್ತು ಪೊಲ್ಮಾಯಿ ಎಂಬ ಮೂರು ಆನೆಗಳಿಗೆ ಕಬ್ಬನ್ನು ತಿನ್ನಿಸಿದರು. +ನಂತರ ಪ್ರಧಾನಿಯವರು ಅದೇ ಅರಣ್ಯ ವ್ಯಾಪ್ತಿಯಲ್ಲಿ ಜೀಪ್ ಸಫಾರಿಯನ್ನು ಕೈಗೊಂಡರು ಮತ್ತು ಅಭಯಾರಣ್ಯದ ನೋಟವನ್ನು ಪಡೆಯಲು ದಲ್ಲೆಗ್ ವಾಚ್ ಟವರ್‍ನಲ್ಲಿ ನಿಲ್ಲಿಸಿದರು. ಹುಲಿಯೊಂದು ಪ್ರಧಾನಿಯವರ ಜಲಪಾತದ ಹಾದಿಯನ್ನು ದಾಟಿತು ಎಂದು ಅಧಿಕಾರಿ ಹೇಳಿದರು, ಪ್ರಧಾನಿ ಮೋದಿ ಕಾಡಿನಲ್ಲಿ ಒಂದು ಕೊಂಬಿನ ಘೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಹಲವಾರು ಪಕ್ಷಿಗಳನ್ನು ನೋಡಿದ್ದಾರೆ ಎಂದು ಹೇಳಿದರು. +ಕಾಜಿರಂಗ ಪ್ರವಾಸದ ವೇಳೆ ಪ್ರಧಾನಿ ಮೋದಿ ಅರಣ್ಯ ಮತ್ತು ವನ್ಯಜೀವಿಗಳ ಹಲವಾರು ಚಿತ್ರಗಳನ್ನು ತೆಗೆದಿದ್ದಾರೆ. ಪ್ರಧಾನಮಂತ್ರಿಯವರೊಂದಿಗೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕಿ ಸೋನಾಲಿ ಘೋಷ್ ಇದ್ದರು. ಇತರ ಹಿರಿಯ ಅರಣ್ಯ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಕೂಡ ಅಲ್ಲಿ ಹಾಜರಿದ್ದರು. +ನಮ್ಮ ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವ ಪ್ರಯತ್ನಗಳಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ಅರಣ್ಯ ಸಿಬ್ಬಂದಿಯ ತಂಡ ವಾನ್ ದುರ್ಗ ಅವರೊಂದಿಗೆ ಸಂವಾದ ನಡೆಸಿದೆ. ನಮ್ಮ ನೈಸರ್ಗಿಕ ಪರಂಪರೆಯನ್ನು ಕಾಪಾಡುವಲ್ಲಿ ಅವರ ಸಮರ್ಪಣೆ ಮತ್ತು ಧೈರ್ಯವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಮೈಕ್ರೋಬ್ಲಾಗಿಂಗ್ ಸೈಟ್‍ನಲ್ಲಿ ಪ್ರಧಾನಿ ಬರೆದಿದ್ದಾರೆ. +ಪ್ರಧಾನ ಮಂತ್ರಿಗಳ ಭೇಟಿಯ ಭದ್ರತಾ ವ್ಯವಸ್ಥೆಗಳ ದೃಷ್ಟಿಯಿಂದ ಮಾರ್ಚ್ 7 ರಿಂದ ಕೇಂದ್ರ ಕೊಹೊರಾ ಶ್ರೇಣಿಯಲ್ಲಿರುವ ಜೀಪ್ ಮತ್ತು ಆನೆ ಸಫಾರಿಗಳನ್ನು ಪ್ರವಾಸಿಗರಿಗೆ ಮುಚ್ಚಲಾಗಿದೆ. ಪ್ರವಾಸಿಗರಿಗಾಗಿ ಅರಣ್ಯ ವ್ಯಾಪ್ತಿಯಲ್ಲಿನ ಜಂಗಲ್ ಸಫಾರಿ ಮಾರ್ಚ್ 10 ರಂದು ಪುನರಾರಂಭಗೊಳ್ಳಲಿದೆ. +ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಶುಕ್ರವಾರ ಸಂಜೆ ಕಾಜಿರಂಗಕ್ಕೆ ಆಗಮಿಸಿದ್ದರು. ಅವರು ಮಧ್ಯಾಹ್ನ ಜೋರ್ಹತ್‍ನಲ್ಲಿ ಪೌರಾಣಿಕ ಅಹೋಮ್ ಜನರಲ್ ಲಚಿತ್ ಅವರ 125 ಅಡಿ ಎತ್ತರದ ಶೌರ್ಯದ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಮೋದಿ ಅವರು ಮೆಲೆಂಗ್ ಮೆಟೆಲಿ ಪೋಥಾರ್‍ಗೆ ತೆರಳಲಿದ್ದು, ಅಲ್ಲಿ ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ಸ್ಥಳದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. \ No newline at end of file diff --git a/eesanje/url_47_150_2.txt b/eesanje/url_47_150_2.txt new file mode 100644 index 0000000000000000000000000000000000000000..082082229fe44bf6e70f69bdf9c1485296a18f87 --- /dev/null +++ b/eesanje/url_47_150_2.txt @@ -0,0 +1,7 @@ +ಉತ್ತರ ಬಂಗಾಳ ಯಾವಾಗಲೂ ಮೋದಿ ಭದ್ರಕೋಟೆ : ಸುವೇಂದು ಅಧಿಕಾರಿ +ನವದೆಹಲಿ,ಮಾ.10- ಉತ್ತರ ಬಂಗಾಳ ಯಾವಾಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರಕೋಟೆಯಾಗಿದೆ ಎಂದು ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ. ಉತ್ತರ ಬಂಗಾಳವು ಪಿಎಂ ಮೋದಿಯ ಭದ್ರಕೋಟೆಯಾಗಿದೆ. ಇಲ್ಲಿ ಜನರು ಅವರನ್ನು ಗೌರವಿಸುತ್ತಾರೆ, ಪ್ರೀತಿಸುತ್ತಾರೆ ಮತ್ತು ಅವರನ್ನು ತಮ್ಮವರೇ ಎಂದು ಪರಿಗಣಿಸುತ್ತಾರೆ. ಉತ್ತರ ಬಂಗಾಳವು 2014 ರಿಂದ ಪ್ರಧಾನಿ ಮೋದಿಯವರ ಪರವಾಗಿಯೇ ಇದೆ. 2019 ರಲ್ಲಿ ಅವರ ಮತ ಶೇಕಡಾವಾರು ಹೆಚ್ಚಾಯಿತು ಮತ್ತು 2021 ರಲ್ಲಿ ಅವರ ಬೆಂಬಲದ ನೆಲೆಯಲ್ಲಿ ಉತ್ತರ ಬಂಗಾಳ ಅಖಂಡವಾಗಿತ್ತು ಎಂದು ಸುವೆಂದು ಅಧಿಕಾರಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. +ತಮ್ಮ ಸಿಲಿಗುರಿ ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತೃಣಮೂಲ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಬಣಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದರು, ಜನರು ಕಷ್ಟಪಡುತ್ತಿರುವಾಗ ಅಥವಾ ಬಳಲುತ್ತಿರುವಾಗ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. ಇಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ಟಿಎಂಸಿಯ ತೋಲಬಾಜ ಲಾಭಕ್ಕಾಗಿ 25 ಲಕ್ಷ ನಕಲಿ ಜಾಬ್ ಕಾರ್ಡ್‍ಗಳನ್ನು ಸೃಷ್ಟಿಸಿ ಜನರಿಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. +ತೊಲಬಾಜನಿಂದ ಆಯ್ಕೆಯಾದ ಜನರಿಗೆ ಟಿಎಂಸಿ ಸರ್ಕಾರ ಹಣ ನೀಡುತ್ತದೆ. ನೀವು ಕಷ್ಟಪಡುತ್ತಿರುವಾಗ ಅಥವಾ ಬಳಲುತ್ತಿರುವಾಗ ಇದು ಟಿಎಂಸಿಗೆ ಪರಿಣಾಮ ಬೀರುವುದಿಲ್ಲ. ಸಂದೇಶಖಾಲಿಯ ದಲಿತ ಮತ್ತು ಆದಿವಾಸಿ ಮಹಿಳೆಯರಿಗೆ ಟಿಎಂಸಿ ನಾಯಕರು ಏನು ಮಾಡಿದ್ದಾರೆ ಎಂದು ಇಡೀ ದೇಶ ಚರ್ಚಿಸುತ್ತಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಲೂಟಿ ಬಡವರು ಕಷ್ಟಪಟ್ಟು ದುಡಿದ ಹಣವನ್ನು ಟಿಎಂಸಿಯ ತೋಲಬಾಜ ಮಾಡುತ್ತಿದೆ, ಎಂದು ಅವರು ಹೇಳಿದರು. +ಇದಲ್ಲದೆ, ಮನರೇಗಾ ವೇತನ ಬಿಡುಗಡೆಗೆ (ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ದೀರ್ಘಕಾಲ ಪ್ರತಿಭಟನೆ ನಡೆಸುತ್ತಿರುವ ವಿಷಯ) ಟಿಎಂಸಿಯನ್ನು ಹೊಡೆದುರುಳಿಸಿದ ಪಿಎಂ ಮೋದಿ, ಕೇಂದ್ರವು ದೆಹಲಿಯಿಂದ ಹಣವನ್ನು ಕಳುಹಿಸುತ್ತದೆ ಆದರೆ ಟಿಎಂಸಿ ಸರ್ಕಾರ ಅದನ್ನು ಲೂಟಿ ಮಾಡಿದೆ ಎಂದು ಹೇಳಿದರು. +ದೇಶದ ಪ್ರತಿಯೊಬ್ಬರೂ ಪಶ್ಚಿಮ ಬಂಗಾಳದ ಸಮಸ್ಯೆಗಳನ್ನು ನೋಡುತ್ತಾರೆ ಆದರೆ ವಿಪರ್ಯಾಸವೆಂದರೆ, ಮೊದಲು ಎಡಪಂಥೀಯರು ನಿಮ್ಮ ಮಾತನ್ನು ಕೇಳಲಿಲ್ಲ, ನಂತರ ಟಿಎಂಸಿ ಕೂಡ ನಿಮ್ಮನ್ನು ಕಡೆಗಣಿಸಿತು. ಅವರು ಬಡವರ ಭೂಮಿಯನ್ನು ಲೂಟಿ ಮಾಡುವಲ್ಲಿ ನಿರತರಾಗಿದ್ದರು ಎಂದು ಪ್ರಧಾನಿ ಹೇಳಿದರು. +ಆದ್ದರಿಂದ, ನೀವು ನನಗೆ ಅವಕಾಶ ನೀಡಿದಾಗ ನಾನು ನಿಮಗೆ ಎಲ್ಲಾ ಸೌಲಭ್ಯಗಳನ್ನು ಮರಳಿ ನೀಡಿದ್ದೇನೆ, ನಾವು ಉಜ್ವಲ ಯೋಜನೆಯಡಿ ಸಹೋದರಿಯರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಿದ್ದೇವೆ, ಆದರೆ ಟಿಎಂಸಿ ಸರ್ಕಾರವು 14 ಲಕ್ಷಕ್ಕೂ ಹೆಚ್ಚು ಸಹೋದರಿಯರಿಗೆ ಉಜ್ವಲ ಅನಿಲ ಸಂಪರ್ಕವನ್ನು ಸಹ ನೀಡುತ್ತಿಲ್ಲ. ನಿನ್ನೆ ಮಹಿಳಾ ದಿನದಂದು ನಾವು ಮತ್ತೊಂದು ಹೆಜ್ಜೆ ಇಟ್ಟಿದ್ದೇವೆ, ಈಗ ಗ್ಯಾಸ್ ಸಿಲಿಂಡರ್‍ಗೆ ? 100 ಹೆಚ್ಚು ಅಗ್ಗವಾಗಲಿದೆ. ಉಚಿತ ಪಡಿತರ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_150_3.txt b/eesanje/url_47_150_3.txt new file mode 100644 index 0000000000000000000000000000000000000000..294843a4ac688d17f8e75385354057e7164d1e09 --- /dev/null +++ b/eesanje/url_47_150_3.txt @@ -0,0 +1,7 @@ +ಚುನಾವಣಾ ಆಯುಕ್ತ ಗೋಯಲ್ ದಿಢೀರ್ ರಾಜೀನಾಮೆಗೆ ಕಾರಣವೇನು..? +ನವದೆಹಲಿ,ಮಾ.10- ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ದಿಢೀರ್ ರಾಜೀನಾಮೆಗೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಡುವಿನ ಭಿನ್ನಾಭಿಪ್ರಾಯಗಳೇ ಕಾರಣ ಎಂದು ಆಯೋಗದ ಮೂಲಗಳು ತಿಳಿಸಿವೆ. +ಚುನಾವಣಾ ಆಯುಕ್ತ ಅರುಣ್ ಗೋಯೆಲ್ ನೀಡಿರುವ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡದಂತೆ ಕೇಂದ್ರ ಸರ್ಕಾರ ಗೋಯಲ್ ಅವರ ಮನವೋಲಿಸುವ ಕೆಲಸ ಮಾಡಿದರೂ ಪ್ರಯೋಜನವಾಗದೆ ಇರಲು ಪ್ರಮುಖ ಕಾರಣವೇ ರಾಜೀವ್ ಕುಮಾರ್ ಎಂದು ವರದಿಯಾಗಿದೆ. +ಮೂರು ಸದಸ್ಯರನ್ನು ಒಳಗೊಂಡಿರುವ ಭಾರತದ ಚುನಾವಣಾ ಆಯೋಗವು ಈಗಾಗಲೇ ಒಂದು ಸ್ಥಾನ ಖಾಲಿ ಇತ್ತು ಇದೀಗ ಗೋಯಲ್ ರಾಜೀನಾಮೆಯಿಂದಾಗಿ ರಾಜೀವ್ ಕುಮಾರ್ ಮಾತ್ರ ಚುನಾವಣಾ ಸಮಿತಿಯಲ್ಲಿ ಉಳಿದಿದ್ದಾರೆ. ನಿವೃತ್ತ ಅಧಿಕಾರಿಯಾಗಿದ್ದ ಪಂಜಾಬ್ ಕೇಡರ್‍ನ 1985-ಬ್ಯಾಚ್ ಐಎಎಸ್ ಅಧಿಕಾರಿ ಗೋಯೆಲ್ ಅವರು ನವೆಂಬರ್ 2022 ರಲ್ಲಿ ಚುನಾವಣಾ ಆಯೋಗವನ್ನು ಸೇರಿದ್ದರು. +ಮೂಲಗಳ ಪ್ರಕಾರ ಮುಂದಿನ ವಾರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಆದಾಗ್ಯೂ, ಗೋಯೆಲ್ ಅವರ ಅನಿರೀಕ್ಷಿತ ನಿರ್ಗಮನದ ಹಿಂದೆ ಹಲವಾರು ಅನುಮಾನಗಳನ್ನು ಹುಟ್ಟಿಹಾಕಿದೆ. ಹೊಸ ಆಯುಕ್ತರ ನೇಮಕಾತಿ ಪ್ರಕ್ರಿಯೆಯು ಕಾನೂನು ಸಚಿವರ ನೇತೃತ್ವದಲ್ಲಿ ಮತ್ತು ಇಬ್ಬರು ಕೇಂದ್ರ ಕಾರ್ಯದರ್ಶಿಗಳನ್ನು ಒಳಗೊಂಡಂತೆ ಐದು ಹೆಸರುಗಳನ್ನು ಶಾರ್ಟ್‍ಲಿಸ್ಟ್ ಮಾಡಿ ತರುವಾಯ, ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯು, ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಥವಾ ಏಕೈಕ ದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿದ್ದು, ಅಂತಿಮ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗುತ್ತದೆ. +ಗೋಯೆಲ್ ಅವರ ರಾಜೀನಾಮೆಗೆ ಮುಂಚಿನ ಒಂದು ಗಮನಾರ್ಹ ಕ್ರಮವೆಂದರೆ ಕಳೆದ ವರ್ಷದ ಕೊನೆಯಲ್ಲಿ ಹೊಸ ಕಾನೂನನ್ನು ಜಾರಿಗೊಳಿಸಿದ್ದು, ದೇಶದ ಉನ್ನತ ಚುನಾವಣಾ ಅಧಿಕಾರಿಗಳನ್ನು ನೇಮಿಸುವ ಪ್ರಕ್ರಿಯೆಯನ್ನು ಬದಲಾಯಿಸಲಾಗಿದ್ದು, ಪರಿಷ್ಕøತ ಕಾರ್ಯವಿಧಾನದ ಅಡಿಯಲ್ಲಿ, ಭಾರತದ ಮುಖ್ಯ ನ್ಯಾಯಾಧಿಶರನ್ನು ಆಯ್ಕೆ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ. +ಗೋಯೆಲ್ ಅವರ ಹಠಾತ್ ನಿರ್ಗಮನದ ಪರಿಣಾಮಗಳನ್ನು ಪ್ರಶ್ನಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತ ಪರಿಸ್ಥಿತಿಯು ಚುನಾವಣಾ ಆಯೋಗವನ್ನು ಚುನಾವಣಾ ಲೋಪ ಎಂದು ಮರುನಾಮಕರಣ ಮಾಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗವೋ ಅಥವಾ ಚುನಾವಣಾ ಲೋಪದೋಷವೋ? ಭಾರತದಲ್ಲಿ ಈಗ ಒಬ್ಬರೇ ಚುನಾವಣಾ ಆಯುಕ್ತರಿದ್ದಾರೆ, ಇನ್ನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ. ಏಕೆ? ಎಂದು ಅವರು ಎಕ್ಸ್‍ನಲ್ಲಿ ಕೇಳಿದ್ದಾರೆ. \ No newline at end of file diff --git a/eesanje/url_47_150_4.txt b/eesanje/url_47_150_4.txt new file mode 100644 index 0000000000000000000000000000000000000000..01c63b74494884771a04a3436311edb0afd4ac66 --- /dev/null +++ b/eesanje/url_47_150_4.txt @@ -0,0 +1,7 @@ +ಅಭಿವೃದ್ಧಿಗೆ ತಕ್ಕಂತೆ ದೇಶದ ರಕ್ಷಣೆ ವಿಕಸನಗೊಳ್ಳಬೇಕು : ಸೇನಾ ಮುಖ್ಯಸ್ಥ ಮನೋಜ್ ಪಾಂಡೆ +ನವದೆಹಲಿ,ಮಾ.10- ಜಾಗತೀಕವಾಗಿ ಬದಲಾಗುತ್ತಿರುವ ಯುದ್ಧಕ್ಕೆ ಅನುಗುಣವಾಗಿ ದೇಶದ ರಕ್ಷಣೆಯನ್ನು ವಿಕಸನಗೊಳಿಸಬೇಕು ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಭೌಗೋಳಿಕ ರಾಜಕೀಯ ಭೂದೃಶ್ಯದಲ್ಲಿ ಅಭೂತಪೂರ್ವ ಬದಲಾವಣೆಗಳು ನಡೆಯುತ್ತಿವೆ ಮತ್ತು ಬದಲಾಗುತ್ತಿರುವ ಯುದ್ಧದ ಜಾಗಕ್ಕೆ ಅನುಗುಣವಾಗಿ ದೇಶದ ರಕ್ಷಣೆಯು ವಿಕಸನಗೊಳ್ಳಬೇಕು ಎಂದು ಅವರು ಮಾಧ್ಯಮವೊಂದು ಏರ್ಪಡಿಸಿದ್ದ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. +ಅಸ್ಥಿರ ಗಡಿಗಳ ಪರಂಪರೆಯ ಸವಾಲುಗಳು ಮುಂದುವರಿಯುತ್ತವೆ. ಸಂಘರ್ಷದ ಸ್ಪೆಕ್ಟ್ರಮ್‍ನಲ್ಲಿನ ಹೊಸ ಬೆದರಿಕೆಗಳು ಸಂಕೀರ್ಣತೆಗಳನ್ನು ಹೆಚ್ಚಿಸಿವೆ ಎಂದು ಅವರು ಹೇಳಿದರು. ಸೇನೆಯ ಮುಖ್ಯಸ್ಥರು ನಮ್ಮ ವಿರೋಧಿಗಳ ಬೂದು ವಲಯದ ಕ್ರಮಗಳು ಮತ್ತು ಆಕ್ರಮಣಶೀಲತೆಯು ಮಿಲಿಟರಿ ಸೇರಿದಂತೆ ಅನೇಕ ಡೊಮೇನ್‍ಗಳಲ್ಲಿ ಅಂದರೆ ಭೂಮಿ, ವಾಯು ಮತ್ತು ಕಡಲ ಜಾಗದಲ್ಲಿ ಪ್ರಕಟವಾಗುತ್ತಿದೆ ಎಂದು ಹೇಳಿದರು. +ಈ ಎಲ್ಲಾ ಬೆಳವಣಿಗೆಗಳ ಪರಿಣಾಮವಾಗಿ, ಯುದ್ಧದ ಸ್ಥಳವು ಹೆಚ್ಚು ಸಂಕೀರ್ಣವಾಗಿದೆ, ಸ್ಪರ್ಧಾತ್ಮಕ ಮತ್ತು ಮಾರಕವಾಗಿದೆ ಮತ್ತು ಭವಿಷ್ಯದಲ್ಲಿ ಹಾಗೆಯೇ ಉಳಿಯುತ್ತದೆ ಎಂದು ಜನರಲ್ ಪಾಂಡೆ ಹೇಳಿದರು. ಸೈಬರ್, ಎಲೆಕ್ಟ್ರೋಮ್ಯಾಗ್ನೆಟಿಕ್ ಸ್ಪೆಕ್ಟ್ರಮ, ಮಾಹಿತಿ ಮತ್ತು ಬಾಹ್ಯಾಕಾಶ ಸೇರಿದಂತೆ ಹೊಸ ಡೊಮೇನ್‍ಗಳಲ್ಲಿ ಯುದ್ಧವು ಹೇಗೆ ವೈವಿಧ್ಯಗೊಂಡಿದೆ ಎಂಬುದನ್ನು ಅವರು ಹೈಲೈಟ್ ಮಾಡಿದರು. ಯುದ್ಧಭೂಮಿಗಳು ಆಧುನಿಕ ಯುದ್ಧದಲ್ಲಿ ಮಾದರಿ ಬದಲಾವಣೆಗೆ ಒಳಗಾಗುವುದರಿಂದ ಭಾರತೀಯ ಸೇನೆಯು ಸ್ಪರ್ಧಾತ್ಮಕ ಅಂಚನ್ನು ಕಾಪಾಡಿಕೊಳ್ಳಲು ಹೊಂದಿಕೊಳ್ಳುವ ಕೆಲಸ ಮಾಡುತ್ತಿದೆ ಎಂದರು. +ನಾನು ಈಗ ವಿವರಿಸಿದ ಈ ಸಂಕೀರ್ಣ ಕ್ಯಾನ್ವಾಸ್ ನಡುವೆ, ನಮ್ಮ ರಾಷ್ಟ್ರವು ಏರುತ್ತಲೇ ಇದೆ. ಒಂದು ರಾಷ್ಟ್ರವಾಗಿ, ನಾವು ನಮ್ಮ ಶತಮಾನೋತ್ಸವದ ಮೈಲಿಗಲ್ಲನ್ನು ಆಚರಿಸುವಾಗ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಹೊರಹೊಮ್ಮುವ ಸಂಕಲ್ಪವನ್ನು ಕಲ್ಪಿಸಿಕೊಂಡಿದ್ದೇವೆ ಮತ್ತು ತೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು. ಭಾರತವು 2047 ರ ವೇಳೆಗೆ ಸ್ವಾತಂತ್ರ್ಯದ ನಂತರ 100 ವರ್ಷಗಳನ್ನು ಪೂರೈಸಿದಾಗ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ದೃಷ್ಟಿಯನ್ನು ಹೊಂದಿದೆ. +ಉದಯುತ್ತಿರುವ ಭಾರತದ ಆಕಾಂಕ್ಷೆಗಳು ವಿಸ್ತರಿಸುತ್ತಿರುವ ಕಾರ್ಯತಂತ್ರದ ಹಾರಿಜಾನ್‍ಗಳಾದ್ಯಂತ ವ್ಯಾಪಿಸುತ್ತವೆ. ಆದ್ದರಿಂದ ನಮಗೆ ಪ್ರಮುಖ ಪರಿಣಾಮಗಳು ರಾಷ್ಟ್ರದ ಭದ್ರತೆಯು ಯಾವುದೇ ರೀತಿಯಲ್ಲಿ ಪರಿಣಾಮ ಬೀರದಂತೆ ನೋಡಿಕೊಳ್ಳುವುದು ಆದ್ದರಿಂದ ಪ್ರಗತಿಯು ಅಡೆತಡೆಯಿಲ್ಲದೆ ಮುಂದುವರಿಯುತ್ತದೆ ಎಂದು ಜನರಲ್ ಪಾಂಡೆ ಹೇಳಿದರು. +ನಾವು 45 ಸ್ಥಾಪಿತ ತಂತ್ರಜ್ಞಾನಗಳು ಮತ್ತು 120 ಸ್ಥಳೀಯ ಯೋಜನೆಗಳ ಮೇಲೆ ಕೆಲಸ ಮಾಡುತ್ತಿದ್ದೇವೆ, ಇದು ಮಿಲಿಟರಿಗೆ ಪರಿಣಾಮ ಬೀರುತ್ತದೆ. ಭಾರತೀಯ ಸೇನೆಯ ದೃಷ್ಟಿ ಆಧುನಿಕ, ಚುರುಕುಬುದ್ಧಿಯ, ಹೊಂದಾಣಿಕೆಯ, ತಂತ್ರಜ್ಞಾನ ಸಕ್ರಿಯಗೊಳಿಸಿದ, ಭವಿಷ್ಯದಲ್ಲಿ-ಸಿದ್ಧ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ, ಇದು ಬಹು ಯುದ್ಧಗಳನ್ನು ತಡೆಯಲು ಮತ್ತು ಗೆಲ್ಲಲು ಸಮರ್ಥವಾಗಿದೆ ಎಂದು ಅವರು ವಿವರಿಸಿದರು. \ No newline at end of file diff --git a/eesanje/url_47_150_5.txt b/eesanje/url_47_150_5.txt new file mode 100644 index 0000000000000000000000000000000000000000..e47f9d5c54d1a206be761c6e3b3524dfded2c114 --- /dev/null +++ b/eesanje/url_47_150_5.txt @@ -0,0 +1,4 @@ +ಇಡಿಯಿಂದ ಮುಖಂಡನ ಆರೆಸ್ಟ್ +ಪಾಟ್ನಾ, ಮಾ.10 (ಪಿಟಿಐ): ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್‍ಜೆಡಿ ಜೊತೆ ನಂಟು ಹೊಂದಿರುವ ವ್ಯಕ್ತಿ ಸುಭಾಷ್ ಯಾದವ್ ಎಂಬುವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಭಾಗವಾಗಿ ಯಾದವ್ ಮತ್ತು ಇತರ ಕೆಲವರ ನಿವೇಶನಗಳನ್ನು ಶನಿವಾರದಿಂದ ಶೋಧಿಸಲಾಗುತ್ತಿದೆ. +ಶನಿವಾರ ತಡರಾತ್ರಿ ಯಾದವ್ ಅವರನ್ನು ಬಂಧಿಸಲಾಗಿದ್ದು, ವಿವಿಧೆಡೆ ಸುಮಾರು 2.3 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಪಾಟ್ನಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಡಿ ಅಧಕಾರಿಗಳು ಅರ್ಧ ಡಜನ್‍ಗೂ ಹೆಚ್ಚು ಆವರಣಗಳನ್ನು ಶೋಧ ನಡೆಸಿದರು ಎಂದು ತಿಳಿದುಬಂದಿದೆ. +ಯಾದವ್ ಅವರು ಬಿಹಾರದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ ಮತ್ತು ಈ ಹಿಂದೆ ಆರ್‍ಜೆಡಿ ಟಿಕೆಟ್‍ನಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು ಎಂದು ಮೂಲಗಳು ತಿಳಿಸಿವೆ. ಮನಿ ಲಾಂಡರಿಂಗ್ ಪ್ರಕರಣವು ಬಿಹಾರ ಪೊಲೀಸರು ದಾಖಲಿಸಿದ ಕೆಲವು ಎ- ಐಆರ್‍ಗಳಿಂದ ಹುಟ್ಟಿಕೊಂಡಿದೆ. \ No newline at end of file diff --git a/eesanje/url_47_150_6.txt b/eesanje/url_47_150_6.txt new file mode 100644 index 0000000000000000000000000000000000000000..ca3e13bde7e540a2815df2c84d7a5bd4be06d32b --- /dev/null +++ b/eesanje/url_47_150_6.txt @@ -0,0 +1,4 @@ +ಗುಂಡಿಟ್ಟು ವ್ಯಕ್ತಿ ಹತ್ಯೆ, ಗ್ಯಾಂಗ್‍ವಾರ್ ಸಾಧ್ಯತೆ +ನವದೆಹಲಿ,ಮಾ.10- ಈಶಾನ್ಯ ದಿಲ್ಲಿಯ ಸೀಲಂಪುರ ಪ್ರದೇಶದಲ್ಲಿ ತಡರಾತ್ರಿ ಓರ್ವ ವ್ಯಕ್ತಿಯನ್ನು ಗುಂಡಿಟ್ಟು ಕೊಂದು ಹಾಕಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಕೂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.45ಕ್ಕೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಅರ್ಬಾಜ್ ಮತ್ತು ಅಬಿದ್‍ಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ. +25 ರಿಂದ 30 ವರ್ಷ ವಯಸ್ಸಿನ ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅರ್ಬಾಜ್ ಸತ್ತಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿ ಹೇಳಿದರು. ಅಬಿದ್ ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು. ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ. +ಅರ್ಬಾಜ್ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಅಬಿದ್ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಶೂಟರ್‍ಗಳನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುತ್ತಿದೆ ಮತ್ತು ಇತರ ಇನ್‍ಪುಟ್‍ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ. \ No newline at end of file diff --git a/eesanje/url_47_150_7.txt b/eesanje/url_47_150_7.txt new file mode 100644 index 0000000000000000000000000000000000000000..9986e64ae47929bcb76ec1257cfc58431c84b4bc --- /dev/null +++ b/eesanje/url_47_150_7.txt @@ -0,0 +1,7 @@ +ಭಯೋತ್ಪಾದಕ ಚಟುವಟಿಕೆ ತ್ಯಜಿಸಿ ಮೋದಿ ಭೇಟಿಯಾದ ಅಶ್ರಫ್ ಆಜಾದ್ +ಬೆಂಗಳೂರು,ಮಾ.9- ಬಿಜೆಪಿ ಅಧ್ಯಕ್ಷರಾಗಿದ್ದ ಮುರಳೀ ಮನೋಹರ ಜೋಷಿ ಮತ್ತು ನರೇಂದ್ರ ಮೋದಿ 1992 ರ ಜನವರಿಯಲ್ಲಿ ಗಣರಾಜ್ಯೋತ್ಸವ ದಿನದಂದು ಶ್ರೀನಗರ ಲಾಲ್‍ಚೌಕ್‍ನಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹಾರಿಸಿದ್ದರು. 26 ವರ್ಷ ವಯಸ್ಸಿನ ಯುವಕ ಮೊಹಮ್ಮದ್ ಅಶ್ರಫ್ ಹಝಂ ಅಲಿಯಾಸ್ ಆಜಾದ್ ಉಗ್ರಗಾಮಿ ಸಂಘಟನೆಯೊಂದಿಗೆ ಗುರುತಿಸಿಕೊಂಡವನಾಗಿದ್ದು ಇಂಥ ಅಪಾಯಕಾರಿ ಕೆಲಸವನ್ನು ಬಿಜೆಪಿ ನಾಯಕರು ಯಾಕೆ ಪಟ್ಟು ಹಿಡಿದು ಮಾಡುತ್ತಿದ್ದಾರೆ ಎಂಬುದನ್ನು ಕುತೂಹಲದಿಂದ ವೀಕ್ಷಿಸಲು ಅಲ್ಲಿಗೆ ಹೋಗಿದ್ದ. +ಕಾಶ್ಮೀರದಲ್ಲಿ ಇದು ಅತ್ಯಂತ ತೀವ್ರ ಉಗ್ರರ ಉಪಟಳವಿದ್ದ ಜಾಗವಾಗಿತ್ತು. ಆಜಾದ್ ಬಿಜೆಪಿ ನಾಯಕರನ್ನು ಭೇಟಿಯಾದ. ಬಳಿಕ ಚೆಷ್ಮಾ ಶಾಹಿಯಲ್ಲಿನ ಅತಿಥಿ ಗೃಹದಲ್ಲಿ ಅವರನ್ನು ಕಂಡ. ಆಜಾದ್‍ನ ಪ್ರಕಾರ ಅವರ ಸಂಬಂಧ ದೃಢವಾಯಿತು. ಬಳಿಕ ಬಿಜೆಪಿ ನಾಯಕರು ಆಜಾದ್‍ನನ್ನು ದೆಹಲಿಗೆ ಆಹ್ವಾನಿಸಿ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಅವನ ಭೇಟಿ ಮಾಡಿಸಿದರು. +ಕೆಲವು ತಿಂಗಳ ಬಳಿಕ ನರೇಂದ್ರ ಮೋದಿ ಶ್ರೀನಗರಕ್ಕೆ ಭೇಟಿ ನೀಡಿ ಆಜಾದ್‍ನನ್ನು ಸಂಪರ್ಕಿಸಿದರು. ಖಾಸಗಿ ಟ್ಯಾಕ್ಸಿಯಲ್ಲಿ ಆಜಾದ್ ಬದ್ಗಾಮ್ ಜಿಲ್ಲೆಯ ಸೊಯಿಬಗ್ ಗ್ರಾಮದ ಹಿಜ್‍ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್‍ನ ನೆಲೆಗೆ ಸಮೀಪದ ಹಕೇರ್ ಮುಲ್ಲಾದಲ್ಲಿದ್ದ ತನ್ನ ಮನೆಗೆ ಮೋದಿ ಅವರನ್ನು ಕರೆದೊಯ್ದ. +10 ದಿನಗಳಿಗೂ ಅಧಿಕ ಕಾಲ ಆಜಾದ್ ಮೋದಿ ಅವರ ಜೊತೆಗೆ ಇದ್ದು ಯಾವುದೇ ಭದ್ರತೆ ಇಲ್ಲದೆ ಕಾಶ್ಮೀರದ ಎಲ್ಲ ಆರು ಜಿಲ್ಲೆಗಳಲ್ಲಿನ ಅನೇಕ ಗ್ರಾಮಗಳಲ್ಲಿ ಸುತ್ತಾಡಿಸಿದ. ಆಜಾದ್ ಪ್ರಕಾರ ಮೋದಿ ಬಿಜೆಪಿ-ಆರ್‍ಎಸ್‍ಎಸ್ ಕಾರ್ಯಭಾರದ ಮೇಲೆ ಬಂದಿದ್ದು ತಮ್ಮನ್ನು ಮಾನವ ಹಕ್ಕುಗಳ ಕಾರ್ಯಕರ್ತ ಎಂದು ಪರಿಚಯಿಸಿಕೊಂಡಿದ್ದರು. ಅವರು ಜನರನ್ನು ಅವರ ರಾಜಕೀಯ ಆಶೋತ್ತರಗಳು, ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳು, ಅಭಿವೃದ್ಧಿ, ಇತಿಹಾಸ ಇತ್ಯಾದಿಗಳ ಬಗ್ಗೆ ವಿವಿಧ ಪ್ರಶ್ನೆಗಳನ್ನು ಕೇಳಿದರು. ಅವರ ಉತ್ತರಗಳನ್ನು ಮೋದಿ ತಮ್ಮ ನೋಟ್‍ಬುಕ್‍ನಲ್ಲಿ ಬರೆದುಕೊಂಡರು. +ಅಲ್ಲಿಂದೀಚೆಗೆ ಆಜಾದ್ ಬಿಜೆಪಿಗೆ ಸೇರ್ಪಡೆಗೊಂಡರು ಮತ್ತು ಇಲ್ಲಿಯತನಕ ಅದೇ ಪಕ್ಷದಲ್ಲಿ ಮುಂದುವರೆದಿದ್ದಾರೆ. 2019 ರ ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಆಜಾದ್ ಮತ್ತು ಮೋದಿ ಶ್ರೀನಗರ ವಿಮಾನನಿಲ್ದಾಣದಲ್ಲಿ ಭೇಟಿಯಾದರು ಮತ್ತು ತಮ್ಮ ಹಳೆಯ ದಿನಗಳನ್ನು ಸ್ಮರಿಸಿಕೊಂಡರು. ಗುರುವಾರ ಸಹ ಮತ್ತೊಮ್ಮೆ ಇವರಿಬ್ಬರೂ ಶ್ರೀನಗರ ವಿಮಾನನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ. ಆಜಾದ್ ಮೋದಿ ಅವರನ್ನು ಬರಮಾಡಿಕೊಂಡು ಬೀಳ್ಕೊಟ್ಟಿದ್ದಾರೆ. +ಮೋದಿ ಆಜಾದ್‍ರ ಕುಟುಂಬ ಮತ್ತು ಸೊಯಿಬಗ್‍ನ ಅಭಿವೃದ್ಧಿಯ ಬಗ್ಗೆ ವಿಚಾರಿಸುವುದನ್ನು ಹಿರಿಯ ಅಧಿಕಾರಿಗಳು ವೀಕ್ಷಿಸಿದರು. ಆಜಾದ್‍ರನ್ನು ನನ್ನ ಹಳೆಯ ಸ್ನೇಹಿತ ಎಂದು ಮೋದಿ ಪರಿಚಯಿಸಿದರು. ವಿಮಾನ ನಿಲ್ದಾಣದಲ್ಲಿ ವಾಪಸಾದಾಗ ಮೋದಿ ಆಜಾದ್‍ಗೆ ಹೇಳಿದರು “ಆಜಾದ್ ಸಾಹಬ್ ಆಪ್ ಕೀ ಮೆಹನತ್ ರಂಗ್ ಲಾಯೀ ಹೈ. ಬಹುತ್ ಸಾರೇ ಲೋಗ್ ಜಲ್‍ಸೇ ಮೇ ಆಯೇ ಥೇ.” ಈಗ 60 ವರ್ಷ ವಯಸ್ಸಿನ ಈ ಬಿಳಿ ಗಡ್ಡಧಾರಿ ಬೇರಾರೂ ಅಲ್ಲ. ಗುರುವಾರ ಶ್ರೀನಗರ ವಿಮಾನನಿಲ್ದಾಣದಲ್ಲಿ ಮೋದಿ ಅವರನ್ನು ಭೇಟಿಯಾದ ಅಶ್ರಫ್ ಆಜಾದ್! \ No newline at end of file diff --git a/eesanje/url_47_150_8.txt b/eesanje/url_47_150_8.txt new file mode 100644 index 0000000000000000000000000000000000000000..08d3cd301a3035a318565f65f09ffb2bc6e7b6d3 --- /dev/null +++ b/eesanje/url_47_150_8.txt @@ -0,0 +1,8 @@ +ಈಶಾನ್ಯದಲ್ಲಿ 55,600 ಕೋಟಿ ರೂ.ಗಳ ಯೋಜನೆಗೆ ಮೋದಿ ಚಾಲನೆ +ಇಟಾನಗರ, ಮಾ 9- (ಪಿಟಿಐ) ಅರುಣಾಚಲ ಪ್ರದೇಶದ ತವಾಂಗ್‍ಗೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸುವ ಕಾರ್ಯತಂತ್ರದ ಸೆಲಾ ಸುರಂಗ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ 55,600 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಿದರು. ಇಟಾನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದ ಯೋಜನೆಗಳನ್ನು ಪ್ರಧಾನಿ ಅನಾವರಣಗೊಳಿಸಿದರು. +ಸುಮಾರು 825 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಲಾ ಸುರಂಗವು ಇಂಜಿನಿಯರಿಂಗ್ ಅದ್ಭುತವಾಗಿದೆ. ಇದು ಅರುಣಾಚಲ ಪ್ರದೇಶದ ಬಲಿಪರಾ-ಚರಿದುವಾರ್-ತವಾಂಗ್ ರಸ್ತೆಯಲ್ಲಿ ಸೆಲಾ ಪಾಸ್ ಮೂಲಕ ತವಾಂಗ್‍ಗೆ ಎಲ್ಲಾಹವಾಮಾನ ಸಂಪರ್ಕವನ್ನು ಒದಗಿಸುತ್ತದೆ ಎಂದು ಹೇಳಿಕೆ ತಿಳಿಸಿದೆ. ಫೆಬ್ರವರಿ 2019 ರಲ್ಲಿ ಪಿಎಂ ಮೋದಿ ಅವರು ಅಡಿಪಾಯ ಹಾಕಿದ ಈ ಯೋಜನೆಯು ಈ ಪ್ರದೇಶದಲ್ಲಿ ವೇಗವಾಗಿ ಮತ್ತು ಹೆಚ್ಚು ಪರಿಣಾಮಕಾರಿ ಸಾರಿಗೆ ಮಾರ್ಗವನ್ನು ಒದಗಿಸುವುದಲ್ಲದೆ, ಚೀನಾದ ಗಡಿಯ ಸಮೀಪದಲ್ಲಿ ನೆಲೆಗೊಂಡಿರುವುದರಿಂದ ದೇಶಕ್ಕೆ ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಹೊಂದಿದೆ. +ಪ್ರಧಾನಮಂತ್ರಿಯವರು ಸೆಲಾ ಸುರಂಗ ಮಾರ್ಗವನ್ನು ಅರುಣಾಚಲ ಪ್ರದೇಶ ರಾಜ್ಯ ಸಾರಿಗೆ ಬಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಮೂಲಕ ಉದ್ಘಾಟಿಸಿದರು. ಒಟ್ಟಾರೆಯಾಗಿ, ಅರುಣಾಚಲ ಪ್ರದೇಶದಲ್ಲಿ 41,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಅನಾವರಣಗೊಳಿಸಿದರು. ಲೋವರ್ ದಿಬಾಂಗ್ ಕಣಿವೆ ಜಿಲ್ಲೆಯಲ್ಲಿ 31,875 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ದಿಬಾಂಗ್ ವಿವಿಧೋದ್ದೇಶ ಜಲವಿದ್ಯುತ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಇದು ದೇಶದ ಅತಿ ಎತ್ತರದ ಅಣೆಕಟ್ಟು ರಚನೆಯಾಗಲಿದೆ. +ಅವರು ಹಲವಾರು ರಸ್ತೆಗಳು, ಪರಿಸರ ಮತ್ತು ಪ್ರವಾಸೋದ್ಯಮ ಯೋಜನೆಗಳು ಮತ್ತು ಶಾಲೆಗಳ ಉನ್ನತೀಕರಣಕ್ಕೆ ಅಡಿಗಲ್ಲು ಹಾಕಿದರು. ಅವರು ರಾಜ್ಯದಲ್ಲಿ ಜಲ ಜೀವನ್ ಮಿಷನ್‍ನ ಸುಮಾರು 1,100 ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಯುನಿವರ್ಸಲ್ ಸರ್ವಿಸ್ ಆಬ್ಲಿಗೇಶನ್ – (ಯುಎಸ್‍ಒಎಫ್) ಅಡಿಯಲ್ಲಿ 170 ಟೆಲಿಕಾಂ ಟವರ್‍ಗಳನ್ನು 300 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರಯೋಜನಕಾರಿಯಾಗುತ್ತಿದೆ.ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 35,000 ಕ್ಕೂ ಹೆಚ್ಚು ಮನೆಗಳನ್ನು ಪ್ರಧಾನ ಮಂತ್ರಿ ಹಸ್ತಾಂತರಿಸಿದರು.ಮಣಿಪುರದಲ್ಲಿ 3,400 ಕೋಟಿ ರೂ.ಗೂ ಅಧಿಕ ಮೊತ್ತದ ಯೋಜನೆಗಳನ್ನು ಮೋದಿ ಅನಾವರಣಗೊಳಿಸಿದರು. +ನಿಲಕುಥಿಯಲ್ಲಿ ಯೂನಿಟಿ ಮಾಲ, ಮಂತ್ರಿಪುಖ್ರಿಯಲ್ಲಿರುವ ಮಣಿಪುರ ಐಟಿ ಎಸ್‍ಇಝ್‍ನ ಸಂಸ್ಕರಣಾ ವಲಯ, ವಿಶೇಷ ಮನೋವೈದ್ಯಕೀಯ ಆರೈಕೆಯನ್ನು ಒದಗಿಸಲು ಲ್ಯಾಂಪ್‍ಜೆಲ್ಪಟ್‍ನಲ್ಲಿ 60 ಹಾಸಿಗೆಗಳ ಆಸ್ಪತ್ರೆ ಮತ್ತು ಇಂಪಾಲ್ ಪಶ್ಚಿಮ ಜಿಲ್ಲೆಯ ಮಣಿಪುರ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಅಡಿಪಾಯ ಹಾಕಲಾದ ಯೋಜನೆಗಳು ಸೇರಿವೆ. . +ಪ್ರಧಾನಮಂತ್ರಿಯವರು ಮಣಿಪುರದಲ್ಲಿ ವಿವಿಧ ರಸ್ತೆ ಯೋಜನೆಗಳು ಮತ್ತು ನೀರು ಸರಬರಾಜು ಯೋಜನೆಗಳು ಸೇರಿದಂತೆ ಇತರ ಯೋಜನೆಗಳನ್ನು ಉದ್ಘಾಟಿಸಿದರು.ನಾಗಾಲ್ಯಾಂಡ್‍ನಲ್ಲಿ 1,700 ಕೋಟಿ ರೂ.ಗಿಂತ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ಅವರು ಅನಾವರಣಗೊಳಿಸಿದರು. ಅವರು ಶಂಕುಸ್ಥಾಪನೆ ಮಾಡಿದ ಯೋಜನೆಗಳಲ್ಲಿ ಚುಮೌಕೆಡಿಮಾ ಜಿಲ್ಲೆಯ ಯೂನಿಟಿ ಮಾಲ್ ಮತ್ತು ದಿಮಾಪುರ್‍ನ ನಾಗಾರ್ಜನ್‍ನಲ್ಲಿ 132 ಉಪ-ಕೇಂದ್ರದ ಉನ್ನತೀಕರಣ. +ಚೆಂಡಾಂಗ್ ಸ್ಯಾಡಲ್‍ನಿಂದ ನೊಕ್ಲಾಕ್‍ಗೆ ನವೀಕರಿಸಿದ ರಸ್ತೆ ಮತ್ತು ಕೊಹಿಮಾ-ಜೆಸ್ಸಾಮಿ ರಸ್ತೆ ಸೇರಿದಂತೆ ರಾಜ್ಯದಲ್ಲಿ ಹಲವಾರು ರಸ್ತೆ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಿದರು.ಮೇಘಾಲಯದಲ್ಲಿ 290 ಕೋಟಿ ರೂ.ಗೂ ಹೆಚ್ಚು ಮೊತ್ತದ ಯೋಜನೆಗಳನ್ನು ಪ್ರಧಾನಿ ಅನಾವರಣಗೊಳಿಸಿದರು. \ No newline at end of file diff --git a/eesanje/url_47_150_9.txt b/eesanje/url_47_150_9.txt new file mode 100644 index 0000000000000000000000000000000000000000..31137c5de37f35b6e35b651fa8a259cb5dec37f3 --- /dev/null +++ b/eesanje/url_47_150_9.txt @@ -0,0 +1,5 @@ +ಏರ್ ಫೋರ್ಸ್ ಸೇರಿದ ಹೊಸ ಕೆಡೆಟ್‍ಗಳು +ಚೆನ್ನೈ, ಮಾ 9 -(ಪಿಟಿಐ) : ಇಲ್ಲಿನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಕಠಿಣ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 184 ಅಧಿಕಾರಿ ಕೆಡೆಟ್‍ಗಳು ಮತ್ತು 36 ಮಹಿಳಾ ಕೆಡೆಟ್‍ಗಳನ್ನು ಭಾರತೀಯ ಸೇನೆಯ ವಿವಿಧ ಶಸ್ತ್ರಾಸ್ತ್ರ ಮತ್ತು ಸೇವೆಗಳಿಗೆ ನಿಯೋಜಿಸಲಾಯಿತು. ಹೆಚ್ಚುವರಿಯಾಗಿ, ಸ್ನೇಹಪರ ವಿದೇಶಗಳ ಮೂರು ಅಧಿಕಾರಿ ಕೆಡೆಟ್‍ಗಳು ಮತ್ತು ಆರು ಮಹಿಳಾ ಕೆಡೆಟ್‍ಗಳು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. +ಚೆನ್ನೈನ ಒಟಿಎಯ ಪರಮೇಶ್ವರನ್ ಡ್ರಿಲ್ ಸ್ಕ್ವೇರ್‌ನಲ್ಲಿ ಅನಿಶ್ಚಿತತೆಯಿಂದ ನಡೆದ ಪಾಸಿಂಗ್ ಔಟ್ ಪರೇಡ್ ಅನ್ನು ಪ್ರಭಾವಿ ಮತ್ತು ಸೂಕ್ಷ್ಮವಾಗಿ ಪರಿಶೀಲಿಸಿದ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ ಅವರು, ಹೊಸ ತಂತ್ರಜ್ಞಾನ ಮತ್ತು ಆಮೂಲಾಗ್ರವಾಗಿ ಹೊಸ ಸಿದ್ಧಾಂತಗಳ ಹೊರಹೊಮ್ಮುವಿಕೆಯೊಂದಿಗೆ ಯುದ್ಧವು ಮೂಲಭೂತ ಬದಲಾವಣೆಗೆ ಒಳಗಾಗುತ್ತಿದೆ ಎಂದು ಹೇಳಿದರು. +ಭಾರತದ ಭದ್ರತಾ ಡೈನಾಮಿಕ್ಸ್ ಬಹುಮುಖಿ ಬೆದರಿಕೆಗಳು ಮತ್ತು ಸವಾಲುಗಳನ್ನು ಒಳಗೊಂಡಿರುತ್ತದೆ. ಇದು ಏಕಕಾಲದಲ್ಲಿ ಮತ್ತು ಕಡಿಮೆ ಸಮಯದ ಚೌಕಟ್ಟಿನಲ್ಲಿ ಕಾರ್ಯಾಚರಣೆಗಳನ್ನು ಕಾರ್ಯಗತಗೊಳಿಸಲು ನಮಗೆ ಅಗತ್ಯವಿರುತ್ತದೆ ಎಂದು ಅವರು ಹೇಳಿದರು. ನಮ್ಮ ಶಸ್ತ್ರಾಸ್ತ್ರ ಪಡೆಗಳು ಮುಂದಿನ ಪೀಳಿಗೆಯ ಯುದ್ಧದ ಹೋರಾಟದ ಯಂತ್ರಗಳನ್ನು ಸ್ವಾೀಧಿನಪಡಿಸಿಕೊಳ್ಳಲು ಹೆಚ್ಚು ಹೂಡಿಕೆ ಮಾಡಿದೆ. ನೀವು, ಈ ಅತ್ಯಂತ ಶಕ್ತಿಯುತ ವ್ಯವಸ್ಥೆಗಳ ಭವಿಷ್ಯದ ನಿರ್ವಾಹಕರು, ಅವರೊಂದಿಗೆ ಸಂಪೂರ್ಣವಾಗಿ ಸಂವಾದಿಸಬೇಕಾಗಿದೆ ಮತ್ತು ಕಠಿಣ ತರಬೇತಿ, ಸಮರ್ಪಣೆ ಮತ್ತು ವೃತ್ತಿಪರ ವಿಧಾನದ ಮೂಲಕ ಮಾತ್ರ ಇದನ್ನು ಸಾಸಬಹುದು ಎಂದು ಏರ್ ಮಾರ್ಷಲ್ ತಿಳಿಸಿದರು. +ಫೀಲ್ಡ ಮಾರ್ಷಲ್ ಸ್ಯಾಮ್ ಮಾನೆಕ್ಷಾ ಅವರನ್ನು ಉಲ್ಲೇಖಿಸಿದ ಅವರು, ರಾಷ್ಟ್ರವು ಅಧಿಕಾರಿಗಳಿಂದ ಅಸಾಧಾರಣ ವೃತ್ತಿಪರತೆ ಮತ್ತು ಪ್ರಶ್ನಾತೀತ ಸಮಗ್ರತೆಯನ್ನು ನಿರೀಕ್ಷಿಸುತ್ತದೆ ಎಂದು ಹೇಳಿದರು. ನೀವು ಶಸ್ತ್ರಾಸ್ತ್ರಗಳ ವೃತ್ತಿಯಲ್ಲಿರುವ ಘನತೆ ಮತ್ತು ಹೆಮ್ಮೆಯನ್ನು ಪ್ರತಿಬಿಂಬಿಸುವ ವೈಯಕ್ತಿಕ ನಡವಳಿಕೆ ಮತ್ತು ನೈತಿಕ ಮೌಲ್ಯಗಳ ಅತ್ಯುನ್ನತ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕೆಂದು ನಾವು ನಿರೀಕ್ಷಿಸುತ್ತೇವೆ ಎಂದು ಚೌಧರಿ ಹೇಳಿದರು. ಅಲ್ಲದೆ, ಅವರು ಕೆಲಸದಲ್ಲಿರುವಾಗ ನ್ಯಾಯಯುತ, ಸ್ಥಿರ ಮತ್ತು ನಿಸ್ವಾರ್ಥವಾಗಿರಬೇಕು ಮತ್ತು ತಮ್ಮ ಅೀಧಿನ ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ಸಹಾನುಭೂತಿ ಮತ್ತು ತಿಳುವಳಿಕೆಯಿಂದ ಇರಬೇಕೆಂದು ಅವರು ತಿಳಿ ಹೇಳಿದರು. \ No newline at end of file diff --git a/eesanje/url_47_151_1.txt b/eesanje/url_47_151_1.txt new file mode 100644 index 0000000000000000000000000000000000000000..7d5fdac46d59402d2cac72fada05394df2a8cbb7 --- /dev/null +++ b/eesanje/url_47_151_1.txt @@ -0,0 +1,5 @@ +ಬಿಜೆಪಿಗೆ ಸೇರ್ಪಡೆಗೊಂಡ ಪಚೌರಿ, ರಾಜುಖೇಡಿ ಮತ್ತಿತರ ಕಾಂಗ್ರೆಸ್ಸಿಗರು +ಭೋಪಾಲ್, ಮಾ 9-ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವವರ ಸಂಖ್ಯೆ ಏರುತ್ತಲೆ ಇದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಸೇರಿದಂತೆ ಹಲವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. +ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿ ಡಿ ಶರ್ಮಾ ಮತ್ತು ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಪಚೌರಿ, ರಾಜುಖೇಡಿ ಮತ್ತು ಇತರ ನಾಯಕರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಇಂದು ಬೆಳಿಗ್ಗೆ ಪಕ್ಷಕ್ಕೆ ಸೇರ್ಪಡೆಯಾದರು. +ಗಾಂಧಿ ಕುಟುಂಬಕ್ಕೆ ನಿಕಟವಾಗಿದ್ದ ಪಚೌರಿ ಅವರು ಕೇಂದ್ರ ರಕ್ಷಣಾ (ರಕ್ಷಣಾ ಉತ್ಪಾದನೆ ಮತ್ತು ಸರಬರಾಜು) ರಾಜ್ಯ ಸಚಿವರಾಗಿದ್ದರು ಮತ್ತು ಗ್ರ್ಯಾಂಡ್ ಓಲ್ಡ ಪಕ್ಷದ ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಪಚೌರಿ ಈ ಹಿಂದೆ ಕಾಂಗ್ರೆಸ್‍ನ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. +ಪ್ರಮುಖ ಬುಡಕಟ್ಟು ನಾಯಕರಾದ ರಾಜುಖೇಡಿ ಅವರು 1998, 1999 ಮತ್ತು 2009 ರ ಮೂರು ಅವಧಿಗೆ ಕಾಂಗ್ರೆಸ್ ಟಿಕೆಟ್‍ನಲ್ಲಿ ಧರ್ (ಪರಿಶಿಷ್ಟ ಪಂಗಡಗಳ) ಲೋಕಸಭಾ ಸ್ಥಾನದಿಂದ ಸಂಸದರಾಗಿ ಆಯ್ಕೆಯಾದರು. ಕಾಂಗ್ರೆಸ್‍ಗೆ ಸೇರುವ ಮೊದಲು ಅವರು 1990 ರಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು. \ No newline at end of file diff --git a/eesanje/url_47_151_10.txt b/eesanje/url_47_151_10.txt new file mode 100644 index 0000000000000000000000000000000000000000..c7471b6296e24700aa6d37a1a735698d207801ac --- /dev/null +++ b/eesanje/url_47_151_10.txt @@ -0,0 +1,9 @@ +ಮುಂದಿನ ವಾರ ಲೋಕಸಭೆ ಮಹಾಸಮರಕ್ಕೆ ಮುಹೂರ್ತ +ನವದೆಹಲಿ,ಮಾ.7- ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿರುವ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇದೇ ತಿಂಗಳ 14 ಅಥವಾ 15ರಂದು ದಿನಾಂಕವನ್ನು ಪ್ರಕಟಿಸಲಿದೆ. +ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಕಳೆದ ಬಾರಿಯಂತೆ ಈ ಬಾರಿಯೂ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ ತಿಂಗಳ ಕೊನೆಯವಾರ ಇಲ್ಲವೇ ಮೇ ಮೊದಲ ವಾರದಲ್ಲಿ ಮತದಾನ ನಡೆಯುವ ಸಂಭವವಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ. ಗುರುವಾರ ಅಥವಾ ಶುಕ್ರವಾರ ದಿನಾಂಕವನ್ನು ಘೋಷಣೆ ಮಾಡಲು ಚುನಾವಣಾ ಆಯೋಗ ಸಿದ್ಧತೆಯನ್ನು ಕೈಗೊಂಡಿದ್ದು, ಅಂದಿನಿಂದಲೇ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡುವಂತಿಲ್ಲ ಅಥವಾ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆಯದೆ ಸರ್ಕಾರಿ +ಕಾರ್ಯಕ್ರಮಗಳಲ್ಲೂ ಭಾಗವಹಿಸುವಂತಿಲ್ಲ:ಪ್ರಧಾನಮಂತ್ರಿ ಹಾಗೂ ಅತಿ ಗಣ್ಯ ವ್ಯಕ್ತಿಗಳನ್ನು ಹೊರತುಪಡಿಸಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಯಾವುದೇ ಜನಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಬಳಸುವಂತಿಲ್ಲ. ಆಯೋಗದ ಅನುಮತಿ ಪಡೆಯಬೇಕಾಗುತ್ತದೆ. 16ನೇ ಲೋಕಸಭೆ ಚುನಾವಣೆಗೆ ಆಯೋಗವು ಮತದಾರರ ಪಟ್ಟಿ, ಭದ್ರತಾ ವ್ಯವಸ್ಥೆ, ಇವಿಎಂ, ಮತ ಎಣಿಕೆ ಕೇಂದ್ರಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ. +ಆಯಾ ರಾಜ್ಯಗಳಲ್ಲಿ ನಡೆಯುವ ಪರೀಕ್ಷೆಗಳು, ಧಾರ್ಮಿಕ ಹಬ್ಬಗಳನ್ನು ನೋಡಿಕೊಂಡು ಚುನಾವಣೆಯ ದಿನಾಂಕವನ್ನು ನಿಗದಿಪಡಿಸಲಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ದಿನಾಂಕವನ್ನು ನಿಗದಿಪಡಿಸಲಿದೆ. +2019ರಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ ಆಯೋಗ ಏಳು ಹಂತದ ಮತದಾನವನ್ನು ನಡೆಸಿತ್ತು. ಈ ಬಾರಿಯೂ ಆಯೋಗ ಏಳು ಹಂತಗಳಲ್ಲೇ ಚುನಾವಣೆಯನ್ನು ನಡೆಸಲಿದೆ ಎಂದು ಗೊತ್ತಾಗಿದೆ. ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದಲ್ಲಿ ಐದು ಹಂತಳಲ್ಲಿ ಮತದಾನ ನಡೆದರೆ ನಕ್ಸಲ್ ಪೀಡಿತ ರಾಜ್ಯಗಳಾದ ಛತ್ತೀಸ್‍ಗಢ, ಜಾರ್ಖಂಡ್‍ನಲ್ಲಿ ನಾಲ್ಕು ಹಂತ, ಮಹಾರಾಷ್ಟ್ರ, ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಎರಡು ಹಂತದ ಮತದಾನ ನಡೆಯಲಿದೆ. +ಉಗ್ರರ ಉಪಟಳವಿರುವ ಕಣಿವೆ ರಾಜ್ಯವಾಗಿದ್ದ ಈಗ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ 5 ಹಂತದ ಮತದಾನ ನಡೆಸಲು ಆಯೋಗ ಸಜ್ಜಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು. ಮಾರ್ಚ್ 14ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಮಾರ್ಚ್ 13ರೊಳಗೆ, ಭಾರತದ ಚುನಾವಣಾ ಆಯೋಗವು ರಾಜ್ಯಗಳಲ್ಲಿ ತನ್ನ ಮೌಲ್ಯಮಾಪನವನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ. ಸುಮಾರು 97 ಕೋಟಿ ಭಾರತೀಯರು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. +2024ರ ಲೋಕಸಭಾ ಚುನಾವಣೆಯ ಜೊತೆಗೆ, ಆಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲಪ್ರದೇಶ ಮತ್ತು ಒಡಿಶಾ ರಾಜ್ಯಗಳು ಆಯಾ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಲಿವೆ. ಇದರ ವೇಳಾಪಟ್ಟಿಯನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ಪ್ರಕಟಿಸಲಿದೆ. 2019ರಲ್ಲಿ ನಡೆದ ಕೊನೆಯ ಚುನಾವಣೆಗಳಲ್ಲಿ ಬಿಜೆಪಿ 303 ಸ್ಥಾನಗಳೊಂದಿಗೆ ಎರಡನೇ ಬಾರಿಗೆ ಗೆಲುವು ಸಾಧಿಸಿತ್ತು. ಇದೇ ವೇಳೆ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಬಿಜೆಪಿಗೆ ಬರೋಬ್ಬರಿ 370 ಸ್ಥಾನಗಳು ಮತ್ತು ಎನ್‍ಡಿಎಗೆ 400 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಹೊಂದಿದೆ. ಕಾಂಗ್ರೆಸ್ ಕನಿಷ್ಠ 40 ಸ್ಥಾನಗಳನ್ನಾದರೂ ಗೆಲ್ಲಲಿ ಎಂದು ವ್ಯಂಗ್ಯವಾಡಿದ್ದಾರೆ. +ಬಿಜೆಪಿ ಈಗಾಗಲೇ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ, ಕೇಸರಿ ಪಕ್ಷವು ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್‍ಸಿಂಗ್ ಚೌಹಾಣ್ ಮತ್ತು ವಿಪ್ಲವ್‍ಕುಮಾರ್ ದೇವ್ ಅವರನ್ನು ಕಣಕ್ಕಿಳಿಸಿದೆ. ಏತನ್ಮಧ್ಯೆ ಐಎನ್‍ಡಿಐಎ ಮೈತ್ರಿಕೂಟದ ಸದಸ್ಯರೊಂದಿಗೆ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. \ No newline at end of file diff --git a/eesanje/url_47_151_11.txt b/eesanje/url_47_151_11.txt new file mode 100644 index 0000000000000000000000000000000000000000..5aa00b6a15b610f1e865be386f65989ebc277d36 --- /dev/null +++ b/eesanje/url_47_151_11.txt @@ -0,0 +1,4 @@ +ಖಾಲ್ಸಾ ಉಗ್ರರಿಬ್ಬರ ಬಂಧನ +ಚಂಡೀಗಢ, ಮಾ 7 (ಪಿಟಿಐ) ಗುಪ್ತಚರ ಆಧಾರಿತ ಕಾರ್ಯಾಚರಣೆಯಲ್ಲಿ, ಬಬ್ಬರ್ ಖಾಲ್ಸಾ ಅಂತರರಾಷ್ಟ್ರೀಯ ಬೆಂಬಲಿತ ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸುವ ಮೂಲಕ ಸಂಭವನೀಯ ಗುರಿ ಹತ್ಯೆಗಳನ್ನು ತಪ್ಪಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಹರ್ವಿಂದರ್ ಸಿಂಗ್ ರಿಂಡಾ ಅವರ ಆಪ್ತ ಸಹಾಯಕ ಅಮೆರಿಕ ಮೂಲದ ಹರ್‍ಪ್ರೀತ್ ಸಿಂಗ್ ಹ್ಯಾಪಿ ಪಾಸಿಯಾನ್ ಹಾಗೂ ಆತನ ಸಹಚರ ಶಂಶೇರ್ ಸಿಂಗ್ ಶೇರಾ ಎಂದು ಗುರುತಿಸಲಾಗಿದೆ. +ಪ್ರಸ್ತುತ ಅರ್ಮೇನಿಯಾದಲ್ಲಿ ನೆಲೆಸಿರುವ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಎಕ್ಸ್ ನಲ್ಲಿ ಹೇಳಿದ್ದಾರೆ. ಪ್ರಾಥಮಿಕ ತನಿಖೆಗಳ ಪ್ರಕಾರ, ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಯುವಕರನ್ನು ಪ್ರೇರೇಪಿಸುವ ಮೂಲಕ ಹ್ಯಾಪಿ ಪ್ಯಾಸಿಯನ್ ರಿಂಡಾ ಮತ್ತು ಶಂಶೇರ್ ಅವರೊಂದಿಗೆ ಸಹಭಾಗಿತ್ವದಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು. +2 ಪಿಸ್ತೂಲ್‍ಗಳು ಮತ್ತು 4 ಮ್ಯಾಗಜೀನ್‍ಗಳು ಮತ್ತು 30 ಲೈವ್ ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಮೃತಸರದ ರಾಜ್ಯ ವಿಶೇಷ ಕಾರ್ಯಾಚರಣೆ ಸೆಲ್ (ಎಸ್‍ಎಸ್‍ಒಸಿ) ನಲ್ಲಿ ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳು (ತಡೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_151_12.txt b/eesanje/url_47_151_12.txt new file mode 100644 index 0000000000000000000000000000000000000000..f5f2412e7b94689e5cc84bb339137f4de8d2dd3d --- /dev/null +++ b/eesanje/url_47_151_12.txt @@ -0,0 +1,6 @@ +ಮತ್ತೆ ಸನಾತನ ಧರ್ಮವನ್ನು ಅವಹೇಳನ ಮಾಡಿದ ಡಿಎಂಕೆ +ಚೆನ್ನೈ,ಮಾ.7- ಉದಯನಿಧಿ ಸ್ಟಾಲಿನ್ ಸೇರಿದಂತೆ ತಮಿಳುನಾಡು ಸಚಿವರ ವಿರುದ್ಧದ ಕೋ ವಾರೆಂಟೊ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇತ್ಯರ್ಥಪಡಿಸಿದ ನಂತರ ಸನಾತನ ಧರ್ಮ ಎಂದರೇನು ಎಂಬುದನ್ನು ವಿವರಿಸುವಂತೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ವಕ್ತಾರ ಟಿಕೆಎಸ್ ಇಳಂಗೋವನ್ ಅವರು ಬಿಜೆಪಿಯನ್ನು ಕೇಳಿದ್ದಾರೆ. +ಸನಾತನ ಧರ್ಮ ಎಂದರೇನು ಎಂಬುದನ್ನು ಅವರು (ಬಿಜೆಪಿ) ವಿವರಿಸಬೇಕು. ಸನಾತನ ಧರ್ಮ ಎಂದರೇನು ಎಂಬುದನ್ನು ವಿವರಿಸಲು ಯಾರೂ ಮುಂದೆ ಬಂದಿಲ್ಲ ಎಂದು ಇಳಂಗೋವನ್ ಅಪಹಾಸ್ಯ ಮಾಡಿದ್ದಾರೆ. ಇದಕ್ಕೂ ಮುನ್ನ ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಅನಿತಾ ಸುಮಂತ್ ಅವರು ತಮಿಳುನಾಡು ಸಚಿವರಾದ ಉದಯನಿಧಿ ಸ್ಟಾಲಿನ್, ಪಿ.ಕೆ.ಶೇಖರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ವಿರುದ್ಧ ಸನಾತನ ಧರ್ಮದ ಕುರಿತಾದ ಟೀಕೆಗಳಿಗೆ ಸಂಬಂಧಿಸಿದಂತೆ ಕೋ ವಾರೆಂಟೊ ಹೊರಡಿಸುವುದನ್ನು ತಪ್ಪಿಸಿದರು. +ಹಿಂದೂ ಮುನ್ನಾನಿ ಸಂಘಟನೆಯ ಪದಾಧಿಕಾರಿಗಳು ಸಲ್ಲಿಸಿದ್ದ ಕೋ ವಾರೆಂಟೊ ಅರ್ಜಿಯ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಇದಕ್ಕೂ ಮುನ್ನ ಮಾರ್ಚ್ 4 ರಂದು, ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡಿದ ಉದಯನಿಧಿ ಸ್ಟಾಲಿನ್ ಅವರ ಟೀಕೆಗಳ ಕುರಿತು ಸುಪ್ರೀಂ ಕೋರ್ಟ್ ಅವರನ್ನು ಪ್ರಶ್ನಿಸಿತು ಮತ್ತು ಅವರು ಸಾಮಾನ್ಯನಲ್ಲ ಆದರೆ ಮಂತ್ರಿ ಎನ್ನುವುದನ್ನು ಮರೆಯಬಾರದು ಎಂದು ತಿಳಿಹೇಳಿತ್ತು. +ಸ್ಟಾಲಿನ್ ಅವರು ತಮ್ಮ ಹೇಳಿಕೆಗಳ ಮೇಲೆ ಹಲವಾರು ರಾಜ್ಯಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಎಫ್‍ಐಆರ್‍ಗಳನ್ನು ಒಂದೆ ಕಡೆ ಸೇರಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದರು. ಮಾತನಾಡುವ ಮುನ್ನ ಸ್ಟಾಲಿನ್‍ಗೆ ಅದರ ಪರಿಣಾಮಗಳೇನು ಎಂದು ತಿಳಿದಿರಬೇಕು ಎಂದು ಪೀಠವು ಸ್ಟಾಲಿನ್‍ಗೆ ಎಚ್ಚರಿಕೆ ನೀಡಿತ್ತು. ನೀವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳ ಅಡಿಯಲ್ಲಿ ನಿಮ್ಮ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ ಮತ್ತು ನಂತರ ಆರ್ಟಿಕಲ್ 32 ರ ಅಡಿಯಲ್ಲಿ ರಕ್ಷಣೆಗಾಗಿ ಸುಪ್ರೀಂ ಕೋರ್ಟ್‍ಗೆ ಬಂದಿದ್ದೀರಿ? ನೀವು ಹೇಳಿದ ಪರಿಣಾಮಗಳ ಬಗ್ಗೆ ನಿಮಗೆ ತಿಳಿದಿಲ್ಲವೇ? ಎಂದು ಪೀಠ ಖಾರವಾಗಿ ಕೇಳಿತ್ತು. +ಡಿಎಂಕೆ ನಾಯಕ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂ ದಂತಹ ಕಾಯಿಲೆಗಳಿಗೆ ಹೋಲಿಸಿ ಟೀಕೆಗಳನ್ನು ಮಾಡಿದರು, ಆದರೆ ಅದು ಜಾತಿ ವ್ಯವಸ್ಥೆ ಮತ್ತು ಐತಿಹಾಸಿಕ ತಾರತಮ್ಯದಲ್ಲಿ ಬೇರೂರಿದೆ ಎಂಬ ಕಾರಣಕ್ಕಾಗಿ ಅದರ ನಿರ್ಮೂಲನೆಗೆ ಪ್ರತಿಪಾದಿಸಿದರು. ಡಿಎಂಕೆ ಸಂಸದ ಎ ರಾಜಾ ಈ ವಾರದ ಆರಂಭದಲ್ಲಿ ಬಿಜೆಪಿಯ ಜೈ ಶ್ರೀರಾಮ, ಭಾರತ್ ಮಾತಾ ಕೀ ಜೈ ಎಂಬ ಬಿಜೆಪಿ ಸಿದ್ಧಾಂತವನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು. \ No newline at end of file diff --git a/eesanje/url_47_151_3.txt b/eesanje/url_47_151_3.txt new file mode 100644 index 0000000000000000000000000000000000000000..adc77e4ba606af85a665302e357f5e636cb446d2 --- /dev/null +++ b/eesanje/url_47_151_3.txt @@ -0,0 +1,5 @@ +1000 ಕೋಟಿಗೂ ಹೆಚ್ಚು ಜಿಎಸ್‍ಟಿ ವಂಚನೆ +ನವದೆಹಲಿ,ಮಾ.8- ಉತ್ತರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ಕಡೆ 1,100 ಕೋಟಿಗೂ ಹೆಚ್ಚಿನ ಜಿಎಸ್‍ಟಿ ತೆರಿಗೆ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಈವರೆಗೂ 5 ಮಂದಿಯನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮೀರಥ್‍ನ ಸಿಜಿಎಸ್‍ಟಿ ಆಯುಕ್ತಾಲಯ ವಂಚನೆ ಮಾರ್ಗವಾಗಿ ಒಂದು ಸಾವಿರ ಕೋಟಿ ರೂ.ಗಳಿಗೂ ಅಧಿಕ ಪ್ರಮಾಣದ ತೆರಿಗೆ ವಂಚನೆ ಪ್ರಕರಣವನ್ನು ಪತ್ತೆ ಹಚ್ಚಿದ್ದು, ಮೂವರನ್ನು ಬಂಧಿಸಿದೆ. +ಸಿಜಿಎಸ್‍ಟಿ ತೆರಿಗೆ ವಂಚನೆ ನಿಗ್ರಹ ದಳ 2023 ರ ಅಕ್ಟೋಬರ್‍ನಲ್ಲಿ ತನಿಖೆ ಆರಂಭಿಸಿತ್ತು. ನಕಲಿ ಬಿಲ್‍ಗಳು ಹಾಗೂ ಲೆಕ್ಕಪತ್ರಗಳನ್ನು ಸಲ್ಲಿಸಿ ವಂಚನೆ ಮಾರ್ಗವಾಗಿ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್(ಐಟಿಸಿ) ಪಡೆದಿರುವುದನ್ನು ಖಚಿತಪಡಿಸಿಕೊಂಡಿದೆ. ಸುಮಾರು 232 ನಕಲಿ ಕಂಪನಿಗಳನ್ನು ಈವರೆಗೂ ಗುರುತಿಸಲಾಗಿದೆ. ಅವುಗಳಲ್ಲಿ 91 ಕಂಪನಿಗಳು ಒಂದೇ ಮೊಬೈಲ್ ನಂಬರ್‍ನಡಿ ನೋಂದಾವಣೆಯಾಗಿವೆ. ಉತ್ತರ ಪ್ರದೇಶ ಅಷ್ಟೇ ಅಲ್ಲದೆ ದೇಶಾದ್ಯಂತ ಬೇರೆ ಬೇರೆ ಸ್ಥಳಗಳಲ್ಲಿ ಇವುಗಳ ಕಾರ್ಯಾಚರಣೆ ನಡೆಸುವುದಾಗಿ ದಾಖಲಿಸಲಾಗಿದೆ. +ಸುಮಾರು 1,048 ಕೋಟಿ ರೂ.ಗಳ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್‍ಗಳನ್ನು ಈ ನಕಲಿ ಕಂಪನಿಗಳ ಹೆಸರಿನಲ್ಲಿ ತೆಗೆದುಕೊಳ್ಳಲಾಗಿದೆ. ಈ ಕಂಪನಿಗಳ ಮೂಲಕ 5,842 ಕೋಟಿ ರೂ. ಸರಕು ಸರಬರಾಜು ಸೇವೆಯನ್ನು ನಡೆಸಿರುವುದಾಗಿ ತನಿಖೆಯಲ್ಲಿ ದೃಢಪಟ್ಟಿದೆ. +ಹಣ ಬದಲಾವಣೆ ಕಂಪನಿಗಳ ಕುಡಿಗಳ ಬೆನ್ನತ್ತಿರುವ ತನಿಖಾಧಿಕಾರಿಗಳು ಒಂದೇ ಕಂತಿನಲ್ಲಿ 1,120 ಕೋಟಿ ರೂ.ಗೂ ಅಧಿಕ ಸೊಗಟು ಖರೀದಿ ವ್ಯವಹಾರವನ್ನು ಗುರುತಿಸಿದ್ದಾರೆ. ತನಿಖೆ ಹಾಗೂ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈವರೆಗೂ ವಿದೇಶಿ ವಿನಿಮಯ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಪಟ್ಟಂತೆ ಮೂವರನ್ನು ಬಂಸಲಾಗಿದೆ ಎಂದು ತಿಳಿಸಲಾಗಿದೆ. \ No newline at end of file diff --git a/eesanje/url_47_151_4.txt b/eesanje/url_47_151_4.txt new file mode 100644 index 0000000000000000000000000000000000000000..7008de89fe24c1eefe40acbb056f25c1565cdedc --- /dev/null +++ b/eesanje/url_47_151_4.txt @@ -0,0 +1,3 @@ +ಮಹಿಳೆಯರ ರಕ್ಷಣೆಗೆ ಒಟ್ಟಾಗಿ : ರಾಷ್ಟ್ರಪತಿ ದ್ರೌಪದಿ ಮುರ್ಮ +ನವದೆಹಲಿ,ಮಾ.8- ಹೆಣ್ಣುಮಕ್ಕಳ ಹಾದಿಯಲ್ಲಿರುವ ಅಡೆತಡೆಗಳನ್ನು ನಿವಾರಿಸಿ ಅವರಿಗೆ ರಕ್ಷಣೆ ನೀಡಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮ ಕರೆಕೊಟ್ಟಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿನ ಪೋಸ್ಟ್ ಮಾಡಿರುವ ಅವರು, ದೇಶದ ಮಹಿಳೆಯರಿಗೆ ಶುಭ ಕೋರಿ, ಮಹಿಳಾ ದಿನದಂದು ಎಲ್ಲರಿಗೂ ನನ್ನ ಶುಭಾಶಯಗಳು! ಇದು ನಾರಿ ಶಕ್ತಿಯನ್ನು ಆಚರಿಸುವ ಸಂದರ್ಭವಾಗಿದೆ. ಸಮಾಜದ ಪ್ರಗತಿಯನ್ನು ಅದರ ಮಹಿಳೆಯರು ಮಾಡಿದ ಪ್ರಗತಿಯಿಂದ ಅಳೆಯಲಾಗುತ್ತದೆ ಎಂದಿದ್ದಾರೆ. +ಭಾರತದ ಹೆಣ್ಣುಮಕ್ಕಳು ಕ್ರೀಡೆಯಿಂದ ವಿಜ್ಞಾನದವರೆಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದಕ್ಕಾಗಿ ಇಡೀ ದೇಶವೇ ಹೆಮ್ಮೆ ಪಡುತ್ತದೆ ಎಂದು ಪ್ರಶಂಸಿಸಿದ್ದಾರೆ. ಯುವತಿಯರ ಹಾದಿಯಲ್ಲಿರುವ ಅಡೆತಡೆಗಳನ್ನು ತೆಗೆದುಹಾಕಲು ನಾವು ಒಟ್ಟಾಗಿ ಕೆಲಸ ಮಾಡೋಣ ಮತ್ತು ಅವರಿಗೆ ರಕ್ಷಣೆ ನೀಡೋಣ, ಏಕೆಂದರೆ ಅವರು ನಾಳಿನ ಭಾರತವನ್ನು ರೂಪಿಸುತ್ತಾರೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_151_5.txt b/eesanje/url_47_151_5.txt new file mode 100644 index 0000000000000000000000000000000000000000..4301e2bd48b8dd5b86ff39f20e8943833312b4c8 --- /dev/null +++ b/eesanje/url_47_151_5.txt @@ -0,0 +1,10 @@ +ರಾಜ್ಯಸಭೆಗೆ ಸುಧಾ ಮೂರ್ತಿಯವರನ್ನು ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ ಮುರ್ಮು +ನವದೆಹಲಿ,ಮಾ.8- ಸಾಹಿತಿ, ಲೇಖಕಿ ಹಾಗೂ ಇನೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಮೂರ್ತಿ ಅವರನ್ನು ನಾಮನಿರ್ದೇಶನ ಮಾಡಿರುವುದಕ್ಕೆ ಅಂಕಿತ ಹಾಕಿದ್ದಾರೆ. + @ . ' , . …../lL2b0nVZ8F +ಶಿಕ್ಷಣ, ಸಮಾಜಸೇವೆ, ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪರಿಮಿತ ಸೇವೆ ಸಲ್ಲಿಸಿರುವ ಸುಧಾ ನಾರಾಯಣಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ರಾಜಸಭೆಗೆ ನಾಮನಿರ್ದೇಶನ ಮಾಡಿರುವುದು ನಾರಿಶಕ್ತಿಯ ಪ್ರಬಲ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮಥ್ರ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಸೇವೆ ಫಲಪ್ರದವಾಗಲಿ ಎಂದು ಪ್ರಧಾನಿ ಮೋದಿಯವರು ಶುಭ ಕೋರಿದ್ದಾರೆ. +ವಿಶ್ವದ ಪ್ರಮುಖ ಐಟಿ ಕಂಪನಿಗಳಲ್ಲಿ ಒಂದಾಗಿರುವ ಇನೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪತ್ನಿಯಾಗಿರುವ ಸುಧಾಮೂರ್ತಿ ಅವರು ಸಾಹಿತ್ಯ, ಬರಹ, ಸಮಾಜಸೇವೆ, ಶಿಕ್ಷಣ ಮಹಿಳೆಯರ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ತಮ್ಮನ್ನು ತೊಡಗಿಸಿಕೊಂಡಿದ್ದರು. +ಇನೋಸಿಸ್‍ನಂತಹ ದೈತ್ಯ ಕಂಪನಿಯ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪತ್ನಿಯಾಗಿದ್ದರೂ ಅವರ ಸರಳತೆ, ಸಜ್ಜನಿಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿತ್ತು. ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಸುಧಾಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ವಿವಾಹವಾಗಿದ್ದಾರೆ. +ಹಿನ್ನಲೆ:ಸುಧಾ ಮೂರ್ತಿಯವರು ಆಗಸ್ಟ್ 19, 1950ರಂದು ಹಾವೇರಿಯ ಜಿಲ್ಲೆಯ ಶಿಗ್ಗಾಂವಿಯಲ್ಲಿ ಡಾ.ಆರ್.ಹೆಚ್.ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಗೆ ಪುತ್ರಿಯಾಗಿ ಜನಿಸಿದರು. ಹುಬ್ಬಳ್ಳಿಯಲ್ಲಿರುವ ಕೆಎಲ್‍ಇ ಸಂಸ್ಥೆಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ, ನಂತರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. +ಸುಧಾಮೂರ್ತಿ ಅವರು ಟಾಟಾ ಇಂಜಿನಿಯರಿಂಗ್ ಮತ್ತು ಲೊಕೊಮೊಟಿವ್ (ಟೆಲ್ಕೊ) ಕಂಪನಿಯಲ್ಲಿ ಕಾರ್ಯ ನಿರ್ವಹಿಸಲು ಆರಂಭಿಸಿದರು. ಭಾರತದ ಅತಿದೊಡ್ಡ ವಾಹನ ತಯಾರಿಕಾ ಘಟಕದಲ್ಲಿ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಇವರಾಗಿದ್ದರು. ಇವರನ್ನು ಮೊದಲು ಪುಣೆಯಲ್ಲಿ ಡೆವಲಪ್‍ಮೆಂಟ್ ಇಂಜಿನಿಯರ್ ಆಗಿ ನೇಮಿಸಲಾಯಿತು. ನಂತರ ಮುಂಬೈ ಮತ್ತು ಜಮ್‍ಶೆಡ್‍ಪುರಗೆ ವರ್ಗಾಯಿಸಲಾಯಿತು. +1970 ಫೆಬ್ರವರಿ 10ರಂದು ನಾರಾಯಣ ಮೂರ್ತಿ ಅವರನ್ನು ವಿವಾಹವಾದರು. ನಂತರ ಇವರು ಇನ್ಪೋಸಿಸ್ ಕಂಪನಿಯನ್ನು ಸ್ಥಾಪಿಸಿದರು. ಈ ಕಂಪನಿ ಜಗತ್ತಿನಾದ್ಯಂತ ಹೆಸರುವಾಸಿ ಆಯ್ತು. ಇವರ ಕಂಪನಿ ಬೆಳೆಯುತ್ತಾ ಹೋದಂತೆ, ಹೆಚ್ಚು ಆದಾಯ ಬರಲು ಆರಂಭಿಸಿತು. ಹೀಗೆ ಬಂದ ಆದಾಯದಲ್ಲಿ ಒಂದಿಷ್ಟು ಪ್ರತಿಷತದಷ್ಟು ಸಮಾಜ ಸೇವೆಗೆ ಮುಡಿಪಾಗಿಡಲು ಆರಂಭಿಸಿದರು. +1996ರಲ್ಲಿ ಸಾರ್ವಜನಿಕ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಇದುವರೆಗೆ 2,300 ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಶಾಲೆಗಳಲ್ಲಿ 70,000 ಗ್ರಂಥಾಲಯಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಇವರ ಸಂಸ್ಥೆ ಇದುವರೆಗೆ 16,000 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿದೆ. ಇವರಿಗೆ 2006ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸುಧಾಮೂರ್ತಿಯವರು ಇದುವರೆಗೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ. \ No newline at end of file diff --git a/eesanje/url_47_151_6.txt b/eesanje/url_47_151_6.txt new file mode 100644 index 0000000000000000000000000000000000000000..9b0718a0b1f0cf979da7774069df5b181ab9dfdc --- /dev/null +++ b/eesanje/url_47_151_6.txt @@ -0,0 +1,5 @@ +ಎನ್‍ಡಿಎಗೆ ಟಿಡಿಪಿ ವಾಪಸ್..?! +ನವದೆಹಲಿ,ಮಾ.8- ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷವು ಆರು ವರ್ಷಗಳ ನಂತರ ಬಿಜೆಪಿ ನೇತೃತ್ವದ ಎನ್‍ಡಿಎಗೆ ಮರಳುವ ಸಾಧ್ಯತೆ ಇದ್ದು, ಬಿಜೆಪಿಯೊಂದಿಗೆ ಟಿಡಿಪಿ ಮೈತ್ರಿ ಬಹುತೇಕ ಖಚಿತವಾಗಿದೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಅವರು ತಡರಾತ್ರಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಜನಸೇನಾ ನಾಯಕ ಪವನ್ ಕಲ್ಯಾಣ್ ಕೂಡ ಉಪಸ್ಥಿತರಿದ್ದರು ಎಂದು ತಿಳಿದುಬಂದಿದೆ. +ಆಂಧ್ರಪ್ರದೇಶದಲ್ಲಿ ಬಿಜೆಪಿ, ತೆಲುಗು ದೇಶಂ ಮತ್ತು ಜನಸೇನೆ ನಡುವೆ ಸೀಟು ಹಂಚಿಕೆಯ ಕುರಿತು ಮಾತುಕತೆ ನಡೆಸಲಾಯಿತು. ಆಂಧ್ರಪ್ರದೇಶದಲ್ಲಿ ವಿಸ್ತರಣೆಯತ್ತ ಸಾಗುತ್ತಿರುವ ಎನ್‍ಡಿಎ ತೆಲುಗು ದೇಶಂ ಮತ್ತು ಜನ ಸೇನಾ ಜತೆ ಮೈತ್ರಿ ಮತ್ತು ಸೀಟು ಸಮನ್ವಯದ ಬಗ್ಗೆ ಮಾತುಕತೆ ನಡೆಸಿದೆ. ಮೂಲಗಳ ಪ್ರಕಾರ, ಆಂಧ್ರಪ್ರದೇಶದ 25 ಸ್ಥಾನಗಳ ಪೈಕಿ ಬಿಜೆಪಿ 8 ಸ್ಥಾನಗಳಲ್ಲಿ ಸ್ರ್ಪಸಬಹುದು ಮತ್ತು ಜನಸೇನೆ ಮೂರು ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಉಳಿದ 14 ಸ್ಥಾನಗಳಲ್ಲಿ ತೆಲುಗು ದೇಶಂ ಸ್ರ್ಪಧಿಸಬಹುದು ಎನ್ನಲಾಗಿದೆ. +ಆದರೆ ತೆಲುಗು ದೇಶಂ ಇದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಬಯಸಿದೆ. ಇದೇ ಕಾರಣಕ್ಕೆ ಬಿಜೆಪಿ ನಾಯಕರು ತಡರಾತ್ರಿವರೆಗೂ ಒಂದು ಸ್ಥಾನದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಮೈತ್ರಿ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲೇ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಫೆಬ್ರವರಿಯಲ್ಲಿ ನಾಯ್ಡು ಅವರು ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದರು. ಇದಾದ ಬಳಿಕ ಮೈತ್ರಿಯತ್ತ ಸಾಗುತ್ತಿದ್ದಾರೆ ಎಂಬ ಊಹಾಪೋಹಗಳು ಬಲಗೊಂಡಿದ್ದವು. ಆದರೆ, ವಿಷಯಗಳು ಇನ್ನೂ ಸ್ಪಷ್ಟವಾಗಿ ಬೆಳಕಿಗೆ ಬಂದಿಲ್ಲ. +ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐದು ರಾಜ್ಯಗಳ 100 ಲೋಕಸಭಾ ಸ್ಥಾನಗಳ ಪೈಕಿ 29 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು. ಇದರಲ್ಲಿ 25 ಸ್ಥಾನಗಳು ಕರ್ನಾಟಕದಿಂದ ಮತ್ತು 4 ಸ್ಥಾನಗಳು ತೆಲಂಗಾಣದಿಂದ ಬಂದಿವೆ. ಟಿಡಿಪಿ ಎನ್‍ಡಿಎಗೆ ಮರಳಿದರೆ ಬಿಜೆಪಿಗೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ. ಇದಲ್ಲದೇ ಒಡಿಶಾದಲ್ಲಿ ಆಡಳಿತಾರೂಢ ಬಿಜು ಜನತಾದಳದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಚರ್ಚೆಯೂ ಅಂತಿಮ ಹಂತದಲ್ಲಿದೆ. \ No newline at end of file diff --git a/eesanje/url_47_151_7.txt b/eesanje/url_47_151_7.txt new file mode 100644 index 0000000000000000000000000000000000000000..fde52bfa7e4cf7b50675b9c84d22e3b832881e2c --- /dev/null +++ b/eesanje/url_47_151_7.txt @@ -0,0 +1,5 @@ +ಹಸೆಮಣೆ ಏರಬೇಕಿದ್ದ ಮಗನನ್ನೇ ಮಸಣಕ್ಕೆ ಕಳುಹಿಸಿದ ತಂದೆ +ನವದೆಹಲಿ,ಮಾ.8- ಮದುವೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗ ಜಿಮ್ ತರಬೇತುದಾರನನ್ನು ಆತನ ತಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಗೌರವ್ ಸಿಂಘಾಲ್(29) ಮೃತ ಜಿಮ್ ಟ್ರೈನರ್ ದಕ್ಷಿಣ ದೆಹಲಿಯಲ್ಲಿರುವ ಮನೆಯಲ್ಲಿ ಮುಂಜಾನೆ, ಮದುವೆಗೂ ಕೆಲವೇ ಗಂಟೆಗಳ ಮೊದಲು ಅವರ ಎದೆಗೆ 15 ಬಾರಿ ಇರಿಯಲಾಗಿದೆ. ಕೊಲೆಯ ಪ್ರಮುಖ ಆರೋಪಿಯಾಗಿರುವ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. +ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಇಲ್ಲಿಯವರೆಗೆ, ತಂದೆ ಮತ್ತು ಮಗನ ನಡುವೆ ವೈಮನಸ್ಸು ಇತ್ತು ಎಂದಷ್ಟೇ ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಶವಾಗಾರಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯ ಬಂಧನದ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ. ಮೃತ ಗೌರವ್ ಸಿಂಘಾಲ್‍ನ ಸಹೋದರ ಮತ್ತು ಸಂಬಂಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಉಪಪೊಲೀಸ್ ಆಯುಕ್ತ (ದಕ್ಷಿಣ) ಅಂಕಿತ್ ಚೌಹಾಣ್ ತಿಳಿಸಿದ್ದಾರೆ. +ಸಿಂಘಾಲ್ ಮುಖಕ್ಕೆ ಮತ್ತು ಎದೆಗೆ 15ಕ್ಕೂ ಹೆಚ್ಚು ಬಾರಿ ಇರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾವು ಪ್ರತಿ ಕೋನದಿಂದ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಮುಖ್ಯ ಉದ್ದೇಶದ ಹಿಂದೆ ಕೆಲವು ಪ್ರಮುಖ ಸುಳಿವುಗಳನ್ನು ಹೊಂದಿದ್ದೇವೆ. ಐದಕ್ಕೂ ಹೆಚ್ಚು ವಿಭಿನ್ನ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. ಪೊಲೀಸರು ಕೊಠಡಿಯಲ್ಲಿ ಮತ್ತು ಸುತ್ತಮುತ್ತಲಿನ ವಿವಿಧ ಗಾತ್ರದ ಹಲವಾರು ಶೂ ಗುರುತುಗಳನ್ನು ಪತ್ತೆಹಚ್ಚಿದ್ದಾರೆ, ಇದು ಕೊಲೆಯಲ್ಲಿ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. +ಗೌರವ್‍ಗೆ ವಿವಾಹವಾಗಲು ಇಷ್ಟವಿರಲಿಲ್ಲ, ಆದರೆ ಆತನ ತಂದೆ ಒತ್ತಡ ಹೇರುತ್ತಿದ್ದರು ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಿಂಘಾಲ್ ಬೇರೊಬ್ಬ ಮಹಿಳೆಯನ್ನು ಪ್ರೀತಿಸುತ್ತಿದ್ದರು ಮತ್ತು ಅವಳನ್ನು ಮದುವೆಯಾಗಲು ಬಯಸಿದ್ದರು. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_151_8.txt b/eesanje/url_47_151_8.txt new file mode 100644 index 0000000000000000000000000000000000000000..908e5f5214343348886c5fdd286f9bcf97507a09 --- /dev/null +++ b/eesanje/url_47_151_8.txt @@ -0,0 +1,5 @@ +ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 100 ರೂ. ಕಡಿತ +ನವದೆಹಲಿ,ಮಾ8- ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತಗೊಳಿಸಿ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ. +ಇದು ದೇಶಾದ್ಯಂತ ಅನ್ವಯವಾಗಲಿದ್ದು, ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದಿದ್ದಾರೆ. ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮ ಹಾಗೂ ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿ ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕುವ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ. +ಉಜ್ವಲ ಯೋಜನೆಯಡಿ ಸಿಲಿಂಡರ್ ಬೆಲೆಯ ಮೇಲಿನ 300 ರೂಪಾಯಿ ರಿಯಾಯಿತಿಯನ್ನು ಮುಂದಿನ ಒಂದು ವರ್ಷಕ್ಕೆ ಮುಂದುವರಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ನಿರ್ಧಾರ ಕೈಗೊಂಡಿತ್ತು. ಅದರಾಚೆಗೆ, ಎಲ್ಲಾ ಸಾಮಾನ್ಯ ಸಿಲಿಂಡರ್ ಗ್ರಾಹಕರಿಗೆ ಪ್ರತಿ ಸಿಲಿಂಡರ್‍ಗೆ 100 ರೂ. ದರ ಇಳಿಕೆ ಅನ್ವಯವಾಗಲಿದೆ.ಸರ್ಕಾರದ ಅಂಕಿಅಂಶಗಳ ಪ್ರಕಾರ, ದೇಶಾದ್ಯಂತ ಸುಮಾರು 32.5 ಕೋಟಿ ಎಲ್‍ಪಿಜಿ ಸಂಪರ್ಕಗಳಿವೆ. ಇದರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ಸುಮಾರು 10.25 ಕೋಟಿ ಸಿಲಿಂಡರ್‍ಗಳನ್ನು ವಿತರಣೆ ಮಾಡಲಾಗಿದೆ. +ಮಾರ್ಚ್ 1ರಂದು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 25 ರೂ. ಹೆಚ್ಚಳ ಮಾಡಿದ್ದವು. ಆದರೆ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಕಳೆದ 6 ತಿಂಗಳಲ್ಲಿ ಪರಿಷ್ಕರಣೆ ಮಾಡಿರಲಿಲ್ಲ. \ No newline at end of file diff --git a/eesanje/url_47_151_9.txt b/eesanje/url_47_151_9.txt new file mode 100644 index 0000000000000000000000000000000000000000..c7622ea86e0bea5fdea5fc921ec22b0bb36eede2 --- /dev/null +++ b/eesanje/url_47_151_9.txt @@ -0,0 +1,6 @@ +ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್ ಜಾರಿ +ನವದೆಹಲಿ,ಮಾ.7- ಅಬಕಾರಿ ನೀತಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಬಾರಿ ಬಾರಿ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ಸ್ವತಃ ದೆಹಲಿ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ. ಮಾರ್ಚ್ 16ಕ್ಕೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಕೋರ್ಟ್ ಸೂಚಿಸಿದೆ.ತಾನು 8 ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಸಮನ್ಸ್ ಹೊರಡಿಸಿದೆ. +ದೆಹಲಿ ಸರ್ಕಾರದ ಮದ್ಯ ನೀತಿ ಹಗರಣ ಸಂಬಂಧ ವಿಚಾರಣೆ ನಡೆಸಲು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಈವರೆಗೆ ಎಂಟು ಬಾರಿ ಸಮನ್ಸ್ ಕೊಟ್ಟಿದೆ. ಯಾವುದಕ್ಕೂ ಅವರು ಸ್ಪಂದಿಸಿಲ್ಲ. ಮಾರ್ಚ್ 4ಕ್ಕೆ ಕೊನೆಯದಾಗಿ ಸಮನ್ಸ್ ಕೊಡಲಾಗಿತ್ತು. ಮೊದಲ ಮೂರು ಸಮನ್ಸ್‍ಗೆ ದೆಹಲಿ ಸಿಎಂ ಸ್ಪಂದಿಸದೇ ಇದ್ದಾಗಲೇ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಇಡಿ ದೂರು ಕೊಟ್ಟಿತ್ತು. ನಂತರದ ಐದು ಸಮನ್ಸ್‍ಗಳಿಗೂ ಅವರು ಸ್ಪಂದಿಸುತ್ತಿಲ್ಲ ಎಂದು ಇಡಿ ಮತ್ತೊಮ್ಮೆ ದೂರು ಕೊಟ್ಟ ಹಿನ್ನೆಲೆಯಲ್ಲಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮಾರ್ಚ್ 16ಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದೆ. +ಸಮನ್ಸ್‍ಗೆ ಸ್ಪಂದಿಸದ ಕೇಜ್ರಿವಾಲ್ ವಿರುದ್ಧ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂಬುದು ಇಡಿ ಒತ್ತಾಯವಾಗಿದೆ. ಆದರೆ, ಇಡಿ ಸಮನ್ಸ್ ಸರಿಯಾದ ಕ್ರಮದಲ್ಲಿ ಇಲ್ಲ. ಅಕ್ರಮವಾಗಿ ಸಮನ್ಸ್ ಕೊಡುತ್ತಿದೆ ಎಂಬುದು ಕೇಜ್ರಿವಾಲ್ ಆಕ್ಷೇಪಣೆ. ಹಾಗೆಯೇ ಕೇಂದ್ರ ಸರ್ಕಾರ ಇಡಿ ಇತ್ಯಾದಿ ಸಂಸ್ಥೆಗಳ ಮೂಲಕ ಎದುರಾಳಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಮುಖ್ಯಮಂತ್ರಿಗಳ ವಾದ. +ವಿಡಿಯೋ ಕಾನೆರೆನ್ಸ್ ಮೂಲಕ ತನ್ನನ್ನು ವಿಚಾರಣೆ ನಡೆಸುವುದಾದರೆ ತಾನು ಸಿದ್ಧ ಎಂದು ಅರವಿಂದ್ ಕೇಜ್ರಿವಾಲ್ ಹೇಳುತ್ತಿದ್ದಾರೆ. ಆದರೆ, ಕಾನರೆನ್ಸ್ ಕಾಲ್ ಸರಿ ಹೋಗಲ್ಲ. ಆ ಪದ್ಧತಿ ಇಲ್ಲ. ಭೌತಿಕವಾಗಿ ತಾವು ವಿಚಾರಣೆಗೆ ಹಾಜರಾಗಬೇಕು ಎಂಬುದು ಇಡಿ ಅಧಿಕಾರಿಗಳು ಹಿಡಿದಿರುವ ಪಟ್ಟು. ಹೀಗಾಗಿ ಇಡಿ ಅಧಿಕಾರಿಗಳಿಗೆ ಕೇಜ್ರಿವಾಲ್ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಈ ಹಿಂದೆ ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಅದಾದ ಬಳಿಕ ಇಬ್ಬರನ್ನೂ ಅದು ಬಂಧಿಸಿದೆ. ಈಗಲೂ ಅವರು ಜೈಲಿನಲ್ಲೇ ಇದ್ದಾರೆ. ತನ್ನನ್ನೂ ಇಡಿ ಜೈಲಿಗೆ ತಳ್ಳಬಹುದು ಎಂಬುದು ಕೇಜ್ರಿವಾಲ್ ಅವರಿಗೆ ಇರುವ ಭಯ. +ಯಾರು ಬಿಜೆಪಿಗೆ ಸೇರಲು ನಿರಾಕರಿಸುತ್ತಾರೋ ಅವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಸತ್ಯೇಂದರ್ ಜೈನ್, ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರು ಈಗ ಬಿಜೆಪಿ ಸೇರಿದರೆ ನಾಳೆಯೇ ಅವರಿಗೆ ಜಾಮೀನು ಸಿಗುತ್ತದೆ. ನಾನು ಕೂಡ ಇವತ್ತು ಬಿಜೆಪಿ ಸೇರಿದರೆ ಇಡಿಯಿಂದ ಸಮನ್ಸ್ ಬರುವುದು ನಿಂತುಹೋಗುತ್ತದೆ ಎಂದು ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_152_1.txt b/eesanje/url_47_152_1.txt new file mode 100644 index 0000000000000000000000000000000000000000..9afa298c77dbdaed9f983efb741f34b22dbe7cab --- /dev/null +++ b/eesanje/url_47_152_1.txt @@ -0,0 +1,3 @@ +ಕಾಜಿರಂಗದಲ್ಲಿ ನಾಳೆ ಮೋದಿ ಸಫಾರಿ +ಗುವಾಹಟಿ, ಮಾ 7 (ಪಿಟಿಐ) : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿ ಸುಮಾರು 18,000 ಕೋಟಿ ರೂಪಾಯಿಗಳ ಯೋಜನೆಗಳ ಉದ್ಘಾಟನೆಗೆ ಅಡಿಪಾಯ ಹಾಕಲಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ ಅವರು, ಮೋದಿ ಮೊದಲ ಬಾರಿಗೆ ಯುನೆಸ್ಕೋ ಪಾರಂಪರಿಕ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ ಸಫಾರಿ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. +ಮೋದಿ ನಾಳೆ ಮಧ್ಯಾಹ್ನ ಅಸ್ಸಾಂಗೆ ಆಗಮಿಸಲಿದ್ದು, ರಾತ್ರಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಮರುದಿನ, ಅವರು ಜೋರ್ಹತ್‍ನಲ್ಲಿ ಅಹೋಮ್ ಜನರಲ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ, ನಂತರ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶರ್ಮಾ ಹೇಳಿದರು. ಸಾರ್ವಜನಿಕ ಸಭೆಯ ಸ್ಥಳದಿಂದ ಅವರು ಸುಮಾರು 18,000 ಕೋಟಿ ರೂಪಾಯಿಗಳ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದ ನಂತರ ಅವರು ಪಶ್ಚಿಮ ಬಂಗಾಳಕ್ಕೆ ತೆರಳಲಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ. \ No newline at end of file diff --git a/eesanje/url_47_152_10.txt b/eesanje/url_47_152_10.txt new file mode 100644 index 0000000000000000000000000000000000000000..cf68e88937d3f64e6c91aed0a8511c0d7cf5d112 --- /dev/null +++ b/eesanje/url_47_152_10.txt @@ -0,0 +1,7 @@ +ಉಡುಗೊರೆ ನೀಡುವ ಮಕ್ಕಳಿಗೆ ಪತ್ರ ಬರಿತ್ತಾರಂತೆ ಪ್ರಧಾನಿ ಮೋದಿ +ಜಾಜ್‍ಪುರ,ಮಾ.6- ಮಕ್ಕಳೇ ನೀವು ತಂದಿರುವ ಉಡುಗೊರೆಗಳ ಹಿಂದೆ ನಿಮ್ಮ ವಿಳಾಸ ಬರೆಯಿರಿ ನಾನು ನಿಮಗೆ ಪತ್ರ ಬರೆಯುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಕ್ಕಳನ್ನು ಉತ್ತೇಜಿಸಿದ ಘಟನೆ ಒಡಿಸ್ಸಾದಲ್ಲಿ ನಡೆದಿದೆ. +ಒಡಿಶಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಮೊದಿ ಅವರು ಕೆಲವು ಮಕ್ಕಳು ತಮಗೆ ಉಡುಗೊರೆಯಾಗಿ ನೀಡಲು ತಂದಿದ್ದ ವಸ್ತುಗಳನ್ನು ಕಂಡು ಎಸ್‍ಪಿಜಿ ಕಮಾಂಡೋಗಳಿಗೆ ಮಕ್ಕಳಿಂದ ಅವುಗಳನ್ನು ಸಂಗ್ರಹಿಸುವಂತೆ ಸೂಚಿಸಿದರು.ನಂತರ ಮಕ್ಕಳೇ, ದಯವಿಟ್ಟು ನಿಮ್ಮ ವಿಳಾಸಗಳನ್ನು ಕಾಗದದ ಹಿಂಭಾಗದಲ್ಲಿ ನಮೂದಿಸಿ. ಮುಖ್ಯ ಚಿಥಿ ಲಿಖುಂಗಾ ಆಪ್ ಲೋಗೋ ಕೋ…(ನಾನು ನಿಮಗೆ ಪತ್ರ ಬರೆಯುತ್ತೇನೆ) ಎಂದು ವಿನಮ್ರವಾಗಿ ಮನವಿ ಮಾಡಿಕೊಂಡರು. +ಇದಕ್ಕೂ ಮುನ್ನ ಒಡಿಶಾದ ಜಾಜ್‍ಪುರದಲ್ಲಿ 19,600 ಕೋಟಿಗೂ ಅಕ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ ಅವರು ಈ ಯೋಜನೆಗಳು ತೈಲ ಮತ್ತು ಅನಿಲ, ರೈಲ್ವೆ, ರಸ್ತೆಗಳು, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ಪರಮಾಣು ಶಕ್ತಿ ಸೇರಿದಂತೆ ಕ್ಷೇತ್ರಗಳಿಗೆ ಸಂಬಂಸಿವೆ ಎಂದು ಮಾಹಿತಿ ನೀಡಿದರು. +ಬಿಜು ಪಟ್ನಾಯಕ್ ಅವರ ಜಯಂತಿ ಸ್ಮರಿಸಿದ ಪ್ರಧಾನಿಯವರು, ರಾಷ್ಟ್ರ ಮತ್ತು ಒಡಿಶಾಗೆ ಅವರು ನೀಡಿದ ಅನುಪಮ ಕೊಡುಗೆಯನ್ನು ಸ್ಮರಿಸಿದರು.ಇಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಪರಮಾಣು ಶಕ್ತಿ, ರಸ್ತೆಮಾರ್ಗಗಳು, ರೈಲ್ವೆಗಳು ಮತ್ತು ಸಂಪರ್ಕ ವಲಯಗಳಲ್ಲಿ ಸುಮಾರು 20,000 ಕೋಟಿಗಳ ಬೃಹತ್ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಹೈಲೈಟ್ ಮಾಡಿದ ಪ್ರಧಾನಮಂತ್ರಿ, ಇದು ಈ ಪ್ರದೇಶದಲ್ಲಿ ಕೈಗಾರಿಕಾ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಅಭಿವೃದ್ಧಿ ಯೋಜನೆಗಳಿಗಾಗಿ ಒಡಿಶಾದ ಜನತೆಯನ್ನು ಅಭಿನಂದಿಸಿದರು. +ವಿಕಸಿತ್ ಭಾರತ್ ನಿರ್ಣಯಕ್ಕಾಗಿ ಕೆಲಸ ಮಾಡುವಾಗ ರಾಷ್ಟ್ರದ ಪ್ರಸ್ತುತ ಅಗತ್ಯಗಳನ್ನು ನೋಡಿಕೊಳ್ಳುವ ಸರ್ಕಾರದ ವಿಧಾನವನ್ನು ಪ್ರಧಾನಿ ಮುಂದಿಟ್ಟರು. ಇಂಧನ ಕ್ಷೇತ್ರದಲ್ಲಿ ಪೂರ್ವ ರಾಜ್ಯಗಳ ಸಾಮಥ್ರ್ಯವನ್ನು ಹೆಚ್ಚಿಸುವ ಪ್ರಯತ್ನಗಳನ್ನು ಅವರು ಪ್ರಸ್ತಾಪಿಸಿದರು. ಉರ್ಜ ಗಂಗಾ ಯೋಜನೆಯಡಿ, ಐದು ದೊಡ್ಡ ರಾಜ್ಯಗಳಾದ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ನೈಸರ್ಗಿಕ ಅನಿಲ ಪೂರೈಕೆಗಾಗಿ ಪ್ರಮುಖ ಯೋಜನೆಗಳು ನಡೆಯುತ್ತಿವೆ. +ಒಡಿಶಾದ ಪರದೀಪ್‍ನಿಂದ ಪಶ್ಚಿಮ ಬಂಗಾಳದ ಹಲ್ದಿಯಾ ವರೆಗೆ 344 ಕಿಲೋಮೀಟರ್ ಉದ್ದದ ಉತ್ಪನ್ನ ಪೈಪ್‍ಲೈನ್ ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಅವರು ಪಾರಾದೀಪ್ ರಿಫೈನರಿಯಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಮೊನೊ ಎಥಿಲೀನ್ ಗ್ಲೈಕಾಲ್ ಪ್ರಾಜೆಕ್ಟ್ ಮತ್ತು ಪಾರಾದಿಪ್‍ನಲ್ಲಿ 0.6 ಎಂಎಂಟಿಪಿಎ ಎಲ್‍ಪಿಜಿ ಆಮದು ಸೌಲಭ್ಯವನ್ನು ಉದ್ಘಾಟಿಸಿದರು, ಇದು ಪೂರ್ವ ಭಾರತದ ಪಾಲಿಯೆಸ್ಟರ್ ಉದ್ಯಮಕ್ಕೆ ಕ್ರಾಂತಿಕಾರಿ ಬದಲಾವಣೆಯನ್ನು ತರುತ್ತದೆ. ಇದು ಭದ್ರಕ್ ಮತ್ತು ಪಾರಾದೀಪ್‍ನಲ್ಲಿರುವ ಜವಳಿ ಪಾರ್ಕ್‍ಗಳಿಗೆ ಕಚ್ಚಾ ವಸ್ತುಗಳನ್ನು ಸಹ ಒದಗಿಸುತ್ತದೆ ಎಂದು ತಿಳಿಸಿದರು. \ No newline at end of file diff --git a/eesanje/url_47_152_11.txt b/eesanje/url_47_152_11.txt new file mode 100644 index 0000000000000000000000000000000000000000..f2d95934df38110ab771a6b7fc499e61dcb9cb24 --- /dev/null +++ b/eesanje/url_47_152_11.txt @@ -0,0 +1,5 @@ +3600 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಕುರಿತು ಮಾಹಿತಿ ಕೇಳಿದ ಇಡಿ +ಪುಣೆ, ಮಾ.6 (ಪಿಟಿಐ) – ಕಳೆದ ತಿಂಗಳು ನಡೆದ ಮೆಫೆಡ್ರೋನ್ ಡ್ರಗ್ ಸಾಗಾಟ ಪ್ರಕರಣದಲ್ಲಿ ಮಹಾರಾಷ್ಟ್ರದಲ್ಲಿ ಪುಣೆ ಪೊಲೀಸರು ಬಂಸಿರುವ ವ್ಯಕ್ತಿಗಳ ವಿವರಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಕೇಳಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಳೆದ ಫೆಬ್ರವರಿಯಲ್ಲಿ ನಗರ ಪೊಲೀಸರು ಪುಣೆ, ದೆಹಲಿ ಮತ್ತು ಸಾಂಗ್ಲಿಯಾದ್ಯಂತ ಅಕ್ರಮ ಮಾರುಕಟ್ಟೆಗಳಲ್ಲಿ ಸುಮಾರು 3,600 ಕೋಟಿ ಮೌಲ್ಯದ 1,700 ಕಿಲೋಗ್ರಾಂಗಳಷ್ಟು ಮೆಫೆಡ್ರೋನ್ ಅನ್ನು ವಶಪಡಿಸಿಕೊಂಡಿದ್ದರು.ಕುರ್ಕುಂಭ್ (ಪುಣೆ ಬಳಿ)ನಲ್ಲಿನ ಉತ್ಪಾದನಾ ಘಟಕದ ಮಾಲೀಕರು ಸೇರಿದಂತೆ 11 ಜನರನ್ನು ಬಂಸಲಾಗಿದೆ, ಅಲ್ಲಿ ಅಕ್ರಮವಾಗಿ ಡ್ರಗ್ಸ್ ಉತ್ಪಾದಿಸಲಾಗಿದೆ ಎಂದು ಹೇಳಲಾಗಿದೆ. +ಆರೋಪಿಗಳ ಬಗ್ಗೆ ಮಾಹಿತಿ ಕೋರಿ ನಾವು ಸೋಮವಾರ ಇಡಿಯಿಂದ ಪತ್ರವನ್ನು ಸ್ವೀಕರಿಸಿದ್ದೇವೆ. ಡ್ರಗ್ ದಂಧೆಯ ಪ್ರಮಾಣವನ್ನು ಗಮನಿಸಿದರೆ, ಇಡಿ ವಿವರಗಳನ್ನು ಹುಡುಕುತ್ತದೆ ಎಂದು ನಿರೀಕ್ಷಿಸಲಾಗಿತ್ತು ಎಂದು ಅಪರಾಧ ವಿಭಾಗದ ಅಧಿಕಾರಿ ತಿಳಿಸಿದ್ದಾರೆ.ಆರೋಪಿಗಳು, ಅವರ ಬ್ಯಾಂಕ್ ಖಾತೆಗಳು ಮತ್ತು ಹುಡುಕಾಟ ನಡೆಸಿದ ಸ್ಥಳಗಳ ಬಗ್ಗೆ ಕೇಂದ್ರ ಸಂಸ್ಥೆ ಮಾಹಿತಿ ಕೇಳಿದೆ. ಮಾಹಿತಿ ಆಧರಿಸಿ, ಹಣದ ಟ್ರೇಲ್ಸ್ ಮತ್ತು ಆರೋಪಿಗಳನ್ನು ಒಳಗೊಂಡಿರುವ ಶಂಕಿತ ಹವಾಲಾ ವಹಿವಾಟಿನ ಕುರಿತು ಸಂಸ್ಥೆ ತನಿಖೆ ನಡೆಸಲಿದೆ ಎಂದು ಅವರು ಹೇಳಿದರು. +ಈ ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಐವರು ನ್ಯಾಯಾಂಗ ಬಂಧನದಲ್ಲಿದ್ದು, ಆರು ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದೇಶದಿಂದ ಪರಾರಿಯಾಗಿರುವ ಮಾಸ್ಟರ್ ಮೈಂಡ್ ಸಂದೀಪ್ ಧುನಯ್ ಸೇರಿದಂತೆ ನಾಲ್ವರು ಶಂಕಿತರು ಪ್ರಕರಣದಲ್ಲಿ ಬೇಕಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_152_12.txt b/eesanje/url_47_152_12.txt new file mode 100644 index 0000000000000000000000000000000000000000..a8736f24e7be92661c045de3b3f1cde7e18db189 --- /dev/null +++ b/eesanje/url_47_152_12.txt @@ -0,0 +1,5 @@ +ಲಕ್ನೋದಲ್ಲಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಸಾವು +ಲಕ್ನೋ, ಮಾ.6: ಇಲ್ಲಿನ ಹತಾ ಹಜರತ್ ಸಾಹಬ್ ಪ್ರದೇಶದಲ್ಲಿನ ಮನೆಯೊಂದರಲ್ಲಿ ಎಲ್‍ಪಿಜಿ ಸಿಲಿಂಡರ್‍ಗಳು ಸೋಟಗೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. +ಕಳೆದ ರಾತ್ರಿ 10.30ರ ಸುಮಾರಿಗೆ ಕಾಕೋರಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಸ್ಫೋಟಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸಕ್ರ್ಯೂಟ್ ನಿಂದ ಸೋಟ ಸಂಭವಿಸಿದೆ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮುಶೀರ್ (50), ಅವರ ಪತ್ನಿ ಹುಸ್ನ್ ಬಾನೋ (45), ರೈಯಾ (7), ಉಮಾ (4) ಮತ್ತು ಹಿನಾ (2) ಎಂದು ಗುರುತಿಸಲಾಗಿದೆ. +ಗಾಯಗೊಂಡಿರುವ ಇಶಾ, 17, ಲಕಾಬ್, 21, ಅಮ್ಜದ್, 34, ಮತ್ತು ಅನಮ್, 18 ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಮಾಹಿತಿ ಬಂದ ನಮತರ ಅಗ್ನಿಶಾಮಕ ದಳದ ಮೂರು ತಂಡಗಳು ಹಾಗೂ ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದೆ ಅಕ್ಕ ಪಕ್ಕ ಮನೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಯಿತು . +ರಕ್ಷಣಾ ಕಾರ್ಯ ವೇಳೆ ಕುಟುಂಬದ ಒಂಬತ್ತು ಸದಸ್ಯರನ್ನು ಸಮೀಪದ ಕಿಂಗ್ ಜಾರ್ಜ್ ಮೆಡಿಕಲ್ ಯೂನಿವರ್ಸಿಟಿಯ ಟ್ರಾಮಾ ಸೆಂಟರ್‍ಗೆ ದಾಖಲಿಸಲಾಯಿತು ಆದರೆ ಅವರಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_152_2.txt b/eesanje/url_47_152_2.txt new file mode 100644 index 0000000000000000000000000000000000000000..3c193c3a88e566f977f55918225383451233a353 --- /dev/null +++ b/eesanje/url_47_152_2.txt @@ -0,0 +1,7 @@ +ರಾಹುಲ್‍ಗಾಂಧಿ ಜನ್ಮ ಜಾಲಾಡಿದ ರಿಜಿಜು +ನವದೆಹಲಿ, ಮಾ.7 (ಪಿಟಿಐ) ತಮ್ಮ ರಾಜಕೀಯ ಇನ್ನಿಂಗ್ಸ್‍ಗೆ ಮರು ಚಾಲನೆ ನೀಡುವ ಪ್ರತಿಯೊಂದು ಪ್ರಯತ್ನದಲ್ಲೂ ಕಾಂಗ್ರೆಸ್ ವಿಫಲವಾಗಿದೆ ಎಂದು ಹೇಳಿರುವ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ತಮ್ಮ ಸಾಮಥ್ರ್ಯಕ್ಕೆ ಮೀರಿದ ಪ್ರಯತ್ನಗಳನ್ನು ಮುಂದುವರಿಸುವುದನ್ನು ನಿಲ್ಲಿಸುವಂತೆ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ್ದಾರೆ. +ಪಿಟಿಐಗೆ ನೀಡಿದ ವೀಡಿಯೋ ಸಂದರ್ಶನದಲ್ಲಿ, ರಿಜಿಜು ಅವರು ಗಾಂಧಿ ವಂಶದಂತೆಯೇ ವೈಫಲ್ಯಗಳನ್ನು ಎದುರಿಸಿದ್ದರೆ, ಅವರು ಮಾಡಲಾಗದ ಯಾವುದನ್ನಾದರೂ ಮಾಡಲು ಪ್ರಯತ್ನಿಸುವಲ್ಲಿ ತಮ್ಮ ಪಕ್ಷ ಮತ್ತು ಸಹೋದ್ಯೋಗಿಗಳ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿರಲಿಲ್ಲ ಎಂದಿದ್ದಾರೆ. ಭಾರತ್ ಜೋಡೋ ನ್ಯಾಯ್ ಯಾತ್ರೆಯು ಗಾಂಧಿಯನ್ನು ಪ್ರಾರಂಭಿಸುವ ಮತ್ತೊಂದು ಪ್ರಯತ್ನವಾಗಿದೆ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಆ ಪ್ರಯತ್ನದಲ್ಲಿ ಶೋಚನೀಯವಾಗಿ ವಿಫಲರಾಗಿದ್ದಾರೆ ಎಂದು ಅವರು ಕಿಚಾಯಿಸಿದ್ದಾರೆ. +ಜಗತ್ತಿನಲ್ಲಿ ಬೇರೆಡೆ, ಉಡಾವಣೆಗೊಳ್ಳಲು ನಿಮಗೆ ಎರಡನೇ ಅವಕಾಶ ಸಿಗುವುದಿಲ್ಲ. ಅವರು (ಗಾಂಧಿ) ಈಗ 19 ಬಾರಿ ಉಡಾವಣೆಯಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ. ನೀವು ಒಬ್ಬ ವ್ಯಕ್ತಿಯನ್ನು ಎಷ್ಟು ದಿನ ಉಡಾವಣೆ ಮಾಡುತ್ತೀರಿ? ಗೃಹ ವ್ಯವಹಾರಗಳು (ರಾಜ್ಯ ಸಚಿವರು), ಅಲ್ಪಸಂಖ್ಯಾತ ವ್ಯವಹಾರಗಳು, ಕ್ರೀಡೆ ಮತ್ತು ಯುವ ವ್ಯವಹಾರಗಳು, ಕಾನೂನು ಮತ್ತು ಈಗ ಭೂ ವಿಜ್ಞಾನ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ಹೊಂದಿರುವ ರಿಜಿಜು ಕೇಳಿದರು. +ಸಾಮಾನ್ಯವಾಗಿ, ನಾನು ನನ್ನ ಪಕ್ಷವನ್ನು ಮುನ್ನಡೆಸಲು ವಿಫಲವಾದರೆ, ಪಕ್ಷದ ಜನರು ನನ್ನನ್ನು ಮತ್ತೆ ಬಿಡುಗಡೆ ಮಾಡಲು ಮತ್ತು ಅವರ ಅಮೂಲ್ಯ ಸಮಯವನ್ನು ಹಾಳು ಮಾಡಲು ಪ್ರಯತ್ನಿಸುವುದಿಲ್ಲ ಅಥವಾ ನಾನು, ನನ್ನ ಸಹೋದ್ಯೋಗಿಗಳ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಲು ಪ್ರಯತ್ನಿಸುವುದಿಲ್ಲ ಎಂದು ಅವರು ಹೇಳಿದರು. ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ದ್ವೇಷದಿಂದ ತುಂಬಿದ್ದಾರೆ ಮತ್ತು ಸಿಕ್ಕಿದ ಪ್ರತಿ ಅವಕಾಶದಲ್ಲಿ ಅವರ ಮೇಲೆ ವಿಷವನ್ನು ಉಗುಳುತ್ತಾರೆ ಎಂದು ರಿಜಿಜು ಆರೋಪಿಸಿದ್ದಾರೆ. +ಅಯೋಧ್ಯೆಯ ರಾಮ ಮಂದಿರದ ಕುರಿತು ಕಾಂಗ್ರೆಸ್ ನಾಯಕರ ಕಾಮೆಂಟ್‍ಗಳ ಬಗ್ಗೆ ಕೇಳಲಾದ ಕೇಂದ್ರ ಸಚಿವರು, ಗಾಂಧಿಯವರು ಹಿಂದೂ ಸಂಸ್ಕøತಿಯ ಬಗ್ಗೆ ದ್ವೇಷವನ್ನು ಹೊಂದಿದ್ದಾರೆ ಎಂದು ಆರೋಪಿಸಿದರು. ಅವರು ಹಿಂದೂ ಧರ್ಮ ಅಥವಾ ಹಿಂದುತ್ವವನ್ನು ದ್ವೇಷಿಸುತ್ತಾರೆ. ಅವರು ಮತ್ತು ಅವರ ಪಕ್ಷವು ರಾಮನ ಕಲ್ಪನೆಯ ಕಲ್ಪಿತ ಎಂದು ಸುಪ್ರೀಂ ಕೋರ್ಟ್‍ನಲ್ಲಿ ಹೇಳಿದ್ದಾರೆ. ಅವರ ಚಿಂತನೆಯ ಪ್ರಕ್ರಿಯೆಯು ಈಗಾಗಲೇ ಜಗತ್ತಿಗೆ ತಿಳಿದಿದೆ. ಆದ್ದರಿಂದ ಅವರು ಯಾವುದೇ ಹೇಳಿಕೆ ನೀಡಿದ್ದರೂ ಅದು ಹಿಂದೂ ದ್ವೇಷದಿಂದ ಹರಿಯುತ್ತದೆ. ಸಂಸ್ಕøತಿ, ರಾಮ ಮಂದಿರದ ವಿಷಯವನ್ನು ರಾಜಕೀಯಗೊಳಿಸುವುದರ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಕೇಳಿದಾಗ ಅವರು ಹೇಳಿದರು. +ಭಾರತ ವಿರೋಧಿ ಗುಂಪುಗಳಿಂದ ಪ್ರಾಯೋಜಿತ, ಗಾಂಧಿ ವಿದೇಶದಲ್ಲಿ ಭಾರತದ ಇಮೇಜ್ ಅನ್ನು ದುರ್ಬಲಗೊಳಿಸುತ್ತಾರೆ ಮತ್ತು ದೇಶದ ಸಂಸ್ಕøತಿ ಮತ್ತು ಸಾಂವಿಧಾನಿಕ ಅಧಿಕಾರಿಗಳನ್ನು ಟೀಕಿಸುತ್ತಾರೆ ಎಂದು ರಿಜಿಜು ಆರೋಪಿಸಿದ್ದಾರೆ. ಅವರು ಪ್ರಧಾನಿ ಮೋದಿ ಮತ್ತು ಭಾರತೀಯ ಸಂಸ್ಕøತಿಯ ಮೇಲೆ ವಿಷವನ್ನು ಉಗುಳುತ್ತಾರೆ. ಅವರು ಯುನೈಟೆಡ್ ಸ್ಟೇಟ್ಸ ಅಥವಾ ಇಂಗ್ಲೆಂಡ್ ಅಥವಾ ಎಲ್ಲಿಗೆ ಹೋದರೂ, ಆ ಭಾರತ ವಿರೋಧಿ ಗುಂಪುಗಳ ಪ್ರಾಯೋಜಕತ್ವದಲ್ಲಿ, ಅವರು ಭಾರತದ ಸಂಸ್ಕøತಿ, ಸಾಂವಿಧಾನಿಕ ಸಂಸ್ಥೆಗಳು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡುತ್ತಾರೆ ಎಂದು ಸಚಿವರು ಹೇಳಿದರು. \ No newline at end of file diff --git a/eesanje/url_47_152_3.txt b/eesanje/url_47_152_3.txt new file mode 100644 index 0000000000000000000000000000000000000000..eea6cda7fe688a3a5b1ed36835f787e70b4be4ac --- /dev/null +++ b/eesanje/url_47_152_3.txt @@ -0,0 +1,6 @@ +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಬಿಜೆಡಿ ಮೈತ್ರಿ..? +ಭುವನೇಶ್ವರ್, ಮಾ.7 (ಪಿಟಿಐ): ಒಡಿಶಾದಲ್ಲಿ ಆಡಳಿತಾರೂಢ ಬಿಜೆಡಿ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಯಾವುದೇ ಔಪಚಾರಿಕ ಘೋಷಣೆಯಾಗದಿದ್ದರೂ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಎರಡೂ ಪಕ್ಷಗಳ ನಾಯಕರು ಪರಸ್ಪರ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. +ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿವಾಸ ನವೀನ್ ನಿವಾಸ್‍ನಲ್ಲಿ ಬಿಜೆಡಿ ನಾಯಕರು ಮ್ಯಾರಥಾನ್ ಸಭೆ ನಡೆಸಿದರೆ, ಬಿಜೆಪಿ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಇದೇ ರೀತಿಯ ಸಭೆ ನಡೆಸಿದರು, ಸಂಭಾವ್ಯ ಮೈತ್ರಿ ಸೇರಿದಂತೆ ಚುನಾವಣಾ ವಿಷಯಗಳ ಬಗ್ಗೆ ಚರ್ಚಿಸಿದರು. ಮೂರು ಗಂಟೆಗಳ ಚರ್ಚೆಯ ನಂತರ, ಬಿಜೆಡಿ ಉಪಾಧ್ಯಕ್ಷ ಮತ್ತು ಶಾಸಕ ದೇಬಿ ಪ್ರಸಾದ್ ಮಿಶ್ರಾ ಅವರು ಬಿಜೆಪಿಯೊಂದಿಗೆ ಸಂಭವನೀಯ ಮೈತ್ರಿ ಬಗ್ಗೆ ಚರ್ಚೆಗಳನ್ನು ಒಪ್ಪಿಕೊಂಡರು ಆದರೆ ಅದರ ರಚನೆಯನ್ನು ಸ್ಪಷ್ಟವಾಗಿ ದೃಢಪಡಿಸಲಿಲ್ಲ. +ಬಿಜು ಜನತಾ ದಳವು ಒಡಿಶಾದ ಜನರ ಹೆಚ್ಚಿನ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತದೆ. ಹೌದು, ಈ ವಿಷಯದ ಬಗ್ಗೆ (ಮೈತ್ರಿ) ಚರ್ಚೆಗಳು ನಡೆದಿವೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.ನವೀನ್ ಪಟ್ನಾಯಕ್ ಅವರ ನಾಯಕತ್ವದಲ್ಲಿ ಒಡಿಶಾ ಗಣನೀಯವಾಗಿ ಪ್ರಗತಿ ಸಾಸಿದೆ ಎಂದು ಪ್ರತಿಪಾದಿಸಿದ ಮಿಶ್ರಾ, ರಾಜ್ಯದ ಅಭಿವೃದ್ಧಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಅಗತ್ಯವನ್ನು ಒತ್ತಿ ಹೇಳಿದರು. +ಮಿಶ್ರಾ ಮತ್ತು ಬಿಜೆಡಿಯ ಹಿರಿಯ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಸಾಹೂ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, ಬಿಜೆಡಿ ಅಧ್ಯಕ್ಷ ಮತ್ತು ಸಿಎಂ ನವೀನ್ ಪಟ್ನಾಯಕ್ ನೇತೃತ್ವದಲ್ಲಿ ಇಂದು ಪಕ್ಷದ ಹಿರಿಯ ನಾಯಕರೊಂದಿಗೆ ಮುಂಬರುವ ಕಾರ್ಯತಂತ್ರದ ಕುರಿತು ವ್ಯಾಪಕ ಚರ್ಚೆ ನಡೆಸಲಾಯಿತು. ಏತನ್ಮಧ್ಯೆ, ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ಬಿಜೆಪಿಯ ಹಿರಿಯ ನಾಯಕ ಮತ್ತು ಸಂಸದ ಜುಯಲ್ ಓರಾಮ್ ಬಿಜೆಡಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಕುರಿತು ಚರ್ಚೆಗಳನ್ನು ಒಪ್ಪಿಕೊಂಡರು. ಆದರೆ, ಈ ಬಗ್ಗೆ ಪಕ್ಷದ ಕೇಂದ್ರ ನಾಯಕತ್ವವೇ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು. +ಹೌದು, ಇತರ ವಿಷಯಗಳ ನಡುವೆ ಮೈತ್ರಿ ಬಗ್ಗೆ ಚರ್ಚೆಗಳು ನಡೆದಿವೆ. ಪಕ್ಷದ ಕೇಂದ್ರ ನಾಯಕತ್ವವು ಅಂತಿಮ ಕರೆಯನ್ನು ಮಾಡುತ್ತದೆ ಎಂದು ವೈಯಕ್ತಿಕವಾಗಿ ಮೈತ್ರಿಯನ್ನು ವಿರೋಸಿದ ಓರಮ್ ಹೇಳಿದರು. ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಡಿಶಾ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಾಲï, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಿದ್ದರು. \ No newline at end of file diff --git a/eesanje/url_47_152_4.txt b/eesanje/url_47_152_4.txt new file mode 100644 index 0000000000000000000000000000000000000000..1cd6abe21fb5b39025dfa54de12bffea581e4f02 --- /dev/null +++ b/eesanje/url_47_152_4.txt @@ -0,0 +1,5 @@ +ಛತ್ತೀಸ್‍ಗಢದ ವಸತಿ ಶಾಲೆಯಲ್ಲಿ ಬೆಂಕಿ, 4 ವರ್ಷದ ಬಾಲಕಿ ಸಾವು +ಬಿಜಾಪುರ, ಮಾ.7 : ಛತ್ತೀಸ್‍ಗಢದ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಬಿಜಾಪುರ ಜಿಲ್ಲೆಯಲ್ಲಿ ಸರ್ಕಾರಿ ವಸತಿ ಶಾಲೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 4 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಅವಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂತಕೊಂಟಾ ಗ್ರಾಮದ ಬಾಲಕಿಯರ ಪೋರ್ಟಾ ಕ್ಯಾಬಿನ್ (ಪ್ರಿಫ್ಯಾಬ್ರಿಕೇಟೆಡ್ ಪೋರ್ಟಬಲ್ ಸ್ಟ್ರಕ್ಚರ್) ಶಾಲೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಬಾಲಕಿ ಶಾಲೆಯ ವಿದ್ಯಾರ್ಥಿಯಲ್ಲ. ಆಕೆ ಕಳೆದ ಕೆಲವು ದಿನಗಳಿಂದ ಶಾಲೆಯ ವಿದ್ಯಾರ್ಥಿನಿಯಾಗಿರುವ ತನ್ನ ಅಕ್ಕನೊಂದಿಗೆ ವಾಸಿಸುತ್ತಿದ್ದಳು ಎಂದು ಅಧಿಕಾರಿ ಹೇಳಿದ್ದಾರೆ. ಬೆಂಕಿ ಕಾಣಿಸಿದಾಗ ಶಾಲೆಯ ಎಲ್ಲಾ 380 ವಿದ್ಯಾರ್ಥಿಗಳನ್ನು ಪೋರ್ಟಾ ಕ್ಯಾಬಿನ್ ಸಿಬ್ಬಂದಿ ಮತ್ತು ಸ್ಥಳೀಯ ಗ್ರಾಮಸ್ಥರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ಆದರೆ, ನಂತರ ವಿದ್ಯಾರ್ಥಿಯ ತಂಗಿ ಕಾಣೆಯಾಗಿರುವುದು ಕಂಡುಬಂತು ನಂತರ ಹುಡುಕಾಟ ನಡಸಿದಾಗ ಆಕೆ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದು ಕಂಡುಬಂತು ಎಂದು ಅವರು ಹೇಳಿದರು. +ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಕಾರದಿಂದ ಬೆಂಕಿಯನ್ನು ಹತೋಟಿಗೆ ತಂದರು ಶಾಲೆ ಸಂಪೂರ್ಣವಾಗಿ ಸುಟ್ಟುಹೋಗಿದೆ ಮತ್ತು ಅಲ್ಲಿನ ವಸ್ತುಗಳು ನಾಶವಾಗಿದೆ. +ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ.ರಾಜ್ಯದ ಕೆಲವು ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಶಾಲಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ಪೋರ್ಟಾ ಕ್ಯಾಬಿನ್‍ಗಳನ್ನು ಬಳಸಲಾಗುತ್ತದೆ ಎಂದು ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವಪಲ್ಲಿ ಪೊಲೀಸರು ತಿಳಿಸಿದ್ದಾರೆ \ No newline at end of file diff --git a/eesanje/url_47_152_5.txt b/eesanje/url_47_152_5.txt new file mode 100644 index 0000000000000000000000000000000000000000..280987b54bf3aa2ca4c80b444a653dc19763e523 --- /dev/null +++ b/eesanje/url_47_152_5.txt @@ -0,0 +1,7 @@ +ಸಮುದ್ರದಡಿ ಸಂಚರಿಸುವ ಮೆಟ್ರೋ ರೈಲಿಗೆ ಪ್ರಧಾನಿ ಚಾಲನೆ +ಕೋಲ್ಕತ್ತಾ,ಮಾ.6- ಪ್ರಧಾನಿ ನರೇಂದ್ರಮೋದಿ ಅವರು ಇಂದು ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋ ರೈಲಿಗೆ ಚಾಲನೆ ನೀಡಿದ್ದಾರೆ. ಹೂಗ್ಲಿ ನದಿಯಡಿ ನಿರ್ಮಿಸಲಾಗಿರುವ ಸುರಂಗದ ಮೂಲಕ ಈ ಮೆಟ್ರೋ ರೈಲು ಗಳು ಚಲಿಸಲಿವೆ.ವಿಶೇಷವೆಂದರೆ ಈ ಮೆಟ್ರೋ ವನ್ನು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸುವ ಮೂಲಕ ಉದ್ಘಾಟಿಸಿದ್ದು, ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ನಗರದಲ್ಲಿ ಈ ರೈಲು ಸೇವೆಗಳು ಆರಂಭವಾಗಿದೆ. +ಹೌರಾ ಮೈದಾನ – ಎಸ್ಪ್ಲಾನೇಡ್ ಮೆಟ್ರೋ ನಿಲ್ದಾಣಗಳನ್ನು ಸಂಪರ್ಕಿಸುವ ಹಸಿರು ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಉದ್ಘಾಟಿಸಿದ್ದಾರೆ. ಇದು ಕೋಲ್ಕತ್ತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ನ ಒಂದು ಭಾಗವಾಗಿದೆ. ಹೌರಾ ಮೈದಾನ – ಎಸ್ಪ್ಲಾನೇಡ್ ಮಾರ್ಗವು ಹೌರಾ ಮೈದಾನ, ಹೌರಾ ಸ್ಟೇಷನ್ ಕಾಂಪ್ಲೆಕ್ಸ್, ಬಿಬಿಡಿ ಬಾಗ್ ನಿಲ್ದಾಣಗಳನ್ನು ಹೊಂದಿದೆ. +ಕೋಲ್ಕತ್ತಾ ಮೆಟ್ರೋದಲ್ಲಿ ಹೌರಾ ಮೈದಾನ- ಎಸ್ಪ್ಲೇನೇಡ್ ಮಾರ್ಗವು ತುಂಬಾ ವಿಶೇಷವಾಗಿದೆ. ಏಕೆಂದರೆ ಇದು ನದಿಯ ಅಡಿಯಲ್ಲಿರುವ ದೇಶದ ಅತಿದೊಡ್ಡ ಸುರಂಗವಾಗಿದೆ. ಈ ಮಾರ್ಗದಲ್ಲಿರುವ ಹೌರಾ ಮೆಟ್ರೋ ನಿಲ್ದಾಣವು ನಮ್ಮ ದೇಶದ ಅತ್ಯಂತ ಆಳವಾದ ಮೆಟ್ರೋ ನಿಲ್ದಾಣವಾಗಿ ದಾಖಲೆ ಬರೆಯಲಿದೆ. ಈ ಸುರಂಗವನ್ನು ನೀರಿನ 6 ಮೀಟರ್ ಆಳದಲ್ಲಿ 520 ಮೀಟರ್ ಉದ್ದದಲ್ಲಿ ನಿರ್ಮಿಸಲಾಗಿದೆ. +ನಮ್ಮ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕೋಲ್ಕತ್ತಾ ನಗರದಲ್ಲಿ ಮೆಟ್ರೋ ರೈಲು ಸೇವೆ ಆರಂಭವಾಗಿತ್ತು. 1984ರಲ್ಲಿ ಕೋಲ್ಕತ್ತಾ ಮೆಟ್ರೋ ರೈಲು ಆರಂಭವಾಗಿತ್ತು. ಇದೀಗ ನೀರೊಳಗಿನ ಮೆಟ್ರೋ ರೈಲು ಆರಂಭಿಸುವ ಮೂಲಕ ಮತ್ತೊಂದು ದಾಖಲೆಗೆ ಪಾತ್ರವಾಗಿದೆ. ಕೋಲ್ಕತ್ತಾ ಪೂರ್ವ-ಪಶ್ಚಿಮ ಮೆಟ್ರೋ ಮಾರ್ಗದ ಒಟ್ಟು ಉದ್ದ 16.6 ಕಿ.ಮೀ. ಈ ಪೈಕಿ 10.8 ಕಿ.ಮೀ ಸುರಂಗ ಮಾರ್ಗದಲ್ಲಿ ಹಾದು ಹೋಗಲಿದೆ. +ಕೋಲ್ಕತ್ತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ ನಿರ್ಮಾಣದ ಭಾಗವಾಗಿ, ಈ ಜಲ ಸುರಂಗ ರೈಲುಮಾರ್ಗವನ್ನು 120 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. 520 ಮೀಟರ್ ಉದ್ದದ ಈ ಸುರಂಗವನ್ನು 45 ಸೆಕೆಂಡುಗಳಲ್ಲಿ ಮೆಟ್ರೋ ರೈಲು ಹಾದು ಹೋಗುತ್ತದೆ. ಲಂಡನ್-ಪ್ಯಾರಿಸ್ ಕಾರಿಡಾರ್ನಲ್ಲಿ ಯುರೋಸ್ಟಾರ್ ಸೇವೆಯಂತೆ ಸುರಂಗವನ್ನು ನಿರ್ಮಿಸಲಾಗಿದೆ. +ಹೂಗ್ಲಿ ನದಿಯಡಿ ನಿರ್ಮಿಸಲಾದ ಈ ನೀರೊಳಗಿನ ಮೆಟ್ರೋ ಅವಳಿ ನಗರಗಳಾದ ಹೌರಾ ಮತ್ತು ಕೋಲ್ಕತ್ತಾಗೆ ಸುಲಭ ಪ್ರವೇಶವನ್ನು ಒದಗಿಸುತ್ತದೆ. ಈ ಮಾರ್ಗದಲ್ಲಿ 6 ನಿಲ್ದಾಣಗಳಿದ್ದರೆ, 3 ನಿಲ್ದಾಣಗಳು ನೀರಿನ ಅಡಿಯಲ್ಲಿ ಮತ್ತು 3 ನಿಲ್ದಾಣಗಳು ನೆಲದ ಮೇಲೆ ಇರುತ್ತವೆ. ಈ ಕೋಲ್ಕತ್ತಾ ಪೂರ್ವ-ಪಶ್ಚಿಮ ಮೆಟ್ರೋ ಕಾರಿಡಾರ್ನ ಅಡಿಪಾಯವನ್ನು ಫೆಬ್ರವರಿ 2009ರಲ್ಲೇ ಹಾಕಲಾಗಿತ್ತು. ಆದರೆ ನೀರೊಳಗಿನ ಮೆಟ್ರೋ ಸುರಂಗದ ನಿರ್ಮಾಣ ಕಾರ್ಯ 2017ರಲ್ಲಿ ಪ್ರಾರಂಭವಾಗಿತ್ತು. \ No newline at end of file diff --git a/eesanje/url_47_152_6.txt b/eesanje/url_47_152_6.txt new file mode 100644 index 0000000000000000000000000000000000000000..a22abb4ec8947c181c1e098d5c80a54dca991ac9 --- /dev/null +++ b/eesanje/url_47_152_6.txt @@ -0,0 +1,8 @@ +ಮುಂದಿನ ವಾರ ಸರ್ಕಾರದ ಕೈ ಸೇರಲಿದೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ವರದಿ +ನವದೆಹಲಿ,ಮಾ.6- ಕಾನೂನು ಆಯೋಗವು ಮುಂದಿನ ವಾರ ಸರಕಾರಕ್ಕೆ ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ವರದಿ ಸಲ್ಲಿಸಲಿದೆ.ಇದರಲ್ಲಿ ಸಂವಿಧಾನಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಹೊಸ ಅಧ್ಯಾಯವನ್ನು ಸೇರಿಸಲು ಮತ್ತು ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲಕ್ಕೆ ಪ್ರಜಾಸತ್ತಾತ್ಮಕವಾಗಿ ಚುನಾವಣೆ ನಡೆಸಲು ಶಿಫಾರಸು ಮಾಡಬಹುದು ಮತ್ತು ಈ ಬೆಳವಣಿಗೆ 2029 ರ ನಂತರ ಕಾರ್ಯಗತಗೊಳಿಸುವಂತೆ ಶಿಫಾರಸು ಮಾಡುವ ಸಾಧ್ಯತೆಗಳಿವೆ. +ಮೂಲಗಳ ಪ್ರಕಾರ, ನ್ಯಾಯಮೂರ್ತಿ (ನಿವೃತ್ತ) ರಿತು ರಾಜ್ ಅವಸ್ಥಿ ಅವರ ಅಡಿಯಲ್ಲಿ ಆಯೋಗವು ಏಕಕಾಲಿಕ ಚುನಾವಣೆಗಳಲ್ಲಿ ಹೊಸ ಅಧ್ಯಾಯ ಅಥವಾ ಭಾಗವನ್ನು ಸೇರಿಸಲು ಸಂವಿಧಾನಕ್ಕೆ ತಿದ್ದುಪಡಿಯನ್ನು ಶಿಫಾರಸು ಮಾಡುತ್ತದೆ.ಮುಂದಿನ ಐದು ವರ್ಷಗಳಲ್ಲಿ ಶಾಸಕಾಂಗ ಸಭೆಗಳ ನಿಯಮಗಳನ್ನು ಮೂರು ಹಂತಗಳಲ್ಲಿ ಸಿಂಕ್ರೊನೈಸ್ ಮಾಡಲು ಸಮಿತಿಯು ಶಿಫಾರಸು ಮಾಡುತ್ತದೆ, ಇದರಿಂದಾಗಿ 19 ನೇ ಲೋಕಸಭೆಗೆ ಚುನಾವಣೆಗಳು ನಡೆಯಲಿರುವಾಗ 2029 ರ ಮೇ-ಜೂನ್‍ನಲ್ಲಿ ಮೊದಲ ಏಕಕಾಲಿಕ ಚುನಾವಣೆಯನ್ನು ನಡೆಸಬಹುದು ಎಂದು ಅಭಿಪ್ರಾಯಪಡಲಾಗಿದೆ ಎಂದು ತಿಳಿದುಬಂದಿದೆ. +ಸಂವಿಧಾನದ ಹೊಸ ಅಧ್ಯಾಯವು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪಂಚಾಯತ್‍ಗಳು ಮತ್ತು ಪುರಸಭೆಗಳಿಗೆ ಏಕಕಾಲಿಕ ಚುನಾವಣೆ, ಏಕಕಾಲಿಕ ಚುನಾವಣೆಗಳ ಸುಸ್ಥಿರತೆ ಮತ್ತು ಸಾಮಾನ್ಯ ಮತದಾರರ ಪಟ್ಟಿ ಗೆ ಸಂಬಂಸಿದ ವಿಷಯಗಳನ್ನು ಒಳಗೊಂಡಿರುತ್ತದೆ, ಇದರಿಂದಾಗಿ ಮೂರು ಹಂತದ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸಬಹುದು. ಒಟ್ಟಿಗೆ ಒಂದೇ ಸಮಯದಲ್ಲಿ ಎಂದು ಮೂಲಗಳು ವಿವರಿಸಿವೆ. +ಶಿಫಾರಸು ಮಾಡಲಾದ ಹೊಸ ಅಧ್ಯಾಯವು ಅಸೆಂಬ್ಲಿಗಳ ನಿಯಮಗಳೊಂದಿಗೆ ವ್ಯವಹರಿಸುವ ಸಂವಿಧಾನದಲ್ಲಿನ ಇತರ ನಿಬಂಧನೆಗಳನ್ನು ಅತಿಕ್ರಮಿಸಲು ಅಸ್ತಿತ್ವದಲ್ಲಿಲ್ಲದ ಅಕಾರವನ್ನು ಹೊಂದಿರುತ್ತದೆ.ಅಸೆಂಬ್ಲಿಗಳ ನಿಯಮಗಳನ್ನು ಸಿಂಕ್ರೊನೈಸ್ ಮಾಡುವ ಐದು ವರ್ಷಗಳ ಅವಯು ಮೂರು ಹಂತಗಳಲ್ಲಿ ಹರಡುತ್ತದೆ. ಮೊದಲ ಹಂತವು ರಾಜ್ಯ ಅಸೆಂಬ್ಲಿಗಳೊಂದಿಗೆ ವ್ಯವಹರಿಸಬಹುದು ಎಂದು ಆಯೋಗವು ಶಿಫಾರಸು ಮಾಡುತ್ತದೆ. +ಒಂದು ವೇಳೆ ಅವಿಶ್ವಾಸದಿಂದ ಸರ್ಕಾರ ಪತನವಾದರೆ ಅಥವಾ ಹಂಗ್ ಹೌಸ್ ಇದ್ದರೆ, ಆಯೋಗವು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಗಳೊಂದಿಗೆ ಏಕತ್ವ ಸರ್ಕಾರ ರಚನೆಗೆ ಶಿಫಾರಸು ಮಾಡುತ್ತದೆ.ಏಕೀಕರಣ ಸರ್ಕಾರದ ಸೂತ್ರವು ಕಾರ್ಯನಿರ್ವಹಿಸದಿದ್ದರೆ, ಸದನದ ಉಳಿದ ಅವಗೆ ಹೊಸ ಚುನಾವಣೆಗಳನ್ನು ನಡೆಸಲು ಕಾನೂನು ಸಮಿತಿಯು ಶಿಫಾರಸು ಮಾಡುತ್ತದೆ. +ಹೊಸ ಚುನಾವಣೆಗಳನ್ನು ಕರೆಯಲಾಗಿದೆ ಮತ್ತು ಸರ್ಕಾರಕ್ಕೆ ಇನ್ನೂ ಮೂರು ವರ್ಷಗಳಿವೆ ಎಂದು ಭಾವಿಸೋಣ, ನಂತರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣೆಗಳು ಉಳಿದ ಅವಗೆ – ಮೂರು ವರ್ಷಗಳವರೆಗೆ ಇರಬೇಕು ಎಂದು ತಿಳಿಸಲಾಗಿದೆ ಮೂಲವೊಂದು ವಿವರಿಸಿದೆ. +ಕಾನೂನು ಆಯೋಗದ ಹೊರತಾಗಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‍ಗಳಿಗೆ ಸಂವಿಧಾನ ಮತ್ತು ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟನ್ನು ಹೇಗೆ ಏಕಕಾಲದಲ್ಲಿ ಚುನಾವಣೆ ನಡೆಸಬಹುದು ಎಂಬ ವರದಿಯನ್ನು ಸಿದ್ಧಪಡಿಸುತ್ತಿದೆ. \ No newline at end of file diff --git a/eesanje/url_47_152_7.txt b/eesanje/url_47_152_7.txt new file mode 100644 index 0000000000000000000000000000000000000000..af4f91d4d4dc29e9d2b10d4f157d5b84c4572a6b --- /dev/null +++ b/eesanje/url_47_152_7.txt @@ -0,0 +1,6 @@ +ಯುವಕರಿಗೆ ಉದ್ಯೋಗ ಹಕ್ಕು ಭಾಗ್ಯ ಘೋಷಿಸಲು ಮುಂದಾದ ಕಾಂಗ್ರೆಸ್ +ನವದೆಹಲಿ,ಮಾ.6- ಲೋಕಸಭೆ ಚುನಾವಣೆಗೆ ಮುನ್ನ ದೇಶದ ಯುವಜನರನ್ನು ಒಲಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣಾ ಭರವಸೆಯ ಭಾಗವಾಗಿ ಯುವಕರಿಗೆ ಉದ್ಯೋಗದ ಹಕ್ಕು ಭಾಗ್ಯ ನೀಡುವುದಾಗಿ ಘೋಷಿಸುವ ಸಾಧ್ಯತೆ ಇದೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂ ಇಬ್ಬರೂ ಉಪಸ್ಥಿತರಿರುವ ಮಧ್ಯಪ್ರದೇಶದ ಬದನಾವರ್‍ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಯುವಕರ ಉದ್ಯೋಗದ ಹಕ್ಕು ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ. +ಈ ಭರವಸೆಗಳು ಕಾಂಗ್ರೆಸ್ ಪ್ರಣಾಳಿಕೆಯ ಭಾಗವಾಗಲಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಅದನ್ನು ಅನುಮೋದಿಸಿದ ನಂತರ ಶೀಘ್ರದಲ್ಲೇ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.ದೇಶದ ಯುವಕರಿಗೆ ಉದ್ಯೋಗದ ಹಕ್ಕನ್ನು ನೀಡುವ ಇಂತಹ ಯೋಜನೆಯನ್ನು ಇದೇ ಮೊದಲ ಬಾರಿಗೆ ನೀಡಲಾಗುವುದು ಮತ್ತು ಯುವಜನರಿಗೆ ಸ್ವಲ್ಪ ಭತ್ಯೆಯನ್ನು ಘೋಷಿಸಬಹುದು ಎಂದು ಮೂಲವೊಂದು ಹೇಳಿದೆ, ಅಭಿವೃದ್ಧಿ ಹೊಂದಿದ ದೇಶಗಳು ಸಹ ಇಂತಹ ಕಾರ್ಯ ಮಾಡುವುದಿಲ್ಲ. ತಮ್ಮ ಯುವಕರಿಗೆ ಅಂತಹ ಯೋಜನೆಯನ್ನು ಘೋಷಿಸಲಾಗುತ್ತಿದೆ ಎಂದು ಮೂಲಗಳು ಉಲ್ಲೇಖಿಸಿವೆ. +ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಮತ್ತು ಶಿಕ್ಷೆಯನ್ನು ಪಕ್ಷವು ಒದಗಿಸುತ್ತದೆ ಮತ್ತು ತನ್ನ ಪ್ರಣಾಳಿಕೆಯಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಪಾರದರ್ಶಕತೆಯನ್ನು ತರಲು ಕ್ರಮಗಳನ್ನು ಸೂಚಿಸುತ್ತದೆ.ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಯವರು ಉತ್ತರ ಪ್ರದೇಶದಂತಹ ಕೆಲವು ಸಂದರ್ಭಗಳಲ್ಲಿ ಪದೇ ಪದೇ ಪತ್ರಿಕೆ ಸೋರಿಕೆ ಮತ್ತು ನಂತರ ಪರೀಕ್ಷೆಗಳನ್ನು ರದ್ದುಗೊಳಿಸುವುದರಿಂದ ಬಳಲುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಸಂಕಷ್ಟದ ಮೇಲೆ ಕೇಂದ್ರೀಕರಿಸಿದ ನಂತರ ಈ ಕ್ರಮಗಳು ಬಂದಿವೆ. +ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆ ನೀಡಿದ 5-ನ್ಯಾಯ (ನ್ಯಾಯದ ಐದು ಸ್ತಂಭಗಳು) ಮೇಲೆ ಪ್ರಣಾಳಿಕೆಯ ಒತ್ತು ಇರಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷವು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಯನ್ನು ನೀಡುವ ಬಗ್ಗೆ ಮತ್ತು ಸರ್ಕಾರಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ದೇಶದಲ್ಲಿ ಜಾತಿ ಆಧಾರಿತ ಜನಗಣತಿಗೆ ಭರವಸೆ ನೀಡುತ್ತದೆ. +ಸಮಾಜದ ಕಟ್ಟಕಡೆಯ ವರ್ಗಗಳಿಗೆ ಹಣಕಾಸಿನ ನೆರವು ನೀಡುವುದು ಮತ್ತು ಅವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳುವುದು ಮತ್ತು ರಾಜ್ಯದ ಕಲ್ಯಾಣ ಕ್ರಮಗಳ ಭಾಗವಾಗುವುದು ಮುಂತಾದ ಕೆಲವು ಕಲ್ಯಾಣ ಕ್ರಮಗಳಿಗೆ ಕಾಂಗ್ರೆಸ್ ಒತ್ತು ನೀಡುವ ಸಾಧ್ಯತೆಯಿದೆ.ಇತ್ತೀಚೆಗೆ ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳಲ್ಲಿ ಕಾಂಗ್ರೆಸ್ ಅಕಾರಕ್ಕೆ ಬರಲು ಜನರಿಗೆ ನೀಡಿದ ಕಾಂಗ್ರೆಸ್ ಭರವಸೆಗಳು ಸಹಾಯ ಮಾಡಿದ ನಂತರ ಈ ಬೆಳವಣಿಗೆಗಳು ಸಂಭವಿಸಿವೆ. ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯು ನಿನ್ನೆ ಸಂಜೆ ಐದು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಲೋಕಸಭೆ ಚುನಾವಣೆಯ ಪ್ರಣಾಳಿಕೆಗೆ ಅಂತಿಮ ರೂಪ ನೀಡಲು ಇಲ್ಲಿ ಸಭೆ ಸೇರಲಿದೆ. \ No newline at end of file diff --git a/eesanje/url_47_152_8.txt b/eesanje/url_47_152_8.txt new file mode 100644 index 0000000000000000000000000000000000000000..b7738939fb4d4502b3b3efb07444d20afe9ee652 --- /dev/null +++ b/eesanje/url_47_152_8.txt @@ -0,0 +1,8 @@ +“ಕೆಲವು ಅತ್ಯಾಚಾರಿಗಳಿದಾಗಿ ಎಲ್ಲಾ ಭಾರತೀಯರು ನಾಚಿಕೆಪಡಬೇಕು” : ಗಾಯಕಿ ಚಿನ್ಮಯಿ ಶ್ರೀಪಾದ +ನವದೆಹಲಿ,ಮಾ.6- ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಗಾಯಕಿ ಚಿನ್ಮಯಿ ಶ್ರೀಪಾದ ಪ್ರತಿಕ್ರಿಯಿಸಿದ್ದು, ಘಟನೆಯಿಂದ ಎಲ್ಲಾ ಭಾರತೀಯರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ. +ಸ್ಪೇನ್‍ನ ಮಹಿಳೆ ಕಳೆದ ಶುಕ್ರವಾರ ಹನ್ಸ್‍ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಮಹತ್‍ನಲ್ಲಿ ತನ್ನ ಪತಿಯೊಂದಿಗೆ ತಾತ್ಕಾಲಿಕ ಟೆಂಟ್‍ನಲ್ಲಿ ರಾತ್ರಿ ಕಳೆಯುತ್ತಿದ್ದಾಗ ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ದಂಪತಿಗಳು ಬಾಂಗ್ಲಾದೇಶದಿಂದ ಎರಡು ಮೋಟಾರ್ ಸೈಕಲ್‍ಗಳಲ್ಲಿ ದುಮ್ಕಾ ತಲುಪಿ ಬಿಹಾರ ಮತ್ತು ನಂತರ ನೇಪಾಳಕ್ಕೆ ತೆರಳುತ್ತಿದ್ದರು. +ಎಕ್ಸ್‍ನಲ್ಲಿ ಶ್ರೀಪಾದ ಅವರು, ಕೆಲವೇ ಭಾರತೀಯರು ಒಲಿಂಪಿಕ್ ಪದಕವನ್ನು ಗೆದ್ದಾಗ ಎಲ್ಲಾ ಭಾರತೀಯರು ಹೆಮ್ಮೆಪಡಬಹುದಾದರೆ, ಕೆಲವರು ಪುರುಷರು ಅತ್ಯಾಚಾರ ಮಾಡಿದಾಗ ಎಲ್ಲಾ ಭಾರತೀಯರು ನಾಚಿಕೆಪಡಬಹುದು ಎಂದು ಹೇಳಿದರು. ನಟರಾದ ದುಲ್ಕರ್ ಸಲ್ಮಾನ್ ಮತ್ತು ರಿಚಾ ಚಡ್ಡಾ ಕೂಡ ಆಪಾದಿತ ಸಾಮೂಹಿಕ ಅತ್ಯಾಚಾರದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಅಪರಾಗಳನ್ನು ನ್ಯಾಯಾಂಗಕ್ಕೆ ತರಬೇಕೆಂದು ಒತ್ತಾಯಿಸಿದ್ದಾರೆ. + 🤮🤮🤢.../dZFwsl6NZY +ಭಾರತದಾದ್ಯಂತ ನಾನು ಸುಮಾರು 20,000 ಕಿಮೀ ಸುರಕ್ಷಿತವಾಗಿ ಪ್ರಯಾಣಿಸಿರುವುದರಿಂದ ಭಾರತದ ಜನರ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಅತ್ಯಾಚಾರಕ್ಕೊಳಗಾದ ಸ್ಪೇನ್ ಮಹಿಳೆ ಹೇಳಿಕೊಂಡಿದ್ದಾರೆ. ತಮ್ಮ ಪತಿಯೊಂದಿಗೆ ತಮ್ಮ ಮೋಟಾರ್‍ಸೈಕಲ್‍ನಲ್ಲಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿಶ್ವ ಪ್ರವಾಸವನ್ನು ಮುಂದುವರಿಸುವುದಾಗಿ ಹೇಳಿದರು. +ಭಾರತದ ಜನರು ಒಳ್ಳೆಯವರು. ನಾನು ಜನರನ್ನು ದೂಷಿಸುವುದಿಲ್ಲ, ಆದರೆ ನಾನು ಅಪರಾಗಳನ್ನು ದೂಷಿಸುತ್ತೇನೆ. ಭಾರತದ ಜನರು ನನ್ನನ್ನು ಚೆನ್ನಾಗಿ ನಡೆಸಿಕೊಂಡಿದ್ದಾರೆ ಮತ್ತು ನನ್ನೊಂದಿಗೆ ತುಂಬಾ ಕರುಣಾಮಯಿಯಾಗಿದ್ದಾರೆ ಎಂದು 28 ವರ್ಷದ ಮಹಿಳೆ ಹೇಳಿದ್ದಾರೆ. +ನಾವು ಕಳೆದ ಆರು ತಿಂಗಳಿಂದ ಭಾರತದಲ್ಲಿದ್ದು, ಸುಮಾರು 20,000 ಕಿ.ಮೀ ಪ್ರಯಾಣಿಸಿದ್ದೇವೆ. ನಮಗೆ ಎಲ್ಲಿಯೂ ಯಾವುದೇ ತೊಂದರೆಯಾಗಿಲ್ಲ, ಇದು ಮೊದಲ ಬಾರಿಗೆ ಸಂಭವಿಸಿದೆ ಎಂದು ಅವರು ಹೇಳಿದರು. ನನಗೆ ಭಾರತ ಪ್ರವಾಸದ ಉತ್ತಮ ನೆನಪುಗಳಿವೆ ಎಂದು ಅವರು ಹೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_152_9.txt b/eesanje/url_47_152_9.txt new file mode 100644 index 0000000000000000000000000000000000000000..5f31eaf98d6e375d9387eb9e7f2de4e4f1b6be49 --- /dev/null +++ b/eesanje/url_47_152_9.txt @@ -0,0 +1,8 @@ +“ಪ್ರಿಯಾಂಕಾ ಜೀ ದಯವಿಟ್ಟು ರಾಯ್‍ಬರೇಲಿಗೆ ಬನ್ನಿ….” +ರಾಯ್ ಬರೇಲಿ,ಮಾ.6- ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಬಲಿಗರು ಪೋಸ್ಟರ್‍ಗಳನ್ನು ಹಾಕಿದ್ದು, ಪಕ್ಷದ ನಾಯಕತ್ವವು ಅವರನ್ನು ಲೋಕಸಭೆ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. +ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಪ್ರತಿನಿಸಿದ್ದರು ಮತ್ತು ಇದು ಕಾಂಗ್ರೆಸ್‍ಗೆ ಪ್ರತಿಷ್ಠೆಯ ಸ್ಥಾನವಾಗಿದೆ. ಕುತೂಹಲಕಾರಿಯಾಗಿ, ಇದು ಇಂದಿರಾ ಗಾಂಧಿಯವರು 1977 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ ನಾರಾಯಣ್ ವಿರುದ್ಧ ಸೋತ ಸ್ಥಾನ – ಲೋಕಸಭೆ ಸ್ಪರ್ಧೆಯಲ್ಲಿ ಸೋತ ಏಕೈಕ ಹಾಲಿ ಪ್ರಧಾನಿಯೂ ಅವರಾಗಿದ್ದರು. +ಕಳೆದ ಎರಡು ದಶಕಗಳಿಂದ ಈ ಕ್ಷೇತ್ರವನ್ನು ಸೋನಿಯಾ ಗಾಂಧಿ ಪ್ರತಿನಿಸುತ್ತಿದ್ದು, ಅವರು ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ. ರಾಯ್ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಈ ಪ್ರತಿಷ್ಠೆಯ ಕದನಕ್ಕೆ ಪಕ್ಷದ ಆಯ್ಕೆಯ ಬಗ್ಗೆ ಊಹಾಪೋಹಗಳ ನಡುವೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಬಲಿಗರು ಕ್ಷೇತ್ರದಲ್ಲಿ ಪೋಸ್ಟರ್‍ಗಳನ್ನು ಹಾಕಿದ್ದಾರೆ. ಕಾಂಗ್ರೆಸ್‍ನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿ, ರಾಯ್‍ಬರೇಲಿ ಕರೆಯುತ್ತಿದೆ, ಪ್ರಿಯಾಂಕಾ ಗಾಂಧಿ ಜೀ, ದಯವಿಟ್ಟು ಬನ್ನಿ ಎಂದು ಪೋಸ್ಟರ್ ಬರೆಯಲಾಗಿದೆ. +ಪೋಸ್ಟರ್‍ಗಳಲ್ಲಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಭಾವಚಿತ್ರಗಳಿವೆ. ಬಿಜೆಪಿ ಕೂಡ ಲೋಕಸಭೆಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿಲ್ಲ. +2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಎದ್ದರೂ ರಾಯ್ ಬರೇಲಿಯನ್ನು ಕಾಂಗ್ರೆಸ್ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದ್ದರಿಂದ, ಈ ಸ್ಥಾನಕ್ಕೆ ಬಿಜೆಪಿಯ ಆಯ್ಕೆಯ ಸುತ್ತ ಅಪಾರ ಕುತೂಹಲವಿದೆ ಮತ್ತು ಸೋನಿಯಾ ಗಾಂಧಿ ಅವರು ಸ್ಥಾನವನ್ನು ತೆರವು ಮಾಡುವುದರಿಂದ ಕಾಂಗ್ರೆಸ್ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. +2019ರ ಚುನಾವಣೆಯಲ್ಲಿ ಬಿಜೆಪಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸಿತ್ತು. ಸೋನಿಯಾ ಗಾಂಧಿ ವಿರುದ್ಧ 1.60 ಲಕ್ಷ ಮತಗಳ ಅಂತರದಿಂದ ಸೋತಿರುವ ಸಿಂಗ್ ಈ ಬಾರಿ ಪಕ್ಷ ಯಾರನ್ನು ಆಯ್ಕೆ ಮಾಡಿದರೂ ಅವರ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ನನ್ನ ಹೃದಯ, ದೇಹ, ಮನಸ್ಸು ಮತ್ತು ಸಂಪತ್ತಿನಿಂದ ಚುನಾವಣೆಯಲ್ಲಿ ಹೋರಾಡಲು ನಾನು ಅವರಿಗೆ ಸಹಾಯ ಮಾಡುತ್ತೇನೆ. ಕಮಲವನ್ನು ಅರಳಿಸುವುದು ನನ್ನ ಸಂಕಲ್ಪ ಎಂದು ಈಗ ರಾಜ್ಯ ಸಚಿವರಾಗಿರುವ ಸಿಂಗ್ ಇತ್ತೀಚೆಗೆ ಸಾಮಾಜಿಕ ಪೋಸ್ಟ್ ನಲ್ಲಿ ಹೇಳಿದ್ದಾರೆ. +ಉತ್ತರ ಪ್ರದೇಶದ ಕಾಂಗ್ರೆಸ್‍ನ ಮತ್ತೊಂದು ಪ್ರತಿಷ್ಠೆಯ ಕ್ಷೇತ್ರವಾಗಿರುವ ಅಮೇಥಿಯಲ್ಲಿ ಬಿಜೆಪಿ ಕೇಂದ್ರ ಸಚಿವೆ ಹಾಗೂ ಹಾಲಿ ಸಂಸದೆ ಸ್ಮತಿ ಇರಾನಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಉಳಿಸಿಕೊಂಡಿದೆ. ಇರಾನಿ ಅವರು ಅಮೇಥಿಯಿಂದ ಸತತ ಮೂರನೇ ಬಾರಿಗೆ ಸ್ರ್ಪಸುತ್ತಿದ್ದಾರೆ. \ No newline at end of file diff --git a/eesanje/url_47_153_1.txt b/eesanje/url_47_153_1.txt new file mode 100644 index 0000000000000000000000000000000000000000..26eff78600a5a3bffd73f3ac610f16224f879ad1 --- /dev/null +++ b/eesanje/url_47_153_1.txt @@ -0,0 +1,6 @@ +ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ತಿರುಗೇಟು +ಅಮೇಥಿ,ಮಾ.5- ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಹಾಗೂ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಹಿರಂಗ ಸವಾಲು ಹಾಕಿದ್ದಾರೆ. +ನನ್ನ ಜೊತೆ ರಾಹುಲ್ ಗಾಂಧಿ ಅವರು ಚರ್ಚೆಗೆ ಸಿದ್ಧವಿದ್ದರೆ ಅವರೇ ಮೈದಾನವನ್ನು ಆಯ್ಕೆ ಮಾಡಬಹುದು. ಆದರೆ ಬಿಜೆಪಿಯು ಚರ್ಚೆಗೆ ಪಕ್ಷದ ಕಾರ್ಯಕರ್ತನನ್ನು ಆಯ್ಕೆ ಮಾಡುತ್ತದೆ ಎಂದು ಎಂದಿದ್ದಾರೆ. ನಾಗ್ಪುರದಲ್ಲಿ ನಡೆದ ನಮೋ ಯುವ ಮಹಾಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಮತಿ ಇರಾನಿ, ರಾಹುಲ್ ಗಾಂಧಿ ಅವರನ್ನು ಚರ್ಚೆಗೆ ಆಹ್ವಾನಿಸಿ, ನನ್ನ ಧ್ವನಿ ರಾಹುಲ್ ಗಾಂಧಿಯನ್ನು ತಲುಪುತ್ತಿದ್ದರೆ, ಅವರು ತೆರೆದ ಕಿವಿಯಿಂದ ಕೇಳಬೇಕು, 10 ವರ್ಷಗಳ ಆಡಳಿತ ಯಾರ ಬಗ್ಗೆ ಚರ್ಚೆಯಾಗಲಿ. ಮೈದಾನ ತುಮ್ ಚುನ್ನೋ, ಕಾರ್ಯಕರ್ತರ ಹಮ್ ಚುನೇಂಗೆ (ನೀವು ಮೈದಾನವನ್ನು ಆರಿಸಿಕೊಳ್ಳಿ, ನಾವು ಬಿಜೆಪಿಯನ್ನು ಪ್ರತಿನಿಧಿಸಲು ಕಾರ್ಯಕಾರಿಯನ್ನು ಆಯ್ಕೆ ಮಾಡುತ್ತೇವೆ) ಎಂದು ಹೇಳಿದ್ದಾರೆ. +ಯುವಮೋರ್ಚಾ ಕಾರ್ಯಕರ್ತರೊಬ್ಬರು ತಮ್ಮ ಮುಂದೆ ಮಾತನಾಡಲು ಆರಂಭಿಸಿದರೆ ರಾಹುಲ್ ಗಾಂಧಿ ಮಾತನಾಡುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ. ಯುವ ಮೋರ್ಚಾದ ಒಬ್ಬ ಸಾಮಾನ್ಯ ಕಾರ್ಯಕರ್ತ ರಾಹುಲ್ ಗಾಂಧಿ ಎದುರು ಮಾತನಾಡಲು ಆರಂಭಿಸಿದರೂ ಆತ ಮಾತನಾಡುವ ಶಕ್ತಿ ಕಳೆದುಕೊಳ್ಳುವುದು ಗ್ಯಾರಂಟಿ ಎಂದು ಅಪಹಾಸ್ಯ ಮಾಡಿದ್ದಾರೆ. +ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರವು ಬಡವರಿಗೆ ಬ್ಯಾಂಕ್ ಖಾತೆಗಳು, ಮನೆಗಳಲ್ಲಿ ಶೌಚಾಲಯಗಳು, 80 ಕೋಟಿ ನಾಗರಿಕರಿಗೆ ಉಚಿತಪಡಿತರ ಮತ್ತು ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯಂತಹ ಕಲ್ಯಾಣ ಕ್ರಮಗಳನ್ನು ಕೈಗೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಯಾವುದೇ ಯುವ ಮೋರ್ಚಾ ಕಾರ್ಯಕರ್ತ ರಾಹುಲ್ ಗಾಂಧಿಯನ್ನು ಸೋಲಿಸಲು ಸಮರ್ಥರು ಎಂದು ಸ್ಮತಿ ಇರಾನಿ ಪುನರುಚ್ಚರಿಸಿದ್ದಾರೆ. +ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆದಾಗ ರಾಹುಲ್ ಗಾಂಗೆ ಆಹ್ವಾನವಿತ್ತು, ಅವರು ಬರಲಿಲ್ಲ, ಅಹಂಕಾರ ಇನ್ನೂ ಹಾಗೆಯೇ ಇದೆ, ದುರಹಂಕಾರ ಹೋಗಿಲ್ಲ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_47_153_10.txt b/eesanje/url_47_153_10.txt new file mode 100644 index 0000000000000000000000000000000000000000..224872b982209f0822884d2ada1196fdb97bd217 --- /dev/null +++ b/eesanje/url_47_153_10.txt @@ -0,0 +1,7 @@ +ತ.ನಾಡು ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ಛೀಮಾರಿ +ನವದೆಹಲಿ,ಮಾ.4-ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಕರೆ ಕೊಟ್ಟಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್‍ಗೆ ಛೀಮಾರಿ ಹಾಕಿರುವ ಸುಪ್ರೀಂಕೋರ್ಟ್, ನೀವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಂಡಿದ್ದೀರಿ ಎಂದು ಕಟು ಶಬ್ದಗಳಿಂದ ಟೀಕಾ ಪ್ರಹಾರ ನಡೆಸಿದೆ. +ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠ, ಸ್ಟಾಲಿನ್ ಸಚಿವ ರಾಗಿದ್ದು, ಅವರ ಹೇಳಿಕೆಯ ಪರಿಣಾಮ ಗಳನ್ನು ತಿಳಿದುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿತು. ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಸಂಬಂಧಿಸಿದಂತೆ ಅವರು ತಮ್ಮ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡ ನಂತರ ಸುಪ್ರೀಂಕೋರ್ಟ್‍ಗೆ ಏಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರಶ್ನೆ ಮಾಡಿದೆ. +ನೀವು ಸಂವಿಧಾನದ ಆರ್ಟಿಕಲ್ 19(1)(ಎ) ಅಡಿಯಲ್ಲಿ ನಿಮ್ಮ ಹಕ್ಕನ್ನು ದುರು ಪಯೋಗಪಡಿಸಿಕೊಳ್ಳುತ್ತೀರಿ. ಆರ್ಟಿಕಲ್ 25ರ ಡಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32ರಡಿಯಲ್ಲಿ (ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ಎಂದು ಸ್ಟಾಲಿನ್ ಪರ ವಕೀಲರನ್ನು ಪ್ರಶ್ನಿಸಿತು. +ಉದಯನಿಧಿ ಸ್ಟಾಲಿನ್ ಸಚಿವರಾಗಿದ್ದು, ಅವರು ತಾವು ಹೇಳಿದ್ದರ ಪರಿಣಾಮ ಏನು ಗೊತ್ತಾ?, ನೀವು ಸಾಮಾನ್ಯರಲ್ಲ, ನೀವು ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವೇ ತಿಳಿದುಕೊಳ್ಳಬೇಕು ಎಂದು ಹೇಳಿ, ಮಾರ್ಚ್ 15ಕ್ಕೆ ಪ್ರಕರಣವನ್ನು ಮುಂದೂಡಿತು. ಸ್ಟಾಲಿನ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ನಾಬ್ ಗೋಸ್ವಾಮಿ, ಮೊಹಮ್ಮದ್ ಜುಬೇರ್ ಮತ್ತು ಇತರರ ಪ್ರಕರಣಗಳ ತೀರ್ಪನ್ನು ಉಲ್ಲೇಖಿಸಿ ಎಫ್‍ಐಆರ್‍ಗಳನ್ನು ಸೇರಿಸಲು ವಾದ ಮಂಡನೆ ಮಾಡಿದರು. ನಂತರ ನೀವು ಅಗತ್ಯವಿದ್ದರೆ ಹೈಕೋರ್ಟ್‍ಗೆ ಹೋಗಬಹುದೆಂದು ದ್ವಿಸದಸ್ಯರ ಪೀಠ ಸಲಹೆ ನೀಡಿದರು. +ಆಗ ಅಭಿಷೇಕ್ ಮನುಸಿಂಘ್ವಿ, ನಾನು ಅನೇಕ ನ್ಯಾಯಾಲಯಗಳಿಗೆ ಹೋಗಬೇಕಾದರೆ, ನಾನು ಇದರಲ್ಲಿ ಬಂಧಿಸಲ್ಪಡುತ್ತೇನೆ. ಇದು ಪ್ರಾಸಿಕ್ಯೂಷನ್‍ಗೆ ಮುಂಚಿತವಾಗಿ ಕಿರುಕುಳ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಮುಂದಿನ ವಾರ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿತು.ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಅವರ ಪುತ್ರರಾಗಿರುವ ಉದಯನಿಧಿ ಸ್ಟಾಲಿನ್ ಅವರು ಪ್ರಸ್ತುತ ಯುವಕಲ್ಯಾಣ, ಕ್ರೀಡಾಭಿವೃದ್ಧಿ ಸಚಿವರಾಗಿದ್ದಾರೆ. +ಕಳೆದ 2023ರ ಸೆಪ್ಟೆಂಬರ್‍ನಲ್ಲಿ ನಡೆದ ಸಮಾವೇಶದಲ್ಲಿ ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಹೀಗಾಗಿ ಇದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದರು. ಒಂದು ಹಂತದಲ್ಲಿ ನಾಲಿಗೆ ಹರಿಬಿಟ್ಟಿದ್ದ ಉದಯನಿ ಸ್ಟಾಲಿನ್ ಸನಾತನ ಧರ್ಮವನ್ನು ಏಡ್ಸ್, ಮಲೇರಿಯಾ, ಕೊರೊನಾ ವೈರಸ್‍ಗೆ ಹೋಲಿಸಿದ್ದರು. ಇದು ದೇಶಾದ್ಯಂತ ಭಾರೀ ವಿವಾದವನ್ನು ಸೃಷ್ಟಿಸಿತ್ತು. \ No newline at end of file diff --git a/eesanje/url_47_153_11.txt b/eesanje/url_47_153_11.txt new file mode 100644 index 0000000000000000000000000000000000000000..338ff5d28509c8e3d41ad8a7b2b6e1d9e653b923 --- /dev/null +++ b/eesanje/url_47_153_11.txt @@ -0,0 +1,10 @@ +ಲಂಚ ಪ್ರಕರಣ: ಶಾಸಕರು, ಸಂಸದರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂ +ನವದೆಹಲಿ,ಮಾ.4-ಲಂಚ ಪಡೆದ ಪ್ರಕರಣಗಳಲ್ಲಿ ಸಂಸದರು ಹಾಗೂ ಶಾಸಕರಿಗೆ ಕಾನೂನು ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್‍ನ ಸಪ್ತಪೀಠ, ಶಾಸಕರಿಗೆ ಕಾನೂನು ಕ್ರಮದಿಂದ ವಿನಾಯಿತಿ ನೀಡುವ ಹಿಂದಿನ ಆದೇಶವನ್ನು ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಎಂ.ಎಂ.ಸುಂದಂರೇಶ್, ಪಿ.ಎಸ್.ನರಸಿಂಹ, ಜೆ.ಬಿ.ಪರ್ದಿವಾಲ, ಸಂಜಯ್‍ಕುಮಾರ್ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ಸಪ್ತ ಪೀಠ ನೀಡಿರುವ ತೀರ್ಪು ಜನಪ್ರತಿನಿಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ. +ಈ ಹಿಂದೆ 1998ರಲ್ಲಿ ಸುಪ್ರೀಂಕೋರ್ಟ್‍ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಸಪ್ತ ಸದಸ್ಯ ಪೀಠ ಬದಲಾವಣೆ ಮಾಡಿದೆ. ಈ ಹಿಂದೆ ಅಂದರೆ 1998ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ, ಸಂಸದರು ಹಾಗೂ ಶಾಸಕರು ಹಣ ಪಡೆದು ಭಾಷಣ ಮಾಡಿದ್ದರೆ ಅಥವಾ ಮತ ಹಾಕಿದ್ದರೆ ಅವರಿಗೆ ಲಂಚ ಪ್ರಕರಣದ ತನಿಖೆ ಅಡಿ ಕಾನೂನಿನ ರಕ್ಷಣೆ ಸಿಗುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ನ್ಯಾಯ ಪೀಠ, ಶಾಸಕರು ಹಾಗೂ ಸಂಸದರಿಗೆ ಇದ್ದ ಆ ವಿನಾಯಿತಿಯನ್ನು ರದ್ದು ಮಾಡಿದೆ. +ಸಂಸದೀಯ ಸೌಲಭ್ಯಗಳ ಅಡಿ ಲಂಚ ಸ್ವೀಕಾರವನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದಿರುವ ನ್ಯಾಯಪೀಠ, 1998ರಲ್ಲಿ ನೀಡಿದ್ದ ತೀರ್ಪು ಸಂವಿಧಾನದ ಆರ್ಟಿಕಲ್ 105 ಹಾಗೂ 194ಕ್ಕೆ ವ್ಯತಿರಿಕ್ತ ನಿಲುವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾಜಿ ಪ್ರಧಾನಿ ದಿವಂಗತ ನರಸಿಂಹರಾವ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನ ಐವರು ಪಂಚಪೀಠ ನೀಡಿದ್ದ ತೀರ್ಪಿನಲ್ಲಿ ಕೆಲವು ಲೋಪದೋಷಗಳಿವೆ ಎಂದಿರುವ ನ್ಯಾಯಪೀಠ, ಜನಪ್ರತಿನಿಧಿಗಳೆಂದರೆ ಕಾನೂನಿಗಿಂತ ಮೇಲಿನವರೇ ಎಂದು ಖಾರವಾಗಿ ಪ್ರಶ್ನೆ ಮಾಡಿತು. +ಸುಪ್ರೀಂಕೋರ್ಟ್‍ನ ಸಾಂವಿಧಾನಿಕ ಪೀಠದ ಎಲ್ಲ ಏಳು ನ್ಯಾಯಾೀಧಿಶರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಿರುವ ನ್ಯಾಯಮೂರ್ತಿ ಚಂದ್ರಚೂಡ್, 1998ರಲ್ಲಿ ಪಿ.ವಿ.ನರಸಿಂಹರಾವ್ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಒಪ್ಪಲು ಸಾಧ್ಯವಿಲ್ಲ. ಏಕೆಂದರೆ ಲಂಚ ಪ್ರಕರಣದಲ್ಲಿ ಶಾಸಕರು ಮತ್ತು ಸಂಸದರಿಗೆ ಕಾನೂನಿನ ರಕ್ಷಣೆ ನೀಡಬೇಕೆನ್ನುವುದೇ ಅತ್ಯಂತ ಅಪಾಯಕಾರಿ ಅಂಶ ಎಂದು ಆತಂಕ ವ್ಯಕ್ತಪಡಿಸಿದರು. +ಇನ್ನು ಮುಂದೆ ಯಾವುದೇ ಶಾಸಕ ಅಥವಾ ಸಂಸದರು ಮತ ಹಾಕಲು ಪಡೆಯುವ ಲಂಚ ಇಲ್ಲವೇ ಶಾಸನಸಭೆಗಳಲ್ಲಿ ಭಾಷಣ ಮಾಡಲು ಹಣ ಪಡೆಯುವುದನ್ನು ಲಂಚ ಪ್ರಕರಣದಡಿ ಕಾನೂನಿನ ರಕ್ಷಣೆ ಪಡೆಯಲು ಸಾಧ್ಯವೇ ಇಲ್ಲ. ಲಂಚ ಪಡೆಯುವುದೇ ಮಹಾಪರಾಧ. ಅಂಥದ್ದರಲ್ಲಿ ಕಾನೂನಿನ ರಕ್ಷಣೆ ನೀಡುವುದು ಹೇಗೆ ಸಾಧ್ಯ? ಸಾರ್ವಜನಿಕ ಜೀವನದಲ್ಲಿರುವ ಶಾಸಕರು ಹಾಗೂ ಸಂಸದರು ಭ್ರಷ್ಟಾಚಾರ ಅಥವಾ ಲಂಚಗುಳಿತನದಲ್ಲಿ ತೊಡಗುವುದು ಸರಿಯಲ್ಲ. ಇದು ಈ ನೆಲದ ಕಾನೂನಿಗೆ ವಿರುದ್ಧ ಎಂದು ಅಭಿಪ್ರಾಯಪಟ್ಟರು. +ಸಂಸದೀಯ ಸೌಲಭ್ಯಗಳಡಿ ಲಂಚ ಸ್ವೀಕಾರವನ್ನು ಸೇರ್ಪಡೆ ಮಾಡಲು ಸಾಧ್ಯವಿಲ್ಲ ಎಂದಿರುವ ನ್ಯಾಯಪೀಠ, 1998ರಲ್ಲಿ ನೀಡಿದ್ದ ತೀರ್ಪು ಸಂವಿಧಾನದ ಆರ್ಟಿಕಲ್ 105 ಹಾಗೂ 194ಕ್ಕೆ ವ್ಯತಿರಿಕ್ತ ನಿಲುವಾಗಿದೆ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ. ಶಾಸಕಾಂಗ ಸದಸ್ಯರ ಭ್ರಷ್ಟಾಚಾರ ಮತ್ತು ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ಕಳೆದುಕೊಳ್ಳುತ್ತದೆ. ಶಾಸಕರಿಗೆ ವಿನಾಯಿತಿ ನೀಡುವ ಪಿವಿ ನರಸಿಂಹ ರಾವ್ ಪ್ರಕರಣದ ಬಹುಮತದ ತೀರ್ಪು ಗಂಭೀರ ಅಪಾಯವನ್ನು ಹೊಂದಿದೆ ಮತ್ತು ಹೀಗಾಗಿ ಅದನ್ನು ರದ್ದುಗೊಳಿಸಲಾಗಿದೆ. +ಲಂಚದ ಅಪರಾಧವು ಕಾನೂನುಬಾಹಿರ ತೃಪ್ತಿಯನ್ನು ತೆಗೆದುಕೊಳ್ಳುವುದರ ಮೇಲೆ ಹರಳುಗಟ್ಟುತ್ತದೆ ಮತ್ತು ಮತ ಅಥವಾ ಭಾಷಣವನ್ನು ನಂತರ ನೀಡಿದರೆ ಅದನ್ನು ಅವಲಂಬಿಸಿರುವುದಿಲ್ಲ ಮತ್ತು ಶಾಸಕರು ಲಂಚವನ್ನು ಸ್ವೀಕರಿಸಿದಾಗ ಅಪರಾಧವು ಪೂರ್ಣಗೊಳ್ಳುತ್ತದೆ. ಲಂಚದ ಕಾರಣದಿಂದಾಗಿ ಒಬ್ಬ ಸದಸ್ಯನು ಒಂದು ನಿರ್ದಿಷ್ಟ ರೀತಿಯಲ್ಲಿ ಮತ ಚಲಾಯಿಸಲು ಪ್ರೇರೇಪಿಸಲ್ಪಟ್ಟಿದ್ದಾನೆ ಮತ್ತು ಅದು ಭಾರತೀಯ ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. +ಲಂಚವು ಸಂಸದೀಯ ಸವಲತ್ತುಗಳಿಂದ ರಕ್ಷಿಸಲ್ಪಡುವುದಿಲ್ಲ ಮತ್ತು ಅವರ ಕಾರ್ಯಕಾರಿ ಪದಗಳೊಂದಿಗೆ ಓದಿದಾಗ ಯಾವುದಾದರೂ ಪದವು ಸದನದ ಮುಂದೆ ಯಾವುದೇ ವಿಷಯದಲ್ಲಿ ಅವರು ಭಾವಿಸಿದಂತೆ ಹೇಳಲು ಮತ್ತು ಮತ ಚಲಾಯಿಸಲು ಸದಸ್ಯರು ವಿನಾಯಿತಿ ಪಡೆಯಬಹುದು ಎಂದು ಸಲಹೆ ಮಾಡಿದರು. +ಸುಪ್ರೀಂ ತೀರ್ಪಿಗೆ ಮೋದಿ ಸ್ವಾಗತನವದೆಹಲಿ,ಮಾ.4- ವಿಧಾನಸಭೆಯಲ್ಲಿ ಭಾಷಣ ಮಾಡಲು ಮತ್ತು ಮತ ಚಲಾಯಿಸಲು ಲಂಚ ಪಡೆದಿರುವ ಶಾಸಕರಿಗೆ ಪ್ರಾಸಿಕ್ಯೂಷನ್‍ನಿಂದ ವಿನಾಯಿತಿ ನೀಡುವ 1998ರ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತ ಎಂದು ಬಣ್ಣಿಸಿದ್ದಾರೆ. ಗೌರವಾನ್ವಿತ ಸುಪ್ರೀಂಕೋರ್ಟ್ ನೀಡಿರುವ ಈ ಮಹತ್ವದ ತೀರ್ಪು ಶುದ್ಧ ರಾಜಕೀಯವನ್ನು ಖಚಿತಪಡಿಸುತ್ತದೆ ಮತ್ತು ವ್ಯವಸ್ಥೆಯಲ್ಲಿ ಜನರ ನಂಬಿಕೆಯನ್ನು ಆಳಗೊಳಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_47_153_12.txt b/eesanje/url_47_153_12.txt new file mode 100644 index 0000000000000000000000000000000000000000..e17f59e58e0096e0ce09acac0fb16aeb3404c89d --- /dev/null +++ b/eesanje/url_47_153_12.txt @@ -0,0 +1,4 @@ +ಜಗನ್ನಾಥ ದೇವಾಲಯಕ್ಕೆ ಅಕ್ರಮ ಪ್ರವೇಶ ಪಡೆದ ಬಾಂಗ್ಲಾದೇಶಿಯರ ಬಂಧನ +ಭುವನೇಶ್ವರ, ಮಾ.4 (ಪಿಟಿಐ) ಪುರಿಯ ಜಗನ್ನಾಥ ದೇವಾಲಯಕ್ಕೆ ಅನಧಿಕೃತವಾಗಿ ಪ್ರವೇಶಿಸಿದ ಆರೋಪದ ಮೇಲೆ ಒಡಿಶಾ ಪೊಲೀಸರು ಒಂಬತ್ತು ಬಾಂಗ್ಲಾದೇಶೀಯರನ್ನು ಬಂಧಿಸಿದ್ದಾರೆ. 12ನೇ ಶತಮಾನದ ಇತಿಹಾಸ ಪ್ರಸಿದ್ದ ಪುರಿ ದೇಗುಲಕ್ಕೆ ಹಿಂದೂಗಳಲ್ಲದವರು ದೇವಾಲಯದ ನಿಯಮಗಳನ್ನು ಉಲ್ಲಂಘಿಸಿ ದೇಗುಲವನ್ನು ಪ್ರವೇಶಿಸಿರುವುದನ್ನು ಕಂಡು ಕೆಲವು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸಿಂಗ್ದ್ವಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. +ದೂರು ಪಡೆದ ನಂತರ, ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ವಿಚಾರಣೆಗಾಗಿ ಪ್ರವಾಸಿಗರನ್ನು ವಶಕ್ಕೆ ತೆಗೆದುಕೊಂಡಿತು ಎಂದು ಪುರಿ ಹೆಚ್ಚುವರಿ ಎಸ್ಪಿ ಸುಶೀಲ್ ಮಿಶ್ರಾ ತಿಳಿಸಿದ್ದಾರೆ. ಬಾಂಗ್ಲಾದೇಶದಿಂದ ಕೆಲವು ಹಿಂದೂಯೇತರ ಜನರು ದೇವಾಲಯಕ್ಕೆ ಪ್ರವೇಶಿಸಿದ್ದಾರೆ ಎಂದು ನಮಗೆ ದೂರು ಬಂದಿದೆ. ನಾವು ಒಂಬತ್ತು ಬಾಂಗ್ಲಾದೇಶಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. +ದೇವಾಲಯದ ನಿಯಮಗಳ ಪ್ರಕಾರ, ದೇಗುಲವನ್ನು ಪ್ರವೇಶಿಸಲು ಹಿಂದೂಗಳಿಗೆ ಮಾತ್ರ ಅವಕಾಶವಿದೆ.ಅವರು ಹಿಂದೂ ಅಲ್ಲ ಎಂದು ಕಂಡುಬಂದರೆ, ಕಾನೂನಿನ ಪ್ರಕಾರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಿಶ್ರಾ ಹೇಳಿದರು. ನಾವು ಅವರ ಪಾಸ್‍ಪೋರ್ಟ್‍ಗಳನ್ನು ಪರಿಶೀಲಿಸುತ್ತಿದ್ದೇವೆ. ಅವರಲ್ಲಿ ಒಬ್ಬ ಹಿಂದೂ ಇರುವುದು ಪತ್ತೆಯಾಗಿದೆ. ನಾವು ಇತರರ ಪಾಸ್‍ಪೋರ್ಟ್‍ಗಳನ್ನು ಪರಿಶೀಲಿಸುತ್ತಿದ್ದೇವೆ. ಒಂಬತ್ತು ಬಂಧಿತರಲ್ಲಿ ನಾಲ್ವರು ದೇವಸ್ಥಾನಕ್ಕೆ ಪ್ರವೇಶಿಸಿದ್ದಾರೆ ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ, ಎಂದು ಅವರು ಹೇಳಿದರು. \ No newline at end of file diff --git a/eesanje/url_47_153_2.txt b/eesanje/url_47_153_2.txt new file mode 100644 index 0000000000000000000000000000000000000000..711fa632815f0bb6c407215a50c83709487842ba --- /dev/null +++ b/eesanje/url_47_153_2.txt @@ -0,0 +1,6 @@ +ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್‍ಐಎ ದಾಳಿ +ನವದೆಹಲಿ, ಮಾ.5- ಪಾಕ್ ಬೆಂಬಲಿತ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಭಯೋತ್ಪಾದಕ ಸಂಘಟನೆಯ ಕೈದಿಗಳನ್ನು ಹಿಂಸಾತ್ಮಕ ಭಯೋತ್ಪಾದನಾ ಕೃತ್ಯ ನಡೆಸುವಂತೆ ಪ್ರೇರೆಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಇಂದು ಕರ್ನಾಟಕ, ತಮಿಳುನಾಡು ಸೇರಿದಂತೆ 7 ರಾಜ್ಯಗಳ 17 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. +ಕರ್ನಾಟಕ, ತಮಿಳುನಾಡು ಮತ್ತು ಇತರ ಐದು ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‍ಐಎ ವಕ್ತಾರರು ತಿಳಿಸಿದ್ದಾರೆ. ಬೆಂಗಳೂರಿನ ಸುಲ್ತಾನ್‍ಪಾಳ್ಯದ ಮನೆಯೊಂದರ ಮೇಲೆ ದಾಳಿ ನಡೆಸಿ ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಅದೇ ರೀತಿ 7 ರಾಜ್ಯಗಳ ಹಲವಾರು ಪ್ರದೇಶಗಳಲ್ಲೂ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದು ಮಹತ್ವದ ಸಾಕ್ಷ್ಯ ಸಂಗ್ರಹಿಸಲಾಗಿದೆ ಎಂದು ವರದಿಯಾಗಿದೆ. +ಕಳೆದ ವರ್ಷ ಏಳು ಪಿಸ್ತೂಲ್‍ಗಳು, ನಾಲ್ಕು ಹ್ಯಾಂಡ್ ಗ್ರೆನೇಡ್‍ಗಳು, ಒಂದು ಮ್ಯಾಗಜೀನ್ ಮತ್ತು 45 ಲೈವ್ ರೌಂಡ್‍ಗಳು ಮತ್ತು ನಾಲ್ಕು ವಾಕಿ-ಟಾಕಿಗಳು ಸೇರಿದಂತೆ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡ ನಂತರ ಬೆಂಗಳೂರು ನಗರ ಪೊಲೀಸರು ಮೂಲತಃ ಪ್ರಕರಣ ದಾಖಲಿಸಿದ್ದರು. +ಆರಂಭದಲ್ಲಿ ಐದು ಜನರನ್ನು ಬಂಧಿಸಲಾಯಿತು ಮತ್ತು ಅವರ ವಿಚಾರಣೆಯ ನಂತರ ಮತ್ತೊಬ್ಬನನ್ನು ಬಂಧಿಸಲು ಕಾರಣವಾಯಿತು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಆರಕ್ಕೆರಿತ್ತು. ಕಳೆದ ವರ್ಷ ಅಕ್ಟೋಬರ್‍ನಲ್ಲಿ ಎನ್‍ಐಎ ಪ್ರಕರಣವನ್ನು ಕೈಗೆತ್ತಿಕೊಂಡಿತು ಮತ್ತು ನಂತರದ ದಾಳಿಗಳನ್ನು ನಡೆಸಿತ್ತು. +ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಈ ಐವರನ್ನು ಭಯೋತ್ಪಾದನಾ ಕೃತ್ಯ ನಡೆಸುವಂತೆ ಪ್ರೇರೆಪಿಸಿದ್ದ ಎಲ್‍ಇಟಿ ಕಾರ್ಯಕರ್ತ ಮತ್ತು ಕಿಂಗ್‍ಪಿನ್ ಟಿ ನಾಸೀರ್, ಪ್ರಸ್ತುತ ಪರಾರಿಯಾಗಿರುವ ಜುನೈದ್ ಅಹ್ಮದ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ನಾಸೀರ್ 2013 ರಿಂದ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಇತರ ಆರೋಪಿಗಳಾದ ಮೊಹಮ್ಮದ್ 2017 ರಲ್ಲಿ ಉಮರ್, ಮೊಹಮ್ಮದ್ ಫೈಸಲ್ ರಬ್ಬಾನಿ, ತನ್ವೀರ್ ಅಹ್ಮದ್, ಮೊಹಮ್ಮದ್ ಫಾರೂಕ್ ಮತ್ತು ಜುನೈದ್ ಅಹಮದ್ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದರು. ಹಿಂಸಾತ್ಮಕ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ನಾಸೀರ್ ಈ ವ್ಯಕ್ತಿಗಳನ್ನು ಆಮೂಲಾಗ್ರಗೊಳಿಸಿದನು ಮತ್ತು ನೇಮಕ ಮಾಡಿಕೊಂಡಿದ್ದನು ಎಂದು ಎನïಐಎ ಕಳೆದ ವರ್ಷ ಹೇಳಿದೆ. \ No newline at end of file diff --git a/eesanje/url_47_153_3.txt b/eesanje/url_47_153_3.txt new file mode 100644 index 0000000000000000000000000000000000000000..aa9d5ba2d7b90a6bfbf6e3afb9b90590d15b623b --- /dev/null +++ b/eesanje/url_47_153_3.txt @@ -0,0 +1,5 @@ +ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ : ಐವರು ಶಂಕಿತರು ಎನ್‍ಐಎ ವಶಕ್ಕೆ +ನವದೆಹಲಿ,ಮಾ.5- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತಮಿಳುನಾಡಿನಲ್ಲಿ ಐವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಕಳೆದ ರಾತ್ರಿ ಚೆನ್ನೈನ ಸಾಯಿದಾಪೇಟೆಯಲ್ಲಿ ದಿಢೀರ್ ದಾಳಿ ನಡೆಸಿದ ಎನ್‍ಐಎ ಅಧಿಕಾರಿಗಳ ತಂಡ, ಐವರು ಶಂಕಿತರನ್ನು ವಶಕ್ಕೆ ಪಡೆದು ರಹಸ್ಯ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. +ಚೆನ್ನೈನ ಮನ್ನಾಡಿ, ಮುಥಿಯಾಲ್ ಪೇಟ್ಟೈನಲ್ಲಿ ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿತ್ತು. ಆರಂಭದಲ್ಲಿ ಮೂವರು, ನಂತರ ಐವರನ್ನು ವಶಕ್ಕೆ ಪಡೆಯಲಾಗಿತ್ತು. ವಿಚಾರಣೆಯ ಬಳಿಕ ಐವರನ್ನು ಬಂಧಿಸಲಾಗಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ಕಳೆದ ಮಾ.1ರಲ್ಲೂ ಬೆಂಗಳೂರಿನ ಎಚ್‍ಎಎಲ್‍ನ ಕುಂದಲಹಳ್ಳಿಯ ರಾಮೇಶ್ವರ ಕೆಫೆಯಲ್ಲಿ ಸುಧಾರಿತ ಬಾಂಬ್ ಸ್ಪೋಟಗೊಂಡು ಹತ್ತು ಮಂದಿ ಗಾಯಗೊಂಡಿದ್ದರು. ಸ್ಪೋಟಗೊಂಡ ನಂತರ ಶಂಕಿತ ವ್ಯಕ್ತಿಯು ಮುಖಕ್ಕೆ ಮಾಸ್ಕ್ ಧರಿಸಿ ಬ್ಯಾಗ್ ಹಾಕಿಕೊಂಡು ಹೊಸೂರು ಮೂಲಕ ತಮಿಳುನಾಡು ಪ್ರವೇಶಿಸಿ ಚೆನ್ನೈಗೆ ತೆರಳಿದ್ದಾನೆ ಎಂಬ ಮಾಹಿತಿಯನ್ನು ಎನ್‍ಐಎ ಕಲೆಹಾಕಿದೆ. +ಇದೀಗ ಎನ್‍ಐಎ ವಶದಲ್ಲಿರುವ ಐವರು ಶಂಕಿತರಿಗೂ ಮತ್ತು ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಪೋಟಕ್ಕೂ ಒಂದೊಂದಕ್ಕು ಸಾಮ್ಯತೆ ಇದೆ ಎಂದು ಎಲ್ಲಾ ಆಯಾಮಗಳಲ್ಲೂ ತನಿಖೆಗೆ ಗುರಿಪಡಿಸಿದ್ದಾರೆ.ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಎನ್‍ಐಎ ತಂಡ ಐಸಿಸ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾರಾ ಎಂಬುದರ ಬಗ್ಗೆಯೂ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಗೃಹ ಇಲಾಖೆ ಎನ್‍ಐಎಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನಲೆಯಲ್ಲಿ ತನಿಖೆಯನ್ನು ಎಲ್ಲಾ ಆಯಾಮಗಳಲ್ಲೂ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. +ತನಿಖೆ ಚುರುಕು:ಇನ್ನು ಪ್ರಕರಣವನ್ನು ಕೈಗೆತ್ತಿಕೊಂಡಿರುವ ಎನ್‍ಐಎ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕಿದೆ. ಎನ್‍ಐಎ ಎಫ್‍ಐಆರ್ ದಾಖಲಿಸಿಕೊಂಡ ಬೆನ್ನಲ್ಲೆ ಐಜಿಪಿ ಸಂತೋಷ್ ರೆಸ್ತೊಗಿ ಅವರ ನೇತೃತ್ವದ ತಂಡ ತನಿಖೆಯನ್ನು ಚುರುಕುಗೊಳಿಸಿದೆ ಎಂದು ತಿಳಿದುಬಂದಿದೆ. ಮಾರ್ಚ್ 1 ಶುಕ್ರವಾರದಂದು ವೈಟ್‍ಫೀಲ್ಡ್ ಬಳಿ ಇರುವ ದಿ ರಾಮೇಶ್ವರಂ ಕೆಫೆಯಲ್ಲಿ ಎರಡು ಬಾಂಬ್ ಸ್ಪೋಟಗೊಂಡಿತ್ತು. ಈ ಬಾಂಬ್ ದಾಳಿಯಿಂದ 10 ಮಂದಿ ಗಾಯಗೊಂಡಿದ್ದರು. \ No newline at end of file diff --git a/eesanje/url_47_153_4.txt b/eesanje/url_47_153_4.txt new file mode 100644 index 0000000000000000000000000000000000000000..a1990d526fd1c124d6aca4c2885e8222327ee6e8 --- /dev/null +++ b/eesanje/url_47_153_4.txt @@ -0,0 +1,4 @@ +ಸಾಮಾಜಿಕ ಜಾಲತಾಣಗಳಲ್ಲಿ ನೀಲಿ ಚಿತ್ರ ನಿರ್ಬಂಧಿಸುವಂತೆ ಸುಪ್ರೀಂಗೆ ಮೊರೆ +ನವದೆಹಲಿ,ಮಾ.5- ಲೈಂಗಿಕ ಅಪರಾಧಗಳ ಹೆಚ್ಚಳಕ್ಕೆ ಕಾರಣವಾಗುವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಅಥವಾ ನೀಲಿ ಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಕ್ಕಳ ಶಸ್ತ್ರಚಿಕಿತ್ಸಕ ಸಂಜಯ್ ಕುಲಶ್ರೇಷ್ಠ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಮೊಬೈಲ್ ಇಂಟರ್ನೆಟ್ ಮೂಲಕ ಅಶ್ಲೀಲತೆಯನ್ನು ಸುಲಭವಾಗಿ ಪ್ರವೇಶಿಸುವುದು ಲೈಂಗಿಕ ನಡವಳಿಕೆಯನ್ನು ವಿರೂಪಗೊಳಿಸುವುದು ಮಾತ್ರವಲ್ಲದೆ ಅಪ್ರಾಪ್ತ ಬಾಲಕಿಯರ ವಿರುದ್ಧ ಲೈಂಗಿಕ ಅಪರಾಧಗಳಲ್ಲಿ ಆತಂಕಕಾರಿ ಹೆಚ್ಚಳ ಕ್ಕೆ ಕಾರಣವಾಗುತ್ತದೆ ಎಂದು ವಾದಿಸಿದ್ದಾರೆ. +ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ, ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ಗಳು ಬಳಕೆದಾರರನ್ನು ಹೋಸ್ಟ್ ಮಾಡದಂತೆ, ಪ್ರದರ್ಶಿಸದಂತೆ ಮಾಡಲು ಸಮಂಜಸವಾದ ಪ್ರಯತ್ನಗಳನ್ನು ಮಾಡುವುದನ್ನು ಖಚಿತಪಡಿಸಿಕೊಳ್ಳಲು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾಯಿಸುವಂತೆ ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. +ಮಾತ್ರವಲ್ಲ, ಅರ್ಜಿದಾರರು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಗೃಹ ವ್ಯವಹಾರಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಿದ್ದಾರೆ. ಮಕ್ಕಳಲ್ಲಿ ಅತ್ಯಾಚಾರಗಳು ಹೆಚ್ಚಾಗಲು ಹಲವು ಕಾರಣಗಳಿದ್ದರೂ, ಅರ್ಜಿದಾರರು 24 ಗಂಟೆಗಳ ಕಾಲ ಅಶ್ಲೀಲತೆಯನ್ನು ಒದಗಿಸುವ ಸುಲಭವಾದ, ಬಹುತೇಕ ಉಚಿತ ಇಂಟರ್ನೆಟ್ ಲಭ್ಯತೆ, ವಿಶೇಷವಾಗಿ ಎಲ್ಲಾ ವಯೋಮಾನದವರಿಗೆ, ಎಲ್ಲಾ ಆರ್ಥಿಕ ವರ್ಗಗಳಿಗೆ ಮೊಬೈಲ್ ಫೋನ್‍ಗಳಲ್ಲಿ ಲಭ್ಯವಿರುವುದೆ ಕಾರಣ ಎಂದಿದ್ದಾರೆ. ಅಶ್ಲೀಲ ಚಿತ್ರಗಳನ್ನು ನೋಡುವುದು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಪುರುಷರಲ್ಲಿ ಸಾಂದರ್ಭಿಕ ಮನೋಭಾವವನ್ನು ಬೆಳೆಸಲು ಕಾರಣವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. \ No newline at end of file diff --git a/eesanje/url_47_153_5.txt b/eesanje/url_47_153_5.txt new file mode 100644 index 0000000000000000000000000000000000000000..1a8bee4d16a0602eb342ac65b5e07daf229bb8aa --- /dev/null +++ b/eesanje/url_47_153_5.txt @@ -0,0 +1,6 @@ +ಜೈಶಂಕರ್ ಹೇಳಿಕೆಗೆ ವಾವ್ ಎಂದ ಬಚ್ಚನ್ +ನವದೆಹಲಿ,ಮಾ.5- ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭಾರತ ಬುಲ್ಲಿ ಅಲ್ಲ ಎಂಬ ಹೇಳಿಕೆಯನ್ನ ವಾವ್ ಎಂದು ಗುಣಗಾನ ಮಾಡಿದ್ದಾರೆ. ಕಳೆದ ವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಉಪಖಂಡ ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತವನ್ನು ದೊಡ್ಡ ಬುಲ್ಲಿ ಎಂದು ಗ್ರಹಿಸಲಾಗುತ್ತಿದೆಯೇ ಎಂದು ಜೈಶಂಕರ್ ಅವರನ್ನು ಕೇಳಲಾಗಿತ್ತು. ಆಗ ಭಾರತವನ್ನು ದೊಡ್ಡ ಬುಲ್ಲಿ ಎಂದು ನೀವು ಕೇಳುತ್ತೀರಾ ಆದರೆ, ನೆರೆಹೊರೆಯವರು ತೊಂದರೆಯಲ್ಲಿರುವಾಗ ದೊಡ್ಡ ಬುಲ್ಲಿಗಳು 4.5 ಬಿಲಿಯನ್ ಅಮೆರಿಕನ್ ಡಾಲರ್ ನೆರವು ನೀಡಲು ಸಾಧ್ಯವೇ ಎಂದು ಮರು ಪ್ರಶ್ನಿಸಿದ್ದರು. +ಜೈಶಂಕರ್ ಅವರ ಈ ಹೇಳಿಕೆಯನ್ನು ಬಚ್ಚನ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಚಿವರ ವೈರಲ್ ಪ್ರತಿಕ್ರಿಯೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲ, ವಾವ್…ಚೆನ್ನಾಗಿ ಹೇಳಿದ್ದೀರಾ ಸಾರ್ ಎಂದು ಪೋಸ್ಟ್ ಮಾಡಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಜು ಅವರು ಭಾರತ ನಮ್ಮನ್ನು ಬೆದರಿಸುವ ಪರವಾನಗಿಯನ್ನು ಹೊಂದಿಲ್ಲ ಎಂದು ಹೇಳಿದ ತಿಂಗಳುಗಳ ನಂತರ ಜೈಶಂಕರ್ ಅವರ ಈ ಪ್ರತ್ಯುತ್ತರ ಬಂದಿದೆ. +ನಾವು ಚಿಕ್ಕವರಾಗಿರಬಹುದು ಆದರೆ ಇದು ನಮ್ಮನ್ನು ಬೆದರಿಸುವುದಕ್ಕೆ ಅವರಿಗೆ ಪರವಾನಗಿ ನೀಡುವುದಿಲ್ಲ ಎಂದು ಅವರು ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವರ ಮಂತ್ರಿಗಳು ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‍ಗಳ ಕುರಿತು ಭಾರತದೊಂದಿಗೆ ರಾಜತಾಂತ್ರಿಕ ಗದ್ದಲದ ನಡುವೆ ಹೇಳಿದ್ದರು. ಈ (ಭಾರತೀಯ) ಸಾಗರವು ನಿರ್ದಿಷ್ಟ ದೇಶಕ್ಕೆ ಸೇರಿದ್ದಲ್ಲ. ಈ ಸಾಗರವು ಅದರಲ್ಲಿರುವ ಎಲ್ಲಾ ದೇಶಗಳಿಗೂ ಸೇರಿದೆ ಎಂದು ಅವರು ನವದೆಹಲಿಯಲ್ಲಿ ಪರೋಕ್ಷವಾಗಿ ಗೇಲಿ ಮಾಡಿದರು. +ಎಸ್ ಜೈಶಂಕರ್ ಹೇಳಿದ್ದೇನು?ದೊಡ್ಡ ಬುಲ್ಲಿ ಪ್ರಶ್ನೆಯ ಕುರಿತು ಮತ್ತಷ್ಟು ಮಾತನಾಡಿದ ಎಸ್ ಜೈಶಂಕರ್, ಭಾರತದ ವ್ಯಾಪಾರ, ಹೂಡಿಕೆ ಮತ್ತು ಅದರ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ, ಭೂತಾನ್, ಬಾಂಗ್ಲಾದೇಶ ಮತ್ತು ಮಾಲ್ಡೀವ್ಸ್‍ನೊಂದಿಗಿನ ಪ್ರಯಾಣವು ತೀವ್ರ ಏರಿಕೆ ಕಂಡಿದೆ ಎಂದು ಹೇಳಿದರು. +ಕೋವಿಡ್ -19 ಕಾಣಿಸಿಕೊಂಡಿದ್ದಾಗ ಬೆದರಿಸುವವರು ಇತರ ದೇಶಗಳಿಗೆ ಲಸಿಕೆಗಳನ್ನು ಪೂರೈಸುವುದಿಲ್ಲ ಅಥವಾ ಆಹಾರದ ಬೇಡಿಕೆಗಳು ಅಥವಾ ಇಂಧನ ಬೇಡಿಕೆಗಳು ಅಥವಾ ರಸಗೊಬ್ಬರ ಬೇಡಿಕೆಗಳಿಗೆ ಪ್ರತಿಕ್ರಿಯಿಸಲು ತಮ್ಮದೇ ಆದ ನಿಯಮಗಳಿಗೆ ವಿನಾಯಿತಿ ನೀಡುವುದಿಲ್ಲ ಏಕೆಂದರೆ ಪ್ರಪಂಚದ ಕೆಲವು ಭಾಗದಲ್ಲಿ ಕೆಲವು ಯುದ್ಧಗಳು ಅವರ ಜೀವನವನ್ನು ಸಂಕೀರ್ಣಗೊಳಿಸಿವೆ ಎಂದು ಜೈಶಂಕರ್ ಶನಿವಾರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹೇಳಿದರು. \ No newline at end of file diff --git a/eesanje/url_47_153_6.txt b/eesanje/url_47_153_6.txt new file mode 100644 index 0000000000000000000000000000000000000000..01f9b4c00691680e41016f9e79a9c5773dc5665f --- /dev/null +++ b/eesanje/url_47_153_6.txt @@ -0,0 +1,5 @@ +ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಹರಿಹಾಯ್ದ ಭಾರತ +ಜಿನೀವಾ, ಮಾ.5 (ಪಿಟಿಐ) ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನವನ್ನು ಭಾರತ ಕಟುವಾಗಿ ಟೀಕಿಸಿದೆ, ಅದು ತನ್ನದೇ ಆದ ಭಯಾನಕ ಮಾನವ ಹಕ್ಕುಗಳ ದಾಖಲೆಯನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಮತ್ತು ವಿಶ್ವದ ಭಯೋತ್ಪಾದನಾ ಕಾರ್ಖಾನೆ ಎಂಬ ಅಪಖ್ಯಾತಿಯಿಂದ ಹೊರ ಬರಬೇಕು ಎಂದು ಸಲಹೆ ನೀಡಿದೆ. ಜಿನೀವಾದಲ್ಲಿ ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‍ನ ಅೀಧಿನ ಕಾರ್ಯದರ್ಶಿ ಜಗಪ್ರೀತ್ ಕೌರ್ ಅವರು ಪಾಕಿಸ್ತಾನದ ನಂತರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 55 ನೇ ನಿಯಮಿತ ಅಧಿವೇಶನದಲ್ಲಿ ಸಾಮಾನ್ಯ ಚರ್ಚೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. +ಪಾಕಿಸ್ತಾನವನ್ನು ಹೆಸರಿಸದೆ ಕೌರ್ ಅವರು, ಈ ದೇಶವು ಭಾರತದ ವಿರುದ್ಧ ತನ್ನ ವಾಕ್ಚಾತುರ್ಯವನ್ನು ಮುಂದುವರೆಸುತ್ತಿದೆ, ಅವರದೇ ಆದ ರಾಜಕೀಯ ಪ್ರೇರಿತ ಕಾರ್ಯಸೂಚಿಯನ್ನು ಮುಂದುವರಿಸಲು ಇಂತಹ ವೇದಿಕೆಯನ್ನು ದುರ್ಬಳಕೆ ಮಾಡುವುದನ್ನು ಮುಂದುವರಿಸಿರುವುದು ದುರದೃಷ್ಟಕರ ಎಂದು ಹೇಳಿದರು. ನಾವು ಅವರಿಗೆ ಪ್ರತಿಕ್ರಿಯಿಸುವ ಮೂಲಕ ಅಂತಹ ಟೀಕೆಗಳನ್ನು ಘನೀಕರಿಸಲು ಬಯಸುವುದಿಲ್ಲ ಮತ್ತು ಆ ನಿಯೋಗವನ್ನು ಅವರದೇ ಆದ ಭಯಾನಕ ಮಾನವ ಹಕ್ಕುಗಳ ದಾಖಲೆ ಮತ್ತು ವಿಶ್ವದ ಭಯೋತ್ಪಾದನಾ ಕಾರ್ಖಾನೆಯಾಗಿ ಅರ್ಹವಾದ ಜಾಗತಿಕ ಖ್ಯಾತಿಯನ್ನು ಆತ್ಮಾವಲೋಕನ ಮಾಡಿಕೊಳ್ಳಲು ಒತ್ತಾಯಿಸುತ್ತೇವೆ ಎಂದು ಕೌರ್ ಹೇಳಿದರು. +ರಕ್ತದ ಕೆಂಪು ಬಣ್ಣದಲ್ಲಿ ನೆನೆಸಿಕೊಂಡು ಮಾತನಾಡುವ ದೇಶಕ್ಕೆ ನಾವು ಯಾವುದೇ ಹೆಚ್ಚಿನ ಗಮನವನ್ನು ನೀಡಲು ಸಾಧ್ಯವಿಲ್ಲ – ಪ್ರಪಂಚದಾದ್ಯಂತ ಅದು ಪ್ರಾಯೋಜಿಸುವ ಭಯೋತ್ಪಾದನೆಯಿಂದ ರಕ್ತಪಾತದ ಕೆಂಪು; ಅದರ ಋಣಭಾರದ ರಾಷ್ಟ್ರೀಯ ಆಯವ್ಯಯಗಳ ಕೆಂಪು; ಮತ್ತು ಅವಮಾನದ ಕೆಂಪು ಅದರ ಸ್ವಂತ ಜನರು ತಮ್ಮ ನಿಜವಾದ ಹಿತಾಸಕ್ತಿಗಳನ್ನು ಪೂರೈಸಲು ವಿಫಲವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು. +ಯುಎನ್ ಸೆಕ್ಯುರಿಟಿ ಕೌನ್ಸಿಲ-ಅನುಮೋದಿತ ಭಯೋತ್ಪಾದಕರನ್ನು ಆತಿಥ್ಯ ವಹಿಸುವ ಮತ್ತು ಆಚರಿಸುವ ದೇಶವು ಭಾರತದ ಬಹುತ್ವದ ನೀತಿ ಮತ್ತು ಪ್ರಜಾಪ್ರಭುತ್ವದ ರುಜುವಾತುಗಳು ಜಗತ್ತಿಗೆ ಮಾದರಿಯಾಗಿರುವ ಭಾರತದ ಬಗ್ಗೆ ಕಾಮೆಂಟ್ ಮಾಡುವುದು ಎಲ್ಲರಿಗೂ ನೋಡಲು ವ್ಯತಿರಿಕ್ತವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_153_7.txt b/eesanje/url_47_153_7.txt new file mode 100644 index 0000000000000000000000000000000000000000..f94e869fafa66727e837a089f98ed5367ed53494 --- /dev/null +++ b/eesanje/url_47_153_7.txt @@ -0,0 +1,4 @@ +ಉಜ್ಜಯಿನಿ ಮಹಾಕಾಳಿ ಆರ್ಶೀವಾದ ಪಡೆದ ಮೋದಿ +ಹೈದರಾಬಾದ್, ಮಾ. 5 (ಪಿಟಿಐ)- ಬಿಗಿ ಭದ್ರತೆಯ ನಡುವೆ ಇಲ್ಲಿನ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಮೋದಿಯವರಿಗೆ ದೇವಿಯ ಛಾಯಾಚಿತ್ರವನ್ನು ಉಡುಗೊರೆಯಾಗಿ ನೀಡಿದರು. ನಿನ್ನೆ ರಾತ್ರಿ ಇಲ್ಲಿನ ರಾಜಭವನದಲ್ಲಿ ತಂಗಿದ್ದ ಮೋದಿ, ದೇವಸ್ಥಾನ ದರ್ಶನದ ನಂತರ ಸಂಗಾರೆಡ್ಡಿ ಜಿಲ್ಲೆಗೆ ತೆರಳಿದರು. 6,800 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. +ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಚಟುವಟಿಕೆಗಳನ್ನು ನವೀಕರಿಸಲು ಮತ್ತು ಹೆಚ್ಚಿಸಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಕಾರವು ಹೈದರಾಬಾದ್‍ನ ಬೇಗಂಪೇಟ್ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಿರುವ ನಾಗರಿಕ ವಿಮಾನಯಾನ ಸಂಶೋಧನಾ ಸಂಸ್ಥೆ (ಸಿಎಆರ್‍ಒ) ಕೇಂದ್ರವನ್ನು ಹೈದರಾಬಾದ್‍ನಲ್ಲಿ ಪ್ರಧಾನಿ ಉದ್ಘಾಟಿಸಿದರು. +350 ಕೋಟಿ ರೂ.ಗಿಂತ ಹೆಚ್ಚಿನ ವೆಚ್ಚದಲ್ಲಿ ನಿರ್ಮಿಸಲಾದ ಈ ಅತ್ಯಾಧುನಿಕ ಸೌಲಭ್ಯವು 5-ಸ್ಟಾರ್-ಗೃಹ ರೇಟಿಂಗ್ ಮತ್ತು ಎನರ್ಜಿ ಕನ್ಸರ್ವೇಶನ್ ಬಿಲ್ಡಿಂಗ್ ಕೋಡ್ ಮಾನದಂಡಗಳಿಗೆ ಅನುಗುಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಅವರು ಮೂರು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಅಡಿಪಾಯ ಹಾಕಿದರು. \ No newline at end of file diff --git a/eesanje/url_47_153_8.txt b/eesanje/url_47_153_8.txt new file mode 100644 index 0000000000000000000000000000000000000000..f6e85cc0feeac34ef6dbb2f76a0b8d378ea33afe --- /dev/null +++ b/eesanje/url_47_153_8.txt @@ -0,0 +1,4 @@ +ಮದುವೆ ಸಮಾರಂಭದಲ್ಲಿ ಗುಂಡಿಕ್ಕಿ ಬಿಎಸ್‍ಪಿ ನಾಯಕನ ಹತ್ಯೆ +ಛತ್ತರ್‍ಪುರ, ಮಾ.5: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಛತ್ತರ್‍ಪುರಕ್ಕೆ ಬಂದಿದ್ದ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಡ ರಾತ್ರಿ ನಗರದ ರೆಸಾರ್ಟ್‍ನಲ್ಲಿ ನಡೆಯುತ್ತಿದ್ದ ಮದುವೆ ಬಂದಿದ್ದ ಬಿಎಸ್‍ಪಿ ನಾಯಕ ಮಹೇಂದ್ರ ಗುಪ್ತಾ ಅವರ ಮೇಲೆ ಬೈಕ್‍ನಲ್ಲಿ ಬಂದ ದುಷ್ಕರ್ಮಿ ಗುಂಡು ಹಾರಿಸಲಾಗಿದೆ. +ಸಾಗರ್ ರಸ್ತೆಯ ಅವರು ಬರುವಾಗ ಈ ಘಟನೆ ನಡೆದಿದೆ,ಗುಪ್ತಾ ಅವರ ತಲೆಗೆ ಗುಂಡು ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ತಿಳಿಸಿದ್ದಾರೆ. ಕಳೆದ 2023ರ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜಾವರ್ ಕ್ಷೇತ್ರದಿಂದ ಬಿಎಸ್‍ಪಿ ಅಭ್ಯರ್ಥಿಯಾಗಿ ಸ್ರ್ಪಧಿಸಿ ಸೋಲುಕಂಡಿದ್ದರು ಆದರು 10,400 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದರು. +ಮೋಟಾರು ಸೈಕಲ್‍ನಲ್ಲಿ ಬಂದ ವ್ಯಕ್ತಿಯಿಂದ ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ಗುಪ್ತಾ ಅವರ ಖಾಸಗಿ ಭದ್ರತಾ ಸಿಬ್ಬಂದಿ ಅಬ್ದುಲ್ ಮನ್ಸೂರಿ ಹೇಳಿದ್ದಾರೆ ತನ್ನ ರೈಫಲ್ ಅನ್ನು ಲೋಡ್ ಮಾಡುವ ಹೊತ್ತಿಗೆ ಓಡಿಹೋದನು, ದಾಳಿಕೋರನನ್ನು ನೋಡಿದ್ದೇನೆ ಮತ್ತು ಅವನನ್ನು ಗುರುತಿಸುತ್ತೇನೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಹೇಳಿದ್ದಾರೆ. ಹಂತಕನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_153_9.txt b/eesanje/url_47_153_9.txt new file mode 100644 index 0000000000000000000000000000000000000000..997717e81a8b133a2756d8d3b0a148759cbe3d4f --- /dev/null +++ b/eesanje/url_47_153_9.txt @@ -0,0 +1,4 @@ +ಭಾರತವು 30,000 ಟನ್ ಬಿಳಿ ಅಕ್ಕಿಯನ್ನು ಟಾಂಜಾನಿಯಾಕ್ಕೆ ರಫ್ತಿಗೆ ಅವಕಾಶ +ನವದೆಹಲಿ,ಮಾ.4 : ತಾಂಜಾನಿಯಾಗೆ 30,000 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ಮತ್ತು 80 ಸಾವಿರ ಟನ್ ಅಕ್ಕಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್ ಮೂಲಕ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ ಪ್ರಕಟಣೆಯಲ್ಲಿದೆ. +ದೇಶೀಯ ಪೂರೈಕೆಯನ್ನು ಜುಲೈ 20, 2023 ರಿಂದ ಬಾಸ್ಮತಿ ಅಲ್ಲದ ಬಿಳಿ ಅಕ್ಕಿ ರಫ್ತುಗಳನ್ನು ನಿಷೇಧಿಸಲಾಗಿತ್ತು ಅದರೆ ಈಗ ಕೆಲ ಸಂಸ್ಥೆಗಳು ವಿನಂತಿ ಮಾಡಿ ಕೆಲವು ದೇಶಗಳಿಗೆ ತಮ್ಮ ಆಹಾರದ ಅವಶ್ಯಕತೆಗಳನ್ನು ಪೂರೈಸಲು ಅನುಮತಿ ಕೇಳಿತ್ತು ಅದರಂತೆ ರಫ್ತುಗಳನ್ನು ಅನುಮತಿಸಲಾಗಿದೆ. ತಾಂಜಾನಿಯಾ ಪೂರ್ವ ಆಫ್ರಿಕಾದ ರಾಷ್ಟ್ರವಾಗಿದ್ದು, ದಕ್ಷಿಣ ಆಫ್ರಿಕಾದ ಖಂಡದ ಈಶಾನ್ಯ ಕರಾವಳಿಯಲ್ಲಿದೆ.ಗಿನಿಯಾ-ಬಿಸ್ಸಾವು ಪಶ್ಚಿಮ ಆಫ್ರಿಕಾದ ಉಷ್ಣವಲಯದ ದೇಶವಾಗಿದೆ. ಅಧಿಸೂಚನೆಯ ಪ್ರಕಾರ, 30,000 ಟನ್ ನುಚ್ಚು ಅಕ್ಕಿಯನ್ನು ಜಿಬೌಟಿಗೆ ಮತ್ತು 50,000 ಟನ್ ಗಿನಿ ಬಿಸ್ಸೌಗೆ ರಫ್ತು ಮಾಡಲು ಅನುಮತಿಸಲಾಗಿದೆ. +ಭಾರತವು ಈ ಹಿಂದೆ ನೇಪಾಳ, ಕ್ಯಾಮರೂನ್, ಕೋಟ್ ಡಿ ಐವೊರ್, ಗಿನಿಯಾ, ಮಲೇಷ್ಯಾ, ಫಿಲಿಪೈನ್ಸ್ ಮತ್ತು ಸೀಶೆಲ್ಸ್‍ನಂತಹ ದೇಶಗಳಿಗೆ ಈ ರಫ್ತುಗಳನ್ನು ಅನುಮತಿಸಲಾಗಿದೆ. ರಾಷ್ಟ್ರೀಯ ಸಹಕಾರಿ ರಫ್ತು ಲಿಮಿಟೆಡ್ ಬಹು-ರಾಜ್ಯ ಸಹಕಾರ ಸಂಘವಾಗಿದೆ. ಇದನ್ನು ದೇಶದ ಕೆಲವು ಪ್ರಮುಖ ಸಹಕಾರ ಸಂಘಗಳು ಜಂಟಿಯಾಗಿ ಪ್ರಚಾರ ಮಾಡುತ್ತವೆ, ಅಂದರೆ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ಎಂದು ಜನಪ್ರಿಯವಾಗಿ ಅಮುಲ್ ಎಂದು ಕರೆಯಲಾಗುತ್ತದೆ, ಇಂಡಿಯನ್ ಫಾರ್ಮರ್ಸ್ ಫಾರ್ಟಿಲೈಸರ್ ಕೋಆಪರೇಟಿವ್ ಲಿಮಿಟೆಡ್ , ಕೃಶಕ್ ಭಾರತಿ ಸಹಕಾರಿ ಲಿಮಿಟೆಡ್ ಮತ್ತು ರಾಷ್ಟ್ರೀಯ ಕೃಷಿ ಸಹಕಾರಿ ಮಾರ್ಕೆಟಿಂಗ್ ಆಫ ಇಂಡಿಯಾ ಲಿಮಿಟೆಡ್ ಇದರಲಿದೆ. \ No newline at end of file diff --git a/eesanje/url_47_154_1.txt b/eesanje/url_47_154_1.txt new file mode 100644 index 0000000000000000000000000000000000000000..808dd173ab5b5a831073ba5699973855d222908f --- /dev/null +++ b/eesanje/url_47_154_1.txt @@ -0,0 +1,3 @@ +ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ : ಒಂದೇ ಕುಟುಂಬದ ಐವರ ದುರ್ಮರಣ +ವಡೋದರಾ, ಮಾ 4 (ಪಿಟಿಐ) ಗುಜರಾತ್‍ನ ವಡೋದರಾ ನಗರದ ಸಮೀಪ ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಪುರುಷರು, ಅವರ ಪತ್ನಿಯರು ಮತ್ತು ಒಂದು ಹಸುಗೂಸು ಅಪಘಾತದಲ್ಲಿ ಪ್ರಾಣ ಬಿಟ್ಟಿದ್ದಾರೆ. +ದಂಪತಿಗಳು ಹಾಗೂ ಇಬ್ಬರು ಮಕ್ಕಳು ವಡೋದರಾ ಜಿಲ್ಲೆಯ ಕರ್ಜನ್ ತಾಲೂಕಿನಿಂದ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಕಪುರೈ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಕಾರು ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಇಬ್ಬರು ದಂಪತಿಗಳು ಮತ್ತು ಒಂದು ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ 4 ವರ್ಷದ ಮಗುವಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಹಾನಿಗೊಳಗಾದವರನ್ನು ಕಾರಿನಿಂದ ಹೊರತೆಗೆದರು ಎಂದು ಅವರು ಹೇಳಿದರು. \ No newline at end of file diff --git a/eesanje/url_47_154_10.txt b/eesanje/url_47_154_10.txt new file mode 100644 index 0000000000000000000000000000000000000000..643915c2330ef32bdfd810f6de44187640bafb27 --- /dev/null +++ b/eesanje/url_47_154_10.txt @@ -0,0 +1,6 @@ +ಸ್ಪ್ಯಾನಿಷ್ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಕೊಳೆತ ಸಮಾಜದ ಕೈಗನ್ನಡಿ : ರಿಚಾ ಚಡ್ಡಾ +ನವದೆಹಲಿ,ಮಾ.3- ಜಾರ್ಖಂಡ್‍ನಲ್ಲಿ ಸ್ಪೇನ್ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ನಟಿ ರಿಚಾ ಚಡ್ಡಾ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇದು ನಮ್ಮ ಕೊಳೆತ ಸಮಾಜಕ್ಕೆ ಹಿಡಿದ ಕೈಗನ್ನಡಿ ಎಂದಿದ್ದಾರೆ. ಜಾರ್ಖಂಡ್‍ನ ದುಮ್ಕಾ ಜಿಲ್ಲೆಯಲ್ಲಿ ಶುಕ್ರವಾರ ತನ್ನ ಪತಿಯೊಂದಿಗೆ ಬೈಕ್ ಪ್ರವಾಸಕ್ಕೆ ತೆರಳಿದ್ದ ಸ್ಪ್ಯಾನಿಷ್ ಪ್ರವಾಸಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. +ನಾಚಿಕೆಗೇಡು! ಭಾರತೀಯರು ತಮ್ಮ ಸ್ವಂತ ಮಹಿಳೆಯರೊಂದಿಗೆ ವಿದೇಶಿಯರನ್ನು ನಡೆಸಿಕೊಳ್ಳುತ್ತಿದ್ದಾರೆ. ನಮ್ಮ ಕೊಳೆತ ಸಮಾಜಕ್ಕೆ ನಾಚಿಕೆಗೇಡು ಎಂದು ಅವರು ಎಕ್ಸ್ ಪೋಸ್ಟ್‍ನಲ್ಲಿ ಬರೆದಿದ್ದಾರೆ. ಸ್ಪೇನ್ ದಂಪತಿ ದ್ವಿಚಕ್ರ ವಾಹನದಲ್ಲಿ ಬಾಂಗ್ಲಾದೇಶದಿಂದ ಜಾರ್ಖಂಡ್ ತಲುಪಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗಳು ಅವರನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ. +ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳನ್ನು ಹಿಡಿಯಲು ಪೊಲೀಸರು ಶೋಧ ಆರಂಭಿಸಿಪೊರೆ ಎಂದು ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಘಟನೆಯ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‍ಐಟಿ) ಕೂಡ ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆ ಕುರಿತಂತೆ ಸ್ಪ್ಯಾನಿಷ್ ಮಹಿಳೆ ಇನ್ಸ್ಟಾಗ್ರಾಮ್ ವೀಡಿಯೊ ಸಂದೇಶದಲ್ಲಿ ಭಯಾನಕ ಘಟನೆಯ ಬಗ್ಗೆ ಮಾತನಾಡಿದ್ದಾರೆ ಮತ್ತು ಏಳು ಪುರುಷರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಹೇಳಿದ್ದಾರೆ. +ಅವರು ನಮ್ಮನ್ನು ಹೊಡೆದಿದ್ದಾರೆ ಮತ್ತು ದರೋಡೆ ಮಾಡಿದ್ದಾರೆ. ಹೆಚ್ಚಿನ ವಿಷಯಗಳಿಲ್ಲದಿದ್ದರೂ ಅವರು ಬಯಸಿದ್ದು ನನ್ನ ಮೇಲೆ ಅತ್ಯಾಚಾರ ಮಾಡಲು ಎಂದು ಅವರು ಹೇಳಿಕೊಂಡಿದ್ದಾರೆ. ಸುಮಾರು 28 ವರ್ಷ ವಯಸ್ಸಿನ ಮಹಿಳೆ ಮತ್ತು ಅವರ 64 ವರ್ಷದ ಪತಿ ದುಮ್ಕಾದ ಫುಲೋ ಜಾನೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಲ್ಲಿ ಅವರು ಸರೈಯಾಹತ್ ಸಮುದಾಯ ಆರೋಗ್ಯ ಕೇಂದ್ರದಿಂದ ಮೋಟಾರ್ ಸೈಕಲ್‍ನಲ್ಲಿ ತಲುಪಿದ್ದರು ಎಂದು ದುಮ್ಕಾ ಸಿವಿಲ್ ಸರ್ಜನ್ ಬಚ್ಚಾ ಪ್ರಸಾದ್ ಸಿಂಗ್ ಪಿಟಿಐಗೆ ತಿಳಿಸಿದರು, +ಇಬ್ಬರೂ ಅಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಸೂಪರಿಂಟೆಂಡೆಂಟ್ ನೇತೃತ್ವದಲ್ಲಿ ಮೂವರು ಸ್ತ್ರೀರೋಗತಜ್ಞರು, ರೇಡಿಯಾಲಜಿಸ್ಟ್ , ಮೂಳೆ ಮತ್ತು ದಂತವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯು ನಡೆಸುತ್ತದೆ. \ No newline at end of file diff --git a/eesanje/url_47_154_11.txt b/eesanje/url_47_154_11.txt new file mode 100644 index 0000000000000000000000000000000000000000..ec627ff649db09de3b0814166c809489d42ac8e5 --- /dev/null +++ b/eesanje/url_47_154_11.txt @@ -0,0 +1,5 @@ +ಹಿಮಕರಡಿಯ ಮಾತೃ ಹೃದಯಕ್ಕೆ ಫಿದಾ ಆದ ಜನ +ನವದೆಹಲಿ,ಮಾ.3- ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅದು ಮನುಷ್ಯರಿರಲಿ ಪ್ರಾಣಿಗಳೇ ಆಗಿರಲಿ ತಾಯಿ ಪ್ರೀತಿ ಮಾತ್ರ ಕಡಿಮೆಯಾಗಲ್ಲ ಎನ್ನುವುದಕ್ಕೆ ಹಿಮಕರಡಿಯೊಂದು ತನ್ನ ಮರಿಯನ್ನು ನೀರಿನಿಂದ ರಕ್ಷಿಸಲು ಹರಸಾಹಸ ಪಡುವ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ. ನದಿಯಲ್ಲಿ ಮುಳುಗಿ ಹೋಗುತ್ತಿದ್ದ ತನ್ನ ಮರಿಯನ್ನು ರಕ್ಷಿಸಲು ಹಿಮ ಕರಡಿ ನೀರಿನಲ್ಲಿ ಮುಳುಗಿ ತನ್ನ ಮರಿಯನ್ನು ಹರಸಾಹಸಪಟ್ಟು ದಡ ಸೇರಿಸಿರುವ ಹಿಮ ಕರಡಿಯ ಸಾಹಸಮಯ ದೃಶ್ಯವನ್ನು ಗೇಬ್ರಿಯೆಲ್ ಕಾರ್ನೊ ಎನ್ನುವವರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. + … ../qRm62UGWs3 +13 ಸೆಕೆಂಡುಗಳ ಈ ಚಿಕ್ಕ ಕ್ಲಿಪ್ ಮೈಕ್ರೋಬ್ಲಾಗಿಂಗ್ ಪ್ಲಾಟ್‍ಫಾರ್ಮ್‍ನಲ್ಲಿ 1.15 ಲಕ್ಷ ವೀಕ್ಷಣೆ ಪಡೆದಿದ್ದು, ಸೋಷಿಯಲ್ ಮಿಡಿಯಾದಲ್ಲಿ ಹಲವಾರು ಮಂದಿ ತಾಯಿ ಹಿಮಕರಡಿಯ ಸಾಹಸಕ್ಕೆ ಬೆರಗಾಗಿದ್ದಾರೆ. ಅದು ಪ್ರಾಣಿಯಾಗಿರಲಿ ಅಥವಾ ಮನುಷ್ಯನಾಗಿರಲಿ, ತಾಯಿಯ ಪ್ರೀತಿ ಯಾವಾಗಲೂ ಬೇಷರತ್ತಾಗಿರುತ್ತದೆ ಎಂದು ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದಾರೆ. +ತಾಯಂದಿರು ತಮ್ಮ ಮಕ್ಕಳಿಗಾಗಿ ಎಲ್ಲವನ್ನೂ ಮಾಡುತ್ತಾರೆ ಎಂದು ಎರಡನೇ ವ್ಯಕ್ತಿ ಹೇಳಿಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು, ಮಾಮ್ ಆನ್ ಡ್ಯೂಟಿ! ಎಂದು ಬರೆದುಕೊಂಡಿದ್ದಾರೆ. ಅನೇಕ ಬಳಕೆದಾರರು ಕಾಮೆಂಟ್‍ಗಳ ವಿಭಾಗದಲ್ಲಿ ಹೃದಯದ ಎಮೋಜಿಗಳನ್ನು ಸಹ ಹರಿಬಿಟ್ಟಿದ್ದಾರೆ. \ No newline at end of file diff --git a/eesanje/url_47_154_12.txt b/eesanje/url_47_154_12.txt new file mode 100644 index 0000000000000000000000000000000000000000..b6faef1ce7e8baa2bfb07292ce223694fdd6b392 --- /dev/null +++ b/eesanje/url_47_154_12.txt @@ -0,0 +1,6 @@ +ಪ್ರಜ್ಞಾಸಿಂಗ್ ಠಾಕೂರ್‌ಗೆ ತಪ್ಪಿದ ಬಿಜೆಪಿ ಟಿಕೆಟ್ +ಭೋಪಾಲï,ಮಾ.3- ವಿವಾದಾತ್ಮಕ ಸಂಸದೆ ಪ್ರಜ್ಞಾಸಿಂಗ್ ಠಾಕೂರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲಾಗಿದೆ.ಬಿಜೆಪಿ ಶನಿವಾರ ಪ್ರಕಟಿಸಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಮಧ್ಯಪ್ರದೇಶದ 29 ಕ್ಷೇತ್ರಗಳಿಗೆ 24 ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಟಿಕೆಟ್ ನೀಡಿ ಭೋಪಾಲ್‍ನಲ್ಲಿ ವಿವಾದಾತ್ಮಕ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿಲ್ಲ. +ಟಿಕೆಟ್ ನಿರಾಕರಿಸಿದ ಆರು ಹಾಲಿ ಸಂಸದರಲ್ಲಿ ಎಂಎಸ್ ಠಾಕೂರ್ ಒಬ್ಬರು ಮತ್ತು 13 ಹಾಲಿ ಸಂಸದರು ಪುನರಾವರ್ತನೆಯಾಗಿದ್ದಾ. ಮೋಹನ್ ಯಾದವ್‍ಗೆ ದಾರಿ ಮಾಡಿಕೊಡಲು ಅವರು ದೇಶದಲ್ಲಿ ಬಿಜೆಪಿಯ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಕೆಳಗಿಳಿದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ವಿದಿಶಾದಿಂದ ಅಭ್ಯರ್ಥಿ ಎಂದು ಘೋಷಿಸಲಾಗಿದೆ. +ನಾನು ವಿದಿಶಾದ ಜನರಿಗೆ ತುಂಬಾ ಹತ್ತಿರವಾಗಿದ್ದೇನೆ, ನಾವು ಕುಟುಂಬದಂತೆ ಇದ್ದೇವೆ. ವಿದಿಶಾಗೆ ಮಾರ್ಗಸೂಚಿ ಸಿದ್ಧವಾಗಿದೆ. ಮಧ್ಯಪ್ರದೇಶದ ಎಲ್ಲಾ 29 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಮತ್ತು ರಾಜ್ಯವು ಪ್ರಧಾನಿ ಮೋದಿಯವರಿಗೆ 29 ಮಾಲೆಗಳನ್ನು ಹಾಕುತ್ತದೆ ಎಂದು ಚೌಹಾಣ್ ಹೇಳಿದ್ದಾರೆ. ವಿದಿಶಾವನ್ನು ದೇಶದಲ್ಲಿ ಬಿಜೆಪಿಯ ಕೋಟೆ ಎಂದು ಪರಿಗಣಿಸಲಾಗಿದೆ ಮತ್ತು 1991 ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು 2009 ಮತ್ತು 2014 ರಲ್ಲಿ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ಗೆದ್ದಿದ್ದರು. +2002 ರಿಂದ 2019 ರಲ್ಲಿ ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಯಾದವ್ ವಿರುದ್ಧ ಸೋಲುವವರೆಗೂ ಅವರು ಹೊಂದಿದ್ದ ಗುಣದಿಂದ ಕೇಂದ್ರ ಸಚಿವ ಮತ್ತು ಮಾಜಿ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಅಭ್ಯರ್ಥಿ ಎಂದು ಹೆಸರಿಸಲಾಗಿದೆ. ಚೌಹಾಣ್ ಅವರ ನಿಷ್ಠಾವಂತರಲ್ಲಿ ಕನಿಷ್ಠ ನಾಲ್ವರು ಟಿಕೆಟ್ ಪಡೆದಿದ್ದಾರೆ. ಭೋಪಾಲ್ ಮಾಜಿ ಮೇಯರ್ ಅಲೋಕ್ ಶರ್ಮಾ (ಕಳೆದ ವರ್ಷದ ಅಸೆಂಬ್ಲಿ ಚುನಾವಣೆಯಲ್ಲಿ ಭೋಪಾಲ್ ಉತ್ತರ ಕ್ಷೇತ್ರದಿಂದ ಸೋತವರು) ಭೋಪಾಲ್‍ನಿಂದ, ರಾಜ್ಯ ಕಿಸಾನ್ ಮೋರ್ಚಾ ಮುಖ್ಯಸ್ಥ ದರ್ಶನ್ ಸಿಂಗ್ ಚೌಧರಿ ಹೋಶಂಗಾಬಾದ್‍ನಿಂದ ಮತ್ತು ಹಾಲಿ ಸಂಸದ ರೊಡ್ಮಲ್ ನಗರ್‍ನಿಂದ ರಾಜ್‍ಗಢದಿಂದ ಕಣಕ್ಕಿಳಿದಿದ್ದಾರೆ. +ಮಾಜಿ ಮುಖ್ಯಮಂತ್ರಿಗಳ ನಿಷ್ಠಾವಂತ ನಾಗರ್ ಸಿಂಗ್ ಚೌಹಾಣ್ ಅವರ ಪತ್ನಿ ಅನಿತಾ ನಗರ್ ಸಿಂಗ್ ಚೌಹಾಣ್ ರತ್ಲಾಮ-ಜಬುವಾ (ಖS) ಸ್ಥಾನಕ್ಕೆ ಅಭ್ಯರ್ಥಿಯಾಗಿ ಹೆಸರಿಸಿದ್ದಾರೆ. ಅಸೆಂಬ್ಲಿ ಸ್ಪೀಕರ್ ಮತ್ತು ಮಾಜಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ನಿಷ್ಠಾವಂತ ಭರತ್ ಸಿಂಗ್ ಕುಶ್ವಾಹ್ ಅವರಿಗೆ ಕಳೆದ ವರ್ಷ ಗ್ವಾಲಿಯರ್ ಗ್ರಾಮಾಂತರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಗ್ವಾಲಿಯರ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ತೋಮರ್ ಅವರ ಇತರ ಇಬ್ಬರು ನಿಷ್ಠಾವಂತರಾದ ಹಾಲಿ ಸಂಸದೆ ಸಂಧ್ಯಾ ರೈ ಮತ್ತು ಮಾಜಿ ಶಾಸಕ ಶಿವಮಂಗಲ್ ಸಿಂಗ್ ತೋಮರ್ ಅವರನ್ನು ಕ್ರಮವಾಗಿ ಭಿಂಡ್ (ಎಸ್‍ಸಿ) ಮತ್ತು ಮೊರೆನಾ ಸ್ಥಾನಗಳಿಂದ ಅಭ್ಯರ್ಥಿಗಳಾಗಿ ಹೆಸರಿಸಲಾಗಿದೆ. ಈ ಕ್ಷೇತ್ರಗಳು ಗ್ವಾಲಿಯರ್-ಚಂಬಲ್ ಪ್ರದೇಶದಲ್ಲಿವೆ. \ No newline at end of file diff --git a/eesanje/url_47_154_2.txt b/eesanje/url_47_154_2.txt new file mode 100644 index 0000000000000000000000000000000000000000..1b5106c2141a790d67c16d119e476988d80dcdc4 --- /dev/null +++ b/eesanje/url_47_154_2.txt @@ -0,0 +1,6 @@ +ಮಹದೇವ್ ಬೆಟ್ಟಿಂಗ್ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ +ರಾಯ್‍ಪುರ,ಮಾ.4- ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಇನ್ನಿಬ್ಬರನ್ನು ಬಂಧಿಸಿದ್ದು, ಆ್ಯಪ್‍ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಚಟುವಟಿಕೆಗಳ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಎಬಿಲಿಟಿ ಗೇಮ್ಸ ಲಿಮಿಟೆಡ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಸೂರಜ್ ಚೋಖಾನಿ ಮತ್ತು ಗಿರೀಶ್ ತಲ್ರೇಜಾ ಅವರನ್ನು ರಾಯಪುರ ನ್ಯಾಯಾಲಯ ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅದೇ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನಿತೀಶ್ ದಿವಾನ್ ಬಂಧನದ ನಂತರ ಇತ್ತೀಚಿನ ಬಂಧನಗಳು ಇದಾಗಿವೆ. +ದಿವಾನ್ ಮಾಡಿದ ಹಕ್ಕುಗಳನ್ನು ಮಾನ್ಯ ಮಾಡಲು ಚೋಖಾನಿ ಮತ್ತು ತಲ್ರೇಜಾ ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ ಎಂದು ಇಡಿ ಪ್ರತಿನಿಧಿಸುವ ವಕೀಲ ಸೌರಭ್ ಪಾಂಡೆ ಬಹಿರಂಗಪಡಿಸಿದ್ದಾರೆ. ಆದಾಗ್ಯೂ, ಅವರ ಹೇಳಿಕೆಗಳು ಇಡಿ ಬಳಿಯಿರುವ ಪುರಾವೆಗಳಿಗೆ ವಿರುದ್ಧವಾಗಿವೆ ಎಂದು ವರದಿಯಾಗಿದೆ ಇದು ಅವರ ಬಂಧನಕ್ಕೆ ಕಾರಣವಾಯಿತು. + ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಎನ್‍ಐಎಗೆ ಹಸ್ತಾಂತರ +ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ಬಂಧನದ ಕುರಿತು, ಪ್ರಕರಣದಲ್ಲಿ ಇಡಿ ಪ್ರತಿನಿಧಿಸುವ ವಕೀಲ ಸೌರಭ್ ಪಾಂಡೆ, ಈ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾವು ಮಾಡಿದ ಕೊನೆಯ ಬಂಧನ ನಿತೀಶ್ ದಿವಾನ್ ವಾಸ್ತವಿಕ ಸತ್ಯವನ್ನು ಪರಿಶೀಲಿಸಲು. ಅವರು ನೀಡಿದ ಹೇಳಿಕೆಗಳು, ಈ ಇಬ್ಬರ ಹೇಳಿಕೆಗಳನ್ನು ದಾಖಲಿಸಲಾಗಿದೆ ಆದರೆ ಅವರು ನಮ್ಮ ಬಳಿ ಇರುವ ಸಾಕ್ಷ್ಯಕ್ಕೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಆದ್ದರಿಂದ ಅವರನ್ನು ಬಂಧಿಸಲಾಗಿದೆ, ನ್ಯಾಯಾಲಯವು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಅವರು ಹೇಳಿದ್ದಾರೆ. +ಪಾಂಡೆ ಪ್ರಕಾರ, ಎಬಿಲಿಟಿ ಗೇಮ್ಸ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸೂರಜ್ ಚೋಖಾನಿ ಅವರು ಹವಾಲಾ ಆಪರೇಟರ್ ಟಿಬ್ರೆವಾಲ್‍ನ ನಿಕಟ ಸಹವರ್ತಿಯಾಗಿದ್ದಾರೆ. ಲೋಟಸ್ 365 ಹೆಸರಿನ ಐಡಿಯು ಮಹದೇವ್ ಅಪ್ಲಿಕೇಶನ್‍ಗಾಗಿ ಕಾರ್ಯನಿರ್ವಹಿಸುತ್ತದೆ. ಗಿರೀಶ್ ತಲ್ರೇಜಾ ಮತ್ತು ಸೌರಭ್ ಚಂದ್ರಖರ್ ಈ ಐಡಿಯನ್ನು ನಿರ್ವಹಿಸುತ್ತಿದ್ದರು ಮತ್ತು ಬೆಟ್ಟಿಂಗ್‍ನಲ್ಲಿ ತೊಡಗಿದ್ದರು. ಸೂರಜ್ ಚೋಖಾನಿ ಹರಿಶಂಕರ್ ತಿಬ್ರೆವಾಲ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಅವರು ಬಹಳಷ್ಟು ಜನರೊಂದಿಗೆ ಸಂಪರ್ಕ ಹೊಂದಿದ್ದಾರೆ. ಮಹದೇವ್ ಆಪ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪಾಂಡೆ ಹೇಳಿದರು. \ No newline at end of file diff --git a/eesanje/url_47_154_3.txt b/eesanje/url_47_154_3.txt new file mode 100644 index 0000000000000000000000000000000000000000..7234cf49329b14f630e9c6a5778a5b2e880b3496 --- /dev/null +++ b/eesanje/url_47_154_3.txt @@ -0,0 +1,7 @@ +ಬಾಹ್ಯಾಕಾಶ ನಿಲ್ದಾಣ ಕಾರ್ಯ ಆರಂಭಿಸಿದ ಇಸ್ರೋ +ನವದೆಹಲಿ,ಮಾ.4- ಬಾಹ್ಯಾಕಾಶದ ಕ್ಷೇತ್ರದಲ್ಲಿನ ಮಹತ್ವಾಕಾಂಕ್ಷೆಯ ಯೋಜನೆಗಳ ಭಾಗವಾಗಿ ಇಸ್ರೋ ಶೀಘ್ರದಲ್ಲೇ ದೇಶದ ಮೊದಲ ಬಾಹ್ಯಾಕಾಶ ನಿಲ್ದಾಣ ನಿರ್ಮಾಣ ಕಾರ್ಯ ಆರಂಭಿಸಲು ತೀರ್ಮಾನಿಸಿದೆ.ಮುಂದಿನ ಕೆಲವು ವರ್ಷಗಳಲ್ಲಿ ಬಾಹ್ಯಾಕಾಶ ನಿಲ್ದಾಣದ ಮೊದಲ ಮಾಡ್ಯೂಲ್‍ಗಳನ್ನು ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. +ಭಾರತದ ಸ್ವಂತ ಬಾಹ್ಯಾಕಾಶ ನಿಲ್ದಾಣ 2035 ರ ವೇಳೆಗೆ ಸ್ಥಾಪಿಸುವ ಗುರಿ ಹೊಂದಲಾಗಿದೆ. ಇಸ್ರೋ ಈಗಾಗಲೇ ಬಾಹ್ಯಾಕಾಶ ನಿಲ್ದಾಣಕ್ಕಾಗಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಪ್ರಾರಂಭಿಸಿದೆ. ಬಾಹ್ಯಾಕಾಶ ನಿಲ್ದಾಣವನ್ನು ಕಡಿಮೆ ಭೂಮಿಯ ಕಕ್ಷೆಯಲ್ಲಿ ಇರಿಸಲಾಗುವುದು. ಭಾರತೀಯ ಅಂತರಿಕ್ಷ ನಿಲ್ದಾಣವು ಬಾಹ್ಯಾಕಾಶದಲ್ಲಿ 2 ರಿಂದ 4 ಗಗನಯಾತ್ರಿಗಳಿಗೆ ಅವಕಾಶ ಕಲ್ಪಿಸುತ್ತದೆ. ರಷ್ಯಾ, ಯುಎಸ್ ಮತ್ತು ಚೀನಾ ಮಾತ್ರ ಬಾಹ್ಯಾಕಾಶ ಕೇಂದ್ರಗಳನ್ನು ಕಕ್ಷೆಗೆ ಕಳುಹಿಸಿವೆ. ಭಾರತವು ಬಾಹ್ಯಾಕಾಶದಲ್ಲಿ ಸ್ವತಂತ್ರ ಬಾಹ್ಯಾಕಾಶ ನಿಲ್ದಾಣವನ್ನು ಹೊಂದಿರುವ ನಾಲ್ಕನೇ ದೇಶವಾಗುವ ಸಾಧ್ಯತೆಗಳಿವೆ. +ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಡಾ.ಉನ್ನಿಕೃಷ್ಣನ್ ನಾಯರ್ ಅವರು, ಕೆಲಸವು ಭರದಿಂದ ಸಾಗುತ್ತಿದೆ ಮತ್ತು ಭಾರತದ ಅತ್ಯಂತ ಭಾರವಾದ ರಾಕೆಟ್ ಬಾಹುಬಲಿ ಅಥವಾ ಲಾಂಚ್ ವೆಹಿಕಲ್ ಮಾರ್ಕ್ 3 ಅನ್ನು ಭೂಮಿಯಿಂದ ಸುಮಾರು 400 ಕಿಲೋಮೀಟರ್ ದೂರದ ಕಕ್ಷೆಗೆ ಜೋಡಿಸಲು ಯೋಜನೆ ಹೊಂದಿದೆ ಎಂದು ಹೇಳಿದರು. +ಆಸ್ಟ್ರೋಬಯಾಲಜಿ ಪ್ರಯೋಗಗಳು ಸೇರಿದಂತೆ ಬಾಹ್ಯಾಕಾಶದಲ್ಲಿ ಸೂಕ್ಷ್ಮ ಗುರುತ್ವಾಕರ್ಷಣೆಯ ಪ್ರಯೋಗಗಳನ್ನು ಮಾಡಲು ಮತ್ತು ಚಂದ್ರನ ಮೇಲ್ಮೈಯಲ್ಲಿ ಆವಾಸಸ್ಥಾನದ ಸಾಧ್ಯತೆಯನ್ನು ಅನ್ವೇಷಿಸಲು ವೇದಿಕೆಯನ್ನು ಬಳಸಲು ಭಾರತವು ಆಶಿಸುತ್ತಿದೆ. ಆರಂಭಿಕ ಅಂದಾಜಿನ ಪ್ರಕಾರ, ಬಾಹ್ಯಾಕಾಶ ನಿಲ್ದಾಣವು ಸುಮಾರು 20 ಟನ್ ತೂಕವಿರಬಹುದು. ಇದು ಘನ ರಚನೆಗಳಿಂದ ಮಾಡಲ್ಪಟ್ಟಿದೆ, ಆದರೆ ಗಾಳಿ ತುಂಬಬಹುದಾದ ಮಾಡ್ಯೂಲ್ಗಳನ್ನು ಸೇರಿಸಬಹುದು. ಅಂತಿಮ ಆವೃತ್ತಿಯು ಸುಮಾರು 400 ಟನ್‍ಗಳಿಗೆ ಹೋಗಬಹುದು ಎಂದಿದ್ದಾರೆ. +ಬಾಹ್ಯಾಕಾಶ ನಿಲ್ದಾಣದ ಒಂದು ತುದಿಯು ಗಗನಯಾತ್ರಿಗಳನ್ನು ಸಾಗಿಸುವ ಸಿಬ್ಬಂದಿ ಮಾಡ್ಯೂಲ್ ಮತ್ತು ರಾಕೆಟ್‍ಗಾಗಿ ಡಾಕಿಂಗ್ ಪೋರ್ಟ್ ಆಗಿರುತ್ತದೆ. ಇದಕ್ಕಾಗಿ ಭಾರತವು 21 ನೇ ಶತಮಾನದ ವಿಶೇಷ ಡಾಕಿಂಗ್ ಬಂದರನ್ನು ಅಭಿವೃದ್ಧಿಪಡಿಸುತ್ತಿದೆ ಮತ್ತು ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಡಾಕಿಂಗ್ ಪೋರ್ಟ್‍ಗೆ ಹೊಂದಿಕೆಯಾಗಬಹುದು. ಒಮ್ಮೆ ಪೂರ್ಣಗೊಂಡ ನಂತರ, ಭಾರತೀಯ ಬಾಹ್ಯಾಕಾಶ ನಿಲ್ದಾಣವು ನಾಲ್ಕು ವಿಭಿನ್ನ ಮಾಡ್ಯೂಲ್‍ಗಳನ್ನು ಮತ್ತು ಕನಿಷ್ಠ ನಾಲ್ಕು ಜೋಡಿ ಸೌರ ಫಲಕಗಳನ್ನು ಹೊಂದಬಹುದು. ಇದು ತುರ್ತು ಸಂದರ್ಭಗಳಲ್ಲಿ ಬಳಸಲು ಶಾಶ್ವತವಾಗಿ ಡಾಕ್ ಮಾಡಲಾದ ಸುರಕ್ಷತಾ ಸಿಬ್ಬಂದಿ ಮಾಡ್ಯೂಲ್ ಎಸ್ಕೇಪ್ ಸಿಸ್ಟಮ್ ಅನ್ನು ಸಹ ಹೊಂದಿರುತ್ತದೆ. +ಮುಖ್ಯ ಘಟಕವು ಭಾರತ-ನಿರ್ಮಿತ ಪರಿಸರ ಜೀವನ ಬೆಂಬಲ ಮತ್ತು ನಿಯಂತ್ರಣ ವ್ಯವಸ್ಥೆಯನ್ನು ಹೊಂದಿದೆ ಮತ್ತು ಇದು ಆಮ್ಲಜನಕವನ್ನು ಉತ್ಪಾದಿಸಲು ಮತ್ತು ಇಂಗಾಲದ ಡೈಆಕ್ಸೈಡ್ ಅನ್ನು ತೆಗೆದುಹಾಕಲು ಮತ್ತು ಸಾಪೇಕ್ಷ ಆದ್ರ್ರತೆಯನ್ನು ಗರಿಷ್ಠ ಮಟ್ಟದಲ್ಲಿ ಇರಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ರೇಖಾಚಿತ್ರಗಳ ಪ್ರಕಾರ, ಮೊದಲ ಹಂತದಲ್ಲಿ, ಭಾರತೀಯ ಅಂತರಿಕ್ಷ ನಿಲ್ದಾಣವನ್ನು ನಡೆಸಲು ಅಗತ್ಯವಿರುವ ಶಕ್ತಿಯನ್ನು ಉತ್ಪಾದಿಸುವ ಎರಡು ದೊಡ್ಡ ಸೌರ ಫಲಕಗಳನ್ನು ಹೊಂದಿರುತ್ತವೆ. \ No newline at end of file diff --git a/eesanje/url_47_154_5.txt b/eesanje/url_47_154_5.txt new file mode 100644 index 0000000000000000000000000000000000000000..37d8613d2d666230f73a0fc4c601155784285358 --- /dev/null +++ b/eesanje/url_47_154_5.txt @@ -0,0 +1,9 @@ +ಹೆಲಿಕಾಪ್ಟರ್ ತುರ್ತು ವೈದ್ಯಕೀಯ ಸೇವೆ ಆರಂಭ +ನವದೆಹಲಿ,ಮಾ.3- ದೇಶದಲ್ಲಿ ಹೆಲಿಕಾಪ್ಟರ್ ತುರ್ತು ವೈದ್ಯಕೀಯ ಸೇವೆ ಆರಂಭಿಸಲು ನಾಗರಿಕ ವಿಮಾನ ಸಚಿವಾಲಯ ನಿರ್ಧರಿಸಿದೆ. ರೋಗಿಗಳ ನಿರ್ಣಾಯಕ ಸುವರ್ಣ ಗಂಟೆಯೊಳಗೆ ತ್ವರಿತ ತುರ್ತು ವೈದ್ಯಕೀಯ ಆರೈಕೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಇಂತಹ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ರಿಷಿಕೇಶ ಹೆಲಿಪ್ಯಾಡ್‍ನಲ್ಲಿ ಒಂದು ವರ್ಷದ ಅವಧಿಗೆ ಏರ್ ಆಂಬುಲೆನ್ಸ್‍ಗಾಇ ಒಂದು ಹೆಲಿಕಾಪ್ಟರ್ ನೀಡಲಾಗಿದೆ. +ಈ ಯೋಜನೆಯು ಸನ್ನಿಹಿತ ಬಿಡುಗಡೆಗೆ ಸಿದ್ಧವಾಗಿದೆ, ಇತರ ರಾಜ್ಯಗಳಿಗೆ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುತ್ತದೆ, ಒಡಿಶಾ ಮತ್ತು ಮಧ್ಯಪ್ರದೇಶ ಇದೇ ರೀತಿಯ ಸೇವೆಗಳಲ್ಲಿ ತೀವ್ರ ಆಸಕ್ತಿಯನ್ನು ವ್ಯಕ್ತಪಡಿಸಿವೆ. ಆಯ್ಕೆಮಾಡಿದ ಹೆಲಿಕಾಪ್ಟರ್ ಸಂಪೂರ್ಣವಾಗಿ ಕಾರ್ಯಾಚರಣಾ ತುರ್ತು ವೈದ್ಯಕೀಯ ಸೇವೆ (ಇಎಂಎಸ್) ಕಿಟ್‍ನೊಂದಿಗೆ ಬರುತ್ತದೆ, ಸ್ಟ್ರೆಚರ್ ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳನ್ನು ಒಳಗೊಂಡಿರುತ್ತದೆ, 100 ನಾಟಿಕಲ್ ಮೈಲುಗಳ ದೂರದಲ್ಲಿ ಒಬ್ಬ ರೋಗಿಯ ಜೊತೆಗೆ ಒಬ್ಬರಿಂದ ಇಬ್ಬರು ವೈದ್ಯಕೀಯ ಸಿಬ್ಬಂದಿಯನ್ನು ಸಾಗಿಸಲು ಅನುಕೂಲವಾಗುತ್ತದೆ. +ಭಾರತ ಪೋಲಿಯೋ ಮುಕ್ತ ರಾಷ್ಟ್ರ ಸ್ಥಿತಿ ಕಾಪಾಡಿಕೊಳ್ಳಬೇಕು : ದಿನೇಶ್‍ ಗುಂಡೂರಾವ್ +ರಿಷಿಕೇಶದಿಂದ ವೈದ್ಯಕೀಯ ಮೇಲ್ವಿಚಾರಣೆ ಮತ್ತು ನಿರ್ದೇಶನವನ್ನು ಒದಗಿಸಲಾಗುತ್ತದೆ, ರೋಗಿಯ ಸ್ಥಿತಿಗೆ ಅನುಗುಣವಾಗಿ ಅಗತ್ಯ ವೈದ್ಯಕೀಯ ಸರಬರಾಜುಗಳ ಲಭ್ಯತೆಯನ್ನು ಖಾತ್ರಿಪಡಿಸುತ್ತದೆ. ಏತನ್ಮಧ್ಯೆ, ಪ್ರಾದೇಶಿಕ ಕೈಗಾರಿಕಾ ಸಮಾವೇಶ 2024 ರ ಸಂದರ್ಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಏರ್ ಆಂಬ್ಯುಲೆನ್ಸ್ ಸೇವೆಗಳನ್ನು ಉದ್ಘಾಟಿಸಿದರು. ಭೋಪಾಲ್‍ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಮಧ್ಯಪ್ರದೇಶದ ಏರ್ ಆಂಬ್ಯುಲೆನ್ಸ್ ಸೇವೆಯು ರಾಜ್ಯದಾದ್ಯಂತ ಆರೋಗ್ಯ ರಕ್ಷಣೆಯನ್ನು ಕ್ರಾಂತಿಗೊಳಿಸಲು ಸಿದ್ಧವಾಗಿದೆ. +ಹೆಲಿ-ಆಂಬ್ಯುಲೆನ್ಸ್ ಮತ್ತು ಫಿಕ್ಸೆಡ್-ವಿಂಗ್ ಏರ್ ಆಂಬ್ಯುಲೆನ್ಸ್ ಎರಡನ್ನೂ ಹೊಂದಿದ್ದು, ಈ ಸಮಗ್ರ ಸೇವೆಯು ಹೆಚ್ಚು ತರಬೇತಿ ಪಡೆದ ವೈದ್ಯರು ಮತ್ತು ಅರೆವೈದ್ಯರನ್ನು ಒಳಗೊಂಡಿದ್ದು, ಎಲ್ಲಾ ಜಿಲ್ಲೆಗಳು ಮತ್ತು ಆಡಳಿತ ವಿಭಾಗಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. +ಏಕ-ಎಂಜಿನ್ ಹೆಲಿಕಾಪ್ಟರ್ ಮತ್ತು ಸ್ಥಿರ-ವಿಂಗ್ ಪ್ಲೇನ್‍ನ ಸಂಯೋಜನೆಯು ತಡೆರಹಿತ ಹಗಲು ಮತ್ತು ರಾತ್ರಿ ಕಾರ್ಯಾಚರಣೆಗಳನ್ನು ಖಾತ್ರಿಗೊಳಿಸುತ್ತದೆ, ಮಧ್ಯಪ್ರದೇಶದ ಯಾವುದೇ ಭಾಗವನ್ನು ತಲುಪುವ ಸಾಮಥ್ರ್ಯವನ್ನು ಹೊಂದಿದೆ, ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣಗಳಲ್ಲಿ ಇಂಧನ ತುಂಬುವ ಆಯ್ಕೆಗಳನ್ನು ಸುಗಮಗೊಳಿಸುತ್ತದೆ. +ಬಿಜೆಪಿ ಸಂಕಲ್ಪ : 3 ಲಕ್ಷ ಜನರ ಅಭಿಪ್ರಾಯ ಸಂಗ್ರಹಕ್ಕೆ ಚಾಲನೆ +ಆಯುಷ್ಮಾನ್ ಭಾರತ್ ಯೋಜನೆಗೆ ಹೊಂದಿಕೊಂಡಂತೆ, ಅಗತ್ಯವಿದ್ದರೆ, ದೆಹಲಿ, ಮುಂಬೈ, ಚೆನ್ನೈ, ಅಥವಾ ಹೈದರಾಬಾದ್‍ನಂತಹ ಪ್ರಮುಖ ನಗರಗಳಲ್ಲಿರುವ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಅವರನ್ನು ಏರ್‍ಲಿಫ್ಟ್ ಮಾಡುವ ಮೊದಲು ಪಿಕಪ್ ಸ್ಥಳಗಳಲ್ಲಿ ರೋಗಿಗಳನ್ನು ಸ್ಥಿರಗೊಳಿಸಲು ಸೇವೆಯು ಆದ್ಯತೆ ನೀಡುತ್ತದೆ. \ No newline at end of file diff --git a/eesanje/url_47_154_6.txt b/eesanje/url_47_154_6.txt new file mode 100644 index 0000000000000000000000000000000000000000..bf7c5c3d3d3f43abfb73342dd6af3feb13de3d9b --- /dev/null +++ b/eesanje/url_47_154_6.txt @@ -0,0 +1,4 @@ +ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣ ಮೇಲ್ದರ್ಜೆಗೆ : ಕುಮಾರಸ್ವಾಮಿ ಹರ್ಷ +ಬೆಂಗಳೂರು, ಮಾ.3-ಸಾಂಸ್ಕøತಿಕ ನಗರಿ ಮೈಸೂರು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಐತಿಹಾಸಿಕ, ಪಾರಂಪರಿಕ ಮಹತ್ವವುಳ್ಳ ರಾಮನಗರ, ಚನ್ನಪಟ್ಟಣ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಂಕಲ್ಪ ಮಾಡಿರುವುದು ಅತೀವ ಸಂತಸ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. +ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, 20.93 ಕೋಟಿ ರೂ. ವೆಚ್ಚದಲ್ಲಿ ಚನ್ನಪಟ್ಟಣ ರೈಲು ನಿಲ್ದಾಣ, 20.96 ಕೋಟಿ ರೂ. ವೆಚ್ಚದಲ್ಲಿ ರಾಮನಗರ ರೈಲು ನಿಲ್ದಾಣವನ್ನು ಸ್ಥಳೀಯ ಸಾಂಸ್ಕøತಿಕ ಸೊಗಡಿನ ಮಾದರಿಯಲ್ಲಿಯೇ ಉನ್ನತೀಕರಿಸುತ್ತಿರುವುದು ಈ ಭಾಗದ ಜನರ ಆಶೋತ್ತರಗಳನ್ನು ಈಡೇರಿಸುವ ಬೃಹತ್ ಪ್ರಯತ್ನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. +ನಿತ್ಯವೂ ಉದ್ಯೋಗ, ವ್ಯವಹಾರಕ್ಕಾಗಿ ಎರಡೂ ನಗರಗಳ ನಡುವೆ ಸಂಚರಿಸುವ ಜಿಲ್ಲೆಯ ಅಸಂಖ್ಯಾತ ಜನರಿಗೆ ಅನುಕೂಲ ಆಗಲಿದೆ. ಈ ಕಾರಣಕ್ಕಾಗಿ ನಾನು ಪ್ರಧಾನಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_154_7.txt b/eesanje/url_47_154_7.txt new file mode 100644 index 0000000000000000000000000000000000000000..24a2354dae01ef54cf911fa80c1998f53fcecfc7 --- /dev/null +++ b/eesanje/url_47_154_7.txt @@ -0,0 +1,6 @@ +ಬಡವರ ವಿರೋಧಿಯಾದ ಭಾರತೀಯ ರೈಲ್ವೇ ನೀತಿ ; ರಾಹುಲ್ ಟೀಕೆ +ನವದೆಹಲಿ, ಮಾ.3 (ಪಿಟಿಐ) ಶ್ರೀಮಂತರನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರ ಭಾರತೀಯ ರೈಲ್ವೇ ನೀತಿಗಳನ್ನು ರೂಪಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ನಂಬಿಕೆ ದ್ರೋಹದ ಗ್ಯಾರಂಟಿ ಇದು ಎಂದಿದ್ದಾರೆ. +ಹವಾಯಿ ಚಪ್ಪಲಿ (ಚಪ್ಪಲಿ) ಧರಿಸಿದವರಿಗೆ ಹವಾಯಿ ಜಹಾಜಾ (ವಿಮಾನ) ಮೂಲಕ ಪ್ರಯಾಣಿಸುವ ಕನಸನ್ನು ತೋರಿಸುವ ಮೂಲಕ ಪ್ರಧಾನಿ ಮೋದಿ ಅವರನ್ನು ಗರೀಬೋನ್ ಕಿ ಸವರಿ ನಿಂದ ದೂರವಿಡುತ್ತಿದ್ದಾರೆ ಎಂದು ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್‍ನಲ್ಲಿ ಗಾಂಧಿ ಆರೋಪಿಸಿದ್ದಾರೆ. ಪ್ರತಿ ವರ್ಷ ಶೇ.10ರಷ್ಟು ಪ್ರಯಾಣ ದರ ಹೆಚ್ಚಳ, ಡೈನಾಮಿಕ್ ದರದ ಹೆಸರಿನಲ್ಲಿ ಲೂಟಿ, ರದ್ದತಿ ದರ ಏರಿಕೆ, ದುಬಾರಿ ಬೆಲೆಯ ಪ್ಲಾಟ್‍ಫಾರ್ಮ್ ಟಿಕೆಟ್‍ಗಳ ನಡುವೆ ಬಡವರು ಕಾಲಿಡಲೂ ಸಾಧ್ಯವಾಗದಂತಹ ಗಣ್ಯರ ರೈಲಿನ ಚಿತ್ರ ತೋರಿಸಿ ಜನರನ್ನು ಸೆಳೆಯಲಾಗುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಹಿರಿಯ ನಾಗರಿಕರಿಗೆ ನೀಡಲಾಗಿದ್ದ ವಿನಾಯಿತಿಗಳನ್ನು ಕಿತ್ತುಕೊಳ್ಳುವ ಮೂಲಕ ಕಳೆದ ಮೂರು ವರ್ಷಗಳಲ್ಲಿ 3,700 ಕೋಟಿ ರೂ.ಗಳನ್ನು ಸರಕಾರ ವಸೂಲಿ ಮಾಡಿದೆ. ಪ್ರಚಾರಕ್ಕಾಗಿ ಆಯ್ಕೆಯಾದ ರೈಲಿಗೆ ಆದ್ಯತೆ ನೀಡಲು ಸಾಮಾನ್ಯ ಜನರ ರೈಲುಗಳನ್ನು ಸೊರಗುವಂತೆ ಮಾಡಲಾಗಿದೆ ಎಂದು ಗಾಂಧಿ ಹೇಳಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಪ್ರಯಾಣಿಕರನ್ನು ರೈಲ್ವೆಯ ಆದ್ಯತೆಯಿಂದ ಹೊರಗಿಡಲಾಗಿದೆ ಎಂದು ಅವರು ದೂರಿದ್ದಾರೆ. +ಎಸಿ ಕೋಚ್‍ಗಳ ಸಂಖ್ಯೆಯನ್ನು ಹೆಚ್ಚಿಸಲು, ಜನರಲ್ ಕೋಚ್‍ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ಈ (ಜನರಲ) ಬೋಗಿಗಳಲ್ಲಿ ಕಾರ್ಮಿಕರು ಮತ್ತು ರೈತರು ಮಾತ್ರವಲ್ಲದೆ ವಿದ್ಯಾರ್ಥಿಗಳು ಮತ್ತು ಸೇವಾ ವರ್ಗದವರೂ ಪ್ರಯಾಣಿಸುತ್ತಾರೆ. ಎಸಿ ಕೋಚ್‍ಗಳ ಉತ್ಪಾದನೆಯನ್ನು ಮೂರು ಪಟ್ಟು ಹೆಚ್ಚಿಸಲಾಗಿದೆ. ವಾಸ್ತವವಾಗಿ, ರೈಲ್ವೆ ಬಜೆಟ್ ಅನ್ನು ಪ್ರತ್ಯೇಕವಾಗಿ ಪ್ರಸ್ತುತಪಡಿಸುವ ಸಂಪ್ರದಾಯವನ್ನು ಕೊನೆಗೊಳಿಸುವುದು ಈ ಶೋಷಣೆಗಳನ್ನು ಮರೆಮಾಡುವ ಪಿತೂರಿಯಾಗಿದೆ ಎಂದು ಗಾಂಧಿ ಆರೋಪಿಸಿದರು. +ಕೇವಲ ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡು ರೈಲ್ವೆಯ ನೀತಿಗಳನ್ನು ರೂಪಿಸಲಾಗುತ್ತಿದೆ ಮತ್ತು ಇದು ಅದನ್ನು ಅವಲಂಬಿಸಿರುವ ಭಾರತದ ಶೇಕಡಾ 80 ರಷ್ಟು ಜನಸಂಖ್ಯೆಗೆ ದ್ರೋಹ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_47_154_8.txt b/eesanje/url_47_154_8.txt new file mode 100644 index 0000000000000000000000000000000000000000..6f229d19bff29ddf61bdf263c813b4940b15119f --- /dev/null +++ b/eesanje/url_47_154_8.txt @@ -0,0 +1,7 @@ +ಟಿಎಂಸಿಯೊಂದಿಗೆ ಮೈತ್ರಿಗೆ ಇನ್ನೂ ಬಾಗಿಲು ತೆರೆದಿದೆ : ಕಾಂಗ್ರೆಸ್ +ಗ್ವಾಲಿಯರ್, ಮಾ 3 (ಪಿಟಿಐ) ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಸ್ರ್ಪಧಿಸಲು ತೃಣಮೂಲ ಕಾಂಗ್ರೆಸ್ ನಿರ್ಧರಿಸಿದ್ದರೂ, ಮುಂಬರುವ ಸಾರ್ವತ್ರಿಕ ಚುನಾವಣೆಗೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯೊಂದಿಗೆ ಮೈತ್ರಿಗೆ ಇನ್ನೂ ಬಾಗಿಲು ತೆರೆದಿದೆ ಎಂದು ಕಾಂಗ್ರೆಸ್ ಹೇಳಿದೆ. +ಪಾಟ್ನಾದಲ್ಲಿ ಪ್ರತಿಪಕ್ಷಗಳ ರ್ಯಾಲಿಗೆ ಮುನ್ನ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು ತಮ್ಮ ಪಕ್ಷದ ಈ ತೀರ್ಮಾನವನ್ನು ಪಿಟಿಐಗೆ ತಿಳಿಸಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂಡಿಯಾ ಒಕ್ಕೂಟದ ಮೈತ್ರಿಯಲ್ಲಿದ್ದೇನೆ ಎಂದು ಹೇಳಿದಾಗ, ಬಿಜೆಪಿಯನ್ನು ಸೋಲಿಸುವುದು ಅವರ ಆದ್ಯತೆಯಾಗಿದೆ ಎಂದು ನಂಬುತ್ತಾರೆ ಎಂದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ. +ನಾವು ಯಾವುದೇ ಬಾಗಿಲು ಮುಚ್ಚಿಲ್ಲ. ಅವರು ಎಲ್ಲಾ 42 ಸ್ಥಾನಗಳಿಗೆ (ಪಶ್ಚಿಮ ಬಂಗಾಳದಲ್ಲಿ) ಸ್ರ್ಪಧಿಸುವುದಾಗಿ ಏಕಪಕ್ಷೀಯವಾಗಿ ಘೋಷಿಸಿದ್ದಾರೆ, ಅದು ಅವರ ಘೋಷಣೆಯಾಗಿದೆ. ನಮಗೆ ಸಂಬಂಧಪಟ್ಟಂತೆ, ಮಾತುಕತೆಗಳು ಇನ್ನೂ ಮುಂದುವರೆದಿದೆ, ಬಾಗಿಲುಗಳು ಇನ್ನೂ ತೆರೆದಿವೆ ಮತ್ತು ಅಂತಿಮ ಮಾತು ಹೇಳುವವರೆಗೂ ಅಂತಿಮ ಮಾತನ್ನು ಹೇಳುವುದಿಲ್ಲ ಎಂದಿದ್ದಾರೆ. +ಇದು ಅತ್ಯಂತ ಮಹತ್ವದ ರಾಜಕೀಯ ರ್ಯಾಲಿಯಾಗಿದ್ದು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳನ್ನು ಸೋಲಿಸಲು ಪ್ರತಿಪಕ್ಷಗಳ ಒಗ್ಗಟ್ಟನ್ನು ತೋರಿಸುತ್ತದೆ ಎಂದು ಅವರು ಹೇಳಿದರು. ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ರ್ಯಾಲಿಯಲ್ಲಿ ಭಾಗವಹಿಸಲು ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ವಿರಾಮ ನೀಡಿದ್ದಾರೆ ಎಂದು ಅವರು ಹೇಳಿದರು. +ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ರ್ಯಾಲಿಗಾಗಿ ಪಾಟ್ನಾಕ್ಕೆ ಹೋಗಬೇಕಾಗಿರುವುದರಿಂದ ಸ್ವಲ್ಪ ಬದಲಾವಣೆಯಾಗಿದೆ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಅದರಲ್ಲಿ ಭಾಗವಹಿಸಲಿದ್ದಾರೆ ಎಂದು ರಮೇಶ್ ಹೇಳಿದರು. ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಲೋಕದಳ ಭಾಗವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮೇಶ್ ಅವರು ಅಲಿಘರ್‍ನಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ನೈಜ ಲೋಕದಳ ಸ್ವಾಗತಿಸಿತು. +ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಇಂದಿರಾ ಗಾಂಧಿ ಮತ್ತು ಲೋಕದಳದ ಪೋಸ್ಟರ್‍ಗಳು, ಬ್ಯಾನರ್‍ಗಳು ಮತ್ತು ಹೋರ್ಡಿಂಗ್‍ಗಳು ಅಲ್ಲಿದ್ದವು ಎಂದು ಅವರು ಹೇಳಿದರು. ಕೇಂದ್ರ ಸರ್ಕಾರ ಇತ್ತೀಚೆಗೆ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಿ ಗೌರವಿಸಿದ ನಂತರ ಆರ್‍ಎಲ್‍ಡಿ ಬಿಜೆಪಿ ನೇತೃತ್ವದ ಎನ್‍ಡಿಎಗೆ ಸೇರ್ಪಡೆಗೊಂಡಿದೆ. \ No newline at end of file diff --git a/eesanje/url_47_154_9.txt b/eesanje/url_47_154_9.txt new file mode 100644 index 0000000000000000000000000000000000000000..5f44e645e60b7d84b3b63b2d180931a2a9aeb26a --- /dev/null +++ b/eesanje/url_47_154_9.txt @@ -0,0 +1,4 @@ +ಮನೆ ಕುಸಿದು ತಾಯಿ ಮತ್ತು ಮೂವರು ಪುತ್ರಿಯರ ದುರ್ಮರಣ +ಜಮ್ಮು, ಮಾ 3 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಕಚ್ಚಾ ಮನೆ ಕುಸಿದು ಬಿದ್ದ ಪರಿಣಾಮ ತಾಯಿ ಮತ್ತು ಅವರ ಮೂವರು ಪುತ್ರಿಯರು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಮ್ಮು ಪ್ರದೇಶದ ವಿವಿಧ ಭಾಗಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯಿಂದ ವಸತಿ ಮನೆಗಳು ಸೇರಿದಂತೆ ಡಜನ್‍ಗಟ್ಟಲೆ ಕಟ್ಟಡಗಳು ಹಾನಿಗೊಳಗಾಗಿವೆ. +ರಿಯಾಸಿ ಘಟನೆಯಲ್ಲಿ ಫಲ್ಲೆ ಅಖ್ತರ್ (30), ಅವರ ಪುತ್ರಿಯರಾದ ನಸಿಮಾ (5), ಸಫೀನಾ ಕೌಸರ್ (3) ಮತ್ತು ಸಮ್ರೀನ್ ಕೌಸರ್ (2) ಅವರು ಚಸ್ಸಾನಾ ತಹಸಿಲ್‍ನ ಕುಂದರ್‍ಧನ್ ಮೊಹ್ರಾ ಗ್ರಾಮದಲ್ಲಿ ಭಾರೀ ಮಳೆಯ ನಂತರ ಅವರ ಮನೆ ಕುಸಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಘಟನೆಯಲ್ಲಿ ಕುಟುಂಬದ ಇಬ್ಬರು ಹಿರಿಯ ಸದಸ್ಯರಾದ ಕಾಲು (60) ಮತ್ತು ಅವರ ಪತ್ನಿ ಬಾನೋ ಬೇಗಂ (58) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಕ್ಷಕರು ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದ್ದಿದ್ದಾರೆ. \ No newline at end of file diff --git a/eesanje/url_47_155_1.txt b/eesanje/url_47_155_1.txt new file mode 100644 index 0000000000000000000000000000000000000000..ff255ebe0ec816c7c55f302afe6e9d55a7d5c06f --- /dev/null +++ b/eesanje/url_47_155_1.txt @@ -0,0 +1,6 @@ +ಖರ್ಗೆ, ಜೈರಾಂ ರಮೇಶ್‍ಗೆ ಗಡ್ಕರಿ ನೋಟೀಸ್ +ನಾಗ್ಪುರ(ಮಹಾರಾಷ್ಟ್ರ),ಮಾ.2- ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಮಾಹಿತಿ ಮತ್ತು ಅವಹೇಳನಕಾರಿ ವಿಡಿಯೋವನ್ನುಹರಡುತ್ತಿದೆ ಎಂದು ಆರೋಪಿಸಿ, ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೀಗಲ್ ನೋಟೀಸ್ ಜಾರಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರಿಗೆ ಈ ನೋಟಿಸ್‍ನೀಡಲಾಗಿದೆ. +ಕಾಂಗ್ರೆಸ್‍ನ ಹಿರಿಯ ನಾಯಕರು ಪಕ್ಷ ಸೇರಿದಂತೆ ಅವರ ವೈಯಕ್ತಿಕ ಎಕ್ಸ್ ಖಾತೆಯಲ್ಲಿ ತಮ್ಮ ವಿರುದ್ಧದ ಸುಳ್ಳು ಮಾಹಿತಿಯುಳ್ಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಿಂದ ತಮಗೆ ಅಪಖ್ಯಾತಿ ತಂದಿದ್ದಾರೆ ಎಂದು ಕೇಂದ್ರ ಸಚಿವರು ಅದರಲ್ಲಿ ದೂರಿದ್ದಾರೆ. ವೆಬ್‍ಪೋರ್ಟಲ್‍ವೊಂದಕ್ಕೆ ತಾವು ನೀಡಿರುವ ಸಂದರ್ಶನದ 19 ಸೆಕೆಂಡ್‍ಗಳ ವಿಡಿಯೋವನ್ನು ತಿರುಚಿ ಸಂದರ್ಭೋಚಿತ ವಾಕ್ಯ, ಪದಗಳನ್ನು ಕತ್ತರಿಸಿ ತಪ್ಪಾಗಿ ಅರ್ಥೈಸುವಂತೆ ಮಾಡಿ ಕಾಂಗ್ರೆಸ್ ಅಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಈ ದೃಶ್ಯವನ್ನು ಹಂಚಿಕೊಳ್ಳಲಾಗಿದೆ. +ಇದನ್ನು ಕೇಳುವ ಮತ್ತು ನೋಡುವ ಜನರಿಗೆ ಸುಳ್ಳು ಮಾಹಿತಿ ರವಾನೆಯಾಗುತ್ತದೆ ಎಂದು ನೋಟಿಸ್‍ನಲ್ಲಿ ಉಲ್ಲೇಖಿಸಿದ್ದಾರೆ. ವಿಡಿಯೋ ತುಣುಕಿನಲ್ಲಿ ಪದಗಳ ಸಂದರ್ಭೋಚಿತ ಉದ್ದೇಶ ಮತ್ತು ಅರ್ಥವನ್ನು ಮರೆಮಾಚಲಾಗಿದೆ. ಸಾರ್ವಜನಿಕರ ದೃಷ್ಟಿಯಲ್ಲಿ ಗಡ್ಕರಿ ಅವರ ಬಗ್ಗೆ ಗೊಂದಲ, ಅಪಖ್ಯಾತಿ ಸೃಷ್ಟಿಸುವ ದುರುದ್ದೇಶ ಇದರ ಹಿಂದಿದೆ. ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ನಡುವೆ ಬಿರುಕು ಮೂಡಿಸಲು ಪ್ರಯತ್ನ ನಡೆಸಲಾಗಿದೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ. +ವಿಡಿಯೋದಲ್ಲೇನಿದೆ: ನಿತಿನ್ ಗಡ್ಕರಿ ಅವರು ಹಿಂದಿಯಲ್ಲಿ ಮಾತನಾಡುತ್ತಿರುವ ವಿಡಿಯೋದಲ್ಲಿ, ಇಂದು ಹಳ್ಳಿಗಳಲ್ಲಿ ಸಾಮಾನ್ಯರು ಮತ್ತು ರೈತರು ಸಂಕಷ್ಟದಲ್ಲಿದ್ದಾರೆ. ಗ್ರಾಮಗಳಿಗೆ ಉತ್ತಮ ರೀತಿಯ ರಸ್ತೆಗಳಿಲ್ಲ, ಕುಡಿಯುವ ನೀರಿನ ಸೌಲಭ್ಯವಿಲ್ಲ. ಗುಣಮಟ್ಟದ ಆಸ್ಪತ್ರೆಗಳು, ಸರ್ಕಾರಿ ಶಾಲೆಗಳು ಇಲ್ಲವಾಗಿವೆ ಎಂದು ಹೇಳುತ್ತಿರುವುದು ಕಾಣಬಹುದು. ಸಂದರ್ಶನದಲ್ಲಿ ಅವರು ಹೇಳಿದ್ದನ್ನು ಸಂಪೂರ್ಣವಾಗಿ ತಿರುಚಲಾಗಿದೆ ಎಂದು ಗಡ್ಕರಿ ಆಕ್ಷೇಪಿಸಿದ್ದರೆ. +ಕ್ಷಮೆಯಾಚಿಸಲು ಸೂಚನೆ:ಮೈಕ್ರೋಬ್ಲಾಗಿಂಗ್ ಖಾತೆಯಲ್ಲಿ ತಿರುಚಿದ ವಿಡಿಯೋವನ್ನು ಹಂಚಿಕೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮತ್ತು ಜೈರಾಮ್‍ರಮೇಶ್ ಅವರು ನೋಟಿಸ್ ಜಾರಿಯಾದ 24 ಗಂಟೆಯೊಳಗೆ ಸಾಮಾಜಿಕ ಜಾಲತಾಣಗಳಿಂದ ವಿಡಿಯೋವನ್ನು ಅಳಿಸಿ ಹಾಕಬೇಕು. ಮೂರು ದಿನಗಳಲ್ಲಿ ಲಿಖಿತವಾಗಿ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಸಿವಿಲ್ ಅಥವಾ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. \ No newline at end of file diff --git a/eesanje/url_47_155_10.txt b/eesanje/url_47_155_10.txt new file mode 100644 index 0000000000000000000000000000000000000000..2c7c44a614d67aa7a6364a8ff2cc76e1b0fb8117 --- /dev/null +++ b/eesanje/url_47_155_10.txt @@ -0,0 +1,7 @@ +ಮುಂದಿನ ತಿಂಗಳು ಪೌರತ್ವ ಕಾಯ್ದೆ ಜಾರಿ..!? +ನವದೆಹಲಿ,ಫೆ.28- 2014 ರ ಡಿಸೆಂಬರ್‍ಗೂ ಮೊದಲು ಭಾರತದಲ್ಲಿ ನೆಲೆಸಿರುವ ಮೂರು ನೆರೆಯ ದೇಶಗಳ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೌರತ್ವವನ್ನು ನೀಡುವ ಪೌರತ್ವ ತಿದ್ದುಪಡಿ ಕಾಯ್ದೆಯು ಮುಂದಿನ ತಿಂಗಳಿನಿಂದ ಜಾರಿಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ನೋಂದಣಿಗಾಗಿ ಆನ್‍ಲೈನ್ ಪೋರ್ಟಲ್ ಸಿದ್ಧವಾಗಿದೆ. ಈ ನಿಯಮವು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಹಿಂದೂಗಳು, ಸಿಖ್ಖರು, ಬೌದ್ಧರು ಮತ್ತು ಕ್ರಿಶ್ಚಿಯನ್ನರಿಗೆ ಅನ್ವಯಿಸುತ್ತದೆ. ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಇದು ಜಾರಿಗೆ ಬರಲಿದೆ ಎಂದು ಮೂಲಗಳು ಹೇಳಿವೆ. +ಸಿಎಎ ಅನುಷ್ಠಾನವು 2019 ರ ಲೋಕಸಭೆ ಚುನಾವಣೆ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಪ್ರಮುಖ ಚುನಾವಣಾ ಕಾರ್ಯಸೂಚಿಯಾಗಿತ್ತು. ಅಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೆ ವಿರೋಧಿಸಿತ್ತು. ಕಳೆದ ವರ್ಷ ಡಿಸೆಂಬರ್‍ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸಿಎಎ ಅನುಷ್ಠಾನ ತಡೆಯಲು ಸಾಧ್ಯವಿಲ್ಲ. ಏಕೆಂದರೆ ಇದು ದೇಶದ ಕಾನೂನು ಎಂದು ಘೋಷಿಸಿದ್ದರು. ಬಹುಸಂಖ್ಯಾತರ ಭಾವನೆಗಳನ್ನೇ ಬಂಡವಾಳ ಮಾಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಆರೋಪ ಬಿಜೆಪಿ ವಿರುದ್ಧ ಕೇಳಿ ಬರುತ್ತಿದೆ. +ದಾಖಲೆಗಳನ್ನು ಹೊಂದಿರದ ಈ ನೆರೆಯ ದೇಶಗಳ ನಿರಾಶ್ರಿತರಿಗೆ ಸಿಎಎ ಸಹಾಯ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯವು ಸ್ವೀಕರಿಸಿದ ದೀರ್ಘಾವಧಿಯ ವೀಸಾಗಳಿಗಾಗಿ ಗರಿಷ್ಠ ಸಂಖ್ಯೆಯ ಅರ್ಜಿಗಳು ಪಾಕಿಸ್ತಾನದಿಂದ ಬಂದವು. ಕಳೆದ ಎರಡು ವರ್ಷಗಳಲ್ಲಿ ಪೌರತ್ವ ಕಾಯಿದೆ – 1955ರ ಅಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲು ಒಂಬತ್ತು ರಾಜ್ಯಗಳ 30 ಕ್ಕೂ ಹೆಚ್ಚು ಜಿಲ್ಲಾ ಮ್ಯಾಜಿಸ್ಟ್ರೇಟ್‍ಗಳು ಮತ್ತು ಗೃಹ ಕಾರ್ಯದರ್ಶಿಗಳಿಗೆ ಅಧಿಕಾರವನ್ನು ನೀಡಲಾಗಿದೆ. +ರಾಜ್ಯಸಭಾ ಚುನಾವಣೆ : ಮತದಾನ ಮಾಡದಿರುವುದಕ್ಕೆ ಸ್ಪಷ್ಟನೆ ನೀಡಿದ ಹೆಬ್ಬಾರ್ +ಕೇಂದ್ರ ಗೃಹ ಸಚಿವಾಲಯದ ವಾರ್ಷಿಕ ವರದಿಯ ಪ್ರಕಾರ, 2021ರ ಏ.1ರಿಂದ ಡಿಸೆಂಬರ್ 31ರವರೆಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಒಟ್ಟು 1,414 ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಪೌರತ್ವ ಕಾಯ್ದೆ 1955ರ ಅಡಿಯಲ್ಲಿ ನೋಂದಣಿ ಅಥವಾ ನೈಸರ್ಗಿಕೀಕರಣದ ಮೂಲಕ ಭಾರತೀಯ ಪೌರತ್ವ ನೀಡಲಾಗಿದೆ. +ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ದೇಶಾದ್ಯಂತ ಪ್ರತಿಭಟನೆಯ ಬಿರುಗಾಳಿ ಎಬ್ಬಿಸಿತ್ತು. ಕೋವಿಡ್ ಸಾಂಕ್ರಾಮಿಕದಿಂದಾಗಿ ಪ್ರತಿಭಟನೆಗಳು ಅಂತ್ಯಗೊಂಡವು. ಪ್ರತಿಭಟನೆ ನಿಲ್ಲುವ ಮೊದಲು ದೇಶದಾದ್ಯಂತ ಹೊರತರಬೇಕಾಗಿದ್ದ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಕೇಂದ್ರವು ತಡೆಹಿಡಿಯಿತು. \ No newline at end of file diff --git a/eesanje/url_47_155_11.txt b/eesanje/url_47_155_11.txt new file mode 100644 index 0000000000000000000000000000000000000000..0a9f8517ba17ab683412b21e5829454f8accaf9b --- /dev/null +++ b/eesanje/url_47_155_11.txt @@ -0,0 +1,6 @@ +ಹಿಮಾಚಲ ಪ್ರದೇಶ : 15 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿದ ಸ್ಪೀಕರ್ +ಶಿಮ್ಲಾ(ಹಿಮಾಚಲಪ್ರದೇಶ),ಫೆ.28- ಸ್ಪೀಕರ್ ಚೇಂಬರ್‍ನಲ್ಲಿ ಘೋಷಣೆ ಕೂಗಿದ ಆರೋಪದ ಮೇಲೆ ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ ಸೇರಿದಂತೆ 15 ಬಿಜೆಪಿ ಶಾಸಕರನ್ನು ವಿಧಾನಸಭೆ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಅವರು ಅಮಾನತುಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗದ್ದಲ ಮುಂದುವರೆದಿದೆ, ಒಂದೆಡೆ ಕಾಂಗ್ರೆಸ್ ಸರ್ಕಾರ ಬಿಕ್ಕಟ್ಟಿಗೆ ಸಿಲುಕಿದ್ದರೆ ಇನ್ನೊಂದೆಡೆ ಸರ್ಕಾರವನ್ನು ಉಳಿಸಲು ವಿಧಾನಸಭೆಯಲ್ಲಿ ಹೊಸ ಆಟ ಶುರುವಾಗಿದೆ. +ಮಾಜಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಸೇರಿದಂತೆ 15 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆ ಸ್ಪೀಕರ್ ಅಧಿವೇಶನದಿಂದ ಅಮಾನತು ಮಾಡಿದ್ದಾರೆ. ಯಾವುದೇ ಮತದಾನ ಮಾಡುವುದಾದರೆ ಕೇವಲ 10 ಶಾಸಕರು ಮಾತ್ರ ಅಲ್ಲಿರುತ್ತಾರೆ. ಇದೇ ವೇಳೆ ಯಾವುದೇ ಅಡೆತಡೆಯಿಲ್ಲದೆ ಬಜೆಟ್ ಮಂಡನೆಯಾಗಲಿದ್ದು, ಅಧಿವೇಶನವನ್ನು ಅನಿರ್ದಿಷ್ಟಾವಗೆ ಮುಂದೂಡಲಾಗುತ್ತದೆ. ಜೈರಾಮ್ ಠಾಕೂರ್, ವಿಪಿನ್ ಸಿಂಗ್ ಪರ್ಮಾರ್, ರಣೀರ್ ಶರ್ಮಾ,ಲೋಕೇಂದ್ರ ಕುಮಾರ್, ವಿನೋದ್ ಕುಮಾರ್, ಹಂಸರಾಜ್, ಜನಕ್‍ರಾಜ್, ಬಲ್‍ಬೀರ್ ವರ್ಮಾ, ತ್ರಿಲೋಕ್ ಜಮ್ವಾಲ್, ಸುರೇಂದ್ರ ಶೋರಿ, ದೀಪ್‍ರಾಜ್, ಪುರಣ್‍ಠಾಕೂರ್, ಇಂದರ್ ಸಿಂಗ್ ಗಾಂಧಿ ಮತ್ತು ದಿಲೀಪ್ ಠಾಕೂರ್ ಸೇರಿದಂತೆ ಬಿಜೆಪಿಯಿಂದ ಉಚ್ಛಾಟಿತ ಶಾಸಕರೂ ಇದ್ದಾರೆ. +ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ +ಸದನದಲ್ಲಿ ಗದ್ದಲ ಎಬ್ಬಿಸಿದಕ್ಕಾಗಿ ಹಾಗೂ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ತಿಳಿಸಿದ್ದಾರೆ. ಆದರೆ ಇದು ಅನ್ಯಾಯದ ಕ್ರಮ ಎಂದು ಬಿಜೆಪಿ ಹೇಳುತ್ತಿದ್ದು, ಕಾಂಗ್ರೆಸ್ ಸರ್ಕಾರವನ್ನು ಉಳಿಸಲು ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿದ್ದಾರೆ. ಇಂದು ಬೆಳಗ್ಗೆಯೇ ಜೈ ರಾಮ್ ಠಾಕೂರ್ ನೇತೃತ್ವದ ಬಿಜೆಪಿ ನಾಯಕರು ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ ಅವರನ್ನು ಭೇಟಿ ಮಾಡಿದ್ದಾರೆ. +ಸದನದಲ್ಲಿ ವಿಶ್ವಾಸಮತ ಪರೀಕ್ಷೆ ನಡೆದರೆ ಅಥವಾ ಬಜೆಟ್ ಮಂಡನೆಗೆ ಮತದಾನಕ್ಕೆ ಒತ್ತಾಯಿಸಿದರೆ ಕಾಂಗ್ರೆಸ್ ಸರ್ಕಾರ ಅಲ್ಪ ಮತಗಳನ್ನು ಪಡೆಯುವ ಸಾಧ್ಯತೆ ಇದೆ ಎಂದು ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿದ್ದಾರೆ. \ No newline at end of file diff --git a/eesanje/url_47_155_12.txt b/eesanje/url_47_155_12.txt new file mode 100644 index 0000000000000000000000000000000000000000..e1518f92633ec511f0739b6284df1534bd6b7857 --- /dev/null +++ b/eesanje/url_47_155_12.txt @@ -0,0 +1,6 @@ +ಗುಜರಾತ್‍ನ ಕರಾವಳಿಯಲ್ಲಿ ಬರೋಬ್ಬರಿ 3,300 ಕೆಜಿ ಡ್ರಗ್ಸ್ ವಶ +ಪೋರಬಂದರ್, ಫೆ 28- ಗುಜರಾತ್‍ನ ಕರಾವಳಿಯಲ್ಲಿ ಭಾರತೀಯ ನೌಕಾಪಡೆ ಮತ್ತು ಎನ್‍ಸಿಬಿ ಜಂಟಿ ಕಾರ್ಯಾಚರಣೆ ಯಲ್ಲಿ ಐವರನ್ನು ಬಂಧಿಸಿ 3,300 ಕೆಜಿ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯ ವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ವಶಪಡಿಸಿಕೊಂಡ ಡ್ರಗ್ಸ್‍ನಲ್ಲಿ 3,089 ಕಿಲೋಗ್ರಾಂ ಚರಸ್, 158 ಕೆಜಿ ಮೆಥಾಂಫೆಟಮೈನ್ ಮತ್ತು 25 ಕೆಜಿ ಮಾರ್ಫಿನ್ ಸೇರಿವೆ, ಬಂಧಿತರನ್ನು ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದೊಂದಿಗೆ ಸಂಯೋಜಿತ ಕಾರ್ಯಾಚರಣೆಯಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಧೋಣಿಯನ್ನು ವಶಪಡಿಸಿಕೊಂಡಿದೆ. +ಪಾಕ್ ಪರ ಘೋಷಣೆ ಪ್ರಕರಣವನ್ನು NIAಗೆ ವಹಿಸಲು ಸುನಿಲ್‍ಕುಮಾರ್ ಒತ್ತಾಯ +ಇದು ಅತಿ ದೊಡ್ಡ ಕಾರ್ಯಾಚರಣೆಯಾಗಿದೆ,ಎನ್‍ಸಿಬಿಯೊಂದಿಗೆ ಭಾರತೀಯ ನೌಕಾಪಡೆಯ ಮಿಷನ್ ಸಹಕಾರಿ ಪ್ರಯತ್ನಗಳ ಮೂಲಕ ಸಾಧ್ಯವಾಯಿತು. ನಿಷಿದ್ಧ ವಸ್ತುವಿನ ಬೆಲೆಯನ್ನು ಅಧಿಕಾರಿಯು ನಿರ್ದಿಷ್ಟಪಡಿಸಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ಚರಸ್ ಬೆಲೆ 7 ಕೋಟಿ ರೂ ಎಂದು ಸೇನಾ ವಕ್ತಾರರು ಹೇಳಿದ್ದಾರೆ. +ನಿರ್ದಿಷ್ಟ ಸುಳಿವು ಆಧರಿಸಿ ಅರಬ್ಬಿ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ಬಳಿ ಕಾರ್ಯಾಚರಣೆ ನಡೆಸಲಾಗಿದೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಹಿರಿಯ ಅಧಿಕಾರಿಯೊಬ್ಬರು ರಾಜ್ಯ ಕರಾವಳಿಯ ಮಧ್ಯ ಸಮುದ್ರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೋಣಿಯಿಂದ ಚರಸ್ (ಹಶಿಶ್) ಸೇರಿದಂತೆ ವಿವಿಧ ರೀತಿಯ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_155_2.txt b/eesanje/url_47_155_2.txt new file mode 100644 index 0000000000000000000000000000000000000000..c453725cf2b279520eebbf1c278245ca7f7b0498 --- /dev/null +++ b/eesanje/url_47_155_2.txt @@ -0,0 +1,6 @@ +ಕುಕ್ಕರ್ ಬಾಂಬ್‍ಗೂ ನಿನ್ನೆಯ ಸ್ಪೋಟಕ್ಕೂ ಸಂಬಂಧವಿಲ್ಲ : ಸಿಎಂ ಸಿದ್ದರಾಮಯ್ಯ +ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರ ತನಿಖೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಂತದಲ್ಲಿ ಯಾವ ಸಂಘಟನೆ, ಯಾರ ಕೈವಾಡ ಎಂಬುದನ್ನು ಹೇಳಲು ಸಾಧ್ಯವಿಲ್ಲ. ತನಿಖೆ ಗಂಭೀರವಾಗಿ ನಡೆಯುತ್ತಿದೆ. ವ್ಯಕ್ತಿಯನ್ನು ಪತ್ತೆ ಹಚ್ಚಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. +ಸ್ಪೋಟ ಸಂಭವಿಸಿರುವುದಂತೂ ನಿಜ. ಮಾಸ್ಕ್ ಹಾಗೂ ಟೋಪಿ ಧರಿಸಿದ್ದ ಒಬ್ಬ ವ್ಯಕ್ತಿ ಬಸ್‍ನಲ್ಲಿ ಬಂದು ಹೋಟೆಲ್‍ನ ಕೌಂಟರ್‍ನಲ್ಲಿ ರವೆ ಇಡ್ಲಿಯನ್ನು ತೆಗೆದುಕೊಂಡು ಟೇಬಲ್‍ನಲ್ಲಿ ಕುಳಿತು ತಿಂದು ಕೈ ತೊಳೆಯುವ ಸಂದರ್ಭದಲ್ಲಿ ಬ್ಯಾಗ್ ಅನ್ನು ಬಿಟ್ಟು ಹೊರಹೋಗಿದ್ದಾನೆ. ಅದು ಸ್ಪೋಟಗೊಂಡು 9 ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು. ನಿನ್ನೆ ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದರು, ಇಂದು ನಾನೂ ಕೂಡ ಸ್ಥಳಕ್ಕೆ ಹೋಗುತ್ತಿದ್ದೇನೆ ಎಂದು ಹೇಳಿದರು. +ಆರೋಪಿಯನ್ನು ಪತ್ತೆ ಹಚ್ಚುವುದು ಸುಲಭವಾಗಿದೆ. ಬಾಂಬ್ ಇಟ್ಟ ಬಳಿಕ ಆರೋಪಿ ಬಸ್‍ನಲ್ಲಿ ವಾಪಸ್ ಹೋಗಿದ್ದಾನೆ. ಪೊಲೀಸರು ಎಲ್ಲಾ ರೀತಿಯ ತನಿಖೆಗಳನ್ನೂ ನಡೆಸುತ್ತಿದ್ದಾರೆ. ಈ ಹಂತದಲ್ಲಿ ಇದು ಭಯೋತ್ಪಾದಕರ ಕೃತ್ಯವೇ ಅಥವಾ ಯಾವುದಾದರೂ ಸಂಘಟನೆ ಭಾಗಿಯಾಗಿದೆಯೇ? ವೈಯಕ್ತಿಕ ದುಷ್ಕøತ್ಯವೇ ಎಂಬುದು ಗೊತ್ತಾಗಿಲ್ಲ ಎಂದು ಹೇಳಿದರು. ಮಂಗಳೂರಿನ ಕುಕ್ಕರ್ ಬಾಂಬ್‍ಗೂ ನಿನ್ನೆಯ ಸ್ಪೋಟಕ್ಕೂ ಸಂಬಂಧವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು. +ಘಟನೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿಯೇ ಬಾಂಬ್ ಸ್ಪೋಟವಾಗಿದೆ ಎಂದು ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟವಾಗಿತ್ತು. ಆಗಲೂ ಅವರು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದ್ದರೇ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ವಿಷಯಗಳಲ್ಲಿ ಬಿಜೆಪಿ ರಾಜಕೀಯ ಮಾಡುತ್ತದೆ. ಬಾಂಬ್ ಸ್ಪೋಟವನ್ನು ನಾನು ಖಂಡಿಸುತ್ತೇನೆ. ಯಾರೂ ಇದನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದರು. +ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‍ಎಸ್‍ಎಲ್‍ನ ವರದಿ ಈವರೆಗೂ ಬಂದಿಲ್ಲ. ಈ ವಿಷಯದಲ್ಲಿ ಪ್ರಕರಣವನ್ನು ತಿರುಚಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪ ಸುಳ್ಳು. ತಪ್ಪಿತಸ್ಥರು ಯಾರೇ ಇದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_47_155_3.txt b/eesanje/url_47_155_3.txt new file mode 100644 index 0000000000000000000000000000000000000000..da454e6fcd43d6a8a598dfaa71ecd3cdc2344cfb --- /dev/null +++ b/eesanje/url_47_155_3.txt @@ -0,0 +1,4 @@ +ಜೆಎನ್‍ಯುನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ +ನವದೆಹಲಿ,ಮಾ.1- ದೆಹಲಿಯಜವಾಹರ್ಲಾಲ್ನೆಹರೂ ವಿಶ್ವವಿದ್ಯಾಲಯಲ್ಲಿ ಮತ್ತೊಮ್ಮೆ ವಿದ್ಯಾರ್ಥಿಗಳ ನಡುವೆ ಭಾರೀ ಜಗಳ ನಡೆದಿದೆ. ವಿದ್ಯಾರ್ಥಿ ಸಂಘದ ಚುನಾವಣೆಗೂ ಮುನ್ನ ಎಬಿವಿಪಿ ಮತ್ತು ಎಡಪಂಥೀಯ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಈ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. +ಪ್ರಕರಣ ಸಂಬಂಧ ಎರಡೂ ಕಡೆಯವರು ದೂರು ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಸದ್ಯ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳಾದ ಅನ್ವೇಶಾ ರೈ, ಮಧುರಿಮಾ ಮತ್ತು ಶೌರ್ಯ ಅವರನ್ನು ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಎಬಿವಿಪಿ ಮತ್ತು ಎಡ ಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ವಾಗ್ವಾದ ನಡೆಸಿದೆ. ಬಳಿಕ ಇದು ಹಿಂಸಾಚಾರಕ್ಕೆ ತಿರುಗಿದೆ ಎಂದು ವರದಿಯಾಗಿದೆ. +ಘರ್ಷಣೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವ ದೃಶ್ಯ ಸೆರೆಯಾಗಿದೆ. ಮತ್ತೊಂದು ವಿಡಿಯೊದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಸೈಕಲ್ ಎಸೆಯುತ್ತಿರುವ ದೃಶ್ಯ ಸೆರೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ (ನೈಋತ್ಯ) ರೋಹಿತ್ ಕುಮಾರ್ ಮೀನಾ, ಜೆಎನ್‍ಯುನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆಯುತ್ತಿದೆ ಎಂದು ರಾತ್ರಿ 1:15 ರ ಸುಮಾರಿಗೆ ಪಿಸಿಆರ್ ಕರೆ ಬಂತು. ಈ ಸಂಬಂಧ ಹಲವು ದೂರುಗಳು ಬಂದಿದ್ದು, ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ. ನಾವು ಎರಡೂ ಕಡೆಯಿಂದ ದೂರುಗಳನ್ನು ಸ್ವೀಕರಿಸಿದ್ದೇವೆ ಮತ್ತು ಘಟನೆಗಳ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_155_4.txt b/eesanje/url_47_155_4.txt new file mode 100644 index 0000000000000000000000000000000000000000..8cf302d52d3750fc4a11b4fe7ef543ca992fa272 --- /dev/null +++ b/eesanje/url_47_155_4.txt @@ -0,0 +1,6 @@ +ಮಹಾರಾಷ್ಟ್ರ ಮಹಾವಿಕಾಸ್ ಅಘಾಡಿ ಸೀಟು ಹಂಚಿಕೆ ಅಂತಿಮ +ಮುಂಬೈ,ಮಾ.1- ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಸೀಟು ಹಂಚಿಕೆಯ ಮಾತುಕತೆ ಅಂತಿಮಗೊಳಿಸಿದೆ ಎಂದು ವರದಿಯಾಗಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 20, ಕಾಂಗ್ರೆಸ್ 18 ಮತ್ತು ಉಳಿದ 10 ಸ್ಥಾನಗಳಲ್ಲಿ ಶರದ್ ಪವಾರ್ ನೇತೃತ್ವದ ಎನ್‍ಸಿಪಿ ಸ್ರ್ಪಧಿಸಲಿದೆ ಎಂದು ತಿಳಿದುಬಂದಿದೆ. +ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೆಟ್ಕರಿ ಸಂಘಟನೆಯಂತಹ ಸಣ್ಣ ಪಕ್ಷಗಳಿಗೆ ಆಯಾ ಮೈತ್ರಿ ಪಾಲುದಾರರು ಸ್ಥಾನಗಳನ್ನು ನೀಡಲಿದ್ದಾರೆ ಎಂದು ಮಹಾ ವಿಕಾಸ್ ಅಘಾಡಿ ಮೂಲಗಳು ತಿಳಿಸಿವೆ. ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ ಹೊಂದಾಣಿಕೆ ಮಾಡಿಕೊಂಡರೆ, ಶಿವಸೇನೆ ಮತ್ತು ಕಾಂಗ್ರೆಸ್ ಕೋಟಾದಿಂದ ಕನಿಷ್ಠ ಮೂರು ಸ್ಥಾನಗಳನ್ನು ನೀಡಬಹುದು ಎನ್ನಲಾಗಿದೆ. +ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ಪಕ್ಷದ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಮತ್ತು ಮಾಜಿ ಸಿಎಂ ಪೃಥ್ವಿರಾಜ್ ಚವ್ಹಾಣ್ ಅವರು ಗುರುವಾರ ಶರದ್ ಪವಾರ್ ಅವರನ್ನು ಅವರ ಸಿಲ್ವರ್ ಓಕ್ ನಿವಾಸದಲ್ಲಿ ಭೇಟಿಯಾಗಿ ಮೈತ್ರಿ ಮಾತುಕತೆ ಅಂತಿಮಗೊಳಿಸಿದರು. ಎನ್‍ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಮಾತನಾಡಿ, ಲೋಕಸಭೆ ಚುನಾವಣೆಯ ಕುರಿತು ಚರ್ಚೆಗಳು ಮುಗಿದಿವೆ ಎಂದು ಹೇಳಿದ್ದಾರೆ. +ಬಿಜೆಪಿಯು ಮೈತ್ರಿ ಅಭ್ಯರ್ಥಿಗಳನ್ನು ಬೇಟೆಯಾಡಬಹುದು ಅಥವಾ ಬೆದರಿಕೆ ಹಾಕಬಹುದು ಎಂಬ ಕಾರಣದಿಂದ ಔಪಚಾರಿಕ ಘೋಷಣೆ ವಿಳಂಬವಾಗಬಹುದು ಎಂದು ತಿಳಿದು ಬಂದಿದೆ. ಸೀಟು ಹಂಚಿಕೆಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳು ಬಗೆಹರಿದಿವೆ. ಉಳಿದವುಗಳನ್ನು ಪಕ್ಷದ ವರಿಷ್ಠರು ಪರಿಹರಿಸುತ್ತಾರೆ ಎಂದು ಅವ್ಹಾದ್ ಹೇಳಿದ್ದಾರೆ. ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದ ಭಾಗವಾಗುವ ಸಾಧ್ಯತೆಯಿಲ್ಲ ಎಂದು ಅವ್ಹಾದ್‍ಮೂಲಗಳು ತಿಳಿಸಿವೆ. +ಪ್ರಕಾಶ್ ಅಂಬೇಡ್ಕರ್ ಅವರು 27 ಸ್ಥಾನಗಳಿಗಾಗಿ ಎದುರು ನೋಡುತ್ತಿದ್ದಾರೆ, ಇದು ಅಪ್ರಾಯೋಗಿಕವಾಗಿದೆ. ನಾವು ಅವರನ್ನು ಮೈತ್ರಿಗೆ ಸೇರಿಸಿಕೊಳ್ಳಲು ಉತ್ಸುಕರಾಗಿದ್ದೇವೆ ಆದರೆ ಅವರು ಬಿಜೆಪಿ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಗೆಲುವಿನ ಅಂಶವನ್ನು ಗಮನದಲ್ಲಿಟ್ಟುಕೊಂಡು ನಾವು ಸೀಟುಗಳನ್ನು ವಿನಿಮಯ ಮಾಡಿಕೊಳ್ಳಲು ಸಿದ್ಧರಿದ್ದೇವೆ. ನಾವು ಒಗ್ಗಟ್ಟಿನಿಂದ ಇರಬೇಕಾಗಿದೆ. ಉದಾಹರಣೆಗೆ, ರೈತರು ತಮ್ಮ ಬೆಳೆಗಳಿಗೆ ಕಡಿಮೆ ದರವನ್ನು ನೀಡುವುದರಿಂದ ಸಂತುಷ್ಟರಾಗಿಲ್ಲ, ಸಾಮಾನ್ಯ ಜನರು ಹೆಚ್ಚಿನ ಹಣದುಬ್ಬರದಿಂದ ತೊಂದರೆಗೀಡಾಗಿದ್ದಾರೆ, ಜೊತೆಗೆ ನಿರುದ್ಯೋಗವು ಯುವಜನರಲ್ಲಿ ಪ್ರಮುಖ ಅಂಶವಾಗಿದೆ. ಇವುಗಳ ವಿರುದ್ಧ ನಾವು ಒಟ್ಟಾಗಿ ಧ್ವನಿ ಎತ್ತಬೇಕು ಎಂದಿದ್ದಾರೆ. \ No newline at end of file diff --git a/eesanje/url_47_155_5.txt b/eesanje/url_47_155_5.txt new file mode 100644 index 0000000000000000000000000000000000000000..30941053f8a4c6ca25156533f0074b46eae1153c --- /dev/null +++ b/eesanje/url_47_155_5.txt @@ -0,0 +1,7 @@ +ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ +ನವದೆಹಲಿ,ಮಾ.1- ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಆಡಳಿತಾರೂಢ ಬಿಜೆಪಿ ಯಾವುದೇ ಕ್ಷಣದಲ್ಲೂ 100 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂಜಾನೆ 5 ಗಂಟೆವರೆಗೂ ಕೇಂದ್ರ ಚುನಾವಣಾ ಸಮಿತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತಿತರ ಪ್ರಮುಖರು ಭಾಗಿಯಾಗಿದ್ದರು. +ಸುದೀರ್ಘ ಆರು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿರುವ ಕೇಂದ್ರ ಚುನಾವಣಾ ಸಮಿತಿ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುವ ಮುನ್ನವೇ 300ಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.ಮೊದಲ ಪಟ್ಟಿಯಲ್ಲಿ 100 ಅಭ್ಯರ್ಥಿಗಳು ಇರಲಿದ್ದು, ಪ್ರಧಾನಿ ನರೇಂದ್ರಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್ ಸೇರಿದಂತೆ ಹಾಲಿ ಕೆಲವು ಸಚಿವರು ಮತ್ತು ಹಾಲಿ ಸಂಸದರು ಪಟ್ಟಿಯಲ್ಲಿ ಇರಲಿದ್ದಾರೆ ಎಂದು ತಿಳಿದುಬಂದಿದೆ. +ಚುನಾವಣಾ ಕಣಕ್ಕೆ ಸೂಕ್ತವೆಂದು ಪರಿಗಣಿಸಲಾದ ಅಭ್ಯರ್ಥಿಗಳನ್ನು ಸೂಕ್ಷ್ಮವಾಗಿ ಆಯ್ಕೆ ಮಾಡಲು ಈ ಬಾರಿ ವಿಶಿಷ್ಟ ತಂತ್ರ ರೂಪಿಸಿರುವ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ತಾಂತ್ರಿಕ ವಿಧಾನ ಅಳವಡಿಸಿಕೊಳ್ಳಲು ಮುಂದಾಗಿದೆ.ತಳಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸಲು ಪಕ್ಷವು ವಿಶಿಷ್ಟ ವಿಧಾನ ಅಳವಡಿಸಿಕೊಂಡಿದೆ. ನಮೋ ಆಪ್ ಮೂಲಕ ಪ್ರಸ್ತುತ ಸಂಸದರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಪ್ರೋತ್ಸಾಹಿಸಲಾಯಿತು. +ಸಾಂಪ್ರದಾಯಿಕ ವಿಧಾನಗಳನ್ನು ಕೈಬಿಟ್ಟು ಪಕ್ಷವು ಪ್ರತಿ ಪ್ರದೇಶದಲ್ಲಿ ಮೂರು ಅತ್ಯಂತ ಜನಪ್ರಿಯ ನಾಯಕರ ಬಗ್ಗೆ ಅಭಿಪ್ರಾಯಗಳನ್ನು ಕೇಳುವ ಮೂಲಕ ಒಂದು ಹೆಜ್ಜೆ ಮುಂದೆ ಹೋಗಿದೆ. ಬಿಜೆಪಿ ತನ್ನ ಸಂಸದರ ಕಾರ್ಯಕ್ಷಮತೆಯನ್ನು ಸಕ್ರಿಯವಾಗಿ ನಿರ್ಣಯಿಸಿದೆ. ಪ್ರತಿ ಸಂಸದೀಯ ಕ್ಷೇತ್ರದ ಸಮಗ್ರ ವರದಿಗಳನ್ನು ಕಂಪೈಲ್ ಮಾಡಲು ಸಮೀಕ್ಷೆ ಏಜೆನ್ಸಿಗಳೊಂದಿಗೆ ಪಕ್ಷ ಕೆಲಸ ಮಾಡಿದೆ. +ಹೊಸ ಮುಖಗಳಿಗೆ ಅವಕಾಶ?:ವಿವಿಧ ಹಿನ್ನೆಲೆಯ ಅಭ್ಯರ್ಥಿಗಳನ್ನು ಸೆಳೆಯುವ ಸಂಘಟಿತ ಪ್ರಯತ್ನದಲ್ಲಿ ಬಿಜೆಪಿ ತನ್ನ ವ್ಯಾಪ್ತಿಯನ್ನು ಪಕ್ಷದ ಗಡಿರೇಖೆ ಮೀರಿ ವಿಸ್ತರಿಸಿದೆ. ಕಡಿಮೆ ಕಾರ್ಯಕ್ಷಮತೆ ಹೊಂದಿರುವ ಸಂಸದರನ್ನು ಕೈಬಿಡಲು ಹಿಂಜರಿಯುವುದಿಲ್ಲ ಎಂದು ಪಕ್ಷದ ನಾಯಕತ್ವ ಸ್ಪಷ್ಟಪಡಿಸಿದೆ. ಇದು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲು 60-70 ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪಲು ಕಾರಣವಾಗಬಹುದು. ಇತರ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಲಾಗಿದೆ. ಅನೇಕ ಒಬಿಸಿ ಸಂಸದರು ಮತ್ತೆ ಸ್ರ್ಪಧಿಸಬೇಕೆಂದು ಬಿಜೆಪಿ ನಿರೀಕ್ಷಿಸಿದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ 85 ಒಬಿಸಿ ಸಮುದಾಯದ ಸಂಸದರು ಗೆಲುವು ದಾಖಲಿಸಿದ್ದರು. +ಇದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಬಾರಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರಿಕೆಯ ಹೆಜ್ಜೆಯಿಟ್ಟಿದೆ. ಚುನಾವಣೆಯ ಅಧಿಕೃತ ಘೋಷಣೆಯ ಮೊದಲು 50ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಪ್ರತಿ ಕ್ಷೇತ್ರಕ್ಕೆ ಹೆಚ್ಚು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸುವ ಗುರಿಯನ್ನು ಪಕ್ಷ ಹೊಂದಿದೆ. \ No newline at end of file diff --git a/eesanje/url_47_155_6.txt b/eesanje/url_47_155_6.txt new file mode 100644 index 0000000000000000000000000000000000000000..12fc62267cf664c09972bc88308c06101059750f --- /dev/null +++ b/eesanje/url_47_155_6.txt @@ -0,0 +1,6 @@ +ವಾಣಜ್ಯ ಬಳಕೆ ಎಲ್‍ಪಿಜಿ ದರ ಹೆಚ್ಚಳ +ನವದೆಹಲಿ,ಮಾ.1- ಇಂದಿನಿಂದಲೇ ಜಾರಿಯಾಗುವಂತೆ ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯೊಂದಿಗೆ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‍ನ ಚಿಲ್ಲರೆ ಬೆಲೆ 1,795 ರೂ. ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749 ರೂ.ಗೆ ಮಾರಾಟವಾಗಲಿದೆ. +ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಕ್ರಮವಾಗಿ 1,960 ರೂ, ಮತ್ತು 1,911 ರೂ.ಗೆ ಏರಿಕೆಯಾಗಿದೆ. ಫೆಬ್ರವರಿ 1 ರಂದು 19 ಕೆಜಿ ಗ್ಯಾಸ್ ಸಿಲಿಂಡರ್ ದರ 14 ರೂ. ಹೆಚ್ಚಾಗಿತ್ತು. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 23.50 ರೂ. ಹೆಚ್ಚಾಗಿ 1,875 ರೂ. ಆಗಿದೆ. ಕಳೆದ ಎರಡು ತಿಂಗಳ ದರ ಪರಿಷ್ಕರಣೆ ಬಗ್ಗೆ ಗಮನಿಸುವುದಾದರೆ, ಕೋಲ್ಕತಾದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ಎರಡು ತಿಂಗಳ ಅವಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 42 ರೂಪಾಯಿ ಏರಿಕೆಯಾಗಿದೆ. ಆ ನಂತರ ಮುಂಬೈನಲ್ಲಿ 40.5 ರೂ. ಏರಿಕೆಯಾಗಿದೆ. +ದೇಶದ ರಾಜಧಾನಿ ದೆಹಲಿಯಲ್ಲಿ ಈ ಏರಿಕೆ 39.5 ರೂ. ಆಗಿದೆ. ದಕ್ಷಿಣ ಭಾರತದ ಅತಿದೊಡ್ಡ ಮಹಾನಗರವಾದ ಚೆನ್ನೈಯಲ್ಲಿ ಎರಡು ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕನಿಷ್ಠ 36 ರೂ. ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‍ಗಳ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಪರಿಷ್ಕರಣೆಯನ್ನು ಕಳೆದ 6 ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ. +ಆಗಸ್ಟ್ 30 ರಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆ ಸಮಯದಲ್ಲಿ ಕೇಂದ್ರ ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 200 ರೂ. ಇಳಿಕೆ ಮಾಡಿತ್ತು. ಆ ನಂತರ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ.ಗೆ ಮತ್ತು ಕೋಲ್ಕತ್ತಾದಲ್ಲಿ 929 ರೂ.ಗೆ ಇಳಿದಿತ್ತು. +ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‍ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಆದರೆ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಪರಿಷ್ಕರಣೆ ಕಳೆದ ಆರು ತಿಂಗಳುಗಳಿಂದ ಸ್ಥಗಿತವಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಪರಿಷ್ಕರಣೆ ಮಾಡಲಾಗುತ್ತಿದೆ. ಕಳೆದ ತಿಂಗಳೂ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರವನ್ನು 14 ರೂ.ಗೆ ಏರಿಕೆ ಮಾಡಲಾಗಿತ್ತು. \ No newline at end of file diff --git a/eesanje/url_47_155_7.txt b/eesanje/url_47_155_7.txt new file mode 100644 index 0000000000000000000000000000000000000000..62426669eaf7389fdb3d629ad1d07151bf6d5eba --- /dev/null +++ b/eesanje/url_47_155_7.txt @@ -0,0 +1,9 @@ +ಸಂದೇಶ್ ಖಾಲಿ ಪ್ರಕರಣ : ಟಿಎಂಸಿ ಮುಖಂಡ ಶೇಖ್ ಷಹಜಹಾನ್‍ ಬಂಧನ +ಕೋಲ್ಕತ್ತಾ,ಫೆ.29- ಸಂದೇಶ್ಖಾಲಿ ಪ್ರಕರಣದ ಪ್ರಮುಖ ಆರೋಪಿ, ತೃಣಮೂಲ ಕಾಂಗ್ರೆಸ್ ಮುಖಂಡ ಶೇಖ್ ಷಹಜಹಾನ್‍ನನ್ನು ಬಂಧಿಸಲಾಗಿದೆ. 55 ದಿನಗಳಿಂದ ತಲೆಮರೆಸಿಕೊಂಡಿದ್ದ ಶಾಜಹಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು ಉತ್ತರ 24 ಪರಗಣ ಜಿಲ್ಲೆಯಲ್ಲಿ ತಡರಾತ್ರಿ ಬಂಸಿದೆ. +ಬಳಿಕ ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ದಿದೆ. ವಿಶೇಷ ತಂಡವು ಶೇಖ್ ಅವರ ಚಲನವಲನಗಳ ಮೇಲೆ ಹಲವು ದಿನಗಳಿಂದ ಕಣ್ಣಿಟ್ಟಿತ್ತು ಎಂದು ಅಕಾರಿಗಳು ತಿಳಿಸಿದ್ದಾರೆ.ಷಹಜಹಾನ್ ಮತ್ತು ಆತನ ಸಹಚರರು ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪ ಹೊತ್ತಿದ್ದಾರೆ. ಹೀಗಾಗಿ, ಉತ್ತರ 24 ಪರಗಣ ಜಿಲ್ಲೆಯಲ್ಲಿ ಶೇಖ್ ಷಹಜಹಾನ್‍ನನ್ನು ಬಂಗಾಳದ ವಿಶೇಷ ಪೊಲೀಸ್ ತಂಡವು ಮಧ್ಯರಾತ್ರಿ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಈತ 55 ದಿನಗಳಿಂದ ತಲೆಮರೆಸಿಕೊಂಡಿದ್ದ. ಬಂಧನದ ನಂತರ ಆತನನ್ನು ಬಸಿರ್ಹತ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಬಂಧನಕ್ಕೆ ಮುನ್ನ ಹಲವು ದಿನಗಳಿಂದ ಆತನ ಚಟುವಟಿಕೆಗಳ ಮೇಲೆ ತಂಡ ನಿಗಾ ಇರಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಂದೇಶ್ಖಾಲಿ ಪ್ರಕರಣದಲ್ಲಿ ಟಿಎಂಸಿ ನಾಯಕನ ಹೆಸರನ್ನೂ ಸೇರಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶಿಸಿದ ಮೂರು ದಿನಗಳ ನಂತರ ಆತನನ್ನು ಪೊಲೀಸರು ಬಂಸಿದ್ದಾರೆ. ಪ್ರಕರಣದಲ್ಲಿ ಆತನಿಗೆ ನೋಟೀಸ್ ನೀಡಬೇಕು. ಬಂಧನ ವಿಚಾರವಾಗಿ ಯಾವುದೇ ಕಾರಣ ನೀಡುವಂತಿಲ್ಲ ಎಂದು ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿತ್ತು. +ಟಿಎಂಸಿ ನಾಯಕ ಹಾಗೂ ಆತನ ಬೆಂಬಲಿಗರು, ಬಲವಂತವಾಗಿ ತಮ್ಮ ಭೂಕಬಳಿಕೆ ಮಾಡಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಹಲವು ಮಹಿಳೆಯರು ಆರೋಪಿಸಿದ್ದರು. ಅದಾದ ಬಳಿಕ, ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿವೆ. +2019ರಲ್ಲಿ ನಡೆದ ಬಿಜೆಪಿಯ ಮೂವರು ಕಾರ್ಯಕರ್ತರ ಕೊಲೆ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಶೇಖ್, ಜನವರಿ 5ರಿಂದ ನಾಪತ್ತೆಯಾಗಿದ್ದರು. ಶೇಖ್, ಪಡಿತರ ಅಕ್ರಮ ಹಾಗೂ ಭೂ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆಸಿದ್ದಾನೆ ಎಂದು ಜಾರಿ ನಿರ್ದೇಶನಾಲಯವೂ ಪ್ರಕರಣ ದಾಖಲಿಸಿಕೊಂಡಿದೆ. +ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರನ್ನು ಬಂಧಿಸುವಂತೆ ಕೋಲ್ಕತಾ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸಂದೇಶಖಾಲಿಯಲ್ಲಿ ಶಹಜಹಾನ್ ನಡೆಸಿದ ದೌರ್ಜನ್ಯದ ಬಗ್ಗೆ ವಿವರವಾಗಿ 72 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಶಹಜಹಾನ್ ಶೇಖ್, ಟಿಎಂಸಿಯ ಪ್ರಬಲ ನಾಯಕರಾಗಿದ್ದಾರೆ, ಸಂದೇಶ್‍ಖಾಲಿ ಘಟಕದ ಟಿಎಂಸಿ ಅಧ್ಯಕ್ಷರೂ ಆಗಿದ್ದಾರೆ. ಜನವರಿ 5 ರಂದು ಬಂಗಾಳದ ಪಡಿತರ ವಿತರಣೆ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರ ವಿಚಾರಣೆಗೆ ಇಡಿ ಬಂದಾಗ ಶೇಖ್ ತಲೆಮರೆಸಿಕೊಂಡಿದ್ದರು. +ಏನಿದು ಷಹಜಹಾನ್‍ ಪ್ರಕರಣ? :ಸಂದೇಶ್ಖಾಲಿಯಲ್ಲಿ ವಾಸಿಸುವ ಮಹಿಳೆಯರು ಆತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು, ಆಗ ಆತನ ಹೆಸರು ಬೆಳಕಿಗೆ ಬಂದಿತ್ತು. ಬಿಜೆಪಿ ಪಕ್ಷವೂ ಕೂಡ ಈ ವಿಚಾರವಾಗಿ ಮಮತಾ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಪಶ್ಚಿಮ ಬಂಗಾಳದ ಪಡಿತರ ವಿತರಣೆ ಹಗರಣದಲ್ಲಿ ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಇಡಿ ಹೇಳಿದೆ. ಇಡಿ ಮೊದಲು ಮಾಜಿ ಸಚಿವೆ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಬಂಸಿತ್ತು, ಇದರಲ್ಲಿ ಶೇಖ್ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಶಂಕರ್ ಆದ್ಯಾ ಭಾಗಿಯಾಗಿರುವುದು ತಿಳಿದುಬಂದಿದೆ. diff --git a/eesanje/url_47_155_8.txt b/eesanje/url_47_155_8.txt new file mode 100644 index 0000000000000000000000000000000000000000..e1830b1bf48a95a05b05a8dd179935cb985ba0b9 --- /dev/null +++ b/eesanje/url_47_155_8.txt @@ -0,0 +1,4 @@ +ದ್ವಿಚಕ್ರ ವಾಹನಗಳ ಅಪಘಾತದಲ್ಲಿ 20 ರಿಂದ 40 ವರ್ಷ ವಯಸ್ಸಿನವರೇ ಹೆಚ್ಚು ಬಲಿಯಾಗಿದ್ದಾರೆ : ಏಮ್ಸ್ +ನವದೆಹಲಿ,ಫೆ 29 : ಇಲ್ಲಿನ ಏಮ್ಸ್ ಟ್ರಾಮಾ ಸೆಂಟರ್‍ನಲ್ಲಿ ಕಳೆದ 2022ರಲ್ಲಿ ಸಂಗ್ರಹಿಸಿದ ಮಾಹಿತಿಯ ಪ್ರಕಾರ ದಿಲ್ಲಿಯಲ್ಲಿ ನಡೆದ ದ್ವಿಚಕ್ರ ವಾಹನಗಳ ಅಪಘಾತ ಪ್ರಕರಣದಲ್ಲಿ ಶೇ. 40 ರಷ್ಟು ಹಿಂಬದಿ ಸವಾರರು ಹೆಲ್ಮೆಟ್ ಬಳಸದೇ ತಲೆಗೆ ಗಾಯ ಮಾಡಿಕೊಂಡಿದ್ದಾರೆ.ಆದಾಗ್ಯೂ, ಸುಮಾರು ಶೇ.85 ರಷ್ಟು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‍ಗಳನ್ನು ಬಳಸಿದರೆ, ಜೀವ ಉಳಿಯುತ್ತಿತ್ತು ಎಂದು ಟ್ರಾಮಾ ಸೆಂಟರ್ ಮುಖ್ಯಸ್ಥ ಡಾ ಕಮ್ರಾನ್ ಫಾರೂಕ್ ಹೇಳಿದ್ದಾರೆ. +ಜನವರಿ 21 ರಿಂದ ಡಿಸೆಂಬರ್ 22 ರ ನಡುವೆ ಕೇಂದ್ರದಲ್ಲಿ ಸಂಗ್ರಹಿಸಿದ ಡೇಟಾವನ್ನು ಅವರು ಉಲ್ಲೇಖಿಸಿ,ಅಂಕಿಅಂಶಗಳ ಪ್ರಕಾರ, 2022 ರಲ್ಲಿ ಆಸ್ಪತ್ರೆಗೆ ಕರೆತರಲಾದ ಸುಮಾರು 82 ಪ್ರತಿಶತದಷ್ಟು ರೋಗಿಗಳು ರಸ್ತೆ ಅಪಘಾತಗಳಿಗೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದರು. 2022 ರಲ್ಲಿ ಆಸ್ಪತ್ರೆಯು 53,541 ಆಘಾತಕಾರಿ ರೋಗಿಗಳು ಬಂದಿದ್ದರು ಎಂದು ಅದರಲ್ಲಿ ಸುಮಾರು 25 ಪ್ರತಿಶತದಷ್ಟು ಜನರು ರಸ್ತೆ ಅಪಘಾತದಲ್ಲಿ ಬಲಿಯಾದವರು. +ವಿಪರ್ಯಾಸವೆಂದರೆ ರಸ್ತೆ ಅಪಘಾತದಲ್ಲಿ ಬಲಿಯಾದವರಲ್ಲಿ ಹೆಚ್ಚಿನವರು 20 ರಿಂದ 40 ವರ್ಷ ವಯಸ್ಸಿನವರು ಎಂದು ಡಾ ಫಾರೂಕ್ ಹೇಳಿದರು. ಈ ವಯೋಮಾನವು ಅತ್ಯಂತ ಸಕ್ರಿಯ ಮತ್ತು ಉತ್ಪಾದಕವಾಗಿರುವುದರಿಂದ, ಅಪಘಾತಗಳಿಗೆ ಬಲಿಯಾಗುವುದು ಅವರ ಕುಟುಂಬಗಳ ಮೇಲೆ ಮಾತ್ರವಲ್ಲದೆ ದೇಶದ ಆರ್ಥಿಕತೆಯ ಮೇಲೂ ಹೆಚ್ಚಿನ ಪರಿಣಾಮ ಬೀರುತ್ತದೆ.ಹಾಗಾಗಿ ರಸ್ತೆ ಅಪಘಾತಕ್ಕೀಡಾದವರಿಗೆ ತಕ್ಷಣದ ನೆರವು ಮತ್ತು ಚಿಕಿತ್ಸೆ ಸಿಗುವಂತೆ ವ್ಯವಸ್ಥಿತ ವ್ಯವಸ್ಥೆ ಕಲ್ಪಿಸಬೇಕು ಎಂದರು. \ No newline at end of file diff --git a/eesanje/url_47_155_9.txt b/eesanje/url_47_155_9.txt new file mode 100644 index 0000000000000000000000000000000000000000..b3c486563aa1ecb9b1c41faa8e2d2bbff889dda4 --- /dev/null +++ b/eesanje/url_47_155_9.txt @@ -0,0 +1,5 @@ +ಪಿಕಪ್ ವಾಹನ ಪಲ್ಟಿಯಾಗಿ 14 ಮಂದಿ ಸಾವು +ಡಿಂಡೋರಿ, ಫೆ.29: ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಪಿಕ್‍ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. +ಬೆಳಗಿನ ಜಾವ 1.30ರ ಸುಮಾರಿಗೆ ಬಡ್ಜರ್ ಘಾಟ್ ಬಳಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಇದರಿಂದ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸುಮಾರು 20 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಕಾರಿ ತಿಳಿಸಿದ್ದಾರೆ. +ಮೃತರು ಡಿಂಡೋರಿ ಜಿಲ್ಲೆಯ ಶಹಪುರ ಬ್ಲಾಕ್‍ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮ್ಹೈ ದೇವ್ರಿ ಗ್ರಾಮಕ್ಕೆ ತೆರಳಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ದಿಂಡೋರಿ ಕಲೆಕ್ಟರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. +ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ. \ No newline at end of file diff --git a/eesanje/url_47_156_1.txt b/eesanje/url_47_156_1.txt new file mode 100644 index 0000000000000000000000000000000000000000..aa4880a25ed4173b6e115e5f8b2e20ebf99a8459 --- /dev/null +++ b/eesanje/url_47_156_1.txt @@ -0,0 +1,15 @@ +ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿದ ಪಾಕ್ ಪರ ಘೋಷಣೆ +ಬೆಂಗಳೂರು,ಫೆ.28- ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಚುನಾಯಿತರಾದ ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಯನ್ನು ಕಿಡಿಗೋಡಿಯೊಬ್ಬ ಕೂಗಿದ್ದಾನೆ ಎಂಬ ಆರೋಪದ ವಿಚಾರ ವಿಧಾನಸಭೆಯಲ್ಲಿಂದು ಪ್ರತಿಧ್ವನಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸದನವನ್ನು ಕೆಲಕಾಲ ಮುಂದೂಡಿದ ಘಟನೆ ವಿಧಾನಸಭೆಯಲ್ಲಿಂದು ನಡೆಯಿತು. +ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕರ್ನಾಟಕದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ವಿಧಾನಸಭೆಯ ನೂರಾರು ಅವೇಶನ ನಡೆದಿದೆ. 7 ಕೋಟಿ ಕನ್ನಡಿಗರ ಜಾಗ ವಿಧಾನಸೌಧ. ಸಂವಿಧಾನ ರಕ್ಷಣೆಯ ಸ್ಥಳ. ಸುರಕ್ಷಿತ ಜಾಗ. ವಿಧಾನಸೌಧವನ್ನು ನಿರ್ಮಿಸಿದ ಕೆಂಗಲ್ ಹನುಮಂತಯ್ಯ ಅವರು ಧರ್ಮ ರಕ್ಷಾ ರಕ್ಷತಿ ಎಂದು ಬರೆಸಿದ್ದಾರೆ. +ಆದರೆ ನಿನ್ನೆ ರಾಜ್ಯಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಸಯ್ಯದ್ ನಾಸಿರ್ ಹುಸೇನ್ ಅವರ ವಿಜಯೋತ್ಸವದ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ರಾಜ್ಯದಲ್ಲಿ ಆತಂಕ ಉಂಟಾಗಿದೆ, ಭಯದ ವಾತಾವರಣವಿದೆ, ಗಲ್ಲಿಗಲ್ಲಿಯಲ್ಲಿ ಈ ರೀತಿಯಲ್ಲಿ ಕೂಗುವುದಿಲ್ಲ ಎಂದು ನಂಬುವುದಾದರೂ ಹೇಗೆ ಎಂದು ಪ್ರಶ್ನಿಸಿದರು. +ಆ ರೀತಿ ಘೋಷಣೆ ಕೂಗಿದವರನ್ನು ರೆಡ್ ಕಾರ್ಪೆಟ್ ಹಾಕಿ ವಿಧಾನಸೌಧಕ್ಕೆ ಕರೆತಂದವರು ಯಾರು ಎಂದಾಗ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಪಾರ್ಲಿಮೆಂಟ್‍ನಲ್ಲಿ ನುಗ್ಗಿದ್ದರಲ್ಲ ಎಂದು ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಆಗ ಅಶೋಕ್‍ರವರು ಮಾತು ಮುಂದುವರೆಸಿ ಸಂಸತ್‍ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು. ನೀವ್ಯಾದರೂ ಅವರಿಗೆ ಹೊಡೆದಿರಾ ಎಂದು ತಿರುಗೇಟು ನೀಡಿದರು. +ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು +ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಲು ಮುಂದಾಗಿ ಚರ್ಚೆಯಾಗಲಿ ಎಂದರು. ಮತ್ತೆ ಮಾತು ಮುಂದುವರೆಸಿದ ಅಶೋಕ್‍ರವರು ಆ ರೀತಿ ಘೋಷಣೆ ಕೂಗಿದವರನ್ನು ವಿಧಾನಸೌಧಕ್ಕೆ ಯಾರು ಕರೆತಂದರು? 500 ಪೊಲೀಸರು, ಐಪಿಎಸ್, ಐಎಎಸ್ ಅಧಿಕಾರಿಗಳು ಇರುವ ಈ ಸ್ಥಳದಲ್ಲಿ ಆ ರೀತಿ ಘೋಷಣೆ ಕೂಗಲು ಎಷ್ಟು ಧೈರ್ಯವಿರಬೇಕು? ದೇಶದ ಗಡಿಯಲ್ಲಿ ಸೈನಿಕರು ಜೀವದ ಹಂಗು ತೊರೆದು ರಕ್ಷಣೆ ಮಾಡುತ್ತಿದ್ದಾರೆ. ಅವರಿಗೆ ನಾವು ಯಾವ ಉತ್ತರ ಕೊಡಬೇಕು? ಅಲ್ಲಿ ಈ ರೀತಿ ಘೋಷಣೆ ಕೂಗಿದರೆ ಅವರನ್ನು ಗುಂಡಿಟ್ಟು ಕೊಲ್ಲುತ್ತಾರೆ ಎಂದು ವಾಗ್ದಾಳಿ ನಡೆಸಿದರು. +ಘೋಷಣೆ ಕೂಗಿದವರು ವಿಧಾನಸೌಧದಿಂದ ಹೊರಹೋಗಲು ವಾಹನ ಮಾಡಿಕೊಟ್ಟವರು ಯಾರು? ಇಷ್ಟೆಲ್ಲಾ ನಡೆದಿದ್ದರೂ ಸರ್ಕಾರ ಏನೂ ಆಗಿಲ್ಲ ಎಂಬಂತಿದೆ. ಒಂದು ಸಣ್ಣ ಕೇಸೂ ಕೂಡ ದಾಖಲಿಸಿಲ್ಲ ಎಂದು ಆರೋಪಿಸಿದರು. ಕಾಂಗ್ರೆಸ್‍ನ ಮತ್ತೊಬ್ಬ ಅಭ್ಯರ್ಥಿ ಚಂದ್ರಶೇಖರ್ ಗೆದ್ದಾಗ ಈ ರೀತಿ ಘೋಷಣೆ ಕೂಗಿಲ್ಲ. ಬಿಜೆಪಿ ಅಭ್ಯರ್ಥಿ ಗೆದ್ದಾಗ ನಮ್ಮ ಪಕ್ಷದವರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಿದ್ದೇವೆ. ಆದರೆ ಸಯ್ಯದ್ ನಾಸಿರ್ ಹುಸೇನ್ ಗೆದ್ದ ಸಂದರ್ಭದಲ್ಲಿ ಯಾಕೆ ಈ ರೀತಿ ಘೋಷಣೆ? ಎಲ್ಲಿದೆ ಸುರಕ್ಷತೆ, ಯಾವ ಸೇಫ್ಟಿ ಇದೆ ಎಂದು ಪ್ರಶ್ನಿಸಿದರು. +ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಹಲವು ಶಾಸಕರು ಎದ್ದು ನಿಂತು ಆಕ್ಷೇಪಿಸಲು ಮುಂದಾದಾಗ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಮಧ್ಯ ಪ್ರವೇಶಿಸಿ ಗಂಭೀರವಾದ ವಿಚಾರ ಚರ್ಚೆ ಮಾಡುವಾಗ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ರಾಜಕೀಯವನ್ನು ಬಿಡಬೇಕು. ರಾಷ್ಟ್ರ, ರಾಜ್ಯದ ಹಿತದ ಬಗ್ಗೆ ಮಾತನಾಡುವಾಗ ಗಂಭೀರವಾಗಿ ಆಲಿಸಬೇಕು, ಗಂಭೀರವಾದ ವಿಚಾರ ಪ್ರಸ್ತಾಪವಾಗುತ್ತಿದೆ, ಸರ್ಕಾರ ಉತ್ತರ ಕೊಡಲಿದೆ ಎಂದು ಸಲಹೆ ಮಾಡಿದರು. +ಮತ್ತೆ ತಮ್ಮ ವಾಗ್ದಾಳಿ ಮುಂದುವರೆಸಿದ ಅಶೋಕ್, ಕಳೆದ ಬಾರಿ ಬಜೆಟ್ ಮಂಡಿಸುವಾಗ ಕಿವಿಯ ಮೇಲೆ ಹೂವು ಇಟ್ಟುಕೊಂಡು ಬಂದಿದ್ದರು. ಆದರೆ ನಿನ್ನೆ ಘೋಷಣೆ ಕೂಗಿದ ವಿಚಾರ ನೋಡಿಲ್ಲ, ಕೇಳಿಲ್ಲ ಎನ್ನುತ್ತಾರೆ. ವಾಹಿನಿಗಳಲ್ಲಿ ಅದನ್ನು ತೋರಿಸಿದ್ದಾರೆ. ಪಾಕಿಸ್ತಾನದ ಪರ ಘೋಷಣೆ ಕೂಗಿದವರು ಪಾಕಿಸ್ತಾನದವರೇ ಇರಬೇಕು. +ಬೇರೆಯವರು ಆ ರೀತಿ ಘೋಷಣೆ ಕೂಗುವುದಿಲ್ಲ. ಏಕೆಂದರೆ ಭಾರತ ಮಾತೆ ಅನ್ನ ತಿಂದವರು, ನೀರು ಕುಡಿದವರು ಆ ರೀತಿ ಕೂಗುವುದಿಲ್ಲ, ಇನ್ನೆಷ್ಟು ಜನ ಬಂದಿದ್ದಾರೋ ಗೊತ್ತಿಲ್ಲ, ಇದು ನಾಡಿನ ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿದೆ. ಒಂದು ವೇಳೆ ಮಾಧ್ಯಮದ ವರದಿ ಸುಳ್ಳಾಗಿದ್ದರೆ ಅವರನ್ನು ಜೈಲಿಗೆ ಹಾಕಿ, ನನ್ನ ಮೇಲೂ ಕೇಸು ಹಾಕಿ. ಈ ಘಟನೆ ಬಗ್ಗೆ ಸಣ್ಣ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಬೇಕಿತ್ತು. ಶಾಸಕರ ಮೇಲೆ ಸ್ವಯಂಪ್ರೇರಿತ ಕೇಸು ಹಾಕುತ್ತಾರೆ, ಶಾಸಕರು ಘಟನಾ ಸ್ಥಳದಲ್ಲಿ ಇಲ್ಲವೆಂದರೂ ಕೇಸು ಹಾಕುತ್ತಾರೆ. ಪಿಎಫ್‍ಐ ಮೇಲಿನ ಕೇಸುಗಳನ್ನು ವಜಾ ಮಾಡಿದ್ದಾರೆ. +ಹೀಗಾಗಿ ಕೋಲಾರ, ಶಿವಮೊಗ್ಗದಲ್ಲಿ ಮಚ್ಚು, ಲಾಂಗುಗಳ ಫ್ಲೆಕ್ಸ್ ಹಾಕಲಾಗಿದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಚರ್ಚೆ ಮಾಡಬೇಕಿತ್ತು. ಇಡೀ ದೇಶಕ್ಕೆ ಅವಮಾನವಾಗಿದೆ. ಕನ್ನಡಿಗರು ತಲೆ ತಗ್ಗಿಸುವಂತಾಗಿದೆ. ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿದರು. +ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದ ಹೈಕೋರ್ಟ್ +ಘೋಷಣೆ ಕೂಗಿದವರನ್ನು ಯಾರು ಕರೆದುಕೊಂಡು ಬಂದರು, ಬಿರಿಯಾನಿ ಕೊಟ್ಟು ಯಾರು ಕಳುಹಿಸಿಕೊಟ್ಟರು, ಇವರಿಗೆ ಹೇಗೆ ರಾಜ್ಯಸಭಾ ಟಿಕೆಟ್ ಕೊಟ್ಟರು, ಅವರೇ ತಾನೇ ಕರೆದುಕೊಂಡು ಬಂದದ್ದು ಎಂದಾಗ ಆಡಳಿತ ಪಕ್ಷದ ಶಾಸಕರಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದು ನೀವೇ ಉದ್ದೇಶಪೂರಕವಾಗಿಯೇ ಮಾಡಿರಬಹುದು. ಇದರ ಬಗ್ಗೆ ತನಿಖೆಯಾಗಬೇಕೆಂದರು. +ಮಾಧ್ಯಮದವರನ್ನು ಚುನಾಯಿತ ಅಭ್ಯರ್ಥಿ ಗೆಟ್ ಔಟ್ ಎನ್ನುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮವೂ ಒಂದು ಅಂಗ ಎನ್ನುತ್ತಿದ್ದಂತೆ ಆಡಳಿತ ಪಕ್ಷದಿಂದ ನಾಸಿರ್ ಹುಸೇನ್ ಬಗ್ಗೆ ಏಕೆ ಮಾತನಾಡುತ್ತೀರಿ ಎಂದು ತೀವ್ರ ಆಕ್ಷೇಪ ವ್ಯಕ್ತವಾಯಿತು. ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರು ರಾಜಕೀಯ ವಿಚಾರ ಪ್ರಸ್ತಾಪ ಬೇಡ. ವ್ಯಾಪ್ತಿ ಮೀರಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾದಾಗ ಸಭಾಧ್ಯಕ್ಷರು ಸದನದ ಕಾರ್ಯಕಲಾಪವನ್ನು 10 ನಿಮಿಷ ಮುಂದೂಡಿದರು. \ No newline at end of file diff --git a/eesanje/url_47_156_10.txt b/eesanje/url_47_156_10.txt new file mode 100644 index 0000000000000000000000000000000000000000..8ca92716623f03877ce7cc31717f95d69d985a32 --- /dev/null +++ b/eesanje/url_47_156_10.txt @@ -0,0 +1,8 @@ +ಜ್ಞಾನವಾಪಿ: ಹಿಂದೂಗಳ ಹೋರಾಟಕ್ಕೆ ಮತ್ತೊಂದು ಕಾನೂನು ಜಯ +ಪ್ರಯಾಗರಾಜ್,ಫೆ.26-ಜ್ಞಾನವಾಪಿ ಮಸೀದಿಯ ವ್ಯಾಸ್ ತೆಹ್ಖಾನಾದಲ್ಲಿ ಪೂಜೆಗೆ ಅವಕಾಶ ನೀಡಿದ ವಾರಾಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗಿ ಹಿಂದೂಗಳ ಹೋರಾಟಕ್ಕೆ ಕಾನೂನಿನ ಜಯ ಸಿಕ್ಕಂತಾಗಿದೆ. +ವಾರಾಣಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಆಸ್ತಿಯ ರಿಸೀವರ್ (ಕಾಪಾಲುದಾರ) (ವ್ಯಾಸ್ ತೆಹ್ಖಾನಾ) ಆಗಿ ನೇಮಿಸಿದ ವಾರಾಣಸಿ ಜಿಲ್ಲಾ ನ್ಯಾಯಾೀಧಿಶರ ಜನವರಿ 17 ರ ಆದೇಶ ಮತ್ತು ಜನವರಿ 31 ರ ಪೂಜೆಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ. +ಈ ಸಂಬಂಧ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಅಲಹಾಬಾದ್ ಹೈಕೋರ್ಟ್ ಅಂಜುಮನ್ ಇಂಟೆಜಾಮಿಯಾ ಅವರ ಆದೇಶದ ಮೊದಲ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಲ್ಲಿ ವಾರಾಣಸಿ ಜಿಲ್ಲಾ ನ್ಯಾಯಾಲಯವು ಜನವರಿ 17 ಮತ್ತು 31ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸಲಾಗಿದೆ. ವಿಷಯ ಏನೆಂದರೆ ಜ್ಞಾನವಾಪಿ ಕಾಂಪ್ಲೆಕ್ಸ್‍ನ ವ್ಯಾಸ್ ತೆಹ್ಖಾನಾದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಯುತ್ತದೆ ಎಂದರು. +ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ +ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ವಿಗ್ರಹಪೂಜೆಗೆ ಅರ್ಚಕರಿಗೆ ಅವಕಾಶ ಕಲ್ಪಿಸಿ ವಾರಾಣಸಿ ಜಿಲ್ಲಾ ನ್ಯಾಯಾಲಯ ಜ. 31ರಂದು ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‍ಲ್ಲೂ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಜಿಲ್ಲಾ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾೀಧಿಶರೊಬ್ಬರು ನಿವೃತ್ತಿಯ ದಿನದಂದೇ ತರಾತುರಿಯಲ್ಲಿ ಆದೇಶ ಹೊರಡಿಸಿದ್ದಾರೆ ಎಂದು ಮಸೀದಿ ಸಮಿತಿ ಪರ ವಕೀಲರು ಪೀಠಕ್ಕೆ ತಿಳಿಸಿದ್ದರು. +ಆ ಸ್ಥಳದಲ್ಲಿ ಹಿಂದಿನಿಂದಲೂ ಪೂಜೆ ನಡೆಸಲಾಗುತ್ತಿತ್ತು. 1993 ರಲ್ಲಿ ಪೂಜೆ ನಿಲ್ಲಿಸಲಾಗಿತ್ತು. ಈಗ ಪೂಜೆಗೆ ಅವಕಾಶ ನೀಡಿರುವುದರಿಂದ ಅವರಿಗೆ (ಮುಸ್ಲಿಮರಿಗೆ) ಯಾವುದೇ ತೊಂದರೆ ಉಂಟಾಗಿಲ್ಲ ಎಂದು ಹಿಂದೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದ್ದರು. ಈ ಹಿಂದೆಯೂ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ನೀಡಿರುವ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಸೀದಿ ನಿರ್ವಹಣಾ ಸಮಿತಿ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಅಲಹಾಬಾದ್ ಹೈಕೋರ್ಟ್‍ನ ಮೆಟ್ಟಿಲೇರಿತ್ತು. +ವಾರಣಾಸಿ ಜಿಲ್ಲಾ ನ್ಯಾಯಾಲಯ ಜ.31ರಂದು ಆದೇಶ ನೀಡಿತ್ತು. ಇದರ ವಿರುದ್ಧ ಮಸೀದಿ ಸಮಿತಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಮನವಿಯನ್ನು ತುರ್ತಾಗಿ ಆಲಿಸಲು ಸುಪ್ರೀಂಕೋರ್ಟ್ ನಿರಾಕರಿಸಿದ್ದರಿಂದ ಸಮಿತಿ ಹೈಕೋರ್ಟ್ ಮೊರೆ ಹೋಗಿತ್ತು. ಈ ನಡುವೆ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ ಪ್ರಾರಂಭಗೊಂಡಿದೆ. ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಮುಚ್ಚಿದ ನೆಲಮಾಳಿಗೆ ತೆಹ್ಖಾನಾ ಒಳಗಡೆ ಹಿಂದೂಗಳು ಪೂಜಾ ವಿಧಿಗಳನ್ನು ನಡೆಸಲು 7 ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ವಾರಾಣಸಿ ಜಿಲ್ಲಾ ನ್ಯಾಯಾೀಧಿಶರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದರು. \ No newline at end of file diff --git a/eesanje/url_47_156_11.txt b/eesanje/url_47_156_11.txt new file mode 100644 index 0000000000000000000000000000000000000000..65e9561c2b062e6ac02e49e4d59d83fda88c1631 --- /dev/null +++ b/eesanje/url_47_156_11.txt @@ -0,0 +1,9 @@ +ಪ್ರತ್ಯೇಕ ಅಪಘಾತ: 15 ಮಂದಿ ಸಾವು +ಪಾಟ್ನಾ,ಫೆ.26- ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ 15 ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿರುವ ಘಟನೆ ಬಿಹಾರ ಹಾಗೂ ಉತ್ತರಪ್ರದೇಶದಲ್ಲಿ ನಡೆದಿದೆ. +ಸರಣಿ ಅಪಘಾತ:ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿ ನಿನ್ನೆ ಸಂಜೆ ಎನ್‍ಎಚ್ 2ರ ದೇವಕಾಲಿ ಗ್ರಾಮದ ಬಳಿ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ನಲ್ಲಿ ನಡೆದಿದೆ. +ಸಸಾರಾಮ್‍ನಿಂದ ವಾರಾಣಸಿಗೆ ತೆರಳುತ್ತಿದ್ದ ಕಾರು, ಮೋಟಾರ್ಸೈಕಲ್‍ಗೆ ಡಿಕ್ಕಿ ಹೊಡೆದಿದೆ. ಆಗ ಎದುರಿನ ಲೇನ್‍ಗೆ ದ್ವಿಚಕ್ರವಾಹನ ಮತ್ತು ಕಾರು ಪಲ್ಟಿಯಾಗಿ ಟ್ರಕ್ ಡಿಕ್ಕಿ ಹೊಡೆದಿದೆ. ಜೀಪ್‍ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‍ಗೆ ಜೀಪ್ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ರಕ್ ಬೈಕ್ ಮತ್ತು ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಹಾಗೂ ಜೀಪ್‍ನಲ್ಲಿದ್ದ 8 ಜನ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. +ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ +ಆಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಟ್ರಕ್‍ನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಂತ್ರಸ್ತರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಮೊಹಾನಿಯಾದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಕುಮಾರ್ ಹೇಳಿದ್ದಾರೆ. ಅಪಘಾತದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. +ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ:ಉತ್ತರಪ್ರದೇಶ ಜೌನ್‍ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಉತ್ತರಪ್ರದೇಶದ ರೋಡ್‍ವೇಸ್ ಬಸ್ ಪ್ರಯಾಗ್‍ರಾಜ್‍ನಿಂದ ಜಾನ್‍ಪುರಕ್ಕೆ ತೆರಳುತ್ತಿತ್ತು. ನಿನ್ನೆ ರಾತ್ರಿ 11.15ರ ಸುಮಾರಿಗೆ ಸಮದ್‍ಗಂಜ್ ಬಳಿ ಅಪಘಾತ ಸಂಭವಿಸಿದೆ. +ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ +ಪೊಲೀಸರ ಪ್ರಕಾರ, ಆರರ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತು ಆರನೆಯವರು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ 12 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. \ No newline at end of file diff --git a/eesanje/url_47_156_12.txt b/eesanje/url_47_156_12.txt new file mode 100644 index 0000000000000000000000000000000000000000..3d1e4b34915bf099d5f4b3bf8a33260bb603c26d --- /dev/null +++ b/eesanje/url_47_156_12.txt @@ -0,0 +1,6 @@ +ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆ +ನವದೆಹಲಿ, ಫೆ.26: ರಷ್ಯಾದ ಸೇನೆಗೆ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಹಲವಾರು ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ. ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಷ್ಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಹುತೇಕರನ್ನು ಮುಕ್ತಗೊಳಿಸಲಾಗಿದೆ. +ಭಾರತೀಯ ಪ್ರಜೆಗಳ ಮೇಲಿರುವ ಎಲ್ಲಾ ಪ್ರಕರಣಗಳನ್ನು ರಷ್ಯಾದ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಮುಂದುವರಿಸುವುದು ಭಾರತದ ಆದ್ಯತೆಯ ವಿಷಯವಾಗಿದ್ದು ಅದಕ್ಕೆ ಬದ್ಧವಾಗಿದೆ ಎಂದು ತಿಳಿಸಲಾಗಿದೆ.ವರದಿಗಳ ಪ್ರಕಾರ, ಹಲವಾರು ಭಾರತೀಯರು ರಷ್ಯಾದ ಮಿಲಿಟರಿಯಲ್ಲಿ ಭದ್ರತಾ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಅವರು ಉಕ್ರೇನ್‍ನೊಂದಿಗಿನ ರಷ್ಯಾದ ಗಡಿಯುದ್ದಕ್ಕೂ ಕೆಲವು ಪ್ರದೇಶಗಳಲ್ಲಿ ರಷ್ಯಾದ ಸೈನಿಕರೊಂದಿಗೆ ಹೋರಾಡಲು ಒತ್ತಾಯಿಸಲಾಯಿತು ಎಂದು ಕೆಲವು ಮಾಧ್ಯಮಗಳಲ್ಲಿ ತಪ್ಪಾಗಿ ಬಿತ್ತರಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. +ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ +ಈ ಬಗ್ಗೆ ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾದ ಪ್ರತಿಯೊಂದು ವಿಷಯವನ್ನು ರಷ್ಯಾದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇದಲ್ಲದೆ ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯೊಂದಿಗೆ ಮಾತುಕತೆ ನಡೆಸಿದ್ದೇವೆ ಇದರ ಫಲವಾಗಿ ಭಾರತೀಯರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಕಳೆದ ವಾರ, ವಕ್ತಾರ ರಣೀರ್ ಜೈಸ್ವಾಲ್ ಅವರು ರಷ್ಯಾದ ಸೈನ್ಯಕ್ಕೆ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುವ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮಾಸ್ಕೋದೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ ಮತ್ತು ಉಕ್ರೇನ್‍ನಲ್ಲಿನ ಸಂಘರ್ಷ ವಲಯದಿಂದ ದೂರವಿರಲು ಮನವಿ ಮಾಡಲಾಗಿತ್ತು ಎಂದು ತಿಳಿಸಿದರು. \ No newline at end of file diff --git a/eesanje/url_47_156_2.txt b/eesanje/url_47_156_2.txt new file mode 100644 index 0000000000000000000000000000000000000000..ee39ae615e7699b3ee4fb6d75a696758efaf0e61 --- /dev/null +++ b/eesanje/url_47_156_2.txt @@ -0,0 +1,6 @@ +ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಸಂತನ್ ಸಾವು +ಚೆನ್ನೈ, ಫೆ 28 : ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಹೃದಯಾಘಾತದಿಂದ ಇಲ್ಲಿ ಸಾವನ್ನಪ್ಪಿದ್ದಾನೆ.ಶ್ರೀಲಂಕಾದ ಪ್ರಜೆ ಸಂತನ್ ಅಲಿಯಾಸ್ ಟಿ ಸುತೇಂದ್ರರಾಜ (55) ಮೃತ ವ್ಯಕ್ತಿಯಾಗಿದ್ದು ,ಕಳೆದ 1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ 2022 ರಲ್ಲಿ ಸುಪ್ರೀಂ ಕೋರ್ಟ್‍ನಿಂದ ಕ್ಷಮಾ ಅರ್ಜಿ ಮೂಲಕ ಬಿಡುಗಡೆ ಮಾಡಿದ ಏಳು ಅಪರಾಧಿಗಳಲ್ಲಿ ಈತನು ಒಬ್ಬ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಅನಾರೋಗ್ಯ(ಲಿವರ್ ವೈಫಲ್ಯ)ದಿಂದ ಬಳಲುತ್ತಿದ್ದ ಆತನನ್ನು ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತು.ಆದರೆ ಚಿಕಿತ್ಸೆ ಫಲಿಸದೆ ಬೆಳಿಗ್ಗೆ 7.50 ಕ್ಕೆ ನಿಧನರಾದರು ಎಂದು ಡೀನ್ ಇ ಥೆರನಿರಾಜನ್ ಅವರು ತಿಳಿಸಿದ್ದಾರೆ. +ರಾಜ್ಯಸಭೆ ಚುನಾವಣೆ: ಎನ್‌ಡಿಎ ಮೈತ್ರಿಗೆ ಸೋಲು, ಕಾಂಗ್ರೆಸ್- ಬಿಜೆಪಿಯ ಅಭ್ಯರ್ಥಿಗಳಿಗೆ ಗೆಲುವು +ಇಂದು ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಸಂತಾನ್‍ಗೆ ಹೃದಯ ಸ್ತಂಭನ ಉಂಟಾಗಿತ್ತು ವೈದ್ಯರು ಸಿಪಿಆರ್ (ಹೃದಯ ಶ್ವಾಸಕೋಶದ ಪುನರುಜ್ಜೀವನ) ಕಾರ್ಯವಿಧಾನವನ್ನು ಅನುಸರಿಸಿ ಪುನರುಜ್ಜೀವನಗೊಳಿಸಲಾಯಿತು ನಂತರ ವೆಂಟಿಲೇಟರ್‍ನಲ್ಲಿದ್ದರು ಆದರೆ ಬೆಳಗ್ಗೆ 7.50ಕ್ಕೆ ಮೃತಪಟ್ಟಿದ್ದಾರೆ ಎಂದು ಎಂದು ಥೆರನಿರಾಜನ್ ಸುದ್ದಿಗಾರರಿಗೆ ತಿಳಿಸಿದರು. +ಮರಣೋತ್ತರ ಪರೀಕ್ಷೆ ನಡೆಸಿದ ನಂತರ ದೇಹವನ್ನು ಶ್ರೀಲಂಕಾಕ್ಕೆ ಕಳುಹಿಸಲು ಕಾನೂನು ವ್ಯವಸ್ಥೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಬಿಡುಗಡೆಯಾದ ನಂತರ ತಿರುಚಿರಾಪಳ್ಳಿಯ ವಿಶೇಷ ಶಿಬಿರದಲ್ಲಿದ್ದ ಕಳೆದ ಜನವರಿ 27 ರಂದು ಅನ್ಯಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. \ No newline at end of file diff --git a/eesanje/url_47_156_3.txt b/eesanje/url_47_156_3.txt new file mode 100644 index 0000000000000000000000000000000000000000..42f2911de5eb5c10b730c1f5edd95068b88e42ca --- /dev/null +++ b/eesanje/url_47_156_3.txt @@ -0,0 +1,5 @@ +ಕೇರಳದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ +ಇಡುಕ್ಕಿ (ಕೇರಳ), ಫೆ.27: ಕೇರಳದಲ್ಲಿ ಮಾನವ-ಪ್ರಾಣಿ ಸಂಘರ್ಷ ಮುಂದುವರಿದಿದ್ದು, ಗುಡ್ಡಗಾಡು ಜಿಲ್ಲೆಯ ಮುನ್ನಾರ್‍ನ ಪ್ರವಾಸಿ ಪಟ್ಟಣ ಸಮೀಪದ ಕನ್ನಿಮಲಾ ಎಸ್ಟೇಟ್‍ನಲ್ಲಿ ಕಾಡು ಆನೆಯ ದಾಳಿಗೆ ಆಟೋರಿಕ್ಷಾ ಚಾಲಕ ಸಾವನ್ನಪ್ಪಿದ್ದಾನೆ. ಕಳೆದ ರಾತ್ರಿ ಆಟೋರಿಕ್ಷಾದಲ್ಲಿ ಪ್ರಯಾಣಿಕರನ್ನು ಕುರಿಸಿಕೊಂಡು ತೆರಳುತ್ತಿದ್ದ ಮೇಳೆ ಆನೆ ದಾಳಿ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇಲ್ಲಿ ಆತ ಆಟೋರಿಕ್ಷಾ ಚಾಲಕ ಕೆಲಸ ಮಾಡುತ್ತಿದ್ದ ಆನೆ ದಾಳಿ ವೇಳೆ ಆಟೋದಲ್ಲಿದ್ದ ಪ್ರಯಾಣಿಕರು ಆನೆ ಕಂಡ ತಕ್ಷಣ ವಾಹನದಿಂದ ಇಳಿದು ತಪ್ಪಿಸಿಕೊಂಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬೆಳಿಗ್ಗೆ ಮುನ್ನಾರ್ ಠಾಣೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ. +ಜೆಡಿಎಸ್-ಬಿಜೆಪಿ ನಾಯಕರ ನಡುವೆ ಲೋಕಸಭಾ ಚುನಾವಣೆ ಕುರಿತು ಸ್ವಾರಸ್ಯಕರ ಚರ್ಚೆ +ವಯನಾಡ್‍ನಲ್ಲಿ ಇತ್ತೀಚೆಗೆ ಕಾಡಾನೆಗಳ ದಾಳಿಗೆ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರಿಂದ ಸ್ಥಳೀಯ ಜನರು ಭಾರಿ ಪ್ರತಿಭಟನೆಗೆ ನಡೆಸಿದ್ದರು ಈಗ ರಾಜ್ಯದಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದೆ. ಇಂದು ವಿವಿಧ ಸಂಘಟನೆಗಳು ಮುನ್ನಾರ್‍ನಲ್ಲಿ ರಸ್ತೆ ತಡೆ ಹಾಗು ಪ್ರತಿಭಟನೆಗಳನ್ನು ನಡೆಸಿದ್ದಾರೆ. \ No newline at end of file diff --git a/eesanje/url_47_156_4.txt b/eesanje/url_47_156_4.txt new file mode 100644 index 0000000000000000000000000000000000000000..9c005e36b16018acd08997e063b223a43092bede --- /dev/null +++ b/eesanje/url_47_156_4.txt @@ -0,0 +1,7 @@ +ಮಹಾರಾಷ್ಟ್ರ ಕಾಂಗ್ರೆಸ್‍ಗೆ ಮತ್ತೊಂದು ಶಾಕ್ : ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ್ ರಾಜೀನಾಮೆ +ಮುಂಬೈ,ಫೆ.27- ಲೋಕಸಭಾ ಚುನಾವಣೆ ಘೋಷಣೆಯಾಗುವ ಮುನ್ನವೇ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಮತ್ತೊಂದು ಹಿನ್ನಡೆಯಾಗಿದೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ರಾಜ್ಯ ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ್ ಮುರುಮಕರ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಪಕ್ಷವನ್ನು ತೊರೆದಿದ್ದರು. +ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ ಪಾಟೀಲ್ ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ. ಇವರು ಮರಾಠವಾಡ ಪ್ರದೇಶದಲ್ಲಿ ದೊಡ್ಡ ನಾಯಕರಾಗಿದ್ದಾರೆ. 2019 ರಲ್ಲಿ ಔಸಾ ವಿಧಾನಸಭಾ ಕ್ಷೇತ್ರದಿಂದ ಸೋತ ನಂತರ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರದ ಕಾರಣ ಮಾಜಿ ಸಚಿವರು ಪಕ್ಷ ತೊರೆದರೂ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯದರ್ಶಿ ಅಭಯ ಸಾಳುಂಕೆ ಹೇಳಿದ್ದಾರೆ. +ಇತ್ತೀಚಿನ ದಿನಗಳಲ್ಲಿ, ಅಶೋಕ್ ಚವಾಣ್, ಮಿಲಿಂದ್ ದಿಯೋರಾ ಮತ್ತು ಬಾಬಾ ಸಿದ್ದೀಖಿ ಸೇರಿದಂತೆ ಅನೇಕ ಹಿರಿಯ ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಪಕ್ಷವನ್ನು ತೊರೆದಿದ್ದಾರೆ. ಚವಾಣ್ ಬಿಜೆಪಿಗೆ ಸೇರ್ಪಡೆಗೊಂಡಿದ್ದರೆ, ದಿಯೋರಾ ಈಗ ಏಕನಾಥ್ ಶಿಂಧೆ ಅವರ ಶಿವಸೇನೆಯಲ್ಲಿದ್ದಾರೆ. ಈ ಇಬ್ಬರೂ ನಾಯಕರು ರಾಜ್ಯಸಭಾ ಚುನಾವಣೆಗೆ ನಾಮ ನಿರ್ದೇಶನಗೊಂಡಿದ್ದಾರೆ. ಮತ್ತೊಂದೆಡೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‍ಸಿಪಿಗೆ ಬಾಬಾ ಸಿದ್ದೀಖಿ ಸೇರಿದ್ದಾರೆ. +ಜೆಡಿಎಸ್-ಬಿಜೆಪಿ ನಾಯಕರ ನಡುವೆ ಲೋಕಸಭಾ ಚುನಾವಣೆ ಕುರಿತು ಸ್ವಾರಸ್ಯಕರ ಚರ್ಚೆ +ಬಸವರಾಜ್ ಪಾಟೀಲ್ ಮುರುಮಕರ ಯಾರು?ಧಾರಾಶಿವ ಜಿಲ್ಲೆಯ ಉಮರ್ಗಾ ತಾಲೂಕಿನ ಮುರುಮ್ ನಿವಾಸಿ ಬಸವರಾಜ್ ಪಾಟೀಲ್ ಅವರು 1999 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಆಯ್ಕೆಯಾದರು. ಅನಂತರ ಅವರು ಮಹಾರಾಷ್ಟ್ರ ಸಂಪುಟದಲ್ಲಿ ಸಚಿವರಾಗಿದ್ದರು. ಬಸವರಾಜ್ ಪಾಟೀಲ್ ಅವರು 1999 ರಿಂದ 2004 ರವರೆಗೆ ಮಹಾರಾಷ್ಟ್ರದ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಪಾಟೀಲ್ 2004 ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. +ಅನಂತರ, ಅವರು ಮೊದಲ ಬಾರಿಗೆ ಉಮರ್ಗಾ ವಿಧಾನಸಭೆಯಿಂದ ಗೆದ್ದರು. ಆದರೆ ನಂತರ ಅದನ್ನು ಮೀಸಲು ಕ್ಷೇತ್ರವೆಂದು ಘೋಷಿಸಲಾಯಿತು. ಆದ್ದರಿಂದ, ಪಕ್ಷವು ಅವರನ್ನು 2009 ರ ಚುನಾವಣೆಯಲ್ಲಿ ಔಸಾ ಕ್ಷೇತ್ರದಿಂದ ನಾಮನಿರ್ದೇಶನ ಮಾಡಿತ್ತು. \ No newline at end of file diff --git a/eesanje/url_47_156_5.txt b/eesanje/url_47_156_5.txt new file mode 100644 index 0000000000000000000000000000000000000000..2d5986698d1d4afdf771eed9d85c29549db2f8a2 --- /dev/null +++ b/eesanje/url_47_156_5.txt @@ -0,0 +1,6 @@ +ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಪಾಂಡೆ +ಲಕ್ನೋ,ಫೆ.27- ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕರೆದಿದ್ದ ಸಭೆಗೆ ಗೈರು ಹಾಜರಾದ ಒಂದು ದಿನದ ನಂತರ ಸಮಾಜವಾದಿ ಪಕ್ಷದ ಶಾಸಕ ಮನೋಜ್ ಕುಮಾರ್ ಪಾಂಡೆ ಪಕ್ಷದ ಮುಖ್ಯ ಸಚೇತಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಎಂಟು ಬಿಜೆಪಿ ಅಭ್ಯರ್ಥಿಗಳು ಮತ್ತು ಸಮಾಜವಾದಿ ಪಕ್ಷದ ಮೂವರು ಕಣದಲ್ಲಿದ್ದಾರೆ. +ಯಾದವ್ಗೆ ಬರೆದ ಪತ್ರದಲ್ಲಿ ಎಸ್ಪಿ ನಾಯಕ, ನೀವು ನನ್ನನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯ ಸಚೇತಕನನ್ನಾಗಿ ನೇಮಿಸಿದ್ದೀರಿ. ನಾನು ಮುಖ್ಯ ಸಚೇತಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ಮನವಿ ಮಾಡಿದ್ದಾರೆ. ಪಾಂಡೆ ಅವರು ರಾಯ್ಬರೇಲಿಯ ಉಂಚಹಾರ್ ಕ್ಷೇತ್ರದ ಶಾಸಕರಾಗಿದ್ದಾರೆ. ಹಿಂದಿನ ಅಖಿಲೇಶ್ ಯಾದವ್ ಸರ್ಕಾರದಲ್ಲಿ ಅವರು ಕ್ಯಾಬಿನೆಟ್ ಸಚಿವರಾಗಿದ್ದರು. +ಲೋಕಸಭಾ ಚುನಾವಣೆಗೆ ಮೈಸೂರಿನಿಂದ 26.55 ಲಕ್ಷ ಅಳಿಸಲಾಗದ ಶಾಯಿ ಪೂರೈಕೆ +ಯಾದವ್ ಸೋಮವಾರ ಕರೆದಿದ್ದ ಸಭೆಗೆ ಎಂಟು ಎಸ್ಪಿ ಶಾಸಕರು ಹಾಜರಾಗಿರಲಿಲ್ಲ. ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆಯ ಬಗ್ಗೆ ಶಾಸಕರಿಗೆ ಮಾಹಿತಿ ನೀಡಲು ಪಕ್ಷದ ಮುಖ್ಯಸ್ಥರು ಸಭೆ ಕರೆದಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಎಸ್ಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. +ಆದಾಗ್ಯೂ, ಪಾಂಡೆ ಮತ್ತು ಇತರ ಏಳು ಶಾಸಕರು ಮುಖೇಶ್ ವರ್ಮಾ, ಮಹಾರಾಜಿ ಪ್ರಜಾಪತಿ, ಪೂಜಾ ಪಾಲ, ರಾಕೇಶ್ ಪಾಂಡೆ, ವಿನೋದ್ ಚತುರ್ವೇದಿ, ರಾಕೇಶ್ ಪ್ರತಾಪ್ ಸಿಂಗ್ ಮತ್ತು ಅಭಯ್ ಸಿಂಗ್ ಅವರು ಸಭೆಗೆ ಹಾಜರಾಗಲಿಲ್ಲ. ಎಸ್ಪಿಯ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧರಿ, ಯಾದವ್ ಕರೆದಿದ್ದ ಭೋಜನ ಮತ್ತು ಸಭೆಗೆ ಎಂಟು ಶಾಸಕರು ಹಾಜರಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಶಾಸಕರ ಹೆಸರು ಬಹಿರಂಗಪಡಿಸಲಿಲ್ಲ. \ No newline at end of file diff --git a/eesanje/url_47_156_6.txt b/eesanje/url_47_156_6.txt new file mode 100644 index 0000000000000000000000000000000000000000..5a76359d6a2f43035daaa9ce0dec9adf3b36dbb7 --- /dev/null +++ b/eesanje/url_47_156_6.txt @@ -0,0 +1,5 @@ +8 ಶಾಸಕರನ್ನು ಅನರ್ಹಗೊಳಿಸಿದ ಆಂಧ್ರ ಸ್ಪೀಕರ್ +ಅಮರಾವತಿ,ಫೆ.27- ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಮುಖ್ಯಮಂತ್ರಿ ಕಚೇರಿ ಅಧಿಕೃತ ಪ್ರಕಟಣೆಯ ಪ್ರಕಾರ, ಅನರ್ಹಗೊಂಡ ಸದಸ್ಯರಲ್ಲಿ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಸೇರಿದ್ದಾರೆ. +ಮುಖ್ಯಮಂತ್ರಿ ಕಚೇರಿ ಪ್ರಕಟಣೆ ಪ್ರಕಾರ ಉಲ್ಲೇಖಿಸಲಾದ ಶಾಸಕರ ವಿರುದ್ಧ ವೈಎಸ್‍ಆರ್‍ಸಿಪಿಯ ಅರ್ಜಿಯಲ್ಲಿ ಸಲ್ಲಿಸಲಾದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಅನರ್ಹತೆ ನಿರ್ಧಾರಕ್ಕೆ ಬರಲಾಗಿದೆ. +ನ್ಯೂಜಿಲೆಂಡ್ ವೇಗದ ಬೌಲರ್ ನೀಲ್ ವ್ಯಾಗ್ನರ್ ಟೆಸ್ಟ್ ಕ್ರಿಕೆಟ್‍ಗೆ ನಿವೃತ್ತಿ ಘೋಷಿಣೆ +ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ. ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಇದಲ್ಲದೇ, ತೆಲುಗು ದೇಶಂ ಪಕ್ಷ (ಟಿಡಿಪಿ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಮದ್ದಲಗಿರಿ, ಕರಣಂ ಬಲರಾಮ, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಅನರ್ಹಗೊಂಡಿದ್ದಾರೆ. ಟಿಡಿಪಿ ಕೂಡ ತನ್ನ ಶಾಸಕರ ವಿರುದ್ಧ ಇದೇ ಆರೋಪ ಮಾಡಿದೆ. \ No newline at end of file diff --git a/eesanje/url_47_156_7.txt b/eesanje/url_47_156_7.txt new file mode 100644 index 0000000000000000000000000000000000000000..8a8c3a8481b67a66764a72cdd02e0bd380e9d77a --- /dev/null +++ b/eesanje/url_47_156_7.txt @@ -0,0 +1,5 @@ +ಪರೀಕ್ಷೆಗಳಿಗೆ ತೆರಳುತ್ತಿದ್ದಾಗ ಅಪಘಾತ: 4 ವಿದ್ಯಾರ್ಥಿಗಳ ಸಾವು +ಶಹಜಹಾನ್‍ಪುರ , ಫೆ 27: ಕಾರೊಂದು ಚಾಲಕನ ನಿರಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪರೀಕ್ಷೆ ಬರೆಯಲು ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿಳು ಸಾವನ್ನಪ್ಪಿ,ಆರು ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ ಜರವಾವ್ ಗ್ರಾಮದ ಬಳಿ ನಡೆದಿದೆ. +ವಿದ್ಯಾರ್ಥಿಗಳನ್ನು ಅನುರಪ್ ಖುಷ್ವಾಹ (15), ಅನುರಾಗ್ ಶ್ರೀವಾಸ್ತವ (14), ಪ್ರತಿಷ್ಠಾ ಮಿಶ್ರಾ (15),ಮೋಹಿನಿ ಮೌರ್ಯ (16) ಎಂದು ಗುರುತಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಬೋರ್ಡ್ ಪರೀಕ್ಷೆ ಆರಂಭವಾಗಿದ್ದು ವಿದ್ಯಾರ್ಥಿಗಳು ಕಾರಿನಲ್ಲಿ ಪರೀಕ್ಷೆಗಾಗಿ ಜೈತಿಪುರದ ಶಾಲೆಗೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +553 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ +ಕಾರು ರಭಸವಾಗಿ ಮರಕ್ಕೆ ಡಿಕ್ಕಿ ಹೊಡೆದು ಬಳಿಯ ಕಂದಕಕ್ಕೆ ಬಿದ್ದಿದೆ ಎಂದು ಹೆಚ್ಚುವರಿ ಎಸ್ಪಿ ಸಂಜಯ್ ಕುಮಾರ್ ತಿಳಿಸಿದ್ದಾರೆ.ಗಾಯಗೊಂಡಿರುವ ಇತರ ಆರು ಮಂದಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_156_8.txt b/eesanje/url_47_156_8.txt new file mode 100644 index 0000000000000000000000000000000000000000..30c62fd3a2c6d754aa91fea11d792efb7fc34092 --- /dev/null +++ b/eesanje/url_47_156_8.txt @@ -0,0 +1,6 @@ +553 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ +ಬೆಂಗಳೂರು– ಅಮೃತ್ಭಾರತ್ಸ್ಟೇಷನ್ಯೋಜನೆಯಡಿ 19,000 ಕೋಟಿರೂ.ಗಳವೆಚ್ಚದಲ್ಲಿ 553 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಶಂಕುಸ್ಥಾಪನೆನೆರವೇರಿಸಿ ಪುನರಾಭಿವೃದ್ಧಿಗೋ ಮತಿ ನಗರ ರೈಲ್ವೆ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಸುಮಾರು 21,520 ಕೋಟಿರೂ.ಗಳ ವೆಚ್ಚದಲ್ಲಿ ದೇಶಾದ್ಯಂತ 1500 ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳನ್ನು ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. +“ಒಂದೇ ಬಾರಿಗೆ 2000 ಯೋಜನೆಗಳನ್ನು ಪ್ರಾರಂಭಿಸುವುದರೊಂದಿಗೆ, ಭಾರತವು ತನ್ನ ರೈಲ್ವೆ ಮೂಲಸೌಕರ್ಯದ ಮೆಗಾ ಪರಿವರ್ತನೆಗೆ ಸಾಕ್ಷಿಯಾಯಿತು “ಭಾರತ ಇಂದು ಏನು ಮಾಡಿದರೂ, ಅದು ಅಭೂತಪೂರ್ವ ವೇಗ ಮತ್ತು ಪ್ರಮಾಣದಲ್ಲಿ ಮಾಡುತ್ತದೆ. ನಾವು ದೊಡ್ಡ ಕನಸುಗಳನ್ನು ಕಾಣುತ್ತೇವೆ ಮತ್ತು ಅವುಗಳನ್ನು ಸಾಕಾರಗೊಳಿಸಲು ದಣಿವರಿಯದೆ ಕೆಲಸಮಾಡುತ್ತೇವೆ. ಈ ಸಂಕಲ್ಪವು ಈ ವಿಕಸಿತ ಭಾರತ್ವಿಕಸಿತ ರೈಲ್ವೆ ಕಾರ್ಯಕ್ರಮದಲ್ಲಿಗೋಚರಿಸುತ್ತದೆ” ಎಂದು ಹೇಳಿದರು. +“ಅಮೃತ್ಭಾರತ್ನಿಲ್ದಾಣಗಳುವಿಕಾಸ್ಮತ್ತುವಿರಾಸತ್ಎರಡರಸಂಕೇತಗಳಾಗಿವೆ” ಕಳೆದ 10 ವರ್ಷಗಳಲ್ಲಿ ವಿಕಸಿತ ಭಾರತ್ರಚನೆಯು ರೈಲ್ವೆಯಲ್ಲಿ ವಿಶೇಷವಾಗಿ ಸ್ಪಷ್ಟವಾಗಿದೆ, ವಿಮಾನ ನಿಲ್ದಾಣಗಳಲ್ಲಿನ ಆಧುನಿಕ ಸೌಲಭ್ಯಗಳನ್ನು ಈಗ ರೈಲ್ವೆನಿಲ್ದಾಣಗಳಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಲಭ್ಯವಾಗುವಂತೆಮಾಡಲಾಗುತ್ತಿದೆ” +ವ್ಹೀಲಿಂಗ್ ಹಾವಳಿ: 6 ಯುವಕರ ವಿರುದ್ಧ ಎಫ್‍ಐಆರ್ +“ರೈಲ್ವೆ ನಾಗರಿಕರಿಗೆ ಪ್ರಯಾಣವನ್ನು ಸುಲಭಗೊಳಿಸುವ ಪ್ರಮುಖ ಅಂಶವಾಗುತ್ತಿದೆ ಮೂಲಸೌಕರ್ಯಕ್ಕಾಗಿ ಖರ್ಚುಮಾಡುವ ಪ್ರತಿ ಪೈಸೆ ಹೊಸ ಆದಾಯದ ಮೂಲಗಳನ್ನು ಮತ್ತು ಹೊಸ ಉದ್ಯೋಗವನ್ನು ಸೃಷ್ಟಿಸುತ್ತದೆ, ಭಾರತೀಯ ರೈಲ್ವೆ ಕೇವಲ ಪ್ರಯಾಣಿಕರ ಸೌಲಭ್ಯವಲ್ಲ ಆದರೆ ಭಾರತದ ಕೃಷಿ ಮತ್ತು ಕೈಗಾರಿಕಾ ಪ್ರಗತಿಯ ಅತಿದೊಡ್ಡ ವಾಹಕವಾಗಿದೆ” ಎಂದು ಪ್ರಧಾನಿ ಮೋದಿ ಉದ್ಗರಿಸಿದರು. diff --git a/eesanje/url_47_157_1.txt b/eesanje/url_47_157_1.txt new file mode 100644 index 0000000000000000000000000000000000000000..de97e4b4aba7581bbe938e74ac71c728403e67e0 --- /dev/null +++ b/eesanje/url_47_157_1.txt @@ -0,0 +1,6 @@ +ಬಲವಂತವಾಗಿ ಭೂ ಕಬಳಿಕೆ:ಟಿಎಂಸಿ ನಾಯಕ ಶಾಜಹಾನ್ ಬಂಧನ +ಕೋಲ್ಕತಾ, ಫೆ 26: ಭೂ ಕಬಳಿಕೆ ಮಾಡಲು ಬಂದ ಟಿಎಂಸಿ ನಾಯಕರನ್ನು ಅಟ್ಟಾಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಪಶ್ಚಿಮ ಬಂಗಾಳ ಪೊಲೀಸರು ಅವರನ್ನು ಉತ್ತರ 24 ಪರಗಣ ಜಿಲ್ಲೆಯ ಸಂದೇಶಾಖಾಲಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಜಿತ್ ಮೈತಿ, ಶಹಜಹಾನ್ ಶೇಖ್ ಅವರ ಆಪ್ತ ಹಾಯಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮಹಿಳೆಯ ಮೇಲೆ ಶಹಜಹಾನ್ ಶೇಖ್ ದೌರ್ಜನ್ಯ ನಡೆಸಿದರಿಂದ ಕುಪಿತಗೊಂಡ ಗ್ರಾಮಸ್ಥರು ಟಿಎಂಸಿ ನಾಯಕರನ್ನು ಬೆನ್ನಟ್ಟಿದ ನಂತರ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಶೆಡ್‍ನಲ್ಲಿ ಕೂಡಿಹಾಕಿ ಬೀಗ ಜಡಿಯಲಾಗಿತ್ತು. ಭೂ ಕಬಳಿಕೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ದೂರುಗಳು ಬಂದ ನಂತರ ನಾವು ಅವನನ್ನು ಬಂಧಿಸಿದ್ದೇವೆ. ನಂತರ ನಾವು ಅತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. +ಬಿಜೆಪಿಯಿಂದ ಸುಮಲತಾ ಅಂಬರೀಶ್ ಬೀದಿಪಾಲು ; ಲಕ್ಷ್ಮಣ್ +ಸುಮಾರು 70 ಕ್ಕೂ ಹೆಚ್ಚು ದೂರುಗಳು ಶಾಜಹಾನ್ ವಿರುದ್ದ ದಾಖಲಾಗಿದ್ದು ತಮ್ಮ ಭೂಮಿಯನ್ನು ಬಲವಂತವಾಗಿ ಸ್ವಾೀಧಿನಪಡಿಸಿಕೊಳ್ಳಲು ಆತ ಪ್ರಯತ್ನಿಸಿದ ಮತ್ತು ಸ್ಥಳೀಯ ಮಹಿಳೆಯರನ್ನು ಹಿಂಸಿಸಿದ್ದಾನೆ ಎಂದು ಹೇಳಿದರು. ಎಚ್ಚೆತ್ತ ಟಿಎಂಸಿ ನಿಯೋಗವು ಪ್ರಕ್ಷುಬ್ಧ ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿದ ನಂತರ ಪೊಲೀಸ್ ಕ್ರಮ ಕೈಗೊಂಡಿದ್ದಾರೆ. +ಕೋಲ್ಕತಾದಿಂದ ಸುಮಾರು 100 ಕಿಲೋಮೀಟರ್ ದೂರದಲ್ಲಿರುವ ಸುಂದರ್‍ಬನ್ಸ್‍ನ ಗಡಿಯಲ್ಲಿರುವ ಸಂದೇಶ್‍ಖಾಲಿ ಪ್ರದೇಶವು ತಲೆಮರೆಸಿಕೊಂಡಿರುವ ಷಹಜಹಾನ್ ಮತ್ತು ಅವರ ಬೆಂಬಲಿಗರ ವಿರುದ್ಧ ಪ್ರತಿಭಟನೆಗಳು ತಿಳಿಸಿವೆ. \ No newline at end of file diff --git a/eesanje/url_47_157_10.txt b/eesanje/url_47_157_10.txt new file mode 100644 index 0000000000000000000000000000000000000000..f80afa0382d44534bf7b54847655b0eea29df2ce --- /dev/null +++ b/eesanje/url_47_157_10.txt @@ -0,0 +1,5 @@ +ಮೃತ ರೈತನ ಸಹೋದರಿಗೆ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸರ್ಕಾರ +ಚಂಡೀಗಢ, ಫೆ 23:ಖಾನೌರಿ ಗಡಿ ಬಿಂದುವಿನಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಸಹೋದರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 1 ಕೋಟಿ ರೂಪಾಯಿ ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದಾರೆ. +ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ರೈತರು ಪೊಲೀಸರ ಬ್ಯಾರಿಕೇಡ್‍ಗಳನ್ನು ಗುದ್ದಿ ಪಕ್ಕಕ್ಕೆ ತಳ್ಳಲುಯತ್ನಿಸಿದಾಗ ಈ ಘಟನೆ ನಡೆದಿದೆ. +ಆರ್ಥಿಕ ಸಬಲರಿಂದಲೇ ಕಾರ್ಮಿಕರಾಗಿ ನೋಂದಣಿ: ಸಂತೋಷ್ ಲಾಡ್ +ಖಾನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಮೃತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ ಆರ್ಥಿಕ ನೆರವು ಮತ್ತು ಅವರ ತಂಗಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_157_11.txt b/eesanje/url_47_157_11.txt new file mode 100644 index 0000000000000000000000000000000000000000..258a8af06c6250d0e26cacee8b91b7b70fadef7e --- /dev/null +++ b/eesanje/url_47_157_11.txt @@ -0,0 +1,5 @@ +ರಸ್ತೆ ಅಪಘಾತದಲ್ಲಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಸಾವು +ಹೈದರಾಬಾದ್, ಫೆ 23 : ಇಲ್ಲಿಗೆ ಸಮೀಪದ ಪತಂಚೇರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಬಿಆರ್‍ಎಸ್ ಪಕ್ಷದ ಶಾಸಕಿ ಜಿ ಲಾಸ್ಯ ನಂದಿತಾ(36)ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆಕೆ ಪ್ರಯಾಣಿಸುತ್ತಿದ್ದ ಕಾರು ಹೊರ ವರ್ತುಲ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಕಾರಿನ ಚಾಲಕನಿಗೆ ಗಾಯಗಳಾಗಿವೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರಿಸ್ಥಿತಿ ಗಂಬೀರವಾಗಿದೆ. ಸಿಕಂದರಾಬಾದ್ ಕಂಟೋನ್ಮೆಂಟ್ (ಎಸ್‍ಸಿ) ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು ಕ್ರಿಯಾಶೀಲ ಶಾಸಕಿಯಾಗಿದ್ದರು. ಆಕಲಿಕ ನಿಧನಕ್ಕೆ ಸಿಎಂ,ಸಚಿವರು,ವಿಪಕ್ಷ ನಾಯಕರು ಸೇರಿ ಆನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. +ಭಾರತವು 10 ಟ್ರಿಲಿಯನ್‍ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ-ಡಬ್ಲೂಇಎಫ್ +ಅಪಘಾತ ನಡೆದ ಸುದ್ದಿ ತಿಳಿದು ಸ್ಥಳಕ್ಕೆ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ. ಪೊಲೀಸರು ಮೃತ ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರುಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಬ್ಬಿಣದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ ,ಇದರ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. \ No newline at end of file diff --git a/eesanje/url_47_157_12.txt b/eesanje/url_47_157_12.txt new file mode 100644 index 0000000000000000000000000000000000000000..d66b0af6695378e26607c23f2257564440c80d73 --- /dev/null +++ b/eesanje/url_47_157_12.txt @@ -0,0 +1,8 @@ +2027 ರ ವೇಳೆಗೆ ಭಾರತ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ +ಬೆಂಗಳೂರು,ಫೆ.22- ಭಾರತದ ಆರ್ಥಿಕತೆ ಮತ್ತು ಇಕ್ವಿಟಿ ಮಾರುಕಟ್ಟೆಗಳ ಕುರಿತು ಜಾಗತಿಕ ಹೂಡಿಕೆ ಕುರಿತಾದ ಸಲಹಾ ಸಂಸ್ಥೆ ಆಶಾದಾಯಕ ಹೊರನೋಟ ನೀಡಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತ ಮೂಲಭೂತ ರಚನಾತ್ಮಕ ಸುಧಾರಣೆಗಳನ್ನು ಕಂಡಿದ್ದು, ದೇಶ ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಂಡಿದೆ ಎಂದು ನ್ಯೂಯಾರ್ಕ್‌ ನಲ್ಲಿ ಮುಖ್ಯ ಕಚೇರಿ ಹೊಂದಿರುವ ಈ ಸಂಸ್ಥೆ ತನ್ನ ಇತ್ತೀಚಿನ ಟಿಪ್ಪಣಿಯಲ್ಲಿ ತಿಳಿಸಿದೆ. +“ಮುಂದಿನ 4 ವರ್ಷಗಳಲ್ಲಿ ಭಾರತದ ಜಿಡಿಪಿ 5 ಟ್ರಿಲಿಯನ್‌ ಗೆ ತಲುಪಲಿದ್ದು, 2027 ರ ವೇಳೆಗೆ 3 ನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ. ಜಪಾನ್‌ ಮತ್ತು ಜರ್ಮನಿಯನ್ನು ಹಿಂದಿಕ್ಕಿ ಅತ್ಯಂತ ತ್ವರಿತವಾಗಿ ಬೆಳವಣಿಗೆಯಾಗುತ್ತಿರುವ ಆರ್ಥಿಕತೆಯಾಗುವ ವಸ್ತುಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲಿದೆ. +ಸುಸ್ಥಿರ ಆರ್ಥಿಕತೆಯ ಪ್ರಗತಿಯಲ್ಲಿ ಬರುವ 2030 ರ ವೇಳೆಗೆ ಭಾರತೀಯ ಷೇರು ಮಾರುಕಟ್ಟೆ 10 ಟ್ರಿಲಿಯನ್‌ ಡಾಲರ್‌ ಗೆ ತಲುಪಲಿದೆ. “ಭಾರತದ ಮಾರುಕಟ್ಟೆಯ ಬಂಡವಾಳೀಕರಣ 4.2 ಟ್ರಿಲಿಯನ್‌ ಡಾಲರ್‌ ಗೆ ತಲುಪಿ ಜಗತ್ತಿನ 5 ನೇ ‍ಶ್ರೇಯಾಂಕಕ್ಕೆ ಏರಿಕೆಯಾಗಲಿದೆ. ಅಮೆರಿಕ [44.7 ಟ್ರಿಲಿಯನ್‌ ಡಾಲರ್‌], ಚೀನಾ [9.8 ಟ್ರಿಲಿಯನ್‌ ಡಾಲರ್]‌, ಜಪಾನ್‌ [6 ಟ್ರಿಲಿಯನ್‌ ಡಾಲರ್]‌ ಮತ್ತು ಹಾಂಕಾಂಗ್‌ [4.8 ಟ್ರಿಲಿಯನ್‌ ಡಾಲರ್]‌ ಮೀರಿ ಭಾರತ ಸಾಧನೆ ಮಾಡಲಿದೆ” ಎಂದು ವರದಿ ಅಂದಾಜಿಸಿದೆ. +ಭಾರತದ ಇಕ್ವಿಟಿ ಮಾರುಕಟ್ಟೆಗಳು ಕಳೆದ 5-20 ವರ್ಷಗಳ ಅವಧಿಯಲ್ಲಿ ಡಾಲರ್‌ ಲೆಕ್ಕದಲ್ಲಿ ಸ್ಥಿರವಾದ 10% ರ ವಾರ್ಷಿಕ ಆದಾಯ ಗಳಿಸಲು ಸಮರ್ಥವಾಗಿವೆ; ಬೆಳವಣಿಗೆಯಾಗುತ್ತಿರುವ ಮಾರುಕಟ್ಟೆ ಜಾಗದಲ್ಲಿ ಅದರ ಯಾವುದೇ ಜಾಗತಿಕ ಗೆಳೆಯರಿಗಿಂತ ಉತ್ತಮವಾಗಿದೆ”. ನವೀಕೃತ ಬಂಡವಾಳ ವೆಚ್ಚದ ಚಕ್ರ ಮತ್ತು ದೃಢವಾದ ಗಳಿಕೆಯ ಪಟ್ಟಿಯಲ್ಲಿ ಭಾರತೀಯ ಮಾರುಕಟ್ಟೆಗಳು ಮುಂದಿನ 5-7 ವರ್ಷಗಳಲ್ಲಿ ಆಕರ್ಷಕ ಬೆಳವಣಿಗೆಯನ್ನು ಮುಂದುವರೆಸುತ್ತದೆ ಎಂದು ಸಂಸ್ಥೆ ಹೇಳಿದೆ.ಭಾರತೀಯ ಮಾರುಕಟ್ಟೆಗಳು ಈಕ್ವಿಟಿಕಗಳಲ್ಲಿ ಕೇವಲ 4.7% ರಷ್ಟು ಗೃಹ ಉಳಿತಾಯಕ್ಕೆ ಒಳಪಟ್ಟಿದೆ ಎಂದು ಜೆಫರಿಸ್‌ ಹೇಳಿದೆ. ಆದಾಗ್ಯೂ ಭಾರತದಲ್ಲಿ ಡಿಜಿಟಲ್‌ ಪ್ರಗತಿ ಸಾಂಪ್ರದಾಯಿಕ ಮತ್ತು ಚಿಲ್ಲರೆ ಹೂಡಿಕೆದಾರರ ನಡುವಿನ ಗೆರೆಯನ್ನು ಮುಸುಕುಗೊಳಿಸಿದೆ. ತಂತ್ರಜ್ಞಾನ ತನ್ನ ಬೆರಳ ತುದಿಯಲ್ಲಿದ್ದು, ಚಿಲ್ಲರೆ ಹೂಡಿಕೆದಾರರಿಗೆ ಇದೀಗ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಮಾರುಕಟ್ಟೆ ಕೈಗೆಟುಕುತ್ತಿದೆ. ಇದು ಹೂಡಿಕೆದಾರರನ್ನು ಮತ್ತಷ್ಟು ಪ್ರಜಾತಂತ್ರ ಮಾರ್ಗದಲ್ಲಿ ಕೊಂಡೊಯ್ಯುತ್ತಿದೆ. ಚಿಲ್ಲರೆ ಹೂಡಿಕೆ ವಲಯದಲ್ಲಿ ಶಿಸ್ತುಬದ್ಧ ಧೋರಣೆಯಿದ್ದು, ಇದು ವ್ಯವಸ್ಥಿತ ಹೂಡಿಕೆ ಯೋಜನೆ [ಎಸ್.ಐ.ಪಿಗಳಲ್ಲಿ] ಅಪಾರ ಜನಪ್ರಿಯತೆ ಪಡೆದುಕೊಂಡಿರುವುದನ್ನು ಪ್ರತಿಬಿಂಬಿಸುತ್ತದೆ. “ನಿಯಂತ್ರಕರ ಮೂಲಕ ಮ್ಯೂಚುವಲ್‌ ಫಂಡ್‌ ಗಳಲ್ಲಿ ಹೂಡಿಕೆ ಮಾಡುವ ಕುರಿತು ಜನಜಾಗೃತಿ ವೃದ್ಧಿಯಾಗುತ್ತಿದೆ ಮತ್ತು ಇದರಿಂದ ಭಾರತೀಯ ಇಕ್ವಿಟಿ ಮಾರುಕಟ್ಟೆಗಳಿಂದ ಹೆಚ್ಚಿನ ಉಳಿತಾಯವನ್ನು ಹಣಕಾಸು ಸಚಿವಾಲಯ ನಿರೀಕ್ಷಿಸಿದೆ” +ಭಾರತದಲ್ಲಿ ಬಹುರಾಷ್ಟ್ರೀಯ ಕಂಪೆನಿಗಳು ಸೇರ್ಪಡೆಯಾಗಲು ಅವಕಾಶಬಲಿಷ್ಠ ಬೆಳವಣಿಗೆಯ ಪ್ರೊಫೈಲ್‌ ನಲ್ಲಿ ಭಾರತೀಯ ಮಾರುಕಟ್ಟೆಯ ತೂಕ ಹೆಚ್ಚಾಗುತ್ತಿದೆ  ಮತ್ತು ಹೆಚ್ಚಿನ ಆದಾಯ ಸೃಜನೆಯಾಗುತ್ತಿರುವುದರಿಂದ ವಿದೇಶಿ ಹೂಡಿಕೆ ಒಳಹರಿವನ್ನು ಹೆಚ್ಚಿನದಾಗಿ ಆಕರ್ಷಿಸಬಹುದಾಗಿದೆ ಎಂದು ಜೆಫರಿಸ್‌ ಮತ್ತಷ್ಟು ಬೆಳಕು ಚೆಲ್ಲಿದೆ. ದಕ್ಷಿಣ ಕೋರಿಯಾದ ಬಹುರಾಷ್ಟ್ರೀಯ ಕಂಪೆನಿ ಹುಂಡೈ ಇಂಡಿಯಾ ತನ್ನ ಭಾರತೀಯ ಅಂಗ ಸಂಸ್ಥೆಯನ್ನು ಪಟ್ಟಿ ಮಾಡಲು ನಿರ್ಧರಿಸಿದ ಉದಾಹರಣೆಯನ್ನು ಉಲ್ಲೇಖಿಸಿ ದೇಶದಲ್ಲಿ ಬಲವಾದ ನೆಲೆ ಹೊಂದಿರುವ ಹಲವಾರು ಬಹುರಾಷ್ಟ್ರೀಯ ಕಂಪೆನಿಗಳೆಂದು ಪಟ್ಟಿ ಮಾಡಲಾದ ಅಮೆಜಾನ್‌, ಸ್ಯಾಮ್‌ ಸಂಗ್‌, ಆಪಲ್‌, ಟಯೋಟಾ ಮತ್ತಿತರ ಘಟಕಗಳಾಗಲು ಇದು ಸೂಕ್ತ ಸಮಯವಾಗಿದೆ” ಎಂದು ವರದಿ ಹೇಳಿದೆ. “ನಾವು ಈ ನಿಟ್ಟಿನಲ್ಲಿ ಆಲೋಚಿಸಬೇಕು – ಇದು ಭಾರತೀಯ ಬಂಡವಾಳ ಮಾರುಕಟ್ಟೆಯಲ್ಲಿ ಆಟದ ಬದಲಾವಣೆ ಕಾಣಲು ಸಾಧ್ಯವಾಗಲಿದೆ” ಎಂದು ತಿಳಿಸಿದೆ. +ಸಿಲಿಕಾನ್ ಸಿಟಿಯಲ್ಲಿ ಹನಿ…ಹನಿ…ನೀರಿಗೂ ತತ್ವಾರನಿರಂತರ ಸುಧಾರಣೆಗಳು ಬಲವಾದ ಭವಿಷ್ಯಕ್ಕಾಗಿ ಅಡಿಪಾಯ ಹಾಕಿವೆಹೆಚ್ಚಿನ ಬೆಳವಣಿಗೆಗಾಗಿ ಪರಿಸರ ವ್ಯವಸ್ಥೆಯನ್ನು ರಚಿಸಲು ಸರ್ಕಾರ ಕೈಗೊಂಡ ನಿರಂತರ ಸುಧಾರಣೆಗಳಿಗೆ ವರದಿ ಮನ್ನಣೆ ನೀಡಿದೆ. “2014 ರಿಂದ ಮೋದಿ ಸರ್ಕಾರ ಭಾರತದಲ್ಲಿ “ಸುಗಮ ವ್ಯವಹಾರ” ಕ್ಕೆ ಪುಷ್ಟಿ ನೀಡುವ ನಿಟ್ಟಿನಲ್ಲಿ ಯಶಸ್ವಿಯಾಗಿ ಸುಧಾರಣೆಗಳನ್ನು ತಂದಿದೆ. 2017 ರಲ್ಲಿ ಮೈಲಿಗಲ್ಲು ಎನ್ನಲಾದ ಜಿ.ಎಸ್.ಟಿ ಸುಧಾರಣೆ, ಬಾರತದಾದ್ಯಂತ ಸರಕು ಮತ್ತು ಸೇವೆಗಳ ʼಯುರೋಝನ್‌ ಶೈಲಿಯ ಹರಿವನ್ನು ಸೃಷ್ಟಿಸುವ ರೀತಿಯಲ್ಲಿ ಒಂದು ಸಾಮಾನ್ಯ ರಾಷ್ಟ್ರೀಯ ವ್ಯವಸ್ಥೆಗೆ ಬಹು ತೆರಿಗೆಯ ರಚನೆಗಳನ್ನು ಸಂಕುಚಿತಗೊಳಿಸಿತು.  ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ತಪ್ಪು ಸಾಲಗಳನ್ನು ಸ್ವಚ್ಛಗೊಳಿಸಲು 2017 ರಲ್ಲಿ ನಿರ್ಣಾಯಕವಾಗಿ ಜಾರಿಗೆ ತಂದ ದಿವಾಳಿ ಕಾನೂನುಗಳು ಸಹಕಾರಿಯಾಗಲಿವೆ. 2017 ರ ರಿಯಲ್‌ ಎಸ್ಟೇಟ್‌ ನಿಯಂತ್ರಣ ಕಾಯ್ದೆ [ರೇರಾ] ಮೂಲಕ ಅಸಂಘಟಿತ ಆಸ್ತಿ ವಲಯವನ್ನು ಶುದ್ಧಗೊಳಿಸಿತು” ಎಂದು ಹೇಳಿದೆ. +“ಜಗತ್ತಿನಲ್ಲಿ ಹೆಚ್ಚಾಗುತ್ತಿರುವ ಭೂ ಭೌಗೋಳಿಕ ಆತಂಕವನ್ನು ನಿವಾರಿಸಲು ಕಳೆದ ಸೆಪ್ಟೆಂಬರ್‌ ನಲ್ಲಿ ನಡೆದ ಜಿ20 ಶೃಂಗಸಭೆ ವ್ಯಾಪಕವಾಗಿ ಒಪ್ಪಿಕೊಂಡ ಯಶಸ್ಸಿನಲ್ಲಿ ಪ್ರತಿಫಲಿಸಿದಂತೆ ಭಾರತ ಬ್ರಿಕ್ಸ್‌ ನ ಸಂಪೂರ್ಣ ಸದಸ್ಯತ್ವದೊಂದಿಗೆ ಜಿ7 ನೊಂದಿಗೆ ಉತ್ತಮ ಸ್ಥಿತಿಯಲ್ಲಿ ಉಳಿಯಲು ಚತುರತೆಯಿಂದ ಕಾರ್ಯ ನಿರ್ವಹಿಸಿದೆ”. \ No newline at end of file diff --git a/eesanje/url_47_157_2.txt b/eesanje/url_47_157_2.txt new file mode 100644 index 0000000000000000000000000000000000000000..19099402a24a6b8aa2f2e20857d0e0f59961c704 --- /dev/null +++ b/eesanje/url_47_157_2.txt @@ -0,0 +1,7 @@ +ಮೂರು ತಿಂಗಳ ಮನ್ ಕಿ ಬಾತ್ ಪ್ರಸಾರವಿಲ್ಲ +ನವದೆಹಲಿ,ಫೆ.25- ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ನೀತಿಗೆ ಅನುಗುಣವಾಗಿ ಮುಂದಿನ ಮೂರು ತಿಂಗಳ ಕಾಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಪ್ರಸಾರ ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರಮೋದಿ ಭಾನುವಾರ ಹೇಳಿದ್ದಾರೆ. ಕಾರ್ಯಕ್ರಮದ 110ನೇ ಸಂಚಿಕೆಯಲ್ಲಿ ಕಳೆದ ಚುನಾವಣೆಯಂತೆಯೇ ಮಾರ್ಚ್‍ನಲ್ಲಿಯೂ ಮಾದರಿ ನೀತಿಸಂಹಿತೆ (ಎಂಸಿಸಿ) ಜಾರಿಯಾಗುವ ಸಾಧ್ಯತೆಯಿದೆ. ಚುನಾವಣಾ ವೇಳಾಪಟ್ಟಿಯನ್ನು ನಿರೀಕ್ಷಿತ ಘೋಷಣೆಯ ಬಗ್ಗೆ ಉಲ್ಲೇಖಿಸಲಾಗಿದೆ. +ಚುನಾವಣಾ ಆಯೋಗದ ಎಂಸಿಸಿ ಮಾರ್ಗಸೂಚಿಗಳು ಆಡಳಿತ ಪಕ್ಷಕ್ಕೆ ಪ್ರಚಾರ ಅಥವಾ ರಾಜಕೀಯ ಲಾಭವನ್ನು ನೀಡಲು ಕಂಡುಬರುವ ಯಾವುದಾದರೂ ಅಧಿಕೃತ ಕಾರ್ಯಕ್ರಮಗಳು ಅಥವಾ ಸಾರ್ವಜನಿಕ-ನಿಧಿಯ ವೇದಿಕೆಗಳನ್ನು ಬಳಸದಂತೆ ಸರ್ಕಾರಗಳಿಗೆ ಸೂಚಿಸಿದೆ. ಮನ್ ಕಿ ಬಾತ್ ಜನರಿಗಾಗಿ, ಜನರಿಗಾಗಿ ಮತ್ತು ಜನರಿಗಾಗಿ ಮಾಡುವ ಕಾರ್ಯಕ್ರಮವಾಗಿದೆ. ಆದಾಗ್ಯೂ, ರಾಜಕೀಯ ನೀತಿಗಳನ್ನು ಅನುಸರಿಸಿ ಲೋಕಸಭೆ ಚುನಾವಣೆಯ ಈ ಅವಧಿಯಲ್ಲಿ ಮುಂದಿನ ಮೂರು ತಿಂಗಳ ಕಾಲ ಪ್ರಸಾರ ಮಾಡುವುದಿಲ್ಲ ಎಂದು ಹೇಳಿದ್ದಾರೆ. +ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, 2019ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. 18ನೇ ಲೋಕಸಭೆಯು ಅವರ ಆಕಾಂಕ್ಷೆಗಳ ಸಂಕೇತವಾಗಲಿದೆ ಎಂದು ಪ್ರತಿಪಾದಿಸಿದ ಮೋದಿ, ಮೊದಲ ಬಾರಿಗೆ ಮತದಾರರು ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ನಾಗರಿಕರು 18 ವರ್ಷ ತುಂಬಿದ ನಂತರ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ಯುವಕರು ಕೇವಲ ರಾಜಕೀಯ ಚಟುವಟಿಕೆಗಳ ಭಾಗವಾಗದೆ, ಈ ಅವಧಿಯಲ್ಲಿ ಚರ್ಚೆಗಳು ಮತ್ತು ಚರ್ಚೆಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು. +ಫ್ಯಾಮಿಲಿ ಎಮೋಷನಲ್ ಡ್ರಾಮ- ಫಾರ್ ರಿಜಿಸ್ಟ್ರೇಷನ್ +ನಿಮ್ಮ ಮೊದಲ ಮತ ದೇಶಕ್ಕಾಗಿ ಆಗಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ ಅವರು, ಪ್ರಭಾವಿಗಳು ಮತ್ತು ಇತರ ಪ್ರಮುಖ ವ್ಯಕ್ತಿಗಳು ಮೊದಲ ಬಾರಿಗೆ ಮತದಾರರನ್ನು ಪ್ರೇರೇಪಿಸಲು ಒತ್ತಾಯಿಸಿದರು. ಚುನಾವಣಾ ಆಯೋಗವು ಮೇರಾ ಪೆಹ್ಲಾ ವೋಟ್ ದೇಶ್ ಕೆ ಲಿಯೆ ಎಂಬ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು, ಮೊದಲ ಬಾರಿಗೆ ಮತದಾರರು ತಮ್ಮ ಹಕ್ಕುಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಬಳಸಬೇಕೆಂದು ಒತ್ತಾಯಿಸಿದರು. +ಚುನಾವಣಾ ಪ್ರಕ್ರಿಯೆಯಲ್ಲಿ ಯುವ ಮತದಾರರು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಿದರೆ, ಅದರ ಪರಿಣಾಮಗಳು ದೇಶಕ್ಕೆ ಹೆಚ್ಚು ಪ್ರಯೋಜನಕಾರಿಯಾಗುತ್ತವೆ ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_157_3.txt b/eesanje/url_47_157_3.txt new file mode 100644 index 0000000000000000000000000000000000000000..49519e5b2477dc63d8d7f1581316e4f32ad11673 --- /dev/null +++ b/eesanje/url_47_157_3.txt @@ -0,0 +1,6 @@ +ವಿದೇಶಿ ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶ +ಕಟಕ್, ಫೆ.25- ಪರದೀಪ್ ಬಂದರಿನಲ್ಲಿ ಪಾವತಿಸದ ಬರ್ತ್ ಬಾಡಿಗೆ ಶುಲ್ಕಕ್ಕೆ ಸಂಬಂಧಿಸಿದಂತೆ ವಿದೇಶಿ ಸರಕು ಹಡಗನ್ನು ಜಪ್ತಿ ಮಾಡುವಂತೆ ಒರಿಸ್ಸಾ ಹೈಕೋರ್ಟ್ ಆದೇಶಿಸಿದೆ. ಅಡ್ಮಿರಾಲ್ಟಿ ಕಾನೂನಿನ ಅಡಿಯಲ್ಲಿ ಕಡಲ ಹಕ್ಕುಗಳ ಜಾರಿಗಾಗಿ ಯಾವುದೇ ಹಡಗಿನ ಮಾಲೀಕತ್ವ, ನಿರ್ಮಾಣ, ಸ್ವಾೀಧಿನ, ನಿರ್ವಹಣೆ, ಕಾರ್ಯಾಚರಣೆ ಅಥವಾ ವ್ಯಾಪಾರದಿಂದ ಉಂಟಾಗುವ ನಷ್ಟ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಬಹುದು. ಅದರಲ್ಲಿ ಹಡಗನ್ನು ಜಪ್ತಿ ಮಾಡುವುದು ಸೇರಿದೆ. +ಪನಾಮದಲ್ಲಿ ನೋಂದಾಯಿತ ಎಂ ವಿ ಡೆಬಿ ಹಡಗು ಮೂರು ತಿಂಗಳ ಕಾಲ ಬಂದರಿನಲ್ಲಿ ಲಂಗರು ಹಾಕಿದೆ. ಅದರಿಂದ ಕಳೆದ ವರ್ಷ ಡಿಸೆಂಬರ್ 1 ರಂದು ಸುಮಾರು 220 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ತುಂಬಿದ ಹಲವಾರು ಪ್ಯಾಕೆಟ್‍ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಎನ್‍ಡಿಪಿಎಸ್ ಕಾಯ್ದೆ ಮತ್ತು ಕಸ್ಟಮ್ಸ್ ಕಾಯ್ದೆಯಡಿ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. +ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ +ಪರದೀಪ್ ಬಂದರಿನ ಪರದೀಪ್ ಇಂಟರ್‍ನ್ಯಾಷನಲ ಕಾರ್ಗೋ ಟರ್ಮಿನಲ್ ಪ್ರವೈಟ್ ಲಿಮಿಟೆಡ್ (ಪಿಐಸಿಟಿಪಿಎಲ್) ಹಡಗಿನ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ಹಡಗನ್ನು ಜಪ್ತಿ ಮಾಡಲು ಆದೇ ನೀಡುವಂತೆ ಕಳೆದ ತಿಂಗಳು ಹೈಕೋರ್ಟ್‍ಗೆ ಮೊರೆ ಹೋಗಿದೆ. ಸರಕು ಹಡಗಿನಿಂದ 7.95 ಕೋಟಿ ರೂಪಾಯಿಗಳು ಶುಲ್ಕ ಬರಬೇಕಿದೆ. +ಅದರಲ್ಲಿ ಬರ್ತ್ ಬಾಡಿಗೆ ಶುಲ್ಕಗಳು, ದಂಡದ ಶುಲ್ಕಗಳು, ಕಾನೂನು ವೆಚ್ಚ ಮತ್ತು ಇತರೆ ಸೇರಿವೆ ಎಂದು ತಿಳಿಸಲಾಗಿದೆ. ನ್ಯಾಯಮೂರ್ತಿ ವಿ.ನರಸಿಂಗ್ ಅವರ ಏಕಸದಸ್ಯ ಪೀಠ ಸರಕು ಹಡಗನ್ನು ಬಂಧಿಸದ ಹೊರತು ಮೊಕದ್ದಮೆ ಇತ್ಯರ್ಥವಾಗುವುದಿಲ್ಲ ಎಂದು ವಾದಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 7ಕ್ಕೆ ನ್ಯಾಯಾಲಯ ನಿಗದಿಪಡಿಸಿದೆ. \ No newline at end of file diff --git a/eesanje/url_47_157_4.txt b/eesanje/url_47_157_4.txt new file mode 100644 index 0000000000000000000000000000000000000000..6ca95c8acce6e472cbc1b96b93e1e0785429f533 --- /dev/null +++ b/eesanje/url_47_157_4.txt @@ -0,0 +1,9 @@ +ದೇಶದ ಅತೀ ಉದ್ದದ ಕೇಬಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ ಮೋದಿ +ಗಾಂಧಿನಗರ,ಫೆ.25-ದೇಶದ ಅತೀ ಉದ್ದದ ಕೇಬಲ್ ತೂಗು ಸೇತುವೆ ಸುದರ್ಶನ ಸೇತುವನ್ನು ಪ್ರಧಾನಿ ನರೇಂದ್ರಮೋದಿ ಲೋಕಾರ್ಪಣೆ ಮಾಡಿದರು. ಇದು 2.5 ಕಿ.ಮೀ ಉದ್ದದ ಸೇತುವೆಯು ಭಾರತದ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ ಸೇತು ಸೇತುವೆಯನ್ನು ಸುಮಾರು 980 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ, ಇದನ್ನು ಓಖಾ-ಬೆಟ್ ದ್ವಾರಕಾ ಸಿಗ್ನೇಚರ್ ಸೇತುವೆ ಎಂದೂ ಕರೆಯಲಾಗುತ್ತದೆ. +ಈ ಸೇತುವೆಯು ದ್ವಾರಕಾೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಬಹಳ ಮುಖ್ಯವಾದುದು ಎಂದು ಸಾಬೀತುಪಡಿಸುತ್ತದೆ. ಈ ಅವಧಿಯಲ್ಲಿ ಪ್ರಧಾನಿಯವರು ರಾಜ್ಯಕ್ಕೆ 52 ಸಾವಿರ ಕೋಟಿಗೂ ಹೆಚ್ಚು ಹೊಸ ಯೋಜನೆಗಳನ್ನು ಉಡುಗೊರೆಯಾಗಿ ನೀಡಲಿದ್ದಾರೆ. 2017ರಲ್ಲಿ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಸುದರ್ಶನ ಸೇತುವೆ ಉದ್ಘಾಟನೆಗೂ ಮೊದಲು ಪ್ರಧಾನಿ ಮೋದಿ ಬೇಟ್ ದ್ವಾರಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. +ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ +ಸುದರ್ಶನ ಸೇತುವೆಗೆ ಸಂಬಂಧಿಸಿದ ವಿಶೇಷ ಸಂಗತಿಗಳು ಓಖಾ ಮುಖ್ಯ ಭೂಭಾಗವನ್ನು ಬೆಟ್ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುವ ಸುದರ್ಶನ್ ಸೇತುವೆಯು ಈ ಪ್ರದೇಶದ ಸಂಪರ್ಕಕ್ಕೆ ಹೊಸ ದಿಕ್ಕನ್ನು ನೀಡುತ್ತದೆ. ಸುದರ್ಶನ್ ಸೇತು ಭಾರತದ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಇದರಲ್ಲಿ ಫುಟ್‍ಪಾತ್‍ನ ಮೇಲ್ಭಾಗದಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿದ್ದು, ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತದೆ. +ಸುದರ್ಶನ ಸೇತು ವಿಶೇಷತೆಗಳೇನು?:ಚತುಷ್ಪಥ ರಸ್ತೆಯನ್ನು ಒಳಗೊಂಡಿರುವ ಸುದರ್ಶನ ಸೇತು 2.32 ಕಿಮೀ ಗಳಷ್ಟು ಉದ್ದವಿದೆ. ಸರಿಸುಮಾರು 980 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸುದರ್ಶನ ಸೇತುವನ್ನು ಓಖಾ-ಬೇಟ್ ದ್ವಾರಕಾ ಸಿಗ್ನೇಚರ್ ಬ್ರಿಡ್ಜ್ ಅಂತಲೂ ಕರೆಯುತ್ತಾರೆ. ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಸೌರ ಫಲಕಗಳನ್ನು ಅಳವಡಿಸಿದ್ದು, ಇದು ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಿದೆ. +ಪಾದಚಾರಿ ಮಾರ್ಗಗಳಲ್ಲಿ ಭಗವದ್ಗೀತೆ ಶ್ಲೋಕ:ಸೇತುವೆ ಮೇಲೆ ನಿರ್ಮಾಣಗೊಂಡಿರುವ ರಸ್ತೆಗಳು 27.2 ಮೀಟರ್ ಅಂದ್ರೆ ಸುಮಾರು 89 ಅಡಿಗಳಷ್ಟು ಅಗಲವಿದೆ. ಎರಡೂ ಬದಿಗಳಲ್ಲಿ 2.5 ಮೀಟರ್ (8 ಅಡಿ) ಗಳಷ್ಟು ಪಾದಚಾರಿ ಮಾರ್ಗಕ್ಕೆ ಸ್ಥಳಾವಕಾಶವಿದೆ. ಈ ಪಾದಚಾರಿ ಮಾರ್ಗಗಳಲ್ಲಿ ಭಗವದ್ಗೀತೆಯ ಶ್ಲೋಕಗಳನ್ನ ಹಾಕಲಾಗಿದೆ ಮತ್ತು ಶ್ರೀಕೃಷ್ಣನ ಚಿತ್ರಗಳನ್ನ ಅಲಂಕರಿಸಲಾಗಿದೆ. +ಕಾಂಗ್ರೆಸ್ 100 ಸ್ಥಾನಗಳ ಗಡಿ ದಾಟುವುದು ಕಷ್ಟ: ಪ್ರಶಾಂತ್ ಕಿಶೋರ್ +20 ಲಕ್ಷ ಯಾತ್ರಾರ್ಥಿಗಳಿಗೆ ಪ್ರಯೋಜನ: ಬೇಟ್ ದ್ವಾರಕಾ, ಓಖಾ ಬಂದರಿನ ಸಮೀಪವಿರುವ ಒಂದು ದ್ವೀಪವಾಗಿದೆ. ಇದು ದ್ವಾರಕಾ ಪಟ್ಟಣದಿಂದ ಸುಮಾರು 30 ಕಿಮೀ ದೂರದಲ್ಲಿದೆ. ಅಲ್ಲಿ ಶ್ರೀಕೃಷ್ಣನ ಪ್ರಸಿದ್ಧ ದ್ವಾರಕಾೀಶ ದೇವಾಲಯವೂ ಇದೆ. ಈ ಮಾರ್ಗವು ದೇವಸ್ಥಾನಗಳಿಗೆ ಪ್ರಯಾಣಿಸುವ ಭಕ್ತರಿಗೆ ಮತ್ತಷ್ಟು ಅನುಕೂಲಕರವಾಗಲಿದೆ. ಒಟ್ಟಿನಲ್ಲಿ ಈ ಸುದರ್ಶನ ಸೇತು ಸುಮಾರು 8,500ಕ್ಕೂ ಹೆಚ್ಚು ಸ್ಥಳೀಯ ನಿವಾಸಿಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ಪ್ರದೇಶದಲ್ಲಿನ ದೇವಾಲಯಗಳಿಗೆ ಭೇಟಿ ನೀಡುವ 20 ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳಿಗೆ ಪ್ರಯೋಜನವಾಗಲಿದೆ. \ No newline at end of file diff --git a/eesanje/url_47_157_5.txt b/eesanje/url_47_157_5.txt new file mode 100644 index 0000000000000000000000000000000000000000..2ab13e50171e6bf76783f3b67c772776b42ff919 --- /dev/null +++ b/eesanje/url_47_157_5.txt @@ -0,0 +1,7 @@ +ಕಾಂಗ್ರೆಸ್ 100 ಸ್ಥಾನಗಳ ಗಡಿ ದಾಟುವುದು ಕಷ್ಟ: ಪ್ರಶಾಂತ್ ಕಿಶೋರ್ +ನವದೆಹಲಿ,ಫೆ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 100 ಸ್ಥಾನಗಳ ಗಡಿ ದಾಟುವುದು ತುಂಬಾ ಕಷ್ಟ ಎಂದು ಮಾಜಿ ಚುನಾವಣಾ ತಂತ್ರಗಾರ ಮತ್ತು ಜನ್ ಸೂರಜ್ ಸಂಘಟನೆಯ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 370 ಸ್ಥಾನಗಳನ್ನು ತಲುಪುವ ಸಾಧ್ಯತೆಯಿಲ್ಲ, ಆದರೂ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬಹುದು ಎಂದು ಅವರು ಹೇಳಿದರು. +ಈ ಚುನಾವಣೆಯಲ್ಲಿ ಕಾಂಗ್ರೆಸ್ 100ರ ಗಡಿ ದಾಟುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಶಾಂತ್ ಕಿಶೋರ್, ಲೋಕಸಭೆಯಲ್ಲಿ ಕಾಂಗ್ರೆಸ್‍ನ ಪ್ರಸ್ತುತ ಸ್ಥಾನಗಳ ಸಂಖ್ಯೆಯಲ್ಲಿ ದೊಡ್ಡ ಬದಲಾವಣೆಯ ಸಾಧ್ಯತೆಯನ್ನು ನಾನು ಕಾಣುತ್ತಿಲ್ಲ. ವಿರೋಧ ಪಕ್ಷಗಳು 2029ರ ಚುನಾವಣೆಗೆ ಈಗಿಂದಲೇ ಸಿದ್ಧತೆ ಮಾಡಿಕೊಳ್ಳುವುದು ಒಳ್ಳೆಯದು.ಸೀಟುಗಳ ಸಂಖ್ಯೆ 50-55 ಬಂದರೂ ಅದು ದೇಶದ ರಾಜಕಾರಣವನ್ನೇ ಬದಲಿಸುವುದಿಲ್ಲ ಎಂದರು. ಕಾಂಗ್ರೆಸ್ ಗೆ ಚುನಾವಣಾ ಫಲಿತಾಂಶದಲ್ಲಿ ಯಾವುದೇ ಸಕಾರಾತ್ಮಕ ಬದಲಾವಣೆ ಕಾಣುತ್ತಿಲ್ಲ. ದೊಡ್ಡ ಬದಲಾವಣೆಗೆ ಕಾಂಗ್ರೆಸ್ 100ರ ಗಡಿ ದಾಟಬೇಕು. ಆದರೆ, ಕಾಂಗ್ರೆಸ್ 100ರ ಗಡಿ ದಾಟುತ್ತದೆ ಎಂದು ಭಾವಿಸುವುದಿಲ್ಲ ಎಂದು ಹೇಳಿದರು. +ಇಂದಿನ ಸ್ಥಿತಿಯಲ್ಲಿ ಕಾಂಗ್ರೆಸ್ 100ರ ಗಡಿ ದಾಟುವುದು ತುಂಬಾ ಕಷ್ಟಕರವಾಗಿದೆ ಎಂದು ಹೇಳಿದ ಪ್ರಶಾಂತ್ ಕಿಶೋರ್, ಬಿಜೆಪಿಯ 370 ಸ್ಥಾನಗಳನ್ನು ಗೆಲ್ಲುವ ಗುರಿಯ ಬಗ್ಗೆ ಕೇಳಿದಾಗ, ¾ಬಿಜೆಪಿ ತನ್ನ ಕಾರ್ಯಕರ್ತರಿಗೆ 370 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಿಗದಿಪಡಿಸಿದೆ. 370ನೇ ವಿಯ ಈ ಗುರಿಯನ್ನು ಜನರು ನಿಜವೆಂದು ಪರಿಗಣಿಸಬಾರದು. ಪ್ರತಿಯೊಬ್ಬ ನಾಯಕನಿಗೆ ಗುರಿಗಳನ್ನು ಹೊಂದಿಸುವ ಹಕ್ಕಿದೆ. ಅವರು ಇದನ್ನು ಸಾಸಿದರೆ ಅದು ಅದ್ಭುತವಾಗಿರುತ್ತದೆ, ಸಾಧ್ಯವಾಗದಿದ್ದರೆ ಪಕ್ಷವು ತನ್ನ ತಪ್ಪನ್ನು ಒಪ್ಪಿಕೊಳ್ಳುವಷ್ಟು ವಿನಮ್ರವಾಗಿರಬೇಕು ಎಂದರು. +ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ +2014 ರ ನಂತರ, 8-9 ಚುನಾವಣೆಗಳು ನಡೆದಿವೆ, ಅಲ್ಲಿ ಬಿಜೆಪಿ ತನ್ನ ಗುರಿಯನ್ನು ಸಾಸಲು ಸಾಧ್ಯವಾಗಲಿಲ್ಲ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬರೋಬ್ಬರಿ 370 ಸ್ಥಾನಗಳು ಬರುವುದಿಲ್ಲ ಎಂದು ಹೇಳಬಲ್ಲೆ. ಇದರ ಸಾಧ್ಯತೆ ಬಹುತೇಕ ಶೂನ್ಯ ಎಂದು ನಾನು ಪರಿಗಣಿಸುತ್ತೇನೆ. ಇದು ಸಂಭವಿಸಿದರೆ ನನಗೆ ತುಂಬಾ ಆಶ್ಚರ್ಯವಾಗುತ್ತದೆ ಎಂದು ಹೇಳಿದರು. +ಪ್ರಶಾಂತ್ ಕಿಶೋರ್ ಹೇಳುವಂತೆ 2019ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದ ಸ್ಥಾನಕ್ಕಿಂತ ಕೆಳಗೆ ಬರುವುದಿಲ್ಲ. ಕಳೆದ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿತ್ತು ಎಂದರು. ಕಾಂಗ್ರೆಸ್‍ನ ಭಾರತ್ ಜೋಡೋ ನ್ಯಾಯ ಯಾತ್ರೆ ಕುರಿತು ಕಿಶೋರ್, ಲೋಕಸಭೆ ಚುನಾವಣೆ ಹತ್ತಿರವಿರುವ ಕಾರಣ ಯಾತ್ರೆಗೆ ಇದು ಸಮಯವಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_157_6.txt b/eesanje/url_47_157_6.txt new file mode 100644 index 0000000000000000000000000000000000000000..ffb4d154f935f56e8d2f776ec5b668fa82e06103 --- /dev/null +++ b/eesanje/url_47_157_6.txt @@ -0,0 +1,6 @@ +ಅಯೋಧ್ಯೆ ಮಂದಿರಕ್ಕೆ 25 ಕೆಜಿ ಚಿನ್ನ -25 ಕೋಟಿ ರೂ ದೇಣಿಗೆ +ಅಯೋಧ್ಯೆ,ಫೆ.25- ಬಾಲರಾಮನ ಮಂದಿರಕ್ಕೆ 25 ಕೆಜಿ ಚಿನ್ನ ಮತ್ತು ಬೆಳ್ಳಿಯ ಆಭರಣ ಸೇರಿದಂತೆ ಸುಮಾರು 25 ಕೋಟಿ ರೂ. ದೇಣಿಗೆ ಹರಿದು ಬಂದಿದೆ. ಈ ಬಗ್ಗೆ ರಾಮಮಂದಿರ ಟ್ರಸ್ಟ್‍ನ ಅಧಿಕಾರಿ ಪ್ರಕಾಶ್ ಗುಪ್ತಾ ಮಾತನಾಡಿ, 25 ಕೋಟಿ ರೂ. ಮೊತ್ತದಲ್ಲಿ ಚೆಕ್‍ಗಳು, ಡ್ರಾಫ್ಟ್‍ಗಳು ಮತ್ತು ದೇವಸ್ಥಾನದ ಟ್ರಸ್ಟ್‍ನ ಕಚೇರಿಯಲ್ಲಿ ಠೇವಣಿ ಮಾಡಿದ ನಗದು ಮತ್ತು ಪೆಟ್ಟಿಗೆಗಳಲ್ಲಿ ಹಾಕಲಾದ ಕಾಣಿಕೆ ಸೇರಿದೆ. ಇನ್ನೂ ಟ್ರಸ್ಟ್‍ನ ಬ್ಯಾಂಕ್ ಖಾತೆಗಳಲ್ಲಿ ನೇರವಾಗಿ ಮಾಡಿದ ಆನ್‍ಲೈನ್ ವಹಿವಾಟಿನ ಬಗ್ಗೆ ನಮಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ. +ರಾಮನವಮಿಯಂದು 50 ಲಕ್ಷ ಜನ ಭಕ್ತರು ಸೇರುವ ಸಾಧ್ಯತೆ ಇದೆ. ಆ ಸಮಯದಲ್ಲಿ ದೇಣಿಗೆ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ವೇಳೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ಸ್ವಯಂಚಾಲಿತ ಹೈಟೆಕ್ ಯಂತ್ರಗಳನ್ನು ಸ್ಥಾಪಿಸಿದೆ ಎಂದು ಅವರು ತಿಳಿಸಿದ್ದಾರೆ.ರಶೀದಿಗಳನ್ನು ನೀಡಲು ಟ್ರಸ್ಟ್‍ನಿಂದ ಹತ್ತಾರು ಗಣಕೀಕೃತ ಕೌಂಟರ್‍ಗಳನ್ನು ಮಾಡಲಾಗಿದೆ. +ಪಕ್ಷಾತೀತವಾಗಿ ಮಹಿಳಾ ನೌಕರರ ಸಂಘ ಮುನ್ನಡೆಯಲಿ: ಲಕ್ಷ್ಮೀ ಹೆಬ್ಬಾಳ್ಕರ್ +ರಾಮಮಂದಿರ ಟ್ರಸ್ಟ್‍ನಿಂದ ದೇವಾಲಯದ ಆವರಣದಲ್ಲಿ ಹೆಚ್ಚುವರಿ ಕಾಣಿಕೆ ಪೆಟ್ಟಿಗೆಗಳನ್ನು ಇರಿಸಲಾಗುತ್ತಿದೆ. ಶೀಘ್ರದಲ್ಲೇ ರಾಮಮಂದಿರದ ಆವರಣದಲ್ಲಿ ದೊಡ್ಡ ಮತ್ತು ಸುಸಜ್ಜಿತ ಎಣಿಕೆ ಕೊಠಡಿಯನ್ನು ನಿರ್ಮಿಸಲಾಗುತ್ತದೆ. ಇನ್ನೂ ರಾಮಲಲ್ಲಾಗೆ ಉಡುಗೊರೆಯಾಗಿ ಸ್ವೀಕರಿಸಿದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಅಮೂಲ್ಯ ವಸ್ತುಗಳ ಮೌಲ್ಯಮಾಪನ ಮತ್ತು ಅವುಗಳ ನಿರ್ವಹಣೆಗೆ ಭಾರತ ಸರ್ಕಾರದ ಟಂಕಸಾಲೆಗೆ ಹಸ್ತಾಂತರಿಸಲಾಗಿದೆ ಎಂದು ರಾಮಮಂದಿರ ಟ್ರಸ್ಟ್‍ನ ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ. +ರಾಮಮಂದಿರದ ದೇಣಿಗೆ, ಕೊಡುಗೆಗಳು, ಚೆಕ್‍ಗಳು, ಡ್ರಾಫ್ಟ್‍ಗಳು ಮತ್ತು ನಗದು ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಎಸ್‍ಬಿಐ ತೆಗೆದುಕೊಳ್ಳುತ್ತದೆ. ದೇಣಿಗೆ ನೀಡಿದ ಹಣವನ್ನು ಪ್ರತಿದಿನ ಎರಡು ಪಾಳಿಗಳಲ್ಲಿ ಎಣಿಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_157_7.txt b/eesanje/url_47_157_7.txt new file mode 100644 index 0000000000000000000000000000000000000000..325e5bb63355e95f651303c93f21bad05d5652c8 --- /dev/null +++ b/eesanje/url_47_157_7.txt @@ -0,0 +1,6 @@ +ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಸೂಚನೆ.. +ನವದೆಹಲಿ,ಫೆ.24- ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಮೂರು ವರ್ಷಕ್ಕಿಂತ ಹೆಚ್ಚಿನ ಅವಧಿ ಒಂದೇ ಕಡೆ ಕೆಲಸ ಮಾಡುತ್ತಿರುವ ಹಾಗೂ ತವರು ಜಿಲ್ಲೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ನಿಯಮವನ್ನು ಗಂಭೀವಾಗಿ ಪರಿಗಣಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. +ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ಪತ್ರ ಬರೆದಿರುವ ಕೇಂದ್ರ ಚುನಾವಣಾ ಆಯೋಗ ವರ್ಗಾವಣೆ ನೀತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಸರ್ಕಾರಿ ಅಧಿಕಾರಿಗಳು ಅದರಲ್ಲೂ ಚುನಾವಣೆಯ ಉಸ್ತುವಾರಿ ಮತ್ತು ಕರ್ತವ್ಯ ನಿರ್ವಹಿಸುತ್ತಿರುವವರು ತವರು ಜಿಲ್ಲೆ ಮತ್ತು ನೆರೆಹೊರೆಯ ಕ್ಷೇತ್ರಗಳಲ್ಲಿ ಕರ್ತವ್ಯದಲ್ಲಿ ಇಲ್ಲದಂತೆ ಎಚ್ಚರಿಕೆ ವಹಿಸಬೇಕು. ಚುನಾವಣಾ ಕ್ಷೇತ್ರ ಮಟ್ಟದ ನಿರ್ವಹಣೆಯಲ್ಲಿ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟಂತೆ ತವರು ಅಥವಾ ಅಕ್ಕಪಕ್ಕದ ಜಿಲ್ಲೆಗೆ ಸೇರಿದ ಅಧಿಕಾರಿಗಳ ಪಾತ್ರ ಇಲ್ಲದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. +ಮಂಡ್ಯಗೆ ಸುಮಲತಾ, ಬೆಂ.ಗ್ರಾಮಾಂತರಕ್ಕೆ ಡಾ.ಮಂಜುನಾಥ್‌ಗೆ ಬಿಜೆಪಿ ಟಿಕೆಟ್..! +ಎರಡೂ ಕ್ಷೇತ್ರಗಳನ್ನು ಸಂಯುಕ್ತಗೊಳಿಸಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ಯಾವುದೇ ಲೋಪಗಳಾಗದಂತೆ ವರ್ಗಾವಣೆ ನೀತಿಯನ್ನು ಅನುಷ್ಠಾನಗೊಳಿಸಬೇಕು. ಅದೇ ಜಿಲ್ಲೆಯ ಅಥವಾ ಅದೇ ಕ್ಷೇತ್ರದ ಅಧಿಕಾರಿಗಳನ್ನು ಕಡ್ಡಾಯವಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು. ಲಿಖಿತವಾಗಿ ಮತ್ತು ಕಾರ್ಯಾನುಷ್ಠಾನಾಧರಿತವಾಗಿ ಆಯೋಗದ ವರ್ಗಾವಣೆ ನೀತಿಯನ್ನು ಅನುಸರಿಸಬೇಕು. +ಈ ಹಿಂದೆ ಆಯೋಗದ ಸೂಚನೆಯನ್ನು ಅನುಸರಿಸಿ ನಡೆಸಲಾಗಿರುವ ವರ್ಗಾವಣೆಗೂ ಅನ್ವಯಗೊಳಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗ ವರ್ಗಾವಣೆ ನೀತಿಯಲ್ಲಿ ಲೋಪಗಳನ್ನು ಸಹಿಸುವುದಿಲ್ಲ. ರಾಜ್ಯಸರ್ಕಾರಗಳ ಧೋರಣೆಯಿಂದ ಚುನಾವಣೆ ನಿರ್ವಹಣೆಯಲ್ಲಿ ಅಡಚಣೆಯಾಗುವುದನ್ನು ಒಪ್ಪುವುದಿಲ್ಲ. ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ಮರಿಸುತ್ತದೆ ಎಂದು ಆಯೋಗದ ಜಂಟಿ ನಿರ್ದೇಶಕ ಅಂಜು ಚಂದಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_157_8.txt b/eesanje/url_47_157_8.txt new file mode 100644 index 0000000000000000000000000000000000000000..c87d124fddff0fc343800dc559557e3fa5f6aeab --- /dev/null +++ b/eesanje/url_47_157_8.txt @@ -0,0 +1,5 @@ +ದರೋಡೆಕೋರರಿಂದ ವ್ಯಕ್ತಿಯ ಕೊಲೆ +ನವದೆಹಲಿ, ಫೆ.24: ಪೂರ್ವ ದೆಹಲಿಯ ಮಧು ವಿಹಾರ್ ಪ್ರದೇಶದ ಉದ್ಯಾನವನದಲ್ಲಿ ತಡ ರಾತ್ರಿ ನಾಲ್ವರು ದರೋಡೆಕೋರರ ಗುಂಪು ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿಯನ್ನು ನರೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಧು ವಿಹಾರ್‍ನ ಸಿಎನ್‍ಜಿ ಗ್ಯಾಸ್ ಸ್ಟೇಷನ್ ಬಳಿಯ ಡಿಡಿಎ ಪಾರ್ಕ್‍ನಲ್ಲಿ ನರೇಂದ್ರ ಮತ್ತು ಸ್ನೇಹಿತ ಮದ್ಯ ಸೇವಿಸುತ್ತಿದ್ದಾಗ ನಾಲ್ವರು ಬಂದು ಆತನ ಬ್ಯಾಗ್ ಮತ್ತು ಮೊಬೈಲ್ ಫೋನ್ ಕಸಿದು ಹಲವು ಬಾರಿ ಚಾಕುವಿನಿಂದ ಇರಿದಿದ್ದಾರೆ. ತೀವರವಾಗಿ ಗಾಯಗೊಂಡ ನರೇಂದ್ರನನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. +ಚಿನ್ನ -ಬೆಳ್ಳಿ ಅಂಗಡಿ ಮಾಲೀಕರಿಗೆ ಅನಗತ್ಯ ಕಿರುಕುಳ ನೀಡಬೇಡಿ +ಮಧು ವಿಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದುದಾಳಿಕೋರರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_157_9.txt b/eesanje/url_47_157_9.txt new file mode 100644 index 0000000000000000000000000000000000000000..8c0ac2edc678ca16cb01b3dee3c0b51944373596 --- /dev/null +++ b/eesanje/url_47_157_9.txt @@ -0,0 +1,10 @@ +ರಾಮೇಶ್ವರಂನ ಸಮುದ್ರದ ಮೇಲೆ ಅತ್ಯಾಧುನಿಕ ರೈಲ್ವೆ ಮೇಲ್ಸೇತುವೆ ಶೀಘ್ರ ಕಾರ್ಯಾರಂಭ +ನವದೆಹಲಿ, ಫೆ 23- ದೇಶದ ಮುಖ್ಯ ಭೂ ಭಾಗವಾದ ರಾಮೇಶ್ವರಂ ದ್ವೀಪದೊಂದಿಗೆ ಸಂಪರ್ಕಿಸುವ ಭಾರತದ ಮೊದಲ (ಲಂಬ-ಲಿಫ್ಟ್) ಪಂಬನ್ ರೈಲ್ವೆ ಸೇತುವೆ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ರೈಲ್ವೆ ಮಂಡಳಿ ಅಧ್ಯಕ್ಷ ಜಯವರ್ಮ ಸಿನ್ಹಾ ಹೇಳಿದ್ದಾರೆ. ಕಾಮಗಾರಿಯ ಪ್ರಗತಿ ಪರಿಶೀಲನೆಗಾಗಿ ಇತ್ತೀಚೆಗೆ ರಾಮೇಶ್ವರಂಗೆ ಭೇಟಿ ನೀಡಿದ್ದ ವರ್ಮಾ ಅವರು ಸುದ್ದಿಗಾರೊಂದಿಗೆ ಮಾತನಾಡಿ, ಮರು ನಿರ್ಮಾಣ ಕಾರ್ಯವು ಉತ್ತಮವಾಗಿ ನಡೆಯುತ್ತಿದೆ ಮತ್ತು ನಾವು ಶೀಘ್ರದಲ್ಲೇ ಸೇವೆಗಳನ್ನು ಮರುಸ್ಥಾಪಿಸುತ್ತೇವೆ ಎಂದು ತಿಳಿಸಿದರು. +ಸೇತುವೆ ಮರುನಿರ್ಮಾಣ ಎದುರಿಸುತ್ತಿರುವ ಬಹು ಸವಾಲುಗಳನ್ನು ಎದುರಿಸಿ ನಮ್ಮ ತಂಡ ಶ್ಲಾಘನೀಯ ಕೆಲಸ ಮಾಡಿದೆ. ಸಮುದ್ರದ ಮೇಲೆ ದೇಶದಲ್ಲೇ ಮೊದಲನೆಯದಾದ ಲಂಬ-ಲಿಫ್ಟ್ ಸೇತುವೆಯನ್ನು ನಿರ್ಮಿಸುವುದು ಹೆಮ್ಮೆ ತಂದಿದೆ ಎಂದರು. ಕಳೆದ 1913 ರಲ್ಲಿ ನಿರ್ಮಿಸಲಾಗಿದ್ದ ರೈಲು ಸೇತುವೆಯನ್ನು ಸುರಕ್ಷತೆಯ ದೃಷ್ಟಿಯಿಂದ ಕಾರ್ಯನಿರ್ವಹಿಸುವುದಿಲ್ಲ ಎಂದು ಘೋಷಿಸಿದ ನಂತರ ಮುಖ್ಯ ಭೂಭಾಗದ ಮಂಡಪಂ ಮತ್ತು ರಾಮೇಶ್ವರಂ ದ್ವೀಪದ ನಡುವಿನ ರೈಲು ಸೇವೆಗಳನ್ನು ಕಳೆದ ಡಿಸೆಂಬರ್ 23, 2022ರಂದು ಸ್ಥಗಿತಗೊಳಿಸಲಾಗಿತ್ತು. +ಇದ್ದಕೂ ಮುನ್ನ ಹೊಸ ಸೇತುವೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಎಂದು ದಕ್ಷಿಣ ರೈಲ್ವೆ ನಿರ್ಧಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 2019ರಲ್ಲಿ ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯ ಶಂಕುಸ್ಥಾಪನೆ ಮಾಡಿದರು ಮತ್ತು ಫೆಬ್ರವರಿ 2020 ರಲ್ಲಿ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ಮೂಲಕ ಕಾಮಗಾರಿಯನ್ನು ಪ್ರಾರಂಭಿಸಲಾಯಿತು. +2027 ರ ವೇಳೆಗೆ ಭಾರತ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ +ಇದು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು, ಆದಾಗ್ಯೂ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಗಡುವನ್ನು ವಿಸ್ತರಿಸಲಾಯಿತು. ರೈಲ್ವೆ ಮೂಲದ ಪ್ರಕಾರ, 2.05-ಕಿಮೀ ಉದ್ದದ ಸೇತುವೆಯು ಭಾರತೀಯ ರೈಲ್ವೆಗಳಿಗೆ ಹೆಚ್ಚಿನ ವೇಗದಲ್ಲಿ ರೈಲುಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ ಮತ್ತು ಇದು ಭಾರತದ ಮುಖ್ಯ ಭೂ ಭಾಗ ಮತ್ತು ರಾಮೇಶ್ವರಂ ದ್ವೀಪದ ನಡುವೆ ಸಂಚಾರವನ್ನು ಹೆಚ್ಚಿಸುತ್ತದೆ. +ಹಳೆಯ ಸೇತುವೆಯ ಕುರಿತು ಮಾತನಾಡಿದ ಜಯವರ್ಮ ಎತ್ತರದ ಉಬ್ಬರ ವಿಳಿತದ ಮಟ್ಟ ಮತ್ತು ಗರ್ಡರ್‍ನ ಕೆಳಭಾಗದ ನಡುವೆ ಅದರ ಲಂಬವಾದ ತೆರವು ಕೇವಲ 1.5 ಮೀಟರ್‍ನಷ್ಟಿದ್ದು, ಇದರ ಪರಿಣಾಮವಾಗಿ ಸಮುದ್ರದ ನೀರು ಗರ್ಡರ್‍ಗಳ ಮೇಲೆ ಚಿಮ್ಮುತ್ತಿದೆ ಎಂದು ಹೇಳಿದರು. ಸೇತುವೆಯ ಕಡಿಮೆ ಉಳಿದಿರುವ ಜೀವಿತಾವದಿಯಲ್ಲಿ, ಅಸ್ತಿತ್ವದಲ್ಲಿರುವ ಸೇತುವೆಗೆ ಸಮಾನಾಂತರವಾಗಿ ನ್ಯಾವಿಗೇಷನಲ್ ಲಿಫ್ಟ್ ಸ್ಪ್ಯಾನ್ ಸೇರಿದಂತೆ ಡಬಲ್ ಲೈನ್‍ಗಳಿಗೆ ಸೂಕ್ತವಾದ ಸೇತುವೆಯನ್ನು ಪುನರ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಎಸ್‍ಆರ್ ವಕ್ತಾರರು ತಿಳಿಸಿದ್ದಾರೆ. +ಹೊಸ ಸೇತುವೆಯು 18.3 ಮೀಟರ್‍ನ 100 ಸ್ಪ್ಯಾನ್‍ಗಳನ್ನು ಮತ್ತು 63 ಮೀಟರ್‍ನ ಒಂದು ನ್ಯಾವಿಗೇಷನಲ್ ಸ್ಪ್ಯಾನ್‍ಗಳನ್ನು ಹೊಂದಿರುತ್ತದೆ. ಸಮುದ್ರ ಮಟ್ಟದಿಂದ 22.0 ಮೀ ಎತ್ತರದ ನ್ಯಾವಿಗೇಷನಲ್ ಏರ್ ಕ್ಲಿಯರೆನ್ಸ್ ಹೊಂದಿರುವ ಅಸ್ತಿತ್ವದಲ್ಲಿರುವ ಸೇತುವೆಗಿಂತ ಇದು 3.0 ಮೀ ಎತ್ತರವಾಗಿರುತ್ತದೆ. ಎಸ್‍ಆರ್ ಪ್ರಕಾರ, ಸೇತುವೆಯ ಸಬ್‍ಸ್ಟ್ರಕ್ಚರ್ ಅನ್ನು ಡಬಲ್ ಲೈನ್‍ಗಳಿಗಾಗಿ ನಿರ್ಮಿಸಲಾಗಿದೆ ಮತ್ತು ನ್ಯಾವಿಗೇಷನಲ್ ಸ್ಪ್ಯಾನ್‍ನಲ್ಲಿ ಡಬಲ್ ಲೈನ್‍ಗಳಿಗೂ ಅವಕಾಶವಿದೆ. +ಆರ್ಥಿಕ ಸಬಲರಿಂದಲೇ ಕಾರ್ಮಿಕರಾಗಿ ನೋಂದಣಿ: ಸಂತೋಷ್ ಲಾಡ್ +ನ್ಯಾವಿಗೇಷನಲ್ ಸ್ಪ್ಯಾನ್ ಸೇರಿದಂತೆ ಸಂಪೂರ್ಣ ಸೇತುವೆಯನ್ನು ರೈಲ್ವೆಯ ವಿದ್ಯುದ್ದೀಕರಣದ ಯೋಜನೆಯನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಅಸ್ತಿತ್ವದಲ್ಲಿರುವ ಹಸ್ತಚಾಲಿತ ಕಾರ್ಯಾಚರಣೆ ಮತ್ತು ನಿಯಂತ್ರಣಕ್ಕೆ ಹೋಲಿಸಿದರೆ, ಹೊಸ ಸೇತುವೆಯು ಎಲೆಕ್ಟ್ರೋ-ಮೆಕ್ಯಾನಿಕಲ್ ನಿಯಂತ್ರಿತ ವ್ಯವಸ್ಥೆಗಳನ್ನು ಹೊಂದಿರುತ್ತದೆ, ಇದು ರೈಲು ನಿಯಂತ್ರಣ ವ್ಯವಸ್ಥೆಗಳೊಂದಿಗೆ ಇಂಟರ್ಲಾಕ್ ಆಗಿರುತ್ತದೆ ಎಂದು ವಕ್ತಾರರು ಹೇಳಿದರು. ಹೊಸ ಸೇತುವೆಯ ನಿರ್ಮಾಣದಲ್ಲಿ ರೈಲ್ವೆಯು ಸ್ಟೇನ್‍ಲೆಸ್ ಸ್ಟೀಲ್ ಬಲವರ್ಧನೆ, ಸಂಯೋಜಿತ ಸ್ಲೀಪರ್‍ಗಳು ಮತ್ತು ದೀರ್ಘಾವದಿಯ ಪೇಂಟಿಂಗ್ ಸಿಸ್ಟಮ್‍ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಲಾಗಿದೆ. \ No newline at end of file diff --git a/eesanje/url_47_158_1.txt b/eesanje/url_47_158_1.txt new file mode 100644 index 0000000000000000000000000000000000000000..4beca4562c76fdce6c310395d481d61914502109 --- /dev/null +++ b/eesanje/url_47_158_1.txt @@ -0,0 +1,8 @@ +ಭಾರತವು 10 ಟ್ರಿಲಿಯನ್‍ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ-ಡಬ್ಲೂಇಎಫ್ +ಹೊಸದಿಲ್ಲಿ, ಫೆ.22 (ಪಿಟಿಐ) ಮುಂಬರುವ ವರ್ಷಗಳಲ್ಲಿ ಭಾರತವು 10 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ ಮತ್ತು ಶೀಘ್ರದಲ್ಲೇ ಮೂರನೇ ಅತಿ ದೊಡ್ಡ ಸ್ಥಾನವನ್ನು ಪಡೆದುಕೊಳ್ಳಲಿದೆ ಎಂದು ವಿಶ್ವ ಆರ್ಥಿಕ ವೇದಿಕೆಯ (ಡಬ್ಲೂಇಎಫ್)ಅಧ್ಯಕ್ಷ ಬೋರ್ಗೆ ಬ್ರೆಂಡೆ ಹೇಳಿದ್ದಾರೆ. ಪಿಟಿಐಯೊಂದಿಗಿನ ವಿಶೇಷ ವೀಡಿಯೊ ಸಂದರ್ಶನದಲ್ಲಿ, ಬ್ರೆಂಡೆ ಅವರು ಸಮಯ ಪಕ್ವವಾದಾಗ ಭಾರತ ಸರ್ಕಾರದ ಸಹಯೋಗದೊಂದಿಗೆ ಡಬ್ಲೂಇಎಫ್- ಭಾರತ ಶೃಂಗಸಭೆಯೊಂದಿಗೆ ದೇಶಕ್ಕೆ ಬರಲು ವಿಶ್ವ ಆರ್ಥಿಕ ವೇದಿಕೆ ಆಶಿಸುತ್ತಿದೆ ಎಂದು ಹೇಳಿದರು. +ಭಾರತದ ಆರ್ಥಿಕತೆಯು ಪ್ರಪಂಚದ ಎಲ್ಲಾ ದೊಡ್ಡ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ನಾವು ಈ ವರ್ಷ ದಾವೋಸ್‍ನಲ್ಲಿ ಭಾರತದಲ್ಲಿ ನಡೆಯುವ ಸಮ್ಮೇಳನದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದೇವೆ ಮತ್ತು ಇದು ಮುಂದುವರಿಯುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಬ್ರೆಂಡೆ ಹೇಳಿದರು. ಜಿನೀವಾ ಮೂಲದ ಡಬ್ಲೂಇಎಫ್, ತನ್ನನ್ನು ಸಾರ್ವಜನಿಕ-ಖಾಸಗಿ ಸಹಕಾರಕ್ಕಾಗಿ ಅಂತರಾಷ್ಟ್ರೀಯ ಸಂಸ್ಥೆ ಎಂದು ವಿವರಿಸುತ್ತದೆ, ಪ್ರತಿ ವರ್ಷ ಜನವರಿಯಲ್ಲಿ ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್‍ನಲ್ಲಿ ತನ್ನ ವಾರ್ಷಿಕ ಸಭೆಯನ್ನು ನಡೆಸುತ್ತದೆ. +ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದಾವೋಸ್‍ಗೆ ಬರಲು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಬ್ರೆಂಡೆ ಹೇಳಿದರು. ಆರ್ಥಿಕ ಬೆಳವಣಿಗೆಯು ತುಂಬಾ ಕೆಟ್ಟದ್ದಲ್ಲ ಎಂದು ಒತ್ತಿಹೇಳುವುದು ಅಗತ್ಯವಾಗಿದೆ ಎಂದು ಬ್ರೆಂಡೆ ಹೇಳಿದರು, ವಿಶೇಷವಾಗಿ ಭಾರತದ ಸಂದರ್ಭದಲ್ಲಿ ನಾವು ಶೇಕಡಾ 7 ರ ಆರ್ಥಿಕ ಬೆಳವಣಿಗೆಯನ್ನು ನೋಡುತ್ತಿದ್ದೇವೆ ಮತ್ತು ವಿಶ್ವದ ಅತಿದೊಡ್ಡ ಆರ್ಥಿಕತೆಯಾದ ಯುಎಸ್ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. +ರಾಜಕಾರಣಕ್ಕೆ ಬರಲ್ಲ, ಚುನಾವಣೆಗೆ ನಿಲ್ಲಲ್ಲ : ಡಾಲಿ ಧನಂಜಯ್ +ಮುಂದಿನ 2-3 ವರ್ಷಗಳಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಗುರಿಯನ್ನು ಹೊಂದಿದೆ ಎಂದು ಬ್ರೆಂಡೆ ಹೇಳಿದರು, ಮುಂಬರುವ ವರ್ಷಗಳಲ್ಲಿ ಭಾರತವು 10 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ. +ಭಾರತವು ಪ್ರಮುಖ ಸುಧಾರಣೆಗಳ ಮೂಲಕ ಸಾಗಿದೆ ಮತ್ತು ಎರಡು ದೊಡ್ಡ ಆರ್ಥಿಕತೆಗಳಾದ ಯುಎಸ್ ಮತ್ತು ಚೀನಾಕ್ಕೆ ಹೋಲಿಸಿದರೆ ಅದು ಉತ್ತಮ ಸ್ಥಾನದಲ್ಲಿದೆ. ಅಲ್ಲದೆ, ಭಾರತವು ವಿದೇಶಿ ನೇರ ಹೂಡಿಕೆಯಲ್ಲಿ ಉತ್ತಮ ಹೆಚ್ಚಳವನ್ನು ಕಾಣುತ್ತಿದೆ, ಈಗ ಬಹಳಷ್ಟು ಉತ್ಪಾದನಾ ಚಟುವಟಿಕೆಗಳು ನಡೆಯುತ್ತಿವೆ. ಇತರ ಉದಯೋನ್ಮುಖ ಆರ್ಥಿಕತೆಗಳಲ್ಲಿ ಭಾರತವು ಸಂಭವಿಸುತ್ತದೆ, ಎಂದು ಅವರು ಹೇಳಿದರು. +ಅವರು ಭಾರತದ ಡಿಜಿಟಲ್ ಸ್ಪರ್ಧಾತ್ಮಕತೆಯನ್ನು ಶ್ಲಾಸಿದರು ಮತ್ತು ಡಿಜಿಟಲ್ ವ್ಯಾಪಾರವು ಇಂದು ವಿಶ್ವದ ಸಾಂಪ್ರದಾಯಿಕ ಸರಕುಗಳಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಭಾರತವು ಉತ್ತಮ ಸ್ಥಾನದಲ್ಲಿದೆ ಮತ್ತು ಯುಎಸ್ ಮತ್ತು ಚೀನಾದ ನಂತರ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೊದಲು ಇದು ಸಮಯದ ಪ್ರಶ್ನೆಯಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_158_10.txt b/eesanje/url_47_158_10.txt new file mode 100644 index 0000000000000000000000000000000000000000..39fc74ffd693253d829a77f64ac0420cf98602ce --- /dev/null +++ b/eesanje/url_47_158_10.txt @@ -0,0 +1,5 @@ +ನೆಲದಡಿ ಕುಕ್ಕರ್‌ನಲ್ಲಿ ಅಡಗಿಸಿಟ್ಟಿದ 2 ಕೆಜಿ ಸ್ಪೋಟಕ ವಶ +ಗಡ್ಚಿರೋಲಿ, ಫೆ.20 (ಪಿಟಿಐ) ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಅರಣ್ಯದಲ್ಲಿ ನಕ್ಸಲೀಯರು ನೆಲದಡಿಯಲ್ಲಿ ಪ್ರೆಶರ್ ಕುಕ್ಕರ್‍ನಲ್ಲಿ ಅಡಗಿಸಿಟ್ಟಿದ್ದ ಎರಡು ಕಿಲೋಗ್ರಾಂಗಳಷ್ಟು ಸ್ಪೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕುರ್ಖೇಡ ತಾಲೂಕಿನ ಗೊಂಡರಿ ಅರಣ್ಯದಲ್ಲಿ ಪೊಲೀಸರಿಗೆ ಹಾನಿ ಮಾಡುವ ಉದ್ದೇಶದಿಂದ ನಕ್ಸಲೀಯರು ಅಪಾರ ಪ್ರಮಾಣದ ಸ್ಪೋಟಕಗಳು ಮತ್ತು ಇತರ ವಸ್ತುಗಳನ್ನು ಬಚ್ಚಿಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ಗಡ್ಚಿರೋಲಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಕಚೇರಿಯ ಪ್ರಕಟಣೆ ತಿಳಿಸಿದೆ. +ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುವಂತೆ ಬಾಂಬ್ ಪತ್ತೆ ಮತ್ತು ಬಿಸಾಡಬಹುದಾದ ಸ್ಕ್ವಾಡ್‍ಗಳಿಗೆ (ಬಿಡಿಡಿಎಸ್) ಸೂಚಿಸಲಾಗಿದೆ. ನಿನ್ನೆ ನಡೆದ ಶೋಧದ ವೇಳೆ, ಎರಡು ಅಡಿ ನೆಲದ ಕೆಳಗೆ ಅಡಗಿಸಿಟ್ಟಿದ್ದ ಪ್ರೆಶರ್ ಕುಕ್ಕರ್‍ನಲ್ಲಿ ಎರಡು ಕೆಜಿ ಸ್ಪೋಟಕಗಳನ್ನು ಪ್ಯಾಕ್ ಮಾಡಿರುವುದು ಬಿಡಿಡಿಎಸ್ ಪತ್ತೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ಬಿಡಿಡಿಎಸ್ ಸೋಟಕಗಳನ್ನು ಸ್ಥಳದಲ್ಲೇ ನಾಶಪಡಿಸಿದೆ ಎಂದು ಅದು ಹೇಳಿದೆ. +ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ +ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಗಡ್ಚಿರೋಲಿ ಎಸ್ಪಿ ನೀಲೋತ್ಪಾಲ್ ತಿಳಿಸಿದ್ದಾರೆ. \ No newline at end of file diff --git a/eesanje/url_47_158_11.txt b/eesanje/url_47_158_11.txt new file mode 100644 index 0000000000000000000000000000000000000000..aeaf74fb99e727965f04a2966153170903d60277 --- /dev/null +++ b/eesanje/url_47_158_11.txt @@ -0,0 +1,6 @@ +ಲಡಾಕ್‍ಗೆ ರಾಜ್ಯ ಸ್ಥಾನಮಾನ ದೊರೆಯದಿದ್ದರೆ ಅಮರಣಾಂತ ಉಪವಾಸ : ವಾಂಗ್ಚುಕ್ +ಲೇಹ್,ಫೆ.20- ಲಡಾಖ್‍ನ ಸಾಂವಿಧಾನಿಕ ರಕ್ಷಣೆಯ ಪ್ರಮುಖ ಪ್ರಚಾರಕ ಸೋನಮ್ ವಾಂಗ್‍ಚುಕ್ ಅವರು ಲಡಾಖ್‍ಗೆ ರಾಜ್ಯ ಸ್ಥಾನಮಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕೇಂದ್ರದೊಂದಿಗಿನ ಮಾತುಕತೆ ವಿಫಲವಾದರೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿದ್ದಾರೆ. +ಲಡಾಖ್ ಜನರ ಬೇಡಿಕೆಗಳನ್ನು ಒಪ್ಪಿಕೊಂಡಿದ್ದಕ್ಕಾಗಿ ನಾವು ಫೆಬ್ರವರಿ 26 ರಂದು ಲೇಹ್ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಕರೆಯುತ್ತೇವೆ ಅಥವಾ ಮಾತುಕತೆ ವಿಫಲವಾದಲ್ಲಿ ಆಮರಣಾಂತ ಉಪವಾಸವನ್ನು ಮಾಡುತ್ತೇವೆ ಎಂದು ವಾಂಗ್ಚುಕ್ ಪಿಟಿಐಗೆ ತಿಳಿಸಿದ್ದಾರೆ. ಪ್ರಸ್ತುತ ರಾಷ್ಟ್ರ ರಾಜಧಾನಿಯಲ್ಲಿ ಮೊಕ್ಕಾಂ ಹೂಡಿರುವ ಲಡಾಖ್ ನಾಯಕತ್ವವು ನಿನ್ನೆ ಕೇಂದ್ರ ಸರ್ಕಾರದೊಂದಿಗೆ ಹೊಸ ಸುತ್ತಿನ ಮಾತುಕತೆಯ ನಂತರ ಫಾಸ್ಟ್ ಟು ಡೆತ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದೆ ಎಂದು ಘೋಷಿಸಿತ್ತು ಆದರೆ, ಇದೀಗ ನಮ್ಮ ಬೇಡಿಕೆ ಈಡೇರದಿದ್ದರೆ ಮತ್ತೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದೆ. +ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ +ಲಡಾಖ್‍ನ ರಾಜ್ಯತ್ವ, ಕೇಂದ್ರಾಡಳಿತ ಪ್ರದೇಶವನ್ನು ಸಂವಿಧಾನದ ಆರನೇ ಶೆಡ್ಯೂಲ್‍ಗೆ ಸೇರಿಸುವುದು ಮತ್ತು ಎತ್ತರದ ಪ್ರದೇಶಕ್ಕೆ ವಿಶೇಷ ಸಾರ್ವಜನಿಕ ಸೇವಾ ಆಯೋಗವನ್ನು ಸ್ಥಾಪಿಸುವ ಬೇಡಿಕೆಗಳ ಬಗ್ಗೆ ಚರ್ಚಿಸಲು ಕೇಂದ್ರವು ಒಪ್ಪಿಕೊಂಡಿದೆ ಎಂದು ಅದು ಹೇಳಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ನೇತೃತ್ವದಲ್ಲಿ ಲಡಾಖ್‍ನ ಉನ್ನತ ಅಧಿಕಾರ ಸಮಿತಿ (ಎಚ್‍ಪಿಸಿ) ಮತ್ತು ಲೇಹ್‍ನ ಅಪೆಕ್ಸ ಬಾಡಿ (ಎಬಿಎಲ್) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲೈಯನ್ಸ್ (ಎಬಿಎಲ್) 14 ಸದಸ್ಯರ ನಿಯೋಗದ ನಡುವಿನ ಸಭೆಯಲ್ಲಿ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ. +ಫೆಬ್ರವರಿ 24 ರ ಉಪಸಮಿತಿಯ ಸಭೆ ಮತ್ತು ಫೆಬ್ರವರಿ 25 ರಂದು ನಮ್ಮ ನಾಯಕರು ಲೇಹ್‍ಗೆ ಹಿಂದಿರುಗುವವರೆಗೆ ನಾವು ಕಾಯುತ್ತೇವೆ. ಮರುದಿನ ಲೇಹ್ ನಗರದಲ್ಲಿ ನಾವು ಬಹಳ ದೊಡ್ಡ ಸಾರ್ವಜನಿಕ ಸಭೆಯನ್ನು ಕರೆಯುತ್ತೇವೆ, ನಮ್ಮ ಬೇಡಿಕೆಗಳನ್ನು ಪೂರೈಸಿದ್ದಕ್ಕಾಗಿ ಸರ್ಕಾರಕ್ಕೆ ಧನ್ಯವಾದ ಅಥವಾ ಒಂದು ವೇಳೆ ಮಾತುಕತೆ ವಿಫಲವಾದಲ್ಲಿ ಆಮರಣಾಂತ ಉಪವಾಸವನ್ನು ಆರಂಭಿಸುತ್ತೇವೆ ಎಂದು ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ವಾಂಗ್ಚುಕ್ ಹೇಳಿದ್ದಾರೆ. \ No newline at end of file diff --git a/eesanje/url_47_158_12.txt b/eesanje/url_47_158_12.txt new file mode 100644 index 0000000000000000000000000000000000000000..51e579bfad1f682eaa9799795276c60c6bca1987 --- /dev/null +++ b/eesanje/url_47_158_12.txt @@ -0,0 +1,4 @@ +ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ +ರಾಯ್‍ಪುರ,ಫೆ.20- ಮುಂಬರುವ ಲೋಕಸಭೆ ಚುನಾವಣೆಗೆ ಸಚಿವ ಸ್ಥಾನ ಮತ್ತು ಟಿಕೆಟ್ ನೀಡುವ ಮೂಲಕ ಛತ್ತೀಸ್‍ಗಢದಲ್ಲಿ ಆಡಳಿತಾರೂಢ ಬಿಜೆಪಿ ತನ್ನ ಪಕ್ಷದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಆರೋಪಿಸಿದ್ದಾರೆ. ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ -ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸೋಲನ್ನು ನಿರೀಕ್ಷಿಸಿ ಬಿಜೆಪಿ ಇಂತಹ ತಂತ್ರಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. +ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಬಘೇಲ್, ಕೇಂದ್ರದಲ್ಲಿ ಅಧಿಕಾರವನ್ನು ಉಳಿಸಿಕೊಂಡರೆ ಲೋಕಸಭೆ ಚುನಾವಣೆ ಟಿಕೆಟ್ ಮತ್ತು ಸಚಿವ ಸ್ಥಾನ ನೀಡುವ ಭರವಸೆ ನೀಡಿ ಬಿಜೆಪಿ ತನ್ನನ್ನು ಸಂಪರ್ಕಿಸಿದೆ ಎಂದು ಇತ್ತೀಚೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‍ನ ಶಾಸಕರೊಬ್ಬರು ನನಗೆ ಹೇಳಿದ್ದರು ಎಂದು ಅವರು ತಿಳಿಸಿದ್ದಾರೆ. +ಬಿಹಾರ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಬೆಳವಣಿಗೆಗಳು 2024 ರ ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿ ಸೋಲನ್ನು ಎದುರಿಸಲಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ. ಹೀಗಾಗಿ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುವ ವಿಶ್ವಾಸ ಇಲ್ಲದಿರುವುದರಿಂದ ಬೇರೆ ಪಕ್ಷಗಳ ಸಂಸದರ ಮೇಲೆ ಬಿಜೆಪಿ ಕಣ್ಣು ಹಾಕಿದೆ ಎಂದು ಅವರು ದೂರಿದರು. 2018 ರಿಂದ 2023 ರವರೆಗೆ ಛತ್ತೀಸ್‍ಗಢ ಸಿಎಂ ಆಗಿದ್ದ ಬಘೇಲಧಿ ಅವರು ಕಳೆದ ನವೆಂಬರ್‍ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಸಿತ್ತು. \ No newline at end of file diff --git a/eesanje/url_47_158_2.txt b/eesanje/url_47_158_2.txt new file mode 100644 index 0000000000000000000000000000000000000000..32648cb4dc4390228c57e2c2e381048852f40381 --- /dev/null +++ b/eesanje/url_47_158_2.txt @@ -0,0 +1,6 @@ +ಅನಂತ್ ಅಂಬಾನಿ ಮದುವೆಗೆ, ಬಿಲ್‍ಗೇಟ್ಸ್, ಜುಕರ್ಬರ್ಗ್ ಸೇರಿದಂತೆ ಜಾಗತಿಕ ಉದ್ಯಮಿಗಳಿಗೆ ಆಹ್ವಾನ +ಮುಂಬೈ, ಫೆ.22- ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಕಾ ಮರ್ಚೆಂಟ್ ಅವರ ವಿವಾಹ ಜು.12ರಂದು ನಿಗದಿಯಾಗಿದ್ದು, ಇದಕ್ಕೂ ಮುನ್ನ ಗುಜರಾತ್‍ನ ಜಾಮ್‍ನಗರದಲ್ಲಿ ನಡೆಯಲಿರುವ ವಿವಾಹಪೂರ್ವ ಉತ್ಸವದಲ್ಲಿ ಜಾಗತಿಕ ಮಟ್ಟದ ಉದ್ಯಮಿಗಳು ಭಾಗಿಯಾಗುತ್ತಿದ್ದಾರೆ. +ಮಾ.1ರಿಂದ 3ರ ವರೆಗೆ ನಡೆಯಲಿರುವ ಈ ಉತ್ಸವಕ್ಕೆ ಈಗಾಗಲೇ ಸ್ವತಃ ಮುಖೇಶ್ ಅಂಬಾನಿ ಅವರೇ ಮುತುವರ್ಜಿ ವಹಿಸಿ ಜಾಗತಿಕ ಉದ್ಯಮಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ. ಈಗಾಗಲೇ ಕಳೆದ ಜನವರಿಯಲ್ಲಿ ನಡೆದಿದ್ದ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿತ್ತು. ಇದು ಎಲ್ಲರನ್ನೂ ಆಕರ್ಷಿಸಿತ್ತು. ಪ್ರಸ್ತುತ ವಿವಾಹಕ್ಕೆ ಮುನ್ನ ನಡೆಯಲಿರುವ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಫೋಟೋಶೂಟ್‍ಗಾಗಿ ಈ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ +ಈ ಬಗ್ಗೆ ರಿಲಾಯನ್ಸ್ ಫೌಂಡೇಷನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಬರುವ ಕೆಲವು ಅತಿಥಿಗಳ ಬಗ್ಗೆ ಮಾಹಿತಿ ನೀಡಲಾಗಿದೆ. ಇದಕ್ಕೆ ಪ್ರೀತಿ ಮತ್ತು ಪರಂಪರೆಯ ಎಳೆಗಳು ಎಂಬ ಶೀರ್ಷಿಕೆ ಕೂಡ ನೀಡಲಾಗಿದೆ. ಇದರಲ್ಲಿ ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಕೂಡ ಟಿಬಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ. ವಧು-ವರರ ವಸ್ತ್ರ ತಯಾರಿಕೆಗಾಗಿ ಈಗಾಗಲೇ ಗುಜರಾತ್‍ನ ಕಚ್ಛ್ ಮತ್ತು ಲಾಲ್ಪುರದಿಂದ ನುರಿತ ಮಹಿಳಾ ಕುಶಲಕರ್ಮಿಗಳನ್ನು ನಿಯೋಜಿಸಿದೆ. +ಈ ಉತ್ಸವದಲ್ಲಿ ಭಾಗಿಯಾಗುವ ಉದ್ಯಮಿಗಳ ಪಟ್ಟಿ ಹೀಗಿದೆ:ಮೆಟಾ ಸಿಇಒ- ಮಾರ್ಕ್ ಜುಕರ್ಬರ್ಗ್ಮೋರ್ಗಾನ್ ಸ್ಟಾನ್ಲಿ ಸಿಇಒ- ಟೆಡ್ ಪಿಕ್ಮೈಕ್ರೋಸಾಫ್ಟ್ ಸಂಸ್ಥಾಪಕ- ಬಿಲ್‍ಗೇಟ್ಸಡಿಸ್ನಿ ಸಿಇಒ- ಬಾಬ್ ಇಗರ್ಬ್ಲ್ಯಾಕ್ರಾಕ್ ಸಿಇಒ- ಲ್ಯಾರಿ ಫಿಂಕ್ಅಡ್ನಾಕ್ ಸಿಇಒ- ಸುಲ್ತಾನ್ ಅಹ್ಮದ್ ಅಲ್ ಜಾಬರ್ಇಎಲ್ ರಾಥ್ಸ್ ಚೈಲ್ಡ ಅಧ್ಯಕ್ಷ- ಲಿನ್ ಫಾರೆಸ್ಟರ್ ಡಿ ರಾಥ್ಸ್ ಚೈಲ್ಡಬ್ಯಾಂಕ್ ಆಫ್ ಅಮೆರಿಕಾ ಅಧ್ಯಕ್ಷ- ಬ್ರಿಯಾನ್ ಥಾಮಸ್ ಮೊಯ್ನಿಹಾನ್ಬ್ಲಾಕ್‍ಸ್ಟೋನ್ ಅಧ್ಯಕ್ಷ- ಸ್ಟೀಫನ್ ಶ್ವಾಜ್ರ್ಮನ್ಕತಾರ್ ಪ್ರೀಮಿಯರ್- ಮೊಹಮ್ಮದ್ ಬಿನ್ ಅಬ್ದುಲ್ ರೆಹ್ಮಾನ್ ಬಿನ್ ಜಾಸಿಮ್ ಅಲ್ ಥಾನಿಅಡೋಬ್ ಸಿಇಒ- ಶಾಂತನು ನಾರಾಯಣ್ಲೂಪಾ ಸಿಸ್ಟಮ್ಸ ಸಿಇಒ- ಜೇಮ್ಸ ಮುರ್ಡೋಕ್ಹಿಲ್‍ಹೌಸ್ ಕ್ಯಾಪಿಟಲ್ ಸಂಸ್ಥಾಪಕ- ಜಾಗ್ ಲೀಬಿಪಿ ಮುಖ್ಯ ಕಾರ್ಯನಿರ್ವಾಹಕ- ಮುರ್ರೆ ಆಚಿನ್ ಕ್ಲೋಸ್ಎಕ್ಸಾರ್ ಸಿಇಒ- ಜಾನ್ ಎಲ್ಕಾನ್ಬ್ರೂಕ್‍ಫೀಲ್ಡ ಅಸೆಟ್ ಮ್ಯಾನೇಜ್‍ಮೆಂಟ್ ಸಿಇಒ- ಬ್ರೂಸ್ ಫ್ಲಾಟ್ \ No newline at end of file diff --git a/eesanje/url_47_158_3.txt b/eesanje/url_47_158_3.txt new file mode 100644 index 0000000000000000000000000000000000000000..1cf49ee7c1245517d2c821c2673f2340a791cd60 --- /dev/null +++ b/eesanje/url_47_158_3.txt @@ -0,0 +1,9 @@ +ಬೈಜೂಸ್ ಸಂಸ್ಥಾಪಕ ರವೀಂದ್ರನ್ ವಿರುದ್ಧ ಲುಕೌಟ್ ನೋಟಿಸ್ ವಿಸ್ತರಣೆ +ನವದೆಹಲಿ, ಫೆ.22- ವಿದೇಶಿ ವಿನಿಮಯ ನಿರ್ವಹಣೆಗೆ ಸಂಬಂಧಿಸಿದಂತೆ ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್ ವಿರುದ್ಧ ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಲುಕೌಟ್ ನೋಟಿಸ್ ವಿಸ್ತರಿಸಲಾಗಿದೆ. ಫೆಮಾ ಕಾಯ್ದೆಯನ್ವಯ ಇಡಿ ಕೋರಿಕೆ ಮೇರೆಗೆ ಬೈಜೂಸ್ ರವೀಂದ್ರನ್ ಅವರ ಲುಕೌಟ್ ನೊಟೀಸ್ ಸುತ್ತೋಲೆಯನ್ನು ಜಾರಿ ನಿರ್ದೇಶನಾಲಯ ನವೀಕರಿಸಿದೆ ಎಂದು ತಿಳಿದುಬಂದಿದೆ. +ಬೈಜೂಸ್ ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ನಡೆಸುತ್ತಿದೆ. 9632 ಕೋಟಿ ರೂ.ಗಳಷ್ಟು ಖಜಾನೆಗೆ ನಷ್ಟ ಉಂಟುಮಾಡಿ ಭಾರತದ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದೆ ಎಂದು ಹಣಕಾಸು ಅಪರಾಧಗಳ ತನಿಖಾ ಸಂಸ್ಥೆ ಆರೋಪ ಮಾಡಿದೆ. ಬೈಜು ರವೀಂದ್ರನ್ ಅವರು ಭಾರತದ ಹೊರಗೆ ಮಾಡಿರುವ ಹೂಡಿಕೆ, ಮುಂಗಡ ಹಣ ರವಾನೆ, ಆಮದು ದಾಖಲೆಗಳನ್ನು ಸಲ್ಲಿಸಲು ವಿಫಲ, ರಫ್ತಿನ ಆದಾಯವನ್ನು ತಡವಾಗಿ ಸಲ್ಲಿಸುವ ಮೂಲಕ (ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ) ನಿಬಂಧನೆಗಳ ಉಲ್ಲಂಘನೆ, ಭಾರತದ ಹೊರಗೆ ಕಂಪೆನಿ ಮಾಡಿರುವ ಹಣದ ದಾಖಲೆ ಸಲ್ಲಿಸಲು ವಿಫಲ ಮತ್ತು ಕಂಪೆನಿ ಸ್ವೀಕರಿಸಿದ ಎಫ್‍ಡಿಐ ಷೇರುಗಳನ್ನು ಹಂಚಿಕೆ ಮಾಡಲು ವಿಫಲವಾಗಿರುವುದೂ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿವೆ. +ವಿಧಾನಸಭೆ ಕಲಾಪ ವೀಕ್ಷಿಸಿದ ಬೀದಿಬದಿ ವ್ಯಾಪಾರಿಗಳು +ಫೆಮಾ ದೂರಿನ ಆಧಾರದ ಮೇಲೆ ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ ಮತ್ತು ಬೈಜು ರವೀಂದ್ರನ್ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ನಿಬಂಧನೆಗಳ ಉಲ್ಲಂಘನೆ ಮತ್ತು 9362 ಕೋಟಿ ರೂ. ಮೊತ್ತಕ್ಕೆ ವಿವರ ಕೇಳಿದೆ. 2011 ರಿಂದ 2023ರ ವರೆಗೆ ಕಂಪೆನಿಯು 28 ಸಾವಿರ ಕೋಟಿ ರೂ.ನಷ್ಟು ವಿದೇಶಿ ನೇರ ಹೂಡಿಕೆ ಪಡೆದಿದೆ ಎಂದು ಇಡಿ ನಡೆಸಿದ ದಾಳಿ ಸಂದರ್ಭದಲ್ಲಿ ತಿಳಿದುಬಂದಿದೆ. +ಸಾಗರೋತ್ತರ ನೇರ ಹೂಡಿಕೆ ಹೆಸರಿನಲ್ಲಿ ಕಂಪೆನಿಯು ಇದೇ ಅವಧಿಯಲ್ಲಿ ವಿದೇಶಿ ನ್ಯಾಯವ್ಯಾಪ್ತಿಗಳಿಗೆ 9754 ಕೋಟಿ ರೂ. ರವಾನೆ ಮಾಡಿದೆ ಎಂದು ಹೇಳಿಕೊಂಡಿದೆ. 2011ರಲ್ಲಿ ಸ್ಥಾಪಿತವಾದ ಕೋಚಿಂಗ್ ಸಂಸ್ಥೆಯಾದ ಬೈಜೂಸ್ ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಭಾರಿ ಉತ್ಕರ್ಷಕ್ಕೆ ಸಾಕ್ಷಿಯಾಯಿತು. ಇದು ಆಕಾಶ್ ಎಜುಕೇಷನಲ್ ಸರ್ವೀಸ್‍ಅನ್ನು ಕೂಡ ಹೊಂದಿದ್ದು, ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳ ಕೋರ್ಸ್‍ಗಳಿಗೆ ತರಬೇತಿ ನೀಡುತ್ತಿದೆ. +ಸಿಬ್ಬಂದಿಗೆ ವೇತನ ಕೊಡಲು ಬೈಜೂಸ್ ರವೀಂದ್ರನ್ ಬೆಂಗಳೂರಿನ ಮನೆಯನ್ನೇ ನೂರು ಕೋಟಿ ರೂ.ಗಳಿಗೆ ಅಡವಿಟ್ಟಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಉದ್ಯೋಗಿಗಳಿಗೆ ಸಂಬಳ ನೀಡಲಾಗದ ಸ್ಥಿತಿಗೆ ಬೈಜೂಸ್ ತಲುಪಿತ್ತು. ಮನೆಯನ್ನು ಅಡವಿಟ್ಟು ಹಣ ಸಂಗ್ರಹಿಸಿ ಉದ್ಯೋಗಿಗಳಿಗೆ ನವೆಂಬರ್ ತಿಂಗಳ ವೇತನವನ್ನು ಅವರು ನೀಡಿದ್ದರು. ರವೀಂದ್ರನ್ ಅವರ ಕುಟುಂಬವು ಬೆಂಗಳೂರಿನಲ್ಲಿ ಎರಡು ಮನೆಗಳನ್ನು ಹೊಂದಿದ್ದು ಮತ್ತು ಬೆಲೆಬಾಳುವ ಗೆಟೆಡ್ ಸಮುದಾಯ ಎಫ್ಸಿಲಾನ್‍ನಲ್ಲಿ ನಿರ್ಮಾಣ ಹಂತದಲ್ಲಿರುವ ವಿಲ್ಲಾ ಇದೆ. +ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ : ಕಾರ್ಮಿಕ ಸಾವು +ಇದನ್ನು ಅಡವಿಟ್ಟು ಬೈಜು ರವೀಂದ್ರನ್ ನೂರು ಕೋಟಿ ರೂ. ಸಾಲ ಪಡೆದಿದ್ದಾರೆ. ಅವರ ಮಾತೃ ಸಂಸ್ಥೆಯಾದ ಥಿಂಕ್ ಅಂಡ್ ಲರ್ನ್ ಪ್ರೈವೇಟ್ ಲಿಮಿಟೆಡ್ 15 ಸಾವಿರ ಉದ್ಯೋಗಿಗಳಿಗೆ ಸಂಬಳ ಪಾವತಿಸಲು ಸ್ಟಾರ್ಟಪ್‍ನಲ್ಲಿರುವ ಹಣ ಬಳಸಿಕೊಂಡಿದ್ದು, ಕಡಿಮೆಯಾದ ಮೊತ್ತಕ್ಕೆ ಈ ಹಣ ಬಳಕೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_158_4.txt b/eesanje/url_47_158_4.txt new file mode 100644 index 0000000000000000000000000000000000000000..f78c5a5291ec0bc073a693a715d25aa64a46fc3f --- /dev/null +++ b/eesanje/url_47_158_4.txt @@ -0,0 +1,5 @@ +ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ : ಕಾರ್ಮಿಕ ಸಾವು +ಬನಿಹಾಲ್/ಜಮ್ಮು, ಫೆ.22 (ಪಿಟಿಐ)- ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತತ ನಾಲ್ಕನೇ ದಿನವೂ ಬಂದ್ ಆಗಿರುವ ಭೂಕುಸಿತದಲ್ಲಿ ನಿರ್ಮಾಣ ಕಂಪೆನಿಯೊಂದರ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡ ಕಾರ್ಮಿಕನನ್ನು ಉತ್ತರ ಪ್ರದೇಶದ ನಿವಾಸಿ ದೇಶಪಾಲ್ (31) ಎಂದು ಗುರುತಿಸಲಾಗಿದ್ದು, ಬೆಳಿಗ್ಗೆ 8.30ರ ಸುಮಾರಿಗೆ ರಾಂಬನ್ ಜಿಲ್ಲೆಯ ಸೆರಿ ಬಳಿಯ ತನ್ನ ಕಂಪೆನಿಯ ಪ್ರಧಾನ ಕಚೇರಿಯ ಹೊರಗೆ ಭೂಕುಸಿತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಘಟನೆ ಸಂಭವಿಸಿದಾಗ ಮೃತರು ಉಪಹಾರಕ್ಕಾಗಿ ಕಂಪೆನಿಯ ಮೆಸ್‍ಗೆ ತೆರಳುತ್ತಿದ್ದರು ಎಂದು ಅವರು ಹೇಳಿದರು. ಅವರ ದೇಹವನ್ನು ಹೊರತೆಗೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. 270 ಕಿಮೀ ಉದ್ದದ ಹೆದ್ದಾರಿ, ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಎಲ್ಲಾ ಹವಾಮಾನ ರಸ್ತೆಯಾಗಿದ್ದು, ಬನಿಹಾಲ್ ಬಳಿಯ ಕಿಶ್ತ್ವಾರಿ ಪಥೆರ್‍ನಲ್ಲಿ ಹೊಸ ಭೂಕುಸಿತದ ನಂತರ ನಾಲ್ಕನೇ ದಿನವೂ ಮುಚ್ಚಲಾಗಿದೆ ಎಂದು ಸಂಚಾರ ವಿಭಾಗದ ಅಕಾರಿಯೊಬ್ಬರು ತಿಳಿಸಿದ್ದಾರೆ. +ಮಲ್ಲಿಕಾರ್ಜುನ ಖರ್ಗೆಯವರೇ ಬಿಜೆಪಿಗೆ ಬರುವ ಸಾಧ್ಯತೆ ಇದೆ : ಯತ್ನಾಳ್ +ಮರುಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ ಮತ್ತು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು. ರಾಂಬನ್ ಮತ್ತು ಬನಿಹಾಲ್ ನಡುವಿನ 12 ಸ್ಥಳಗಳಲ್ಲಿ ಭಾರೀ ಮಳೆಯಿಂದ ಉಂಟಾದ ಅನೇಕ ಭೂಕುಸಿತಗಳ ನಂತರ ಆಯಕಟ್ಟಿನ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. \ No newline at end of file diff --git a/eesanje/url_47_158_5.txt b/eesanje/url_47_158_5.txt new file mode 100644 index 0000000000000000000000000000000000000000..f624953d554ba159b66647442229dbeb2db9efb2 --- /dev/null +++ b/eesanje/url_47_158_5.txt @@ -0,0 +1,6 @@ +ಬಿಹಾರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು +ಲಖಿಸಾರೈ,ಫೆ.21- ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿ 6ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಲಖಿಸರಾಯ್‍ನ ರಾಮಗಢ್ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಹರೌರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರ ಪೈಕಿ ದಿವಾನ ಕುಮಾರ್, ಛೋಟು ಕುಮಾರ್, ಅಮಿತ್ ಕುಮಾರ್ ಮತ್ತು ರಾಮು ಕುಮಾರ್ ಎಬುವರನ್ನು ಗುರುತಿಸಲಾಗಿದೆ. +ಇವರೆಲ್ಲರೂ ಮುಂಗೇರ್ ಜಿಲ್ಲೆಯ ಜಮಾಲ್‍ಪುರದ ನಯಾ ತೋಲಾ ಕೇಶೋಪುರ ನಿವಾಸಿಗಳಾಗಿದ್ದರು. ಇನ್ನು ಬಾಕಿಯುಳಿದ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಭಯಾನಕ ಅಪಘಾತದಲ್ಲಿ 6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪರಿಚಿತ ವಾಹನವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಹಾರಿ ಹೋಗಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದರೆ, ಗಂಭೀರವಾಗಿ ಗಾಯಗೊಂಡವರು ಎಲ್ಲೆಂದರಲ್ಲಿ ಬಿದ್ದಿದ್ದಾರೆ. +ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಇನ್ಸ್‌ಪೆಕ್ಟರ್‌ ಆತ್ಮಹತ್ಯೆ +ಸಿಕ್ಕಿರುವ ಮಾಹಿತಿ ಪ್ರಕಾರ, ಲಖಿಸರಾಯ್-ಸಿಕಂದ್ರ ಮುಖ್ಯ ರಸ್ತೆಯ ಬಿಹರೌರಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಆಟೋದಲ್ಲಿ ಒಟ್ಟು 15 ಜನರಿದ್ದು, ಈ ಪೈಕಿ 9 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಉತ್ತಮ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಹಲವು ಠಾಣೆಗಳ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ತಿಳಿದುಬ ಬಂದಿದೆ. +ಅಪಘಾತದಲ್ಲಿ ಗಾಯಗೊಂಡ ಆಟೋ ಚಾಲಕ ಮನೋಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.ಪೊಲೀಸರು ಅವರ ಮೊಬೈಲ್ ಫೋನ್‍ಗಳ ಆಧಾರದ ಮೇಲೆ ಅವರ ಕುಟುಂಬಗಳಿಗೆ ಮಾಹಿತಿ ನೀಡಿ ಮೃತರ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ. ಏತನ್ಮಧ್ಯೆ, ಕೆಲವು ಗಾಯಾಳುಗಳನ್ನು ಗುರುತಿಸಲಾಗಿದೆ, ಪಚ್ನಾ ರಸ್ತೆಯ ಸಾಗರ್ ಯಾದವ್, ಲಖಿಸಾರೈ ಮತ್ತು ಮುಂಗೇರ್ ಜಮಾಲ್ಪುರದ ಹೃತಿಕ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಹಾಗೂ ಜನ ಜಮಾಯಿಸಿದ್ದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. \ No newline at end of file diff --git a/eesanje/url_47_158_6.txt b/eesanje/url_47_158_6.txt new file mode 100644 index 0000000000000000000000000000000000000000..6998f5b2b06f980fa47aad080b2d9e07db03bee9 --- /dev/null +++ b/eesanje/url_47_158_6.txt @@ -0,0 +1,7 @@ +ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್.ನಾರಿಮನ್ ನಿಧನ +ನವದೆಹಲಿ,ಫೆ.21- ಸುಪ್ರೀಂಕೋರ್ಟ್‍ನಲ್ಲಿ ಕರ್ನಾಟಕದ ಜಲವಿವಾದಗಳ ಬಗ್ಗೆ ಹಲವಾರು ದಶಕಗಳಿಂದ ಕಾನೂನು ಹೋರಾಟ ನಡೆಸುತ್ತಿದ್ದ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ (95) ನಿಧನರಾಗಿದ್ದಾರೆ. ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ನದಿ ನೀರು ಹಂಚಿಕೆಯ ಎಲ್ಲ ವ್ಯಾಜ್ಯಗಳಲ್ಲಿ ರಾಜ್ಯದ ಪರ ವಾದಿಸುತ್ತಿದ್ದ ಇವರಿಗೆ ಅಂತಾರಾಷ್ಟ್ರೀಯ ಜಲತಜ್ಞರೆಂಬ ಖ್ಯಾತಿಯೂ ಬಂದಿತ್ತು.ಇವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. +1929 ರಂದು ಜನವರಿ 10 ರಂದು ಜನಿಸಿದ ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‍ನ ವಕೀಲರಾಗಿ ವೃತ್ತಿ ಆರಂಭಿಸಿದರು. 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ. ಅವರ ಪುತ್ರ ರೋಹಿಂಟನ್ ನಾರಿಮನ್ ಕೂಡ ಹಿರಿಯ ವಕೀಲರಾಗಿದ್ದು ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಯಾಗಿದ್ದಾರೆ. ನಾರಿಮನ್ ನವೆಂಬರ್ 1950ರಲ್ಲಿ ವಕೀಲರಾಗಿ ವೃತ್ತಿ ಜೀವನ ಆರಂಭಿಸಿದರು. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ಅವರು ಎಎಎಸ್‍ಜಿ ಹುದ್ದೆಗೆ ರಾಜೀನಾಮೆ ನೀಡಿದ್ದರು. +ಇಬ್ಬರು ಬಿಜೆಡಿ ನಾಯಕರು ಬಿಜೆಪಿ ಕೇಂದ್ರ ಸಚಿವ ಅವಿರೋಧವಾಗಿ ರಾಜ್ಯ ಸಭೆಗೆ ಆಯ್ಕೆ +ಅವರ ಸುದೀರ್ಘ ಕಾನೂನು ವೃತ್ತಿ ಜೀವನದಲ್ಲಿ ನಾರಿಮನ್ ಅವರು ಅನೇಕ ದೊಡ್ಡ ಐತಿಹಾಸಿಕ ಪ್ರಕರಣಗಳ ಭಾಗವಾಗಿದ್ದಾರೆ. ಕೊಲಿಜಿಯಂ ವ್ಯವಸ್ಥೆ ಅಸ್ತಿತ್ವಕ್ಕೆ ಬರಲು ಈ ವಿಷಯ ಪ್ರಮುಖ ಕಾರಣ ಎನ್ನಲಾಗಿದೆ. 1975ರಲ್ಲಿ ಘೋಷಿಸಲಾದ ತುರ್ತು ಪರಿಸ್ಥಿತಿ ಸರ್ಕಾರದ ನಿರ್ಧಾರದಿಂದ ನಾರಿಮನ್ ಅವರು ಸಂತೋಷವಾಗಿರಲಿಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ತೆಗೆದುಕೊಂಡ ತುರ್ತು ನಿರ್ಧಾರವನ್ನು ವಿರೋಧಿಸಿ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. +ನಾರಿಮನ್ ಅವರು 1991 ರಿಂದ 2010 ರವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು. 1989 ರಿಂದ 2005 ರವರೆಗೆ ಇಂಟರ್‍ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್ ಪ್ಯಾರಿಸ್‍ನ ಇಂಟರ್‍ನ್ಯಾಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್‍ನ ಉಪಾಧ್ಯಕ್ಷರಾಗಿದ್ದರು ಮತ್ತು ಇಂಟರ್‍ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್‍ನ ಅಧ್ಯಕ್ಷರಾಗಿದ್ದರು. 1995 ರಿಂದ 1997 ರವರೆಗೆ ಜಿನೀವಾದಲ್ಲಿ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿದ್ದರು. +ಕಂಬನಿ: ನಾರಿಮನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. \ No newline at end of file diff --git a/eesanje/url_47_158_7.txt b/eesanje/url_47_158_7.txt new file mode 100644 index 0000000000000000000000000000000000000000..04a0949dcadd9792f05b49163ddb5b0822f516c0 --- /dev/null +++ b/eesanje/url_47_158_7.txt @@ -0,0 +1,6 @@ +ಇಬ್ಬರು ಬಿಜೆಡಿ ನಾಯಕರು ಬಿಜೆಪಿ ಕೇಂದ್ರ ಸಚಿವ ಅವಿರೋಧವಾಗಿ ರಾಜ್ಯ ಸಭೆಗೆ ಆಯ್ಕೆ +ಭುವನೇಶ್ವರ, ಫೆ- 20: ಬಿಜೆಪಿಯಿಂದ ಕಣಕ್ಕಿಳಿದಿದ್ದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬಿಜೆಡಿಯ ದೇಬಾಶಿಶ್ ಸಾಮಂತ್ರಾಯ್ ಮತ್ತು ಸುಭಾಶಿಶ್ ಖುಂಟಿಯಾ ಅವರು ಒಡಿಶಾದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವ ಗಡುವು ಇಂದು ಮಧ್ಯಾಹ್ನ ಮುಗಿದ ನಂತರ ಚುನಾವಣಾಧಿಕಾರಿ ರಾಜೇಶ್ ಅಬನಿಕಾಂತ ಪಟ್ನಾಯಕ್ ಅವರು ಚುನಾಯಿತರ ಹೆಸರನ್ನು ಪ್ರಕಟಿಸಿದರು. +ಬಿಜೆಪಿ ಅಭ್ಯರ್ಥಿ ಮತ್ತು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ರಾಜ್ಯದ ಆಡಳಿತಾರೂಢ ಬಿಜೆಡಿ ಬೆಂಬಲದೊಂದಿಗೆ ರಾಜ್ಯಸಭೆಗೆ ಮರು ಆಯ್ಕೆಯಾಗಿದ್ದಾರೆ. ಕಳೆದ ಫೆಬ್ರವರಿ 15 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯ ಕೊನೆಯ ದಿನದಂದು ವೈಷ್ಣವ್ ಅವರು ತಮ್ಮ ನಾಮ ಪತ್ರವನ್ನು ಸಲ್ಲಿಸಿದ್ದರೆ, ಫೆಬ್ರವರಿ 13 ರಂದು ಇಬ್ಬರು ಬಿಜೆಡಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. +ಈ ವರ್ಷದ ಏಪ್ರಿಲ್‍ನಲ್ಲಿ ಖಾಲಿಯಾಗುವ ಎಲ್ಲಾ ಮೂರು ರಾಜ್ಯಸಭೆ ಸ್ಥಾನಗಳನ್ನು ಗೆಲ್ಲಲು ಒಡಿಶಾ ವಿಧಾನಸಭೆಯಲ್ಲಿ ಬಿಜೆಡಿ ಅಗತ್ಯವಿರುವ ಸಂಖ್ಯೆಯನ್ನು ಹೊಂದಿದ್ದರೂ, ಆಡಳಿತ ಪಕ್ಷವು ಬಿಜೆಪಿಯ ವೈಷ್ಣವ್‍ಗೆ ಒಂದು ಸ್ಥಾನವನ್ನು ಬಿಟ್ಟು ಇಬ್ಬರು ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಲು ಆದ್ಯತೆ ನೀಡಿತ್ತು.ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ವೈಷ್ಣವ್ ಅವರಿಗೆ ರಾಜ್ಯದ ರೈಲ್ವೆ ಮತ್ತು ಟೆಲಿಕಾಂ ಅಭಿವೃದ್ಧಿಯ ದೊಡ್ಡ ಹಿತಾಸಕ್ತಿಗಾಗಿ ತನ್ನ ಬೆಂಬಲವನ್ನು ಘೋಷಿಸಿತ್ತು. 2019 ರಲ್ಲಿ, ವೈಷ್ಣವ್ ಅವರು ಮೊದಲ ಬಾರಿಗೆ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದಾಗ ಪಟ್ನಾಯಕ್ ಅವರನ್ನು ಬೆಂಬಲಿಸಿದ್ದರು. +ದುಬಾರಿ ಬೆಲೆಗೆ ನೀರು ಮಾರಿದರೆ ಟ್ಯಾಂಕರ್ ಪರವಾನಗಿ ರದ್ದು +ಜೂನ್ 2019 ರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾ ಮುಖ್ಯಮಂತ್ರಿ ಪಟ್ನಾಯಕ್ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ ನಂತರ ಒಡಿಶಾ ಕೇಡರ್ ಮಾಜಿ ಐಎಎಸ್ ಅಧಿಕಾರಿ ವೈಷ್ಣವ್ ಅವರಿಗೆ ಬೆಂಬಲ ನೀಡುವುದಾಗಿ ಬಿಜೆಡಿ ಘೋಷಿಸಿತ್ತು. ಖಾಲಿ ಇರುವ ಮೂರು ಸ್ಥಾನಗಳಿಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆಯ ಅಗತ್ಯವಿಲ್ಲ ಎಂದು ಚುನಾವಣಾ„ಕಾರಿ ತಿಳಿಸಿದ್ದರು ಪ್ರಸ್ತುತ ಮೂವರು ಸದಸ್ಯರಾದ ವೈಷ್ಣವ್, ಬಿಜೆಡಿಯ ಪ್ರಶಾಂತ್ ನಂದಾ ಮತ್ತು ಅಮರ್ ಪಟ್ನಾಯಕ್ ಅವರ ಅ„ಕಾರಾವ„ ಈ ವರ್ಷದ ಏಪ್ರಿಲ್‍ನಲ್ಲಿ ಕೊನೆಗೊಳ್ಳಲಿದೆ. ಖಾಲಿ ಇರುವ ಮೂರು ಸ್ಥಾನಗಳಿಗೆ ಚುನಾವಣೆ ಪ್ರಕ್ರಿಯೆ ನಡೆದಿತ್ತು. \ No newline at end of file diff --git a/eesanje/url_47_158_8.txt b/eesanje/url_47_158_8.txt new file mode 100644 index 0000000000000000000000000000000000000000..732f93d6ed2be67d483e3424cba318ecdebbfef0 --- /dev/null +++ b/eesanje/url_47_158_8.txt @@ -0,0 +1,5 @@ +ಸರ್ವೀಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಇನ್ಸ್‌ಪೆಕ್ಟರ್‌ ಆತ್ಮಹತ್ಯೆ +ನಾಸಿಕ್, ಫೆ- 20-ಮಹಾರಾಷ್ಟ್ರದ ನಾಸಿಕ್ ನಗರದ ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ರೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. +ಇನ್ಸ್‍ಪೆಕ್ಟರ್ ಅಶೋಕ್ ನಜನ್ ಅವರು ಬೆಳಿಗ್ಗೆ ಅಂಬಾಡ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಕ್ಯಾಬಿನ್‍ಗೆ ತೆರಳಿದ ಸ್ವಲ್ಪ ಸಮಯದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. +ಶಿಕ್ಷಕಿಯಿಂದ ಶ್ರೀರಾಮನಿಗೆ ಅಪಮಾನ ಪ್ರಕರಣ : ವಿದೇಶಗಳಿಂದ ಪೋಷಕರಿಗೆ ಬೆದರಿಕೆ ಕರೆ +ಗುಂಡಿನ ಸದ್ದು ಕೇಳಿದ ಠಾಣೆಯ ಸಿಬ್ಬಂದಿ ಒಳಗೆ ಹೋಗಿ ನೋಡಿದ್ದಾಗ ಕುರ್ಚಿಯ ಮೇಲೆ ಅಶೋಕ್ ನಜನ್ ನಿರ್ಜೀವನಾಗಿದ್ದರು ನಂತರ ದೇಹವನ್ನು ಜಿಲ್ಲೆ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ಅವರು ಹೇಳಿದರು.ಘಟನೆಯ ನಂತರ ಪೊಲೀಸ್ ಕಮಿಷನರ್ ಸಂದೀಪ್ ಕಾರ್ಣಿಕ್ ಮತ್ತು ಇತರ ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_158_9.txt b/eesanje/url_47_158_9.txt new file mode 100644 index 0000000000000000000000000000000000000000..d5b442f33d17f48b2f1295bb928043c430e92238 --- /dev/null +++ b/eesanje/url_47_158_9.txt @@ -0,0 +1,5 @@ +4 ಮಕ್ಕಳ ಸಾವು : ಕುಟುಂಬ ಸದಸ್ಯರನ್ನು ಭೇಟಿ ಮಾಡಿ ರಾಜ್ಯಪಾಲರ ಸಂತಾಪ +ಕೋಲ್ಕತ್ತಾ, ಫೆ- 20 ಮಂಗಳವಾರ ಭಾರತ-ಬಂಗ್ಲಾದೇಶದ ಗಡಿ ಉತ್ತರ ದಿನಾಜ್‍ಪುರ ಜಿಲ್ಲೆಯ ಚೋಪ್ರಾದ ಚೇತನಾಗಚ್ ಗ್ರಾಮದಲ್ಲಿ ಬಳಿ ಒಳಚರಂಡಿ ವಿಸ್ತರಣೆ ಕಾಮಗಾರಿ ಸಂದರ್ಭದಲ್ಲಿ ಮಣ್ಣಿನ ಗುಡ್ಡೆ ಕುಸಿದು ನಾಲ್ವರು ಮಕ್ಕಳು ಸಾವನ್ನಪ್ಪಿದ್ದು ಇಂದು ಸ್ಥಳಕ್ಕೆ ಬೇಟಿ ನೀಡಿದ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ಭೇಡಿ ನೀಡಿ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. +ಕಳೆದ ರಾತ್ರಿ ಕೋಲ್ಕತಾದಿಂದ ಕಿಶನ್‍ಗಂಜ್‍ಗೆ ರೈಲಿನಲ್ಲಿ ಪ್ರಯಾಣಿಸಿ ನಂತರ ಅವರು ರಸ್ತೆ ಮೂಲಕ ಚೋಪ್ರಾಗೆ ತಲುಪಿದ್ದಾರೆ.ಕಳೆದ ಫೆಬ್ರವರಿ 12 ರಂದು, ಚೋಪ್ರಾ ಬ್ಲಾಕ್‍ನ ಚೇತನಾಗಚ್ ಗ್ರಾಮದಲ್ಲಿ ಭೂಮಿ ಅಗೆಯುವ ಯಂತ್ರವು ಕಂದಕವನ್ನು ಅಗೆಯುತ್ತಿದ್ದಾಗ ಮಣ್ಣಿನ ಗುಡ್ಡೆ ಬಿದ್ದ ಸಮೀಪದಲ್ಲಿದ್ದ ಐದು ಮತ್ತು 12 ವರ್ಷದೊಳಗಿನ ನಾಲ್ಕು ಮಕ್ಕಳು ಜೀವಂತ ಸಮಾ„ಯಾದರು. ನಿರ್ಮಾಣ ಕಾರ್ಯವನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ನಡೆಸುತ್ತಿತ್ತು. +ನಡುರಸ್ತೆಯಲ್ಲೇ ಪತ್ನಿ ಮೇಲೆ ಮಚ್ಚು ಬೀಸಿದ ಪತಿ +ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಲ್ವರು ಅಪ್ರಾಪ್ತರ ಸಾವಿಗೆ ಬಿಎಸ್‍ಎಫೆ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿದ್ದಾರೆ ಈಗ ಅದು ರಾಜಕೀಯ ತಿರುವು ಪಡೆದುಕೊಂಡಿತು. ಟಿಎಂಸಿ ನಾಯಕರ ತಂಡ ರಾಜಭವನದಲ್ಲಿ ಬೋಸ್ ಅವರನ್ನು ಭೇಟಿ ಮಾಡಿ ಅಪಘಾತದ ತನಿಖೆಗೆ ಒತ್ತಾಯಿಸಿದ್ದರು ಆದರೆ ಅವರೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. diff --git a/eesanje/url_47_159_1.txt b/eesanje/url_47_159_1.txt new file mode 100644 index 0000000000000000000000000000000000000000..9c62537abdc804fddc8da9114440eb11aef87919 --- /dev/null +++ b/eesanje/url_47_159_1.txt @@ -0,0 +1,6 @@ +ಬಿಜೆಪಿ ಈ ಬಾರಿ 100 ಸ್ಥಾನ ಕೂಡ ಗೆಲ್ಲಲ್ಲ : ಖರ್ಗೆ ಭವಿಷ್ಯ +ಅಮೇಥಿ,ಫೆ.20- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಪಡೆದುಕೊಳ್ಳುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಸಾಗುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಮೇಥಿ ಮತ್ತು ರಾಯಬರೇಲಿ ಅಭಿವೃದ್ಧಿಯನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ. +ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಅಮೇಥಿಯಲ್ಲಿ ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು ಆದರೆ ಅವುಗಳಲ್ಲಿ ಹೆಚ್ಚಿನವು ಬಾಕಿ ಉಳಿದಿವೆ. ಯೋಜನೆಗಳು ಇನ್ನೂ ಏಕೆ ಅಪೂರ್ಣವಾಗಿವೆ ಎಂದು ನಾನು ಅವರನ್ನು ಕೇಳಲು ಬಯಸುತ್ತೇನೆ. ಅವರು ಅಮೇಥಿ ಮತ್ತು ರಾಯಬರೇಲಿಯಲ್ಲಿ ಕೆಲಸ ಮಾಡಲು ಬಯಸುವುದಿಲ್ಲ ಎಂದಿದ್ದಾರೆ. ರಾಯಬರೇಲಿ ಮತ್ತು ಅಮೇಠಿ ಜನರೊಂದಿಗೆ ದ್ವೇಷವನ್ನು ಬಿತ್ತಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. +ಪ್ರಧಾನಿ ನರೇಂದ್ರ ಮೋದಿಯವರ ಅಬ್ಕಿ ಬಾರ್ 400 ಸ್ಥಾನ ಘೋಷಣೆಯನ್ನು ಟೀಕಿಸಿದ ಅವರು, ಮುಂಬರುವ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಮೀರುವುದಿಲ್ಲ ಎಂದು ಭವಿಷ್ಯ ನುಡಿದರು. 400ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವುದಾಗಿ ಬಿಜೆಪಿ ಹೇಳಿಕೊಂಡರೂ 100 ಸೀಟುಗಳನ್ನು ದಾಟಲು ಸಾಧ್ಯವಿಲ್ಲ. ಅಬ್ಕಿ ಬಾರ್, ಸತ್ತಾ ಸೆ ಬಹರ್ (ಈ ಬಾರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಗುವುದು) ಎಂದು ಖರ್ಗೆ ಹೇಳಿದರು. +ಮೋದಿಜಿ (ಪಿಎಂ ನರೇಂದ್ರ ಮೋದಿ) ಇಲ್ಲಿಗೆ ಬಂದು ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸುತ್ತಾರೆ, ಈಗ ನೀವೇನು ಮಾಡುತ್ತಿದ್ದೀರಿ ಎಂದು ಹೇಳಿ. ಇದಕ್ಕೆ ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು. ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಯ್ ಬರೇಲಿಯಿಂದ ಪ್ರಸ್ತುತ ಲೋಕಸಭಾ ಸಂಸದೆ, ರಾಜಸ್ಥಾನದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ ಸೋನಿಯಾ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ರಾಯ್ ಬರೇಲಿಯಿಂದ ಗೆದ್ದರು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 1,65,000 ಮತಗಳಿಂದ ಸೋಲಿಸಿದ್ದರು. +2004 ಮತ್ತು 2019 ರ ನಡುವೆ ಅಮೇಥಿಯನ್ನು ರಾಹುಲ್ ಗಾಂಧಿ ಪ್ರತಿನಿಧಿಸಿದ್ದರೂ, ಅವರು 2019 ರಲ್ಲಿ ಬಿಜೆಪಿಯ ಸ್ಮತಿ ಇರಾನಿ ವಿರುದ್ಧ ಸುಮಾರು 55,000 ಮತಗಳಿಂದ ಸೋತರು. \ No newline at end of file diff --git a/eesanje/url_47_159_10.txt b/eesanje/url_47_159_10.txt new file mode 100644 index 0000000000000000000000000000000000000000..3cd091e82f457620d970b7b8318a6740fcbdbae5 --- /dev/null +++ b/eesanje/url_47_159_10.txt @@ -0,0 +1,5 @@ +ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರವೆಸಗಿದ್ದವನ ವಿರುದ್ಧ ಎಫ್‍ಐಆರ್ +ಥಾಣೆ, ಫೆ.19 (ಪಿಟಿಐ) ಮಹಿಳೆಯೊಬ್ಬರನ್ನು ಬ್ಲಾಕ್‍ಮೇಲ್ ಮಾಡಿ ಕಳೆದ ಎರಡು ವರ್ಷಗಳಿಂದ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 25 ವರ್ಷದ ನವಿ ಮುಂಬೈ ನಿವಾಸಿಯೊಬ್ಬರನ್ನು ಬ್ಲಾಕ್‍ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ದ್ವಿಶತಕ ಸಿಡಿಸಿದ ಜೈಸ್ವಾಲ್, ಇಂಗ್ಲೆಂಡ್‌ಗೆ 556 ಗುರಿ +ಮಹಿಳೆ ಬೃಹನ್‍ಮುಂಬೈ ಮುನ್ಸಿಪಲ್ ಕಾಪೆರ್ರೇಷನ್‍ನಲ್ಲಿ ಕೆಲಸ ಮಾಡುತ್ತಿದ್ದರೆ, ಪುರುಷ ಅಹ್ಮದ್‍ನಗರದ ನಿವಾಸಿ ಎಂದು ಕಾಮೋಟೆ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಪುರುಷ ಮತ್ತು ಮಹಿಳೆ ಸ್ನೇಹ ಬೆಳೆಸಿದರು, ನಂತರ ಅವರು ಅಕ್ಟೋಬರ್ 2022 ಮತ್ತು ಈ ವರ್ಷದ ಜನವರಿ ನಡುವೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದರು. +ಅವನು ಅವಳನ್ನು ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಅವಳನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ನಾವು ಶನಿವಾರ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದೇವೆ ಆದರೆ ಇನ್ನೂ ಆರೋಪಿಯನ್ನು ಬಂಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_159_11.txt b/eesanje/url_47_159_11.txt new file mode 100644 index 0000000000000000000000000000000000000000..4f7188ff0a6097d23f4f6b925db5e245a75eff76 --- /dev/null +++ b/eesanje/url_47_159_11.txt @@ -0,0 +1,6 @@ +ಜೈನ ಧರ್ಮಗುರು ಆಚಾರ್ಯ ವಿದ್ಯಾಸಾಗರ ಪ್ರಾಣತ್ಯಾಗ +ರಾಜನಂದಗಾಂವ್, ಫೆ. 18 – (ಪಿಟಿಐ)-ಖ್ಯಾತ ಜೈನ ಧರ್ಮದರ್ಶಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಅವರು ಛತ್ತೀಸ್ಗಢದ ರಾಜನಂದಗಾಂವ್ ಜಿಲ್ಲೆಯ ಡೊಂಗರ್ಗಢ್ನಲ್ಲಿರುವ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನವನ್ನು ಕೈಗೊಂಡ ನಂತರ ಇಂದು ಕೊನೆಯು ಸಿರೆಳೆದರು. ಸಲ್ಲೇಖನಾ ಎಂಬುದು ಜೈನ ಧಾರ್ಮಿಕ ಆಚರಣೆಯಾಗಿದ್ದು, ಆಧ್ಯಾತ್ಮಿಕ ಶುದ್ಧೀಕರಣಕ್ಕಾಗಿ ಸ್ವಯಂಪ್ರೇರಿತ ಉಪವಾಸವನ್ನು ಒಳಗೊಂಡಿರುತ್ತದೆ ಎಂದು ತೀರ್ಥರ ಹೇಳಿಕೆ ತಿಳಿಸಿದೆ. +ಆಚಾರ್ಯ ವಿದ್ಯಾಸಾಗರ ಮಹಾರಾಜರು ಬೆಳಗಿನ ಜಾವ 2.35ಗಂಟೆಗೆ ಚಂದ್ರಗಿರಿ ತೀರ್ಥದಲ್ಲಿ ಸಲ್ಲೇಖನ ಮೂಲಕ ಸಮಾ ಪಡೆದರು ಎಂದು ಪ್ರಕಟಣೆ ಹೇಳಿದೆ.ಮಹಾರಾಜರು ಕಳೆದ ಆರು ತಿಂಗಳಿಂದ ಡೊಂಗರಗಢದಲ್ಲಿನ ತೀರ್ಥದಲ್ಲಿ ತಂಗಿದ್ದರು ಮತ್ತು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು. ಕಳೆದ ಮೂರು ದಿನಗಳಿಂದ ಅವರು ಸ್ವಯಂಪ್ರೇರಣೆಯಿಂದ ಉಪವಾಸ ಮಾಡುವ ಧಾರ್ಮಿಕ ಆಚರಣೆಯಾದ ಸಲ್ಲೇಖನವನ್ನು ಕೈಗೊಂಡು ಆಹಾರ ಸೇವನೆಯನ್ನು ತ್ಯಜಿಸಿದ್ದರು. ಜೈನ ಧರ್ಮದ ಪ್ರಕಾರ, ಇದು ಆಧ್ಯಾತ್ಮಿಕ ಶುದ್ಧೀಕರಣಕ್ಕಾಗಿ ತೆಗೆದುಕೊಳ್ಳಲಾದ ಪ್ರತಿಜ್ಞಾಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. +आचार्य श्री 108 विद्यासागर जी महाराज जी का ब्रह्मलीन होना देश के लिए एक अपूरणीय क्षति है। लोगों में आध्यात्मिक जागृति के लिए उनके बहुमूल्य प्रयास सदैव स्मरण किए जाएंगे। वे जीवनपर्यंत गरीबी उन्मूलन के साथ-साथ समाज में स्वास्थ्य और शिक्षा को बढ़ावा देने में जुटे रहे। यह मेरा…../ +ಅಗಲಿದ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಲು ಭಾನುವಾರ ಮಧ್ಯಾಹ್ನ ಒಂದು ಗಂಟೆಗೆ ಮೆರವಣಿಗೆ ನಡೆಸಲಾಗುವುದು ಮತ್ತು ಚಂದ್ರಗಿರಿ ತೀರ್ಥದಲ್ಲಿ ಅಂತಿಮ ವಿವಿಧಾನಗಳನ್ನು ನಡೆಸಲಾಗುವುದು.ಕಳೆದ ವರ್ಷ ಛತ್ತೀಸ್ಗಢ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ಯಾತ್ರಾ ಸ್ಥಳವಾದ ಡೊಂಗರ್ಗಢಕ್ಕೆ ಭೇಟಿ ನೀಡಿದ್ದರು ಮತ್ತು ನವೆಂಬರ್ 5 ರಂದು ಆಚಾರ್ಯ ವಿದ್ಯಾಸಾಗರ ಮಹಾರಾಜರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. +ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ತಮ್ಮ ಶೋಕ ಸಂದೇಶದಲ್ಲಿ, ತಮ್ಮ ಚಲನಶೀಲ ಜಾ್ಞನದಿಂದ ಛತ್ತೀಸ್ಗಢ ಸೇರಿದಂತೆ ದೇಶ ಮತ್ತು ಜಗತ್ತನ್ನು ಶ್ರೀಮಂತಗೊಳಿಸಿದ ಆಚಾರ್ಯ ಶ್ರೀ ವಿದ್ಯಾಸಾಗರ್ ಜಿ ಮಹಾರಾಜ್ ಅವರು ದೇಶ ಮತ್ತು ಸಮಾಜಕ್ಕಾಗಿ ಅವರು ಮಾಡಿದ ಅನುಕರಣೀಯ ಕೆಲಸಗಳು, ತ್ಯಾಗ ಮತ್ತು ತಪಸ್ಸು ಯುಗಯುಗಾಂತರಗಳವರೆಗೆ ನೆನಪಿನಲ್ಲಿ ಉಳಿಯುತ್ತಾರೆ. ನಾನು ಆಚಾರ್ಯ ಶ್ರೀ ವಿದ್ಯಾಸಾಗರ್ ಜಿಯವರ ಪಾದಗಳಿಗೆ ನಮಸ್ಕರಿಸುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_159_12.txt b/eesanje/url_47_159_12.txt new file mode 100644 index 0000000000000000000000000000000000000000..9f5e40828c9e3f8ee295f5bf20f676e6d123a06a --- /dev/null +++ b/eesanje/url_47_159_12.txt @@ -0,0 +1,7 @@ +ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಲಗೇಜ್ ಪಡೆಯಲು 30 ನಿಮಿಷ ಅವಕಾಶ +ನವದೆಹಲಿ, ಫೆ 18 (ಪಿಟಿಐ)-ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ 30 ನಿಮಿಷಗಳಲ್ಲಿ ಪ್ರಯಾಣಿಕರ ಎಲ್ಲಾ ಬ್ಯಾಗೇಜ್ಗಳನ್ನು ತಲುಪಿಸುವಂತೆ ನಿಯಂತ್ರಕ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. +ವಿಮಾನ ಇಳಿದ ನಂತರ ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಪಡೆಯುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ನಿಂದ ಏಳು ನಿಗದಿತ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.ಫೆಬ್ರವರಿ 26 ರೊಳಗೆ ಲಗೇಜ್ಗಳನ್ನು ಸಮಯೋಚಿತವಾಗಿ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳನ್ನು ಕೇಳಿದೆ ಎಂದು ಅಕೃತ ಹೇಳಿಕೆ ತಿಳಿಸಿದೆ. +ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ಸ್ಪೈಸ್ ಜೆಟ್, ವಿಸ್ತಾರಾ, ಎಐಎಕ್ಸ್ ಕನೆಕ್ಟ್ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ ಎಂಬ ಏಳು ಏರ್ಲೈನ್ಗಳಿಗೆ ನಿರ್ದೇಶನವನ್ನು ನೀಡಲಾಗಿದೆ.ಕಾರ್ಯಾಚರಣೆ, ನಿರ್ವಹಣೆ ಮತ್ತು ವಿತರಣಾ ಒಪ್ಪಂದದ ಸೇವಾ ಗುಣಮಟ್ಟ ಅಗತ್ಯತೆಗಳ ಪ್ರಕಾರ ಕೊನೆಯ ಸಾಮಾನುಗಳ ವಿತರಣೆಯನ್ನು 30 ನಿಮಿಷಗಳಲ್ಲಿ ಮಾಡಲಾಗುತ್ತದೆ ಎಂದು ಏರ್ಲೈನ್ಗಳು ಖಚಿತಪಡಿಸಿಕೊಳ್ಳಬೇಕು. +ನಾಳೆಯಿಂದ ವಿಧಾನಮಂಡಲದಲ್ಲಿ ಬಜೆಟ್ ಫೈಟ್ +ಕಳೆದ ಜನವರಿಯಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಯಾ ಅವರ ಸೂಚನೆ ಅಡಿಯಲ್ಲಿ ಆರು ಪ್ರಮುಖ ವಿಮಾನ ನಿಲ್ದಾಣಗಳ ಬೆಲ್ಟ್ಗಳಲ್ಲಿ ಬ್ಯಾಗೇಜ್ ಆಗಮನವನ್ನು ಮೇಲ್ವಿಚಾರಣೆ ಮಾಡುತ್ತಿದೆ.ಎಲ್ಲಾ ವಿಮಾನಯಾನ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಾರಕ್ಕೊಮ್ಮೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. +ಸಾಕಷ್ಟು ಸುಧಾರಿಸಿದ್ದರೂ ಆದೇಶಗಳ ಪ್ರಕಾರ ಅಲ್ಲ. ವಿಮಾನದ ಇಂಜಿನ್ ಅನ್ನು ಸ್ಥಗಿತಗೊಳಿಸಿದ 10 ನಿಮಿಷಗಳಲ್ಲಿ ಮೊದಲ ಬ್ಯಾಗೇಜ್, ಬ್ಯಾಗೇಜ್ ಬೆಲ್ಟ್ಗೆ ತಲುಪಲು ಮತ್ತು ಅದೇ 30 ನಿಮಿಷಗಳಲ್ಲಿ ಕೊನೆಯ ಬ್ಯಾಗ್ ಅನ್ನು ಕಡ್ಡಾಯವಾಗಿ ಪಡೆಯ ಬೇಕು ಎಂದು ಹೇಳಿಕೆತಿಳಿಸಿದೆ. \ No newline at end of file diff --git a/eesanje/url_47_159_2.txt b/eesanje/url_47_159_2.txt new file mode 100644 index 0000000000000000000000000000000000000000..35842d530312abf6567ae28a33603122cef6f777 --- /dev/null +++ b/eesanje/url_47_159_2.txt @@ -0,0 +1,5 @@ +ಎಐಎಂಐಎಂ ಪಕ್ಷದ ವಾರಿಸ್ ಪಠಾಣ್ ಬಂಧನ +ಮುಂಬೈ,ಫೆ.20- ಜನವರಿಯಲ್ಲಿ ಕೋಮು ಘರ್ಷಣೆ ನಡೆದ ಮೀರಾ ರೋಡ್‍ಗೆ ಭೇಟಿ ನೀಡಿದ್ದ ಮಾಜಿ ಶಾಸಕ ಮತ್ತು ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಾರಿಸ್ ಪಠಾಣ್ ಅವರು ಮೀರಾ ರೋಡ್‍ಗೆ ತೆರಳುತ್ತಿದ್ದಾಗ ದಹಿಸರ್ ಚೆಕ್‍ಪಾಯಿಂಟ್‍ನಲ್ಲಿ ಪೊಲೀಸರು ಬಂಧಿಸಿದ್ದಾರೆ. +ಫೆ.19ರಂದು ಮೀರಾ ರಸ್ತೆಗೆ ಹೋಗುವುದಾಗಿ ಪೊಲೀಸರಿಗೆ ತಿಳಿಸಿದ್ದರೂ ಅನುಮತಿ ನೀಡಿಲ್ಲ, ಅಲ್ಲಿಗೆ ಹೋಗಲು ಬಿಡುತ್ತಿಲ್ಲ ಎಂದು ಆರೋಪಿಸಿ ಎಐಎಂಐಎಂ ಕಾರ್ಯಕರ್ತರ ಘೋಷಣೆಗಳನ್ನು ಕೂಗಿದರು ಅವರನ್ನು ಬಂಧಿಸಲಾಗಿದೆ. ದ್ವೇಷದ ಭಾಷಣಗಳನ್ನು ನೀಡುವ ಜನರ ವಿರುದ್ಧ ಪೊಲೀಸ್ ಆಯುಕ್ತರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ತೆರಳುತ್ತಿದ್ದಾಗ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ವಾರಿಸ್ ಪಠಾಣ್ ಎಕ್ಸ್ ಪೋಸ್ಟ್‍ನಲ್ಲಿ ಹೇಳಿದ್ದಾರೆ. +49 ಹೊಸ ತಾಲ್ಲೂಕುಗಳಿಗೆ 2-3 ವರ್ಷಗಳಲ್ಲಿ ಆಡಳಿತ ಕಚೇರಿ ನಿರ್ಮಾಣ +ಇನ್ನೊಂದು ಪೋಸ್ಟ್‍ನಲ್ಲಿ ಅವರು ಹೀಗೆ ಬರೆದಿದ್ದಾರೆ: ದ್ವೇಷದ ಭಾಷಣಗಳನ್ನು ನೀಡುವ ಮತ್ತು ಕೋಮುಗಲಭೆಗಳನ್ನು ಸೃಷ್ಟಿಸುವ ಜನರ ವಿರುದ್ಧ ಜ್ಞಾಪಕ ಪತ್ರವನ್ನು ಸಲ್ಲಿಸಲು ನಾನು ಪೊಲೀಸ್ ಆಯುಕ್ತರನ್ನು ಭೇಟಿಯಾಗಬೇಕಾಗಿತ್ತು. ಆದರೆ ನನ್ನನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ ಎಐಎಂಐಎಂ ನಾಯಕ, ತನ್ನ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದಾರೆ. ನನ್ನನ್ನು ಎಲ್ಲಿಗೆ ಕರೆದೊಯ್ಯಲಾಗುತ್ತಿದೆ ಎಂದು ನನಗೆ ತಿಳಿದಿರಲಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_159_3.txt b/eesanje/url_47_159_3.txt new file mode 100644 index 0000000000000000000000000000000000000000..4ac9d23293455d08c547f3b0c5d6a69adc43c964 --- /dev/null +++ b/eesanje/url_47_159_3.txt @@ -0,0 +1,6 @@ +ರಾಜಕೀಯ ಮಾತುಕತೆ ಆರಂಭಿಸಿದ ಪವನ್‍ಕಲ್ಯಾಣ್ +ವಿಶಾಖಪಟ್ಟಣಂ,ಫೆ.19- ಜನಸೇನಾ ಪಕ್ಷದ (ಜೆಎಸ್‍ಪಿ) ಅಧ್ಯಕ್ಷ ಪವನ್ ಕಲ್ಯಾಣ್ ಅವರು ವಿಶಾಖಪಟ್ಟಣದಲ್ಲಿ ಮಾಜಿ ಸಚಿವ ಮತ್ತು ಸಂಸದ ಕೊಣತಲ ರಾಮಕೃಷ್ಣ ಅವರೊಂದಿಗೆ ಸಭೆ ನಡೆಸಿದರು ಮತ್ತು ಉತ್ತರಾಂಧ್ರದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು. ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕೊಣತ್ತಲ ರಾಮಕೃಷ್ಣ ಅವರೊಂದಿಗಿನ ಸಭೆಯ ನಂತರ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಮಾತನಾಡಿ, ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಉತ್ತರಾಂಧ್ರದ ಬೆಳವಣಿಗೆಯ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದ್ದಾರೆ. +ಪವನ್ ಕಲ್ಯಾಣ್ ಹಾಗೂ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಕೊಣತಾಳ ರಾಮಕೃಷ್ಣ ಅವರ ನಡುವೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಯಿತು. ಪಂಚಾಯತ್ ಮಟ್ಟದಿಂದ ದೆಹಲಿ ಸಭೆಯವರೆಗೂ ಮಧ್ಯಸ್ಥಗಾರರಿಗೆ ಉತ್ತಮ ತಿಳುವಳಿಕೆ ನೀಡಬೇಕು ಎಂದು ಕೊಣತ್ತಲ ರಾಮಕೃಷ್ಣ ಅಭಿಪ್ರಾಯಪಟ್ಟರು. +ಅವರು ಉತ್ತರ ಆಂಧ್ರವನ್ನು ದತ್ತು ತೆಗೆದುಕೊಳ್ಳುವಂತೆ ಪವನ್ ಕಲ್ಯಾಣ್‍ಗೆ ಸೂಚಿಸಿದರು ಮತ್ತು ಪವನ್ ಎಲ್ಲಿ ಸ್ರ್ಪಧಿಸಲು ಪರಿಗಣಿಸಬೇಕು ಎಂಬುದರ ಕುರಿತು ಇನ್ಪುಟ್ ಅನ್ನು ಒದಗಿಸಿದರು, ಸೂಕ್ತ ಸಮಯದಲ್ಲಿ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅವರು ಹೇಳಿದರು. +ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸಮ್ಮತಿ +ಇದಕ್ಕೂ ಮೊದಲು ಫೆಬ್ರವರಿ 5 ರಂದು ಪವನ್ ಕಲ್ಯಾಣ್ ಅವರು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಅಮರಾವತಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ್ದರು. \ No newline at end of file diff --git a/eesanje/url_47_159_4.txt b/eesanje/url_47_159_4.txt new file mode 100644 index 0000000000000000000000000000000000000000..2381b3427c4001feb403ae97f15f9e0e100cb53d --- /dev/null +++ b/eesanje/url_47_159_4.txt @@ -0,0 +1,6 @@ +ಅತ್ಯಾಚಾರ ಸಂತ್ರಸ್ಥೆಗೆ ಲೈಂಗಿಕ ಕಿರುಕುಳ ನೀಡಿದ ಮ್ಯಾಜಿಸ್ಟ್ರೇಟ್ +ಅಗರ್ತಲಾ,ಫೆ.19- ಅತ್ಯಾಚಾರ ಸಂತ್ರಸ್ತೆಯೊಬ್ಬರು ತ್ರಿಪುರಾದ ನ್ಯಾಯಾಲಯದಲ್ಲಿ ಮ್ಯಾಜಿಸ್ಟ್ರೇಟ್ ತನ್ನ ಚೇಂಬರ್‍ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಧಲೈ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾೀಧಿಶ ಗೌತಮ್ ಸರ್ಕಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯು ಆರೋಪದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ ಎಂದು ಹಿರಿಯ ವಕೀಲರು ತಿಳಿಸಿದ್ದಾರೆ. +ಫೆಬ್ರವರಿ 16 ರಂದು ತನ್ನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕಮಲಾಪುರದ ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ಕೋಣೆಗೆ ಹೋದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. ಹೆಚ್ಚುವರಿ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾಧೀಶ ಕಮಲಾಪುರಕ್ಕೆ ನೀಡಿದ ದೂರಿನಲ್ಲಿ ಮಹಿಳೆ, ಫೆಬ್ರವರಿ 16 ರಂದು ನನ್ನ ಹೇಳಿಕೆಯನ್ನು ದಾಖಲಿಸಲು ನಾನು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ಕೊಠಡಿಗೆ ಹೋಗಿದ್ದೆ. ನಾನು ನನ್ನ ಹೇಳಿಕೆಯನ್ನು ನೀಡಲು ಮುಂದಾದಾಗ, ನ್ಯಾಯಾೀಧಿಶರು ತಬ್ಬಿಕೊಂಡರು. ನಾನು ಅವರ ಕೊಠಡಿಯಿಂದ ಹೊರಗೆ ಧಾವಿಸಿ ವಕೀಲರು ಮತ್ತು ನನ್ನ ಪತಿಗೆ ಘಟನೆಯ ಬಗ್ಗೆ ತಿಳಿಸಿದೆ. ಘಟನೆ ಕುರಿತು ಮಹಿಳೆಯ ಪತಿ ಕಮಲಾಪುರ ಬಾರ್ ಅಸೋಸಿಯೇಷನ್‍ಗೆ ಪ್ರತ್ಯೇಕ ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ. +ಪಪುವಾ ನ್ಯೂಗಿನಿಯಲ್ಲಿ ಮಾರಣಹೋಮ, 53 ಮಂದಿಯ ಹತ್ಯೆ +ಈ ದೂರಿನ ಮೇರೆಗೆ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾೀಶ ಗೌತಮ್ ಸರ್ಕಾರ್ ಅವರು ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಸತ್ಯಜಿತ್ ದಾಸ್ ಅವರೊಂದಿಗೆ ಕಮಲಾಪುರದ ಹೆಚ್ಚುವರಿ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾೀಧಿಶರ ಕಚೇರಿಗೆ ಭೇಟಿ ನೀಡಿ ತನಿಖೆ ನಡೆಸಿದರು. ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾೀಧಿಶರ ನೇತೃತ್ವದ ತ್ರಿಸದಸ್ಯ ಸಮಿತಿಯು ನ್ಯಾಯಾಲಯದ ಆವರಣದಲ್ಲಿ ಕಮಲಾಪುರ ವಕೀಲರ ಸಂಘದ ಸದಸ್ಯರನ್ನು ಭೇಟಿ ಮಾಡಿ ಮಹಿಳೆಯ ಆರೋಪಗಳ ಬಗ್ಗೆ ನಮ್ಮ ಅಭಿಪ್ರಾಯವನ್ನು ಕೇಳಿದೆವು. ನಾವು ನಮ್ಮ ಅಂಶಗಳನ್ನು ಸಮಿತಿಯ ಮುಂದೆ ಇರಿಸಿದ್ದೇವೆ ಎಂದು ಶಿಬೇಂದ್ರ ದಾಸ್‍ಗುಪ್ತ ಹೇಳಿದರು. ವಕೀಲರ ಸಂಸ್ಥೆಯ ಕಾರ್ಯದರ್ಶಿ ದೂರವಾಣಿಯಲ್ಲಿ ಪಿಟಿಐಗೆ ತಿಳಿಸಿದರು. +ತ್ರಿಪುರಾ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ನ್ಯಾಯಾೀಧಿಶರ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಿದ ವಿ ಪಾಂಡೆ, ಈ ವಿಷಯದ ಬಗ್ಗೆ ನಮಗೆ ಇನ್ನೂ ಯಾವುದೇ ಅಧಿಕೃತ ದೂರು ಬಂದಿಲ್ಲ, ರಾಜ್ಯದ ಇತರ ಜನರಂತೆ ನನಗೂ ಈ ಬಗ್ಗೆ ಮಾಧ್ಯಮಗಳಿಂದ ತಿಳಿದುಬಂದಿದೆ. ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ಗಳು. ಒಮ್ಮೆ ನಾವು ಸರಿಯಾದ ಸ್ವರೂಪದಲ್ಲಿ ದೂರನ್ನು ಸ್ವೀಕರಿಸಿದರೆ, ನಾವು ಖಂಡಿತವಾಗಿಯೂ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. \ No newline at end of file diff --git a/eesanje/url_47_159_5.txt b/eesanje/url_47_159_5.txt new file mode 100644 index 0000000000000000000000000000000000000000..15feda4d070664be83bea50f4acee71f36152296 --- /dev/null +++ b/eesanje/url_47_159_5.txt @@ -0,0 +1,8 @@ +ಇಡಿ ಮುಚ್ಚಿದರೆ ಬಿಜೆಪಿ ತೊರೆಯಲಿದ್ದಾರೆ ಘಟಾನುಘಟಿ ನಾಯಕರು : ಕೇಜ್ರಿ +ನವದೆಹಲಿ,ಫೆ.19-ಜಾರಿ ನಿರ್ದೇಶನಾಲಯ ಮುಚ್ಚಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 45 ಅನ್ನು ರದ್ದುಗೊಳಿಸಿದರೆ ಬಿಜೆಪಿಯ ಹಿರಿಯ ನಾಯಕರಾಗಿ ಶಿವರಾಜ್ ಚೌಹಾಣ್ ಹಾಗೂ ವಸುಂಧರಾ ರಾಜೇ ಅವರು ತಮ್ಮದೇ ಆದ ಹೊಸ ಪಕ್ಷಗಳನ್ನು ಸ್ಥಾಪಿಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. +ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಎಎಪಿ ನಾಯಕ ಈ ಹೇಳಿಕೆ ನೀಡಿದ್ದಾರೆ. ವರದಿಗಳ ಪ್ರಕಾರ, ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಅನುಪಾತದ ಬಗ್ಗೆ ಚರ್ಚಿಸಲು ನಾಯಕರು ಸಭೆ ನಡೆಸಿದರು. ಕೇಜ್ರಿವಾಲ್ ಅವರು ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಮುರ್ಮು ಸೊರೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ಬಂಧಿಸಿರುವ ಜೈಲಿನಲ್ಲಿರುವ ನಾಯಕನಿಗೆ ಅವರು ಬೆಂಬಲ ಘೋಷಿಸಿದ್ದಾರೆ. +ಪಪುವಾ ನ್ಯೂಗಿನಿಯಲ್ಲಿ ಮಾರಣಹೋಮ, 53 ಮಂದಿಯ ಹತ್ಯೆ +ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಕಲ್ಪನಾ ಅವರು ತಮ್ಮ ಬೆಂಬಲವನ್ನು ವಿಸ್ತರಿಸಿದ್ದಕ್ಕಾಗಿ ಕೇಜ್ರಿವಾಲ್ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಇಂದು ನಾನು ದೆಹಲಿಯ ಗೌರವಾನ್ವಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ. ಈ ಸಮಯದಲ್ಲಿ ಅವರು ಹೇಮಂತ್ ಜಿ ಮತ್ತು ಜೆಎಂಎಂ ಕುಟುಂಬದೊಂದಿಗೆ ಇರುವುದಕ್ಕೆ ಅರವಿಂದ್ ಜಿ ಅವರಿಗೆ ಧನ್ಯವಾದಗಳು ಎಂದು ಅವರು ಹಿಂದಿಯಲ್ಲಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ಹೇಮಂತ್ ಸೊರೆನ್ ಅವರ ಪತ್ನಿ, ಜಾರ್ಖಂಡ್, ದೆಹಲಿ ಮತ್ತು ಯಾವುದೇ ಬಿಜೆಪಿಯೇತರ ಸರ್ಕಾರವು ಆಳುವ ಇತರ ರಾಜ್ಯಗಳಲ್ಲಿ ಬಿಜೆಪಿ ಪ್ರಜಾಪ್ರಭುತ್ವವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿದರು. +ಕಮಲ್‍ನಾಥ್ ಕಾಂಗ್ರೆಸ್ ಬಿಡಲ್ಲ : ಜಿತು ಪಟ್ವಾರಿ +ಕಲ್ಪನಾ ಜೀ, ನಾವು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಜಿ ಅವರೊಂದಿಗೆ ನಿಂತಿದ್ದೇವೆ. ಬಿಜೆಪಿಯ ದೌರ್ಜನ್ಯವನ್ನು ಎದುರಿಸುತ್ತಿರುವ ಅವರ ಧೈರ್ಯವನ್ನು ಇಡೀ ದೇಶವೇ ಹೊಗಳುತ್ತದೆ, ಅವರು ಇಂದು ಬಿಜೆಪಿಯೊಂದಿಗೆ ಹೋಗಿದ್ದರೆ ಜೈಲು ಪಾಲಾಗುತ್ತಿರಲಿಲ್ಲ. ಆದರೆ ಅವರು ಬಿಡಲಿಲ್ಲ. ಸತ್ಯದ ಮಾರ್ಗ ಅನುಸರಿಸಿದ್ದಾರೆ ಅವರಿಗೆ ನಮಸ್ಕಾರ ಎಂದು ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. \ No newline at end of file diff --git a/eesanje/url_47_159_6.txt b/eesanje/url_47_159_6.txt new file mode 100644 index 0000000000000000000000000000000000000000..b2fea6c7ec843982d5f498713cbffe54fb90685e --- /dev/null +++ b/eesanje/url_47_159_6.txt @@ -0,0 +1,11 @@ +ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸಮ್ಮತಿ +ಚಂಡೀಗಢ, ಫೆ 19 (ಪಿಟಿಐ) ರೈತರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳು ಕನಿಷ್ಠ ಬೆಂಬಲ ಬೆಲೆಯಲ್ಲಿ ಐದು ವರ್ಷಗಳವರೆಗೆ ಖರೀದಿಸಲು ಮೂವರು ಕೇಂದ್ರ ಸಚಿವರ ಸಮಿತಿಯು ಸಮ್ಮತಿಸಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಸಚಿವರೊಂದಿಗೆ ನಡೆದ ಸಭೆಯ ನಂತರ ರೈತ ಮುಖಂಡರು ಸೋಮವಾರ ಮತ್ತು ಮಂಗಳವಾರ ತಮ್ಮ ವೇದಿಕೆಯಲ್ಲಿ ಸರ್ಕಾರದ ಪ್ರಸ್ತಾವನೆಯನ್ನು ಚರ್ಚಿಸಿ ನಂತರ ಮುಂದಿನ ಕ್ರಮವನ್ನು ನಿರ್ಧರಿಸುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. +ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಗೋಯಲ್, ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ರೈತ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಿದರು, ಈ ಸಂದರ್ಭದಲ್ಲಿ ಪಂಜಾಂಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಕೂಡ ಹಾಜರಿದ್ದರು. ರೈತರ ಬೇಡಿಕೆಗಳು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಗೆ ಆಗ್ರಹಿಸಿ ಸಾವಿರಾರು ಪ್ರತಿಭಟನಾಕಾರರು ರೈತರು ಪಂಜಾಬ-ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. +ರಾತ್ರಿ 8.15ಕ್ಕೆ ಆರಂಭವಾದ ನಾಲ್ಕು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗೋಯಲ್, ಚರ್ಚೆಯ ಸಮಯದಲ್ಲಿ ವಿನೂತನ ಮತ್ತು ಪೆಟ್ಟಿಗೆಯಿಂದ ಹೊರಗಿರುವ ಕಲ್ಪನೆಯು ಹೊರಹೊಮ್ಮಿತು ಮತ್ತು ಮುಂದಿನ ನಿರ್ಧಾರವನ್ನು ರೈತ ಮುಖಂಡರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು. +ಪಪುವಾ ನ್ಯೂಗಿನಿಯಲ್ಲಿ ಮಾರಣಹೋಮ, 53 ಮಂದಿಯ ಹತ್ಯೆ +ಎನ್‍ಸಿಸಿಎಫ್ (ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ) ಮತ್ತು ಎನ್‍ಎಎಫ್‍ಇಡಿ (ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ) ನಂತಹ ಸಹಕಾರ ಸಂಘಗಳು ತುರ್ ದಾಲï, ಉರಾದ್ ದಾಲ್, ಮಸೂರ್ ದಾಲ್ ಅಥವಾ ಮೆಕ್ಕೆಜೋಳವನ್ನು ಬೆಳೆಯುವ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತವೆ. ಮುಂದಿನ ಐದು ವರ್ಷಗಳವರೆಗೆ ಅವರ ಬೆಳೆಯನ್ನು ಎಂಎಸ್‍ಪಿಯಲ್ಲಿ ಖರೀದಿಸುತ್ತೇವೆ ಎಂದು ಗೋಯಲ್ ಹೇಳಿದರು. +ಪ್ರಮಾಣಕ್ಕೆ (ಖರೀದಿಸಿದ) ಯಾವುದೇ ಮಿತಿ ಇರುವುದಿಲ್ಲ ಮತ್ತು ಇದಕ್ಕಾಗಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಹೇಳಿದರು. ಇದು ಪಂಜಾಬ್‍ನ ಕೃಷಿಯನ್ನು ಉಳಿಸುತ್ತದೆ, ಅಂತರ್ಜಲ ಮಟ್ಟವನ್ನು ಸುಧಾರಿಸುತ್ತದೆ ಮತ್ತು ಈಗಾಗಲೇ ಒತ್ತಡದಲ್ಲಿರುವ ಭೂಮಿಯನ್ನು ಬಂಜರುತನದಿಂದ ಉಳಿಸುತ್ತದೆ ಎಂದು ಗೋಯಲ್ ಹೇಳಿದರು. +ರೈತರು ಜೋಳದ ಬೆಳೆಗಳಾಗಿ ವೈವಿಧ್ಯಗೊಳಿಸಲು ಬಯಸುತ್ತಾರೆ ಆದರೆ ಬೆಲೆಗಳು ಎಂಎಸ್‍ಪಿಗಿಂತ ಕಡಿಮೆಯಾದಾಗ ನಷ್ಟವನ್ನು ತಪ್ಪಿಸಲು ಬಯಸುತ್ತಾರೆ ಎಂದು ಅವರು ಹೇಳಿದರು. ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, ಎಂಎಸ್‍ಪಿ ಕಾನೂನು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳು ಮತ್ತು ಸಾಲ ಮನ್ನಾ ಮುಂತಾದ ವಿಷಯಗಳ ಕುರಿತು ಚರ್ಚೆಗಳು ನಡೆದವು. ಕೇಂದ್ರದ ಪ್ರಸ್ತಾವನೆ ಕುರಿತು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾತನಾಡಿ, ಫೆ.19 ಮತ್ತು 20ರಂದು ನಮ್ಮ ವೇದಿಕೆಗಳಲ್ಲಿ ಚರ್ಚಿಸಿ ತಜ್ಞರ ಅಭಿಪ್ರಾಯ ಪಡೆದು ಅದರಂತೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು. +ಸಾಲ ಮನ್ನಾ ಮತ್ತು ಇತರ ಬೇಡಿಕೆಗಳ ಕುರಿತು ಚರ್ಚೆ ಬಾಕಿಯಿದ್ದು, ಮಂಗಳವಾರದೊಳಗೆ ಇವುಗಳನ್ನು ಪರಿಹರಿಸಲಾಗುವುದು ಎಂದು ಪಂಧೇರ್ ಹೇಳಿದರು, ಪ್ರಸ್ತುತ ದೆಹಲಿ ಚಲೋ ಮೆರವಣಿಗೆಯನ್ನು ತಡೆಹಿಡಿಯಲಾಗಿದೆ, ಆದರೆ ಎಲ್ಲಾ ಸಮಸ್ಯೆಗಳು ಇದ್ದಲ್ಲಿ ಫೆಬ್ರವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಪುನರಾರಂಭಿಸಲಾಗುವುದು ಎಂದು ಅವರು ಹೇಳಿದರು. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನರೇಂದ್ರ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾತನಾಡಿದ ಗೋಯಲ್, 2014 ರಿಂದ 2024 ರವರೆಗೆ ಸರ್ಕಾರವು 18 ಲಕ್ಷ ಕೋಟಿ ರೂಪಾಯಿ ಮೌಲ್ಯದ ಬೆಳೆಗಳನ್ನು ಎಂಎಸ್‍ಪಿಯಲ್ಲಿ ಸಂಗ್ರಹಿಸಿದ್ದರೆ, 2004 ಮತ್ತು 2014 ರ ನಡುವೆ ಕೇವಲ 5.50 ಲಕ್ಷ ಕೋಟಿ ಮೌಲ್ಯದ ಬೆಳೆಗಳನ್ನು ಖರೀದಿಸಲಾಗಿದೆ ಎಂದು ಮಾಹಿತಿ ನೀಡಿದರು. +ಕಮಲ್‍ನಾಥ್ ಕಾಂಗ್ರೆಸ್ ಬಿಡಲ್ಲ : ಜಿತು ಪಟ್ವಾರಿ +ಆದಾಗ್ಯೂ, ರೈತರ ಇತರ ಬೇಡಿಕೆಗಳು ಆಳವಾದ ಮತ್ತು ನೀತಿ-ಚಾಲಿತ ಆಗಿದ್ದು, ಆಳವಾದ ಚರ್ಚೆಯಿಲ್ಲದೆ ಪರಿಹಾರವನ್ನು ಕಂಡುಹಿಡಿಯಲು ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು. ಚುನಾವಣೆ ಬರಲಿದ್ದು, ಹೊಸ ಸರ್ಕಾರ ರಚನೆಯಾಗಲಿದೆ… ಇಂತಹ ವಿಷಯಗಳ ಕುರಿತು ಚರ್ಚೆ ಮುಂದುವರಿಯಲಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_159_7.txt b/eesanje/url_47_159_7.txt new file mode 100644 index 0000000000000000000000000000000000000000..97a31d3799c731dd4873d414f366f7dbb3765f38 --- /dev/null +++ b/eesanje/url_47_159_7.txt @@ -0,0 +1,5 @@ +ಗಣಿ ಕಾರ್ಮಿಕರನ್ನು ಅಪಹರಿಸಿದ ಉಗ್ರರು +ತಿನ್ಸುಕಿಯಾ, ಫೆ 19 (ಪಿಟಿಐ) ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯಲ್ಲಿ ಅಸ್ಸಾಂನ ಕನಿಷ್ಠ ಮೂವರು ಗಣಿಗಾರರನ್ನು ಶಂಕಿತ ಉಗ್ರರು ಅಪಹರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ರಾಜ್ಯಗಳ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ ಒಳಗೊಂಡ ತಂಡವು ಗಣಿಗಾರರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅರೆಸೇನಾ ಪಡೆಯ ವಕ್ತಾರರು ಪಿಟಿಐಗೆ ತಿಳಿಸಿದ್ದಾರೆ. +ಟಿನ್ಸುಕಿಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಗೌರವ್ ಮಾತನಾಡಿ, ಜಿಲ್ಲೆಯ ಮೂವರು ವ್ಯಕ್ತಿಗಳು, ನೆರೆಯ ರಾಜ್ಯದ ಕಲ್ಲಿದ್ದಲು ಗಣಿಯಲ್ಲಿ ಕೆಲಸ ಮಾಡುತ್ತಿದ್ದು, ಅಪಹರಣಗೊಂಡಿರುವ ಶಂಕಿತರಲ್ಲಿ ಸೇರಿದ್ದಾರೆ. ಅವರನ್ನು ಜ್ಞಾನ್ ಥಾಪಾ, ಲೇಖನ್ ಬೋರಾ ಮತ್ತು ಚಂದನ್ ನರ್ಜಾರಿ ಎಂದು ಗುರುತಿಸಲಾಗಿದೆ. ಅಪಹರಣಕ್ಕೊಳಗಾದವರ ನಿಖರ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು. +ಟ್ರಂಪ್ ಅಧ್ಯಕ್ಷರಾದರೆ ನ್ಯಾಟೋ ಪತನ : ನಿಕ್ಕಿ ಹ್ಯಾಲೆ +ಎಎಸ್ಪಿ ಬಿಭಾಷ್ ದಾಸ್ ಅವರು ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಪ್ರಕರಣವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅರುಣಾಚಲ ಪ್ರದೇಶದಿಂದ ಬಂದ ವರದಿಗಳ ಪ್ರಕಾರ, ಚಾಂಗ್ಲಾಂಗ್ ಜಿಲ್ಲೆಯ ಫೆಬ್ರು ಬಸ್ತಿ ಪ್ರದೇಶದಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಕಾರ್ಮಿಕರನ್ನು ಶಂಕಿತ ಉಲಾ (ಐ) ಮತ್ತು ಎನ್‍ಎಸ್‍ಸಿಎನ್ ಉಗ್ರರು ಅಪಹರಿಸಿದ್ದಾರೆ. \ No newline at end of file diff --git a/eesanje/url_47_159_8.txt b/eesanje/url_47_159_8.txt new file mode 100644 index 0000000000000000000000000000000000000000..2c376bb6bec81330b027606e94b3693f3442ee11 --- /dev/null +++ b/eesanje/url_47_159_8.txt @@ -0,0 +1,7 @@ +ಕಮಲ್‍ನಾಥ್ ಕಾಂಗ್ರೆಸ್ ಬಿಡಲ್ಲ : ಜಿತು ಪಟ್ವಾರಿ +ಭೋಪಾಲï, ಫೆ 19 (ಪಿಟಿಐ) – ನಾನು ಎಲ್ಲಿಗೂ ಹೋಗುವುದಿಲ್ಲ ಮತ್ತು ಪಕ್ಷದಲ್ಲಿಯೇ ಉಳಿಯುತ್ತೇನೆ ಎಂದು ಹಿರಿಯ ಸಹೋದ್ಯೋಗಿ ಕಮಲ್ ನಾಥ್ ಹೇಳಿದ್ದಾರೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ತಿಳಿಸಿದ್ದಾರೆ. ನಾಥ್ ಮತ್ತು ಅವರ ಪುತ್ರ ನಕುಲ್ ನಾಥ್ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬುದನ್ನು ಅವರು ಇದೇ ಸಂದರ್ಭದಲ್ಲಿ ಅಲ್ಲಗಳೆದಿದ್ದಾರೆ. +ಬಿಜೆಪಿಯು ಮಾಧ್ಯಮವನ್ನು ದುರುಪಯೋಗಪಡಿಸಿಕೊಳ್ಳುತ್ತದೆ ಮತ್ತು ವ್ಯಕ್ತಿಯ ಸಮಗ್ರತೆಯನ್ನು ಪ್ರಶ್ನಿಸುತ್ತದೆ, ನಾನು ಕಮಲ್ ನಾಥ್ ಜೀ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ, ಅವರು ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು ಪಿತೂರಿಯ ಭಾಗವಾಗಿದೆ ಎಂದು ಹೇಳಿದರು. ಗಾಂಧಿ ಕುಟುಂಬದೊಂದಿಗೆ ಅವರ ಸಂಬಂಧ ಅಚಲವಾಗಿದೆ. ಅವರು ಕಾಂಗ್ರೆಸ್ ಸಿದ್ಧಾಂತದೊಂದಿಗೆ ಬದುಕಿದ್ದಾರೆ ಮತ್ತು ಕೊನೆಯವರೆಗೂ ಅದರೊಂದಿಗೆ ಇರುತ್ತಾರೆ. ಇದು ಅವರು ನನಗೆ ಹೇಳಿದ್ದು ಎಂದು ಕಾಂಗ್ರೆಸ್ ನಾಯಕ ಹೇಳಿದರು. +ಟ್ರಂಪ್ ಅಧ್ಯಕ್ಷರಾದರೆ ನ್ಯಾಟೋ ಪತನ : ನಿಕ್ಕಿ ಹ್ಯಾಲೆ +ನಾಥ್ ಅವರ ಪರವಾಗಿ ಏಕೆ ಹೇಳುತ್ತಿಲ್ಲ ಎಂಬ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ ಸರಿಯಾದ ಸಮಯದಲ್ಲಿ ಮಾತನಾಡುತ್ತಾರೆ ಎಂದು ಪಟ್ವಾರಿ ಹೇಳಿದರು. ನಾನು ಹೇಳಿದ್ದು ಅವನ ಪರವಾಗಿ ಎಂದು ಅವರು ಹೇಳಿದರು.ನಾಥ್ ಮತ್ತು ಅವರ ಪುತ್ರ ಮತ್ತು ಚಿಂದ್ವಾರ ಸಂಸದ ನಕುಲ್ ನಾಥ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಬಯೋದಿಂದ ಕಾಂಗ್ರೆಸ್ ಅನ್ನು ಕೈಬಿಟ್ಟಿದ್ದಾರೆ. ಕಮಲ್ ನಾಥ್ ಅವರಿಗೆ ನಿಷ್ಠರಾಗಿರುವ ಮಧ್ಯಪ್ರದೇಶದ ಸುಮಾರು ಅರ್ಧ ಡಜನ್ ಶಾಸಕರು ಭಾನುವಾರ ದೆಹಲಿ ತಲುಪಿದ್ದು, ಅಪ್ಪ-ಮಗ ಇಬ್ಬರೂ ಆಡಳಿತಾರೂಢ ಬಿಜೆಪಿಗೆ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ಒತ್ತು ನೀಡಿದೆ. +ಪಪುವಾ ನ್ಯೂಗಿನಿಯಲ್ಲಿ ಮಾರಣಹೋಮ, 53 ಮಂದಿಯ ಹತ್ಯೆ +ಭೋಪಾಲ್‍ನಲ್ಲಿ ನಾಥ್ ಅವರ ಪಕ್ಷದ ಸಹೋದ್ಯೋಗಿ ದಿಗ್ವಿಜಯ ಸಿಂಗ್ ಅವರು ತಮ್ಮ ಹಳೆಯ ಸ್ನೇಹಿತ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದ ಪಕ್ಷವನ್ನು ತ್ಯಜಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಏತನ್ಮಧ್ಯೆ, ದೆಹಲಿಯಲ್ಲಿ, ಕಮಲ್ ನಾಥ್ ಅವರ ನಿಕಟವರ್ತಿ ಎಂದು ಕರೆಯಲ್ಪಡುವ ಕಾಂಗ್ರೆಸ್ ನಾಯಕ ಸಜ್ಜನ್ ಸಿಂಗ್ ವರ್ಮಾ ಅವರು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. \ No newline at end of file diff --git a/eesanje/url_47_159_9.txt b/eesanje/url_47_159_9.txt new file mode 100644 index 0000000000000000000000000000000000000000..008692992f222006b141b59205ac15c7533569cf --- /dev/null +++ b/eesanje/url_47_159_9.txt @@ -0,0 +1,5 @@ +6ನೇ ಬಾರಿಗೂ ಇಡಿ ಮುಂದೆ ಹಾಜರಾಗದ ಕೇಜ್ರಿ +ನವದೆಹಲಿ, ಫೆ 19 (ಪಿಟಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಕೂಡ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಎಎಪಿ ಹೇಳಿದೆ. ತನ್ನ ರಾಷ್ಟ್ರೀಯ ಸಂಚಾಲಕರಿಗೆ ಇಡಿ ನೀಡಿರುವ ಆರನೇ ಸಮನ್ಸ್ ಕಾನೂನುಬಾಹಿರ ಎಂದು ಬಣ್ಣಿಸಿದ ಪಕ್ಷ, ಇಡಿ ಪದೇ ಪದೇ ಕೇಜ್ರಿವಾಲ್‍ಗೆ ಸಮನ್ಸ್ ಕಳುಹಿಸುವ ಬದಲು ನ್ಯಾಯಾಲಯದ ನಿರ್ಧಾರಕ್ಕಾಗಿ ಕಾಯಬೇಕು ಎಂದು ಹೇಳಿದೆ. +ಕೇಜ್ರಿವಾಲ್ ಅನೇಕ ಸಮನ್ಸ್‍ಗಳನ್ನು ಬಿಟ್ಟುಬಿಟ್ಟ ನಂತರ ಜಾರಿ ನಿರ್ದೇಶನಾಲಯ (ಇಡಿ) ನಗರ ನ್ಯಾಯಾಲಯವನ್ನು ಸಂಪರ್ಕಿಸಿತ್ತು. ಕೇಂದ್ರೀಯ ಸಂಸ್ಥೆ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಶನಿವಾರ ಕೇಜ್ರಿವಾಲ್‍ಗೆ ವೈಯಕ್ತಿಕ ಹಾಜರಾತಿಯಿಂದ ನ್ಯಾಯಾಲಯ ವಿನಾಯಿತಿ ನೀಡಿದೆ. +ದ್ವಿಶತಕ ಸಿಡಿಸಿದ ಜೈಸ್ವಾಲ್, ಇಂಗ್ಲೆಂಡ್‌ಗೆ 556 ಗುರಿ +ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನವು ಫೆಬ್ರವರಿ 15 ರಂದು ಪ್ರಾರಂಭವಾಗಿದೆ ಮತ್ತು ಮಾರ್ಚ್ ಮೊದಲ ವಾರದವರೆಗೆ ಮುಂದುವರಿಯುತ್ತದೆ ಎಂದು ಕೇಜ್ರಿವಾಲ್ ಅವರ ವಕೀಲರು ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ. ಮಾರ್ಚ್ 16 ರಂದು ಮುಂದಿನ ವಿಚಾರಣೆಯ ದಿನಾಂಕದಂದು ಅವರು ದೈಹಿಕವಾಗಿ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_15_1.txt b/eesanje/url_47_15_1.txt new file mode 100644 index 0000000000000000000000000000000000000000..6fcd8096d2336e0465a965f9a7f6c2d0755830b6 --- /dev/null +++ b/eesanje/url_47_15_1.txt @@ -0,0 +1,5 @@ +ಕಾಂಗ್ರೆಸ್‌‍ ಸೇರಲ್ಲ : ಖ್ಯಾತ ಗಾಯಕ ಕನ್ನಯ್ಯಾ ಮಿತ್ತಲ್‌ + , ‘ ’ , +ಹರಿದ್ವಾರ, ಸೆ.11 (ಪಿಟಿಐ)– ದೇಶದ ಖ್ಯಾತ ಭಕ್ತಿ ಗಾಯಕ ಕನ್ನಯ್ಯಾ ಮಿತ್ತಲ್‌ ಅವರು ಕಾಂಗ್ರೆಸ್‌‍ ಸೇರುವ ತಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಂತರು, ಮಹಾಂತರು ಮತ್ತು ರಾಜಕಾರಣಿಗಳ ಪ್ರತಿಕ್ರಿಯೆಯನ್ನು ಸ್ವೀಕರಿಸಿದ ನಂತರ ಕಾಂಗ್ರೆಸ್‌‍ ಸೇರುವ ನಿರ್ಧಾರವನ್ನು ಬದಲಾಯಿಸಿದ್ದೇನೆ ಎಂದು ಖ್ಯಾತ ಭಕ್ತಿ ಗಾಯಕ ಕನ್ಹ್ಯಾ ಮಿತ್ತಲ್‌ ಹೇಳಿದ್ದಾರೆ. +ಮಿತ್ತಲ್‌ ಅವರ ಜೋ ರಾಮ್‌ ಕೋ ಲಾಯೆ ಹೈ ಹಮ್‌ ಉಂಕೋ ಲಾಯೇಂಗೆ ಹಾಡಿನ ಮೂಲಕ ದೇಶದ ಪ್ರಸಿದ್ಧ ಗಾಯಕರಾಗಿ ಹೊರಹೊಮಿದ್ದಾರೆ.ಹರಿಯಾಣ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌‍ ಸೇರುವ ಇಚ್ಛೆ ವ್ಯಕ್ತಪಡಿಸಿದ್ದರು. ನಾನು (ಕಾಂಗ್ರೆಸ್‌‍) ಸೇರುವ ಇಚ್ಛೆಯನ್ನು ವ್ಯಕ್ತಪಡಿಸ್ದೆಿ ಆದರೆ ಜನರು ನಾನು ಸೇರಬಾರದು ಎಂದು ನನಗೆ ಪ್ರತಿಕ್ರಿಯೆ ನೀಡಿದರು. +ಸಂತರು, ಮಹಾಂತರು, ರಾಜಕಾರಣಿಗಳು ಹೀಗಾಗಬಾರದು ಎಂದರು. ಬಿಜೆಪಿಯ ಹಿರಿಯ ನಾಯಕತ್ವವು ಮಧ್ಯಪ್ರವೇಶಿಸಿದಾಗ ಮತ್ತು ನಾನು ಅವರೊಂದಿಗೆ ಮಾತನಾಡಿದಾಗ, ಈ ಹೆಜ್ಜೆ ತಪ್ಪು ಎಂದು ನಾನು ಭಾವಿಸಿದೆ, ಎಂದು ಮಿತ್ತಲ್‌ ಪಿಟಿಐಗೆತಿಳಿಸಿದರು. ಸೆಪ್ಟೆಂಬರ್‌ 8 ರಂದು ಮಿತ್ತಲ್‌ ಅವರು ಆದಷ್ಟು ಬೇಗ ಕಾಂಗ್ರೆಸ್‌‍ ಸೇರುವುದಾಗಿ ಹೇಳಿದ್ದರು. \ No newline at end of file diff --git a/eesanje/url_47_15_10.txt b/eesanje/url_47_15_10.txt new file mode 100644 index 0000000000000000000000000000000000000000..c3956c7707e505d32bbf57f38e0dfff34c2d0c46 --- /dev/null +++ b/eesanje/url_47_15_10.txt @@ -0,0 +1,12 @@ +ಆಮ್ಟೆಕ್ ಆಟೋ ಕಂಪೆನಿಯ 5115 ಕೋಟಿ ಮೌಲ್ಯ ಆಸ್ತಿ ಮುಟ್ಟುಗೋಲು + ’ 5,000 27,000 +ನವದೆಹಲಿ,ಸೆ.9-ಅಕ್ರಮ ಹಣ ವರ್ಗಾವಣೆ ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್ನ ನಿರ್ದೇಶನದ ಮೇರೆಗೆ ತನಿಖೆ ಆರಂಭಿಸಿರುವ ಜಾರಿ ನಿರ್ದೇಶನಾಲಯವು ಗುರುಗ್ರಾಂ ಮೂಲದ ಆಮ್ಟೆಕ್ ಆಟೋ ಲಿಮಿಟೆಡ್ ಕಂಪನಿಗೆ ಸೇರಿದ 5,115 ಕೋಟಿ ರೂ.ಗಳಷ್ಟು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ. +ಈ ಕಂಪನಿ ಸರ್ಕಾರಿ ಬ್ಯಾಂಕ್ಗಳಿಂದ 27,000 ಕೋಟಿ ರೂ.ಗಳನ್ನು ಅಕ್ರಮ ವರ್ಗಾವಣೆ ಮಾಡಿ ವಂಚನೆ ಎಸಗಿರುವ ಆರೋಪ ಹೊತ್ತಿದೆ.ಪ್ರವರ್ತಕ ಅರವಿಂದ್ ಧಾಮ್ ಅವರ ಆಮ್ಟೆಕ್ ಕಂಪನಿಯ ಸಮೂಹಕ್ಕೆ ಸೇರಿದ ಎಆರ್ಜಿ ಲಿಮಿಟೆಡ್, ಎಸಿಐಎಲ್ ಲಿಮಿಟೆಡ್, ಮೆಟಾಲಿಸ್ಟ್ ಫೋರ್ಜಿಂಗ್ ಲಿಮಿಟೆಡ್ ಮತ್ತು ಕಾಸ್ಟೆಕ್‌್ಸ ಟೆಕ್ನಾಲಜೀಸ್ ಲಿಮಿಟೆಡ್ ಕಂಪನಿಗಳೂ ವಂಚನೆಯಲ್ಲಿ ಶಾಮೀಲಾಗಿದೆ ಎಂದು ಆರೋಪಿಸಲಾಗಿದೆ. +ಈ ಮುನ್ನ ಐಡಿಬಿಪಿ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಮಹಾರಾಷ್ಟ್ರ ನೀಡಿದ ದೂರಿನ ಮೇರೆಗೆ ಸಿಬಿಐ ಕೂಡ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಿಸಿತ್ತು. ಧಾಮ್ ಮತ್ತು ಅವರ ಸಮೂಹ ಸಂಸ್ಥೆಗಳು ನಕಲಿ ಕಂಪನಿಗಳಿಗೆ ಬ್ಯಾಂಕ್ ಸಾಲವನ್ನು ಕೊಡಿಸಿದ್ದವು ಎಂದು ಈ ಬ್ಯಾಂಕ್ಗಳು ಆರೋಪಿಸಿದ್ದವು. +ಫೆಬ್ರವರಿಯಲ್ಲಿ ಆಮ್ಟೆಕ್ ಆಟೋ ಕಂಪನಿ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಕಂಪನಿ ಭಾಗಿಯಾಗಿದ್ದ 27,000 ಕೋಟಿ ರೂ.ಗಳ ಬ್ಯಾಂಕ್ ವಂಚನೆ ಪ್ರಕರಣ ಕುರಿತಂತೆ ತನಿಖೆ ನಡೆಸುವಂತೆ ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. +ಇಡಿ ತನಿಖೆ ನಡೆಸಿದ ಬಳಿಕ 5,000 ಕೋಟಿ ರೂ.ಗಳಿಗೂ ಅಧಿಕ ಬ್ಯಾಂಕ್ ಮೊತ್ತವನ್ನು 500 ಕ್ಕೂ ಅಧಿಕ ನಕಲಿ ಕಂಪನಿಗಳಿಗೆ ವರ್ಗಾವಣೆ ಮಾಡಿಸಿದ್ದ ಹಣಕಾಸು ವಂಚನೆ ಹಗರಣ ಬಯಲಿಗೆ ಬಂದಿದ್ದು ಧಾಮ್ ಅವರನ್ನು ಜುಲೈ 9 ರಂದು ಬಂಧಿಸಲಾಯಿತು. +ಆರೋಪಿಯು ನಕಲಿ ಹಣಕಾಸು ದಾಖಲೆಗಳನ್ನು ಸೃಷ್ಟಿಸಿ ಖೋಟಾ ಆಸ್ತಿಗಳ ಸೃಷ್ಟಿ ಮಾಡಿ ತನ್ನ ಎಲ್ಲ ಕಂಪನಿಗಳನ್ನು ದಿವಾಳಿಯಾಗಿರುವುದಾಗಿ ಘೋಷಿಸಿಕೊಂಡಿದ್ದರು. ಈ ಕಂಪನಿಗಳ ದಿವಾಳಿ ಘೋಷಣಾ ನಿರ್ಣಯದ ವೇಳೆ ಬ್ಯಾಂಕ್ಗಳು ಶೇ.80ಕ್ಕೂ ಅಧಿಕ ಮೊತ್ತದ ವಂಚನೆಗೊಳಗಾಗಿದ್ದವು. +ತನ್ನ 500 ಕ್ಕೂ ಅಧಿಕ ನಕಲಿ ಕಂಪನಿಗಳನ್ನು ಬಳಸಿ ಧಾಮ್ ರಿಯಲ್ ಎಸ್ಟೇಟ್ ಮತ್ತು ಐಷಾರಾಮಿ ಆಸ್ತಿಗಳಲ್ಲಿ ಹಣಕಾಸು ಹೂಡಿಕೆ ಮಾಡಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ. ಈ ಕಂಪನಿಗಳ ಆಸ್ತಿಯ ಫಲಾನುಭವಿ ಆಮ್ಟೆಕ್ ಗ್ರೂಪ್ನ ಪ್ರವರ್ತಕ ಮತ್ತು ಲಾಭದಾಯಕ ಮಾಲೀಕ ಅರವಿಂದ್ ಧಾಮ್ ಎಂದು ಇಡಿ ಹೇಳಿದೆ. +ಜಪ್ತಿಯಾದ 85 ಆಸ್ತಿಗಳು 2,675 ಕೋಟಿ ರೂ.ಗಳ ಮೌಲ್ಯ ಹೊಂದಿದ್ದು 13 ವಿವಿಧ ರಾಜ್ಯಗಳಲ್ಲಿ ಹರಡಿಕೊಂಡಿವೆ. ಇದರಲ್ಲಿ ದೆಹಲಿಯ ಪ್ರಮುಖ ಸ್ಥಳದಲ್ಲಿ ವಾಣಿಜ್ಯ ಆಸ್ತಿಗಳು ಮತ್ತು ತೋಟದ ಮನೆಗಳು, ಮಹಾರಾಷ್ಟ್ರದಲ್ಲಿ 200 ಹೆಕ್ಟೇರ್ಗಳ ಭೂಮಿ, ಹರಿಯಾಣ ಮತ್ತು ಪಂಜಾಬ್ನ ಗುರುಗಾವ್, ಚಂಡೀಗಢ, ರೇವಾರಿ ಮತ್ತು ಪಂಚಕುಲ ಸೇರಿದಂತೆ ಕೈಗಾರಿಕಾ ಪ್ರದೇಶಗಳು ವಸತಿ ಬಡಾವಣೆಗಳೂ ಒಳಗೊಂಡಂತೆ ನೂರಾರು ಎಕರೆಗಳ ಭೂಮಿ ಸೇರಿವೆ. +ಇದರ ಜೊತೆಗೆ ಅಧಿಕೃತ ಮತ್ತು ಅನಧಿಕೃತ ಕಂಪನಿಗಳಲ್ಲಿನ 2,353.46 ಕೋಟಿ ರೂ.ಗಳ ಷೇರುಗಳನ್ನೂ ಜಪ್ತಿ ಮಾಡಲಾಗಿದೆ. ಈ ಕಂಪನಿಗಳಲ್ಲಿ ಅಲಯನ್ಸ್ ಇಂಟಿಗ್ರೇಟೆಡ್ ಮೆಟಾಲಿಕ್ಸ್ ಲಿಮಿಟೆಡ್, ನ್ಯೂಟೈಮ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮುಂತಾದವೂ ಸೇರಿವೆ ಎಂದು ಇಡಿ ವಿವರಿಸಿದೆ. +ಈ ಎಲ್ಲ ಕಂಪನಿಗಳು ಅರವಿಂದ ಧಾಮ್ ಅವರ ಮಾಲೀಕತ್ವದ ಕೆಲ ಕಂಪನಿಗಳ ಮೂಲಕ ಹಣಕಾಸು ವಂಚನೆಯ ಅಪರಾಧದಲ್ಲಿ ನೇರವಾಗಿ ಭಾಗಿಯಾಗಿರುವುದಾಗಿ ಗುರುತಿಸಲಾಗಿದೆ ಎಂದು ಇಡಿ ನುಡಿದಿದೆ. \ No newline at end of file diff --git a/eesanje/url_47_15_11.txt b/eesanje/url_47_15_11.txt new file mode 100644 index 0000000000000000000000000000000000000000..8d13a3223a11eab2823bf77e1a12731e81bfbcad --- /dev/null +++ b/eesanje/url_47_15_11.txt @@ -0,0 +1,8 @@ +ಆಟೋ ಕಾಂಪೋನೆಂಟ್‌ ಕ್ಷೇತ್ರದಲ್ಲಿ ಸ್ವಾವಲಂಬನೆ ಬೆಳವಣಿಗೆ ಶ್ಲಾಘನೀಯ : ಕೇಂದ್ರ ಸಚಿವ ಹೆಚ್ಡಿಕೆ + : +ನವದೆಹಲಿ,ಸೆ.9-ಆತ್ಮನಿರ್ಭರ್‌ ಭಾರತ ಅಭಿಯಾನದ ಮೂಲಕ ಆಟೋ ಕಾಂಪೋನೆಂಟ್‌ ಕ್ಷೇತ್ರದಲ್ಲಿ ಸ್ವಾವಲಂಬಿಯ ಬೆಳವಣಿಗೆಯನ್ನು ಉತ್ತೇಜಿಸುತ್ತಿರುವುದು ಶ್ಲಾಘನೀಯ ಎಂದು ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಹೆಚ್‌ ಡಿ. ಕುಮಾರಸ್ವಾಮಿ ಹೇಳಿದರು. +ವಿಕಸಿತ್‌ ಭಾರತ್‌ ಚಲನಶೀಲ ಘಟಕಗಳಲ್ಲಿ ಸ್ವಾವಲಂಬನೆ ಮತ್ತು ಜಾಗತಿಕ ಸ್ಪರ್ಧಾತಕತೆಯನ್ನು ಪೋಷಿಸುವುದು ಎಂಬ ಶಿರ್ಷಿಕೆಯುಳ್ಳ 64ನೇ ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು, ಇದು ಈಗ ಭಾರತದ ಶೇ.2.7ರಷ್ಟು ಜಿಡಿಪಿ ಮತ್ತು 5 ಮಿಲಿಯನ್‌ ಉದ್ಯೋಗಗಳನ್ನು ಒದಗಿಸುತ್ತವೆ. ಈ ಕ್ಷೇತ್ರವು ಈ ವರ್ಷ 300 ದಶಲಕ್ಷ ಡಾಲರ್‌ ವಾಣಿಜ್ಯ ಲಾಭ ಸಾಧಿಸಿದೆ ಎಂದು ಪ್ರಶಂಸಿಸಿದರು. +ಆಟೋ ಕ್ಷೇತ್ರದ ಉತ್ಪಾದನಾ ಲಿಂಕ್ಡ್ ಇನ್ಸೆಂಟಿವ್‌ ಯೋಜನೆಯ ಯಶಸ್ಸನ್ನು, 74,850 ಕೋಟಿ ರೂ. ಹೂಡಿಕೆಯನ್ನು ಆಕರ್ಷಿಸುವ ಮೂಲಕ ವಾಹನ ವಲಯಕ್ಕೆ 30,000ಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ತಿಳಿಸಿದರು. +ಸುಧಾರಿತ ಬ್ಯಾಟರಿ ಕೋಶಗಳಿಗಾಗಿ ತಂತ್ರಜ್ಞಾನ ಶ್ರೇಣಿಯ ಮಾದರಿಯ ಬಿಎಲ್‌ಐ ಯೋಜನೆಯ ಕುರಿತು ವಿವರಣೆ ನೀಡಿದ ಅವರು, ಮತ್ತು ಫೇಮ್‌-2 ಯೋಜನೆಯು ಮತ್ತು ಇತ್ತೀಚೆಗೆ ಪ್ರಾರಂಭಿತ ವಿದ್ಯುತ್‌ ವಾಹನ ಇಲೆಕ್ಟ್ರಿಕ್‌ ಮೊಬಿಲಿಟಿ ಪ್ರೋಮೋಷನ್‌ ಸ್ಕೀಮ್‌ (ಇಒ) ಯು ಇಲೆಕ್ಟ್ರಿಕ್‌ ವಾಹನದ ಅಂಗೀಕಾರವನ್ನು ಉತ್ತೇಜಿಸುತ್ತವೆ ಎಂದು ಪ್ರಶಂಸಿಸಿದರು.ಇದಲ್ಲದೆ, ವರ್ಧಿತ ನಾವೀನ್ಯತೆ ಮತ್ತು ಸಹಯೋಗದ ಮೂಲಕ ಆತನಿರ್ಭರ್‌ ಭಾರತದ ದೃಷ್ಟಿಯನ್ನು ಸಾಕಾರಗೊಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತವೆ ಎಂದು ಅವರು ಸ್ಪಷ್ಟವಾಗಿ ತಿಳಿಸಿದರು. +ಫೇಮ್‌-3 ಯೋಜನೆಯು ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ ಅದರ ಚೌಕಟ್ಟಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಫೇಮ್‌-2ನಲ್ಲಿ ಗುರುತಿಸಲಾದ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಇಎಂಪಿಎಸ್‌‍ ಯೋಜನೆಯನ್ನು ಎರಡು ತಿಂಗಳವರೆಗೆ ಹೆಚ್ಚಿಸಲಾಗುತ್ತದೆ ಎಂದು ಹೇಳಿದರು. +ಈ ಸಂದರ್ಭದಲ್ಲಿ ಎಸಿಎಂಎ ಅಧ್ಯಕ್ಷೆ ಶ್ರದ್ಧಾ ಸೂರಿ ಮರ್ವಾಹ್‌, ಎಸ್‌‍ಐಎಎಂ ಅಧ್ಯಕ್ಷ ವಿನೋದ ಅಗರ್ವಾಲ್‌, ಸಿಐಐ ಅಧ್ಯಕ್ಷ ಮತ್ತು ಐಟಿಸಿ ವ್ಯವಸ್ಥಾಪಕ ನಿರ್ದೇಶಕ ಸಂಜೀವ ಪೂರಿ, ಮಾರುತಿ ಸುಜುಕಿ ಇಂಡಿಯಾ ಎಂಡಿ ಮತ್ತು ಸಿಇಒ ಹಿಸಾಶಿ ತಕೇಚಿ ಮತ್ತು ಎಸ್‌‍ಸಿಎಎಲ್‌ಇ ಅಧ್ಯಕ್ಷ ಡಾ. ಪವನ್‌ ಗೋಯಂಕ್‌ ಸೇರಿದಂತೆ ಪ್ರಮುಖ ಉದ್ಯಮದ ಗಣ್ಯರು ಹಾಜರಾಗಿದ್ದರು. \ No newline at end of file diff --git a/eesanje/url_47_15_12.txt b/eesanje/url_47_15_12.txt new file mode 100644 index 0000000000000000000000000000000000000000..42301ade5b45e6078393714f360388826b20c771 --- /dev/null +++ b/eesanje/url_47_15_12.txt @@ -0,0 +1,7 @@ +ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ ಅಧ್ಯಕ್ಷ ಗೋಪಾಲ್‌ ದಾಸ್‌‍ ಆರೋಗ್ಯ ಸ್ಥಿತಿ ಗಂಭೀರ + , +ಅಯೋಧ್ಯೆ,ಸೆ.9– ಶ್ರೀರಾಮ ಜನಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್‌ ನೃತ್ಯ ಗೋಪಾಲ್‌ ದಾಸ್‌‍ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. +ಮೂತ್ರದ ಸಮಸ್ಯೆ ಮತ್ತು ಆಹಾರ ಸೇವನೆಯ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಯಿತು. ಕಷ್ಣ ಜನಾಷ್ಟಮಿಯಂದು ಮಥುರಾಗೆ ಹೋದಾಗ ಮಹಂತ್‌ ನತ್ಯ ಗೋಪಾಲ್‌ ದಾಸ್‌‍ ಅವರ ಆರೋಗ್ಯ ಹದಗೆಟ್ಟಿತ್ತು. +ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ ನಿನ್ನೆ ಸಂಜೆ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಂತ್‌ ನತ್ಯ ಗೋಪಾಲ್‌ ದಾಸ್‌‍ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಈ ಅವಧಿಯಲ್ಲಿ, ಅವರು ಹಲವಾರು ದಿನಗಳವರೆಗೆ ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು ಮತ್ತು ಚೇತರಿಸಿಕೊಂಡ ನಂತರ ಅಯೋಧ್ಯೆಗೆ ಮರಳಿದ್ದರು. +ಮಹಂತ್‌ ಸುಮಾರು 86 ವರ್ಷ ವಯಸ್ಸಿನವರಾಗಿದ್ದು, ಯಾವಾಗಲೂ ವೈದ್ಯರ ಮೇಲ್ವಿಚಾರಣೆಯಲ್ಲಿರುತ್ತಾರೆ. 2022 ರಲ್ಲಿ, ಅವರ ಆರೋಗ್ಯವು ಹಲವಾರು ಬಾರಿ ಹದಗೆಟ್ಟಿತ್ತು, ನಂತರ ಅವರನ್ನು ಮೇದಾಂತಕ್ಕೆ ದಾಖಲಿಸಲಾಗಿತ್ತು. ಅವರಿಗೆ ಕಿಡ್ನಿ ಸೋಂಕು ತಗುಲಿತ್ತು. +ಮಹಂತ್‌ ದೀರ್ಘಕಾಲದ ಮೂತ್ರಪಿಂಡ ವೈಫಲ್ಯ ಎಂಬ ಕಾಯಿಲೆಯಿಂದ ಬಳಲುತ್ತಿದ್ದರು.ಇದಲ್ಲದೇ ಅವರಿಗೆ ಮೂತ್ರನಾಳದ ಸೋಂಕು ಅಂದರೆ ಯುಟಿಐ ಕೂಡ ಇತ್ತು. ಈ ರೋಗದಲ್ಲಿ ಮೂತ್ರನಾಳವು ಸೋಂಕಿಗೆ ಒಳಗಾಗುತ್ತದೆ. \ No newline at end of file diff --git a/eesanje/url_47_15_2.txt b/eesanje/url_47_15_2.txt new file mode 100644 index 0000000000000000000000000000000000000000..7f78606233cb78b971600666637f0ba86b096838 --- /dev/null +++ b/eesanje/url_47_15_2.txt @@ -0,0 +1,6 @@ +ಶವವಾಗಿ ನೇತಾಡುತ್ತಿದ್ದ ವಿದ್ಯಾರ್ಥಿ ಶವ ಕೆಳಗಿಳಿಸಲು ಎಂಟು ಗಂಟೆ..! +ಗುವಾಹಟಿ,ಸೆ.10-ಇಲ್ಲಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ)ಯಲ್ಲಿ 21 ವರ್ಷದ ವಿದ್ಯಾರ್ಥಿಯ ಸಾವು ಇತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.ವಿದ್ಯಾರ್ಥಿಗಳು ಮತ್ತು ಪೋಷಕರ ಬಗ್ಗೆ ಆಡಳಿತವು ಬೇಜವಬ್ದಾರಿ ಧೋರಣೆ ತಳೆದಿದೆ ಎಂದು ಅವರ ಮೃತನ ಸ್ನೇಹಿತರು ಆರೋಪಿಸಿದ್ದಾರೆ. +ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಜೀವನಕ್ಕಿಂತ ಗ್ರೇಡ್‌ಗಳು ಮುಖ್ಯವಾಗಿವೆ ಎಂದು ಆರೋಪಿಸಿ ನಿನ್ನೆ ಸಂಜೆ ಕ್ಯಾಂಪಸ್‌‍ನಲ್ಲಿ ಬಹತ್‌ ಪ್ರತಿಭಟನೆ ನಡೆಸಲಾಯಿತು. ಉತ್ತರ ಪ್ರದೇಶದ ವಿದ್ಯಾರ್ಥಿ ತನ್ನ ಹಾಸ್ಟೆಲ್‌ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಈ ವರ್ಷ ಪ್ರತಿಷ್ಠಿತ ಸಂಸ್ಥೆಯಲ್ಲಿ ನಡೆದ ನಾಲ್ಕನೇ ಸಾವು ಇದಾಗಿದೆ. ಮತದೇಹ ಗಮನಕ್ಕೆ ಬಂದಾಗ ಆಡಳಿತ ಮಂಡಳಿಯವರು ಹಾಸ್ಟೆಲ್‌ ಕೊಠಡಿಯ ಬಾಗಿಲು ಒಡೆಯದಂತೆ ವಿದ್ಯಾರ್ಥಿಗಳನ್ನು ತಡೆದಿದ್ದಾರೆ ಎಂಬ ಆರೋಪ ಈಗ ಕೇಳಿ ಬರುತ್ತಿದೆ. +ಮತ ವಿದ್ಯಾರ್ಥಿಯ ಕುಟುಂಬಕ್ಕೆ ವಿಷಯ ತಿಳಿಸುವುದನ್ನು ತಡೆಯಲಾಗಿದೆ ಮತ್ತು ಆಡಳಿತವು ಅವರ ಫೋನ್‌ಗಳಿಂದ ವೀಡಿಯೊಗಳನ್ನು ಅಳಿಸಲು ಪ್ರಯತ್ನಿಸಿದೆ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. +ನನ್ನ ಸ್ನೇಹಿತ ಫ್ಯಾನ್‌ಗೆ ನೇತಾಡುತ್ತಿರುವುದನ್ನು ನಾನು ವೆಂಟಿಲೇಟರ್‌ ಮೂಲಕ ನೋಡಿದೆ. ಕಾವಲುಗಾರರು ನಮನ್ನು ಬಾಗಿಲು ಮುರಿಯದಂತೆ ತಡೆದರು. ಅದನ್ನು ತೆರೆಯಲು ಸುಮಾರು 30 ನಿಮಿಷಗಳನ್ನು ತೆಗೆದುಕೊಂಡಿತು. ಅವನು ಬದುಕಿದ್ದಾನೋ ಇಲ್ಲವೋ ಎಂಬುದು ಅವರ ಕಾಳಜಿಯಲ್ಲ ಎಂದು ಮತ್ತೊಬ್ಬ ವಿದ್ಯಾರ್ಥಿ ಆರೋಪಿಸಿದ್ದಾನೆ. ಬಾಗಿಲು ತೆರೆದ ನಂತರ, ಭದ್ರತಾ ಸಿಬ್ಬಂದಿ ನರ್ಸ್‌ಗೆ ಅವರ ನಾಡಿಮಿಡಿತವನ್ನು ಪರೀಕ್ಷಿಸಲು ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದರು. +ನಾವು ಅವನನ್ನು ಕಳೆದುಕೊಂಡೆವು, ಆದರೆ ಇಡೀ ರಾತ್ರಿ ಶವವನ್ನು ಕೆಳಗೆ ತರಲಿಲ್ಲ. ಬಾಗಿಲು ತೆರೆದ ಎಂಟು ಗಂಟೆಗಳ ನಂತರ ಅದನ್ನು ತೆಗೆಯಲಾಯಿತು ಎಂದು ಎನ್ನುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. \ No newline at end of file diff --git a/eesanje/url_47_15_3.txt b/eesanje/url_47_15_3.txt new file mode 100644 index 0000000000000000000000000000000000000000..e8201a4027e9a148cc40c83b407b7d6a01584ec4 --- /dev/null +++ b/eesanje/url_47_15_3.txt @@ -0,0 +1,4 @@ +ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶವವಾಗಿ ಪತ್ತೆ +ಲಕ್ನೋ,ಸೆ.10-ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಸಕ ಜಾಹಿದ್‌ ಬೇಗ್‌ ಅವರ ಮನೆಯ ಟೆರೇಸ್‌‍ನಲ್ಲಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. +ಘಟನೆಯನ್ನು ದಢಪಡಿಸಿದ ಭದೋಹಿ ಪೊಲೀಸ್‌‍ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್‌ ಅವರು ಆತಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. +ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಬಾಲಕಿ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣವೇನಿರಬಹುದು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.ರಾತ್ರಿ ಊಟ ಮುಗಿಸಿ ಮಲಗಿದ್ದಳು ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಶಾಸಕರ ನಿವಾಸದಲ್ಲಿ ಆಕೆ ಕೆಲಸ ಮಾಡುತ್ತಿದ್ದರು. diff --git a/eesanje/url_47_15_4.txt b/eesanje/url_47_15_4.txt new file mode 100644 index 0000000000000000000000000000000000000000..520754d703c19811337c9bc4156b49f284a8ac72 --- /dev/null +++ b/eesanje/url_47_15_4.txt @@ -0,0 +1,10 @@ +ಭಾರತದ ಅಭಿವೃದ್ಧಿಗೆ ದುಷ್ಟಶಕ್ತಿಗಳು ಅಡ್ಡಿಪಡಿಸುತ್ತಿವೆ : ಮೋಹನ್ ಭಾಗವತ್ +ಪುಣೆ, ಸೆ.10-ಭಾರತ ದೇಶ ಬೆಳೆಯುವುದನ್ನು ಬಯಸದ ದುಷ್ಟ ಶಕ್ತಿಗಳು ಅಭಿವೃದ್ಧಿಯ ಹಾದಿಯಲ್ಲಿ ಅಡ್ಡಿ ಉಂಟು ಮಾಡುತ್ತಿವೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. +ಇಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಇದೇ ರೀತಿಯ ಪರಿಸ್ಥಿತಿ ಚಾಲ್ತಿಯಲ್ಲಿತ್ತು ಆದರೆ ಭಯಪಡುವ ಅಗತ್ಯವಿಲ್ಲ, ದುಷ್ಟ ಶಕ್ತಿಗಳ ತಂತ್ರ ಯಶಸ್ವಿಯಾಗುವುದಿಲ್ಲ ಘರ್ಜಿಸಿದ್ದಾರೆ. +ಧರ್ಮ ಎಂದರೆ ಕೇವಲ ಪೂಜೆ (ಆಚರಣೆಗಳು) ಅಲ್ಲ, ಆದರೆ ಇದು ಸತ್ಯ, ಸಹಾನುಭೂತಿ ಮತ್ತು ತಪಶ್ಚರ್ಯ (ಅರ್ಪಣ) ಒಳಗೊಂಡಿರುವ ವಿಶಾಲವಾದ ಪರಿಕಲ್ಪನೆಯಾಗಿದೆ ಎಂದರು. ಹಿಂದೂ ಪದವು ವೈವಿಧ್ಯತೆಗಳ ಸ್ವೀಕಾರವನ್ನು ನಿರೂಪಿಸುವ ವಿಶೇಷಣವಾಗಿದೆ ಎಂದು ಅವರು ಭಾರತವು ಒಂದು ಉದ್ದೇಶಕ್ಕಾಗಿ ಅಸ್ತಿತ್ವಕ್ಕೆ ಬಂದಿತು ಮತ್ತು ವಸುಧೈವ ಕುಟುಂಬಕಂ (ಜಗತ್ತೇ ಒಂದು ಕುಟುಂಬ) ಕಲ್ಪನೆಯ ಸಾರ ಎಂದು ಒತ್ತಿಹೇಳಿದರು.ಭಾರತದ ಮೇಲೆ ಹಿಂದೆ ಬಾಹ್ಯ ಆಕ್ರಮಣ ಹೆಚ್ಚಾಗಿತ್ತು , ಆದ್ದರಿಂದ ಜನರು ಜಾಗರೂಕರಾಗಿದ್ದರು, ಆದರೆ ಈಗ ಅವರು ವಿಭಿನ್ನ ರೂಪಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದರು. +ತಾಟಕ (ರಾಮಾಯಣದಲ್ಲಿ ರಾಕ್ಷಸ) ದಾಳಿ ಮಾಡಿದಾಗ ಬಹಳಷ್ಟು ಅವ್ಯವಸ್ಥೆ ಉಂಟಾಯಿತು ಆದರೆ ಲಕ್ಷ್ಮಣನ ಬಾಣದಿಂದ ಕೊಲ್ಲಲ್ಪಟ್ಟಳು,ಇನ್ನುಪೂತನಿ ರಾಕ್ಷಸಿ ಹಾಲುಣಿಸಲು ಚಿಕ್ಕಮನ ವೇಷದಲ್ಲಿ ಶಿಶು ಕೃಷ್ಣನ ಬಳಿ ಬಂದಳು ಆದರೆ ಏನಾಯಿತು. ಇಂದಿನ ಪರಿಸ್ಥಿತಿಯು ಅದೇ ಆಗಿದೆ. +ದಾಳಿಗಳು ನಡೆಯುತ್ತಿವೆ ಮತ್ತು ಅವು ಆರ್ಥಿಕ, ಆಧ್ಯಾತ್ಮಿಕ ಅಥವಾ ರಾಜಕೀಯವಾಗಿರಬಹುದು, ಎಲ್ಲಾ ರೀತಿಯಲ್ಲಿ ವಿನಾಶಕಾರಿಯಾಗಿದೆ.ಕೆಲವು ಅಂಶಗಳು ಭಾರತದ ಅಭಿವೃದ್ಧಿಯ ಹಾದಿಯಲ್ಲಿ .ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಮತ್ತು ಜಾಗತಿಕ ಮಟ್ಟದಲ್ಲಿ ಹೆದರುತ್ತಿವೆ, ಆದರೆ ಅವು ಯಶಸ್ವಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದರು. +ಭಾರತ ದೊಡ್ಡದಾದರೆ, ತಮ ವ್ಯವಹಾರಗಳು ಮುಚ್ಚಲ್ಪಡುತ್ತವೆ ಎಂದು ಭಯಪಡುವವರೆಲ್ಲರೂ, ಅಂತಹ ಅಂಶಗಳು ದೇಶದ ಅಭಿವೃದ್ಧಿಯ ಹಾದಿಯಲ್ಲಿ ಅಡಚಣೆಯನ್ನು ಸೃಷ್ಟಿಸಲು ಮತ್ತು ತಮಲ್ಲಿರುವ ಎಲ್ಲಾ ಶಕ್ತಿಯನ್ನು ಹೆಚ್ಚಿಸುವ ಮೂಲಕ ಕೆಲಸ ಮಾಡುತ್ತಿವೆ ಎಂದು ಆರ್‌ಎಸ್‌‍ಎಸ್‌‍ ಮುಖ್ಯಸ್ಥರು ಹೇಳಿದರು. +ಸೃಷಿ ್ವಆರಂಭದಲ್ಲಿ ಧರ್ಮ ಇತ್ತು ಮತ್ತು ಅದು (ಧರ್ಮ) ಕೊನೆಯವರೆಗೂ ಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತವು ಅತ್ಯಂತ ಅದೃಷ್ಟ ಮತ್ತು ಆಶೀರ್ವಾದದ ದೇಶವಾಗಿದೆ ಎಂದು ಭಾಗವತ್‌ ಒತ್ತಿ ಹೇಳಿದರು. +ಮಹಾನ್‌ ವ್ಯಕ್ತಿಗಳು ಮತ್ತು ಸಂತರ ಆಶೀರ್ವಾದ ಮತ್ತು ಪ್ರೇರಣೆಯಿಂದ ದೇಶವು ಅಜರಾಮರವಾಯಿತು, ಇದರಿಂದಾಗಿ, ನಮ ದೇಶವು ಅಲ್ಲಿ ಇಲ್ಲಿ ಸ್ವಲ್ಪ ದಾರಿ ತಪ್ಪಿದರೂ, ಅಂತಿಮವಾಗಿ ಸರಿ ದಾರಿಯಲ್ಲಿ ಬರುತ್ತಿತ್ತು. ಇದು ನಾವು ಪಡೆದ ದೈವಿಕ ವರವಾಗಿದೆ ಮತ್ತು ಅದು ದೇವರು ನಮಗೆ ಪ್ರಪಂಚದ ಜವಾಬ್ದಾರಿಗಳನ್ನು ವಹಿಸಿಕೊಟ್ಟಿರುವುದರಿಂದ ನಿರ್ದಿಷ್ಟ ಉದ್ದೇಶಕ್ಕಾಗಿ ಸ್ವೀಕರಿಸಲಾಗಿದೆ ಎಂದರು. +ಇತ್ತೀಚೆಗೆ ಸುಭಾಷ್‌ ಚಂದ್ರ ಬೋಸ್‌‍ ಅವರು ಬರೆದ ಇಂಡಿಯನ್‌ ರೆಸಿಸ್ಟೆನ್‌್ಸ ಪುಸ್ತಕವನ್ನು ನಾನು ನೋಡಿದೆ. ಕೇವಲ ಹಿಂದೂ ಧರ್ಮದ ಕಾರಣದಿಂದ ಭಾರತ ವರ್ಷವು ಒಗ್ಗಟ್ಟಾಗಿ ಉಳಿದಿದೆ ಎಂದು ಬೋಸ್‌‍ ಪುಸ್ತಕದಲ್ಲಿ ಬರೆದಿದ್ದಾರೆ ಎಂದರು. \ No newline at end of file diff --git a/eesanje/url_47_15_5.txt b/eesanje/url_47_15_5.txt new file mode 100644 index 0000000000000000000000000000000000000000..6b662ca05f49dfb42fb369127ec0a66239d51d79 --- /dev/null +++ b/eesanje/url_47_15_5.txt @@ -0,0 +1,7 @@ +ಬಾಲಕನನ್ನು ಕೊಂದು ಶವವನ್ನು ವಾಷಿಂಗ್ ಮೆಷಿನ್‌ನಲ್ಲಿ ಬಚ್ಚಿಟ್ಟ ಮಹಿಳೆ +ಚೆನ್ನೈ,ಸೆ.10– ವಿಕೃತ ಮನಸ್ಸಿನ ಮಹಿಳೆಯೊಬ್ಬರು ಪಕ್ಕದ ಮನೆಯ ಬಾಲಕನನ್ನು ಹತ್ಯೆ ಮಾಡಿ ಶವವನ್ನು ವಾಷಿಂಗ್‌ ಮೆಷಿನ್‌ನಲ್ಲಿ ಬಚ್ಚಿಟ್ಟಿದ್ದ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ರಾಧಾಪುರಂನ ಆತುಕುರಿಚಿ ಗ್ರಾಮದಲ್ಲಿ ನಡೆದಿದೆ.ಮಹಿಳೆ ಕ್ರೌರ್ಯಕ್ಕೆ ಬಲಿಯಾದ ಬಾಲಕನನ್ನು ಕಟ್ಟಡ ಕಾರ್ಮಿಕ ವಿಘ್ನೇಶ್‌ ಅವರ ಪುತ್ರ ಸಂಜಯ್‌ ಎಂದು ಗುರುತಿಸಲಾಗಿದೆ. +ತಂಗವಾಳ್‌ ಎಂಬಾಕೆ 3 ವರ್ಷದ ಬಾಲಕನನ್ನು ಹತ್ಯೆ ಮಾಡಿರುವ ಮಹಿಳೆ, ಆ ಬಾಲಕನ ತಂದೆಯೊಂದಿಗೆ ದ್ವೇಷವಿದ್ದ ಹಿನ್ನೆಲೆಯಲ್ಲಿ ಮಗುವನ್ನು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಸಂಜಯ್‌ ಬೆಳಗ್ಗೆ ಮನೆಯ ಬಳಿ ಆಟವಾಡುತ್ತಿದ್ದ, ಆದರೆ ಬಾಲಕನ ತಾಯಿ ರವ್ಯಾ ಮಗನನ್ನು ಅಂಗನವಾಡಿಗೆ ಕರೆದೊಯ್ಯಬೇಕೆಂದು ಹುಡುಕಾಡಿ ದಾಗ ಎಲ್ಲೂ ಕಾಣಿಸಿರಲಿಲ್ಲ. +ವಿಘ್ನೇಶ್‌ ರಾಧಾಪುರಂ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸ್‌‍ ಸಿಬ್ಬಂದಿ ಆತನ ಬೀದಿಯಲ್ಲಿರುವ ಮನೆಗಳಲ್ಲಿ ಬಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ. ಸಂಜಯ್‌ ಅವರ ಮತದೇಹವನ್ನು ಗೋಣಿಚೀಲದಲ್ಲಿ ಸುತ್ತಿ ತಂಗವಾಳ್‌ ಅವರ ಮನೆಯಲ್ಲಿರುವ ವಾಷಿಂಗ್‌ ಮೆಷಿನ್‌‍ನಲ್ಲಿ ಬಚ್ಚಿಟ್ಟಿದ್ದನ್ನು ಪೊಲೀಸ್‌‍ ಸಿಬ್ಬಂದಿ ಪತ್ತೆ ಮಾಡಿದ್ದಾರೆ. +ಪೊಲೀಸರು ಶವವನ್ನು ವಶಪಡಿಸಿ ಕೊಂಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸ್‌‍ ವರಿಷ್ಠಾಧಿಕಾರಿ ಎನ್‌ ಸಿಲಂಬರಸನ್‌, ಉಪ ಪೊಲೀಸ್‌‍ ವರಿಷ್ಠಾಧಿಕಾರಿ ಆರ್‌ ಯೋಗೇಶ್‌ ಕುಮಾರ್‌ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ವಿಚಾರಣೆ ನಡೆಸಿದರು. +ಪೊಲೀಸರು ತಂಗವಾಳ್‌ ಅವರನ್ನು ಬಂಧಿಸಿ ವಿಚಾರಣೆ ಆರಂಭಿಸಿದರು ಎಂದು ಮೂಲಗಳು ತಿಳಿಸಿವೆ. ವಿಘ್ನೇಶ್‌ ಮತ್ತು ತಂಗವಾಳ್‌ ನಡುವೆ ಹಿಂದಿನ ದ್ವೇಷವಿತ್ತು ಎಂದು ಮೂಲಗಳು ತಿಳಿಸಿವೆ. ಈ ದ್ವೇಷದ ಹಿನ್ನೆಲೆಯಲ್ಲಿ ತಂಗವಾಳ್‌ ಬಾಲಕನನ್ನು ಕೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. +ಈ ಕೊಲೆಯಲ್ಲಿ ಬೇರೆಯವರ ಕೈವಾಡವಿದೆಯೇ ಎಂದು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಅಪಘಾತದಲ್ಲಿ ತಂಗವಾಳ್‌ ತನ್ನ ಮಗನನ್ನು ಕಳೆದುಕೊಂಡಿದ್ದರಿಂದ ಆಕೆಯ ಮಾನಸಿಕ ಸ್ಥಿತಿ ಅಷ್ಟು ಸರಿಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. \ No newline at end of file diff --git a/eesanje/url_47_15_6.txt b/eesanje/url_47_15_6.txt new file mode 100644 index 0000000000000000000000000000000000000000..bafae3c755062b7f9541d968d4aa7d14d852b5f0 --- /dev/null +++ b/eesanje/url_47_15_6.txt @@ -0,0 +1,8 @@ +“ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಕಪ್ಪು ಚುಕ್ಕೆ” + : +ನವದೆಹಲಿ,ಸೆ.10-ಭಾರತದ ಪ್ರಜಾಪ್ರಭುತ್ವದಲ್ಲಿ ರಾಹುಲ್ ಗಾಂಧಿ ಒಬ್ಬರು ಕಪ್ಪುಚುಕ್ಕೆ ಎಂದು ಬಿಜೆಪಿ ಟೀಕಿಸಿದೆ. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಯತ್ನ ನಡೆಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವಾಗ್ದಾಳಿ ನಡೆಸಿದ್ದಾರೆ. +ರಾಹುಲ್ ಗಾಂಧಿ ಪ್ರಬುದ್ಧತೆ ಇಲ್ಲ. ಅವರೊಬ್ಬ ಅರೆಕಾಲಿಕ ನಾಯಕ ಎಂಬುದು ಎಲ್ಲರಿಗೂ ತಿಳಿದಿದೆ. ಆದರೂ, ಜನರು ಅವರಿಗೆ ವಿಪಕ್ಷ ಸ್ಥಾನದಂತಹ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಭಾರತದ ಪ್ರಜಾಪ್ರಭುತ್ವದಲ್ಲಿ ರಾಹುಲ್ ಗಾಂಧಿ ಕಪ್ಪು ಚುಕ್ಕೆ ಎಂದು ಹೇಳಲು ಬೇಸರವಾಗುತ್ತದೆ. ವಿದೇಶಕ್ಕೆ ಭೇಟಿ ನೀಡಿದಾಗ ಅವರಿಗೆ ಹೇಗೆ ಮಾತನಾಡಬೇಕು ಎಂಬುದು ಸಹ ತಿಳಿದಿಲ್ಲ ಎಂದು ಟೀಕಿಸಿದರು. +ರಾಹುಲ್ ಗಾಂಧಿ, ತಮ ಭಾಷಣದಲ್ಲಿ ಚೀನಾದ ಬಗ್ಗೆ ಒಂದೇ ಒಂದು ಶಬ್ಧವನ್ನೂ ಅವರು ಮಾತನಾಡಲಿಲ್ಲ. ಭಾರತವನ್ನು ಅವರು ದುರ್ಬಲಗೊಳಿಸಿ, ಚೀನಾದ ಪರವಾಗಿದ್ದಾರೆ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಚೀನಾದ ಜೊತೆಗೆ ಅವರ ಪಕ್ಷದ ಒಪ್ಪಂದ ಕುರಿತು ಮಾತನಾಡಿದರು. +ಆ ಒಪ್ಪಂದದ ಪರಿಣಾಮವಾಗಿ ಅವರು ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಯತ್ನ ಮಾಡಿದ್ದಾರೆ. ಚೀನಾದೊಂದಿಗೆ ಮಾಡಿಕೊಂಡಿರುವ ಆ ಒಪ್ಪಂದವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಾರ್ವಜನಿಕಗೊಳಿಸುವಂತೆ ಸವಾಲು ಹಾಕುತ್ತೇನೆ ಎಂದು ಭಾಟಿಯಾ ಹೇಳಿದ್ದಾರೆ. +ರಾಜೀವ್ ಗಾಂಧಿ ಸುಪ್ರೀಂಕೋರ್ಟ್ ತೀರ್ಪನ್ನೇ ವಜಾ ಮಾಡಿದ್ದನ್ನು ನೆನಪಿಸಿಕೊಳ್ಳಲಿ: ಬಿಜೆಪಿ ಮತ್ತು ಆರೆಸ್ಎಸ್ ಮಹಿಳೆಯರನ್ನು ಮನೆಯಲ್ಲಿಯೇ ನಿರ್ಬಂಧಿಸುವ, ಅಡುಗೆ ಮನೆಗೆ ಸೀಮಿತಗೊಳಿಸುವ ಉದ್ದೇಶ ಹೊಂದಿದೆ ಎಂಬ ಹೇಳಿಕೆ ಟೀಕಿಸಿದ ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್, ಶಾ ಬಾನು ಪ್ರಕರಣದಲ್ಲಿ ಹೇಗೆ ಸುಪ್ರೀಂ ಕೋರ್ಟ್ ವರದಿಯನ್ನು ಮಾಜಿ ಪ್ರಧಾನಿ ರಾಹುಲ್ ಗಾಂಧಿ ವಜಾ ಮಾಡಿದರು ಎಂಬುದನ್ನು ನೆನಪಿಸಿಕೊಳ್ಳುವಂತೆ ತಿಳಿಸಿದರು. +ಆರೆಸ್ಎಸ್ ಪಾತ್ರ ತಿಳಿಯಬೇಕಾದರೆ, ಇತಿಹಾಸದ ಪುಟ ತಿರುವಿ ಹಾಕಬೇಕು. ಇದನ್ನು ತಿಳಿಯಲು ರಾಹುಲ್ ಗಾಂಧಿಗೆ ಹಲವು ವರ್ಷಗಳೇ ಬೇಕಾಗಬಹುದು. ರಾಹುಲ್ ಭಾರತವನ್ನು ಅವಮಾನ ಮಾಡಲು ವಿದೇಶಕ್ಕೆ ಪ್ರಯಾಣಿಸಿದಂತೆ ಕಾಣುತ್ತದೆ ಎಂದು ಟೀಕಿಸಿದರು.ಟೆಕ್ಸಾಸ್ನಲ್ಲಿ ಭಾರತೀಯ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ, ಭಾರತ ರಾಜಕೀಯದಲ್ಲಿ ಪ್ರೀತಿ, ಗೌರವ, ನಮ್ರತೆ ಕಣರೆಯಾಗಿದೆ ಎಂದು ಟೀಕಿಸಿದ್ದರು. ಅಷ್ಟೇ ಅಲ್ಲ ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದ್ದರು. \ No newline at end of file diff --git a/eesanje/url_47_15_7.txt b/eesanje/url_47_15_7.txt new file mode 100644 index 0000000000000000000000000000000000000000..9030a70a1f7b40b3ca8d03d6adc4fed12bba39a3 --- /dev/null +++ b/eesanje/url_47_15_7.txt @@ -0,0 +1,6 @@ +ಸಿಮೆಂಟ್‌ ಬ್ಲಾಕ್‌ಗಳನ್ನು ಗೂಡ್ಸ್ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ + ' , +ಜೈಪುರ, ಸೆ 10 (ಪಿಟಿಐ)ರಾಜಸ್ಥಾನದ ಅಜೀರ್‌ ಜಿಲ್ಲೆಯಲ್ಲಿ ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕುವ ಮೂಲಕ ಲೋಡ್‌ ಆಗಿರುವ ಸರಕು ರೈಲನ್ನು ಹಳಿತಪ್ಪಿಸಲು ಪ್ರಯತ್ನಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. +ಗೂಡ್‌್ಸ ರೈಲು ಬ್ಲಾಕ್‌ಗಳಿಗೆ ಅಪ್ಪಳಿಸಿತು, ಒಂದೊಂದು ಇಟ್ಟಿಗೆ ತಲಾ 70 ಕೆಜಿ ತೂಕವಿತ್ತು, ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಕೆಲವು ದುಷ್ಕರ್ಮಿಗಳು ಮೀಸಲಾದ ಸರಕು ಸಾಗಣೆ ಕಾರಿಡಾರ್‌ನಲ್ಲಿ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು ಹಾಕಿದರು. ಸರಕು ರೈಲು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಫುಲೇರಾ-ಅಹಮದಾಬಾದ್‌ ಸ್ಟ್ರೆಚ್‌ನಲ್ಲಿರುವ ವೆಸ್ಟರ್ನ್‌ ಡೆಡಿಕೇಟೆಡ್‌ ಫ್ರೈಟ್‌ ಕಾರಿಡಾರ್‌ನ ಸರಧ್ನಾ ಮತ್ತು ಬಂಗಾಡ್‌ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ.ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸರಕು ಸಾಗಣೆ ಕಾರಿಡಾರ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಭಿವಾನಿ-ಪ್ರಯಾಗರಾಜ್‌ ಕಾಳಿಂದಿ ಎಕ್ಸ್ ಪ್ರೆಸ್‌‍ ಹಳಿತಪ್ಪಿಸುವ ಪ್ರಯತ್ನದ ಒಂದು ದಿನದ ನಂತರ ಈ ವರದಿ ಬಂದಿದೆಕಾನ್ಪುರದಲ್ಲಿ ಎಲ್‌ಪಿಜಿ ಸಿಲಿಂಡರ್‌ ಅನ್ನು ಟ್ರ್ಯಾಕ್‌ಗಳ ಮೇಲೆ ಇರಿಸುವ ಮೂಲಕ ರೈಲು ಹಳಿ ತಪ್ಪಿಸುವ ಪ್ರಯತ್ನ ನಡೆಸಲಾಗಿತ್ತು. \ No newline at end of file diff --git a/eesanje/url_47_15_8.txt b/eesanje/url_47_15_8.txt new file mode 100644 index 0000000000000000000000000000000000000000..0878c27e72e4e92041f3aa5c72f0084bf61540e3 --- /dev/null +++ b/eesanje/url_47_15_8.txt @@ -0,0 +1,9 @@ +ರಾಜಕೀಯದಲ್ಲಿ ನಿವೃತ್ತಿ ಇರಬಾರದು : ಮಲ್ಲಿಕಾರ್ಜುನ ಖರ್ಗೆ + : +ನವದೆಹಲಿ, ಸೆ.10 (ಪಿಟಿಐ) –ರಾಜಕೀಯದಲ್ಲಿ ನಿವತ್ತಿ ವಯಸ್ಸು ಇರಬಾರದು, ಸೈದ್ಧಾಂತಿಕ ದಢತೆ ಇರುವವರು ತಮ್ಮ ಕೊನೆಯ ಉಸಿರು ಇರುವವರೆಗೂ ಜನರು ಮತ್ತು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. +ಪತ್ರಕರ್ತ-ಲೇಖಕ ರಶೀದ್‌ ಕಿದ್ವಾಯಿ ಬರೆದ ಕಾಂಗ್ರೆಸ್‌‍ ಹಿರಿಯ ನಾಯಕ ಸುಶೀಲ್‌ ಕುಮಾರ್‌ ಶಿಂಧೆ ಅವರ ರಾಜಕೀಯದಲ್ಲಿ ಐದು ದಶಕಗಳ ಆತಚರಿತ್ರೆಯ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. +ಕಾಂಗ್ರೆಸ್‌‍ ಪಕ್ಷವನ್ನು ಬಲಪಡಿಸುವಲ್ಲಿ ಮತ್ತು ಅದರ ಸಿದ್ಧಾಂತವನ್ನು ಜನಸಾಮಾನ್ಯರಲ್ಲಿ ಮತ್ತಷ್ಟು ಹರಡುವಲ್ಲಿ ಇನ್ನೂ ನಿರ್ಣಾಯಕ ಪಾತ್ರ ವಹಿಸಬೇಕಾಗಿರುವುದರಿಂದ ಶಿಂಧೆ ಅವರು 83 ನೇ ವಯಸ್ಸಿನಲ್ಲಿ ತಮನ್ನು ನಿವತ್ತ ವ್ಯಕ್ತಿ ಎಂದು ನೋಡಬಾರದು ಎಂದು ಖರ್ಗೆ ಹೇಳಿದರು. +ನಿಮಗೆ 82-83 ವರ್ಷ ಇರಬಹದು ಮೊರಾರ್ಜಿ ದೇಸಾಯಿ ಅವರನ್ನು ನೋಡಿ. ಯಾರೂ ರಾಜಕೀಯದಲ್ಲಿ ನಿವತ್ತಿ ಹೊಂದಬಾರದು ಎಂದು ನಾನು ನಂಬುತ್ತೇನೆ. ಅವರ ಸಿದ್ಧಾಂತದಲ್ಲಿ ನಂಬಿಕೆ ಇರುವವರು, ದೇಶ ಸೇವೆ ಮಾಡಲು ಬಯಸುತ್ತಾರೆ, ಅವರ ಸಮುದಾಯಕ್ಕೆ ಸೇವೆ ಸಲ್ಲಿಸಲು ಬಯಸುತ್ತಾರೆ, ಆಗ ನೀವು ನಿಮ ತನಕ ಕೆಲಸ ಮಾಡಬೇಕು. ಕೊನೆಯ ಉಸಿರು ಇರುವವರೆಗೂ ಸೇವೆ ಮಾಡಬೇಕು ಎಂದರು. +ಅದ್ಯಾವುದೂ ಮಂತ್ರಿಗಿರಿ ಅಥವಾ ಇತರ ಬೆಲೆಬಾಳುವ ಸ್ಥಾನಗಳನ್ನು ಬಯಸಿ ಮಾಡಬಾರದು, ಆದರೆ ದೇಶದ ಜನರಿಗೆ ಮತ್ತು ವ್ಯಕ್ತಿಯನ್ನು ಬೆಳೆಸಿದ ರಾಜಕೀಯ ಪಕ್ಷಕ್ಕೆ ರಿಟರ್ನ್‌ ಉಡುಗೊರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಸ್ಪಷ್ಟಪಡಿಸಿದರು. +ಯಾರು ತಮ ಜೀವನದಲ್ಲಿ ಏನನ್ನು ಕಲಿತಿದ್ದಾರೆ ಅಥವಾ ಒಬ್ಬರು ಏನನ್ನು ಸಾಧಿಸಿದ್ದಾರೆ, ಅಂತಿಮವಾಗಿ ನೀವು ಅದನ್ನು ಜನರಿಗೆ ಹಿಂದಿರುಗಿಸಬೇಕು ಎಂದು ಅವರು ಹೇಳಿದರು, ಶಿಂಧೆ ಅವರು ತಮ ಐದು ದಶಕಗಳ ಅವಧಿಯಲ್ಲಿ ಇಷ್ಟು ಸಾಧಿಸಿದ ಪಕ್ಷಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. +2003 ರಿಂದ 2004 ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುವುದನ್ನು ಹೊರತುಪಡಿಸಿ, ಶಿಂಧೆ ಅವರು 2004-2006 ರವರೆಗೆ ಆಂಧ್ರಪ್ರದೇಶದ ರಾಜ್ಯಪಾಲರು ಮತ್ತು 2012-2014 ರವರೆಗೆ ಕೇಂದ್ರ ಗಹ ಸಚಿವರೂ ಸೇರಿದಂತೆ ದೇಶದ ಕೆಲವು ಉನ್ನತ ಹ್ದುೆಗಳನ್ನು ಅಲಂಕರಿಸಿದ್ದಾರೆ. ಅವರು 2002 ರಲ್ಲಿ ಯುಪಿಎ ಉಪಾಧ್ಯಕ್ಷ ಅಭ್ಯರ್ಥಿಯಾಗಿದ್ದರು ಮತ್ತು ಪಕ್ಷದಲ್ಲಿ ಅವರು ಅಖಿಲ ಭಾರತ ಕಾಂಗ್ರೆಸ್‌‍ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. \ No newline at end of file diff --git a/eesanje/url_47_15_9.txt b/eesanje/url_47_15_9.txt new file mode 100644 index 0000000000000000000000000000000000000000..86a2a7d85ef4cc0dce3e85d0e7f487a31537b8cd --- /dev/null +++ b/eesanje/url_47_15_9.txt @@ -0,0 +1,9 @@ +ನನ್ನನ್ನು ಸಿಬಿಐ ದಾಳಿಗೆ ಸಿಲುಕಿಸಲು ಫಡ್ನವಿಸ್‌‍ ಸಂಚು : ಅನಿಲ್‌ ದೇಶ್‌ಮುಖ್‌ +" ... ": - +ನಾಗ್ಪುರ, ಸೆ 10 (ಪಿಟಿಐ)ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ (ಎಸ್‌‍ಪಿ) ನಾಯಕ ಅನಿಲ್‌ ದೇಶ್‌ಮುಖ್‌ ಅವರು ರಾಜ್ಯದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌‍ ಅವರು ನನ್ನನ್ನು ಕೇಂದ್ರ ಏಜೆನ್ಸಿಗಳ ಸಹಾಯದಿಂದ ಬಂಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. +ಎಕ್‌್ಸನಲ್ಲಿನ ಪೋಸ್ಟ್‌ನಲ್ಲಿ, ನಾಲ್ಕು ವರ್ಷಗಳ ಹಿಂದಿನ ಘಟನೆಯಲ್ಲಿ ಬಿಜೆಪಿ ನಾಯಕ ಫಡ್ನವಿಸ್‌‍ ಅವರ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ದೇಶಮುಖ್‌ ಹೇಳಿದ್ದಾರೆ. +ನಾಲ್ಕು ವರ್ಷಗಳ ಹಿಂದೆ ನಾನು ಮಹಾರಾಷ್ಟ್ರದ ಗಹ ಸಚಿವನಾಗಿದ್ದಾಗ ಬಿಜೆಪಿ ಮುಖಂಡ ಗಿರೀಶ್‌ ಮಹಾಜನ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಲಗಾಂವ್‌ ಪೊಲೀಸ್‌‍ ಅಧಿಕಾರಿಯೊಬ್ಬರಿಗೆ ಒತ್ತಡ ಹೇರ್ದೆಿ ಎಂದು ಆರೋಪಿಸಲಾಗಿದೆ. +ನನ್ನ ಮಾಹಿತಿಯ ಪ್ರಕಾರ, ದೇವೇಂದ್ರ ಫಡ್ನವೀಸ್‌‍ ನನ್ನ ಮೇಲೆ ದಾಳಿ ನಡೆಸಿ ನನ್ನನ್ನು ಬಂಧಿಸಲು ಪ್ರಯತ್ನಿಸುತ್ತಿದ್ದಾರೆ. ದೆಹಲಿ (ಕೇಂದ್ರ) ಮತ್ತು ಇಡಿ-ಸಿಬಿಐ ಸಹಾಯದಿಂದ ಮಹಾರಾಷ್ಟ್ರ ರಾಜಕೀಯವನ್ನು ಅತ್ಯಂತ ಕೆಳಮಟ್ಟಕ್ಕೆ ತಂದಿರುವ ದೇವೇಂದ್ರ ಫಡ್ನವಿಸ್‌‍ ಅವರಿಗೆ ನಾನು ಹೇಳಲು ಬುದ್ದಿ ಕಲಿಸುತ್ತೇನೆ ಎಂದಿದ್ದಾರೆ. +2020 ರಲ್ಲಿ ರಾಜ್ಯದ ಬಿಜೆಪಿ ನಾಯಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಸಂಚು ರೂಪಿಸಿದ ಆರೋಪದ ಮೇಲೆ ಸಿಬಿಐ ದೇಶಮುಖ್‌ ಅವರು ಅಂದಿನ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಪ್ರವೀಣ್‌ ಪಂಡಿತ್‌ ಚವಾಣ್‌ ಮತ್ತು ಇಬ್ಬರು ಪೊಲೀಸ್‌‍ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ಅಧಿಕಾರಿಗಳು ಕಳೆದ ವಾರ ತಿಳಿಸಿದ್ದಾರೆ. +2020 ರಲ್ಲಿ ವಿರೋಧ ಪಕ್ಷದಲ್ಲಿದ್ದ ಫಡ್ನವಿಸ್‌‍ ಅವರು ಅಂದಿನ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ಹಸ್ತಾಂತರಿಸಿದ ಪೆನ್‌ ಡ್ರೈವ್‌ನಿಂದ ಹುಟ್ಟಿಕೊಂಡ ಎರಡು ವರ್ಷಗಳ ಪ್ರಾಥಮಿಕ ವಿಚಾರಣೆಯ ನಂತರ ಸಿಬಿಐ ಈ ಪ್ರಕರಣವನ್ನು ದಾಖಲಿಸಿದೆ ಎಂದು ಅವರು ಹೇಳಿದರು. +ಜಲಗಾಂವ್‌ ಜಿಲ್ಲಾ ಮರಾಠಾ ವಿದ್ಯಾ ಪ್ರಸಾರಕ ಸಹಕಾರಿ ಸಮಾಜದ ಟ್ರಸ್ಟಿ ಮತ್ತು ವಕೀಲ ವಿಜಯ್‌ ಪಾಟೀಲ್‌ ಮತ್ತು ಆಗಿನ ಗಹ ಸಚಿವ ದೇಶಮುಖ್‌ ಅವರೊಂದಿಗೆ ಈಗ ಸಚಿವರಾಗಿರುವ ಬಿಜೆಪಿ ನಾಯಕ ಮಹಾಜನ್‌ ಅವರನ್ನು ಬಂಧಿಸಲು ಚವಾಣ್‌ ಪಿತೂರಿ ನಡೆಸಿದ್ದರು ಎಂದು ತೋರಿಸುವ ಪೆನ್‌ ಡ್ರೈವ್‌ ಬಾಂಬ್‌‍ ವೀಡಿಯೊಗಳನ್ನು ಒಳಗೊಂಡಿದೆ. \ No newline at end of file diff --git a/eesanje/url_47_160_1.txt b/eesanje/url_47_160_1.txt new file mode 100644 index 0000000000000000000000000000000000000000..c89dfd1fe7792d373151e69f33b9f92c26bea443 --- /dev/null +++ b/eesanje/url_47_160_1.txt @@ -0,0 +1,9 @@ +ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ : ಅಮಿತ್ ಷಾ +ನವದೆಹಲಿ,ಫೆ.18- ದೇಶದ ಜನ ನರೇಂದ್ರ ಮೋದಿಯವರನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಹೀಗಾಗಿ ಮರಳಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೇಂದ್ರ ಗೃಹಸಚಿವ ಅಮಿತ್ ಷಾ ಹೇಳಿದ್ದಾರೆ.ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಸಮಾವೇಶ-2024 ರಲ್ಲಿ ಮಾತನಾಡಿದ ಅವರು, 75 ವರ್ಷಗಳ ಸ್ವಾತಂತ್ರ್ಯದ ಅವಧಿಯಲ್ಲಿ ದೇಶ 17 ಲೋಕಸಭೆ ಚುನಾವಣೆಗಳನ್ನು ಕಂಡಿದೆ. 22 ಸರ್ಕಾರಗಳು, 15 ಪ್ರಧಾನಮಂತ್ರಿಗಳು ದೇಶವನ್ನಾಳಿದ್ದಾರೆ. +ಪ್ರತಿಯೊಂದು ಸರ್ಕಾರವು ದೇಶದ ಅಭಿವೃದ್ಧಿಗೆ ತನ್ನದೇ ಆದ ಪ್ರಯತ್ನ ಮಾಡಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಒಟ್ಟಾರೆ ಅಭಿವೃದ್ಧಿ ಕಂಡಿದೆ ಎಂದು ಯಾವುದೇ ಗೊಂದಲಗಳಿಲ್ಲದೆ ಹೇಳಬಲ್ಲೆ ಎಂದರು.ಪ್ರತಿಯೊಂದು ಕ್ಷೇತ್ರ, ಪ್ರತಿ ವ್ಯಕ್ತಿಯ ಅಭಿವೃದ್ಧಿ ಕಳೆದ 10 ವರ್ಷಗಳಲ್ಲಿ ಸಹಕಾರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಸುರಕ್ಷಿತವಾಗಿದೆ. 60 ಕೋಟಿ ಬಡವರು ಬಡತನದಿಂದ ಮುಕ್ತಿ ಪಡೆದಿದ್ದಾರೆ ಎಂದು ತಿಳಿಸಿದರು. +2014 ರವರೆಗೂ ಬಡತನ ನಿರ್ಮೂಲನೆ ಬಗ್ಗೆ ಮಾತುಗಳನ್ನಾಡುತ್ತಿದ್ದರು. ಪ್ರತಿಯೊಬ್ಬ ಭಾರತೀಯನಿಗೂ ಪ್ರಜಾಪ್ರಭುತ್ವದಲ್ಲಿ ತನ್ನ ಪಾತ್ರ ಏನು ಮತ್ತು ನನಗೆ ಸಿಕ್ಕಿದ್ದೇನು ಎಂಬ ಗೊಂದಲಗಳಿದ್ದವು. ಆದರೆ ಮೋದಿ ಸರ್ಕಾರ 60 ಕೋಟಿ ಜನರಿಗೆ ಮನೆ ಕಟ್ಟಿಸಿಕೊಟ್ಟಿದೆ. ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಿದೆ. ಶೌಚಾಲಯ ನಿರ್ಮಿಸಿದೆ. ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿದೆ. ವಿದ್ಯುತ್ ಪೂರೈಸಿದೆ. 80 ಕೋಟಿಗೂ ಹೆಚ್ಚು ಬಡವರಿಗೆ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ನೀಡಿದೆ. 5 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆಯ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು. +ಅಭಿವೃದ್ಧಿಯನ್ನು ಒಪ್ಪಿಕೊಂಡಿರುವ ಜನ ಮುಂದಿನ 5 ವರ್ಷಗಳಲ್ಲಿ ಬಿಜೆಪಿ ಕೈಗೆ ಅಧಿಕಾರ ನೀಡುವುದು ಹಾಗೂ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ನಿರ್ಧಾರ ಮಾಡಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಹಬ್ಬವಾಗಿ ಸಂಭ್ರಮಿಸಲ್ಪಟ್ಟಿದೆ. ಇದು ಹೊಸ ಯುಗದ ಉದಯಕ್ಕೆ ಕಾರಣವಾಗಿದೆ. 2019 ರ ನವೆಂಬರ್ 9 ರಂದು ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಬಿಜೆಪಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟುವ ನಿರ್ಧಾರ ಕೈಗೊಂಡಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಶ್ರೀ ರಾಮನಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅನ್ನು ರಚಿಸಿದರು. +ನಿರ್ಮಾಣ ಕಾರ್ಯ ಅತ್ಯಂತ ವೇಗವಾಗಿ ನಡೆದು 4 ವರ್ಷಗಳಲ್ಲೇ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಜನವರಿ 22 ರಂದು ನಡೆಯಿತು ಎಂದು ಹೇಳಿದರು. ಶ್ರೀರಾಮಮಂದಿರದ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಸಮಾವೇಶದಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕರು ಜೈ ಶ್ರೀರಾಮ್ ಘೋಷಣೆ ಮೊಳಗಿಸಿದರು.ದೇಶಾದ್ಯಂತ ಜೈ ಶ್ರೀರಾಮ್ ಮಧುರವಾಣಿಯನ್ನು ನಾವು ಕೇಳುವಂತಾಗಿದೆ. ಇದು ಭಾರತೀಯರ ಹೆಮ್ಮೆಯ ಸಂಗತಿ ಎಂದು ಜೆ.ಪಿ.ನಡ್ಡಾ ಪ್ರಶಂಸೆ ವ್ಯಕ್ತಪಡಿಸಿದರು. +ಆಚಾರ್ಯ ಶ್ರೀ 108 ವಿದ್ಯಸಾಗರ್‍ಜಿ ಮಹಾರಾಜ್ ನಿಧನಕ್ಕೆ ಸಮಾವೇಶದಲ್ಲಿ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪ್ರಧಾನಿಯಾಗಿ 10 ವರ್ಷ ಯಶಸ್ವಿಯಾಗಿ ಆಡಳಿತ ನಡೆಸಿದ ನರೇಂದ್ರ ಮೋದಿಯವರನ್ನು ಬಿಜೆಪಿ ಕಾರ್ಯಕರ್ತರು ಸಮಾವೇಶದಲ್ಲಿ ಸನ್ಮಾನಿಸಿದರು. +ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರು, ಬಿಜೆಪಿ ಆಡಳಿತದ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ವಿರೋಧ ಪಕ್ಷದ ನಾಯಕರು, ಕೇಂದ್ರ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು. ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ನಾಯಕಿ ರೀಟಾ ಬಹುಗುಣ ಜೋಷಿ, ರಾಹುಲ್‍ಗಾಂಧಿ ಯಾತ್ರೆ ಯಾವುದೇ ಪರಿಣಾಮ ಬೀರುವುದಿಲ್ಲ. ಅವರನ್ನು ಗಂಭೀರ ರಾಜಕಾರಣಿ ಎಂದು ಪರಿಗಣಿಸುವುದಿಲ್ಲ. ಇಡೀ ದೇಶವೇ ಮೋದಿಮಯವಾಗಿದೆ. ಬಿಜೆಪಿ 400 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಉತ್ತರಪ್ರದೇಶದಲ್ಲಿ 80 ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದರು. +ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‍ನ ಕಮಲ್‍ನಾಥ್‍ರವರು ಕಾಂಗ್ರೆಸ್‍ನಲ್ಲಿ ನೋವುಂಡಿದ್ದಾರೆ. ಅದನ್ನು ನಾವು ಅವರ ಮಾತುಗಳಲ್ಲಿ ಕೇಳಿದ್ದೇವೆ. ಮಧ್ಯಪ್ರದೇಶ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಬಿಜೆಪಿಗೆ ಯಾರೇ ಬಂದರೂ ಮುಕ್ತ ಸ್ವಾಗತವಿದೆ ಎಂದು ರೀಟಾ ಬಹುಗುಣ ಜೋಷಿ ಹೇಳಿದರು. \ No newline at end of file diff --git a/eesanje/url_47_160_10.txt b/eesanje/url_47_160_10.txt new file mode 100644 index 0000000000000000000000000000000000000000..6a1591f553663aaa8ac996dbd29b0c99e894ebff --- /dev/null +++ b/eesanje/url_47_160_10.txt @@ -0,0 +1,6 @@ +ರಾಷ್ಟ್ರ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದ್ದು : ಚಂದ್ರಚೂಡ್ +ಪ್ರಯಾಗರಾಜ್,ಫೆ.17- ಅಲಹಾಬಾದ್ ಶತಮಾನಗಳಿಂದ ಜ್ಞಾನ ಮತ್ತು ವಿಚಾರ ವಿನಿಮಯ ಕೇಂದ್ರವಾಗಿ ಉಳಿದಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಪ್ರಯಾಗರಾಜ್‍ನಲ್ಲಿ ಡಾ ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣ ಮತ್ತು ನ್ಯಾಯದಲ್ಲಿ ವಕೀಲರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದಿದ್ದಾರೆ. +ಅಲಹಾಬಾದ್ ಶತಮಾನಗಳಿಂದ ಜ್ಞಾನ ಮತ್ತು ವಿಚಾರಗಳ ವಿನಿಮಯ ಕೇಂದ್ರವಾಗಿ ಉಳಿದಿದೆ. ಪೂರ್ವದ ಆಕ್ಸ್‍ಫರ್ಡ್ ಎಂದು ಪರಿಗಣಿಸಲಾದ ಅಲಹಾಬಾದ್ ವಿಶ್ವವಿದ್ಯಾಲಯವು ಕಳೆದ 137 ವರ್ಷಗಳಿಂದ ಜ್ಞಾನದ ದಾರಿದೀಪವಾಗಿ ಉಳಿದಿದೆ. ವಕೀಲರು ರಾಷ್ಟ್ರ ನಿರ್ಮಾಣಕ್ಕೆ ಗಣನೀಯ ಕೊಡುಗೆ ನೀಡಿದ್ದಾರೆ. ರಾಷ್ಟ್ರ ನಿರ್ಮಾಣದ ವ್ಯಾಪಕ ಪ್ರಕ್ರಿಯೆಯಲ್ಲಿ ವಕೀಲರು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಎಂದು ಅವರು ಹೇಳಿದರು. +ಕೋಟಿ ಹಣಕ್ಕೆ ಅಪಹರಣ ನಾಟಕ : ಕಾರು ಚಾಲಕ, ರೌಡಿಗಳು ಸೇರಿ ಐವರ ಸೆರೆ +ವಕೀಲರು ಸಮಾಜದಲ್ಲಿ ನಿರ್ಣಾಯಕ ಮತ್ತು ಬಹುಮುಖಿ ಪಾತ್ರವನ್ನು ವಹಿಸುತ್ತಾರೆ, ಕಾನೂನು ವ್ಯವಸ್ಥೆಗಳ ಕಾರ್ಯನಿರ್ವಹಣೆಗೆ ಕೊಡುಗೆ ನೀಡುತ್ತಾರೆ ಮತ್ತು ನ್ಯಾಯವನ್ನು ಉತ್ತೇಜಿಸುತ್ತಾರೆ. ಅವರು ತಮ್ಮ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುವ ವ್ಯಕ್ತಿಗಳು ಮತ್ತು ಘಟಕಗಳನ್ನು ಪ್ರತಿನಿಧಿಸುತ್ತಾರೆ ಎಂದು ಅವರು ಹೇಳಿದರು. +ಏತನ್ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತಮ ಆಡಳಿತಕ್ಕೆ ಕಾನೂನಿನ ನಿಯಮವು ಮೂಲಭೂತವಾಗಿದೆ ಎಂದು ಹೇಳಿದರು. ಭಾರತದ ಪ್ರಜಾಪ್ರಭುತ್ವದ ಎಲ್ಲಾ ಸ್ತಂಭಗಳನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲರೂ ಯಾವಾಗಲೂ ಶ್ರಮಿಸಬೇಕು ಎಂದು ಅವರು ಹೇಳಿದರು. ಇದಲ್ಲದೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಜಾಪ್ರಭುತ್ವದಲ್ಲಿ ಸಂವಾದದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು, ಕುಂದುಕೊರತೆಗಳನ್ನು ಹೊಂದಿರುವ ವ್ಯಕ್ತಿಗಳು ತಮ್ಮ ಕಳವಳಗಳನ್ನು ನೇರವಾಗಿ ಸರ್ಕಾರಕ್ಕೆ ತಿಳಿಸಲು ವಿವಿಧ ಮಾರ್ಗಗಳನ್ನು ಹೊಂದಿದ್ದಾರೆ ಎಂದು ವಿವರಿಸಿದರು. \ No newline at end of file diff --git a/eesanje/url_47_160_11.txt b/eesanje/url_47_160_11.txt new file mode 100644 index 0000000000000000000000000000000000000000..20e7dd9c4958326932ba7b7fd54f9ffe706bedff --- /dev/null +++ b/eesanje/url_47_160_11.txt @@ -0,0 +1,4 @@ +ವಿದೇಶಿ ಪ್ರಜೆ ಬಂಧನ : 3.37 ಕೋಟಿ ಮೌಲ್ಯದ ಡ್ರಗ್ಸ್ ವಶ +ಮುಂಬೈ,ಫೆ.17- ಇಲ್ಲಿನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಅಧಿಕಾರಿಗಳು ಮುಂಬೈನ ಜುಹು ಪ್ರದೇಶದಲ್ಲಿ 3.37 ಕೋಟಿ ಮೌಲ್ಯದ ಎಂಡಿಎಂಎ (ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ) ಹೊಂದಿರುವ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಜುಹು ತಾರಾ ರಸ್ತೆಯಲ್ಲಿರುವ ಪಂಚತಾರಾ ಹೋಟೆಲ್ ಬಳಿ ವಿದೇಶಿ ಪ್ರಜೆ ಎಗ್ವೆ ಜಾನ್‍ನನ್ನು ಬಂಧಿಸಲಾಗಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ. +ಎಗ್ವೆ ಜಾನ್‍ನನ್ನು 3.37 ಕೋಟಿ ಮೌಲ್ಯದ ಎಂಡಿಎಂಎಯೊಂದಿಗೆ ಬಂಧಿಸಲಾಗಿದ್ದು, ಆತನ ಸಹಚರ ಪರಾರಿಯಾಗಿದ್ದಾನೆ. ಬಂಧನದ ವೇಳೆ ಆತನ ಬಳಿ ಎರಡು ಕಿಲೋಗ್ರಾಂಗಳಷ್ಟು ಮಾದಕ ದ್ರವ್ಯ ಪತ್ತೆಯಾಗಿದ್ದು, ಪಕ್ಕದ ಪಾಲ್ಘರ್‍ನ ನಲಸೋಪಾರಾದಲ್ಲಿರುವ ಆತನ ಸಹಚರನ ಮನೆಯಿಂದ 250 ಗ್ರಾಂ ವಶಪಡಿಸಿಕೊಳ್ಳಲಾಗಿದೆ. +ನಾರ್ಕೋಟಿಕ್ ಡ್ರಗ್ಸ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. \ No newline at end of file diff --git a/eesanje/url_47_160_12.txt b/eesanje/url_47_160_12.txt new file mode 100644 index 0000000000000000000000000000000000000000..f523dc8f7e7228d45e5ece08f755f113776fb254 --- /dev/null +++ b/eesanje/url_47_160_12.txt @@ -0,0 +1,6 @@ +ರಾಹುಲ್ ನ್ಯಾಯಯಾತ್ರೆಯಲ್ಲಿ ತೇಜಸ್ವಿಯಾದವ್ +ಸಸಾರಾಮ್, ಫೆ 16 (ಪಿಟಿಐ) ಇಂದಿನಿಂದ ಬಿಹಾರದ ಸಸಾರಾಮ್ ಜಿಲ್ಲೆಯಿಂದ ಪುನರಾರಂಭಗೊಂಡಿರುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಆರ್‍ಜೆಡಿ ನಾಯಕ ತೇಜಸ್ವಿ ಯಾದವ್ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಸಂಸದರಾಗಿರುವ ಗಾಂಧಿ ಅವರು ಇಂದು ಬೆಳಗ್ಗೆ ಪಕ್ಷದ ಜಿಲ್ಲೆ ಕಚೇರಿಯಿಂದ ತಮ್ಮ ಯಾತ್ರೆಯನ್ನು ಆರಂಭಿಸಿದ್ದು, ಸಂಜೆ ಕೈಮೂರ್ ಜಿಲ್ಲೆಯ ಮೊಹಾನಿಯಾ ಮೂಲಕ ಉತ್ತರ ಪ್ರದೇಶವನ್ನು ಪ್ರವೇಶಿಸುವ ನಿರೀಕ್ಷೆಯಿದೆ. +ನಿಧಾನವಾಗಿ ಚಲಿಸುತ್ತಿದ್ದ ಸ್ಪೋಟ್ರ್ಸ್ ಯುಟಿಲಿಟಿ ವಾಹನದ ಛಾವಣಿಯ ಮೇಲೆ ಯಾದವ್ ಮತ್ತು ಗಾಂಧಿ ಕುಳಿತಿರುವುದು ಕಂಡುಬಂದಿತು ಮತ್ತು ಅವರು ಪಟ್ಟಣದ ಮುಖ್ಯ ರಸ್ತೆಯ ಉದ್ದಕ್ಕೂ ನೆರೆದಿದ್ದ ಉತ್ಸಾಹಭರಿತ ಜನರತ್ತ ಕೈ ಬೀಸಿದರು. ಸ್ಥಳೀಯರು ರಸ್ತೆಯ ಇಕ್ಕೆಲಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮೆರವಣಿಗೆ ವೀಕ್ಷಿಸಿದರು. +ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ, ಪ್ರತಿಭಟನಾನಿರತ ರೈತರ ಬೆಂಬಲಕ್ಕೆ ನಿಂತ ಗಾಂಧಿ, ಸಾಗುವಳಿದಾರರನ್ನು ದೇಶದ ಗಡಿಯಲ್ಲಿ ಹೋರಾಡುವ ಸೈನಿಕರಿಗೆ ಹೋಲಿಸಿದರು.ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಸಾಲ ಮನ್ನಾ ಸೇರಿದಂತೆ ತಮ್ಮ ಬೇಡಿಕೆಗಳಿಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಕಾಂಗ್ರೆಸ್ ನಾಯಕರು ಉಲ್ಲೇಖಿಸಿದರು. +ಪಾಕಿಸ್ತಾನಿ ಕ್ವಾಡ್‌ಕಾಪ್ಟರ್‌ಗಳ ಮೇಲೆ ಬಿಎಸ್ಎಫ್ ಗುಂಡಿನ ದಾಳಿ +ಜನವರಿ 14 ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೇಗಳ ಮೂಲಕ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_47_160_2.txt b/eesanje/url_47_160_2.txt new file mode 100644 index 0000000000000000000000000000000000000000..481b84751492ed4baf359a76696eca19f8bf5abb --- /dev/null +++ b/eesanje/url_47_160_2.txt @@ -0,0 +1,5 @@ +ಯಾವುದೇ ಕಂಪನಿಯಾದರೂ ದೇಶದ ಕಾನೂನಿಗೆ ಬದ್ಧವಾಗಿರಬೇಕು : ರಾಜೀವ್ ಚಂದ್ರಶೇಖರ್ +ದೆಹಲಿ, ಫೆ.18- ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲಿನ ರಿಸರ್ವ್ ಬ್ಯಾಂಕಿನ ನಿಯಂತ್ರಣ ಕ್ರಮವು ಫಿನ್‍ಟೆಕ್ ಸಂಸ್ಥೆಗಳು ಕಾನೂನುಗಳನ್ನು ಅನುಸರಿಸುವ ಪ್ರಾಮುಖ್ಯತೆಯನ್ನು ಪ್ರತಿಪಾದಿಸಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವರಾಗಿರುವ ಚಂದ್ರಶೇಖರ್ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಮಸ್ಯೆಯು ಎಚ್ಚರಿಕೆಯ ಗಂಟೆಯಾಗಿದೆ. +ಕಾನೂನು ಮೀರಿದ ಕ್ರಮಗಳಿಂದ ಯಾವುದೇ ಕಂಪನಿಯಾದರೂ ಅಂತರ ಕಾಯ್ದುಕೊಳ್ಳಬೇಕು. ಅದು ಭಾರತ ಅಥವಾ ವಿದೇಶದ ಕಂಪೆನಿಯಾದರೂ ಸರಿ, ದೊಡ್ಡದಾಗಿರಲಿ ಅಥವಾ ಚಿಕ್ಕದಾಗಿರಲಿ, ದೇಶದ ಕಾನೂನಿಗೆ ಬದ್ಧವಾಗಿರಬೇಕು ಎಂದು ಪ್ರತಿಪಾದಿಸಿದರು. +ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಚ್ 15 ರಿಂದ ಪೇ ಟಿಎಂ ಹೊಸ ಠೇವಣಿಗಳನ್ನು ಸ್ವೀಕರಿಸುವುದನ್ನು ನಿರ್ಬಂಸಿದೆ. ಪಿಪಿಬಿಎಲ್ ಮೇಲಿನ ಆರ್‍ಬಿಐ ಕ್ರಮವು ಫಿನ್‍ಟೆಕ್ ಸಂಸ್ಥೆಗಳನ್ನು ಕೆರಳಿಸಿದೆ ಎಂಬ ಭಾವನೆ ಸರಿಯಲ್ಲ. ಫಿನ್‍ಟೆಕ್ ಉದ್ಯಮಕ್ಕೆ ಹಾನಿಕಾರಕ ಪರಿಣಾಮಗಳಾಗಿವೆ ಎಂಬ ಆತಂ ಒಪ್ಪಲು ಸಾಧ್ಯವಿಲ್ಲ ಎಂದರು. +ಕೇಂದ್ರ ಸರ್ಕಾರದ ಕ್ರಮ ಫಿನ್‍ಟೆಕ್ ಉದ್ಯಮಿಗಳ ಗಮನವನ್ನು ಸೆಳೆದಿದೆ. ಕಾನೂನನ್ನು ಹೇಗೆ ಅನುಸರಿಸಬೇಕು ಎಂಬುದನ್ನು ಸಹ ತಿಳಿದಿರಬೇಕು. ನಿಯಂತ್ರಕ ಅನುಸರಣೆ ವಿಶ್ವದ ಯಾವುದೇ ದೇಶಕ್ಕೆ ಐಚ್ಛಿಕ ವಿಷಯವಲ್ಲ, ಕಾನೂನುಗಳನ್ನು ನಿರ್ಲಕ್ಷ್ಯಿಸುವುದು ಸರಿಯಲ್ಲ. ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಕಡೆಗಣಿಸಬಾರದು ಎಂದು ಹೇಳಿದರು. \ No newline at end of file diff --git a/eesanje/url_47_160_3.txt b/eesanje/url_47_160_3.txt new file mode 100644 index 0000000000000000000000000000000000000000..42f196c11c277da126be2e7f8376f97c4d304be9 --- /dev/null +++ b/eesanje/url_47_160_3.txt @@ -0,0 +1,6 @@ +ಆನೆ ದಾಳಿಗೆ ಬಲಿಯಾದ ಕುಟುಂಬದವರಿಗೆ ರಾಹುಲ್ ಸಾಂತ್ವನ +ವಯನಾಡ್ (ಕೇರಳ), ಫೆ 18 (ಪಿಟಿಐ) : ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಈ ಹೈರೇಂಜ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕಾಡಾನೆ ದಾಳಿಗೆ ಬಲಿಯಾಗಿದ್ದ ಇಬ್ಬರ ಮನೆಗಳಿಗೆ ಇಂದು ಭೇಟಿ ನೀಡಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. +ತಮ್ಮ ಲೋಕಸಭಾ ಕ್ಷೇತ್ರದಲ್ಲಿನ ಮಾನವ-ಪ್ರಾಣಿ ಸಂಘರ್ಷಗಳಿಗೆ ಪರಿಹಾರಕ್ಕೆ ಆಗ್ರಹಿಸಿ ಸ್ಥಳೀಯರ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ನಿನ್ನೆ ರಾತ್ರಿ ತಮ್ಮ ಭಾರತ್ ಜೋಡೋ ನ್ಯಾಯಯಾತ್ರೆಯನ್ನು ವಾರಣಾಸಿಯಲ್ಲಿ ಹಠಾತ್ತನೆ ಸ್ಥಗಿತಗೊಳಿಸಿ ನೆರೆಯ ಕಣ್ಣೂರು ಜಿಲ್ಲೆಗೆ ಆಗಮಿಸಿದರು. +ಕಣ್ಣೂರಿನಿಂದ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿದ ಅವರ ಜೊತೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಇತರ ಸ್ಥಳೀಯ ಮುಖಂಡರಿದ್ದರು. ಕಳೆದ ವಾರ ವಯನಾಡ್ ಜಿಲ್ಲೆಯ ಮನಂತವಾಡಿ ಪ್ರದೇಶದಲ್ಲಿ ರೇಡಿಯೋ ಕಾಲರ್ ಆನೆ ತುಳಿದು ಸಾವನ್ನಪ್ಪಿದ ಅಜಿ (42) ಅವರ ಮನೆಯಲ್ಲಿ ರಾಹುಲ್ ಗಾಂಧಿ 20 ನಿಮಿಷವಿದ್ದು, ಕುಟುಂಬದ ಸದಸ್ಯರ ನೋವನ್ನು ಆಲಿಸಿ ಸಾಂತ್ವನ ಹೇಳಿದರು. +ಬಳಿಕ ಶುಕ್ರವಾರ ಕುರುವ ದ್ವೀಪದ ಬಳಿ ಕಾಡಾನೆ ದಾಳಿಗೆ ಬಲಿಯಾದ ಅರಣ್ಯ ಇಲಾಖೆಯ ಪರಿಸರ ಪ್ರವಾಸೋದ್ಯಮ ಮಾರ್ಗದರ್ಶಕ ಪಾಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಕುಟುಂಬದವರ ಸಂಕಷ್ಟವನ್ನು ಆಲಿಸಿ ಸಾಂತ್ವನ ಹೇಳಿ ತೆರಳಿದರು. +ಮಧ್ಯಾಹ್ನ ಅಲಹಾಬಾದ್‍ಗೆ ತೆರಳುವ ಮೊದಲು ಕಲ್ಪೆಟ್ಟಾದಲ್ಲಿರುವ ಪಿಡಬ್ಲ್ಯುಡಿ ವಿಶ್ರಾಂತಿ ಗೃಹದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜಾ ನುವಾರು ಮತ್ತು ಮನುಷ್ಯರ ಮೇಲೆ ವನ್ಯ ಜೀವಿಗಳ ದಾಳಿಗಳು ಇತ್ತೀಚೆಗೆ ವಯನಾಡಿನಿಂದ ಆಗಾಗ್ಗೆ ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಾಡು ಪ್ರಾಣಿಗಳ ದಾಳಿಯನ್ನು ವಿರೋಸಿ ವಿವಿಧ ರಾಜಕೀಯ ಪಕ್ಷಗಳು ಕರೆ ನೀಡಿದ್ದ ಪ್ರತಿಭಟನೆ ಶನಿವಾರ ಇಲ್ಲಿ ಹಿಂಸಾಚಾರಕ್ಕೆ ತಿರುಗಿತು. \ No newline at end of file diff --git a/eesanje/url_47_160_4.txt b/eesanje/url_47_160_4.txt new file mode 100644 index 0000000000000000000000000000000000000000..5cc86558a92e13931c911976774ffd40947a5025 --- /dev/null +++ b/eesanje/url_47_160_4.txt @@ -0,0 +1,4 @@ +ಭಾರತ-ಬಾಂಗ್ಲಾ ಗಡಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.25 ಕೋಟಿ ಮೌಲ್ಯದ ಚಿನ್ನ ವಶ +ಬರಾಸತ್, ಫೆ 18: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪೆಟ್ರಾಪೋಲ್‍ನಲ್ಲಿರುವ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯ ಮೂಲಕ 2.25 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಮೂವರನ್ನು ಬಂಸಲಾಗಿದೆ ಎಂದು ಬಿಎಸ್‍ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಖಚಿತ ಸುಳಿವಿನ ಮೇರೆಗೆ ಪ್ರತ್ಯೇಕ 2 ಘಟನೆಗಳಲ್ಲಿ ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿದ ಬಿಎಸ್‍ಎಫ್ ಸಿಬ್ಬಂದಿ ಈ ಭಾರಿ ಮೊತ್ತದ ಚಿನ್ನ ಜಪ್ತಿ ಮಾಡಲಾಗಿದೆ.ಮೊದಲ ಘಟನೆಯಲ್ಲಿ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ಟ್ರಕ್‍ಗಳ ತಪಾಸಣೆ ನಡೆಸುತ್ತಿದ್ದಾಗ ವಾಹನವೊಂದರಲ್ಲಿ 1.58 ಕೋಟಿ ಮೌಲ್ಯದ 2.5 ಕೆಜಿ ಚಿನ್ನದ ಬಿಸ್ಕತ್‍ಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಸಿದ್ದಾರೆ. +ಮತ್ತೊಂದು ಘಟನೆಯಲ್ಲಿ, 1 ಕೆಜಿಗಿಂತ ಹೆಚ್ಚು ತೂಕದ ಚಿನ್ನದ ಪೇಸ್ಟ್‍ಅನ್ನುಸಗಿಸುತ್ತಿದ್ದ ವ್ಯಕ್ತಿಯನ್ನು ಬಂಸಲಾಗಿದೆ.ಇದರ ಹಿಂದೆ ಯಾರಿದ್ದಾರೆ ಮತ್ತಿತರ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ವಶಪಡಿಸಿಕೊಂಡ ಚಿನ್ನ ಮತ್ತು ಬಂತ ವ್ಯಕ್ತಿಗಳನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದಾರೆ. \ No newline at end of file diff --git a/eesanje/url_47_160_5.txt b/eesanje/url_47_160_5.txt new file mode 100644 index 0000000000000000000000000000000000000000..800f7b65ebdfa5d0a479939bc754afa5a730f608 --- /dev/null +++ b/eesanje/url_47_160_5.txt @@ -0,0 +1,7 @@ +ಲೋಕಸಭಾ ಚುನಾವಣೆಗೆ ಕಮಲ ಕಹಳೆ, ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಾವೇಶ +ಬೆಂಗಳೂರು,ಫೆ.17- ಲೋಕಸಭೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಇಂದಿನಿಂದ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾವೇಶ ಆಯೋಜನೆಗೊಂಡಿದ್ದು, ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಲು ರಣತಂತ್ರ ರೂಪಿಸಲಾಗಿದೆ. +ಸಮೀಕ್ಷೆಗಳ ಪ್ರಕಾರ ನರೇಂದ್ರಮೋದಿ ಅವರು 3ನೇ ಬಾರಿ ಪ್ರಧಾನಿಯಾಗಲಿದ್ದಾರೆ ಎಂಬ ಹಿನ್ನಲೆಯಲ್ಲಿ ಎರಡು ದಿನಗಳ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕ ರಾಜ್ಯದಿಂದ 500ಕ್ಕೂ ಹೆಚ್ಚು ರಾಜ್ಯ ನಾಯಕರಿಗೆ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದಾರೆ. +ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ +ದೆಹಲಿಯ ಪ್ರಗತಿ ಮೈದಾನದಲ್ಲಿ ಆರಂಭವಾಗಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ಉಖ್ಯಮಂತ್ರಿಗಳು, ಸಚಿವರು, ಸುಮಾರು 11 ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. +ಎರಡು ದಿನಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಮಹಿಳಾ ಮೀಸಲಾತಿ, ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇಂತಹ ಪ್ರಮುಖ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಬಗ್ಗೆ ಮನವರಿಕೆ ಮಾಡಿಕೊಡುವ ಚರ್ಚೆ ನಡೆಯುತ್ತಿದೆ.ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಬಗ್ಗೆಯೂ ಕೂಡ ಮಹತ್ವದ ಚರ್ಚಿಸಲಾಗುತ್ತಿದೆ. +ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ವಿಕಸಿತ ಭಾರತ ಅಭಿಯಾನಕ್ಕೆ ಚಾಲನೆ ನೀಡಿದರು. ವಸ್ತುಪ್ರದರ್ಶನ ಆಯೋಜಿಸಿದ್ದು, ಇದರಲ್ಲಿ ಎನ್‍ಡಿಎ ಸರ್ಕಾರದ ಸಾಧನೆಗಳು ಅನಾವರಣಗೊಳಿಸಲಾಗಿದೆ. \ No newline at end of file diff --git a/eesanje/url_47_160_6.txt b/eesanje/url_47_160_6.txt new file mode 100644 index 0000000000000000000000000000000000000000..861d67c92646d28fa4817304c8244d9413a118af --- /dev/null +++ b/eesanje/url_47_160_6.txt @@ -0,0 +1,6 @@ +ಮೋದಿ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ : ಖರ್ಗೆ +ನವದೆಹಲಿ,ಫೆ.17- ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ದೇಶದ ರೈತರಿಗೆ ಶಾಪವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿರುವ ಅವರು, ನಿರಂತರ ಸುಳ್ಳು ಮೋದಿ ಗ್ಯಾರಂಟಿಯಿಂದ ಈ ಮೊದಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ 750 ರೈತರು ಪ್ರಾಣ ಕಳೆದುಕೊಂಡಿದ್ದರು. ಎರಡನೇ ಹಂತದ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಬಳಸಿದ ರಬ್ಬರ್ ಬುಲೆಟ್‍ಗಳಿಂದ ನಿನ್ನೆ ರೈತರೊಬ್ಬರು ಹುತಾತ್ಮರಾಗಿದ್ದಾರೆ. ಮೂರು ಜನ ಕಣ್ಣು ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. +ನರೇಂದ್ರ ಮೋದಿಯವರ ಸರ್ಕಾರ ರೈತರನ್ನು ಶತ್ರುಗಳಂತೆ ನಡೆಸಿಕೊಳ್ಳುತ್ತಿದೆ. ಕಾಂಗ್ರೆಸ್ ಮಾತ್ರ ರೈತರಿಗೆ ಕಾನೂನುಬದ್ಧವಾದ ಕನಿಷ್ಠ ಬೆಂಬಲ ಬೆಲೆ ಹಕ್ಕನ್ನು ನೀಡಲು ಸಾಧ್ಯ ಎಂದು ಖರ್ಗೆ ಸ್ಪಷ್ಟಪಡಿಸಿದ್ದಾರೆ. ತಮ್ಮ ಪೋಸ್ಟ್‍ನಲ್ಲಿ 2014 ರಲ್ಲಿ ನರೇಂದ್ರ ಮೋದಿಯವರು ರೈತರ ಕೃಷಿ ಉತ್ಪಾದನಾ ವೆಚ್ಚಕ್ಕೆ ಹೆಚ್ಚುವರಿಯಾಗಿ ಶೇ.50 ರಷ್ಟನ್ನು ಸೇರ್ಪಡೆಗೊಳಿಸಿ ಒಂದೂವರೆ ಪಟ್ಟು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದಾಗಿ ನೀಡಿದ್ದ ಭರವಸೆಯನ್ನು ಖರ್ಗೆ ನೆನಪಿಸಿದ್ದಾರೆ. +ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ದಾಖಲೆಯ ಮತದಾನ +2014 ರಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಬಹಿರಂಗ ಸಭೆಯಲ್ಲಿ ಹೇಳಿಕೆ ನೀಡಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ 2020-21 ರಲ್ಲಿ ಕನಿಷ್ಠ ಬೆಂಬಲ ಬೆಲೆಗಾಗಿ ಮತ್ತು ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿ ಪ್ರಹಾರ ನಡೆಸಿ, ಅಶ್ರವಾಯು ಸಿಡಿಸಿದ್ದನ್ನು ಖರ್ಗೆ ಪ್ರಸ್ತಾಪಿಸಿದ್ದಾರೆ. ಆ ಪ್ರತಿಭಟನೆ ವೇಳೆ 750 ರೈತರು ಬಲಿದಾನವಾಗಿದ್ದನ್ನು ಉಲ್ಲೇಖಿಸಿದ್ದಾರೆ. +ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು ಹಾಗೂ ಬಿಜೆಪಿ ನಾಯಕರು ಪ್ರತಿಭಟನಾ ನಿರತ ರೈತರನ್ನು ಅವಹೇಳಕಾರಿಯಾಗಿ ಬಿಂಬಿಸಿದ್ದನ್ನು ಕಾಂಗ್ರೆಸ್ ಅಧಿನಾಯಕ ಆಕ್ಷೇಪಿಸಿದ್ದಾರೆ. ಕಳೆದ ವಾರದಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ನಿರ್ಬಂಧಿಸಲು ಮುಳ್ಳು ತಂತಿಬೇಲಿ ನಿರ್ಮಿಸಿರುವುದು, ಬ್ಯಾರಿಕೇಡ್ ಹಾಕಿರುವುದು, ಡ್ರೋನ್ ಬಳಸಿ ಅಶ್ರವಾಯು ಸ್ಪೋಟಿಸುತ್ತಿರುವುದು ಸೇರಿದಂತೆ ಹಲವು ಆಕ್ಷೇಪಾರ್ಹ ಕ್ರಮಗಳನ್ನು ಖರ್ಗೆ ಖಂಡಿಸಿದ್ದಾರೆ. \ No newline at end of file diff --git a/eesanje/url_47_160_7.txt b/eesanje/url_47_160_7.txt new file mode 100644 index 0000000000000000000000000000000000000000..08e03752dd8b583281171ef791efb673ac5289b5 --- /dev/null +++ b/eesanje/url_47_160_7.txt @@ -0,0 +1,6 @@ +ಇನ್ಸಾಟ್ -3ಡಿಎಸ್ ಉಪಗ್ರಹ ಉಡಾವಣೆಗೆ ಕ್ಷಣಗಣನೆ +ಶ್ರೀಹರಿಕೋಟಾ, ಫೆ 17 (ಪಿಟಿಐ) ಜಿಯೋಸಿಂಕ್ರೊನಸ್ ಲಾಂಚ್ ವೆಹಿಕಲ್ (ಜಿಎಸ್‍ಎಲ್‍ವಿ) ರಾಕೆಟ್‍ನಲ್ಲಿ ಇನ್ಸಾಟ್-3ಡಿಎಸ್ ಹವಾಮಾನ ಉಪಗ್ರಹ ಉಡಾವಣೆ ಸಿದ್ದತೆ ಸುಗಮವಾಗಿ ಸಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.ರ್ವತ ಹವಾಮಾನ ವೀಕ್ಷಣೆಗಳು, ಹವಾಮಾನ ಮುನ್ಸೂಚನೆ ಮತ್ತು ವಿಪತ್ತು ಎಚ್ಚರಿಕೆಗಾಗಿ ಭೂಮಿ ಮತ್ತು ಸಾಗರ ಮೇಲ್ಮೈಗಳ ಮೇಲ್ವಿಚಾರಣೆ ಮತ್ತು ಉಪಗ್ರಹ ನೆರವಿನ ಸಂಶೋಧನೆ ಮತ್ತು ಪಾರುಗಾಣಿಕಾ ಸೇವೆಗಳನ್ನು ಒದಗಿಸಲು ಅಸ್ತಿತ್ವದಲ್ಲಿರುವ ಕಾರ್ಯಾಚರಣೆಯ ಇನ್ಸಾಟ್ -3ಡಿ ಮತ್ತು ಇನ್ಸಾಟ್ -3ಡಿಆರ್ ಗೆ ಸೇವೆಗಳ ನಿರಂತರತೆಯನ್ನು ಒದಗಿಸುವುದು ಈ ಮಿಷನ್ ಉದ್ದೇಶವಾಗಿದೆ. +ನಿನ್ನೆ ಮಧ್ಯಾಹ್ನ 2.30 ಕ್ಕೆ ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎರಡನೇ ಉಡಾವಣಾ ಪ್ಯಾಡ್‍ನಿಂದ ಪೂರ್ವ ನಿಗದಿತ ಸಮಯ ಇಂದು ಸಂಜೆ 5.35ಕ್ಕೆ ನಿಗದಿಪಡಿಸಲಾಗಿದೆ. ಮೂರು ಹಂತದ ರಾಕೆಟ್, ಕ್ರಯೋಜೆನಿಕ್ ಮೇಲಿನ ಹಂತದೊಂದಿಗೆ, ಸುಮಾರು 20 ನಿಮಿಷಗಳ ಹಾರಾಟದ ನಂತರ, ಜಿಎಸ್‍ಎಲ್‍ವಿ ರಾಕೆಟ್‍ನಿಂದ 2,274 ಕೆಜಿ ತೂಕದ ಉಪಗ್ರಹ ಭಾರತೀಯ ರಾಷ್ಟ್ರೀಯ ಉಪಗ್ರಹ ವ್ಯವಸ್ಥೆ ಯನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್‍ಫರ್ ಆರ್ಬಿಟ್‍ಗೆ ಸೇರಿಸುವ ನಿರೀಕ್ಷೆಯಿದೆ. ನಂತರ, ವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ನಡೆಯಲಿರುವ ಭೂ-ಸ್ಥಾಯಿ ಕಕ್ಷೆಯಲ್ಲಿ ಇರಿಸಲು ಕುಶಲ ಸರಣಿಗಳನ್ನು ಆರಂಭಿಸಲಿದ್ದಾರೆ. +ಕೇಜ್ರಿವಾಲ್ ಖುದ್ದು ಹಾಜರಿಗೆ ವಿನಾಯ್ತಿ ನೀಡಿದ ನ್ಯಾಯಾಲಯ +51.7 ಮೀಟರ್ ಎತ್ತರದ ರಾಕೆಟ್ ಮೋಡದ ಗುಣಲಕ್ಷಣಗಳು, ಮಂಜು, ಮಳೆ, ಹಿಮದ ಹೊದಿಕೆ, ಹಿಮದ ಆಳ, ಬೆಂಕಿ, ಹೊಗೆ, ಭೂಮಿ ಮತ್ತು ಸಾಗರ, ಬಾಹ್ಯಾಕಾಶವನ್ನು ಅಧ್ಯಯನ ಮಾಡಲು ಇಮೇಜರ್ ಪೇಲೋಡ್‍ಗಳು, ಸೌಂಡರ್ ಪೇಲೋಡ್‍ಗಳು, ಡೇಟಾ ರಿಲೇ ಟ್ರಾನ್ಸ್‍ಪಾಂಡರ್‍ಗಳು, ಉಪಗ್ರಹ ನೆರವಿನ ಹುಡುಕಾಟ ಮತ್ತು ಪಾರುಗಾಣಿಕಾ ಟ್ರಾನ್ಸ್‍ಪಾಂಡರ್‍ಗಳನ್ನು ಒಯ್ಯುತ್ತದೆ ಎಂದು ಸಂಸ್ಥೆ ಹೇಳಿದೆ. +ಭೂ ವಿಜ್ಞಾನ ಸಚಿವಾಲಯದ ವಿವಿಧ ಇಲಾಖೆಗಳಾದ ಭಾರತ ಹವಾಮಾನ ಇಲಾಖೆ, ಮಧ್ಯಮ ಶ್ರೇಣಿಯ ಹವಾಮಾನ ಮುನ್ಸೂಚನೆಯ ರಾಷ್ಟ್ರೀಯ ಕೇಂದ್ರ, ಭಾರತೀಯ ಉಷ್ಣವಲಯದ ಹವಾಮಾನ ಸಂಸ್ಥೆ, ರಾಷ್ಟ್ರೀಯ ಸಾಗರ ತಂತ್ರಜ್ಞಾನ ಸಂಸ್ಥೆ, ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ ಮತ್ತು ವಿವಿಧ ಏಜೆನ್ಸಿಗಳು ಮತ್ತು ಸಂಸ್ಥೆಗಳು ಡೇಟಾದಿಂದ ಪ್ರಯೋಜನ ಪಡೆಯುತ್ತವೆ. ಸುಧಾರಿತ ಹವಾಮಾನ ಮುನ್ಸೂಚನೆಗಳು ಮತ್ತು ಹವಾಮಾನ ಸೇವೆಗಳನ್ನು ಒದಗಿಸಲು ಇನ್ಸಾಟ್-3ಡಿಎಸ್‍ನಿಂದ ಒದಗಿಸಲಾಗಿದೆ. ಈ ರಾಕೇಟ್‍ನ ಜೀವಿತಾವಧಿ ಸುಮಾರು 10 ವರ್ಷಗಳು ಎಂದು ಮೂಲಗಳು ತಿಳಿಸಿವೆ. ಜನವರಿ 1 ರಂದು ಪಿಎಸ್‍ಎಲ್‍ವಿ-ಸಿ 58/ಎಕ್ಸ್‍ಪೋಸ್ಯಾಟ್ ಯಶಸ್ವಿ ಉಡಾವಣೆ ನಂತರ 2024 ರಲ್ಲಿ ಇಸ್ರೋಗೆ ಶನಿವಾರದ ಮಿಷನ್ ಎರಡನೆಯದಾಗಿದೆ. \ No newline at end of file diff --git a/eesanje/url_47_160_8.txt b/eesanje/url_47_160_8.txt new file mode 100644 index 0000000000000000000000000000000000000000..377195df1de2a6d9e2f1d5200c98d0ae04914806 --- /dev/null +++ b/eesanje/url_47_160_8.txt @@ -0,0 +1,6 @@ +ಹೂಡಿಕೆದಾರರ ದಾರಿದೀಪವಾಗುತ್ತಿದೆ ಭಾರತ +ನವದೆಹಲಿ,ಫೆ.17- ಕೊರೊನಾ ಸೋಂಕಿನ ನಂತರ ಭಾರತ ಹೂಡಿಕೆದಾರರ ಅವಕಾಶದ ದಾರಿದೀಪವಾಗಿ ಹೊರ ಹೊಮ್ಮಿದೆ. ಹೂಡಿಕೆದಾರರಿಗೆ ಅವಕಾಶದ ದಾರಿದೀಪವಾಗಿ ಹೊರಹೊಮ್ಮಿರುವ ಭಾರತದ ಮೇಲೆ ಈಗ ಗಮನಸೆಳೆದಿದೆ. ಅಂತರಾಷ್ಟ್ರೀಯ ಹಣಕಾಸು ನಿಧಿಯ ಪ್ರಕ್ಷೇಪಗಳು ಭಾರತವು ಆರ್ಥಿಕ ಉತ್ಪಾದನೆಯ ವಿಷಯದಲ್ಲಿ ಜಪಾನ್ ಮತ್ತು ಜರ್ಮನಿ ಎರಡನ್ನೂ ಹಿಂದಿಕ್ಕಲು ಸಜ್ಜಾಗಿದೆ ಎಂದು ತಿಳಿಸಿದೆ. +ವಿಶ್ವ ಆರ್ಥಿಕ ಪರಿಸ್ಥಿತಿ ಮತ್ತು ಭವಿಷ್ಯ 2024 ರ ವರದಿಯ ಪ್ರಕಾರ ಭಾರತವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಉಳಿದಿದೆ ಮತ್ತು ಅದರ ಬೆಳವಣಿಗೆಯು 2024 ರಲ್ಲಿ ಶೇ.6.2ನ್ನು ತಲುಪುತ್ತದೆ ಎಂದು ಅಂದಾಜಿಸಲಾಗಿದೆ. ಭಾರತವು ಪ್ರಸ್ತುತ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದ್ದು, ಯುಎಸ್, ಚೀನಾ, ಜಪಾನ್ ಮತ್ತು ಜರ್ಮನಿಯ ಹಿಂದೆ ಇದೆ. +2023 ರಲ್ಲಿ ಅಮೆರಿಕದ ಒಟ್ಟು ದೇಶೀಯ ಉತ್ಪನ್ನ 27.94 ಟ್ರಿಲಿಯನ್ ಆಗಿದ್ದರೆ, ಚೀನಾದ್ದು 17.5 ಟ್ರಿಲಿಯನ್ ಆಗಿತ್ತು. ಭಾರತದ ಜಿಡಿಪಿಯು ಸುಮಾರು 3.7 ಟ್ರಿಲಿಯನ್ ಆಗಿದೆ ಆದರೆ ಸುಮಾರು ಶೇ,7ರ ಸಿಜ್ಲಿಂಗ್ ದರದಲ್ಲಿ ಬೆಳೆಯುತ್ತಿದೆ. ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ಪೂರೈಕೆ ಸರಪಳಿ ವೈವ್ಯೀಕರಣ ತಂತ್ರಗಳ ಸಂದರ್ಭದಲ್ಲಿ ದೇಶವನ್ನು ಪ್ರಮುಖ ಪರ್ಯಾಯ ಉತ್ಪಾದನಾ ನೆಲೆಯಾಗಿ ನೋಡುವ ಬಹುರಾಷ್ಟ್ರೀಯ ಸಂಸ್ಥೆಗಳಿಂದ ಹೆಚ್ಚುತ್ತಿರುವ ಆಸಕ್ತಿಯಿಂದ ಭಾರತವು ಈ ಪ್ರಯೋಜನ ಪಡೆಯುತ್ತಿದೆ. +ವಿದೇಶಿ ಪ್ರಜೆ ಬಂಧನ : 3.37 ಕೋಟಿ ಮೌಲ್ಯದ ಡ್ರಗ್ಸ್ ವಶ +ಅಭಿವೃದ್ಧಿ ಹೊಂದಿದ ದೇಶಗಳು ಮತ್ತು ಉದಯೋನ್ಮುಖ ರಾಷ್ಟ್ರಗಳ ನಡುವಿನ ಅಂತರವು ಕುಗ್ಗುತ್ತಿದೆ, ಭಾರತವು ಈಗ ಜಾಗತಿಕ ಆರ್ಥಿಕ ಭೂದೃಶ್ಯದಲ್ಲಿ ಮಹತ್ವದ ಆಟಗಾರನಾಗುವ ಅವಕಾಶವನ್ನು ಬಳಸಿಕೊಳ್ಳಲು ಸಿದ್ಧವಾಗಿದೆ. ಬದಲಾಗುತ್ತಿರುವ ಡೈನಾಮಿಕ್ಸ್ ಭಾರತಕ್ಕೆ ತನ್ನ ಪ್ರಭಾವವನ್ನು ಪ್ರತಿಪಾದಿಸಲು ಮತ್ತು ಮುಂಬರುವ ವರ್ಷಗಳಲ್ಲಿ ಜಾಗತಿಕ ಬೆಳವಣಿಗೆಗೆ ಗಣನೀಯವಾಗಿ ಕೊಡುಗೆ ನೀಡಲು ಒಂದು ಕ್ಷಣವನ್ನು ಪ್ರಸ್ತುತಪಡಿಸುತ್ತದೆ \ No newline at end of file diff --git a/eesanje/url_47_160_9.txt b/eesanje/url_47_160_9.txt new file mode 100644 index 0000000000000000000000000000000000000000..d09ca6b205161b919c6c881bf1675290ee7829dc --- /dev/null +++ b/eesanje/url_47_160_9.txt @@ -0,0 +1,8 @@ +ಕೇಜ್ರಿವಾಲ್ ಖುದ್ದು ಹಾಜರಿಗೆ ವಿನಾಯ್ತಿ ನೀಡಿದ ನ್ಯಾಯಾಲಯ +ನವದೆಹಲಿ, ಫೆ 17 (ಪಿಟಿಐ) : ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಮನ್ಸ್‍ಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ದಿಲ್ಲಿ ನ್ಯಾಯಾಲಯ ಇಂದು ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಎಎಪಿ ನಾಯಕ ವಿಡಿಯೋ ಕಾನರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗಿ ದಿನದ ದೈಹಿಕ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿದ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಕೇಜ್ರಿವಾಲ್‍ಗೆ ಈ ಪರಿಹಾರ ನೀಡಿದರು. +ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿರುವುದರಿಂದ ನ್ಯಾಯಾಲಯದ ಮುಂದೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಕೇಜ್ರಿವಾಲ್ ನ್ಯಾಯಾಲಯಕ್ಕೆ ತಿಳಿಸಿದರು. ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ರಮೇಶ್ ಗುಪ್ತಾ, ಮುಂದಿನ ವಿಚಾರಣೆಯ ದಿನಾಂಕದಂದು ದೆಹಲಿ ಮುಖ್ಯಮಂತ್ರಿ ಖುದ್ದು ಹಾಜರಾಗಲಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. +ಕೋಟಿ ಹಣಕ್ಕೆ ಅಪಹರಣ ನಾಟಕ : ಕಾರು ಚಾಲಕ, ರೌಡಿಗಳು ಸೇರಿ ಐವರ ಸೆರೆ +ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿದೆ. ದೆಹಲಿ ಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಸಮನ್ಸ್‍ಗಳನ್ನು ಪಾಲಿಸಲು ಬಯಸುವುದಿಲ್ಲ ಮತ್ತು ಕುಂಟು ನೆಪಗಳನ್ನು ನೀಡುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತನ್ನ ದೂರಿನಲ್ಲಿ ಆರೋಪಿಸಿದೆ. ಅವರಂತಹ ಉನ್ನತ ಶ್ರೇಣಿಯ ಸಾರ್ವಜನಿಕ ಕಾರ್ಯನಿರ್ವಾಹಕರು ಕಾನೂನಿಗೆ ಅವಿಧೇಯರಾದರೆ, ಅದು ಸಾಮಾನ್ಯ ಜನರಿಗೆ ಅಂದರೆ ಆಮ್ ಆದ್ಮಿ ಗೆ ತಪ್ಪು ಉದಾಹರಣೆಯಾಗಿದೆ ಎಂದು ಸಂಸ್ಥೆ ಹೇಳಿದೆ. +ದೂರಿನ ವಿಷಯಗಳು ಮತ್ತು ದಾಖಲಾದ ವಸ್ತುಗಳಿಂದ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 174 ರ ಅಡಿಯಲ್ಲಿ ಪ್ರಾಥಮಿಕ ಅಪರಾಧವನ್ನು ಮಾಡಲಾಗಿದೆ ಮತ್ತು ಆರೋಪಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮುಂದುವರಿಯಲು ಸಾಕಷ್ಟು ಆಧಾರಗಳಿವೆ ಎಂದು ನ್ಯಾಯಾೀಧಿಶರು ಈ ಹಿಂದೆ ಹೇಳಿದ್ದರು. ಅದರ ಪ್ರಕಾರ, ಫೆಬ್ರವರಿ 17, 2024 ಕ್ಕೆ ಐಪಿಸಿಯ ಸೆಕ್ಷನ್ 174 ರ ಅಡಿಯಲ್ಲಿ ಅಪರಾಧಕ್ಕಾಗಿ ಆರೋಪಿ ಅರವಿಂದ್ ಕೇಜ್ರಿವಾಲ್‍ಗೆ ಸಮನ್ಸ್ ನೀಡಿ ಎಂದು ನ್ಯಾಯಾೀಧಿಶರು ಸೇರಿಸಿದ್ದಾರೆ. +ತೆರಿಗೆ ಸೋರಿಕೆ ತಡೆಗಟ್ಟಲು 3ಡಿ ಡ್ರೋನ್ +ಐಪಿಸಿ ಸೆಕ್ಷನ್ 174 ಸಾರ್ವಜನಿಕ ಸೇವಕನ ಆದೇಶಕ್ಕೆ ವಿಧೇಯರಾಗಿ ಹಾಜರಾಗದಿರುವಿಕೆಗೆ ಸಂಬಂಧಿಸಿದೆ. ಫೆಬ್ರವರಿ 3 ರಂದು ಇಡಿ ತನ್ನ ಸಮನ್ಸ್‍ಗಳನ್ನು ಪಾಲಿಸದ ಕಾರಣ ಕೇಜ್ರಿವಾಲ್ ವಿರುದ್ಧ ಹೊಸ ದೂರು ದಾಖಲಿಸಿದೆ. ಎಎಪಿ ಸಂಚಾಲಕರು ಈ ಹಿಂದೆ ಇಡಿಗೆ ಪತ್ರ ಬರೆದಿದ್ದು, ಅವರಿಗೆ ನೀಡಲಾದ ಸಮನ್ಸ್‍ಗಳನ್ನು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ವಿವರಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ಸಮನ್ಸ್ ನೀಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. \ No newline at end of file diff --git a/eesanje/url_47_161_1.txt b/eesanje/url_47_161_1.txt new file mode 100644 index 0000000000000000000000000000000000000000..ec75e00f2cec98ff1f06610bb7c9e498a959658a --- /dev/null +++ b/eesanje/url_47_161_1.txt @@ -0,0 +1,9 @@ +ಜೆಟ್ ಏರ್‌ವೇಶ್‌ ಸಂಸ್ಥಾಪಕನಿಗೆ ಕ್ಯಾನ್ಸರ್, ಮಧ್ಯಂತರ ಜಾಮೀನಿಗೆ ಅರ್ಜಿ +ಮುಂಬೈ, ಫೆ 16 (ಪಿಟಿಐ) ಖಾಸಗಿ ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಬಹಿರಂಗಗೊಂಡಿರುವ ಮಾರಣಾಂತಿಕ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಕೋರಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಜೆಟ್ ಏರ್‌ವೇಶ್‌ ಸಂಸ್ಥಾಪಕ ನರೇಶ್ ಗೋಯಲ್ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಗೋಯಲ್ ಅವರ ಮಧ್ಯಂತರ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸಲು ಇಡಿ ಸಮಯ ಕೋರಿದ್ದರಿಂದ ಅವರ ವೈದ್ಯಕೀಯ ವರದಿಗಳನ್ನು ಪರಿಶೀಲಿಸಲು ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸಲು ನ್ಯಾಯಾಲಯವು ಆರಂಭಿಕ ಆದೇಶವನ್ನು ನೀಡಿದೆ. +ಕಳೆದ ತಿಂಗಳು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿ ಪ್ರಕರಣಗಳ ವಿಶೇಷ ನ್ಯಾಯಾೀಧಿಶ ಎಂ ಜಿ ದೇಶಪಾಂಡೆ ಅವರು ಖಾಸಗಿ ವೈದ್ಯರಿಂದ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ಗೋಯಲ್ (74) ಅವರಿಗೆ ಅನುಮತಿ ನೀಡಿದ್ದರು. ಮಧ್ಯಂತರ ಜಾಮೀನಿಗಾಗಿ ಗುರುವಾರ ಸಲ್ಲಿಸಿದ ಮನವಿಯಲ್ಲಿ, ಜೆಟ್ ಏರ್‍ವೇಸ್ ಸಂಸ್ಥಾಪಕ ಗೋಯಲ, ಖಾಸಗಿ ವೈದ್ಯರು ಕೈಗೊಂಡ ಪರೀಕ್ಷೆಗಳಲ್ಲಿ ಮಾರಣಾಂತಿಕತೆ ಬಹಿರಂಗವಾಗಿದೆ ಎಂದು ಹೇಳಿದರು. +ಅಮೇರಿಕಾದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಗುಂಡಿಕ್ಕಿ ಹತ್ಯೆ +ಅವರ ವೈದ್ಯಕೀಯ ದಾಖಲೆಗಳ ಪ್ರಕಾರ, ಗೋಯಲ್ ಅವರ ಕರುಳಿನಲ್ಲಿ ಸಣ್ಣ ಗೆಡ್ಡೆಗಳನ್ನು ಹೊಂದಿದ್ದಾರೆ ಇದು ನ್ಯೂರೋ ಎಂಡೋಕ್ರೈನ್ ಟ್ಯೂಮರ್ಸ್ ಆಗಿರುವುದು ಖಚಿತಪಟ್ಟಿದೆ. ದೀರ್ಘಾವಯ ಔಷಧಿ ಅಥವಾ ಶಸ್ತ್ರಚಿಕಿತ್ಸೆಯ ಮೂಲಕ ಹೊಟ್ಟೆಯನ್ನು ಕೆಳಕ್ಕೆ ಇಳಿಸಬೇಕು ಮತ್ತು ಆಸಿಡ್ ರಿಫ್ಲಕ್ಸ್ ಅನ್ನು ತಡೆಯಬೇಕು ಎಂದು ಸೂಚಿಸಲಾಗಿದೆ. ಅವರ ವರದಿಯು ಮಧ್ಯ ಮತ್ತು ಕೆಳಗಿನ ಅನ್ನನಾಳದ ಸಂಯಲ್ಲಿ ಕಿರಿದಾಗುವಿಕೆಯ ಒಂದು ಸಣ್ಣ ಭಾಗವನ್ನು ಬಹಿರಂಗಪಡಿಸಿತು, ಇದು ಬ್ಯಾರೆಟ್‍ನ ಅನ್ನನಾಳವನ್ನು ಸೂಚಿಸುತ್ತದೆ, ಇದು ಕ್ಯಾನ್ಸರ್ ಪೂರ್ವ ಸ್ಥಿತಿಯಾಗಿದೆ. +ಗೋಯಲ್ ಅವರ ಬಯಾಪ್ಸಿಯನ್ನು ಹಿಸ್ಟೋಲಾಜಿಕಲ್ ವಿಶ್ಲೇಷಣೆ ಮತ್ತು ಇಮ್ಯುನೊಹಿಸ್ಟೋಕೆಮಿಸ್ಟ್ರಿಗಾಗಿ ಕಳುಹಿಸಲಾಗಿದೆ ಎಂದು ಹೇಳಿದರು. ಸಂಶೋಧನೆಗಳ ಆಧಾರದ ಮೇಲೆ ಮಾರಣಾಂತಿಕತೆಯ ಹಂತವನ್ನು ನಿರ್ಧರಿಸಲು ಗೋಯಲ್ ಪಿಇಟಿ ಸ್ಕ್ಯಾನ್‍ಗೆ ಒಳಗಾಗುವುದು ಕಡ್ಡಾಯವಾಗಿದೆ, ಅದರ ಆಧಾರದ ಮೇಲೆ ವೈದ್ಯರು ಶಸ್ತ್ರಚಿಕಿತ್ಸೆ ಮತ್ತು ಕೀಮೋಥೆರಪಿ ಸೇರಿದಂತೆ ಚಿಕಿತ್ಸೆಯ ಮಾರ್ಗವನ್ನು ನಿರ್ಧರಿಸಲು ಸಾಧ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. +ಅರ್ಜಿದಾರರ ಪ್ರಕರಣದಲ್ಲಿ ಉದ್ಭವಿಸಬಹುದಾದ ಯಾವುದೇ ಮಾರಣಾಂತಿಕ ಸಮಸ್ಯೆಗಳನ್ನು ತಡೆಗಟ್ಟಲು ವೈದ್ಯರು ಆಕ್ರಮಣಕಾರಿ ಮತ್ತು ತಕ್ಷಣದ ಚಿಕಿತ್ಸೆಯನ್ನು ಸೂಚಿಸಿದ್ದಾರೆ ಎಂದು ಮನವಿಯಲ್ಲಿ ಸೇರಿಸಲಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸುನಿಲ್ ಗೊನ್ಸಾಲ್ವಿಸ್ ಅವರು ಇಡಿ ಸೂಚನೆಯಂತೆ ಜೆಜೆ ಆಸ್ಪತ್ರೆಯ ವೈದ್ಯಕೀಯ ಮಂಡಳಿಯನ್ನು ರಚಿಸಬೇಕು ಮತ್ತು ಗೋಯಲ್ ಅವರ ವೈದ್ಯಕೀಯ ದಾಖಲೆಗಳನ್ನು ಅಭಿಪ್ರಾಯಕ್ಕಾಗಿ ಉಲ್ಲೇಖಿಸಲಾಗುತ್ತದೆ, ನಂತರ ಇಡಿ ತಮ್ಮ ಉತ್ತರವನ್ನು ಹೆಚ್ಚು ಸ್ಪಷ್ಟತೆಯೊಂದಿಗೆ ಸಲ್ಲಿಸುತ್ತದೆ. +ವಿಮಾನ ನಿಲ್ದಾಣದಲ್ಲಿ ಮಹಿಳೆಯರ ಬೂತ್‍ಗೆ ಪ್ರವೇಶಿಸಿದ ಜಿಂಬಾಬ್ವೆ ಪ್ರಜೆ +ಎರಡೂ ಕಡೆಯ ವಾದವನ್ನು ಆಲಿಸಿದ ನಂತರ, ಇಡಿ ವಿನಂತಿಸಿದಂತೆ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ಮತ್ತು ಗೋಯಲ್ ಅವರನ್ನು ಕೂಲಂಕಷವಾಗಿ ಪರೀಕ್ಷಿಸಲು ಜೆಜೆ ಆಸ್ಪತ್ರೆಯ ಡೀನ್ ಅವರನ್ನು ಕೋರಲಾಗಿದೆ ಎಂದು ನ್ಯಾಯಾಲಯ ಹೇಳಿದೆ. \ No newline at end of file diff --git a/eesanje/url_47_161_10.txt b/eesanje/url_47_161_10.txt new file mode 100644 index 0000000000000000000000000000000000000000..dfd0fe61c4f5c12929f0104314dfc5728d16751f --- /dev/null +++ b/eesanje/url_47_161_10.txt @@ -0,0 +1,9 @@ +ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ, ನಾಮಪತ್ರ ಸಲ್ಲಿಕೆ +ನವದೆಹಲಿ/ಜೈಪುರ, ಫೆ.14 : ಮುಂಬರುವ ರಾಜ್ಯಸಭಾ ಚುನಾವಣೆಗೆ ರಾಜಸ್ಥಾನದಿಂದ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಣಕ್ಕಿಳಿದಿದ್ದಾರೆ. ಐದು ಭಾರಿ ಲೋಕಸಭೆ ಸಂಸದರಾಗಿ ಸೇವೆ ಸಲ್ಲಿಸಿರುವ 77 ವರ್ಷದ ಕಾಂಗ್ರೆಸ್ ನಾಯಕಿ ಮೊದಲ ಬಾರಿಗೆ ಮೇಲ್ಮನೆ ಪ್ರವೇಶಿಸಲಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. +ಕಳೆದ ಕೆಲವು ದಿನಗಳಿಂದ ಸೋನಿಯಾ ಗಾಂಧಿ ಅವರು ಕರ್ನಾಟಕ,ತೆಲಂಗಾಣ ,ಮಧ್ಯಪ್ರದೇಶ ಸೇರಿ ಹಲವು ರಾಜ್ಯಗಳಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿತ್ತು,ಈಗ ಇದೆಲ್ಲದಕ್ಕೂ ತೆರೆ ಬೀಳಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಇಂದು ಸೋನಿಯಾಗಾಂಧಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಜೈಪುರಕ್ಕೆ ಆಗಮಿಸಿ ವಿಧಾನಸಭೆ ಸಚಿವಾಲಯದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. +ಒಮ್ಮ ಕರ್ನಾಟಕದ ಬಳ್ಳಾರಿ ನಂತರ ಉತ್ತರ ಪ್ರದೇಶದ ರಾಯ್ ಬರೇಲಿಯನ್ನು ಪ್ರತಿನಿಧಿಸಿ 5 ಬಾರಿ ಸದಸ್ಯರಾಗಿದ್ದಾರೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ಮೊದಲೇ ಹೇಳಿದ್ದರು. ಪ್ರಸ್ತುತ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸದಸ್ಯರು ಏಪ್ರಿಲ್‍ನಲ್ಲಿ ನಿವೃತ್ತರಾಗುತ್ತಿದ್ದು, ಫೆಬ್ರವರಿ 27 ರಂದು ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. +ತೆರಿಗೆ ಅನ್ಯಾಯದ ವಿರುದ್ಧ ಮುಂದುವರೆದ ಕಾಂಗ್ರೆಸ್ ಅಭಿಯಾನ +ಪ್ರಸ್ತುತ 4 ರಾಜ್ಯಗಳಿಗೆ ಮಾತ್ರ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಅದರಂತೆ ರಾಜಸ್ಥಾನದಿಂದ ಸೋನಿಯಾಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಗ್ವಿ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೋರಿ ಅವರು ಸ್ಪರ್ಧಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಳಿದ ರಾಜ್ಯಗಳಿಗೆ ಇಂದು ರಾತ್ರಿಯೊಳಗೆ ಹೆಸರು ಅಂತಿಮಗೊಳ್ಳುವ ಸಾಧ್ಯತೆಯಿದೆ. +ತೆಲಂಗಾಣ ಮತ್ತು ಕರ್ನಾಟಕದಲ್ಲಿ ಅತೀ ಹೆಚ್ಚು ಸ್ಥಾನ ಗಳಿಸುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಾನಾ ಕಸರತ್ತು ನಡೆಸಿದೆ. ರಾಜಸ್ಥಾನ ರಾಜ್ಯದಿಂದ 3 ಸ್ಥಾನಗಳು ತೆರವಾಗಲಿದ್ದು, ಅದರಲ್ಲಿ ಒಂದು ಸ್ಥಾನವನ್ನು ಗೆಲ್ಲಲು ಕಾಂಗ್ರೆಸ್‍ಗೆ ಸುಲಭವಾಗಿದೆ. ಉಳಿದೆರಡು ಸ್ಥಾನಗಳು ಬಿಜೆಪಿ ಪಾಲಾಗಲಿದೆ. ಈಗಾಗಲೆ ಇದೇ ರಾಜ್ಯದಿಂದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ರಾಜ್ಯ ಸಭೆ ಸದಸ್ಯರಾಗಿದ್ದರು. ಆರು ವರ್ಷಗಳ ಅಧಿಕಾರಾವಧಿಯನ್ನು ಏಪ್ರಿಲ್‍ನಲ್ಲಿ ಪೂರ್ಣಗೊಳಿಸಿದ ನಂತರ ಸ್ಥಾನ ತೆರವಾಗಲಿದೆ. +ಅವರು ಆಗಸ್ಟ್ 1964 ರಿಂದ ಫೆಬ್ರವರಿ 1967 ರವರೆಗೆ ಮೇಲ್ಮನೆ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ನಂತರ ರಾಜ್ಯಸಭೆಗೆ ಪ್ರವೇಶಿಸಿದ ಗಾಂಧಿ ಕುಟುಂಬದ ಎರಡನೇ ಸದಸ್ಯರಾಗಿದ್ದಾರೆ.ಈ ಬಾರಿ ಸೋನಿಯಾ ಗಾಂಧಿ ಅವರು ರಾಯ್ ಬರೇಲಿ ಲೋಕಸಭಾ ಕ್ಷೇತ್ರದಿಂದ ಹೊರಗುಳಿದ ನಂತರ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬರುತ್ತಿದೆ. +ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ diff --git a/eesanje/url_47_161_11.txt b/eesanje/url_47_161_11.txt new file mode 100644 index 0000000000000000000000000000000000000000..ecaadfca138e7926f065bfb2f69d29ccf08b1ad6 --- /dev/null +++ b/eesanje/url_47_161_11.txt @@ -0,0 +1,4 @@ +ಅಕ್ರಮ ಗಣಿಗಾರಿಕೆ : ರಾಜಸ್ಥಾನದ ಹಲವು ಸ್ಥಳಗಳಲ್ಲಿ ಶೋಧ +ಜೈಪುರ,ಫೆ.14-ಅಕ್ರಮ ಗಣಿಗಾರಿಕೆ ಸಂಬಂಧದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ರಾಜಸ್ಥಾನ ರಾಜ್ಯದ ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತದೆ.ಗಣಿಗಾರಿಕೆ ವಲಯದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ರಾಜಕೀಯ ವ್ಯಕ್ತಿಗಳು ,ಉದ್ಯಮಿಗಳ ಮನೆ ಕಚೇರಿ ಮೇಲೆ ದಾಳಿ ನಡೆದಿದೆ ಎಂದು ಅ„ಕೃತ ಮೂಲಗಳು ತಿಳಿಸಿವೆ. +ಗಣಿಗಾರಿಕೆ ವಲಯ ಮತ್ತು ಅಂಗಸಂಸ್ಥೆಗಳು ,ಹಲವು ಅದಿಕಾರಿಗಳು ಇದರಲ್ಲಿ ಆಪಾದಿತರಾಗಿದ್ದು ದಾಳಿ ವೇಳೆ ಹಲವು ದಾಖಲೆ ,ನಗದು ಹಣ ಜಪ್ತಿ ಮಾಡಲಾಗಿದೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. +ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ಕಾನೂನು ಸುವ್ಯವಸ್ಥೆ ವಿಚಾರ \ No newline at end of file diff --git a/eesanje/url_47_161_12.txt b/eesanje/url_47_161_12.txt new file mode 100644 index 0000000000000000000000000000000000000000..ebd5c63373f26aa9a9445f521bad7b12a99e1300 --- /dev/null +++ b/eesanje/url_47_161_12.txt @@ -0,0 +1,5 @@ +ತೆರಿಗೆ ಪಾವತಿಸದ ರಾಕ್‍ಲೈನ್ ಮಾಲ್‍ಗೆ ಬೀಗ +ಬೆಂಗಳೂರು,ಫೆ.ಐ14-ಕೋಟ್ಯಂತರ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ನಗರದ ರಾಕ್‍ಲೈನ್ ಮಾಲ್‍ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ರಾಕ್‍ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಇಂದು ಪಾಲಿಕೆ ಕಂದಾಯ ಅಧಿಕಾರಿಗಳು ಇಂದು ತುಮಕೂರು ರಸ್ತೆಯ ಪ್ರಶಾಂತ್ ನಗರದಲ್ಲಿರುವ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಿದ್ದಾರೆ. +ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. 2011 ರಿಂದ 2023ರವರೆಗೆ ಸರಿ ಸುಮಾರು 11.51 ಕೋಟಿ ರೂ.ಗಳ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದರು. ಬಾಕಿ ತೆರಿಗೆ ಪಾವತಿಸಲು ಡಿಮ್ಯಾಂಡ್ ನೋಟೀಸ್ ಜಾರಿ ಮಾಡಿದ್ದರು ಮಾಲ್ ಮಾಲೀಕರು ತಲೆ ಕೆಡಿಸಿಕೊಂಡಿರಲಿಲ್ಲ. +ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ +ಹೀಗಾಗಿ ವಲಯ ಆಯುಕ್ತೆ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತ ಬಾಲಶೇಖರ್ ಮತ್ತಿತರ ಅಧಿಕಾರಿಗಳು ಮಾರ್ಷಲ್‍ಗಳು ಹಾಗೂ ಪೊಲೀಸ್ ಭದ್ರತೆಯೊಂದಿಗೆ ಇಂದು ಮಾಲ್‍ಗೆ ತೆರಳಿ ಬೀಗ ಜಡಿದಿದ್ದಾರೆ. \ No newline at end of file diff --git a/eesanje/url_47_161_2.txt b/eesanje/url_47_161_2.txt new file mode 100644 index 0000000000000000000000000000000000000000..53320746d70da9ac060945bdff2e68c1bac2c091 --- /dev/null +++ b/eesanje/url_47_161_2.txt @@ -0,0 +1,6 @@ +ಪಾಕಿಸ್ತಾನಿ ಕ್ವಾಡ್‌ಕಾಪ್ಟರ್‌ಗಳ ಮೇಲೆ ಬಿಎಸ್ಎಫ್ ಗುಂಡಿನ ದಾಳಿ +ಜಮ್ಮು, ಫೆ.16:ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಎರಡು ವಿಭಿನ್ನ ಸ್ಥಳಗಳಲ್ಲಿ ಪಾಕಿಸ್ತಾನದ ಕ್ವಾಡ್‍ಕಾಪ್ಟರ್ ಹರುಬರುತ್ತಿದ್ದನ್ನು ಪತ್ತೆ ಮಡಿದ ಬಿಎಸ್ಎಫ್ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದೆ. ಬಾಲ್ನೋಯ್-ಮೆಂಧರ್ ಮತ್ತು ಗುಲ್ಪುರ್ ಸೆಕ್ಟರ್‍ಗಳಲ್ಲಿನ ಭಾರತದ ಭೂಪ್ರದೇಶದ ಮೇಲೆ ಸಂಕ್ಷಿಪ್ತವಾಗಿ ಸುಳಿದಾಡಿದ ನಂತರ ಪಾಕಿಸ್ತಾನದ ಕಡೆಗೆ ಮರಳಿದವು ಎಂದು ಅವರು ಅಧಿಕಾರಿಗಳು ಹೇಳಿದರು. +ಕ್ವಾಡ್‍ಕಾಪ್ಟರ್‍ಗಳಿಂದ ಶಸ್ತ್ರಾಸ್ತ್ರಗಳು ಅಥವಾ ಮಾದಕ ದ್ರವ್ಯಗಳನ್ನು ತಂದಿದೆಯ ಎಂದು ಖಚಿತಪಡಿಸಿಕೊಳ್ಳಲು ಎರಡೂ ವಲಯಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಸಿದ್ದಾರೆ. +ಇಂದು ಬೆಳಗ್ಗೆ 6.30ರ ಸುಮಾರಿಗೆ ಮೆಂಧರ್‍ನ ಬಲ್ನೋಯಿ ಪ್ರದೇಶಕ್ಕೆ ಎರಡು ಕ್ವಾಡ್‍ಕಾಪ್ಟರ್‍ಗಳು ಪ್ರವೇಶಿಸುತ್ತಿರುವುದನ್ನು ಗಮನಿಸಿದ ನಮ್ಮ ಪಡೆಗಳು ಗುಂಡು ಹಾರಿಸಿದವು ಆದರೆ ರಿಮೋಟ್‍ನಿಂದ ನಿಯಂತ್ರಿತ ಯಂತ್ರಗಳು ಹಿಂತಿರುಗಿದವು ಅಂತೆಯೇ, ಅದೇ ಸಮಯದಲ್ಲಿ ಗುಲ್ಪುರ್ ಸೆಕ್ಟರ್ ಮೇಲೆ ತೂಗಾಡುತ್ತಿದ್ದ ಒಂದೆರಡು ಕ್ವಾಡ್ಕಾಪ್ಟಗಳು ಭಾರತೀಯ ಸೈನಿಕರ ಗುಂಡಿನ ದಾಳಿ ನಂತರ ಹಿಂತಿರುಗಿವೆ. +ಅಮೇರಿಕಾದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಗುಂಡಿಕ್ಕಿ ಹತ್ಯೆ +ಜಮ್ಮು ಮತ್ತು ಕಾಶ್ಮೀರದಲ್ಲಿ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಬಿಡಲು ಪಾಕಿಸ್ತಾನವು ಡ್ರೋನ್‍ಗಳನ್ನು ಬಳಸುತ್ತಿದೆ.ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತ್ತೀಚೆಗೆ ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳನ್ನು ಬೀಳಿಸುವ ಉದ್ದೇಶದಿಂದ ಗಡಿಯಾಚೆಯಿಂದ ಹಾರಿಸಲಾದ ಡ್ರೋನ್‍ಗಳ ಬಗ್ಗೆ ಮಾಹಿತಿ ನೀಡುವವರಿಗೆ ಮೂರು ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ. \ No newline at end of file diff --git a/eesanje/url_47_161_3.txt b/eesanje/url_47_161_3.txt new file mode 100644 index 0000000000000000000000000000000000000000..c42c8cbc284b7dfd520aba4f5ec06e04694eb9d0 --- /dev/null +++ b/eesanje/url_47_161_3.txt @@ -0,0 +1,8 @@ +ರಾಮ ಮಂದಿರಕ್ಕೆ 11ಕೋಟಿ ರೂ. ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್ +ಅಹಮದಾಬಾದ್,ಫೆ.15-ರಾಮ ಮಂದಿರಕ್ಕೆ ಒಮ್ಮೆ 11 ಕೋಟಿ ದೇಣಿಗೆ ನೀಡಿ ಭಕ್ತಿ ಬಾವ ಮೆರದಿದ್ದ ಉದ್ಯಮಿ ಗೋವಿಂದ್ ಧೋಲಾಕಿಯಾ ಅವರು ಗುಜರಾತ್‍ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಡುಬಡತನದಿಂದ ಸಿರವಂತರಾದ ವಜ್ರದ ಉದ್ಯಮಿ ರಾಜಕೀಯಕ್ಕೆ ಕಾಲಿಡುತ್ತಿರುವುದು ಹಲವರನ್ನು ಹುಬ್ಬೇರುವಂತೆ ಮಾಡಿದೆ. +ಈ ಬಗ್ಗೆ ಮಾತನಾಡಿರುವ ಗೋವಿಂದ್ ಧೋಲಾಕಿಯಾ ರೈತ ಕುಟುಂಬದಿಂದ ಬಂದು , ಉದ್ಯಮಿಯಾಗುವತ್ತ ನನ್ನ ಪ್ರಯಾಣವು ತುಂಬಾ ಸಂತೋಷವಾಗಿದೆ… ನಾಲ್ಕು ಗಂಟೆಗಳ ಹಿಂದೆಯಷ್ಟೇ ನನಗೆ ಬಿಜೆಪಿ ಟಿಕೆಟ್ ನೀಡಿರುವುದು ನನಗೆ ತಿಳಿಯಿತು ಆದರೆ ನನ್ನ ಹೆಸರನ್ನು ಅಂತಿಮಗೊಳಿಸುವ ಮೊದಲು ಬಿಜೆಪಿ ನಾಯಕರು ಖಂಡಿತವಾಗಿಯೂ ಈ ಬಗ್ಗೆ ಚಿಂತನೆ ನಡೆಸಿರಬಹುದು ಎಂದು ಅವರು ತಿಳಿಸಿದರು. +ಗೋವಿಂದ್ ಧೋಲಾಕಿಯಾ ಅವರು ಸೂರತ್ ಮೂಲದ ವಜ್ರ ಉತ್ಪಾದನೆ ಮತ್ತು ರಫ್ತು ಮಾಡುವ ಕಂಪನಿ ಶ್ರೀರಾಮಕೃಷ್ಣ ಎಕ್ಸ್‍ಪೋಟ್ರ್ಸ್ ಪ್ರೈವೇಟ್ ಲಿಮಿಟೆಡ್‍ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ. ಇದು ಈ ವಲಯದ ವಿಶ್ವದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿದೆ. ಕಳೆದ 1970 ರಲ್ಲಿ ಕಂಪನಿಯನ್ನು ಪ್ರಾರಂಭಿಸಿ ಇಂದು ಲಿಂಕ್ಡ್‍ಇನ್ ಪೆಪೋಲ್ ಪ್ರಕಾರ, ಕಂಪನಿಯು 5000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಕಂಪನಿಯ ಒಟ್ಟು ಆದಾಯವು ಈಗ 1.8 ಬಿಲಿಯನ್ ಡಾಲರ್‍ಗಳನ್ನು ಮೀರಿದೆ. +ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ : ಅಡ್ಡ ಮತದಾನ ಭೀತಿ +ಗೋವಿಂದಕಾಕ ಅವರು ವಜ್ರ ಉದ್ಯಮ ಮತ್ತು ಯುವಜನತೆಗೆ ಚಿಂತನಶೀಲ ನಾಯಕರಾಗಿದ್ದಾರೆ. ಅವರ ಅಪಾರ ಅನುಭವದಿಂದ ಪ್ರೇರಿತರಾದ ಅವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್- ಅಹಮದಾಬಾದ್, ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಅವರನ್ನು ಆಗಾಗ್ಗೆ ಆಹ್ವಾನಿಸುತ್ತಾರೆ. (ದೆಹಲಿ, ನ್ಯಾಷನಲ್ ಅಕಾಡೆಮಿ ಆಫ್ ಇಂಡಿಯನ್ ರೈಲ್ವೇಸ್, ವಡೋದರಾದ ಸಿಂಬಯೋಸಿಸ್ ಇನ್‍ಸ್ಟಿಟ್ಯೂಟ್ ಆಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್,ಬೆಂಗಳೂರಿನ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಹಲವಾರು ಇತರ ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರಾಗಿದ್ದಾರೆ. +ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಏನನ್ನು ನಿರೀಕ್ಷಿಸಬಹುದು..? +ಲೋಕೋಪಕಾರಕ್ಕಾಗಿ 2014 ರಲ್ಲಿ ನಾಲೆಡ್ಜ್ ಡೇಶನ್ ಅನ್ನು ಸ್ಥಾಪಿಸಿದರು.ಅವರು ದೀಪಾವಳಿ ಸಮಯದಲ್ಲಿ ತಮ್ಮ ಉದ್ಯೋಗಿಗಳಿಗೆ ಉದಾರ ಉಡುಗೊರೆಗಳನ್ನು ನೀಡಲು ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ರಾಜ್ಯಸಭೆ ಸದಸ್ಯರಾಗುವುದು ನಿಶ್ಚಿತವಾಗಿದ್ದು ಹೊಸ ರಂಗ ಪ್ರವೇಶಿಸಲಿದ್ದಾರೆ. \ No newline at end of file diff --git a/eesanje/url_47_161_4.txt b/eesanje/url_47_161_4.txt new file mode 100644 index 0000000000000000000000000000000000000000..b89869cfce0bb9e070fe2123087998d78327adce --- /dev/null +++ b/eesanje/url_47_161_4.txt @@ -0,0 +1,7 @@ +ಕೆಲವರ ದುರಹಂಕಾರದಿಂದ ಕಾಂಗ್ರೆಸ್ ಅವನತಿಯತ್ತ ಸಾಗುತ್ತಿದೆ : ಅಜಾದ್ +ಪೂಂಚ್,ಫೆ.15- ದೌರ್ಬಲ್ಯ ಹಾಗೂ ದುರಹಂಕಾರದಿಂದಾಗಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಅಜಾದ್ ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್‍ನೊಳಗಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ, ಕಾಂಗ್ರೆಸ್ ಪಕ್ಷದ ಮಾಜಿ ನಾಯಕರಾಗಿದ್ದ ಅಜಾದ್ ಅವರು, ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಅವರು ಪಕ್ಷದಿಂದ ನಿರ್ಗಮಿಸಿರುವುದು ಕಾಂಗ್ರೆಸ್‍ಗೆ ದೊಡ್ಡ ಹೊಡೆತವಾಗಿದೆ ಎಂದು ತಿಳಿಸಿದ್ದಾರೆ. +ಈಗ ನಾನು ಈ ಬಗ್ಗೆ ಹೆಚ್ಚು ಹೇಳಲು ಬಯಸುವುದಿಲ್ಲ ಏಕೆಂದರೆ ನಾನು ಪಕ್ಷವನ್ನು ತೊರೆದಿದ್ದೇನೆ. ಅಬ್ ವೋ ಜಾನೇ ಉಂಕ ಕಾಮ್ ಜಾನೆ. ಅಶೋಕ್ ಚವ್ಹಾಣ್ ಕಾಂಗ್ರೆಸ್ ಗೆ ಮಹತ್ವದ ಕೊಡುಗೆ ನೀಡಿದ್ದಾರೆ.ಅವರ ತಂದೆ ಕೂಡ ಕಾಂಗ್ರೆಸ್ ನ ದೊಡ್ಡ ನಾಯಕರಾಗಿದ್ದು, ಕೇಂದ್ರ ಸಚಿವರೂ ಆಗಿದ್ದರು. ಮುಂಬರುವ ದಿನಗಳಲ್ಲಿ ಇನ್ನಷ್ಟು ಮಂದಿ ಪಕ್ಷ ತೊರೆಯಲಿದ್ದಾರೆ ಎಂಬುದು ನನ್ನ ಬಳಿ ಇರುವ ಮಾಹಿತಿ ಇದು ಅವರಿಗೆ ದೊಡ್ಡ ಹೊಡೆತ ಎಂದು ಅವರು ಹೇಳಿದರು. +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ನನ್ನ ಶಾಸಕಾಂಗ ವೃತ್ತಿಯು ಮಹಾರಾಷ್ಟ್ರದಲ್ಲಿ ಪ್ರಾರಂಭವಾಯಿತು. ನಾನು ಅಲ್ಲಿಂದಲೇ ಲೋಕಸಭಾ ಸದಸ್ಯನಾಗಿದ್ದೆ. ನಾನು ಸಹ ಮೊದಲ ಬಾರಿಗೆ ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಹೋಗಿದ್ದೆ. ಭಾರತದಲ್ಲಿ ಕಾಂಗ್ರೆಸ್ ಪುನಶ್ಚೇತನಗೊಳ್ಳಲು ಒಂದೇ ಒಂದು ರಾಜ್ಯ ಅಂದರೆ ಮಹಾರಾಷ್ಟ್ರವಿದೆ. ಇನ್ನೊಂದರಲ್ಲಿ ಯುಪಿ ಮತ್ತು ಬಂಗಾಳದಂತಹ ದೊಡ್ಡ ರಾಜ್ಯಗಳು ಕೊನೆಗೊಂಡಿವೆ, ಕೆಲವೇ ಜನರ ದೌರ್ಬಲ್ಯ ಮತ್ತು ದುರಹಂಕಾರದಿಂದ ಈ ಪಕ್ಷವು ಅಂತ್ಯಗೊಳ್ಳುತ್ತಿರುವುದು ದುರದೃಷ್ಟಕರವಾಗಿದೆ ಎಂದು ಅವರು ಹೇಳಿದರು. +ಅಶೋಕ್ ಚವಾಣ್ ಮಂಗಳವಾರ ಕಾಂಗ್ರೆಸ್ ತೊರೆದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ರಾಷ್ಟ್ರದ ಮನಸ್ಥಿತಿಯನ್ನು ಗಮನಿಸಿ ಕಾಂಗ್ರೆಸ್ ತೊರೆದಿದ್ದೇನೆ ಎಂದು ಚವಾಣ್ ಹೇಳಿದ್ದರು. +ರಾಜಕೀಯದಲ್ಲಿ, ನೀವು ರಾಷ್ಟ್ರದ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು, ಜನರ ಮನಸ್ಥಿತಿಯನ್ನು ಪರಿಗಣಿಸಿ ನಾನು ಬಿಜೆಪಿಗೆ ಸೇರಲು ನಿರ್ಧರಿಸಿದ್ದೇನೆ, ನಾನು ಕಾಂಗ್ರೆಸ್ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ, ಕಾಂಗ್ರೆಸ್‍ನಲ್ಲಿ ಏನು ನಡೆದರೂ ಅದು ಅವರ ಕರ್ಮ, ನಾನು ಸೋನಿಯಾ ಗಾಂಯನ್ನು ಗೌರವಿಸುತ್ತೇನೆ. . ನಾನು ಈಗಷ್ಟೇ ಪಕ್ಷವನ್ನು ತೊರೆದಿದ್ದೇನೆ ಮತ್ತು ಆಕೆಯ ಬಗ್ಗೆ ಪ್ರತಿಕ್ರಿಯಿಸಲು ನಾನು ಅಷ್ಟು ದೊಡ್ಡವನಲ್ಲ ಎಂದು ಚವಾಣ್ ಹೇಳಿದ್ದರು. \ No newline at end of file diff --git a/eesanje/url_47_161_5.txt b/eesanje/url_47_161_5.txt new file mode 100644 index 0000000000000000000000000000000000000000..19e34473861d8016f957df983ec0f4f36797ff33 --- /dev/null +++ b/eesanje/url_47_161_5.txt @@ -0,0 +1,11 @@ + : ಚುನಾವಣಾ ಬಾಂಡ್ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ,. ಸುಪ್ರೀಂ ಮಹತ್ವದ ತೀರ್ಪು +ನವದೆಹಲಿ,ಫೆ.15- ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠ ಚುನಾವಣಾ ಬಾಂಡ್‍ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಪೀಠವು ಚುನಾವಣಾ ಬಾಂಡ್‍ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಮಹತ್ವದ ತೀರ್ಪ ನೀಡಿದೆ. +ರಾಜಕೀಯ ಪಕ್ಷಗಳಿಗೆ ಅನಾಮಧೇಯ ನಿಧಿಗೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‍ಗಳ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಪೀಠವು ಈ ತೀರ್ಪು ನೀಡಿದೆ.ತೀರ್ಪಿನ ಪ್ರಾರಂಭದಲ್ಲಿ, ಸಿಜೆಐ ಚಂದ್ರಚೂಡ್ ಅವರು ಎರಡು ಅಭಿಪ್ರಾಯಗಳನ್ನು ಹೊಂದಿದ್ದರೆ, ಒಬ್ಬರು ಸ್ವತಃ ಮತ್ತು ಇನ್ನೊಬ್ಬ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಇಬ್ಬರೂ ಒಂದೇ ತೀರ್ಮಾನಕ್ಕೆ ಬಂದಿದ್ದಾರೆ. +ಪೀಠವು ಅರ್ಜಿಗಳು ಎರಡು ಪ್ರಮುಖ ಸಮಸ್ಯೆಗಳನ್ನು ಎತ್ತಿವೆ ಎಂದು ಹೇಳಿದರು; ತಿದ್ದುಪಡಿಗಳು ಆರ್ಟಿಕಲ್ 19(1)(ಎ) ಅಡಿಯಲ್ಲಿ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆಯೇ ಮತ್ತು ಅನಿಯಮಿತ ಕಾಪೆರ್ರೇಟ್ ನಿಧಿಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಉಲ್ಲಂಘಿಸಿದೆಯೇ. +ಅನಾಮಧೇಯ ಚುನಾವಣಾ ಬಾಂಡ್‍ಗಳು ಮಾಹಿತಿ ಹಕ್ಕು ಮತ್ತು ಕಲಂ 19(1)(ಎ) ಅನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ ಎಂದು ಸಿಜೆಐ ತಮ್ಮ ತೀರ್ಪನ್ನು ಓದುತ್ತಾ ಹೇಳಿದರು.ಚುನಾವಣಾ ಬಾಂಡ್‍ಗಳ ಮೂಲಕ ಕಾಪೆರ್ರೇಟ್ ಕೊಡುಗೆದಾರರ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ, ಏಕೆಂದರೆ ಕಂಪನಿಗಳು ನೀಡುವ ದೇಣಿಗೆಗಳು ಸಂಪೂರ್ಣವಾಗಿ ಕ್ವಿಡ್ ಪ್ರೊ ಕೋ ಉದ್ದೇಶಗಳನ್ನು ಹೊಂದಿರುತ್ತದೆ ಎಂದು ಅವರು ಗಮನಿಸಿದ್ದಾರೆ. +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ಕಂಪನಿಗಳ ಅಧಿನಿಯಮಿತ ರಾಜಕೀಯ ಕೊಡುಗೆಗಳನ್ನು ಅನುಮತಿಸುವ ಕಂಪನಿಗಳ ಕಾಯಿದೆಯಲ್ಲಿನ ತಿದ್ದುಪಡಿಗಳು ನಿರಂಕುಶ ಮತ್ತು ಅಸಂವಿಧಾನಿಕ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕಪ್ಪುಹಣಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮಾಹಿತಿ ಹಕ್ಕು ಉಲ್ಲಂಘನೆ ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. +ಚುನಾವಣಾ ಬಾಂಡ್‍ಗಳನ್ನು ನೀಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) ರಾಜಕೀಯ ಪಕ್ಷಗಳು ಎನ್‍ಕ್ಯಾಶ್ ಮಾಡಿದ ಎಲೆಕ್ಟೋರಲ್ ಬಾಂಡ್‍ಗಳ ವಿವರಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಬ್ಯಾಂಕ್‍ಗಳಿಗೆ ಆದೇಶಿಸಿದೆ. ಎಸ್‍ಬಿಐ ಭಾರತೀಯ ಚುನಾವಣಾ ಆಯೋಗಕ್ಕೆ ವಿವರಗಳನ್ನು ಸಲ್ಲಿಸಬೇಕು ಮತ್ತು ಇಸಿಐ ಈ ವಿವರಗಳನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಬೇಕು ಎಂದು ನ್ಯಾಯಾಲಯ ಹೇಳಿದೆ. +ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಈ ವಿಷಯದಲ್ಲಿ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಎಲೆಕ್ಟೋರಲ್ ಬಾಂಡ್ ಎನ್ನುವುದು ಪ್ರಾಮಿಸರಿ ನೋಟ್ ಅಥವಾ ಬೇರರ್ ಬಾಂಡ್‍ನ ಸ್ವರೂಪದಲ್ಲಿರುವ ಒಂದು ಸಾಧನವಾಗಿದ್ದು, ವ್ಯಕ್ತಿ ಅಥವಾ ದೇಹವು ಭಾರತದ ಪ್ರಜೆಯಾಗಿದ್ದರೆ ಅಥವಾ ಭಾರತದಲ್ಲಿ ಸಂಘಟಿತ ಅಥವಾ ಸ್ಥಾಪಿಸಲ್ಪಟ್ಟಿದ್ದರೆ ಅದನ್ನು ಯಾವುದೇ ವ್ಯಕ್ತಿ, ಕಂಪನಿ, ಸಂಸ್ಥೆ ಅಥವಾ ವ್ಯಕ್ತಿಗಳ ಸಂಘದಿಂದ ಖರೀದಿಸಬಹುದು. +ಬಾಂಡ್‍ಗಳನ್ನು ನಿರ್ದಿಷ್ಟವಾಗಿ ರಾಜಕೀಯ ಪಕ್ಷಗಳಿಗೆ ನಿಯ ಕೊಡುಗೆಯ ಉದ್ದೇಶಕ್ಕಾಗಿ ನೀಡಲಾಗುತ್ತದೆ. ಚುನಾವಣಾ ಬಾಂಡ್‍ಗಳ ಯೋಜನೆಯು ರಾಜಕೀಯ ನಿಧಿಯ ಸಂಪೂರ್ಣ ಪಾರದರ್ಶಕ ವಿಧಾನವಾಗಿದೆ ಮತ್ತು ಕಪ್ಪು ಹಣ ಅಥವಾ ಲೆಕ್ಕವಿಲ್ಲದ ಹಣವನ್ನು ಪಡೆಯುವುದು ಅಸಾಧ್ಯ ಎಂದು ಕೇಂದ್ರವು ಅಫಿಡವಿಟ್‍ನಲ್ಲಿ ಹೇಳಿತ್ತು. +ಹಣಕಾಸು ಕಾಯಿದೆ 2017 ಮತ್ತು ಹಣಕಾಸು ಕಾಯಿದೆ 2016 ರ ಮೂಲಕ ರಾಜಕೀಯ ಪಕ್ಷಗಳ ಅಧಿನಿಯಮಿತ, ಅಧಿನಿಯಂತ್ರಿತ ನಿಧಿಗೆ ಬಾಗಿಲು ತೆರೆದಿದೆ ಎಂಬ ಕಾರಣಕ್ಕಾಗಿ ವಿವಿಧ ಕಾನೂನುಗಳಿಗೆ ಮಾಡಿದ ತಿದ್ದುಪಡಿಗಳನ್ನು ಪ್ರಶ್ನಿಸಿ ವಿವಿಧ ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ. \ No newline at end of file diff --git a/eesanje/url_47_161_6.txt b/eesanje/url_47_161_6.txt new file mode 100644 index 0000000000000000000000000000000000000000..e645c51bde1e2e04df12ef9362343df68b2d5191 --- /dev/null +++ b/eesanje/url_47_161_6.txt @@ -0,0 +1,7 @@ +ಪಟಾಕಿ ಸ್ಪೋಟಕ್ಕೆ ನಾಲ್ವರು ಬಲಿ +ಚಿತ್ರಕೂಟ,ಫೆ.15- ಉತ್ತರ ಪ್ರದೇಶದ ಚಿತ್ರಕೂಟದ ಬುಂದೇಲ್‍ಖಂಡ ಗೌರವ ಮಹೋತ್ಸವದಲ್ಲಿ ಸಂಭವಿಸಿದ ಪಟಾಕಿ ಸ್ಪೋಟದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ ಈ ಸ್ಪೋಟ ಸಂಭವಿಸಿದೆ. +ಇದರಲ್ಲಿ ನಮ್ಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಚಿತ್ರಕೂಟದ ಡಿಐಜಿ, ಜಿಲ್ಲಾ ಅಧಿಕಾರಿ ಚಿತ್ರಕೂಟ, ಮತ್ತು ಎಸ್ಪಿ, ಹೆಚ್ಚುವರಿ ಎಸ್ಪಿ, ಇತರ ಅಕಾರಿಗಳು ಸ್ಥಳದಲ್ಲಿದ್ದಾರೆ, ನಮ್ಮ ವಿಧಿವಿಜ್ಞಾನ ತಂಡ, ಬಾಂಬ್ ನಿಷ್ಕ್ರಿಯ ದಳದ (ಬಿಡಿಎಸ್) ತಂಡವೂ ಆಗಮಿಸುತ್ತಿದೆ ಎಂದು ಎಡಿಜಿ ಭಾನು ಭಾಸ್ಕರ್ ತಿಳಿಸಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಎಫ್‍ಐಆರ್‍ನಲ್ಲಿ ಇನ್ನೂ ಹೆಚ್ಚಿನವರ ಹೆಸರು ಇರುವ ಸಾಧ್ಯತೆ ಇದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. +ದಕ್ಷಿಣ ಏಷ್ಯಾದಲ್ಲಿ ಭಾರತ ದೊಡ್ಡ ಪಾಲುದಾರ ದೇಶ ; ಅಮೆರಿಕ +ಈಗ ಸುಮಾರು ಮೂವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ ಮತ್ತು ಅದರಲ್ಲಿ ಹೆಚ್ಚಿನ ಜನರನ್ನು ಸೇರಿಸಲಾಗುವುದು. ತನಿಖೆ ನಡೆಯುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಹೇಳಿದ್ದಾರೆ. ತನಿಖೆಗೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಏಕೆಂದರೆ ಎಲ್ಲಾ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ. ಮಕ್ಕಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿಲ್ಲ. ಹೆಚ್ಚಿನ ಜನರನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಅವರು ನೀಡಿದ ಸುಳಿವುಗಳೊಂದಿಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. +ಶಸ್ತ್ರಾಸ್ತ್ರ ಲೂಟಿ ಮಾಡಿದ್ದವರ ಬಂಧನ +ಘಟನೆಯ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ 5 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಈಗ ನಾವು ಎಲ್ಲರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ, ಕುಟುಂಬ ಸದಸ್ಯರನ್ನು ಭೇಟಿ ಮಾಡುವುದು ನಮ್ಮ ಮೊದಲ ಕೆಲಸವಾಗಿತ್ತು, ಆದ್ದರಿಂದ ನಾವು ಇಲ್ಲಿಯವರೆಗೆ ನಾವು ಇಬ್ಬರನ್ನು ಭೇಟಿ ಮಾಡಿದ್ದೇವೆ, ನಾವು ಅಲಹಾಬಾದ್ ಮತ್ತು ಪ್ರಯಾಗ್ರಾಜ್ನಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದೇವೆ ಮತ್ತು ಅದರ ನಂತರ ನಾವು ಉಳಿದವರನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು. \ No newline at end of file diff --git a/eesanje/url_47_161_7.txt b/eesanje/url_47_161_7.txt new file mode 100644 index 0000000000000000000000000000000000000000..52f0a317f62e9b90205f6d542fcebac12671830b --- /dev/null +++ b/eesanje/url_47_161_7.txt @@ -0,0 +1,8 @@ +ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ +ನವದೆಹಲಿ,ಫೆ.15-ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮೂವರು ಕೇಂದ್ರ ಸಚಿವರ ಸಮಿತಿ ಇಂದು ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ. ಕೃಷಿ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸಲು ಇಂದು ಸಂಜೆ 5 ಗಂಟೆಗೆ ಸಭೆ ನಡೆಸಲಿದ್ದಾರೆ, ಪ್ರಮುಖವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಖಾತರಿಪಡಿಸುವ ಕಾನೂನು ಜಾರಿ ಕುರಿತಂತೆ ಮಹತ್ವದ ಮಾತುಕತೆ ನಡೆಯಲಿದೆ. +ಫೆಬ್ರವರಿ 8 ಮತ್ತು 12 ರಂದು ನಡೆದ ಹಿಂದಿನ ಸುತ್ತಿನ ಮಾತುಕತೆಗಳು ಅನಿರ್ದಿಷ್ಟವಾಗಿ ಉಳಿದಿರುವ ಕಾರಣ ಇದು ಉಭಯ ಪಕ್ಷಗಳ ನಡುವಿನ ಮಾತುಕತೆಯ ಮೂರನೇ ಪ್ರಯತ್ನವನ್ನು ಸೂಚಿಸುತ್ತದೆ. ಪಂಜಾಬ್ ಮತ್ತು ಹರಿಯಾಣದ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿರುವ ಪಂಜಾಬ್‍ನ ರೈತರು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡಲು ದೆಹಲಿಯತ್ತ ಪಾದಯಾತ್ರೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಹರಿಯಾಣದ ಜಿಂದ್ ಜಿಲ್ಲೆಯ ಸಮೀಪವಿರುವ ಡಾಟಾ ಸಿಂಘ್ವಾಲಾ-ಖನೌರಿ ಗಡಿಯಲ್ಲಿ ಇದೇ ರೀತಿಯ ಬಿಕ್ಕಟ್ಟು ಮುಂದುವರಿದಿದೆ. +ಶಸ್ತ್ರಾಸ್ತ್ರ ಲೂಟಿ ಮಾಡಿದ್ದವರ ಬಂಧನ +ಪಂಜಾಬ್‍ನಾದ್ಯಂತ ರೈಲ್ ರೋಕೋ ಸಭೆ ನಡೆಯುವವರೆಗೆ ರಾಷ್ಟ್ರ ರಾಜಧಾನಿ ಕಡೆಗೆ ತೆರಳುವ ಯಾವುದೇ ಹೊಸ ಪ್ರಯತ್ನಗಳನ್ನು ಮಾಡದಂತೆ ರೈತ ಮುಖಂಡರನ್ನು ಒತ್ತಾಯಿಸಲಾಗಿದೆ. ಆರೆ, ಕೇಂದ್ರದ ಪ್ರಸ್ತಾವನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಆದಾಗ್ಯೂ, ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಮತ್ತು ಬಿಕೆಯು ದಕೌಂಡಾ (ಧನೇರ್) ಇಂದು ಪಂಜಾಬ್‍ನಲ್ಲಿ ರೈಲ್ ರೋಕೋ (ರೈಲು ದಿಗ್ಬಂಧನ) ಘೋಷಿಸಿದ್ದಾರೆ. ಶಂಭು ಮತ್ತು ಖಾನೌರಿ ಗಡಿಯಲ್ಲಿ ಹರಿಯಾಣ ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‍ಗಳು ಮತ್ತು ನೀರಿನ ಫಿರಂಗಿಗಳನ್ನು ಬಳಸುವುದನ್ನು ವಿರೋಧಿಸಿ ರೈತರು ರೈಲ್ ರೋಖೋ ನಡೆಸುತ್ತಿದ್ದಾರೆ. +ಕಳೆದ ಎರಡು ದಿನಗಳ ಹಿಂದೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ನಿಯೋಜಿಸಿದ್ದು, ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಅಶ್ರುವಾಯು ಪ್ರಭಾವವನ್ನು ಕಡಿಮೆ ಮಾಡಲು ರೈತರು ನೀರಿನ ಬಾಟಲಿಗಳು, ಒದ್ದೆಯಾದ ಬಟ್ಟೆಗಳು ಮತ್ತು ರಕ್ಷಣಾತ್ಮಕ ಸಾಧನಗಳೊಂದಿಗೆ ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ರೈತರು ತಮ್ಮ ಟ್ರ್ಯಾಕ್ಟರ್ ಟ್ರಾಲಿಗಳಲ್ಲಿ ದೆಹಲಿಗೆ ಪ್ರಯಾಣಿಸುವುದನ್ನು ತಡೆಯುವ ಮೂಲಕ ಪೊಲೀಸರು ಗಡಿಯನ್ನು ಬ್ಯಾರಿಕೇಡ್‍ಗಳಿಂದ ಮುಚ್ಚಿದ್ದಾರೆ. +ದಕ್ಷಿಣ ಏಷ್ಯಾದಲ್ಲಿ ಭಾರತ ದೊಡ್ಡ ಪಾಲುದಾರ ದೇಶ ; ಅಮೆರಿಕ +ನವದೆಹಲಿಯಲ್ಲಿ ಟ್ರಾಫಿಕ್ ಮೇಲೆ ಪರಿಣಾಮ ಬೀರುವ ಪ್ರತಿಭಟನೆಗಳೊಂದಿಗೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ಕಳೆದ ರಾತ್ರಿ ವಿದ್ಯಾರ್ಥಿಗಳಿಗೆ ತಮ್ಮ ಪ್ರಯಾಣವನ್ನು ಮೊದಲೇ ಯೋಜಿಸುವಂತೆ ಒತ್ತಾಯಿಸಿ ಸಲಹೆಯನ್ನು ನೀಡಿತು. ಮಂಡಳಿಯು ಮೆಟ್ರೋ ಬಳಸಲು ಶಿಫಾರಸು ಮಾಡಿದೆ. \ No newline at end of file diff --git a/eesanje/url_47_161_8.txt b/eesanje/url_47_161_8.txt new file mode 100644 index 0000000000000000000000000000000000000000..480d08bb3c9b2f0f51d905c30d8afbc0974fd26e --- /dev/null +++ b/eesanje/url_47_161_8.txt @@ -0,0 +1,6 @@ +ಶಸ್ತ್ರಾಸ್ತ್ರ ಲೂಟಿ ಮಾಡಿದ್ದವರ ಬಂಧನ +ಇಂಫಾಲ್, ಫೆ.15 (ಪಿಟಿಐ) ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್‍ನಲ್ಲಿರುವ ಇಂಡಿಯಾ ರಿಸರ್ವ್ ಬೆಟಾಲಿಯನ್ ಶಿಬಿರದಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುತ್ತಿದ್ದ ಆರು ಜನರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ. ನಾಲ್ಕು ಇನ್ಸಾಸ್ ರೈಫಲ್‍ಗಳು, ಒಂದು ಎಕೆ ಘಟಕ್, ಎಸ್‍ಎಲ್‍ಆರ್‍ನ ಎರಡು ಮ್ಯಾಗಜೀನ್‍ಗಳು ಮತ್ತು ಐಆರ್‍ಬಿ ಕ್ಯಾಂಪ್‍ನಿಂದ ಲೂಟಿ ಮಾಡಿದ 9 ಎಂಎಂ ಮದ್ದುಗುಂಡುಗಳ 16 ಸಣ್ಣ ಪೆಟ್ಟಿಗೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೊನ್ನೆ ರಾತ್ರಿ ಅಶಿಸ್ತಿನ ಜನಸಮೂಹದಿಂದ 5 ನೇ ಐಆರ್‍ಬಿ, ಚಿಂಗಾರೆಲ್, ಇಂಫಾಲ್ ಪೂರ್ವದ ಶಸ್ತ್ರಾಸ್ತ್ರ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಪುರ ಪೊಲೀಸರು ಆರು ಜನರನ್ನು ಬಂಧಿಸಿ ಪೊಲೀಸ್ ಕಸ್ಟಡಿಗ ಕಳುಹಿಸಲಾಗಿದೆ. ಆದಾಗ್ಯೂ, ಶಸ್ತ್ರಾಸ್ತ್ರಗಳನ್ನು ಎಲ್ಲಿಂದ ವಶಪಡಿಸಿಕೊಳ್ಳಲಾಗಿದೆ ಅಥವಾ ವ್ಯಕ್ತಿಗಳನ್ನು ಎಲ್ಲಿಂದ ಬಂಧಿಸಲಾಗಿದೆ ಎಂಬುದನ್ನು ಪೊಲೀಸರು ತಿಳಿಸಿಲ್ಲ. ಅಶಿಸ್ತಿನ ಗುಂಪೊಂದು ಚಿಂಗಾರೆಲ್‍ನಲ್ಲಿರುವ 5 ನೇ ಐಆರ್‍ಬಿಯ ಕ್ಯಾಂಪ್‍ಗೆ ನುಗ್ಗಿತು ಮತ್ತು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಓಡಿಹೋಯಿತು. +ಬೆಂಗಳೂರು : ಆತಂಕ ಸೃಷ್ಟಿಸಿದ್ದ ಸ್ಕ್ರಾಪ್ ಎಟಿಎಂ ಬಾಕ್ಸ್ +ಘಟನೆಯ ನಂತರ, ಚಿಂಗಾರೆಲ್‍ನಿಂದ ಸುಮಾರು 5 ಕಿಮೀ ದೂರದಲ್ಲಿರುವ ಇಂಫಾಲ್ ಪೂರ್ವ ಜಿಲ್ಲೆಯ ಪಂಗೇಯಲ್ಲಿರುವ ಮಣಿಪುರ ಪೊಲೀಸ್ ತರಬೇತಿ ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯ ಗ್ರಾಮ ಸ್ವಯಂಸೇವಕರು ನುಗ್ಗಲು ಪ್ರಯತ್ನಿಸಿದರು. +ತರಬೇತಿ ಕಾಲೇಜಿಗೆ ನುಗ್ಗಲು ಪ್ರಯತ್ನಿಸುತ್ತಿರುವ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಸೇರಿದಂತೆ ಹಿಂಸಾತ್ಮಕ ಗುಂಪುಗಳನ್ನು ಹಿಮ್ಮೆಟ್ಟಿಸಲು, ಭದ್ರತಾ ಪಡೆಗಳು ಕಾನೂನು ಬಲವನ್ನು ಬಳಸಿದವು. ಘಟನೆಯ ಸಂದರ್ಭದಲ್ಲಿ, ಒಬ್ಬ ವ್ಯಕ್ತಿ ಗಾಯಗೊಂಡರು ಮತ್ತು ಮೂವರು ವ್ಯಕ್ತಿಗಳು ಗಾಯಗೊಂಡಿದ್ದರು. \ No newline at end of file diff --git a/eesanje/url_47_161_9.txt b/eesanje/url_47_161_9.txt new file mode 100644 index 0000000000000000000000000000000000000000..52b2a40c0ccd37bd2579a06f4d16fba6f7703124 --- /dev/null +++ b/eesanje/url_47_161_9.txt @@ -0,0 +1,6 @@ +ಬಿಜೆಪಿಗೆ ಸೇರ್ಪಡೆಗೊಂಡ ಪಿಡಿಪಿ ನಾಯಕ +ಜಮ್ಮು, ಫೆ 14:ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ)ನಾಯಕ ಅರ್ಷಿದ್ ಮೆಹಮೂದ್ ಖಾನ್ ಅವರು ಇಂದು ಇಲ್ಲಿ ತಮ್ಮ ಹಲವಾರು ಬೆಂಬಲಿಗರೊಂದಿಗೆ ಬಿಜೆಪಿ ಸೇರಿದರು. ನೌಶೇರಾದ ದಂಡೇಸರ್ ಗ್ರಾಮದಿಂದ ಮೂರು ಬಾರಿ ಸರಪಂಚ್ ಆಗಿರುವ ಖಾನ್ ಮತ್ತು ಅವರ ಬೆಂಬಲಿಗರನ್ನು ಪಕ್ಷದ ಜೆ ಕೆ ಅಧ್ಯಕ್ಷ ರವೀಂದರ್ ರೈನಾ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕವೀಂದರ್ ಗುಪ್ತಾ ಮತ್ತು ಸಂಸದ ಜುಗಲ್ ಕಿಶೋರ್ ಸೇರಿದಂತೆ ಇತರ ಹಿರಿಯ ನಾಯಕರು ಬಿಜೆಪಿಗೆ ಸ್ವಾಗತಿಸಿದರು. +ಸೇರ್ಪಡೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೈನಾ, ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಚುನಾವಣೆಗೆ ಸಿದ್ಧವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಯನ್ನು ಘೋಷಿಸುವುದು ಚುನಾವಣಾ ಆಯೋಗದ ಅ„ಕಾರವಾಗಿದೆ ಆದರೆ ನಾವು ಯಾವುದೇ ಚುನಾವಣೆಗೆ ಸಿದ್ಧರಿದ್ದೇವೆ ಎಂದು ಅವರು ಹೇಳಿದರು. +ಕ್ರೈಂ ರಾಜಧಾನಿಯಾಗುತ್ತಿದೆ ಬೆಂಗಳೂರು : ಆರ್.ಅಶೋಕ್ +ಫೆಬ್ರವರಿ 20 ರಂದು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರೈನಾ ಹೇಳಿದರು.ಮೋದಿ ಅವರು ಜೆ ಕೆ ಅಭಿವೃದ್ಧಿಗಾಗಿ ಬೊಕ್ಕಸವನ್ನು ತೆರೆದರು. ಶಾಂತಿ ಮತ್ತು ಸಹೋದರತ್ವದ ಮರುಸ್ಥಾಪನೆಯು ಜನರಿಗೆ ಅವರ ದೊಡ್ಡ ಕೊಡುಗೆಯಾಗಿದೆ. ಅವರು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸವನ್ನು ಖಾತ್ರಿಪಡಿಸಿದ್ದಾರೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯವನ್ನು ಒದಗಿಸಿದ್ದಾರೆ ಎಂದು ಅವರು ಹೇಳಿದರು. +ಪ್ರಧಾನಿ ಸಮ್ಮುಖದಲ್ಲಿ ಕೆಲವು ಹಿರಿಯ ರಾಜಕೀಯ ನಾಯಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಯಾರೇ ಬಂದರೂ ನಾವು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇವೆ ಎಂದು ರೈನ್ ಹೇಳಿದರು. \ No newline at end of file diff --git a/eesanje/url_47_162_1.txt b/eesanje/url_47_162_1.txt new file mode 100644 index 0000000000000000000000000000000000000000..4d180a60f2f45d8d92111727532c04f1e7bad016 --- /dev/null +++ b/eesanje/url_47_162_1.txt @@ -0,0 +1,6 @@ +ಗಂಗಾ ಸ್ನಾನ ಮಾಡಿದ 15 ಲಕ್ಷ ಭಕ್ತರು +ಪ್ರಯಾಗರಾಜ್, ಫೆ 14 (ಪಿಟಿಐ) ಬಸಂತ್ ಪಂಚಮಿಯ ಪವಿತ್ರ ದಿನವಾದ ಇಂದು ಸುಮಾರು 15ಲಕ್ಷ ಜನರು ಗಂಗಾ ನದಿ ಮತ್ತು ಪವಿತ್ರ ಸಂಗಮದಲ್ಲಿ ಸ್ನಾನ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಘಮೇಳ ಕ್ಷೇತ್ರಕ್ಕೆ ಮುಂಜಾನೆಯಿಂದಲೇ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಭಕ್ತರು ಆಗಮಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಮಂಗಳವಾರದ ಮಳೆ ಮತ್ತು ಇಂದು ಬೆಳಿಗ್ಗೆ ಮೋಡ ಕವಿದ ವಾತಾವರಣ ಮತ್ತು ತಂಪಾದ ವಾತಾವರಣದ ಹೊರತಾಗಿಯೂ, ಸುಮಾರು 15 ಲಕ್ಷ ಜನರು ಸಂಗಮ್ ನಗರದಲ್ಲಿ ಮಾಘ ಮೇಳದ ನಾಲ್ಕನೇ ಸ್ನಾನದ ಹಬ್ಬವಾದ ಬಸಂತ್ ಪಂಚಮಿಯನ್ನು ಆಚರಿಸಲು ಪವಿತ್ರ ಸ್ನಾನ ಮಾಡಿದರು. ಘಾಟ್‍ಗಳ ಉದ್ದವನ್ನು 6,800 ಅಡಿಗಳಿಂದ 8,000 ಅಡಿಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು. ಈ ಬಾರಿ ಜನರ ಅನುಕೂಲಕ್ಕಾಗಿ ಮತ್ತು ಒಟ್ಟು 12 ಘಾಟ್‍ಗಳನ್ನು ಸಾಕಷ್ಟು ಬದಲಾವಣೆ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ಮೇಳ ಪ್ರದೇಶದಲ್ಲಿ 300 ಸಿಸಿಟಿವಿ ಕ್ಯಾಮೆರಾಗಳು ಮತ್ತು ಹಲವು ಎಐ ಆಧಾರಿತ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ಫೀಡ್‍ಗಳನ್ನು ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಕಳುಹಿಸುವ ಮೂಲಕ ಮೇಳ ಪ್ರದೇಶದಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಪೊಲೀಸ್ ಉಪ ಮಹಾನಿರೀಕ್ಷಕ (ಮಾಘ ಮೇಳ) ರಾಜೀವ್ ನಾರಾಯಣ ಮಿಶ್ರಾ ತಿಳಿಸಿದ್ದಾರೆ. +ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಕಂಡರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು. ಮಾಘಮೇಳ ಕ್ಷೇತ್ರದಲ್ಲಿರುವ ಸಂತರ, ಮುನಿಗಳ ಶಿಬಿರಗಳಲ್ಲಿ ದೊಡ್ಡ ಮಟ್ಟದಲ್ಲಿ ಭಂಡಾರವನ್ನು ಆಯೋಜಿಸಲಾಗುತ್ತಿದೆ. \ No newline at end of file diff --git a/eesanje/url_47_162_10.txt b/eesanje/url_47_162_10.txt new file mode 100644 index 0000000000000000000000000000000000000000..5ae9449a8aa468620fc4f0ba2da7670b31af0f96 --- /dev/null +++ b/eesanje/url_47_162_10.txt @@ -0,0 +1,5 @@ +ಎನ್‍ಸಿಪಿ ಹೆಸರು, ಚಿಹ್ನೆಗಾಗಿ ಸುಪ್ರೀಂ ಮೊರೆ ಹೋದ ಶರದ್‍ಪವಾರ್ +ನವದೆಹಲಿ, ಫೆ.13 (ಪಿಟಿಐ) – ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪಕ್ಷವನ್ನು ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಎಂದು ಗುರುತಿಸಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಹಿರಿಯ ನಾಯಕ ಶರದ್ ಪವಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ನಿನ್ನೆ ಸಂಜೆ ವಕೀಲ ಅಭಿಷೇಕ್ ಜೆಬರಾಜ್ ಮೂಲಕ ಪವಾರ್ ಅವರು ತಮ್ಮ ವೈಯಕ್ತಿಕ ಸಾಮಥ್ರ್ಯದ ಮೇಲೆ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದ್ದಾರೆ. +ಅವರಿಗಿಂತ ಮೊದಲು, ಅಜಿತ್ ಪವಾರ್ ಬಣವು ವಕೀಲ ಅಭಿಕಲ್ಪ ಪ್ರತಾಪ್ ಸಿಂಗ್ ಮೂಲಕ ಈಗಾಗಲೇ ಸುಪ್ರೀಂ ಕೋರ್ಟ್‍ಗೆ ಕೇವಿಯಟ್ ಸಲ್ಲಿಸಿದೆ. ಫೆಬ್ರವರಿ 6 ರಂದು, ಚುನಾವಣಾ ಆಯೋಗವು ಅಜಿತ್ ಪವಾರ್ ಬಣ ನಿಜವಾದ ಎನ್‍ಸಿಪಿ ಎಂದು ಘೋಷಿಸಿತು, ಈ ನಿರ್ಧಾರ ಪಕ್ಷದ ಸಂಸ್ಥಾಪಕ ಶರದ್ ಪವಾರ್‍ಗೆ ದೊಡ್ಡ ಹಿನ್ನಡೆ ಎಂದು ಭಾವಿಸಲಾಗಿತ್ತು. +ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗ ನೀಡಲು ಮುಂದಾದ ಟಾಟಾ ಸಂಸ್ಥೆ +ಚುನಾವಣಾ ಸಮಿತಿಯು ಅಜಿತ್ ಪವಾರ್ ನೇತೃತ್ವದ ಗುಂಪಿಗೆ ಎನ್‍ಸಿಪಿ ಚಿಹ್ನೆ ಗಡಿಯಾರವನ್ನು ಸಹ ನೀಡಿದೆ. ಈ ನಿರ್ಧಾರವು ಪಕ್ಷದ ಸಂವಿಧಾನದ ಗುರಿಗಳು ಮತ್ತು ಉದ್ದೇಶಗಳ ಪರೀಕ್ಷೆಗಳು, ಪಕ್ಷದ ಸಂವಿಧಾನದ ಪರೀಕ್ಷೆ ಮತ್ತು ಸಾಂಸ್ಥಿಕ ಮತ್ತು ಶಾಸಕಾಂಗದ ಬಹುಮತದ ಪರೀಕ್ಷೆಗಳನ್ನು ಒಳಗೊಂಡಿರುವ ಅಂತಹ ಅರ್ಜಿಯ ನಿರ್ವಹಣೆಯ ಪರೀಕ್ಷೆಗಳನ್ನು ಅನುಸರಿಸಿದೆ ಎಂದು ಇಸಿ ಹೇಳಿತ್ತು. ಚುನಾವಣಾ ಆಯೋಗದ ಈ ನಿರ್ಧಾರವನ್ನು ಪ್ರಶ್ನಿಸಿ ಶರದ್ ಪವಾರ್ ಅವರು ಇದೀಗ ಸುಪ್ರೀಂ ಕೊರ್ಟ್ ಮೆಟ್ಟಿಲೇರಿದ್ದಾರೆ. \ No newline at end of file diff --git a/eesanje/url_47_162_11.txt b/eesanje/url_47_162_11.txt new file mode 100644 index 0000000000000000000000000000000000000000..c1cf0df7be982cf3fce068e2946ada566131e572 --- /dev/null +++ b/eesanje/url_47_162_11.txt @@ -0,0 +1,6 @@ +ಬಂಧಿತ ತಮಿಳುನಾಡು ಸಚಿವ ಬಾಲಾಜಿ ರಾಜೀನಾಮೆ +ಚೆನ್ನೈ,ಫೆ.13- ಉದ್ಯೋಗಕ್ಕಾಗಿ ನಗದು ಪ್ರಕರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಮದ್ರಾಸ್ ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರುವ ಮುಂಚಿತವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಾಲಾಜಿ ಅವರು ಈ ಹಿಂದೆ ಸಾರಿಗೆ ಸಚಿವರಾಗಿದ್ದಾಗ ಚೆನ್ನೈನ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು ದಾಖಲಿಸಿದ ಉದ್ಯೋಗಕ್ಕಾಗಿ ನಗದು ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಆರಂಭಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಳೆದ ವರ್ಷ ಜೂನ್ 14 ರಂದು ಬಂಧಿಸಿತ್ತು. +ಆಡಳಿತಾರೂಢ ಡಿಎಂಕೆ ಪಕ್ಷದ ಮೂಲಗಳು ಬಾಲಾಜಿ ಅವರ ಅಧಿಕಾರಾವಧಿಯ ಸುತ್ತ ನಡೆಯುತ್ತಿರುವ ಕಾನೂನು ತೊಡಕುಗಳನ್ನು ಉಲ್ಲೇಖಿಸಿ ಅವರ ರಾಜೀನಾಮೆಯನ್ನು ದೃಢಪಡಿಸಿವೆ. ರಾಜ್ಯಪಾಲ ಟಿ.ಎನ್.ರವಿ ಅವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರನ್ನು ಒತ್ತಾಯಿಸಿದ್ದರು. ಸ್ಟಾಲಿನ್ ಅವರು ಬೆಂಬಲದ ಪ್ರದರ್ಶನವಾಗಿ ಬಾಲಾಜಿ ಅವರನ್ನು ತಮಿಳುನಾಡು ಸಂಪುಟದಲ್ಲಿ ಉಳಿಸಿಕೊಂಡರು. ಆದರೆ, ಮದ್ರಾಸ್ ಹೈಕೋರ್ಟ್ ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಿ ಸ್ಟಾಲಿನ್ ಅವರ ಸ್ಥಾನವನ್ನು ಮರುಚಿಂತನೆ ಮಾಡುವುದು ಉತ್ತಮ ಎಂದು ಹೈಕೋರ್ಟ್ ಇತ್ತೀಚೆಗೆ ಸಲಹೆ ನೀಡಿತ್ತು. +ಚವಾಣ್‍ರನ್ನು ರಾಜ್ಯಸಭೆಗೆ ಕಳುಹಿಸುವುದು ಹುತಾತ್ಮರಿಗೆ ಅಗೌರವ ತೋರಿದಂತೆ : ಠಾಕ್ರೆ +ರಾಜಕೀಯ ಬಲವಂತವು ಸಾರ್ವಜನಿಕ ನೈತಿಕತೆ, ಉತ್ತಮ ಮತ್ತು ಸ್ವಚ್ಛ ಆಡಳಿತದ ಅವಶ್ಯಕತೆಗಳು ಮತ್ತು ಸಾಂವಿಧಾನಿಕ ನೈತಿಕತೆಯನ್ನು ಮೀರಿಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಎಸ್‍ವಿ ಗಂಗಾಪುರವಾಲಾ ನೇತೃತ್ವದ ಪೀಠ ಹೇಳಿದೆ. +ಪದೇ ಪದೇ ಮನವಿ ಮಾಡಿದರೂ ಕೆಳ ನ್ಯಾಯಾಲಯಗಳು ಬಾಲಾಜಿಗೆ ಜಾಮೀನು ನಿರಾಕರಿಸಿವೆ. ಅವರ ಜಾಮೀನು ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಎರಡು ದಿನಗಳಲ್ಲಿ ಎರಡನೇ ಬಾರಿಗೆ ವಿಚಾರಣೆ ನಡೆಸಲಿದೆ. ಇದಕ್ಕೂ ಮುನ್ನವೇ ಬಾಲಾಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. \ No newline at end of file diff --git a/eesanje/url_47_162_12.txt b/eesanje/url_47_162_12.txt new file mode 100644 index 0000000000000000000000000000000000000000..0b64a391f6dde3185aa48ef8c1664b6b5f6c79c2 --- /dev/null +++ b/eesanje/url_47_162_12.txt @@ -0,0 +1,5 @@ +ಆರಂಭಿಕ ಉದ್ಯೋಗಿಗಳನ್ನು ಪುರಸ್ಕರಿಸದಿರುವುದಕ್ಕೆ ಇನ್ಫಿ ಮೂರ್ತಿ ವಿಷಾದ +ನವದೆಹಲಿ,ಫೆ.13- ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಕಂಪನಿಯ ಆರಂಭಿಕ ಉದ್ಯೋಗಿಗಳಿಗೆ ಪುರಸ್ಕಾರ ನೀಡದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇನ್ಫೋಸಿಸ್ ಯಶಸ್ಸನ್ನು ನಿರ್ಮಿಸುವಲ್ಲಿ ಕಂಪನಿಯ ಆರಂಭಿಕ ಉದ್ಯೋಗಿಗಳ ಕೊಡುಗೆಗಳನ್ನು ಅವರು ಸ್ಮರಿಸಿಕೊಂಡಿದ್ದಾರೆ. ಇನ್ಫೋಸಿಸ್ ನ ಆರಂಭಿಕ ಅಳವಡಿಕೆದಾರರು ಹಲವಾರು ಮಂದಿ ಇದ್ದರು, ನನ್ನ ಸಹ-ಸಂಸ್ಥಾಪಕರಿಗೆ ನಾನು ನೀಡಿದ ಷೇರುಗಳನ್ನು ನಾನು ನೀಡಲು ಸಾಧ್ಯವಾಗಲಿಲ್ಲ. ಅವರ ಕೊಡುಗೆ ಹೆಚ್ಚು ಅಥವಾ ನನ್ನಂತೆಯೇ ಇತ್ತು ಎಂದು ಮೂರ್ತಿ ಅವರು ತಮ್ಮ ಪುಸ್ತಕ ಬಿಡುಗಡೆಯ ನಂತರ ಪ್ರಶ್ನೆಗಳಿಗೆ ಉತ್ತರಿಸಿದರು. +ಇನ್ಫೋಸಿಸ್ ಅನ್ನು ಜುಲೈ 1981 ರಲ್ಲಿ ಪುಣೆಯಲ್ಲಿ ಸ್ಥಾಪಿಸಲಾಯಿತು ಆದರೆ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಗೊಂಡಿದೆ, ಇದನ್ನು ಮೂರ್ತಿ ಸೇರಿದಂತೆ ಏಳು ಎಂಜಿನಿಯರ್‍ಗಳು ಸಹ-ಸಂಸ್ಥಾಪಕರಿದ್ದರು. ಇತರ ಸಹ-ಸಂಸ್ಥಾಪಕರೆಂದರೆ ನಂದನ್ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್, ಎಸ್‍ಡಿ ಶಿಬುಲಾಲ, ಕೆ ದಿನೇಶ್, ಎನ್‍ಎಸ್ ರಾಘವನ್ ಮತ್ತು ಅಶೋಕ್ ಅರೋರಾ ಆಗಿದ್ದರು. +ಚವಾಣ್‍ರನ್ನು ರಾಜ್ಯಸಭೆಗೆ ಕಳುಹಿಸುವುದು ಹುತಾತ್ಮರಿಗೆ ಅಗೌರವ ತೋರಿದಂತೆ : ಠಾಕ್ರೆ +ಕಳೆದ ತಿಂಗಳು, ಮೂರ್ತಿ ಅವರು ತಮ್ಮ ಪತ್ನಿ ಸುಧಾ ಮೂರ್ತಿಗೆ ಈಗ ಟೆಕ್ ದೈತ್ಯ ಇನೋಸಿಸ್‍ಗೆ ಸೇರಲು ಅವಕಾಶ ನೀಡಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದರು. ಇನೋಸಿಸ್ ಅನ್ನು ಸ್ಥಾಪಿಸಲು ಸುಧಾ ಮೂರ್ತಿ ತನ್ನ ಪತಿಗೆ 10,000 ರೂ.ಗಳ ಆರಂಭಿಕ ಮೂಲ ಬಂಡವಾಳವನ್ನು ಒದಗಿಸಿದವರು. ಮೂರ್ತಿ ಅವರು ಟೆಕ್ ದೈತ್ಯರಾಗಿದ್ದ ಸಮಯದಲ್ಲಿ, ನಿರ್ಧಾರ ತೆಗೆದುಕೊಳ್ಳುವ ಮೊದಲು ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪರಿಗಣಿಸಬೇಕು ಇಲ್ಲದಿದ್ದರೆ ಪ್ರಜಾಪ್ರಭುತ್ವದಲ್ಲಿ ನೀವು ಯಾವಾಗಲೂ ಉತ್ತಮ ಫಲಿತಾಂಶಗಳನ್ನು ಪಡೆಯುವುದಿಲ್ಲ ಎಂದು ಮೂರ್ತಿ ಹೇಳಿದ್ದಾರೆ. ನಾವು ಪ್ರಬುದ್ಧ ಪ್ರಜಾಪ್ರಭುತ್ವವನ್ನು ರಚಿಸಿದ್ದರಿಂದ ಇನ್ಫೋಸಿಸ್ ನಮಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿತ್ತು ಎಂದು ಅವರು ಹೇಳಿದರು. \ No newline at end of file diff --git a/eesanje/url_47_162_2.txt b/eesanje/url_47_162_2.txt new file mode 100644 index 0000000000000000000000000000000000000000..07ad601158621820296e91b44feeb2d41ab68b6a --- /dev/null +++ b/eesanje/url_47_162_2.txt @@ -0,0 +1,9 @@ +‘ದೆಹಲಿ ಚಲೋ’ ಪ್ರತಿಭಟನೆ : ಮತ್ತೆ ರೈತರ ಮೇಲೆ ಆಶ್ರುವಾಯು ಪ್ರಯೋಗ +ಚಂಡೀಗಢ, ಫೆ 14 (ಪಿಟಿಐ) ಅಂಬಾಲ ಬಳಿಯ ಶಂಭು ಗಡಿಯಲ್ಲಿ ಇಂದು ರೈತರು ತಮ್ಮ ದೆಹಲಿ ಚಲೋ ಪ್ರತಿಭಟನೆಯನ್ನು ಪುನರಾರಂಭಿಸಲು ಮುಂದಾದಾಗ ರೈತರ ಮೇಲೆ ಕೆಲವು ಅಶ್ರುವಾಯು ಶೆಲ್‍ಗಳನ್ನು ಹಾರಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕೆಲವು ರೈತರು ಶಂಭು ಗಡಿಯಲ್ಲಿನ ಬ್ಯಾರಿಕೇಡ್‍ಗಳ ಬಳಿ ಜಮಾಯಿಸಿದಾಗ ಹರಿಯಾಣ ಭದ್ರತಾ ಸಿಬ್ಬಂದಿಗಳು ಅಶ್ರುವಾಯು ಶೆಲ್‍ಗಳನ್ನು ಎಸೆದರು ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. +ನಿನ್ನೆ ರಾಷ್ಟ್ರ ರಾಜಧಾನಿಗೆ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ತಡೆಯುವ ಬ್ಯಾರಿಕೇಡ್‍ಗಳನ್ನು ಮುರಿಯಲು ಪ್ರಯತ್ನಿಸಿದಾಗ ರೈತರು ಅಶ್ರುವಾಯು ಮತ್ತು ನೀರಿನ ಫಿರಂಗಿಗಳನ್ನು ಎದುರಿಸಿ, ರಾಜ್ಯಗಳ ನಡುವಿನ ಎರಡು ಗಡಿ ಬಿಂದುಗಳಲ್ಲಿ ಹರಿಯಾಣ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು. ಹಲವು ಗಂಟೆಗಳ ಕಾಲ ಪೊಲೀಸರೊಂದಿಗೆ ಮುಖಾಮುಖಿಯಾದ ನಂತರ, ರೈತ ಮುಖಂಡರು ದಿನದ ಪ್ರತಿಭಟನೆಯನ್ನು ಹಿಂಪಡೆದು ಇಂದು ಶಂಭುದಿಂದ ಮೆರವಣಿಗೆಯನ್ನು ಪುನರಾರಂಭಿಸಲು ಮುಂದಾಗಿದ್ದರು. +ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಸಾಲ ಮನ್ನಾ ಸೇರಿದಂತೆ ತಮ್ಮ ಬೇಡಿಕೆಗಳಿಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋ ಆಂದೋಲನವನ್ನು ಮುನ್ನಡೆಸುತ್ತಿವೆ. ಫೆಬ್ರವರಿ 13 ರಂದು ಶಂಭು ಗಡಿಯಲ್ಲಿ ತಮ್ಮ ಪ್ರತಿಭಟನೆಯ ಸಂದರ್ಭದಲ್ಲಿ, ರೈತರು, ಟ್ರಾಕ್ಟರ್‍ಗಳ ಸಹಾಯದಿಂದ, ಪ್ರತಿಭಟನಾಕಾರರು ದೆಹಲಿಗೆ ಹೋಗುವುದನ್ನು ತಡೆಯಲು ಹರಿಯಾಣ ಅಧಿಕಾರಿಗಳು ಮಾಡಿದ ವಿಸ್ತಾರವಾದ ವ್ಯವಸ್ಥೆಗಳ ಭಾಗವಾಗಿದ್ದ ಕೆಲವು ಸಿಮೆಂಟ್ ಬ್ಯಾರಿಕೇಡ್‍ಗಳು ಮತ್ತು ಕಬ್ಬಿಣದ ಮೊಳೆಗಳನ್ನು ತೆಗೆದುಹಾಕುವಲ್ಲಿ ಯಶಸ್ವಿಯಾದರು. +ವಿಶ್ವದಲ್ಲಿ ಭಾರತದ ಶಕ್ತಿ ಹೆಚ್ಚಿದೆ : ರವಿಶಂಕರ್ ಪ್ರಸಾದ್ +ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 24 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಜಿಂದ್ ಜಿಲ್ಲೆಯ ಗಡಿಯಲ್ಲಿಯೂ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದರು. ಪೊಲೀಸರ ಪ್ರಕಾರ, ಡಾಟಾ ಸಿಂಘ್ವಾಲಾ-ಖನೌರಿ ಗಡಿಯಲ್ಲಿ ನಡೆದ ಈ ಘರ್ಷಣೆಯಲ್ಲಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. +ಮಂಗಳವಾರ ದಿಲ್ಲಿಯತ್ತ ಸಾಗುತ್ತಿದ್ದ ಪ್ರತಿಭಟನಾಕಾರರ ಮೇಲೆ ನಡೆದ ದಾಳಿಗೆ ಕೇಂದ್ರವನ್ನು ದೂಷಿಸಿದ ರೈತ ಮುಖಂಡರು, ಪಂಜಾಬ-ಹರಿಯಾಣ ಗಡಿ ಬಿಂದುಗಳಲ್ಲಿ ಪೊಲೀಸರು ಅಶ್ರುವಾಯು ಶೆಲ್‍ಗಳನ್ನು ಬಳಸಿದ್ದರಿಂದ ಅವರಲ್ಲಿ 60 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಹರಿಯಾಣ ಸರ್ಕಾರವು ಮಂಗಳವಾರ ಅಂಬಾಲಾ, ಕುರುಕ್ಷೇತ್ರ, ಕೈತಾಲ, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಎಂಬ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳು, ಬೃಹತ್ ಎಸ್‍ಎಂಎಸ್ ಮತ್ತು ಡಾಂಗಲ್ ಸೇವೆಗಳ ಸ್ಥಗಿತವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ. +ಇಂದು ಕಾಂಗ್ರೆಸ್ ಶಾಸಕಾಂಗ ಸಭೆ +ಶಂಭು ಮತ್ತು ಖಾನೌರಿ ಗಡಿಯಲ್ಲಿ ಪೊಲೀಸರೊಂದಿಗೆ ಘರ್ಷಣೆಯ ನಂತರ ಹಲವು ರೈತರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರವು ಹರಿಯಾಣದ ಗಡಿಯ ಸಮೀಪದಲ್ಲಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಸೇರಿಸಿದೆ. \ No newline at end of file diff --git a/eesanje/url_47_162_3.txt b/eesanje/url_47_162_3.txt new file mode 100644 index 0000000000000000000000000000000000000000..72b845e4fcb8752fda4ecc85b532e1cbc43f7ff5 --- /dev/null +++ b/eesanje/url_47_162_3.txt @@ -0,0 +1,7 @@ +ಇಂದಿನಿಂದ ಆರಂಭವಾಗಬೇಕಿದ್ದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ರದ್ದು +ರಾಂಚಿ, ಫೆ.14 (ಪಿಟಿಐ) – ಜಾರ್ಖಂಡ್‍ನಲ್ಲಿ ಇಂದಿನಿಂದ ಆರಂಭವಾಗಬೇಕಿದ್ದ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡನೇ ಹಂತವನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ರೈತರ ಆಂದೋಲನದಲ್ಲಿ ಭಾಗವಹಿಸಲು ಹಿರಿಯ ಕಾಂಗ್ರೆಸ್ ನಾಯಕ ದೆಹಲಿಗೆ ಧಾವಿಸಿದ್ದರಿಂದ ಯಾತ್ರೆ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಗರ್ವಾ ಜಿಲ್ಲೆಯ ರಂಕಾದಲ್ಲಿ ಎಂಜಿಎನ್‍ಆರ್‍ಇಜಿಎ ಕಾರ್ಯಕರ್ತರೊಂದಿಗೆ ನಿಗದಿತ ಸಂವಾದವನ್ನು ಈಗ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಮತ್ತು ಇತರ ಪಕ್ಷದ ನಾಯಕರು ನಡೆಸಲಿದ್ದಾರೆ. ಛತ್ತೀಸ್‍ಗಢದಿಂದ ಗಾಂಧಿ ಅವರು ಜಾರ್ಖಂಡ್‍ಗೆ ಎರಡನೇ ಹಂತದ ಯಾತ್ರೆಗಾಗಿ ಬುಧವಾರ ಗಹ್ವಾರ್ ಜಿಲ್ಲೆಯ ಮೂಲಕ ಮರುಪ್ರವೇಶ ಮಾಡಬೇಕಿತ್ತು. ತಡರಾತ್ರಿ ತೆಗೆದುಕೊಂಡ ನಿರ್ಧಾರದ ಪ್ರಕಾರ, ಜಾರ್ಖಂಡ್‍ನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಕಾಂಗ್ರೆಸ್ ವಕ್ತಾರ ಸೋನಾಲ್ ಶಾಂತಿ ಪಿಟಿಐಗೆ ತಿಳಿಸಿದ್ದಾರೆ. +ಇಂದು ಕಾಂಗ್ರೆಸ್ ಶಾಸಕಾಂಗ ಸಭೆ +ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್, ಜಾರ್ಖಂಡ್ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಎನಎಸ್‍ಯುಐ ಉಸ್ತುವಾರಿ ಕನ್ನಯಾ ಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ರಂಕಾದಲ್ಲಿ ಎಂಜಿಎನ್‍ಆರ್‍ಇಜಿಎ ಕಾರ್ಯಕರ್ತರೊಂದಿಗೆ ನಿಗದಿತ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. +ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಈ ಹಿಂದೆ ವಿಶೇಷ ಉದ್ದೇಶಕ್ಕಾಗಿ ಗಾಂಧಿ ದೆಹಲಿಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ. ಜಾರ್ಖಂಡ್‍ನಲ್ಲಿ ಗಾಂಧಿಯವರ ಮೊದಲ ಯಾತ್ರೆ ಫೆಬ್ರವರಿ ಮೊದಲ ವಾರದಲ್ಲಿ ನಡೆಯಿತು. ಫೆಬ್ರವರಿ 2 ರಂದು ಪಶ್ಚಿಮ ಬಂಗಾಳದಿಂದ ಜಾರ್ಖಂಡ್ ಪ್ರವೇಶಿಸಿ ಫೆಬ್ರವರಿ 6 ರಂದು ಒಡಿಶಾ ಪ್ರವೇಶಿಸಿತ್ತು. ಫೆಬ್ರವರಿ 15 ರಂದು ಬಿಹಾರಕ್ಕೆ ಪ್ರವೇಶಿಸುವ ಮೊದಲು ಗಾಂಧಿ ಅವರು ಎರಡನೇ ಹಂತದಲ್ಲಿ ಜಾರ್ಖಂಡ್‍ನಲ್ಲಿ ಎರಡು ದಿನಗಳ ಕಾಲ ಇರಬೇಕಿತ್ತು. +ಜನವರಿ 14 ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೋ ನ್ಯಾಯ್ ಯಾತ್ರೆ 67 ದಿನಗಳಲ್ಲಿ 6,713 ಕಿ.ಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_47_162_4.txt b/eesanje/url_47_162_4.txt new file mode 100644 index 0000000000000000000000000000000000000000..03c960d519f0fdc3f46085e732e798e344e308f9 --- /dev/null +++ b/eesanje/url_47_162_4.txt @@ -0,0 +1,6 @@ +ಪ್ರಧಾನಿ ಮೋದಿ ಇಲ್ಲದಿದ್ದರೆ ನಾನು ನನ್ನ ಕುಟುಂಬ ಸೇರುತ್ತಿರಲಿಲ್ಲ ; ವರ್ಮಾ +ಇಂದೋರ್, ಫೆ 14 (ಪಿಟಿಐ) : ನಾನು ನನ್ನ ಮಗಳ ಮದುವೆ ನೋಡಲಾಗಲಿಲ್ಲ. ಆದರೂ ಪರ್ವಾಗಿಲ್ಲ ಪ್ರಧಾನಿ ಮೋದಿ ಅವರ ಕೃಪೆಯಿಂದ ನಾನು ಕತಾರ್‌ನಿಂದ ಜೀವಂತವಾಗಿ ಹಿಂತಿರುಗಿ ನನ್ನ ಸೋದರಳಿಯನ ಮದುವೆ ಸಂಭ್ರಮದಲ್ಲಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡಿದ್ದೇನೆ ಇದು ನನ್ನ ಜೀವನದಲ್ಲಿ ಸಂಭವಿಸುತ್ತದೆ ಎಂದು ನಾನು ನಂಬಿರಲಿಲ್ಲ ಎಂದು ಕತಾರ್‌ನಿಂದ ಹಿಂದಿರುಗಿದ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಬಿ ಕೆ ವರ್ಮಾ ತಿಳಿಸಿದ್ದಾರೆ. +ಕತಾರ್‍ನ ಜೈಲಿನಿಂದ ಬಿಡುಗಡೆಯಾದ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳಲ್ಲಿ ವರ್ಮಾ (58) ಸೇರಿದ್ದಾರೆ. ಇವರಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಗೂಢಚರ್ಯೆ ಆರೋಪದ ಮೇಲೆ ಕಳೆದ ವರ್ಷ ಅಕ್ಟೋಬರ್‍ನಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ವರ್ಚಸ್ಸು ಇಲ್ಲದಿದ್ದರೆ ನಾವು ಜೈಲಿನಿಂದ ಬಿಡುಗಡೆ ಸಾಧ್ಯವಾಗುತ್ತಿರಲಿಲ್ಲ ಎಂದು ವರ್ಮಾ ಪಿಟಿಐಗೆ ತಿಳಿಸಿದರು. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನವಿ ಮುಂಬೈ ನಿವಾಸಿ ಕುಟುಂಬದಲ್ಲಿ ಮದುವೆಯಲ್ಲಿ ಭಾಗವಹಿಸಲು ಬಂದಿದ್ದರು. +ವಿಶ್ವದಲ್ಲಿ ಭಾರತದ ಶಕ್ತಿ ಹೆಚ್ಚಿದೆ : ರವಿಶಂಕರ್ ಪ್ರಸಾದ್ +ನಾನು ನನ್ನ ಕುಟುಂಬ ಸದಸ್ಯರ ನಡುವೆ ಮರಳಲು ನನಗೆ ತುಂಬಾ ಸಂತೋಷವಾಗಿದೆ. ಇದು ನನ್ನ ಕುಟುಂಬಕ್ಕೂ ದೊಡ್ಡ ಪರಿಹಾರವಾಗಿದೆ. ಇಂದು ನನ್ನ ಸೋದರಳಿಯನ ಮದುವೆ ಇರುವುದರಿಂದ ನನ್ನ ಸಂತೋಷವೂ ಹೆಚ್ಚಾಗಿದೆ ಎಂದು ವರ್ಮಾ ಹೇಳಿದರು. ಪ್ರಧಾನಿ ಮೋದಿಯವರ ವೈಯಕ್ತಿಕ ಹಸ್ತಕ್ಷೇಪದಿಂದಾಗಿ ನಾನು ಇಂದು ಇಲ್ಲಿ ಕುಳಿತಿದ್ದೇನೆ. ನನ್ನ ಮತ್ತು ನನ್ನ ಸಹೋದ್ಯೋಗಿಗಳ ಪರವಾಗಿ ನಾನು ಅವರಿಗೆ ನನ್ನ ಹೃದಯದಿಂದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಪ್ರಕರಣವನ್ನು ಅವರು ಉದಾರವಾಗಿ ಪರಿಗಣಿಸಿದ್ದಕ್ಕಾಗಿ ಕತಾರ್ ಎಮಿರ್ ಅವರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ವರ್ಮಾ ಅವರು ನವೆಂಬರ್ 27, 2022 ರಂದು ತಮ್ಮ ಮಗಳ ಮದುವೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. +ನಾನು ಈಗ ತನ್ನ ಹೆಂಡತಿ ಮತ್ತು ಮಕ್ಕಳೊಂದಿಗೆ ಇರಲು ಬಯಸುತ್ತೇನೆ ಮತ್ತು ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಬೆಂಬಲವಾಗಿ ನಿಂತ ತನ್ನ ಎಲ್ಲ ಸ್ನೇಹಿತರನ್ನು ಭೇಟಿಯಾಗಲು ಬಯಸುತ್ತೇನೆ ಎಂದು ವರ್ಮಾ ಹೇಳಿದರು. ಅವರ ಪತ್ನಿ ಸುಮನ್ ಅವರ ಬಿಡುಗಡೆಗಾಗಿ ದೇವರಿಗೆ ಧನ್ಯವಾದ ಹೇಳಿದರು ಮತ್ತು ಅವರೊಂದಿಗೆ ಮತ್ತೆ ಒಂದಾಗುವುದು ಅವರು ಶಾಶ್ವತವಾಗಿ ಕಾಯುತ್ತಿರುವ ಕ್ಷಣವಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_162_5.txt b/eesanje/url_47_162_5.txt new file mode 100644 index 0000000000000000000000000000000000000000..7878bc4d0bbeed43d9b31ff79ba73f2b8431e2a7 --- /dev/null +++ b/eesanje/url_47_162_5.txt @@ -0,0 +1,8 @@ +ವಿಶ್ವದಲ್ಲಿ ಭಾರತದ ಶಕ್ತಿ ಹೆಚ್ಚಿದೆ : ರವಿಶಂಕರ್ ಪ್ರಸಾದ್ +ಪಾಟ್ನಾ, ಫೆ.14 (ಪಿಟಿಐ) – ಕತಾರ್‍ನಲ್ಲಿ ಜೈಲಿನಲ್ಲಿರುವ ನೌಕಾಪಡೆಯ ಮಾಜಿ ಸಿಬ್ಬಂದಿಯ ಬಿಡುಗಡೆಯು ವಿಶ್ವದಲ್ಲಿ ಭಾರತದ ಶಕ್ತಿ ಹೆಚ್ಚಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಪ್ರತಿಪಾದಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ವಿದೇಶಾಂಗ ನೀತಿ ದೇಶದ ಶಕ್ತಿಯನ್ನು ಹೆಚ್ಚಿಸಿದೆ ಎಂದು ಕೇಂದ್ರದ ಮಾಜಿ ಸಚಿವ ಪ್ರಸಾದ್ ಹೇಳಿದರು. +ಇಲ್ಲಿಗೆ ಆಗಮಿಸಿದ ನಂತರ ಸ್ವದೇಶಕ್ಕೆ ಮರಳಿದ ಮಾಜಿ ಸೈನಿಕರು ಪ್ರಧಾನಿಯನ್ನು ಅಭಿನಂದಿಸಿದರು. ಅವರ ವೈಯಕ್ತಿಕ ಉಪಕ್ರಮದಿಂದ ಇದು ಸಾಧ್ಯವಾಯಿತು ಎಂದು ಹೇಳಿದರು. ಇದು ವಿಶ್ವದಲ್ಲಿ ಭಾರತದ ಶಕ್ತಿ ಹೆಚ್ಚಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. +ಕತಾರ್ ಜೈಲಿನಲ್ಲಿರುವ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಬಿಡುಗಡೆ ಮಾಡಿದೆ ಮತ್ತು ಅವರಲ್ಲಿ ಏಳು ಮಂದಿ ಮನೆಗೆ ಮರಳಿದರು, ಕಳೆದ ಅಕ್ಟೋಬರ್‍ನಲ್ಲಿ ಅವರ ಮರಣದಂಡನೆಯನ್ನು 46 ದಿನಗಳ ನಂತರ ವಿವಿಧ ಅವಯ ಜೈಲು ಪದಗಳಾಗಿ ಪರಿವರ್ತಿಸಲಾಯಿತು. +ಈ ಎಂಟು ಮಂದಿ ಗೂಢಚರ್ಯೆಯ ಆರೋಪಗಳನ್ನು ಎದುರಿಸುತ್ತಿದ್ದರು ಆದರೆ ಕತಾರಿ ಅಕಾರಿಗಳು ಅಥವಾ ನವದೆಹಲಿ ಅವರ ವಿರುದ್ಧದ ಆರೋಪಗಳನ್ನು ಬಹಿರಂಗಗೊಳಿಸಲಿಲ್ಲ. ಭಾರತೀಯರು ಎಲ್ಲಿ ಸಿಕ್ಕಿಹಾಕಿಕೊಂಡಿದ್ದರೂ, ಅವರ ಕಣ್ಣೀರು ಒರೆಸಲು ಭಾರತ ಸರ್ಕಾರ ಕೆಲಸ ಮಾಡುತ್ತದೆ ಎಂದು ಪ್ರಸಾದ್ ಹೇಳಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-02-2024) +ಮೋದಿ ಸರ್ಕಾರ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು, ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಹಿಂದೂಗಳು ಮತ್ತು ಪಾಕಿಸ್ತಾನದಿಂದ ಐಎಎಫ್ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಮರಳಿ ಕರೆತಂದಿದೆ ಎಂದು ಅವರು ಹೇಳಿದರು. +ಪ್ರಧಾನಿ ಏನು ಹೇಳಿದರೂ ಜಗತ್ತು ಕೇಳುತ್ತದೆ. ಇದಷ್ಟೇ ಅಲ್ಲ, ಆರಕ್ಕೂ ಹೆಚ್ಚು ಇಸ್ಲಾಮಿಕ್ ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಪ್ರಧಾನಿಗೆ ನೀಡಿವೆ ಎಂದು ಪ್ರಸಾದ್ ಹೇಳಿದರು.ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿರುವ ನಾಯಕರು ಭಾರತೀಯ ರಾಜಕೀಯದಲ್ಲಿ ಗಂಭೀರ ಆಟಗಾರನಾಗುವುದನ್ನು ನಿಲ್ಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.ಜನರು ಅವರಿಂದ ಓಡಿಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಉಳಿದ ಇಟ್ಟಿಗೆಗಳು ಸಹ ಬಿರುಕು ಬಿಡುತ್ತಿವೆ ಎಂದು ಬಿಜೆಪಿ ನಾಯಕ ಹೇಳಿದರು. \ No newline at end of file diff --git a/eesanje/url_47_162_6.txt b/eesanje/url_47_162_6.txt new file mode 100644 index 0000000000000000000000000000000000000000..52ea159333eb412385d5c26648b5790f64fca8e2 --- /dev/null +++ b/eesanje/url_47_162_6.txt @@ -0,0 +1,9 @@ +ದೆಹಲಿಯಲ್ಲಿ ಮೊಳಗಿದ ರೈತ ಕಹಳೆ : ಅಶ್ರುವಾಯು ಪ್ರಯೋಗ, ಹಲವರ ಬಂಧನ +ನವದೆಹಲಿ, ಫೆ.13-ರಾಷ್ಟ್ರ ರಾಜಧಾನಿಗೆ ಆಗಮಿಸುವ ರೈತರ ದೆಹಲಿ ಚಲೋ ಮೆರವಣಿಗೆ ಹಿಂಸಾರೂಪ ಪಡೆದಿದ್ದು ಪೊಲೀಸರು ಜಲಪಿರಂಗಿ ಪ್ರಯೋಗಿಸಿ ಅಶ್ರುವಾಯು ಸಿಡಿಸಿದ್ದಾರೆ. ದೆಹಲಿ ಪ್ರವೇಶವನ್ನು ತಡೆಯಲು ಗಡಿಭಾಗಗಳಲ್ಲಿ ಬಹು ಪದರದ ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‍ಗಳ ಗೋಡೆಗಳನ್ನು ನಿರ್ಮಿಸಿದರೂ ಅದನ್ನು ನುಗ್ಗಲು ಪ್ರಯತ್ನಿಸಿದ್ದಾಗ ಪೊಲೀಸರು ಬಲ ಪ್ರಯೋಗ ನಡೆಸಿದ್ದಾರೆ. +ರೈತರ ಪ್ರತಿಭಟನೆಯಿಂದಾಗಿ ರಾಷ್ಟ್ರ ರಾಜಧಾನಿ ಸಮೀಪ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‍ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರು ಇಂದು ದೆಹಲಿಗೆ ತೆರಳಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಘೋಷಿಸಿವೆ. +ಬಹುತೇಕ ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಫಿಕ್ಸ್..? +ರೈತರು ಇಂದು ಮುಂಜಾನೆ ತಮ್ಮ ಮೆರವಣಿಗೆಯನ್ನು ಆರಂಭಿಸಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಇಬ್ಬರು ಕೇಂದ್ರ ಸಚಿವರೊಂದಿಗೆ ಚಂಡೀಗಢದಲ್ಲಿ ಐದು ಗಂಟೆಗಳ ಕಾಲ ನಡೆದ ಸಭೆಯ ನಂತರ ಕೃಷಿ ನಾಯಕರೊಬ್ಬರು ಪ್ರತಿಭಟನೆ ಅನಿವಾರ್ಯ ಎಂದಿದ್ದಾರೆ. ನಮ್ಮ ಯಾವುದೇ ಬೇಡಿಕೆಗಳ ಬಗ್ಗೆ ಸರ್ಕಾರವು ಗಂಭೀರವಾಗಿದೆ ಎಂದು ನಾವು ಭಾವಿಸುವುದಿಲ್ಲ. ಅವರು ಇಂದು ನಮ್ಮ ಬೇಡಿಕೆಗಳನ್ನು ಈಡೇರಿಸಲು ಬಯಸುವುದಿಲ್ಲ ಎಂದು ನಾವು ಭಾವಿಸುತ್ತೇವೆ, ನಾವು ದೆಹಲಿಯತ್ತ ಮೆರವಣಿಗೆ ಮಾಡುತ್ತೇವೆ ಎಂದು ಸಭೆಯ ನಂತರ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. +ಪಂಜಾಬ್ ಮತ್ತು ಹರಿಯಾಣದಿಂದಲೇ ಹೆಚ್ಚು ರೈತರು ಇಲ್ಲಿ ಭಾಗಿಯಾಗಿದ್ದು, ಉತ್ತರ ಪ್ರದೇಶ ಸೇರಿದಂತೆ ದೆಹಲಿ ಸಂಪರ್ಕ ಇರುವ ರಸ್ತೆಗಳಲ್ಲಿ ಈಗ ರೈತರ ಪ್ರತಿಭಟನೆಯಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಪೊಲೀಸರ ಜೊತೆ ಮಾತಿನ ಚಕಾಮಕಿ ನಡೆದಿದ್ದು, ರೈತರನ್ನು ಸಮಾಧಾನ ಪಡಿಸಲು ಸಾಕಷ್ಟುಹರಸಾಹಸ ಮಾಡಲಾಗುತ್ತಿದೆ. ಹಲವರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ಈಗ ಉದ್ವಿಗ್ನವಾಗಿದೆ.ಕೇಂದ್ರ ಸಚಿವರು ಹಾಗೂ ರೈತರ ನಿಯೋಗದೊಂದಿಗೆ ಸಭೆಯೂ ಕೂಡ ನಡೆಯುತ್ತಿದ್ದು, ಪ್ರಸ್ತುತ ಇದು ಯಾವ ನಿಲುವು ತಳೆಯುತ್ತದೆ ಎಂದು ತೀವ್ರ ಕೂತುಹಲ ಕೆರಳಿಸಿದೆ. ಯಾವುದೇ ಕಾರಣಕ್ಕೂ ರೈತರು ದೆಹಲಿ ತಲುಪದಂತೆ ಪೊಲೀಸರು ಹಾಗೂ ಅರೆಸೇನಾ ಪಡೆಗಳು ಇದೆಂದೂ ಕಾಣದಂತಹ ತಡೆಗೋಡೆಯನ್ನು ನಿರ್ಮಿಸಿದೆ. +ಹದಗೆಟ್ಟ ಕಾನೂನು ಸುವ್ಯವಸ್ಥೆ : ವಿಧಾನಸಭೆಯಲ್ಲಿ ಕೋಲಾಹ +ಉದ್ದೇಶಿತ ವ್ಯಾಪಕ ಉದ್ವಿಗ್ನತೆ ಮತ್ತು ಸಾಮಾಜಿಕ ಅಶಾಂತಿ ಯ ದೃಷ್ಟಿಯಿಂದ ನಗರದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆ, ಮೆರವಣಿಗೆಗಳು ಅಥವಾ ರ್ಯಾಲಿಗಳು ಮತ್ತು ಜನರನ್ನು ಸಾಗಿಸುವ ಟ್ರ್ಯಾಕ್ಟರ್ ಟ್ರಾಲಿಗಳ ಪ್ರವೇಶವನ್ನು ನಿಷೇಸುವ ಸೆಕ್ಷನ್ 144 ಅನ್ನು ದೆಹಲಿ ಪೊಲೀಸರು ಒಂದು ತಿಂಗಳ ಕಾಲ ವಿಧಿಸಿದ್ದಾರೆ. +ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಹೊರಡಿಸಿದ ಆದೇಶಗಳ ಪ್ರಕಾರ, ಮದುವೆಗಳು, ಅಂತ್ಯಕ್ರಿಯೆಗಳು ಮತ್ತು ಇತರ ಧಾರ್ಮಿಕ ಕಾರ್ಯಗಳಿಗೆ ಸಂಬಂಧಿಸಿದ ಸಭೆಗಳು ಮತ್ತು ಮೆರವಣಿಗೆಗಳಿಗೆ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಅಗತ್ಯವಿದೆ. \ No newline at end of file diff --git a/eesanje/url_47_162_7.txt b/eesanje/url_47_162_7.txt new file mode 100644 index 0000000000000000000000000000000000000000..111c5a425e467ce3722ce0aec3ce34d441dd7515 --- /dev/null +++ b/eesanje/url_47_162_7.txt @@ -0,0 +1,9 @@ +ಹಿಂದೂ ಮಂದಿರ ಶಾಂತಿ ಸಹಿಷ್ಣುತೆಯ ಸಂಕೇತ : ಮೋದಿ +ನವದೆಹಲಿ, ಫೆ 13- (ಪಿಟಿಐ) ಗಲ್ಫ್ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್‍ನೊಂದಿಗೆ ಭಾರತದ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಹೆಚ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುಎಇಗೆ ಎರಡು ದಿನಗಳ ಭೇಟಿಯನ್ನು ಮುಗಿಸಿದ ಮೋದಿ ನಾಳೆ ಮಧ್ಯಾಹ್ನ ಕತಾರ್ ರಾಜಧಾನಿ ದೋಹಾಗೆ ಪ್ರಯಾಣ ಬೆಳೆಸಲಿದ್ದಾರೆ. +ಎರಡು ರಾಷ್ಟ್ರಗಳ ಭೇಟಿಯ ಮುನ್ನಾ ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಕತಾರ್‍ನ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು, ಅವರ ನಾಯಕತ್ವದಲ್ಲಿ ದೇಶವು ಪ್ರಚಂಡ ಬೆಳವಣಿಗೆ ಮತ್ತು ಪರಿವರ್ತನೆ ಯನ್ನು ವೀಕ್ಷಿಸುತ್ತಿದೆ ಎಂದು ಹೇಳಿದರು. +ಜೈಲಿನಲ್ಲಿರುವ ಎಂಟು ಮಾಜಿ ಭಾರತೀಯ ನೌಕಾಪಡೆಯ ಸಿಬ್ಬಂದಿಯನ್ನು ಕತಾರ್ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮೋದಿ ಅವರ ದೋಹಾ ಭೇಟಿಯ ಘೋಷಣೆ ಹೊರಬಿದ್ದಿದೆ. ಭಾರತ ಮತ್ತು ಕತಾರ್ ಐತಿಹಾಸಿಕವಾಗಿ ನಿಕಟ ಮತ್ತು ಸೌಹಾರ್ದ ಸಂಬಂಧವನ್ನು ಹೊಂದಿವೆ. ಇತ್ತೀಚಿನ ವರ್ಷಗಳಲ್ಲಿ, ಉನ್ನತ ಮಟ್ಟದ ರಾಜಕೀಯ ವಿನಿಮಯಗಳು, ಎರಡು ದೇಶಗಳ ನಡುವೆ ವ್ಯಾಪಾರ ಮತ್ತು ಹೂಡಿಕೆಯನ್ನು ಹೆಚ್ಚಿಸುವುದು, ನಮ್ಮ ಶಕ್ತಿ ಪಾಲುದಾರಿಕೆಯನ್ನು ಬಲಪಡಿಸುವುದು ಮತ್ತು ಸಹಕಾರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಬಹುಮುಖಿ ಸಂಬಂಧಗಳು ಗಾಢವಾಗುತ್ತಿವೆ. ಸಂಸ್ಕøತಿ ಮತ್ತು ಶಿಕ್ಷಣದಲ್ಲಿ ಎಂದು ಮೋದಿ ಹೇಳಿದರು. +ಪಾಕ್ ಚುನಾವಣೆ ಹಿಂಸಾಚಾರಕ್ಕೆ ವಿಶ್ವಸಂಸ್ಥೆ ಕಳವಳ +ದೋಹಾದಲ್ಲಿ 800,000 ಕ್ಕೂ ಹೆಚ್ಚು ಬಲಿಷ್ಠ ಭಾರತೀಯ ಸಮುದಾಯದ ಉಪಸ್ಥಿತಿಯು ನಮ್ಮ ಬಲವಾದ ಜನರ-ಜನರ ಸಂಬಂಧಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಭಾರತ ಮತ್ತು ಯುಎಇ ನಡುವಿನ ಸಹಕಾರವು ವಿವಿಧ ಕ್ಷೇತ್ರಗಳಲ್ಲಿ ಏರಿಕೆ ಕಂಡಿದೆ ಎಂದು ಪ್ರಧಾನಿ ಹೇಳಿದರು. +ಕಳೆದ ಒಂಬತ್ತು ವರ್ಷಗಳಲ್ಲಿ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆಹಾರ ಮತ್ತು ಇಂಧನ ಭದ್ರತೆ ಮತ್ತು ಶಿಕ್ಷಣದಂತಹ ವೈವಿಧ್ಯಮಯ ವಲಯಗಳಲ್ಲಿ ಯುಎಇಯೊಂದಿಗಿನ ನಮ್ಮ ಸಹಕಾರವು ಬಹುಪಟ್ಟು ಬೆಳೆದಿದೆ. ನಮ್ಮ ಸಾಂಸ್ಕøತಿಕ ಮತ್ತು ಜನರ ನಡುವಿನ ಸಂಪರ್ಕವು ಹಿಂದೆಂದಿಗಿಂತಲೂ ಬಲವಾಗಿದೆ ಎಂದು ಅವರು ಹೇಳಿದರು. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅಬುಧಾಬಿಯಲ್ಲಿ ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ ಮತ್ತು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ವ್ಯಾಪಕ ಚರ್ಚೆಗಳನ್ನು ನಡೆಸುತ್ತೇನೆ ಎಂದು ಮೋದಿ ಹೇಳಿದರು. ಅಬುಧಾಬಿಯಲ್ಲಿ ಮೋದಿ ನಗರದಲ್ಲಿ ಮೊದಲ ಹಿಂದೂ ಕಲ್ಲಿನ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. +1.45 ಕೋಟಿ ಮೌಲ್ಯದ ನಿಷೇಧಿತ ನಿಕೋಟಿಕ್ ಜಪ್ತಿ : 9 ಮಂದಿ ಬಂಧನ +ನಾನು ಅಬುಧಾಬಿಯಲ್ಲಿ ಮೊದಲ ಹಿಂದೂ ಮಂದಿರವನ್ನು ಸಹ ಉದ್ಘಾಟಿಸುತ್ತೇನೆ. ಭಾರತ ಮತ್ತು ಯುಎಇ ಎರಡೂ ಹಂಚಿಕೊಳ್ಳುವ ಸೌಹಾರ್ದತೆ, ಶಾಂತಿ ಮತ್ತು ಸಹಿಷ್ಣುತೆಯ ಮೌಲ್ಯಗಳಿಗೆ ಈ ದೇವಾಲಯವು ನಿರಂತರ ಗೌರವವಾಗಿದೆ ಎಂದು ಪ್ರಧಾನಿ ಹೇಳಿದರು.ಅಬುಧಾಬಿಯಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಯುಎಇಯ ಎಲ್ಲಾ ಎಮಿರೇಟ್ಸ್‍ನ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_162_8.txt b/eesanje/url_47_162_8.txt new file mode 100644 index 0000000000000000000000000000000000000000..f37ad17ad196a1c70dcf6a8e7048354214ef793e --- /dev/null +++ b/eesanje/url_47_162_8.txt @@ -0,0 +1,6 @@ +ರೈತ ಧ್ವನಿ ಹತ್ತಿಕ್ಕುತ್ತಿದೆ ಮೋದಿ ಸರ್ಕಾರ : ಖರ್ಗೆ +ನವದೆಹಲಿ, ಫೆ 13 (ಪಿಟಿಐ) ಕಳೆದ 10 ವರ್ಷಗಳಿಂದ ರೈತರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾಗಿರುವ ಮೋದಿ ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಸಾವಿರಾರು ರೈತರು ದೆಹಲಿ ಚಲೋ ಪ್ರತಿಭಟನೆಗೆ ಕರೆ ನೀಡಿದ ದಿನದಂದು ಸರ್ಕಾರದ ವಿರುದ್ಧ ಖರ್ಗೆ ಅವರ ವಾಗ್ದಾಳಿಯು ಈ ಬಂದಿದೆ. +ರಾಜಧಾನಿಗೆ ಆಗಮಿಸುವ ರೈತರನ್ನು ತಡೆಯಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಸರ್ವಾಧಿಕಾರಿ ಧೋರಣೆ ಎಂದು ಜರಿದಿರುವ ಅವರು ಮೋದಿ ಸರಕಾರ ರೈತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಅವರು ಎಕ್ಸ್ ಮಾಡಿದ್ದಾರೆ. ಆಂದೋಲನ ಜೀವಿ ಮತ್ತು ಪರಾವಲಂಬಿ ಎಂದು ಕರೆಯುವ ಮೂಲಕ ರೈತರನ್ನು ಹೇಗೆ ಮಾನನಷ್ಟಗೊಳಿಸಲಾಯಿತು ಮತ್ತು 750 ರೈತರು ಹೇಗೆ ಪ್ರಾಣ ಕಳೆದುಕೊಂಡರು ಎಂಬುದನ್ನು ನೆನಪಿಸಿಕೊಳ್ಳಿ ಎಂದು ಅವರು ಹಿಂದಿಯಲ್ಲಿ ತಮ್ಮ ಪೆಪೋಸ್ಟ್‍ನಲ್ಲಿ ತಿಳಿಸಿದ್ದಾರೆ. +ಒಂದು ಮಿಲಿಯನ್ ಜನರನ್ನು ಮಂಗಳನ ಅಂಗಳಕ್ಕೆ ಕಳುಹಿಸಲು ಮಸ್ಕ್ ಪ್ಲಾನ್ +10 ವರ್ಷಗಳಲ್ಲಿ ಮೋದಿ ಸರ್ಕಾರ ದೇಶದ ಅನ್ನದಾತರಿಗೆ ನೀಡಿದ್ದ ಮೂರು ಭರವಸೆಗಳನ್ನು ಉಲ್ಲಂಘಿಸಿದೆ ಎಂದು ಖರ್ಗೆ ಹೇಳಿದರು. ಅವುಗಳೆಂದರೆ, 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು, ಸ್ವಾಮಿನಾಥನ್ ವರದಿಗೆ ಅನುಗುಣವಾಗಿ ಇನ್‍ಪುಟ್ ವೆಚ್ಚಗಳ ಅನುಷ್ಠಾನ ಮತ್ತು ಶೇ.50 ರಷ್ಟು ಮತ್ತು ಎಂಎಸ್‍ಪಿಗೆ ಕಾನೂನು ಸ್ಥಾನಮಾನವನ್ನು ನೀಡುವುದು. +ರೈತರ ಆಂದೋಲನಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಖರ್ಗೆ, ಇಂದು ಛತ್ತೀಸ್‍ಗಢದ ಅಂಬಿಕಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರೈತ ಪರ ನ್ಯಾಯದ ಧ್ವನಿ ಎತ್ತಲಿದೆ ಎಂದು ಹೇಳಿದರು. ಇದರ ಜತೆ ನಾವು ಹೆದರುವುದಿಲ್ಲ, ತಲೆಬಾಗುವುದಿಲ್ಲ ಎಂದು ಖರ್ಗೆ ತಮ್ಮ ಪೋಸ್ಟ್‍ನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_162_9.txt b/eesanje/url_47_162_9.txt new file mode 100644 index 0000000000000000000000000000000000000000..57e71fd60ce00333ca207262851f294c26a0a925 --- /dev/null +++ b/eesanje/url_47_162_9.txt @@ -0,0 +1,7 @@ + ಮೇನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ : 100ಕ್ಕೆ 100 ಅಂಕ ಪಡೆದ 23 ವಿದ್ಯಾರ್ಥಿಗಳು +ನವದೆಹಲಿ, ಫೆ 13 (ಪಿಟಿಐ) ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯ ಜೆಇಇ-ಮೇನ್‍ನಲ್ಲಿ ಇಪ್ಪತ್ತಮೂರು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಮತ್ತು ಅವರಲ್ಲಿ ಗರಿಷ್ಠ ತೆಲಂಗಾಣದವರು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. +ನಿರ್ಣಾಯಕ ಪರೀಕ್ಷೆಯ ಮೊದಲ ಆವೃತ್ತಿಗೆ 11.70 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. 100 ಎನ್‍ಟಿಎ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳಲ್ಲಿ ತೆಲಂಗಾಣದಿಂದ ಏಳು, ಹರಿಯಾಣದಿಂದ ಇಬ್ಬರು, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರದಿಂದ ತಲಾ ಮೂರು, ದೆಹಲಿಯಿಂದ ಇಬ್ಬರು ಮತ್ತು ಗುಜರಾತ್, ಕರ್ನಾಟಕ ಮತ್ತು ತಮಿಳುನಾಡಿನಿಂದ ತಲಾ ಒಬ್ಬರು ಇದ್ದಾರೆ. ಅಧಿಕಾರಿಗಳ ಪ್ರಕಾರ, ಎನ್‍ಟಿಎ ಸ್ಕೋರ್ ಪಡೆದ ಅಂಕಗಳ ಶೇಕಡಾವಾರು ಒಂದೇ ಅಲ್ಲ ಆದರೆ ಸಾಮಾನ್ಯ ಅಂಕಗಳು. +ಎನ್‍ಟಿಎ ಸ್ಕೋರ್‍ಗಳು ಬಹು-ಅಧಿವೇಶನ ಪತ್ರಿಕೆಗಳಲ್ಲಿ ಸಾಮಾನ್ಯೀಕರಿಸಿದ ಸ್ಕೋರ್‍ಗಳಾಗಿವೆ ಮತ್ತು ಒಂದು ಸೆಷನ್‍ನಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲರ ಸಾಪೇಕ್ಷ ಕಾರ್ಯಕ್ಷಮತೆಯನ್ನು ಆಧರಿಸಿವೆ. ಪಡೆದ ಅಂಕಗಳನ್ನು ಪರೀಕ್ಷಾರ್ಥಿಗಳ ಪ್ರತಿ ಸೆಷನ್‍ಗೆ 100 ರಿಂದ 0 ವರೆಗಿನ ಸ್ಕೇಲ್‍ಗೆ ಪರಿವರ್ತಿಸಲಾಗುತ್ತದೆ, ಎಂದು ಹಿರಿಯ ಅಧಿಕಾರಿಯೊಬ್ಬರು ವಿವರಿಸಿದರು. ಪರೀಕ್ಷೆಯು ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ನಡೆಯಿತು. +ಒಂದು ಮಿಲಿಯನ್ ಜನರನ್ನು ಮಂಗಳನ ಅಂಗಳಕ್ಕೆ ಕಳುಹಿಸಲು ಮಸ್ಕ್ ಪ್ಲಾನ್ +ಪರೀಕ್ಷೆಯನ್ನು ಭಾರತದ ಹೊರಗೆ ಮನಾಮಾ, ದೋಹಾ, ದುಬೈ, ಕಠ್ಮಂಡು, ಮಸ್ಕತ್, ರಿಯಾದ್, ಶಾರ್ಜಾ, ಸಿಂಗಾಪುರ್, ಕುವೈತ್ ಸಿಟಿ, ಕೌಲಾಲಂಪುರ್, ಲಾಗೋಸ್/ಅಬುಜಾ, ಕೊಲಂಬೊ, ಜಕಾರ್ತಾ, ಮಾಸ್ಕೋ, ಒಟ್ಟಾವಾ, ಪೋರ್ಟ್ ಲೂಯಿಸ್, ಬ್ಯಾಂಕಾಕ್ ಮತ್ತು ವಾಷಿಂಗ್ಟನ್ ಡಿಸಿಗಳಲ್ಲೂ ನಡೆಸಲಾಗಿತ್ತು. ಇದೆ ಮೊದಲ ಬಾರಿಗೆ ಅಬುಧಾಬಿ, ಹಾಂಗ್ ಕಾಂಗ್ ಮತ್ತು ಓಸ್ಲೋದಲ್ಲೂ ಪರೀಕ್ಷೆ ನಡೆಸಲಾಯಿತು. +ಪರೀಕ್ಷೆಯ ಮೊದಲ ಆವೃತ್ತಿಯನ್ನು ಜನವರಿ-ಫೆಬ್ರವರಿಯಲ್ಲಿ ನಡೆಸಿದರೆ, ಎರಡನೇ ಆವೃತ್ತಿಯನ್ನು ಏಪ್ರಿಲ್‍ನಲ್ಲಿ ನಿಗದಿಪಡಿಸಲಾಗಿದೆ. ಜೆಇಇ-ಮೇನ್ಸ್ ಪೇಪರ್ 1 ಮತ್ತು ಪೇಪರ್ 2 ರ ಫಲಿತಾಂಶಗಳ ಆಧಾರದ ಮೇಲೆ, ಅಭ್ಯರ್ಥಿಗಳನ್ನು ಜೆಇಇ-ಅಡ್ವಾನ್ಸ್ಡ್ ಪರೀಕ್ಷೆಗೆ ಹಾಜರಾಗಲು ಶಾರ್ಟ್‍ಲಿಸ್ಟ್ ಮಾಡಲಾಗುತ್ತದೆ, ಇದು 23 ಪ್ರಧಾನ ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (ಐಐಟಿ) ಪ್ರವೇಶ ಪಡೆಯಲು ಮಹತ್ವದ ಹೆಜ್ಜೆಯಾಗಿದೆ. \ No newline at end of file diff --git a/eesanje/url_47_163_1.txt b/eesanje/url_47_163_1.txt new file mode 100644 index 0000000000000000000000000000000000000000..92a6b3808a0a3e1132735d2d4a01491aef937a01 --- /dev/null +++ b/eesanje/url_47_163_1.txt @@ -0,0 +1,8 @@ +ರೈತರ ದೆಹಲಿ ಚಲೋ ತಡೆಯಲು ಪೊಲೀಸ್ ಸರ್ಪಗಾವಲು +ನವದೆಹಲಿ, ಫೆ.13 (ಪಿಟಿಐ) ರಾಷ್ಟ್ರ ರಾಜಧಾನಿಗೆ ಆಗಮಿಸುವ ರೈತರ ದೆಹಲಿ ಚಲೋ ಮೆರವಣಿಗೆಯನ್ನು ತಡೆಯಲು ಗಡಿಗಳಲ್ಲಿ ಭಾರಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗಡಿಭಾಗಗಳಲ್ಲಿ ಬಹು ಪದರದ ಬ್ಯಾರಿಕೇಡ್‍ಗಳು, ಕಾಂಕ್ರೀಟ್ ಬ್ಲಾಕ್‍ಗಳು, ಕಬ್ಬಿಣದ ಮೊಳೆಗಳು ಮತ್ತು ಕಂಟೈನರ್‍ಗಳ ಗೋಡೆಗಳೊಂದಿಗೆ ದೆಹಲಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. +ಸಿಂಘು, ಟಿಕ್ರಿ ಮತ್ತು ಘಾಜಿಪುರ ಎಂಬ ಮೂರು ಗಡಿ ಬಿಂದುಗಳಲ್ಲಿ ಗಲಭೆ ನಿಗ್ರಹ ಪಡೆಗಳಲ್ಲಿ ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಮೆರವಣಿಗೆಯ ದೃಷ್ಟಿಯಿಂದ ನಿರ್ದಿಷ್ಟ ಸ್ಥಳಗಳಲ್ಲಿ ತಾತ್ಕಾಲಿಕ ಜೈಲುಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ. +ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‍ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ರೈತರು ಇಂದು ದೆಹಲಿಗೆ ತೆರಳಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಘೋಷಿಸಿವೆ. +ಚವಾಣ್‍ರನ್ನು ರಾಜ್ಯಸಭೆಗೆ ಕಳುಹಿಸುವುದು ಹುತಾತ್ಮರಿಗೆ ಅಗೌರವ ತೋರಿದಂತೆ : ಠಾಕ್ರೆ +ರೈತರು ಇಂದು ಮುಂಜಾನೆ ತಮ್ಮ ಮೆರವಣಿಗೆಯನ್ನು ಆರಂಭಿಸಿದ್ದಾರೆ. ತಮ್ಮ ಬೇಡಿಕೆಗಳ ಕುರಿತು ಇಬ್ಬರು ಕೇಂದ್ರ ಸಚಿವರೊಂದಿಗೆ ಚಂಡೀಗಢದಲ್ಲಿ ಐದು ಗಂಟೆಗಳ ಕಾಲ ನಡೆದ ಸಭೆಯ ನಂತರ ಕೃಷಿ ನಾಯಕರೊಬ್ಬರು ಪ್ರತಿಭಟನೆ ಅನಿವಾರ್ಯ ಎಂದಿದ್ದಾರೆ. ನಮ್ಮ ಯಾವುದೇ ಬೇಡಿಕೆಗಳ ಬಗ್ಗೆ ಸರ್ಕಾರವು ಗಂಭೀರವಾಗಿದೆ ಎಂದು ನಾವು ಭಾವಿಸುವುದಿಲ್ಲ. ಅವರು ಇಂದು ನಮ್ಮ ಬೇಡಿಕೆಗಳನ್ನು ಈಡೇರಿಸಲು ಬಯಸುವುದಿಲ್ಲ ಎಂದು ನಾವು ಭಾವಿಸುತ್ತೇವೆ, ನಾವು ದೆಹಲಿಯತ್ತ ಮೆರವಣಿಗೆ ಮಾಡುತ್ತೇವೆ ಎಂದು ಸಭೆಯ ನಂತರ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. +ಉದ್ದೇಶಿತ ವ್ಯಾಪಕ ಉದ್ವಿಗ್ನತೆ ಮತ್ತು ಸಾಮಾಜಿಕ ಅಶಾಂತಿ ಯ ದೃಷ್ಟಿಯಿಂದ ನಗರದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರ ಸಭೆ, ಮೆರವಣಿಗೆಗಳು ಅಥವಾ ರ್ಯಾಲಿಗಳು ಮತ್ತು ಜನರನ್ನು ಸಾಗಿಸುವ ಟ್ರ್ಯಾಕ್ಟರ್ ಟ್ರಾಲಿಗಳ ಪ್ರವೇಶವನ್ನು ನಿಷೇಸುವ ಸೆಕ್ಷನ್ 144 ಅನ್ನು ದೆಹಲಿ ಪೊಲೀಸರು ಒಂದು ತಿಂಗಳ ಕಾಲ ವಿಧಿಸಿದ್ದಾರೆ. +ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಹೊರಡಿಸಿದ ಆದೇಶಗಳ ಪ್ರಕಾರ, ಮದುವೆಗಳು, ಅಂತ್ಯಕ್ರಿಯೆಗಳು ಮತ್ತು ಇತರ ಧಾರ್ಮಿಕ ಕಾರ್ಯಗಳಿಗೆ ಸಂಬಂಧಿಸಿದ ಸಭೆಗಳು ಮತ್ತು ಮೆರವಣಿಗೆಗಳಿಗೆ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಅಗತ್ಯವಿದೆ. \ No newline at end of file diff --git a/eesanje/url_47_163_10.txt b/eesanje/url_47_163_10.txt new file mode 100644 index 0000000000000000000000000000000000000000..2c5f720a78ebd72b6c33793369531383c757fa9c --- /dev/null +++ b/eesanje/url_47_163_10.txt @@ -0,0 +1,5 @@ +ತಾಯಿ-ಮಗನಿಗೆ ವಿಷವುಣಿಸಿ ಕೊಂದು ಉದ್ಯಮಿ ಆತ್ಮಹತ್ಯೆ +ಆಗ್ರಾ,ಫೆ.12- ಉದ್ಯಮಿಯೊಬ್ಬ ತನ್ನ ತಾಯಿ ಹಾಗೂ 12 ವರ್ಷದ ಮಗನಿಗೆ ವಿಷವುಣಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ತರುಣ್ ಚೌಹಾಣ್ ತನ್ನ ತಾಯಿ ಮತ್ತು ಮಗನಿಗೆ ವಿಷವುಣಿಸಿ ನಂತರ ನ್ಯೂ ಆಗ್ರಾ ಪೊಲೀಸ್ ಠಾಣೆಯ ಲಾಯರ್ಸ್ ಕಾಲೋನಿಯಲ್ಲಿರುವ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. +ಆಂಧ್ರ ಸಿಎಂ ತಮ್ಮ ಚಿಕ್ಕಪ್ಪನನ್ನು ಹತ್ಯೆ ಮಾಡಿದ್ದಾರೆ : ನಾರಾ ಲೋಕೇಶ್ +ಮನೆ ಕೆಲಸದವರು ನಿತ್ಯ ಕೆಲಸಕ್ಕೆ ಬರುವಂತೆ ಬಂದಿದ್ದರು. ಆಕೆ ಮನೆಗೆ ಬಂದಾಗ ತರುಣ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ತಾಯಿ ಮತ್ತು 12 ವರ್ಷದ ಮಗನ ಶವಗಳು ಹಾಸಿಗೆಯ ಮೇಲೆ ಬಿದ್ದಿರುವುದು ಕಂಡುಬಂದಿದೆ. ಆಕೆ ಕೂಡಲೇ ಅಕ್ಕಪಕ್ಕದ ಮನೆಯವರು ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. +ಸ್ಥಳಕ್ಕೆ ಬಂದ ಪೊಲೀಸರು ತರುಣ್ ಚೌಹಾಣ್ ಅವರ ಶವವನ್ನು ಕುಣಿಕೆಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ಆಸ್ಪತ್ರೆಗೆ ರವಾನಿಸಿ, ತರುಣ್ ಚೌಹಾಣ್ ಅವರ ಪತ್ನಿ ಮತ್ತು ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದಾರೆ.ಘಟನಾ ಸ್ಥಳದಲ್ಲಿ ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_163_11.txt b/eesanje/url_47_163_11.txt new file mode 100644 index 0000000000000000000000000000000000000000..6973af1ae23deb2d851b16e94c18489d8a77ac17 --- /dev/null +++ b/eesanje/url_47_163_11.txt @@ -0,0 +1,9 @@ +ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ +ನವದೆಹಲಿ,ಫೆ.12- ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸುಮಾರು 200 ರೈತ ಸಂಘಟನೆಗಳು ನಾಳೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೆಹಲಿ ಚಲೋ ನಡೆಸಲಿವೆ. ಈ ಬಾರಿಯೂ ಸಹ, ರೈತರು ಎಲ್ಲಾ ಅಗತ್ಯ ವಸ್ತುಗಳು, ಪಡಿತರ ಮತ್ತು ಸಿಲಿಂಡರ್‍ಗಳೊಂದಿಗೆ ರಾಷ್ಟ್ರ ರಾಜಧಾನಿಗೆ ಬರುತ್ತಿದ್ದಾರೆ. +ಈ ಹಿನ್ನಲೆಯಲ್ಲಿ ಪ್ರತಿಭಟನಾಕಾರರನ್ನು ಕರೆತರುವ ವಾಹನಗಳು ನಗರಕ್ಕೆ ಪ್ರವೇಶಿಸದಂತೆ ಗಡಿಗಳನ್ನು ಕಾಂಕ್ರೀಟ್ ಬ್ಲಾಕ್‍ಗಳು ಮತ್ತು ಕಬ್ಬಿಣದ ಮೊಳೆಗಳಿಂದ ಭದ್ರಪಡಿಸಲಾಗಿದೆ. ಹೆಚ್ಚಾಗಿ ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್‍ನಿಂದ ಹಲವಾರು ರೈತ ಸಂಘಗಳು ನಾಳೆ ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿ ಮಾಡುವಂತೆ ಡೆಲ್ಲಿ ಚಲೋಗೆ ಕರೆ ನೀಡಿವೆ. +ಇಂದು ಸಿಂಗು ಗಡಿಯಲ್ಲಿ ವಾಣಿಜ್ಯ ವಾಹನಗಳಿಗೆ ಸಂಚಾರ ನಿರ್ಬಂಧಗಳನ್ನು ವಿಧಿಸಲಾಗಿದೆ. ನಾಳೆಯ ನಂತರ ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧಗಳು ಅನ್ವಯಿಸುತ್ತವೆ. ಪೊಲೀಸರು 5,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದು, ರಸ್ತೆನಿರ್ಬಂಧಿಸಲು ದೊಡ್ಡ ಕಂಟೈನರ್‍ಗಳನ್ನು ಸಾಗಿಸುವ ಕ್ರೇನ್‍ಗಳು ಮತ್ತು ಮಣ್ಣು ಮೂವರ್‍ಗಳು ಸಹ ಕಾರ್ಯ ನಿರ್ವಹಿಸುತ್ತಿವೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸದಂತೆ ಗಡಿಯಲ್ಲಿ ಈಗಾಗಲೇ ಭದ್ರತಾ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದ್ದು, ಪ್ರತಿಭಟನಾನಿರತ ರೈತರು ವಾಹನಗಳ ಮೇಲೆ ನಗರ ಪ್ರವೇಶಿಸಲು ಪ್ರಯತ್ನಿಸಿದರೆ, ಅವರ ಟೈರ್‍ಗಳು ಪಂಕ್ಚರ್ ಆಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಏತನ್ಮಧ್ಯೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ದೆಹಲಿಯ ಈಶಾನ್ಯ ಜಿಲ್ಲೆಯಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 144ರಡಿ ನಿಷೇತ ಆದೇಶಗಳನ್ನು ಜಾರಿಗೊಳಿಸಲಾಗಿದೆ. ದೆಹಲಿ ಚಲೋದಲ್ಲಿ ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ರೈತರು ದೆಹಲಿ ಪ್ರವೇಶ ಮಾಡಲು ಯತ್ನಿಸಿದರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಇದರೊಂದಿಗೆ ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ. +ಕ್ಷೇತ್ರ ಹಂಚಿಕೆ ಕುರಿತು ಜೆಡಿಎಸ್-ಬಿಜೆಪಿ ನಡುವೆ ಸಮಸ್ಯೆ ಇಲ್ಲ : ಹೆಚ್‌ಡಿಕೆ +ಅಂಬಾಲಾ, ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಗಳನ್ನು ಮುಚ್ಚಲಾಗಿದೆ. ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಎಂಬ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರನೆಟ್ ಸೇವೆಗಳು ಮತ್ತು ಎಸ್‍ಎಂಎಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ. ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಹರಿಯಾಣದ ಪೆÇಲೀಸ್ ಮಹಾನಿರ್ದೇಶಕ ಶತ್ರುಜೀತ್ ಕಪೂರ್, ಪೊಲೀಸ್ ಮಹಾನಿರೀಕ್ಷಕ (ಅಂಬಾಲಾ ರೇಂಜ್) ಶಿವಾಸ್ ಕವಿರಾಜ್ ಮತ್ತು ಅಂಬಾಲಾ ಪೊಲೀಸ್ ವರಿಷ್ಠಾಧಿಕಾರಿ ಜಶಂದೀಪ್ ಸಿಂಗ್ ಗಡಿ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ. +ಚಂಡೀಗಢದಿಂದ ದೆಹಲಿಗೆ ಹೋಗುವ ಪ್ರಯಾಣಿಕರು ದೇರಾಬಸ್ಸಿ, ಬರ್ವಾಲಾ/ರಾಮ್ಗಢ, ಸಹಾ, ಶಹಬಾದ್, ಕುರುಕ್ಷೇತ್ರ ಅಥವಾ ಪಂಚಕುಲ, ಯಮುನಾನಗರ ಇಂದ್ರಿ/ಪಿಪ್ಲಿ, ಕರ್ನಾಲ್ ಮೂಲಕ ಪರ್ಯಾಯ ಮಾರ್ಗಗಳನ್ನು ತೆಗೆದುಕೊಳ್ಳುವಂತೆ ತಿಳಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಮಾತ್ರ ಪಂಜಾಬ್‍ಗೆ ಪ್ರಯಾಣಿಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹರಿಯಾಣ ಪೊಲೀಸರು 50 ಕಂಪನಿಗಳ ಕೇಂದ್ರೀಯ ಅರೆಸೇನಾ ಪಡೆಗಳನ್ನು ನಿಯೋಜಿಸಿದ್ದಾರೆ. +ಪ್ರತಿಭಟನಾನಿರತ ರೈತರು ಯೋಜಿತ ಮೆರವಣಿಗೆಯಲ್ಲಿ ಅನುಮತಿ ಇಲ್ಲದೆ ಭಾಗವಹಿಸದಂತೆ ಮನವಿ ಮಾಡಲಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. \ No newline at end of file diff --git a/eesanje/url_47_163_12.txt b/eesanje/url_47_163_12.txt new file mode 100644 index 0000000000000000000000000000000000000000..06dea2633da6ad6231105d28ed2c89aedceeb2be --- /dev/null +++ b/eesanje/url_47_163_12.txt @@ -0,0 +1,6 @@ +ಆಂಧ್ರ ಸಿಎಂ ತಮ್ಮ ಚಿಕ್ಕಪ್ಪನನ್ನು ಹತ್ಯೆ ಮಾಡಿದ್ದಾರೆ : ನಾರಾ ಲೋಕೇಶ್ +ಅಮರಾವತಿ,ಫೆ.12- ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಚಿಕ್ಕಪ್ಪ ವೈ.ಎಸ್.ವಿವೇಕಾನಂದ ರೆಡ್ಡಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ತೆಲುಗು ದೇಶಂ ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಗಂಭೀರ ಆರೋಪ ಮಾಡಿದ್ದಾರೆ. +ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗನ್ ತಮ್ಮ ಚಿಕ್ಕಪ್ಪನನ್ನ (ಬಾಬಾಯ್) ಹತ್ಯೆ ಮಾಡಿದ್ದೀರಿ? ಇನ್ನಷ್ಟು ಕುಟುಂಬಗಳನ್ನು ಕೊಲ್ಲಲು ಅವರು ಸಿದ್ಧರಿದ್ದಾರೆ, ಅಮರನಾಥ್ ಗೌಡ ಅವರಂತಹ ಹಿಂದುಳಿದ ವರ್ಗದ ನಾಯಕ ಮತ್ತು ಡಾ.ಸುಧಾಕರ್ ಅವರಂತಹ ದಲಿತರನ್ನು ಹತ್ಯೆ ಮಾಡಲು ಸಿದ್ಧರಿದ್ದಾರಾ? ಈ ರಾಜ್ಯವನ್ನು ನಾಶ ಮಾಡೋವುದಕ್ಕಾಗಿಯೇ ನಿಂತಿದ್ದೀರಾ ರೆಡ್ಡಿಯವರೇ? ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ. +ಮನೆಗೆ ಬೆಂಕಿ, ಮೂವರು ಸಹೋದರಿಯರು ಆಹುತಿ +ತಂದೆಯಾಗಿರುವ ಟಿಡಿಪಿ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನ ಕಾನೂನು ಬಾಹಿರವಾಗಿ ಬಂಧಿಸಿ, 53 ದಿನಗಳ ಕಾಲ ಜೈಲಿನಲ್ಲಿರಿಸಿದೆ ಎಂದು ನಾರಾ ಲೋಕೇಶ್ ವಾಗ್ದಾಳಿ ನಡೆಸಿದ್ದಾರೆ. +ಅಷ್ಟೇ ಅಲ್ಲ ಕಳೆದ ನಾಲ್ಕು ವರ್ಷಗಳಲ್ಲಿ ತೆಲುಗು ದೇಶಂ ಪಕ್ಷದ ಕಾರ್ಯಕರ್ತರ ವಿರುದ್ಧ ಕೊಲೆಗೆ ಯತ್ನ ದೌರ್ಜನ್ಯ ಸೇರಿದಂತೆ 22 ಪ್ರಕರಣಗಳನ್ನು ದಾಖಲಿಸಿದ್ದಾರೆ. ವೈಎಸ್‍ಆರ್‍ಪಿ ಪಕ್ಷದ ಮುಖಂಡರು ಉದ್ದೇಶಪೂರ್ವಕವಾಗಿಯೇ ಟಿಡಿಪಿ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ರೆಡ್ಲಿಸ್ಟ್ನಲ್ಲಿ ಇಟ್ಟಿದ್ದಾರೆ ಎಂದರಲ್ಲದೇ, ಭಾರತದಲ್ಲಿ ಆಂಧ್ರಪ್ರದೇಶವನ್ನು ಗಾಂಜಾ ರಾಜಧಾನಿಯನ್ನಾಗಿ ಮಾಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. \ No newline at end of file diff --git a/eesanje/url_47_163_2.txt b/eesanje/url_47_163_2.txt new file mode 100644 index 0000000000000000000000000000000000000000..eb519e5d846eb28bb7db73e427f4da0283eaeba2 --- /dev/null +++ b/eesanje/url_47_163_2.txt @@ -0,0 +1,5 @@ +ಲೈಂಗಿಕ ಅಲ್ಪಸಂಖ್ಯಾತರಿಗೆ ಉದ್ಯೋಗ ನೀಡಲು ಮುಂದಾದ ಟಾಟಾ ಸಂಸ್ಥೆ +ರಾಂಚಿ, ಫೆ 13 (ಪಿಟಿಐ) ಟ್ರಾನ್ಸ್‌ಜೆಂಡರ್‌ಗಳನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳಲು ಮುಂದಾಗುವ ಮೂಲಕ ಟಾಟಾ ಸ್ಟೀಲ್ ಹೊಸ ಇತಿಹಾಸ ಬರೆಯಲು ಮುಂದಾಗಿದೆ. ತಮ್ಮ ಸಂಸ್ಥೆಯಲ್ಲಿರುವ ವಿವಿಧ ಹುದ್ದೆಗಳಿಗೆ ಟ್ರಾನ್ಸ್‍ಜೆಂಡರ್ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಮೂಲಕ ಟಾಟಾ ಸ್ಟೀಲ್ಸ್ ಸಂಸ್ಥೆ ಮಹತ್ವದ ಹೆಜ್ಜೆಯನ್ನು ತೆಗೆದುಕೊಂಡಿದೆ ಎಂದು ಕಂಪನಿ ತಿಳಿಸಿದೆ. +ಪ್ರಮುಖ ಜಾಗತಿಕ ಉಕ್ಕಿನ ಕಂಪನಿಯಾಗಿರುವ ಟಾಟಾ ಸ್ಟೀಲ್ ಸಮಾಜದಲ್ಲಿ ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಬೇಕು ಎಂಬ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆಯಂತೆ.ಇಂಗ್ಲೀಷ್ ಅಥವಾ ಐಟಿಐನಲ್ಲಿ ಮೆಟ್ರಿಕ್ಯುಲೇಷನ್ ಅಥವಾ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಎಐಸಿಟಿಇ ಅಥವಾ ಯುಜಿಸಿ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಎಂಜಿನಿಯರಿಂಗ್‍ನಲ್ಲಿ ಡಿಫ್ಲೋಮಾ… ಅಥವಾ ಯಾವುದೇ ವಿಭಾಗದಲ್ಲಿ ಬಿಇ/ಬಿ ಟೆಕ್‍ನಲ್ಲಿ ಪದವಿ ಸಂಸ್ಥೆ, ಎಐಸಿಟಿಇ ಅಥವಾ ಯುಜಿಸಿ ಪಾಸಾದವರು ಅರ್ಜಿ ಸಲ್ಲಿಸಬಹುದು ಎಂದು ಟಾಟಾ ಸ್ಟೀಲ್ ಅಸೂಚನೆಯಲ್ಲಿ ತಿಳಿಸಿದೆ.ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. +ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಆರೋಪಿ ಬಂಧನ +ಎಲ್ಲಾ ಶಾರ್ಟ್‍ಲಿಸ್ಟ್ ಮಾಡಿದ ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಒಳಗಾಗುತ್ತಾರೆ, ಇದು ಅಗತ್ಯಕ್ಕೆ ಅನುಗುಣವಾಗಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿರುತ್ತದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_163_3.txt b/eesanje/url_47_163_3.txt new file mode 100644 index 0000000000000000000000000000000000000000..205562697dec52bfd10c2b365a9d8a60b2524209 --- /dev/null +++ b/eesanje/url_47_163_3.txt @@ -0,0 +1,5 @@ +ಬಹುಕೋಟಿ ಪಡಿತರ ಹಗರಣ, ಬಂಗಾಳದಲ್ಲಿ ಇಡಿ ದಾಳಿ +ಕೋಲ್ಕತ್ತಾ, ಫೆ 13 (ಪಿಟಿಐ) ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಬಹುಕೋಟಿ ಪಡಿತರ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತಂಡಗಳು ಇಂದು ಬೆಳಗ್ಗೆ ಮಹಾನಗರದ ಹಲವು ಸ್ಥಳಗಳಲ್ಲಿ ದಾಳಿ ಆರಂಭಿಸಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇಂದ್ರ ಪಡೆಗಳೊಂದಿಗೆ ಇಡಿ ತಂಡಗಳು ಸಾಲ್ಟ ಲೇಕ್, ಕೈಖಾಲಿ, ಮಿರ್ಜಾ ಗಾಲಿಬ್ ಸ್ಟ್ರೀಟ್, ಹೌರಾ ಮತ್ತು ಇತರ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಿವೆ ಎಂದು ಅವರು ಹೇಳಿದರು. +ರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ +ವಿಚಾರಣೆ ನಡೆಸುತ್ತಿರುವವರಲ್ಲಿ ಉದ್ಯಮಿಗಳು ಮತ್ತು ಹಗರಣದಲ್ಲಿ ಈ ಹಿಂದೆ ಬಂಧಿತರಾದವರಿಗೆ ನಿಕಟ ಸಂಬಂಧ ಹೊಂದಿರುವವರು ಸೇರಿದ್ದಾರೆ ಎಂದು ಅವರು ಹೇಳಿದರು. ಈ ದಾಳಿಗಳು ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿವೆ. ಈಗಾಗಲೇ ಬಂಧಿಸಲ್ಪಟ್ಟವರನ್ನು ವಿಚಾರಣೆ ಮಾಡಿದ ನಂತರ ಈ ಜನರು ಭಾಗಿಯಾಗಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದು ಇಡಿ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ. +ತನಿಖಾ ಸಂಸ್ಥೆಯು ಪಶ್ಚಿಮ ಬಂಗಾಳದಲ್ಲಿ ಪಡಿತರ ವಿತರಣೆಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜ್ಯ ಸಚಿವರು ಮತ್ತು ಟಿಎಂಸಿ ಮುಖಂಡರನ್ನು ಬಂಧಿಸಿದೆ. \ No newline at end of file diff --git a/eesanje/url_47_163_4.txt b/eesanje/url_47_163_4.txt new file mode 100644 index 0000000000000000000000000000000000000000..b10b93e79a388c6cd2a5f74ef725226d093b7a62 --- /dev/null +++ b/eesanje/url_47_163_4.txt @@ -0,0 +1,5 @@ +ಚವಾಣ್‍ರನ್ನು ರಾಜ್ಯಸಭೆಗೆ ಕಳುಹಿಸುವುದು ಹುತಾತ್ಮರಿಗೆ ಅಗೌರವ ತೋರಿದಂತೆ : ಠಾಕ್ರೆ +ಛತ್ರಪತಿ ಸಂಭಾಜಿನಗರ, ಫೆ.13 (ಪಿಟಿಐ) ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರನ್ನು ಗುರಿಯಾಗಿಸಿ ಆದರ್ಶ ವಸತಿ ಹಗರಣವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಬಿಜೆಪಿ ಅವರನ್ನು ರಾಜ್ಯಸಭೆಗೆ ಕಳುಹಿಸಿದರೆ ಹುತಾತ್ಮ ಯೋಧರಿಗೆ ಅಗೌರವ ತೋರಿದಂತಾಗುತ್ತದೆ ಎಂದು ಹೇಳಿದ್ದಾರೆ. ಛತ್ರಪತಿ ಸಂಭಾಜಿನಗರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈ ಹಿಂದೆ ನಾಂದೇಡ್ (ಚವಾಣ್ ಅವರ ತವರು ಜಿಲ್ಲೆ)ಗೆ ಹೋಗಿ ಅಶೋಕ್ ಚವಾಣ್ ಮಾಡಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದರು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ. +ಆದರೆ ಪ್ರಧಾನಿ ಅವರನ್ನು (ಚವಾಣ್‍) ರಾಜ್ಯಸಭೆಗೆ ಕಳುಹಿಸಿದರೆ, ಅದು ನಮ್ಮ ಸೈನಿಕರಿಗೆ ಅಗೌರವ ತೋರಿದಂತಾಗುತ್ತದೆ ಎಂದು ಅವರು ಹೇಳಿದರು. ಈ ಹಿಂದೆ, ಪ್ರಧಾನಿ ಮತ್ತು ಫಡ್ನವೀಸ್ ಚವಾಣ್ ಅವರನ್ನು ಡೀಲರ್ ಮತ್ತು ನಾಯಕನಲ್ಲ ಎಂದು ಕರೆಯುತ್ತಿದ್ದರು ಎಂದು ಠಾಕ್ರೆ ನೆನಪಿಸಿಕೊಂಡಿದ್ದಾರೆ. ಅವರು ಆದರ್ಶ್ ವಸತಿ ಹಗರಣವನ್ನು ಸೈನಿಕರಿಗೆ ಅಗೌರವ ಎಂದು ಬಣ್ಣಿಸಿದ್ದಾರೆ. ಹುತಾತ್ಮ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಅಗೌರವ ತೋರಿದ ವ್ಯಕ್ತಿಯನ್ನು (ಚವಾಣ್‍) ಅವರು ರಾಜ್ಯಸಭೆಗೆ ಕಳುಹಿಸುತ್ತೀರಾ ಎಂದು ನಾನು ಪ್ರಧಾನಿಯನ್ನು ಕೇಳಲು ಬಯಸುತ್ತೇನೆ? ಎಂದು ಮಾಜಿ ಸಿಎಂ ಪ್ರಶ್ನಿಸಿದರು. +ರಾಜ್ಯಪಾಲರ ಮೂಲಕ ಜನರಿಗೆ ತಪ್ಪು ಮಾಹಿತಿ : ಜಿ.ಟಿ.ದೇವೇಗೌಡ +ಕಳೆದ ವಾರ ಸಂಸತ್ತಿನಲ್ಲಿ ಮಂಡಿಸಲಾದ ಶ್ವೇತಪತ್ರದಲ್ಲಿ ಉಲ್ಲೇಖಿಸಲಾದ ಆದರ್ಶ್ ಬಿಲ್ಡಿಂಗ್ ಹಗರಣದ ಹಿನ್ನೆಲೆ, 2010 ರಲ್ಲಿ ರಾಜ್ಯದ ಮುಖ್ಯಮಂತ್ರಿ ಚವಾಣ್ ರಾಜೀನಾಮೆಗೆ ಕಾರಣವಾದ ಹಗರಣ, ಅವರ ನಿರ್ಗಮನದ ಸಂಭಾವ್ಯ ಅಂಶವಾಗಿ ಗಮನ ಸೆಳೆದಿದೆ. ಚವಾಣ್ ಅವರು ಈ ಹಕ್ಕನ್ನು ನಿರಾಕರಿಸಿದ್ದಾರೆ. \ No newline at end of file diff --git a/eesanje/url_47_163_5.txt b/eesanje/url_47_163_5.txt new file mode 100644 index 0000000000000000000000000000000000000000..cf4140bef3dbc22b1c9bd0dbed510d7cef11b120 --- /dev/null +++ b/eesanje/url_47_163_5.txt @@ -0,0 +1,5 @@ +ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ +ಬೆಂಗಳೂರು,ಫೆ.12- ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸುರಂಗ ರಸ್ತೆ ನಿರ್ಮಾಣದ ಸಾಧಕ ವರದಿ ಪರಿಶೀಲನೆ ಯಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದ್ದಾರೆ. ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಇಂದು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಸಾಧಕ ವರದಿಯನ್ನು ಸಿದ್ದಪಡಿಸಲಾಗುತ್ತಿದೆ. ಬೆಂಗಳೂರು ಮೆಟ್ರೊ ಹಂತ-2 ರಿಚ್ 5ರಲ್ಲಿ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‍ವರೆಗಿನ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು 2024ರ ಜುಲೈ ವೇಳೆಗೆ ಕಾರ್ಯಾಚರಣೆಯ ಸಾಧ್ಯತೆ ಇದೆ. +ಸೆಂಟ್ರಲ್ ಸಿಲ್ಕ್‍ಬೋರ್ಡ್‍ನಿಂದ ಕೃಷ್ಣರಾಜಪುರದವರೆಗೆ ಮತ್ತು ಕೃಷ್ಣರಾಜಪುರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ಕಾಮಗಾರಿಗಳು 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಬಿಬಿಎಂಪಿಗೆ ಸೇರ್ಪಡೆಯಾದ 110 ಹಳ್ಳಿಗಳ ಪ್ರದೇಶಗಳಿಗೆ 775 ಎಂಎಲ್‍ಡಿ ಹೆಚ್ಚುವರಿ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ 2024ರ ಮಾರ್ಚ್‍ಗೆ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದ್ದಾರೆ. +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಬೈಯಪ್ಪನಹಳ್ಳಿ ಚಿಕ್ಕಬಾಣವಾರ ನಡುವಿನ 25 ಕಿ.ಮೀಗಳ ಕಾರಿಡಾರ್‍ನ ಸಿವಿಲ್ ಕಾಮಗಾರಿ ಪ್ರಗತಿಯಲ್ಲಿದೆ. ಹೀಲಲಿಗೆ ರಾಜಾನುಕುಂಟೆ ನಡುವಿನ 46.24 ಕಿ.ಮೀ ಕಾರಿಡಾರ್‍ನ ಸಿವಿಲ್ ಕಾಮಗಾರಿಗೆ ಟೆಂಡರ್ ಅಂತಿಮಗೊಂಡಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ ಎಂದು ವಿವರಿಸಿದ್ದಾರೆ. \ No newline at end of file diff --git a/eesanje/url_47_163_6.txt b/eesanje/url_47_163_6.txt new file mode 100644 index 0000000000000000000000000000000000000000..30ad5050adb6e62236439f67de7faacc31bc8416 --- /dev/null +++ b/eesanje/url_47_163_6.txt @@ -0,0 +1,5 @@ +ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ನಿತೀಶ್ +ಪಾಟ್ನಾ,ಫೆ.12-ಭಾರೀ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ನಿರ್ಣಯದಲ್ಲಿ ಕೊನೆಗೂ ಮುಖ್ಯಮಂತ್ರಿ ನಿತೀಶ್‍ಕುಮಾರ್ ಅಚ್ಚರಿ ರೀತಿಯಲ್ಲಿ ಗೆದ್ದು ಬೀಗಿದ್ದಾರೆ. ಒಟ್ಟು 129 ಮತಗಳು ವಿಶ್ವಾಸ ಮತ ಪರವಾಗಿ ಚಲಾವಣೆಗೊಂಡಿದ್ದು, ಸದನದಲ್ಲಿದ್ದವರಿಗೆ ಅಚ್ಚರಿ ಮೂಡಿಸಿತ್ತು. ನಿತೀಶ್‍ರ ಪರಮ ವೈರಿ ಎಂದೇ ಬಿಂಬಿತವಾಗಿದ್ದ ಆರ್‍ಜೆಡಿಯ ನಾಲ್ಕರಿಂದ ಐದು ಶಾಸಕರು ವಿಶ್ವಾಸಮತ ಚಲಾಯಿಸಿದ್ದಾರೆ. +ಜೆಡಿಯುನಲ್ಲಿ ಒಡಕಿದೆ ಎಂದು ಹೇಳುತ್ತಿದ್ದ ಆರ್‍ಜೆಡಿಯ ಎಲ್ಲ ತಂತ್ರಗಾರಿಕೆಯು ಕೈಕೊಟ್ಟಿದೆ. ಬದಲಾಗಿ ಅದಕ್ಕೆ ತಿರುಗು ಬಾಣವಾಗಿದೆ ಬಿಜೆಪಿಯ 78 ಹಾಗೂ ಜೆಡಿಯುನ 45 ಶಾಸಕರನ್ನು ಹೊಂದಿದ್ದು, ಹೊಸ ಮೈತ್ರಿಕೂಟದ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದೆ. ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಆರ್‍ಜೆಡಿಯ ಮೂವರು ಶಾಸಕರು ಆಡಳಿತ ಪಕ್ಷದ ಆಸನದತ್ತ ಕೂತಿದ್ದರು. ಇದನ್ನು ನೀಡಿದ ಆರ್‍ಜೆಡಿ ನಾಯಕ ಹಾಗೂ ಮಾಜಿ ಡಿಸಿಎಂ ತೇಜಸ್ವಿ ಯಾದವ್ ಆಕ್ಷೇಪ ವ್ಯಕ್ತಪಡಿಸಿದರು. ಆದರೂ ನಂತರ ನಡೆದ ಬೆಳವಣಿಗೆಯಲ್ಲಿ ಮೊದಲು ಬಿಜೆಪಿಯ ಶಾಸಕರಿಂದ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಯಿತು. +ನ್ಯಾಯಯುತವಾಗಿ ರಾಜ್ಯಕ್ಕೆ ತೆರಿಗೆ ಪಾಲು ಸಿಗುತ್ತಿಲ್ಲ : ಭಾಷಣದಲ್ಲಿ ರಾಜ್ಯಪಾಲ ಅಸಮಾಧಾನ +ನಂತರ ನಡೆದ ಮತದಾನದಲ್ಲಿ ಅವಿಶ್ವಾಸದ ಪರ 125 ಮತಗಳು ಬಂದರೆ ಇದಕ್ಕೆ ವಿರುದ್ಧವಾಗಿ ಕೇವಲ 112 ಶಾಸಕರು ಇದ್ದರು. ಸ್ಪೀಕರ್ ಪದಚ್ಯುತಿ ನಂತರ ಸಿಎಂ ನಿತೀಶ್‍ಕುಮಾರ್ ವಿಶ್ವಾಸ ಮತ ಯಾಚನೆ ನಿರ್ಣಯವನ್ನು ಮಂಡಿಸಿ ಬಹಳ ಚರ್ಚೆಯ ನಂತರ ಎಲ್ಲರೂ ಅಚ್ಚರಿಪಡುವಂತೆ 129 ಶಾಸಕರ ಬೆಂಬಲದೊಂದಿಗೆ ಸಂಪೂರ್ಣ ಬಹುಮತ ಸಾಬೀತುಪಡಿಸುವಲ್ಲಿ ನಿತೀಶ್ ಯಶಸ್ವಿಯಾಗಿದ್ದಾರೆ.ಈ ಬಳಿಕ ಬಿಜೆಪಿ ಹಾಗೂ ಜೆಡಿಯು ಶಾಸಕರು ಸಂಭ್ರಮಿಸಿದರು. \ No newline at end of file diff --git a/eesanje/url_47_163_7.txt b/eesanje/url_47_163_7.txt new file mode 100644 index 0000000000000000000000000000000000000000..314bc8775ce161c1c450b3822ce5e36a8e7de8a5 --- /dev/null +++ b/eesanje/url_47_163_7.txt @@ -0,0 +1,6 @@ +ಸರ್ಕಾರ ಬರೆದುಕೊಟ್ಟಿದ್ದ ಭಾಷಣವನ್ನು ಓದಲ್ಲ ಎಂದು ಹೊರ ನಡೆದ ರಾಜ್ಯಪಾಲ +ಚನ್ನೈ, ಫೆ.12 – ರಾಜ್ಯ ಬಜೆಟ್ ಅವೇಶನದಲ್ಲಿ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ. ಸರ್ಕಾರ ಬರೆದುಕೊಟ್ಟಿದ್ದ ಭಾಷಣವನ್ನು ಓದಲ್ಲ ಅಂತ ಹೇಳುವ ಮೂಲಕ ತಮಿಳುನಾಡು ರಾಜ್ಯಪಾಲರಾದ ಆರ್.ಎನ್.ರವಿ ಹೊಸ ವಿವಾದ ಸೃಷ್ಟಿಸಿದ್ದಾರೆ. ನಾನು ನನ್ನ ಧ್ವನಿಯನ್ನು ನೀಡಿದರೆ, ಅದು ಸಾಂವಿಧಾನಿಕ ಅಪಹಾಸ್ಯಕ್ಕೆ ಕಾರಣವಾಗುತ್ತದೆ ಎಂದು ಆರ್.ಎನ್.ರವಿ ಅೀಧಿವೇಶನದಲ್ಲಿ ಹೇಳಿದರು. +ರಾಜ್ಯಪಾಲರು ತಮ್ಮ ವಾಡಿಕೆ ಭಾಷಣವನ್ನು ಎರಡು ನಿಮಿಷಗಳಲ್ಲಿ ಮುಗಿಸಿದ್ದಾರೆ. ಭಾಷಣದ ಪ್ರಾರಂಭ ಮತ್ತು ಕೊನೆಯಲ್ಲಿ ರಾಷ್ಟ್ರಗೀತೆಯನ್ನು ಹಾಡಲು ನಿರಾಕರಿಸಿದ್ದಾರಂತೆ. ತಮಿಳುನಾಡು ವಿಧಾನಸಭೆಯಲ್ಲಿನ ಸಮಾವೇಶದ ಪ್ರಕಾರ, ಭಾಷಣದ ಮೊದಲು ರಾಜ್ಯಗೀತೆ ಮತ್ತು ನಂತರ ರಾಷ್ಟ್ರಗೀತೆಯನ್ನು ಹಾಕಲಾಗುತ್ತೆ. ಆದರೆ ರಾಜ್ಯಪಾಲರು ಆರ್.ಎನ್.ರವಿ ಇದಕ್ಕೆ ನಿರಾಕರಿಸಿದ್ದಾರೆ. +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ತಮಿಳುನಾಡು ವಿಧಾನಸಭೆ ಸೇರುತ್ತಿದ್ದಂತೆ ತಮಿಳುನಾಡು ರಾಜ್ಯಪಾಲ ರವಿ ಅವರು ಕೇರಳದಲ್ಲಿ ನಡೆದಂತೆ ತಮ್ಮ ಭಾಷಣವನ್ನು ಪೂರ್ತಿಯಾಗಿ ಓದಲಿಲ್ಲ.ತಮಿಳುನಾಡು ಸರ್ಕಾರ ತಮಗಾಗಿ ಸಿದ್ಧಪಡಿಸಿರುವ ಭಾಷಣದಲ್ಲಿ ಮಾಡಿರುವ ಕೆಲವು ಟೀಕೆಗಳನ್ನು ಒಪ್ಪುವುದಿಲ್ಲ ಎಂದು ಹೇಳಿ ಭಾಷಣ ಮುಗಿಸಿದರು. ಕೆಲವೇ ನಿಮಿಷಗಳಲ್ಲಿ ರಾಜ್ಯಪಾಲರು ಭಾಷಣ ಮುಗಿಸಿದರು. +ಕೇರಳ ರಾಜ್ಯದಲ್ಲೂ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಜಟಾಪಟಿ ಏರ್ಪಟ್ಟಿತ್ತು. ಕಳೆದ ತಿಂಗಳು ಅಲ್ಲಿ ವಿಧಾನಸಭೆ ಅವೇಶನ ನಡೆದಾಗ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ಚಟುವಟಿಕೆಗಳು ಚರ್ಚೆಗೆ ಗ್ರಾಸವಾಗಿತ್ತು. \ No newline at end of file diff --git a/eesanje/url_47_163_8.txt b/eesanje/url_47_163_8.txt new file mode 100644 index 0000000000000000000000000000000000000000..1bbb3ad2a85a2a49f4a87aad6d427080e05f20b1 --- /dev/null +++ b/eesanje/url_47_163_8.txt @@ -0,0 +1,8 @@ +ಕೇರಳ : ಅಕ್ರಮ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ +ಕೊಚ್ಚಿ, -ಫೆ.12: ಇಲ್ಲಿಗೆ ಸಮೀಪದ ತ್ರಿಪುಣಿತುರಾದಲ್ಲಿ ವಸತಿ ಪ್ರದೇಶದಿಂದ ನಡೆಯುತ್ತಿದ್ದ ಅಕ್ರಮ ಪಟಾಕಿ ಗೋದಾಮಿನಲ್ಲಿಂದು ಸಂಭವಿಸಿದ ಭಾರೀ ಸೋಟದಲ್ಲಿ ಒಬ್ಬ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 16 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ವೈದ್ಯಕೀಯ ತಜ್ಞರ ಚಿಕಿತ್ಸೆಗಾಗಿ ಅವರನ್ನು ಸಮೀಪದ ಆಸ್ಪತ್ರೆಯಿಂದ ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತ ವ್ಯಕ್ತಿಯನ್ನು ತಿರುವನಂತಪುರಂ ಮೂಲದ ವಿಷ್ಣು ಎಂದು ಗುರುತಿಸಲಾಗಿದೆ .ಸೋಟದಲ್ಲಿ ಸುತ್ತಮುತ್ತಲಿನ 25 ಕ್ಕೂ ಹೆಚ್ಚು ಮನೆಗಳು ಮತ್ತು ಕೆಲವು ಅಂಗಡಿಗಳು ತೀವ್ರವಾಗಿ ಹಾನಿಗೊಳಗಾಗಿವೆ ಮತ್ತು ಎರಡು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ ಮತ್ತು ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಗೋದಾಮಿಗೆ ತಂದಿದ್ದ ಪಟಾಕಿಗಳ ಬೃಹತ್ ಸಂಗ್ರಹ ಒಟ್ಟಿಗೆ ಸೋಟಗೊಂಡಿರುವ ಶಂಕೆ ಇದೆ ಎಂದು ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಇದು ಭಾರೀ ಸೋಟವಾಗಿದ್ದು, ಹಲವಾರು ಕಿಮೀ ದೂರದಲ್ಲಿ ಜನರು ಭೂಮಿ ನಡುಗಿದ ಅನುಭವವಾಗಿದೆ ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲೂ ಕಂಪನದ ಅನುಭವವಾಗಿದೆ ಎಂದು ಅವರು ಹೇಳಿದರು ಮತ್ತು ಸೋಟದ ದೊಡ್ಡ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ.ದಟ್ಟ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಗೋದಾಮು ನಡೆಸುತ್ತಿರುವ ಬಗ್ಗೆ ನಮಗೆ ಯಾವುದೇ ಸುಳಿವು ಇರಲಿಲ್ಲ. ಅದನ್ನು ನಿರ್ವಹಿಸುವವರು ಅದಕ್ಕೆ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಸಹಾಯಕ ಠಾಣಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದರು. +ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಯಾವುದೂ ಇಲ್ಲ : ಕುಮಾರಸ್ವಾಮಿ +ವಾಹನದಿಂದ ಪಟಾಕಿಗಳನ್ನು ಗೋದಾಮಿಗೆ ಇಳಿಸುವಾಗ ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯ ಜನರು ಮಾಹಿತಿಯ ನೀಡಿದ್ದಾರೆ.ಈ ಪ್ರದೇಶದಲ್ಲಿ ಗೋದಾಮು ಸ್ವಲ್ಪ ಸಮಯದಿಂದ ಕಾರ್ಯನಿರ್ವಹಿಸುತ್ತಿದೆ ಮತ್ತು ಸ್ಥಳೀಯ ದೇವಾಲಯದ ಉತ್ಸವದ ಭಾಗವಾಗಿ ಪಟಾಕಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. +ಈ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡಗಳ ಮೇಲ್ಛಾವಣಿ ತೀವ್ರವಾಗಿ ಹಾನಿಗೀಡಾಗಿರುವುದು ಕಂಡುಬಂದಿದೆ. ಸೋಟದ ಪ್ರಭಾವದಿಂದ ಅನೇಕ ಮನೆಗಳ ಬಾಗಿಲು ಮತ್ತು ಕಿಟಕಿಗಳು ಗೋಡೆಯಿಂದ ಹಾರಿಹೋಗಿವೆ ಮತ್ತು ಪೋರ್ಟಿಕೋಗಳಲ್ಲಿ ನಿಲ್ಲಿಸಲಾಗಿದ್ದ ಕಾರುಗಳ ಮೇಲೆ ಇಟ್ಟಿಗೆಗಳು ಮತ್ತು ಹೆಂಚುಗಳು ಬಿದ್ದು ನಾಶವಾಗಿವೆ. +ಬೆಂಕಿಯಿಂದಾಗಿ ಎತ್ತರದ ಮರಗಳು ಸಹ ಸಂಪೂರ್ಣವಾಗಿ ಸುಟ್ಟುಹೋದವು, ಸೋಟದ ಅವಶೇಷಗಳು ಹಲವಾರು ಮೀಟರ್ ದೂರದಲ್ಲಿ ಕಾಣಿಸಿಕೊಂಡಿದೆ ಹಿರಿಯ ಅಧಿದಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. \ No newline at end of file diff --git a/eesanje/url_47_163_9.txt b/eesanje/url_47_163_9.txt new file mode 100644 index 0000000000000000000000000000000000000000..cf13e736543bf78ab20828af14a7d3a2b7349f58 --- /dev/null +++ b/eesanje/url_47_163_9.txt @@ -0,0 +1,5 @@ +ಮಾಜಿ ಸಿಎಂ ಅಶೋಕ್ ಚವ್ಹಾಣ್ ಕಾಂಗ್ರೆಸ್‌ಗೆ ಗುಡ್ ಬೈ +ಮುಂಬೈ,ಫೆ.12- ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಭಾರೀ ಮರ್ಮಾಘಾತ ಉಂಟಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಪಕ್ಷ ತೊರೆಯಲು ತೀರ್ಮಾನಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಅಶೋಕ್ ಚವ್ಹಾಣ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ. +ಮಹಾರಾಷ್ಟ್ರದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಳ್ ಅವರಿಗೆ ಒಂದು ಸಾಲಿನ ಪತ್ರ ಬರೆದಿರುವ ಚವ್ಹಾಣ್, ನಾನು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಕೋರಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅಶೋಕ್ ಚವ್ಹಾಣ್, ಪಕ್ಷ ಬಿಡಲು ಮುಂದಾಗಿರುವುದು ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಎಂದೇ ಹೇಳಲಾಗಿದೆ. +ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ +ಕೆಲದಿನಗಳ ಹಿಂದೆ ಪಕ್ಷದ ಪ್ರಮುಖರಾದ ಮಿಲಿಂದ್ ದೇವೂರ ಹಾಗೂ ಬಾಬಾ ಸಿದ್ದಕ್ಕಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಇದೀಗ ಅಶೋಕ್ ಚವ್ಹಾಣ್ ನಿರ್ಗಮನ ಹೊಡೆತದ ಮೇಲೆ ಹೊಡೆತ ಕೊಟ್ಟಂತಾಗಿದೆ. \ No newline at end of file diff --git a/eesanje/url_47_164_1.txt b/eesanje/url_47_164_1.txt new file mode 100644 index 0000000000000000000000000000000000000000..21a03255f66f7f490947a3c9ebb07d086867688b --- /dev/null +++ b/eesanje/url_47_164_1.txt @@ -0,0 +1,5 @@ +ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ಮೇಲೆ ಸೇನೆಯಿಂದ ಗುಂಡಿನ ದಾಳಿ +ಮೆಂಧರ್/ಜಮ್ಮು, ಫೆ.12: ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಸೇನಾ ಪಡೆಗಳು ಪಾಕಿಸ್ತಾನದ ಡ್ರೋನ್ ಮೇಲೆ ಗುಂಡಿನ ದಾಳಿ ನಡೆಸಿದೆ. ತಡರಾತ್ರಿ ಭಾರತದ ಭೂಪ್ರದೇಶ ಪ್ರವೇಶಿಸಿದಾಗ ಅದನ್ನು ಹಿಮ್ಮೆಟ್ಟಿಸಲಾಗಿದೆ. ಗುಂಡಿಗೆ ಡ್ರೋನ್ ಹಾನಿಗೊಂಡರೂ ಪಾಕಿಸ್ತಾನದ ಕಡೆಗೆ ಮರಳಿತು ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. +ಮೆಂಧರ್‍ನ ನಾರ್ ಮಾನ್‍ಕೋಟೆ ಪ್ರದೇಶದಲ್ಲಿ ಪಾಕ್ ಡ್ರೋನ್‍ನ ಚಲನೆಯನ್ನು ಪತ್ತೆಮಾಡಿ ನಿಯಂತ್ರಣ ರೇಖೆಯಲ್ಲಿ ಕಾವಲು ಕಾಯುತ್ತಿರುವ ಪಡೆಗಳು ಅದನ್ನು ಉರುಳಿಸಲು ಮೂರು ಸುತ್ತು ಗುಂಡು ಹಾರಿಸಿದರು ಆದರೆ ಭಾರತೀಯ ಸೈನಿಕರ ಗುಂಡಿನ ದಾಳಿಗೆ ಡ್ರೋನ್ ಪಾಕಿಸ್ತಾನದ ಕಡೆಗೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +33 ಲಕ್ಷ ರೈತರಿಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೆಗೌಡ +ಪ್ರಸ್ತುತ್ತ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತ್ತೀಚೆಗೆ ಮಾದಕ ದ್ರವ್ಯಗಳು, ಶಶಸ್ತ್ರಗಳು ಅಥವಾ ಸ್ಪೋಟಕ ವಸ್ತುಗಳನ್ನು ಗಡಿಯಾಚೆಯಿಂದ ತರುವ ಡ್ರೋನ್‍ಗಳ ಕುರಿತು ಮಾಹಿತಿ ನೀಡುವವರಿಗೆ 3 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು, \ No newline at end of file diff --git a/eesanje/url_47_164_10.txt b/eesanje/url_47_164_10.txt new file mode 100644 index 0000000000000000000000000000000000000000..29f2db5568558cd54c96caf7758e898d05eaf093 --- /dev/null +++ b/eesanje/url_47_164_10.txt @@ -0,0 +1,6 @@ +ಬೂದಿ ಮುಚ್ಚಿದ ಕೆಂಡದಂತಿರುವ ಉತ್ತರಾಖಂಡದ ಬಂಭುಲ್‍ಪುರದಲ್ಲಿ ಬಿಗಿ ಬಂದೋಬಸ್ತ್ +ಡೆಹ್ರಾಡೂನ್,ಫೆ.11- ಕೆಲವು ದಿನಗಳ ಹಿಂದೆ ಜಿಲ್ಲಾಡಳಿತದ ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಹಿಂಸಾಚಾರ ಭುಗಿಲೆದ್ದಿದ್ದ ಹಲ್ದ್ವಾನಿಯ ಬಂಭುಲ್‍ಪುರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಉತ್ತರಾಖಂಡ ಸರ್ಕಾರ ನಾಲ್ಕು ಹೆಚ್ಚುವರಿ ಕೇಂದ್ರೀಯ ಅರೆಸೇನಾ ಪಡೆಗಳನ್ನು ಕರೆಸಿಕೊಂಡಿದೆ. +ಕೇಂದ್ರ ಗೃಹ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಅವರು, ನೈನಿತಾಲ್ ಜಿಲ್ಲೆಯ ಹಲ್ದ್ವಾನಿ ನಗರದ ಬನ್‍ಭುಲ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಲಿಕ್ ಕಾ ಬಗಿಚಾದಲ್ಲಿ ಫೆ.8ರಂದು ನಡೆದ ಅತಿಕ್ರಮಣ ಅಭಿಯಾನದ ದೃಷ್ಟಿಯಿಂದ ನಿರಂತರ ಪ್ರಯತ್ನಗಳು ನಡೆಯುತ್ತಿವೆ. ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರಭಾವ ಬೀರಲು ಅರಾಜಕತಾವಾದಿ ಅಂಶಗಳಿಂದ ಮಾಡಲ್ಪಟ್ಟಿದೆ, ಆದ್ದರಿಂದ ಹೆಚ್ಚುವರಿ ಅರೆಸೈನಿಕ ಪಡೆಗಳ 04 ಕಂಪನಿಗಳ ಅವಶ್ಯಕತೆಯಿದೆ ಎಂದು ಮನವಿ ಮಾಡಿಕೊಂಡಿದ್ದಾರೆ. +“ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಮಕ್ಕಳೇ 2 ದಿನ ಊಟ ಬಿಡಿ” ಎಂದ ಶಾಸಕ +ಗುರುವಾರ ನಡೆದ ಅತಿಕ್ರಮಣ ವಿರೋಧಿ ಅಭಿಯಾನದ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದು, ನಂತರ ಈ ಪ್ರದೇಶದಲ್ಲಿ ಕಫ್ರ್ಯೂ ವಿಸಲಾಗಿದೆ. ಹಿರಿಯ ಪೊಲೀಸ್ ಅೀಧಿಕ್ಷಕ (ಎಸ್‍ಎಸ್‍ಪಿ) ನೈನಿತಾಲ್ ಪಿಎನ್ ಮೀನಾ ಅವರು ಮೂರು ಪ್ರಕರಣಗಳನ್ನು ದಾಖಲಿಸಿದ್ದು, 19 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ ಪ್ರಕರಣಗಳಲ್ಲಿ ಸುಮಾರು 5,000 ಅಪರಿಚಿತರನ್ನು ಹೆಸರಿಸಲಾಗಿದೆ. +ಇದಕ್ಕೂ ಮೊದಲು, ಬನ್‍ಭೂಲ್‍ಪುರದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದ ನಂತರ ಗೃಹ ಸಚಿವಾಲಯವು ನಾಲ್ಕು ಕಂಪನಿಗಳ ಅರೆಸೇನಾ ಪಡೆಗಳನ್ನು ನೈನಿತಾಲ್ ಜಿಲ್ಲೆಯ ಹಲ್ದ್ವಾನಿಗೆ ಧಾವಿಸಿವೆ. ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಲ್ದ್ವಾನಿಗೆ ಭೇಟಿ ನೀಡಿದ್ದು, ಮಹಿಳಾ ಅಧಿಕಾರಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿಯ ಮೇಲಿನ ಹಲ್ಲೆ ಅತ್ಯಂತ ಖಂಡನೀಯ ಎಂದು ಹೇಳಿ್ದದ್ದಾರೆ. ದೇವಭೂಮಿಯಲ್ಲಿ ಕೆಲವರು ಕಾನೂನನ್ನು ಕೈಗೆತ್ತಿಕೊಂಡು ವಾತಾವರಣ ಹಾಳು ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. \ No newline at end of file diff --git a/eesanje/url_47_164_11.txt b/eesanje/url_47_164_11.txt new file mode 100644 index 0000000000000000000000000000000000000000..bda71e57490a929eae3821d8077b412eec269995 --- /dev/null +++ b/eesanje/url_47_164_11.txt @@ -0,0 +1,9 @@ +ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್‌ ಸಂಪರ್ಕ ಕಟ್ +ಚಂಡೀಗಢ,ಫೆ.11- ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವೂ ದೆಹಲಿಗೆ ತೆರಳುವ ರೈತರ ಪಾದಯಾತ್ರೆಯನ್ನು ತಡೆಯಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಮನೋಹರ್ ಲಾಲ್ ಖಟ್ಟರ್ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದ್ದು, ಮೊಬೈಲ್ ಫೋನ್‍ಗಳಲ್ಲಿ ಒದಗಿಸಲಾದ ಡಾಂಗಲ್ ಸೇವೆಗಳನ್ನು ಅಮಾನತುಗೊಳಿಸಲಾಗುವುದು ಮತ್ತು ಧ್ವನಿ ಕರೆಗಳು ಮಾತ್ರ ಹೋಗುತ್ತವೆ ಎಂದು ಹೇಳಿದೆ. +200ಕ್ಕೂ ಹೆಚ್ಚು ಸಂಘಟನೆಗಳ ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‍ಪಿ) ಮತ್ತು ಪಿಂಚಣಿ ಮತ್ತು ವಿಮಾ ಯೋಜನೆಗಳಿಗೆ ಖಾತರಿ ನೀಡುವ ಕಾನೂನನ್ನು ಒತ್ತಾಯಿಸುತ್ತಿದ್ದಾರೆ. ಮಂಗಳವಾರ ರಾತ್ರಿಯವರೆಗೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. +ಏತನ್ಮಧ್ಯೆ, ದೆಹಲಿಗೆ ತೆರಳುವ ಮೊದಲು ನೆರೆಯ ರಾಜ್ಯದ ರೈತರು ಹರಿಯಾಣವನ್ನು ಪ್ರವೇಶಿಸದಂತೆ ಖಚಿತಪಡಿಸಿಕೊಳ್ಳಲು ಹರಿಯಾಣ-ಪಂಜಾಬ್ ಗಡಿಗಳನ್ನು ಮುಚ್ಚಲು ಪೊಲೀಸರು ಯೋಜಿಸಿದ್ದಾರೆ. ಈ ಕ್ರಮವು ಚಂಡೀಗಢ ಮತ್ತು ದೆಹಲಿ ನಡುವೆ ಪ್ರಯಾಣಿಸುವವರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಪೊಲೀಸರು ಪರ್ಯಾಯ ಮಾರ್ಗಗಳನ್ನು ಘೋಷಿಸಿದ್ದಾರೆ. +ನಮ್ಮ ಸರ್ಕಾರಕ್ಕೆ225 ಶಾಸಕರ ಬಲವಿದೆ ; ಅಜಿತ್ ಪವಾರ್ +ಮಂಗಳವಾರದಂದು ಅಪಧಮನಿಯ ರಸ್ತೆಗಳನ್ನು ತಪ್ಪಿಸುವಂತೆ ಹರಿಯಾಣ ಪೊಲೀಸರು ಪ್ರಯಾಣಿಕರಿಗೆ ಸಲಹೆ ನೀಡಿದ್ದಾರೆ. ಪ್ರತಿಭಟನೆಯಿಂದಾಗಿ ಸಂಚಾರ ವ್ಯತ್ಯಯವಾಗುವ ಎಚ್ಚರಿಕೆಯನ್ನೂ ನೀಡಿದೆ. ಹರಿಯಾಣ ಮತ್ತು ದೆಹಲಿ ನಡುವಿನ ಗಡಿಯಲ್ಲಿ, ಸಿಮೆಂಟ್ ತಡೆಗೋಡೆಗಳು, ಮುಳ್ಳುತಂತಿಗಳು ಮತ್ತು ಮರಳು ಚೀಲಗಳು ರಾಷ್ಟ್ರ ರಾಜಧಾನಿಗೆ ರೈತರು ದಾಟುವುದನ್ನು ತಡೆಯಲು ಸ್ಥಳದಲ್ಲಿವೆ. ಜಲ ಫಿರಂಗಿಗಳು ಮತ್ತು ಡ್ರೋನ್‍ಗಳನ್ನು ಸಹ ತರಲಾಗಿದೆ. +ಹರಿಯಾಣ ಪೊಲೀಸರಿಗೆ ನೆರವಾಗಲು ಐವತ್ತು ಕಂಪನಿಗಳ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಯಾರಾದರೂ ಶಾಂತಿ ಕದಡಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಕಪೂರ್ ಎಚ್ಚರಿಕೆ ನೀಡಿದ್ದಾರೆ. ರೈತರು ದೂರ ಉಳಿಯುವಂತೆ ಪೊಲೀಸರು ಸೂಚಿಸಿದ್ದು, ಸಾರ್ವಜನಿಕ ಆಸ್ತಿಗೆ ಹಾನಿಯಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಕೂಡ ರಾಜ್ಯ ಸರ್ಕಾರ ಸಂಪೂರ್ಣ ಶಾಂತಿಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ. +ಏತನ್ಮಧ್ಯೆ, ಕೇಂದ್ರವು ಪ್ರತಿಭಟನಾ ನಿರತ ರೈತರನ್ನು ನಾಳೆ ಮಾತುಕತೆಗೆ ಆಹ್ವಾನಿಸಿದೆ. ಆದರೆ ಸಭೆಯು ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಲ್ಲಿ ಕಾರಣವಾಗುವುದು ಅಸಂಭವವಾಗಿದೆ ಏಕೆಂದರೆ ಬೇಡಿಕೆಗಳಿಗೆ ವಿವರವಾದ ಚರ್ಚೆ ಮತ್ತು ಸಂಸತ್ತಿನ ನಡೆಗಳು ಬೇಕಾಗುತ್ತವೆ. +ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಈ ಪ್ರತಿಭಟನೆಯನ್ನು ಆಯೋಜಿಸುತ್ತಿದ್ದು, ಹಲವಾರು ರೈತ ಸಂಘಟನೆಗಳು ಅದರಿಂದ ದೂರ ಸರಿದಿವೆ. 2020-21ರಲ್ಲಿ ರೈತರ ಪ್ರತಿಭಟನೆಯ ಭಾಗವಾಗಿದ್ದ ಭಾರತೀಯ ಕಿಸಾನ್ ಯೂನಿಯನ್ (ಲಖೋವಲï), ಕೇಂದ್ರವು ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಕಾರಣವಾಯಿತು, ಅವರು ಮಂಗಳವಾರದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_164_12.txt b/eesanje/url_47_164_12.txt new file mode 100644 index 0000000000000000000000000000000000000000..2bf0f5f8ff1f05b737bc858a76c4320955538b10 --- /dev/null +++ b/eesanje/url_47_164_12.txt @@ -0,0 +1,8 @@ +ಚರಣ್‍ಸಿಂಗ್ ಭಾರತರತ್ನ ಲಭಿಸಿರುವುದು ದೇಶದ 90 ಕೋಟಿ ರೈತರಿಗೆ ಸಂದ ಗೌರವ : ಚೌಧರಿ +ಲಕ್ನೋ, ಫೆ 11 (ಪಿಟಿಐ) ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡಿರುವುದು ಭಾರತದ 90 ಕೋಟಿ ರೈತರಿಗೆ ಸಂದ ಗೌರವ ಎಂದು ಉತ್ತರ ಪ್ರದೇಶದ ಸಚಿವ ಲಕ್ಷ್ಮೀ ನಾರಾಯಣ ಚೌಧರಿ ಹೇಳಿದ್ದಾರೆ. ಫೆಬ್ರವರಿ 9 ರಂದು ಮರಣೋತ್ತರವಾಗಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪಡೆದ ಸಿಂಗ್ ಅವರು ರೈತರ ಸಮಸ್ಯೆಗಳಿಗೆ ಹೋರಾಡಿದ ಮಹಾತ್ಮ ಎಂದು ಅವರು ಬಣ್ಣಿಸಿದ್ದಾರೆ. +ಪಿಟಿಐ ಜೊತೆ ಮಾತನಾಡಿದ ಚೌಧರಿ, ಸ್ವಾತಂತ್ರ್ಯದ ನಂತರ, ಚೌಧರಿ ಚರಣ್ ಸಿಂಗ್ ಅವರು ರೈತರ ಮೆಸ್ಸಿಹ್ ಎಂದು ಪರಿಗಣಿಸಲ್ಪಟ್ಟ ಏಕೈಕ ರಾಜ್ಯವಾಗಿದೆ, ಅವರು ದೇಶದ ಅಭಿವೃದ್ಧಿಗೆ ಕಾರಣವಾಗುವ ಮಾರ್ಗವು ಅದರ ಮೂಲಕ ಹಾದುಹೋಗುತ್ತದೆ ಎಂದು ಹೇಳಿದರು. +ರೈತರ ಹಿತಾಸಕ್ತಿ ಮತ್ತು ಕಲ್ಯಾಣಕ್ಕಾಗಿ ಅವರು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಅವರ ಹೆಸರು ಯಾವಾಗಲೂ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಉಳಿಯುತ್ತದೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಉದ್ಯಮದ ಸಚಿವರು ಹೇಳಿದರು. ಚೌಧರಿ ಚರಣ್ ಅವರಿಗೆ ಭಾರತ ರತ್ನ ನೀಡಿರುವುದು ಭಾರತದ 90 ಕೋಟಿ ರೈತರಿಗೆ ಗೌರವವಾಗಿದೆ ಎಂದು ಅವರು ಹೇಳಿದರು. +ದೇಶದ ರೈತರ ಕಲ್ಯಾಣಕ್ಕಾಗಿ ಭಾರತ ರತ್ನ ಪುರಸ್ಕøತರು ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದ ಯುಪಿ ಕ್ಯಾಬಿನೆಟ್ ಸಚಿವರು, ಸಿಂಗ್ ಅವರು 1953 ರ ಹಿಡುವಳಿಗಳ ಬಲವರ್ಧನೆ ಕಾಯಿದೆ ಮತ್ತು ಉತ್ತರ ಪ್ರದೇಶ ಜಮೀನ್ದಾರಿ ಮತ್ತು ಭೂಸುಧಾರಣಾ ಕಾಯ್ದೆಯಂತಹ ಹಲವಾರು ರೈತ ಪರ ಕಾನೂನುಗಳನ್ನು ತಂದರು ಎಂದು ಹೇಳಿದರು. ಮಾಜಿ ಪ್ರಧಾನಿಯೊಂದಿಗಿನ ಅವರ ಸಂಬಂಧವನ್ನು ನೆನಪಿಸಿಕೊಂಡ ಚೌಧರಿ, ಅವರೊಂದಿಗಿನ ನನ್ನ ಒಡನಾಟವು ನನ್ನ ಬಾಲ್ಯದ ದಿನಗಳಿಂದಲೂ ಇತ್ತು. ನಾನು ಅವರನ್ನು ಮೊದಲು ಭೇಟಿಯಾದದ್ದು 1967 ರಲ್ಲಿ. ಆ ಸಮಯದಲ್ಲಿ ನಾನು ಹೈಸ್ಕೂಲ್ (10 ನೇ ತರಗತಿ) ನಲ್ಲಿದ್ದೆ. +ಅವರ (ಚರಣ್ ಸಿಂಗ್) ಆಶೀರ್ವಾದದಿಂದ, ನಾನು ಶಾಸಕನಾಗಿದ್ದೇನೆ (ಫೋಮ್ ಛಾಟಾ). ನಾನು ವಿದ್ಯಾರ್ಥಿಯಾಗಿದ್ದಾಗ ಕೋಸಿ ಕಾಲನ್ (ಮಥುರಾದಲ್ಲಿ) ಮಂಡಿ ಸಮಿತಿಯ ಅಧ್ಯಕ್ಷನಾಗುವ ಗೌರವವನ್ನು ಹೊಂದಿದ್ದೇನೆ. ಇದು 1977 ರಲ್ಲಿ, ನಾನು ಎಂಎ ಮುಗಿಸಿ ಎಲ್‍ಎಲ್‍ಬಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದೆ. ನಂತರ 1985ರಲ್ಲಿ ನನಗೆ ಪಕ್ಷ (ಲೋಕದಳ) ಟಿಕೆಟ್ ನೀಡಿತ್ತು. +“ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಮಕ್ಕಳೇ 2 ದಿನ ಊಟ ಬಿಡಿ” ಎಂದ ಶಾಸಕ +ಚೌಧರಿ ಅವರು ಯುಪಿ ವಿಧಾನಸಭೆಯಲ್ಲಿ ಐದು ಬಾರಿ ಮಥುರಾ ಜಿಲ್ಲೆಯ ಛಾಟಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಅವರು 1985 ರಿಂದ 1989 ರವರೆಗೆ ಲೋಕದಳದ ಶಾಸಕರಾಗಿದ್ದರು ಮತ್ತು 1996 ರಿಂದ 2002 ರವರೆಗೆ ಕಾಂಗ್ರೆಸ್ ಶಾಸಕರಾಗಿದ್ದರು. 2007 ರಿಂದ 2012 ರವರೆಗೆ ಅವರು ಅದೇ ಸ್ಥಾನದಿಂದ ಬಿಎಸ್ಪಿ ಶಾಸಕರಾಗಿದ್ದರು. 2017 ರಿಂದ, ಚೌಧರಿ ಬಿಜೆಪಿ ಟಿಕೆಟ್‍ನಲ್ಲಿ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಛಾಟಾವನ್ನು ಪ್ರತಿನಿಧಿಸುತ್ತಿದ್ದಾರೆ. \ No newline at end of file diff --git a/eesanje/url_47_164_2.txt b/eesanje/url_47_164_2.txt new file mode 100644 index 0000000000000000000000000000000000000000..cedf89928709684478cac4a139cf57862c9b0fd1 --- /dev/null +++ b/eesanje/url_47_164_2.txt @@ -0,0 +1,5 @@ +ಕತಾರ್ ಜೈಲಿನಲ್ಲಿದ್ದ 8 ಮಾಜಿ ಭಾರತೀಯ ನೌಕಾ ಸಿಬ್ಬಂದಿ ಬಿಡುಗಡೆ : ಭಾರತಕ್ಕೆ ರಾಜತಾಂತ್ರಿಕ ಗೆಲುವು +ನವದೆಹಲಿ, ಫೆ12 (ಪಿಟಿಐ) ಕತಾರ್‍ನ ಜೈಲಿನಲ್ಲಿ ಸಂಕಷ್ಟದಲ್ಲಿದ್ದ 8 ಮಾಜಿ ಭಾರತೀಯ ನೌಕಾ ಸಿಬ್ಬಂದಿಯನ್ನು ಕತಾರ್ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಈ ನಿರ್ಧಾರವನ್ನು ಭಾರತ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಹೇಳಿದೆ. +ಕತಾರ್‍ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. +33 ಲಕ್ಷ ರೈತರಿಗೆ 628 ಕೋಟಿ ಹಣ : ಸಚಿವ ಕೃಷ್ಣ ಭೈರೆಗೌಡ +ಅವರ ಪೈಕಿ ಎಂಟು ಮಂದಿಯಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ. ಮರಣದಂಡನೆ ಶಿಕ್ಷೆಯಿಂದ ಪಾರಾದ ಇವರು ಮರು ಜೀವ ಪಡೆದಿದ್ದಾರೆ.ಬೇಹುಗಾರಿಕೆ ಆರೋಪದ ಮೇಲೆ ಇವರನ್ನು ಕತಾರ್‍ನಲ್ಲಿ ಬಂದಿಸಲಾಗಿತ್ತು. ಭಾರತ ಸರ್ಕಾರ ನಿರಂತರವಾಗಿ ಇವರ ಪರ ನಿಂತು ಬಿಡುಗಡೆವರೆಗೂ ಶ್ರಮಿಸಿದೆ ಇದೊಂದು ರಾಜತಾಂತ್ರಿಕ ಗೆಲವು ಎಂದೇ ಬಣ್ಣಿಸಲಾಗಿದೆ. \ No newline at end of file diff --git a/eesanje/url_47_164_3.txt b/eesanje/url_47_164_3.txt new file mode 100644 index 0000000000000000000000000000000000000000..aeef8f8432e9adf206b27fb2f58cace5de08dc44 --- /dev/null +++ b/eesanje/url_47_164_3.txt @@ -0,0 +1,6 @@ +ಯುಎಇಯಲ್ಲಿ 33 ಕೋಟಿ ಲಾಟರಿ ಹಣ ಗೆದ್ದ ಭಾರತೀಯ +ದುಬೈ,ಫೆ.11- ಭಾರತೀಯ ವಲಸಿಗ ರಾಜೀವ್ ಅರಿಕ್ಕಾಟ್ ಎಂಬುವರಿಗೆ ಅಬುಧಾಬಿಯ ಬಿಗ್-ಟಿಕೆಟ್ ಸಾಪ್ತಾಹಿಕ ಲಾಟರಿ ಡ್ರಾದಲ್ಲಿ 15 ಮಿಲಿಯನ್ ಧೀರಮ್ ಅಂದರೆ ಸುಮಾರು 33 ಕೋಟಿ ರೂ.ಗಳ ಬಹುಮಾನ ಗೆದ್ದಿದ್ದಾರೆ. ಅರಿಕ್ಕಟ್ ಅವರು ಡ್ರಾಗಾಗಿ ಒಟ್ಟು ಆರು ಟಿಕೆಟ್‍ಗಳನ್ನು ಖರೀದಿಸಿದ್ದರು ಅವರು ಖರೀದಿಸಿದ್ದ 037130 ಟಿಕೆಟ್ ಸಂಖ್ಯೆಗೆ ಬಹುಮಾನ ಒಲಿದುಬಂದಿದೆ. +ಭಾರತದಲ್ಲಿ ಕೇರಳದಿಂದ ಬಂದಿರುವ ರಾಜೀವ್ ಅರಿಕ್ಕಾಟ್ ಅವರು ಯುಎಇಯಲ್ಲಿನ ಅಲ್ ಐನ್‍ನಲ್ಲಿರುವ ವಾಸ್ತುಶಿಲ್ಪ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಜನವರಿ 10 ರಂದು ಲಾಟರಿ ಟಿಕೆಟ್ ಖರೀದಿಸಿದ 40 ವರ್ಷ ವಯಸ್ಸಿನ ಅರಿಕ್ಕಾಟ್ ಅವರು ಪತ್ನಿ ಮತ್ತು ಇಬ್ಬರ ಮಕ್ಕಳೊಂದಿಗೆ ಕಳೆದ 10 ವರ್ಷಗಳಿಂದ ಯುಎಇಯಲ್ಲಿ ವಾಸಿಸುತ್ತಿದ್ದಾರೆ. +ಬೂದಿ ಮುಚ್ಚಿದ ಕೆಂಡದಂತಿರುವ ಉತ್ತರಾಖಂಡದ ಬಂಭುಲ್‍ಪುರದಲ್ಲಿ ಬಿಗಿ ಬಂದೋಬಸ್ತ್ +ಮೊದಲ ಬಾರಿಗೆ ಲಾಟರಿ ವಿಜೇತರು ತಮ್ಮ ಹೆಂಡತಿಯೊಂದಿಗೆ ತಮ್ಮ ಮಕ್ಕಳ ಜನ್ಮ ದಿನಾಂಕವಾದ 7 ಮತ್ತು 13 ಸಂಖ್ಯೆಗಳೊಂದಿಗೆ ಟಿಕೆಟ್‍ಗಳನ್ನು ಆಯ್ಕೆ ಮಾಡಲು ನಿರ್ಧರಿಸಿದ್ದ ಅವರ ನಿರ್ಧಾರಕ್ಕೆ ಕೋಟಿ ಕೋಟಿ ಹಣ ಬಂದಂತಾಗಿದೆ. +ನಾನು ಅಲ್ ಐನ್‍ನಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ವಾಸಿಸುತ್ತಿದ್ದೇನೆ. ನಾನು ಕಳೆದ 3 ವರ್ಷಗಳಿಂದ ಟಿಕೆಟ್‍ಗಳನ್ನು ಖರೀದಿಸುತ್ತಿದ್ದೇನೆ. ನಾನು ಲಾಟರಿ ಗೆದ್ದಿರುವುದು ಇದೇ ಮೊದಲು. ಈ ಬಾರಿ, ನಾನು 7 ಮತ್ತು 13 ಸಂಖ್ಯೆಗಳ ಟಿಕೆಟ್‍ಗಳನ್ನು ಆಯ್ಕೆ ಮಾಡಿದ್ದೇವೆ, ಅದು ನಮ್ಮ ಮಕ್ಕಳ ಜನ್ಮ ದಿನಾಂಕವಾಗಿದೆ. ಎರಡು ತಿಂಗಳ ಹಿಂದೆ, ನಾನು ಅದೇ ಸಂಯೋಜನೆಯೊಂದಿಗೆ ವಿಸ್ಕರ್‍ನಿಂದ 1 ಮಿಲಿಯನ್ ದಿರ್ಹಂ ಅನ್ನು ಕಳೆದುಕೊಂಡೆ, ಆದರೆ ಈ ಬಾರಿ ನಾನು ಅದೃಷ್ಟಶಾಲಿಯಾಗಿದ್ದಾನೆ ಎಂದು ಅರಿಕ್ಕಾಟ್ ತಿಳಿಸಿದ್ದಾರೆ. \ No newline at end of file diff --git a/eesanje/url_47_164_4.txt b/eesanje/url_47_164_4.txt new file mode 100644 index 0000000000000000000000000000000000000000..b13776e936fea45d2485cc3f1e82874ee880c122 --- /dev/null +++ b/eesanje/url_47_164_4.txt @@ -0,0 +1,7 @@ +ಐದನೂರು ವರ್ಷಗಳ ಗುಲಾಮಗಿರಿ ಮುರಿದ ರಾಮ ಮಂದಿರ : ಆದಿತ್ಯನಾಥ್ +ಪುಣೆ, ಫೆ 11 (ಪಿಟಿಐ) – ಐನೂರು ವರ್ಷಗಳ ಗುಲಾಮಗಿರಿಯನ್ನು ಮುರಿಯುವ ಮೂಲಕ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಭಕ್ತಿ ಮತ್ತು ಶಕ್ತಿ ಸಂಗಮ ಕಾರಣವಾಯಿತು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಭಿಪ್ರಾಯಪಟ್ಟಿದ್ದಾರೆ. +ಮಹಾರಾಷ್ಟ್ರದ ಪುಣೆ ಜಿಲ್ಲೆಯ ಅಳಂಡಿಯಲ್ಲಿ ನಡೆದ ಗೀತಾ ಭಕ್ತಿ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಆದಿತ್ಯನಾಥ್, ಮೊಘಲ್ ಚಕ್ರವರ್ತಿ ಔರಂಗಜೇಬನ ಅಧಿಕಾರಕ್ಕೆ ಸವಾಲು ಹಾಕಿದ್ದ ಮರಾಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜ್ ಅವರನ್ನು ಶ್ಲಾಘಿಸಿದರು. ಈ ವರ್ಷ ಜನವರಿ 22 ರಂದು ಅಯೋಧ್ಯೆ ದೇವಸ್ಥಾನದಲ್ಲಿ ರಾಮ್ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯನ್ನು ಅದ್ಧೂರಿಯಾಗಿ ನಡೆಸಲಾಯಿತು ಇಂದು ಶಕ್ತಿ ಮತ್ತು ಭಕ್ತಿ ಪರಸ್ಪರ ಭೇಟಿಯಾಗುತ್ತಿವೆ ಎಂದು ಆದಿತ್ಯನಾಥ್ ಹೇಳಿದರು. +ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು +ಭಕ್ತಿ ಮತ್ತು ಶಕ್ತಿಯ ಸಂಗಮವು 500 ವರ್ಷಗಳ ಗುಲಾಮಗಿರಿಯನ್ನು ಮುರಿದು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಕಾರಣವಾಯಿತು. ಆ ಅಭೂತಪೂರ್ವ ಕ್ಷಣವನ್ನು ನೋಡುವ ಅವಕಾಶ ನಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕಳೆದ ನೂರಾರು ವರ್ಷಗಳಿಂದ ಸಂತರ ಆಶೀರ್ವಾದ ಪಡೆಯುತ್ತಿರುವ ಮಹಾರಾಷ್ಟ್ರದ ಜನರು ಅದೃಷ್ಟವಂತರು ಎಂದು ಯುಪಿ ಸಿಎಂ ಹೇಳಿದ್ದಾರೆ. +ಭಕ್ತಿಯಿಂದ ಹೊರಹೊಮ್ಮಿದ ಈ ಶಕ್ತಿಯು ಶತ್ರುಗಳನ್ನು ಸೋಲಿಸುತ್ತಿದೆ. ಸಮರ್ಥ ರಾಮದಾಸ್ ಈ ನೆಲದಿಂದ ಛತ್ರಪತಿ ಶಿವಾಜಿ ಮಹಾರಾಜರನ್ನು ರಚಿಸಿದ್ದಾರೆ, ಅವರು ಮೊಘಲ್ ಚಕ್ರವರ್ತಿ ಔರಂಗಜೇಬ್‍ನ ಅಧಿಕಾರಕ್ಕೆ ಸವಾಲು ಹಾಕಿದರು ಮತ್ತು ಅವರನ್ನು ನರಳಲು ಮತ್ತು ಸಾಯಲು ಬಿಟ್ಟರು ಮತ್ತು ಅವರ ಬಗ್ಗೆ ಯಾರೂ ಕಾಳಜಿ ವಹಿಸಲಿಲ್ಲ ಎಂದು ಅವರು ಹೇಳಿದರು. ಪೂಜ್ಯ ಸಂತರ ಸಾಮೀಪ್ಯದಿಂದಾಗಿ ಮಹಾರಾಷ್ಟ್ರ ಶೌರ್ಯದ ನಾಡಾಗಿದೆ ಎಂದು ಯುಪಿ ಮುಖ್ಯಮಂತ್ರಿ ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರ ರೂಪದಲ್ಲಿ ಭಕ್ತಿ ಮತ್ತು ಶಕ್ತಿಯ ಮಿಶ್ರಣವನ್ನು ಕಾಣಬಹುದು ಎಂದರು. ಮೊಘಲ್ ಮ್ಯೂಸಿಯಂ ನಿರ್ಮಾಣವಾಗುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜರೊಂದಿಗೆ ನಾವು ನಂಟು ಹೊಂದಿದ್ದೇವೆಯೇ ಹೊರತು ಮೊಘಲರಲ್ಲ ಎಂಬ ಕಾರಣಕ್ಕೆ ಮ್ಯೂಸಿಯಂಗೆ ಅವರ ಹೆಸರಿಡಬೇಕು ಎಂದು ಹೇಳಿದ್ದೆ ಎಂದು ಹೇಳಿದರು. +ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಯಲ್ಲಿ ರಕ್ಷಣಾ ಕಾರಿಡಾರ್ ಅನ್ನು ಘೋಷಿಸಿದ್ದಾರೆ ಮತ್ತು ಅದನ್ನು ಛತ್ರಪತಿ ಶಿವಾಜಿ ಮಹಾರಾಜರಿಗೆ ಸಮರ್ಪಿಸಲಾಗಿದೆ ಎಂದು ಆದಿತ್ಯನಾಥ್ ಹೇಳಿದರು. ದೇಶದ ಸಶಸ್ತ್ರ ಪಡೆಗಳು ಆತ್ಮನಿರ್ಭರ್ (ಸ್ವಾವಲಂಬಿ) ಪಡೆಯುವ ಗುರಿಯನ್ನು ಸಾಸುತ್ತಿವೆ ಎಂದು ನನಗೆ ಖಾತ್ರಿಯಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_164_5.txt b/eesanje/url_47_164_5.txt new file mode 100644 index 0000000000000000000000000000000000000000..3d496647d180e4aea4820b03d692064008b8152b --- /dev/null +++ b/eesanje/url_47_164_5.txt @@ -0,0 +1,10 @@ +ಬದ್ದವೈರಿಗಳಾಗಿ ಬದಲಾದ ಬಿಜೆಪಿ-ಎಐಡಿಎಂಕೆ ಸ್ನೇಹಿತರು +ಚೆನ್ನೈ, ಫೆ 11 (ಪಿಟಿಐ) ಲೋಕಸಭೆ ಚುನಾವಣೆಗೆ ಮುನ್ನ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಸ್ನೇಹಿತರು ವೈರಿಗಳಾಗಿ ಮಾರ್ಪಟ್ಟಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಿಕೊಂಡು ಎಐಡಿಎಂಕೆ ಮುಖಂಡರು ವಾಗ್ದಾಳಿ ನಡೆಸುತ್ತಿದ್ದಾರೆ. +ಲೋಕಸಭಾ ಚುನಾವಣೆಯ ಆರಂಭಿಕ ಘೋಷಣೆಯನ್ನು ನಿರೀಕ್ಷಿಸುತ್ತಿರುವ ಆಡಳಿತಾರೂಢ ಡಿಎಂಕೆ ತನ್ನ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ಆರಂಭಿಸಿದೆ ಮತ್ತು ಚುನಾವಣಾ ಪ್ರಣಾಳಿಕೆಯನ್ನು ಹೊರತರಲು ಸಜ್ಜಾಗಿದೆ. ಬಹುಕೋನದ ಸ್ಪರ್ಧೆಯು ಸನ್ನಿಹಿತವಾಗಿದ್ದರೂ, ಡಿಎಂಕೆ ಮತ್ತು ಮಿತ್ರಪಕ್ಷಗಳನ್ನು ಹೊರತುಪಡಿಸಿ ರಾಜಕೀಯ ಪಕ್ಷಗಳು ಇನ್ನೂ ಮೈತ್ರಿಯಲ್ಲಿ ಮಸುಕಾಗಿವೆ. +ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಅಣ್ಣಾಮಲೈ ಅವರನ್ನು ವೈಯಕ್ತಿಕವಾಗಿ ಗುರಿಯಾಗಿಸಲು ಹೆಚ್ಚು ಸಮಯವನ್ನು ಮೀಸಲಿಡುತ್ತಿದಾರೆ ಮತ್ತು ಅದೇ ವಿಚಾರವನ್ನು ತಮ್ಮ ಪ್ರಚಾರದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರಿಗಿಂತ ಮಾಜಿ ಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಅವರನ್ನು ವಿಶ್ವಾಸಾರ್ಹ ಮಿತ್ರರನ್ನಾಗಿ ಮಾಡಲು ಬಿಜೆಪಿ ಆದ್ಯತೆ ನೀಡಿರುವುದು ಅವರ ಕೋಪಕ್ಕೆ ಕಾರಣವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. +ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ಉದ್ದೇಶದಿಂದ ಏಕರೂಪ ನಾಗರಿಕ ಸಂಹಿತೆಗೆ ವಿರೋಧ ವ್ಯಕ್ತಪಡಿಸಿರುವ ಮಹತ್ವಾಕಾಂಕ್ಷೆಯ ಪಳನಿಸ್ವಾಮಿ ಅವರ ಒಡನಾಟದಲ್ಲಿ ಬಿಜೆಪಿ ಎಂದಿಗೂ ಆರಾಮದಾಯಕವಾಗಿಲ್ಲ. ಅಣ್ಣಾಮಲೈ ಅವರ ಆಕ್ರಮಣಕಾರಿ ರಾಜಕೀಯದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ಬಿಜೆಪಿಯೊಂದಿಗಿನ ಚುನಾವಣಾ ಸಂಬಂಧವನ್ನು ಕಡಿದುಕೊಂಡಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಮೈತ್ರಿ ಮಾಡಿಕೊಳ್ಳುವಲ್ಲಿ ನಿರತರಾಗಿದ್ದಾರೆ. +ಎಐಎಡಿಎಂಕೆಯ ಎದೆಯುರಿ ಮತ್ತೊಂದು ಕಾರಣವೆಂದರೆ ಆ ಪಕ್ಷದ 12 ಮಾಜಿ ಶಾಸಕರು ಮತ್ತು ಸಂಸದರು ಇತ್ತೀಚೆಗೆ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ್ದಾರೆ. ಡಿಎಂಕೆ, ಕಾಂಗ್ರೆಸ್ ಮತ್ತು ಡಿಎಂಡಿಕೆಯಿಂದ ತಲಾ ಒಬ್ಬ ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. +ಇದನ್ನು ವ್ಯಂಗ್ಯವಾಡಿದ ಎಐಎಡಿಎಂಕೆ ಮಾಜಿ ಸಚಿವ ಡಿ ಜಯಕುಮಾರ್ ಅವರು, ತಮಿಳುನಾಡು ರಾಜ್ಯಪಾಲರು ಅಣ್ಣಾಮಲೈ ಅವರನ್ನು ಆ ಮಾಜಿ ಶಾಸಕರೊಂದಿಗೆ ಸರ್ಕಾರ ರಚಿಸಲು ಆಹ್ವಾನಿಸುತ್ತಾರೆ ಎಂದು ಟೀಕಿಸಿದರು. ಇದಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷರನ್ನು ಮಣ್ಣಿನ ಕುದುರೆಗೆ ಹೋಲಿಸಿದ ಅವರು, ಅಣ್ಣಾಮಲೈ ಜನರು ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ಭ್ರಮೆಯನ್ನು ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದರು. ಮಣ್ಣಿನ ಕುದುರೆ ನೀರಿನಲ್ಲಿ ಶಿಥಿಲವಾದಾಗ ಅವರನ್ನು ಅನುಸರಿಸುವವರು ಕಣ್ಮರೆಯಾಗುವ ಸಾಧ್ಯತೆಯಿದೆ ಎಂದು ಜಯಕುಮಾರ್ ಪ್ರತಿಪಾದಿಸಿದರು. +ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು +ಕಾಂಗ್ರೆಸ್, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎಡಪಕ್ಷಗಳು ಕೂಡ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಸ್ತಿತ್ವವನ್ನು ಹೊಂದಿದ್ದರೂ, ಅವರು ಡಿಎಂಕೆ ರೇಖೆಯನ್ನು ಅನುಸರಿಸುತ್ತಾರೆ. ಆಡಳಿತಾರೂಢ ಡಿಎಂಕೆ ತನ್ನ ಮೈತ್ರಿ ಅಖಂಡವಾಗಿರುವುದರಿಂದ ಆರಾಮವಾಗಿ ಇರಿಸಲ್ಪಟ್ಟಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸ್ರ್ಪಧಿಸುತ್ತಿವೆ. ಇತರ ರಾಜಕೀಯ ಪಕ್ಷಗಳಾದ ದೇಸಿಯ ಮುಪೆರ್ಕ್ಕು ದ್ರಾವಿಡ ಕಳಗಂ (ಡಿಎಮ್‍ಡಿಕೆ) ಮತ್ತು ಪಟ್ಟಾಲಿ ಮಕ್ಕಳ್ ಕಚ್ಚಿ ಇನ್ನೂ ಮೈತ್ರಿಯನ್ನು ನಿರ್ಧರಿಸಿಲ್ಲ. +ನಟ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಮತ್ತು ನಟ ಸೀಮಾನ್ ನೇತೃತ್ವದ ನಾಮ್ ತಮಿಳರ್ ಕಚ್ಚಿಯಂತಹ ಪಕ್ಷಗಳು ಕೂಡ ಕಣದಲ್ಲಿವೆ. \ No newline at end of file diff --git a/eesanje/url_47_164_6.txt b/eesanje/url_47_164_6.txt new file mode 100644 index 0000000000000000000000000000000000000000..b478e9b71ea9474a786f502f37ef74e5b3a17e72 --- /dev/null +++ b/eesanje/url_47_164_6.txt @@ -0,0 +1,6 @@ +ಪತ್ನಿ ವಿರುದ್ಧ ದೂರು ದಾಖಲಿಸಿಕೊಳ್ಳಲು ನಿರಾಕರಣೆ : ಎಸ್‍ಪಿ ಮನೆ ಮುಂದೆ ವಿಷ ಸೇವಿಸಿದ ಪತಿ +ಪಿಲಿಭಿತ್,ಫೆ.11- ತನಗೆ ಕಿರುಕುಳ ನೀಡುತ್ತಿದ್ದ ಪತ್ನಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿವಾಸದ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಿಲಿಭಿತ್‍ನಲ್ಲಿ ನಡೆದಿದೆ. ಎಸ್‍ಪಿ ನಿವಾಸದ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪ್ರದೀಪ್ ಎಂದು ಗುರುತಿಸಲಾಗಿದೆ. +ಕೆಲವು ದಿನಗಳ ಹಿಂದೆ ಪ್ರದೀಪ್ ಮೇಲೆ ಕೌಟುಂಬಿಕ ದೌರ್ಜನ್ಯದ ಬಗ್ಗೆ ಪತ್ನಿ ದೂರು ನೀಡಿದ್ದಾಳೆ ಎಂದು ವ್ಯಕ್ತಿಯ ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆದರೆ, ಪತ್ನಿಯ ಕಿರುಕುಳದ ಬಗ್ಗೆ ಪೊಲೀಸರು ದೂರು ಸ್ವೀಕರಿಸಿಲ್ಲ ಎಂದು ತಿಳಿದುಬಂದಿದೆ. ಎರಡು ತಿಂಗಳ ಹಿಂದೆ ಪ್ರದೀಪ್ ಮತ್ತು ಇಶಾ ವಿವಾಹವಾಗಿದ್ದು, ಪ್ರದೀಪ್ ಅವರಿಂದ 5 ಲಕ್ಷಕ್ಕೆ ಬೇಡಿಕೆಯಿಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಚರಣ್‍ಸಿಂಗ್ ಭಾರತರತ್ನ ಲಭಿಸಿರುವುದು ದೇಶದ 90 ಕೋಟಿ ರೈತರಿಗೆ ಸಂದ ಗೌರವ : ಚೌಧರಿ +ನಿನ್ನೆ ದೀಪ್ ಪತ್ನಿ ವಿರುದ್ಧ ದೂರು ನೀಡಲು ಎಸ್‍ಪಿ ಕಚೇರಿಗೆ ಹೋದರೂ ಅಧಿಕಾರಿ ಹಾಜರಿರಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹೀಗಾಗಿ ಪ್ರದೀಪ್ ಎಸ್ಪಿ ನಿವಾಸಕ್ಕೆ ತೆರಳಿ ವಿಷ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಅತುಲ್ ಶರ್ಮಾ ಅವರು, ಸುಂಗಹಿರ್‍ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರದೀಪ್ ವಿಷ ಸೇವಿಸಿದ್ದಾರೆ. ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವಿಷಯವನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_164_7.txt b/eesanje/url_47_164_7.txt new file mode 100644 index 0000000000000000000000000000000000000000..41d51a87527f7f6aa231b3f0818a48e54f179337 --- /dev/null +++ b/eesanje/url_47_164_7.txt @@ -0,0 +1,5 @@ +ಮುಂಬೈ ಅಮೆರಿಕ ಕಾನ್ಸುಲೇಟ್ ಕಚೇರಿ ಸ್ಫೋಟದ ಬೆದರಿಕೆ +ಮುಂಬೈ,ಫೆ.11- ಮುಂಬೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಜನರಲ್ ಕಚೇರಿಯನ್ನು ಸ್ಪೋಟಿಸುವ ಬೆದರಿಕೆ ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಕಚೇರಿ ಸ್ಪೋಟಿಸುವ ಬೆದರಿಕೆ ಇಮೇಲ್ ಕಳುಹಿಸಿದ್ದು ಬಾಂದ್ರಾ ಕುರ್ಲಾ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರ್‍ಕೆಜಿಟ್ರೆಡಿಂಗ್777ಆಟ್‍ಜಿಮೇಲ್ ಎಂಬ ವಿಳಾಸದಿಂದ ಇಮೇಲ್ ಸ್ವೀಕರಿಸಲಾಗಿದ್ದು ಆರೋಪಿ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ಕೈಗೊಂಡಿದ್ದಾರೆ. +ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 (1) (ಬಿ) ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಾಂದ್ರಾ-ಕುರ್ಲಾ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ. +ಚರಣ್‍ಸಿಂಗ್ ಭಾರತರತ್ನ ಲಭಿಸಿರುವುದು ದೇಶದ 90 ಕೋಟಿ ರೈತರಿಗೆ ಸಂದ ಗೌರವ : ಚೌಧರಿ +ಇಮೇಲ್‍ನಲ್ಲಿ, ಅಪರಿಚಿತ ವ್ಯಕ್ತಿ ತನ್ನನ್ನು ಯುಎಸ್ ಪ್ರಜೆ ಎಂದು ಹೇಳಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಆರೋಪಿ ಅಮೆರಿಕನ್ ದೂತಾವಾಸವನ್ನು ಸ್ಪೋಟಿಸುವುದಾಗಿ ಮತ್ತು ಅಲ್ಲಿ ಕೆಲಸ ಮಾಡುವ ಎಲ್ಲಾ ಅಮೆರಿಕನ್ ನಾಗರಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. \ No newline at end of file diff --git a/eesanje/url_47_164_8.txt b/eesanje/url_47_164_8.txt new file mode 100644 index 0000000000000000000000000000000000000000..b556cedf2bc6bc8b449d656f95236f88774e7fc9 --- /dev/null +++ b/eesanje/url_47_164_8.txt @@ -0,0 +1,10 @@ +ಏಪ್ರಿಲ್‍ನಿಂದ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ಆರಂಭ +ನವದೆಹಲಿ,ಫೆ.11- ದೇಶದಲ್ಲಿ ಅಸ್ತಿತ್ವದಲ್ಲಿರುವ ಟೋಲ್‍ಗಳಲ್ಲಿ ಅತಿ ಶೀಘ್ರದಲ್ಲೇ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ. ಮುಂದಿನ ಏಪ್ರಿಲ್‍ನಿಂದ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. +ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರವು ಸಲಹೆಗಾರರನ್ನು ನೇಮಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಫಾಸ್ಟ್‍ಟ್ಯಾಗ್‍ಗಳ ಜೊತೆಗೆ ಪ್ರಾಯೋಗಿಕ ಆಧಾರದ ಮೇಲೆ ವ್ಯವಸ್ಥೆಯನ್ನು ಪರಿಚಯಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಕ್ರಮವು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೆದ್ದಾರಿಗಳಲ್ಲಿ ಪ್ರಯಾಣಿಸುವ ನಿಖರವಾದ ದೂರಕ್ಕೆ ವಾಹನ ಚಾಲಕರಿಂದ ಶುಲ್ಕ ವಿಸುವ ಗುರಿಯನ್ನು ಹೊಂದಿದೆ. +ಸರ್ಕಾರಿ ಸ್ವಾಮ್ಯದ ಎನ್‍ಎಚ್‍ಎಐನ ಟೋಲ್ ಆದಾಯ ಪ್ರಸ್ತುತ 40,000 ಕೋಟಿಗಳಷ್ಟಿದ್ದು, 2-3 ವರ್ಷಗಳಲ್ಲಿ 1.40 ಲಕ್ಷ ಕೋಟಿಗೆ ಏರಲಿದೆ ಎಂದು ಗಡ್ಕರಿ ಈ ಹಿಂದೆ ಹೇಳಿದ್ದರು. ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಬದಲಿಸಲು ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಗಳು ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಸರ್ಕಾರ ನೋಡುತ್ತಿದೆ… ನಾವು ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನವನ್ನು ತರುತ್ತೇವೆ ಎಂದು ಅವರು ಹೇಳಿದರು. +2018-19ರಲ್ಲಿ ಟೋಲ್ ಪ್ಲಾಜಾದಲ್ಲಿ ವಾಹನಗಳಿಗೆ ಸರಾಸರಿ ಕಾಯುವ ಸಮಯ 8 ನಿಮಿಷಗಳು. 2020-21 ಮತ್ತು 2021-22ರ ಅವಯಲ್ಲಿ ಫಾಸ್ಟ್‍ಟ್ಯಾಗ್‍ಗಳ ಪರಿಚಯದೊಂದಿಗೆ, ವಾಹನಗಳ ಸರಾಸರಿ ಕಾಯುವ ಸಮಯವನ್ನು 47 ಸೆಕೆಂಡುಗಳಿಗೆ ಕಡಿಮೆ ಮಾಡಲಾಗಿದೆ. 2021 ರಿಂದ, ಹೆದ್ದಾರಿಗಳಲ್ಲಿ ಟೋಲ್ ಪಾವತಿಸಲು ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳು ಟೋಲ್ ಶುಲ್ಕದ ದುಪ್ಪಟ್ಟು ದಂಡವನ್ನು ಪಾವತಿಸಬೇಕಾಗುತ್ತದೆ. +ಕೆಲವು ಸ್ಥಳಗಳಲ್ಲಿ, ವಿಶೇಷವಾಗಿ ನಗರಗಳ ಸಮೀಪದಲ್ಲಿ, ಜನನಿಬಿಡ ಪಟ್ಟಣಗಳಲ್ಲಿ ಕಾಯುವ ಸಮಯದಲ್ಲಿ ಗಣನೀಯ ಸುಧಾರಣೆ ಕಂಡುಬಂದರೂ, ಪೀಕ್ ಅವರ್‍ಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಇನ್ನೂ ಕೆಲವು ವಿಳಂಬಗಳಿರುವುದರಿಂದ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. +ಹೇಗೆ ಕಾರ್ಯನಿರ್ವಹಿಸುತ್ತವೆ:ಜಿಪಿಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯು ಹೆದ್ದಾರಿಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳ ಮೂಲಕ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‍ಪಿಆರ್) ವ್ಯವಸ್ಥೆಯನ್ನು ಬಳಸುತ್ತದೆ ಮತ್ತು ವಾಹನವು ಪ್ರಯಾಣಿಸುವ ದೂರದ ಆಧಾರದ ಮೇಲೆ ಟೋಲ್‍ಗಳನ್ನು ಕಡಿತಗೊಳಿಸುತ್ತದೆ. ಪ್ರಸ್ತುತ, ಫಾಸ್ಟ್‍ಟ್ಯಾಗ್ ಪ್ಲಾಜಾಗಳಲ್ಲಿ ಆರ್‍ಎಫ್‍ಡಿ ಆಧಾರಿತ ಟೋಲ್ ಸಂಗ್ರಹ ಮಾಡಲಾಗುತ್ತಿದೆ. +ಜನಸಮೂಹದ ಮೇಲೆ ಹಾಲಿನ ಲಾರಿ ಹರಿದು ಮೂವರ ದುರ್ಮರಣ +ವಾಹನ ಚಾಲನೆ ಮಾಡುವಾಗ ಸಾಧನವು ನಿಮ್ಮ ಚಲನವಲನಗಳನ್ನು ಮೇಲ್ವಿಚಾರಣೆ ಮಾಡುತ್ತದೆ, ಟೋಲ್ ಮಾಡಿದ ವಿಭಾಗಗಳಲ್ಲಿ ನಿಮ್ಮ ಪ್ರವೇಶ ಮತ್ತು ನಿರ್ಗಮನ ಬಿಂದುಗಳನ್ನು ನಿಖರವಾಗಿ ಗುರುತಿಸುತ್ತದೆ. ನಿಮ್ಮ ಪ್ರಯಾಣದ ದೂರವನ್ನು ವಿಶ್ಲೇಷಿಸುವ ಮೂಲಕ, ನೀವು ಹಾದುಹೋಗಿರುವ ಟೋಲ್ ಪ್ಲಾಜಾಗಳನ್ನು ಇದು ಗುರುತಿಸುತ್ತದೆ ಮತ್ತು ಅದಕ್ಕೆ ಅನುಗುಣವಾಗಿ ಶುಲ್ಕಗಳನ್ನು ಲೆಕ್ಕಾಚಾರ ಮಾಡುತ್ತದೆ. ಇದು ಬೂತ್‍ಗಳಲ್ಲಿ ಸ್ಥಿರವಾದ ಟೋಲ್‍ಗಳ ಏಕರೂಪತೆಯನ್ನು ನಿವಾರಿಸುತ್ತದೆ, ಕಡಿಮೆ ದೂರವನ್ನು ಪ್ರಯಾಣಿಸುವ ಚಾಲಕರಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸುತ್ತದೆ. +ಇದಲ್ಲದೆ, ರಸ್ತೆಯ ಚಾಲಕರು ನಗದು ನಿರ್ವಹಣೆ, ಬದಲಾವಣೆಗಾಗಿ ಕಾಯುವುದು ಅಥವಾ ಅವರ ಫಾಸ್ಟ್‍ಟ್ಯಾಗ್ ಖಾತೆಯ ಬ್ಯಾಲೆನ್ಸ್ ಅನ್ನು ಪರಿಶೀಲಿಸುವ ಕಾಳಜಿಯಿಂದ ಮುಕ್ತರಾಗುತ್ತಾರೆ. ಸುರಕ್ಷಿತ ಎಲೆಕ್ಟ್ರಾನಿಕ್ ಪಾವತಿ ವ್ಯವಸ್ಥೆಯನ್ನು ಬಳಸಿಕೊಂಡು ನಿಮ್ಮ ಲಿಂಕ್ ಮಾಡಿದ ಖಾತೆಯಿಂದ ಟೋಲ್ ಶುಲ್ಕವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಗುತ್ತದೆ. ಈ ಪ್ರಕ್ರಿಯೆಯು ಮಾನವ ದೋಷಗಳನ್ನು ಮತ್ತು ಟೋಲ್ ತಪ್ಪಿಸುವ ಸಾಧ್ಯತೆಯನ್ನು ನಿರ್ಮೂಲನೆ ಮಾಡುತ್ತದೆ. \ No newline at end of file diff --git a/eesanje/url_47_164_9.txt b/eesanje/url_47_164_9.txt new file mode 100644 index 0000000000000000000000000000000000000000..b330b1cc1e33000e4367437fd695278674fe9f70 --- /dev/null +++ b/eesanje/url_47_164_9.txt @@ -0,0 +1,6 @@ +ದೇಶ ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ : ದೇವೇಗೌಡರು +ನವದೆಹಲಿ, ಫೆ.11- ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹರಾವ್ ಹಾಗೂ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಕೇಂದ್ರ ಸರ್ಕಾರವು ಭಾರತರತ್ನ ಪುರಸ್ಕಾರ ಘೋಷಣೆ ಮಾಡಿದ್ದರ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಸಂಸತ್ ಅಧಿವೇಶನದ ಬಜೆಟ್ ಕಲಾಪದ ಕೊನೆಯ ದಿನವಾದ ನಿನ್ನೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಇಂಥ ಅನನ್ಯ ಸಾಧಕರಿಗೆ ಭಾರತರತ್ನ ಘೋಷಣೆ ಮಾಡಿದ್ದನ್ನು ನಾನು ಸ್ವಾಗತಿಸುತ್ತೇನೆ. ಈ ಬಗ್ಗೆ ಭಿನ್ನಾಭಿಪ್ರಾಯಗಳು ಬರಬಾರದು. ಇಡೀ ದೇಶವೇ ಅತ್ಯುನ್ನತ ಪುರಸ್ಕಾರಕ್ಕೆ ಈ ಮೂವರು ಮಹನೀಯರನ್ನು ಆಯ್ಕೆ ಮಾಡಿದ್ದಕ್ಕೆ ಸ್ವಾಗತಿಸಿ ಸಂತೋಷ ವ್ಯಕ್ತಪಡಿಸಿದೆ ಎಂದಿದ್ದಾರೆ. +ಕೇಂದ್ರ ಸರ್ಕಾರವು ಈ ಗೌರವಕ್ಕೆ ಅರ್ಹರು, ಮಹಾನ್ ಸಾಧಕರನ್ನೇ ಆಯ್ಕೆ ಮಾಡಿದೆ. ಈ ಬಗ್ಗೆ ಅನಗತ್ಯವಾಗಿ ಚರ್ಚೆ ಮಾಡುವುದು ಅಥವಾ ಟೀಕಿಸುವುದು ಸರಿಯಲ್ಲ. ಚರಣ್ ಸಿಂಗ್, ನರಸಿಂಹರಾವ್ ಹಾಗೂ ಸ್ವಾಮಿನಾಥನ್ ಅವರ ಜತೆಗಿನ ತಮ್ಮ ಒಡನಾಟವನ್ನು ಅವರು ಸ್ಮರಿಸಿದ್ದಾರೆ. ಇದೇ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ನಡೆದ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತಾವು ತಮ್ಮ ಧರ್ಮಪತ್ನಿ ಅವರ ಸಮೇತ ಹಾಜರಾದ ಬಗ್ಗೆ ಮಾತನಾಡಿದ ಗೌಡರು, ಈ ದೈವಕಾರ್ಯದಲ್ಲಿ ನಾನು, ನನ್ನ ಪತ್ನಿ ಮತ್ತು ಕುಟುಂಬದೊಂದಿಗೆ ಭಾಗಿಯಾಗಿದ್ದೆ. ಈ ದೇಶವನ್ನು ಒಗ್ಗೂಡಿಸುವಿಕೆಯಲ್ಲಿ ಶ್ರೀರಾಮದೇವರ ದೈವಿಕ ಆಶೀರ್ವಾದವಿದೆ ಎಂದು ಹೇಳಿದ್ದಾರೆ. +ನಮ್ಮ ಸರ್ಕಾರಕ್ಕೆ225 ಶಾಸಕರ ಬಲವಿದೆ ; ಅಜಿತ್ ಪವಾರ್ +ರಾಮಮಂದಿರ ನಿರ್ಮಾಣದಿಂದ ಕೋಟ್ಯಂತರ ಭಾರತೀಯರ ಕನಸು ಸಾಕಾರವಾಗಿದೆ. ಅದು ನನ್ನ ಪಾಲಿಗೆ ಭಕ್ತಿ ಪರವಶತೆಯ ಕ್ಷಣವಾಗಿತ್ತು. ಶ್ರೀರಾಮದೇವರು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿ ಇರುವವನು ಎನ್ನುವುದಕ್ಕೆ ಅದುವೇ ಸಾಕ್ಷಿ. ಶ್ರೀರಾಮರು ಸದ್ವಿಚಾರಗಳು ಮತ್ತು ದಯೆ, ಪ್ರೀತಿಯ ಪ್ರತೀಕ. ಹೀಗಾಗಿ ಪ್ರತಿಯೊಬ್ಬರಿಗೂ ಆ ರಾಮನು ಆರಾಧ್ಯ ದೈವವಾಗಿದ್ದಾನೆ ಎಂದು ಅವರು ಬಣ್ಣಿಸಿದ್ದಾರೆ. +ಶ್ರೀರಾಮ ದೇವರ ತತ್ವಾದರ್ಶಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂೀಧಿಜಿ ಅವರು ಪ್ರಭಾವಿತರಾಗಿದ್ದರು. ಅಲ್ಲದೆ, ಶ್ರೀರಾಮರನ್ನು ಬಾಪೂ ಅವರು ನಮ್ಮ ದೇಶದ ಸದ್ಗುಣಗಳ ಪ್ರತೀಕವನ್ನಾಗಿಸಿದರು. ಆ ರಾಮರ ಆಶೀರ್ವಾದ, ಕರುಣೆಯಿಂದಲೇ ಅವರು ಭಾರತವನ್ನು ಒಗ್ಗೂಡಿಸಿದರು ಎಂದು ದೇವೇಗೌಡರು ಪ್ರತಿಪಾದಿಸಿದ್ದಾರೆ. ಶ್ರೀರಾಮಮಂದಿರವು ಜಗತ್ತಿಗೆ ಇಂಥ ಸದ್ಗುಣ, ಮೌಲ್ಯಾದರ್ಶಗಳನ್ನು ಪಸರಿಸುವ ಸಂಕೇತವಾಗಿ ಬೆಳಗಲಿ. ಪ್ರಾಣಪ್ರತಿಷ್ಠೆ ಕಾರ್ಯವನ್ನು ನೆರೆವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡ ವ್ರತ, ಉಪವಾಸ, ಮತ್ತಿತರ ಕಠಿಣ ನಿಯಮಗಳ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಪಡಿಸಿದ್ದಾರೆ. \ No newline at end of file diff --git a/eesanje/url_47_165_1.txt b/eesanje/url_47_165_1.txt new file mode 100644 index 0000000000000000000000000000000000000000..102fe6a1722de28f5849d9016d02e56146231cc2 --- /dev/null +++ b/eesanje/url_47_165_1.txt @@ -0,0 +1,5 @@ +ಪಂಡಿತ್ ದೀನ್‍ದಯಾಳ್‍ ಪುಣ್ಯತಿಥಿ : ಶ್ರದ್ದಾಂಜಲಿ ಸಲ್ಲಿಸಿದ ಬಿಜೆಪಿ ಮುಖಂಡರು +ನವದೆಹಲಿ, ಫೆ.11 (ಪಿಟಿಐ) ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು, ಭಾರತೀಯ ಸಂಸ್ಕøತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ದೇಶವನ್ನು ಮುನ್ನಡೆಸುವ ಹಾದಿಯನ್ನು ದೀನದಯಾಳ್ ನಮಗೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ದಯಾಳ್ ತೋರಿಸಿರುವ ಮಾರ್ಗ ನಮಗೆ ಸೂರ್ತಿಯಾಗಿವೆ ಎಂದು ಮೋದಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ದಯಾಳ್ ಅವರ ಅಂತ್ಯೋದಯ (ಅತ್ಯಂತ ಬಡವರ ಉನ್ನತಿ) ಮತ್ತು ಅವಿಭಾಜ್ಯ ಮಾನವತಾವಾದ ದ ವಿಚಾರಗಳನ್ನು ಮೋದಿಯವರು ತಮ್ಮ ಆಡಳಿತ ಮಾದರಿಗೆ ಸೂರ್ತಿ ಎಂದು ಹೆಚ್ಚಾಗಿ ಉಲ್ಲೇಖಿಸಿದ್ದಾರೆ. ಉಪಾಧ್ಯಾಯ 1968 ರಲ್ಲಿ ನಿಧನರಾದರು. +“ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಮಕ್ಕಳೇ 2 ದಿನ ಊಟ ಬಿಡಿ” ಎಂದ ಶಾಸಕ +ಇತರ ಬಿಜೆಪಿ ನಾಯಕರು ಕೂಡ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಅವರ ಮೌಲ್ಯಗಳು ಯಾವಾಗಲೂ ಪಕ್ಷಕ್ಕೆ ಮಾರ್ಗದರ್ಶಕ ಬೆಳಕು ಎಂದು ಪ್ರತಿಪಾದಿಸಿದರು. ಉಪಾಧ್ಯಾಯ ಅವರ ಜೀವನವು ರಾಷ್ಟ್ರದ ಸೇವೆ ಮತ್ತು ಅದರ ಮೇಲಿನ ಭಕ್ತಿಯ ದೈತ್ಯ ಸಂಕೇತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಯಾವುದೇ ದೇಶವು ತನ್ನ ಸಂಸ್ಕøತಿಯ ಮೂಲಭೂತ ಮೌಲ್ಯಗಳನ್ನು ನಿರ್ಲಕ್ಷಿಸುವ ಮೂಲಕ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಅವರು ನಂಬಿದ್ದರು ಎಂದು ಶಾ ಹೇಳಿದರು. \ No newline at end of file diff --git a/eesanje/url_47_165_10.txt b/eesanje/url_47_165_10.txt new file mode 100644 index 0000000000000000000000000000000000000000..57ee35ab9f025b34a9cc187e54a04eb4cb1ef65a --- /dev/null +++ b/eesanje/url_47_165_10.txt @@ -0,0 +1,6 @@ +ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ +ಹಲ್ದ್ವಾನಿ, ಫೆ 10 (ಪಿಟಿಐ) ಹಿಂಸಾಚಾರ ಪೀಡಿತ ಉತ್ತರಾಖಂಡ ಪಟ್ಟಣದ ಹೊರ ಪ್ರದೇಶಗಳಿಂದ ಕಫ್ರ್ಯೂ ಹಿಂತೆಗೆದುಕೊಳ್ಳಲಾಗಿದೆ, ಆದರೆ ಅಕ್ರಮ ಮಸೀದಿ ಕೆಡವಿದ್ದಕ್ಕಾಗಿ ಜನಸಮೂಹದಿಂದ ಬೆಂಕಿ ಮತ್ತು ವಿಧ್ವಂಸಕ ಕೃತ್ಯಗಳಿಗೆ ಸಾಕ್ಷಿಯಾದ ಬಂಭೂಲ್‍ಪುರ ಪ್ರದೇಶದಲ್ಲಿ ಕಪ್ರ್ಯೂ ಜಾರಿಯಲ್ಲಿರುತ್ತದೆ. ಪಟ್ಟಣದ ಹೊರವಲಯದಲ್ಲಿರುವ ಅಂಗಡಿಗಳು ಇಂದು ತೆರೆದಿದ್ದರೂ ಶಾಲೆಗಳು ಮುಚ್ಚಿದ್ದವು. ಬಾತ ಪ್ರದೇಶದಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ ಮತ್ತು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಲ್ದ್ವಾನಿಯಲ್ಲಿ ಕ್ಯಾಂಪ್ ಮಾಡುತ್ತಿರುವ ಎಡಿಜಿ ಎ ಪಿ ಅಂಶುಮಾನ್ ಪಿಟಿಐಗೆ ತಿಳಿಸಿದ್ದಾರೆ. +ಗುರುವಾರದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಐದು ಜನರನ್ನು ಇದುವರೆಗೆ ಬಂಸಲಾಗಿದೆ ಮತ್ತು ಮೂರು ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವದಂತಿಗಳು ಹರಡುವುದನ್ನು ತಡೆಯಲು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. +ಭಾರತದೊಂದಿಗಿನ ದ್ವಿಪಕ್ಷಿಯ ಪಾಲುದಾರಿಕೆ ಅಭೂತಪೂರ್ವ : ಶ್ವೇತಭವನ +ಆದಾಗ್ಯೂ, ಕಫ್ರ್ಯೂ ಜಾರಿಯಲ್ಲಿರುವ ಬಂಭೂಲ್‍ಪುರ ಪ್ರದೇಶದ ನಿವಾಸಿಗಳಿಗೆ ಕಾಲಕಾಲಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗುತ್ತಿದೆ ಎಂದು ಎಡಿಜಿ ತಿಳಿಸಿದ್ದಾರೆ. ಕತ್ಗೊಡಮ್ ವರೆಗೆ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗಿದೆ ಎಂದು ಅವರು ಹೇಳಿದರು. ಎಲ್ಲಿಯೂ ಹೊಸ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. +ಗುರುವಾರದ ಹಿಂಸಾಚಾರದಲ್ಲಿ ಆರು ಮಂದಿ ಗಲಭೆಕೋರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪತ್ರಕರ್ತ ಸೇರಿದಂತೆ ಏಳು ಮಂದಿ ಮೂರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_165_11.txt b/eesanje/url_47_165_11.txt new file mode 100644 index 0000000000000000000000000000000000000000..4f08e66e87d53479c98d86de16c7ceacd6eab6ce --- /dev/null +++ b/eesanje/url_47_165_11.txt @@ -0,0 +1,7 @@ +ಇಪಿಎಫ್ ಗರಿಷ್ಠ ಬಡ್ಡಿದರ ಶೇ.8.25ಕ್ಕೆ ನಿಗದಿ +ನವದೆಹಲಿ, ಫೆ 10 (ಪಿಟಿಐ) ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್‍ಒ ಇಂದು 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲೆ ಮೂರು ವರ್ಷಗಳ ಗರಿಷ್ಠ ಬಡ್ಡಿ ದರವನ್ನು ಶೇ.8.25 ನಿಗದಿಪಡಿಸಿದೆ. ಮಾರ್ಚ್ 2023 ರಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ 2021-22 ರಲ್ಲಿ 8.10 ಶೇಕಡಾದಿಂದ 2022-23 ಕ್ಕೆ ಇಪಿಎಫ್ ಮೇಲಿನ ಬಡ್ಡಿದರವನ್ನು ಶೇ,8.15ಕ್ಕೆ ಹೆಚ್ಚಿಸಿದೆ. +ಮಾರ್ಚ್ 2022 ರಲ್ಲಿ, ಇಪಿಎಫ್ ಮೇಲಿನ ಬಡ್ಡಿಯನ್ನು 2020-21 ರಲ್ಲಿ ಶೇಕಡಾ 8.5 ರಿಂದ ಆರು ಕೋಟಿಗೂ ಹೆಚ್ಚು ಚಂದಾದಾರರಿಗೆ ನಾಲ್ಕು ದಶಕಗಳ ಕಡಿಮೆ ಶೇಕಡಾ 8.1 ಕ್ಕೆ ಇಳಿಸಿತ್ತು. 1977-78ರಲ್ಲಿ ಇಪಿಎಫ್ ಬಡ್ಡಿ ದರ ಶೇ 8ರಷ್ಟಿದ್ದ ನಂತರ ಇದು ಅತ್ಯಂತ ಕಡಿಮೆ. ಇಪಿಎಫ್‍ಒದ ಅಪೆಕ್ಸ್ ಡಿಸಿಷನ್ ಮೇಕಿಂಗ್ ಬಾಡಿ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಸ್ (ಸಿಬಿಟಿ) ಸಭೆಯಲ್ಲಿ 2023-24ಕ್ಕೆ ಇಪಿಎಫ್‍ನಲ್ಲಿ ಶೇಕಡಾ 8.25 ಬಡ್ಡಿದರವನ್ನು ಒದಗಿಸಲು ನಿರ್ಧರಿಸಿದೆ ಎಂದು ಮೂಲವೊಂದು ತಿಳಿಸಿದೆ. +ಇಪಿಎಫ್ ನಿರ್ಧಾರದ ನಂತರ, 2023-24ರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಒಪ್ಪಿಗೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ. ಸರ್ಕಾರದ ಅನುಮೋದನೆಯ ನಂತರ, 2023-24ರ ಇಪಿಎಫ್ ಮೇಲಿನ ಬಡ್ಡಿ ದರವನ್ನು ಆರು ಕೋಟಿ ಚಂದಾದಾರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಹಣಕಾಸು ಸಚಿವಾಲಯದ ಮೂಲಕ ಸರ್ಕಾರವು ಅನುಮೋದಿಸಿದ ನಂತರವೇ ಇಪಿಎಫ್‍ಓ ಬಡ್ಡಿದರವನ್ನು ಒದಗಿಸುತ್ತದೆ. +ಮೋದಿ, ಆಡ್ವಾಣಿ ಟೀಕಿಸಿದ ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ +ಮಾರ್ಚ್ 2020 ರಲ್ಲಿ, ಇಪಿಎಫ್‍ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು 2018-19ಕ್ಕೆ ಒದಗಿಸಿದ 8.65 ಪ್ರತಿಶತದಿಂದ 2019-20ಕ್ಕೆ ಏಳು ವರ್ಷಗಳ ಕನಿಷ್ಠ 8.5 ಪ್ರತಿಶತಕ್ಕೆ ಇಳಿಸಿದೆ. ಇಪಿಎಫ್‍ಒ ತನ್ನ ಚಂದಾದಾರರಿಗೆ 2016-17ರಲ್ಲಿ ಶೇ 8.65 ಮತ್ತು 2017-18ರಲ್ಲಿ ಶೇ 8.55 ಬಡ್ಡಿ ದರವನ್ನು ಒದಗಿಸಿದೆ. 2015-16ರಲ್ಲಿ ಬಡ್ಡಿ ದರವು 8.8 ಶೇಕಡ ಸ್ವಲ್ಪ ಹೆಚ್ಚಿತ್ತು. +ನಿವೃತ್ತಿ ನಿಧಿ ಸಂಸ್ಥೆಯು 2013-14 ಮತ್ತು 2014-15 ರಲ್ಲಿ 8.75 ಪರ್ಸೆಂಟ್ ಬಡ್ಡಿದರವನ್ನು ನೀಡಿದೆ, ಇದು 2012-13 ಕ್ಕೆ 8.5 ಶೇಕಡಾಕ್ಕಿಂತ ಹೆಚ್ಚಾಗಿದೆ. 2011-12ರಲ್ಲಿ ಬಡ್ಡಿ ದರ ಶೇ.8.25ರಷ್ಟಿತ್ತು. \ No newline at end of file diff --git a/eesanje/url_47_165_12.txt b/eesanje/url_47_165_12.txt new file mode 100644 index 0000000000000000000000000000000000000000..02631aa608abe55207219b4f0bc0a778303e3b8c --- /dev/null +++ b/eesanje/url_47_165_12.txt @@ -0,0 +1,7 @@ +ಸೇನಾ ಸಿಬ್ಬಂದಿಗೆ ಸಿಗುವ ಸೌಲಭ್ಯ ಅಗ್ನಿವೀರರಿಗೂ ಸಿಗಲಿ : ಸಂಸದೀಯ ಸಮಿತಿ ಶಿಫಾರಸು +ನವದೆಹಲಿ,ಫೆ.10-ಸೇವಾ ಅವಧಿಯಲ್ಲಿ ಸಾವನ್ನಪ್ಪುವ ಅಗ್ನಿವೀರರ ಕುಟುಂಬಗಳು ಸಾಮಾನ್ಯ ಸೇನಾ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸಂಸದೀಯ ಸಮಿತಿ ಶಿಫಾರಸು ಮಾಡಿದೆ. ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ, ಕರ್ತವ್ಯದ ಸಾಲಿನಲ್ಲಿ ಸಾವನ್ನಪ್ಪುವ ಅಗ್ನಿವೀರರ ಕುಟುಂಬಗಳು ಪಿಂಚಣಿಯಂತಹ ನಿಯಮಿತ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ. ಕುಟುಂಬದ ಸದಸ್ಯರು ಹಾಗೂ ಸಂಬಂಧಿಕರು, ಅಗ್ನಿವೀರನ ಹುತಾತ್ಮನ ನಂತರ ಸಮಿತಿಯ ಅಪೇಕ್ಷೆಯನ್ನು ಪರಿಗಣಿಸಿ, ಸಾಮಾನ್ಯ ಸೈನಿಕನ ಕುಟುಂಬಕ್ಕೆ ಒದಗಿಸುವ ಅದೇ ಪ್ರಯೋಜನಗಳನ್ನು ಅವರ ಕುಟುಂಬ ಸದಸ್ಯರಿಗೆ ಒದಗಿಸಬೇಕು ಎಂದು ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. +ಜೂನ್ 2022 ರಲ್ಲಿ ಮೂರು ಸೇವೆಗಳ ವಯಸ್ಸಿನ ಪ್ರೊಫೈಲ್ ಅನ್ನು ಕಡಿಮೆ ಮಾಡುವ ಉದ್ದೇಶದಿಂದ ಸಿಬ್ಬಂದಿಗಳ ಅಲ್ಪಾವಧಿಯ ಸೇರ್ಪಡೆಗಾಗಿ ಸರ್ಕಾರವು ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹೊರತಂದಿದೆ. ಇದು 17 ಮತ್ತು ಅರ್ಧ ವರ್ಷ ಮತ್ತು 21 ರ ನಡುವಿನ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಿಸಿಕೊಳ್ಳಲು ಅವಕಾಶ ನೀಡುತ್ತದೆ ಮತ್ತು ಅವರಲ್ಲಿ ಶೇ.25 ರಷ್ಟು ಮಂದಿಯನ್ನು 15 ವರ್ಷಗಳವರೆಗೆ ಉಳಿಸಿಕೊಳ್ಳಲು ಅವಕಾಶವಿದೆ. +ಕರ್ತವ್ಯದ ಸಾಲಿನಲ್ಲಿ ಸಾವನ್ನಪ್ಪುವ ಸೈನಿಕರ ಕುಟುಂಬಗಳಿಗೆ ನೀಡಲಾಗುವ ಎಕ್ಸ್‍ಗ್ರೇಷಿಯಾ ಮೊತ್ತವನ್ನು ಪ್ರತಿ ವಿಭಾಗದಲ್ಲಿ 10 ಲಕ್ಷ ಹೆಚ್ಚಿಸುವಂತೆ ಸಮಿತಿ ಶಿಫಾರಸು ಮಾಡಿದೆ. ವಿವಿಧ ವರ್ಗದ ಸೈನಿಕರ ಸಾವಿಗೆ ಎಕ್ಸ್‍ಗ್ರೇಷಿಯಾ ಮೊತ್ತವು ಬದಲಾಗುತ್ತದೆ ಎಂದು ರಕ್ಷಣಾ ಸಚಿವಾಲಯವು ಸಮಿತಿಗೆ ತಿಳಿಸಿದೆ. ಕರ್ತವ್ಯ ನಿರ್ವಹಿಸುವಾಗ ಭಯೋತ್ಪಾದಕರು, ಸಮಾಜಘಾತುಕರಿಂದ ಅವಘಡಗಳು ಅಥವಾ ಹಿಂಸಾಚಾರದಿಂದ ಸಾವು ಸಂಭವಿಸಿದರೆ 25 ಲಕ್ಷ ಪರಿಹಾರ ನೀಡಲಾಗುತ್ತದೆ. +ಜೆಎನ್‍ಯು ವಿವಿಯಲ್ಲಿ ವಿದ್ಯಾರ್ಥಿಗಳ ಮಾರಮಾರಿ +ಗಡಿ ಘರ್ಷಣೆ ಮತ್ತು ಉಗ್ರಗಾಮಿಗಳು, ಭಯೋತ್ಪಾದಕರು, ಉಗ್ರಗಾಮಿಗಳು, ಕಡಲ್ಗಳ್ಳರು ಮುಂತಾದವರ ವಿರುದ್ಧ ಕ್ರಮ ಕೈಗೊಂಡಲ್ಲಿ ಸಾವು ಸಂಭವಿಸಿದಲ್ಲಿ 35 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಯುದ್ಧದಲ್ಲಿ ಶತ್ರುಗಳ ದಾಳಿಯ ಸಂದರ್ಭದಲ್ಲಿ ಸಾವು ಸಂಭವಿಸಿದರೆ 45 ಲಕ್ಷ ಮೊತ್ತವನ್ನು ಪರಿಹಾರವಾಗಿ ನೀಡಲಾಗುತ್ತದೆ ಎಂದು ಅದು ತಿಳಿಸಲಾಗಿದೆ. +ಮೇಲಿನ ಪ್ರತಿಯೊಂದು ವಿಭಾಗಗಳಲ್ಲಿ 10 ಲಕ್ಷದವರೆಗೆ ಎಕ್ಸ್‍ಗ್ರೇಷಿಯಾ ಹೆಚ್ಚಿಸುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಬೇಕು ಎಂದು ಸಮಿತಿಯು ಪುನರುಚ್ಚರಿಸಲು ಬಯಸುತ್ತದೆ. ಯಾವುದೇ ವರ್ಗದ ಅಡಿಯಲ್ಲಿ ಕನಿಷ್ಠ ಮೊತ್ತವು 35 ಲಕ್ಷ ಮತ್ತು ಗರಿಷ್ಠ 55 ಲಕ್ಷವಾಗಿರುತ್ತದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_165_2.txt b/eesanje/url_47_165_2.txt new file mode 100644 index 0000000000000000000000000000000000000000..9015565227bddacc1eb087dfc2f59d4ea171dec0 --- /dev/null +++ b/eesanje/url_47_165_2.txt @@ -0,0 +1,5 @@ +ಪೊಲೀಸರಿಗೆ ಶರಣಾದ ನಕ್ಸಲಿಯ +ಲಾಟೇಹರ್, ಫೆ.11 (ಪಿಟಿಐ) ಕಟ್ಟಾ ಮಾವೋವಾದಿ ನಕ್ಸಲನೊಬ್ಬ ಜಾರ್ಖಂಡ್‍ನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರಿಗೆ ಬೇಕಾಗಿದ್ದ ಜಾರ್ಖಂಡ್‍ನ ಲಾಟೇಹಾರ್ ಜಿಲ್ಲೆಯಲ್ಲಿ ಸ್ವಯಂಘೋಷಿತ ಸಿಪಿಐ (ಮಾವೋವಾದಿ) ಝೋನಲ್ ಕಮಾಂಡರ್ ಲಾಲ್‍ದೀಪ್ ಗಂಜು ಅಲಿಯಾಸ್ ಕಲ್ತು ಶರಣಾದ ನಕ್ಸಲಿಯ. ಈತನ ತಲೆಯ ಮೇಲೆ ಪೊಲೀಸರು 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದರು ಎನ್ನುವುದು ಉಲ್ಲೇಖಾರ್ಹ. +ಕಲ್ತು ಎಂದು ಗುರುತಿಸಲಾದ ಮಾವೋವಾದಿ ಶನಿವಾರ ಸಂಜೆ ಲತೇಹರ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಪಿ) ಅಂಜನಿ ಅಂಜನ್ ಅವರ ಕಚೇರಿಯಲ್ಲಿ ಶರಣಾದರು. ಲಾಟೆಹಾರ್‍ನ ಎರಡು ಮತ್ತು ಬಿಹಾರದ ಒಂದು ಪೊಲೀಸ್ ಠಾಣೆಗಳಲ್ಲಿ ಎಂಟು ಪ್ರಕರಣಗಳಲ್ಲಿ ಲಾಲ್‍ದೀಪ್ ಬೇಕಾಗಿದ್ದಾರೆ ಎಂದು ಎಸ್‍ಪಿ ಹೇಳಿದರು. ಇವರು 2004 ರಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಗೆ ಸೇರಿದ್ದರು ಮತ್ತು 20 ವರ್ಷಗಳಿಂದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ ಎಂದು ಅಂಜನ್ ಹೇಳಿದರು. +“ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಮಕ್ಕಳೇ 2 ದಿನ ಊಟ ಬಿಡಿ” ಎಂದ ಶಾಸಕ +ಜಿಲ್ಲೆಯ ವಿವಿಧೆಡೆ ಪೊಲೀಸರು ನಡೆಸುತ್ತಿರುವ ಮಾವೋವಾದಿ ವಿರೋಧಿ ಕಾರ್ಯಾಚರಣೆಯಿಂದ ಮಾವೋವಾದಿ ಸಂಘಟನೆ ದುರ್ಬಲಗೊಂಡಿದೆ ಎಂದು ಎಸ್ಪಿ ತಿಳಿಸಿದರು. ಲಾಟೇಹರ್‍ನಲ್ಲಿ ಕಳೆದ ಒಂದು ವರ್ಷದಲ್ಲಿ ಸುಮಾರು 10 ಮಂದಿ ಮಾವೋವಾದಿ ನಾಯಕರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಮತ್ತು 19 ಮಂದಿಯನ್ನು ಬಂಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_165_3.txt b/eesanje/url_47_165_3.txt new file mode 100644 index 0000000000000000000000000000000000000000..24ec0e47c002d924dc4a1a8d88f0c69612d2d63e --- /dev/null +++ b/eesanje/url_47_165_3.txt @@ -0,0 +1,5 @@ +ಜನಸಮೂಹದ ಮೇಲೆ ಹಾಲಿನ ಲಾರಿ ಹರಿದು ಮೂವರ ದುರ್ಮರಣ +ಗ್ಯಾಂಗ್‍ಟಕ್, ಫೆ.11 (ಪಿಟಿಐ) ಸಿಕ್ಕಿಂನ ಗ್ಯಾಂಗ್‍ಟಕ್ ಜಿಲ್ಲೆಯ ರಾಣಿಪೂಲ್‍ನಲ್ಲಿ ಹಾಲಿನ ಟ್ಯಾಂಕರ್‌ವೊಂದು ಜನಸಮೂಹದ ಮೇಲೆ ವೇಗವಾಗಿ ನುಗ್ಗಿದ ಪರಿಣಾಮ ಮೂವರು ಮೃತಪಟ್ಟು 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಂದ ಸುಮಾರು 11 ಕಿಮೀ ದೂರದಲ್ಲಿರುವ ಮೇಳ ಮೈದಾನ ರಾಣಿಪೂಲ್‍ನಲ್ಲಿ ಜನಸಂದಣಿ ತಾಂಬೂಲ ನುಡಿಸಲು ಜಮಾಯಿಸಿತ್ತು ಈ ಸಂದರ್ಭದಲ್ಲಿ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಜನ ಸಮೂಹದ ಮೇಲೆ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಚಾಲಕನನ್ನು ಬಂಸಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್‍ನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. +ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ +ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ನನ್ನ ಆಲೋಚನೆಗಳು ಗಾಯಾಳುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ, ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾಮಾಣಿಕವಾಗಿ ಪ್ರಾರ್ಥಿಸುತ್ತೇನೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದುರಂತ, ಮತ್ತು ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_165_4.txt b/eesanje/url_47_165_4.txt new file mode 100644 index 0000000000000000000000000000000000000000..080e364cff4dd9145ba5cd318531abdb6fa4f011 --- /dev/null +++ b/eesanje/url_47_165_4.txt @@ -0,0 +1,6 @@ +ಮಾಂತ್ರಿಕ ಚಿಕಿತ್ಸೆ ನಿಷೇಧಿಸಿದ ಅಸ್ಸಾಂ +ಗುವಾಹಟಿ, ಫೆ.11 (ಪಿಟಿಐ) ಚಿಕಿತ್ಸೆಯ ಹೆಸರಿನಲ್ಲಿ ಮಾಂತ್ರಿಕ ಚಿಕಿತ್ಸೆ ಪದ್ಧತಿಗಳನ್ನು ನಿಷೇಧಿಸುವ ಮತ್ತು ತೊಡೆದುಹಾಕುವ ಮಸೂದೆಗೆ ಅಸ್ಸಾಂ ಸರ್ಕಾರವು ತನ್ನ ಅನುಮೋದನೆಯನ್ನು ನೀಡಿದ್ದು, ವೈದ್ಯರ ವಿರುದ್ಧ ಕಠಿಣ ದಂಡನಾತ್ಮಕ ಕ್ರಮವನ್ನು ಪ್ರಸ್ತಾಪಿಸಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. +ಎಕ್ಸ್‍ನಲ್ಲಿನ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಹಂಚಿಕೊಂಡ ಶರ್ಮಾ, ಮಂತ್ರಿಗಳ ಮಂಡಳಿಯು ಅಸ್ಸಾಂ ಹೀಲಿಂಗ್ (ದುಷ್ಟ ತಡೆಗಟ್ಟುವಿಕೆ) ಅಭ್ಯಾಸಗಳ ಮಸೂದೆ, 2024 ಅನ್ನು ಅನುಮೋದಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತಾವಿತ ಮಸೂದೆಯು ಕಿವುಡುತನ, ಮೂಕತನ, ಕುರುಡುತನ, ದೈಹಿಕ ವಿಕಲತೆ ಮತ್ತು ಸ್ವಲೀನತೆಯಂತಹ ಕೆಲವು ಜನ್ಮಜಾತ ಕಾಯಿಲೆಗಳ ಚಿಕಿತ್ಸೆಯ ಹೆಸರಿನಲ್ಲಿ ಮಾಂತ್ರಿಕ ಚಿಕಿತ್ಸೆ ಅಭ್ಯಾಸಗಳನ್ನು ನಿಷೇಸುವ ಉದ್ದೇಶದಿಂದ ಈ ಕ್ರಮಕ್ಕೆ ಮುಂದಾಗಿದೆ. +ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ +ಚಿಕಿತ್ಸೆಯ ಹೆಸರಿನಲ್ಲಿ ಬಡ ಮತ್ತು ದೀನದಲಿತ ಜನರನ್ನು ಸುಲಿಗೆ ಮಾಡುವ ವೈದ್ಯರ ವಿರುದ್ಧ ಬಲವಾದ ದಂಡನಾತ್ಮಕ ಕ್ರಮವನ್ನು ನೀಡುತ್ತದೆ ಎಂದು ಸಿಎಂ ಎಕ್ಸ್‍ನಲ್ಲಿ ಬರೆದಿದ್ದಾರೆ. ಸುಸ್ಥಿರ ನಗರಾಭಿವೃದ್ಧಿಗಾಗಿ, ಹತ್ತು ನಗರಗಳ ಅಭಿವೃದ್ಧಿ (ದೋಹ್ ಶಾರ್ಹೆ-ಏಕ್ ರೂಪಯಾನ್) ಪರಿಕಲ್ಪನೆಯನ್ನು ಪರಿಚಯಿಸಲಾಗುವುದು ಎಂದಿದ್ದಾರೆ. ಪರಿಕಲ್ಪನೆಯ ಅನುಷ್ಠಾನವನ್ನು ರಾಜ್ಯ ಮಟ್ಟದ ಚಾಲನಾ ಸಮಿತಿಯು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಪರಿಶೀಲಿಸುತ್ತದೆ. +ಘನತ್ಯಾಜ್ಯ ನಿರ್ವಹಣೆ, ಶುದ್ಧ ಮತ್ತು ಕುಡಿಯುವ ನೀರು ಸರಬರಾಜು, ಸಂಚಾರ ನಿರ್ವಹಣೆ, ನಗರ ಯೋಜನೆ ಮತ್ತು ಮಾನವಶಕ್ತಿ ತರ್ಕಬದ್ಧಗೊಳಿಸುವಿಕೆ ಮತ್ತು ಸಾಮಥ್ರ್ಯ ವರ್ಧನೆಯು ಇದರ ಅಡಿಯಲ್ಲಿ ಪ್ರಮುಖ ಅಂಶಗಳಾಗಿವೆ. \ No newline at end of file diff --git a/eesanje/url_47_165_5.txt b/eesanje/url_47_165_5.txt new file mode 100644 index 0000000000000000000000000000000000000000..7a8779e0aac756e7a4dd72368c3dc8e0a63440fb --- /dev/null +++ b/eesanje/url_47_165_5.txt @@ -0,0 +1,6 @@ +“ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ ಮಕ್ಕಳೇ 2 ದಿನ ಊಟ ಬಿಡಿ” ಎಂದ ಶಾಸಕ +ಮುಂಬೈ, ಫೆ.11 (ಪಿಟಿಐ) – ಒಂದು ವೇಳೆ ನಿಮ್ಮ ಅಪ್ಪ ಅಮ್ಮ ನನಗೆ ಮತ ಹಾಕದಿದ್ದರೆ ನೀವು ಎರಡು ದಿನ ಊಟ ಮಾಡಬೇಡಿ ಎಂದು ಮಕ್ಕಳಿಗೆ ಉಚಿತ ಸಲಹೆ ನೀಡುವ ಮೂಲಕ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣದ ಶಾಸಕರೊಬ್ಬರು ವಿವಾದಕ್ಕೆ ಕಾರಣರಾಗಿದ್ದಾರೆ. ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದ ನಂತರ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ ಅವರ ಈ ಹೇಳಿಕೆಗಳು ಹೊರಬಿದ್ದಿವೆ. +ಮುಂದಿನ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ, ಎರಡು ದಿನ ಊಟ ಮಾಡಬೇಡಿ ಎಂದು ಬಂಗಾರ್ ಅವರು ಹಿಂಗೋಲಿ ಜಿಲ್ಲೆಯ ಜಿಲ್ಲೆ ಪರಿಷತ್ ಶಾಲೆಗೆ ಭೇಟಿ ನೀಡಿದಾಗ ಚಿತ್ರೀಕರಿಸಿದ ವೈರಲ್ ವಿಡಿಯೋದಲ್ಲಿ ಶಾಲಾ ಮಕ್ಕಳಿಗೆ ಹೇಳುತ್ತಿರುವುದು ಕಂಡುಬಂದಿದೆ. +ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ +10 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಿಗೆ ಬಂಗಾರ್ ಅವರು ತಮ್ಮ ಪೋಷಕರು ತಿನ್ನಲು ನಿರಾಕರಿಸಿದರೆ, ಸಂತೋಷ್ ಬಂಗಾರ್ ಅವರಿಗೆ ಮತ ನೀಡಿ, ಆಗ ಮಾತ್ರ ನಾವು ತಿನ್ನುತ್ತೇವೆ ಎಂದು ಉತ್ತರಿಸಬೇಕು ಎಂದು ಹೇಳುತ್ತಿರುವುದು ಕಂಡುಬರುತ್ತದೆ. ನಂತರ ಶಾಸಕರು ಮುಂದಿನ ಚುನಾವಣೆಯಲ್ಲಿ ಯಾರಿಗೆ ಮತ ಹಾಕಬೇಕು ಎಂಬುದರ ಕುರಿತು ತಮ್ಮ ಪೋಷಕರ ಮುಂದೆ ಹೇಳುವುದನ್ನು ಪುನರಾವರ್ತಿಸಿ ಮತ್ತು ಹೇಳುವಂತೆ ಮಕ್ಕಳಿಗೆ ಹೇಳಿದರು. +ಬಂಗಾರ್ ಅವರ ಹೇಳಿಕೆಗಳು ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್‍ಸಿಪಿಯ ನಾಯಕರನ್ನು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ. ಎನ್‍ಸಿಪಿ-ಎಸ್‍ಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ಅವರು, ಬಂಗಾರ್ ಶಾಲಾ ಮಕ್ಕಳಿಗೆ ಹೇಳಿರುವುದು ಚುನಾವಣಾ ಆಯೋಗದ ನಿರ್ದೇಶನಕ್ಕೆ ವಿರುದ್ಧವಾಗಿದೆ, ಆದ್ದರಿಂದ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅವರು ಪುನರಾವರ್ತಿತ ಅಪರಾ ಮತ್ತು ಅವರು ಬಿಜೆಪಿಯ ಮಿತ್ರರಾಗಿರುವುದರಿಂದ ಸ್ಕಾಟ್-ಫ್ರೀ ಆಗಿದ್ದಾರೆ. ಆಯೋಗವು ಅವರ ವಿರುದ್ಧ ಪೂರ್ವಾಗ್ರಹವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_47_165_6.txt b/eesanje/url_47_165_6.txt new file mode 100644 index 0000000000000000000000000000000000000000..3878e5f6dfcc96bf3dbcf1be10f891b138356e5e --- /dev/null +++ b/eesanje/url_47_165_6.txt @@ -0,0 +1,6 @@ +ನಮ್ಮ ಸರ್ಕಾರಕ್ಕೆ225 ಶಾಸಕರ ಬಲವಿದೆ ; ಅಜಿತ್ ಪವಾರ್ +ಮುಂಬೈ, ಫೆ.11 (ಪಿಟಿಐ) – ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ವಜಾಗೊಳಿಸಬೇಕೆಂಬ ವಿಪಕ್ಷಗಳ ಆಗ್ರಹದ ನಡುವೆಯೇ 288 ಸದಸ್ಯ ಬಲದ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ 225 ಶಾಸಕರ ಬೆಂಬಲವಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. +ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಬಾಬಾ ಸಿದ್ದಿಕ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಪವಾರ್, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಅಧಿಕಾರದಲ್ಲಿದ್ದಾಗ ಇಲ್ಲಿ 26/11 ಭಯೋತ್ಪಾದಕ ದಾಳಿಯ ನಂತರ ಅಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದರು. +ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ +ಇಂದು ಪ್ರತಿಪಕ್ಷಗಳು ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿವೆ. ನಮ್ಮ ಮಹಾಯುತಿ (ಬಿಜೆಪಿ-ಶಿವಸೇನೆ-ಎನ್‍ಸಿಪಿ ಮೈತ್ರಿ) 225 ಶಾಸಕರ ಬೆಂಬಲವನ್ನು ಹೊಂದಿದೆ ಎಂದು ಅವರು ಹೇಳಿದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಭಯದ ವಾತಾವರಣ ಸೃಷ್ಟಿಸಲು ಕೆಲವರು ಯತ್ನಿಸುತ್ತಿದ್ದಾರೆ….26/11ರ ಭಯೋತ್ಪಾದಕ ದಾಳಿ ನಡೆದಾಗ ಅಂತಹ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಪವಾರ್ ಹೇಳಿದ್ದಾರೆ. +ಆದಾಗ್ಯೂ, ಇತ್ತೀಚಿನ ಹಿಂಸಾಚಾರದ ಘಟನೆಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರದ ಮೇಲೆ ತನ್ನ ಬಂದೂಕುಗಳನ್ನು ತರಬೇತುಗೊಳಿಸಿರುವುದನ್ನು ತಾನು ಸಮರ್ಥಿಸುತ್ತಿಲ್ಲ ಎಂದು ಅವರು ಹೇಳಿದರು. ಇದಕ್ಕೂ ಮೊದಲು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂಬೈನ ಬೊರಿವಲಿ ಪ್ರದೇಶದಲ್ಲಿ ತಮ್ಮ ಪಕ್ಷದ ನಾಯಕ ಅಭಿಷೇಕ್ ಘೋಸಲ್ಕರ್ ಅವರ ಹತ್ಯೆ ಮತ್ತು ಈ ತಿಂಗಳ ಆರಂಭದಲ್ಲಿ ಥಾಣೆ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಅವರ ಘಟನೆಯ ಹಿನ್ನೆಲೆಯಲ್ಲಿ ಸರ್ಕಾರವನ್ನು ವಜಾಗೊಳಿಸುವಂತೆ ಕೋರಿದರು. ಪೊಲೀಸ್ ಠಾಣೆಯೊಳಗೆ ಗುಂಡು ಹಾರಿಸಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದ. \ No newline at end of file diff --git a/eesanje/url_47_165_7.txt b/eesanje/url_47_165_7.txt new file mode 100644 index 0000000000000000000000000000000000000000..69d4790d06f4a3b98c4c26035a08747fea6c1f9c --- /dev/null +++ b/eesanje/url_47_165_7.txt @@ -0,0 +1,12 @@ +ಬಿಜೆಪಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನ ಫಿಕ್ಸ್ : ಅಮಿತ್ ಶಾ +ನವದೆಹಲಿ,ಫೆ.10-ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಎನ್‍ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಕುತೂಹಲ ಇಲ್ಲ. ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ತಾವು ಮತ್ತೆ ವಿರೋಧ ಪಕ್ಷದ ಸ್ಥಾನಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂಬುದನ್ನು ಅರಿತುಕೊಂಡಿವೆ ಎಂದು ವ್ಯಂಗ್ಯವಾಡಿದರು. +ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‍ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂಬ ಭರವಸೆ ಇದೆ ಎಂದರು. ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರೆಲ್‍ಡಿ), ಶಿರೋಮಣಿ ಅಕಾಲಿದಳ (ಎಸ್‍ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‍ಡಿಎ)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಬಿಜೆಪಿ, ಕುಟುಂಬ ಯೋಜನೆಯಲ್ಲಿ ನಂಬಿಕೆ ಇದೆ. ಆದರೆ ರಾಜಕೀಯದಲ್ಲಿ ಅಲ್ಲ.ಎಸ್‍ಎಡಿ ಜೊತೆ ಮಾತುಕತೆಗಳು ನಡೆಯುತ್ತಿವೆ ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು. +2024ರ ಚುನಾವಣೆಯು ಎನ್‍ಡಿಎ ಮತ್ತು ಭಾರತದ ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ, ಆದರೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಲಿದೆ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ, 1947ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾದ ಕಾರಣ ನೆಹರು-ಗಾಂಧಿ ವಂಶಸ್ಥರಿಗೆ ಅಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. +ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯ ಉಳಿದ ಪಂದ್ಯಗಳಿಂದ ಹೊರಗುಳಿದ ಕೊಹ್ಲಿ +ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಸಮಯದ ಕುರಿತು, 2014ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುಪಿಎ ಯಾವ ಗೊಂದಲವನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ. ಆ ಸಮಯದಲ್ಲಿ (2014) ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು, ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು, ವಿದೇಶಿ ಹೂಡಿಕೆ ಬರುತ್ತಿರಲಿಲ್ಲ, ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು. +10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ, ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಅವರು ಪ್ರತಿಪಾದಿಸಿದರು. +ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಮಾತನಾಡಿದ ಅಮಿತ್ ಷಾ, ರಾಮ ಜನ್ಮ ಸ್ಥಳದಲ್ಲಿಯೇ ಮಂದಿರ ನಿರ್ಮಾಣವಾಗಬೇಕು ಎಂಬುದು ದೇಶದ ಜನತೆ 500-550 ವರ್ಷಗಳಿಂದ ನಂಬಿದ್ದರು. ಆದರೆ, ತುಷ್ಟೀಕರಣ ರಾಜಕಾರಣ ಮತ್ತು ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಸಿಕ್ಕಿರಿಲಿಲ್ಲ ಎಂದರು. +ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ) ಕುರಿತು, 2019 ರಲ್ಲಿ ಜಾರಿಗೊಳಿಸಲಾದ ಕಾನೂನನ್ನು ಈ ನಿಟ್ಟಿನಲ್ಲಿ ನಿಯಮಗಳನ್ನು ಹೊರಡಿಸಿದ ನಂತರ ಲೋಕಸಭೆ ಚುನಾವಣೆಗೆ ಮೊದಲು ಜಾರಿಗೆ ತರಲಾಗುವುದು.ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ (ಸಿಎಎ ವಿರುದ್ಧ) ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದು ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳಲು ಅಲ್ಲ, ಎಂದು ಅವರು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. +ಇಪಿಎಫ್ ಗರಿಷ್ಠ ಬಡ್ಡಿದರ ಶೇ.8.25ಕ್ಕೆ ನಿಗದಿ +ಏಕರೂಪ ನಾಗರಿಕ ಸಂಹಿತೆಯ ಕುರಿತು, ಇದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಇತರರು ಸಹಿ ಮಾಡಿದ ಸಾಂವಿಧಾನಿಕ ಕಾರ್ಯಸೂಚಿಯಾಗಿದೆ.ಆದರೆ ಕಾಂಗ್ರೆಸ್ ತುಷ್ಟೀಕರಣದ ಕಾರಣದಿಂದ ಅದನ್ನು ನಿರ್ಲಕ್ಷಿಸಿದೆ. ಉತ್ತರಾಖಂಡದಲ್ಲಿ ಯುಸಿಸಿ ಜಾರಿ ಸಾಮಾಜಿಕ ಬದಲಾವಣೆಯಾಗಿದೆ. ಇದನ್ನು ಎಲ್ಲಾ ವೇದಿಕೆಗಳಲ್ಲಿ ಚರ್ಚಿಸಲಾಗುವುದು ಮತ್ತು ಕಾನೂನು ಪರಿಶೀಲನೆ ಎದುರಿಸಬೇಕಾಗುತ್ತದೆ. ಜಾತ್ಯತೀತ ದೇಶವು ಧರ್ಮ ಆಧಾರಿತ ನಾಗರಿಕ ಸಂಹಿತೆಗಳನ್ನು ಹೊಂದಲು ಸಾಧ್ಯವಿಲ್ಲ ಎಂದು ಅಮಿತ್ ಷಾ ಅವರು ಹೇಳಿದರು. \ No newline at end of file diff --git a/eesanje/url_47_165_8.txt b/eesanje/url_47_165_8.txt new file mode 100644 index 0000000000000000000000000000000000000000..c1b99d61b86fc50588bab3234fd3846034f37301 --- /dev/null +++ b/eesanje/url_47_165_8.txt @@ -0,0 +1,6 @@ +ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆ ಅರೆಸ್ಟ್ +ಪಾಲ್ಘರ್, ಫೆ 10 (ಪಿಟಿಐ) ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ 22 ವರ್ಷದ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆ ಗರ್ಭಧರಿಸಿದ ನಂತರ ಆ ತಲೆಮರೆಸಿಕೊಂಡಿದ್ದ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 2021 ರಿಂದ ಆರೋಪಿಗಳು ಅನೇಕ ಬಾರಿ ಅತ್ಯಾಚಾರವೆಸಗಿದ್ದ ಅವರ ಮಗಳು ಕಳೆದ ವರ್ಷ ನವೆಂಬರ್‍ನಲ್ಲಿ ಕ್ಷಯರೋಗ ಚಿಕಿತ್ಸೆಯ ಸಮಯದಲ್ಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. +53 ವರ್ಷದ ಆರೋಪಿ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ ನಂತರ ಕಳೆದ ಹಲವು ತಿಂಗಳುಗಳಿಂದ ಆತ ಪರಾರಿಯಾಗಿದ್ದ. ಅವನು ಸಂತ್ರಸ್ತೆಯನ್ನು ಗರ್ಭಧರಿಸಿದ ಸಂದರ್ಭದಲ್ಲಿ ಥಳಿಸಿದ್ದ ಪರಿಣಾಮ ಆಕೆಯ ಗರ್ಭಪಾತಕ್ಕೆ ಕಾರಣವಾಯಿತು ಎಂದು ಹಿರಿಯ ಇನ್ಸ್‍ಪೆಕ್ಟರ್ ಪ್ರಮೋದ್ ಬಡಾಖ್ ಹೇಳಿದ್ದಾರೆ. +ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ +ಕಳೆದ ವರ್ಷ ನವೆಂಬರ್ 14 ರಂದು ಕ್ಷಯರೋಗಕ್ಕೆ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅದೇ ದಿನ ಅವಳು ಅಲ್ಲಿಯೇ ಸಾವನ್ನಪ್ಪಿದಳು, ಎಂದು ಅವರು ಹೇಳಿದರು, ನಂತರ ಆಕೆಯ ತಾಯಿ ಆರೋಪಿಯ ವಿರುದ್ಧ ದೂರು ನೀಡಿದ್ದರು. +ಕ್ರೈಂ ಬ್ರಾಂಚ್ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಿತ್ತು ಮತ್ತು ತಂಡದ ಸದಸ್ಯರು ಅಂತಿಮವಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. \ No newline at end of file diff --git a/eesanje/url_47_165_9.txt b/eesanje/url_47_165_9.txt new file mode 100644 index 0000000000000000000000000000000000000000..330668436f38b21f9a1d621dff1f013abe381508 --- /dev/null +++ b/eesanje/url_47_165_9.txt @@ -0,0 +1,6 @@ +ದೇಶದಲ್ಲಿ ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ ಯೋಗಿ ಆದಿತ್ಯನಾಥ್ +ನವದೆಹಲಿ,ಫೆ.10- ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಸ್ತುತ ದೇಶದಲ್ಲಿ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದಾರೆ. ಇಂಡಿಯಾ ಟು ಡೇ, ಸೀ ವೋಟರ್ ಮೂಡ್ ಆಫ್ ನೇಷನ್ ಸಮೀಕ್ಷೆ ಪ್ರಕಾರ ಯೋಗಿ ಆದಿತ್ಯನಾಥ್ ಅವರು ಜನಪ್ರಿಯ ಹಾಗೂ ಪ್ರಭಾವಿ ಮುಖ್ಯಮಂತ್ರಿಯಾಗಿದ್ದಾರೆ. ಜಗತ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದವರು. ಪ್ರಧಾನಿ ನರೇಂದ್ರ ಮೋದಿ ಅವರು 95.2 ಮಿಲಿಯನ್ ಟ್ವಿಟರ್ ಫಾಲೋವರ್ಸ್‍ಗಳನ್ನು ಹೊಂದಿದ್ದರೆ, ಕೇಂದ್ರ ಗೃಹಸಚಿವ ಅಮಿತ್ ಷಾ 34.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಯೋಗಿ ಆದಿತ್ಯನಾಥ್ ಅವರು 27.4 ಅನುಯಾಯಿಗಳೊಂದಿಗೆ ಪ್ರಭಾವಿ ರಾಜಕಾರಣಿಯಾಗಿ ಹೊರಹೊಮ್ಮಿದ್ದಾರೆ. +ಅವರ ಜನಪ್ರಿಯತೆ ಸಾಮಾಜಿಕ ಮಾಧ್ಯಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಇಂಡಿಯಾ ಟು ಡೇ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಸತತ ಎಂಟು ಬಾರಿ ಅವರು ಅತ್ಯಂತ ಪ್ರಭಾವಿ ಮುಖ್ಯಮಂತ್ರಿ ಎಂಬುದು ಕಂಡುಬಂದಿದೆ. 30 ಮುಖ್ಯಮಂತ್ರಿಗಳಲ್ಲಿ ಆದಿತ್ಯನಾಥ್ ಅವರು ಅತ್ಯುತ್ತಮ ಎಂಬ ರೇಟ್ ಬಂದಿದೆ. ಅವರ ಜನಪ್ರಿಯತೆಯಲ್ಲಿ ಸ್ಥಿರವಾದ ಏರಿಕೆ ಕಂಡುಬಂದಿದೆ. +ಸಹಜಸ್ಥಿತಿಯತ್ತ ಹಿಂಸಾಚಾರ ಪೀಡಿತ ಉತ್ತರಾಖಂಡ +ಕಳೆದ ಆಗಸ್ಟ್ 2023ರಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದ ಶೇ.46.3ರಷ್ಟು ಜನ ಯೋಗಿ ಅವರನ್ನು ಅತ್ಯುತ್ತಮ ಮುಖ್ಯಮಂತ್ರಿ ಎಂದು ಬಣ್ಣಿಸಿದ್ದಾರೆ. ಇದರಿಂದ ಅವರ ಸ್ಥಾನ ಮತ್ತಷ್ಟು ಸದೃಢವಾಗಿದೆ. ದೆಹಲಿಯಲ್ಲಿ ಕೇಜ್ರಿವಾಲ್ ಅವರ ರೇಟಿಂಗ್ 6 ತಿಂಗಳಲ್ಲಿ ಶೇ.58ರಿಂದ 36ಕ್ಕೆ ಕುಸಿದಿದೆ. +ಎಂ.ಕೆ.ಸ್ಟಾಲಿನ್ ಅವರ ರೇಟಿಂಗ್ ಶೇ.48ರಿಂದ 36ಕ್ಕೆ ಕುಸಿದಿದೆ. ನವೀನ್ ಪಟ್ನಾಯಕ್ ಅವರು ತವರು ರಾಜ್ಯದಲ್ಲಿ ಅತ್ಯಂತ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ. ಪುಷ್ಕರ್ ಸಿಂಗ್ ಧಾಮಿ ಅವರು ಟಾಪ್ 10ರಲ್ಲಿದ್ದಾರೆ. ಅರವಿಂದ್ ಕೇಜ್ರವಾಲ್ ಅವರನ್ನು ಕೇವಲ 19.6 ಪ್ರತಿಶತ ಜನ ಬೆಂಬಲಿಸಿದ್ದಾರೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ. \ No newline at end of file diff --git a/eesanje/url_47_166_1.txt b/eesanje/url_47_166_1.txt new file mode 100644 index 0000000000000000000000000000000000000000..9dfbca11d8ece0c544b70624b46f44a0cdfa02ef --- /dev/null +++ b/eesanje/url_47_166_1.txt @@ -0,0 +1,7 @@ +ಸಮೀರ್ ವಾಂಖೆಡೆ ವಿರುದ್ಧ ಪಿಎಂಎಲ್‍ಎ ಪ್ರಕರಣ ದಾಖಲು +ಮುಂಬೈ,ಫೆ.10- ಡ್ರಗ್ಸ್ ಪ್ರಕರಣದಲ್ಲಿ ಪುತ್ರನನ್ನು ರಕ್ಷಿಸಲು ಸೂಪರ್ ಸ್ಟಾರ್ ಶಾರುಖ್ ಖಾನ್ ಕುಟುಂಬದಿಂದ 25 ಕೋಟಿ ರೂ.ಲಂಚದ ಬೇಡಿಕೆಯ ಆರೋಪದ ಮೇಲೆ ಸಿಬಿಐ ಎಫ್‍ಐಆರ್‍ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈ ಎನ್‍ಸಿಬಿಯ ಮಾಜಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ. +ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕೇಂದ್ರೀಯ ಸಂಸ್ಥೆ ಪ್ರಕರಣ ದಾಖಲಿಸಿದೆ.ಕಸ್ಟಮ್ಸ ಮತ್ತು ಪರೋಕ್ಷ ತೆರಿಗೆ ಕೇಡರ್‍ನ 2008-ಬ್ಯಾಚ್‍ನ ಭಾರತೀಯ ಕಂದಾಯ ಸೇವೆ ಅಧಿಕಾರಿಯಾಗಿರುವ ವಾಂಖೆಡೆ ಅವರು ಅಕ್ರಮ ಹಣ ವರ್ಗಾವಣೆ-ವಿರೋಧಿ ಏಜೆನ್ಸಿಯ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ಕೋರಿ ಬಾಂಬೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. +ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಬಂಧಿಸದಿರಲು 25 ಕೋಟಿ ಲಂಚ ಕೇಳಿದ ಆರೋಪದ ಮೇಲೆ ಕಳೆದ ವರ್ಷ ಮೇ ತಿಂಗಳಲ್ಲಿ ಸಿಬಿಐನಿಂದ ಪ್ರಕರಣ ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ 2, 2021 ರಂದು ಕಾರ್ಡೆಲಿಯಾ ಕ್ರೂಸ್ ಹಡಗಿನಲ್ಲಿ ಡ್ರಗ್ ಬಸ್ಟ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. +ಉಗ್ರ ಬೆಂಬಲಿಗರ ಮೇಲೆ ಎನ್‍ಐಎ ರೇಡ್ +ಕೇಂದ್ರೀಯ ತನಿಖಾ ದಳದವರು ವಾಂಖೆಡೆ ಮತ್ತು ಇತರರ ವಿರುದ್ಧ ಕ್ರಿಮಿನಲ್ ಪಿತೂರಿ (120-ಬಿ ಐಪಿಸಿ), ಮತ್ತು ಸುಲಿಗೆ ಬೆದರಿಕೆ (388 ಐಪಿಸಿ) ಜೊತೆಗೆ ಎನ್‍ಸಿಬಿಯಿಂದ ಬಂದ ದೂರಿನ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ದಾಖಲಿಸಿದೆ. ಒಂದು ವರ್ಷದ ನಂತರ, ಎನ್‍ಸಿಬಿ 14 ಆರೋಪಿಗಳ ವಿರುದ್ಧ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿತು ಆದರೆ ಆರ್ಯನ್ ಖಾನ್‍ಗೆ ಕ್ಲೀನ್ ಚಿಟ್ ಸಿಕ್ಕಿತ್ತು. +2021 ರಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಎನ್‍ಸಿಬಿ ಅಧಿಕಾರಿ ಮತ್ತು ಆರ್ಯನ್ ಖಾನ್ ಅವರನ್ನು ಬಿಟ್ಟುಕೊಡಲು ಸಾಕ್ಷಿ ಗೋಸಾವಿ ಸೇರಿದಂತೆ ಇತರ ವ್ಯಕ್ತಿಗಳಿಂದ 25 ಕೋಟಿಗೆ ಬೇಡಿಕೆಯಿಟ್ಟರು ಎಂದು ಹೇಳಿದಾಗ ಹೆಚ್ಚು ಪ್ರಚಾರಗೊಂಡ ಪ್ರಕರಣವು ಟ್ವಿಸ್ಟ್ ತೆಗೆದುಕೊಂಡಿತ್ತು. ಕೆಲವು ಮಾಜಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಅಧಿಕಾರಿಗಳಿಗೂ ಸಮನ್ಸ್ ನೀಡಲಾಗಿದೆ. \ No newline at end of file diff --git a/eesanje/url_47_166_10.txt b/eesanje/url_47_166_10.txt new file mode 100644 index 0000000000000000000000000000000000000000..b2c4db1092b5ecd3181d7ca772f6c302e4d848fd --- /dev/null +++ b/eesanje/url_47_166_10.txt @@ -0,0 +1,5 @@ +ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು +ನವದೆಹಲಿ,ಫೆ.9- ರೈಲ್ವೇ ಜಮೀನು-ಉದ್ಯೋಗ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‍ಗೆ ದೆಹಲಿ ನ್ಯಾಯಾಲಯವು ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. +ಹಾನಿಕಾರಕ ವರದಿಯೊಂದರಲ್ಲಿ ಜೋ ಬಿಡೆನ್ ಹೆಸರು ಪ್ರಸ್ತಾಪ +ಅವರ ಸಾಮಾನ್ಯ ಜಾಮೀನು ಅರ್ಜಿಯ ಮೇಲೆ ವಾದಗಳನ್ನು ಸಲ್ಲಿಸಲು ಸಮಯ ಬೇಕಾಗುತ್ತದೆ ಎಂದು ಇಡಿ ಹೇಳಿಕೊಂಡ ನಂತರ ವಿಶೇಷ ನ್ಯಾಯಾೀಧಿಶ ವಿಶಾಲ್ ಗೋಗ್ನೆ ಅವರು ಮೂವರಿಗೆ ಪರಿಹಾರವನ್ನು ನೀಡಿದರು. ಇಡಿ ಸಲ್ಲಿಸಿದ ಚಾರ್ಜ್ ಶೀಟ್‍ನ ಅರಿವು ಪಡೆದು ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಸಮನ್ಸ್‍ಗೆ ಅನುಗುಣವಾಗಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. +ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ತನ್ನ ತನಿಖೆಯ ಸಮಯದಲ್ಲಿ ಆರೋಪಿಗಳನ್ನು ಬಂಧಿಸದಿರುವಾಗ ತನಗೆ ಏಕೆ ಕಸ್ಟಡಿ ಬೇಕು ಎಂದು ಇಡಿಯನ್ನು ಕೇಳಿತು. ನಂತರ ಮೂವರಿಗೂ ಫೆ.28ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. \ No newline at end of file diff --git a/eesanje/url_47_166_11.txt b/eesanje/url_47_166_11.txt new file mode 100644 index 0000000000000000000000000000000000000000..3ae56c3b8df73ce6e0512bf677a94ae01c3c1ce4 --- /dev/null +++ b/eesanje/url_47_166_11.txt @@ -0,0 +1,7 @@ +ಶಿವಸೇನೆ ಮುಖಂಡನನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಸಾಮಾಜಿಕ ಕಾರ್ಯಕರ್ತ +ಮುಂಬೈ, ಫೆ 9 (ಪಿಟಿಐ) – ಉದ್ಧವ್ ಠಾಕ್ರೆ ಶಿವಸೇನಾ ಬಣದ ಮುಖಂಡ ಅಭಿಷೇಕ್ ಘೋಸಲ್ಕರ್ ಅವರನ್ನು ಫೇಸ್‍ಬುಕ್ ಲೈವ್‍ನಲ್ಲಿ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಹತ್ಯೆ ಮಾಡಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ಮುಂಬೈ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಉದ್ಧವ್ ಠಾಕ್ರೆ ನೇತೃತ್ವದ ಪಕ್ಷದ ನಿಷ್ಠಾವಂತ ಮಾಜಿ ಶಾಸಕ ವಿನೋದ್ ಘೋಸಲ್ಕರ್ ಅವರ ಪುತ್ರ ಅಭಿಷೇಕ್ (40) ಮಾಜಿ ಕಾಪೆರ್ರೇಟರ್ ಕೂಡ ಆಗಿದ್ದರು. +ಉತ್ತರ ಉಪನಗರ ಬೊರಿವಲಿ (ಪಶ್ಚಿಮ) ನಲ್ಲಿರುವ ಐಸಿ ಕಾಲೋನಿಯಲ್ಲಿ ನಿನ್ನೆ ಸಂಜೆ ದಾಳಿಕೋರ ಮೌರಿಸ್ ನೊರೊನ್ಹಾ ಅವರ ಕಚೇರಿಯಲ್ಲಿ ನಡೆದ ಘಟನೆಯ ವೈರಲ್ ವೀಡಿಯೊದಲ್ಲಿ ಘೋಸಲ್ಕರ್ ಅವರ ಹೊಟ್ಟೆ ಮತ್ತು ಭುಜಕ್ಕೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಮದ್ಯದ ಅಮಲಿನಲ್ಲಿದ್ದ ನೊರೊನ್ಹಾ ಅವರು ಆಯುಧವನ್ನು ಹೇಗೆ ಪಡೆದರು ಮತ್ತು ಅದನ್ನು ಒದಗಿಸಿದವರು ಯಾರು ಮತ್ತು ಘೋಸಲ್ಕರ್ ಮೇಲೆ ಗುಂಡು ಹಾರಿಸಿದಾಗ ಸ್ಥಳದಲ್ಲಿದ್ದ ಜನರನ್ನು ಪ್ರಶ್ನಿಸುವುದು ಸೇರಿದಂತೆ ಹಲವು ಅಂಶಗಳ ಮೇಲೆ ಕ್ರೈಂ ಬ್ರಾಂಚ್ ತನಿಖೆ ಕೇಂದ್ರೀಕರಿಸಲಿದೆ. +ಹಾನಿಕಾರಕ ವರದಿಯೊಂದರಲ್ಲಿ ಜೋ ಬಿಡೆನ್ ಹೆಸರು ಪ್ರಸ್ತಾಪ +ಘೋಸಲ್ಕರ್ ಅವರಿಗೆ ನಾಲ್ಕು ಗುಂಡುಗಳು ತಗುಲಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಹಿಂದೆ ಪಿಟಿಐಗೆ ತಿಳಿಸಿದ್ದಾರೆ. ಅಪರಾಧಕ್ಕಾಗಿ ಅಕ್ರಮ ಪಿಸ್ತೂಲ್ ಬಳಸಿದ ನೊರೊನ್ಹಾ ನಂತರ ಒಮ್ಮೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು. ಘೋಸಲ್ಕರ್ ಮತ್ತು ನೊರೊನ್ಹಾ ಅವರು ವೈಯಕ್ತಿಕ ದ್ವೇಷವನ್ನು ಹೊಂದಿದ್ದರು ಆದರೆ ಐಸಿ ಕಾಲೋನಿ ಪ್ರದೇಶದ ಸುಧಾರಣೆಗಾಗಿ ಅವರ ಕಹಿಯನ್ನು ಕೊನೆಗೊಳಿಸುವುದಕ್ಕಾಗಿ ಅವರು ಒಟ್ಟಿಗೆ ಬಂದಿದ್ದಾರೆ ಎಂದು ಸ್ಪಷ್ಟಪಡಿಸಲು ಫೇಸ್‍ಬುಕ್ ಲೈವ್ ಅನ್ನು ಏರ್ಪಡಿಸಲಾಗಿದೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. +ಜನಾಂಗಿಯ ನಿಂದನೆ : ಫುಟ್‍ಬಾಲ್ ಅಭಿಮಾನಿಗೆ ಜೈಲು +ಕೊಲೆಯ ನಂತರ ಎಂಎಚ್‍ಬಿ ಕಾಲೋನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಜಂಟಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸತ್ಯ ನಾರಾಯಣ ಮತ್ತು ಉಪ ಪೊಲೀಸ್ ಆಯುಕ್ತ (ಡಿಸಿಪಿ) ದತ್ತಾ ನಲವಾಡೆ ಅವರು ತನಿಖೆಗಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಡರಾತ್ರಿ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್‍ಗೆ ವರ್ಗಾಯಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದ ಗಂಭೀರತೆ ಮತ್ತು ತನಿಖೆಯ ವ್ಯಾಪ್ತಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. \ No newline at end of file diff --git a/eesanje/url_47_166_12.txt b/eesanje/url_47_166_12.txt new file mode 100644 index 0000000000000000000000000000000000000000..9265a6c6fbbea2e118d31ec5d793b4bb8c0a50b6 --- /dev/null +++ b/eesanje/url_47_166_12.txt @@ -0,0 +1,10 @@ +ಮದರಸಾ ಧ್ವಂಸ ಪ್ರಕರಣದಿಂದ ಉದ್ನಿಗ್ನಗೊಂಡ ಉತ್ತರಾಖಂಡ +ಹಲ್‍ದ್ವಾನಿ,ಫೆ.9- ಉತ್ತರಾಖಂಡದ ಹಲ್‍ದ್ವಾನಿಯಲ್ಲಿ ಅಕ್ರಮ ಮದರಸಾ ಮತ್ತು ಪಕ್ಕದ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ವ್ಯಾಪಕ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 250 ಮಂದಿ ಗಾಯಗೊಂಡಿದ್ದಾರೆ. ನಗರವನ್ನು ಕಫ್ರ್ಯೂ ಅಡಿಯಲ್ಲಿ ಇರಿಸಲಾಗಿದೆ, ಗಲಭೆಕೋರರ ವಿರುದ್ಧ ಶೂಟ್-ಆಟ್-ಸೈಟ್ ಆದೇಶಗಳನ್ನು ಹೊರಡಿಸಲಾಗಿದೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. +ನ್ಯಾಯಾಲಯದ ಆದೇಶದ ನಂತರ ಪೊಲೀಸರೊಂದಿಗೆ ಸರ್ಕಾರಿ ಅಧಿಕಾರಿಗಳ ತಂಡವು ಕಟ್ಟಡಗಳನ್ನು ನೆಲಸಮಗೊಳಿಸಲು ಪ್ರಯತ್ನಿಸಿದಾಗ ಘರ್ಷಣೆಯು ಕುದಿಯುವ ಹಂತವನ್ನು ತಲುಪಿತು. ಮದ್ರಸಾ ಮತ್ತು ಮಸೀದಿಯನ್ನು ಆಡಳಿತವು ಕಾನೂನುಬಾಹಿರವೆಂದು ಘೋಷಿಸಿತು, ಇದು ಅದರ ಧ್ವಂಸಕ್ಕೆ ಕಾರಣವಾಯಿತು. ಜಿಲ್ಲಾಡಳಿತದ ನಿರ್ಧಾರ ಘರ್ಷಣೆಗೆ ಕಾರಣವಾಗಿದ್ದು, ಗಲಭೆಯಲ್ಲಿ 50 ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ ಹಾಗೂ ಹಲವಾರು ಆಡಳಿತ ಅಧಿಕಾರಿಗಳು, ಪುರಸಭೆಯ ಕಾರ್ಯಕರ್ತರು ಮತ್ತು ಪತ್ರಕರ್ತರು ಸಹ ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ. +ದೊಡ್ಡ ಗುಂಪೊಂದು ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದರು, ಅಶ್ರುವಾಯು ಮೂಲಕ ಪ್ರತೀಕಾರ ತೀರಿಸಲು ಪೊಲೀಸರನ್ನು ಪ್ರೇರೇಪಿಸಿತು. ಪೊಲೀಸ್ ಠಾಣೆಯ ಹೊರಗೆ ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಹಿಂಸಾಚಾರ ಹೆಚ್ಚಾಯಿತು. +ಭಾರೀ ಪೊಲೀಸ್ ಮತ್ತು ಪ್ರಾಂತೀಯ ಸಶಸ್ತ್ರ ಕಾನ್ಸ್‍ಟೆಬ್ಯುಲರಿ (ಪಿಎಸಿ) ಉಪಸ್ಥಿತಿಯೊಂದಿಗೆ ಕೆಡವುವಿಕೆಗಳನ್ನು ನಡೆಸಲಾಯಿತು, ಇದು ಮದ್ರಸಾ ಮತ್ತು ಮಸೀದಿಯಿಂದ ಅತಿಕ್ರಮಿಸಲ್ಪಟ್ಟಿದೆ ಎಂದು ಹೇಳಲಾದ ಸರ್ಕಾರಿ ಭೂಮಿಯನ್ನು ತೆರವುಗೊಳಿಸುವ ಗುರಿಯನ್ನು ಹೊಂದಿದೆ. ಕೋರ್ಟಿನ ಆದೇಶಕ್ಕೆ ಬದ್ಧವಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ ತಿಳಿಸಿದ್ದಾರೆ. +ಹಾನಿಕಾರಕ ವರದಿಯೊಂದರಲ್ಲಿ ಜೋ ಬಿಡೆನ್ ಹೆಸರು ಪ್ರಸ್ತಾಪ +ಬುಲ್ಡೋಜರ್ ಕಟ್ಟಡಗಳನ್ನು ನೆಲಸಮಗೊಳಿಸಿದ್ದರಿಂದ ಆಕ್ರೋಶಗೊಂಡ ಮಹಿಳೆಯರು ಸೇರಿದಂತೆ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅವರು ಬ್ಯಾರಿಕೇಡ್‍ಗಳನ್ನು ಮುರಿದು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರಿಂದ, ಪರಿಸ್ಥಿತಿ ವೇಗವಾಗಿ ಉಲ್ಬಣಗೊಂಡಿತು. ನಂತರ ಜನಸಮೂಹವು ಪೊಲೀಸರು, ಪುರಸಭೆಯ ಕಾರ್ಯಕರ್ತರು ಮತ್ತು ಪತ್ರಕರ್ತರ ಮೇಲೆ ಕಲ್ಲುಗಳನ್ನು ಎಸೆದರು, ಇದರ ಪರಿಣಾಮವಾಗಿ ಗಾಯಗಳು ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಯಿತು. 20ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಮತ್ತು ಭದ್ರತಾ ಬಸ್‍ಗೆ ಬೆಂಕಿ ಹಚ್ಚಲಾಗಿದೆ. +ಪೊಲೀಸರು ಯಾರನ್ನೂ ಪ್ರಚೋದಿಸಲಿಲ್ಲ. ಅದರ ಹೊರತಾಗಿಯೂ, ಅವರ ಮೇಲೆ ದಾಳಿ ಮಾಡಲಾಯಿತು, ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಲಾಯಿತು ಮತ್ತು ಗಲಭೆಕೋರರು ಪೊಲೀಸ್ ಸಿಬ್ಬಂದಿಯನ್ನು ಠಾಣೆಯೊಳಗೆ ಸುಡಲು ಪ್ರಯತ್ನಿಸಿದರು ಎಂದು ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಸಿಂಗ್ ಹೇಳಿದರು. +ಕಣಿವೆಯಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರಿ ಶಸ್ತ್ರಾಸ್ತ್ರ ವಶ +ನ್ಯಾಯಾಲಯದ ಆದೇಶದ ನಂತರ ನೆಲಸಮಗೊಳಿಸಲು ತಂಡವನ್ನು ಪ್ರದೇಶಕ್ಕೆ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಸಮಾಜ ವಿರೋಧಿಗಳು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಒತ್ತಿ ಹೇಳಿದರು. ಸುವ್ಯವಸ್ಥೆ ಪುನಃಸ್ಥಾಪಿಸಲು ಹೆಚ್ಚುವರಿ ಪೊಲೀಸ್ ಮತ್ತು ಕೇಂದ್ರ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಶಾಂತಿ ಕಾಪಾಡುವಂತೆ ಧಾಮಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_47_166_2.txt b/eesanje/url_47_166_2.txt new file mode 100644 index 0000000000000000000000000000000000000000..865b8a861ce1d1c6b2a859aa8ae7e41247ec933e --- /dev/null +++ b/eesanje/url_47_166_2.txt @@ -0,0 +1,8 @@ +ಮೋದಿ, ಆಡ್ವಾಣಿ ಟೀಕಿಸಿದ ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ದಾಳಿ +ನವದೆಹಲಿ,ಫೆ.10- ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ನಾಯಕ ಎಲ್‍ಕೆ ಅಡ್ವಾಣಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. +ಪುಣೆಯ ಡೆಕ್ಕನ್ ಪ್ರದೇಶದಲ್ಲಿ ರಾಷ್ಟ್ರ ಸೇವಾದಳ ಆಯೋಜಿಸಿದ್ದ ನಿರ್ಭಯ್ ಬಾನೋ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಹೋಗುತ್ತಿದ್ದಾಗ ಅಪರಿಚಿತ ಗಲಭೆಕೋರರು ಅವರ ಕಾರಿಗೆ ಮಸಿ ಎಸೆದಿದ್ದಾರೆ. ದಾಳಿಯಲ್ಲಿ ಅವರ ಕಾರಿನ ವಿಂಡ್‍ಸ್ಕ್ರೀನ್ ಮತ್ತು ಸೈಡ್ ಪೇನ್‍ಗಳಿಗೆ ಹಾನಿಯಾಗಿದೆ. +ನಂತರ ಸ್ಥಳದಲ್ಲಿ, ವಾಗ್ಲೆ ತಮ್ಮ ಭಾಷಣದಲ್ಲಿ, ನನ್ನ ಮೇಲೆ ದಾಳಿ ಮಾಡಿದ ಎಲ್ಲರನ್ನು ನಾನು ಕ್ಷಮಿಸುತ್ತೇನೆ. ನನ್ನ ಮೇಲೆ ಆರು ಬಾರಿ ದಾಳಿ ಮಾಡಲಾಗಿದೆ ಮತ್ತು ಇದು ಏಳನೆಯದು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದ ನಂತರ ವಾಗ್ಲೆ ಅವರು ಎಕ್ಸ್‍ನಲ್ಲಿ ಮಾನಹಾನಿಕರ ಟೀಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. +ಆಯೋಗದ ಮುಂದೆ ದಾಖಲೆ ಸಲ್ಲಿಸಿ : ಕೆಂಪಣ್ಣಗೆ ಕಾಂಗ್ರೆಸ್ ಸವಾಲು +64 ವರ್ಷದ ಪತ್ರಕರ್ತನ ವಿರುದ್ಧ ಬಿಜೆಪಿ ನಾಯಕ ಸುನಿಲ್ ದಿಯೋಧರ್ ನೀಡಿದ ದೂರಿನ ಆಧಾರದ ಮೇಲೆ ಪುಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಮೇಲೆ ಮಾನನಷ್ಟ, ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪವಿದೆ. ನಿಖಿಲ್ ವಾಗ್ಲೆ ಅವರ ಕಾರನ್ನು ಧ್ವಂಸಗೊಳಿಸಿದ ನಂತರ ಪ್ರತಿಪಕ್ಷಗಳು ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಎನ್‍ಸಿಪಿಯ ಶರದ್ಚಂದ್ರ ಪವಾರ್, ಸಂಸದೆ ಸುಪ್ರಿಯಾ ಸುಳೆ ಘಟನೆಯನ್ನು ಖಂಡಿಸಿದರು ಮತ್ತು ಬಿಜೆಪಿಗೆ ಗಲಭೆಗೆ ಪರವಾನಗಿ ಯಾರು ನೀಡಿದರು ಎಂದು ಕೇಳಿದರು. +ಹಿರಿಯ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೇ ನಡೆಸಿ ಕಲ್ಲು ತೂರಾಟ ನಡೆಸಿದ್ದಾರೆ. ಈ ಅತಿರೇಕದ ಘಟನೆಯಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಕೆಲವು ಹುಡುಗಿಯರು ಗಾಯಗೊಂಡಿದ್ದಾರೆ. ಇದು ನಡೆಯುತ್ತಿರುವಾಗ ಪೊಲೀಸರು ಸುಮ್ಮನೆ ನೋಡುತ್ತಿದ್ದರು ಎಂದು ಸುಳೆ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಈ ಸಂದರ್ಭದಲ್ಲಿ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಯಾರಾದರೂ ಆದೇಶ ನೀಡಿದ್ದಾರೆಯೇ? ಬಿಜೆಪಿಗೆ ಬಹಿರಂಗವಾಗಿ ಗಲಭೆ ಮಾಡಲು ಪರವಾನಿಗೆ ಕೊಟ್ಟವರು ಯಾರು? ಈ ದೇಶದಲ್ಲಿ ವಿಚಾರಗಳನ್ನು ಕಲ್ಪನೆಗಳ ಮೂಲಕ ಎದುರಿಸುವ ಸಂಪ್ರದಾಯವಿದೆ. ಬಿಜೆಪಿ ಈ ಸಂಪ್ರದಾಯವನ್ನು ಮುರಿಯಲು ಬಯಸುತ್ತದೆಯೇ? ಮತ್ತು ಗೂಂಡಾಗಳ ರಾಷ್ಟ್ರವೆಂಬ ಗುರುತನ್ನು ಸೃಷ್ಟಿಸುವುದೇ? ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಬರೆದಿದ್ದಾರೆ. \ No newline at end of file diff --git a/eesanje/url_47_166_3.txt b/eesanje/url_47_166_3.txt new file mode 100644 index 0000000000000000000000000000000000000000..2e0611ca857285b6049b06a8b115394349e5d99e --- /dev/null +++ b/eesanje/url_47_166_3.txt @@ -0,0 +1,8 @@ +ಭಾರತದೊಂದಿಗಿನ ದ್ವಿಪಕ್ಷಿಯ ಪಾಲುದಾರಿಕೆ ಅಭೂತಪೂರ್ವ : ಶ್ವೇತಭವನ +ವಾಷಿಂಗ್ಟನ್, ಫೆ 10 (ಪಿಟಿಐ) ಇಂಡೋ-ಪೆಸಿಫಿಕ್ ಕಾರ್ಯತಂತ್ರದ ಕಾರ್ಯಗತಗೊಳಿಸುವಿಕೆಯು ಅಮೆರಿಕ ಮತ್ತು ಪ್ರಮುಖ ಪ್ರದೇಶವನ್ನು ಹೆಚ್ಚು ಸುರಕ್ಷಿತ ಮತ್ತು ಹೆಚ್ಚು ಸಮೃದ್ಧಗೊಳಿಸಿದೆ ಮತ್ತು ಭಾರತದೊಂದಿಗಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಅಭೂತಪೂರ್ವ ರೀತಿಯಲ್ಲಿ ವಿಸ್ತರಿಸಿದೆ ಎಂದು ಶ್ವೇತಭವನ ತಿಳಿಸಿದೆ. +ಬಿಡೆನ್ ಆಡಳಿತದ ಹೆಗ್ಗುರುತು ವಿದೇಶಾಂಗ ನೀತಿಯ ಕಾರ್ಯತಂತ್ರದ ಪ್ರಾರಂಭದ ಎರಡನೇ ವಾರ್ಷಿಕೋತ್ಸವದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಅಡ್ರಿಯೆನ್ ವ್ಯಾಟ್ಸನ್, ಕಳೆದ ಎರಡು ವರ್ಷಗಳಲ್ಲಿ, ಮುಕ್ತ ಮತ್ತು ಸಂಪರ್ಕ, ಸಮೃದ್ಧ, ಸುರಕ್ಷಿತ ಮತ್ತು ಚೇತರಿಸಿಕೊಳ್ಳುವ ಇಂಡೋ-ಪೆಸಿಫಿಕ್ ಅನ್ನು ಮುನ್ನಡೆಸುವಲ್ಲಿ ನಾವು ಐತಿಹಾಸಿಕ ಪ್ರಗತಿಯನ್ನು ಸಾಧಿಸಿದ್ದೇವೆ. ಅಧ್ಯಕ್ಷ ಬಿಡೆನ್ ಅವರ ನಾಯಕತ್ವಕ್ಕೆ ಧನ್ಯವಾದಗಳು ಎಂದಿದ್ದಾರೆ. +ಇಂಡೋ-ಪೆಸಿಫಿಕ್ ಸ್ಟ್ರಾಟಜಿಯನ್ನು ಪ್ರಾರಂಭಿಸಿದ ಎರಡು ವರ್ಷಗಳಲ್ಲಿ, ಯುಎಸ್ ತನ್ನ ಮೈತ್ರಿಗಳು ಮತ್ತು ಪಾಲುದಾರಿಕೆಗಳನ್ನು ಮರುಹೂಡಿಕೆ ಮಾಡಿ ಪುನಶ್ಚೇತನಗೊಳಿಸಿದೆ ಮತ್ತು ಅವುಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ ಎಂದು ವ್ಯಾಟ್ಸನ್ ಹೇಳಿದರು. +ನಾವು ಜಪಾನ್, ರಿಪಬ್ಲಿಕ್ ಆಫ್ ಕೊರಿಯಾ , ಆಸ್ಟ್ರೇಲಿಯಾ, ಫಿಲಿಪೈನ್ಸ್ ಮತ್ತು ಥಾಯ್ಲೆಂಡ್‍ನೊಂದಿಗೆ ಮೈತ್ರಿಗಳನ್ನು ಆಳಗೊಳಿಸಿದ್ದೇವೆ ಮತ್ತು ಉನ್ನತೀಕರಿಸಿದ್ದೇವೆ. ನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದೊಂದಿಗೆ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ನವೀಕರಿಸಿದ್ದೇವೆ. +ಆಯೋಗದ ಮುಂದೆ ದಾಖಲೆ ಸಲ್ಲಿಸಿ : ಕೆಂಪಣ್ಣಗೆ ಕಾಂಗ್ರೆಸ್ ಸವಾಲು +ನಾವು ಭಾರತದೊಂದಿಗೆ ನಮ್ಮ ಪಾಲುದಾರಿಕೆಯನ್ನು ವಿಸ್ತರಿಸಿದ್ದೇವೆ. ಅಭೂತಪೂರ್ವ ರೀತಿಯಲ್ಲಿ ನಾವು ಪೆಸಿಫಿಕ್‍ನಲ್ಲಿ ನಮ್ಮ ಪ್ರಯತ್ನಗಳನ್ನು ಹೆಚ್ಚಿಸಿದ್ದೇವೆ, ಶ್ವೇತಭವನದಲ್ಲಿ ಪೆಸಿಫಿಕ್ ದ್ವೀಪ ನಾಯಕರಿಗೆ ಎರಡು ಐತಿಹಾಸಿಕ ಶೃಂಗಸಭೆಗಳು ಮತ್ತು ಬ್ಲೂ ಪೆಸಿಫಿಕ್‍ನ ಪಾಲುದಾರರ ಸ್ಥಾಪನೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ ಎಂದರು. +ಈ ಪ್ರಮುಖ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ತೆರೆಯಲು ಅಧ್ಯಕ್ಷ ಬಿಡೆನ್ ಕ್ಯಾಂಪ್ ಡೇವಿಡ್‍ನಲ್ಲಿ ಐತಿಹಾಸಿಕ ಯುಎಸ್-ಜಪಾನ್-ದಕ್ಷಿಣ ಕೊರಿಯಾ ತ್ರಿಪಕ್ಷೀಯ ಶೃಂಗಸಭೆಯನ್ನು ಆಯೋಜಿಸಿದ್ದಾರೆ ಎಂದು ಅವರು ಹೇಳಿದರು. ಅವರ ನಾಯಕತ್ವದಲ್ಲಿ ಯುಎಸ್ ಆಸ್ಟ್ರೇಲಿಯಾ, ಭಾರತ ಮತ್ತು ಜಪಾನ್‍ನೊಂದಿಗೆ ಕ್ವಾಡ್ ಅನ್ನು ನಾಯಕ-ಮಟ್ಟದ ಶೃಂಗಸಭೆಗೆ ಏರಿಸಿದೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ನಿರ್ದಿಷ್ಟ ಫಲಿತಾಂಶಗಳನ್ನು ನೀಡಿದೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/eesanje/url_47_166_4.txt b/eesanje/url_47_166_4.txt new file mode 100644 index 0000000000000000000000000000000000000000..1b8e2c592c11960b898102e66120af4e6ecb1af8 --- /dev/null +++ b/eesanje/url_47_166_4.txt @@ -0,0 +1,8 @@ +ಜೆಎನ್‍ಯು ವಿವಿಯಲ್ಲಿ ವಿದ್ಯಾರ್ಥಿಗಳ ಮಾರಮಾರಿ +ನವದೆಹಲಿ,ಫೆ.10- ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ ಕ್ಯಾಂಪಸ್‍ನಲ್ಲಿ ಆರ್‍ಎಸ್‍ಎಸ್ ಸಂಯೋಜಿತ ಎಬಿವಿಪಿ ಮತ್ತು ಎಡ ಬೆಂಬಲಿತ ಗುಂಪುಗಳ ನಡುವೆ ತಡರಾತ್ರಿ ಘರ್ಷಣೆ ನಡೆದಿದ್ದು, ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯನ್ನು ನಡೆಸುವ ಸಭೆಯ ವೇಳೆ ಎರಡೂ ಕಡೆಯ ಕೆಲವು ಸದಸ್ಯರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. +2024 ರ ಜೆಎನ್‍ಯುಎಸ್‍ಯು ಚುನಾವಣೆಗೆ ಚುನಾವಣಾ ಆಯೋಗದ ಸದಸ್ಯರನ್ನು ಆಯ್ಕೆ ಮಾಡಲು ಕ್ಯಾಂಪಸ್‍ನಲ್ಲಿರುವ ಸಬರಮತಿ ಧಾಬಾದಲ್ಲಿ ವಿಶ್ವವಿದ್ಯಾನಿಲಯ ಜನರಲ್ ಬಾಡಿ ಮೀಟಿಂಗ್ (ಯುಜಿಬಿಎಂ) ಸಂದರ್ಭದಲ್ಲಿ ವಿದ್ಯಾರ್ಥಿ ಗುಂಪುಗಳು ಬಡಿದಾಡಿಕೊಂಡಿದ್ದಾರೆ. ಎಡ-ಸಂಯೋಜಿತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್‍ಎಫ್) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಡಯಾಸ್‍ಗೆ ನುಗ್ಗಿ ಪರಸ್ಪರ ಘೋಷಣೆ ಕೂಗಿ ದಾಂಧಲೆ ನಡೆಸಿದ್ದಾರೆ. +ತೆರಿಗೆ ಪಾವತಿಸುವಂತೆ ಮೆಟ್ರೋಗೆ ನೋಟಿಸ್ +ಸಾಮಾಜಿಕ ಮಾಧ್ಯಮದಲ್ಲಿ ಎರಡೂ ಗುಂಪುಗಳು ಹಂಚಿಕೊಂಡ ವೀಡಿಯೊಗಳಲ್ಲಿ, ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜೆಎನ್‍ಯುಎಸ್‍ಯು ಅಧ್ಯಕ್ಷೆ ಐಶೆ ಘೋಷ್ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಮತ್ತು ಗದ್ದಲದ ಸಮಯದಲ್ಲಿ ಅವರ ಮೇಲೆ ನೀರು ಎಸೆದಿದ್ದಾರೆ ಎಂದು ಭಾರತೀಯ ವಿದ್ಯಾರ್ಥಿ ಫೆಡರೇಶನ್ ಹೇಳಿಕೊಂಡಿದೆ. +ಜೆಎನ್‍ಯುಎಸ್‍ಯು ಅಧ್ಯಕ್ಷೆ ಐಶೆ ಘೋಷ್ ಅವರ ಮೇಲೆ ಎಬಿವಿಪಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ ಮತ್ತು ನಾಚಿಕೆಯಿಲ್ಲದೆ ಹಲ್ಲೆ ನಡೆಸಿದ್ದಾರೆ. ಅವರು ಆಕೆಯ ಮೇಲೆ ನೀರು ಸುರಿದಿದ್ದಾರೆ. ಜೆಎನ್‍ಯು ವಿದ್ಯಾರ್ಥಿನಿಯ ವಿರುದ್ಧ ಇಂತಹ ಅವಮಾನಕರ ವರ್ತನೆಯನ್ನು ಯಾವುದೇ ಬೆಲೆಗೆ ಸಹಿಸಬಾರದು ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಎಬಿವಿಪಿ-ಜೆಎನ್‍ಯು ಕಾರ್ಯದರ್ಶಿ ವಿಕಾಸ್ ಪಟೇಲ್ ಮೇಲೆ ಡಿಎಸ್‍ಎಫ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಬಲಪಂಥೀಯ ವಿದ್ಯಾರ್ಥಿಗಳ ಗುಂಪು ಆರೋಪಿಸಿದೆ. ವೈಯಕ್ತಿಕ ಅಂಕಗಳನ್ನು ಇತ್ಯರ್ಥಪಡಿಸಲು ನಡೆದ ಗಲಾಟೆಯಲ್ಲಿ ಇನ್ನೊಬ್ಬ ವಿದ್ಯಾರ್ಥಿ ಪ್ರಶಾಂತೋ ಬಾಗ್ಚಿಗೆ ಥಳಿಸಲಾಗಿದೆ ಎಂದು ಅವರು ಹೇಳಿದರು. +ಎಂಎ ಅಂತಿಮ ವರ್ಷದ ವಿದ್ಯಾರ್ಥಿ ಪ್ರಫುಲ್ಲ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಲಾಗಿದೆ ಎಂದು ಎಬಿವಿಪಿ ಆರೋಪಿಸಿದೆ. ಎಬಿವಿಪಿಯನ್ನು ಬೆಂಬಲಿಸಿದ ಕಾರಣಕ್ಕಾಗಿ ಬಿಎ ಪರ್ಷಿಯನ್ ಎಂಬ ವಿಕಲಚೇತನ ವಿದ್ಯಾರ್ಥಿ ದಿವ್ಯಪ್ರಕಾಶ್ ಅವರನ್ನು ಎಡ ಗುಂಪುಗಳ ವಿದ್ಯಾರ್ಥಿಗಳು ಥಳಿಸಿದ್ದಾರೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_166_5.txt b/eesanje/url_47_166_5.txt new file mode 100644 index 0000000000000000000000000000000000000000..be59d5303700be43ca1e13290b9841a198f226c4 --- /dev/null +++ b/eesanje/url_47_166_5.txt @@ -0,0 +1,5 @@ +ಉಗ್ರ ಬೆಂಬಲಿಗರ ಮೇಲೆ ಎನ್‍ಐಎ ರೇಡ್ +ಶ್ರೀನಗರ, ಫೆ. 10 (ಪಿಟಿಐ) ಭಯೋತ್ಪಾದಕರಿಗೆ ಹಣ ನೀಡುವುದು ಮತ್ತು ಯುವಕರನ್ನು ಆಮೂಲಾಗ್ರೀಕರಣಗೊಳಿಸುವಲ್ಲಿ ತೊಡಗಿರುವ ಅಂಶಗಳ ವಿರುದ್ಧದ ಕಾರ್ಯಾಚರಣೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ದಾಳಿಗಳನ್ನು ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಜಮ್ಮು ನಗರದ ಗುಜ್ಜರ್ ನಗರ ಮತ್ತು ಶಾಹೀದಿ ಚೌಕ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಅವರು ಹೇಳಿದರು. ಅಧ್ಯಕ್ಷರ ಮನೆ ಸೇರಿದಂತೆ ಅದರ ಮೂವರು ಪದಾಧಿಕಾರಿಗಳಿಗೆ ಸಂಬಂಧಿಸಿದ ಖಾಸಗಿ ಶಾಲೆ ಮತ್ತು ಆವರಣದ ಮೇಲೆ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. +ಪ್ರಯೋಗಾತ್ಮಕ ಸ್ಕ್ರೀನ್ ಪ್ಲೇ ಜೂನಿ +ಕುಲ್ಗಾಮ್ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆ ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ನಾಯಕರ ನಿವಾಸಗಳನ್ನು ಶೋಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಜಿ ಜಮಾತ್ ಮುಖ್ಯಸ್ಥ ಶೇಖ್ ಗುಲಾಮ್ ಹಸನ್ ಮತ್ತು ಮತ್ತೊಬ್ಬ ನಾಯಕ ಸಯರ್ ಅಹ್ಮದ್ ರೇಶಿ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದರು. ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರವನ್ನು ಫೆಬ್ರವರಿ 2019 ರಲ್ಲಿ ಐದು ವರ್ಷಗಳ ಕಾಲ ಕೇಂದ್ರವು ನಿಷೇಧಿಸಿತು. \ No newline at end of file diff --git a/eesanje/url_47_166_6.txt b/eesanje/url_47_166_6.txt new file mode 100644 index 0000000000000000000000000000000000000000..97e318edd7b91af88e05a2f7dbe9a68e51989a77 --- /dev/null +++ b/eesanje/url_47_166_6.txt @@ -0,0 +1,10 @@ +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನಟಿ ಕಂಗನಾ ರಣಾವತ್ ಸ್ಪರ್ಧೆ..? +ನವದೆಹಲಿ,ಫೆ.9-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಕೂಡ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಎಂಬ ಮಾತು ಹರಿದಾಡುತ್ತಿದೆ. 2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಅವುಗಳಲ್ಲಿ ಅತೀ ಹೆಚ್ಚು ಬಿಜೆಪಿ ಸೋತಿರುವ ಕ್ಷೇತ್ರಗಳೇ ಆಗಿರುತ್ತದೆ ಎಂದು ತಿಳಿದು ಬಂದಿದೆ. +ಆ ಪೈಕಿ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರವೂ ಸೇರಿದ್ದು, ಚುನಾವಣಾ ಘೋಷಣೆಗೂ ಮೊದಲೇ ಬಿಜೆಪಿ ಇಲ್ಲಿ ತನ್ನ ಭದ್ರಕೋಟೆಯನ್ನು ಬಲಿಷ್ಠಪಡಿಸಲು ನಿರ್ಧರಿಸಿದೆ. ಹಿಮಾಚಲ ಪ್ರದೇಶದ ಏಕೈಕ ಲೋಕಸಭಾ ಕ್ಷೇತ್ರವಾಗಿದ್ದು, ಇಲ್ಲಿ ಸದ್ಯ ಕಾಂಗ್ರೆಸ್ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದೆ. ಇದಕ್ಕೂ ಮೊದಲ ಈ ಕ್ಷೇತ್ರ ಬಿಜೆಪಿಯದ್ದಾಗಿತ್ತು. ಆದರೆ 2021ರಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿತ್ತು. +ಸದ್ಯ ಚುನಾವಣೆ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಮಂಡಿ ಲೋಕಸಭಾ ಕ್ಷೇತ್ರವೂ ಇದರಲ್ಲಿ ಸೇರಿದೆ. ಇಲ್ಲಿಯೂ ನಿಗದಿತ ಸಮಯಕ್ಕಿಂತ ಮೊದಲು ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಕಳೆದುಹೋದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಯಕ್ಕಿಂತ ಮುಂಚಿತವಾಗಿ ಪ್ರಚಾರವನ್ನು ಪ್ರಾರಂಭಿಸುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ. + : ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ +ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಹೆಸರು ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲವು ಸಮಯದಿಂದ ಕಂಗನಾ ರಣಾವತ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ರ್ಪಸಲಿದ್ದಾರೆ ಎಂಬ ಮಾತುಗಳು ಸಿಕ್ಕಾಪಟ್ಟೆ ಹರಿದಾಡಿತ್ತು. ಕಂಗನಾ ರಣಾವತ್ ಕೂಡ ಇದನ್ನು ಅಲ್ಲಗಳೆಯದೆ ಚುನಾವಣೆಗೆ ಸ್ರ್ಪಧಿಸುವ ಬಗ್ಗೆ ಪರೋಕ್ಷವಾಗಿ ಉತ್ಸುಕತೆ ತೋರಿದ್ದರು. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. +ಇನ್ನುಳಿದಂತೆ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಅವರ ಹೆಸರು ಕೂಡ ಮಂಡಿ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಸಾಲಿನಲ್ಲಿ ಪ್ರಬಲವಾಗಿ ಕೇಳಿಬಂದಿದ್ದು, ಆದರೆ ಜೈರಾಮ್ ಠಾಕೂರ್ ಅವರು ಚುನಾವಣೆಗೆ ಸ್ರ್ಪಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ. +ಲಾಲೂ ಪತ್ನಿ, ಪುತ್ರಿಯರಿಗೆ ಮಧ್ಯಂತರ ಜಾಮೀನು ಮಂಜೂರು +ಇದಲ್ಲದೆ, ಬಿಜೆಪಿಯ ಮಾಜಿ ಅಭ್ಯರ್ಥಿ ಬ್ರಿಗೇಡಿಯರ್ ಖುಶಾಲ್ ಠಾಕೂರ್, ಮನಾಲಿ ಪುರಸಭೆಯ ಅಧ್ಯಕ್ಷ ಮತ್ತು ಎಚ್‍ಪಿ ಮುನ್ಸಿಪಲ್ ಕಾಪೆರ್ರೇಷನ್/ಉಪಾಧ್ಯಕ್ಷ ಫೆಡರೇಶನ್ ಅಧ್ಯಕ್ಷ ಚಮನ್ ಕಪೂರ್, ಬಿಜೆಪಿ ನಾಯಕ ಅಜಯ್ ರಾಣಾ ಮತ್ತು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಿದ್ದ ಆಶ್ರಯ ಶರ್ಮಾ ಅವರ ಪ್ರಮುಖ ಹೆಸರುಗಳು ಪ್ರಮುಖವಾಗಿ ಪ್ರಸ್ತಾಪವಾಗಿವೆ. +ಇನ್ನು ಕಂಗನಾ ಕೂಡ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದು, ಇದರೊಂದಿಗೆ ಮಾಜಿ ಸಂಸದ ಮಹೇಶ್ವರ್ ಸಿಂಗ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ವಯಸ್ಸನ್ನು ಪರಿಗಣಿಸಿ ಪಕ್ಷ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. \ No newline at end of file diff --git a/eesanje/url_47_166_7.txt b/eesanje/url_47_166_7.txt new file mode 100644 index 0000000000000000000000000000000000000000..1f3f1edcd47cd32d489c3f7e64f521e678e88aa9 --- /dev/null +++ b/eesanje/url_47_166_7.txt @@ -0,0 +1,7 @@ +ಮಗಳ ಸ್ನೇಹಿತೆ ಮೇಲೆ ಅತ್ಯಾಚಾರವೆಸಗಿದ್ದವನ ಬಂಧನ +ಜಜ್‍ಪುರ, ಫೆ.9 (ಪಿಟಿಐ) ತನ್ನ ಮಗಳ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಆಕೆಯ ಅಶ್ಲೀಲ ಫೋಟೋಗಳನ್ನು ಅಪ್‍ಲೋಡ್ ಮಾಡಿದ ಆರೋಪದ ಮೇಲೆ 54 ವರ್ಷದ ವ್ಯಕ್ತಿಯನ್ನು ಒಡಿಶಾದ ಜಜ್‍ಪುರ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಪಾನಿಕೋಯಿಲಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ಆರೋಪಿಯು ತನ್ನ ಸ್ನೇಹಿತನ ತಂದೆಯಾಗಿದ್ದಾನೆ. ಆರೋಪಿಯು ತನ್ನ ಸ್ನೇಹಿತೆಯ ಮನೆಗೆ ಹಲವು ಬಾರಿ ಭೇಟಿ ನೀಡಿದ್ದರಿಂದ ಆಕೆಗೆ ಪರಿಚಿತನಾಗಿದ್ದ. +ಕಳೆದ ವರ್ಷ ಅವಳನ್ನು ಭೇಟಿಯಾಗಲು ನನ್ನ ಸ್ನೇಹಿತೆಯ ಮನೆಗೆ ಹೋಗಿದ್ದೆ, ನಾನು ಅಲ್ಲಿಗೆ ಬಂದಾಗ ನನ್ನ ಸ್ನೇಹಿತೆ ಮತ್ತು ಅವಳ ತಾಯಿ ಮನೆಯಲ್ಲಿ ಇರಲಿಲ್ಲ, ನಾನು ನನ್ನ ಸ್ನೇಹಿತೆಯನ್ನು ವಿಚಾರಿಸಿದಾಗ, ಮನೆಯಲ್ಲಿ ಒಬ್ಬರೇ ಇದ್ದ ಅವಳ ತಂದೆ ನನಗೆ ಅವಳು ಹೊರಗೆ ಹೋಗಿದ್ದಾಳೆಂದು ಹೇಳಿದರು. ಆದ್ದರಿಂದ ನಾನು ಅವಳನ್ನು ಭೇಟಿಯಾಗಲು ಮನೆಯಲ್ಲಿ ಕಾಯುತ್ತಿದ್ದೆ. ಪರಿಸ್ಥಿತಿಯ ಲಾಭವನ್ನು ಬಳಸಿಕೊಂಡು ಅವನು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. +ಮದರಸಾ ಧ್ವಂಸ ಪ್ರಕರಣದಿಂದ ಉದ್ನಿಗ್ನಗೊಂಡ ಉತ್ತರಾಖಂಡ +ಆದಾಗ್ಯೂ, ಆರೋಪಿಯು ಘಟನೆಗೆ ಕ್ಷಮೆಯಾಚಿಸಿದ್ದರಿಂದ ಅವಳು ಅದನ್ನು ತನ್ನ ಸ್ನೇಹಿತ ಅಥವಾ ಬೇರೆ ಯಾರಿಗಾದರೂ ಬಹಿರಂಗಪಡಿಸಲಿಲ್ಲ. ಕಳೆದೆರಡು ತಿಂಗಳ ಹಿಂದೆ ಕಟಕ್‍ನಲ್ಲಿರುವ ಸಂಬಂಧಿಕರ ಮನೆಯಲ್ಲಿ ಆರೋಪಿಗಳು ಮತ್ತೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆ ಹೇಳಿದ್ದಾರೆ. ಈ ಕೃತ್ಯವನ್ನು ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ. +ನಂತರ ಆರೋಪಿಗಳು ದೈಹಿಕ ಸಂಬಂಧವನ್ನು ಮುಂದುವರಿಸದಿದ್ದರೆ ತಮ್ಮ ಆತ್ಮೀಯ ಕ್ಷಣಗಳ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಏತನ್ಮಧ್ಯೆ, ಸಂತ್ರಸ್ತೆಯ ಮದುವೆಯನ್ನು ಪ್ರದೇಶದ ಯುವಕನೊಂದಿಗೆ ನಿಶ್ಚಯಿಸಲಾಯಿತು. +ಆರೋಪಿಯು ಮದುವೆಯ ಬಗ್ಗೆ ತಿಳಿದುಕೊಂಡು ಸಂಬಂಧವನ್ನು ಮುಂದುವರಿಸುವಂತೆ ಕೇಳಿಕೊಂಡಿದ್ದ ಆದರೆ ಮಹಿಳೆ ತನ್ನ ಮದುವೆ ಆಗಲೇ ನಿಶ್ಚಯವಾಗಿರುವ ಕಾರಣ ಆತನೊಂದಿಗೆ ಸಂಬಂಧ ಹೊಂದಲು ನಿರಾಕರಿಸಿದ್ದಳು ಹೀಗಾಗಿ ಆತ ತನ್ನ ಬಳಿ ಇದ್ದ ಮೋಬೈಲ್ ದೃಶ್ಯಗಳನ್ನು ಬಹಿರಂಗಗೊಳಿಸುವ ಬೆದರಿಕೆ ಹಾಕಿದ್ದರಿಂದ ಸಂತ್ರಸ್ಥೆ ಪೊಲೀಸರಿಗೆ ದೂರು ನೀಡಿದ್ದರು. \ No newline at end of file diff --git a/eesanje/url_47_166_8.txt b/eesanje/url_47_166_8.txt new file mode 100644 index 0000000000000000000000000000000000000000..cb16c4b75e0ca4effcff679462f841c9e9b93ef6 --- /dev/null +++ b/eesanje/url_47_166_8.txt @@ -0,0 +1,14 @@ + : ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ +ನವದೆಹಲಿ,ಫೆ.9- ಹಸಿರುಕ್ರಾಂತಿಯ ಹರಿಕಾರ ಡಾ.ಎಂ.ಎಸ್.ಸ್ವಾಮಿನಾಥನ್, ಮಾಜಿ ಪ್ರಧಾನಿಗಳಾದ ಚೌಧರಿ ಚರಣಸಿಂಗ್ ಮತ್ತು ಪಿ.ವಿ.ನರಸಿಂಹರಾವ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಘೋಷಣೆ ಮಾಡಲಾಗಿದೆ.1990ರ ದಶಕದಲ್ಲಿ ಆರ್ಥಿಕ ಉದಾರೀಕರಣಕ್ಕೆ ಮುನ್ನುಡಿ ಬರೆದಿದ್ದ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್, ರೈತ ನಾಯಕ ಚೌಧರಿ ಚರಣ್ ಸಿಂಗ್ ಹಾಗೂ ಹಸಿರುಕ್ರಾಂತಿಯ ಹರಿಕಾರನೆಂದೇ ಖ್ಯಾತಿಯಾಗಿದ್ದ ಡಾ.ಎಂ.ಎಸ್.ಸ್ವಾಮಿನಾಥನ್ ಅವರ ಅದ್ವೀತಿಯ ಸಾಧನೆಗಾಗಿ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿಯನ್ನು ಪ್ರಕಟಿಸಿದೆ. +ಇತ್ತೀಚೆಗಷ್ಟೇ ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಹಾಗು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಈ ಮೂವರು ಸಾಧಕರಿಗೂ ಪ್ರಶಸ್ತಿ ಲಭಿಸಿದೆ.ಪ್ರಸಕ್ತ ವರ್ಷದಲ್ಲಿ ಕೇಂದ್ರ ಸರ್ಕಾರ ಐದು ಭಾರತ ರತ್ನಗಳನ್ನು ಘೋಷಣೆ ಮಾಡಿದಂತಾಗಿದೆ. +ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಅಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದು, ಈ ಮೂವರು ಸಾಧಕರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು ಮರಣೋತ್ತರವಾಗಿ ನೀಡುತ್ತಿರುವುದು ನನಗೆ ವೈಯಕ್ತಿಕವಾಗಿ ಖುಷಿ ತಂದಿದೆ ಎಂದು ಪೋಸ್ಟ್ ಮಾಡಿದ್ದಾರೆ. +ರಾಜಕೀಯ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದ ಆಂಧ್ರಪ್ರದೇಶದ ಹೆಮ್ಮೆಯ ಪುತ್ರ ಪಿ.ವಿ.ನರಸಿಂಹ ರಾವ್, ರೈತರಿಗೆ ತಮ್ಮ ಜೀವವನ್ನೇ ಮುಡುಪಾಗಿಟ್ಟಿದ್ದ ಉತ್ತರಪ್ರದೇಶದ ಹೆಮ್ಮೆಯ ಚೌಧರಿಯ ಚರಣ್ ಸಿಂಗ್ ಮತ್ತು ಭಾರತದ ಕೃಷಿ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ. +ಚೌಧರಿ ಚರಣ್ ಸಿಂಗ್:ದೇಶದ 5ನೇ ಪ್ರಧಾನಿಯಾಗಿ 1979, ಜುಲೈ 28ರಂದು ಅಧಿಕಾರ ಸ್ವೀಕರಿಸಿದ್ದ ಚೌಧರಿ ಚರಣ್ ಸಿಂಗ್ ಅವರು, 1980 ಜನವರಿ 14ರವರೆಗೆ ಆಡಳಿತ ನಡೆಸಿದ್ದರು. ಉತ್ತರಪ್ರದೇಶದ ಮೀರತ್‍ನಲ್ಲಿ 1902ರಂದು ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ್ದ ಅವರು ರೈತ ನಾಯಕನೆಂದೇ ಖ್ಯಾತಿಯಾದವರು. +ಚರಣ್ ಸಿಂಗ್ ಅವರು ತಮ್ಮ ಕಾಲದಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದರು. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಹೀಗಾಗಿ ಅವರ ಜನ್ಮದಿನವಾದ 23ರಂದು ರೈತ ದಿನವನ್ನಾಗಿ ಆಚರಿಸಲಾಗುತ್ತದೆ. ಹಲವಾರು ಕೃಷಿ ಸ್ನೇಹಿ ನೀತಿಗಳನ್ನು ರೂಪಿಸಿದ ಸಿಂಗ್ ಅವರು 1987ರಲ್ಲಿ ನಿಧನರಾದರು. +ಪಿ.ವಿ.ನರಸಿಂಹರಾವ್:1921ರ ಜೂನ್ 28ರಂದು ಈಗಿನ ತೆಲಂಗಾಣದ ಕರೀಂನಗರ ಜಿಲ್ಲೆಯ ವಂಗಾರಾ ಗ್ರಾಮದಲ್ಲಿ ಜನಿಸಿದರು. ಅವರ ತವರೂರು ಉತ್ತರ ಮತ್ತು ದಕ್ಷಿಣದ ಸೇತುವಿವಂತಿತ್ತು. ಗ್ರಾಮಸ್ಥರು ತೆಲುಗು, ಹಿಂದಿ, ಮರಾಠಿ, ಕನ್ನಡ, ಒರಿಯಾ ಭಾಷೆಗಳನ್ನು ಅರಿತಿದ್ದರು. ನಿಜಾಮರ ನಾಡಾಗಿದ್ದರಿಂದ ಉರ್ದುವಿನ ಪ್ರಭಾವ ಇತ್ತು. ನರಸಿಂಹರಾಯರು 15 ಭಾಷೆಗಳನ್ನು ಬಲ್ಲವರಾಗಿದ್ದರು. +2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್ ಡಿಎ ಸರಕಾರ, ಯಾವುದೇ ವಿಳಂಬಕ್ಕೆ ಕಾರಣವಿಲ್ಲದಂತೆ ಮಾಜಿ ಪ್ರಧಾನಿ ನರಸಿಂಹ ರಾವ್ ಅವರ ಸ್ಮಾರಕವನ್ನು ದಿಲ್ಲಿಯಲ್ಲಿ ನಿರ್ಮಿಸಿತು. ಆಗ ನಗರಾಭಿವೃದ್ಧಿ ಸಚಿವರಾಗಿದ್ದ ವೆಂಕಯ್ಯನಾಯ್ಡು ಖುದ್ದಾಗಿ ಸ್ಮಾರಕ ನಿರ್ಮಾಣದ ಮೇಲುಸ್ತುವಾರಿ ವಹಿಸಿಕೊಂಡಿದ್ದರು. +ಪ್ರಧಾನಿಯಾಗಿ ಪಿ.ವಿ.ನರಸಿಂಹ ರಾವ್ ಅವರು ಅಧಿಕಾರ ಸ್ವೀಕರಿಸಿದಾಗ ದೇಶ ಆರ್ಥಿಕವಾಗಿ ದಿವಾಳಿಯ ಅಂಚಿನಲ್ಲಿತ್ತು. ಸರಕಾರಕ್ಕೆ ಬಹುಮತ ಇರಲಿಲ್ಲ. ಪಕ್ಷದ ಒಳಗಿನಲ್ಲೂ ಅವರಿಗೆ ವಿರೋಗಳಿದ್ದರು. ದಶದಿಕ್ಕುಗಳಿಂದ ಪ್ರತಿಕೂಲತೆಗಳನ್ನು ಎದುರಿಸಿಯೂ, ದೇಶವನ್ನು ದಿವಾಳಿತನದ ಗಂಡಾಂತರಗಳಿಂದ ಯಶಸ್ವಿಯಾಗಿ ಪಾರು ಮಾಡಿದರು. ಆರ್ಥಿಕ ಉದಾರೀಕರಣದ ಬಾಗಿಲನ್ನು ತೆರೆದು ನವ ಭಾರತದ ಅಭ್ಯುದಯಕ್ಕೆ, ಜಿಡಿಪಿ ಬೆಳವಣಿಗೆಗೆ ಬುನಾದಿ ನಿರ್ಮಿಸಿದರು. ತೆಲಂಗಾಣದ ಗ್ರಾಮವೊಂದರಲ್ಲಿ ಜನಿಸಿ, ಕಡು ಕಷ್ಟದ ಬಾಲ್ಯವನ್ನುಂಡರೂ, ಮೇಧಾವಿಯಾಗಿ, ಬಹುಭಾಷಾ ಪಂಡಿತರಾಗಿ, ಮುತ್ಸದ್ಧಿಯಾಗಿ ಬೆಳೆದ ಅತ್ಯಪರೂಪದ ರಾಜಕಾರಣಿ. + . , ’ . - …../ + , , . , . …../lihdk2BzDU +हमारी सरकार का यह सौभाग्य है कि देश के पूर्व प्रधानमंत्री चौधरी चरण सिंह जी को भारत रत्न से सम्मानित किया जा रहा है। यह सम्मान देश के लिए उनके अतुलनीय योगदान को समर्पित है। उन्होंने किसानों के अधिकार और उनके कल्याण के लिए अपना पूरा जीवन समर्पित कर दिया था। उत्तर प्रदेश के…../gB5LhaRkIv +ಹನುಮ ಧ್ವಜ ಕಿಚ್ಚು : ಇಂದು ಮಂಡ್ಯ- ಕೆರೆಗೋಡು ಬಂದ್ \ No newline at end of file diff --git a/eesanje/url_47_166_9.txt b/eesanje/url_47_166_9.txt new file mode 100644 index 0000000000000000000000000000000000000000..d0e8c26e8a9d76586c8680fc25ead5633b107f22 --- /dev/null +++ b/eesanje/url_47_166_9.txt @@ -0,0 +1,5 @@ +ಪಶ್ಚಿಮ ಬಂಗಾಳ : ದೋಣಿ ಮುಳುಗಿ ಐವರು ನೀರುಪಾಲು +ಹೌರಾ, ಫೆ 9 (ಪಿಟಿಐ) ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‍ಪುರ್ ಮತ್ತು ಬಗ್ನಾನ್‍ನಿಂದ 19 ಜನರ ಗುಂಪು ಪಶ್ಚಿಮ ಮೇದಿನಿಪುರ ಜಿಲ್ಲೆಯ ದಾಸ್‍ಪುರದ ಟ್ರಿಬೇನಿ ಪಾರ್ಕ್‍ಗೆ ಪಿಕ್ನಿಕ್‍ಗೆ ತೆರಳಿತ್ತು. ಗುರುವಾರ ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ನದಿಯ ಮಧ್ಯದಲ್ಲಿ ದೋಣಿ ಮಗುಚಿ ಬಿದ್ದಿದೆ. +ಕಿರುಚಾಟ ಕೇಳಿ ಇತರ ದೋಣಿಗಳು ಸ್ಥಳಕ್ಕೆ ಧಾವಿಸಿ ಸಾಧ್ಯವಾದಷ್ಟು ಜನರನ್ನು ರಕ್ಷಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಐದು ಜನರ ಪತ್ತೆ ಸಾಧ್ಯವಾಗಿಲ್ಲ, ಶೋಧ ನಡೆಯುತ್ತಿದೆ ಎಂದು ಅವರು ಹೇಳಿದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ರಕ್ಷಣಾ ಕಾರ್ಯಕ್ಕಾಗಿ ಎರಡು ವಿಪತ್ತು ನಿರ್ವಹಣಾ ತಂಡಗಳು ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ಕರೆತರಲಾಗಿದೆ ಎಂದು ಹೌರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಪ್ರಿಯಾ ಪಿ ತಿಳಿಸಿದ್ದಾರೆ. +ಹಾನಿಕಾರಕ ವರದಿಯೊಂದರಲ್ಲಿ ಜೋ ಬಿಡೆನ್ ಹೆಸರು ಪ್ರಸ್ತಾಪ +ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವಾತಿ ಭಂಗಾಲಿಯಾ ತಿಳಿಸಿದ್ದಾರೆ. ರಕ್ಷಿಸಲ್ಪಟ್ಟವರಲ್ಲಿ ಕೆಲವರನ್ನು ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_167_1.txt b/eesanje/url_47_167_1.txt new file mode 100644 index 0000000000000000000000000000000000000000..833f27ef7c4221a28d9bcf50fb4c36bad5450328 --- /dev/null +++ b/eesanje/url_47_167_1.txt @@ -0,0 +1,8 @@ +ಕಣಿವೆಯಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರಿ ಶಸ್ತ್ರಾಸ್ತ್ರ ವಶ +ಶ್ರೀನಗರ, ಫೆ.9 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಎರಡು ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆ ಹಚ್ಚಿದ್ದು ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಶಂಕಿತ ಭಯೋತ್ಪಾದಕ ಸಹಚರರನ್ನು ಸಹ ಬಂಧಿಸಲಾಗಿದೆ, ಇದು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಾಗಣೆಯನ್ನು ಪಡೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಪೋರ್ ಪೊಲೀಸ್ ಠಾಣಾ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಭಯೋತ್ಪಾದನೆ ಸಂಬಂಧಿತ ಪ್ರಕರಣದ ತನಿಖೆ ನಡೆಸುತ್ತಿರುವಾಗ ಪೊಲೀಸರು ಕಾರ್ಯಸಾಧ್ಯವಾದ ದಾರಿಗಳನ್ನು ಅಭಿವೃದ್ಧಿಪಡಿಸಿದ್ದಾರೆ ಎನ್ನಲಾಗಿದೆ. +ಹತ್ಯೆಗೀಡಾದ ಭಯೋತ್ಪಾದಕ ಕಮಾಂಡರ್ ಅಬ್ದುಲ್ ಕಯೂಮ್ ನಜರ್ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಅಲ್ಲಿ ಭದ್ರತಾ ಪಡೆಗಳು ಕಾಂಕ್ರೀಟ್ ಅಡಗುತಾಣವನ್ನು ಕಂಡುಕೊಂಡರು. +ಶೋಧನೆಯ ಸಮಯದಲ್ಲಿ, ಅಬ್ದುಲ್ ರಶೀದ್ ನಜರ್ ಅವರ ವಸತಿ ಮನೆಯೊಳಗೆ ರಹಸ್ಯ ಕಾಂಕ್ರೀಟ್ ಅಡಗುತಾಣವು ಕಂಡುಬಂದಿದೆ, ಅದರಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳಾದ ಐಇಡಿ, ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, ಲೈವ್ ಮದ್ದುಗುಂಡುಗಳು ಮತ್ತು ಇತರ ದೋಷಾರೋಪಣೆಯ ಎಲೆಕ್ಟ್ರಾನಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಜನತಾದರ್ಶನಕ್ಕೆ ಬಂದು ಶಕ್ತಿಸೌಧ ಕಣ್ತುಂಬಿಕೊಂಡ ಜನರು +ಹತ್ಯೆಗೀಡಾದ ಭಯೋತ್ಪಾದಕ ಕಮಾಂಡರ್‍ನ ಸಂಬಂಧಿ ಅಬ್ದುಲ್ ರಶೀದ್ ನಜರ್‍ನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ವಿಚಾರಣೆಯ ಸಮಯದಲ್ಲಿ, ಸೋಪೋರ್‍ನ ನಿವಾಸಿ ಅಬ್ದುಲ್ ಜಮೀಲ್ ಲಾರಾ ಎಂಬಾತ ಇದೇ ರೀತಿಯ ವಿಧ್ವಂಸಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಬಹಿರಂಗಪಡಿಸಿದ್ದಾನೆ ಎಂದು ಅವರು ಹೇಳಿದರು. +ಲಾರಾ ಅವರ ನಿವಾಸದಲ್ಲಿ ನಡೆಸಿದ ಶೋಧದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಮತ್ತು ಇತರ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲು ಕಾರಣವಾಯಿತು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_167_10.txt b/eesanje/url_47_167_10.txt new file mode 100644 index 0000000000000000000000000000000000000000..db74ccafe93d68be6d58a74ec980ca897256ebbf --- /dev/null +++ b/eesanje/url_47_167_10.txt @@ -0,0 +1,6 @@ +ಧಾರ್ಮಿಕ ಕಾರ್ಯಕ್ರಮದಲ್ಲಿ ಊಟ ಮಾಡಿದ 2,000 ಜನ ಅಸ್ವಸ್ಥ +ಮುಂಬೈ, ಫೆ.7- ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಲೋಹಾ ತಹಸಿಲ್ ವ್ಯಾಪ್ತಿಯ ಕೋಷ್ಟವಾಡಿ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೊಂದರಲ್ಲಿ ಆಹಾರ ಸೇವಿಸಿದ ಸುಮಾರು 2000 ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. +ಸಾವರಗಾಂವ್, ಪೊಸ್ಟ್ವಾಡಿ, ರಿಸಂಗಾವ್ ಮತ್ತು ಮಸ್ಕಿ ಗ್ರಾಮಗಳ ಜನರು ಒಟ್ಟುಗೂಡಿ ಧಾರ್ಮಿಕ ಪ್ರವಚನದಲ್ಲಿ ಪಾಲ್ಗೊಂಡು ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಆಹಾರ ಸೇವಿಸಿದರು. ಇಂದು ಬೆಳಿಗ್ಗೆ ಜನರು ವಾಂತಿ, ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಸುಮಾರು 150 ಜನರನ್ನು ನಾಂದೇಡ್ನ ಲೋಹಾದಲ್ಲಿರುವ ಉಪ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ನಂತರ 870 ರೋಗಿಗಳನ್ನು ಶಂಕರರಾವ್ ಚೌಹಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಕಡೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಾಂದೇಡ್ನ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗತ್ಯವಿದ್ದಲ್ಲಿ ಹೆಚ್ಚಿನ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ. +ಡಿಕೆಶಿ ಆಪ್ತರಿಗೆ ಐಟಿ ಶಾಕ್ +ಅಸ್ವಸ್ಥಗೊಂಡಿರುವ ಜನರ ಗ್ರಾಮಗಳಲ್ಲಿ ಸಮೀಕ್ಷೆಗಾಗಿ ಐದು ತಂಡಗಳನ್ನು ನಿಯೋಜಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ಕ್ಷಿಪ್ರ ಪ್ರಕ್ರಿಯೆ ತಂಡವನ್ನು ಕೂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಎಲ್ಲರ ಆರೋಗ್ಯ ಸ್ಥಿರವಾಗಿದೆ. ಚಿಕಿತ್ಸೆ ನಂತರ ರೋಗಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_167_11.txt b/eesanje/url_47_167_11.txt new file mode 100644 index 0000000000000000000000000000000000000000..c6ece02c252c7e66fe5e163a3bd98ce20ee46f85 --- /dev/null +++ b/eesanje/url_47_167_11.txt @@ -0,0 +1,6 @@ +ತೆರೆದ ಬಾವಿಗೆ ಬಿದ್ದ 2 ವರ್ಷದ ಮಗು ಪ್ರಾಣಾಪಾಯದಿಂದ ಬಚಾವ್ +ಜಾಮ್‍ನಗರ, ಫೆ.7 (ಪಿಟಿಐ) : ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗುವನ್ನು ರಕ್ಷಿಸುವಲ್ಲಿ ಗುಜರಾತ್‍ನ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ಧಾರೆ. ಗುಜರಾತ್‍ನ ಜಾಮ್‍ನಗರ ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕನೊಬ್ಬ 15 ಅಡಿ ಆಳದ ಬೋರ್‍ವೆಲ್‍ಗೆ ಬಿದ್ದಿದ್ದು, ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಆರು ಗಂಟೆಗಳ ಕಾರ್ಯಾಚರಣೆಯ ನಂತರ ಜೀವಂತವಾಗಿ ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಗೋವಾನಾ ಗ್ರಾಮದ ಕೃಷಿ ಭೂಮಿಯಲ್ಲಿ ಹೊಲದಲ್ಲಿ ಆಟವಾಡುತ್ತಿದ್ದ ರೈತನ ಎರಡು ವರ್ಷದ ಮಗು ತೆರೆದ ಬೋರ್‍ವೆಲ್‍ಗೆ ಬಾಲಕ ಬಿದ್ದಿದ್ದಾನೆ ಎಂದು ಜಾಮ್‍ನಗರ ಜಿಲ್ಲಾಧಿಕಾರಿ ಬಿ ಕೆ ಪಾಂಡ್ಯ ತಿಳಿಸಿದ್ದಾರೆ.ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯನ್ನು ಒಳಗೊಂಡ ರಕ್ಷಣಾ ತಂಡಗಳು ಸತತ ಆರು ಗಂಟೆಗಳ ಕಾರ್ಯಚರಣೆ ನಡೆಸಿ ಮಗುವನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. +ಅವರು ಬೋರ್‍ವೆಲ್‍ಗೆ ಆಮ್ಲಜನಕವನ್ನು ಪೂರೈಸಿದರು ಮತ್ತು ಮಗುವನ್ನು ತಲುಪಲು ಸಮಾನಾಂತರ ಹೊಂಡವನ್ನು ಅಗೆಯುವ ಮೂಲಕ ಮಗುವನ್ನು ಹೊರ ತರಲಾಗಿದೆ. ಮಧ್ಯರಾತ್ರಿ 12.30ರ ಸುಮಾರಿಗೆ ಬಾಲಕನನ್ನು ಹೊರ ತೆಗೆಯಲಾಯಿತು. ಕೂಡಲೇ ಅವರನ್ನು ಜಾಮ್‍ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇತ್ತೀಚಿನ ಘಟನೆಯೊಂದಿಗೆ, ತೆರೆದ ಮತ್ತು ಕೈಬಿಟ್ಟ ಬೋರ್‍ವೆಲ್‍ಗಳಿಂದ ಉಂಟಾಗುವ ಅಪಾಯಗಳು ಮತ್ತೆ ಮುನ್ನೆಲೆಗೆ ಬಂದಿವೆ. +ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಕ್ಸಲರ ಓಡಾಟ, ಹೈಅಲರ್ಟ್ ಘೋಷಣೆ +ಇದಕ್ಕೂ ಮುನ್ನ ಜನವರಿ 1 ರಂದು ಗುಜರಾತ್‍ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿ ಬೋರ್‍ವೆಲ್‍ಗೆ ಬಿದ್ದು ಸಾವನ್ನಪ್ಪಿದ್ದಳು. ಕಳೆದ ವರ್ಷ ಜೂನ್‍ನಲ್ಲಿ ಜಾಮ್‍ನಗರ ಜಿಲ್ಲೆಯ ತಮಾಚನ್ ಗ್ರಾಮದಲ್ಲಿ ಎರಡು ವರ್ಷದ ಬಾಲಕಿ ಕಿರಿದಾದ ಬೋರ್‍ವೆಲ್‍ಗೆ ಜಾರಿ 20 ಅಡಿ ಆಳದಲ್ಲಿ ಸಿಲುಕಿಕೊಂಡಿದ್ದಳು. 19 ಗಂಟೆಗಳ ಕಾಲ ಅನೇಕ ಏಜೆನ್ಸಿಗಳ ತೀವ್ರವಾದ ರಕ್ಷಣಾ ಪ್ರಯತ್ನಗಳ ಹೊರತಾಗಿಯೂ ಅವಳು ಸಾವನ್ನಪ್ಪಿದಳು. ಜುಲೈ 2022 ರಲ್ಲಿ, ಗುಜರಾತ್‍ನ ಸುರೇಂದ್ರನಗರ ಜಿಲ್ಲೆಯ ಹಳ್ಳಿಯೊಂದರಲ್ಲಿ 12 ವರ್ಷದ ಬಾಲಕಿ ಬೋರ್‍ವೆಲ್‍ಗೆ ಬಿದ್ದು 60 ಅಡಿ ಆಳದಲ್ಲಿ ಸಿಲುಕಿಕೊಂಡಳು, ಆದರೆ ಸುಮಾರು ಐದು ಗಂಟೆಗಳ ನಂತರ ರಕ್ಷಿಸಲಾಯಿತು. \ No newline at end of file diff --git a/eesanje/url_47_167_12.txt b/eesanje/url_47_167_12.txt new file mode 100644 index 0000000000000000000000000000000000000000..e40a1a971fe456d54fbb18fd7049066056fdb00e --- /dev/null +++ b/eesanje/url_47_167_12.txt @@ -0,0 +1,6 @@ +ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ನಿತೀಶ್ ಕುಮಾರ್ +ಪಾಟ್ನಾ, ಫೆ.7 (ಪಿಟಿಐ) – ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಜೆಡಿಯು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.ಜನವರಿ 28 ರಂದು ಬಿಹಾರದಲ್ಲಿ ಎನ್‍ಡಿಎಗೆ ಮರಳಲು ಕುಮಾರ್ ಮಹಾಘಟಬಂಧನ್ ಮೈತ್ರಿಯನ್ನು ತ್ಯಜಿಸಿದ ನಂತರ ಇದು ರಾಷ್ಟ್ರ ರಾಜಧಾನಿಗೆ ಅವರ ಮೊದಲ ಭೇಟಿ ಮತ್ತು ಮೋದಿಯೊಂದಿಗಿನ ಮೊದಲ ಭೇಟಿಯಾಗಿದೆ. +ಫೆಬ್ರವರಿ 12 ರಂದು ವಿಶ್ವಾಸ ಮತವನ್ನು ಎದುರಿಸಲು ನಿರ್ಧರಿಸಲಾದ ಕುಮಾರ್ ಸರ್ಕಾರಕ್ಕೆ ಕೇವಲ ಐದು ದಿನಗಳ ಮುಂಚಿತವಾಗಿ ಈ ಸಭೆ ನಡೆಯಲಿದೆ. ಕುಮಾರ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. +ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಅವರು ಸೋಮವಾರ ಪ್ರಧಾನಿಯನ್ನು ಭೇಟಿ ಮಾಡಿದ್ದರು. ಜೆಡಿಯು ಮೂಲಗಳ ಪ್ರಕಾರ, ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಗೆ ಸಂಬಂಸಿದ ವಿಷಯಗಳ ಬಗ್ಗೆಯೂ ಸಿಎಂ ಬಿಜೆಪಿಯ ಉನ್ನತ ನಾಯಕರೊಂದಿಗಿನ ಸಭೆಯಲ್ಲಿ ಚರ್ಚಿಸಬಹುದು ಎನ್ನಲಾಗಿದೆ. ಬಿಹಾರದಲ್ಲಿ ಆರು ರಾಜ್ಯಸಭಾ ಸ್ಥಾನಗಳು ತೆರವಾಗುತ್ತಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. +ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಮುಂಬೈಗೆ ಬಂದ ಮೂವರು ವಶಕ್ಕೆ +ಆರು ಸ್ಥಾನಗಳಲ್ಲಿ, ಎರಡು ಪ್ರಸ್ತುತ ಜೆಡಿಯು ಜೊತೆ ಪಕ್ಷದ ಮಾಜಿ ಅಧ್ಯಕ್ಷ ಬಶಿಷ್ಠï ನಾರಾಯಣ ಸಿಂಗ್ ಮತ್ತು ಹಿರಿಯ ನಾಯಕ ಅನೀಲ್ ಹೆಗ್ಡೆ ಹೊಂದಿದ್ದರೆ, ಎರಡು ಆರ್‍ಜೆಡಿಯಲ್ಲಿದೆ, ಮನೋಜ್ ಕುಮಾರ್ ಝಾ ಮತ್ತು ಮಿಸಾ ಭಾರತಿ ಇದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಒಂದು ಸ್ಥಾನವನ್ನು ಹೊಂದಿದ್ದರೆ ಮತ್ತು ಕಾಂಗ್ರೆಸ್‍ನ ಒಂದು ಸ್ಥಾನವನ್ನು ಅದರ ರಾಜ್ಯ ಘಟಕದ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಹೊಂದಿ್ದÁರೆ. ಅವರ ಅವ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ. \ No newline at end of file diff --git a/eesanje/url_47_167_2.txt b/eesanje/url_47_167_2.txt new file mode 100644 index 0000000000000000000000000000000000000000..5994948ea374d184a7fbfa15d3c6f3a47ee34c7b --- /dev/null +++ b/eesanje/url_47_167_2.txt @@ -0,0 +1,29 @@ +ಭಾರತೀಯ ಆರ್ಥಿಕತೆ ಕುರಿತ ಶ್ವೇತಪತ್ರದ ಮುಖ್ಯಾಂಶಗಳು +ಯುಪಿಎ ಸರ್ಕಾರವು ಹೆಚ್ಚು ಸುಧಾರಣೆಗಳಿಗೆ ಸಿದ್ಧವಾಗಿದ್ದ ಆರೋಗ್ಯಕರ ಆರ್ಥಿಕತೆಯನ್ನು ಪಡೆದುಕೊಂಡಿತು, ಆದರೆ ಅದನ್ನು ತನ್ನ 10 ವರ್ಷಗಳಲ್ಲಿ ಅದಕ್ಷವನ್ನಾಗಿ ಮಾಡಿತು. +2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟು () ಭಾರತದ ಮೇಲೆ ಕೆಟ್ಟ ಪರಿಣಾಮ ಬೀರಲಿಲ್ಲ +‌ +ಒಂದುದಶಕದಲ್ಲಿದುರ್ಬಲ ಐದು ಆರ್ಥಿಕತೆಗಳಲ್ಲಿ ಒಂದಾಗಿದ್ದ ಭಾರತ ಈಗ ಅಗ್ರ ಐದರ ಸ್ಥಾನದಲ್ಲಿ +2012-13 ಮತ್ತು 2021-22 ರಲ್ಲಿ ಭಾರತದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳ ಸ್ಥಿತಿ +ಮಾಹಿತಿ ಮೂಲ: ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ +ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಪ್ರಮುಖ ಅನುಪಾತಗಳು (ಅಂಕಿಅಂಶಗಳು ಶೇ.) +ಹೂಡಿಕೆದಾರರ ಪ್ರವೃತ್ತಿಗಳ   ಪುನರುಜ್ಜೀವನ +ಸಬಲೀಕರಣ ಮತ್ತು ಪರಿಣಾಮಕಾರಿ ವಿತರಣೆಯ ಮೂಲಕ ಸಾರ್ವಜನಿಕ ಕಲ್ಯಾಣ: +ಸಾರ್ವಜನಿಕ ಹಣಕಾಸು: ದಯನೀಯ ಸ್ಥಿತಿಯಿಂದ  ಉತ್ತಮ ಸ್ಥಿತಿಗೆ ಪಯಣ +-ಆರ್ಥಿಕತೆಯು ಸಮರ್ಥನೀಯವಲ್ಲದ ದರದಲ್ಲಿ ವಿಸ್ತರಿಸದೆ ಆರ್ಥಿಕ ವರ್ಷ 2014ರಿಂದ 2024ರವರೆಗೆ(ಪರಿಷ್ಕೃತ ಅಂದಾಜು) ಪೂರ್ಣಾಂಕದಲ್ಲಿ ಬಜೆಟ್ ಬಂಡವಾಳ ವೆಚ್ಚ ಐದು ಪಟ್ಟು ಹೆಚ್ಚಾಗಿದೆ. +2015ರಿಂದ 2024ರ ಅವಧಿಯಲ್ಲಿ ಬಂಡವಾಳ ವೆಚ್ಚಕ್ಕೆ ಒತ್ತು +-ಹೆಚ್ಚಿನ ಬೆಳವಣಿಗೆಯ ಅವಧಿಯಲ್ಲಿ (ಆವರ್ತಕ ಪರ) ಬಜೆಟ್‌ಗಳನ್ನು ವಿಸ್ತರಿಸುವ ಯುಪಿಎ ಸರ್ಕಾರದ ವಿಧಾನಕ್ಕೆ ವ್ಯತಿರಿಕ್ತವಾಗಿ, ಪ್ರಸ್ತುತ ಸರ್ಕಾರವು ಜಿಡಿಪಿ ಬೆಳವಣಿಗೆಯ ಗರಿಷ್ಠ ಆವರ್ತನ ಸಮಯದಲ್ಲಿ ಬಜೆಟ್ ಗಾತ್ರವನ್ನು ಒಳಗೊಂಡಿರುವ ವಿವೇಚನಾಶೀಲ ಹಣಕಾಸಿನ ನೀತಿಯನ್ನು ಅನುಸರಿಸಿ ಯಾವುದೇ ನಿರ್ವಹಣೆಗೆ ಅನಿರೀಕ್ಷಿತ ಸಂದರ್ಭಗಳು ಎದುರಾದ ಸಂದರ್ಭದಲ್ಲಿ ಸಾಕಷ್ಟು ಹಣಕಾಸಿನ ಸ್ಥಳವನ್ನು ಸೃಷ್ಟಿಸಿದೆ. +ಕಳೆದ ದಶಕದಲ್ಲಿ ದೃಢವಾದ ಆದಾಯದ ಬೆಳವಣಿಗೆಯೊಂದಿಗೆ ಸುಧಾರಿತ ತೆರಿಗೆ-ಪರಿಸರ ವ್ಯವಸ್ಥೆ +ಸರಕು ಮತ್ತು ಸೇವಾ ತೆರಿಗೆ() ಆಡಳಿತದ ಪರಿಚಯವು ಇಂದಿಗೆ ಹೆಚ್ಚು ಅತ್ಯಗತ್ಯವಾದ ರಚನಾತ್ಮಕ ಸುಧಾರಣೆಯಾಗಿದೆ. ಸರಕು ಮತ್ತು ಸೇವಾ ತೆರಿಗೆ () ಪರಿಚಯಿಸುವ ಮೊದಲು, 440 ಕ್ಕಿಂತ ಹೆಚ್ಚು ತೆರಿಗೆ ದರಗಳು, ಅಬಕಾರಿ ಸುಂಕಗಳು ಮತ್ತು ಈ ದರಗಳನ್ನು ನಿರ್ವಹಿಸುವ ಬಹು ಏಜೆನ್ಸಿಗಳ ಅನುಸರಣೆ ಅಗತ್ಯತೆಗಳು ಭಾರತದ ಆಂತರಿಕ ವ್ಯಾಪಾರವು ಮುಕ್ತವಾಗಿರಲಿಲ್ಲ ಅಥವಾ ಏಕೀಕೃತವಾಗಿರಲಿಲ್ಲ. +ಸುಧಾರಣೆಯ ಅನುಷ್ಠಾನವು 29 ರಾಜ್ಯಗಳು ಮತ್ತು 7 ಕೇಂದ್ರಾಡಳಿತ ಪ್ರದೇಶಗಳನ್ನು ಒಗ್ಗೂಡಿಸಿದ್ದು, ಅವುಗಳು ತಮ್ಮ ವಿಭಿನ್ನ ತೆರಿಗೆ ರಚನೆಗಳ ಕಾರಣದಿಂದಾಗಿ ತಮ್ಮದೇ ಆದ ಆರ್ಥಿಕ ಪ್ರದೇಶಗಳಾಗಿವೆ. ಹೊಸ ತೆರಿಗೆ ರಚನೆಯು ರಾಜಕೀಯ ಒಮ್ಮತದ ರಚನೆ ಮತ್ತು ಜಿಎಸ್ ಟಿ ಕೌನ್ಸಿಲ್‌ನ ಸಂಗ್ರಹ ಸಾರ್ವಭೌಮತ್ವದಿಂದ ನಿರೂಪಿಸಲ್ಪಟ್ಟಿದ್ದು, ಸಹಕಾರಿ ಸಂಯುಕ್ತ ವ್ಯವಸ್ಥೆಗೆ ಎರಡೂ ಪ್ರಮುಖ ಉದಾಹರಣೆಗಳಾಗಿವೆ. ಕಳೆದ ದಶಕದಲ್ಲಿ ದೂರಗಾಮಿ ತೆರಿಗೆ ಸುಧಾರಣೆಗಳು ಸುಧಾರಿತ ಆದಾಯ ಸಂಗ್ರಹಣೆ ಮತ್ತು ಅನುಸರಣೆಗಳನ್ನು ಹೊಂದಿರುವ ಪರಿಣಾಮಕಾರಿ ವ್ಯವಸ್ಥೆಗಳನ್ನು ಜಾರಿಗೆ ತಂದಿವೆ. +-ಆರ್ಥಿಕ ವರ್ಷ 2015ರಿಂದ ಆರ್ಥಿಕ ವರ್ಷ 2024ರವರೆಗೆ ಪರಿಷ್ಕ್ರಿತ ಅಂದಾಜಿನ ಸರಾಸರಿ ತೆರಿಗೆ-ಜಿಡಿಪಿ ಅನುಪಾತವು ಸುಮಾರು ಶೇಕಡಾ 10.9ರಷ್ಟಿದ್ದು, ಇದು 2004ರಿಂದ 2014 ರಲ್ಲಿ ಹತ್ತು ವರ್ಷಗಳ ಸರಾಸರಿ ಶೇಕಡಾ 10.5ಕ್ಕಿಂತ ಹೆಚ್ಚಾಗಿದೆ. ಕಡಿಮೆ ತೆರಿಗೆ ದರಗಳು ಮತ್ತು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ವ್ಯಾಪಕವಾದ ಪರಿಹಾರವನ್ನು ವಿಸ್ತರಿಸಲಾಗಿದೆ. +ಡಿಸೆಂಬರ್ 2017 ರಿಂದ ಮಾರ್ಚ್ 2023 ರವರೆಗೆ ಕುಟುಂಬಗಳಿಗೆ ತಿಂಗಳಿಗೆ ಸುಮಾರು 45,000 ಕೋಟಿ ರೂಪಾಯಿ ಉಳಿಸಲು ಜಿಎಸ್ ಟಿ ಸಹಾಯ ಮಾಡಿದೆ ಎಂದು ಲೆಕ್ಕಾಚಾರ ತೋರಿಸುತ್ತದೆ. ಅದೇ ಸಮಯದಲ್ಲಿ, ಜಿಎಸ್ ಟಿಯಿಂದ ಮಾಸಿಕ ಸರಾಸರಿ ಆದಾಯವು ಆರ್ಥಿಕ ವರ್ಷ 2018 ರಲ್ಲಿ 90,000 ಕೋಟಿ ರೂಪಾಯಿಗಳಿಂದ ಆರ್ಥಿಕ ವರ್ಷ 2024 ರಲ್ಲಿ 1.7 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. +ಅಭಿವೃದ್ಧಿಯಲ್ಲಿ ರಾಜ್ಯಗಳು ಸಮಾನ ಪಾಲುದಾರರು ಎಂಬುದನ್ನು ಒಪ್ಪಿಕೊಂಡು, ನಮ್ಮ ಸರ್ಕಾರವು ಸಹಕಾರಿ ಸಂಯುಕ್ತ ವ್ಯವಸ್ಥೆಯ ಮನೋಭಾವದಲ್ಲಿ 14 ಮತ್ತು 15 ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಒಪ್ಪಿಕೊಂಡಿದೆ. +ಎರಡು ಸರ್ಕಾರಗಳ ಆಡಳಿತದಲ್ಲಿ ರಾಜ್ಯಗಳಿಗೆ ವರ್ಗಾವಣೆಗಳ ಹೋಲಿಕೆ +-ಇದಲ್ಲದೆ, ಬದಲಾಗುತ್ತಿರುವ ಪರಿಸರ ಸ್ಥಿತಿಗತಿಗಳ ಸಮಯದಲ್ಲಿ ರಾಜ್ಯಗಳ ಜೊತೆ ಕೇಂದ್ರ ಸರ್ಕಾರ ದೃಢವಾಗಿ ನಿಂತಿದೆ.ಅಸಮರ್ಥತೆಗಳನ್ನು ಪರಿಹರಿಸಲು ಮತ್ತು ಕಲ್ಲಿದ್ದಲು ಕ್ಷೇತ್ರದಲ್ಲಿ ಪೈಪೋಟಿ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸಲು, ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸರ್ಕಾರವು ಅನೇಕ ಸುಧಾರಣೆಗಳನ್ನು ಕೈಗೊಂಡಿದೆ. +-ಅಧಿಕಾರಕ್ಕೆ ಬಂದ ನಂತರ, ನಮ್ಮ ಸರ್ಕಾರವು ಕಲ್ಲಿದ್ದಲು ಸಂಪನ್ಮೂಲಗಳ ಪಾರದರ್ಶಕ ಹಂಚಿಕೆ ಮತ್ತು ದೇಶದ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕಲ್ಲಿದ್ದಲು ಗಣಿಗಳ (ವಿಶೇಷ ನಿಬಂಧನೆಗಳ () ಕಾಯಿದೆ 2015ನ್ನು ತ್ವರಿತವಾಗಿ ಜಾರಿಗೆ ತಂದಿತು. ಮೊದಲ ಬಾರಿಗೆ ಕಲ್ಲಿದ್ದಲು ನಿಕ್ಷೇಪಗಳ ಹರಾಜು, ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆ ಸೇರಿದಂತೆ ಕಲ್ಲಿದ್ದಲು ಸಂಪರ್ಕಗಳ ತರ್ಕಬದ್ಧಗೊಳಿಸುವಿಕೆ, ಕಲ್ಲಿದ್ದಲಿನ ಇ-ಹರಾಜಿಗೆ ಏಕ ಗವಾಕ್ಷಿ ಮಾರ್ಗ ಇತ್ಯಾದಿ ಹಲವು ಕ್ರಮಗಳನ್ನು ಒಳಗೊಂಡಿದೆ. +ಕಲ್ಲಿದ್ದಲು ವಲಯವನ್ನು ಸ್ವಚ್ಛಗೊಳಿಸಲು ನಮ್ಮ ಸರ್ಕಾರದ ಅವಿರತ ಪ್ರಯತ್ನಗಳ ಪರಿಣಾಮವಾಗಿ, ಆರ್ಥಿಕ ವರ್ಷ 2023 ರಲ್ಲಿ ಕಲ್ಲಿದ್ದಲು ಉತ್ಪಾದನೆಯು ದಾಖಲೆಯ ಮಟ್ಟ 893.19 ಮಿಲಿಯನ್ ಟನ್ ಗೆ ತಲುಪಿತು, ಇದು ಭಾರತದ ಇತಿಹಾಸದಲ್ಲಿ ಅತ್ಯಧಿಕವಾಗಿದೆ. +-ಆರ್ಥಿಕ ವರ್ಷ 2023ರಲ್ಲಿ ಕಲ್ಲಿದ್ದಲು ಉತ್ಪಾದನೆಯ ಮಟ್ಟವು ಆರ್ಥಿಕ ವರ್ಷ 2014 ರಲ್ಲಿ 565.77 ಮಿಲಿಯನ್ ಟನ್ ಕಲ್ಲಿದ್ದಲು ಉತ್ಪಾದನೆಗಿಂತ ಸುಮಾರು ಶೇಕಡಾ 57.8ರಷ್ಟು ಬೆಳವಣಿಗೆಯನ್ನು ಸೂಚಿಸುತ್ತದೆ. ಆರ್ಥಿಕ ವರ್ಷ 2009 ರಿಂದ ಆರ್ಥಿಕ ವರ್ಷ 2014ರವರೆಗಿನ ಕಲ್ಲಿದ್ದಲು ಉತ್ಪಾದನೆಯ ಸಂಯುಕ್ತ ವಾರ್ಷಿಕ ಬೆಳವಣಿಗೆ ದರ() ಶೇಕಡಾ 2.8 ರಷ್ಟಿತ್ತು, ಇದೇ ರೀತಿ ಮುಂದುವರಿದಿದ್ದರೆ ಆರ್ಥಿಕ ವರ್ಷ 2023 ರಲ್ಲಿ ಕಲ್ಲಿದ್ದಲು ಉತ್ಪಾದನೆಯು 725.39 ಮಿಲಿಯನ್ ಟನ್ ಆಗುತ್ತಿತ್ತು. +ನಮ್ಮ ಸರ್ಕಾರವು ದೇಶದ ವಿದ್ಯುತ್ ವಲಯವನ್ನು ಬಾಧಿಸುತ್ತಿರುವ ಬಹು ಸಮಸ್ಯೆಗಳನ್ನು ಪರಿಹರಿಸಿದೆ, ಈ ಮೂಲಕ ವಿದ್ಯುತ್ ಕೊರತೆಯಿಂದ ಸಾಕಷ್ಟು ವಿದ್ಯುತ್ ಉತ್ಪಾದನೆ ಸ್ಥಿತಿಗೆ ಬದಲಾವಣೆ ಕಂಡಿದೆ. +ದೂರಸಂಪರ್ಕ ವಲಯದಲ್ಲಿ ಉತ್ತಮ ಆಡಳಿತ +2014 ರಿಂದ, ನಮ್ಮ ಸರ್ಕಾರವು ದೂರಸಂಪರ್ಕ ಮಾರುಕಟ್ಟೆಯಲ್ಲಿನ ಪರಿಸ್ಥಿತಿಯನ್ನು ಸರಿಪಡಿಸಲು ಮತ್ತು ಈ ವಲಯದಲ್ಲಿನ ನೀತಿಯಲ್ಲಿ ಸ್ಪಷ್ಟತೆಯ ಕೊರತೆಯಿಂದ ಉಂಟಾದ ವೈಫಲ್ಯಗಳನ್ನು ಬಗೆಹರಿಸಿ ಪರಿಣಾಮಕಾರಿಯಾಗಿ ನಿರ್ವಹಿಸಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಇದು ಸ್ಪೆಕ್ಟ್ರಮ್ ಹರಾಜು, ವ್ಯಾಪಾರ ಮತ್ತು ಹಂಚಿಕೆಯ ಪಾರದರ್ಶಕ ವಿಧಾನಗಳನ್ನು ತಂದು ಸ್ಪೆಕ್ಟ್ರಮ್‌ನ ಅತ್ಯುತ್ತಮ ಬಳಕೆಯನ್ನು ಮತ್ತಷ್ಟು ಸಕ್ರಿಯಗೊಳಿಸಿತು. 2022ರ 5ಜಿ ಹರಾಜು, ಟೆಲಿಕಾಂ ಸೇವಾ ಪೂರೈಕೆದಾರರಿಗೆ () ಒಟ್ಟಾರೆ ಸ್ಪೆಕ್ಟ್ರಮ್ ಲಭ್ಯತೆಯನ್ನು ಹೆಚ್ಚಿಸಿ ಇದುವರೆಗಿನ ಅತ್ಯಧಿಕ ಪ್ರಮಾಣದ ಸ್ಪೆಕ್ಟ್ರಮ್ ನ್ನು, ಅಂದರೆ, 52 , ಅತ್ಯಧಿಕ ಹರಾಜು ಮೌಲ್ಯ ಕಂಡಿದೆ. +-ಅಲ್ಲದೆ, ಟಿಎಸ್ ಪಿಗಳಿಗೆ ಆರೋಗ್ಯಕರ ನಗದು ಹರಿವು 5ಜಿ ತಂತ್ರಜ್ಞಾನದಲ್ಲಿ ಬಂಡವಾಳ ಹೂಡಿಕೆಗಳನ್ನು ಮಾಡಲು ಅನುವು ಮಾಡಿಕೊಟ್ಟಿತು, ಇದು ದೇಶದಲ್ಲಿ 5ಜಿ ಸಂಪರ್ಕಜಾಲದ ಅನಾವರಣಕ್ಕೆ ಕಾರಣವಾಯಿತು, ಭಾರತ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ 5ಜಿ ತಂತ್ರಜ್ಞಾನ ಜಾರಿಗೆ ತಂದ ದೇಶ ಎಂದು ಗುರುತಿಸಲ್ಪಟ್ಟಿದೆ. ಈ ಎಲ್ಲಾ ಕ್ರಮಗಳ ಪರಿಣಾಮಕಾರಿತ್ವವು ಎಲ್ಲಾ ಟೆಲಿಕಾಂ ಸೇವಾ ಪೂರೈಕೆದಾರರ ಹೆಚ್ಚುತ್ತಿರುವ ಸಂಚಿತ ಒಟ್ಟು ಆದಾಯದಲ್ಲಿ ಪ್ರತಿಫಲಿಸುತ್ತದೆ, ಇದು ಈಗಾಗಲೇ 3 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿದೆ. diff --git a/eesanje/url_47_167_3.txt b/eesanje/url_47_167_3.txt new file mode 100644 index 0000000000000000000000000000000000000000..dbe69391dabed0cef50de804efa5a05debf4b0ef --- /dev/null +++ b/eesanje/url_47_167_3.txt @@ -0,0 +1,8 @@ +ಕರ್ನಾಟಕದ ಬೆನ್ನಲ್ಲೇ ದೆಹಲಿಯಲ್ಲಿ ಕೇರಳ, ತಮಿಳುನಾಡು ಪ್ರತಿಭಟನೆ +ನವದೆಹಲಿ, ಫೆ.8 -(ಪಿಟಿಐ): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ತಮ್ಮ ರಾಜ್ಯಗಳಿಗೆ ಹಣ ಹಂಚಿಕೆಯಲ್ಲಿ ನಿರ್ಲಕ್ಷ್ಯ ಮತ್ತು ಪಕ್ಷಪಾತದ ಆರೋಪದ ಮೇಲೆ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಕೇರಳದ ಎಡರಂಗ ಮತ್ತು ತಮಿಳುನಾಡಿನ ಡಿಎಂಕೆ ಇಂದು ದೆಹಲಿಯಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿವೆ. +ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಎಲ್ಡಿಎಫ್ನ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಬೆಂಬಲ ಘೋಷಿಸಿದ್ದಾರೆ.ಕೇರಳದ ವಿರುದ್ಧ ಕೇಂದ್ರದ ತಾರತಮ್ಯ ಮತ್ತು ಪರಿಣಾಮವಾಗಿ ಆರ್ಥಿಕ ಮುಗ್ಗಟ್ಟು ರಾಜ್ಯವು ಪ್ರತಿಭಟನಾ ಮಾರ್ಗವನ್ನು ಆಶ್ರಯಿಸುವಂತೆ ಮಾಡಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +2024-25ರ ಮಧ್ಯಂತರ ಬಜೆಟ್ನಲ್ಲಿ ತಮಿಳುನಾಡಿಗೆ ಅಗತ್ಯ ಹಣ ಮಂಜೂರು ಮಾಡದಿರುವ ಕೇಂದ್ರದ ವಿರುದ್ಧ ಪ್ರತಿಭಟಿಸಲು ಹಿರಿಯ ನಾಯಕ ಟಿಆರ್ ಬಾಲು ನೇತೃತ್ವದಲ್ಲಿ ಡಿಎಂಕೆಯ ಸಂಸದರು ಕಪ್ಪು ಅಂಗಿ ಪ್ರದರ್ಶನ ನಡೆಸಿದರು.ಇತ್ತೀಚಿನ ಚಂಡಮಾರುತ, ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿಯಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಲು ತಮಿಳುನಾಡಿಗೆ ಸೂಕ್ತವಾಗಿ ಹಣವನ್ನು ನೀಡದ ಕಾರಣ, ಕೇಸರಿ ಪಕ್ಷದ ನೇತೃತ್ವದ ಕೇಂದ್ರದ ಆಡಳಿತವು ಪಕ್ಷಪಾತ ದೋರಣೆ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. +ಡಿಎಂಕೆ ಸಂಸದ ಮತ್ತು ಪಕ್ಷದ ಸಂಸದೀಯ ಪಕ್ಷದ ನಾಯಕ ಬಾಲು ಮಾತನಾಡಿ, ಕಾಂಗ್ರೆಸ್ ಸೇರಿದಂತೆ ಮೈತ್ರಿ ಪಕ್ಷಗಳ ಸಂಸದರನ್ನು ರಾಷ್ಟ್ರ ರಾಜಧಾನಿಯಲ್ಲಿ ತಮ್ಮೊಂದಿಗೆ ಸೇರಲು ವಿನಂತಿಸಲಾಗಿದೆ.ಡಿಸೆಂಬರ್ 2023 ರಲ್ಲಿ ಚಂಡಮಾರುತ, ಅಭೂತಪೂರ್ವ ಮಳೆ ಮತ್ತು ಪ್ರವಾಹದ ನಂತರ ಸುಮಾರು 37,000 ಕೋಟಿ ರೂಪಾಯಿಗಳ ಪರಿಹಾರವನ್ನು ಕೋರಿ ಮಧ್ಯಂತರ ಬಜೆಟ್ನಲ್ಲಿ ತಮಿಳುನಾಡಿನ ಪ್ರಾತಿನಿಧ್ಯದ ಕುರಿತು ಯಾವುದೇ ಘೋಷಣೆ ಮಾಡಿಲ್ಲ ಎಂದು ಡಿಎಂಕೆ ಹೇಳಿದೆ. +ಮನಮೋಹನ್ ಸಿನ್ ಸೇವೆಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ +ಅಲ್ಲದೆ, ಮಧುರೈನಲ್ಲಿ ಏಮ್ಸï ಸ್ಥಾಪನೆ ಸೇರಿದಂತೆ ತಮಿಳುನಾಡಿನ ಅಭಿವೃದ್ಧಿ ಯೋಜನೆಗಳಿಗೆ ನಿ ಹಂಚಿಕೆ ಕುರಿತು ಮಧ್ಯಂತರ ಬಜೆಟ್ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದು ಡಿಎಂಕೆ ಹೇಳಿದೆ. ರಾಜ್ಯದ ಆರ್ಥಿಕ ಸಂಕಷ್ಟಕ್ಕೆ ಕೇಂದ್ರವನ್ನು ದೂಷಿಸುತ್ತಿರುವ ಕೇರಳದ ಎಡ ಸರ್ಕಾರ ತನ್ನ ಬಜೆಟ್ನಲ್ಲಿ ದಕ್ಷಿಣ ರಾಜ್ಯವನ್ನು ತನ್ನ ಇತಿಹಾಸದಲ್ಲೇ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನತ್ತ ತಳ್ಳುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. +ರಾಜ್ಯದ ಎಲ್ಲಾ ಆರ್ಥಿಕ ಸಮಸ್ಯೆಗಳಿಗೆ ಕೇಂದ್ರವನ್ನು ದೂಷಿಸುವ ಎಡಪಕ್ಷದ ನಿರೂಪಣೆಯನ್ನು ಒಪ್ಪುವುದಿಲ್ಲ ಎಂದು ಹೇಳುವ ಮೂಲಕ ಯುಡಿಎಫ್ ಪ್ರತಿಭಟನೆಯಲ್ಲಿ ಭಾಗವಹಿಸಲು ನಿರಾಕರಿಸಿದೆ. ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಪ್ರಮುಖ ಕಾಂಗ್ರೆಸ್ ನಾಯಕರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು, ಇದು ಪಕ್ಷ ಮತ್ತು ನರೇಂದ್ರ ಮೋದಿ ಸರ್ಕಾರದ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. \ No newline at end of file diff --git a/eesanje/url_47_167_4.txt b/eesanje/url_47_167_4.txt new file mode 100644 index 0000000000000000000000000000000000000000..fb17184e00cf08def6072a2365923dff472a373f --- /dev/null +++ b/eesanje/url_47_167_4.txt @@ -0,0 +1,6 @@ +ಮನಮೋಹನ್ ಸಿನ್ ಸೇವೆಯನ್ನು ಪ್ರಶಂಸಿಸಿದ ಪ್ರಧಾನಿ ಮೋದಿ +ನವದೆಹಲಿ,ಫೆ.8-ಮನಮೋಹನ್ ಸಿಂಗ್ ಅವರು ವ್ಹೀಲ್‍ಚೇರ್‍ನಲ್ಲಿ ಬಂದು ಮತ ಹಾಕಿದ್ದಾರೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿಯನ್ನು ಹೊಗಳಿದ್ದಾರೆ. ರಾಜ್ಯಸಭೆಯ ನಿವೃತ್ತ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ನಾನು ಡಾ. ಮನಮೋಹನ್ ಸಿಂಗ್ ಅವರನ್ನು ನೆನಪಿಸಿಕೊಳ್ಳಲು ಬಯಸುತ್ತೇನೆ, ಅವರ ಕೊಡುಗೆ ದೊಡ್ಡದಾಗಿದೆ. ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದಿದ್ದಾರೆ. +ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ಗಾಲಿ ಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ. ಅವರು ಯಾರಿಗೆ ಅಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ. +ಜನತಾದರ್ಶನದ ಅರ್ಜಿಗಳನ್ನು 3 ತಿಂಗಳೊಳಗೆ ಇತ್ಯರ್ಥ : ಸಿಎಂ ಸಿದ್ದರಾಮಯ್ಯ +ಮನಮೋಹನ್ ಸಿಂಗ್ ಅವರೊಂದಿಗೆ ನನಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿರಬಹುದು, ಆದರೆ ಅವರು ಯಾವಾಗಲೂ ದೇಶಕ್ಕೆ ಮಾರ್ಗದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವರು ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ತಮ್ಮ ಅಮೂಲ್ಯ ಚಿಂತನೆಗಳಿಂದ ಆರು ಬಾರಿ ಈ ಸದನಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಹೊಗಳಿದ್ದಾರೆ. +ಸದಸ್ಯರು ತಮ್ಮ ಕರ್ತವ್ಯಗಳ ಬಗ್ಗೆ ಎಚ್ಚರವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಲ್ಲದೇ ಮನಮೋಹನ್ ಸಿಂಗ್ ಎಲ್ಲ ಸಂಸದರಿಗೆ ಸೂರ್ತಿ ಎಂದು ಬಣ್ಣಿಸಿದ್ದಾರೆ. diff --git a/eesanje/url_47_167_5.txt b/eesanje/url_47_167_5.txt new file mode 100644 index 0000000000000000000000000000000000000000..91806d9d46a6c145fece428e4040bb18c3ac2152 --- /dev/null +++ b/eesanje/url_47_167_5.txt @@ -0,0 +1,7 @@ +ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪುಪತ್ರ ಬಿಡುಗಡೆ ಮಾಡಿದ ಖರ್ಗೆ +ನವದೆಹಲಿ,ಫೆ.8- ನರೇಂದ್ರ ಮೋದಿ ಸರಕಾರದ ಕಳೆದ 10 ವರ್ಷಗಳ ಸಾಧನೆಯ ಶ್ವೇತಪತ್ರವನ್ನು ಎದುರಿಸಲು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕಪ್ಪು ಕಾಗದ ಹೊರ ತಂದಿದೆ. ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬೆಳಗ್ಗೆ ಕಪ್ಪು ಪತ್ರ ಬಿಡುಗಡೆ ಮಾಡಿ ಗಮನ ಸೆಳೆದಿದ್ದಾರೆ. ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಸರ್ಕಾರ ಎಂದಿಗೂ ಹೇಳುವುದಿಲ್ಲ. ಅವರು ಎಷ್ಟು ಮನರೆಗಾ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ. ಅವರು ಅನ್ಯ ಸರ್ಕಾರಗಳ ರಾಜ್ಯಗಳ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು. +ಕಾಂಗ್ರೆಸ್ ವಿಚಾರವಾದಿಗಳಾದ ಜವಾಹರಲಾಲ್ ನೆಹರು ಮತ್ತು ಇಂದಿರಾಗಾಂಧಿ ಅವರ ಮೇಲೆ ಕೇಂದ್ರದ ವಾಗ್ದಾಳಿಗೆ ಪ್ರತಿಯಾಗಿ, ನೀವು ಇಂದು ಆಡಳಿತ ನಡೆಸುತ್ತಿದ್ದೀರಿ, ಹಣದುಬ್ಬರವನ್ನು ನಿಯಂತ್ರಿಸಲು ನೀವು ಏನು ಮಾಡಿದ್ದೀರಿ ಎಂದು ಖರ್ಗೆ ಪ್ರಶ್ನಿಸಿದ್ದಾರೆ. +2014 ರಲ್ಲಿ ಅಧಿಕಾರಕ್ಕೆ ಬಂದ ನಂತರದ ಬಿಜೆಪಿ ಸರ್ಕಾರದ ಶ್ವೇತಪತ್ರದ ಹಿಂದೆ ಕಾಂಗ್ರೆಸ್‍ನ ಈ ಕ್ರಮವು ಬಂದಿತು. ಫೆಬ್ರವರಿ 1 ರಂದು ತನ್ನ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸರ್ಕಾರವು ಉಭಯ ಸದನಗಳಲ್ಲಿ ಶ್ವೇತಪತ್ರ ಮಂಡಿಸಲಿದೆ ಎಂದು ಘೋಷಿಸಿದ್ದರು. ಸಂಸತ್ತಿನ ನಾವು 2014 ರವರೆಗೆ ಎಲ್ಲಿದ್ದೇವೆ ಮತ್ತು ಈಗ ನಾವು ಎಲ್ಲಿದ್ದೇವೆ ಎಂಬುದನ್ನು ನೋಡಲು. ಈ ಕ್ರಮದ ಹಿಂದಿನ ಏಕೈಕ ಉದ್ದೇಶವೆಂದರೆ, ಆ ವರ್ಷಗಳ ತಪ್ಪು ನಿರ್ವಹಣೆಯಿಂದ ಪಾಠಗಳನ್ನು ಕಲಿಯುವುದು ಎಂದು ಅವರು ಹೇಳಿದ್ದರು. +ಮುಂದುವರೆದ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ಹಿಂದಿನ ಯುಪಿಎ ಸರಕಾರಗಳ ವಿರುದ್ಧ ಪ್ರಧಾನಿಯವರು ಲೆಕ್ಕವಿಲ್ಲದಷ್ಟು ಸುಳ್ಳು ಮಾತುಗಳನ್ನು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ ಅವರು, ನಿರುದ್ಯೋಗ ದರ ಏರಿಕೆ, ಸರಾಸರಿ ಜಿಡಿಪಿ ಬೆಳವಣಿಗೆ ದರದಲ್ಲಿನ ಕುಸಿತ ಮತ್ತು ಪ್ರಸ್ತುತ ಸರ್ಕಾರದ ಅಡಿಯಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಕುರಿತು ಎಕ್ಸ್ ಮಾಡಿದ್ದಾರೆ. +10 ವರ್ಷ ಅಧಿಕಾರದಲ್ಲಿದ್ದರೂ ತಮ್ಮ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ಪಕ್ಷವನ್ನು ಮಾತ್ರ ಟೀಕಿಸುತ್ತಾರೆ.ಇಂದಿಗೂ ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಅಸಮಾನತೆಯ ಬಗ್ಗೆ ಮಾತನಾಡಿಲ್ಲವೇ? ಮೋದಿ ಕಿ ಗ್ಯಾರಂಟಿ ಸುಳ್ಳನ್ನು ಹರಡಲು ಮಾತ್ರ ಎಂದು ಖರ್ಗೆ ಹೇಳಿದರು. \ No newline at end of file diff --git a/eesanje/url_47_167_6.txt b/eesanje/url_47_167_6.txt new file mode 100644 index 0000000000000000000000000000000000000000..4c0eac0f265777044871c8da840da50db58acbd0 --- /dev/null +++ b/eesanje/url_47_167_6.txt @@ -0,0 +1,5 @@ +ಅನಾಥ ಸಹೋದರಿಯರಿಗೆ ಮನೆ ನಿರ್ಮಿಸಿಕೊಡಲು ಮುಂದಾದ ಗೋವಾ ಸ್ಪೀಕರ್ +ಪಣಜಿ, ಫೆ.8 (ಪಿಟಿಐ) – ಪೋಷಕರನ್ನು ಕಳೆದುಕೊಂಡಿರುವ ನೆರೆಯ ಮಹಾರಾಷ್ಟ್ರದ ಇಬ್ಬರು ಅಪ್ರಾಪ್ತ ಸಹೋದರಿಯರಿಗೆ ಮನೆ ನಿರ್ಮಿಸಿಕೊಡುವುದಾಗಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಹೇಳಿದ್ದಾರೆ. ತವಡ್ಕರ್ ಅವರು ಶ್ರಮ್ ಧಾಮ ಉಪಕ್ರಮವನ್ನು ಪ್ರಾರಂಭಿಸಿದ್ದಾರೆ, ಅದರ ಅಡಿಯಲ್ಲಿ ಅವರು ದಕ್ಷಿಣ ಗೋವಾ ಜಿಲ್ಲೆಯ ತಮ್ಮ ಕ್ಷೇತ್ರ ಕೆನಕೋನಾದಲ್ಲಿ ನಿರ್ಗತಿಕರಿಗೆ 20 ಮನೆಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. +ಸ್ಥಳೀಯ ಪಂಚಾಯತ್‍ನಿಂದ ಮನವಿ ಸ್ವೀಕರಿಸಿದ ನಂತರ ಮಹಾರಾಷ್ಟ್ರದ ಮೀರಜ್ ತಾಲೂಕಿನ ಆರಗ್ ಗ್ರಾಮದ ಸಹೋದರ-ಸಹೋದರಿ ಜೋಡಿಯ ಉಪಕ್ರಮವನ್ನು ವಿಸ್ತರಿಸಲು ನಿರ್ಧರಿಸಿರುವುದಾಗಿ ಸ್ಪೀಕರ್ ಹೇಳಿದರು. ಮಕ್ಕಳ ತಂದೆ 2018ರಲ್ಲಿ ಸಾವನ್ನಪ್ಪಿದ್ದು 2019ರಲ್ಲಿ ತಾಯಿಯನ್ನು ಕಳೆದುಕೊಂಡಿದ್ದಾರೆ ಎಂದು ಆರಗ ಪಂಚಾಯತ್ ಸರಪಂಚ್ ಎಸ್ ಎಸ್ ನಾಯ್ಕರ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ. +ಅಮಿತ್ ಶಾ, ನಡ್ಡಾ ಭೇಟಿಯಾದ ಚಂದ್ರಬಾಬು ನಾಯ್ಡು +ಸದ್ಯ ಶಿಥಿಲಾವಸ್ಥೆಯಲ್ಲಿರುವ ಮಕ್ಕಳ ಮನೆ ನಿರ್ಮಾಣಕ್ಕೆ ಸಹಕರಿಸುವಂತೆ ಪಂಚಾಯಿತಿ ವತಿಯಿಂದ ತಾವಾಡ್ಕರ್ ಅವರಿಗೆ ಮನವಿ ಮಾಡಲಾಗಿದೆ. ಪಂಚಾಯಿತಿಯು ಕುಟುಂಬಕ್ಕೆ ಸಹಾಯ ಮಾಡಲು ನನ್ನನ್ನು ವಿನಂತಿಸಿದೆ. ವಿವಿಧ ಸಾಮಾಜಿಕ ಸಂಸ್ಥೆಗಳು ಮತ್ತು ಪರೋಪಕಾರಿಗಳೊಂದಿಗೆ ಅವರಿಗೆ ಸಹಾಯವನ್ನು ಖಚಿತಪಡಿಸಿಕೊಳ್ಳುವುದು ನನ್ನ ಕರ್ತವ್ಯ ಎಂದು ತವಡ್ಕರ್ ಹೇಳಿದರು. \ No newline at end of file diff --git a/eesanje/url_47_167_7.txt b/eesanje/url_47_167_7.txt new file mode 100644 index 0000000000000000000000000000000000000000..66677661e08b82cf6f1fb08b9af3641ef8e0a42f --- /dev/null +++ b/eesanje/url_47_167_7.txt @@ -0,0 +1,5 @@ +ಮುಂದುವರೆದ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ದಮುಂಬೈ, ಫೆಬ್ರವರಿ 8 (ಪಿಟಿಐ) ಹಣದುಬ್ಬರದ ಮೇಲೆ ಬಿಗಿಯಾದ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತಿರುವ ಕಾರಣ ಭಾರತೀಯ ರಿಸರ್ವ್ ಬ್ಯಾಂಕ್ ಸತತ ಆರನೇ ಬಾರಿಗೆ ರೇಪೊ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ನಿರ್ಧರಿಸಿದೆ. ಮೇ 2022 ರಿಂದ ಸತತ ಆರು ದರ ಏರಿಕೆಗಳ ನಂತರ 250 ಬೇಸಿಸ್ ಪಾಯಿಂಟ್‍ಗಳಿಗೆ ಒಟ್ಟುಗೂಡಿದ ನಂತರ ಕಳೆದ ವರ್ಷ ಏಪ್ರಿಲ್‍ನಲ್ಲಿ ದರ ಹೆಚ್ಚಳದ ಚಕ್ರವನ್ನು ವಿರಾಮಗೊಳಿಸಲಾಯಿತು. +ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ವಿತ್ತೀಯ ನೀತಿ ಸಮಿತಿ (ಎಂಪಿಸಿ) ರೆಪೊ ದರವನ್ನು ಶೇ. 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಎಂಪಿಸಿಯು ಆಹಾರ ಹಣದುಬ್ಬರದ ಮೇಲೆ ನಿಗಾ ಇಡುತ್ತದೆ, ಇದರಿಂದ ಗಳಿಸಿದ ಪ್ರಯೋಜನಗಳು ಹದಗೆಡುವುದಿಲ್ಲ ಎಂದು ಅವರು ಹೇಳಿದರು. ಕಳೆದ ವಾರ ಮಧ್ಯಂತರ ಬಜೆಟ್ 2024-25 ಮಂಡನೆ ನಂತರ ಇದು ಮೊದಲ ದ್ವೈಮಾಸಿಕ ನೀತಿಯಾಗಿದೆ. +ಚುನಾವಣೆಯ ಮುನ್ನಾದಿನದಂದು ಪಾಕಿಸ್ತಾನದ ಅಭ್ಯರ್ಥಿಯ ಕಚೇರಿ ಬಳಿ ಸ್ಫೋಟದಲ್ಲಿ 26 ಮಂದಿ ಸಾವು +ಡಿಸೆಂಬರ್‍ನಲ್ಲಿ ಗ್ರಾಹಕ ಬೆಲೆ ಆಧಾರಿತ ಹಣದುಬ್ಬರ (ಸಿಪಿಐ) ಶೇ 5.69 ರಷ್ಟಿತ್ತು. ಸಿಪಿಐ ಹಣದುಬ್ಬರವನ್ನು ಶೇಕಡಾ 4 ರಷ್ಟು ಎರಡೂ ಬದಿಗಳಲ್ಲಿ 2 ಶೇಕಡಾ ಮಾರ್ಜಿನ್‍ನೊಂದಿಗೆ ಖಚಿತಪಡಿಸಿಕೊಳ್ಳಲು ಸರ್ಕಾರವು ಆರ್‌ಬಿಐ ಗೆ ಆದೇಶ ನೀಡಿದೆ \ No newline at end of file diff --git a/eesanje/url_47_167_8.txt b/eesanje/url_47_167_8.txt new file mode 100644 index 0000000000000000000000000000000000000000..389831d32969693c4a1373602d24103cbeb4736d --- /dev/null +++ b/eesanje/url_47_167_8.txt @@ -0,0 +1,6 @@ +ಉಗ್ರರ ದಾಳಿಗೆ ಬಲಿಯಾದ ಇಬ್ಬರು ಕಾರ್ಮಿಕರು +ಶ್ರೀನಗರ, ಫೆ 8 (ಪಿಟಿಐ) : ನಗರದ ಹಬ್ಬಾ ಕಡಲ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡ ಪಂಜಾಬ್‍ನ ಕಾರ್ಮಿಕರೊಬ್ಬರು ಇಲ್ಲಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಎರಡಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ರೋಹಿತ್ ಮಸಿಹ್ ಅವರು ಇಂದು ಬೆಳಿಗ್ಗೆ ಇಲ್ಲಿನ ಎಸ್‍ಕೆಐಎಂಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೃತೀಯ ಆರೈಕೆ ಸಂಸ್ಥೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‍ನ ಮತ್ತೊಬ್ಬ ಕಾರ್ಮಿಕ ಅಮೃತಪಾಲ್ ಸಿಂಗ್ ಬುಧವಾರ ಹಬ್ಬಾ ಕಡಲ್‍ನ ಶಲ್ಲಾ ಕಡಲ್‍ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದರು. ಇದು ವರ್ಷದ ಮೊದಲ ಉದ್ದೇಶಿತ ಹತ್ಯೆಯಾಗಿದೆ. +ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ಹೊಯ್ಸಳ ಪೊಲೀಸರು +ಭಯೋತ್ಪಾದಕರು 2023 ರಲ್ಲಿ ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ಮೂರು ದಾಳಿಗಳನ್ನು ನಡೆಸಿದ್ದರು, ಇದರ ಪರಿಣಾಮವಾಗಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದರು ಮತ್ತು ಮೂವರಿಗೆ ಗಾಯಗಳಾಗಿವೆ. ಮೇ 30, 2023 ರಂದು ಅನಂತ್‍ನಾಗ್ ಜಿಲ್ಲೆಯಲ್ಲಿ ಉಧಮ್‍ಪುರ ಜಿಲ್ಲೆಯ ಸರ್ಕಸ್ ಕೆಲಸಗಾರನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರೆ, ಬಿಹಾರದ ಇಟ್ಟಿಗೆ ಗೂಡು ಕೆಲಸಗಾರ ಮುಕೇಶ್ ಕುಮಾರ್ ಅವರನ್ನು ಕಳೆದ ವರ್ಷ ಅಕ್ಟೋಬರ್ 31 ರಂದು ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಗುಂಡಿಕ್ಕಿ ಕೊಂದಿದ್ದರು. +ಜುಲೈ 13 ರಂದು ಶೋಪಿಯಾನ್ ಜಿಲ್ಲೆಯ ಗಾಗ್ರೆನ್ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದರು. \ No newline at end of file diff --git a/eesanje/url_47_167_9.txt b/eesanje/url_47_167_9.txt new file mode 100644 index 0000000000000000000000000000000000000000..f2cf2b142cb7a65e261edf8efa7d30b318bcc729 --- /dev/null +++ b/eesanje/url_47_167_9.txt @@ -0,0 +1,8 @@ +ಅಮಿತ್ ಶಾ, ನಡ್ಡಾ ಭೇಟಿಯಾದ ಚಂದ್ರಬಾಬು ನಾಯ್ಡು +ನವದೆಹಲಿ, ಫೆ 8 (ಪಿಟಿಐ) ಮುಂಬರುವ ಚುನಾವಣೆಗೆ ಆಂಧ್ರಪ್ರದೇಶದಲ್ಲಿ ಎರಡು ಪಕ್ಷಗಳು ಕೈಜೋಡಿಸಬಹುದೆಂಬ ಸೂಚನೆಗಳ ನಡುವೆ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ತಡರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. +ಆಂಧ್ರದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಯಲಿದೆ. ಗೃಹ ಸಚಿವರ ನಿವಾಸದಲ್ಲಿ ನಾಯ್ಡು ಅವರು ಶಾ ಅವರನ್ನು ಭೇಟಿ ಮಾಡಿದ್ದು, ಸಭೆಯಲ್ಲಿ ನಡ್ಡಾ ಕೂಡ ಇದ್ದರು ಎಂದು ಮೂಲಗಳು ತಿಳಿಸಿವೆ. ನಾಯ್ಡು ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ ಮರಳಿದರೆ, ಜನತಾ ದಳ (ಯುನೈಟೆಡ್) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕಳೆದ ತಿಂಗಳು ಎನ್‍ಡಿಎ ಮರಳಿದ ನಂತರ ಮತ್ತೊಂದು ಪಕ್ಷ ಟಿಡಿಪಿ ಎನ್‍ಡಿಎ ಸೇರಲು ಉತ್ಸುಕವಾಗಿದೆ. +543 ಸದಸ್ಯ ಬಲದ ಸಂಸತ್‍ಗೆ ಏಪ್ರಿಲ-ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ತಮ್ಮ ಪಕ್ಷ 370 ಸ್ಥಾನಗಳನ್ನು ಪಡೆಯಲಿದೆ ಮತ್ತು ಎನ್‍ಡಿಎ 400 ಸೀಟುಗಳನ್ನು ದಾಟಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಸಂಸತ್ತಿನಲ್ಲಿ ಪ್ರತಿಪಾದಿಸಿದ್ದರು. ಬಿಜೆಪಿಗೆ ಸದ್ಯಕ್ಕೆ ರಾಜ್ಯದಿಂದ ಯಾವುದೇ ಲೋಕಸಭಾ ಸದಸ್ಯರಿಲ್ಲ. ಬಿಜೆಪಿಯ ಹಿರಿಯ ನಾಯಕರೊಬ್ಬರು ತಮ್ಮ ಪಕ್ಷವು ಮೈತ್ರಿಗೆ ಮುಕ್ತವಾಗಿದೆ ಆದರೆ ಇದು ಮುಖ್ಯವಾಗಿ ಲೋಕಸಭೆ ಚುನಾವಣೆಗೆ ರಾಜ್ಯದ ಪ್ರಮುಖ ವಿರೋಧ ಪಕ್ಷವಾದ ಟಿಡಿಪಿ ಎಷ್ಟು ಸ್ಥಾನಗಳನ್ನು ನೀಡಲು ಒಪ್ಪುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು. +ಚುನಾವಣೆಯ ಮುನ್ನಾದಿನದಂದು ಪಾಕಿಸ್ತಾನದ ಅಭ್ಯರ್ಥಿಯ ಕಚೇರಿ ಬಳಿ ಸ್ಫೋಟದಲ್ಲಿ 26 ಮಂದಿ ಸಾವು +ತೆಲಂಗಾಣ ಇನ್ನೂ ಔಪಚಾರಿಕವಾಗಿ ಆಂಧ್ರಪ್ರದೇಶದಿಂದ ಬೇರ್ಪಡದಿರುವಾಗ ಇಬ್ಬರೂ 2014 ರ ಚುನಾವಣೆಯಲ್ಲಿ ಒಟ್ಟಿಗೆ ಸ್ರ್ಪಸಿದ್ದರು. ಆಗ ಬಿಜೆಪಿ ಮೂರು ಸ್ಥಾನಗಳಲ್ಲಿ ಸ್ರ್ಪಧಿಸಿತ್ತು ಮತ್ತು ಅಖಂಡ ರಾಜ್ಯದ 42 ಸ್ಥಾನಗಳ ಪೈಕಿ ಎಲ್ಲವನ್ನೂ ಗೆದ್ದಿತ್ತು. ತೆಲಂಗಾಣ ರಚನೆಯ ನಂತರ, ಆಂಧ್ರಪ್ರದೇಶವು 25 ಸ್ಥಾನಗಳನ್ನು ಹೊಂದಿದೆ ಮತ್ತು ಬಿಜೆಪಿ ಆರರಿಂದ ಎಂಟು ಸ್ಥಾನಗಳಲ್ಲಿ ಎಲ್ಲಿಯಾದರೂ ಸ್ರ್ಪಧಿಸಲು ಉತ್ಸುಕವಾಗಿದೆ ಎಂದು ಮೂಲಗಳು ತಿಳಿಸಿವೆ. +ಟಿಡಿಪಿ 2018 ರಲ್ಲಿ ಎನ್‍ಡಿಎಯಿಂದ ಹೊರನಡೆದಿತ್ತು ಆದರೆ 2019 ರ ಚುನಾವಣೆಯಲ್ಲಿ ಅದು ಕೇವಲ ಮೂರು ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು ಮತ್ತು ವೈಎಸ್‍ಆರ್ ಕಾಂಗ್ರೆಸ್‍ಗೆ ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡಿತು, ಇದು ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಬೆಂಬಲಿಸಿತು. ಕಳೆದ ಐದು ವರ್ಷಗಳ ಪ್ರಮುಖ ಸಮಸ್ಯೆಗಳು. +ಆದಾಗ್ಯೂ, ರಾಜಕೀಯ ಸಮೀಕರಣಗಳು ಟಿಡಿಪಿಯೊಂದಿಗಿನ ತನ್ನ ಸಂಬಂಧವನ್ನು ಪುನರುಜ್ಜೀವನಗೊಳಿಸುವ ಸಾಧ್ಯತೆಯನ್ನು ಅನ್ವೇಷಿಸಲು ಬಿಜೆಪಿಯನ್ನು ಪ್ರೇರೇಪಿಸಿವೆ, ಇದು ದೀರ್ಘಕಾಲದವರೆಗೆ ವಿಷಯವನ್ನು ಗಂಭೀರವಾಗಿ ಅನುಸರಿಸುತ್ತಿದೆ. ಬಿಜೆಪಿ ಮಿತ್ರಪಕ್ಷವಾಗಿದ್ದ ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷವು ಈಗಾಗಲೇ ಟಿಡಿಪಿ ಜೊತೆ ಕೈಜೋಡಿಸಲು ನಿರ್ಧರಿಸಿದೆ. \ No newline at end of file diff --git a/eesanje/url_47_168_1.txt b/eesanje/url_47_168_1.txt new file mode 100644 index 0000000000000000000000000000000000000000..53c16a20fb8e5fa5fb6942336a2fc7a7eedcf4d3 --- /dev/null +++ b/eesanje/url_47_168_1.txt @@ -0,0 +1,5 @@ +ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಮುಂಬೈಗೆ ಬಂದ ಮೂವರು ವಶಕ್ಕೆ +ಮುಂಬೈ, ಫೆ.7: ಕುವೈತ್‍ನಿಂದ ಸಮುದ್ರ ಮೂಲಕ ಬೋಟ್‍ನಲ್ಲಿ ಇಲ್ಲಿಗೆ ಬಂದ ಮೂವರನ್ನು ಅಕ್ರಮ ದೇಶಪ್ರವೇಶದ ಆರೋಪದ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಗಳವಾರ ಗೇಟ್‍ವೇ ಆಫ್ ಇಂಡಿಯಾದಲ್ಲಿ ಲಂಗರು ಹಾಕಲಾಗಿದ್ದ ಬೋಟ್‍ನಲ್ಲಿ ಅನುಮಾನಾಸ್ಪದ ವಸ್ತು ಏನೂ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದರು ಮೂವರು ಕೂಡ ತಮಿಳುನಾಡು ಮೂಲದವರು ಎಂದು ತಿಳಿಸಿದ್ದಾರೆ. +ಎರಡು ವರ್ಷಗಳ ಹಿಂದೆ ಕೆಲಸದ ನಿಮಿತ್ತ ಕುವೈತ್‍ಗೆ ಹೋಗಿದ್ದರು. ಕುವೈತ್‍ಗೆ ಕರೆದೊಯ್ದ ಅವರ ಏಜೆಂಟ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಆರೋಪಿಸಲಾಗಿದೆ, ನಂತರ ಅವರು ಅಲ್ಲಿಂದ ತಪ್ಪಿಸಿಕೊಂಡರು ಬಂದಿದ್ದಾರೆ. +ಛತ್ತೀಸ್‍ಗಢದಲ್ಲಿ ನಕ್ಸಲೀಯರಿಂದ ಗ್ರಾಮಸ್ಥನ ಹತ್ಯೆ +ಅಕ್ರಮ ಪ್ರವೇಶಕ್ಕಾಗಿ ಪಾಸ್‍ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಇಲ್ಲಿನ ಕೊಲಾಬಾ ಪೊಲೀಸರು ಮೂವರನ್ನು ವಶಕ್ಕೆ ಪಡದು ಪ್ರಕರಣ ದಾಖಲಿಸಿದ್ದಾರೆ ಅವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಹಿರಿಯ ಅದಿಕಾರಿಗಳು ಹೇಳಿದರು. ಕಳೆದ 2008ರ ನವೆಂಬರ್£ಲ್ಲಿ ಮುಂಬೈಗೆ ಇದೇ ರೀತಿ 10 ಪಾಕಿಸ್ತಾನಿ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಆಗಮಿಸಿ ದುಷ್ಕøತ್ಯ ನಡೆಸಿದ್ದರು. \ No newline at end of file diff --git a/eesanje/url_47_168_10.txt b/eesanje/url_47_168_10.txt new file mode 100644 index 0000000000000000000000000000000000000000..12ff7a63444a82216f917d75a60a7e7cca0baa05 --- /dev/null +++ b/eesanje/url_47_168_10.txt @@ -0,0 +1,8 @@ +1 ಕೋಟಿ ರೂ. ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಪ್ರಕರಣ ದಾಖಲು +ಮುಂಬೈ, ಫೆ.6 (ಪಿಟಿಐ) – ಬಾಕಿ ಇರುವ ತೆರಿಗೆ ಇತ್ಯರ್ಥಕ್ಕೆ ಕಂಪನಿಯ ನಿರ್ದೇಶಕರಿಂದ 1 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ತೆರಿಗೆ ಸಹಾಯಕ ಆಯುಕ್ತ ಮತ್ತು ಮಹಾರಾಷ್ಟ್ರ ಜಿಎಸ್‍ಟಿ ಇಲಾಖೆಯ ಇತರ ಕೆಲವು ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ ದಾಖಲಿಸಿಕೊಂಡಿದೆ. +ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ಎಸಿಬಿ ಮುಂಬೈ ಘಟಕವು ಫೆ 2 ರಂದು ರಾಜ್ಯ ತೆರಿಗೆ (ತನಿಖಾ ಶಾಖೆ) ಸಹಾಯಕ ಆಯುಕ್ತ ಅರ್ಜುನ್ ಸೂರ್ಯವಂಶಿ ಮತ್ತು ಇತರ ಅಧಿಕಾರಿಗಳ ವಿರುದ್ಧ ಅಪರಾಧವನ್ನು ದಾಖಲಿಸಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. +ತೆರಿಗೆಯ ವಿಶೇಷ ಆಯುಕ್ತರು ಮತ್ತು ಮುಖ್ಯ ವಿಜಿಲೆನ್ಸ್ ಅಧಿಕಾರಿಯು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಿಗೆ (ಎಸಿಬಿ) ರಾಜ್ಯ ತೆರಿಗೆಯ ತನಿಖಾ ಶಾಖೆಯ ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಪತ್ರ ಬರೆದ ನಂತರ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ತನಿಖೆಯ ಸಮಯದಲ್ಲಿ, ಸೂರ್ಯವಂಶಿ ಮತ್ತು ಅವರ ತಂಡವು ಕಳೆದ ವರ್ಷ ಜುಲೈ 5 ಮತ್ತು ಆಗಸ್ಟ 7 ರ ನಡುವೆ 20 ಕೋಟಿ ರೂಪಾಯಿಗಳಿಗಿಂತ ಹೆಚ್ಚು ತೆರಿಗೆಯನ್ನು ಹೊಂದಿರುವ ಸಂಸ್ಥೆಯ ಮೇಲೆ ದಾಳಿ ನಡೆಸಿತು ಎಂದು ತಿಳಿದುಬಂದಿದೆ ಎಂದು ಅಧಿಕಾರಿ ಹೇಳಿದರು. +ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಬ್ರಿಟನ್ ರಾಜ ಚಾರ್ಲ್ಸ್ +ಹಲವಾರು ಜ್ಞಾಪನೆಗಳ ಹೊರತಾಗಿಯೂ, ಸಂಸ್ಥೆಯ ನಿರ್ದೇಶಕರು ಬಾಕಿ ಇರುವ ತೆರಿಗೆಯನ್ನು ಪಾವತಿಸಿಲ್ಲ, ನಂತರ ಜಿಎಸ್‍ಟಿ ಇಲಾಖೆ ಅಧಿಕಾರಿಗಳು ಅವರ ಕಚೇರಿ ಮತ್ತು ನಿವಾಸಕ್ಕೂ ಭೇಟಿ ನೀಡಿದರು ಎಂದು ಅವರು ಹೇಳಿದರು. ಆಗಸ್ಟ್ 21 ರಂದು ಸೂರ್ಯವಂಶಿ ಅವರು ತೆರಿಗೆ ವಿಷಯವನ್ನು ಇತ್ಯರ್ಥಪಡಿಸಲು ಸಂಸ್ಥೆಯ ನಿರ್ದೇಶಕರಿಂದ 1 ಕೋಟಿ ರೂಪಾಯಿಗೆ ಬೇಡಿಕೆಯಿರುವ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಲಂಚದ ಬೇಡಿಕೆಯನ್ನು ತನಿಖೆಯ ಸಮಯದಲ್ಲಿ ದೃಢಪಡಿಸಲಾಯಿತು (ಆದರೂ ಹಣ ವಿನಿಮಯವಾಗಿಲ್ಲ) ನಂತರ ಎಫ್‍ಐಆರ್ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_168_11.txt b/eesanje/url_47_168_11.txt new file mode 100644 index 0000000000000000000000000000000000000000..8e87ffca077cb3e0f1f3109735418c364f00a647 --- /dev/null +++ b/eesanje/url_47_168_11.txt @@ -0,0 +1,6 @@ +ಮಹಿಳೆಯನ್ನು ಕೊಂದು, ಶವದ ಜೊತೆ ಸಂಭೋಗ ಮಾಡಿದ್ದ ವಿಕೃತ ಕಾಮಿಗಳ ಬಂಧನ +ಬಲರಾಂಪುರ, ಫೆ 5 (ಪಿಟಿಐ) ಸಂಬಂಧಿ ಮಹಿಳೆಯನ್ನು ಹತ್ಯೆ ಮಾಡಿ ನಂತರ ಶವದೊಂದಿಗೆ ಸಂಬೋಗ ನಡೆಸಿದ ಆರೋಪದ ಮೇಲೆ ಛತ್ತೀಸ್‍ಗಢದ ಬಲರಾಮ್‍ಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್‍ಪುರ ಠಾಣೆ ವ್ಯಾಪ್ತಿಯ ಪರಸಗುಡಿ ಹರಿತ್ಮಾ ಗ್ರಾಮದ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. +17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕ ಮಹಿಳೆಯ ಪತಿಯ ಕಿರಿಯ ಸಹೋದರನಾಗಿದ್ದು, ಇತರ ಆರೋಪಿಯು ಸಂತ್ರಸ್ತೆ ಸಂಬಂಧಿ ಎಂದು ಗುರುತಿಸಲಾಗಿದೆ. ಮಹಿಳೆ ಮತ್ತು ಆಕೆಯ ಪತಿ ಕೆಲಸದ ನಿಮಿತ್ತ ಪರ್ಸಗುಡಿಯಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಸುರ್ಗುಜಾ ಜಿಲ್ಲೆಯ ಅಕೋಲಾಕ್ಕೆ ಸ್ಥಳಾಂತರಗೊಂಡಿದ್ದರು. ಘಟನೆಯ ದಿನ ಆರೋಪಿಗಳು ತಮ್ಮ ಕೃಷಿ ಭೂಮಿಗೆ ನೀರುಣಿಸಲು ಹರಿತ್ಮಾ ಅರಣ್ಯಕ್ಕೆ ಬರುವಂತೆ ಫೋನ್ ಮೂಲಕ ಕರೆದಿದ್ದರು. +ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಬ್ರಿಟನ್ ರಾಜ ಚಾರ್ಲ್ಸ್ +ಕಾಡಿಗೆ ಬಂದ ಮಹಿಳೆಯೊಂದಿಗೆ ಮದ್ಯ ಸೇವಿಸಿದ ನಂತರ ಅಪ್ರಾಪ್ತ ಬಾಲಕ ನೈಲಾನ್ ಹಗ್ಗದಿಂದ ಆಕೆಯ ಕತ್ತು ಹಿಸುಕಿ ಕೊಂದು ನಂತರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಪರಾರಿಯಾಗಿದ್ದರು. ಮರುದಿನ ಬೆಳಗ್ಗೆ ದಾರಿಹೋಕರು ಆಕೆಯ ಶವವನ್ನು ಕಂಡುಕೊಂಡು ಪೊಲೀಸರಿಗೆ ತಿಳಿಸಿದ್ದರು. +ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಅವರು ಮಹಿಳೆಯನ್ನು ಕೊಲೆ ಮಾಡಿ ನಂತರ ಶವ ಸಂಭೋಗ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_168_12.txt b/eesanje/url_47_168_12.txt new file mode 100644 index 0000000000000000000000000000000000000000..5b07ba86681e5b346b7faa36f1bfe73203971edb --- /dev/null +++ b/eesanje/url_47_168_12.txt @@ -0,0 +1,6 @@ +ಧಾರಾವಿ ಸ್ಲಂ ಅಭಿವೃದ್ಧಿ ಯೋಜನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ +ಮುಂಬೈ, ಫೆ 5 (ಪಿಟಿಐ) ಏಷ್ಯಾ ಖಂಡದ ಅತಿ ದೊಡ್ಡ ಸ್ಲಂ ಎಂದು ಗುರುತಿಸಲಾಗಿರುವ ಮಹಾರಾಷ್ಟ್ರದ ಧಾರಾವಿ ಕೊಳೆಗೇರಿ ಪುನರಾಭಿವೃದ್ಧಿ ಯೋಜನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಮುಂಬೈನಲ್ಲಿರುವ 283.40 ಎಕರೆ ಉಪ್ಪಿನಂಗಡಿ ಭೂಮಿಯನ್ನು ಪುನರ್ವಸತಿ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರದಿಂದ 99 ವರ್ಷಗಳ ಗುತ್ತಿಗೆಗೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. +ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ವಸತಿ ಇಲಾಖೆ ಮಂಡಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಉಪ್ಪಿನಂಗಡಿ ಜಮೀನು ಹಸ್ತಾಂತರಕ್ಕೆ ಪ್ರತ್ಯೇಕ ಪ್ರಸ್ತಾವನೆ, ಕೆಲವರ ಪುನರ್ವಸತಿಗೆ ಬಳಸಿಕೊಳ್ಳಬೇಕು ಧಾರಾವಿ ನಿವಾಸಿಗಳಿಗೆ ಸ್ಲಂ ಪುನರಾಭಿವೃದ್ಧಿ ಯೋಜನೆಯಡಿ ಶೀಘ್ರದಲ್ಲಿಯೇ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. +ರಸ್ತೆ ಹಂಪ್ ಬಳಿ ಉರುಳಿದ ಸ್ಕೂಟರ್ : ಸವಾರ ದುರ್ಮರಣ +ಧಾರಾವಿ ಸ್ಲಂ ಕಾಲೋನಿಯ ಪುನರಾಭಿವೃದ್ಧಿಗಾಗಿ ರಚಿಸಲಾದ ವಿಶೇಷ ಉದ್ದೇಶದಡಿ ಒಟ್ಟು 283.40 ಎಕರೆ ಜಮೀನುಗಳ ಮಾರುಕಟ್ಟೆ ಮೌಲ್ಯವನ್ನು ವಸೂಲಿ ಮಾಡಿ ನಂತರ ಕೇಂದ್ರಕ್ಕೆ ಹಸ್ತಾಂತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಕಳೆದ ವರ್ಷ ಜುಲೈನಲ್ಲಿ ಮಹಾರಾಷ್ಟ್ರ ಸರ್ಕಾರವು 259 ಹೆಕ್ಟೇರ್ ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು ಅದಾನಿ ಸಮೂಹ ಸಂಸ್ಥೆಗೆ ಔಪಚಾರಿಕವಾಗಿ ನೀಡಿತು. +ಎಸ್‍ಪಿವಿ ಮೂಲಕ ಕಾರ್ಯಗತಗೊಳ್ಳಲಿರುವ ಬಹುಕೋಟಿ ಯೋಜನೆ ಇದಾಗಿದೆ. ಮಧ್ಯ ಮುಂಬೈನಲ್ಲಿ ಏಷ್ಯಾದ ಅತಿ ದೊಡ್ಡದಾದ ಧಾರಾವಿ ಕೊಳೆಗೇರಿಯನ್ನು ಮರುನಿರ್ಮಾಣ ಮಾಡುವುದನ್ನು ಒಳಗೊಂಡಿರುತ್ತದೆ. \ No newline at end of file diff --git a/eesanje/url_47_168_2.txt b/eesanje/url_47_168_2.txt new file mode 100644 index 0000000000000000000000000000000000000000..6128da835870efafa369be1d29dfa31a39901bb6 --- /dev/null +++ b/eesanje/url_47_168_2.txt @@ -0,0 +1,5 @@ +ಛತ್ತೀಸ್‍ಗಢದಲ್ಲಿ ನಕ್ಸಲೀಯರಿಂದ ಗ್ರಾಮಸ್ಥನ ಹತ್ಯೆ +ಬಿಜಾಪುರ, ಫೆ.7: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ಕಳೆದ ರಾತ್ರಿ ವ್ಯಕ್ತಿಯಬ್ಬರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ. ಬಸಗುಡ ಪೊಲೀಸ್ ಠಾಣಾ ವ್ಯಾಪ್ತಿಯ ತಿಮಾಪುರ ಗ್ರಾಮದ ಹೊರವಲಯದ ರಸ್ತೆಯಲ್ಲಿ ಮಿಚ್ಚಾ ಹದ್ಮಾ ಶವ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ನಕ್ಸಲೀಯರ ಗುಂಪೊಂದು ಕೊಡಲಿಯಿಂದ ಗ್ರಾಮಸ್ಥನ ಮೇಲೆ ದಾಳಿ ಮಾಡಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದರು ಎಂದು ಅವರು ಹೇಳಿದರು. +ಪೊಲೀಸರ ತಂಡ ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಹತ್ಯೆಯ ಹಿಂದಿನ ನಿಖರವಾದ ಕಾರಣ ಇನ್ನೂ ಪತ್ತೆಯಾಗಿಲ್ಲ, ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಹೆಲಿಕಾಪ್ಟರ್ ಅಪಘಾತದಲ್ಲಿ ಚಿಲಿಯ ಮಾಜಿ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ ನಿಧನ \ No newline at end of file diff --git a/eesanje/url_47_168_3.txt b/eesanje/url_47_168_3.txt new file mode 100644 index 0000000000000000000000000000000000000000..9ad2d87fa892062dae189638e65b97879eeba276 --- /dev/null +++ b/eesanje/url_47_168_3.txt @@ -0,0 +1,9 @@ +ಇಂದಿನಿಂದ ಕೇಂದ್ರದ ಭಾರತ್ ಬ್ರಾಂಡ್ ಅಕ್ಕಿ ಮಾರುಕಟ್ಟೆಗೆ +ನವದೆಹಲಿ,ಫೆ.6- ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರಾಂಡ್ ಅಕ್ಕಿ ಮಾರಾಟ ಇಂದಿನಿಂದ ದೇಶದದ್ಯಾಂತ ಆರಂಭವಾಗಿದೆ. ಭಾರತ್ ಬ್ರಾಂಡ್ ಅಕ್ಕಿ ಗ್ರಾಹಕರಿಗೆ ಆನ್‍ಲೈನ್‍ನಲ್ಲೂ ಸಹ ಸಿಗಲಿದ್ದು, ಪ್ರತಿ ಕೆ.ಜಿ ಅಕ್ಕಿಗೆ 29 ದರ ನಿಗದಿಪಡಿಸಲಾಗಿದೆ. 5 ಕೆ.ಜಿ ಮತ್ತು 10 ಕೆ.ಜಿ ಪ್ಯಾಕೆಟ್ ಗಳಲ್ಲಿ ದೊರೆಯಲಿದೆ. +ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‍ನಷ್ಟು ಅಕ್ಕಿಯನ್ನು ಬಿಡುಗಡೆ ಮಾಡಲಾಗುತ್ತದೆ. ಸರಕಾರ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಅಮೆಜಾನ್, ಫ್ಲಿಪ್‍ಕಾರ್ಟ್ ಮುಂತಾದ ಇ – ಕಾಮರ್ಸ್ ತಾಣಗಳಲ್ಲಿ ಅಕ್ಕಿ ಮಾರಾಟಕ್ಕೆ ಮುಂದಾಗುತ್ತಿರುವ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿದೆ. ಭಾರತ್ ಅಕ್ಕಿ 5 ಕೆ.ಜಿ, 10 ಕೆ.ಜಿ ಪ್ಯಾಕೆಟ್‍ಗಳಲ್ಲಿ ಮಾರಾಟಗೊಳ್ಳಲಿದೆ ಎಂದು ಆಹಾರ ಸಚಿವಾಲಯದ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾಹಿತಿ ನೀಡಿದ್ದಾರೆ. +ಆನ್‍ಲೈನ್ ವೇದಿಕೆಗಳಲ್ಲದೆ ಎನ್‍ಎಎಫ್‍ಇಡಿ (ನಾಫೆಡ್), ಎನ್ಸಿಸಿಎಫ್, ಕೇಂದ್ರೀಯ ಭಂಡಾರಗಳಲ್ಲಿ ಅಕ್ಕಿ ಮಾರಾಟಕ್ಕೆ ಲಭ್ಯವಿದೆ. ಇದೇ ವೇಳೆ ಅಕ್ಕಿ ದರ ನಿಯಂತ್ರಣಕ್ಕೆ ಬರುವವರೆಗೂ ಅಕ್ಕಿ ರಫ್ತಿಗೆ ಹೇರಲಾಗಿರುವ ನಿರ್ಬಂಧವನ್ನು ಸಡಿಲಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶದ ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ 14.5 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇ 15.5ರಷ್ಟು ಅಕ್ಕಿ ದರ ಏರಿಕೆಯಾಗಿದೆ. ಬೆಲೆ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ, ದಾಸ್ತಾನು ಮಾಡಿರುವ ಅಕ್ಕಿ ಮತ್ತು ಭತ್ತದ ಪ್ರಮಾಣವನ್ನು ವರ್ತಕರು, ಗಿರಣಿ ಮಾಲೀಕರು ಬಹಿರಂಗಪಡಿಸಬೇಕು ಎಂದು ಸೂಚಿಸಿದೆ. +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ಅಕ್ಕಿ ರಫ್ತಿನ ಮೇಲೆ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ದೇಶೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಾಗುವವರೆಗೂ ಈ ನಿರ್ಬಂಧ ಮುಂದುವರಿಯಲಿದೆ. ದೇಶದಲ್ಲಿ ಹಲವು ಆಹಾರ ಪದಾರ್ಥಗಳ ದರಗಳು ಏರಿಕೆ ಕಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಅವುಗಳ ರಫ್ತನ್ನು ನಿಷೇಧಿಸಿತ್ತು. ಈ ಕ್ರಮದಿಂದ ಆಹಾರ ಪದಾರ್ಥಗಳ ದರಗಳು ನಿಯಂತ್ರಣದಲ್ಲಿವೆ. ಆದರೆ ಅಕ್ಕಿ ದರ ಮಾತ್ರ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 14.5 ಪ್ರತಿಶತ ಹೆಚ್ಚಾಗಿಯೇ ಇದೆ. ಬೆಲೆ ನಿಯಂತ್ರಣಕ್ಕೂ ಬರುತ್ತಿಲ್ಲ. +ಮುಂದಿನ ವರ್ಷ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರಕಾರ ಅಹಾರ ಪದಾರ್ಥಗಳ ದರಗಳ ಮೇಲೆ ತೀವ್ರ ನಿಗಾ ಇರಿಸಿದ್ದು ಗೋಧಿ, ಅಕ್ಕಿ, ಸಕ್ಕರೆ ಮತ್ತು ನೀರುಳ್ಳಿ ಮೊದಲಾದ ದಿನ ಬಳಕೆ ವಸ್ತುಗಳ ಬೆಲೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ. +ದಿನಸಿ, ಧಾನ್ಯ ಎಲ್ಲಾ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದಾರೆ. ಈ ಹಣದುಬ್ಬರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಾನಾ ಪ್ರಯತ್ನಗಳನ್ನು ನಡೆಸುತ್ತಿದ್ದು, ಸರ್ಕಾರ ಈಗಾಗಲೇ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಗೋಧಿ ಮತ್ತು ಬೇಳೆ ಕಾಳುಗಳನ್ನು ಮಾರಾಟ ಮಾಡುತ್ತಿದೆ. ಬೆಂಗಳೂರಿನಲ್ಲಿ ಎನ್ಸಿಸಿಎಫ್‍ನ ಮುಖ್ಯ ಗೋಡಾನ್ ಯಶವಂತಪುರದಲ್ಲಿದ್ದು ಬೆಂಗಳೂರಿನ 50 ಸ್ಥಳಗಳಿಗೆ ಮೊಬೈಲ್ ವ್ಯಾನ್ ಮೂಲಕ ಮನೆ ಮನೆಗೆ ತಲುಪಿಸುವ ಪ್ಲಾನ್ ಮಾಡಿಕೊಂಡಿದೆ. +ಬಸವೇಶ್ವರ ನಗರ, ದೀಪಾಂಜಲಿ ನಗರ, ಮಹಾಕ್ಷ್ಮಿ ಲೇಔಟ್, ಗಾಯತ್ರಿ ನಗರ, ನಾಗಸಂದ್ರ, ಅಬ್ಬಿಗೆರೆ, ಚಿಕ್ಕಬಣ್ಣಾವರ, ಥಣಿಸಂದ್ರ, ಹೆಸರಘಟ್ಟ, ಯಲಹಂಕ, ಮಾಗಡಿ ರೋಡ್, ಕೊಡಿಗೆಹಳ್ಳಿ, ಶೇಷಾದ್ರಿಪುರಂ, ಸಂಜಯ್ ನಗರ, ಜಕ್ಕೂರು, ಬನಶಂಕರಿ, ಕುಮಾರಸ್ವಾಮಿ ಲೇಔಟ, ಜೆ.ಸಿ. ನಗರ, ಡೈರಿ ಸರ್ಕಲ, ಕೊಡಿಗೆಹಳ್ಳಿ ಸೇರಿದಂತೆ ಸುಮಾರು 50 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವ್ಯಾನ್ ಮೂಲಕ ಅಕ್ಕಿ ಪೂರೈಸಿ ಮನೆ ಮನೆಗೆ ತಲುಪಿಸಲಾಗುತ್ತದೆ. \ No newline at end of file diff --git a/eesanje/url_47_168_4.txt b/eesanje/url_47_168_4.txt new file mode 100644 index 0000000000000000000000000000000000000000..a9a9ef38b312ebf88a8ffd8e24b6970b6d95d6c7 --- /dev/null +++ b/eesanje/url_47_168_4.txt @@ -0,0 +1,7 @@ +ಜಮ್ಮು ಮತ್ತು ಕಾಶ್ಮೀರದ ಹಲವು ಜಿಲ್ಲೆಗಳಿಗೆ ಹಿಮ ಕುಸಿತದ ಎಚ್ಚರಿಕೆ +ಶ್ರೀನಗರ,ಫೆ.6- ಜಮ್ಮು ಮತ್ತು ಕಾಶ್ಮೀರ ವಿಪತ್ತು ನಿರ್ವಹಣಾ ಪ್ರಾಧಿಕಾರ ಕಣಿವೆ ರಾಜ್ಯದ ಹಲವು ಜಿಲ್ಲೆಗಳಿಗೆ ಹಿಮಕುಸಿತದ ಎಚ್ಚರಿಕೆ ನೀಡಿದೆ. ಬಂಡಿಪೋರ್, ಬಾರಾಮುಲ್ಲಾ ಮತ್ತು ಕುಪ್ವಾರದ ಮೇಲೆ 2,400 ಮೀಟರ್‍ಗಿಂತ ಹೆಚ್ಚು ಕಡಿಮೆ ಅಪಾಯದ ಮಟ್ಟ ಹೊಂದಿರುವ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. +ಮುಂದಿನ 24 ಗಂಟೆಗಳಲ್ಲಿ ದೋಡಾ, ಕಿಶ್ತ್ವಾರ್, ಪೂಂಚ್, ರಾಂಬನ್ ಮತ್ತು ಗಂದರ್‍ಬಾಲ್ ಜಿಲ್ಲೆಗಳಲ್ಲಿ 2,200 ಮೀಟರ್‍ಗಿಂತ ಹೆಚ್ಚು ಮಧ್ಯಮ ಅಪಾಯದ ಮಟ್ಟ ಹೊಂದಿರುವ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ ಎಂದು ಜೆಕೆಡಿಎಂಎ ಹೇಳಿದೆ. ಈ ಪ್ರದೇಶಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಲು ಸೂಚಿಸಲಾಗಿದೆ. ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಹಲವೆಡೆ ತಾಜಾ ಹಿಮಪಾತವನ್ನು ಮುಂದುವರೆಸಿದೆ ಮತ್ತು ಸೋಮವಾರ ತಾಪಮಾನವು 9 ಡಿಗ್ರಿ ಸೆಲ್ಸಿಯಸ್‍ಗೆ ಇಳಿದಿದೆ. +ದೇವರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ : ಭಾಗವತ್ +ಪ್ರಸ್ತುತ ಕಾಶ್ಮೀರ ಕಣಿವೆಯಲ್ಲಿ ಹಲವಾರು ಜಿಲ್ಲೆಗಳು ಹಲವಾರು ಅಡಿಗಳಷ್ಟು ಹಿಮದಿಂದ ಆವೃತವಾಗಿವೆ ಮತ್ತು ಇದು ಆಯಕಟ್ಟಿನ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಮಾನಗಳು ಮತ್ತು ಸಂಚಾರದ ಮೇಲೆ ಪರಿಣಾಮ ಬೀರಿದೆ. ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್ ಪ್ರದೇಶದಲ್ಲಿ ಹಿಮಪಾತ ಮುಂದುವರಿದಿರುವುದರಿಂದ ದಟ್ಟವಾದ ಹಿಮದ ಹೊದಿಕೆ ಆವರಿಸಿದೆ. +ಹವಾಮಾನ ಪರಿಸ್ಥಿತಿಗಳಲ್ಲಿನ ತೀವ್ರ ಬದಲಾವಣೆಯಿಂದಾಗಿ ಶೇರ್ ಬೀಬಿ ಪ್ರದೇಶದ ಬಳಿ ಕಿಶ್ತ್ವಾರಿ ಪಥೇರಿಯಲ್ಲಿ 270-ಕಿಮೀ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹೆದ್ದಾರಿಯ ರಾಮ್ಸು-ಬನಿಹಾಲ-ಶ್ರೀನಗರ ಸ್ಟ್ರೆಚ್ ಕೂಡ ಭಾರಿ ಹಿಮಪಾತವನ್ನು ದಾಖಲಿಸಿದೆ, ಆದರೆ ಉಳಿದ 270 ಕಿಮೀ ಹೆದ್ದಾರಿಯು ಭಾರಿ ಮಳೆಯಿಂದ ತತ್ತರಿಸಿಹೋಗಿದೆ. +ಹವಾಮಾನ ವೈಪರೀತ್ಯದಿಂದಾಗಿ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಚಾಪರ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರದೇಶಗಳಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಲೇಹ್‍ಗೆ ಒಟ್ಟು 6 ಇಂಡಿಗೋ ವಿಮಾನಗಳನ್ನು ರದ್ದುಗೊಳಿಸಲಾಗಿದೆ. \ No newline at end of file diff --git a/eesanje/url_47_168_5.txt b/eesanje/url_47_168_5.txt new file mode 100644 index 0000000000000000000000000000000000000000..72abfa6bfbcd7962fad05b2bb97558a5c89be713 --- /dev/null +++ b/eesanje/url_47_168_5.txt @@ -0,0 +1,5 @@ +ಭಾರತದ ಸಮುದ್ರ ರಕ್ಷಣೆಗೆ ಬಂತು ಅಮೆರಿಕದ MQ9- ಡ್ರೋನ್ +ವಾಷಿಂಗ್ಟನ್,ಫೆ.6- ಜನರಲ್ ಅಟಾಮಿಕ್ಸ್ ಎಂಕ್ಯೂ-9ಬಿ ಸಶಸ್ತ್ರ ಡ್ರೋನ್‍ಗಳ ಮಾರಾಟವು ಭಾರತಕ್ಕೆ ವರ್ದಿತ ಸಮುದ್ರ ಸುರಕ್ಷತೆ ಮತ್ತು ಡೊಮೇನ್ ಜಾಗೃತಿ ಸಾಮಥ್ರ್ಯವನ್ನು ಒದಗಿಸುತ್ತದೆ ಎಂದು ಯುನೈಟೆಡ್ ಸ್ಟೇಟ್ಸ್ ಹೇಳಿದೆ. ಕಳೆದ ವಾರ, ಸ್ಟೇಟ್ ಡಿಪಾಟ್ರ್ಮೆಂಟ್ 3.99 ಬಿಲಿಯನ್ ಅಮೆರಿಕನ್ ಡಾಲರ್ ಅಂದಾಜು ವೆಚ್ಚದಲ್ಲಿ 31 ಎಂಕ್ಯೂ -9ಬಿ ಸಶಸ್ತ್ರ ಡ್ರೋನ್‍ಗಳ ಮಾರಾಟವನ್ನು ಅಧಿಕೃತಗೊಳಿಸುವ ನಿರ್ಧಾರಕೈಗೊಳ್ಳಲಾಗಿತ್ತು. +ಯೋಜಿತ ಮೆಗಾ ಡ್ರೋನ್ ಒಪ್ಪಂದವನ್ನು ಜೂನ್ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ರಾಜ್ಯ ಭೇಟಿಯ ಸಂದರ್ಭದಲ್ಲಿ ಬಹಿರಂಗಗೊಂಡಿತ್ತು. ಈ ಮಾರಾಟವು ಭಾರತಕ್ಕೆ ವರ್ದಿತ ಕಡಲ ಭದ್ರತೆ ಮತ್ತು ಕಡಲ ಡೊಮೇನ್ ಜಾಗೃತಿ ಸಾಮಥ್ರ್ಯವನ್ನು ಒದಗಿಸುತ್ತದೆ ಎಂದು ನಾವು ನಂಬುತ್ತೇವೆ ಎಂದು ವಿದೇಶಾಂಗ ಇಲಾಖೆಯ ಉಪ ವಕ್ತಾರ ವೇದಾಂತ್ ಪಟೇಲ್ ತಮ್ಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ದೇವರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ : ಭಾಗವತ್ +ಇದು ಈ ವಿಮಾನಗಳ ಸಂಪೂರ್ಣ ಮಾಲೀಕತ್ವವನ್ನು ಭಾರತಕ್ಕೆ ನೀಡುತ್ತದೆ, ಮತ್ತು ಇದು ನಮ್ಮ ಭಾರತೀಯ ಪಾಲುದಾರರೊಂದಿಗೆ ನಮ್ಮ ಸಹಕಾರವನ್ನು ಗಾಢವಾಗಿಸುವುದನ್ನು ನಾವು ಮುಂದುವರಿಸುತ್ತೇವೆ ಎಂದು ಪಟೇಲ್ ವಿವರಿಸಿದರು. \ No newline at end of file diff --git a/eesanje/url_47_168_6.txt b/eesanje/url_47_168_6.txt new file mode 100644 index 0000000000000000000000000000000000000000..0bf9cf0e3d3790baebacacedb1797e3a44fc9653 --- /dev/null +++ b/eesanje/url_47_168_6.txt @@ -0,0 +1,5 @@ +ಕೇಜ್ರಿವಾಲ್ ಆಪ್ತ, ರಾಜ್ಯಸಭಾ ಸದಸ್ಯ ಸೇರಿ ಹಲವರ ಮನೆಗಳ ಮೇಲೆ ಇಡಿ ರೇಡ್ +ನವದೆಹಲಿ,ಫೆ.6- ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸಂಸದ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಡಿ ಅಧಿಕಾರಿಗಳು ಪ್ರಸ್ತುತ ದೆಹಲಿ, ಚಂಡೀಗಢ ಮತ್ತು ವಾರಣಾಸಿಯಾದ್ಯಂತ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. +ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಹಾಗೂ ರಾಜ್ಯಸಭಾ ಸಂಸದ ಎನ್‍ಡಿ ಗುಪ್ತಾ, ದೆಹಲಿ ಜಲ ಮಂಡಳಿಯ ಮಾಜಿ ಸದಸ್ಯ ಶಲಭ್ ಕುಮಾರ್ ಸೇರಿದಂತೆ ಹಲವರು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಇಡಿ ದಾಳಿಗೆ ನಾವು ಹೆದರುವುದಿಲ್ಲ. ಯಾವುದೇ ಸಾಕ್ಷ್ಯಾಧಾರಗಳಿಲ್ಲ (ಯಾವುದೇ ಅಕ್ರಮದ) ಇಡಿ ಆರೋಪಿಗಳನ್ನು ಸರ್ಕಾರಿ ಸಾಕ್ಷಿಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಸಚಿವ ಅತಿಶಿ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. +ಮಹಿಳೆಯನ್ನು ಕೊಂದು, ಶವದ ಜೊತೆ ಸಂಭೋಗ ಮಾಡಿದ್ದ ವಿಕೃತ ಕಾಮಿಗಳ ಬಂಧನ +ಜಲ್ ಬೋರ್ಡ್‍ನಲ್ಲಿ ನಡೆದ ಆರೋಪದ ಹಗರಣಕ್ಕೆ ಸಂಬಂಸಿದಂತೆ ನಡೆದ ದಾಳಿಗಳು – ಎಎಪಿ ಪತ್ರಿಕಾಗೋಷ್ಠಿಗೆ ಗಂಟೆಗಳ ಮೊದಲು ಬಂದಿದೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಎರಡು ಆರ್ಥಿಕ ಅವ್ಯವಹಾರಗಳ ಕುರಿತು ಇಡಿ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಜಲ ಮಂಡಳಿಯ ಇಬ್ಬರು ಮಾಜಿ ಮುಖ್ಯ ಎಂಜಿನಿಯರ್‍ಗಳನ್ನು ಬಂಧಿಸಲಾಗಿತ್ತು. \ No newline at end of file diff --git a/eesanje/url_47_168_7.txt b/eesanje/url_47_168_7.txt new file mode 100644 index 0000000000000000000000000000000000000000..a00097dd0f18cacc8c3a0c2d27f2a5424d91dc6e --- /dev/null +++ b/eesanje/url_47_168_7.txt @@ -0,0 +1,6 @@ +ಖಾಸಗಿ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ಯೂನ್ +ಮುಂಬೈ, ಫೆ 5 (ಪಿಟಿಐ) ನಾಲ್ಕು ವರ್ಷದ ಮಗುವಿನ ಮೇಲೆ ಶಾಲಾ ಪ್ಯೂನ್ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಇಲ್ಲಿನ ಪಶ್ಚಿಮ ಉಪನಗರ ಕಾಂದಿವಲಿಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ. ನಾಲ್ಕು ವರ್ಷದ ಬಾಲಕಿಯೊಬ್ಬಳು ಪ್ಯೂನ್‍ನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಶಾಲೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಶಾಲಾ ಸಮಯದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ವಾಶ್‍ರೂಮ್‍ನಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಹಲ್ಲೇಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮನೆ ತಲುಪಿದ ನಂತರ ಬಾಲಕಿ ತನ್ನ ಕುಟುಂಬ ಸದಸ್ಯರಿಗೆ ಸಂಕಟವನ್ನು ವಿವರಿಸಿದಳು ಮತ್ತು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು ಮಗು ಬೊರಿವಲಿಯ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ಅವರು ಹೇಳಿದರು. 40 ವರ್ಷದ ಆರೋಪಿಯನ್ನು ಸೆಕ್ಷನ್ 376 (ಅತ್ಯಾಚಾರ) ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಧಾರಾವಿ ಸ್ಲಂ ಅಭಿವೃದ್ಧಿ ಯೋಜನೆಗೆ ಮಹಾರಾಷ್ಟ್ರ ಸಚಿವ ಸಂಪುಟ ಒಪ್ಪಿಗೆ +ಆರೋಪಿಯನ್ನು ಬಂಧಿಸಿದ ನಂತರವೂ ಪೋಷಕರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿ ಘಟನೆ ಬಗ್ಗೆ ತಿಳಿದಿದ್ದರೂ ಪೋಲೀಸರಿಗೆ ಮಾಹಿತಿ ನೀಡದ ಶಾಲೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. \ No newline at end of file diff --git a/eesanje/url_47_168_8.txt b/eesanje/url_47_168_8.txt new file mode 100644 index 0000000000000000000000000000000000000000..ce50d7ba922a84d453cd68810d61972aa75e5c38 --- /dev/null +++ b/eesanje/url_47_168_8.txt @@ -0,0 +1,7 @@ +ಕೋವಿಡ್ ಲಸಿಕೆಗಳಿಂದ ಹೃದಯಘಾತವಾಗುತ್ತಿಲ್ಲ : ರುಶಿಕೇಶ್ +ಗಾಂಧಿನಗರ, ಫೆ 5 (ಪಿಟಿಐ) ಕೋವಿಡ್ -19 ಲಸಿಕೆಗೂ ಹೃದಯಾಘಾತದಿಂದ ಉಂಟಾಗುವ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಗುಜರಾತ್ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ವಿಧಾನಸಭೆಯ ಬಜೆಟ್ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವುಗಳು ಕೋವಿಡ್-19 ನ ಕೆಲವು ಅಡ್ಡ ಪರಿಣಾಮಗಳಿಂದ ಉಂಟಾಗುತ್ತವೆ ಎಂಬ ನಾಗರಿಕರಲ್ಲಿ ಜನಪ್ರಿಯವಾದ ಕಲ್ಪನೆಯ ಬಗ್ಗೆ ಸರ್ಕಾರದ ನಿಲುವು ಏನೆಂದು ಪ್ರಶ್ನಿಸಿದ್ದರು. +ಪಟೇಲ್ ತಮ್ಮ ಉತ್ತರದಲ್ಲಿ, ಈ ಕಲ್ಪನೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ದೇಶಾದ್ಯಂತ ಸುಮಾರು 250 ಕೋಟಿ ಡೋಸ್ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ. ಲಸಿಕೆಯ ಯಾವುದೇ ಅಡ್ಡ ಪರಿಣಾಮದಿಂದಾಗಿ ಹೃದಯಾಘಾತವು ಉಂಟಾಗುವುದಿಲ್ಲ. ಸಾವುಗಳ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. +ಮಹಿಳೆಯನ್ನು ಕೊಂದು, ಶವದ ಜೊತೆ ಸಂಭೋಗ ಮಾಡಿದ್ದ ವಿಕೃತ ಕಾಮಿಗಳ ಬಂಧನ +-ಕೋವಿಡ್ 19 ಕಾರಣದಿಂದಾಗಿ ಜನರು ಫೈಬ್ರೋಸಿಸ್ (ಗಂಭೀರ ಶ್ವಾಸಕೋಶದ ಕಾಯಿಲೆ) ಸೋಂಕಿಗೆ ಒಳಗಾಗಿರಬಹುದು, ಇದು ತಡೆಗಟ್ಟುವಿಕೆಯಿಂದಾಗಿ ಶ್ವಾಸಕೋಶದ ಸಾಮಥ್ರ್ಯವನ್ನು ಕಡಿಮೆ ಮಾಡಬಹುದು. ಇಲ್ಲದಿದ್ದರೆ, ಹೃದಯಾಘಾತ ಮತ್ತು ಕರೋನವೈರಸ್ ಲಸಿಕೆ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಪಟೇಲ್ ಸದನಕ್ಕೆ ತಿಳಿಸಿದರು. +ಪ್ರಾಸಂಗಿಕವಾಗಿ, ಕಳೆದ ವರ್ಷ ಅಕ್ಟೋಬರ್‍ನಲ್ಲಿ ನವರಾತ್ರಿ ಉತ್ಸವಗಳನ್ನು ಗುರುತಿಸುವ ಗರ್ಬಾ ಕಾರ್ಯಕ್ರಮಗಳು ಸೇರಿದಂತೆ ಗುಜರಾತ್‍ನಲ್ಲಿ ಇತ್ತೀಚೆಗೆ ಹಲವಾರು ಕಾರ್ಯಕ್ರಮಗಳ ಸಂದರ್ಭದಲ್ಲಿ ಹೃದಯ ಸಮಸ್ಯೆಗಳಿಂದ ಹಲವಾರು ಸಾವುಗಳು ವರದಿಯಾಗಿದ್ದವು. ಆ ಸಮಯದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಸಮಾರಂಭವೊಂದರಲ್ಲಿ ಮಾತನಾಡುವಾಗ ಈ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. +ಕಳೆದ ವರ್ಷ ಅಕ್ಟೋಬರ್‍ನಲ್ಲಿ ಗುಜರಾತ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಧ್ಯಯನವನ್ನು ಉಲ್ಲೇಖಿಸಿದ್ದಾರೆ ಮತ್ತು ಈ ಹಿಂದೆ ಕೋವಿಡ್ -19 ತೀವ್ರವಾಗಿ ಬಳಲುತ್ತಿದ್ದವರು ಕಠಿಣ ವ್ಯಾಯಾಮ, ಓಟ ಮತ್ತು ವ್ಯಾಯಾಮದಿಂದ ದೂರವಿರಬೇಕು ಎಂದು ಹೇಳಿದರು. ಹೃದಯಾಘಾತ ಮತ್ತು ಹೃದಯ ಸ್ತಂಭನವನ್ನು ತಪ್ಪಿಸಲು ಒಂದು ಅಥವಾ ಎರಡು ವರ್ಷಗಳ ಕಾಲ ಶ್ರಮದಾಯಕ ವ್ಯಾಯಾಮಗಳು ಮಾಡಬಾರದು ಎಂದು ಸಲಹೆ ನೀಡಿದ್ದರು. \ No newline at end of file diff --git a/eesanje/url_47_168_9.txt b/eesanje/url_47_168_9.txt new file mode 100644 index 0000000000000000000000000000000000000000..745eafd49659d546a844f2c07a2beb3ea0719e82 --- /dev/null +++ b/eesanje/url_47_168_9.txt @@ -0,0 +1,8 @@ +ದೇವರ ಆಶಯದಂತೆ ರಾಮಮಂದಿರ ನಿರ್ಮಾಣವಾಗಿದೆ : ಭಾಗವತ್ +ಪುಣೆ, ಫೆ.5 (ಪಿಟಿಐ) – ಅಯೋಧ್ಯೆ ದೇವಸ್ಥಾನದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ಒಂದು ಧೈರ್ಯದ ಕೆಲಸ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್‍ಬಣ್ಣಿಸಿದ್ದಾರೆ, ಮಾತ್ರವಲ್ಲ, ಇದು ದೇವರ ಆಶೀರ್ವಾದ ಮತ್ತು ಆಶಯದಂತೆ ನಡೆದಿದೆ ಎಂದಿದ್ದಾರೆ. +ಮಹಾರಾಷ್ಟ್ರದ ಪುಣೆ ಜಿಲ್ಲೆಯ ಅಳಂಡಿಯಲ್ಲಿ ನಡೆದ ಗೀತಾ ಭಕ್ತಿ ಅಮೃತ ಮಹೋತ್ಸವದಲ್ಲಿ ಮಾತನಾಡಿದ ಭಾಗವತ್, ಇದು ಸಾಕಷ್ಟು ಹೋರಾಟದ ನಂತರ ಸಾಧಿಸಲಾದ ಧೈರ್ಯದ ಕೆಲಸವಾಗಿದೆ ಎಂದು ಅವರು ಹೇಳಿದರು. +ರಾಮ ಲಲ್ಲಾ ಅವರ ಸ್ಥಾನದಲ್ಲಿ ನಿಲ್ಲುವುದನ್ನು ಇಂದಿನ ಪೀಳಿಗೆಯು ನೋಡುವ ಅದೃಷ್ಟಶಾಲಿಯಾಗಿದೆ. ಇದು ನಿಜವಾಗಿ ಸಂಭವಿಸಿದೆ, ನಾವೆಲ್ಲರೂ ಅದಕ್ಕಾಗಿ ಕೆಲಸ ಮಾಡಿದ್ದರಿಂದ ಮಾತ್ರವಲ್ಲ, ನಾವೆಲ್ಲರೂ ಕೆಲವು ಒಳ್ಳೆಯ ಕಾರ್ಯಗಳನ್ನು ಮಾಡಿದ್ದರಿಂದ ಮತ್ತು ಅದಕ್ಕಾಗಿಯೇ ದೇವರು ಅವರ ಆಶೀರ್ವಾದವನ್ನು (ನಮ್ಮ ಮೇಲೆ) ಸುರಿಸಿದರು. ಎಂಬುದು ದೇವರ ಆಶಯವಾಗಿದೆ ಎಂದು ಭಾಗವತ್ ಹೇಳಿದ್ದಾರೆ. +ರಾಜಕೀಯ ಪಕ್ಷ ಸ್ಥಾಪಿಸಿದ ವಿಜಯ್ ನಿರ್ಧಾರ ಸ್ವಾಗತಿಸಿದ ಪುದುಚೇರಿ ಸಿಎಂ ರಂಗಸಾಮಿ +ರಾಮ್ ಲಲ್ಲಾ ಅವರ ವಿಗ್ರಹದ ಪ್ರತಿಷ್ಠಾಪನೆಯು ಅವರ (ದೇವರ) ಆಶಯವನ್ನು ಪೂರೈಸುವಲ್ಲಿ ಪ್ರಾರಂಭದ ಹಂತ ಎಂದು ಅವರು ಹೇಳಿದರು. ಸಮಾರಂಭದಲ್ಲಿ ಗೋವಿಂದ್ ದೇವ್ ಗಿರಿಜಿ (ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಖಜಾಂಚಿ) ಅವರೊಂದಿಗೆ ಉಪಸ್ಥಿತರಿರುವುದು ನನ್ನ ಅದೃಷ್ಟ ಎಂದು ಭಾಗವತ್ ಹೇಳಿದರು.ಜಗತ್ತಿಗೆ ಅಗತ್ಯವಿರುವಂತೆ ಜ್ಞಾನವನ್ನು ನೀಡಲು ಹೊಸ ಭರತವರ್ಷವು ಉದಯಿಸಬೇಕಾಗಿದೆ ಎಂದು ಅವರು ಹೇಳಿದರು. +ಭಾರತವು ತನ್ನ ಕರ್ತವ್ಯವನ್ನು ತಲುಪಿಸಲು ಮುಂದಾಗಬೇಕು, ಭಾರತವು ಜ್ಞಾನ ಮತ್ತು ಬೆಳಕಿನ ರಥ ಎಂದು ಅವರು ಬಣ್ಣಿಸಿದರು. ಸಂತ ಜ್ಞಾನೇಶ್ವರನಿಗೆ ಸಂಬಂಧಿಸಿದ ಅಳಂಡಿಯಲ್ಲಿ ನಡೆಯುತ್ತಿರುವ ಆಧ್ಯಾತ್ಮಿಕ ಕಾರ್ಯಕ್ರಮದ ಕುರಿತು ಮಾತನಾಡಿದ ಭಾಗವತ್, ಪ್ರಾರಂಭದ ನಂತರ, ಪುರಾತನ ಜ್ಞಾನದ ಕುರಿತು ಚರ್ಚೆಗಳನ್ನು ಪದೇ ಪದೇ ನಡೆಸಲಾಗುವುದು ಎಂದು ಹೇಳಿದರು. +ಪ್ರಸ್ತುತ ಸನ್ನಿವೇಶದಲ್ಲಿ ಪ್ರಾಚೀನ ಪಠ್ಯದ ಅರ್ಥವನ್ನು ಯಾವುದೇ ತಪ್ಪಿಲ್ಲದೆ ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಮತ್ತು ಅದಕ್ಕಾಗಿಯೇ ಇಂತಹ ಮಹೋತ್ಸವಗಳನ್ನು ಆಯೋಜಿಸಲಾಗುತ್ತಿದೆ. ತಪ್ಪು ಅರ್ಥವು ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದರು.ಕಾಲ ಬದಲಾದರೂ ಜ್ಞಾನ ಮತ್ತು ವಿಜ್ಞಾನದ ಮೂಲ ಹಾಗೆಯೇ ಉಳಿದಿದೆ ಎಂದರು. \ No newline at end of file diff --git a/eesanje/url_47_169_1.txt b/eesanje/url_47_169_1.txt new file mode 100644 index 0000000000000000000000000000000000000000..afadf9c550bc422a3c1b1ea3378b2bb980b13e1a --- /dev/null +++ b/eesanje/url_47_169_1.txt @@ -0,0 +1,6 @@ +ರಾಜಕೀಯ ಪಕ್ಷ ಸ್ಥಾಪಿಸಿದ ವಿಜಯ್ ನಿರ್ಧಾರ ಸ್ವಾಗತಿಸಿದ ಪುದುಚೇರಿ ಸಿಎಂ ರಂಗಸಾಮಿ +ಪುದುಚೇರಿ, ಫೆ 5 (ಪಿಟಿಐ) ತಮಿಳುನಾಡಿನಲ್ಲಿ ತಮಿಳಿಗ ವೆಟ್ರಿ ಕಳಗಂ ಪಕ್ಷ ಸ್ಥಾಪಿಸಿರುವ ಖ್ಯಾತ ಚಿತ್ರ ನಟ ವಿಜಯ್ ಅವರ ನಿರ್ಧಾರವನ್ನು ಪುದಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಶ್ಲಾಘಿಸಿದ್ದಾರೆ. ಅಖಿಲ ಭಾರತ ಎನ್‍ಆರ್‍ಸಿ ಪಕ್ಷದ ಸಂಸ್ಥಾಪಕರಾದ ರಂಗಸಾಮಿ ಅವರು ವಿಜಯ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಅವರ ರಾಜಕೀಯ ಪ್ರವೇಶದ ಬಗ್ಗೆ ಅವರ ಇಚ್ಛೆಯನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. +ವಿಜಯ್ ತಮ್ಮ ಮುಂಬರುವ ಚಿತ್ರ ಗೋಟ್ ಚಿತ್ರೀಕರಣಕ್ಕಾಗಿ ಶನಿವಾರದಿಂದ ಪುದುಚೇರಿಯಲ್ಲಿ ಬೀಡುಬಿಟ್ಟಿದ್ದಾರೆ. ಪುದುಚೇರಿಯಲ್ಲಿ ಸರ್ಕಾರಿ ಸ್ವಾಮ್ಯದ ಆದರೆ ಈಗ ನಿಷ್ಕ್ರಿಯಗೊಂಡಿರುವ ಆಂಗ್ಲೋ-ಫ್ರೆಂಚ್ ಟೆಕ್ಸ್‍ಟೈಲ್ ರೋಡಿಯರ್ ಮಿಲ್‍ನ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಶೂಟಿಂಗ್ ನಡೆಯುತ್ತಿದ್ದು ಅವರನ್ನು ನೋಡಲು ಅಭಿಮಾನಿಗಳ ಮಹಾಪೂರವೇ ಹರಿದುಬರುತ್ತಿದೆ. +10 ವರ್ಷಗಳಲ್ಲಿ ಏಕೆ ಮೋದಿ ಗ್ಯಾರಂಟಿ ನೀಡಿರಲಿಲ್ಲ..? : ಸಿಎಂ ಸಿದ್ದರಾಮಯ್ಯ +ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪುದುಚೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೇಂದ್ರಾಡಳಿತ ಪ್ರದೇಶವು ಸಂಸತ್ತಿನ ಕೆಳಮನೆಯಲ್ಲಿ ಏಕೈಕ ಸ್ಥಾನವನ್ನು ಹೊಂದಿದೆ. ಇಲ್ಲಿ ಎಐಎನ್‍ಆರ್‍ಸಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅಂಗವಾಗಿರುವ ಬಿಜೆಪಿ ಚುನಾವಣೆಯಲ್ಲಿ ಸ್ರ್ಪಸಲು ಉದ್ದೇಶಿಸಿರುವುದರಿಂದ ಚುನಾವಣಾ ಸಂಬಂತ ಕೆಲಸವನ್ನು ಪ್ರಾರಂಭಿಸಿದೆ. +ಬಿಜೆಪಿಯ ಪುದುಚೇರಿ ಘಟಕದ ನಿಯೋಗವು ಇತ್ತೀಚೆಗೆ ರಂಗಸಾಮಿ ಅವರ ನಿವಾಸದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನಾ ಅವರೊಂದಿಗೆ ಔಪಚಾರಿಕ ಚರ್ಚೆ ನಡೆಸಿತು. \ No newline at end of file diff --git a/eesanje/url_47_169_10.txt b/eesanje/url_47_169_10.txt new file mode 100644 index 0000000000000000000000000000000000000000..772a9d3ffe5d2574a9619d9b7282095319417b24 --- /dev/null +++ b/eesanje/url_47_169_10.txt @@ -0,0 +1,6 @@ +ಇಂದಿನಿಂದ ನ್ಯಾಯ ಯಾತ್ರೆ ಪುನರಾರಂಭ +ರಾಮಗಢ, ಫೆ.5 (ಪಿಟಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಜಾರ್ಖಂಡ್‍ನ ರಾಮಗಢ ಜಿಲ್ಲೆಯಿಂದ ರಾಜ್ಯದಲ್ಲಿ ಇಂದಿನಿಂದ ಪುನರಾರಂಭಗೊಂಡಿದೆ. ಜಿಲ್ಲೆಯ ಸಿದ್ದು-ಕಾನ್ಹು ಮೈದಾನದಲ್ಲಿ ರಾತ್ರಿ ವಿರಾಮದ ನಂತರ ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಚೌಕ್‍ನಿಂದ ಯಾತ್ರೆ ಪುನರಾರಂಭಗೊಂಡು ಚುಟುಪಾಲು ಕಣಿವೆಗೆ ತೆರಳಿದ ರಾಹುಲ್ ಅವರು ಅಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಸಹೀದ್ ಶೇಖ್ ಖಾರಿ ಮತ್ತು ಟಿಕೈತ್ ಉಮಾರೋ ಸಿಂಗ್ , ರಾಜ್ಯ ಕಾಂಗ್ರೆಸ್ ವಕ್ತಾರ ರಾಜೀವ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. +ರಾಂಚಿ ಜಿಲ್ಲೆಯ ಇರ್ಬಾ ತಲುಪಿದ ನಂತರ ಇಂದಿರಾಗಾಂಧಿ ಕೈಮಗ್ಗ ಪ್ರಕ್ರಿಯೆ ಮೈದಾನದಲ್ಲಿ ನೇಕಾರರೊಂದಿಗೆ ಸಂವಾದ ನಡೆಸಿದರು. ಭೋಜನ ವಿರಾಮದ ನಂತರ ಯಾತ್ರೆಯು ರಾಂಚಿಯ ಶಹೀದ್ ಮೈದಾನವನ್ನು ತಲುಪಿದ ನಂತರ ಅವರು ಅಲ್ಲಿ ರ್ಯಾಲಿ ನಡೆಸಲಾಗುವುದು. +ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ: ಕಾಂಗ್ರೆಸ್ +ಜಲ್-ಜಂಗಲ್-ಜಮಿನ್ (ನೀರು, ಅರಣ್ಯ ಮತ್ತು ಭೂ ಸಂಪನ್ಮೂಲಗಳು) ಮೇಲಿನ ಆದಿವಾಸಿಗಳ ಹಕ್ಕುಗಳಿಗಾಗಿ ತಮ್ಮ ಪಕ್ಷವು ನಿಂತಿದೆ ಎಂದು ಗಾಂಧಿ ಹೇಳಿದ್ದರು. ಜೆಎಂಎಂ ನೇತೃತ್ವದ ಮೈತ್ರಿ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. +ಖುಂಟಿ ಜಿಲ್ಲೆಯಲ್ಲಿ ರಾಹುಲ್‍ಗಾಂಧಿಯವರ ರಾತ್ರಿ ವಿರಾಮವನ್ನು ನಿಗದಿಪಡಿಸಲಾಗಿದೆ. ಎರಡು ಹಂತಗಳಲ್ಲಿ ಎಂಟು ದಿನಗಳ ಕಾಲ ರಾಜ್ಯದ 13 ಜಿಲ್ಲೆಗಳಲ್ಲಿ 804 ಕಿ.ಮೀ ಯಾತ್ರೆ ಸಂಚರಿಸಲಿದೆ. ಜನವರಿ 14 ರಂದು ಮಣಿಪುರದಲ್ಲಿ ಆರಂಭವಾದ ಭಾರತ್ ಜೋಡೋ ನ್ಯಾಯ್ ಯಾತ್ರೆಯು 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದ್ದು, 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_47_169_11.txt b/eesanje/url_47_169_11.txt new file mode 100644 index 0000000000000000000000000000000000000000..5f40923d53094c011167300922fff618e64e884e --- /dev/null +++ b/eesanje/url_47_169_11.txt @@ -0,0 +1,6 @@ +ಪ್ರತಿನಿತ್ಯ ಸ್ನಾನ ಮಾಡದ ಪತಿಯಿಂದ ವಿಚ್ಛೇದನಕ್ಕೆ ಮೊರೆ ಹೋದ ಪತ್ನಿ +ಟರ್ಕಿ,ಫೆ.4- ತನ್ನ ಗಂಡ ನಿತ್ಯ ಸ್ನಾನ ಮಾಡುವುದಿಲ್ಲ ಎಂದು ಸಿಟ್ಟುಗೊಂಡು, ಆತನಿಂದ ನನಗೆ ವಿಚ್ಛೇದನ ಕೊಡಿಸಿ ಎಂದು ಪತ್ನಿ ನ್ಯಾಯಾಲಯದ ಮೊರೆ ಹೋಗಿರುವ ಘಟನೆ ಟರ್ಕಿಯಲ್ಲಿ ನಡೆದಿದೆ. ತನ್ನ ಪತಿ ಎಂದಿಗೂ ಸ್ನಾನ ಮಾಡುವುದಿಲ್ಲ. ಐದು ದಿನಗಳವರೆಗೆ ಒಂದೇ ಬಟ್ಟೆಗಳನ್ನು ಧರಿಸುತ್ತಾರೆ. ಮೂರ್ನಾಲ್ಕು ದಿನ ಬ್ರಷ್ ಮಾಡುವುದಿಲ್ಲ. ಇದರಿಂದಾಗಿ ಆತನ ದೇಹದಿಂದ ಅಸಹನೀಯ ದುರ್ವಾಸನೆ ಬರುತ್ತದೆ. ಆತನೊಂದಿಗೆ ಬದುಕುವುದು ಕಷ್ಟಕರವಾಗುತ್ತಿದೆ ಎಂದು ಆರೋಪಿಸಿದ್ದಾಳೆ. +ಪತಿಯ ಜೊತೆ ಕೆಲಸ ಮಾಡುವವರೂ ಕೂಡ ಆತನಿಂದ ದೂರ ನಿಲ್ಲುತ್ತಾರೆ. ಬೆವರಿನ ವಾಸನೆಯಿಂದ ಆತನ ಜೊತೆ ಕೆಲಸ ಮಾಡುವುದು ತುಂಬಾ ಕಷ್ಟಗುತ್ತಿದೆ ಎಂದಿದ್ದಾರೆಂದು ದೂರಿದ್ದಾಳೆ. ಮಹಿಳೆಯ ದೂರನ್ನು ಪರಿಗಣಿಸಿದ ಟರ್ಕಿಯ ಅಂಕಾರಾದ ಕೌಟುಂಬಿಕ ನ್ಯಾಯಾಲಯ ಸಾಕ್ಷಿಗಳನ್ನು ಕೇಳಿದ್ದು, ಮಹಿಳೆಯು ತನ್ನ ಪತಿ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿಗಳನ್ನು ಹಾಜರುಪಡಿಸಿದ್ದಾಳೆ. +ಜೈ ಶ್ರೀರಾಮ್ ಹೇಳುವಷ್ಟೇ ಗಟ್ಟಿಯಾಗಿ ಜೈ ಕರ್ನಾಟಕ ಹೇಳಿ : ಪ್ರಿಯಾಂಕ್ ಖರ್ಗೆ +ಸ್ಥಳೀಯರು ಮತ್ತು ಆತನೊಂದಿಗೆ ಕೆಲಸ ಮಾಡುವ ಜನರನ್ನು ಸಹ ನ್ಯಾಯಾಲಯಕ್ಕೆ ಕರೆಸಲಾಗಿದೆ. ಈ ವೇಳೆ ಮಹಿಳೆಯ ಪತಿ ನಿಜವಾಗಿಯೂ ತುಂಬಾ ಕೊಳಕು ರೀತಿಯಲ್ಲಿ ವಾಸಿಸುತ್ತಿದ್ದಾರೆ ಎಂದು ಈ ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ. +ಕೊನೆಗೆ ಈ ಪ್ರಕರಣದ ವಿಚಾರಣೆ ನಡೆಸಿ ಇಬ್ಬರ ವಾದವನ್ನು ಆಲಿಸಿದ ನ್ಯಾಯಾಲಯ ಇಬ್ಬರಿಗೂ ವಿಚ್ಛೇದನ ನೀಡಲು ಒಪ್ಪಿಗೆ ನೀಡಿದೆ. ಅಲ್ಲದೇ ಅಶುದ್ಧವಾಗಿ ಬದುಕುತ್ತಿರುವ ಪತಿಗೆ ಛೀಮಾರಿ ಹಾಕಿದೆ. ಅಷ್ಟೇ ಅಲ್ಲದೇ, ಸುಮಾರು 500,000 ಟರ್ಕಿಶ್ ಲಿರಾ ಅಂದರೆ ಸರಿಸುಮಾರು 13.69 ಲಕ್ಷ ರೂ.ಗಳನ್ನು ಮಹಿಳೆಗೆ ಪರಿಹಾರವಾಗಿ ನೀಡುವಂತೆ ಪತಿಗೆ ನ್ಯಾಯಾಲಯ ಆದೇಶಿಸಿದೆ. \ No newline at end of file diff --git a/eesanje/url_47_169_12.txt b/eesanje/url_47_169_12.txt new file mode 100644 index 0000000000000000000000000000000000000000..aa8c6f9994d96ecf55aeeeb82ae9200ab5ae2ac6 --- /dev/null +++ b/eesanje/url_47_169_12.txt @@ -0,0 +1,6 @@ +ಮಹಿಳಾ ನ್ಯಾಯಾಧೀಶೆ ಅನುಮಾನಸ್ಪದವಾಗಿ ಸಾವು +ಲಕ್ನೋ, ಫೆ.4- ಬದೌನ್ ಜಿಲ್ಲೆಯಲ್ಲಿ ಸಿವಿಲ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳಾ ನ್ಯಾಯಾಧೀಶೆ ಅನುಮಾನಸ್ಪದವಾಗಿ ಅವರ ನಿವಾಸದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಅವರ ನಿವಾಸಕ್ಕೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. +ಸ್ಥಳಕ್ಕೆ ದಾವಿಸಿದ ಪೊಲೀಸರು ಬಾಗಿಲು ಒಡೆದು ಪರಿಶೀಲಿಸಿದಾಗ ಕೊಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನ್ಯಾಯಾಧೀಶೆ ಜ್ಯೋತ್ಸನಾ(27) ಅವರ ಶವ ಪತ್ತೆಯಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರಲ್ಲಿ ಇದು ಆತಂಕ ಮೂಡಿಸಿದೆ. +ಬಿಗಿ ಭದ್ರತೆಯ ನ್ಯಾಯಾಂಗ ಸಮುಚ್ಛಯದಲ್ಲಿ ಇವರು ವಾಸಿಸುತ್ತಿದ್ದರು. ಆದರೆ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಥವಾ ಇದರ ಹಿಂದೆ ಏನಾದರೂ ದುಷ್ಕøತ್ಯ ಅಡಗಿದೆಯೇ ಎಂಬುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ಅಲೋಕ್ ಪ್ರಿಯದರ್ಶಿ ಹೇಳಿದ್ದಾರೆ. ಮೂಲತಃ ಮೌ ಜಿಲ್ಲೆಯವರಾದ ಜ್ಯೋತ್ಸನಾ ರಾಯ್ ಅವರು ಅವಿವಾಹಿತರಾಗಿದ್ದು, ಏಕಾಂಗಿಯಾಗಿ ಇಲ್ಲಿ ವಾಸಿಸುತ್ತಿದ್ದರು. +ವೈಫಲ್ಯಗಳನ್ನು ಮರೆಮಾಚಲು ಕೇಂದ್ರ ರುದ್ಧ ಗೂಬೆ ಕೂರಿಸುವ ಪ್ರಯತ್ನ : ಬಿಜೆಪಿ ವಾಗ್ದಾಳಿ +ಸುದ್ದಿ ಹರಡುತ್ತಿದ್ದಂತೆಯೇ ವಕೀಲರು ಹಾಗೂ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಸಂತಾಪ ವ್ಯಕ್ತಪಡಿಸಿ ಕಣ್ಣೀರು ಹಾಕಿದ್ದರು. ವಿವಿಜ್ಞಾನ ಪರೀಕ್ಷ ತಂಡ ಹಾಗೂ ಸ್ಥಳೀಯ ಪೊಲೀಸರು ತನಿಖೆಯನ್ನು ಕೈಗೊಂಡಿದ್ದು, ಸ್ಥಳದಲ್ಲಿದ್ದ ಮೊಬೈಲ್ ಫೋನ್‍ನ್ನು ಕೂಡ ವಶಪಡಿಸಿಕೊಳ್ಳಲಾಗಿದೆ. ಶವವನ್ನು ಬದೌನ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ತಿಳಿದು ಬರಲಿದೆ. \ No newline at end of file diff --git a/eesanje/url_47_169_2.txt b/eesanje/url_47_169_2.txt new file mode 100644 index 0000000000000000000000000000000000000000..aed9f60c7634851c1b28adfdafa3ce9b93306179 --- /dev/null +++ b/eesanje/url_47_169_2.txt @@ -0,0 +1,8 @@ +ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಎಸಗಿಲ್ಲ : ನಿರ್ಮಲಾ ಸೀತಾರಾಮನ್ +ನವದೆಹಲಿ,ಫೆ.5- ಕರ್ನಾಟಕಕ್ಕೆ ಅನುದಾನ ಬಿಡುಗಡೆ ಕುರಿತಾಗಿ ಲೋಕಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಶೂನ್ಯವೇಳೆಯಲ್ಲಿ ಕಾಂಗ್ರೆಸ್‍ನ ಲೋಕಸಭೆ ಸಂಸದೀಯ ನಾಯಕ ಅದಿರಂಜನ್ ಚೌಧರಿ ವಿಷಯ ಪ್ರಸ್ತಾಪಿಸಿ, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಗೆ ಕೇಂದ್ರ ಮಲತಾಯಿ ಧೋರಣೆ ಮಾಡುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದರೆ ಬಿಜೆಪಿಯೇತರ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು. +ಈ ಆರೋಪಕ್ಕೆ ಸದನದಲ್ಲಿ ಹಾಜರಿದ್ದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೇಂದ್ರ ಸರ್ಕಾರ ಯಾವುದೇ ರಾಜ್ಯಗಳಿಗೂ ಅನುದಾನ ಬಿಡುಗಡೆ ವಿಷಯದಲ್ಲಿ ಅನ್ಯಾಯ ಮಾಡುತ್ತಿಲ್ಲ. ಹಣಕಾಸು ಆಯೋಗ ನೀಡುವ ಸಲಹೆಗಳು ಮತ್ತು ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿದ್ದೇವೆ ಎಂದು ಸಮರ್ಥಿಸಿಕೊಂಡರು. +ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿಲ್ಲ : ಗೃಹ ಸಚಿವ ಪರಮೇಶ್ವರ್ +ನನ್ನ ಮನಸ್ಸಿಗೆ ಬಂದಂತೆ ಅನುದಾನ ಬಿಡುಗಡೆ ಮಾಡಲು ಆಗುವುದಿಲ್ಲ. ಹಣಕಾಸು ಆಯೋಗ ಪ್ರತಿ ವರ್ಷ ಆಯಾ ರಾಜ್ಯಗಳ ಸ್ಥಿತಿಗತಿಗಳನ್ನು ನೋಡಿಕೊಂಡು ಅನುದಾನ ಬಿಡುಗಡೆಗೆ ಶಿಫಾರಸ್ಸು ಮಾಡುತ್ತದೆ. ನಾವು ಅದನ್ನು ಪಾಲನೆ ಮಾಡುತ್ತೇವೆ. ಇದರಲ್ಲಿ ತಾರತಮ್ಯದ ಪ್ರಶ್ನೆ ಎಲ್ಲಿಂದ ಬರುತ್ತದೆ ಎಂದು ಪ್ರಶ್ನಿಸಿದರು. +ಅದಿರಂಜನ್ ಚೌಧರಿ ಮಾಡಿರುವ ಆರೋಪದಂತೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಅನುದಾನ ಬಿಡುಗಡೆ ವಿಷಯದಲ್ಲಿ ಯಾವುದೇ ರಾಜ್ಯಕ್ಕೂ ಅನ್ಯಾಯ ಇಲ್ಲವೇ ಮಲತಾಯಿ ಧೋರಣೆ ಅನುಸರಿಸಿಲ್ಲ. ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಯಾವ ರಾಜ್ಯಗಳಲ್ಲಿ ತಲಾ ಆದಾಯ ಕಡಿಮೆ ಇರುತ್ತದೆಯೋ ಅವುಗಳನ್ನು ಭೀಮಾರ್ ರಾಜ್ಯಗಳೆಂದು ಪರಿಗಣಿಸಲಾಗುತ್ತದೆ. ಅಂತಹ ರಾಜ್ಯಗಳಿಗೆ ಮೊದಲ ಆದ್ಯತೆ ನೀಡಬೇಕೆಂದು ಹಣಕಾಸು ಆಯೋಗವೇ ಶಿಫಾರಸ್ಸು ಮಾಡುತ್ತದೆ. +ಕರ್ನಾಟಕಕ್ಕೆ ಹಿಂದಿನ ಯುಪಿಎ ಸರ್ಕಾರದ 10 ವರ್ಷದ ಅವಯಲ್ಲಿ ಹಾಗೂ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ರಾಜ್ಯಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದನ್ನು ನಾವು ದಾಖಲೆಗಳ ಸಮೇತ ನೀಡಲು ಸಿದ್ದರಿದ್ದೇವೆ ಎಂದರು. +ರಾಜಕೀಯ ಕಾರಣಗಳಿಗಾಗಿ ಆರೋಪ ಮಾಡುವುದಾದರೆ ನಾವು ಕೂಡ ಆರೋಪಿಸಬಹುದು. ಸಭಾಧ್ಯಕ್ಷರು ಅನುಮತಿ ನೀಡಿದರೆ ಯಾರ ಕಾಲದಲ್ಲಿ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂಬುದನ್ನು ನಾನು ದಾಖಲೆಗಳ ಸಮೇತ ಸದನದಲ್ಲೇ ಚರ್ಚೆ ಮಾಡುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಅದಿರಂಜನ್ ಚೌಧರಿ ಆರೋಪಕ್ಕೆ ತಿರುಗೇಟು ನೀಡಿದರು. \ No newline at end of file diff --git a/eesanje/url_47_169_3.txt b/eesanje/url_47_169_3.txt new file mode 100644 index 0000000000000000000000000000000000000000..1d1c8a02e295ab78a62be07789712838f5166b93 --- /dev/null +++ b/eesanje/url_47_169_3.txt @@ -0,0 +1,9 @@ +ಫ್ರಾನ್ಸ್‌ನಲ್ಲಿ ಯುಪಿಐ ಪಾವತಿ ಮಾದರಿ ಅಳವಡಿಕೆ +ನವದೆಹಲಿ,ಫೆ.5- ಫ್ರಾನ್ಸ್‌ನಲ್ಲಿ ಎನ್‍ಪಿಸಿಐ ಇಂಟರ‍್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್‍ಐಪಿಎಲ್) ಮತ್ತು ಫ್ರೆಂಚ್ ಪಾವತಿ ಭದ್ರತಾ ಕಂಪನಿ ಲೈರಾ, ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಸ್ವೀಕಾರವನ್ನು ಪರಿಚಯಿಸಿದೆ. ಐಫೆಲ್ ಟವರ್ ಈಗ ಭಾರತೀಯ ಪ್ರವಾಸಿಗರಿಗೆ ಯುಪಿಐ ಬಳಸಿ ಆನ್‍ಲೈನ್‍ನಲ್ಲೇ ಟಿಕೆಟ್‍ಗಳನ್ನು ಖರೀದಿಸಲು ಅನುವು ಮಾಡಿಕೊಟ್ಟಿದೆ. ಯುರೋಪಿಯನ್ ದೇಶಗಳಲ್ಲಿ ಫ್ರಾನ್ಸ್ ಈ ಪರಿಣಾಮಕಾರಿ ಪಾವತಿ ಕಾರ್ಯವಿಧಾನವನ್ನು ಅಳವಡಿಸಿಕೊಂಡ ಮೊದಲ ದೇಶವಾಗಿದೆ. +ಎನ್‍ಪಿಸಿಐ ಇಂಟರ‍್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್‍ಐಪಿಎಲ್) ಇ-ಕಾಮರ್ಸ್ ಮತ್ತು ಸಾಮೀಪ್ಯ ಪಾವತಿಗಳನ್ನು ಭದ್ರಪಡಿಸುವಲ್ಲಿ ಫ್ರೆಂಚ್ ನಾಯಕ ಲೈರಾ ಸಹಭಾಗಿತ್ವದಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ)ನ್ನು ಫ್ರಾನ್ಸ್‍ನಲ್ಲಿ ಸ್ವೀಕರಿಸುವುದಾಗಿ ಘೋಷಿಸಿದೆ. ಐಫೆಲ್ ಟವರ್ ಪ್ರವಾಸಕ್ಕೆ ಹೋಗೋ ಭಾರತೀಯರು ಈಗ ಯುಪಿಐ ಬಳಸಿ ಆನ್‍ಲೈನ್‍ನಲ್ಲಿ ಟಿಕೆಟ್ ಖರೀದಿಸೋ ಸುಲಭ ಅವಕಾಶ ಸಿಕ್ಕಿದೆ. ಈ ಪಾವತಿ ವಿಧಾನದಿಂದ ತ್ವರಿತ, ಸುಲಭ ಮತ್ತು ತೊಂದರೆ ಮುಕ್ತ ಪ್ರವಾಸಕ್ಕೆ ಅನುಕೂಲವಾಗಿದೆ. +ಫ್ರಾನ್ಸ್‍ನ ಪ್ಯಾರೀಸ್‍ನಲ್ಲಿರೋ ಭಾರತೀಯ ರಾಯಭಾರ ಕಚೇರಿಯಲ್ಲಿ ಆಯೋಜಿಸಿದ್ದ ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ ಮಾಡಲಾಗಿದೆ. ಈ ವೇಳೆ ಫ್ರಾನ್ಸ್ ಮತ್ತು ಮೊನಾಕೊದಲ್ಲಿನ ಭಾರತದ ರಾಯಭಾರಿ ಗೌರವಾನ್ವಿತ ಎಂ.ಜಾವೇದ್ ಅಶ್ರಫ್, ಪ್ರಧಾನ ಮಂತ್ರಿಗಳ ಮಂತ್ರಿ ಪ್ರತಿನಿಧಿ ಮತ್ತು ಫ್ರಾನ್ಸ್ ಸರ್ಕಾರದ ವಕ್ತಾರ ಪ್ರಿಸ್ಕಾ ಥೆವೆನೊಟ್, ಲೈರಾ ಗ್ರೂಪ್ ಅಧ್ಯಕ್ಷ ಅಲೈನ್ ಲಾಕೂರ್, ಲೈರಾ ಫ್ರಾನ್ಸ್ ನ ವಾಣಿಜ್ಯ ನಿರ್ದೇಶಕ ಕ್ರಿಸ್ಟೋಫ್ ಮಾರಿಯೆಟ್ ಮತ್ತು ಸೊಸಿಯೆಟೆ ಡಿ ಎಕ್ಸ್ ಪಿಎಲ್ ನ ಸಿಇಒ ಪ್ಯಾಟ್ರಿಕ್ ಬ್ರಾಂಕೊ ರುಯಿವೊ ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು. +ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ +ಐಫೆಲ್ ಟವರ್ ಗೆ ಭೇಟಿ ನೀಡುವ ಅಂತರರಾಷ್ಟ್ರೀಯ ಪ್ರವಾಸಿಗರಲ್ಲಿ ಭಾರತೀಯ ಪ್ರವಾಸಿಗರು ಎರಡನೇ ಅತಿದೊಡ್ಡ ಗುಂಪಾಗಿರುವುದನ್ನು ಪರಿಗಣಿಸಿಲಾಗಿದ್ದು, ಈ ಮಹತ್ವದ ಘೋಷಣೆ ಮಾಡಲಾಗಿದೆ. ಇದರಿಂದ ಶೀಘ್ರದಲ್ಲೇ ಪ್ರವಾಸೋದ್ಯಮ, ವ್ಯಾಪಾರಿಗಳ ಪ್ರಗತಿ ಸಾಧ್ಯವಾಗುತ್ತದೆ ಎಂದು ಫ್ರಾನ್ಸ್ ದೇಶ ಅಭಿವೃದ್ದಿ ಬಗ್ಗೆ ವ್ಯಕ್ತಪಡಿಸಿದೆ. ಈ ಪಾವತಿ ಕ್ರಮದಿಂದ ಭಾರತೀಯ ಪ್ರವಾಸಿಗರು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಲು ಮತ್ತು ಪಾವತಿಯನ್ನು ಪ್ರಾರಂಭಿಸಲು ತಮ್ಮ ಯುಪಿಐ ಚಾಲಿತ ಅಪ್ಲಿಕೇಶನ್‍ಗಳನ್ನು ಬಳಸುವ ಮೂಲಕ ಸುರಕ್ಷಿತ ಆನ್‍ಲೈನ್ ವಹಿವಾಟುಗಳನ್ನು ನಡೆಸಬಹುದಾಗಿದೆ. +ಫ್ರಾನ್ಸ್ ದೇಶ ಭಾರತೀಯ ಪ್ರವಾಸಿಗರಿಗೆ ತಡೆರಹಿತ ಪಾವತಿ ಆಯ್ಕೆಯನ್ನು ಒದಗಿಸುವುದಲ್ಲದೆ, ಪ್ರವಾಸೋದ್ಯಮ ಹಾಗೂ ವ್ಯಾಪಾರಸ್ಥರಿಗೆ ಸಹಾಯವಾಗುವಂತ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡು ಎಲ್ಲರಿಗೂ ಅನುಕೂಲವಾಗುವಂತೆ ಮಾಡುತ್ತಿದೆ. ಪ್ರವಾಸಿಗರಿಗೆ ಮೊದಲೇ ತಾವು ಪ್ರವಾಸದಲ್ಲಿ ಅನುಕೂಲಕರವಾದ ಹೋಟೆಲ್ ವ್ಯವಸ್ಥೆ, ವಸ್ತುಸಂಗ್ರಹಾಲಯಗಳು, ನೋಡಬೇಕಾದ ಸ್ಥಳಗಳ ಭೇಟಿ ಬಗ್ಗೆ ಮೊದಲೇ ಟಿಕೆಟ್ ಕಾಯ್ದಿರಿಸುವಂತ ಸುಲಭ ವಿಧಾನ ತರಲಾಗಿದೆ. +ರಾಜಸ್ಥಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ : ದಿಯಾಕುಮಾರಿ +380 ದಶಲಕ್ಷಕ್ಕೂ ಹೆಚ್ಚು ಬಳಕೆದಾರರೊಂದಿಗೆ, ಪಾವತಿ ವಿಧಾನವಾಗಿ ಯುಪಿಐ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಗಮನಾರ್ಹವಾಗಿ ಗುರುತಿಸಿಕೊಂಡಿದೆ. ಜನವರಿ 2024ರಲ್ಲಿ, ಯುಪಿಐ 12.2 ಬಿಲಿಯನ್ ವಹಿವಾಟುಗಳನ್ನು ದಾಖಲಿಸಿದೆ. ಈ ಸಾಧನೆಯಿಂದ ವಿಶ್ವದ ಅತ್ಯಂತ ಪರಿಣಾಮಕಾರಿ, ತ್ವರಿತ ಪಾವತಿ ವ್ಯವಸ್ಥೆಯಾಗಿ ಗುರುತಿಸಿಕೊಳ್ಳುತ್ತಿದೆ. \ No newline at end of file diff --git a/eesanje/url_47_169_4.txt b/eesanje/url_47_169_4.txt new file mode 100644 index 0000000000000000000000000000000000000000..97a3c3ba5c2c01c41139f7f4c9a2650047734afb --- /dev/null +++ b/eesanje/url_47_169_4.txt @@ -0,0 +1,6 @@ +ವಿಶ್ವಾಸ ಮತ ಯಾಚನೆಯಲ್ಲಿ ಪಾಲ್ಗೊಂಡ ಹೇಮಂತ್ ಸೊರೆನ್ +ರಾಂಚಿ, ಫೆ 5 (ಪಿಟಿಐ) ಬಂಧಿತ ಜೆಎಂಎಂ ನಾಯಕ ಹಾಗೂ ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಇಂದು ವಿಧಾನಸಭೆಗೆ ಆಗಮಿಸಿ ಚಂಪೈ ಸೊರೆನ್ ನೇತೃತ್ವದ ಸರ್ಕಾರದ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಿದ್ದಾರೆ. +ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರಿಗೆ ಸದನದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯವು ಜನವರಿ 31 ರಂದು ಬಂಧಿಸಿತ್ತು. ಫೆಬ್ರವರಿ 2 ರಂದು ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು. +ಹೇಮಂತ್ ಸೊರೆನ್ ಅವರು ವಿಶೇಷ ಪಿಎಂಎಲ್‍ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಕೋರಿದ್ದರು. +ಇನ್ನೂ ಬುದ್ದಿ ಕಲಿಯದ ಮಾಲ್ಡಿವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು +ತಾವು ವಿಧಾನಸಭೆಯ ಸದಸ್ಯರಾಗಿದ್ದು, ಸದನದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಚಂಪೈ ಸೊರೆನ್ ನೇತೃತ್ವದ ಹೊಸ ಸರ್ಕಾರವು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಹೇಮಂತ್ ಬಂಧನದ ನಂತರ ಜಾರ್ಖಂಡ್‍ನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. \ No newline at end of file diff --git a/eesanje/url_47_169_5.txt b/eesanje/url_47_169_5.txt new file mode 100644 index 0000000000000000000000000000000000000000..c7f892e84f6556813ec632e2711fd94940ab48f3 --- /dev/null +++ b/eesanje/url_47_169_5.txt @@ -0,0 +1,6 @@ +ತೇಜಸ್ವಿ ಯಾದವ್ ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರಿಂಕೋರ್ಟ್ +ನವದೆಹಲಿ,ಫೆ.5- ಗುಜರಾತಿಗಳು ಮಾತ್ರ ದರೋಡೆಕೋರರಾಗಬಹುದು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯದಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವರ್ಗಾಯಿಸುವಂತೆ ಕೋರಿ ಆರ್‍ಜೆಡಿ ನಾಯಕ ತೇಜಸ್ವಿ ಯಾದವ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. +ನ್ಯಾಯಮೂರ್ತಿಗಳಾದ ಎಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ತೇಜಸ್ವಿ ಯಾದವ್ ಸಲ್ಲಿಸಿದ ಕ್ಷಮೆಯಾಚನೆಯ ಹೊಸ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ನಾವು ಆದೇಶಗಳನ್ನು ರವಾನಿಸುತ್ತೇವೆ ಎಂದು ಪೀಠ ಹೇಳಿದೆ. +ರಾಜಸ್ಥಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ : ದಿಯಾಕುಮಾರಿ +ಜನವರಿ 29 ರಂದು ಸುಪ್ರೀಂ ಕೋರ್ಟ್ ಯಾದವ್ ಅವರಿಗೆ ಗುಜರಾತಿಗಳು ಮಾತ್ರ ಕೊಲೆಗಡುಕರಾಗಲು ಸಾಧ್ಯ ಎಂಬ ಅವರ ಹೇಳಿಕೆಯನ್ನು ಹಿಂತೆಗೆದುಕೊಂಡು ಸರಿಯಾದ ಹೇಳಿಕೆ ಸಲ್ಲಿಸುವಂತೆ ಸೂಚಿಸಿತ್ತು. ಜನವರಿ 19 ರಂದು ಯಾದವ್ ಅವರು ತಮ್ಮ ಆಪಾದಿತ ಗುಜರಾತಿ ದರೋಡೆಕೋರರು ಹೇಳಿಕೆಯನ್ನು ಹಿಂತೆಗೆದುಕೊಳ್ಳುವ ಮೂಲಕ ಉನ್ನತ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದ್ದರು. +ಆರ್‍ಜೆಡಿ ನಾಯಕನ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ ಈ ಹಿಂದೆ ಕ್ರಿಮಿನಲ್ ಮಾನನಷ್ಟ ದೂರಿನ ವಿಚಾರಣೆಯನ್ನು ತಡೆಹಿಡಿದಿತ್ತು ಮತ್ತು ಅರ್ಜಿ ಸಲ್ಲಿಸಿದ್ದ ಗುಜರಾತ್ ನಿವಾಸಿಗೆ ನೋಟಿಸ್ ಜಾರಿ ಮಾಡಿತ್ತು. \ No newline at end of file diff --git a/eesanje/url_47_169_6.txt b/eesanje/url_47_169_6.txt new file mode 100644 index 0000000000000000000000000000000000000000..b75b78c5dacadf717cdff830503713a6c2652b45 --- /dev/null +++ b/eesanje/url_47_169_6.txt @@ -0,0 +1,7 @@ +ದ್ವೇಷ ಭಾಷಣ ಮಾಡಿದ್ದ ಮುಫ್ತಿ ಸಲ್ಮಾನ್ ಅರೆಸ್ಟ್, ಬೆಂಬಲಿಗರ ಹೈಡ್ರಾಮಾ +ಜುನಾಗಢ್, ಫೆ 5 (ಪಿಟಿಐ) ದ್ವೇಷದ ಭಾಷಣ ಮಾಡಿದ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಿರುವ ಗುಜರಾತ್ ಪೊಲೀಸರು ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝಾರಿ ಅವರನ್ನು ಮುಂಬೈನಿಂದ ಬಂಧಿಸಿದ್ದಾರೆ ಮತ್ತು ಅವರನ್ನು ರಾಜ್ಯಕ್ಕೆ ಕರೆತರುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜನವರಿ 31 ರ ರಾತ್ರಿ ಗುಜರಾತ್‍ನ ಜುನಾಗಢ್ ನಗರದ ಬಿ ವಿಭಾಗದ ಪೊಲೀಸ್ ಠಾಣೆ ಬಳಿಯ ತೆರೆದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ದ್ವೇಷ ಭಾಷಣ ಮಾಡಿದ್ದ ಆರೋಪಕ್ಕೆ ಅಝಾರಿ ಗುರಿಯಾಗಿದ್ದರು. +ಅದರ ವೀಡಿಯೊ ವೈರಲ್ ಆದ ನಂತರ, ಅಝಾರಿ ಮತ್ತು ಸ್ಥಳೀಯ ಸಂಘಟಕರಾದ ಮೊಹಮ್ಮದ್ ಯೂಸುಫ್ ಮಾಲೆಕ್ ಮತ್ತು ಅಜೀಮ್ ಹಬೀಬ್ ಒಡೆದಾರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 ಬಿ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆಗಳನ್ನು ನೀಡುವುದು) ಅರೋಪದಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಮಾಲೆಕ್ ಮತ್ತು ಹಬೀಬ್ ಅವರನ್ನು ಶನಿವಾರ ಬಂಧಿಸಲಾಗಿದ್ದು, ಪೊಲೀಸರು ಅಝಾರಿಗಾಗಿ ಹುಡುಕಾಟ ನಡೆಸುತ್ತಿದ್ದರು. +ರಾಜಸ್ಥಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ : ದಿಯಾಕುಮಾರಿ +ಮುಂಬೈನ ನ್ಯಾಯಾಲಯದಿಂದ ಟ್ರಾನ್ಸಿಟ್ ರಿಮಾಂಡ್ ಪಡೆದ ನಂತರ ಅವರನ್ನು ಜುನಾಗಢಕ್ಕೆ ಮರಳಿ ಕರೆತರಲಾಗುತ್ತಿದೆ ಎಂದು ಜುನಾಗಢ ಅಪರಾಧ ವಿಭಾಗದ ಪೊಲೀಸ್ ಇನ್ಸ್‍ಪೆಕ್ಟರ್ ಜೆ ಜೆ ಪಟೇಲ್ ತಿಳಿಸಿದ್ದಾರೆ. ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಸಹಾಯದಿಂದ ಜುನಾಗಢ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಪಟೇಲ್ ತಿಳಿಸಿದ್ದಾರೆ. +ಆರೋಪಿಯನ್ನು ಜುನಾಗಢಕ್ಕೆ ಕರೆತರಲಾಗುತ್ತಿದ್ದು,ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು. ಅಕಾರಿಗಳ ಪ್ರಕಾರ, ಬಂಧಿತ ವ್ಯಕ್ತಿಗಳು ಡಿ-ಅಡಿಕ್ಷನ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಎಂದು ಕೂಟಕ್ಕೆ ಪೊಲೀಸರಿಂದ ಅನುಮತಿ ಪಡೆದಿದ್ದರು, ಆದರೆ ಅವರು ಉದ್ರೇಕಕಾರಿ ಭಾಷಣ ಮಾಡಿದರು ಎಂದು ಆರೋಪಿಸಲಾಗಿದೆ. +ಗುಜರಾತ್ ಪೊಲೀಸರು ಮುಂಬೈನಲ್ಲಿ ಅಝಾರಿಯನ್ನು ಬಂಧಿಸಿದ ನಂತರ, ಮಹಾರಾಷ್ಟ್ರದ ರಾಜಧಾನಿಯ ಘಾಟ್ಕೋಪರ್ ಪೊಲೀಸ್ ಠಾಣೆಯ ಹೊರಗೆ ನೂರಾರು ಬೆಂಬಲಿಗರು ಜಮಾಯಿಸಿದ್ದರಿಂದ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಬೇಕಾಯಿತು. \ No newline at end of file diff --git a/eesanje/url_47_169_7.txt b/eesanje/url_47_169_7.txt new file mode 100644 index 0000000000000000000000000000000000000000..477c1041f037b1fd28131c084f010a1f9f6477d6 --- /dev/null +++ b/eesanje/url_47_169_7.txt @@ -0,0 +1,7 @@ +ರಾಜಸ್ಥಾನದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ಸಿಗಲಿದೆ : ದಿಯಾಕುಮಾರಿ +ಜೈಪುರ,ಫೆ.5- ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಸ್ಥಾನದ ಎಲ್ಲಾ 25 ಸಂಸದ ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲ್ಲುತ್ತದೆ ಎಂದು ರಾಜಸ್ಥಾನ ಉಪ ಮುಖ್ಯಮಂತ್ರಿ ದಿಯಾ ಕುಮಾರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಂಡಿತವಾಗಿಯೂ ನಾವು 25 ಸ್ಥಾನಗಳನ್ನು ಗೆದ್ದಿದ್ದೇವೆ, ರಾಜಸ್ಥಾನದಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಲೋಕಸಭೆಯಲ್ಲಿ ಕಳೆದ ಬಾರಿಗಿಂತ ಹೆಚ್ಚಿನ ಬಹುಮತವನ್ನು ನಾವು ಪಡೆಯುತ್ತೇವೆ ಎಂದು ದಿಯಾ ಕುಮಾರಿ ಹೇಳಿದ್ದಾರೆ. +ಗ್ರಾಮಗಳಿಗೆ ಪಕ್ಷದ ಪ್ರಚಾರ ಅಭಿಯಾನದ ಕುರಿತು ಮಾತನಾಡಿದ ದಿಯಾ ಕುಮಾರಿ, ಭಾರತೀಯ ಜನತಾ ಪಕ್ಷವು ತಳಮಟ್ಟದ ಪಕ್ಷವಾಗಿದೆ; ನಮ್ಮ ಕಾರ್ಯಕರ್ತರು ಯಾವಾಗಲೂ ಜನರ ನಡುವೆ ವಾಸಿಸುತ್ತಾರೆ, ಮತ್ತು ನಮ್ಮ ನಾಯಕರು ಸಹ ಜನರ ನಡುವೆ ವಾಸಿಸುತ್ತಾರೆ, ಆದ್ದರಿಂದ ಈ ಅಭಿಯಾನವು ಈ ಗಾಂವ್ ಚಲೋ ಅಭಿಯಾನವನ್ನು ಆರಂಭಿಸಿದ್ದೇವೆ ಎಂದು ಅವರು ಹೇಳಿದರು. +23 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ +ಏತನ್ಮಧ್ಯೆ, ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಸಮನ್ವಯವನ್ನು ಸ್ಥಾಪಿಸಲು ಫೆಬ್ರವರಿ 19 ರಂದು ಡೆಹ್ರಾಡೂನ್‍ನಲ್ಲಿ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಮತ್ತು ಆರ್‍ಎಸ್‍ಎಸ್‍ನ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆರ್‍ಎಸ್‍ಎಸ್‍ನಿಂದ ಅರುಣ್ ಕುಮಾರ್ ಮತ್ತು ಬಿಜೆಪಿಯಿಂದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. +ಇದಕ್ಕೂ ಮುನ್ನ, ಶನಿವಾರ, ಆಡಳಿತಾರೂಢ ಬಿಜೆಪಿ ಫೆಬ್ರವರಿ 17-18 ರಂದು ರಾಷ್ಟ್ರೀಯ ಸಮಾವೇಶವನ್ನು ಕರೆದಿದೆ. ಎರಡು ದಿನಗಳ ಪ್ರಮುಖ ಸಭೆಯು ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ನಡೆಯಲಿದೆ. ಫೆಬ್ರವರಿ 17 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉದ್ಘಾಟನಾ ಅಧಿವೇಶನವನ್ನು ಉದ್ಘಾಟಿಸಲಿದ್ದು, ಫೆಬ್ರವರಿ 18 ರಂದು ಪ್ರಧಾನಿ ನರೇಂದ್ರ ಮೋದಿಯವರ ಸಮಾರೋಪ ಅಥವಾ ಸಮಾರೋಪ ಭಾಷಣದೊಂದಿಗೆ ಸಮಾವೇಶವು ಮುಕ್ತಾಯಗೊಳ್ಳಲಿದೆ. ಆದರೆ ಅದಕ್ಕೂ ಒಂದು ದಿನ ಮುಂಚಿತವಾಗಿ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದೆ. +ಪ್ರಧಾನ ಕಾರ್ಯದರ್ಶಿಗಳು, ಕೋಶಗಳ ಸಂಚಾಲಕರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪುರಸಭೆಗಳು, ನಗರ ಪಂಚಾಯಿತಿಗಳು ಮತ್ತು ಜಿಲ್ಲಾ ಪಂಚಾಯಿತಿಗಳನ್ನು ಸಮಾವೇಶಕ್ಕೆ ಆಹ್ವಾನಿಸಲಾಗುತ್ತದೆ. ರಾಷ್ಟ್ರೀಯ ಕಾರ್ಯಕಾರಿಣಿ, ರಾಷ್ಟ್ರೀಯ ಪರಿಷತ್ತಿನ ಪದಾಧಿಕಾರಿಗಳು, ದೇಶಾದ್ಯಂತ ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಲೋಕಸಭಾ ಉಸ್ತುವಾರಿಗಳು, ಕ್ಲಸ್ಟರ್ ಉಸ್ತುವಾರಿಗಳು, ಲೋಕಸಭೆಯ ಸಂಚಾಲಕರು, ಲೋಕಸಭೆ ವಿಸ್ತರಣಾಕಾರರು, ಶಿಸ್ತು ಸಮಿತಿ, ಹಣಕಾಸು ಸಮಿತಿ, ರಾಜ್ಯಗಳ ಮುಖ್ಯ ವಕ್ತಾರರು, ಮಾಧ್ಯಮ ಕೋಶದ ಸಂಚಾಲಕರು, ಸಂಚಾಲಕರು ಸೇರಿದಂತೆ ದೇಶದ ವಿವಿಧ ಹಂತಗಳ ಐಟಿ ಸೆಲ್‍ನ ಅಧಿಕಾರಿಗಳನ್ನು ಎರಡು ದಿನಗಳ ಮಿದುಳುದಾಳಿ ಅಧಿವೇಶನಕ್ಕೆ ಆಹ್ವಾನಿಸಲಾಗಿದೆ \ No newline at end of file diff --git a/eesanje/url_47_169_8.txt b/eesanje/url_47_169_8.txt new file mode 100644 index 0000000000000000000000000000000000000000..1402ec8be301deee6c50f2a4db642ae37ade7b0b --- /dev/null +++ b/eesanje/url_47_169_8.txt @@ -0,0 +1,6 @@ +ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದ ನಾಯ್ಡು-ಪವನ್‍ ಮಾತುಕತೆ +ಅಮರಾವತಿ, ಫೆ.5- ತೆಲುಗು ಚಿತ್ರರಂಗದ ಖ್ಯಾತ ಚಿತ್ರ ನಟ, ರಾಜಕಾರಣಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿರುವುದು ಆಂಧ್ರದಲ್ಲಿ ಸಂಚಲನ ಸೃಷ್ಟಿಸಿದೆ. +ಉಭಯ ನಾಯಕರು ಮುಂಬರುವ ಆಂಧ್ರ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಗಂಟೆಗಳ ಕಾಲ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಕಳೆದ ತಿಂಗಳು ನಾಯ್ಡು ಮತ್ತು ಪವನ್ ಕಲ್ಯಾಣ್ ಈ ವರ್ಷ ನಡೆಯಲಿರುವ ಆಂಧ್ರಪ್ರದೇಶ ಚುನಾವಣೆಗೆ ಎರಡು ವಿಧಾನಸಭಾ ಸ್ಥಾನಗಳಿಗೆ ತಮ್ಮ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿದರು. +ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ +ಪವನ್ ಅವರು ರಾಜನಗರಂ ಮತ್ತು ರಜೋಲ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದರೆ, ಚಂದ್ರಬಾಬು ಅರಕು ಮತ್ತು ಮಂಡಪೇಟ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದರು, ಇದು ಟಿಡಿಪಿ-ಜೆಎಸ್ಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಿದೆ ಎಂದು ಆರೋಪಿಸಲಾಗಿದೆ. +ರಾಜಕೀಯ ಒತ್ತಡಕ್ಕೆ ಮಣಿದ ಪವನ್ ಅವರು ಎರಡು ಸ್ಥಾನಗಳಲ್ಲಿ ಸ್ರ್ಪಧಿಸುವ ತಮ್ಮ ಪಕ್ಷದ ನಿರ್ಧಾರವನ್ನು ತಿಳಿಸಿದರು. ಚಂದ್ರಬಾಬು ಅವರಂತೆ ನಾನು ಕೂಡ ಒತ್ತಡದಲ್ಲಿದ್ದೇನೆ. ಅದಕ್ಕಾಗಿಯೇ ಜನಸೇನೆ ಎರಡು ಕ್ಷೇತ್ರಗಳಲ್ಲಿ ಸ್ರ್ಪಧಿಸುತ್ತದೆ ಎಂದು ನಟ ಕಮ್ ರಾಜಕಾರಣಿ ಹೇಳಿದ್ದಾರೆ. ಆಂಧ್ರಪ್ರದೇಶದಲ್ಲಿ ಈ ವರ್ಷ ಲೋಕಸಭೆ ಚುನಾವಣೆ ಜತೆಗೆ ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. \ No newline at end of file diff --git a/eesanje/url_47_169_9.txt b/eesanje/url_47_169_9.txt new file mode 100644 index 0000000000000000000000000000000000000000..acb18fe4c0af0880a250d14e4246b3705d3596cf --- /dev/null +++ b/eesanje/url_47_169_9.txt @@ -0,0 +1,8 @@ +23 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ +ಕೊಲಂಬೊ, ಫೆ 5 (ಪಿಟಿಐ) ದ್ವೀಪ ರಾಷ್ಟ್ರದ ನೀರಿನಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಲಂಕಾ ನೌಕಾಪಡೆಯು 23 ಭಾರತೀಯ ಮೀನುಗಾರರನ್ನು ಬಂಧಿಸಿದೆ ಮತ್ತು ಎರಡು ಟ್ರಾಲರ್‍ಗಳನ್ನು ವಶಪಡಿಸಿಕೊಂಡಿದೆ ಎಂದು ಇಲ್ಲಿ ಅಧಿಕೃತ ಹೇಳಿಕೆ ತಿಳಿಸಿದೆ. ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಅವರ ಎರಡು ಟ್ರಾಲರ್‍ಗಳನ್ನು ಜಾಫ್ನಾ ಡೆಲ್ಪ್ಸ್ ದ್ವೀಪದ ಉತ್ತರದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. +ಬಂಧಿತ 23 ಮೀನುಗಾರರು ಮತ್ತು ಅವರ ಎರಡು ಟ್ರಾಲರ್‍ಗಳನ್ನು ಕಂಕಸಂತುರೈ ಬಂದರಿಗೆ ಬೆಂಗಾವಲು ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮೈಲಾಡಿ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅದು ತಿಳಿಸಿದೆ. +ಸ್ಥಳೀಯ ಮೀನುಗಾರರ ಜೀವನೋಪಾಯದ ಮೇಲೆ ಈ ಅಭ್ಯಾಸಗಳ ಪರಿಣಾಮಗಳನ್ನು ಗಣನೆಗೆ ತೆಗೆದುಕೊಂಡು ವಿದೇಶಿ ಮೀನುಗಾರಿಕೆ ಟ್ರಾಲರ್‍ಗಳಿಂದ ಅಕ್ರಮ ಮೀನುಗಾರಿಕೆ ಅಭ್ಯಾಸಗಳನ್ನು ತಡೆಯಲು ನೌಕಾಪಡೆಯು ಲಂಕಾದ ನೀರಿನಲ್ಲಿ ನಿಯಮಿತ ಗಸ್ತು ಮತ್ತು ಕಾರ್ಯಾಚರಣೆಗಳನ್ನು ನಡೆಸುತ್ತಿದೆ. +ಗರ್ಭಗುಡಿಗಳು ಒಂದು ಸಮುದಾಯಕ್ಕೆ ಸೀಮಿತ ಎಂಬುದನ್ನು ಒಪ್ಪಿಕೊಳ್ಳಲಾಗುವುದಿಲ್ಲ: ಕಾಂಗ್ರೆಸ್ +ಈ ಪ್ರಯತ್ನಗಳ ಮುಂದುವರಿದ ಭಾಗವಾಗಿ, ಉತ್ತರ ನೌಕಾ ಕಮಾಂಡ್ ನೌಕಾಪಡೆ ಮತ್ತು ಲಂಕಾ ಕೋಸ್ಟ್ ಗಾರ್ಡ್‍ಗೆ ಸೇರಿದ ಫಾಸ್ಟ್ ಅಟ್ಯಾಕ್ ಕ್ರಾಫ್ಟ್ ಅನ್ನು ಭಾರತೀಯ ಬೇಟೆಯಾಡುವ ಟ್ರಾಲರ್‍ಗಳ ಕ್ಲಸ್ಟರ್ ಅನ್ನು ಓಡಿಸಲು ನಿಯೋಜಿಸಿತು, ಏಕೆಂದರೆ ಟ್ರಾಲರ್‍ಗಳು ಶನಿವಾರ ಲಂಕಾದ ನೀರಿನಲ್ಲಿ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿರುವುದು ಪತ್ತೆಯಾಗಿತ್ತು. +ಭಾರತ ಮತ್ತು ಲಂಕಾ ನಡುವಿನ ಬಾಂಧವ್ಯದಲ್ಲಿ ಮೀನುಗಾರರ ಸಮಸ್ಯೆ ವಿವಾದಾಸ್ಪದವಾಗಿದೆ, ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ಲಂಕಾದ ಪ್ರಾದೇಶಿಕ ಜಲವನ್ನು ಅಕ್ರಮವಾಗಿ ಪ್ರವೇಶಿಸಿದ ಹಲವಾರು ಘಟನೆಗಳಲ್ಲಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. +ಪಾಕ್ ಜಲಸಂಧಿಯು ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುವ ನೀರಿನ ಕಿರಿದಾದ ಪಟ್ಟಿಯಾಗಿದ್ದು, ಎರಡೂ ದೇಶಗಳ ಮೀನುಗಾರರಿಗೆ ಈ ಪ್ರದೇಶ ಶ್ರೀಮಂತ ಮೀನುಗಾರಿಕೆ ಕೇಂದ್ರವಾಗಿದೆ. \ No newline at end of file diff --git a/eesanje/url_47_16_1.txt b/eesanje/url_47_16_1.txt new file mode 100644 index 0000000000000000000000000000000000000000..fa7bb7b60391e68375f58b0ed30d7f78633279cc --- /dev/null +++ b/eesanje/url_47_16_1.txt @@ -0,0 +1,9 @@ +ಹೆಣ್ಣು ಶಿಶುವಿಗೆ ವಿಷವಿಟ್ಟು ಹತ್ಯೆ ಮಾಡಿದ ಪಾಪಿ ಪೋಷಕರು + 9-- , ; +ಚೆನ್ನೈ,ಸೆ.9-ಎರಡನೆಯದು ಹೆಣ್ಣು ಮಗುವಾಯಿತು ಎಂದು ಪೋಷಕರು ತಮ 9 ದಿನದ ಹಸುಗೂಸಿಗೆ ವಿಷ ಹಾಕಿ ಹತ್ಯೆ ಮಾಡಿ ಶವವನ್ನು ಹೂತು ಹಾಕಿದ್ದ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.ಮೊದಲನೆಯದ್ದು ಹೆಣ್ಣುಮಗುವಿತ್ತು, ಈಗ ಎರಡನೆಯದೂ ಹೆಣ್ಣಾಗಿದೆ ಅದು ತಮಗೆ ಬೇಡ ಎಂದು ಹೇಳಿ ಶಿಶುವಿಗೆ ವಿಷ ಉಣಿಸಿ ಹೆತ್ತವರೇ ಕೊಲೆ ಮಾಡಿದ್ದು ಪಾಪಿ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. +ಈಗಾಗಲೇ ಎರಡು ವರ್ಷದ ಮಗಳನ್ನು ಹೊಂದಿರುವ ಜೀವಾ ಮತ್ತು ಡಯಾನಾ ದಂಪತಿಗೆ ಆ. 27ರಂದು ಎರಡನೇ ಹೆಣ್ಣುಮಗು ಹುಟ್ಟಿತ್ತು. ಡಯಾನಾ ಹೆರಿಗೆಯ ಸಮಯದಲ್ಲಿ ತೊಂದರೆಯಾದ ಕಾರಣ ವೆಲ್ಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. +ಡಿಸ್ಚಾರ್ಜ್‌ ಆಗಿದ್ದು ಮನೆಗೆ ಮರಳಿದ ನಂತರ, ದಂಪತಿ ತಮ ನವಜಾತ ಶಿಶುವಿಗೆ ವಿಷಪೂರಿತ ಹಾಲನ್ನು ಕುಡಿಸಿದ್ದಾರೆ. ಮಗು ಸಾವನ್ನಪ್ಪಿದಾಗ, ಯಾವುದೇ ಸಂಬಂಧಿಕರಿಗೆ ತಿಳಿಸದೆ ಆಕೆಯ ಶವವನ್ನು ತಮ ಹಿತ್ತಲಿನಲ್ಲಿಯೇ ಹೂತಿದ್ದರು. +╰┈➤ +ಡಯಾನಾ ತನ್ನ ತಂದೆಗೆ ಕರೆ ಮಾಡಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮತಪಟ್ಟಿದೆ ಎಂದು ಹೇಳಿದ್ದಾಳೆ. ಆಗ ಅವರ ತಂದೆಗೆ ಅನುಮಾನ ಬಂದಿದೆ, ಮಗುವಿನ ಅನುಮಾನಾಸ್ಪದ ಸಾವಿನ ಕುರಿತು ಪೊಲೀಸರಿಗೆ ದೂರು ನೀಡಿದ್ದರು. +ಪೊಲೀಸರು ಆಗಮಿಸಿ ತನಿಖೆ ನಡೆಸಿದಾಗ ದಂಪತಿ ಮನೆಯಿಂದ ಪರಾರಿಯಾಗಿರುವುದು ಕಂಡು ಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಸಮುಖದಲ್ಲಿ ಸೆ.5ರಂದು ಮಗುವಿನ ಮತದೇಹವನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ. +ಪೋಷಕರನ್ನು ಪತ್ತೆಹಚ್ಚಲು ವೆಲ್ಲೂರು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದರು ಮತ್ತು ಅಂತಿಮವಾಗಿ ಇಬ್ಬರೂ ಶಂಕಿತರನ್ನು ಬಂಧಿಸಲಾಯಿತು. ತನಿಖೆ ಮುಂದುವರಿದಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. \ No newline at end of file diff --git a/eesanje/url_47_16_10.txt b/eesanje/url_47_16_10.txt new file mode 100644 index 0000000000000000000000000000000000000000..936d2735f858234391bc01df6ee13420a890bb9c --- /dev/null +++ b/eesanje/url_47_16_10.txt @@ -0,0 +1,7 @@ +ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ..! + , +ನವದೆಹಲಿ,ಸೆ.6-ಗೌರಿಗಣೇಶ ಹಬ್ಬದ ದಿನದಂದು ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಕೆ ಮಾಡಲು ಮುಂದಾಗಿದೆ.ನೂತನ ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ ಸಾಧ್ಯತೆ ಇದ್ದು, ಪ್ರತಿ ಲೀಟರ್ಗೆ ಡೀಸೆಲ್ ದರ 6 ರೂ. ಹಾಗೂ ಪೆಟ್ರೋಲ್ ದರವನ್ನು 4 ರೂ. ಕಡಿತ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. +ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 72.75ರಿಂದ 70 ಡಾಲರ್ಗೆ ಇಳಿಕೆಯಾಗಿರುವುದರಿಂದ ತೈಲ ಬೆಲೆಯನ್ನು ಇಳಿಸಲು ಸರ್ಕಾರ ಸಮತಿಸಿದೆ.ಈಗಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಕೇಂದ್ರ ಪೆಟ್ರೋಲಿಯಂ ಸಚಿವರು ಹಾಗೂ ತೈಲ ಪೂರೈಕೆ ಮಾಡುವ ಕಂಪನಿಗಳ ಜೊತೆ ಚರ್ಚೆ ನಡೆಸಿದ್ದು, ಪರಿಷ್ಕೃತ ದರ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ತಿಳಿದುಬಂದಿದೆ. +ಜಮು ಮತ್ತು ಕಾಶೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ನಡೆಯತ್ತಿರುವ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ತೈಲ ದರವನ್ನು ಪ್ರಸ್ತಾಪಿಸಬಹುದೆಂಬ ಹಿನ್ನಲೆಯಲ್ಲಿ ದರ ಇಳಿಸುವ ಬಗ್ಗೆ ಚಿಂತನೆ ನಡೆಸಿದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ ಮೋದಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಕೆ ಮಾಡಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುವ ಸಾಧ್ಯತೆ ಇದೆ. ಇದನ್ನು ಮನಗಂಡೇ ದರ ಇಳಿಕೆಗೆ ಚಿಂತನೆ ನಡೆಸಲಾಗಿದೆ. +ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಬ್ಯಾರೆಲ್ಗೆ 85 ರೂ. ಇತ್ತು. ಈ ವೇಳೆಯೇ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಸಬೇಕೆಂಬ ಬೇಡಿಕೆ ಹೆಚ್ಚಾಗಿತ್ತು.ತೈಲ ದರವನ್ನು ಕೇಂದ್ರ ಸರ್ಕಾರ ತೀರ್ಮಾನಿಸುವುದಿಲ್ಲ. ಬದಲಿಗೆ ತೈಲ ಕಂಪನಿಗಳಾದ ಭಾರತೀಯ ತೈಲ ನಿಗಮ(ಐಓಸಿ), ಭಾರತ್ +ಪೆಟ್ರೋಲಿಯಂ ಕಾರ್ಪೊರೇಷನ್ (ಬಿಪಿಸಿಎಲ್) ಹಾಗೂ ಹಿಂದೂಸ್ಥಾನ್ ಪೆಟ್ರೀಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಎಚ್ಪಿಸಿಎಲ್) ನಿರ್ಧರಿಸುತ್ತವೆ. ಕಳೆದ ಮಾ.14ರಂದು ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪ್ರತಿ ಲೀಟರ್ಗೆ 2 ರೂ. ಕಡಿತ ಮಾಡಿತ್ತು. ತೈಲ ದರವನ್ನು ಕಡಿಮೆ ಮಾಡಬೇಕೆಂದು ರಾಜ್ಯ ಸರ್ಕಾರಗಳು ಕೂಡ ಕೇಂದ್ರಕ್ಕೆ ಮನವಿ ಮಾಡಿದ್ದನ್ನು ಸರಿಸಬಹುದು. \ No newline at end of file diff --git a/eesanje/url_47_16_11.txt b/eesanje/url_47_16_11.txt new file mode 100644 index 0000000000000000000000000000000000000000..769a506c65c8cc1d9c58fc13801b1930612657e7 --- /dev/null +++ b/eesanje/url_47_16_11.txt @@ -0,0 +1,8 @@ +ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಕಾಮುಕರು ಅರೆಸ್ಟ್ + , +ಬೀದರ್,ಸೆ.6-ಬಸವ ಕಲ್ಯಾಣದಲ್ಲಿ ನಡೆದಿದ್ದ ಪರಿಶಿಷ್ಟ ಜಾತಿಗೆ ಸೇರಿದ 19 ವರ್ಷದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. +ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಬೀದರ್ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ತಿಳಿಸಿದ್ದಾರೆ. +ಮೂವರು ಆರೋಪಿಗಳಲ್ಲಿ ಒಬ್ಬರು ಅದೇ ಗ್ರಾಮದವರು (ಬಾಲಕಿಯದು). ಉಳಿದ ಇಬ್ಬರು ಪಕ್ಕದ ಗ್ರಾಮದವರು. ಮೂವರನ್ನು ಬಂಧಿಸಲಾಗಿದೆ ಮತ್ತು ಅವರ ವಿರುದ್ಧ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. +ಕಳೆದ ಆ.29 ರಂದು ಯುವತಿ ನಾಪತ್ತೆಯಾಗಿದ್ದರು. ಆಕೆಯ ಪೋಷಕರು ಎರಡು ದಿನ ಹುಡುಕಾಟ ನಡೆಸಿ ಕೊನೆಗೆ ಆ.31ರಂದು ಪೊಲೀಸರಿಗೆ ದೂರು ನೀಡಿದ್ದರು.ದೂರು ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿದ ಪೊಲೀಸರು ಸೆ.1ರಂದು ಪೊದೆಯಲ್ಲಿ ಎಸೆಯಲಾಗಿದ್ದ ಯುವತಿ ಶವ ವಶಪಡಿಸಿಕೊಂಡಿದ್ದರು. +ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ಪರೀಕ್ಷೆ ನಂತರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿತ್ತು. ಹೀಗಾಗಿ ಆರೋಪಿಗಳ ಎಡೆಮುರಿ ಕಟ್ಟಲು ಕಂಕಣಬದ್ಧರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಘಟನೆ ಖಂಡಿಸಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಮತ್ತು ವಿರೋಧ ಪಕ್ಷ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದರು. \ No newline at end of file diff --git a/eesanje/url_47_16_12.txt b/eesanje/url_47_16_12.txt new file mode 100644 index 0000000000000000000000000000000000000000..31655377403faf017674018ad4ee470979c184f9 --- /dev/null +++ b/eesanje/url_47_16_12.txt @@ -0,0 +1,15 @@ +ಉಚಿತ ಯೋಜನೆಗಳ ಎಫೆಕ್ಟ್ : ಪೆಟ್ರೋಲ್‌-ಡಿಸೇಲ್‌ ವ್ಯಾಟ್‌ ಹೆಚ್ಚಿಸಿ, ವಿದ್ಯುತ್‌ ಸಬ್ಸಿಡಿ ರದ್ದುಗೊಳಿಸಿದ ಪಂಜಾಬ್‌ ಸರ್ಕಾರ +- , +ಚಂಡೀಗಢ,ಸೆ.6-ಉಚಿತ ಯೋಜನೆಗಳನ್ನು ಘೋಷಣೆ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಂಜಾಬ್‌ ಆಪ್‌ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ವ್ಯಾಟ್‌ ಹೆಚ್ಚಿಸಿ ವಿದ್ಯುತ್‌ ಸಬ್ಸಿಡಿಯನ್ನು ರದ್ದುಗೊಳಿಸಿದೆ.ಮುಖ್ಯಮಂತ್ರಿ ಭಗವಂತ್‌ ಮಾನ್‌ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಇಂಧನ ಬೆಲೆ ಏರಿಕೆಯಿಂದಾಗಿ ಇತರ ಅಗತ್ಯ ವಸ್ತುಗಳ ಬೆಲೆ ಮೇಲೆ ಪರಿಣಾಮ ಬೀರಲಿದೆ ಎಂಬ ಟೀಕೆ ವ್ಯಕ್ತವಾಗಿದೆ. +ಈಗಾಗಲೇ ಕೆಲವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ. ಇದೀಗ ಇಂಧನದ ಬೆಲೆ ಏರಿಕೆ ಜನರಿಗೆ ಹೊರೆಯಾಗಿದ್ದು, ರಾಜ್ಯಾದ್ಯಂತ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ಆಪ್‌ ಸರ್ಕಾರ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದ ನಂತರ ಮೂರನೇ ಬಾರಿ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಏರಿಕೆ ಮಾಡಿದೆ. +ಪೆಟ್ರೋಲ್‌ ಬೆಲೆಯಲ್ಲಿ 61 ಪೈಸೆ, ಡಿಸೇಲ್‌ ಬೆಲೆಯನ್ನು 92 ಪೈಸೆ ಹೆಚ್ಚಿಸಲು ನಿರ್ಣಯ ಕೈಗೊಳ್ಳಲಾಗಿದೆ. ಮತ್ತೊಂದು ಪ್ರಮುಖ ನಿರ್ಣಯ ಎಂದರೆ, ಈ ಹಿಂದಿನ ಕಾಂಗ್ರೆಸ್‌‍ ಸರ್ಕಾರದಲ್ಲಿ 7 ಕಿಲೋ ವ್ಯಾಟ್‌ ವರೆಗೆ ನೀಡಲಾಗುತ್ತಿದ್ದ ವಿದ್ಯುತ್‌ ಸಬ್ಸಿಡಿ ಯೋಜನೆಯನ್ನೂ ಸರ್ಕಾರ ರದ್ದುಗೊಳಿಸಿದೆ. +ಈ ನಿರ್ಣಯದಿಂದಾಗಿ 1,500 ರಿಂದ 1,700 ಕೋಟಿ ಹಣ ಸಂಗ್ರಹವಾಗುತ್ತದೆ ಎಂದು ಹಣಕಾಸು ಸಚಿವ ಹರ್ಪಲ್‌ ಚೀಮಾ ತಿಳಿಸಿದ್ದಾರೆ. ಇಂಧನದ ಮೇಲಿನ ದರ ಹೆಚ್ಚಳದಿಂದ ಸರ್ಕಾರಕ್ಕೆ ವಾರ್ಷಿಕ 392 ಕೋಟಿ ಹಣ ಉಳಿಯುತ್ತದೆ. ಆದಾಗ್ಯೂ, ರಾಜ್ಯದ ಶೇ 90ರಷ್ಟು ನಿವಾಸಿಗಳಿಗೆ ನೀಡಲಾಗುತ್ತಿರುವ 300 ಯೂನಿಟ್‌ಗಳ ಉಚಿತ ವಿದ್ಯುತ್‌ ಮುಂದುವರಿಯುತ್ತದೆ ಎಂದು ಹೇಳಿದೆ. +7 ಕಿಲೋವ್ಯಾಟ್‌ ವರೆಗಿನ ವಿದ್ಯುತ್‌ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಲಾಗಿದೆ. ಇದರ ಜೊತೆ ಬಸ್‌‍ ಟಿಕೆಟ್‌ ದರ ಪ್ರತಿ ಕಿ.ಮೀ.ಗೆ 23 ಪೈಸೆ ಏರಿಕೆ ಮಾಡಲಾಗಿದೆ. +ವಿದ್ಯುತ್‌ ಸಬ್ಸಿಡಿಯನ್ನು ರದ್ದುಗೊಳಿಸಿದ ನಿರ್ಧಾರಗಳನ್ನು ಸಮರ್ಥಿಸಿಕೊಂಡ ಹಣಕಾಸು ಸಚಿವ ಹರ್ಪಲ್‌ ಚೀಮಾ ಇದರಿಂದ 1,500-1700 ಕೋಟಿ ರೂ. ಉಳಿಸಬಹುದು ಎಂದು ತಿಳಿಸಿದರು. ವಾರ್ಷಿಕವಾಗಿ ಡೀಸೆಲ್‌ ಮಾರಾಟದಿಂದ 395 ಕೋಟಿ ರೂ. ಮತ್ತು ಪೆಟ್ರೋಲ್‌ನಿಂದ 150 ಕೋಟಿ ರೂ. ಹೆಚ್ಚುವರಿಯಾಗಿ ಸಂಗ್ರಹಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ. +ಕಾಂಗ್ರೆಸ್‌‍ ಚನ್ನಿ ಸರ್ಕಾರ ಘೋಷಣೆ ಮಾಡಿದ ಉಚಿತ ಭರವಸೆಗಳಿಂದ ರಾಜ್ಯಕ್ಕೆ ಸಂಕಷ್ಟ ಎದುರಾಗಿದೆ ಆಪ್‌ ಸರ್ಕಾರ ತಿಳಿಸಿದೆ. ಚನ್ನಿ ಸರ್ಕಾರ 2021ರಲ್ಲಿ 7 ಕಿಲೋವ್ಯಾಟ್‌ವರೆಗಿನ ಗೃಹ ಬಳಕೆಯ ವಿದ್ಯುತ್‌ ಶುಲ್ಕವನ್ನು ಪ್ರತಿ ಯುನಿಟ್‌ಗೆ 3 ರೂ.ಗೆ ಇಳಿಕೆ ಮಾಡಿತ್ತು. 7 ಕಿಲೋ ವ್ಯಾಟ್‌ವರೆಗೂ ಇದರ ಲಾಭ ಪಡೆಯಲು ಅವಕಾಶವಿತ್ತು. +ಆಮ್‌ ಆದಿ ಪಕ್ಷದ ನೇತೃತ್ವದ ಪಂಜಾಬ್‌ ಸರ್ಕಾರವು ಗೃಹ ಬಳಕೆದಾರರಿಗೆ ತಿಂಗಳಿಗೆ 300 ಯೂನಿಟ್‌ ಉಚಿತ ವಿದ್ಯುತ್‌ ನೀಡುತ್ತಿದ್ದು ಈ ಯೋಜನೆ ಮುಂದುವರಿಯಲಿದೆ. ಕಾಂಗ್ರೆಸ್‌‍ ಸರ್ಕಾರ ಜಾರಿಗೆ ತಂದಿದ್ದ ಸಬ್ಸಿಡಿ ಮಾತ್ರ ಈಗ ರದ್ದುಗೊಂಡಿದೆ. +ಹಿಮಾಚಲದಂತೆ ಪಂಜಾಬ್‌ ಉಚಿತ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸೆ.4ರವರೆಗೆ ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಾಗಿರಲಿಲ್ಲ. ಮಾರ್ಚ್‌ನಲ್ಲಿ ಮಂಡನೆಯಾದ ಬಜೆಟ್‌ ಭಾಷಣದಲ್ಲಿ ಹರ್ಪಾಲ್‌ ಚೀಮಾ ಅವರು 2024-25ರ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಪಂಜಾಬ್‌ನ ಸಾಲವು 3.74 ಲಕ್ಷ ಕೋಟಿ ರೂ.ಗೆ ಏರಿಕೆಯಾಗಬಹುದು ಎಂದು ತಿಳಿಸಿದ್ದರು. +ಈ ಕುರಿತು ಮಾತನಾಡಿರುವ ಸರ್ಕಾರ ಆಡಳಿತ ಸುಧಾರಣೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಭಗವತ್‌ ಮಾನ್‌ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. +ಪಂಜಾಬ್‌ನಲ್ಲಿ ಆಡಳಿತವನ್ನು ಸುಧಾರಿಸುವ ಮತ್ತು ಸ್ಥಿರವಾದ ಅಭಿವೃದ್ಧಿ ಕಾಪಾಡುವುದು ಎಎಪಿ ಸರ್ಕಾರ ಗುರಿಯಾಗಿದೆ ಎಂದು ಎಎಪಿ ಪಂಜಾಬ್‌ನ ಎಕ್ಸ್ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. +ಎಎಪಿ ಸರ್ಕಾರ ಕಳೆದ ಎರಡು ವರ್ಷಗಳಲ್ಲಿ ಇಂಧನದ ಬೆಲೆ ಮೂರನೇ ಬಾರಿ ಹೆಚ್ಚಿಸಿದೆ. ಎಎಪಿ ಸರ್ಕಾರ ಪೆಟ್ರೋಲಿಯಂ ವ್ಯಾಪಾರವನ್ನು ಕೊಲ್ಲುತ್ತಿದೆ ಎಂದು ಪೆಟ್ರೋಲ್ ಪಂಪ್‌ ಡೀಲರ್ಸ್‌ ಅಸೋಸಿಯೇಷನ್‌ ಪಂಜಾಬ್‌ನ ವಕ್ತಾರ ಮಾಂಟಿ ಸೆಹಗಲ್‌ ಐಎಎನ್‌ಎಸ್‌‍ಗೆ ತಿಳಿಸಿದ್ದಾರೆ. +ಸರ್ಕಾರವೂ ಸಿಎನ್‌ಜಿ ಬಳಕೆ ಹೆಚ್ಚಿಸಲು ಹಸಿರು ಇಂಧನದ ಮೇಲೆ ವ್ಯಾಟ್‌ ಕಡಿಮೆ ಮಾಡಬೇಕು. ಈ ಮೂಲಕ ಅವುಗಳನ್ನು ಪೆಟ್ರೋಲ್‌ ಮತ್ತು ಡೀಸೆಲ್‌ಗಿಂತ ಅಗ್ಗ ಮಾಡಬೇಕು ಎಂದು ತಿಳಿಸಿದ್ದಾರೆ. ಸಚಿವ ಸಂಪುಟ ನಿರ್ಧಾರಕ್ಕೆ ಮುನ್ನ ಜಲಂಧರ್‌ನಲ್ಲಿ ಪೆಟ್ರೋಲ್‌ ಲೀಟರ್‌ಗೆ 96.17 ಮತ್ತು ಡೀಸೆಲ್‌ 86.32 ರೂ ಇತ್ತು. \ No newline at end of file diff --git a/eesanje/url_47_16_2.txt b/eesanje/url_47_16_2.txt new file mode 100644 index 0000000000000000000000000000000000000000..7a00759a01f44e9ed1a370b7f09bf0f03968e236 --- /dev/null +++ b/eesanje/url_47_16_2.txt @@ -0,0 +1,6 @@ +ಗೋವಾದಲ್ಲಿ ಕ್ರಿಶ್ಚಿಯನ್ನರಿಗಿಂತ ಹೆಚ್ಚಾಗುತ್ತಿದ್ದಾಂರಂತೆ ಮುಸ್ಲಿಮರು + , : +ಕೊಚ್ಚಿ, ಸೆ.9 (ಪಿಟಿಐ)– ಗೋವಾದಲ್ಲಿ ಕ್ರಿಶ್ಚಿಯನ್ನರ ಸಂಖ್ಯೆ ಕಡಿಮೆಯಾತ್ತಿದ್ದು ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗೋವಾ ರಾಜ್ಯಪಾಲ ಪಿ ಎಸ್‌‍ ಶ್ರೀಧರನ್‌ ಪಿಳ್ಳೈ ಹೇಳಿದ್ದಾರೆ. ಇಲ್ಲಿನ ಚರ್ಚ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಗೋವಾದಲ್ಲಿ ಕ್ರಿಶ್ಚಿಯನ್‌ ಜನಸಂಖ್ಯೆಯು ಹಿಂದಿನ ಶೇಕಡಾ 36 ರಿಂದ ಶೇಕಡಾ 25 ಕ್ಕೆ ಇಳಿದಿದೆ ಎಂದಿದ್ದಾರೆ. +ನಾನು ಹಿರಿಯ ಪಾದ್ರಿಯೊಂದಿಗೆ ಮಾತನಾಡಿದ್ದೇನೆ. ಕ್ಯಾಥೋಲಿಕ್‌ ಸಮುದಾಯದ ಸದಸ್ಯರ ಶೇಕಡಾವಾರು ಪ್ರಮಾಣ ಶೇ. 25 ಕ್ಕೆ ಇಳಿದಿದೆ, ಆದರೆ ಇಸ್ಲಾಮಿಕ್‌ ಸಮುದಾಯದ ಸದಸ್ಯರು ಹಿಂದಿನ ಶೇ. 3 ರಿಂದ 12 ಕ್ಕೆ ಏರಿದ್ದಾರೆ ಎಂದು ಅವರು ಹೇಳಿದರು. +ಈ ನಿಟ್ಟಿನಲ್ಲಿ ಸಕಾರಾತಕ ಅಧ್ಯಯನ ನಡೆಸುವಂತೆ ಸಮುದಾಯದ ಸದಸ್ಯರನ್ನು ಕೇಳಿದ್ದೇನೆ ಎಂದು ಪಿಳ್ಳೈ ಹೇಳಿದರು. ನನ್ನ ಹೇಳಿಕೆಯಿಂದ ಕೆಲವು ಮಾಧ್ಯಮಗಳು ವಿವಾದ ಸಷ್ಟಿಸುವುದನ್ನು ನಾನು ನೋಡಿದ್ದೇನೆ. ನಾನು ಜನಸಂಖ್ಯಾಶಾಸ್ತ್ರದ ಬಗ್ಗೆ ಅಥವಾ ಯಾವುದೇ ನಿರ್ದಿಷ್ಟ ಸಮುದಾಯದ ಬಗ್ಗೆ ಮಾತನಾಡಲಿಲ್ಲ ಎಂದು ಪಿಳ್ಳೈ ಹೇಳಿದರು. ಗೋವಾದಲ್ಲಿ ಕ್ಯಾಥೋಲಿಕ್‌ ಸದಸ್ಯರ ಸಂಖ್ಯೆಯು ವರ್ಷಗಳಲ್ಲಿ ಕಡಿಮೆಯಾಗಿದೆ ಎಂದು ಅವರು ಹೇಳಿದರು. +ಪುರೋಹಿತರು ಸೇರಿದಂತೆ ಸಮುದಾಯದ ಮುಖಂಡರು ನನ್ನನ್ನು ಭೇಟಿ ಮಾಡಿದಾಗ, ನಾನು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಸುದ್ದಿ ಲೇಖನಗಳನ್ನು ಉಲ್ಲೇಖಿಸಿದೆ. ನಾನು ಅವರನ್ನು ಅಧ್ಯಯನ ಮಾಡಲು ಕೇಳಿದೆ. ಇದು ಮುಖ್ಯವಾಗಿ ಮೆದುಳಿನ ಡ್ರೈನ್‌ಗೆ ಕಾರಣ ಎಂದು ನನಗೆ ಅನಿಸುತ್ತದೆ ಎಂದು ಪಿಳ್ಳೈ ಮತ್ತೊಂದು ಸಮಾರಂಭದಲ್ಲಿ ಸ್ಪಷ್ಟಪಡಿಸಿದರು. \ No newline at end of file diff --git a/eesanje/url_47_16_3.txt b/eesanje/url_47_16_3.txt new file mode 100644 index 0000000000000000000000000000000000000000..9ac435cbab4c74d215aaf074e12e0b8f6d239ed4 --- /dev/null +++ b/eesanje/url_47_16_3.txt @@ -0,0 +1,10 @@ +ಯುನಿಕೋಡ್‌ನಲ್ಲಿ ತುಳು ಲಿಪಿ ಸೇರ್ಪಡೆಗೆ ಒಪ್ಪಿಗೆ + ; +ಮಂಗಳೂರು, ಸೆ 9 (ಪಿಟಿಐ)ಯುನಿಕೋಡ್‌ ಒಕ್ಕೂಟವು ತನ್ನ ಇತ್ತೀಚಿನ ಆವತ್ತಿಯಾದ ಯುನಿಕೋಡ್‌ 16 ರಲ್ಲಿ ತುಳು ಲಿಪಿಯನ್ನು ಸೇರಿಸುವುದಾಗಿ ಘೋಷಿಸಿದೆ. ಈ ಅಪ್‌ಡೇಟ್‌ ಯುನಿಕೋಡ್‌ ಸ್ಟ್ಯಾಂಡರ್ಡ್‌ಗೆ 80 ಅಕ್ಷರಗಳನ್ನು ಸೇರಿಸುತ್ತದೆ, ಇದು ತುಳು ಮಾತನಾಡುವ ಸಮುದಾಯಕ್ಕೆ ಮಹತ್ವದ ಮೈಲಿಗಲ್ಲು ಆಗಲಿದೆ. +2001 ರಲ್ಲಿ ಯುನಿಕೋಡ್‌ ಒಕ್ಕೂಟದ ಸದಸ್ಯರೊಬ್ಬರು ಕನ್ನಡ ಲಿಪಿಯನ್ನು ಯುನಿಕೋಡ್‌ನಲ್ಲಿ ಸರಿಪಡಿಸಲು ಸಹಾಯ ಮಾಡಿದರು ಮತ್ತು ಏಕಕಾಲದಲ್ಲಿ ತುಳು ಸೇರ್ಪಡೆಗಾಗಿ ಪ್ರತಿಪಾದಿಸಿದಾಗ ಈ ಸಾಧನೆಯ ಪ್ರಯಾಣ ಪ್ರಾರಂಭವಾಯಿತು. +ಮಂಗಳೂರಿನ ತುಳು ಅಕಾಡೆಮಿಯೊಂದಿಗೆ ಆರಂಭಿಕ ತಪ್ಪುಗ್ರಹಿಕೆಗಳ ಹೊರತಾಗಿಯೂ, ಭವಿಷ್ಯದ ಬೆಳವಣಿಗೆಗಳಿಗೆ ಅಡಿಪಾಯ ಹಾಕಲಾಯಿತು. ಆರಂಭದಲ್ಲಿ, ತುಳು ವಿದ್ವಾಂಸರಾದ ಎಸ್‌‍ ಎ ಕಷ್ಣಯ್ಯ ಸೇರಿದಂತೆ ಮೂವರು ತುಳು ತಜ್ಞರು ಈ ವಿಷಯದಲ್ಲಿ ಕೆಲಸ ಮಾಡಿದ್ದರು. +╰┈➤ +2014 ರಲ್ಲಿ ತುಳು ವಿಕಿಪೀಡಿಯವನ್ನು ರಚಿಸುವ ಪ್ರಯತ್ನಗಳು ವೇಗವನ್ನು ಪಡೆದುಕೊಂಡವು, 2016 ರಂದು ಅದರ ಪ್ರಾರಂಭಕ್ಕೆ ಕಾರಣವಾಯಿತು. 2017 ರ ಹೊತ್ತಿಗೆ, ತುಳು ಅಕಾಡೆಮಿಯು ತುಳು ಯುನಿಕೋಡ್‌ ಅಗತ್ಯವನ್ನು ಗುರುತಿಸಿತು, ತಾಂತ್ರಿಕ ಮಾರ್ಗದರ್ಶನದೊಂದಿಗೆ ಅಕ್ಷರಗಳನ್ನು ಅಂತಿಮಗೊಳಿಸಲು ಸಮಿತಿಯನ್ನು ರಚಿಸಿತು. ತಿಲಾರಿ ಲಿಪಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಷ್ಣಯ್ಯ ಪಿಟಿಐಗೆ ತಿಳಿಸಿದರು. +ವ್ಯಾಪಕವಾದ ಪತ್ರವ್ಯವಹಾರದ ನಂತರ, ಲಿಪಿಯನ್ನು ತುಳು-ತಿಗಳರಿ ಎಂಬ ಹೆಸರಿನಲ್ಲಿ ಅಧಿಕತವಾಗಿ ಯುನಿಕೋಡ್‌ಗೆ ಸೇರಿಸಲಾಯಿತು. ತುಳು ಅಕಾಡೆಮಿಯ ಪಟ್ಟಿ ಮತ್ತು ಅಂತಿಮಗೊಳಿಸಿದ ಯುನಿಕೋಡ್‌ ಆವತ್ತಿಯ ನಡುವೆ ಸಣ್ಣ ವ್ಯತ್ಯಾಸಗಳಿದ್ದರೂ, ಹೆಚ್ಚಿನ ಅಕ್ಷರಗಳನ್ನು ಸೇರಿಸಲಾಗಿದೆ. ಗಮನಾರ್ಹವಾಗಿ, ತುಳು ಅಂಕಿಗಳನ್ನು ಮತ್ತು ತುಳು ಲಿಪಿಯಲ್ಲಿ ಸಂಸ್ಕೃತವನ್ನು ಬರೆಯಲು ಅಗತ್ಯವಾದ ಕೆಲವು ಡಯಾಕ್ರಿಟಿಕ್‌ ಗುರುತುಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದರು. +ತುಳು ಲಿಪಿಯನ್ನು ಯುನಿಕೋಡ್‌ನಲ್ಲಿ ಸೇರಿಸುವುದರಿಂದ ವರ್ಧಿತ ಡಿಜಿಟಲ್‌ ಉಪಸ್ಥಿತಿ ಸೇರಿದಂತೆ ತುಳು ಭಾಷಿಕರ ಡಿಜಿಟಲ್‌ ಸಂವಹನದ ಮೇಲೆ ಗಮನಾರ್ಹ ಧನಾತಕ ಪರಿಣಾಮ ಬೀರುತ್ತದೆ. ತುಳು ಭಾಷಿಕರು ಈಗ ತಮ ಸ್ಥಳೀಯ ಸ್ಕ್ರಿಪ್ಟ್ ಅನ್ನು ಸಾಮಾಜಿಕ ಮಾಧ್ಯಮ, ವೆಬ್‌ಸೈಟ್‌ಗಳು ಮತ್ತು ಮೆಸೇಜಿಂಗ್‌ ಅಪ್ಲಿಕೇಶನ್‌ಗಳು ಸೇರಿದಂತೆ ವಿವಿಧ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಸಬಹುದು, ಇದು ಬಲವಾದ ಆನ್‌ಲೈನ್‌ ಉಪಸ್ಥಿತಿಯನ್ನು ಉತ್ತೇಜಿಸುತ್ತದೆ. +ಯೂನಿಕೋಡ್‌ನಲ್ಲಿ ತುಳು ಲಭ್ಯವಿರುವುದರಿಂದ ಪಠ್ಯಪುಸ್ತಕಗಳು ಮತ್ತು ಆನ್‌ಲೈನ್‌ ಕೋರ್ಸ್‌ಗಳಂತಹ ಶೈಕ್ಷಣಿಕ ಸಾಮಗ್ರಿಗಳನ್ನು ತುಳು ಲಿಪಿಯಲ್ಲಿ ರಚಿಸಲು ಅನುಕೂಲವಾಗುತ್ತದೆ, ಭಾಷಾ ಕಲಿಕೆ ಮತ್ತು ಸಾಕ್ಷರತೆಯನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_16_4.txt b/eesanje/url_47_16_4.txt new file mode 100644 index 0000000000000000000000000000000000000000..fc74a73056aaca63921b94b3017dfd78022067e5 --- /dev/null +++ b/eesanje/url_47_16_4.txt @@ -0,0 +1,6 @@ +ಗೋವಾದಲ್ಲಿ ಸಮುದ್ರ ಪಾಲಾದ ರಷ್ಯನ್‌ ಪ್ರಜೆ + , +ಪಣಜಿ, ಸೆ.9 (ಪಿಟಿಐ)– ಗೋವಾ ಪ್ರವಾಸಕ್ಕೆ ಬಂದಿದ್ದ ರಷ್ಯಾ ಪ್ರಜೆಯೊಬ್ಬರು ಅರಬ್ಬಿ ಸಮುದ್ರ ಪಾಲಾಗಿದ್ದಾರೆ. ಗೋವಾಕ್ಕೆ ಭೇಟಿ ನೀಡಿದ್ದ 33 ವರ್ಷದ ರಷ್ಯಾದ ಪ್ರಜೆಯೊಬ್ಬರು ಅರಬ್ಬಿ ಸಮುದ್ರದಲ್ಲಿ ಮುಳುಗಿ ಮತಪಟ್ಟಿದ್ದು, ಅವರ ಪಾಲುದಾರ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಉತ್ತರ ಗೋವಾ ಜಿಲ್ಲೆಯ ಮೊರ್ಜಿಮ್‌ ಬೀಚ್‌ ನಲ್ಲಿ ಈ ಘಟನೆ ನಡೆದಿದೆ.ರಷ್ಯಾದ ಪ್ರಜೆ ಡಿಮಿಟ್ರಿ ಎಲ್ವೊವ್‌ (33) ತನ್ನ ಸಂಗಾತಿ ಐರಿನಾ ರುಡೆಮ್ಕೊ (28) ಜೊತೆಗೆ ಉತ್ತರ ಗೋವಾದಲ್ಲಿ ವಿಹಾರಕ್ಕೆ ಬಂದಿದ್ದರು. ಅವರು ಮುಂಜಾನೆ 5 ಗಂಟೆ ಸುಮಾರಿಗೆ ಮೊರ್ಜಿಮ್‌ ಬೀಚ್‌ನಲ್ಲಿ ನೀರಿನಲ್ಲಿ ಮುಳುಗಿದ್ದಾರೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಸಮುದ್ರದ ಸುಳಿಯಿಂದಾಗಿ ನೀರಿಗಿಳಿದಿದ್ದ ಇಬ್ಬರು ಪ್ರಾಣ ರಕ್ಷಣೆಗಾಗಿ ಕೂಗಿಕೊಂಡಾಗ ಸ್ಥಳೀಯರು ರಷ್ಯನ್‌ ಮಹಿಳೆಯನ್ನು ರಕ್ಷಿಸಿದ್ದಾರೆ ಆದರೆ ಎಲ್ವೊವ್‌ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇಬ್ಬರೂ ನೀರಿಗೆ ಎಳೆದರು ಎಂದು ಅವರು ಹೇಳಿದರು.ನಂತರ ಮತದೇಹವನ್ನು ಜೀವರಕ್ಷಕರು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +╰┈➤ \ No newline at end of file diff --git a/eesanje/url_47_16_5.txt b/eesanje/url_47_16_5.txt new file mode 100644 index 0000000000000000000000000000000000000000..e3970117d295622e68208668d402126ed35dbc3b --- /dev/null +++ b/eesanje/url_47_16_5.txt @@ -0,0 +1,9 @@ + : ಕಾಂಗ್ರೆಸ್‌‍-ಆಮ್‌ ಆದಿ ಪಕ್ಷದ ನಡುವೆ ಮೈತ್ರಿ +- +ನವದೆಹಲಿ,ಸೆ.9-ಶತಾಯಗತಾಯ ರಾಜ್ಯದಲ್ಲಿ ಈ ಬಾರಿ ಅಧಿಕಾರ ಗದ್ದುಗೆ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಇಂಡಿಯಾ ಕೂಟದ ಮಿತ್ರಪಕ್ಷಗಳಾದ ಕಾಂಗ್ರೆಸ್‌‍ ಮತ್ತು ಆಮ್‌ ಆದಿ ಪಕ್ಷದ ನಡುವೆ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಏರ್ಪಟ್ಟಿದೆ. ಸೀಟು ಹಂಚಿಕೆ ವಿಚಾರವಾಗಿ ನಡೆದ ದೀರ್ಘ ಮಾತುಕತೆ ಅಂತ್ಯವಾಗಿದ್ದು, ಹೊಂದಾಣಿಕೆ ಮಾಡಿಕೊಳ್ಳಲಾಗಿದೆ.ಕಾಂಗ್ರೆಸ್‌‍ ಮತ್ತು ಆಪ್‌ ನಡುವಿನ ಸೀಟು ಹಂಚಿಕೆಯು ಮುಗಿದಿದೆ. ಆಪ್‌ ಐದು ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. +ಸೀಟು ಹಂಚಿಕೆ ವಿಚಾರವಾಗಿ ಆಪ್‌ ಪಟ್ಟು ಸಡಿಲಿಸದ ಕಾರಣ, ಎರಡೂ ಪಕ್ಷಗಳ ನಡುವೆ ಹಗ್ಗಜಗ್ಗಾಟ ನಡೆದಿತ್ತು. ವಿಧಾನಸಭೆಯ 90 ಸ್ಥಾನಗಳ ಪೈಕಿ ಆಪ್‌ 7ರಿಂದ 10 ಸ್ಥಾನಗಳಲ್ಲಿ ಸ್ಪರ್ಧಿಸುವ ಬಗ್ಗೆ ಇಂಗಿತ ವ್ಯಕ್ತಪಡಿಸಿತ್ತು. ಕಾಂಗ್ರೆಸ್‌‍ ಇದಕ್ಕೆ ಒಪ್ಪದ ಕಾರಣ, ಮೈತ್ರಿ ಸಂಭವಿಸುವ ಬಗ್ಗೆ ಅನುಮಾನ ಮೂಡಿತ್ತು. +ಕಾಂಗ್ರೆಸ್‌‍ನ ದೀಪಕ್‌ ಬಬಾರಿಯಾ ಮತ್ತು ಆಪ್‌ ನಾಯಕ ರಾಘವ್‌ ಚಡ್ಡಾ ನಡುವೆ ನಿನ್ನೆ ನಡೆದ ಮಾತುಕತೆ ಸಕಾರಾತಕ ದಿಕ್ಕಿನಲ್ಲಿ ಸಾಗಿದೆ. ಸೋಮವಾರ ಮೈತ್ರಿಯಾದ ಬಗ್ಗೆ ಅಂತಿಮ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ ಎಂದು ಆಪ್‌ ಮೂಲಗಳು ತಿಳಿಸಿವೆ. +╰┈➤ +ಇದಕ್ಕೂ ಮುನ್ನ ಮಾತನಾಡಿದ್ದ ಆಪ್‌ ರಾಜ್ಯಸಭಾ ಸಂಸದ ರಾಘವ್‌ ಚಡ್ಡಾ, ಕಾಂಗ್ರೆಸ್‌‍ ಮತ್ತು ನಮ ಪಕ್ಷ ವೈಯಕ್ತಿಕ ಆಕಾಂಕ್ಷೆಗಳನ್ನು ಬದಿಗಿಟ್ಟು ಹರಿಯಾಣ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿವೆ. ಮೈತ್ರಿ ಬಗ್ಗೆ ಒಮತ ಮೂಡದಿದ್ದರೂ, ಮಾತುಕತೆಗಳು ಸಕಾರಾತಕ ದಿಕ್ಕಿನಲ್ಲಿ ಸಾಗಿವೆ. ಉತ್ತಮ ಫಲಿತಾಂಶ ಬರಲಿದೆ ಎಂದಿದ್ದರು. +ಹರಿಯಾಣದ 90 ಸದಸ್ಯ ಬಲದ ವಿಧಾನಸಭೆಗೆ ಅಕ್ಟೋಬರ್‌ 5ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್‌ 12 ಕೊನೆಯ ದಿನ. ಅಕ್ಟೋಬರ್‌ 8ರಂದು ಫಲಿತಾಂಶ ಪ್ರಕಟವಾಗಲಿದೆ. +ಮೈತ್ರಿ ಅಂತಿಮವಾಗಿಲ್ಲ :ಆಮ್‌ ಆದಿ ಪಕ್ಷದ ಇನ್ನೊಂದು ಮಾಹಿತಿಯ ಪ್ರಕಾರ, ಕಾಂಗ್ರೆಸ್‌‍ ಜೊತೆಗಿನ ಮೈತ್ರಿ ಯಾವುದೇ ಅಂತಿಮವಾಗಿಲ್ಲ. ಈ ಬಗ್ಗೆ ಮತ್ತಷ್ಟು ಮಾತುಕತೆಗಳು ನಡೆಯಬೇಕಿದೆ ಎಂದು ತಿಳಿದುಬಂದಿದೆ. ಮಾತುಕತೆಗಳು ಜಾರಿಯಲ್ಲಿವೆ. 5 ಸ್ಥಾನಗಳಲ್ಲಿ ಆಪ್‌ ಸ್ಪರ್ಧಿಸಲು ಒಪ್ಪಿಕೊಂಡಿದೆ ಎಂದು ಅಧಿಕೃತಪಡಿಸಿಲ್ಲ ಎಂದು ತಿಳಿಸಿದೆ. \ No newline at end of file diff --git a/eesanje/url_47_16_6.txt b/eesanje/url_47_16_6.txt new file mode 100644 index 0000000000000000000000000000000000000000..80400a10a167270d4aaed348d13c9eef0efff178 --- /dev/null +++ b/eesanje/url_47_16_6.txt @@ -0,0 +1,6 @@ +ಒಲಿಂಪಿಕ್‌ ಕೌನ್ಸಲರ್ ಆಫ್‌ ಏಷ್ಯಾದ ಅಧ್ಯಕ್ಷರಾಗಿ ರಣದೀರ್‌ ಸಿಂಗ್‌ ಆಯ್ಕೆ + +ನವದೆಹಲಿ, ಸೆ 8– ಪ್ರಪ್ರಥಮ ಭಾರಿಗೆ ಭಾರತದ ಹಿರಿಯ ಕ್ರೀಡಾ ನಿರ್ವಾಹಕ ರಣಧೀರ್‌ ಸಿಂಗ್‌ ಅವರು ಒಲಿಂಪಿಕ್‌ ಕೌನ್ಸಿಲ್‌ ಆಫ್‌ ಏಷ್ಯಾದ (ಒಸಿಎ) ಅಧ್ಯಕ್ಷರಾಗಿ ಆಯ್ಕೆಯಾದ್ದಾರೆ. ಇಲ್ಲಿ ನಡೆದ ಕಾಂಟಿನೆಂಟಲ್‌ ಬಾಡ್‌ನ 44 ನೇ ಸಾಮಾನ್ಯ ಸಭೆಯಲ್ಲಿ ರಣಧೀರ್‌ ಸಿಂಗ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸ್ಥಾನಕ್ಕೇರಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. +ಶೂಟಿಂಗ್‌ನಲ್ಲಿ ಐದು ಬಾರಿ ಒಲಿಂಪಿಕ್‌ನಲ್ಲಿ ಭಾಗವಹಿದ್ದ ರಣಧೀರ್‌ ಒಸಿಎ ಅಧ್ಯಕ್ಷ ಸ್ಥಾನಕ್ಕೆ ಏಕೈಕ ಅರ್ಹ ಅಭ್ಯರ್ಥಿಯಾಗಿದ್ದರು. ಅವರ ಅಧಿಕಾರಾವಧಿಯು 2024 ರಿಂದ 2028 ರವರೆಗೆ ಇರುತ್ತದೆ ಎಂದು ವರದಿ ತಿಳಿಸಿದೆ. +ಕುವೈತ್‌ನ ಶೇಖ್‌ ಅಹ್ಮದ್‌ ಅಲ್‌‍-ಫಹಾದ್‌ ಅಲ್‌‍-ಸಬಾಹ್‌ ಅವರನ್ನು ಸ್ಥಾನವನ್ನು ಇವರು ತುಂಬಲಿದ್ದಾರೆ. ಭಾರತೀಯ ಮತ್ತು ಏಷ್ಯನ್‌ ಕ್ರೀಡಾ ಸಂಸ್ಥೆಗಳಲ್ಲಿ ವಿಭಿನ್ನ ಆಡಳಿತಾತ್ಮಕ ಹುದ್ದೆಗಳನ್ನು ಹೊಂದಿದ್ದ ರಣಧೀರ್‌ ಅವರನ್ನು ಕ್ರೀಡಾ ಸಚಿವ ಮನ್ಸುಖ್‌ ಮಾಂಡವಿಯಾ ಮತ್ತು ಏಷ್ಯಾದ ಎಲ್ಲಾ 45 ದೇಶಗಳ ಉನ್ನತ ಕ್ರೀಡಾ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಅಧ್ಯಕ್ಷರಾಗಿ ನೇಮಿಸಲಾಯಿತು. +ಪಂಜಾಬ್‌ನ ಪಟಿಯಾಲ ಮೂಲದ ಇವರು ಕ್ರೀಡಾ ಪಟುಗಳ ಕುಟುಂಬಕ್ಕೆ ಸೇರಿದವರು.ಅವರ ಚಿಕ್ಕಪ್ಪ, ಮಹಾರಾಜ ಯಾದವೀಂದ್ರ ಸಿಂಗ್‌ ಭಾರತಕ್ಕಾಗಿ ಟೆಸ್ಟ್‌ ಕ್ರಿಕೆಟ್‌ ಆಡಿದರು ಅವರ ತಂದೆ ಭಲೀಂದ್ರ ಸಿಂಗ್‌ ಪ್ರಥಮ ದರ್ಜೆ ಕ್ರಿಕೆಟಿಗರು, 1947 ಮತ್ತು 1992 ರ ನಡುವೆ ಸದಸ್ಯರಾಗಿದ್ದರು. \ No newline at end of file diff --git a/eesanje/url_47_16_7.txt b/eesanje/url_47_16_7.txt new file mode 100644 index 0000000000000000000000000000000000000000..80a41633d38ff76120a2aa50228dab0da6c8f9d5 --- /dev/null +++ b/eesanje/url_47_16_7.txt @@ -0,0 +1,15 @@ +ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, 7 ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ +6 , , +ಇಂಫಾಲ(ಮಣಿಪುರ),ಸೆ.8-ಬೂದಿಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಏಳು ಜನರು ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.ಸ್ಥಳೀಯರು ಸೆಂಟ್ರಲ್‌ ಫೋರ್ಸ್‌ನ ಕಾರುಗಳನ್ನು ನಿಲ್ಲಿಸಲು ಆಗ್ರಹಿಸಿದ್ದರಿಂದ ತೌಬಲ್‌ನಲ್ಲಿ ಉದ್ವಿಗ್ನತೆ ಉಂಟಾಗಿದೆ. ಶಂಕಿತ ಕುಕಿ ದಂಗೆಕೋರರು ರಾಜ್ಯದ ರಾಜಧಾನಿ ಇಂಫಾಲ್‌ನಿಂದ 229 ಕಿಮೀ ದೂರದಲ್ಲಿರುವ ಜಿಲ್ಲೆಯ ನುಂಗ್‌ಚಾಪ್ಪಿ ಗ್ರಾಮದ ಮೇಲೆ ದಾಳಿ ಮಾಡಿರುವುದಲ್ಲದೆ, ಯುರೆಂಬಮ್‌ ಕುಲೇಂದ್ರ ಸಿಂಘಾ ಎಂಬವರನ್ನು ಕೊಂದು ಹಾಕಿದ್ದಾರೆ. ಇದರಿಂದ ಕಳೆದ ಒಂದು ವಾರದಲ್ಲಿ ಆರು ಜನರು ಬಲಿಯಾದಂತಾಗಿದೆ. +ಶಂಕಿತ ಸಶಸ್ತ್ರಧಾರಿಗಳು ಮಣಿಪುರದ ಮೊದಲ ಮುಖ್ಯಮಂತ್ರಿ ಮೈರೆಂಬಮ್‌ ಕೊಯಿರೆಂಗ್‌ ಮನೆ ಮೇಲೆ ರಾಕೆಟ್‌ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿ, ಆರು ಜನರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಪ್ರತಿ ದಾಳಿಯಲ್ಲಿ ಚುರಾಚಂದಪುರ್‌ ಜಿಲ್ಲೆಯಲ್ಲಿ ಮೂರು ಬಂಕರ್‌ಗಳನ್ನು ನಾಶಪಡಿಸಿದ್ದಾರೆ. ಜತೆಗೆ ಮಿಲಿಟರಿ ಹೆಲಿಕಾಪ್ಟರ್‌ ಮೂಲಕ ಆಗಸದಿಂದ ಗಸ್ತು ನಡೆಸಲಾಗಿದೆ. +ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ, ಈ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಎರಡು ಸಶಸ್ತ್ರ ಗುಂಪುಗಳ ನಡುವೆ ಗುಂಡಿನ ಕಾಳಗ ನಡೆದಿದ್ದು, ನಿದ್ದೆಯಲ್ಲಿದ್ದಾಗ ಒಬ್ಬ ವೃದ್ಧನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ನುಂಚಾಪಿ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಉಗ್ರಗಾಮಿಗಳು ಭಾರೀ ಗುಂಡಿನ ಚಕಮಕಿಯಲ್ಲಿ ತೊಡಗಿದ್ದು, ಮೂವರು ಶಂಕಿತ ಕುಕಿ ಉಗ್ರಗಾಮಿಗಳು ಸಾವನ್ನಪ್ಪಿದ್ದಾರೆ. +ಸಾರ್ವಜನಿಕ ತುರ್ತು ಪರಿಸ್ಥಿತಿ ಘೋಷಣೆ:ಈ ಘಟನೆಗಳ ಬೆನ್ನಲ್ಲೇ ಮಣಿಪುರ ಸಮಗ್ರತೆಯ ಸಮನ್ವಯ ಸಮಿತಿ ವಕ್ತಾರ ಖುರೈಜಮ್‌ ಅಥೌಬಾ ಅವರು ಅನಿರ್ದಿಷ್ಟಾವಧಿಯ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಕುಕಿ ಸಮುದಾಯದ ಆಕ್ರಮಣ ಹೆಚ್ಚಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. +ಕುಕಿ ಆಕ್ರಮಣ ಉಲ್ಬಣಗೊಂಡಿದ್ದು, ಮತ್ತೆ ಎರಡು ಪಟ್ಟು ಹೆಚ್ಚಾಗಿದೆ. ಕಳೆದ ಕೆಲವು ದಿನಗಳಲ್ಲಿ ಇಂಫಾಲ್‌ ಪಶ್ಚಿಮದಲ್ಲಿ ಡ್ರೋನ್‌ ಮೂಲಕ ಬಾಂಬ್‌ ದಾಳಿ ನಡೆಸಿದ ಹಲವು ಘಟನೆಗಳು ನಡೆದಿವೆ. ಇದರಲ್ಲಿ ಕೆಲ ಜನರು ಅಸುನೀಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಇಂದು ಮತ್ತೆ ಎರಡು ಕ್ಷಿಪಣಿ ದಾಳಿಗಳು ನಡೆದಿವೆ. +ಸುಮಾರು 7 ಕಿಲೋಮೀಟರ್‌ ದೂರದಿಂದ ಗುಂಡು ಹಾರಿಸಲಾಗಿದ್ದು, ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಚಿನ್‌-ಕುಕಿ ನಾರ್ಕೋ ಭಯೋತ್ಪಾದಕ ಗುಂಪುಗಳು ಆಶ್ರಯ ಪಡೆದಿವೆ. ಶುಕ್ರವಾರದ ದಾಳಿಯನ್ನು ಇವರು ನಡೆಸಿದ ಮಾರಣಾಂತಿಕ ದಾಳಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ ಎಂದು ಅಥೌಬಾ ತಿಳಿಸಿದ್ದಾರೆ. +ಕುಕಿ ಆಕ್ರಮಣದಲ್ಲಿ ಹೆಚ್ಚಳವಾಗಿದ್ದು, ಕಳೆದೆರಡು ದಿನಗಳಲ್ಲಿ ಡ್ರೋನ್‌ ಬಾಂಬ್‌ ದಾಳಿಯ ಹಲವು ಘಟನೆಗಳು ನಡೆದಿವೆ. ಶುಕ್ರವಾರ ಎರಡು ರಾಕೆಟ್‌ ದಾಳಿಗಳು ನಡೆದ್ದು, ಮಣಿಪುರದ ಮೊದಲ ಸಿಎಂ ಮೈರೆಂಬಮ್‌ ಕೊಯಿರೆಂಗ್‌ ಸಿಂಗ್‌ ಅವರ ತವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಇದರಲ್ಲಿ ಅವರ ಪ್ರತಿಮೆ ಮತ್ತು ಆಸ್ತಿ ಧ್ವಂಸಗೊಂಡಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ. +ಇದು ಸಾಮಾನ್ಯ ದಾಳಿಯಲ್ಲ, ಕಾರಣ ರಾಕೆಟ್‌ನ್ನು ದೂರದ ಬೆಟ್ಟದಿಂದ ಉಡಾಯಿಸಲಾಗಿದೆ. ಕುಕಿ ಸಶಸ್ತ್ರ ಗುಂಪುಗಳು ಯಾವುದೇ ರೀತಿಯ ಆಕ್ರಮಣವನ್ನು ಮಾಡದಂತೆ ತಡೆಯಲು ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ತಪ್ಪಲಿನ ಪ್ರದೇಶಗಳಲ್ಲಿರುವ ಇವರು ಅಸಹಾಯಕರಾಗಿದ್ದಾರೆ, ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ. +ಡ್ರೋನ್‌ಗಳು ಕಂಡು ಬಂದ ಬಳಿಕ ಮಣಿಪುರದ ಬಿಷ್ಣುಪುರ ಹಾಗೂ ಇಂಫಾಲ್‌ ಪೂರ್ವ ಜಿಲ್ಲೆಗಳ ಜನರು ಶುಕ್ರವಾರ ಮನೆಗಳ ಲೈಟ್‌ಗಳನ್ನು ಆಫ್‌ ಮಾಡಿ ರಕ್ಷಣೆ ಪಡೆದಿದ್ದರು. ಫೆರಿಫೆರಲ್‌ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿವೆ. ಸಶಸ್ತ್ರಧಾರಿಗಳು ಬಾಂಬ್‌ ದಾಳಿಗೆ ಡ್ರೋನ್‌ಗಳನ್ನು ಬಳಸಲು ಆರಂಭಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ. +ಮೊದಲ ಘಟನೆಯಲ್ಲಿ ಇಂಫಾಲ ಪಶ್ಚಿಮ ಜಿಲ್ಲೆಯ ಕೌಟ್ರುಕ್‌ ಗ್ರಾಮದ ಮೇಲೆ ಸೆಪ್ಟೆಂಬರ್‌ 1ರಂದು ಡ್ರೋನ್‌ ದಾಳಿ ನಡೆದಿತ್ತು. ಇದಾದ ಬಳಿಕ ಬಂದೂಕಿನ ಮೂಲಕವೂ ದಾಳಿ ನಡೆಸಿ ಇಬ್ಬರನ್ನು ಕೊಲ್ಲಲಾಗಿದ್ದರೆ, 9 ಜನರು ಇದರಲ್ಲಿ ಗಾಯಗೊಂಡಿದ್ದರು. ಮರುದಿನ ಸೆಂಜಮ್‌ ಚಿರಾಜ್‌ನಲ್ಲಿ ಇನ್ನೊಂದು ಡ್ರೋನ್‌ ದಾಳಿ ನಡೆದಿತ್ತು. ಮೂರು ಕಿಲೋಮೀಟರ್‌ ದೂರದಲ್ಲಿ ನಡೆದ ಈ ದಾಳಿಯಲ್ಲಿ ಮೂವರು ಗಾಯಗೊಂಡಿದ್ದರು. +ಸಿಎಂ ರಾಜ್ಯಪಾಲರ ಭೇಟಿ:ರಾಜ್ಯದಲ್ಲಿನ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌ ಅವರು ರಾಜ್ಯಪಾಲ ಎಲ್‌.ಆಚಾರ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಎನ್‌.ಬಿರೇನ್‌ ಸಿಂಗ್‌ ಅವರ ರಾಜೀನಾಮೆ ಬಗ್ಗೆ ಊಹಾಪೋಹಗಳ ನಡುವೆ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. +ಈ ಕುರಿತು ಮಾತನಾಡಿದ ಬಿರೇನ್‌ ಸಿಂಗ್‌, ರಾಜ್ಯಪಾಲರು ಇಂಫಾಲ್‌ಗೆ ಹಿಂದಿರುಗಿದ ಬಳಿಕ ರಾಜ್ಯದ ಪರಿಸ್ಥಿತಿಯನ್ನು ತಿಳಿಸಲು ಹೋಗಿದ್ದೆ. ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ವಿದೇಶಿ ಅಂಶಗಳನ್ನು ಎದುರಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಅಂತಹ ಅಂಶಗಳ ವಿರುದ್ಧ ಹೆಚ್ಚು ಆಕ್ರಮಣಕಾರಿ ನಿಲುವು ತೆಗೆದುಕೊಳ್ಳಲು ರಾಜ್ಯ ಸರ್ಕಾರ ಬಯಸಿದೆ ಎಂದು ತಿಳಿಸಿದರು. +ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಸಂಬಂಧಿಸಿದಂತೆ ಸಿಎಂ ಬಿರೇನ್‌ ಸಿಂಗ್‌ ರಾಜೀನಾಮೆಯ ಊಹಾಪೋಹಗಳ ಮಧ್ಯೆ, ಬಿಜೆಪಿಯ ಉನ್ನತ ಮೂಲಗಳು ಅವರ ಬೆಂಬಲಕ್ಕೆ ನಿಂತಿವೆ. ಬಿರೇನ್‌ ಸಿಂಗ್‌ ಸಿಎಂ ಆಗಿ ಮುಂದುವರೆಯಲಿದ್ದಾರೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ತಿಳಿಸಿದೆ. \ No newline at end of file diff --git a/eesanje/url_47_16_8.txt b/eesanje/url_47_16_8.txt new file mode 100644 index 0000000000000000000000000000000000000000..1cbdb526b57f0d87d096cb457f599caaaeec8a38 --- /dev/null +++ b/eesanje/url_47_16_8.txt @@ -0,0 +1,7 @@ +ಲಖನೌ ಬಹುಮಹಡಿ ಕಟ್ಟಡ ಕುಸಿತ ದುರಂತ : ಮೃತರ ಸಂಖ್ಯೆ 8ಕ್ಕೆ ಏರಿಕೆ +6 , 3- +ಲಖನೌ,ಸೆ.8-ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ಈ ನಡುವೆ ಘಟನೆ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸ್ಥಳದಲ್ಲಿ ಇನ್ನೂ ಐವರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗಿದ್ದು, ಕಟ್ಟಡದ ಬಳಿ ನಿಂತಿದ್ದ ಟ್ರಕ್‌ಗೂ ಹಾನಿಯಾಗಿದೆ. ಕಟ್ಟಡ ಕುಸಿದು ಬಿದ್ದಿದ್ದರಿಂದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿತ್ತು. ಸದ್ಯ ಪೊಲೀಸ್‌‍ ತಂಡ ಹಾಗೂ ಇತರೆ ರಕ್ಷಣಾ ಪಡೆಗಳು ಸ್ಥಳಕ್ಕೆ ಆಗಮಿಸಿದ್ದು ಕಟ್ಟಡದ ಅವಶೇಷಗಳನ್ನು ತೆಗೆಯುವಲ್ಲಿ ನಿರತರಾಗಿದ್ದಾರೆ. +ಮುಖ್ಯಮಂತ್ರಿಗಳು ಸ್ಥಳದ ಪರಿಸ್ಥಿತಿ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ ಎಂದು ಎಡಿಜಿ ಅಮಿತಾಬ್‌ ಯಶ್‌ ಅವರು ಮಾಹಿತಿ ನೀಡಿದ್ದಾರೆ. +ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. +ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಂತಾಪ ಸೂಚಿಸಿದ್ದು, ಮ್ಯಾಜಿಸ್ಟ್ರೇಟ್‌ ಜೊತೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಕರೆ ಮಾಡಿ ಎಲ್ಲಾ ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಡೆಸುತ್ತಿದೆ. ಸಂತ್ರಸ್ತರಿಗೆ ಸಾಧ್ಯವಾಗುವ ಎಲ್ಲಾ ಸಹಾಯವನ್ನು ಮಾಡುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ. \ No newline at end of file diff --git a/eesanje/url_47_16_9.txt b/eesanje/url_47_16_9.txt new file mode 100644 index 0000000000000000000000000000000000000000..393ef3b8c89f8ecc2cbfff701fb9b4f92d096d2d --- /dev/null +++ b/eesanje/url_47_16_9.txt @@ -0,0 +1,10 @@ +ಅಗ್ನಿಪತ್ ಯೋಜನೆಯಲ್ಲಿ ಬದಲಾವಣೆ ತರಲು ಮುಂದಾದ ಕೇಂದ್ರ ಸರ್ಕಾರ + +ನವದೆಹಲಿ,ಸೆ.6-ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳೆ ಉತ್ತರ ಭಾರತದ ರಾಜ್ಯಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ಅಗ್ನಿಪಥ್ ಯೋಜನೆಯಲ್ಲಿ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಗ್ನಿವೀರರ ಸಂಖ್ಯೆ, ಸಂಬಳ ಸೇರಿ ಮತ್ತಿತರ ನಿಯಮಗಳನ್ನು ಪರಿಷ್ಕರಿಸಲಿದೆ ಎಂದು ತಿಳಿದುಬಂದಿದೆ. +ಅಗ್ನಿಪಥ್ ಯೋಜನೆಯ ಪ್ರಸ್ತುತ ನಿಯಮಗಳ ಪ್ರಕಾರ, 4 ವರ್ಷಗಳ ತರಬೇತಿಯ ಬಳಿಕ ಶೇಕಡಾ 75 ಅಗ್ನಿವೀರರು ನಿವೃತ್ತಿ ಹೊಂದಬೇಕು. 25 ಪ್ರತಿಶತದಷ್ಟು ಯುವಕರನ್ನು ಸೇನೆಗೆ ಆಯ್ಕೆಯಾಗುತ್ತಾರೆ. ಈ ನಿಯಮಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. +ಜೊತೆಗೆ ಎನ್ಡಿಎ ಮಿತ್ರಪಕ್ಷಗಳು ಸಹ ಅಗ್ನಿಪಥ್ ನಿಯಮಗಳನ್ನು ಮರುಪರಿಶೀಲಿಸಲು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಡುವ ಸಾಧ್ಯತೆ ಇದೆ. 4 ವರ್ಷಗಳ ಅವಧಿಯ ಬಳಿಕ ಅಗ್ನಿವೀರರು ನಿವೃತ್ತಿ ಮತ್ತು ಸೇನೆಗೆ ಸೇರುವವರ ಸಂಖ್ಯೆಯನ್ನು ಶೇಕಡಾ 50:50ರಷ್ಟು ಆಗಲಿದೆ. +ಈಗಿರುವ 21 ವರ್ಷ ವಯೋಮಿತಿ ಬದಲಿಗೆ 23 ವರ್ಷಕ್ಕೆ ಅರ್ಹತೆ ಹೆಚ್ಚಳವಾಗಲಿದೆ ಎಂದು ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೇತನದಲ್ಲೂ ಬದಲಾವಣೆ ತರುವ ಯೋಜನೆ ಇದೆ ಎಂದರು. +ಸೇನಾ ಬಲ ಕುಗ್ಗುವ ಸಾಧ್ಯತೆ:ಆಂತರಿಕ ಸಮೀಕ್ಷೆಗಳನ್ನು ನಡೆಸಿರುವ ಸೇನೆಯು, ಅಗ್ನಿಪಥ್ ಯೋಜನೆಯಲ್ಲಿ ಬದಲಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕೇಂದ್ರಕ್ಕೆ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಿದೆ. ಅಗ್ನಿವೀರರು ಶೇ.25ರಷ್ಟು ಮಾತ್ರ ಸೇನೆ ಸೇರುವುದರಿಂದ ಅದರ ಬಲವೂ ಕುಗ್ಗುವ ಸಾಧ್ಯತೆ ಇದೆ. +ಇದನ್ನು ತಪ್ಪಿಸಲು ಸೇನೆಗೆ ಆಯ್ಕೆಯಾಗುವ ಯುವಕರ ಸಂಖ್ಯೆಯನ್ನು ದುಪ್ಪಟ್ಟು ಮಾಡಲು ಶಿಫಾರಸು ಮಾಡಲಾಗಿದೆ. 4 ವರ್ಷ ಕಠಿಣ ತರಬೇತಿ ಪಡೆದ ಸೈನಿಕರ ಸಾಮರ್ಥ್ಯವನ್ನು ಸೇನೆ ಬಳಸಿಕೊಳ್ಳಬೇಕು ಎಂದು ನಿವೃತ್ತ ನೌಕಾಪಡೆ ಅಧಿಕಾರಿಯೊಬ್ಬರು ತಿಳಿಸಿದರು. +2022 ರ ಜೂನ್ನಲ್ಲಿ ಕೇಂದ್ರ ಸರ್ಕಾರವು ಮೂರು ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯನ್ನು ಜಾರಿಗೆ ತಂದಿತು. 17ರಿಂದ 21 ವರ್ಷದೊಳಗಿನ ಯುವಕ-ಯುವತಿಯರು ಮಾತ್ರ ಅಗ್ನಿವೀರರಾಗಿ ಕರ್ತವ್ಯ ನಿರ್ವಹಿಸಲು ಅರ್ಹರು ಎಂದು ಕೇಂದ್ರ ಹೇಳಿದೆ.ನಾಲ್ಕು ವರ್ಷ ಪೂರ್ಣಗೊಂಡ ನಂತರ ಸೇವೆಯಿಂದ ನಿವೃತ್ತಿಯಾಗುವ ಯುವಕರಿಗೆ ಸಂಬಳ ಮತ್ತು ಮೊತ್ತವನ್ನು ನೀಡಲಾಗುತ್ತಿದೆ. +ನಿವೃತ್ತಿ ಬಳಿಕ ಯಾವುದೇ ಪಿಂಚಣಿ ಸೌಲಭ್ಯ ಸಿಗುವುದಿಲ್ಲ. ಇದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿತ್ತು. ಬಳಿಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗ್ನಿವೀರರಿಗೆ ಹಲವು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ. \ No newline at end of file diff --git a/eesanje/url_47_170_1.txt b/eesanje/url_47_170_1.txt new file mode 100644 index 0000000000000000000000000000000000000000..3e63e9cca6414d607a6a77994298bf5c35e1896b --- /dev/null +++ b/eesanje/url_47_170_1.txt @@ -0,0 +1,5 @@ +ಹಿಮಪಾತದಿಂದಾಗಿ ಕಾಶ್ಮೀರದಿಂದ ವಿಮಾನ ಸಂಚಾರ ಸ್ಥಗಿತ +ಶ್ರೀನಗರ,ಫೆ 4: ಕಾಶ್ಮೀರ ಕಣಿವೆಯಲ್ಲಿ ಹಿಮಪಾತದಿಂದಾಗಿ ದೇಶದ ಇತರ ಭಾಗಗಳ ನಡುವಿನ ವಿಮಾನ ಸಂಚಾರವನ್ನು ಇಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ನಾಲ್ಕು ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, ಹಿಮಪಾತದಿಂದಾಗಿ ಉಳಿದ ನಿಗದಿತ ವಿಮಾನಗಳನ್ನು ಸ್ಟ್ಯಾಂಡ್‍ಬೈನಲ್ಲಿ ಇರಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ನಿನ್ನೆ ತಡರಾತ್ರಿ ಆರಂಭವಾದ ಹಿಮಪಾತವು ಮುಂಜಾನೆ ಸ್ವಲ್ಪಮಟ್ಟಿಗೆ ನಿಂತಿದೆ ಆದರೆ ರನ್‍ವೇ ಮೇಲಿರುವ ಹಿಮವನ್ನು ತೆರವುಗೊಳಿಸಲಾಗುತ್ತಿತ್ತು ಆದರೆ ಮತ್ತೆ ಹಿಮ ಸುರಿಯುತ್ತಿದೆ ಇದರಿಂದಾಗಿ ಯಾವುದೇ ವಿಮಾನಗಳು ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. +ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ +ಕಾಶ್ಮೀರದ ಬಯಲು ಪ್ರದೇಶಗಳು ಮಧ್ಯಮ ಮತ್ತು ಕಣಿವೆಯ ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತದ ವರದಿಯಾಗಿದೆ.ಇನ್ನು ರಸ್ತೆಗಳು ಸಂಚಾರಕ್ಕೆ ಅಡಚಣೆ ಯಾಗಬರದೆಂದು ಮುಂಜಾನೆಯಿಂದ ಹಿಮ ತೆರವು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಜಾರುವ ರಸ್ತೆಗಳ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. \ No newline at end of file diff --git a/eesanje/url_47_170_10.txt b/eesanje/url_47_170_10.txt new file mode 100644 index 0000000000000000000000000000000000000000..8fb2dd9c3ace5e1332efea4cc13ae4350b1212c0 --- /dev/null +++ b/eesanje/url_47_170_10.txt @@ -0,0 +1,6 @@ +ಟೈರಿಗೆ ಸಿಲುಕಿದ ಬೈಕ್ ಸವಾರನನ್ನು 3 ಕಿಮೀ ಎಳೆದೊಯ್ದ ಇನ್ನೋವಾ +ಲಕ್ನೋ,ಫೆ.3- ದಂಪತಿ ಮತ್ತು ಅವರ ಐದು ವರ್ಷದ ಮಗುವನ್ನು ಹೊತ್ತೊಯ್ಯುತ್ತಿದ್ದ ಮೋಟಾರ್ ಸೈಕಲ್ ಗೆ ಎಸ್‍ಯುವಿಯೊಂದರ ಚಾಲಕ ಡಿಕ್ಕಿ ಹೊಡೆದು, ಫೆಂಡರ್ ಮತ್ತು ಚಕ್ರದ ನಡುವೆ ಸಿಲುಕಿಕೊಂಡಿದ್ದ ಬೈಕ್ ಸವಾರನನ್ನು ಮೂರು ಕಿ.ಮಿವರೆಗೆ ಎಳೆದೊಯ್ದಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಪತ್ನಿ ಮತ್ತು ಮಗು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ವೀರೇಂದ್ರ ಕುಮಾರ್ ಅವರು ಪತ್ನಿ ಮತ್ತು ಐದು ವರ್ಷದ ಮಗನೊಂದಿಗೆ ರಾಯ್ ಬರೇಲಿಯಿಂದ ದಾಲ್ಮೌ ಪಟ್ಟಣಕ್ಕೆ ಮನೆಗೆ ತೆರಳುತ್ತಿದ್ದಾಗ ವೇಗವಾಗಿ ಬಂದ ಇನ್ನೋವಾ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಅವರ ಪತ್ನಿ ಮತ್ತು ಮಗ ಬೈಕ್‍ನಿಂದ ಹಾರಿಹೋದಾಗ, ಅಪಘಾತದ ಪರಿಣಾಮ ಎಸ್‍ಯುವಿ ಮುಂಭಾಗದ ಭಾಗಗಳು ಸುಕ್ಕುಗಟ್ಟಿದವು ಮತ್ತು ವೀರೇಂದ್ರ ಬಲ ಫೆಂಡರ್ ಮತ್ತು ಚಕ್ರದ ನಡುವೆ ಸಿಲುಕಿಕೊಂಡರು. +ಅಪಘಾತದ ನಂತರ ಚಾಲಕ ನಿಲ್ಲಿಸದೆ ವೀರೇಂದ್ರನನ್ನು ಕಾರಿನೊಂದಿಗೆ ಸುಮಾರು 3 ಕಿ.ಮೀ ಎಳೆದೊಯ್ದಿದ್ದಾನೆ ಎಂದು ಅಕಾರಿಗಳು ತಿಳಿಸಿದ್ದಾರೆ. ಕೊನೆಗೆ ಆತ ನಿಲ್ಲಿಸಿದಾಗ ದಾರಿಹೋಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. +ಹಿಂದೂ ಸನಾತನ ಧರ್ಮದ ಬಗ್ಗೆ ತಿರುಪತಿಯಲ್ಲಿ ಮಠಾಧೀಶರ ಚರ್ಚೆ +ವೀರೇಂದ್ರ, ಅವರ ಪತ್ನಿ ರೂಪಾಲ್ ಮತ್ತು ಪುತ್ರ ಅನುರಾಗ್ ಅವರನ್ನು ರಾಯ್ ಬರೇಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ವೀರೇಂದ್ರ ಮೃತಪಟ್ಟಿದ್ದು, ಅವರ ಪತ್ನಿ ಮತ್ತು ಮಗು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಲಾಲ್‍ಗಂಜ್ ಠಾಣಾಧಿಕಾರಿ ಶಿವಶಂಕರ್ ಸಿಂಗ್ ತಿಳಿಸಿದ್ದಾರೆ. \ No newline at end of file diff --git a/eesanje/url_47_170_11.txt b/eesanje/url_47_170_11.txt new file mode 100644 index 0000000000000000000000000000000000000000..8fe0abb080c99fc4ed90dbbaf664b6c97cb3d9e9 --- /dev/null +++ b/eesanje/url_47_170_11.txt @@ -0,0 +1,9 @@ +ಐಫೆಲ್ ಟವರ್‌ನಲ್ಲಿ ಯುಪಿಐ ಬಿಡುಗಡೆ ಕ್ರಮವನ್ನು ಶ್ಲಾಘಿಸಿದ ಮೋದಿ +ನವದೆಹಲಿ,ಫೆ.3- ಪ್ಯಾರಿಸ್‍ನ ಐಕಾನಿಕ್ ಐಫೆಲ್ ಟವರ್‌ನಲ್ಲಿ ಯುನಿಫೈಡ್ ಪೇಮೆಂಟ್ಸ ಇಂಟರ್‍ಫೇಸ್ (ಯುಪಿಐ) ಅನ್ನು ಔಪಚಾರಿಕವಾಗಿ ಬಿಡುಗಡೆ ಮಾಡಿರುವುದನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಯುಪಿಐ ಜಾಗತಿಕಗೊಳಿಸುವತ್ತ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. +ಇದನ್ನು ನೋಡಲು ಅದ್ಭುತವಾಗಿದೆ – ಇದು ಯುಪಿಐ ಜಾಗತಿಕವಾಗಿ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಮತ್ತು ಬಲವಾದ ಸಂಬಂಧಗಳನ್ನು ಬೆಳೆಸಲು ಇದು ಅದ್ಭುತ ಉದಾಹರಣೆಯಾಗಿದೆ ಎಂದು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. +ಯುನಿಫೈಡ್ ಪೇಮೆಂಟ್ಸ ಇಂಟರ್‍ಫೇಸ್ (ಯುಪಿಐ) ಅನ್ನು ಪ್ಯಾರಿಸ್‍ನ ಐಫೆಲ್ ಟವರ್‍ನಲ್ಲಿ ಔಪಚಾರಿಕವಾಗಿ ಪ್ರಾರಂಭಿಸಲಾಗಿದೆ ಎಂದು ಫ್ರಾನ್ಸ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ತಿಳಿಸಿದೆ ಮತ್ತು ಇದು ಪ್ರಧಾನಿ ನರೇಂದ್ರ ಮೋದಿಯವರ ಯುಪಿಐ ಅನ್ನು ಜಾಗತಿಕವಾಗಿ ತೆಗೆದುಕೊಳ್ಳುವ ದೃಷ್ಟಿ ಭಾಗವಾಗಿದೆ ಎಂದು ಹೇಳಿದೆ. ಫ್ರಾನ್ಸ್‍ನಲ್ಲಿ ನಡೆದ ಗಣರಾಜ್ಯೋತ್ಸವದ ಸ್ವಾಗತ ಸಮಾರಂಭದಲ್ಲಿ ಯುಪಿಐ ಅನ್ನು ಔಪಚಾರಿಕವಾಗಿ ಪ್ರಾರಂಭಿಸಲಾಯಿತು. +ಶಾಲಾ-ಕಾಲೇಜುಗಳ ಬಳಿ ಸಂಚಾರಿ ಪೊಲೀಸರ ವಿಶೇಷ ಕಾರ್ಯಾಚರಣೆ : 639 ಪ್ರಕರಣ ದಾಖಲು +ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ, ಫ್ರಾನ್ಸ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಯುಪಿಐ ಅನ್ನು ಗಣರಾಜ್ಯೋತ್ಸವದ ಬೃಹತ್ ಸ್ವಾಗತದಲ್ಲಿ ಐಫೆಲ್ ಟವರ್‍ನಲ್ಲಿ ಔಪಚಾರಿಕವಾಗಿ ಪ್ರಾರಂಭಿಸಲಾಯಿತು. ನರೇಂದ್ರ ಮೋದಿಜಿ ಅವರ ಘೋಷಣೆ ಮತ್ತು ಯುಪಿಐ ಅನ್ನು ಜಾಗತಿಕವಾಗಿ ತೆಗೆದುಕೊಳ್ಳುವ ದೃಷ್ಟಿಯನ್ನು ಕಾರ್ಯಗತಗೊಳಿಸುವುದು. +2023 ರಲ್ಲಿ, ಭಾರತ ಮತ್ತು ಫ್ರಾನ್ಸ್ ಅಭಿವೃದ್ಧಿ ಹೊಂದುತ್ತಿರುವ ಪರಿಸರ ವ್ಯವಸ್ಥೆಯನ್ನು ಪೋಷಿಸಲು ಮತ್ತು ತಮ್ಮ ನಾಗರಿಕರನ್ನು ಸಶಕ್ತಗೊಳಿಸಲು ಮತ್ತು ಡಿಜಿಟಲ್ ಶತಮಾನದಲ್ಲಿ ಅವರ ಸಂಪೂರ್ಣ ಭಾಗವಹಿಸುವಿಕೆಯನ್ನು ಖಚಿತಪಡಿಸುವ ಸಹಯೋಗಗಳನ್ನು ನಿರ್ಮಿಸಲು ಬದ್ಧವಾಗಿವೆ ಎಂದು ಭಾರತ-ಫ್ರಾನ್ಸ್ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. +ಮುಖ್ಯ ಚುನಾವಣಾಧಿಕಾರಿಗೆ ಜೆಡಿಎಸ್‍ನಿಂದ ದೂರು ಸಲ್ಲಿಕೆ +ಕಳೆದ ವರ್ಷ ಜುಲೈನಲ್ಲಿ ಫ್ರಾನ್ಸ್‍ಗೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಯುಪಿಐ ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ ಮತ್ತು ಇದು ಐಫೆಲ್ ಟವರ್‍ನಿಂದ ಪ್ರಾರಂಭವಾಗಲಿದೆ ಎಂದು ಘೋಷಿಸಿದರು. ಫ್ರಾನ್ಸ್‍ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. \ No newline at end of file diff --git a/eesanje/url_47_170_12.txt b/eesanje/url_47_170_12.txt new file mode 100644 index 0000000000000000000000000000000000000000..f1b2a72c1312dc08f0999946fa06efd7d0e35d8d --- /dev/null +++ b/eesanje/url_47_170_12.txt @@ -0,0 +1,6 @@ +1 ವರ್ಷದಲ್ಲಿ ತನಿಖೆ ಪ್ರಗತಿ ಕಾಣದಿದ್ದರೆ ವಶಪಡಿಸಿಕೊಂಡ ಆಸ್ತಿ ಹಿಂತಿರುಗಿಸಿ : ದೆಹಲಿ ಹೈಕೋರ್ಟ್ +ನವದೆಹಲಿ,ಫೆ.3- ಒಂದು ವರ್ಷದ ಅವಧಿಯ ತನಿಖೆಯಲ್ಲಿ ಯಾವುದೇ ಪ್ರಕ್ರಿಯೆಗಳು ನಡೆಯದಿದ್ದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಶಪಡಿಸಿಕೊಂಡ ಆಸ್ತಿಯನ್ನು ಹಿಂದಿರುಗಿಸಬೇಕು ಎಂದು ದೆಹಲಿ ಹೈಕೋರ್ಟ್ ಹೇಳಿದೆ. +ಈ ವಾರದ ಆರಂಭದಲ್ಲಿ ಹೊರಡಿಸಿದ ಆದೇಶದಲ್ಲಿ, ನ್ಯಾಯಮೂರ್ತಿ ನವೀನ್ ಚಾವ್ಲಾ ಅವರು 365 ದಿನಗಳಿಗೂ ಮೀರಿದ ವಶಪಡಿಸಿಕೊಳ್ಳುವಿಕೆಯನ್ನು ಮುಂದುವರಿಸುವುದು, ನ್ಯಾಯಾಲಯದ ಮುಂದೆ ಯಾವುದೇ ಅಪರಾಧಕ್ಕೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಗಳ ಬಾಕಿ ಇಲ್ಲದಿದ್ದಲ್ಲಿ, ಸ್ವಭಾವತಃ ಮತ್ತು ಕಾನೂನಿನ ಅಧಿಕಾರವಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳುವುದು ಸಂವಿಧಾನದ 300ಎ ವಿಧಿಯ ಉಲ್ಲಂಘನೆಯಾಗಿದೆ. +ರಾಜ್ಯಕ್ಕಾದ ಅನ್ಯಾಯ ಮರೆಮಾಚಲು ಅನಗತ್ಯ ವಿವಾದ : ಡಿ.ಕೆ.ಸುರೇಶ್ ಕಿಡಿ +ವಿವಿಧ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಒಟ್ಟು 85 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳುವುದರ ವಿರುದ್ಧ ಭೂಷಣ್ ಪವರ್ ಅಂಡ್ ಸ್ಟೀಲ್ ಲಿಮಿಟೆಡ್ ನ ರೆಸಲ್ಯೂಶನ್ ವೃತ್ತಿಪರರು ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಾಲಯದ ಈ ತೀರ್ಪು ಬಂದಿದೆ. ವಶಪಡಿಸಿಕೊಂಡ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆಗಳ ಅನುಪಸ್ಥಿತಿಯಲ್ಲಿ, ಅರ್ಜಿದಾರರಿಗೆ ಅದನ್ನು ಹಿಂದಿರುಗಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ಸೂಚಿಸಿತು. +(ಹಣ ಲಾಂಡರಿಂಗ್ ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 8(3) ರ ಪ್ರಕಾರ, ಕಾಯಿದೆಯ ಅಡಿಯಲ್ಲಿ ಯಾವುದೇ ಅಪರಾಧಕ್ಕೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಗಳಿಗೆ ಕಾರಣವಾಗದ 365 ದಿನಗಳಿಗೂ ಮೀರಿದ ಅವಧಿಯ ತನಿಖೆಯ ಸ್ವಾಭಾವಿಕ ಪರಿಣಾಮವೆಂದರೆ, ಅಂತಹ ವಶಪಡಿಸಿಕೊಳ್ಳುವಿಕೆ ವಿಫಲಗೊಳ್ಳುತ್ತದೆ ಮತ್ತು ವಶಪಡಿಸಿಕೊಂಡ ಆಸ್ತಿಯನ್ನು ಯಾರಿಂದ ವಶಪಡಿಸಿಕೊಳ್ಳಲಾಗಿದೆಯೋ ಅವರಿಗೆ ಹಿಂತಿರುಗಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. \ No newline at end of file diff --git a/eesanje/url_47_170_2.txt b/eesanje/url_47_170_2.txt new file mode 100644 index 0000000000000000000000000000000000000000..f388c36c3e9ba1d8e2d838aeddba37db56964996 --- /dev/null +++ b/eesanje/url_47_170_2.txt @@ -0,0 +1,6 @@ +ಕೋಲ್ಕತಾಗೆ ಶೀಘ್ರರೈಲು ಸಂಪರ್ಕ : ಸಿಎಂ ಮಾಣಿಕ್ ಸಹಾ +ಅಗರ್ತಲಾ, ಫೆ.4 : ಅಗರ್ತಲಾದಿಂದ ಬಾಂಗ್ಲಾದೇಶದ ಮೂಲಕ ಕೋಲ್ಕತ್ತಾಗೆ ರೈಲು ಸೇವೆಯನ್ನು ಆರಂಭವಾಗಲಿದೆ ಎಂದು ತ್ರಿಪುರದ ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ. ಅಗರ್ತಲಾ ರೈಲು ನಿಲ್ದಾಣದಲ್ಲಿ ನಡೆದ ಅಗರ್ತಲಾ-ದಿಯೋಘರ್ ನಡುವಿನ ಎಕ್ಸ್‍ಪ್ರೆಸ್ ರೈಲಿಗೆ ಹಸಿರು ನಿಶಾನೆ ಅವರು ಮಾತನಾಡಿದರು ರೈಲು ಸಂಪರ್ಕದಿಂದಾಗಿ ರಾಜ್ಯದಲ್ಲಿ ಅಬಿವೃದ್ದಿಗೆ ಮತ್ತಷ್ಟು ಉತ್ತೇಜನ ಸಿಗಲಿದೆ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ಹೇಳಿದ್ದಾರೆ. +ಅಗರ್ತಲಾದಿಂದ ಕೋಲ್ಕತ್ತಾಗೆ ಸಂಪರ್ಕ ಕಲ್ಪಿಸುವ ಉದ್ದೇಶಿತ ರೈಲು ನೆರೆ ರಾಷ್ಟ್ರವಾದ ಬಾಂಗ್ಲಾದೇಶದ ಗಂಗಾಸಾಗರ ಮೂಲಕ ಸಂಪರ್ಕವಿದ್ದು ಇದರ ಪ್ರಾಯೋಗಿಕ ಚಾಲನೆಯನ್ನು ಈಗಾಗಲೇ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಅವರು ಹೇಳಿದರು. +ಈಶಾನ್ಯ ರಾಜ್ಯಕ್ಕೆ ರಸ್ತೆ ಹೆದ್ದಾರಿ, ರೈಲ್ವೆ, ವಾಯುಮಾರ್ಗ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರು ಮತ್ತು ಅದನ್ನು ಮಾಡಿದ್ದಾರೆ, ಪ್ರಸ್ತುತ ಅಗರ್ತಲಾ ನಿಲ್ದಾಣವನ್ನು ವಿಶ್ವದರ್ಜೆಯನ್ನಾಗಿಸಲು ಕೇಂದ್ರವು 260 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಮತ್ತು ಮೂರು ರೈಲು ನಿಲ್ದಾಣಗಳಾದ ಧರ್ಮನಗರ, ಉದಯಪುರ ಮತ್ತು ಕುಮಾರ್‍ಘಾಟ್ ಅನ್ನು ಅಮೃತ್ ಭಾರತ್ ನಿಲ್ದಾಣಗಳಾಗಿ ಪರಿವರ್ತಿಸಲು 93 ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಎಂದು ಸಿಎಂ ಹೇಳಿದರು. +ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ +ಪ್ರಸ್ತುತ, ಸುಮಾರು 18 ಎಕ್ಸ್‍ಪ್ರೆಸ್ ಮತ್ತು ಸ್ಥಳೀಯ ರೈಲುಗಳು ರಾಜ್ಯದ ಜನರಿಗೆ ಸೇವೆಯನ್ನು ಒದಗಿಸುತ್ತಿವೆ, ಇದನ್ನು ನೋಡಿದರೆ ಒಂದು ಕಾಲದಲ್ಲಿ ನಂಬಲಸಾಧ್ಯವಾಗಿತ್ತು. ಎಲ್‍ಹೆಚ್‍ಬಿ ಕೋಚ್‍ಗಳೊಂದಿಗೆ ಅಗರ್ತಲಾ-ದಿಯೋಘರ್ ಎಕ್ಸ್‍ಪ್ರೆಸ್ ರೈಲನ್ನು ಪರಿವರ್ತಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಸಹಾ ಹೇಳಿದರು. \ No newline at end of file diff --git a/eesanje/url_47_170_3.txt b/eesanje/url_47_170_3.txt new file mode 100644 index 0000000000000000000000000000000000000000..b5a1b3a1a8fe7f0cebd8b11b1136300743e4a8b9 --- /dev/null +++ b/eesanje/url_47_170_3.txt @@ -0,0 +1,9 @@ +ದೆಹಲಿ ಸಿಸಿಬಿ ಪೊಲೀಸರಿಂದ ಕೇಜ್ರಿಗೆ ನೋಟಿಸ್ +ನವದೆಹಲಿ, ಫೆ.3- ನಮ್ಮ ಸರ್ಕಾರವನ್ನು ಅಸ್ಥಿರಗೊಳಿ ಸಲು ಸಂಚು ರೂಪಿಸಿರುವ ಬಿಜೆಪಿ ಆಮ್ ಆದ್ಮಿ ಪಕ್ಷದ ಏಳು ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಇವರಿಗೆ ತಲಾ 25 ಕೋಟಿ ರೂ. ಆಫರ್ ನೀಡಿದೆ ಎಂದು ಆರೋಪಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಅಪರಾಧ ವಿಭಾಗದ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. +ಕಳೆದ ವಾರ ಪತ್ರಿಕಾಗೋಷ್ಠಿಯಲ್ಲಿ ದೆಹಲಿ ಸಚಿವೆ ಅತಿಶಿ, ಬಿಜೆಪಿ ತನ್ನ ಏಳು ಶಾಸಕರಿಗೆ ಪಕ್ಷ ತೊರೆಯಲು ತಲಾ 25 ಕೋಟಿ ರೂ.ಗಳನ್ನು ನೀಡುವುದಾಗಿ ಆಫರ್ ಮಾಡಿದ್ದು, ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವುದಾಗಿ ಬೆದರಿಕೆ ಹಾಕಿದರು. ಪಕ್ಷದ ಶಾಸಕರೊಬ್ಬರನ್ನು ಸಂಪರ್ಕಿಸಿದ ವ್ಯಕ್ತಿಯ ವಾಯ್ಸ ರೆಕಾರ್ಡ್ ಲಭ್ಯವಿದ್ದು, ಅದನ್ನು ನಂತರ ತೋರಿಸಲಾಗುವುದು ಎಂದು ಆರೋಪಿಸಿದ್ದರು. +ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಕೇಜ್ರಿವಾಲ, ತಮ್ಮ ಪಕ್ಷದ ಏಳು ಶಾಸಕರನ್ನು ಅವರು ಅಥವಾ ಬಿಜೆಪಿಯವರು ಸಂಪರ್ಕಿಸಿದ್ದಾರೆ. ಶೀಘ್ರದಲ್ಲೇ ನನ್ನನ್ನು ಬಂಧಿಸಬಹುದು ಎಂದಿದ್ದಾರೆ. ದೆಹಲಿ ಸರ್ಕಾರ ಪತನಗೊಂಡ ನಂತರ ಚುನಾವಣೆಯಲ್ಲಿ ಸ್ರ್ಪಧಿಸಲು ಶಾಸಕರಿಗೆ ತಲಾ 25 ಕೋಟಿ ಮತ್ತು ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಎಎಪಿ ನಾಯಕ ಆರೋಪಿಸಿದ್ದಾರೆ. ಎಲ್ಲಾ ಏಳು ಎಎಪಿ ಶಾಸಕರು ಪಕ್ಷ ತೊರೆಯಲು ನಿರಾಕರಿಸಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು. +ಕೇಂದ್ರದ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ದೀದಿ +ಇಂದು ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿದ ದೆಹಲಿ ಪೆÇಲೀಸರ ಕ್ರೈಂ ಬ್ರ್ಯಾಂಚ್ ತಂಡ ನೋಟಿಸ್ ಜಾರಿ ಮಾಡಿದೆ. ಕೇಜ್ರಿವಾಲ್ ಆರೋಪದ ವಿರುದ್ಧ ದೆಹಲಿ ಬಿಜೆಪಿ ನಿಯೋಗವು ಅಪರಾಧ ವಿಭಾಗಕ್ಕೆ ದೂರು ನೀಡಿತ್ತು. ಅಲ್ಲದೇ ವಿಶೇಷ ತನಿಖಾ ತಂಡದಿಂದ (ಎಸ್‍ಐಟಿ) ತನಿಖೆ ನಡೆಸುವಂತೆ ಬಿಜೆಪಿ ನಿಯೋಗ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಕ್ರೈಂ ಬ್ರ್ಯಾಂಚ್ ತಂಡವು ಇಂದು ಕೇಜ್ರಿವಾಲ್ ಅವರ ನಿವಾದಕ್ಕೆ ಭೇಟಿ ನೀಡಿ ನೋಟಿಸ್ ನೀಡಿದೆ. +ಕೇಜ್ರಿವಾಲ್ ಆರೋಪ ಏನು:ರಾಷ್ಟ್ರ ರಾಜಧಾನಿಯಲ್ಲಿ ಆಪ್ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ ಆಮ್ ಆದ್ಮಿ ಪಕ್ಷದ ಏಳು ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್ ನೀಡಿದೆ. ಬಿಜೆಪಿ ಆಪ್ ಶಾಸಕರೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಪ್ ಸರ್ಕಾರವನ್ನು ಸಂಪೂರ್ಣವಾಗಿ ಮುಗಿಸಲು ಸಂಚು ಆದ್ದರಿಂದ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದೆ ಎನ್ನುವುದು ಆಪ್ ಆರೋಪವಾಗಿದೆ. +ದೆಹಲಿಯಲ್ಲಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಬಿಜೆಪಿ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಕೊಳಕು ಪಿತೂರಿ ನಡೆಸುತ್ತಿದೆ ಎಂದು ದೆಹಲಿಯ ಆಡಳಿತ ಪಕ್ಷ ಆರೋಪಿಸಿದೆ. ಕೇಜ್ರಿವಾಲ್ ಅವರು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಭ್ರಷ್ಟಾಚಾರದ ತನಿಖೆ ನಡೆಸುತ್ತಿರುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯದ ಬಿಸಿಯನ್ನು ಎದುರಿಸುತ್ತಿದ್ದಾರೆ. +ಆದಾಗ್ಯೂ, ದೆಹಲಿ ಬಿಜೆಪಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಆಫರ್‍ನೊಂದಿಗೆ ತಮ್ಮನ್ನು ಸಂಪರ್ಕಿಸಿದ ಶಾಸಕರು ಮತ್ತು ಜನರನ್ನು ಹೆಸರಿಸುವಂತೆ ಎಎಪಿಗೆ ಸವಾಲು ಹಾಕಿರುವ ಬಿಜೆಪಿ ಕಾರ್ಯದರ್ಶಿ ಹರೀಶ್ ಖುರಾನಾ ಅವರು ಅತಿಶಿ ಅವರನ್ನು ಸಂಪರ್ಕಿಸಿದ ಶಾಸಕರು ಮತ್ತು ಆಫರ್‍ನೊಂದಿಗೆ ತಮ್ಮನ್ನು ತಲುಪಿದವರ ಹೆಸರನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_47_170_4.txt b/eesanje/url_47_170_4.txt new file mode 100644 index 0000000000000000000000000000000000000000..a5e81829f7134e29b3c9e7b8f9d3fac86c42b640 --- /dev/null +++ b/eesanje/url_47_170_4.txt @@ -0,0 +1,9 @@ +ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ +ನವದೆಹಲಿ,ಫೆ.3- ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿ ರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನ ವಾರದಿಂದಲೇ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ ಸಗಟು ಖರೀದಿದಾರರು ತಮ್ಮ ಬಳಿ ಹೊಂದಿರುವ ಅಕ್ಕಿ ಸಂಗ್ರಹದ ಪ್ರಮಾಣವನ್ನೂ ಬಹಿರಂಗಪಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. +ಈ ಬಗ್ಗೆ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸಂಜೀವ್ ಚೋಪ್ರಾ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಶೇ.15ರಷ್ಟು ಹೆಚ್ಚಳವಾಗಿದೆ. ವಿವಿಧ ಮಾದರಿಯ ಅಕ್ಕಿ ರಫ್ತಿನ ಮೇಲೆ ನಿಯಂತ್ರಣ ಹೇರಿದ್ದರೂ ದರ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರವೇ ಮುಂದಿನ ವಾರದಿಂದ ಜಾರಿಗೆ ಬರುವಂತೆ ಮುಕ್ತ ಮಾರುಕಟ್ಟೆಯಲ್ಲಿ ಕೆ.ಜಿ ಅಕ್ಕಿಗೆ 29 ರೂ. ನಂತೆ ಮಾರಾಟ ಮಾಡಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. +ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ +ಈಗಾಗಲೇ ಭಾರತ್ ಬ್ರ್ಯಾಂಡ್ ಗೋದಿ ಹಿಟ್ಟು ಮತ್ತು ಕಡಲೆ ಬೇಳೆ ಮಾರಾಟವಾಗುತ್ತಿದೆ. ಗೋದಿ ಹಿಟ್ಟು ಪ್ರತಿ ಕೆ.ಜಿಗೆ 27.50 ರೂ. ಕಡಲೆ ಬೇಳೆ ಪ್ರತಿ ಕೆ.ಜಿಗೆ 60 ರೂ.ಗಳಿಗೆ ಮಾರಾಟವಾಗುತ್ತಿದೆ. ಇದರೊಂದಿಗೆ ಅಕ್ಕಿಯೂ ಮಾರಾಟವಾಗಲಿದೆ. ಪ್ರತಿ ಕೆಜಿ ಅಕ್ಕಿಗೆ 29 ರೂ. ನಿಗದಿಪಡಿಸಲಾಗಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕೆಟ್‍ಗಳಲ್ಲಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. +ಭಾರತ್ ರೈಸ್ ಮೊಬೈಲ್ ವ್ಯಾನ್‍ಗಳು ಮತ್ತು ಮೂರು ಕೇಂದ್ರ ಸಹಕಾರ ಏಜೆನ್ಸಿಗಳ ಮಳಿಗೆಗಳಿಂದ ಗ್ರಾಹಕರು ಖರೀದಿಸಬಹುದು. ಇದು ಶೀಘ್ರದಲ್ಲೇ ಇ-ಕಾಮರ್ಸ್ ಪ್ಲಾಟ್‍ಫಾರ್ಮ್‍ಗಳು ಸೇರಿದಂತೆ ಇತರ ಚಿಲ್ಲರೆ ಸರಪಳಿಗಳ ಮೂಲಕವೂ ಲಭ್ಯವಾಗಲಿದೆ ಎಂದು ಸಚಿವಾಲಯ ತಿಳಿಸಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಬೆಲೆಗಳನ್ನು ನಿಯಂತ್ರಿಸಲು ಮತ್ತು ದೇಶದಲ್ಲಿ ಸುಲಭವಾಗಿ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಗೋಯ ದಾಸ್ತಾನುಗಳ ಮೇಲೂ ನಿಗಾವಹಿಸಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ. +ಗೋಧಿಯ ಅಖಿಲ ಭಾರತ ಸರಾಸರಿ ದೇಶೀಯ ಸಗಟು ಮತ್ತು ಚಿಲ್ಲರೆ ಬೆಲೆಯು ಒಂದು ತಿಂಗಳು ಮತ್ತು ವರ್ಷದಲ್ಲಿ ಇಳಿಕೆಯ ಪ್ರವೃತ್ತಿ ಕಂಡಿದೆ ಎಂದು ಅದು ಹೇಳಿದೆ. ಗೋ ಹಿಟ್ಟಿನ ಬೆಲೆಗಳು ಸಹ ಒಂದು ವಾರ, ತಿಂಗಳು ಮತ್ತು ವರ್ಷದಲ್ಲಿ ಕಡಿಮೆಯಾಗುವ ಪ್ರವೃತ್ತಿಯನ್ನು ತೋರಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. +ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು +ಎಲ್ಲಲ್ಲಿ ಮಾರಾಟ:?ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ , ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಅಕ್ಕಿ ಮಾರಾಟಕ್ಕೆ ನಿರ್ಧರಿಸಿದೆ. ಮೊದಲ ಹಂತದಲ್ಲಿ ಚಿಲ್ಲರೆ ಮಾರುಕಟ್ಟೆಗೆ 5 ಲಕ್ಷ ಟನ್‍ಗಳಷ್ಟು ಅಕ್ಕಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಐದು ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಭಾರತ್ ರೈಸ್ ಬ್ರ್ಯಾಂಡ್‍ನಡಿ ಮೂರು ಏಜೆನ್ಸಿಗಳಾದ ನಾಫೆಡ್, ಎನ್‍ಸಿಸಿಎಫ್ ಮತ್ತು ಕೇಂದ್ರೀಯ ಭಂಡಾರ್ ಮೂಲಕ ಚಿಲ್ಲರೆ ಮಾರಾಟಕ್ಕೆ ಹಂಚಿಕೆ ಮಾಡಲಾಗಿದೆ. ಭಾರತ್ ರೈಸ್‍ನ ಚಿಲ್ಲರೆ ದರವನ್ನು ಕಿಲೋಗೆ 29 ರೂ.ಗೆ ನಿಗದಿಪಡಿಸಲಾಗಿದೆ ಮತ್ತು ಅವುಗಳನ್ನು 5 ಕೆಜಿ ಮತ್ತು 10 ಕೆಜಿ ಪ್ಯಾಕ್‍ಗಳಲ್ಲಿ ಮಾರಾಟ ಮಾಡಲಾಗುತ್ತದೆ. \ No newline at end of file diff --git a/eesanje/url_47_170_5.txt b/eesanje/url_47_170_5.txt new file mode 100644 index 0000000000000000000000000000000000000000..fb629aed849a5afd759ccbb640b2c37a2bd307f8 --- /dev/null +++ b/eesanje/url_47_170_5.txt @@ -0,0 +1,9 @@ +ತಾಜ್‍ಮಹಲ್‍ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ +ಆಗ್ರಾ,ಫೆ.3- ಬಲಪಂಥೀಯ ಸಂಘಟನೆಯೊಂದು ಆಗ್ರಾ ನ್ಯಾಯಾಲಯದಲ್ಲಿ ತಾಜ್ ಮಹಲ್‍ನಲ್ಲಿ ಉರುಸ್ ವೀಕ್ಷಣೆಗೆ ನಿಷೇಧಾಜ್ಞೆ ಕೋರಿ ಅರ್ಜಿ ಸಲ್ಲಿಸಿದೆ. ಅರ್ಜಿದಾರರಾದ ಅಖಿಲ ಭಾರತ ಹಿಂದೂ ಮಹಾಸಭಾ ಕೂಡ ತಾಜ್ ಮಹಲ್ ಒಳಗೆ ಉರುಸ್‍ಗೆ ಉಚಿತ ಪ್ರವೇಶವನ್ನು ಪ್ರಶ್ನಿಸಿದೆ. +ನ್ಯಾಯಾಲಯವು ಅರ್ಜಿಯನ್ನು ಸ್ವೀಕರಿಸಿ ಮಾರ್ಚ್ 4 ರಂದು ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಿದೆ. ಮೂರು ದಿನಗಳ ಉರುಸ್ ಕಾರ್ಯಕ್ರಮವು ಈ ವರ್ಷ ಫೆಬ್ರವರಿ 6 ರಿಂದ ಫೆಬ್ರವರಿ 8 ರವರೆಗೆ ನಡೆಯಲಿದೆ. 1653 ರಲ್ಲಿ ಯಮುನಾ ನದಿಯ ದಡದಲ್ಲಿ ನಿರ್ಮಿಸಲಾದ ತಾಜ್ ಮಹಲ್‍ಅನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ಅವರ ಮರಣವನ್ನು ಗುರುತಿಸಲು ಈ ಅವಧಿಯನ್ನು ಆಚರಿಸಲಾಗುತ್ತದೆ. +ಅರ್ಜಿದಾರರ ಪರ ವಕೀಲ ಅನಿಲ್‍ಕುಮಾರ್ ತಿವಾರಿ ಅವರು, ಅರ್ಜಿದಾರ ಎಬಿಎಚ್‍ಎಂ ವಿಭಾಗೀಯ ಮುಖ್ಯಸ್ಥೆ ಮೀನಾ ದಿವಾಕರ್ ಮತ್ತು ಜಿಲ್ಲಾಧ್ಯಕ್ಷ ಸೌರಭ್ ಶರ್ಮಾ ಮೂಲಕ ಆಗ್ರಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿರುವ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾೀಧಿಶ (ಕಿರಿಯ ವಿಭಾಗ) ಕೊಠಡಿ ಸಂಖ್ಯೆ 4 ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. +ಬಿಜೆಪಿ ಭೀಷ್ಮ ಲಾಲ್‍ಕೃಷ್ಣ ಅಡ್ವಾಣಿಗೆ ‘ಭಾರತ ರತ್ನ’ ಗೌರವ +ಅವರು ಉರುಸ್ ಆಚರಿಸುವ ಸಮಿತಿಯ ವಿರುದ್ಧ ಶಾಶ್ವತ ನಿಷೇಧಾಜ್ಞೆಯನ್ನು ಕೋರಿದ್ದಾರೆ. ತಾಜ್ ಮಹಲ್‍ನಲ್ಲಿ ಉರುಸ್‍ಗೆ ಉಚಿತ ಪ್ರವೇಶವನ್ನು ಹೊಂದಲು ಅರ್ಜಿದಾರರು ಆಕ್ಷೇಪಿಸಿದ್ದಾರೆ. +ಎಬಿಎಚ್‍ಎಂ ವಕ್ತಾರ ಸಂಜಯ್ ಜಾಟ್ ಅವರು ಆರ್‍ಟಿಐ ಆಧಾರದ ಮೇಲೆ ಅರ್ಜಿಯನ್ನು ಸಲ್ಲಿಸಿದ್ದು, ಮೊಘಲರು ಅಥವಾ ಬ್ರಿಟಿಷರು ತಾಜ್‍ನೊಳಗೆ ಉರುಸ್ ನಡೆಸಲು ಅವಕಾಶ ನೀಡಲಿಲ್ಲ ಎಂದು ಬಹಿರಂಗಪಡಿಸಿದ್ದಾರೆ. +ಆಗ್ರಾ ನಗರದ ಇತಿಹಾಸಕಾರ ರಾಜ್ ಕಿಶೋರ್ ರಾಜೆ ಸಲ್ಲಿಸಿದ ಆರ್‍ಟಿಐ ಆಧಾರದಲ್ಲಿ ಅರ್ಜಿ ಸಲ್ಲಿಸಲಾಗಿದೆ. ತಾಜ್ ಮಹಲ್ ಆವರಣದಲ್ಲಿ ಉರುಸ್ ಆಚರಣೆ ಮತ್ತು ನಮಾಜ್‍ಗೆ ಅನುಮತಿ ನೀಡಿದವರು ಯಾರು ಎಂದು ಆರ್‍ಟಿಐನಲ್ಲಿ ಕೇಳಿದಾಗ ಮೊಘಲರಾಗಲೀ, ಬ್ರಿಟಿಷ್ ಸರ್ಕಾರವಾಗಲೀ ಅಥವಾ ಭಾರತ ಸರ್ಕಾರವಾಗಲೀ ತಾಜ್ ಮಹಲ್‍ನಲ್ಲಿ ಉರುಸ್ ಆಚರಣೆಗೆ ಅವಕಾಶ ನೀಡಿಲ್ಲ ಎಂದು ಮಾಹಿತಿ ನೀಡಲಾಗಿದೆ ಎಂದು ಸಂಜಯ್ ಜಾಟ್ ಪಿಟಿಐಗೆ ತಿಳಿಸಿದರು. +ಆದ್ದರಿಂದ, ಅದರ ಆಧಾರದ ಮೇಲೆ ನಾವು ನಿಷೇಧಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದೇವೆ, ಸೈಯ್ಯದ್ ಇಬ್ರಾಹಿಂ ಜೈದಿ ನೇತೃತ್ವದ ಷಹಜಹಾನ್ ಉರುಸ್ ಆಚರಣಾ ಸಮಿತಿಯ ಸಂಘಟಕರು ತಾಜ್ ಮಹಲ್‍ನಲ್ಲಿ ಉರುಸ್ ಆಚರಿಸುವುದನ್ನು ನಿಲ್ಲಿಸಿದ್ದೇವೆ. ಮೂರು ದಿನಗಳ ಉರುಸ್ ಇತರ ಕಾರ್ಯಕ್ರಮಗಳಲ್ಲಿ ಚಾದರ್ಪೋಸಿ, ಸ್ಯಾಂಡಲ, ಗುಸುಲ, ಕುಲ ಆಚರಣೆಗಳನ್ನು ನಡೆಸಲಾಗುತ್ತದೆ. ಉರುಸ್‍ನ ಕೊನೆಯ ದಿನದಂದು, 1,880 ಮೀಟರ್ ಅಥವಾ ಅದಕ್ಕಿಂತ ಹೆಚ್ಚಿನ ಅಳತೆಯ ಚಾದರ್ ಅನ್ನು ನೀಡಲಾಗುತ್ತದೆ. \ No newline at end of file diff --git a/eesanje/url_47_170_6.txt b/eesanje/url_47_170_6.txt new file mode 100644 index 0000000000000000000000000000000000000000..88f7b803b9c1125cbeeba79044e984b491e0ff3a --- /dev/null +++ b/eesanje/url_47_170_6.txt @@ -0,0 +1,5 @@ +ಕೇಂದ್ರದ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿದ ದೀದಿ +ಕೋಲ್ಕತ್ತಾ, ಫೆ 3 (ಪಿಟಿಐ) ವಿವಿಧ ಸಮಾಜ ಕಲ್ಯಾಣ ಯೋಜನೆಗಳಿಗಾಗಿ ಕೇಂದ್ರದಿಂದ ಪಶ್ಚಿಮ ಬಂಗಾಳದ ಬಾಕಿ ಗಾಗಿ ಒತ್ತಾಯಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾತ್ರಿಯಿಡೀ ಪ್ರತಿಭಟನೆ ನಡೆಸಿದ್ದು, ಇಂದು ಬೆಳಿಗ್ಗೆ ವಾಕಿಂಗ್ ಮುಗಿಸಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ಯಾನರ್ಜಿ ಅವರು ತಮ್ಮ ಪಕ್ಷವಾದ ಟಿಎಂಸಿ ನಾಯಕರೊಂದಿಗೆ ನಿನ್ನೆ ಮಧ್ಯಾಹ್ನ ಕೋಲ್ಕತ್ತಾದ ಹೃದಯಭಾಗದಲ್ಲಿರುವ ಮೈದಾನ ಪ್ರದೇಶದಲ್ಲಿ ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಯ ಮುಂದೆ ಪ್ರತಿಭಟನೆ ಪ್ರಾರಂಭಿಸಿದರು. +ರಾತ್ರಿಯಿಡೀ ಜ್ಯಾನರ್ಜಿ ಜೊತೆ ಫಿರ್ಹಾದ್ ಹಕೀಮ್ ಮತ್ತು ಅರೂಪ್ ಬಿಸ್ವಾಸ್ ಅವರಂತಹ ರಾಜ್ಯ ಮಂತ್ರಿಗಳು ಇದ್ದರು. ಬೆಳಿಗ್ಗೆ, ದೀದಿ ಹತ್ತಿರದ ರೆಡ್ ರೋಡ್‍ನಲ್ಲಿ ವಾಕಿಂಗ್ ಮಾಡಿದರು. ಈ ಪ್ರದೇಶವು ದಟ್ಟವಾದ ಮಂಜಿನಿಂದ ಆವೃತವಾಗಿತ್ತು, ಮತ್ತು ಬ್ಯಾನರ್ಜಿ ತನ್ನ ಭದ್ರತಾ ಸಿಬ್ಬಂದಿಯೊಂದಿಗೆ ಬೆಳಗಿನ ನಡಿಗೆಗೆ ಹೋದರು. ಬಾಸ್ಕೆಟ್‍ಬಾಲ್ ಮೈದಾನದಲ್ಲಿ ಕೆಲವು ಆಟಗಾರರನ್ನು ನೋಡಿ, ಅವರನ್ನು ನಿಲ್ಲಿಸಿ ಅವರೊಂದಿಗೆ ಮಾತನಾಡಿದರು. ಅವರು ಕ್ರೀಡೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದರು ಟಿಎಂಸಿ ನಾಯಕರೊಬ್ಬರು ಹೇಳಿದರು. +ಐಫೆಲ್ ಟವರ್‌ನಲ್ಲಿ ಯುಪಿಐ ಬಿಡುಗಡೆ ಕ್ರಮವನ್ನು ಶ್ಲಾಘಿಸಿದ ಮೋದಿ +ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಮನರೆಗಾ ಮತ್ತು ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳ ಖಾತೆಯಲ್ಲಿ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ನೀಡಬೇಕಿದೆ ಎಂದು ಬ್ಯಾನರ್ಜಿ ಆರೋಪಿಸಿದ್ದಾರೆ. ಭಾನುವಾರದವರೆಗೆ 48 ಗಂಟೆಗಳ ಕಾಲ ಧರಣಿ ಮುಂದುವರಿಯಲಿದ್ದು, ಸೋಮವಾರದಿಂದ ರಾಜ್ಯದ ಬಜೆಟ್ ಅಧಿವೇಶನ ಆರಂಭವಾಗಲಿದೆ. \ No newline at end of file diff --git a/eesanje/url_47_170_7.txt b/eesanje/url_47_170_7.txt new file mode 100644 index 0000000000000000000000000000000000000000..f063f5511aeb24559eca5dd859f8f8185927a9de --- /dev/null +++ b/eesanje/url_47_170_7.txt @@ -0,0 +1,7 @@ +ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ ನಕಲಿ ಔಷಧಿ ದಂಧೆ +ನಾಗ್ಪುರ, ಫೆ.3 (ಪಿಟಿಐ) – ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತವು (ಎಫ್‍ಡಿಎ) ನಕಲಿ ಔಷಧ ದಂಧೆಯನ್ನು ಬಯಲು ಮಾಡಿದೆ ಮತ್ತು ನಾಗ್ಪುರದ ಸರ್ಕಾರಿ ಆಸ್ಪತ್ರೆಯಿಂದ ಆಂಟಿಬಯೋಟಿಕ್ ಸಿಪ್ರೊಪ್ರೋಕ್ಸಾಸಿನ್ ಎಂದು ರವಾನಿಸಲಾಗಿದ್ದ 21,600 ಮಾತ್ರೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈ ಪ್ರಕರಣದಲ್ಲಿ ಈಗಾಗಲೇ ಜೈಲಿನಲ್ಲಿರುವ ಥಾಣೆ ನಿವಾಸಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರದ ಗುತ್ತಿಗೆ ಪ್ರಕ್ರಿಯೆಯ ಮೂಲಕ ಔಷಧವನ್ನು ಖರೀದಿಸಲಾಗಿದೆ ಎಂದು ಎಫ್‍ಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲೆಯ ಸರ್ಕಾರಿ ಸೌಲಭ್ಯಗಳಿಗೆ ಔಷಧಿಗಳನ್ನು ಪೂರೈಸುವ ಇಂದಿರಾಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ ಇದನ್ನು ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದೆ. +ಹಲವಾರು ಬ್ಯಾಕ್ಟೀರಿಯಾದ ಸೋಂಕುಗಳಿಗೆ ಚಿಕಿತ್ಸೆ ನೀಡಲು ಶಿಫಾರಸು ಮಾಡಲಾದ ಸಿಪ್ರೊಪ್ರೋಕ್ಸಾಸಿನ್ ನ ನಕಲಿ ಮಾತ್ರೆಗಳು ಕೋಟ್ಯಂತರ ರೂಪಾಯಿ ಮೌಲ್ಯದ ಮಹಾರಾಷ್ಟ್ರದ ಅನೇಕ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜಾಗಿವೆ ಎಂದು ಎಫ್‍ಡಿಎ ಅಧಿಕಾರಿ ತಿಳಿಸಿದ್ದಾರೆ. ಮಾರ್ಚ್ 2023 ರಲ್ಲಿ, ಎಫ್‍ಡಿಎ ನಾಗಪುರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಕಲ್ಮೇಶ್ವರ್ ತಹಸಿಲ್‍ನಲ್ಲಿರುವ ಸರ್ಕಾರಿ ಆರೋಗ್ಯ ಸೌಲಭ್ಯದಿಂದ ಸಿಪ್ರೊಪ್ರೋಕ್ಸಾಸಿನ್ ಮಾತ್ರೆಗಳ ಮಾದರಿಗಳನ್ನು ತೆಗೆದುಕೊಂಡು ಪರೀಕ್ಷೆಗಾಗಿ ಮುಂಬೈನ ಸರ್ಕಾರಿ ಲ್ಯಾಬ್‍ಗೆ ಕಳುಹಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +3.99ಕೋಟಿ ಶತಕೋಟಿ ಮೌಲ್ಯದ ಡ್ರೋಣ್ ಡೀಲ್​ಗೆ ಅಮೆರಿಕ ಒಪ್ಪಿಗೆ +ಡಿಸೆಂಬರ್ 2023 ರಲ್ಲಿ ಬಂದ ಪರೀಕ್ಷಾ ವರದಿಯು ಮಾತ್ರೆಗಳು ಯಾವುದೇ ಔಷೀಧಿಯ ಮೌಲ್ಯವನ್ನು ಹೊಂದಿಲ್ಲ ಎಂದು ತೋರಿಸಿದೆ ಏಕೆಂದರೆ ಅವುಗಳು ಸಿಪ್ರೊಪ್ರೋಕ್ಸಾಸಿನ್ ಅನ್ನು ಹೊಂದಿಲ್ಲ ಎಂದು ಅವರು ಹೇಳಿದರು. ನಾಗ್ಪುರ ಮೂಲದ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮೂಲಕ ಮಾತ್ರೆಗಳನ್ನು ಸರಬರಾಜು ಮಾಡಲಾಗಿರುವುದರಿಂದ, ಎಫ್‍ಡಿಎ ಅಧಿಕಾರಿಗಳು ಇತ್ತೀಚೆಗೆ ಅಲ್ಲಿನ ಅಂಗಡಿಯ ಮೇಲೆ ದಾಳಿ ನಡೆಸಿ ಅದೇ ಬ್ರಾಂಡ್‍ನ 21,600 ಟ್ಯಾಬ್ಲೆಟ್‍ಗಳ ದಾಸ್ತಾನು ವಶಪಡಿಸಿಕೊಂಡಿದ್ದಾರೆ. +ಗುಜರಾತ್‍ನ ರಿಫೈನ್ಡ್ ಫಾರ್ಮಾ ಎಂಬ ನಕಲಿ ಕಂಪನಿಯು ಈ ಔಷಧವನ್ನು ತಯಾರಿಸಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಕಂಪನಿಯು ಅಸ್ತಿತ್ವದಲ್ಲಿಲ್ಲ ಎಂದು ಅಧಿಕಾರಿ ಹೇಳಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಮೇಶ್ವರ ಪೊಲೀಸರು ಥಾಣೆಯ ವಿಜಯ್ ಶೈಲೇಂದ್ರ ಚೌಧರಿ, ಲಾತೂರ್ ನಿವಾಸಿ ಹೇಮಂತ್ ಧೋಂಡಿಬಾ ಮುಳೆ ಮತ್ತು ಥಾಣೆ ಸಮೀಪದ ಭಿವಂಡಿಯ ಮಿಹಿರ್ ತ್ರಿವೇದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. \ No newline at end of file diff --git a/eesanje/url_47_170_8.txt b/eesanje/url_47_170_8.txt new file mode 100644 index 0000000000000000000000000000000000000000..0b106909b3eec5c326d61e1588e0280351cd2a9c --- /dev/null +++ b/eesanje/url_47_170_8.txt @@ -0,0 +1,5 @@ +ಬಿಜೆಪಿ ಭೀಷ್ಮ ಲಾಲ್‍ಕೃಷ್ಣ ಅಡ್ವಾಣಿಗೆ ‘ಭಾರತ ರತ್ನ’ ಗೌರವ +ನವದೆಹಲಿ,ಫೆ.3- ಬಿಜೆಪಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಹಿಂದುತ್ವದ ಪ್ರತಿಪಾದಕ ದೇಶದಲ್ಲಿ ಪಕ್ಷಕ್ಕೆ ಭದ್ರ ನೆಲೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್‍ಕೃಷ್ಣ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದೆ. +ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಟ್ವಿಟರ್‍ನಲ್ಲಿ ಇದನ್ನು ಖಚಿತಪಡಿಸಿದ್ದಾರೆ. ಎಲ್.ಕೆ.ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲು ನನಗೆ ತುಂಬ ಸಂತೋಷವಾಗಿದೆ. ಈ ಬಗ್ಗೆ ನಾನು ಅವರೊಂದಿಗೆ ಮಾತನಾಡಿದ್ದೇನೆ ಎಂದು ತಮ್ಮ ಅಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. + . . , . …../Ya78qjJbPK +ಭಾರತ ರತ್ನ ಪ್ರಶಸ್ತಿಗೆ ಪುರಸ್ಕøತರಾಗಿರುವ ಲಾಲ್‍ಕೃಷ್ಣ ಅಡ್ವಾಣಿಯವರು ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಗಳಲ್ಲಿ ಒಬ್ಬರು. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರೂ ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಬಣ್ಣಿಸಿದ್ದಾರೆ. \ No newline at end of file diff --git a/eesanje/url_47_170_9.txt b/eesanje/url_47_170_9.txt new file mode 100644 index 0000000000000000000000000000000000000000..cd30c666e7f37560812bb652a25827e8d80646b1 --- /dev/null +++ b/eesanje/url_47_170_9.txt @@ -0,0 +1,10 @@ +ಸೋಮವಾರ ಜಾರ್ಖಂಡ್ ಸಿಎಂಗೆ ಅಗ್ನಿಪರೀಕ್ಷೆ : ಹೈದರಾಬಾದ್ ರೆಸಾರ್ಟ್‍ನಲ್ಲಿ ಜೆಎಂಎಂ ಶಾಸಕರು +ನವದೆಹಲಿ,ಫೆ.3- ಜಾರ್ಖಂಡ್‍ನ ನೂತನ ಮುಖ್ಯಮಂತ್ರಿಯಾಗಿ ನೇಮಕಗೊಂಡಿರುವ ಚಂಪೈ ಸೊರೆನ್ ಸೋಮವಾರ ರಾಜ್ಯ ವಿಧಾನಸಭೆ ಆರಂಭವಾದಾಗ ತಮ್ಮ ಸರಕಾರದ ಬಹುಮತವನ್ನು ಸಾಬೀತುಪಡಿಸಬೇಕಾಗಿರುವುದರಿಂದ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಸಮ್ಮಿಶ್ರ ಸರ್ಕಾರದ ಸುಮಾರು 40 ಶಾಸಕರನ್ನು ಬಿಜೆಪಿ ಸೆಳೆಯುವ ಸಾದ್ಯತೆ ಇರುವುದರಿಂದ ಅವರನ್ನು ರಕ್ಷಿಸಲು ತೆಲಂಗಾಣದ ರಾಜಧಾನಿ ಹೈದರಾಬಾದ್ ಬಳಿಯ ರೆಸಾರ್ಟ್‍ನಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. +ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯ ನಡುವೆಯೇ ಉನ್ನತ ಹುದ್ದೆ ತೊರೆದಿರುವ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯನ್ನು ದುರ್ಬಲಗೊಳಿಸಲು ಕೇಂದ್ರದ ಬಿಜೆಪಿ ಉದ್ದೇಶಪೂರ್ವಕವಾಗಿ ಗುರಿಯಾಗಿಸಿದೆ ಎಂದು ಆರೋಪಿಸಿದ್ದಾರೆ. ಜಾರ್ಖಂಡ್ ವಿಧಾನಸಭೆಯು 81 ಸ್ಥಾನಗಳನ್ನು ಹೊಂದಿದ್ದು, ಬಹುಮತ ಸಾಬೀತುಪಡಿಸಲು 41 ಶಾಸಕರ ಅವಶ್ಯಕತೆ ಇದೆ. +ವಿಶ್ವಾಸಮತ ಪರೀಕ್ಷೆ ನಡೆಯುವವರೆಗೆ ಶಾಸಕರನ್ನು ರಕ್ಷಿತ ಸ್ಥಳದಲ್ಲಿ ಇರಿಸಲಾಗುವುದು ಎಂದು ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಇಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಕೆಳಗಿಳಿದು ಪಕ್ಷದ ಸಹೋದ್ಯೋಗಿಗೆ ಅಧಿಕಾರ ಹಸ್ತಾಂತರಿಸುವುದು ಯೋಚಿಸಲಾಗದ ಮತ್ತು ಅಭೂತಪೂರ್ವವಾಗಿದೆ. +ಇಡೀ ಒಕ್ಕೂಟವು ಹೇಮಂತ್ ಸೋರೆನ್ ಅವರ ಉತ್ತರಾಧಿಕಾರಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಮತ್ತು ಔಪಚಾರಿಕವಾಗಿ ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ರಾಜ್ಯಪಾಲರಿಗೆ ಪ್ರಸ್ತಾಪಿಸಿದೆ. ನಾವು ರಾಜ್ಯಪಾಲರಿಗೆ ಕೃತಜ್ಞರಾಗಿರುತ್ತೇವೆ. ಪ್ರಮಾಣವಚನ ಸಮಾರಂಭವನ್ನು ನಿನ್ನೆ ನಡೆಯಲು ಅವಕಾಶ ಮಾಡಿಕೊಟ್ಟರು ಎಂದು ಮಿರ್ ಹೇಳಿದರು. +ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮೈತ್ರಿಕೂಟವನ್ನು ಆಹ್ವಾನಿಸಲಾಗುತ್ತದೆ. ಅಲ್ಲಿಯವರೆಗೆ, ನಮ್ಮ ಎಲ್ಲಾ ಶಾಸಕರು ಸಂರಕ್ಷಿತ ಸ್ಥಳದಲ್ಲಿರುತ್ತಾರೆ ಎಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬದಿಯಲ್ಲಿ ಕಾಂಗ್ರೆಸ್ ನಾಯಕ ಹೇಳಿದರು. ಬಿಜೆಪಿಯು ಜಾರ್ಖಂಡ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿತು, ಆದರೆ ಇಂಡಿಯ ಒಕ್ಕೂಟ ಬಣವೂ ಅದರ ಪಿತೂರಿ ಯ ವಿರುದ್ಧ ನಿಂತಿತು ಮತ್ತು ಅವರಿಗೆ ಜನಪ್ರಿಯ ಜನಾದೇಶವನ್ನು ಕದಿಯಲು ಬಿಡಲಿಲ್ಲ ಎಂದು ರಾಹುಲ್ ಗಾಂಧಿ ನಿನ್ನೆ ಯಾತ್ರೆ ರಾಜ್ಯವನ್ನು ಪ್ರವೇಶಿಸಿದಾಗ ಹೇಳಿದರು. ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಅದೇ ಪಕ್ಷಗಳು ಅಥವಾ ಮಿತ್ರಪಕ್ಷಗಳು ನಡೆಸುವ ಮತ್ತೊಂದು ರಾಜ್ಯಕ್ಕೆ ಕರೆದೊಯ್ಯುವ ಅಭ್ಯಾಸವನ್ನು ರೆಸಾರ್ಟ್ ರಾಜಕೀಯ ಎಂದು ಕರೆಯಲಾಗುತ್ತದೆ. +3.99ಕೋಟಿ ಶತಕೋಟಿ ಮೌಲ್ಯದ ಡ್ರೋಣ್ ಡೀಲ್​ಗೆ ಅಮೆರಿಕ ಒಪ್ಪಿಗೆ +ಸೆಪ್ಟೆಂಬರ್ 2022 ರಲ್ಲಿ, ಹೇಮಂತ್ ಸೊರೆನ್ ಅವರ ಪರವಾಗಿ 48 ಮತಗಳೊಂದಿಗೆ ಬಹುಮತದ ಪರೀಕ್ಷೆಯನ್ನು ಗೆದ್ದಿದ್ದರು. ಭ್ರಷ್ಟಾಚಾರದ ಆರೋಪದ ಮೇಲೆ ಅಸೆಂಬ್ಲಿಯಿಂದ ಅನರ್ಹಗೊಳಿಸುವ ಬೆದರಿಕೆಯ ನಡುವೆಯೂ ಸೋರೆನ್ ಅವರ ಬಹುಮತದ ಪರೀಕ್ಷೆ ನಡೆದಿತ್ತು. +ಜೆಎಂಎಂ-ಕಾಂಗ್ರೆಸ್-ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ 46 ಸ್ಥಾನಗಳನ್ನು ಹೊಂದಿದೆ – ಜೆಎಂಎಂ 28, ಕಾಂಗ್ರೆಸ್ 16, ಆರ್‍ಜೆಡಿ 1, ಮತ್ತು ಸಿಪಿಐ (ಎಂಎಲ್) ಲಿಬರೇಶನ್ 1 ಶಾಸಕರನ್ನು ಹೊಂದಿದೆ. ಜಾರ್ಖಂಡ್ ಅಸೆಂಬ್ಲಿ 80 ಸ್ಥಾನಗಳನ್ನು ಹೊಂದಿದೆ ಮತ್ತು ಬಹುಮತದ ಗುರುತು 41 ಆಗಿದೆ. +ಬಿಜೆಪಿ, ಆಲ್ ಜಾರ್ಖಂಡ್ ವಿದ್ಯಾರ್ಥಿಗಳ ಒಕ್ಕೂಟ (ಎಜೆಎಸ್‍ಯು) ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‍ಸಿಪಿ) ಒಳಗೊಂಡಿರುವ ವಿರೋಧ ಪಕ್ಷದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‍ಡಿಎ) 29 ಶಾಸಕರನ್ನು ಹೊಂದಿದೆ. \ No newline at end of file diff --git a/eesanje/url_47_171_1.txt b/eesanje/url_47_171_1.txt new file mode 100644 index 0000000000000000000000000000000000000000..d6a9e628e5e7cbdeb98651fd07eb7f95654e0b20 --- /dev/null +++ b/eesanje/url_47_171_1.txt @@ -0,0 +1,9 @@ +ವಿಶ್ವದ ಸ್ನೇಹಿತ ಮತ್ತು ಒಮ್ಮತದ ಬಿಲ್ಡರ್ ಆಗಿ ಹೊರಹೊಮ್ಮಿದ ಭಾರತ +ನವದೆಹಲಿ,ಫೆ.3- ಯಶಸ್ವಿ ಜಿ 20 ಶೃಂಗಸಭೆ ಅಧ್ಯಕ್ಷರಾದ ನಂತರ ಭಾರತವು ವಿಶ್ವದಲ್ಲಿ ಸ್ನೇಹಿತ ಮತ್ತು ಒಮ್ಮತದ ಬಿಲ್ಡರ್ ಆಗಿ ಹೊರಹೊಮ್ಮಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ, ಇದು ದೇಶದ ರಾಜತಾಂತ್ರಿಕ ಇತಿಹಾಸದಲ್ಲಿ ಗಮನಾರ್ಹ ಅವಧಿ ಎಂದು ಬಣ್ಣಿಸಿದ್ದಾರೆ. +ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಷಣ ಮಾಡಿದ ಜೈಶಂಕರ್, ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಉಕ್ರೇನ್ ಸಂಘರ್ಷದ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸುವ ಮೂಲಕ ನಾಯಕರ ಘೋಷಣೆಯನ್ನು ತಯಾರಿಸಲು ನವದೆಹಲಿಯನ್ನು ವಿಶೇಷವಾಗಿ ಉಲ್ಲೇಖಿಸಿದ್ದಾರೆ. +ನಾವು ಒಮ್ಮತಕ್ಕೆ ಬರುವ ಮೊದಲು ಕಳೆದ 48 ಗಂಟೆಗಳ ಮೊದಲು ನಾವು ವಿಶೇಷವಾಗಿ ಉತ್ತೇಜಕವನ್ನು ಹೊಂದಿದ್ದೇವೆ ಎಂದು ಅವರು ಘೋಷಣೆಯಲ್ಲಿ ಉಕ್ರೇನ್ ಸಂಘರ್ಷವನ್ನು ವಿವರಿಸಲು ಪಠ್ಯದ ಮೇಲಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ಹೋದ ತೀವ್ರವಾದ ಮಾತುಕತೆಗಳ ಓರೆಯಾದ ಉಲ್ಲೇಖದಲ್ಲಿ ಹೇಳಿದರು. +ರಾಜ್ಯಕ್ಕಾದ ಅನ್ಯಾಯ ಮರೆಮಾಚಲು ಅನಗತ್ಯ ವಿವಾದ : ಡಿ.ಕೆ.ಸುರೇಶ್ ಕಿಡಿ +ಇಂಡಿಯಾ ಅಂಡ್ ದಿ ಫ್ಯೂಚರ್ ಆಫ್ ಜಿ20: ಶೇಪಿಂಗ್ ಪಾಲಿಸೀಸ್ ಫಾರ್ ಎ ಬೆಟರ್ ವಲ್ರ್ಡ್ ಎಂಬ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜೈಶಂಕರ್ ಮಾತನಾಡುತ್ತಿದ್ದರು. ನ್ಯಾಷನಲ್ ಯೂನಿವರ್ಸಿಟಿ ಆಫ್ ಸಿಂಗಾಪುರದ ಇನ್‍ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ಭಾರತೀಯ ದೃಷ್ಟಿಕೋನದಿಂದ, ಜಿ20 ನಮಗೆ ಇಂದು ವಿಶ್ವಾಮಿತ್ರ, ಸ್ನೇಹಿತ, ಒಂದು ರೀತಿಯ ಒಮ್ಮತದ ಬಿಲ್ಡರ್, ಸೇತುವೆ ನಿರ್ಮಾಣಗಾರನಾಗಿ ಹೊರಹೊಮ್ಮಿದೆ ಎಂದು ಜೈಶಂಕರ್ ಹೇಳಿದರು. +ಭಾರತದ ಜಿ 20 ಅಧ್ಯಕ್ಷ ಸ್ಥಾನವು ದೇಶದ ರಾಜತಾಂತ್ರಿಕ ಇತಿಹಾಸದಲ್ಲಿ ಗಮನಾರ್ಹ ಅವಧಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಹೇಳಿದರು. ಬಹುಪಕ್ಷೀಯತೆಯನ್ನು ಮರಳಿ ಟ್ರ್ಯಾಕ್‍ಗೆ ತರುವುದರಿಂದ ಹಿಡಿದು ಆಫ್ರಿಕಾಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭರವಸೆಯನ್ನು ಪೂರೈಸುವವರೆಗೆ, ಭಾರತವು ಹೆಮ್ಮೆಪಡಬೇಕಾದದ್ದು ಬಹಳಷ್ಟಿದೆ ಎಂದು ಅವರು ಹೇಳಿದರು. +ಶಾಲಾ-ಕಾಲೇಜುಗಳ ಬಳಿ ಸಂಚಾರಿ ಪೊಲೀಸರ ವಿಶೇಷ ಕಾರ್ಯಾಚರಣೆ : 639 ಪ್ರಕರಣ ದಾಖಲು +55-ರಾಷ್ಟ್ರಗಳ ಆಫ್ರಿಕನ್ ಯೂನಿಯನ್ ಅನ್ನು ಜಿ20ಯ ಖಾಯಂ ಸದಸ್ಯರನ್ನಾಗಿ ಮಾಡುವುದನ್ನು 2023 ರಲ್ಲಿ ವಿಶ್ವದ 20 ದೊಡ್ಡ ಆರ್ಥಿಕತೆಗಳ ಗುಂಪಿನ ಭಾರತದ ಅಧ್ಯಕ್ಷತೆಯ ಪ್ರಮುಖ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಈ ಪುಸ್ತಕವು ಇಂಡಿಯಾ ಒಕ್ಕೂಟದ ಅಧ್ಯಕ್ಷ ಸ್ಥಾನದ ಬಗ್ಗೆ ವಿಶಿಷ್ಟ ವಿದ್ವಾಂಸರು, ನೀತಿ ಅಭ್ಯಾಸಕಾರರು ಮತ್ತು ಜಿ20 ಶೆರ್ಪಾಗಳಿಂದ ಒಳನೋಟಗಳು ಮತ್ತು ದೃಷ್ಟಿಕೋನಗಳ ವೈವಿಧ್ಯಮಯ ಶ್ರೇಣಿಯನ್ನು ಪರಿಶೀಲಿಸುತ್ತದೆ. \ No newline at end of file diff --git a/eesanje/url_47_171_10.txt b/eesanje/url_47_171_10.txt new file mode 100644 index 0000000000000000000000000000000000000000..7b428ccb8163506684979ffe2cdddd6e76bb6042 --- /dev/null +++ b/eesanje/url_47_171_10.txt @@ -0,0 +1,7 @@ +ಇಂಡಿಯಾ ಮೈತ್ರಿ ಕೂಟಕ್ಕೆ ಮಮತಾ ಗುಡ್‍ಬೈ..?! +ನವದೆಹಲಿ,ಫೆ.2- ಇತ್ತೀಚಿನ ದಿನಗಳಲ್ಲಿ ವಿರೋಧ ಪಕ್ಷದ ಮೈತ್ರಿ ಸ್ಥಿತಿ ಭಾರೀ ಹದಗೆಡುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್‍ಕುಮಾರ್ ಪಕ್ಷ ಬದಲಿಸಿದ ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೈತ್ರಿಕೂಟದಲ್ಲಿ ಮುಂದುವರಿಯುವ ಬಗ್ಗೆ ಅನುಮಾನ ಮೂಡಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಇಂಡಿಯಾ ಮೈತ್ರಿಯಿಂದ ಬೇರ್ಪಡಬಹುದು ಎಂಬ ಸುದ್ದಿ ಇದೆ. ಈ ಬಗ್ಗೆ ಎಡಪಕ್ಷಗಳು ಹೊಸ ಹಕ್ಕು ಮಂಡಿಸಿವೆ. +ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಬಂಗಾಳವನ್ನು ತಲುಪಿದೆ ಎಂಬುವುದು ಉಲ್ಲೇಖನೀಯ. ನಿನ್ನೆ ಎಡಪಂಥೀಯ ಕಾರ್ಯಕರ್ತರು ಮತ್ತು ಬೆಂಬಲಿಗರ ದೊಡ್ಡ ಗುಂಪು ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸೇರಿದೆ. +ಇದೇ ಸಂದರ್ಭದಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಪಕ್ಷದ ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಮತ್ತು ಇತರ ನಾಯಕರು ರಘುನಾಥಗಂಜ್‍ನಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ಆರ್‍ಎಸ್‍ಎಸ್-ಬಿಜೆಪಿ ಮತ್ತು ಅನ್ಯಾಯದ ವಿರುದ್ಧದ ಹೋರಾಟದ ಭಾಗವಾಗಲು ಎಡಪಕ್ಷಗಳು ಕಾಂಗ್ರೆಸ್ ಯಾತ್ರೆಗೆ ಸೇರ್ಪಡೆಗೊಂಡಿವೆ. ನಾವು ಆರ್‍ಎಸ್‍ಎಸ್-ಬಿಜೆಪಿ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಸಲೀಂ ಹೇಳಿದ್ದಾರೆ. + : ನಟಿ ಪೂನಂ ಪಾಂಡೆ ಇನ್ನಿಲ್ಲ..! +ಆರೆಎಸ್‍ಎಸ್-ಬಿಜೆಪಿಗೆ ಪೈಪೋಟಿ ನೀಡಲು ರಾಹುಲ್ ಗಾಂಧಿ ಕೂಡ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಹೊರಟಿದ್ದಾರೆ. ನಾವು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಡುತ್ತಿದ್ದೇವೆ. ಈ ಯಾತ್ರೆಗೆ ನಮ್ಮ ಒಗ್ಗಟ್ಟು ಪ್ರದರ್ಶಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಸಲೀಂ ಅವರು ರಾಹುಲ್ ಗಾಂಧಿ ಅವರೊಂದಿಗೆ ಸುಮಾರು 45 ನಿಮಿಷಗಳ ಕಾಲ ಸಭೆ ನಡೆಸಿದರು. +ಟಿಎಂಸಿ ಇಂಡಿಯಾ ಮೈತ್ರಿಯಿಂದ ಬೇರ್ಪಡಲು ಉತ್ಸುಕತೆ ತೋರುತ್ತಿದೆ. ಮೊದಲಿನಿಂದಲೂ ಅನೇಕ ಜನರು ಈ ಮೈತ್ರಿಗೆ ಸೇರಿದ್ದಾರೆ. ಆದರೆ ಬಿಜೆಪಿ ವಿರುದ್ಧದ ಹೋರಾಟದ ಭಾಗವಾಗಿ ಯಾರು ಉಳಿಯುತ್ತಾರೆ ಮತ್ತು ಯಾರು ದೂರವಾಗುತ್ತಾರೆ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಮಮತಾ ಬ್ಯಾನರ್ಜಿ ಈಗ ಅದರಿಂದ ದೂರವಿರಲು ಬಯಸಿದ್ದಾರೆ ಮತ್ತು ನಾವು ಅದನ್ನು ಸ್ವಾಗತಿಸುತ್ತೇವೆ ಎಂದು ಸಲೀಂ ತಿಳಿಸಿದ್ದಾರೆ. \ No newline at end of file diff --git a/eesanje/url_47_171_11.txt b/eesanje/url_47_171_11.txt new file mode 100644 index 0000000000000000000000000000000000000000..0dcd48b7af265d2095d183a93b1b26b45837d10e --- /dev/null +++ b/eesanje/url_47_171_11.txt @@ -0,0 +1,6 @@ +ನಷ್ಟಕ್ಕೆ ಸಮನಾದ ಹಣವನ್ನು ಠೇವಣಿ ಇಟ್ಟ ನಂತರವೇ ಜಾಮೀನು : ಕಾನೂನು ಆಯೋಗ ಶಿಫಾರಸು +ನವದೆಹಲಿ, ಫೆ.2 (ಪಿಟಿಐ) – ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವ ವ್ಯಕ್ತಿಗಳು ಅವರಿಂದ ಉಂಟಾದ ನಷ್ಟಕ್ಕೆ ಸಮನಾದ ಹಣವನ್ನು ಠೇವಣಿ ಮಾಡಿದ ನಂತರವೇ ಜಾಮೀನು ಮಂಜೂರು ಮಾಡುವಂತೆ ಕಾನೂನು ಆಯೋಗ ಶಿಫಾರಸು ಮಾಡುವ ಸಾಧ್ಯತೆ ಇದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯಲ್ಲಿ ಬದಲಾವಣೆಗೆ ಶಿಫಾರಸು ಮಾಡಿರುವ ಕಾನೂನು ಸಮಿತಿಯು ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಲ್ಲಿ ತೊಡಗಿರುವವರಿಗೆ ಕಠಿಣ ಜಾಮೀನು ನಿಬಂಧನೆಗಳನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. +ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಲ್ಲಿ ತೊಡಗಿರುವ ಜನರು ನಾಶಪಡಿಸಿದ ಆಸ್ತಿಯ ಮೌಲ್ಯಕ್ಕೆ ಸಮನಾದ ಮೊತ್ತವನ್ನು ಪಾವತಿಸಿದರೆ, ಅದು ಇತರರನ್ನು ಅಂತಹ ಕ್ರಮಗಳಿಗೆ ಆಶ್ರಯಿಸದಂತೆ ತಡೆಯುತ್ತದೆ ಎಂಬ ಭಾವನೆ ಇತ್ತು. +ವಾಹನ ತಪಾಸಣೆ ವೇಳೆ ಸಿಕ್ತು 5.12 ಕೋಟಿ ರೂ.ನಗದು..! +2015ರಲ್ಲಿ ಸರ್ಕಾರ ಕಾನೂನಿಗೆ ತಿದ್ದುಪಡಿ ತರಲು ಮುಂದಾಗಿದ್ದರೂ ಮಸೂದೆ ತರಲು ಸಾಧ್ಯವಾಗಿರಲಿಲ್ಲ. ಸುಪ್ರೀಂ ಕೋರ್ಟ್‍ನ ಕೆಲವು ನಿರ್ದೇಶನಗಳು ಮತ್ತು ಕೆಲವು ಹೈಕೋರ್ಟ್‍ಗಳ ತೀರ್ಪುಗಳ ಹಿನ್ನೆಲೆಯಲ್ಲಿ ಆಯೋಗವು ಈ ವಿಷಯದ ಕುರಿತು ಯೋಜನೆಯನ್ನು ಕೈಗೆತ್ತಿಕೊಂಡಿದೆ. +ಕಾನೂನು ಸಮಿತಿಯು ಕ್ರಿಮಿನಲ್ ಮಾನನಷ್ಟ ಕಾನೂನಿಗೆ ಸಂಬಂಧಿಸಿದ ವರದಿಯನ್ನು ಸಿದ್ಧಪಡಿಸುತ್ತಿದೆ ಮತ್ತು ಅದರಲ್ಲಿ ಯಾವುದೇ ಬದಲಾವಣೆಗಳನ್ನು ಶಿಫಾರಸು ಮಾಡುವುದಿಲ್ಲ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_171_12.txt b/eesanje/url_47_171_12.txt new file mode 100644 index 0000000000000000000000000000000000000000..bda51b04825a8810912751c82c95657f0315a316 --- /dev/null +++ b/eesanje/url_47_171_12.txt @@ -0,0 +1,10 @@ +ರಾಮಮಂದಿರಕ್ಕೆ 25 ಲಕ್ಷ ಭಕ್ತರ ಭೇಟಿ, 11 ಕೋಟಿ ದೇಣಿಗೆ ಸಂಗ್ರಹ +ನವದೆಹಲಿ,ಫೆ.2- ಕಳೆದ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ನಂತರ ದೇವಾಲಯಕ್ಕೆ 25 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ ಮತ್ತು 11 ಕೋಟಿ ರೂ.ಗಳಿಗೂ ಹೆಚ್ಚು ಕೊಡುಗೆಗಳನ್ನು ನೀಡಿದ್ದಾರೆ ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. +ದೇವಾಲಯವನ್ನು ಸಾರ್ವಜನಿಕರಿಗೆ ತೆರೆದು 11 ದಿನಗಳು ಕಳೆದಿವೆ ಮತ್ತು ಕಾಣಿಕೆಯಾಗಿ ಕಾಣಿಕೆ ಪೆಟ್ಟಿಗೆಗಳಲ್ಲಿ 8 ಕೋಟಿ ರೂ.ಠೇವಣಿ ಮಾಡಲಾಗಿದೆ ಮತ್ತು 3.5 ಕೋಟಿ ಚೆಕ್ ಮತ್ತು ಆನ್‍ಲೈನ್ ಪಾವತಿಗಳ ಮೂಲಕ ದೇಣಿಗೆ ನೀಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‍ನ ಕಚೇರಿ ಉಸ್ತುವಾರಿ ಪ್ರಕಾಶ್ ಗುಪ್ತಾ ತಿಳಿಸಿದ್ದಾರೆ. +ದೇವಾಲಯದ ಗರ್ಭಗುಡಿ, ಹೊಸ ಬಾಲಕ ರಾಮ್ ವಿಗ್ರಹ ಮತ್ತು ರಾಮ್ ಲಲ್ಲಾ ವಿಗ್ರಹಕ್ಕೆ ನೆಲೆಯಾಗಿದೆ, ಭಕ್ತರಿಗೆ ಕಾಣಿಕೆಗಳನ್ನು ಜಮಾ ಮಾಡಲು ನಾಲ್ಕು ಕಾಣಿಕೆ ಪೆಟ್ಟಿಗೆಗಳನ್ನು ಹಾಕಲಾಗಿದೆ. ಗರ್ಭಗುಡಿಯ ಮುಂಭಾಗದಲ್ಲಿರುವ ದೇವರಿಗೆ ಪ್ರಾರ್ಥನೆ ಸಲ್ಲಿಸಲು ಭಕ್ತರು ನಡೆಯುವ ದರ್ಶನ ಪಥದಲ್ಲಿ ಅವುಗಳನ್ನು ಇರಿಸಲಾಗಿದೆ. +ಡಿಜಿಟಲ್ ದೇಣಿಗೆ ನೀಡಲು 10 ಗಣಕೀಕೃತ ಕೌಂಟರ್ ಗಳನ್ನು ಇರಿಸಲಾಗಿದೆ. ಇಲ್ಲಿ, ರಾಮ ಭಕ್ತರು ಚೆಕ್‍ಗಳು ಮತ್ತು ಇತರ ಆನ್‍ಲೈನ್ ಪಾವತಿ ವಿಧಾನಗಳ ಮೂಲಕ ಅರ್ಪಣೆ ಮಾಡಬಹುದು. ಸಂಜೆ ಕೌಂಟರ್ ಮುಚ್ಚಿದ ನಂತರ, 11 ಬ್ಯಾಂಕ್ ಉದ್ಯೋಗಿಗಳು ಮತ್ತು ಮೂವರು ದೇವಸ್ಥಾನದ ಟ್ರಸ್ಟ್ ಕಾರ್ಯಕರ್ತರು ಸೇರಿದಂತೆ 14 ಕಾರ್ಮಿಕರ ತಂಡವು ಕಾಣಿಕೆ ಪೆಟ್ಟಿಗೆಗಳಲ್ಲಿ ಠೇವಣಿ ಇಟ್ಟ ಕಾಣಿಕೆಗಳನ್ನು ಎಣಿಸುತ್ತಾರೆ. ದೇಣಿಗೆಯಿಂದ ಹಿಡಿದು ಮೊತ್ತದ ಎಣಿಕೆಯವರೆಗಿನ ಸಂಪೂರ್ಣ ಪ್ರಕ್ರಿಯೆಯನ್ನು ಸಿಸಿಟಿವಿ ಕಣ್ಗಾವಲು ಅಡಿಯಲ್ಲಿ ಮಾಡಲಾಗುತ್ತದೆ. +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ಉತ್ತರ ಭಾರತದಲ್ಲಿ ಕೊರೆಯುವ ಚಳಿ ಕಡಿಮೆಯಾಗುತ್ತಿದ್ದಂತೆ ಮುಂದಿನ ಕೆಲವೇ ವಾರಗಳಲ್ಲಿ ರಾಮ ಮಂದಿರಕ್ಕೆ ಹೆಚ್ಚಿನ ಭಕ್ತರು ಆಗಮಿಸಲು ಅಯೋಧ್ಯೆ ಸಜ್ಜಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮ ಜನ್ಮಭೂಮಿ ಸಂಕೀರ್ಣ ನಿಯಂತ್ರಣ ಕೊಠಡಿಯಲ್ಲಿ ರಾಜ್ಯ ಮತ್ತು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಭೆ ನಡೆಸಿದರು. +ಹವಾಮಾನ ಪರಿಸ್ಥಿತಿಯಲ್ಲಿ ಸುಧಾರಣೆ ಮತ್ತು ಚಳಿ ಕಡಿಮೆಯಾಗುವುದರೊಂದಿಗೆ, ಅಯೋಧ್ಯೆಯಲ್ಲಿ ಪ್ರವಾಸಿಗರು ಮತ್ತು ರಾಮ ಭಕ್ತರ ಹೆಚ್ಚಳವನ್ನು ನಾವು ನಿರೀಕ್ಷಿಸುತ್ತೇವೆ. ಎಲ್ಲಾ ಭಕ್ತರಿಗೆ ರಾಮಲಲ್ಲಾನ ಸುಲಭ ದರ್ಶನವನ್ನು ಸುಗಮಗೊಳಿಸಲು ನಾವು ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು. +ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು +ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಯೋಧ್ಯೆಯನ್ನು ಭಾರತದಾದ್ಯಂತ ಇತರ ಎಂಟು ನಗರಗಳಿಗೆ ಸಂಪರ್ಕಿಸುವ ತಡೆರಹಿತ ವಿಮಾನ ಸೇವೆಗಳನ್ನು ಉದ್ಘಾಟಿಸಿದರು. ಸ್ಪೈಸ್‍ಜೆಟ್ ಏರ್‍ಲೈನ್ಸ್ ದರ್ಭಾಂಗಾ, ಅಹಮದಾಬಾದ್, ಚೆನ್ನೈ, ಜೈಪುರ, ಪಾಟ್ನಾ, ದೆಹಲಿ, ಮುಂಬೈ ಮತ್ತು ಬೆಂಗಳೂರುಗಳಿಂದ ಅಯೋಧ್ಯೆಗೆ ನೇರ ವಿಮಾನವನ್ನು ಘೋಷಿಸಲಾಗಿದೆ. ದೇವಾಲಯದ ಮೊದಲ ಹಂತವನ್ನು 70 ಎಕರೆ ಸಂಕೀರ್ಣದಲ್ಲಿ ನಿರ್ಮಿಸಲಾಗಿದ್ದು, ಎರಡನೇ ಹಂತವು ಡಿಸೆಂಬರ್ 2025 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_171_2.txt b/eesanje/url_47_171_2.txt new file mode 100644 index 0000000000000000000000000000000000000000..91a2958c9427fa5b680ebfc299f68ea1831ebfaf --- /dev/null +++ b/eesanje/url_47_171_2.txt @@ -0,0 +1,7 @@ +ಹಿಂದೂ ಸನಾತನ ಧರ್ಮದ ಬಗ್ಗೆ ತಿರುಪತಿಯಲ್ಲಿ ಮಠಾಧೀಶರ ಚರ್ಚೆ +ಹೈದರಾಬಾದ್,ಫೆ.3- ಇಂದಿನಿಂದ ಮೂರು ದಿನಗಳ ಕಾಲ ತಿರುಮಲ ತಿರುಪತಿಯಲ್ಲಿ ಹಿಂದೂ ಸನಾತನ ಧರ್ಮದ ಮೌಲ್ಯಗಳ ಕುರಿತಂತೆ ನಾಡಿನ ಪ್ರಸಿದ್ಧ 57 ಮಠಾಧೀಶರು ಸಭೆ ನಡೆಸಲಿದ್ದಾರೆ. ಹಿಂದೂ ಸನಾತನ ಧರ್ಮದ ಮೌಲ್ಯಗಳನ್ನು ಎತ್ತಿಹಿಡಿಯುವ ಬಗ್ಗೆ ಚರ್ಚೆಗಳನ್ನು ನಡೆಸುತ್ತದೆ ಮತ್ತು ಧಾರ್ಮಿಕ ಮತಾಂತರದ ಬಗ್ಗೆಯೂ ಚರ್ಚಿಸಲಾಗುವುದು. +ಇಂದಿನಿಂದ ಆರಂಭವಾಗಲಿರುವ ಸನಾತನ ಧಾರ್ಮಿಕ ಸದಸ್ಯದಲ್ಲಿ ಪೀಠಾಪತಿಗಳು (ಮಠಾಧೀಶರು) ಮುಂದಿನ ಪೀಳಿಗೆಗೆ ಸನಾತನ ಧರ್ಮದ ಮೌಲ್ಯಗಳನ್ನು ಉಳಿಸಿಕೊಳ್ಳಲು ಆಧ್ಯಾತ್ಮಿಕ ಆಂದೋಲನವನ್ನು ನಡೆಸಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಟ್ರಸ್ಟ್ ಬೋರ್ಡ್ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ತಿಳಿಸಿದ್ದಾರೆ. +ತಿರುಮಲದ ಅಸ್ತಾನ ಮಂಟಪದಲ್ಲಿ ನಡೆಯುವ ಧಾರ್ಮಿಕ ಸದಸ್‍ನಲ್ಲಿ ದೂರದ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ನಡೆಯುವ ಧಾರ್ಮಿಕ ಮತಾಂತರವನ್ನು ತಡೆಯುವ ಬಗ್ಗೆಯೂ ಚರ್ಚಿಸಲಾಗುವುದು. ಟಿಟಿಡಿಯು ಈ ಹಿಂದೆ ದಲಿತ ಗೋವಿಂದಂ, ಕಲ್ಯಾಣಮಸ್ತು ಮತ್ತು ಕೈಸಿಕ ದ್ವಾದಶಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ದೂರದ ಪ್ರದೇಶಗಳಲ್ಲಿ ಧಾರ್ಮಿಕ ಮತಾಂತರವನ್ನು ತಡೆಯಲು ಸಹಕಾರಿಯಾಗಿದೆ. +ರಾಜ್ಯಕ್ಕಾದ ಅನ್ಯಾಯ ಮರೆಮಾಚಲು ಅನಗತ್ಯ ವಿವಾದ : ಡಿ.ಕೆ.ಸುರೇಶ್ ಕಿಡಿ +ಹಿಂದೂ ಧರ್ಮದ ಮಹಾಕಾವ್ಯಗಳು, ಪರಂಪರೆ, ಸಂಸ್ಕøತಿ ಮತ್ತು ಧಾರ್ಮಿಕ ಪಠ್ಯಗಳಲ್ಲಿ ಹುದುಗಿರುವ ಮೌಲ್ಯಗಳನ್ನು ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಇಂದಿನ ಯುವ ಪೀಳಿಗೆಗೆ ತಲುಪಲು ಉದ್ದೇಶಿಸಲಾಗಿದೆ. ನಾವು ಮಠಾಧೀಶರು ಮತ್ತು ಧರ್ಮದರ್ಶಿಗಳ ಸಲಹೆಗಳನ್ನು ಸ್ವಾಗತಿಸುತ್ತೇವೆ ಮತ್ತು ಅವರ ಸಲಹೆಗಳನ್ನು ಕಾರ್ಯಗತಗೊಳಿಸಲು ಯೋಜಿಸುತ್ತೇವೆ. ಹೆಚ್ಚಿನ ಧಾರ್ಮಿಕ ಕಾರ್ಯಕ್ರಮಗಳನ್ನು ಸಮಗ್ರ ರೀತಿಯಲ್ಲಿ ಕೈಗೊಳ್ಳಲಾಗುವುದು ಎಂದು ರೆಡ್ಡಿ ಹೇಳಿದರು. +ಕಳೆದ ಹಲವಾರು ದಶಕಗಳಿಂದ, ತಿರುಮಲವು ಆಧ್ಯಾತ್ಮಿಕತೆಯ ದ್ಯೋತಕವಾಗಿ, ಇಡೀ ದೇಶಕ್ಕೆ ಆಧ್ಯಾತ್ಮಿಕ ರಾಜಧಾನಿಯಾಗಿ ಕಂಡುಬರುತ್ತದೆ ಮತ್ತು ಇಂದು ಮತ್ತೆ, ಯಾತ್ರಿಕ ಕೇಂದ್ರವು ವಿದ್ವಾಂಸರ ಸಲಹೆಗಳನ್ನು ಸ್ವೀಕರಿಸಿದ ನಂತರ ದೇಶದಾದ್ಯಂತ ಮತ್ತೊಂದು ಆಧ್ಯಾತ್ಮಿಕ ಚಳುವಳಿಯನ್ನು ಮುನ್ನಡೆಸಲು ಸಜ್ಜಾಗಿದೆ. ನಮ್ಮ ಸನಾತನ ಧರ್ಮವನ್ನು ಮತ್ತಷ್ಟು ಬಲಪಡಿಸಲು ಮಠಾೀಶರು ಮತ್ತು ಧಾರ್ಮಿಕ ಸದಸ್‍ಗಳಲ್ಲಿ ದಾರ್ಶನಿಕರು ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_171_3.txt b/eesanje/url_47_171_3.txt new file mode 100644 index 0000000000000000000000000000000000000000..c1bf50e49a773e314366a2db82eb84bf50723c28 --- /dev/null +++ b/eesanje/url_47_171_3.txt @@ -0,0 +1,7 @@ +ಹೊಸ ರಾಜಕೀಯ ಪಕ್ಷ ಘೋಷಿಸಿದ ಇಳಯದಳಪತಿ ವಿಜಯ್ +ಚೆನ್ನೈ, ಫೆ.2- ಕಾಲಿವುಡ್‍ನ ಖ್ಯಾತ ನಟ ಇಳಯದಳಪತಿ ವಿಜಯ್ ಅವರು ಫೆಬ್ರವರಿ 2 (ಶುಕ್ರವಾರ)ರಂದು ತಮ್ಮ ರಾಜಕೀಯ ಪಕ್ಷ ಘೋಷಿಸಿದ್ದು, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಉಂಟಾಗಿದೆ. ತಮ್ಮ ರಾಜಕೀಯ ಪಕ್ಷಕ್ಕೆ ವಿಜಯ್ತಮಿಳಗ ವೆಟ್ರಿ ಕಳಂ' ಎಂದು ಹೆಸರಿಟ್ಟಿದ್ದಾರೆ. +ಲೋಕಸಭೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವಾಗಲೇ ಅವರು ತಮ್ಮ ಹೊಸ ಪಕ್ಷ ಘೋಷಿಸಿದ್ದರೂ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸದೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ರಾಜಕೀಯದಲ್ಲಿ ಅದರಲ್ಲೂ ಮುಖ್ಯವಾಗಿ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಲು ಹೊರಟಿರುವ ವಿಜಯ್ ಅವರು, ಪಾರದರ್ಶಕ, ಜಾತ್ಯತೀತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಸುವುದೇ ನನ್ನ ಪರಮ ಗುರಿ ಎಂದು ತಾವು ಬರೆದಿರುವ ಪತ್ರದಲ್ಲಿ ಬಹಿರಂಗಪಡಿಸಿದ್ದಾರೆ. +ಕಳೆದ ವಾರವಷ್ಟೇ ತಮ್ಮ ಅಭಿಮಾನಿ ಸಂಘವಾದ ವಿಜಯ್ ಮಕ್ಕಳ್ ಇಯಕ್ಕಂನೊಂದಿಗೆ ಚೆನ್ನೈನಲ್ಲಿ ಸಭೆ ನಡೆಸಿದ್ದ ದಳಪತಿ ವಿಜಯ್ ಅಂದು ಘೋಷಿಸಿದಂತೆ ಫೆಬ್ರವರಿ 2 (ಶುಕ್ರವಾರ)ರಂದು ತಮ್ಮ ಹೊಸ ಪಕ್ಷವನ್ನು ಘೋಷಿಸಿ ಅದನ್ನು ನೋಂದಣಿ ಮಾಡಲು ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಪ್ರಜೆಗಳು ಬಯಸಿದಂತೆ ಪಾರದರ್ಶಿಕ ಆಡಳಿತ ತರುವ ದೃಷ್ಟಿಯಿಂದ ಇಂದು ನಾವು ಚುನಾವಣಾ ಆಯೋಗದಲ್ಲಿ ತಮಿಳಗ ವೆಟ್ರಿ ಕಳಗಂ ಎಂಬ ಪಕ್ಷದ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸಿದ್ದು, 2026ರ ತಮಿಳುನಾಡು ವಿಧಾನಸಭಾ ಚುನಾವಣೆ ಮೂಲಕ ಅಖಾಡಕ್ಕೆ ಇಳಿಯುತ್ತೇವೆ’ ಎಂದು ವಿಜಯ್ ಹೇಳಿದ್ದಾರೆ. +ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ +`ಸಿನಿಮಾರಂಗದಂತೆ ರಾಜಕೀಯ ನನ್ನ ಮತ್ತೊಂದು ವೃತ್ತಿಯಲ್ಲ. ರಾಜಕೀಯ ಭಯದಲ್ಲಿರುವವರು ಮಾಡುವ ಕೆಲಸ. ಹಲವು ವರ್ಷಗಳಿಂದ ನಾನು ರಾಜಕೀಯಕ್ಕೆ ಬರಲು ಪೂರ್ವತಯಾರಿ ನಡೆಸುತ್ತಿದ್ದೆ. ರಾಜಕೀಯ ನನ್ನ ಬಯಕೆಯಾಗಿದೆಯೇ ವಿನಃ ಹವ್ಯಾಸ ಅಲ್ಲ. ನಾನು ಇದರಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದು ವಿಜಯ್ ತಿಳಿಸಿದ್ದಾರೆ. +ಸದ್ಯಕ್ಕೆ ಈಗ ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸಿದ್ದು ಅಲ್ಲಿಂದ ಹಸಿರುನಿಶಾನೆ ಬಂದ ನಂತರ ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಸಭೆ ನಡೆಸಿ ಪಕ್ಷದ ಚಿನ್ಹೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಬಹಿರಂಗಪಡಿಸುತ್ತೇನೆ ಎಂದು ವಿಜಯ್ ಹೇಳಿದ್ದಾರೆ. \ No newline at end of file diff --git a/eesanje/url_47_171_4.txt b/eesanje/url_47_171_4.txt new file mode 100644 index 0000000000000000000000000000000000000000..f40ee9f4b1ab4bd0e005b65b9b9487a1fce1641e --- /dev/null +++ b/eesanje/url_47_171_4.txt @@ -0,0 +1,11 @@ +ದಕ್ಷಿಣ ಭಾರತ ಕಡೆಗಣನೆಗೆ ಖಂಡನೆ : ಸಂತೋಷ್ ಲಾಡ್ +ಹುಬ್ಬಳ್ಳಿ,ಫೆ.2- ಸಂಸದ ಡಿ.ಕೆ.ಸುರೇಶ್‍ರ ಹೇಳಿಕೆಯನ್ನು ಚರ್ಚೆ ಮಾಡುವುದಾದರೆ ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎಂದು ದಿನಬೆಳಿಗ್ಗೆ ಹೇಳುವ ಬಿಜೆಪಿಯವರ ಹೇಳಿಕೆಗಳು ಚರ್ಚೆಯಾಗಬೇಕಲ್ಲವೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ದಕ್ಷಿಣ ಭಾರತ ದೇಶದ ಬೇಡಿಕೆಗೆ ನನ್ನ ಬೆಂಬಲ ಇಲ್ಲ. ಅದರ ಹೊರತಾಗಿ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪಕ್ಕೆ ಸಂಪೂರ್ಣ ಸಹಮತ ಇದೆ ಎಂದರು. +2014 ರಲ್ಲಿ ಕರ್ನಾಟಕಕ್ಕೆ ದೊರೆಯುತ್ತಿದ್ದ ಆರ್ಥಿಕ ನೆರವನ್ನು ಪ್ರಸ್ತುತ ಮೌಲ್ಯಕ್ಕೆ ಹೋಲಿಸಿದರೆ ಕಡಿಮೆಯಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದು ಪ್ರಶ್ನಾರ್ಹ. ನಮ್ಮ ಹಣವನ್ನು ತೆಗೆದುಕೊಂಡು ಉತ್ತರ ಭಾರತದ ಅಭಿವೃದ್ಧಿಗೆ ಬಳಸುವುದಾದರೆ ನಮ್ಮ ಪರಿಸ್ಥಿತಿ ಏನಾಗಬೇಕು. ಮೊದಲು ನಮ್ಮ ಪಾಲನ್ನು ನಮಗೆ ಕೊಡಿ, ಮಿಕ್ಕಿದ್ದನ್ನು ಉತ್ತರ ಭಾರತಕ್ಕೆ ಕೊಟ್ಟರೆ ನಾವು ಬೇಡ ಎನ್ನುವುದಿಲ್ಲ. ಆದರೆ ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ಕಡೆಗಣಿಸಿ ಉತ್ತರಭಾರತಕ್ಕೆ ಆದ್ಯತೆ ನೀಡುವುದು ಖಂಡನೀಯ ಎಂದರು. +ಮತ್ತೊಂದು ಜೀವ ಬಲಿ ಪಡೆದ ಕಿಲ್ಲರ್ ಬಿಎಂಟಿಸಿ, ವಿದ್ಯಾರ್ಥಿನಿ ಸಾವು +ಡಿ.ಕೆ.ಸುರೇಶ್‍ರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿ ವಿವಾದ ಮಾಡುತ್ತಿದೆ. ಅದೇ ರೀತಿ ಬಿಜೆಪಿಯವರು ದಿನಬೆಳಗಾದರೆ ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‍ರವರು ಬರೆದ ಸಂವಿಧಾನವನ್ನು ಗೌರವಿಸುವುದಿಲ್ಲ, ಅದನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಸಂವಿಧಾನ ಬದಲಾದರೆ ದೇಶ ಬದ ದಂತಲ್ಲವೇ ಎಂದು ಹೇಳಿದರು. +ಅನೇಕ ಬಾರಿ ರಾಜ್ಯದಲ್ಲೂ ಪ್ರತ್ಯೇಕತೆಯ ಕೂಗುಗಳು ಕೇಳಿ ಬಂದಿವೆ. ಏಕೀಕರಣದ ಉದ್ದೇಶ ವನ್ನು ಬದಿಗಿರಿಸಿ ಅಭಿವೃದ್ಧಿಯ ವಿಷಯ ವಾಗಿಯೇ ಆಕ್ರೋಶ ವ್ಯಕ್ತಪಡಿಸುವಾಗ ಪ್ರತ್ಯೇಕ ರಾಜ್ಯವಾಗಬೇಕು ಎನ್ನುತ್ತಾರೆ. ಇದಕ್ಕೆ ಏನು ಹೇಳಬೇಕು ಎಂದರು.ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಗ್ಯಾರಂಟಿ ಯೋಜನೆಗಳ ಕುರಿತು ನೀಡಿರುವ ಹೇಳಿಕೆಗೆ ನನ್ನ ಬೆಂಬಲವಿಲ್ಲ. ಆದರೆ ಕೇಂದ್ರದವರು ನೀಡುತ್ತಿರುವ ಅಕ್ಕಿ ಯಾರ ಯೋಜನೆ ಎಂಬುದನ್ನು ಜನರಿಗೆ ತಿಳಿಸಬೇಕು. +ಮನಮೋಹನಸಿಂಗ್ ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಯೋಜನೆಯನ್ನು ಜಾರಿ ಗೊಳಿಸಿದ್ದರು. ಅಂದಿನಿಂದಲೂ ಬಡವರಿಗೆ ಅಕ್ಕಿ ನೀಡುವುದು ಜಾರಿಯಲ್ಲಿದೆ. ಕಳೆದ ಒಂದು ವರ್ಷದಿಂದ ಇದರ ಬಗ್ಗೆ ಜ್ಞಾನೋದಯ ವಾದಂತೆ ಬಿಜೆಪಿಯವರು 80 ಕೋಟಿ ಜನರಿಗೆ ಉಚಿತ ಅಕ್ಕಿ ನೀಡುತ್ತಿದ್ದೇವೆ ಎಂದು ಪ್ರಚಾರ ಮಾಡಿಕೊಳ್ಳಲಾರಂಭಿಸಿದ್ದಾರೆ ಎಂದು ತಿರುಗೇಟು ನೀಡಿದರು. +ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಜಾರಿಗೊಳಿಸಿದ ಮೇಲೆ ಕೇಂದ್ರ ಸರ್ಕಾರ ಮೋದಿ ಗ್ಯಾರಂಟಿ ಎಂದು ಜಾರಿ ಮಾಡಲು ಮುಂದಾಗಿದೆ. ಅದಕ್ಕೆ ಮೊದಲು ಗ್ಯಾರಂಟಿ ಎಂಬ ಪದವನ್ನೇ ಟೀಕಿಸುತ್ತಿದ್ದರು. ಮೋದಿಯವರ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಹೊಸ ಯೋಜನೆ ತೋರಿಸಲಿ ಎಂದು ಸವಾಲು ಹಾಕಿದರು. +ಮೇಕ್ ಇನ್ ಇಂಡಿಯಾ ಎನ್ನುತ್ತಾರೆ. ಒಂದು ಸೂಜಿಯನ್ನೂ ತಯಾರಿಸಿಲ್ಲ. ವಿದೇಶದಿಂದ ತಂದು ಇಲ್ಲಿ ಪ್ಯಾಕ್ ಮಾಡಿ ನೀಡಲಾಗುತ್ತಿದೆ. ಖೇಲೋ ಇಂಡಿಯಾ ಬಗ್ಗೆ ಮರೆತುಬಿಟ್ಟಿದ್ದಾರೆ. ಸ್ವಚ್ಛಭಾರತ್ ಯೋಜನೆಗೆ ಹಣವನ್ನೇ ಇಟ್ಟಿಲ್ಲ. ವಯೋವೃದ್ಧರಿಗೆ, ವಿಧವೆಯರಿಗೆ, ವಿಶೇಷ ಚೇತನರಿಗೆ ಇಂದಿರಾಗಾಂಧಿ ಕಾಲದಿಂದಲೂ 20 ಅಂಶಗಳ ಕಾರ್ಯಕ್ರಮದಲ್ಲಿ ಮಾಸಾಶನ ನೀಡಲಾಗುತ್ತಿದೆ. ಇಂತಹ ಎಲ್ಲಾ ಯೋಜನೆ ಗಳನ್ನು ಹೆಸರು ಬದಲಿಸಿ ಕೇಂದ್ರ ಸರ್ಕಾರ ತನ್ನ ಸಾಧನೆ ಎಂದು ಹೇಳಿಕೊಳ್ಳುತ್ತಿದೆ ಎಂದು ಆರೋಪಿಸಿದರು. +ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ +ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿಯವರು ಪದೇಪದೇ ಪ್ರಚಾರ ಮಾಡುತ್ತಿದ್ದಾರೆ. ಅಸಂಬದ್ಧವಾದ ಈ ಪ್ರಶ್ನೆಗೆ ಎಷ್ಟು ಬಾರಿ ಉತ್ತರ ನೀಡಲು ಸಾಧ್ಯ. ಸರ್ಕಾರ ಪತನವಾಗುವುದಾದರೆ ಅದು ಆಯಾ ಕಾಲಕ್ಕೆ ನಡೆಯುತ್ತದೆ. ದಯವಿಟ್ಟು ಇಂತಹ ಪ್ರಶ್ನೆಗಳನ್ನ ಪದೇ ಪದೇ ಕೇಳಬೇಡಿ ಎಂದು ಹೇಳಿದರು. \ No newline at end of file diff --git a/eesanje/url_47_171_5.txt b/eesanje/url_47_171_5.txt new file mode 100644 index 0000000000000000000000000000000000000000..dc9bef79c392ea2efc63501ef4bf0392b4074723 --- /dev/null +++ b/eesanje/url_47_171_5.txt @@ -0,0 +1,5 @@ +ದಿಢೀರನೇ ಬೆಲೆ ಏರಿಕೆ, ಮದ್ಯ ಪ್ರಿಯರ ಜೇಬಿಗೆ ಕತ್ತರಿ +ಬೆಂಗಳೂರು, ಫೆ. 2- ದಿಢೀರನೆ ಮತ್ತೆ ಬೆಲೆ ಏರಿಸಿ ಮದ್ಯ ಪ್ರಿಯರ ಜೇಬಿಗೆ ರಾಜ್ಯ ಸರ್ಕಾರ ಕತ್ತರಿಹಾಕಿದೆ.ಅಬಕಾರಿ ಇಲಾಖೆ ಕಳೆದ ರಾತ್ರಿ ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಪ್ರಸ್ತುತ ಇದ್ದದ್ದ ಬೆಲೆಗೆ ಶೇ 10 ರಷ್ಟು ಹೆಚ್ಚಿಸಿದೆ. ಇದರಿಂದಾಗಿ, ಬಿಯರ್ ಬಾಟಲ್ ಬೆಲೆ 10 ರಿಂದ 15 ರೂಪಾಯಿ ಹೆಚ್ಚಾಗಿದೆ. ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ. +ಇದರೊಂದಿಗೆ, ಕಳೆದ 7 ತಿಂಗಳ ಅವಧಿಯಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾದಂತಾಗಿದೆ ಆಗಿನಿಂದ ಒಟ್ಟು 40 ರೂಹೆಚ್ಚಗಿದೆ. ಸರ್ಕಾರ ಶೇ 20ರಷ್ಟು ಸುಂಕ ಹೆಚ್ಚಿಸಿದರೆ ಉತ್ಪಾದನಾ ಕಂಪನಿ ನಿರ್ವಹಣಾ ಹಾಗು ಇತರ ಕಾರಣ ನೀಡಿ ಪ್ರತಿ ಬಾಟಲ್ ಮೇಲೆ 10 ರೂ. ಏರಿಸಿತ್ತು. ಇದೀಗ ಮತ್ತೆ ಬಿಯರ್ ದರ ಹೆಚ್ಚಳ ಮಾಡಿದೆ. ಗ್ಯಾರೆಂಟಿ ಯೋಜನೆಗೆ ಹಣ ಸರಿ್ದೂಗಿಸಲು ಅಬಕಾರಿ ಇಲಾಖೆಯಿಂದ 36 ಸಾವಿರ ಕೋಟಿ ಆದಾಯ ಸಂಗ್ರಹಕ್ಕೆ ಗುರಿ ನೀಡಿದೆ ಇದರಿಂದಾಗಿ ಪದೆಪದೇ ಮದ್ಯದ ದರ ಏರಿಸಲಾಗಿದೆ ಇಸರಿಂದ ವ್ಯಾಪಾರಕ್ಕೂ ಹೊಡೆತ ಬೀಳುತ್ತಿದೆ ಎಂದು ಮಾರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ. +ಬೆಂಗಳೂರು : ಮಗನಿಂದಲೇ ತಾಯಿ ಕೊಲೆ +ಮೂಲಗಳ ಪ್ರಕಾರ 10 ತಿಂಗಳಲ್ಲಿ 27 ಸಾವಿರ ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಗುರಿ ತಲುಪಲು 9 ಸಾವಿರ ಕೋಟಿ ಸಂಗ್ರಹವಾಗಬೇಕಿದೆ. ಬಿಯರ್ ಮಾರಾಟದಿಂದ ಸರ್ಕಾರಕ್ಕೆ ಬರುವ ಆದಾಯ ಬಹಳ ಕಡಿಮೆ. ಹೀಗಾಗಿ ದರ ಏರಿಕೆ ಮಾಡಿ ಖಜಾನೆ ತುಂಬಿಸಿಕೊಳ್ಳಲು ಚಿಂತನೆ ಮಾಡಿದೆ. ಈ ಮೂಲಕ ಮದ್ಯ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಬಡವರು ಹೆಚ್ಚಾಗಿ ಕುಡಿಯುವ ಮೂರು ಹಾಟ್ ಫೇವರೆಟ್ ಬ್ರ್ಯಾಂಡ್‍ಗಳ ಮದ್ಯದ ದರವನ್ನು ಕಳೆದ ತಿಂಗಳಷ್ಟೇ ಮದ್ಯ ಮಾರಾಟ ಕಂಪನಿಗಳು ಹೆಚ್ಚಳ ಮಾಡಿದ್ದವು. \ No newline at end of file diff --git a/eesanje/url_47_171_6.txt b/eesanje/url_47_171_6.txt new file mode 100644 index 0000000000000000000000000000000000000000..7f194ddae526801a69a9c792fff5d21808d715a1 --- /dev/null +++ b/eesanje/url_47_171_6.txt @@ -0,0 +1,7 @@ +ಫೆ.29ರ ನಂತರವೂ ಕಾರ್ಯ ನಿರ್ವಹಿಸಲಿದೆ ಪೇಟಿಎಂ +ನವದೆಹಲಿ, ಫೆ 2 (ಪಿಟಿಐ) ಡಿಜಿಟಲ್ ಪಾವತಿ ಮತ್ತು ಸೇವೆಗಳ ಅಪ್ಲಿಕೇಶನ್ ಪೇಟಿಎಂ ಫೆಬ್ರವರಿ 29 ರ ನಂತರವೂ ಎಂದಿನಂತೆ ಕಾರ್ಯನಿರ್ವಹಿಸುತ್ತದೆ ಎಂದು ಅದರ ಸಿಇಒ ವಿಜಯ್ ಶೇಖರ್ ಶರ್ಮಾ ಹೇಳಿದ್ದಾರೆ. ಪೇಟಿಎಂ ಬ್ರ್ಯಾಂಡ್ ಅನ್ನು ಹೊಂದಿರುವ ಒನ್97 ಕಮ್ಯುನಿಕೇಷನ್ಸ್ ಲಿಮಿಟೆಡ್‍ನ ಸ್ಥಾಪಕ ಮತ್ತು ಸಿಇಒ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಕಂಪನಿಯು ಸಂಪೂರ್ಣ ಅನುಸರಣೆಯಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ. +ಪ್ರತಿ ಪೇಟ್‍ಮರ್‍ಗೆ, ನಿಮ್ಮ ನೆಚ್ಚಿನ ಅಪ್ಲಿಕೇಶನ್ ಕಾರ್ಯನಿರ್ವಹಿಸುತ್ತಿದೆ, ಎಂದಿನಂತೆ ಫೆಬ್ರವರಿ 29 ರ ನಂತರವೂ ಕಾರ್ಯನಿರ್ವಹಿಸುತ್ತದೆ ಎಂದು ಶರ್ಮಾ ಹೇಳಿದ್ದಾರೆ. ಫೆಬ್ರವರಿ 29, 2024 ರ ನಂತರ ಯಾವುದೇ ಗ್ರಾಹಕ ಖಾತೆ, ಪ್ರಿಪೇಯ್ಡ ಉಪಕರಣಗಳು, ವ್ಯಾಲೆಟ್‍ಗಳು ಮತ್ತು ಫಾಸ್ಟ್‍ಟ್ಯಾಗ್‍ಗಳಲ್ಲಿ ಠೇವಣಿ ಅಥವಾ ಟಾಪ್-ಅಪ್‍ಗಳನ್ನು ಸ್ವೀಕರಿಸುವುದರಿಂದ ಪೇಟಿಎಂನ್ನು ಆರ್‍ಬಿಐ ನಿರ್ಬಂಧಿಸಿದೆ. +ನಿಮ್ಮ ನಿರಂತರ ಬೆಂಬಲಕ್ಕಾಗಿ ನಾನು ಪ್ರತಿ ಪೇಟಿಎಂ ತಂಡದ ಸದಸ್ಯರೊಂದಿಗೆ ನಿಮ್ಮನ್ನು ವಂದಿಸುತ್ತೇನೆ. ಪ್ರತಿ ಸವಾಲಿಗೆ, ಒಂದು ಪರಿಹಾರವಿದೆ ಮತ್ತು ನಮ್ಮ ರಾಷ್ಟ್ರವನ್ನು ಪೂರ್ಣ ಅನುಸರಣೆಯಲ್ಲಿ ನಾವು ಪ್ರಾಮಾಣಿಕವಾಗಿ ಬದ್ಧರಾಗಿದ್ದೇವೆ. ಭಾರತವು ಪಾವತಿ ಆವಿಷ್ಕಾರ ಮತ್ತು ಹಣಕಾಸು ಸೇವೆಗಳಲ್ಲಿ ಸೇರ್ಪಡೆಯಲ್ಲಿ ಜಾಗತಿಕ ಪುರಸ್ಕಾರಗಳನ್ನು ಗೆಲ್ಲುತ್ತಲೇ ಇರುತ್ತದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ. +ರಂಗೇರಿದ ರಾಜ್ಯಸಭೆ : ಜೆಡಿಎಸ್-ಬಿಜೆಪಿ ಮೈತ್ರಿಯ 5ನೇ ಅಭ್ಯರ್ಥಿ ಕಣಕ್ಕೆ +ಪೇಟಿಎಂ ಟಾಪ್ ಮ್ಯಾನೇಜ್‍ಮೆಂಟ್ ಗಳಿಕೆ ಕರೆಯಲ್ಲಿ ಅವರು ಪಿಪಿಬಿಎಲ, ವ್ಯಾಲೆಟ್, ಫಾಸ್ಟ್‍ಟ್ಯಾಗ್ ಇತ್ಯಾದಿ ಬಳಕೆದಾರರಿಗೆ ಇತರ ಬ್ಯಾಂಕ್‍ಗಳೊಂದಿಗೆ ವಲಸೆ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಪ್ರತ್ಯೇಕವಾಗಿ, ಕಂಪನಿಯು ತನ್ನ ಆಫ್‍ಲೈನ್ ವ್ಯಾಪಾರಿಗಳ ನೆಟ್‍ವರ್ಕ್ ನೀಡುವಿಕೆ ಮತ್ತು ಸೌಂಡ್‍ಬಾಕ್ಸ, ಉಈಇ, ಕ್ಕಿ ನಂತಹ ಸಾಧನ ವ್ಯವಹಾರವು ತನ್ನ ಸಹವರ್ತಿ ಬ್ಯಾಂಕ್‍ಗೆ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಿಂದ ಪ್ರಭಾವಿತವಾಗಿಲ್ಲ ಎಂದು ತಿಳಿಸಿದೆ. +ಆರ್‍ಬಿಐ ಆದೇಶವು ಅವರ ಉಳಿತಾಯ ಖಾತೆಗಳು, ವ್ಯಾಲೆಟ್‍ಗಳು, ಫಾಸ್ಟ್‍ಟ್ಯಾಗ್‍ಗಳು ಮತ್ತು ಎನ್‍ಸಿಎಂಸಿ (ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ) ಖಾತೆಗಳಲ್ಲಿನ ಬಳಕೆದಾರರ ಠೇವಣಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಅವರು ಅಸ್ತಿತ್ವದಲ್ಲಿರುವ ಬ್ಯಾಲೆನ್ಸ್‍ಗಳನ್ನು ಬಳಸುವುದನ್ನು ಮುಂದುವರಿಸಬಹುದು ಎಂದು ಪೇಟಿಎಂ ಹೇಳಿದೆ. \ No newline at end of file diff --git a/eesanje/url_47_171_7.txt b/eesanje/url_47_171_7.txt new file mode 100644 index 0000000000000000000000000000000000000000..7de78fdce7de04c45f04beaaa69dd677f64f7591 --- /dev/null +++ b/eesanje/url_47_171_7.txt @@ -0,0 +1,7 @@ +ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ನಾಯಕ ಚಿನ್ಮಯಾನಂದ್ ಖುಲಾಸೆ +ಅಲಹಾಬಾದ್,ಫೆ.2-ಕಳೆದ 2011ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಚಿನ್ಮಯಾನಂದ್ ಅವರನ್ನು ಉತ್ತರ ಪ್ರದೇಶ ಜನಪ್ರತಿನಿದಿಗಳ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪ ಮಾಡಿದ್ದ ಮಹಿಳೆ ದ್ವೇಷದಿಂದ ಚಿನ್ಮಯಾನಂದ ವಿರುದ್ಧ ಸುಳ್ಳು ದೂರು ನೀಡಿ ಸುಳ್ಳು ಸಾಕ್ಷ್ಯ ನೀಡಿದ ಕಾರಣ ಆಕೆಯ ಮೇಲೆ ಪ್ರಕರಣ ದಾಖಲಿಸುವಂತೆಯೂ ನ್ಯಾಯಾಲಯ ಆದೇಶಿಸಿದೆ. +ಮಾಜಿ ಕೇಂದ್ರ ಸಚಿವರು ಆಶ್ರಮದಲ್ಲಿದ್ದಾಗ ಮಹಿಳೆಯೊಬ್ಬರು ತನಗೆ ಮದ್ಯ ಕುಡಿಸಿ ಅತ್ಯಾಚಾರವೆಸಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿತ್ತು ತನ್ನ ಮೇಲೆ ಅತ್ಯಾಚಾರ ಮಾಡುವಾಗ ಅಶ್ಲೀಲ ವೀಡಿಯೊಗಳು ಮತ್ತು ಫೋಟೋಗಳನ್ನು ರೆಕಾರ್ಡ್ ಮಾಡಿದ್ದಾರೆ, ತಾನು ಎರಡು ಬಾರಿಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿತ್ತು. +ಇದು ಭಾರಿ ಸುದ್ದಿಯಾಗಿತ್ತು ಘಟನೆ ಸಂಭಂದ ಬಂಧನಕ್ಕೆ ಒಳಗಗಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಚಿನ್ಮಯಾನಂದ ಅವರನ್ನು ಇಂದು ಖುಲಾಸೆಗೊಳಿಸಲಾಗಿದೆ. + : ನಟಿ ಪೂನಂ ಪಾಂಡೆ ಇನ್ನಿಲ್ಲ..! +2018 ರಲ್ಲಿ, ಯುಪಿ ಸರ್ಕಾರವು ಪ್ರಕರಣವನ್ನು ಹಿಂತೆಗೆದುಕೊಂಡಿತು ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ಕಡೆಯಿಂದ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಿತು. ಆದರೆ, ಜಿಲ್ಲಾ ನ್ಯಾಯಾಲಯ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು, ನಂತರ ಅದನ್ನು ಹೈಕೋರ್ಟ್ ಎತ್ತಿಹಿಡಿಯಿತು.ನಂತರ, ಚಿನ್ಮಯಾನಂದ ಅವರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದರು ಆದರೆ ಯಾವುದೇ ಪರಿಹಾರವನ್ನು ಪಡೆಯುವಲ್ಲಿ ವಿಫಲರಾದರು. +ಕಳೆದ 2022 ರಲ್ಲಿ, ಚಿನ್ಮಯಾನಂದ ಅವರು ಅಲಹಾಬಾದ್ ಹೈಕೋರ್ಟ್‍ನಿಂದ ಫೆಬ್ರವರಿ 6, 2023 ರವರೆಗೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದರು. ಮಹಿಳೆ ಮತ್ತು ರಾಜ್ಯ ಸರ್ಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಸ್ವೀಕರಿಸಿದ ನಂತರ ಜಾಮೀನನ್ನು ಮತ್ತಷ್ಟು ವಿಸ್ತರಿಸಲಾಗಿತ್ತು. \ No newline at end of file diff --git a/eesanje/url_47_171_8.txt b/eesanje/url_47_171_8.txt new file mode 100644 index 0000000000000000000000000000000000000000..6f8f2cb61c756a017416943d0f36d2b9fd6a4e28 --- /dev/null +++ b/eesanje/url_47_171_8.txt @@ -0,0 +1,14 @@ +ಸಂಸತ್‍ನ ಉಭಯ ಸದನಗಳಲ್ಲೂ ಡಿ.ಕೆ.ಸುರೇಶ್ ದೇಶ ಒಡೆಯುವ ಹೇಳಿಕೆ ಪ್ರತಿದ್ವನಿ +ನವದೆಹಲಿ,ಫೆ.2-ಕೇಂದ್ರದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದರಿಂದ ಪ್ರತ್ಯೇಕ ರಾಷ್ಟ್ರ ಬೇಡಿಕೆಗೆ ಹಕ್ಕು ಮಂಡಿಸಬೇಕಾಗುತ್ತದೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆ ಸಂಸತ್‍ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿದೆ. ಡಿ.ಕೆ.ಸುರೇಶ್ ವಿರುದ್ದ ಕಾಂಗ್ರೆಸ್ ಪಕ್ಷದ ನಾಯಕರು ಶಿಸ್ತು ಕ್ರಮ ಜರುಗಿಸಬೇಕೆಂದು ಸಂಸತ್‍ನ ಉಭಯ ಸದನಗಳಾದ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಬಿಜೆಪಿ ಒತ್ತಾಯ ಮಾಡಿತು. +ಇದರಿಂದ ಎರಡೂ ಸದನಗಳಲ್ಲಿ ಕೆಲಕಾಲ ಗದ್ದಲ, ಕೋಲಾಹಲ, ಮಾತಿನ ಚಕಮಕಿ ನಡೆಯಿತು. ಮತ್ತೊಂದು ಕಡೆ ಡಿ.ಕೆ.ಸುರೇಶ್ ಹೇಳಿಕೆಯನ್ನು ಸ್ವತಃ ಎಐಸಿಸಿ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರೇ ತೀವ್ರವಾಗಿ ವಿರೋಸಿರುವುದರಿಂದ ಕೈ ನಾಯಕರು ಮುಜುಗರಕ್ಕೆ ಸಿಲುಕುವಂತಾಗಿದೆ. +ಬೆಳಗ್ಗೆ ಸಂಸತ್‍ನ ಕಲಾಪ ಆರಂಭವಾಗುತ್ತಿದಂತೆ ರಾಜ್ಯಸಭೆಯಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ವಿಷಯ ಪ್ರಸ್ತಾಪಿಸಿ ಪ್ರತ್ಯೇಕ ರಾಷ್ಟ್ರ ಬೇಡಿಕೆ ಇಟ್ಟಿರುವ ನಿಮ್ಮ ಸಂಸದರ ಬಗ್ಗೆ ಕ್ರಮ ಕೈಗೊಳ್ಳುತ್ತೀರ ಎಂದು ರಾಜಸಭೆಯ ಪ್ರತಿಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶ್ನಿಸಿದರು. +ಭಾರತವನ್ನು ಅನೇಕರು ತ್ಯಾಗ, ಬಲಿದಾನ ಮೂಲಕ ಕಟ್ಟಿದ್ದಾರೆ. ಎಲ್ಲಾ ರಾಜ್ಯಗಳಿಗೂ ಅನುದಾನ ಕೇಳಲು ಒಕ್ಕೂಟ ವ್ಯವಸ್ಥೆಯಲ್ಲಿ ಅವಕಾಶವಿದೆ. ಆದರೆ ಅದನ್ನೇ ನೆಪವಾಗಿಟ್ಟುಕೊಂಡು ದೇಶ ವಿಭಜನೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. +ಡಿ.ಕೆ.ಸುರೇಶ್ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಬೆಂಬಲವಿದೆಯೇ? ನೀವು ದೇಶ ವಿಭಜನೆ ಹೇಳಿಕೆಯನ್ನು ಬೆಂಬಲಿಸುತ್ತೀರಾ? ಇಲ್ಲವಾದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದರ ಜೊತೆಗೆ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. +ಈ ಹಂತದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲಹೊತ್ತು ಮಾತಿನ ಚಕಮಕಿ ನಡೆಯಿತು. ಪಿಯೂಷ್ ಗೋಯಲ್ ಹೇಳಿಕೆಗೆ ಕಾಂಗ್ರೆಸ್‍ನ ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ,ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂ ಮತ್ತು ರಾಜೀವ್ ಗಾಂ ತ್ಯಾಗ ಬಲಿದಾನ ಮಾಡಿದ್ದಾರೆ. ಆದಾಗ್ಯೂ, ಲೋಕಸಭಾ ಸಂಸದ (ಡಿ.ಕೆ.ಸುರೇಶ್) ಹಾಗೆ ಹೇಳಿಲ್ಲ ಎಂದು ಹೇಳಿದ್ದು, ಅದನ್ನು ಚರ್ಚಿಸಬಾರದು ಎಂದು ಮನವಿ ಮಾಡಿದರು. +ಅಖಂಡ ಭಾರತವೇ ನಮ್ಮ ಪರಿಕಲ್ಪನೆ : ಗೃಹಸಚಿವ ಪರಮೇಶ್ವರ್ +ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು. +ಲೋಕಸಭೆಯಲ್ಲಿ ಕೋಲಾಹಲ:ಇನ್ನೊಂದೆಡೆ ಸಂಸತ್‍ನ ಕೆಳಮನೆಯಾದ ಲೋಕಸಭೆಯಲ್ಲೂ ಡಿ.ಕೆ.ಸುರೇಶ್ ಹೇಳಿಕೆ ಕೋಲಾಹಲ ಸೃಷ್ಟಿಸಿತು. ಕಲಾಪ ಆರಂಭವಾಗುತ್ತಿದ್ದಂತೆ ಡಿ.ಕೆ.ಸುರೇಶ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಷಿ ಸೇರಿದಂತೆ ಮತ್ತಿತರರು ತಕ್ಷಣವೇ ದೇಶದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. +ವಿಷಯ ಪ್ರಸ್ತಾಪಿಸಿದ ಸಚಿವ ಪ್ರಲ್ಹಾದ್ ಜೋಶಿ, ದೇಶವಿಭಜನೆ ಬಗ್ಗೆ ಮಾತನಾಡಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಅನುದಾನ ನೀಡುತ್ತಿಲ್ಲ ಎಂಬ ಸುಳ್ಳು ಆರೋಪ ಮಾಡಿ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ದೇಶ ವಿಭಜನೆ ಮಾಡುವ ಕಾಂಗ್ರೆಸ್ನ ಪ್ರಯತ್ನ ಇನ್ನೂ ಮುಂದುವರೆದಿದೆ. ಈ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ನೀಡಬೇಕು ಹಾಗೂ ಕ್ಷಮೆ ಕೇಳಬೇಕು. ಇದು ಸಂವಿಧಾನಕ್ಕೆ ಮಾಡಿದ ಘೋರ ಅಪಮಾನ. ಅಷ್ಟೆ ಅಲ್ಲದೆ ತನಿಖೆಯನ್ನು ನೈತಿಕ ಸಮಿತಿಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. +ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಡಿ.ಕೆ.ಸುರೇಶ್ ಹೇಳಿಕೆಯನ್ನು ಖಂಡಿಸಿ, ದೇಶದ ಏಕತೆ, ಸಾರ್ವಭೌಮತ್ವದ ಬಗ್ಗೆ ಯಾರೂ ಮಾತನಾಡಬಾರದು. ಸಂಸದ ಡಿ.ಕೆ.ಸುರೇಶ್ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ತರಾಟೆಗೆ ತೆಗೆದುಕೊಂಡರು.ಕಲ್ಲು ಹೊಡೆದುಕೊಂಡು ಇದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ. ಇಲ್ಲಿ ಬಡ ಜನರ ಲೂಟಿ ಮಾಡಿಕೊಂಡು ಸಾಕ್ಷಿಗುಡ್ಡೆ ಮಾಡಿದ್ದಾರೆ. ಅಂಥವರನ್ನು ತೆಗೆದುಕೊಂಡು ಹೋಗಿ ದೇಶ ಕಟ್ಟು ಎಂದು ಕಳುಹಿಸಿದ್ರೆ ಕಟ್ತಾರಾ? ಅವರ ಸಾಮ್ರಾಜ್ಯ ಕಟ್ಟುಕೊಳ್ಳುತ್ತಾರೆರೆ ಅಷ್ಟೇ. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡ ಡಿ.ಕೆ.ಸುರೇಶ್ ಹೇಳಿಕೆ ಬಗ್ಗೆ ಲೇವಡಿ ಮಾಡಿದ್ದಾರೆ. +ಏನಿದು ವಿವಾದ:ಕೇಂದ್ರ ಬಜೆಟ್ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ಡಿ.ಕೆ.ಸುರೇಶ್, ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಹೊಸತೇನನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರವು ದಕ್ಷಿಣ ಭಾರತದ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆಯೇ ಅನ್ಯಾಯ ಆಗುತ್ತಿದ್ದರೆ ನಾವು ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ. ದಕ್ಷಿಣ ಭಾರತದವರು ಧ್ವನಿ ಎತ್ತಬೇಕಾಗುತ್ತದೆ ಎಂದು ಹೇಳಿದ್ದರು. +ಬಜೆಟ್‍ನಲ್ಲಿ ಹೊಸತೇನು ಇಲ್ಲ. ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದಂತವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ಪ್ರತ್ಯೇಕ ದೇಶ ಕೇಳಬೇಕಾಗುತ್ತದೆ ಎಂದಿದ್ದರು. \ No newline at end of file diff --git a/eesanje/url_47_171_9.txt b/eesanje/url_47_171_9.txt new file mode 100644 index 0000000000000000000000000000000000000000..9b4c7699980980d618f4fece0dfdf050370762ec --- /dev/null +++ b/eesanje/url_47_171_9.txt @@ -0,0 +1,7 @@ +ಬಾಲಕಿಯ ಶಿರಚ್ಛೇದ : ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಉದ್ವಿಗ್ನ ವಾತಾವರಣ +ಕೋಲ್ಕತ್ತಾ,ಫೆ.2- ಸಂಬಂಧಿಯೊಬ್ಬ ಬಾಲಕಿಯ(11) ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಘಟನೆ ಖಂಡಿಸಿ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿಂದೆ ಹಲವು ಬಾರಿ ಬಾಲಕಿ ಸಾರ್ವಜನಿಕವಾಗಿ ಅವಮಾನಿಸಿದ್ದರಿಂದ ನಾನು ಆಕೆಯನ್ನು ಕೊಂದಿರುವುದಾಗಿ ಆರೋಪಿ ಚಿಕ್ಕಪ್ಪ ಪೊಲೀಸರಿಗೆ ತಿಳಿಸಿದ್ದಾನೆ. +ಜನವರಿ 29ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮುಂಡ ಮತ್ತು ರುಂಡ ಮಾಲ್ಡಾ ನಗರದ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿವೆ. ಹುಡುಗಿಯ 27 ವರ್ಷದ ಚಿಕ್ಕಪ್ಪನನ್ನು ಸಿಸಿಟಿವಿ ಫೂಟೇಜ್ ಮೂಲಕ ಪತ್ತೆಹಚ್ಚಲಾಗಿದೆ. ಹುಡುಗಿ ಕಾಣೆಯಾಗುವ ಮೊದಲು ಆತ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದ. +ಆರೋಪಿ ಮೊದಲಿಗೆ ಪೊಲೀಸರನ್ನು ದಾರಿತಪ್ಪಿಸಲು ಪ್ರಯತ್ನಿಸಿದ. ಆದರೆ ನಂತರ ಆಕೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾನೆ. ಆತನನ್ನು ಬಂಧಿಸಿ 12 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. + : ನಟಿ ಪೂನಂ ಪಾಂಡೆ ಇನ್ನಿಲ್ಲ..! +ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಅಮಾನುಷವಾಗಿ ಕೊಲೆ ಮಾಡಿರುವ ಬಾಲಕಿಯ ಚಿಕ್ಕಪ್ಪನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. +ಘಟನೆಯನ್ನು ಖಂಡಿಸಿ ಬಿಜೆಪಿ, ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಪ್ರತಿಭಟನಾ ರ್ಯಾಲಿಗಳು ಮತ್ತು ಮೌನ ಮೆರವಣಿಗೆ ನಡೆಸಿದ್ದವು. \ No newline at end of file diff --git a/eesanje/url_47_172_1.txt b/eesanje/url_47_172_1.txt new file mode 100644 index 0000000000000000000000000000000000000000..0f958a7d726102920bc89eaeeaf48b3e08a0b930 --- /dev/null +++ b/eesanje/url_47_172_1.txt @@ -0,0 +1,6 @@ +ಸೊರೆನ್ ಬಂಧನ ವಿಚಾರದಲ್ಲಿ ಮಧ್ಯ ಪ್ರವೇಶಿಸದಿರಲು ಸುಪ್ರೀಂ ತೀರ್ಮಾನ +ನವದೆಹಲಿ, ಫೆ.2 (ಪಿಟಿಐ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‍ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಮನವಿಯಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. +ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಎಂಎಂ ಸುಂದ್ರೇಶ್ ಮತ್ತು ಬೇಲಾ ಎಂ ತ್ರಿವೇದಿ ಅವರಿದ್ದ ಪೀಠವು ಸೊರೆನ್ ಪರ ಹಾಜರಿದ್ದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಸಿಂಘ್ವಿ ಅವರಿಗೆ ಪರಿಹಾರಕ್ಕಾಗಿ ಹೈಕೋರ್ಟ್ ಮೊರೆ ಹೋಗುವಂತೆ ಸೂಚಿಸಿದೆ. +ತಮ್ಮ ಸನ್ನಿಹಿತ ಬಂಧನದ ಹಿನ್ನೆಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಗಿದ್ದ ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಮನವಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಸಂಯೋಜಿತ ಪಿತೂರಿಯ ಭಾಗವಾಗಿ ಬಂಧಿಸಿದೆ ಎಂದು ಆರೋಪಿಸಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವುದರಿಂದ ಕೇಂದ್ರ ಸರ್ಕಾರ ತನ್ನ ಬಂಧನವನ್ನು ಅನಧಿಕೃತ, ಅನಿಯಂತ್ರಿತ ಮತ್ತು ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಘೋಷಿಸುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಮನವಿಯಲ್ಲಿ ಸೊರೆನ್ ಒತ್ತಾಯಿಸಿದ್ದರು. +ಮತ್ತೆ ಇಡಿ ವಿಚಾರಣೆಗೆ ಗೈರಾದ ಕೇಜ್ರಿವಾಲ್ +ಜ. 31 ರಂದು ಸೋರೆನ್ ಅವರನ್ನು ಬಂಧಿಸಲಾಗಿದೆ. ಮನೀ ಲಾಂಡರಿಂಗ್ ಪ್ರಕರಣದಲ್ಲಿ ಅಕ್ರಮ ಭೂಮಿಯನ್ನು ಹೊಂದಿರುವ ಮತ್ತು ಭೂ ಮಾಫಿಯಾ ಜೊತೆಗಿನ ಸಂಬಂಧವನ್ನು ಸೊರೆನ್ ವಿರುದ್ಧ ಹೊರಿಸಲಾಗಿದೆ. ರಾಂಚಿಯ ವಿಶೇಷ ಪಿಎಂಎಲ್‍ಎ ನ್ಯಾಯಾಲಯ ಸೊರೆನ್ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. \ No newline at end of file diff --git a/eesanje/url_47_172_10.txt b/eesanje/url_47_172_10.txt new file mode 100644 index 0000000000000000000000000000000000000000..59334e05be8a57774063f5d1a22354b5bb74874c --- /dev/null +++ b/eesanje/url_47_172_10.txt @@ -0,0 +1,6 @@ +ತಾರಕಕ್ಕೇರಿದ ಎಎಪಿ-ಬಿಜೆಪಿ ನಡುವಿನ ಸಮರ +ನವದೆಹಲಿ,ಫೆ.2-ಆಮ್ ಆದ್ಮಿ ಪಕ್ಷ ಹಾಗು ಬಿಜೆಪಿ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚಂಡೀಗಢ ಮೇಯರ್ ಚುನಾವಣೆ ಅಕ್ರಮವಾಗಿ ನಡೆದಿದೆ ಎಂದು ಎಎಪಿ ಇಂದು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಅರವಿಂದ್ ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಎಎಪಿ ಕೇಂದ್ರ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. +ದೆಹಲಿಯ ಕೇಂದ್ರ ಪ್ರದೇಶದಲ್ಲಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿಎರಡೂ ಪಕ್ಷದ ಕಚೇರಿ ಇದ್ದು ಭಧ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾನೂನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದು ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಲಿದ್ದು, ಬದಲಿ ಮಾರ್ಗ ಮಾಡಲಾಗಿತ್ತು. +ಈಗಾಗಲೆ ಜಾರಿ ನಿರ್ದೇಶನಾಲಯ ನೀಡಿರುವ 5 ಸಮನ್ಸ್‍ಗಳಿಗೆ ಕ್ಯಾರೆ ಎನ್ನದ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. +ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ +ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‍ದೇವ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್‍ವೀರ್ ಸಿಂಗ್ ಬಿಧುರಿ ಮತ್ತು ಇತರರು ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ ಒಟ್ಟಾರೆ ದೆಹಲಿಯಲ್ಲಿ ಪ್ರತಿಭಟನಾ ಕಾವು ಜೋರಾಗಿತ್ತು. \ No newline at end of file diff --git a/eesanje/url_47_172_11.txt b/eesanje/url_47_172_11.txt new file mode 100644 index 0000000000000000000000000000000000000000..47a592918ee464f63fb5224e622a657c0e156688 --- /dev/null +++ b/eesanje/url_47_172_11.txt @@ -0,0 +1,6 @@ +ಸಿಬಿಐಗೆ 928 ಕೋಟಿ ನಿಗದಿ +ನವದೆಹಲಿ, ಫೆ 1 (ಪಿಟಿಐ) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ 2024-25 ರಲ್ಲಿ ಕೇಂದ್ರ ತನಿಖಾ ದಳಕ್ಕೆ ಕೇಂದ್ರವು 928.46 ಕೋಟಿ ರೂಪಾಯಿಗಳನ್ನು ನಿಗದಿಪಡಿಸಿದೆ ಎಂದು ತಿಳಿಸಿದ್ದಾರೆ. 2023-24ರ ಬಜೆಟ್ ಅಂದಾಜುಗಳಲ್ಲಿ ತನ್ನ ವ್ಯವಹಾರಗಳನ್ನು ನಿರ್ವಹಿಸಲು ಏಜೆನ್ಸಿಯು 946.51 ಕೋಟಿ ರೂಪಾಯಿಗಳನ್ನು ಪಡೆದಿತ್ತು, ನಂತರ ಅದನ್ನು ಪರಿಷ್ಕøತ ಅಂದಾಜುಗಳಲ್ಲಿ 968.86 ಕೋಟಿಗೆ ಹೆಚ್ಚಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ. +ಈ ನಿಬಂಧನೆಯು ಸಾರ್ವಜನಿಕ ಸೇವಕರು, ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಮತ್ತು ಇತರ ಗಂಭೀರ ಅಪರಾಧಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖೆ ಮತ್ತು ಕಾನೂನು ಕ್ರಮವನ್ನು ವಹಿಸಿಕೊಡುವ ಕೇಂದ್ರೀಯ ತನಿಖಾ ದಳದ ಸ್ಥಾಪನೆ-ಸಂಬಂಧಿತ ವೆಚ್ಚಕ್ಕಾಗಿ ಎಂದು ಅದು ಹೇಳಿದೆ. +ಭಾರತದ ಭವಿಷ್ಯ ರೂಪಿಸುವ ಬಜೆಟ್ : ಪ್ರಧಾನಿ ಮೋದಿ +ಸಿಬಿಐನ ತರಬೇತಿ ಕೇಂದ್ರಗಳ ಆಧುನೀಕರಣ, ತಾಂತ್ರಿಕ ಮತ್ತು ಫೋರೆನ್ಸಿಕ್ ಬೆಂಬಲ ಘಟಕಗಳ ಸ್ಥಾಪನೆ, ಸಮಗ್ರ ಆಧುನೀಕರಣ ಮತ್ತು ಭೂಮಿ ಖರೀದಿ ಮತ್ತು ಏಜೆನ್ಸಿಗೆ ಕಚೇರಿ ಮತ್ತು ನಿವಾಸ ಕಟ್ಟಡಗಳ ನಿರ್ಮಾಣದಂತಹ ವಿವಿಧ ಯೋಜನೆಗಳಿಗೆ ನಿಬಂಧನೆಯನ್ನು ಹಂಚಿಕೆ ಒಳಗೊಂಡಿದೆ ಎಂದು ದಾಖಲೆ ಹೇಳಿದೆ. +ದೇಶದ ಪ್ರಧಾನ ತನಿಖಾ ಸಂಸ್ಥೆಯು ಬ್ಯಾಂಕ್ ಸಾಲ ವಂಚನೆಗಳು ಮತ್ತು ವಿದೇಶದಲ್ಲಿ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ಹಸ್ತಾಂತರ ಪ್ರಕರಣಗಳಂತಹ ಸಾಂಪ್ರದಾಯಿಕ ಅಪರಾಧಗಳ ಜೊತೆಗೆ ಕೃತಕ ಬುದ್ಧಿಮತ್ತೆ, ಕ್ರಿಪ್ರೋಕರೆನ್ಸಿ ಮತ್ತು ಡಾಕ್ರ್ನೆಟ್ ಪ್ರಾಬಲ್ಯ ಹೊಂದಿರುವ ಉದಯೋನ್ಮುಖ ಅಪರಾಧ ದೃಶ್ಯಗಳನ್ನು ನಿಭಾಯಿಸಲು ತೊಡಗಿದೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_47_172_12.txt b/eesanje/url_47_172_12.txt new file mode 100644 index 0000000000000000000000000000000000000000..9658354bfe8f26ad77c0f6b9f169db7302c11bef --- /dev/null +++ b/eesanje/url_47_172_12.txt @@ -0,0 +1,6 @@ +ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ +ನವದೆಹಲಿ, ಫೆ.1- ಈ ಬಾರಿಯ ಬಜೆಟ್‍ನಲ್ಲಿ ರಕ್ಷಣಾ ವಲಯಕ್ಕೆ 11 ಲಕ್ಷ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಇದು ಕಳೆದ ಬಾರಿಗಿಂತ ಶೇ.11ರಷ್ಟು ಹೆಚ್ಚಾಗಿದೆ. ಇದು ಜಿಡಿಪಿಯ ಶೇ.3.4ರಷ್ಟಿದೆ. ಕಳೆದ ಬಜೆಟ್‍ನಲ್ಲಿ 5.93 ಲಕ್ಷ ಕೋಟಿ ರೂ. ಮೀಸಲಿರಿಸಲಾಗಿತ್ತು. ಇದು ಜಿಡಿಪಿಯ ಶೇ.1.9ರಷ್ಟಿತ್ತು ಎಂದು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದರು. +ಸದ್ಯ ಜಗತ್ತಿನ ಎರಡು ಪ್ರದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಉಂಟಾಗಿದೆ. ಗಾಜಾ-ಉಕ್ರೇನ್ ಮತ್ತು ಇಸ್ರೇಲ್-ಹಮಾಸ್ ನಡುವೆ ಯುದ್ಧ ನಡೆಯುತ್ತಿದೆ. ಈ ಹಿನ್ನೆಲೆ ಬಜೆಟ್‍ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಅನುದಾನ ನೀಡುವ ಅಗತ್ಯವಿತ್ತು. +2022ರಲ್ಲಿ ಶಸ್ತ್ರಾಸ್ತ್ರಗಳಿಗಾಗಿಯೇ 1.52 ಲಕ್ಷ ಕೋಟಿ ರೂ. ಹಣವನ್ನು ಮೀಸಲಿಟ್ಟಿತ್ತು. ಇದರಲ್ಲೀಗ ಶೇ.6.5ರಷ್ಟು ಹೆಚ್ಚಳಗೊಂಡಿದೆ. 2022-23ರಲ್ಲಿ ಶೇ. 12 ಮತ್ತು 2021-22ರಲ್ಲಿ ಶೇ.19ರಷ್ಟಿತ್ತು. ಸದ್ಯ ಭಾರತ 85 ದೇಶಗಳಿಗೆ ತನ್ನ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ. 2016ಕ್ಕೆ ಹೋಲಿಸಿದರೆ ಭಾರತದ ರಕ್ಷಣಾ ರಫ್ತು 10 ಪಟ್ಟು ಹೆಚ್ಚಾಗಿದೆ. ನೌಕಾಪಡೆಗೆ 26 ರಫೇಲ್ ವಿಮಾನಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +31 Iಕಿ9ಆ ರೀಪರ್ ಡ್ರೋನ್‍ಗಳನ್ನು ಖರೀದಿಸಲು ಅಮೆರಿಕದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಅಮೆರಿಕ ಜಂಟಿಯಾಗಿ ಸ್ಟ್ರೈಕರ್ ಶಸ್ತ್ರಸಜ್ಜಿತ ಯುದ್ಧ ವಾಹನವನ್ನು ನಿರ್ಮಿಸಲು ಒಪ್ಪಿಕೊಂಡಿವೆ. ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತೇವೆ. ವಿಕಸಿತ ಭಾರತಕ್ಕೆ ನಮ್ಮ ಸಂಪೂರ್ಣ ಯೋಜನೆ ಘೋಷಣೆ ಮಾಡಲಾಗವುದು ಸಚಿವರು ಹೇಳಿದರು. \ No newline at end of file diff --git a/eesanje/url_47_172_2.txt b/eesanje/url_47_172_2.txt new file mode 100644 index 0000000000000000000000000000000000000000..7df90b3fd5837d5040b4eb70fe01a9fef7c0990d --- /dev/null +++ b/eesanje/url_47_172_2.txt @@ -0,0 +1,5 @@ +ಸಂಸತ್ತಿನಲ್ಲಿ ಸೊರೆನ್ ಬಂಧನ ವಿಷಯ ಪ್ರಸ್ತಾಪಿಸಲು ಇಂಡಿಯಾ ಒಕ್ಕೂಟ ನಿರ್ಧಾರ +ನವದೆಹಲಿ, ಫೆ 2 (ಪಿಟಿಐ) ಸಂಸತ್ತಿನ ಉಭಯ ಸದನಗಳಲ್ಲಿ ಜೆಎಂಎಂ ನಾಯಕ ಹಾಗೂ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಂಧನದ ವಿಷಯವನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟ ಬಣ ನಿರ್ಧರಿಸಿದೆ. ಸಂಸತ್ ಭವನದಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಚೇಂಬರ್‍ನಲ್ಲಿ ಇಂದು ಬೆಳಗ್ಗೆ ನಡೆದ ಇಂಡಿಯಾ ಒಕ್ಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. +ಜ. 31 ರಂದು ಆರಂಭವಾದ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ತಮ್ಮ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರು ಭೇಟಿಯಾಗುತ್ತಿರುವುದು ಇದೇ ಮೊದಲು. ಜಾರಿ ನಿರ್ದೇಶನಾಲಯವು ಸೋರೆನ್ ಅವರನ್ನು ಬಂಧಿಸಿರುವುದು ಮತ್ತು ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಲ್ಲಿ ವಿಳಂಬವನ್ನು ಪ್ರತಿಪಕ್ಷ ನಾಯಕರು ಟೀಕಿಸಿದ್ದಾರೆ. +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ಸೋರೆನ್ ಅವರನ್ನು ಇಡಿ ಬಂಧಿಸಿದ ದಿನದಂದು ಸೋನಿಯಾ ಗಾಂಧಿ, ಶರದ್ ಪವಾರ್ ಮತ್ತು ಟಿಆರ್ ಬಾಲು ಸೇರಿದಂತೆ ಪ್ರತಿಪಕ್ಷಗಳ ಉನ್ನತ ನಾಯಕರು ಈ ಹಿಂದೆ ಖರ್ಗೆ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಸೋರೆನ್ ಅವರನ್ನು ಬಲವಂತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲಾಯಿತು ಮತ್ತು ಹೊಸ ಸರ್ಕಾರ ರಚನೆ ವಿಳಂಬವಾಯಿತು ಎಂದು ಅವರು ಆರೋಪಿಸುತ್ತಿದ್ದಾರೆ. ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬುಧವಾರ ರಾತ್ರಿ ಸೋರೆನ್ ಅವರನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_47_172_3.txt b/eesanje/url_47_172_3.txt new file mode 100644 index 0000000000000000000000000000000000000000..8666b59d2cbe536fd40089983e8b3be6a372faab --- /dev/null +++ b/eesanje/url_47_172_3.txt @@ -0,0 +1,5 @@ +ಮುಂಬೈನಲ್ಲಿ ಮತ್ತೆ ಸರಣಿ ಬಾಂಬ್ ಸ್ಪೋಟದ ಬೆದರಿಕೆ +ಮುಂಬೈ, ಫೆ.2 (ಪಿಟಿಐ) ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೆ ಸರಣಿ ಬಾಂಬ್ ಸ್ಪೋಟ ನಡೆಸುವುದಾಗಿ ಬಂದಿರುವ ಬೆದರಿಕೆ ಕರೆಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ. ಮಧ್ಯರಾತ್ರಿ ಟ್ರಾಫಿಕ್ ಕಂಟ್ರೋಲ್ ರೂಂಗೆ ಸಂದೇಶ ಕರೆಗಳು ಬಂದಿದ್ದು ನಗರದ ಹಲವಾರು ಪ್ರದೇಶಗಳಲ್ಲಿ ಬಾಂಬ್‍ಗಳನ್ನು ಇರಿಸಲಾಗಿದೆ. ಮತ್ತು ಅವುಗಳನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. +ದೇಶದ ಆರ್ಥಿಕ ರಾಜಧಾನಿಯ ಆರು ಸ್ಥಳಗಳಲ್ಲಿ ಬಾಂಬ್‍ಗಳನ್ನು ಇರಿಸಿರುವುದರಿಂದ ಮುಂಬೈನಲ್ಲಿ ಸ್ಪೋಟಗಳು ಸಂಭವಿಸಲಿವೆ ಎಂದು ಬೆದರಿಕೆ ಹಾಕಿದವರು ಹೇಳಿಕೊಂಡಿದ್ದರು. ಮುಂಬೈ ಪೊಲೀಸರ ಅಪರಾಧ ವಿಭಾಗ ಮತ್ತು ಮಹಾರಾಷ್ಟ್ರ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಬೆದರಿಕೆ ಸಂದೇಶದ ಬಗ್ಗೆ ಎಚ್ಚರಿಕೆ ನೀಡಿದ್ದು, ಕರೆ ಕಳುಹಿಸುವವರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ. +ವಾಹನ ತಪಾಸಣೆ ವೇಳೆ ಸಿಕ್ತು 5.12 ಕೋಟಿ ರೂ.ನಗದು..! +ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ, ಇದು ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದ್ವೇಷವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳಿಗೆ ಸಂಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_172_4.txt b/eesanje/url_47_172_4.txt new file mode 100644 index 0000000000000000000000000000000000000000..a07f2beea0a6a57d365eda844e69a57de56ce04f --- /dev/null +++ b/eesanje/url_47_172_4.txt @@ -0,0 +1,6 @@ +ಅಮೃತ್‍ಸರದಲ್ಲಿ ಸಿಕ್ತು 4 ಕೆಜಿ ಹೆರಾಯಿನ್ +ಗುರುದಾಸ್‍ಪುರ,ಫೆ.2- ಗಡಿ ಭದ್ರತಾ ಪಡೆ (ಬಿಎಸ್‍ಎಫ್ ) ಮತ್ತು ಎಸ್‍ಟಿಎಫ್ ಅಮೃತಸರದಲ್ಲಿ ನಡೆಸಿದ ಜಂಟಿ ದಾಳಿಯಲ್ಲಿ ಗುರುದಾಸ್‍ಪುರದ ದಿಧೋವಲ್ ಗ್ರಾಮದ ಮನೆಯೊಂದರಿಂದ ಸುಮಾರು ನಾಲ್ಕು ಕೆಜಿಯಷ್ಟು ಶಂಕಿತ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. +ಹುಡುಕಾಟದ ಸಮಯದಲ್ಲಿ ಮನೆಯಲ್ಲಿ ಅಡಗಿಸಿಟ್ಟಿದ್ದ ಹೆರಾಯಿನ್ ಅನ್ನು ಹೊಂದಿರುವ ಶಂಕಿತ ಪ್ಯಾಕೆಟ್ ಅನ್ನು ಯಶಸ್ವಿಯಾಗಿ ವಶಪಡಿಸಿಕೊಳ್ಳಲಾಗಿದೆ. ಸುಮಾರು ನಾಲ್ಕು ಕೆಜಿಯಷ್ಟು ಮಾದಕ ವಸ್ತು ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಮಾದಕವಸ್ತುಗಳನ್ನು ಹಳದಿ ಅಂಟಿಕೊಳ್ಳುವ ಟೇಪ್‍ನಿಂದ ಸುತ್ತಿಡಲಾಗಿತ್ತು ಮತ್ತು ಪ್ಯಾಕೆಟ್‍ಗೆ ಲೋಹದ ಕೊಕ್ಕೆ ಜೋಡಿಸಲಾಗಿದೆ. +ಬಂದ ವಿಶ್ವಾಸಾರ್ಹ ಇನ್ಪುಟ್ ಮತ್ತು ಬಿಎಸ್‍ಎಫ್ ಮತ್ತು ಎಸ್ಟಿಎಫ್‍ನ ಸುಸಂಘಟಿತ ಜಂಟಿ ಕಾರ್ಯಾಚರಣೆ, ಅಮೃತಸರ ಗಡಿಯಾಚೆಗಿನ ಮಾದಕವಸ್ತುಗಳ ಮತ್ತೊಂದು ಕಳ್ಳಸಾಗಣೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿತು. +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ಇದಕ್ಕೂ ಮೊದಲು, ಬಿಎಸ್‍ಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ತರ್ನ್ ತರನ್ ಜಿಲ್ಲೆಯ ಕೃಷಿ ಕ್ಷೇತ್ರದಿಂದ ಮುರಿದ ಸ್ಥಿತಿಯಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ವಶಪಡಿಸಿಕೊಂಡಿದ್ದರು. ಜನವರಿ 29 ರಂದು, ರಾತ್ರಿ ಸಮಯದಲ್ಲಿ, ಜಾಗರೂಕ ಬಿಎಎಸ್‍ಎಫ್ ಪಡೆಗಳು ತರ್ನ್ ತರನ್ ಜಿಲ್ಲೆಯ ಗ್ರಾಮ ದಳದ ಬಳಿ ಶಂಕಿತ ಡ್ರೋನ್ ಚಲನೆಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. \ No newline at end of file diff --git a/eesanje/url_47_172_5.txt b/eesanje/url_47_172_5.txt new file mode 100644 index 0000000000000000000000000000000000000000..ac08a6ac5dbc68533be39fb051a873f68350f6b1 --- /dev/null +++ b/eesanje/url_47_172_5.txt @@ -0,0 +1,7 @@ +ನಿರ್ಮಲಾ ಬಜೆಟ್ 2047ಕ್ಕೆ ಸರಿಹೋಗುತ್ತದೆ : ಸಿನ್ಹಾ ವ್ಯಂಗ್ಯ +ನವದೆಹಲಿ,ಫೆ.2- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಸಂದೇಹ ವ್ಯಕ್ತಪಡಿಸಿರುವ ಟಿಎಂಸಿ ಸಂಸದ ಶತ್ರುಘ್ನ ಸಿನ್ಹಾ ಅವರು, ಬಜೆಟ್ ಇವತ್ತಿಗೆ ಏನೂ ಲಾಭ ಇಲ್ಲ, ಎಲ್ಲವೂ 2047ಕ್ಕೆ ಎಂದು ಪ್ರತಿಪಾದಿಸಿದ್ದಾರೆ.’ +ಬಜೆಟ್ ಭವಿಷ್ಯತ್ತವಾಗಿದೆ. ಎಲ್ಲವೂ 2047ಕ್ಕೆ ಇದೆ ಆದರೆ ಇವತ್ತಿಗೆ ಏನಿದೆ? ನೀವು ನಾಲ್ಕು ವಿಭಾಗಗಳ ಬಗ್ಗೆ ಮಾತನಾಡುತ್ತೀರಿ: ಮಹಿಳೆಯರು, ಬಡವರು, ರೈತರು ಮತ್ತು ಯುವಕರು. ನೀವು ಅವರಿಗೆ ಏನು ಮಾಡಿದ್ದೀರಿ? ಈ ಬಜೆಟ್ ಉದ್ಯೋಗವನ್ನು ಹೆಚ್ಚಿಸುವ ಅಥವಾ ದ್ವಿಗುಣಗೊಳಿಸುವ ಬಗ್ಗೆ ಏನಾದರೂ ಹೇಳುತ್ತದೆಯೇ? ರೈತರ ಆದಾಯ? ಎಂದು ಅಸನ್ಸೋಲ್ ಸಂಸದರು ಪ್ರಶ್ನಿಸಿದ್ದಾರೆ. +ಹೆಲ್ತ್‍ಕೇರ್ ಬಜೆಟ್ ಮತ್ತು ಬಾಲಕಿಯರ ವ್ಯಾಕ್ಸಿನೇಷನ್ ಉಪಕ್ರಮದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಿನ್ಹಾ, ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9-14 ವರ್ಷ ವಯಸ್ಸಿನ ಹುಡುಗಿಯರು ಉಚಿತ ಲಸಿಕೆಯನ್ನು ಪಡೆಯುವುದು ಒಳ್ಳೆಯದು ಎಂದು ಹೇಳಿದರು. ಆದಾಗ್ಯೂ, ಎಲ್ಲರಿಗೂ ಆರೋಗ್ಯ ವಿಮೆಗೆ ಯಾವುದೇ ನಿಬಂಧನೆ ಇದೆಯೇ ಎಂದು ಅವರು ಪ್ರಶ್ನಿಸಿದರು, ವಿಶಾಲವಾದ ಆರೋಗ್ಯ ರಕ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಮಾತನಾಡಿ, ಮಧ್ಯಂತರ ಬಜೆಟ್ ಜನರನ್ನು ಬಲೆಗೆ ಬೀಳಿಸುವ ಆರ್ಥಿಕ ಜಾಲವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ದೇಶವಾಸಿಗಳ ನಿರೀಕ್ಷೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಸುಖು ಹೇಳಿದ್ದಾರೆ. +ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಸುಖು, ರಾಜ್ಯಕ್ಕೆ ರೈಲು ಜಾಲ ವಿಸ್ತರಣೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಿಮಾಚಲದಂತಹ ಗುಡ್ಡಗಾಡು ರಾಜ್ಯಗಳಿಗೆ ಮೆಟ್ರೋ ರೈಲು ಪ್ರಾರಂಭಿಸಲು ಸಾಧ್ಯವಾಗದ ಯಾವುದೇ ಕ್ಷಿಪ್ರ ಸಮೂಹ ಸಾರಿಗೆ ವ್ಯವಸ್ಥೆಯ ಬಗ್ಗೆಯೂ ಯಾವುದೇ ಉಲ್ಲೇಖವಿಲ್ಲ ಎಂದು ಹರಿಹಾಯ್ದಿದ್ದಾರೆ. \ No newline at end of file diff --git a/eesanje/url_47_172_6.txt b/eesanje/url_47_172_6.txt new file mode 100644 index 0000000000000000000000000000000000000000..afbe09552edb9874a77ed7841cacbb3f669d837c --- /dev/null +++ b/eesanje/url_47_172_6.txt @@ -0,0 +1,6 @@ +ಜಡ್ಜ್‌ಗೆ ಬೆದರಿಕೆ ಹಾಕಿದ್ದವರ ಬಂಧನ +ಆಲಪ್ಪುಳ, ಫೆ.1 (ಪಿಟಿಐ) ಬಿಜೆಪಿ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದ ತೀರ್ಪು ಪ್ರಕಟವಾದ ನಂತರ ಮಾವೆಲಿಕ್ಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ವಿರುದ್ಧ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ. +ಮಾವೆಲಿಕ್ಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ-ಐ ವಿ ಜಿ ಶ್ರೀದೇವಿ ವಿರುದ್ಧ ಆನ್‍ಲೈನ್ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ ನಂತರ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲಪ್ಪುಳ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಒಟ್ಟು ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು ನಾಲ್ಕು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು. +ಆಲಪ್ಪುಳ ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಮತ್ತು ಪುನ್ನಪ್ರಾ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣಗಳು ದಾಖಲಾಗಿವೆ ಮತ್ತು ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ನೇಮಿಸಲಾಗಿದೆ ಎಂದು ಅದು ಹೇಳಿದೆ. +ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ +ಮನ್ನಾಚೇರಿ ನಿವಾಸಿ ನಾಸೀರ್ಮೋನ್ (47), ಮಂಗಳಪುರಂ ನಿವಾಸಿ ರಫಿ (38), ಆಲಪ್ಪುಳ ನಿವಾಸಿ ನವಾಸ್ ನೈನಾ (42) ಮತ್ತು ಅಂಬಲಪ್ಪುಳ ನಿವಾಸಿ ಶಾಜಹಾನ್ (36) ಬಂಧಿತರು. 2021 ರಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ನಡೆದ ಬಿಜೆಪಿ ಒಬಿಸಿ ವಿಭಾಗದ ನಾಯಕನ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಗೆ ಸಂಬಂಧಿಸಿದ 15 ಜನರಿಗೆ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿತ್ತು. \ No newline at end of file diff --git a/eesanje/url_47_172_7.txt b/eesanje/url_47_172_7.txt new file mode 100644 index 0000000000000000000000000000000000000000..a0395c6b0524e2d5bd11b2ae7dcde8c1ab5674a0 --- /dev/null +++ b/eesanje/url_47_172_7.txt @@ -0,0 +1,8 @@ +ಮತ್ತೆ ಇಡಿ ವಿಚಾರಣೆಗೆ ಗೈರಾದ ಕೇಜ್ರಿವಾಲ್ +ನವದೆಹಲಿ,ಫೆ.2- ಐದನೇ ಬಾರಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಪಡೆದಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ತನಿಖಾ ಸಂಸ್ಥೆಯ ಮುಂದೆ ಹಾಜರಾಗಿಲ್ಲ. ಜನವರಿ 19 ರಂದು ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರುಹಾಜರಾದ ನಂತರ, ಇಡಿ ನೀಡಿದ ಸಮನ್ಸ್ ಕಾನೂನುಬಾಹಿರವಾಗಿದೆ ಮತ್ತು ಅವರನ್ನು ಬಂಧಿಸುವುದು ಅದರ ಏಕೈಕ ಗುರಿಯಾಗಿದೆ ಎಂದು ಎಎಪಿ ಆರೋಪಿಸಿದೆ. +ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರೂ ಆಗಿರುವ ಕೇಜ್ರಿವಾಲ್ ಅವರು ನವೆಂಬರ್ 2, ಡಿಸೆಂಬರ್ 21 ಮತ್ತು ಜನವರಿ 3 ರಂದು ಮೂರು ಹಿಂದಿನ ಸಮನ್ಸ್‍ಗಳಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ್ದರು. +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ಎಎಪಿ ಏಜೆನ್ಸಿಯ ಕ್ರಮಗಳನ್ನು ರಾಜಕೀಯ ಪ್ರೇರಿತ ಮತ್ತು ಕಾನೂನುಬಾಹಿರ ಎಂದು ಟೀಕಿಸಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ ದೆಹಲಿ ಸರ್ಕಾರವನ್ನು ಉರುಳಿಸುವುದು ಪ್ರಧಾನಿ ಮೋದಿಯವರ ಗುರಿಯಾಗಿದೆ. ಇದನ್ನು ನಾವು ಮಾಡಲು ಬಿಡುವುದಿಲ್ಲ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಏಪ್ರಿಲ್‍ನಲ್ಲಿ ಪ್ರಶ್ನಿಸಿತ್ತು, ಆದರೆ ಸಂಸ್ಥೆಯು ಆರೋಪಿಯನ್ನಾಗಿ ಮಾಡಿರಲಿಲ್ಲ. ಜಾರಿ ನಿರ್ದೇಶನಾಲಯದಿಂದ ಮೊದಲ ಸಮನ್ಸ್ ಜಾರಿಯಾದಾಗಿನಿಂದಲೂ, ದೆಹಲಿ ಮುಖ್ಯಮಂತ್ರಿಯನ್ನು ಅವರ ವಿಚಾರಣೆಯ ನಂತರ ಸಂಸ್ಥೆಯು ಬಂಸುತ್ತದೆ ಎಂಬ ತೀವ್ರ ಊಹಾಪೋಹಗಳಿವೆ. +ತಾರಕಕ್ಕೇರಿದ ಎಎಪಿ-ಬಿಜೆಪಿ ನಡುವಿನ ಸಮರ +ಎಎಪಿ ಪಕ್ಷದ ಮೂವರು ನಾಯಕರಾದ ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಈಗಾಗಲೇ ಜೈಲಿನಲ್ಲಿದ್ದಾರೆ. ಆಪಾದಿತ ಹಗರಣದ ಆದಾಯವನ್ನು ಎಎಪಿ ಗುಜರಾತ್‍ನಲ್ಲಿ ತನ್ನ ದೊಡ್ಡ ಪ್ರಮಾಣದ ಪ್ರಚಾರಕ್ಕಾಗಿ ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ, ಇದರಲ್ಲಿ ಅದು 12.91 ಶೇಕಡಾ ಮತಗಳನ್ನು ಪಡೆದು ರಾಷ್ಟ್ರೀಯ ಪಕ್ಷವಾಗಿ ಸ್ಥಾಪಿಸಿಕೊಂಡಿದೆ. \ No newline at end of file diff --git a/eesanje/url_47_172_8.txt b/eesanje/url_47_172_8.txt new file mode 100644 index 0000000000000000000000000000000000000000..acaf9aa728473d0215c59324037009aee2ce215e --- /dev/null +++ b/eesanje/url_47_172_8.txt @@ -0,0 +1,7 @@ +ವಾಹನ ತಪಾಸಣೆ ವೇಳೆ ಸಿಕ್ತು 5.12 ಕೋಟಿ ರೂ.ನಗದು..! +ಗುಡೂರು, ಫೆ.2 (ಪಿಟಿಐ) ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಗುಡೂರು ಎಂಬಲ್ಲಿ ವಾಹನಗಳ ತಪಾಸಣೆ ವೇಳೆ 5.12 ಕೋಟಿ ರೂಪಾಯಿ ನಗದು ಸಹಿತ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಿಲ್ಲಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವರಗಲಿ ಕ್ರಾಸಿಂಗ್‍ನಲ್ಲಿ ಪಿ ಸಾಯಿಕೃಷ್ಣ (56), ಎಂ ಶ್ರೀಧರ್ (48) ಮತ್ತು ಜಿ ರವಿ (32) ಎಂಬುವರಿಂದ 3.67 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. +ಅಕ್ರಮ ಮದ್ಯ ಹಾಗೂ ಇತರೆ ನಿಷೇತ ವಸ್ತುಗಳ ವಾಹನಗಳ ತಪಾಸಣೆ ವೇಳೆ ನಗದು ಪತ್ತೆಯಾಗಿದೆ ಎಂದು ಗುಡೂರು ಉಪವಿಭಾಗದ ಪೊಲೀಸ್ ಅಧಿಕಾರಿ ಎಂ.ಸೂರ್ಯನಾರಾಯಣ ರೆಡ್ಡಿ ತಿಳಿಸಿದ್ದಾರೆ. ಚಿನ್ನವನ್ನು ಖರೀದಿಸಲು ಚೆನ್ನೈಗೆ ಹೋಗುತ್ತಿದ್ದೇವೆ ಎಂದು ಮೂವರು ವ್ಯಕ್ತಿಗಳು ಪೆÇಲೀಸರಿಗೆ ತಿಳಿಸಿದ್ದಾರೆ ಆದರೆ ಅವರ ಹಕ್ಕುಗಳನ್ನು ದೃಢೀಕರಿಸಲು ಅವರಿಗೆ ಪುರಾವೆಗಳನ್ನು ನೀಡಲು ಸಾಧ್ಯವಾಗಲಿಲ್ಲ ಎಂದು ರೆಡ್ಡಿ ಹೇಳಿದರು. +ಎರಡನೆ ಘಟನೆಯಲ್ಲಿ ಎಂ.ಲಕ್ಷ್ಮಣ್ ರಾವ್ (24) ಮತ್ತು ಕೆ.ಮಹೇಶ್ ಕುಮಾರ್ (26) ಎಂಬುವರನ್ನು ಬೆಳಗ್ಗೆ 6 ಗಂಟೆ ಸುಮಾರಿಗೆ ಚಿಲ್ಲಕೂರು ಬೈಪಾಸ್ ರಸ್ತೆ ಜಂಕ್ಷನ್‍ನಲ್ಲಿ ವಾಹನದಿಂದ 95.5 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. +ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ +ಮೂರನೇ ಘಟನೆಯಲ್ಲಿ ಮುಬಾರಕ್ ರೆಸ್ಟೊರೆಂಟ್ ಬಳಿ ಕೆ ಸೂರ್ಯನಾರಾಯಣ ಮೂರ್ತಿ (59) ಎಂಬುವವರಿಂದ 50 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಲ್ಲಾ ಆರು ಜನರನ್ನು ಬಂಧಿಸಲಾಗಿದೆ, ಅವರು ಪರಸ್ಪರ ಸಂಬಂಧ ಹೊಂದಿಲ್ಲ ಎಂದು ರೆಡ್ಡಿ ಹೇಳಿದರು. +ಮುಂದಿನ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆ ಅಕಾರಿಗಳ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಲೋಕಸಭೆ ಚುನಾವಣೆ ಮತ್ತು ಕೆಲವೇ ತಿಂಗಳುಗಳಲ್ಲಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನಗದು ವಶಪಡಿಸಿಕೊಳ್ಳಲಾಗಿದೆ. \ No newline at end of file diff --git a/eesanje/url_47_172_9.txt b/eesanje/url_47_172_9.txt new file mode 100644 index 0000000000000000000000000000000000000000..011a014a5e8144f9cd20a8d90447c40391b19afa --- /dev/null +++ b/eesanje/url_47_172_9.txt @@ -0,0 +1,10 @@ +2047ರ ವೇಳೆಗೆ ಭಾರತ ಮುಂದುವರೆದ ರಾಷ್ಟ್ರವಾಗಲಿದೆ : ಐಎಂಎಫ್ +ವಾಷಿಂಗ್ಟನ್, ಫೆ 2 (ಪಿಟಿಐ) ಭಾರತದ ಆರ್ಥಿಕ ಯಶಸ್ಸು ಕಳೆದ ವರ್ಷಗಳಲ್ಲಿ ಸುಧಾರಣೆಗಳ ಅನ್ವೇಷಣೆಯಲ್ಲಿ ನೆಲೆಗೊಂಡಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಅವರು ತಿಳಿಸಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರ ಎಂಬ ತನ್ನ ಗುರಿಯನ್ನು ಸಾಧಿಸುವ ವಿಶ್ವಾಸದಲ್ಲಿ ಮುಂದುವರೆದಿರುವ ಭಾರತ 2047ರ ವೇಳೆಗೆ ಮುಂದುವರೆದ ರಾಷ್ಟ್ರವಾಗಲಿದೆ ಎಂದು ಅವರು ಹೇಳಿದ್ದಾರೆ. +ಭಾರತವು ವಿಶ್ವ ಆರ್ಥಿಕತೆಯಲ್ಲಿ ಉಜ್ವಲ ತಾಣವಾಗಿದೆ, ಮತ್ತು ಅದು ಮುಂದುವರಿಯುತ್ತಿದೆ. ನಾವು 2024 ರಲ್ಲಿ 6.5 ಶೇಕಡಾಕ್ಕೆ ಭಾರತೀಯ ಬೆಳವಣಿಗೆಯ ಪ್ರಕ್ಷೇಪಣಗಳನ್ನು ಅಪ್‍ಗ್ರೇಡ್ ಮಾಡುತ್ತಿದ್ದೇವೆ. ಇದು 2023 ರಲ್ಲಿ ಸಾಕಷ್ಟು ಬಲವಾದ ಕಾರ್ಯಕ್ಷಮತೆಯ ಹಿನ್ನೆಲೆಯಲ್ಲಿ ಬರುತ್ತದೆ. ಭಾರತದ ಯಶಸ್ಸು ಕಳೆದ ವರ್ಷಗಳಲ್ಲಿ ಸುಧಾರಣೆಗಳ ಅನ್ವೇಷಣೆಯಲ್ಲಿ ನೆಲೆಗೊಂಡಿದೆ ಎಂದು ಜಾರ್ಜಿವಾ ಇಲ್ಲಿ ವರದಿಗಾರರ ಗುಂಪಿಗೆ ತಿಳಿಸಿದರು. +ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಡಿಜಿಟಲ್ ಐಡಿ ಮತ್ತು ಡಿಜಿಟಲ್ ಅನ್ನು ಭಾರತದ ಪ್ರಬಲ ತುಲನಾತ್ಮಕ ಶಕ್ತಿಯನ್ನಾಗಿ ಮಾಡುವ ಮೂಲಕ ಡಿಜಿಟಲ್ ಮುಂಭಾಗದಲ್ಲಿ ದಿಟ್ಟ ಕ್ರಮಗಳು ಭಾರತದ ಒಂದು ಪ್ರಮುಖ ಪ್ರಯೋಜನವಾಗಿದೆ ಎಂದು ಜಾರ್ಜೀವಾ ಹೇಳಿದರು, ಸಣ್ಣ ಉದ್ಯಮಿಗಳಿಗೆ ಅವರು ಮಾಡಲು ಸಾಧ್ಯವಾಗದ ರೀತಿಯಲ್ಲಿ ಮಾರುಕಟ್ಟೆಗೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. +ಕಾರ್ಮಿಕ ಮಾರುಕಟ್ಟೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಸಾಕಷ್ಟಿಲ್ಲ ಎಂದು ನಾವು ಭಾರತದಲ್ಲಿ ಗುರುತಿಸುತ್ತೇವೆ. ಪ್ರಧಾನಿ (ನರೇಂದ್ರ) ಮೋದಿ ಅವರು ಭಾರತೀಯ ಮಹಿಳೆಯರು ಆರ್ಥಿಕತೆಯಲ್ಲಿ ಅವರ ಭಾಗವಹಿಸುವಿಕೆಗೆ ಹೆಚ್ಚಿನ ಅವಕಾಶವನ್ನು ತೆರೆಯುವುದು ಸರಿ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು. +ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ +ಭಾರತವು ನಾವೀನ್ಯತೆಯು ಭವಿಷ್ಯದ ಸ್ಪರ್ಧಾತ್ಮಕತೆಯನ್ನು ಪ್ರೇರೇಪಿಸುತ್ತದೆ ಎಂದು ಗುರುತಿಸುತ್ತದೆ, ಚಂದ್ರಯಾನ ಸೇರಿದಂತೆ ನಾವು ಅತ್ಯಂತ ಪರಿಣಾಮಕಾರಿ ಹೂಡಿಕೆ ಮತ್ತು ಇದು ಭವಿಷ್ಯದ ಬೆಳವಣಿಗೆಗೆ ಅತ್ಯಂತ ಫಲವತ್ತಾದ ನೆಲವನ್ನು ಸೃಷ್ಟಿಸುತ್ತದೆ ಎಂದು ಅವರು ವಿವರಿಸಿದ್ದಾರೆ. +ಭಾರತವು ಇತರ ಎಲ್ಲ ದೇಶಗಳಂತೆ ಜಾಗರೂಕರಾಗಿರಬೇಕು, ಸಾರ್ವಜನಿಕ ಹಣಕಾಸಿನ ಸಾಮಥ್ರ್ಯ ಮತ್ತು ಸಾರ್ವಜನಿಕ ಹಣದ ಬಳಕೆಯು ಈ ಮಧ್ಯಮ ದೀರ್ಘಾವಯ ಬಲವಾದ ಬೆಳವಣಿಗೆಯ ಉದ್ದೇಶವನ್ನು ಹೇಗೆ ಬೆಂಬಲಿಸುತ್ತದೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದರು. +2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಬೇಕೆಂಬ ಪ್ರಧಾನಿ ಮೋದಿಯವರ ಕರೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ದೇಶವು ತನ್ನ ಸ್ವಾತಂತ್ರ್ಯದ 100 ನೇ ವರ್ಷವನ್ನು ಆಚರಿಸುತ್ತಿರುವಾಗ, ಇದು ತುಂಬಾ ಸಾಧಿಸಬಹುದಾಗಿದೆ ಎಂದು ಹೇಳಿದರು. +2047 ರ ವೇಳೆಗೆ ಭಾರತವನ್ನು ವಿಕಸಿತ (ಅಭಿವೃದ್ಧಿ) ಭಾರತವನ್ನಾಗಿ ಮಾಡಲು ಮೋದಿ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವರು ತಮ್ಮ ಮಧ್ಯಂತರ ಬಜೆಟ್‍ನಲ್ಲಿ ಕೇಂದ್ರ ಹಣಕಾಸು ಸಚಿವರು ಹೇಳಿದ ಗಂಟೆಗಳ ನಂತರ ಐಎಂಎಫ್ ಅಧ್ಯಕ್ಷರ ಈ ಹೇಳಿಕೆ ಗಮನ ಸೆಳೆದಿದೆ. \ No newline at end of file diff --git a/eesanje/url_47_173_1.txt b/eesanje/url_47_173_1.txt new file mode 100644 index 0000000000000000000000000000000000000000..34230280bdc883087c44239e975abc91e72cc36e --- /dev/null +++ b/eesanje/url_47_173_1.txt @@ -0,0 +1,7 @@ +ಕೃಷಿಕರಿಗೆ ಸಂತಸ, ಯುವ ಜನತೆಗೆ ಆದ್ಯತೆ, ಮಹಿಳಾ ಕಲ್ಯಾಣ ಬಜೆಟ್ +ನವದೆಹಲಿ, ಫೆ.1- ಯಾವುದೇ ಹೊಸ ತೆರಿಗೆ ವಿಧಿಸದೆ, ಹಳೆ ತೆರಿಗೆ ಪದ್ಧತಿಯನ್ನೇ ಮುಂದುವರೆಸಿ ಹೊಸ ಯೋಜನೆಗಳನ್ನೂ ಪ್ರಕಟಿಸದೆ ಬಡವರು, ಮಹಿಳೆಯರು, ಯುವಕರು ಹಾಗೂ ಅನ್ನದಾತರಿಗೆ ವಿಶೇಷ ಒತ್ತು ನೀಡಲಾಗಿದ್ದು, ಜನಸಾಮಾನ್ಯರು, ಮಧ್ಯಮ ವರ್ಗದವರ ಮೂಗಿಗೆ ತುಪ್ಪ ಸವರುವ ಮೂಲಕ ಕೇಂದ್ರ ಸರ್ಕಾರದ ಬಹುನಿರೀಕ್ಷಿತ 2024-25ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿದೆ. +ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡಲಿದೆ ಎಂಬ ಜನತೆಯ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ ಆಶಾದಾಯಕ ಎಂದು ಹೇಳಿಕೊಂಡಿದ್ದರೂ, ಹೊಸ ಯೋಜನೆಗಳನ್ನು ಘೋಷಣೆ ಮಾಡದಿರುವುದು ಈ ಬಜೆಟ್‍ನ ವಿಶೇಷತೆಯಾಗಿದೆ. 7 ಲಕ್ಷದವರೆಗೆ ತೆರಿಗೆ ಮಿತಿಯನ್ನು ನೀಡಿರುವುದಷ್ಟೇ ಸಮಾಧಾನಕರ ಬೆಳವಣಿಗೆ. +ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗಿದೆ.ಆದಾಯ ತೆರಿಗೆ ಸ್ಲ್ಯಾಬ್‍ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂ. ಇರಲಿದೆ ಎಂದು ಅಂದಾಜಿಸಲಾಗಿದೆ. ವಿತ್ತೀಯ ಕೊರತೆ ಮೇಲೆ ಹಿಡಿತ ಸಾಧಿಸಲಾಗಿದೆ. 2023-24ನೇ ಹಣಕಾಸು ವರ್ಷಕ್ಕೆ ಪರಿಷ್ಕøತ ವಿತ್ತೀಯ ಕೊರತೆ ಶೇ.5.8ರಷ್ಟು ನಿಗದಿಪಡಿಸಲಾಗಿದೆ. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ್ಯ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ. ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ. +ದೇಶದ 3 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇತ್ತೀಚೆಗೆ ಘೋಷಣೆಯಾದ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು ನೀಡಲಾಗಿದೆ. ಮನೆಗಳಿಗೆ ಸೋಲಾರ್ ಮೇಲ್ಛಾವಣಿ ಅಳವಡಿಸುವ ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. \ No newline at end of file diff --git a/eesanje/url_47_173_10.txt b/eesanje/url_47_173_10.txt new file mode 100644 index 0000000000000000000000000000000000000000..71903f28baefbb8747cea9f4e1bda1c125346e85 --- /dev/null +++ b/eesanje/url_47_173_10.txt @@ -0,0 +1,6 @@ +ವಿಕಸಿತ ಭಾರತ ನಿರ್ಮಿಸುವತ್ತ ಗಮನ ಹರಿಸಿದ್ದೇವೆ : ನಿರ್ಮಲಾ +ನವದೆಹಲಿ,ಫೆ.1- ನರೇಂದ್ರ ಮೋದಿ ಸರಕಾರವು 2047ರ ವೇಳೆಗೆ ಭಾರತವನ್ನು ವಿಕಸಿತ (ಅಭಿವೃದ್ಧಿ) ಭಾರತವನ್ನಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ 2024 ರ ಮಧ್ಯಂತರ ಬಜೆಟ್‍ನಲ್ಲಿ ಅವರು, ಎಲ್ಲವನ್ನೂ ಒಳಗೊಂಡಿರುವ ಮತ್ತು ಎಲ್ಲಾ ವ್ಯಾಪಕವಾದ ಅಭಿವೃದ್ಧಿಗಾಗಿ ಕೆಲಸ ಮಾಡುವ ಸಂಕಲ್ಪ ಮಾಡಿದ್ದಾರೆ. +ವಿಕಸಿತ್ ಭಾರತ್‍ಗಾಗಿ ನಮ್ಮ ದೃಷ್ಟಿ ಸಮೃದ್ಧ ಭಾರತವಾಗಿದೆ. ಪ್ರಕೃತಿ ಮತ್ತು ಆಧುನಿಕ ಮೂಲಸೌಕರ್ಯಗಳೊಂದಿಗೆ ಸಾಮರಸ್ಯದಿಂದ ಮತ್ತು ಎಲ್ಲರಿಗೂ ಅವರ ಸಾಮಥ್ರ್ಯವನ್ನು ತಲುಪಲು ಅವಕಾಶಗಳನ್ನು ಒದಗಿಸುತ್ತದೆ. ಮುಂದಿನ ಐದು ವರ್ಷಗಳಲ್ಲಿ ಅಭೂತಪೂರ್ವ ಅಭಿವೃದ್ಧಿ ಮತ್ತು ಗುರಿಯನ್ನು ಸಾಸುವ ಸುವರ್ಣ ಕ್ಷಣಗಳೊಂದಿಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ. +ಬಜೆಟ್‍ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು +ಸಬ್ ಕಾ ಪ್ರಯಾಸ್‍ನ ದೃಷ್ಟಿಕೋನದಿಂದ ಬೆಂಬಲಿತವಾದ ಪ್ರಜಾಪ್ರಭುತ್ವ, ಜನಸಂಖ್ಯಾಶಾಸ್ತ್ರ ಮತ್ತು ವೈವಿಧ್ಯತೆಯ ತ್ರಿಮೂರ್ತಿಗಳು ಪ್ರತಿಯೊಬ್ಬ ಭಾರತೀಯ ಪುರುಷ ಮತ್ತು ಮಹಿಳೆಯ ಆಕಾಂಕ್ಷೆಗಳನ್ನು ಪೂರೈಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. +ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯವು ಪರಿಣಾಮಕಾರಿಯಾಗಿದೆ. ಮತ್ತು ಅಗತ್ಯ ಆಡಳಿತ ಮಾದರಿ ಎಲ್ಲಾ ಅರ್ಹರನ್ನು ಒಳಗೊಳ್ಳುವುದು ನಿಜವಾದ ಸಾಮಾಜಿಕ ನ್ಯಾಯ ಜಾತ್ಯತೀತತೆ. ಇದು ಭ್ರಷ್ಟಾಚಾರವನ್ನು ಕಡಿಮೆ ಮಾಡುತ್ತದೆ ಎಂದಿದ್ದಾರೆ. \ No newline at end of file diff --git a/eesanje/url_47_173_11.txt b/eesanje/url_47_173_11.txt new file mode 100644 index 0000000000000000000000000000000000000000..e14c85e6019304c285ed1733169660387c82a2a2 --- /dev/null +++ b/eesanje/url_47_173_11.txt @@ -0,0 +1,5 @@ +2030ರ ವೇಳೆಗೆ 100 ಮೆಟ್ರಿಕ್ ಟನ್ ಕಲ್ಲಿದ್ದಲು ಅನಿಲೀಕರಣ +ನವದೆಹಲಿ, ಫೆ 1 (ಪಿಟಿಐ) ಕಲ್ಲಿದ್ದಲು ಅನಿಲೀಕರಣ ಮತ್ತು 100 ಮೆಟ್ರಿಕ್ ಟನ್ ದ್ರವೀಕರಣವನ್ನು 2030 ರ ವೇಳೆಗೆ ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜನವರಿಯಲ್ಲಿ ಕಲ್ಲಿದ್ದಲು, ಲಿಗ್ನೈಟ್ ಅನಿಲೀಕರಣ ಯೋಜನೆಗಳನ್ನು ಉತ್ತೇಜಿಸಲು ಸರ್ಕಾರವು 8,500 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ಅನುಮೋದಿಸಿತ್ತು. +13,052.81 ಕೋಟಿ ಹೂಡಿಕೆಯಲ್ಲಿ ಕೋಲ್ ಇಂಡಿಯಾ ಮತ್ತು ಗೇಲ್ ನಡುವಿನ ಜಂಟಿ ಉದ್ಯಮದ ಮೂಲಕ ಕಲ್ಲಿದ್ದಲು-ಎಸ್‍ಎನ್‍ಜಿ (ಸಿಂಥೆಟಿಕ್ ನ್ಯಾಚುರಲ್ ಗ್ಯಾಸ್) ಯೋಜನೆಯನ್ನು ಸ್ಥಾಪಿಸಲು ಸರ್ಕಾರವು ಅನುಮೋದನೆ ನೀಡಿದೆ ಮತ್ತು ಸಿಐಎಲ್ ನಡುವಿನ ಜಂಟಿ ಉದ್ಯಮದ ಮೂಲಕ ಕಲ್ಲಿದ್ದಲು-ಅಮೋನಿಯಂ ನೈಟ್ರೇಟ್ ಯೋಜನೆ ಮತ್ತು ಬಿಎಚ್‍ಇಎಲ್‍ನ 11,782.05 ಕೋಟಿ ರೂ. ಕಲ್ಲಿದ್ದಲು ಅನಿಲೀಕರಣದ ಮೂಲಕ ಪಡೆಯಬಹುದಾದ ರಾಸಾಯನಿಕಗಳ ಆಮದನ್ನು ಕಡಿಮೆ ಮಾಡಲು ಈ ನಿರ್ಧಾರವು ಮಹತ್ವದ ಹೆಜ್ಜೆಯಾಗಿದೆ. +ನಾವು ಹಿಂದೂ ವಿರೋಧಿಗಳಲ್ಲ : ಸಚಿವ ಚಲುವರಾಯಸ್ವಾಮಿ +ಭಾರತವು 2014 ರಿಂದ 596 ಶತಕೋಟಿ ಅಮೆರಿಕನ್ ಡಾಲರ್ ವಿದೇಶಿ ನೇರ ಹೂಡಿಕೆ (ಎಫ್‍ಡಿಐ) ಒಳಹರಿವನ್ನು ಪಡೆದಿದೆ, ಇದು 2004 ಮತ್ತು 2014 ರ ನಡುವಿನ ಒಳಹರಿವಿನ ದುಪ್ಪಟ್ಟು ಎಂದು ಅವರು ಹೇಳಿದರು. ದೇಶದಲ್ಲಿ ಅಕ್ವಾಕಲ್ಚರ್ ಅನ್ನು ಉತ್ತೇಜಿಸಲು ಸರ್ಕಾರವು ಬ್ಲೂ ಎಕಾನಮಿ 2.0 ಅನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_173_12.txt b/eesanje/url_47_173_12.txt new file mode 100644 index 0000000000000000000000000000000000000000..b0241f0fd91bc9e7216e4d48ae17fe503a6fab70 --- /dev/null +++ b/eesanje/url_47_173_12.txt @@ -0,0 +1,5 @@ +40 ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತನೆ +ನವದೆಹಲಿ,ಫೆ.1- ಸಂಪರ್ಕ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವಲ್ಲಿ ಗಮನ ಹರಿಸಿದ್ದೇವೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 40,000 ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು ಎಂದು ತಿಳಿಸಿದ್ದಾರೆ. +ತಮ್ಮ ಮಧ್ಯಂತರ ಬಜೆಟ್‍ನಲ್ಲಿ ಅವರು, ಪ್ರಯಾಣಿಕರ ಸುರಕ್ಷತೆ, ಅನುಕೂಲತೆ ಮತ್ತು ಸೌಕರ್ಯ ವನ್ನು ಹೆಚ್ಚಿಸಲು ಇದನ್ನು ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇಂಧನ ಖನಿಜ ಮತ್ತು ಸಿಮೆಂಟ್ ಕಾರಿಡಾರ್, ಬಂದರು ಸಂಪರ್ಕ ಕಾರಿಡಾರ್ ಮತ್ತು ಹೆಚ್ಚಿನ ಸಂಚಾರ ಸಾಂದ್ರತೆ ಕಾರಿಡಾರ್ – ಮೂರು ಪ್ರಮುಖ ರೈಲ್ವೆ ಕಾರಿಡಾರ್ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ. +25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ : ನಿರ್ಮಲಾ +ಪಿಎಂ ಗತಿಶಕ್ತಿ ಅಡಿಯಲ್ಲಿ ಗುರುತಿಸಲ್ಪಟ್ಟಿರುವ ಈ ಯೋಜನೆಗಳು ಬಹು-ಮಾದರಿ ಸಂಪರ್ಕವನ್ನು ಸಕ್ರಿಯಗೊಳಿಸುತ್ತದೆ, ಲಾಜಿಸ್ಟಿಕ್ಸ್ ದಕ್ಷತೆಯನ್ನು ಸುಧಾರಿಸುತ್ತದೆ ಮತ್ತು ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ವಿವರಿಸಿದ್ದಾರೆ. \ No newline at end of file diff --git a/eesanje/url_47_173_2.txt b/eesanje/url_47_173_2.txt new file mode 100644 index 0000000000000000000000000000000000000000..ad56219bdf5dd0cbf87974fcccf13dcbbdaa3881 --- /dev/null +++ b/eesanje/url_47_173_2.txt @@ -0,0 +1,5 @@ +ಭಾರತದ ಭವಿಷ್ಯ ರೂಪಿಸುವ ಬಜೆಟ್ : ಪ್ರಧಾನಿ ಮೋದಿ +ನವದೆಹಲಿ, ಫೆ 1 (ಪಿಟಿಐ) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ಭಾರತದ ಅಡಿಪಾಯವನ್ನು ಬಲಪಡಿಸುವ ಗ್ಯಾರಂಟಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಬಜೆಟ್ ನಂತರ ದೂರದರ್ಶನದ ಭಾಷಣದಲ್ಲಿ ಅವರು ಅಭಿವೃದ್ಧಿ ಹೊಂದಿದ ಭಾರತದ ನಾಲ್ಕು ಸ್ತಂಭಗಳಾದ ಯುವ, ಬಡ, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವುದಾಗಿ ಹೇಳಿದರು. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಇದು ಭಾರತದ ಭವಿಷ್ಯವನ್ನು ರೂಪಿಸುವ ಬಜೆಟ್ ಆಗಿದೆ ಎಂದ ಅವರು, ಇದು ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ ಎಂದರು. ಸಂಶೋಧನೆ ಮತ್ತು ನಾವೀನ್ಯತೆಗಾಗಿ 1 ಲಕ್ಷ ಕೋಟಿ ನಿಯ ಘೋಷಣೆಯನ್ನು ಉಲ್ಲೇಖಿಸಿದ ಅವರು, ಐತಿಹಾಸಿಕ ಬಜೆಟ್ ಸ್ಟಾರ್ಟ್-ಅಪ್‍ಗಳಿಗೆ ರಿಯಾಯಿತಿಯನ್ನು ಸಹ ನೀಡಿದೆ ಎಂದು ಗಮನಿಸಿದರು. ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು 11.11 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಬಂಡವಾಳ ವೆಚ್ಚಕ್ಕೆ ಇದು ನಿಬಂಧನೆಗಳನ್ನು ಹೊಂದಿದೆ ಎಂದು ಅವರು ಹೇಳಿದರು. +ಬಜೆಟ್ ಬಡವರು ಮತ್ತು ಮಧ್ಯಮ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಮತ್ತು ಯುವಕರಿಗೆ ಅಸಂಖ್ಯಾತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_173_3.txt b/eesanje/url_47_173_3.txt new file mode 100644 index 0000000000000000000000000000000000000000..16d125294d075b15b274b5640fe801ebe8e5c2fc --- /dev/null +++ b/eesanje/url_47_173_3.txt @@ -0,0 +1,6 @@ +ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆ ವಿಸ್ತರಣೆ +ನವದೆಹಲಿ, ಫೆ 1 (ಪಿಟಿಐ) ಚಾರ್ಜಿಂಗ್ ಇನ್ರಾವನ್ನು ಬೆಂಬಲಿಸಲು ಸರ್ಕಾರವು ಎಲೆಕ್ಟ್ರಿಕ್ ವಾಹನ ಪರಿಸರ ವ್ಯವಸ್ಥೆಯನ್ನು ವಿಸ್ತರಿಸಲಿದೆ ಮತ್ತು ಸಾರ್ವಜನಿಕ ಸಾರಿಗೆ ನೆಟ್‍ವರ್ಕ್‍ಗಳಿಗೆ ಇ-ಬಸ್‍ಗಳನ್ನು ಉತ್ತೇಜಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. +ಸೀತಾರಾಮನ್ ಅವರು ತಮ್ಮ ಮಧ್ಯಂತರ ಬಜೆಟ್‍ನಲ್ಲಿ ಸಾರಿಗೆ ಮತ್ತು ಕೊಳವೆ ನೈಸರ್ಗಿಕ ಅನಿಲಕ್ಕಾಗಿ ಸಂಕುಚಿತ ನೈಸರ್ಗಿಕ ಅನಿಲಕ್ಕೆ ಸಂಕುಚಿತ ಜೈವಿಕ ಅನಿಲವನ್ನು ಮಿಶ್ರಣ ಮಾಡುವುದು ಕಡ್ಡಾಯವಾಗಿದೆ ಎಂದು ಹೇಳಿದರು. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಜೈವಿಕ ವಿಘಟನೀಯ ಉತ್ಪಾದನೆಗೆ ಪರಿಸರ ಸ್ನೇಹಿ ಪರ್ಯಾಯಗಳನ್ನು ಒದಗಿಸಲು ಜೈವಿಕ ಉತ್ಪಾದನೆ ಮತ್ತು ಜೈವಿಕ ಫೌಂಡ್ರಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದರು. ಭಾರತದ ಆರ್ಥಿಕ ಶಕ್ತಿಯು ದೇಶವನ್ನು ವ್ಯಾಪಾರ ಮತ್ತು ಸಮ್ಮೇಳನ ಪ್ರವಾಸೋದ್ಯಮಕ್ಕೆ ಆಕರ್ಷಕ ತಾಣವನ್ನಾಗಿ ಮಾಡಿದೆ ಎಂದು ಸೀತಾರಾಮನ್ ಹೇಳಿದರು. +ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ ಎಂದ ಅವರು, ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು ಐಕಾನಿಕ್ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿದೆ ಎಂದು ಭರವಸೆ ನೀಡಿದರು. \ No newline at end of file diff --git a/eesanje/url_47_173_4.txt b/eesanje/url_47_173_4.txt new file mode 100644 index 0000000000000000000000000000000000000000..c80e491d3ab97541131a078ae17b3bccafead11c --- /dev/null +++ b/eesanje/url_47_173_4.txt @@ -0,0 +1,5 @@ +ಡೀಪ್ ಟೆಕ್ ಬಲವರ್ಧನೆಗೆ ಹೊಸ ಯೋಜನೆ +ನವದೆಹಲಿ, ಫೆ 1 (ಪಿಟಿಐ) ರಕ್ಷಣಾ ವಲಯಕ್ಕೆ ಡೀಪ್ ಟೆಕ್ ಅನ್ನು ಬಲಪಡಿಸಲು ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. +2024-25 ರ ಮಧ್ಯಂತರ ಬಜೆಟ್ ಅನ್ನು ಪ್ರಸ್ತುತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೊಯ್ಲಿನ ನಂತರದ ಕೃಷಿ ಚಟುವಟಿಕೆಗಳಲ್ಲಿ ಸರ್ಕಾರವು ಸಾರ್ವಜನಿಕ ಮತ್ತು ಖಾಸಗಿ ಹೂಡಿಕೆಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ಕೃಷಿ-ಹವಾಮಾನ ವಲಯಗಳಲ್ಲಿ ವಿವಿಧ ಬೆಳೆಗಳ ಮೇಲೆ ನ್ಯಾನೊ ಡಿಎಪಿ ಅಳವಡಿಕೆಯನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಸಿಮೆಂಟ್ ಸೇರಿದಂತೆ ಮೂರು ಪ್ರಮುಖ ರೈಲ್ವೆ ಕಾರಿಡಾರ್‍ಗಳನ್ನು ನಿರ್ಮಿಸಲಾಗುವುದು ಮತ್ತು 40,000 ಸಾಮಾನ್ಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತಿಸಲಾಗುವುದು ಎಂದು ಹಣಕಾಸು ಸಚಿವರು ಹೇಳಿದರು. \ No newline at end of file diff --git a/eesanje/url_47_173_5.txt b/eesanje/url_47_173_5.txt new file mode 100644 index 0000000000000000000000000000000000000000..986f0bee68e0e02265f558adaa04df8579af621e --- /dev/null +++ b/eesanje/url_47_173_5.txt @@ -0,0 +1,13 @@ +ಆದಾಯ ತೆರಿಗೆ ಸೇರಿದಂತೆ ತೆರಿಗೆ ಪದ್ಧತಿಗಳಲ್ಲಿ ಬದಲಾವಣೆ ಇಲ್ಲ +ನವದೆಹಲಿ,ಫೆ.1- ಆದಾಯ ತೆರಿಗೆ, ವೃತ್ತಿ ತೆರಿಗೆ ಸೇರಿದಂತೆ ನೇರ ಹಾಗೂ ಪರೋಕ್ಷ ತೆರಿಗೆ ಪದ್ಧತಿಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಘೋಷಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನವೋದ್ಯಮಗಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಬಾಕಿ ಪ್ರಕರಣಗಳಿಗೆ ಮಹತ್ವದ ಕೊಡುಗೆಗಳನ್ನು ಘೋಷಿಸಿದ್ದಾರೆ. ಜೊತೆಗೆ ತೆರಿಗೆದಾರರ ಸೇವೆಯನ್ನು ಮತ್ತಷ್ಟು ಉತ್ತಮಗೊಳಿಸುವ ಭರವಸೆ ನೀಡಿದ್ದಾರೆ. +ಸಂಸತ್‍ನಲ್ಲಿ ಬಜೆಟ್ ಮಂಡಿಸಿದ ಅವರು, ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಸಂಗ್ರಹಣೆ ಮೂರು ಪಟ್ಟು ಹೆಚ್ಚಾಗಿದೆ. ತೆರಿಗೆ ಪಾವತಿದಾರರು 2.4 ರಷ್ಟು ಹೆಚ್ಚಿದ್ದಾರೆ. ತೆರಿಗೆದಾರರ ಹಣವನ್ನು ಅತ್ಯಂತ ಬುದ್ಧಿವಂತಿಕೆಯಿಂದ ದೇಶದ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ಬಳಕೆ ಮಾಡಲಾಗುತ್ತಿದೆ. ತೆರಿಗೆದಾರರ ಬೆಂಬಲವನ್ನು ನಾನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ. +ಸರ್ಕಾರ ಈಗಾಗಲೇ ತೆರಿಗೆ ದರಗಳನ್ನು ಕಡಿಮೆ ಮಾಡಿದ್ದು ಮತ್ತು ತರ್ಕಬದ್ಧಗೊಳಿಸಿದೆ. ಹೊಸ ತೆರಿಗೆ ಯೋಜನೆಯಡಿ 7 ಲಕ್ಷದವರೆಗೂ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇದನ್ನು 2013-14 ರಲ್ಲಿ 2.2 ಲಕ್ಷ ಮಿತಿಗೊಳಿಸಲಾಗಿತ್ತು ಎಂದು ಸ್ಮರಿಸಿಕೊಂಡಿದ್ದಾರೆ. +ಚಿಲ್ಲರೆ ವ್ಯಾಪಾರಸ್ಥರ ತೆರಿಗೆ ಮಿತಿಯನ್ನು 2 ರಿಂದ 3 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ವೃತ್ತಿನಿರತರ ತೆರಿಗೆ ಮಿತಿಯನ್ನು 50 ರಿಂದ 70 ಲಕ್ಷ ರೂ.ಗಳಿಗೆ ಏರಿಸಿದರೆ ಕಾರ್ಪರೇಟ್ ತೆರಿಗೆಯನ್ನು ಶೇ.30 ರಿಂದ ಶೇ.22 ಕ್ಕೆ ಇಳಿಸಲಾಗಿದೆ. ಚಾಲ್ತಿಯಲ್ಲಿರುವ ದೇಶೀಯ ಕಂಪನಿಗಳು ಶೇ.15 ರಷ್ಟು ಅನುಕೂಲ ಪಡೆಯಲಿವೆ ಎಂದು ಹೇಳಿದ್ದಾರೆ. +ಕಳೆದ 5 ವರ್ಷಗಳಲ್ಲಿ ತೆರಿಗೆದಾರರಿಗೆ ನೀಡಲಾಗುವ ಸೇವೆಯನ್ನು ಉತ್ತಮಗೊಳಿಸಲು ಆದ್ಯತೆ ನೀಡಲಾಗಿದೆ. ವಯೋವೃದ್ಧರಿಗಾಗಿ ನ್ಯಾಯವ್ಯಾಪ್ತಿ ಆಧಾರಿತ ಮೌಲ್ಯಮಾಪನ ವ್ಯವಸ್ಥೆಯನ್ನು ಪರಿಚಯಿಸಲಾಗಿದ್ದು, ಹಿರಿಯ ನಾಗರಿಕರು ಖುದ್ದು ಹಾಜರಾತಿ ಇಲ್ಲದೆ ಮೇಲ್ಮನವಿಗಳ ಸಲ್ಲಿಕೆ ಹಾಗೂ ಮೌಲ್ಯಮಾಪನ ಮನವಿಗಳನ್ನು ಮಾಡಬಹುದು. ಇದು ತೆರಿಗೆ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಿದೆ. ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಸಿಂಧುಗೊಳಿಸಿದೆ ಎಂದು ತಿಳಿಸಿದ್ದಾರೆ. +40 ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತನೆ +ಹೊಸದಾಗಿ ಪರಿಚಯಿಸಲಾದ 26 ಎಎಸ್ ಅರ್ಜಿ ನಮೂನೆ ತೆರಿಗೆ ಪಾವತಿಯ ಪೂರ್ವ ಭರ್ತಿಯನ್ನು ಸರಳೀಕರಣಗೊಳಿಸಿದೆ. 2013-14 ರಲ್ಲಿ ತೆರಿಗೆ ಮರುಪಾವತಿಯ ಅವ 93 ದಿನಗಳಷ್ಟಿತ್ತು. ಪ್ರಸ್ತುತ ಅದು 10 ದಿನಗಳಿಗೆ ಕಡಿತಗೊಂಡಿದ್ದು, ತೆರಿಗೆದಾರರಿಗೆ ಮರು ಪಾವತಿ ಸೌಲಭ್ಯ ಶೀಘ್ರವಾಗಿ ದೊರೆಯಲಿದೆ ಎಂದು ಹೇಳಿದ್ದಾರೆ. +ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ತಾವು ಹೊಸದಾಗಿ ಯಾವುದೇ ತೆರಿಗೆ ಪ್ರಸ್ತಾವನೆಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಚುವರಿ ತೆರಿಗೆಗಳಿಲ್ಲದೆ ಹಿಂದಿನ ತೆರಿಗೆ ಪದ್ಧತಿಗಳನ್ನೇ ಮುಂದುವರೆಸಲಾಗುತ್ತಿದೆ. ನೇರ ಹಾಗೂ ಪರೋಕ್ಷ ತೆರಿಗೆಗಳು, ಆಮದು ಶುಲ್ಕಗಳು ಎಂದಿನಂತೆ ಚಾಲ್ತಿಯಲ್ಲಿರಲಿವೆ ಎಂದು ಹೇಳಿದ್ದಾರೆ. +ಆದಾಗ್ಯೂ ನವೋದ್ಯಮಗಳಿಗೆ ನಿರ್ದಿಷ್ಟವಾದ ತೆರಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಾರ್ವಭೌಮ ಸಂಪತ್ತಿನ ಹೂಡಿಕೆ ಮತ್ತು ಪಿಂಚಣಿ ನಿಗೆ ಹಾಗೂ ಸೀಮಿತ ಆದಾಯದಾರರಿಗೆ ದೊರೆಯುತ್ತಿದ್ದ ಐಎಫ್‍ಎಸ್‍ಸಿ ಆಧಾರಿತ ತೆರಿಗೆ ವಿನಾಯಿತಿ ಸೌಲಭ್ಯ ಈ ವರ್ಷದ 31 ಕ್ಕೆ ಮುಕ್ತಾಯಗೊಳ್ಳುತ್ತಿದೆ. ಅದನ್ನು ಮುಂದಿನ ವರ್ಷದ ಮಾರ್ಚ್ 31 ರವರೆಗೂ ವಿಸ್ತರಿಸುವುದಾಗಿ ಹೇಳಿದ್ದಾರೆ. +ನಮ್ಮ ಸರ್ಕಾರ ಜೀವನ ಮಟ್ಟ ಸುಧಾರಣೆ ಹಾಗೂ ವ್ಯವಹಾರಿಕ ಸರಳೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಹೀಗಾಗಿ ತೆರಿಗೆ ಪಾವತಿದಾರರ ಸೇವೆಗಳನ್ನು ಮತ್ತಷ್ಟು ಉತ್ತಮಗೊಳಿಸುವುದಾಗಿ ಘೋಷಿಸುತ್ತೇನೆ ಎಂದಿದ್ದಾರೆ. 1962 ರಿಂದಲೂ ಬಾಕಿ ಉಳಿದಿರುವ ಸಣ್ಣ, ಪರಿಶೀಲನೆಗೊಳಪಡದ, ಪರಿಗಣನೆಯಿಂದ ಹೊರತಾಗುಳಿದ ಹಾಗೂ ವಿವಾದಿತ ತೆರಿಗೆದಾರರ ಬೇಡಿಕೆಗಳನ್ನು ಪರಿಷ್ಕರಿಸಲಾಗಿದೆ. ಅತೀ ದೊಡ್ಡ ಸಂಖ್ಯೆಯಲ್ಲಿರುವ ಈ ವಲಯದ ಲೆಕ್ಕಪತ್ರಗಳನ್ನು ಮುಂದುವರೆಸುತ್ತಿರುವುದು ಅನಗತ್ಯವಾದ ಹೊರೆಯಾಗಿದೆ ಮತ್ತು ಪ್ರಾಮಾಣಿಕ ತೆರಿಗೆದಾರರ ಆತಂಕಕ್ಕೂ ಕಾರಣವಾಗಿದೆ. ನೂರಾರು ವರ್ಷಗಳ ಮರುಪಾವತಿಗೂ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ. +ವಿಕಸಿತ ಭಾರತ ನಿರ್ಮಿಸುವತ್ತ ಗಮನ ಹರಿಸಿದ್ದೇವೆ : ನಿರ್ಮಲಾ +ಈ ಹಿನ್ನೆಲೆಯಲ್ಲಿ ನೇರ ತೆರಿಗೆ ಬೇಡಿಕೆಗಳ ಪೈಕಿ 2009-10 ರವರೆಗಿನ ಬಾಕಿಗಳಲ್ಲಿ 25 ಸಾವಿರ ರೂ.ಗಳ ವಿನಾಯಿತಿ ನೀಡುವುದಾಗಿ ತಿಳಿಸಿದ್ದಾರೆ. 2010-11 ಮತ್ತು 2014-15 ನೇ ಆರ್ಥಿಕ ವರ್ಷದವರೆಗೆ 10 ಸಾವಿರ ರೂ.ಗಳವರೆಗೂ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ. ಇದು 1 ಕೋಟಿಗೂ ಅಕ ತೆರಿಗೆದಾರರಿಗೆ ಲಾಭವಾಗಲಿದೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_173_6.txt b/eesanje/url_47_173_6.txt new file mode 100644 index 0000000000000000000000000000000000000000..3d1350bddb53e53d09917e06d04cb72fe10a8e0e --- /dev/null +++ b/eesanje/url_47_173_6.txt @@ -0,0 +1,5 @@ +ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +ನವದೆಹಲಿ,ಫೆ.1- ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‍ಗೆ ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‍ನಲ್ಲಿ ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ. ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. +ನಿರ್ಮಲಾ ಸೀತಾರಾಮನ್ ಅವರು ಇಂದು ನೂತನ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ಅವರು, ವಿಕಸಿತ್ ಭಾರತ್‍ನ ದೃಷ್ಟಿಯನ್ನು ಸಾಕಾರಗೊಳಿಸಲು ರಾಜ್ಯದಲ್ಲಿ ಅನೇಕ ಬೆಳವಣಿಗೆ ಮತ್ತು ಅಭಿವೃದ್ಧಿ-ಶಕ್ತಗೊಳಿಸುವ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು. +2030ರ ವೇಳೆಗೆ 100 ಮೆಟ್ರಿಕ್ ಟನ್ ಕಲ್ಲಿದ್ದಲು ಅನಿಲೀಕರಣ +ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್‍ನಲ್ಲಿ ನಮ್ಮ ಸರ್ಕಾರವು ವಿಕಸಿತ್ ಭಾರತ್‍ನ ನಮ್ಮ ಅನ್ವೇಷಣೆಗಾಗಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ ಎಂದರು. \ No newline at end of file diff --git a/eesanje/url_47_173_7.txt b/eesanje/url_47_173_7.txt new file mode 100644 index 0000000000000000000000000000000000000000..73a675b85840e88efded95f4e1c121288f2fc649 --- /dev/null +++ b/eesanje/url_47_173_7.txt @@ -0,0 +1,6 @@ +ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆ ನಿರ್ಮಾಣ +ನವದೆಹಲಿ, ಫೆ 1 (ಪಿಟಿಐ) : ಮುಂದಿನ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ ಇನ್ನೂ ಎರಡು ಕೋಟಿ ಮನೆಗಳ ನಿರ್ಮಾಣವನ್ನು ಮಾಡಲಾಗುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ಅವರು ಮಂಡಿಸಿದ ತಮ್ಮ ಮಧ್ಯಂತರ ಬಜೆಟ್‍ನಲ್ಲಿ ಅವರು, ಕೋವಿಡ್ -19 ಸಾಂಕ್ರಾಮಿಕದ ಹೊರತಾಗಿಯೂ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅನುಷ್ಠಾನವನ್ನು ಮುಂದುವರೆಸಲಾಗಿದೆ ಮತ್ತು ಮೂರು ಕೋಟಿ ಗ್ರಾಮೀಣ ಮನೆಗಳನ್ನು ನಿರ್ಮಿಸುವ ಗುರಿಯನ್ನು ಶೀಘ್ರದಲ್ಲೇ ತಲುಪಲಾಗುವುದು ಎಂದು ಹೇಳಿದರು. +ಕೋವಿಡ್-19 ಕಾರಣದಿಂದಾಗಿ ಸವಾಲುಗಳ ಹೊರತಾಗಿಯೂ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅನುಷ್ಠಾನವು ಮುಂದುವರೆಯಿತು ಮತ್ತು ನಾವು ಮೂರು ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿದೆ ಎಂದು ಸೀತಾರಾಮನ್ ಹೇಳಿದರು. +40 ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತನೆ +ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ಅವಶ್ಯಕತೆಗಳನ್ನು ಪೂರೈಸಲು ಮುಂದಿನ ಐದು ವರ್ಷಗಳಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಮ್ಮ ಚುನಾವಣಾ ಪೂರ್ವ ಬಜೆಟ್‍ನಲ್ಲಿ ತಿಳಿಸಿದ್ದಾರೆ. +ಪಿಎಂವೈ ಎಂಬುದು ದೇಶದ ಗ್ರಾಮೀಣ ಬಡವರಿಗೆ ವಸತಿ ಕಲ್ಪಿಸುವ ಸಾಮಾಜಿಕ ಕಲ್ಯಾಣ ಕಾರ್ಯಕ್ರಮವಾಗಿದೆ. ಈ ಯೋಜನೆಯಡಿ ಬಯಲು ಪ್ರದೇಶದಲ್ಲಿ 1.20 ಲಕ್ಷ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ 1.30 ಲಕ್ಷ ಸಹಾಯಧನ ನೀಡಲಾಗುತ್ತದೆ. ಯೋಜನೆಯ ವೆಚ್ಚವನ್ನು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು 60:40 ಅನುಪಾತದಲ್ಲಿ ಭರಿಸುತ್ತವೆ. \ No newline at end of file diff --git a/eesanje/url_47_173_8.txt b/eesanje/url_47_173_8.txt new file mode 100644 index 0000000000000000000000000000000000000000..bcfea472363ac534ffb7c9422ec6de67611ee898 --- /dev/null +++ b/eesanje/url_47_173_8.txt @@ -0,0 +1,7 @@ +ಹೆಚ್ಚಿನ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ +ನವದೆಹಲಿ, ಫೆ.1 (ಪಿಟಿಐ) ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಮತ್ತು ಈ ವಿಷಯವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮಧ್ಯಂತರ ಬಜೆಟ್‍ನಲ್ಲಿ ತಿಳಿಸಿದ್ದಾರೆ. +ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 9-14 ವರ್ಷ ವಯಸ್ಸಿನ ಹೆಣ್ಣು ಮಕ್ಕಳಿಗೆ ಲಸಿಕೆ ಹಾಕಲು ಸರ್ಕಾರ ಪೋತ್ಸಾಹಿಸುತ್ತದೆ ಎಂದು ಸಚಿವರು ಹೇಳಿದರು.ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನದಲ್ಲಿ ಸಿನರ್ಜಿಗಾಗಿ ಒಂದು ಸಮಗ್ರ ಕಾರ್ಯಕ್ರಮದ ಅಡಿಯಲ್ಲಿ ತರಲಾಗುವುದು ಎಂದು ಸೀತಾರಾಮನ್ ಸಂಸತ್ತಿನಲ್ಲಿ ಹೇಳಿದರು. +ಹಲವಾರು ಯುವಕರು ವೈದ್ಯರಾಗಿ ಅರ್ಹತೆ ಪಡೆಯಲು ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಅವರು ಸುಧಾರಿತ ಆರೋಗ್ಯ ಸೇವೆಗಳ ಮೂಲಕ ನಮ್ಮ ಜನರಿಗೆ ಸೇವೆ ಸಲ್ಲಿಸುವ ಗುರಿ ಹೊಂದಿದ್ದಾರೆ. ನಮ್ಮ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಆಸ್ಪತ್ರೆ ಮೂಲಸೌಕರ್ಯಗಳನ್ನು ಬಳಸಿಕೊಂಡು ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಯೋಜಿಸಿದೆ. +ಬಜೆಟ್‍ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ಅನ್ನದಾತ ಆದ್ಯತೆ +ಈ ಉದ್ದೇಶಕ್ಕಾಗಿ ಸಮಿತಿಯನ್ನು ರಚಿಸಲಾಗುವುದು ಮತ್ತು ಸಮಸ್ಯೆಗಳನ್ನು ಪರಿಶೀಲಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಸೀತಾರಾಮನ್ ಹೇಳಿದರು. ಲಸಿಕೆಯನ್ನು ನಿರ್ವಹಿಸಲು ಹೊಸದಾಗಿ ವಿನ್ಯಾಸಗೊಳಿಸಲಾದ ಯು-ವಿನ್ ಪ್ಲಾಟ್‍ಫಾರ್ಮ್ ಮತ್ತು ಮಿಷನ್ ಇಂದ್ರಧನುಷ್‍ನ ತೀವ್ರತರವಾದ ಪ್ರಯತ್ನಗಳನ್ನು ದೇಶಾದ್ಯಂತ ತ್ವರಿತವಾಗಿ ಹೊರತರಲಾಗುವುದು ಎಂದು ಸೀತಾರಾಮನ್ ಹೇಳಿದರು. +ಸಕ್ಷಮ್ ಅಂಗನವಾಡಿ ಮತ್ತು ಪೋಷಣೆ 2.0 ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ಉನ್ನತೀಕರಣವನ್ನು ಸುಧಾರಿತ ಪೌಷ್ಟಿಕಾಂಶ ವಿತರಣೆ, ಬಾಲ್ಯದ ಆರೈಕೆ ಮತ್ತು ಅಭಿವೃದ್ಧಿಗಾಗಿ ತ್ವರಿತಗೊಳಿಸಲಾಗುವುದು ಎಂದು ಅವರು ಹೇಳಿದರು. ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ವಿಸ್ತರಿಸಲಾಗುವುದು ಎಂದು ಸಚಿವರು ಹೇಳಿದರು. \ No newline at end of file diff --git a/eesanje/url_47_173_9.txt b/eesanje/url_47_173_9.txt new file mode 100644 index 0000000000000000000000000000000000000000..d73689148c93450509d8708bb38d64b40e7f5e8f --- /dev/null +++ b/eesanje/url_47_173_9.txt @@ -0,0 +1,4 @@ +ಅಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಕಾರ್ಡ್ +ನವದೆಹಲಿ, ಫೆ 1 (ಪಿಟಿಐ) ಆಯುಷ್ಮಾನ್ ಭಾರತ್ ಅಡಿಯಲ್ಲಿ ಆರೋಗ್ಯ ರಕ್ಷಣೆಯನ್ನು ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿಸ್ತರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆ ವಿಶ್ವದಲ್ಲೇ ಅತಿ ದೊಡ್ಡ ಸಾರ್ವಜನಿಕ ನಿಧಿಯ ಆರೋಗ್ಯ ವಿಮಾ ಯೋಜನೆಯಾಗಿದ್ದು, ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗೆ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. +40 ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತನೆ +ಕಳೆದ ವರ್ಷ ಡಿಸೆಂಬರ್ 27 ರವರೆಗೆ 12 ಕೋಟಿ ಕುಟುಂಬಗಳಿಗೆ ಸೇರಿದ 55 ಕೋಟಿ ಜನರು ಈ ಯೋಜನೆಗೆ ಒಳಪಟ್ಟಿದ್ದರು. ಮಧ್ಯಂತರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಂಎಸ್‍ಎಂಇಗಳಿಗೆ ಸಮರ್ಪಕವಾಗಿ ಮತ್ತು ಸಮಯೋಚಿತ ಹಣಕಾಸು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು. \ No newline at end of file diff --git a/eesanje/url_47_174_1.txt b/eesanje/url_47_174_1.txt new file mode 100644 index 0000000000000000000000000000000000000000..7f71ea6b93ba574b5c72cf24b0f2c89218dbbf62 --- /dev/null +++ b/eesanje/url_47_174_1.txt @@ -0,0 +1,6 @@ +ಬಜೆಟ್‍ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ಅನ್ನದಾತ ಆದ್ಯತೆ +ನವದೆಹಲಿ,ಫೆ.1- ಬಡವರು, ಮಹಿಳೆಯರು, ಯುವಕರು ಹಾಗೂ ಅನ್ನದಾತರು ತಮ್ಮ ಬಜೆಟ್‍ನ 4 ಪ್ರಮುಖ ಅಂಶಗಳು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. +ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಜೆಟ್‍ನ ಮೊದಲ ಆಧಾರ ಸ್ತಂಭವಾಗಿರುವ ಬಡವರ ಅಭಿವೃದ್ಧಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ. +11.8 ಕೋಟಿ ರೈತರಿಗೆ ಪಿಎಂ ಕಿಸಾನ್ ಯೋಜನೆ ನೆರವು +ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆರ್ಥಿಕವಾಗಿ ಬಲಿಷ್ಠವಾಗುತ್ತಿದೆ. ಕೊರೋನಾದಂತಹ ಶತಮಾನದ ಬಿಕ್ಕಟ್ಟಿನ ಮಧ್ಯೆಯೂ ಭಾರತವು ಸಕಲ ಕ್ಷೇತ್ರಗಳಲ್ಲಿ ಏಳಿಗೆ ಹೊಂದುತ್ತಿದೆ. ಉಜ್ವಲ ಭವಿಷ್ಯದತ್ತ ಭಾರತ ಹೆಜ್ಜೆ ಹಾಕುತ್ತಿದೆ. ಸುಭದ್ರ ಸರ್ಕಾರಕ್ಕೆ ಜನ ಬಹುಮತ ನೀಡಿದ್ದರಿಂದ ಇದೆಲ್ಲ ಸಾಕಾರವಾಗುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಮಂತ್ರವು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು. +ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು. \ No newline at end of file diff --git a/eesanje/url_47_174_10.txt b/eesanje/url_47_174_10.txt new file mode 100644 index 0000000000000000000000000000000000000000..a28d9e6108a4a6bf43dd42634ae724b93aeec68e --- /dev/null +++ b/eesanje/url_47_174_10.txt @@ -0,0 +1,7 @@ +ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನ +ನವದೆಹಲಿ, ಫೆ 1 (ಪಿಟಿಐ) : ದೆಹಲಿ ಜಲ ಮಂಡಳಿಯ ಟೆಂಡರ್ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಿವೃತ್ತ ಮುಖ್ಯ ಎಂಜಿನಿಯರ್ ಮತ್ತು ಗುತ್ತಿಗೆದಾರನನ್ನು ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ನಿವೃತ್ತ ಮುಖ್ಯ ಇಂಜಿನಿಯರ್ ಜಗದೀಶ್ ಕುಮಾರ್ ಅರೋರಾ ಮತ್ತು ಗುತ್ತಿಗೆದಾರ ಅನಿಲ್ ಕುಮಾರ್ ಅಗರ್ವಾಲ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಜುಲೈನಲ್ಲಿ ಫೆಡರಲ್ ಏಜೆನ್ಸಿ ಈ ಪ್ರಕರಣದಲ್ಲಿ ದಾಳಿ ನಡೆಸಿತ್ತು. +ಡಿಜೆಬಿಯ ಟೆಂಡರ್ ಪ್ರಕ್ರಿಯೆಯಲ್ಲಿನ ಅಕ್ರಮಗಳ ಎರಡು ಪ್ರತ್ಯೇಕ ವಿಷಯಗಳಲ್ಲಿ ಇಡಿ ತನಿಖೆ ನಡೆಸುತ್ತಿದೆ ಮತ್ತು ಅದರ ಕ್ರಿಮಿನಲ್ ಪ್ರಕರಣವು ಸಿಬಿಐನ ಎಫ್‍ಐಆರ್ ಮತ್ತು ದೆಹಲಿ ಸರ್ಕಾರದ ಭ್ರಷ್ಟಾಚಾರ ವಿರೋಧಿ ಶಾಖೆ (ಎಸಿಬಿ)ಯಿಂದ ಬಂದಿದೆ. +ನಕಲಿ ಪ್ರಮಾಣ ಪತ್ರ ವಿಚಾರದಲ್ಲಿ ಠಾಕೂರ್ ಮಧ್ಯಸ್ತಿಕೆಗೆ ಸಾಕ್ಷಿ ಮಲ್ಲಿಕ್ ಮನವಿ +ಎನ್‍ಬಿಸಿಸಿ ಇಂಡಿಯಾ ಲಿಮಿಟೆಡ್‍ನ ಅಕಾರಿಗಳ ಸಹಯೋಗದಲ್ಲಿ ಎಲೆಕ್ಟ್ರೋ-ಮ್ಯಾಗ್ನೆಟಿಕ್ ಪ್ರೋ ಮೀಟರ್‍ಗಳ ಪೂರೈಕೆ, ಸ್ಥಾಪನೆ, ಪರೀಕ್ಷೆ ಮತ್ತು ಕಾರ್ಯಾರಂಭಕ್ಕಾಗಿ ಕಂಪನಿಗೆ ಟೆಂಡರ್ ನೀಡುವಾಗ ಡಿಜೆಬಿಯ ಅಧಿಕಾರಿಗಳು ಎನ್‍ಕೆಜಿ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್‍ಗೆ ಅನಾವಶ್ಯಕ ಲಾಭ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. +ಎರಡನೇ ಆರೋಪವು ನವೆಂಬರ್ 2022 ರ ಎಸಿಬಿ ದೂರಿಗೆ ಸಂಬಂಧಿಸಿದೆ, ಅಲ್ಲಿ ಡಿಜೆಬಿ ತನ್ನ ವಿವಿಧ ಕಚೇರಿಗಳಲ್ಲಿ ಗ್ರಾಹಕರಿಗೆ ಬಿಲ್ ಪಾವತಿಗೆ ಅನುಕೂಲವಾಗುವಂತೆ ಆಟೋಮೋಟಿವ್ ಬಿಲ್ ಪಾವತಿ ಸಂಗ್ರಹ ಯಂತ್ರಗಳನ್ನು (ಕಿಯೋಸ್ಕ್ ) ಸ್ಥಾಪಿಸಲು ಟೆಂಡರ್ ನೀಡಿದೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_47_174_11.txt b/eesanje/url_47_174_11.txt new file mode 100644 index 0000000000000000000000000000000000000000..1531d979350d42df3f715a0546118d029ac3524d --- /dev/null +++ b/eesanje/url_47_174_11.txt @@ -0,0 +1,6 @@ +ಉಳಿಗಮಾನ್ಯ ವ್ಯವಸ್ಥೆ ವಿರುದ್ಧ ಸಮರ ಸಾರುವ ಸಮಯ ಬಂದಿದೆ : ಹೇಮಂತ್ ಸೊರೆನ್ +ರಾಂಚಿ, ಫೆ.1 (ಪಿಟಿಐ) – ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ. +ನಾನು ಬಲಿಪಶು ಆಗುವುದಿಲ್ಲ ಅಂತಿಮವಾಗಿ ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಸೋರೆನ್ ತನ್ನ ಬಂಧನಕ್ಕೆ ಮುನ್ನ ರೆಕಾರ್ಡ್ ಮಾಡಿದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ತನ್ನನ್ನು ಬಂಧಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ಸೋರೆನ್ ಹೇಳಿಕೊಂಡಿದ್ದಾರೆ. +ನಕಲಿ ಪ್ರಮಾಣ ಪತ್ರ ವಿಚಾರದಲ್ಲಿ ಠಾಕೂರ್ ಮಧ್ಯಸ್ತಿಕೆಗೆ ಸಾಕ್ಷಿ ಮಲ್ಲಿಕ್ ಮನವಿ +ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜೆಎಂಎಂ ನಾಯಕನನ್ನು ತಡರಾತ್ರಿ ಬಂಧಿಸಲಾಗಿದೆ ಮತ್ತು ಪಕ್ಷದ ನಿಷ್ಠಾವಂತ ಮತ್ತು ರಾಜ್ಯ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಅವರ ಉತ್ತರಾಧಿಕಾರಿ ಎಂದು ಹೆಸರಿಸಲಾಗಿದೆ. +ಹೇಮಂತ್ ಸೊರೆನ್ ಅವರ ಅಧಿಕೃತ ನಿವಾಸದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಏಳು ಗಂಟೆಗಳ ಕಾಲ ಸತತ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_47_174_12.txt b/eesanje/url_47_174_12.txt new file mode 100644 index 0000000000000000000000000000000000000000..488e98cefabe014d02d75bb75403c1dfa272ac9a --- /dev/null +++ b/eesanje/url_47_174_12.txt @@ -0,0 +1,6 @@ +ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದು ನಕ್ಸಲೀಯ ದೇವ ಪಡೆ +ರಾಯ್‍ಪುರ, ಫೆ.1 (ಪಿಟಿಐ) ಛತ್ತೀಸ್‍ಗಢದ ಬಸ್ತಾರ್ ಪ್ರದೇಶದಲ್ಲಿ ಉಗ್ರರ ಬಲಿಷ್ಠ ಸೇನಾ ರಚನೆಯಾಗಿರುವ ಬೆಟಾಲಿಯನ್ ನಂ.1ನ ಕಮಾಂಡರ್ ಆಗಿ ಇತ್ತೀಚೆಗೆ ನೇಮಕಗೊಂಡಿರುವ ನಕ್ಸಲೀಯ ದೇವ ಅವರು, ಎರಡು ದಿನಗಳ ಹಿಂದೆ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ನಡೆಸಿದ ತಂಡವನ್ನು ಮುನ್ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. +ನಿನ್ನೆ ಟೇಕಲ್‍ಗುಡೆಮ್ ಗ್ರಾಮದ ಬಳಿ ನಡೆದ ಎನ್‍ಕೌಂಟರ್‍ನಲ್ಲಿ ಅದರ ವಿಶೇಷ ಜಂಗಲ್ ವಾರ್‍ಫೇರ್ ಯುನಿಟ್ ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಗೆ ಸೇರಿದ ಇಬ್ಬರು ಸೇರಿದಂತೆ ಮೂವರು ಸಿಆರ್‍ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. +ಅಸಭ್ಯವಾಗಿ ವರ್ತಿಸಿ ಗೌರವ ಕಳೆದುಕೊಳ್ಳಬೇಡಿ : ವಿಪಕ್ಷಗಳಿಗೆ ಮೋದಿ ಸಲಹೆ +ದಾಳಿಯ ಸಂದರ್ಭದಲ್ಲಿ ನಕ್ಸಲ್ ನಾಯಕ ಹಿದ್ಮಾ ಇದ್ದರು ಎಂಬ ಪ್ರಶ್ನೆಗೆ, ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ (ಬಸ್ತರ್ ರೇಂಜï) ಸುಂದರರಾಜ್ ಪಿ, ಅದರ ಬಗ್ಗೆ ತಿಳಿದುಬಂದಿಲ್ಲ ಎಂದಿದ್ದಾರೆ. ಹಿದ್ಮಾ ಇರುವಿಕೆಯ ಸಾಧ್ಯತೆ ಕಡಿಮೆ, ಆದರೆ ದೇವ ಅಲ್ಲಿ ಪ್ರತ್ಯಕ್ಷವಾಗಿರಬಹುದು ಎಂದು ಅವರು ಪಿಟಿಐಗೆ ತಿಳಿಸಿದರು. ದೇವಾ ಇತ್ತೀಚೆಗೆ ಹಿದ್ಮಾ ಅವರನ್ನು ನಕ್ಸಲೀಯರ ಬೆಟಾಲಿಯನ್ ನಂ.1 ಕಮಾಂಡರ್ ಆಗಿ ನೇಮಿಸಿದ್ದಾರೆ ಎಂದು ಐಜಿ ಸೇರಿಸಲಾಗಿದೆ. +ಪೊಲೀಸ್ ಮೂಲಗಳ ಪ್ರಕಾರ, ಪೀಪಲ್ಸ ಲಿಬರೇಶನ್ ಗೆರಿಲ್ಲಾ ಆರ್ಮಿ ಬೆಟಾಲಿಯನ್ ನಂ. 1 ರ ಹಿಂದೆ ದಕ್ಷಿಣ ಬಸ್ತಾರ್‍ನಲ್ಲಿ ನಡೆದ ಹಲವಾರು ಮಾರಣಾಂತಿಕ ದಾಳಿಗಳಲ್ಲಿ ಪಾತ್ರ ವಹಿಸಿದೆ ಎಂದು ಅಂದಾಜಿಸಲಾಗಿದೆ. \ No newline at end of file diff --git a/eesanje/url_47_174_2.txt b/eesanje/url_47_174_2.txt new file mode 100644 index 0000000000000000000000000000000000000000..d6fd1b953fc033692a205fbc6d7cb9cd75da7ecf --- /dev/null +++ b/eesanje/url_47_174_2.txt @@ -0,0 +1,7 @@ +30 ವರ್ಷಗಳ ನಂತರ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆ ಪುನರಾರಂಭ +ವಾರಣಾಸಿ,ಫೆ.1- ಬಾಬರಿ ಮಸೀದಿ ಧ್ವಂಸ ಪ್ರಕರಣದ ನಂತರ ಅಂದಿನ ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆದೇಶದ ಮೇರೆಗೆ 30 ವರ್ಷಗಳ ಹಿಂದೆ ಬಂದ್ ಮಾಡಲಾಗಿದ್ದ ವಾರಣಾಸಿಯ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಇಂದಿನಿಂದ ಮತ್ತೆ ಪೂಜೆ ಆರಂಭವಾಗಿದೆ. +ಜಿಲ್ಲಾ ನ್ಯಾಯಾಲಯದ ಆದೇಶದ ನಂತರ ಹಿಂದೂ ಅರ್ಚಕರ ಕುಟುಂಬದ ಸದಸ್ಯರು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಆರಂಭಿಸಲಾಗಿದೆ ಹಿಂದೂಗಳಿಗೆ ಪ್ರಾರ್ಥನೆ ಮಾಡುವ ಹಕ್ಕು ಇದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿಯ ಸಮೀಪವಿರುವ ಪ್ರದೇಶವು ನಿನ್ನೆ ತಡರಾತ್ರಿ ಬಿರುಸಿನ ಚಟುವಟಿಕೆಗೆ ಸಾಕ್ಷಿಯಾಯಿತು, ಹಿಂದೂ ಭಕ್ತರು ವ್ಯಾಸ್ ಕಾ ತೆಹಕಾನಾ ಎಂದು ಹೆಸರಿಸಲಾದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಮಾಡಲು ಮಸೀದಿಗೆ ತೆರಳಿದರು. +ಹಿಂದೂ ಸಂಘಟನೆಯಾದ ರಾಷ್ಟ್ರೀಯ ಹಿಂದೂ ದಳದ ಸದಸ್ಯರು ಮಸೀದಿ ಬಳಿಯ ಫಲಕದ ಮೇಲೆ ಮಂದಿರ (ಮಂದಿರ) ಪದವನ್ನು ಅಂಟಿಸಿರುವುದು ಕಂಡುಬಂದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಪೂಜೆ ಆರಂಭವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. +2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು +ಮಸೀದಿಯು ತನ್ನ ನೆಲಮಾಳಿಗೆಯಲ್ಲಿ ನಾಲ್ಕು ನೆಲಮಾಳಿಗೆಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ಅಲ್ಲಿ ವಾಸಿಸುತ್ತಿದ್ದ ಪುರೋಹಿತರ ಕುಟುಂಬದ ವಶದಲ್ಲಿತ್ತು. ವ್ಯಾಸ್ ಕುಟುಂಬದ ಸದಸ್ಯರಾದ ಸೋಮನಾಥ್ ವ್ಯಾಸ್ ಅವರು 1993 ರಲ್ಲಿ ಮೊಹರು ಮಾಡುವ ಮೊದಲು ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು ಎಂದು ಅರ್ಜಿದಾರರು ಮತ್ತು ಕುಟುಂಬದ ಸದಸ್ಯರಾದ ಶೈಲೇಂದ್ರ ಪಾಠಕ್ ತಿಳಿಸಿದ್ದಾರೆ. +ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‍ನಲ್ಲಿ ಪ್ರಶ್ನಿಸುವುದಾಗಿ ಮಸೀದಿ ಸಮಿತಿ ಹೇಳಿದೆ. ರಾಜಕೀಯ ಲಾಭ ಪಡೆಯಲು ಇದು ನಡೆಯುತ್ತಿದೆ. ಬಾಬರಿ ಮಸೀದಿ ಪ್ರಕರಣದಲ್ಲಿ ಅದೇ ವಿಧಾನವನ್ನು ಅನುಸರಿಸಲಾಗುತ್ತಿದೆ ಎಂದು ಅವರ ವಕೀಲ ಮೆರಾಜುದ್ದೀನ್ ಸಿದ್ದಿಕಿ ತಿಳಿಸಿದ್ದಾರೆ. \ No newline at end of file diff --git a/eesanje/url_47_174_3.txt b/eesanje/url_47_174_3.txt new file mode 100644 index 0000000000000000000000000000000000000000..e6a4d918d0067ecd22eddd7a1a2b8d0b9a778f12 --- /dev/null +++ b/eesanje/url_47_174_3.txt @@ -0,0 +1,5 @@ +ಬಜೆಟ್‍ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು +ನವದೆಹಲಿ,ಫೆ.1- ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಮಧ್ಯಂತರ ಬಜೆಟ್‍ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಶೇ.28ರಷ್ಟು ಹೆಚ್ಚಾಗಿದೆ. +ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕೋರ್ಸ್‍ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು ಶೇ.43ರಷ್ಟು ದಾಖಲಾತಿಯನ್ನು ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ. +2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು +ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಶೇ.70ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು. \ No newline at end of file diff --git a/eesanje/url_47_174_4.txt b/eesanje/url_47_174_4.txt new file mode 100644 index 0000000000000000000000000000000000000000..d602498163ce7d78fc65b7f798f584db4855ccbc --- /dev/null +++ b/eesanje/url_47_174_4.txt @@ -0,0 +1,12 @@ +25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ : ನಿರ್ಮಲಾ +ನವದೆಹಲಿ,ಫೆ.1- ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ 25 ಕೋಟಿಗೂ ಹೆಚ್ಚು ಜನರನ್ನು ಬಹು ಆಯಾಮಗಳ ಬಡತನದಿಂದ ಹೊರಬರಲು ನೆರವು ನೀಡುವ ಮೂಲಕ ಕೇಂದ್ರ ಸರ್ಕಾರ ನೈಜ್ಯ ಬಡತನ ನಿರ್ಮೂಲನೆ ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. +ಸಂಸತ್‍ನಲ್ಲಿ ತಮ್ಮ 6 ನೇ ಬಜೆಟ್ ಮಂಡಿಸಿದ ಅವರು, ತಮ್ಮ ಸರ್ಕಾರದ 10 ವರ್ಷದ ಸಾಧನೆಯನ್ನು ಎಳೆಎಳೆಯಾಗಿ ಬಿಡಿಸಿಟ್ಟರು. ಹಿಂದಿನ ಸರ್ಕಾರಗಳಂತೆ ನಾವು ಬರೀ ಘೋಷಣೆಗಳನ್ನು ಮಾಡುವುದಿಲ್ಲ. ಅಸಲಿ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದರು. +ತಮ್ಮ ಭಾಷಣದುದ್ದಕ್ಕೂ ಮಹಿಳಾ ಆದ್ಯತೆಯನ್ನು ಪ್ರಬಲವಾಗಿ ಪ್ರತಿಪಾದಿಸಿದ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆಗಳನ್ನು ಪ್ರಸ್ತಾಪಿಸಿದರು. ಕಳೆದ 10 ವರ್ಷಗಳಿಂದಲೂ ಭಾರತ ಪ್ರಗತಿದಾಯಕ ಪರಿವರ್ತನೆ ಮುನ್ಸೂಚನೆಯನ್ನು ಕಂಡಿದೆ. ಅವಕಾಶಗಳಲ್ಲಿ ಭಾರತೀಯರು ಬಹುನಿರೀಕ್ಷೆಗಳನ್ನು ಹೊಂದಿದ್ದಾರೆ. ಜನರ ಆಶೀರ್ವಾದದೊಂದಿಗೆ ನಮ್ಮ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ 2014 ರಿಂದಲೂ ದೇಶದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದೆ ಎಂದಿದ್ದಾರೆ. +ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ +ಸಬ್ ಕ ಸಾಥ್, ಸಬ್ ಕ ವಿಕಾಸ್ ಎಂಬ ಮಂತ್ರದೊಂದಿಗೆ ಸರಿಯಾದ ಹಾದಿಯಲ್ಲಿ ಮುನ್ನಡೆಯುತ್ತಿದೆ. ಯುವ ಜನರ ಬಹು ಎತ್ತರದ ಆಕಾಂಕ್ಷೆಗಳಿಗೆ ಸ್ಪಂದಿಸಿದೆ. ಅವರ ಪ್ರಕಾಶಮಾನ ಭವಿಷ್ಯಕ್ಕಾಗಿ ಈ ಬಜೆಟ್ ಮಂಡಿಸುತ್ತಿರುವುದು ಹೆಮ್ಮೆ ಎಂದಿದ್ದಾರೆ. ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಜನರ ಆಶೀರ್ವಾದದೊಂದಿಗೆ ಅತ್ಯುದ್ಭುತವಾದ ಕೆಲಸಗಳನ್ನು ಮುಂದುವರೆಸಲಿದೆ ಎಂಬ ವಿಶ್ವಾಸವನ್ನು ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ. +ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಳ್ಳುವಿಕೆಯ ಸಾಮಾಜಿಕ ಬದ್ಧತೆಯಾಗಿದೆ. ಎಲ್ಲಾ ಧರ್ಮೀಯರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ. ಎಲ್ಲರ ಸಹಭಾಗಿತ್ವಕ್ಕೂ ಆದ್ಯತೆ ದೊರೆತಿದೆ ಎಂದು ಹೇಳಿದರು. ದೇಶದ ಭವಿಷ್ಯವಾಗಿರುವ ಅಮೃತ್‍ಕಾಲ್‍ಗೆ ಭದ್ರಬುನಾದಿ ಹಾಕಲಾಗಿದೆ. ಜನರ ಪರವಾದ ಕೆಲಸಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲಾಗಿದೆ. ಉದ್ಯಮ ಹಾಗೂ ಕೈಗಾರಿಕಾ ವಲಯಕ್ಕೆ ನೀಡಿದ ಬೆಂಬಲದಿಂದಾಗಿ ಆರ್ಥಿಕ ಪರಿವರ್ತನೆ ಸಕಾರಾತ್ಮಕವಾಗಿದೆ ಎಂದು ಹೇಳಿಕೊಂಡಿದ್ದಾರೆ. +ಎಲ್ಲರ ಮನೆಮನೆಗೆ ನೀರು, ಎಲ್ಲರಿಗೂ ಬ್ಯಾಂಕ್ ಖಾತೆಗಳು, ಉಚಿತ ಗ್ಯಾಸ್ ಕನೆಕ್ಷನ್, ಅಗತ್ಯ ಇರುವವರಿಗೆ ಆಹಾರ ಧಾನ್ಯ ಸೇರಿದಂತೆ ಜನಪರವಾದ ಯೋಜನೆಗಳು ನಿರಂತರವಾಗಿ ಜಾರಿಯಲ್ಲಿವೆ. ಸರ್ವಾಂಗೀಣ, ಸರ್ವಸ್ಪರ್ಶಿ, ಸರ್ವ ಸಮಾದೇಷ್ಟಿ ಆದ್ಯತೆಗಳೊಂದಿಗೆ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಭ್ರಷ್ಟಾಚಾರವನ್ನು ತಗ್ಗಿಸಲಾಗಿದ್ದು, ಪಕ್ಷಪಾತವನ್ನು ಹತ್ತಿಕ್ಕಲಾಗಿದೆ. ಪಾರದರ್ಶಕತೆಯನ್ನು ಹೆಚ್ಚಿಸಲಾಗಿದೆ. ಸಂಪನ್ಮೂಲ ಹಂಚಿಕೆ ಸಮನಾಗಿ ನಡೆಯುತ್ತಿದೆ. ಸಮಾನತೆಗಾಗಿ ಎಲ್ಲಾ ಅಡೆತಡೆಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಹೇಳಿದರು. +ನಮ್ಮ ಸರ್ಕಾರ 4 ವರ್ಗಗಳ ಮೇಲೆ ಹೆಚ್ಚು ಆದ್ಯತೆ ನೀಡಿದೆ. ದಯಾಳ್, ಬಡವರು, ಮಹಿಳೆ, ಯುವಕರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇವರು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯಾಗುತ್ತದೆ. ಜಾತ್ಯತೀತತೆ ಎಂಬುದನ್ನು ಕ್ರಿಯಾತ್ಮಕವಾಗಿ ಜಾರಿಗೊಳಿಸಲಾಗಿದೆ. ಬಡವರ ಅಭಿವೃದ್ಧಿ, ದೇಶದ ಅಭಿವೃದ್ಧಿ. ಈ ಹಿಂದೆ ಗರೀಬ್ ಹಠಾವೊ ಘೋಷಣೆಯಾಗಿತ್ತು. ನಮ್ಮ ಸರ್ಕಾರದಲ್ಲಿ ಅವರು ಸಶಕ್ತಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. +ನೇರ ನಗದು ವರ್ಗಾವಣೆಯಡಿ ಪಿಎಂ ಜನಮನ್ ಖಾತೆ ಮೂಲಕ 34 ಲಕ್ಷ ಕೋಟಿ ರೂ.ಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗಿದೆ. ಇದರಿಂದ 2.7 ಲಕ್ಷ ಕೋಟಿ ರೂ. ಸೋರಿಕೆ ಉಳಿಕೆಯಾಗಿದೆ. ತನ್ಮೂಲಕ ಬಡವರ ಅಭಿವೃದ್ಧಿಗೆ ಮತ್ತಷ್ಟು ಹಣ ದೊರೆತಂತಾಗಿದೆ ಎಂದಿದ್ದಾರೆ. ಪಿಎಂ ಜನ್‍ಮನ್ ಯೋಜನೆಯಡಿ 78 ಲಕ್ಷ ಬೀದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡಲಾಗಿದೆ. ಅದರಲ್ಲಿ 2.3 ಲಕ್ಷ ಫಲಾನುಭವಿಗಳು 3ನೇ ಕಂತನ್ನು ಪಡೆದುಕೊಂಡಿದ್ದಾರೆ. 18 ವಲಯಗಳ ಕುಶಲಕರ್ಮಿಗಳನ್ನು ಬೆಂಬಲಿಸುವ ಪಿಎಂ ವಿಶ್ವಕರ್ಮ ಯೋಜನೆ ಉತ್ತಮ ಫಲಿತಾಂಶ ನೀಡಿದೆ. ಇದರಿಂದ ಹಲವು ವಲಯಗಳಲ್ಲಿ ಅದ್ಭುತವಾದ ಅಭಿವೃದ್ಧಿಯಾಗಿದೆ ಎಂದು ಹೇಳಿದರು. +ನೋಟು ಅಮಾನ್ಯೀಕರಣದಿಂದ ಖಾಸಗಿ ಬಂಡವಾಳದಾರರಿಗೆ ಲಾಭ : ಸುರ್ಜೇವಾಲ +ಅನ್ನದಾತರಾದ ರೈತರಿಗೆ ಕೇಂದ್ರ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ. 11.8 ಕೋಟಿ ರೈತರಿಗೆ ಕೃಷಿ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವು ಒದಗಿಸಲಾಗುತ್ತದೆ. 4 ಕೋಟಿ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆವಿಮೆ ಪಾವತಿಸಲಾಗಿದೆ. ಎಲೆಕ್ಟ್ರಾನಿಕ್ಸ್ ನ್ಯಾಷನಲ್ ಅಗ್ರಿಕಲ್ಚುರಲ್ ಮಾರ್ಕೆಟ್ ಸಮೀಕರಣದಿಂದ 1,361 ಮಂಡಿಗಳನ್ನು ಸಂಪರ್ಕಿಸಲಾಗಿದ್ದು, 1.8 ಕೋಟಿ ರೈತರಿಗೆ ಸೇವೆ ಒದಗಿಸುತ್ತಿದೆ. ಇದು 3 ಲಕ್ಷ ಕೋಟಿಗೂ ಅಕ ಇಳುವರಿಗೆ ಕಾರಣವಾಗಿದೆ ಎಂದರು. ಕೃಷಿ ಕ್ಷೇತ್ರದ ಸರ್ವರ ಒಳಗೊಳ್ಳುವಿಕೆ, ಸಮತೋಲನ, ತ್ವರಿತ ಅಭಿವೃದ್ಧಿ ಮತ್ತು ಉತ್ಪಾದಕತೆಗೆ ಒತ್ತು ನೀಡಲಾಗಿದೆ ಎಂದು ವಿವರಿಸಿದರು. \ No newline at end of file diff --git a/eesanje/url_47_174_5.txt b/eesanje/url_47_174_5.txt new file mode 100644 index 0000000000000000000000000000000000000000..809fab0a05e5c600fa64cb4eba561121c8f65f9a --- /dev/null +++ b/eesanje/url_47_174_5.txt @@ -0,0 +1,4 @@ +11.8 ಕೋಟಿ ರೈತರಿಗೆ ಪಿಎಂ ಕಿಸಾನ್ ಯೋಜನೆ ನೆರವು +ನವದೆಹಲಿ, ಫೆ 1 (ಪಿಟಿಐ) ಪಿಎಂ ಕಿಸಾನ್ ಯೋಜನೆಯಡಿ 11.8 ಕೋಟಿ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎನ್ನುವುದು ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ ಎಂದಿದ್ದಾರೆ. +ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ +ಈ ಯೋಜನೆಯಡಿಯಲ್ಲಿ, ಸರ್ಕಾರವು ಮೂರು ಸಮಾನ ನಾಲ್ಕು-ಮಾಸಿಕ ಕಂತುಗಳಲ್ಲಿ ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ. ಹಣವನ್ನು ಡಿಬಿಟಿ ಮೋಡ್ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಫೆಬ್ರವರಿ 2019 ರಲ್ಲಿ ಮಧ್ಯಂತರ ಬಜೆಟ್‍ನಲ್ಲಿ ಘೋಷಿಸಲಾಯಿತು, ಈ ಯೋಜನೆಯು ಡಿಸೆಂಬರ್ 2018 ರಿಂದ ಜಾರಿಗೆ ಬಂದಿತು. \ No newline at end of file diff --git a/eesanje/url_47_174_6.txt b/eesanje/url_47_174_6.txt new file mode 100644 index 0000000000000000000000000000000000000000..a225cd60c5e500fb3f3ddb18962fbb611e475031 --- /dev/null +++ b/eesanje/url_47_174_6.txt @@ -0,0 +1,8 @@ +ತಿಂಗಳಾರಂಭದಲ್ಲೇ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ +ನವದೆಹಲಿ,ಫೆ.1- ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 14 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಏಳೆದಂತಾಗಿದೆ. +ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಬಳಕೆಯ ಸಿಲಿಂಡರ್‍ಗಳ ಪರಿಷ್ಕøತ ಬೆಲೆ ಇಂದಿನಿಂದಲೇ ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು. +ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ. ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದೆ. ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ. ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್‍ಗಳ ದರ 17 ಬಾರಿ ಬದಲಾಗಿದ್ದು, ವಾಣಿಜ್ಯ ಸಿಲಿಂಡರ್‍ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ. +ಈ ಬದಲಾವಣೆಗಳಿಂದಾಗಿ, ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಐಒಸಿ ಅಂಕಿಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ. +ಸ್ನೇಹಿತನ ವಿರುದ್ದ ಅತ್ಯಾಚಾರ ಆರೋಪ ಮಾಡಿದ ಬಿಗ್‍ಬಾಸ್ ಸ್ಪರ್ಧಿ +ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಸತತ 6ನೇ ಬಾರಿ ಯಾವುದೇ ಬದಲಾವಣೆಯಾಗಿಲ್ಲ. ಆಗಸ್ಟ್ 30 ರಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬಾರಿ ಬದಲಾವಣೆ ಮಾಡಲಾಗಿತ್ತು. ಅಂಕಿಅಂಶಗಳ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ., ಕೋಲ್ಕತ್ತಾದಲ್ಲಿ 929 ರೂ., ಮುಂಬೈಯಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಇದೆ. +ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾಪೆರ್ರೇಷನ್, ಭಾರತ್ ಪೆಟ್ರೋಲಿಯಂ ಕಾಪೆರ್ರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾಪೆರ್ರೇಷನ್ ಲಿಮಿಟೆಡ್ ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‌ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. \ No newline at end of file diff --git a/eesanje/url_47_174_7.txt b/eesanje/url_47_174_7.txt new file mode 100644 index 0000000000000000000000000000000000000000..080cdc97f3ee86332aa64d73b02fc1971457c6be --- /dev/null +++ b/eesanje/url_47_174_7.txt @@ -0,0 +1,15 @@ +2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು +* ಭಾರತವು ಕೋವಿಡ್ -19 ರ ಸವಾಲುಗಳನ್ನು ಜಯಿಸಿದೆ,* ಸ್ವಾವಲಂಬಿ ಭಾರತಕ್ಕಾಗಿ ಅಡಿಪಾಯ ಹಾಕಲಾಗಿದೆ.* 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿಕೆ +*ಆದಾಯ ತೆರಿಗೆ ಸೇರಿದಂತೆ ತೆರಿಗೆ ಪದ್ಧತಿಗಳಲ್ಲಿ ಬದಲಾವಣೆ ಇಲ್ಲ* ಅನ್ನದಾತರಿಗೆ ಕನಿಷ್ಠ ಬೆಂಬಲ ಬೆಲೆಗಳ ಹೆಚ್ಚಳ ಮಾಡಲಾಗಿದೆ.* 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಶ್ರಮ* ಬಡವರು, ಮಹಿಳೆಯರು, ಯುವಕರು ಮತ್ತು ರೈತರೇ ನಮ್ಮ ನಾಲ್ಕು ಜಾತಿಗಳು +*2030ರ ವೇಳೆಗೆ 100 ಮೆಟ್ರಿಕ್ ಟನ್ ಕಲ್ಲಿದ್ದಲು ಅನಿಲೀಕರಣ*ವಿಕಸಿತ ಭಾರತ ನಿರ್ಮಿಸುವತ್ತ ಗಮನ ಹರಿಸಿದ್ದೇವೆ : ನಿರ್ಮಲಾ +* ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಹು ಆಯಾಮದ ಬಡತನದಿಂದ ಮುಕ್ತಿ ಪಡೆದಿದ್ದಾರೆ* ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಅಡಿಯಲ್ಲಿ 11.8 ಕೋಟಿ ರೈತರು ಆರ್ಥಿಕ ನೆರವು ನೀಡಲಾಗಿದೆ. +*11.8 ಕೋಟಿ ರೈತರಿಗೆ ಪಿಎಂ ಕಿಸಾನ್ ಯೋಜನೆ ನೆರವು +* ಎಲ್ಲ ಅರ್ಹ ಜನರನ್ನು ಒಳಗೊಳ್ಳುವ ಶುದ್ಧತ್ವ ವಿಧಾನವು ಸಾಮಾಜಿಕ ನ್ಯಾಯದ ನಿಜವಾದ ಮತ್ತು ಸಮಗ್ರ ಸಾಧನೆಯಾಗಿದೆ* ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ, 43 ಕೋಟಿ ಸಾಲವನ್ನು ಒಟ್ಟು 22.5 ಲಕ್ಷ ಕೋಟಿ ರೂ.ಗೆ ವಿಸ್ತರಿಸಲಾಗಿದೆ +*ಬಜೆಟ್‍ನಲ್ಲಿ ಬಡವರು, ಮಹಿಳೆಯರು, ಯುವಕರು ಹಾಗೂ ಅನ್ನದಾತ ಆದ್ಯತೆ*40 ಸಾವಿರ ಸಾಮಾನ್ಯ ರೈಲು ಬೋಗಿಗಳನ್ನು ವಂದೇ ಭಾರತ್ ಮಾನದಂಡಕ್ಕೆ ಪರಿವರ್ತನೆ +* ಜನ್ ಧನ್ ಖಾತೆಗಳ ಮೂಲಕ 34 ಲಕ್ಷ ಕೋಟಿ ನೇರ ಲಾಭ ವರ್ಗಾವಣೆಯಿಂದ 2.7 ಲಕ್ಷ ಕೋಟಿ ಉಳಿತಾಯವಾಗಿದೆ* 10 ವರ್ಷಗಳಲ್ಲಿ ಮಹಿಳೆಯರಿಗೆ 30 ಕೋಟಿ ಮುದ್ರಾ ಯೋಜನೆ ಸಾಲ ನೀಡಲಾಗಿದೆ +*25 ಕೋಟಿಗೂ ಹೆಚ್ಚು ಜನ ಬಡತನದಿಂದ ಹೊರಬಂದಿದ್ದಾರೆ : ನಿರ್ಮಲಾ*ಬಜೆಟ್‍ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು +* ಸ್ಕಿಲ್ ಇಂಡಿಯಾ ಮಿಷನ್ ದೇಶದಲ್ಲಿ 1.4 ಕೋಟಿ ಯುವಕರಿಗೆ ತರಬೇತಿ ಮತ್ತು ಕೌಶಲ್ಯ ನೀಡಲಾಗಿದೆ* ತ್ರಿವಳಿ ತಲಾಖ್‍ಗೆ ಕೊಕ್ ನೀಡಲಾಗಿದೆ.* ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಶಾಸಕಾಂಗ ಸ್ಥಾನಗಳನ್ನು ಮೀಸಲಿಡಲಾಗಿದೆ.* ಹಣದುಬ್ಬರ ಕಡಿಮೆಯಾಗಿದೆ +*ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್‍ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ +*ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆ ನಿರ್ಮಾಣ +*ಅಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಕಾರ್ಡ್ +*ಹೆಚ್ಚಿನ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ನಿರ್ಧಾರ* ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯ ಪರಿಣಾಮಕಾರಿ ಮತ್ತು ಅಗತ್ಯ ಮಾದರಿ* ನಾವು ಫಲಿತಾಂಶಗಳ ಮೇಲೆ ಕೇಂದ್ರೀಕರಿಸುತ್ತೇವೆ ಹೊರತು ವೆಚ್ಚಗಳಲ್ಲ \ No newline at end of file diff --git a/eesanje/url_47_174_8.txt b/eesanje/url_47_174_8.txt new file mode 100644 index 0000000000000000000000000000000000000000..12ca9b03689a6af5b4d2ed76f887d31a0255d4d8 --- /dev/null +++ b/eesanje/url_47_174_8.txt @@ -0,0 +1,7 @@ +ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ +ನವದೆಹಲಿ,ಫೆ.1- ಕೇಂದ್ರ ಸರ್ಕಾರದ ಸತತ 6ನೇ ಬಾರಿಗೆ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ನೀಲಿಬಣ್ಣದ ಸೀರೆ ಧರಿಸಿದ್ದು ವಿಶೇಷವಾಗಿತ್ತು. ಬಜೆಟ್ ಮಂಡನೆಗೂ ರಾಷ್ಟ್ರಪತಿ ದ್ರೌಪದಿ ಮುರ್ಮ ಹಾಗೂ ಹಣಕಾಸು ಸಚಿವಾಲಯದ ಕಚೇರಿಗೆ ಆಗಮಿಸಿದ್ದ ನಿರ್ಮಲಾ ಸೀತಾರಾಮನ್ ನೀಲಿ ಹಾಗೂ ಕೆನೆಬಣ್ಣದ ಸೀರೆ ಧರಿಸಿದ್ದರು. ನಂತರ ಸಂಸತ್ತಿನಲ್ಲಿ ಬಜೆಟ್ ಪುಸ್ತಕ ಓದುವಾಗಲೂ ಅದೇ ರಿಸಿನಲ್ಲಿದ್ದರು. +ಈ ಬಾರಿಯ ಬಜೆಟ್‍ನಲ್ಲಿ ನಿರ್ಮಲಾ ಅವರು ಧರಿಸುವ ಸೀರೆ ಸಂಪೂರ್ಣ ನೀಲಿ ಬಣ್ಣದ್ದಾಗಿದ್ದು, ಮಧ್ಯದಲ್ಲಿ ಕೆನೆ ಬಣ್ಣದ ಚಿತ್ತಾರವಿದೆ. ಬಳ್ಳಿ ಹಾಗೂ ಎಲೆಗಳಿಂದ ಕೂಡಿರುವ ಚಿತ್ತಾರವನ್ನು ಸೀರೆಯಲ್ಲಿ ಕಾಣಬಹುದಾಗಿದೆ. ಇದರೊಂದಿಗೆ ಸೀರೆಗೊಪ್ಪುವ ಕೆನೆ ಬಣ್ಣದ ಮ್ಯಾಚಿಂಗ್ ಬ್ಲೌಸ್ ಧರಿಸಿದ್ದರು. +ಸತತವಾಗಿ 6 ಬಾರಿ ಬಜೆಟ್ ಮಂಡಿಸಿ ನಿರ್ಮಲಾ ದಾಖಲೆ +ಪ್ರತಿ ಬಾರಿ ಬಜೆಟ್‍ನಲ್ಲೂ ನಿರ್ಮಲಾ ಸೀತಾರಾಮನ್ ಅವರು ಮಂಡಿಸುವ ಬಜೆಟ್ ಜೊತೆಗೆ ಅವರ ಸೀರೆ ಕೂಡ ಸುದ್ದಿಯಾಗುತ್ತಿತ್ತು. ನಿರ್ಮಲಾ ಸೀತಾರಾಮನ್ ಅವರ ಭಾರತೀಯ ಜವಳಿಗಳ ಮೇಲಿನ ಪ್ರೀತಿ ಅಪಾರ. ಅವರು ಯಾವಾಗಲೂ ಸ್ಥಳೀಯ ಕೈಮಗ್ಗಗಳನ್ನು ಬಳಸುವಂತೆ ಕರೆ ನೀಡುತ್ತಾರೆ. +ಕಳೆದ ವರ್ಷದ ಬಜೆಟ್‍ನಲ್ಲಿ (2023ರದ್ದು) ಅವರು ಕೆಂಪು ಬಣ್ಣದ ಇಳಕಲ್ ಸೀರೆ ತೊಟ್ಟು ಮಿಂಚಿದ್ದರು. ಈ ಬಾರಿಯ ಮಧ್ಯಂತರ ಬಜೆಟïನಲ್ಲಿ ಅವರು ನೀಲಿ ಮತ್ತು ಕ್ರೀಮ್ ಬಣ್ಣದ ಛಾಯೆ ಇರುವ ಸೀರೆ ( ) ತೊಟ್ಟಿದ್ದಾರೆ. +ನಿರ್ಮಲಾ ಸೀತಾರಾಮನ್ ಈ ಬಾರಿ ತೊಟ್ಟಿರುವ ನೀಲಿ ಬಣ್ಣದ ಸೀತೆ ತುಸ್ಸಾರ್ ರೇಷ್ಮೆಯದ್ದು. ಪಶ್ಚಿಮ ಬಂಗಾಳ, ಬಿಹಾರ, ಝಾರ್ಖಂಡ್, ಒಡಿಶಾ ಪ್ರದೇಶಗಳಲ್ಲಿ ಸಿಗುವ ರೇಷ್ಮೆಯಿಂದ ಈ ಸೀರೆ ನೇಯಲಾಗುತ್ತದೆ. \ No newline at end of file diff --git a/eesanje/url_47_174_9.txt b/eesanje/url_47_174_9.txt new file mode 100644 index 0000000000000000000000000000000000000000..dd1a2d794ee0aebc0652ff79a3946599f0124f9c --- /dev/null +++ b/eesanje/url_47_174_9.txt @@ -0,0 +1,5 @@ +ನೋಟು ಅಮಾನ್ಯೀಕರಣದಿಂದ ಖಾಸಗಿ ಬಂಡವಾಳದಾರರಿಗೆ ಲಾಭ : ಸುರ್ಜೇವಾಲ +ನವದೆಹಲಿ,ಫೆ.1- ವಿನಾಶಕಾರಿ ನೋಟು ಅಮಾನೀಕರಣದ ವಿಪತ್ತನ್ನು ಖಾಸಗಿ ಬಂಡವಾಳದಾರರು ಲಾಭದಾಯಕವನ್ನಾಗಿ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಮತ್ತು ರಾಹುಲ್‍ಗಾಂಧಿ ಹೇಳಿದ್ದು ನಿಜವಾಗುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರತಿಪಾದಿಸಿದ್ದಾರೆ. +ಉಳಿಗಮಾನ್ಯ ವ್ಯವಸ್ಥೆ ವಿರುದ್ಧ ಸಮರ ಸಾರುವ ಸಮಯ ಬಂದಿದೆ : ಹೇಮಂತ್ ಸೊರೆನ್ +ಪೇಟಿಎಂ ಪೇಮಿಂಟ್ಸ್ ಬ್ಯಾಂಕ್ ಲಿಮಿಟೆಡ್ ವಹಿವಾಟಿನ ಮೇಲೆ ಆರ್‍ಬಿಐ ಫೆ.29 ರವರೆಗೂ ನಿಬಂಧ ಹೇರಿದ ಬೆನ್ನಲ್ಲೇ ಸದರಿ ಆದೇಶವನ್ನು ಟ್ಯಾಗ್ ಮಾಡಿರುವ ರಣದೀಪ್ ಸಿಂಗ್ ಸುರ್ಜೆವಾಲ ಆರ್‍ಬಿಐನ ಆದೇಶದಿಂದ ರಾಹುಲ್‍ಗಾಂಧಿ ಮತ್ತು ಕಾಂಗ್ರೆಸ್‍ನ ಹೇಳಿಕೆಗಳು ನಿಜವಾಗುತ್ತಿವೆ. ನೋಟು ಅಮಾನೀಕರಣ, ವಿನಾಶಕಾರಿ ಆದೇಶವಾಗಿತ್ತು. ಈ ವಿಪತ್ತನ್ನು ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಲು ಪೇಟಿಎಂ ನಂತಹ ಸಂಸ್ಥೆಗಳು ಪ್ರಧಾನಿ ನರೇಂದ್ರ ಮೋದಿಯವರ ಫೋಟೊದೊಂದಿಗೆ ದೇಶದ ಎಲ್ಲಾ ದಿನಪತ್ರಿಕೆಗಳಿಗೆ ನೂರಾರು ಕೋಟಿ ರೂ. ಖರ್ಚು ಮಾಡಿ ಮುಖಪುಟದ ಜಾಹೀರಾತು ನೀಡಿದ್ದರು ಎಂದು ಹೇಳಿದ್ದಾರೆ. +ಆರ್‍ಬಿಐನ ಆದೇಶದ ನಂತರ ಕೋಟ್ಯಂತರ ಷೇರುದಾರರ ಪರಿಸ್ಥಿತಿ ಏನು ಎಂದು ಸುರ್ಜೆವಾಲ ಪ್ರಶ್ನಿಸಿದ್ದಾರೆ. ಮೋದಿ ಸರ್ಕಾರ ಇದಕ್ಕೆ ಉತ್ತರಿಸಬೇಕು ಮತ್ತು ಉತ್ತರದಾಯಿ ಆಗಬೇಕೆಂದು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_47_175_1.txt b/eesanje/url_47_175_1.txt new file mode 100644 index 0000000000000000000000000000000000000000..a329c44b6f3152f7a4bacbe9d0e3e6f96da8d95c --- /dev/null +++ b/eesanje/url_47_175_1.txt @@ -0,0 +1,11 @@ +ಸತತವಾಗಿ 6 ಬಾರಿ ಬಜೆಟ್ ಮಂಡಿಸಿ ನಿರ್ಮಲಾ ದಾಖಲೆ +ನವದೆಹಲಿ,ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ 6ನೇ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಈವರೆಗೆ ಐದು ವಾರ್ಷಿಕ ಬಜೆಟ್ ಮಂಡಿಸಿದ್ದ ಅವರು, ಈಗ ಒಂದು ಮಧ್ಯಂತರ ಬಜೆಟ್ ಮಂಡನೆ ಮಾಡುವ ಮೂಲಕ ಹೊಸ ದಾಖಲೆ ಬರೆದರು. ಇದುವರೆಗೆ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಮಾತ್ರ ಈ ಸಾಧನೆ ಮಾಡಿದ್ದರು. +ಮಧ್ಯಂತರ ಬಜೆಟ್ ಮಂಡನೆಯೊಂದಿಗೆ ನಿರ್ಮಲಾ ಸೀತಾರಾಮನ್ ಸತತ ಐದು ಬಜೆಟ್‍ಗಳನ್ನು ಮಂಡಿಸಿದ ಮನಮೋಹನ್ ಸಿಂಗ್, ಅರುಣ್ ಜೇಟ್ಲಿ, ಪಿ. ಚಿದಂಬರಂ ಮತ್ತು ಯಶವಂತ್ ಸಿನ್ಹಾ ಅವರ ಹಿಂದಿನ ದಾಖಲೆಗಳನ್ನು ಮುರಿದಿದ್ದಾರೆ. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿ ಐದು ವಾರ್ಷಿಕ ಬಜೆಟ್ ಮತ್ತು ಒಂದು ಮಧ್ಯಂತರ ಬಜೆಟ್ ಅನ್ನು 1959-1964 ರ ನಡುವೆ ಮಂಡಿಸಿದ್ದರು. ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ 10 ಬಜೆಟ್‍ಗಳನ್ನು ಮಂಡಿಸಿರುವ ದಾಖಲೆಯನ್ನೂ ಹೊಂದಿದ್ದು, ಇದು ಯಾವುದೇ ಹಣಕಾಸು ಸಚಿವರಿಗಿಂತ ಈವರೆಗಿನ ಗರಿಷ್ಠ ದಾಖಲೆಯಾಗಿದೆ. ಸತತವಾಗಿ ಒಂದು ಮಧ್ಯಂತರ ಸೇರಿದಂತೆ ಆರು ಬಜೆಟ್‍ಗಳನ್ನು ಸಹ ಇವರು ಮಂಡಿಸಿದ್ದರು. +ಹಣಕಾಸು ವರ್ಷದ ಮಧ್ಯಂತರ ಬಜೆಟ್ ಏಪ್ರಿಲ-ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾಗುವವರೆಗೆ ಕೆಲವು ವಸ್ತುಗಳ ಮೇಲೆ ಖರ್ಚು ಮಾಡುವ ಹಕ್ಕನ್ನು ಸರ್ಕಾರಕ್ಕೆ ನೀಡುತ್ತದೆ. ಲೋಕಸಭೆ ಚುನಾವಣೆಯ ನಂತರ, ಜೂನ್‍ನಲ್ಲಿ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ. ಹೊಸ ಸರ್ಕಾರವು ಜುಲೈನಲ್ಲಿ 2024-25 ರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಸಾಮಾನ್ಯವಾಗಿ, ಮಧ್ಯಂತರ ಬಜೆಟ್ ಪ್ರಮುಖ ನೀತಿ ಘೋಷಣೆಗಳನ್ನು ಒಳಗೊಂಡಿರುವುದಿಲ್ಲ, ಆದರೆ ಆರ್ಥಿಕತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. +2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅರುಣ್ ಜೇಟ್ಲಿ ಹಣಕಾಸು ಸಚಿವಾಲಯದ ಉಸ್ತುವಾರಿ ವಹಿಸಿಕೊಂಡಿದ್ದರು ಮತ್ತು 2014-15 ರಿಂದ 2018-19 ರವರೆಗೆ ಸತತ ಐದು ಬಜೆಟ್ ಮಂಡಿಸಿದರು. 1970-71ರ ಆರ್ಥಿಕ ವರ್ಷಕ್ಕೆ ಬಜೆಟ್ ಮಂಡಿಸಿದ ಇಂದಿರಾ ಗಾಂಧಿ ನಂತರ ಕೇಂದ್ರ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಸಹ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯ ನಂತರ ಎರಡನೇ ಅವಧಿಯಲ್ಲಿ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆಯ ಜವಾಬ್ದಾರಿಯನ್ನು ಮೋದಿ ಸರ್ಕಾರ ವಹಿಸಿತು. ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾದರು. ಇಂದಿರಾ ಗಾಂಧಿಯವರು 1970-71ರ ಆರ್ಥಿಕ ವರ್ಷದ ಬಜೆಟ್ ಮಂಡಿಸಿದ್ದರು. +ಏನಿದು ಮಧ್ಯಂತರ ಬಜೆಟ್ ? :5 ವರ್ಷಗಳ ಪೂರ್ಣಾವಧಿಯ ಕೇಂದ್ರ ಸರ್ಕಾರ ತನ್ನ ಕೊನೆಯ ಬಜೆಟ್ ಅನ್ನು ಸಾಮಾನ್ಯವಾಗಿ ಮಧ್ಯಂತರ ಬಜೆಟ್ ಎಂದು ಕರೆಯುತ್ತದೆ. ಚಾಲ್ತಿಯಲ್ಲಿರುವ ಹಣಕಾಸು ವರ್ಷದ ಆರಂಭಕ್ಕೆ ಅಥವಾ ಕೊನೆಗೆ ಸಾರ್ವತ್ರಿಕ ಚುನಾವಣೆ ಬಂದರೆ ಆಗ ಮಂಡಿಸುವ ಬಜೆಟ್ ಪೂರ್ಣಕಾಲಿಕ ಬಜೆಟ್ ಆಗಿರುವುದಿಲ್ಲ. ಕೆಲವೇ ತಿಂಗಳ ಅವಧಿಯ ಖರ್ಚು ವೆಚ್ಚಗಳನ್ನು ನಿರ್ವಹಿಸುವ ಮುಂಗಡಪತ್ರವಾಗಿರುತ್ತದೆ. ಚುನಾವಣೆಯಲ್ಲಿ ಗೆದ್ದ ನಂತರ ಹೊಸ ಸರ್ಕಾರವು ಪೂರ್ಣ ಪ್ರಮಾಣದ ಬಜೆಟ್ ಅನ್ನು ರೂಪಿಸುವ ಮತ್ತು ಪ್ರಸ್ತುತಪಡಿಸುವವರೆಗೆ ಅಲ್ಪಾವಧಿಗೆ ಸರ್ಕಾರದ ವೆಚ್ಚದ ಅಗತ್ಯಗಳನ್ನು ಪೂರೈಸಲು ಮಧ್ಯಂತರ ಬಜೆಟ್ ತಾತ್ಕಾಲಿಕ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. +ಚುನಾವಣೆಯಲ್ಲಿ ಗೆದ್ದ ನಂತರ ಹೊಸ ಸರ್ಕಾರವು ಪೂರ್ಣ ಪ್ರಮಾಣದ ಬಜೆಟ್ ಅನ್ನು ರೂಪಿಸುವ ಮತ್ತು ಪ್ರಸ್ತುತಪಡಿಸುವವರೆಗೆ ಅಲ್ಪಾವಧಿಗೆ ಸರ್ಕಾರದ ವೆಚ್ಚದ ಅಗತ್ಯಗಳನ್ನು ಪೂರೈಸಲು ಮಧ್ಯಂತರ ಬಜೆಟ್ ತಾತ್ಕಾಲಿಕ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸರ್ಕಾರ ರಚನೆಯಾದ ನಂತರ 2024-25 ರ ಆರ್ಥಿಕ ವರ್ಷಕ್ಕೆ ಪೂರ್ಣ ಬಜೆಟ್ ಮಂಡಿಸಲಾಗುವುದು.ಹೊರಹೋಗುವ ಸರ್ಕಾರದ ಅವಧಿಯಲ್ಲಿ ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗುತ್ತದೆ.ಮುಂದಿನ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಹೊಣೆಗಾರಿಕೆ ವಹಿಸಿಕೊಳ್ಳಲಿದೆ. +ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ +ಮಧ್ಯಂತರ ಬಜೆಟ್ ಅನ್ನು ವೋಟ್-ಆನ್-ಅಕೌಂಟ್ ಎಂದೂ ಕರೆಯುತ್ತಾರೆ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಳ್ಳುವವರೆಗೆ ಅಗತ್ಯವಾದ ನಿರ್ದಿಷ್ಟ ಖರ್ಚುಗಳನ್ನು ಮಾಡುವ ಅಧಿಕಾರವಾಗಿ ಇದು ಕಾರ್ಯನಿರ್ವಹಿಸುತ್ತದೆ. ವೋಟ್ ಆನ್ ಅಕೌಂಟ್ ಸಮಯದಲ್ಲಿ ಪ್ರಮುಖ ನೀತಿ ಪ್ರಕಟಣೆಗಳನ್ನು ಮಾಡಲಾಗುವುದಿಲ್ಲ, ಆದಾಗ್ಯೂ ಗಣನೀಯ ಘೋಷಣೆಗಳನ್ನು ಮಾಡುವುದರ ವಿರುದ್ಧ ಯಾವುದೇ ಸಾಂವಿಧಾನಿಕ ನಿಷೇಧವಿಲ್ಲ. +ಮಧ್ಯಂತರ ಬಜೆಟ್‍ಗಳು ಮತದಾರರ ಮೇಲೆ ಯಾವುದೇ ಅನಗತ್ಯ ಪ್ರಭಾವ ಬೀರದಂತೆ ನೋಡಿಕೊಳ್ಳಲು ಭಾರತದ ಚುನಾವಣಾ ಆಯೋಗವು ಕೆಲವು ಮಿತಿಗಳನ್ನು ವಿಸಿದೆ. ಸರ್ಕಾರವು ಪ್ರಮುಖ ತೆರಿಗೆಗಳು ಅಥವಾ ನೀತಿ ಸುಧಾರಣೆಗಳನ್ನು ಬಜೆಟ್‍ನಲ್ಲಿ ಪ್ರಸ್ತಾಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ಆಡಳಿತದ ವಿತರಣೆಯ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರಬಹುದು. ವೋಟ್-ಆನ್-ಅಕೌಂಟ್ ಎರಡು ತಿಂಗಳ ಅವಧಿಯವರೆಗೆ ಪರಿಣಾಮಕಾರಿಯಾಗಿ ಉಳಿಯುತ್ತದೆ, ಅಗತ್ಯವಿದ್ದರೆ ವಿಸ್ತರಣೆಯನ್ನೂ ಮಾಡಬಹುದಾಗಿದೆ. +ಸಂವಿಧಾನದ 116 ನೇ ವಿಧಿಯ ಪ್ರಕಾರ, ವೋಟ್-ಆನ್-ಖಾತೆಯು ಸರ್ಕಾರಕ್ಕೆ ಕನ್ಸಾಲಿಡೇಟೆಡ್ ಫಂಡ್ ಆಫ್ ಇಂಡಿಯಾದಿಂದ ಮುಂಗಡ ಹಂಚಿಕೆಯನ್ನು ಸೂಚಿಸುತ್ತದೆ, ನಿರ್ದಿಷ್ಟವಾಗಿ ತಕ್ಷಣದ ವೆಚ್ಚದ ಅಗತ್ಯಗಳನ್ನು ಪರಿಹರಿಸಲು ಇದನ್ನು ಗೊತ್ತುಪಡಿಸಲಾಗಿದೆ. \ No newline at end of file diff --git a/eesanje/url_47_175_10.txt b/eesanje/url_47_175_10.txt new file mode 100644 index 0000000000000000000000000000000000000000..ea17ebc1d2e70af1dab0953ff1945a529fd12430 --- /dev/null +++ b/eesanje/url_47_175_10.txt @@ -0,0 +1,7 @@ +ವಾಷ್ ರೂಮ್‍ನಲ್ಲಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಶಿಕ್ಷಕನ ಬಂಧನ +ನಾಗ್ಪುರ, ಜನವರಿ 31 (ಪಿಟಿಐ) : ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿನ ಕೈಗಾರಿಕಾ ಎಕ್ಸ್ ಪೋದಲ್ಲಿ ಮಹಿಳೆಯರು ವಾಶ್‍ರೂಮ್ ಬಳಸುತ್ತಿರುವ ವೀಡಿಯೊಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ, ಅಲ್ಲಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಆರೋಪಿಯನ್ನು ನಾಗ್ಪುರದ ಕಾಸರಪುರ ನಿವಾಸಿ ಹಾಗೂ ಪ್ರತಿಷ್ಠಿತ ಖಾಸಗಿ ಶಾಲೆಯೊಂದರ ಚಿತ್ರಕಲಾ ಶಿಕ್ಷಕ ಮಂಗೇಶ್ ವಿನಾಯಕರಾವ್ ಖಪ್ರೆ (37) ಎಂದು ಗುರುತಿಸಲಾಗಿದ್ದು, ವಾಶ್ ರೂಂನ ಕಿಟಕಿಯ ಮೂಲಕ ಮಹಿಳೆಯರ ಮೊಬೈಲ್ ಫೋನ್‍ನಲ್ಲಿ ವೀಡಿಯೊಗಳನ್ನು ರೆಕಾರ್ಡ್ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-01-2024) +ಮೂರು ದಿನಗಳ ಕೈಗಾರಿಕಾ ಎಕ್ಸ್ಪೋ , ಅಡ್ವಾಂಟೇಜ್ ವಿದರ್ಭ ಅನ್ನು ಅಂಬಾಜಾರಿಯಲ್ಲಿರುವ ನಾಗ್‍ಪುರ ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿತ್ತು. ಘಟನೆ ಕುರಿತು ಮಹಿಳೆಯೊಬ್ಬರು ಸಂಘಟಕರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಂಗಳವಾರ ಜಾಮೀನು ನೀಡಿದೆ. +ಫೋನ್ ಅನ್ನು ಪರೀಕ್ಷಿಸಿದಾಗ, ಖಪ್ರೆ ಹಿಂದಿನ ಮೂರು ದಿನಗಳಲ್ಲಿ ಸುಮಾರು ಹನ್ನೆರಡು ಮಹಿಳೆಯರ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದಾರೆ ಮತ್ತು ಕೆಲವು ಕ್ಲಿಪ್‍ಗಳನ್ನು ಅಳಿಸಿದ್ದಾರೆ ಎಂದು ಕಂಡುಬಂದಿದೆ, ಶಿಕ್ಷಕರು ಮಾನಸಿಕ ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. +ಸಾರ್ವಜನಿಕ ಶೌಚಾಲಯಗಳಲ್ಲಿ ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡಿದ ಇತಿಹಾಸವೂ ಖಪ್ರೆ ಅವರದ್ದು ಎಂಬ ಅಂಶವೂ ಬೆಳಕಿಗೆ ಬಂದಿದೆ. ಅವರ ಮೊಬೈಲ್ ಫೋನ್‍ನಲ್ಲಿ ಸುಮಾರು 30 ಅಂತಹ ವೀಡಿಯೊಗಳು ಕಂಡುಬಂದಿವೆ ಮತ್ತು ಅವುಗಳನ್ನು 2022 ರಿಂದ ರೆಕಾರ್ಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. diff --git a/eesanje/url_47_175_11.txt b/eesanje/url_47_175_11.txt new file mode 100644 index 0000000000000000000000000000000000000000..12cf04057ce6162c9be1955f33cbca6ff2530300 --- /dev/null +++ b/eesanje/url_47_175_11.txt @@ -0,0 +1,5 @@ +ಇಂಡಿ ಮೈತ್ರಿಕೂಟಕ್ಕೆ ಚಂಢೀಘಡದಲ್ಲಿ ಮರ್ಮಾಘಾತ, ಬಿಜೆಪಿಗೆ ಮೇಯರ್ ಪಟ್ಟ +ಚಂಡೀಘಡ,ಜ.30- ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಪ್ರತಿಷ್ಠಿತ ಚಂಡೀಘಡ ಮೇಯರ್ ಪಟ್ಟ ಬಿಜೆಪಿಗೆ ಒಲಿದಿದೆ. ಬಿಜೆಪಿ ಅಭ್ಯರ್ಥಿ ಮನೋಜ್‍ಕುಮಾರ್ ಸೋಂಕರ್ ಅವರು 16 ಮತ ಪಡೆದು ತಮ್ಮ ಪ್ರತಿಸ್ರ್ಪಧಿ ಇಂಡಿಯಾ ಮೈತ್ರಿಕೂಟದ ಕುಲದೀಪ್ ಸಿಂಗ್ ಅವರನ್ನು ನಾಲ್ಕು ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ. +ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಲಿ : ಹೆಚ್‌ಡಿಕೆ ಸವಾಲ್ +ದೇಶದ ಪ್ರತಿಷ್ಠಿತ ಮೇಯರ್ ಹುದ್ದೆ ಎಂದೇ ಪರಿಗಣಿಸಲ್ಪಟ್ಟಿದ್ದ ಚಂಡೀಘಡ ಪಾಲಿಕೆಯು ಬಿಜೆಪಿ ತೆಕ್ಕೆಗೆ ಬಂದಿರುವುದರಿಂದ ಇಲ್ಲಿ ಕೂಡ ಇಂಡಿಯಾ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯಾಗಿದೆ. ಪದನಿಮ್ಮತ್ತ ಸದಸ್ಯ ಕಿರಣ್.ಕೆ ಅವರ ಮತ ಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ ಅಭ್ಯರ್ಥಿ ಮನೋಜ್‍ಕುಮಾರ್ ಸೋಂಕರ್ 16 ಮತ ಪಡೆದರೆ, ಇಂಡಿಯಾ ಒಕ್ಕೂಟದ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರೆ 8 ಮತಗಳು ಅಸಿಂಧುವಾಗಿದೆ. +ಎಎಪಿ-ಕಾಂಗ್ರೆಸ್‍ನ 8 ಮತಗಳು ಅಸಿಂಧು ಎಂದು ಘೋಷಿಸುತ್ತಿದ್ದಂತೆ ಸಭೆಯೊಳಗೆ ಗದ್ದಲ ಉಂಟಾಗಿ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಚುನಾವಣಾಧಿಕಾರಿ ಬಿಜೆಪಿ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಿದರು. \ No newline at end of file diff --git a/eesanje/url_47_175_12.txt b/eesanje/url_47_175_12.txt new file mode 100644 index 0000000000000000000000000000000000000000..f10fe57f3bece8f91e299149e58b7dd4443b1e45 --- /dev/null +++ b/eesanje/url_47_175_12.txt @@ -0,0 +1,6 @@ +ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಕೆರಗೋಡು ಗ್ರಾಮಸ್ಥರ ಆಕ್ರೋಶದ ಜ್ವಾಲೆಗೆ ಕಾರಣ +ಮಂಡ್ಯ, ಜ.30- ರಾಷ್ಟ್ರಧ್ವಜಕ್ಕಾಗಲಿ ಕಾನೂನಿಗಾಗಲಿ ನಾವು ಯಾವುದೇ ಅಪಚಾರ ಮಾಡಿಲ್ಲ, ಪೊಲೀಸರನ್ನು ಬಳಸಿಕೊಂಡು ಕಾಂಗ್ರೆಸ್‍ನವರು ಗ್ರಾಮಸ್ಥರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಆಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಸಲುವಾಗಿ ಅಂದಿನಿಂದಲೇ ಮಂಡ್ಯ ಜಿಲ್ಲೆಯಾದ್ಯಂತ ಎಲ್ಲಾ ದೇವಾಲಯಗಳಲ್ಲದೇ ಪ್ರತಿ ಗ್ರಾಮದಲ್ಲೂ ವಿಶೇಷ ಕಾರ್ಯ ಕ್ರಮಗಳನ್ನು ಆಯೋಜಿಸಿ ಹನುಮ ಧ್ವಜವನ್ನು ಎಲ್ಲಾ ಮನೆ ಮನೆಗಳಲ್ಲೂ ಹಾರಿಸಲಾಗಿತ್ತು. +ಇದನ್ನು ಸಹಿಸದೇ ಕೆಲವರು ಪ್ರಚೋಧನೆ ಮಾಡಿ ಈ ರದ್ಧಾಂತ ಸೃಷ್ಠಿಯಿದ್ದಾರೆಂದು ಟೀಕಿಸಿದ್ದಾರೆ. ಹನುಮ ದೇವಾಲಯದ ಸಮೀಪದವೇ ಪಂಚಾಯತಿ ಕಟ್ಟಡವಿದ್ದು, ಎಲ್ಲಾ ಅನುಮತಿಗಳನ್ನು ಪಡೆದು ನಾವೇ ಧ್ವಜಸ್ತಂಭವನ್ನು ಸ್ಥಾಪಿಸಿ ಗಣರಾಜ್ಯೋತ್ಸವದಂದು ರಾಷ್ಟ್ರಧ್ವಜವನ್ನು ಹಾರಿಸಿದ್ದೇವೆ. ನಂತರ ನಾವು ಹನುಮ ಧ್ವಜವನ್ನು ಹಾರಿಸಿ ಅದನ್ನು ಇಳಿಸುತ್ತಿದ್ದೇವು ಅಷ್ಟರೊಳಗೆ ನೂರಾರು ಪೊಲೀಸರನ್ನು ಕರೆಸಿ ಭಯ ಹುಟ್ಟಿಸಿ ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಈ ಘಟನೆಗೆ ಕಾರಣವಾಗಿದೆಯೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. +ಅಂತರ್ಧರ್ಮೀಯ ದಂಪತಿಗಳ ಭದ್ರತೆಗೆ ಆಗ್ರಹಿಸಿದ ಅರ್ಜಿ ವಜಾ +ಅನುಮತಿ ಪಡೆಯದೇ ಸರ್ಕಾರಿ ಜಾಗ ಇತ್ಯಾದಿ ಬಗ್ಗೆ ಕೆಲವು ಕಾಗದ ಪತ್ರಗಳನ್ನು ಅಂತರ್ಜಾಲದಲ್ಲಿ ಹಾಕಿದ್ದಾರೆ. ಆದರೆ ನಾವು ಕೊಟ್ಟ ಪತ್ರವೇ ಬೇರೆ ಇಲ್ಲಿ ಕಾಂಗ್ರೆಸ್‍ನವರು ಹಾಕಿರುವುದೇ ಬೇರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ನಾವು ಯಾರೂ ಕೂಡ ಬಲವಂತವಾಗಿ ಹನುಮ ಧ್ವಜವನು ಹಾಕುವಂತೆ ಹೇಳಿರಲಿಲ್ಲ. ಸ್ವಯಂ ಪ್ರೇರಿತವಾಗಿ ಪ್ರತಿ ಗ್ರಾಮದಲ್ಲೂ ಹಾಕಲಾಗಿತ್ತು. ಆದರೆ ಇದನ್ನು ಸಹಿಸದೇ ಕೆಲವರು ಹಿಂದು ವಿರೋ ದೋರಣೆಯನ್ನು ತಳೆದಿದ್ದಾರೆ. ಇದಕ್ಕೆ ತಕ್ಕ ಉತ್ತರ ನೀಡಲಾಗುವುದು. ಗ್ರಾಮಸ್ಥರ ಮೇಲೆ ದಬ್ಬಾಳಿಕೆ ಮಾಡಿ ಶಾಂತಿಯುತವಾಗಿ ನಡೆಯುತ್ತಿದ್ದ ಪಾದಯಾತ್ರೆಗೂ ಅಡ್ಡಿಪಡಿಸಿದವರು ಯಾರು ಮತ್ತು ಪ್ರಚೋದಿಸಿದವರು ಯಾರು ಎಂದು ನಮ್ಮ ಜನರಿಗೆ ಗೊತ್ತಿದೆ ತಕ್ಕ ಪಾಠ ಕಲಿಸುತ್ತಾರೆಂದು ಹೇಳಿದ್ದಾರೆ. \ No newline at end of file diff --git a/eesanje/url_47_175_2.txt b/eesanje/url_47_175_2.txt new file mode 100644 index 0000000000000000000000000000000000000000..8c3c5c08abea185f219279d75c4ed7f793d55f5e --- /dev/null +++ b/eesanje/url_47_175_2.txt @@ -0,0 +1,9 @@ +ಅಸಭ್ಯವಾಗಿ ವರ್ತಿಸಿ ಗೌರವ ಕಳೆದುಕೊಳ್ಳಬೇಡಿ : ವಿಪಕ್ಷಗಳಿಗೆ ಮೋದಿ ಸಲಹೆ +ನವದೆಹಲಿ,ಜ.31- ಸಂಸತ್ನಲ್ಲಿ ದುರ್ವತನೆ ತೋರಿ ಸದನದಿಂದ ಅಮಾನತುಗೊಂಡು ಪ್ರಜಾಪ್ರಭುತ್ವದ ಗೌರವವನ್ನು ಹಾಳು ಮಾಡಿದ್ದ ಸಂಸದರು ಈಗಲಾದರೂ ಪಶ್ಚಾತ್ತಾಪಪಟ್ಟು ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ. +ಜಂಟಿ ಅಧಿವೇಶನಕ್ಕೂ ಮುನ್ನ ಸಂಸತ್ನ ಹೊರಗಡೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಹಿಂದೆ ಕೆಲವರು ಸಂಸತ್ನಲ್ಲಿ ಅಶಿಸ್ತು ತೋರಿ ಸದನದಿಂದ ಅಮಾನತುಗೊಂಡಿದ್ದರು. ಅಂಥವರು ಚರ್ಚೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವದ ಮರ್ಯಾದೆ ಕಳೆದವರು ಪಶ್ಚಾತ್ತಾಪ ಪಡಲೇಬೇಕೆಂದು ಸೂಚ್ಯವಾಗಿ ಹೇಳಿದರು. +ವಿರೋಧ ಪಕ್ಷಗಳ ಸದಸ್ಯರ ಅಶಿಸ್ತಿನ ವರ್ತನೆ ಯಾರಿಗೂ ಶೋಭೆ ತರುವುದಿಲ್ಲ. ನಾವು ಮಾಡಿದ್ದೇ ಸರಿ ಎಂದು ಕೆಲವು ಸಂಸದರು ಭಾವಿಸಿದ್ದಾರೆ. ನಿಮ್ಮ ನಡೆಯನ್ನು ದೇಶದ ಜನತೆ ನೋಡುತ್ತಿದ್ದಾರೆ ಎಂಬುದನ್ನು ಮರೆಯಬೇಡಿ. ಈಗಲಾದರೂ ನಿಮ್ಮ ದುರ್ನಡತೆಯನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ಮಾಡಿದರು. +ಬೆಳಗಾವಿಯಲ್ಲಿ ಡಬಲ್ ಮರ್ಡರ್ : ಪತ್ನಿ , ಪ್ರಿಯಕರನ ಕೊಂದು ಪತಿ ಪರಾರಿ +ನಮ್ಮ ಸಂಸತ್ ಇರುವುದು ಸಕಾರಾತ್ಮಕ ಚರ್ಚೆಗೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುವ ಅಭ್ಯಾಸ ಇಟ್ಟುಕೊಂಡಿರುವವರು ಈ ಸದನದಲ್ಲಿ ನಾವು ಏನು ಮಾಡುತ್ತೇವೆ ಎಂಬ ಅರಿವು ನಿಮಗಿರಬೇಕು. ಧನಾತ್ಮಕ ಚಿಂತನೆ ಪ್ರತಿಯೊಬ್ಬರಲ್ಲೂ ಇರಬೇಕೆಂಬುದನ್ನು ನಾವು ಭಾವಿಸುತ್ತೇನೆ. ಸಂಸತ್ಗೆ ತಮ್ಮದೇ ಆದ ಸೇವೆ ಸಲ್ಲಿಸಿದವರನ್ನು ನಾವು ಸದಾ ಸ್ಮರಿಸುತ್ತೇವೆ. ಕಲಾಪಕ್ಕೆ ಅಡ್ಡಿಪಡಿಸಿದ ಸದಸ್ಯರನ್ನು ಎಂದಾದರೂ ನೆನಪಿಸಿಕೊಳ್ಳುತ್ತೇವೆ ಎಂದು ವಿರೋಧ ಪಕ್ಷಗಳಿಗೆ ಛಾಟಿ ಬೀಸಿದರು. +ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾವೆಲ್ಲರೂ ನಾರಿಶಕ್ತಿಗೆ ಸಾಕ್ಷಿಯಾಗಿದ್ದೇವೆ. ಇದು ನಮ್ಮ ದೇಶ ಮಹಿಳೆಯರಿಗೆ ನೀಡುವ ಗೌರವ. ನಾಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆ. ಲೋಕಸಭೆ ಮುಗಿದ ನಂತರ ನಾವೇ ಪೂರ್ಣ ಬಜೆಟ್ ಮಂಡನೆ ಮಾಡುತ್ತೇವೆ ಎನ್ನುವ ಮೂಲಕ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ವ್ಯಕ್ತಪಡಿಸಿದರು. +ಹೊಸ ಸಂಸತ್ನಲ್ಲಿ ಕಳೆದ ಅವೇಶನದ ವೇಳೆ ನಾವು ಮಹಿಳೆಯರಿಗೆ ಶಾಸನ ಸಭೆಗಳಲ್ಲಿ ಮೀಸಲಾತಿ ನೀಡುವ ಮಸೂದೆಯನ್ನು ಅಂಗೀಕರಿಸಿದ್ದೇವೆ. ಈ ಹೊಸ ಸಂಸತ್ನ ಕಟ್ಟಡದಲ್ಲಿ ಮೊದಲ ಅಧಿವೇಶನದ ಕೊನೆಯ ದಿನ ಸಂಸತ್ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಅದುವೇ ನಾರಿ ಶಕ್ತಿ ವಂದನ್ ಅನಿಯಮ್, ಇದೇ 26ರಂದು ದೇಶವು ನಾರಿಶಕ್ತಿ ಸಾಮಥ್ರ್ಯವನ್ನು ಅವರ ಶೌರ್ಯ, ಶಕ್ತಿ ಏನೆಂಬುದನ್ನು ಇಡೀ ದೇಶವೇ ನೋಡಿದೆ ಎಂದು ಕೊಂಡಾಡಿದರು. +ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮಾರ್ಗದರ್ಶನ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮಧ್ಯಂತರ ಬಜೆಟ್ ಮಂಡಿಸುವಾಗ ಇದು ಕೂಡ ಒಂದು ರೀತಿ ನಾರಿ ಶಕ್ತಿಯ ಹಬ್ಬವಾಗಿದೆ ಎಂದು ಮೋದಿ ಪ್ರಶಂಸಿಸಿದರು. \ No newline at end of file diff --git a/eesanje/url_47_175_3.txt b/eesanje/url_47_175_3.txt new file mode 100644 index 0000000000000000000000000000000000000000..fe1f3ec16f6ffdfae1c86443565fe4a1423ff5a3 --- /dev/null +++ b/eesanje/url_47_175_3.txt @@ -0,0 +1,11 @@ +ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ : ಇಲ್ಲಿದೆ ಸಾರಾಂಶ +ನವದೆಹಲಿ,ಜ.31- ನಾವು ಬಾಲ್ಯದಿಂದಲೂ ಗರೀಬಿ ಹಠಾವೋ ಘೋಷಣೆಯನ್ನು ಕೇಳಿದ್ದೇವೆ. ಆದರೆ, ಇಂದು ನಮ್ಮ ಜೀವನದಲ್ಲಿ ಮೊದಲ ಬಾರಿಗೆ ಬಡತನ ನಿವಾರಿಸುವುದನ್ನು ದೊಡ್ಡ ಪ್ರಮಾಣದಲ್ಲಿ ಕಾಣುತ್ತಿದ್ದೇವೆ. ವಿಶ್ವದಾದ್ಯಂತ ಇರುವ ಗಂಭೀರ ಬಿಕ್ಕಟ್ಟುಗಳ ನಡುವೆ ಭಾರತದ ಆರ್ಥಿಕತೆಯು ಅತಿ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದರು. +ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಐದು ದುರ್ಬಲ ಆರ್ಥಿಕತೆಗಳ ಸಾಲಿಗೆ ಸೇರಿದ್ದ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಕೇಂದ್ರ ಸರ್ಕಾರದ ಸಾಧನೆಗಳನ್ನು ಕೊಂಡಾಡಿದರು. ಹೊಸ ಸಂಸತ್ ಕಟ್ಟಡದಲ್ಲಿ ಇದು ನನ್ನ ಮೊದಲ ಭಾಷಣ. ಅಮೃತ ಕಾಲದ ಆರಂಭದಲ್ಲಿ ಈ ಭವ್ಯ ಕಟ್ಟಡವನ್ನು ನಿರ್ಮಿಸಲಾಗಿದೆ. +21ನೇ ಶತಮಾನದ ಹೊಸ ಭಾರತದ ಹೊಸ ಸಂಪ್ರದಾಯಗಳನ್ನು ನಿರ್ಮಿಸುವ ಸಂಕಲ್ಪವನ್ನು ಸಹ ಹೊಂದಿದೆ. ಈ ಹೊಸ ಕಟ್ಟಡದಲ್ಲಿ ನೀತಿಗಳ ಬಗ್ಗೆ ಅರ್ಥಪೂರ್ಣ ಸಂಭಾಷಣೆ ನಡೆಯಲಿದೆ ಎಂದು ನನಗೆ ವಿಶ್ವಾಸವಿದೆ ಎಂದರು. +ಕಳೆದ ವರ್ಷ ಭಾರತವು ಅನೇಕ ಸಾಧನೆಗಳನ್ನು ಮಾಡಿದೆ ಮತ್ತು ಅನೇಕ ಯಶಸ್ಸುಗಳು ದಕ್ಕಿವೆ. ಭಾರತ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ಮೊದಲ ರಾಷ್ಟ್ರವಾಯಿತು. ಭಾರತವೇ ಆಯೋಜಿಸಿದ್ದ ಯಶಸ್ವಿ ಜಿ-20 ಶೃಂಗಸಭೆಯು ವಿಶ್ವದಲ್ಲಿ ನಮ್ಮ ರಾಷ್ಟ್ರದ ಪಾತ್ರವನ್ನು ಮತ್ತಷ್ಟು ಬಲಪಡಿಸಿತು. ಭಾರತವು ಏಷ್ಯನ್ ಗೇಮ್ಸ್ನಲ್ಲಿ 100ಕ್ಕೂ ಹೆಚ್ಚು ಪದಕಗಳನ್ನು ಗೆದ್ದಿದೆ. ಭಾರತವೂ ಅಟಲ್ ಸುರಂಗವನ್ನು ಪಡೆದುಕೊಂಡಿದೆ ಎಂದು ಶ್ಲಾಘಿಸಿದರು. +ಬೆಳಗಾವಿಯಲ್ಲಿ ಡಬಲ್ ಮರ್ಡರ್ : ಪತ್ನಿ , ಪ್ರಿಯಕರನ ಕೊಂದು ಪತಿ ಪರಾರಿ +ಇಂದು ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ್ ಭಾರತ್ ನಮ್ಮ ಶಕ್ತಿಯಾಗಿವೆ. ರಕ್ಷಣಾ ಉತ್ಪಾದನೆಯು 1 ಲಕ್ಷ ಕೋಟಿ ರೂ. ಗಡಿ ದಾಟಿದೆ ಎಂದು ಶ್ಲಾಘಿಸಿದರು.ರಾಮಮಂದಿರ ನಿರ್ಮಾಣಕ್ಕೆ ಶತಮಾನಗಳಿಂದಲೂ ಕಾಯಲಾಗಿತ್ತು. ಇಂದು ಇದು ವಾಸ್ತವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದತಿ ಈಗ ಇತಿಹಾಸವಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಭವ್ಯ ಸೌಧವು ಯುವ ಶಕ್ತಿ, ಮಹಿಳಾ ಶಕ್ತಿ, ರೈತರು ಮತ್ತು ಬಡವರು ಎಂಬ ನಾಲ್ಕು ಬಲವಾದ ಸ್ತಂಭಗಳ ಮೇಲೆ ನಿಲ್ಲುತ್ತದೆ ಎಂದು ನನ್ನ ಸರ್ಕಾರ ನಂಬುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು. +ಮಹಿಳಾ ಮೀಸಲಾತಿ ಕಾನೂನು ಜಾರಿಗೆ ತಂದ ಸಂಸದರನ್ನು ಹಾಡಿಹೊಗಳಿದ ರಾಷ್ಟ್ರಪತಿ ಅವರು, ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಅತ್ಯಕ ಪದಕಗಳು, ಚಂದ್ರಯಾನ-3 ರ ಯಶಸ್ಸು ಮತ್ತು ರಾಮಮಂದಿರ ನಿರ್ಮಾಣದ ಕನಸು ನನಸಾಗಿರುವುದನ್ನು ಅವರು ಪ್ರಸ್ತಾಪಿಸಿದರು. ರಾಷ್ಟ್ರಪತಿ ರಾಮ ಮಂದಿರದ ಬಗ್ಗೆ ಪ್ರಸ್ತಾಪಿಸಿದ ಕೂಡಲೇ ಅಲ್ಲಿದ್ದ ಸಂಸದರು ಮೇಜು ಕುಟ್ಟಿ ಅಭಿನಂದಿಸಿದರು. +ಸಂಸತ್ತಿನ ಅವೇಶನ ಜನವರಿ 31ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಇದರಲ್ಲಿ 8 ಸಭೆಗಳು ನಡೆಯಲಿವೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.ನಮ್ಮ ಸರ್ಕಾರ ಒಂದು ದೇಶ-ಒಂದು ತೆರಿಗೆ ಕಾನೂನನ್ನು ತಂದಿತು. ಬ್ಯಾಂಕಿಂಗ್ ವ್ಯವಸ್ಥೆ ಬಲಗೊಂಡಿದೆ. ಬ್ಯಾಂಕ್ಗಳ ಎನ್ಪಿಎ ಶೇ.4ಕ್ಕೆ ಇಳಿಕೆಯಾಗಿದೆ. ಮೊದಲಿಗಿಂತ ಎಫ್ಡಿಐ ದುಪ್ಪಟ್ಟಾಗಿದೆ. ಉತ್ತಮ ಆಡಳಿತ ಮತ್ತು ಪಾರದರ್ಶಕತೆಯಿಂದಾಗಿ ಆರ್ಥಿಕ ಸುಧಾರಣೆಯಾಗಿದೆ. ಮೇಕ್ ಇನ್ ಇಂಡಿಯಾ ದೊಡ್ಡ ಅಭಿಯಾನವಾಗಿದೆ. ರಕ್ಷಣಾ ಕ್ಷೇತ್ರಗಳಲ್ಲಿ ಖಾಸಗಿ ಕಂಪನಿಗಳ ಭಾಗವಹಿಸುವಿಕೆ ಹೆಚ್ಚಾಗಿದೆ. ಇಂದು ನಾವು ಆಟಿಕೆಗಳನ್ನು ರಫ್ತು ಮಾಡುತ್ತೇವೆ ಎಂದರು. +ಡಿಜಿಟಲ್ ಇಂಡಿಯಾ ದೇಶದ ಪ್ರಮುಖ ಸಾಧನೆಯಾಗಿದೆ. ಇಂದು ಜಗತ್ತಿನ ಇತರೆ ರಾಷ್ಟ್ರಗಳೂ ಯುಪಿಎ ಮೂಲಕ ವಹಿವಾಟು ಸೌಲಭ್ಯ ಒದಗಿಸುತ್ತಿವೆ. ಖಾಸಗಿ ವಲಯದ ಸಾಮಥ್ರ್ಯದ ಮೇಲೆ ಸರ್ಕಾರಕ್ಕೆ ವಿಶ್ವಾಸವಿದೆ. 2 ಕೋಟಿ ನಕಲಿ ಫಲಾನುಭವಿಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು. +ಜಿಎಸ್ಟಿಯಿಂದ ಒಂದು ದೇಶ ಒಂದು ಟ್ಯಾಕ್ಸ್ ಕಲ್ಪನೆ ಸಕಾರಗೊಂಡಿದೆ. ಭಾರತದಲ್ಲಿ ಮೂಬೈಲ್ ತಯಾರಿಕೆ ಹೆಚ್ಚಳವಾಗಿದೆ. ಆಟಿಕೆಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಅವು ಭಾರತದಲ್ಲಿ ನಿರ್ಮಾಣವಾಗುತ್ತಿವೆ. ರಕ್ಷಣಾ ವಲಯದಲ್ಲಿ ಭಾರತ ಸ್ವಾವಲಂಬಿಯಾಗಿದೆ. ಹಲವು ಯುದ್ಧ ವಿಮಾನಗಳನ್ನು ಭಾರತದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ವಿಮಾನದ ಇಂಜಿನ್ ಕೂಡಾ ನಿರ್ಮಾಣ ಮಾಡಲಾಗುತ್ತಿದೆ. ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣವಾಗಿದೆ ಎಂದು ಭಾರತದ ಸಾಧನೆಗಳ ಪಟ್ಟಿಯನ್ನು ಮುರ್ಮು ವಿವರಿಸಿದರು. \ No newline at end of file diff --git a/eesanje/url_47_175_4.txt b/eesanje/url_47_175_4.txt new file mode 100644 index 0000000000000000000000000000000000000000..582751f043951e07a9c02f59db646f9ea05c4b76 --- /dev/null +++ b/eesanje/url_47_175_4.txt @@ -0,0 +1,8 @@ +ಲಕ್ನೋದಿಂದ ಪಾದಯಾತ್ರೆ ಮೂಲಕ ಅಯೋಧ್ಯೆ ಬಂದು ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ 350 ಮುಸ್ಲಿಮರು +ಅಯೋಧ್ಯೆ,ಜ.31- ಲಕ್ನೋದಿಂದ 6 ದಿನ ಪಾದಯಾತ್ರೆಮೂಲಕ ಅಯೋಧ್ಯೆ ಬಂದ 350 ಮುಸ್ಲಿಮರು ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ರಾಷ್ಟ್ರೀಯ ಮಂಚ್‍ನ ಸಂಚಾಲಕ ರಾಜಾ ರಯೀಸ್ ಮತ್ತು ಪ್ರಾಂತೀಯ ಸಂಚಾಲಕ ಶೇರ್ ಅಲಿ ಖಾನ್ ನೇತೃತ್ವದಲ್ಲಿ 350 ಭಕ್ತರು ಪಾದಯಾತ್ರ ಮೂಲಕ ಬಂದು ಶ್ರೀರಾಮ ಮಂದಿರದಲ್ಲಿ ರಾಮ್ ಲಾಲಾವನ್ನು ನೋಡಿದ ಎಲ್ಲರೂ ಬಾವಪರವಶರಾಗಿದ್ದಾರೆ.ಇದೊಂದು ಅವಿಸ್ಮರಣೀಯ ದಿನ ಎಂದಿದ್ದಾರೆ. +ಎಲ್ಲರ ಬಾಯಲ್ಲಿ ಶ್ರೀ ರಾಮನ ಸ್ಮರಣೆ ಭಕ್ತಿ ಬಾವ ನೋಡಿ ಎಲ್ಲರೂ ಬೆರಗಾಗಿದ್ದಾರೆ ,ಸುಮಾರು 350 ಮುಸ್ಲಿಂ ಭಕ್ತರೊಂದಿಗೆ ಲಕ್ನೋದಿಂದ ಅಯೋಧ್ಯೆಗೆ ಸರಿಸುಮಾರು 150 ಕಿ.ಮೀ ಆರು ದಿನಗಳ ಪಾದಯಾತ್ರೆಯನ್ನು ಕೈಗೊಂಡರು. ಪ್ರಯಾಣದ ಸಮಯದಲ್ಲಿ, ಮಂಚ್ನ ಸೀತಾ ರಸೋಯಿ ಉಪಹಾರ ಮತ್ತು ಆಹಾರಕ್ಕಾಗಿ ಅತ್ಯುತ್ತಮವಾದ ವ್ಯವಸ್ಥೆಯನ್ನು ನೀಡಲಾಗಿದೆ. + –../ANAub317fy +ಪ್ರತಿ ದಿನ 25 ಕಿ.ಮಿ ನಂತೆ ತಮ್ಮ ಪ್ರಯಾಣವನ್ನು ನಿರಂತರವಾಗಿ ಮುಂದುವರಿಸುತ್ತದೆ. ಆರು ದಿನಗಳ ಅಚಲ ಪಾದಯಾತ್ರೆ ನಂತರ, ಅಂತಿಮವಾಗಿ ಅಯೋಧ್ಯೆ ತಲುಪಿ ಶ್ರೀ ರಾಮನ ಮುಂದೆ ನಿಂತು ಪ್ರಾರ್ಥನೆ ಮಾಡಿ ದರ್ಶನವನ್ನು ಅನುಭವಿಸಿದರು ಮಾಧ್ಯಮ ಉಸ್ತುವಾರಿ ಶಾಹಿದ್ ಸಯೀದ್ ಹೇಳಿದ್ದಾರೆ.. +ಶ್ರೀರಾಮ ಮಂದಿರದ ಸಂಕೀರ್ಣದಿಂದ ಮುಸ್ಲಿಂ ಭಕ್ತರು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ಸಾರಿದರು. ಅಸುದ್ದೀನ್ ಓವೈಸಿಯಂತಹ ನಾಯಕರ ಉಪಸ್ಥಿತಿಯು ದೇಶದಲ್ಲಿ ಮುಸ್ಲಿಮರ ಅಶಿಕ್ಷಿತ, ತುಳಿತಕ್ಕೊಳಗಾದ, ಹಿಂದುಳಿದ, ಬಡ ಮತ್ತು ಅಸುರಕ್ಷಿತ ಸ್ಥಿತಿಯನ್ನು ಶಾಶ್ವತಗೊಳಿಸುತ್ತದೆ ಎಂದು ಮುಸ್ಲಿಂ ರಾಷ್ಟ್ರೀಯ ಮಂಚ್ ಪ್ರತಿಪಾದಿಸಿದೆ. +ಶ್ರೀರಾಮ ಮಂದಿರದಲ್ಲಿ ರಾಮ್ ಲಾಲಾ ದರ್ಶನದ ನಂತರ ದೇವಾಲಯದ ಆವರಣದಲ್ಲಿ ಮಾತನಾಡಿದ ಮಂಚ್ ಸಂಚಾಲಕ ರಾಜಾ ರಯೀಸ್ , ರಾಮನು ಎಲ್ಲರಿಗೂ ಪೂರ್ವಜ ಎಂದು ಪ್ರತಿಪಾದಿಸಿದ್ದಾರೆ.ಧರ್ಮ, ಜಾತಿ ಮತ್ತು ಧರ್ಮಕ್ಕಿಂತ ದೇಶ ಮತ್ತು ಮಾನವೀಯತೆ ಆದ್ಯತೆಯಾಗಿದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಒತ್ತಿ ಹೇಳಿದರು. +ದೇಶದಲ್ಲಿ ಪ್ರೀತಿ ಮತ್ತು ಐಕ್ಯತೆಯ ಸಂಸ್ಕøತಿಯನ್ನು ಬಲಪಡಿಸಲು ವಿವಿಧ ಧರ್ಮಗಳನ್ನು ಗೌರವಿಸುವುದು, ಏಕತೆಯನ್ನು ಬೆಳೆಸುವುದು ಮತ್ತು ಸಹ ನಾಗರಿಕರ ಸಂತೋಷ ಮತ್ತು ದುಃಖದಲ್ಲಿ ಭಾಗಿಯಾಗುತ್ತದೆ ಇದು ನಮ್ಮ ಪ್ರಾಮುಖ್ಯತೆ ಎಂದಿದ್ದಾರೆ. \ No newline at end of file diff --git a/eesanje/url_47_175_5.txt b/eesanje/url_47_175_5.txt new file mode 100644 index 0000000000000000000000000000000000000000..a5490e4b12968388cb23243047b31e15058ba7e1 --- /dev/null +++ b/eesanje/url_47_175_5.txt @@ -0,0 +1,11 @@ +ಭ್ರಷ್ಟಾಚಾರ ಸೂಚ್ಯಂಕದಲ್ಲಿ ಭಾರತಕ್ಕೆ 93ನೇ ಸ್ಥಾನ +ನವದೆಹಲಿ,ಜ.31- ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತಿರುವ ಪರಿಣಾಮ ಭ್ರಷ್ಟಾಚಾರ ಅನಿಯಂತ್ರಿತವಾಗಿದೆ ಎಂದು ಟ್ರಾನ್‍ಸ್ಪರೆನ್ಸಿ ಇಂಟರ್‍ನ್ಯಾಷನಲ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದ್ದು, 2023ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕದಲ್ಲಿ ಭಾರತವು 180 ದೇಶಗಳಲ್ಲಿ 93ನೇ ಸ್ಥಾನದಲ್ಲಿದೆ.180 ದೇಶಗಳ ಭ್ರಷ್ಟಾಚಾರ ಶ್ರೇಯಾಂಕವೂ ಪ್ರಕಟವಾಗಿದ್ದು, ಭಾರತ 93ನೇ ಸ್ಥಾನದಲ್ಲಿದ್ದು ಹಿಂದಿಗಿಂತ ಹೆಚ್ಚಿನ ಬದಲಾವಣೆ ಇಲ್ಲ ಎಂದು ಹೇಳಿದೆ. +2023ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ)ದಂತೆ ಜಗತ್ತಿನ ಹಲವು ದೇಶಗಳಲ್ಲಿ ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಸಮರಗಳು ಹೆಚ್ಚು ಪರಿಣಾಮ ಬೀರಿದಂತೆ ಕಾಣುತ್ತಿಲ್ಲ. ಬಿಡುಗಡೆಯಾದ 2023ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಅಥವಾ ಸಿಪಿಐ ಡೇಟಾ ಅಂತಹ ಸೂಚನೆ ನೀಡಿದೆ. +ಈ ಪಟ್ಟಿಯಲ್ಲಿರುವ ಮೂರನೇ ಎರಡರಷ್ಟು ದೇಶಗಳು 50ಕ್ಕಿಂತ ಕಡಿಮೆ ಅಂಕಗಳನ್ನು ಗಳಿಸಿವೆ. ಸಿಪಿಐ 180 ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಡೆನ್ಮಾರ್ಕ್ ಸತತ 6ನೇ ವರ್ಷವೂ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಮತ್ತು ಇಲ್ಲಿ ಕಡಿಮೆ ಭ್ರಷ್ಟಾಚಾರ ಕಂಡುಬಂದಿದೆ. ಆದರೆ ಸೋಮಾಲಿಯಾ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. +ಹೆಚ್ಚಿನ ದೇಶಗಳು ಸಾರ್ವಜನಿಕ ವಲಯದ ಭ್ರಷ್ಟಾಚಾರವನ್ನು ನಿಭಾಯಿಸುವಲ್ಲಿ ಸ್ವಲ್ಪ ಅಥವಾ ಯಾವುದೇ ಪ್ರಗತಿಯನ್ನು ಸಾಸಿಲ್ಲ ಮತ್ತು ಮೂರನೇ ಎರಡರಷ್ಟು ದೇಶಗಳು 50ಕ್ಕಿಂತ ಕಡಿಮೆ ಅಂಕಗಳನ್ನು ಗಳಿಸಿದ್ದು, ಭ್ರಷ್ಟಾಚಾರಕ್ಕೆ ಸಂಬಂಸಿದಂತೆ ಗಂಭೀರ ಸಮಸ್ಯೆಗಳನ್ನು ತೋರುತ್ತಿವೆ ಎಂದು ಹೇಳಿದೆ. +ಹನುಮ ಧ್ವಜ ಇಳಿಸಿದಂತೆ ಹಿಂದೂಗಳು ನಿಮ್ಮನ್ನೂ ಕುರ್ಚಿಯಿಂದ ಇಳಿಸುತ್ತಾರೆ : ಆರ್.ಅಶೋಕ್ +ನ್ಯಾಯ ವ್ಯವಸ್ಥೆಗಳು ಇಂತಹ ತಪ್ಪನ್ನು ಶಿಕ್ಷಿಸುವವರೆಗೆ ಮತ್ತು ಸರ್ಕಾರಗಳನ್ನು ಹಿಡಿತದಲ್ಲಿಟ್ಟುಕೊಳ್ಳುವವರೆಗೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಕ್ಕೆ ಸಾಧ್ಯವಿಲ್ಲ ಎಂದು ಟ್ರಾನ್ಸ್‍ಪರೆನ್ಸಿ ಇಂಟರ್ನ್ಯಾಶನಲ್‍ನ ಅಧ್ಯಕ್ಷ ಫ್ರಾಂಕೋಯಿಸ್ ವಲೇರಿಯನ್ ಅಭಿಪ್ರಾಯಪಟ್ಟಿದ್ದಾರೆ. +ತಜ್ಞರು ಮತ್ತು ವ್ಯಾಪಾರಸ್ಥರ ಪ್ರಕಾರ ಸಾರ್ವಜನಿಕ ವಲಯದ ಭ್ರಷ್ಟಾಚಾರದ ಗ್ರಹಿಕೆಯ ಮಟ್ಟಗಳ ಮೂಲಕ 180 ದೇಶಗಳು ಮತ್ತು ಪ್ರಾಂತ್ಯಗಳ ಶ್ರೇಣಿಯನ್ನು ನಿರ್ಧರಿಸಲಾಗಿದೆ. ಶೂನ್ಯ 0 ಶ್ರೇಣಿ ಹೊಂದಿರುವ ದೇಶಗಳು ಅತಿ ಹೆಚ್ಚು ಭ್ರಷ್ಟವಾಗಿದ್ದರೆ, 100ನೇ ಸ್ಥಾನ ಹೊಂದಿರುವ ದೇಶಗಳು ಭ್ರಷ್ಟಾಚಾರದ ವಿಷಯದಲ್ಲಿ ಸ್ವಚ್ಛವಾಗಿದೆ. ಭಾರತದ ಒಟ್ಟಾರೆ ಅಂಕ 39 ಇದ್ದು, 2022 ರಲ್ಲಿ 40 ಅಂಕಗಳೊಂದಿಗೆ 85 ಶ್ರೇಯಾಂಕ ಹೊಂದಿತ್ತು. ಭಾರತದ ಸ್ಕೋರ್ ಏರಿಳಿತಗಳನ್ನು ಹೊಂದಿದ್ದು, 85ರಿಂದ 93ಕ್ಕೆ ಸುಧಾರಣೆ ಕಂಡಿದೆ ಎಂದು ವರದಿ ಹೇಳಿದೆ. +ದಕ್ಷಿಣ ಏಷ್ಯಾದಲ್ಲಿ, ಪಾಕಿಸ್ತಾನ (133) ಮತ್ತು ಶ್ರೀಲಂಕಾ (115) ಎರಡೂ ತಮ್ಮ ಸಾಲದ ಹೊರೆಗಳನ್ನು ಮತ್ತು ರಾಜಕೀಯ ಅಸ್ಥಿರತೆಯನ್ನು ಎದುರಿಸುತ್ತಿವೆ ಎಂದು ವರದಿ ತಿಳಿಸಿದೆ. ಆದಾಗ್ಯೂ, ಎರಡು ದೇಶಗಳು ಬಲವಾದ ನ್ಯಾಯಾಂಗ ಮೇಲ್ವಿಚಾರಣೆಯನ್ನು ಹೊಂದಿವೆ. ಇದು ಸರ್ಕಾರವನ್ನು ಹಿಡಿತದಲ್ಲಿಡಲು ಸಹಾಯ ಮಾಡುತ್ತಿದೆ ಎಂದು ವರದಿ ಹೇಳಿದೆ. +ಇವುಗಳಲ್ಲಿ ಅರ್ಜೆಂಟೀನಾ, ಆಸ್ಟ್ರೀಯಾ, ಪೋಲೆಂಡ್, ಟರ್ಕಿ ಹಾಗೂ ಯುನೈಟೆಡ್ ಕಿಂಗ್‍ಡಮ್‍ನಂತಹ ಕೆಲವು ಮಧ್ಯಮ ಮತ್ತು ಉನ್ನತ ಆದಾಯದ ದೇಶಗಳು ಸೇರಿವೆ. ಆದರೆ ಈ ಅವಯಲ್ಲಿ 8 ದೇಶಗಳ ಸಿಪಿಐ ಸ್ಕೋರ್ ಸುಧಾರಿಸಿರುವುದು ಜಗತ್ತಿಗೆ ಸಾಮಾಧಾನದ ಸುದ್ದಿಯಾಗಿದೆ. ಇವುಗಳಲ್ಲಿ ಐರ್ಲೆಂಡ್, ದಕ್ಷಿಣ ಕೊರಿಯಾ, ಅರ್ಮೇನಿಯಾ, ವಿಯೆಟ್ನಾಂ, ಮಾಲ್ಡೀವ್ಸ್, ಅಂಗೋಲಾ ಮತ್ತು ಉಜ್ಬೇಕಿಸ್ತಾನ್ ಹೆಸರುಗಳಿವೆ. +ಭಾರತವು 93ನೇ ಸ್ಥಾನದಲ್ಲಿದೆ. 2023ರ ಸಿಪಿಐನಲ್ಲಿ ಭಾರತ 39 ಅಂಕಗಳೊಂದಿಗೆ 93ನೇ ಸ್ಥಾನದಲ್ಲಿದೆ. ಆದರೆ ನೆರೆಯ ರಾಷ್ಟ್ರ ಚೀನಾ 76 ಅಂಕ ಪಡೆದು 42ನೇ ಸ್ಥಾನದಲ್ಲಿದೆ. ವಿಶೇಷವೆಂದರೆ 2022ರಿಂದ ಚೀನಾದ ಅಂಕ 3ರಷ್ಟು ಕಡಿಮೆಯಾಗಿದೆ. ಪಾಕಿಸ್ತಾನವು 133ನೇ ಸ್ಥಾನದಲ್ಲಿದೆ, ಅವರು 29 ಅಂಕಗಳನ್ನು ಪಡೆದಿದ್ದಾರೆ. 180 ದೇಶಗಳಲ್ಲಿ ಅಫ್ಘಾನಿಸ್ತಾನ 20 ಅಂಕಗಳೊಂದಿಗೆ 162ನೇ ಸ್ಥಾನದಲ್ಲಿದೆ. \ No newline at end of file diff --git a/eesanje/url_47_175_6.txt b/eesanje/url_47_175_6.txt new file mode 100644 index 0000000000000000000000000000000000000000..b42ac75cc9024b177c1fa18444bf6f67097fc12f --- /dev/null +++ b/eesanje/url_47_175_6.txt @@ -0,0 +1,8 @@ +ದೆಹಲಿಯಲ್ಲಿ ದಟ್ಟ ಮಂಜು, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ +ನವದೆಹಲಿ, ಜ 31 (ಪಿಟಿಐ) : ಇಂದು ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು ವಿಮಾನ ಮತ್ತು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. +ಭಾರತೀಯ ಹವಾಮಾನ ಇಲಾಖೆ ಪ್ರಕಾರ ನಗರದಲ್ಲಿ ಹಗಲಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇಂದಿರಾಗಾಂ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 6.30ಕ್ಕೆ ದಟ್ಟವಾದ ಮಂಜು ಆವರಿಸಿದ್ದರಿಂದ ಗೋಚರತೆ ಶೂನ್ಯವಾಗಿತ್ತು. ಬೆಳಿಗ್ಗೆ 9 ಗಂಟೆಯವರೆಗೂ ಗೋಚರತೆ ಹಾಗೆಯೇ ಇತ್ತು ಎಂದು ವರದಿಯಾಗಿದೆ. +ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಕೆಟ್ಟ ಹವಾಮಾನದಿಂದಾಗಿ ಕನಿಷ್ಠ ಮೂರು ವಿಮಾನಗಳ ಮಾರ್ಗ ಬದಲಿಸುವಂತಾಗಿತ್ತು. ಅತ್ಯಂತ ದಟ್ಟವಾದ ಮಂಜಿನಿಂದಾಗಿ ಹಲವಾರು ರೈಲುಗಳು ತಡವಾಗಿ ಓಡುತ್ತಿವೆ ಎಂದು ವರದಿಯಾಗಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-01-2024) +ಇಂದು ಸಂಜೆ ಅಥವಾ ರಾತ್ರಿಯಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮದ ಅಡಚಣೆಯಿಂದಾಗಿ ಹವಾಮಾನ ಏರಿಳಿತಗಳು ಫೆ 3 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ, ಅಲ್ಲಿಂದ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. +ದೆಹಲಿಯಲ್ಲಿ ಇಂದಿನ ಕನಿಷ್ಠ ತಾಪಮಾನ 7.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಋತುವಿನ ಸರಾಸರಿಗಿಂತ ಕಡಿಮೆಯಾಗಿದೆ.ಮಂಗಳವಾರದವರೆಗಿನ ಅಕೃತ ಅಂಕಿಅಂಶಗಳ ಪ್ರಕಾರ ಜನವರಿ 30 ರವರೆಗೆ ದೆಹಲಿಯಲ್ಲಿ ಸರಾಸರಿ ಗರಿಷ್ಠ ತಾಪಮಾನವು 17.7 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಇದು 13 ವರ್ಷಗಳಲ್ಲೇ ಕನಿಷ್ಠವಾಗಿದೆ. +ಇದೇ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಸರಾಸರಿ ಕನಿಷ್ಠ ತಾಪಮಾನವು 6.2 ಡಿಗ್ರಿ ಸೆಲ್ಸಿಯಸ್‍ಗೆ ದಾಖಲಾಗಿದೆ, ಇದು 13 ವರ್ಷಗಳಲ್ಲಿ ಎರಡನೇ ಅತಿ ಕಡಿಮೆಯಾಗಿದೆ ಎಂದು ಡೇಟಾ ತೋರಿಸಿದೆ. \ No newline at end of file diff --git a/eesanje/url_47_175_7.txt b/eesanje/url_47_175_7.txt new file mode 100644 index 0000000000000000000000000000000000000000..d9e9c5c48bbabb019f9caade8f315e329fb588a5 --- /dev/null +++ b/eesanje/url_47_175_7.txt @@ -0,0 +1,6 @@ +ಬಿಪಿಎಲ್ ಸಂಸ್ಥೆಯ 200 ಕೋಟಿ ಬ್ಯಾಂಕ್‍ಸಾಲ ವಂಚನೆ ಪ್ರಕರಣ : ಕಾಶ್ಮೀರ, ಪಂಜಾಬ್,ಯುಪಿಯಲ್ಲಿ ಇಡಿ ಶೋಧ +ಜಮ್ಮು, ಜ 31 (ಪಿಟಿಐ) : ಭಾರತ್ ಪೇಪರ್ಸ್ ಲಿಮಿಟೆಡ್ (ಬಿಪಿಎಲï) ಗೆ ಸಂಬಂಸಿದ 200 ಕೋಟಿ ರೂ. ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಉತ್ತರ ಪ್ರದೇಶದ ಸ್ಥಳಗಳಲ್ಲಿ ಇಂದು ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಈ ಪ್ರದೇಶಗಳಲ್ಲಿ ಕನಿಷ್ಠ ಒಂಬತ್ತು ಆವರಣಗಳನ್ನು ಕೇಂದ್ರ ಏಜೆನ್ಸಿಯು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‍ಎ) ನಿಬಂಧನೆಗಳ ಅಡಿಯಲ್ಲಿ ಶೋಸುತ್ತಿದೆ.ಸೆಪ್ಟೆಂಬರ್ 2006 ರಲ್ಲಿ ಸಂಯೋಜಿತವಾದ, ಬಿಪಿಎಲ್ ಭಾರತ್ ಬಾಕ್ಸ್ ಫ್ಯಾಕ್ಟರಿ ಇಂಡಸ್ಟ್ರೀಸ್ ಲಿಮಿಟೆಡ್ (ಬಿಬಿಎಫ್‍ಇಎಲ್) ನ ಸಹವರ್ತಿಯಾಗಿದೆ, ಇದು ಜಮ್ಮು ಮತ್ತು ಲುಯಾನ ಮೂಲದ ಪೇಪರ್ ಬೋರ್ಡ್ ಪ್ಯಾಕೇಜಿಂಗ್ ಉದ್ಯಮವಾಗಿದೆ. +ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂದು ಲೀಡ್ ಬ್ಯಾಂಕ್ ಹೊಂದಿರುವ ಬ್ಯಾಂಕ್‍ಗಳ ಒಕ್ಕೂಟದೊಂದಿಗೆ ಅದರ ನಿರ್ದೇಶಕರು ಸುಮಾರು 200 ಕೋಟಿ ರೂಪಾಯಿಗಳ ಬ್ಯಾಂಕ್ ಸಾಲ ವಂಚನೆ ಮಾಡಿದ್ದಾರೆ ಎಂಬುದು ಕಂಪನಿಯ ವಿರುದ್ಧದ ಪ್ರಾಥಮಿಕ ಆರೋಪ ಹೊರಿಸಲಾಗಿದೆ. ಇತರ ಬ್ಯಾಂಕ್‍ಗಳಲ್ಲಿ ಜೆ ಕೆ ಬ್ಯಾಂಕ್, ಪಿಎನ್‍ಬಿ ಮತ್ತು ಕರೂರ್ ವೈಶ್ಯ ಬ್ಯಾಂಕ್ ಸೇರಿವೆ. +ವಾಷ್ ರೂಮ್‍ನಲ್ಲಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಶಿಕ್ಷಕನ ಬಂಧನ +ಆರೋಪಿಗಳು ಬೋಗಸ್ ಘಟಕಗಳಿಗೆ ಹಣವನ್ನು ಪಾವತಿಸಿ ಮತ್ತು ನಕಲಿ ಇನ್‍ವಾಯ್ಸ್‍ಗಳನ್ನು ಎತ್ತುವ ಮೂಲಕ ಸಾಲ ನೀಡುವ ಬ್ಯಾಂಕ್‍ಗಳ ಅನುಮತಿಯಿಲ್ಲದೆ ಆಮದು ಮಾಡಿದ ಸ್ವದೇಶಿ ಯಂತ್ರೋಪಕರಣಗಳ ಮಾರಾಟವನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಭಾರತ್ ಪೇಪರ್ಸ್ ಲಿಮಿಟೆಡ್‍ನ ನಿರ್ದೇಶಕರು ರಾಜಿಂದರ್ ಕುಮಾರ್, ಪರ್ವೀನ್ ಕುಮಾರ್, ಬಲ್ಜಿಂದರ್ ಸಿಂಗ್, ಅನಿಲ್ ಕುಮಾರ್ ಮತ್ತು ಅನಿಲ್ ಕಶ್ಯಪ್ ಎಂದು ಗುರುತಿಸಲಾಗಿದೆ. \ No newline at end of file diff --git a/eesanje/url_47_175_8.txt b/eesanje/url_47_175_8.txt new file mode 100644 index 0000000000000000000000000000000000000000..68b5e527e8575c353b8885a2057f6d3fc34a53d2 --- /dev/null +++ b/eesanje/url_47_175_8.txt @@ -0,0 +1,7 @@ +ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನಿಗೆ 5 ವರ್ಷ ಶಿಕ್ಷೆ +ಮುಂಬೈ, ಜ 31 (ಪಿಟಿಐ) – ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಇಲ್ಲಿನ 28 ವರ್ಷದ ಶಾಲಾ ಶಿಕ್ಷಕನಿಗೆ ಮುಂಬೈನ ವಿಶೇಷ ನ್ಯಾಯಾಲಯ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. +ಒಬ್ಬ ಶಿಕ್ಷಕ ರಕ್ಷಕನಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಮತ್ತು ಆರೋಪಿಗಳ ಇಂತಹ ಹೇಯ ಕೃತ್ಯಗಳು ಸಂತ್ರಸ್ತರ ಮೇಲೆ ಜೀವಿತಾವಯಲ್ಲಿ ಮಾನಸಿಕ ಮತ್ತು ಭಾವನಾತ್ಮಕ ಪ್ರಭಾವ ವನ್ನು ಉಂಟುಮಾಡಿದೆ ಎಂದು ವಿಶೇಷ ನ್ಯಾಯಾಧೀಶರಾದ ಸೀಮಾ ಜಾಧವ್ ಆದೇಶದಲ್ಲಿ ತಿಳಿಸಿದ್ದಾರೆ. +ಉಪನಗರ ಗೋವಂಡಿಯ ಶಾಲೆಯೊಂದರಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ನ್ಯಾಯಾಲಯವು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಸ್ಕೋ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದೆ. ತನ್ನ ತರಗತಿಯ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೂವರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಅವರ ಮೇಲಿತ್ತು. +ವಾಷ್ ರೂಮ್‍ನಲ್ಲಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಶಿಕ್ಷಕನ ಬಂಧನ +ಆದ್ದರಿಂದ, ಶಿಕ್ಷಕನು ರಕ್ಷಕನಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಆರೋಪಿಗಳ ಇಂತಹ ಹೇಯ ಕೃತ್ಯಗಳು ಸಂತ್ರಸ್ತರ ಮೇಲೆ ಜೀವಮಾನದ ಮಾನಸಿಕ ಮತ್ತು ಭಾವನಾತ್ಮಕ ಪ್ರಭಾವವನ್ನು ಬೀರುತ್ತವೆ ಎಂದು ನ್ಯಾಯಾೀಶರು ಹೇಳಿದರು. +ಪ್ರಸ್ತುತ ಪ್ರಕರಣದಲ್ಲಿನ ಸತ್ಯಗಳನ್ನು ಪರಿಗಣಿಸಿ, ಪೋಕ್ಸೊ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಕನಿಷ್ಠ ಶಿಕ್ಷೆಯು ನ್ಯಾಯದ ಅಂತ್ಯವನ್ನು ಪೂರೈಸುತ್ತದೆ ಎಂದು ನ್ಯಾಯಾಲಯವು ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಸಿದೆ. \ No newline at end of file diff --git a/eesanje/url_47_175_9.txt b/eesanje/url_47_175_9.txt new file mode 100644 index 0000000000000000000000000000000000000000..0f525d26fe3d10a03c31fce2251e463302fdb687 --- /dev/null +++ b/eesanje/url_47_175_9.txt @@ -0,0 +1,4 @@ +ಶಿವಸೇನೆ ಶಾಸಕ ಅನಿಲ್ ಬಾಬರ್ ನಿಧನ +ಮುಂಬೈ, ಜ 31 (ಪಿಟಿಐ) – ಶಿವಸೇನೆಯ ಶಾಸಕ ಅನಿಲ್ ಬಾಬರ್ ಅವರು ನಿಧನರಾಗಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. +ಅವರಿಗೆ 74 ವರ್ಷ. ಬಾಬರ್ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಖಾನಾಪುರದ ಶಾಸಕರಾಗಿದ್ದರು. ಶಿಂಧೆ ಅವರು ಬಾಬರ್ ಅವರ ನಿಧನದಿಂದ ಅವರು ಮಾರ್ಗದರ್ಶಕ ಮತ್ತು ನಿಕಟವರ್ತಿಯನ್ನು ಕಳೆದುಕೊಂಡಿದ್ದಾರೆ ಮತ್ತು ರಾಜ್ಯವು ಹಿರಿಯ ಜನಪ್ರತಿನಿಯನ್ನು ಕಳೆದುಕೊಂಡಿದೆ. ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಸಿಎಂ ತಿಳಿಸಿದರು. +ವಾಷ್ ರೂಮ್‍ನಲ್ಲಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಶಿಕ್ಷಕನ ಬಂಧನ \ No newline at end of file diff --git a/eesanje/url_47_176_1.txt b/eesanje/url_47_176_1.txt new file mode 100644 index 0000000000000000000000000000000000000000..d806a4531a1db2a49a012fdaeae2267403dd23e5 --- /dev/null +++ b/eesanje/url_47_176_1.txt @@ -0,0 +1,11 @@ + : ನಿಷೇಧಿತ ಪಿಎಫ್‍ಐನ 15 ಮಂದಿಗೆ ಮರಣದಂಡನೆ +ತಿರುವಂತನಪುರಂ,ಜ.30-ಕೇರಳದ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸನ್ ಅವರನ್ನು ಭರ್ಬರವಾಗಿ ಹತ್ಯೆ ಮಾಡಿದ್ದ ನಿಷೇಧಿತ ಪಿಎಫ್‍ಐನ 15 ಮಂದಿ ಗೆ ಅಲಪ್ಪುಳ ನ್ಯಾಯಾಲಯವು ಮರಣದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಇತ್ತೀಚಿನ ದಶಕಗಳಲ್ಲೇ ಎಲ್ಲಾ ಅಪರಾಧಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷ ವಿಧಿಸಿರುವ ಅತೀ ದೊಡ್ಡ ಪ್ರಕರಣ ಇದಾಗಿದೆ. +2021ರ ಡಿಸೆಂಬರ್ 19ರಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯನ್ನು ಅವರ ಮನೆಯಲ್ಲೇ ತಾಯಿ, ಪತ್ನಿ ಮತ್ತು ಮಕ್ಕಳ ಎದುರೇ ಪಿಎಫ್‍ಐ ಕಾರ್ಯಕರ್ತರು ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಇದು ದೇಶದದ್ಯಾಂತ ಭಾರೀ ಸದ್ದು ಮಾಡಿತ್ತು. ಪ್ರಕರಣದ ಕುರಿತು ಸುೀಧಿರ್ಘ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾೀಧಿಶ ವಿ.ಜಿ ಶ್ರೀದೇವಿ ಅವರು ಇಂದು ಶಿಕ್ಷೆಯನ್ನು ಪ್ರಕಟಿಸಿದರು. +ದ್ವೇಷದ ಬಿರುಗಾಳಿಯಲ್ಲಿ ಸತ್ಯದ ಜ್ವಾಲೆ ನಂದಿಸಲು ಬಿಡಬಾರದು : ಕಾಂಗ್ರೆಸ್ +ಆಪರಾಧಿಗಳಾದ ನೈಸಾಮ್, ಅಜ್ಮಲ್, ಅನೂಪ್, ಮೊಹಮ್ಮದ್ ಅಸ್ಲಾಂ, ಅಬ್ದುಲ್ ಕಲಾಂ ಅಲಿಯಾಸ್ ಸಲಾಂ, ಸಫರುದ್ದೀನ್, ಮನ್ಶಾದ್, ಜಸೀಬ್ ರಾಜಾ, ನವಾಸ್, ಸಮೀರ್, ನಜೀರ್, ಜಾಕೀರ್ ಹುಸೇನ್, ಶಾಜಿ ಪೂವತುಂಗಲ್ ಮತ್ತು ಶೆರ್ನಾಸ್ ಅಶ್ರಫ್ ಅವರುಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು.ಎಲ್ಲಾ ಆರೋಪಿಗಳು ಈಗ ನಿಷೇಧಿತ ಉಗ್ರಗಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಮತ್ತು ಅದರ ರಾಜಕೀಯ ಅಂಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಸದಸ್ಯರಾಗಿದ್ದರು. +ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯನ್ನು ಕೋರಿತ್ತು. ಅವರು ತರಬೇತಿ ಪಡೆದ ಕೊಲೆಗಾರರಾಗಿದ್ದಾರೆ. ತಾಯಿ, ಶಿಶು ಮತ್ತು ಹೆಂಡತಿಯ ಮುಂದೆ ಕೊಲ್ಲಲ್ಪಟ್ಟ ಕ್ರೂರ ಮತ್ತು ಪೈಶಾಚಿಕ ರೀತಿಯಲ್ಲಿ ಕೃತ್ಯ ಎಸಗಿದ್ದಾರೆ. ಹೀಗಾಗಿ ಎಲ್ಲಾ ಆರೋಪಿಗಳಿಗೆ ಗರಿಷ್ಟ ಶಿಕ್ಷೆ ವಿಧಿಸುವಂತೆ ಕೋರಲಾಗಿತ್ತು.ಇದೊಂದು ಅಪರೂಪದಲ್ಲೇ ಅಪರೂಪದ ಪ್ರಕರಣ ಎಂದು ಹೇಳಿದ್ದ ನ್ಯಾಯಾಲಯ,ಅಪರಾಗಳನ್ನು ಅಲಪ್ಪುಳದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಾನಸಿಕ ಸ್ಥಿರತೆ ಪರೀಕ್ಷೆಗೆ ಒಳಪಡಿಸಿತ್ತು. +ಎಸ್‍ಡಿಪಿಐ ಮುಖಂಡ ಕೆ.ಎಸ್.ಶಾನ್ ಅವರು ಡಿಸೆಂಬರ್ 18ರಂದು ರಾತ್ರಿ ಅಲಪ್ಪುಳದಲ್ಲಿ ಮನೆಗೆ ಮರಳುತ್ತಿದ್ದಾಗ ತಂಡವೊಂದು ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಾಯಕನ ಹತ್ಯೆ ನಡೆದಿತ್ತು.ಘೋರ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ಮೊದಲ ಎಂಟು ಆರೋಪಿಗಳನ್ನು ಸೆಕ್ಷನ್ 302 (ಕೊಲೆ), 149 (ಕಾನೂನುಬಾಹಿರ ಸಭೆ), 449 (ಮರಣ ದಂಡನೆಗೆ ಒಳಪಡುವ ಅಪರಾಧವನ್ನು ಮಾಡಲು ಮನೆ ಅತಿಕ್ರಮಣ), 506 (ಅಪರಾಧ ಬೆದರಿಕೆ), ಮತ್ತು 341 ( ಭಾರತೀಯ ದಂಡ ಸಂಹಿತೆಯ) ಸೇರಿದಂತೆ ವಿವಿಧ ಸೆಕ್ಷನ್ ಗಳಡಿ ದೂರು ದಾಖಲಾಗಿತ್ತು. +5 ಟ್ರಿಲಿಯನ್ ಡಾಲರ್ ಆರ್ಥಿಕತೆ ಅನ್ನೊದು ಜುಮ್ಲಾ : ಪ್ರಿಯಾಂಕಾ +ಅಪರಾಧ ಎಸಗಿದಾಗ ಮಾರಕಾಸ್ತ್ರಗಳೊಂದಿಗೆ ಬಿಜೆಪಿ ನಾಯಕನ ಮನೆಯ ಹೊರಗೆ ಕಾವಲು ಕಾಯುತ್ತಿದ್ದ ಇತರ ಆರೋಪಿಗಳನ್ನು ಐಪಿಸಿಯ ಸೆಕ್ಷನ್ 302 ಆರ್/ಡಬ್ಲ್ಯೂ 149 ಮತ್ತು 447 (ಕ್ರಿಮಿನಲ್ ಅತಿಕ್ರಮಣ)ರಡಿ ದೋಷಾರೋಪಣೆ ಮಾಡಲಾಗಿತ್ತು. ಪ್ರಮುಖ ಸಂಚುಕೋರರಾದ ಝಾಕಿರ್, ಶಾಜಿ ಮತ್ತು ಶೆರ್ನಾಸ್ ಅವರು ಕ್ರಮವಾಗಿ ಐಪಿಸಿ ಸೆಕ್ಷನ್ 120 ಬಿ ಮತ್ತು 302ರಡಿ ಕ್ರಿಮಿನಲ್ ಪಿತೂರಿ ಮತ್ತು ಕೊಲೆಯ ತಪ್ಪಿತಸ್ಥರೆಂದು ಕಂಡುಬಂದಿತ್ತು. ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‍ಎಸ್‍ಎಸ್) ಸೇರಿದ ಪ್ರಕರಣದ ಆರೋಪಿಗಳು ಪ್ರಸ್ತುತ ವಿಚಾರಣೆ ಎದುರಿಸುತ್ತಿದ್ದಾರೆ. +ಏನಿದು ಪ್ರಕರಣ?:2021, ಡಿಸೆಂಬರ್ 19ರಂದು ಎಸ್‍ಡಿಪಿಐ ನಾಯಕ ಕೆ.ಎಸ್.ಶಾನ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ದಾಳಿ ಎಸಗಿ ಭೀಕರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೊಚ್ಚಿ ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ. ಕೆ.ಎಸ್.ಖಾನ್ ಹತ್ಯೆಯ ಹಿಂದೆ ಆರ್‍ಎಸ್‍ಎಸ್ ಕೈವಾಡವಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆರೋಪಿಸಿತ್ತು. +ಹತ್ಯೆಯಾದ 12 ಗಂಟೆಯೊಳಗೆ ಪ್ರತೀಕಾರ ಎಂಬಂತೆ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಹತ್ಯೆಯಾಗಿತ್ತು. ಮೇಲ್ನೋಟಕ್ಕೆ ಎಸ್‍ಡಿಪಿಐ ಮುಖಂಡನ ಹತ್ಯಗೆ ಪ್ರತೀಕಾರವಾಗಿ ರಂಜಿತ್ ಹತ್ಯೆಯಾಗಿರಬಹುದು ಎಂದು ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದರು. ಅಲಪ್ಪುಳ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಸ್ರ್ಪಧಿಸಿ ಪರಾಭವಗೊಂಡಿದ್ದ ರಂಜಿತ್ ಶ್ರೀನಿವಾಸನ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. \ No newline at end of file diff --git a/eesanje/url_47_176_10.txt b/eesanje/url_47_176_10.txt new file mode 100644 index 0000000000000000000000000000000000000000..e747e09aa041bdfc12344e7697393b392946ec1d --- /dev/null +++ b/eesanje/url_47_176_10.txt @@ -0,0 +1,6 @@ +ಮಹಾತ್ಮ ಗಾಂಧಿ ಪುಣ್ಯತಿಥಿ, ಪ್ರಧಾನಿ ಮೋದಿ ನಮನ +ನವದೆಹಲಿ, ಜ 30 (ಪಿಟಿಐ) – ಮಹಾತ್ಮ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪೀತನಿಗೆ ಗೌರವ ನಮನ ಸಲ್ಲಿಸಿದರು. ಪೂಜ್ಯ ಬಾಪು ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗಗಳು ನಮಗೆ ಜನರ ಸೇವೆ ಮಾಡಲು ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ದೃಷ್ಟಿಕೋನವನ್ನು ಪೂರೈಸಲು ಪ್ರೇರೇಪಿಸುತ್ತದೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ. +ಪ್ರಧಾನಿಯವರ ಜೀವನಕ್ಕೆ ಸಂಬಂಸಿದ ಉಪಾಖ್ಯಾನಗಳು ಮತ್ತು ಬೆಳವಣಿಗೆಗಳನ್ನು ಹಂಚಿಕೊಳ್ಳುವ ಮತ್ತೊಂದು ಎಕ್ಸ್ ಹ್ಯಾಂಡಲïನಲ್ಲಿ ಗಾಂಧಿಯವರ ಉಲ್ಲೇಖಗಳನ್ನು ಹೊಂದಿರುವ ಮೋದಿಯವರ ವೈಯಕ್ತಿಕ ಡೈರಿಯಿಂದ ಕೆಲವು ಪುಟಗಳನ್ನು ಪೋಸ್ಟ್ ಮಾಡಲಾಗಿದೆ. +15 ರಾಜ್ಯಗಳ 56 ರಾಜ್ಯಸಭಾ ಸದಸ್ಯರ ಸ್ಥಾನಕ್ಕೆ ಚುನಾವಣೆ ಘೋಷಣೆ +ಹ್ಯಾಂಡಲ್ ಮೋದಿ ಆರ್ಚೀವ್ ಹೀಗೆ ಹೇಳಿದೆ, ನಾವು ನರೇಂದ್ರಮೋದಿಜಿ ಅವರ ವೈಯಕ್ತಿಕ ದಿನಚರಿಯಿಂದ ಪುಟಗಳನ್ನು ನಿಮಗೆ ತರುತ್ತೇವೆ, ಇದು ಅವರು ಮಹಾತ್ಮ ಗಾಂಯನ್ನು ವ್ಯಾಪಕವಾಗಿ ಓದಿದ್ದಲ್ಲದೆ, ಅವರು ತಮ್ಮ ವೈಯಕ್ತಿಕ ಡೈರಿಯಲ್ಲಿ ಗಾಂಧಿಯವರ ಉಲ್ಲೇಖಗಳನ್ನು ಅವರಿಗೆ ಸೂರ್ತಿದಾಯಕ ಮೌಲ್ಯವಾಗಿ ಬರೆದಿದ್ದಾರೆ ಎಂಬುದನ್ನು ತೋರಿಸಲಾಗಿದೆ. +ಈ ನಮೂದುಗಳು ನಂತರ ಅವರ ಸಂವಾದಗಳಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರೆಸಿದವು. 1948ರಲ್ಲಿ ಇದೇ ದಿನ ನಾಥೂರಾಂ ಗೋಡ್ಸೆಯಿಂದ ಗಾಂ ಹತ್ಯೆಯಾಗಿತ್ತು. \ No newline at end of file diff --git a/eesanje/url_47_176_11.txt b/eesanje/url_47_176_11.txt new file mode 100644 index 0000000000000000000000000000000000000000..00410400fed88430089900e5fa4c11d80703bd30 --- /dev/null +++ b/eesanje/url_47_176_11.txt @@ -0,0 +1,6 @@ +ನೀರೊಳಗೆ ಸಂಚರಿಸುವ ಸಿ-ಬೋಟ್ ಲೋಕಾರ್ಪಣೆ +ಪಣಜಿ, ಜ. 30 (ಪಿಟಿಐ) ಗೋವಾ ಮೂಲದ ಸಿಎಸ್‍ಐಆರ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ (ಎನ್‍ಐಒ) ಹವಳದ ದಿಬ್ಬಗಳ ಮೇಲೆ ಹೆಚ್ಚಿನ ಕಣ್ಗಾವಲುಗಾಗಿ ಸುಧಾರಿತ ವೈಶಿಷ್ಟ್ಯಗಳನ್ನು ಹೊಂದಿರುವ ರೋಬೋಟ್ ಸಿ-ಬೋಟ್ ಎಂಬ ನೀರೊಳಗಿನ ವಾಹನವನ್ನು ಬಿಡುಗಡೆ ಮಾಡಿದೆ. +ಕೌನ್ಸಿಲ್ ಫಾರ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‍ಐಆರ್) ಮಹಾನಿರ್ದೇಶಕ ಡಾ ಎನ್ ಕಲೈಸೆಲ್ವಿ ಅವರು ಸಿ-ಬೋಟ್ ಅನ್ನು ಬಿಡುಗಡೆ ಮಾಡಿದರು ಮತ್ತು ವಾಹನವು ನೀರಿನ ಅಡಿಯಲ್ಲಿ 200 ಮೀಟರ್ ಆಳಕ್ಕೆ ಚಲಿಸಬಹುದು ಎಂದು ವಿವರಿಸಿದರು. ಹಿಂದೂ ಮಹಾಸಾಗರದ ಆಳವನ್ನು ಸ್ಕ್ಯಾನ್ ಮಾಡುವ ಸಾಮಥ್ರ್ಯವಿರುವ ನೀರೊಳಗಿನ ವಾಹನವನ್ನು ನಿರ್ಮಿಸಲು ಈ ರೋಬೋಟ್ ಮೊದಲ ಹೆಜ್ಜೆಯಾಗಿದೆ ಎಂದು ಅವರು ಸಿಎಸ್‍ಐಆರ್-ಎನ್‍ಐಒ ಕ್ಯಾಂಪಸ್‍ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. +15 ರಾಜ್ಯಗಳ 56 ರಾಜ್ಯಸಭಾ ಸದಸ್ಯರ ಸ್ಥಾನಕ್ಕೆ ಚುನಾವಣೆ ಘೋಷಣೆ +ಸಮುದ್ರದಲ್ಲಿ ಸಾವಿರಾರು ಮೀಟರ್‍ಗಳಷ್ಟು ಪ್ರಯಾಣಿಸಲು ಸಾಧ್ಯವಾಗುವ ಈ ವಾಹನವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ ಎಂದು ಕಲೈಸೆಲ್ವಿ ಹೇಳಿದರು. ಸಿಎಸ್‍ಐಆರ್-ಎನ್‍ಐಒ ನಿರ್ದೇಶಕ ಸುನಿಲ್ ಕುಮಾರ್ ಸಿಂಗ್ ಮಾತನಾಡಿ, ಸಾಗರದಲ್ಲಿನ ಹವಳದ ದಿಬ್ಬಗಳ ಮೇಲೆ ಕಣ್ಗಾವಲು ನಿರ್ವಹಿಸಲು ಸಿ-ಬೋಟ್ ಸಹಾಯ ಮಾಡುತ್ತದೆ ಎಂದರು. ಹವಾಮಾನ ಬದಲಾವಣೆಯಿಂದ ಹವಳದ ಬ್ಲೀಚಿಂಗ್ ನಡೆಯುತ್ತಿದೆ ಎಂದರು. ವಿಭಿನ್ನ ಸಂವೇದಕಗಳು, ವಿಭಿನ್ನ ಕ್ಯಾಮೆರಾಗಳೊಂದಿಗೆ, ರೋಬೋಟ್ ನಿಯತಾಂಕಗಳನ್ನು ಅಳೆಯುತ್ತದೆ ಮತ್ತು ಹವಳಗಳು ಏಕೆ ಸಾಯುತ್ತಿವೆ ಎಂಬುದನ್ನು ವಿವರಿಸಲು ಸಹಾಯ ಮಾಡಬಹುದು ಎಂದು ಅವರು ಹೇಳಿದರು. +ಸಂಶೋಧಕರಿಗೆ ಸಹಾಯ ಮಾಡುವುದರ ಜೊತೆಗೆ, ಸಿ-ಬೋಟ್ ಭಾರತೀಯ ನೌಕಾಪಡೆಯು ನ್ಯಾವಿಗೇಷನ್ ಚಾನಲ್‍ಗಳನ್ನು ರೂಪಿಸಲು ಮತ್ತು ಜಲವಿದ್ಯುತ್ ದ್ವಾರಗಳನ್ನು ಸ್ಕೋಪ್ ಮಾಡಲು ಸಹಾಯ ಮಾಡಲಿದೆ ಎಂದರು. 400-500 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಅನೇಕ ವಿಪರೀತ ವಾತಾವರಣದಲ್ಲಿ ಅನೇಕ ಸ್ಥಳಗಳಲ್ಲಿ ನಡೆಯುತ್ತಿರುವ ಸಕ್ರಿಯ ಜೀವಶಾಸ್ತ್ರ ಮತ್ತು ಸಾಗರಕ್ಕೆ ಸಾಕಷ್ಟು ಅಂಶಗಳನ್ನು ಹೊರಸೂಸುವ ಸಕ್ರಿಯ ಜಲೋಷ್ಣೀಯ ದ್ವಾರಗಳನ್ನು ಕಂಡುಹಿಡಿಯಲು ರೋಬೋಟ್ ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. ವಾಹನವು ನೈಜ ಸಮಯದ ಡೇಟಾ ಮತ್ತು ಛಾಯಾಚಿತ್ರಗಳನ್ನು ಕಳುಹಿಸಬಹುದು, ಇದು ಸಂಶೋಧಕರಿಗೆ ಅವರ ಅಧ್ಯಯನದಲ್ಲಿ ಸಹಾಯ ಮಾಡುತ್ತದೆ ಎಂದು ಸಿಂಗ್ ಹೇಳಿದರು. \ No newline at end of file diff --git a/eesanje/url_47_176_12.txt b/eesanje/url_47_176_12.txt new file mode 100644 index 0000000000000000000000000000000000000000..659bccc85702afef9fa0b671675ce965975a973c --- /dev/null +++ b/eesanje/url_47_176_12.txt @@ -0,0 +1,7 @@ +15 ರಾಜ್ಯಗಳ 56 ರಾಜ್ಯಸಭಾ ಸದಸ್ಯರ ಸ್ಥಾನಕ್ಕೆ ಚುನಾವಣೆ ಘೋಷಣೆ +ಬೆಂಗಳೂರು, ಜ.29- ಕರ್ನಾಟಕದ ನಾಲ್ವರು ಸೇರಿದಂತೆ ರಾಷ್ಟ್ರದ 15 ರಾಜ್ಯಗಳ 56 ರಾಜ್ಯಸಭಾ ಸದಸ್ಯ ಸ್ಥಾನಗಳಿಗೆ ಭಾರತೀಯ ಚುನಾವಣಾ ಆಯೋಗ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್‍ನಲ್ಲಿ ನಿವೃತ್ತಿ ಹೊಂದುವ 56 ರಾಜ್ಯಸಭಾ ಸದಸ್ಯರ ಸ್ಥಾನಗಳಿಗೆ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು , ಫೆಬ್ರವರಿ 27 ರಂದು ಚುನಾವಣೆ ಜರುಗಲಿದೆ. +ಏಪ್ರಿಲ್ 2ರಂದು ನಿವೃತ್ತಿ ಆಗಲಿರುವ ಕರ್ನಾಟಕದ ರಾಜ್ಯಸಭಾ ಸದಸ್ಯರಾದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (ಬಿಜೆಪಿ), ಕಾಂಗ್ರೆಸ್ ಸದಸ್ಯರಾದ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸೈಯದ್ ನಸೀರ್ ಹುಸೇನ್ ಅವರ ನಿವೃತ್ತಿಯಿಂದ ತೆರವಾಗುವ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದೆ. +ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆಯನ್ನು ಪ್ರಕಟಿಸಲಿದ್ದು , ಅಂದಿನಿಂದ ಫೆ.15ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಫೆ. 16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಫೆ.20 ಕಡೆ ದಿನ. ಅಗತ್ಯ ಬಿದ್ದರೆ ಫೆ.27ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದ್ದು , ಅಂದು ಸಂಜೆ 5 ಗಂಟೆ ನಂತರ ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಿಸಲಾಗುತ್ತದೆ. +ಜ್ಞಾನವ್ಯಾಪಿ ಸಮೀಕ್ಷೆ ವಿರೋಧಿಸುವವರು ತುಕ್ಡೆ ಗ್ಯಾಂಗ್‍ನ ಭಾಗವಾಗಿದ್ದಾರೆ : ಜಮಾಲ್ +ಫೆ.29ರಷ್ಟರಲ್ಲಿ ರಾಜ್ಯಸಭೆ ಸದಸ್ಯರ ದ್ವೈವಾರ್ಷಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಉತ್ತರಪ್ರದೇಶ-10, ಮಹಾರಾಷ್ಟ್ರ-6, ಬಿಹಾರ-6, ಮಧ್ಯಪ್ರದೇಶ-5, ಗುಜರಾತ್-4, ಕರ್ನಾಟಕ-4, ತೆಲಂಗಾಣ- 3, ಒಡಿಶಾ-3, ರಾಜಸ್ಥಾನ-3, ಆಂಧ್ರಪ್ರದೇಶ-3,ಛತ್ತೀಸ್‍ಗಢ-1, ಹರಿಯಾಣ-1, ಹಿಮಾಚಲಪ್ರದೇಶ-1, ಉತ್ತರಖಂಡದ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿದೆ. +ರಾಜಸ್ಥಾನದ 3 ರಾಜ್ಯಸಭಾ ಸದಸ್ಯರು ಏಪ್ರಿಲ್ 3 ರಂದು ನಿವೃತ್ತಿ ಆದರೆ ಉಳಿದ ರಾಜ್ಯಗಳ 53 ರಾಜ್ಯಸಭಾ ಸದಸ್ಯರು ಏಪ್ರಿಲ್ 2 ರಂದೇ ನಿವೃತ್ತಿಯಾಗಲಿದ್ದಾರೆ. \ No newline at end of file diff --git a/eesanje/url_47_176_2.txt b/eesanje/url_47_176_2.txt new file mode 100644 index 0000000000000000000000000000000000000000..bd919278c3793725c52b969dc00ab182308d2437 --- /dev/null +++ b/eesanje/url_47_176_2.txt @@ -0,0 +1,11 @@ +ಬಿಜೆಪಿ-ಜೆಡಿಎಸ್ ಯುವಕರನ್ನು ಪ್ರಚೋದಿಸಿ ಗಲಭೆ ಸೃಷ್ಟಿಗೆ ಯತ್ನ : ಸಚಿವ ಚೆಲುವರಾಯಸ್ವಾಮಿ +ಮಂಡ್ಯ,ಜ.30- ಬಿಜೆಪಿ-ಜೆಡಿಎಸ್ ಪಕ್ಷಗಳ ರಾಜಕೀಯ ಅಸ್ತಿತ್ವಕ್ಕಾಗಿ ಜಿಲ್ಲೆಯ ಯುವಕರನ್ನು ಪ್ರಚೋದಿಸಿ ಗಲಭೆ ಸೃಷ್ಟಿಸಲು ಯತ್ನಿಸಿದರೆ ಜನ ಅದನ್ನು ಸಹಿಸುವುದಿಲ್ಲ. ಮುಂದಿನ ದಿನಗಳಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ಮುಂದುವರೆಸಿದರೆ ಜಿಲ್ಲಾಡಳಿತ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. +ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಡ್ಯದಲ್ಲಿ ಕಾವೇರಿ ನೀರಿನ ವಿವಾದ, ಸಕ್ಕರೆ ಕಾರ್ಖಾನೆ ಅಭಿವೃದ್ಧಿ, ರೈತರ ಸಮಸ್ಯೆ, ಬರ ಸನ್ನಿವೇಶ ಸೇರಿದಂತೆ ಯಾವ ವಿಚಾರದಲ್ಲೂ ಜೆಡಿಎಸ್‍ನ ಕುಮಾರಸ್ವಾಮಿಯಾಗಲೀ, ಬಿಜೆಪಿಯ ನಾಯಕರಾಗಲೀ ಜಿಲ್ಲೆಯಲ್ಲಿ ಹೋರಾಟ ನಡೆಸಲಿಲ್ಲ. ಈಗ ಪ್ರಚೋದಾನಾತ್ಮಕ ಹೇಳಿಕೆಗಳ ಮೂಲಕ ಜಿಲ್ಲೆಯ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಇಲ್ಲಿನ ಯುವಕರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು. +ಇದು ಮಂಗಳೂರು ಅಥವಾ ಉಡುಪಿ ಅಲ್ಲ, ಮಂಡ್ಯ ಎಂಬುದನ್ನು ಬಿಜೆಪಿ ನಾಯಕರು ನೆನಪಿನಲ್ಲಿಟ್ಟುಕೊಳ್ಳಬೇಕು. ಕುಮಾರಸ್ವಾಮಿಯವರು ಈ ಹಿಂದೆ ಬಿಜೆಪಿ ಮತ್ತು ಆರ್‍ಎಸ್‍ಎಸ್ ಅನ್ನು ಕಾಂಗ್ರೆಸ್‍ಗಿಂತಲೂ ಹೆಚ್ಚಿನದಾಗಿ ಮತ್ತು ಕೆಟ್ಟದಾಗಿ ಟೀಕಿಸಿದ್ದರು. ನರೇಂದ್ರಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿಕೆ ನೀಡಿದರು. ನಿನ್ನೆ ಕುಮಾರಸ್ವಾಮಿಯವರು ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿರುಗೇಟು ನೀಡಿದರು. +ದ್ವೇಷದ ಬಿರುಗಾಳಿಯಲ್ಲಿ ಸತ್ಯದ ಜ್ವಾಲೆ ನಂದಿಸಲು ಬಿಡಬಾರದು : ಕಾಂಗ್ರೆಸ್ +ಸರ್ಕಾರಿ ಜಾಗದಲ್ಲಿ ರಾಷ್ಟ್ರ ಮತ್ತು ರಾಜ್ಯ ಧ್ವಜವನ್ನು ಮಾತ್ರ ಹಾರಿಸಬೇಕು ಎಂದು ಗ್ರಾಮ ಪಂಚಾಯಿತಿ ಅನುಮತಿ ನೀಡಿತ್ತು. ಷರತ್ತನ್ನು ಉಲ್ಲಂಘಿಸಿ ಕೇಸರಿ ಧ್ವಜ ಹಾರಿಸಿದ್ದಾರೆ. ನಾವು ಯಾವುದೇ ಧ್ವಜಕ್ಕೆ ವಿರೋಧವಿಲ್ಲ. ಖಾಸಗಿ ಜಾಗದಲ್ಲಿ ಕೇಸರಿ ಧ್ವಜ ಹಾರಿಸುವುದಾದರೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು. +30 ವರ್ಷಗಳಿಂದಲೂ ಅಲ್ಲಿ ಕೇಸರಿ ಧ್ವಜ ಹಾರಿಸುತ್ತಿದ್ದೆವು ಎಂದು ಹೇಳುತ್ತಿರುವುದು ಸುಳ್ಳು. ಧ್ವಜ ಸ್ತಂಭ ನಿರ್ಮಾಣವಾಗಿರುವುದೇ ಇತ್ತೀಚೆಗೆ. ಜನರನ್ನು ದಾರಿ ತಪ್ಪಿಸಲು ಹಳೆಯ ಫೋಟೊಗಳನ್ನು ಪ್ರದರ್ಶನ ಮಾಡಿ ಯಾಮಾರಿಸಲಾಗುತ್ತಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ಭರದಲ್ಲಿ ಸುಳ್ಳುಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಣರಾಜ್ಯೋತ್ಸವ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಪ್ರಧಾನಿಯಾದಿಯಾಗಿ ಎಲ್ಲರೂ ಶೂ ಧರಿಸಿಯೇ ಧ್ವಜಾರೋಹಣ ಮಾಡುತ್ತಾರೆ. +ಕೆರಗೋಡಿನಲ್ಲಿ ಜಿಲ್ಲಾಧಿಕಾರಿ ಶೂ ಧರಿಸಿ ಧ್ವಜಾರೋಹಣ ಮಾಡಿ ಅಪಮಾನ ಮಾಡಿದ್ದಾರೆ ಎಂಬ ಅನಗತ್ಯ ವಾದವನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆಯ ಕಾರಣಕ್ಕಾಗಿಜನರ ನೆಮ್ಮದಿಯನ್ನು ಕೆಡಿಸುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಜೆಡಿಎಸ್ ಶೇ. 90 ರಷ್ಟು ಕಾರಣವಾದರೆ ಬಿಜೆಪಿ ಪಾಲು ಶೇ.10 ರಷ್ಟು. ಇದನ್ನು ಕುಮಾರಸ್ವಾಮಿ, ಯಡಿಯೂರಪ್ಪ, ಆರ್.ಅಶೋಕ್, ವಿಜಯೇಂದ್ರ, ಸಿ.ಟಿ.ರವಿ ಸೇರಿದಂತೆ ಎಲ್ಲರೂ ತಕ್ಷಣವೇ ನಿಲ್ಲಿಸಬೇಕು. ಬಹುಷಃ ನಿನ್ನೆಯ ರ್ಯಾಲಿಯ ಬಳಿಕ ಪ್ರಚೋದನೆ ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಭಾವಿಸುತ್ತೇವೆ. ಇಲ್ಲವಾದರೆ, ನಾವು ಶಾಂತಿ ಯಾತ್ರೆಯನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. +ನಾವು ಮಂಡ್ಯದ ಜನ. ಇಲ್ಲಿನ ನೀರು ಕುಡಿದು, ನೆರಳಿನಲ್ಲಿ ಬದುಕಿದವರು, ನಮಗಿಂತಲೂ ಹೆಚ್ಚಿನದಾಗಿ ಜಿಲ್ಲೆಯ ಜನ ಕುಮಾರಸ್ವಾಮಿಯವರನ್ನು ಪ್ರೀತಿಸಿದರು. ನಮ್ಮನ್ನು ಸೋಲಿಸಿ, ಅವರನ್ನು ಗೆಲ್ಲಿಸಿದರು. ಅದಕ್ಕೆ ನೀಡುತ್ತಿರುವ ಪ್ರತಿಫಲ ಇದೇ ಏನು ಎಂದು ಪ್ರಶ್ನಿಸಿದ ಚೆಲುವರಾಯಸ್ವಾಮಿ, ಇಲ್ಲಿಗೆ ಬಂದು ಹೋಗುವವರು ಸ್ಥಳೀಯರ ನೆಮ್ಮದಿ ಕೆಡಿಸುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಹೇಳಿದರು. +ಅಂತರ್ಧರ್ಮೀಯ ದಂಪತಿಗಳ ಭದ್ರತೆಗೆ ಆಗ್ರಹಿಸಿದ ಅರ್ಜಿ ವಜಾ +ಶಾಸಕರಾದ ರವಿಕುಮಾರ್ ಗಣಿಗ ಮತ್ತು ಪಿ.ಎಂ.ನರೇಂದ್ರಸ್ವಾಮಿ ಬಿಜೆಪಿ ನಾಯಕರನ್ನು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_47_176_3.txt b/eesanje/url_47_176_3.txt new file mode 100644 index 0000000000000000000000000000000000000000..ed3e0f92a072858917902917fb6cade9837a2c82 --- /dev/null +++ b/eesanje/url_47_176_3.txt @@ -0,0 +1,6 @@ +5 ಟ್ರಿಲಿಯನ್ ಡಾಲರ್ ಆರ್ಥಿಕತೆ ಅನ್ನೊದು ಜುಮ್ಲಾ : ಪ್ರಿಯಾಂಕಾ +ನವದೆಹಲಿ,ಜ.30- ಇಸ್ರೇಲ್‍ನಲ್ಲಿ ಉದ್ಯೋಗ ಹುಡುಕುತ್ತಿರುವ ಜನರ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಮಾತು ಮತ್ತು ಮೋದಿಯವರ ಭರವಸೆ ಕೇವಲ ಜುಮ್ಲಾ ಆಗಿದ್ದು, ದೇಶದ ನಿಜವಾದ ಸಮಸ್ಯೆ ನಿರುದ್ಯೋಗ ಮತ್ತು ಹಣದುಬ್ಬರಕ್ಕೆ ಬಿಜೆಪಿ ಸರ್ಕಾರದಲ್ಲಿ ಯಾವುದೇ ಪರಿಹಾರವಿಲ್ಲ ಎಂದು ಹೇಳಿದ್ದಾರೆ. +ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಕ್ಸ್ ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದು ಇಸ್ರೇಲ್‍ಗೆ ಕಾರ್ಮಿಕರನ್ನು ಕಳುಹಿಸಲು ನೇಮಕಾತಿ ಡ್ರೈವ್‍ಗಾಗಿ ಜನರು ಸರತಿ ಸಾಲಿನಲ್ಲಿ ನಿಂತಿರುವುದನ್ನು ತೋರಿಸುತ್ತದೆ.ಎಲ್ಲಿಯಾದರೂ ಯುದ್ಧದ ಪರಿಸ್ಥಿತಿ ಇದ್ದರೆ, ಮೊದಲು ನಾವು ನಮ್ಮ ನಾಗರಿಕರನ್ನು ಅಲ್ಲಿಂದ ರಕ್ಷಿಸುತ್ತೇವೆ ಮತ್ತು ಅವರನ್ನು ನಮ್ಮ ದೇಶಕ್ಕೆ ಕರೆತರುತ್ತೇವೆ ಎಂದು ಹೇಳಿದರು. ಆದರೆ ಇಂದು ನಿರುದ್ಯೋಗವು ಇಂತಹ ಪರಿಸ್ಥಿತಿಗೆ ಕಾರಣವಾಗಿದೆ, ಯುದ್ಧ ಪೀಡಿತ ಇಸ್ರೇಲ್‍ಗೆ ಹೋಗುವ ಅಪಾಯವನ್ನು ತೆಗೆದುಕೊಳ್ಳುವುದರಿಂದ ಸರ್ಕಾರವು ಸಾವಿರಾರು ಅಸಹಾಯಕ ಯುವಕರನ್ನು ಸಹ ಉಳಿಸುತ್ತಿಲ್ಲ ಎಂದು ಅವರು ಎಕ್ಸ್ ಮಾಡಿದ್ದಾರೆ. +ಕಡಲ್ಗಳ್ಳರಿಂದ 19 ಪಾಕ್ ಸಿಬ್ಬಂದಿಗಳನ್ನು ರಕ್ಷಿಸಿದ ಭಾರತದ ಐಎನ್‍ಎಸ್ ಸುಮಿತ್ರಾ +5 ಟ್ರಿಲಿಯನ್ ಡಾಲರ್ ಆರ್ಥಿಕತೆ, ವಾರ್ಷಿಕ ಎರಡು ಕೋಟಿ ಉದ್ಯೋಗಗಳು ಮತ್ತು ಚುನಾವಣಾ ಸಮಯದಲ್ಲಿ ಮೋದಿಯವರ ಖಾತರಿಯಂತಹ ವಿಷಯಗಳ ಮಾತು ಕೇವಲ ಜುಮ್ಲಾ (ವಾಕ್ಚಾತುರ್ಯ) ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಯುವಜನತೆಗೆ ಸ್ವಂತ ದೇಶದಲ್ಲಿ ಏಕೆ ಉದ್ಯೋಗ ಸಿಗುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. +ಎರಡು ದಿನಗಳಿಂದ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿರುವ ಈ ಯುವಕರು ನಮ್ಮ ದೇಶದ ಮಕ್ಕಳಲ್ಲವೇ, ಅಂತಹ ಭಯಾನಕ ಯುದ್ಧದ ಮಧ್ಯದಲ್ಲಿ ಅವರನ್ನು ಕಳುಹಿಸಲು ನಾವು ಸಂತೋಷದಿಂದ ಸಿದ್ಧರಿದ್ದೇವೆಯೆ ಎಂದು ಅವರು ಕೇಳಿದ್ದಾರೆ. ಸರ್ಕಾರ ಎಷ್ಟು ಜಾಣತನದಿಂದ ಇದನ್ನು ದೇಶದ ಯುವಜನರ ವೈಯಕ್ತಿಕ ಸಮಸ್ಯೆಯಾಗಿ ಮಾಡುತ್ತಿದೆ ಎಂಬುದನ್ನು ಗಮನಿಸಿ ಎಂದಿದ್ದಾರೆ ಪ್ರಿಯಾಂಕ. \ No newline at end of file diff --git a/eesanje/url_47_176_4.txt b/eesanje/url_47_176_4.txt new file mode 100644 index 0000000000000000000000000000000000000000..57bace31a9d140037ed258c947f6100dec5aeb51 --- /dev/null +++ b/eesanje/url_47_176_4.txt @@ -0,0 +1,7 @@ +2030ರ ವೇಳೆಗೆ 7 ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಭಾರತ +ನವದೆಹಲಿ,ಜ.30- ಮಧ್ಯಂತರ ಬಜೆಟ್‍ಗೆ ಮುಂಚಿತವಾಗಿ, ಹಣಕಾಸು ಸಚಿವಾಲಯದ ವರದಿಯು ಭಾರತದ ಆರ್ಥಿಕ ಪಥವನ್ನು 2030 ರ ವೇಳೆಗೆ 7 ಟ್ರಿಲಿಯನ್ ಡಾಲರ್‍ಗೆ ತಲುಪಲಿದೆ ಎಂದು ಅಂದಾಜಿಸಿದೆ. ಇಂಡಿಯನ್ ಎಕಾನಮಿ – ಎ ರಿವ್ಯೂ ಪ್ರಸ್ತುತಪಡಿಸಿದ ಮಾಹಿತಿಯ ಪ್ರಕಾರ, ಭಾರತವು ಮೂರನೇ ಒಂದು ಭಾಗಕ್ಕೆ ಬಲವಾದ ಬೆಳವಣಿಗೆಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಸತತ ವರ್ಷ, ಜಾಗತಿಕ ಆರ್ಥಿಕತೆಯು ಶೇ.3 ಕ್ಕಿಂತ ಹೆಚ್ಚು ಬೆಳೆಯಲು ಹೆಣಗಾಡುತ್ತಿರುವಾಗ 7 ಶೇಕಡಾ ವಿಸ್ತರಣೆಯನ್ನು ಮೀರಿಸಲಿದೆ ಎಂದು ಹೇಳಿದೆ. +ಸ್ಥಿರ ಆರ್ಥಿಕ ಬೆಳವಣಿಗೆಯನ್ನು ಖಾತ್ರಿಪಡಿಸಿಕೊಳ್ಳಲು ಭಾರತದ ಅಚಲವಾದ ಬದ್ಧತೆಯು ಹವಾಮಾನ ಬದಲಾವಣೆಯ ಹೊಂದಾಣಿಕೆ, ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು ಮತ್ತು ಹೊರಸೂಸುವಿಕೆಯನ್ನು ತಗ್ಗಿಸಲು ಅಗತ್ಯವಿರುವ ಹೂಡಿಕೆಗೆ ಸಂಪನ್ಮೂಲಗಳನ್ನು ಉತ್ಪಾದಿಸುತ್ತಿದೆ ಎಂದು ವಿಮರ್ಶೆ ಹೇಳಿದೆ. +ಕಳೆದ ದಶಕದಲ್ಲಿ, ಸಾರ್ವಜನಿಕ ವಲಯದ ಬಂಡವಾಳ ಹೂಡಿಕೆಯು ಹೆಚ್ಚಿದೆ, ಹಣಕಾಸು ವಲಯವು ಆರೋಗ್ಯಕರವಾಗಿ ಉಳಿದಿದೆ ಮತ್ತು ಆಹಾರೇತರ ಸಾಲದ ಬೆಳವಣಿಗೆಯು ದೃಢವಾಗಿದೆ, ಇವೆಲ್ಲವೂ ಭಾರತದ ಚುರುಕಾದ ಆರ್ಥಿಕ ಆರೋಹಣಕ್ಕೆ ಕೊಡುಗೆ ನೀಡಿವೆ. ಹಣಕಾಸು ವಲಯವನ್ನು ಬಲಪಡಿಸಲು ಕೈಗೊಂಡ ಸುಧಾರಣೆಗಳು ಬ್ಯಾಂಕ್‍ಗಳು ಮತ್ತು ಕಾಪೆರ್ರೇಟ್‍ಗಳ ಬ್ಯಾಲೆನ್ಸ್‍ಶೀಟ್‍ಗಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡಿದೆ ಮತ್ತು ಆರ್ಥಿಕತೆಯ ಎಲ್ಲಾ ಕ್ಷೇತ್ರಗಳಿಗೆ ಸಾಲವನ್ನು ಪುನರಾರಂಭಿಸಲು ಬ್ಯಾಂಕ್‍ಗಳನ್ನು ಉತ್ತೇಜಿಸಿದೆ. ಜಿಎಸ್‍ಟಿ ಅಳವಡಿಕೆಯಿಂದ ದೇಶೀಯ ಮಾರುಕಟ್ಟೆಗಳ ಏಕೀಕರಣವು ಉತ್ಪಾದನೆಯನ್ನು ಉತ್ತೇಜಿಸಿದೆ. ಲಾಜಿಸ್ಟಿಕ್ಸ ವೆಚ್ಚವನ್ನು ಕಡಿಮೆ ಮಾಡುವಾಗ ದೊಡ್ಡ ಪ್ರಮಾಣದಲ್ಲಿ ಮತ್ತು ರ್ವತ ಆರ್ಥಿಕ ದಕ್ಷತೆ, ವರದಿ ತಿಳಿಸಿದೆ. +ಕಡಲ್ಗಳ್ಳರಿಂದ 19 ಪಾಕ್ ಸಿಬ್ಬಂದಿಗಳನ್ನು ರಕ್ಷಿಸಿದ ಭಾರತದ ಐಎನ್‍ಎಸ್ ಸುಮಿತ್ರಾ +ಕೇಂದ್ರದ ಎಲ್ಲ ಅಂತರ್ಗತ ಕಲ್ಯಾಣ ವಿಧಾನವು ಮಧ್ಯಮ ವರ್ಗವನ್ನು ವಿಸ್ತರಿಸುವ ಮೂಲಕ ಬಳಕೆಯ ನೆಲೆಯ ವಿಸ್ತರಣೆಗೆ ಕೊಡುಗೆ ನೀಡುವ ನಿರೀಕ್ಷೆಯಿದೆ ಎಂದು ವರದಿ ಸೇರಿಸುತ್ತದೆ. ಜಾಗತಿಕ ಆರೋಗ್ಯ ಬಿಕ್ಕಟ್ಟು ಮತ್ತು ಹವಾಮಾನ ವೈಪರೀತ್ಯದ ಸವಾಲುಗಳ ಹೊರತಾಗಿಯೂ, ಕೃಷಿ ವಲಯವು ಗಮನಾರ್ಹವಾದ ದೃಢತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸಿದೆ ಎಂದು ಅದು ಹೇಳುತ್ತದೆ. +ಭಾರತದ ದೃಢವಾದ ಡಿಜಿಟಲ್ ಪಬ್ಲಿಕ್ ಇನ್ರಾಸ್ಟ್ರಕ್ಚರ್ ದೃಢೀಕರಣ ಪರಿಸರ ವ್ಯವಸ್ಥೆಯನ್ನು ಪರಿವರ್ತಿಸಿದೆ, ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ನಡೆಸುವ ವೆಚ್ಚವನ್ನು ಕಡಿಮೆ ಮಾಡಿದೆ. ಇದು ವ್ಯಾಪಕವಾದ ಇಂಟರ್ನೆಟ್ ಸಂಪರ್ಕ ಮತ್ತು ಸ್ಮಾರ್ಟ್‍ಫೋನ್‍ಗಳು, ಕ್ಷಿಪ್ರ ನಗರೀಕರಣದೊಂದಿಗೆ ಸೇರಿಕೊಂಡು ದೇಶದ ಇ-ಕಾಮರ್ಸ್ ಮಾರುಕಟ್ಟೆಯನ್ನು ಮುಂದೂಡಿದೆ, ಯುಎಸ್‍ಎ ಮತ್ತು ಯುಕೆ ನಂತರ ಭಾರತವು ಜಾಗತಿಕವಾಗಿ ಮೂರನೇ-ಅತಿದೊಡ್ಡ ಫಿನ್‍ಟೆಕ್ ಆರ್ಥಿಕತೆಯನ್ನು ಮಾಡಿದೆ ಎಂದು ಹೇಳಲಾಗಿದೆ. \ No newline at end of file diff --git a/eesanje/url_47_176_5.txt b/eesanje/url_47_176_5.txt new file mode 100644 index 0000000000000000000000000000000000000000..bed2bffaec282e8c25c9adf026bea0a2239f74af --- /dev/null +++ b/eesanje/url_47_176_5.txt @@ -0,0 +1,8 @@ +ದ್ವೇಷದ ಬಿರುಗಾಳಿಯಲ್ಲಿ ಸತ್ಯದ ಜ್ವಾಲೆ ನಂದಿಸಲು ಬಿಡಬಾರದು : ಕಾಂಗ್ರೆಸ್ +ನವದೆಹಲಿ, ಜ 30 (ಪಿಟಿಐ) ಮಹಾತ್ಮಾ ಗಾಂಧಿಯವರ ಪುಣ್ಯತಿಥಿಯಂದು, ದ್ವೇಷದ ಬಿರುಗಾಳಿಯಲ್ಲಿ ಸತ್ಯ ಮತ್ತು ಸಾಮರಸ್ಯದ ಜ್ವಾಲೆಯನ್ನು ನಂದಿಸಲು ಬಿಡದಿರುವುದೇ ರಾಷ್ಟ್ರಪಿತನಿಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ. ಮಹಾತ್ಮ ಗಾಂಧಿಯವರ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸುವವರಿಗೆ ಭಾರತದ ಕಲ್ಪನೆಯನ್ನು ವ್ಯಾಖ್ಯಾನಿಸಲು ಬಿಡಬಾರದು ಮತ್ತು ಬಿಡುವುದಿಲ್ಲ ಎಂದು ಪಕ್ಷ ಹೇಳಿದೆ. +ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‍ನ ಪೋಸ್ಟ್‍ನಲ್ಲಿ ಮಹಾತ್ಮ ಗಾಂಧಿಯವರ ಉಲ್ಲೇಖವನ್ನು ಉಲ್ಲೇಖಿಸಿದ್ದಾರೆ, ಶತ್ರು ಎಂದರೆ ಭಯ, ನಾವು ಅದನ್ನು ದ್ವೇಷ ಎಂದು ಭಾವಿಸುತ್ತೇವೆ ಆದರೆ ಅದು ಭಯ ಎಂದಿದ್ದಾರೆ. ಹುತಾತ್ಮರ ದಿನದಂದು, ನಮ್ಮ ರಾಷ್ಟ್ರದ ನೈತಿಕ ದಿಕ್ಸೂಚಿಯಾದ ಬಾಪು ಅವರಿಗೆ ನಾವು ಗೌರವ ಸಲ್ಲಿಸುತ್ತೇವೆ. ಸಂಭವ ಮತ್ತು ಸರ್ವೋದಯದ ಆಧಾರದ ಮೇಲೆ ಅವರ ಆದರ್ಶಗಳನ್ನು ನಾಶಮಾಡಲು ಪ್ರಯತ್ನಿಸುವವರ ವಿರುದ್ಧ ನಾವು ಹೋರಾಡಲು ಪ್ರತಿಜ್ಞೆ ಮಾಡಬೇಕು ಎಂದು ಖರ್ಗೆ ಹೇಳಿದರು. +ಧ್ವಜ ಸ್ತಂಭಕ್ಕೆ ಅನುಮತಿ ಕೊಟ್ಟ ಕೆರೆಗೋಡು ಪಿಡಿಒ ಅಮಾನತು +ವಿವಿಧತೆಯಲ್ಲಿ ಏಕತೆ ಭಾರತವನ್ನು ರಕ್ಷಿಸಲು ಮತ್ತು ನಮ್ಮ ಜನರಲ್ಲಿ ನ್ಯಾಯ, ಸಮಾನತೆ ಮತ್ತು ಭ್ರಾತೃತ್ವವನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲವನ್ನೂ ಮಾಡೋಣ ಎಂದು ಅವರು ಹೇಳಿದರು. ಈ ದಿನವೇ ದ್ವೇಷ ಮತ್ತು ಹಿಂಸೆಯ ಸಿದ್ಧಾಂತವು ಪೂಜ್ಯ ಬಾಪು ಅವರನ್ನು ದೇಶದಿಂದ ಕಿತ್ತುಕೊಂಡಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಿಂದಿಯಲ್ಲಿ ಎಕ್ಸ್ ಮಾಡಿದ್ದಾರೆ. ಮತ್ತು, ಇಂದು ಅದೇ ಚಿಂತನೆಯು ಅವರ ತತ್ವಗಳು ಮತ್ತು ಆದರ್ಶಗಳನ್ನು ನಮ್ಮಿಂದ ಕಸಿದುಕೊಳ್ಳಲು ಬಯಸುತ್ತಿದೆ ಎಂದು ಅವರು ಹೇಳಿದ್ದಾರೆ. ಆದರೆ ಈ ದ್ವೇಷದ ಚಂಡಮಾರುತದಲ್ಲಿ, ಸತ್ಯ ಮತ್ತು ಸಾಮರಸ್ಯದ ಜ್ವಾಲೆಯನ್ನು ನಂದಿಸಬಾರದು ಎಂದು ಕಾಂಗ್ರೆಸ್ ನಾಯಕ ಹೇಳಿದರು ಮತ್ತು ಇದು ಮಹಾತ್ಮಾ ಗಾಂಧಿಯವರಿಗೆ ನಿಜವಾದ ಗೌರವವಾಗಿದೆ ಎಂದು ಹೇಳಿದರು. +76 ವರ್ಷಗಳ ಹಿಂದೆ ಮಹಾತ್ಮ ಗಾಂಧಿ ಹತ್ಯೆಯಾದ ದಿನದಂದು ಅವರನ್ನು ಸ್ಮರಿಸಲು ಬಿಹಾರದ ಅರಾರಿಯಾದಲ್ಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರಾ ಶಿಬಿರದಲ್ಲಿ ಮುಂಜಾನೆ ಪ್ರಾರ್ಥನಾ ಸಭೆ ನಡೆಸಲಾಯಿತು. ಎಕ್ಸ್ ನ ಪೋಸ್ಟ್‍ನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಮತ್ತು ಇತರ ಹಲವಾರು ನಾಯಕರು ರಾಷ್ಟ್ರಪಿತನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಾರ್ಥನಾ ಸಭೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. +ಹೊಸ ಕರೆನ್ಸಿ ಪರಿಚಯಿಸಲು ನಿರ್ಧರಿಸಿದ ಪಾಕ್ +ಅವರ ಜೀವಿತಾವಧಿಯಲ್ಲಿ ಅವರನ್ನು ವಿರೋಧಿಸಿದ ಮತ್ತು ತಿರಸ್ಕರಿಸಿದ ಸಿದ್ಧಾಂತಗಳ ವಿರುದ್ಧದ ನಮ್ಮ ಹೋರಾಟ ಮತ್ತು ಈಗ ಆಗಾಗ್ಗೆ ಅವರನ್ನು ಆಯ್ಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ರಮೇಶ್ ಹೇಳಿದರು. ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಮಾತನಾಡಿ, ಮಹಾತ್ಮಾ ಗಾಂಧಿಯವರು ಕೊಲ್ಲಲ್ಪಟ್ಟಿರಬಹುದು ಆದರೆ ಲಕ್ಷಾಂತರ ಭಾರತೀಯರು, ವಿಶೇಷವಾಗಿ ಸಾಮಾನ್ಯ ಭಾರತೀಯರು, ಅವರ ಜೀವನ ಮತ್ತು ಅವರ ಪ್ರೀತಿ, ಸಾಮರಸ್ಯ, ಭ್ರಾತೃತ್ವ ಮತ್ತು ಶಾಂತಿಯ ಬೋಧನೆಗಳನ್ನು ಗೌರವಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_176_6.txt b/eesanje/url_47_176_6.txt new file mode 100644 index 0000000000000000000000000000000000000000..b1ac23bdfa10a0681a2cd0e09c20b5a33a9cfa7b --- /dev/null +++ b/eesanje/url_47_176_6.txt @@ -0,0 +1,10 @@ +ಜಾರ್ಖಂಡ್ ಸಿಎಂ ನಾಪತ್ತೆ..! +ನವದೆಹಲಿ,ಜ.30- ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ನಾಪತ್ತೆಯಾಗಿರುವುದು ಕೂತುಹಲಕ್ಕೆ ಎಡೆ ಮಾಡಿಕೊಟ್ಟಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಂದಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮತ್ತು ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. +ಕಳೆದ 24 ಗಂಟೆಗಳಿಂದ ಸೋರೆನ್ ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿದರೆ, ಅವರ ಪಕ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ ಮುಖ್ಯಮಂತ್ರಿ ಸುರಕ್ಷಿತವಾಗಿದ್ದಾರೆ ಮತ್ತು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದೆ. ಇಡಿ ಮೂಲಗಳ ಪ್ರಕಾರ, ಸೊರೆನ್ ಇರುವಿಕೆಯ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇಲ್ಲ. +ಅವರು ರಾಂಚಿಯಿಂದ ದೆಹಲಿಗೆ ಪ್ರಯಾಣಿಸಿದ ಚಾರ್ಟರ್ಡ್ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಅವರ ಸಿಬ್ಬಂದಿಯ ಹಲವಾರು ಜನರ ಫೋನ್‍ಗಳು ಸ್ವಿಚ್ ಆಫ್ ಆಗಿವೆ. ದೆಹಲಿಯಲ್ಲಿರುವ ಅವರ ಬಿಎಂಡಬ್ಲ್ಯು ಕಾರನ್ನು ಇಡಿ ವಶಪಡಿಸಿಕೊಂಡಿದೆ. ಅವರ ಚಾಲಕನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇಡಿ ಅಧಿಕಾರಿಗಳು ನಿನ್ನೆ ದೆಹಲಿಯಲ್ಲಿರುವ ಅವರ ಮನೆ ಮತ್ತು ಜಾರ್ಖಂಡ್ ಭವನಕ್ಕೆ ಭೇಟಿ ನೀಡಿದ್ದರೂ ಅವರು ಇದುವರೆಗೂ ಪತ್ತೆಯಾಗಿಲ್ಲ. +ಕಡಲ್ಗಳ್ಳರಿಂದ 19 ಪಾಕ್ ಸಿಬ್ಬಂದಿಗಳನ್ನು ರಕ್ಷಿಸಿದ ಭಾರತದ ಐಎನ್‍ಎಸ್ ಸುಮಿತ್ರಾ +ಏತನ್ಮಧ್ಯೆ, ಇಡಿ ಅವರ ಕಚೇರಿಯಿಂದ ಪತ್ರ ಬಂದಿದ್ದು, ಅವರು ನಾಳೆ ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಲಭ್ಯವಾಗಲಿದ್ದಾರೆ ಎಂದು ಜೆಎಂಎಂ ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿಯ ಜಾರ್ಖಂಡ್ ಘಟಕವು ಮುಖ್ಯಮಂತ್ರಿ ಪರಾರಿಯಾಗಿದ್ದಾನೆ ಎಂದು ಹೇಳಿಕೊಂಡಿದೆ ಮತ್ತು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಗಮನಿಸಬೇಕು ಎಂದು ಒತ್ತಾಯಿಸಿದೆ. ಒಟ್ಟಾರೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೇನೆ ಎಂದು ರಾಜ್ಯಪಾಲರು ಹೇಳಿದ್ದಾರೆ. ಇದು ರಾಜ್ಯಪಾಲರ ಕೆಲಸ, ನಾನು ಮಾಡುತ್ತಿದ್ದೇನೆ, ಸೇತುವೆ ಬಂದಾಗ ಸೇತುವೆ ದಾಟುತ್ತೇವೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಕೆಲವು ವರದಿಗಳ ಪ್ರಕಾರ ಸೋರೆನ್ ತಮ್ಮ ದಿಲ್ಲಿ ಮನೆಯಿಂದ ತಡರಾತ್ರಿ ಕಾಲ್ನಡಿಗೆಯಲ್ಲಿ ಓಡಿಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. +ಜೆಎಂಎಂ ಮತ್ತು ಅದರ ಮಿತ್ರಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಶೀಘ್ರದಲ್ಲೇ ರಾಂಚಿಗೆ ಮರಳಲಿದ್ದಾರೆ ಮತ್ತು ಇಡಿ ಕ್ರಮಗಳು ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿದೆ. ಸಿಎಂ ಕೆಲವು ವೈಯಕ್ತಿಕ ಕೆಲಸಗಳಿಗಾಗಿ ದೆಹಲಿಗೆ ಹೋಗಿದ್ದಾರೆ ಮತ್ತು ಅವರು ಹಿಂತಿರುಗುತ್ತಾರೆ. ಆದರೆ, ಇಡಿ ಕ್ರಮವು ಅಸಂವಿಧಾನಿಕ ಮತ್ತು ಅಸಾಂವಿಧಾನಿಕವಾಗಿದೆ. ಈ ಕ್ರಮವು ರಾಜಕೀಯ ಪ್ರೇರಿತವಾಗಿದೆ ಎಂದು ತೋರುತ್ತದೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸುಪ್ರಿಯೋ ಭಟ್ಟಾಚಾರ್ಯ ಹೇಳಿದ್ದಾರೆ. +ಮತ್ತೆ ಕ್ರೂಸ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ +ಜಾರ್ಖಂಡ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಅವರು ಸೋರೆನ್ ಅವರ ಸ್ಥಳದ ಕುರಿತು ರಚಿಸಲಾದ ಗೊಂದಲವು ಉತ್ತಮವಾಗಿ ವಿನ್ಯಾಸಗೊಳಿಸಲಾದ ಪಿತೂರಿ ಯ ಭಾಗವಾಗಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಪರಿಸ್ಥಿತಿಯನ್ನು ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ, ಸಿಎಂ ನಾಪತ್ತೆಯಾಗಿದ್ದಾರೆ ಎಂದು ಜನರು ವದಂತಿಗಳನ್ನು ಹರಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಏತನ್ಮಧ್ಯೆ,ಇಂದಿನ ಸಭೆಗಾಗಿ ಜೆಎಂಎಂ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಎಲ್ಲಾ ಶಾಸಕರನ್ನು ಜಾರ್ಖಂಡ್‍ನಲ್ಲಿ ಉಳಿಯುವಂತೆ ಕೇಳಲಾಗಿದೆ. ಶಾಸಕರು ಮುಂದಿನ ಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಜೆಎಂಎಂ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಸಿಂಗ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. \ No newline at end of file diff --git a/eesanje/url_47_176_7.txt b/eesanje/url_47_176_7.txt new file mode 100644 index 0000000000000000000000000000000000000000..9d80701f40858172dbf764546ea3ad746b172c1a --- /dev/null +++ b/eesanje/url_47_176_7.txt @@ -0,0 +1,7 @@ +ಅಂತರ್ಧರ್ಮೀಯ ದಂಪತಿಗಳ ಭದ್ರತೆಗೆ ಆಗ್ರಹಿಸಿದ ಅರ್ಜಿ ವಜಾ +ಪ್ರಯಾಗ್‍ರಾಜ್,ಜ.30- ಅಂತರ್ಧರ್ಮೀಯ ವಿವಾಹದ ನಂತರ ಭದ್ರತೆಗೆ ಆಗ್ರಹಿಸಿ ದಂಪತಿ ಸಲ್ಲಿಸಿದ್ದ ಅರ್ಜಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಈ ಜೋಡಿಯ ವಿವಾಹವು ಉತ್ತರ ಪ್ರದೇಶದ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ನಿಬಂಧನೆಗಳಿಗೆ ಬದ್ಧವಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ಅವರು ಮೊರಾದಾಬಾದ್ ಮತ್ತು ಇತರ ಜಿಲ್ಲೆಗಳ ಅನೇಕ ಅರ್ಜಿದಾರರ ಪ್ರತ್ಯೇಕ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ನೀಡಿದ್ದಾರೆ. +ದಂಪತಿಗಳು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸುವಂತೆ ಕುಟುಂಬವನ್ನು ಕೇಳಬೇಕೆಂದು ನ್ಯಾಯಾಲಯವನ್ನು ಒತ್ತಾಯಿಸಿದರು ಮತ್ತು ತಮ್ಮ ಜೀವಕ್ಕೆ ಬೆದರಿಕೆಯನ್ನು ಉಲ್ಲೆಖಿಸಿ ತಮ್ಮ ಸುರಕ್ಷತೆಗೆ ಭದ್ರತೆಯನ್ನು ಕೋರಿದ್ದರು. +ಕಡಲ್ಗಳ್ಳರಿಂದ 19 ಪಾಕ್ ಸಿಬ್ಬಂದಿಗಳನ್ನು ರಕ್ಷಿಸಿದ ಭಾರತದ ಐಎನ್‍ಎಸ್ ಸುಮಿತ್ರಾ +ಇದು ವಿರುದ್ಧ ಧರ್ಮದ ಜೋಡಿಯ ವಿವಾಹ ಪ್ರಕರಣ ಎಂದು ನ್ಯಾಯಾಲಯ ಹೇಳಿದೆ. ವಿವಾಹದ ಮೊದಲು ಧಾರ್ಮಿಕ ಮತಾಂತರದ ಕಾನೂನು ಪ್ರಕ್ರಿಯೆಯನ್ನು ಅನುಸರಿಸಲಾಗಿಲ್ಲ. ಹಾಗಾಗಿ ಈ ಮದುವೆ ಕಾನೂನಿನಡಿ ಸಿಂಧುವಾಗಿಲ್ಲ ಎಂದಿರುವ ನ್ಯಾಯಾಲಯ ಈ ಮದುವೆಯಲ್ಲಿ ಮತಾಂತರ ತಡೆ ಕಾನೂನನ್ನು ಪಾಲಿಸಿಲ್ಲ ಎಂದು ಹೇಳಿದೆ. +ಆದಾಗ್ಯೂ, ಅರ್ಜಿದಾರರು ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿ ಮದುವೆಯಾದರೆ, ಅವರು ಹೊಸದಾಗಿ ರಕ್ಷಣೆ ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ. 2021 ರಲ್ಲಿ ಅಂಗೀಕರಿಸಿದ ಮತಾಂತರ ವಿರೋ ಕಾನೂನು ತಪ್ಪು ನಿರೂಪಣೆ, ಬಲವಂತ, ವಂಚನೆ, ಅನಗತ್ಯ ಪ್ರಭಾವ, ಬಲವಂತ ಮತ್ತು ಪ್ರಚೋದನೆಯಿಂದ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರವನ್ನು ನಿಷೇಧಿಸುತ್ತದೆ. ಒಟ್ಟು ಎಂಟು ಅರ್ಜಿಗಳ ಪೈಕಿ ಐವರು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಮತ್ತು ಮೂವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ವಿವಾಹವಾಗಿದ್ದಾರೆ. +ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಮತಾಂತರ ವಿರೋಧಿ ಕಾನೂನುಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಉಳಿದಿವೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_176_8.txt b/eesanje/url_47_176_8.txt new file mode 100644 index 0000000000000000000000000000000000000000..b6404a202bea3e1a91737426e5e1299dcbad8554 --- /dev/null +++ b/eesanje/url_47_176_8.txt @@ -0,0 +1,7 @@ +ನಾಗಪಟ್ಟಣಂನಲ್ಲಿ ಪಿಎಂ ಅವಾಸ್ ಯೋಜನೆ ಜಾರಿಯಾಗಿಲ್ಲ ; ರವಿ +ಚೆನ್ನೈ, ಜ 30 (ಪಿಟಿಐ) ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಅವರು ಸರ್ಕಾರದ ನಿರಾಸಕ್ತಿಯಿಂದಾಗಿ ನಾಗಪಟ್ಟಣಂ ಜಿಲ್ಲೆಯ ಅರ್ಹ ಬಡ ಗ್ರಾಮಸ್ಥರು ಪ್ರಧಾನಮಂತ್ರಿ ಆವಾಸ್ ಯೋಜನೆಯ ಲಾಭ ಪಡೆಯಲು ಸಾಧ್ಯವಾಗದೇ ಇರುವುದು ದುರಂತ ಎಂದು ಆರೋಪಿಸಿದ್ದಾರೆ. ಜ.28 ರಂದು ರಾಜ್ಯದ ಕಾವೇರಿ ನದಿ ಮುಖಜ ಪ್ರದೇಶದಲ್ಲಿರುವ ನಾಗಪಟ್ಟಣಂ ಜಿಲ್ಲೆಗೆ ಭೇಟಿ ನೀಡಿದ್ದ ರವಿ ಅವರು ಎಕ್ಸ್‍ನಲ್ಲಿ ಈ ರೀತಿ ಪೋಸ್ಟ್ ಮಾಡಿದ್ದಾರೆ. +ನಾಗಪಟ್ಟಣಂ ಜಿಲ್ಲೆಯ ಅರ್ಹ ಬಡ ಗ್ರಾಮಸ್ಥರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗದಿರುವುದು ದುರಂತ. ಆಡಳಿತಾತ್ಮಕ ನಿರಾಸಕ್ತಿ ಮತ್ತು ಆಪಾದಿತ ಭ್ರಷ್ಟಾಚಾರದಿಂದಾಗಿ ಇಂತಹ ಅವಘಡ ಸಂಭವಿಸಿದೆ ಎಂದು ಅವರು ದೂರಿದ್ದಾರೆ. +ರಾಜ್ಯಪಾಲರ ಆರೋಪಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸಾಮಿ, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 127 ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಮಂಜೂರಾತಿ ನೀಡಲಾಗಿದೆ. ಇಲ್ಲಿಯವರೆಗೆ 75 ಫಲಾನುಭವಿಗಳು ವಸತಿಗಳನ್ನು ನಿರ್ಮಿಸಿದ್ದಾರೆ ಮತ್ತು ಉಳಿದ 52 ಪ್ರದೇಶಗಳಿಗೆ ಸಂಬಂಧಿಸಿದಂತೆ ನಾಗಪಟ್ಟಿಣಂ ಜಿಲ್ಲೆಯ ವೆಣ್ಮಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದೆ. +ಧ್ವಜ ಸ್ತಂಭಕ್ಕೆ ಅನುಮತಿ ಕೊಟ್ಟ ಕೆರೆಗೋಡು ಪಿಡಿಒ ಅಮಾನತು +ಆ ಪ್ರದೇಶದಲ್ಲಿ 66 ಗುಡಿಸಲುಗಳನ್ನು ರಾಜ್ಯ ವಸತಿ ಯೋಜನೆಗೆ ಅರ್ಹವೆಂದು ಗುರುತಿಸಲಾಗಿದೆ ಮತ್ತು ಇವುಗಳನ್ನು ಕಾಂಕ್ರೀಟ್ ಮನೆಗಳಾಗಿ ಪರಿವರ್ತಿಸಲಾಗುವುದು.ಅರ್ಹ ಫಲಾನುಭವಿಗಳನ್ನು ಹೊಂದಿರದ ಸ್ಥಳಗಳಿಂದ ಹೆಚ್ಚು ಅರ್ಹ ಅರ್ಜಿದಾರರನ್ನು ಹೊಂದಿರುವ ಪ್ರದೇಶಗಳಿಗೆ ಮನೆಗಳನ್ನು (ಕೇಂದ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ) ವರ್ಗಾಯಿಸಲು ಕೇಂದ್ರ ಸರ್ಕಾರವು ತನ್ನ ಅನುಮತಿಯನ್ನು ನೀಡಿಲ್ಲ ಎಂದಿದ್ದಾರೆ. +ಇಂತಹ ತಾಂತ್ರಿಕ ಅಂಶಗಳ ಹಿನ್ನೆಲೆಯಲ್ಲಿ ವೆಣ್ಮಣಿ ಗ್ರಾಮ ಪಂಚಾಯಿತಿಯಂತಹ ಸ್ಥಳೀಯ ಸಂಸ್ಥೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಮನೆಗಳನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_176_9.txt b/eesanje/url_47_176_9.txt new file mode 100644 index 0000000000000000000000000000000000000000..18a43771f4cb13f1775d2209d82e722866352cab --- /dev/null +++ b/eesanje/url_47_176_9.txt @@ -0,0 +1,7 @@ +ಕಡಲ್ಗಳ್ಳರಿಂದ 19 ಪಾಕ್ ಸಿಬ್ಬಂದಿಗಳನ್ನು ರಕ್ಷಿಸಿದ ಭಾರತದ ಐಎನ್‍ಎಸ್ ಸುಮಿತ್ರಾ +ನವದೆಹಲಿ,ಜ. 30 (ಪಿಟಿಐ) ಇರಾನ್ ಧ್ವಜದ ಮೀನುಗಾರಿಕಾ ಹಡಗಿನ ಮೇಲೆ ಕಡಲ್ಗಳ್ಳರು ದಾಳಿ ಮಾಡಿದ ನಂತರ ಭಾರತೀಯ ಯುದ್ಧನೌಕೆ ಐಎನ್‍ಎಸ್ ಸುಮಿತ್ರಾ ಮೀನುಗಾರಿಕಾ ಹಡಗಿನಲ್ಲಿದ್ದ 19 ಪಾಕಿಸ್ತಾನಿ ಸಿಬ್ಬಂದಿಯನ್ನು ರಕ್ಷಿಸಿದೆ ಎಂದು ಸೊಮಾಲಿಯಾದ ಪೂರ್ವ ಕರಾವಳಿ ಅಧಿಕಾರಿಗಳು ತಿಳಿಸಿದ್ದಾರೆ. +ಸೋಮಾಲಿಯಾದ ಪೂರ್ವ ಮತ್ತು ಏಡನ್ ಕೊಲ್ಲಿಯಲ್ಲಿ ಐಎನ್‍ಎಸ್ ಸುಮಿತ್ರಾ ಹಡಗನ್ನು ಕಡಲ್ಗಳ್ಳತನ ವಿರೋಧಿ ಮತ್ತು ಕಡಲ ಭದ್ರತಾ ಕಾರ್ಯಾಚರಣೆಗಳಿಗಾಗಿ ನಿಯೋಜಿಸಲಾಗಿದೆ. ಇರಾನ್ ಮೀನುಗಾರಿಕಾ ಹಡಗು ಇಮಾನ್ ಮೇಲೆ ಕಡಲ್ಗಳ್ಳತನ ಯತ್ನವನ್ನು ಹಡಗು ವಿಫಲಗೊಳಿಸಿದೆ. ಸೋಮಾಲಿಯಾದ ಪೂರ್ವ ಕರಾವಳಿಯಲ್ಲಿ ಮತ್ತೊಂದು ಯಶಸ್ವಿ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಯಲ್ಲಿ, ಐಎನ್‍ಎಸ್ ಸುಮಿತ್ರಾ 11 ಸೊಮಾಲಿ ಕಡಲ್ಗಳ್ಳರಿಂದ ಮೀನುಗಾರಿಕೆ ಹಡಗು ಅಲ್ ನಯೀಮಿ ಮತ್ತು ಅದರ 19 ಸಿಬ್ಬಂದಿಯನ್ನು ರಕ್ಷಿಸಿದೆ ಎಂದು ಭಾರತೀಯ ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ಹೇಳಿದ್ದಾರೆ. +# 2nd # – 19 & . , - , …://./QZz9bCihaUpic../6AonHw51KX +ಹೊಸ ಕರೆನ್ಸಿ ಪರಿಚಯಿಸಲು ನಿರ್ಧರಿಸಿದ ಪಾಕ್ +ಐಎನ್‍ಎಸ್ ಸುಮಿತ್ರಾ 36 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಕ್ಷಿಪ್ರ, ನಿರಂತರ ಮತ್ತು ಪಟ್ಟುಬಿಡದ ಪ್ರಯತ್ನಗಳ ಮೂಲಕ ಎರಡು ಅಪಹರಣಕ್ಕೊಳಗಾದ ಮೀನುಗಾರಿಕಾ ಹಡಗುಗಳನ್ನು 36 ಸಿಬ್ಬಂದಿ (17 ಇರಾನಿ ಮತ್ತು 19 ಪಾಕಿಸ್ತಾನಿ) ಜೊತೆಗೆ ದಕ್ಷಿಣ ಅರೇಬಿಯನ್ ಸಮುದ್ರದಲ್ಲಿ ಕೊಚ್ಚಿಯಿಂದ ಸುಮಾರು 850 ನಾಟಿಕಲ್ ಮೈಲುಗಳ ಪಶ್ಚಿಮದಲ್ಲಿ ರಕ್ಷಿಸಿದೆ ಎಂದು ಮಾಧ್ವಲ್ ಹೇಳಿದರು. +ಸಮುದ್ರದಲ್ಲಿರುವ ಎಲ್ಲಾ ನಾವಿಕರು ಮತ್ತು ಹಡಗುಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡಲ ಬೆದರಿಕೆಗಳ ವಿರುದ್ಧ ಕಾರ್ಯನಿರ್ವಹಿಸಲು ಭಾರತೀಯ ನೌಕಾಪಡೆಯು ಈ ಪ್ರದೇಶದಲ್ಲಿ ತನ್ನ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_177_1.txt b/eesanje/url_47_177_1.txt new file mode 100644 index 0000000000000000000000000000000000000000..f95fea55d2e9c35f7c8a461259315cbab9fbd4e7 --- /dev/null +++ b/eesanje/url_47_177_1.txt @@ -0,0 +1,7 @@ +ಫಾರೂಖ್ ಅಬ್ದುಲ್‍ಗೆ ಮರ್ಮಾಘಾತ : ಬಿಜೆಪಿ ಸೇರಿದ ನ್ಯಾಷನಲ್ ಕಾನರೆನ್ಸ್ ನಾಯಕರು + +ಜಮ್ಮು,ಜ.29- ನ್ಯಾಷನಲ್ ಕಾನರೆನ್ಸ್‍ನ ಹಲವಾರು ನಾಯಕರು ಬಿಜೆಪಿಗೆ ಸೇರುವ ಮೂಲಕ ಫಾರೂಖ್ ಅಬ್ದುಲ್‍ಗೆ ಮರ್ಮಾಘಾತ ಉಂಟು ಮಾಡಿದ್ದಾರೆ. ಜಮ್ಮು ಪ್ರದೇಶದಲ್ಲಿ ನಿನ್ನೆ ಕತುವಾ ಜಿಲ್ಲಾಧ್ಯಕ್ಷ ಸೇರಿದಂತೆ ಹಲವಾರು ನ್ಯಾಷನಲ್ ಕಾನರೆನ್ಸ್‍ನ ಪದಾಕಾರಿಗಳು, ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು. ಜಮ್ಮು ಮತ್ತು ಕಾಶ್ಮೀರ ಘಟಕದ ಬಿಜೆಪಿ ಮುಖ್ಯಸ್ಥ ರವೀಂದ್ರ ರೈನಾ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ನ್ಯಾಷನಲ್ ಕಾನರೆನ್ಸ್ ಮುಖಂಡರನ್ನು ಭವ್ಯವಾಗಿ ಸ್ವಾಗತಿಸಲಾಯಿತು. +ದೇಶದ ಜನರ ಮತ್ತು ಧರ್ಮದ ಕಲ್ಯಾಣಕ್ಕಾಗಿ ಬಿಜೆಪಿ ತನ್ನ ಬದ್ದತೆಯನ್ನು ಎತ್ತಿ ಹಿಡಿಯುತ್ತದೆ ಎಂದು ರೈನಾ ಈ ಸಂದರ್ಭದಲ್ಲಿ ಹೇಳಿದರು. ಆರೋಗ್ಯ ರಕ್ಷಣೆ, ಶಿಕ್ಷಣ, ಮೂಲಸೌಕರ್ಯ ನಿರ್ಮಾಣ ಮತ್ತು ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಬಿಜೆಪಿಗೆ ಕೊಡುಗೆ ಮತ್ತು ಸಾಧನೆಗಳು ಐತಿಹಾಸಿಕವಾಗಿವೆ ಎಂದರು. ಪ್ರಧಾನಿ ನರೇಂದ್ರಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಅವರು, ರಾಷ್ಟ್ರದ ಏಕತೆ ಮತ್ತು ಪ್ರಗತಿಗೆ ಅವರ ಅರ್ಹನಿಶಿ ಪ್ರಯತ್ನ ಕಾರಣವಾಗಿದೆ ಎಂದು ಹೇಳಿದರು. +ಜ್ಞಾನವ್ಯಾಪಿ ಸಮೀಕ್ಷೆ ವಿರೋಧಿಸುವವರು ತುಕ್ಡೆ ಗ್ಯಾಂಗ್‍ನ ಭಾಗವಾಗಿದ್ದಾರೆ : ಜಮಾಲ್ +ಪ್ರತಿಯೊಬ್ಬರ ಹೊಸ ಪ್ರವೇಶವನ್ನು ಪ್ರೀತಿ ಮತ್ತು ಸೌಹಾರ್ದತೆಯಿಂದ ಸ್ವಾಗತಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಸಿಂಗ್ ರಾಣಾ ತಿಳಿಸಿದರು. ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಕ್ಕಾಗಿ ಪ್ರಧಾನಿಯವರ ನಾಯಕತ್ವವನ್ನು ಬೆಂಬಲಿಸುತ್ತಾ ನಾವು ಬಿಜೆಪಿ ಸೇರಿರುವುದಾಗಿ ನ್ಯಾಷನಲ್ ಕಾನರೆನ್ಸ್‍ನ ಕತುವಾ ಜಿಲ್ಲಾ ಘಟಕದ ನೇತೃತ್ವ ವಹಿಸಿದ್ದ ಸಂಜೀವ್ ಕುಜರಿಯ ಮಾತನಾಡಿ, ಮೋದಿ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಪ್ರಶನಿಸಿದರು. +ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ ಕವೀಂದರ್ ಗುಪ್ತ ಮಾತನಾಡಿ, ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಸಲು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಜಮ್ಮುಕಾಶ್ಮೀರ ಎದುರಿಸುತ್ತಿರುವ ಸವಾಲುಗಳನ್ನು ಹಿಮ್ಮೆಟ್ಟಿಸಲು ಬಿಜೆಪಿ ಬದ್ದವಾಗಿದೆ ಎಂದು ಗುಪ್ತ ಹೇಳಿದರು. ಮಹಿಳೆಯರು ಮತ್ತು ಯುವಕರಿಗೆ ಪ್ರಾತಿನಿಧ್ಯ ನೀಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದರು. \ No newline at end of file diff --git a/eesanje/url_47_177_10.txt b/eesanje/url_47_177_10.txt new file mode 100644 index 0000000000000000000000000000000000000000..35fed54b797fa3f38e6e92df2081f6ddb13babf9 --- /dev/null +++ b/eesanje/url_47_177_10.txt @@ -0,0 +1,7 @@ +ವಿಮಾನ ನಿಲ್ದಾಣದ ಭದ್ರತಾ ಲೋಪ ಹೆಡ್‌ಕಾನ್‌ಸ್ಟೇಬಲ್‌ ಅಮಾನತು +ನವದೆಹಲಿ,ಜ.29- ಗಣರಾಜ್ಯೋತ್ಸವದ ಹೈ ಅಲರ್ಟ್‍ನ ಸಂದರ್ಭದಲ್ಲಿ ದೆಹಲಿ ವಿಮಾನ ನಿಲ್ದಾಣದ ಕಂಪೌಂಡ್ ಏರಿ ರನ್ ವೇ ಗೆ ವ್ಯಕ್ತಿಯೊಬ್ಬ ಎಂಟ್ರಿ ಪಡೆದ ಗಂಭೀರ ಭದ್ರತಾ ಲೋಪದ ಮೇಲೆ ಹೆಡ್ ಕಾನ್ಸ್‍ಟೆಬಲ್ ಒಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. +ಅತಿಸೂಕ್ಷ್ಮ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಎಐ) ವಿಮಾನ ನಿಲ್ದಾಣವನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಹೆಡ್ ಕಾನ್‍ಸ್ಟೆಬಲ್‍ನನ್ನು ಅಮಾನತುಗೊಳಿಸಲಾಗಿದೆ. ಶನಿವಾರ ರಾತ್ರಿ 11.30 ರ ಸುಮಾರಿಗೆ ಏರ್ ಇಂಡಿಯಾ ವಿಮಾನದ ಪೈಲಟ್ ರನ್‍ವೇಯಲ್ಲಿ ಪಾನಮತ್ತನಾಗಿದ್ದ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಗುರುತಿಸಿ ಪೈಲಟ್ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ಮಾಹಿತಿ ನೀಡಿದ್ದರು. +ಬಿಗಿ ಭದ್ರತೆಯಲ್ಲಿ ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ +ಹರಿಯಾಣ ಮೂಲದ ವ್ಯಕ್ತಿಯನ್ನು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್‍ಎಫ್) ಸಿಬ್ಬಂದಿ ಹಿಡಿದು ದೆಹಲಿ ಪೊಲೀಸರಿಗೆ ಒಪ್ಪಿಸಿದ್ದರು. ಅರೆಸೈನಿಕ ಪಡೆ ಅತಿಸೂಕ್ಷ್ಮ ನಾಗರಿಕ ವಿಮಾನಯಾನ ಸೌಲಭ್ಯದಲ್ಲಿ ಗಂಭೀರ ಭದ್ರತಾ ಉಲ್ಲಂಘನೆಯ ಬಗ್ಗೆ ವಿಚಾರಣೆಯನ್ನು ಪ್ರಾರಂಭಿಸಿತು ಮತ್ತು ಆ ದಿನ ಕರ್ತವ್ಯದಲ್ಲಿದ್ದ ಹೆಡ್ ಕಾನ್‍ಸ್ಟೆಬಲ್‍ನನ್ನು ಅಮಾನತುಗೊಳಿಸಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. +ತೀವ್ರ ಶೀತ ಹವಾಮಾನ ಮತ್ತು ಮಂಜುಗಡ್ಡೆಯ ದೃಷ್ಟಿಯಿಂದ ವಿಧ್ವಂಸಕ ಚಟುವಟಿಕೆಗಳನ್ನು ಪರಿಶೀಲಿಸಲು ವಿಶೇಷ ಕ್ರಮಗಳೊಂದಿಗೆ ನಡೆಯುತ್ತಿರುವ ಗಣರಾಜ್ಯೋತ್ಸವದ ಆಚರಣೆಗಾಗಿ ಭದ್ರತಾ ಏಜೆನ್ಸಿಗಳು ಹೈ-ಅಲರ್ಟ್ ಅನ್ನು ಧ್ವನಿಸಿದಾಗ ಆತಂಕಕಾರಿ ಘಟನೆ ಸಂಭವಿಸಿದೆ ಎಂದು ಹಿರಿಯ ಅಕಾರಿಯೊಬ್ಬರು ತಿಳಿಸಿದ್ದಾರೆ. +ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಎಐ) ವಿಮಾನ ನಿಲ್ದಾಣಕ್ಕೆ ಭಯೋತ್ಪಾದನಾ ನಿಗ್ರಹ ಭದ್ರತೆಯನ್ನು ಒದಗಿಸುತ್ತದೆ ಮತ್ತು ಅದರ ಸುತ್ತಳತೆಯ ಗೋಡೆಯನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿದೆ. \ No newline at end of file diff --git a/eesanje/url_47_177_11.txt b/eesanje/url_47_177_11.txt new file mode 100644 index 0000000000000000000000000000000000000000..1201f273f4cf6ff51bb820cd5187a060a4c16b39 --- /dev/null +++ b/eesanje/url_47_177_11.txt @@ -0,0 +1,9 @@ +ದಲಿತನಿಗೆ ಧ್ವಜಾರೋಹಣ ಮಾಡಲು ಬಿಡದೆ ಕೆಲಸ ಕಳೆದುಕೊಂಡ ಅಧಿಕಾರಿ +ಭೋಪಾಲï, ಜ 28 (ಪಿಟಿಐ) ಗಣರಾಜ್ಯೋತ್ಸವದಂದು ಮಧ್ಯಪ್ರದೇಶದ ರಾಜ್‍ಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಸರಪಂಚ್‍ಗೆ ಜಾತಿಯ ಕಾರಣ ನೀಡಿ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಂಚಾಯತ್ ಇಲಾಖೆ ನೌಕರನ ಸೇವೆಯನ್ನು ವಜಾಗೊಳಿಸಿದ್ದಾರೆ. +ರಾಜ್‍ಗಢ್ ಜಿಲ್ಲೆಯ ಬಿಯೋರಾ ತಹಸಿಲ್ ವ್ಯಾಪ್ತಿಯ ತರೇನಾ ಗ್ರಾಮ ಪಂಚಾಯತ್‍ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ದಿಗ್ವಿಜಯ ಸಿಂಗ್ ಅವರು ಸರಪಂಚ್ ದಲಿತ ಎಂಬ ಕಾರಣಕ್ಕಾಗಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +ಜಿಲ್ಲೆ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಅಕ್ಷಯ್ ತೆಮ್ರಾವಾಲ್ ಅವರು ತರೇನಾ ಗ್ರಾಮ ಪಂಚಾಯಿತಿಯ ಉದ್ಯೋಗ ಸಹಾಯಕ ಲಖನ್ ಸಿಂಗ್ ಸೋಂಯಾ ಅವರು ಗಣರಾಜ್ಯೋತ್ಸವದಂದು ಗ್ರಾಮದ ಸರಪಂಚ್ ಬದಲಿಗೆ ಇನ್ನೊಬ್ಬ ವ್ಯಕ್ತಿಯಿಂದ ಧ್ವಜಾರೋಹಣ ಮಾಡಿಸಿದ್ದರು ಎಂದು ತಿಳಿಸಿದ್ದಾರೆ. +ಅವೈಜ್ಞಾನಿಕ ಕಾಂತರಾಜ್ ವರದಿ ಒಪ್ಪಲು ಸಾಧ್ಯವಿಲ್ಲ : ಆರ್.ಅಶೋಕ್ +ಉದ್ಯೋಗ ಸಹಾಯಕ ಸೋಂಯಾ ಅವರ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ ಎಂದು ತೆಮ್ರಾವಾಲ್ ಹೇಳಿದ್ದಾರೆ. ಘಟನೆಯ ನಂತರ, ಸರಪಂಚ್ ಮಾನ್ ಸಿಂಗ್ ವರ್ಮಾ ಅವರು ಜನವರಿ 26 ರಂದು ತಮ್ಮ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉದ್ಯೋಗ ಸಹಾಯಕ ಲಖನ್ ಸಿಂಗ್ ಅವರು ಇನ್ನೊಬ್ಬ ವ್ಯಕ್ತಿಯಿಂದ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಾನು ವರ್ಮಾ ಆಗಿರುವುದರಿಂದ ಇದು ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.ನಂತರ ಸರಪಂಚ್ ಬೈಯೋರಾ ಜನಪದ ಪಂಚಾಯತ್ ಸಿಇಒ ಈಶ್ವರ್ ವರ್ಮಾ ಅವರಿಗೆ ದೂರು ನೀಡಿದ್ದಾರೆ. +ಸರಪಂಚ್ ಬದಲಿಗೆ ಧ್ವಜಾರೋಹಣ ಮಾಡಿದ ನೌಕರನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಪರಿಶಿಷ್ಟ ಜಾತಿಯಲ್ಲಿ ಹುಟ್ಟುವುದು ಅಪರಾಧವೇ ಎಂದು ಪ್ರಶ್ನಿಸಿದ್ದರು. +ಕೆರಗೋಡಿನಲ್ಲಿ ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ +ಪಂಚಾಯತ್ ಭವನದಲ್ಲಿ ಧ್ವಜಾರೋಹಣ ಮಾಡುವ ಹಕ್ಕು ಸರಪಂಚ್‍ಗೆ ಇಲ್ಲವೇ? ಅಂತಹ ತಪ್ಪಿತಸ್ಥ ರೋಜಗರ್ ಸಹಾಯಕ ಲಖನ್ ಸಿಂಗ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನಾನು ಮುಖ್ಯಮಂತ್ರಿಗಳನ್ನು ಕೋರುತ್ತೇನೆ ಎಂದು ಸಿಂಗ್ ಶನಿವಾರ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದರು. \ No newline at end of file diff --git a/eesanje/url_47_177_12.txt b/eesanje/url_47_177_12.txt new file mode 100644 index 0000000000000000000000000000000000000000..ba808692ac0ac3fc02f451a8d434830e722c3424 --- /dev/null +++ b/eesanje/url_47_177_12.txt @@ -0,0 +1,7 @@ +ಪೊಲೀಸರಿಗೆ ಶರಣಾದ ನಕ್ಸಲರು +ಸುಕ್ಮಾ, ಜ 28 (ಪಿಟಿಐ) ಛತ್ತೀಸ್‍ಗಢದ ಸುಕ್ಮಾ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ನಕ್ಸಲೀಯರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರಣಾಗಿರುವ ನಕ್ಸಲ್ ಮಹಿಳೆ ತಲೆಗೆ ಪೊಲೀಸರು 1 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು. +ನಕ್ಸಲೀಯರು ಇಲ್ಲಿನ ಸಿಆರ್‍ಪಿಎಫ್‍ನ 50 ನೇ ಬೆಟಾಲಿಯನ್‍ನ ಪೆಪೊಲೀಸರು ಮತ್ತು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಅಮಾನವೀಯ ಮತ್ತು ಟೊಳ್ಳಾದ ನಕ್ಸಲ್ ಸಿದ್ಧಾಂತದ ಬಗ್ಗೆ ನಿರಾಶೆಯನ್ನು ಉಲ್ಲೇಖಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಶರಣಾದವರನ್ನು ದು ಸುಕ್ದಿ (53), ದು ದೇವೆ (38) ಮತ್ತು ಮದ್ವಿ ಹದ್ಮಾ (26) ಎಂದು ಗುರುತಿಸಲಾಗಿದೆ. ತುಮಲ್‍ಪಾಡ್ ಕ್ರಾಂತಿಕಾರಿ ಮಹಿಳಾ ಆದಿವಾಸಿ ಸಂಘಟನೆಯ (ನಕ್ಸಲೀಯರ ಮುಂಭಾಗದ ವಿಭಾಗ) ಮುಖ್ಯಸ್ಥೆಯಾಗಿ ಸಕ್ರಿಯರಾಗಿದ್ದ ದೇವೆ ತಲೆಯ ಮೇಲೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. +ನಕ್ಸಲೀಯರಿಗಾಗಿ ಜಿಲ್ಲಾ ಪೋಲೀಸರ ಪುನರ್ವಸತಿ ಅಭಿಯಾನದ ಪುನಾ ನರ್ಕೋಮ (ಹೊಸ ಡಾನ್, ಹೊಸ ಆರಂಭ ಎಂಬರ್ಥದ ಸ್ಥಳೀಯ ಗೊಂಡಿ ಉಪಭಾಷೆಯಲ್ಲಿ ಈ ಪದವನ್ನು ರಚಿಸಲಾಗಿದೆ) ಎಂದು ಕರೆಯಲ್ಪಡುವ ನಕ್ಸಲೀಯರಿಗೆ ಆಕರ್ಷಿತರಾಗಿದ್ದೇವು ಎಂದು ಮೂವರು ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದರು. +ಅವೈಜ್ಞಾನಿಕ ಕಾಂತರಾಜ್ ವರದಿ ಒಪ್ಪಲು ಸಾಧ್ಯವಿಲ್ಲ : ಆರ್.ಅಶೋಕ್ +ಛತ್ತೀಸ್‍ಗಢ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ಕಳೆದ ವರ್ಷ ರಾಜ್ಯದಲ್ಲಿ 384 ನಕ್ಸಲೀಯರು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು. ಸುಕ್ಮಾ ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಏಳು ಜಿಲ್ಲೆಗಳಲ್ಲಿ ಒಂದಾಗಿದೆ. \ No newline at end of file diff --git a/eesanje/url_47_177_2.txt b/eesanje/url_47_177_2.txt new file mode 100644 index 0000000000000000000000000000000000000000..7967c17e2c14dc9a6cfb079d85e871db40fe93e5 --- /dev/null +++ b/eesanje/url_47_177_2.txt @@ -0,0 +1,6 @@ +ಜ್ಞಾನವ್ಯಾಪಿ ಸಮೀಕ್ಷೆ ವಿರೋಧಿಸುವವರು ತುಕ್ಡೆ ಗ್ಯಾಂಗ್‍ನ ಭಾಗವಾಗಿದ್ದಾರೆ : ಜಮಾಲ್ +ನವದೆಹಲಿ,ಜ.29- ಜ್ಞಾನವ್ಯಾಪಿ ಕುರಿತ ವರದಿಯನ್ನು ತಿರಸ್ಕರಿಸುವ ಜನರು ತುಕಡೆ ತುಕಡೆ ಗ್ಯಾಂಗ್‍ನ ಭಾಗವಾಗಿದ್ದಾರೆ ಎಂದು ಮುಸ್ಲಿಂ ವಿದ್ವಾಂಸರಾದ ಕಾರಿ ಅಬ್ರಾರ್ ಜಮಾಲ್ ಕಿಡಿಕಾರಿದ್ದಾರೆ. ನ್ಯಾಯಾಲಯದ ಆದೇಶದ ಮೇರೆಗೆ ಸಮೀಕ್ಷೆ ನಡೆಸಲಾಗಿದೆ. ಇದನ್ನು ವಿರೋಸುವ ಜನರಿಗೆ ನ್ಯಾಯಾಲಯದ ಮೇಲೆ ನಂಬಿಕೆ ಇಲ್ಲವೇ? ಅವರಿಗೆ ಪ್ರತ್ಯೇಕ ನ್ಯಾಯಾಲಯ ಮತ್ತು ಪ್ರತ್ಯೇಕ ದೇಶ ಬೇಕೇ ಎಂದು ಪ್ರಶ್ನಿಸಿದ್ದಾರೆ. +ಹಿಂದೂಗಳು ಪ್ರತೀ ಮಸೀದಿಯಲ್ಲಿ ಶಿವಲಿಂಗವನ್ನು ಕಾಣಬಾರದು ಎಂದು ಆರ್‍ಎಸ್‍ಎಸ್ ಮುಖ್ಯಸ್ಥರು ಈಗಾಗಲೇ ಹೇಳಿದ್ದಾರೆ. ಈಗ ಎಎಸ್‍ಐ ವರದಿ ನಂತರ ಮುಸ್ಲಿಮರಾದ ನಾವೂ ಕೂಡ ದೊಡ್ಡ ಹೃದಯ ವೈಶಾಲ್ಯತೆಯನ್ನು ಪ್ರದರ್ಶಿಸಬೇಕು ಮತ್ತು ಸಾಮರಸ್ಯಕ್ಕಾಗಿ ಹಿಂದೂ ಪರವಾಗಿರಬೇಕು ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ ರಾಮಮಂದಿರ ಉದ್ಘಾಟನೆಗೆ ಆಹ್ವಾನಿಸಿದ ರಾಮಜನ್ಮಭೂಮಿ ಟ್ರಸ್ಟ್‍ನ ಎಲ್ಲಾ ಮುಖಂಡರಿಗೂ ನಾವು ಕೃತಜ್ಞರಾಗಿದ್ದೇವೆ. +ಇಂಡಿ ಮೈತ್ರಿಕೂಟಕ್ಕೆ ನಿತೀಶ್ ಕುಮಾರ್ ಕೊನೇ ಮೊಳೆ ಹೊಡೆದಿದ್ದಾರೆ +ಅಲ್ಲಿಗೆ ಹೋಗಿ ಬಂದ ನಂತರ ನಾವು ಬೇರೆ ಕಡೆಗೆ ಹೋಗಿ ಬಂದಿದ್ದೇವೆ ಎಂದು ನಮಗೆ ಅನ್ನಿಸಲೇ ಇಲ್ಲ. ಇದು ನಮಗೆ ಒಂದು ಐತಿಹಾಸಿಕ ಕ್ಷಣವಾಗಿದೆ. ಸಾಧು-ಸಂತರು, ಋಷಿಮುನಿಗಳು ಸೇರಿ ನಡೆಸಿದ ಮಹತ್ತರ ಧಾರ್ಮಿಕ ಕಾರ್ಯಕ್ರಮ ಇದಾಗಿತ್ತು. ಇದನ್ನು ಕಣ್ತುಂಬಿಕೊಂಡು ನಾವು ಧನ್ಯರಾಗಿದ್ದೇವೆ ಎಂದು ಅವರು ಹೇಳಿದ್ದಾರೆ. +ಅಲ್ಲಿ ನಮ್ಮನ್ನು ತುಂಬಾ ಆದರವಾಗಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಎಲ್ಲಾ ಸಂತರು ಮತ್ತು ಋಷಿಗಳ ನಡುವೆ ನಾವು ಜೈ ಶ್ರೀರಾಮ್ ಜಪಿಸಿದೆವು ಎಂದು ಹೇಳಿದರು. \ No newline at end of file diff --git a/eesanje/url_47_177_3.txt b/eesanje/url_47_177_3.txt new file mode 100644 index 0000000000000000000000000000000000000000..1f455b51d566440726f5fde1ee075e2bb48832d9 --- /dev/null +++ b/eesanje/url_47_177_3.txt @@ -0,0 +1,3 @@ +ಇಂಡಿ ಮೈತ್ರಿಕೂಟಕ್ಕೆ ನಿತೀಶ್ ಕುಮಾರ್ ಕೊನೇ ಮೊಳೆ ಹೊಡೆದಿದ್ದಾರೆ +ನವದೆಹಲಿ,ಜ.29- ಐಎನ್‍ಡಿಐಎ ಮೈತ್ರಿಕೂಟಕ್ಕೆ ನಿತೀಶ್‍ಕುಮಾರ್ ಅಂತ್ಯಸಂಸ್ಕಾರ ಮಾಡಿದರು ಎಂದು ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣ ಹೇಳಿದ್ದಾರೆ. ಇಂಡಿ ಮೈತ್ರಿಕೂಟವು ಆರಂಭದಿಂದಲೂ ಗಂಭಿರ ಖಾಯಿಲೆಗಳಿಗೆ ತುತ್ತಾಗಿತ್ತು. +ನಂತರ ಅದು ಐಸಿಯುಗೆ ಹೋಯಿತು. ಆಮೇಲೆ ಅದನ್ನು ವೆಂಟಿಲೇಟರ್‍ನಲ್ಲಿ ಇರಿಸಲಾಯಿತು. ನಿನ್ನೆ ನಿತೀಶ್‍ಕುಮಾರ್‍ರವರು ಅಂತ್ಯಸಂಸ್ಕಾರ ಮಾಡಿದರು. ಈಗ ಮೈತ್ರಿಕೂಟಕ್ಕೆ ಏನಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_47_177_4.txt b/eesanje/url_47_177_4.txt new file mode 100644 index 0000000000000000000000000000000000000000..c237b565d0ab6f31a56ebf0e4409c18a1aacce1c --- /dev/null +++ b/eesanje/url_47_177_4.txt @@ -0,0 +1,5 @@ + : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್ +ಕೋಲ್ಕತ್ತಾ,ಜ.29- ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಂತನೂ ಠಾಕೂರ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಸಿಎಎ ಜಾರಿಗೆ ಬರಲಿದೆ ಎಂದು ನಾನು ಖಾತರಿ ನೀಡಬಲ್ಲೇ ಎಂದಿದ್ದಾರೆ. +ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸಿಎಎ ಹೇಳಿಕೆಯಲ್ಲಿ ಹೇಳಿದ್ದನ್ನು ಬಂಗಾಳದ ಬಂಗಾವ್‍ನ ಬಿಜೆಪಿಯ ಲೋಕಸಭಾ ಸಂಸದ ಶಂತನೂ ಠಾಕೂರ್ ಪುನರುಚ್ಚರಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್‍ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರಲಿದೆ ಮತ್ತು ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಪ್ರತಿಪಾದಿಸಿದ್ದರು. ಸಿಎಎಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ಅವರ ಹೇಳಿಕೆಗಳು ಬಂದಿರುವುದು ವಿಶೇಷವಾಗಿದೆ. +ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ +ಈ ತಿಂಗಳ ಆರಂಭದಲ್ಲಿ ಸಿಎಎ ನಿಯಮಗಳು ಕೇಂದ್ರದೊಂದಿಗೆ ಸಿದ್ಧವಾಗಿವೆ ಮತ್ತು ಲೋಕಸಭೆ ಚುನಾವಣೆಯ ಘೋಷಣೆಗೆ ಬಹಳ ಮುಂಚೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಘೋಷಿಸಬೇಕಾಗುತ್ತದೆ. ಅರ್ಜಿದಾರರಿಂದ ಯಾವುದೇ ದಾಖಲೆಯನ್ನು ಕೇಳಲಾಗುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_177_5.txt b/eesanje/url_47_177_5.txt new file mode 100644 index 0000000000000000000000000000000000000000..13e1fc2b9b49f0b70f0cfee67ccf01c8b773c9d1 --- /dev/null +++ b/eesanje/url_47_177_5.txt @@ -0,0 +1,6 @@ +ಇಡಿ ವಿಚಾರಣೆಗೆ ಹಾಜರಾದ ಲಾಲೂ ಮತ್ತು ಪುತ್ರಿ ಮಿಶಾ ಭಾರ್ತಿ +ಪಾಟ್ನಾ,ಜ.29- ಬಿಹಾರದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯ ನಂತರ ಆರ್‍ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಇಂದು ಬೆಳಿಗ್ಗೆ ಪಾಟ್ನಾದಲ್ಲಿರುವ ಇಡಿ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು. ಭೂಮಿ-ಉದ್ಯೋಗ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾದ ಲಾಲೂ ಅವರೊಂದಿಗೆ ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಅವರ ಪುತ್ರಿ ಮಿಶಾ ಭಾರ್ತಿ ಕೂಡ ಜೊತೆಗಿದ್ದರು. +2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದ ಲಾಲೂ ಅವರ ಅಧಿಕಾರಾವಧಿಯಲ್ಲಿ ನಡೆದ ಆರೋಪದ ಅಕ್ರಮಗಳಿಗೆ ಈ ಪ್ರಕರಣವು ಸಂಬಂಧಿಸಿದೆ. ಲಾಲೂ ಅವರ ಪತ್ನಿ ಮತ್ತು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಮಗಳು ಮಿಸಾ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಲಂಚದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇಡಿ ಅಕ್ರಮ ಹಣ ವರ್ಗಾವಣೆಯ ಜಾಡು ಹಿಡಿದು ತನಿಖೆ ನಡೆಸುತ್ತಿದೆ. +ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ +ರಾಜಕೀಯ ಪ್ರತಿಸ್ರ್ಪಗಳನ್ನು ಗುರಿಯಾಗಿಸಲು ಬಿಜೆಪಿ ಸರ್ಕಾರಿ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಆರ್‍ಜೆಡಿ ಆರೋಪಿಸಿದೆ. ಇದು ಇಡಿ ಸಮನ್ಸ್ ಅಲ್ಲ, ಆದರೆ ಬಿಜೆಪಿ ಸಮನ್ಸ್ ಇದು 2024 ರವರೆಗೆ ಮುಂದುವರಿಯುತ್ತದೆ, ಅಲ್ಲಿಯವರೆಗೆ ದಯವಿಟ್ಟು ಇದನ್ನು ಇಡಿ ಸಮನ್ಸ್ ಎಂದು ಕರೆಯಬೇಡಿ.. ನಾವೇಕೆ ಹೆದರಬೇಕು? ಎಂದು ಆರ್ ಜೆಡಿ ಸಂಸದ ಮನೋಜ್ ಝಾ ಹೇಳಿದ್ದಾರೆ. +ಇಂದು ಬೆಳಗ್ಗೆ ಇಡಿ ಕಚೇರಿಯಲ್ಲಿ ಭಾರ್ತಿ ಅವರು, ಬಿಜೆಪಿಯಲ್ಲಿ ಇಲ್ಲದ ಮತ್ತು ಅವರ ಪಕ್ಷಕ್ಕೆ ಬದಲಾಯಿಸಲು ಸಿದ್ಧರಿಲ್ಲದವರು ಈ ಶುಭಾಶಯ ಪತ್ರವನ್ನು ಪಡೆಯುತ್ತಾರೆ ಎಂದು ಹೇಳಿದರು. ತನಿಖಾ ಸಂಸ್ಥೆಗಳ ಪ್ರತಿಯೊಂದು ಪ್ರಶ್ನೆಗೆ ಅವರ ಕುಟುಂಬ ಸದಸ್ಯರು ಯಾವಾಗಲೂ ಉತ್ತರಿಸುತ್ತಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_177_6.txt b/eesanje/url_47_177_6.txt new file mode 100644 index 0000000000000000000000000000000000000000..dc36a7a7e6f08f445cdc188abe631ba6170aa8b1 --- /dev/null +++ b/eesanje/url_47_177_6.txt @@ -0,0 +1,6 @@ +ಲೋಕಸಭೆಗೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ದಿಗ್ವಿಜಯ್‍ಸಿಂಗ್ +ರಾಜ್‍ಗಢ,ಜ.29- ಮಧ್ಯಪ್ರದೇಶದ ಕಾಂಗ್ರೆಸ್‍ನ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸುವುದನ್ನು ತಳ್ಳಿಹಾಕಿದ್ದಾರೆ. ನಾನು ರಾಜ್ಯಸಭಾ ಸದಸ್ಯನಾಗಿರುವುದರಿಂದ ಮತ್ತು ಇನ್ನೂ ಎರಡು ವರ್ಷ (ರಾಜ್ಯಸಭಾ ಅಧಿಕಾರಾವಧಿ) ಉಳಿದಿರುವ ಕಾರಣ ಚುನಾವಣೆಯಲ್ಲಿ ಸ್ರ್ಪಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಿಂಗ್ ರಾಜ್‍ಗಢ್ ಜಿಲ್ಲೆಯ ಖಿಲ್ಚಿಪುರ್ ಪಟ್ಟಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ಗಮನಾರ್ಹವೆಂದರೆ, ಸಿಂಗ್ 2019 ರಲ್ಲಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿದ್ದರು ಆದರೆ ಬಿಜೆಪಿಯ ಪ್ರಜ್ಞಾಸಿಂಗ್ ಠಾಕೂರ್ ವಿರುದ್ಧ 3.65 ಲಕ್ಷ ಮತಗಳ ಅಂತರದಿಂದ ಸೋತಿದ್ದರು. +ರಾಜ್‍ಗಢ್ ಲೋಕಸಭಾ ಕ್ಷೇತ್ರವು ರಾಜ್‍ಗಢ್ ಸಂಸದೀಯ ಕ್ಷೇತ್ರದ ಅಡಿಯಲ್ಲಿ ಬರುವ ರಘೋಗಡ್ ಅಸೆಂಬ್ಲಿ ವಿಭಾಗದಿಂದ (ಗುಣ ಜಿಲ್ಲೆ) ಸಿಂಗ್ ಅವರ ತವರು ಕ್ಷೇತ್ರವಾಗಿದೆ. ಅವರು 1984 ಮತ್ತು 1991 ರಲ್ಲಿ ರಾಜ್‍ಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. +ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ +ಮಧ್ಯಪ್ರದೇಶದ ಒಟ್ಟು 29 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 28 ಮತ್ತು ಕಾಂಗ್ರೆಸ್ ಒಂದನ್ನು ಗೆದ್ದಿದೆ.ಕಳೆದ ವರ್ಷ ನಡೆದ ಸಂಸದೀಯ ವಿಧಾನಸಭಾ ಚುನಾವಣೆಯಲ್ಲಿ ಸಿಂಗ್ ಮತ್ತು ಮತ್ತೋರ್ವ ಅನುಭವಿ ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು \ No newline at end of file diff --git a/eesanje/url_47_177_7.txt b/eesanje/url_47_177_7.txt new file mode 100644 index 0000000000000000000000000000000000000000..aac5e797fe652998bb8ed87ab0b40964461a89ca --- /dev/null +++ b/eesanje/url_47_177_7.txt @@ -0,0 +1,7 @@ +ಬಿಹಾರ ಪ್ರವೇಶಿಸಿದ ರಾಹುಲ್ ನ್ಯಾಯಯಾತ್ರೆ +ಪಾಟ್ನಾ,ಜ.29- ಇಂಡಿಯಾ ಮೈತ್ರಿಕೋಟದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹೊರ ಬಂದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಿಹಾರವನ್ನು ಪ್ರವೇಶಿಸಿದೆ. ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾಗಿ ಈಶಾನ್ಯದಲ್ಲಿ ಪ್ರಯಾಣಿಸಿದ ನಂತರ, ಗಾಂಧಿಯವರು ವಿರಾಮ ತೆಗೆದುಕೊಂಡು ದೆಹಲಿಗೆ ಬರುವ ಮೊದಲ ಬಿಹಾರದಲ್ಲಿ ಮಹಾಘಟ ಬಂಧನ್ ನೇತೃತ್ವದ ಸರ್ಕಾರವಿತ್ತು. +ಇಂದು ಬೆಳಗ್ಗೆ ಬಂಗಾಳದ ಉತ್ತರ ದಿನಾಜ್‍ಪುರ ಜಿಲ್ಲೆಯ ಸೋನಾಪುರದಲ್ಲಿ ಆರಂಭವಾದ ಯಾತ್ರೆ ಬೆಳಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಕಿಶನ್‍ಗಂಜ್ ತಲುಪಿತು. ಮುಸ್ಲಿಂ ಪ್ರಾಬಲ್ಯದ ಪ್ರದೇಶವಾದ ಕಿಶನ್‍ಗಂಜ್ ಲೋಕಸಭಾ ಕ್ಷೇತ್ರವು 2009 ರ ಲೋಕಸಭಾ ಚುನಾವಣೆಯಿಂದಲೂ ಕಾಂಗ್ರೆಸ್‍ನಲ್ಲಿದೆ. ರ್ಯಾಲಿ ನಾಳೆ ಪೂರ್ಣೆಯಾ ಮತ್ತು ಮರುದಿನ ಕತಿಹಾರ್‍ಗೆ ತೆರಳಲಿದೆ. ಎರಡೂ ಜಿಲ್ಲೆಗಳು ಜೆಡಿಯು ಭದ್ರಕೋಟೆಗಳಾಗಿದ್ದು, ಯಾತ್ರೆ ಆರಂಭವಾದಾಗ ಕಾಂಗ್ರೆಸ್ ಗೆ ದೋಸ್ತಿ ಕ್ಷೇತ್ರವಾಗಿತ್ತು. ಈಗ ಸಮೀಕರಣಗಳು ಬದಲಾಗಿವೆ. +ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ +ಇದು 2020 ರ ವಿಧಾನಸಭಾ ಚುನಾವಣೆಯ ನಂತರ ಬಿಹಾರಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿಯಾಗಿದೆ. 2020 ರ ಚುನಾವಣೆಯ ನಂತರ ಎನ್‍ಡಿಎ ಮೈತ್ರಿಕೂಟವು ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರವನ್ನು ರಚಿಸಿತು. ಎರಡು ವರ್ಷಗಳ ನಂತರ, ಆಗಸ್ಟ್ 2022 ರಲ್ಲಿ ಕುಮಾರ್ ಎನ್‍ಡಿಎ ಮೈತ್ರಿಕೂಟದಿಂದ ಹೊರನಡೆದರು ಮತ್ತು ದೂರವಾದ ಮಿತ್ರಪಕ್ಷಗಳಾದ ಆರ್‍ಜೆಡಿ ಮತ್ತು ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚಿಸಿದ್ದರೂ ಇದೀಗ ಅವರು, ಮತ್ತೊಮ್ಮೆ ಮಹಾಘಟ ಬಂಧನ್‍ನಿಂದ ಹೊರ ಬಂದು ಮತ್ತೇ ಎನ್‍ಡಿಎ ಮೈತ್ರಿಕೂಟ ಸೇರಿಕೊಂಡಿದ್ದಾರೆ. +ಬಿಹಾರದಲ್ಲಿ ಪಕ್ಷದ ಮೈತ್ರಿಕೂಟದ ಪಾಲುದಾರರಾದ ಆರ್‍ಜೆಡಿ ಮತ್ತು ಸಿಪಿಐ (ಎಂಎಲï)-ಎಲ್ ಅನ್ನು ಪೂರ್ಣೆ ರ್ಯಾಲಿಗೆ ಆಹ್ವಾನಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಬಿಹಾರದ ಯಾತ್ರೆಯ ಸಮಯದಲ್ಲಿ ಸಾರ್ವಜನಿಕ ಭಾಷಣದ ಸಮಯದಲ್ಲಿ ರಾಹುಲ್ ಗಾಂಧಿಯವರು ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆ ಇದೆ. +ಬಿಹಾರದ ಹಿನ್ನಡೆಗೆ ಕಾಂಗ್ರೆಸ್ ತೀವ್ರವಾಗಿ ಪ್ರತಿಕ್ರಿಯಿಸಿದೆ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿತೀಶ್ ಕುಮಾರ್ ಅವರನ್ನು ಆಯಾ ರಾಮ್ ಗಯಾ ರಾಮï ಎಂದು ಉಲ್ಲೇಖಿಸಿದ್ದಾರೆ – ಇದು ಪಕ್ಷಗಳನ್ನು ಬದಲಾಯಿಸುವ ರಾಜಕಾರಣಿಗಳಿಗೆ ಬಳಸಲಾಗುವ ಪದವಾಗಿದೆ. diff --git a/eesanje/url_47_177_8.txt b/eesanje/url_47_177_8.txt new file mode 100644 index 0000000000000000000000000000000000000000..17313d44ccc8d1294101f4386483c7670d3b53be --- /dev/null +++ b/eesanje/url_47_177_8.txt @@ -0,0 +1,9 @@ +2,500 ವರ್ಷಗಳಿಗೊಮ್ಮೆ ಸಂಭವಿಸುವ ಭೂಕಂಪಕ್ಕೂ ಅಲ್ಲಾಡಲ್ಲ ಅಯೋಧ್ಯೆಯ ರಾಮಮಂದಿರ +ನವದೆಹಲಿ,ಜ.29- ಅಪಾರ ಸಂಖ್ಯೆಯಲ್ಲಿ ಭಕ್ತರನ್ನು ಸೆಳೆಯುತ್ತಿರುವ ಅಯೋಧ್ಯೆ ರಾಮ ಮಂದಿರವನ್ನು 2,500 ವರ್ಷಗಳಿಗೊಮ್ಮೆ ಸಂಭವಿಸುವ ಅತಿ ದೊಡ್ಡ ಭೂಕಂಪವನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ಸಿಎಸ್‍ಐಆರ್ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್‍ನವರು ನಡೆಸಿದ ಜಿಯೋಟೆಕ್ನಿಕಲ್ ವಿಶ್ಲೇಷಣೆ, ಅಡಿಪಾಯ ವಿನ್ಯಾಸ ಪರಿಶೀಲನೆ ಮತ್ತು 3ಡಿ ರಚನಾತ್ಮಕ ವಿಶ್ಲೇಷಣೆ ಮತ್ತು ವಿನ್ಯಾಸ ಸೇರಿದಂತೆ ಮಂದಿರದ ವೈಜ್ಞಾನಿಕ ಅಧ್ಯಯನದಲ್ಲಿ ಈ ಅಂಶ ಬಹಿರಂಗಗೊಂಡಿದೆ. +ಘೋಷ್ ಮತ್ತು ಮನೋಜಿತ್ ಸಮಂತಾ ನೇತೃತ್ವದ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಈ ವರದಿ ತಿಳಿದುಬಂದಿದೆ ಎಂದು ವರದಿಯಾಗಿದೆ. ಈ ವಿಜ್ಞಾನಿಗಳಿಗೆ ಸಿಎಸ್‍ಐಆರ್ ನಿರ್ದೇಶಕ ಪ್ರದೀಪ್ ಕುಮಾರ್ ರಾಮಂಚಾರ್ಲಾ ಮತ್ತು ಎನ್ ಗೋಪಾಲಕೃಷ್ಣನ್ ಮಾರ್ಗದರ್ಶನ ನೀಡಿದರು. +ಜಿಯೋಫಿಸಿಕಲ್ ಗುಣಲಕ್ಷಣ ಪ್ರಕ್ರಿಯೆಯು ಪ್ರಾಥಮಿಕ ತರಂಗ ವೇಗವನ್ನು ಅಂದಾಜು ಮಾಡಲು ಮೇಲ್ಮೈ ಅಲೆಗಳ ಬಹು-ಚಾನಲ್ ವಿಶ್ಲೇಷಣೆಯನ್ನು ಒಳಗೊಂಡಿರುತ್ತದೆ, ಜೊತೆಗೆ ವೈಪರೀತ್ಯಗಳು, ನೀರಿನ ಶುದ್ಧತ್ವ ವಲಯಗಳು ಮತ್ತು ನೀರಿನ ಕೋಷ್ಟಕಗಳನ್ನು ಗುರುತಿಸಲು ವಿದ್ಯುತ್ ಪ್ರತಿರೋಧದ ಟೊಮೊಗ್ರಫಿಯೊಂದಿಗೆ ರಚಿಸಲಾಗಿದೆ ಎಂದು ಘೋಷ್ ಹೇಳಿದರು. +ಅಮೆರಿಕಾದಲ್ಲಿ ನಿರಾಶ್ರಿತ ವ್ಯಕ್ತಿಯಿಂದ ಭಾರತೀಯ ವಿದ್ಯಾರ್ಥಿಯ ಕೊಲೆ +ಭೂಗತ ತನಿಖೆಗಳು ಮತ್ತು ಭೂಕಂಪನ ವಿನ್ಯಾಸದ ನಿಯತಾಂಕಗಳ ಅಂದಾಜುಗಾಗಿ ಸೈಟ್‍ನ ನಿರ್ದಿಷ್ಟ ಪ್ರತಿಕ್ರಿಯೆಗಾಗಿ ಈ ಸಂಶೋಧನೆಗಳು ನಿರ್ಣಾಯಕ ಒಳಹರಿವುಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಅವರು ಹೇಳಿದರು. +ಮಣ್ಣಿನ ತನಿಖಾ ಯೋಜನೆಗಳು, ಅಡಿಪಾಯ ವಿನ್ಯಾಸ ನಿಯತಾಂಕಗಳು, ಉತ್ಖನನ ಯೋಜನೆಗಳು ಮತ್ತು ಅಡಿಪಾಯ ಮತ್ತು ರಚನೆಯ ಮೇಲ್ವಿಚಾರಣೆಗಾಗಿ ಶಿಫಾರಸುಗಳನ್ನು ಸಹ ಪರಿಶೀಲಿಸಿತು.50 ಕ್ಕೂ ಹೆಚ್ಚು ಕಂಪ್ಯೂಟರ್ ಮಾದರಿಗಳನ್ನು ಅನುಕರಿಸಿದ ನಂತರ ಮತ್ತು ಅದರ ಅತ್ಯುತ್ತಮ ಕಾರ್ಯಕ್ಷಮತೆ, ವಾಸ್ತುಶಿಲ್ಪದ ಆಕರ್ಷಣೆ ಮತ್ತು ಸುರಕ್ಷತೆಗಾಗಿ ವಿಭಿನ್ನ ಲೋಡಿಂಗ್ ಪರಿಸ್ಥಿತಿಗಳಲ್ಲಿ ಅವುಗಳನ್ನು ವಿಶ್ಲೇಷಿಸಿದ ನಂತರ ರಚನಾತ್ಮಕ ವಿನ್ಯಾಸವನ್ನು ಶಿಫಾರಸು ಮಾಡಲಾಗಿದೆ ಎಂದು ಘೋಷ್ ಹೇಳಿದರು. +ಸಂಪೂರ್ಣ ಸೂಪರ್ ಸ್ಟ್ರಕ್ಚರ್ ಅನ್ನು ಬಂಧಿಸಿ ಪಹಾರ್‍ಪುರ ಮರಳುಗಲ್ಲು ಬಳಸಿ ನಿರ್ಮಿಸಲಾಗಿದೆ, ಉಕ್ಕಿನ ಬಲವರ್ಧನೆಯಿಲ್ಲದೆ ಒಣ ಜಂಟಿ ರಚನೆಯನ್ನು ಸಾಕಾರಗೊಳಿಸಲಾಗಿದೆ, ಇದನ್ನು 1,000 ವರ್ಷಗಳ ಜೀವಿತಾವಧಿಗೆ ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು. ರಚನಾತ್ಮಕ ವಿಶ್ಲೇಷಣೆಗೆ ಇನ್‍ಪುಟ್ ಆಗಿ ಬಳಸಲಾದ ಎಂಜಿನಿಯರಿಂಗ್ ಗುಣಲಕ್ಷಣಗಳನ್ನು ಮೌಲ್ಯಮಾಪನ ಮಾಡಲು ಸೂಪರ್‍ಸ್ಟ್ರಕ್ಚರ್ ವಸ್ತು — ಬನ್ಸಿ ಪಹಾರ್‍ಪುರ್ ಮರಳುಗಲ್ಲು — ಅನ್ನು ಕೇಂದ್ರದಲ್ಲಿ ಪರೀಕ್ಷಿಸಲಾಗಿದೆ. +20 ಎಂಪಿಎ (ಮೆಗಾ ಪ್ಯಾಸ್ಕಲ್ಸ) ಗಿಂತ ಹೆಚ್ಚಿನ ಸಂಕುಚಿತ ಶಕ್ತಿಯೊಂದಿಗೆ ವಿಶೇಷವಾದ ಇಟ್ಟಿಗೆ ಅಥವಾ ಪ್ರತಿ ಚದರ ಇಂಚಿಗೆ ಸರಿಸುಮಾರು 2,900 ಪೌಂಡ್ ಇದ್ದು, 28 ದಿನಗಳಲ್ಲಿ ಪ್ರಮಾಣಿತ ಪರಿಸ್ಥಿತಿಗಳಲ್ಲಿ ಕ್ಯೂರಿಂಗ್ ಅನ್ನು ರಚನೆಗಳಲ್ಲಿ ಬಳಸಲಾಗಿದೆ ಎಂದು ಘೋಷ್ ಘೋಷಿಸಿದ್ದಾರೆ. \ No newline at end of file diff --git a/eesanje/url_47_177_9.txt b/eesanje/url_47_177_9.txt new file mode 100644 index 0000000000000000000000000000000000000000..d69ef529a0f56c424186993817fe050de721d311 --- /dev/null +++ b/eesanje/url_47_177_9.txt @@ -0,0 +1,7 @@ +ಪ್ರಿಯಕರನಿಂದ ಕೊಲೆಯಾದ ಇನ್ಫೋಸಿಸ್ ಉದ್ಯೋಗಿ +ಪುಣೆ,ಜ.29 – ಇನೋಸಿಸ್‍ನಲ್ಲಿ ಕೆಲಸ ಮಾಡುತ್ತಿದ್ದ ಸಾಫ್ಟ್‍ವೇರ್ ಇಂಜಿನಿಯರ್ ಒಬ್ಬರನ್ನು ಪುಣೆ ಹೊರವಲಯದ ಹೋಟೆಲ್‍ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಗೆಳೆಯನನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದು, ಆತನಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. +ಪಿಂಪ್ರಿ ಚಿಂಚ್‍ವಾಡ್‍ನ ಹಿಂಜೆವಾರಿ ಪ್ರದೇಶದ ಓಯೋ ಹೋಟೆಲ್‍ನಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹೋಟೆಲ್‍ಗೆ ಆಗಮಿಸಿ ಮಹಿಳೆಯ ಶವವನ್ನು ವಶಪಡಿಸಿಕೊಂಡಿದ್ದಾರೆ. +ಪೊಲೀಸರ ಪ್ರಕಾರ, ಮಹಿಳೆಯನ್ನು ವಂದನಾ ದ್ವಿವೇದಿ ಎಂದು ಗುರುತಿಸಲಾಗಿದೆ ಮತ್ತು ಆಕೆಯನ್ನು ಕೊಲೆ ಮಾಡಿದ ಆರೋಪಿಯನ್ನು ಆಕೆಯ ಪ್ರಿಯಕರ ರಿಷಬ್ ನಿಗಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದವರು. ಇವರಿಬ್ಬರ ನಡುವೆ ಪರಸ್ಪರ ಸಂಬಂಧವಿದ್ದು, ಜಗಳವೇ ಕೊಲೆಗೆ ಕಾರಣ ಎಂಬುದು ಈವರೆಗಿನ ತನಿಖೆಯಿಂದ ತಿಳಿದುಬಂದಿದೆ. ಈ ದುರಂತ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ. +ಕೆರಗೋಡಿನಲ್ಲಿ ಭಗ್ವದ್‍ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ +ಹೋಟೆಲ್‍ನ ಸಿಸಿಟಿವಿ ಫೂಟೇಜ್‍ನಲ್ಲಿ ರಿಷಬ್ ತಡರಾತ್ರಿ ಕೊಠಡಿಯಿಂದ ಹೊರಬರುವುದನ್ನು ತೋರಿಸಿದ ನಂತರ ರಿಷಬ್ ಪೊಲೀಸರ ಸ್ಕ್ಯಾನರ್‍ಗೆ ಒಳಗಾದರು. ನಂತರ ಪೊಲೀಸರು ಚೆಕ್‍ಪೋಸ್ಟ್‍ಗಳಲ್ಲಿ ವಾಹನಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸಿದರು ಮತ್ತು ಅವನನ್ನು ಹಿಡಿದಿದ್ದಾರೆ. +ಹೋಟೆಲ್ ರೂಂ ಬುಕ್ಕಿಂಗ್ ಅನ್ನು ವಂದನಾ ಮತ್ತು ರಿಷಭ್ ಹೆಸರಿನಲ್ಲಿ ಮಾಡಲಾಗಿದೆ. ಆದ್ದರಿಂದ ಅವನು ನಮ್ಮ ಪ್ರಮುಖ ಶಂಕಿತ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವಿಶಾಲ್ ಹಿರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. \ No newline at end of file diff --git a/eesanje/url_47_178_1.txt b/eesanje/url_47_178_1.txt new file mode 100644 index 0000000000000000000000000000000000000000..52886c5f0dd85fb36d8fcc217d1a05b8d0aff076 --- /dev/null +++ b/eesanje/url_47_178_1.txt @@ -0,0 +1,6 @@ + ಕೇಂದ್ರ ಕಚೇರಿ ಸುತ್ತ ಡ್ರೋನ್ ಮುಕ್ತ ವಲಯವೆಂದು ಘೋಷಣೆ +ನಾಗ್ಪುರ, ಜ. 29 (ಪಿಟಿಐ) : ನಾಗ್ಪುರ ಪೊಲೀಸರು ಇಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಕೇಂದ್ರ ಕಚೇರಿಯನ್ನು ನೋ-ಡ್ರೋನ್ ವಲಯ ಎಂದು ಘೋಷಿಸಿದ್ದಾರೆ ಮತ್ತು ಮಾರ್ಚ್ 28 ರವರೆಗೆ ಆವರಣದ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿಯನ್ನು ನಿಷೇಸಿದ್ದಾರೆ. +ಆರ್‍ಎಸ್‍ಎಸ್ ಪ್ರಧಾನ ಕಛೇರಿಯು ಮಹಾರಾಷ್ಟ್ರದ ನಾಗ್ಪುರ ನಗರದ ಮಹಲ್ ಪ್ರದೇಶದಲ್ಲಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‍ಪಿಸಿ) ಸೆಕ್ಷನ್ 144 (1) (3) ರ ಅಡಿಯಲ್ಲಿ ಹೊರಡಿಸಿದ ಆದೇಶದಲ್ಲಿ, ಆರ್‍ಎಸ್‍ಎಸ್ ಕಚೇರಿ ಹೆಚ್ಚು ಹೋಟೆಲ್‍ಗಳು, ಲಾಡ್ಜ್‍ಗಳು ಮತ್ತು ಕೋಚಿಂಗ್ ಕ್ಲಾಸ್‍ಗಳಿಂದ ಸುತ್ತುವರಿದ ಜನನಿಬಿಡ ಪ್ರದೇಶದಲ್ಲಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಅಸ್ವತಿ ದೋರ್ಜೆ ಹೇಳಿದ್ದಾರೆ. +ಅವೈಜ್ಞಾನಿಕ ಕಾಂತರಾಜ್ ವರದಿ ಒಪ್ಪಲು ಸಾಧ್ಯವಿಲ್ಲ : ಆರ್.ಅಶೋಕ್ +ಆರ್‍ಎಸ್‍ಎಸ್ ಕಚೇರಿ ಸುತ್ತಮುತ್ತಲಿನ ಮೂಲಕ ಹಾದುಹೋಗುವ ವ್ಯಕ್ತಿಗಳು ಚಿತ್ರಗಳು ಮತ್ತು ವೀಡಿಯೊ ಮಾಡುವುದು ಅಥವಾ ಡ್ರೋನ್ ವೀಡಿಯೊಗ್ರಫಿಯನ್ನು ಮಾಡಿಕೊಳ್ಳಬಹುದಿತ್ತು, ಇದು ಪ್ರಧಾನ ಕಚೇರಿಗೆ ಸಂಭಾವ್ಯ ಅಪಾಯವನ್ನುಂಟುಮಾಡುವ ಸಾಧ್ಯತೆಗಳಿದ್ದವು. ಆದ್ದರಿಂದ, ನಾನು ಈ ಪ್ರದೇಶದಲ್ಲಿ ಚಿತ್ರಗಳು, ವೀಡಿಯೊಗಳು ಅಥವಾ ಡ್ರೋನ್ ಛಾಯಾಗ್ರಹಣವನ್ನು ತೆಗೆದುಕೊಳ್ಳುವುದನ್ನು ನಿಷೇಧಿಸುತ್ತಿದ್ದೇನೆ ಎಂದು ದೋರ್ಜೆ ಆದೇಶದಲ್ಲಿ ತಿಳಿಸಿದ್ದಾರೆ. +ಆದೇಶವನ್ನು ಉಲ್ಲಂಘಿಸುವವರು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಕ್ರಮವನ್ನು ಎದುರಿಸಬೇಕಾಗುತ್ತದೆ (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ), ಅಕಾರಿಗಳು ತಿಳಿಸಿದ್ದಾರೆ . ಈ ಆದೇಶವು ಈ ವರ್ಷದ ಜನವರಿ 29 ರಿಂದ ಮಾರ್ಚ್ 28 ರವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_178_10.txt b/eesanje/url_47_178_10.txt new file mode 100644 index 0000000000000000000000000000000000000000..35c7490189323f47cc89aab1e561fd2ee096bb1f --- /dev/null +++ b/eesanje/url_47_178_10.txt @@ -0,0 +1,6 @@ +ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್ +ಲಕ್ನೋ, ಜ 27- ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಇಂಡಿಯಾ ಒಕ್ಕೂಟದಲ್ಲಿ ಕೆಲವರಿಗೆ ತಮ್ಮದೇ ಆದ ಮೈತ್ರಿಯಲ್ಲಿ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಲಕ್ನೋದಲ್ಲಿ 19ನೇ ಏಷ್ಯನ್ ಮತ್ತು 4ನೇ ಪ್ಯಾರಾ ಮತ್ತು ರಾಷ್ಟ್ರೀಯ ಕ್ರೀಡಾಕೂಟದ ಬಹುಮಾನ ವಿತರಣೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಠಾಕೂರ್ ಈ ಹೇಳಿಕೆ ನೀಡಿದ್ದಾರೆ. +ಕೆಲವರಿಗೆ ತಮ್ಮದೇ ಆದ ಮೈತ್ರಿಯಲ್ಲಿ ನ್ಯಾಯ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಮತ್ತು ಇದರಿಂದಾಗಿ ಒಂದರ ನಂತರ ಒಂದರಂತೆ ರಾಜ್ಯಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೀವು ನೋಡಬಹುದು ಎಂದು ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು. ಬಿಹಾರದಲ್ಲಿ ಮಹಾಘಟಬಂಧನ್ ನಲ್ಲಿ ಬಿರುಕು ಮೂಡಿದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಹೊರಬಿದ್ದಿದೆ. +ಮದರಸಾಗಳಲ್ಲಿ ರಾಮಯಣ ಕಥೆ ಮತ್ತು ಆದರ್ಶಗಳ ಬೋಧನೆಗೆ ಮುಂದಾದ ಉತ್ತರಾಖಂಡ ಸರ್ಕಾರ +ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಂದು ವೋಲ್ಟï-ಫೇಸ್ ಮಾಡಿ ಬಿಜೆಪಿ ನೇತೃತ್ವದ ಎನ್‍ಡಿಎಗೆ ಮರಳಬಹುದು ಎಂಬ ಮಾತುಗಳು ಕೇಳಿ ಬರುತ್ತಿರುವ ಸಂದರ್ಭದಲ್ಲೇ ಠಾಕೂರ್ ಅವರ ಹೇಳಿಕೆ ಮಹತ್ವಪಡೆದುಕೊಂಡಿದೆ. 500 ವರ್ಷಗಳ ಕಾಯುವಿಕೆ ಮುಗಿದಿದೆ. ಭವ್ಯವಾದ ರಾಮ ಮಂದಿರದ ನಿರ್ಮಾಣ ಪೂರ್ಣಗೊಂಡಿದೆ ಎಂದು ಯುವ ವ್ಯವಹಾರಗಳು ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಠಾಕೂರ್ ಹೇಳಿದರು. +ಬಿಜೆಪಿ ನಾಯಕರು ಮಿತ್ರಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದರು, ನಿತೀಶ್ ಕುಮಾರ್ ಅವರ ಇಂಡಿಯಾ ಒಕ್ಕೂಟದ ಪಾಲುದಾರರೊಂದಿಗಿನ ಸಂಬಂಧವು ಹೆಚ್ಚು ಬಲವಾಗಿರದ ಕಾರಣ ಪಕ್ಷವು ಮತ್ತೊಮ್ಮೆ ಅವರೊಂದಿಗೆ ಕೈಜೋಡಿಸಲು ಮುಕ್ತವಾಗಿದೆ ಎಂಬ ಸಂಕೇತಗಳನ್ನು ರವಾನಿಸಿದ್ದಾರೆ. \ No newline at end of file diff --git a/eesanje/url_47_178_11.txt b/eesanje/url_47_178_11.txt new file mode 100644 index 0000000000000000000000000000000000000000..560dbdc6a4a3bfb2d7d8857f1429a00c5c066d96 --- /dev/null +++ b/eesanje/url_47_178_11.txt @@ -0,0 +1,6 @@ +ಮದರಸಾಗಳಲ್ಲಿ ರಾಮಯಣ ಕಥೆ ಮತ್ತು ಆದರ್ಶಗಳ ಬೋಧನೆಗೆ ಮುಂದಾದ ಉತ್ತರಾಖಂಡ ಸರ್ಕಾರ +ಡೆಹ್ರಾಡೂನ್,ಜ.27 : ಉತ್ತರಾಖಂಡ ಮದರಸಾಗಳಲ್ಲಿ ರಾಮಯಣ ಕಥೆ ಮತ್ತು ಆದರ್ಶಗಳನ್ನು ಮಕ್ಕಳಿಗೆ ಅರ್ಥಮಾಡಿಸಲು ರಾಜ್ಯ ವಕ್ ಮಂಡಳಿ ಮುಂದಾಗಿದೆ. ಮುಂದಿನ ಮಾರ್ಚ್‍ನಲ್ಲಿ ಪ್ರಾರಂಭವಾಗುವ ವಿಧಾನಸಭೆ ಅಧಿವೇಶನದಿಂದ ಭಗವಾನ್ ರಾಮನ ಕಥೆಯನ್ನು ಹೊಸ ಪಠ್ಯಕ್ರಮದ ಭಾಗವಾಲು ನೀತಿ ರಚಿಸಲಾಗುವುದು ಎಂದು ರಾಜ್ಯ ವಕ್ ಮಂಡಳಿ ಅಧ್ಯಕ್ಷ ಶಾದಾಬ್ ಶಾಮ್ಸ್ ಹೇಳಿದ್ದಾರೆ. +ತನ್ನ ತಂದೆಯನ್ನು ಬಂಧಿಸಿದ ಮತ್ತು ತನ್ನ ಸ್ವಂತ ಸಹೋದರರನ್ನು ಕೊಂದ ಔರಂಗಜೇಬನ ಕಥೆಯನ್ನು ಕಲಿಸುವುದಕ್ಕಿಂತ ವಿದ್ಯಾರ್ಥಿಗಳಿಗೆ ತಂದೆಯ ಮಾತನ್ನು ಗೌರವಿಸಲು ಕಾಡಿಗೆ ವನವಾಸ ಮಾಡಿದ ರಾಮನಂತೆ ಮತ್ತು ಆತನ ಸತ್ಯ ನಿಷ್ಠೆ ಕಲಿಸಬೇಕು ಎಂದರು.ವಕ್ ಮಂಡಳಿಯ ಅಡಿಯಲ್ಲಿ 117 ಮದರಸಾಗಳಿವೆ ಆಧುನಿಕ ಪಠ್ಯಕ್ರಮವನ್ನು ಆರಂಭದಲ್ಲಿ ಡೆಹ್ರಾಡೂನ್, ಹರಿದ್ವಾರ, ಉಧಮ್ ಸಿಂಗ್ ನಗರ ಮತ್ತು ನೈನಿತಾಲ್ ಮದರಸಾಗಳಲ್ಲಿ ಪರಿಚಯಿಸಲಾಗುವುದು ಎಂದು ತಿಳಿಸಿದರು. +ಡಿಕೆಶಿ ಮನೆಗೆ ಗೃಹಸಚಿವ ಪರಮೇಶ್ವರ್ ದಿಢೀರ್ ಭೇಟಿ +ಪ್ರವಾದಿ ಮೊಹಮ್ಮದ್ ಜೊತೆಗೆ ಭಗವಾನ್ ರಾಮನ ಜೀವನದ ಕಥೆಯನ್ನು ಮದರಸಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ಅವರು ಹೇಳಿದರು. ಅನೇಕ ಮುಸ್ಲಿಂ ಧರ್ಮಗುರುಗಳು ಸಹ ಈ ಕ್ರಮವನ್ನು ಅನುಮೋದಿಸಿದ್ದಾರೆ ಎಂದರು. +20ನೇ ಶತಮಾನದ ಮುಸ್ಲಿಂ ತತ್ವಜ್ಞಾನಿ ಅಲ್ಲಾಮ ಇಕ್ಬಾಲ್ ಮಾತುಗಳನ್ನು ಉಲ್ಲೇಖಿಸಿ ಹೈ ರಾಮ್ ಕೆ ವಜೂದ್ ಪೆ ಹಿಂದೂಸ್ತಾನ್ ಕೊ ನಾಜ್, ಅಹ್ಲೆ ನಜರ್ ಸಮ್‍ಜ್ತೇ ಹೈಂ ಉಂಕೋ ಇಮಾಮ್-ಎ-ಹಿಂದ್ (ಹಿಂದೂಸ್ತಾನವು ಭಗವಾನ್ ರಾಮನ ಅಸ್ತಿತ್ವದ ಬಗ್ಗೆ ಹೆಮ್ಮೆಪಡುತ್ತದೆ, ಜನರು ಅವನನ್ನು ಹಿಂದೂ ನಾಯಕನೆಂದು ಪರಿಗಣಿಸುತ್ತಾರೆ)ನಾವು ಮಕ್ಕಳಿಗೆ ಆಧುನಿಕತೆಯ ಶಕ್ಷಣ ಅಗತ್ಯ ಎಂದು ಶಾದಾಬ್ ಶಾಮ್ಸ್ ಹೇಳಿದ್ದಾರೆ. \ No newline at end of file diff --git a/eesanje/url_47_178_12.txt b/eesanje/url_47_178_12.txt new file mode 100644 index 0000000000000000000000000000000000000000..31779b286ca0b110961186cb7d504b126a801518 --- /dev/null +++ b/eesanje/url_47_178_12.txt @@ -0,0 +1,5 @@ +ಟ್ರಕ್‍ಗೆ ಕಾರು ಅಪ್ಪಳಿಸಿ ಐವರ ಸಾವು +ಹೋಶಿಯಾರ್‍ಪುರ,ಜ.27 (ಪಿಟಿಐ) ಜಲಂಧರ್-ಪಠಾಣ್‍ಕೋಟ್ ರಸ್ತೆಯಲ್ಲಿ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ತಡರಾತ್ರಿ ಜಲಂಧರ್‍ನಿಂದ ಮುಕೇರಿಯನ್‍ಗೆ ತೆರಳುತ್ತಿದ್ದಾಗ ಡಿಕ್ಕಿ ಸಂಭವಿಸಿದೆ ಎಂದು ದಸುಯಾ ಪೊಲೀಸ್ ಠಾಣೆ ಎಸ್‍ಎಚ್‍ಒ ಸಬ್‍ಇನ್ಸ್‍ಪೆಕ್ಟರ್ ಹಪ್ರ್ರೇಮ್ ಸಿಂಗ್ ತಿಳಿಸಿದ್ದಾರೆ. +ಕಾರು ಉಂಚಿ ಬಸ್ಸಿ ಗ್ರಾಮಕ್ಕೆ ಸಮೀಪಿಸುತ್ತಿದ್ದಂತೆ, ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ರಸ್ತೆಯ ಇನ್ನೊಂದು ಬದಿಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್‍ಗೆ ಅಪ್ಪಳಿಸಿದ್ದರಿಂದ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. +ರಾಹುಲ್ ನಡೆಸುತ್ತಿರುವುದು ಭಾರತ್ ತೋಡೋ ಯಾತ್ರೆ : ಅಠಾವಳೆ +ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಐದನೇ ವ್ಯಕ್ತಿಯನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಸಾವನ್ನಪ್ಪಿದರು. ಘಟನೆಯಲ್ಲಿ ಹರಿಯಾಣ ಮೂಲದ ಟ್ರಕ್ ಚಾಲಕ ಸುಶೀಲ್ ಕುಮಾರ್ ಎಂಬುವರಿಗೂ ಗಾಯಗಳಾಗಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_178_2.txt b/eesanje/url_47_178_2.txt new file mode 100644 index 0000000000000000000000000000000000000000..345cd5a2bc71a710ded108cd6a2e2b8a3668632c --- /dev/null +++ b/eesanje/url_47_178_2.txt @@ -0,0 +1,10 @@ +ನಿತೀಶ್‍ ಎನ್‍ಡಿಎ ಜೊತೆ ಹೋಗುವುದು 5 ದಿನ ಹಿಂದೆಯೇ ಮಾಹಿತಿ ಇತ್ತು : ಖರ್ಗೆ +ಬೆಂಗಳೂರು,ಜ.28- ನಿತೀಶ್‍ಕುಮಾರ್‍ ರವರು ಇಂಡಿಯಾ ರಾಜಕೀಯ ಕೂಟಕ್ಕೆ ರಾಜೀನಾಮೆ ನೀಡಿ ಎನ್‍ಡಿಎ ಜೊತೆ ಹೋಗುವುದು 5 ದಿನಗಳ ಹಿಂದೆಯೇ ನಮಗೆ ಮಾಹಿತಿ ಇತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ದಿನಗಳ ಹಿಂದೆ ಬಿಹಾರದ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ತಮ್ಮೊಂದಿಗೆ ಮಾತುಕತೆ ನಡೆಸಿದ್ದರು. ಆ ವೇಳೆ ಎಲ್ಲವೂ ಚರ್ಚೆಯಾಗಿದ್ದವು. ನಮ್ಮ ಸಂಖ್ಯಾಬಲ ಏನು, ಅವರ ಸಂಖ್ಯಾಬಲ ಏನಿದೆ ಎಂಬುದೆಲ್ಲಾ ವಿಶ್ಲೇಷಣೆಗಳಾಗಿದ್ದವು ಎಂದಿದ್ದಾರೆ. +ಮಾಜಿ ಕೇಂದ್ರ ಸಚಿವ ಹರ್ಮೋಹನ್ ಧವನ್ ನಿಧನ +ನಿತೀಶ್‍ಕುಮಾರ್‍ ರವರು ಇಂಡಿಯಾ ಮೈತ್ರಿಕೂಟವನ್ನು ತೊರೆದು ಎನ್‍ಡಿಎ ಜೊತೆ ಹೋಗುವುದಾದರೆ ಹೋಗಲಿ ಬಿಡಿ. ನಾವು ಮೊದಲಿನಿಂದಲೂ ಒಟ್ಟಾಗಿಯೇ ಹೋರಾಟ ಮಾಡುತ್ತಿದ್ದೇವೆ. ಮುಂದೆಯೂ ಅದನ್ನು ಮುಂದುವರೆಸೋಣ. ನಿತೀಶ್ ಅವರ ಜೊತೆ ಮಾತುಕತೆ ನಡೆಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ. ಒಂದು ವೇಳೆ ಸಾಧ್ಯವಾಗದೇ ಹೋದರೆ ಅವರ ದಾರಿ ಅವರು ನೋಡಿಕೊಳ್ಳಲಿ. ನೀವೇನೂ ತಲೆಕೆಡಿಸಿಕೊಳ್ಳಬೇಡಿ ಎಂದು ಲಾಲೂ ಪ್ರಸಾದ್ ಯಾದವ್ ತಮಗೆ ಹೇಳಿದ್ದರು. ಇದ್ಯಾವುದೂ ಅನಿರೀಕ್ಷಿತ ಬೆಳವಣಿಗೆಗಳಲ್ಲ. ಎಲ್ಲವೂ ಗೊತ್ತಿತ್ತು. ಆದರೆ ಕೊನೆ ಕ್ಷಣದವರೆಗೂ ಬಹಿರಂಗಪಡಿಸಬಾರದು ಎಂದು ನಾವು ಸುಮ್ಮನಿದ್ದೆವು ಎಂದು ಖರ್ಗೆ ಹೇಳಿದರು. +ಲಾಲೂಪ್ರಸಾದ್ ಯಾದವ್ ಮತ್ತು ತೇಜಸ್ವಿ ಯಾದವ್ ಅವರೊಂದಿಗಿನ ಮಾತುಕತೆ ವೇಳೆ ಅವರು ಹೇಳಿದ ಬಹಳಷ್ಟು ವಿಷಯಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನಿತೀಶ್ ಅವರ ನಡವಳಿಕೆ ಸಂಶಯಾಸ್ಪದವಾಗಿದೆ. ನಾವು ಅದರ ಬಗ್ಗೆ ನಂತರ ಚರ್ಚೆ ಮಾಡುತ್ತೇವೆ ಎಂದರು. +ಒಂದು ವೇಳೆ ನಿತೀಶ್‍ರ ಬಗ್ಗೆ ಆರಂಭದಲ್ಲೇ ನಾವು ಮಾತನಾಡಿದ್ದರೆ ತಪ್ಪು ಸಂದೇಶವಾಗುತ್ತಿತ್ತು. ಅದು ಇಂಡಿಯಾ ಮೈತ್ರಿಕೂಟದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿತ್ತು. ಹಾಗಾಗಿ ನಾವು ಅವರ ನಿರ್ಧಾರಗಳನ್ನು ನಿರೀಕ್ಷಿಸುತ್ತಿದ್ದೆವು. ಈಗ ಎಲ್ಲವೂ ಒಂದು ಹಂತಕ್ಕೆ ಬಂದಿದೆ ಎಂದಿದ್ದಾರೆ. ಇಂಡಿಯಾ ಮೈತ್ರಿಕೂಟದ ಜೊತೆ ಹಲವರು ಬರುತ್ತಾರೆ, ಕೆಲವರು ಹೋಗುತ್ತಾರೆ. ಆಯಾರಾಮ್, ಗಯಾರಾಮ್ ಇದ್ದದ್ದೇ ಎಂದು ಖರ್ಗೆ ಹೇಳಿದರು. +ಇಂಡಿಯಾ ಮೈತ್ರಿಕೂಟದ ನಡುವೆ ಸೀಟುಗಳ ಹಂಚಿಕೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್‍ನ ನಾಯಕ ಮುಖುಲ್ ವಾಸ್ಮಿ ಅವರ ನೇತೃತ್ವದಲ್ಲಿ ಆರು ಜನರ ಸಮಿತಿಯನ್ನು ರಚಿಸಲಾಗಿದೆ. ಅವರು ಈಗಾಗಲೇ ಬಿಹಾರದ ಆರ್‍ಜೆಡಿ, ಅಮ್ ಆದ್ಮಿ, ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳ ಜೊತೆ ಚರ್ಚೆ ನಡೆಸಿದ್ದಾರೆ. ಕೆಲವು ಕಡೆ ಸೀಟುಗಳ ಹೊಂದಾಣಿಕೆಯಾಗಿದೆ. ಇನ್ನೂ ಚರ್ಚೆಗಳು ನಡೆಯುತ್ತಿವೆ ಎಂದರು.ಕಾಂಗ್ರೆಸ್ ಪಕ್ಷವು ಲೋಕಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದೆ. +ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ +ರಾಹುಲ್‍ಗಾಂಧಿಯವರು ಮಣಿಪುರದಿಂದ ಮುಂಬೈವರೆಗೂ ಭಾರತ್ ಜೋಡೊ ನ್ಯಾಯಯಾತ್ರೆ ಆರಂಭಗೊಂಡಿದೆ. ನಾನು ತೆಲಂಗಾಣ, ಡೆಹ್ರಾಡೂನ್, ಒರಿಸ್ಸಾ, ದೆಹಲಿ, ಕೇರಳ ಸೇರಿದಂತೆ ವಿವಿಧ ಕಡೆಗಳ ಕಾರ್ಯಕ್ರಮಗಳಿಗೆ ದಿನಾಂಕ ನಿಗದಿಯಾಗಿದೆ. ಕೆಲವು ಕಾರ್ಯಕ್ರಮಗಳಿಗೆ ರಾಹುಲ್‍ಗಾಂಧಿಯವರು ಬರುತ್ತಾರೆ ಎಂದು ಹೇಳಿದರು. +ನಾವು ನಮ್ಮ ಪಕ್ಷದ ಕಾರ್ಯಕ್ರಮಗಳನ್ನು ಶುರು ಮಾಡಿದ್ದೇವೆ. ಮತ್ತೊಂದು ಪಕ್ಷವನ್ನು ಹೋಲಿಕೆ ಮಾಡಿಕೊಂಡು ಕೂರುವುದಿಲ್ಲ. ನಾವು ನಮ್ಮ ಜವಾಬ್ದಾರಿ ಏನಿದೆಯೋ ಅದನ್ನು ನಿಭಾಯಿಸುತ್ತೇವೆ. ಲೋಕಸಭೆ ಚುನಾವಣೆ ತಯಾರಿಯಲ್ಲಿ ಹಿಂದೆ ಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_178_3.txt b/eesanje/url_47_178_3.txt new file mode 100644 index 0000000000000000000000000000000000000000..0379f2d35033a6ced7f63d14085352e5cc3bf814 --- /dev/null +++ b/eesanje/url_47_178_3.txt @@ -0,0 +1,12 @@ +ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‍ಕುಮಾರ್ ರಾಜೀನಾಮೆ +ಪಾಟ್ನಾ,ಜ.28- ಕಳೆದ ಒಂದು ವಾರದಿಂದ ಕ್ಷಿಪ್ರ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‍ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನವೇ ಬಿಹಾರದಲ್ಲಿ ನಡೆದ ಈ ರಾಜಕೀಯ ಬೆಳವಣಿಗೆ ಇಂಡಿಯಾ ಒಕ್ಕೂಟಕ್ಕೆ ಭಾರೀ ಹಿನ್ನೆಯೆಂದೇ ವ್ಯಾಖ್ಯಾನಿಸಲಾಗಿದೆ. +ಲಾಲೂಪ್ರಸಾದ್ ನೇತೃತ್ವದ ಆರ್‍ಜೆಡಿ ಜೊತೆಗೂಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದ ನಿತೀಶ್‍ಕುಮಾರ್ ಇದೀಗ ಪುನಃ 9ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಬಿಜೆಪಿಯಿಂದ ಸುಶೀಲ್‍ಕುಮಾರ್ ಮೋದಿ ಮತ್ತು ರಾಣಿದೇವಿ ಕೂಡ ಉಪಮುಖ್ಯಮಂತ್ರಿಗಳಾಗಿ ಅಕಾರ ಸ್ವೀಕರಿಸಲಿದ್ದು, ಈವರೆಗೂ ಆರ್‍ಜೆಡಿ ಬಳಿಯಿದ್ದ ಖಾತೆಗಳನ್ನು ಬಿಜೆಪಿಗೆ ನೀಡಲು ಸಮ್ಮತಿಸಲಾಗಿದೆ. +ಇದಕ್ಕೂ ಮುನ್ನ ಬೆಳಿಗ್ಗೆ ಪಾಟ್ನಾದಲ್ಲಿರುವ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರು, ಸಂಸದರು ಹಾಗೂ ಪ್ರಮುಖರ ಜೊತೆ ಸಭೆ ನಡೆಸಿದ ನಿತೀಶ್ ಕುಮಾರ್ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ರಚನೆಗೆ ಹಕ್ಕು ಮಂಡಿಸಿ ತಮಗಿರುವ ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. +ಸಂಜೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ ಹಾಗೂ ಎರಡು ಪಕ್ಷಗಳ ಮುಖಂಡರು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ರಾಜೀನಾಮೆ ನೀಡಿದ ನಂತರ ರಾಜಭವನದ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್‍ಕುಮಾರ್, ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸರ್ಕಾರ ರಚನೆಗೂ ಹಕ್ಕು ಮಂಡಿಸಲಾಗಿದೆ. ಸಂಪುಟಕ್ಕೆ ಯಾರ್ಯಾರು ಸೇರ್ಪಡೆಯಾಗಲಿದ್ದಾರೆ ಎಂಬುದನ್ನು ಕಾದು ನೋಡಿ ಎಂದರು. +ಈವರೆಗೂ ನಾನು ಮಹಾಘಟಬಂದನ್ ಭಾಗವಾಗಿ ಸರ್ಕಾರವನ್ನು ಮುನ್ನಡೆಸಿದ್ದೆ. ಆದರೆ ಕೆಲವು ಪರಿಸ್ಥಿತಿಗಳು ನನ್ನನ್ನು ಆಚೆಯಿಂದ ಬರುವಂತೆ ಮಾಡಿತು. ನಾನು ಏನೇ ನಿರ್ಧಾರ ತೆಗೆದುಕೊಂಡಿದ್ದರೂ ಅದು ಬಿಹಾರ ಮತ್ತು ಇಲ್ಲಿನ ಜನರ ಒಳಿತಿಗಾಗಿ. ಆಗುವುದೆಲ್ಲವೂ ಒಳ್ಳೆಯದಕ್ಕೆ ಎಂದು ಹೇಳಿದರು. ಇನ್ನೊಂದೆಡೆ ಬಿಜೆಪಿಯು ಪಕ್ಷದ ಹಿರಿಯ ನಾಯಕ ಸುಶೀಲ್‍ಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿ ನಿತೀಶ್ ಕುಮಾರ್‍ಗೆ ಬೆಂಬಲ ನೀಡುವ ಶಾಸಕರ ಪತ್ರವನ್ನು ರಾಜ್ಯಪಾಲರಿಗೆ ನೀಡಿದೆ. +ಚರ್ಚೆಗೆ ಗ್ರಾಸವಾದ ಸೂರಜ್-ಶಿವಕುಮಾರ್ ಭೇಟಿ +78 ಶಾಸಕರನ್ನು ಹೊಂದಿರುವ ಬಿಜೆಪಿ ನಿತೀಶ್‍ಕುಮಾರ್ ಮುಖ್ಯಮಂತ್ರಿಯಾಗಲು ಒಪ್ಪಿಗೆ ಸೂಚಿಸಿದೆ.ಬಿಹಾರದಲ್ಲಿ ಇದೀಗ ಜೆಡಿಯು, ಬಿಜೆಪಿ, ಎಚ್‍ಎಂಎಂ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಈ ಹಿಂದೆ ನಿತೀಶ್‍ಕುಮಾರ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸಮ್ಮಿಶ್ರ ಸರ್ಕಾರವನ್ನು ರಚನೆ ಮಾಡಿದ್ದರು.ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿಗೆ ಸೋಡಾ ಚೀಟಿ ಕೊಟ್ಟು ಆರ್‍ಜೆಡಿ ಜೊತೆ ಸರ್ಕಾರ ರಚನೆ ಮಾಡಿದ್ದರು. ಇತ್ತೀಚೆಗೆ ಎರಡೂ ಪಕ್ಷಗಳ ನಡುವೆ ಉಂಟಾದ ಮನಸ್ತಾಪದಿಂದ ನಿತೀಶ್‍ಕುಮಾರ್ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ. +ಇಂಡಿಯಾ ಮೈತ್ರಿಕೂಟ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿತೀಶ್‍ಕುಮಾರ್ ಪ್ರಧಾನಿ ನರೇಂದ್ರ ಮೋದಿ ಎದುರು ತಮ್ಮನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಒತ್ತಡ ಹಾಕಿದ್ದರು. ಇತ್ತೀಚೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಮೈತ್ರಿಕೂಟದ ಪ್ರಮುಖರು ಸಂಚಾಲಕರಾಗಿ ಮುನ್ನಡೆಸಬೇಕೆಂದು ಮನವಿ ಮಾಡಿದ್ದರೂ ಅವರು ಹಿಂದೆ ಸರಿದಿದ್ದರು. ಇದೇ ಸಂದರ್ಭದಲ್ಲಿ ಬಿಹಾರದ ಹಿಂದುಳಿದ ಪ್ರಭಾವಿ ನಾಯಕ ಕರ್ಪೂರಿ ಠಾಕೂರ್‍ಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿತ್ತು. +ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ +ಅವರ ನೂರನೇ ಜನ್ಮಶತಾಬ್ದಿ ಕಾರ್ಯಕ್ರಮದ ವೇಳೆ ನಿತೀಶ್‍ಕುಮಾರ್ ಮಾಡಿದ ಭಾಷಣ ಆರ್‍ಜೆಡಿ ನಾಯಕರ ಕಣ್ಣು ಕೆಂಪಾಗುವಂತೆ ಮಾಡಿತ್ತು. ಕರ್ಪೂರಿ ಠಾಕೂರ್ ಎಂದಿಗೂ ಕುಟುಂಬ ರಾಜಕಾರಣ ಮಾಡಲಿಲ್ಲ. ಎರಡು ಬಾರಿ ಮುಖ್ಯಮಂತ್ರಿಯಾಗಿ ವಿವಿಧ ಹುದ್ದೆಗಳನ್ನು ಅನುಭವಿಸಿದರೂ ಆಡಳಿತದಲ್ಲಿ ಎಂದಿಗೂ ಕುಟುಂಬದವರ ಹಸ್ತಕ್ಷೇಪಕ್ಕೆ ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದು ವಿವಾದದ ಕಿಡಿ ಹೊತ್ತಿಸಿತ್ತು. +ನಿತೀಶ್‍ಕುಮಾರ್ ತಮ್ಮ ಕುಟುಂಬವನ್ನೇ ಗುರಿಯಾಗಿಟ್ಟುಕೊಂಡು ಈ ಮಾತನ್ನು ಹೇಳಿದ್ದಾರೆ ಎಂದು ಲಾಲೂ ಪ್ರಸಾದ್ ಯಾದವ್ ಪುತ್ರಿ ರೋಹಿಣಿ ಆಚಾರ್ಯರವರು ಕೆಲವರಿಗೆ ಕುಟುಂಬದ ರಾಜಕಾರಣ ಏನೆಂದರೆ ಗೊತ್ತಿಲ್ಲ ಎಂದು ಪರೋಕ್ಷವಾಗಿ ಸಿಎಂ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. \ No newline at end of file diff --git a/eesanje/url_47_178_4.txt b/eesanje/url_47_178_4.txt new file mode 100644 index 0000000000000000000000000000000000000000..9554a86722b295b90b24507f0f05c858434b32de --- /dev/null +++ b/eesanje/url_47_178_4.txt @@ -0,0 +1,9 @@ +ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ +ತಿರುವನಂತಪುರಂ,ಜ.28- ಅಪರೂಪದ ಜನ್ಮಜಾತ ಕಾಯಿಲೆಯಿಂದ ಬಳಲುತ್ತಿರುವ ತಮ್ಮ ಮಕ್ಕಳಿಗೆ ಚಿಕಿತ್ಸೆ ಮುಂದುವರಿಸುವ ಪ್ರಯತ್ನಗಳು ವಿಫಲವಾದ ನಂತರ ಕೇರಳದ ಕೊಟ್ಟಾಯಂನ ದಂಪತಿ ತಮ್ಮ ಕುಟುಂಬದ ಎಲ್ಲಾ ಐವರು ಸದಸ್ಯರಿಗೆ ದಯಾಮರಣ ನೀಡಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. +ದಂಪತಿಗಳಾದ ಸ್ಮಿತಾ ಆಂಟೋನಿ ಮತ್ತು ಮನು ಜೋಸೆಫ್, ಈ ಜಿಲ್ಲೆಯ ಕೊಝುವನಾಲïನವರು. ತಮ್ಮ ಮೂರು ಮಕ್ಕಳಲ್ಲಿ ಇಬ್ಬರ ಚಿಕಿತ್ಸೆಯನ್ನು ಮುಂದುವರಿಸಲು ಯಾವುದೇ ಮಾರ್ಗವನ್ನು ಕಂಡುಕೊಳ್ಳಲು ಸಾಧ್ಯವಾಗದ ಕಾರಣ ದಯಾ ಮರಣಕ್ಕಾಗಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಲು ನಿರ್ಧರಿಸಿದರು. ಈ ಎರಡೂ ಮಕ್ಕಳು ಸಾಲ್ಟ-ವೇಸ್ಟಿಂಗ್ ಕಂಜೆನಿಟಲ್ ಅಡ್ರಿನಲ್ ಹೈಪಪ್ರ್ಲಾಸಿಯಾನಿಂದ ಬಳಲುತ್ತಿದ್ದಾರೆ. +ತಾವಿಬ್ಬರೂ ವೃತ್ತಿಯಲ್ಲಿ ನರ್ಸ್‍ಗಳಾಗಿದ್ದರೂ, ಎರಡನೇ ಮತ್ತು ಮೂರನೇ ಮಕ್ಕಳನ್ನು ಸಂಪೂರ್ಣವಾಗಿ ನೋಡಿಕೊಳ್ಳಲು ಮನೆಯಲ್ಲಿಯೇ ಇರಬೇಕಾಗಿರುವುದರಿಂದ ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಸ್ಮಿತಾ ಹೇಳಿದರು. ಅವರು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸ್ಯಾಂಟ್ರಿನ್ ಮತ್ತು ಸ್ಯಾಂಟೊಯೊ ಇಬ್ಬರಿಗೂ ಸಾಲ್ಟ-ವೇಸ್ಟಿಂಗ್ ಕಂಜೆನಿಟಲ್ ಅಡ್ರಿನಲ್ ಹೈಪಪ್ರ್ಲಾಸಿಯಾ ರೋಗ ಇದೆ ಎಂದು ಹೇಳಲಾಗಿದೆ. ಈ ಕಾರಣದಿಂದ ಮೊದಲ ಮಗು ಕೂಡ 90 ರಷ್ಟು ಸ್ವಲೀನತೆಯಿಂದ ಬಳಲುತ್ತಿದೆ. +ಇನ್ನು ಮಕ್ಕಳ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮಕ್ಕಳಿಗೆ ಔಷಧ ಖರೀದಿಸಲು ಆಸ್ತಿಯನ್ನು ಅಡವಿಟ್ಟು ಮಾರಾಟ ಮಾಡಿರುವುದಾಗಿ ತಿಳಿಸಿದರು. ಸ್ಮಿತಾ ಮಾತನಾಡಿ, ನಾವು ನಮ್ಮ ದೈನಂದಿನ ಖರ್ಚು, ಚಿಕ್ಕ ಮಕ್ಕಳ ಚಿಕಿತ್ಸೆ ಮತ್ತು ಹಿರಿಯ ಮಗುವಿನ ಶಿಕ್ಷಣವನ್ನು ಪೂರೈಸಲು ಹೆಣಗಾಡುತ್ತಿದ್ದೇವೆ. ಆದಾಯವಿಲ್ಲದ ಕಾರಣ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. +ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋಣ್ ಕ್ಯಾಮೆರಾ ಬಳಕೆ +ಉದ್ಯೋಗ ಮತ್ತು ಚಿಕಿತ್ಸೆಗಾಗಿ ನೆರವು ಕೋರಿ ಸ್ಥಳೀಯ ಪಂಚಾಯತ್ಗೆ ಮನವಿ ಮಾಡಿದರೂ ಅವರು ಯಾವುದೇ ನೆರವು ನೀಡಲಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಕೆಲ ಸಮಯದ ಹಿಂದೆ ಪಂಚಾಯತ್ ಸಮಿತಿಯವರು ಕೂಡಿ ಕೆಲಸ ಕೊಡಿಸಲು ತೀರ್ಮಾನಿಸಿದ್ದರು. ಆದರೆ ಅದರ ಕಾರ್ಯದರ್ಶಿಯವರು ನಿರ್ಣಯದ ಬಗ್ಗೆ ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಕಳುಹಿಸಲಿಲ್ಲ ಎಂದು ಅವರು ಹೇಳಿದರು. +ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದರು. ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದ ನಂತರ ಕಾರ್ಯದರ್ಶಿ ಕಡತವನ್ನು ಸರ್ಕಾರಕ್ಕೆ ಕಳುಹಿಸಿದ್ದಾರೆ, ಆದರೆ ಇದುವರೆಗೆ ಸಂಬಂಧಿಸಿದ ಕೆಲಸದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಮಹಿಳೆ ಹೇಳಿದರು. +ಆದ್ದರಿಂದ ನಮ್ಮ ಕುಟುಂಬಕ್ಕೆ ಈಗ ದಯಾಮರಣವನ್ನು ವಿನಂತಿಸುವುದನ್ನು ಬಿಟ್ಟು ಬೇರೆ ಆಯ್ಕೆಗಳಿಲ್ಲ ಎಂದು ಅವರು ಹೇಳಿದರು. ನಾವು ಈಗ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಅನ್ನು ಸಂಪರ್ಕಿಸಲು ಪರಿಗಣಿಸುತ್ತಿದ್ದೇವೆ. ತಮ್ಮ ಕುಟುಂಬ ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದೆ ಎಂದು ಸ್ಮಿತಾ ಹೇಳಿದ್ದಾರೆ. \ No newline at end of file diff --git a/eesanje/url_47_178_5.txt b/eesanje/url_47_178_5.txt new file mode 100644 index 0000000000000000000000000000000000000000..41e6d90a8475dd63e8e9e48c5c6e600014f89577 --- /dev/null +++ b/eesanje/url_47_178_5.txt @@ -0,0 +1,6 @@ +ಮಾಜಿ ಕೇಂದ್ರ ಸಚಿವ ಹರ್ಮೋಹನ್ ಧವನ್ ನಿಧನ +ನವದೆಹಲಿ,ಜ.28- ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಹರ್ಮೋಹನ್ ಧವನ್ (83) ನಿಧನರಾಗಿದ್ದಾರೆ. ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಮಾಜಿ ಪ್ರಧಾನಿ ಚಂದ್ರಶೇಖರ್ ಅವರ ಸರ್ಕಾರದಲ್ಲಿ ಕೇಂದ್ರ ರಾಜ್ಯ ಸಚಿವರಾಗಿದ್ದರು. +ಇದಾದ ನಂತರ ಅವರು ಕಾಂಗ್ರೆಸ್, ಬಿಎಸ್ಪಿ ಮತ್ತು ಬಿಜೆಪಿ ಸೇರಿದರು. ಆದಾಗ್ಯೂ, ಈಗ ಅವರು ಅಮ್ ಆದ್ಮಿ ಪಕ್ಷದೊಂದಿಗೆ (ಎಎಪಿ) ಸಂಬಂಧ ಹೊಂದಿದ್ದರು. ಹರ್ಮೋಹನ್ ಧವನ್ ಚಂಡೀಗಢದಿಂದ ಸಂಸತ್ ಸದಸ್ಯ ಮತ್ತು ಕೇಂದ್ರ ಸಚಿವರಾಗಿದ್ದರು. +1970 ರಲ್ಲಿ ಅವರು ಸಣ್ಣ ಪ್ರಮಾಣದ ಕೈಗಾರಿಕಾ ಘಟಕವನ್ನು ಪ್ರಾರಂಭಿಸಿದರು. 1979ರಲ್ಲಿ ಮೆಹಿಲ್ ಎಂಬ ರೆಸ್ಟೋರೆಂಟ್ ಅನ್ನು ತೆರೆದರು. ಹರ್ಮೋಹನ್ ಧವನ್ 1977 ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು ದಿವಂಗತ ಪ್ರಧಾನಿ ಚಂದ್ರಶೇಖರ್ ಅವರಿಂದ ಮಾರ್ಗದರ್ಶನ ಪಡೆದಿದ್ದರು. ಅವರು 1981 ರಲ್ಲಿ ಜನತಾ ಪಕ್ಷದ ಅಧ್ಯಕ್ಷರಾದರು. 1989 ರಲ್ಲಿ ಅವರು ಚಂಡೀಗಢ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾದರು ಮತ್ತು ಚಂದ್ರಶೇಖರ್ ಅವರ ಸರ್ಕಾರದಲ್ಲಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು. +ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋಣ್ ಕ್ಯಾಮೆರಾ ಬಳಕೆ +ಅವರು 14 ಜುಲೈ 1940 ರಂದು ಕ್ಯಾಂಪ್ಬೆಲ್ಪುರದ ಫತೇಜಂಗ್ ಜಿಲ್ಲೆಯಲ್ಲಿ (ಈಗ ಪಶ್ಚಿಮ ಪಾಕಿಸ್ತಾನದಲ್ಲಿದೆ) ಜನಿಸಿದ್ದರು. 1947 ರಲ್ಲಿ ಭಾರತ ವಿಭಜನೆಯ ನಂತರ ಅವರ ಕುಟುಂಬ ಭಾರತಕ್ಕೆ ಬಂದಿತು. ಅವರು ಅಂಬಾಲಾ ಕಂಟೋನ್ಮೆಂಟ್‍ನಲ್ಲಿ ಬಹಳ ಕಾಲ ಇದ್ದರು. ಅಲ್ಲಿ ಅವರು ಮೆಟ್ರಿಕ್ಯುಲೇಷನ್ ಮತ್ತು ಎಸ್ಡಿ ಕಾಲೇಜಿನಿಂದ ಇಂಟರ್‍ಮೀಡಿಯೇಟ್ ಮಾಡಿದರು. ಧವನ್ 1960 ರಲ್ಲಿ ತಮ್ಮ ಇಂಟರ್‍ಮೀಡಿಯೇಟ್ ಮುಗಿಸಿದರು. 1960ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಎಂಎಸ್ಸಿ ಅಧ್ಯಯನ ಮಾಡಿದರು. \ No newline at end of file diff --git a/eesanje/url_47_178_6.txt b/eesanje/url_47_178_6.txt new file mode 100644 index 0000000000000000000000000000000000000000..46399deda27957ee5578961781144d8b0dd58c4d --- /dev/null +++ b/eesanje/url_47_178_6.txt @@ -0,0 +1,6 @@ +ನಿತೀಶ್‍ಗೆ ಕಾಂಗ್ರೆಸ್ ಮಾಡಿದ ಅವಮಾನದಿಂದ ಇಂಡಿಯಾ ಮೈತ್ರಿಕೂಟ ಪತನ : ಕೆ.ಸಿ.ತ್ಯಾಗಿ +ಪಾಟ್ನಾ,ಜ.28-ಕಾಂಗ್ರೆಸ್ ನಾಯಕತ್ವದ ಒಂದು ವರ್ಗ ಮುಖ್ಯಮಂತ್ರಿ ನಿತೀಶ್‍ಕುಮಾರ್ ಅವರನ್ನು ಪದೇಪದೇ ಅವಮಾನ ಇಂಡಿಯಾ ಮೈತ್ರಿಕೂಟ ಪತನವಾಯಿತು ಎಂದು ಜೆಡಿಯು ರಾಜಕೀಯ ಸಲಹೆಗಾರ ಹಾಗೂ ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಬಹುತೇಕ ಪತನವಾಗಿದೆ. ಇಂಡಿಯಾ ಮೈತ್ರಿಕೂಟ ಕೂಡ ಪತನದ ಅಂಚಿನಲ್ಲಿದೆ. ಪಂಜಾಬ್ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಇಂಡಿಯಾ ಕೂಟ ಪಕ್ಷಗಳ ಮೈತ್ರಿ ಬಹುತೇಕ ಮುಗಿದುಹೋಗಿದೆ ಎಂದು ಹೇಳಿದರು. +ಕಾಂಗ್ರೆಸೇತರ ಪಕ್ಷಗಳನ್ನು ಕಾಂಗ್ರೆಸ್‍ನೊಂದಿಗೆ ಕರೆತರುವಲ್ಲಿ ಜೆಡಿಯು ಅಧ್ಯಕ್ಷರಾದ ನಿತೀಶ್‍ಕುಮಾರ್‍ರವರು ಗುರಿ ಮತ್ತು ಸ್ಪಷ್ಟ ಉದ್ದೇಶಗಳನ್ನು ಹೊಂದಿದ್ದರೂ ಕಾಂಗ್ರೆಸ್ ನಾಯಕರು ತಪ್ಪಾಗಿ ಅರ್ಥೈಸಿದರು. ಇಂಡಿಯಾ ಮೈತ್ರಿಕೂಟದಲ್ಲಿ ನಿತೀಶ್‍ರವರು ಸ್ಥಾನಮಾನಕ್ಕಾಗಿ ಎಂದಿಗೂ ಹಾತೊರೆಯಲಿಲ್ಲ. ಆದರೆ ಕಾಂಗ್ರೆಸ್ ನಾಯಕತ್ವದ ಒಂದು ವಿಭಾಗ ಅವರನ್ನು ಪದೇಪದೇ ಅವಮಾನಿಸಿತು. ಈ ಕಾರಣದಿಂದ ಮೈತ್ರಿಕೂಟ ಪತನಕ್ಕೆ ನಾಂದಿಯಾಯಿತು ಎಂದು ಹೇಳಿದರು. +ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ ಜತೆ ಎಸ್.ಟಿ.ಸೋಮಶೇಖರ್ ಚರ್ಚೆ +ಇಂಡಿಯಾ ಮೈತ್ರಿಕೂಟ ಪ್ರಬಲ ಭಾರತೀಯ ಜನತಾಪಕ್ಷದ ವಿರುದ್ಧ ಹೇಗೆ ಹೋರಾಟ ಮಾಡಬಹುದೆಂಬುದನ್ನು ಅವರು ಊಹಿಸಲೇ ಇಲ್ಲ. ಪಾಟ್ನಾದಲ್ಲಿ ಹಲವಾರು ಪಕ್ಷಗಳನ್ನು ಒಗ್ಗೂಡಿಸುವಲ್ಲಿ ನಿತೀಶ್ ಯಶಸ್ವಿಯಾದರು. +ಆದರೆ ಚುನಾವಣೆ ಹತ್ತಿರದಲ್ಲಿದ್ದರೂ ನಾಯಕತ್ವ ಹಾಗೂ ಕಾರ್ಯಸೂಚಿ ಬಗ್ಗೆ ಇಂಡಿಯಾ ಮೈತ್ರಿಕೂಟ ಯಾವುದೇ ಜಂಟಿ ಸಭೆ ನಡೆಸಲಿಲ್ಲ. ಇದರಿಂದ ಇಡೀ ಪ್ರಕ್ರಿಯೆ ವ್ಯರ್ಥವಾಯಿತು ಎಂದು ತ್ಯಾಗಿ ಹೇಳಿದ್ದಾರೆ. \ No newline at end of file diff --git a/eesanje/url_47_178_7.txt b/eesanje/url_47_178_7.txt new file mode 100644 index 0000000000000000000000000000000000000000..72f71a632e26318df95d25601adb7c2dcde64917 --- /dev/null +++ b/eesanje/url_47_178_7.txt @@ -0,0 +1,7 @@ +ಕರ್ನಾಟಕ ಸೇರಿ 23 ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ +ಬೆಂಗಳೂರು, ಜ.27- ಮುಂಬರುವ ಲೋಕಸಭೆ ಚುನಾವಣೆ ಸಜ್ಜಾಗುತ್ತಿರುವ ಬಿಜೆಪಿ 23 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ. +ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ. ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ. +ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಅಂಡಮಾನ್ ಮತ್ತು ನಿಕೋಬಾರ್​ಗೆ ವೈ ಸತ್ಯ ಕುಮಾರ್, ಅರುಣಾಚಲ ಪ್ರದೇಶಕ್ಕೆ ಅಶೋಕ್ ಸಿಂಘಾಲ್, ಚಂಡೀಗಢಕ್ಕೆ ವಿಜಯಭಾಯಿ ರೂಪಾನಿ, ಗೋವಾಕ್ಕೆ ಆಶಿಶ್ ಸೂದ್, ಜಾರ್ಖಂಡ್​ಗೆ ಲಕ್ಷ್ಮೀಕಾಂತ ಬಾಜಪೇಯಿ, ಲಡಾಖ್​ಗೆ ತರುಣ್ ಚುಗ್, ಲಕ್ಷ್ಯದ್ವೀಪಕ್ಕೆ ಅರವಿಂದ್ ಮೆನನ್, ಪುದುಚೇರಿಗೆ ನಿರ್ಮಲ್ ಕುಮಾರ್ ಸುರಾನಾ, ಸಿಕ್ಕಿಂಗೆ ದಿಲೀಪ್ ಜೈಸ್ವಾಲ್, ಉತ್ತರಾಖಂಡಕ್ಕೆ ದುಶ್ಯಂತ್ ಕುಮಾರ್ ಗೌತಮ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. +ಗೂಂಡಾ ಕಾಯ್ದೆ ಮಾದರಿಯಲ್ಲೇ ಡ್ರಗ್ಸ್ ಪೆಡ್ಲರ್‌ಗಳ ಮೇಲೆ ಕ್ರಮ +ಬಿಹಾರಕ್ಕೆ ವಿನೋದ್ ತಾವ್ಡೆ, ಹರಿಯಾಣಕ್ಕೆ ಬಿಪ್ಲಬ್ ಕುಮಾರ್ ದೇವ್, ಹಿಮಾಚಲ ಪ್ರದೇಶಕ್ಕೆ ಶ್ರೀಕಾಂತ್ ಶರ್ಮಾ, ಮಧ್ಯಪ್ರದೇಶಕ್ಕೆ ಮಹೇಂದ್ರ ಕುಮಾರ್ ಸಿಂಗ್, ಒಡಿಶಾಕ್ಕೆ ವಿಜಯಪಾಲ್ ಸಿಂಗ್ ತೋಮರ್, ತಮಿಳುನಾಡಿಗೆ ಅರವಿಂದ್ ಮೆನನ್, ಪಶ್ಚಿಮ ಬಂಗಾಳಕ್ಕೆ ಮಂಗಲ್ ಪಾಂಡೆ ಇವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ. +ಮತ್ತೊಂದೆಡೆ, ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆ ಭರದಿಂದ ಸಾಗಿದೆ. ಪ್ರಣಾಳಿಕೆ ಸಿದ್ಧಪಡಿಸಲು ಸಲಹೆ ಸೂಚನೆ ನೀಡುವಂತೆ ಯುವ ಮತದಾರರನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಆಹ್ವಾನಿಸಿದ್ದು, ನಮೋ ಅಪ್ಲಿಕೇಶನ್‌ನಲ್ಲಿ ಆಲೋಚನೆಗಳನ್ನು ಹಂಚಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_178_8.txt b/eesanje/url_47_178_8.txt new file mode 100644 index 0000000000000000000000000000000000000000..ce64751df2c72a9aadb0d6eeba4dc80ae8ce478e --- /dev/null +++ b/eesanje/url_47_178_8.txt @@ -0,0 +1,14 @@ +ಬಿಹಾರ ಸಿಎಂ ನಿತೀಶ್‍ಗೆ ಬಿಗ್ ಶಾಕ್ ಕೊಟ್ಟ ತೇಜಸ್ವಿ +ಪಾಟ್ನಾ,ಜ.27-ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಬಿಹಾರ ರಾಜಕಾರಣ ಈಗ ನಿರ್ಣಾಯಕ ಘಟ್ಟ ತಲುಪಿದ್ದು, ಮುಖ್ಯಮಂತ್ರಿ ನಿತೀಶ್‍ಕುಮಾರ್‍ಗೆ ನೀಡಿದ್ದ ಬೆಂಬಲವನ್ನು ಆರ್‍ಜೆಡಿ ಹಿಂಪಡೆದಿದೆ. ಇದರಿಂದ ಜೆಡಿಯು-ಆರ್‍ಜೆಡಿ ಮೈತ್ರಿ ವಿದ್ಯುಕ್ತವಾಗಿ ಮುರಿದು ಬಿದ್ದಿದು, ಮುಖ್ಯಮಂತ್ರಿ ನಿತೀಶ್‍ಕುಮಾರ್ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಡಿಸಿಎಂ ತೇಜಸ್ವಿ ಯಾದವ್ ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ. +ಇದೀಗ ನಿತೀಶ್‍ಕುಮಾರ್ ಸದನ ದಲ್ಲಿ ಬಹುಮತ ಸಾಬೀತುಪಡಿಸಬೇಕು ಇಲ್ಲವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಇಕ್ಕಟ್ಟಿಗೆ ಸಿಲುಕಿದ್ದು, ಮುಂದೆ ನಡೆಯುವ ರಾಜಕೀಯ ವಿದ್ಯಮಾನಗಳು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿವೆ. ಮೂಲಗಳ ಪ್ರಕಾರ ನಿತೀಶ್‍ಕುಮಾರ್ ತಮ್ಮ ಸ್ಥಾನಕ್ಕೆ ಯಾವುದೇ ಕ್ಷಣದಲ್ಲೂ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿ ಜೊತೆ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಯುಗೆ ಬೆಂಬಲ ನೀಡಲು ಬಿಜೆಪಿ ಸಮ್ಮತಿಸಿವೆ. ಹೊಸ ಸರ್ಕಾರದಲ್ಲಿ ಬಿಜೆಪಿಗೆ ಎರಡು ಡಿಸಿಎಂ ಹಾಗೂ ಆರ್‍ಜೆಡಿ ಬಳಿ ಇದ್ದ ಖಾತೆಗಳನ್ನೆ ನೀಡಲು ಜೆಡಿಯು ಒಪ್ಪಿಕೊಂಡಿದೆ. +ಸುಫಾರಿ ಕೊಟ್ಟು ತಂದೆಯ ಕೊಲ್ಲಿಸಿದ ಮಗ +ಆದರೆ ಇದೀಗ ಸಿಎಂ ನಿತೀಶ್‍ಕುಮಾರ್‍ಗೆ ತೇಜಸ್ವಿ ಯಾದವ್ ಮಾಸ್ಟರ್ ಸ್ಟ್ರೋಕ್ ಕೊಟ್ಟಿರುವುದು ಎಲ್ಲರನ್ನು ಹುಬ್ಬೇರುವಂತೆ ಮಾಡಿದೆ. ಇಂದು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ನಿವಾಸದಲ್ಲಿ ಆರ್‍ಜೆಡಿಯ ಮಹತ್ವದ ಸಭೆ ನಡೆಯಲಿದ್ದು, ತೇಜಸ್ವಿ ಯಾದವ್ ಎಲ್ಲಾ ಶಾಸಕರೊಂದಿಗೆ ರಣತಂತ್ರ ರೂಪಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. +ಬಿಹಾರದಲ್ಲಿ ಬದಲಾಗುತ್ತಿರುವ ರಾಜಕೀಯದ ನಡುವೆ ತೇಜಸ್ವಿ ಯಾದವ್ ಅವರ ಈ ಸಭೆಯನ್ನು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದೆಲ್ಲದರ ಮಧ್ಯೆ, ನಿತೀಶ್ ಕುಮಾರ್ ಅವರಿಗೆ ಈ ಬಾರಿ ದಂಗೆ ಸುಲಭವಲ್ಲ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ತಮ್ಮ ಪಕ್ಷದ ಆರ್ಜೆಡಿಯ ಶಾಸಕರು ಮತ್ತು ಮುಖಂಡರೊಂದಿಗಿನ ಸಭೆಯಲ್ಲಿ ತೇಜಸ್ವಿ ಈ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳಿಂದ ಹೇಳಲಾಗುತ್ತಿದೆ. ಜೊತೆಗೆ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕೂಡ ತಮ್ಮ ಬಳಿ ಬಹುಮತವಿದೆ ಎಂದು ಹೇಳಿದ್ದಾರೆ. +ನಿತೀಶ್ ಕುಮಾರ್ ಅವರೊಂದಿಗಿನ ಜೆಡಿಯು ಮೈತ್ರಿ ಮುರಿದರೆ, ಬಿಹಾರದಲ್ಲಿ ಅತಿದೊಡ್ಡ ಪಕ್ಷವಾಗಿರುವ ಆರ್ಜೆಡಿ ರಾಜಭವನಕ್ಕೆ ಹೋಗಿ ಸರ್ಕಾರ ರಚಿಸಲು ಹಕ್ಕು ಸಾಸಬಹುದು. ರಾಜಭವನಕ್ಕೆ ಹೋಗಲು ಅನುಮತಿ ಸಿಗದಿದ್ದರೆ ತೇಜಸ್ವಿ ಯಾದವ್ ಅವರು ತಮ್ಮ ಶಾಸಕರೊಂದಿಗೆ ರಾಜಭವನದ ಹೊರಗೆ ಧರಣಿ ನಡೆಸುವ ಸಾಧ್ಯತೆಯೂ ಇದೆ. +ಮೂಲಗಳ ಪ್ರಕಾರ, ಮುಂಬರುವ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿಯೇ ಹಲವು ಅಕಾರಿಗಳು ರಾಜಭವನಕ್ಕೆ ತೆರಳಿದ್ದು, ಸಿದ್ಧತೆ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯ ಸರ್ಕಾರದ ಮೂವರು ಹಿರಿಯ ಅಧಿಕಾರಿಗಳು ರಾಜಭವನಕ್ಕೆ ತೆರಳಿದ್ದು, ಅದರಲ್ಲಿ ನಿತೀಶ್ ಕುಮಾರ್ ಅವರ ಪ್ರಮುಖ ಅಧಿಕಾರಿಯೊಬ್ಬರು ಉಪಸ್ಥಿತರಿದ್ದರು ಎಂದು ಮೂಲಗಳು ಬಹಿರಂಗಪಡಿಸಿವೆ.ರಾಜಭವನದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು ಎಂದು ಮೂಲಗಳು ಬಹಿರಂಗಪಡಿಸಿವೆ. +ನಿಗಮ – ಮಂಡಳಿ ನೇಮಕಾತಿ ಬೆನ್ನಲ್ಲೇ `ಕೈ’ನಲ್ಲಿ ಭುಗಿಲೆದ್ದ ಭಿನ್ನಮತ +ಬಿಹಾರದ ಮಹಾ ಘಟಬಂಧನ ಮೈತ್ರಿ ಸರ್ಕಾರದಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಸಿಎಂ ಆಗಿದ್ದು, ಅಂಗ ಪಕ್ಷವಾದ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಡಿಸಿಎಂ ಆಗಿದ್ದಾರೆ. ಈ ಮೈತ್ರಿ ಕೂಟದಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳೂ ಸೇರಿದಂತೆ ಹಲವು ಪಕ್ಷಗಳಿವೆ. ಇದೀಗ ನಿತೀಶ್ ಕುಮಾರ್ ಮತ್ತೆ ಎನ್‍ಡಿಎ ತೆಕ್ಕೆಗೆ ವಾಲಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. 2022ರಲ್ಲಿ ರಾಷ್ಟ್ರ ಮಟ್ಟದಲ್ಲಿ ಎನ್‍ಡಿಎ ಮೈತ್ರಿ ಕೂಟದಿಂದ ಹೊರ ಬಂದಿದ್ದ ನಿತೀಶ್ ಕುಮಾರ್, ಬಿಹಾರದಲ್ಲೂ ಬಿಜೆಪಿ ಮೈತ್ರಿ ಮುರಿದು ಮಹಾ ಘಟಬಂಧನದ ಜೊತೆ ಮೈತ್ರಿ ಸರ್ಕಾರ ರಚಿಸಿದ್ದರು. ಇದೀಗ ಎರಡೇ ವರ್ಷಗಳಲ್ಲಿ ಯೂ ಟರ್ನ್ ಹೊಡೆಯಲು ಮುಂದಾಗಿದ್ಧಾರೆ ಎನ್ನಲಾಗಿದೆ. +ಲೋಕ ಸಮರದಲ್ಲಿ ಶತಾಯ ಗತಾಯ ಬಿಜೆಪಿಯನ್ನು ಸೋಲಿಸುವ ಪಣ ತೊಟ್ಟು 28 ಪ್ರತಿಪಕ್ಷಗಳು ರಚಿಸಿಕೊಂಡಿರುವ ಐಎನ್‍ಡಿಐಎ ಮೈತ್ರಿ ಕೂಟದಲ್ಲಿ ಭಿನ್ನ ಮತದ ಬಿರುಗಾಳಿ ಜೋರಾಗಿದೆ. ಟಿಎಂಸಿ ಹಾಗೂ ಆಪ್ ಪಕ್ಷಗಳು ಪಶ್ಚಿಮ ಬಂಗಾಳ ಹಾಗೂ ಪಂಜಾಬ್‍ನಲ್ಲಿ ಏಕಾಂಗಿಯಾಗಿ ಸ್ರ್ಪಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ, ಈಗ ಬಿಹಾರದಲ್ಲಿ ಜೆಡಿಯು ಮುಖ್ಯಸ್ಥ ಹಾಗೂ ಸಿಎಂ ನಿತೀಶ್ ಕುಮಾರ್ ಐಎನ್‍ಡಿಐಎ ಮೈತ್ರಿಕೂಟದಿಂದ ದೂರ ಸರಿದು ಎನ್‍ಡಿಎ ಸೇರಿಕೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ. +ಇದರ ಬೆನ್ನಲ್ಲೇ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರು ನಿತೀಶ್ ಅವರನ್ನು ತಮ್ಮ ನಿವಾಸಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ. ಬಿಹಾರದಲ್ಲಿ ಮಹಾ ಘಟಬಂಧನದ ಜೊತೆ ಮೈತ್ರಿ ಮುರಿದುಕೊಂಡು ಅವ ಪೂರ್ವವಾಗಿ ವಿಧಾನಸಭೆ ವಿಸರ್ಜಿಸಿ ಎನ್‍ಡಿಎ ಜೊತೆ ಸೇರಿ ಚುನಾವಣೆ ಎದುರಿಸಲು ನಿತೀಶ್ ಸಜ್ಜಾಗಿದ್ಧಾರೆ ಎನ್ನಲಾಗಿದೆ. +ಹೈಕಮಾಂಡ್ ನಿತೀಶ್ ಅವರನ್ನು ಸಂಪರ್ಕಿಸಲಿದೆ ಎಂದ ಮಾಜಿ ಡಿಸಿಎಂ ಸುಶೀಲ್‍ಕುಮಾರ್ ಮೋದಿ, ಮತ್ತೆ ಎನ್‍ಡಿಎ ಒಕ್ಕೂಟಕ್ಕೆ ನಿತೀಶ್ ಸೇರುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ. ಈ ಬೆಳವಣಿಗೆಯ ನಡುವೆ ಸುಶೀಲ್ ಮೋದಿ ಸೇರಿದಂತೆ ಬಿಹಾರ ಬಿಜೆಪಿಯ ಪ್ರಮುಖ ನಾಯಕರನ್ನು ಪಕ್ಷದ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡಿದೆ. +ರಾಜಕೀಯ ಗೊಂದಲದ ನಡುವೆಯೇ ಹೊಸ ಸರ್ಕಾರ ರಚನೆಯಾಗುವ ಸೂಚನೆಗಳು ಗೋಚರಿಸುತ್ತಿದ್ದು, ಇದರ ಸಿದ್ಧತೆಗೆ ಸಂಬಂಸಿದಂತೆ ರಾಜಭವನದಲ್ಲಿ ಚಟುವಟಿಕೆ ನಡೆಯುತ್ತಿದೆ ಎಂದು ಮೂಲಗಳಿಂದ ವರದಿಯಾಗಿದೆ. ಇದೇ ವೇಳೆ ಆರ್‍ಜೆಡಿ ಪಾಳಯವೂ ಈ ನಿಟ್ಟಿನಲ್ಲಿ ಸಕ್ರಿಯವಾಗಿದ್ದು, ಒಂದು ವೇಳೆ ಮೈತ್ರಿ ಮುರಿದರೆ ಇಂದು ಮಧ್ಯಾಹ್ನ 1 ಗಂಟೆಗೆ ತೇಜಸ್ವಿ ಯಾದವ್ ನೇತೃತ್ವದಲ್ಲಿ ಸರ್ಕಾರ ರಚಿಸಲು ಆರ್‍ಜೆಡಿ ಹಕ್ಕು ಸಾಧಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. \ No newline at end of file diff --git a/eesanje/url_47_178_9.txt b/eesanje/url_47_178_9.txt new file mode 100644 index 0000000000000000000000000000000000000000..48ab39f1e9665803a6f7d16ad257e7a3ebdfed22 --- /dev/null +++ b/eesanje/url_47_178_9.txt @@ -0,0 +1,9 @@ +ಲೋಕಸಭೆ ಚುನಾವಣೆ ಗೆಲ್ಲುವವರೆಗೂ ಯಾರಿಗೂ ವಿಶ್ರಾಂತಿ ಇಲ್ಲ : ವಿಜಯೇಂದ್ರ +ಬೆಂಗಳೂರು,ಜ.27- ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಈ ಚುನಾವಣೆ ಬಂದು ಮುಗಿಯುವವರೆಗೂ ನಾವು ವಿಶ್ರಾಂತಿ ಪಡೆಯುವಂತಿಲ್ಲ. ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. +ನಗರದ ಅರಮನೆ ಮೈದಾನದಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಆರಂಭವಾದ ರಾಜ್ಯ ಬಿಜೆಪಿ ವಿಶೇóಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಎದುರಾಳಿಗಳನ್ನು ಹಗುರವಾಗಿ ತೆಗೆದುಕೊಳ್ಳದೆ, ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದು ಎಚ್ಚರಿಸಿದರು. +ಒಂದು ಕಡೆ ಲೋಕಸಭಾ ಚುನಾವಣೆ ಬರುತ್ತಿದೆ. ಇನ್ನೊಂದೆಡೆ ನೂರಾರು ವರ್ಷಗಳ ತಪಸ್ಸಿನ ಫಲವಾಗಿ ಮೊನ್ನೆ ದಿನ ಜನವರಿ 22ರಂದು ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಆಗಿರುವ ಶುಭ ಘಳಿಗೆಯಲ್ಲಿ ನಾವೆಲ್ಲ ಇಲ್ಲಿ ಸೇರಿದ್ದೇವೆ ಎಂದು ತಿಳಿಸಿದರು. ಆದರೆ, ಯಾವ ಶುಭ ಘಳಿಗೆಯಲ್ಲಿ ನಾವೆಲ್ಲ ಇದ್ದೇವೆ ಎಂದರೆ, ಕಳೆದ ಹಲವಾರು ದಶಕಗಳಿಂದ ನಿರಂತರವಾದ ಹೋರಾಟ. ಪ್ರಭು ಶ್ರೀರಾಮಚಂದ್ರನ ಮಂದಿರ ಲೋಕಾರ್ಪಣೆಗೆ ನಿರಂತರ ಹೋರಾಟ ನಡೆದಿತ್ತು ಎಂದು ನೆನಪಿಸಿದರು. +ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್ +ಒಂದು ದಿನವೂ ವಿಶ್ರಾಂತಿಯನ್ನು ತೆಗೆದುಕೊಳ್ಳದೆ, ನಮ್ಮ ಪ್ರಧಾನಮಂತ್ರಿಗಳು ದೇಶದ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದ್ದಾರೆ. ಈ ಮೂಲಕ ಇವತ್ತು ಭಾರತವನ್ನು ಮುನ್ನಡೆಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ, ಕಾರ್ಯಕರ್ತರಿಗಾಗಿ, ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ ಎಂದು ವಿವರಿಸಿದರು. ಜಮ್ಮು ಕಾಶ್ಮೀರವು ಹಲವಾರು ವರ್ಷಗಳಿಂದ ಉಗ್ರಗಾಮಿಗಳ ಚಟುವಟಿಕೆಯಿಂದ ತತ್ತರಿಸಿ ಹೋಗಿತ್ತು. +ಅಲ್ಲಿದ್ದ ಆರ್ಟಿಕಲ್ 370 ರದ್ದುಪಡಿಸಿದರೆ ಅಲ್ಲೋಲಕಲ್ಲೋಲ ಆಗಲಿದೆ ಎಂದು ಬಿಂಬಿಸುವ ಕೆಲಸ ಕಾಂಗ್ರೆಸ್‍ನಿಂದ ಆಗಿತ್ತು. ನರೇಂದ್ರ ಮೋದಿಯವರ ದಿಟ್ಟ ನಾಯಕತ್ವ ಮತ್ತೊಂದು ಕಡೆ ಹೆಮ್ಮೆಯ ಗೃಹ ಸಚಿವ ಅಮಿತ್ ಶಾ ಜೀ ಅವರ ದಿಟ್ಟ ನಿರ್ಧಾರದಿಂದ ಆರ್ಟಿಕಲ್ 370 ರದ್ದು ಮಾಡುವ ಮೂಲಕ ಅಲ್ಲಿದ್ದ ಉಗ್ರಗಾಮಿ ಚಟುವಟಿಕೆಗಳಿಗೆ ಆರ್ಥಿಕ ಶಕ್ತಿ ಕೊಡುವುದನ್ನೂ ಬುಡಸಮೇತ ಕಿತ್ತು ಹಾಕುವ ಕೆಲಸ ಆಗಿದೆ ಎಂದು ಮೆಚ್ಚುಗೆ ಸೂಚಿಸಿದರು. +ಒಂದು ಕಡೆ ಅಯೋಧ್ಯೆ ವಿಚಾರದಲ್ಲಿ ಜನರೆಲ್ಲರೂ ಸಂತೋಷದಿಂದಿದ್ದರೆ, ರಾಜ್ಯದಲ್ಲಿದ್ದ ದುಷ್ಟ ಕಾಂಗ್ರೆಸ್ ಸರಕಾರವು, ಹುಬ್ಬಳ್ಳಿಯ ಶ್ರಿಕಾಂತ ಪೂಜಾರಿಯವರನ್ನು ಬಂಸಿ ಸೇಡು ತೀರಿಸುವ ಕೆಲಸ ಮಾಡಿತು ಎದು ದೂರಿದರು. ಸರಕಾರ ಬಂದು 8 ತಿಂಗಳಾದರೂ ಸಹ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮತ್ತೊಂದು ಕಡೆ ಬರದ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರೈತರ ಸಂಕಷ್ಟಕ್ಕೆ ಸ್ಪಂಸುತ್ತಿಲ್ಲ. ರೈತರು ಭೀಕರ ಬರಗಾಲಕ್ಕೆ ತುತ್ತಾಗಿ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಕೂಡ ಅದು ಎಚ್ಚತ್ತಿಲ್ಲ ಎಂದು ಟೀಕಿಸಿದರು. +ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮತ್ತು ಪ್ರಮುಖರು ಉಪಸ್ಥಿತರಿದ್ದರು. \ No newline at end of file diff --git a/eesanje/url_47_179_1.txt b/eesanje/url_47_179_1.txt new file mode 100644 index 0000000000000000000000000000000000000000..9017ab6baa292807631e905aee19c15f2a2a3435 --- /dev/null +++ b/eesanje/url_47_179_1.txt @@ -0,0 +1,5 @@ +ಕಲ್ಕತ್ತಾ ಹೈಕೋರ್ಟ್ ಏಕಪೀಠ ಸದಸ್ಯ ಪೀಠದ ತೀರ್ಪಿಗೆ ಸುಪ್ರೀಂ ತಡೆ +ನವದೆಹಲಿ,ಜ.27- ಪಶ್ಚಿಮ ಬಂಗಾಳದಲ್ಲಿ ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಅವರ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಅಭೂತಪೂರ್ವ ನಿದರ್ಶನದಲ್ಲಿ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ತಮ್ಮ ಸಹೋದ್ಯೋಗಿ, ವೈದ್ಯಕೀಯ ಪ್ರವೇಶ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಏಕಸದಸ್ಯ ನ್ಯಾಯಾೀಧಿಶರ ಆದೇಶವನ್ನು ತಡೆಹಿಡಿದ ವಿಭಾಗೀಯ ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಸೌಮೆನ್ ಸೇನ್ ಅವರು ರಾಜಕೀಯ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. +ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಇಂದು ವಿಚಾರಣೆ ನಡೆಸಿತು. ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರಿದ್ದ ಏಕಸದಸ್ಯ ಪೀಠವು ನ್ಯಾಯಮೂರ್ತಿಗಳಾದ ಸೌಮೆನ್ ಸೇನ್ ಮತ್ತು ಉದಯ್ ಕುಮಾರ್ ಅವರ ವಿಭಾಗೀಯ ಪೀಠ ನೀಡಿದ ಆದೇಶವು ಸಂಪೂರ್ಣ ಕಾನೂನುಬಾಹಿರ ಮತ್ತು ನಿರ್ಲಕ್ಷಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. +ಜನರ ಗಮನ ಬೇರೆಡೆ ತಿರುಗಿಸುತ್ತದೆ ಕೇಂದ್ರ ಸರ್ಕಾರ : ಜೈರಾಮ್ +ಸರ್ಕಾರದ ಲೆಕ್ಕ ಪರಿಶೋಧಕ ಸಿಎಜಿಯನ್ನು ನೇಮಿಸುವ ಕಾರ್ಯವಿಧಾನವನ್ನು ಪ್ರಶ್ನಿಸುವ ಮನವಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಕೋರಲಾಗಿದೆ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಮೀಸಲಾತಿ ವರ್ಗದ ಅಭ್ಯರ್ಥಿಗಳ ದಾಖಲಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಎಂಬಿಬಿಎಸ್ ಅಭ್ಯರ್ಥಿ ಇತಿಶಾ ಸೊರೆನ್ ಸಲ್ಲಿಸಿದ್ದ ಮನವಿಯ ಮೇಲೆ ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದು ಹೇಳುವ ಮೂಲಕ ಏಕ ಸದಸ್ಯ ಪೀಠವು ಆರಂಭದಲ್ಲಿ ಸಿಬಿಐ ತನಿಖೆಗೆ ಆದೇಶಿಸಿತ್ತು. \ No newline at end of file diff --git a/eesanje/url_47_179_10.txt b/eesanje/url_47_179_10.txt new file mode 100644 index 0000000000000000000000000000000000000000..17fb2d70fa8663f48f91909729481361c0f7e479 --- /dev/null +++ b/eesanje/url_47_179_10.txt @@ -0,0 +1,6 @@ +ಬಂಧನಿ ಪೇಟ ಧರಿಸಿ ಗಮನ ಸೆಳೆದ ಮೋದಿ +ನವದೆಹಲಿ,ಜ.26- ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೇಶದ ವೈವಿಧ್ಯಮಯ ಸಂಸ್ಕøತಿಯನ್ನು ತಮ್ಮ ವಿಶೇಷ ಆಯ್ಕೆಗಳೊಂದಿಗೆ ಆಚರಿಸಲು ಹೆಸರುವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಂಧನಿ ಪೇಟ ಧರಿಸಿ ಗಮನ ಸೆಳೆದರು. +ಗಣರಾಜ್ಯೋತ್ಸವ ಪರೇಡ್‍ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆ ಅವರ ಉಡುಪಿನ ಫಸ್ಟ್ ಲುಕ್ ಬಹಿರಂಗವಾಯಿತು. ವಿಶಿಷ್ಟವಾದ ಪೇಟದ ಜೊತೆಗೆ ಅವರು ಕಂದು ಬಣ್ಣದ ಕೋಟ್ ಮತ್ತು ಬಿಳಿ ಪ್ಯಾಂಟ್‍ನೊಂದಿಗೆ ಬಿಳಿ ಕುರ್ತಾವನ್ನು ಧರಿಸಿದ್ದರು. +ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯ ಪಥದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸ್ವದೇಶಿ ಗನ್ ಸಿಸ್ಟಮ್ 105-ಎಂಎಂ ಇಂಡಿಯನ್ ಫೀಲ್ಡ್ ಗನ್‍ಗಳೊಂದಿಗೆ ವಿಜೃಂಭಣೆಯ 21-ಗನ್ ಸೆಲ್ಯೂಟ್‍ನೊಂದಿಗೆ ರಾಷ್ಟ್ರಗೀತೆಯ ನಂತರ ಧ್ವಜಾರೋಹಣವನ್ನು ಮಾಡಲಾಯಿತು. +ಗಣರಾಜ್ಯೋತ್ಸವದಲ್ಲಿ ಸ್ತ್ರೀ ಶಕ್ತಿ ಪ್ರದರ್ಶನ ಅನಾವರಣ +ನಂತರ 105 ಹೆಲಿಕಾಪ್ಟರ್ ಘಟಕದ ಹೆಲಿಕಾಪ್ಟರ್‍ಗಳು ಕರ್ತವ್ಯ ಪಥದಲ್ಲಿ ಹಾಜರಿದ್ದ ಪ್ರೇಕ್ಷಕರ ಮೇಲೆ ಹೂ ಮಳೆ ಸುರಿಸಿದವು. ಇದರ ನಂತರ ಆವಾಹನ್, 100 ಕ್ಕೂ ಹೆಚ್ಚು ಮಹಿಳಾ ಕಲಾವಿದರಿಂದ ವಿವಿಧ ರೀತಿಯ ತಾಳವಾದ್ಯಗಳನ್ನು ನುಡಿಸುವ ಬ್ಯಾಂಡ್ ಪ್ರದರ್ಶನವು ನಾರಿ ಶಕ್ತಿಯನ್ನು ಸಂಕೇತಿಸಿತು. \ No newline at end of file diff --git a/eesanje/url_47_179_11.txt b/eesanje/url_47_179_11.txt new file mode 100644 index 0000000000000000000000000000000000000000..10f8e00c99ff1be407d2f1e0c49e2b11ebc00ef0 --- /dev/null +++ b/eesanje/url_47_179_11.txt @@ -0,0 +1,7 @@ +ಮ್ಯಾಕ್ರನ್ ಸೆಲ್ಫಿ ವಿತ್ ಮೋದಿ +ನವದೆಹಲಿ,ಜ.26- ಇಂದಿನ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಮುಖ್ಯ ಅತಿಥಿಯಾಗಿರುವ ಫ್ರೆಂಚ್ ಪ್ರಧಾನಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸೆಲ್ಫಿಯನ್ನು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ನನ್ನ ಆತ್ಮೀಯ ಸ್ನೇಹಿತ ನರೇಂದ್ರ ಮೋದಿಜೀ ಹಾಗೂ ಭಾರತೀಯ ಜನತೆ, ನಿಮ್ಮ ಗಣರಾಜ್ಯೋತ್ಸವದಂದು ನನ್ನ ಆತ್ಮೀಯ ಶುಭಾಶಯಗಳು. ನಿಮ್ಮೊಂದಿಗೆ ಇರುವುದಕ್ಕೆ ಸಂತೋಷ ಮತ್ತು ಹೆಮ್ಮೆ. ನಾವು ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸೋಣ!, ಎಂದು ಅವರು ಹೇಳಿದ್ದಾರೆ. + @, , . .’ !../e5kg1PEc0p +ದ್ವಿಪಕ್ಷೀಯ ಕಾರ್ಯತಂತ್ರದ ನಿಶ್ಚಿತಾರ್ಥವನ್ನು ಮತ್ತಷ್ಟು ಕ್ರೋಢೀಕರಿಸಲು ಜೈಪುರದ ರಾಜಮನೆತನದ ಪರಂಪರೆಯನ್ನು ಪ್ರದರ್ಶಿಸುವ 19 ನೇ ಶತಮಾನದ ಅರಮನೆಯಲ್ಲಿ ಪ್ರಧಾನಿ ಮೋದಿ ಮತ್ತು ಎಮ್ಯಾನುಯೆಲ್ ಮ್ಯಾಕ್ರನ್ ನಿನ್ನೆ ವ್ಯಾಪಕ ಮಾತುಕತೆ ನಡೆಸಿದ್ದರು. ಫ್ರೆಂಚ್ ಅಧ್ಯಕ್ಷರಿಗೆ ಪಿಂಕ್ ಸಿಟಿಯಲ್ಲಿ ರೆಡ್ ಕಾರ್ಪೆಟ್ ಸ್ವಾಗತ ನೀಡಿದ ಗಂಟೆಗಳ ನಂತರ ಮಾತುಕತೆ ನಡೆಯಿತು, ನಂತರ ಪ್ರಧಾನಿ ಮೋದಿ-ಮ್ಯಾಕ್ರಾನ್ ರೋಡ್ ಶೋ ಜಂತರ್ ಮಂತರ್‍ನ ಖಗೋಳ ವೀಕ್ಷಣಾ ತಾಣದಿಂದ ಐಕಾನಿಕ್ ಹವಾ ಮಹಲ್‍ವರೆಗೆ ನಡೆಯಿತು. +ಇಂಡಿಯಾ ಒಕ್ಕೂಟದ ಏಕತೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ +ಮ್ಯಾಕ್ರನ್ ಜೈಪುರದ ಹೊರವಲಯದಲ್ಲಿರುವ ಅರಾವಳಿ ಶ್ರೇಣಿಯಲ್ಲಿರುವ ಅಂಬರ್ ಕೋಟೆಗೆ ಭೇಟಿ ನೀಡಿದರು. ಭಾರತಕ್ಕೆ 26 ರಫೇಲ್-ಎಂ (ಸಾಗರ ಆವೃತ್ತಿ) ಫೈಟರ್ ಜೆಟ್‍ಗಳು ಮತ್ತು ಮೂರು ಫ್ರೆಂಚ್ ವಿನ್ಯಾಸದ ಸ್ಕಾರ್ಪೀನ್ ಜಲಾಂತರ್ಗಾಮಿ ನೌಕೆಗಳ ಖರೀದಿಗೆ ಒದಗಿಸುವ ಎರಡು ಮೆಗಾ ರಕ್ಷಣಾ ಒಪ್ಪಂದಗಳನ್ನು ಮುದ್ರೆಯೊತ್ತಲು ಉಭಯ ಕಡೆಯ ಉನ್ನತ ಸಮಾಲೋಚಕರು ಕಣ್ಣಿಟ್ಟಿರುವ ಕಾರಣ ಫ್ರೆಂಚ್ ಅಧ್ಯಕ್ಷರ ಎರಡು ದಿನಗಳ ಭಾರತ ಭೇಟಿ ಮಹತ್ವಪಡೆದುಕೊಂಡಿದೆ. ಕಳೆದ ಜುಲೈನಲ್ಲಿ ಪ್ಯಾರಿಸ್‍ನಲ್ಲಿ ನಡೆದ ಪ್ರತಿಷ್ಠಿತ ಬಾಸ್ಟಿಲ್ ಡೇ ಪರೇಡ್‍ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿದ್ದರು. \ No newline at end of file diff --git a/eesanje/url_47_179_12.txt b/eesanje/url_47_179_12.txt new file mode 100644 index 0000000000000000000000000000000000000000..108fc71fd773cbb5d6e22709135b4c9ac60bf5f9 --- /dev/null +++ b/eesanje/url_47_179_12.txt @@ -0,0 +1,6 @@ +ಭಾರತೀಯ ವಿದ್ಯಾರ್ಥಿಗಳಿಗೆ ಫ್ರಾನ್ಸ್ ನೆರವು : ಮ್ಯಾಕ್ರನ್ +ನವದೆಹಲಿ,ಜ.26- ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‍ನಲ್ಲಿ ವಿದ್ಯಾಭ್ಯಾಸ ಮಾಡಲು ಎಲ್ಲ ರೀತಿಯ ಅಗತ್ಯಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಪ್ರಕಟಿಸಿದ್ದಾರೆ. ಈ ವರ್ಷದ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‍ನಲ್ಲಿ ಓದುವುದನ್ನು ಖಚಿತಪಡಿಸಿಕೊಳ್ಳುವ ಕ್ರಮಗಳನ್ನು ಪ್ರಕಟಿಸಿದರು. +2030 ರ ವೇಳೆಗೆ 30,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದುವ ಮಹತ್ವಾಕಾಂಕ್ಷೆಯ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ಅವರು ಹೇಳಿದರು. 2030 ರಲ್ಲಿ ಫ್ರಾನ್ಸ್‍ನಲ್ಲಿ 30,000 ಭಾರತೀಯ ವಿದ್ಯಾರ್ಥಿಗಳು. ಇದು ಬಹಳ ಮಹತ್ವಾಕಾಂಕ್ಷೆಯ ಗುರಿಯಾಗಿದೆ, ಆದರೆ ಅದನ್ನು ಮಾಡಲು ನಾನು ನಿರ್ಧರಿಸಿದ್ದೇನೆ ಎಂದು ಮ್ಯಾಕ್ರನ್ ಎಕ್ಸ್ ಮಾಡಿದ್ದಾರೆ. ಫ್ರಾನ್ಸ್ ಭಾರತೀಯ ವಿದ್ಯಾರ್ಥಿಗಳಿಗೆ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ವಿವರಿಸಿದ ಮ್ಯಾಕ್ರನ್, ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅಂತರರಾಷ್ಟ್ರೀಯ ತರಗತಿಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು. +ಇಂಡಿಯಾ ಒಕ್ಕೂಟದ ಏಕತೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ +ನಾವು ಫ್ರೆಂಚ್ ಕಲಿಯಲು ಹೊಸ ಕೇಂದ್ರಗಳೊಂದಿಗೆ ಅಲೈಯನ್ಸ್ ಫ್ರಾಂಚೈಸ್‍ಗಳ ನೆಟ್‍ವರ್ಕ್ ಅನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ನಾವು ಅಂತರರಾಷ್ಟ್ರೀಯ ತರಗತಿಗಳನ್ನು ರಚಿಸುತ್ತಿದ್ದೇವೆ, ಇದು ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ನಮ್ಮ ವಿಶ್ವವಿದ್ಯಾಲಯಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ಮ್ಯಾಕ್ರನ್ ಹೇಳಿದರು. +ಕೊನೆಯದಾಗಿ ಆದರೆ, ಫ್ರಾನ್ಸ್‍ನಲ್ಲಿ ಅಧ್ಯಯನ ಮಾಡಿದ ಯಾವುದೇ ಮಾಜಿ ಭಾರತೀಯ ವಿದ್ಯಾರ್ಥಿಗಳಿಗೆ ನಾವು ವೀಸಾ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತೇವೆ ಎಂದು ಫ್ರೆಂಚ್ ಅಧ್ಯಕ್ಷರು ತಿಳಿಸಿದ್ದಾರೆ. \ No newline at end of file diff --git a/eesanje/url_47_179_2.txt b/eesanje/url_47_179_2.txt new file mode 100644 index 0000000000000000000000000000000000000000..7b53d29d222ded357c383993965be80f28b0b7d6 --- /dev/null +++ b/eesanje/url_47_179_2.txt @@ -0,0 +1,8 @@ +ಬಿಜೆಪಿಯಿಂದ ಎಎಪಿ ಶಾಸಕರಿಗೆ 25 ಕೋಟಿ ಆಫರ್ ; ಕೇಜ್ರಿವಾಲ್ +ನವದೆಹಲಿ,ಜ.27- ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಏಳು ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ತಲಾ 25 ಕೋಟಿ ನೀಡಿ ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. +ಎಎಪಿ ಶಾಸಕರೊಂದಿಗೆ ಬಿಜೆಪಿ ಮಾತುಕತೆಯಲ್ಲಿ ತೊಡಗಿದೆ ಮತ್ತು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿಯನ್ನು ಸನ್ನಿಹಿತವಾಗಿ ಬಂಧಿಸುವುದಾಗಿ ಬೆದರಿಕೆ ಹಾಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಆಪಾದಿತ ಸಂಭಾಷಣೆಯು ದೆಹಲಿಯಲ್ಲಿ ಎಎಪಿ ಸರ್ಕಾರವನ್ನು ಉರುಳಿಸುವ ಕೆಟ್ಟ ಯೋಜನೆಯನ್ನು ಒಳಗೊಂಡಿದೆ ಎಂದು ಅವರು ದೂರಿದ್ದಾರೆ. +ಜನರ ಗಮನ ಬೇರೆಡೆ ತಿರುಗಿಸುತ್ತದೆ ಕೇಂದ್ರ ಸರ್ಕಾರ : ಜೈರಾಮ್ +ಸುದೀರ್ಘ ಸಾಮಾಜಿಕ ಮಾಧ್ಯಮ ಪೋಸ್ಟ್‍ನಲ್ಲಿ, ದೆಹಲಿ ಮುಖ್ಯಮಂತ್ರಿ ಈ ಆರೋಪ ಮಾಡಿದ್ದಾರೆ. ಇತ್ತೀಚೆಗೆ, ಅವರು ಬಿಜೆಪಿ ದೆಹಲಿ ಮುಖಂಡರು ನಮ್ಮ 7 ಶಾಸಕರನ್ನು ಸಂಪರ್ಕಿಸಿ – ಕೆಲವು ದಿನಗಳ ನಂತರ ನಾವು ಕೇಜ್ರಿವಾಲ್ ಅವರನ್ನು ಬಂಧಿಸುತ್ತೇವೆ. ನಂತರ ನಾವು ಶಾಸಕರನ್ನು ಒಡೆಯುತ್ತೇವೆ. 21 ಶಾಸಕರ ಜೊತೆ ಮಾತುಕತೆ ನಡೆಸಲಾಗಿದೆ. ಇತರರೊಂದಿಗೂ ಮಾತುಕತೆ.ಆ ನಂತರ ದೆಹಲಿಯ ಆಮ್ ಆದ್ಮಿ ಸರ್ಕಾರವನ್ನು ಉರುಳಿಸುತ್ತೇವೆ.ನೀವೂ ಬನ್ನಿ 25 ಕೋಟಿ ನೀಡಿ ಬಿಜೆಪಿ ಟಿಕೆಟ್ ಮೇಲೆ ಚುನಾವಣೆಗೆ ಸ್ರ್ಪಧಿಸಲು ಆಫರ್ ನೀಡಿದ್ದಾರಂತೆ. +21 ಶಾಸಕರನ್ನು ಸಂಪರ್ಕಿಸುವ ಹೇಳಿಕೆಯ ಹೊರತಾಗಿಯೂ, ಕೇವಲ ಏಳು ಶಾಸಕರನ್ನು ಸಂಪರ್ಕಿಸಲಾಗಿದೆ ಎಂದು ಆಪ್‍ಗೆ ಲಭ್ಯವಿರುವ ಮಾಹಿತಿಯು ಸೂಚಿಸುತ್ತದೆ ಮತ್ತು ಅವರೆಲ್ಲರೂ ಪ್ರಲೋಭನಗೊಳಿಸುವ ಪ್ರಸ್ತಾಪವನ್ನು ದೃಢವಾಗಿ ನಿರಾಕರಿಸಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. +ಇದರರ್ಥ ಯಾವುದೇ ಮದ್ಯದ ಹಗರಣದ ತನಿಖೆಗಾಗಿ ನನ್ನನ್ನು ಬಂಸಲಾಗುತ್ತಿಲ್ಲ ಆದರೆ ಅವರು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಉರುಳಿಸಲು ಪಿತೂರಿ ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಅವರು ನಮ್ಮ ಸರ್ಕಾರವನ್ನು ಬೀಳಿಸಲು ಅನೇಕ ಷಡ್ಯಂತ್ರಗಳನ್ನು ಮಾಡಿದರು. +ಆದರೆ ಅವರು ಯಾವುದೇ ಯಶಸ್ಸನ್ನು ಪಡೆಯಲಿಲ್ಲ, ದೇವರು ಮತ್ತು ಜನರು ಯಾವಾಗಲೂ ನಮ್ಮನ್ನು ಬೆಂಬಲಿಸುತ್ತಾರೆ, ನಮ್ಮ ಎಲ್ಲಾ ಶಾಸಕರು ಸಹ ಬಲವಾಗಿ ಜೊತೆಯಾಗಿದ್ದಾರೆ. ಈ ಬಾರಿಯೂ ಈ ಜನರು ತಮ್ಮ ನೀಚತನದಲ್ಲಿ ವಿಫಲರಾಗುತ್ತಾರೆ ಎಂದಿದ್ದಾರೆ. \ No newline at end of file diff --git a/eesanje/url_47_179_3.txt b/eesanje/url_47_179_3.txt new file mode 100644 index 0000000000000000000000000000000000000000..b651f6fcc8fff4fb490b9e650018f811b02a72f6 --- /dev/null +++ b/eesanje/url_47_179_3.txt @@ -0,0 +1,9 @@ +ಡ್ರಗ್ಸ್ ನೀಡಿ ಅತ್ಯಾಚಾರ ನಡೆಸಿದ ಇನ್‍ಸ್ಟಾಗ್ರಾಮ್‍ ಸ್ನೇಹಿತ +ಮುಂಬೈ,ಜ.27- ಇಲ್ಲಿನ 21 ವರ್ಷದ ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾದ ಮತ್ತು ಸ್ನೇಹ ಬೆಳೆಸಿದ ವ್ಯಕ್ತಿಯೊಬ್ಬ ಮಾದಕವಸ್ತು ಸೇವಿಸಿ ನಂತರ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಮಹಿಳೆ ತನ್ನ ಅತ್ಯಂತ ಆಘಾತಕಾರಿ ಅನುಭವ ಎಂದು ವಿವರಿಸಿದ ದುಃಖದ ವಿವರಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿ ತನ್ನ ಗುರುತನ್ನು ಬಹಿರಂಗಪಡಿಸಿಲ್ಲ. +ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಹೀತಿಕ್ ಷಾ ಎಂದು ಗುರುತಿಸಲಾಗಿದೆ ಮತ್ತು ಸಂತ್ರಸ್ತೆ ವೈಯಕ್ತಿಕವಾಗಿ ಭೇಟಿಯಾಗಲು ನಿರ್ಧರಿಸುವ ಮೊದಲು ಇನ್ಸ್‍ಟಾದಲ್ಲಿ ಮಾತ್ರ ಸಂವಹನ ನಡೆಸಿದ್ದರು. ಘಟನೆಯು ಜನವರಿ 13 ರಂದು ಸಂಭವಿಸಿದೆ ಎಂದು ವರದಿಯಾಗಿದೆ ಮತ್ತು ದಕ್ಷಿಣ ಮುಂಬೈನ ವರ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. +ತನ್ನ ಇನ್‍ಸ್ಟಾಗ್ರಾಮ್ ಪೋಸ್ಟ್‍ನಲ್ಲಿ, ಮಹಿಳೆಯು ಸಾಂದರ್ಭಿಕ ರಾತ್ರಿಯಾಗಬೇಕಾದದ್ದು ಹೇಗೆ ದುಃಸ್ವಪ್ನವಾಗಿ ಮಾರ್ಪಟ್ಟಿದೆ ಎಂದು ವಿವರಿಸಿದ್ದಾರೆ. ಅವರು ಬಾಸ್ಟಿಯನ್ ರೆಸ್ಟೋರೆಂಟ್‍ಗೆ ಹೋಗುವ ಮೊದಲು ಹುಡುಗಿ ಹೀತಿಕ್ ಷಾ ಅವರನ್ನು ಭೇಟಿಯಾಗಿ ಮತ್ತು ಪಾನೀಯಗಳನ್ನು ಸೇವಿಸಿದ್ದರು. ಟಕಿಲಾ ಶಾಟ್‍ಗಳನ್ನು ಸೇವಿಸಿದ ನಂತರ ತಾನು ನಶೆ ಮತ್ತು ಆತಂಕ ಅನುಭವಿಸಲು ಪ್ರಾರಂಭಿಸಿದೆ ಎಂದು ಮಹಿಳೆ ಹೇಳಿದ್ದಾರೆ ಮತ್ತು ತನಗೆ ತಿಳಿಯದೆ ಮಾದಕ ದ್ರವ್ಯ ಸೇವಿಸಿರಬಹುದು ಎಂದು ಅವರು ಶಂಕಿಸಿದ್ದಾರೆ. +ಜನರ ಗಮನ ಬೇರೆಡೆ ತಿರುಗಿಸುತ್ತದೆ ಕೇಂದ್ರ ಸರ್ಕಾರ : ಜೈರಾಮ್ +ಆತ ನನಗೆ ಹೆಚ್ಚು ಕುಡಿಯಲು ಒತ್ತಾಯಿಸಿದರು, ನಂತರ ಏನಾಯಿತು ಎಂದು ನೆನಪಿಸಿಕೊಳ್ಳುವುದಿಲ್ಲ ಎಂದು ಆಕೆ ತನ್ನ ಮೇಲೆ ಬೀಯಿಂಗ್ ರೂಫಿಡ್ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಬೀಯಿಂಗ್ ರೂಫಿಡ್ ಎನ್ನುವುದು ಯಾರೋ ಅತ್ಯಾಚಾರಕ್ಕೊಳಗಾದ ಅಥವಾ ಮಾದಕ ದ್ರವ್ಯ ಸೇವಿಸಿದ ನಂತರ ಲೈಂಗಿಕವಾಗಿ ದೌರ್ಜನ್ಯಕ್ಕೊಳಗಾಗುವ ವಿಷಯವಾಗಿದೆ. +ಆತನಿಂದ ಅತ್ಯಾಚಾರಕ್ಕೊಳಗಾಗುವುದನ್ನು ಕಂಡು ಎಚ್ಚರವಾಯಿತು ಎಂದು ಅವಳು ಹೇಳುತ್ತಾಳೆ. ಅವಳು ವಿರೋಧಿಸಲು ಪ್ರಯತ್ನಿಸಿದರೂ, ಆರೋಪಿಯು ಆಕ್ರಮಣವನ್ನು ಮುಂದುವರೆಸಿದನು ಮತ್ತು ದೈಹಿಕ ಹಿಂಸೆಗೆ ಸಹ ಆಶ್ರಯಿಸಿದನು, ತೀವ್ರ ಕೋಪದಿಂದ ಮೂರು ಬಾರಿ ಕಪಾಳಮೋಕ್ಷ ಮಾಡಿ ನನ್ನನ್ನು ಹೆದರಿಸಿದ್ದಾನೆ. ಅತ್ಯಾಚಾರವೂ ಶಾ ಸ್ನೇಹಿತನ ಮನೆಯಲ್ಲಿ ನಡೆದಿದೆ ಎಂದು ಆಕೆ ಮಾಹಿತಿ ನೀಡಿದ್ದಾರೆ. +ಬ್ರೇಕಿಂಗ್ : ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ, ಮೊದಲ ಪಟ್ಟಿ ಬಿಡುಗಡೆ +ಆರೋಪಿಯು ಮರುದಿನ ಬೆಳಿಗ್ಗೆ ತನ್ನ ವರ್ತನೆಗೆ ಕ್ಷಮೆಯಾಚಿಸಿದನು, ಆದರೆ ಮಹಿಳೆ ಕ್ಷಮೆಯಾಚಿಸುವುದರಲ್ಲಿ ಅರ್ಥವಿಲ್ಲ ಎಂದು ಹೇಳಿಕೊಂಡಿದ್ದಾರೆ. ಅವನ ಬೆಳಿಗ್ಗೆ ಕ್ಷಮೆಯಾಚನೆಯು ನನಗೆ ಏನೂ ಅರ್ಥವಾಗುವುದಿಲ್ಲ, ಮತ್ತು ಅವನು ಏನು ಮಾಡಿದ್ದಾನೆಂದು ತಿಳಿದಿರುವ ಕಾರಣ ಆತ ಪರಾರಿಯಾಗಿದ್ದಾನೆ. 12 ದಿನಗಳು ಕಳೆದಿವೆ ಮತ್ತು ಅವನನ್ನು ಬಂಸಲಾಗಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_179_4.txt b/eesanje/url_47_179_4.txt new file mode 100644 index 0000000000000000000000000000000000000000..accd6e4fe5a22025e8fb0ff918904300abd096c7 --- /dev/null +++ b/eesanje/url_47_179_4.txt @@ -0,0 +1,8 @@ +ರಾಹುಲ್ ನಡೆಸುತ್ತಿರುವುದು ಭಾರತ್ ತೋಡೋ ಯಾತ್ರೆ : ಅಠಾವಳೆ +ದಿಬ್ರುಗಢ,ಜ.27- ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯನ್ನು ಭಾರತ್ ತೋಡೋ ಯಾತ್ರೆ (ಬ್ರೇಕ್ ಇಂಡಿಯಾ ಯಾತ್ರೆ) ಎಂದು ಹೇಳಿದ್ದಾರೆ. ಇದು ರಾಹುಲ್ ಗಾಂಧಿಯವರ ನ್ಯಾಯ ಯಾತ್ರೆ ಅಲ್ಲ ಆದರೆ ಇದು ಅನ್ಯಾಯ ಯಾತ್ರೆ ಎಂದು ನಾನು ಭಾವಿಸುತ್ತೇನೆ. ಇದು ಭಾರತ್ ಜೋಡೋ ಯಾತ್ರೆಯಲ್ಲ ಆದರೆ ಭಾರತ್ ತೋಡೋ ಯಾತ್ರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. +ಕೇವಲ ರಾಜಕೀಯ ನಾಟಕ ಸೃಷ್ಟಿಸುವುದಕ್ಕಾಗಿಯೇ ಯಾತ್ರೆ ನಡೆಸಲಾಗುತ್ತಿದೆ ಎಂದ ಅವರು, ಅದರ ಅಗತ್ಯವಿಲ್ಲ ಎಂದು ಅವರು ಹೇಳಿದರು. ಈ ಹಿಂದೆ ದೇಶವನ್ನು ವಿಭಜಿಸಲಾಗಿತ್ತು ಆದರೆ ಬಿಆರ್ ಅಂಬೇಡ್ಕರ್ ಅವರ ಸಂವಿಧಾನವು ಅದನ್ನು ಒಡೆಯಲು ಅಸಾಧ್ಯವಾದ ರೀತಿಯಲ್ಲಿ ಭಾರತವನ್ನು ಒಂದುಗೂಡಿಸಿದೆ. +ರಾಹುಲ್ ಗಾಂಧಿಯವರು ದೇಶದ ಬಗ್ಗೆ ಚಿಂತಿಸಬೇಕಾಗಿಲ್ಲ; ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ನಾವು ಇಲ್ಲಿದ್ದೇವೆ ಎಂದು ಅವರು ರಾಹುಲ್ ಕಾಲೇಳೆದಿದ್ದಾರೆ.ಇನ್ನು ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಗೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದಿದ್ದಾರೆ. +ಬ್ರೇಕಿಂಗ್ : ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ, ಮೊದಲ ಪಟ್ಟಿ ಬಿಡುಗಡೆ +ಅವರು (ಕಾಂಗ್ರೆಸï) ಅಧಿಕಾರದಲ್ಲಿದ್ದಾಗ, ಅವರು ದೇಶವನ್ನು ಒಗ್ಗೂಡಿಸಲು ಅಥವಾ ಜನರಿಗೆ ನ್ಯಾಯವನ್ನು ನೀಡಲು ಪ್ರಯತ್ನಿಸಲಿಲ್ಲ, ಇದು ಕೇವಲ ನಾಟಕವಾಗಿದೆ ಆದ್ದರಿಂದ ಈ ಯಾತ್ರೆಯು ಕಾಂಗ್ರೆಸ್‍ಗೆ ಪ್ರಯೋಜನವಾಗುವುದಿಲ್ಲ ಎಂದು ಅವರು ಹೇಳಿದರು. +ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರು ತಮ್ಮ ಪಕ್ಷದ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ ಹಳೆಯ ಪಕ್ಷವು ಕೋರಿದ ಸಣ್ಣ ಸಭೆ ಗೆ ಸಿಲಿಗುರಿಯ ಆಡಳಿತವು ಅನುಮತಿ ನಿರಾಕರಿಸಿದೆ ಎಂದು ಆರೋಪಿಸಿದ್ದಾರೆ. +ಭಾರತ್ ಜೋಡೋ ನ್ಯಾಯ್ ಯಾತ್ರೆಯು ಆರಂಭದಿಂದಲೂ ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಅಥವಾ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳದಲ್ಲಿ ಹಲವಾರು ಸವಾಲುಗಳನ್ನು ಸ್ವೀಕರಿಸುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_179_5.txt b/eesanje/url_47_179_5.txt new file mode 100644 index 0000000000000000000000000000000000000000..5e2412eb534e3778b081203c435b5945fd3afbbf --- /dev/null +++ b/eesanje/url_47_179_5.txt @@ -0,0 +1,8 @@ +ಜನರ ಗಮನ ಬೇರೆಡೆ ತಿರುಗಿಸುತ್ತದೆ ಕೇಂದ್ರ ಸರ್ಕಾರ : ಜೈರಾಮ್ +ನವದೆಹಲಿ, ಜ.27 (ಪಿಟಿಐ) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಭಾರತದಲ್ಲಿ ಪ್ರತಿ ಎರಡನೇ ವ್ಯಕ್ತಿಯೂ ಹೆಚ್ಚುತ್ತಿರುವ ಹಣದುಬ್ಬರ, ಆರ್ಥಿಕ ಹಿಂಜರಿತ, ನಿರುದ್ಯೋಗ ಮತ್ತು ಸಂಘರ್ಷಗಳ ಬಗ್ಗೆ ಚಿಂತಿತರಾಗಿದ್ದಾರೆ ಆದರೆ ಮೋದಿ ಸರ್ಕಾರವು ಗಮನವನ್ನು ಬೇರೆಡೆಗೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಆರೋಪಿಸಿದೆ. + : ಕೋತಿಗಳಿಂದ ಹರಡುವ ಅತ್ಯಂತ ಭೀಕರ ವೈರಸ್ ಪತ್ತೆ..! +ಕಳೆದ ಒಂದು ವರ್ಷದಲ್ಲಿ ತರಕಾರಿ ಬೆಲೆ ಶೇ.15 ರಿಂದ 60 ರಷ್ಟು ಏರಿಕೆಯಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್ ಮಾಧ್ಯಮ ವರದಿಯನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿನ ತಮ್ಮ ಪೋಸ್ಟ್‍ನಲ್ಲಿ ರಮೇಶ್, ಅಹಂಕಾರಾಚಾರ್ಯರ ಮೆಹಂಗಾಯ್ ಕಾಲನ ಅಡಿಯಲ್ಲಿ, ಈ ವರ್ಷ ಮೂರು ಭಾರತೀಯರಲ್ಲಿ ಒಬ್ಬರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಬಗ್ಗೆ ಚಿಂತಿತರಾಗಿದ್ದಾರೆ, ಆದರೆ ಶೇ.57 ರಷ್ಟು ಹಣದುಬ್ಬರದ ಬಗ್ಗೆ ಚಿಂತಿತರಾಗಿದ್ದಾರೆ ಎಂದಿದ್ದಾರೆ. +ಭಾರತದಲ್ಲಿ ಪ್ರತಿ ಎರಡನೇ ವ್ಯಕ್ತಿಯೂ ಅನ್ಯಾಯ ಕಾಲ ಅಡಿಯಲ್ಲಿ ಬಳಲುತ್ತಿದ್ದಾರೆ ಮತ್ತು ಹಣದುಬ್ಬರ, ಆರ್ಥಿಕ ಹಿಂಜರಿತ, ನಿರುದ್ಯೋಗ ಮತ್ತು ಸಂಘರ್ಷಗಳ ಹೆಚ್ಚಳದಿಂದಾಗಿ ಚಿಂತಿತರಾಗಿದ್ದಾರೆ, ಆದರೆ ಮೋದಿ ಸರ್ಕಾರವು ತನ್ನ ಪರಿಚಿತ ಶೈಲಿಯಲ್ಲಿ ದೇಶದ ಗಮನವನ್ನು ಬೇರೆಡೆಗೆ ತಿರುಗಿಸುವಲ್ಲಿ ನಿರತವಾಗಿದೆ ಎಂದು ದೂರಿದ್ದಾರೆ. +ಆದರೆ ಜನರಿಗೆ ನ್ಯಾಯ ಕೊಡಿಸಲು ಕಾಂಗ್ರೆಸ್ ತನ್ನ ಹೋರಾಟವನ್ನು ಮುಂದುವರೆಸಲಿದೆ ಎಂದು ಅವರು ಪ್ರತಿಪಾದಿಸಿದರು. ಭಾರತ್ ಜೋಡೋ ನ್ಯಾಯ ಯಾತ್ರೆ ಭಾನುವಾರ ಮಧ್ಯಾಹ್ನ ಜಲ್ಪೈಗುರಿಯಿಂದ ಆರಂಭವಾಗಲಿದೆ ಎಂದು ಅವರು ಹೇಳಿದರು. +ಬ್ರೇಕಿಂಗ್ : ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ, ಮೊದಲ ಪಟ್ಟಿ ಬಿಡುಗಡೆ +ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ನಿರಂತರ 12 ದಿನಗಳ ನಂತರ ಪೂರ್ವ ಯೋಜಿತ ವಿರಾಮವನ್ನು ತೆಗೆದುಕೊಂಡಿದೆ ಮತ್ತು ಭಾನುವಾರ ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ಪಾದಯಾತ್ರೆಯೊಂದಿಗೆ ಪುನರಾರಂಭವಾಗಲಿದೆ \ No newline at end of file diff --git a/eesanje/url_47_179_6.txt b/eesanje/url_47_179_6.txt new file mode 100644 index 0000000000000000000000000000000000000000..5cde8fb58e913381e52aaac87c2ef8343d001fe8 --- /dev/null +++ b/eesanje/url_47_179_6.txt @@ -0,0 +1,7 @@ +ಇಂಡಿಯಾ ಒಕ್ಕೂಟದಲ್ಲಿ ಏಕತೆ ಇರಬೇಕು : ಸ್ಟಾಲಿನ್ +ತಿರುಚಿರಾಪಳ್ಳಿ, ಜ, 27 (ಪಿಟಿಐ) ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಬಣದಲ್ಲಿ ಗೊಂದಲ ಮುಂದುವರೆದಿರುವಂತೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟವನ್ನು ಸೋಲಿಸಲು ಡಿಎಂಕೆ ಏಕತಾ ಮಂತ್ರ ಜಪಿಸುತ್ತಿದೆ. ಇಲ್ಲಿ ಆಯೋಜಿಸಿದ್ದ ಪ್ರಜಾಪ್ರಭುತ್ವ ಗೆಲ್ಲುತ್ತದೆ ಸಮಾವೇಶದಲ್ಲಿ ಇಂಡಿಯಾ ಒಕ್ಕೂಟದ ಕಾಂಗ್ರೆಸ್, ಡಿಎಂಕೆ, ಎಡ ಪಕ್ಷಗಳು ಮತ್ತು ವಿದುತಲೈ ಚಿರುತೈಗಲ್ ಕಚ್ಚಿ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. +ಲೋಕಸಭೆ ಸಂಸದ ತೋಲ್ ತಿರುಮಾವಲವನ್ ನೇತೃತ್ವದ ವಿಸಿಕೆ ತಮಿಳುನಾಡಿನ ಡಿಎಂಕೆಯ ಪ್ರಮುಖ ಮಿತ್ರ ಪಕ್ಷವಾಗಿದೆ. ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಸಿಪಿಐ (ಎಂ) ಮತ್ತು ಸಿಪಿಐ ನಾಯಕರು ಕ್ರಮವಾಗಿ ಸೀತಾರಾಂ ಯೆಚೂರಿ ಮತ್ತು ಡಿ ರಾಜಾ ಮತ್ತು ಇತರರು ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್‍ನ ನಡುವೆ ನಡೆದ ಸುಸಜ್ಜಿತ ಸಮಾವೇಶದಲ್ಲಿ ಮಾತನಾಡಿದರು. +ಇತ್ತೀಚೆಗೆ, ಇಂಡಿಯಾ ಒಕ್ಕೂಟ ಗುಂಪಿನ ಇತರ ಎರಡು ಘಟಕಗಳಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ಲೋಕಸಭೆ ಚುನಾವಣೆಗೆ ಕ್ರಮವಾಗಿ ಪಶ್ಚಿಮ ಬಂಗಾಳ ಮತ್ತು ಪಂಜಾಬ್‍ನಲ್ಲಿ ಕಾಂಗ್ರೆಸ್‍ನೊಂದಿಗೆ ಕೈಜೋಡಿಸುವುದಿಲ್ಲ ಎಂದು ಘೋಷಿಸಿವೆ. + : ಕೋತಿಗಳಿಂದ ಹರಡುವ ಅತ್ಯಂತ ಭೀಕರ ವೈರಸ್ ಪತ್ತೆ..! +ಚಂಡೀಗಢದಲ್ಲಿ ಮೇಯರ್ ಚುನಾವಣೆಯ ಹಂತದಲ್ಲಿಯೂ ವಿರೋಧ ಪಕ್ಷದ ಮೈತ್ರಿಕೂಟದ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ತಲ್ಲಣಗೊಂಡಿರುವಾಗ, ಘಟಕಗಳ ನಡುವಿನ ಒಗ್ಗಟ್ಟು ಕೇಸರಿ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುತ್ತದೆ ಎಂಬುದನ್ನು ಇಂಡಿಯಾ ಒಕ್ಕೂಟದ ನಾಯಕರು ಅರಿತುಕೊಳ್ಳಬೇಕು ಎಂದು ಸ್ಟಾಲಿನ್ ತಮ್ಮ ಭಾಷಣದಲ್ಲಿ ಹೇಳಿದರು. +ಚಂಡೀಗಢದ ಮೇಯರ್ ಚುನಾವಣೆ ಮುಂದೂಡಿಕೆ ಮತ್ತು ಅಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯನ್ನು ಉಲ್ಲೇಖಿಸಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಗೆಲುವಿಗೆ ಪಕ್ವವಾಗಿರುವುದರಿಂದ ಮೇಯರ್ ಮಟ್ಟದ ಚುನಾವಣೆಯನ್ನು ಸಹ ರದ್ದುಗೊಳಿಸಿದೆ ಎಂದು ಹೇಳಿದರು. \ No newline at end of file diff --git a/eesanje/url_47_179_7.txt b/eesanje/url_47_179_7.txt new file mode 100644 index 0000000000000000000000000000000000000000..fda87ab514cae065350632f60d4dd33a431cf6e8 --- /dev/null +++ b/eesanje/url_47_179_7.txt @@ -0,0 +1,6 @@ +ಮರಾಠರಿಗೆ ಮೀಸಲಾತಿ ನೀಡಲು ಶಿಂಧೆ ಸಮ್ಮತಿ +ಮುಂಬೈ, ಜ 27 (ಪಿಟಿಐ) – ಮಹಾರಾಷ್ಟ್ರ ಸರ್ಕಾರವು ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಿದೆ ಎಂದು ಹೇಳುವ ಮೂಲಕ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಪ್ರತಿಭಟನೆಯನ್ನು ಹಿಂಪಡೆದಿರುವುದಾಗಿ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಗೆ ಹೇಳಿದ್ದಾರೆ. ಮರಾಠರ ಎಲ್ಲ ಬಂಧುಗಳ ದಾಖಲೆ (ಕುಂಬಿ ಜಾತಿಗೆ ಸಂಬಂಧ) ಪತ್ತೆಯಾದವರಿಗೆ ಕುಂಬಿ ಜಾತಿ ಪ್ರಮಾಣ ಪತ್ರ ನೀಡಲು ಸರಕಾರ ಅಧಿಸೂಚನೆ ಹೊರಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. +ನೆರೆಯ ನವಿ ಮುಂಬೈನ ವಾಶಿಯಲ್ಲಿ ಅವರು ಈ ಘೋಷಣೆ ಮಾಡಿದರು, ನಿನ್ನೆ ಬೆಳಿಗ್ಗೆ ಸ್ಥಳಕ್ಕೆ ತಲುಪಿದ ನಂತರ ಸಾವಿರಾರು ಬೆಂಬಲಿಗರೊಂದಿಗೆ ರಾತ್ರಿಯಿಡೀ ಅವರು ಹೋರಾಟದ ರೂಪುರೇಷೆ ಸಿದ್ದಪಡಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಜಾರಂಗೆ ಅವರನ್ನು ಭೇಟಿ ಮಾಡಿ ಮರಾಠ ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ ನಂತರ ಮರಾಠ ಮೀಸಲಾತಿ ಹೋರಾಟವನ್ನು ಸ್ಥಗಿತಗೊಳಿಸಲಾಗಿದೆ. +ಬ್ರೇಕಿಂಗ್ : ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಪಟ್ಟ, ಮೊದಲ ಪಟ್ಟಿ ಬಿಡುಗಡೆ +ಮೀಸಲಾತಿಯ ಪ್ರಯೋಜನ ಇಡೀ ಸಮುದಾಯಕ್ಕೆ ಲಭ್ಯವಾಗುವವರೆಗೆ ಎಲ್ಲಾ ಮರಾಠರನ್ನು ಸೇರಿಸಲು ಸರ್ಕಾರ ತನ್ನ ಉಚಿತ ಶಿಕ್ಷಣ ನೀತಿಯನ್ನು ತಿದ್ದುಪಡಿ ಮಾಡಬೇಕೆಂದು ಜಾರಂಗೆ ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದರು. +ರಾಜ್ಯ ಸರ್ಕಾರ ನೀಡಿರುವ 37 ಲಕ್ಷ ಕುಂಬಿ ಪ್ರಮಾಣಪತ್ರಗಳ ದತ್ತಾಂಶ ಕೇಳಿದ್ದಾರೆ. ಕುಂಬಿ, ಕೃಷಿಕ ಸಮುದಾಯವು ಇತರ ಹಿಂದುಳಿದ ವರ್ಗಗಳ (ಒಬಿಸಿ) ವರ್ಗಕ್ಕೆ ಸೇರುತ್ತದೆ ಮತ್ತು ಜರಂಗೆ ಅವರು ಎಲ್ಲಾ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ಕೋರಿದ್ದರು. \ No newline at end of file diff --git a/eesanje/url_47_179_8.txt b/eesanje/url_47_179_8.txt new file mode 100644 index 0000000000000000000000000000000000000000..3daf0e490a1b8a36c1b8d2b4a180e357972b6f31 --- /dev/null +++ b/eesanje/url_47_179_8.txt @@ -0,0 +1,12 @@ +, RSSನಿಂದ ಸಂವಿಧಾನ ನಾಶಕ್ಕೆ ಯತ್ನ : ಮಲ್ಲಿಕಾರ್ಜುನ ಖರ್ಗೆ +ಬೆಂಗಳೂರು, ಜ.26- ಬಿಜೆಪಿ ಮತ್ತು ಆರ್‍ಎಸ್‍ಎಸ್ ಸಂಘಟನೆಗಳು ಸಂವಿಧಾನವನ್ನು ನಾಶ ಮಾಡಲು ಯತ್ನಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದರು. ಕೆಪಿಸಿಸಿ ಕಚೇರಿಯಲ್ಲಿಂದು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಕೆಲವರು ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುತ್ತಾ, ತಮ್ಮದೇ ಮಹಾನ್ ಸಾಧನೆ, ತಮ್ಮಿಂದಲೇ ಎಲ್ಲಾ ಎಂದು ಹೇಳಿಕೊಳ್ಳುತ್ತಾರೆ ಎಂದು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು. +ಬಿಜೆಪಿ, ಆರ್‍ಎಸ್‍ಎಸ್ ಸಂವಿಧಾನವನ್ನು ನಾಶ ಮಾಡಲು ಸಂಚು ರೂಪಿಸಿದೆ. ಸ್ವಾತಂತ್ರ್ಯ, ಸಂವಿಧಾನ ಉಳಿದರೆ ಮುಂದಿನ ಪಿಳಿಗೆಗೆ ಅವಕಾಶ ಇರುತ್ತದೆ. ಇಲ್ಲವಾದರೆ ಯಾರಿಗೂ ಅವಕಾಶ ಸಿಗುವುದಿಲ್ಲ. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗೆ ಕಾಂಗ್ರೆಸ್ಸಿಗರು ಪಣ ತೊಡಬೇಕಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನ ಹೋರಾಟದ ಮೂಲಕ ಗೆಲ್ಲಬೇಕು ಎಂದು ಕರೆ ನೀಡಿದರು. +ಸಂವಿಧಾನವನ್ನು ಒಪ್ಪಿಸುವಾಗ ಅಂಬೇಡ್ಕರ್ ಅವರು ಸಂವಿಧಾನ ಒಳ್ಳೆಯದಾಗಿ ಅನುಷ್ಠಾನಕ್ಕೆ ತರಬೇಕು, ಅದನ್ನು ಜಾರಿ ಮಾಡುವವರು ಒಳ್ಳೆಯವರಾಗಿದ್ದರೆ ಮಾತ್ರ ಜನರಿಗೆ ಒಳ್ಳೆಯದಾಗುತ್ತದೆ. ಇಲ್ಲವಾದರೆ ಕೆಟ್ಟದಾಗುತ್ತದೆ ಎಂದು ಹೇಳಿದ್ದರು. 1949ರಲ್ಲಿ ಅಂಬೇಡ್ಕರ್ ಹೇಳಿದ ಮಾತು ಇಂದು ನಿಜವಾಗುತ್ತಿದೆ. ದೇಶದಲ್ಲಿಂದು ಸಂವಿಧಾನ ಜಾರಿ ಮಾಡುವ ಜನ ಸರಿ ಇಲ್ಲದಿದ್ದರಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ದೂರಿದರು. +ದೇಶದಲ್ಲಿ ಸಂವೃದ್ಧಿ ಬಂದಿದೆ ಎಂದು ಬಿಂಬಿಸಲಾಗುತ್ತಿದೆ, ಎಲ್ಲಿದೆ ಸಂವೃದ್ಧಿ. ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಒಟ್ಟು ಸಾಲ 55 ಲಕ್ಷ ಕೋಟಿ ಮಾತ್ರವಿತ್ತು. ಕಳೆದ 10 ವರ್ಷದಲ್ಲಿ ಅದು ಏಕಾಏಕಿ ದುಪ್ಪಟ್ಟು ಹೆಚ್ಚಾಗಿದೆ. ಪ್ರಸ್ತುತ ದೇಶದ ಇಂದಿನ ಸಾಲ 1.50 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನಕ್ಕೆ ಧಕ್ಕೆಯಿದೆ. ನಿರುದ್ಯೋಗ ಹೆಚ್ಚಳದಿಂದ ಯುವ ಸಮುದಾಯಕ್ಕೆ ಧಕ್ಕೆಯಾಗಲಿದೆ. ಹಣದುಬ್ಬರದಿಂದ ಜನ ಸಾಮಾನ್ಯರಿಗೆ ಸಂಕಷ್ಟಗಳಿವೆ ಎಂದು ವಿವರಿಸಿದರು. +ಪಕ್ಷ ನಿಷ್ಠೆ ಪರಿಶೀಲಿಸಿ:ಹೊರಗಿನವರನ್ನು ಕಾಂಗ್ರೆಸ್‍ಗೆ ಕರೆತಂದು ಪಕ್ಷವನ್ನು ಬಲ ಪಡಿಸುವುದು ಅಗತ್ಯ. ಆದರೆ ಈ ವೇಳೆ ತತ್ವ-ಸಿದ್ಧಾಂತಗಳ ನಿಷ್ಠೆ ಬಗ್ಗೆಪರಿಶೀಲನೆ ಅಗತ್ಯವಿದೆ. ಇಂದು ಬಂದು ನಾಳೆ ಹೋದರು ಎಂಬಂತವರಿಗೆ ಅವಕಾಶ ನೀಡಬಾರದು. ಇದು ಪಕ್ಷದ ಸಿದ್ಧಾಂತಕ್ಕೆ ಹಾನಿ ಮಾಡಲಿದೆ ಎಂದು ಜಗದೀಶ್ ಶೆಟ್ಟರ್ ಪಕ್ಷಾಂತರ ಕುರಿತು ಪರೋಕ್ಷ ಅಸಮಧಾನ ವ್ಯಕ್ತಪಡಿಸಿದರು. +ಜ್ಞಾನವಾಪಿ ಮಂದಿರಕ್ಕೂ ಇದೆ ಕರುನಾಡ ನಂಟು +ಗ್ರಾಮೀಣಭಾಗದಲ್ಲಿ ಸಣ್ಣ ಪ್ರಾಣಿ ಖರೀದಿ ಮಾಡುವಾಗಲೂ ತೂಕ, ಅಳತೆ ನೋಡಿ, ಹಲವು ಬಾರಿ ಯೋಜಿಸಿ ನಂತರ ಖರೀದಿ ಮಾಡುತ್ತಾರೆ. ಅದೇ ರೀತಿ ಅನ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಾಗಲೂ ಸರಿಯಾಗಿ ಯೋಚಿಸಬೇಕು. ಕಾಂಗ್ರೆಸ್ ಸೇರುವವರ ಗುಣ ಹಿಂದೆ ಹೇಗಿತ್ತು, ಯಾವ ಪರಿಸ್ಥಿತಿಯಲ್ಲಿದ್ದರು, ಯಾವ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿದ್ದರು ಎಂಬುದನ್ನು ಪರಿಶೀಲಿಸುವುದು ಬಹಳ ಮುಖ್ಯವಾಗಿದೆ ಎಂದರು.ಕಾಂಗ್ರೆಸ್ ಪಕ್ಷ ಸಿದ್ಧಾಂತ ಹಾಗೂ ತತ್ವದ ತಳಹದಿಯ ಮೇಲೆ ನಿಂತಿದೆ. ನಮ್ಮ ನಾಯಕರು ದೇಶದ ಐಕ್ಯತೆ ಹಾಗೂ ಸಿದ್ಧಾಂತಕ್ಕಾಗಿಯೇ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂ 32 ಗುಂಡುಗಳನ್ನು ತಿಂದು ದೇಶದ ಐಕ್ಯತೆ ಪ್ರಾಣ ಬಿಟ್ಟರು. ರಾಜೀವ್ ಗಾಂಧಿ ತಮ್ಮ ದೇಹ ಛೀದ್ರಗೊಂಡದರು ದೇಶ ಉಳಿಸುತ್ತೇನೆ ಎಂದು ಪಣತೊಟ್ಟಿದ್ದರು ಎಂದು ಹೇಳಿದರು. +ನಮ್ಮ ಪಕ್ಷ ಬಡವರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಹೆಣ್ಣುಮಕ್ಕಳು, ಎಸ್‍ಸ್ಸಿಎಸ್ಟಿಗಳ ಬಗ್ಗೆ ಕಾಳಜಿ ಹೊಂದಿದೆ. ಸಂವಿಧಾನದೊಂದಿಗೆ ಹೆಣ್ಣುಮಕ್ಕಳಿಗೆ ಸಂವಿಧಾನದೊಂದಿಗೆ ಮತದಾನದ ಹಕ್ಕು ನೀಡಲಾಯಿತು. ಮುಂದುವರೆದ ದೇಶದಲ್ಲೇ ಮಹಿಳೆಯರಿಗೆ ಮತದಾನದ ಹಕ್ಕಿರಲಿಲ್ಲ. ಅಂತಹ ಕಾಲದಲ್ಲಿ ಅಂಬೇಡ್ಕರ್ ಮತ್ತು ನೆಹರು ಅವರು ಹೆಣ್ಣು ಮಕ್ಕಳ ಸಮಾನತೆಗೆ ವಿಶ್ವದಲ್ಲೇ ಮೊಟ್ಟಮೊದಲಿಗೆ ಆದ್ಯತೆ ನೀಡಿದರು ಎಂದರು. +ಶ್ರೀಮಂತರು, ಪ್ರಭಾವಿಗಳು, ಬಡವರು, ಕಾರ್ಮಿಕರು ಎಂಬ ಬೇಧವಿಲ್ಲದೆ ಸಂವಿಧಾಣ ಎಲ್ಲರಿಗೂ ಸಮಾನವಾದ ಮತದಾನದ ಹಕ್ಕು ನೀಡಿದೆ. ಟಾಟಾ-ಬಿರ್ಲಾ, ಅಂಬಾನಿ-ಅದಾನಿಯವರ ಮತಕ್ಕೆ ಇರುವಷ್ಟೆ ಮೌಲ್ಯ, ಜನಸಾಮಾನ್ಯರ ಮತಕ್ಕೂ ಇದೆ. ಬಹಳಷ್ಟು ಮಂದಿಗೆ ಇತಿಹಾಸವೇ ಗೊತ್ತಿಲ್ಲ. ಅನಗತ್ಯವಾಗಿ ಟೀಕೆ ಮಾಡುತ್ತಾರೆ. ಯುವಕರಿಗೂ ಕೂಡ ಯಾರು ಸ್ವಾತಂತ್ರ್ಯ ತಂದು ಕೊಟ್ಟರು, ಹೋರಾಟ ಮಾಡಿದ್ಯಾರು ಎಂಬ ಮಾಹಿತಿ ತಿಳಿದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. +ಬಂಧನಿ ಪೇಟ ಧರಿಸಿ ಗಮನ ಸೆಳೆದ ಮೋದಿ +ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರು ದೆಹಲಿಯ ಕೇಂದ್ರ ಕಚೇರಿ ಬಿಟ್ಟು ಬೆಂಗಳೂರಿಗೆ ಬಂದು ರಾಷ್ಟ್ರಧ್ವಜಾರೋಹಣ ಮಾಡಿದ್ದಾರೆ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್‍ನ ಶಕ್ತಿ ದೇಶದ ಶಕ್ತಿ. ದೇಶದ ಐಕ್ಯತೆ, ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗೆ ತ್ಯಾಗದ ಹೋರಾಟಕ್ಕೆ ನಾವೆಲ್ಲಾ ಸಿದ್ಧರಾಗೋಣ ಎಂದು ಕರೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾಯಾಧ್ಯಕ್ಷರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. \ No newline at end of file diff --git a/eesanje/url_47_179_9.txt b/eesanje/url_47_179_9.txt new file mode 100644 index 0000000000000000000000000000000000000000..67dc71e1d2f0833fc5f5c925fb1870ce1db782e1 --- /dev/null +++ b/eesanje/url_47_179_9.txt @@ -0,0 +1,8 @@ +ಜ್ಞಾನವಾಪಿ ಮಂದಿರಕ್ಕೂ ಇದೆ ಕರುನಾಡ ನಂಟು +ಬೆಂಗಳೂರು,ಜ.26- ಜ್ಞಾನವಾಪಿ ದೇವಾಲಯದ ಕುರುಹುಗಳಲ್ಲಿ ಕನ್ನಡ ಭಾಷೆಯ ಬರಹಗಳು ಸಿಕ್ಕಿವೆ. ಇದರೊಂದಿಗೆ ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯಿಂದ ಹಿಡಿದು ಹಲವು ಬಗೆಯಲ್ಲಿ ಕರ್ನಾಟಕದ ನಂಟು ಇದ್ದರೆ, ಇತ್ತ ಜ್ಞಾನವಾಪಿಗೂ ಕರುನಾಡ ನಂಟು ಇರುವ ವಿಚಾರ ಬೆಳಕಿಗೆ ಬಂದಿದೆ. +ಹಿಂದೂಗಳ ಪವಿತ್ರ ಕ್ಷೇತ್ರ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿ ಬಗ್ಗೆ ವೈಜ್ಞಾನಿಕ ಸಮೀಕ್ಷಾ ವರದಿ ಇದೀಗ ಬಹಿರಂಗಗೊಂಡಿದೆ. ಜ್ಞಾನವಾಪಿಯೊಳಗೆ ಕನ್ನಡ ಬರಹಗಳು ಪತ್ತೆಯಾಗಿವೆ. ಹಲವು ಶಾಸನಗಳು, ಹಲವು ಪ್ರಮುಖ ಪತ್ರಗಳು ಸಿಕ್ಕಿವೆ. ಅವುಗಳಲ್ಲಿ ಕನ್ನಡ ಬರಹ ಪತ್ತೆಯಾಗಿದೆ. ಇದರ ಜೊತೆಗೆ ತೆಲುಗು ಹಾಗೂ ದೇವನಗರಿ ಲಿಪಿಗಳ ಬರಹಗಳೂ ಕಂಡು ಬಂದಿವೆ ಎಂದು ಪುರಾತತ್ವ ಸರ್ವೇಕ್ಷಣಾ ವರದಿಯಿಂದ ಬಹಿರಂಗಗೊಂಡಿದೆ. +ಮೊನ್ನೆ ಮೊನ್ನೆಯಷ್ಟೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠೆ ಪೂರ್ಣಗೊಂಡಿದೆ. ಅಲ್ಲಿನ ಬಾಲ ಶ್ರೀರಾಮನ ಮೂರ್ತಿ ಮಾಡಿದ್ದು ಕರುನಾಡಿನ ಶಿಲ್ಪಿ ಅರುಣ್ ಯೋಗಿರಾಜ್. ಇದಕ್ಕೂ ಮುನ್ನ ಹಲವು ಕನ್ನಡಿಗರು ರಾಮ ಜನ್ಮಭೂಮಿ ಹೋರಾಟದಲ್ಲಿ ಇದ್ದರು. ರಾಮಮಂದಿರ ನಿರ್ಮಾಣದ ವೇಳೆ ಅನೇಕ ಕನ್ನಡಿಗರು ಕೆಲಸ ಮಾಡಿದ್ದಾರೆ. ಇದೀಗ ಜ್ಞಾನವಾಪಿಯಲ್ಲೂ ಕನ್ನಡ ಬರಹ ಪತ್ತೆಯಾಗಿದೆ. +ಬಂಧನಿ ಪೇಟ ಧರಿಸಿ ಗಮನ ಸೆಳೆದ ಮೋದಿ +ಜ್ಞಾನವಾಪಿ ಮಸೀದಿಯಲ್ಲ ಮಂದಿರ:ಹಿಂದೂಗಳ ಪವಿತ್ರ ಕ್ಷೇತ್ರ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿ ಬಗ್ಗೆ ವೈಜ್ಞಾನಿಕ ಸಮೀಕ್ಷಾ ವರದಿ ಇದೀಗ ಬಹಿರಂಗಗೊಂಡಿದೆ. ಜ್ಞಾನವಾಪಿ ಮಸೀದಿ ಜಾಗದಲ್ಲಿ ಮೊದಲು ಹಿಂದೂ ದೇವಾಲಯ ಇತ್ತು ಎಂದು ಪುರಾತತ್ವ ಸರ್ವೇಕ್ಷಣಾ ವರದಿ ಹೇಳಿದೆ. +ಎಎಸ್‍ಐ ಸಮೀಕ್ಷೆ ಸಮಯದಲ್ಲಿ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ಹಲವಾರು ಶಾಸನಗಳನ್ನು ಗುರುತಿಸಿ, ಅಧ್ಯಯನ ನಡೆಸಲಾಗಿದೆ. ಪ್ರಸ್ತುತ ಸಮೀಕ್ಷೆಯಲ್ಲಿ ಒಟ್ಟು 34 ಶಾಸನಗಳನ್ನು ದಾಖಲಿಸಲಾಗಿದೆ ಮತ್ತು 32 ಮುದ್ರೆಯ ಪುಟಗಳನ್ನು ಅಧ್ಯಯನ ನಡೆಸಲಾಗಿದೆ ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂ ಸಂಘಟನೆಗಳ ಪರ ವಾದ ಮಂಡಿಸುತ್ತಿರುವ ವಿಷ್ಣು ಶಂಕರ್ ಜೈನ್ ತಿಳಿಸಿದ್ದಾರೆ. +ಹಿಂದಿನ ಶಾಸನಗಳ ಮರುಬಳಕೆಯು ಹಿಂದಿನ ರಚನೆಗಳನ್ನು ನಾಶಪಡಿಸಿದೆ ಎಂದು ಸೂಚಿಸುತ್ತದೆ. ಅವುಗಳ ಭಾಗಗಳನ್ನು ಅಸ್ತಿತ್ವದಲ್ಲಿರುವ ರಚನೆಯ ನಿರ್ಮಾಣ ದುರಸ್ತಿಯಲ್ಲಿ ಮರುಬಳಕೆ ಮಾಡಲಾಯಿತು. ಜನಾರ್ದನ, ರುದ್ರ ಮತ್ತು ಉಮೇಶ್ವರ ಮುಂತಾದ ಮೂರು ದೇವತೆಗಳ ಹೆಸರುಗಳು ಈ ಶಾಸನಗಳಲ್ಲಿ ಕಂಡುಬರುತ್ತವೆ ಎಂದು ವಕೀಲರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_17_1.txt b/eesanje/url_47_17_1.txt new file mode 100644 index 0000000000000000000000000000000000000000..9c31f7fafdddcc328c2a450b3423b2573bfe77cf --- /dev/null +++ b/eesanje/url_47_17_1.txt @@ -0,0 +1,5 @@ +ಇಯರ್‌ಫೋನ್‌ ವ್ಯಾಮೋಹದಿಂದ ರೈಲಿಗೆ ಬಲಿಯಾದ ಪೊಲೀಸಪ್ಪ + , +ನವದೆಹಲಿ,ಸೆ.6-ಇಯರ್‌ ಪೋನ್‌ ವ್ಯಾಮೋಹಕ್ಕೆ ಪೊಲೀಸ್‌‍ ಪೇದೆಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.ಇಯರ್‌ಫೋನ್‌ ಹಾಕಿಕೊಂಡು ಹೋಗುತ್ತಿದ್ದ ಪೊಲೀಸಪ್ಪನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಪ್ರಾಣ ಕಳೆದುಕೊಂಡ ನತದೃಷ್ಟ ಪೊಲೀಸಪ್ಪನನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ.ನಿನ್ನೆ ಅವರು ಶಹಜಹಾನ್‌ಪುರದ ಇಂದಿರಾನಗರ ರೈಲ್ವೆ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದರು. +ಈ ಸಂದರ್ಭದಲ್ಲಿ ರೈಲು ಬಂದರೂ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದ ಕಾರಣ ರೈಲು ಅಪ್ಪಳಿಸಿ ಆತ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಸಿಂಗ್‌ಗೆ ರೈಲು ಅಪ್ಪಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೇರೆಯಾಗಿದೆ. ಅಪಘಾತದಲ್ಲಿ ಅವರ ಒಂದು ಕಾಲು ತುಂಡಾಗಿದ್ದು, ಅತಿಯಾದ ರಕ್ತಸ್ರಾವದಿಂದ ಚಿಕಿತ್ಸೆ ವೇಳೆ ಮತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_17_10.txt b/eesanje/url_47_17_10.txt new file mode 100644 index 0000000000000000000000000000000000000000..2c94fd9e5060199fddc20ae4c4c5244eb2c2cb68 --- /dev/null +++ b/eesanje/url_47_17_10.txt @@ -0,0 +1,10 @@ +2025ರ ಜುಲೈ ವೇಳೆಗೆ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣ : ಸಚಿವ ಪರಮೇಶ್ವರ್ +ತುಮಕೂರು,ಸೆ.5-ಬಯಲುಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ 2025ರ ಜುಲೈ ಮಾಹೆಯೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು. +ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಮೊದಲ ಹಂತದ ಎತ್ತಿನಹೊಳೆ ಯೋಜನೆಗೆ ಚಾಲನೆ ನೀಡುತ್ತಿರುವ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಳೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ರ ಕಾಮಗಾರಿ ಉದ್ಘಾಟನೆಯಾಗಲಿದೆ ಎಂದರು. +ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4ರಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ 1ರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. +ಸದರಿ ಕಾಮಗಾರಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದಾರೆ. ಕಾಮಗಾರಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕು ವಾಣಿವಿಲಾಸ ಸಾಗರ ಅಣೆಕಟ್ಟಿಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಂಡು ತುಮಕೂರಿಗೆ ನೀರು ಹರಿಯಲಿದ್ದು, ಇದರಲ್ಲಿ 0.20 ಟಿಎಂಸಿ ನೀರನ್ನು ವಸಂತನರಸಾಪುರಕ್ಕೆ ಕುಡಿಯುವ ಉದ್ದೇಶಕ್ಕಾಗಿ ಪೂರೈಕೆ ಮಾಡಲಾಗುವುದು ಎಂದರು. +ಎತ್ತಿನಹೊಳೆ ಯೋಜನೆಗೊಳಪಡುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಹಂಚಿಕೆಯಾದ 24.01 ಟಿಎಂಸಿ ನೀರಿನಲ್ಲಿ ಜಿಲ್ಲೆಗೆ 5.470 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಕುಡಿಯುವ ನೀರಿಗಾಗಿ 2.294 ಟಿಎಂಸಿ, ಸಣ್ಣ ನೀರಾವರಿಯ 113 ಕೆರೆಗಳ ಭರ್ತಿ ಮಾಡಲು 3.446 ಟಿಎಂಸಿ ನೀರನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು. +ಎತ್ತಿನ ಹೊಳೆ ಯೋಜನೆಗಾಗಿ ಅಗತ್ಯವಿರುವ 3117.26 ಎಕರೆ ಪ್ರದೇಶದ ಪೈಕಿ ಸ್ವಾಧೀನಪಡಿಸಿಕೊಂಡ 2022 ಎಕರೆ ವಿಸ್ತೀರ್ಣದ ಭೂಮಿಗೆ ಸರ್ಕಾರದಿಂದ ಹಣ ಮಂಜೂರಾಗಿದೆ. ಈವರೆಗೂ ಶೇ.80ರಷ್ಟು ಭೂಸ್ವಾಧೀನಪಡಿಸಿಕೊಳ್ಳಲಾಗಿದೆ. ಭೂ ಮಾಲೀಕರಿಗೆ ಅವಾರ್ಡ್ ಹಣ ವಿತರಿಸಲು ಸರ್ಕಾರದಿಂದ 1200 ಕೋಟಿ ರೂ.ಗಳು ಬಿಡುಗಡೆಯಾಗಿದ್ದು, ಈಗಾಗಲೇ ಭೂ ಮಾಲೀಕರಿಗೆ 448 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಉಳಿದ 434 ಕೋಟಿ ರೂ. ಗಳು ಎತ್ತಿನಹೊಳೆ ಭೂ ಸ್ವಾಧೀನಾಧಿಕಾರಿಗಳ ಖಾತೆಯಲ್ಲಿದೆ. ಭೂ ಮಾಲೀಕರಿಂದ ಅಗತ್ಯ ದಾಖಲೆಗಳು ಸಲ್ಲಿಕೆಯಾಗಿ ಅನುಮೋದನೆಗೊಂಡ ನಂತರ ಅವಾರ್ಡ್ ಹಣವನ್ನು ನೀಡಲಾಗುವುದು ಎಂದರು. +ಭದ್ರಾ ಮೇಲ್ದಂಡೆ :ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಕೊರಟಗೆರೆ ತಾಲ್ಲೂಕಿನ ಬೈರಗೊಂಡನಹಳ್ಳಿ ಗ್ರಾಮದಲ್ಲಿ 2500 ಎಕರೆ ಹಾಗೂ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 2500 ಎಕರೆ ಸೇರಿ ಒಟ್ಟು 5000 ಎಕರೆ ಭೂಮಿಯಲ್ಲಿ ಕೈಗೊಳ್ಳಲು ಭದ್ರಾ ಮೇಲ್ದಂಡೆ ಯೋಜನೆಯನ್ನು ರೂಪಿಸಲಾಗಿತ್ತು. +ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಭೂಸ್ವಾಧೀನ ದರವನ್ನು ಪ್ರತಿ ಎಕರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿಗೆ 32ಲಕ್ಷ ಹಾಗೂ ಕೊರಟಗೆರೆ ತಾಲ್ಲೂಕಿಗೆ 12 ಲಕ್ಷ ರೂ.ಗಳೆಂದು ನಿಗಧಿಪಡಿಸಿದ್ದರಿಂದ ಕೊರಟಗೆರೆ ತಾಲ್ಲೂಕಿನ ರೈತರು ಈ ಯೋಜನೆ ನಮಗೆ ಬೇಡವೆಂದು ನಿರಾಕರಿಸಿದಾಗ ಸರ್ಕಾರವು ಯೋಜನೆಯನ್ನು ಕೈಬಿಟ್ಟಿತು ಎಂದರು. +ಪೂರ್ಣಗೊಂಡ ಕಾಲುವೆಗಳ ವಿವರ :ಎತ್ತಿನಹೊಳೆ ಯೋಜನೆಯಡಿ ಜಿಲ್ಲೆಯ ತಿಪಟೂರಿನಲ್ಲಿ 43.45 ಕಿ.ಮೀ, ಚಿಕ್ಕನಾಯಕನಹಳ್ಳಿ 12.75 ಕಿ.ಮೀ, ತುರುವೆಕೆರೆ 2.15 ಕಿ.ಮೀ, ಗುಬ್ಬಿ 41.48 ಕಿ.ಮೀ, ತುಮಕೂರು ಗ್ರಾಮಾಂತರ 31.8, ಕೊರಟಗೆರೆ 19.091, ಮಧುಗಿರಿ(ಫೀಡರ್ ಕಾಲುವೆ) 40.90 ಕಿ.ಮೀ, ಪಾವಗಡ 42.10 ಕಿ.ಮೀ. ಕಾಲುವೆ ಹಾದು ಹೋಗಲಿದೆ.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ. ಸಿಇಒ ಪ್ರಭು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. \ No newline at end of file diff --git a/eesanje/url_47_17_11.txt b/eesanje/url_47_17_11.txt new file mode 100644 index 0000000000000000000000000000000000000000..1639f18256dc63376301b02e73ca3de671ca163c --- /dev/null +++ b/eesanje/url_47_17_11.txt @@ -0,0 +1,9 @@ +ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಗುಡ್ ನ್ಯೂಸ್ + , , 1, 2025 +ನವದೆಹಲಿ,ಸೆ.5-ಪ್ರಮುಖ ಬೆಳವಣಿಗೆಯೊಂದರಲ್ಲಿ, ನೌಕರರ ಪಿಂಚಣಿ ಯೋಜನೆ (ಇಪಿಎಸ್)ಗಾಗಿ ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು 2025ರ ಜನವರಿ 1 ರಿಂದ ಭಾರತದ ಯಾವುದೇ ಬ್ಯಾಂಕ್ನಿಂದ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ. +ರಾಷ್ಟ್ರೀಯ ಮಟ್ಟದ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೊಳಿಸುತ್ತಿರುವುದು ಸಿಪಿಪಿಎಸ್ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಇದರಿಂದ ಭಾರತದಾದ್ಯಂತದ ಯಾವುದೇ ಬ್ಯಾಂಕ್, ಯಾವುದೇ ಶಾಖೆಯ ಮೂಲಕ ಪಿಂಚಣಿ ಪಡೆಯಲು ಸಾಧ್ಯವಾಗಲಿದೆ ಎಂದು ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. +ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಕಾರ್ಮಿಕ ಸಚಿವ ಡಾ.ಮನ್ಸುಖ್ ಮಾಂಡವಿಯಾ, ಕೇಂದ್ರೀಕೃತ ಪಿಂಚಣಿ ಪಾವತಿ ವ್ಯವಸ್ಥೆ (ಸಿಪಿಪಿಎಸ್) ಅನುಮೋದನೆಯು ಇಪಿಎಫ್ಒ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಪಿಂಚಣಿದಾರರು ಇನ್ನು ಮುಂದೆ ತಮ ಪಿಂಚಣಿಯನ್ನು ದೇಶದ ಯಾವುದೇ ಭಾಗದಲ್ಲಿನ ಯಾವುದೇ ಬ್ಯಾಂಕ್, ಯಾವುದೇ ಶಾಖೆಯಿಂದ ಪಡೆಯಬಹುದಾಗಿದೆ. +ಹೊಸ ವ್ಯವಸ್ಥೆಯು ಪಿಂಚಣಿದಾರರು ಎದುರಿಸುತ್ತಿರುವ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲಿದೆ ಮತ್ತು ತಡೆರಹಿತ ಹಾಗೂ ಪರಿಣಾಮಕಾರಿ ಪಿಂಚಣಿ ವಿತರಣೆಗೆ ಅನುವು ಮಾಡಿಕೊಡಲಿದೆ. ಇಪಿಎಫ್ಒ ಅನ್ನು ಹೆಚ್ಚು ದೃಢವಾದ, ಸ್ಪಂದಿಸುವ ಮತ್ತು ತಂತ್ರಜ್ಞಾನ – ಶಕ್ತ ಸಂಸ್ಥೆಯಾಗಿ ಪರಿವರ್ತಿಸುವ ನಮ ನಿರಂತರ ಪ್ರಯತ್ನಗಳಲ್ಲಿ ಇದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೇಳಿದರು. +78 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ಅನುಕೂಲ:ಸಿಪಿಪಿಎಸ್ ಇಪಿಎಫ್ಒನ 78 ಲಕ್ಷಕ್ಕೂ ಹೆಚ್ಚು ಇಪಿಎಸ್ ಪಿಂಚಣಿದಾರರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸುಧಾರಿತ ಐಟಿ ಮತ್ತು ಬ್ಯಾಂಕಿಂಗ್ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ಇದು ಪಿಂಚಣಿದಾರರಿಗೆ ಹೆಚ್ಚು ಪರಿಣಾಮಕಾರಿ, ತಡೆರಹಿತ ಮತ್ತು ಬಳಕೆದಾರ ಸ್ನೇಹಿ ಅನುಭವವನ್ನು ನೀಡುತ್ತದೆ ಎಂದು ಸರ್ಕಾರ ಹೇಳಿದೆ. +ಪಿಂಚಣಿದಾರನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಗೊಂಡಾಗ ಅಥವಾ ತನ್ನ ಬ್ಯಾಂಕ್ ಅಥವಾ ಶಾಖೆ ಬದಲಾಯಿಸಿದಾಗಲೂ ಸಹ ಪಿಂಚಣಿ ಪಾವತಿ ಆದೇಶಗಳನ್ನು (ಪಿಪಿಒ) ಒಂದು ಕಚೇರಿಯಿಂದ ಇನ್ನೊಂದಕ್ಕೆ ವರ್ಗಾಯಿಸುವ ಅಗತ್ಯವಿಲ್ಲದೇ ಭಾರತದಾದ್ಯಂತ ಪಿಂಚಣಿ ಪಡೆಯುವಿಕೆಯನ್ನು ಸಾಧ್ಯವಾಗಿಸುತ್ತದೆ ಎಂದು ಅದು ಹೇಳಿದೆ. ನಿವೃತ್ತಿಯ ನಂತರ ಬೇರೆ ಊರುಗಳಿಗೆ ತೆರಳುವ ಪಿಂಚಣಿದಾರರಿಗೆ ಇದು ಬಹಳ ಅನುಕೂಲ ಒದಗಿಸಲಿದೆ. +2025 ರ ಜನವರಿ 1 ರಿಂದ ಇಪಿಎಫ್ಒನ ಐಟಿ ಆಧುನೀಕರಣ ಯೋಜನೆ ಕೇಂದ್ರೀಕೃತ ಐಟಿ ಎನೇಬಲ್ಡ್ ಸಿಸ್ಟಮ್ (ಸಿಟಿಇಎಸ್ 2.01) ಭಾಗವಾಗಿ ಈ ಸೌಲಭ್ಯವನ್ನು ಪ್ರಾರಂಭಿಸಲಾಗುವುದು. ಮುಂದಿನ ಹಂತದಲ್ಲಿ, ಸಿಪಿಪಿಎಸ್ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ (ಎಬಿಪಿಎಸ್) ಸುಗಮವಾಗಿ ಬದಲಾವಣೆ ಮಾಡುವುದು ಇದರಿಂದ ಸಾಧ್ಯವಾಗಲಿದೆ. \ No newline at end of file diff --git a/eesanje/url_47_17_12.txt b/eesanje/url_47_17_12.txt new file mode 100644 index 0000000000000000000000000000000000000000..8fd22c9fe6aa3fe73dbc7bb16f3da9dd1586a86d --- /dev/null +++ b/eesanje/url_47_17_12.txt @@ -0,0 +1,7 @@ +ನೀಟ್‌ ಪರೀಕ್ಷೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ + ' , 15th +ಜೈಪುರ,ಸೆ.5-ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಪದವಿಪೂರ್ವ) (ನೀಟ್‌) ಗೆ ತಯಾರಿ ನಡೆಸುತ್ತಿದ್ದ 21 ವರ್ಷದ ವಿದ್ಯಾರ್ಥಿ ಕಳೆದ ರಾತ್ರಿ ರಾಜಸ್ಥಾನದ ಕೋಟಾದಲ್ಲಿ ಆತಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. +ಉತ್ತರ ಪ್ರದೇಶದ ಮಥುರಾದ ವಿದ್ಯಾರ್ಥಿಯು ಒಂದು ವರ್ಷದ ಹಿಂದೆ ಕೋಟಾಕ್ಕೆ ಆಗಮಿಸಿ ತನ್ನ ಬಾಡಿಗೆ ಮನೆಯಲ್ಲಿ ಆತಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯೊಂದಿಗೆ, ಕೋಟಾದಲ್ಲಿ 16 ನೇ, ಸಿಕರ್‌ ಮತ್ತು ಜೈಪುರದಲ್ಲಿ ತಲಾ ಒಬ್ಬರು ಸೇರಿದಂತೆ ರಾಜಸ್ಥಾನದಾದ್ಯಂತ 18 ಕ್ಕೆ ತಲುಪಿದೆ. +ಕೋಟಾ (ಪ್ರಥಮ) ಉಪ ಪೊಲೀಸ್‌‍ ಅಧೀಕ್ಷಕರ ಪ್ರಕಾರ, ಉತ್ತರ ಪ್ರದೇಶದ ಮಥುರಾದ ವಿದ್ಯಾರ್ಥಿ ರಾಜೇಶ್‌ ಟೈಲರ್‌ ಒಂದು ವರ್ಷದ ಹಿಂದೆ ಕೋಟಾಕ್ಕೆ ಆಗಮಿಸಿ ಜವಾಹರ್‌ ನಗರ ಪ್ರದೇಶದಲ್ಲಿ ಕಳೆದ ರಾತ್ರಿ ತನ್ನ ಬಾಡಿಗೆ ನಿವಾಸದಲ್ಲಿ ಆತಹತ್ಯೆ ಮಾಡಿಕೊಂಡಿದ್ದಾನೆ. +ಹಲವಾರು ಮನವಿ ಮಾಡಿಕೊಂಡರೂ ಸ್ಪಂದಿಸದ ಹಿನ್ನಲೆಯಲ್ಲಿ ಮನೆಯ ಮಾಲೀಕರಿಗೆ ಅನುಮಾನ ಬಂದಾಗ ಈ ಘಟನೆ ಬಯಲಿಗೆ ಬಂದಿದೆ. ಬಳಿಕ ಸ್ಥಳೀಯ ಪೊಲೀಸ್‌‍ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಠಾಣಾಧಿಕಾರಿ ಹರಿ ನಾರಾಯಣ ಶರ್ಮಾ ಅವರು ತಕ್ಷಣ ಸ್ಥಳಕ್ಕಾಗಮಿಸಿ ಬಾಗಿಲು ಒಡೆದು ನೋಡಿದಾಗ ಮೃತದೇಹ ಪತ್ತೆಯಾಗಿದೆ. ಆತನ ಸ್ಥಳದಿಂದ ಇದುವರೆಗೆ ಯಾವುದೇ ಆತಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಸ್ಥಳವನ್ನು ಪರೀಕ್ಷಿಸಲು ಎಫ್‌ಎಸ್‌‍ಎಲ್‌ ತಂಡವನ್ನು ಸಹ ಕರೆಯಲಾಗಿದೆ. ಆತನ ಪೋಷಕರಿಗೂ ಮಾಹಿತಿ ನೀಡಲಾಗಿತ್ತು. ಕಳೆದ ಕೆಲವು ದಿನಗಳಲ್ಲಿ ವಿದ್ಯಾರ್ಥಿಯಲ್ಲಿ ಯಾವುದೇ ವರ್ತನೆಯ ಬದಲಾವಣೆಗಳ ಬಗ್ಗೆ ನಾವು ಅವರನ್ನು ಪ್ರಶ್ನಿಸುತ್ತೇವೆ ಎಂದು ಡಿಎಸ್ಪಿ ಹೇಳಿದರು. \ No newline at end of file diff --git a/eesanje/url_47_17_2.txt b/eesanje/url_47_17_2.txt new file mode 100644 index 0000000000000000000000000000000000000000..5977d99485f0ece77e8c11dce9f70a64fa0185af --- /dev/null +++ b/eesanje/url_47_17_2.txt @@ -0,0 +1,6 @@ +ಉತ್ತರ ಪ್ರದೇಶ : ಸರಣಿ ಅಪಘಾತಕ್ಕೆ ಇಡಿ ಕುಟುಂಬ ಬಲಿ + 5 - ' +ಲಕ್ನೋ,ಸೆ.6-ಸರಣಿ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮಧ್ಯರಾತ್ರಿ ನಡೆದಿದೆ.ವೇಗವಾಗಿ ಬಂದ ಕಾರು ಇತರೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಉತ್ತರಪ್ರದೇಶದ ಮೆಹಮೂದಾಬಾದ್‌ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಕ್ನೋ ಕಡೆಗೆ ಹೋಗುತ್ತಿದ್ದ ಅತಿವೇಗದ ಕಾರು ಮೊದಲು ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದು ನಂತರ ವಿರುದ್ಧ ದಿಕ್ಕಿನಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡನೇ ಕಾರು ಸಮೀಪದ ಹೊಂಡಕ್ಕೆ ಹಾರಿದೆ. +ಸ್ಥಳೀಯರು ಕೂಡಲೇ ರಕ್ಷಣೆ ಮಾಡಲು ಮುಂದಾದರು. ಮೂವರು ಸ್ಥಳದಲ್ಲೇ ಮತಪಟ್ಟರೆ, ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಮತರೆಲ್ಲರೂ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ಹೋಗುತ್ತಿದ್ದರು. +ಮತರನ್ನು ಇರ್ಫಾನ್‌, ವಹಿದುನ್‌ ನಿಶಾ, ಅಜೀಜ್‌ ಅಹದ್‌ (ಅಲಿಯಾಸ್‌‍ ಬುದ್ಧ), ತಾಹಿರಾ ಬಾನೋ ಮತ್ತು ಸಬ್ರೀನ್‌ ಎಂದು ಗುರುತಿಸಲಾಗಿದೆ, ಎಲ್ಲರೂ ಬಾರಾಬಂಕಿ ಜಿಲ್ಲೆಯ ಒಂದೇ ಕುಟುಂಬದವರು. ಕಾರು ಚಾಲಕ ವಿವೇಕ್‌ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. \ No newline at end of file diff --git a/eesanje/url_47_17_3.txt b/eesanje/url_47_17_3.txt new file mode 100644 index 0000000000000000000000000000000000000000..6f4c48a5d6615b65df72e828011c57feed5e4ca8 --- /dev/null +++ b/eesanje/url_47_17_3.txt @@ -0,0 +1,7 @@ +ಕೋಲ್ಕತ್ತಾ ವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ : ಸಿಬಿಐ + - , : +ನವದೆಹಲಿ,ಸೆ.6-ಕೋಲ್ಕತ್ತಾದ ಆರ್‌ಜಿಕರ್‌ ಆಸ್ಪತ್ರೆಯಲ್ಲಿ ರೇಪ್‌ ಅಂಡ್‌ ಮರ್ಡರ್‌ಗೆ ಬಲಿಯಾಗಿರುವ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ. ಬಂಧಿತ ವ್ಯಕ್ತಿ ಸಂಜಯ್‌ ರಾಯ್‌ ಮಾತ್ರ ಆರೋಪಿಯಾಗಿದ್ದಾನೆ ಎಂದು ಸಿಬಿಐ ಸ್ಪಷ್ಟಪಡಿಸಿದೆ ಎಂದು ಮೂಲಗಳು ತಿಳಿಸಿವೆ. +ಕೋಲ್ಕತ್ತಾ ಹೈಕೋರ್ಟ್‌ ಸೂಚನೆ ಮೇರೆಗೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ತನಿಖೆಯನ್ನು ಪೂರ್ಣಗೊಳಿಸಿದ್ದು ಶೀಘ್ರದಲ್ಲೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿವೆ. +ನಾನು ಐದು ದಿನಗಳ ಕಾಲಾವಕಾಶ ಕೇಳಿದೆೞ (ಪೊಲೀಸರು ಫೆಡರಲ್‌ ಏಜೆನ್ಸಿಗೆ ಕರೆ ಮಾಡುವ ಮೊದಲು ತನಿಖೆ ಮಾಡಲು) ಆದರೆ ಪ್ರಕರಣವನ್ನು ಸಿಬಿಐಗೆ ಕಳುಹಿಸಲಾಗಿದೆ. ಅವರಿಗೆ ನ್ಯಾಯ ಬೇಡ, ಅವರಿಗೆ ವಿಳಂಬ ಬೇಕು. 16 ದಿನಗಳಾಗಿವೆ, ನ್ಯಾಯ ಎಲ್ಲಿದೆ? ಎಂದು ಸಿಎಂ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದರು. +ಇಪ್ಪತೂರು ದಿನಗಳು ಕಳೆದಿವೆ (ಪ್ರಕರಣವನ್ನು ವರ್ಗಾಯಿಸಿದ ನಂತರ) … ಸಿಬಿಐನಿಂದ ಯಾವುದೇ ಪ್ರಗತಿ ವರದಿ ಇಲ್ಲ. ನಾವು ತನಿಖೆಯ ವಿವರವಾದ ವರದಿಯನ್ನು ಕೋರುತ್ತೇವೆ. ಕೋಲ್ಕತ್ತಾ ಪೊಲೀಸರು ತನಿಖೆ ನಡೆಸುತ್ತಿದ್ದಾಗ ಪತ್ರಿಕಾಗೋಷ್ಠಿಗಳ ಮೂಲಕ ನಿಯಮಿತ ನವೀಕರಣಗಳನ್ನು ನೀಡಲಾಯಿತು ಎಂದು ಅವರು ಘೋಷಿಸಿದ್ದರು. +ದೆಹಲಿಯ ಸರ್ಕಾರಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ತಜ್ಞರಿಗೆ ಆರೋಪಿಗಳಿಂದ ಡಿಎನ್‌ಎ ಸಹಿತ ವೈದ್ಯಕೀಯ ವರದಿಯನ್ನು ಸಿಬಿಐ ಸಿದ್ದಪಡಿಸಿದೆ. ವಿಷಯದ ಕುರಿತು ವೈದ್ಯರ ಅಂತಿಮ ಅಭಿಪ್ರಾಯವನ್ನು ಪಡೆದ ನಂತರ ಈ ವಿಚಾರಣೆಯನ್ನು ಪೂರ್ಣಗೊಳಿಸಲು ಸಂಸ್ಥೆ ಎದುರುನೋಡುತ್ತಿದೆ. \ No newline at end of file diff --git a/eesanje/url_47_17_4.txt b/eesanje/url_47_17_4.txt new file mode 100644 index 0000000000000000000000000000000000000000..d655687ecf6a7ec4039b5e92aa8543e1e304ed2a --- /dev/null +++ b/eesanje/url_47_17_4.txt @@ -0,0 +1,7 @@ +ಆರ್‌ಜಿ ಕರ್‌ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಮನೆ ಮೇಲೆ ಇಡಿ ದಾಳಿ + +ಕೋಲ್ಕತ್ತಾ,ಸೆ.6-ಆರ್‌ಜಿಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಸರ್ಕಾರಿ ಸಂಸ್ಥೆಯಲ್ಲಿ ನಡೆದ ಆರ್ಥಿಕ ಹಗರಣದ ಭಾಗವಾಗಿ ದಾಳಿ ನಡೆದಿದೆ. ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. +ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದ ಆರೋಪದ ಹಣಕಾಸು ಅಕ್ರಮಗಳ ಬಗ್ಗೆ ಕೇಂದ್ರೀಯ ಸಂಸ್ಥೆಗಳ ತನಿಖೆಗೆ ಕಾರಣವಾಯಿತು. ಸಂದೀಪ್‌ ಘೋಷ್‌ ಅವರು ಆಪಾದಿತ ಹಣಕಾಸು ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. +ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ನೇತತ್ವದ ಪೀಠದ ಮುಂದೆ ಈ ಅರ್ಜಿ ಇಂದು ವಿಚಾರಣೆ ನಡೆಸಲಿದೆ.ಕೋಲ್ಕತ್ತಾ ನ್ಯಾಯಾಲಯವು ಆರ್‌ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ಹಣಕಾಸು ಅವ್ಯವಹಾರದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಘೋಷ್‌ ಮತ್ತು ಇತರ ಮೂವರನ್ನು ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತು. +ಭ್ರಷ್ಟಾಚಾರ ಪ್ರಕರಣದಲ್ಲಿ ಹೆಚ್ಚಿನ ತನಿಖೆಯ ಅಗತ್ಯ ಉಲ್ಲೇಖಿಸಿ ಸಿಬಿಐ 10 ದಿನಗಳ ಕಸ್ಟಡಿಗೆ ಕೋರಿತ್ತು. ಸೋಮವಾರ ರಾತ್ರಿ ಫೆಡರಲ್‌ ಏಜೆನ್ಸಿಯಿಂದ ಬಂಧಿಸಲ್ಪಟ್ಟ ಸಂದೀಪ್‌ ಘೋಷ್‌ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಹಲ್ಲೆ ಮಾಡಲಾಗಿದೆ. +ಸಿಬಿಐ ತನ್ನ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್‌) ಘೋಷ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 120 ಬಿ (ಕ್ರಿಮಿನಲ್‌ ಪಿತೂರಿ), ಸೆಕ್ಷನ್‌ 420 ಐಪಿಸಿ (ವಂಚನೆ ಮತ್ತು ಅಪ್ರಮಾಣಿಕತೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ಆರೋಪ ಮಾಡಿದೆ.ಸೆಪ್ಟೆಂಬರ್‌ 2 ರಂದು, ಭ್ರಷ್ಟಾಚಾರ ಪ್ರಕರಣದಲ್ಲಿ ಡಾ ಘೋಷ್‌ ಅವರನ್ನು ಸಿಬಿಐ ಬಂಧಿಸಿತು ಮತ್ತು ನಂತರ ಅವರನ್ನು ತನಿಖಾ ಸಂಸ್ಥೆಯ ಕಸ್ಟಡಿಗೆ ಕಳುಹಿಸಲಾಯಿತು. \ No newline at end of file diff --git a/eesanje/url_47_17_5.txt b/eesanje/url_47_17_5.txt new file mode 100644 index 0000000000000000000000000000000000000000..d4cb552f8bcf0cba217472e977ec4b7f20bd60ff --- /dev/null +++ b/eesanje/url_47_17_5.txt @@ -0,0 +1,6 @@ +ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮದ್ಯ ಕುಡಿಸಿ ರಸ್ತೆ ಮಧ್ಯೆಯೇ ಅತ್ಯಾಚಾರ + , +ಭೂಪಾಲ್‌,ಸೆ.6– ದುಷ್ಕರ್ಮಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮದ್ಯಪಾನ ಮಾಡಿಸಿ ರಸ್ತೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು ಈ ವಿಷಯದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. +ಉಜ್ಜಯಿನಿಯ ಕೊ್ಲಾ ಫಾಟಕ್‌ ಬಳಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆಯ ವಿಡಿಯೋ ವೈರಲ್‌ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ವಿಡಿಯೋ ವೈರಲ್‌ ಆದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಸಂತ್ರಸ್ತ ಮಹಿಳೆಯ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. +ಯುವಕ ತನ್ನನ್ನು ಮದುವೆಯಾಗುವುದಾಗಿ ಆಮಿಷ ಒಡ್ಡಿ ನಂತರ ಮದ್ಯ ಕುಡಿಸಿ ನಂತರ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿ ಲೋಕೇಶ್‌ ಎಂದು ಹೇಳಲಾಗಿದ್ದು, ಕತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದ. +ನಂತರ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಡಿಯೋ ಆಧರಿಸಿ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಉಜ್ಜಯಿನಿ ಸೆಂಟ್ರಲ್‌ ಕೊತ್ವಾಲಿ ಪೊಲೀಸ್‌‍ ಠಾಣೆಯ ಸಿಎಸ್‌‍ ಪಿ ಓಂ ಪ್ರಕಾಶ್‌ ಮಿಶ್ರಾ ತಿಳಿಸಿದ್ದಾರೆ. \ No newline at end of file diff --git a/eesanje/url_47_17_6.txt b/eesanje/url_47_17_6.txt new file mode 100644 index 0000000000000000000000000000000000000000..5d7860684554107145efa39cbe2c904295578bd5 --- /dev/null +++ b/eesanje/url_47_17_6.txt @@ -0,0 +1,5 @@ +ಕುಡಿದ ನಶೆಯಲ್ಲಿ ತಾಯಿ ಮೇಲೆ ಅತ್ಯಾಚಾರವೆಸಗಿದ ಪಾಪಿಪುತ್ರ + : +ಜೈಪುರ,ಸೆ.5-ಕುಡಿತದ ಮತ್ತಿನಲ್ಲಿದ್ದ ಮಗ ತನ್ನ ತಾಯಿಯ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ.ದೂರದಲ್ಲಿರುವ ತನ್ನ ಸಹೋದರ ಮನೆಗೆ ಪುತ್ರನೊಂದಿಗೆ ತೆರಳಿದ್ದ 52 ವರ್ಷದ ಮಹಿಳೆ ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಕುಡಿತದ ಮತ್ತಿನಲ್ಲಿದ್ದ ಮಗನೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. +ಮತ್ತೊಬ್ಬ ಮಗ ಹಾಗೂ ಮಗಳೊಂದಿಗೆ ದಾಬಿ ಪೊಲೀಸ್‌‍ ಠಾಣೆಗೆ ತೆರಳಿ ಕಾಮುಕ ಮಗನ ವಿರುದ್ಧ ಆ ತಾಯಿ ದೂರು ನೀಡಿದ್ದಾರೆ.ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಲಾಗಿದೆ. +ನಾವು ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್‌‍ ವರಿಷ್ಠಾಧಿಕಾರಿ (ಡಿಎಸ್ಪಿ) ತರುಂಕಂತ್‌ ಸೋಮಾನಿ ತಿಳಿಸಿದ್ದಾರೆ. \ No newline at end of file diff --git a/eesanje/url_47_17_7.txt b/eesanje/url_47_17_7.txt new file mode 100644 index 0000000000000000000000000000000000000000..dc2c2dd85f853d8d02fd51ff77e66f3684e9ec2c --- /dev/null +++ b/eesanje/url_47_17_7.txt @@ -0,0 +1,6 @@ +ಮೊಮ್ಮಗನಿಂದಲೇ ಕೊಲೆಯಾದ ನಿವೃತ್ತ ಯೋಧ + +ನವದೆಹಲಿ,ಸೆ.5-ಆಸ್ತಿ ವ್ಯಾಮೋಹದಿಂದ ಮೊಮಗನೆ ನಿವೃತ ಸೈನಿಕರಾಗಿದ್ದ ತಾತನನ್ನು ಕೊಲೆ ಮಾಡಿರುವ ಘಟನೆ ದೆಹಲಿಯ ಆದರ್ಶ್ನಗರದಲ್ಲಿ ನಡೆದಿದೆ.ತಾತ ಭೋಜರಾಜ್‌ ಅವರನ್ನು ಕೊಂದ ಪಾಪಿ ಮೊಮಗನ್ನು 35 ವರ್ಷದ ಪ್ರದೀಪ್‌ ಎಂದು ಗುರುತಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕಾಗಿ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ. +1985 ರಲ್ಲಿ ಭಾರತೀಯ ಸೇನೆಯಿಂದ ನಿವತ್ತರಾಗಿದ್ದ ಮಾಜಿ ಹವಾಲ್ದಾರ್‌ ಭೋಜರಾಜ್‌ ಅವರು ತಮ ಪಿಂಚಣಿ ಹಣವನ್ನು ತನ್ನ ಇಬ್ಬರು ಪುತ್ರರಾದ ಜಯವೀರ್‌ ಮತ್ತು ಸುರೇಶ್‌ ಅವರಿಗೆ ಕೊಡುತ್ತಿದ್ದರು. ಅವರು ಇಬ್ಬರು ಪುತ್ರರಿಗೂ ಮನೆಗಳನ್ನು ಕಟ್ಟಿಸಿಕೊಟ್ಟಿದ್ದರು ಆದರೆ ಆಜಾದ್‌ಪುರ ಗ್ರಾಮದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. +ಪಿಂಚಣಿ ಹಣ ಹಂಚಿಕೆ ವಿಚಾರವಾಗಿ ಸುರೇಶ್‌ ಅವರ ಪುತ್ರ ಪ್ರದೀಪ್‌ ಭೋಜರಾಜ್‌ ಜತೆ ವಾಗ್ವಾದ ನಡೆಸಿದಾಗ ಈ ಘಟನೆ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಪ್ರದೀಪ್‌ ಭೋಜರಾಜ್‌ ಅವರನ್ನು ದೊಣ್ಣೆಯಿಂದ ಪದೇ ಪದೇ ಥಳಿಸಿದ್ದ ಎನ್ನಲಾಗಿದೆ. +ಭೋಜರಾಜ್‌ ತೀವ್ರವಾಗಿ ಗಾಯಗೊಂಡಿದ್ದು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಪ್ರದೀಪ್‌ನನ್ನು ಪತ್ತೆ ಹಚ್ಚಿ ಬಂಧಿಸುವ ಪ್ರಯತ್ನ ನಡೆಯುತ್ತಿದೆ. \ No newline at end of file diff --git a/eesanje/url_47_17_8.txt b/eesanje/url_47_17_8.txt new file mode 100644 index 0000000000000000000000000000000000000000..886736c4262d38200ae65b5b0290579a0b5a9995 --- /dev/null +++ b/eesanje/url_47_17_8.txt @@ -0,0 +1,8 @@ +ಮನೆಯ ಮೇಲೆ ಬಿತ್ತು ವಿಮಾನದ ಎಂಜಿನ್‌ ತುಣುಕು + ' ; +ನವದೆಹಲಿ,ಸೆ.5-ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ವಿಮಾನೆ ಎಂಜಿನ್‌ನಿಂದ ಲೋಹದ ವಸ್ತುವೊಂದು ಮನೆಯ ಮೇಲೆ ಬಿದ್ದಿರುವ ಘಟನೆ ವರದಿಯಾಗಿದೆ.ತಕ್ಷಣವೇ, ಆ ಸಮಯದಲ್ಲಿ ಟೇಕ್‌ ಆಫ್‌ ಆಗುತ್ತಿದ್ದ ಎಲ್ಲಾ ವಿಮಾನಗಳ ಪೈಲಟ್‌ಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಇದರ ನಂತರ, ವಿಮಾನವನ್ನು ಗುರುತಿಸಿ ಮತ್ತು ಅದನ್ನು ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲು ಸೂಚನೆಗಳನ್ನು ನೀಡಲಾಗಿತ್ತು. +ಈ ಘಟನೆ ಸೆ.2 ರಂದು ತಡರಾತ್ರಿ 9.30 ರ ಸುಮಾರಿಗೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಖಾಸಗಿ ವಿಮಾನಯಾನ ಸಂಸ್ಥೆಯೊಂದು ಐಜಿಐ ವಿಮಾನ ನಿಲ್ದಾಣದಿಂದ ಹೊರಟಿತ್ತು. ವಿಮಾನವು ವಸಂತ್‌ ಕುಂಜ್‌ ಪ್ರದೇಶದಿಂದ ಹೊರಡುವಾಗ, ಅದರ ಕೆಲವು ಲೋಹದ ತುಣುಕುಗಳು ಆ ಪ್ರದೇಶದ ಮನೆಯೊಂದರ ಛಾವಣಿಯ ಮೇಲೆ ಬಿದ್ದಿದ್ದವು. +ತಕ್ಷಣ ಮನೆಯ ಮಾಲೀಕರು ದೆಹಲಿ ಪೊಲೀಸ್‌‍ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಹೊರಗೆ ವಿಮಾನದ ಎಂಜಿನ್‌ನ ಭಾಗ ಪತ್ತೆಯಾದ ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ. +ಕಳೆದ ಸೋಮವಾರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ವಿಮಾನದಿಂದ ಈ ಲೋಹದ ವಸ್ತುಗಳು ಬಿದ್ದಿರಬಹುದು ಎಂದು ಮೂಲಗಳು ತಿಳಿಸಿವೆ. +ಬಹುಶಃ ವಿಮಾನ ಎಂಜಿನ್‌ನಿಂದ ಮುರಿದ ಬ್ಲೇಡ್‌ನ ಭಾಗ ಇದಾಗಿರಬಹುದು. ಆದಾಗ್ಯೂ, ಲೋಹದ ತುಂಡುಗಳು ಆ ವಿಮಾನದದ್ದೇ ಅಥವಾ ಇಲ್ಲವೇ ಎಂಬುದನ್ನು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ. +ಐಜಿಐ ವಿಮಾನ ನಿಲ್ದಾಣ ಸೇರಿದಂತೆ ಹಲವು ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಇದಾದ ನಂತರ ವಸಂತ್‌ ಕುಂಜ್‌ ಕಡೆಗೆ ಹಾರಿದ ವಿಮಾನಗಳನ್ನು ಗುರುತಿಸುವ ಕಾರ್ಯ ತ್ವರಿತವಾಗಿ ಆರಂಭವಾಯಿತು. ಆದಾಗ್ಯೂ, ಸ್ವಲ್ಪ ತನಿಖೆಯ ನಂತರ, ಆ ಸಮಯದಲ್ಲಿ ಐಜಿಐ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಮತ್ತು ಲ್ಯಾಂಡ್‌ ಆಗುವ ಬಗ್ಗೆ ಎಟಿಸಿ ವಿಮಾನದ ಪೈಲಟ್‌ಗೆ ಮಾಹಿತಿ ನೀಡಿತು. ಏರ್‌ ಇಂಡಿಯಾ ಎಕ್‌್ಸಪ್ರೆಸ್‌‍ ವಿಮಾನ ಐಎಕ್‌್ಸ -145 ನ ಭಾಗ ಅದು ಎಂದು ತಿಳಿದುಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಸುರಕ್ಷಿತವಾಗಿದ್ದಾರೆ. \ No newline at end of file diff --git a/eesanje/url_47_17_9.txt b/eesanje/url_47_17_9.txt new file mode 100644 index 0000000000000000000000000000000000000000..ea36361d33808c3d6c5b321f0738826634f617e9 --- /dev/null +++ b/eesanje/url_47_17_9.txt @@ -0,0 +1,9 @@ +11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ + - 11 FY27 +ನವದೆಹಲಿ,ಸೆ.5-ರೈತ ಸಮುದಾಯವನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2027ರೊಳಗೆ 11 ಕೋಟಿ ರೈತರಿಗೆ ಡಿಜಿಟಲ್ ಐಡಿ ಕಾರ್ಡ್ ಸೃಷ್ಟಿಸುವ ಗುರಿ ಹೊಂದಿದೆ. ಇದು ಆಧಾರ್ ಕಾರ್ಡ್ನಂತೆಯೇ ಇರುತ್ತದೆ. +ರೈತರಿಗೆ ಪ್ರಮುಖ ಸೇವೆಗಳು ಮತ್ತು ಯೋಜನೆಗಳನ್ನು ತಲುಪಿಸುವ ರೈತ ಕೇಂದ್ರಿತ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (ಡಿಪಿಐ)ದಂತೆ ರಚಿಸಿರುವ ಅಗ್ರಿಸ್ಟಾಕ್ ಉಪಕ್ರಮದ ಭಾಗವಾಗಿರುವುದು ಇದರ ಗುರಿಯಾಗಿದೆ. +ಆಧಾರ್ ಕಾರ್ಡ್ನಂತೆಯೇ ರೈತರಿಗೆ ೞರೈತ ಗುರುತಿನ ಚೀಟಿ ಪರಿಚಯಿಸುವುದು ಅಗ್ರಿಸ್ಟ್ಯಾಕ್ನ ಪ್ರಮುಖ ವೈಶಿಷ್ಟ್ಯವಾಗಿದೆ. 2024-25ರ ಹಣಕಾಸು ವರ್ಷದಲ್ಲಿ 6 ಕೋಟಿ, 2025-26ರ ಹಣಕಾಸು ವರ್ಷದಲ್ಲಿ 3 ಕೋಟಿ ಮತ್ತು 2026-27ನೇ ಸಾಲಿನಲ್ಲಿ 2 ಕೋಟಿ ಡಿಜಿಟಲ್ ಐಡಿಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸರ್ಕಾರ ಹೇಳಿದೆ. +ರಾಜ್ಯ ಸರ್ಕಾರ, ಕೇಂದ್ರಾಡಳಿತ ಪ್ರದೇಶಗಳಿಂದ ರಚಿಸಲ್ಪಟ್ಟ ಮತ್ತು ನಿರ್ವಹಿಸಲ್ಪಡುವ ಈ ಗುರುತಿನ ಚೀಟಿಗಳಲ್ಲಿ ಭೂ ದಾಖಲೆಗಳು, ಜಾನುವಾರುಗಳ ಮಾಲೀಕತ್ವ, ಬಿತ್ತಿದ ಬೆಳೆಗಳು ಮತ್ತು ಪಡೆದ ಪ್ರಯೋಜನಗಳು ಸೇರಿದಂತೆ ವಿವಿಧ ರೈತ-ಸಂಬಂಧಿತ ಡೇಟಾವನ್ನು ಲಿಂಕ್ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ. +2024-25 ರಲ್ಲಿ 400 ಜಿಲ್ಲೆಗಳು ಮತ್ತು 2025-26 ರಲ್ಲಿ ಎಲ್ಲಾ ಜಿಲ್ಲೆಗಳನ್ನು ಒಳಗೊಳ್ಳುವ ಡಿಜಿಟಲ್ ಬೆಳೆ ಸಮೀಕ್ಷೆಯನ್ನು ಎರಡು ವರ್ಷಗಳಲ್ಲಿ ರಾಷ್ಟ್ರವ್ಯಾಪಿ ಪ್ರಾರಂಭಿಸಲು ಸರ್ಕಾರ ಯೋಜಿಸಿದೆ. +ಕೃಷಿ ಸಚಿವಾಲಯದ ಪ್ರಕಾರ, ಡಿಜಿಟಲ್ ಕ್ರಾಂತಿಯು ಸುರಕ್ಷಿತ ಪಾವತಿಗಳು ಮತ್ತು ವಹಿವಾಟುಗಳನ್ನು ರಚಿಸುವ ಮೂಲಕ ಇತ್ತೀಚಿನ ವರ್ಷಗಳಲ್ಲಿ ಆಡಳಿತ ಮತ್ತು ಸೇವಾ ವಿತರಣೆಯನ್ನು ಗಣನೀಯವಾಗಿ ಪರಿವರ್ತಿಸಿದೆ. ಇದು ಹಣಕಾಸು, ಆರೋಗ್ಯ, ಶಿಕ್ಷಣ, ಮತ್ತು ಚಿಲ್ಲರೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಡಿಜಿಟಲ್ ಪೂರಕ ಪರಿಸರಕ್ಕೆ ಹಾದಿ ಸುಗಮಗೊಳಿಸಿದೆ. +ಕೃಷಿ ಕ್ಷೇತ್ರದಲ್ಲಿ ಇದೇ ರೀತಿಯ ಪರಿವರ್ತನೆಗಾಗಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2,817 ಕೋಟಿ ರೂಪಾಯಿಗಳ ಗಣನೀಯ ಹಣಕಾಸಿನ ವೆಚ್ಚದೊಂದಿಗೆ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ೞ ಗೆ ಅನುಮೋದನೆ ನೀಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಭಾಗಿತ್ವದ ಮೂಲಕ ಅಗ್ರಿಸ್ಟಾಕ್ ಅನುಷ್ಠಾನ ಪ್ರಗತಿಯಲ್ಲಿದ್ದು, 19 ರಾಜ್ಯಗಳು ಕೃಷಿ ಸಚಿವಾಲಯದೊಂದಿಗೆ ಒಡಂಬಡಿಕೆಗೆ ಸಹಿ ಹಾಕಿವೆ. \ No newline at end of file diff --git a/eesanje/url_47_180_1.txt b/eesanje/url_47_180_1.txt new file mode 100644 index 0000000000000000000000000000000000000000..b97b7e210b2e9ad58b6359f507a1da86615feded --- /dev/null +++ b/eesanje/url_47_180_1.txt @@ -0,0 +1,10 @@ +ಗಣರಾಜ್ಯೋತ್ಸವದಲ್ಲಿ ಸ್ತ್ರೀ ಶಕ್ತಿ ಪ್ರದರ್ಶನ ಅನಾವರಣ +ನವದೆಹಲಿ, ಜ 26 (ಪಿಟಿಐ) ರಾಷ್ಟ್ರ ರಾಜಧಾನಿಯ ಹೃದಯಭಾಗದಲ್ಲಿರುವ ಕರ್ತವ್ಯ ಪಥದಲ್ಲಿ ಭಾರತವು ತನ್ನ ಮಿಲಿಟರಿ ಶಕ್ತಿ ಮತ್ತು ಶ್ರೀಮಂತ ಸಾಂಸ್ಕøತಿಕ ಪರಂಪರೆಯ ಪ್ರಭಾವಶಾಲಿ ಪ್ರದರ್ಶನದೊಂದಿಗೆ ಇಂದು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸಿತು. +ರಾಷ್ಟ್ರದ ಮಹಿಳಾ ಶಕ್ತಿ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಪ್ರತಿಬಿಂಬಿಸುವ ಪ್ರಮುಖ ವಿಷಯದೊಂದಿಗೆ ಮಹಾ ಆಚರಣೆಗಳು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ 90 ನಿಮಿಷಗಳ ಪರೇಡ್‍ಗೆ ವಿದ್ಯುಕ್ತ ಚಾಲನೆ ನೀಡಿದರು. +ಸಶಸ್ತ್ರ ಪಡೆಗಳು ಪರೇಡ್‍ನಲ್ಲಿ ಕ್ಷಿಪಣಿಗಳು, ಡ್ರೋನ್ ಜಾಮರ್‍ಗಳು, ಕಣ್ಗಾವಲು ವ್ಯವಸ್ಥೆಗಳು, ವಾಹನ-ಆರೋಹಿತವಾದ ಮಾರ್ಟರ್‍ಗಳು ಮತ್ತು ಪದಾತಿ ದಳದ ಯುದ್ಧ ವಾಹನಗಳಂತಹ ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಉಪಕರಣಗಳ ಶ್ರೇಣಿಗಳನ್ನು ಪ್ರದರ್ಶಿಸಲಾಯಿತು. ಇದೆ ಮೊದಲ ಬಾರಿಗೆ, ಎಲ್ಲಾ ಮಹಿಳಾ ತ್ರಿ-ಸೇವಾ ತುಕಡಿಯು ಗಣ ರಾಜ್ಯೋತ್ಸದ ಭಾಗವಾಗಿದ್ದವು. +ಅಲ್ಲದೆ, ಸಾಂಪ್ರದಾಯಿಕ ಮಿಲಿಟರಿ ಬ್ಯಾಂಡ್‍ಗಳ ಬದಲಿಗೆ ಮೊದಲ ಬಾರಿಗೆ 100 ಕ್ಕೂ ಹೆಚ್ಚು ಮಹಿಳಾ ಕಲಾವಿದರು ಭಾರತೀಯ ಸಂಗೀತ ವಾದ್ಯಗಳಾದ ಸಂಖ್, ನಾದಸ್ವರಂ ಮತ್ತು ನಾಗಾರವನ್ನು ನುಡಿಸಿದರು. ಸುಮಾರು 15 ಮಹಿಳಾ ಪೈಲಟ್‍ಗಳು ನಾರಿ ಶಕ್ತಿಯನ್ನು ಪ್ರತಿನಿಸುವ ಭಾರತೀಯ ವಾಯುಪಡೆಯ ಫ್ಲೈ-ಪಾಸ್ಟ್ ಸಮಯದಲ್ಲಿ ಪ್ರೇಕ್ಷಕರನ್ನು ಆಕರ್ಷಿಸಿದರು. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ತುಕಡಿಗಳು ಮಹಿಳಾ ಸಿಬ್ಬಂದಿಗಳು ಹಾಜರಿದ್ದರು. +ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡು ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಆರಂಭವಾದ ಪರೇಡ್ ಕಾರ್ಯಕ್ರಮಗಳು 90 ನಿಮಿಷಗಳ ಕಾಲ ನಡೆಯಿತು. +105 ಎಂಎಂ ಭಾರತೀಯ ಫೀಲ್ಡ ಗನ್‍ಗಳ ಸ್ವದೇಶಿ ಬಂದೂಕು ವ್ಯವಸ್ಥೆಯೊಂದಿಗೆ 21-ಗನ್ ಸೆಲ್ಯೂಟ್‍ನೊಂದಿಗೆ ರಾಷ್ಟ್ರಗೀತೆ ಹಾಡಿದ ನಂತರ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. 105 ಹೆಲಿಕಾಪ್ಟರ್ ಘಟಕದ ನಾಲ್ಕು ಎಂಐ -17 ಐವಿ ಹೆಲಿಕಾಪ್ಟರ್‍ಗಳು ಕರ್ತವ್ಯ ಪಥದಲ್ಲಿರುವ ಪ್ರೇಕ್ಷಕರ ಮೇಲೆ ಹೂ ಮಳೆ ಸುರಿಸಿದವು. ನಂತರ 100 ಕ್ಕೂ ಹೆಚ್ಚು ಮಹಿಳಾ ಕಲಾವಿದರು ವಿವಿಧ ರೀತಿಯ ತಾಳವಾದ್ಯಗಳನ್ನು ನುಡಿಸುವ ಆವಾಹನ್ ಬ್ಯಾಂಡ್ ನಡೆಸಿಕೊಟ್ಟರು. ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗೌರವ ವಂದನೆ ಸ್ವೀಕರಿಸುವುದರೊಂದಿಗೆ ಪಥಸಂಚಲನ ನಡೆಯಿತು. +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ಇದರ ನೇತೃತ್ವವನ್ನು ದೆಹಲಿ ಪ್ರದೇಶದ ಜನರಲ್ ಆಫೀಸರ್ ಕಮಾಂಡಿಂಗ್ ಲೆಫ್ಟಿನೆಂಟ್ ಜನರಲ್ ಭವ್ನಿಶ್ ಕುಮಾರ್ ವಹಿಸಿದ್ದರು. ಕರ್ತವ್ಯ ಪಥವು ಫ್ರೆಂಚ್ ಸಶಸ್ತ್ರ ಪಡೆಗಳ ಸಂಯೋಜಿತ ಬ್ಯಾಂಡ್ ಮತ್ತು ಮಾರ್ಚಿಂಗ್ ತುಕಡಿಯಿಂದ ಮಾರ್ಚ್ ಪಾಸ್ಟ್‍ಗೆ ಸಾಕ್ಷಿಯಾಯಿತು. +ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 16 ಟ್ಯಾಬ್ಲೋಗಳು ಮತ್ತು ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಂದ ಒಂಬತ್ತು ಟ್ಯಾಬ್ಲೋಗಳು ಪರೇಡ್‍ನಲ್ಲಿ ಭಾಗವಹಿಸಿದ್ದವು.ಅರುಣಾಚಲ ಪ್ರದೇಶ, ಹರಿಯಾಣ, ಮಣಿಪುರ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‍ಗಢ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ಲಡಾಖ್, ತಮಿಳುನಾಡು, ಗುಜರಾತ್, ಮೇಘಾಲಯ, ಜಾರ್ಖಂಡ್, ಉತ್ತರ ಪ್ರದೇಶ, ತೆಲಂಗಾಣ ಮತ್ತಿತರ ಕೇಂದ್ರಾಡಳಿತ ಪ್ರದೇಶಗಳ ಟ್ಯಾಬ್ಲೋಗಳು ಪರೇಡ್‍ನಲ್ಲಿ ಹಾಜರಿದ್ದವು. \ No newline at end of file diff --git a/eesanje/url_47_180_10.txt b/eesanje/url_47_180_10.txt new file mode 100644 index 0000000000000000000000000000000000000000..eeca289740d12de721ddfafb39c807ae76bd5bc4 --- /dev/null +++ b/eesanje/url_47_180_10.txt @@ -0,0 +1,9 @@ +ಹಿಂಡೆನ್‍ಬರ್ಗ್ ಆರೋಪದಿಂದ ಅಮೂಲ್ಯ ಪಾಠ ಕಲಿತಿದ್ದೇವೆ ; ಅದಾನಿ +ನವದೆಹಲಿ,ಜ.25-ಅಮೆರಿಕದ ಮೂಲದ ಹಿಂಡೆನ್‍ಬರ್ಗ್ ಸಂಸ್ಥೆಯ ಆರೋಪಗಳಿಂದ ಅದಾನಿ ಗ್ರೂಪ್ ಮುಕ್ತವಾಗಿದೆ. ಈ ಅನುಭವವು ಕಂಪನಿಗೆ ಅಮೂಲ್ಯವಾದ ಪಾಠಗಳನ್ನು ಕಲಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಅಭಿಪ್ರಾಯಪಟ್ಟಿದ್ದಾರೆ. +ನಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳು ಹೊಸದೇನಲ್ಲ. ಆದ್ದರಿಂದ, ಸಮಗ್ರ ಪ್ರತಿಕ್ರಿಯೆಯನ್ನು ನೀಡಿದ ನಂತರ, ನಾನು ಅದರ ಬಗ್ಗೆ ಹೆಚ್ಚು ಯೋಚಿಸಲಿಲ್ಲ. ಕಡಿಮೆ-ಮಾರಾಟದ ದಾಳಿಯ ಪರಿಣಾಮವು ಸಾಮಾನ್ಯವಾಗಿ ಹಣಕಾಸಿನ ಮಾರುಕಟ್ಟೆಗಳಿಗೆ ಸೀಮಿತವಾಗಿದೆ. ಆದಾಗ್ಯೂ, ಇದು ಒಂದು ವಿಶಿಷ್ಟವಾದ ಎರಡು ಆಯಾಮದ ದಾಳಿಯಾಗಿದೆ ಎಂದಿದ್ದಾರೆ. +ಮಾಧ್ಯಮದಲ್ಲಿ ಕೆಲವರ ನೆರವಿನಿಂದ, ನಮ್ಮ ವಿರುದ್ಧದ ಈ ಸುಳ್ಳುಗಳು ನಮ್ಮ ಬಂಡವಾಳದ ಮಾರುಕಟ್ಟೆ ಕ್ಯಾಪ್ ಅನ್ನು ಗಣನೀಯವಾಗಿ ನಾಶಮಾಡುವಷ್ಟು ವಿನಾಶಕಾರಿಯಾಗಿದೆ. ವಿಶಿಷ್ಟವಾಗಿ, ಬಂಡವಾಳ ಮಾರುಕಟ್ಟೆಗಳು ತರ್ಕಬದ್ಧವಾಗಿರುವುದಕ್ಕಿಂತ ಹೆಚ್ಚು ಭಾವನಾತ್ಮಕವಾಗಿರುತ್ತವೆ. ಸಾವಿರಾರು ಸಣ್ಣ ಹೂಡಿಕೆದಾರರು ತಮ್ಮ ಉಳಿತಾಯವನ್ನು ಕಳೆದುಕೊಂಡಿರುವುದು ನನಗೆ ಹೆಚ್ಚು ನೋವುಂಟುಮಾಡಿದೆ. +ಲೋಕಸಭೆ ಚುನಾವಣೆ ನಂತರ ರಾಹುಲ್ ಬಂಧನ : ಹಿಮಂತ ಬಿಸ್ವಾ ಶರ್ಮಾ +ನಮ್ಮ ವಿರೋಧಿಗಳ ಯೋಜನೆಯು ಸಂಪೂರ್ಣವಾಗಿ ಯಶಸ್ವಿಯಾಗಿದ್ದರೆ, ಡೊಮಿನೊ ಪರಿಣಾಮಗಳು ಅನೇಕ ನಿರ್ಣಾಯಕ ಮೂಲಸೌಕರ್ಯ ಸ್ವತ್ತುಗಳು, ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ವಿದ್ಯುತ್ ಸರಬರಾಜು ಸರಪಳಿಗಳಿಗೆ ದುರ್ಬಲಗೊಳಿಸಬಹುದು ಇದುವ ಯಾವುದೇ ದೇಶಕ್ಕೆ ದುರಂತ ಪರಿಸ್ಥಿತಿ. +ಈ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಪೂರ್ವನಿದರ್ಶನದ ಮೇಲೆ ಹಿಂದೆ ಬೀಳಲು ಸಾಧ್ಯವಾಗಲಿಲ್ಲ. ನಮ್ಮ ವ್ಯವಹಾರಗಳ ಘನತೆಯ ಮೇಲಿನ ನಮ್ಮ ವಿಶ್ವಾಸವು ನಮ್ಮ ಹೆಚ್ಚಾಗಿ ವಿರೋಧಾತ್ಮಕ ಕಾರ್ಯತಂತ್ರವನ್ನು ನಿರ್ದೇಶಿಸುತ್ತದೆ. ನಾವು ಸತ್ಯಗಳನ್ನು ಪಾರದರ್ಶಕವಾಗಿ ವಿವರಿಸುವ ಮತ್ತು ಕಥೆಯ ನಮ್ಮ ಭಾಗವನ್ನು ನಿರೂಪಿಸುವುದರ ಮೇಲೆ ಕೇಂದ್ರೀಕರಿಸಿದ್ದೇವೆ. ಇದು ನಮ್ಮ ಗುಂಪಿನ ವಿರುದ್ಧ ನಕಾರಾತ್ಮಕ ಪ್ರಚಾರಗಳ ಕ್ಷೀಣಿಸಲು ಕಾರಣವಾಯಿತು. +ಕಳೆದ ವರ್ಷದ ಪ್ರಯೋಗಗಳು ಮತ್ತು ಕ್ಲೇಶಗಳು ನಮಗೆ ಅಮೂಲ್ಯವಾದ ಪಾಠಗಳನ್ನು ಕಲಿಸಿವೆ, ನಮ್ಮನ್ನು ಬಲಪಡಿಸಿವೆ ಮತ್ತು ಭಾರತೀಯ ಸಂಸ್ಥೆಗಳಲ್ಲಿ ನಮ್ಮ ನಂಬಿಕೆಯನ್ನು ಪುನರುಚ್ಚರಿಸಿವೆ. ನಮ್ಮ ಮೇಲಿನ ಈ ವಂಚಕ ದಾಳಿ – ಮತ್ತು ನಮ್ಮ ಬಲವಾದ ಪ್ರತಿಕ್ರಮಗಳು – ನಿಸ್ಸಂದೇಹವಾಗಿ ಒಂದು ಕೇಸ್ ಸ್ಟಡಿ ಆಗುತ್ತದೆ ಎಂದಿದ್ದಾರೆ. +ಈ ಅನುಭವದಿಂದ ನಾವು ಬಲಶಾಲಿಯಾಗಿ ಹೊರಹೊಮ್ಮಿದ್ದೇವೆ ಮತ್ತು ಭಾರತದ ಬೆಳವಣಿಗೆಯ ಕಥೆಗೆ ನಮ್ಮ ವಿನಮ್ರ ಕೊಡುಗೆಯನ್ನು ಮುಂದುವರಿಸುವ ನಮ್ಮ ಸಂಕಲ್ಪದಲ್ಲಿ ಹೆಚ್ಚು ಅಚಲವಾಗಿದ್ದೇವೆ ಎಂದು ನಾನು ನಂಬುತ್ತೇನೆ. \ No newline at end of file diff --git a/eesanje/url_47_180_11.txt b/eesanje/url_47_180_11.txt new file mode 100644 index 0000000000000000000000000000000000000000..c10fd9d4f29215d1c1a80b90a43030f36a2521f7 --- /dev/null +++ b/eesanje/url_47_180_11.txt @@ -0,0 +1,8 @@ +ಇಂದು ಗಣರಾಜ್ಯೋತ್ಸವದ ಮುಖ್ಯ ಅತಿಥಿ ಮ್ಯಾಕ್ರನ್ ಜೊತೆ ಮೋದಿ ರೋಡ್ ಶೋ +ನವದೆಹಲಿ,ಜ.25- ಈ ವರ್ಷದ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಜೈಪುರಕ್ಕೆ ಬಂದಿಳಿಯಲಿದ್ದು, ಅವರು ಒಂದೆರಡು ಪಾರಂಪರಿಕ ತಾಣಗಳ ಪ್ರವಾಸ ಮತ್ತು ರೋಡ್‍ಶೋಗಾಗಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ. ಅವರು ಇಂದು ಅಮೇರ್ ಕೋಟೆಗೆ ಭೇಟಿ ನೀಡಲಿದ್ದು, ಅಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. +ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಜಂತರ್ ಮಂತರ್ ಪ್ರವಾಸದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸೇರಿಕೊಳ್ಳಲಿದ್ದಾರೆ. ನಂತರ ಉಭಯ ನಾಯಕರು ಜಂತರ್ ಮಂತರ್‍ನಿಂದ ಸಂಗನೇರಿ ಗೇಟ್‍ವರೆಗೆ ಹವಾ ಮಹಲ್‍ನಲ್ಲಿ ನಿಲುಗಡೆಯೊಂದಿಗೆ ಜಂಟಿ ರೋಡ್‍ಶೋನಲ್ಲಿ ಭಾಗವಹಿಸಲಿದ್ದಾರೆ. +ಅವರು ಹವಾ ಮಹಲ್‍ನಲ್ಲಿ ಜೈಪುರದ ವಿಶೇಷ ಮಸಾಲಾ ಚಾಯ್ ಅನ್ನು ಹೊಂದಿರುತ್ತಾರೆ ಮತ್ತು ನೀಲಿ ಕುಂಬಾರಿಕೆ ಮತ್ತು ಪ್ರಸಿದ್ಧ ಕೆತ್ತನೆಯ ಕೆಲಸದಂತಹ ಕರಕುಶಲ ವಸ್ತುಗಳನ್ನು ತೆಗೆದುಕೊಳ್ಳುತ್ತಾರೆ, ಅದಕ್ಕಾಗಿ ಅವರು ಭೀಮ್ ಯುಪಿಐ ಮೂಲಕ ಪಾವತಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಗಣ್ಯರು ಬ್ರೌಸ್ ಮಾಡಲು ಹವಾ ಮಹಲ್‍ನ ಪಕ್ಕದಲ್ಲಿ ಕರಕುಶಲ ಕಿಯೋಸ್ಕ್‍ಗಳನ್ನು ಸ್ಥಾಪಿಸಲಾಗಿದೆ. +ರೈಲುಗಳ ಅಪಘಾತ ತಡೆಯುವ ‘ಕವಚ್’ ಸಿಸ್ಟಮ್ ಯಶಸ್ವಿ ಪರೀಕ್ಷೆ +ರಾಂಬಾಗ್ ಅರಮನೆಯಲ್ಲಿ ಮ್ಯಾಕ್ರನ್‍ಗೆ ಖಾಸಗಿ ಭೋಜನವನ್ನು ಸಹ ಯೋಜಿಸಲಾಗಿದೆ. ಕೇಂದ್ರ ಮತ್ತು ಫ್ರೆಂಚ್ ಸರ್ಕಾರವು ಫ್ರೆಂಚ್ ಫೈಟರ್ ಜೆಟ್‍ಗಳು ಮತ್ತು ಸೈನ್ಯಕ್ಕಾಗಿ ಜಲಾಂತರ್ಗಾಮಿ ನೌಕೆಗಳ ಬಹು-ಶತಕೋಟಿ ಡಾಲರ್ ವ್ಯವಹಾರಗಳ ಮಾತುಕತೆಯನ್ನು ಮುಂದುವರೆಸುತ್ತಿರುವಾಗ ಈ ಭೇಟಿ ಬಂದಿದೆ. +ನಂತರ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದ 26 ರಫೇಲ್ ಯುದ್ಧ ವಿಮಾನಗಳು ಮತ್ತು ಮೂರು ಸ್ಕಾರ್ಪಿಯನ್ ಜಲಾಂತರ್ಗಾಮಿ ನೌಕೆಗಳ ಖರೀದಿಯ ಪ್ರಸ್ತಾಪವೂ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಫ್ರಾನ್ಸ್ ಭಾರತದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರ ಮತ್ತು ದಶಕಗಳಿಂದ ಯುರೋಪ್‍ನಲ್ಲಿ ಅದರ ಅತ್ಯಂತ ಹಳೆಯ ಮತ್ತು ಹತ್ತಿರದ ಪಾಲುದಾರರಲ್ಲಿ ಒಂದಾಗಿದೆ. +ಗಣರಾಜ್ಯೋತ್ಸವದ ಕೊನೆಯ ಕ್ಷಣದ ಆಹ್ವಾನವನ್ನು ಅಧ್ಯಕ್ಷ ಮ್ಯಾಕ್ರನ್ ಸ್ವೀಕರಿಸಿದ್ದರು, ಇದು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಲದ ಗುರುತು ಎಂದು ಬಿಂಬಿಸಲಾಗಿದೆ. ತಾನು ಬರಲು ಸಾಧ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ತಿಳಿಸಿದಾಗ ನವದೆಹಲಿ ಪ್ಯಾರಿಸ್‍ಗೆ ಕರೆ ಮಾಡಿತ್ತು. ಕಳೆದ ವರ್ಷ ಜುಲೈನಲ್ಲಿ ಫ್ರಾನ್ಸ್‍ನ ಬಾಸ್ಟಿಲ್ ಡೇ ಆಚರಣೆಯಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿದ್ದರು. \ No newline at end of file diff --git a/eesanje/url_47_180_12.txt b/eesanje/url_47_180_12.txt new file mode 100644 index 0000000000000000000000000000000000000000..d63c8368f3d0e20defff8d11e90eb2981d4efff6 --- /dev/null +++ b/eesanje/url_47_180_12.txt @@ -0,0 +1,8 @@ +ಲೋಕಸಭೆ ಚುನಾವಣೆ ನಂತರ ರಾಹುಲ್ ಬಂಧನ : ಹಿಮಂತ ಬಿಸ್ವಾ ಶರ್ಮಾ +ಶಿವಸಾಗರ್,ಜ.25- ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ರಾಹುಲ್ ಅಸ್ಸಾಂ ಅನ್ನು ಅಸ್ಥಿರಗೊಳಿಸಲು ಬಯಸಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಲೋಕಸಭೇ ಚುನಾವಣೆ ನಂತರ ರಾಹುಲ್ ಅವರನ್ನು ಬಂಧಿಸುವುದಾಗಿ ಘೋಷಿಸಿದ್ದಾರೆ. +ಅಂದು ಅವರು (ಕಾಂಗ್ರೆಸ್) ಬಟಾದ್ರವ ಥಾನ್ ಪ್ರವೇಶಿಸಲು ಗಲಾಟೆ ಪರಿಸ್ಥಿತಿಯನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷಕ್ಕೆ ನಾನು 2-3 ಪ್ರಶ್ನೆಗಳನ್ನು ಕೇಳಲು ಬಯಸುತ್ತೇನೆ. ಆದರೆ ರಾಹುಲ್ ಗಾಂಧಿ ಅವರು ಭೂಪೇನ್ ಹಜಾರಿಕಾ ಸಮಾ ಖೇತ್ರದ ಮುಂದೆ ಗುವಾಹಟಿ ದಾಟಿದರು ಮತ್ತು ಅವರು ನಿಲ್ಲಿಸಲಿಲ್ಲ. ಭೂಪೇನ್ ಹಜಾರಿಕಾ ಸಮಾಯಲ್ಲಿ ರಾಹುಲ್ ಗಾಂಧಿ ಹಜೋ ಹಯಗ್ರೀವ್ ಮಾಧವ್ ಮಂದಿರ ಮತ್ತು ಪೊವಾ ಮೆಕ್ಕಾವನ್ನು ದಾಟಿದರು, ಆದರೆ ಅವರು ಅಲ್ಲಿ ನಿಲ್ಲಲಿಲ್ಲ, ರಾಹುಲ್ ಗಾಂಧಿ ಕೂಡ ಬಾರ್ಪೇಟಾ ಸತ್ರದ ಮುಂದೆ ದಾಟಿದರು ಮತ್ತು ಅವರು ಅಲ್ಲಿ ಒಂದು ನಿಮಿಷ ನಿಲ್ಲಲಿಲ್ಲ; ಅವರು ಸಹ ನಿಲ್ಲಲಿಲ್ಲ. ಕಾಮಾಖ್ಯ ದೇವಸ್ಥಾನದಲ್ಲಿ ನಿಲ್ಲಿಸಿ, ಇಡೀ ಘಟನೆಯು ಕೇವಲ ಮಾಧ್ಯಮಗಳ ಆಕರ್ಷಣೆಗಾಗಿ ಮತ್ತು ಅಸ್ಸಾಂ ಅನ್ನು ಅಸ್ಥಿರಗೊಳಿಸಲು ನಾಟಕವಾಡಿದ್ದಾರೆ ಎಂದಿದ್ದಾರೆ. +ರಾಹುಲ್ ಗಾಂಧಿಯನ್ನು ಟೀಕಿಸಿದ ಅಸ್ಸಾಂ ಮುಖ್ಯಮಂತ್ರಿ, ಅವರು (ರಾಹುಲ್ ಗಾಂಧಿ) ಮಹಾಪುರುಷ ಶ್ರೀಮಂತ ಶಂಕರದೇವರನ್ನು ಗೌರವಿಸಿದ್ದರೆ, ಅವರು ಬರ್ಪೇಟ ಸತ್ರ, ಪಟಬೌಷಿ ಸತ್ರಕ್ಕೆ ಹೋಗಬಹುದಿತ್ತು, ಏಕೆಂದರೆ ಶ್ರೀಮಂತ ಶಂಕರದೇವ ಬರ್ಪೇಟ ಸತ್ರವನ್ನು ಸ್ಥಾಪಿಸಿ ಪಟಬೌಶಿಯಲ್ಲಿ ಉಳಿದುಕೊಂಡರು. +ರೈಲುಗಳ ಅಪಘಾತ ತಡೆಯುವ ‘ಕವಚ್’ ಸಿಸ್ಟಮ್ ಯಶಸ್ವಿ ಪರೀಕ್ಷೆ +ಅವರು ಅಸ್ಸಾಂ ಅನ್ನು ಪ್ರೀತಿಸುತ್ತಿದ್ದರೆ, ಅವರು ಭೂಪೇನ್ ಹಜಾರಿಕಾ ಸಮಾ ಖೇತ್ರಾದಲ್ಲಿ ನಿಲ್ಲಿಸಿ ಭೂಪೇನ್ ಹಜಾರಿಕಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬಹುದಿತ್ತು, ಅವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರು ಕಾಮಾಖ್ಯ ದೇವಸ್ಥಾನಕ್ಕೆ ಒಂದು ನಿಮಿಷ ಹೋಗಬಹುದಿತ್ತು, ಅಸ್ಥಿರಗೊಳಿಸುವುದು ಅವರ ಮುಖ್ಯ ಗುರಿಯಾಗಿತ್ತು. ಇಂದು ನಾವು ಅದನ್ನು ವಿಫಲಗೊಳಿಸಿದ್ದೇವೆ, ಈಗ ಅವರು ಧುಬ್ರಿಯಲ್ಲಿ ನ್ಯಾಯ್ ಯಾತ್ರೆ ಮಾಡಲು ಬಯಸುತ್ತಾರೆ ಅದನ್ನು ಮಾಡಿ ನನ್ನ ಅಭ್ಯಂತರವಿಲ್ಲ, ಎಂದು ಅವರು ಹೇಳಿದರು. +ಲೋಕಸಭಾ ಚುನಾವಣೆಯ ನಂತರ ನಾವು ಅವರನ್ನು ಬಂಧಿಸುತ್ತೇವೆ, ನಾವು ಅವರನ್ನು ಮೊದಲು ಬಂಧಿಸಿದರೆ ಅದು ರಾಜಕೀಯವಾಗುತ್ತದೆ, ಈಗ ಪ್ರಕರಣ ದಾಖಲಾಗಿದೆ, ಎಸ್‍ಐಟಿ ತನಿಖೆ ನಡೆಸುತ್ತದೆ, ಮತ್ತು ನಮ್ಮ ಬಳಿ ಸಾಕ್ಷ್ಯವಿದೆ, ಅವರು ಪ್ರಚೋದನೆ ನೀಡಿದ ನಂತರ ಗುವಾಹಟಿಯಲ್ಲಿ ದೊಡ್ಡ ಘಟನೆ ಸಂಭವಿಸಬಹುದು. ಬ್ಯಾರಿಕೇಡ್‍ಗಳನ್ನು ಒಡೆದು, ಲೋಕಸಭೆ ಚುನಾವಣೆಗೂ ಮುನ್ನ ನಾವು ರಾಜಕೀಯ ಮಾಡಲು ಬಯಸುವುದಿಲ್ಲ ಏಕೆಂದರೆ ಈ ಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ ಎಂದು ಅವರು ಹೇಳಿದರು. +ಮುಂಬರುವ ಲೋಕಸಭಾ ಚುನಾವಣಾ ದಿನಾಂಕಗಳ ಕುರಿತು ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ, ಅಸ್ಸಾಂನಲ್ಲಿ ಏಪ್ರಿಲ್ 14 ರ ಮೊದಲು ಲೋಕಸಭಾ ಚುನಾವಣೆಯನ್ನು ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡುವುದಾಗಿ ಹೇಳಿದರು, ಇದರಿಂದ ಜನರು ಬೋಹಾಗ್ ಅಥವಾ ರೊಂಗಾಲಿ ಬಿಹು ಆಚರಣೆಯನ್ನು ಆಚರಿಸಬಹುದು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_180_2.txt b/eesanje/url_47_180_2.txt new file mode 100644 index 0000000000000000000000000000000000000000..60649002bbfd49852134bf4881b701c9424071c1 --- /dev/null +++ b/eesanje/url_47_180_2.txt @@ -0,0 +1,7 @@ +ಭಿನ್ನಾಭಿಪ್ರಾಯಗಳು ಹಿಂಸಾಚಾರಕ್ಕೆ ಕಾರಣವಾಗಬಾರದು : ಖಾನ್ +ತಿರುವನಂತಪುರಂ, ಜ 26 (ಪಿಟಿಐ) ಭಿನ್ನಾಭಿಪ್ರಾಯ ಮತ್ತು ಅಭಿಪ್ರಾಯಗಳು ಪ್ರಜಾಪ್ರಭುತ್ವದ ಕಾರ್ಯಚಟುವಟಿಕೆಗೆ ಅತ್ಯಗತ್ಯ ಅಂಶಗಳಾಗಿವೆ ಆದರೆ ಅವು ಹಿಂಸಾಚಾರಕ್ಕೆ ಇಳಿಯಬಾರದು ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೇಳಿದ್ದಾರೆ. +ರಾಜ್ಯ ರಾಜಧಾನಿಯ ಸೆಂಟ್ರಲ್ ಸ್ಟೇಡಿಯಂನಲ್ಲಿ ಗಣರಾಜ್ಯೋತ್ಸವದ ನೇತೃತ್ವ ವಹಿಸಿದ್ದ ಖಾನ್ ಅವರು, ಮುಂದಿನ ಪೀಳಿಗೆಗೆ ಕೆಟ್ಟ ಉದಾಹರಣೆಯಾಗುವುದರಿಂದ ಆಡಳಿತದ ಮೇಲೆ ಪರಿಣಾಮ ಬೀರುವ ಗುಂಪು ಪೈಪೋಟಿ ಅಥವಾ ಅಕಾರಕ್ಕಾಗಿ ಆಂತರಿಕ ಹೋರಾಟಗಳಿಗೆ ಸಮಾಜವು ಅವಕಾಶ ನೀಡಬಾರದು ಎಂದು ಹೇಳಿದರು. +ಶಿಕ್ಷಣವು ಸಮಾಜವನ್ನು ಪರಿವರ್ತಿಸುವ ಮುಖ್ಯ ಸಾಧನವಾಗಿದೆ ಮತ್ತು ಹಳೆಯ ಪೂರ್ವಾಗ್ರಹಗಳಿಂದ ಮನಸ್ಸನ್ನು ಶುದ್ಧೀಕರಿಸುವ ಏಕೈಕ ಪರಿಣಾಮಕಾರಿ ವಿಧಾನವಾಗಿದೆ ಎಂದು ರಾಜ್ಯಪಾಲರು ಹೇಳಿದರು. ಭವಿಷ್ಯವು ನಮ್ಮ ಆಲೋಚನೆಗಳು ಮತ್ತು ಕಾರ್ಯಗಳಲ್ಲಿ ನಾವು ಏನಾಗಿದ್ದೇವೆ ಎಂಬುದರ ಮೇಲೆ ಅವಲಂಬಿತವಾಗಿದೆ, ಇದಕ್ಕಾಗಿ, ನಮಗೆ ನಿಜವಾದ ಸ್ವಾಯತ್ತ ಮತ್ತು ಯಾವುದೇ ಬಾಹ್ಯ ಹಸ್ತಕ್ಷೇಪದಿಂದ ಮುಕ್ತವಾದ ಉನ್ನತ ಶಿಕ್ಷಣದ ಸಂಸ್ಥೆಗಳು ಬೇಕಾಗುತ್ತವೆ, ಅದು ಯುವಕರನ್ನು ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಭಾಗವಹಿಸಿದ್ದರು. +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ಸ್ಟಾರ್ಟಪ್‍ಗಳು, ಆರೋಗ್ಯ ಮತ್ತು ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೇರಳ ಸಾಸಿರುವ ವಿವಿಧ ಸಾಧನೆಗಳು ಮತ್ತು ಪ್ರಶಸ್ತಿಗಳನ್ನು ಖಾನ್ ಉಲ್ಲೇಖಿಸಿದರು ಮತ್ತು ಅಂತಹ ಉನ್ನತ ಸಾಧನೆ ಮಾಡಿದ ರಾಜ್ಯದ ಜನರು ಆರೋಗ್ಯಕರ ಪ್ರಜಾಪ್ರಭುತ್ವವನ್ನು ಪೋಷಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು. ಪರಸ್ಪರ ಗೌರವ ಮತ್ತು ಆಳವಾದ ತಿಳುವಳಿಕೆಯ ಮನೋಭಾವ. +ಭಿನ್ನಾಭಿಪ್ರಾಯ ಮತ್ತು ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಕಾರ್ಯಚಟುವಟಿಕೆಗೆ ಅತ್ಯಗತ್ಯ ಅಂಶಗಳಾಗಿವೆ. ಆದರೆ ಭಿನ್ನಾಭಿಪ್ರಾಯವು ಹಿಂಸಾಚಾರಕ್ಕೆ ಇಳಿಯುತ್ತದೆ, ಅದು ದೈಹಿಕ ಅಥವಾ ಮೌಖಿಕವಾಗಿರಬಹುದು, ಇದು ಪ್ರಜಾಪ್ರಭುತ್ವದ ದ್ರೋಹ ಮತ್ತು ಮಾನವ ವೈಫಲ್ಯದ ಸಂಕೇತವಾಗಿದೆ. ಒಂದು ಸಮಾಜವಾಗಿ, ನಾವು ಗುಂಪು ಪೈಪೋಟಿ ಅಥವಾ ಅಧಿಕಾರಕ್ಕಾಗಿ ಆಂತರಿಕ ಹೋರಾಟಗಳನ್ನು ಆಡಳಿತದ ಮೇಲೆ ಪರಿಣಾಮ ಬೀರಲು ಅವಕಾಶ ನೀಡಬಾರದು, ಆ ಮೂಲಕ ಯುವಕರಿಗೆ ಕೆಟ್ಟ ಉದಾಹರಣೆ ನೀಡಬಾರದು ಎಂದು ಖಾನ್ ಹೇಳಿದರು. \ No newline at end of file diff --git a/eesanje/url_47_180_3.txt b/eesanje/url_47_180_3.txt new file mode 100644 index 0000000000000000000000000000000000000000..f62a3f24cc1715cb13ddd4183926ee6b3d9f0107 --- /dev/null +++ b/eesanje/url_47_180_3.txt @@ -0,0 +1,7 @@ +ಇಂಡಿಯಾ ಒಕ್ಕೂಟದ ಏಕತೆ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ರಾಹುಲ್ +ಕೂಚ್ ಬೆಹಾರ್, ಜ 25 (ಪಿಟಿಐ) ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಏಕಾಂಗಿಯಾಗಿ ಸ್ರ್ಪಧಿಸಲು ನಿರ್ಧರಿಸಿದ ಒಂದು ದಿನದ ನಂತರ, ರಾಷ್ಟ್ರವ್ಯಾಪಿ ಅನ್ಯಾಯದ ವಿರುದ್ಧ ಹೋರಾಡುವಲ್ಲಿ ಇಂಡಿಯಾ ಒಕ್ಕೂಟದ ಬಣಗಳ ಏಕತೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನಿಂದ ಕೂಚ್ ಬೆಹಾರ್ ಜಿಲ್ಲೆಯ ಬಕ್ಷಿರ್ಹತ್ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿತು. ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅೀಧಿರ್ ಚೌಧರಿ ಆತ್ಮೀಯವಾಗಿ ಸ್ವಾಗತಿಸಿದರು. ಕೂಚ್ ಬೆಹಾರ್‍ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, ಬಿಜೆಪಿ ಮತ್ತು ಆರ್‍ಎಸ್‍ಎಸ್ ದೇಶಾದ್ಯಂತ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಎಂದು ಆರೋಪಿಸಿದರು. +ದೇಶದಾದ್ಯಂತ ಅನ್ಯಾಯ ನಡೆಯುತ್ತಿರುವುದರಿಂದ ಯಾತ್ರೆಗೆ ನ್ಯಾಯ್ (ನ್ಯಾಯ) ಪದವನ್ನು ಲಗತ್ತಿಸಲಾಗಿದೆ. ಇಂಡಿಯಾ ಒಕ್ಕೂಟ ದೇಶದಾದ್ಯಂತ ಅನ್ಯಾಯದ ವಿರುದ್ಧ ಹೋರಾಡಲಿದೆ ಎಂದರು. ಪಶ್ಚಿಮ ಬಂಗಾಳದ ಸಂಸತ್ತಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ರ್ಪಧಿಸುವ ಮಮತಾ ಬ್ಯಾನರ್ಜಿ ಅವರ ನಿರ್ಧಾರವು ಪ್ರತಿಪಕ್ಷ ಬಣದಲ್ಲಿ ಅಲ್ಲೊಲ್ಲ ಕಲ್ಲೊಲ ಸೃಷ್ಟಿಸಿದ ಒಂದು ದಿನದ ನಂತರ ಗಾಂಧಿಯವರ ಈ ಹೇಳಿಕೆಯು ಇಂಡಿಯಾ ಒಕ್ಕೂಟದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸಿದೆ. +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ಬ್ಯಾನರ್ಜಿಯವರ ಹಠಾತ್ ಕಾಮೆಂಟ್‍ಗಳು ಕಾಂಗ್ರೆಸ್‍ಗೆ ಸಮನ್ವಯ ವಿಧಾನವನ್ನು ಅಳವಡಿಸಿಕೊಳ್ಳಲು ಒತ್ತಾಯಿಸಿತು, ಪಕ್ಷದ ವಕ್ತಾರ ಜೈರಾಮ್ ರಮೇಶ್ ಅವರು ಮಮತಾ ಬ್ಯಾನರ್ಜಿ ಇಲ್ಲದೆ ಇಂಡಿಯಾ ಒಕ್ಕೂಟ ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಪ್ರತಿಪಾದಿಸಿದರು. ಸಿಪಿಐ(ಎಂ) ಮತ್ತು ಎಡ ಪಕ್ಷಗಳು, ರಾಜ್ಯದೊಳಗಿನ ಕಾಂಗ್ರೆಸ್‍ನ ಮಿತ್ರಪಕ್ಷಗಳು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಇಂಡಿಯ ಒಕ್ಕೂಟದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ, ಯಾತ್ರೆಯ ಬಗ್ಗೆ ಮಾಹಿತಿ ಕೊರತೆಯನ್ನು ಮುಂದಿಟ್ಟುಕೊಂಡು ಟಿಎಂಸಿ ಗೈರಾಗಲು ನಿರ್ಧರಿಸಿದೆ. +ಯಾತ್ರೆಯ ಬಂಗಾಳದ ಭಾಗವು ಆರು ಜಿಲ್ಲೆಗಳು ಮತ್ತು ಆರು ಲೋಕಸಭಾ ಕ್ಷೇತ್ರಗಳಾದ ಡಾರ್ಜಿಲಿಂಗ್, ರಾಯ್‍ಗುಂಜ, ಉತ್ತರ ಮತ್ತು ದಕ್ಷಿಣ ಮಾಲ್ಡಾ ಮತ್ತು ಎರಡು ಮುರ್ಷಿದಾಬಾದ್‍ನಲ್ಲಿ ಐದು ದಿನಗಳ ಕಾಲ 523 ಕಿ.ಮೀ. ಏಪ್ರಿಲ-ಮೇ 2021 ರ ವಿಧಾನಸಭಾ ಚುನಾವಣೆಯ ನಂತರ ಇದು ರಾಜ್ಯಕ್ಕೆ ಗಾಂಧಿಯವರ ಮೊದಲ ಭೇಟಿಯಾಗಿದೆ. \ No newline at end of file diff --git a/eesanje/url_47_180_4.txt b/eesanje/url_47_180_4.txt new file mode 100644 index 0000000000000000000000000000000000000000..0bd2d8ce3f6744e4c8798732e5ec230dccb03227 --- /dev/null +++ b/eesanje/url_47_180_4.txt @@ -0,0 +1,7 @@ +ಅಂಬೇಡ್ಕರ್ ಮೊಮ್ಮಗನಿಗೆ ಗಾಳ ಹಾಕಿದ ಮಹಾ ವಿಕಾಸ್ ಅಘಾಡಿ +ಮುಂಬೈ, ಜ. 25 (ಪಿಟಿಐ) ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ಮೈತ್ರಿಕೂಟದ ಭಾಗವಾಗಲು ಮತ್ತು ಸೀಟು ಹಂಚಿಕೆಯ ಚರ್ಚೆಗೆ ಸೇರಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ ಗೆ ಮಹಾ ವಿಕಾಸ್ ಅಘಾಡಿ ಆಹ್ವಾನ ನೀಡಿದೆ. +ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ಎನ್‍ಸಿಪಿಯ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಮತ್ತು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್ ಅವರು ಸಹಿ ಮಾಡಿದ ಪತ್ರವನ್ನು ಪ್ರಕಾಶ್ ಅಂಬೇಡ್ಕರ್ ಅವರಿಗೆ ಕಳುಹಿಸಲಾಗಿದ್ದು, ಸೀಟು ಹಂಚಿಕೆ ಮಾತುಕತೆಗೆ ಸೇರಲು ವಿಬಿಎಯಿಂದ ಹಿರಿಯ ನಾಯಕರನ್ನು ನಿಯೋಜಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. +ದೇಶವು ಕಠಿಣ ಸಮಯವನ್ನು ಹಾದುಹೋಗುತ್ತಿದೆ ಮತ್ತು ಸರ್ವಾಕಾರದ ವಿರುದ್ಧ ಧ್ವನಿ ಎತ್ತುತ್ತಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. ಸಂವಿಧಾನ ಮತ್ತು ದೇಶವನ್ನು ರಕ್ಷಿಸುವ ಅಗತ್ಯವಿದೆ ಹೀಗಾಗಿ ಸೀಟು ಹಂಚಿಕೆ ಕುರಿತು ಚರ್ಚಿಸಲು ಎಂವಿಎ ಮಿತ್ರಪಕ್ಷಗಳು ಸಭೆ ನಡೆಸುತ್ತಿದ್ದು, ವಿಬಿಎಯನ್ನು ಮಾತುಕತೆಗೆ ಆಹ್ವಾನಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ವಿಬಿಎ ಮೈತ್ರಿ ಮಾತುಕತೆಯ ಭಾಗವಾಗಬೇಕೆಂದು ನಾವು ಬಯಸುತ್ತೇವೆ ಎಂದು ಅಂಬೇಡ್ಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ಈ ವರ್ಷ ಲೋಕಸಭೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಕಳೆದ ವಾರ ಬಿಜೆಪಿ ನೇತೃತ್ವದ ಎನ್‍ಡಿಎಗೆ ಪರ್ಯಾಯವಾಗಿ ಒಗ್ಗೂಡಿರುವ ಸಮಾನ ಮನಸ್ಕ ವಿರೋಧ ಪಕ್ಷಗಳಿಗೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರವನ್ನು ಸೋಲಿಸುವವರೆಗೆ ವಿಶ್ರಾಂತಿ ಪಡೆಯಬಾರದು ಎಂದು ಒತ್ತಾಯಿಸಿದ್ದರು. +ಶಿವಸೇನೆ (ಯುಬಿಟಿ), ಎನ್‍ಸಿಪಿ ಮತ್ತು ಕಾಂಗ್ರೆಸ್‍ಗಳನ್ನು ಒಳಗೊಂಡಿರುವ ಎಂವಿಎ ಮುಂಬರುವ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಎಡಪಕ್ಷಗಳು ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಿಬಿಎ ಜೊತೆ ಮಾತನಾಡುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_180_5.txt b/eesanje/url_47_180_5.txt new file mode 100644 index 0000000000000000000000000000000000000000..9ead5b894d74ac148a48284c1e643746ad61582c --- /dev/null +++ b/eesanje/url_47_180_5.txt @@ -0,0 +1,8 @@ +ಕೆಲವೇ ವರ್ಷಗಳಲ್ಲಿ ವಿಶ್ವಗುರುವಾಗಲಿದೆ ಭಾರತ : ಮೋಹನ್ ಭಾಗವತ್ +ನಾಗ್ಪುರ, ಜ. 26 (ಪಿಟಿಐ) ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಜನರನ್ನು ಸಹೋದರತೆಯಿಂದ ಬಾಳುವಂತೆ ಕೇಳಿಕೊಂಡರು ಮತ್ತು ಭಾರತವು ಕೆಲವೇ ವರ್ಷಗಳಲ್ಲಿ ವಿಶ್ವ ಗುರು ಆಗುವ ಸಾಮಥ್ರ್ಯವನ್ನು ಹೊಂದಿದೆ ಎಂದು ಪ್ರತಿಪಾದಿಸಿದರು. ಭಾರತದ 75 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಾಗ್ಪುರದ ಆರ್‍ಎಸ್‍ಎಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಭಾಗವತ್ ಮಾತನಾಡಿದರು. +ನಾವು ಧರ್ಮ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವುದನ್ನು ನಾವು ಇಂದು ನೋಡುತ್ತಿದ್ದೇವೆ. ಈ ಶಕ್ತಿ ಎಲ್ಲಿಂದ ಬಂತು? ಈ ಶಕ್ತಿ ಯಾವಾಗಲೂ ಇತ್ತು. ಜನವರಿ 22 ರಂದು (ರಾಮ ಮಂದಿರ ಪ್ರತಿಷ್ಠಾಪನಾ ದಿನ) ವಾತಾವರಣವನ್ನು ನಿರ್ಮಿಸಲಾಯಿತು. ಅದೇ ರೀತಿಯಲ್ಲಿ, ಈ ದಿನವೂ ವಾತಾವರಣ ನಿರ್ಮಾಣವಾಗಿದೆ. +ಈ ವಾತಾವರಣ ಒಂದು ದಿನಕ್ಕೆ ಸೀಮಿತವಾಗಿರುತ್ತದೆ ಎಂದು ನಿರೀಕ್ಷಿಸಲಾಗುವುದಿಲ್ಲ ಎಂದು ಅವರು ಹೇಳಿದರು. ಸಂವಿಧಾನವನ್ನು ರಕ್ಷಿಸುವಲ್ಲಿ ಸರ್ಕಾರವು ತಾಂತ್ರಿಕ ಜವಾಬ್ದಾರಿಯನ್ನು ಹೊಂದಿದೆ, ಆದರೆ ನಾಗರಿಕರು ಅದರಲ್ಲಿ ಹೆಚ್ಚು ಮಹತ್ವದ ಪಾತ್ರವನ್ನು ವಹಿಸುತ್ತಾರೆ ಎಂದು ಆರ್‍ಎಸ್‍ಎಸ್ ಮುಖ್ಯಸ್ಥರು ಹೇಳಿದರು. +ಭಾರತವು ಯಾವಾಗಲೂ ಮೇಲೇರುವ ಸಾಮಥ್ರ್ಯವನ್ನು ಹೊಂದಿದೆ, ಆದರೆ ಜನರು ಸಹೋದರತೆಯಿಂದ ಬದುಕಿದಾಗ ಅದು ಫಲಿತಾಂಶಗಳನ್ನು ನೀಡುತ್ತದೆ ಎಂದು ಭಾಗವತ್ ಹೇಳಿದರು. 40 ವರ್ಷಗಳ ಹಿಂದೆ ಭಾರತವರ್ಷದ ಉದಯದ ಬಗ್ಗೆ ಯಾರಾದರೂ ಮಾತನಾಡಿದ್ದರೆ, ನಮ್ಮವರೇ ನಮ್ಮನ್ನು ಅಪಹಾಸ್ಯ ಮಾಡುತ್ತಿದ್ದರು ಎಂದು ಅವರು ಹೇಳಿದರು. +ಹನಿಮೂನ್‍ ಹೆಸರಲ್ಲಿ ಅಯೋಧ್ಯೆಗೆ ಕರೆದೊಯ್ದ ಪತಿಗೆ ವಿಚ್ಚೇದನ ನೀಡಲು ಮುಂದಾದ ಮಹಿಳೆ +ಪ್ರತಿಯೊಬ್ಬರೂ ನಮ್ಮ ಸ್ವಂತ ಸಾಮಥ್ರ್ಯಗಳನ್ನು ಹೊಂದಿರುವುದರಿಂದ ಎಲ್ಲರ ಅನುಕೂಲಕ್ಕಾಗಿ ನಮ್ಮ ಸಾಮಥ್ರ್ಯಗಳನ್ನು ಬಳಸುವುದು ನಮಗೆ ಪ್ರತಿಯೊಬ್ಬರಿಗೂ ಆಗಿದೆ. ನಾವು ವಿಭಿನ್ನವಾಗಿ ಕಂಡರೂ, ನಮ್ಮ ದೇಶವು ವೈವಿಧ್ಯತೆಯನ್ನು ಒಪ್ಪಿಕೊಳ್ಳುವ ಸಂಪ್ರದಾಯವನ್ನು ಹೊಂದಿದೆ. ನಾವು ಸಹೋದರತೆಯಿಂದ ಬಾಳಬೇಕು ಮತ್ತು ಸಂವಿಧಾನದ ತತ್ವಗಳನ್ನು ಅನುಸರಿಸಬೇಕು. ಆಗ ದೇಶ ಪ್ರಗತಿಯತ್ತ ಸಾಗುತ್ತದೆ ಎಂದರು.ಜನರು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡಬೇಕು ಎಂದು ಭಾಗವತ್ ಹೇಳಿದರು. ಕೆಲವು ವರ್ಷಗಳಲ್ಲಿ ಭಾರತವು ವಿಶ್ವ ಗುರುವಾಗುವುದನ್ನು ನಾವು ನೋಡಬಹುದು ಎಂದು ಅವರು ಹೇಳಿದರು. +ಗಣರಾಜ್ಯೋತ್ಸವವನ್ನು ಆಚರಿಸಲು ಜನರನ್ನು ಕೋರಿದ ಅವರು ತಮ್ಮ ಜವಾಬ್ದಾರಿಗಳನ್ನು ಅರಿತು ಸರಿಯಾಗಿ ನಿರ್ವಹಿಸುವಂತೆ ಒತ್ತಾಯಿಸಿದರು.ಸಂಘವು ಇಲ್ಲಿನ ರೇಶಿಂಬಾಗ್ ಪ್ರದೇಶದಲ್ಲಿರುವ ಡಾ ಹೆಡಗೇವಾರ್ ಸ್ಮತಿ ಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. \ No newline at end of file diff --git a/eesanje/url_47_180_6.txt b/eesanje/url_47_180_6.txt new file mode 100644 index 0000000000000000000000000000000000000000..d8c4bd69c81954536c342cb21b3ff72d4b9d503b --- /dev/null +++ b/eesanje/url_47_180_6.txt @@ -0,0 +1,10 @@ +ಮತ್ತೆ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ +ಮುಂಬೈ, ಜ. 26 (ಪಿಟಿಐ) – ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೆ ಮರಾಠ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯಿದೆ. ಸಮುದಾಯದ ಮೀಸಲಾತಿಗಾಗಿ ಒತ್ತಾಯಿಸಲು ಮರಾಠ ಕೋಟಾದ ನಾಯಕ ಮನೋಜ್ ಜಾರಂಗೆ ಅವರು ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ನವಿ ಮುಂಬೈ ತಲುಪಿದ್ದಾರೆ. +ಜಾರಂಗೆ ಮತ್ತು ಇತರ ಮರಾಠಾ ಕಾರ್ಯಕರ್ತರು ಬೈಕ್‍ಗಳು, ಕಾರುಗಳು, ಜೀಪುಗಳು, ಟೆಂಪೋಗಳು ಮತ್ತು ಟ್ರಕ್‍ಗಳ ಮೂಲಕ ಮುಂಬೈನ ಹೊರವಲಯದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮುಂಭಾಗಕ್ಕೆ ಬಂದು ಜಮಾಯಿಸಿದ್ದಾರೆ. ಅವರ ಯೋಜನೆಯಂತೆ ಜಾರಂಗೆ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಮರಾಠಾ ಸಮುದಾಯಕ್ಕೆ ಕುಂಬಿ (ಒಬಿಸಿ) ಸ್ಥಾನಮಾನ ನೀಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯವಾಗಿದೆ. +ನಗರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಿ ಮುಂಬೈ ಪೊಲೀಸರು ನೋಟಿಸ್ ಜಾರಿ ಮಾಡಿದ್ದರೂ, ಜನವರಿ 26ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನ ತಲುಪುವುದಾಗಿ ಗುರುವಾರ ಜಾರಂಜ್ ಘೋಷಿಸಿದ್ದರು. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 149 ರ ಅಡಿಯಲ್ಲಿ ಹೊರಡಿಸಲಾದ ನೋಟಿಸ್‍ನಲ್ಲಿ ಪೊಲೀಸರು, ಮುಂಬೈ ದೇಶದ ಆರ್ಥಿಕ ರಾಜಧಾನಿಯಾಗಿದೆ ಮತ್ತು ಮುಂಬೈನಲ್ಲಿ ವಿವಿಧ ಹಣಕಾಸು ಸಂಸ್ಥೆಗಳು, ಅಂತರರಾಷ್ಟ್ರೀಯ ವಕೀಲರು ಮತ್ತು ಇತರ ಹಣಕಾಸು ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. +ಮುಂಬೈನಲ್ಲಿ ಪ್ರತಿದಿನ ಸರಿಸುಮಾರು 60 ರಿಂದ 65 ಲಕ್ಷ ನಾಗರಿಕರು ಕೆಲಸಗಳಿಗಾಗಿ ರೈಲು ಮತ್ತು ಇತರ ಸಾರಿಗೆ ವಿಧಾನಗಳಲ್ಲಿ ಪ್ರಯಾಣಿಸುತ್ತಾರೆ. ಮರಾಠಾ ಪ್ರತಿಭಟನಾಕಾರರು ತಮ್ಮ ವಾಹನಗಳಲ್ಲಿ ನಗರಕ್ಕೆ ಬಂದರೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಮತ್ತು ನಗರದಲ್ಲಿ ದೈನಂದಿನ ಸಾರಿಗೆ ವ್ಯವಸ್ಥೆ ಕುಸಿಯುತ್ತದೆ ಎಂದು ಎಚ್ಚರಿಸಿದ್ದರು. +ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆದ ನಂತರ ನವಿ ಮುಂಬೈನ ಖಾರ್ಘರ್‍ನಲ್ಲಿರುವ ಇಂಟರ್‍ನ್ಯಾಷನಲ್ ಕಾಪೆರ್ರೇಷನ್ ಪಾರ್ಕ್ ಗ್ರೌಂಡ್‍ನಲ್ಲಿ ಪ್ರತಿಭಟನಾಕಾರರು ಸೇರಬಹುದು ಎಂದು ಮುಂಬೈ ಪೊಲೀಸರು ಸೂಚಿಸಿದ್ದಾರೆ. ಒಂದು ವೇಳೆ ಮೋರ್ಚಾ ನೋಟಿಸ್‍ಗೆ ಬದ್ಧವಾಗಿಲ್ಲದಿದ್ದರೆ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‍ನ ಆದೇಶಗಳನ್ನು ನಿಂದನೆ ಮಾಡಿದಂತೆ ಎಂದು ಸೂಚಿಸಲಾಗಿದೆ. +ಹೈಕೋರ್ಟ್ ಪ್ರಕಾರ, ಆಜಾದ್ ಮೈದಾನದ 7,000 ಚದರ ಮೀಟರ್ ಪ್ರದೇಶವನ್ನು ಮಾತ್ರ ಪ್ರತಿಭಟನೆಗೆ ಮೀಸಲಿಡಲಾಗಿದೆ ಮತ್ತು ಅದರ ಸಾಮಥ್ರ್ಯವು 5,000 ರಿಂದ 6,000 ಪ್ರತಿಭಟನಾಕಾರರಿಗೆ ಮಾತ್ರ ಅವಕಾಶ ಕಲ್ಪಿಸುತ್ತದೆ, ಆದರೆ ಹೆಚ್ಚಿನ ಸಂಖ್ಯೆಯ ಪ್ರತಿಭಟನಾಕಾರರು ಅಲ್ಲಿಗೆ ಬಂದರೆ, ಅವರಿಗೆ ಸಾಕಷ್ಟು ಸ್ಥಳಾವಕಾಶವಿಲ್ಲ. ಉಳಿದ ಮೈದಾನವು ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಗೆ ಒಳಪಟ್ಟಿದ್ದು, ರ್ಯಾಲಿ ನಡೆಸಲು ಅನುಮತಿ ನಿರಾಕರಿಸಿದೆ ಎಂದು ನೋಟಿಸ್‍ನಲ್ಲಿ ತಿಳಿಸಲಾಗಿದೆ. +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ದಾದರ್‍ನ ಶಿವಾಜಿ ಪಾರ್ಕ್ ಮೈದಾನದಲ್ಲಿ ಜನಸಮೂಹ ಸೇರಲು ಅನುಮತಿ ನಿರಾಕರಿಸಿದ ಪೊಲೀಸರು, ಜನವರಿ 26 ಗಣರಾಜ್ಯೋತ್ಸವ ದಿನವಾದ್ದರಿಂದ ಶಿವಾಜಿ ಪಾರ್ಕ್‍ನಲ್ಲಿ ಸರ್ಕಾರಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಇದರಿಂದ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆಂದೋಲನ. ಶಿವಾಜಿ ಪಾರ್ಕ್ ಮೈದಾನಕ್ಕೆ ಇಷ್ಟು ದೊಡ್ಡ ಸಂಖ್ಯೆಯ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಮಥ್ರ್ಯ ಇಲ್ಲ ಎಂದು ನೋಟಿಸ್ ಸೇರಿಸಲಾಗಿದೆ. +ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ರಿಟ್ ಅರ್ಜಿಯ ಪ್ರಕಾರ, ಪ್ರತಿಭಟನೆಯಿಂದ ಮುಂಬೈನಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಮರಾಠಾ ಆಂದೋಲನವು ಗಣರಾಜ್ಯೋತ್ಸವದಂದು ಯೋಜಿಸಲಾದ ಯಾವುದೇ ಆಚರಣೆಯನ್ನು ಎಂದಿಗೂ ಅಡ್ಡಿಪಡಿಸುವುದಿಲ್ಲ ಎಂದು ಜಾರಂಗೆ ಹೇಳಿದರು. \ No newline at end of file diff --git a/eesanje/url_47_180_7.txt b/eesanje/url_47_180_7.txt new file mode 100644 index 0000000000000000000000000000000000000000..00ba2e3cefe558912bd4753dec36985801c65674 --- /dev/null +++ b/eesanje/url_47_180_7.txt @@ -0,0 +1,6 @@ +ಹನಿಮೂನ್‍ ಹೆಸರಲ್ಲಿ ಅಯೋಧ್ಯೆಗೆ ಕರೆದೊಯ್ದ ಪತಿಗೆ ವಿಚ್ಚೇದನ ನೀಡಲು ಮುಂದಾದ ಮಹಿಳೆ +ಭೋಪಾಲ್, ಜ.26 (ಪಿಟಿಐ) – ವಿದೇಶಕ್ಕೆ ಹನಿಮೂನ್‍ಗೆ ಕರೆದೊಯ್ಯದೆ ತನ್ನ ಹೆತ್ತವರೊಂದಿಗೆ ಅಯೋಧ್ಯೆ ಮತ್ತಿತರ ಧಾರ್ಮಿಕ ಕ್ಷೇತ್ರಗಳಿಗೆ ಕರೆದೊಯ್ದ ವ್ಯಕ್ತಿಯೊಬ್ಬರ ವಿರುದ್ಧ ಆತನ ಪತ್ನಿ ವಿಚ್ಚೇದನ ಪಡೆದುಕೊಳ್ಳಲು ಮುಂದಾಗಿದ್ದಾರೆ. ವಿವಾಹವಾಗಿ ಕೇವಲ ಎಂಟು ತಿಂಗಳು ಕಳೆದಿರುವ ದಂಪತಿಯ ವಿಚ್ಛೇದನದ ಅರ್ಜಿಯು ಕೌನ್ಸೆಲಿಂಗ್ ಹಂತದಲ್ಲಿ ಬಾಕಿ ಉಳಿದಿದ್ದು, ಮಹಿಳೆ ಮತ್ತು ಆಕೆಯ ಪತಿ ನಡುವೆ ಸೌಹಾರ್ದಯುತ ಪರಿಹಾರಕ್ಕಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದು ಕೌಟುಂಬಿಕ ನ್ಯಾಯಾಲಯದ ವಿವಾಹ ಸಲಹೆಗಾರ ಶೈಲ್ ಅವಸ್ತಿ ಪಿಟಿಐಗೆ ತಿಳಿಸಿದರು. +ದಂಪತಿ ಕಳೆದ ವರ್ಷ ಮೇ 3 ರಂದು ವಿವಾಹವಾಗಿದ್ದರು. ಚೆನ್ನಾಗಿ ಸಂಪಾದನೆ ಮಾಡುತ್ತಿರುವುದರಿಂದ ವಿದೇಶಕ್ಕೆ ಹನಿಮೂನ್ ಹೋಗುವಂತೆ ಮಹಿಳೆ ಹಠ ಹಿಡಿದಿದ್ದಾಳೆ. ಪತಿ ಐಟಿ ವೃತ್ತಿಪರರಾಗಿದ್ದರೆ, ಮಹಿಳೆ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವಸ್ತಿ ಹೇಳಿದರು. +ಪತಿ ಹನಿಮೂನ್‍ಗಾಗಿ ವಿದೇಶಕ್ಕೆ ಹೋಗಲು ಇಷ್ಟವಿರಲಿಲ್ಲ ಮತ್ತು ನಂತರ ಗೋವಾ ಅಥವಾ ದಕ್ಷಿಣ ಭಾರತದಲ್ಲಿ ಎಲ್ಲೋ ಸಾಧ್ಯವಿರುವ ಸ್ಥಳಗಳಿಗೆ ತೆರಳಿ ವಾಪಸ್ಸಾಗಿದ್ದರು. ವ್ಯಕ್ತಿ ತನ್ನ ಹೆಂಡತಿಗೆ ತಿಳಿಸದೆ ಅಯೋಧ್ಯೆ ಮತ್ತು ವಾರಣಾಸಿಗೆ ವಿಮಾನ ಟಿಕೆಟ್‍ಗಳನ್ನು ಕಾಯ್ದಿರಿಸಿದ್ದಾನೆ ಮತ್ತು ಹೊರಡುವ ಒಂದು ದಿನದ ಮೊದಲು ಪ್ರವಾಸದ ಬಗ್ಗೆ ತಿಳಿಸಿದ್ದಾನೆ ಎಂದು ಅವಸ್ತಿ ಹೇಳಿದರು. +ಕಾರಿನಲ್ಲಿ ಸರಸ-ಸಲ್ಲಾಪ : ಎಸ್ಐ ಹತ್ಯೆಗೆ ಯತ್ನಿಸಿದ ಯುವಕ-ಯುವತಿಗಾಗಿ ಶೋಧ +ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನೆಗೂ ಮುನ್ನ ತನ್ನ ತಾಯಿ ಅಯೋಧ್ಯೆಗೆ ಭೇಟಿ ನೀಡಲು ಬಯಸಿರುವುದಾಗಿ ಪತ್ನಿಗೆ ತಿಳಿಸಿದರು. ಆ ಸಮಯದಲ್ಲಿ ಮಹಿಳೆ ಆಕ್ಷೇಪಿಸಲಿಲ್ಲ ಆದರೆ ಕುಟುಂಬವು ಹಿಂತಿರುಗಿದ ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಂತರ ಅದರ ಬಗ್ಗೆ ಜಗಳವಾಯಿತು. ಮಹಿಳೆ ತನ್ನ ಹೇಳಿಕೆಯಲ್ಲಿ ಪುರುಷನು ತನ್ನ ಹೆತ್ತವರನ್ನು ತನಗಿಂತ ಹೆಚ್ಚು ಕಾಳಜಿ ವಹಿಸಿದ್ದಾನೆ ಎಂದು ಮುನಿಸಿಕೊಂಡು ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ದಂಪತಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಆದರೆ ಸಮಸ್ಯೆಯನ್ನು ಪರಿಹರಿಸಲು ಸಮಯ ತೆಗೆದುಕೊಳ್ಳಬಹುದು ಎಂದು ಅವಸ್ತಿ ತಿಳಿಸಿದ್ದಾರೆ. \ No newline at end of file diff --git a/eesanje/url_47_180_8.txt b/eesanje/url_47_180_8.txt new file mode 100644 index 0000000000000000000000000000000000000000..adafb8eaa1467652ee74dedf856c13539f9c9129 --- /dev/null +++ b/eesanje/url_47_180_8.txt @@ -0,0 +1,6 @@ +ಮೆಗಾಸ್ಟಾರ್ ಚಿರಂಜೀವಿಗೆ ಲಭಿಸಿದ ಪದ್ಮವಿಭೂಷಣ ಪ್ರಶಸ್ತಿ +ಬೆಂಗಳೂರು, ಜ.26- ಸಿನಿಮಾ ಹಾಗೂ ಸಾಮಾಜಿಕ ರಂಗದಲ್ಲಿ ಮುಂಚೂಣಿಯಲ್ಲಿರುವ ಟಾಲಿವುಡ್‍ನ ಮೆಗಾಸ್ಟಾರ್ ಚಿರಂಜೀವಿ ಅವರಿಗೆ 2024ರ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದ್ದು, ಅಭಿಮಾನಿಗಳಲ್ಲಿ ಸಂತಸ ಮನೆಮಾಡಿದೆ. +ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಸಿನಿಮಾ, ಕಲೆ, ವಿಜ್ಞಾನ, ಸಾಮಾಜಿಕ ಸೇರಿದಂತೆ ಹಲವಾರು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರನ್ನು ಗೌರವಿಸುವ ಸಲುವಾಗಿ ಕೇಂದ್ರ ಸರ್ಕಾರವು ಪದ್ಮ ಪ್ರಶಸ್ತಿಯನ್ನು ಘೋಷಿಸಿದ್ದು 132 ಮಂದಿಗೆ ಈ ಗೌರವ ಸಂದಿದೆ. ಚಿರಂಜೀವಿ ಸೇರಿದಂತೆ 5 ಮಂದಿಗೆ ಪದ್ಮವಿಭೂಷಣ, 17 ಮಂದಿಗೆ ಪದ್ಮಭೂಷಣ್ ಹಾಗೂ 110 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. +ಸಿನಿಮಾರಂಗವಲ್ಲದೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಮೆಗಾಸ್ಟಾರ್ ಚಿರಂಜೀವಿ ರಕ್ತದಾನ ಮತ್ತು ನೇತ್ರದಾನವನ್ನು ಪ್ರೋತ್ಸಾಹಿಸುತ್ತ ಬರುತ್ತಿದ್ದು, ಕೊರೊನಾ ಲಾಕ್‍ಡೌನ್ ವೇಳೆಯಲ್ಲಿ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡಿದ್ದರು. ಈ ಸೇವೆಯನ್ನು ಪರಿಗಣಿಸಿ ಚಿರುಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. ಈ ಹಿಂದೆ ಅವರಿಗೆ ಪದ್ಮಭೂಷಣ ಪ್ರಶಸ್ತಿಯೂ ಲಭಿಸಿತ್ತು. +ಕಾರಿನಲ್ಲಿ ಸರಸ-ಸಲ್ಲಾಪ : ಎಸ್ಐ ಹತ್ಯೆಗೆ ಯತ್ನಿಸಿದ ಯುವಕ-ಯುವತಿಗಾಗಿ ಶೋಧ +ಚಿರಂಜೀವಿ ಅಲ್ಲದೆ ತಮಿಳು ಚಿತ್ರರಂಗ ಹಿರಿಯ ನಟಿ ವೈಜಯಂತಿ ಬಾಲಿ ಹಾಗೂ ಖ್ಯಾತ ನೃತ್ಯಪಟು ಪದ್ಮಸುಬ್ರಮಣಿಯಂ ಅವರು ಕೂಡ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಕಾಲಿವುಡ್‍ನ ಖ್ಯಾತ ನಟ ಹಾಗೂ ರಾಜಕಾರಣಿ ಕ್ಯಾಪ್ಟನ್ ವಿಜಯ್ ಕಾಂತ್ ಅವರಿಗೆ ಮರಣೋತ್ತರ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದರೆ, ಬಾಲಿವುಡ್‍ನ ಖ್ಯಾತ ನಟ ಮಿಥುನ್ ಚಕ್ರವರ್ತಿ, ಖ್ಯಾತ ಗಾಯಕಿ ಉಷಾ ಉತ್ತುಪ್, ಸಂಗೀತ ನಿರ್ದೇಶಕ ಪ್ಯಾರೆಲಲ್ ಶರ್ಮಾ ಅವರಿಗೂ ಪದ್ಮಭೂಷಣ ಪ್ರಶಸ್ತಿ ಸಂದಿದೆ. \ No newline at end of file diff --git a/eesanje/url_47_180_9.txt b/eesanje/url_47_180_9.txt new file mode 100644 index 0000000000000000000000000000000000000000..b4038adae03ed92a768d165d1b6f41607c5c4a6d --- /dev/null +++ b/eesanje/url_47_180_9.txt @@ -0,0 +1,7 @@ +ಪರೇಡ್‍ನಲ್ಲಿ ಭಾಗವಹಿಸುವ ಅದೃಷ್ಟ ಪಡೆದ ಸೇನಾ ದಂಪತಿ +ನವದೆಹಲಿ,ಜ.25- ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‍ನಲ್ಲಿ ತಮಿಳುನಾಡು ಹಾಗೂ ಕರ್ನಾಟಕ ಮೂಲದ ಸೇನಾ ದಂಪತಿ ಎರಡು ಪ್ರತ್ಯೇಕ ತುಕಡಿಗಳಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ. ಭಾರತೀಯ ಸೇನೆಗೆ ಐತಿಹಾಸಿಕ ಕ್ಷಣದಲ್ಲಿ, ವಿವಿಧ ತುಕಡಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಿವಾಹಿತ ದಂಪತಿಯಾದ ಮೇಜರ್ ಜೆರ್ರಿ ಬ್ಲೇಜ್ ಮತ್ತು ಕ್ಯಾಪ್ಟನ್ ಸುಪ್ರೀತಾ ಸಿಟಿ ನಾಳೆ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸಲಿದ್ದಾರೆ. ಅವರು ಎರಡು ಪ್ರತ್ಯೇಕ ತುಕಡಿಗಳ ಸದಸ್ಯರಾಗಿ ಕರ್ತವ್ಯ ಪಥದಲ್ಲಿ ಸಾಗಲಿದ್ದಾರೆ. +ಮೇಜರ್ ಜೆರ್ರಿ ಬ್ಲೇಜ್ ಮೂಲತಃ ತಮಿಳುನಾಡಿನವರು ಮತ್ತು ಮಿಲಿಟರಿ ಪೊಲೀಸ್‍ನಲ್ಲಿ ಪರಿಣತಿ ಹೊಂದಿರುವ ಮದ್ರಾಸ್ ರೆಜಿಮೆಂಟ್‍ನ ಭಾಗವಾಗಿದ್ದು, ಜೂನ್ 2023 ರಲ್ಲಿ ಕ್ಯಾಪ್ಟನ್ ಸುಪ್ರೀತಾ ಸಿಟಿ ಅವರನ್ನು ವಿವಾಹವಾದರು. ಮೈಸೂರಿನ ನಿವಾಸಿ ಕ್ಯಾಪ್ಟನ್ ಸುಪ್ರೀತಾ ಅವರು ಆರ್ಮಿ ಏರ್ ಡಿಫೆನ್ಸ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿವಿಧ ಸ್ಥಳಗಳಲ್ಲಿ ಪೋಸ್ಟ್ ಮಾಡಲಾಗಿದ್ದರೂ, ಗಣರಾಜ್ಯೋತ್ಸವ ಪರೇಡ್ ಅವರಿಗೆ ಹೊಸದಿಲ್ಲಿಯಲ್ಲಿ ಒಟ್ಟಿಗೆ ಸೇವೆ ಸಲ್ಲಿಸಲು ಅನನ್ಯ ಅವಕಾಶವನ್ನು ಒದಗಿಸಿಕೊಟ್ಟಿದೆ. +ಇಂದು ಗಣರಾಜ್ಯೋತ್ಸವದ ಮುಖ್ಯ ಅತಿಥಿ ಮ್ಯಾಕ್ರನ್ ಜೊತೆ ಮೋದಿ ರೋಡ್ ಶೋ +ಈ ಕುರಿತಂತೆ ಮಾಧ್ಯಮದೊಂದಿಗೆ ಸಂತಸ ಹಂಚಿಕೊಂಡಿರುವ ಕ್ಯಾಪ್ಟನ್ ಸುಪ್ರೀತಾ ಅವರು, ಜೆರ್ರಿ ಮತ್ತು ನಾನು ಎನ್‍ಸಿಸಿ ದಿನಗಳಿಂದಲೂ ಒಬ್ಬರಿಗೊಬ್ಬರು ತಿಳಿದಿದ್ದೇವೆ. ನಾವಿಬ್ಬರೂ ಬೇರೆ ಬೇರೆ ಸ್ಥಳಗಳಲ್ಲಿ ಪೋಸ್ಟ್ ಮಾಡಿದ್ದೇವೆ. ಅದೃಷ್ಟವಶಾತ್ ನಾವಿಬ್ಬರೂ ಗಣರಾಜ್ಯೋತ್ಸವ ಪರೇಡ್‍ನಿಂದ ಇಲ್ಲಿಗೆ ಬಂದಿದ್ದೇವೆ. +ಇದು ಸಂತಸ ತಂದಿದೆ ಎಂದಿದ್ದಾರೆ. ಮೇಜರ್ ಜೆರ್ರಿ ಬ್ಲೇಜ್ ಅವರು ತಮ್ಮ ಪ್ರೇರಣೆಯನ್ನು ಹಂಚಿಕೊಂಡರು, ನನ್ನ ಪತ್ನಿ 2016 ರಲ್ಲಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಎನ್‍ಸಿಸಿ ತುಕಡಿಯ ಭಾಗವಾಗಿದ್ದರು. 2014 ರಲ್ಲಿ ನವದೆಹಲಿಯಲ್ಲಿ ನಡೆದ ಎನ್‍ಸಿಸಿ ಗಣರಾಜ್ಯೋತ್ಸವ ಶಿಬಿರದ ಭಾಗವಾಗಲು ನನಗೆ ಅವಕಾಶ ಸಿಕ್ಕಿತು. +ಇದು ಕೂಡ ನನಗೆ ಪ್ರೇರಕ ಅಂಶಗಳಲ್ಲಿ ಒಂದಾಗಿದೆ. 2024 ರ ಗಣರಾಜ್ಯ ದಿನದಂದು ನನ್ನ ರೆಜಿಮೆಂಟ್ ಅನ್ನು ಕರ್ತವ್ಯದ ಹಾದಿಯಲ್ಲಿ ಮುನ್ನಡೆಸಲು ಮತ್ತು ನನ್ನ ರೆಜಿಮೆಂಟ್ ಅನ್ನು ಹೆಮ್ಮೆ ಪಡಿಸಲು ನಾನು ಬಯಸುತ್ತೇನೆ. ನನ್ನ ಈ ಆಸೆ ಈಗ ಈಡೇರುತ್ತಿದೆ ಎಂದು ಹೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_181_1.txt b/eesanje/url_47_181_1.txt new file mode 100644 index 0000000000000000000000000000000000000000..2eb6df1bfac4d60275ae91f4fa8c5730fff1b8d6 --- /dev/null +++ b/eesanje/url_47_181_1.txt @@ -0,0 +1,6 @@ +ಪಶ್ಚಿಮ ಬಂಗಾಳ ಪ್ರವೇಶಿಸಿದ ರಾಹುಲ್ ‘ನ್ಯಾಯ್ ಯಾತ್ರೆ’ +ಕೋಲ್ಕತ್ತಾ, ಜನವರಿ 25 (ಪಿಟಿಐ) ಇಂಡಿಯಾ ಒಕ್ಕೂಟದ ಮೈತ್ರಿಕೂಟದೊಳಗಿನ ರಾಜಕೀಯ ಏರಿಳಿತದ ನಡುವೆಯೇ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಅಸ್ಸಾಂನಿಂದ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸ್ವತಂತ್ರವಾಗಿ ಸ್ರ್ಪಧಿಸಲಿದೆ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಘೋಷಿಸಿದ ಒಂದು ದಿನದ ನಂತರ ಯಾತ್ರೆಯ ಬಂಗಾಳ ಲೆಗ್ ಆರಂಭವಾಗಿದೆ. +ಕಾಂಗ್ರೆಸ್ ಮತ್ತು ಟಿಎಂಸಿ ಎರಡೂ 2024 ರ ಸಂಸತ್ತಿನ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು ಎದುರಿಸಲು ರಚಿಸಲಾದ ಇಂಡಿಯಾ ಬ್ಲಾಕ್‍ನ ಘಟಕಗಳಾಗಿವೆ.ಯಾತ್ರೆಯು ರಾಜ್ಯದ ಉತ್ತರ ಭಾಗದಲ್ಲಿರುವ ಕೂಚ್ ಬೆಹಾರ್ ಜಿಲ್ಲೆಯ ಬಕ್ಷೀರ್ಹತ್ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದೆ. ರಂದು ಎರಡು ದಿನಗಳ ಪ್ರವಾಸದ ನಂತರ, ಜನವರಿ 29 ರಂದು ಬಿಹಾರವನ್ನು ಪ್ರವೇಶಿಸುವ ಮೊದಲು ಜಲ್ಪೈಗುರಿ, ಅಲಿಪುದೌರ್ರ, ಉತ್ತರ ದಿನಜ್ಪುರ್ ಮತ್ತು ಡಾರ್ಜಿಲಿಂಗ್ ಜಿಲ್ಲೆಗಳ ಮೂಲಕ ನ್ಯಾಯ ಯಾತ್ರೆ ಸಂಚರಿಸಲಿದೆ. +ರೈಲುಗಳ ಅಪಘಾತ ತಡೆಯುವ ‘ಕವಚ್’ ಸಿಸ್ಟಮ್ ಯಶಸ್ವಿ ಪರೀಕ್ಷೆ +ಜನವರಿ 31 ರಂದು ಮಾಲ್ಡಾ ಮೂಲಕ ಪಶ್ಚಿಮ ಬಂಗಾಳವನ್ನು ಮರುಪ್ರವೇಶಿಸುವ ಇದು ಫೆಬ್ರವರಿ 1 ರಂದು ರಾಜ್ಯದಿಂದ ನಿರ್ಗಮಿಸುವ ಮೊದಲು ಎರಡೂ ಕಾಂಗ್ರೆಸ್ ಭದ್ರಕೋಟೆ ಜಿಲ್ಲೆಗಳಾದ ಮುರ್ಷಿದಾಬಾದ್ ಮೂಲಕ ಹಾದುಹೋಗುತ್ತದೆ. ಯಾತ್ರೆಯ ಬಂಗಾಳದ ಭಾಗವು ಆರು ಜಿಲ್ಲೆಗಳು ಮತ್ತು ಆರು ಲೋಕಸಭಾ ಕ್ಷೇತ್ರಗಳಾದ ಡಾರ್ಜಿಲಿಂಗ್, ರಾಯ್‍ಗುಂಜ, ಉತ್ತರ ಮತ್ತು ದಕ್ಷಿಣ ಮಾಲ್ಡಾ ಮತ್ತು ಎರಡು ಮುರ್ಷಿದಾಬಾದ್‍ನಲ್ಲಿ ಐದು ದಿನಗಳ ಕಾಲ 523 ಕಿಮೀ ವ್ಯಾಪಿಸಿದೆ. +ಇದು ಏಪ್ರಿಲ್-ಮೇ 2021 ರ ವಿಧಾನಸಭಾ ಚುನಾವಣೆಯ ನಂತರ ರಾಜ್ಯಕ್ಕೆ ರಾಹುಲ್ ಗಾಂಧಿಯವರ ಮೊದಲ ಭೇಟಿಯಾಗಿದೆ. ರಾಜ್ಯ ಕಾಂಗ್ರೆಸ್‍ನ ಮಾಜಿ ಅಧ್ಯಕ್ಷ ಪ್ರದೀಪ್ ಭಟ್ಟಾಚಾರ್ಯ ಅವರು ಆಶಾವಾದ ವ್ಯಕ್ತಪಡಿಸಿದ್ದಾರೆ, ರಾಹುಲ್ ಜಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಬಂಗಾಳದ ಕಾಂಗ್ರೆಸ್ ಘಟಕಕ್ಕೆ ಹೊಸ ಜೀವನ ನೀಡಲಿದೆ ಎಂದು ನಾವು ಭಾವಿಸುತ್ತೇವೆ. ಈ ಯಾತ್ರೆಯು ನಮಗೆ ಸಂಘಟನಾತ್ಮಕವಾಗಿ ಮಾತ್ರವಲ್ಲದೆ ಚುನಾವಣಾ ಪೂರ್ವದಲ್ಲಿಯೂ ಸಹಾಯ ಮಾಡುತ್ತದೆ ಎಂದಿದ್ದಾರೆ. \ No newline at end of file diff --git a/eesanje/url_47_181_10.txt b/eesanje/url_47_181_10.txt new file mode 100644 index 0000000000000000000000000000000000000000..89cb2ee7186ce31cda312b7d89b0f0a30faf6198 --- /dev/null +++ b/eesanje/url_47_181_10.txt @@ -0,0 +1,6 @@ +ಜಯಲಲಿತಾರ ಚಿನ್ನದ ಆಭರಣಗಳನ್ನು ಸರ್ಕಾರಕ್ಕೆ ವರ್ಗಾಯಿಸಲು ಕೋರ್ಟ್ ಆದೇಶ +ಬೆಂಗಳೂರು, ಜ 23 – ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ರಾಜ್ಯ ಸರ್ಕಾರಕ್ಕೆ ವರ್ಗಾಯಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಜಯಲಲಿತಾ ಮತ್ತು ಇತರರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ವಸ್ತು ಸಾಕ್ಷ್ಯದ ಭಾಗವಾಗಿರುವ ಈ ಚಿನ್ನ ಮತ್ತು ವಜ್ರದ ಆಭರಣಗಳನ್ನು ವಿಲೇವಾರಿ ಮಾಡಲು ತಮಿಳುನಾಡು ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧಿಶ ಹೆಚ್ ಎ ಮೋಹನ್ ಅವರು ಈ ಆದೇಶವನ್ನು ನೀಡಿದ್ದಾರೆ. +ಅಮೆರಿಕದಲ್ಲಿ ಬಂದೂಕುದಾರಿಯಿಂದ ಗುಂಡಿನ ದಾಳಿ, 8 ಮಂದಿ ಬಲಿ +ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕರ್ನಾಟಕದಲ್ಲಿ ನಡೆದ ವಿಚಾರಣೆಯಲ್ಲಿ ಎಲ್ಲಾ ವಸ್ತು ಸಾಕ್ಷ್ಯಗಳು ಈಗ ನ್ಯಾಯಾಲಯದ ವಶದಲ್ಲಿರುವ ಕರ್ನಾಟಕ ಖಜಾನೆಯಲ್ಲಿವೆ. ಜಯಲಲಿತಾ ಅವರ ಸಂಬಂಧಿಕರು ರಾಜ್ಯದಿಂದ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಿಗೆ ಅರ್ಹರಲ್ಲ ಎಂದು ನ್ಯಾಯಾಲಯ ಈ ಹಿಂದೆ ಹೇಳಿತ್ತು. ಹೀಗಾಗಿ ಜಯಲಲಿತಾ ಅವರ ಸೋದರಳಿಯ ಜೆ.ದೀಪಾ ಮತ್ತು ಜೆ.ದೀಪಕ್ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ಸಿಬಿಐ ನ್ಯಾಯಾಲಯ ತಿರಸ್ಕರಿಸಿತ್ತು. +ವಿಶೇಷ ನ್ಯಾಯಾಲಯವು ತಮಿಳುನಾಡು ಗೃಹ ಇಲಾಖೆಯು ಆಭರಣಗಳನ್ನು ಸಂಗ್ರಹಿಸಲು ಪೊಲೀಸರೊಂದಿಗೆ ಕಾರ್ಯದರ್ಶಿ ಶ್ರೇಣಿಯಲ್ಲಿರುವ ಸಮರ್ಥ ವ್ಯಕ್ತಿಗಳಿಗೆ ಅ„ಕಾರ ನೀಡುತ್ತದೆ ಎಂದು ನಿರ್ದೇಶನ ನೀಡಿತು ಇದೇ ಆದೇಶದಲ್ಲಿ ವಿಶೇಷ ನ್ಯಾಯಾಲಯವು ರಾಜ್ಯದಲ್ಲಿ ನಡೆಸಿದ ವಿಚಾರಣೆಯ ವೆಚ್ಚಕ್ಕಾಗಿ ಕರ್ನಾಟಕಕ್ಕೆ ಐದು ಕೋಟಿ ರೂ. ಚೆನ್ನೈನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಜಯಲಲಿತಾ ಅವರಿಗೆ ಸಂಬಂಧಿಸಿದ ಖಾತೆಯಲ್ಲಿನ ನಿಶ್ಚಿತ ಠೇವಣಿಯಿಂದ ಪಾವತಿ ಮಾಡಲಾಗುತ್ತದೆ. +ಜಯಲಲಿತಾ, ಅವರ ಮಾಜಿ ಆಪ್ತ ಸಹಾಯಕಿ ವಿ ಶಶಿಕಲಾ, ಜಯಲಲಿತಾ ಅವರ ಸಾಕು ಪುತ್ರ ವಿಎನ್ ಸುಧಾಕರನ್ ಮತ್ತು ಶಶಿಕಲಾ ಅವರ ಸೊಸೆ ಜೆ ಇಳವರಸಿ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಅಕ್ರಮ ಆಸ್ತಿ ಗಳಿಕೆ ವಿಚಾರಣೆ ನಡೆಸಿತು. \ No newline at end of file diff --git a/eesanje/url_47_181_11.txt b/eesanje/url_47_181_11.txt new file mode 100644 index 0000000000000000000000000000000000000000..0f7ce81c9fccf67b6c22e43f9ffecf16c297f660 --- /dev/null +++ b/eesanje/url_47_181_11.txt @@ -0,0 +1,9 @@ +ಸಂಸತ್ತಿನ ಸಂಕೀರ್ಣ ಭದ್ರತೆಗಾಗಿ 140 ಸಿಐಎಸ್‍ಎಫ್ ಸಿಬ್ಬಂದಿ ನಿಯೋಜನೆ +ನವದೆಹಲಿ, ಜ.23: ಮುಂದಿನ ಜ. 31 ರಿಂದ ಪ್ರಾರಂಭವಾಗುವ ಸಂಸತ್ ಬಜೆಟ್ ಅ„ವೇಶನದಿಂದ ಸಂದರ್ಶಕರು ಮತ್ತು ಅವರ ವಸ್ತುಗಳನ್ನು ಪರೀಕ್ಷಿಸಲು ಹೊಸ ಕ್ರಮದ ಭಾಗವಾಗಿ 140 ಸಿಐಎಸ್‍ಎ-ï ಸಿಬ್ಬಂದಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ನಿಯೋಜಿಸಲಾಗಿದೆ. +ಕಳೆದ ವರ್ಷ ಡಿಸೆಂಬರ್ 13 ರಂದು ಸಂಸತ್ತಿನ ಸಭಾಂಗಣಕ್ಕೆ ಪ್ರವೇಶಿಸಿ ಇಬ್ಬರು ಬಣ್ಣದ ಹೊಗೆ ಡಬ್ಬಿಗಳನ್ನು ಎರಚಿ ಬೀತಿ ಹುಟ್ಟಿಸುವ ಕೃತ್ಯ ನಡೆದಿತ್ತು ಈ ಹಿನ್ನೆಲೆಯಲ್ಲಿ ಸೌಲಭ್ಯದ ಸಮಗ್ರ ಭದ್ರತಾ ಪರಿಶೀಲನೆಯ ನಂತರ ಕೇಂದ್ರ ಗೃಹ ಸಚಿವಾಲಯವು ಸಿಐಎಸ್‍ಎ-ï ಪಡೆ ಮಂಜೂರು ಮಾಡಿದೆ.ಎಂದು ಅ„ಕೃತ ಮೂಲಗಳು ತಿಳಿಸಿವೆ. +ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಒಟ್ಟು 140 ಸಿಬ್ಬಂದಿ ನಿನ್ನೆಯಿಂದಲೆ ಸಂಸತ್ತಿನ ಸಂಕೀರ್ಣದಲ್ಲಿ ಅ„ಕಾರ ವಹಿಸಿಕೊಂಡಿದ್ದಾರೆ. ಅವರು ಸಂದರ್ಶಕರನ್ನು, ಅವರ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕಟ್ಟಡಕ್ಕೆ ಅಗ್ನಿ ಸುರಕ್ಷತಾ ಸಾಧನವನ್ನು ಕೂಡ ಸಹ ಒದಗಿಸಲಾಗಿದೆ. +ಸಿದ್ದರಾಮಯ್ಯನವರು ರಾಮ ಭಕ್ತರಲ್ಲ, ಹೈಕಮಾಂಡ್ ಭಕ್ತರು : ಆಶೋಕ್ ವಾಗ್ದಾಳಿ +ಸಂಸತ್ತಿನ ಸಂಕೀರ್ಣವನ್ನು ಈಗಾಗಲೇ ಅಲ್ಲಿ ಇರುವ ಇತರ ಭದ್ರತಾ ಏಜೆನ್ಸಿಗಳೊಂದಿಗೆ ಪರಿಚಿತಗೊಳಿಸುತ್ತಿದೆ, ಇದರಿಂದಾಗಿ ಅವರು ಬಜೆಟ್ ಅ„ವೇಶನ ಪ್ರಾರಂಭವಾಗುವ ಜನವರಿ 31 ರಿಂದ ಕಾರ್ಯಕ್ಕೆ ಸಿದ್ಧರಾಗಿದ್ದಾರೆ ಎಂದು ಅವರು ಹೇಳಿದರು. +ಸಿಐಎಸ್‍ಎ-ï ಹೊಸ ಮತ್ತು ಹಳೆಯ ಸಂಸತ್ತಿನ ಕಟ್ಟಡಕ್ಕೆ ಪ್ರವೇಶ ನಿಯಂತ್ರಣವನ್ನು ಏರ್‍ಪೆÇೀರ್ಟ್ ಭದ್ರತೆಯಂತಹ ಶೈಲಿಯಲ್ಲಿ ನೀಡುತ್ತದೆ, ಅಲ್ಲಿ ವ್ಯಕ್ತಿಗಳು ಮತ್ತು ಅವರ ವಸ್ತುಗಳ ದೇಹವನ್ನು ಪರೀಕ್ಷಿಸಲಾಗುತ್ತದೆ ಎಕ್ಸ್-ರೇ ಯಂತ್ರಗಳು, ಹ್ಯಾಂಡ್‍ಹೆಲ್ಡ್ ಡಿಟೆಕ್ಟರ್‍ಗಳ ಮೂಲಕ ಶೂಗಳನ್ನು ಸ್ಕ್ಯಾನ್ ಮಾಡಲು ಸಹ ಅವಕಾಶವಿದೆ. ಭಾರವಾದ ಜಾಕೆಟ್‍ಗಳು ಮತ್ತು ಬೆಲ್ಟ್‍ಗಳನ್ನು ಟ್ರೇನಲ್ಲಿ ಇರಿಸಿ ಮತ್ತು ಅವುಗಳನ್ನು ಎಕ್ಸ್-ರೇ ಸ್ಕ್ಯಾನರ್ ಮೂಲಕ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಸುಮಾರು 1.70 ಲಕ್ಷ ಸಿಬ್ಬಂದಿ ಬಲಿಷ್ಠ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕೇಂದ್ರ ಸಶಸ ಪೆÇಲೀಸ್ ಪಡೆ ಆಗಿದೆ ಮತ್ತು ಇದು ಏರೋಸ್ಪೇಸ್ ಮತ್ತು ಪರಮಾಣು ಶಕ್ತಿ ಡೊಮೇನ್‍ನಲ್ಲಿ ಪ್ರಮುಖ ಸ್ಥಾಪನೆಗಳನ್ನು ಹೊರತುಪಡಿಸಿ ದೇಶದ 68 ನಾಗರಿಕ ವಿಮಾನ ನಿಲ್ದಾಣಗಳ ಸುರಕ್ಷತೆ ಕಾಪಾಡುತ್ತಿದೆ. +ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಮಿತ್ರ ಕಟ್ಟಡಗಳನ್ನು ಸಿಐಎಸ್‍ಎ-ïನ ಸಮಗ್ರ ಭದ್ರತೆಯ ಅಡಿಯಲ್ಲಿ ತರಲಾಗುವುದು ಎಂದು ಮೂಲಗಳು ಈ ಹಿಂದೆ ಪಿಟಿಐಗೆ ತಿಳಿಸಿದ್ದವು, ಇದು ಸಂಸತ್ತಿನ ಭದ್ರತಾ ಸೇವೆ (ಪಿಎಸ್‍ಎಸ್), ದೆಹಲಿ ಪೆÇಲೀಸ್ ಮತ್ತು ಸಂಸತ್ತಿನ ಅಸ್ತಿತ್ವದಲ್ಲಿರುವ ಅಂಶಗಳನ್ನು ಸಹ ಹೊಂದಿರುತ್ತದೆ. diff --git a/eesanje/url_47_181_12.txt b/eesanje/url_47_181_12.txt new file mode 100644 index 0000000000000000000000000000000000000000..231991c2febc2b0645f7e3f93421c3df8a947faf --- /dev/null +++ b/eesanje/url_47_181_12.txt @@ -0,0 +1,5 @@ +ಶ್ರೀರಾಮನಿಗೆ 11 ಕೋಟಿ ಮೌಲ್ಯದ ವಜ್ರಖಚಿತ ಕಿರೀಟ ಸಮರ್ಪಿಸಿದ ಉದ್ಯಮಿ ಮುಖೇಶ್ ಪಟೇಲ್‍ +ಗಾಂಧಿನಗರ, ಜ.16- ಗುಜರಾತ್‍ನ ಖ್ಯಾತ ಚಿನ್ನಾಭರಣ ಉದ್ಯಮಿ ಮುಖೇಶ್ ಪಟೇಲ್ ಅವರು ಅಯೋಧ್ಯೆಯ ಶ್ರೀರಾಮನಿಗಾಗಿ 11 ಕೋಟಿ ರೂ. ಮೌಲ್ಯದ ಮುತ್ತು-ರತ್ನ-ವಜ್ರಗಳಿಂದ ಕೂಡಿದ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. +ಸೂರತ್‍ನಲ್ಲಿ ಗ್ರೀನ್ ಲ್ಯಾಬ್ ಡೈಮಂಡ್ ಕಂಪೆನಿ ಮಾಲೀಕರಾಗಿರುವ ಮುಖೇಶ್ ಪಟೇಲ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಕನಸು ಕಂಡಿದ್ದರು. ಅದರಂತೆ ಅದು ಸಾಕಾರಗೊಂಡಾಗ ಭಾವಪರವಶರಾಗಿರುವ ಅವರು ಶ್ರೀರಾಮನಿಗಾಗಿ ಆರು ಕೆಜಿ ಚಿನ್ನ ಬಳಸಿ ವಜ್ರ, ಮುತ್ತು, ಪಚ್ಚೆ ಸೇರಿದಂತೆ ಇತರ ಬೆಲೆಬಾಳುವ ವಸ್ತುಗಳನ್ನು ಅಳವಡಿಸಿ ಚಿನ್ನದ ಕಿರೀಟವನ್ನು ತಯಾರಿಸಿ ಅದನ್ನು ಶ್ರೀರಾಮನಿಗೆ ಸಮರ್ಪಿಸಿದ್ದಾರೆ. +ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್ +ಸುಮಾರು ಐದು ತಿಂಗಳ ಕಾಲ ವ್ರತ ಮಾಡಿ ಮಡಿಯಿಂದ ಈ ಕಿರೀಟ ತಯಾರಿಸಲಾಗಿದೆ. ನನ್ನ ತಂದೆ-ತಾಯಿ ಜತೆ ಇದನ್ನು ಶ್ರೀರಾಮ ಮಂದಿರ ಟ್ರಸ್ಟ್‍ಗೆ ಹಸ್ತಾಂತರಿಸಿದ್ದು, ನನಗೆ ಇದೊಂದು ಪವಿತ್ರ ಹಾಗೂ ಅವಿಸ್ಮರಣೀಯ ದಿನವಾಗಿದೆ ಎಂದು ಮುಖೇಶ್ ಪಟೇಲ್ ಹೇಳಿದ್ದಾರೆ. \ No newline at end of file diff --git a/eesanje/url_47_181_2.txt b/eesanje/url_47_181_2.txt new file mode 100644 index 0000000000000000000000000000000000000000..6bc232c9ad963d4d0ca06c46b682766c1e5ba778 --- /dev/null +++ b/eesanje/url_47_181_2.txt @@ -0,0 +1,6 @@ +ಶ್ರೀರಾಮನಿಗೆ ಉಡುಪು ತಯಾರಿಸಲು ದೈವಪ್ರೇರಣೆಯಾಗಿತ್ತು ; ತ್ರಿಪಾಠಿ +ಅಯೋಧ್ಯೆ,ಜ. 25 (ಪಿಟಿಐ) ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ದೇವಾಲಯದಲ್ಲಿ ರಾಮ ಲಲ್ಲಾ ವಿಗ್ರಹದಿಂದ ಅಲಂಕರಿಸಲ್ಪಟ್ಟ ಉಡುಪನ್ನು ವಿನ್ಯಾಸಗೊಳಿಸಿದ ಮನೀಶ್ ತ್ರಿಪಾಠಿ ಅವರು ದೇವರೊಂದಿಗಿನ ದೈವಿಕ ಸಂಬಂಧವು ಈ ಕಾರ್ಯವನ್ನು ಸಾಧಿಸಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ. +ಉಡುಪಿನ ವಸ್ತು ಮತ್ತು ವಿನ್ಯಾಸದ ಬಗ್ಗೆ ವಿವರಿಸಿದ ತ್ರಿಪಾಠಿ, ನಾವು ಕಾಶಿಯಲ್ಲಿ (ವಾರಣಾಸಿ) ದೇವರಿಗೆ ಸಿದ್ಧಪಡಿಸಿದ ಪೀತಾಂಬರಿ (ಹಳದಿ) ಬಟ್ಟೆಯನ್ನು ಪಡೆದುಕೊಂಡಿದ್ದೇವೆ ಎಂದು ಪಿಟಿಐಗೆ ತಿಳಿಸಿದರು. ಬಟ್ಟೆ ತಯಾರಿಕೆಯಲ್ಲಿ ರೇಷ್ಮೆ ಜೊತೆಗೆ ಚಿನ್ನ ಮತ್ತು ಬೆಳ್ಳಿಯ ತಂತಿಗಳನ್ನು ಬಳಸಲಾಗಿದೆ ಎಂದು ಅವರು ಹೇಳಿದರು. ಉಡುಪು ಮೇಲೆ ಮಾಡಿದ ಕಸೂತಿ ವೈಷ್ಣವ ಚಿಹ್ನೆಗಳನ್ನು ಹೊಂದಿದೆ, ವಿನ್ಯಾಸಕರು ಹೇಳಿದರು. +ಉಡುಪಿನ ಪರಿಕಲ್ಪನೆ ಮತ್ತು ತಯಾರಿಕೆಯಲ್ಲಿ ಎದುರಿಸಿದ ಸವಾಲುಗಳ ಬಗ್ಗೆ ಕೇಳಿದಾಗ, ತ್ರಿಪಾಠಿ ಹೇಳಿದರು, ರಾಜಕುಮಾರ ಮತ್ತು ದೇವರ ಹಿರಿಮೆಗೆ ಸರಿಹೊಂದುವ ಬಟ್ಟೆಯನ್ನು ಸಿದ್ಧಪಡಿಸುವುದು ದೊಡ್ಡ ಸವಾಲಾಗಿತ್ತು. ನನಗೆ ದಾರಿ ತೋರಿಸಲು ನಾನು ದೇವರನ್ನು ಪ್ರಾರ್ಥಿಸಿದೆ ಮತ್ತು ಅವರು ನನಗೆ ಚಿಹ್ನೆಗಳನ್ನು ತೋರಿಸಿದರು. ಮತ್ತು ನಾನು ಸೂಕ್ತವಾದ ಬಟ್ಟೆಗಳನ್ನು ಸಿದ್ಧಪಡಿಸಲು ಬುದ್ಧಿವಂತಿಕೆಯನ್ನು ಕೊಟ್ಟನು. ಲಕ್ನೋದಲ್ಲಿ ಹುಟ್ಟಿ ಬೆಳೆದ ಯುವ ವಿನ್ಯಾಸಕ, ದೇವಾಲಯವನ್ನು ನಿರ್ಮಿಸಲು 500 ವರ್ಷಗಳಿಂದ ಕಾಯುತ್ತಿರುವ ಭಕ್ತರ ಕಲ್ಪನೆ ಮತ್ತು ನಿರೀಕ್ಷೆಗಳಿಗೆ ತಕ್ಕಂತೆ ಬದುಕುವುದು ತನಗೆ ಸವಾಲಾಗಿದೆ ಎಂದು ಹೇಳಿದರು. +ರಾಮಮಂದಿರ ನಿರ್ಮಾಣದ ಮೂಲಕ ದೇಶ, ದೇಹ, ಮನಸ್ಸುಗಳ ಶುದ್ಧೀಕರಣ ಮಾಡಿದ ನಮೋ +ಭಕ್ತಿಯಿಂದ ತುಂಬಿರುವ ಜನರು ಉಡುಪಿಗೆ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದರ ಕುರಿತು ನನ್ನ ಮನಸ್ಸಿನಲ್ಲಿ ಒಂದು ಆಲೋಚನೆ ಇತ್ತು. ಎಲ್ಲರ ಮೆಚ್ಚುಗೆಯನ್ನು ಪಡೆದ ನಂತರ ನಾನು ತುಂಬಾ ಹೆಮ್ಮೆಪಡುತ್ತೇನೆ ಎಂದು ತ್ರಿಪಾಠಿ ಹೇಳಿದರು. ನನ್ನ ತಾಯಿ ಮತ್ತು ಹೆಂಡತಿಯಿಂದ ನಾನು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದೇನೆ, ಅವರು ತಮ್ಮ ಮುಖದಲ್ಲಿ ನಗು ಮತ್ತು ಅವರ ಕಣ್ಣುಗಳಲ್ಲಿ ಕಣ್ಣೀರುಗಳೊಂದಿಗೆ ಉಡುಪನ್ನು ಅಭಿನಂದಿಸಿದರು ಎಂದು ಅವರು ಹೇಳಿದರು. \ No newline at end of file diff --git a/eesanje/url_47_181_3.txt b/eesanje/url_47_181_3.txt new file mode 100644 index 0000000000000000000000000000000000000000..45cbaf4edc9f67fceee16c3adb143d66e2308882 --- /dev/null +++ b/eesanje/url_47_181_3.txt @@ -0,0 +1,8 @@ +ರೈಲುಗಳ ಅಪಘಾತ ತಡೆಯುವ ‘ಕವಚ್’ ಸಿಸ್ಟಮ್ ಯಶಸ್ವಿ ಪರೀಕ್ಷೆ +ನವದೆಹಲಿ, ಜ.25 (ಪಿಟಿಐ) ಗಂಟೆಗೆ 160 ಕಿಮೀ ವೇಗದಲ್ಲಿ ಸಂಚರಿಸುವ ಅರೆ-ಹೈ ಸ್ಪೀಡ್ ಎಂಜಿನ್‍ನಲ್ಲಿ ಆಂಟಿ-ಟ್ರೇನ್ ಡಿಕ್ಕಿ ಸಿಸ್ಟಮ್ ಕವಚ್‍ನ ಬ್ರೇಕಿಂಗ್ ಅಳವಡಿಕೆ ಪರೀಕ್ಷೆ ಯಶಸ್ವಿಯಾಗಿದೆ ಎಂದು ಉತ್ತರ ಮಧ್ಯ ರೈಲ್ವೆಯ ಆಗ್ರಾ ವಿಭಾಗ ತಿಳಿಸಿದೆ. ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡಡ್ರ್ಸ್ ಆರ್ಗನೈಸೇಶನ್ ಅಭಿವೃದ್ಧಿಪಡಿಸಿದ ಕವಚ್ ಸಿಸ್ಟಮ್, ರೈಲು ಚಾಲಕನು ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಲು ವಿಫಲವಾದಾಗ ತುರ್ತು ಸಂದರ್ಭದಲ್ಲಿ ಸ್ವಯಂಚಾಲಿತವಾಗಿ ಬ್ರೇಕ್‍ಗಳನ್ನು ಅನ್ವಯಿಸಬಹುದು. +ಕಾರ್ಯಾಚರಣೆಯ ಸುರಕ್ಷತೆಯನ್ನು ಹೆಚ್ಚಿಸಲು ಭಾರತೀಯ ರೈಲ್ವೇ ತನ್ನ ನೆಟ್‍ವರ್ಕ್‍ನಾದ್ಯಂತ ಈ ವ್ಯವಸ್ಥೆಯನ್ನು ಅಳವಡಿಸುವ ಪ್ರಕ್ರಿಯೆಯಲ್ಲಿದೆ. ಉತ್ತರ ಮಧ್ಯ ರೈಲ್ವೆಯ ಉಪ ಮುಖ್ಯ ಸಿಗ್ನಲ್ ಮತ್ತು ದೂರಸಂಪರ್ಕ ಇಂಜಿನಿಯರ್ ಕುಶ್ ಗುಪ್ತಾ ಅವರ ಮೇಲ್ವಿಚಾರಣೆಯಲ್ಲಿ, ಅರೆ-ಹೈ ಸ್ಪೀಡ್ ಇಂಜಿನ್ ವ್ಯಾಪ್-5 ಅನ್ನು ಕವಚ ವ್ಯವಸ್ಥೆಯೊಂದಿಗೆ ಅಳವಡಿಸಲಾಯಿತು ಮತ್ತು ಜನವರಿ 19 ರಂದು ಪಲ್ವಾಲ್-ಮಥುರಾ ವಿಭಾಗದಲ್ಲಿ ಗಂಟೆಗೆ 160 ಕಿ.ಮೀ ಸಂಚರಿಸಬಹುದು ಎಂದು ಆಗ್ರಾ ರೈಲು ವಿಭಾಗದ ಪಿಆರ್‍ಒ ಶ್ರೀ ವಾಸ್ತವ ತಿಳಿಸಿದ್ದಾರೆ. +ಮುಂದೆ ಕೆಂಪು ಸಿಗ್ನಲ್ ಅನ್ನು ಗಮನಿಸಿದ ನಂತರ ಬ್ರೇಕ್ ಹಾಕದಂತೆ ಇಂಜಿನ್‍ನ ಚಾಲಕನನ್ನು ಕೇಳಲಾಯಿತು. ಕವಚ್ ತನ್ನದೇ ಆದ ಬ್ರೇಕ್‍ಗಳನ್ನು ಅನ್ವಯಿಸುತ್ತದೆಯೇ ಮತ್ತು ಸಿಗ್ನಲ್‍ಗೆ ಮುಂಚಿತವಾಗಿ ರೈಲನ್ನು ನಿಲ್ಲಿಸುತ್ತದೆಯೇ ಎಂದು ನಾವು ಪರಿಶೀಲಿಸಲು ಬಯಸಿದ್ದೇವೆ ಎಂದು ಅವರು ಹೇಳಿದರು. ಭಾಗವಹಿಸಿದ ಇಂಜಿನಿಯರ್‍ಗಳು ಮತ್ತು ಅಧಿಕಾರಿಗಳು ಕೆಂಪು ಸಿಗ್ನಲ್‍ಗೆ 30 ಮೀಟರ್ ಮೊದಲು ಇಂಜಿನ್ ನಿಲ್ಲಿಸಿರುವುದನ್ನು ಗಮನಿಸಿ ಸಂತೋಷಪಟ್ಟರು. ಇದು ಇತರ ಸುರಕ್ಷತಾ ನಿಯತಾಂಕಗಳನ್ನು ಸಹ ಪೂರೈಸಿದೆ ಎಂದು ಅವರು ಹೇಳಿದರು. +ವ್ಯಾಪ್ -5 ಲೊಕೊಮೊಟಿವ್‍ಗಳು ಪ್ಯಾಸೆಂಜರ್ ಕೋಚ್‍ಗಳನ್ನು 160 ಕಿ.ಮೀ ವೇಗದಲ್ಲಿ ಎಳೆಯುವ ಸಾಮಥ್ರ್ಯವನ್ನು ಹೊಂದಿವೆ ಮತ್ತು ಶತಾಬ್ದಿ ಮತ್ತು ಗತಿಮಾನ್ ಎಕ್ಸ್‍ಪ್ರೆಸ್‍ನಂತಹ ರೈಲುಗಳಲ್ಲಿ ಬಳಸಲಾಗುತ್ತದೆ. ಉತ್ತರ ಪ್ರದೇಶದ ವೃಂದಾವನದಿಂದ ಬೆಳಿಗ್ಗೆ 10 ಗಂಟೆಗೆ ವಿಚಾರಣೆ ಪ್ರಾರಂಭವಾಯಿತು ಮತ್ತು ವೇಳಾಪಟ್ಟಿಯ ಪ್ರಕಾರ ಡೌನ್ ಲೈನ್ ದಿಕ್ಕಿನಲ್ಲಿ ಹರಿಯಾಣದ ಪಲ್ವಾಲ್‍ನಲ್ಲಿ ಮಧ್ಯಾಹ್ನ 1:20 ಕ್ಕೆ ಪೂರ್ಣಗೊಂಡಿತು. ಪಲ್ವಾಲ್‍ನಿಂದ ವೃಂದಾವನದವರೆಗೆ ಉತ್ತರ ಪ್ರದೇಶದ ಮಾರ್ಗದ ದಿಕ್ಕಿನಲ್ಲಿ ಮಧ್ಯಾಹ್ನ 2 ಮತ್ತು 3:35 ರ ನಡುವೆ ಪುನರಾವರ್ತನೆಯಾಯಿತು. +ಬೆಂಗಳೂರಲ್ಲಿ ಮನೆಗೆ ನುಗ್ಗಿ ರೌಡಿಯಭೀಕರ ಕೊಲೆ +ಈಗ ವಿಭಾಗವು ಶೀಘ್ರದಲ್ಲೇ ಪ್ರಯಾಣಿಕರ ಕೋಚ್‍ಗಳೊಂದಿಗೆ ಲೊಕೊಮೊಟಿವ್‍ನಲ್ಲಿ ಪ್ರಯೋಗವನ್ನು ಪುನರಾವರ್ತಿಸುತ್ತದೆ ಎಂದು ಅಕಾರಿಗಳು ತಿಳಿಸಿದ್ದಾರೆ.ಆಗ್ರಾ ವಿಭಾಗವು ಮಥುರಾ (ನಿಲ್ದಾಣವನ್ನು ಹೊರತುಪಡಿಸಿ) ಮತ್ತು ಪಲ್ವಾಲ್ ನಡುವಿನ 80-ಕಿಮೀ ವಿಸ್ತಾರದಲ್ಲಿ ಸಂಪೂರ್ಣ ಕವಚ ಜಾಲವನ್ನು ಅಭಿವೃದ್ಧಿಪಡಿಸಿದೆ. ನಿಲ್ದಾಣಗಳಂತಹ ಹಲವಾರು ಸ್ಥಳಗಳಲ್ಲಿ ಸ್ಥಾಯಿ ಕವಾಚ್ ಘಟಕಗಳನ್ನು ಸ್ಥಾಪಿಸುವುದು ಮತ್ತು ಟ್ರ್ಯಾಕ್‍ಗಳ ಉದ್ದಕ್ಕೂ ಟವರ್‍ಗಳು ಮತ್ತು ಆಂಟೆನಾಗಳನ್ನು ಸ್ಥಾಪಿಸುವುದನ್ನು ಒಳಗೊಂಡಿರುತ್ತದೆ. +ಆರ್‍ಡಿಎಸ್‍ಒ ಅಧಿಕಾರಿಗಳ ಪ್ರಕಾರ, ದೆಹಲಿ ಮತ್ತು ಆಗ್ರಾ ನಡುವಿನ ಮೂರು ಭಾಗಗಳಲ್ಲಿ 125 ಕಿಮೀ ವಿಸ್ತಾರವು ಸಂಪೂರ್ಣ ರೈಲು ಜಾಲದಾದ್ಯಂತ ಇರುವ ಏಕೈಕ ವಿಸ್ತರಣೆಯಾಗಿದ್ದು, ಗರಿಷ್ಠ 160 ಕಿಮೀ ವೇಗದಲ್ಲಿ ರೈಲುಗಳು ಚಲಿಸಬಹುದು. \ No newline at end of file diff --git a/eesanje/url_47_181_4.txt b/eesanje/url_47_181_4.txt new file mode 100644 index 0000000000000000000000000000000000000000..28811b07cc428af6fe6500e30989424701137ff6 --- /dev/null +++ b/eesanje/url_47_181_4.txt @@ -0,0 +1,6 @@ +ಅಯೋಧ್ಯೆಯಲ್ಲಿ 2 ತಿಂಗಳವರೆಗೂ ಭಕ್ತರಿಗೆ ನಿರಂತರ ಊಟದ ವ್ಯವಸ್ಥೆ +ಅಯೋಧ್ಯೆ,ಜ.24-ಶ್ರೀ ರಾಮಚಂದ್ರ ಪ್ರಭುವಿನ ದರ್ಶನ ಪಡೆಯಲು ದೇಶ-ವಿದೇಶದಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಇದಕ್ಕಾಗಿ ಅಯೋಧ್ಯೆಯಲ್ಲಿ ಎರಡು ತಿಂಗಳ ಕಾಲ ವಿವಿಧ ವಸ್ತುಗಳನ್ನು ಸಂಗ್ರಹಿಸಲು ದೊಡ್ಡ ಭಂಡಾರಗಳನ್ನು ನಿರ್ಮಿಸಲಾಗಿದೆ. +ರಾಮಭಕ್ತರು ಕಳುಹಿಸಿದ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ರಾಮಮಂದಿರ ಟ್ರಸ್ಟ್‍ಗೆ ಈಗ ಸ್ಥಳಾವಕಾಶವಿಲ್ಲದ ಕಾರಣ ದೊಡ್ಡ ಭಂಡಾರಗಳನ್ನು ಸ್ಥಾಪಿಸಲಾಗುತ್ತಿದೆ. ಅಯೋಧ್ಯೆಯ ಸರಯು ನದಿ ಮತ್ತು ಹನುಮಾನ್‍ಗಢದ ಬಳಿ 6 ಸಂಸ್ಥೆಗಳ ಭವ್ಯವಾದ ಸಭಾಂಗಣ ಸಿದ್ಧವಾಗಿದೆ. + !../ +30 ಅಡುಗೆಯವರು ಮತ್ತು 100 ಕೆಲಸಗಾರರ ತಂಡವು ಆಹಾರವನ್ನು ಸಿದ್ಧಪಡಿಸುತ್ತದೆ. ಇದಲ್ಲದೆ ವಿವಿಧ ವಸ್ತಗಳನ್ನು ಸಂಗ್ರಹಿಸಲಾಗುತ್ತಿದ್ದು ಅಗತ್ಯವಿರುವ ಭಕ್ತರಿಗೆ ಆಹಾರ,ಬೆಡ್ ಶೀಟ್,ಔಷದ ಸೇರಿ ವಿವಿಧ ಸೌಲಭ್ಯ ನೀಡಲಾಗುತ್ತಿದೆ. +660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ \ No newline at end of file diff --git a/eesanje/url_47_181_5.txt b/eesanje/url_47_181_5.txt new file mode 100644 index 0000000000000000000000000000000000000000..373818448be2a7a84bcc7b68199f4ee2ce326301 --- /dev/null +++ b/eesanje/url_47_181_5.txt @@ -0,0 +1,14 @@ +ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ನಿಯಂತ್ರಣಕ್ಕೆಪೊಲೀಸರ ಹರಸಾಹಸ +ಅಯೋಧ್ಯೆ, ಜ.24- ರಾಮ ಮಂದಿರ ದಲ್ಲಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಬಳಿಕ ದರ್ಶನಕ್ಕೆ ದೇಶ-ವಿದೇಶಗಳಿಂದ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಕ್ಷಣ-ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಭದ್ರತೆ ಒದಗಿಸುವುದೇ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಈ ನಡುವೆ ಭಕ್ತರ ಮೇಲೆ ಅನಗತ್ಯವಾಗಿ ಪೊಲೀಸರು ಲಾಠಿ ಪ್ರಹಾರ ನಡೆಸದಂತೆ ಹಾಗೂ ಸಂಯಮದಿಂದ ವರ್ತಿಸುವಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. +ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಬರುವ ಎಲ್ಲಾ ಭಕ್ತರಿಗೆ ರಾಮಲಲ್ಲಾನ ದರ್ಶನಕ್ಕೆ ಅವಕಾಶವಿದೆ. ಆದರೆ, ತಾಳ್ಮೆಯಿಂದ ಇರುವಂತೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಅಚಾರ್ಯ ಸತ್ಯೇಂದ್ರ ದಾಸ್ ಅವರು ಮನವಿ ಮಾಡಿದ್ದಾರೆ. ಭದ್ರತೆಗೆ ಸವಾಲಾದ ಭಕ್ತರ ಸಂಖ್ಯೆ: ದೇವಾಲಯದ ಭದ್ರತೆಯ ನಿರ್ವಹಣಾ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಭಾರೀ ಯಾತ್ರಾರ್ಥಿಗಳ ಗುಂಪನ್ನು ನಿಯಂತ್ರಿಸಲು ಕಷ್ಟಪಟ್ಟ ನಂತರ ಈ ಹೇಳಿಕೆ ಬಂದಿದೆ. ಎಲ್ಲಾ ಭಕ್ತರು ರಾಮಲಲ್ಲಾನ ದರ್ಶನ ಪಡೆಯಲು ಸಾಧ್ಯವಾಗುತ್ತದೆ. ದರ್ಶನವು ನಿರಂತರವಾಗಿ ನಡೆಯುತ್ತಿದೆ. ಭಕ್ತರು ತಾಳ್ಮೆಯಿಂದ ಇರಬೇಕೆಂದು ಅವರು ಹೇಳಿದ್ದಾರೆ. +ರಾಮಮಂದಿರದ ಗರ್ಭಗುಡಿಯೊಳಗೆ ಜನಸಂದಣಿಯನ್ನು ನಿರ್ವಹಿಸಲು ಸ್ವತ: ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಪ್ರಸಾದ್ ಮತ್ತು ಉತ್ತರ ಪ್ರದೇಶ ಡಿಜಿಪಿ ಪ್ರಶಾಂತ್ ಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.ಮಂಗಳವಾರ ಸುಮಾರು 5 ಲಕ್ಷ ಭಕ್ತರು ಭೇಟಿ ನೀಡಿದ್ದರು. ಇಂದು ಸಹ ಲಕ್ಷಾಂತರ ಭಕ್ತರು ಬಾಲ ರಾಮನ ದರ್ಶನಕ್ಕೆ ಮುಂಜಾನೆಯಿಂದಲೇ ಕಾದು ಕುಳಿತಿದ್ದರು. +ರಾಮನ ದರ್ಶನಕ್ಕೆ ಅವಕಾಶ ಕೊಟ್ಟ ಮೊದಲ ದಿನ, ಮುಂಜಾನೆ 3 ಗಂಟೆ ಸುಮಾರಿಗೆ ಲಕ್ಷಾಂತರ ಭಕ್ತರು ಸೇರಿದ್ದರು. ಈ ವೇಳೆ ರಾಮ ಮಂದಿರದ ಬಾಗಿಲು ತೆರೆಯುತ್ತಿದ್ದಂತೆ ದರ್ಶನಕ್ಕೆ ನೂಕು ನುಗ್ಗಲು ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದೇವಾಲಯದ ಒಳಗೆ ಪ್ರವೇಶಿಸುವ ಭಕ್ತರನ್ನು ಮೆಟಲ್ ಡಿಟೆಕ್ಟರ್ ಮೂಲಕ ಪರಿಶೀಲಿಸಲಾಗುತ್ತಿದೆ. +ಮಂದಿರಕ್ಕೆ ಜನರನ್ನು ಸರದಿಯಲ್ಲಿ ಬಿಡಲಾಗುತ್ತಿದ್ದು, ಶಿಸ್ತು, ಸಂಯಮ ಪಾಲನೆಗೆ ಮನವಿ ಮಾಡಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಅದೆಷ್ಟೋ ವರ್ಷದಿಂದ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಬಯಕೆ ಈಗ ಈಡೇರಿದೆ. ಹಾಗಾಗಿ ಜೀವನದಲ್ಲಿ ಒಮ್ಮೆ ರಾಮನ ದರ್ಶನ ಪಡೆಯಬೇಕೆಂಬ ಹಂಬಲ ಭಕ್ತರಲ್ಲಿ ಮೂಡಿದೆ. ಎರಡು ದಿನಗಳಿಂದ ಅಯೋಧ್ಯೆಗೆ ಲಕ್ಷಾಂತರ ಭಕ್ತರು ನಿರಂತರವಾಗಿ ಆಗಮಿಸುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಬಂದ ಭಕ್ತರನ್ನು ನಿಯಂತ್ರಿಸಲು ಅಲ್ಲಿದ್ದ ಪೊಲೀಸರು, ಭದ್ರತಾ ಸಿಬಂದಿ ಹರಸಾಹಸ ಪಡುವಂತಾಗಿದೆ. +ಭಕ್ತರಿಗೆ ಬಾಲ ರಾಮನ ದರ್ಶನಕ್ಕೆ ಸಮಯ ನಿಗದಿ: +ಬಾಲಕ ರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ವೆಬ್ಸೈಟ್ನಲ್ಲಿ ನಿರ್ದಿಷ್ಟ ಸಮಯದ ಸ್ಲಾಟ್ಗಳನ್ನು ಒದಗಿಸಿರುವ ಮಾಹಿತಿ ಇದೆ. ಇದರಂತೆ ನಿತ್ಯ ಬೆಳಗ್ಗೆ 7 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6:30ಕ್ಕೆ ಆರತಿ ಹಾಗೂ ಅಲಂಕಾರ ನಡೆಯಲಿದೆ. ಸಂಜೆ 7:30 ಕ್ಕೆ ಸಂಧ್ಯಾ ಆರತಿ ನಡೆಯಲಿದೆ. ಆಫ್ಲೈನ್ ಮತ್ತು ಆನ್ಲೈನ್ ಎರಡರಲ್ಲೂ ಆರತಿಗಾಗಿ ಪಾಸ್ಗಳು ದೊರೆಯಲಿವೆ. ಆಫ್ಲೈನ್ ಪಾಸ್ಗಳು ಶ್ರೀರಾಮ ಜನ್ಮಭೂಮಿಯ ಕಚೇರಿಯಲ್ಲಿ ಲಭ್ಯವಿದ್ದು, ಗುರುತಿನ ಪುರಾವೆ ಒದಗಿಸಿ ಪಡೆಯಬಹುದಾಗಿದೆ. +ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ, ಅಯೋಧ್ಯೆಯಲ್ಲಿ ಅಧಿಕಾರಿಗಳು ಒಳಬರುವ ಎಲ್ಲಾ ವಾಹನಗಳಿಗೆ ತಕ್ಷಣ ಪ್ರವೇಶವನ್ನು ನಿರ್ಬಂಸಿದ್ದಾರೆ. ಬೆಳಿಗ್ಗೆ ಅಯೋಧ್ಯೆಯಲ್ಲಿ ಹಠಾತ್ ಯಾತ್ರಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಇದರಿಂದ ಭದ್ರತಾ ವ್ಯವಸ್ಥೆಯು ಸವಾಲಾಗಿ ಪರಿಣಮಿಸಿದೆ. ಜನದಟ್ಟಣೆಯಿಂದಾಗಿ ಕೆಲವು ವ್ಯಕ್ತಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಗಂಭೀರ ಹಾನಿಯ ವರದಿಯಾಗಿಲ್ಲ. ಭಾರೀ ಜನಸಂದಣಿಯನ್ನು ಗಮನಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಮತ್ತಷ್ಟು ಯಾತ್ರಿಗಳ ಆಗಮನವನ್ನು ನಿರ್ಬಂಸಲು ಆದೇಶಿಸಿದರು. +ಗೊಂದಲಗಳಿಲ್ಲದೆ ನಡೆದ ಪಿಎಸ್‍ಐ ಹುದ್ದೆಗಳ ನೇಮಕಾತಿ ಲಿಖಿತ ಮರು ಪರೀಕ್ಷೆ +ಅಯೋಧ್ಯೆಯಲ್ಲಿನ ಪರಿಸ್ಥಿತಿ ಕುರಿತು ಸಭೆ ನಡೆಸಲಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಅಯೋಧ್ಯೆಗೆ ತೆರಳುವ ಎಲ್ಲಾ ವಾಹನಗಳ ಮೇಲೆ ನಿಷೇಧ ಹೇರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ವಾಹನಗಳಿಗೆ ಮಾಡಲಾದ ಎಲ್ಲಾ ಆನ್ಲೈನ್ ಬುಕಿಂಗ್ಗಳನ್ನು ರದ್ದುಗೊಳಿಸಲಾಗಿದೆ ಮತ್ತು ಯಾತ್ರಿಕರ ಬಸ್ ದರಗಳ ಮರುಪಾವತಿಯನ್ನು ತ್ವರಿತ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. +ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವ ಕಾರಣ ಅಯೋಧ್ಯೆಯಲ್ಲಿ ಹೋಟೆಲ್, ರೂಮ್ಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೋ ತಿಂಗಳ ಕಾಲದವರೆಗೆ ಹೋಟೆಲ್ಗಳು ಬುಕ್ ಆಗಿದೆ ಎನ್ನಲಾಗಿದೆ. ಅದೂ ಅಲ್ಲದೆ ಕೆಲವೊಂದು ಹೋಟೆಲ್ಗಳಲ್ಲಿ ಹೆಚ್ಚಿನ ಬಾಡಿಗೆ ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. +ಅಯೋಧ್ಯೆ ದೇವಸ್ಥಾನದಲ್ಲಿ ನೂತನ ರಾಮಲಲ್ಲಾ ಮೂರ್ತಿಯ ಪ್ರಾಣಪ್ರತಿಷ್ಠಾಪಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಸಮಾರಂಭವನ್ನು ದೇಶಾದ್ಯಂತ ನೇರಪ್ರಸಾರ ಮಾಡಲಾಯಿತು. ಸಮಾರಂಭಕ್ಕೆ ಪ್ರಮುಖ ರಾಜಕಾರಣಿಗಳು, ಉದ್ಯಮಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳು ಸೇರಿದಂತೆ ಸಾವಿರಾರು ಜನರನ್ನು ಆಹ್ವಾನಿಸಲಾಗಿತ್ತು. ಆಮಂತ್ರಿತರು ನಂತರ ಸಮಾರಂಭ ಮುಗಿದ ಕೂಡಲೇ ದೇವರ ದರ್ಶನ ಪಡೆದರು. +ಕಳೆದ ಸೋಮವಾರ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು ಇದರೊಂದಿಗೆ ನೂರಾರು ವರುಷಗಳ ತಪಸ್ಸಿನ ಫಲವಾಗಿ ನೆರವೇರಿದಂತಾಗಿದೆ. ಅಂದಿನಿಂದ ಅಯೋಧ್ಯೆಗೆ ಭಕ್ತರ ದಂಡೇ ಹರಿದು ಬರುತ್ತಿದೆ. \ No newline at end of file diff --git a/eesanje/url_47_181_6.txt b/eesanje/url_47_181_6.txt new file mode 100644 index 0000000000000000000000000000000000000000..139699714a540fb7055076cfc6fb637f47001e22 --- /dev/null +++ b/eesanje/url_47_181_6.txt @@ -0,0 +1,8 @@ +ಭಾರತ್ ನ್ಯಾಯ ಯಾತ್ರೆಗೆ ಭದ್ರತೆ ನೀಡುವಂತೆ ಅಮಿತ್ ಷಾಗೆ ಖರ್ಗೆ ಪತ್ರ +ನವದೆಹಲಿ, ಜ.24- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ನ್ಯಾಯ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಲು ಸಂಬಂಧಪಟ್ಟ ಪೊಲೀಸರಿಗೆ ನಿರ್ದೇಶನ ನೀಡುವಂತೆ ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆದಿದ್ದಾರೆ. +ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಎದುರಿಸಿರುವ ಭದ್ರತಾ ಲೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಪತ್ರದ ಮೂಲಕ ಸೂಕ್ತ ಭದ್ರತೆ ನೀಡಲು ಮನವಿ ಮಾಡಿಕೊಂಡಿದ್ದಾರೆ.ರಾಜ್ಯಸಭೆಯ ವಿರೋಧಪಕ್ಷ ನಾಯಕರೂ ಆಗಿರುವ ಖರ್ಗೆ ಮಂಗಳವಾರ ರಾತ್ರಿ ಬರೆದ ಪತ್ರವು ಕಾಂಗ್ರೆಸ್ ನಾಯಕನ ಸುರಕ್ಷತೆಯ ಬಗ್ಗೆ ಮೂಡಿರುವ ಕಳವಳವನ್ನು ಎತ್ತಿ ಹೇಳಿದೆ. +ಜನವರಿ 22ರಂದು ನಾಗಾಂವ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಅಸ್ಸಾಂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದಾರೆ ಮತ್ತು ಕೆಲವೊಮ್ಮೆ ಕಾರ್ಯಕರ್ತರ ಬೆಂಗಾವಲು ವಾಹನವನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.ಹೀಗಾಗಿ ರಾಹುಲ್ ಗಾಂ ಭದ್ರತೆಗೆ ಅಪಾಯವಿದೆ ಎಂದಿದ್ದಾರೆ. ಮಂಗಳವಾರ ಗುವಾಹಟಿಯ ಹೊರವಲಯದಲ್ಲಿ ಗಾಂಧಿ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ ನಂತರ ಅಮಿತ್‍ಶಾಗೆ ಅವರು ಪತ್ರ ಬರೆದಿದ್ದಾರೆ. +ಕಾಂಗ್ರೆಸ್‍ನ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ : ಟಿಎಂಸಿ +ಶಾ ಮಧ್ಯಪ್ರವೇಶಿಸಿ ರಾಹುಲ್ ಗಾಂಧಿ ಹಾಗೂ ಯಾತ್ರೆಯಲ್ಲಿ ಭಾಗವಹಿಸುವವರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಪತ್ರದಲ್ಲಿ ಒತ್ತಾಯಿಸಲಾಗಿದೆ. ದೈಹಿಕ ಹಾನಿಗೆ ಕಾರಣವಾಗುವ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಮತ್ತು ಅಸ್ಸಾಂನ ಪೊಲೀಸ್ ಮಹಾನಿರ್ದೇಶಕರನ್ನು ವಿನಂತಿಸುತ್ತೇನೆ ಎಂದಿದ್ದಾರೆ. +ಭಾರತ್ ಜೋಡೋ ನ್ಯಾಯ ಯಾತ್ರೆಯು ಜನವರಿ 14 ರಂದು ಮಣಿಪುರದ ಇಂಫಾಲ್‍ನಿಂದ ಪ್ರಾರಂಭವಾಯಿತು. ಮುಂಬೈನಲ್ಲಿ ಕೊನೆಗೊಳ್ಳುವ ಈ ಯಾತ್ರೆ 6,700 ಕಿಲೋಮೀಟರ್‍ಗಳನ್ನು ಕ್ರಮಿಸಲು ಸಿದ್ಧವಾಗಿದೆ. ಸಮಾಜದ ದುರ್ಬಲ ವರ್ಗಗಳನ್ನು ಒಗ್ಗೂಡಿಸುವುದರೊಂದಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. +ಕಾರ್ಮಿಕ ಕಾನೂನುಗಳ ನಿರ್ವಹಣೆ ಮತ್ತು ವಿರೋಧ ಪಕ್ಷದವರ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜನವಿರೋ ನೀತಿಗಳನ್ನು ಜನರಿಗೆ ವಿವರಿಸಲು ಕಾಂಗ್ರೆಸ್ ಈವಯಾತ್ರೆಯನ್ನು ವೇದಿಕೆಯಾಗಿಸಿಕೊಂಡಿದೆ. \ No newline at end of file diff --git a/eesanje/url_47_181_7.txt b/eesanje/url_47_181_7.txt new file mode 100644 index 0000000000000000000000000000000000000000..fb622928a1495b5a1c4b5016991ebcdcebb47006 --- /dev/null +++ b/eesanje/url_47_181_7.txt @@ -0,0 +1,7 @@ +ಬಾಬರ್‌ನ ಕಾಲದಲ್ಲಿ ಉಂಟಾದ ಗಾಯಕ್ಕೆ ರಾಮ ಮಂದಿರ ಹೊಲಿಗೆ ಹಾಕಿದೆ : ಅಮಿತ್ ಶಾ +ಅಹಮದಾಬಾದ್, ಜ 24- ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮ ಮಂದಿರದಲ್ಲಿ ನಡೆದ ಪ್ರಾಣಪ್ರತಿಷ್ಠಾಪನೆ ಸಮಾರಂಭವು ಸುಮಾರು 500 ವರ್ಷಗಳ ಹಿಂದೆ ಮೊಘಲ್ ದೊರೆ ಬಾಬರ್ ಕಾಲದಲ್ಲಿ ಉಂಟಾದ ಆಳವಾದ ಗಾಯಕ್ಕೆ ಹೊಲಿಗೆ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. +ಗುಜರಾತ್‍ನ ಅಹಮದಾಬಾದ್‍ನ ರಾನಿಪ್ ಪ್ರದೇಶದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ರಾಮಜಿ ದೇವಸ್ಥಾನದಲ್ಲಿ ಮಂಗಳವಾರ ಪುನಃ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯ ರಾಮ ಮಂದಿರದಲ್ಲಿ ಶೀ ಬಾಲರಾಮನ ಪ್ರಾಣ ಪ್ರತಿಷ್ಠಾ ಮಾಡುವ ಮೂಲಕ ಗಮನಾರ್ಹ ಕೆಲಸ ಮಾಡಿದ್ದಾರೆ. +ಕಳೆದ 500 ವರ್ಷಗಳಿಂದ ವಿಶ್ವದಾದ್ಯಂತ ಶ್ರೀರಾಮನ ಭಕ್ತರು ಈ ಕ್ಷಣಕ್ಕಾಗಿ ಕಾಯುತ್ತಿದ್ದರು. ಶ್ರೀರಾಮನನ್ನು ನೋಡುವುದು ಯಾವಾಗ ಎಂದು ಅವರು ಕೇಳುತ್ತಿದ್ದರು. ಈಗ ಭವ್ಯವಾದ ದೇವಾಲಯ ಕಂಗೊಳಿಸುತ್ತಿದೆ ಈ ಘಟನೆಯನ್ನು ನೋಡಿದಾಗ ಬಾಬರ್‍ನ ಕಾಲದಲ್ಲಿ ನಮ್ಮ ಹೃದಯದಲ್ಲಿ ಆಗಿದ್ದ ಆಳವಾದ ಗಾಯಕ್ಕೆ ಈಗ ಹೊಲಿಗೆ ಮಾಡಿದಂತಾಗಿದೆ ಎಂದು ಷಾ ಹೇಳಿದರು. +ಈ ವರ್ಷವೂ ಮುಂದುವರೆಯಲಿದೆ ಭಾರತ ಆರ್ಥಿಕ ಪ್ರಾಬಲ್ಯ +2014ರ ಹಿಂದಿನ ಕಾಂಗ್ರೆಸ್ ಸರ್ಕಾರ ದೇಶದ ಸಂಸ್ಕøತಿ, ಧರ್ಮ ಮತ್ತು ಭಾಷೆಗಳನ್ನು ಗೌರವಿಸಲು ಹೆದರುತ್ತಿದ್ದವು.ಔರಂಗಜೇಬನು ಕಾಶಿ ವಿಶ್ವನಾಥ ದೇವಾಲಯವನ್ನು ಧ್ವಂಸ ಮಾಡಿದನು. ಇಷ್ಟು ವರ್ಷಗಳ ನಂತರ ಅದನ್ನು ಪುನಃ ನಿರ್ಮಿಸಿದ ಮತ್ತು ಅಲ್ಲಿ ಎಲ್ಲಾ ಭಕ್ತರಿಗೆ ಅನುಕೂಲತೆಗಳನ್ನುಮಾಡಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲಬೇಕು ಎಂದು ಗೃಹ ಸಚಿವರು ಹೇಳಿದರು. +ಬಾಬರ್ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಧ್ವಂಸ ಮಾಡಿದ್ದಾನೆ. ಈಗ ಅಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗಿದೆ ಜೈ ಶ್ರೀರಾಮ್ ಘೋಷಣೆಗಳ ಮೊಳಗಿದೆ ಎಂದರು. \ No newline at end of file diff --git a/eesanje/url_47_181_8.txt b/eesanje/url_47_181_8.txt new file mode 100644 index 0000000000000000000000000000000000000000..2521abec76c79271ee275b15de90d56e4e9ebd36 --- /dev/null +++ b/eesanje/url_47_181_8.txt @@ -0,0 +1,9 @@ +ಈ ವರ್ಷವೂ ಮುಂದುವರೆಯಲಿದೆ ಭಾರತ ಆರ್ಥಿಕ ಪ್ರಾಬಲ್ಯ +ಬೆಂಗಳೂರು,ಜ.24- ಭಾರತವು ಈ ವರ್ಷ ಮತ್ತು ಮುಂದಿನ ವರ್ಷ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರೆಯಲಿದೆ ಹಾಗೂ ಹಣದುಬ್ಬರ ಮತ್ತೆ ಏರಿಕೆಯಾಗುವ ಸಾಧ್ಯತೆ ಇಲ್ಲ ಎಂದು ಆರ್ಥಶಾಸ್ತ್ರಜ್ಞರ ಸಮೀಕ್ಷೆ ಅಭಿಪ್ರಾಯಪಟ್ಟಿದೆ. +ಮೇ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಚುನಾವಣೆಯ ಬೆಳವಣಿಗೆಯ ಆವೇಗವನ್ನು ಹೆಚ್ಚಿಸಲು ಸರ್ಕಾರವು ಈಗಾಗಲೇ ಬಲವಾದ ವೆಚ್ಚವನ್ನು ಹೆಚ್ಚಿಸಲು ಈ ಹಣಕಾಸು ವರ್ಷದ ಮೊದಲ ಎರಡು ತ್ರೈಮಾಸಿಕಗಳಲ್ಲಿ ಮಾರ್ಚ್ ಅಂತ್ಯದವರೆಗೆ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವು ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ. +ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಹೆಚ್ಚಿನ ವೆಚ್ಚವು ಮೂಲಸೌಕರ್ಯಗಳನ್ನು ನಿರ್ಮಿಸಲು ಹೋಗಿದೆ. ಖಾಸಗಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯು ಹಿಂದುಳಿದಿದೆ, ಇದು ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಹೊಸ ಪಾತ್ರವನ್ನು ವಹಿಸುವುದನ್ನು ಮುಂದುವರಿಸುತ್ತದೆ ಎಂದು ಸೂಚಿಸುತ್ತದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2024) +ಜನವರಿ 10-23 ರ 54 ಅರ್ಥಶಾಸ್ತ್ರಜ್ಞರ ರಾಯಿಟರ್ಸ್ ಸಮೀಕ್ಷೆಯು ಈ ಆರ್ಥಿಕ ವರ್ಷದಲ್ಲಿ ಆರ್ಥಿಕತೆಯು ಶೇ. 6.9 ರಷ್ಟು ಬೆಳೆಯುತ್ತದೆ ಎಂದು ಭವಿಷ್ಯ ನುಡಿದಿದೆ, ಇದು ಡಿಸೆಂಬರ್ ಸಮೀಕ್ಷೆಯಲ್ಲಿ ಶೇ.6.7ರಿಂದ ಸಣ್ಣ ಅಪ್‍ಗ್ರೇಡ್ ಆಗಿದೆ. ಹಿಂದಿನ ಸಮೀಕ್ಷೆಯಂತೆಯೇ ಮುಂದಿನ ಹಣಕಾಸು ವರ್ಷದಲ್ಲಿ ಶೇ.6.3 ರಷ್ಟು ವಿಸ್ತರಿಸುವ ಮುನ್ಸೂಚನೆಯನ್ನು ನೀಡಿದೆ. +ಹಣದುಬ್ಬರವು ಅಲ್ಪಾವಯಲ್ಲಿ ತೀವ್ರವಾಗಿ ಕಡಿಮೆಯಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ, ಈಗಾಗಲೇ ಕೆಳಹಂತದ ಕೋರ್ ಹಣದುಬ್ಬರದಿಂದ ತೊಂದರೆಗೆ ಸಿಲುಕುತ್ತದೆ ಎಂದು ಪ್ಯಾಂಥಿಯಾನ್ ಮ್ಯಾಕ್ರೋ ಎಕನಾಮಿಕ್ಸ್‍ನ ಮುಖ್ಯ ಉದಯೋನ್ಮುಖ ಏಷ್ಯಾದ ಅರ್ಥಶಾಸ್ತ್ರಜ್ಞ ಮಿಗುಯೆಲ್ ಚಾಂಕೊ ಹೇಳಿದ್ದಾರೆ. +ಅದೇ ಸಮಯದಲ್ಲಿ, ಈ ಪ್ರವೃತ್ತಿಗಳು ಆರ್ಥಿಕತೆಯಲ್ಲಿ ನಿರಂತರವಾದ ನಿಧಾನತೆಯನ್ನು ಪ್ರತಿಬಿಂಬಿಸುತ್ತವೆ, ವಿಶೇಷವಾಗಿ ಖಾಸಗಿ ಬಳಕೆಗೆ ಸಂಬಂಸಿದಂತೆ, ಬೆಳವಣಿಗೆಯ ಪ್ರಮುಖ ಅಂಶವಾಗಿದೆ. ಈ ವಿತ್ತೀಯ ವರ್ಷದಲ್ಲಿ ಗ್ರಾಹಕರ ಬೆಲೆ ಹಣದುಬ್ಬರವು ಸರಾಸರಿ 5.4% ಮತ್ತು 4.7% ಎಂದು ಸಮೀಕ್ಷೆಯು ತೋರಿಸಿದೆ ಮತ್ತು ಮುಂದಿನ ಆರು ತಿಂಗಳ ಅವಯಲ್ಲಿ ಗಮನಾರ್ಹವಾದ ಪುನರುತ್ಥಾನದ ಅಪಾಯವು ಕಡಿಮೆಯಾಗಿದೆ ಎಂದು 32 ರಲ್ಲಿ 23 ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ. +ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯ ಶೇ.60 ರಷ್ಟಿರುವ ಗ್ರಾಹಕ ಖರ್ಚು ನಿಧಾನಗೊಂಡಿದೆ. ಆದರೆ ಬಹುಪಾಲು ಅರ್ಥಶಾಸ್ತ್ರಜ್ಞರು, 28 ರಲ್ಲಿ 25, ಮುಂದಿನ ಆರು ತಿಂಗಳಲ್ಲಿ ಉದ್ಯೋಗವು ಸುಧಾರಿಸುತ್ತದೆ ಎಂದು ಹೇಳಿದ್ದಾರೆ.ಭಾರತದ ಆರ್ಥಿಕತೆಯು ಬಲವಾದ ಆವೇಗದಲ್ಲಿದ್ದರೂ… ಖಾಸಗಿ ಬಳಕೆ ಬೇಡಿಕೆಯಲ್ಲಿನ ದೌರ್ಬಲ್ಯದ ಕಾರಣದಿಂದಾಗಿ ಮಿತವಾದ ಲಕ್ಷಣಗಳಿವೆ ಎಂದು ಅಕ್ಯೂಟ್ ರೇಟಿಂಗ್ಸ್ ಮತ್ತು ರಿಸರ್ಚ್‍ನ ಮುಖ್ಯ ಅರ್ಥಶಾಸ್ತ್ರಜ್ಞ ಸುಮನ್ ಚೌಧರಿ ಹೇಳಿದ್ದಾರೆ. \ No newline at end of file diff --git a/eesanje/url_47_181_9.txt b/eesanje/url_47_181_9.txt new file mode 100644 index 0000000000000000000000000000000000000000..08f5b77dbbaa02d05527e7ed6687cfbbf8ff1ca1 --- /dev/null +++ b/eesanje/url_47_181_9.txt @@ -0,0 +1,7 @@ +ಅಯೋಧ್ಯೆಯತ್ತ ಹರಿದು ಬರತ್ತಲೇ ಇದೆ ಭಕ್ತ ಸಾಗರ +ಅಯೋಧ್ಯೆ,ಜ.24- ರಾಮ ಲಲ್ಲಾನ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಮಂದಿರ ಉದ್ಘಾಟನೆಗೊಂಡ ಒಂದು ದಿನದ ನಂತರ ಸುಮಾರು 5 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಯೋಧ್ಯೆಯಲ್ಲಿ ಮೈ ಕೊರೆಯುವ ಚಳಿ ಇದ್ದರೂ ಭಕ್ತರ ದಂಡು ಆಗಮಿಸುತ್ತಲೆ ಇದ್ದು, ಇಂದು ಕೂಡ ರಾಮನ ದರ್ಶನಕ್ಕೆ ಭಕ್ತ ಸಾಗರ ಕಾದು ನಿಂತಿದೆ. +ಇಂದು ಬೆಳಗ್ಗೆಯೂ ದೇವಾಲಯದ ಹೊರಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿರುವ ದೃಶ್ಯಗಳು ಕಂಡುಬಂದಿವೆ. ಪ್ರತಿದಿನ ಒಂದು ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುವ ನಿರೀಕ್ಷೆಯಿದೆ.ಹರಿದು ಬರುತ್ತಿರುವ ಭಕ್ತ ಸಾಗರವನ್ನು ನಿಯಂತ್ರಿಸಲು ಉತ್ತರ ಪ್ರದೇಶ ಸರ್ಕಾರ ತನ್ನ ಪ್ರಧಾನ ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್ ಮತ್ತು ಉನ್ನತ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್ ಅವರನ್ನು ಅಯೋಧ್ಯೆಗೆ ಕಳುಹಿಸಿದೆ. +ಜನರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪ್ರಧಾನ ಗೃಹ ಕಾರ್ಯದರ್ಶಿ ಮತ್ತು ನನ್ನನ್ನು ಇಲ್ಲಿಗೆ ಕಳುಹಿಸಲಾಗಿದೆ. ನಾವು ಜನಸಂದಣಿ ನಿರ್ವಹಣೆಗಾಗಿ ನಾವು ಸರದಿ ವ್ಯವಸ್ಥೆಯನ್ನು ಸುಧಾರಿಸಿದ್ದೇವೆ. ನಾವು ಜನರಿಗಾಗಿ ಚಾನಲ್‍ಗಳನ್ನು ಮಾಡಿದ್ದೇವೆ ಎಂದು ಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-01-2024) +ಉತ್ತರ ಪ್ರದೇಶ ಪೊಲೀಸ್, ರಾಪಿಡ್ ಆಕ್ಷನ್ ಫೋರ್ಸ್ (ಆರ್‍ಎಎಫ್), ಮತ್ತು ಸಶಸ್ತ್ರ ಸೀಮಾ ಬಾಲ್ (ಎಸ್‍ಎಸ್‍ಬಿ) ಯ ಸುಮಾರು 8,000 ಭದ್ರತಾ ಸಿಬ್ಬಂದಿಯನ್ನು ದೇವಸ್ಥಾನದಲ್ಲಿ ನಿಯೋಜಿಸಲಾಗಿದೆ. ಎಂಟು ಮ್ಯಾಜಿಸ್ಟ್ರೇಟ್‍ಗಳು ದೇವಾಲಯದ ವಿವಿಧ ಸ್ಥಳಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ. +ಅಯೋಧ್ಯೆಯ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಪ್ರವೀಣ್ ಕುಮಾರ್ ಅವರು, ಜನರು ಎರಡು ವಾರಗಳ ನಂತರ ಮಂದಿರ ಭೇಟಿಗೆ ಸಮಯ ನಿಗದಿಪಡಿಸಿಕೊಳ್ಳಿ ಯಾವುದೆ ಅತುರ ಸಲ್ಲದು ಎಂದು ಮನವಿ ಮಾಡಿಕೊಂಡಿದ್ದಾರೆ. ದೇವಾಲಯದ ಆವರಣದಲ್ಲಿ ವಿಶೇಷವಾಗಿ ಭಕ್ತರು ದರ್ಶನಕ್ಕೆ ತೆರಳುವ ಸ್ಥಳಗಳಲ್ಲಿ ಸಾಕಷ್ಟು ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಯುಪಿ ಪೊಲೀಸ್ ಮುಖ್ಯಸ್ಥ ವಿಜಯ್ ಕುಮಾರ್ ಈ ಹಿಂದೆ ಭರವಸೆ ನೀಡಿದ್ದರು. \ No newline at end of file diff --git a/eesanje/url_47_182_1.txt b/eesanje/url_47_182_1.txt new file mode 100644 index 0000000000000000000000000000000000000000..1dd6d5a627009bbff57bb415b4632ae98b0e2e10 --- /dev/null +++ b/eesanje/url_47_182_1.txt @@ -0,0 +1,8 @@ +ಜ.22ರಂದು ಜನಿಸಿದ ಶಿಶುಗಳಿಗೆ ರಾಮ, ಸೀತಾ ಹೆಸರು +ಕೇಂದ್ರಪಾರ,ಜ.23 (ಪಿಟಿಐ) ಒಡಿಶಾದ ಕೇಂದ್ರಪಾರ ಮತ್ತು ಜಗತ್‍ಸಿಂಗ್‍ಪುರ ಜಿಲ್ಲೆಗಳಲ್ಲಿ ಅನೇಕ ಪೋಷಕರು ರಾಮ ಮಂದಿರದ ಪ್ರತಿಷ್ಠಾಪನೆಯ ದಿನದಂದು ಜನಿಸಿದ ತಮ್ಮ ಶಿಶುಗಳಿಗೆ ರಾಮ ಮತ್ತು ಸೀತಾ ಎಂದು ಹೆಸರಿಸಿದ್ದಾರೆ. ಜ.22 ರಂದು ಕೇಂದ್ರಪಾರಾ ಮತ್ತು ಜಗತ್‍ಸಿಂಗ್‍ಪುರ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜನಿಸಿದ ಕನಿಷ್ಠ ಆರು ಶಿಶುಗಳು, ಗಂಡು ಮತ್ತು ಹೆಣ್ಣುಮಕ್ಕಳಿಗೆ ಅವರ ಪೋಷಕರು ಭಗವಾನ್ ರಾಮ ಮತ್ತು ದೇವಿ ಸೀತೆಯ ಹೆಸರನ್ನು ಇಟ್ಟಿದ್ದಾರೆ. +ಒಡಿಶಾದಲ್ಲಿ ಸಂಪ್ರದಾಯದ ಪ್ರಕಾರ ಮಗು ಹುಟ್ಟಿದ 21 ನೇ ದಿನದಂದು ನಾಮಕರಣ ಮಾಡುವುದಾದರೂ, ಸೋಮವಾರ ನಡೆದ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾ ಸಮಾರಂಭದಂದೆ ಪೋಷಕರು ತಮ್ಮ ನವಜಾತ ಶಿಶುಗಳಿಗೆ ರಾಮ, ಸೀತಾ ಎಂದು ಹೆಸರಿಸಲು ಮುಂದಾದರು. +ಸನಾತನ ಧರ್ಮದ ಎಲ್ಲಾ ಸಾಧಕರಿಗೆ ಇದು ಮಹತ್ವದ ದಿನವಾಗಿದೆ. ನಮ್ಮ ಕುಟುಂಬಕ್ಕೆ ಹೊಸ ಆಗಮನದಿಂದ ನಮಗೆ ಇದು ಡಬಲ್ ಸಂತೋಷವಾಗಿದೆ ಎಂದು ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಿಯಾಂಕಾ ಮಲ್ಲಿಕ್ (24) ಹೇಳಿದರು. +ಇಂದಿನಿಂದ ಭಕ್ತರಿಗೆ ರಾಮಲಲ್ಲಾನ ದರ್ಶನ ಭಾಗ್ಯ +ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದ ನಂತರ ಕೇಂದ್ರಪಾರ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಕೆಯ ಮಗುವಿನ ಜನನ ನಡೆದಿದೆ. ಯುಗಪುರುಷದ ದಿನದ ನೆನಪಿಗಾಗಿ ನಮ್ಮ ಮಗಳಿಗೆ ಸೀತೆ ಎಂದು ಹೆಸರಿಡಲು ನಿರ್ಧರಿಸಿದ್ದೇವೆ ಎಂದು ನವಜಾತ ಶಿಶುವಿನ ತಂದೆ ನಾರಾಯಣ್ ಹೇಳಿದ್ದಾರೆ. ಮಂಗಳಕರ ದಿನದಂದು ಮಗುವಿನ ಜನನದಿಂದ ಅನೇಕ ಪೋಷಕರು ಸಂತೋಷಪಟ್ಟರು. +ರೇಣುಬಾಲಾ ರೌತ್ (24) ಕೇಂದ್ರಪಾರ ಪಟ್ಟಣದ ಖಾಸಗಿ ನರ್ಸಿಂಗ್ ಹೋಂನಲ್ಲಿ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಹರ್ಷ ವ್ಯಕ್ತಪಡಿಸಿದರು. ರಾಮ ಮಂದಿರದ ಪ್ರತಿಷ್ಠಾಪನೆಯ ದಿನದಂದು ನಾನು ಗಂಡು ಮಗುವಿಗೆ ತಂದೆಯಾಗಿದ್ದೇನೆ. ಶುಭ ದಿನದಂದು ಅವನ ಜನನವು ನಮ್ಮನ್ನು ಭಾವಪರವಶಗೊಳಿಸಿದೆ. ನಮ್ಮ ಮಗನಿಗೆ ರಾಮ ಎಂದು ಹೆಸರಿಸಲು ನಾವು ನಿರ್ಧರಿಸಿದ್ದೇವೆ ಎಂದು ರೇಣುಬಾಲಾ ಅವರ ಪತಿ ಅಜಯ್ ಹರ್ಷ ವ್ಯಕ್ತಪಡಿಸಿದರು. +ಜನವರಿ 22 ರಂದು ಜನಿಸಿದ ತಮ್ಮ ನವಜಾತ ಶಿಶುಗಳಿಗೆ ರಾಮ್ ಮತ್ತು ಸೀತೆ ಎಂದು ನಾಮಕರಣ ಮಾಡುವ ಪೋಷಕರು ಇದೇ ರೀತಿಯ ನಿದರ್ಶನಗಳು ರಾಜ್ಯದ ವಿವಿಧ ಭಾಗಗಳಿಂದ ಹರಿದಾಡುತ್ತಿವೆ. \ No newline at end of file diff --git a/eesanje/url_47_182_10.txt b/eesanje/url_47_182_10.txt new file mode 100644 index 0000000000000000000000000000000000000000..ad415326c678867a881c0179e0bd31d826348605 --- /dev/null +++ b/eesanje/url_47_182_10.txt @@ -0,0 +1,7 @@ +ಶ್ರೀರಾಮ ಪಾದ ಸ್ಥಾಪಿಸಿದ ಸ್ಥಳದ ಅಭಿವೃದ್ಧಿ : ಮೋಹನ್ ಯಾದವ್ +ಭೋಪಾಲ್, ಜ 23 (ಪಿಟಿಐ) ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ಐತಿಹಾಸಿಕ ಘಟನೆಯಾಗಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ ಮತ್ತು ರಾಜ್ಯದಲ್ಲಿ ಹಿಂದೂ ದೇವತೆಗೆ ಸಂಬಂಧಿಸಿದ ಸ್ಥಳಗಳನ್ನು ಜನಪ್ರಿಯ ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದ ಪಟ್ಟಣದಲ್ಲಿ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವು ತಾರತಮ್ಯವಿಲ್ಲದೆ ಸಾಮರಸ್ಯದ ಸಮಾಜವನ್ನು ಸೂಚಿಸುವ ಪ್ರಾಚೀನ ಪರಿಕಲ್ಪನೆಯಾದ ರಾಮ ರಾಜ್ಯದ ಬರವಣಿಗೆಗೆ ನಾಂದಿ ಹಾಡುತ್ತದೆ ಎಂದಿದ್ದಾರೆ. ರಾಮ ಮಂದಿರದ ಮೂರ್ತಿ ಪ್ರತಿಷ್ಠಾಪನಾ ಸಮಾರಂಭವು ಐತಿಹಾಸಿಕ ಘಟನೆಯಾಗಿದೆ. ಮಧ್ಯಪ್ರದೇಶದಲ್ಲಿ ಶ್ರೀರಾಮನು ತನ್ನ ಪಾದವನ್ನು ಸ್ಥಾಪಿಸಿದ ಸ್ಥಳಗಳನ್ನು ಪ್ರವಾಸಿ ಸ್ಥಳಗಳಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು. +ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಉತ್ತಮ ಆಡಳಿತವನ್ನು ಸ್ಥಾಪಿಸಲಾಗಿದೆ. ವಾಸ್ತವದಲ್ಲಿ ರಾಮ ರಾಜ್ಯಬರುತ್ತಿದೆ. ಸುಮಾರು 142 ಕೋಟಿ ಜನರು ಸರ್ಕಾರದ ಪರವಾಗಿ ನಿಂತು ಕೋಮು ಸೌಹಾರ್ದದ ಉದಾಹರಣೆಯನ್ನು ಪ್ರದರ್ಶಿಸಿದರು, ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಯಾದವ್ ದೇಶದ ನಾಗರಿಕರಿಗೆ ಅಭಿನಂದನೆ ಸಲ್ಲಿಸಿದರು. +ಲೋಕಸಭಾ ಚುನಾವಣೆ ಅಂತಿಮ ಮತದಾರರ ಪಟ್ಟಿ ಪ್ರಕಟ +ಅಲಂಕೃತಗೊಂಡಿದ್ದ ಅವರ ಮನೆಯಲ್ಲಿ ಸಿಎಂ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಿದರು, ದೀಪಗಳನ್ನು ಹಚ್ಚಿದರು ಮತ್ತು ಜೈ ಶ್ರೀ ರಾಮ ಎಂದು ಘೋಷಣೆ ಮಾಡಿದರು. ಹಿಂದಿನ ದಿನ, ಅವರು ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದ ರಾಮ್ ರಾಜ ದೇವಸ್ಥಾನದಿಂದ ವಾಸ್ತವಿಕವಾಗಿ ಪವಿತ್ರೀಕರಣ ಸಮಾರಂಭವನ್ನು ವೀಕ್ಷಿಸಿದರು. +ಯಾದವ್ ಅವರು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಓರ್ಚಾದ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು, ಇದನ್ನು ಛೋಟಿ ಅಯೋಧ್ಯೆ ಎಂದೂ ಕರೆಯುತ್ತಾರೆ. \ No newline at end of file diff --git a/eesanje/url_47_182_11.txt b/eesanje/url_47_182_11.txt new file mode 100644 index 0000000000000000000000000000000000000000..4aa911f863d61b176e8fdc44dd12e854db2409b7 --- /dev/null +++ b/eesanje/url_47_182_11.txt @@ -0,0 +1,8 @@ +ಶ್ರೀರಾಮ ಸಾಂಸ್ಕೃತಿಕ, ಆಧ್ಯಾತ್ಮಿಕತೆಯ ಪ್ರತೀಕ : ರಾಷ್ಟ್ರಪತಿ +ನವದೆಹಲಿ, ಜ.22- ಅಯೋಧ್ಯೆಯ ರಾಮಮಂದಿರದಲ್ಲಿಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ನರೇಂದ್ರಮೋದಿಯವರಿಗೆ ಪತ್ರ ಬರೆದು ಅಭಿನಂದನೆ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರ ನಿರ್ಮಾಣವಾಗಿದೆ. ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಭಾಗಿಯಾಗಲು ನೀವು ಕಠಿಣ ಅನುಷ್ಠಾನವನ್ನು ಕೈಗೊಂಡಿದ್ದೀರಿ. +ನೀವು ಕೈಗೊಂಡ 11-ದಿನಗಳ ಅನುಷ್ಠಾನ ಕೇವಲ ಪವಿತ್ರ ಧಾರ್ಮಿಕ ಆಚರಣೆಗಳ ಅನುಸರಣೆ ಮಾತ್ರವಲ್ಲ, ಇದು ತ್ಯಾಗ ಮನೋಭಾವದಿಂದ ಪ್ರೇರಿತವಾದ ಅತ್ಯುನ್ನತ ಆಧ್ಯಾತ್ಮಿಕ ಕಾರ್ಯವಾಗಿದೆ ಎಂದು ಶ್ಲಾಘಿಸಿದ್ದಾರೆ.ಇಂತಹ ಶುಭ ಸಂದರ್ಭದಲ್ಲಿ, ನೀವು ಅಯೋಧ್ಯೆಗೆ ಭೇಟಿ ನೀಡುತ್ತಿರುವುದಕ್ಕೆ ನಾನು ನಿಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ. +ಜೈಶ್ರೀರಾಮ್ ಘೋಷ ಜೋರಾಗಿ ಮೊಳಗಿಸಿ : ವೆಂಕಟೇಶ್‍ಪ್ರಸಾದ್ +ಶ್ರೀರಾಮಮಂದಿರ ಉದ್ಘಾಟನೆಯಿಂದ ರಾಷ್ಟ್ರವ್ಯಾಪಿ ಹಬ್ಬದ ವಾತಾವರಣ ಮನೆ ಮಾಡಿದೆ. ನಮ್ಮ ರಾಷ್ಟ್ರ ಹೊಸತನದತ್ತ ಹೆಜ್ಜೆ ಇಡುತ್ತಿದ್ದು, ನಾವು ಸಾಕ್ಷಿಯಾಗುತ್ತಿರುವುದು ನಮ್ಮೆಲ್ಲರ ಅದೃಷ್ಟ. ಪ್ರಭು ಶ್ರೀರಾಮನ ಧೈರ್ಯ, ಸಹಾನುಭೂತಿ ಮತ್ತು ಕರ್ತವ್ಯದ ಮೇಲಿನ ಅಚಲ ಭಕ್ತಿಯಂತಹ ಮೌಲ್ಯಗಳು ಭವ್ಯವಾದ ಮಂದಿರದ ಮೂಲಕ ಜನರಿಗೆ ತಲಪುತ್ತದೆ ಎಂದಿದ್ದಾರೆ. +ಶ್ರೀರಾಮನು ನಮ್ಮ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯ ಪ್ರತೀಕ. ಕೆಟ್ಟದ್ದರ ವಿರುದ್ಧ ಹೋರಾಡುವ, ಒಳ್ಳೆಯ ಆದರ್ಶವನ್ನು ಪ್ರತಿನಿಸುತ್ತಾನೆ. ನಮ್ಮ ರಾಷ್ಟ್ರೀಯ ಇತಿಹಾಸದ ಅನೇಕ ಅಧ್ಯಾಯಗಳು ಶ್ರೀರಾಮನ ಜೀವನ ಮತ್ತು ತತ್ವಗಳಿಂದ ಪ್ರಭಾವಿತವಾಗಿವೆ. ರಾಮ್ ಕಥಾದ ಆದರ್ಶಗಳು ರಾಷ್ಟ್ರ ನಿರ್ಮಾತೃಗಳಿಗೆ ಸೂರ್ತಿ ನೀಡಿವೆ. +ನನಸಾಯ್ತು ಶತಕೋಟಿ ಭಾರತೀಯರ 500 ವರ್ಷಗಳ ಕನಸು +ಗಾಂೀಜಿಯವರು ತಮ್ಮ ಕೊನೆ ಉಸಿರಿನವರೆಗೂ ರಾಮನಾಮ ಜಪಿಸಿದರು. ನನ್ನ ಕಷ್ಟದ ಸಮಯದಲ್ಲಿ ರಾಮನ ಹೆಸರು ನನ್ನ ರಕ್ಷಕವಾಗಿದೆ ಮತ್ತು ಈಗಲೂ ಆ ಹೆಸರು ನನ್ನನ್ನು ರಕ್ಷಿಸುತ್ತಿದೆ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_182_12.txt b/eesanje/url_47_182_12.txt new file mode 100644 index 0000000000000000000000000000000000000000..a03bc66203db1cbae60112dc9f5e46b3ca94c435 --- /dev/null +++ b/eesanje/url_47_182_12.txt @@ -0,0 +1,8 @@ +ತೀವ್ರ ಚಳಿ ಹಿನ್ನೆಲೆಯಲ್ಲಿ ರಾಮೋತ್ಸವಕ್ಕೆ ಲಾಲ್ ಕೃಷ್ಣ ಅಡ್ವಾಣಿ ಗೈರು +ನವದೆಹಲಿ,ಜ.22- ತೀವ್ರ ಚಳಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಅಯೋಧ್ಯೆಯಲ್ಲಿ ನಡೆಯುವ ಬಾಲರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮಕ್ಕೆ ಗೈರಾದರು.ಆರೋಗ್ಯದ ಹಿತದೃಷ್ಟಿ ಹಾಗೂ ವೈದ್ಯರ ಸಲಹೆ ಮೇರೆಗೆ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ ಪ್ರಯಾಣ ರದ್ದಾಯಿತು. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರಮದಿಂದ ಹೊರಗುಳಿದರು. +ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರಕ್ಕಾಗಿ ಹೋರಾಟ ನಡೆಸಿದವರಲ್ಲಿ ಅಡ್ವಾಣಿ ಕೂಡ ಪ್ರಮುಖ ವ್ಯಕ್ತಿ. 96ನೇ ವಯಸ್ಸಿನಲ್ಲಿಯೂ ಆಹ್ವಾನ ಸ್ವೀಕರಿಸಿ ಅಯೋಧ್ಯೆಗೆ ತೆರಳಲು ಸಿದ್ಧರಾಗಿದ್ದರು. ಹಿರಿಯ ನಾಯಕರ ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಈ ಮಹಾ ಕಾರ್ಯಕ್ರಮಕ್ಕೆ ಹಾಜರಾಗದಂತೆ ಈ ಹಿಂದೆ ವಿನಂತಿಸಲಾಗಿತ್ತು. +ಅಡ್ವಾಣಿಯವರೊಂದಿಗೆ ರಾಮಮಂದಿರ ಚಳುವಳಿಯ ನೇತೃತ್ವ ವಹಿಸಿದ್ದ ಮುರಳಿ ಮನೋಹರ್ ಜೋಶಿ ಅವರನ್ನೂ ಸಮಾರಂಭದಿಂದ ಹೊರಗುಳಿಯುವಂತೆ ಕೇಳಲಾಗಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ (ರಾಮ ಮಂದಿರ ಟ್ರಸ್ಟ್) ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಡ್ವಾಣಿ ಮತ್ತು ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ವಿನಂತಿಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಅದರಂತೆ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. +ಜೈಶ್ರೀರಾಮ್ ಘೋಷ ಜೋರಾಗಿ ಮೊಳಗಿಸಿ : ವೆಂಕಟೇಶ್‍ಪ್ರಸಾದ್ +ಆಹ್ವಾನಿತರಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಬಿಗ್‍ಬಿ ಅಮಿತಾಭ್ ಬಚ್ಚನ್, ಉದ್ಯಮಿಗಳಾದ ಅನಿಲ್ ಅಂಬಾನಿ, ಗೌತಮ್ ಅದಾನಿ ಕೂಡ ಸೇರಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‍ಎಸ್‍ಎಸ್) ಮುಖಂಡ ಕೃಷ್ಣ ಗೋಪಾಲ್ ಮತ್ತು ರಾಮ್‍ಲಾಲ್ ಅವರು ವಿಎಚ್‍ಪಿ ಮುಖ್ಯಸ್ಥ ಅಲೋಕ್‍ಕುಮಾರ್ ಅವರೊಂದಿಗೆ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿ ಮಾಡಿ ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಆಹ್ವಾನ ನೀಡಿದ್ದರು. +ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಎಲ್.ಕೆ.ಅಡ್ವಾಣಿ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದರು. +ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಕಾಂಗ್ರೆಸ್ ನಿರಾಕರಿಸಿದೆ. ಕಾಂಗ್ರೆಸ್‍ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅೀಧಿರ್ ರಂಜನ್ ಚೌಧರಿ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. \ No newline at end of file diff --git a/eesanje/url_47_182_2.txt b/eesanje/url_47_182_2.txt new file mode 100644 index 0000000000000000000000000000000000000000..74105e19a8186afacb3fbbd8ed660cd2f968efc5 --- /dev/null +++ b/eesanje/url_47_182_2.txt @@ -0,0 +1,6 @@ +ಅಯೋಧ್ಯೆ ನೆನಪು ಎಂದಿಗೂ ಮಾಸುವುದಿಲ್ಲ ; ಮೋದಿ +ನವದೆಹಲಿ, ಜ 23 (ಪಿಟಿಐ) ರಾಮ ಮಂದಿರದ ಪ್ರತಿಷ್ಠಾಪನೆಯ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಾವು ಕಂಡದ್ದು ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಹೇಳಿದ್ದಾರೆ. ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಮೋದಿ ಅವರು ಅಯೋಧ್ಯೆ ದೇವಸ್ಥಾನದಲ್ಲಿ ರಾಮ್ ಲಲ್ಲಾನ ಹೊಸ ವಿಗ್ರಹವನ್ನು ಪ್ರತಿಷ್ಠಾಪಿಸಿದ ಸಮಾರಂಭದ ವೀಡಿಯೊ ಮಾಂಟೇಜ್ ಅನ್ನು ಹಂಚಿಕೊಂಡಿದ್ದಾರೆ. +ನಾವು ನಿನ್ನೆ ಅಯೋಧ್ಯೆಯಲ್ಲಿ ನೋಡಿದ್ದು ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಮೋದಿ ತಮ್ಮ ಪೋಸ್ಟ್‍ನಲ್ಲಿ ವೀಡಿಯೊದೊಂದಿಗೆ ಹೇಳಿದ್ದಾರೆ. ಮುಂದಿನ 1,000 ವರ್ಷಗಳ ಬಲವಾದ, ಸಮರ್ಥ ಮತ್ತು ದೈವಿಕ ಭಾರತದ ಅಡಿಪಾಯವನ್ನು ನಿರ್ಮಿಸಲು ಭವ್ಯ ಮಂದಿರದ ನಿರ್ಮಾಣವನ್ನು ಮೀರಿ ಹೋಗಬೇಕೆಂದು ಮೋದಿ ಕರೆ ನೀಡಿದ್ದಾರೆ. +ತಾಯ್ನಾಡಿಗೆ ಹಿಂತಿರುಗಿದ ಮ್ಯಾನ್ಮಾರ್ ಸೈನಿಕರು +ದೇವಾಲಯದ ಉದ್ಘಾಟನೆಯು ಅಯೋಧ್ಯೆಯಲ್ಲಿ ವಿವಾದಿತ ಧಾರ್ಮಿಕ ಸ್ಥಳವನ್ನು ಮರುಪಡೆಯಲು ದಶಕಗಳ ಕಾಲ ನಡೆದ ಅಭಿಯಾನದ ಪರಾಕಾಷ್ಠೆಯನ್ನು ಗುರುತಿಸಿದೆ, ಇದು ಹೊಸ ಯುಗದ ಆಗಮನವಾಗಿದೆ ಎಂದು ಮೋದಿ ಹೇಳಿದರು. +ಲಕ್ಷಾಂತರ ಜನರು ತಮ್ಮ ಮನೆಗಳಲ್ಲಿ ಮತ್ತು ನೆರೆಹೊರೆಯ ದೇವಾಲಯಗಳಲ್ಲಿ ದೂರದರ್ಶನದಲ್ಲಿ ಪ್ರಾಣ್ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭವನ್ನು ವೀಕ್ಷಿಸಿದ್ದರು. \ No newline at end of file diff --git a/eesanje/url_47_182_3.txt b/eesanje/url_47_182_3.txt new file mode 100644 index 0000000000000000000000000000000000000000..ab73f26c8f1650b23b048f744f93c8dff896ff5b --- /dev/null +++ b/eesanje/url_47_182_3.txt @@ -0,0 +1,5 @@ +ನೇತಾಜಿ ಜನ್ಮದಿನ : ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ +ನವದೆಹಲಿ, ಜ. 23 (ಪಿಟಿಐ) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಗೌರವ ಸಲ್ಲಿಸಿದ್ದಾರೆ ಮತ್ತು ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವರ ಅಚಲವಾದ ಸಮರ್ಪಣೆಯು ಸೂರ್ತಿದಾಯಕವಾಗಿದೆ ಎಂದು ಹೇಳಿದ್ದಾರೆ. +ಆಜಾದ್ ಹಿಂದ್ ಫೌಜ್ ಸಂಸ್ಥಾಪಕರ ಜನ್ಮ ವಾರ್ಷಿಕೋತ್ಸವವನ್ನು ಗುರುತಿಸುವ ಪರಾಕ್ರಮ್ ದಿವಸ್ ದಿನದಂದು ಮೋದಿ ಜನರಿಗೆ ಶುಭಾಶಯ ಕೋರಿದ್ದಾರೆ. ಭಾರತದ ಜನತೆಗೆ ಪರಾಕ್ರಮ್ ದಿವಸ್‍ನ ಶುಭಾಶಯಗಳು. ಇಂದು ಬೋಸ್ ಜಯಂತಿಯಂದು ನಾವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಮತ್ತು ಧೈರ್ಯವನ್ನು ಗೌರವಿಸುತ್ತೇವೆ ಎಂದು ಮೋದಿ ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ತಾಯ್ನಾಡಿಗೆ ಹಿಂತಿರುಗಿದ ಮ್ಯಾನ್ಮಾರ್ ಸೈನಿಕರು +ನಮ್ಮ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಅವರ ಅಚಲವಾದ ಸಮರ್ಪಣೆಯು ಸೂರ್ತಿ ನೀಡುತ್ತಿದೆ ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_182_4.txt b/eesanje/url_47_182_4.txt new file mode 100644 index 0000000000000000000000000000000000000000..7e8bd94f342f70ec1603a231e62596312710155a --- /dev/null +++ b/eesanje/url_47_182_4.txt @@ -0,0 +1,5 @@ +ಮೂರು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ ಆಶಾ +ನವದೆಹಲಿ, ಜ.23 (ಪಿಟಿಐ) ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಎಕ್ಸ್‍ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ, ಕುನೋನ ಹೊಸ ಮರಿಗಳು! ನಮೀಬಿಯಾ ಚೀತಾ ಆಶಾ ತನ್ನ ಮರಿಗಳಿಗೆ ಜನ್ಮ ನೀಡಿದ ಕೆಲವೇ ವಾರಗಳಲ್ಲಿ ನಮೀಬಿಯಾದ ಚೀತಾ ಜ್ವಾಲಾ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. +ದೇಶಾದ್ಯಂತ ಎಲ್ಲಾ ವನ್ಯಜೀವಿ ಮುಂಚೂಣಿ ಯೋಧರು ಮತ್ತು ವನ್ಯಜೀವಿ ಪ್ರೇಮಿಗಳಿಗೆ ಅಭಿನಂದನೆಗಳು. ಭಾರತದ ವನ್ಯಜೀವಿಗಳು ಅಭಿವೃದ್ಧಿ ಹೊಂದಲಿ ಎಂದು ಅವರು ಆಶಿಸಿದ್ದಾರೆ. ಜನವರಿ 3 ರಂದು ಕುನೊ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ನಮೀಬಿಯಾದ ಚೀತಾ ಆಶಾ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ವರದಿ ಮಾಡಿದರು. ಇದಕ್ಕೂ ಮುನ್ನ ಕಳೆದ ಮಾರ್ಚ್‍ನಲ್ಲಿ ಸಿಯಾಯಾ ಎಂಬ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ಅದರಲ್ಲಿ ಒಂದು ಮರಿ ಬದುಕುಳಿದಿತ್ತು. +ರಾಮಮಂದಿರ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಿದ ಬಿಹಾರ +ಜ್ವಾಲಾ, ಆಶಾ ಮತ್ತು ಸಿಯಾಯಾ ಚೀತಾಗಳು ನಮೀಬಿಯಾದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪ್ರಾಜೆಕ್ಟ್ ಚೀತಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಗೊಂಡಿವೆ, ಇದು ಸ್ವತಂತ್ರ ಭಾರತದಲ್ಲಿ ಅಳಿವಿನಂಚಿನಲ್ಲಿರುವ ಏಕೈಕ ದೊಡ್ಡ ಮಾಂಸಾಹಾರಿ ಜಾತಿಗಳನ್ನು ಮರು-ಪರಿಚಯಿಸುವ ಗುರಿಯನ್ನು ಹೊಂದಿದೆ. \ No newline at end of file diff --git a/eesanje/url_47_182_5.txt b/eesanje/url_47_182_5.txt new file mode 100644 index 0000000000000000000000000000000000000000..02e945bc5d127c4016ed4c698229486d0738c990 --- /dev/null +++ b/eesanje/url_47_182_5.txt @@ -0,0 +1,6 @@ +ಇಂದಿನಿಂದ ಭಕ್ತರಿಗೆ ರಾಮಲಲ್ಲಾನ ದರ್ಶನ ಭಾಗ್ಯ +ಅಯೋಧ್ಯೆ, ಜ. 23 (ಪಿಟಿಐ) ಹೊಸ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಯ ಒಂದು ದಿನದ ನಂತರ ಅಯೋಧ್ಯೆಯಲ್ಲಿ ರಾಮಮಂದಿರದ ಬಾಗಿಲು ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಿದೆ. ತಡರಾತ್ರಿ ದೇವಾಲಯದ ಸಂಕೀರ್ಣಕ್ಕೆ ಹೋಗುವ ರಾಮಪಥದ ಉದ್ದಕ್ಕೂ ಮುಖ್ಯ ಗೇಟ್‍ವೇ ಬಳಿ ಸ್ಥಳೀಯರು ಮತ್ತು ಇತರ ರಾಜ್ಯಗಳ ಪ್ರವಾಸಿಗರು ಹೆಚ್ಚಿನ ಸಂಖ್ಯೆಯ ಭಕ್ತರು ಆವರಣಕ್ಕೆ ಪ್ರವೇಶ ಕೋರಿ ಜಮಾಯಿಸಿದರು. +ವಿಧ್ಯುಕ್ತ ಗೇಟ್‍ವೇ ಬಳಿ ದೊಡ್ಡ ಜನಸಮೂಹವು ನಿರ್ಮಾಣಗೊಂಡಿದ್ದರಿಂದ ಪವಿತ್ರ ಸಮಾರಂಭಕ್ಕೆ ಅಲಂಕೃತಗೊಂಡಿದ್ದರಿಂದ ಇಂದಿನಿಂದ ದೇವಾಲಯವನ್ನು ಸಾರ್ವಜನಿಕರಿಗೆ ತೆರೆಯಲಾಗುವುದು ಎಂದು ಪೊಲೀಸರು ಭಕ್ತರಿಗೆ ತಿಳಿಸಿದರು. +ರಾಮಮಂದಿರ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಿದ ಬಿಹಾರ +ಅಯೋಧ್ಯೆ ದೇವಸ್ಥಾನದಲ್ಲಿ ಹೊಸ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಹೆಗ್ಗುರುತಾಗಿದೆ, ಅವರು ಬಲವಾದ, ಸಮರ್ಥ ಮತ್ತು ದೈವಿಕತೆಯ ಅಡಿಪಾಯವನ್ನು ನಿರ್ಮಿಸಲು ಭವ್ಯ ಮಂದಿರದ ನಿರ್ಮಾಣವನ್ನು ಮೀರಿ ಹೋಗಬೇಕೆಂದು ಸ್ಪಷ್ಟ ಕರೆ ನೀಡಿದ್ದಾರೆ. +ಹೀಗಾಗಿ ರಾಮ ಲಲ್ಲಾನ ದರ್ಶನಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಭಕ್ತರು ಅಯೋಧ್ಯೆಗೆ ದೌಡಾಯಿಸುತ್ತಿದ್ದಾರೆ. ಇಂದಿನಿಂದ ಸಾರ್ವಜನಿಕರು ರಾಮನ ದರ್ಶನ ಪಡೆಯುವ ಸೌಭಾಗ್ಯ ಪಡೆದಿದ್ದಾರೆ. \ No newline at end of file diff --git a/eesanje/url_47_182_6.txt b/eesanje/url_47_182_6.txt new file mode 100644 index 0000000000000000000000000000000000000000..3a5e6af091c955a4cd18c8e2dd4c35ffdd7de91d --- /dev/null +++ b/eesanje/url_47_182_6.txt @@ -0,0 +1,6 @@ +ಬಾಂಗ್ಲಾ ಗಡಿಯಲ್ಲಿ 3 ಕೋಟಿ ಮೌಲ್ಯದ ಚಿನ್ನ ವಶ, ಓರ್ವ ಬಂಧನ +ಬರಾಸತ್, ಜ 23 (ಪಿಟಿಐ) ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 3.09 ಕೋಟಿ ರೂಪಾಯಿ ಮೌಲ್ಯದ ಚಿನ್ನದ ತುಂಡುಗಳು ಮತ್ತು ಇಟ್ಟಿಗೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.4.82 ಕೆಜಿ ತೂಕದ ಎರಡು ಚಿನ್ನದ ತುಂಡುಗಳು ಮತ್ತು 30 ಚಿನ್ನದ ಬಿಸ್ಕೆಟ್‍ಗಳನ್ನು ಬಿಎಸ್‍ಎಫ್ ಸಿಬ್ಬಂದಿ ಆಂಗ್ರೇಲ್ ಗಡಿ ಹೊರಠಾಣೆ ಪ್ರದೇಶದ ಹಲ್ದರ್‍ಪಾರಾದಿಂದ ವಶಪಡಿಸಿಕೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. +ಎರಡು ದೇಶಗಳ ನಡುವಿನ ನೈಸರ್ಗಿಕ ಗಡಿಯಾಗಿರುವ ಇಚಮತಿ ನದಿಯಲ್ಲಿ ಬಾಂಗ್ಲಾದೇಶದ ಕಡೆಯಿಂದ ಭಾರತಕ್ಕೆ ದಾಟುತ್ತಿರುವ ಮೂವರು ವ್ಯಕ್ತಿಗಳನ್ನು ಕರ್ತವ್ಯದಲ್ಲಿದ್ದ ಸಿಬ್ಬಂದಿ ಗುರುತಿಸಿದ್ದಾರೆ. ಬಿಎಸ್‍ಎಫ್ ಸಿಬ್ಬಂದಿ ಬೆನ್ನಟ್ಟಿದ್ದರಿಂದ ಇಬ್ಬರು ಪರಾರಿಯಾಗಿದ್ದು, ಒಬ್ಬ ಸಿಕ್ಕಿಬಿದ್ದಿದ್ದಾನೆ. +ರಾಮಮಂದಿರ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಿದ ಬಿಹಾರ +ಆರೋಪಿಯನ್ನು ಪ್ರೊಸೆನ್‍ಜಿತ್ ಮಂಡಲ್ ಎಂದು ಗುರುತಿಸಲಾಗಿದ್ದು, ನದಿ ದಾಟಲು ಮತ್ತು ಚಿನ್ನವನ್ನು ಭಾರತಕ್ಕೆ ಪಡೆಯಲು ವ್ಯಕ್ತಿಯೊಬ್ಬರಿಂದ 500 ರೂ. ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.ಸ್ಥಳೀಯರಾದ ಮಂಡಲ್ ಅವರು ಬಾಂಗ್ಲಾದೇಶದ ಕಡೆಗೆ ಹೋದಾಗ, ಒಬ್ಬ ವ್ಯಕ್ತಿ ಚಿನ್ನದ ಬಿಸ್ಕತ್ತು ಮತ್ತು ಬಾರ್‍ಗಳೊಂದಿಗೆ ಅವನಿಗಾಗಿ ಕಾಯುತ್ತಿದ್ದನು. ಅವರು ಅವರನ್ನು ಕರೆದೊಯ್ದು ಭಾರತಕ್ಕೆ ಹಿಂತಿರುಗುತ್ತಿದ್ದಾಗ ಬಿಎಸ್‍ಎಫ್ ಅವರನ್ನು ಹಿಡಿದಿತ್ತು. +ಮುಂದಿನ ಕಾನೂನು ಪ್ರಕ್ರಿಯೆಗಾಗಿ ಬಿಎಸ್‍ಎಫ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (ಡಿಆರ್‍ಐ) ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_182_7.txt b/eesanje/url_47_182_7.txt new file mode 100644 index 0000000000000000000000000000000000000000..3d580024f282579e19b53ddee451af0c8c5a0c33 --- /dev/null +++ b/eesanje/url_47_182_7.txt @@ -0,0 +1,6 @@ +ವಿದ್ಯಾರ್ಥಿಗಳು, ನಾಗರೀಕರೊಂದಿಗೆ ಸಂವಾದ ನಡೆಸಿದ ರಾಹುಲ್‍ಗಾಂಧಿ +ಗುವಾಹಟಿ, ಜ.23 (ಪಿಟಿಐ) ಭಾರತ್ ಜೋಡೋ ನ್ಯಾಯ್ ಯಾತ್ರೆಯ ಭಾಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಿದ್ಯಾರ್ಥಿಗಳು ಮತ್ತು ನಾಗರಿಕ ಸಮಾಜದ ಸದಸ್ಯರು ಸೇರಿದಂತೆ ವಿವಿಧ ಗುಂಪುಗಳೊಂದಿಗೆ ಇಂದು ಸಂವಾದ ನಡೆಸಿದರು. +ಮೇಘಾಲಯವನ್ನು ಪ್ರವೇಶಿಸಿದ ಯಾತ್ರೆಯು ತನ್ನ ಕೊನೆಯ ಹಂತಕ್ಕೆ ಅಸ್ಸಾಂಗೆ ಹಿಂದಿರುಗಿ ರಾಜ್ಯದ ಅತಿದೊಡ್ಡ ನಗರವಾದ ಗುವಾಹಟಿಯ ಹೊರವಲಯದಲ್ಲಿ ಇಂದು ಸಂಚರಿಸಿತು. ನಂತರ ಅವರು ಮೇಘಾಲಯದ ರಿ ಭೋಯ್ ಜಿಲ್ಲೆಯ ಜೋರಾಬತ್‍ನಲ್ಲಿರುವ ಹೋಟೆಲ್‍ನಲ್ಲಿ ಗಾಂಧಿ ಅವರು ಈಶಾನ್ಯ ಕಾಂಗ್ರೆಸ್ ಸಮಿತಿಯೊಂದಿಗೆ ಸಭೆ ನಡೆಸಿದರು. ಇದರ ನಂತರ ಗುವಾಹಟಿಯಲ್ಲಿ ವಿದ್ಯಾರ್ಥಿಗಳು ಮತ್ತು ನಾಗರಿಕ ಸಮಾಜದ ಸದಸ್ಯರೊಂದಿಗೆ ಪ್ರತ್ಯೇಕ ಸಂವಾದ ನಡೆಸಿದರು. +ಮುಖ್ಯ ನಗರವನ್ನು ಬೈಪಾಸ್ ಮಾಡುವ ರಾಷ್ಟ್ರೀಯ ಹೆದ್ದಾರಿಯ ಮೂಲಕ ಮುತ್ತಣದವರಿಗೂ ಗಾಂಧಿಯವರು ಸಾರ್ವಜನಿಕ ಭಾಷಣ ಮಾಡಲಿದ್ದಾರೆ. ಪ್ರಮುಖ ನಗರದಲ್ಲಿ ರೋಡ್‍ಶೋ ಅಥವಾ ಪಾದಯಾತ್ರೆ ನಡೆಸಲು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಪಕ್ಷ ಹೇಳಿಕೊಂಡಿದೆ. +ಶ್ರೀರಾಮ ಪಾದ ಸ್ಥಾಪಿಸಿದ ಸ್ಥಳದ ಅಭಿವೃದ್ಧಿ : ಮೋಹನ್ ಯಾದವ್ +ಗುವಾಹಟಿಯಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಕಮ್ರೂಪ್ ಜಿಲ್ಲೆಯ ದಮ್ದಾಮಾದಲ್ಲಿ ಗಾಂಧಿಯವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾರ್ಪೇಟಾ ಜಿಲ್ಲೆಯ ಗೊರೆಮರಿ ಪೆಟ್ರೋಲ್ ಪಂಪ್‍ನಿಂದ ಕುಕರ್‍ಪರ್‍ಗೆ ಪಾದಯಾತ್ರೆಯನ್ನು ನಿಗದಿಪಡಿಸಲಾಗಿದೆ, ನಂತರ ಸಾರ್ವಜನಿಕರನ್ನು ಉದ್ದೇಶಿಸಿ. ರಾತ್ರಿ ವಿರಾಮವನ್ನು ಬಿಷ್ಣುಪುರದಲ್ಲಿ ನಿಗದಿಪಡಿಸಲಾಗಿದೆ. ಜನವರಿ 14 ರಂದು ಮಣಿಪುರದಿಂದ ಆರಂಭವಾದ ಯಾತ್ರೆ ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ \ No newline at end of file diff --git a/eesanje/url_47_182_8.txt b/eesanje/url_47_182_8.txt new file mode 100644 index 0000000000000000000000000000000000000000..ab8fd37dd99897368f01a41f6aa358e587e0a05c --- /dev/null +++ b/eesanje/url_47_182_8.txt @@ -0,0 +1,7 @@ +ತಾಯ್ನಾಡಿಗೆ ಹಿಂತಿರುಗಿದ ಮ್ಯಾನ್ಮಾರ್ ಸೈನಿಕರು +ಐಜ್ವಾಲï, ಜ 23 (ಪಿಟಿಐ) ಜನಾಂಗೀಯ ಬಂಡುಕೋರರ ಗುಂಪಿನೊಂದಿಗೆ ನಡೆದ ಗುಂಡಿನ ಚಕಮಕಿಯ ನಂತರ ಕಳೆದ ವಾರ ಮಿಜೋರಾಂಗೆ ಪಲಾಯನ ಮಾಡಿದ 184 ಮ್ಯಾನ್ಮಾರ್ ಸೈನಿಕರು ಅವರ ದೇಶಕ್ಕೆ ವಾಪಸ್ ಕಳುಹಿಸಲಾಗಿದೆ. ಕಳೆದ ವಾರ ಒಟ್ಟು 276 ಮ್ಯಾನ್ಮಾರ್ ಸೈನಿಕರು ಮಿಜೋರಾಂಗೆ ಪ್ರವೇಶಿಸಿದ್ದು, ಅವರಲ್ಲಿ 184 ಮಂದಿಯನ್ನು ಸೋಮವಾರ ವಾಪಸ್ ಕಳುಹಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ಧಿಅಧಿಕಾರಿ ತಿಳಿಸಿದ್ದಾರೆ. +ಅವರನ್ನು ಮ್ಯಾನ್ಮಾರ್ ವಾಯುಪಡೆಯ ವಿಮಾನಗಳಲ್ಲಿ ಐಜ್ವಾಲ್ ಬಳಿಯ ಲೆಂಗ್‍ಪುಯಿ ವಿಮಾನ ನಿಲ್ದಾಣದಿಂದ ನೆರೆಯ ದೇಶದ ರಾಖೈನ್ ರಾಜ್ಯದ ಸಿಟ್ವೆಗೆ ಕಳುಹಿಸಲಾಯಿತು ಎಂದು ಅವರು ಹೇಳಿದರು. ಉಳಿದ 92 ಸೈನಿಕರನ್ನು ಇಂದು ಸ್ವದೇಶಕ್ಕೆ ಕಳುಹಿಸಲಾಗುತ್ತಿದೆ. +ಮ್ಯಾನ್ಮಾರ್ ಸೈನಿಕರು ಜನವರಿ 17 ರಂದು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ದಕ್ಷಿಣದ ಮಿಜೋರಾಂನ ಭಾರತ-ಮ್ಯಾನ್ಮಾರ್-ಬಾಂಗ್ಲಾದೇಶ ಟ್ರೈಜಂಕ್ಷನ್‍ನಲ್ಲಿರುವ ಬಂಡುಕ್ಬಂಗಾ ಗ್ರಾಮದ ಮೂಲಕ ಭಾರತಕ್ಕೆ ಬಂದಿದ್ದರು. ಅವರ ಶಿಬಿರವನ್ನು ಅರಕನ್ ಆರ್ಮಿ ಯೋಧರು ವಶಪಡಿಸಿಕೊಂಡ ನಂತರ ಮ್ಯಾನ್ಮಾರ್ ಸೈನಿಕರು ಮಿಜೋರಾಂಗೆ ಓಡಿಬಂದಿದ್ದರು. +ಶ್ರೀರಾಮ ಪಾದ ಸ್ಥಾಪಿಸಿದ ಸ್ಥಳದ ಅಭಿವೃದ್ಧಿ : ಮೋಹನ್ ಯಾದವ್ +ಮ್ಯಾನ್ಮಾರ್ ಸೈನಿಕರನ್ನು ಹತ್ತಿರದ ಪರ್ವಾದಲ್ಲಿರುವ ಅಸ್ಸಾಂ ರೈಫಲ್ಸ್ ಶಿಬಿರಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ಅವರಲ್ಲಿ ಹೆಚ್ಚಿನವರನ್ನು ಲುಂಗ್ಲೈಗೆ ಸ್ಥಳಾಂತರಿಸಲಾಗಿತ್ತು.ಅಂದಿನಿಂದ ಅವರು ಅಸ್ಸಾಂ ರೈಫಲ್ಸ್‍ನ ಮೇಲ್ವಿಚಾರಣೆಯಲ್ಲಿದ್ದಾರೆ. +ಈ 276 ಸೈನಿಕರನ್ನು ಲೆಂಗ್‍ಪುಯಿ ವಿಮಾನ ನಿಲ್ದಾಣದಿಂದ ಮ್ಯಾನ್ಮಾರ್‍ಗೆ ಸಾಗಿಸಲು ಶನಿವಾರ ಮತ್ತು ಭಾನುವಾರದಂದು ಐಜ್ವಾಲ್‍ಗೆ ಕರೆತರಲಾಯಿತು. ಗುಂಪು ಕರ್ನಲ್ ನೇತೃತ್ವದಲ್ಲಿದೆ ಮತ್ತು 36 ಅಧಿಕಾರಿಗಳು ಮತ್ತು 240 ಕೆಳ ಶ್ರೇಣಿಯ ಸಿಬ್ಬಂದಿಯನ್ನು ಹೊಂದಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_182_9.txt b/eesanje/url_47_182_9.txt new file mode 100644 index 0000000000000000000000000000000000000000..c855ee93b75cbcb87ff15fd56437b28dcdd6a5b7 --- /dev/null +++ b/eesanje/url_47_182_9.txt @@ -0,0 +1,6 @@ +ರಾಮಮಂದಿರ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಿದ ಬಿಹಾರ +ಪಾಟ್ನಾ, ಜ 23 (ಪಿಟಿಐ) ಅಯೋಧ್ಯೆಯಲ್ಲಿ ನಡೆದ ಮಹಾಮಸ್ತಕಾಭಿಷೇಕ ಸಮಾರಂಭದ ನಂತರ ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಶ್ರೀ ರಾಮ ಜನ್ಮಭೂಮಿ ದೇವಾಲಯ ಕುರಿತು ಅಂಚೆ ಇಲಾಖೆಯ ವಿಶೇಷ ಅಂಚೆ ಟಿಕೆಟ್ ಬಿಡುಗಡೆ ಮಾಡಿದರು. +ಅಂಚೆ ಇಲಾಖೆಯು 150 ವರ್ಷಗಳಿಂದ ಜನಸೇವೆ ಮಾಡುತ್ತಾ ಬಂದಿದ್ದು, ಅಂಚೆಚೀಟಿಗಳು, ವಿಶೇಷ ಕವರ್‍ಗಳಂತಹ ಸ್ಮರಣಿಕೆಗಳ ಮೂಲಕ ಪರಂಪರೆಯನ್ನು ಜೀವಂತವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದರು. +ಶ್ರೀರಾಮ ಪಾದ ಸ್ಥಾಪಿಸಿದ ಸ್ಥಳದ ಅಭಿವೃದ್ಧಿ : ಮೋಹನ್ ಯಾದವ್ +ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿದ ಅರ್ಲೇಕರ್ ಅವರು, ದೇಶವು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭ, ಪ್ರಭು ಅವರ ವಿಶೇಷ ಹೊದಿಕೆಯನ್ನು ಬಿಡುಗಡೆ ಮಾಡಿರುವುದು ನನ್ನ ಸೌಭಾಗ್ಯ ಎಂದರು. +ಸಮಾರಂಭದಲ್ಲಿ ಮಾತನಾಡಿದ ಬಿಹಾರ ವೃತ್ತದ ಮುಖ್ಯ ಪೋಸ್ಟ್‍ಮಾಸ್ಟರ್ ಜನರಲ್ ಅನಿಲ್ ಕುಮಾರ್, ಈ ವಿಶೇಷ ಕವರ್ ಅನ್ನು ಶ್ರೀರಾಮನ ಬಿಹಾರ ಭೇಟಿಗೆ ಸಮರ್ಪಿಸಲಾಗಿದೆ ಎಂದು ಹೇಳಿದರು. ಭಗವಾನ್ ರಾಮನ ಮೇಲೆ ಈಗಾಗಲೇ ಅನೇಕ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_183_1.txt b/eesanje/url_47_183_1.txt new file mode 100644 index 0000000000000000000000000000000000000000..bf3fa10adcda64c410481356fd21653e57950ba4 --- /dev/null +++ b/eesanje/url_47_183_1.txt @@ -0,0 +1,14 @@ +ನನಸಾಯ್ತು ಶತಕೋಟಿ ಭಾರತೀಯರ 500 ವರ್ಷಗಳ ಕನಸು +ಅಯೋಧ್ಯೆ(ಉ.ಪ್ರ)- ಅದೊಂದೇ ಒಂದು ಐತಿಹಾಸಿಕ ಕ್ಷಣಕ್ಕೆ ಸುಮಾರು 500 ವರ್ಷಗಳ ಕಾಲ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಶತಕೋಟಿ ಭಾರತೀಯರ ಕನಸು ಸರಿಯಾಗಿ ಮಧ್ಯಾಹ್ನ 12.29ರಿಂದ 12.30ಕ್ಕೆ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯೊಂದಿಗೆ ಕೊನೆಗೂ ನನಸಾಯಿತು. ಇದರೊಂದಿಗೆ ಸುಮಾರು 70 ವರ್ಷಗಳ ಟೆಂಟ್‍ವಾಸದಿಂದ ಭವ್ಯ ಮಂದಿರಕ್ಕೆ ರಾಮನ ಪುನರಾಗಮನವಾಗುತ್ತಿದ್ದಂತೆ ಇಡೀ ಭಾರತೀಯರ ಸಂತಸಕ್ಕೆ ಪಾರವೇ ಇರಲಿಲ್ಲ. +ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂ ಧರ್ಮದ ಧಾರ್ಮಿಕ ವಿವಿಧಾನಗಳನ್ನು ನೇರವೇರಿಸಿದರೆ, ಕಾಶಿಯ ಹೆಸರಾಂತ ವೈದಿಕ ಆಚಾರ್ಯ ಗಣೇಶ್ವರ್ ದ್ರಾವಿಡ್ ಹಾಗೂ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಸುಮಾರು 121 ವೈದಿಕ ಆಚಾರ್ಯರಿಂದ ಧಾರ್ಮಿಕ ಕ್ರಿಯೆ ನೆರವೇರಿದರೆ, 150ಕ್ಕೂ ಹೆಚ್ಚು ಸಂಪ್ರದಾಯಗಳು, 50ಕ್ಕೂ ಹೆಚ್ಚು ಬುಡಕಟ್ಟು, ಕರಾವಳಿ, ದ್ವೀಪ, ಬುಡಕಟ್ಟು ಸಂಪ್ರದಾಯಗಳ ಸಂತರು ಮತ್ತು ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು. +ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‍ಎಸ್‍ಎಸ್ ಸರಸಂಚಾಲಕ ಮೋಹನ್ ಭಾಗವತ್ ಹಾಗೂ ಸಂತರು, ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಪ್ರತಿಷ್ಠಾಪನಾ ಮಹೋತ್ಸವ ನಡೆಯಿತು. +ಹಿಂದೂಗಳ ಪಾಲಿನ ಮರ್ಯಾದಾ ಪುರುಷೋತ್ತಮನೆಂದು ಕೊಂಡಾಡಲ್ಪಡುವ, ನಾರಾಯಣನ ಅವತಾರಗಳಲ್ಲಿ ಒಂದಾಗಿರುವ ಶ್ರೀರಾಮಚಂದ್ರನ ಜನ್ಮಸ್ಥಾನವಾಗಿರುವ ಸರಯೂ ನದಿ ತೀರದ ಅಯೋಧ್ಯೆಯ ಭವ್ಯಮಂದಿರದಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ಅದಕ್ಕೂ ಮೊದಲು ಒಂದು ಗಂಟೆ ಕಾಲ ಯೋಗ, ಹೋಮ, ಹವನ ನಡೆದವು. ಪೂಜಾ ವಿವಿಧಾನಗಳು ಮುಗಿಯುತ್ತಿದ್ದಂತೆ ಈ ವೇಳೆ ಭಾರತ ಮಾತ್ರವಲ್ಲದೆ, ವಿಶ್ವದೆಲ್ಲೆಡೆ ಜೈ ಶ್ರೀರಾಮ್ ಘೋಷಣೆಗಳು ಮಾಧರ್ Àನಿಸಿದವು. ಈ ಅಪರೂಪದ ಕ್ಷಣಕ್ಕೆ 60 ದೇಶಗಳಿಂದ 500ಕ್ಕೂ ಹೆಚ್ಚು ವಿದೇಶಿ ಅತಿಥಿಗಳು ಸೇರಿದಂತೆ 7,000 ಗಣ್ಯರು ಸಾಕ್ಷಿಯಾದರು. +ಕರ್ನಾಟಕದ ಮೈಸೂರಿನ ಅರುಣ್ ಯೋಗಿರಾಜ್ ಅವರು ತಯಾರಿಸಿದ 51 ಇಂಚಿನ ನೂತನ ರಾಮಲಲ್ಲಾ ದೇವಸ್ಥಾನದ ಗರ್ಭಗುಡಿಯಲ್ಲಿ ವಿರಾಜಮಾನನಾಗಿ ಎಲ್ಲರನ್ನೂ ಆಕರ್ಷಿಸುತ್ತಿದ್ದಾನೆ. ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಮೊದಲ ಬಾರಿಗೆ ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ಮಹಾಮಜ್ಜನ ಮಾಡಿಸಲಾಯಿತು. ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಎರಡು ಗಂಟೆಗಳ ಕಾಲ ದೇಶದ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ 50 ಸಂಗೀತ ವಾದ್ಯಗಳಿಂದ ಮಂಗಳ ವಾದ್ಯ ಮೊಳಗಿದವು. +ಕರ್ನಾಟಕ ಶಾಸ್ತ್ರೀಯ ಸಂಗೀತದ ಪ್ರತಿನಿಯಾಗಿ ವೀಣೆ, ಉತ್ತರ ಪ್ರದೇಶದ ಪಖ್ವಾಜ್, ಕೊಳಲು, ಧೋಲಕ್, ಆಂಧ್ರ ಪ್ರದೇಶದ ಘಟಂ, ಮಹಾರಾಷ್ಟ್ರದ ಸುಂದರಿ, ಪಂಜಾಬ್‍ನ ಅಲ್ಗೋಜಾ, ಒಡಿಶಾದ ಮರ್ದಲ್, ಮಧ್ಯಪ್ರದೇಶದ ಸಂತೂರ್, ಗುಜರಾತ್ ಸಂತರ್, ಬಿಹಾರದ ಪಖವಾಜ್, ಮಣಿಪುರದ ಪುಂಗ್, ಅಸ್ಸಾಂನ ನಾಗಡಾ ಮತ್ತು ಕಾಳಿ, ಛತ್ತೀಸ್‍ಗಢದ ತುಂಬೂರಾ, ದೆಹಲಿಯ ಶೆಹನಾಯಿ, ರಾಜಸ್ಥಾನದ ರಾವಣಹತ, ಪಶ್ಚಿಮ ಬಂಗಾಳದ ಶ್ರೀಖೋಲ್ ಮತ್ತು ಸರೋದ್, ಜಾರ್ಖಂಡ್‍ನ ಸಿತಾರ್, ಉತ್ತರಾಖಂಡದ ಹುಡ್ಕಾ, ತಮಿಳುನಾಡಿನ ನಾಗಸ್ವರಂ, ತವಿಲ್, ಮೃದಂಗ ಸೇರಿ ಭಾರತೀಯ ಸಂಗೀತ ಸಂಪ್ರದಾಯದಲ್ಲಿ ಬಳಸುವ ಎಲ್ಲಾ ವಾದ್ಯಗಳನ್ನು ಶ್ರೀ ರಾಮ ಮಂದಿರದ ಪ್ರಾಂಗಣದಲ್ಲಿ ನುಡಿಸಲಾಯಿತು. +ನವದೆಹಲಿಯ ಸಂಗೀತ ನಾಟಕ ಅಕಾಡೆಮಿ ಸಹಯೋಗದಲ್ಲಿ ಅಯೋಧ್ಯೆಯ ಖ್ಯಾತ ಕವಿ ಯತೀಂದ್ರ ಮಿಶ್ರಾ ಅವರಿಂದ ಈ ಭವ್ಯ ಸಂಗೀತ ಮೇಳವನ್ನು ಆಯೋಜಿಸಲಾಗಿತ್ತು. ನಾಗರ ಶೈಲಿಯ ವಾಸ್ತುಶಿಲ್ಪದಲ್ಲಿ ನಿರ್ಮಾಣವಾಗಿರುವ ರಾಮಮಂದಿರವು, 360 ಅಡಿ ಉದ್ದ, 235 ಅಡಿ ಅಗಲವಿದ್ದು, ದೇವಸ್ಥಾನ ಪೂರ್ಣಗೊಂಡ ನಂತರ, ದೇವಸ್ಥಾನದ ತಳದಿಂದ ಅದರ ಗರ್ಭಗುಡಿಯಲ್ಲಿನ ಗೋಪುರದ ತುದಿಯವರೆಗೆ 161 ಅಡಿ ಎತ್ತರವಿರಲಿದೆ. ಇದು ಮೂರು ಅಂತಸ್ತಿನ ಕಟ್ಟಡವಾಗಿದ್ದು, ಪ್ರತಿ ಅಂತಸ್ತು 20 ಅಡಿ ಎತ್ತರವಿರಲಿದೆ. +ಈಗ ಪ್ರತಿಷ್ಠಾಪನೆ ಅಂಗವಾಗಿ ಮೊದಲ ಅಂತಸ್ತು (ನೆಲ ಅಂತಸ್ತು) ಪೂರ್ಣವಾಗಿದೆ. ನೆಲ ಅಂತಸ್ತಿನಲ್ಲಿ 160 ಕಂಬಗಳಿದ್ದು (ಪಿಲ್ಲರ್ ಗಳು), ಮೊದಲ ಅಂತಸ್ತಿನಲ್ಲಿ 132 ಕಂಬಗಳು, ಮೂರನೇ ಅಂತಸ್ತಿನಲ್ಲಿ 74 ಕಂಬಗಳು ಇರಲಿವೆ. ದೇವಾಲಯದ ಪ್ರವೇಶವು ಪೂರ್ವ ದಿಕ್ಕಿನಿಂದ ಮತ್ತು ನಿರ್ಗಮನವು ದಕ್ಷಿಣ ದಿಕ್ಕಿನಿಂದ ಇರುತ್ತದೆ. ದೇವಾಲಯವು ಮೂರು ಅಂತಸ್ತಿನದ್ದಾಗಲಿದೆ. ಮುಖ್ಯ ದೇವಾಲಯವನ್ನು ತಲುಪಲು, ಭಕ್ತರು ಪೂರ್ವ ಭಾಗದಿಂದ 32 ಮೆಟ್ಟಿಲುಗಳನ್ನು ಏರುತ್ತಾರೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾದ ದೇವಾಲಯ ಸಂಕೀರ್ಣವು 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರವಿದೆ. ದೇವಾಲಯದ ಪ್ರತಿಯೊಂದು ಮಹಡಿಯು 20 ಅಡಿ ಎತ್ತರವಿದ್ದು, 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿದೆ. +ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ-ಪ್ರತಿಷ್ಠಾಪನಾ ಸಮಾರಂಭದ ವೈದಿಕ ಆಚರಣೆಗಳು ಜನವರಿ 16ರಂದು ಮುಖ್ಯ ಸಮಾರಂಭದ ಒಂದು ವಾರದ ಮೊದಲು ಪ್ರಾರಂಭವಾಗಿತ್ತು. ರಾಮ ಜನ್ಮಭೂಮಿ-ಬಾಬರಿ ಮಸೀದಿ ಶೀರ್ಷಿಕೆ ಮೊಕದ್ದಮೆಯಲ್ಲಿ 2019ರಲ್ಲಿ ಐತಿಹಾಸಿಕ ಸುಪ್ರೀಂಕೋರ್ಟ್ ತೀರ್ಪಿನಿಂದ ಸಾಧ್ಯವಾದ ದೇವಾಲಯದ ನಿರ್ಮಾಣದ ಮೊದಲ ಹಂತದ ನಂತರ ಶಂಕುಸ್ಥಾಪನೆ ಸಮಾರಂಭ ನಡೆಸಲಾಗಿತ್ತು. +ಕೇಸರಿ ಬಣ್ಣದೊಂದಿಗೆ ಝಗಮಗಿಸುತ್ತಿದೆ ಆಯೋಧ್ಯೆ +ರಾಮನ ಜನ್ಮಸ್ಥಳವನ್ನು ಗುರುತಿಸುವ ದೇವಾಲಯದ ಸ್ಥಳದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಹಿಂದೂ ದಾವೆದಾರರು ವಾದಿಸಿದ್ದರು. 1992ರಲ್ಲಿ, 16ನೇ ಶತಮಾನದ ಮಸೀದಿಯನ್ನು ಕರ ಸೇವಕರು ಕೆಡವಿ ಹಾಕಿದ್ದರು. ಇದೀಗ ಸುಪ್ರೀಂ ಕೋರ್ಟ್ ನ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಕೊನೆಗೂ ರಾಮಮಂದಿರ ತಲೆ ಎತ್ತಿ ನಿಂತಿದೆ. +ಅಯೋಧ್ಯೆ-ಅಯೋಧ್ಯೆಯ ರಾಮಮಂದಿರ ಆವರಣದಲ್ಲಿ ನಡೆಯುತ್ತಿರುವ ಈ ಭವ್ಯ ಸಮಾರಂಭಕ್ಕೆ 7,000 ಕ್ಕೂ ಹೆಚ್ಚು ಗಣ್ಯರು ಸಾಕ್ಷೀಯಾದರು. ಈ ಆಯ್ದ ಪಟ್ಟಿಯಲ್ಲಿ 506 ಎ-ಲಿಸ್ಟರ್ ಗಣ್ಯರೂ ಕೂಡ ಇದ್ದು, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್, ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಮತ್ತು ಕ್ರೀಡಾ ಐಕಾನ್ ಸಚಿನ್ ತೆಂಡೂಲ್ಕರ್ ಕಾರ್ಯಕ್ರಮಕ್ಕೆ ಆಹ್ವಾನಿಸಲಾದ ಪ್ರಮುಖ ವ್ಯಕ್ತಿಗಳಲ್ಲಿ ಸೇರಿದ್ದರು. ಹೀಗಾಗಿ ಇಡೀ ಕಾರ್ಯಕ್ರಮಕ್ಕೆ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು.ಕ್ರಿಕೆಟ್ ಜಗತ್ತು, ಚಲನಚಿತ್ರ ಜಗತ್ತು, ಸಂತ ಸಮಾಜ, ರಾಜಕೀಯ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಮತ್ತು ಇತರ ಕ್ಷೇತ್ರಗಳ ವಿಶೇಷ ಅತಿಥಿಗಳನ್ನು ಈ ಭವ್ಯ ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. +ಸಮಾಜದ ಉನ್ನತ ವ್ಯಕ್ತಿಗಳಾದ ನ್ಯಾಯಮೂರ್ತಿಗಳು, ವಿಜ್ಞಾನಿಗಳು, ದೈತ್ಯ ಉದ್ಯಮಿಗಳು, ಸಿನಿಮಾ ತಾರೆಯರು, ಕ್ರೀಡಾ ತಾರೆಯರು ಸೇರಿದಂತೆ ಸುಮಾರು 8000 ಗಣ್ಯರನ್ನು ಆಹ್ವಾನಿಸಲಾಗಿತ್ತು. ಇವರಲ್ಲಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಮುಕೇಶ್ ಅಂಬಾನಿ, ಇನೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ – ಸುಧಾಮೂರ್ತಿ ದಂಪತಿ, ನಂದನ್ ನಿಲೇಕಣಿ, ಟಿ.ವಿ. ಮೋಹನ ದಾಸ್ ಪೈ, ರತನ್ ಟಾಟಾ, ಸಿನಿಮಾ ಸೂಪರ್ ಸ್ಟಾರ್ ಗಳಾದ ಅಮಿತಾಭ್ ಬಚ್ಚನ್ ದಂಪತಿ, ರಜನೀಕಾಂತ್, ಮೋಹನ್ ಲಾಲ್, ಕನ್ನಡದ ಯಶ್, ತೆಲುಗಿನ ಪ್ರಭಾಸ್; ಕ್ರೀಡಾತಾರೆಗಳಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ, ಚೆಸ್ ತಾರೆಯಾದ ವಿಶ್ವನಾಥನ್ ಆನಂದ್, ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು. \ No newline at end of file diff --git a/eesanje/url_47_183_10.txt b/eesanje/url_47_183_10.txt new file mode 100644 index 0000000000000000000000000000000000000000..78fd24ed4b09317f7326bb2b4bffa0424147a301 --- /dev/null +++ b/eesanje/url_47_183_10.txt @@ -0,0 +1,12 @@ +ಕೇಸರಿ ಬಣ್ಣದೊಂದಿಗೆ ಝಗಮಗಿಸುತ್ತಿದೆ ಆಯೋಧ್ಯೆ +ಅಯೋಧ್ಯೆ, ಜ 22 (ಪಿಟಿಐ) ಕೇಸರಿ ಧ್ವಜಗಳೊಂದಿಗೆ ರಾರಾಜಿಸುತ್ತಿರುವ ರಾಮನಗರಿ ಆಯೋಧ್ಯೆ ಇಂದು ಇಡಿ ವಿಶ್ವದ ಗಮನ ಸೆಳೆಇದೆ. ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತಾ ಬ್ಯಾರಿಕೇಡ್‍ಗಳು, ಮುಳ್ಳುತಂತಿಗಳು ಮತ್ತುಪೊಲೀಸ್ ಸಿಬ್ಬಂದಿ ಆಗಾಗ್ಗೆ ತಪಾಸಣೆ ನಡೆಸುವುದು ಸಾಮಾನ್ಯ ದೃಶ್ಯವಾಗಿದೆ. +ಆದರೆ ಪವಿತ್ರ ನಗರವು ಈಗ ಅದರ ಹೃದಯಭಾಗದಲ್ಲಿರುವ ಭವ್ಯವಾದ ರಾಮಮಂದಿರದೊಂದಿಗೆ ಬೃಹತ್ ಮೂಲಸೌಕರ್ಯ ಬೆಳವಣಿಗೆಯಿಂದ ಉತ್ತೇಜಿತವಾಗಿರುವ ಮಾದರಿ ಬದಲಾವಣೆಗೆ ಒಳಗಾರುವುದರಿಂದ ಇದುವರೆಗೂ ನಿದ್ದೆಯ ಪಟ್ಟಣ್ಣದಂತಿದ್ದ ಆಯೋಧ್ಯೆ ಇದೀಗ ರಾಮನಾಮ ಜಪದಿಂದಾಗಿ ಇಡೀ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. +ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದ ಕುರಿತು 2019 ರ ಸುಪ್ರೀಂ ಕೋರ್ಟ್ ತೀರ್ಪು ಈ ಯಾತ್ರಾ ನಗರದ ಪ್ರಗತಿಗೆ ದಾರಿ ಮಾಡಿಕೊಟ್ಟಿತು, ಕೆಲವು ವರ್ಷಗಳ ಹಿಂದೆ ಉತ್ತರ ಪ್ರದೇಶದ ನಿದ್ದೆಯ ಪಟ್ಟಣವಾಗಿತ್ತು. ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು 7,000 ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಳ್ಳುವ ಸಮಾರಂಭದಲ್ಲಿ ಅಯೋಧ್ಯೆ ಮತ್ತು ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದೆ. +ಈ ಪ್ರಾಣ ಪ್ರತಿಷ್ಠಾ ದ ಅಂಗವಾಗಿ ಸರ್ಕಾರವು ಭವ್ಯ, ದಿವ್ಯ ಮತ್ತು ನವ್ಯ ಅಯೋಧ್ಯೆ ಎಂದು ಕರೆಯುವ ದೇವಾಲಯದ ಪಟ್ಟಣವನ್ನು ಪರಿವರ್ತಿಸಲು ಮೂಲಸೌಕರ್ಯ ಯೋಜನೆಗಳ ಸರಣಿಯನ್ನು ಪ್ರಾರಂಭಿಸಲಾಗಿದೆ. ಭವ್ಯವಾದ ಹೊಸ ವಿಮಾನ ನಿಲ್ದಾಣ, ಪುನರಾಭಿವೃದ್ಧಿ ರೈಲ್ವೆ ನಿಲ್ದಾಣ, ಎರಡು ಅಗಲವಾದ ರಸ್ತೆಗಳು — ರಾಮ್ ಪಥ್ ಮತ್ತು ಧರ್ಮ್ ಪಥ್ ರಸ್ತೆಗಳು, ಬಹು-ಹಂತದ ಕಾರ್ ಪಾರ್ಕಿಂಗ್ ಸೌಲಭ್ಯಗಳು, ಇ-ಬಸ್‍ಗಳು, ಮೀಸಲಾದ ಬಹುಭಾಷಾ ಪ್ರವಾಸಿ ಅಪ್ಲಿಕೇಶನ್ ಮತ್ತು ಹೊಸ ಐಷಾರಾಮಿ ಹೋಟೆಲ್‍ಗಳೊಂದಿಗೆ ಇಡಿ ಅಯೋಧ್ಯೆ ಬದಲಾಗಿದೆ ಮತ್ತು ಅದರ ಚಿತ್ರಣವೂ ಬದಲಾಗಿದೆ. +ಪ್ರಧಾನಿ ನರೇಂದ್ರ ಮೋದಿಯವರ ವಿಕಾಸ್ ಭಿ, ವಿರಾಸತ್ ಭಿ ಯ ದೃಷ್ಟಿಗೆ ಅನುಗುಣವಾಗಿ, ಈ ಮೂಲಸೌಕರ್ಯ ಪುಶ್ ಪ್ರಾಚೀನ ನಗರದ ಪರಂಪರೆಯನ್ನು ಸಹ ಅಳವಡಿಸಿಕೊಂಡಿದೆ, ಅಲ್ಲಿ ಹಿಂದೂಗಳು ಭಗವಾನ್ ರಾಮನು ಜನಿಸಿದನೆಂದು ನಂಬುತ್ತಾರೆ. ವಿಮಾನ ನಿಲ್ದಾಣ ಮತ್ತು ರೈಲ್ವೇ ನಿಲ್ದಾಣವು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಹೊಸದಾಗಿ ನಿರ್ಮಿಸಲಾದ ರಾಮ ಮಂದಿರದ ವಾಸ್ತುಶಿಲ್ಪದ ಅಂಶಗಳಿಂದ ವಿನ್ಯಾಸವನ್ನು ಹೊಂದಿರುವ ಮರಳುಗಲ್ಲಿನ ಹೊದಿಕೆಯನ್ನು ಹೊಂದಿದೆ, ಇದು ರಾಜಸ್ಥಾನದಿಂದ ಬಂದ ಮರಳುಗಲ್ಲುಗಳನ್ನು ಬಳಸುತ್ತದೆ. +ನಾವು ಜಾಗತಿಕ ಮಟ್ಟದಲ್ಲಿ ಅಯೋಧ್ಯೆಗೆ ಹೊಸ ಗುರುತನ್ನು ನೀಡಬೇಕಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಇ ಫ್ಲೀಟ್ ಅನ್ನು ಫ್ಲ್ಯಾಗ್ ಆಫ್ ಮಾಡಿದ ನಂತರ ಹೇಳಿದ್ದರು. 2020ರ ಆಗಸ್ಟ್‍ನಲ್ಲಿ ಮೋದಿಯವರು ರಾಮಮಂದಿರ ನಿರ್ಮಾಣದ ಭೂಮಿಪೂಜೆ ನೆರವೇರಿಸಿದ ನಂತರ ರಾಜ್ಯ ಸರ್ಕಾರದ ಮೂಲಸೌಕರ್ಯ ವಿಸ್ತರಣೆಗೆ ಚಾಲನೆ ನೀಡಿದೆ. ಸಾಂಪ್ರದಾಯಿಕ ನಾಗರ ಶೈಲಿಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರ 380 ಅಡಿ ಉದ್ದ (ಪೂರ್ವ-ಪಶ್ಚಿಮ ದಿಕ್ಕು), 250 ಅಡಿ ಅಗಲ ಮತ್ತು 161 ಅಡಿ ಎತ್ತರ ಇರಲಿದೆ. ಮೂರು ಅಂತಸ್ತಿನ ದೇವಾಲಯದ ಪ್ರತಿ ಮಹಡಿಯು 20 ಅಡಿ ಎತ್ತರ ಮತ್ತು ಒಟ್ಟು 392 ಕಂಬಗಳು ಮತ್ತು 44 ದ್ವಾರಗಳನ್ನು ಹೊಂದಿರುತ್ತದೆ. +ಈ ದೇವಾಲಯವನ್ನು ತಲುಪಲು ಭಕ್ತರಿಗೆ ಅನುಕೂಲವಾಗುವಂತೆ, ಸರ್ಕಾರವು ಸಹದತ್‍ಗಂಜ್‍ನಿಂದ ನಯಾ ಘಾಟ್ ಚೌರಾಹಾದವರೆಗಿನ 13-ಕಿಮೀ ರಾಮ್ ಪಥವನ್ನು ಒಳಗೊಂಡಂತೆ ನಾಲ್ಕು ರಸ್ತೆಗಳನ್ನು ಮರುಅಭಿವೃದ್ಧಿಗೊಳಿಸಿದೆ – ಇದಕ್ಕಾಗಿ ಹೆಚ್ಚಿನ ಸಂಖ್ಯೆಯ ಅಂಗಡಿಗಳು, ಮನೆಗಳು ಮತ್ತು ಇತರ ಕಟ್ಟಡಗಳ ಭಾಗಶಃ ನೆಲಸಮ ಮಾಡಲಾಗಿದೆ. +ಎರಡೂ ಬದಿಗಳಲ್ಲಿ ಕಟ್ಟಡಗಳ ಏಕರೂಪದ ಮುಂಭಾಗಗಳನ್ನು ಹೊಂದಿರುವ ಅಗಲವಾದ ರಾಮಪಥ, ಸಾಂಪ್ರದಾಯಿಕ ರಾಮನದಿ ತಿಲಕವನ್ನು ಪ್ರತಿನಿಸುವ ವಿನ್ಯಾಸವನ್ನು ಹೊಂದಿರುವ ಅಲಂಕಾರಿಕ ದೀಪದ ಕಂಬಗಳು ಮತ್ತು ಧರ್ಮ್ ಪಥ್ ಮತ್ತು ಲತಾ ಮಂಗೇಶ್ಕರ್ ಚೌಕ್ ಉದ್ದಕ್ಕೂ ಸ್ಥಾಪಿಸಲಾದ 40 ಸೂರ್ಯ ಸ್ತಂಭಗಳು ನಗರದ ಹೊಸ ಪ್ರವಾಸಿ ಆಕರ್ಷಣೆಗಳಾಗಿವೆ. +ನಿಗಮ ಮಂಡಳಿಗಳ ನೇಮಕಾತಿ : ಸುರ್ಜೆವಾಲ ಮಹತ್ವದ ಸಭೆ +ಹಿಂದೆ, ಜನರು ರಾಮಜನ್ಮಭೂಮಿ, ಹನುಮಾನ್‍ಗರ್ಹಿ ದೇವಸ್ಥಾನ, ಕನಕ್ ಭವನ, ಅಶರ್ಫಿ ಭವನಕ್ಕೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದರು ಈಗ, ಸಂದರ್ಶಕರು ರಾಮ್ ಕಿ ಪೈಡಿ, ಸೂರ್ಯ ಕುಂಡ್ ಮತ್ತು ಇತರ ದೇವಾಲಯಗಳಂತಹ ಇತರ ಸ್ಥಳಗಳನ್ನು ಅನ್ವೇಷಿಸಲು ಒಂದು ದಿನ ಅಥವಾ ಅದಕ್ಕಿಂತ ಹೆಚ್ಚು ಕಾಲ ಉಳಿಯಲು ಬಯಸುತ್ತಿದ್ದಾರೆ. +2019 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ನಗರದಲ್ಲಿ ಹೆಚ್ಚಿನ ಸಂಖ್ಯೆಯ ಹೊಸ ಬಜೆಟ್ ಹೋಟೆಲ್‍ಗಳು, ಲಾಡ್ಜ್‍ಗಳು ಮತ್ತು ಹೋಂಸ್ಟೇಗಳು ಹುಟ್ಟಿಕೊಂಡಿವೆ. ಮಂದಿರ-ಮಸೀದಿ ವಿವಾದವು ನಗರದ ಬೆಳವಣಿಗೆಯನ್ನು ಸ್ಥಗಿತಗೊಳಿಸಿದೆ. ಆದರೆ ಮಂದಿರದ ನಿರ್ಮಾಣವು ಮೂಲಸೌಕರ್ಯವನ್ನು ಹೆಚ್ಚಿಸಿದೆ ಮತ್ತು ಇದು ಅಯೋಧ್ಯೆಯ ಬೆಳವಣಿಗೆಯ ಕಥೆಯನ್ನು ಉತ್ತೇಜಿಸಿದೆ. \ No newline at end of file diff --git a/eesanje/url_47_183_11.txt b/eesanje/url_47_183_11.txt new file mode 100644 index 0000000000000000000000000000000000000000..b99278c9599b1dd18abe0079c97b01d08077b603 --- /dev/null +++ b/eesanje/url_47_183_11.txt @@ -0,0 +1,5 @@ +ಕೋಮುಸೌಹಾರ್ಧತೆಗೆ ಸಾಕ್ಷಿಯಾಗಲಿದೆ ರಾಮಮಂದಿರ : ಅದಾನಿ +ನವದೆಹಲಿ,ಜ.22- ಅಯೋಧ್ಯೆಯ ರಾಮ ಮಂದಿರ ದೇಶದಲ್ಲಿ ಕೋಮು ಸೌಹಾರ್ಧತೆಗೆ ಸಾಕ್ಷಿಯಾಗಲಿದೆ ಎಂದು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹೇಳಿದ್ದಾರೆ. ಈ ಮಂಗಳಕರ ದಿನದಂದು ಅಯೋಧ್ಯೆ ಮಂದಿರದ ಬಾಗಿಲು ತೆರೆದಂತೆ, ಇದು ಜ್ಞಾನೋದಯ ಮತ್ತು ಶಾಂತಿಯ ಹೆಬ್ಬಾಗಿಲಾಗಲಿ, ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕøತಿಕ ಸಾಮರಸ್ಯದ ಕಾಲಾತೀತ ಎಳೆಗಳೊಂದಿಗೆ ಸಮುದಾಯಗಳನ್ನು ಬಂಸಲಿ ಎಂದು ಅವರು ಎಕ್ಸ್ ಮಾಡಿದ್ದಾರೆ. + , ' , , ' .../3MzcKiI8GG +ಅದೇ ರೀತಿ ಮರ್ಯಾದಾ ಪುರುಷೋತ್ತಮ ರಾಮ ಧರ್ಮವನ್ನು ಮೀರಿದ ವ್ಯಕ್ತಿ ಎಂದು ಖ್ಯಾತ ವಾಣಿಜ್ಯೋದ್ಯಮಿ ಆನಂದ್ ಮಹೀಂದ್ರಾ ಅಭಿಪ್ರಾಯಪಟ್ಟಿದ್ದಾರೆ.ರಾಮ ಧರ್ಮವನ್ನು ಮೀರಿದ ವ್ಯಕ್ತಿ. ಒಬ್ಬರ ನಂಬಿಕೆ ಏನೇ ಇರಲಿ, ಗೌರವದಿಂದ ಮತ್ತು ಬಲವಾದ ಮೌಲ್ಯಗಳೊಂದಿಗೆ ಬದುಕಲು ಸಮರ್ಪಿತವಾಗಿರುವ ಜೀವಿಗಳ ಪರಿಕಲ್ಪನೆಗೆ ನಾವೆಲ್ಲರೂ ಆಕರ್ಷಿತರಾಗಿದ್ದೇವೆ ಎಂದು ಅವರು ಎಕ್ಸ್ ಮಾಡಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-01-2024) \ No newline at end of file diff --git a/eesanje/url_47_183_12.txt b/eesanje/url_47_183_12.txt new file mode 100644 index 0000000000000000000000000000000000000000..fa6b71c4c8fc78078fc4394410e1a2a40ce9a958 --- /dev/null +++ b/eesanje/url_47_183_12.txt @@ -0,0 +1,9 @@ +ಜೈಲಿಗೆ ವಾಪಸ್ಸಾದ ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳು +ಗೋಧ್ರಾ, ಜ.22 (ಪಿಟಿಐ)-ಬಿಲ್ಕಿಸ್ ಬಾನೊ ಪ್ರಕರಣದ ಎಲ್ಲಾ 11 ಅಪರಾಧಿಗಳು ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಕಾರಾಗೃಹದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಗಡುವುಗೆ ಅನುಗುಣವಾಗಿ ಶರಣಾಗಿದ್ದಾರೆ.11 ಅಪರಾಧಿಗಳು ತಡರಾತ್ರಿ ಜೈಲು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಸ್ಥಳೀಯ ಅಪರಾಧ ವಿಭಾಗದ ಇನ್ಸ್‍ಪೆಕ್ಟರ್ ಎನ್‍ಎಲ್ ದೇಸಾಯಿ ತಿಳಿಸಿದ್ದಾರೆ. +ನಿನ್ನೆ ಮಧ್ಯರಾತ್ರಿಯ ಮೊದಲು ಅವರು ಜೈಲಿಗೆ ಬಂದರು, ಅದು ಅವರಿಗೆ ಶರಣಾಗಲು ನಿಗದಿಪಡಿಸಿದ ಗಡುವು ಎಂದು ಅವರು ಹೇಳಿದರು.ಶರಣಾಗತಿಗೆ ಹೆಚ್ಚಿನ ಸಮಯಾವಕಾಶ ನೀಡುವಂತೆ ಅಪರಾಗಳ ಮನವಿಯನ್ನು ಶುಕ್ರವಾರ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಭಾನುವಾರದೊಳಗೆ ಶರಣಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಸುಪ್ರೀಂ ಆದೇಶದ ಹಿನ್ನೆಲೆಯಲಲಿ ಎಲ್ಲ 11 ಆರೋಪಿಗಳು ಶರಣಾಗಿದ್ದಾರೆ. +11 ಅಪರಾಗಳೆಂದರೆ ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್ ಜಸ್ವಂತ್ ನಾಯ್ , ಮಿತೇಶ್ ಭಟ್, ಪ್ರದೀಪ್ ರ್ಮೋಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ಗಳಾಗಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-01-2024) +ಫೆಬ್ರವರಿ 2002 ರಲ್ಲಿ ಗೋಧ್ರಾ ರೈಲು ದಹನ ಘಟನೆಯ ನಂತರ ಭುಗಿಲೆದ್ದ ಕೋಮು ಗಲಭೆಗಳ ಭಯಾನಕತೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಬಿಲ್ಕಿಸ್ ಬಾನೋ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿಯಾಗಿದ್ದಳು. ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬ ಸದಸ್ಯರು ಕೊಲ್ಲಲ್ಪಟ್ಟಿದ್ದರು. +ಆಗಸ್ಟ್ 15, 2022 ರಂದು, ಜೀವಾವಧಿ ಶಿಕ್ಷೆಯ ಭಾಗವಾಗಿ 14 ವರ್ಷಗಳನ್ನು ಜೈಲಿನಲ್ಲಿ ಕಳೆದ 11 ಅಪರಾಗಳಿಗೆ ಗುಜರಾತ್ ಸರ್ಕಾರವು ತನ್ನ 1992 ರ ನೀತಿಗೆ ಅನುಗುಣವಾಗಿ ಅವರ ಉಪಶಮನ ಅರ್ಜಿಗಳನ್ನು ಸ್ವೀಕರಿಸಿದ ನಂತರ ಅಕಾಲಿಕ ಬಿಡುಗಡೆಗೆ ಮಾಡಲಾಗಿತ್ತು. 11 ಅಪರಾಧಿಗಳು ಪಂಚಮಹಲ್ ಬಳಿಯ ದಾಹೋದ್ ಜಿಲ್ಲೆಯ ಸಿಂಗ್ವಾಡ್ ತಾಲೂಕಿನ ಸಿಂಗ್ವಾಡ್ ಮತ್ತು ರಂಕ್ಪುರ್ ಗ್ರಾಮದ ನಿವಾಸಿಗಳು. +ಉಪಶಮನದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವುದರಿಂದ ಅಪರಾಧಿಗಳಿಗೆ ಅವಪೂರ್ವ ಬಿಡುಗಡೆ ನೀಡಲು ಗುಜರಾತ್ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ತೀರ್ಪು ನೀಡಿತ್ತು. +ಎಸ್‍ಸಿ ಆದೇಶದ ಕೆಲವು ದಿನಗಳ ನಂತರ, ದೋಷಿಗಳು ಆರೋಗ್ಯ ವೈಫಲ್ಯ, ಮುಂಬರುವ ಶಸ್ತ್ರಚಿಕಿತ್ಸೆ, ಮಗನ ಮದುವೆ ಮತ್ತು ಮಾಗಿದ ಬೆಳೆಗಳನ್ನು ಕೊಯ್ಲು ಮಾಡುವಂತಹ ವಿವಿಧ ಆಧಾರದ ಮೇಲೆ ಶರಣಾಗಲು ಹೆಚ್ಚಿನ ಸಮಯವನ್ನು ಕೋರಿ ಉನ್ನತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಆದರೆ ನ್ಯಾಯಾಲಯ ಅವರ ಮನವಿಗಳನ್ನು ನಿರಾಕರಿಸಿ ಶರಣಾಗತಿಗೆ ಗಡುವು ವಿಸಿತ್ತು. \ No newline at end of file diff --git a/eesanje/url_47_183_2.txt b/eesanje/url_47_183_2.txt new file mode 100644 index 0000000000000000000000000000000000000000..713e488a6a753de8024a3151d965eadf136af77f --- /dev/null +++ b/eesanje/url_47_183_2.txt @@ -0,0 +1,7 @@ +ರಾಮಲಲ್ಲಾ ಕಾರ್ಯಕ್ರಮ ನೇರ ಪ್ರಸಾರಕ್ಕೆ ತಮಿಳುನಾಡಿನಲ್ಲಿ ಕಿಡಿಗೇಡಿಗಳಿಂದ ಅಡ್ಡಿ +ಚೆನ್ನೈ,ಜ.22- ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರಕ್ಕೆ ತಮಿಳುನಾಡಿನಲ್ಲಿ ಅಡ್ಡಿಪಡಿಸಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಕೇಳಿಬಂದಿವೆ. ಅಯೋಧ್ಯೆಯಲ್ಲಿ ಪ್ರಧಾನಿಯವರು ಪ್ರಾಣ ಪ್ರತಿಷ್ಠಾಪನೆ ಮಾಡುವ ಕಾರ್ಯಕ್ರಮದ ನೇರಪ್ರಸಾರವನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರು ಕಾಮಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಅಳವಡಿಸಲಾಗಿದ್ದ ಬೃಹತ್ ಎಲ್‍ಇಡಿಯಲ್ಲಿ ವೀಕ್ಷಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದರಿಂದಾಗಿ ಗೊಂದಲಗಳಾಗಿವೆ ಎಂದು ಹೇಳಲಾಗಿದೆ. +#| | , , , . .../9zxiDFPalo +ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‍ರವರು ತಮಿಳುನಾಡಿನಲ್ಲಿ ವಿವಿಧ ಕಡೆ ಆಯೋಜಿಸಲಾಗಿದ್ದ ನೇರಪ್ರಸಾರಕ್ಕೆ ತಡೆಯೊಡ್ಡಿರುವುದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ನಾಗರ ಕೋಯಿಲ್‍ನಲ್ಲಿರುವ ಥೋವಲೈ ಮುರುಗನ್ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿನ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ಪ್ರಸಾರಕ್ಕಾಗಿ ಎಲ್‍ಇಡಿ ಪರದೆಗಳನ್ನು ಅಳವಡಿಸಲು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ನೇರಪ್ರಸಾರದಿಂದಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಪೊಲೀಸರು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ +ಇನ್ನು ಕಾಂಚಿಪುರಂ ಜಿಲ್ಲೆಯಲ್ಲಿ 466 ಎಲ್‍ಇಡಿ ಪರದೆಯನ್ನು ಅಳವಡಿಸುವ ಸವ್ಯವಸ್ಥೆಯಾಗಿದ್ದು ಪೊಲೀಸರು 400 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎಲ್‍ಇಡಿ ಪರದೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಪೊಲೀಸರನ್ನು ನಿಯೋಜಿಸಿ ನೇರಪ್ರಸಾರವನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಡಿಎಂಕೆ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಾಗಿ ಎಲ್‍ಇಡಿ ಪೂರೈಕೆದಾರರು ಭಯದಿಂದ ಹೆದರಿ ಓಡಿಹೋಗುತ್ತಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ. +ಮತ್ತೊಂದೆಡೆ ತಮಿಳುನಾಡು ಬಿಜೆಪಿಯ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮಿಳುನಾಡಿನ ಖಾಸಗಿ ಆವರಣದಲ್ಲಿ ಪ್ರಾಣ ಪ್ರತಿಷ್ಠಾಪನಾ ನೇರಪ್ರಸಾರಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ಮೌಖಿಕ ಆದೇಶ ನೀಡಿ ತಮಿಳುನಾಡು ಸೇರಿದಂತೆ ಯಾವುದೇ ರಾಜ್ಯಗಳು ಜನರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಸೂಚಿಸಿದೆ. ಆದರೆ ತಮಿಳುನಾಡಿನ ದೇವಸ್ಥಾನದಲ್ಲಿ ನೇರಪ್ರಸಾರ, ಬಜನೆ, ವಿಶೇಷ ಪೂಜೆ, ಅನ್ನದಾನಕ್ಕೆ ನಿರ್ಬಂಧಗಳಿಲ್ಲ ಎಂದು ವಿವರಿಸಿದರು. ಅದರ ಹೊರತಾಗಿಯೂ ತಮಿಳುನಾಡಿನ ಬಹುತೇಕ ಕಡೆ ಪ್ರಸಾರಕ್ಕೆ ನಿರಾಕರಿಸಲಾಗಿತ್ತು ಎಂಬ ದೂರುಗಳಿವೆ. \ No newline at end of file diff --git a/eesanje/url_47_183_3.txt b/eesanje/url_47_183_3.txt new file mode 100644 index 0000000000000000000000000000000000000000..51a2d21adab5e92d529afa9a6266637ee8745d01 --- /dev/null +++ b/eesanje/url_47_183_3.txt @@ -0,0 +1,6 @@ +ರಾಮಮಂದಿರ ಉದ್ಘಾಟನೆ ಲೈವ್‍ಗೆ ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ +ಚೆನ್ನೈ, ಜ 22 (ಪಿಟಿಐ) ತಮಿಳುನಾಡಿನ ಖಾಸಗಿ ಅವರಣಗಳಲ್ಲಿ ನಡೆಸಲಾಗುವ ಶ್ರೀರಾಮ ಮಂದಿರದ ಪ್ರತಿಷ್ಠಾಪನೆ ಸಂಬಂಧಿತ ಕಾರ್ಯಕ್ರಮಗಳಿಗೆ ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಖಾಸಗಿಯಾಗಿ ನಡೆಸುವ ಕಾರ್ಯಕ್ರಮಗಳು ದೇವರ ಮೇಲಿನ ಭಕ್ತಿ ಮಾತ್ರ ಎಂದು ಹೇಳಿರುವ ನ್ಯಾಯಾಲಯ ಶಾಂತಿ ಮತ್ತು ಸಂತೋಷ ಮತ್ತು ಸಾಮಾಜಿಕ ಸಮತೋಲನವನ್ನು ಯಾರು ಕದಡಬಾರದು ಎಂದು ಆದೇಶಿಸಿದೆ. +ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಭವ್ಯ ಮಂದಿರದ ಪ್ರಾಣ ಪ್ರತಿಷ್ಠಾಕ್ಕೆ ಗಂಟೆಗಳ ಮೊದಲು, ಮಹಾಮಸ್ತಕಾಭಿಷೇಕ ಸಮಾರಂಭದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲು ಸಂಘಟಕರಿಗೆ ಮುಕ್ತ ಅವಕಾಶ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿದೆ. +ಕೋಮುಸೌಹಾರ್ಧತೆಗೆ ಸಾಕ್ಷಿಯಾಗಲಿದೆ ರಾಮಮಂದಿರ : ಅದಾನಿ +ನಗರದ ಪಟ್ಟಾಭಿರಾಮನ ಮದುವೆ ಮಂಟಪದಲ್ಲಿ ಸೋಮವಾರ ಭಜನೆ ಮತ್ತು ಅನ್ನದಾನ ನಡೆಸಲು ಆವಡಿ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪಟ್ಟಾಭಿರಾಮ ವಿಭಾಗದ ಪ್ರಭಾರಿ (ಪ್ರಥಮ ಪ್ರತಿವಾದಿ) ಅನುಮತಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಆನಂದ ವೆಂಕಟೇಶ್ ಈ ಆದೇಶ ನೀಡಿದ್ದಾರೆ. ಎಲ್ ಗಣಪತಿ ಎಂಬುವರು ಅರ್ಜಿ ಸಲ್ಲಿಸಿದ್ದರು. +ತಮಿಳುನಾಡನ್ನು ಪ್ರತಿನಿಧಿಸಿದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಎ ದಾಮೋಧರನ್ ಅವರು, ಖಾಸಗಿ ಆವರಣಗಳಾದ ಮಂಟಪಗಳು, ಖಾಸಗಿ ದೇವಸ್ಥಾನಗಳು ಮತ್ತು ಇತರ ಯಾವುದೇ ಖಾಸಗಿ ಸ್ಥಳದಲ್ಲಿ ನಡೆಸುವ ಕಾರ್ಯಕ್ರಮಗಳು, ಭಜನೆಗಳು ಮತ್ತು ಅನ್ನದಾನಗಳಿಗೆ ಪೊಲೀಸರಿಂದ ಯಾವುದೇ ಅನುಮತಿ ಅಗತ್ಯವಿಲ್ಲ ಎಂದಿದ್ದಾರೆ. \ No newline at end of file diff --git a/eesanje/url_47_183_4.txt b/eesanje/url_47_183_4.txt new file mode 100644 index 0000000000000000000000000000000000000000..2a3b8b2cce6be8b840444d0301dd1e7501def15d --- /dev/null +++ b/eesanje/url_47_183_4.txt @@ -0,0 +1,7 @@ +ಕಾಶ್ಮೀರಿ ಹಿಂದೂಗಳ ಪ್ರತಿನಿಧಿಯಾಗಿ ಅಯೋಧ್ಯೆಗೆ ಬಂದಿದ್ದೇನೆ ; ಅನುಪಮ್ ಖೇರ್ +ಅಯೋಧ್ಯೆ,ಜ.22- ನಾನು ಲಕ್ಷಾಂತರ ಕಾಶ್ಮೀರಿ ಹಿಂದೂಗಳ ಪ್ರತಿನಿಧಿಯಾಗಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಖ್ಯಾತ ಬಾಲಿವುಡ್ ನಟ ಅನುಪಮ್ ಖೇರ್ ತಿಳಿಸಿದ್ದಾರೆ. ಸಮಾರಂಭಕ್ಕೆ ಸಾಕ್ಷಿಯಾಗುವ ಮೊದಲು ಅವರು ಹನುಮಾನ್ ಗರ್ಹಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. +ಕೋಮುಸೌಹಾರ್ಧತೆಗೆ ಸಾಕ್ಷಿಯಾಗಲಿದೆ ರಾಮಮಂದಿರ : ಅದಾನಿ +ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು, ನಾನು ಲಕ್ಷಾಂತರ ಕಾಶ್ಮೀರಿ ಹಿಂದೂಗಳನ್ನು ಪ್ರತಿನಿಧಿಸುತ್ತಿದ್ದೇನೆ ಎಂದು ಬಾವುಕರಾದರು. ಇಂದು ಭಗವಾನ್ ರಾಮನು ತನ್ನ ಮನೆಗೆ ಹಿಂದಿರುಗುತ್ತಿದ್ದಾನೆ ಮತ್ತು ನಾವು ಕೂಡ ಶೀಘ್ರದಲ್ಲೇ ಹಿಂತಿರುಗುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಕಾಶ್ಮೀರಕ್ಕೆ ಹಿಂತಿರುಗುವ ಮುನ್ಸೂಚನೆ ನೀಡಿದರು. ರಾಮನ ಬಳಿಗೆ ಹೋಗುವ ಮೊದಲು, ಭಗವಾನ್ ಹನುಮಂತನ ದರ್ಶನವನ್ನು ಪಡೆಯುವುದು ಬಹಳ ಮುಖ್ಯ … ಅಯೋಧ್ಯೆಯ ವಾತಾವರಣವು ತುಂಬಾ ಆಕರ್ಷಕವಾಗಿದೆ. +ಎಲ್ಲೆಡೆ ಜೈ ಶ್ರೀರಾಮ್ ಘೋಷಣೆ ಮೊಳಗುತ್ತಿರುವುದರಿಂದ ಇಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ ಎಂದು ಅವರು ಹೇಳಿದರು.ಕ್ರಿಕೆಟ್ ಜಗತ್ತು, ಚಲನಚಿತ್ರ ಜಗತ್ತು, ಸಂತ ಸಮಾಜ, ರಾಜಕೀಯ, ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಮತ್ತು ಇತರ ಕ್ಷೇತ್ರಗಳ ವಿಶೇಷ ಅತಿಥಿಗಳನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. +ಬಾಲಿವುಡ್ ಸೆಲೆಬ್ರಿಟಿಗಳಾದ ರಣಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ವಿಕ್ಕಿ ಕೌಶಲ, ಆಯುಷ್ಮಾನ್ ಖುರಾನಾ, ಕಂಗನಾ ರಣಾವತ್, ಕತ್ರಿನಾ ಕೈಫ್, ಜಾಕಿ ಶ್ರಾಫ್ ಮತ್ತು ಆಶಾ ಭೋಂಸ್ಲೆ ಸೇರಿದಂತೆ ಹಲವಾರು ಮಂದಿ ಸಮಾರಂಭಕ್ಕೆ ಸಾಕ್ಷಿಯಾದರು. +ಉತ್ತರ ಪ್ರದೇಶದ ಲಕ್ನೋವನ್ನು ಭಗವಾನ್ ರಾಮನ ಪೋಸ್ಟರ್‍ಗಳು ಮತ್ತು ಧ್ವಜಗಳಿಂದ ಅಲಂಕರಿಸಲಾಗಿದೆ, ಆದರೆ ದೇಶದಾದ್ಯಂತದ ನಗರಗಳನ್ನು ದೀಪಗಳು, ಭಗವಾನ್ ರಾಮನ ಬೃಹತ್ ಕಟೌಟ್‍ಗಳು ಮತ್ತು ಭಗವಾನ್ ರಾಮನಿಗೆ ಸಂಬಂಧಿಸಿದ ಧಾರ್ಮಿಕ ಘೋಷಣೆಗಳನ್ನು ಹೊಂದಿರುವ ಪೋಸ್ಟರ್‍ಗಳಿಂದ ಅಲಂಕರಿಸಲಾಗಿದೆ. \ No newline at end of file diff --git a/eesanje/url_47_183_5.txt b/eesanje/url_47_183_5.txt new file mode 100644 index 0000000000000000000000000000000000000000..089c82bc419baa5bfea2d9217b7a9a58281b9cb9 --- /dev/null +++ b/eesanje/url_47_183_5.txt @@ -0,0 +1,7 @@ +ಅಯೋಧ್ಯೆಗೆ ಹರಿದುಬಂದ ಭಕ್ತ ಸಾಗರ +ಅಯೋಧ್ಯೆ, ಜ 22 (ಪಿಟಿಐ) – ಮೈ ಕೊರೆಯುವ ಚಳಿಯನ್ನು ಲೆಕ್ಕಿಸದೆ ದೇಶ ವಿದೇಶಗಳಿಂದ ಆಯೋಧ್ಯೆಗೆ ಭಕ್ತ ಸಾಗರವೇ ಹರಿದುಬಂದಿದೆ. ಸ್ಥಳೀಯರು ಮತ್ತು ಭಕ್ತರು ರಸ್ತೆಯ ಎರಡೂ ಬದಿಗಳಲ್ಲಿ ಕೇಸರಿ ಧ್ವಜಗಳನ್ನು ಬೀಸುತ್ತಾ ಮತ್ತು ಸಮರ್ಪಿತವಾದ ಹಾಡುಗಳಿಗೆ ನೃತ್ಯ ಮಾಡುತ್ತ ರಾಮ ಭಜನೆ ಜಪಿಸುತ್ತ ಸಾಗುತ್ತಿರುವ ದೃಶ್ಯಗಳು ಎಲ್ಲೆಡೆ ಕಂಡು ಬರುತ್ತಿದೆ. +ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಅನುಪಮ್ ಖೇರ್ , ಕೈಲಾಶ್ ಖೇರ್, ಜುಬಿನ್ ನೌಟಿಯಾಲï, ಪ್ರಸನ್ ಜೋಷಿ, ಮನೋಜ್ ಜೋಶಿ, ಸಚಿನ್ ತೆಂಡೂಲ್ಕರ್, ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್ , ರವಿಶಂಕರ್ ಪ್ರಸಾದ್ ಮತ್ತು ಅನಿಲ್ ಅಂಬಾನಿ ಮತ್ತಿತರ ಗಣ್ಯರು ಈಗಾಗಲೇ ಆಯೋಧ್ಯೆಲ್ಲಿ ಬೀಡುಬಿಟ್ಟಿದ್ದಾರೆ. ಹೇಮಾ ಮಾಲಿನಿ, ಕಂಗನಾ ರಣಾವತ್, ಶ್ರೀ ರವಿಶಂಕರ್, ಮೊರಾರಿ ಬಾಪು, ರಜನಿಕಾಂತ್, ಪವನ್ ಕಲ್ಯಾಣ್. ಮಧುರ್ ಭಂಡಾರ್ಕರ್, ಸುಭಾಷ್ ಘಾಯï, ಶೆಫಾಲಿ ಶಾ ಮತ್ತು ಸೋನು ನಿಗಮ್ ಅಯೋಧ್ಯೆಗೆ ಆಗಮಿಸಿದ್ದಾರೆ. +ಎಲ್ಲಾ ಆಹ್ವಾನಿತರು ಆರತಿಯ ಸಮಯದಲ್ಲಿ ಗಂಟೆ ಬಾರಿಸಿದರೆ, ಆರ್ಮಿ ಹೆಲಿಕಾಪ್ಟರ್‍ಗಳು ಆರತಿ ಸಮಯದಲ್ಲಿ ಬಾನಿನಿಂದ ಪುಷ್ಪಾರ್ಚನೆ ಮಾಡಿದವು. ಇಂದು ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿರುವುದರಿಂದ ಮತ್ತು ಅನೇಕ ರಾಜ್ಯಗಳು ಇದನ್ನು ಅನುಸರಿಸಿದ್ದರಿಂದ ಲಕ್ಷಾಂತರ ಜನರು ಟಿವಿ ಮತ್ತು ಆನ್‍ಲೈನ್ ಪ್ಲಾಟ್‍ಫಾರ್ಮ್‍ಗಳಲ್ಲಿ ರಾಮಮಂದಿರ ಉದ್ಘಾಟನೆ ವೀಕ್ಷಿಸಿ ಪುನೀತರಾದರು. +ಕೇಸರಿ ಬಣ್ಣದೊಂದಿಗೆ ಝಗಮಗಿಸುತ್ತಿದೆ ಆಯೋಧ್ಯೆ +ಈ ಸಂದರ್ಭದಲ್ಲಿ ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಾಷಿಂಗ್ಟನ್ ಡಿಸಿಯಿಂದ ಪ್ಯಾರಿಸ್‍ನಿಂದ ಸಿಡ್ನಿಯವರೆಗೆ, ವಿಶ್ವ ಹಿಂದೂ ಪರಿಷತ್ (ವಿಎಚ್‍ಪಿ) ಅಥವಾ ಹಿಂದೂ ಡಯಾಸ್ಪೊರಾ ಗುಂಪುಗಳಿಂದ ವಿಶ್ವದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಯೋಜಿಸಲಾಗಿತ್ತು. +ರಾಮ ಮಂದಿರವನ್ನು ಶ್ರೀಮಂತ ದಾಸ್ತಾನು ಹೂವುಗಳು ಮತ್ತು ವಿಶೇಷ ದೀಪಗಳಿಂದ ಅಲಂಕರಿಸಲಾಗಿದೆ ಮತ್ತು ಇಡೀ ನಗರವು ಧಾರ್ಮಿಕ ಉತ್ಸಾಹದಲ್ಲಿ ಮುಳುಗಿದೆ. ಫ್ಲೈಓವರ್‍ಗಳ ಮೇಲಿನ ಬೀದಿದೀಪಗಳನ್ನು ಭಗವಾನ್ ರಾಮನನ್ನು ಚಿತ್ರಿಸುವ ಕಲಾಕೃತಿಗಳು ಮತ್ತು ಬಿಲ್ಲು ಮತ್ತು ಬಾಣದ ಕಟೌಟ್‍ಗಳನ್ನು ಅಲಂಕರಿಸಲಾಗಿದೆ ಮತ್ತು ಅಲಂಕಾರಿಕ ದೀಪಸ್ತಂಭಗಳು ಸಾಂಪ್ರದಾಯಿಕ ರಾಮನಂದಿ ತಿಲಕ ದ ಮೇಲೆ ವಿನ್ಯಾಸಗಳನ್ನು ಹೊಂದಿವೆ. \ No newline at end of file diff --git a/eesanje/url_47_183_6.txt b/eesanje/url_47_183_6.txt new file mode 100644 index 0000000000000000000000000000000000000000..69ddf3a980958d1cbc6d6d8889040dd6c2dccc73 --- /dev/null +++ b/eesanje/url_47_183_6.txt @@ -0,0 +1,8 @@ +ದೇಶದಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ +ನವದೆಹಲಿ, ಜ 22 (ಪಿಟಿಐ) ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬೆಂಗಾವಲು ಪಡೆಗಳ ಮೇಲಿನ ದಾಳಿ ಯೋಜಿತ ದಾಳಿ ಎಂದು ಆರೋಪಿಸಿದರುವ ಕಾಂಗ್ರೆಸ್ ಇಂದು ಸಂಜೆ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಲು ತೀರ್ಮಾನಿಸಿದೆ. ಯಾತ್ರೆಯು ಅಸ್ಸಾಂನಲ್ಲಿ ಪ್ರವೇಶಿಸಿದಾಗಿನಿಂದ, ಭಾರತದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಗಳು ತಮ್ಮ ಬೆಂಗಾವಲು ಪಡೆಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಕೆಸಿ ವೇಣುಗೋಪಾಲ್ ಅವರು ಎಕ್ಸ್ ಮಾಡಿದ್ದಾರೆ. +ಇದು ಬಿಜೆಪಿಯ ಫ್ಯಾಸಿಸಂ ಮತ್ತು ಗೂಂಡಾಗಿರಿಯನ್ನು ಬಯಲಿಗೆಳೆಯುವ ಕಾರಣ ಪ್ರತಿಯೊಬ್ಬ ಭಾರತೀಯನೂ ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ. ಇಂದು ಸಂಜೆ ದೊಡ್ಡ ಪ್ರಮಾಣದ ಪ್ರತಿಭಟನೆಗಳನ್ನು ನಡೆಸಲು ಮತ್ತು ಮೋದಿ ನೇತೃತ್ವದ ಬಿಜೆಪಿ ಅಸ್ಸಾಂನಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ಕೊಲ್ಲುತ್ತಿದೆ ಎಂಬುದನ್ನು ಬಹಿರಂಗಪಡಿಸಲು ಭಾರತದಾದ್ಯಂತ ಪಿಸಿಸಿ ಮತ್ತು ಡಿಸಿಸಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ನ್ಯಾಯಕ್ಕಾಗಿ ನಮ್ಮ ಹೋರಾಟ – ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ – ನಿರಾತಂಕವಾಗಿ ಮುಂದುವರಿಯುತ್ತದೆ! ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರು, ರಾಜ್ಯ ಉಸ್ತುವಾರಿಗಳು, ಪಕ್ಷದ ಕಾರ್ಯದರ್ಶಿಗಳು, ಮುಂಚೂಣಿ ಸಂಘಟನೆಗಳ ಮುಖ್ಯಸ್ಥರು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ವೇಣುಗೋಪಾಲ್ ಅವರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾಯಿತು, ಯಶಸ್ವಿಯಾಗಿ ಪ್ರಯಾಣಿಸಿದೆ. ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶದ ಮೂಲಕ ಮತ್ತು ಈಗ ಅಸ್ಸಾಂ ಪ್ರವೇಶಿಸಿದೆ. +ನಿಮಗೆ ತಿಳಿದಿರುವಂತೆ, ಬಿಜೆಪಿಯು ವಿಶೇಷವಾಗಿ ಅಸ್ಸಾಂನ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ಶಾಂತಿಯುತ ಯಾತ್ರೆಯನ್ನು ಅಡ್ಡಿಪಡಿಸಲು ಹತಾಶವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಳೆದ ಎರಡು ದಿನಗಳಿಂದ, ಭಾರತ್ ಜೋಡೋ ನ್ಯಾಯ್ ಯಾತ್ರೆಯ ಬೆಂಗಾವಲು ಪಡೆಗಳ ಮೇಲೆ ಯೋಜಿತ ದಾಳಿಗಳನ್ನು ನಾವು ನೋಡಿದ್ದೇವೆ ಮತ್ತು ಈ ತೊಂದರೆ ಕೊಡುವವರು ನಮ್ಮ ಯಾತ್ರೆಯ ಪೋಸ್ಟರ್‍ಗಳನ್ನು ಹರಿದು ಹಾಕುವ ನಿದರ್ಶನಗಳನ್ನು ನೋಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. +ಕೇಸರಿ ಬಣ್ಣದೊಂದಿಗೆ ಝಗಮಗಿಸುತ್ತಿದೆ ಆಯೋಧ್ಯೆ +ಇಂದು ಉದ್ದೇಶಪೂರ್ವಕವಾಗಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂ ನೇತೃತ್ವದ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ್ದು, ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥರು ಸೇರಿದಂತೆ ಹಲವು ಪಕ್ಷದ ನಾಯಕರಿಗೆ ಗಾಯಗಳಾಗಿವೆ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ. ನಮ್ಮ ಉದ್ದೇಶವನ್ನು ಹತ್ತಿಕ್ಕುವ ಇಂತಹ ಅಬ್ಬರದ ಪ್ರಯತ್ನಗಳ ಸಂದರ್ಭದಲ್ಲಿ, ನಾವು ದೃಢವಾಗಿ ಮತ್ತು ಒಗ್ಗಟ್ಟಿನಿಂದ ನಿಲ್ಲುವುದು ಅತ್ಯಗತ್ಯವಾಗಿದೆ. +ನಮ್ಮ ಸಾಮೂಹಿಕ ಪ್ರತಿರೋಧವು ಈ ದಾಳಿಗಳಿಗೆ ಪ್ರತಿಕ್ರಿಯೆ ಮಾತ್ರವಲ್ಲ; ಇದು ನ್ಯಾಯಕ್ಕಾಗಿ ನಮ್ಮ ಅಚಲ ಬದ್ಧತೆಯ ಘೋಷಣೆಯಾಗಿದೆ ಎಂದು ವೇಣುಗೋಪಾಲ್ ಹೇಳಿದರು. ಕೆಲವರ ಹತಾಶ ಕ್ರಮಗಳು ನಮ್ಮ ಧ್ಯೇಯದಿಂದ ನಮ್ಮನ್ನು ತಡೆಯಲು ನಾವು ಅನುಮತಿಸುವುದಿಲ್ಲ ಎಂದು ಅವರು ಹೇಳಿದರು. ಈ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಇಂದು ಸಂಜೆ ನಮ್ಮ ಹಿರಿಯ ನಾಯಕರು ಮತ್ತು ಪಕ್ಷದ ಪದಾಕಾರಿಗಳನ್ನು ಒಳಗೊಂಡ ಪಿಸಿಸಿಗಳು ರಾಜ್ಯ ಮತ್ತು ಜಿಲ್ಲೆ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಬೇಕೆಂದು ವಿನಂತಿಸಲಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. \ No newline at end of file diff --git a/eesanje/url_47_183_7.txt b/eesanje/url_47_183_7.txt new file mode 100644 index 0000000000000000000000000000000000000000..5a6e7911134bcbaa554c8cb51635165a40041e59 --- /dev/null +++ b/eesanje/url_47_183_7.txt @@ -0,0 +1,8 @@ +ರಾಮಮಂದಿರ ಉದ್ಘಾಟನೆ ದಿನವೇ ಸಂಪ್ರೀತಿ ರ‍್ಯಾಲಿ : ಕೋಲ್ಕತ್ತಾದಲ್ಲಿ ಪೊಲೀಸ್ ಬಂದೋಬಸ್ತ್ +ಕೋಲ್ಕತ್ತಾ, ಜ 22 (ಪಿಟಿಐ) ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಸಂಪ್ರೀತಿ ರ‍್ಯಾಲಿ ಮತ್ತು 35 ಸಣ್ಣ ಮೆರವಣಿಗೆಗಳ ಸಂದರ್ಭದಲ್ಲಿ ಕೋಲ್ಕತ್ತಾ ಮತ್ತು ಸುತ್ತಮುತ್ತ ಯಾವುದೇ ಅಹಿತಕರ ಘಟನೆಗಳನ್ನು ನಡೆಯದಂತೆ ನೋಡಿಕೊಳ್ಳುವ ಉದ್ದೇಶದಿಂದ 4,000 ಪೊಲೀಸರ ನಿಯೋಜನೆ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ. +ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಂದರ್ಭದಲ್ಲಿ ದೀದಿ ಸಂಪ್ರೀತಿ ರ್ಯಾಲಿ ಹಮ್ಮಿಕೊಂಡಿರುವುದರಿಂದ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಪ್ರಯಾಣಿಕರಿಗೆ ತೊಂದರೆಯಾಗದಂತೆ ಟ್ರಾಫಿಕ್ ಡೈವರ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಭವಾನಿಪೋರ್, ಕ್ಯಾಮಾಕ್ ಸ್ಟ್ರೀಟ್, ಸೀಲ್ದಾ, ಗಫಾರ್, ಪಟುಲಿ, ಸಕುಂತಲಾ ಪಾರ್ಕ್ ಮತ್ತು ಬಂದರು ಪ್ರದೇಶಗಳ ಮೂಲಕ ರ್ಯಾಲಿ ಹಾದು ಹೋಗುತ್ತವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೋಲ್ಕತ್ತಾ ಪೊಲೀಸ್ ವ್ಯಾಪ್ತಿಗೆ ಒಳಪಡುವ ಪ್ರತಿ ವಿಭಾಗದಲ್ಲಿ ಹೆಚ್ಚುವರಿ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. +ಎಲ್ಲಾ ಪೊಲೀಸ್ ಠಾಣೆಗಳಿಗೆ ದಿನವಿಡೀ ಜಾಗರೂಕರಾಗಿರಲು ಸೂಚನೆ ನೀಡಲಾಗಿದೆ. ಪೂಜೆಗಳು ಮತ್ತು ರ್ಯಾಲಿಗಳನ್ನು ನಿಗದಿಪಡಿಸುವ ಪೊಲೀಸ್ ಠಾಣೆಗಳಿಗೆ ಹೆಚ್ಚಿನ ಜಾಗರೂಕರಾಗಿರಲು ತಿಳಿಸಲಾಗಿದೆ ಎಂದು ಅಕಾರಿ ಪಿಟಿಐಗೆ ತಿಳಿಸಿದ್ದಾರೆ. +ಕೋಮುಸೌಹಾರ್ಧತೆಗೆ ಸಾಕ್ಷಿಯಾಗಲಿದೆ ರಾಮಮಂದಿರ : ಅದಾನಿ +ಎಲ್ಲಾ ರ್ಯಾಲಿಗಳನ್ನು ವೀಡಿಯೊಗ್ರಾಫ್ ಮಾಡಲಾಗುವುದು ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲು ಪೊಲೀಸರು ಸನ್ನದ್ಧರಾಗಿದ್ದಾರೆ. ದಕ್ಷಿಣ ಕೋಲ್ಕತ್ತಾದ ಹಜ್ರಾ ಕ್ರಾಸಿಂಗ್‍ನಿಂದ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ರಾರಂಭವಾಗುವ ಟಿಎಂಸಿಯ ಸಂಪ್ರೀತಿ ರ್ಯಾಲಿಗೆ ಹಜ್ರಾ ರಸ್ತೆ ಮತ್ತು ಸೈಯದ್ ಅಮೀರ್ ಅಲಿ ಅವೆನ್ಯೂ ಮೂಲಕ ಪಾರ್ಕ್ ಸರ್ಕಸ್ ಮೈದಾನ ತಲುಪಲಿರುವುದರಿಂದ ಭಾರಿ ಬಂದೋಬಸ್ತ್ ಮಾಡಲಾಗಿದೆ. +ನಗರದ ರ್ಯಾಲಿ ಮಾರ್ಗಗಳ ಉದ್ದಕ್ಕೂ ಇರುವ ಹೆಚ್ಚಿನ ಖಾಸಗಿ ಶಾಲೆಗಳು ತರಗತಿಗಳನ್ನು ಸ್ಥಗಿತಗೊಳಿಸಿವೆ ಅಥವಾ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಕರಿಗೆ ಯಾವುದೇ ತೊಂದರೆಯಾಗದಂತೆ ಖಚಿತಪಡಿಸಿಕೊಳ್ಳಲು ವರ್ಚುವಲ್ ತರಗತಿಗಳಿಗೆ ವ್ಯವಸ್ಥೆ ಮಾಡಿವೆ. ಸಂಪ್ರೀತಿ ರ್ಯಾಲಿ ಮಾರ್ಗದ ಇತರ ಶಾಲೆಗಳು ದಿನದ ಮಟ್ಟಿಗೆ ಮುಚ್ಚುವುದಾಗಿ ಘೋಷಿಸಿವೆ ಎಂದು ಶಾಲಾ ಮೂಲಗಳು ಖಚಿತಪಡಿಸಿವೆ. \ No newline at end of file diff --git a/eesanje/url_47_183_8.txt b/eesanje/url_47_183_8.txt new file mode 100644 index 0000000000000000000000000000000000000000..1ce14451fac2d7a9b2cea8b9c42fa222429e1c43 --- /dev/null +++ b/eesanje/url_47_183_8.txt @@ -0,0 +1,6 @@ +ಭಾರತದ ನಾಗರಿಕತೆಗೆ ದೈವಿಕತೆ ಸ್ಪರ್ಶ ; ಧನಕರ್ +ನವದೆಹಲಿ, ಜ 22 (ಪಿಟಿಐ) ಭಾರತದ ನಾಗರಿಕತೆಯ ಪಥದಲ್ಲಿ ದೈವಿಕತೆಯೊಂದಿಗೆ ಪ್ರಯತ್ನಿಸುವ ನಿರ್ಣಾಯಕ ಕ್ಷಣವಾಗಿ ಜನವರಿ 22 ಅನ್ನು ಇತಿಹಾಸದಲ್ಲಿ ಬರೆಯಲಾಗುವುದು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ಅಯೋಧ್ಯೆಯಲ್ಲ್ತಿ ಸಂತರ ಸಮ್ಮುಖದಲ್ಲಿ ರಾಮ ಲಲ್ಲಾ ಪಟ್ಟಾಭಿಷೇಕ ಸಮಾರಂಭದ ಪವಿತ್ರ ವಿವಿಧಾನಗಳನ್ನು ಮುನ್ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ಇದೇ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ. +ಕೇಸರಿ ಬಣ್ಣದೊಂದಿಗೆ ಝಗಮಗಿಸುತ್ತಿದೆ ಆಯೋಧ್ಯೆ +ರಾಷ್ಟ್ರೀಯ ಹೆಮ್ಮೆಯ ಪುನರುಜ್ಜೀವನವನ್ನು ಗುರುತಿಸುವ ಸಂಭ್ರಮಾಚರಣೆಯ ಕ್ಷಣವನ್ನು ವೀಕ್ಷಿಸಲು ಸಂತೋಷವಾಗಿದೆ. ಜನವರಿ 22 ನಮ್ಮ ನಾಗರಿಕತೆಯ ಪಥದಲ್ಲಿ ದೈವಿಕತೆಯೊಂದಿಗೆ ಪ್ರಯತ್ನಿಸುವ ಕ್ಷಣವೆಂದು ಇತಿಹಾಸದಲ್ಲಿ ಬರೆಯಲಾಗಿದೆ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ. +ಈ ದಿನದಂದು, ಪ್ರಭು ಶ್ರೀರಾಮನ ಸಮಗ್ರತೆ, ಕ್ಷಮೆ, ಶೌರ್ಯ, ಪ್ರಾಮಾಣಿಕತೆ, ನಮ್ರತೆ, ಕಾಳಜಿ ಮತ್ತು ಸಹಾನುಭೂತಿಯ ಮËಲ್ಯಗಳನ್ನು ಜೀವನದ ಮಾರ್ಗವಾಗಿ ಜ್ಞಾನ, ಶಾಂತಿ, ಸಾಮರಸ್ಯ ಮತ್ತು ಸದಾಚಾರವನ್ನು ತರಲು ಸಂಕಲ್ಪ ಮಾಡೋಣ ಎಂದು ಧನಖರ್ ಹೇಳಿದರು. +ಅಯೋಧ್ಯೆಯು ಇಂದು ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ. \ No newline at end of file diff --git a/eesanje/url_47_183_9.txt b/eesanje/url_47_183_9.txt new file mode 100644 index 0000000000000000000000000000000000000000..33176ffcec73c236e7645e017776a85f4d1728d1 --- /dev/null +++ b/eesanje/url_47_183_9.txt @@ -0,0 +1,9 @@ +ರಾಹುಲ್‍ಗಾಂಧಿ ದೇವಸ್ಥಾನ ಭೇಟಿಗೆ ಅವಕಾಶ ನಿರಾಕರಣೆ +ನಾಗಾವ್, ಜ 22 (ಪಿಟಿಐ) ಅಸ್ಸಾಂನ ಹೈಬೋರಗಾಂವ್‍ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಇಲ್ಲಿಗೆ ಸಮೀಪದ ಬೋರ್ಡುವದಲ್ಲಿರುವ ಶ್ರೀ ಶಂಕರ ದೇವ್ ಸತ್ರ ದೇವಸ್ಥಾನಕ್ಕೆ ಭೇಟಿ ನೀಡಲು ಅಧಿಕಾರಿಗಳು ಅನುಮತಿ ನೀಡದ ನಂತರ ಹೈ ಡ್ರಾಮಾ ನಡೆಯಿತು. +ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಸೋಮವಾರ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಪ್ರಾರಂಭಿಸುವ ಮೊದಲು ಸ್ಥಳೀಯ ದೇವರಿಗೆ ಪೂಜೆ ಸಲ್ಲಿಸಲು ನಿರ್ಧರಿಸಲಾಗಿತ್ತು ಆದರೆ, ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಹೈಬೋರಗಾಂವ್‍ನಲ್ಲಿ ನಿಲ್ಲಿಸಲಾಯಿತು ಮತ್ತು ಮುಂದೆ ಹೋಗಲು ಬಿಡಲಿಲ್ಲ. ನಂತರ ದೇವಸ್ಥಾನಕ್ಕೆ ಭೇಟಿ ನೀಡಲು ಗಾಂಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಮಹಿಳಾ ಕಾಂಗ್ರೆಸ್ ಮುಖಂಡರು ಧರಣಿ ಕುಳಿತರು. ಧರಣಿಯಲ್ಲಿ ಕಾಂಗ್ರೆಸ್‍ನ ಮಾಜಿ ಮುಖ್ಯಸ್ಥರೂ ಪಾಲ್ಗೊಂಡಿದ್ದರು. +ಮಧ್ಯಾಹ್ನ 3 ಗಂಟೆಗೆ ಮಾತ್ರ ದೇವಾಲಯಕ್ಕೆ ಭೇಟಿ ನೀಡಲು ಗಾಂಗೆ ಅನುಮತಿ ನೀಡಲಾಗುವುದು ಎಂದು ಅಕಾರಿಗಳು ತಿಳಿಸಿದ್ದಾರೆ.ದೇಗುಲಕ್ಕೆ ಭೇಟಿ ನೀಡದಂತೆ ತಮ್ಮನ್ನು ಏಕೆ ತಡೆದಿದ್ದಾರೆ ಎಂದು ಗಾಂಧಿ ಪೊಲೀಸರನ್ನು ಪ್ರಶ್ನಿಸಿದರು. +ಜೈಲಿಗೆ ವಾಪಸ್ಸಾದ ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳು +ಯಾರು ದೇವಸ್ಥಾನಕ್ಕೆ ಯಾವಾಗ ಭೇಟಿ ನೀಡಬೇಕು ಎಂಬುದನ್ನು ಪ್ರಧಾನಿ ಮೋದಿಯವರು ಈಗ ನಿರ್ಧರಿಸುತ್ತಾರೆ ಎಂದು ಗಾಂ ಆರೋಪಿಸಿದ್ದಾರೆ. ನಾವು ಯಾವುದೇ ಸಮಸ್ಯೆಗಳನ್ನು ಸೃಷ್ಟಿಸಲು ಬಯಸುವುದಿಲ್ಲ, ಕೇವಲ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡುತ್ತೇವೆ ಎಂದು ಗಾಂಧಿ ಪೊಲೀಸ್ ಅಧಿಕಾರಿಗಳಿಗೆ ಹೇಳಿದರು. +ಆದರೆ, ದೇವಸ್ಥಾನದ ಸುತ್ತ ಬಿಗಿ ಭದ್ರತೆ, ಭಾರೀ ಪೊಲೀಸ್ ಪಡೆ ನಿಯೋಜನೆ ಮತ್ತು ರಸ್ತೆ ತಡೆ ಜಾರಿಯಲ್ಲಿತ್ತು. ದೇವಸ್ಥಾನದ ಸ್ಥಳದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ಹೈಬೋರಗಾಂವ್‍ನ ಆಚೆಗೆ ಸ್ಥಳೀಯ ಸಂಸದ ಮತ್ತು ಶಾಸಕರನ್ನು ಹೊರತುಪಡಿಸಿ ಯಾವುದೇ ಕಾಂಗ್ರೆಸ್ ನಾಯಕರಿಗೆ ಪ್ರಯಾಣಿಸಲು ಅವಕಾಶವಿರಲಿಲ್ಲ. ಮಾಧ್ಯಮ ತಂಡಕ್ಕೂ ಹೈಬೋರಗಾಂವ್‍ನಿಂದ ಆಚೆಗೆ ಪ್ರಯಾಣಿಸಲು ಬಿಡಲಿಲ್ಲ. +ಪ್ರಧಾನಿ ಮತ್ತು ಅಸ್ಸಾಂ ಮುಖ್ಯಮಂತ್ರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಸೇವಾದಳದ ಮುಖ್ಯಸ್ಥ ಲಾಲ್ಜಿ ದೇಸಾಯಿ ಹೇಳಿದ್ದಾರೆ. ಇದು ಘೋರವಾಗಿದೆ. ದೇಶದಲ್ಲಿ ಯಾರು ಯಾವ ಸಮಯದಲ್ಲಿ ಪ್ರಾರ್ಥನೆ ಮಾಡಬೇಕೆಂದು ಪ್ರಧಾನಿ ನಿರ್ಧರಿಸುವುದು ದುರದೃಷ್ಟಕರ ಎಂದು ಅವರು ಹೇಳಿದರು. +ಪ್ರಧಾನಿ ಅವರು ಪೂಜೆ ಮಾಡುವವರೆಗೆ (ಅಯೋಧ್ಯೆಯಲ್ಲಿ), ಯಾರಿಗೂ ಎಲ್ಲಿಯೂ ಪ್ರಾರ್ಥನೆ ಮಾಡಲು ಅವಕಾಶವಿಲ್ಲ ಎಂದು ದೇಸಾಯಿ ಪ್ರತಿಪಾದಿಸಿದರು.ಇಲ್ಲಿ ಯಾವುದೇ ಲೋಕತಂತ್ರ (ಪ್ರಜಾಪ್ರಭುತ್ವ) ಇಲ್ಲ ಮತ್ತು ಜನರು ದೇವಾಲಯಗಳಲ್ಲಿ ಯಾವಾಗ ಪ್ರಾರ್ಥನೆ ಸಲ್ಲಿಸುತ್ತಾರೆ ಎಂಬುದನ್ನು ಸರ್ಕಾರ ನಿರ್ಧರಿಸುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_184_1.txt b/eesanje/url_47_184_1.txt new file mode 100644 index 0000000000000000000000000000000000000000..ea88d25c447e01508888c79f1827995e4b33795a --- /dev/null +++ b/eesanje/url_47_184_1.txt @@ -0,0 +1,5 @@ +ಬಾಲರಾಮ ಪ್ರತಿಷ್ಠಾಪನೆಯ ನೇರಪ್ರಸಾರಕ್ಕೆ ನಕಾರ : ತಮಿಳುನಾಡು ವಿರುದ್ದ ನಿರ್ಮಲಾ ಅಸಮಾಧಾನ +ನವದೆಹಲಿ,ಜ.21- ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಮೂರ್ತಿ ಪ್ರತಿಷ್ಠಾಪನೆ ಸಮಾರಂಭದ ನೇರಪ್ರಸಾರವನ್ನು ತಮಿಳುನಾಡು ಸರ್ಕಾರ ನಿಷೇಧಿಸಿದ್ದು, ಈ ಹಿಂದೂ ವಿರೋಧಿ ಕ್ರಮವನ್ನು ಬಲವಾಗಿ ಖಂಡಿಸೆ್ತುೀನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನಲ್ಲಿ ಶ್ರೀರಾಮನಿಗೆ 200ಕ್ಕೂ ಹೆಚ್ಚು ದೇವಾಲಯಗಳಿವೆ. ಎಚ್‍ಆರ್ ಅಂಡ್ ಸಿಇ ನಿರ್ವಹಿಸುವ ದೇವಾಲಯಗಳಲ್ಲಿ ಶ್ರೀರಾಮನ ಹೆಸರಿನಲ್ಲಿ ಯಾವುದೇ ಪೂಜೆ/ಭಜನೆ/ಪ್ರಸಾದ/ಅನ್ನದಾನಕ್ಕೆ ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ. +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ಖಾಸಗಿ ದೇವಸ್ಥಾನಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಪೊಲೀಸರು ತಡೆಯುತ್ತಿದ್ದಾರೆ. ನೇರ ಪ್ರಸಾರ ವೀಕ್ಷಿಸುವ ಪಂಗಡಗಳನ್ನು ಕಿತ್ತುಹಾಕುತ್ತೇವೆ ಎಂದು ಸಂಘಟಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೂ ವಿರೋಧಿ ಮತ್ತು ದ್ವೇಷಪೂರಿತ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_184_10.txt b/eesanje/url_47_184_10.txt new file mode 100644 index 0000000000000000000000000000000000000000..45e95e518dc62feee970f78a2c2a15eef6171c63 --- /dev/null +++ b/eesanje/url_47_184_10.txt @@ -0,0 +1,9 @@ +ಸುಪ್ರೀಂ ಕೋರ್ಟ್‍ನಲ್ಲೀಗ ಮೂವರು ದಲಿತ ನ್ಯಾಯಮೂರ್ತಿಗಳು +ನವದೆಹಲಿ,ಜ.20- ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರಿಗೆ ಬಡ್ತಿ ನೀಡಲು ಶಿಫಾರಸು ಮಾಡಿದೆ. ಹೀಗಾಗಿ ಸುಪ್ರೀಂ ಕೋರ್ಟ್‍ಗೆ ಮತ್ತೊಬ್ಬ ನ್ಯಾಯಾೀಧಿಶರು ಸಿಗುವ ಸಾಧ್ಯತೆ ಇದೆ. +ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರ ನೇಮಕಾತಿ ದೃಢಪಟ್ಟರೆ ನ್ಯಾಯಮೂರ್ತಿ ವರಾಳೆ ಅವರು ಸುಪ್ರೀಂ ಕೋರ್ಟ್‍ನಲ್ಲಿ ಮೂರನೇ ದಲಿತ ನ್ಯಾಯಮೂರ್ತಿಯಾಗಲಿದ್ದಾರೆ. ಈಗಾಗಲೇ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಅವರು ಸುಪ್ರೀಂ ಕೋರ್ಟ್‍ನಲ್ಲಿ ಇರುವ ಇಬ್ಬರು ದಲಿತ ನ್ಯಾಯಮೂರ್ತಿಗಳಾಗಿದ್ದಾರೆ. +ಅಂದಹಾಗೆ ಸುಪ್ರೀಂ ಕೋರ್ಟ್‍ನಲ್ಲಿ ಮೂವರು ದಲಿತ ನ್ಯಾಯಮೂರ್ತಿಗಳು ಇರುವುದು ಇದೇ ಮೊದಲು. ನ್ಯಾಯಮೂರ್ತಿ ಗವಾಯಿ ಅವರು ಮೇ ತಿಂಗಳಿಂದ ನವೆಂಬರ್ 2025 ರವರೆಗೆ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿರುತ್ತಾರೆ. 61 ವರ್ಷದ ನ್ಯಾಯಮೂರ್ತಿ ವರಾಳೆ ಅವರು ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಮರಾಠವಾಡ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಅವರು ಎರಡು ದಶಕಗಳಿಗೂ ಹೆಚ್ಚು ಕಾಲ ಸಿವಿಲ್, ಕ್ರಿಮಿನಲ್, ಕಾರ್ಮಿಕ ಮತ್ತು ಆಡಳಿತ ವಿಷಯಗಳಲ್ಲಿ ಪ್ರತ್ಯೇಕವಾಗಿ ಕಾನೂನು ಅಭ್ಯಾಸ ಮಾಡಿದ್ದಾರೆ. +ನ್ಯಾಯಮೂರ್ತಿ ವರಾಳೆ ಅವರು ಈ ಹಿಂದೆ ಬಾಂಬೆ ಹೈಕೋರ್ಟ್‍ನಲ್ಲಿ ನ್ಯಾಯಾೀಧಿಶರಾಗಿದ್ದರು. ಅವರು ಅಕ್ಟೋಬರ್ 2022 ರಲ್ಲಿ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಪ್ರಸ್ತುತ ಹೈಕೋರ್ಟ್‍ನ ಅತ್ಯಂತ ಹಿರಿಯ ನ್ಯಾಯಾೀಧಿಶರು ಮತ್ತು ಪರಿಶಿಷ್ಟ ಜಾತಿಯಿಂದ ಬಂದಿರುವ ಏಕೈಕ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. +ಪ್ರಾಣ ಪ್ರತಿಷ್ಠೆವರೆಗೆ ರಾಮಲಲ್ಲಾನ ಕಣ್ಣು ಅಗೋಚರವಾಗಿರಲಿದೆ +ಕಳೆದ ತಿಂಗಳು ರಾಜೀನಾಮೆ ನೀಡಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರ ಸ್ಥಾನಕ್ಕೆ ಜಸ್ಟಿಸ್ ವರಾಲೆ ನೇಮಕಗೊಂಡಿದ್ದಾರೆ. ಅವರ ನೇಮಕಾತಿಯ ನಂತರ ಸರ್ವೋಚ್ಚ ನ್ಯಾಯಾಲಯವು 34 ನ್ಯಾಯಾೀಧಿಶರ ಸಂಪೂರ್ಣ ಮಂಜೂರಾತಿಯ ಸಾಮಥ್ರ್ಯದಲ್ಲಿ ಕಾರ್ಯನಿರ್ವಹಿಸುತ್ತದೆ. ಈ ತಿಂಗಳ ಆರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ನಾಲ್ಕು ಹೈಕೋರ್ಟ್‍ಗಳಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಐವರನ್ನು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್‍ಗಳಿಂದ ಇತರ ಇಬ್ಬರನ್ನು ಶಾಶ್ವತ ನೇಮಕಾತಿಗಾಗಿ ಶಿಫಾರಸು ಮಾಡಿದೆ. +ಕೊಲಿಜಿಯಂ ವ್ಯವಸ್ಥೆಯ ಮೂಲಕ ನ್ಯಾಯಾೀಧಿಶರ ನೇಮಕವು ನ್ಯಾಯಾಲಯ ಮತ್ತು ಕೇಂದ್ರ ಸರ್ಕಾರದ ನಡುವೆ ಆಗಾಗ್ಗೆ ನಡೆಯುವ ಸಂಘರ್ಷಕ್ಕೂ ಕಾರಣವಾಗಿದೆ ಅನ್ನೋದು ಗಮನಾರ್ಹ. ನ್ಯಾಯಾೀಧಿಶರ ಆಯ್ಕೆಯಲ್ಲಿ ಪಾರದರ್ಶಕತೆಯ ಕೊರತೆಯ ದೂರುಗಳು ಸೇರಿದಂತೆ ಕೊಲಿಜಿಯಂ ವ್ಯವಸ್ಥೆಯು ವಿವಿಧ ವಲಯಗಳಿಂದ ಟೀಕೆಗೆ ಒಳಗಾಗಿದೆ. ವಿಶೇಷವಾಗಿ ನ್ಯಾಯಾೀಧಿಶರ ನೇಮಕಾತಿಯಲ್ಲಿ ತಾವು ಮೂಗು ತೂರಿಸಿಕೊಳ್ಳಲಾಗದೆ ರಾಜಕೀಯ ವಲಯದಿಂದ ಟೀಕೆಗೆ ಒಳಗಾಗುತ್ತದೆ ಅನ್ನೋದು ಗಮನಾರ್ಹ. +ಜನವರಿ 1 ರಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಾೀಶರ ನೇಮಕಾತಿಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕೈಗೊಂಡಿದ್ದರು. ಅನೇಕ ಕಾರಣಗಳಿಂದಾಗಿ ಕೊಲಿಜಿಯಂನ ಚರ್ಚೆಗಳನ್ನು ಸಾರ್ವಜನಿಕ ಡೊಮೇನ್‍ನಲ್ಲಿ ಇರಿಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಹೇಳಿದ್ದರು. \ No newline at end of file diff --git a/eesanje/url_47_184_11.txt b/eesanje/url_47_184_11.txt new file mode 100644 index 0000000000000000000000000000000000000000..5df9b3a1875b134e0d06a1a9a2228e1591fde096 --- /dev/null +++ b/eesanje/url_47_184_11.txt @@ -0,0 +1,8 @@ +ಪ್ರಾಣ ಪ್ರತಿಷ್ಠೆವರೆಗೆ ರಾಮಲಲ್ಲಾನ ಕಣ್ಣು ಅಗೋಚರವಾಗಿರಲಿದೆ +ಅಯೋಧ್ಯೆ, ಜ.20- ಪ್ರಾಣ ಪ್ರತಿಷ್ಠಾಕ್ಕೂ ಮೊದಲು ರಾಮಲಲ್ಲಾ ಮೂರ್ತಿಯ ಕಣ್ಣುಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ತಿಳಿಸಿದ್ದಾರೆ. ಜನವರಿ 22 ರಂದು ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾ ನಡೆಯಲಿದೆ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿದ ದೇವರ ವಿಗ್ರಹವನ್ನು ದೇವಾಲಯದ ಗರ್ಭಗುಡಿಯಲ್ಲಿ ಇರಿಸಲಾಗಿದೆ ಹಾಗೂ ಮುಸುಕಿನಿಂದ ಮುಚ್ಚಲ್ಪಟ್ಟಿದೆ. ವಿಗ್ರಹದ ಮೊದಲ ಫೋಟೋವನ್ನು ಗರ್ಭಗುಡಿಯಲ್ಲಿ ಇರಿಸುವ ಸಮಾರಂಭದಲ್ಲಿ ಬಹಿರಂಗಪಡಿಸಲಾಗಿತ್ತು. ಆದಾಗ್ಯೂ, ರಾಮ್ ಲಲ್ಲಾ ವಿಗ್ರಹವು ಅವರ ಕಣ್ಣುಗಳನ್ನು ತೋರಿಸುವ ಚಿತ್ರಗಳು ಅಂತರ್ಜಾಲದಲ್ಲಿ ಕಾಣಿಸಿಕೊಂಡಿವೆ. +ಪ್ರಾಣ ಪ್ರತಿಷ್ಠೆ ಪೂರ್ಣಗೊಳ್ಳುವ ಮೊದಲು ಭಗವಾನ್ ರಾಮನ ವಿಗ್ರಹದ ಕಣ್ಣುಗಳನ್ನು ಬಹಿರಂಗಪಡಿಸಲಾಗುವುದಿಲ್ಲ, ಭಗವಾನ್ ರಾಮನ ಕಣ್ಣುಗಳು ಕಾಣುವ ವಿಗ್ರಹವು ನಿಜವಾದ ವಿಗ್ರಹವಲ್ಲ, ಕಣ್ಣುಗಳನ್ನು ನೋಡಬಹುದಾದರೆ, ಕಣ್ಣುಗಳನ್ನು ಯಾರು ಬಹಿರಂಗಪಡಿಸಿದ್ದಾರೆ ಮತ್ತು ವಿಗ್ರಹದ ಚಿತ್ರಗಳು ಹೇಗೆ ವೈರಲ್ ಆಗುತ್ತಿವೆ ಎಂಬುದರ ಕುರಿತು ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. +ಎಲ್ಲಾ ಪ್ರಕ್ರಿಯೆಗಳನ್ನು ಎಂದಿನಂತೆ ನಡೆಸಲಾಗುವುದು. ಆದರೆ, ಪ್ರಾಣ ಪ್ರತಿಷ್ಠಾದವರೆಗೂ ರಾಮ್ ಲಲ್ಲಾ ಅವರ ಕಣ್ಣುಗಳು ಬಹಿರಂಗಗೊಳ್ಳುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ರಾಮ ಲಲ್ಲಾನ ಗುಡಿಯ ವಿಗ್ರಹವನ್ನು ದೇವಸ್ಥಾನಕ್ಕೆ ಕೊಂಡೊಯ್ಯುವ ವಿಧಾನಗಳ ಕುರಿತು ಅವರು ಮಾತನಾಡಿದರು. +ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ +ದೇವಸ್ಥಾನದ ಗರ್ಭಗುಡಿಯಲ್ಲಿ ಇದನ್ನು ಸ್ಥಾಪಿಸಲಾಗುವುದು, ಅಲ್ಲಿ ಹೊಸ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುತ್ತದೆ. ಇದಕ್ಕೆ ಯಾವುದೇ ಶುಭ ಮುಹೂರ್ತವೂ ಇಲ್ಲ. ಹೊಸದನ್ನು ಮಾಡಬೇಕಾದಾಗ ಒಂದು ಶುಭ ಮುಹೂರ್ತವನ್ನು ಮುನ್ಸೂಚಿಸಲಾಗುತ್ತದೆ. ಇದು ಒಂದು ಕಾರ್ಯವಿಧಾನವಾಗಿದೆ ಎಂದು ಅವರು ಹೇಳಿದರು. +ದೇವಸ್ಥಾನಕ್ಕೆ ವಿಗ್ರಹವನ್ನು ಯಾರು ಒಯ್ಯುತ್ತಾರೆ ಎಂಬುದು ಪ್ರಶ್ನೆಯಾಗಿದೆ. ಈ ಹಿಂದೆ ಮುಖ್ಯಮಂತ್ರಿಗಳು ಟೆಂಟ್‍ನಿಂದ ತಾತ್ಕಾಲಿಕವಾಗಿ ನಿರ್ಮಿಸಲಾದ ದೇವಾಲಯಕ್ಕೆ ವಿಗ್ರಹವನ್ನು ಕೊಂಡೊಯ್ದರು. ಸಿಎಂ ಯೋಗಿ ಅವರೇ ಮೂರ್ತಿಯನ್ನು ದೇವಸ್ಥಾನಕ್ಕೆ ಕೊಂಡೊಯ್ಯಬಹುದು ಎಂದು ಹೇಳಿದರು. +1992 ರಲ್ಲಿ, ಕರಸೇವಕರು ಬಾಬರಿ ಮಸೀದಿಯನ್ನು ಕೆಡವಿದಾಗ, ಅವರು ಧ್ವಂಸಗೊಂಡ ಸ್ಥಳದಲ್ಲಿ ಟೆಂಟ್‍ನಲ್ಲಿ ರಾಮ ಲಲ್ಲಾನ ಸಣ್ಣ ವಿಗ್ರಹವನ್ನು ಸ್ಥಾಪಿಸಿದರು ಮತ್ತು ಅದನ್ನು ಪೂಜಿಸಲು ಪ್ರಾರಂಭಿಸಿದರು. ಶ್ರೀರಾಮ ಲಲ್ಲಾನ ಡೇರೆ ವಿಗ್ರಹದ ಇತಿಹಾಸವು 1949 ರಲ್ಲಿ ಕೆಲವು ಹಿಂದೂ ನಾಯಕರು ಬಾಬರಿ ಮಸೀದಿಯೊಳಗೆ ವಿಗ್ರಹವನ್ನು ಇರಿಸಿದಾಗ ಹಿಂದಿನದು. ನಂತರ ಮಸೀದಿಯಲ್ಲಿಯೇ ಭಗವಂತ ಕಾಣಿಸಿಕೊಂಡನೆಂದು ಹೇಳಲಾಗಿತ್ತು. \ No newline at end of file diff --git a/eesanje/url_47_184_12.txt b/eesanje/url_47_184_12.txt new file mode 100644 index 0000000000000000000000000000000000000000..29ccbcfbdc45a4d49f95607601524e48dda39322 --- /dev/null +++ b/eesanje/url_47_184_12.txt @@ -0,0 +1,7 @@ +ಮೈಥಿಲಿ ಹಾಡಿದ ಶಬರಿ ಹಾಡಿಗೆ ಮೋದಿ ಫಿದಾ +ನವದೆಹಲಿ,ಜ.20- ಶ್ರೀರಾಮನ ವನವಾಸದ ಸಮಯದಲ್ಲಿ ಅರ್ಧ ತಿಂದ ಹಣ್ಣನ್ನು ಅರ್ಪಿಸಿದ ಶಬರಿ ಮಾತೆ ಕುರಿತಂತೆ ಬಿಹಾರ ಮೂಲದ ಗಾಯಕಿ ಮೈಥಿಲಿ ಠಾಕೂರ್ ಹಾಡಿರುವ ಹಾಡಿಗೆ ಪ್ರಧಾನಿ ನರೇಂದ್ರ ಮೋದಿ ಫೀದಾ ಆಗಿದ್ದಾರೆ. ಮೈಥಿಲಿ ಬರೆದಿರುವ ಹಾಡಿಗೆ ಪ್ರಶಂಸೆ ವ್ಯಕ್ತಪಡಿಸಿರುವ ಪ್ರಧಾನಿಗಳು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ದೇಶದ ಜನರಿಗೆ ಭಗವಾನ್ ರಾಮನ ಜೀವನಕ್ಕೆ ಸಂಬಂಧಿಸಿದ ಘಟನೆಗಳನ್ನು ನೆನಪಿಸುತ್ತಿದೆ ಎಂದು ಎಕ್ಸ್‍ನಲ್ಲಿನ ಪೋಸ್ಟ್ ಮಾಡಿದ್ದಾರೆ. + . .#://./://./Qt8w4qMaDY… +ಅಯೋಧ್ಯೆಯಲ್ಲಿನ ಪ್ರಾಣ ಪ್ರತಿಷ್ಠೆಯ ಸಂದರ್ಭವು ಭಗವಾನ್ ಶ್ರೀರಾಮನ ಜೀವನ ಮತ್ತು ಆದರ್ಶಗಳಿಗೆ ಸಂಬಂಧಿಸಿದ ಪ್ರತಿಯೊಂದು ಘಟನೆಯನ್ನು ದೇಶಾದ್ಯಂತ ನನ್ನ ಕುಟುಂಬ ಸದಸ್ಯರಿಗೆ ನೆನಪಿಸುತ್ತಿದೆ. ಅಂತಹ ಒಂದು ಭಾವನಾತ್ಮಕ ಘಟನೆ ಶಬರಿಗೆ ಸಂಬಂಧಿಸಿದೆ. ಮೈಥಿಲಿ ಠಾಕೂರ್ ಜಿ ಅದನ್ನು ಹೇಗೆ ಹಾಡಿದ್ದಾರೆ ಎಂಬುದನ್ನು ಆಲಿಸಿ ಎಂದು ಅವರು ದೇಶವಾಸಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. +ಪನ್ನುನ್ ಹತ್ಯೆ ಸಂಚಿನ ಆರೋಪಿ ನಿಖಿಲ್‍ಗುಪ್ತಾ ಹಸ್ತಾಂತರಕ್ಕೆ ಜೆಕ್ ನ್ಯಾಯಾಲಯ ಸಮ್ಮತಿ +ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠಾ ಮತ್ತು ಅವಸರ ದೇಶಭರ್ ಅವರು ಪರಿವಾರದವರಿಗೆ ಪ್ರಭುಗಳು ಶೋಂ ಸೆ ಜುಡೇ ಏಕ-ಒಂದು ಪ್ರಸಂಗ ಕಾ ಸ್ಮರಣ ಕರ ರಹಾ ಹೇ. ಏಸಾ ಹೀ ಒಂದು ಭಾವುಕ ಪ್ರಸಂಗ ಶಬರಿ ಸೆ ಜುಡಾ ಹೈ. ಸುನಿಯೇ, ಮೈಥಿಲಿ ಠಾಕುರ್ ಜೀ ನೆ ಕಿಸ್ ತರಹ ಸೆ ಇಸೆ ಅಪನೇ ಸುಮಧುರ್ ಸುರೋಂ ಮೆಂ ಪಿರೋಯಾ ಎಂದು ಅವರು ಬರೆದುಕೊಂಡಿದ್ದಾರೆ. +ಬಿಹಾರದ ಬೇನಿಪಟ್ಟಿಯಲ್ಲಿ ಜನಿಸಿದ ಮೈಥಿಲಿ ಠಾಕೂರ್ ಅವರು ಹಿಂದಿ, ಭೋಜ್‍ಪುರಿ ಮತ್ತು ಮೈಥಿಲಿಯಂತಹ ವಿವಿಧ ಭಾಷೆಗಳಲ್ಲಿ ಹಾಡುಗಳನ್ನು ಹಾಡಲು ಹೆಸರುವಾಸಿಯಾಗಿದ್ದಾರೆ. \ No newline at end of file diff --git a/eesanje/url_47_184_2.txt b/eesanje/url_47_184_2.txt new file mode 100644 index 0000000000000000000000000000000000000000..6ccfcbab9fb4297356ebaa971c14c83643a96462 --- /dev/null +++ b/eesanje/url_47_184_2.txt @@ -0,0 +1,5 @@ +ಅಯೋಧ್ಯೆಯ ರಾಮಮಂದಿರದ ಉಪಗ್ರಹ ಚಿತ್ರ ಬಿಡುಗಡೆ ಮಾಡಿದ ಇಸ್ರೋ +ಬೆಂಗಳೂರು, ಜ.21- ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮಮಂದಿರದ ಬಾಹ್ಯಾಕಾಶದ ನೋಟವನ್ನು ಹೈದರಾಬಾದ್ ಮೂಲದ ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಬಿಡುಗಡೆ ಮಾಡಿದೆ. +ಭಾರತೀಯ ರಿಮೋಟ್ ಸೆನ್ಸಿಂಗ್ ಉಪಗ್ರಹದಿಂದ ತೆಗೆದುಕೊಳ್ಳಲಾಗಿದೆ, ಭಾನುವಾರ ಇಸ್ರೋ ಹಂಚಿಕೊಂಡ ಚಿತ್ರವು ಜನವರಿ 22ರಂದು ಉದ್ಘಾಟನೆಗೊಳ್ಳಲಿರುವ ಭವ್ಯವಾದ ಹೊಸ ದೇವಾಲಯವನ್ನು ತೋರಿಸುತ್ತದೆ.ಕಳೆದ ವರ್ಷ ಡಿ.16ರಂದು ತೆಗೆದ ಚಿತ್ರವು ದಶರಥ್ ಮಹಲ್, ಅಯೋಧ್ಯೆ ರೈಲು ನಿಲ್ದಾಣ ಮತ್ತು ಧಾರ್ಮಿಕ ಸರಯೂ ನದಿಯನ್ನು ಸಹ ತೋರಿಸುತ್ತದೆ. +ದುನಿಯಾ ವಿಜಯ್ ಹುಟ್ಟುಹಬ್ಬಕ್ಕೆ VK29 ಪೋಸ್ಟರ್ ಗಿಫ್ಟ್ +ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರ ಸಮ್ಮುಖದಲ್ಲಿ ವೈದಿಕ ಸ್ತೋತ್ರಗಳ ನಡುವೆ ನಾಳೆ ಮಹಾಮಸ್ತಕಾಭಿಷೇಕ ನಡೆಯಲಿದೆ. \ No newline at end of file diff --git a/eesanje/url_47_184_3.txt b/eesanje/url_47_184_3.txt new file mode 100644 index 0000000000000000000000000000000000000000..4eaea5da6ed53e252a1c69403149e4466fea0b33 --- /dev/null +++ b/eesanje/url_47_184_3.txt @@ -0,0 +1,7 @@ +ರಾಮೋತ್ಸವಕ್ಕೆ ರಜೆ ಘೋಷಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಸರ್ಕಾರ +ಶಿಮ್ಲಾ,ಜ.21- ಶ್ರೀರಾಮಜನ್ಮಭೂಮಿ ಅಯೋಧ್ಯೆಯ ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಹಿಮಾಚಲ ಪ್ರದೇಶ ಸರ್ಕಾರ ಒಂದು ದಿನದ ರಜೆ ಘೋಷಣೆ ಮಾಡಿದೆ. ನಾಳೆ ನಡೆಯಲಿರುವ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಿಜೆಪಿ ಆಡಳಿತದ ಬಹುತೇಕ ರಾಜ್ಯಗಳು ಒಂದು ದಿನದ ಸರ್ಕಾರಿ ರಜೆ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಅರ್ಧ ದಿನ ರಜೆ ನೀಡಿದೆ. ಬಿಜೆಪಿಯೇತರ ಆಡಳಿತದ ಸರ್ಕಾರಗಳು ಕೆಲವು ಕಡೆ ರಜೆ ನೀಡಿದರೆ, ಇನ್ನೂ ಕೆಲವೆಡೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ತಟಸ್ಥವಾಗಿವೆ. +ಈ ನಡುವೆ ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿನ ಸರ್ಕಾರ ರಜೆ ಘೋಷಣೆ ಮಾಡಿರುವುದು ಗಮನ ಸೆಳೆದಿದೆ. ಅಲ್ಲಿನ ಮುಖ್ಯ ಕಾರ್ಯದರ್ಶಿ ಪ್ರಬೋಧ್ ಸಕ್ಸೇನಾ ಇಂದು ಸರ್ಕಾರಿ ಆದೇಶ ಹೊರಡಿಸಿದ್ದು, ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳು, ಸರ್ಕಾರದ ಇಲಾಖೆಗಳು, ನಿಗಮ ಮಂಡಳಿಗಳಿಗೆ ರಜೆ ಘೋಷಿಸಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಅಥವಾ ವೀಕ್ಷಿಸಲು ಅನುಕೂಲವಾಗುವಂತೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ವ್ಯಾಪಕ ಒತ್ತಡ ಹೇರುತ್ತಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರು ಸಕಾರಾತ್ಮಕವಾಗಿ ಸ್ಪಂದಿಸದೆ ರಜೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. + 22 .../SYZuobwDb5 +ಕಾಂಗ್ರೆಸ್‍ನ ಎಐಸಿಸಿ ನಾಯಕರು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ತಿರಸ್ಕರಿಸಿದ ಬಳಿಕ ಕಾಂಗ್ರೆಸ್ ಆಡಳಿತದ ರಾಜ್ಯಗಳು ಸರ್ಕಾರಿ ರಜೆ ಘೋಷಿಸಲು ಹಿಂದೆಮುಂದೆ ನೋಡುತ್ತಿವೆ. ಇಂತಹ ಸಂಕೀರ್ಣದ ಸಂದರ್ಭದಲ್ಲಿ ಹಿಮಾಚಲ ಪ್ರದೇಶ ಸರ್ಕಾರದ ಆದೇಶ ಗಮನ ಸೆಳೆದಿದೆ. \ No newline at end of file diff --git a/eesanje/url_47_184_4.txt b/eesanje/url_47_184_4.txt new file mode 100644 index 0000000000000000000000000000000000000000..152840aeba2cf4a60ec9665fa02ddb514cb396e2 --- /dev/null +++ b/eesanje/url_47_184_4.txt @@ -0,0 +1,5 @@ +ಪತ್ನಿ ಕೊಂದ ಹೋಟೆಲ್ ಮ್ಯಾನೇಜರ್ ಬಂಧನ +ಗೋವಾ,ಜ.21- ಒಂದು ವರ್ಷದ ಹಿಂದಷ್ಟೇ ಕೈಹಿಡಿದಿದ್ದ ಪತ್ನಿಯನ್ನು ಸಮುದ್ರಕ್ಕೆ ತಳ್ಳಿ ಸಾಯಿಸಿ ನಾಟಕವಾಡಿದ್ದ ಇಲ್ಲಿನ ಪ್ರತಿಷ್ಠಿತ ಹೋಟೆಲ್‍ನ ಮ್ಯಾನೇಜರ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಕಟಿಯಾರ್‍ಬಂತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಪತ್ನಿಯನ್ನು ಸಮುದ್ರದಲ್ಲಿ ಮುಳುಗಿಸಿ ಕೊಂದು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಈತನ ಕುತಂತ್ರ ಬೆಳಕಿಗೆ ಬಂದಿದೆ.ಕಳೆದ 1 ವರ್ಷದ ಹಿಂದೆ ದೀಕ್ಷಾ ಎಂಬಾಕೆಯನ್ನು ವಿವಾಹ ವಾಗಿದ್ದ ಗಂಗ್ವಾರ್ ಕೆಲ ತಿಂಗಳ ಹಿಂದೆ ಬೇರೊಬ್ಬ ಮಹಿಳೆ ಜತೆ ಅನೈತಿಕ ಸಂಬಂಧಹೊಂದಿದ್ದ. +ನಮ್ಮ ಸಂಬಂಧಕ್ಕೆ ಪತ್ನಿ ಅಡ್ಡ ಬರುತ್ತಾಳೆ ಎಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ.ಕಳೆದ ಶುಕ್ರವಾರ ಮಧ್ಯಾಹ್ನ ಪೊಲೀಸರು ಮಹಿಳೆಯೊಬ್ಬರ ಶವವನ್ನು ಸಮುದ್ರ ತೀರದ ಬಳಿ ಪತ್ತೆಯಾಗಿತ್ತು. ದಕ್ಷಿಣ ಗೋವಾದ ಕೊಲ್ವಾದಲ್ಲಿ ಐಷಾರಾಮಿ ಹೋಟೆಲ್‍ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿ ಆರೋಪಿ ಲಕ್ನೋ ಮೂಲದವನಾಗಿದ್ದು ದೀಕ್ಷಾ ಅವರನ್ನು ಮದುವೆಯಾದ ನಂತರ ಅವರ ಸಂಬಂಧವು ಹಳಸಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು +ಕಟಿಗೌರವ್ ತನ್ನ ಪತ್ನಿಯನ್ನು ದಕ್ಷಿಣ ಗೋವಾದ ಕಡಲತೀರ ಕಾಬೋ ಡಿ ರಾಮಾ ಬೀಚ್‍ನಲ್ಲಿ ವಿಹಾರಕ್ಕೆ ಕರೆದೊಯ್ದನು, ಅಲ್ಲಿ ಆಕೆಯನ್ನು ಸಮುದ್ರಕ್ಕೆ ತಳ್ಳಿ ಹತ್ಯೆ ಮಾಡಿ ನಂತರ ಏನು ತಿಳಿಯದಂತೆ ವಾಪಸ್ ಆಗಿದ್ದ ಬೀಚ್‍ನಿಂದ ಬರುವಾಗ ಆತನ ವರ್ತನೆ ಕಂಡು ಕೆಲ ಪ್ರವಾಸಿಗರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. \ No newline at end of file diff --git a/eesanje/url_47_184_5.txt b/eesanje/url_47_184_5.txt new file mode 100644 index 0000000000000000000000000000000000000000..5498d97b6dea8de5e6d947461d2ee8eb903a579c --- /dev/null +++ b/eesanje/url_47_184_5.txt @@ -0,0 +1,7 @@ +ರಾಮಸೇತು ಅರಿಚಲಮುನೈನಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ +ರಾಮೇಶ್ವರಂ , ಜ 21- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ದಕ್ಷಿಣ ತುದಿಯಾದ ಅರಿಚಲಮುನೈಗೆ ಭೇಟಿ ನೀಡಿ ಸಮುದ್ರ ತೀರದಲ್ಲಿ ಪುಷ್ಪ ನಮನ ಸಲ್ಲಿಸಿದರು. ಪ್ರಧಾನಿ ಅಲ್ಲಿ ಪ್ರಾಣಾಯಾಮ (ಉಸಿರಾಟದ ವ್ಯಾಯಾಮ) ಕೂಡ ಮಾಡಿದರು. ಸಮುದ್ರದ ನೀರನ್ನು ಬಳಸಿ ಪ್ರಾರ್ಥನೆಯನ್ನೂ ಸಲ್ಲಿಸಿದರು. ರಾತ್ರಿ ರಾಮೇಶ್ವರಂನಲ್ಲಿ ತಂಗಿದ್ದ ಮೋದಿ ಅವರು ರಾಮಸೇತು ನಿರ್ಮಿಸಿದ ಸ್ಥಳ ಎನ್ನಲಾದ ಅರಿಚಲಮುನೈಗೆ ತೆರಳಿದರು. + : , .../Cy86FtwyBB +ಧರ್ಮದ ವಿಚಾರಗಳು ಪ್ರಚಾರದ ಸರಕುಗಳಲ್ಲ : ಡಿಕೆಶಿ ತಿರುಗೇಟು +ರಾಮಸೇತುವನ್ನು ಆಡಮ್ ಸೇತುವೆ ಎಂದೂ ಕರೆಯುತ್ತಾರೆ ಇದನ್ನು ರಾವಣನ ವಿರುದ್ಧ ಯುದ್ಧ ಮಾಡಲು ಲಂಕಾಕ್ಕೆ ಪ್ರಯಾಣಿಸಲು ವಾನರ ಸೇನೆಯ ಸಹಾಯದಿಂದ ಶ್ರೀರಾಮನು ನಿರ್ಮಿಸಿದನೆಂದು ಹೇಳಲಾಗುತ್ತದೆ. +#| : , .../ +ಕಡಲತೀರದಲ್ಲಿ ಪುಷ್ಪಾರ್ಚನೆ ಮಾಡಿ ನಂತರ ರಾಷ್ಟ್ರೀಯ ಲಾಂಛನದೊಂದಿಗೆ ಅಲ್ಲಿ ನಿರ್ಮಿಸಲಾದ ಸ್ತಂಭಕ್ಕೆ ಪುಷ್ಪ ನಮನ ಸಲ್ಲಿಸಿದರು.ನಿನ್ನೆ ಅವರು ಶ್ರೀರಂಗಂ ಮತ್ತು ರಾಮೇಶ್ವರಂನಲ್ಲಿರುವ ಶ್ರೀರಂಗನಾಥಸ್ವಾಮಿ ಮತ್ತು ಅರುಲ್ಮಿಗು ರಾಮನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರು. \ No newline at end of file diff --git a/eesanje/url_47_184_6.txt b/eesanje/url_47_184_6.txt new file mode 100644 index 0000000000000000000000000000000000000000..9f2f7b56b73c89c874e090c6274d2fd41d247a92 --- /dev/null +++ b/eesanje/url_47_184_6.txt @@ -0,0 +1,8 @@ +ವಿಶ್ವದ ಚಿತ್ತ ಅಯೋಧ್ಯೆ ರಾಮನತ್ತ +ಅಯೋಧ್ಯೆ,ಜ.21- ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗಾಗಿ ಸಕಲ ರೀತಿಯಲ್ಲಿ ಸಜ್ಜುಗೊಂಡು ಝಗಮಗಿಸುತ್ತಿರುವ ಅಯೋಧ್ಯೆಯತ್ತ ಇಡೀ ದೇಶವಷ್ಟೇ ಅಲ್ಲ ವಿಶ್ವದ ಚಿತ್ತ ನೆಟ್ಟಿದೆ. ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳ ಕೋಟಿಕೋಟಿ ರಾಮಭಕ್ತರು ಕಾತುರದಿಂದ ಎದುರು ನೋಡುತ್ತಿದ್ದಾರೆ. +ಅಯೋಧ್ಯೆ ಮಧುವಣಗಿತ್ತಿಯಂತೆ ಶೃಂಗಾರಗೊಂಡಿದೆ. ರಾಮನ ಎತ್ತರೆತ್ತರದ ಕಟೌಟುಗಳು ರಾರಾಜಿಸುತ್ತಿವೆ. ಅಯೋಧ್ಯೆಯಾದ್ಯಂತ ರಾಮನ ವೈಭವ ಮನೆಮಾಡಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷಬೇಧ ಮರೆತ ಜನ ಅಯೋಧ್ಯೆಯತ್ತ ದಾಂಗುಡಿ ಇಟ್ಟಿದ್ದಾರೆ. +ನಾಳಿನ ಕ್ಷಣವನ್ನು ಕಣ್ತುಂಬಿಕೊಳ್ಳಲು ಅಯೋಧ್ಯೆಯಲ್ಲಿ ದೊಡ್ಡ ದೊಡ್ಡ ಎಲ್‍ಇಡಿ ಸ್ಕ್ರೀನ್‍ಗಳನ್ನು ಅಳವಡಿಸಲಾಗಿದೆ. ದೂರದ ಅಮೆರಿಕ, ಇಂಗ್ಲೆಂಡ್, ಬ್ರಿಟನ್, ಆಸ್ಟ್ರೇಲಿಯಾ, ಆಫ್ರಿಕಾ, ಕಾಂಬೋಡಿಯಾ ಸೇರಿದಂತೆ ನೂರಾರು ದೇಶಗಳಲ್ಲೂ ಕೂಡ ರಾಮೋತ್ಸವದ ಸಡಗರ ಮನೆಮಾಡಿದೆ. ಅಯೋಧ್ಯೆಗೆ ಬರುವ ಭಕ್ತರನ್ನು ಸ್ವಾಗತಿಸಲು ಸ್ವಯಂಸೇವಕರು ಸಜ್ಜಾಗಿದ್ದಾರೆ. ಎಲ್ಲೆಡೆ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ರಾಮ ಪಟ್ಟಾಭಿಷೇಕ ಮಹೋತ್ಸವದ ಗತವೈಭವದ ನೆನಪುಗಳು ಈ ಕಲಿಯುಗದಲ್ಲಿಮರುಕಳಿಸುತ್ತಿವೆ. ರಾಮನ ಸ್ವಾಗತಕ್ಕೆ ಅಂದು ವೈಭವದ ಸಿದ್ಧತೆ ನಡೆಸಿದಂತೆಯೇ ಇಂದೂ ಕೂಡ ಜನ ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. +ರಾಜಕಾರಣಿಗಳ ಪೋಸ್ಟರ್‍ಗಳು ಒಂದೆಡೆ ರಾರಾಜಿಸುತ್ತಿದ್ದರೆ ಸಾಧು ಸಂತರು ಸೇರಿದಂತೆ ಎಲ್ಲಾ ಪೋಸ್ಟರ್‍ಗಳೂ ಕೂಡ ಅಯೋಧ್ಯೆಯಲ್ಲಿ ಕಂಗೊಳಿಸುತ್ತಿವೆ. ರಸ್ತೆಯುದ್ದಕ್ಕೂ ರಂಗೋಲಿಗಳನ್ನು ಹಾಕಿ ಜನ ರಾಮನ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ತಳಿರು-ತೋರಣ ಝಗಮಗಿಸುವ ವಿದ್ಯುತ್ ದೀಪಗಳ ಅಲಂಕಾರದಿಂದ ಶೃಂಗರಿಸಲಾಗಿದೆ. +ಒಟ್ಟಾರೆ ರಾಮರಾಜ್ಯವೇ ಅಯೋಧ್ಯೆಗೆ ಇಳಿದುಬಂದಂತಹ ವೈಭವ ಉಂಟಾಗಿದೆ. ಅಯೋಧ್ಯೆಗೆ ಬರುವ ಭಕ್ತರೆಲ್ಲರಿಗೂ ದಾಸೋಹದ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ. ದಿನದ 24 ಗಂಟೆಯೂ ಕೂಡ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನೂತನ ರಾಮಮಂದಿರವಂತೂ ಎಲ್ಲರ ಕಣ್ಮನ ಸೆಳೆಯುತ್ತಿದೆ. ನೂರಾರು ಬಗೆಬಗೆಯ ಹೂಗಳಿಂದ ಝಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. +ದೇಶಾದ್ಯಂತ ನಾಡಿನ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲು ನೇರಪ್ರಸಾರದ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ಇಸ್ಕಾನ್, ಜೈನ ಧರ್ಮದ ಮಠಗಳು ವಿವಿಧ ಧಾರ್ಮಿಕ ಮಠದವರು ಬರುವ ಭಕ್ತಾದಿಗಳಿಗೆ ಅನ್ನ ದಾಸೋಹವನ್ನು ಏರ್ಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮನಾಮದ ಜಪ ಕೇಳಿಬರುತ್ತಿದೆ. ನಾಳೆ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿಯವರು ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರಾದ್ಯಂತ ಎರಡು ಸಾವಿರಕ್ಕೂ ಅಧಿಕ ಗಣ್ಯರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶೇಷ ಆಹ್ವಾನ ನೀಡಲಾಗಿದೆ. ಲಕ್ಷಾಂತರ ಕಾರ್ಯಕರ್ತರು, ಕರಸೇವಕರು, ಅಯೋಧ್ಯೆ ರಾಮಜನ್ಮಭೂಮಿಗಾಗಿ ಹೋರಾಟ ನಡೆಸಿದವರು ಈಗಾಗಲೇ ಅಯೋಧ್ಯೆಗೆ ಆಗಮಿಸಿ ರಾಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. +ನಾಳೆ ನಡೆಯಲಿರುವ ಕಾರ್ಯಕ್ರಮದಲ್ಲಿ ದೇಶ ಎಲ್ಲಾ ಜನರು ಪಾಲ್ಗೊಳ್ಳಲು ಸಾಧ್ಯವಾಗದಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ರಾಮನ ಸ್ಮರಣೆ ಮಾಡಿ, ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ದೀಪಗಳನ್ನು ಹಚ್ಚುವಂತೆ ಈಗಾಗಲೇ ಸೂಚನೆ ನೀಡಿ ಮಂತ್ರಾಕ್ಷತೆಯನ್ನು ಮನೆಮನೆಗೂ ವಿತರಿಸಲಾಗಿದೆ. ಒಟ್ಟಾರೆ ನಾಳಿನ ರಾಮೋತ್ಸವ ಐತಿಹಾಸಿಕ ದಾಖಲೆಗೆ ಸಾಕ್ಷಿಯಾಗಲಿದೆ. \ No newline at end of file diff --git a/eesanje/url_47_184_7.txt b/eesanje/url_47_184_7.txt new file mode 100644 index 0000000000000000000000000000000000000000..befdbe8626a7614415b29dfde32a37aefd382a6c --- /dev/null +++ b/eesanje/url_47_184_7.txt @@ -0,0 +1,7 @@ +ಮಸೀದಿ, ದರ್ಗಾಗಳಲ್ಲಿ ರಾಮನಾಮ ಜಪಿಸಿ ದೀಪ ಬೆಳಗಿಸಿ ಎಂದ ಮೌಲ್ವಿ ವಿಡಿಯೋ ವೈರಲ್ +ನವದೆಹಲಿ, ಜ.21- ಶ್ರೀರಾಮ್ ಜೈ ರಾಮ್ ಜೈ ಜೈ ರಾಮ್… ಎಲ್ಲರೂ ಮಸೀದಿ, ಮನೆಗಳ ಬಳಿ ದೀಪ ಹಚ್ಚಿ ಭಕ್ತಿಯಿಂದ ರಾಮನಾಮ ಜಪಿಸಿ… ಹೀಗೆ ಕರೆ ಕೊಟ್ಟವರು ಮುಸ್ಲಿಂ ಮೌಲ್ವಿಯೊಬ್ಬರು. ಅವರು ಆಡಿರುವ ಮಾತುಗಳ ವಿಡಿಯೋ ವೈರಲ್ ಆಗಿದ್ದು, ಮರ್ಯಾದಾ ಪುರುಷ ಆದರ್ಶ ಗುಣಗಳ ಶ್ರೀರಾಮಚಂದ್ರ ಎಲ್ಲರ ಆರಾಧ್ಯ ದೈವ. ನಮ್ಮ ಪೂರ್ವಿಕರು ರಾಮನನ್ನು ಪೂಜಿಸುತ್ತಿದ್ದರು. +ಅಯೋಧ್ಯೆಯ ರಾಮಜನ್ಮಸ್ಥಳದಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯ ವಿಧಾನಗಳ ನಡುವೆ ನಾವು ನಮ್ಮ ದರ್ಗಾಗಳಲ್ಲೂ ಕೂಡ ದೀಪ ಹಚ್ಚಿ ನಮಿಸೋಣ ಎಂದು ಭಾರತದಲ್ಲಿರುವ ಎಲ್ಲ ಮುಸಲ್ಮಾನರಿಗೂ ನಾನು ಮನವಿ ಮಾಡುತ್ತೇನೆ. +‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿಯ ‘ಕೆಟಿಎಂ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್ +ಮೊಘಲರ ಆಡಳಿತದ ವೇಳೆ ಅದೆಷ್ಟೋ ದೇವಸ್ಥಾನಗಳನ್ನು ಕೆಡವಲಾಗಿತ್ತು ಮತ್ತು ಮಸೀದಿಗಳನ್ನು ಕಟ್ಟಲಾಗಿದೆ. ಇದು ಸತ್ಯ ಘಟನೆಯಾಗಿದ್ದು, ಇದನ್ನು ಮರೆಮಾಚಬಾರದು. ಈಗ ಸಮಯ ಬಂದಿದೆ. + 🙏 #../Nm4h6G5LAX +ದೇವಾಲಯದ ಮೇಲೆ ಯಾವ ಯಾವ ಮಸೀದಿಗಳು ಇವೆಯೋ ಅವನ್ನು ಈಗ ನಾವೇ ಖುದ್ದಾಗಿ ತೆರವು ಮಾಡಿಕೊಡಬೇಕು. ಕೆಲವು ನಿಮ್ಮನ್ನು ತಡೆಯಬಹುದು. ಆದರೆ, ವಾಸ್ತವವನ್ನು ಅರಿಯಬೇಕು. ಶ್ರೀರಾಮನನ್ನು ಭಜಿಸುವ ಜತೆಗೆ ದೇವಾಲಯಗಳಿಗೆ ತೆರಳಿ ಭಕ್ತಿಯಿಂದ ದೀಪ ಹಚ್ಚಿ ಎಂದು ಕರೆ ನೀಡಿದ್ದಾರೆ. \ No newline at end of file diff --git a/eesanje/url_47_184_8.txt b/eesanje/url_47_184_8.txt new file mode 100644 index 0000000000000000000000000000000000000000..10c5ec4e1a2bdb628b026869632034490419fd33 --- /dev/null +++ b/eesanje/url_47_184_8.txt @@ -0,0 +1,8 @@ +ರಾಮಮಂದಿರ ದೇಣಿಗೆ ವಿವರ ನೀಡಿದ ಸಿಎಂ ಯೋಗಿ ಆದಿತ್ಯನಾಥ್ +ಅಯೋಧ್ಯೆ,ಜ.20- ಕಳೆದ ಕೆಲದಿನಗಳಿಂದ ಇಡೀ ದೇಶವೇ ಶ್ರೀರಾಮನ ಭಕ್ತಿಯಲ್ಲಿ ಮುಳುಗಿದೆ. ಜ.22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹದ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಈ ಮಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬಂದ ದೇಣಿಗೆಯ ಬಗ್ಗೆಯೂ ಜನರಲ್ಲಿ ಕುತೂಹಲ ಸೃಷ್ಟಿಸಿದೆ. +ಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಹರಿದು ಬರುತ್ತಿರುವ ದೇಣಿಗೆಯ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ ಹಣ ಎಲ್ಲಿಂದ ಬಂದಿತು? ಯಾವ್ಯಾವ ಮೂಲಗಳಿಂದ ದೇಣಿಗೆ ಹರಿದು ಬರುತ್ತಿದೆ? ಸರ್ಕಾರ ನೀಡಿದ ದೇಣಿಗೆ ಎಷ್ಟು? ಇನ್ನಿತರ ಕುರಿತಾದ ವಿಷಯಗಳಿಗೆ ಸಂಬಂಧಿಸಿದಂತೆ ಸಿಎಂ ಆದಿತ್ಯನಾಥ್ ವಿವರಣೆ ನೀಡಿದ್ದಾರೆ. +ಸಂದರ್ಶನವೊಂದರ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಪೋಸ್ಟ್ ಮಾಡಿ, ರಾಮ ಮಂದಿರಕ್ಕೆ ಬರುತ್ತಿರುವ ದೇಣಿಗೆಯ ಬಗ್ಗೆ ವಿವರಣೆ ನೀಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರಸೇವಕರು ತ್ಯಾಗ ಮಾಡಿದ್ದಾರೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಾರ್ಗದರ್ಶನ, ವಿಶ್ವ ಹಿಂದೂ ಪರಿಷತ್ತಿನ ನೇತೃತ್ವ ಮತ್ತು ಪೂಜ್ಯ ಸಂತರ ಆಶೀರ್ವಾದವಿದೆ. . +ಪ್ರಾಣ ಪ್ರತಿಷ್ಠೆವರೆಗೆ ರಾಮಲಲ್ಲಾನ ಕಣ್ಣು ಅಗೋಚರವಾಗಿರಲಿದೆ +ಆ ಚಳವಳಿಯಿಂದಾಗಿ ರಾಮಜನ್ಮಭೂಮಿಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದರಲ್ಲಿ ಸರ್ಕಾರ ಒಂದು ಪೈಸೆಯನ್ನೂ ನೀಡಿಲ್ಲ. ಕೇಂದ್ರ ಸರಕಾರವಾಗಲಿ, ರಾಜ್ಯ ಸರಕಾರವಾಗಲಿ ಹಣ ನೀಡಿಲ್ಲ. ಈ ಎಲ್ಲಾ ಹಣವನ್ನು ದೇಶಾದ್ಯಂತ, ಪ್ರಪಂಚದಾದ್ಯಂತದ ರಾಮ ಭಕ್ತರು ನೀಡಿದ್ದಾರೆ ಎಂದು ಹೇಳಿದ್ದಾರೆ. +ರಾಮ ಮಂದಿರದ ನಿರ್ಮಾಣಕ್ಕೆ ಸರ್ಕಾರ ಹಣ ನೀಡದಿದ್ದರೂ ಸಹ ಯಾವ ಕಾಮಗಾರಿಗೆ ಸರಕಾರ ಹಣ ಖರ್ಚು ಮಾಡುತ್ತಿದೆ ಎಂಬುದರ ಬಗ್ಗೆ ಸಿಎಂ ಆದಿತ್ಯನಾಥ್ ಸ್ಪಷ್ಟನೆ ನೀಡಿದ್ದಾರೆ. ರಾಮಮಂದಿರದ ಹೊರಭಾಗದ ಮೂಲಸೌಕರ್ಯಗಳಾದ ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ ನಿರ್ಮಾಣ, ಅತಿಥಿ ಗೃಹ ನಿರ್ಮಾಣ, ಕ್ರೂಸ್ ಸೇವೆ, ರಸ್ತೆ ಅಗಲೀಕರಣ, ವಾಹನ ನಿಲುಗಡೆ ಸೌಲಭ್ಯ ಮುಂತಾದವುಗಳಿಗೆ ಸರ್ಕಾರ ಹಣ ವ್ಯಯಿಸುತ್ತಿದೆ ಎಂದರು. +ರಾಮ ಮಂದಿರಕ್ಕೆ ದೇಶ ವಿದೇಶಗಳಿಂದ ಕೋಟ್ಯಂತರ ಜನರು ಉದಾರವಾಗಿ ದೇಣಿಗೆ ನೀಡುತ್ತಿದ್ದಾರೆ. ನಿರೀಕ್ಷೆಗೂ ಮೀರಿ ಅಯೋಧ್ಯೆ ರಾಮ ಮಂದಿರದ ಬ್ಯಾಂಕ್ ಖಾತೆಗೆ ಹಣ ಹರಿದು ಬರುತ್ತಿದ್ದು, ಪ್ರತಿ ತಿಂಗಳು ಅಯೋಧ್ಯೆ ರಾಮಮಂದಿರದ ಬ್ಯಾಂಕ್ ಖಾತೆಗೆ ಕೋಟ್ಯಂತರ ರೂಪಾಯಿ ದೇಣಿಗೆ ಬರುತ್ತಿದೆ. ಆದರೆ ಇದುವರೆಗೂ ಆನ್‍ಲೈನ್ ಮೂಲಕ ಬಂದ ದೇಣಿಗೆಗಳ ಎಣಿಕೆಯನ್ನು ಒಮ್ಮೆಯೂ ಮಾಡಲಾಗಿಲ್ಲ ಎಂಬುದು ಗಮನಾರ್ಹ. \ No newline at end of file diff --git a/eesanje/url_47_184_9.txt b/eesanje/url_47_184_9.txt new file mode 100644 index 0000000000000000000000000000000000000000..c3cc856383b7902e7ac653e4fc4cbaaf657b76fe --- /dev/null +++ b/eesanje/url_47_184_9.txt @@ -0,0 +1,8 @@ +ಅಯೋಧ್ಯೆಗೆ ತಿರುಪತಿಯಿಂದ 1 ಲಕ್ಷ ಲಡ್ಡು ರವಾನೆ +ತಿರುಪತಿ,ಜ.20- ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಗೆ ತಿರುಪತಿ ಲಡ್ಡು ಆಗಮನವಾಗಿದೆ. ತಿರುಮಲ ತಿರುಪತಿ ದೇವಸ್ಥಾನ ಒಂದು ಲಕ್ಷ ವಿಶ್ವವಿಖ್ಯಾತ ತಿರುಪತಿ ಲಡ್ಡುಗಳನ್ನು ಅಯೋಧ್ಯೆಗೆ ರವಾನಿಸಿದೆ. ತಿರುಪತಿ ವಿಮಾನ ನಿಲ್ದಾಣದಿಂದ ವಿಮಾನದಲ್ಲಿ ತಿರುಪತಿ ಲಡ್ಡುಗಳನ್ನು ರವಾನೆ ಮಾಡಲಾಗಿದೆ. ಲಡ್ಡು ಪ್ರಸಾದವನ್ನು ಜ. 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸುವ ಭಕ್ತರಿಗೆ ವಿತರಿಸಲಾಗುತ್ತದೆ. +ಈ ಪ್ರತಿ ಲಡ್ಡು ಸುಮಾರು 25 ಗ್ರಾಂ ತೂಗುತ್ತದೆ. ರಾಮಭಕ್ತರಿಗೆ ವಿತರಿಸಲು ಅವುಗಳನ್ನು ಅತ್ಯಂತ ಎಚ್ಚರಿಕೆಯಿಂದ ಪ್ಯಾಕ್ ಮಾಡಲಾಗಿದೆ. ಶ್ರೀವಾರಿ ಸೇವಕರು ಸುಮಾರು 350 ಬಾಕ್ಸ್‍ಗಳಲ್ಲಿ ಲಡ್ಡುಗಳನ್ನು ಪ್ಯಾಕ್ ಮಾಡಿದ್ದಾರೆ. ವಿಶೇಷ ವಿಮಾನದ ಮೂಲಕ ತಿರುಪತಿ ವಿಮಾನ ನಿಲ್ದಾಣದಿಂದ ನೇರವಾಗಿ ಅಯೋಧ್ಯೆಗೆ ಈ ಲಡ್ಡುಗಳನ್ನು ಕಳುಹಿಸಲಾಗಿದೆ. ಶ್ರೀವಾರಿ ಲಡ್ಡುಗಳನ್ನು ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ಗೆ ಹಸ್ತಾಂತರಿಸಲಾಗುವುದು. +ಐತಿಹಾಸಿಕ ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಸಂದರ್ಭದಲ್ಲಿ ತಿರುಪತಿ ಟ್ರಸ್ಟ್ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಇಒ ಎವಿ ಧರ್ಮಾ ರೆಡ್ಡಿ ನೇತೃತ್ವದಲ್ಲಿ ತಿರುಪತಿ ಲಡ್ಡುಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ (ಎಫ್‍ಎಸಿ) ವಿ. ವೀರಬ್ರಹ್ಮಮ್ ಸುದ್ದಿಗಾರರಿಗೆ ತಿಳಿಸಿದರು. +ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ನಕಲಿ ಪಾಸ್‍ಪೋರ್ಟ್, ವೀಸಾ ತಯಾರಕ +ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ದಿನವಾದ ಜ.22ರಂದು ತಿರುಪತಿಯ ಲಡ್ಡು ಭಕ್ತರಿಗೆ ನೀಡಲಾಗುತ್ತದೆ. ಈ ಒಂದು ಲಕ್ಷ ಲಡ್ಡು ತಯಾರಿಸಲು ಬಳಸಲು 2000 ಕೆಜಿ ಶುದ್ಧ ದೇಸಿ ತುಪ್ಪವನ್ನು ಮೈ ಹೋಮ್ ಗ್ರೂಪ್ ಅಧ್ಯಕ್ಷ ಜೆ.ರಾಮೇಶ್ವರ್ ಅವರು ನೀಡಿದ್ದಾರೆ. ಇನ್ನೂ ಈ ಲಡ್ಡುಗಳನ್ನು ಕಳುಹಿಸಿಕೊಡುವ ಸಂದರ್ಭದಲ್ಲಿ ಸೇವಾ ಸದನದ ಇಡೀ ಆವರಣವು ಜೈ ಶ್ರೀ ರಾಮ್ ಮತ್ತು ಗೋವಿಂದಾ ನಮಸ್ಕಾರಗಳೊಂದಿಗೆ ಉತ್ಸಾಹಭರಿತವಾಗಿ ಕೂಡಿತ್ತು. ಲಡ್ಡುಗಳನ್ನು ವಿತರಿಸುವ ಸಮಯದಲ್ಲಿ ಭಕ್ತರು ದೈವಿಕ ನಾಮಗಳನ್ನು ಪಠಿಸಿದರು. ಈ ವೇಳೆ ಸಿಪಿಆರ್‍ಒ ಡಾ.ಟಿ.ರವಿ, ಡಿವೈಇಒ ಜನರಲ್ ಶಿವಪ್ರಸಾದ್ ಇತರರು ಇದ್ದರು. +ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿಯ ಶ್ರೀಮಂತ ಹಿಂದೂ ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ತಾನಂ ಟ್ರಸ್ಟ್ ಇತ್ತೀಚೆಗೆ ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜಗತ್ತಿನಾದ್ಯಂತದ ಭಕ್ತರಿಗೆ ಒಂದು ಲಕ್ಷ ವಿಶ್ವ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ವಿತರಿಸುವ ಯೋಜನೆಯನ್ನು ಪ್ರಕಟಿಸಿತ್ತು. ಅದರ ನಿರ್ಧಾರಕ್ಕೆ ಅನುಗುಣವಾಗಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ವಿ ವೀರಬ್ರಹ್ಮಮ್ ನೇತೃತ್ವದ ತಿರುಪತಿ ಟ್ರಸ್ಟ್ ಒಂದು ಲಕ್ಷ ಲಡ್ಡುಗಳ ತಯಾರಿ ಆರಂಭಿಸಿತ್ತು. ಸದ್ಯ ಆ ಲಡ್ಡುಗಳು ರಾಮಲಲ್ಲಾನ ಸನ್ನಿಧಾನವನ್ನು ತಲುಪಿವೆ. +ತಿರುಪತಿ ಲಡ್ಡು ಅಥವಾ ಶ್ರೀವಾರಿ ಲಡ್ಡು ಭಾರತದ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ನೈವೇದ್ಯವಾಗಿ ನೀಡುವ ಸಿಹಿ. ಇದನ್ನು ಹಿಟ್ಟು, ಸಕ್ಕರೆ ತುಪ್ಪ, ಎಣ್ಣೆ, ಏಲಕ್ಕಿ ಮತ್ತು ಡ್ರೈ ಫ್ರೂಟ್ಸ್‍ಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಏಳು ಬೆಟ್ಟದೊಡೆಯ, ಭಾರತದ ಶ್ರೀಮಂತ ದೇಗುಲಗಳಲ್ಲೊಂದಾದ ತಿರುಪತಿಯ ದರ್ಶನಕ್ಕೆ ದೇಶ-ವಿದೇಶದಿಂದ ಭಕ್ತರು ಬರುತ್ತಾರೆ. ತಿಮ್ಮಪ್ಪನ ಸನ್ನಿ ಎಷ್ಟು ವೈಶಿಷ್ಯ ಹೊಂದಿದ್ಯೋ ಅಷ್ಟೇ ಏಳುಕೊಂಡಲವಾಡನ ದರ್ಶನ ಪಡೆದ ಬಳಿಕ ಕೊಡೋ ಲಡ್ಡು ಕೂಡ ವಿಶ್ವದಾದ್ಯಂತ ಪ್ರಸಿದ್ಧ. ತಿಮ್ಮಪ್ಪನ ದರ್ಶನದ ಬಳಿಕ ಭಕ್ತರಿಗೆ ಈ ಲಡ್ಡಿ ವಿತರಿಸಲಾಗುತ್ತದೆ. \ No newline at end of file diff --git a/eesanje/url_47_185_1.txt b/eesanje/url_47_185_1.txt new file mode 100644 index 0000000000000000000000000000000000000000..c9b5e2ae4da22781efb806debcfc97ff4cfbd3b0 --- /dev/null +++ b/eesanje/url_47_185_1.txt @@ -0,0 +1,5 @@ +ಬಿಜೆಪಿ ಆಡಳಿತಾವಧಿಯಲ್ಲಿ ಈಶಾನ್ಯ ರಾಜ್ಯಕ್ಕೆ ಸುವರ್ಣ ಕಾಲ ; ಶಾ +ನವದೆಹಲಿ,ಜ.20- ಕೇಂದ್ರದ ಬಿಜೆಪಿ ಸರ್ಕಾರ ಯಾವಾಗಲೂ ಈಶಾನ್ಯವನ್ನು ಭಾರತದ ಪ್ರಮುಖ ಭಾಗವೆಂದು ಪರಿಗಣಿಸಿದೆ ಮತ್ತು ಗುಡ್ಡಗಾಡು ರಾಜ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪೂರ್ವದಲ್ಲಿ ಆಕ್ಟ್ ಫಾಸ್ಟ್ ಆಕ್ಟ್ ಫಸ್ಟ್ ಎಂಬ ಮಂತ್ರಗಳನ್ನು ಒತ್ತಿ ಹೇಳಿದ ಶಾ, ಮೋದಿ ಸರ್ಕಾರದ ಅಡಿಯಲ್ಲಿ ಕಳೆದ 10 ವರ್ಷಗಳ ಈಶಾನ್ಯ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಂಘರ್ಷ ಪರಿಹಾರದ ವಿಷಯದಲ್ಲಿ ಅಭೂತಪೂರ್ವವಾಗಿದೆ ಎಂದು ಹೇಳಿದರು. +ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅವಧಿಯಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ಇದು ಮೀಸಲಾದ ಈಶಾನ್ಯ ಸಚಿವಾಲಯದ ಸ್ಥಾಪನೆಗೆ ಕಾರಣವಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಸ್ತುತ ಸರ್ಕಾರವು ಪೂರ್ವಭಾವಿ ವಿಧಾನವನ್ನು ಅಳವಡಿಸಿಕೊಂಡಿದೆ. ಆಕ್ಟ್ ಈಸ್ಟ್, ಆಕ್ಟ್ ಫಾಸ್ಟ್ ಮತ್ತು ಆಕ್ಟ್ ಫಸ್ಟ್ ಎಂಬ ಮೂರು ಮಾರ್ಗದರ್ಶಿ ತತ್ವಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದಿದ್ದಾರೆ. +ಆ್ಯಂಟಿ ಬಯೋಟಿಕ್ ಬಳಕೆಗೆ ಕಡ್ಡಾಯವಾಗಿ ಕಾರಣ ತಿಳಿಸಲು ವೈದ್ಯರಿಗೆ ಸೂಚನೆ +ಕಳೆದ 10 ವರ್ಷಗಳನ್ನು ಖಂಡಿತವಾಗಿಯೂ ಈಶಾನ್ಯ ಪ್ರದೇಶದ ಸುವರ್ಣ ಅವಧಿ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ಹೇಳಿದರು. ಮೂರು ದಿನಗಳ ಅಸ್ಸಾಂ ಮತ್ತು ಮೇಘಾಲಯ ಪ್ರವಾಸದಲ್ಲಿರುವ ಶಾ ಅವರು ನಿನ್ನೆ ಶಿಲ್ಲಾಂಗ್ ನಲ್ಲಿ ಈಶಾನ್ಯ ಕೌನ್ಸಿಲ್‍ನ 71 ನೇ ಸರ್ವಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಾ ಅವರು ಮೇಘಾಲಯದ ರಾಜಧಾನಿಯಲ್ಲಿರುವ ಅಸ್ಸಾಂ ರೈಫಲ್ಸ್‍ನ ಪ್ರಧಾನ ನಿರ್ದೇಶನಾಲಯಕ್ಕೆ ಭೇಟಿ ನೀಡಿದರು ಮತ್ತು ಅವರ ತ್ಯಾಗಕ್ಕಾಗಿ ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿದರು. \ No newline at end of file diff --git a/eesanje/url_47_185_10.txt b/eesanje/url_47_185_10.txt new file mode 100644 index 0000000000000000000000000000000000000000..663ef40d1b68f93f8b0349a007e010ea8d18ecea --- /dev/null +++ b/eesanje/url_47_185_10.txt @@ -0,0 +1,6 @@ +ನಾಸಾ ಸಂಪರ್ಕಕ್ಕೆ ಸಿಕ್ಕ ಚಂದ್ರಯಾನ-3ರ ಪ್ರಗ್ಯಾನ್ ರೋವರ್ +ನವದೆಹಲಿ,ಜ.19-ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್‌ನಲ್ಲಿ ರವಾನೆಯಾಗಿದ್ದ ಸಲಕರಣೆಯೊಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾಕ್ಕೆ ಸಂಪರ್ಕಗೊಳ್ಳುವ ಮೂಲಕ ಮತ್ತಷ್ಟು ಅಧ್ಯಯನ ಆಶಯಗಳನ್ನು ಹುಟ್ಟು ಹಾಕಿದೆ. ಚಂದ್ರನ ಮೇಲ್ಮೈನಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದ್ದ ವಿಕ್ರಮ್ ಲ್ಯಾಂಡರ್‍ನಲ್ಲಿದ್ದ ಪ್ರಜ್ಞಾ ಉಪಗ್ರಹ ಒಂದಿಷ್ಟು ದಿನ ಕೆಲಸ ನಿರ್ವಹಿಸಿ ವಿದ್ಯುತ್ ಅಭಾವದಿಂದಾಗಿ ತಟಸ್ಥವಾಗಿತ್ತು. ಆದರೆ ಅದರಲ್ಲಿರುವ ಕೆಲವು ಸಲಕರಣೆಗಳು ಇನ್ನು ಸಕ್ರಿಯವಾಗಿದ್ದು, ಬಾಹ್ಯಾಕಾಶ ನೌಕೆಗಳಿಗೆ ಪದೇ ಪದೇ ಸಂಪರ್ಕಗೊಳ್ಳುತ್ತಿದೆ. +ಅದರ ಭಾಗವಾಗಿ ವಿಕಿರಣಗಳ ಹಿಮ್ಮುಖ ಪ್ರತಿಫಲಕ ಯಂತ್ರ-ಲೇಸರ್‍ರೆಟ್ರೊರಿಫ್ಲೆಕ್ಟರ್ ಹರೆ(ಎಲ್‍ಆರ್‍ಎ) ನಾಸಾದ ಚಂದ್ರನ ವಿಚಕ್ಷಣ ಕಕ್ಷೆಗಾಮಿಗೆ ಸಂಪರ್ಕಗೊಂಡಿದೆ. ಕಳೆದ ವರ್ಷದ ಜು.14ರಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3ರ ಗಗನ ನೌಕೆಯನ್ನು ಉಡಾವಣೆ ಮಾಡಿದರು. ಅದು ಆ.23ರಂದು ಚಂದ್ರನ ಮೇಲ್ಮೈನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದಿತ್ತು. +ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ; ಭವಿಷ್ಯ ನುಡಿದ ಅಮೆರಿಕನ್ ಗಾಯಕಿ +ಅದರಲ್ಲಿರುವ ಎಲ್‍ಆರ್‍ಎ ನಿಖರವಾದ ಬಿಂದುವಿನಲ್ಲಿ ಪ್ರತಿಷ್ಠಾಪನೆಗೊಂಡಿದೆ. ನಾಸಾದ ಕಕ್ಷೆಗಾಮಿ ಸಂಚರಿಸುವಾಗ ವಿಕಿರಣಗಳ ಮಿತಿಯ ವ್ಯಾಪ್ತಿಯಲ್ಲಿ ಡಿ.12ರಂದು ಪತ್ತೆಯಾಗಿದೆ. +ಇದರಿಂದಾಗಿ ಚಂದ್ರನನ್ನು ನಿರಂತರವಾಗಿ ರಾತ್ರಿ ವೇಳೆಯಲ್ಲೂ ಅಧ್ಯಯನ ಮಾಡಲು ಅವಕಾಶ ಸಿಕ್ಕಂತಾಗಿದೆ. ಪಶ್ಚಿಮ ದಿಕ್ಕಿನತ್ತ ಆರೋಹಣ ಕ್ರಮದಲ್ಲಿರುವ ಚಂದ್ರನಲ್ಲಿನ ವಿದ್ಯಾಮಾನಗಳನ್ನು ಎಲ್‍ಆರ್‍ಎಯಿಂದ ನಾಸಾದ ಕಕ್ಷೆಗಾಮಿ ಸಂಗ್ರಹಿಸಲಿದೆ ಎಂಬ ಮಾಹಿತಿ ಸಿಕ್ಕಿದೆ. \ No newline at end of file diff --git a/eesanje/url_47_185_11.txt b/eesanje/url_47_185_11.txt new file mode 100644 index 0000000000000000000000000000000000000000..a3e0f1e744f660a483a55d564b97a3629c9a0ed1 --- /dev/null +++ b/eesanje/url_47_185_11.txt @@ -0,0 +1,6 @@ +ನಿಯಮ ಉಲ್ಲಂಘನೆ : ನ್ಯಾಯ ಯಾತ್ರೆ ವಿರುದ್ಧ ದೂರು +ಗುಹಾವಾಟಿ,ಜ.19- ಭಾರತ್ ಜೋಡೋ ಯಾತ್ರೆಯ ಮಾರ್ಗಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಪೊಲೀಸರು ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಆಯೋಜಕ ಕೆ.ಬಿ.ಬೈಜು ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಮಧ್ಯಾಹ್ನ ಯಾತ್ರೆ ಜೋರ್ಹತ್ ಪಟ್ಟಣದ ಮೂಲಕ ಹಾದು ಹೋಗುತ್ತಿದ್ದಂತೆ ರ್ಯಾಲಿ ಸಂಘಟಕರು ನಿಯೋಜಿತ ನಿರ್ದೇಶನಗಳನ್ನೂ ಗಾಳಿಗೆ ತೂರಿ ಮಾರ್ಗ ಬಡಾವಣೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಾರ್ಗದಲ್ಲಿ ಹಠಾತ್ ಬದಲಾವಣೆ ಮಾಡಿದ್ದರಿಂದ ಯಾತ್ರೆಗೆ ಅಡ್ಡಿಪಡಿಸಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿ್ದದ್ದಾರೆ, ಯಾತ್ರೆಯ ಸಂಘಟಕರು ಟ್ರಾಫಿಕ್ ಬ್ಯಾರಿಕೇಡ್‍ಗಳನ್ನು ಮುರಿಯಲು ಜನರನ್ನು ಪ್ರಚೋದಿಸಿದರು, ಇದನ್ನು ತಡೆಯಲು ಹೋದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೇ ನಡೆಸಿದರು ಎಂದು ಹೇಳಿದ್ದಾರೆ. +ರಾಹುಲ್ ಅವರ ಭಾರತ್ ಜೋಡೋ ಯಾತ್ರೆಯ ವಿರುದ್ಧ ವಿರೋಧ ಪಕ್ಷದ ನಾಯಕರು ಇದೊಂದು ಜನರ ದಿಕ್ಕು ತಪ್ಪಿಸುವ ಯಾತ್ರೆ, ಯಾತ್ರೆಯ ಹೆಸರಿನಲ್ಲಿ ದೇಶದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. +ಯಾತ್ರೆಯ ವೇಳೆ ಜನರ ಹಠಾತ್ ನೂಕು ನುಗ್ಗಲಿನಿಂದಾಗಿ ಕೆಲವರು ಬಿದ್ದು ಕಾಲ್ತುಳಿತದಂತಹ ಪರಿಸ್ಥಿತಿ ಸೃಷ್ಟಿಯಾಯಿತು. ಯಾತ್ರೆ ಮತ್ತು ಅದರ ಮುಖ್ಯ ಸಂಘಟಕರ ವಿರುದ್ಧ ಜೋರ್ಹತ್ ಸರ್ದ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. +ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಜನವರಿ 14 ರಂದು ಮಣಿಪುರದಿಂದ ಆರಂಭವಾದ ಯಾತ್ರೆ ಮಾರ್ಚ್ 20 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. ಒಟ್ಟಾರೆ ಯೋಜನೆಯು 15 ರಾಜ್ಯಗಳಾದ್ಯಂತ 110 ಜಿಲ್ಲೆಗಳಲ್ಲಿ ಸಂಚರಿಸುವ, 67 ದಿನಗಳಲ್ಲಿ 6,713 ಕಿಮೀ ಯಾತ್ರೆಯನ್ನು ಒಳಗೊಂಡಿದೆ. \ No newline at end of file diff --git a/eesanje/url_47_185_12.txt b/eesanje/url_47_185_12.txt new file mode 100644 index 0000000000000000000000000000000000000000..823e43d6e143d2f8664d594402c4ed7fbde866f5 --- /dev/null +++ b/eesanje/url_47_185_12.txt @@ -0,0 +1,7 @@ +ರಾಹುಲ್ ಪ್ರತಿನಿಧಿಸುವ ವೈನಾಡಿನಲ್ಲಿ ರಾಮ ಸಂಭ್ರಮ +ವಯನಾಡ್,ಜ. 19 (ಪಿಟಿಐ) ಅಯೋಧ್ಯೆಯಲ್ಲಿ ಆಯೋಜಿಸಲಾಗುತ್ತಿರುವ ರಾಮಮಂದಿರ ಶಂಕುಸ್ಥಾಪನೆ ಸಮಾರಂಭವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಅದ್ಧೂರಿಯಾಗಿ ಆಚರಿಸಲು ಬಿಜೆಪಿ ನೇತೃತ್ವದ ಎನ್‍ಡಿಎ ಯೋಜಿಸಿದೆ. +ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಜ.22 ರಂದು ಅಯೋಧ್ಯೆಯಲ್ಲಿ ಆಯೋಜಿಸಲಾಗುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ಬೆಟ್ಟದ ಜಿಲ್ಲೆಯ ಶ್ರೀರಾಮ ದೇವಾಲಯದಲ್ಲಿ ಎನ್‍ಡಿಎ ನಾಯಕರನ್ನು ಸೇರಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಅವರು ಪೊಂಕುಝಿ ಶ್ರೀರಾಮ ದೇವಸ್ಥಾನದಲ್ಲಿ ಅಯೋಧ್ಯೆ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸುತ್ತಾರೆ.ಜಾವಡೇಕರ್ ಮತ್ತು ಸ್ಥಳೀಯ ಬಿಜೆಪಿ ನಾಯಕರಲ್ಲದೆ, ಎನ್‍ಡಿಎ ರಾಜ್ಯ ಸಂಚಾಲಕ ತುಷಾರ್ ವೆಲ್ಲಪ್ಪಳ್ಳಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ಪಿಟಿಐಗೆ ತಿಳಿಸಿವೆ. +ದೇಶದ ನಾನಾ ಮೂಲೆಗಳಿಂದ ಆಯೋಧ್ಯೆಯತ್ತ ದೌಡಾಯಿಸುತ್ತಿದೆ ಜನ ಸಮೂಹ +ಈಜವ ಸಮುದಾಯದ ಮುಖಂಡ ಮತ್ತು ಎಸ್‍ಎನ್‍ಡಿಪಿ ಯೋಗಂ ಪ್ರಧಾನ ಕಾರ್ಯದರ್ಶಿ ವೆಲ್ಲಪ್ಪಲ್ಲಿ ನಟೇಶನ್ ಅವರ ಪುತ್ರ ವೆಲ್ಲಪ್ಪಲ್ಲಿ ಅವರು 2019 ರ ಚುನಾವಣೆಯಲ್ಲಿ ಗಾಂಧಿ ಸ್ರ್ಪಧಿಸಿದಾಗ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿದ್ದರು. ಅವರು ಕೇರಳದಲ್ಲಿ ಬಿಜೆಪಿಯ ಮಿತ್ರಪಕ್ಷವಾದ ಭಾರತ್ ಧರ್ಮ ಜನ ಸೇನೆ (ಬಿಡಿಜೆಎಸ್) ದ ನಾಯಕರಾಗಿದ್ದಾರೆ. +ಬಿಜೆಪಿ ಮೂಲಗಳು ಸುಲ್ತಾನ್ ಬತ್ತೇರಿ-ಮೈಸೂರು ರಸ್ತೆಯಲ್ಲಿರುವ ಕೇರಳದ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಮಹತ್ವವನ್ನು ಎತ್ತಿ ತೋರಿಸುತ್ತವೆ, ಇದು ಅವರ ಪ್ರಕಾರ, ರಾಮಾಯಣದೊಂದಿಗೆ ನಿಕಟ ಸಂಪರ್ಕ ಹೊಂದಿದೆ. ಗಾಂಧಿಯವರ ಕ್ಷೇತ್ರದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮವು ಅಯೋಧ್ಯೆಯಲ್ಲಿ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕತ್ವಕ್ಕೆ ರಾಷ್ಟ್ರವ್ಯಾಪಿ ಸಂದೇಶವನ್ನು ಕಳುಹಿಸುವ ಉದ್ದೇಶವನ್ನು ಹೊಂದಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_185_2.txt b/eesanje/url_47_185_2.txt new file mode 100644 index 0000000000000000000000000000000000000000..84983adda20b5e03b3a2402b1c92f257b2aa543d --- /dev/null +++ b/eesanje/url_47_185_2.txt @@ -0,0 +1,5 @@ +ಕಾಲುವೆಗೆ ಕಾರು ಉರುಳಿ ಬಿದ್ದು ನಾಲ್ವರ ಸಾವು +ಆಗ್ರಾ,ಜ.20- ತಡರಾತ್ರಿ ವೇಗವಾಗಿ ಬಂದ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ಕಾರಿನಲ್ಲಿ ಆರು ಮಂದಿ ಇದ್ದರು ಅವರ ಕಾರು ನಗರದ ತಾಜ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಡಿಗ್ನರ್ ರಸ್ತೆ ಬದಿಯ ಕಾಲುವೆ ಉರುಳಿಬಿದ್ದು ಈ ದುರ್ಘಟನೆ ನಡೆದಿದೆ. +ಆ್ಯಂಟಿ ಬಯೋಟಿಕ್ ಬಳಕೆಗೆ ಕಡ್ಡಾಯವಾಗಿ ಕಾರಣ ತಿಳಿಸಲು ವೈದ್ಯರಿಗೆ ಸೂಚನೆ +ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಗ್ರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. +ಈ ಘಟನೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತ (ಡಿಸಿಪಿ, ನಗರ) ಸೂರಜ್ ಕುಮಾರ್ ರೈ ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_47_185_3.txt b/eesanje/url_47_185_3.txt new file mode 100644 index 0000000000000000000000000000000000000000..100c1090124f1cded660b5c6661116b3fcef7582 --- /dev/null +++ b/eesanje/url_47_185_3.txt @@ -0,0 +1,7 @@ +ಭಾರತ ಪ್ರವೇಶಿಸಿರುವ ಮ್ಯಾನ್ಮಾರ್ ಸೈನಿಕರನ್ನು ವಾಪಸ್ ಕಳುಹಿಸಲು ಒತ್ತಾಯ +ಗುವಾಹಟಿ,ಜ.20- ಮ್ಯಾನ್ಮಾರ್‍ನಲ್ಲಿ ಬಂಡುಕೋರ ಪಡೆಗಳು ಮತ್ತು ಜುಂಟಾ ಆಡಳಿತದ ನಡುವೆ ಕಾದಾಟ ನಡೆಯುತ್ತಿದ್ದು, ನೂರಾರು ಮ್ಯಾನ್ಮಾರ್ ಸೇನಾ ಸಿಬ್ಬಂದಿ ಭಾರತಕ್ಕೆ ಪಲಾಯನ ಮಾಡುತ್ತಿದ್ದಾರೆ. ಮಿಜೋರಾಂ ಸರ್ಕಾರವು ಈ ಬೆಳವಣಿಗೆಯ ಬಗ್ಗೆ ಕೇಂದ್ರವನ್ನು ಎಚ್ಚರಿಸಿದೆ ಮತ್ತು ನೆರೆಯ ರಾಷ್ಟ್ರದ ಸೈನಿಕರನ್ನು ಹಿಂದಕ್ಕೆ ಕಳುಹಿಸುವುದನ್ನು ತ್ವರಿತವಾಗಿ ಖಚಿತಪಡಿಸಿಕೊಳ್ಳುವಂತೆ ಒತ್ತಾಯಿಸಿದೆ. +ತೀವ್ರ ಘರ್ಷಣೆಯ ನಡುವೆ ಸುಮಾರು 600 ಮ್ಯಾನ್ಮಾರ್ ಸೇನೆಯ ಸೈನಿಕರು ಭಾರತವನ್ನು ದಾಟಿದ್ದಾರೆ. ಪಶ್ಚಿಮ ಮ್ಯಾನ್ಮಾರ್ ರಾಜ್ಯದ ರಾಖೈನ್‍ನಲ್ಲಿ ಜನಾಂಗೀಯ ಸಶಸ್ತ್ರ ಗುಂಪು – ಅರಕನ್ ಆರ್ಮಿ (ಎಎ) ಉಗ್ರಗಾಮಿಗಳು ತಮ್ಮ ಶಿಬಿರಗಳನ್ನು ವಶಪಡಿಸಿಕೊಂಡ ನಂತರ ಅಸ್ಸಾಂ ರೈಫಲ್ಸ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅವರು ಹೇಳಿದರು. +ಶಿಲ್ಲಾ0ಗ್‍ನಲ್ಲಿ ನಡೆದ ಈಶಾನ್ಯ ಕೌನ್ಸಿಲ್ ಸಭೆಯ ಪೂರ್ಣಾವ ಅಧಿವೇಶನದಲ್ಲಿ ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವೆ ತುರ್ತು ಮಾತುಕತೆಗೆ ಪರಿಸ್ಥಿತಿ ಪ್ರೇರೇಪಿಸಿದೆ. ರಾಜ್ಯದೊಳಗೆ ಆಶ್ರಯ ಪಡೆದಿರುವ ಮ್ಯಾನ್ಮಾರ್ ಸೇನಾ ಸಿಬ್ಬಂದಿಯನ್ನು ಶೀಘ್ರವಾಗಿ ವಾಪಸು ಕಳುಹಿಸುವ ಅಗತ್ಯವನ್ನು ಮಿಜೋರಾಂ ಒತ್ತಿ ಹೇಳಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಪ್ರದೇಶದ ಸ್ಥಿರತೆಯ ಮೇಲೆ ಅದು ಬೀರಬಹುದಾದ ಪ್ರಭಾವದ ಬಗ್ಗೆ ಹೆಚ್ಚುತ್ತಿರುವ ಕಾಳಜಿಯ ನಡುವೆ ಈ ಮನವಿ ಬಂದಿದೆ. +ಬಾಬರ್ ರಸ್ತೆ ಮರುನಾಮಕರಣಕ್ಕೆ ಹಿಂದೂ ಸೇನೆ ಆಗ್ರಹ +ಸರ್ವಸದಸ್ಯರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಜೋರಾಂ ಮುಖ್ಯಮಂತ್ರಿ ಲಾಲ್ದುಹೋಮ ನಡೆಯುತ್ತಿರುವ ಪರಿಸ್ಥಿತಿಯ ಮೇಲೆ ಬೆಳಕು ಚೆಲ್ಲಿದರು. ಜನರು ಆಶ್ರಯಕ್ಕಾಗಿ ಮ್ಯಾನ್ಮಾರ್‍ನಿಂದ ನಮ್ಮ ದೇಶಕ್ಕೆ ಪಲಾಯನ ಮಾಡುತ್ತಿದ್ದಾರೆ, ಮತ್ತು ನಾವು ಅವರಿಗೆ ಮಾನವೀಯ ಆಧಾರದ ಮೇಲೆ ಸಹಾಯ ಮಾಡುತ್ತಿದ್ದೇವೆ. ಮಯನ್ಮಾರ್ ಸೈನಿಕರು ಬರುತ್ತಲೇ ಇರುತ್ತಾರೆ, ಆಶ್ರಯ ಪಡೆಯುತ್ತಾರೆ, ಮತ್ತು ಮೊದಲು ನಾವು ಅವರನ್ನು ವಿಮಾನದ ಮೂಲಕ ವಾಪಸ್ ಕಳುಹಿಸುತ್ತಿದ್ದೆವು. ಸುಮಾರು 450 ಸೇನಾ ಸಿಬ್ಬಂದಿಯನ್ನು ವಾಪಸ್ ಕಳುಹಿಸಲಾಗಿದೆ, ಮುಖ್ಯಮಂತ್ರಿ ಲಾಲ್ದುಹೋಮ ಹೇಳಿದರು. +ಅಕ್ಟೋಬರ್ ಅಂತ್ಯದಲ್ಲಿ ಮೂರು ಜನಾಂಗೀಯ ಅಲ್ಪಸಂಖ್ಯಾತ ಪಡೆಗಳು ಸಂಘಟಿತ ಆಕ್ರಮಣವನ್ನು ಪ್ರಾರಂಭಿಸಿ, ಕೆಲವು ಪಟ್ಟಣಗಳು ಮತ್ತು ಮಿಲಿಟರಿ ಪೋಸ್ಟ್‍ಗಳನ್ನು ವಶಪಡಿಸಿಕೊಂಡು ಸೈನಿಕರನ್ನು ಪಲಾಯನ ಮಾಡಲು ಒತ್ತಾಯಿಸಿದ ನಂತರ 2021 ರ ದಂಗೆಯಲ್ಲಿ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಮ್ಯಾನ್ಮಾರ್‍ನ ಜನರಲ್‍ಗಳು ತಮ್ಮ ಅತಿದೊಡ್ಡ ಪರೀಕ್ಷೆಯನ್ನು ಎದುರಿಸುತ್ತಿದ್ದಾರೆ. \ No newline at end of file diff --git a/eesanje/url_47_185_4.txt b/eesanje/url_47_185_4.txt new file mode 100644 index 0000000000000000000000000000000000000000..7809fb644894cf68ee0209e7879e60be8df2a0b7 --- /dev/null +++ b/eesanje/url_47_185_4.txt @@ -0,0 +1,9 @@ +ಆ್ಯಂಟಿ ಬಯೋಟಿಕ್ ಬಳಕೆಗೆ ಕಡ್ಡಾಯವಾಗಿ ಕಾರಣ ತಿಳಿಸಲು ವೈದ್ಯರಿಗೆ ಸೂಚನೆ +ನವದೆಹಲಿ,ಜ. 20 (ಪಿಟಿಐ) ಕೇಂದ್ರ ಆರೋಗ್ಯ ಸಚಿವಾಲಯವು ಆ್ಯಂಟಿಬಯೋಟಿಕ್‍ಗಳನ್ನು ಶಿಫಾರಸು ಮಾಡುವಾಗ ವೈದ್ಯರಿಗೆ ಕಡ್ಡಾಯವಾಗಿ ಸೂಚನೆಗಳು ಮತ್ತು ಕಾರಣಗಳನ್ನು ನಮೂದಿಸುವಂತೆ ಸೂಚಿಸಿದೆ. ಸಾಂಕ್ರಾಮಿಕ ರೋಗ ತಜ್ಞರು ಈ ಉಪಕ್ರಮವು ಆಂಟಿಮೈಕ್ರೊಬಿಯಲ್ ಬಳಕೆಯನ್ನು ತರ್ಕಬದ್ಧಗೊಳಿಸಲು ಮತ್ತು ವಿವೇಚನಾರಹಿತ ಸೇವನೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ. +ಈ ಅಭ್ಯಾಸವು ವೈದ್ಯಕೀಯದಲ್ಲಿ ಸಾಕ್ಷ್ಯಾಧಾರಿತ ವಿಧಾನವನ್ನು ಮತ್ತಷ್ಟು ಸಹಾಯ ಮಾಡುತ್ತದೆ, ಜೊತೆಗೆ ರೋಗಿಗಳ ಫಲಿತಾಂಶಗಳನ್ನು ಸುಧಾರಿಸುತ್ತದೆ ಮತ್ತು ಚಿಕಿತ್ಸೆಯ ವೆಚ್ಚಗಳು ಮತ್ತು ಅನಗತ್ಯ ಅಡ್ಡಪರಿಣಾಮಗಳನ್ನು ನಿಗ್ರಹಿಸಲು ಸಹಕಾರಿಯಾಗಲಿದೆ. +ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನ ಉಚ್ಛಾಟನೆ +ಆಂಟಿಮೈಕ್ರೊಬಿಯಲ್‍ಗಳನ್ನು ಶಿಫಾರಸು ಮಾಡುವ ಮೊದಲು ಶಿಫಾರಸು ಮಾಡುವವರು ತರ್ಕಬದ್ಧವಾಗಿ ಯೋಚಿಸಬೇಕು ಮತ್ತು ದಾಖಲಿಸಬೇಕು. ಇದು ಆಂಟಿಮೈಕ್ರೊಬಿಯಲ್‍ಗಳನ್ನು ತರ್ಕಬದ್ಧವಾಗಿ ಶಿಫಾರಸು ಮಾಡಲು ಮತ್ತು ಅನಪೇಕ್ಷಿತ ಬಳಕೆಯನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎಂದು ಕೌಶಂಬಿಯ ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಾಂಕ್ರಾಮಿಕ ರೋಗ ತಜ್ಞ ಮತ್ತು ಹಿರಿಯ ಸಲಹೆಗಾರ ಡಾ ಛವಿ ಗುಪ್ತಾ ತಿಳಿಸಿದ್ದಾರೆ. +ಜನವರಿ 1 ರಂದು ವೈದ್ಯಕೀಯ ಕಾಲೇಜುಗಳು ಮತ್ತು ವೈದ್ಯಕೀಯ ಸಂಘಗಳ ಎಲ್ಲಾ ವೈದ್ಯರಿಗೆ ಪತ್ರದಲ್ಲಿ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ ಅತುಲ್ ಗೋಯೆಲ್ ಅವರು ಆಂಟಿಮೈಕ್ರೊಬಿಯಲ್‍ಗಳನ್ನು ಶಿಫಾರಸು ಮಾಡುವಾಗ ಸೂಚನೆಗಳು, ಕಾರಣಗಳು ಅಥವಾ ಸಮರ್ಥನೆಗಳನ್ನು ಬರೆಯುವುದನ್ನು ಕಡ್ಡಾಯವಾಗಿ ಅಭ್ಯಾಸ ಮಾಡುವಂತೆ ಸೂಚಿಸಿದ್ದಾರೆ. +ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ನಿಯಮಗಳ ಶೆಡ್ಯೂಲ್ ಎಚ್ ಮತ್ತು ಎಚ್ 1 ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮತ್ತು ಆಂಟಿಬಯೋಟಿಕ್‍ಗಳ ಪ್ರತ್ಯುತ್ತರ ಮಾರಾಟವನ್ನು ನಿಲ್ಲಿಸಿ ಮತ್ತು ಅರ್ಹ ವೈದ್ಯರ ಪ್ರಿಸ್ಕ್ರಿಪ್ಷನ್‍ನ ಮೇರೆಗೆ ಮಾತ್ರ ಮಾರಾಟ ಮಾಡಲು ಎಲ್ಲಾ ಫಾರ್ಮಾಸಿಸ್ಟ್‍ಗಳಿಗೆ ಅವರು ಮನವಿ ಮಾಡಿದ್ದಾರೆ. +ರಾಜೀವ್ ಬದುಕಿದ್ದರೆ ಬಾಬ್ರಿ ಮಸೀದಿ ಉಳಿಯುತ್ತಿತ್ತು : ಅಯ್ಯರ್ +ಈ ಕ್ರಮದ ಬಗ್ಗೆ ಕೇಳಿದಾಗ, ಐಐಟಿ-ಬಾಂಬೆಯಲ್ಲಿ ಜೀನೋಮಿಕ್ಸ್ ಆಧಾರಿತ ಡಯಾಗ್ನೋಸ್ಟಿಕ್ಸ್ ಪರಿಹಾರಗಳನ್ನು ಒದಗಿಸುವ ಹೇಸ್ಟಾಕ್ ಅನಾಲಿಟಿಕ್ಸ್‍ನ ವೈದ್ಯಕೀಯ ವ್ಯವಹಾರಗಳ ನಿರ್ದೇಶಕ ಡಾ ಮಹುವಾ ಕಪೂರ್ ದಾಸ್‍ಗುಪ್ತಾ ಅವರು, ಇದು ರೋಗನಿರ್ಣಯದ ಆರೈಕೆಯನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ತಂತ್ರಗಳನ್ನು ವಿನ್ಯಾಸಗೊಳಿಸಲು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_47_185_5.txt b/eesanje/url_47_185_5.txt new file mode 100644 index 0000000000000000000000000000000000000000..1a5050e03ec285e7334f25962ea4b3a1a488f951 --- /dev/null +++ b/eesanje/url_47_185_5.txt @@ -0,0 +1,3 @@ +ಶ್ರೀರಂಗನ ದರ್ಶನ ಪಡೆದ ಮೋದಿ +ತಿರುಚಿರಾಪಳ್ಳಿ, ಜ. 20 (ಪಿಟಿಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಇಲ್ಲಿನ ಶ್ರೀರಂಗಂನಲ್ಲಿರುವ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇಗುಲದಲ್ಲೂ ಪೂಜೆ ಸಲ್ಲಿಸಿದ ನಂತರ ಅವರು ಶ್ರೀರಂಗಂನಲ್ಲಿ ವಿವಿಧ ವಿದ್ವಾಂಸರ ಕಂಬ ರಾಮಾಯಣದ ಪದ್ಯಗಳನ್ನು ಮೋದಿ ಆಲಿಸಿದರು. +ನಂತರ, ಅವರು ರಾಮೇಶ್ವರಂ ತಲುಪಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ ಮತ್ತು ದೇಗುಲದಲ್ಲಿ ಭಕ್ತಿಗೀತೆಗಳ ಪಠಣದಲ್ಲಿ ಪಾಲ್ಗೊಳ್ಳುತ್ತಾರೆ. ಶ್ರೀರಂಗಂ ದೇವಸ್ಥಾನವನ್ನು ಭೂಲೋಕದ ವೈಕುಂಠ ಅಥವಾ ಭೂಮಿಯ ಮೇಲಿನ ವೈಕುಂಠಂ ಎಂದೂ ಕರೆಯಲಾಗುತ್ತದೆ. ವೈಕುಂಟಂ ವಿಷ್ಣುವಿನ ಶಾಶ್ವತ ನಿವಾಸವಾಗಿದೆ. \ No newline at end of file diff --git a/eesanje/url_47_185_6.txt b/eesanje/url_47_185_6.txt new file mode 100644 index 0000000000000000000000000000000000000000..d8af234590bcb2e5d153254b8f47cc412b3946a5 --- /dev/null +++ b/eesanje/url_47_185_6.txt @@ -0,0 +1,5 @@ +ಬಾಬರ್ ರಸ್ತೆ ಮರುನಾಮಕರಣಕ್ಕೆ ಹಿಂದೂ ಸೇನೆ ಆಗ್ರಹ +ನವದೆಹಲಿ, ಜ. 20 (ಪಿಟಿಐ) ಕೇಂದ್ರ ದೆಹಲಿಯ ಬಾಬರ್ ರಸ್ತೆಗೆ ಮರುನಾಮಕರಣ ಮಾಡಬೇಕು ಎಂದು ಒತ್ತಾಯಿಸಿ ಬಲಪಂಥೀಯ ಸಂಘಟನೆ ಹಿಂದೂ ಸೇನೆ ಶನಿವಾರ ಫಲಕವನ್ನು ವಿರೂಪಗೊಳಿಸಿದೆ. ಸಂಘಟನೆಯ ಕಾರ್ಯಕರ್ತರು ಅಯೋಧ್ಯಾ ಮಾರ್ಗ ಎಂದು ಬರೆದಿರುವ ಪೋಸ್ಟರ್ ಅಂಟಿಸಿದ್ದಾರೆ. +ಹೊಸದಿಲ್ಲಿ ಮುನ್ಸಿಪಲ್ ಕೌನ್ಸಿಲ್ (ಎನ್‍ಡಿಎಂಸಿ) ಅಧಿಕಾರಿಯೊಬ್ಬರು ಪೋಸ್ಟರ್ ಅನ್ನು ತೆಗೆದುಹಾಕುತ್ತಿದ್ದಾರೆ ಮತ್ತು ಈ ವಿಷಯದಲ್ಲಿ ಪೊಲೀಸರಿಗೆ ದೂರು ದಾಖಲಿಸಲಿದ್ದಾರೆ. ಏತನ್ಮಧ್ಯೆ, ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ ಮಾತನಾಡಿ, ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕು ಎಂದು ಸಂಘಟನೆಯು ಬಹಳ ದಿನಗಳಿಂದ ಒತ್ತಾಯಿಸುತ್ತಿದೆ. +ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಜಾಮೀನು ಕೊಡಿಸಿದ ಕಾಂಗ್ರೆಸ್ ವಕೀಲನ ಉಚ್ಛಾಟನೆ +ಈಗ ರಸ್ತೆ ಹೆಸರು ಬದಲಾವಣೆಗೆ ಸೂಕ್ತ ಕಾಲವಾಗಿದೆ ಈ ಕೂಡಲೆ ಸಂಬಂಧಪಟ್ಟವರು ಬಾಬರ್ ರಸ್ತೆಗೆ ಅಯೋಧ್ಯಾ ಮಾರ್ಗ ಎಂದು ಮರುನಾಮಕರಣ ಮಾಡುವಂತೆ ಅವರು ಆಗ್ರಹಿಸಿದ್ದಾರೆ. \ No newline at end of file diff --git a/eesanje/url_47_185_7.txt b/eesanje/url_47_185_7.txt new file mode 100644 index 0000000000000000000000000000000000000000..0cb4226d401404d62893cef6e139b030db7eefe9 --- /dev/null +++ b/eesanje/url_47_185_7.txt @@ -0,0 +1,9 @@ +ರಾಜೀವ್ ಬದುಕಿದ್ದರೆ ಬಾಬ್ರಿ ಮಸೀದಿ ಉಳಿಯುತ್ತಿತ್ತು : ಅಯ್ಯರ್ +ನವದೆಹಲಿ, ಜ 20 (ಪಿಟಿಐ) ಪಿ ವಿ ನರಸಿಂಹರಾವ್ ಬದಲಿಗೆ ರಾಜೀವ್‍ಗಾಂಧಿ ಅವರು ಅಂದು ಪ್ರಧಾನ ಮಂತ್ರಿಯಾಗಿದ್ದರೆ ಬಾಬರಿ ಮಸೀದಿ ಇನ್ನು ಉಳಿಯುತ್ತಿತ್ತು. ಇದರ ಜೊತೆಗೆ ಬಿಜೆಪಿಗೆ ಸೂಕ್ತ ಉತ್ತರ ನೀಡಲು ಅವರು ಸಮರ್ಥರಾಗಿದ್ದರು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. ಜನವರಿ 22 ರ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ವರಿಷ್ಠರ ನಿರ್ಧಾರವನ್ನು ಅವರು ಇದೇ ಸಂದರ್ಭದಲ್ಲಿ ಸಮರ್ಥಿಸಿಕೊಂಡಿದ್ದಾರೆ. +ಜಗ್ಗರ್‍ನಾಟ್ ಪ್ರಕಟಿಸಿದ ದಿ ರಾಜೀವ್ ಐ ನೋ ಅಂಡ್ ವೈ ಹಿ ವಾಸ್ ಇಂಡಿಯಾಸ್ ಮೋಸ್ಟ್ ಮಿಸ್‍ಂಡರ್‍ಸ್ಟಡ್ ಪ್ರೈಮ್ ಮಿನಿಸ್ಟರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅಯ್ಯರ್ ಮಾತನಾಡುತ್ತಿದ್ದರು. ರಾಜೀವ್ ಗಾಂಧಿ ಮಸೀದಿಯನ್ನು ಇಟ್ಟುಕೊಳ್ಳಿ ಮತ್ತು ಮಂದಿರವನ್ನು ನಿರ್ಮಿಸಿ ಎಂದು ಹೇಳುತ್ತಿದ್ದರು. +ಮಂದಿರವನ್ನು ಮಾಡಿ ಮತ್ತು ಮಸೀದಿಯನ್ನು ಬೇರೆಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದರ್ಥದಲ್ಲಿ, ತೀರ್ಪು ರಾಜೀವ್ ಅವರ ನಿರ್ಧಾರಕ್ಕೆ ಸಮಾನವಾಗಿದೆ ಎಂದು ಅಯ್ಯರ್ ಹೇಳಿದರು. ಹಿರಿಯ ಪತ್ರಕರ್ತ ವೀರ್ ಸಾಂಘ್ವಿ ಅವರೊಂದಿಗಿನ ಉಚಿತ ವೀಲಿಂಗ್ ಚಾಟ್‍ನಲ್ಲಿ, ಅಟಲ್ ಬಿಹಾರಿ ವಾಜಪೇಯಿಯವರ ಬಿಜೆಪಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಕದ್ದಿದ್ದಾರೆ ಎಂದು ಅವರು ಆರೋಪಿಸಿದರು. +ಮೊಣಕೈ, ಮೂಗಿಗೆ ತುಪ್ಪ ಸವರುವುದೇ ಕಾಂಗ್ರೆಸ್‍ನ ಸಾಮಾಜಿಕ ನ್ಯಾಯ : ಸಿ.ಟಿ.ರವಿ +ಎನ್‍ಡಿಎ ಸೋತ ನಂತರ 10 ವರ್ಷ ಕಾಂಗ್ರೆಸ್ ಆಡಳಿತವಿತ್ತು. ಆ ಕಾಂಗ್ರೆಸ್ ಆಡಳಿತದ ಕೊನೆಯಲ್ಲಿ, ಪರಿಸ್ಥಿತಿಗಳು ನಿಜವಾಗಿಯೂ ಕೆಟ್ಟದಾಗಿ ಹೋಗುತ್ತಿದ್ದವು, ನಾವು ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದ ಪ್ರಧಾನಿಯನ್ನು ಹೊಂದಿದ್ದೇವೆ ಮತ್ತು ಅದರ ಪರಿಣಾಮವೆಂದರೆ ಮೋದಿಯ ಬಿಜೆಪಿಯನ್ನು ಆ ನಿರ್ವಾತಕ್ಕೆ ಪ್ರವೇಶಿಸಿತು ಎಂದು ಅಯ್ಯರ್ ಹೇಳಿದರು. +ಅಯ್ಯರ್ ಅವರ ಪುಸ್ತಕವು ಗಾಂಧಿಯವರ ಪ್ರಧಾನಿ ಹುದ್ದೆÉಯ ಬಗ್ಗೆ ಮಾತನಾಡುತ್ತದೆ (ಅಕ್ಟೋಬರ್ 31, 1984-ಡಿಸೆಂಬರ್ 2, 1989) ಅವರು ಪ್ರಧಾನ ಮಂತ್ರಿ ಕಚೇರಿಯಲ್ಲಿ ದಿವಂಗತ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ನಿಕಟವಾಗಿ ಕೆಲಸ ಮಾಡುವಾಗ ಅವರು ನೋಡಿದಂತೆ. ಬಾಬರಿ ಮಸೀದಿ-ರಾಮ ಜನ್ಮಭೂಮಿ ಸಮಸ್ಯೆ, ಶಾ ಬಾನೋ ಪ್ರಕರಣ, ಭಾರತ-ಶ್ರೀಲಂಕಾ (ರಾಜೀವ್-ಜಯವರ್ಧನೆ) ಒಪ್ಪಂದ ಮತ್ತು ಭಾರತೀಯ ಶಾಂತಿ ಪಾಲನಾ ಪಡೆ (ಐಪಿಕೆಎಫ್) ಮುಂತಾದ ವಿವಾದಗಳನ್ನು ಪುಸ್ತಕದಲ್ಲಿ ವಿವರವಾಗಿ ಪ್ರಸ್ತಾಪಿಸಲಾಗಿದೆ. +ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ದಿನಗಳು ಬಾಕಿಯಿರುವುದರಿಂದ ಸಾಂಘ್ವಿಯೊಂದಿಗಿನ ಅಯ್ಯರ್ ಅವರ ಸಂಭಾಷಣೆಯ ಹೆಚ್ಚಿನ ಗಮನವು ರಾಮ ಜನ್ಮಭೂಮಿ ವಿಷಯದ ಮೇಲೆಯೇ ಕೇಂದ್ರಿಕೃತವಾಗಿತ್ತು. 1986 ರಲ್ಲಿ ಬಾಬರಿ ಮಸೀದಿ ಗೇಟ್‍ಗಳ ಬೀಗಗಳನ್ನು ತೆರೆಯುವ ಬಗ್ಗೆ ಕೇಳಲಾದ ಪ್ರಶ್ನೆಗೆ ಅಯ್ಯರ್ ಅವರು, ಸಂಸತ್ತಿನಲ್ಲಿ 400 ಸ್ಥಾನಗಳ ಬಹುಮತದೊಂದಿಗೆ ಗಾಂಧಿಯವರು ಮುಸ್ಲಿಮರನ್ನು ಸಮಾಧಾನಪಡಿಸಲು ಅಥವಾ ಹಿಂದೂ ಭಾವನೆಗಳನ್ನು ಪ್ರೋತ್ಸಾಹಿಸಲು ಯಾವುದೇ ಕಾರಣವಿಲ್ಲ ಎಂಬುದು ವಾಸ್ತವ ಸಂಗತಿಯಾಗಿದೆ ಎಂದು ಹೇಳಿದರು. +ಬೀಗ ತೆರೆಯುವುದರ ಹಿಂದೆ ಅರುಣ್ ನೆಹರು ಅವರ ಕೈವಾಡವಿದೆ ಎಂದು ಪ್ರತಿಪಾದಿಸಿದ ಅಯ್ಯರ್, ಅರುಣ್ ನೆಹರು ಲಕ್ನೋ ಶಾಲೆಯಲ್ಲಿ ಓದಿದ್ದರಿಂದ, ಆ ಸಮಯದಲ್ಲಿ ಸ್ಥಳೀಯ ಸಮಸ್ಯೆಯಾಗಿದ್ದ ರಾಮಜನ್ಮಭೂಮಿ ಸಮಸ್ಯೆ ಅವರ ಮನಸ್ಸಿನಲ್ಲಿ ತುಂಬಾ ಇತ್ತು ಎಂದು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_185_8.txt b/eesanje/url_47_185_8.txt new file mode 100644 index 0000000000000000000000000000000000000000..c4b98ce3fad57cd0c7c29e7a893bff90d38e4cb4 --- /dev/null +++ b/eesanje/url_47_185_8.txt @@ -0,0 +1,7 @@ +ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ +ಲಕ್ನೋ,ಜ.19- ಜನವರಿ 22 ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿರುವಾಗಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧನಕ್ಕೊಳಪಡಿಸಿದೆ. ಉತ್ತರ ಪ್ರದೇಶದ ವಿಶೇಷ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮಾತನಾಡಿ, ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿಸಿದ್ದಾರೆ. +ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೇಯ ಯುಪಿ-ಎಟಿಎಸ್‍ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ. +ರಾಜ್ಯಕ್ಕೆ ಪ್ರಧಾನಿ ಆಗಮನದ ಬೆನ್ನಲ್ಲೇ ಪುಟಿದೆದ್ದ ರಾಜ್ಯ ಬಿಜೆಪಿ +ಶ್ರೀ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರಪ್ರದೇಶ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದೆ. ಡ್ರೋಣ್‍ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ. ಉತ್ತರ ಪ್ರದೇಶ ಸರ್ಕಾರವು ಡ್ರೋನ್‍ಗಳ ಮೂಲಕ ಕಣ್ಗಾವಲು ಹೆಚ್ಚಿಸಿದೆ. ರಾಜ್ಯ ಸರ್ಕಾರವು ನಗರದಾದ್ಯಂತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಎನ್ವಿಡಿ ಮತ್ತು ಸಿಸಿಟಿವಿ ಕ್ಯಾಮೆರಾಗಳಂತಹ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ. +ಜನವರಿ 22 ರಂದು ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಗಣ್ಯರು ಹಾಗೂ ಸಮಾಜದ ಎಲ್ಲ ವರ್ಗದ ಜನರು ಪಾಲ್ಗೊಳ್ಳಲಿದ್ದಾರೆ. ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಸಿದ್ಧರಾಗಿದ್ದಾರೆ. ವಾರಾಣಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್‍ರವರು ಜನವರಿ 22 ರಂದು ರಾಮಲಲ್ಲಾ ಅವರ ಮಹಾಮಸ್ತಕಾಭಿಷೇಕದ ಮುಖ್ಯ ವಿವಿಧಾನವನ್ನು ನೆರವೇರಿಸಲಿದ್ದಾರೆ. +ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯಲ್ಲಿ ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ. ಸಮಾರಂಭದ ದಿನಾಂಕ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಯಲ್ಲಿ ರಾಮಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳಿಗೂ ಹೆಚ್ಚು ಕಾಲ ಕಾದಿದ್ದರಿಂದ ರಾಮ ಭಕ್ತರು ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಬಯಸುತ್ತಿದ್ದಾರೆ. ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. \ No newline at end of file diff --git a/eesanje/url_47_185_9.txt b/eesanje/url_47_185_9.txt new file mode 100644 index 0000000000000000000000000000000000000000..dbf4a439b536e7908ebfac2a60db88c8a105c361 --- /dev/null +++ b/eesanje/url_47_185_9.txt @@ -0,0 +1,8 @@ +ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಹುವಾ ಮೊಯಿತ್ರಾ +ನವದೆಹಲಿ,ಜ.19- ಲೋಕಸಭೆಯಿಂದ ಉಚ್ಛಾಟನೆಗೊಂಡಿದ್ದ ತೃಣಮೂಲ ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯೆ ಮಹುವಾ ಮೊಯಿತ್ರಾ ಕೊನೆಗೂ ತಮ್ಮ ಸರ್ಕಾರಿ ಬಂಗಲೆಯನ್ನು ಇಂದು ಖಾಲಿ ಮಾಡಿದ್ದಾರೆ. ತಮಗೆ ಬಂಗಲೆ ತೆರವುಗೊಳಿಸುವಂತೆ ನೀಡಿದ ನೋಟಿಸ್‍ಗೆ ದೆಹಲಿ ಹೈಕೋರ್ಟ್ ನಿನ್ನೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಇದರ ಬೆನ್ನಲ್ಲೇ ಅವರು ಮನೆಯನ್ನು ಖಾಲಿ ಮಾಡಿದ್ದಾರೆ. +ಕಳೆದ ವರ್ಷ ಡಿಸೆಂಬರ್‍ನಲ್ಲಿ ಲೋಕಸಭಾ ಸಂಸದರಾಗಿ ಉಚ್ಛಾಟಿತರಾಗಿದ್ದ ಮೊಯಿತ್ರಾ. ಮಂಗಳವಾರ ಎಸ್ಟೇಟ್‍ಗಳ ನಿರ್ದೇಶನಾಲಯದಿಂದ (ಡಿಒಇ) ಹೊರಹಾಕುವ ಸೂಚನೆಯನ್ನು ಸ್ವೀಕರಿಸಿದ್ದರು.ಅವರು ಇಂದು ಬೆಳಿಗ್ಗೆ 10 ಗಂಟೆಗೆ ಸಂಪೂರ್ಣವಾಗಿ ಬಂಗಲೆಯನ್ನು ಖಾಲಿ ಮಾಡಿ, ಅದರ ಸ್ವಾೀಧಿನವನ್ನು ಅವರ ವಕೀಲರು ಎಸ್ಟೇಟ್ ನಿರ್ದೇಶನಾಲಯಕ್ಕೆ ಹಸ್ತಾಂತರಿಸಿದರು. +ನ್ಯಾಯಮೂರ್ತಿ ಗಿರೀಶ್ ಕಠ್ಪಾಲಿಯಾ ಅವರು, ಸಂಸದರು ಶಾಸಕ ಸ್ಥಾನ ರದ್ದಾದ ನಂತರ ಅವರನ್ನು ಸರ್ಕಾರಿ ವಸತಿಗಳಿಂದ ಹೊರಹಾಕುವ ಬಗ್ಗೆ ಯಾವುದೇ ನಿರ್ದಿಷ್ಟ ನಿಯಮವನ್ನು ನ್ಯಾಯಾಲಯದ ಮುಂದೆ ತರಲಾಗಿಲ್ಲ ಎಂದು ಹೇಳಿದರು. ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದಲ್ಲಿ ಮತ್ತು ಸಂಸತ್ತಿನ ವೆಬ್‍ಸೈಟ್‍ನ ಬಳಕೆದಾರರ ಐಡಿ ಮತ್ತು ಪಾಸ್‍ವರ್ಡ್‍ನ್ನು ಅವರೊಂದಿಗೆ ಹಂಚಿಕೊಂಡಿದ್ದಕ್ಕಾಗಿ ನೈತಿಕ ಸಮಿತಿಯು ಅನೈತಿಕ ನಡವಳಿಕೆ ಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನಂತರ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಹೊರಹಾಕಲಾಯಿತು. +ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ; ಭವಿಷ್ಯ ನುಡಿದ ಅಮೆರಿಕನ್ ಗಾಯಕಿ +ಉಡುಗೊರೆಗಳ ಬದಲಾಗಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಆದೇಶದ ಮೇರೆಗೆ ಅದಾನಿ ಗ್ರೂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಮೊಯಿತ್ರಾ ಲೋಕಸಭೆಯಲ್ಲಿ ಹಣಕ್ಕಾಗಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಸಮಿತಿಯು ತನಿಖೆಯನ್ನು ಪ್ರಾರಂಭಿಸಿದೆ. +ಸರ್ಕಾರಿ ಬಂಗಲೆಯನ್ನು ತೆರವು ಮಾಡುವಂತೆ ತನಗೆ ಕಳುಹಿಸಿದ್ದ ನೋಟಿಸ್‍ನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‍ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ. ನಿನ್ನೆ ಹೊರಡಿಸಿದ ತನ್ನ ಆದೇಶದಲ್ಲಿ, ಮೊಯಿತ್ರಾ ಅವರು ಸಂಸದೆಯವರು ಉಚ್ಛಾಟನೆಯಾಗಿರುವುದರಿಂದ ಬಂಗಲೆಯಲ್ಲಿ ವಾಸಿಸುವ ಹಕ್ಕು ಇಲ್ಲ ಎಂದು ಹೈಕೋರ್ಟ್ ಹೇಳಿದೆ. +ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಉಡುಗೊರೆಗಳನ್ನು ಸ್ವೀಕರಿಸಿದ ಆರೋಪದ ಮೇಲೆ ಡಿಸೆಂಬರ್ 8ರಂದು ಮೊಯಿತ್ರಾ ಅವರನ್ನು ಉಚ್ಛಾಟಿಸಿದ ಬಳಿಕ ಜ.7ರೊಳಗೆ ಬಂಗಲೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿತ್ತು. ನಂತರ ಡಿಒಇ ಆದೇಶವನ್ನು ಅವರು ಪ್ರಶ್ನಿಸಿ ದೆಹಲಿ ಹೈಕೋರ್ಟ್‍ನ ಮೊರೆಹೋಗಿದ್ದರು. ಆದಾಗ್ಯೂ ಜ.4ರಂದು ನ್ಯಾಯಾಲಯವು ಮಹುವಾ ಮೊಯಿತ್ರಾ ಅವರಿಗೆ ಸರ್ಕಾರವು ಮಂಜೂರು ಮಾಡಿದ ವಸತಿಗೃಹದಲ್ಲಿ ಉಳಿಯಲು ಅನುಮತಿಗಾಗಿ ಡಿಒಇಯನ್ನು ಸಂಪರ್ಕಿಸಲು ಹೇಳಿತ್ತು. ತಕ್ಷಣ ಬಂಗಲೆಯನ್ನು ಖಾಲಿ ಮಾಡುವಂತೆ ಡಿಒಇ ಸೂಚಿಸಿದ್ದರು. ಇದನ್ನು ಪ್ರಶ್ನಿಸಿ ಮೊಯಿತ್ರಾ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದಾಗ್ಯೂ ನ್ಯಾಯಾಲಯವು ಆಕೆಯ ಮನವಿಯನ್ನು ತಿರಸ್ಕರಿಸಿದೆ. \ No newline at end of file diff --git a/eesanje/url_47_186_1.txt b/eesanje/url_47_186_1.txt new file mode 100644 index 0000000000000000000000000000000000000000..29d0d18848753ec74e0da962cf1f179bdb51dd07 --- /dev/null +++ b/eesanje/url_47_186_1.txt @@ -0,0 +1,6 @@ +ಅಮೃತ ಕಾಲಕ್ಕಿಂತ ಶಿಕ್ಷಾ ಕಾಲ ಬೇಕಿದೆ : ಖರ್ಗೆ +ನವದೆಹಲಿ, ಜ. 19 (ಪಿಟಿಐ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ದೇಶದ ಶಿಕ್ಷಣದ ಸ್ಥಿತಿಯ ಬಗ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು 2024 ರಲ್ಲಿ ಇಂಡಿಯಾ ಒಕ್ಕೂಟವೂ ತನ್ನ ವಿದ್ಯಾರ್ಥಿಗಳಿಗೆ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಹೇಳಿದರು. ಅಮೃತ್ ಕಾಲ ಗಿಂತ ಹೆಚ್ಚಾಗಿ ನಮಗೆ ಭಾರತಕ್ಕೆ ಶಿಕ್ಷಾ ಕಾಲ ಬೇಕು ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. +2024 ರಲ್ಲಿ ಇಂಡಿಯಾ ಒಕ್ಕೂಟವೂ ಮೋದಿ ಸರ್ಕಾರದಿಂದ ನಮ್ಮ ವಿದ್ಯಾರ್ಥಿಗಳಿಗೆ ನ್ಯಾಯವನ್ನು ಖಚಿತಪಡಿಸುತ್ತದೆ, ಏಕೆಂದರೆ ಶಿಕ್ಷಣದ ವರದಿ ಕಾರ್ಡ್ ಅನ್ನು ಒಟ್ಟು ವೈಫಲ್ಯ ಎಂದು ಗುರುತಿಸಲಾಗಿದೆ ಎಂದು ಅವರು ವಾರ್ಷಿಕ ಶಿಕ್ಷಣ ವರದಿಯನ್ನು ಉಲ್ಲೇಖಿಸಿದ್ದಾರೆ. +ವರದಿಯನ್ನು ಉಲ್ಲೇಖಿಸಿ, ಗ್ರಾಮೀಣ ಭಾರತದಲ್ಲಿ 14 ರಿಂದ 18 ವರ್ಷ ವಯಸ್ಸಿನ 56.7 ರಷ್ಟು ವಿದ್ಯಾರ್ಥಿಗಳು 3 ನೇ ತರಗತಿ ಗಣಿತವನ್ನು ಮಾಡಲು ಸಾಧ್ಯವಿಲ್ಲ ಮತ್ತು ಈ ವಯಸ್ಸಿನ 26.5 ಪ್ರತಿಶತದಷ್ಟು ಜನರು ಇನ್ನೂ ತಮ್ಮ ಪ್ರಾದೇಶಿಕ ಭಾಷೆಯಲ್ಲಿ 2 ನೇ ತರಗತಿಯ ಪಠ್ಯವನ್ನು ನಿರರ್ಗಳವಾಗಿ ಓದಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ಇದೆ ಎಂದು ಹೇಳಿದರು. +10ಸಾವಿರ ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗೆ ಮಹಾರಾಷ್ಟ ಸಹಿ +17-18 ವಯೋಮಾನದ ಶೇಕಡ 25 ರಷ್ಟು ಯುವಕರು ಶಿಕ್ಷಣವನ್ನು ಸ್ಥಗಿತಗೊಳಿಸಿದ್ದಾರೆ, ಹೆಚ್ಚಾಗಿ ಆಸಕ್ತಿ ಕೊರತೆ ಕಾರಣ ಎಂದು ಅವರು ಗಮನಿಸಿದರು. ಬಿಜೆಪಿ ನಮ್ಮ ಯುವಕರ ಭವಿಷ್ಯವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿ ಖರ್ಗೆ ತಮ್ಮ ಪೋಸ್ಟ್‍ನೊಂದಿಗೆ 35 ಸೆಕೆಂಡ್‍ಗಳ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_186_10.txt b/eesanje/url_47_186_10.txt new file mode 100644 index 0000000000000000000000000000000000000000..9abb3d8e75b7fa96738ab0a0c6085952a43a70c8 --- /dev/null +++ b/eesanje/url_47_186_10.txt @@ -0,0 +1,7 @@ +ಇರಾನ್ ದಾಳಿ ನಿರ್ಧಾರ ಸಮರ್ಥಿಸಿಕೊಂಡ ಭಾರತ +ನವದೆಹಲಿ,ಜ.18-ಪಾಕಿಸ್ತಾನದ ಮೇಲೆ ಇರಾನ್‍ನ ಕ್ಷಿಪಣಿ ದಾಳಿಯು ಆ ಎರಡು ರಾಷ್ಟ್ರಗಳಿಗೆ ಮಾತ್ರ ಸಂಬಂಧಿಸಿದೆ ಎಂದು ಭಾರತ ಹೇಳಿದೆ. ಇರಾನ್ ಪಾಕಿಸ್ತಾನದಲ್ಲಿರುವ ಜೈಶ್ ಅಲ-ಅದ್ಲ್ ಗುಂಪಿನ ಪ್ರಧಾನ ಕಛೇರಿಯ ಮೇಲೆ ಕ್ಷಿಪಣಿ ಮತ್ತು ಡ್ರೋನ್ ಮೂಲಕ ದಾಳಿ ಮಾಡಿದ ನಂತರ ನವದೆಹಲಿಯ ಈ ಪ್ರತಿಕ್ರಿಯೆ ಬಂದಿದೆ, ಇದನ್ನು ನಮ್ಮ ದೇಶದ ಭದ್ರತೆಯ ವಿರುದ್ಧದ ಆಕ್ರಮಣಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಎಂದು ಕರೆದಿದೆ. +ಇದು ಇರಾನ್ ಮತ್ತು ಪಾಕಿಸ್ತಾನದ ನಡುವಿನ ವಿಷಯವಾಗಿದೆ. ಭಾರತಕ್ಕೆ ಸಂಬಂಧಿಸಿದಂತೆ, ನಾವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ರಾಜಿಯಾಗದ ನಿಲುವನ್ನು ಹೊಂದಿದ್ದೇವೆ. ದೇಶಗಳು ತಮ್ಮ ಸ್ವರಕ್ಷಣೆಗಾಗಿ ತೆಗೆದುಕೊಳ್ಳುವ ಕ್ರಮಗಳನ್ನು ನಾವು ಅರ್ಥಮಾಡಿಕೊಂಡಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. +ಇಡಿ ಮುಂದೆ ಕೇಜ್ರಿವಾಲ್ ಹಾಜರಾಗೋದು ಡೌಟು +ಪಶ್ಚಿಮ ಏಷ್ಯಾದ ದೇಶವು ಸಿರಿಯಾ ಮತ್ತು ಇರಾಕ್‍ನ ಸ್ವಾಯತ್ತ ಕುರ್ದಿಸ್ತಾನ್ ಪ್ರದೇಶದಲ್ಲಿ ಪತ್ತೇದಾರಿ ಕೇಂದ್ರ ಮತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿಯನ್ನು ಪ್ರಾರಂಭಿಸಿದ ಒಂದು ದಿನದ ನಂತರ ಇರಾನ್ ದಾಳಿ ನಡೆಸಿತ್ತು. ಪಾಕಿಸ್ತಾನವು ಬುಧವಾರ ಇರಾನ್‍ನ ತನ್ನ ವಾಯುಪ್ರದೇಶದ ಉಲ್ಲಂಘನೆ ಯನ್ನು ಖಂಡಿಸಿದೆ ಮತ್ತು ಅಂತಹ ಕ್ರಮಗಳು ಗಂಭೀರ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ನೆರೆಯ ದೇಶಕ್ಕೆ ಎಚ್ಚರಿಕೆ ನೀಡಿದೆ. +ಕಳೆದ ರಾತ್ರಿ ಇರಾನ್‍ನಿಂದ ಪಾಕಿಸ್ತಾನದ ಸಾರ್ವಭೌಮತ್ವದ ಅಪ್ರಚೋದಿತ ಮತ್ತು ಸ್ಪಷ್ಟ ಉಲ್ಲಂಘನೆಯು ಅಂತರರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ಚಾರ್ಟರ್‍ನ ಉದ್ದೇಶಗಳು ಮತ್ತು ತತ್ವಗಳ ಉಲ್ಲಂಘನೆಯಾಗಿದೆ. ಈ ಕಾನೂನುಬಾಹಿರ ಕೃತ್ಯವು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಮರ್ಥನೆಯನ್ನು ಹೊಂದಿಲ್ಲ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ನಾವು ಈ ಸಂದೇಶವನ್ನು ಇರಾನ್ ಸರ್ಕಾರಕ್ಕೆ ರವಾನಿಸಿದ್ದೇವೆ. +ಪಾಕಿಸ್ತಾನವು ಇರಾನ್‍ನಿಂದ ತನ್ನ ರಾಯಭಾರಿಯನ್ನು ಹಿಂಪಡೆಯಲು ನಿರ್ಧರಿಸಿದೆ ಮತ್ತು ಪ್ರಸ್ತುತ ಇರಾನ್‍ಗೆ ಭೇಟಿ ನೀಡುತ್ತಿರುವ ಪಾಕಿಸ್ತಾನದಲ್ಲಿರುವ ಇರಾನ್ ರಾಯಭಾರಿ ಸದ್ಯಕ್ಕೆ ಹಿಂತಿರುಗದಿರಬಹುದು ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಾವು ಸಹ ನಿರ್ಧರಿಸಿದ್ದೇವೆ. ಮುಂಬರುವ ದಿನಗಳಲ್ಲಿ ಪಾಕಿಸ್ತಾನ ಮತ್ತು ಇರಾನ್ ನಡುವೆ ನಡೆಯುತ್ತಿರುವ ಅಥವಾ ಯೋಜಿಸಲಾಗಿದ್ದ ಎಲ್ಲಾ ಉನ್ನತ ಮಟ್ಟದ ಭೇಟಿಗಳನ್ನು ಸ್ಥಗಿತಗೊಳಿಸಲಾಗಿದೆ. \ No newline at end of file diff --git a/eesanje/url_47_186_11.txt b/eesanje/url_47_186_11.txt new file mode 100644 index 0000000000000000000000000000000000000000..6ddb39548073441dc7366d2d5df35ea9fb2cbe19 --- /dev/null +++ b/eesanje/url_47_186_11.txt @@ -0,0 +1,5 @@ +ಬಿಜೆಪಿ ಸೇರಲು ಆಫರ್ ಬಂದಿತ್ತು ; ಸುಶೀಲ್‍ಕುಮಾರ್ ಶಿಂಧೆ +ಪೂನಾ,ಜ.18- ತನಗೆ ಮತ್ತು ತಮ್ಮ ಪುತ್ರಿ ಶಾಸಕಿ ಪ್ರಣಿತಿ ಶಿಂಧೆ ಅವರಿಗೆ ಬಿಜೆಪಿ ಸೇರುವ ಆಫರ್ ಬಂದಿತ್ತು, ಆದರೆ ತಾವು ಕಾಂಗ್ರೆಸ್‍ನ ನಿಷ್ಠಾವಂತರು ಮತ್ತು ಯಾವುದೆ ಕಾರಣಕ್ಕೂ ಪಕ್ಷವನ್ನು ತೊರೆಯುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ. ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾಜಿ ಕೇಂದ್ರ ಗೃಹ ಸಚಿವರು ಮಾತನಾಡಿದರು. +ಆದರೆ ಶಿಂಧೆ ತಂದೆ-ಮಗಳ ಜೋಡಿಗೆ ಅಂತಹ ಯಾವುದೇ ಆಫರ್ ನೀಡಿಲ್ಲ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಪ್ರಣಿತಿ ಮತ್ತು ನನಗೆ ಬಿಜೆಪಿಯಿಂದ ಆಫರ್ ಬಂದಿದೆ. ಆದರೆ ಅದು ಹೇಗೆ ಸಾಧ್ಯ (ಬದಿ ಬದಲಾಯಿಸುವುದು)? ನಾನು ನನ್ನ ಇಡೀ ಜೀವನವನ್ನು ಕಾಂಗ್ರೆಸ್‍ನಲ್ಲಿ ಕಳೆದಿದ್ದೇನೆ ಮತ್ತು ಇತರರ ಮನೆಗೆ ಹೋಗುವುದು ಹೇಗೆ ಸಾಧ್ಯ. ನಾನು ಅಂತಹ ಪಕ್ಷ ಬದಲಾಯಿಸುವ ವಿಷಯಕ್ಕೆ ಬಂದಿಲ್ಲ ಶಿಂಧೆ ಹೇಳಿದರು.ಕಾರ್ಯಕ್ರಮದ ನಂತರ, ಪತ್ರಕರ್ತರು ಬಿಜೆಪಿ ಸೇರಲು ನಿಮಗೆ ಯಾರು ಆಫರ್ ನೀಡಿದರು ಎಂದು ಕೇಳಿದಾಗ, ಆಫರ್ ನೀಡಿದ ವ್ಯಕ್ತಿ ದೊಡ್ಡ ವ್ಯಕ್ತಿ ಎಂದು ಹೇಳಿದರಾದರೂ ಅವರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದರು. +ನೈಜಿರಿಯಾ ಸ್ಪೋಟಕ್ಕೆ ಮೂರು ಬಲಿ, 71 ಮಂದಿಗೆ ಗಾಯ +ನಾನೊಬ್ಬ ನಿಷ್ಠಾವಂತ ಕಾಂಗ್ರೆಸಿಗ, ಕಾಂಗ್ರೆಸ್ ತೊರೆದು ಬೇರೆಲ್ಲೂ ಹೋಗುವುದಿಲ್ಲ ಎಂದು ಹೇಳಿದರು. ಈ ಹೇಳಿಕೆಯನ್ನು ತಳ್ಳಿಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ ಬಾವಂಕುಳೆ ಅವರು, ಶಿಂಧೆ ಮತ್ತು ಅವರ ಮಗಳಿಗೆ ಬಿಜೆಪಿ ಸೇರುವ ಯಾವುದೇ ಪ್ರಸ್ತಾಪವನ್ನು ನೀಡಿಲ್ಲ ಎಂದು ಸುದ್ದಿ ವಾಹಿನಿಯೊಂದಕ್ಕೆ ತಿಳಿಸಿದ್ದಾರೆ. \ No newline at end of file diff --git a/eesanje/url_47_186_12.txt b/eesanje/url_47_186_12.txt new file mode 100644 index 0000000000000000000000000000000000000000..84f16267b6f687ee5b33e0801d634b08edd471fc --- /dev/null +++ b/eesanje/url_47_186_12.txt @@ -0,0 +1,6 @@ +ಬಿಲ್ಕಿಸ್ ಬಾನೋ ಪ್ರಕರಣ : ಶರಣಾಗಲು ಕಾಲಾವಕಾಶ ಕೇಳಿದ ಆರೋಪಿಗಳು +ನವದೆಹಲಿ,ಜ.18- ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಗಳಲ್ಲಿ ಒಬ್ಬರಾದ ಗೋವಿಂದಭಾಯ್ ನ್ಯಾಯ್ ಅವರು ತಮ್ಮ ಆರೋಗ್ಯ ಮತ್ತು ಕುಟುಂಬದ ಜವಾಬ್ದಾರಿಗಳನ್ನು ಉಲ್ಲೇಖಿಸಿ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ. ಜನವರಿ 8 ರಂದು ಮಹತ್ವದ ತೀರ್ಪಿನಲ್ಲಿ, 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ 11 ಜನರಿಗೆ ಕ್ಷಮೆ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. +ಮಾತ್ರವಲ್ಲ, ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಅಪರಾಧಿಗಳು ಜನವರಿ 22 ರೊಳಗೆ ಶರಣಾಗುವಂತೆ ನ್ಯಾಯಾೀಧಿಶರು ಸೂಚಿಸಿದ್ದರು. ಕ್ಷೌರಿಕನಾಗಿ ಕೆಲಸ ಮಾಡುತ್ತಿರುವ ಗೋವಿಂದ ಭಾಯ್ ಅವರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ಅರ್ಜಿಯಲ್ಲಿ ವಿಸ್ತರಣೆ ಕೋರಲು ಹಲವು ಕಾರಣಗಳನ್ನು ನೀಡಿದ್ದಾರೆ. 88 ವರ್ಷದ ಹಾಸಿಗೆ ಹಿಡಿದಿರುವ ತಂದೆ ಮತ್ತು 75 ವರ್ಷದ ತಾಯಿಗೆ ತಾನೊಬ್ಬನೇ ಪಾಲಕನಾಗಿದ್ದು, ನನ್ನ ಮೇಲೆ ಅವರು ಸಂಪೂರ್ಣ ಅವಲಂಬಿತರಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ. +ಭಾರತೀಯ ಮೂಲದ ಸಿಂಗಾಪುರ ಸಚಿವ ರಾಜೀನಾಮೆ +ತನ್ನ ಇಬ್ಬರು ಮಕ್ಕಳ ಆರ್ಥಿಕ ಅಗತ್ಯಗಳಿಗೂ ತಾವೇ ಜವಾಬ್ದಾರರು ಎಂದು ಹೇಳಿರುವ ಅವರು, ಕೊನೆಯದಾಗಿ, ಅವರು ನಾನು ಕೂಡ ಅನಾರೋಗ್ಯದಿಂದ ನರಳುತ್ತಿರುವುದರಿಂದ ಶರಣಾಗಲು ಕಾಲಾವಕಾಶ ಕೋರಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಬಿಡುಗಡೆ ಆದೇಶದ ನಿಯಮಗಳು ಮತ್ತು ಷರತ್ತುಗಳನ್ನು ಪಾಲಿಸಿದ್ದೇನೆ ಎಂದು ನ್ಯಾಯ್ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ. +ಆ ಸಮಯದಲ್ಲಿ ಗರ್ಭಿಣಿಯಾಗಿದ್ದ 21 ವರ್ಷದ ಬಿಲ್ಕಿಸ್ ಬಾನೊ ಮತ್ತು ಅವಳ ಇಬ್ಬರು ಮಕ್ಕಳು ಮಾತ್ರ 2002 ರ ಗಲಭೆಗಳ ಸಮಯದಲ್ಲಿ ಬೆನ್ನಟ್ಟಿದ ಮತ್ತು ದಾಳಿಗೊಳಗಾದ ಗುಂಪಿನಲ್ಲಿ ಬದುಕುಳಿದಿದ್ದರು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬವನ್ನು ಕೊಂದ ಪುರುಷರ ಬಿಡುಗಡೆಯು ರಾಷ್ಟ್ರವ್ಯಾಪಿ ಕೋಪವನ್ನು ಹುಟ್ಟುಹಾಕಿತ್ತು. \ No newline at end of file diff --git a/eesanje/url_47_186_2.txt b/eesanje/url_47_186_2.txt new file mode 100644 index 0000000000000000000000000000000000000000..8934afc948d2f197ec5a58033483dacd4c7178c2 --- /dev/null +++ b/eesanje/url_47_186_2.txt @@ -0,0 +1,9 @@ +ದೇಶದ ನಾನಾ ಮೂಲೆಗಳಿಂದ ಆಯೋಧ್ಯೆಯತ್ತ ದೌಡಾಯಿಸುತ್ತಿದೆ ಜನ ಸಮೂಹ +ಅಯೋಧ್ಯೆ, ಜ. 19 (ಪಿಟಿಐ)ಮೈ ಕೊರೆಯುವ ಚಳಿಯ ನಡುವೆಯೂ ದೂರದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ದೇಶದಾದ್ಯಂತ ಜನ ವಾಕಿಂಗ್, ಸೈಕ್ಲಿಂಗ್ ಮತ್ತು ಸ್ಕೇಟಿಂಗ್ ಮೂಲಕ ರಾಮನಗರಿಗೆ ದೌಡಾಯಿಸುತ್ತಿದ್ದಾರೆ. ಭಗವಾನ್ ರಾಮನ ಭಕ್ತಿಯ ಪರಕಾಷ್ಟೆಯಲ್ಲಿ ಮಿಂದೆದ್ದಿರುವ ಜನ ಸಮೂಹ ಜ.22 ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಉತ್ಸಾಹದಿಂದ ಅಯೋಧ್ಯೆಯತ್ತ ಸಾಗುತ್ತಿದ್ದಾರೆ. +ಬಿಹಾರದ ಮಾಧೇಪುರ ಜಿಲ್ಲೆಯ ನಿವಾಸಿಯಾಗಿರುವ ನಿತೀಶ್ ಕುಮಾರ್ ಅವರು ಅಯೋಧ್ಯೆ ತಲುಪಲು 600 ಕಿಲೋಮೀಟರ್‍ದೂರದ ಅಯೋಧ್ಯೆಗೆ ಸೈಕಲ್‍ನಲ್ಲಿ ಪ್ರಯಾಣಿಸಿದ್ದಾರೆ. ಬಿಹಾರದಿಂದ ಅಯೋಧ್ಯೆಗೆ 615 ಕಿಲೋಮೀಟರ್‍ಗಳನ್ನು ಕ್ರಮಿಸಲು ನನಗೆ ಏಳು ದಿನಗಳು ಬೇಕಾಯಿತು. ನಾನು ಇಂದು ತಲುಪಿದ್ದೇನೆ. ನಾನು ನನ್ನ ಸೈಕಲ್‍ನಲ್ಲಿ ಸ್ಲೀಪಿಂಗ್ ಬ್ಯಾಗ್ ಮತ್ತು ಕೆಲವು ಅಗತ್ಯ ವಸ್ತುಗಳನ್ನು ಹೊತ್ತುಕೊಂಡು ಬಂದಿದ್ದೇನೆ ಎಂದು ತಿಳಿಸಿದ್ದಾರೆ. +ನಾನು ಮುಂದಿನ ಬಾರಿ ನನ್ನ ಕುಟುಂಬದೊಂದಿಗೆ ಬರುತ್ತೇನೆ. ನಾವು ಭಗವಾನ್ ರಾಮನಲ್ಲಿ ಬಲವಾದ ನಂಬಿಕೆ ಹೊಂದಿರುವುದರಿಂದ ಅಯೋಧ್ಯೆಯಲ್ಲಿ ಈ ಐತಿಹಾಸಿಕ ದಿನದ ಭಾಗವಾಗಲು ಬಯಸುತ್ತೇನೆ ಎಂದು ಅವರು ಹೇಳಿದರು. ಕುಮಾರ್ ಅವರು ತಮ್ಮ ಬೈಸಿಕಲ್ ಅನ್ನು ನಾಲ್ಕು ಧ್ವಜಗಳಿಂದ ಅಲಂಕರಿಸಿದ್ದಾರೆ ಹಾಗೂ ಜೈ ಶ್ರೀರಾಮ್ ಘೋಷಣೆ ಬರೆಸಿಕೊಂಡಿದ್ದಾರೆ. +ಧೀಘ ಡ್ಯಾನ್ಸ್ ಮ್ಯಾರಥಾನ್ (124 ಗಂಟೆಗಳ) ಗಿನ್ನೆಸ್ ಪುಸ್ತಕದ ದಾಖಲೆಯನ್ನು ಹೊಂದಿರುವ ಸೋನಿ ಚೌರಾಸಿಯಾ ಅವರು ಪವಿತ್ರ ಸಮಾರಂಭದ ಆಹ್ವಾನಿತರಲ್ಲಿ ಸೇರಿದ್ದಾರೆ ಮತ್ತು ವಾರಣಾಸಿಯಿಂದ ಅಯೋಧ್ಯೆಗೆ ಸ್ಕೇಟಿಂಗ್ ಮಾಡುತ್ತಿದ್ದಾರೆ. ನಾನು ಜನವರಿ 17 ರಂದು ವಾರಣಾಸಿಯಿಂದ ಹೊರಟೆ ಮತ್ತು ಜನವರಿ 22 ರಂದು ತಲುಪುತ್ತೇನೆ. ನಾನು ತುಂಬಾ ಹಿಂದೆಯೇ ಸ್ಕೇಟ್ ಮಾಡಿದ್ದೇನೆ ಆದರೆ ಈಗ ಹವಾಮಾನವು ಒಂದು ಸವಾಲಾಗಿದೆ. ಸಂಪೂರ್ಣ ಪ್ರಯಾಣವು 228 ಕಿಲೋಮೀಟರ್ ಆಗಿದೆ. ನನ್ನ ತರಬೇತುದಾರ ಮತ್ತು ವೈದ್ಯರು ನನ್ನನ್ನು ಅನುಸರಿಸುತ್ತಾರೆ ಎಂದು ಚೌರಾಸಿಯಾ ಪಿಟಿಐಗೆ ತಿಳಿಸಿದರು. +ಕೇವಲ 10 ವರ್ಷ ವಯಸ್ಸಿನ ಹಿಮಾಂಶು ಸೋನಿ ಜನವರಿ 16 ರಂದು ರಾಜಸ್ಥಾನದ ಕೋಟ್‍ಪುತ್ಲಿಯಿಂದ ಸ್ಕೇಟ್‍ನಲ್ಲಿ ಅಯೋಧ್ಯೆಗೆ ಹೊರಟಿದ್ದು 704 ಕಿಲೋಮೀಟರ್ ದೂರವನ್ನು ಕ್ರಮಿಸುವ ಗುರಿಯನ್ನು ಹೊಂದಿದ್ದಾರೆ.ನನ್ನ ಕುಟುಂಬವು ಭಗವಾನ್ ರಾಮನಲ್ಲಿ ನಂಬಿಕೆಯುಳ್ಳವರು ಮತ್ತು ನಾವು ಸುತ್ತಲೂ ನೋಡಿದಾಗ, ವಾತಾವರಣವು ದೀಪಾವಳಿಗಿಂತ ಕಡಿಮೆಯಿಲ್ಲ. ನಾನು ಪವಿತ್ರ ಸಮಾರಂಭದ ದಿನದಂದು ಅಯೋಧ್ಯೆಯಲ್ಲಿ ಇರಬೇಕೆಂದು ಬಯಸಿದ್ದೆ ಮತ್ತು ನನ್ನ ಪ್ರತಿಭೆಯನ್ನು ಮುಂದುವರಿಸುವುದಕ್ಕಿಂತ ಉತ್ತಮವಾದ ಮಾರ್ಗ ಯಾವುದು ಎಂದು ಸೋನಿ ಹೇಳಿದರು. +10ಸಾವಿರ ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗೆ ಮಹಾರಾಷ್ಟ ಸಹಿ +ಹಿಂದೂ-ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಶಬನಮ್ ಶೇಖ್ ಮುಂಬೈನಿಂದ ಅಯೋಧ್ಯೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.ಒಟ್ಟು ಪ್ರಯಾಣವು 1,400 ಕಿಲೋಮೀಟರ್‍ಗಳಿಗಿಂತ ಹೆಚ್ಚಿದೆ. ನಾನು ದಿನಕ್ಕೆ 60 ಕಿಲೋಮೀಟರ್‍ಗಳಷ್ಟು ನಡೆಯುತ್ತೇನೆ ಮತ್ತು ಅನೇಕ ವಿರಾಮಗಳನ್ನು ತೆಗೆದುಕೊಳ್ಳುತ್ತೇನೆ. ಹುಡುಗಿಯಾಗಿ, ಪ್ರಯಾಣದ ಸಮಯದಲ್ಲಿ ವಿರಾಮಗಳನ್ನು ತೆಗೆದುಕೊಳ್ಳಲು ಸುರಕ್ಷಿತ ಸ್ಥಳವನ್ನು ಹುಡುಕುವುದು ಸ್ಪಷ್ಟ ಕಾಳಜಿಯಾಗಿದೆ ಆದರೆ ನಾನು ಎಲ್ಲಿಗೆ ಹೋದರೂ ಜನರು ಸ್ವಾಗತಿಸುತ್ತಿದ್ದಾರೆ ಎಂದು ಅವರು ಹೇಳಿದರು. +ದುಂಡಗಿನ ಕನ್ನಡಕ ಮತ್ತು ಕೈಯಲ್ಲಿ ಕೋಲು ಹಿಡಿದು ಮಹಾತ್ಮ ಗಾಂೀಧಿಜಿ ವೇಷ ಧರಿಸಿ, ಕರ್ನಾಟಕದ ಕರಕಿಟ್ಟಿ ನಿವಾಸಿ ಮುತ್ತಣ್ಣ ತಿರ್ಲಾಪುರ ಅವರು 2000 ಕಿಲೋಮೀಟರ್‍ಗೂ ಹೆಚ್ಚು ಕಾಲ್ನಡಿಗೆಯಲ್ಲಿ ಸಾಗಿ ಅಯೋಧ್ಯೆ ತಲುಪಿದ್ದಾರೆ. \ No newline at end of file diff --git a/eesanje/url_47_186_3.txt b/eesanje/url_47_186_3.txt new file mode 100644 index 0000000000000000000000000000000000000000..4e4b95df769038ff5b34444687bba8907a8413f6 --- /dev/null +++ b/eesanje/url_47_186_3.txt @@ -0,0 +1,6 @@ +ಪ್ರತ್ಯೇಕ ರಾಜ್ಯ ಹೋರಾಟದಿಂದ ಸ್ಥಗಿತಗೊಂಡ ರೈಲು ಸೇವೆ +ಜಲ್ಪೈಗುರಿ,ಜ. 19 (ಪಿಟಿಐ) ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಲು ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಆಲ್ ಕಮ್ತಾಪುರ್ ವಿದ್ಯಾರ್ಥಿಗಳ ಒಕ್ಕೂಟದ (ಎಕೆಎಸ್‍ಯು) ಸದಸ್ಯರು ರೈಲು ಹಳಿಗಳನ್ನು ತಡೆದಿದ್ದರಿಂದ ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯವಾಗಿದೆ. ಈಶಾನ್ಯ ಫ್ರಾಂಟಿಯರ್ ರೈಲ್ವೆಯ ನ್ಯೂ ಜಲ್ಪೈಗುರಿ-ಹೊಸ ಬೊಂಗೈಗಾಂವ್ ವಿಭಾಗದ ಬೆಟ್‍ಗಾರ ನಿಲ್ದಾಣದಲ್ಲಿ ಬೆಳಿಗ್ಗೆ 7 ಗಂಟೆಗೆ ದಿಗ್ಬಂಧನ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ದಿಗ್ಬಂಧನವು ಎಲ್ಲಾ ಪ್ರಮುಖ ಮಾರ್ಗಗಳಲ್ಲಿ ರೈಲು ಸೇವೆಗಳನ್ನು ಅಸ್ತವ್ಯಸ್ತಗೊಳಿಸಿದೆ. ಇದರ ಪರಿಣಾಮ ನ್ಯೂ ಜಲ್ಪೈಗುರಿ-ಗುವಾಹಟಿ ವಂದೇ ಭಾರತ್ ಎಕ್ಸ್‍ಪ್ರೆಸ್ ಸೇರಿದಂತೆ ಹಲವಾರು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. +10ಸಾವಿರ ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗೆ ಮಹಾರಾಷ್ಟ ಸಹಿ +ಆರ್‍ಪಿಎಫ್ ಅಧಿಕಾರಿಗಳು ಮತ್ತು ರಾಜ್ಯ ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತನಾಡುತ್ತಿದ್ದರು ಮತ್ತು ದಿಗ್ಬಂಧನವನ್ನು ತೆಗೆದುಹಾಕಲು ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ. ಪ್ರತಿಭಟನೆಯು ರಾತ್ರಿ 7 ಗಂಟೆಯವರೆಗೆ ಮುಂದುವರಿಯುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು, ಆದರೆ ರೈಲ್ವೆ ಅಧಿಕಾರಿಗಳು ಮೊದಲೇ ಸೇವೆಗಳನ್ನು ಪುನರಾರಂಭಿಸುವ ಭರವಸೆ ಹೊಂದಿದ್ದಾರೆ. ತಮ್ಮ ಬೇಡಿಕೆಯನ್ನು ಈಡೇರಿಸದ ಟಿಎಂಸಿ ಮತ್ತು ಬಿಜೆಪಿ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. +ಎಕೆಎಸ್‍ಯು ಕಮ್ತಾಪುರ್ ಪೀಪಲ್ಸ ಪಾರ್ಟಿ ಯುನೈಟೆಡ್‍ನ ವಿದ್ಯಾರ್ಥಿಗಳ ವಿಭಾಗವಾಗಿದೆ, ಇದು ಪ್ರತ್ಯೇಕ ಕಮ್ತಾಪುರ ರಾಜ್ಯಕ್ಕಾಗಿ ಆಂದೋಲನ ನಡೆಸುತ್ತಿದೆ, ಇದನ್ನು ಪಶ್ಚಿಮ ಬಂಗಾಳದ ಉತ್ತರ ಭಾಗಗಳು ಮತ್ತು ಪಶ್ಚಿಮ ಅಸ್ಸಾಂನಿಂದ ಕೆತ್ತಲಾಗಿದೆ. \ No newline at end of file diff --git a/eesanje/url_47_186_4.txt b/eesanje/url_47_186_4.txt new file mode 100644 index 0000000000000000000000000000000000000000..cb5409232bfbd0635d0ac694b4d79e291f13fec7 --- /dev/null +++ b/eesanje/url_47_186_4.txt @@ -0,0 +1,7 @@ +ವಿಶೇಷ ದೋಣಿಯಲ್ಲಿ ಮಜುಲಿಗೆ ಪ್ರಯಾಣಿಸಿದ ನ್ಯಾಯ ಯಾತ್ರೆ +ಜೋರ್ಹತ್, ಜ. 19 (ಪಿಟಿಐ) – ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬೆಳಗ್ಗೆ ಅಸ್ಸಾಂನಲ್ಲಿ ಪುನರಾರಂಭಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಪಕ್ಷದ ಸಹೋದ್ಯೋಗಿಗಳೊಂದಿಗೆ ವಿಶ್ವದ ಅತಿದೊಡ್ಡ ಜನವಸತಿ ದ್ವೀಪವಾದ ಮಜುಲಿಗೆ ಪ್ರಯಾಣ ಬೆಳೆಸಿದ್ದಾರೆ. ಹಲವಾರು ದೋಣಿಗಳು ಅವರನ್ನು ಜೋರ್ಹತ್ ಜಿಲ್ಲೆಯ ನಿಮತಿಘಾಟ್‍ನಿಂದ ಮಜುಲಿ ಜಿಲ್ಲೆಯ ಅಫಲಮುಖ ಘಾಟ್‍ಗೆ ಕರೆದೊಯ್ದವು, ವಿಶೇಷ ದೋಣಿಗಳು ಕೆಲವು ವಾಹನಗಳನ್ನು ಬ್ರಹ್ಮಪುತ್ರದಾದ್ಯಂತ ಸಾಗಿಸುತ್ತಿವೆ. +ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್,. ರಾಜ್ಯಾಧ್ಯಕ್ಷ ಭೂಪೇನ್ ಕುಮಾರ್ ಬೋರಾ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಸೇರಿದಂತೆ ಪಕ್ಷದ ಹಲವಾರು ಪ್ರಮುಖ ನಾಯಕರು ಗಾಂಧಿಯವರೊಂದಿಗೆ ಇದ್ದರು. ಅಫಲಮುಖ ಘಾಟ್ ತಲುಪಿದ ನಂತರ, ಗಾಂಧಿಯವರು ಕಮಲಾಬರಿ ಚರಿಯಾಲಿಗೆ ಪ್ರಯಾಣಿಸುತ್ತಾರೆ, ಅಲ್ಲಿ ಅವರು ವೈಷ್ಣವರ ಪ್ರಮುಖ ತಾಣವಾದ ಔನಿಯಾತಿ ಸತ್ರಕ್ಕೆ ಭೇಟಿ ನೀಡುತ್ತಾರೆ. +10ಸಾವಿರ ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗೆ ಮಹಾರಾಷ್ಟ ಸಹಿ +ಗರ್ಮುರ್ ಮೂಲಕ ಹಾದುಹೋಗುವ ಯಾತ್ರೆಯು ಜೆಂಗ್ರೈಮುಖ್‍ನಲ್ಲಿರುವ ರಾಜೀವ್ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ಬೆಳಿಗ್ಗೆ ವಿರಾಮವನ್ನು ತೆಗೆದುಕೊಳ್ಳುತ್ತದೆ. ರಮೇಶ್ ಮತ್ತು ಪಕ್ಷದ ಸಂಸದ ಗೌರವ್ ಗೊಗೊಯ್ ಅವರು ಅಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. +ಮೆರವಣಿಗೆ ನಂತರ ಉತ್ತರ ಲಖಿಂಪುರ ಜಿಲ್ಲೆಯ ಧಾಕುಖಾನಾಗೆ ಬಸ್ ಮೂಲಕ ಸಾಗುತ್ತದೆ, ಗಾಂಧಿ ಸಂಜೆ ಗೊಗಾಮುಖ್‍ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಕ್ಷವು ಹಂಚಿಕೊಂಡ ವೇಳಾಪಟ್ಟಿಯಂತೆ ಯಾತ್ರೆಯು ಗೋಮುಖ ಕಾಲೋನಿ ಮೈದಾನದಲ್ಲಿ ರಾತ್ರಿ ನಿಲ್ಲುತ್ತದೆ. +ಗಾಂಧಿ ನೇತೃತ್ವದ ಯಾತ್ರೆಯು ಜನವರಿ 14 ರಂದು ಮಣಿಪುರದಿಂದ ಪ್ರಾರಂಭವಾಯಿತು ಮತ್ತು ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲು ನಿರ್ಧರಿಸಲಾಗಿದೆ. ಅಸ್ಸಾಂನಲ್ಲಿ ಜನವರಿ 25ರವರೆಗೆ 17 ಜಿಲ್ಲೆಗಳಲ್ಲಿ 833 ಕಿ.ಮೀ ಸಂಚರಿಸಲಿದೆ. \ No newline at end of file diff --git a/eesanje/url_47_186_5.txt b/eesanje/url_47_186_5.txt new file mode 100644 index 0000000000000000000000000000000000000000..0fc428b93bfca84e575f9c37405b5b7654a9ce55 --- /dev/null +++ b/eesanje/url_47_186_5.txt @@ -0,0 +1,4 @@ +ಆಯೋಧ್ಯೆಗೆ ರವಾನೆಯಾಯ್ತು 500 ಕೆಜಿ ಕುಂಕುಮ +ನಾಗ್ಪುರ, ಜ 19 (ಪಿಟಿಐ) : ಇದೇ 22 ರಂದು ರಾಮಮಂದಿರದ ವಿಗ್ರಹ ಪ್ರತಿಷ್ಠಾಪನೆಗಾಗಿ ಮಹಾರಾಷ್ಟ್ರದ ಅಮರಾವತಿಯಿಂದ ಅಯೋಧ್ಯೆಗೆ 500 ಕೆ.ಜಿ ಕುಂಕುಮದ ಎಲೆಗಳನ್ನು ಕಳುಹಿಸಲಾಗಿದೆ. ಆಧ್ಯಾತ್ಮಿಕ ನಾಯಕರಾದ ರಾಜೇಶ್ವರ ಮೌಲಿ ಮತ್ತು ಜಿತೇಂದ್ರನಾಥ್ ಮಹಾರಾಜ್ ಅವರು ಕುಂಕುಮ ಎಲೆಗಳನ್ನು ಯುಪಿಯ ಪವಿತ್ರ ಪಟ್ಟಣಕ್ಕೆ ಕೊಂಡೊಯ್ಯುತ್ತಿದ್ದಾರೆ. +857 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್‌ಡಿ ಅಳವಡಿಕೆ +ಅವರು ಅಯೋಧ್ಯೆಗೆ ನಿರ್ಗಮಿಸುವ ಸಮಾರಂಭದಲ್ಲಿ ಸ್ಥಳೀಯ ಸಂಸದ ನವನೀತ್ ರಾಣಾ ಭಾಗವಹಿಸಿದ್ದರು.ಕುಂಕುಮ ಎಲೆಗಳು ಭಾರತದಲ್ಲಿ ಆಳವಾದ ಸಾಮಾಜಿಕ ಮತ್ತು ಧಾರ್ಮಿಕ ಮಹತ್ವವನ್ನು ಹೊಂದಿವೆ. \ No newline at end of file diff --git a/eesanje/url_47_186_6.txt b/eesanje/url_47_186_6.txt new file mode 100644 index 0000000000000000000000000000000000000000..ba8d5d80c59e28317958151a098e66e3bbf97272 --- /dev/null +++ b/eesanje/url_47_186_6.txt @@ -0,0 +1,5 @@ +10ಸಾವಿರ ಕೋಟಿ ಬಂಡವಾಳ ಹೂಡಿಕೆ ಒಡಂಬಡಿಕೆಗೆ ಮಹಾರಾಷ್ಟ ಸಹಿ +ಮುಂಬೈ, ಜ 19 (ಪಿಟಿಐ) ಮಹಾರಾಷ್ಟ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಬೃಹತ್ ಐಟಿ, ಐಟಿಇಎಸ್ ಡೇಟಾ ಸೆಂಟರ್‍ನಲ್ಲಿ ಹೂಡಿಕೆ ಮಾಡಲು ವೆಬ್ ವಕ್ರ್ಸ್‍ನೊಂದಿಗೆ ರೂ 10,000 ಕೋಟಿ ಮೌಲ್ಯದ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದೆ. +ದಾವೋಸ್‍ನಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸಮ್ಮುಖದಲ್ಲಿ ಎಂಒಯುಗೆ ಸಹಿ ಹಾಕಲಾಗಿದೆ ಎಂದು ಶಿಂಧೆ ಕಚೇರಿ ಎಕ್ಸ್ ಮಾಡಿದೆ. ಹೂಡಿಕೆ ಪ್ರಸ್ತಾವನೆಯು 1,500 ಜನರಿಗೆ ನೇರ ಉದ್ಯೋಗವನ್ನು ಸೃಷ್ಟಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಅದು ಹೇಳಿದೆ. +857 ಕೋಟಿ ರೂ. ವೆಚ್ಚದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಪಿಎಸ್‌ಡಿ ಅಳವಡಿಕೆ +ಇದಕ್ಕೂ ಮುನ್ನ, ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯಲ್ಲಿ ರಾಜ್ಯವು 3,53,675 ಕೋಟಿ ರೂಪಾಯಿ ಮೌಲ್ಯದ ಎಂಒಯುಗಳಿಗೆ ಸಹಿ ಹಾಕಲಾಗಿದೆ ಎಂದು ಸಿಎಂ ಶಿಂಧೆ ಹೇಳಿದ್ದಾರೆ. \ No newline at end of file diff --git a/eesanje/url_47_186_7.txt b/eesanje/url_47_186_7.txt new file mode 100644 index 0000000000000000000000000000000000000000..f1e05f0739654b08e225804fd231ba3ce8bd4324 --- /dev/null +++ b/eesanje/url_47_186_7.txt @@ -0,0 +1,5 @@ +ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಅಪಹರಣಕ್ಕೆ ಯತ್ನಿಸಿದ ಯುವಕನ ಬಂಧನ +ಲಕ್ನೊ,ಜ.18- ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರನ್ನು ಅಪಹರಿಸಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಯುವಕನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದಿದೆ. ಖಾಸಗಿ ಕಾರ್ಯಕ್ರಮ ವೊಂದರಲ್ಲಿ ಪಾಲ್ಗೊಳ್ಳಲು ದೆಹಲಿಯಿಂದ ಲಕ್ನೋಗೆ ವಿಮಾನದಲ್ಲಿ ಬಂದಿದ್ದ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರನ್ನು ಯುವಕನೊಬ್ಬ ಬಂದೂಕು ತೋರಿಸಿ ಅಪಹರಿಸಲು ಯತ್ನಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. +ಸಚಿವೆ ಸಾದ್ವಿ ನಿರಂಜನ್ ಜ್ಯೋತಿ ಅವರ ಕಾರು ಚಾಲಕ ನೀಡಿರುವ ದೂರಿನನ್ವಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಚಿವರನ್ನು ಕರೆತರುವ ಕಾರಿನಲ್ಲಿ ತೆರಳುತ್ತಿದ್ದಾಗ ಬಂತಾರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂಪ್ರದಾನ್ ಡಾಬಾ ಬಳಿ ಟೀ ಕುಡಿಯಲು ನಿಲ್ಲಿಸಿದ್ದ ವೇಳೆ ವ್ಯಕ್ತಿಯೊಬ್ಬ ದಿಢೀರ್ ಬಂದು ಕಾರು ಹತ್ತಿ ಕುಳಿತ ಎಂದು ದೂರಿನಲ್ಲಿ ವಿವರಿಸಿದರು. +ಗ್ರಾಮೀಣ ಭಾಗದ ಶೇ.42ರಷ್ಟು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಬರಲ್ಲ +ಬಳಿಕ ಬಂದೂಕುಧಾರಿ ಕಾರಿನ ಸಮೇತ ಪರಾರಿಯಾಗಲು ಯತ್ನಿಸಿದ. ತಕ್ಷಣವೇ ಭದ್ರತಾ ಸಿಬ್ಬಂದಿಗಳು ಕಾರನ್ನು ಸುತ್ತುವರಿದು ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಯುವಕನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. \ No newline at end of file diff --git a/eesanje/url_47_186_8.txt b/eesanje/url_47_186_8.txt new file mode 100644 index 0000000000000000000000000000000000000000..a2dc99e0223ef871e0af561284931624ce1a416d --- /dev/null +++ b/eesanje/url_47_186_8.txt @@ -0,0 +1,7 @@ +ಅಯೋಧ್ಯೆ ರಾಮೋತ್ಸವಕ್ಕೆ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ +ಅಯೋಧ್ಯೆ,ಜ.18- ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಜನವರಿ 22 ರಂದು ನಡೆಯಲಿದ್ದು, ಹಲವು ರಾಜ್ಯಗಳು ರಜೆ ಘೋಷಣೆ ಮಾಡಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಜನವರಿ 22 ರಂದು ಉತ್ತರ ಪ್ರದೇಶದ ಶಿಕ್ಷಣ ಸಂಸ್ಥೆಗಳು ರಾಮಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭದ ದೃಷ್ಟಿಯಿಂದ ಮುಚ್ಚಿರು ತ್ತವೆ ಎಂದು ಸುದ್ದಿ ಸಂಸ್ಥೆ ಂಓಐ ವರದಿ ಮಾಡಿದೆ. ಹೆಚ್ಚುವರಿಯಾಗಿ, ಅಂದು ರಾಜ್ಯದಾದ್ಯಂತ ಮದ್ಯದಂಗಡಿಗಳನ್ನು ಕೂಡ ಮುಚ್ಚಲಾಗು ವುದು. +ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಜನವರಿ 22 ರಂದು ಶಾಲಾ ರಜೆ ಎಂದು ಘೋಷಿಸಿದ್ದಾರೆ, ಜನರು ಈ ದಿನವನ್ನು ಹಬ್ಬದಂತೆ ಆಚರಿಸಲು ಪ್ರೋತ್ಸಾಹಿಸಿದ್ದಾರೆ. ಯಾದವ್ ಅವರು ಜನವರಿ 22 ರಂದು ರಾಜ್ಯದಲ್ಲಿ ಡ್ರೈ ಡೇ ಘೋಷಿಸಿದ್ದಾರೆ, ಮದ್ಯ ಮತ್ತು ಭಾಂಗ್ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ. +ಆರಾಧನಾ ಸ್ಥಳಗಳ ಕಾಯ್ದೆ ರಕ್ಷಣೆಗೆ ಓವೈಸಿ ಮನವಿ +ಗೋವಾದಲ್ಲೂ ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ಹಿನ್ನೆಲೆಯಲ್ಲಿ ಗೋವಾ ಸರ್ಕಾರವು ಜನವರಿ 22 ರಂದು ಸರ್ಕಾರಿ ನೌಕರರು ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಶಾಲೆಗಳೊಂದಿಗೆ ಸರ್ಕಾರಿ ನೌಕರರಿಗೆ ಮಾತ್ರ ಸಾರ್ವಜನಿಕ ರಜೆ ಇರುತ್ತದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. +ಛತ್ತೀಸ್‍ಘಡದಲ್ಲೂ ರಾಮಮಂದಿರದಲ್ಲಿ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಆಚರಿಸಲು ಛತ್ತೀಸ್ಗಢ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಜನವರಿ 22 ರಂದು ರಜೆ ಘೋಷಿಸಿದೆ. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಎಕ್ಸ್‍ನಲ್ಲಿ ಬರೆದುಕೊಂಡಿದ್ದಾರೆ. +ಹರ್ಯಾಣ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರ ಜನವರಿ 22 ರಂದು ಶಾಲೆಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಅಲ್ಲದೆ, ಮಹಾಮಸ್ತಕಾಭಿಷೇಕದ ದಿನದಂದು ರಾಜ್ಯದಲ್ಲಿ ಎಲ್ಲಿಯೂ ಮದ್ಯ ಸೇವನೆಯನ್ನು ಅನುಮತಿಸಲಾಗುವುದಿಲ್ಲ ಎಂದು ಕೂಡ ತಿಳಿಸಿದೆ. \ No newline at end of file diff --git a/eesanje/url_47_186_9.txt b/eesanje/url_47_186_9.txt new file mode 100644 index 0000000000000000000000000000000000000000..50c7256c1e3dc35098845abdaa1cb8d153495051 --- /dev/null +++ b/eesanje/url_47_186_9.txt @@ -0,0 +1,6 @@ +ಗ್ರಾಮೀಣ ಭಾಗದ ಶೇ.42ರಷ್ಟು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಬರಲ್ಲ +ನವದೆಹಲಿ,ಜ.18- ಗ್ರಾಮೀಣ ಭಾರತದಲ್ಲಿ 14 ರಿಂದ 18 ವರ್ಷ ವಯಸ್ಸಿನ ಶೇ. 42 ರಷ್ಟು ಮಕ್ಕಳು ಇಂಗ್ಲಿಷ್‍ನಲ್ಲಿ ಸುಲಭವಾದ ವಾಕ್ಯಗಳನ್ನು ಓದಲು ಸಾಧ್ಯವಿಲ್ಲ ಎಂದು ವಾರ್ಷಿಕ ಶಿಕ್ಷಣದ ಸ್ಥಿತಿ ವರದಿಯಲ್ಲಿ ಬಹಿರಂಗಗೊಂಡಿದೆ. ಆದರೆ ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಸರಳ ವಿಭಜನೆಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವಾರ್ಷಿಕ ಶಿಕ್ಷಣದ ಸ್ಥಿತಿ ವರದಿ ಉಲ್ಲೇಖಿಸಿದೆ. +ಏಸರ್ 2023 ಬಿಯಾಂಡ್ ಬೇಸಿಕ್ಸ್ ಸಮೀಕ್ಷೆಯನ್ನು 26 ರಾಜ್ಯಗಳಾದ್ಯಂತ 28 ಜಿಲ್ಲೆಗಳಲ್ಲಿ ನಡೆಸಲಾಗಿದ್ದು, 14-18 ವರ್ಷ ವಯಸ್ಸಿನ ಒಟ್ಟು 34,745 ಯುವಕರನ್ನು ಸಮೀಕ್ಷೆಗೊಳಪಡಿಸಲಾಗಿದೆ. ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶವನ್ನು ಹೊರತುಪಡಿಸಿ, ಎರಡು ಗ್ರಾಮಾಂತರ ಜಿಲ್ಲೆಗಳನ್ನು ಸಮೀಕ್ಷೆ ಮಾಡಲಾಗಿದ್ದು, ಪ್ರತಿ ಪ್ರಮುಖ ರಾಜ್ಯದಲ್ಲಿ ಒಂದು ಗ್ರಾಮಾಂತರ ಜಿಲ್ಲೆಯಲ್ಲಿ ಸಮೀಕ್ಷೆ ಮಾಡಲಾಗಿದೆ. +ಇಡಿ ಮುಂದೆ ಕೇಜ್ರಿವಾಲ್ ಹಾಜರಾಗೋದು ಡೌಟು +ಪ್ರಥಮ್ ಫೌಂಡೇಶನ್ ಪ್ರಕಟಿಸಿದ ವಾರ್ಷಿಕ ವರದಿಯು 14-18 ವಯೋಮಾನದ ಅರ್ಧಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿಭಜನೆಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದಾರೆ ಎಂದು ವರದಿ ಮಾಡಿದೆ. ಈ ವಯೋಮಾನದ ಸುಮಾರು 25 ವಿದ್ಯಾರ್ಥಿಗಳು ಇನ್ನೂ ತಮ್ಮ ಪ್ರಾದೇಶಿಕ ಭಾಷೆಯಲ್ಲಿ 2 ನೇ ತರಗತಿಯ ಪಠ್ಯವನ್ನು ನಿರರ್ಗಳವಾಗಿ ಓದಲು ಸಾಧ್ಯವಿಲ್ಲ. ಅರ್ಧಕ್ಕಿಂತ ಹೆಚ್ಚು ಭಾಗವು (3-ಅಂಕಿಯಿಂದ 1-ಅಂಕಿಯ) ಸಮಸ್ಯೆಗಳೊಂದಿಗೆ ಹೋರಾಡುತ್ತಿದೆ. 14-18 ವರ್ಷ ವಯಸ್ಸಿನವರಲ್ಲಿ ಶೇ.43 ರಷ್ಟು ಮಂದಿ ಮಾತ್ರ ಅಂತಹ ಸಮಸ್ಯೆಗಳನ್ನು ಸರಿಯಾಗಿ ಮಾಡಲು ಸಾಧ್ಯವಾಗುತ್ತದೆ. ಈ ಕೌಶಲ್ಯವನ್ನು ಸಾಮಾನ್ಯವಾಗಿ 3 ಮತ್ತು 4 ನೇ ತರಗತಿಯಲ್ಲಿ ನಿರೀಕ್ಷಿಸಲಾಗುತ್ತದೆ. +ದಾಖಲಾತಿ ವರ್ಗಗಳಾದ್ಯಂತ, ಮಹಿಳೆಯರು (76 ಪ್ರತಿಶತ) ತಮ್ಮ ಪ್ರಾದೇಶಿಕ ಭಾಷೆಯಲ್ಲಿ ತರಗತಿ 2 ಹಂತದ ಪಠ್ಯವನ್ನು ಓದುವಲ್ಲಿ ಪುರುಷರಿಗಿಂತ (ಶೇ 70.9) ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಇದಕ್ಕೆ ವ್ಯತಿರಿಕ್ತವಾಗಿ, ಅಂಕಗಣಿತ ಮತ್ತು ಇಂಗ್ಲಿಷ್ ಓದುವಿಕೆಯಲ್ಲಿ ಪುರುಷರು ತಮ್ಮ ಸ್ತ್ರೀ ಪ್ರತಿರೂಪಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಸಮೀಕ್ಷೆಗೆ ಒಳಗಾದ ಶೇಕಡ 45ರಷ್ಟು ವಿದ್ಯಾರ್ಥಿಗಳು ರಾತ್ರಿ ಮಲಗಿ ಬೆಳಗ್ಗೆ ಏಳುವ ಸಮಯವನ್ನು ಆಧರಿಸಿ ಮಗು ಎಷ್ಟು ಗಂಟೆ ನಿದ್ದೆ ಮಾಡಿದೆ ಎಂದು ಲೆಕ್ಕ ಹಾಕಬಹುದು ಎಂದು ವರದಿ ಹೇಳುತ್ತದೆ. \ No newline at end of file diff --git a/eesanje/url_47_187_1.txt b/eesanje/url_47_187_1.txt new file mode 100644 index 0000000000000000000000000000000000000000..ba4391445dae6057acc767437f662fea0ca6e37d --- /dev/null +++ b/eesanje/url_47_187_1.txt @@ -0,0 +1,7 @@ +ಇಡಿ ಮುಂದೆ ಕೇಜ್ರಿವಾಲ್ ಹಾಜರಾಗೋದು ಡೌಟು +ನವದೆಹಲಿ,ಜ.18- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಲ್ಕನೇ ಬಾರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್‍ನಿಂದ ಹೊರಗುಳಿಯುವ ಸಾಧ್ಯತೆಯಿದೆ. ಕೇಂದ್ರ ಏಜೆನ್ಸಿ ಕಳೆದ ವಾರ ಕೇಜ್ರಿವಾಲ್ ಅವರಿಗೆ ನಾಲ್ಕನೇ ಸಮನ್ಸ್ ಜಾರಿ ಮಾಡಿದ್ದು, ಇಂದು ಹಾಜರಾಗುವಂತೆ ಕೇಳಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ, ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲು ಮತ್ತು ಲೋಕಸಭೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಗೋವಾಗೆ ಭೇಟಿ ನೀಡಲಿರುವುದರಿಂದ ಅವರು ಹಾಗೆ ಮಾಡುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ. +ನಿನ್ನೆ ಗುಜರಾತ್‍ಗೆ ಪ್ರಯಾಣಿಸುವ ಹಿರಿಯ ಯಾತ್ರಾರ್ಥಿಗಳನ್ನು ನೋಡಲು ದೆಹಲಿ ಸರ್ಕಾರದ ಕಾರ್ಯಕ್ರಮವೊಂದರಲ್ಲಿ, ಕೇಜ್ರಿವಾಲ್ ಅವರನ್ನು ಹೊಸ ಸಮನ್ಸ್ ಕುರಿತು ಕೇಳಲಾಯಿತು. ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದಷ್ಟೆ ಅವರು ಉತ್ತರಿಸಿದರು. +ಕೇಜ್ರಿವಾಲ್‍ಗೆ ಮೊದಲು ನವೆಂಬರ್ 2 ರಂದು ಇಡಿ ಮುಂದೆ ಹಾಜರಾಗಲು ಸಮನ್ಸ್ ನೀಡಲಾಯಿತು ಮತ್ತು ನಂತರ ಕಳೆದ ವರ್ಷ ಡಿಸೆಂಬರ್ 21 ರಂದು. ಅವರು ಎರಡೂ ಸಮನ್ಸ್‍ಗಳನ್ನು ತಪ್ಪಿಸಿದರು. ನಂತರ ಅವರನ್ನು ಜನವರಿ 3 ರಂದು ಬರಲು ಕೇಳಲಾಯಿತು, ಆದರೆ ಅವರು ರಾಜ್ಯಸಭಾ ಚುನಾವಣೆ ಮತ್ತು ಗಣರಾಜ್ಯೋತ್ಸವದ ಸಿದ್ಧತೆಗಳನ್ನು ಉಲ್ಲೇಖಿಸಿದರು. ಜನವರಿ 18 ಅಥವಾ 19 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಹೇಳಿ ಹೊಸ ಸಮನ್ಸ್ ಜಾರಿ ಮಾಡಲಾಗಿತ್ತು. ಅವರು ಇದನ್ನು ಸಹ ಬಿಟ್ಟುಬಿಡುವ ಸಾಧ್ಯತೆಯಿದೆ. +ಭಾರತೀಯ ಮೂಲದ ಸಿಂಗಾಪುರ ಸಚಿವ ರಾಜೀನಾಮೆ +ಕೇಜ್ರಿವಾಲ್ ಅವರು ಈ ಹಿಂದೆ ಇಡಿಯ ಉದ್ದೇಶಗಳನ್ನು ಪ್ರಶ್ನಿಸಿದ್ದರು ಮತ್ತು ಸಂಸ್ಥೆಯು ನ್ಯಾಯಾೀಧಿಶರು, ತೀರ್ಪುಗಾರರು ಮತ್ತು ಮರಣದಂಡನೆ ಪಾತ್ರವನ್ನು ವಹಿಸಿಕೊಂಡಿದೆ ಎಂದು ಆರೋಪಿಸಿದರು. ಬಿಜೆಪಿ ನೇತೃತ್ವದ ಸರ್ಕಾರವು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡದಂತೆ ಅವರನ್ನು ಬಂಧಿಸಲು ಬಯಸಿದೆ ಎಂದು ಅವರು ಹೇಳಿದ್ದಾರೆ. +ಸತ್ಯವೆಂದರೆ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಬಿಜೆಪಿ ನನ್ನನ್ನು ಬಂಧಿಸಲು ಬಯಸುತ್ತದೆ. ನನ್ನ ದೊಡ್ಡ ಆಸ್ತಿ ನನ್ನ ಪ್ರಾಮಾಣಿಕತೆ ಮತ್ತು ಅದನ್ನು ನಾಶಮಾಡಲು ಅವರು ಬಯಸುತ್ತಾರೆ. ನನಗೆ ಕಳುಹಿಸಲಾದ ಸಮನ್ಸ್‍ಗಳು ಕಾನೂನುಬಾಹಿರ ಎಂದು ನನ್ನ ವಕೀಲರು ಹೇಳಿದ್ದಾರೆ. ಬಿಜೆಪಿಯ ಉದ್ದೇಶ ನನ್ನ ತನಿಖೆಯಲ್ಲ. ಆದರೆ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ನನಗೆ ಅವಕಾಶ ನೀಡುವುದಿಲ್ಲ. ಅವರು ತನಿಖೆಯ ನೆಪದಲ್ಲಿ ನನ್ನನ್ನು ಕರೆದು ನಂತರ ನನ್ನನ್ನು ಬಂಧಿಸಲು ಬಯಸುತ್ತಾರೆ, ಎಂದು ಅವರು ಈ ತಿಂಗಳ ಆರಂಭದಲ್ಲಿ ಹೇಳಿದರು. \ No newline at end of file diff --git a/eesanje/url_47_187_10.txt b/eesanje/url_47_187_10.txt new file mode 100644 index 0000000000000000000000000000000000000000..99b128461112aaa59e8098b494e75c4068a51f87 --- /dev/null +++ b/eesanje/url_47_187_10.txt @@ -0,0 +1,6 @@ +ಮಧ್ಯಪ್ರದೇಶದಲ್ಲಿ ಮತ್ತೊಂದು ಹುಲಿ ಸಾವು +ಉಮಾರಿಯಾ, ಜ 17 (ಪಿಟಿಐ) ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಬಾಂಧವ್‍ಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ (ಬಿಟಿಆರ್) ಹುಲಿಯೊಂದು ಶವವಾಗಿ ಪತ್ತೆಯಾಗಿದ್ದು, ಇದನ್ನು ದೊಡ್ಡ ಹುಲಿ ಕೊಂದಿರಬಹುದು ಎಂದು ಶಂಕಿಸಲಾಗಿದೆ. ಇದು ಬಿಟಿಆರ್ ಪ್ರದೇಶದಲ್ಲಿ ಒಂದು ವಾರದೊಳಗೆ ಎರಡನೆ ಹುಲಿ ಸಾವಿನ ಪ್ರಕರಣವಾಗಿದೆ. +18 ತಿಂಗಳ ವಯಸ್ಸಿನ ಹುಲಿಯ ಶವ ಬಿಟಿಆರ್‍ನ ಧಮೋಖರ್ ವ್ಯಾಪ್ತಿಯ ಕಂದಕದಲ್ಲಿ ಪತ್ತೆಯಾಗಿದೆ ಎಂದು ಅರಣ್ಯ ರಕ್ಷಕ ವಿಜಯ್ ಶಂಕರ್ ಶ್ರೀವಾಸ್ತವ ತಿಳಿಸಿದ್ದಾರೆ. ಮೃತದೇಹವು ಸುಮಾರು 36 ಗಂಟೆಗಳಷ್ಟು ಹಳೆಯದಾಗಿದೆ ಮತ್ತು ವಯಸ್ಕ ಹುಲಿಯೊಂದಿಗೆ ಕಾದಾಟದಲ್ಲಿ ಹುಲಿ ಸಾವನ್ನಪ್ಪಿರುವ ಶಂಕೆ ಇದೆ ಎಂದು ಅವರು ಹೇಳಿದರು. ಸುತ್ತಮುತ್ತಲ ಪ್ರದೇಶದಲ್ಲಿ ಎರಡನೇ ಹುಲಿಯ ಹೆಜ್ಜೆ ಗುರುತು ಪತ್ತೆಯಾಗಿದೆ ಇದರ ಜೊತೆಗೆ ಹುಲಿಯ ಮೃತದೇಹವನ್ನು ಮತ್ತೊಂದು ಹುಲಿ ಎಳೆದೊಯ್ದ ಗುರುತುಗಳೂ ಪತ್ತೆಯಾಗಿವೆ ಎಂದರು. +ಡಿಕೆಶಿಗೆ ಸಿಎಂ ಹುದ್ದೆ ಚರ್ಚೆ ಮತ್ತೆ ಮುನ್ನೆಲೆಗೆ +ಮೃತದೇಹದ ಕತ್ತಿನ ಮೂಳೆ ಮುರಿದಿರುವುದು ಕಂಡುಬಂದಿದ್ದು, ಹಲ್ಲಿನ ಗುರುತುಗಳು ಕೂಡ ಕಂಡುಬಂದಿದ್ದು, ಮತ್ತೊಂದು ಹುಲಿಯೊಂದಿಗೆ ಕಾದಾಟದಲ್ಲಿ ಇದು ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ. +ಶವ ಪರೀಕ್ಷೆಯ ನಂತರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‍ಟಿಸಿಎ) ಮಾರ್ಗಸೂಚಿಗಳ ಪ್ರಕಾರ ಶವವನ್ನು ವಿಲೇವಾರಿ ಮಾಡಲಾಗಿದೆ ಮತ್ತು ಅದರ ದೇಹದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_187_11.txt b/eesanje/url_47_187_11.txt new file mode 100644 index 0000000000000000000000000000000000000000..99d7371b8fca9519d7e70ba778226ea9b0483ca7 --- /dev/null +++ b/eesanje/url_47_187_11.txt @@ -0,0 +1,5 @@ +ನಾಳೆ ಗೋವಾಗೆ ಕೇಜ್ರಿವಾಲ್ +ಪಣಜಿ, ಜ 17 (ಪಿಟಿಐ) ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ನಾಳೆಯಿಂದ ಮೂರು ದಿನಗಳ ಕಾಲ ಗೋವಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಮಿತ್ ಪಾಲೇಕರ್ ತಿಳಿಸಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಮತ್ತು ಸಂಸದರಾದ ರಾಘವ್ ಚಡ್ಡಾ ಮತ್ತು ಸಂದೀಪ್ ಪಾಠಕ್ ಅವರೊಂದಿಗೆ ಕೇಜ್ರಿವಾಲ್ ಜ. 18 ರಿಂದ 20 ರವರೆಗೆ ಕರಾವಳಿ ರಾಜ್ಯದಲ್ಲಿ ಇರಲಿದ್ದಾರೆ ಎಂದು ಪಾಲೇಕರ್ ಪಿಟಿಐಗೆ ತಿಳಿಸಿದರು. +ಲೋಕಸಭೆ ಚುನಾವಣೆಗೆ ಮುನ್ನ ಬರುವ ತಮ್ಮ ಭೇಟಿಯ ಸಂದರ್ಭದಲ್ಲಿ ಪಕ್ಷದ ಗೋವಾ ಶಾಸಕರು ಮತ್ತು ಇತರ ರಾಜ್ಯದ ಪದಾಧಿಕಾರಿಗಳು ಮತ್ತು ಸ್ವಯಂಸೇವಕರನ್ನು ಹಿರಿಯ ಎಎಪಿ ನಾಯಕರು ಭೇಟಿಯಾಗಲಿದ್ದಾರೆ ಎಂದು ಪಾಲೇಕರ್ ಹೇಳಿದರು. +ಅವರಿವರನ್ನು ಛೂ ಬಿಡುವ ಬದಲು ನನ್ನೆದುರು ಬಂದು ಮಾತಾಡಿ : ಸಿಎಂ ಸಿದ್ದುಗೆ ಹೆಗಡೆ ಸವಾಲ್ +ಗೋವಾ ವಿಧಾನಸಭೆಯಲ್ಲಿ ಎಎಪಿ ಇಬ್ಬರು ಶಾಸಕರನ್ನು ಹೊಂದಿದೆ – ವೆಂಜಿ ವಿಗಾಸ್ (ಬೆನೌಲಿಮ) ಮತ್ತು ಕ್ರೂಜ್ ಸಿಲ್ವಾ (ವೆಲಿಮ) ಅವರು ಆಪ್ ಶಾಸಕರಾಗಿದ್ದಾರೆ. ಕಾರ್ಯಕ್ರಮದ ವಿವರವಾದ ವೇಳಾಪಟ್ಟಿಯನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪಾಳೇಕರ್ ಹೇಳಿದರು. \ No newline at end of file diff --git a/eesanje/url_47_187_12.txt b/eesanje/url_47_187_12.txt new file mode 100644 index 0000000000000000000000000000000000000000..be7a52f1e64ae8af43fd0b78fb0f0f681233efb4 --- /dev/null +++ b/eesanje/url_47_187_12.txt @@ -0,0 +1,8 @@ +ಕೇರಳದ ಕೃಷ್ಣ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಮೋದಿ +ತ್ರಿಶೂರ್, ಜ 17 (ಪಿಟಿಐ) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕೇರಳದ ಗುರುವಾಯೂರಿನಲ್ಲಿರುವ ಪ್ರಸಿದ್ಧ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಮತ್ತು ನಟ-ರಾಜಕಾರಣಿ ಸುರೇಶ್ ಗೋಪಿ ಅವರ ಕುಟುಂಬ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡರು, ಇದರಲ್ಲಿ ಮಲಯಾಳಂ ಚಿತ್ರರಂಗದ ಟಾಪ್ ಸ್ಟಾರ್‍ಗಳು ಭಾಗವಹಿಸಿದ್ದರು. +ಪ್ರಧಾನಮಂತ್ರಿಯವರು ಮುಂಡು (ಧೋತಿ)ಯ ಸಾಂಪ್ರದಾಯಿಕ ಉಡುಗೆ ಮತ್ತು ಬಿಳಿ ಶಾಲನ್ನು ಧರಿಸಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ, ಅವರು ತಮ್ಮ ಉಡುಗೆಯನ್ನು ಬದಲಾಯಿಸಿದರು ಮತ್ತು ನಟ ಕಮ್ ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ಮದುವೆಯಲ್ಲಿ ಭಾಗವಹಿಸಿದರು ಎಂದು ಭದ್ರತಾ ವ್ಯವಸ್ಥೆಗಳ ಭಾಗವಾಗಿ ದೇವಾಲಯದಲ್ಲಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. + " " …#../ +ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ಮಮ್ಮುಟ್ಟಿ, ಮೋಹನ್‍ಲಾಲ್ ಮತ್ತು ದಿಲೀಪ್ ಸೇರಿದಂತೆ ಮಲಯಾಳಂ ಚಿತ್ರರಂಗದ ಸೂಪರ್‌ಸ್ಟಾರ್‌ಗಳು ಅಲ್ಲಿ ಉಪಸ್ಥಿತರಿದ್ದರು ಮತ್ತು ಪ್ರಧಾನಿ ಅವರು ಪ್ರತಿಯೊಬ್ಬರೊಂದಿಗೂ ಮಾತನಾಡಿದರು ಎಂದು ಅಕಾರಿ ಹೇಳಿದರು. ಗೋಪಿ ಅವರ ಮಗಳ ಮದುವೆಗೂ ಮುನ್ನ ದೇವಸ್ಥಾನದಲ್ಲಿ ವಿವಾಹವಾದ ದಂಪತಿಗಳಿಗೆ ಸಿಹಿ ತಿಂಡಿ ನೀಡಿ ಆಶೀರ್ವಾದ ಮಾಡಿದರು ಎಂದು ಅಧಿಕಾರಿ ತಿಳಿಸಿದರು. ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಇಲ್ಲಿನ ಪ್ರಸಿದ್ಧ ಶ್ರೀಕೃಷ್ಣ ದೇಗುಲಕ್ಕೆ ಮುಂಜಾನೆಯಿಂದಲೇ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. +ಅವರಿವರನ್ನು ಛೂ ಬಿಡುವ ಬದಲು ನನ್ನೆದುರು ಬಂದು ಮಾತಾಡಿ : ಸಿಎಂ ಸಿದ್ದುಗೆ ಹೆಗಡೆ ಸವಾಲ್ +ಬೆಳಗ್ಗೆ 7.35ರ ಸುಮಾರಿಗೆ ಗುರುವಾಯೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮೋದಿ ಶ್ರೀ ಕೃಷ್ಣ ಕಾಲೇಜು ಮೈದಾನದಲ್ಲಿ ಬಂದಿಳಿದಿದ್ದು, ನೂರಾರು ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ಅವರನ್ನು ಸ್ವಾಗತಿಸಲು ಗಂಟೆಗಟ್ಟಲೆ ಜಮಾಯಿಸಿದ್ದರು. ಎಲ್ಲಾ ವಯಸ್ಸಿನ ಜನರು ಹೆಲಿಪ್ಯಾಡ್‍ನಲ್ಲಿ ಬಿಜೆಪಿ ಧ್ವಜಗಳನ್ನು ಬೀಸುತ್ತಾ ಮತ್ತು ಪಕ್ಷದ ಬಣ್ಣಗಳಲ್ಲಿ ಟೋಪಿಗಳು ಮತ್ತು ಕ್ಯಾಪ್ಗ್‍ಳನ್ನು ಧರಿಸಿ ಪ್ರಧಾನಿಯನ್ನು ಸ್ವಾಗತಿಸಿದರು. ಹೆಲಿಪ್ಯಾಡ್‍ನಿಂದ ಶ್ರೀ ವಲ್ಸಮ್ ಗೆಸ್ಟ್ ಹೌಸ್‍ಗೆ ತೆರಳಿದ ಮೋದಿ ಅಲ್ಲಿ ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳುವ ಮೊದಲು ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಬದಲಾಯಿಸಿಕೊಂಡರು. +ನಂತರ ಅವರು ತ್ರಿಶ್ಶೂರ್ ಜಿಲ್ಲೆಯ ತ್ರಿಪ್ರಯಾರ್ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಚ್ಚಿಗೆ ಹಿಂದಿರುಗುವ ಮೊದಲು ಅಲ್ಲಿ ಕೇಂದ್ರ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಿನ್ನೆ ಮೋದಿ ಅವರು ಕೊಚ್ಚಿಯಲ್ಲಿ ಬೃಹತ್ ರೋಡ್‍ಶೋ ನಡೆಸಿದರು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿಯವರ ಜನಪ್ರಿಯತೆಯ ಮೇಲೆ ಸಾಗುವ ಬಿಜೆಪಿಯು ದಕ್ಷಿಣ ರಾಜ್ಯದಲ್ಲಿ ಕಾಲಿಡಲು ಗಮನಹರಿಸಲಾಗುತ್ತಿದೆ. \ No newline at end of file diff --git a/eesanje/url_47_187_2.txt b/eesanje/url_47_187_2.txt new file mode 100644 index 0000000000000000000000000000000000000000..e0f948be9b75c730655e582407e119e16f2a0d53 --- /dev/null +++ b/eesanje/url_47_187_2.txt @@ -0,0 +1,7 @@ +ಆರಾಧನಾ ಸ್ಥಳಗಳ ಕಾಯ್ದೆ ರಕ್ಷಣೆಗೆ ಓವೈಸಿ ಮನವಿ +ನವದೆಹಲಿ,ಜ.18- ಶ್ರೀಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‍ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಬೆನ್ನಲ್ಲೇ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಆರಾಧನಾ ಸ್ಥಳಗಳ ಕಾಯ್ದೆಯನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. +ಪ್ರಾರ್ಥನಾ ಸ್ಥಳಗಳ ಕಾಯಿದೆಯು ವಸಾಹತುಶಾಹಿ ಆಳ್ವಿಕೆಯಿಂದ ಸ್ವಾತಂತ್ರ್ಯದ ದಿನವಾದ ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದಂತೆ ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸುವ ಮತ್ತು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳಲು ಒದಗಿಸುವ ಕಾಯಿದೆಯನ್ನು ಬಲಪಡಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. +ವಿಷಯವು ನ್ಯಾಯಾಲಯಕ್ಕೆ ಹೋಗುತ್ತಿದೆ ಮತ್ತು ನ್ಯಾಯಾಲಯವು ತೀರ್ಪು ನೀಡುತ್ತಿದೆ. ಸುಪ್ರೀಂ ಕೋರ್ಟ್ ಸರಿಯಾದ ಕೆಲಸ ಮಾಡಿದೆ. ಬಾಬರಿ ಮಸೀದಿ ವಿವಾದದಲ್ಲಿ, ಪೂಜಾ ಸ್ಥಳಗಳ ಕಾಯ್ದೆಯು ಸಂವಿಧಾನದ ಮೂಲ ರಚನೆಯಿಂದ ಬಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ ಇದನ್ನು ಹೇಳಿದಾಗ, ಸರ್ಕಾರ ಅದನ್ನು ಏಕೆ ಒಪ್ಪುವುದಿಲ್ಲ ಎಂದು ಅವರು ಕೇಳಿದರು. +ಭಾರತೀಯ ಮೂಲದ ಸಿಂಗಾಪುರ ಸಚಿವ ರಾಜೀನಾಮೆ +ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಲಹಾಬಾದ್ ಹೈಕೋರ್ಟ್‍ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶಾಹಿ ಈದ್ಗಾ ಮಸೀದಿಗೆ ಆಯೋಗವನ್ನು ನೇಮಿಸುವ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮ್ಯಾನೇಜ್‍ಮೆಂಟ್ ಟ್ರಸ್ಟ್ ಶಾಹಿ ಮಸೀದಿ ಈದ್ಗಾ ಸಮಿತಿಯು ಸಲ್ಲಿಸಿದ ಮನವಿಯ ಮೇಲೆ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಸಂಬಂಧಪಟ್ಟ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. +ಮುಂದಿನ ವಿಚಾರಣೆಗಾಗಿ ನ್ಯಾಯಾಲಯವು ಜನವರಿ 23 ಕ್ಕೆ ಪ್ರಕರಣವನ್ನು ಪಟ್ಟಿ ಮಾಡಿದೆ. ವಿಚಾರಣಾ ನ್ಯಾಯಾಲಯದ ಮುಂದೆ ವಿಚಾರಣೆಯನ್ನು ಮುಂದುವರಿಸಬಹುದು ಆದರೆ ಮುಂದಿನ ವಿಚಾರಣೆಯ ದಿನಾಂಕದವರೆಗೆ ಆಯೋಗವನ್ನು ಕಾರ್ಯಗತಗೊಳಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. \ No newline at end of file diff --git a/eesanje/url_47_187_3.txt b/eesanje/url_47_187_3.txt new file mode 100644 index 0000000000000000000000000000000000000000..2001bc33f6a54709b9a5353de9ec5e85e8c82b5e --- /dev/null +++ b/eesanje/url_47_187_3.txt @@ -0,0 +1,7 @@ +ವಾಹನ ಸವಾರರಿಗೆ ಸಿಹಿ ಸುದ್ದಿ, ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಇಳಿಕೆ +ನವದೆಹಲಿ,ಜ.17- ವಾಹನ ಸವಾರರಿಗೆ ಸದ್ಯದಲ್ಲೇ ಸಿಹಿ ಸುದ್ದಿಯೊಂದು ಹೊರಬೀಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಭಾರೀ ಲಾಭದಲ್ಲಿ ಮುನ್ನಡೆಯುತ್ತಿರುವ ಕಾರಣ ಗ್ರಾಹಕರಿಗೆ ಹೊರೆಯನ್ನು ಇಳಿಸಲು ಮುಂದಾಗಿದ್ದು, ಪ್ರತಿ ಲೀಟರ್ ಡೀಸೆಲ್‍ಗೆ 10 ರೂ. ಹಾಗೂ ಪೆಟ್ರೋಲ್‍ಗೆ 5 ರೂ. ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ. +ದರ ಪರಿಷ್ಕರಣೆ ಫೆಬ್ರವರಿಯಿಂದ ಜಾರಿಗೆ ಬರುವ ಸಂಭವವಿದ್ದು, ಒಂದು ವೇಳೆ ತೈಲ ಕಂಪನಿಗಳ ಲಾಭದ ಹಳಿ ಇದೇ ರೀತಿ ಮುಂದುವರೆದರೆ ಡೀಸೆಲ್ ಮತ್ತು ಪೆಟ್ರೋಲ್ ದರ ಕಡಿತವಾಗುವುದು ಬಹುತೇಕ ಖಚಿತವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬಿಡುಗಡೆ ಮಾಡುವ ತ್ರೈಮಾಸಿಕ ವರದಿಯಲ್ಲಿಬರೋಬ್ಬರಿ 75 ಸಾವಿರ ಕೋಟಿ ನಿವ್ವಳ ಲಾಭವನ್ನು ಗಳಿಸಿದೆ. +ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕಚ್ಛಾ ತೈಲದ ಬೆಲೆ ಪ್ರತೀ ಬ್ಯಾರೆಲ್‍ಗೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವುದರಿಂದ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಕಡಿತಗೊಳಿಸಬೇಕೆಂಬ ಪ್ರಸ್ತಾಪ ವ್ಯಕ್ತವಾಗಿದೆ. 2023-24 ನೇ ಸಾಲಿನ ತ್ರೈಮಾಸಿಕ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ನಿರೀಕ್ಷೆಗಿಂತಲೂ ಹೆಚ್ಚಿನ ಲಾಭಾಂಶ ಬಂದಿರುವ ಕಾರಣ ಗ್ರಾಹಕರಿಗೆ ದರ ಇಳಿಸುವ ಪ್ರಸ್ತಾವನೆ ನಮ್ಮ ಮುಂದೆ ಎಂದು ಹೆಸರು ಬಹಿರಂಗಪಡಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ರಾಮನ ನೈವೇದ್ಯಕ್ಕೆ 1265 ಕೆಜಿ ತೂಕದ ಲಡ್ಡು ತಯಾರಿಸಿದ ರೆಡ್ಡಿ +ಕಳೆದ ಒಂದು ತಿಂಗಳಿನಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕಚ್ಛಾ ತೈಲ ಬೆಲೆ ಇಳಿಮುಖವಾಗುತ್ತಿರುವುದರಿಂದ ಸರ್ಕಾರಿ ಒಡೆತನದ ತೈಲ ಕಂಪನಿಗಳ ಲಾಭಾಂಶ ಒಂದೇ ಸಮನೆ ಏರಿಕೆಯಾಗುತ್ತಲೇ ಇದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಹಿಂದೂಸ್ತಾನ್ ಪೆಟ್ರೋಲಿಯಂ ಕಾಪೆರ್ರೇಷನ್ ಲಿಮಿಟೆಡ್, ಇಂಡಿಯನ್ ಆಯಿಲ್ ಕಾಪೆರ್ರೇಷನ್, ಭಾರತ್ ಪೆಟ್ರೋಲಿಯಂ ಕಾಪೆರ್ರೇಷನ್‍ಗಳ ಒಟ್ಟಾರೆ ಕಳೆದ ವರ್ಷದಲ್ಲಿ 1 ಲಕ್ಷ ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ತಿಳಿದುಬಂದಿದೆ. +ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಲೆ ಏರಿಕೆಯಿಂದ ಬಸವಳಿದಿರುವ ದೇಶದ ಜನತೆಗೆ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಸುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕೇಂದ್ರಸರ್ಕಾರ ಮಾಡುವ ಸಾಧ್ಯತೆಯಿದೆ. ಫೆಬ್ರವರಿ 1 ರಂದು ಮಂಡನೆಯಾಗುವ ಬಜೆಟ್‍ನಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ನಿರ್ಮಲಾ ಸೀತಾರಾಮನ್‍ರವರು ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡುವ ಪ್ರಸ್ತಾವನೆಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_187_4.txt b/eesanje/url_47_187_4.txt new file mode 100644 index 0000000000000000000000000000000000000000..987a95c62866effce7c55f6385814d7ca9122abd --- /dev/null +++ b/eesanje/url_47_187_4.txt @@ -0,0 +1,6 @@ +ಅಗಲಿದ ಪತ್ನಿಯನ್ನು ಸುಂದರ ಆತ್ಮಕ್ಕೆ ಹೊಲಿಸಿದ ತರೂರ್ +ನವದೆಹಲಿ,ಜ.17- ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತಮ್ಮನು ಅಗಲಿದ ಪತ್ನಿಯನ್ನು ಸುಂದರ ಆತ್ಮ ಎಂದು ಬಣ್ಣಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಪತ್ನಿ ಸುನಂದಾ ಪುಷ್ಕರ್ ಅವರ ಪುಣ್ಯತಿಥಿಯಂದು ಶ್ರದ್ಧಾಂಜಲಿ ಸಲ್ಲಿಸಿರುವ ಅವರು ತಮ್ಮ ಪತ್ನಿ ಸುಂದರವಾದ ಆತ್ಮ ಅದು ಶಾಶ್ವತವಾಗಿ ಬದುಕುತ್ತದೆ ಎಂದು ಬರೆದುಕೊಂಡಿದ್ದಾರೆ. +51 ವರ್ಷದ ಸುನಂದಾ ಪುಷ್ಕರ್ ಅವರು 2014 ರ ಜ.17ರಂದು ದೆಹಲಿಯ ಪಂಚತಾರಾ ಹೋಟೆಲ್‍ನಲ್ಲಿ ತಮ್ಮ ಸೂಟ್‍ನಲ್ಲಿ ಶವವಾಗಿ ಪತ್ತೆಯಾಗಿದ್ದರು. ನೀನು ನಮ್ಮನು ಅಗಲಿ 10 ವರ್ಷಗಳಾಯಿತು. ಸುಂದರವಾದ ಆತ್ಮವು ಶಾಶ್ವತವಾಗಿ ಬದುಕುತ್ತದೆ ಓಂ ಶಾಂತಿ ಎಂದು ತರೂರ್ ಪೋಸ್ಟ್ ಮಾಡಿದ್ದಾರೆ. +2010 ರಲ್ಲಿ ಕೇರಳದ ಎಲವಂಚೇರಿಯಲ್ಲಿರುವ ತರೂರ್ ಅವರ ಪೂರ್ವಜರ ಮನೆಯಲ್ಲಿ ನಡೆದ ಮಲಯಾಳಿ ವಿವಾಹ ಸಮಾರಂಭದಲ್ಲಿ ಇಬ್ಬರೂ ವಿವಾಹವಾಗಿದ್ದರು. ಜನವರಿ 17, 2014 ರ ರಾತ್ರಿ ದೆಹಲಿಯ ಐಷಾರಾಮಿ ಹೋಟೆಲ್‍ನಲ್ಲಿ ಪುಷ್ಕರ್ ಶವವಾಗಿ ಪತ್ತೆಯಾಗಿದ್ದರು ಆ ಸಮಯದಲ್ಲಿ ತರೂರ್ ಅವರ ಅಧಿಕೃತ ಬಂಗಲೆಯನ್ನು ನವೀಕರಿಸಲಾಗುತ್ತಿದ್ದ ಕಾರಣ ದಂಪತಿಗಳು ಹೋಟೆಲ್‍ನಲ್ಲಿ ತಂಗಿದ್ದರು. +ಬಿಹಾರದ 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಆರ್ಥಿಕ ನೆರವು +ತರೂರ್ ವಿರುದ್ಧ ಕ್ರೌರ್ಯ ಮತ್ತು ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು. ಈ ಸಾವಿನಲ್ಲಿ ನಾನು ಭಾಗಿಯಾಗಿಲ್ಲ ಎಂದು ವಾದಿಸಿದ್ದ ತರೂರ್ ಅವರಿಗೆ 2021 ರಲ್ಲಿ ಪ್ರಕರಣದಿಂದ ಮುಕ್ತಿ ದೊರೆತಿತ್ತು. \ No newline at end of file diff --git a/eesanje/url_47_187_5.txt b/eesanje/url_47_187_5.txt new file mode 100644 index 0000000000000000000000000000000000000000..ff8a9e4d41c4b7bfe0ff44de2806743c082605a7 --- /dev/null +++ b/eesanje/url_47_187_5.txt @@ -0,0 +1,8 @@ +ನಮ್ಮದು ರಾಜನೀತಿ ಅಲ್ಲ ಧರ್ಮನೀತಿ : ಆಚಾರ್ಯ ಸತ್ಯೇಂದ್ರ ದಾಸ್ +ಅಯೋಧ್ಯೆ,ಜ.17- ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರವೂ ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ನಡುವೆಯೇ, ಶ್ರೀರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಅದು ರಾಜನೀತಿ (ರಾಜಕೀಯ) ಅಲ್ಲ ಬದಲಿಗೆ ಅದು ಧರ್ಮನೀತಿ (ಧರ್ಮಮಾರ್ಗ) ಎಂದು ವ್ಯಾಖ್ಯಾನಿಸಿದ್ದಾರೆ. +ಇದು ರಾಜನೀತಿ ಅಲ್ಲ, ಅದು ಧರ್ಮನೀತಿ. ಅವರು ಪ್ರಧಾನಿ ಬಗ್ಗೆ ಅಸಭ್ಯವಾಗಿ ಮಾತನಾಡುತ್ತಾರೆ. ಅದಕ್ಕೆ ಬಿಜೆಪಿ ಉತ್ತರಿಸುತ್ತದೆ. ಆದರೆ, ನಾನು ಧರ್ಮನೀತಿ ಗೆ ಸೇರಿದ್ದೇನೆ. ನಾನು ಮಾಡಬೇಕಾಗಿರುವುದು ರಾಮಭಕ್ತರ ಸೇವೆ. ನಾನೊಬ್ಬ ಅರ್ಚಕ ಮತ್ತು ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಆಚಾರ್ಯ ತಿಳಿಸಿದ್ದಾರೆ. +ಆರೆಸ್ಸೆಸ್ ಮತ್ತು ಬಿಜೆಪಿ ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಜಕೀಯ ನರೇಂದ್ರ ಮೋದಿ ಕಾರ್ಯ ಮಾಡಿದೆ ಮತ್ತು ಕಾಂಗ್ರೆಸ್ ನಾಯಕರು ವಿನ್ಯಾಸಗೊಳಿಸಿದ ರಾಜಕೀಯ ಸಮಾರಂಭಕ್ಕೆ ಹೋಗುವುದು ಕಷ್ಟ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. +ಜಗನ್ನಾಥ ದೇವಸ್ಥಾನ ಹೆರಿಟೇಜ್ ಕಾರಿಡಾರ್ ಯೋಜನೆ ಉದ್ಘಾಟನೆ +ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ನಿನ್ನೆಯಿಂದ ವೈದಿಕ ವಿಧಿ ವಿಧಾನಗಳು ಪ್ರಾರಂಭವಾಗುತ್ತಿದ್ದಂತೆ, ಆಚಾರ್ಯ ದಾಸ್ ಅವರು, ವಿಗಳು ಪ್ರಾರಂಭವಾಗಿದೆ, ಎಲ್ಲಾ ಕಾರ್ಯವಿಧಾನಗಳನ್ನು ಆಚಾರ್ಯರು ನೆರವೇರಿಸುತ್ತಾರೆ ಮತ್ತು ನಂತರ ಜನವರಿ 22 ರಂದು ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. +ರಾಮ ಲಲ್ಲಾ ವಿಗ್ರಹವನ್ನು ಪ್ರತಿಷ್ಠಾಪಿಸಿದ ನಂತರ, ಪೂಜೆ ನಡೆಸಲಾಗುವುದು ಮತ್ತು ವಿಗ್ರಹಕ್ಕೆ ಸ್ನಾನ ಮಾಡಿಸಿದ ನಂತರ, ರಾಮ್ ಲಲ್ಲಾನನ್ನು ಮುಕುತ್ ಮತ್ತು ಕುಂಡಲïಗಳಿಂದ ಅಲಂಕರಿಸಲಾಗುತ್ತದೆ, ನಂತರ ಆರತಿ ಮಾಡಲಾಗುತ್ತದೆ ಎಂದು ವಿವರಿಸಿದರು. +ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಜನವರಿ 22 ರಂದು ಅಯೋಧ್ಯೆಯ ಭವ್ಯವಾದ ರಾಮಮಂದಿರದಲ್ಲಿ ಭಗವಾನ್ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾ ನಡೆಯಲಿದೆ. ಸಮಾರಂಭಕ್ಕೆ ಅದ್ದೂರಿ ವ್ಯವಸ್ಥೆ ಮಾಡಲಾಗುತ್ತಿದೆ. \ No newline at end of file diff --git a/eesanje/url_47_187_6.txt b/eesanje/url_47_187_6.txt new file mode 100644 index 0000000000000000000000000000000000000000..c2618add04b71d0d2092a4572c401723196ebd55 --- /dev/null +++ b/eesanje/url_47_187_6.txt @@ -0,0 +1,6 @@ +ರಾಮನ ನೈವೇದ್ಯಕ್ಕೆ 1265 ಕೆಜಿ ತೂಕದ ಲಡ್ಡು ತಯಾರಿಸಿದ ರೆಡ್ಡಿ +ಹೈದರಾಬಾದ್,ಜ.17- ಇಲ್ಲಿನ ನಾಗಭೂಷಣ ರೆಡ್ಡಿ ಎಂಬ ವ್ಯಕ್ತಿಯೊಬ್ಬರು ಅಯೋಧ್ಯೆ ರಾಮಮಂದಿರಕ್ಕಾಗಿ 1,265 ಕೆಜಿ ತೂಕದ ಲಡ್ಡು ತಯಾರಿಸಿ ದೇವಸ್ಥಾನದಲ್ಲಿ ನೈವೇದ್ಯವಾಗಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ರೆಡ್ಡಿ ಅವರು ತಯಾರಿಸಿರುವ ಲಡ್ಡುವನ್ನು ಇಂದು ಹೈದರಾಬಾದ್‍ನಿಂದ ಅಯೋಧ್ಯೆಗೆ ತೆಗೆದುಕೊಂಡು ಹೋಗಲಾಗುವುದು ಎಂದು ತಿಳಿದುಬಂದಿದೆ. +ಲಡ್ಡುವನ್ನು ರೆಫ್ರಿಜರೇಟೆಡ್ ಗಾಜಿನ ಪೆಟ್ಟಿಗೆಯಲ್ಲಿ ಒಯ್ಯಲಾಗುತ್ತದೆ. ಈ ಲಡ್ಡು ತಯಾರಿಸಲು ಸುಮಾರು 30 ಜನರು 24 ಗಂಟೆಗಳ ಕಾಲ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ನಾಗಭೂಷಣರೆಡ್ಡಿ ತಿಳಿಸಿದರು. 2000ನೇ ಇಸವಿಯಿಂದ ನಾನು ಶ್ರೀ ರಾಮ್ ಕ್ಯಾಟರಿಂಗ್ ಎಂಬ ಕೇಟರಿಂಗ್ ಸೇವೆಯನ್ನು ಹೊಂದಿದ್ದೇನೆ. ರಾಮ ಜನ್ಮಭೂಮಿ ದೇವಸ್ಥಾನದ ಭೂಮಿ ಪೂಜೆ ನಡೆಯುವಾಗ, ಶ್ರೀರಾಮನಿಗೆ ಏನು ನೈವೇದ್ಯವನ್ನು ನೀಡಬಹುದು ಎಂದು ನಾವು ಯೋಚಿಸಿದೆವು. ನಂತರ, ನಾವು ಒಂದು ಉಪಾಯವನ್ನು ಮಾಡಿದ್ದೇವೆ. ಭೂಮಿ ಪೂಜೆಯ ದಿನದಿಂದ ದೇವಸ್ಥಾನ ತೆರೆಯುವ ದಿನದವರೆಗೆ ಪ್ರತಿ ದಿನ 1 ಕೆಜಿ ಲಡ್ಡು ನೀಡುತ್ತೇವೆ ಎಂದು ನಾಗಭೂಷಣ ರೆಡ್ಡಿ ತಿಳಿಸಿದ್ದಾರೆ. +ಮಧ್ಯಪ್ರದೇಶದಲ್ಲಿ ಮತ್ತೊಂದು ಹುಲಿ ಸಾವು +ಮಂದಿರಕ್ಕಾಗಿ 1,265 ಕೆ.ಜಿ ತೂಕದ ಈ ಲಡ್ಡುವನ್ನು ನಾವು ಸಿದ್ಧಪಡಿಸಿದ್ದೇವೆ. ನಾವು ಈ ಲಡ್ಡುವನ್ನು ಹೈದರಾಬಾದ್‍ನಿಂದ ಅಯೋಧ್ಯೆಗೆ ರೆಫ್ರಿಜರೇಟೆಡ್ ಬಾಕ್ಸ್‍ನಲ್ಲಿ ಯಾತ್ರೆಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ನಾವು ಇಂದು ಹೈದರಾಬಾದ್‍ನಿಂದ ಪ್ರಯಾಣವನ್ನು ಪ್ರಾರಂಭಿಸುತ್ತೇವೆ ಮತ್ತು ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಈ ಲಡ್ಡುವನ್ನು ತಯಾರಿಸಿದ ಸ್ವೀಟ್ ಮಾಸ್ಟರ್ ದುಶಾಸನ್ ಅವರು ನನಗೆ ತುಂಬಾ ಸಂತೋಷವಾಗಿದೆ, ನಾನು ಇದೇ ಮೊದಲ ಬಾರಿಗೆ ಇಂತಹ ದೊಡ್ಡ ಕೆಲಸವನ್ನು ಮಾಡಿದ್ದೇನೆ. ನಾವು ತುಂಬಾ ಕಷ್ಟಪಟ್ಟು ಇದನ್ನು ಮಾಡಿದ್ದೇವೆ. ನಾವು ಈ ಲಡ್ಡುವನ್ನು ತಯಾರಿಸಿದ್ದೇವೆ ಎಂದು ವಿವರಿಸಿದರು. \ No newline at end of file diff --git a/eesanje/url_47_187_7.txt b/eesanje/url_47_187_7.txt new file mode 100644 index 0000000000000000000000000000000000000000..8be1e1d0669d504af2e86bea85d7b6c3885fb45c --- /dev/null +++ b/eesanje/url_47_187_7.txt @@ -0,0 +1,6 @@ +ರಾಮಮಂದಿರ ಪ್ರವೇಶಿಸಿದ ರಾಮ್‍ಲಲ್ಲಾ ವಿಗ್ರಹ +ಆಯೋದ್ಯೆ,ಜ.17-ಒಂದು ವಾರದ ಪ್ರಾಣ ಪ್ರತಿಷ್ಠಾ ಸಮಾರಂಭದ ಎರಡನೇ ದಿನವಾದ ಇಂದು ಭಗವಾನ್ ರಾಮ ಲಲ್ಲಾನ ವಿಗ್ರಹವನ್ನು ಮೊದಲ ಬಾರಿಗೆ ರಾಮಮಂದಿರದೊಳಗೆ ತರಲಾಯಿತು. ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ರಾಮ ಲಲ್ಲಾ ಅಥವಾ ಶಿಶು ರಾಮನ ವಿಗ್ರಹವನ್ನು ಮೆರವಣಿಗೆ ಮೂಲಕ ಇಂದು ದೇವಸ್ಥಾನಕ್ಕೆ ತರಲಾಯಿತು. +ಹೊಸ ರಾಮಮಂದಿರದ ಸಂಕೀರ್ಣಕ್ಕೆ ವಿಗ್ರಹವನ್ನು ಕೊಂಡೊಯ್ಯಲು ನಿನ್ನೆ ರಾತ್ರಿಯಿಂದಲೇ ಸಿದ್ಧತೆ ನಡೆದಿತ್ತು. 150ರಿಂದ 200 ಕೆಜಿ ನಡುವೆ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಮೆರವಣಿಗೆಗಾಗಿ ತಡರಾತ್ರಿ ಹೂವಿನಿಂದ ಅಲಂಕರಿಸಿದ ಟ್ರಕ್ ಮೇಲೆ ಇರಿಸಲಾಯಿತು. +ವಿಗ್ರಹವು ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಹಲವಾರು ವಿಧಿವಿಧಾನಗಳನ್ನು ನಡೆಸಲಾಯಿತು. ಜಲ ಯಾತ್ರೆ, ತೀರ್ಥ ಪೂಜೆ, ಬ್ರಾಹ್ಮಣ-ಬಟುಕ್ – ಕುಮಾರಿ-ಸುವಾಸಿನಿ ಪೂಜೆ, ರ್ವನಿ ಪೂಜೆ, ಕಲಾಯಾತ್ರೆಯನ್ನು ಪ್ರಸಾದ್ ಸಂಕೀರ್ಣದಲ್ಲಿರುವ ರಾಮ್ ಲಲ್ಲಾ ವಿಗ್ರಹದ ಮುಂದೆ ನಡೆಸಲಾಯಿತು. ಜಲಯಾತ್ರೆ, ತೀರ್ಥ ಪೂಜೆ, ಬ್ರಾಹ್ಮಣ-ಬಟುಕ್, ಕುಮಾರಿ-ಸುವಾಸಿನಿ ಪೂಜೆ, ರ್ವನಿ ಪೂಜೆ, ಕಲಶಯಾತ್ರೆ ಮತ್ತು ಪ್ರಸಾದ ಆವರಣದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರದಕ್ಷಿಣೆ ನಡೆಯಿತು. +ಬಿಹಾರದ 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಆರ್ಥಿಕ ನೆರವು +ಸಕಲ ವಿಧಿ ವಿಧಾನಗಳೊಂದಿಗೆ ದೇವಾಲಯಕ್ಕೆ ಬಂದಿರುವ ರಾಮ ಲಲ್ಲಾ ವಿಗ್ರಹವನ್ನು ನಾಳೆ ಅಧಿಕೃತವಾಗಿ ಗರ್ಭಗುಡಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು. 6 ದಿನಗಳ ಕಾಲ ನಡೆಯುವ ಧಾರ್ಮಿಕ ವಿವಿಧಾನಗಳು ಜನವರಿ 22 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಇತರ ಗಣ್ಯರು ಭಾಗವಹಿಸುವ ಮಹಾ ಸಮರ್ಪಣೆ ಅಥವಾ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಮುಕ್ತಾಯಗೊಳ್ಳಲಿವೆ. ಜನವರಿ 23 ರಿಂದ ರಾಮಜನ್ಮಭೂಮಿ ದೇಗುಲ ಸಾರ್ವಜನಿಕರಿಗೆ ದರ್ಶನಕ್ಕೆ ಮುಕ್ತವಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ. \ No newline at end of file diff --git a/eesanje/url_47_187_8.txt b/eesanje/url_47_187_8.txt new file mode 100644 index 0000000000000000000000000000000000000000..a5884a5a0a2ba05627d5318e154ac996852d8ec2 --- /dev/null +++ b/eesanje/url_47_187_8.txt @@ -0,0 +1,6 @@ +ಜಗನ್ನಾಥ ದೇವಸ್ಥಾನ ಹೆರಿಟೇಜ್ ಕಾರಿಡಾರ್ ಯೋಜನೆ ಉದ್ಘಾಟನೆ +ಪುರಿ, ಜ 17 (ಪಿಟಿಐ) ಸುಮಾರು 800 ಕೋಟಿ ರೂಪಾಯಿ ವೆಚ್ಚದದಲ್ಲಿ ನಿರ್ಮಾಣ ಮಾಡಲಾಗಿರುವ ಮಂದಿರ ಪರಿಕ್ರಮ ಪ್ರಕಲ್ಪ ಅಥವಾ ಜಗನ್ನಾಥ ದೇವಸ್ಥಾನ ಹೆರಿಟೇಜ್ ಕಾರಿಡಾರ್ ಯೋಜನೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು ಉದ್ಘಾಟಿಸಿದರು. ಈ ಯೋಜನೆಯು ಪಾರ್ಕಿಂಗ್ ಪ್ರದೇಶಗಳು, ಶ್ರೀ ಸೇತು (ಸೇತುವೆ), ಶ್ರೀ ದಂಡಾ (ರಸ್ತೆ), ಯಾತ್ರಿಗಳ ಸಂಚಾರವನ್ನು ಸುಗಮಗೊಳಿಸಲು ಬಡಾ ದಂಡಕ್ಕೆ ಸಮಾನಾಂತರವಾಗಿ ಚಲಿಸುವುದು, ಯಾತ್ರಾ ಕೇಂದ್ರ, ವಿಶ್ರಾಂತಿ ಕೊಠಡಿ ಸೌಲಭ್ಯಗಳು, ಜಗನ್ನಾಥ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರವಾಸಿಗರಿಗೆ ಉಡುಪುಗಳು, ಶೌಚಾಲಯಗಳು ಮತ್ತು ಇತರ ಸೌಕರ್ಯಗಳನ್ನು ಒದಗಿಸುವುದಾಗಿದೆ. +ಉದ್ಘಾಟನಾ ಸಮಾರಂಭಕ್ಕೆ ಈಗಾಗಲೇ ಒಡಿಶಾ ಮತ್ತು ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಇಲ್ಲಿಗೆ ಜಮಾಯಿಸಿದ್ದಾರೆ. ಪಟ್ನಾಯಕ್ ಅವರು ಯೋಜನೆಯ ಕುರಿತು ಕೆಲವು ಸಾಕ್ಷ್ಯಚಿತ್ರಗಳನ್ನು ಸಹ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. +ಮಧ್ಯಪ್ರದೇಶದಲ್ಲಿ ಮತ್ತೊಂದು ಹುಲಿ ಸಾವು +ದೇಶಾದ್ಯಂತ 90 ದೇಗುಲಗಳು ಮತ್ತು ಧಾರ್ಮಿಕ ಸಂಸ್ಥೆಗಳಿಂದ ಅನೇಕ ಸಾಧುಗಳು ಈಗಾಗಲೇ ಪವಿತ್ರ ಪಟ್ಟಣವನ್ನು ತಲುಪಿದ್ದಾರೆ ಮತ್ತು ಅವರ ಸುಗಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಜಗನ್ನಾಥ ದೇವಾಲಯದ ಆಡಳಿತ (ಎಸ್‍ಜೆಟಿಎ) ಮುಖ್ಯ ಆಡಳಿತಾಕಾರಿ ರಂಜನ್ ಕುಮಾರ್ ದಾಸ್ ತಿಳಿಸಿದ್ದಾರೆ. +ಪರಿಕ್ರಮದಲ್ಲಿ 900 ಅತಿಥಿಗಳಿಗೆ ದೊಡ್ಡ ಡಿಜಿಟಲ್ ಪರದೆಗಳನ್ನು ಅಳವಡಿಸಲಾಗಿರುವ ವಿಶೇಷ ಸಭಾಂಗಣವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮದಲ್ಲಿ ಜನರು ಭಾಗವಹಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಇಂದು ಸಾರ್ವಜನಿಕ ರಜೆ ಘೋಷಿಸಿದೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು ಮುಚ್ಚಲ್ಪಡುತ್ತವೆ ಆದರೆ ಖಾಸಗಿ ಕಚೇರಿಗಳು ಮತ್ತು ಸಂಸ್ಥೆಗಳು ತಮ್ಮ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಲೈವ್ ಸ್ಟ್ರೀಮಿಂಗ್ ಏರ್ಪಡಿಸಲಾಗಿದೆ. \ No newline at end of file diff --git a/eesanje/url_47_187_9.txt b/eesanje/url_47_187_9.txt new file mode 100644 index 0000000000000000000000000000000000000000..6b5020858a62ac09ac32854bcf4464389ae88139 --- /dev/null +++ b/eesanje/url_47_187_9.txt @@ -0,0 +1,7 @@ +ಬಿಹಾರದ 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಆರ್ಥಿಕ ನೆರವು +ಪಾಟ್ನಾ, ಜ 17 (ಪಿಟಿಐ) ರಾಜ್ಯ ಸರ್ಕಾರದ ಯೋಜನೆಯಡಿಯಲ್ಲಿ ಉದ್ಯಮಶೀಲತೆ ಮತ್ತು ಸ್ವಯಂ ಉದ್ಯೋಗಕ್ಕಾಗಿ ಮಾಸಿಕ ಆದಾಯ 6,000 ಅಥವಾ ಅದಕ್ಕಿಂತ ಕಡಿಮೆ ಇರುವ 94 ಲಕ್ಷ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ಬಿಹಾರ ಕ್ಯಾಬಿನೆಟ್ ಅನುಮೋದನೆ ನೀಡಿದೆ. +ಜಾತಿವಾರು ಸಮೀಕ್ಷೆಯ ವರದಿಯ ಪ್ರಕಾರ ಬಿಹಾರದಲ್ಲಿ 94,33,312 ಕುಟುಂಬಗಳು ತಿಂಗಳಿಗೆ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳಿವೆ. ಈಗ ಬಿಹಾರದ ಸಣ್ಣ ವಾಣಿಜ್ಯೋದ್ಯಮಿ ಯೋಜನೆಯಡಿಯಲ್ಲಿ ಉದ್ಯೋಗ ಉದ್ಯಮಶೀಲತೆ ಮತ್ತು ಸ್ವಯಂ-ಉದ್ಯಮಕ್ಕಾಗಿ ತಲಾ 2 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲು ತೀರ್ಮಾನಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಎಸ್ ಸಿದ್ಧಾರ್ಥ್ ಹೇಳಿದ್ದಾರೆ. +ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿಯ ಅನುಮೋದನೆಯ ನಂತರವೇ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ಹೇಳಿದರು. ಬಿಹಾರದ ಸಣ್ಣ ಉದ್ಯಮಿ ಯೋಜನೆಯಡಿ, ಫಲಾನುಭವಿಗಳು ಕರಕುಶಲ ವಸ್ತುಗಳು, ಜವಳಿ, ಸೇವಾ ವಲಯಗಳು ಮತ್ತು ವಿದ್ಯುತ್ ವಸ್ತುಗಳನ್ನು ಒಳಗೊಂಡಿರುವ ಸಣ್ಣ-ಪ್ರಮಾಣದ ಗುಡಿ ಕೈಗಾರಿಕೆಗಳಲ್ಲಿ ಹೂಡಿಕೆ ಮಾಡಬಹುದು ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ನಿಗದಿ ಪಡಿಸಲಾಗಿರುವ ಮೊತ್ತವನ್ನು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. +ಅವರಿವರನ್ನು ಛೂ ಬಿಡುವ ಬದಲು ನನ್ನೆದುರು ಬಂದು ಮಾತಾಡಿ : ಸಿಎಂ ಸಿದ್ದುಗೆ ಹೆಗಡೆ ಸವಾಲ್ +ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮರಣ ಮತ್ತು ಅಂಗವೈಕಲ್ಯ ಉಂಟಾದಾಗ ಅವರ ಪರಿಹಾರವನ್ನು ಸಂಪುಟ ಹೆಚ್ಚಿಸಿದೆ. ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು (ಅಥವಾ ಅವರ ಕುಟುಂಬಗಳು) ಈಗ ಸಾವಿನ ಸಂದರ್ಭದಲ್ಲಿ (ಅಸ್ವಾಭಾವಿಕ/ಆಕಸ್ಮಿಕವಾಗಿ) 2 ಲಕ್ಷ ರೂಪಾಯಿ (ಹಿಂದೆ ಇದು 1 ಲಕ್ಷ ರೂಪಾಯಿ) ಮತ್ತು ಶಾಶ್ವತ ಅಂಗವೈಕಲ್ಯಕ್ಕೆ 1 ಲಕ್ಷ ರೂಪಾಯಿ (ರೂ 75,000 ರಿಂದ) ಪರಿಹಾರವನ್ನು ಪಡೆಯುತ್ತದೆ. ಅದೇ ರೀತಿ ಕೂಲಿ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ಅವರ ಕುಟುಂಬ ಸದಸ್ಯರಿಗೆ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಸಿದ್ಧಾರ್ಥ್ ತಿಳಿಸಿದರು. +ಅಲ್ಲದೆ, ಬಿಹಾರ ಲೋಕಸೇವಾ ಆಯೋಗ (ಬಿಪಿಎಸ್‍ಸಿ) ಮತ್ತು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‍ಸಿ) ಪರೀಕ್ಷೆಗಳ ತಯಾರಿಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಬಿಸಿ) ರಾಜ್ಯ ಸರ್ಕಾರದ ಅಸ್ತಿತ್ವದಲ್ಲಿರುವ ಪ್ರೋತ್ಸಾಹವನ್ನು ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ. \ No newline at end of file diff --git a/eesanje/url_47_188_1.txt b/eesanje/url_47_188_1.txt new file mode 100644 index 0000000000000000000000000000000000000000..bd39ae5ce5806d1d66908ce933deddaf92b16a98 --- /dev/null +++ b/eesanje/url_47_188_1.txt @@ -0,0 +1,5 @@ +ಶ್ರೀರಾಮ ಪ್ರಾಣ ಪ್ರತಿಷ್ಠಾ ವಿಧಿ ವಿಧಾನಗಳಿಗೆ ಇಂದಿನಿಂದ ಚಾಲನೆ +ನವದೆಹಲಿ,ಜ.16- ಆಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಗಳ ವಿಧಿ ವಿಧಾನಗಳಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಇಂದು ರಾಮಲಲ್ಲಾ ಮಂದಿರದಲ್ಲಿ ಇಂದಿನಿಂದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. +ಜ. 22 ರಂದು ಅಯೋಧ್ಯೆಯಲ್ಲಿನ ಅವರ ಹೊಸ ಭವ್ಯ ಮಂದಿರದಲ್ಲಿ ರಾಮ್ ಲಲ್ಲಾ ಅವರ ಕಾರ್ಯಕ್ರಮ ಮತ್ತು ಪೂಜಾ ವಿಧಿವಿಧಾನಗಳು ಇಂದಿನಿಂದ ಪ್ರಾರಂಭವಾಗಲಿದ್ದು, ಜನವರಿ 18 ರಂದು ಗರ್ಭಗುಡಿಯಲ್ಲಿ ವಿಗ್ರಹವನ್ನು ಇರಿಸಲಾಗುವುದು. +ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕರ್ನಾಟಕದ ವೀಣಾವಾದನ +ದೇವಾಲಯದ ಟ್ರಸ್ಟ್‍ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ ಮತ್ತು ಅವರಲ್ಲಿ ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಬಾಲಿವುಡ್ ಸೂಪರ್‍ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ದೇವಸ್ಥಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭಕ್ಕೆ ನಗರ ಸಜ್ಜುಗೊಳ್ಳುತ್ತಿದೆ. \ No newline at end of file diff --git a/eesanje/url_47_188_10.txt b/eesanje/url_47_188_10.txt new file mode 100644 index 0000000000000000000000000000000000000000..0e07e359db25fa05a574e9fc7d492d4b0cfa9296 --- /dev/null +++ b/eesanje/url_47_188_10.txt @@ -0,0 +1,7 @@ +ಕೃತಕ ಬುದ್ಧಿಮತ್ತೆಯನ್ನು ಅನುಕೂಲಕಾರಿಯಾಗಿ ನೋಡಬೇಕು : ಗೋದ್ರೇಜ್ +ದಾವೋಸ್,ಜ. 15 (ಪಿಟಿಐ) ಕೃತಕ ಬುದ್ಧಿಮತ್ತೆಯ ಸರಿಯಾದ ಬಳಕೆಯಿಂದ ಭಾರತದಲ್ಲಿ ಉತ್ಪಾದನೆ, ಆರೋಗ್ಯ ಮತ್ತು ಇತರ ಕ್ಷೇತ್ರಗಳು ಹೊಸ ಎತ್ತರವನ್ನು ಅಳೆಯಬಹುದು ಎಂದು ವ್ಯಾಪಾರ ನಾಯಕ ನಾದಿರ್ ಗೋದ್ರೇಜ್ ಅಭಿಪ್ರಾಯಪಟ್ಟಿದ್ದಾರೆ. +ದಾವೋಸ್ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ಗೋದ್ರೇಜ್ ಅವರು, ಭಾರತವು ತನ್ನ ನಿವ್ವಳ ಶೂನ್ಯ ಗುರಿಗಳನ್ನು ಗಡುವಿನ ಮುಂಚೆಯೇ ಸಾಧಿಸಬಹುದು ಎಂದು ಹೇಳಿದರು ಏಕೆಂದರೆ ದೇಶವು ಹವಾಮಾನ ಸಂಬಂಧಿತ ವಿಷಯಗಳಲ್ಲಿ ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದೆ ಎಂದಿದ್ದಾರೆ. +ಪಿಟಿಐ ಜೊತೆ ಮಾತನಾಡಿದ ಅವರು, ಪ್ರಕ್ರಿಯೆಗಳನ್ನು ಉತ್ತಮಗೊಳಿಸುವ ಮೂಲಕ ವಿವಿಧ ಕ್ಷೇತ್ರಗಳಿಗೆ ಸಹಾಯ ಮಾಡುವ ಹೆಚ್ಚಿನ ಸಾಮಥ್ರ್ಯವನ್ನು ಕೃತಕ ಬುದ್ಧಿಮತ್ತೆ ಹೊಂದಿದೆ ಮತ್ತು ಅದನ್ನು ಅಡ್ಡಿಪಡಿಸುವ ಬದಲು ಅನುಕೂಲಕಾರಿಯಾಗಿ ನೋಡಬೇಕು ಎಂದು ಹೇಳಿದರು. ಗೋದ್ರೇಜ್ ಉದ್ಯಮ ಸಂಘಟಿತ ಗೋದ್ರೇಜ್ ಇಂಡಸ್ಟ್ರೀಸ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. +ಜಲ್ಲಿಕಟ್ಟು ಮೂಲಕ ಪೊಂಗಲ್ ಹಬ್ಬ ಆಚರಿಸಿದ ತಮಿಳುನಾಡು ಜನತೆ +ಹವಾಮಾನ ಬದಲಾವಣೆ, ಸಂಘರ್ಷಗಳು, ಭೌಗೋಳಿಕ ರಾಜಕೀಯ ಮತ್ತು ಭೌಗೋಳಿಕ-ಆರ್ಥಿಕ ಕಾಳಜಿಗಳು ಮತ್ತು ಎಐ ಒಡ್ಡುವ ಅವಕಾಶಗಳು ಮತ್ತು ಬೆದರಿಕೆಗಳು ಇಲ್ಲಿ ಪ್ರಾರಂಭವಾಗುವ ಐದು ದಿನಗಳ ವಾರ್ಷಿಕ ಸಭೆಯಲ್ಲಿ ಚರ್ಚಿಸಲಾಗುವ ಪ್ರಮುಖ ವಿಷಯಗಳಾಗಿವೆ. +ಹವಾಮಾನ ಬದಲಾವಣೆ, ಜಾಗತಿಕ ಆರ್ಥಿಕ ಕಾಳಜಿ ಮತ್ತು ಸಂಘರ್ಷ ಪರಿಹಾರದಂತಹ ಕ್ಷೇತ್ರಗಳ ಕುರಿತು ಸಭೆಯು ಹಲವಾರು ಸಕಾರಾತ್ಮಕ ಫಲಿತಾಂಶಗಳನ್ನು ನೀಡಬೇಕೆಂದು ಗೋದ್ರೇಜ್ ಹೇಳಿದರು. \ No newline at end of file diff --git a/eesanje/url_47_188_11.txt b/eesanje/url_47_188_11.txt new file mode 100644 index 0000000000000000000000000000000000000000..4c431e470761cbe9b5bd05e4a220ae656c4e1c5d --- /dev/null +++ b/eesanje/url_47_188_11.txt @@ -0,0 +1,8 @@ +ಸೇನಾ ದಿನಾಚರಣೆ : ಭಾರತೀಯ ಸೇನೆಗೆ ಪ್ರಧಾನಿ ಶುಭಾಷಯ +ನವದೆಹಲಿ,ಜ.15- ಸೇನಾ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. 2024 ರ ಸೇನಾ ದಿನದ ಸಂದರ್ಭದಲ್ಲಿ ಸೈನಿಕರಿಗೆ ನೀಡಿದ ಸಂದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಪತ್ತಿನ ಸಮಯದಲ್ಲಿ ಸಹಾಯ ಹಸ್ತ ಚಾಚಿದ್ದ ಧೈರ್ಯಶಾಲಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. +ಸೇನಾ ದಿನದಂದು ಭಾರತೀಯ ಸೇನೆಯ ವೀರ ಒಡನಾಡಿಗಳು, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಸೇನೆಯ ವೀರ ಪುರುಷ ಮತ್ತು ಮಹಿಳೆಯರ ಅದಮ್ಯ ಧೈರ್ಯ, ಸೇವೆ ಮತ್ತು ಸಮರ್ಪಣೆಗಾಗಿ ರಾಷ್ಟ್ರವು ಹೆಮ್ಮೆಪಡುತ್ತದೆ. +ಅದು ದೃಢವಾಗಿರಲಿ ಬಾಹ್ಯ ಬೆದರಿಕೆಗಳು ಮತ್ತು ಆಂತರಿಕ ಸವಾಲುಗಳನ್ನು ಎದುರಿಸುವುದು ಅಥವಾ ವಿಪತ್ತಿನ ಸಮಯದಲ್ಲಿ ಸಹಾಯ ಹಸ್ತ ಚಾಚುವುದು, ಸೇನೆಯ ವೀರ ಪುರುಷರು ಪ್ರತಿ ಪಾತ್ರದಲ್ಲೂ ಪ್ರಭಾವ ಬೀರಿದ್ದಾರೆ, ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಸೇನೆಗೆ ಲಿಖಿತ ಸಂದೇಶ ರವಾನಿಸಿದ್ದಾರೆ. +ಭಾರತೀಯ ಸೇನೆಯು ಸಂಘಟಿತ ಮತ್ತು ಶಿಸ್ತಿನ ಶಕ್ತಿಯಾಗಿ ವಿಶ್ವದಲ್ಲಿ ವಿಶಿಷ್ಟವಾದ ಗುರುತನ್ನು ಸೃಷ್ಟಿಸಿದೆ. ಬದಲಾಗುತ್ತಿರುವ ಯುಗದ ಸವಾಲುಗಳಿಗೆ ಭಾರತೀಯ ಸೇನೆಯು ತನ್ನನ್ನು ತಾನು ಹೊಂದಿಕೊಳ್ಳುವ ಜಾಗೃತವಾಗಿದೆ ಮತ್ತು ಇಂದು ದೇಶವು ತನ್ನ ಮಿಲಿಟರಿ ವೀರರೊಂದಿಗೆ ಎಲ್ಲಾ ಸೌಲಭ್ಯಗಳು ಮತ್ತು ಸಂಪನ್ಮೂಲಗಳೊಂದಿಗೆ ನಿಂತಿದೆ ಎಂದು ಅವರು ಸ್ಮರಿಸಿಕೊಂಡಿದ್ದಾರೆ. +ಜಲ್ಲಿಕಟ್ಟು ಮೂಲಕ ಪೊಂಗಲ್ ಹಬ್ಬ ಆಚರಿಸಿದ ತಮಿಳುನಾಡು ಜನತೆ +ಸೇನಾ ದಿನದ ಸಂದರ್ಭದಲ್ಲಿ, ದೇಶ ಸೇವೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲ ವೀರ ಹುತಾತ್ಮರಿಗೆ ನಾನು ರಾಷ್ಟ್ರದ ಪರವಾಗಿ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ವೀರ ಒಡನಾಡಿಗಳ ತ್ಯಾಗ ಮತ್ತು ತಪಸ್ಸಿಗೆ ದೇಶವು ನಮಸ್ಕರಿಸುತ್ತದೆ ಎಂದು ಅವರು ಹೇಳಿದರು. +ಅಮೃತ ಕಾಲದಲ್ಲಿ ಭವ್ಯವಾದ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವತ್ತ ರಾಷ್ಟ್ರವು ವೇಗವಾಗಿ ಸಾಗುತ್ತಿದೆ. ಭಾರತೀಯ ಸೇನೆಯ ಕೆಚ್ಚೆದೆಯ ಒಡನಾಡಿಗಳು ದೇಶಕ್ಕೆ ಭದ್ರತೆ ಮತ್ತು ಸ್ಥಿರತೆಯನ್ನು ಒದಗಿಸುವ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ. ನನಗೆ ವಿಶ್ವಾಸವಿದೆ. ಸಾಮೂಹಿಕ ಶಕ್ತಿಯಿಂದ ಶಕ್ತಿಯುತವಾದ ರಾಷ್ಟ್ರವು ಪ್ರಗತಿಯ ಹೊಸ ಎತ್ತರವನ್ನು ತಲುಪುತ್ತದೆ ಎಂದಿದ್ದಾರೆ. \ No newline at end of file diff --git a/eesanje/url_47_188_12.txt b/eesanje/url_47_188_12.txt new file mode 100644 index 0000000000000000000000000000000000000000..2318dbdfcba7f7309de5f4a0a9db020f21c55e4b --- /dev/null +++ b/eesanje/url_47_188_12.txt @@ -0,0 +1,10 @@ +56 ದೇಶಗಳ 10 ಕೋಟಿ ಮನೆಗಳಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ +ನವದೆಹಲಿ,ಜ.15- ವಿಶ್ವದ 56 ದೇಶಗಳಲ್ಲಿ ನೆಲೆಸಿರುವ 10 ಕೋಟಿ ಮನೆಗಳಿಗೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ವಿಎಚ್‍ಪಿ ಯೋಜನೆ ಹಾಕಿಕೊಂಡಿದೆ. ನಾವು ವಿಶ್ವದ 56 ದೇಶಗಳ 10 ಕೋಟಿ ಮನೆಗಳಿಗೆ ಹೋಗಿ ಅವರನ್ನು ಆಹ್ವಾನಿಸುತ್ತೇವೆ . ಅವರು ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವರ ಹತ್ತಿರದ ದೇವಸ್ಥಾನದಲ್ಲಿ ಒಟ್ಟಿಗೆ ಸೇರಬೇಕು ಎಂದು ವಿಎಚ್‍ಪಿ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಕರೆ ನೀಡಿದ್ದಾರೆ. +ಮೂರ್ತಿ ಸ್ಥಾಪನೆ ಎಂದೂ ಕರೆಯಲ್ಪಡುವ ಪ್ರಾಣ ಪ್ರತಿಷ್ಠಾ ಹಿಂದೂ ಮತ್ತು ಜೈನ ಆಚರಣೆಯಾಗಿದ್ದು, ಇದು ದೇವಾಲಯದಲ್ಲಿ ದೇವತೆಯ ವಿಗ್ರಹವನ್ನು (ಮೂರ್ತಿ) ಪ್ರತಿಷ್ಠಾಪಿಸುತ್ತದೆ. ಈ ಆಚರಣೆಯು ಸ್ತೋತ್ರಗಳು ಮತ್ತು ಮಂತ್ರಗಳನ್ನು ಪಠಿಸುವುದನ್ನು ಒಳಗೊಂಡಿರುತ್ತದೆ ಮತ್ತು ದೇವರನ್ನು ನಿವಾಸ ಅತಿಥಿಯಾಗಿ ಆಹ್ವಾನಿಸಲು ಮತ್ತು ನಂತರ ಮೊದಲ ಬಾರಿಗೆ ಮೂರ್ತಿಯ ಕಣ್ಣುಗಳನ್ನು ತೆರೆಯುತ್ತದೆ. +ಜನವರಿ 22 ರಂದು ಮುಕ್ತಾಯಗೊಳ್ಳಲಿರುವ ಈ ಉಪಕ್ರಮವು ಅಯೋಧ್ಯೆಯ ರಾಮಲಾಲಾ ದೇವಸ್ಥಾನದಲ್ಲಿ ಪವಿತ್ರ ಅಕ್ಕಿಯನ್ನು ಪ್ರಸ್ತುತಪಡಿಸುವುದನ್ನು ಒಳಗೊಂಡಿರುತ್ತದೆ. ಈ ಕಾರ್ಯಕ್ರಮ ಕೇವಲ ವೈಯಕ್ತಿಕ ವೀಕ್ಷಣೆಗೆ ಮಾತ್ರವಲ್ಲದೆ ಸಾಮೂಹಿಕ ಭಾಗವಹಿಸುವಿಕೆಯ ಗುರಿಯನ್ನು ಹೊಂದಿದೆ, ಇದು ಜಾಗತಿಕ ಜವಾಬ್ದಾರಿಗಳನ್ನು ಸ್ವೀಕರಿಸಲು ಹಿಂದೂ ಸಮುದಾಯದ ಸಿದ್ಧತೆಯನ್ನು ಸಂಕೇತಿಸುತ್ತದೆ ಎಂದಿದ್ದಾರೆ. +ಸಂಕ್ರಾಂತಿ ಶುಭಾಶಯ ಕೋರಿದ, ಮೋದಿ, ನಡ್ಡಾ, ಯೋಗಿ +ಈ ಕಾರ್ಯಕ್ರಮವು ಕೇವಲ ವೈಯಕ್ತಿಕ ವೀಕ್ಷಣೆಗೆ ಮಾತ್ರವಲ್ಲ, ಸಾಮೂಹಿಕ ಭಾಗವಹಿಸುವಿಕೆಗಾಗಿ ಉದ್ದೇಶಿಸಲಾಗಿದೆ. ಆದ್ದರಿಂದ ಜನರು ನೆರೆಹೊರೆಯ ದೇವಾಲಯಗಳಲ್ಲಿ ಒಟ್ಟುಗೂಡಿದಾಗ, ಸಾಕ್ಷಿ ಮತ್ತು ಆರತಿಯಲ್ಲಿ ಭಾಗವಹಿಸಿದಾಗ, ಒಗ್ಗಟ್ಟಿನಿಂದ ನಿಂತಾಗ, ಹಿಂದೂ ಸಮುದಾಯವು ಈಗ ಅದನ್ನು ಎತ್ತಿಹಿಡಿಯಲು ಸಿದ್ಧವಾಗಿದೆ ಎಂದು ಇಡೀ ಜಗತ್ತಿಗೆ ತಿಳಿಸುತ್ತದೆ. ಜಾಗತಿಕ ಹಿಂದೂ ಕುಟುಂಬದೆಡೆಗಿನ ಜವಾಬ್ದಾರಿಗಳು ಎಂದು ವಿಎಚ್‍ಪಿ ನಾಯಕ ಅಲೋಕ್ ಕುಮಾರ್ ಹೇಳಿದ್ದಾರೆ. +ಅಲೋಕ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದೊಳಗಿನ ಅಗೌರವದ ಟೀಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ, ಅಂತಹ ಕಾಮೆಂಟ್‍ಗಳು ಹಿಂದೂ ಸಮುದಾಯದ ತಾಳ್ಮೆಯನ್ನು ಪರೀಕ್ಷಿಸಬಹುದು ಎಂದು ಪ್ರತಿಪಾದಿಸಿದರು. +ಮೈತ್ರಿಕೂಟದ ಕೆಲವು ಸದಸ್ಯರು ದೇವರನ್ನು ಅಗೌರವಿಸುವ ಮಟ್ಟಿಗೆ ಅಗೌರವದ ಟೀಕೆಗಳನ್ನು ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ ಎಂದು ನನಗೆ ತೋರುತ್ತದೆ, ಕೆಲವರು ಡೆಂಗ್ಯೂ ಬಗ್ಗೆ ಹೇಳುತ್ತಾರೆ, ಇತರರು ದೇವಸ್ಥಾನದ ಗಂಟೆ ಬೂಟಾಟಿಕೆ ಅಥವಾ ಮೂರ್ಖ ಎಂದು ಹೇಳುತ್ತಾರೆ. ಈ ಎಲ್ಲಾ ಪ್ರತಿಕ್ರಿಯೆಗಳು ಹಿಂದೂ ಸಮುದಾಯದ ತಾಳ್ಮೆಗಾಗಿ ಕಾಯುತ್ತಿವೆ ಮತ್ತು ಅವರು ಹಿಂದೂ ಸಮಾಜದ ಈ ಪರೀಕ್ಷೆಗೆ ಪ್ರತಿಕ್ರಿಯಿಸಲು ಸಿದ್ಧರಾಗಿದ್ದಾರೆ ಎಂದಿದ್ದಾರೆ. +ಉಜ್ಜಯಿನಿ ಕುಂಭಮೇಳಕ್ಕೆ 12 ಕೋಟಿ ಜನ ಬರುವ ನಿರೀಕ್ಷೆ +ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಯೋಗೇಶ್ ಸಿಂಗ್ ಅವರು ಆಹ್ವಾನವನ್ನು ಸ್ವೀಕರಿಸಿದ ಗೌರವಕ್ಕೆ ಕೃತಜ್ಞತೆ ಸಲ್ಲಿಸಿದರು. \ No newline at end of file diff --git a/eesanje/url_47_188_2.txt b/eesanje/url_47_188_2.txt new file mode 100644 index 0000000000000000000000000000000000000000..e9590b6cd9a09e0428b606835d2a3cedb713db01 --- /dev/null +++ b/eesanje/url_47_188_2.txt @@ -0,0 +1,6 @@ +ಮಥುರಾದ ಶಾಹಿ ಈದ್ಗಾ ಮಸೀದಿ ಸರ್ವೆಗೆ ಸುಪ್ರೀಂ ತಡೆ +ನವದೆಹಲಿ, ಜ.16 (ಪಿಟಿಐ) ಮಥುರಾದ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಸಲು ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ಡಿಸೆಂಬರ್ 14, 2023 ರ ಆದೇಶದ ಅನುಷ್ಠಾನಕ್ಕೆ ತಡೆ ನೀಡಿದೆ. +ಸರ್ವೆಗೆ ಕೆಲವು ಕಾನೂನು ಸಮಸ್ಯೆಗಳು ಉದ್ಭವಿಸಿವೆ ಎಂದು ಪೀಠವು ಹೇಳಿದೆ ಮತ್ತು ಸಮೀಕ್ಷೆಗಾಗಿ ನ್ಯಾಯಾಲಯದ ಆಯುಕ್ತರ ನೇಮಕಕ್ಕಾಗಿ ಹೈಕೋರ್ಟ್‍ನಲ್ಲಿ ಮಾಡಿದ ಅಸ್ಪಷ್ಟ ಅರ್ಜಿಯನ್ನು ಪ್ರಶ್ನಿಸಿದೆ. ನೀವು ನ್ಯಾಯಾಲಯದ ಆಯುಕ್ತರ ನೇಮಕಾತಿಗಾಗಿ ಅಸ್ಪಷ್ಟ ಅರ್ಜಿಯನ್ನು ಸಲ್ಲಿಸಲು ಸಾಧ್ಯವಿಲ್ಲ. ಇದು ಉದ್ದೇಶದ ಮೇಲೆ ಬಹಳ ನಿರ್ದಿಷ್ಟವಾಗಿರಬೇಕು. ಅದನ್ನು ಪರಿಶೀಲಿಸಲು ನೀವು ಎಲ್ಲವನ್ನೂ ನ್ಯಾಯಾಲಯಕ್ಕೆ ಬಿಡಲು ಸಾಧ್ಯವಿಲ್ಲ, ಎಂದು ಪೀಠವು ಭಗವಾನ್‍ಶ್ರೀಕೃಷ್ಣ ವಿರಾಜಮಾನ್ ಮತ್ತು ಇತರ ಹಿಂದೂ ಸಂಸ್ಥೆಗಳ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್‍ಗೆ ಹೇಳಿದೆ. +ಅಮೆರಿಕ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ವಿವೇಕ್ ರಾಮಸ್ವಾಮಿ +ಹಿಂದೂ ಸಂಸ್ಥೆಗಳಿಗೆ ನೋಟಿಸ್ ನೀಡುತ್ತಿರುವುದಾಗಿ ತಿಳಿಸಿರುವ ಪೀಠ, ವಿವಾದದಲ್ಲಿ ಹೈಕೋರ್ಟ್‍ನಲ್ಲಿ ವಿಚಾರಣೆ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿ ಅವರ ಪ್ರತಿಕ್ರಿಯೆ ಕೇಳಿದೆ. ಶಾಹಿ ಈದ್ಗಾದ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಸಲು ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಹಿ ಮಸೀದಿ ಈದ್ಗಾದ ಆಡಳಿತ ಸಮಿತಿಯ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. +ಮಸೀದಿ ಸಮಿತಿಯು ತನ್ನ ಮನವಿಯಲ್ಲಿ, ಮೊಕದ್ದಮೆಯಲ್ಲಿ ಇತರ ಯಾವುದೇ ಅರ್ಜಿಗಳನ್ನು ನಿರ್ಧರಿಸುವ ಮೊದಲು ಅರ್ಜಿಯನ್ನು ತಿರಸ್ಕರಿಸುವ ತನ್ನ ಅರ್ಜಿಯನ್ನು ಹೈಕೋರ್ಟ್ ಪರಿಗಣಿಸಬೇಕಿತ್ತು ಎಂದು ವಾದಿಸಿದೆ. ಧಾರ್ಮಿಕ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991, ಧಾರ್ಮಿಕ ಸ್ಥಳಗಳ ಸ್ವರೂಪ ಬದಲಾವಣೆಗೆ ತಡೆ ಹಾಕುವ ಮೂಲಕ ಮೊಕದ್ದಮೆಯನ್ನು ನಿರ್ಬಂಧಿಸಲಾಗಿದೆ ಎಂಬ ಆಧಾರದ ಮೇಲೆ ಸಮಿತಿಯು ಮನವಿಯನ್ನು ತಿರಸ್ಕರಿಸುವಂತೆ ಕೋರಿತು. \ No newline at end of file diff --git a/eesanje/url_47_188_3.txt b/eesanje/url_47_188_3.txt new file mode 100644 index 0000000000000000000000000000000000000000..caec8e7e9bc7b25d081210f7f8e8f3b3ca1f1e4b --- /dev/null +++ b/eesanje/url_47_188_3.txt @@ -0,0 +1,11 @@ +ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಕರ್ನಾಟಕದ ವೀಣಾವಾದನ +ಅಯೋಧ್ಯೆ, ಜ. 16 (ಪಿಟಿಐ) ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠಾಪನೆ ಸಮಾರಂಭವನ್ನು ಆಚರಿಸಲು ಉತ್ತರ ಪ್ರದೇಶದ ಪಖಾವಾಜ್‍ನಿಂದ ತಮಿಳುನಾಡಿನ ಮೃದಂಗ ಹಾಗೂ ಕರ್ನಾಟಕದ ವೀಣೆ ಸೇರಿಂತೆ ದೇಶಾದ್ಯಂತ ಇರುವ ವಿವಿಧ ಶಾಸ್ತ್ರೀಯ ವಾದ್ಯಗಳನ್ನು ನುಡಿಸಲಾಗುವುದು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. +ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, ಜನವರಿ 22 ರಂದು ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಸಂಗೀತ ನೀಡಲು ಭಾರತದ ವಿವಿಧ ಭಾಗಗಳಿಂದ ಸಂಗೀತಗಾರರನ್ನು ಆಯ್ಕೆ ಮಾಡಲಾಗಿದೆ. ಅಪೂರ್ಣ ದೇವಸ್ಥಾನದಲ್ಲಿ ನಡೆಯುತ್ತಿರುವ ಸಮಾರಂಭದ ಕುರಿತು ಹಲವರು ಎತ್ತಿರುವ ಪ್ರಶ್ನೆಗಳಿಗೆ ರೈ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿ, ಯಾವುದೇ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು. +ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾ ಮಧ್ಯಾಹ್ನ 12:20 ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉಪಸ್ಥಿತಿಯಲ್ಲಿ ಸಮಾರಂಭ ನಡೆಯಲಿದೆ ಎಂದು ರೈ ಹೇಳಿದರು.ಸುಮಾರು 8,000 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. +ಆಯ್ಕೆಯಾದ ಸಂಗೀತಗಾರರು ತಮ್ಮ ಪ್ರದೇಶಗಳಿಂದ ಭಾರತೀಯ ಸಂಪ್ರದಾಯದ ವಿವಿಧ ರೀತಿಯ ವಾದ್ಯ ಯಂತ್ರ (ಸಂಗೀತ ವಾದ್ಯಗಳು) ನುಡಿಸುತ್ತಾರೆ ಎಂದು ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಬಾನ್ಸುರಿ ಮತ್ತು ಢೋಲಕ್ ಕಲಾವಿದರು ಇರುತ್ತಾರ, ಕರ್ನಾಟಕದ ವೀಣೆ, ಮಹಾರಾಷ್ಟ್ರದಿಂದ ಸುಂದರಿ, ಪಂಜಾಬ್‍ನಿಂದ ಅಲ್ಗೋಜಾ, ಒಡಿಶಾದಿಂದ ಮರ್ದಲ, ಮಧ್ಯಪ್ರದೇಶದಿಂದ ಸಂತೂರ್, ಮಣಿಪುರದಿಂದ ಪುಂಗ್, ಅಸ್ಸಾಂನಿಂದ ನಾಗದಾ ಮತ್ತು ಕಾಳಿ, ಛತ್ತೀಸ್‍ಗಢದಿಂದ ತಂಬೂರಾ, ಬಿಹಾರದಿಂದ ಪಖಾವಾಜ್, ದೆಹಲಿಯಿಂದ ಶೆಹಾನಿ ಮತ್ತು ರಾಜಸ್ಥಾನದಿಂದ ರಾವನ್ಹತ ಇರುತ್ತದೆ ಎಂದು ಅವರು ಮಾಹಿತಿ ನೀಡಿದರು. +ಪಶ್ಚಿಮ ಬಂಗಾಳದ ಖೋಲ್ ಮತ್ತು ಸರೋದ್ ಕಲಾವಿದರು, ಆಂಧ್ರಪ್ರದೇಶದಿಂದ ಘಟಂ, ಜಾರ್ಖಂಡ್‍ನಿಂದ ಸಿತಾರ್, ತಮಿಳುನಾಡಿನಿಂದ ನಾದಸ್ವರಮ್ ಮತ್ತು ಮೃದಂಗ ಹಾಗೂ ಉತ್ತರಾಖಂಡದ ಹುಡ್ಕಾ ಕೂಡ ಈ ಕಾರ್ಯಕ್ರಮದಲ್ಲಿ ಇರಲಿದೆ. +ಧಾರ್ಮಿಕ ಪಠಣಗಳು ನಡೆಯದಿದ್ದಾಗ ಅಥವಾ ಯಾರಾದರೂ ಮಾತನಾಡದಿದ್ದಾಗ ಅವರು ವಾದ್ಯಗಳನ್ನು ನುಡಿಸುತ್ತಾರೆ ಎಂದು ರೈ ಹೇಳಿದರು.ರಾಮಮಂದಿರದ ಯೋಜನಾ ನಿರ್ವಹಣಾ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿರುವ ಎರಡು ಕಂಪನಿಗಳಾದ ಎಲ್ ಅಂಡ್ ಟಿ ಮತ್ತು ಟಾಟಾ ಕನ್ಸಲ್ಟಿಂಗ್ ಇಂಜಿನಿಯರ್ ಪ್ರತಿನಿಧಿಗಳು ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಅತಿಥಿಗಳಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ಕುಡಿಯುವ ನೀರು, ಶೌಚಾಲಯ ಬ್ಲಾಕ್‍ಗಳು ಮತ್ತು ಶೂ ರ್ಯಾಕ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ರೈ ಹೇಳಿದರು. +ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಇಡಿಗೆ ಜಾರ್ಖಾಂಡ್ ಸಿಎಂ ಮನವಿ +ದೇವಾಲಯದ ಟ್ರಸ್ಟ್‍ನಿಂದ 7,000 ಕ್ಕೂ ಹೆಚ್ಚು ಜನರನ್ನು ಪ್ರಾಣ ಪ್ರತಿಷ್ಠಾಕ್ಕೆ ಆಹ್ವಾನಿಸಲಾಗಿದೆ. ಆಹ್ವಾನಿತರಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಬಿಲಿಯನೇರ್ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಜನವರಿ 26 ರಿಂದ, ಆರ್‍ಎಸ್‍ಎಸ್ ಮತ್ತು ವಿಎಚ್‍ಪಿ ಕಾರ್ಯಕರ್ತರು ಬ್ಯಾಚ್‍ಗಳಲ್ಲಿ ದೇವಾಲಯಕ್ಕೆ ಭೇಟಿ ನೀಡಲು ಪ್ರಾರಂಭಿಸುತ್ತಾರೆ, ಇದು ಫೆಬ್ರವರಿ ಅಂತ್ಯದವರೆಗೆ ಮುಂದುವರಿಯುತ್ತದೆ ಎಂದು ರೈ ಹೇಳಿದರು.ಕಳೆದ ಹಲವಾರು ದಿನಗಳಲ್ಲಿ ನೇಪಾಳದ ಜಂಕಕಪುರ ಮತ್ತು ಬಿಹಾರದ ಸಿತ್‍ಮರ್ಹಿ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ ಈ ಸಂದರ್ಭಕ್ಕಾಗಿ ಉಡುಗೊರೆಗಳು ಬಂದಿವೆ ಎಂದು ಅವರು ಹೇಳಿದರು. +ಕರಸೇವಕಪುರಂ, ತೀರ್ಥ ಕ್ಷೇತ್ರ ಪುರಂನಲ್ಲಿ ಆಹ್ವಾನಿತರಿಗೆ ತಂಗಲು ವ್ಯವಸ್ಥೆ ಮಾಡಲಾಗುತ್ತಿದ್ದು, ಹಲವಾರು ಹೋಟೆಲ್‍ಗಳು ಮತ್ತು ಧರ್ಮಶಾಲೆಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದು ರೈ ಹೇಳಿದರು. ದೇವಾಲಯದ ಕಾರ್ಯಕ್ರಮಕ್ಕೆ ಯುಎಸ್ ಮತ್ತು ಆಫ್ರಿಕಾ ಮತ್ತು ಗಲï ಪ್ರದೇಶ ಮತ್ತು ಹಾಂಗ್ ಕಾಂಗ್ ಸೇರಿದಂತೆ 50 ದೇಶಗಳಿಂದ ಒಟ್ಟು 53 ಅತಿಥಿಗಳು ಬರಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ. \ No newline at end of file diff --git a/eesanje/url_47_188_4.txt b/eesanje/url_47_188_4.txt new file mode 100644 index 0000000000000000000000000000000000000000..23c4577b2b2625d2e141ecde0625d01367e16c34 --- /dev/null +++ b/eesanje/url_47_188_4.txt @@ -0,0 +1,6 @@ +ದೇವಾಲಯ ಶುಚಿಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ +ಲಕ್ನೋ, ಜ 16 (ಪಿಟಿಐ) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಇಲ್ಲಿನ ಹನುಮಾನ್ ಸೇತು ದೇವಸ್ಥಾನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಶಂಕುಸ್ಥಾಪನೆ ಸಮಾರಂಭದ ಮೊದಲು ದೇವಾಲಯಗಳು ಮತ್ತು ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ಹಲವಾರು ಮುಖಂಡರುಗಳು ತಮ್ಮ ತಮ್ಮ ವ್ಯಾಪ್ತಿಯ ದೇವಾಲಯಗಳ ಶುಚಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. +ಲಕ್ನೋ ಸಂಸದರಾಗಿರುವ ಸಿಂಗ್ ಅವರು ದೇವಾಲಯಕ್ಕೆ ಪೂಜೆ ಸಲ್ಲಿಸಿ ಇಡಿ ದೇವಾಲಯವನ್ನು ಪೊರಕೆಯಿಂದ ಗುಡಿಸಿ ಶುಚಿಗೊಳಿಸಿದರು. +ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಇಡಿಗೆ ಜಾರ್ಖಾಂಡ್ ಸಿಎಂ ಮನವಿ +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ನಡೆಯುತ್ತಿರುವುದು ಜನತೆಗೆ ಸಂತಸದ ವಿಚಾರ. ಈ ಕಾರ್ಯಕ್ರಮದಲ್ಲಿ ದೇಶದ ಜನರು ಮಾತ್ರವಲ್ಲದೆ ವಿದೇಶದವರೂ ಭಾಗವಹಿಸಲಿದ್ದಾರೆ ಎಂದು ಸಿಂಗ್ ಹೇಳಿದರು. +हनुमान तेहि परसा कर पुनि कीन्ह प्रनाम, ⁰राम काजु कीन्हें बिनु मोहि कहाँ बिश्राम।प्रधानमंत्री श्री@narendramodiने समस्त देशवासियों से आह्वान किया है कि सभी लोग अपने आस पास के मंदिरों में स्वच्छता के लिए श्रमदान करें।आज लखनऊ में हनुमान सेतु मंदिर में जाकर,#…../ePaBCU7R6I \ No newline at end of file diff --git a/eesanje/url_47_188_5.txt b/eesanje/url_47_188_5.txt new file mode 100644 index 0000000000000000000000000000000000000000..bf10bd4b9cdfe2e8334d1a774b1eab710622ed45 --- /dev/null +++ b/eesanje/url_47_188_5.txt @@ -0,0 +1,7 @@ +ಕೋಕಾ ಕೋಲಾ-ರಿಲಿಯನ್ಸ್ ಸಂಸ್ಥೆಯಿಂದ ‘ಪ್ಲಾಸ್ಟಿಕ್ ಬಾಟಲ್ ಲೌಟಾನಾ’ ಯೋಜನೆ +ಮುಂಬೈ,ಜ. 16- ಕೋಕಾ-ಕೋಲಾ ಇಂಡಿಯಾ ಮತ್ತು ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರಿ ರಿಲಯನ್ಸ್ ರಿಟೇಲ್ಸ್ ಸಂಸ್ಥೆಗಳು ಭೂಲ್ ನಾ ಜಾನಾ, ಪ್ಲಾಸ್ಟಿಕ್ ಬಾಟಲ್ ಲೌಟಾನಾ ಎಂಬ ಯೋಜನೆ ಆರಂಭಿಸುವುದಾಗಿ ಘೋಷಿಸಿವೆ. ರಿವರ್ಸ್ ವೆಂಡಿಂಗ್ ಮೆಷಿನ್‍ಗಳು () ಮತ್ತು ಕಲೆಕ್ಷನ್ ಬಿನ್‍ಗಳ ಮೂಲಕ ಮುಂಬೈನ ರಿಲಯನ್ಸ್ ರಿಟೇಲ್ ಸ್ಟೋರ್‍ಗಳಲ್ಲಿ ಸಂಗ್ರಹಣೆ. ವೃತ್ತಾಕಾರದ ಆರ್ಥಿಕತೆಯ ದೃಷ್ಟಿಯೊಂದಿಗೆ, ಸರ್ಕಾರದ ಸ್ವಚ್ಛ ಭಾರತ್ ಮಿಷನ್‍ನೊಂದಿಗೆ ಜೋಡಿಸಲಾದ ಈ ಪ್ರಾಯೋಗಿಕ ಯೋಜನೆಯು ಮುಂಬೈ ಮತ್ತು ದೆಹಲಿಯ ಸ್ಮಾರ್ಟ್ ಬಜಾರ್ ಮತ್ತು ಸಹಕಾರಿ ಭಂಡಾರ್ ಸ್ಟೋರ್‍ಗಳು ಸೇರಿದಂತೆ 36 ರಿಲಯನ್ಸ್ ರಿಟೇಲ್ ಸ್ಟೋರ್‌ಗಳನ್ನು ಪ್ರಾರಂಭವಾಗಿದೆ. +ಇದರ ಜತೆಗೆ 2025 ರ ವೇಳೆಗೆ ದೇಶಾದ್ಯಂತ 200 ಸ್ಟೋರ್‍ಗಳಿಗೆ ವಿಸ್ತರಿಸಲಿದೆ. ಪ್ರಾಯೋಗಿಕ ಹಂತದಲ್ಲಿ ವಾರ್ಷಿಕವಾಗಿ 5,00,000 ಪಿಇಟಿ ಬಾಟಲಿಗಳನ್ನು ಸಂಗ್ರಹಿಸುವ ಗುರಿ ಹೊಂದಲಾಗಿದೆ. ಸಾಂತಾ ಕ್ರೂಜ್‍ನಲ್ಲಿರುವ ರಿಲಯನ್ಸ್ ರೀಟೇಲ್‍ನ ಸ್ಮಾರ್ಟ್ ಬಜಾರ್ ಸ್ಟೋರ್‍ನಲ್ಲಿ ಬೃಹನ್‍ಮುಂಬೈ ಮುನ್ಸಿಪಲ್ ಕಾಪೆರ್ರೇಷನ್ ಘನ ತ್ಯಾಜ್ಯ ನಿರ್ವಹಣೆಯ ವಿಶೇಷ ಕರ್ತವ್ಯದ ಅಕಾರಿ ಕಾಜಿ ಇರ್ಫಾನ್ ಅವರ ಉಪಸ್ಥಿತಿಯಲ್ಲಿ ಈ ಉಪಕ್ರಮವನ್ನು ಪ್ರಾರಂಭಿಸಲಾಗಿದೆ. +ಸ್ಥಾಪಿಸಲಾದ ಸಂಗ್ರಹಣೆ ತೊಟ್ಟಿಗಳು ಗ್ರಾಹಕರಿಗೆ ಕೋಕಾ-ಕೋಲಾ ಇಂಡಿಯಾ ಉತ್ಪನ್ನಗಳ ಮೇಲೆ ಬಲವಾದ ರಿಯಾಯಿತಿಗಳಿಗೆ ಬದಲಾಗಿ ಬಳಸಿದ ಖಾಲಿ ಬಾಟಲಿಗಳನ್ನು ಠೇವಣಿ ಮಾಡಲು ಅನುಕೂಲಕರ ಮಾರ್ಗವನ್ನು ನೀಡುತ್ತದೆ. ವಿಲೇವಾರಿ ಮಾಡಿದ ಪಿಇಟಿ ಬಾಟಲಿಗಳನ್ನು ಪಾಲಿಯೆಸ್ಟರ್ ಮತ್ತು ಪ್ಲಾಸ್ಟಿಕ್‍ಗಳ ಮರುಬಳಕೆಯಲ್ಲಿ ಮುಂಚೂಣಿಯಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ () ಸಂಗ್ರಹಿಸಿ ಮರುಬಳಕೆ ಮಾಡುತ್ತದೆ. ಈ ಉಪಕ್ರಮವು ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆಯಲ್ಲಿ ಗ್ರಾಹಕರನ್ನು ತೊಡಗಿಸಿಕೊಳ್ಳುವ ಮೂಲಕ ಸುಗಮ ತ್ಯಾಜ್ಯ ಸಂಗ್ರಹಣೆಯನ್ನು ಸುಗಮಗೊಳಿಸುತ್ತದೆ. +ಪ್ರತ್ಯೇಕ ಅಪಘಾತ : ಬೆಂಗಳೂರಿನಲ್ಲಿ ಟೆಕ್ಕಿ ಸೇರಿ ನಾಲ್ವರು ಸಾವು +ರಿಲಯನ್ಸ್ ರಿಟೇಲ್ ಲಿಮಿಟೆಡ್‍ನ ದಿನಸಿ ರಿಟೇಲ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಾಮೋದರ್ ಮಾಲ್ ಮಾತನಾಡಿ, ಭಾರತೀಯ ಕುಟುಂಬಗಳು ಪ್ರತಿದಿನ ಹಾಲಿನ ಪೌಚ್‍ಗಳು, ಪ್ಲಾಸ್ಟಿಕ್ ಬಾಟಲಿಗಳು, ಪತ್ರಿಕೆಗಳನ್ನು ಸಹ ಕಸಕ್ಕೆ ಹಾಕದ ಅಭ್ಯಾಸವನ್ನು ಹೊಂದಿದ್ದವು. ನಾವು ಅವುಗಳನ್ನು ಸ್ವಚ್ಛಗೊಳಿಸುತ್ತೇವೆ, ಸಂಗ್ರಹಿಸುತ್ತೇವೆ. ಮತ್ತು ಅವುಗಳನ್ನು ಇಂದಿನ ಜಗತ್ತಿನಲ್ಲಿ ಮರುಬಳಕೆ ಮಾಡುವ ವಿಶಿಷ್ಟ ಮುಂಭಾಗದ ಸೈನ್ಯವಾಗಿರುವ ರಡ್ಡಿವಾಲಾಗಳಿಗೆ ಹಸ್ತಾಂತಸುತ್ತೇವೆ ಎಂದಿದ್ದಾರೆ. +ಆಧುನಿಕ ಚಿಲ್ಲರೆ ವ್ಯಾಪಾರಿಯಾಗಿ ಸ್ಮಾರ್ಟ್‍ಬಜಾರ್ ಆಧುನಿಕ ವಿಧಾನಗಳೊಂದಿಗೆ ಈ ಅಭ್ಯಾಸವನ್ನು ಪ್ರೋತ್ಸಾಹಿಸುವುದನ್ನು ಮುಂದುವರೆಸಿದೆ. ನಮ್ಮ ಪೈಲಟ್ ನಮ್ಮ ಅಂಗಡಿ ಶಾಪರ್‍ಗಳೊಂದಿಗೆ, ಕೋಕಾ- ಬೆಂಬಲದೊಂದಿಗೆ ಕೋಲಾ ಇಂಡಿಯಾ ಮತ್ತು ರಿಲಯನ್ಸ ಇಂಡಸ್ಟ್ರೀಸ್ ನಮ್ಮ ವಿಶಾಲವಾದ ಮಳಿಗೆಗಳ ಜಾಲದೊಂದಿಗೆ ಮುಂದುವರಿಸಲು ನಾವು ಯೋಜಿಸಿರುವ ಇಂತಹ ಪ್ರಯತ್ನಗಳಲ್ಲಿ ಒಂದಾಗಿದೆ. \ No newline at end of file diff --git a/eesanje/url_47_188_6.txt b/eesanje/url_47_188_6.txt new file mode 100644 index 0000000000000000000000000000000000000000..4d9d14b27725cb7489832a46c157a8610c553601 --- /dev/null +++ b/eesanje/url_47_188_6.txt @@ -0,0 +1,7 @@ +ರಾಹುಲ್ ಯಾತ್ರೆಗೆ ಬಂತು ಮೊಹಬ್ಬತ್ ಕಿ ದುಕಾನ್ ಬಸ್ ಟಿಕೆಟ್ +ಖುಜಾಮಾ, ಜ. 16 (ಪಿಟಿಐ) ಭಾರತ್ ಜೋಡೋ ನ್ಯಾಯ್ ಯಾತ್ರೆಗಾಗಿ ರಾಹುಲ್ ಗಾಂಧಿ ಅವರ ಮೊಹಬ್ಬತ್ ಕಿ ದುಕಾನ್ ಬಸ್‍ನಲ್ಲಿ ಹತ್ತಲು ಬಯಸುವ ಯಾರಾದರೂ ತಮ್ಮ ಯಾತ್ರೆಯ ಸಂದರ್ಭದಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷರ ಚಿತ್ರವನ್ನು ಮುದ್ರಿಸಿರುವ ವಿಶೇಷ ಟಿಕೆಟ್ ಪಡೆಯಬೇಕಿದೆ. +ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಟಿ-ಶರ್ಟ್ ಮತ್ತು ಟ್ರೌಸರ್ ಧರಿಸಿರುವ ಗಾಂಧಿ ವಾಕಿಂಗ್ ಭಂಗಿಯಲ್ಲಿ ಮತ್ತು ಅವರ ಹಸ್ತಾಕ್ಷರ ಹೊಂದಿರುವ ಟಿಕೆಟ್‍ನೊಂದಿಗೆ ಪೋಸ್ ನೀಡಿದ್ದಾರೆ. ಎಕ್ಸ್‍ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‍ನಲ್ಲಿ ರಮೇಶ್, ಇದು ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪ್ರಯಾಣಿಸುವ ಮೊಹಬ್ಬತ್ ಕಿ ದುಕಾನ್ ಬಸ್‍ನ ಟಿಕೆಟ ಎಂದು ಹೇಳಿದ್ದಾರೆ. +ಕಳೆದ 10 ವರ್ಷಗಳ ಅನ್ಯಾಯದ ವಿರುದ್ಧ ಈ ನ್ಯಾಯದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತನಾಡಲು ಬಯಸುವವರಿಗೆ ಅಂತಹ ಟಿಕೆಟ್ ನೀಡಿ ಬಸ್‍ನಲ್ಲಿ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು. +ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಇಡಿಗೆ ಜಾರ್ಖಾಂಡ್ ಸಿಎಂ ಮನವಿ +ವಾಹನದ ಮೇಲಿನಿಂದ ಜನಸಂದಣಿಯನ್ನು ಉದ್ದೇಶಿಸಿ ನಾಯಕನಿಗೆ ಹೈಡ್ರಾಲಿಕ್ ಲಿಫ್ಟ್ ಹೊಂದಿರುವ ಕಸ್ಟಮ-ನಿರ್ಮಿತ ವೋಲ್ವೋ ಬಸ್‍ನಲ್ಲಿ ಗಾಂಧಿ ಪ್ರಯಾಣಿಸುತ್ತಿದ್ದಾರೆ. ಬಸ್ಸಿನಲ್ಲಿ ಮೊಹಬ್ಬತ್ ಕಿ ದುಕಾನ್ ಎಂದು ಮುದ್ರಿಸಲಾಗಿದೆ. ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಗಾಂಧಿಯವರು ಮೊಹಬ್ಬತ್ ಕಿ ದುಕಾನ್ ಎಂಬ ಪದವನ್ನು ಮೊದಲು ಬಳಸಿದ್ದರು, ಅವರು ನಫ್ರತ್ ಕಾ ಬಜಾರ್ (ದ್ವೇಷದ ಮಾರುಕಟ್ಟೆ) ನಲ್ಲಿ ಮೊಹಬ್ಬತ್ ಕಿ ದುಕಾನ್ (ಪ್ರೀತಿಯನ್ನು ಹರಡುವ ಅಂಗಡಿ) ತೆರೆಯುತ್ತಿದ್ದಾರೆ ಎಂದು ರಮೇಶ್ ಬಣ್ಣಿಸಿದ್ದಾರೆ. +ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ನಿನ್ನೆ ಸಂಜೆ ನಾಗಾಲ್ಯಾಂಡ್ ತಲುಪಿದ್ದು, ಅವರು ತಮ್ಮ ಪಕ್ಷದ ಸಹೋದ್ಯೋಗಿಗಳೊಂದಿಗೆ ಮಣಿಪುರದ ಗಡಿಯಲ್ಲಿರುವ ಕೊಹಿಮಾ ಜಿಲ್ಲೆಯ ಖುಜಾಮಾ ಗ್ರಾಮಕ್ಕೆ ಆಗಮಿಸಿದರು. ಪಾದಯಾತ್ರೆಯು 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳ ಮೂಲಕ ಹಾದು ಹೋಗಲಿದ್ದು, 6,713 ಕಿ.ಮೀ.ಗಳನ್ನು ಹೆಚ್ಚಾಗಿ ಬಸ್‍ಗಳಲ್ಲಿ ಮಾತ್ರವಲ್ಲದೆ ಕಾಲ್ನಡಿಗೆಯಲ್ಲಿಯೂ ಕ್ರಮಿಸಲಿದ್ದು, ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ. \ No newline at end of file diff --git a/eesanje/url_47_188_7.txt b/eesanje/url_47_188_7.txt new file mode 100644 index 0000000000000000000000000000000000000000..960d4533fa9ae043ee4a6b651e35f438a048ebd2 --- /dev/null +++ b/eesanje/url_47_188_7.txt @@ -0,0 +1,6 @@ +ಮನುಷ್ಯನ ದೇಹದಲ್ಲಿ ಮೈಕ್ರೋಚಿಪ್ ಆರೋಪ, ತನಿಖೆಗೆ ಕೋರ್ಟ್ ಸೂಚನೆ +ಮುಂಬೈ, ಜ 16 (ಪಿಟಿಐ) – ಕೆಲವು ಅಪರಿಚಿತ ವ್ಯಕ್ತಿಗಳು ತನ್ನ ದೇಹಕ್ಕೆ ಮೈಕ್ರೋಚಿಪ್ ಇಟ್ಟು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯ ದೂರಿನ ತನಿಖೆ ನಡೆಸುವಂತೆ ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ. ಬೊರಿವಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ ಎನ್ ಚಿಕ್ನೆ ಅವರು ನಗರದ ಚಾರ್ಕೋಪ್ ಪೊಲೀಸರಿಗೆ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಕಳೆದ ತಿಂಗಳು ಜಾರಿಯಾಗಿದ್ದ ಆದೇಶ ಇಂದು ಲಭ್ಯವಾಗಿದೆ. +ಆದಷ್ಟು ಬೇಗ ಅಂತಿಮ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದ್ದು, ದೂರಿಗೆ ಸಂಬಂಧಿಸಿದ ದಾಖಲೆಗಳನ್ನು ಅಗತ್ಯ ಕ್ರಮಕ್ಕಾಗಿ ಚಾರ್ಕೋಪ್ ಪೊಲೀಸ್ ಠಾಣೆಯ ಸೈಬರ್ ಕ್ರೈಮ್‍ಗೆ ರವಾನಿಸಬೇಕು ಎಂದು ಹೇಳಿದೆ. +ಸಚಿನ್ ಸೋನಾವಾನೆ ಅವರ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹ್ಯಾಕ್ ಮಾಡಿದ್ದರಿಂದ ಈ ದೂರನ್ನು ದಾಖಲಿಸಲು ಕ್ರಮಕ್ಕೆ ಕಾರಣವಾಯಿತು, ಅವರು ತಮ್ಮ ದೇಹಕ್ಕೆ ಕೆಲವು ಮೈಕ್ರೋಚಿಪ್ ಹಾಕುವ ಮೂಲಕ ಹ್ಯಾಕರ್ ತನ್ನನ್ನು ಬಗ್ ಮಾಡಿದ್ದಾರೆ ಎಂಬ ಅನುಮಾನವಿದೆ ಎಂದು ಅವರು ಹೇಳಿದ್ದಾರೆ. +ಪ್ರತ್ಯೇಕ ಅಪಘಾತ : ಬೆಂಗಳೂರಿನಲ್ಲಿ ಟೆಕ್ಕಿ ಸೇರಿ ನಾಲ್ವರು ಸಾವು +ಪಾಸ್‍ವರ್ಡ್‍ಗಳನ್ನು ಬದಲಾಯಿಸುವಂತಹ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೂ ಹ್ಯಾಕರ್ ತನ್ನ ಹೊಸ ಜಿಮೇಲ್ ಖಾತೆ ಸೇರಿದಂತೆ ತನ್ನ ಖಾತೆಗಳಿಗೆ ಲಾಗ್ ಇನ್ ಮಾಡುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_188_8.txt b/eesanje/url_47_188_8.txt new file mode 100644 index 0000000000000000000000000000000000000000..d62eeff74e862012de6faf267707094d0f32097b --- /dev/null +++ b/eesanje/url_47_188_8.txt @@ -0,0 +1,6 @@ +ಸಚಿವಾಲಯಕ್ಕೆ ಬಂದು ಹೇಳಿಕೆ ದಾಖಲಿಸಿಕೊಳ್ಳಿ : ಇಡಿಗೆ ಜಾರ್ಖಾಂಡ್ ಸಿಎಂ ಮನವಿ +ರಾಂಚಿ, ಜ.16 (ಪಿಟಿಐ) ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತಮ್ಮ ಹೇಳಿಕೆಯನ್ನು ಜ.20 ರಂದು ತಮ್ಮ ಸಚಿವಾಲಯದಲ್ಲಿ ದಾಖಲಿಸಿಕೊಳ್ಳಬಹುದು ಎಂದು ಜಾರಿ ನಿರ್ದೇಶನಾಲಯವನ್ನು ಕೇಳಿದ್ದಾರೆ. ಜ 13 ರಂದು ಇಡಿ ಮುಖ್ಯಮಂತ್ರಿಗೆ ಪತ್ರವನ್ನು ಕಳುಹಿಸಿದ್ದು, ಜನವರಿ 16 ಮತ್ತು ಜನವರಿ 20 ರ ನಡುವೆ ಪ್ರಕರಣದಲ್ಲಿ ವಿಚಾರಣೆಗೆ ಲಭ್ಯವಾಗುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಏಜೆನ್ಸಿಯ ಏಳು ಸಮನ್ಸ್‍ಗಳನ್ನು ಸೊರೆನ್ ಕೈಬಿಟ್ಟ ನಂತರ ಇಡಿ ಪತ್ರವನ್ನು ಕಳುಹಿಸಿದೆ. ನಿನ್ನೆ ಮುಖ್ಯಮಂತ್ರಿ ಕಚೇರಿಯ ವ್ಯಕ್ತಿಯೊಬ್ಬರು ರಾಂಚಿಯಲ್ಲಿರುವ ಇಡಿ ಕಚೇರಿ ಪತ್ರಕ್ಕೆ ಸೋರೆನ್ ಅವರ ಉತ್ತರವನ್ನು ಸಲ್ಲಿಸಿದ್ದು, ಜ. 20 ರಂದು ಪ್ರಕರಣದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಅವರು ಲಭ್ಯವಿರುತ್ತಾರೆ ಎಂದು ಮೂಲಗಳು ತಿಳಿಸಿವೆ. ಜಾರ್ಖಂಡ್‍ನಲ್ಲಿ ಇಡಿ ಪ್ರಕಾರ, ತನಿಖೆಯು ಜಾರ್ಖಂಡ್‍ನಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆಗೆ ಸಂಬಂಧಿಸಿದೆ. +ಪ್ರತ್ಯೇಕ ಅಪಘಾತ : ಬೆಂಗಳೂರಿನಲ್ಲಿ ಟೆಕ್ಕಿ ಸೇರಿ ನಾಲ್ವರು ಸಾವು +ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ 2011ರ ಬ್ಯಾಚ್ ಐಎಎಸ್ ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಮಂದಿಯನ್ನು ಈ ಪ್ರಕರಣದಲ್ಲಿ ಸಂಸ್ಥೆ ಇದುವರೆಗೆ ಬಂಧಿಸಿದೆ. 48ರ ಹರೆಯದ ಸೊರೆನ್ ಅವರು ತಮ್ಮ ಆಯ್ಕೆಯ ದಿನಾಂಕ, ಸ್ಥಳ ಮತ್ತು ಸಮಯದ ಬಗ್ಗೆ ಪ್ರಕರಣದ ತನಿಖಾಧಿಕಾರಿಗೆ ತಿಳಿಸುವಂತೆ ಕೇಂದ್ರೀಯ ಸಂಸ್ಥೆ ಕೇಳಿದೆ, ಇದರಿಂದಾಗಿ ಅವರ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ದಾಖಲಿಸಬಹುದು. +ಸೋರೆನ್‍ಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಇಡಿ ಮುಂದೆ ಇದುವರೆಗೂ ಹಾಜರಾಗಿಲ್ಲ.ಅವರು ಇಡಿ ಕ್ರಮದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್ ಮತ್ತು ನಂತರ ಜಾರ್ಖಂಡ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು ಮತ್ತು ಸಮನ್ಸ್‍ಗಳನ್ನು ಅನಗತ್ಯ ಎಂದು ಕರೆದಿದ್ದರು. \ No newline at end of file diff --git a/eesanje/url_47_188_9.txt b/eesanje/url_47_188_9.txt new file mode 100644 index 0000000000000000000000000000000000000000..f5552943238853327fd823616aac85eb9f735b6d --- /dev/null +++ b/eesanje/url_47_188_9.txt @@ -0,0 +1,7 @@ +2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್ +ಇಂಫಾಲ, ಜ. 15 (ಪಿಟಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಇಲ್ಲಿನ ಸೆಕ್ಮಾಯಿಯಿಂದ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಎರಡನೇ ದಿನವನ್ನು ಪ್ರಾರಂಭಿಸಿದರು ಮತ್ತು ಅವರನ್ನು ಸ್ವಾಗತಿಸಲು ಮಾರ್ಗದ ಉದ್ದಕ್ಕೂ ಸಾಲುಗಟ್ಟಿದ ಜನರೊಂದಿಗೆ ಸಂವಾದ ನಡೆಸಿದರು. ಕಸ್ಟಮ್ ನಿರ್ಮಿತ ವೋಲ್ವೋ ಬಸ್‍ನಲ್ಲಿ ಯಾತ್ರೆಯನ್ನು ಆರಂಭಿಸಿದ ಗಾಂಧಿಯವರು ಸ್ವಲ್ಪ ದೂರದವರೆಗೆ ನಡೆದು ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ವಿಚಾರಿಸಿದರು. +ಹಲವಾರು ಜನರು, ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು, ಯಾತ್ರೆಯ ಮಾರ್ಗದಲ್ಲಿ ಸಾಲುಗಟ್ಟಿ ನಿಂತಿದ್ದರು ಮತ್ತು ಗಾಂಧಿಯವರ ಬಸ್ಸು ಇಲ್ಲಿ ಹಲವಾರು ಜನನಿಬಿಡ ಪ್ರದೇಶಗಳಲ್ಲಿ ಸಾಗುತ್ತಿದ್ದಂತೆ ಅವರನ್ನು ಹರ್ಷೋದ್ಗಾರ ಮಾಡಿ ಬರಮಾಡಿಕೊಂಡರು. ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಭಾರತ್ ಜೋಡೋ ನ್ಯಾಯ್ ಯಾತ್ರೆಯ 2 ನೇ ದಿನವು ಬೆಳಿಗ್ಗೆ 7:30 ಕ್ಕೆ ಶಿಬಿರದಲ್ಲಿ ಸೇವಾದಳದಿಂದ ಸಾಂಪ್ರದಾಯಿಕ ಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. +ಯಾತ್ರೆಯು ಸೆಕ್ಮಾಯಿಯಿಂದ ಕಾಂಗ್ಪೋಕ್ಪಿಗೆ ಮತ್ತು ನಂತರ ಮಣಿಪುರದ ಸೇನಾಪತಿಗೆ ಚಲಿಸುತ್ತದೆ ಮತ್ತು ಅಂತಿಮವಾಗಿ ರಾತ್ರಿ ನಾಗಾಲ್ಯಾಂಡ್ ತಲುಪಲಿದೆ ಎಂದು ಅವರು ಹೇಳಿದರು. ಹಿಂಸಾಚಾರ ಪೀಡಿತ ಮಣಿಪುರದಿಂದ ಭಾನುವಾರ ಆರಂಭವಾದ ಯಾತ್ರೆಯು, ಸೌಹಾರ್ದತೆ, ಭ್ರಾತೃತ್ವ ಮತ್ತು ಸಮಾನತೆಯ ಆಧಾರದ ಮೇಲೆ ಮತ್ತು ದ್ವೇಷ, ಹಿಂಸೆ ಮತ್ತು ಏಕಸ್ವಾಮ್ಯವನ್ನು ಹೊಂದಿರದ ಭಾರತಕ್ಕಾಗಿ ಪಕ್ಷವು ಹೊಸ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತದೆ ಎಂದು ಗಾಂಧಿ ಪ್ರತಿಪಾದಿಸಿದರು. +ಇಸ್ರೇಲ್ ಗಾಜಾ ಮೇಲಿನ ದಾಳಿ ನಿಲ್ಲಿಸಲು ಇದು ಸಕಾಲ : ಶ್ವೇತಭವನ +6,700 ಕಿಲೋಮೀಟರ್‍ಗಳ ಯಾತ್ರೆಯನ್ನು ಫ್ಲ್ಯಾಗ್ ಆಫ್ ಮಾಡಲು ಇಲ್ಲಿ ನಡೆದ ರ್ಯಾಲಿಯಲ್ಲಿ ಪಕ್ಷವು ಲೋಕಸಭೆ ಚುನಾವಣೆಯ ನಿರೂಪಣೆಯನ್ನು ಹೊಂದಿಸಲು ಬಯಸುತ್ತಿರುವಾಗ, ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂಸೆ, ಮತ್ತು ಅದರ ಜನರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪ್ರತಿಜ್ಞೆ ಮಾಡಿದರು. +ಭಾರತ್ ಜೋಡೋ ನ್ಯಾಯ್ ಯಾತ್ರೆಯು 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಹಾದು ಹೋಗಲಿದೆ. ಇದು 6,713 ಕಿ.ಮೀ.ಗಳನ್ನು ಹೆಚ್ಚಾಗಿ ಬಸ್‍ಗಳಲ್ಲಿ ಆದರೆ ಕಾಲ್ನಡಿಗೆಯಲ್ಲಿ ಕ್ರಮಿಸುತ್ತದೆ ಮತ್ತು ಮಾರ್ಚ್ 20 ಅಥವಾ 21 ರಂದು ಮುಂಬೈನಲ್ಲಿ ಕೊನೆಗೊಳ್ಳುತ್ತದೆ. \ No newline at end of file diff --git a/eesanje/url_47_189_1.txt b/eesanje/url_47_189_1.txt new file mode 100644 index 0000000000000000000000000000000000000000..f91d311066f35d969aaa421a1de9bc0d4b086d4b --- /dev/null +++ b/eesanje/url_47_189_1.txt @@ -0,0 +1,8 @@ +ರಾಮನ ವಿರೋಧಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ : ಮೋಹನ್ ಯಾದವ್ +ಭೋಪಾಲï,ಜ.15- ರಾಮ ಮಂದಿರದ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನಿರಾಕರಿಸಿದ್ದಕ್ಕಾಗಿ ವಿರೋಧ ಪಕ್ಷದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿರುವ ಮಧ್ಯೆಯೇ ಹಿಂದೂ ದೇವರು ಮತ್ತು ದೇವತೆಗಳ ಮೇಲೆ ಬೆರಳು ಎತ್ತಿದ್ದಕ್ಕಾಗಿ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭವಿಷ್ಯ ನುಡಿದಿದ್ದಾರೆ. +ಯಾದವ್ ಅವರು ಉಜ್ಜಯಿನಿ ಜಿಲ್ಲೆಯ ನಗ್ಡಾದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಮಾತ್ರವಲ್ಲ ಈ ಪ್ರಮಾದಕ್ಕಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು. ಕಾಂಗ್ರೆಸ್ ಮತ್ತು ನಮ್ಮ ನಡುವೆ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಆದರೆ ನಮ್ಮ ನಡುವೆ ಸೈದ್ಧಾಂತಿಕ ಹೋರಾಟವಿದೆ. ನಮ್ಮ ದೇವರು ಮತ್ತು ದೇವತೆಗಳತ್ತ ಕಾಂಗ್ರೆಸ್ ಏಕೆ ಬೆರಳು ತೋರಿಸುತ್ತದೆ? ಇದಕ್ಕೆ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದರು. +ಶ್ರೀರಾಮನು ಕಷ್ಟಗಳನ್ನು ಅನುಭವಿಸಿದ ನಂತರವೂ ಇತರರಿಗೆ ಒಳಿತನ್ನು ನೀಡಿದ್ದಾನೆ ಎಂದು ಹೇಳಿದರು. ಆಕ್ರಮಣಕಾರರು ನಮ್ಮ ಮೇಲೆ ಕೈ ಹಾಕುವ ಮೊದಲು ಹಿಂದೂ ದೇವರು ಮತ್ತು ದೇವತೆಗಳ ದೇವಾಲಯಗಳನ್ನು ನಾಶಪಡಿಸಿದರು. ಆದರೆ ಅದು ಗುಲಾಮಗಿರಿಯ ಅವಧಿ ಮತ್ತು ನಾವು ಅದರ ಬಗ್ಗೆ ಹೆಚ್ಚು ಮಾಡಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. +ಮಕರ ಸಂಕ್ರಾಂತಿ ಪ್ರಯುಕ್ತ ಲಕ್ಷಾಂತರ ಭಕ್ತರಿಂದ ಗಂಗಾ ಸ್ನಾನ +ಇದೇ ಕಾಂಗ್ರೆಸ್ ಪಕ್ಷದ ಮುಖಂಡ ಜವಾಹರಲಾಲ್ ನೆಹರು ಅವರು, ಸೋಮನಾಥ (ದೇವಾಲಯ)ವನ್ನು ವಿರೋಧಿಸಿದರು ಮತ್ತು ಇಂದಿನ ಕಾಂಗ್ರೆಸ್ ಅಯೋಧ್ಯೆಯನ್ನು ವಿರೋಧಿಸುತ್ತಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ತನ್ನ ಮಾಜಿ ಅಧ್ಯಕ್ಷ ಮದನ್ ಮೋಹನ್ ಮಾಳವೀಯ ಅವರು ಕಾಶಿ ಹಿಂದೂ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದರಿಂದ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಯಾದವ್ ಕರೆ ನೀಡಿದರು. +ನೀವು (ಕಾಂಗ್ರೆಸ್) ಹಿಂದೂ ಪದವನ್ನು ತುಂಬಾ ದ್ವೇಷಿಸುತ್ತಿದ್ದೀರಿ . ಆದರೆ ಹಿಂದೂ ಆಗಿರುವ ಮಹತ್ವವು ನಿಮ್ಮ ಸ್ವಂತ ಕಾಂಗ್ರೆಸ್‍ನ ಹಿಂದಿನ ರಾಷ್ಟ್ರೀಯ ಅಧ್ಯಕ್ಷರಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ತನ್ನ ಪಾಪಕ್ಕೆ ಕ್ಷಮೆ ಯಾಚಿಸಬೇಕು ಎಂದ ಅವರು, ಹಳೆಯ ಪಕ್ಷವು ಸಮಾಜವನ್ನು ವಿಭಜಿಸುತ್ತಿದೆ ಎಂದು ಆರೋಪಿಸಿದರು. +ಮಧ್ಯಪ್ರದೇಶ ಸರ್ಕಾರವು ಅಯೋಧ್ಯೆಗೆ 5 ಲಕ್ಷ ಲಡ್ಡೂಗಳನ್ನು ಕಳುಹಿಸುತ್ತಿದೆ ಆದರೆ ಜನವರಿ 22 ರಂದು ರಾಮಮಂದಿರದ ಶಂಕುಸ್ಥಾಪನೆಯ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿದೆ ಎಂದು ಅವರು ಹೇಳಿದರು. ಈ ಆಹ್ವಾನದ ಬಗ್ಗೆ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಹೆಚ್ಚಿಸಿದೆ. ಕಾಂಗ್ರೆಸ್ ಮತ ಬ್ಯಾಂಕ್ ಅನ್ನು ನೋಡುತ್ತಿದೆ ಮತ್ತು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು \ No newline at end of file diff --git a/eesanje/url_47_189_10.txt b/eesanje/url_47_189_10.txt new file mode 100644 index 0000000000000000000000000000000000000000..be0fb1ea0d6562deba8f732a69e5f32df0658c62 --- /dev/null +++ b/eesanje/url_47_189_10.txt @@ -0,0 +1,16 @@ +ಮಣಿಪುರದಿಂದ ಮುಂಬೈವರೆಗೆ ರಾಹುಲ್ ನ್ಯಾಯ ಯಾತ್ರೆ ಆರಂಭ +ಗುವಾಹಟಿ , ಜ.14- ದೇಶದ ಪ್ರತಿಯೊಬ್ಬರನ್ನು ತಲುಪುವ ಮಹಾ ಉದ್ದೇಶದೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದಿನಿಂದ 2ನೇ ಹಂತದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಎಂಬ ಘೋಷಣೆಯೊಂದಿಗೆ ಆರಂಭಗೊಂಡಿರುವ ಯಾತ್ರೆ ಪ್ರತಿಯೊಬ್ಬ ಭಾರತೀಯನನ್ನು ತಲುಪುವ ಜೊತೆಗೆ ನ್ಯಾಯದ ಹಕ್ಕು ಸಿಗುವವರೆಗೆ ಹೋರಾಟ ಇರಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. +ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಸಚಿವರು, ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಶಾಸಕಾಂಗ ಪಕ್ಷಗಳ ನಾಯಕರು, ಸಂಸದರು, ಪಕ್ಷ ಅಧಿಕಾರದಲ್ಲಿ ಇರುವ ಕಡೆಗಳಲ್ಲಿನ ಸಚಿವರು, ಪ್ರಮುಖ ನಾಯಕರು ಯಾತ್ರೆಯ ಉದ್ಘಾಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. +ದೆಹಲಿಯಿಂದ ವಿಮಾನದಲ್ಲಿ ಒಟ್ಟಾಗಿ ಪ್ರಯಾಣಿಸಿದ ಪ್ರಮುಖ ನಾಯಕರು, ನಾವು ಹೆದರುವುದಿಲ್ಲ, ಸರ್ವಾಧಿಕಾರಿ ಹಾಗೂ ಆನ್ಯಾಯಕಾರಿ ಆಡಳಿತವನ್ನು ಮಣಿಸುತ್ತೇವೆ. ಗೆಲ್ಲುವವರೆಗೂ ಹೋರಾಡುತ್ತೇವೆ ಎಂದು ಘೋಷಣೆ ಕೂಗುವ ಮೂಲಕ ನವಚೈತನ್ಯ ಒಗ್ಗೂಡಿಸಿಕೊಂಡಿದ್ದಾರೆ. ವಿವಿಧ ರಾಜ್ಯಗಳಲ್ಲೂ ಭಾರತ್ ಜೋಡೋ ನ್ಯಾಯ ಯಾತ್ರೆಯ ಸ್ಟಿಕರ್‍ಗಳು ಕಾರು ಸೇರಿದಂತೆ ವಾಹನಗಳ ಮೇಲೆ ರಾರಾಜಿಸಲಾರಂಭಿಸಿವೆ. ಖುದ್ದು ಪ್ರಮುಖ ನಾಯಕರೇ ಯಾತ್ರೆ ಸ್ಟಿಕರ್‍ಗಳನ್ನು ಅಂಟಿಸುವ ಮೂಲಕ ಪ್ರಚಾರಕ್ಕೆ ಮುನ್ನುಡಿ ಬರೆಸಿದ್ದಾರೆ. +ರಾಮಮಂದಿರ ನಿರ್ಮಾಣಕ್ಕೆ ಶೇ.74 ಮುಸ್ಲಿಮರ ಒಪ್ಪಿಗೆ ; +ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳ ಮುನ್ನಾ ಶುರುವಾಗಿರುವ ಈ ಯಾತ್ರೆ ರಾಜಕೀಯ ಬದಲಾವಣೆಗೆ ಕಾರಣವಾಗಲಿದೆ ಎಂಬ ವಿಶ್ಲೇಷಣೆಗಳು ನಡೆದಿವೆ. ಈ ಮೊದಲು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಕಾಲ್ನಡೆಗೆ ಜಾಥ ನಡೆಸಿದ್ದ ರಾಹುಲ್‍ಗಾಂ ಪಕ್ಷಕ್ಕೆ ಹೊಸ ಉತ್ಸಾಹ ತುಂಬಿದ್ದರು. ಈಗ ಎರಡನೇ ಸುತ್ತಿನಲ್ಲಿ ಮಣಿಪುರದ ತೌಬಲ್‍ನಲ್ಲಿ ಆರಂಭವಾದ ಯಾತ್ರೆಯು 15 ರಾಜ್ಯಗಳು, 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. +ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಸೈದ್ಧಾಂತಿಕ ಸಂಘರ್ಷವೇ ಹೊರತು ಚುನಾವಣಾ ಯಾತ್ರೆಯಲ್ಲ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ನರೇಂದ್ರ ಮೋದಿ ಸರ್ಕಾರದ 10 ವರ್ಷಗಳ ಅನ್ಯಾಯ ಕಾಲ ವಿರುದ್ಧ ಹೋರಾಟವಾಗಿದೆ. 67 ದಿನಗಳಲ್ಲಿ 110 ಜಿಲ್ಲೆಗಳ ಮೂಲಕ 6,700 ಕಿಲೋಮೀಟರ್ ದೂರವನ್ನು ರಾಹುಲ್‍ಗಾಂಧಿ ಕ್ರಮಿಸಲಿದ್ದಾರೆ. ಈಶಾನ್ಯ ರಾಜ್ಯಗಳಿಂದ ಆರಂಭಗೊಂಡು, ಉತ್ತರ ಮತ್ತು ಮಧ್ಯ ಭಾಗದ ಮೂಲಕ ಮಾರ್ಚ್ 20 ರಂದು ಮಹಾರಾಷ್ಟ್ರದಲ್ಲಿ ಮುಕ್ತಾಯಗೊಳ್ಳಲಿದೆ. +ಯೋಗಿ ಆದಿತ್ಯನಾಥ್‍ರ ಆಡಳಿತದಲ್ಲಿರುವ ಹಾಗೂ ರಾಮಮಂದಿರದಿಂದ ಜಾಗತಿಕ ಗಮನ ಸೆಳೆದಿರುವ ಉತ್ತರ ಪ್ರದೇಶದಲ್ಲಿ ಯಾತ್ರೆ ಗರಿಷ್ಠ ಅವಧಿಯನ್ನು ಕಳೆಯಲಿದೆ. ಉತ್ತರ ಪ್ರದೇಶದ 20 ಜಿಲ್ಲೆಗಳಲ್ಲಿ 11 ದಿನಗಳಲ್ಲಿ 1,074 ಕಿಮೀ ಕ್ರಮಿಸುತ್ತದೆ. ಅಮೇಥಿ, ರಾಯ್ ಬರೇಲಿಯ ಗಾಂಧಿ ಕುಟುಂಬದ ಭದ್ರಕೋಟೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿ ಸೇರಿದಂತೆ ರಾಜಕೀಯವಾಗಿ ಪ್ರಮುಖ ಪ್ರದೇಶಗಳನ್ನು ಉತ್ತರ ಪ್ರದೇಶ ಹೊಂದಿದೆ. 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವುದರಿಂದ ಆ ರಾಜ್ಯವನ್ನು ಕೇಂದ್ರಿಕರಿಸಲಾಗಿದೆ ಎಂಬ ವಿವರಣೆಗಳಿವೆ. +ನಂತರ ಜಾರ್ಖಂಡ್, ಅಸ್ಸಾಂನಲ್ಲಿ ಎಂಟು ದಿನ, ಮಧ್ಯಪ್ರದೇಶದಲ್ಲಿ ಏಳು ದಿನ ಕಳೆಯಲಿದೆ. ಬಿಹಾರದ ಏಳು ಜಿಲ್ಲೆಗಳು ಮತ್ತು ಜಾರ್ಖಂಡ್‍ನ 13 ಜಿಲ್ಲೆಗಳಲ್ಲಿ ರಾಹುಲ್ ಗಾಂಧಿ ಅವರ ಪಾದಯಾತ್ರೆ ಕ್ರಮವಾಗಿ 425 ಕಿಮೀ ಮತ್ತು 804 ಕಿಮೀ ಕ್ರಮಿಸಲಿದೆ. +ಬಹುತೇಕ ಬಸ್‍ಗಳಲ್ಲಿ ಮತ್ತು ಕೆಲವೆಡೆ ಕಾಲ್ನಡಿಗೆಯಲ್ಲಿ ಯಾತ್ರೆ ಸಾಗಲಿದೆ. ಇದು ಸುಮಾರು 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ ಯಾತ್ರೆಯು ಭೌಗೋಳಿಕ ವ್ಯತ್ಯಾಸಗಳನ್ನು ಒಳಗೊಳ್ಳಲು ಮತ್ತು ನೆಲದ ಮೇಲಿನ ಸಮುದಾಯಗಳೊಂದಿಗೆ ಸಂಪರ್ಕ ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಪಕ್ಷವು ಮೊದಲು ಹೇಳಿದೆ. +ಇಂಫಾಲ್ ಬದಲಿಗೆ ತೌಬಲ್ ಜಿಲ್ಲೆಯ ಖಾಸಗಿ ಮೈದಾನದಿಂದ ಯಾತ್ರೆಯನ್ನು ಆರಂಭಿಸಲಾಗುತ್ತಿದೆ. ಬಿಜೆಪಿ ನೇತೃತ್ವದ ಮಣಿಪುರ ಸರ್ಕಾರವು ರಾಜ್ಯ ರಾಜಧಾನಿ ಇಂಫಾಲ್‍ನ ಅರಮನೆ ಮೈದಾನದಿಂದ ಯಾತ್ರೆಯನ್ನು ಆರಂಭಿಸಬೇಕಾದರೆ ಷರತ್ತುಗಳನ್ನು ಪಾಲನೆ ಮಾಡಬೇಕು, ಇಂತಿಷ್ಟೆ ಸಂಖ್ಯೆಯಲ್ಲಿ ಯಾತ್ರೆಯಲ್ಲಿ ಭಾಗವಹಿಸಬೇಕು ಎಂಬ ಷರತ್ತು ವಿಧಿಸಿತ್ತು. ಹೀಗಾಗಿ ಇಂಪಾಲ್ ಬದಲಿಗೆ ತೌಬಲ್ ಪ್ರದೇಶವನ್ನು ಕಾಂಗ್ರೆಸ್ ಆಯ್ಕೆ ಮಾಡಿಕೊಂಡಿದೆ. ಅಲ್ಲಿಯೂ ಕೂಡ ಸಮಾವೇಶಗೊಳ್ಳುವವರ ಸಂಖ್ಯೆ ಮೂರು ಸಾವಿರ ಮೀರಬಾರದು ಎಂದು ಜಿಲ್ಲಾಡಳಿತ ತಿಳಿಸಿದೆ. +2023ರಿಂದ ಮೇ ತಿಂಗಳಿನಿಂದ ಈಶಾನ್ಯಅಸ್ಸಾಂ ಸುದೀರ್ಘವಾದ ಜನಾಂಗೀಯ ಹಿಂಸಾಚಾರದಿಂದ ನಲುಗಿದೆ. ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಸಂಘರ್ಷದಿಂದಾಗಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, ನೂರಾರು ಜನರು ಗಾಯಗೊಂಡಿದ್ದಾರೆ. ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳು ಮತ್ತು ಘೋರ ಅಪರಾಧಗಳು ವರದಿಯಾಗಿವೆ. +ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಅಗತ್ಯ : ಲೆಟರ್ಮ್ +ಇಂದು ಬೆಳಗ್ಗೆ ಯಾತ್ರೆಯನ್ನು ಪ್ರಾರಂಭಿಸುವ ಮೊದಲು ಗಾಂಧಿ 1891 ರಲ್ಲಿ ಕೊನೆಯ ಆಂಗ್ಲೋ-ಮಣಿಪುರ ಯುದ್ಧದಲ್ಲಿ ಹುತಾತ್ಮರಾದವರ ನೆನಪಿಗಾಗಿ ತೌಬಲ್‍ನಲ್ಲಿರುವ ಖೋಂಗ್‍ಜೋಮ್ ನಿರ್ಮಿಸಲಾದ ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. +ಮಣಿಪುರದಿಂದ, ಯಾತ್ರೆಯು ನಾಗಾಲ್ಯಾಂಡ್‍ಗೆ ಮುಂದುವರಿಯುತ್ತದೆ, ಎರಡು ದಿನಗಳಲ್ಲಿ 257 ಕಿಮೀ ಮತ್ತು ಐದು ಜಿಲ್ಲೆಗಳನ್ನು ಕ್ರಮಿಸುತ್ತದೆ, ಮೊದಲು 833 ಕಿಮೀ ಮತ್ತು ಅಸ್ಸಾಂನ 17 ಜಿಲ್ಲೆಗಳನ್ನು ಕ್ರಮಿಸುತ್ತದೆ. ಇದು ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಒಂದು ದಿನ ಇರಲಿದೆ. ನಂತರ ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‍ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಯಾತ್ರೆ ಸಾಗಲಿದೆ. +ಇಂಡಿಯಾ ರಾಜಕೀಯ ಕೂಟದ ಸಹವರ್ತಿಗಳೊಂದಿಗೆ ಸಭೆ ನಡೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಾಧ್ಯವಿರುವ ಕಡೆಗಳಲ್ಲಿ ಯಾತ್ರೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ. \ No newline at end of file diff --git a/eesanje/url_47_189_11.txt b/eesanje/url_47_189_11.txt new file mode 100644 index 0000000000000000000000000000000000000000..bf71cd8ff40070e26c59f1e41ddc8c039cfc26fb --- /dev/null +++ b/eesanje/url_47_189_11.txt @@ -0,0 +1,8 @@ +ಆಯೋಧ್ಯೆಗೆ ಹೊಸ ಲುಕ್, ಝಗಮಗಿಸುವ ದೀಪಾಲಂಕಾರ +ಲಕ್ನೋ,ಜ.14- ರಾಮಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭಗೊಳ್ಳುತ್ತಿದ್ದಂತೆ ಇಡಿ ಅಯೋಧ್ಯ ಪಟ್ಟಣ ದೀಪಾಲಂಕಾರಗಳಿಂದ ಝಗಮಗಿಸತೊಡಗಿದ್ದು, ಇಡೀ ನಗರಕ್ಕೆ ಹೊಸ ಲುಕ್ ನೀಡಲಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಸೂರ್ಯ ಸ್ತಂಭ, ಹೊಸ ಮಾರ್ಗಗಳನ್ನು ರಚಿಸಲಾಗಿದ್ದು, ರಾಮ್ ಲಲ್ಲಾ ಅವರನ್ನು ಸ್ವಾಗತಿಸಲು ಅಯೋಧ್ಯೆ ಸಂಪೂರ್ಣ ಸಿದ್ಧವಾಗಿದೆ ಎಂದು ವಿಭಾಗೀಯ ಆಯುಕ್ತ ಗೌರವ್ ದಯಾಳ್ ಹೇಳಿದ್ದಾರೆ. +ಅಯೋಧ್ಯೆಯಲ್ಲಿ ರಾಮ ಮಂದಿರದ ಮಹಾ ವಿಧ್ಯುಕ್ತ ಉದ್ಘಾಟನೆಗೆ ಕೇವಲ ಒಂದು ವಾರ ಉಳಿದಿರುವಾಗ, ಜನವರಿ 22 ರಂದು ಬಹು ನಿರೀಕ್ಷಿತ ಪ್ರಾಣ ಪ್ರತಿಷ್ಠಾಕ್ಕೆ ಮುಂಚಿತವಾಗಿ ನಗರವು ಪರಿವರ್ತಕ ಬದಲಾವಣೆಯನ್ನು ನೀಡಲಾಗಿದೆ. ಅಯೋಧ್ಯೆಯ ಶ್ರೀರಾಮ ಲಲ್ಲಾ ಅವರ ಜನ್ಮಸ್ಥಳದಲ್ಲಿ ಅವರ ಪ್ರಾಣ ಪ್ರತಿಷ್ಠೆ ವರೆಗೆ ಉಪವಾಸ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ಭವ್ಯ ಮಂದಿರ ಉದ್ಘಾಟನೆ ನೆರವೇರಿಸಲಿದ್ದಾರೆ. +ಅಯೋಧ್ಯೆಯ ಒಟ್ಟಾರೆ ಸುಂದರೀಕರಣ ಮತ್ತು ಅಭಿವೃದ್ಧಿ ನಮಗೆ ದೊಡ್ಡ ಸವಾಲಾಗಿತ್ತು ಮತ್ತು ಸಾಕಷ್ಟು ಯೋಜನೆ ಮತ್ತು ಕಠಿಣ ಪರಿಶ್ರಮವು ಎಲ್ಲಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಇಷ್ಟು ಕಡಿಮೆ ಸಮಯದಲ್ಲಿ ಎಷ್ಟೊಂದು ಸಾಧಿಸಲಾಗಿದೆ. ಇದು ಕೇವಲ ಒಂದೂವರೆ ವರ್ಷದಲ್ಲಿ ಅಯೋಧ್ಯೆಯನ್ನು ಪ್ರಾಚೀನ ಮತ್ತು ಸುಂದರ ನಗರವಾಗಿ ಪರಿವರ್ತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಜನವರಿ 22 ರಂದು ನಡೆಯಲಿರುವ ಭವ್ಯವಾದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ನಾವು ದೇಶದಾದ್ಯಂತ ಮಾತ್ರವಲ್ಲದೆ ಸಾಗರೋತ್ತರದಿಂದ ಸಂದರ್ಶಕರನ್ನು ಪಡೆಯುತ್ತಿದ್ದೇವೆ. ನಗರಕ್ಕೆ ಹೊಸ ರೂಪ ನೀಡಲಾಗುತ್ತಿರುವ ಕಾರಣ ದೇಶದಾದ್ಯಂತದ ಜನರು ಪ್ರತಿದಿನ ಅಯೋಧ್ಯೆಗೆ ಆಗಮಿಸುತ್ತಿದ್ದಾರೆ.’ +ನಾಗರಿಕ ಮತ್ತು ಸಾರ್ವಜನಿಕ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನಹರಿಸುವ ಬದಲಾವಣೆ. ಇಂದಿನ ಅಯೋಧ್ಯೆಯು ಹಿಂದೆಂದಿಗಿಂತಲೂ ದೂರದಲ್ಲಿದೆ. ಹೊಸದಾಗಿ ಹಾಕಲಾದ ಧರ್ಮ ಪಥ, ಭಕ್ತಿ ಪಥ ಜನ್ಮಭೂಮಿ ಪಥ ಮತ್ತು ಲಾಟ್‍ನ ಅತ್ಯಂತ ಉದ್ದವಾದ 13-ಕಿ.ಮೀ. ರಾಮ್ ಪಥ ನಿಜವಾಗಿಯೂ ಅದ್ಭುತವಾಗಿದೆ ಎಂದು ವಿಭಾಗೀಯ ಆಯುಕ್ತರು ತಿಳಿಸಿದರು. +ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು..? : ರಾಣೆ +500 ವರ್ಷಗಳ ವನವಾಸದ ನಂತರ ತನ್ನ ಜನ್ಮಸ್ಥಳಕ್ಕೆ ಹಿಂದಿರುಗುತ್ತಿರುವ ರಾಮ್ ಲಲ್ಲಾ ಅವರನ್ನು ಸ್ವೀಕರಿಸಲು ನಗರವನ್ನು ಸಂಪೂರ್ಣವಾಗಿ ಅಲಂಕರಿಸಲಾಗಿದೆ ಎಂದು ಅವರು ಹೇಳಿದರು.ಜನವರಿ 22 ರಂದು ರಾಮ್ ಲಲ್ಲಾ ಅವರನ್ನು ಸ್ವಾಗತಿಸಲು ಅಯೋಧ್ಯೆಯು ಸಂಪೂರ್ಣವಾಗಿ ಸಿದ್ಧವಾಗಿದೆ. ಅಯೋಧ್ಯೆಗೆ ಭವ್ಯವಾದ ಮತ್ತು ಅದ್ಭುತವಾದ ಮೇಕ್ ಓವರ್ ನೀಡಲು ತೆರೆಮರೆಯಲ್ಲಿ ಅಧಿಕಾರಿಗಳು ಮಾಡಿದ ಕಠಿಣ ಪರಿಶ್ರಮ ಮತ್ತು ಪ್ರಯತ್ನವು ಶ್ಲಾಘನೀಯವಾಗಿದೆ. ನಾವು ನಗರಕ್ಕೆ ಮಾಡಿದ್ದು ಕೇವಲ ಹಣಕ್ಕಾಗಿ ಅಲ್ಲ. ಕೆಲಸವು ನಮ್ಮ ನಂಬಿಕೆ ಮತ್ತು ಭಾವನೆಗಳೊಂದಿಗೆ ಅಂತರ್ಗತವಾಗಿ ಜೋಡಿಸಲ್ಪಟ್ಟಿರುವುದರಿಂದ, ಬಾಕಿ ಉಳಿದಿರುವ ಎಲ್ಲಾ ಕೆಲಸಗಳನ್ನು ಜನವರಿ 22 ರ ಮೊದಲು ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ದಯಾಳ್ ಹೇಳಿದ್ದಾರೆ. \ No newline at end of file diff --git a/eesanje/url_47_189_12.txt b/eesanje/url_47_189_12.txt new file mode 100644 index 0000000000000000000000000000000000000000..0c54abbe6272ac7dc3689ac74ef47dfb8fa26400 --- /dev/null +++ b/eesanje/url_47_189_12.txt @@ -0,0 +1,7 @@ +ಪತ್ನಿಯ 5ನೇ ವಿವಾಹವಾದ ನಿರ್ಧಾರದಿಂದ ಪ್ರಾಣ ತ್ಯಾಗ ಮಾಡಿದ ಪತಿ +ಇಂದೋರ್,ಜ.14- ಕಳೆದ ವಾರ ಇಂದೋರ್‍ನಲ್ಲಿ 35 ವರ್ಷದ ವ್ಯಕ್ತಿಯೊಬ್ಬರು ತನ್ನ ಪತ್ನಿ ಐದನೇ ಬಾರಿಗೆ ವಿವಾಹವಾಗಿದ್ದಾರೆ ಎಂದು ಆರೋಪಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ಮಹಿಳೆಯ ನಾಲ್ಕನೇ ಪತಿಯಾಗಿದ್ದು, ಐದನೇ ಬಾರಿಗೆ ಆಕೆಯ ಉದ್ದೇಶಪೂರ್ವಕ ವಿವಾಹವು ಆತ್ಮಹತ್ಯೆಗೆ ಪ್ರಚೋದನೆಯಾಗಿದೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತ ವ್ಯಕ್ತಿಯನ್ನು ಸುನಿಲ್ ಲೋಹಾನಿ ಎಂದು ಗುರುತಿಸಲಾಗಿದೆ. ಅವರು 2018 ರಲ್ಲಿ ವಿವಾಹವಾದ ಮಹಿಳೆಯ ನಾಲ್ಕನೇ ಪತಿಯಾಗಿದ್ದರು. ಆದರೆ, ಕಳೆದ ವರ್ಷ ಅವರ ಸಂಬಂಧವು ಹದಗೆಟ್ಟಿತು ಮತ್ತು ಮಹಿಳೆ ತನ್ನ ಹೆತ್ತವರೊಂದಿಗೆ ವಾಸಿಸಲು ಪ್ರಾರಂಭಿಸಿದಳು ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಶೈಲೇಂದ್ರ ಸಿಂಗ್ ಜಡೋನ್ ಪಿಟಿಐಗೆ ತಿಳಿಸಿದ್ದಾರೆ. +ಮಹಿಳೆ ಲೋಹಾನಿ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣವನ್ನೂ ದಾಖಲಿಸಿದ್ದರು. ಅವರು ಬಹುಶಃ ನ್ಯಾಯಾಲಯದ ಪ್ರಕರಣದಿಂದ ಬೇಸರಗೊಂಡಿದ್ದಾರೆ ಮತ್ತು ತೀವ್ರವಾದ ಹೆಜ್ಜೆಯನ್ನು ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಡಿಯೋರಾ ರಾಜೀನಾಮೆ ಸಮಯವನ್ನು ಮೋದಿ ನಿರ್ಧರಿಸಿದ್ದಾರೆ : ಜೈರಾಮ್ ಆರೋಪ +ಲೋಹಾನಿ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸ್ವತಃ ವೀಡಿಯೊವನ್ನು ಚಿತ್ರೀಕರಿಸಿದ್ದರು ಮತ್ತು ಐದನೇ ಬಾರಿಗೆ ತನ್ನ ಪತ್ನಿ ವಿವಾಹ ಮಾಡಿಕೊಳ್ಳಲು ತೀರ್ಮಾನಿಸಿರುವುದರಿಂದ ಬೇಸರಗೊಂಡಿದ್ದೇಣೆ ಎಂಬ ಸೂಸೈಡ್ ನೋಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿಕೊಂಡಿದ್ದರು. +ಐದನೇ ಮದುವೆಯ ವಿಷಯದ ಬಗ್ಗೆ, ಪೊಲೀಸರು ಅದನ್ನು ಪರಿಶೀಲಿಸುತ್ತಿದ್ದಾರೆ ಎಂದು ಜಡೋನ್ ಹೇಳಿದರು. ಜುನಿ ಪ್ರದೇಶದಲ್ಲಿ ಲೋಹಾನಿ ತನ್ನನ್ನು ತಾನು ಬೆಂಕಿಗೆ ಹಾಕಿಕೊಳ್ಳುವ ಮೊದಲು ಪೆಟ್ರೋಲ್ ಸುರಿದುಕೊಳ್ಳುವುದನ್ನು ಹತ್ತಿರದ ಮನೆಯ ಸಿಸಿಟಿವಿ ಕ್ಯಾಮೆರಾ ಸೆರೆಹಿಡಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_189_2.txt b/eesanje/url_47_189_2.txt new file mode 100644 index 0000000000000000000000000000000000000000..d9dd771878d1fbf41bddda14e5f108b4cb7464f0 --- /dev/null +++ b/eesanje/url_47_189_2.txt @@ -0,0 +1,6 @@ +“ರಾಮಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಶ್ರೀರಾಮ ನನ್ನ ಕನಸಲ್ಲಿ ಬಂದು ಹೇಳಿದ್ದಾನೆ +ನವದೆಹಲಿ,ಜ.15- ಇದೇ ಜ. 22ರಂದು ನಡೆಯಲಿರುವ ಅಯೋಧ್ಯೆ ರಾಮ ಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಭಗವಾನ್ ರಾಮನು ತನ್ನ ಕನಸಿನಲ್ಲಿ ಬಂದು ಹೇಳಿದ್ದ ಎಂದು ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ. +ಚುನಾವಣೆ ಮುಗಿದ ಮೇಲೆ ರಾಮನನ್ನು ಮರೆತುಬಿಡುತ್ತಾರೆ ಜನವರಿ 22ಕ್ಕೆ ಬರುವುದು ಕಡ್ಡಾಯವೇ? ನಾಲ್ವರು ಶಂಕರಾಚಾರ್ಯರ ಕನಸಿನಲ್ಲಿ ರಾಮ್ ಬಂದಿದ್ದಾನೆ. ರಾಮ್ ಜೀ ನನ್ನ ಕನಸಿನಲ್ಲಿಯೂ ಬಂದರು ಮತ್ತು ಇದು ಬೂಟಾಟಿಕೆ ಇದೆ ಹೀಗಾಗಿ ನಾನು ಬರುವುದಿಲ್ಲ ಎಂದು ತಿಳಿಸಿದರು ಎಂದಿದ್ದಾರೆ. +ತೇಜ್ ಪ್ರತಾಪ್ ಅವರು ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಮಠಗಳ ಮಠಾಧೀಶರಾದ ನಾಲ್ವರು ಶಂಕರಾಚಾರ್ಯರನ್ನು ಉಲ್ಲೇಖಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದಿದ್ದಾರೆ. ಅವರ ಸಹೋದರ, ಈಗ ಆಡಳಿತಾರೂಢ ರಾಷ್ಟ್ರೀಯ ಜನತಾ ದಳವನ್ನು ಮುನ್ನಡೆಸುತ್ತಿರುವ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಪ್ರತಿಪಕ್ಷ ಬಿಜೆಪಿ ಕೂಡ ಈ ಹೇಳಿಕೆಗೆ ಏನನ್ನೂ ಹೇಳಿಲ್ಲ. +ಉಜ್ಜಯಿನಿ ಕುಂಭಮೇಳಕ್ಕೆ 12 ಕೋಟಿ ಜನ ಬರುವ ನಿರೀಕ್ಷೆ +ಮಾನವೀಯತೆಯನ್ನು ಅಗ್ರಗಣ್ಯ ಧರ್ಮವೆಂದು ಪರಿಗಣಿಸಬೇಕು ಎಂದಿದ್ದ ಬಿಹಾರ ಸಚಿವ ಚಂದ್ರಶೇಖರ್ ಅವರು ಜನರು ಅನಾರೋಗ್ಯಕ್ಕೆ ಒಳಗಾದರೆ ದೇವಸ್ಥಾನಕ್ಕೆ ಭೇಟಿ ನೀಡುವ ಬದಲು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಾರೆ ಎಂದು ಹೇಳಿದ ನಂತರ ಅವರು ಈ ಸಲಹೆ ನೀಡಿದರು. \ No newline at end of file diff --git a/eesanje/url_47_189_3.txt b/eesanje/url_47_189_3.txt new file mode 100644 index 0000000000000000000000000000000000000000..b50d063c535f5ecc6f52d0dc5df383433511fba2 --- /dev/null +++ b/eesanje/url_47_189_3.txt @@ -0,0 +1,7 @@ +ಜಲ್ಲಿಕಟ್ಟು ಮೂಲಕ ಪೊಂಗಲ್ ಹಬ್ಬ ಆಚರಿಸಿದ ತಮಿಳುನಾಡು ಜನತೆ +ಚೆನ್ನೈ.ಜ.15- ಗೂಳಿ ಪಳಗಿಸುವ ಜಲ್ಲಿಕಟ್ಟು ಆಚರಣೆ ಮೂಲಕ ತಮಿಳುನಾಡಿನಾದ್ಯಂತ ಪೊಂಗಲ್ ಹಬ್ಬವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಗಿದೆ. ರಾಜ್ಯದಾದ್ಯಂತ ಜನರು ಸಮೃದ್ಧಿಯ ಸಂಕೇತವಾಗಿ ಅಕ್ಕಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ಖಾದ್ಯ ಪೊಂಗಲ್ ಅನ್ನು ತಯಾರಿಸುವ ಮಂಗಳಕರ ತಮಿಳು ತಿಂಗಳ ಥಾಯಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅನೇಕ ಮನೆಗಳನ್ನು ಅಲಂಕರಿಸಲಾಗಿತ್ತು ಮತ್ತು ಹೊಸ ಉಡುಪುಗಳನ್ನು ಧರಿಸಿದ ಜನರು ಬಹಳ ಸಂತೋಷ ಮತ್ತು ಉತ್ಸಾಹದಿಂದ ಹಬ್ಬವನ್ನು ಆಚರಿಸಿದರು. +ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ, ಡಿಎಂಕೆ ಸಂಸದೆ ಕನಿಮೋಳಿ ಸೇರಿದಂತೆ ಹಲವರು ಪೊಂಗಲ್ ಹಬ್ಬದ ಶುಭಾಶಯ ಕೋರಿದರು. +ತಮ್ಮ ಪೊಂಗಲ್ ಶುಭಾಶಯಗಳಲ್ಲಿ, ಡಿಎಂಕೆ ಯುವ ಘಟಕದ ಮುಖ್ಯಸ್ಥ ಮತ್ತು ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಕೂಡ ತಮಿಳು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಗಾಮಿ ಆರ್ಯ ಪದ್ಧತಿಗಳು ನಾಶವಾಗಲಿ ಮತ್ತು ದ್ರಾವಿಡ ಸಮಾನತೆ ಪ್ರವರ್ಧಮಾನಕ್ಕೆ ಬರಲಿ. ನಿಮ್ಮೆಲ್ಲರಿಗೂ ಹ್ಯಾಪಿ ಪೊಂಗಲ್ ಮತ್ತು ತಮಿಳು ಹೊಸ ವರ್ಷದ ಶುಭಾಶಯಗಳು ಎಂದು ಅವರು ಎಕ್ಸ್ ಮಾಡಿದ್ದಾರೆ. +ಉಜ್ಜಯಿನಿ ಕುಂಭಮೇಳಕ್ಕೆ 12 ಕೋಟಿ ಜನ ಬರುವ ನಿರೀಕ್ಷೆ +2006-11ರ ಆಡಳಿತದ ಅವಧಿಯಲ್ಲಿ ದಿವಂಗತ ಎಂ ಕರುಣಾನಿಧಿ ನೇತೃತ್ವದ ಡಿಎಂಕೆ ಸರ್ಕಾರವು ತಮಿಳು ಕ್ಯಾಲೆಂಡರ್ ಅನ್ನು ಏಪ್ರಿಲ್‍ನಲ್ಲಿ ಆಚರಿಸಲಾಗುವ ತಮಿಳು ಹೊಸ ವರ್ಷವನ್ನು ಜನವರಿಗೆ ತರಲು ಥಾಯಗೆ ಹೊಂದಿಕೆಯಾಯಿತು. ಆದಾಗ್ಯೂ, ದಿವಂಗತ ಜೆ ಜಯಲಲಿತಾ ನೇತೃತ್ವದ ನಂತರದ ಎಐಎಡಿಎಂಕೆ ಸರ್ಕಾರವು ಅದನ್ನು ಏಪ್ರಿಲ್ ಅಥವಾ ತಮಿಳು ತಿಂಗಳ ಚಿತಿರೈ ಎಂದು ಮರುನಾಮಕರಣ ಮಾಡಿತ್ತು. +ಪ್ರತ್ಯೇಕ ವೀಡಿಯೊ ಪೋಸ್ಟ್‍ನಲ್ಲಿ ಉದಯನಿ ಅವರು ತಮ್ಮ ಪೊಂಗಲ್ ಮತ್ತು ತಮಿಳು ಹೊಸ ವರ್ಷದ ಶುಭಾಶಯಗಳನ್ನು ತಿಳಿಸುತ್ತಾ, ಜನವರಿ 21 ರ ಸೇಲಂ ಯೂತ್ ವಿಂಗ್ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಮ್ಮ ಬೆಂಬಲಿಗರನ್ನು ಉತ್ತೇಜಿಸಿದರು, ಇದು ಕೇಂದ್ರದಲ್ಲಿ ಬದಲಾವಣೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದರು. \ No newline at end of file diff --git a/eesanje/url_47_189_4.txt b/eesanje/url_47_189_4.txt new file mode 100644 index 0000000000000000000000000000000000000000..853ccfe4e20ca5194ae87d01834ed950d255462a --- /dev/null +++ b/eesanje/url_47_189_4.txt @@ -0,0 +1,8 @@ +ಆಯೋಧ್ಯೆಯಲ್ಲಿ ಲಕ್ಷುರಿ ಪ್ಲಾಟ್ ಖರೀದಿಸಿದ ಬಿಗ್‍ಬಿ +ನವದೆಹಲಿ,ಜ.15- ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಅವರು ರಾಮಮಂದಿರ ನಿರ್ಮಾಣವಾಗುತ್ತಿರುವ ಉತ್ತರ ಪ್ರದೇಶದ ಪವಿತ್ರ ಪಟ್ಟಣವಾದ ಅಯೋಧ್ಯೆಯಲ್ಲಿ ಸೆವೆನ್ ಸ್ಟಾರ್ ಎನ್‍ಕ್ಲೇವ್‍ನಲ್ಲಿ ಪ್ಲಾಟ್ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಮೂಲದ ಡೆವಲಪರ್ ದಿ ಹೌಸ್ ಆಫ್ ಅಭಿನಂದನ್ ಲೋಧಾ ಅವರು, ಪ್ಲಾಟ್‍ನ ಗಾತ್ರ ಮತ್ತು ಮೌಲ್ಯವನ್ನು ಬಹಿರಂಗಪಡಿಸಿಲ್ಲ. ಆದರೆ ಉದ್ಯಮದ ಮೂಲಗಳು ಇದು ಸುಮಾರು 10,000 ಚದರ ಅಡಿ ಮತ್ತು 14.5 ಕೋಟಿ ವೆಚ್ಚವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. +51 ಎಕರೆ ವಿಸ್ತೀರ್ಣದ ಸರಯೂ ಎನ್‍ಕ್ಲೇವ್ ಔಪಚಾರಿಕವಾಗಿ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ದೇವಾಲಯದ ಮಹಾಮಸ್ತಕಾಭಿಷೇಕ ಸಮಾರಂಭದ ದಿನದಂದು ಉದ್ಘಾಟನೆಗೊಳ್ಳಲಿದೆ. ಡೆವಲಪರ್ ಪ್ರಕಾರ ಇದು ದೇವಸ್ಥಾನದಿಂದ ಸುಮಾರು 15 ನಿಮಿಷಗಳ ದೂರದಲ್ಲಿದೆ ಮತ್ತು ವಿಮಾನ ನಿಲ್ದಾಣದಿಂದ ಅರ್ಧ ಗಂಟೆ ಪ್ರಯಾಣದ ದೂರವಾಗಿದೆ. ಯೋಜನೆಯು ಮಾರ್ಚ್ 2028 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ಪಂಚತಾರಾ ಅರಮನೆಯ ಹೋಟೆಲ್ ಅನ್ನು ಹೊಂದಿರುತ್ತದೆ. +ಉಜ್ಜಯಿನಿ ಕುಂಭಮೇಳಕ್ಕೆ 12 ಕೋಟಿ ಜನ ಬರುವ ನಿರೀಕ್ಷೆ +ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ನಗರವಾದ ಅಯೋಧ್ಯೆಯಲ್ಲಿ ಸರಯುಗಾಗಿ ಅಭಿನಂದನ್ ಲೋಧಾ ಅವರ ಮನೆಯೊಂದಿಗೆ ಈ ಪ್ರಯಾಣವನ್ನು ಪ್ರಾರಂಭಿಸಲು ನಾನು ಎದುರು ನೋಡುತ್ತಿದ್ದೇನೆ. ಅಯೋಧ್ಯೆಯ ಕಾಲಾತೀತ ಆಧ್ಯಾತ್ಮಿಕತೆ ಮತ್ತು ಸಾಂಸ್ಕøತಿಕ ಶ್ರೀಮಂತಿಕೆಯು ಭೌಗೋಳಿಕ ಗಡಿಗಳನ್ನು ಮೀರಿದ ಭಾವನಾತ್ಮಕ ಸಂಬಂಧವನ್ನು ರೂಪಿಸಿದೆ ಎಂದು ಬಚ್ಚನ್ ಹೇಳಿಕೊಂಡಿದ್ದಾರೆ. +ಇದು ಅಯೋಧ್ಯೆಯ ಆತ್ಮಕ್ಕೆ ಒಂದು ಹೃತ್ಪೂರ್ವಕ ಪ್ರಯಾಣದ ಆರಂಭವಾಗಿದೆ, ಅಲ್ಲಿ ಸಂಪ್ರದಾಯ ಮತ್ತು ಆಧುನಿಕತೆಯು ಮನಬಂದಂತೆ ಸಹ ಅಸ್ತಿತ್ವದಲ್ಲಿದೆ, ನನ್ನೊಂದಿಗೆ ಆಳವಾಗಿ ಪ್ರತಿಧ್ವನಿಧಿಸುವ ಭಾವನಾತ್ಮಕ ವಸ್ತ್ರವನ್ನು ಸೃಷ್ಟಿಸುತ್ತದೆ. ಜಾಗತಿಕ ಆಧ್ಯಾತ್ಮಿಕ ರಾಜಧಾನಿಯಲ್ಲಿ ನನ್ನ ಮನೆಯನ್ನು ನಿರ್ಮಿಸಲು ನಾನು ಎದುರು ನೋಡುತ್ತಿದ್ದೇನೆ, ಅವರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ. +ಅಮಿತಾಬ್ ಅವರ ಜನ್ಮಸ್ಥಳ ಪ್ರಯಾಗ್ರಾಜ್ (ಹಿಂದಿನ ಅಲಹಾಬಾದ್ ) ಅಯೋಧ್ಯೆಯಿಂದ ಕೇವಲ ನಾಲ್ಕು ಗಂಟೆಗಳ ಪ್ರಯಾಣ ದೂರದಲ್ಲಿದೆ ಎನ್ನುವುದು ವಿಶೇಷವಾಗಿದೆ. ಬಿಗ್‍ಬಿ ಸರಯೂನ ಪ್ರಥಮ ಪ್ರಜೆ ಮತ್ತು ಅವರ ಹೂಡಿಕೆಯು ಯೋಜನೆಯನ್ನು ಅಯೋಧ್ಯೆಯ ಜಾಗತಿಕ ಆಧ್ಯಾತ್ಮಿಕ ಪ್ರಾಮುಖ್ಯತೆಯ ಸಂಕೇತ ಆಗಿ ಪರಿವರ್ತಿಸುತ್ತದೆ ಎಂದು ಹೇಳಿದರು. +ಅಯೋಧ್ಯೆ ಯೋಜನೆಯಲ್ಲಿ ಸೂಪರ್‌ಸ್ಟಾರ್ ನ ಹೂಡಿಕೆಯು ನಗರದ ಆರ್ಥಿಕ ಸಾಮಥ್ರ್ಯದ ಮೇಲಿನ ವಿಶ್ವಾಸ ಮತ್ತು ಅದರ ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಆಳವಾದ ಮೆಚ್ಚುಗೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_189_5.txt b/eesanje/url_47_189_5.txt new file mode 100644 index 0000000000000000000000000000000000000000..860edcf5b91ff3ba8912ac799a382e3c70ef6d45 --- /dev/null +++ b/eesanje/url_47_189_5.txt @@ -0,0 +1,7 @@ +ಸಂಕ್ರಾಂತಿ ಶುಭಾಶಯ ಕೋರಿದ, ಮೋದಿ, ನಡ್ಡಾ, ಯೋಗಿ +ನವದೆಹಲಿ,ಜ.15- ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನರಿಗೆ ಮಕರ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ. ಮಕರ ಸಂಕ್ರಾಂತಿಯ ಹೃತ್ಪೂರ್ವಕ ಶುಭಾಶಯಗಳನ್ನು ಕಳುಹಿಸುವುದು, ಪವಿತ್ರವಾದ ಧ್ಯಾನ ಮತ್ತು ಉಪಕಾರದ ಆಚರಣೆಗಳೊಂದಿಗೆ ಸಂಬಂಧ ಹೊಂದಿರುವ ಮಂಗಳಕರ ಹಬ್ಬ. ಪ್ರಕೃತಿಯನ್ನು ಆಚರಿಸುವ ಈ ಹಬ್ಬದಂದು, ಉತ್ತರಾಯಣ ಸೂರ್ಯ ದೇವರು ನನ್ನ ಎಲ್ಲಾ ದೇಶವಾಸಿಗಳಿಗೆ ಸಂತೋಷ, ಸಮೃದ್ಧಿ, ಯಶಸ್ಸು ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಭಾವಿಸುತ್ತೇನೆ ಎಂದು ಅವರು ಎಕ್ಸ್ ಮಾಡಿದ್ದಾರೆ. +ಮಾತ್ರವಲ್ಲ, ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿಯಂದು ತಮ್ಮ ನಿವಾಸದಲ್ಲಿ ಗೋವುಗಳಿಗೆ ಆಹಾರ ನೀಡಿದರು. ಏತನ್ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಗೋರಖ್‍ಪುರದ ಗೋರಖ್‍ನಾಥ್ ದೇವಸ್ಥಾನದಲ್ಲಿ ಮಂಗಳಕರ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇಂದು ಮಕರ ಸಂಕ್ರಾಂತಿ ನಿಮಿತ್ತ ಸಂಗಮದಲ್ಲಿ ಸ್ನಾನ ಮಾಡುತ್ತಿದ್ದು, ನಿನ್ನೆಯಿಂದ ಭಕ್ತಾದಿಗಳು ಗೋರಖನಾಥ ದೇಗುಲದಲ್ಲಿ ಖಿಚಡಿ ನೈವೇದ್ಯ ಮಾಡುತ್ತಿದ್ದಾರೆ. +ಜನರು ಅಪಾರ ನಂಬಿಕೆಯಿಂದ ಖಿಚಡಿ ನೈವೇದ್ಯ ಮಾಡುತ್ತಿದ್ದಾರೆ.ಮಕರ ಸಂಕ್ರಾಂತಿ ಹಬ್ಬದ ನಂತರ ಸಕಲ ಶುಭ ಕಾರ್ಯಗಳು ನೆರವೇರಿವೆ. ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ನಾನು ಎಲ್ಲಾ ಭಕ್ತಾದಿಗಳಿಗೆ ಹೃತ್ಪೂರ್ವಕವಾಗಿ ನನ್ನ ಶುಭಾಶಯಗಳನ್ನು ಹೇಳುತ್ತೇನೆ ಎಂದು ಸಿಎಂ ಯೋಗಿ ಮಾಧ್ಯಮವನ್ನುದ್ದೇಶಿಸಿ ಹೇಳಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಶುಭ ಸಂದರ್ಭದಲ್ಲಿ ಭಾರತೀಯ ಜನತೆಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. +ಕೆಪಿಎಸ್‍ಸಿ ಸಂಘರ್ಷದಲ್ಲಿ ಉದ್ಯೋಗವಿಲ್ಲದೆ ನಲುಗುತ್ತಿರುವ ಅಭ್ಯರ್ಥಿಗಳು +ಸೂರ್ಯನ ಆರಾಧನೆಯ ಮಹಾ ಹಬ್ಬವಾದ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಈ ಮಹಾ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಸಂತೋಷ, ಸೌಭಾಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ. ಈ ಶುಭ ಸಂದರ್ಭ ಶುಭ ಕಾರ್ಯಗಳನ್ನು ಪ್ರಾರಂಭಿಸುವುದರಿಂದ ಪ್ರತಿಯೊಬ್ಬರ ಜೀವನದಲ್ಲಿ ಹೊಸ ಸೂರ್ತಿ ಮತ್ತು ಶಕ್ತಿಯನ್ನು ತುಂಬುತ್ತದೆ ಎಂದು ನಡ್ಡಾ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಕರ ಸಂಕ್ರಾಂತಿಯಂದು ಹರಿದ್ವಾರ ಮತ್ತು ಪ್ರಯಾಗ್‍ರಾಜ್‍ಗೆ ಸೋಮವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದರು. +ಈ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗರಾದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ ಮತ್ತು ರವಿ ಬಿಷ್ಣೋಯ್ ಕೂಡ ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮಕರ ಸಂಕ್ರಾಂತಿಯ ಮಂಗಳಕರ ಹಬ್ಬವು ಧನು ರಾಶಿ (ಧನು ರಾಶಿ) ಯಿಂದ ಮಕರ ರಾಶಿ (ಮಕರ ಸಂಕ್ರಾಂತಿ) ಗೆ ಸೂರ್ಯನ ಪರಿವರ್ತನೆಯನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯನ (ಉತ್ತರಾಯಣ) ಉತ್ತರದ ಪ್ರಯಾಣವು ಪ್ರಾರಂಭವಾಗುತ್ತದೆ ಎಂದು ಹೇಳಲಾಗುತ್ತದೆ, ಇದು ಆಚರಣೆಗಳನ್ನು ಸಾಕಷ್ಟು ಮಂಗಳಕರಗೊಳಿಸುತ್ತದೆ. \ No newline at end of file diff --git a/eesanje/url_47_189_6.txt b/eesanje/url_47_189_6.txt new file mode 100644 index 0000000000000000000000000000000000000000..3e13f27233017cec63f5479ed7498eb985fd0608 --- /dev/null +++ b/eesanje/url_47_189_6.txt @@ -0,0 +1,7 @@ +ಮಕರ ಸಂಕ್ರಾಂತಿ ಪ್ರಯುಕ್ತ ಲಕ್ಷಾಂತರ ಭಕ್ತರಿಂದ ಗಂಗಾ ಸ್ನಾನ +ಗಂಗಾಸಾಗರ, ಜ 15 (ಪಿಟಿಐ) ಮಕರ ಸಂಕ್ರಾಂತಿಯ ಹಬ್ಬದ ಅಂಗವಾಗಿ ಇಂದು ನಸುಕಿನಲ್ಲಿ ಗಂಗಾ ನದಿ ಮತ್ತು ಬಂಗಾಳ ಕೊಲ್ಲಿಯ ಸಂಗಮದಲ್ಲಿ ದೇಶಾದ್ಯಂತದ ಲಕ್ಷಾಂತರ ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಿದ್ದಾರೆ. +ಪ್ರತಿ ವರ್ಷ, ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಕಪಿಲ ಮುನಿ ದೇವಸ್ಥಾನದಲ್ಲಿ ಸ್ನಾನ ಮಾಡಲು ಮತ್ತು ಪ್ರಾರ್ಥನೆ ಸಲ್ಲಿಸಲು ಗಂಗಾಸಾಗರಕ್ಕೆ ಲಕ್ಷಾಂತರ ಯಾತ್ರಿಕರು ಸೇರುತ್ತಾರೆ. ಈ ಬಾರಿ 65 ಲಕ್ಷ ಮಂದಿ ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. +ಅಪಾರ ಸಂಖ್ಯೆಯ ಯಾತ್ರಾರ್ಥಿಗಳ ಸಭೆಯಿಂದಾಗಿ, ರಾಜ್ಯ ಸರ್ಕಾರವು ಸಾಗರ್ ದ್ವೀಪದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಿದೆ. ರಾಜ್ಯ ಪೊಲೀಸರ ಹೊರತಾಗಿ, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಮತ್ತು ಕೋಸ್ಟ್‍ಗಾರ್ಡ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. +ಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ +ವಿಶಾಲವಾದ ಬೀಚ್‍ನಲ್ಲಿ ಹರಡಿರುವ ಜಾತ್ರೆಯ ಮೈದಾನವನ್ನು ಸುಮಾರು 1,100 ಸಿಸಿಟಿವಿ ಕ್ಯಾಮೆರಾಗಳು ಮತ್ತು 22 ಡ್ರೋನ್‍ಗಳ ಕಣ್ಗಾವಲು ಅಡಿಯಲ್ಲಿ ತರಲಾಗಿದೆ ಎಂದು ಬಿಸ್ವಾಸ್ ಹೇಳಿದರು. +14,000 ಪೊಲೀಸರನ್ನು ನಿಯೋಜಿಸಲಾಗಿದೆ, 45 ವಾಚ್ ಟವರ್‍ಗಳನ್ನು ನಿರ್ಮಿಸಿ ಯಾತ್ರಾರ್ಥಿಗಳನ್ನು ಸಾಗರ ದ್ವೀಪಕ್ಕೆ 36 ಹಡಗುಗಳು, 100 ಲಾಂಚ್‍ಗಳು ಮತ್ತು 22 ಜೆಟ್ಟಿಗಳಲ್ಲಿ ಆರು ಬಾರ್ಜ್‍ಗಳ ಮೂಲಕ ಸಾಗಿಸಲಾಗುತ್ತಿದೆ, ಮುರಿಗಂಗಾ ನದಿಯಲ್ಲಿ 300 ಮಂಜು ದೀಪಗಳನ್ನು ಅಳವಡಿಸಲಾಗಿದೆ. \ No newline at end of file diff --git a/eesanje/url_47_189_7.txt b/eesanje/url_47_189_7.txt new file mode 100644 index 0000000000000000000000000000000000000000..76d4dc73cd83b9442f9bc678cf2b4ad66c07e99f --- /dev/null +++ b/eesanje/url_47_189_7.txt @@ -0,0 +1,7 @@ +ಉಜ್ಜಯಿನಿ ಕುಂಭಮೇಳಕ್ಕೆ 12 ಕೋಟಿ ಜನ ಬರುವ ನಿರೀಕ್ಷೆ +ಭೋಪಾಲï, ಜ 15 (ಪಿಟಿಐ) ಉಜ್ಜಯಿನಿ ಸಿಂಹಸ್ಥ (ಕುಂಭ) ಮೇಳದಲ್ಲಿ ಸುಮಾರು 12 ಕೋಟಿ ಜನರು ಭಾಗವಹಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಸಿಂಹಸ್ಥ ಮೇಳದ ಅಂಗವಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಭಾನುವಾರ ಉಜ್ಜಯಿನಿಯಲ್ಲಿ ಸಭೆ ನಡೆಸಿ ಮಹಾಸಭೆಗೆ ವಿವಿಧ ಕಾಮಗಾರಿಗಳನ್ನು ಪ್ರಾರಂಭಿಸುವ ಕುರಿತು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು. +ಉಜ್ಜಯಿನಿ ಜಿಲ್ಲೆಯ ರಾಮ್ ಜನಾರ್ದನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಅವರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು. ಅಧಿಕೃತ ಪ್ರಕಟಣೆಯ ಪ್ರಕಾರ 12 ವರ್ಷಗಳಿಗೊಮ್ಮೆ ಆಯೋಜಿಸಲಾಗುವ 2028 ರ ಸಿಂಹಸ್ಥದಲ್ಲಿ (ಕುಂಭಮೇಳ ಅಥವಾ ಜಾತ್ರೆ) ಸುಮಾರು 12 ಕೋಟಿ ಭಕ್ತರು ಭಾಗವಹಿಸುತ್ತಾರೆ ಎಂದು ಅಂದಾಜಿಸಲಾಗಿದೆ. +ಕ್ಷಿಪ್ರಾ ನದಿಯಲ್ಲಿ ತ್ಯಾಜ್ಯ ಬಿಡುಗಡೆಯಾಗುವುದನ್ನು ಪರಿಶೀಲಿಸಲು ನೆರೆಯ ಇಂದೋರ್ ಮತ್ತು ದೇವಾಸ್‍ನ ವಿವಿಧ ಸ್ಥಳಗಳಲ್ಲಿ ಸ್ಟಾಪ್ ಅಣೆಕಟ್ಟುಗಳನ್ನು ನಿರ್ಮಿಸಲು ಯಾದವ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 2028 ರ ಮೊದಲು ನದಿಯು ಮಾಲಿನ್ಯದಿಂದ ಮುಕ್ತವಾಗಿದೆ ಮತ್ತು ಅದರ ನೀರು ಕುಡಿಯಲು ಯೋಗ್ಯವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ಅಧಿಕಾರಿಗಳಿಗೆ ತಿಳಿಸಿದರು. +ಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ +ಸಂತರು ಮತ್ತು ಸಾಧುಗಳೊಂದಿಗೆ ಸಮಾಲೋಚಿಸಿದ ನಂತರ ಕಾರ್ಯಯೋಜನೆಯನ್ನು ರೂಪಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಗತ್ಯವಿದ್ದರೆ, ಉಜ್ಜಯಿನಿಯಲ್ಲಿ ಮಹಾಕಾಲ್ ಲೋಕದ ಮೂರನೇ ಹಂತವನ್ನು ಪ್ರಾರಂಭಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. +ಇಂದೋರ್‍ನಲ್ಲಿ ಒಂಬತ್ತು ಸ್ಟಾಪ್ ಅಣೆಕಟ್ಟುಗಳನ್ನು ನಿರ್ಮಿಸಲಾಗುವುದು, ಅಲ್ಲಿ ಕಲುಷಿತ ಚರಂಡಿಗಳು ಕ್ಷಿಪ್ರಾ ನದಿಯಲ್ಲಿ ನೀರನ್ನು ಬಿಡುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂತರು ನೆಲೆಸಿರುವ ನದಿಯ ದಡದಲ್ಲಿರುವ ಘಾಟ್‍ಗಳನ್ನು ಆದ್ಯತೆಯ ಮೇಲೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_47_189_8.txt b/eesanje/url_47_189_8.txt new file mode 100644 index 0000000000000000000000000000000000000000..58c420a3c51a8bf0f8c105111f8670be2f7ce25a --- /dev/null +++ b/eesanje/url_47_189_8.txt @@ -0,0 +1,10 @@ +ಪೊಂಗಲ್ ಆಚರಣೆಯಲ್ಲಿ ಭಾಗವಹಿಸಿದ ಮೋದಿ +ನವದೆಹಲಿ,ಜ.14- ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಎಲ್.ಮುರುಗನ್ ಅವರ ನಿವಾಸದಲ್ಲಿ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೊಂಗಲ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಮತ್ತು ತಮಿಳುನಾಡಿನ ಪ್ರತಿಯೊಂದು ಮನೆಯಿಂದಲೂ ಹಬ್ಬದ ಸಂಭ್ರಮವನ್ನು ವೀಕ್ಷಿಸಬಹುದು ಎಂದು ಹೇಳಿದರು.ಎಲ್ಲಾ ನಾಗರಿಕರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂತೃಪ್ತಿಯ ಹರಿವು ನಿರಂತರವಾಗಿ ಹರಿಯಲಿ ಎಂದು ಶ್ರೀ ಮೋದಿ ಹಾರೈಸಿದರು. +ನಿನ್ನೆ ನಡೆದ ಲೋಹ್ರಿ ಆಚರಣೆಗಳು, ಇಂದು ಮಕರ ಉತ್ತರಾಯಣದ ಹಬ್ಬದ ಸಂದರ್ಭ, ನಾಳೆ ಆಚರಿಸಲಾಗುವ ಮಕರ ಸಂಕ್ರಾಂತಿ ಮತ್ತು ಶೀಘ್ರದಲ್ಲೇ ಮಾಘ ಬಿಹು ಪ್ರಾರಂಭವಾಗುವುದನ್ನು ಅವರು ಗಮನಿಸಿದರು. ದೇಶದಲ್ಲಿ ನಡೆಯುತ್ತಿರುವ ಹಬ್ಬದ ಅವಗೆ ಮೋದಿ ಅವರು ಎಲ್ಲಾ ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. +ಪ್ರಧಾನಿ ಮೋದಿ ಇದೇ ರೀತಿಯ ಮುಖಗಳನ್ನು ಗುರುತಿಸಲು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಕಳೆದ ವರ್ಷ ತಮಿಳು ಪುತಾಂಡು ಆಚರಣೆಯ ಸಂದರ್ಭದಲ್ಲಿ ಅವರನ್ನು ಭೇಟಿಯಾಗಿದ್ದನ್ನು ನೆನಪಿಸಿಕೊಂಡರು.ಇಂದಿನ ಸಂದರ್ಭದ ಆಹ್ವಾನಕ್ಕಾಗಿ ಕೇಂದ್ರ ಸಚಿವರಾದ ಎಲ್.ಮುರುಗನ್ ಅವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿಯವರು, ಕುಟುಂಬ ಮತ್ತು ಸ್ನೇಹಿತರೊಂದಿಗೆ ಹಬ್ಬವನ್ನು ಆಚರಿಸುವ ಭಾವನೆಯನ್ನು ಹೋಲುತ್ತದೆ ಎಂದು ಹೇಳಿದರು. +ಮಹಾನ್ ಸಂತ ತಿರುವಳ್ಳುವರ್ ಅವರನ್ನು ಉಲ್ಲೇಖಿಸಿ, ಪ್ರಧಾನಿಯವರು ವಿದ್ಯಾವಂತ ನಾಗರಿಕರು, ಪ್ರಾಮಾಣಿಕ ಉದ್ಯಮಿಗಳು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಉತ್ತಮ ಬೆಳೆಗಳ ಪಾತ್ರವನ್ನು ಎತ್ತಿ ತೋರಿಸಿದರು ಮತ್ತು ಪೊಂಗಲ್ ಸಮಯದಲ್ಲಿ ಹೊಸ ಬೆಳೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ, ಇದು ಈ ಹಬ್ಬದ ಸಂಪ್ರದಾಯದ ಕೇಂದ್ರದಲ್ಲಿ ಅನ್ನದಾತ ಕಿಸಾನ್¿ಗಳನ್ನು ಇರಿಸುತ್ತದೆ ಎಂದು ಹೇಳಿದರು. +ಅವರು ಭಾರತದ ಪ್ರತಿಯೊಂದು ಹಬ್ಬದ ಗ್ರಾಮೀಣ, ಬೆಳೆ ಮತ್ತು ರೈತ ಸಂಪರ್ಕವನ್ನು ಒತ್ತಿ ಹೇಳಿದರು. ಕಳೆದ ಬಾರಿ ಅವರು ರಾಗಿ ಮತ್ತು ತಮಿಳು ಸಂಪ್ರದಾಯಗಳ ನಡುವಿನ ಸಂಬಂಧದ ಬಗ್ಗೆ ಮಾತನಾಡಿದ್ದನ್ನು ಅವರು ನೆನಪಿಸಿಕೊಂಡರು. ಸೂಪರ್‍ಫುಡ್ ಅನ್ನದ ಬಗ್ಗೆ ಹೊಸ ಜಾಗೃತಿ ಮೂಡಿದೆ ಮತ್ತು ಅನೇಕ ಯುವಕರು ರಾಗಿ-ಶ್ರೀ ಅನ್ನದ ಮೇಲೆ ಸ್ಟಾರ್ಟಪ್ ಉದ್ಯಮಗಳನ್ನು ಕೈಗೊಂಡಿದ್ದಾರೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು. ರಾಗಿ ಕೃಷಿ ಮಾಡುತ್ತಿರುವ 3 ಕೋಟಿಗೂ ಹೆಚ್ಚು ರೈತರು ರಾಗಿ ಪ್ರಚಾರದ ನೇರ ಲಾಭ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. +ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ +ಪೊಂಗಲ್ ಆಚರಣೆಯ ಸಂದರ್ಭದಲ್ಲಿ ತಮಿಳು ಸಮುದಾಯದ ಮಹಿಳೆಯರು ಮನೆಗಳ ಹೊರಗೆ ಕೋಲಮ್ ಬಿಡಿಸುವ ಸಂಪ್ರದಾಯವನ್ನು ಗಮನಿಸಿದ ಪ್ರಧಾನಿ, ಪ್ರಕ್ರಿಯೆಯ ಬಗ್ಗೆ ವಿವರಿಸಿದರು ಮತ್ತು ಹಿಟ್ಟಿನಿಂದ ನೆಲದ ಮೇಲೆ ಅನೇಕ ಚುಕ್ಕೆಗಳನ್ನು ಮಾಡುವ ಮೂಲಕ ವಿನ್ಯಾಸವನ್ನು ಹಾಕಲಾಗಿದೆ, ಪ್ರತಿಯೊಂದೂ ವಿಭಿನ್ನ ಮಹತ್ವವನ್ನು ಹೊಂದಿದೆ. ಆದರೆ ಈ ಎಲ್ಲಾ ಚುಕ್ಕೆಗಳು ಸೇರಿಕೊಂಡು ದೊಡ್ಡ ಕಲಾಕೃತಿಯನ್ನು ರಚಿಸಲು ಬಣ್ಣದಿಂದ ತುಂಬಿದಾಗ ಕೋಲಂನ ನೈಜ ನೋಟವು ಹೆಚ್ಚು ಭವ್ಯವಾಗುತ್ತದೆ. ಕೋಲಮ್‍ನೊಂದಿಗೆ ಭಾರತದ ವೈವಿಧ್ಯತೆಗೆ ಸಾಮ್ಯತೆಗಳನ್ನು ಚಿತ್ರಿಸಿದ ಪ್ರಧಾನಿ, ದೇಶದ ಪ್ರತಿಯೊಂದು ಮೂಲೆಯು ಪರಸ್ಪರ ಭಾವನಾತ್ಮಕವಾಗಿ ಸಂಪರ್ಕಿಸಿದಾಗ, ರಾಷ್ಟ್ರದ ಶಕ್ತಿಯು ಹೊಸ ರೂಪದಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ಹೇಳಿದರು. +ಕಾಶಿ-ತಮಿಳು ಸಂಗಮಮ್ ಮತ್ತು ಸೌರಾಷ್ಟ್ರ-ತಮಿಳು ಸಂಗಮಂ ಆರಂಭಿಸಿದ ಸಂಪ್ರದಾಯದಲ್ಲಿ ಅದೇ ಮನೋಭಾವವನ್ನು ವೀಕ್ಷಿಸಬಹುದು ಎಂದು ಅವರು ಗಮನಿಸಿದರು, ಇದು ತಮಿಳು ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಭಾಗವಹಿಸುವುದನ್ನು ದಾಖಲಿಸುತ್ತದೆ. +ಪ್ರಧಾನಮಂತ್ರಿಯವರು, ಈ ಏಕತೆಯ ಭಾವನೆಯು 2047 ರ ವೇಳೆಗೆ ವಿಕ್ಷಿತ ಭಾರತವನ್ನು ನಿರ್ಮಿಸಲು ದೊಡ್ಡ ಶಕ್ತಿಯಾಗಿದೆ. ನಾನು ಕೆಂಪು ಕೋಟೆಯಿಂದ ಕರೆದ ಪಂಚಪ್ರಾಣದ ಮುಖ್ಯ ಅಂಶವೆಂದರೆ ದೇಶದ ಏಕತೆಯನ್ನು ಶಕ್ತಿಯುತಗೊಳಿಸುವುದು ಮತ್ತು ಏಕತೆಯನ್ನು ಬಲಪಡಿಸುವುದು. ಪೊಂಗಲ್ ಹಬ್ಬದ ಈ ಶುಭ ಸಂದರ್ಭದಲ್ಲಿ ರಾಷ್ಟ್ರದ ಐಕ್ಯತೆಯನ್ನು ಬಲಪಡಿಸುವ ಸಂಕಲ್ಪಕ್ಕೆ ನಮ್ಮನ್ನು ನಾವು ಪುನಃ ಸಮರ್ಪಿಸಿಕೊಳ್ಳೋಣ ಎಂದು ಕರೆ ನೀಡಿದರು. \ No newline at end of file diff --git a/eesanje/url_47_189_9.txt b/eesanje/url_47_189_9.txt new file mode 100644 index 0000000000000000000000000000000000000000..9c54f7111c22ca805c73248ebfa957aebaa6f60e --- /dev/null +++ b/eesanje/url_47_189_9.txt @@ -0,0 +1,6 @@ +ದೆಹಲಿಯಲ್ಲಿ ಪ್ರತಿಕೂಲ ಹವಾಮಾನ : 34 ವಿಮಾನಗಳ ಹಾರಾಟ ವಿಳಂಬ +ನವದೆಹಲಿ, ಜ.14-ಪ್ರತಿಕೂಲ ಹವಾಮಾನದಿಂದಾಗಿ ದೆಹಲಿ, ಬೆಂಗಳೂರು ಸೇರಿದಂತೆ ಹಲವು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ಬಹಳಷ್ಟು ವಿಮಾನಗಳ ವಿಳಂಬ ಹಾರಾಟ ಹಾಗೂ ಮಾರ್ಗ ಬದಲಾವಣೆ ಮಾಡಬೇಕಾಯಿತು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ 34 ವಿಮಾನಗಳ ಹಾರಾಟ ವಿಳಂಬವಾಯಿತು. ದಟ್ಟ ಮಂಜಿನಿಂದ ಮಾರ್ಗ ಅಗೋಚರವಾಗಿತ್ತು, ಹಾಗಾಗಿ ಎರಡು ಗಂಟೆಗೂ ಹೆಚ್ಚು ಕಾಲ ವಿಮಾನಗಳು ಟೇಕಾಫ್ ಆಗಿಲ್ಲ. ಹವಾಮಾನ ವೈಪರಿತ್ಯದಿಂದಾಗಿ ಪ್ರಯಾಣಿಕರು ಪರದಾಡುವಂತಾಯಿತು. +ದಟ್ಟ ಮಂಜಿನಿಂದ ರನ್ ವೇ ಕೂಡ ಕಾಣದಾಗಿತ್ತು. ಪ್ರಯಾಣಿಕರು ವಿಮಾನಗಳಲ್ಲೆ ಕುಳಿತ ಕಾಲಹರಣ ಮಾಡಬೇಕಾಯಿತು. ಬಿಸಿಲು ಕಾವೇರಿದ ಬಳಿಕ ಸುಮಾರು 9 ಗಂಟೆ ವೇಳೆಗೆ ಮಂಜು ಮರೆಯಾಯಿತು. ನಂತರ ಹಂತ ಹಂತವಾಗಿ ಒಂದೊಂದೆ ವಿಮಾನಗಳು ಟೇಕ್ ಆಫ್ ಆದವು. ಪ್ರತಿ ವರ್ಷ ಚಳಿಗಾಲದಲ್ಲಿ ಮುಂಜಾನೆ ಈ ಸಮಸ್ಯೆ ತಲೆದೂರುತ್ತದೆ. ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿ ಪ್ರಯಾಣಿಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಚಳಿಗಾಲ ಮುಗಿಯುವವರೆಗೂ ಕನಿಷ್ಠ ಮೂರು ತಿಂಗಳು ಆಗಾಗ ಈ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ. +ಪಕ್ಷಿ ಪ್ರಭೇದ ರಕ್ಷಣೆಗಾಗಿ ಜಾರ್ಖಾಂಡ್‍ನಲ್ಲಿ ವಲ್ಚರ್ ರೆಸ್ಟೋರೆಂಟ್ ಆರಂಭ +ಇತ್ತ ದೆಹಲಿಯಲ್ಲೂ ದಟ್ಟ ಮಂಜಿನ ವಾತಾವರಣದಿಂದ ಬೆಳಗ್ಗೆ 4.30ರಿಂದ 7.30ರ ನಡುವೆ ಆರು ವಿಮಾನಗಳನ್ನು ಜೈಪುರಕ್ಕೆ ಮತ್ತು ಒಂದು ವಿಮಾನವನ್ನು ಮುಂಬೈಗೆ ಮಾರ್ಗ ಬದಲಾವನೆ ಮಾಡಲಾಯಿತು.ಭಾನುವಾರದಂದು ದೆಹಲಿ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿ ಮಂಜಿನ ಕುರುಡು ಪದರವು ಆವರಿಸಿದೆ, ಗೋಚರತೆಯ ಮಟ್ಟವು ಹಲವಾರು ಸ್ಥಳಗಳಲ್ಲಿ ಶೂನ್ಯ ಮೀಟರ್‍ಗೆ ಇಳಿದಿತ್ತು. +ಭಾರತೀಯ ಹವಾಮಾನ ಇಲಾಖೆ ಜನರು ಅನಗತ್ಯ ಪ್ರಯಾಣದಿಂದ ದೂರವಿರಲು ಮತ್ತು ಚಾಲನೆ ಮಾಡುವಾಗ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ದೆಹಲಿಯ ಇಂದಿರಾಗಾಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಿರುವ ಪಾಲಂ ವೀಕ್ಷಣಾಲಯವು ದಟ್ಟವಾದ ಮಂಜು ಮುಂಜಾನೆ 5 ಗಂಟೆಯ ವೇಳೆಗೆ ಶೂನ್ಯ ಮೀಟರ್ ಮಟ್ಟಕ್ಕೆ ಇಳಿದಿತ್ತು ಎಂದು ವರದಿ ಮಾಡಿದೆ. \ No newline at end of file diff --git a/eesanje/url_47_18_1.txt b/eesanje/url_47_18_1.txt new file mode 100644 index 0000000000000000000000000000000000000000..96907b44f0955420db3264659aa656e1f8e47f3e --- /dev/null +++ b/eesanje/url_47_18_1.txt @@ -0,0 +1,10 @@ +ಮುಖ್ಯಮಂತ್ರಿಗಳು ರಾಜರಲ್ಲ, ನಾವು ಉಳಿಗೆಮಾನ್ಯ ಯುಗದಲ್ಲಿಲ್ಲ : ಉತ್ತರಖಂಡ್‌ ಸಿಎಂಗೆ ಸುಪ್ರೀಂ ತಪರಾಕಿ + +ನವದೆಹಲಿ,ಸೆ.5-ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾಗಿ ವಿವಾದಿತ ಐಎಫ್‌ಎಸ್‌‍ ಅಧಿಕಾರಿಯನ್ನು ನೇಮಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರ ಕ್ರಮಕ್ಕೆ ರಾಜ್ಯದ ಅರಣ್ಯ ಸಚಿವರು ಮತ್ತು ಇತರರ ಅಭಿಪ್ರಾಯಗಳನ್ನು ಕಡೆಗಣಿಸಿ ಸುಪ್ರೀಂ ಕೋರ್ಟ್‌ನಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. +ಸರ್ಕಾರದ ಮುಖ್ಯಸ್ಥರು ಹಳೆಯ ದಿನಗಳ ರಾಜರು ಎಂದು ನಿರೀಕ್ಷಿಸಲಾಗುವುದಿಲ್ಲ ಮತ್ತು ನಾವು ಊಳಿಗಮಾನ್ಯ ಯುಗದಲ್ಲಿಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ, ಪಿ.ಕೆ.ಮಿಶ್ರಾ ಮತ್ತು ಕೆ.ವಿ.ವಿಶ್ವನಾಥನ್‌ ಅವರ ಪೀಠ ಹೇಳಿದೆ. +ಆದರೆ ನೇಮಕಾತಿ ಆದೇಶವನ್ನು ಸೆ. 3 ರಂದು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಪೀಠಕ್ಕೆ ತಿಳಿಸಿದೆ.ಈ ದೇಶದಲ್ಲಿ ಸಾರ್ವಜನಿಕ ನಂಬಿಕೆಯ ಸಿದ್ಧಾಂತವಿದೆ, ಕಾರ್ಯಾಂಗದ ಮುಖ್ಯಸ್ಥರು ಹಳೆಯ ದಿನಗಳ ರಾಜರು ಎಂದು ನಿರೀಕ್ಷಿಸಲಾಗುವುದಿಲ್ಲ, ಅವರು ಏನು ಹೇಳಿದರೆ ಮಾಡುತ್ತಾರೆ ಎಂಬ ಮನೋಭಾವನೆ ಬೇಡ. ಏಕೆಂದರೆ, ಅವರು ಊಳಿಗಮಾನ್ಯ ಕಾಲದಲ್ಲಿ ಇಲ್ಲ. ಮುಖ್ಯಮಂತ್ರಿ, ಅವರು ಈ ರೀತಿಯಾಗಿ ನಡೆದುಕೊಳ್ಳಬಹುದೇ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. +ವಿವಾದಿತ ಐಎಫ್‌ಎಸ್‌‍ ಅಧಿಕಾರಿಯ ವಿರುದ್ಧ ಇಲಾಖಾ ಪ್ರಕ್ರಿಯೆ ಬಾಕಿ ಇರುವುದನ್ನು ಗಮನಿಸಿದ ಪೀಠವು ಮುಖ್ಯಮಂತ್ರಿಗೆ ಅಧಿಕಾರಿಯ ಮೇಲೆ ವಿಶೇಷ ಪ್ರೀತಿ ಏಕೆ ಎಂದು ಪ್ರಶ್ನಿಸಿತು.ಭಾರತೀಯ ಅರಣ್ಯ ಸೇವೆಯ ಹಿರಿಯ ಅಧಿಕಾರಿ ರಾಹುಲ್‌ ವಿರುದ್ಧ ಶಿಸ್ತಿನ ಪ್ರಕ್ರಿಯೆ ಬಾಕಿ ಇದೆ. ಅಧಿಕಾರಿಯನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎನ್‌ ಎಸ್‌‍ ನಾಡಕರ್ಣಿ ಹೇಳಿದರು. +ಅಧಿಕಾರಿಯನ್ನು ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿಯೋಜಿಸಬಾರದು ಎಂದು ಟಿಪ್ಪಣಿಯಲ್ಲಿ ತಿಳಿಸಲಾಗಿದೆ ಎಂದು ಸೂಚಿಸಿದ ನ್ಯಾಯಾಲಯ, ಮುಖ್ಯಮಂತ್ರಿ ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಹೇಳಿದರು. +ಕಾರ್ಬೆಟ್‌ ಹುಲಿ ಸಂರಕ್ಷಿತ ಪ್ರದೇಶದ ಮಾಜಿ ನಿರ್ದೇಶಕ, ಭಾರತೀಯ ಅರಣ್ಯ ಸೇವಾ ಅಧಿಕಾರಿ ರಾಹುಲ್‌ ಅವರನ್ನು ರಾಜಾಜಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರನ್ನಾಗಿ ನೇಮಿಸುವುದನ್ನು ಹಿರಿಯ ಅಧಿಕಾರಿಗಳು ತೀವ್ರವಾಗಿ ವಿರೋಧಿಸಿದರು. ಮೊದಲ ಅಧಿಕಾರಿಯಿಂದ ನಿರ್ದಿಷ್ಟ ಟಿಪ್ಪಣಿ ಇದೆ ಎಂದು ನ್ಯಾಯಾಲಯ ಗಮನಿಸಿದೆ. ಇದನ್ನು ಉಪ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಅರಣ್ಯ ಸಚಿವರು ಅನುಮೋದಿಸಿದ್ದಾರೆ. +ನೀವು ಡೆಸ್ಕ್‌ ಅಧಿಕಾರಿ, ಉಪ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಸಚಿವರಿಂದ ಸರಿಯಾಗಿ ಒಪ್ಪದಿದ್ದರೆ, ಅವರು ಪ್ರಸ್ತಾವನೆಯನ್ನು ಏಕೆ ಒಪ್ಪುವುದಿಲ್ಲ ಎಂಬುದಕ್ಕೆ ಸ್ವಲ್ಪ ಮನಸ್ಸಿನ ಅನ್ವಯವಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅದು ಹೇಳಿದೆ. +ಏನೂ ಇಲ್ಲದ ಉತ್ತಮ ಅಧಿಕಾರಿಯನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ನಾಡಕರ್ಣಿ ವಾದಿಸಿದ್ದರು. ಏನೂ ಇಲ್ಲ ಎಂದಾದರೆ ಅವರ ವಿರುದ್ಧ ಇಲಾಖಾ ಮೊಕದ್ದಮೆ ಏಕೆ ನಡೆಸುತ್ತಿದ್ದೀರಿ? ಎಂದು ನ್ಯಾಯಾಲಯ ಕೇಳಿತು. ಕೆಲವು ಪ್ರಾಥಮಿಕ ವಿಷಯಗಳಿಲ್ಲದಿದ್ದರೆ, ಯಾರ ವಿರುದ್ಧವೂ ಇಲಾಖಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗುವುದಿಲ್ಲ ಎಂದು ನ್ಯಾಯಾಧೀಶರು ಸೇರಿಸಿದರು. \ No newline at end of file diff --git a/eesanje/url_47_18_10.txt b/eesanje/url_47_18_10.txt new file mode 100644 index 0000000000000000000000000000000000000000..94b8a00d2f6e0ca0e96ab41209a7a08d0fa65d3a --- /dev/null +++ b/eesanje/url_47_18_10.txt @@ -0,0 +1,8 @@ +ಮೋದಿಯವರೇ ಮಣಿಪುರಕ್ಕೆ ಯಾವಾಗ ಭೇಟಿ ನೀಡ್ತೀರಾ..? : ಕಾಂಗ್ರೆಸ್ ಪ್ರಶ್ನೆ + '' : ' +ನವದೆಹಲಿ, ಸೆ 3 (ಪಿಟಿಐ) –ಪ್ರಧಾನಿ ನರೇಂದ್ರ ಮೋದಿ ಅವರು ಬ್ರೂನೈ ಮತ್ತು ಸಿಂಗಾಪುರಕ್ಕೆ ಭೇಟಿ ನೀಡುತ್ತಿದ್ದಂತೆ ಕಾಂಗ್ರೆಸ್‌‍ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ವಿದೇಶಿ ವ್ಯಾಮೋಹದ ಪ್ರಧಾನಿಗಳು ಗಲಭೆ ಪೀಡಿತ ಮಣಿಪುರ ರಾಜ್ಯಕ್ಕೆ ಯಾವಾಗ ಮಾನವೀಯ ಭೇಟಿ ನೀಡುತ್ತಾರೆ ಎಂದು ಪ್ರಶ್ನಿಸಿದೆ. +ಅಸ್ತಿತ್ವದಲ್ಲಿರುವ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಇನ್ನಷ್ಟು ಬಲಪಡಿಸಲು ಸುಲ್ತಾನ್‌ ಹಾಜಿ ಹಸನಲ್‌ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಸೆಪ್ಟೆಂಬರ್‌ 3-4 ರಂದು ಬ್ರೂನೈಗೆ ಭೇಟಿ ನೀಡುತ್ತಿದ್ದಾರೆ. +ಅವರ ಸಿಂಗಾಪುರದ ಸಹವರ್ತಿ ಲಾರೆನ್ಸ್ ವಾಂಗ್‌ ಅವರ ಆಹ್ವಾನದ ಮೇರೆಗೆ ಅವರು ಸೆಪ್ಟೆಂಬರ್‌ 4-5 ರಂದು ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ.ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಮಾತನಾಡಿ, ಜೈವಿಕವಲ್ಲದ ಪ್ರಧಾನಿ ಬ್ರೂನೈಗೆ ಐತಿಹಾಸಿಕ ಭೇಟಿ ಎಂದು ಬಿಂಬಿಸುತ್ತಿದ್ದಾರೆ, ನಂತರ ಅವರು ಸಿಂಗಾಪುರಕ್ಕೆ ಹೋಗುತ್ತಾರೆ. ನಮ ಆಗಾಗ್ಗೆ ಪ್ರಯಾಣಿಸುವವರು ಯಾವಾಗ ತೊಂದರೆಗೀಡಾದ ಮಣಿಪುರ ರಾಜ್ಯಕ್ಕೆ ಭೇಟಿ ನೀಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ. +ಮಣಿಪುರದ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಅವರು ಇದಕ್ಕೆ ವಿರುದ್ಧವಾದ ಹೇಳಿಕೆಗಳ ಹೊರತಾಗಿಯೂ ಮಣಿಪುರದಲ್ಲಿ ಪರಿಸ್ಥಿತಿಯು ಬಹಳ ಉದ್ವಿಗ್ನತೆಯನ್ನು ಮುಂದುವರೆಸಿದೆ ಎಂದು ಅವರು ಹೇಳಿದರು.ಮಣಿಪುರದಲ್ಲಿ ಹಿಂಸಾಚಾರ ಸ್ಫೋಟಗೊಂಡು ಇಂದಿಗೆ ಸರಿಯಾಗಿ 16 ತಿಂಗಳುಗಳು, ಇದು ನೂರಾರು ಜನರ ಸಾವಿಗೆ ಕಾರಣವಾಯಿತು ಮತ್ತು ಪರಿಹಾರ ಶಿಬಿರಗಳಲ್ಲಿ ಹೀನಾಯ ಸ್ಥಿತಿಯಲ್ಲಿ ವಾಸಿಸುವ ಸಾವಿರಾರು ಜನರ ಸ್ಥಳಾಂತರಕ್ಕೆ ಕಾರಣವಾಗಿದೆ ಎಂದು ರಮೇಶ್‌ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ. +ನರೇಂದ್ರ ಮೋದಿಯವರು ರಾಜ್ಯಕ್ಕೆ ಹೋಗಿ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಗುಂಪುಗಳು ಮತ್ತು ಜನರೊಂದಿಗೆ ಸಂವಹನ ನಡೆಸಲು ಇನ್ನೂ ಸಮಯ ಅಥವಾ ಒಲವು ಕಂಡುಕೊಂಡಿಲ್ಲ ಎಂಬುದು ನಂಬಿಕೆಗೆ ಮೀರಿದೆ ಎಂದು ಅವರು ಹೇಳಿದರು. +ಮೈತೇಯಿ ಮತ್ತು ಕುಕಿ-ಜೋಮಿ ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಬಿರೇನ್‌ ಸಿಂಗ್‌ ನೇಮಿಸಿದ ದೂತರನ್ನು ಉಲ್ಲೇಖಿಸಿ ರಮೇಶ್‌ ಮಾಧ್ಯಮ ವರದಿಯನ್ನು ಟ್ಯಾಗ್‌ ಮಾಡಿದ್ದಾರೆ, ಮಾತುಕತೆಗಳಿಗೆ ಅನುಕೂಲಕರವಲ್ಲದ ವಾತಾವರಣದಲ್ಲಿ ಹಿಂಸಾಚಾರದ ನಡುವೆ ಮಧ್ಯಸ್ಥಿಕೆ ವಹಿಸುವುದು ಕಷ್ಟ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_18_11.txt b/eesanje/url_47_18_11.txt new file mode 100644 index 0000000000000000000000000000000000000000..7a7b31e0fdafddf9f64658f8f7b68249b4dbbd45 --- /dev/null +++ b/eesanje/url_47_18_11.txt @@ -0,0 +1,9 @@ +ಮಣಿಪುರದ ಇಂಫಾಲದಲ್ಲಿ ಡ್ರೋನ್‌ ದಾಳಿ, ಮೂವರ ಸ್ಥಿತಿ ಗಂಭೀರ + +ಇಂಫಾಲ್‌‍, ಸೆ 3 (ಪಿಟಿಐ)ಮಣಿಪುರದ ಇಂಫಾಲ್‌ ಪಶ್ಚಿಮ ಜಿಲ್ಲೆಯಲ್ಲಿ ಡ್ರೋನ್‌ ಬಳಸಿ ಶಂಕಿತ ಉಗ್ರರು ಹೊಸ ಬಾಂಬ್‌ ದಾಳಿ ನಡೆಸಿದ್ದು, 23 ವರ್ಷದ ಮಹಿಳೆ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. +ನಿನ್ನೆ ಸಂಜೆ 6.20 ರ ಸುಮಾರಿಗೆ ವಸತಿ ಪ್ರದೇಶದಲ್ಲಿ ಡ್ರೋನ್‌ನಿಂದ ಕನಿಷ್ಠ ಎರಡು ಸ್ಫೋಟಕಗಳನ್ನು ಬೀಳಿಸಲಾಯಿತು, ಇದರಲ್ಲಿ ಮಹಿಳೆ ಮತ್ತು ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಹಿಳೆ ಸೆಂಜಮ್‌ ಚಿರಾಂಗ್‌ ಪ್ರದೇಶದ ತನ್ನ ನಿವಾಸದಲ್ಲಿದ್ದಾಗ ಬಾಂಬ್‌ ತನ್ನ ಮನೆಯ ಸುಕ್ಕುಗಟ್ಟಿದ ಕಬ್ಬಿಣದ ಮೇಲ್ಛಾವಣಿಯ ಶೀಟ್‌ಗಳ ಮೂಲಕ ತೂರಿಕೊಂಡು ಸ್ಫೋಟಗೊಂಡಿತು ಎಂದು ಅವರು ಹೇಳಿದರು. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಕಾಂಗ್‌ಪೊಕ್ಪಿ ಜಿಲ್ಲೆಯ ಬೆಟ್ಟದ ಮೇಲಿನ ಸ್ಥಾನಗಳಿಂದ ತಗ್ಗು ಪ್ರದೇಶದ ಸೆಜಮ್‌ ಚಿರಾಂಗ್‌ ಗ್ರಾಮದ ಮೇಲೆ ಉಗ್ರರು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈ ಸ್ಥಳವು ಕೌಟ್ರುಕ್‌ನಿಂದ ಕೇವಲ 3 ಕಿಮೀ ದೂರದಲ್ಲಿದೆ, ಭಾನುವಾರದಂದು ಇದೇ ರೀತಿಯ ಡ್ರೋನ್‌ ಬಾಂಬ್‌ ಮತ್ತು ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡಿದ್ದರು. +ಏತನಧ್ಯೆ, ಮಣಿಪುರ ಪೊಲೀಸರು ಹೇಳಿಕೆಯಲ್ಲಿ, ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯ ಸಮೀಪದ ಖರಂ ವೈಫೇಯ್‌ ಗ್ರಾಮದಿಂದ ಡ್ರೋನ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಕಾಂಗ್‌ಪೊಕ್ಪಿ ಜಿಲ್ಲೆಯ ಕಾಂಗ್‌ಚುಪ್‌ ಪೊನ್ಲೆನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಗಳು ಮತ್ತು ಪ್ರದೇಶದ ಪ್ರಾಬಲ್ಯವು ಶಸಾ್ತ್ರಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲು ಕಾರಣವಾಯಿತು. +ಕಾರ್ಯಾಚರಣೆಯ ವೇಳೆ ಹತ್ತು 12 ಇಂಚಿನ ಸಿಂಗಲ್‌ ಬೋರ್‌ ಬ್ಯಾರೆಲ್‌ ರೈಫಲ್‌ಗಳು, ಒಂದು ಸುಧಾರಿತ ಮಾಟರ್ರ, ಒಂಬತ್ತು ಸುಧಾರಿತ ಮಾರ್ಟರ್‌ ಬ್ಯಾರೆಲ್‌ಗಳು, ಇಪ್ಪತ್ತು ಜೆಲಾಟಿನ್‌ ಸ್ಟಿಕ್‌ಗಳು, ಮೂವತ್ತು ಡಿಟೋನೇಟರ್‌ಗಳು, ಎರಡು ದೇಶ ನಿರ್ಮಿತ ರಾಕೆಟ್‌ಗಳು ಮತ್ತು ಇತರವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_18_12.txt b/eesanje/url_47_18_12.txt new file mode 100644 index 0000000000000000000000000000000000000000..60a5e60e0d9c5956c2dd8184987c1b292c0be90b --- /dev/null +++ b/eesanje/url_47_18_12.txt @@ -0,0 +1,9 @@ +ಕಾಂಗ್ರೆಸ್ ಗ್ಯಾರಂಟಿ ಜಾತಿ ಗಣತಿ ಹೈಜಾಕ್ ಮಾಡುತ್ತಿದೆಯೇ ಬಿಜೆಪಿ..? ; ಜೈರಾಮ್ ರಮೇಶ್ + : , +ನವದೆಹಲಿ, ಸೆ.3 (ಪಿಟಿಐ)ಜಾತಿ ಗಣತಿ ಕುರಿತು ಆರ್ಎಸ್ಎಸ್ ಹೇಳಿಕೆ ನೀಡಿದ ಒಂದು ದಿನದ ನಂತರ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತನ್ನ ಇನ್ನೊಂದು ಭರವಸೆಯನ್ನು ಹೈಜಾಕ್ ಮಾಡಿ ಸಂಘವು ನೀಡಿರುವ ಜಾತಿ ಗಣತಿಯನ್ನು ಈಗ ನಡೆಸುತ್ತಾರೆಯೇ ಎಂದು ಕಾಂಗ್ರೆಸ್ ಆಶ್ಚರ್ಯ ವ್ಯಕ್ತಪಡಿಸಿದೆ. +ನಿರ್ದಿಷ್ಟ ಸಮುದಾಯಗಳು ಅಥವಾ ಜಾತಿಗಳ ಮಾಹಿತಿಯನ್ನು ಸಂಗ್ರಹಿಸಲು ಯಾವುದೇ ಅಭ್ಯಂತರವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನಿನ್ನೆ ಹೇಳಿಕೆ ನೀಡಿತ್ತು. ಟೀಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ನ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಜಾತಿ ಗಣತಿ ಕುರಿತು ಆರ್ಎಸ್ಎಸ್ನ ಉಪದೇಶವು ಕೆಲವು ಮೂಲಭೂತ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಮತ್ತು ಜಾತಿ ಗಣತಿಯ ಮೇಲೆ ಅದಕ್ಕೆ ವಿಟೋ ಅಧಿಕಾರವಿದೆಯೇ ಎಂದು ಪ್ರಶ್ನಿಸಿದ್ದಾರೆ. +ಜಾತಿ ಗಣತಿಗೆ ಅನುಮತಿ ನೀಡಲು ಆರ್ಎಸ್ಎಸ್ ಯಾರು? ಜಾತಿ ಗಣತಿಯನ್ನು ಚುನಾವಣಾ ಪ್ರಚಾರಕ್ಕೆ ದುರುಪಯೋಗಪಡಿಸಿಕೊಳ್ಳಬಾರದು ಎಂದು ಆರ್ಎಸ್ಎಸ್ ಹೇಳುತ್ತದೆಯೇ? ಇದು ನ್ಯಾಯಾಧೀಶರೇ ಅಥವಾ ಅಂಪೈರ್ ಆಗಬೇಕೇ? ಎಂದು ರಮೇಶ್ ಹಿಂದಿಯಲ್ಲಿ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ. +ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಮೀಸಲಾತಿಯ ಮೇಲಿನ ಶೇ.50 ರಷ್ಟು ಮಿತಿಯನ್ನು ತೆಗೆದುಹಾಕಲು ಸಾಂವಿಧಾನಿಕ ತಿದ್ದುಪಡಿಯ ಅಗತ್ಯತೆಯ ಬಗ್ಗೆ ಆರ್ಎಸ್ಎಸ್ ಏಕೆ ನಿಗೂಢ ಮೌನ ವಹಿಸಿದೆ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ. +ಈಗ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದ್ದು, ಅಜೈವಿಕ ಪ್ರಧಾನಿ ಕಾಂಗ್ರೆಸ್ನ ಮತ್ತೊಂದು ಗ್ಯಾರಂಟಿಯನ್ನು ಹೈಜಾಕ್ ಮಾಡಿ ಜಾತಿ ಗಣತಿ ನಡೆಸುತ್ತಾರಾ? ರಮೇಶ್ ಕೇಳಿದ್ದಾರೆ. +ಜಾತಿ ಗಣತಿ ಪರವೋ ಅಥವಾ ವಿರೋಧವೋ ಎಂಬುದನ್ನು ಆರ್ಎಸ್ಎಸ್ ದೇಶಕ್ಕೆ ಸ್ಪಷ್ಟವಾಗಿ ತಿಳಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾತ್ರಿ ಹೇಳಿದ್ದರು. +ದೇಶದ ಸಂವಿಧಾನದ ಬದಲು ಮನುಸತಿಯ ಪರವಾಗಿರುವ ಸಂಘಪರಿವಾರಕ್ಕೆ ದಲಿತರು, ಆದಿವಾಸಿಗಳು, ಹಿಂದುಳಿದವರು ಹಾಗೂ ಬಡ-ವಂಚಿತ ಸಮಾಜದ ಪಾಲ್ಗೊಳ್ಳುವಿಕೆ ಬಗ್ಗೆ ಚಿಂತಿಸುತ್ತಿದೆಯೇ ಅಥವಾ ಇಲ್ಲವೇ? ಎಕ್‌್ಸನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್ನಲ್ಲಿ ಖರ್ಗೆ ಹೇಳಿದ್ದಾರೆ. \ No newline at end of file diff --git a/eesanje/url_47_18_2.txt b/eesanje/url_47_18_2.txt new file mode 100644 index 0000000000000000000000000000000000000000..f4c9e668f48b4487019b4692f73163806575287e --- /dev/null +++ b/eesanje/url_47_18_2.txt @@ -0,0 +1,9 @@ +ಡಾ.ಸಂದೀಪ್‌ ಘೋಷ್‌ ಕಿಕ್‌ ಬ್ಯಾಕ್‌ ಪಡೆದಿದ್ದನ್ನು ಬಹಿರಂಗಪಡಿಸಿದ ಸಿಬಿಐ + , , : - +ಕೋಲ್ಕತ್ತಾ,ಸೆ.5-ಆರ್‌ಜಿ ಕಾರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್‌ ಘೋಷ್‌, ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಕೆಲವು ಕಿಕ್‌ ಬ್ಯಾಕ್‌ ಗಳನ್ನು ಪಡೆದಿದ್ದಾರೆ ಎಂದು ಕೇಂದ್ರೀಯ ತನಿಖಾ ದಳ ಬಹಿರಂಗಪಡಿಸಿದೆ. +ಕಳೆದ ತಿಂಗಳು ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣ ನಂತರ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಆರ್ಥಿಕ ಅಕ್ರಮಗಳ ಬಗ್ಗೆ ಸಂಸ್ಥೆ ಘೋಷ್‌ ಅವರನ್ನು ಎರಡು ವಾರಗಳ ಕಾಲ ಪ್ರಶ್ನಿಸಿತ್ತು, ಅಂತಿಮವಾಗಿ ಸೆ.2 ರಂದು ಅವರನ್ನು ಬಂಧಿಸಲಾಯಿತು. +ಸಂದೀಪ್‌ ಘೋಷ್‌ ಅವರು ನಿನ್ನೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಸಂಸ್ಥೆಯಲ್ಲಿ ಹಣಕಾಸಿನ ಅವ್ಯವಹಾರಗಳನ್ನು ಆರೋಪಿಸಿರುವ ಅರ್ಜಿಗೆ ಕಕ್ಷಿದಾರರಾಗಿ ಸೇರಿಸಲು ತನ್ನ ಮನವಿಯನ್ನು ವಜಾಗೊಳಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿದರು. +ಸಿಬಿಐ ಮೂಲಗಳ ಪ್ರಕಾರ, ಘೋಷ್‌ ಅವರು ಅನರ್ಹ ವೈದ್ಯಕೀಯ ವಿದ್ಯಾರ್ಥಿಗಳಿಗೆ ವರ್ಗಾವಣೆ, ಪೋಸ್ಟಿಂಗ್‌ ಮತ್ತು ಪಾಸ್‌‍ ಅಂಕಗಳನ್ನು ಒದಗಿಸಲು ಶೇ.40ರಷ್ಟು ಕಮಿಷನ್‌ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. +ಇತ್ತೀಚಿನ ವರ್ಷಗಳಲ್ಲಿ ವೈದ್ಯರ ಅಕ್ರಮ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ದಂಧೆಯು ಹೆಚ್ಚಾಗುತ್ತಿದ್ದು ಅವರ ಕಮಿಷನ್‌ ಕ್ರಮೇಣ ಶೇ.10 ಕ್ಕೆ ಇಳಿದಿದೆ. ಹೆಚ್ಚುತ್ತಿರುವ ವೈದ್ಯರ ನಡುವೆ ಹಣವನ್ನು ವಿತರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಉತ್ತರ ಬಂಗಾಳದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ಡಾ. ಅಭಿಕ್‌ ಘೋಷ್‌ ಅವರನ್ನು ಅಕ್ರಮ ವರ್ಗಾವಣೆ ಮತ್ತು ಪೋಸ್ಟಿಂಗ್‌ ದಂಧೆ ನಡೆಸುವಲ್ಲಿ ಪ್ರಮುಖ ವ್ಯಕ್ತಿ ಎಂದು ಸಿಬಿಐ ಮೂಲಗಳು ಗುರುತಿಸಿವೆ. ಈ ಯೋಜನೆಯಲ್ಲಿ ಭಾಗಿಯಾಗಿರುವ ಇತರ ಹಿರಿಯ ವೈದ್ಯರಿಗಾಗಿಯೂ ಕೇಂದ್ರ ತನಿಖಾ ಸಂಸ್ಥೆ ಹುಡುಕಾಟ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. +ವೈದ್ಯಕೀಯ ಹಗರಣಗಳಲ್ಲಿ ಭಾಗಿಯಾಗಿರುವ ಮಾರಾಟಗಾರರಿಗೆ ನೀಡಿದ ಪ್ರತಿ ಟೆಂಡರ್‌ನಲ್ಲಿ ಘೋಷ್‌ ಶೇ. 20 ರಿಂದ 30ರಷ್ಟು ಕಮಿಷನ್‌ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ. ಅಂತಹ ಟೆಂಡರ್‌ಗಳನ್ನು ಮಾರಾಟಗಾರರಾದ ಬಿಪ್ಲವ್‌ ಸಿಂಘಾ ಮತ್ತು ಸುಮನ್‌ ಹಜ್ರಾ ಅವರಿಗೆ ನಿಯಮಾವಳಿಗಳನ್ನು ಉಲ್ಲಂಸಿ ನೀಡಲಾಗಿದೆ ಎಂದು ವರದಿಯಾಗಿದೆ. ಸಿಬಿಐ ಸಂದೀಪ್‌ ಘೋಷ್‌ ಅವರನ್ನು ಸೋಮವಾರ ಬಂಧಿಸಿದೆ. \ No newline at end of file diff --git a/eesanje/url_47_18_3.txt b/eesanje/url_47_18_3.txt new file mode 100644 index 0000000000000000000000000000000000000000..2af1236ddb9f405486ea14a8bb9bfe3efec7c465 --- /dev/null +++ b/eesanje/url_47_18_3.txt @@ -0,0 +1,9 @@ +ಅಸ್ಸಾಂನಲ್ಲಿ 22 ಸಾವಿರ ಕೋಟಿ ಆನ್‌ಲೈನ್‌ ಸ್ಟಾಕ್‌ ಮಾರುಕಟ್ಟೆ ವಂಚನೆ ಪತ್ತೆ + 2,200 , +ಗುವಾಹಟಿ,ಸೆ.4-ಬರೊಬ್ಬರಿ 22 ಸಾವಿರ ಕೋಟಿ ರೂ.ಗಳ ಆನ್‌ಲೈನ್‌ ಸ್ಟಾಕ್‌ ಮಾರುಕಟ್ಟೆ ವಂಚನೆ ಪ್ರಕರಣವನ್ನು ಅಸ್ಸಾಂ ಪೊಲೀಸರು ಬಯಲಿಗೆಳೆದಿದ್ದಾರೆ. ನರ ಹಣವನ್ನು ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಆನ್‌ಲೈನ್‌ ಸ್ಟಾಕ್‌ ಮಾರುಕಟ್ಟೆ ಹೂಡಿಕೆಯನ್ನು ವಂಚಿಸಿದ ದಲ್ಲಾಳಿಗಳು ಒಳಗೊಂಡ 22,000 ಕೋಟಿಯ ಬಹತ್‌ ಹಣಕಾಸು ಹಗರಣವನ್ನು ಅಸ್ಸಾಂ ಪೊಲೀಸರು ಬಯಲಿಗೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಈ ಪ್ರಕರಣದಲ್ಲಿ ದಿಬ್ರುಗಢ್‌ನ 22 ವರ್ಷದ ಆನ್‌ಲೈನ್‌ ವ್ಯಾಪಾರಿ ವಿಶಾಲ್‌ ಫುಕನ್‌ ಮತ್ತು ಗುವಾಹಟಿಯ ಸ್ವಪ್ನಿಲ್‌ ದಾಸ್‌‍ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಾಗ್ಯೂ, ರಾಜ್ಯದಲ್ಲಿ ವ್ಯಾಪಿಸಿರುವ ಹಗರಣದಲ್ಲಿ ಇನ್ನೂ ಹಲವಾರು ಬಂಧನಗಳನ್ನು ನಿರೀಕ್ಷಿಸಲಾಗಿದೆ. +ತನ್ನ ಶ್ರೀಮಂತ ಜೀವನಶೈಲಿಯನ್ನು ಬಳಸಿಕೊಂಡು ಜನರಿಗೆ ಆಮಿಷವೊಡ್ಡಿದ ಫುಕನ್‌‍, ತನ್ನ ಹೂಡಿಕೆದಾರರಿಗೆ 60 ದಿನಗಳಲ್ಲಿ ತಮ ಹೂಡಿಕೆಯ ಮೇಲೆ ಶೇ.30 ಲಾಭವನ್ನು ನೀಡುವುದಾಗಿ ಭರವಸೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ನಕಲಿ ಕಂಪನಿಗಳನ್ನು ಸ್ಥಾಪಿಸಿ, ಅಸ್ಸಾಮಿ ಚಲನಚಿತ್ರೋದ್ಯಮದಲ್ಲಿ ಹೂಡಿಕೆ ಮಾಡಿ ಹಲವು ಆಸ್ತಿಗಳನ್ನು ಸಂಪಾದಿಸಿದ್ದ ಎಂದು ತಿಳಿದುಬಂದಿದೆ. +ದಿಬ್ರುಗಢ್‌ನಲ್ಲಿರುವ ಅವರ ಮನೆ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮುಟ್ಲಿ-ಕೋಟಿ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇದೀಗ ಅಸ್ಸಾಮಿ ನತ್ಯ ಸಂಯೋಜಕಿ ಸುಮಿ ಬೋರಾ ಅವರನ್ನು ಹುಡುಕುತ್ತಿದ್ದಾರೆ, ಅವರು ಫುಕಾನ್‌ನ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿದ್ದಾರೆಂದು ವರದಿಯಾಗಿದೆ. +ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮೋಸದ ಆನ್‌ಲೈನ್‌ ಸ್ಟಾಕ್‌ ಮಾರುಕಟ್ಟೆ ಹೂಡಿಕೆಗಳನ್ನು ತಪ್ಪಿಸಲು ಜನರನ್ನು ಒತ್ತಾಯಿಸಿದರು, ಕನಿಷ್ಠ ಪ್ರಯತ್ನದಿಂದ ಹಣವನ್ನು ದ್ವಿಗುಣಗೊಳಿಸುವ ಹಕ್ಕುಗಳು ಸಾಮಾನ್ಯವಾಗಿ ಮೋಸದಿಂದ ಕೂಡಿರುತ್ತವೆ ಎಂದು ಹೇಳಿದ್ದರು. +ಈ ಆನ್‌ಲೈನ್‌ ವ್ಯಾಪಾರ ಸಂಸ್ಥೆಗಳ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವ ಯಾವುದೇ ವ್ಯವಸ್ಥೆ ಇಲ್ಲ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ. ವಂಚಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ವಂಚಕರಿಂದ ದೂರವಿರಿ ಎಂದು ನಾನು ಜನರಿಗೆ ಮನವಿ ಮಾಡುತ್ತೇನೆ. ಇದೀಗ ಅಕ್ರಮ ದಲ್ಲಾಳಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿನ ಸಂಪೂರ್ಣ ದಂಧೆಯನ್ನು ಭೇದಿಸಲು ನಾವು ಪ್ರಯತ್ನಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. +ಸೆಬಿ ಅಥವಾ ಆರ್‌ಬಿಐ ಮಾರ್ಗಸೂಚಿಗಳನ್ನು ಅನುಸರಿಸದೆ ಹಲವಾರು ಆನ್‌ಲೈನ್‌ ಟ್ರೇಡಿಂಗ್‌ ಸಂಸ್ಥೆಗಳು ರಾಜ್ಯದಲ್ಲಿ ವ್ಯವಹಾರ ನಡೆಸುತ್ತಿವೆ ಎಂಬ ವರದಿಗಳ ನಂತರ ಮುಖ್ಯಮಂತ್ರಿಯವರ ಈ ಹೇಳಿಕೆ ಬಂದಿದೆ. \ No newline at end of file diff --git a/eesanje/url_47_18_4.txt b/eesanje/url_47_18_4.txt new file mode 100644 index 0000000000000000000000000000000000000000..98eff5e95c5a88c38cab843cec6a66f51b830ea0 --- /dev/null +++ b/eesanje/url_47_18_4.txt @@ -0,0 +1,6 @@ +ಮದರಸಾದಲ್ಲಿ ಆರ್ಎಸ್ಎಸ್ ವಿರೋಧಿ ಪುಸ್ತಕ ಪತ್ತೆ + +ಲಕ್ನೋ,ಸೆ.4– ಮದರಸಾದಲ್ಲಿ ಆರ್ಎಸ್ಎಸ್ ಕುರಿತ ವಿವಾದಾತಕ ಪುಸ್ತಕ ದೊರೆತಿರುವ ಘಟನೆ ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದಿದೆ.ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಮೇರೆಗೆ ಮದರಸಾಗೆ ಶೋಧಕ್ಕೆಂದು ಹೋಗಿದ್ದ ಅಧಿಕಾರಿಗಳಿಗೆ ಈ ವಿವಾದಾತಕ ಪುಸ್ತಕ ಸಿಕ್ಕಿದೆ. +ಪ್ರಯಾಗ್ರಾಜ್ನ ಅತರ್ಸ್ಯುಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜೊತೆಗೆ, ಪೊಲೀಸರು ಪುಸ್ತಕವನ್ನು ವಶಪಡಿಸಿಕೊಂಡಿದ್ದಾರೆ. +ಆರ್ಎಸ್ಎಸ್ ದಿ ಬಿಗ್ಗೆಸ್ಟ್ ಟೆರರಿಸ್ಟ್ ಆರ್ಗನೈಸೇಷನ್ ಇನ್ ದಿ ಕಂಟ್ರಿ ಎನ್ನುವ ಪುಸ್ತಕವನ್ನು ಉರ್ದುವಿನಿಂದ ಹಿಂದಿಗೆ ತರ್ಜುಮೆ ಮಾಡಲಾಗಿದೆ. ಈ ಪುಸ್ತಕವನ್ನು ಎಸ್.ಎಂ ಮುಷರಫ್ ಎಂಬುವವರು ಬರೆದಿದ್ದಾರೆ. +ಮದರಸಾದಲ್ಲಿ ಆರ್ಎಸ್ಎಸ್ ವಿರುದ್ಧ ಮಕ್ಕಳಲ್ಲಿ ವಿಷಬೀಜ ಬಿತ್ತಲು ಮೌಲ್ವಿ ಮೊಹಮದ್ ತಫ್ಸೀರುಲ್ ಅರಿಫೀನ್ ಈ ಪುಸ್ತಕವನ್ನು ಬಳಕೆ ಮಾಡುತ್ತಿರಬಹುದು ಎಂದು ಅನುಮಾನಿಸಲಾಗಿದೆ. \ No newline at end of file diff --git a/eesanje/url_47_18_5.txt b/eesanje/url_47_18_5.txt new file mode 100644 index 0000000000000000000000000000000000000000..e29c8c88d30849e7d6bf0cc1a899dc4a2f366644 --- /dev/null +++ b/eesanje/url_47_18_5.txt @@ -0,0 +1,9 @@ +ಎಲೆಕ್ಟ್ರಿಕಲ್ ವಾಹನಗಳ ತಾಣವಾಗಿ ಭಾರತ : ಕೇಂದ್ರ ಸಚಿವ ಕುಮಾರಸ್ವಾಮಿ + : .. +ನವದೆಹಲಿ , ಸೆ. 4– ಮುಂದಿನ 2070ರ ವೇಳೆಗೆ ಶೂನ್ಯ ಹೊಗೆ ಹೊರಸೂಸುವಿಕೆಯನ್ನು ಸಾಧಿಸುವ ಉದ್ದೇಶವನ್ನು ಭಾರತ ಹೊಂದಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. +ಅಸೋಚಾಮ್ ಆಯೋಜಿಸಿದ್ದ ವಿಕಸಿತ ಭಾರತಕ್ಕಾಗಿ ಎಲೆಕ್ಟ್ರಿಕ್ ಮೊಬಿಲಿಟಿ ಹಬಾಗಿ ಭಾರತವನ್ನು ನಿರ್ಮಿಸುವ ಕುರಿತ ರಾಷ್ಟ್ರೀಯ ಸಮೇಳನದಲ್ಲಿ ಮಾತನಾಡಿದ ಅವರು, ಎಲೆಕ್ಟ್ರಿಕ್ ಚಲನಶೀಲತೆಯನ್ನು ಅಳವಡಿಸಿಕೊಳ್ಳುವುದು, ಭಾರತದ ಸಾರಿಗೆ ವಲಯವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಪರಿವರ್ತನೆಯ ಹೆಜ್ಜೆಯಾಗಿದೆ ಎಂದಿದ್ದಾರೆ. +ಇದರಿಂದ ಪರಿಸರ ಪ್ರಯೋಜನಗಳನ್ನು ಮಾತ್ರವಲ್ಲದೆ, ಈ ಬದಲಾವಣೆಯು ಗಮನಾರ್ಹ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಸಾಂಪ್ರದಾಯಿಕ ಇಂಧನಗಳ ಮೇಲೆ ದೇಶದ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಸ್ವಚ್ಛವಾದ, ಹಸಿರು ಪರಿಸರ ಭವಿಷ್ಯಕ್ಕೆ ಕೊಡುಗೆ ನೀಡುತ್ತದೆ. ಈ ಉಪಕ್ರಮಗಳು ಸುಸ್ಥಿರ ಅಭಿವೃದ್ಧಿ ಮತ್ತು ತಾಂತ್ರಿಕ ಆವಿಷ್ಕಾರದಲ್ಲಿ ಜಾಗತಿಕ ನಾಯಕನಾಗಿ ಭಾರತದ ಸ್ಥಾನವನ್ನು ಬಲಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ. +ಭಾರೀ ಕೈಗಾರಿಕೆಗಳ ಸಚಿವಾಲಯವು ಭಾರತವನ್ನು ವಿದ್ಯುತ್ ಚಲನಶೀಲತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ದಣಿವರಿಯದೆ ಕೆಲಸ ಮಾಡುತ್ತಿದೆ. ವಿದ್ಯುತ್ ಚಾಲಿತ ವಾಹನಗಳ (ಇವಿ) ಪರಿಸರ ವ್ಯವಸ್ಥೆಯನ್ನು ಮುಂದುವರಿಸಲು ಕೈಗಾರಿಕಾ ಸಚಿವಾಲಯ ಅಚಲ ಬದ್ಧತೆಯನ್ನು ಹೊಂದಿದೆ ಎಂದು ಒತ್ತಿ ಹೇಳಿದರು. +ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸುವುದು ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಸುಸ್ಥಿರ ಬೆಳವಣಿಗೆಯನ್ನು ಚಾಲನೆ ಮಾಡುವತ್ತ ಗಮನಹರಿಸಲಾಗಿದೆ. ಈ ಪ್ರಯತ್ನಗಳು ಪ್ರಧಾನಿ ನರೇಂದ್ರ ಮೋದಿ ಅವರ ಆತನಿರ್ಭರ ಭಾರತ ಮತ್ತು ವಿಕ್ಷಿತ ಭಾರತ 2047 ಉಪಕ್ರಮಗಳ ದೂರದೃಷ್ಟಿಯ ಗುರಿಗಳೊಂದಿಗೆ ಪರಿಪೂರ್ಣ ಹೊಂದಾಣಿಕೆಯಲ್ಲಿವೆ ಎಂದು ಅವರು ತಿಳಿಸಿದರು. +ಸುಸ್ಥಿರ ಸಾರಿಗೆ ಮತ್ತು ಆರ್ಥಿಕ ಬೆಳವಣಿಗೆಯತ್ತ ದೇಶದ ಪ್ರಯಾಣವನ್ನು ಮತ್ತಷ್ಟು ವೇಗಗೊಳಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಮತ್ತು ಸಹಯೋಗಿಸಲು ಪಾಲುದಾರರಿಗೆ ಈ ಸಮ್ಮೇಳನವು ನಿರ್ಣಾಯಕ ವೇದಿಕೆಯಾಗಿದೆ ಎಂದು ಸಚಿವರು ಹೇಳಿದ್ದಾರೆ. +ಅಸೋಚಾಮ್ನ ಪ್ರಧಾನ ಕಾರ್ಯದರ್ಶಿ ದೀಪಕ್ ಸೂದ್ ಮತ್ತು ಗ್ರೀನ್ ಮೊಬಿಲಿಟಿಯ ರಾಷ್ಟ್ರೀಯ ಮಂಡಳಿಯ ಅಧ್ಯಕ್ಷ ನಿಶಾಂತ್ ಆರ್ಯ ಸೇರಿದಂತೆ ಪ್ರಮುಖ ಉದ್ಯಮದ ಪ್ರತನಿಧಿಗಳು ಸಮೇಳನದಲ್ಲಿ ಭಾಗವಹಿಸಿದ್ದರು. \ No newline at end of file diff --git a/eesanje/url_47_18_6.txt b/eesanje/url_47_18_6.txt new file mode 100644 index 0000000000000000000000000000000000000000..93cb57347a2563403ee34f88b0a57629f44a6c16 --- /dev/null +++ b/eesanje/url_47_18_6.txt @@ -0,0 +1,10 @@ +ಹಿಮಾಲಯದ ಐಸ್‌‍ನಲ್ಲಿ ಅಡಗಿದ್ದ 1700 ಪ್ರಾಚಿನ ವೈರಸ್‌‍ಗಳು ಪತ್ತೆ + 1,700 +ನವದೆಹಲಿ,ಸೆ.4-ಹಿಮಾಲಯದ ಗ್ಲೇಶಿಯರ್ ಐಸ್‌‍ನಲ್ಲಿ ಅಡಗಿರುವ ಸುಮಾರು 1,700 ಪ್ರಾಚೀನ ವೈರಸ್‌‍ ಪ್ರಭೇದಗಳನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.ನೇಚರ್‌ ಜಿಯೋಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಪತ್ರಿಕೆಯ ಪ್ರಕಾರ, ಈ ವೈರಸ್‌‍ಗಳಲ್ಲಿ ಮುಕ್ಕಾಲು ಭಾಗದಷ್ಟು ಹಿಂದೆ ವಿಜ್ಞಾನಕ್ಕೆ ತಿಳಿದಿರಲಿಲ್ವಂತೆ. +ಸಮುದ್ರ ಮಟ್ಟದಿಂದ ಸುಮಾರು ನಾಲ್ಕು ಮೈಲುಗಳಷ್ಟು ಎತ್ತರದಲ್ಲಿರುವ ಟಿಬೆಟಿಯನ್‌ ಪ್ರಸ್ಥಭೂಮಿಯ ಗುಲಿಯಾ ಗ್ಲೇಸಿಯರ್‌ನಿಂದ ತೆಗೆದ ಐಸ್‌‍ ಕೋರ್‌ಗಳಲ್ಲಿ ಹೆಪ್ಪುಗಟ್ಟಿದ ವೈರಲ್‌ ಡಿಎನ್‌ಎ ಸ್ಕ್ರ್ಯಾಪ್‌ಗಳಲ್ಲಿ ವೈರಸ್‌‍ ಪ್ರಭೇದಗಳು ಪತ್ತೆಯಾಗಿವೆ. ಹವಾಮಾನದಲ್ಲಿನ ಬದಲಾವಣೆಗಳಿಗೆ ವೈರಸ್‌‍ಗಳು ಹೇಗೆ ಹೊಂದಿಕೊಳ್ಳುತ್ತವೆ ಮತ್ತು ಮುಂಬರುವ ವರ್ಷಗಳಲ್ಲಿ ಪ್ರಸ್ತುತ ವೈರಸ್‌‍ಗಳು ಹೇಗೆ ಬದಲಾಗಬಹುದು ಎಂಬುದನ್ನು ಅರ್ಥಮಾಡಿಕೊಳ್ಳಲು ಸಂಶೋಧಕರು ಈಗ ಆಶಿಸಿದ್ದಾರೆ. +ಈ ಕೆಲಸ ಮಾಡುವ ಮೊದಲು, ಭೂಮಿಯ ಹವಾಮಾನದಲ್ಲಿನ ದೊಡ್ಡ ಪ್ರಮಾಣದ ಬದಲಾವಣೆಗಳಿಗೆ ವೈರಸ್‌‍ಗಳು ಹೇಗೆ ಸಂಬಂಧಿಸಿವೆ ಎಂಬುದನ್ನು ಹೆಚ್ಚಾಗಿ ತನಿಖೆ ಮಾಡಲಾಗಿಲ್ಲ ಎಂದು ಓಹಿಯೋ ಸ್ಟೇಟ್‌ ಯೂನಿವರ್ಸಿಟಿಯ ಬೈಡ್‌ರ್‌ ಪೋಲಾರ್ ಮತ್ತು ಹವಾಮಾನ ಸಂಶೋಧನಾ ಕೇಂದ್ರದ ಸಂಶೋಧನಾ ಸಹ-ಲೇಖಕ ಝಿಪಿಂಗ್‌ ಜಾಂಗ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಗ್ಲೇಶಿಯಲ್‌ ಐಸ್‌‍ ತುಂಬಾ ಅಮೂಲ್ಯವಾಗಿದೆ, ಮತ್ತು ವೈರಸ್‌‍ ಮತ್ತು ಸೂಕ್ಷ್ಮಜೀವಿಗಳ ಸಂಶೋಧನೆಗೆ ಅಗತ್ಯವಿರುವ ಹೆಚ್ಚಿನ ಪ್ರಮಾಣದ ವಸ್ತುಗಳನ್ನು ನಾವು ಹೊಂದಿರುವುದಿಲ್ಲ ಎಂದು ಅವರು ಹೇಳಿದರು. +ಅಧ್ಯಯನದ ಪ್ರಕಾರ, ಈ ಇತ್ತೀಚಿನ ಆವಿಷ್ಕಾರವು ಈ ಪ್ರಾಚೀನ ವೈರಸ್‌‍ಗಳು ಹವಾಮಾನಕ್ಕೆ ಗಮನಾರ್ಹ ಬದಲಾವಣೆಗಳೊಂದಿಗೆ ಹೇಗೆ ಹೊಂದಿಕೊಂಡವು ಮತ್ತು ವಿಕಸನಗೊಂಡವು ಎಂಬುದರ ಪ್ರಮುಖ ವಿವರಗಳನ್ನು ಬಹಿರಂಗಪಡಿಸುತ್ತದೆ. +2015 ರಲ್ಲಿ ಪತ್ತೆಯಾದ ವೈರಸ್‌‍ಗಳು ಕಳೆದ 41,000 ವರ್ಷಗಳಲ್ಲಿ ಮೂರು ಶೀತ-ಬೆಚ್ಚಗಿನ ಚಕ್ರಗಳನ್ನು ವ್ಯಾಪಿಸಿರುವ ಒಂಬತ್ತು-ಸಮಯದ ಹಾರಿಜಾನ್‌ಗಳಿಂದ ಬಂದವು ಎಂದು ಸಂಶೋಧಕರು ಹೇಳಿದ್ದಾರೆ. ಹಿಮದ ಕೋರ್‌ಗಳಲ್ಲಿ ಕಂಡುಬರುವ ವೈರಲ್‌ ಸಮುದಾಯಗಳಲ್ಲಿ ಒಂದಾದ ಸುಮಾರು 11,500 ವರ್ಷಗಳ ಹಿಂದೆ ಹವಾಮಾನವು ಕೊನೆಯ ಗ್ಲೇಶಿಯಲ್‌ ಹಂತದ ಶೀತದಿಂದ ನಾವು ಪ್ರಸ್ತುತ ವಾಸಿಸುವ ಬೆಚ್ಚಗಿನ ಹೊಲೊಸೀನ್‌ ಯುಗಕ್ಕೆ ಬದಲಾಗುತ್ತಿದೆ ಎಂದು ಅಧ್ಯಯನ ಹೇಳಿದೆ. +ಇದು ಕನಿಷ್ಠ ವೈರಸ್‌‍ಗಳು ಮತ್ತು ಹವಾಮಾನ ಬದಲಾವಣೆಯ ನಡುವಿನ ಸಂಭಾವ್ಯ ಸಂಪರ್ಕವನ್ನು ಸೂಚಿಸುತ್ತದೆ ಎಂದು ಜಾಂಗ್‌ ಹೇಳಿದರು. ಇದಲ್ಲದೆ, ಐಸ್‌‍ ಕೋರ್‌ನಲ್ಲಿನ ಸುಮಾರು ಕಾಲು ಭಾಗದಷ್ಟು ವೈರಸ್‌‍ಗಳು ಬೇರೆಡೆ ಕಂಡುಬರುವ ಜಾತಿಗಳೊಂದಿಗೆ ಅತಿಕ್ರಮಿಸಿರುವುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ. ಅಂದರೆ ಅವುಗಳಲ್ಲಿ ಕೆಲವು ಮಧ್ಯಪ್ರಾಚ್ಯ ಅಥವಾ ಆರ್ಕ್ಟಿಕ್‌ ಪ್ರದೇಶಗಳಿಂದ ಸಂಭಾವ್ಯವಾಗಿ ಸಾಗಿಸಲ್ಪಟ್ಟಿವೆ ಎನ್ನಲಾಗಿದೆ. +ಈಗ, ಇತ್ತೀಚಿನ ಆವಿಷ್ಕಾರದೊಂದಿಗೆ, ಮುಂಬರುವ ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಅತಿಕ್ರಮಣ ಪರಿಣಾಮಗಳಿಗೆ ನಮ ಆಧುನಿಕ ವೈರಸ್‌‍ಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದನ್ನು ಉತ್ತಮವಾಗಿ ಊಹಿಸಲು ಸಂಶೋಧಕರು ಆಶಿಸಿದ್ದಾರೆ. ನನಗೆ, ಈ ವಿಜ್ಞಾನವು ಮೂಲಭೂತ ಹವಾಮಾನ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಾಗದ ಹೊಸ ಸಾಧನವಾಗಿದೆ ಎಂದು ಅಧ್ಯಯನದ ಸಹ-ಲೇಖಕಿ ಲೋನಿ ಥಾಂಪ್ಸನ್‌ ತಿಳಿಸಿದ್ದಾರೆ. \ No newline at end of file diff --git a/eesanje/url_47_18_7.txt b/eesanje/url_47_18_7.txt new file mode 100644 index 0000000000000000000000000000000000000000..ba1a5ef0c16a674bd2019b55d2d963a5a5d87ef6 --- /dev/null +++ b/eesanje/url_47_18_7.txt @@ -0,0 +1,5 @@ +ಮಲ್ಲಿಕಾರ್ಜುನ ಖರ್ಗೆ-ಅಮೆರಿಕಾ ರಾಯಭಾರಿ ಗಾರ್ಸೆಟ್ಟಿ ಮಾತುಕತೆ + +ನವದೆಹಲಿ,ಸೆ.4-ಭಾರತದಲ್ಲಿರುವ ಅಮೆರಿಕ ರಾಯಭಾರಿ ಎರಿಕ್‌ ಗಾರ್ಸೆಟ್ಟಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಕುರಿತು ಚರ್ಚಿಸಿದರು. +ಸಭೆಯ ನಂತರ ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ ಖರ್ಗೆ ಅವರು ಭಾರತ ಮತ್ತು ಯುನೈಟೆಡ್‌ ಸ್ಟೇಟ್ಸ್‌‍ ಮಾನವ ಪ್ರಯತ್ನದ ಬಹುತೇಕ ಎಲ್ಲಾ ಕ್ಷೇತ್ರಗಳನ್ನು ಒಳಗೊಂಡ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಆನಂದಿಸುತ್ತವೆ, ಇದು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳಿಂದ ನಡೆಸಲ್ಪಡುತ್ತದೆ ಎಂದಿದ್ದಾರೆ. +ಭಾರತಕ್ಕೆ ಯುಎಸ್‌‍ ರಾಯಭಾರಿ ಎರಿಕ್‌ ಗಾರ್ಸೆಟ್ಟಿ, ರಾಜಕೀಯ ವ್ಯವಹಾರಗಳ ಸಚಿವ-ಸಮಾಲೋಚಕ ಗ್ರಹಾಂ ಮೇಯರ್‌ ಮತ್ತು ಮುಖ್ಯಸ್ಥೆ ಲಿಸಾ ಬ್ರೌನ್‌ ಅವರನ್ನು ಭೇಟಿಯಾಗಲು ಸಂತೋಷವಾಗಿದೆ ಮತ್ತು ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಕುರಿತು ಚರ್ಚಿಸಲಾಗಿದೆ ಎಂದು ಖರ್ಗೆ ಹೇಳಿದ್ದಾರೆ. \ No newline at end of file diff --git a/eesanje/url_47_18_8.txt b/eesanje/url_47_18_8.txt new file mode 100644 index 0000000000000000000000000000000000000000..2b8d45858f47e868f5b7e84ab8d6193a1e6c4b16 --- /dev/null +++ b/eesanje/url_47_18_8.txt @@ -0,0 +1,8 @@ +ತಮಿಳರ ಕ್ಷಮೆ ಕೋರಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ + +ಚೆನ್ನೈ(ತಮಿಳುನಾಡು),ಸೆ.4-ರಾಮೇಶ್ವರಂ ಕಫ ಸ್ಫೋಟ ಪ್ರಕರಣಕ್ಕೂ ತಮಿಳರಿಗೂ ಸಂಬಂಧವಿದೆ ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ಕ್ಷಮೆ ಯಾಚಿಸಿದ್ದಾರೆ.ಈ ಪ್ರಕರಣ ರದ್ದುಗೊಳಿಸುವಂತೆ ಶೋಭಾ ಪರವಾಗಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಪ್ರಕರಣ ನಿನ್ನೆ ಮತ್ತೆ ವಿಚಾರಣೆಗೆ ಬಂದಿತ್ತು. +ಕೋರ್ಟಿನಲ್ಲಿ ಶೋಭಾ ಪರ ವಾದ ಮಂಡಿಸಿದ ವಕೀಲರು, ಬೆಂಗಳೂರು ರಾಮೇಶ್ವರಂ ಕೆೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸುವುದಾಗಿ ಅಫಿಡವಿಟ್ ಸಲ್ಲಿಸಲಾಗಿದೆ ಎಂದರು. +ಬಾಂಬ್ ಸ್ಫೋಟ ಟದಲ್ಲಿ ತಮಿಳರು ಭಾಗಿಯಾಗಿದ್ದಾರೆ ಎಂಬ ಹೇಳಿಕೆಯನ್ನು ತಮಿಳರ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲಾಗಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಅವರ ಹೇಳಿಕೆಯು ತಮಿಳರನ್ನು ನೋಯಿಸಿದೆ ಎಂದು ಅವರು ಅರ್ಥ ಮಾಡಿಕೊಂಡಿದ್ದಾರೆ ಮತ್ತು ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆ ಯಾಚಿಸಿದ್ದಾರೆ. ಹಾಗೂ ತಮಿಳರ ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯದ ಬಗ್ಗೆ ಅವರಿಗೆ ಹೆಚ್ಚಿನ ಗೌರವವಿದೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ. +ಇದೇ ವೇಳೆ ಸಚಿವೆ ಶೋಭಾ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುವುದಾಗಿ ಅವರ ಪರವಾಗಿ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಇದಾದ ಬಳಿಕ ತಮಿಳುನಾಡಿನ ಮುಖ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು, ಸರ್ಕಾರದಿಂದ ಸೂಕ್ತ ಸೂಚನೆ ಪಡೆದು ತಿಳಿಸುವುದಾಗಿ ಹೇಳಿದರು. +ನಂತರ ನ್ಯಾಯಾಧೀಶರು ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.5 ರಂದು ನಡೆಸುವುದಾಗಿ ಹೇಳಿ ಪ್ರಕರಣವನ್ನು ಮುಂದೂಡಿದರು. +ಕರ್ನಾಟಕದ ಬೆಂಗಳೂರಿನ ರಾಮೇಶ್ವರಂ ಕೆೆಯ ಬಾಂಬ್ ಸ್ಫೋಟಕ್ಕೂ, ತಮಿಳುನಾಡಿನ ವ್ಯಕ್ತಿಗೂ ಸಂಬಂಧವಿದೆ ಎಂದು ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದರು. ನಂತರ ಈ ಸಂಬಂಧ ಡಿಎಂಕೆಯಿಂದ ತ್ಯಾಗರಾಜನ್ ನೀಡಿದ ದೂರಿನ ಆಧಾರದ ಮೇಲೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈನಲ್ಲಿ ಕೋಮುಗಲಭೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವುದು ಸೇರಿದಂತೆ 4 ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. \ No newline at end of file diff --git a/eesanje/url_47_18_9.txt b/eesanje/url_47_18_9.txt new file mode 100644 index 0000000000000000000000000000000000000000..a96b29d5976faeef227ae5a373e69f673e07cac7 --- /dev/null +++ b/eesanje/url_47_18_9.txt @@ -0,0 +1,8 @@ +ಕಾಶ್ಮೀರ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾದ ನಿಷೇಧಿತ ಜಮಾತ್-ಎ-ಇಸ್ಲಾಮಿ ಸಂಘಟನೆ ಮುಖ್ಯಸ್ಥ +" ": & +ನವದೆಹಲಿ,ಸೆ.3-ಮುಂಬರುವ ಜಮು ಮತ್ತು ಕಾಶೀರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಧ್ವನಿ ಎತ್ತಲು ಚುನಾವಣೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ ಎಂದು ನಿಷೇಧಿತ ಯ ಸಂಘಟನೆಯ ಗುಲಾಮ್ ಖಾದಿರ್ ಲೋನ್ ಹೇಳಿದ್ದಾರೆ. +ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಮಿತಿಯ ಸದಸ್ಯ ಮತ್ತು ಜಮಾತ್-ಎ-ಇಸ್ಲಾಮಿಯಾದ ಮಾಜಿ ಪ್ರಧಾನ ಕಾರ್ಯದರ್ಶಿ ಲೋನ್ ಅವರು ತಮ ಮೇಲೆ ಹೇರಲಾಗಿರುವ ನಿಷೇಧವನ್ನು ತೆಗೆದುಹಾಕಲು ಚುನಾವಣೆಯಲ್ಲಿ ಸ್ಪರ್ಧಿಸಲು ಹೋರಾಡುತ್ತಿದ್ದೇವೆ ಎಂದಿದ್ದಾರೆ. +ಕೇಂದ್ರ ಗಹ ಸಚಿವಾಲಯದ ನಿಷೇಧದಿಂದಾಗಿ ಸಂಘಟನೆಯು ಚುನಾವಣೆಯಲ್ಲಿ ಭಾಗವಹಿಸುವಂತಿಲ್ಲ. 1987 ರಿಂದ ಯಾವುದೇ ಚುನಾವಣೆಗಳಲ್ಲಿ ಭಾಗವಹಿಸಿಲ್ಲ.ನಾವು ಕಾನೂನಿಗೆ ವಿರುದ್ಧ ವಾದ ಏನನ್ನೂ ಮಾಡಿಲ್ಲ ಮತ್ತು ಯಾವಾಗಲೂ ಭಾರತೀಯಸಂವಿಧಾನದ ಚೌಕಟ್ಟಿನೊಳಗೆ ನಮ ಚಟುವಟಿಕೆಗಳನ್ನು ನಡೆಸುತ್ತೇವೆ. +ಹಾಗಾಗಿ ಕೇಂದ್ರವು ನಮ ಮೇಲೆ ನಿಷೇಧ ಹೇರಲು ನಿರ್ಧರಿಸಿದಾಗ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇದು ಹೇಗೆ ಸಂಭವಿಸಿತು ಎಂದು ನಮಗೆ ಆಶ್ಚರ್ಯವಾಯಿತು. ಹಾಗಾಗಿ ಧ್ವನಿ ಎತ್ತಲು ನಾವು ಚುನಾವಣೆಯಲ್ಲಿ ಭಾಗವಹಿಸಲು ನಿರ್ಧರಿಸಿದ್ದೇವೆ ಎಂದು ಗುಲಾಮ್ ಖಾದಿರ್ ಲೋನ್ ತಿಳಿಸಿದರು. +ಜಮಾತ್ ತಮ ಪಕ್ಷದ ಹೆಸರನ್ನು ಜಮು ಕಾಶೀರ ಜಸ್ಟೀಸ್ ಅಂಡ್ ಡೆವಲಪ್ಮೆಂಟ್ ಫ್ರಂಟ್ ಎಂಬ ನೋಂದಣಿಗಾಗಿ ಭಾರತೀಯ ಚುನಾವಣಾ ಆಯೋಗದ ಮುಂದೆ ಅರ್ಜಿಯನ್ನು ಸಲ್ಲಿಸಿತ್ತು ಆದರೆ ಅವರ ನಿಷೇಧವನ್ನು ಅನುಮೋದಿಸಿದಾಗ, ಅವರು ಸ್ವತಂತ್ರರಾಗಿ ಚುನಾವಣೆಗಳನ್ನು ಎದುರಿಸಲು ನಿರ್ಧರಿಸಿದರು. +ನಮ ಅಭ್ಯರ್ಥಿಗಳು ಜನರಿಗಾಗಿ ಕೆಲಸ ಮಾಡಬೇಕೆಂದು ನಾವು ಬಯಸುತ್ತೇವೆ. ಅವರು ನಮ ಮೇಲೆ ಹೇರಿದ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು ಮತ್ತು ನೆಲದ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಲೋನ್ ಹೇಳಿದರು.ಜಮಾತ್ ಬಿಜೆಪಿಯ ಪ್ರಾಕ್ಸಿ ಆಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೆಚ್ಚಿನ ರಾಜಕೀಯ ಪಕ್ಷಗಳು ಏಕೆ ಹೇಳುತ್ತಿವೆ ಎಂದು ಕೇಳಿದಾಗ, ಗುಲಾಮ್ ಖಾದಿರ್ ಲೋನ್ ಇದು ತಪ್ಪು ಎಂದು ಹೇಳಿದರು. \ No newline at end of file diff --git a/eesanje/url_47_190_1.txt b/eesanje/url_47_190_1.txt new file mode 100644 index 0000000000000000000000000000000000000000..ccbc6f3dee328fe97d60531b9845c7bd591d3837 --- /dev/null +++ b/eesanje/url_47_190_1.txt @@ -0,0 +1,6 @@ +ರಾಮಮಂದಿರ ಉದ್ಘಾಟನೆಗೆ ಅಖಿಲೇಶ್ ಯಾದವ್‍ಗೆ ಆಹ್ಮಾನ +ನವದೆಹಲಿ,ಜ.14- ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜನವರಿ 22 ರಂದು ಪ್ರಾಣ ಪ್ರತಿಷ್ಠಾಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ರಾಮಮಂದಿರ ಟ್ರಸ್ಟ್‍ಗೆ ಧನ್ಯವಾದ ಅರ್ಪಿಸಿದರು ಮತ್ತು ಕಾರ್ಯಕ್ರಮದ ನಂತರ ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹೇಳಿದರು. +ಅಯೋಧ್ಯೆಯ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಖುದ್ದಾಗಿ ಅಥವಾ ಕೊರಿಯರ್ ಮೂಲಕ ಯಾವುದೇ ಆಹ್ವಾನ ಬಂದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿಕೊಂಡಿದ್ದರು ಮತ್ತು ಅದನ್ನು ಅಂಚೆ ಮೂಲಕ ಕಳುಹಿಸಿದ್ದರೆ ಪುರಾವೆಯನ್ನೂ ಕೇಳಿದ್ದರು. +ಮಾಲ್ಡೀವ್ಸ್ ರಾಜಧಾನಿ ಮಾಲೆ ಮೇಯರ್ ಆದ ಭಾರತದ ಪರ ನಾಯಕ +ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಪತ್ರ ಬರೆದಿರುವ ಎಸ್‍ಪಿ ಮುಖ್ಯಸ್ಥರು ಶನಿವಾರ ಬೆಳಿಗ್ಗೆ ಸ್ವೀಕರಿಸಿದ ಆಹ್ವಾನಕ್ಕೆ ಧನ್ಯವಾದ ತಿಳಿಸಿದ್ದಾರೆ. +ಎಕ್ಸ್ ನಲ್ಲಿ ರಾಯ್ ಅವರಿಗೆ ಧನ್ಯವಾದ ಅರ್ಪಿಸುವ ಪತ್ರವನ್ನು ಪೋಸ್ಟ್ ಮಾಡಿದ ಅಖಿಲೇಶ್ ಯಾದವ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆದರೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕುಟುಂಬ ಸಮೇತ ರಾಮಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. \ No newline at end of file diff --git a/eesanje/url_47_190_10.txt b/eesanje/url_47_190_10.txt new file mode 100644 index 0000000000000000000000000000000000000000..a701631d3164c2a3e44aa73406292f57e7e03394 --- /dev/null +++ b/eesanje/url_47_190_10.txt @@ -0,0 +1,10 @@ +ಶಂಕಿತ 8 ಉಗ್ರರ ವಿರುದ್ಧ ಎನ್‍ಐಎ ಚಾರ್ಜ್‍ಶೀಟ್ +ನವದೆಹಲಿ,ಜ.13- ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿದ್ವಂಸಕ ಕೃತ್ಯ ಎಸಗಲು ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತು ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. +ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ದೆಹಲಿ ಕೋರ್ಟ್‍ಗೆ ದೋಷಾರೋಪ ಪಟ್ಟಿಯನ್ನು ದೆಹಲಿ ಕೋರ್ಟ್‍ಗೆ ಸಲ್ಲಿಸಿದ್ದು, ಶಂಕಿತ ಉಗ್ರರರಾದ ಸೈಯದ್ ಸುಹೇಲ್ ಖಾನ್, ಮೊಹಮ್ಮದ್ ಉಮರ್, ಝಹೀದ್ ತಬ್ರೇಜ್, ಸೈಯದ್ ಮುದಾಸಿರ್ ಮತ್ತು ಫೈಸಲ್ ರಬ್ಬಾನಿ ಎಂಬುವವರನ್ನು ಕಳೆದ ವರ್ಷ ಜುಲೈ 19ರಂದು ಎನ್‍ಐಎ ತಂಡ ಬಂಧಿಸಿದೆ. +ಇವರ ಹೆಸರುಗಳನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಿದ್ದು, ಇವರೆಲ್ಲರ ವಿರುದ್ಧ ಐಪಿಸಿ, ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಸ್ಪೋಟಕಗಳ ಸಾಗಣೆಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 8 ಮಂದಿಯಲ್ಲಿ 6 ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ ಇಬ್ಬರು ಉಗ್ರರು ತಲೆ ಮರೆಸಿಕೊಂಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇವರ ವಿರುದ್ಧ ಉಗ್ರವಾದಕ್ಕೆ ಪಿತೂರಿ, ಆತ್ಮಾಹುತಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಆರೋಪವಿದೆ. +ಆರೋಪಿಗಳು ಯುವಕರ ಬ್ರೇನ್‍ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂಬುದು ದೃಢಪಟ್ಟಿದ್ದರಿಂದ ಹೆಚ್ಚಿನ ತನಿಖೆಯನ್ನು ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದ ಪ್ರಮುಖ ಆರೋಪಿ ಕೇರಳ ಮೂಲದ ನಸೀರ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಇಬ್ಬರು ಉಗ್ರರಾದ ಜುನೈದ್ ಅಹ್ಮದ್ ಮತ್ತು ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. +ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ +ಬೆಂಗಳೂರಿನಲ್ಲಿ ಸ್ಪೋಟ ಕೃತ್ಯ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಸುಳಿವು ಸಿಕ್ಕ ಕಾರಣ 2023ರ ಜು.18ರಂದು ಬೆಂಗಳೂರು ಪೋಲೀಸರು ಪ್ರಕರಣ ದಾಖಲಿಸಿದ್ದರು. ದಾಳಿ ವೇಳೆ ನಾಡಪಿಸ್ತೂಲ್, ಜೀವಂತ ಗುಂಡುಗಳು, ವಾಕಿಟಾಕಿ, ಡ್ರ್ಯಾಗರ್ ಮೊಬೈಲ್‍ಗಳು ಜಪ್ತಿಯಾಗಿತ್ತು. +ಈ ಪ್ರಕರಣಕ್ಕೆ ಸಂಬಂಧಿಸಿ ಜು.18ರಂದು ದಾಳಿ ನಡೆಸಿದ ಪೊಲೀಸರು ಐವರು ಶಂಕಿತ ಲಷ್ಕರ್ ಉಗ್ರರನ್ನು ಬಂಧಿಸಿದ್ದರು. ಶಂಕಿತರ ಬಂಧನದ ವೇಳೆ ಅವರಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡುಗಳು, ವಾಕಿಟಾಕಿಗಳು, ಡ್ಯಾಗರ್ಗಳು ಮತ್ತು 12 ಮೊಬೈಲ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. +ನಂತರ ಈ ಪ್ರಕರಣವನ್ನು 2023ರ ಅಕ್ಟೋಬರ್‍ನಲ್ಲಿ ಎನ್‍ಐಎ ತನಿಖೆಗೆ ವಹಿಸಿಕೊಂಡಿತ್ತು. ಈ ಉಗ್ರರು ಅನ್ಯ ಕೇಸಿನಲ್ಲಿ ಬಂಧಿತರಾಗಿದ್ದಾಗ 2017ರಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟಾಗಿ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದರು. ಬಳಿಕ 7 ಮಂದಿ ಜೈಲಿಂದ ಬಿಡುಗಡೆ ಆಗಿದ್ದರು. ನಂತರ ಜೈಲಿನಲ್ಲೇ ಇದ್ದ ನಸೀರ್ಗೆ ಅನ್ಯ ಪ್ರಕರಣದಲ್ಲಿ ಶಿಕ್ಷೆಯಾದರೇ, ಇಬ್ಬರು ಪರಾರಿಯಾಗಿದ್ದರು. ಮೂವರು ಕಳೆದ ವರ್ಷ ಜು.18ರಂದು ಮತ್ತೆ ಬಂಧಿತರಾಗಿದ್ದರು. +ಇವರು ಯುವಕರ ಬ್ರೈನ್ವಾಶ್ ಮಾಡಿ ಉಗ್ರ ಸಂಘಟನೆಗಳಿಗೆ ಸೇರಿಸುತ್ತಿದ್ದರು. ಅಕ್ರಮವಾಗಿ ಉಗ್ರ ಸಂಘಟನೆಗಳಿಗೆ ಹಣ ರವಾನೆ ಮಾಡುತ್ತಿದ್ದರು ಎಂದು ಪತ್ತೆ ಆಗಿತ್ತು. \ No newline at end of file diff --git a/eesanje/url_47_190_11.txt b/eesanje/url_47_190_11.txt new file mode 100644 index 0000000000000000000000000000000000000000..25a6cacd85380b7d69b3966854e8f79af2cace62 --- /dev/null +++ b/eesanje/url_47_190_11.txt @@ -0,0 +1,8 @@ +ದೆಹಲಿ ವಿವಿಯ ಮಹಿಳಾ ಶೌಚಾಲಯಗಳ ಮುಂದೆ ಸಿಸಿ ಕ್ಯಾಮರಾ ಅಳವಡಿಕೆ +ನವದೆಹಲಿ,ಜ.13- ಐಐಟಿ-ದೆಹಲಿಯಲ್ಲಿ ಕೆಲ ಮಹಿಳೆಯರನ್ನು ರಹಸ್ಯವಾಗಿ ಚಿತ್ರೀಕರಿಸಿದ ಘಟನೆಯ ಹಿನ್ನೆಲೆಯಲ್ಲಿ ಮಹಿಳಾ ಶೌಚಾಲಯಗಳು ಮತ್ತು ಉತ್ಸವಗಳ ಸಂದರ್ಭದಲ್ಲಿ ಬಟ್ಟೆ ಬದಲಾಯಿಸುವ ಕೊಠಡಿಗಳ ಹೊರಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ದೆಹಲಿ ವಿಶ್ವವಿದ್ಯಾಲಯವು ತನ್ನ ಕಾಲೇಜುಗಳಿಗೆ ಸೂಚಿಸಿದೆ. +ಇತ್ತೀಚಿನ ಸಲಹೆಯೊಂದರಲ್ಲಿ, ಯಾವುದೇ ಅನಾಹುತವನ್ನು ತಪ್ಪಿಸಲು ಸಂಸ್ಥೆಗಳು ಮತ್ತು ಹಾಸ್ಟೆಲ್‍ಗಳ ಎಲ್ಲಾ ಗೇಟ್‍ಗಳಲ್ಲಿ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆಗಳನ್ನು ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಆಡಳಿತವು ತನ್ನ ಕಾಲೇಜುಗಳು ಮತ್ತು ಇಲಾಖೆಗಳನ್ನು ಕೇಳಿಕೊಂಡಿದೆ. ದೆಹಲಿ ಪೊಲೀಸರ ಶಿಫಾರಸುಗಳ ನಂತರ, ಐಐಟಿ-ದೆಹಲಿಯಲ್ಲಿ ನಡೆದ ಇತ್ತೀಚಿನ ಘಟನೆಯನ್ನು ಗಮನದಲ್ಲಿಟ್ಟುಕೊಂಡು ನಾವು ಫೆಸ್ಟ್ ಮಾರ್ಗಸೂಚಿಗಳಿಗೆ ಸೂಕ್ತ ಸೇರ್ಪಡೆಗಳನ್ನು ಮಾಡಿದ್ದೇವೆ. ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ವಾಶ್‍ರೂಮ್‍ಗಳು ಮತ್ತು ಡ್ರೆಸ್ಸಿಂಗ್ ರೂಮ್‍ಗಳ ಮುಂದೆ ಸಿಸಿಟಿವಿ ವ್ಯವಸ್ಥೆ ಮಾಡಲು ನಾವು ಕಾಲೇಜುಗಳಿಗೆ ಕೇಳಿದ್ದೇವೆ ಎಂದು ಡಿಯು ಪ್ರೊಕ್ಟರ್ ರಜನಿ ಅಬ್ಬಿ ಪಿಟಿಐಗೆ ತಿಳಿಸಿದರು. +ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ +ಕಳೆದ ಅಕ್ಟೋಬರ್‍ನಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಭಾರತಿ ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳು ಇನ್‍ಸ್ಟಿಟ್ಯೂಟ್‍ನ ಫೆಸ್ಟ್‍ನಲ್ಲಿ ಫ್ಯಾಷನ್ ಶೋನಲ್ಲಿ ಐಐಟಿ-ದೆಹಲಿ ವಾಶ್‍ರೂಮ್‍ನಲ್ಲಿ ಬದಲಾಗುತ್ತಿರುವಾಗ ರಹಸ್ಯವಾಗಿ ಚಿತ್ರೀಕರಣ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. +ಈ ಪ್ರಕರಣದಲ್ಲಿ 20 ವರ್ಷದ ಗುತ್ತಿಗೆ ಸ್ವೀಪರ್ ಅನ್ನು ಪೊಲೀಸರು ಬಂಧಿಸಿದ್ದು, ವ್ಯಕ್ತಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ (ವೋಯರಿಸಂ) ಅಡಿಯಲ್ಲಿ ಕಿಶನ್‍ಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. +ಪರಿಷ್ಕøತ ಮಾರ್ಗಸೂಚಿಗಳ ಅಡಿಯಲ್ಲಿ, ಯಾವುದೇ ದೊಡ್ಡ ಕಾರ್ಯಕ್ರಮದ ಮೊದಲು ತಮ್ಮ ಗಡಿ ಗೋಡೆಗಳ ಮೌಲ್ಯಮಾಪನವನ್ನು ನಡೆಸಲು ಮತ್ತು ಹೊರಗಿನವರು ಗೋಡೆಗಳನ್ನು ಸ್ಕೇಲ್ ಮಾಡುವುದನ್ನು ತಡೆಯಲು ಕಡಿಮೆ ಕನ್ಸರ್ಟಿನಾ ವೈರ್‍ಗಳನ್ನು ಅಳವಡಿಸಲು ಕಾಲೇಜುಗಳಿಗೆ ತಿಳಿಸಲಾಗಿದೆ. ಸಂಸ್ಥೆಯ ಎಲ್ಲಾ ಗೇಟ್‍ಗಳಲ್ಲಿ ಕೇಂದ್ರೀಕೃತ ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಯನ್ನು ಸಹ ಸಲಹಾ ಸೂಚಿಸುತ್ತದೆ. +ಹೊರಗಿನ ವಿದ್ಯಾರ್ಥಿಗಳನ್ನು ಯಾವುದೇ ಸಂಸ್ಥೆಗೆ ಆಹ್ವಾನಿಸುವ ಯಾವುದೇ ದೊಡ್ಡ ಕಾರ್ಯಕ್ರಮದ ಮೊದಲು, ಆಡಳಿತವು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸುಧಾರಿತ ಭದ್ರತಾ ಸಂಪರ್ಕ ಸಭೆಯನ್ನು ನಡೆಸಬೇಕು ಎಂದು ಸೂಚಿಸಲಾಗಿದೆ. \ No newline at end of file diff --git a/eesanje/url_47_190_12.txt b/eesanje/url_47_190_12.txt new file mode 100644 index 0000000000000000000000000000000000000000..7ec85f3c4f97df606cf418341e0e56942d7a3830 --- /dev/null +++ b/eesanje/url_47_190_12.txt @@ -0,0 +1,7 @@ +ಶೀಘ್ರದಲ್ಲೇ ಇಂಡಿ ಮೈತ್ರಿಕೂಟ ಪತನವಾಗಲಿದೆ : ದಿಲೀಪ್ ಘೋಷ್ +ಖರಗ್‍ಪುರ,ಜ.13- ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ದಿಲೀಪ್ ಘೋಷ್ ಅವರು ಇಂಡಿಯಾ ಒಕ್ಕೂಟ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಪ್ರತಿಪಾದಿಸಿದ್ದಾರೆ. ಇಂದು ಇಂಡಿಯಾ ಒಕ್ಕೂಟದ ನಾಯಕರ ಸಭೆ ಇಂದು ನಡೆಯಲಿರುವ ಸಂದರ್ಭದಲ್ಲೇ ಘೋಷ್ ಅವರ ಹೇಳಿಕೆ ಭಾರಿ ಸಂಚಲನ ಮೂಡಿಸಿದೆ. +ಇಂಡಿಯಾ ಮೈತ್ರಿಕೂಟವು ಸಭೆಗಳನ್ನು ಮಾತ್ರ ಮಾಡುತ್ತದೆ ಆದರೆ ಏನೂ ಆಗುವುದಿಲ್ಲ ಮತ್ತು ಶೀಘ್ರದಲ್ಲೇ ಮೈತ್ರಿ ಮುರಿದುಹೋಗುತ್ತದೆ ಎಂದು ದಿಲೀಪ್ ಘೋಷ್ ಸುದ್ದಿಗಾರರಿಗೆ ತಿಳಿಸಿದರು. ಮೈತ್ರಿಕೂಟದ ಸಂಚಾಲಕರ ಹೆಸರಿನ ಬಗೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಗಳಿವೆ. ಮಣಿಪುರದಲ್ಲಿ ಜನವರಿ 14 ರಂದು ಆರಂಭವಾಗಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮೈತ್ರಿ ಪಕ್ಷಗಳು ಭಾಗವಹಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾಹಿತಿ ನೀಡಿದ್ದಾರೆ. +ವಿಶ್ವಕಪ್‍ನಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಕಷ್ಟಕರವಾಗಿತ್ತು : ಆರ್ಥರ್ +ಇಂದಿನ ಸಭೆಯಲ್ಲಿ ಸೀಟು ಹಂಚಿಕೆ ಮಾತುಕತೆಗಳು, ಇಂಫಾಲ್ ಬಳಿಯ ತೌಬಲ್‍ನಿಂದ ಪ್ರಾರಂಭವಾಗುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸುವಿಕೆಯಂತಹ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತಿದೆ. ಕಾಂಗ್ರೆಸ್ ಮುಖಂಡ ಅೀಧಿರ್ ರಂಜನ್ ಚೌಧರಿ ಅವರು ಬಂಗಾಳದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ತೃಣಮೂಲ ಕಾಂಗ್ರೆಸ್ ಅನ್ನು ಸಾರ್ವಜನಿಕವಾಗಿ ದೂಷಿಸಿರುವುದು ಮಮತಾ ಅವರನ್ನು ಕೆರಳಿಸಿದೆ. +ಸಂದೇಶಖಾಲಿಯಲ್ಲಿ ನಡೆದಂತಹ ಘಟನೆ ಭಾರತದಲ್ಲಿ ಎಲ್ಲಿಯೂ ನಡೆಯುವುದಿಲ್ಲ, ಪುಂಡ ಪೋಕರಿಗಳಿಗೆ ಇಂದು ಅಂತಹ ಧೈರ್ಯವಿದೆ, ಅದಕ್ಕೆ ಇದು ಒಂದು ಉದಾಹರಣೆಯಾಗಿದೆ. ಈ ಘಟನೆಯು ಬಂಗಾಳ ಆಡಳಿತ ಪಕ್ಷ ಮತ್ತು ಪೊಲೀಸ್ ಪಡೆಗಳ ನಡುವಿನ ಸಂಬಂಧವನ್ನು ಸಾಬೀತುಪಡಿಸುತ್ತದೆ. ಈ ಅಪವಿತ್ರ ಸಂಬಂಧವು ಪ್ರತಿಫಲಿಸುತ್ತದೆ. ಸಂದೇಶಖಾಲಿ ಘಟನೆ ಎಂದು ಅೀಧಿರ್ ರಂಜನ್ ಚೌಧರಿ ಜನವರಿ 6 ರಂದು ಹೇಳಿದ್ದರು. +ಹೀಗಾಗಿ ಇಂದಿನ ಸಭೆಯಲ್ಲಿ ಟಿಎಂಸಿ ನಾಯಕರು ಕಾಂಗ್ರೆಸ್ ಮುಖಂಡರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇರುವುದರಿಂದ ಒಕ್ಕೂಟದ ಬಗ್ಗೆ ಅಪಸ್ವರ ಕೇಳಿ ಬರುತ್ತಿದೆ. \ No newline at end of file diff --git a/eesanje/url_47_190_2.txt b/eesanje/url_47_190_2.txt new file mode 100644 index 0000000000000000000000000000000000000000..5715da562c0a1f04048415c556e6ea1ac8b660d9 --- /dev/null +++ b/eesanje/url_47_190_2.txt @@ -0,0 +1,5 @@ +ಪಕ್ಷಿ ಪ್ರಭೇದ ರಕ್ಷಣೆಗಾಗಿ ಜಾರ್ಖಾಂಡ್‍ನಲ್ಲಿ ವಲ್ಚರ್ ರೆಸ್ಟೋರೆಂಟ್ ಆರಂಭ +ರಾಂಚಿ, ಜ 14 (ಪಿಟಿಐ) ಜಾನುವಾರುಗಳಲ್ಲಿ ಮಾದಕ ವಸ್ತುಗಳ ಸೇವನೆಯಿಂದ ವೇಗವಾಗಿ ಕ್ಷೀಣಿಸುತ್ತಿರುವ ಪಕ್ಷಿ ಪ್ರಭೇದಗಳನ್ನು ಸಂರಕ್ಷಿಸುವ ಉದ್ದೇಶದಿಂದ ಜಾರ್ಖಂಡ್‍ನಲ್ಲಿ ವಲ್ಚರ್ ರೆಸ್ಟೋರೆಂಟ್ ಅನ್ನು ಸ್ಥಾಪಿಸಲಾಗಿದೆ. ಕೋಡೆರ್ಮಾ ಜಿಲ್ಲೆಯಲ್ಲಿ ರೆಸ್ಟೋರೆಂಟ್ ಅನ್ನು ಸ್ಥಾಪಿಸಲಾಗಿದೆ ಮತ್ತು ಡಿಕ್ಲೋಫೆನಾಕ್ ಮುಕ್ತ ಪ್ರಾಣಿಗಳ ಮೃತದೇಹಗಳನ್ನು ಒದಗಿಸುವ ಗೋಶಾಲೆಗಳು (ಹಸು ಆಶ್ರಯ) ಮತ್ತು ಪುರಸಭೆಗಳಿಗೆ ಪ್ರೋಟೋಕಾಲ್ ಸಿದ್ಧವಾದ ನಂತರ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಡಿಯೋರಾ ರಾಜೀನಾಮೆ ಸಮಯವನ್ನು ಮೋದಿ ನಿರ್ಧರಿಸಿದ್ದಾರೆ : ಜೈರಾಮ್ ಆರೋಪ +ಗೋಶಾಲೆಗಳು ಮತ್ತು ಪುರಸಭೆಗಳ ಜಾನುವಾರುಗಳ ಮೃತದೇಹಗಳನ್ನು ಸ್ಕ್ಯಾವೆಂಜರ್ ಪಕ್ಷಿಗಳಿಗೆ ಆಹಾರವಾಗಿ ರಣಹದ್ದು ರೆಸ್ಟೊರೆಂಟ್‍ನಲ್ಲಿ ಗುರುತಿಸಲಾಗುತ್ತಿದೆ. ಕೊಡೆರ್ಮಾವಲ್ಚರ್ ರೆಸ್ಟೋರೆಂಟ್ ಅನ್ನು ತಿಲಯ್ಯಾ ನಗರ ಪರಿಷತ್ತಿನ ಗುಮೋದಲ್ಲಿ ಒಂದು ಹೆಕ್ಟೇರ್ ಭೂಮಿಯಲ್ಲಿ ಸ್ಥಾಪಿಸಲಾಗಿದೆ ಏಕೆಂದರೆ ಇದು ಪಕ್ಷಿಗಳಿಗೆ ಆಹಾರ ನೀಡುವ ತಾಣವೆಂದು ಪರಿಗಣಿಸಲಾಗಿದೆ. ಕಾರ್ಯಾಚರಣೆಯನ್ನು ವಿಸ್ತರಿಸಲು ಮತ್ತು ಚಂದವಾರಾ ಬ್ಲಾಕ್‍ನಲ್ಲಿ ಅಂತಹ ಮತ್ತೊಂದು ಸೌಲಭ್ಯವನ್ನು ತೆರೆಯಲು ಯೋಜಿಸಲಾಗಿದೆ ಎಂದು ಕೊಡರ್ಮಾ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‍ಒ) ಸೂರಜ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದರು. +ರಣಹದ್ದುಗಳ ಸಂರಕ್ಷಣೆ ಮುಖ್ಯವಾಗಿದೆ ಏಕೆಂದರೆ ಪಕ್ಷಿ ಪ್ರಭೇದಗಳು ಪ್ರಾಣಿಗಳ ಶವಗಳ ತ್ವರಿತ ಸೇವನೆಯ ಮೂಲಕ ಪ್ರಮುಖ ಪರಿಸರ ಪಾತ್ರವನ್ನು ವಹಿಸುತ್ತವೆ. \ No newline at end of file diff --git a/eesanje/url_47_190_3.txt b/eesanje/url_47_190_3.txt new file mode 100644 index 0000000000000000000000000000000000000000..085a1a331ad39bdb761ff1d1c71be71b5143470a --- /dev/null +++ b/eesanje/url_47_190_3.txt @@ -0,0 +1,9 @@ +ರಾಮಮಂದಿರ ನಿರ್ಮಾಣಕ್ಕೆ ಶೇ.74 ಮುಸ್ಲಿಮರ ಒಪ್ಪಿಗೆ ; +ನವದೆಹಲಿ,ಜ.14- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಿಂದ ಶೇ.74ರಷ್ಟು ಮುಸ್ಲಿಮರು ಸಂತಸಗೊಂಡಿದ್ದು, ನರೇಂದ್ರ ಮೋದಿ ಭಾರತದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ನಂಬಿದ್ದಾರೆ ಎಂದು ರಾಷ್ಟ್ರೀಯವಾದಿ ಮುಸ್ಲಿಂ ಸಂಘಟನೆ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‍ಎಂ) ಪ್ರತಿಪಾದಿಸಿದೆ. +ಪತ್ರಿಕಾ ಪ್ರಕಟಣೆಯ ಪ್ರಕಾರ, ಎಂಆರ್‍ಎಂ ಗುಜರಾತ್‍ನ ಸ್ವತಂತ್ರ ಸಂಶೋಧನೆ ಮತ್ತು ಸಮೀಕ್ಷಾ ಕಂಪನಿಯಾದ ಆಯುರ್ವೇದ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮೂಲಕ ದೇಶದ ಮುಸ್ಲಿಮರಲ್ಲಿ ಇದುವರೆಗೆ ಅತಿದೊಡ್ಡ ಸಮೀಕ್ಷೆಯನ್ನು ನಡೆಸಿದೆ. ಸಮೀಕ್ಷೆಯ ಫಲಿತಾಂಶಗಳನ್ನು ಉಲ್ಲೇಖಿಸಿದ ಎಂಆರ್‍ಎಂ, ಭಗವಾನ್ ರಾಮನು ಜನರ ಪ್ರತಿಯೊಂದು ಮೂಲೆಯಲ್ಲೂ ಇದ್ದಾನೆ ಮತ್ತು ಪಿಎಂ ಮೋದಿ ಭಾರತದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೇಳಿದೆ, ಅವರ ಮಾತುಗಳನ್ನು ಭಾರತ ಮಾತ್ರವಲ್ಲದೆ ಇಡೀ ಜಗತ್ತು ಕೇಳುತ್ತದೆ ಮತ್ತು ಸ್ವೀಕರಿಸುತ್ತದೆ ಎಂದು ತಿಳಿಸಿದೆ. +ಅಸಂಖ್ಯಾತ ಮುಸ್ಲಿಮರು ಇಸ್ಲಾಮಿನ ಹೆಸರಿನಲ್ಲಿ ತಮ್ಮ ರಾಜಕೀಯ ಅದೃಷ್ಟವನ್ನು ಗಳಿಸಲು ಪ್ರಯತ್ನಿಸುತ್ತಿರುವ ಉಲೇಮಾಗಳು, ಮಮೌಲಾನಾಗಳು ಮತ್ತು ವಿರೋಧ ಪಕ್ಷದ ನಾಯಕರನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕೆಂದು ಬಯಸುತ್ತಾರೆ ಎಂದು ಸಮೀಕ್ಷೆ ಹೇಳಿದೆ. +ಮಾಲ್ಡೀವ್ಸ್ ರಾಜಧಾನಿ ಮಾಲೆ ಮೇಯರ್ ಆದ ಭಾರತದ ಪರ ನಾಯಕ +ಸಮೀಕ್ಷೆಯ ವೇಳೆ ಅಸಂಖ್ಯಾತ ಮುಸ್ಲಿಮರು ಜೈ ಶ್ರೀರಾಮ್ ಎಂದು ಬಹಿರಂಗವಾಗಿ ಹೇಳಿದ್ದು, ಸಮೀಕ್ಷೆಯಿಂದ ಹೊರಬಿದ್ದಿರುವ ಇನ್ನೊಂದು ಅಂಶವೆಂದರೆ, ಇಸ್ಲಾಂ ಹೆಸರಿನಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿರುವ ಉಲೇಮಾಗಳು, ಮೌಲಾನಾಗಳು ಮತ್ತು ವಿರೋಧ ಪಕ್ಷದ ನಾಯಕರನ್ನು ಸಂಪೂರ್ಣವಾಗಿ ಬಹಿಷ್ಕರಿಸಬೇಕು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮಂದಿರ ನಿರ್ಮಾಣದಿಂದ ಶೇ.74ರಷ್ಟು ಮುಸ್ಲಿಮರು ಸಂತಸಗೊಂಡಿದ್ದಾರೆ. ಶೇ.70ರಷ್ಟು ಮುಸ್ಲಿಮರು ಮೋದಿ ಸರಕಾರವನ್ನು ನಂಬಿದ್ದಾರೆ. ಶೇ.72ರಷ್ಟು ಮುಸ್ಲಿಮರು ಒಪ್ಪಿಗೆ ಸೂಚಿಸಿದ್ದಾರೆ, ವಿರೋಧಕ್ಕೆ ಯಾವುದೇ ಸಮಸ್ಯೆ ಇಲ್ಲ ಮತ್ತು ಶೇ.70ರಷ್ಟು ಮುಸ್ಲಿಮರು ಭಾರತ ದೇಶವಾಗಿ ಹೊರಹೊಮ್ಮಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. +ಮುಸ್ಲಿಂ ರಾಷ್ಟ್ರೀಯ ಮಂಚ್ ನಡೆಸಿದ ಸಮೀಕ್ಷೆಯು ಮೋದಿ ಸರ್ಕಾರದ ಅಡಿಯಲ್ಲಿ ಮುಸ್ಲಿಮರು ಸುರಕ್ಷಿತರಾಗಿದ್ದಾರೆ ಮತ್ತು ಮೋದಿ ಸರ್ಕಾರದಲ್ಲಿ ಎಲ್ಲರಿಗೂ ಅಭಿವೃದ್ಧಿಗೆ ಸಮಾನ ಅವಕಾಶವಿದೆ ಎಂದು ನಂಬಿದ್ದಾರಂತೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ದೃಷ್ಟಿಯಿಂದ, ಮುಸ್ಲಿಂ ಸಮುದಾಯದ ಪ್ರಕಾರ, ಅಯೋಧ್ಯೆಯ ರಾಮಮಂದಿರವು ಹಿಂದೂಗಳ ನಂಬಿಕೆಯ ಕೇಂದ್ರವಾಗಿದೆ ಮತ್ತು ಬಹುಸಂಖ್ಯಾತ ಜನಸಂಖ್ಯೆಯ ನಂಬಿಕೆಯನ್ನು ಗೌರವಿಸಬೇಕು ಎಂದು ಸಮೀಕ್ಷೆಯು ಪ್ರತಿಪಾದಿಸಿದೆ. +ಇನ್ಫೋಸಿಸ್ ಹುಟ್ಟಿಗೆ ಅಜೀಂ ಪ್ರೇಮ್ ಜಿ ಕಾರಣ ; ನಾರಾಯಣಮೂರ್ತಿ +ಜನ್ ಧನ್ ಯೋಜನೆಯಿಂದ ಇಜ್ಜತ್ ಘರ್, ಅಂದರೆ ಶೌಚಾಲಯ ನಿರ್ಮಾಣ, ಉಜ್ವಲ ಯೋಜನೆ, ಉಚಿತ ಪಡಿತರ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಗಳವರೆಗೆ ಮುಸ್ಲಿಮರು ಪ್ರಯೋಜನಗಳನ್ನು ಪಡೆದಿದ್ದಾರೆ ಎಂಬುದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ದೇಶದ ಸಾಮಾನ್ಯ ಮುಸ್ಲಿಮರು, ಬುದ್ಧಿಜೀವಿಗಳು, ಉಲೇಮಾಗಳು ಮತ್ತು ಮೌಲಾನಾಗಳು ವರ್ಷಗಟ್ಟಲೆ ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಹೆಸರಿನಲ್ಲಿ ಮೌನವಾಗಿ ಬೆದರಿಸುತ್ತಿದ್ದಾರೆ ಎಂದು ನಂಬುತ್ತಾರೆ. ಬಿಜೆಪಿ ಮತ್ತು ಮೋದಿ ಸರ್ಕಾರದ ಮೇಲೆ ವಿಶ್ವಾಸ ಮೂಡಿಸಲು ಮುಸ್ಲಿಮರು ಮುಂದೆ ಬಂದು ಐತಿಹಾಸಿಕ ಅಭಿಯಾನ ನಡೆಸಬೇಕು ಎಂದು ಸಮೀಕ್ಷೆಯಿಂದ ತಿಳಿದುಬಂದಿದೆಯಂತೆ. \ No newline at end of file diff --git a/eesanje/url_47_190_4.txt b/eesanje/url_47_190_4.txt new file mode 100644 index 0000000000000000000000000000000000000000..38e54b00d3fe7c02bc350250e2490a9830c515d6 --- /dev/null +++ b/eesanje/url_47_190_4.txt @@ -0,0 +1,9 @@ +ಹಿಂದೂ ಧರ್ಮಕ್ಕೆ ಶಂಕರಾಚಾರ್ಯರ ಕೊಡುಗೆ ಏನು..? : ರಾಣೆ +ಪಾಲ್ಘರ್,ಜ.14- ಶಂಕರಾಚಾರ್ಯರು ಕೆಲವು ಅಂಶಗಳನ್ನು ಟೀಕಿಸುವ ಬದಲು ರಾಮ ಮಂದಿರವನ್ನು ಆಶೀರ್ವದಿಸಬೇಕು ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಹೇಳಿದ್ದಾರೆ ಮತ್ತು ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ರಾಜಕೀಯ ದೃಷ್ಟಿಯಿಂದ ನೋಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +ಮಹಾರಾಷ್ಟ್ರದ ಪಾಲ್ಘರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕರಾಚಾರ್ಯರು ಹಿಂದೂ ಧರ್ಮಕ್ಕೆ ಆಗಿರುವ ಕೊಡುಗೆಯನ್ನು ಸ್ಮರಿಸಿಕೊಳ್ಳಬೇಕು. ಇದುವರೆಗೂ ಯಾರಿಂದಲೂ ಮಾಡಲಾಗಲಿಲ್ಲ ಆದರೆ, ಮೋದಿ, ಬಿಜೆಪಿಯವರು ಅದನ್ನು ಕೈಗೆತ್ತಿಕೊಂಡು ಮಂದಿರ ಕಟ್ಟುತ್ತಿದ್ದಾರೆ. ದೇವಸ್ಥಾನಕ್ಕೆ ಆಶೀರ್ವಾದ ಮಾಡಬೇಕೋ ಅಥವಾ ಟೀಕಿಸಬೇಕೋ? ಅಂದರೆ ಶಂಕರಾಚಾರ್ಯರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯವರನ್ನು ರಾಜಕೀಯ ದೃಷ್ಟಿಯಿಂದ ನೋಡುವುದನ್ನು ಬಿಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. +ಈ ದೇವಾಲಯ ಇದು ರಾಜಕೀಯದ ಮೇಲೆ ನಿರ್ಮಾಣವಾಗಿಲ್ಲ, ಆದರೆ ಧರ್ಮದ ಮೇಲೆ ನಿರ್ಮಿಸಲಾಗಿದೆ. ರಾಮ ನಮ್ಮ ದೇವರು ಎಂದು ಹೇಳಿದ ಅವರು ಶಂಕರಾಚಾರ್ಯರು ಹಿಂದೂ ಧರ್ಮಕ್ಕೆ ನೀಡಿರುವ ಕೊಡುಗೆ ಏನು ಎಂದು ಹೇಳಬೇಕು ಎಂದು ಅವರು ಕೇಳಿದ್ದಾರೆ. +ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಮಮಂದಿರವನ್ನು ಕಡ್ಡಾಯವಾಗಿ ಉದ್ಘಾಟಿಸಬೇಕು ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ, ರಾಣೆ ಅವರು ಕೆಲಸವಿಲ್ಲದೆ ಮತ್ತು ಮನೆಯಲ್ಲಿ ಕುಳಿತುಕೊಳ್ಳುವ ಯಾರೊಬ್ಬರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು. +ಠಾಕ್ರೆ ಅವರ ಬಣವು ಮತ್ತಷ್ಟು ಹೊಡೆತವನ್ನು ತೆಗೆದುಕೊಳ್ಳುತ್ತದೆ ಎಂದು ರಾಣೆ ಹೇಳಿದ್ದಾರೆ, ಏಕೆಂದರೆ ಅವರೊಂದಿಗಿನ 16 ಶಾಸಕರಲ್ಲಿ ಎಂಟು ಮಂದಿ ನಮ್ಮನ್ನು (ಬಿಜೆಪಿ ನೇತೃತ್ವದ ಆಡಳಿತ ಮೈತ್ರಿ) ಸಂಪರ್ಕಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಬಿಜೆಪಿ ಸೇರುತ್ತಾರೆ ಎಂದು ಬಾಂಬ್ ಸಿಡಿಸಿದರು. ಬಿಜೆಪಿಯ ಬೆಂಬಲದೊಂದಿಗೆ ಮುಖ್ಯಮಂತ್ರಿಯಾದ ಏಕನಾಥ್ ಶಿಂಧೆ ಅವರನ್ನು ಬಹುಪಾಲು ಶಾಸಕರು ಬೆಂಬಲಿಸಿದ ನಂತರ ಜೂನ್ 2022 ರಲ್ಲಿ ಶಿವಸೇನೆ ವಿಭಜನೆಯಾಯಿತು. +ಸಂಕ್ರಾಂತಿ ಮೇಲೆ ಬರದ ಕರಿನೆರಳು, ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಸಜ್ಜು +ಏತನ್ಮಧ್ಯೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಅವರು ರಾಣೆ ಅವರು ಹಿಂದೂ ಧರ್ಮ ಮತ್ತು ಅದರ ಆಧ್ಯಾತ್ಮಿಕ ಮುಖ್ಯಸ್ಥರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಣೆ ಅವರಿಗೆ ಹಿಂದೂ ಧರ್ಮದ ಬಗ್ಗೆ ಸಾಕಷ್ಟು ತಿಳಿದಿಲ್ಲ ಎಂದು ಅವರು ಹೇಳಿದರು ಮತ್ತು ಸಚಿವರ ಹೇಳಿಕೆಗಳ ಬಗ್ಗೆ ಬಿಜೆಪಿಯ ಪ್ರತಿಕ್ರಿಯೆಯನ್ನು ಕೇಳಿದರು. +ವಿಎಚ್‍ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ನಾಲ್ವರು ಶಂಕರಾಚಾರ್ಯರ ಪೈಕಿ ಇಬ್ಬರು ಮುಂಬರುವ ಮಹಾಮಸ್ತಕಾಭಿಷೇಕ ಸಮಾರಂಭವನ್ನು ಬಹಿರಂಗವಾಗಿ ಸ್ವಾಗತಿಸಿದ್ದಾರೆ ಆದರೆ ಅವರ್ಯಾರೂ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮಹಾ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_190_5.txt b/eesanje/url_47_190_5.txt new file mode 100644 index 0000000000000000000000000000000000000000..024cd2bb917ca8b233a1d3f6e0db5ec45970e55e --- /dev/null +++ b/eesanje/url_47_190_5.txt @@ -0,0 +1,8 @@ +ಇನ್ಫೋಸಿಸ್ ಹುಟ್ಟಿಗೆ ಅಜೀಂ ಪ್ರೇಮ್ ಜಿ ಕಾರಣ ; ನಾರಾಯಣಮೂರ್ತಿ +ನವದೆಹಲಿ,ಜ.14- ವಿಪ್ರೋದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದೇ ಆದರೆ ನನ್ನನ್ನು ತಿರಸ್ಕರಿಸಲಾಯಿತು, ಇದು ಐಟಿ ಉದ್ಯಮದಲ್ಲಿ ವಿಪ್ರೋದ ಅತಿದೊಡ್ಡ ಪ್ರತಿಸ್ರ್ಪಧಿಗಳಲ್ಲಿ ಒಂದಾದ ಇನೋಸಿಸ್ ಹುಟ್ಟಿಗೆ ಕಾರಣವಾಯಿತು ಎಂದು ಇನೋಸಿಸ್ ಸಂಸ್ಥಾಪಕ ಎನ್‍ಆರ್ ನಾರಾಯಣ ಮೂರ್ತಿ ತಿಳಿಸಿದ್ದಾರೆ. +ನನ್ನನ್ನು ನೇಮಿಸಿಕೊಳ್ಳದಿರುವುದು ಅವರು ಮಾಡಿದ ದೊಡ್ಡ ತಪ್ಪುಗಳಲ್ಲಿ ಒಂದಾಗಿದೆ ಎಂದು ಅಜೀಮ್ ಒಮ್ಮೆ ಹೇಳಿದ್ದರು ಎಂದು ನಾರಾಯಣಮೂರ್ತಿ ಸ್ಮರಿಸಿಕೊಂಡಿದ್ದಾರೆ. 1981 ರಲ್ಲಿ ಮೂರ್ತಿ ಅವರು ತಮ್ಮ ಆರು ಸ್ನೇಹಿತರೊಂದಿಗೆ ಇನೋಸಿಸ್ ಅನ್ನು ಸ್ಥಾಪಿಸಿದರು ಮತ್ತು ಅವರ ಪತ್ನಿ ಮತ್ತು ಲೇಖಕಿ ಸುಧಾ ಮೂರ್ತಿ ಅವರು ಒದಗಿಸಿದ 10,000 ಹಣದಿಂದ ಸಂಸ್ಥೆ ಆರಂಭಿಸಿದ್ದರು. +ಮೂರ್ತಿ ಅವರು ಮೊದಲಿನಿಂದ ಪ್ರಾರಂಭಿಸಿದಾಗ, ಅಜೀಂ ಅವರು ತಮ್ಮ ಆನುವಂಶಿಕ ಸಸ್ಯಜನ್ಯ ಎಣ್ಣೆ ಸಾಮ್ರಾಜ್ಯವನ್ನು ಐಟಿ ಸಾಫ್ಟ್‍ವೇರ್ ಪರಿಹಾರಗಳನ್ನು ಒದಗಿಸುವ ಸಂಸ್ಥೆಯಾಗಿ ಪರಿವರ್ತಿಸಿದರು. ಜನವರಿ 12, 2024 ರ ಹೊತ್ತಿಗೆ, ಇನೋಸಿಸ್ 6.65 ಲಕ್ಷ ಕೋಟಿ ಮತ್ತು ವಿಪ್ರೋ 2.43 ಲಕ್ಷ ಕೋಟಿ ಮೌಲ್ಯದ್ದಾಗಿದೆ. +ಅಕ್ರಮ ಕುದರೆ ರೇಸ್ ಬೆಟ್ಟಿಂಗ್ : ಸಿಸಿಬಿ ದಾಳಿ 3.45 ಕೋಟಿ ನಗದು ಜಪ್ತಿ +ಐಐಎಂ ಅಹಮದಾಬಾದ್‍ನಲ್ಲಿ ಸಂಶೋಧನಾ ಸಹವರ್ತಿಯಾಗಿ ಕೆಲಸ ಮಾಡುವ ಮೂಲಕ ಟೆಕ್ ಉದ್ಯಮಿಯಾಗಿ ಮೂರ್ತಿ ಅವರ ಪ್ರಯಾಣ ಪ್ರಾರಂಭವಾಯಿತು. ನಂತರ, ಅವರು ಮುಖ್ಯ ಸಿಸ್ಟಮ್ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದರು ಮತ್ತು ಸಹೋದ್ಯೋಗಿಯೊಂದಿಗೆ, ಭಾರತದ ಮೊದಲ ಬೇಸಿಕ್ ಇಂಟಪ್ರ್ರಿಟರ್ ಅನ್ನು ಅಭಿವೃದ್ಧಿಪಡಿಸಿದರು, ಇದು 1960 ರ ದಶಕದ ಉತ್ತರಾರ್ಧದಲ್ಲಿ ಎಲೆಕ್ಟ್ರಾನಿಕ್ಸ್ ಕಾಪೆರ್ರೇಷನ್ ಆಫ್ ಇಂಡಿಯಾ ಲಿಮಿಟೆಡ್‍ನಿಂದ ತಯಾರಿಸಲ್ಪಟ್ಟಿತು. +ನಂತರ ಅವರು ತಮ್ಮ ಸ್ವಂತ ಐಟಿ ಉದ್ಯಮವಾದ ಸಾಫ್ಟ್‍ಟ್ರಾನಿಕ್ಸ್ ಅನ್ನು ಪ್ರಾರಂಭಿಸಿದರು, ಅದು ಇನೋಸಿಸ್ ಹುಟ್ಟುವ ಮೊದಲು ವಿಫಲವಾಗಿತ್ತು. ವ್ಯಾಪಾರದೊಂದಿಗೆ ಕುಟುಂಬವನ್ನು ಒಳಗೊಳ್ಳುವ ಮೂರ್ತಿಯವರ ಅಭಿಪ್ರಾಯಗಳು ಅಜೀಂ ಅವರಿಗಿಂತ ವ್ಯಾಪಕವಾಗಿ ಭಿನ್ನವಾಗಿವೆ. 2019 ರಲ್ಲಿ ಅವರ ತಂದೆ ಕೆಳಗಿಳಿದ ನಂತರ ರಿಷಾದ್ ಪ್ರೇಮ್‍ಜಿ ವಿಪ್ರೋವನ್ನು ವಹಿಸಿಕೊಂಡರೆ, ಮೂರ್ತಿ ಅವರು ತಮ್ಮ ಮಗ ರೋಹನ್ ಇನೋಸಿಸ್‍ನ ಭಾಗವಾಗಲು ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. +ಈ ವಿಚಾರಗಳಲ್ಲಿ ಅವನು ನನಗಿಂತ ಕಠಿಣ ಎಂದು ನಾನು ಭಾವಿಸುತ್ತೇನೆ; ಅವನು ಅದನ್ನು ಎಂದಿಗೂ ಹೇಳುವುದಿಲ್ಲ ಎಂದು ಅವರು ಮಾಧ್ಯಮವೊಂದಕ್ಕೆ ತಿಳಿಸಿದರು. \ No newline at end of file diff --git a/eesanje/url_47_190_6.txt b/eesanje/url_47_190_6.txt new file mode 100644 index 0000000000000000000000000000000000000000..3d89db821297e99195ee5a774bf6e5881e8ea101 --- /dev/null +++ b/eesanje/url_47_190_6.txt @@ -0,0 +1,6 @@ +ಡಿಯೋರಾ ರಾಜೀನಾಮೆ ಸಮಯವನ್ನು ಮೋದಿ ನಿರ್ಧರಿಸಿದ್ದಾರೆ : ಜೈರಾಮ್ ಆರೋಪ +ನವದೆಹಲಿ,ಜ.114- ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭವಾಗುವ ಮುನ್ನವೇ ತನ್ನ ಹಿರಿಯ ನಾಯಕ ಮಿಲಿಂದ್ ಡಿಯೋರಾ ರಾಜೀನಾಮೆ ನೀಡುವ ದಿನಾಂಕದ ಘೋಷಣೆಯ ಸಮಯವನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಡಿಯೋರಾ ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ದಕ್ಷಿಣ ಮುಂಬೈ ಲೋಕಸಭೆಗೆ ಹಕ್ಕು ಸಾಧಿಸುವ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಲು ಬಯಸುವುದಾಗಿ ವಿನಂತಿಸಿದ್ದರು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪಿಟಿಐಗೆ ತಿಳಿಸಿದ್ದಾರೆ. +ಅವರು ರಾಹುಲ್ ಗಾಂಧಿಯನ್ನು ಭೇಟಿಯಾಗಲು ಬಯಸಿದ್ದರು ಮತ್ತು ಸೀಟಿನ ಬಗ್ಗೆ ಅವರಿಗೆ ವಿವರಿಸಲು ಬಯಸಿದ್ದರು ಮತ್ತು ನಾನು ಅದರ ಬಗ್ಗೆ ಗಾಂಧಿಯವರೊಂದಿಗೆ ಮಾತನಾಡಲು ಬಯಸುತ್ತೇನೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೇಳಿದ್ದೇ ನಿಸ್ಸಂಶಯವಾಗಿ ಇದೆಲ್ಲವೂ ಪ್ರಹಸನವಾಗಿತ್ತು ಮತ್ತು ಅವರು ಬಿಡಲು ಮನಸ್ಸು ಮಾಡಿದ್ದರು. ಅವರ ನಿರ್ಗಮನದ ಘೋಷಣೆಯ ಸಮಯವನ್ನು ಪಿಎಂ ಸ್ಪಷ್ಟವಾಗಿ ನಿರ್ಧರಿಸಿದ್ದಾರೆ ಎಂದು ರಮೇಶ್ ಆರೋಪಿಸಿದರು. +ಪ್ರತ್ಯೇಕ ಅಪಘಾತ : ಸ್ವಿಗ್ಗಿ ಮ್ಯಾನೇಜರ್-ಜೊಮೊಟೋ ಡೆಲಿವರಿ ಬಾಯ್ ಸಾವು +ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ, ರಮೇಶ್ ಅವರು ಏಳು ಬಾರಿ ಕಾಂಗ್ರೆಸ್ ಸಂಸದ ಮುರಳಿ ಡಿಯೋರಾ ಅವರೊಂದಿಗಿನ ತಮ್ಮ ಸುದೀರ್ಘ ವರ್ಷಗಳ ಒಡನಾಟವನ್ನು ಬಹಳ ಪ್ರೀತಿಯಿಂದ ನೆನಪಿಸಿಕೊಂಡಿದ್ದಾರೆ. ಅವರು ಎಲ್ಲಾ ರಾಜಕೀಯ ಪಕ್ಷಗಳಲ್ಲಿ ನಿಕಟ ಸ್ನೇಹಿತರನ್ನು ಹೊಂದಿದ್ದರು, ಆದರೆ ಯಾವಾಗಲೂ ಕಾಂಗ್ರೆಸ್ ಪಕ್ಷದ ಪರವಾಗಿ ನಿಲ್ಲುವ ಒಬ್ಬ ಕಾಂಗ್ರೆಸ್ಸಿಗರಾಗಿದ್ದರು ಎಂದು ಅವರು ಸ್ಮರಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾ ಪ್ಲಾಟ್‍ಫಾರ್ಮ್ ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ, ಮಾಜಿ ದಕ್ಷಿಣ ಮುಂಬೈ ಲೋಕಸಭಾ ಸಂಸದರು, ಇಂದು ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯದ ಮುಕ್ತಾಯವನ್ನು ಸೂಚಿಸುತ್ತದೆ. +ನಾನು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ನನ್ನ ಕುಟುಂಬದ 55 ವರ್ಷಗಳನ್ನು ಕೊನೆಗೊಳಿಸಿದ್ದೇನೆ. ಪಕ್ಷದೊಂದಿಗಿನ ಸಂಬಂಧ. ವರ್ಷಗಳಲ್ಲಿ ಅವರ ಅಚಲ ಬೆಂಬಲಕ್ಕಾಗಿ ನಾನು ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. \ No newline at end of file diff --git a/eesanje/url_47_190_7.txt b/eesanje/url_47_190_7.txt new file mode 100644 index 0000000000000000000000000000000000000000..f436ecf8a6dee5f2906714500538c846fea24a9a --- /dev/null +++ b/eesanje/url_47_190_7.txt @@ -0,0 +1,8 @@ +ಶ್ರೀರಾಮ ಬ್ರಹ್ಮಾಂಡದ ಗುರು : ಸೋನಾಲ್‍ ಸಿಂಗ್ +ಲಕ್ನೋ, ಜ 14 (ಪಿಟಿಐ) ಭಗವಾನ್ ರಾಮ ಆಯೋಧ್ಯೆ ಅಥವಾ ಭಾರತಕ್ಕೆ ಸೀಮಿತವಾಗಿಲ್ಲ ಅವರು ಇಡಿ ಬ್ರಹ್ಮಾಂಡದ ಗುರು ಎಂದು ನ್ಯೂಯಾರ್ಕ್ ಮೂಲದ ಸೋನಾಲ್‍ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ರಾಮ್ ಲಲ್ಲಾನ ಐತಿಹಾಸಿಕ ಪ್ರಾಣ ಪ್ರತಿಷ್ಠಾವನ್ನು ವೀಕ್ಷಿಸಲು ಅವರು ಅಯೋಧ್ಯೆಯಲ್ಲಿ ಇರುವುದಿಲ್ಲವಾದರೂ, ನಮ್ಮ ಪೂರ್ವಜರು ಆಯೋಧ್ಯೆ ಮೂಲದವರು ಹೀಗಾಗಿ ರಾಮನ ಬಗ್ಗೆ ನಮಗೆ ಎಲ್ಲಿಲ್ಲದ ಪ್ರೀತಿ ಇದೆ ಎಂದಿದ್ದಾರೆ. +ಸಾಫ್ಟ್‍ವೇರ್ ಕನ್ಸಲ್ಟೆಂಟ್ ಆಗಿರುವ ಸಿಂಗ್ ಅವರು ಆಧ್ಯಾತ್ಮಿಕ ಹಾದಿಯನ್ನು ಆರಂಭಿಸಿದ್ದಾರೆ. ಮನೆಯಿಂದ ಕೆಲಸದ ಆಯ್ಕೆಯನ್ನು ಆರಿಸಿಕೊಂಡ ನಂತರ, ಅವರು ಪ್ರಯಾಗರಾಜ್‍ನ ಸಂಗಮ್ ಪ್ರದೇಶದ ಅಕ್ಷಯ್ ವಟ್ ಮಾರ್ಗದಲ್ಲಿರುವ ರಾಮ್ ನಾಮ್ ಬ್ಯಾಂಕ್‍ನ ಮಾಘ ಮೇಳ ಶಿಬಿರದಲ್ಲಿದ್ದಾರೆ. +ರಾಮ ಎಂಬುದು ಕೇವಲ ಹೆಸರಲ್ಲ, ಆದರೆ ಸಕಾರಾತ್ಮಕ ಕಂಪನಗಳನ್ನು ಉಂಟುಮಾಡುವ ಪದ ಮತ್ತು ನಮ್ಮೊಳಗೆ ಸಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುವ ದೈವಿಕ ಶಕ್ತಿ ಎಂದು ಅವರು ನಂಬಿದ್ದಾರೆ. ಲಾರ್ಡ್ ರಾಮ್ ಕೇವಲ ಅಯೋಧ್ಯೆ ಅಥವಾ ಭಾರತಕ್ಕೆ ಸೀಮಿತವಾದ ಐಕಾನ್ ಅಲ್ಲ. ವಾಸ್ತವವಾಗಿ, ಅವನ ಸೆಳವು ಪ್ರಪಂಚದಾದ್ಯಂತ ವ್ಯಾಪಿಸಿದೆ. ಅವನು ಇಡೀ ಮಾನವಕುಲಕ್ಕೆ ಐಕಾನ್ ಆಗಿದ್ದಾನೆ. ಅವನು ಬ್ರಹ್ಮಾಂಡ ನಾಯಕ (ಇಡೀ ಬ್ರಹ್ಮಾಂಡದ ಮಾಸ್ರ್ಟ). ಈ ಭೂಮಿಯ ಮೇಲಿರುವ ಪ್ರತಿಯೊಬ್ಬ ನಾಗರೀಕ ವ್ಯಕ್ತಿಗೆ ಅವರು ಮಾದರಿಯಾಗಿದ್ದಾರೆ, ಆದ್ದರಿಂದ ಅವರನ್ನು ಮರ್ಯಾದಾ ಪುರುಷೋತ್ತಮ ಎಂದೂ ಕರೆಯುತ್ತಾರೆ ಎಂದು ಸಿಂಗ್ ಸಂಗಮ್ ಪ್ರದೇಶದಿಂದ ಪಿಟಿಐಗೆ ತಿಳಿಸಿದ್ದಾರೆ. +ರಾಮನ ಹೆಸರನ್ನು ಒಮ್ಮೆ ಜಪಿಸುವುದರಿಂದ ಭಗವಾನ್ ವಿಷ್ಣುವಿನ ಹೆಸರನ್ನು 1,000 ಬಾರಿ ತೆಗೆದುಕೊಳ್ಳುವುದಕ್ಕೆ ಸಮಾನವಾಗಿದೆ. ಮತ್ತು ನೀವು ಕೇವಲ ನಿಮ್ಮ ಹೃದಯದ ಒಳಭಾಗದಿಂದ ರಾಮ್ -ರಾಮ್ ಅನ್ನು ಜಪಿಸಿದರೆ, ನೀವು ಉಪಪ್ರಜ್ಞೆಯಿಂದ ಆ ಆವರ್ತನ ಮತ್ತು ಲಯದಲ್ಲಿ ಭಗವಾನ್ ರಾಮನನ್ನು ಪಡೆಯುತ್ತೀರಿ ಎಂದು ಅವರು ಹೇಳಿದರು. +ಪ್ರತ್ಯೇಕ ಅಪಘಾತ : ಸ್ವಿಗ್ಗಿ ಮ್ಯಾನೇಜರ್-ಜೊಮೊಟೋ ಡೆಲಿವರಿ ಬಾಯ್ ಸಾವು +ನಾನು ಅಯೋಧ್ಯೆಗೆ ಸೇರಿದ್ದೇನೆ. ನನ್ನ ಅಜ್ಜ ರಾಮ್ ಲಖನ್ ಸಿಂಗ್ ಅಯೋಧ್ಯೆಯಲ್ಲಿ ವಾಸಿಸುತ್ತಿದ್ದ ನಮ್ಮ ಕುಟುಂಬದಲ್ಲಿ ಕೊನೆಯವರು. ನಾನು ಸುಮಾರು 10 ವರ್ಷಗಳಿಂದ ಭಾರತದಿಂದ ಹೊರಗಿದ್ದೇನೆ. ನಾನು ಸುಮಾರು 20 ವರ್ಷಗಳಿಂದ ರಾಮ್ ನಾಮ್ ಬ್ಯಾಂಕ್‍ನೊಂದಿಗೆ ಸಂಬಂಧ ಹೊಂದಿದ್ದೇನೆ. ನಮ್ಮ ಸಂಸ್ಕøತಿ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ವಾಸಿಸುವ ಹೊಸ ಪೀಳಿಗೆಯ ನಡುವಿನ ಅಂತರದ ಬಗ್ಗೆ ಹೊಸ ಪೀಳಿಗೆಗೆ ಅರಿವು ಮೂಡಿಸಲು ನಾನು ಕೆಲಸ ಮಾಡುತ್ತೇನೆ. +ಮುಂಬರುವ ಮಹಾಮಸ್ತಕಾಭಿಷೇಕ ಸಮಾರಂಭವನ್ನು ನೀವು ಹೇಗೆ ವೀಕ್ಷಿಸುತ್ತೀರಿ ಎಂದು ಕೇಳಿದಾಗ, ಭಾರತದ ಹೊರಗೆ ವಾಸಿಸುವ, ಸನಾತನ ಧರ್ಮವನ್ನು ನಂಬುವ ಮತ್ತು ರಾಮಾಯಣವನ್ನು ಅನುಸರಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಇದು ಒಂದು ದೊಡ್ಡ ಒಗ್ಗೂಡಿಸುವ ಅಂಶವಾಗಿದೆ. ನನಗೆ ಭಾರತಕ್ಕೆ ಭೇಟಿ ನೀಡದ ಸ್ನೇಹಿತರಿದ್ದಾರೆ. ಆದರೆ ಈಗ ದೇಶದ ಆಧ್ಯಾತ್ಮಿಕ ಭಾಗದ ಕಡೆಗೆ ಅವರ ಕುತೂಹಲ ಗಮನಾರ್ಹವಾಗಿ ಹೆಚ್ಚಾಗಿದೆ. ಮುಂಬರುವ ರಾಮ ಮಂದಿರವು ಬಹಳ ಹಿಂದೆಯೇ ಕಣ್ಮರೆಯಾಗಿದ್ದ ಇಡೀ ನಾಗರಿಕತೆ ಮತ್ತು ಆಧ್ಯಾತ್ಮಿಕ ಮೌಲ್ಯಗಳಿಗೆ ಗೋಚರತೆಯನ್ನು ನೀಡುತ್ತಿದೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_47_190_8.txt b/eesanje/url_47_190_8.txt new file mode 100644 index 0000000000000000000000000000000000000000..88ee4294eb93d15bc69e9b70a49e442251942ff6 --- /dev/null +++ b/eesanje/url_47_190_8.txt @@ -0,0 +1,10 @@ +ಅಸ್ಸಾಂನಲ್ಲಿ 8 ದಿನ ಸಂಚರಿಸಲಿದೆ ಭಾರತ್ ಜೋಡೋ ನ್ಯಾಯ ಯಾತ್ರೆ +ಗುವಾಹಟಿ, ಜ14 (ಪಿಟಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅಸ್ಸಾಂನ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜ 18 ರಂದು ಶಿವಸಾಗರದಿಂದ ಎಂಟು ದಿನಗಳ ಕಾಲ ನಡೆಯಲಿದೆ. ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿಯು ಬಿಡುಗಡೆ ಮಾಡಿದ ಉದ್ದೇಶಿತ ಮಾರ್ಗದ ಪ್ರಕಾರ, ಯಾತ್ರೆಯು ನೆರೆಯ ನಾಗಾಲ್ಯಾಂಡ್‍ನಿಂದ ಅಂತರರಾಜ್ಯ ಗಡಿಯುದ್ದಕ್ಕೂ ಹಲುಯಟಿಂಗ್‍ನಲ್ಲಿ ರಾಜ್ಯವನ್ನು ಪ್ರವೇಶಿಸಲಿದೆ. +ಯಾತ್ರೆಯು ಅಸ್ಸಾಂನ 17 ಜಿಲ್ಲೆಗಳನ್ನು ಮತ್ತು 833 ಕಿ.ಮೀ ದೂರ ಸಂಚರಿಸಲಿದೆ. ಮೊದಲ ದಿನ ಶಿವಸಾಗರದ ಅಮ್ಗುರಿ ಮತ್ತು ಜೋರ್ಹತ್ ಜಿಲ್ಲೆಯ ಮರಿಯಾನಿಯಲ್ಲಿ ಗಿಬ್ಬನ್ ಅರಣ್ಯ ಪ್ರದೇಶದಲ್ಲಿ ಗಾಂಧಿ ಎರಡು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ದಿನ ಅಮ್ಗುರಿ ಮತ್ತು ಮರಿಯಾನಿಯಲ್ಲಿ ಎರಡು ರೋಡ್‍ಶೋಗಳು ನಡೆಯಲಿದ್ದು, ಅವರ ಪರಿವಾರದೊಂದಿಗೆ ಜೋರ್ಹತ್‍ನಲ್ಲಿ ರಾತ್ರಿ ಕಳೆಯಲಿದೆ. +ಯಾತ್ರೆಯು ನಿಮತಿಘಾಟ್‍ನಿಂದ ಅಫಲಾಘಾಟ್‍ಗೆ ಬ್ರಹ್ಮಪುತ್ರ ನದಿಯ ಮೂಲಕ ದೋಣಿಯ ಮೂಲಕ ಅತಿದೊಡ್ಡ ನದಿ ದ್ವೀಪವಾದ ಮಜುಲಿಗೆ ಮುಂದುವರಿಯುತ್ತದೆ. ಗಾಂಧಿಯವರು ಪ್ರಸಿದ್ಧ ಕಮಲಾಬರಿ ಮತ್ತು ಔನತಿ ಸತ್ರಗಳಿಗೆ (ವೈಷ್ಣವ ಮಠಗಳು) ಜೆಂಗ್ರೈಮುಖ್ ಮತ್ತು ದೌಕುಖಾನ್ ಜೊತೆಗೆ ರೋಡ್ ಶೋ ನಡೆಸಲಿದ್ದಾರೆ. +ಕಾಂಗ್ರೆಸ್ ನಾಯಕ ಮತ್ತು ಅವರ ಪರಿವಾರವು ಧೇಮಾಜಿ ಜಿಲ್ಲೆಯ ಗೋಗಮುಖ್‍ನಲ್ಲಿ ರಾತ್ರಿ ನಿಲ್ಲಲಿದೆ.ಜನವರಿ 20 ರಂದು, ಯಾತ್ರೆಯು ಲಖಿಂಪುರಕ್ಕೆ ತೆರಳಲಿದ್ದು, ಅಲ್ಲಿ ಲಖಿಂಪುರ ಪಟ್ಟಣ, ಲಾಲುಕ್, ಹರ್ಮತಿ ಮತ್ತು ನೌಬೋಚಾದಲ್ಲಿ ರೋಡ್‍ಶೋ ನಡೆಯಲಿದ್ದು, ನೆರೆಯ ರಾಜ್ಯ ಅರುಣಾಚಲ ಪ್ರದೇಶವನ್ನು ಪ್ರವೇಶಿಸುವ ಮೊದಲು ಅವರು ಇಟಾನಗರದಲ್ಲಿ ರಾತ್ರಿ ನಿಲ್ಲುತ್ತಾರೆ. +ಮರುದಿನ, ಅವರು ಗೋಹ್‍ಪುರದಲ್ಲಿ ಅಸ್ಸಾಂ ಅನ್ನು ಮರುಪ್ರವೇಶಿಸುತ್ತಾರೆ ಮತ್ತು ಬಿಶ್ವನಾಥ್ ಮತ್ತು ಸೋನಿತ್‍ಪುರ್ ಜಿಲ್ಲೆಗಳಲ್ಲಿ ರೋಡ್‍ಶೋಗಳನ್ನು ನಡೆಸಿ ನಾಗಾವ್ ಜಿಲ್ಲೆಗೆ ತೆರಳುತ್ತಾರೆ, ಅಲ್ಲಿ ಅವರು ರಾತ್ರಿ ರುಪೋಹಿಯಲ್ಲಿ ನಿಲ್ಲುತ್ತಾರೆ. ಅವರು ವೈಷ್ಣವ ಸಂತ ಶ್ರೀಮಂತ ಶಂಕರದೇವರ ಜನ್ಮಸ್ಥಳವಾದ ಬಟದ್ರವಾದಲ್ಲಿರುವ ಬೋರ್ಡುವ ಸತ್ರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ನಂತರ ಮೇಘಾಲಯದ ನೊಂಗ್‍ಫೋಗೆ ತೆರಳುವ ಮೊದಲು ರೋಡ್‍ಶೋ ಮತ್ತು ಬೀದಿ ಮೂಲೆ ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ, ಅಲ್ಲಿ ಅವರು ಸಾರ್ವಜನಿಕ ಸಭೆಯನ್ನು ನಡೆಸಿ ರಾತ್ರಿ ನಿಲ್ಲುತ್ತಾರೆ. +ಅಕ್ರಮ ಕುದರೆ ರೇಸ್ ಬೆಟ್ಟಿಂಗ್ : ಸಿಸಿಬಿ ದಾಳಿ 3.45 ಕೋಟಿ ನಗದು ಜಪ್ತಿ +ಜನವರಿ 23 ರಂದು, ಯಾತ್ರೆಯು ಕಾಮ್ರೂಪ್ (ಮೆಟ್ರೋ) ನಲ್ಲಿ ಗುವಾಹಟಿಯನ್ನು ಪ್ರವೇಶಿಸುತ್ತದೆ ಮತ್ತು ನಂತರ ಕಾಮ್ರೂಪ್ (ಗ್ರಾಮೀಣ) ಮತ್ತು ಎರಡೂ ಜಿಲ್ಲೆಗಳಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ನಿಗದಿಪಡಿಸಲಾಗಿಲ್ಲ. +ಯಾತ್ರೆಯು ಅದೇ ದಿನ ನಲ್ಬರಿ ಜಿಲ್ಲೆಯನ್ನು ಪ್ರವೇಶಿಸುತ್ತದೆ, ಅಲ್ಲಿ ಗಾಂಧೀಜಿ ಮತ್ತು ಅವರ ಪರಿವಾರವು ರಾತ್ರಿ ನಿಲ್ಲುವ ಬಾರ್ಪೇಟಾ ಜಿಲ್ಲೆಗೆ ತೆರಳುವ ಮೊದಲು ಬೀದಿ ಮೂಲೆ ಸಭೆಯನ್ನು ನಿಗದಿಪಡಿಸಲಾಗಿದೆ. ಮರುದಿನ, ಯಾತ್ರೆಯು ಬಾರ್ಪೇಟಾದಿಂದ ಬೊಂಗೈಗಾಂವ, ಉತ್ತರ ಸಲ್ಮಾರಾ ಮತ್ತು ಧುಬ್ರಿಗೆ ಮುಂದುವರಿಯುತ್ತದೆ, ಅಲ್ಲಿ ಅದು ರಾತ್ರಿ ಗೌರಿಪುರದಲ್ಲಿ ನಿಲ್ಲುತ್ತದೆ. +ಪಶ್ಚಿಮ ಬಂಗಾಳಕ್ಕೆ ಪ್ರವೇಶಿಸಲು ಅಸ್ಸಾಂ-ಬಂಗಾಳ ಗಡಿಯಲ್ಲಿ ಬೋಕ್ಸಿರ್‍ಹಟ್‍ನಲ್ಲಿ ಸಾಗೋಲಿಯಾ ತಲುಪಲು ಜಿಲ್ಲೆಯ ವಿವಿಧ ಭಾಗಗಳಲ್ಲಿ ಯಾತ್ರೆ ಸಾಗುವ ಮೊದಲು ಗೌರಿಪುರದಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಲು ಪ್ರಸ್ತಾಪಿಸಲಾಯಿತು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯಕ್ಕೆ ಎಲ್ಲಾ ಪ್ರವಾಸಿಗರಿಗೆ ಸ್ವಾಗತ ಎಂದು ಯಾತ್ರೆ ನಡೆಸಲು ಕಾಂಗ್ರೆಸ್‍ಗೆ ತಮ್ಮ ಸರ್ಕಾರ ಅನುಮತಿ ನೀಡಲಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_190_9.txt b/eesanje/url_47_190_9.txt new file mode 100644 index 0000000000000000000000000000000000000000..df5e3c6017ff453cc060cf5a5a0319170068f9c0 --- /dev/null +++ b/eesanje/url_47_190_9.txt @@ -0,0 +1,6 @@ +60 ಸಾವಿರಕ್ಕೂ ಹೆಚ್ಚು ಘಟಕಗಳನ್ನು ಸ್ವದೇಶಿಗೊಳಿಸಿದ ಐಎಎಫ್ +ನಾಗ್ಪುರ, ಜ 14 (ಪಿಟಿಐ) ಕಳೆದ ಎರಡು ಮೂರು ವರ್ಷಗಳಲ್ಲಿ ಐಎಎಫ್ 60,000 ಕ್ಕೂ ಹೆಚ್ಚು ಘಟಕಗಳನ್ನು ಸ್ವದೇಶಿಗೊಳಿಸಿದೆ ಎಂದು ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಹೇಳಿದ್ದಾರೆ. ರಿಪೇರಿ ಮತ್ತು ಕೂಲಂಕುಷ ನಿರ್ವಹಣೆ ಚಟುವಟಿಕೆಗಳಿಗಾಗಿ ವಾಯುಪಡೆಯು ವಿದೇಶಿ ಒಇಎಂಗಳನ್ನು (ಮೂಲ ಸಲಕರಣೆ ತಯಾರಕರು) ಅವಲಂಬಿಸುವಂತಿಲ್ಲ ಮತ್ತು ಅದನ್ನು ಮನೆಯೊಳಗೆ ಮಾಡಬೇಕಾಗಿದೆ ಎಂದು ಅವರು ಹೇಳಿದರು. +ನಾಗ್ಪುರದ ಭೋನ್ಸಾಲಾ ಮಿಲಿಟರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ನಂತರ ಐಎಎಫ್ ಮುಖ್ಯಸ್ಥರು ಸುದ್ದಿಗಾರರೊಂದಿಗೆ ಮಾತನಾಡಿದರು. ಚೆನ್ನೈ ಕರಾವಳಿಯ ಬಂಗಾಳ ಕೊಲ್ಲಿಯಲ್ಲಿ ಭಾರತೀಯ ವಾಯುಪಡೆಯ ಸಾರಿಗೆ ವಿಮಾನದ ಅವಶೇಷಗಳನ್ನು ಪತ್ತೆಹಚ್ಚಲು ಪ್ರಶ್ನಿಸಿದಾಗ, ಏರ್ ಚೀಫ್ ಮಾರ್ಷಲ್ ಹೇಳಿದರು, ದುರದೃಷ್ಟವಶಾತ್, ಇದು ತುಂಬಾ ಸಮಯ ತೆಗೆದುಕೊಂಡಿತು ಆದರೆ ಅಂತಿಮವಾಗಿ ನಾವು ಕನಿಷ್ಟ ಆಳವಾದ ಸಮುದ್ರವನ್ನು (ಅನ್ವೇಷಿಸಲು) ತಂತ್ರಜ್ಞಾನವನ್ನು ಪಡೆದುಕೊಂಡಿದ್ದೇವೆ. ಮತ್ತು ಅಂತಹ ವಸ್ತುಗಳನ್ನು ಸಮುದ್ರತಳದಲ್ಲಿ ಪತ್ತೆ ಮಾಡಲು ಯಶಸ್ವಿಯಾಗಿದ್ದೇವೆ ಎಂದರು. +ಪ್ರತ್ಯೇಕ ಅಪಘಾತ : ಸ್ವಿಗ್ಗಿ ಮ್ಯಾನೇಜರ್-ಜೊಮೊಟೋ ಡೆಲಿವರಿ ಬಾಯ್ ಸಾವು +ವಿಮಾನದ ಭಗ್ನಾವಶೇಷವನ್ನು ಕಂಡುಹಿಡಿಯಲು ಸಾಧ್ಯವಾಗಿದ್ದಕ್ಕಾಗಿ ನಾವು ಸಾಗರ ಮತ್ತು ಭೂ ವಿಜ್ಞಾನ ಸಚಿವಾಲಯಕ್ಕೆ ಕೃತಜ್ಞರಾಗಿರುತ್ತೇವೆ. ಇದು ದೀರ್ಘ ಬಾಕಿಯಿರುವ ದುಃಖದ ಅಪಘಾತಕ್ಕೆ ಮುಚ್ಚುವಿಕೆಯನ್ನು ತರುತ್ತದೆ. ರಕ್ಷಣಾ ಸಚಿವಾಲಯದ ಪ್ರಕಾರ 29 ಸಿಬ್ಬಂದಿಗಳಿದ್ದ ವಿಮಾನ ನಾಪತ್ತೆಯಾದ ಸುಮಾರು ಏಳೂವರೆ ವರ್ಷಗಳ ನಂತರ, ಬಂಗಾಳಕೊಲ್ಲಿಯಲ್ಲಿ ಸುಮಾರು 3.4 ಕಿಮೀ ಆಳದಲ್ಲಿ ಸಾರಿಗೆ ವಿಮಾನದ ಅವಶೇಷಗಳು ಪತ್ತೆಯಾಗಿವೆ. +ಬೇಸ್ ರಿಪೇರಿ ಡಿಪೋಗಳ (ಬಿಆರ್‍ಡಿ) ಸ್ವದೇಶೀಕರಣದ ಬಗ್ಗೆ ಕೇಳಿದಾಗ, ಐಎಎಫ್ ಮುಖ್ಯಸ್ಥರು, ನಮ್ಮ ಎಲ್ಲಾ ಬಿಆರ್‍ಡಿಗಳನ್ನು ಎಲ್ಲಾ ಕೈಗಾರಿಕೆಗಳಿಗೆ ತೆರೆಯಲಾಗಿದೆ ಮತ್ತು ಕೈಗಾರಿಕೆಗಳು ಎಲ್ಲಿ ಕೆಲಸ ಮಾಡುತ್ತವೆ ಎಂಬುದನ್ನು ನೋಡೋಣ ಎಂದರು. ಕಳೆದ ಎರಡು ಅಥವಾ ಮೂರು ವರ್ಷಗಳಲ್ಲಿ ನಾವು 60,000 ಕ್ಕೂ ಹೆಚ್ಚು ಘಟಕಗಳನ್ನು ಸ್ವದೇಶಿಗೊಳಿಸಿದ್ದೇವೆ. ದುರಸ್ತಿ ಮತ್ತು ಕೂಲಂಕಷ ನಿರ್ವಹಣೆ ಚಟುವಟಿಕೆಗಳಿಗಾಗಿ ನಾವು ವಿದೇಶಿ ಒಇಎಂಗಳನ್ನು ಅವಲಂಬಿಸಲಾಗುವುದಿಲ್ಲ ಎಂದು ನಾವು ಅರಿತುಕೊಂಡಿದ್ದೇವೆ. ನಾವು ಅದನ್ನು ಮನೆಯಲ್ಲಿಯೇ ಮಾಡಬೇಕಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_191_1.txt b/eesanje/url_47_191_1.txt new file mode 100644 index 0000000000000000000000000000000000000000..4fbe8d117066a3557956ef5ad6c356cb4bee154e --- /dev/null +++ b/eesanje/url_47_191_1.txt @@ -0,0 +1,6 @@ +ಸಾಧುಗಳ ಮೇಲೆ ದಾಳಿ, ಬಂಗಾಳದಲ್ಲಿ 12 ಜನರ ಬಂಧನ +ಕೋಲ್ಕತ್ತಾ,ಜ.13- ಪಶ್ಚಿಮ ಬಂಗಾಳದಲ್ಲಿ ಸಾಧುಗಳ ಗುಂಪಿನ ಮೇಲೆ ದಾಳಿ ನಡೆದಿರುವುದು ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಡುವೆ ಮತ್ತೊಂದು ಹಣಾಹಣಿಗೆ ವೇದಿಕೆ ಕಲ್ಪಿಸಿದೆ. ಈ ಘಟನೆಯ ವೀಡಿಯೋಗಳು ವೈರಲ್ ಆದ ನಂತರ ಸಾಧುಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. +ಮೂಲಗಳ ಪ್ರಕಾರ ಗಂಗಾಸಾಗರಕ್ಕೆ ತೆರಳುತ್ತಿದ್ದ ದಾರ್ಶನಿಕರು ಅಥವಾ ಸಾಧುಗಳು ದಾರಿಗಾಗಿ ಮಹಿಳೆಯರ ಗುಂಪನ್ನು ಸಂಪರ್ಕಿಸಿದ್ದರು. ಸಾಧುಗಳು ಕೇವಲ ಬೂದಿಯಿಂದ ಮುಚ್ಚಿರುವುದನ್ನು ನೋಡಿದ ಮಹಿಳೆಯರು ಗಾಬರಿಗೊಂಡರು ಮತ್ತು ಒಂದು ಜನಸಮೂಹವು ಸಾಧುಗಳ ಮೇಲೆ ದಾಳಿ ಮಾಡಿತ್ತು. ಪೊಲೀಸರು ಇಲ್ಲಿಯವರೆಗೆ ಯಾವುದೇ ಕೋಮು ಕೋನವನ್ನು ನಿರಾಕರಿಸಿದ್ದಾರೆ. ಬಂಧಿತರಲ್ಲಿ ಮುಸ್ಲಿಮರು ಇದ್ದಾರೆಯೇ ಎಂಬ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ. +ವಿಶ್ವಕಪ್‍ನಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಕಷ್ಟಕರವಾಗಿತ್ತು : ಆರ್ಥರ್ +ಕೆಲವರು ಸ್ಥಳಕ್ಕೆ ಧಾವಿಸಿ, ಸಾಧುಗಳನ್ನು ರಕ್ಷಿಸಿದರು ಮತ್ತು ಪಶ್ಚಿಮ ಬಂಗಾಳದ ಪೂಜ್ಯ ಯಾತ್ರಾ ಸ್ಥಳವಾದ ಗಂಗಾಸಾಗರ್‍ಗೆ ಅವರ ಮುಂದಿನ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಕೋಮು ಕೋನವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಸಾಧುಗಳ ಮೇಲಿನ ದಾಳಿಯನ್ನು ಖಂಡಿಸಲು ಹಲವಾರು ಬಿಜೆಪಿ ನಾಯಕರು ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್ ಎಕ್ಸ್‍ಗೆ ಕರೆದೊಯ್ದಿದ್ದಾರೆ. +ಪುರುಲಿಯಾ ಘಟನೆಯಿಂದ ಆಕ್ರೋಶಗೊಂಡಿದೆ! ಗಂಗಾಸಾಗರ್ ಮಾರ್ಗದಲ್ಲಿ ಸಾಧುಗಳು ಕ್ರೂರವಾಗಿ ದಾಳಿ ಮಾಡಿದ್ದಾರೆ-ಟಿಎಂಸಿ ಅಡಿಯಲ್ಲಿ ಸುರಕ್ಷತೆ ಹದಗೆಟ್ಟಿದೆ ಎಂಬ ಆಘಾತಕಾರಿ ಪುರಾವೆ ಇದು ಸಾಕ್ಷಿಯಾಗಿದೆ. ಮಮತಾ ಆಡಳಿತವು ಷಹಜಹಾನ್ ಶೇಖ್‍ನಂತಹ ಭಯೋತ್ಪಾದಕರನ್ನು ರಕ್ಷಿಸುತ್ತದೆ, ಆದರೆ ಸಾಧುಗಳು ಕ್ರೂರ ಹತ್ಯೆಯನ್ನು ಎದುರಿಸುತ್ತಿದ್ದಾರೆ. ಬಂಗಾಳದಲ್ಲಿ ಹಿಂದೂಗಳಿಗೆ ಬೆಲೆಯಿಲ್ಲ ಎಂದು ಕೆಲವರು ವಾಗ್ದಾಳಿ ನಡೆಸಿದ್ದಾರೆ. \ No newline at end of file diff --git a/eesanje/url_47_191_10.txt b/eesanje/url_47_191_10.txt new file mode 100644 index 0000000000000000000000000000000000000000..f351004c80feac56da7d79d267c0793eab813fd1 --- /dev/null +++ b/eesanje/url_47_191_10.txt @@ -0,0 +1,9 @@ +ರಾಮ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ +ನವದೆಹಲಿ,ಜ.12- ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ದೇಶದ ಜನತೆಗೆ ಆಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ. ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ. +ನಾನು ಕೂಡ ಈ ಮಂಗಳಕರ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಅದೃಷ್ಟ. ಭಗವಂತ ನನಗೆ ಎಲ್ಲಾ ಭಾರತೀಯರನ್ನು ಪ್ರತಿನಿಧಿಸುವ ಅವಕಾಶವನ್ನು ನೀಡಿದ್ದಾನೆ ಎಂದು ಹೇಳಿದ್ದಾರೆ. ಇಂದಿನಿಂದ 11 ದಿನಗಳ ವಿಶೇಷ ಧಾರ್ಮಿಕ ವಿವಿಧಾನವನ್ನು ಪ್ರಾರಂಭಿಸುತ್ತಿದ್ದೇನೆ, ಸಾರ್ವಜನಿಕರಾಗಿ ನಿಮ್ಮೆಲ್ಲರ ಆಶೀರ್ವಾದ ಕೋರುತ್ತೇನೆ, ಈ ಸಮಯದಲ್ಲಿ ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದಾದ ಪ್ರಯತ್ನ ಮಾಡಿದ್ದೇನೆ ಎಂದು ಬರೆದಿದ್ದಾರೆ. +ನಾನು ಕೂಡ ಈ ಪವಿತ್ರ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಪಾಲಿಗೆ ಅದೃಷ್ಟ. ಈಸಮಯದಲ್ಲಿ ಭಾರತದ ನಾಗರಿಕರನ್ನು ಪ್ರತಿನಿಸಲು ದೇವರು ನನ್ನನ್ನು ಸೃಷ್ಟಿಸಿದನು. ಇದನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಸಂಪ್ರದಾಯವನ್ನು ನಾನು ಆಚರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ಮತ್ತು ಶುಭಕರ ಸಂದರ್ಭವಾಗಿದ್ದು, ಅದಕ್ಕೆ ಸಾಕ್ಷಿಯಾಗುತ್ತಿರುವ ನಾನು ಅದೃಷ್ಟಶಾಲಿ. ನಾನು ಭಾವುಕನಾಗಿದ್ದೇನೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಇಂತಹ ಭಾವನೆಗಳನ್ನು ಅನುಭವಿಸುತ್ತಿದ್ದೇನೆ ಎಂದು ಹೇಳಿದ್ದಾರೆ. +ಬಿಜೆಪಿಯ ನಾಯಕರು ಸಾಲುಸಾಲಾಗಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುತ್ತಿರೋದೇಕೆ..? +ವ್ರತದ ಮಹತ್ವ ಏನು:ಹಿಂದೂ ಶಾಸ್ತ್ರಗಳ ಪ್ರಕಾರ, ದೇವರ ವಿಗ್ರಹದ ‘¾’ಪ್ರಾಣ ಪ್ರತಿಷ್ಠೆ’¿’ ಒಂದು ವಿವರವಾದ ಆಚರಣೆಯಾಗಿದೆ. ಇದಕ್ಕೂ ಮುನ್ನ ಸಾಕಷ್ಟು ನಿಯಮಗಳನ್ನು ಅನುರಿಸಬೇಕಾಗುತ್ತದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಹಲವು ಜವಾಬ್ದಾರಿಗಳ ನಡುವೆಯೂ ಎಲ್ಲಾ ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ನಿರ್ಧರಿಸಿದ್ದಾರೆ. ಅದರ ಫಲವಾಗಿ 11 ದಿನಗಳ ವ್ರತಕ್ಕೆ ಇಂದು ಕೈ ಹಾಕಿದ್ದಾರೆ. +ಹಿಂದೂ ಧರ್ಮಗ್ರಂಥಗಳಲ್ಲಿ, ಉಪವಾಸಕ್ಕಾಗಿ ನಿರ್ದಿಷ್ಟ ಸೂಚನೆಗಳನ್ನು ನೀಡಲಾಗಿದೆ. ಅಂತೆಯೇ ತಮ್ಮ ದೈನಂದಿನ ದಿನಚರಿಯ ಭಾಗವಾಗಿ ಪ್ರಧಾನಿಯವರು ಬ್ರಹ್ಮ ಮುಹೂರ್ತ ಜಾಗರಣ, ಪ್ರಾರ್ಥನೆಗಳು ಮತ್ತು ಸರಳ ಆಹಾರದಂತಹ ಆಚರಣೆಗಳನ್ನು ಅನುಸರಿಸುತ್ತಾರೆ. +ಜ.16ರಿಂದಲೇ ಆರಂಭ:ಜನವರಿ 22 ರಂದು ಅಯೋಧ್ಯೆಯಲ್ಲಿನ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ವೈದಿಕ ವಿಧಿ-ವಿಧಾನಗಳು ಜನವರಿ 16 ರಂದು ಅಂದರೆ ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಜನವರಿ 22ರಂದು ವಾರಣಾಸಿಯ ಅರ್ಚಕರಾದ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಮುಖ್ಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನಿರ್ವಹಿಸಲಿದ್ದಾರೆ. +ಈ ಸಂದರ್ಭದಲ್ಲೇ ಸರಯೂ ನದಿ ದಂಡೆಯಲ್ಲಿ 1008 ಹುಂಡಿ ಮಹಾಯಜ್ಞವೂ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಸಾವಿರಾರು ಭಕ್ತರಿಗೆ ಅವಕಾಶ ಕಲ್ಪಿಸಲು ಅಯೋಧ್ಯೆಯಲ್ಲಿ ಹಲವಾರು ಟೆಂಟ್ ಸಿಟಿಗಳನ್ನು ಕೂಡ ನಿರ್ಮಿಸಲಾಗುತ್ತಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಪ್ರಕಾರ, 10,000-15,000 ಜನರಿಗೆ ವ್ಯವಸ್ಥೆ ಮಾಡಲಾಗುವುದು. ಇನ್ನು ಕಾರ್ಯಕ್ರಮಕ್ಕೆ ಭಾರತ ಮತ್ತು ವಿದೇಶದಿಂದ ಹಲವಾರು ಗಣ್ಯರು ಆಹ್ವಾನಗಳನ್ನು ಸ್ವೀಕರಿಸಿರುವುದರಿಂದ ಕಾರ್ಯಕ್ರಮಕ್ಕೆ ಈಗಾಗಲೇ ಸಿದ್ಧತೆಗಳು ಕೊನೆಯ ಹಂತದಲ್ಲಿವೆ. \ No newline at end of file diff --git a/eesanje/url_47_191_11.txt b/eesanje/url_47_191_11.txt new file mode 100644 index 0000000000000000000000000000000000000000..28bdce8af05490cb93dd996cd61ff141f8431b65 --- /dev/null +++ b/eesanje/url_47_191_11.txt @@ -0,0 +1,7 @@ +ಮಹತ್ವದ ಘೋಷಣೆ : ಸಿಂಗಾಪುರದಿಂದ ಭಾರತೀಯರು ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ +ನವದೆಹಲಿ,ಜ.12- ಭಾರತೀಯರು ಈಗ ಸಿಂಗಾಪುರದಿಂದ ನೇರವಾಗಿ ತಮ್ಮ ಬ್ಯಾಂಕ್ ಖಾತೆಗಳಿಗೆ ನೈಜ ಸಮಯದಲ್ಲಿ ಹಣ ರವಾನೆಯನ್ನು ಮನಬಂದಂತೆ ಸ್ವೀಕರಿಸಬಹುದು. ನ್ಯಾಷನಲ್ ಪೇಮೆಂಟ್ಸ್ ಕಾಪೆರ್ರೇಷನ್ ಆಫ್ಇಂಡಿಯಾ ಈ ಮಹತ್ವದ ಘೋಷಣೆ ಮಾಡಿದ್ದು ಪ್ರಮುಖ ಪ್ರಮುಖ ಸಿಂಗಾಪುರದಿಂದ ಹಣ ರವಾನೆಯನ್ನು ಸ್ವೀಕರಿಸಲು ಯುಪಿಐ, ಪೇ ನೌ ಅಪ್ಲಿಕೇಶನ್‍ಗಳನ್ನು ಸಕ್ರಿಯಗೊಳಿಸಲಾಗಿದೆ. +ಗಮನಾರ್ಹವಾಗಿ, ಆಕ್ಸಿಸ್ ಬ್ಯಾಂಕ್, ಡಿಬಿಎಸ್ ಬ್ಯಾಂಕ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ಇಂಡಿಯಾ ಈಗಾಗಲೇ ತಮ್ಮ ಅಪ್ಲಿಕೇಶನ್‍ಗಳ ಮೂಲಕ ಈ ಕಾರ್ಯವನ್ನು ಒದಗಿಸುವ ಬ್ಯಾಂಕ್‍ಗಳಲ್ಲಿ ಸೇರಿವೆ. ಎನ್‍ಪಿಸಿಐ ಹೆಚ್ಚು ಥರ್ಡ್-ಪಾರ್ಟಿ ಅಪ್ಲಿಕೇಶನ್ ಪೂರೈಕೆದಾರರು (ಟಿಪಿಎಪಿ) ಮತ್ತು ಬ್ಯಾಂಕ್ ಅಪ್ಲಿಕೇಶನ್‍ಗಳಾದ ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಎಚ್‍ಡಿಎಫ್‍ಸಿ ಬ್ಯಾಂಕ್ ಸೇರಿದಂತೆ ಇತರೆ ಬ್ಯಾಂಕ್ ಸೇರಿಸುವುದನ್ನು ನಿರೀಕ್ಷಿಸುತ್ತದೆ, ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ಆಯ್ಕೆಗಳನ್ನು ವಿಸ್ತರಿಸಲಾಗುತ್ತಿದೆ. +ಯೂನಿಡ್ ಪೇಮೆಂಟ್ಸ್ ಇಂಟರ್ಆಫ್ಸ್ ಮತ್ತು ಸಿಂಗಾಪುರದ ಪೇ ನೌ ನಡುವಿನ ಈ ಗಡಿಯಾಚೆಗಿನ ಸಂಪರ್ಕವು ಗೇಮ್ ಚೇಂಜರ್ ಆಗಿದ್ದು, ಭಾರತೀಯ ಡಯಾಸ್ಪೊರಾದಿಂದ ನೇರವಾಗಿ ಬ್ಯಾಂಕ್ ಖಾತೆಗಳಿಗೆ ತ್ವರಿತ, ಸುರಕ್ಷಿತ ಮತ್ತು ವೆಚ್ಚ-ಪರಿಣಾಮಕಾರಿ ಹಣ ರವಾನೆಯನ್ನು ಸುಗಮಗೊಳಿಸುತ್ತದೆ. +ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ +- ಸಂಪರ್ಕವು ನೈಜ-ಸಮಯದ ನಿಧಿ ವರ್ಗಾವಣೆಗಳನ್ನು ಖಾತ್ರಿಗೊಳಿಸುತ್ತದೆ, ಸ್ವೀಕರಿಸುವವರನ್ನು ಸೆಕೆಂಡುಗಳಲ್ಲಿ ತಲುಪುತ್ತದೆ, ಸುರಕ್ಷಿತ ಮತ್ತು ವಿಶ್ವಾಸಾರ್ಹ ವಹಿವಾಟುಗಳಿಗಾಗಿ ದೃಢವಾದ ಭದ್ರತಾ ಪ್ರೋಟೋಕಾಲ್‍ಗಳನ್ನು ಬಳಸಿಕೊಳ್ಳುತ್ತದೆ.ಇದಲ್ಲದೆ, ಎನ್‍ಪಿಸಿಐ ವಹಿವಾಟು ಶುಲ್ಕವನ್ನು ಸ್ಪರ್ಧಾತ್ಮಕ ದರದಲ್ಲಿರುತ್ತದೆ. ಈ ಸೇವೆಯು ಸಣ್ಣ ಮತ್ತು ಆಗಾಗ್ಗೆ ರವಾನೆಗಳಿಗೆ ವಿಶೇಷವಾಗಿ ಸೂಕ್ತವಾಗಿದೆ. ಈ ಸೌಲಭ್ಯವು ವರ್ಷದ 365 ದಿನಗಳು ಗಡಿಯಾರದ ಸುತ್ತ ಕಾರ್ಯನಿರ್ವಹಿಸುತ್ತದೆ, ಬಳಕೆದಾರರಿಗೆ ಪ್ರವೇಶ ಮತ್ತು ಅನುಕೂಲತೆಯನ್ನು ಒದಗಿಸುತ್ತದೆ. +ಈ ಪರಸ್ಪರ ಕಾರ್ಯಸಾಧ್ಯತೆಯ ಸಾಧನೆಯು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಸಿಂಗಾಪುರದ ಹಣಕಾಸು ಪ್ರಾ„ಕಾರ ನಡುವಿನ ಸಹಯೋಗದ ಪ್ರಯತ್ನದ ಫಲಿತಾಂಶವಾಗಿದೆ. ಎನ್‍ಪಿಸಿಐ ಪ್ರಕಾರ, ಗಡಿಯಾಚೆಗಿನ ವಹಿವಾಟುಗಳಲ್ಲಿ ಯುಪೇ ಅಳವಡಿಕೆಯು ಹಣಕಾಸಿನ ಸೇರ್ಪಡೆ ಮತ್ತು ಅನುಕೂಲತೆಯನ್ನು ಹೆಚ್ಚಿಸುವುದಲ್ಲದೆ, ಭಾರತದ ಡೈನಾಮಿಕ್ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯ ಒಟ್ಟಾರೆ ಬೆಳವಣಿಗೆಯನ್ನು ಪೋಷಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದೆ. \ No newline at end of file diff --git a/eesanje/url_47_191_12.txt b/eesanje/url_47_191_12.txt new file mode 100644 index 0000000000000000000000000000000000000000..383d70a9a0f5736972ee561324706eaf3a5bad40 --- /dev/null +++ b/eesanje/url_47_191_12.txt @@ -0,0 +1,7 @@ +ಶತ್ರುದೇಶಕ್ಕೆ ವಲಸೆ ಹೋದವರ ಆಸ್ತಿ, ಷೇರು ಮಾರಾಟಕ್ಕೆ ಮೋದಿ ಸರ್ಕಾರ ಸಿದ್ಧತೆ +ನವದೆಹಲಿ,ಜ.12-ಶತ್ರುದೇಶಕ್ಕೆ ವಲಸೆ ಹೊಗಿರುವವರ ಆಸ್ತಿ,ಷೇರುಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸುಮಾರು 84 ಕಂಪನಿಗಳಲ್ಲಿ 2.91 ಲಕ್ಷಕ್ಕೂ ಹೆಚ್ಚು ಆಸ್ತಿಷೇರುಗಳನ್ನು ಮಾರಾಟ ಮಾಡಲು ಯೋಜಿಸುತ್ತಿದೆ. ಕಾಪೆರ್ರೇಟ್‍ಗಳಿಗೆ ಮತ್ತು ವ್ಯಕ್ತಿಗಳಿಗೆ ವಿವಿಧ ಹಂತಗಳಲ್ಲಿ ಮಾರಾಟ ಮಾಡಲು ಯೋಜಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. +ಸಾರ್ವಜನಿಕ ಸೂಚನೆಯ ಪ್ರಕಾರ. 1947 ಮತ್ತು 1962 ರ ನಡುವೆ ಪಾಕಿಸ್ತಾನ ಮತ್ತು ಚೀನಾದ ಪೌರತ್ವವನ್ನು ಪಡೆದ ಜನರು ಬಿಟ್ಟುಹೋದ ಆಸ್ತಿಗಳನ್ನು ಶತ್ರು ಆಸ್ತಿ ಎಂದು ಕರೆಯಲಾಗುತ್ತದೆ. ಪ್ರಸ್ತಾವಿತ ಷೇರು ಮಾರಾಟವು ದೇಶದಲ್ಲಿನ ಶತ್ರು ಆಸ್ತಿವಿಲೇವಾರಿ ಮಾಡುವ ಸರ್ಕಾರದ ಉಪಕ್ರಮದ ಭಾಗವಾಗಿದೆ. +ಪ್ರಮುಖವಾಗಿ ಪಾಕಿಸ್ತಾನ ಮತ್ತು ಚೀನಾಕ್ಕೆ ವಲಸೆ ಹೋಗಿರುವ ವ್ಯಕ್ತಿಗಳ ಆಸ್ತಿಯನ್ನು ವಿಲೇವಾರಿ ಮಾಡಲಾಗುತ್ತಿದ್ದು , ಮೊದಲ ಕಂತಿನಲ್ಲಿ, ಸರ್ಕಾರವು 20 ಕಂಪನಿಗಳಲ್ಲಿ ಸುಮಾರು 1.88 ಲಕ್ಷ ಷೇರುಗಳನ್ನು ಮಾರಾಟ ಮಾಡಲು ನೋಡುತ್ತಿದೆ. +ಜ.17ರಂದು ಟಿ-20 ಕ್ರಿಕೆಟ್ : ಬಿಎಂಟಿಸಿಯಿಂದ ಹೆಚ್ಚುವರಿ ಬಸ್ +ವ್ಯಕ್ತಿಗಳು, ಎನ್‍ಆರ್‍ಐಗಳು, ಹಿಂದೂ ಅವಿಭಜಿತ ಕುಟುಂಬಗಳು ಸೇರಿದಂತೆ 10 ವರ್ಗದ ಖರೀದಿದಾರರಿಂದ ಬಿಡ್‍ಗಳನ್ನು ಆಹ್ವಾನಿಸಿದೆ. (ಎಚ್‍ಯುಎಫ್), ಅರ್ಹ ಸಾಂಸ್ಥಿಕ ಖರೀದಿದಾರರು (ಕ್ಯೂಐಬಿ), ಟ್ರಸ್ಟ್‍ಗಳು ಮತ್ತು ಕಂಪನಿಗಳು ಆರ್ಹರಾಗಿರುತ್ತಾರೆ. +ಫೆಬ್ರವರಿ 8 ರೊಳಗೆ ಖರೀದಿದಾರರು ತಾವು ಖರೀದಿಸಲು ಬಯಸುವ ಷೇರುಗಳಿಗೆ ಬಿಡ್‍ಗಳನ್ನು ಇರಿಸಬೇಕಾಗುತ್ತದೆ ಮತ್ತು ಸರ್ಕಾರವು ನಿಗದಿಪಡಿಸಿದ ಮೀಸಲು ಬೆಲೆಗಿಂತ ಕೆಳಗೆ ನಮೂದಿಸಿದ ಯಾವುದೇ ಬೆಲೆಯನ್ನು ತಿರಸ್ಕರಿಸಲಾಗುತ್ತದೆ. ನಿರೀಕ್ಷಿತ ಬಿಡ್ದಾರರಿಂದ ಮೀಸಲು ಬೆಲೆಯನ್ನು ಗೌಪ್ಯವಾಗಿ ಇರಿಸಲಾಗುತ್ತದೆ. 84 ಕಂಪನಿಗಳ 2,91,536 ಷೇರುಗಳನ್ನು ಕಸ್ಟೋಡಿಯನ್ ಆಫೆ ಎನಿಮಿ ಪ್ರಾಪರ್ಟೀಸ್ ಫೆರ್ ಇಂಡಿಯಾ (ಸಿಇಪಿಐ) ಹೊಂದಿದೆ. \ No newline at end of file diff --git a/eesanje/url_47_191_2.txt b/eesanje/url_47_191_2.txt new file mode 100644 index 0000000000000000000000000000000000000000..182fa0d4d6eaba1aa176dc111bb1a1786cc98569 --- /dev/null +++ b/eesanje/url_47_191_2.txt @@ -0,0 +1,6 @@ +ರಾಮಮಂದಿರ ಉದ್ಘಾಟನೆ ಬಹಿಷ್ಕರಿಸಿರುವುದು ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ : ಖರ್ಗೆ +ನವದೆಹಲಿ,ಜ.13- ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಗೈರು ಹಾಜರಾಗಲು ನಿರ್ಧರಿಸಿರುವುದು ಯಾರ ಭಾವನೆಗಳಿಗೆ ಹಾಗೂ ಧರ್ಮಕ್ಕೆ ಧಕ್ಕೆ ತರುವ ಉದ್ದೇಶದಿಂದಲ್ಲ ಎಂದು ಕಾಂಗ್ರೆಸ್ ಹೇಳಿದೆ. ಪಕ್ಷದ ಈ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನಿರ್ಧಾರವು ಯಾರ ಭಾವನೆಗಳಿಗೆ ಅಥವಾ ಯಾವುದೇ ಧರ್ಮಕ್ಕೆ ಧಕ್ಕೆ ತರುವ ಉದ್ದೇಶವನ್ನು ಹೊಂದಿಲ್ಲ ಎಂದಿದ್ದಾರೆ. +ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಪಕ್ಷದ ಲೋಕಸಭೆಯ ವಿರೋಧ ಪಕ್ಷದ ನಾಯಕ ಅೀಧಿರ್ ರಂಜನ್ ಚೌಧರಿ ಅವರುಗಳು ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದರು. ಯಾರಾದರೂ ಅಯೋಧ್ಯೆಗೆ ಭೇಟಿ ನೀಡಲು ಬಯಸಿದರೆ (ಜನವರಿ 22 ರಂದು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ) ಅವರು ಯಾವಾಗ ಬೇಕಾದರೂ ಹೋಗಬಹುದು ಎಂದು ನಾವು ಈಗಾಗಲೇ ಹೇಳಿದ್ದೇವೆ, ಆದರೆ ಬಿಜೆಪಿ ಕಾರ್ಯಕ್ರಮಕ್ಕೆ ಹಾಜರಾಗದಿರುವ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ನಮ್ಮ ನಿರ್ಧಾರವು ಯಾವುದೇ ವ್ಯಕ್ತಿ ಅಥವಾ ಧರ್ಮದ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಅವರು ಹೇಳಿದ್ದಾರೆ. +ರಾಜಕೀಯಕ್ಕಾಗಿ ಶಿಕ್ಷಣದಲ್ಲಿ ರಾಜಿ ಮಾಡಿಕೊಳ್ಳಬೇಡಿ : ಪಂಡಿತ್ +ನಾವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಲು ಬಯಸುತ್ತೇವೆ: ಹಣದುಬ್ಬರ ಮತ್ತು ನಿರುದ್ಯೋಗವನ್ನು ನಿಗ್ರಹಿಸಲು ಅವರು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ? ನಮ್ಮ ಗಡಿಗಳನ್ನು ಸುರಕ್ಷಿತವಾಗಿರಿಸಲು ಅವರು ತೆಗೆದುಕೊಂಡ ಕ್ರಮಗಳನ್ನು ಪಟ್ಟಿ ಮಾಡಲು ನಾವು ಬಯಸುತ್ತೇವೆ. ಇವು ದೇಶ ಮತ್ತು ಅದರ ಜನರ ಮೇಲೆ ನೇರವಾಗಿ ಪರಿಣಾಮ ಬೀರುವ ಸಮಸ್ಯೆಗಳಾಗಿವೆ. , ಎಂದು ಖರ್ಗೆ ತಿಳಿಸಿದರು. +ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಧ್ಯಪ್ರದೇಶದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು, ರಾಮ ಮಂದಿರವು ನಮ್ಮ ರಾಷ್ಟ್ರ ಮಂದಿರ (ರಾಷ್ಟ್ರೀಯ ಮಂದಿರ) ಮತ್ತು ಪ್ರಭು ಶ್ರೀರಾಮ ನಮ್ಮ ಅಸ್ತಿತ್ವ ಮತ್ತು ನಂಬಿಕೆಗೆ ಅಂತರ್ಗತವಾಗಿದೆ. ಅವರು ದೇಶದ ಗುರುತನ್ನು ಪ್ರತಿನಿಧಿಸುತ್ತಾರೆ. ಆದ್ದರಿಂದ, ಅಯೋಧ್ಯೆಯಲ್ಲಿನ ಪ್ರಾಣ ಪ್ರತಿಷ್ಠಾಕ್ಕೆ ಹಾಜರಾಗುವ ಆಹ್ವಾನವನ್ನು ತಿರಸ್ಕರಿಸುವ ಮೂಲಕ, ಅವರು ನಮ್ಮ ನಾಗರಿಕತೆಯ ಬೇರುಗಳು ಮತ್ತು ರಾಷ್ಟ್ರೀಯ ಗುರುತನ್ನು ನಿರಾಕರಿಸಿದ್ದಾರೆ. ಇದು ದುರದೃಷ್ಟಕರ ಎಂದು ವಾಗ್ದಾಳಿ ನಡೆಸಿದ್ದರು. \ No newline at end of file diff --git a/eesanje/url_47_191_3.txt b/eesanje/url_47_191_3.txt new file mode 100644 index 0000000000000000000000000000000000000000..4d388c4c7b52bd727fd857b557b5da64a9c9dfe4 --- /dev/null +++ b/eesanje/url_47_191_3.txt @@ -0,0 +1,9 @@ +ಭಾರತ ರಾಜಕೀಯವಾಗಿ ಸ್ಥಿರವಾದ ದೇಶ : ಮುಖೇಶ್ ಆಘಿ +ನವದೆಹಲಿ,ಜ.13- ಇತ್ತೀಚಿನ ವರ್ಷಗಳಲ್ಲಿ ಭಾರತದ ನಾಯಕತ್ವದಲ್ಲಿ ವಿಶ್ವಾಸ ಬೆಳೆದಿದೆ ಮತ್ತು ರಾಜಕೀಯ ಅಪಾಯದ ದೃಷ್ಟಿಕೋನದಿಂದ ದೇಶವು ಅತ್ಯಂತ ಸ್ಥಿರವಾದ ದೇಶ ಎಂದು ಪ್ರಶಂಸಿಸಲ್ಪಟ್ಟಿದೆ ಎಂದು ಯುಎಸ್ -ಇಂಡಿಯಾ ಸ್ಟ್ರಾಟೆಜಿಕ್ ಪಾಟ್ನನರ್‍ಶಿಪ್ ಫೋರಂನ ಮುಖ್ಯಸ್ಥ ಮುಖೇಶ್ ಆಘಿ ಹೇಳಿದ್ದಾರೆ. +ಮೊದಲ ಬಾರಿಗೆ, ರಾಜಕೀಯ ಅಪಾಯದ ದೃಷ್ಟಿಕೋನದಿಂದ ಭಾರತವು ಅತ್ಯಂತ ಸ್ಥಿರವಾದ ದೇಶವಾಗಿ ಬದಲಾಗಿದೆ ಎಂದು ನಾನು ಹೇಳುತ್ತಿದ್ದೇನೆ ಎಂದು ಅವರು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ. +ಯುನೈಟೆಡ್ ಸ್ಟೇಟ್ಸ್‍ನಲ್ಲಿ ಚಾಲ್ತಿಯಲ್ಲಿರುವ ಅನಿಶ್ಚಿತತೆಗೆ ವ್ಯತಿರಿಕ್ತತೆಯನ್ನು ತೋರಿಸುತ್ತಾ, ಅಮೆರಿಕ ಈಗ ಏನಾಗಲಿದೆ ಎಂದು ನಮಗೆ ತಿಳಿದಿಲ್ಲ. ಅಧ್ಯಕ್ಷ ಟ್ರಂಪ್ ಹಿಂತಿರುಗಬಹುದು, ಅಥವಾ ಅಧ್ಯಕ್ಷ ಬಿಡೆನ್ ಆಯ್ಕೆಯಾಗಬಹುದು, ಅಥವಾ ನಿಕ್ಕಿ ಹ್ಯಾಲಿ ಅಲ್ಲಿರಬಹುದು ಎಂದು ಹೇಳಿದ ಅವರು, ಇದನ್ನು ಪ್ರಕ್ಷುಬ್ಧತೆ ಎಂದು ವಿವರಿಸಿದ ಅವರು ಅಮೆರಿಕದಲ್ಲಿನ ರಾಜಕೀಯ ಪರಿಸ್ಥಿತಿಯ ಅಸ್ಥಿರ ಸ್ವರೂಪದ ಬಗ್ಗೆ ವಿವರಿಸಿದರು. +ವಿಶ್ವಕಪ್‍ನಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಕಷ್ಟಕರವಾಗಿತ್ತು : ಆರ್ಥರ್ +ಒಟ್ಟಾರೆಯಾಗಿ, ನಾವು ಏನನ್ನು ನೋಡುತ್ತಿದ್ದೇವೆ, ಪ್ರಪಂಚವು ಹರಿದಾಡುತ್ತಿದೆ ಎಂದು ನಾನು ಭಾವಿಸುತ್ತೇನೆ. ಸುಮಾರು ಶೇ.50 ಜನಸಂಖ್ಯೆಯು ಅಮೆರಿಕ, ಭಾರತ, ರಷ್ಯಾ, ಇಂಡೋನೇಷ್ಯಾ, ಪಾಕಿಸ್ತಾನದವರೆಗೆ ಎಲ್ಲಾ ರೀತಿಯಲ್ಲಿ ಮತ ಚಲಾಯಿಸಲು ಹೋಗುತ್ತಿದೆ. ನಾವು ಬದಲಾವಣೆಯನ್ನು ಕಾಣುತ್ತೇವೆ. ಎರಡನೇ ಮಹಾಯುದ್ಧದ ನಂತರ ಮೊದಲ ಬಾರಿಗೆ ನಾವು ನೋಡುತ್ತಿರುವುದು ಅಕಾರದ ಸಮತೋಲನದಲ್ಲಿ ಬದಲಾವಣೆಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು. +ಈ ವಿಕಾಸಗೊಳ್ಳುತ್ತಿರುವ ಸನ್ನಿವೇಶದಲ್ಲಿ ಭಾರತದ ಪಾತ್ರದ ಬಗ್ಗೆ ಆಶಾವಾದವನ್ನು ವ್ಯಕ್ತಪಡಿಸಿದ ಅಘಿ, ಭಾರತದಂತಹ ದೇಶಗಳು ಹೆಚ್ಚು ಸಮರ್ಥನೀಯ ಮತ್ತು ಆರ್ಥಿಕವಾಗಿ ಸದೃಢವಾಗುತ್ತಿವೆ ಎಂದು ಹೇಳಿದರು. ಭಾರತದಂತಹ ದೇಶಗಳು ಆರ್ಥಿಕ ಬೆಳವಣಿಗೆಯ ದೃಷ್ಟಿಕೋನದಿಂದ ಹೆಚ್ಚು ದೃಢವಾಗಿ ಹೊರಬರುತ್ತಿವೆ, ಹೆಚ್ಚು, ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು. +ಯುಎಸ್ -ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್‍ನರ್‍ಶಿಪ್ ಫೋರಮ್ (ಯುಎಸ್‍ಐಎಸ್‍ಪಿಎಫ್), 2017 ರಲ್ಲಿ ರೂಪುಗೊಂಡಿತು, ವ್ಯಾಪಾರ ಮತ್ತು ಸರ್ಕಾರದ ನಡುವಿನ ಅಂತರವನ್ನು ಕಡಿಮೆ ಮಾಡಲು ಮತ್ತು ಯುನೈಟೆಡ್ ಸ್ಟೇಟ್ಸ ಮತ್ತು ಭಾರತದಲ್ಲಿನ ಆರ್ಥಿಕತೆ ಮತ್ತು ಸಮಾಜದ ಎಲ್ಲಾ ಅಂಶಗಳಲ್ಲಿ ಸಾರ್ವಜನಿಕ-ಖಾಸಗಿ ವಲಯದ ಪಾಲುದಾರಿಕೆಯನ್ನು ನಿಕಟವಾಗಿ ಬೆಳೆಸುವ ಗುರಿಯನ್ನು ಹೊಂದಿದೆ. +ಅಘಿ ಅವರು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಭಾರತದ ಬಹುಮುಖಿ ಬೆಳವಣಿಗೆಯನ್ನು ಒತ್ತಿ ಹೇಳಿದರು. ಪ್ರತಿಯೊಂದು ಅಂಶದಲ್ಲೂ, ಭಾರತವು ಏರುತ್ತಿರುವುದನ್ನು ನೀವು ನೋಡುತ್ತಿದ್ದೀರಿ. ನೀವು ಆತ್ಮವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ಹೊಂದಿದ್ದೀರಿ, ಇದು ಜನಸಂಖ್ಯೆಯಲ್ಲಿ ವಿಶ್ವಾಸವನ್ನು ವ್ಯಾಪಿಸಲು ಒಲವು ತೋರುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_47_191_4.txt b/eesanje/url_47_191_4.txt new file mode 100644 index 0000000000000000000000000000000000000000..c600e23810b68b687fb3dc612bd6286719f09c01 --- /dev/null +++ b/eesanje/url_47_191_4.txt @@ -0,0 +1,5 @@ +ಭೀಕರ ಅಪಘಾತ ತಂದೆ-ಮಗ ಸೇರಿ ನಾಲ್ವರ ದುರ್ಮರಣ +ಬೀಡ್, ಜ 13 (ಪಿಟಿಐ) ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಪಿಕಪ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ ಅಹಮದ್‍ಪುರ-ಅಹಮದ್‍ನಗರ ಹೆದ್ದಾರಿಯಲ್ಲಿ ಬೀಡ್ ತಾಲೂಕಿನ ಸಾಸೆವಾಡಿ ಗ್ರಾಮದ ಬಳಿ ಈ ಘೋರ ಅಪಘಾತ ಸಂಭವಿಸಿದೆ. +ಪಿಕಪ್ ವಾಹನವು ಜಿಲ್ಲೆಯ ಮಂಜರಸುಂಭದ ಮೂಲಕ ಪಟೋಡಕ್ಕೆ ತೆರಳುತ್ತಿದ್ದಾಗ ಎದುರು ದಿಕ್ಕಿನಿಂದ ಪೈಪ್‍ಗಳನ್ನು ಸಾಗಿಸುತ್ತಿದ್ದ ಟ್ರಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ನಂತರ ಪಿಕಪ್ ವಾಹನವು ಟ್ರಕ್‍ಗೆ ಸಿಲುಕಿ ಸ್ವಲ್ಪ ದೂರದವರೆಗೆ ಎಳೆದೊಯ್ದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. +ಕೇಜ್ರಿಗೆ ರವಾನೆಯಾಯ್ತು ಮತ್ತೊಂದು ನೋಟೀಸ್ +ಅಪಘಾತದಲ್ಲಿ ಮೃತಪಟ್ಟವರನ್ನು ಪಿಕಪ್ ವಾಹನದಲ್ಲಿದ್ದ ಪ್ರಹ್ಲಾದ್ ಘರತ್ (63), ಅವರ ಪುತ್ರ ನಿತಿನ್ (41), ವಿನೋದ್ ಸನಪ್ (40) ಮತ್ತು ಟ್ರಕ್ ಚಾಲಕ ಗಹಿನಿನಾಥ್ ಗರ್ಜೆ (31) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_191_5.txt b/eesanje/url_47_191_5.txt new file mode 100644 index 0000000000000000000000000000000000000000..f8208a5b021835d09053eae47c995970c3af4eae --- /dev/null +++ b/eesanje/url_47_191_5.txt @@ -0,0 +1,6 @@ +ಹೊಸ ಜಾತಿಯ ಹವಳದ ಹಾವು ಪತ್ತೆ +ಐಜ್ವಾಲ್, ಜ 13 (ಪಿಟಿಐ) ಮಿಜೋರಾಂ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧಕರು ಹೊಸ ಜಾತಿಯ ಹವಳದ ಹಾವನ್ನು ಪತ್ತೆ ಮಾಡಿದ್ದಾರೆ. ಮಿಜೋರಾಂ ವಿಶ್ವವಿದ್ಯಾನಿಲಯದ ಪ್ರಾಣಿಶಾಸ್ತ್ರ ಪ್ರಾಧ್ಯಾಪಕ ಎಚ್‍ಟಿ ಲಾಲ್ರೆಂಸಂಗ ಅವರ ಪ್ರಕಾರ, ಬ್ರಿಟಿಷ್ ಇಂಡಿಯಾ ವೈದ್ಯ ಗೋರ್ ಅವರ ನಂತರ ಇದನ್ನು ಸಿನೊಮಿಕ್ರುರಸ್ ಗೊರೆ ಎಂದು ಹೆಸರಿಸಲಾಗಿದೆ. +ಲಾಲ್ರೆಂಸಂಗ ಅವರು ತಮ್ಮ ಸಂಶೋಧನಾ ವಿದ್ವಾಂಸರಾದ ಲಾಲ್ಬಿಯಾಕ್ಜುವಾಲಾ ಮತ್ತು ಇತರ ಸಂಶೋಧಕರೊಂದಿಗೆ ಹೊಸ ಜಾತಿಯ ಹವಳದ ಹಾವುಗಳನ್ನು ಕಂಡುಹಿಡಿದಿದ್ದಾರೆ. ಸರೀಸೃಪವನ್ನು ಸ್ಥಳೀಯವಾಗಿ ರುಲ ಹಿಹ್ನಾ ಎಂದು ಕರೆಯಲಾಗುತ್ತದೆ ಏಕೆಂದರೆ ಮಿಜೋ ಸಾಂಪ್ರದಾಯಿಕ ಅಂಬರ್ ನೆಕ್ಲೇಸ್ ಅನ್ನು ಹಿಹ್ನಾ ಎಂದು ಕರೆಯುತ್ತಾರೆ ಎಂದು ಲಾಲ್ರೆಮ್ಸಂಗ ಹೇಳಿದರು. +ವಿಶ್ವಕಪ್‍ನಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಕಷ್ಟಕರವಾಗಿತ್ತು : ಆರ್ಥರ್ +ಮಿಜೋರಾಂನಲ್ಲಿನ ಹವಳದ ಹಾವುಗಳ ಅಸ್ಥಿಪಂಜರ ಮತ್ತುನ್ಯೂಕ್ಲಿಯರ್ ಮತ್ತು ಮೈಟೊಕಾಂಡ್ರಿಯಲ್ ಜೀನ್ 5ಅನ್ನು ಅಧ್ಯಯನ ಮಾಡುವಾಗ ಸಂಶೋಧಕರು ಈ ಆವಿಷ್ಕಾರವನ್ನು ಮಾಡಿದ್ದಾರೆ. ಜ. 10 ರಂದು ಬ್ರಿಟಿಷ್ ಸೈನ್ಸ್ ಜರ್ನಲ, ಸಿಸ್ಟಮ್ಯಾಟಿಕ್ಸ್ ಬಯೋಡೈವರ್ಸಿಟಿ (ಟೇಲರ್ ಮತ್ತು ಫ್ರಾನ್ಸಿಸ್ ಗ್ರೂಪ್) ನಲ್ಲಿ ಪ್ರಕಟವಾದ ಎರಡು ಸಹಾನುಭೂತಿಯ ಹವಳದ ಹಾವುಗಳ (ರೆಪ್ಟಿಲಿಯಾ: ಎಲಾಪಿಡೆ) ವ್ಯವಸ್ಥಿತತೆಯ ಮರುಮೌಲ್ಯಮಾಪನ ಎಂಬ ಶೀರ್ಷಿಕೆಯ ಅಧ್ಯಯನದಲ್ಲಿ ಹೊಸ ಪ್ರಭೇದವನ್ನು ಅನಾವರಣಗೊಳಿಸಲಾಗಿದೆ. +ಲಾಲ್ರೆಂಸಂಗ ಅವರ ಪ್ರಕಾರ, ಪ್ರಪಂಚದಾದ್ಯಂತ ಒಟ್ಟು ಒಂಬತ್ತು ಜಾತಿಯ ಸಿನೊಮಿಕ್ರಸ್ ಹವಳದ ಹಾವುಗಳನ್ನು ಕಂಡುಹಿಡಿಯಲಾಗಿದೆ ಮತ್ತು ಇವುಗಳಲ್ಲಿ ಸಿನೊಮಿಕ್ರುರಸ್ ಮ್ಯಾಕ್ಲೆಲಾಂಡಿ ಎಂಬ ಒಂದು ಜಾತಿ ಮಾತ್ರ ಈಶಾನ್ಯ ಭಾರತದಲ್ಲಿ ಕಂಡುಬರುತ್ತದೆ. ಈ ಸಂಶೋಧನೆಯ ತನಕ ಸಿನೊಮಿಕ್ರುರಸ್ ಗೊರೆಯನ್ನು ಅವುಗಳ ನಿಕಟ ಹೋಲಿಕೆಯಿಂದಾಗಿ ಸಿನೊಮಿಕ್ರುರಸ್ ಮ್ಯಾಕ್ಲೆಲಾಂಡಿಯಂತೆಯೇ ಪರಿಗಣಿಸಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_191_6.txt b/eesanje/url_47_191_6.txt new file mode 100644 index 0000000000000000000000000000000000000000..fc2fadaee81fab5f722e6fb13731474f40536f84 --- /dev/null +++ b/eesanje/url_47_191_6.txt @@ -0,0 +1,8 @@ +ರಾಜಕೀಯಕ್ಕಾಗಿ ಶಿಕ್ಷಣದಲ್ಲಿ ರಾಜಿ ಮಾಡಿಕೊಳ್ಳಬೇಡಿ : ಪಂಡಿತ್ +ನವದೆಹಲಿ, ಜ 13 (ಪಿಟಿಐ) ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‍ನಲ್ಲಿ ಧರಣಿ ನಡೆಸುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಹೇರುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯಕ್ಕಾಗಿ ಅಧ್ಯಯನದಲ್ಲಿ ರಾಜಿ ಮಾಡಿಕೊಳ್ಳಬೇಡಿ ಎಂದು ಜೆಎನ್‍ಯು ಉಪಕುಲಪತಿ ಶಾಂತಿಶ್ರೀ ಡಿ ಪಂಡಿತ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ. +ಶಿಸ್ತಿನ ಕ್ರಮವು ಉದ್ಯೋಗಗಳನ್ನು ಖಾತರಿಪಡಿಸುವ ವಿದ್ಯಾರ್ಥಿಗಳ ಭವಿಷ್ಯದ ನಿರೀಕ್ಷೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಎಂದು ಪಂಡಿತ್ ಹೇಳಿದರು. ಪ್ರತಿಭಟನೆಗಳನ್ನು ಮಾಡಬೇಡಿ ಎಂದು ಯಾರೂ ಹೇಳುವುದಿಲ್ಲ ಆದರೆ ಅದೇ ಸಮಯದಲ್ಲಿ ನಿಮ್ಮ ಶಿಕ್ಷಣದಲ್ಲಿ ರಾಜಿ ಮಾಡಿಕೊಳ್ಳಬಾರದು. ರಾಜಕೀಯದಲ್ಲಿ ತೊಡಗಿರುವ ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ನಂತರ ಉದ್ಯೋಗಕ್ಕಾಗಿ ಹೋದಾಗ ಅವರ ಪ್ರೊಫೈಲ್‍ನಲ್ಲಿ ಪ್ರತಿಬಿಂಬಿಸುವ ವಿಸ್ತರಣೆಗಳನ್ನು ಕೋರಿ ನನ್ನ ಬಳಿಗೆ ಬರುತ್ತಾರೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. +ಜೆಎನ್‍ಯುನಲ್ಲಿ ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಮುಕ್ತ ಚರ್ಚೆಗಳು ಮತ್ತು ಉಪನ್ಯಾಸಗಳನ್ನು ಉಪಕುಲಪತಿ ಉಲ್ಲೇಖಿಸಿದರು ಯುದ್ಧದ ಬಗ್ಗೆ ಯಾವುದೇ ಆಂದೋಲನ ನಡೆದಿಲ್ಲ ಎಂದು ಒತ್ತಿ ಹೇಳಿದರು ಇದು ಕ್ಯಾಂಪಸ್‍ನಲ್ಲಿ ವಿಮರ್ಶಾತ್ಮಕ ಚಿಂತನೆಯ ಸಂಸ್ಕøತಿಯನ್ನು ತೋರಿಸಿದೆ ಎಂದಿದ್ದಾರೆ. +ಮಿಜೋರಾಂನಲ್ಲಿ 68.41 ಕೋಟಿ ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ +2022 ರಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಪಂಡಿತ್, 2019 ರ ಶುಲ್ಕ ಹೆಚ್ಚಳದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ವೃತ್ತಿಜೀವನದ ಮೇಲೆ ಅದರ ಪ್ರಭಾವವನ್ನು ಪರಿಗಣಿಸಿ ಅವರ ವಿರುದ್ಧ ಎಲ್ಲಾ ಪ್ರಾಕ್ಟೋರಿಯಲ್ ವಿಚಾರಣೆಗಳನ್ನು ಹಿಂತೆಗೆದುಕೊಂಡಿದ್ದೇನೆ ಎಂದು ಹೇಳಿದರು. +ವಿದ್ಯಾರ್ಥಿಗಳು ತಮ್ಮ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ವ್ಯಕ್ತಪಡಿಸಬೇಕು ಎಂದು ಉಪಕುಲಪತಿ ಹೇಳಿದರು. ಕ್ಯಾಂಪಸ್‍ನಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯುವುದು, ಮದ್ಯಪಾನ ಮಾಡುವುದು ಅಥವಾ ಕ್ಯಾಂಪಸ್‍ನಲ್ಲಿ ಅತಿವೇಗದ ಚಾಲನೆಯಂತಹ ಕೆಲವು ಕ್ರಮಗಳನ್ನು ದಂಡ ವಿಧಿಸುವ ಮುಖ್ಯ ಪ್ರಾಕ್ಟರ್ ಆಫೀಸ್ (ಸಿಪಿಒ) ಕೈಪಿಡಿಗೆ ಆಡಳಿತವು ಅಧಿಕೃತವಾಗಿ ಸೂಚನೆ ನೀಡಿದೆ ಎಂದು ಅವರು ಹೇಳಿದರು. +ವಿಶ್ವವಿದ್ಯಾನಿಲಯ ಆಡಳಿತವು ದಂಡವನ್ನು ಹೆಚ್ಚಿಸಿಲ್ಲ ಆದರೆ ಇದು ಅಕೃತವಾಗಿ ಮುಖ್ಯ ಪ್ರಾಕ್ಟರ್ ಆಫೀಸ್ (ಸಿಪಿಒ) ಕೈಪಿಡಿಗೆ ಸೂಚನೆ ನೀಡಿದೆ ಎಂದು ಉಪಕುಲಪತಿ ಹೇಳಿದರು, ಕ್ಯಾಂಪಸ್‍ನಲ್ಲಿ ಯಾವುದೇ ನಿಯಮ ಉಲ್ಲಂಘನೆಯನ್ನು ತಡೆಯಲು ಹೈಕೋರ್ಟ್‍ನ ಶಿಫಾರಸುಗಳ ಆಧಾರದ ಮೇಲೆ ಕಾನೂನುಬದ್ಧವಾಗಿ ದೃಢವಾಗಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_191_7.txt b/eesanje/url_47_191_7.txt new file mode 100644 index 0000000000000000000000000000000000000000..d4983ebf9d0a825ae26f238914b31d8635fad665 --- /dev/null +++ b/eesanje/url_47_191_7.txt @@ -0,0 +1,6 @@ +ಕೇಜ್ರಿಗೆ ರವಾನೆಯಾಯ್ತು ಮತ್ತೊಂದು ನೋಟೀಸ್ +ನವದೆಹಲಿ,ಜ.13- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಾಲ್ಕನೇ ಬಾರಿಗೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಕರೆದಿದೆ. ಜನವರಿ 18 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ. ಜ.3 ರಂದು ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರುಹಾಜರಾದ ನಂತರ, ಇಡಿ ನೀಡಿದ ಸಮನ್ಸ್ ಕಾನೂನುಬಾಹಿರವಾಗಿದೆ ಮತ್ತು ಅವರನ್ನು ಬಂಧಿಸುವುದು ಅದರ ಏಕೈಕ ಗುರಿಯಾಗಿದೆ ಎಂದು ಹೇಳಿದರು. +ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರೂ ಆಗಿರುವ ಕೇಜ್ರಿವಾಲ್ ಅವರು ನವೆಂಬರ್ 2 ಮತ್ತು ಡಿಸೆಂಬರ್ 21 ಕ್ಕೆ ಎರಡು ಹಿಂದಿನ ಸಮನ್ಸ್‍ನಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥರನ್ನು ಕೇಂದ್ರ ತನಿಖಾ ದಳವು ಏಪ್ರಿಲ್‍ನಲ್ಲಿ ಪ್ರಶ್ನಿಸಿತ್ತು, ಆದರೆ ಸಂಸ್ಥೆಯು ಆರೋಪಿಯನ್ನಾಗಿ ಮಾಡಿರಲಿಲ್ಲ. +ಮಾವೋವಾದಿ ನಾಯಕನನ್ನು ಬಂಧಿಸಿದ ಪಶ್ಚಿಮ ಬಂಗಾಳ ಪೊಲೀಸರು +ಜಾರಿ ನಿರ್ದೇಶನಾಲಯದಿಂದ ಮೊದಲ ಸಮನ್ಸ್ ಜಾರಿಯಾದಾಗಿನಿಂದಲೂ, ದೆಹಲಿ ಮುಖ್ಯಮಂತ್ರಿಯನ್ನು ಅವರ ವಿಚಾರಣೆಯ ನಂತರ ಸಂಸ್ಥೆಯು ಬಂಸುತ್ತದೆ ಎಂಬ ತೀವ್ರ ಊಹಾಪೋಹಗಳಿವೆ. ಅದರ ಮೂವರು ನಾಯಕರಾದ ಮನೀಷ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ಸತ್ಯೇಂದ್ರ ಜೈನ್ ಅವರುಗಳು ಈಗಾಗಲೇ ಜೈಲಿನಲ್ಲಿದ್ದಾರೆ. +ಎಎಪಿ ದೀರ್ಘಾವಧಿಯವರೆಗೆ ಸಂಭವನೀಯತೆಯನ್ನು ನಿರೀಕ್ಷಿಸುತ್ತಿದೆ ಮತ್ತು ಸಂಭವನೀಯ ಕ್ರಮಗಳ ಬಗ್ಗೆ ಚರ್ಚಿಸಿದೆ. ಅವರು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಉಳಿಯಬೇಕು ಮತ್ತು ಜೈಲಿನಿಂದಲೇ ತಮ್ಮ ಕೆಲಸವನ್ನು ಮಾಡಬೇಕೆಂದು ಬಯಸುತ್ತಾರೆ. ಆಪಾದಿತ ಹಗರಣದ ಆದಾಯವನ್ನು ಎಎಪಿ ಗುಜರಾತ್‍ನಲ್ಲಿ ತನ್ನ ದೊಡ್ಡ ಪ್ರಮಾಣದ ಪ್ರಚಾರಕ್ಕಾಗಿ ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ, ಇದರಲ್ಲಿ ಅದು 12.91 ಶೇಕಡಾ ಮತಗಳನ್ನು ಪಡೆದು ರಾಷ್ಟ್ರೀಯ ಪಕ್ಷವಾಗಿ ಸ್ಥಾಪಿಸಿಕೊಂಡಿದೆ. \ No newline at end of file diff --git a/eesanje/url_47_191_8.txt b/eesanje/url_47_191_8.txt new file mode 100644 index 0000000000000000000000000000000000000000..7671cb9fa2295e5df8b5ba9f741e287b943e54a5 --- /dev/null +++ b/eesanje/url_47_191_8.txt @@ -0,0 +1,5 @@ +ಮಾವೋವಾದಿ ನಾಯಕನನ್ನು ಬಂಧಿಸಿದ ಪಶ್ಚಿಮ ಬಂಗಾಳ ಪೊಲೀಸರು +ಕೋಲ್ಕತ್ತಾ, ಜ.12-ತಲೆಮರೆಸಿಕೊಂಡಿದ್ದ ಕುಖ್ಯಾತ ಮಾವೋವಾದಿ ನಾಯಕ ಸಬ್ಯಸಾಚಿ ಗೋಸ್ವಾಮಿ ಅಲಿಯಾಸ್ ಕಿಶೋರ್ ಎಂಬಾತನ ಪಶ್ಚಿಮ ಬಂಗಾಳ ಪೊಲೀಸರು ಜಾಖರ್ಂಡ್ ಗಡಿಯ ಬಳಿಯ ಕಾಡಿನಲ್ಲಿ ಬಂಧಿಸಿದ್ದಾರೆ. ಈತನ ಪತ್ತೆಗೆ ಹಲವು ಭಾರಿ ಕಾರ್ಯಾಚರಣೆ ನಡೆಸಲಾಗಿತ್ತು ಎನ್‍ಐಎಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಈತನ ತಲೆಗೆ 10 ಲಕ್ಷ ರೂಪಾಯಿ ಬಹುಮಾನವನ್ನುಘೋಷಿಸಲಾಗಿತ್ತು. +ಮಹತ್ವದ ಘೋಷಣೆ : ಸಿಂಗಾಪುರದಿಂದ ಭಾರತೀಯರು ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ +ಪುರುಲಿಯಾ ಜಿಲ್ಲೆಯಲ್ಲಿ ಗೋಸ್ವಾಮಿಯನ್ನು ಕಳೆದ ರಾತ್ರಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾಯಿತು ಜಾಖರ್ಂಡ್ ಗಡಿಯ ಸಮೀಪವಿರುವ ಕಾಡಿನಲ್ಲಿ ಆತನ ಚಲನವಲನದ ಬಗ್ಗೆ ನಮಗೆ ಮಾಹಿತಿ ಇತ್ತು ಮತ್ತು ಕಾರ್ಯಾಚರಣೆ ಪ್ರಾರಂಭಿಸಿದೆವು. ಅಂತಿಮವಾಗಿ, ನಾವು ಅವನನ್ನು ಚೌನಿಯಾ ಬಳಿಯ ಕಾಡಿನಲ್ಲಿ ಬಂಧಿಸಿದ್ದೇವೆ ಎಂದು ಅವರು ತಿಳಿಸಿದರು. +ಆತನ ಬಳಿಯಿಂದ ಕೆಲವು ಸುತ್ತಿನ ಗುಂಡುಗಳು, ಒಂದು 9 ಎಂಎಂ ಪಿಸ್ತೂಲ್ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ನಾವು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುತ್ತೇವೆ ಎಂದು ಅಧಿಕಾರಿ ಹೇಳಿದರು. \ No newline at end of file diff --git a/eesanje/url_47_191_9.txt b/eesanje/url_47_191_9.txt new file mode 100644 index 0000000000000000000000000000000000000000..9e3673e9d6f8c910ea598937d80614fda4b82600 --- /dev/null +++ b/eesanje/url_47_191_9.txt @@ -0,0 +1,6 @@ +ಮಿಜೋರಾಂನಲ್ಲಿ 68.41 ಕೋಟಿ ಮೌಲ್ಯದ ಡ್ರಗ್ಸ್ ವಶ, ಮೂವರ ಬಂಧನ +ಐಜ್ವಾಲ್,ಜ.12:ಮಿಜೋರಾಂನಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 68.41 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಮತ್ತು ಮೂವರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಅಧಿಕಾರಿಗಳು ತಿಳಿಸಿದ್ದಾರೆ. +ಖಚಿತ ಸುಳಿವಿನ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಸಿಯಾಹಾ ಜಿಲ್ಲೆಯ ಬುವಲ್ಪುಯಿ ಗ್ರಾಮದ ಮೇಲೆ ದಾಳಿ ನಡೆಸಿ 1.75 ಕೋಟಿ ಮೌಲ್ಯದ 225 ಗ್ರಾಂ ಹೆರಾಯಿನ್ ವಶಪಡಿಸಿಕೊಂಡಿದ್ದಾರೆಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದ್ದಾರೆ. +ರಾಮ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಕಠಿಣ ವ್ರತ +ಮತ್ತೊಂದು ಕಾರ್ಯಾಚರಣೆಯಲ್ಲಿ ಪಡೆಗಳು 22.2 ಕೆಜಿ ತೂಕದ 20 ಪ್ಯಾಕೆಟ್ ಮೆಥಾಂ-ಟಮೈನ್ ಮಾತ್ರೆಗಳನ್ನು ಜಿಲ್ಲೆಯ ಝೋಖಾವ್ತಾರ್-ಮೆಲ್ಬುಕ್ ರಸ್ತೆಯಿಂದ ವಾಹನದಲ್ಲಿ ಸಾಗಿಸುವಾಗ ವಶಪಡಿಸಿಕೊಳ್ಳಲಾಗಿದೆ. +66.66 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ಕಾನೂನು ಪ್ರಕ್ರಿಯೆಗಾಗಿ ಅಬಕಾರಿ ಮತ್ತು ಮಾದಕ ದ್ರವ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ವಶಪಡಿಸಿಕೊಳ್ಳುವಿಕೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_47_192_1.txt b/eesanje/url_47_192_1.txt new file mode 100644 index 0000000000000000000000000000000000000000..691d9dd5af96f7dd5ff8fd5fb3828901f9b72fc2 --- /dev/null +++ b/eesanje/url_47_192_1.txt @@ -0,0 +1,9 @@ +ಮಾಜಿ ಮಾಡೆಲ್ ಪಹುಜಾ ಹಂತಕನ ಬಂಧನ +ನವದೆಹಲಿ,ಜ.12- ಮಾಜಿ ಮಾಡೆಲ್ ದಿವ್ಯಾ ಪಹುಜಾ ಅವರನ್ನು ಹತ್ಯೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಪ್ರಮುಖ ಆರೋಪಿಯನ್ನು ಪಶ್ಚಿಮ ಬಂಗಾಳದಲ್ಲಿ ನಿನ್ನೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಮಾಡೆಲ್‍ನ ಶವವನ್ನು ಮತ್ತೊಬ್ಬ ಆರೋಪಿ ರವಿ ಬಂಗಾ ಜೊತೆ ವಿಲೇವಾರಿ ಮಾಡಿದ್ದ ಬಾಲರಾಜ್ ಗಿಲ್ ಎಂಬಾತನನ್ನು ನಿನ್ನೆ ಸಂಜೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ. +ರವಿ ಬಂಗಾ ಇನ್ನೂ ಪರಾರಿಯಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜ. 2 ರಂದು ದಿವ್ಯಾ ಅವರನ್ನು ಐದು ಜನರು ಹೋಟೆಲ್ ಸಿಟಿ ಪಾಯಿಂಟ್‍ಗೆ ಕರೆದೊಯ್ದು ಕೊಠಡಿ ಸಂಖ್ಯೆ 111 ರೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಮಾಡೆಲ್‍ನ ದೇಹ ಇನ್ನೂ ಪತ್ತೆಯಾಗಿಲ್ಲ. +ಬಿಎಂಡಬ್ಲ್ಯು ಕಾರಿನಲ್ಲಿ ಶವವನ್ನು ಕೊಂಡೊಯ್ದಿದ್ದ ಬಾಲರಾಜ್ ಸಿಂಗ್ ಮತ್ತು ರವಿ ಬಂಗಾ ಅದನ್ನು ಘಗ್ಗರ್ ನದಿಯಲ್ಲಿ ಎಸೆದಿರಬಹುದು ಎಂಬ ಅನುಮಾನ ಪೊಲೀಸರಿಗಿದೆ ಎಂದು ಹಿರಿಯ ತನಿಖಾಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ತಂಡವು ಡೈವರ್‍ಗಳ ಸಹಾಯದಿಂದ ಮೃತದೇಹವನ್ನು ನದಿಯಿಂದ ಹೊರತೆಗೆಯಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.ಪ್ರಕರಣದ ಪ್ರಮುಖ ಆರೋಪಿಗಳಾದ ಅಭಿಜಿತ್ ಸಿಂಗ್, ಹೇಮರಾಜ್ ಮತ್ತು ಓಂಪ್ರಕಾಶ್ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. +ರಾಮಮಂದಿರ ಉದ್ಘಾಟನೆಗೆ ಯೋಗಿ ಬಿಟ್ಟರೆ ಬೇರೆ ಯಾವ ಸಿಎಂಗೂ ಇಲ್ಲ ಆಹ್ವಾನ +ಮೂಲಗಳ ಪ್ರಕಾರ ಪಹುಜಾ ತನ್ನ ಫೋನ್‍ನಲ್ಲಿ ಅಭಿಜಿತ್ ಸಿಂಗ್ ಅವರ ಕೆಲವು ಅಶ್ಲೀಲ ವೀಡಿಯೊಗಳನ್ನು ಹೊಂದಿದ್ದರು, ಅದನ್ನು ಅಳಿಸಲು ಕೇಳಿದರು, ಆದರೆ ಅವರು ನಿರಾಕರಿಸಿದರು. ಮಾಜಿ ಮಾಡೆಲ್ ಫೋಟೋಗಳೊಂದಿಗೆ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾನೆ ಮತ್ತು ಇದು ಸಿಂಗ್ ಮತ್ತು ಅವನ ಇಬ್ಬರು ಸಹಾಯಕರು ಅವಳನ್ನು ಕೊಲೆ ಮಾಡುವ ಪ್ರಮುಖ ಕಾರಣವಾಗಿದೆ. +ಅಭಿಜೀತ್ ಸಿಂಗ್ ಶವದೊಂದಿಗೆ ಕಾರನ್ನು ಹೋಟೆಲ್‍ನಿಂದ ಒಂದು ಕಿಲೋಮೀಟರ್ ದೂರದಲ್ಲಿ ಬಲರಾಜ್ ಗಿಲ್‍ಗೆ ಹಸ್ತಾಂತರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಂಜಾಬ್‍ನ ಪಟಿಯಾಲಾದ ಬಸ್ ನಿಲ್ದಾಣದಲ್ಲಿ ಗುರ್ಗಾಂವ್ ಪೊಲೀಸರು ಜನವರಿ 5 ರಂದು ಬಿಎಂಡಬ್ಲ್ಯು ಕಾರನ್ನು ಪತ್ತೆ ಮಾಡಿದರು. +ಸಿಎಸ್‍ಕೆ ಸ್ಟಾರ್ ಆಲ್ರೌಂಡರ್‌‌ಗೆ ಕೊರೊನಾ ಸೋಂಕು +ಪಹುಜಾ, 27, 2016 ರಲ್ಲಿ ತನ್ನ ಆಗಿನ ಗೆಳೆಯ ಮತ್ತು ಗುರುಗ್ರಾಮ್ ದರೋಡೆಕೋರ ಸಂದೀಪ್ ಗಡೋಲಿಯ ನಕಲಿ ಎನ್‍ಕೌಂಟರ್‍ನಲ್ಲಿ ತನ್ನ ಪಾತ್ರಕ್ಕಾಗಿ ಏಳು ವರ್ಷಗಳ ಕಾಲ ಜೈಲಿನಲ್ಲಿದ್ದಳು. ಕಳೆದ ವರ್ಷ ಜೂನ್‍ನಲ್ಲಿ ಆಕೆಗೆ ಜಾಮೀನು ನೀಡಲಾಗಿತ್ತು. \ No newline at end of file diff --git a/eesanje/url_47_192_10.txt b/eesanje/url_47_192_10.txt new file mode 100644 index 0000000000000000000000000000000000000000..864cb3978effd8d66bc608b915f7ab9465898ab1 --- /dev/null +++ b/eesanje/url_47_192_10.txt @@ -0,0 +1,5 @@ +ಟಿಫಿನ್‍ ಬಾಕ್ಸ್‌ನಲ್ಲಿದ್ದ ಐಇಡಿ ಸ್ಪೋಟಕಗಳು, 12 ರೈಫಲ್, ಬುಲೆಟ್‍ಗಳು ವಶಕ್ಕೆ +ರಜೌರಿ/ಜಮ್ಮು, ಜ 11 (ಪಿಟಿಐ) ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಟಿಫಿನ್ ಬಾಕ್ಸ್‍ಗಳಲ್ಲಿ ಅಳವಡಿಸಲಾಗಿದ್ದ ನಾಲ್ಕು ಸುಧಾರಿತ ಸ್ಪೋಟಕ ಸಾಧನಗಳು (ಐಇಡಿ) ಮತ್ತು ಎಕೆ ಸರಣಿಯ ಸುಮಾರು ಎರಡು 12 ಬುಲೆಟ್‍ಗಳನ್ನು  ಸಿಆರ್‌ಪಿಎಫ್  ಯೋಧರು ವಶಪಡಿಸಿಕೊಂಡಿದ್ದಾರೆ. +ಜಮ್ಮು ಪ್ರದೇಶದಲ್ಲಿ ನಿಯೋಜಿಸಲಾದ ಗುಪ್ತಚರ ವಿಭಾಗದಿಂದ ಬಂದ ಮಾಹಿತಿ ಆಧಾರದ ಮೇಲೆ ಸಿಆರ್‌ಪಿಎಫ್  ಅರೆಸೈನಿಕ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ 237 ನೇ ಬೆಟಾಲಿಯನ್‍ನ ಸಿ ಕಂಪನಿಯ ಪಡೆಗಳು ಸ್ಥಳೀಯ ಪೊಲೀಸರೊಂದಿಗೆ ಹಯಾತ್‍ಪುರ-ಮಂಜಕೋಟ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಕೈಗೊಂಡವು ಟಿಫಿನ್ ಬಾಕ್ಸ್‍ಗಳಲ್ಲಿ ಬಚ್ಚಿಟ್ಟಿದ್ದ ನಾಲ್ಕು ಐಇಡಿಗಳು, ಎಕೆ ಅಸಾಲ್ಟ್ ರೈಫಲ್ ಗಳ 23 ಲೈವ್ ಬುಲೆಟ್‍ಗಳು, ವೈರ್‍ಲೆಸ್ ಸೆಟ್ ಮತ್ತು ಟೇಪ್ ರೆಕಾರ್ಡರ್ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ. +ಟೆಕ್ಕಿಗಳಿಂದ ಹಣದಾಸೆಗಾಗಿ ಮ್ಯಾಟ್ರೋಮೋನಿ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ +ಕಳೆದ ಎರಡು ವರ್ಷಗಳಿಂದ ಪೂಂಚ್-ರಜೌರಿ ಪ್ರದೇಶದಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಚಟುವಟಿಕೆಗಳನ್ನು ನಡೆಸುತ್ತಿರುವ ಕಾರಣ ಶೋಧ ಕಾರ್ಯಾಚರಣೆಯನ್ನು ವಿಸ್ತರಿಸಲಾಗಿದೆ ಮತ್ತು ಪಕ್ಕದ ಪ್ರದೇಶಗಳನ್ನು ಶೋದಿಸಲಾಗುತ್ತಿದೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೇನೆಯ ಕಾರ್ಯಾಚರಣೆ ಘಟಕಗಳು ಮತ್ತು ರಾಷ್ಟ್ರೀಯ ರೈಫಲ್ಸ್ ಸಹ ಉಗ್ರರ ಚಟುವಟಿಕೆ ಮಟ್ಟಹಾಕಲು ಇಲ್ಲಿ ನಿಯೋಜಿಸಲಾಗಿದೆ. \ No newline at end of file diff --git a/eesanje/url_47_192_11.txt b/eesanje/url_47_192_11.txt new file mode 100644 index 0000000000000000000000000000000000000000..d38a9f4140368eef8ca3c8797d51f3734879587b --- /dev/null +++ b/eesanje/url_47_192_11.txt @@ -0,0 +1,8 @@ +ನಾಳೆ ಪ್ರಧಾನಿಯಿಂದ ಅಟಲ್ ಸೇತುವೆ ಲೋಕಾರ್ಪಣೆ +ಮುಂಬೈ, ಜ.11- ದೇಶದ ಅತೀ ಉದ್ದದ ಸಮುದ್ರ ಸೇತುವೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಮುಂಬೈನ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಲೋಕಾರ್ಪಣೆ ಮಾಡಲಿದ್ದಾರೆ. ನಾಳೆ ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಮುಂಬೈ ಪೆಪೊಲೀಸರು ಅದರ ಮೇಲೆ ಪ್ರಯಾಣಿಸಲು ನಿಯಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ಅನ್ನು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಇದನ್ನು ಅಟಲ್ ಸೇತು ಎಂದೂ ಕರೆಯುತ್ತಾರೆ, ಇದು ಭಾರತದಲ್ಲಿ ನಿರ್ಮಿಸಲಾದ ಅತಿ ಉದ್ದದ ಸಮುದ್ರ ಸೇತುವೆಯಾಗಿದೆ. +ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. ಅಟಲ್ ಸೇತು ಮುಂಬೈನ ಸೆವ್ರಿಯಿಂದ ಪ್ರಾರಂಭವಾಗಿ ರಾಯಗಢ ಜಿಲ್ಲೆಯ ಉರಾನ್ ತಾಲೂಕಿನ ನ್ಹವಾಶೇವಾದಲ್ಲಿ ಕೊನೆಗೊಳ್ಳುತ್ತದೆ. ಇಡೀ ಯೋಜನೆಗೆ 18,000 ಕೋಟಿ ವೆಚ್ಚವಾಗಿದೆ. +ಮುಂಬೈ ಪೊಲೀಸರು ಪ್ರಯಾಣಿಸಲು ಕೆಲವು ನಿಯಮಗಳನ್ನು ಹೊರಡಿಸಿದ್ದಾರೆ. ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ನಲ್ಲಿ ನಾಲ್ಕು ಚಕ್ರಗಳ ಗರಿಷ್ಠ ವೇಗದ ಮಿತಿ 100 ಮೀಟರ್ ಆಗಿರುತ್ತದೆ. ಆದರೆ ಮೋಟಾರು ಬೈಕುಗಳು, ಆಟೋರಿಕ್ಷಾಗಳು ಮತ್ತು ಟ್ರ್ಯಾಕ್ಟರ್‍ಗಳನ್ನು ಸಮುದ್ರ ಸೇತುವೆಯ ಮೇಲೆ ಅನುಮತಿಸಲಾಗುವುದಿಲ್ಲ. +ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿಕಾರುಗಳು, ಟ್ಯಾಕ್ಸಿಗಳು, ಲಘು ಮೋಟಾರು ವಾಹನಗಳು, ಮಿನಿ ಬಸ್‍ಗಳು ಮತ್ತು ಎರಡು ಆಕ್ಸಲ್ ಬಸ್‍ಗಳಂತಹ ವಾಹನಗಳು ಗಂಟೆಗೆ 100 ಕಿಲೋಮೀಟರ್ ವೇಗದ ಮಿತಿಯನ್ನು ಹೊಂದಿರುತ್ತದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಸೇತುವೆಯಿಂದ ಆರೋಹಣ ಮತ್ತು ಅವರೋಹಣದ ವೇಗದ ಮಿತಿಯನ್ನು 40 ಕಿ.ಮೀ.ಗೆ ಸೀಮಿತಗೊಳಿಸಲಾಗಿದೆ. +ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಮೇಲೆ ವೇಗದ ಮಿತಿಯನ್ನು ವಿಸುವ ಹಿಂದಿನ ಕಾರಣವೆಂದರೆ ಅಪಾಯ, ಅಡೆತಡೆಗಳು ಮತ್ತು ಸಾರ್ವಜನಿಕರಿಗೆ ಅನಾನುಕೂಲತೆಯನ್ನು ನಿಗ್ರಹಿಸಲು ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ದ್ವಿಚಕ್ರ ವಾಹನಗಳು, ಮೊಪೆಡ್‍ಗಳು, ಆಟೋ ರಿಕ್ಷಾ, ಟ್ರ್ಯಾಕ್ಟರ್‍ಗಳು ಮತ್ತು ನಿಧಾನವಾಗಿ ಚಲಿಸುವ ವಾಹನಗಳನ್ನು ಸೇತುವೆಯ ಮೇಲೆ ಅನುಮತಿಸಲಾಗುವುದಿಲ್ಲ. +ಮುಂಬೈ ಕಡೆಗೆ ಹೋಗುವ ಮಲ್ಟಿ-ಆಕ್ಸಲ್ ಭಾರೀ ವಾಹನಗಳು, ಟ್ರಕ್‍ಗಳು ಮತ್ತು ಬಸ್‍ಗಳು ಪೂರ್ವ ಮುಕ್ತಮಾರ್ಗದಲ್ಲಿ ಪ್ರವೇಶವನ್ನು ಹೊಂದಿರುವುದಿಲ್ಲ ಎಂದು ಅವರು ಹೇಳಿದರು. ಈ ವಾಹನಗಳು ಮುಂಬೈ ಪೋರ್ಟ್ ಸೇವ್ರಿ ನಿರ್ಗಮನವನ್ನು ಬಳಸಬೇಕಾಗುತ್ತದೆ. +ಈ ಸೇತುವೆ ಮೂಲಕ ಪ್ರಯಾಣವನ್ನು ಸುವ್ಯವಸ್ಥಿತಗೊಳಿಸಲಾಗುತ್ತದೆ ಮತ್ತು ವಾಹನ ಚಾಲಕರು ಮುಂಬೈ ಮತ್ತು ನವಿ ಮುಂಬೈ ನಡುವಿನ ಅಂತರವನ್ನು ಕೇವಲ 20 ನಿಮಿಷಗಳಲ್ಲಿ ಕ್ರಮಿಸಲು ಸಾಧ್ಯವಾಗುತ್ತದೆ, ಇಲ್ಲದಿದ್ದರೆ 2 ಗಂಟೆ ತೆಗೆದುಕೊಳ್ಳುತ್ತದೆ. \ No newline at end of file diff --git a/eesanje/url_47_192_12.txt b/eesanje/url_47_192_12.txt new file mode 100644 index 0000000000000000000000000000000000000000..4c9eb58c1208b7970e76d9fcc10fb3d6d0cd8d37 --- /dev/null +++ b/eesanje/url_47_192_12.txt @@ -0,0 +1,9 @@ +ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಅಡ್ವಾಣಿ +ನವದೆಹಲಿ,ಜ.11- ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ರಥಯಾತ್ರೆ ನಡೆಸಿದ್ದ ಭೀಷ್ಮ ಪಿತಾಮಹ ಎಲ್.ಕೆ.ಅಡ್ವಾಣಿಯವರು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿ ರುವ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿಂದೆ ಅಡ್ವಾಣಿಯವರ ವಯಸ್ಸಿನ ಹಿನ್ನೆಲೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಕಾರ್ಯಕ್ರಮಕ್ಕೆ ಬರುವುದು ಬೇಡ ಎಂದು ರಾಮಲಲ್ಲಾ ಟ್ರಸ್ಟ್ ಹೇಳಿತ್ತು. +ಇದು ತೀವ್ರ ವಿವಾದವನ್ನು ಸೃಷ್ಟಿಸಿತ್ತು. ಕೊನೆಗೆ ವಿಶ್ವ ಹಿಂದೂ ಪರಿಷತ್ ಅಡ್ವಾಣಿಯವರಿಗೆ ಆಹ್ವಾಣ ನೀಡಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿತ್ತು. ಅಯೋಧ್ಯೆಯ ಸಮಾರಂಭದಲ್ಲಿ ಅಡ್ವಾಣಿಯವರು ಭಾಗವಹಿಸುವ ಬಗ್ಗೆ ವಿಹೆಚ್ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. +28 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇವೆ : ಸಚಿವ ಮುನಿಯಪ್ಪ +ಅಡ್ವಾಣಿ ಮತ್ತು ಮತ್ತೊಬ್ಬರು ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಫೋಟೊಗಳು ಪ್ರಕಟಗೊಂಡಿದ್ದವು. +ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಾವಿರಾರು ಸಂತರ ಸಮ್ಮುಖದಲ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಏತನ್ಮಧ್ಯೆ, ಅದ್ದೂರಿ ಸಮಾರಂಭಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ರಾಮಮಂದಿರಕ್ಕೆ ಈಗಾಗಲೇ 1,100 ಕೆಜಿ ತೂಕದ ದೀಪ, ಎಂಟು ಲೋಹಗಳಿಂದ ಮಾಡಿದ 2,100 ಕೆಜಿ ತೂಕದ ಗಂಟೆ ಸೇರಿದಂತೆ ಭಾರತ ಮತ್ತು ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಕಳುಹಿಸಲಾಗಿದೆ. +ಕಾರ್ಯಕ್ರಮದ ಮೊದಲು, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ), ಆರ್‍ಎಸ್‍ಎಸ್ ಮತ್ತು ಅದರ ಅಂಗಸಂಸ್ಥೆಗಳ ಸ್ವಯಂಸೇವಕರು ದೇಶಾದ್ಯಂತ ಜನರಿಗೆ ರಾಮ ಮಂದಿರಕ್ಕೆ ಭೇಟಿ ನೀಡುವಂತೆ ಮಂತ್ರಾಕ್ಷತೆ ಸಹಿತ ಆಹ್ವಾನ ನೀಡುತ್ತಿದ್ದಾರೆ. ಪ್ರಾಣ ಪ್ರತಿಷ್ಠೆಯ ದಿನ ಮನೆಯಲ್ಲಿ ಹಾಗೂ ನೆರೆಹೊರೆಯಲ್ಲಿರುವ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಪವಿತ್ರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. +ನಿರುದ್ಯೋಗ ನಿವಾರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ : ಜೈರಾಮ್ +ಅಡ್ವಾಣಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಅವರಿಗಾಗಿ ಅಯೋಧ್ಯೆಯಲ್ಲಿ ವೈದ್ಯಕೀಯ ತಂಡ ನಿಯೋಜನೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ರಾಮಮಂದಿರಕ್ಕಾಗಿ ರಥಯಾತ್ರೆ ಮಾಡಿದ್ದ ಲಾಲ್ ಕೃಷ್ಣ ಅಡ್ವಾಣಿ ಅಯೋಧ್ಯೆ ಹೋರಾಟದ ಪ್ರಮುಖ ರೂವಾರಿಯಾಗಿದ್ದಾರೆ. \ No newline at end of file diff --git a/eesanje/url_47_192_2.txt b/eesanje/url_47_192_2.txt new file mode 100644 index 0000000000000000000000000000000000000000..6cc0baa410d1c92968e1dc66a2e737f1961466db --- /dev/null +++ b/eesanje/url_47_192_2.txt @@ -0,0 +1,9 @@ +ಐತಿಹಾಸಿಕ ಅಟಲ್ ಸೇತುವಿನ ವಿಶೇಷತೆಗಳೇನು ಗೊತ್ತೇ ..? +ಮುಂಬೈ,ಜ.12- ಪ್ರಧಾನಿ ಮೋದಿ ಅವರಿಂದ ಇಂದು ಉದ್ಘಾಟನೆಗೊಂಡಿರುವ ಐತಿಹಾಸಿಕ ಅಟಲ್ ಸೇತು ಕೇವಲ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮಾತ್ರವಲ್ಲದೆ ಅದು ಭೂಕಂಪ-ನಿರೋಧಕ ತಂತ್ರಜ್ಞಾನದೊಂದಿಗೆ ನಿರ್ಮಿಸಲಾಗಿದೆ ಎಂದು ಐಐಟಿ ತಜ್ಞರು ತಿಳಿಸಿದ್ದಾರೆ. +21 ಕಿಲೋಮೀಟರ್ ಉದ್ದದ ಸೇತುವೆಯನ್ನು ಮುಂಬೈ ಮಧ್ಯಮ ಭೂಕಂಪನದ ಅಪಾಯದ ವಲಯದ ಅಡಿಯಲ್ಲಿ ಬರುವುದರಿಂದ ಅದರ ಸ್ಥಳವನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ ಎಂದು ಐಐಟಿ ಬಾಂಬೆಯ ಸಿವಿಲ್ ಇಂಜಿನಿಯರಿಂಗ್ ಮುಖ್ಯಸ್ಥ ಪ್ರೊಫೆಸರ್ ದೀಪಂಕರ್ ಚೌಧರಿ ತಿಳಿಸಿದ್ದಾರೆ. +ಸೇತುವೆಯ ಬಹುಭಾಗವನ್ನು ಸಮುದ್ರದ ಮೇಲೆ ನಿರ್ಮಿಸಲಾಗಿರುವುದರಿಂದ, ಅದರ ಅಡಿಯಲ್ಲಿರುವ ಮಣ್ಣಿನ ಮೇಲೆ ಭೂಕಂಪನ ಚಟುವಟಿಕೆಯ ಪರಿಣಾಮವನ್ನು ನಾವು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಇದನ್ನು 6.5 ತೀವ್ರತೆಯ ನಾಲ್ಕು ವಿಭಿನ್ನ ರೀತಿಯ ಭೂಕಂಪಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅವರು ಹೇಳಿದರು. +ಡ್ರಗ್ಸ್ ತಯಾರಿಸುತ್ತಿದ್ದ ರಾಸಾಯನಿಕ ವಿಜ್ಞಾನಿ ಬಂಧನ +2018 ರಲ್ಲಿ ಯೋಜನೆಗಾಗಿ ಪ್ರೀಮಿಯರ್ ಇನ್‍ಸ್ಟಿಟ್ಯೂಟ್ ಅನ್ನು ತೊಡಗಿಸಿಕೊಂಡ ನಂತರ ಆರು ಐಐಟಿ ಬಾಂಬೆ ವಿದ್ವಾಂಸರ ತಂಡವು ಸೇತುವೆಯ ವಿನ್ಯಾಸದಲ್ಲಿ ಕೆಲಸ ಮಾಡಿದೆ. ಅವರು ಅಡಿಪಾಯವನ್ನು ಬಲಪಡಿಸಲು ಬೆಂಬಲ ವ್ಯವಸ್ಥೆಗಳನ್ನು ವಿವರಿಸುವ ಆರು ತಿಂಗಳೊಳಗೆ ತಮ್ಮ ವರದಿಯನ್ನು ಸಲ್ಲಿಸಿದರು. 1963 ರಿಂದ ಮುಂಬೈ ಮತ್ತು ನವಿ ಮುಂಬೈ ಸಂಪರ್ಕಿಸಲು ಈ ಸೇತುವೆಯನ್ನು ನಿರ್ಮಿಸಿದ್ದೇವೆ ಆದ್ದರಿಂದ ನಾವು ಈ ಯೋಜನೆಯ ಭಾಗವಾಗಿರಲು ಹೆಮ್ಮೆಪಡುತ್ತೇವೆ ಎಂದು ಅವರು ಹೇಳಿದರು. +ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಎಂದೂ ಕರೆಯಲ್ಪಡುವ 17,840 ಕೋಟಿ ವೆಚ್ಚದ ಸೇತುವೆಯು ಮುಂಬೈ ಮತ್ತು ನವಿ ಮುಂಬೈ ನಡುವಿನ ಪ್ರಯಾಣದ ಸಮಯವನ್ನು 2 ಗಂಟೆಗಳಿಂದ 20 ನಿಮಿಷಗಳಿಗೆ ಕಡಿತಗೊಳಿಸಲು ಸಿದ್ಧವಾಗಿದೆ. ಈ ಸೇತುವೆಯನ್ನು ತಜ್ಞರು ಎಂಜಿನಿಯರಿಂಗ್ ಅದ್ಭುತ ಎಂದು ಹೊಗಳುತ್ತಿದ್ದಾರೆ. +ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ +ಮಹಾರಾಷ್ಟ್ರದಾದ್ಯಂತ 30,500 ಕೋಟಿ ಯೋಜನೆಗಳ ಜೊತೆಗೆ ಆರು ಪಥಗಳ ಸಮುದ್ರ ಸಂಪರ್ಕವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಮುಂಬೈನಲ್ಲಿ ಉದ್ಘಾಟಿಸಿದರು. ಈಗಾಗಲೇ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ರಸ್ತೆ ನಿರ್ಮಾಣ, ವಿದ್ಯುತ್ ಕಾಮಗಾರಿ, ಜಾಣ ಸಾರಿಗೆ ವ್ಯವಸ್ಥೆ ಸೇರಿದಂತೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಜನವರಿ 12ರಂದು ಮುಖ್ಯ ಭೂಮಿಗೆ ಸೇತುವೆಯ ಸಂಪರ್ಕದ ನಂತರ ಅಂತಿಮಗೊಳಿಸಲಾಗುವುದು. ಇದು ಪೂರ್ಣಗೊಂಡ ನಂತರ ಅಟಲ್ ಸೇತು ಸುಮಾರು 70,000 ವಾಹನಗಳನ್ನು ಪೂರೈಸುತ್ತದೆ ಮತ್ತು ಪ್ರದೇಶದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ. \ No newline at end of file diff --git a/eesanje/url_47_192_3.txt b/eesanje/url_47_192_3.txt new file mode 100644 index 0000000000000000000000000000000000000000..e999eb75dae145e34b440fa9efef2d95dadb7be3 --- /dev/null +++ b/eesanje/url_47_192_3.txt @@ -0,0 +1,8 @@ +ರಾಮಮಂದಿರ ಉದ್ಘಾಟನೆಗೆ ಯೋಗಿ ಬಿಟ್ಟರೆ ಬೇರೆ ಯಾವ ಸಿಎಂಗೂ ಇಲ್ಲ ಆಹ್ವಾನ +ನವದೆಹಲಿ,ಜ.12- ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೊರತುಪಡಿಸಿ ದೇಶದ ಇತರ ರಾಜ್ಯಗಳ ಯಾವ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗಿಲ್ಲ. ದಲಿತ ಮುಖಂಡರುಗಳು, ಕರಸೇವಕರು ಮತ್ತು ಹಲವಾರು ಪ್ರಮುಖ ವ್ಯಕ್ತಿಗಳ ಕುಟುಂಬಗಳಿಗೆ ಮೆಗಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗಿದೆ. ಆದರೆ ಯೋಗಿ ಆದಿತ್ಯನಾಥ್ ಅವರನ್ನು ಹೊರತುಪಡಿಸಿ ಯಾವುದೇ ಮುಖ್ಯಮಂತ್ರಿಗಳಿಗೆ ಸರ್ಕಾರ ಆಹ್ವಾನ ಕಳುಹಿಸಿಲ್ಲ ಎಂದು ಮೂಲಗಳು ತಿಳಿಸಿವೆ. +ಜನವರಿ 22 ರಂದು ನಡೆಯಲಿರುವ ಸಮಾರಂಭಕ್ಕೆ ಆಹ್ವಾನಿತರಲ್ಲಿ ದಲಿತ ಐಕಾನ್‍ಗಳಾದ ಬಿಆರ್ ಅಂಬೇಡ್ಕರ್, ಜಗಜೀವನ್ ರಾಮ, ಕಾನ್ಶಿರಾಮ್ ಅವರ ಕುಟುಂಬದ ಸದಸ್ಯರು ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಕ್ಕೆ ರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಮಡಿದ ಕರಸೇವಕರ ಕುಟುಂಬ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. +ರಾಮಮಂದಿರ ಬಗ್ಗೆ ಭಾವನಾತ್ಮಕವಾಗಿದ್ದೇನೆ ; ಪ್ರಧಾನಿ ಮೋದಿ +ಸುಪ್ರೀಂ ಕೋರ್ಟ್‍ನ ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು, ಎಲ್ಲಾ ಮೂರು ಸೇವೆಗಳ ನಿವೃತ್ತ ಮುಖ್ಯಸ್ಥರು– ಸೇನೆ, ನೌಕಾಪಡೆ ಮತ್ತು ವಾಯುಪಡೆ, ಮಾಜಿ ರಾಯಭಾರಿಗಳು, ಉನ್ನತ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳು ಪ್ರಮುಖ ಸ್ಥಾನಗಳು ಮತ್ತು ನೊಬೆಲ್ ಪ್ರಶಸ್ತಿಯಿಂದ ಗೌರವಿಸಲ್ಪಟ್ಟ ಸಹೋದರ ಸಹೋದರಿಯರು ಆಹ್ವಾನಿತರ ಪಟ್ಟಿಯಲ್ಲಿದ್ದಾರೆ. +ರಾಮಮಂದಿರ ಕಾರ್ಯಕ್ರಮದ ಆಹ್ವಾನಗಳು ರಾಜಕೀಯ ಗದ್ದಲಕ್ಕೆ ಕಾರಣವಾಗಿದ್ದು, ಸಮಾರಂಭವನ್ನು ಬಿಟ್ಟುಬಿಟ್ಟಿದ್ದಕ್ಕಾಗಿ ಬಿಜೆಪಿ ಕಾಂಗ್ರೆಸ್‍ನಂತಹ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ. +ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರು ಆಹ್ವಾನವನ್ನು ತಿರಸ್ಕರಿಸಿದ್ದಾರೆ, ಕಾರ್ಯಕ್ರಮವನ್ನು ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸï) ನ ರಾಜಕೀಯ ಯೋಜನೆ ಎಂದು ಕರೆದಿದ್ದಾರೆ ಮತ್ತು ಧರ್ಮವು ವೈಯಕ್ತಿಕ ವಿಷಯ ಎಂದು ಪ್ರತಿಪಾದಿಸಿದ್ದಾರೆ. ಎಡಪಕ್ಷಗಳು ಮತ್ತು ತೃಣಮೂಲ ಕಾಂಗ್ರೆಸ್ ಕೂಡ ಸಮಾರಂಭವನ್ನು ತ್ಯಜಿಸುವುದಾಗಿ ಘೋಷಿಸಿವೆ. +ರಾಮಮಂದಿರ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ ಸನಾತನ ವಿರೋಧಿಗಳ ಮುಖಗಳನ್ನು ಗಮನಿಸಿ ಎಂಬ ಶೀರ್ಷಿಕೆಯೊಂದಿಗೆ ಬಿಜೆಪಿ ಕೆಲವು ವಿರೋಧ ಪಕ್ಷದ ನಾಯಕರ ಕ್ರಮ ನಾಚಿಕೆ ತರಿಸುವಂತಿದೆ ಎಂದು ಟ್ವೀಟ್ ಮಾಡಿದೆ. \ No newline at end of file diff --git a/eesanje/url_47_192_4.txt b/eesanje/url_47_192_4.txt new file mode 100644 index 0000000000000000000000000000000000000000..51099a4e9f541515a32e9479fe3bba393ba7a231 --- /dev/null +++ b/eesanje/url_47_192_4.txt @@ -0,0 +1,14 @@ +ಕಿಸಾನ್ ಸಮ್ಮಾನ್ ಕುರಿತು ರೈತರಗೆ ಭರ್ಜರಿ ಸುದ್ದಿ..! +ನವದೆಹಲಿ,ಜ.12- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದೇಶದ ಅನ್ನದಾತನ ಮನಗೆಲ್ಲಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿರುವ ಆರ್ಥಿಕ ನೆರವಿನ ಹಣವನ್ನು 6 ರಿಂದ 9 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ. +ಪ್ರಸ್ತುತ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದ ಅರ್ಹ ರೈತರಿಗೆ ವಾರ್ಷಿಕವಾಗಿ 3 ಕಂತುಗಳಲ್ಲಿ 6 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಬರುವ ಜೂನ್ ತಿಂಗಳಿನಿಂದ ಅನ್ವಯವಾಗುವಂತೆ 9 ಸಾವಿರಕ್ಕೆ ಹೆಚ್ಚಿಸುವ ಸಾಧ್ಯತೆಯಿದೆ. +ಫೆಬ್ರವರಿ 1ರಂದು ಹಣಕಾಸು ಖಾತೆಯನ್ನು ಹೊಂದಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಜೆಟ್ ಮಂಡಿಸಲಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿರುವ ಹಣವನ್ನು ಹೆಚ್ಚಳ ಮಾಡಲು ಸಮ್ಮತಿಸಿದ್ದಾರೆಂದು ತಿಳಿದುಬಂದಿದೆ. +ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಮ್ಮತಿಸಿದ್ದು, ಇನ್ನು ಮುಂದೆ ರೈತರ ಖಾತೆಗೆ ವಾರ್ಷಿಕವಾಗಿ 9 ಸಾವಿರ ರೂ. ಪ್ರತಿ ನಾಲ್ಕು ತಿಂಗಳಿಗೆ ಒಂದರಂತೆ ಮೂರು ಕಂತುಗಳಲ್ಲಿ ಫಲಾನುಭವಿಗಳಿಗೆ ಜಮಾವಣೆಯಾಗಲಿದೆ. ಒಟ್ಟು 13 ಕೋಟಿ ರೈತ ಕುಟುಂಬಗಳು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 13ನೇ ಕಂತು ಫಲಾನುಭವಿಗಳಾಗಲಿವೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ರೈತ ಕುಟುಂಬಗಳು ಕೆಲವೊಂದು ನೀತಿ ನಿಯಮಗಳನ್ನು ಹಾಗೂ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. +ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್ +ಇ-ಕೆವೈಸಿ ಮತ್ತು ಇತರ ಮಾನದಂಡಗಳ ನಿಯಮಗಳನ್ನು ಪೂರೈಸುವ ರೈತರಿಗೆ ಮಾತ್ರ ಯೋಜನೆಯ ಪ್ರಯೋಜನ ದೊರೆಯುತ್ತದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣವನ್ನು ಹೆಚ್ಚಿಸುವುದರ ಜೊತೆಗೆ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ಬೆಳೆಗಳಿಗೆ ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮೇಲೆ ಪ್ಯಾನಲ್ ಸ್ಥಾಪಿಸುವ ಬಗ್ಗೆಯೂ ಸಹ ಘೋಷಿಸಬಹುದು ಎಂದು ಹೇಳಲಾಗುತ್ತಿದೆ. +ಏನಿದು ಯೋಜನೆ ! :ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಕೇಂದ್ರ ವಲಯದ ಯೋಜನೆಯಾಗಿದ್ದು, ಕೆಲವು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟು ದೇಶಾದ್ಯಂತ ಎಲ್ಲಾ ಕೃಷಿಯೋಗ್ಯ ಭೂಮಿ ಹೊಂದಿರುವ ರೈತ ಕುಟುಂಬಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. ಯೋಜನೆಯಡಿ ರೂ. 6000/- ಅನ್ನು ವಾರ್ಷಿಕವಾಗಿ ಮೂರು ಸಮಾನ ಕಂತುಗಳಲ್ಲಿ ರೂ.2000/- ನೇರವಾಗಿ ರೈತರ ಆರ್ಧಾ ಸೀಡೆಡ್ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. +ರೈತ ಕೇಂದ್ರಿತ ಡಿಜಿಟಲ್ ಮೂಲಸೌಕರ್ಯವು ಯಾವುದೇ ಮಧ್ಯವರ್ತಿಗಳ ಒಳಗೊಳ್ಳುವಿಕೆ ಇಲ್ಲದೆ ದೇಶದಾದ್ಯಂತ ಎಲ್ಲಾ ರೈತರಿಗೆ ಯೋಜನೆಯ ಪ್ರಯೋಜನಗಳನ್ನು ತಲುಪುವಂತೆ ಮಾಡಿದೆ, ಫಲಾನುಭವಿಗಳನ್ನು ನೋಂದಾಯಿಸುವಲ್ಲಿ ಮತ್ತು ಪರಿಶೀಲಿಸುವಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುತ್ತದೆ. ಭಾರತ ಸರ್ಕಾರವು 11 ಕೋಟಿಗೂ ಹೆಚ್ಚು ರೈತರಿಗೆ 2.60 ಲಕ್ಷ ಕೋಟಿ ರೂ.ಗಳನ್ನು ವಿತರಿಸಿದೆ. +ಪಿಎಂ-ಕಿಸಾನ್ ಯೋಜನೆಯನ್ನು ಫೆಬ್ರವರಿ 2019 ರಲ್ಲಿ ಪ್ರಾರಂಭಿಸಲಾಯಿತು. ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ಹಣವನ್ನು ರಾಜ್ಯ ಸರ್ಕಾರಕ್ಕೆ ವರ್ಗಾಯಿಸಬೇಕೆಂದು ಆರಂಭದಲ್ಲಿ ರಾಜ್ಯವು ಬಯಸಿದಂತೆ ಪಶ್ಚಿಮ ಬಂಗಾಳ ರಾಜ್ಯವು 8 ನೇ ಕಂತು (ಏಪ್ರಿಲ-ಜುಲೈ, 2021) ರಿಂದ ಯೋಜನೆಗೆ ಸೇರ್ಪಡೆಗೊಂಡಿತು. +ಕಳೆದ ಹಣಕಾಸು ವರ್ಷದಲ್ಲಿ ಅಂದರೆ 2022-23 ರಲ್ಲಿ ಒಟ್ಟು ರೂ. 58,201.85 ಕೋಟಿಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ. ಮೋದಿ ಸರ್ಕಾರ ಎರಡನೇ ಅವಧಿಯಲ್ಲಿ ಅಧಿಕಾರಕ್ಕೆ ಬಂದ ಬಳಿಕ ಪ್ರತಿಷ್ಠೆಯಾಗಿ ತೆಗೆದುಕೊಂಡ ಯೋಜನೆ ಎಂದರೇ ಅದು ಪ್ರಧಾನ ಮಂತ್ರಿ ಕಿಸಾನ್ ಯೋಜನೆ. ಈ ಯೋಜನೆಯ ಅನ್ವಯ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಂದಾಯ ಮಾಡುತ್ತಿದೆ. ಇದರಿಂದ ಲಕ್ಷಾಂತರ ರೈತರು ಪ್ರಯೋಜನೆಯವನ್ನು ಪಡೆದುಕೊಂಡಿದ್ದಾರೆ. +ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ +ಇತ್ತೀಚಿನ ಮಾಹಿತಿಯ ಅನ್ವಯ ಕೇಂದ್ರ 15 ಹಂತದಲ್ಲಿ 2.81 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ರೈತರಿಗೆ ನೀಡಿದೆ. 11 ಕೋಟಿಗೂ ಅಧಿಕ ರೈತರು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯು ದೇಶಾದ್ಯಂತ ಜಮೀನು ಹೊಂದಿರುವ ರೈತ ಕುಟುಂಬಗಳಿಗೆ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಮತ್ತು ಮನೆಯ ಅಗತ್ಯಗಳಿಗೆ ಸಂಬಂಧಿಸಿದ ವೆಚ್ಚಗಳನ್ನು ಪೂರೈಸಲು ಕೆಲವು ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ. +ಪಿಎಂ ಕಿಸಾನ್ ಯೋಜನೆ ವಿಶ್ವದ ಅತಿ ದೊಡ್ಡ ನೇರ ಫಲಾನುಭವಿಗಳಿಗೆ ವರ್ಗಾವಣೆ (ಡಿಬಿಟಿ) ಯೋಜನೆಗಳಲ್ಲಿ ಒಂದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಗೆ ಸಂಬಂಸಿದಂತೆ ಯಾವುದೇ ಸಮಸ್ಯೆಗಳಿದ್ದರೆ, ರೈತರು &|. ಇಮೇಲ್ ಐಡಿಯಲ್ಲಿ ಸಂಪರ್ಕಿಸಬಹುದು. ಅಲ್ಲದೇ, ಪಿಎಂ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ – 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದಾಗಿದೆ. \ No newline at end of file diff --git a/eesanje/url_47_192_5.txt b/eesanje/url_47_192_5.txt new file mode 100644 index 0000000000000000000000000000000000000000..667de0a8256dfd93e42dbf2489ff91f5a5d782b1 --- /dev/null +++ b/eesanje/url_47_192_5.txt @@ -0,0 +1,9 @@ +ಟಿಎಂಸಿ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ +ಕೋಲ್ಕತ್ತಾ,ಜ.12- ಪಶ್ಚಿಮ ಬಂಗಾಳದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವ ಸುಜಿತ್ ಬೋಸ್, ಟಿಎಂಸಿ ಶಾಸಕ ತಪಸ್ ರಾಯ್ ಮತ್ತು ಉತ್ತರ ದಮ್ಡಮ್ ಪುರಸಭೆಯ ಮಾಜಿ ಅಧ್ಯಕ್ಷ ಸುಬೋಧ ಚಕ್ರವರ್ತಿ ಅವರ ನಿವಾಸಗಳ ಮೇಲೆ ಇಂದು ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ. +ಕೇಂದ್ರ ಪಡೆಗಳ ಜೊತೆಯಲ್ಲಿ ಜಾರಿ ನಿರ್ದೇಶನಾಲಯದ ಅಕಾರಿಗಳು ಇಂದು ಮುಂಜಾನೆ ಉತ್ತರ 24 ಪರಗಣ ಜಿಲ್ಲೆಯ ಲೇಕ್ ಟೌನ್ ಪ್ರದೇಶದಲ್ಲಿ ಬೋಸ್ ಅವರ ಎರಡು ನಿವಾಸಗಳ ಮೇಲೆ ದಾಳಿ ನಡೆಸಿದರು ಎಂದು ತಿಳಿದುಬಂದಿದೆ. ಕೇಂದ್ರ ಏಜೆನ್ಸಿ ಅಧಿಕಾರಿಗಳು ತಪಸ್ ರಾಯ್ ಅವರ ಬಿಬಿ ಗಂಗೂಲಿ ಸ್ಟ್ರೀಟ್ ನಿವಾಸ ಮತ್ತು ಬಿರಾಟಿಯಲ್ಲಿರುವ ಚಕ್ರವರ್ತಿ ಅವರ ನಿವಾಸದ ಮೇಲೂ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದರು. +ನಾಗರಿಕ ಸಂಸ್ಥೆಗಳಲ್ಲಿನ ನೇಮಕಾತಿಗೆ ಸಂಬಂಧಿಸಿದಂತೆ ನಾವು ಮೂವರು ಟಿಎಂಸಿ ನಾಯಕರ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ನಾವು ನಾಯಕರೊಂದಿಗೂ ಮಾತನಾಡುತ್ತಿದ್ದೇವೆ ಎಂದು ಇಡಿ ಅಧಿಕಾರಿ ಪಿಟಿಐಗೆ ತಿಳಿಸಿದರು. ಸ್ಥಳೀಯ ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಆಯಾ ಸ್ಥಳಗಳಿಗೆ ತಲುಪಿ ಇಡೀ ಪ್ರದೇಶವನ್ನು ಸುತ್ತುವರಿದಿದ್ದಾರೆ. +ರೊಚ್ಚಿಗೆದ್ದ ಅಮೆರಿಕ-ಬ್ರಿಟನ್, ಹೌತಿ ಬಂಡುಕೋರರ ಮೇಲೆ ಏರ್ ಸ್ಟ್ರೈಕ್ +ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರಂಭದಲ್ಲಿ ಬೋಸ್ ನಿವಾಸವನ್ನು ಪ್ರವೇಶಿಸಲು ಪ್ರತಿರೋಧವನ್ನು ಎದುರಿಸಿದರು ಮತ್ತು ಸುಮಾರು 40 ನಿಮಿಷಗಳ ನಂತರ ಅವರನ್ನು ಒಳಗೆ ಅನುಮತಿಸಲಾಯಿತು ಎಂದು ಮೂಲಗಳು ತಿಳಿಸಿವೆ. ನಾವು ಹುಡುಕಾಟ ವಾರಂಟ್ ಅನ್ನು ಹೊಂದಿದ್ದೇವೆ ಮತ್ತು ಆರಂಭದಲ್ಲಿ ನಮ್ಮನ್ನು ಪ್ರವೇಶಿಸಲು ಅನುಮತಿಸಲಿಲ್ಲ ಕೊನೆಗೆ ಅವರ ಮನವೊಲಿಸಿ ಮನೆ ಪ್ರವೇಶಿಸಬೇಕಾಯಿತು ಎಂದು ಮೂಲಗಳು ತಿಳಿಸಿವೆ. +ಕೇಂದ್ರ ಪಡೆಗಳು ಹೆಲ್ಮೆಟ್‍ಗಳು, ಸ್ವಯಂಚಾಲಿತ ಗನ್‍ಗಳಂತಹ ಹೆಚ್ಚುವರಿ ರಕ್ಷಣಾ ಸಾಧನಗಳನ್ನು ಹೊಂದಿದ್ದು, ಕಳೆದ ವಾರ ಸಂದೇಶಖಾಲಿಯಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ ಅವರ ಮೇಲೆ ನಡೆದ ದಾಳಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಾಂಗ್ರೆಸ್‍ನ ಕಣಕಣದಲ್ಲೂ ಹಿಂದೂ ದ್ವೇಷ ಇದೆ : ಆರ್.ಅಶೋಕ್ +ಜನವರಿ 5 ರಂದು, ಪಡಿತರ ವಿತರಣೆ ಹಗರಣದ ತನಿಖೆಗೆ ಸಂಬಂಧಿಸಿದಂತೆ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ನಿವಾಸದ ಮೇಲೆ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ನಿವಾಸದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದಾಗ ಮೂವರು ಜಾರಿ ಇಲಾಖೆ (ಇಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದರು. \ No newline at end of file diff --git a/eesanje/url_47_192_6.txt b/eesanje/url_47_192_6.txt new file mode 100644 index 0000000000000000000000000000000000000000..814206b25d73a85ae161bf3701738c4db0023cb6 --- /dev/null +++ b/eesanje/url_47_192_6.txt @@ -0,0 +1,5 @@ +ಡ್ರಗ್ಸ್ ತಯಾರಿಸುತ್ತಿದ್ದ ರಾಸಾಯನಿಕ ವಿಜ್ಞಾನಿ ಬಂಧನ +ಮುಂಬೈ,ಜ.12- ಇಲ್ಲಿನ ಲಾಲ್ಜಿ ಪದಾ ಸ್ಲಂ ಪ್ರದೇಶದಲ್ಲಿರುವ ಡ್ರಗ್ ಫ್ಯಾಕ್ಟರಿಯಿಂದ ಮುಂಬೈ ಪೊಲೀಸರು ಇಬ್ಬರು ಶಂಕಿತರನ್ನು ಬಂಧಿಸಿ 1.18 ಕೋಟಿ ಮೌಲ್ಯದ 503 ಗ್ರಾಂ ಎಂಡಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. +ಈ ವಿಷಯಕ್ಕೆ ಸಂಬಂಧಿಸಿದಂತೆ ನೂರ್ ಆಲಂ ಮಹಬೂಬ್ ಆಲಂ ಚೌಧರಿ ಎಂದು ಗುರುತಿಸಲಾದ 24 ವರ್ಷದ ರಾಸಾಯನಿಕ ವಿಜ್ಞಾನಿಯನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಅವರು ರಾಸಾಯನಿಕ ಉತ್ಪಾದನೆಯ ಹಿಂದೆ ಮಾಸ್ಟರ್ ಮೈಂಡ್ ಎಂದು ನಂಬಲಾಗಿದೆ. +ಕಾಂಗ್ರೆಸ್‍ನ ಕಣಕಣದಲ್ಲೂ ಹಿಂದೂ ದ್ವೇಷ ಇದೆ : ಆರ್.ಅಶೋಕ್ +ಮತ್ತೊಬ್ಬ ಶಂಕಿತ ಆರೋಪಿಯನ್ನು 30 ವರ್ಷದ ಅಬ್ರಾರ್ ಇಬ್ರಾಹಿಂ ಶೇಖ್ ಎಂದು ಗುರುತಿಸಲಾಗಿದ್ದು, ಮಾದಕ ದ್ರವ್ಯ ಹೊಂದಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. \ No newline at end of file diff --git a/eesanje/url_47_192_7.txt b/eesanje/url_47_192_7.txt new file mode 100644 index 0000000000000000000000000000000000000000..872c33f194410d4f71966a5a32643bd2a0351018 --- /dev/null +++ b/eesanje/url_47_192_7.txt @@ -0,0 +1,9 @@ +ರಾಮಮಂದಿರ ಬಗ್ಗೆ ಭಾವನಾತ್ಮಕವಾಗಿದ್ದೇನೆ ; ಪ್ರಧಾನಿ ಮೋದಿ +ನವದೆಹಲಿ,ಜ.12- ಇದೇ ಜನವರಿ 22ರಂದು ನಡೆಯಲಿರುವ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ನಾನು ಭಾವನಾತ್ಮಕವಾಗಿದ್ದೇನೆ. ನನ್ನ ಜೀವನದಲ್ಲಿ ಇದೇ ಮೊದಲ ಬಾರಿಗೆ ನಾನು ಇಂತಹ ಭಾವನೆಗಳನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ. +ರಾಮಮಂದಿರ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನಗಳ ಆಚರಣೆಗಳನ್ನು ಆರಂಭಿಸಿದ್ದು, ಅದರಲ್ಲಿ ಕಟ್ಟುನಿಟ್ಟಿನ ಪ್ರತಿಜ್ಞೆ ಮತ್ತು ಬಲಿದಾನವನ್ನು ಆರಂಭಿಸಿದ್ದಾರೆ. ಹೀಗಾಗಿ ಅವರು ಎಕ್ಸ್‍ನಲ್ಲಿ ರಾಷ್ಟ್ರಕ್ಕೆ ನೀಡಿರುವ 10 ನಿಮಿಷಗಳ ವಿಶೇಷ ಸಂದೇಶದಲ್ಲಿ ಅವರು ಭಾವುಕರಾಗಿ ಈ ವಿಷಯ ಹಂಚಿಕೊಂಡಿದ್ದಾರೆ. +ಅಯೋಧ್ಯೆಯ ಹೊಸ ರಾಮಮಂದಿರದಲ್ಲಿ ರಾಮ ಲಲ್ಲಾ ಅಥವಾ ಶಿಶು ರಾಮನ ವಿಗ್ರಹವನ್ನು ಇರಿಸುವ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ವೀಕ್ಷಿಸಲು ಸಾಧ್ಯವಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. +ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ +ನಮ್ಮ ಶಾಸ್ತ್ರಗಳು ಹೇಳುವಂತೆ ದೇವರ ಯಜ್ಞಕ್ಕೆ, ಪೂಜೆಗೆ, ನಮ್ಮೊಳಗಿರುವ ಪರಮಾತ್ಮನ ಪ್ರಜ್ಞೆಯನ್ನು ಜಾಗೃತಗೊಳಿಸಬೇಕು. ಇದಕ್ಕಾಗಿ ಶಾಸ್ತ್ರಗಳು ಪ್ರತಿಷ್ಠಾಪನೆಯ ಮೊದಲು ಅನುಸರಿಸಬೇಕಾದ ವ್ರತಗಳನ್ನು ಮತ್ತು ಕಟ್ಟುನಿಟ್ಟಾದ ನಿಯಮಗಳನ್ನು ಸೂಚಿಸುತ್ತವೆ. ಆದ್ದರಿಂದ, ಈ ಆಧ್ಯಾತ್ಮಿಕ ಪ್ರಯಾಣದಲ್ಲಿ ನಾನು ಸಂತರಿಂದ ಮಾರ್ಗದರ್ಶನ ಪಡೆದಿದ್ದೇನೆ … ಅವರು ನಡವಳಿಕೆಯ ತತ್ವಗಳನ್ನು (ಯಾಮ-ನಿಯಮ) ಸೂಚಿಸಿದ್ದಾರೆ ಮತ್ತು ನಾನು ಇಂದಿನಿಂದ 11 ದಿನಗಳ ವಿಶೇಷ ಆಚರಣೆಯನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ. +ಇಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಇದು ಸಂತೋಷದ ಕಾಕತಾಳೀಯ ಎಂದು ಕರೆದರು. ಅವರು ಛತ್ರಪತಿ ಶಿವಾಜಿಯವರ ತಾಯಿ ಜೀಜಾಬಾಯಿಯವರ ಜನ್ಮದಿನವನ್ನು ಉದಾಹರಿಸಿದರು, ಅವರ ಸ್ವಂತ ತಾಯಿಯನ್ನೂ ನೆನಪಿಸಿಕೊಂಡರು. ಪ್ರಧಾನಮಂತ್ರಿಯವರು ತಮ್ಮ ನಮೋ ಆ್ಯಪ್ ಮೂಲಕ ತಮ್ಮನ್ನು ಸಂಪರ್ಕಿಸುವಂತೆ ಭಾರತೀಯರನ್ನು ಒತ್ತಾಯಿಸಿದರು ಮತ್ತು ಅವರ ಆಶೀರ್ವಾದವನ್ನು ಕೋರಿದರು. +ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ : ನೆಟ್‌ಫ್ಲಿಕ್ಸ್‌ನಿಂದ ನಯನತಾರಾ ಅಭಿನಯದ ಅನ್ನಪೂರ್ಣಿ ಚಿತ್ರ ಔಟ್ +ನಾನು ಬಯಸಿದ್ದರೂ, ಅದರ ಆಳ, ಅಗಾಧತೆ ಮತ್ತು ತೀವ್ರತೆಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ನನ್ನ ಸ್ಥಿತಿಯನ್ನು ನೀವು ಅರ್ಥಮಾಡಿಕೊಳ್ಳಬಹುದು. ಹಲವಾರು ತಲೆಮಾರುಗಳು ವರ್ಷಗಳಿಂದ ಪಾಲಿಸಿಕೊಂಡು ಬಂದ ಕನಸು, ಅದರ ಈಡೇರಿಕೆಗೆ ನಾನು ಪ್ರಸ್ತುತವಾಗಿರುವ ಅದೃಷ್ಟ. ನನ್ನನ್ನು ಎಲ್ಲಾ ಭಾರತೀಯರ ಪ್ರತಿನಿಧಿಯನ್ನಾಗಿ ಮಾಡಿದೆ, ನಾನು ಕೇವಲ ಒಂದು ಸಾಧನ, ಇದು ಒಂದು ದೊಡ್ಡ ಜವಾಬ್ದಾರಿ, ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_192_8.txt b/eesanje/url_47_192_8.txt new file mode 100644 index 0000000000000000000000000000000000000000..41def0aed2c8dc6ef51aedf2a5367c0f1b0de218 --- /dev/null +++ b/eesanje/url_47_192_8.txt @@ -0,0 +1,6 @@ +ಜೈಶಂಕರ್-ಬ್ಲಿಂಕೆನ್ ಮಹತ್ವದ ಚರ್ಚೆ +ನ್ಯೂಯಾರ್ಕ್, ಜ. 12 (ಪಿಟಿಐ) ಕೆಂಪು ಸಮುದ್ರದಲ್ಲಿ ನೌಕಾಯಾನದ ಸ್ವಾತಂತ್ರ್ಯವನ್ನು ರಕ್ಷಿಸುವಲ್ಲಿ ಭಾರತದೊಂದಿಗೆ ಹೆಚ್ಚಿದ ಸಹಕಾರವನ್ನು ಅಮೆರಿಕ ಸ್ವಾಗತಿಸಿದೆ, ಈ ಪ್ರದೇಶದಲ್ಲಿ ಹೌತಿಗಳ ಅಜಾಗರೂಕ ದಾಳಿಯ ಬಗ್ಗೆ ಉಭಯ ದೇಶಗಳು ಕಳವಳ ವ್ಯಕ್ತಪಡಿಸಿವೆ. +ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಈ ಕುರಿತಂತೆ ಮಾತುಕತೆ ನಡೆಸಿದ್ದಾರೆ. ಮತ್ತು ದಕ್ಷಿಣ ಕೆಂಪು ಸಮುದ್ರ ಮತ್ತು ಏಡನ್ ಕೊಲ್ಲಿಯಲ್ಲಿ ಅಜಾಗರೂಕ ಹೌತಿ ದಾಳಿಗಳ ಬಗ್ಗೆ ಯುನೈಟೆಡ್ ಸ್ಟೇಟ್ಸ ಮತ್ತು ಭಾರತದ ಹಂಚಿಕೆಯ ಕಳವಳಗಳ ಬಗ್ಗೆಯೂ ಚರ್ಚಿಸಿದರು, ಇದು ವಾಣಿಜ್ಯದ ಮುಕ್ತ ಹರಿವಿಗೆ ಬೆದರಿಕೆ ಹಾಕುತ್ತದೆ ಮತ್ತು ಅಮಾಯಕ ನಾವಿಕರನ್ನು ಅಪಾಯಕ್ಕೆ ತಳ್ಳುತ್ತದೆ ಹಾಗೂ ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ಉಭಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ. +ಕಾಂಗ್ರೆಸ್‍ನ ಕಣಕಣದಲ್ಲೂ ಹಿಂದೂ ದ್ವೇಷ ಇದೆ : ಆರ್.ಅಶೋಕ್ +ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿಕೆಯೊಂದರಲ್ಲಿ, ಕೆಂಪು ಸಮುದ್ರವು ಅಂತರರಾಷ್ಟ್ರೀಯ ವ್ಯಾಪಾರವನ್ನು ಸುಗಮಗೊಳಿಸುವ ಪ್ರಮುಖ ವಾಣಿಜ್ಯ ಕಾರಿಡಾರ್ ಎಂದು ಬ್ಲಿಂಕನ್ ಒತ್ತಿಹೇಳಿದರು ಮತ್ತು ಈ ಪ್ರದೇಶದಲ್ಲಿ ನೌಕಾಯಾನ ಸ್ವಾತಂತ್ರ್ಯವನ್ನು ರಕ್ಷಿಸುವಲ್ಲಿ ಭಾರತದೊಂದಿಗೆ ಹೆಚ್ಚಿದ ಸಹಕಾರವನ್ನು ಸ್ವಾಗತಿಸಿದರು. +ಜೈಶಂಕರ್ ಮತ್ತು ಬ್ಲಿಂಕೆನ್ ಇಸ್ರೇಲ್-ಹಮಾಸ್ ಸಂಘರ್ಷ, ಉಲ್ಬಣಗೊಳ್ಳುವುದನ್ನು ತಡೆಯುವ ಪ್ರಯತ್ನಗಳು ಮತ್ತು ಗಾಜಾದಲ್ಲಿ ನಾಗರಿಕರಿಗೆ ಮಾನವೀಯ ನೆರವು ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದರು. ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣಕಾರಿ ಯುದ್ಧದ ಬಗ್ಗೆಯೂ ಬ್ಲಿಂಕನ್ ಚರ್ಚಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ. \ No newline at end of file diff --git a/eesanje/url_47_192_9.txt b/eesanje/url_47_192_9.txt new file mode 100644 index 0000000000000000000000000000000000000000..190f0bc3c44635f3d84fa271f6cfc1d1c7e21b34 --- /dev/null +++ b/eesanje/url_47_192_9.txt @@ -0,0 +1,11 @@ +ಕರ್ನಾಟಕ ಮೂಲದ ಸವಾದ್‍ಗೆ ಇತ್ತು ಪಿಎಫ್‍ಐ ಸಹಾನುಭೂತಿ +ಕಣ್ಣೂರು , ಜ 12 (ಪಿಟಿಐ) ಕಳೆದ 2010ರಲ್ಲಿ ಕೇರಳದ ಕಾಲೇಜು ಪ್ರಾಧ್ಯಾಪಕ ರೊಬ್ಬರ ತಲೆ ಕಡಿಯುವ ಪ್ರಕರಣದ ಪ್ರಮುಖ ಆರೋಪಿ ಸವಾದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಹಾನುಭೂತಿಯ ಕೈವಾಡವಿರುವ ಬಗ್ಗೆ ಆತನ ಕುಟುಂಬಕ್ಕೆ ಅರಿವಾಗಿದೆ ಎಂದು ಆತನ ಮಾವ ಹೇಳಿಕೊಂಡಿದ್ದಾರೆ. +ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಜನವರಿ 10ರಂದು ಸವಾದ್‍ನನ್ನು ಬಂಧಿಸಿತ್ತು. ಕರ್ನಾಟಕದ ಉಳ್ಳಾಲದ ಸವಾದ್ ತಾನು ಬಡವನೆಂದು ಹೇಳಿಕೊಂಡು ಯಾವುದೇ ವರದಕ್ಷಿಣೆ ಕೇಳದೆ 2016 ರಲ್ಲಿ ತನ್ನ ನಾಲ್ಕು ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡಿದ್ದ ಎಂದು ಅವರ ಮಾವ ತಿಳಿಸಿದ್ದಾರೆ. +ಕ್ರೀಡೆಗಳು ಜೀವನ ಪಾಠ ಕಲಿಸುತ್ತದೆ : ಎಸ್.ಮರಿಸ್ವಾಮಿ +ಮದುವೆಯ ಸಮಯದಲ್ಲಿಯೂ ಸವಾದ್ ತನ್ನ ಹೆಸರು ಶಾಜಹಾನ್ ಎಂದು ಸ್ಥಳೀಯ ಮಸೀದಿ ಅಕಾರಿಗಳಿಗೆ ಹೇಳಿದ್ದ ಎಂದು ಅವನ ಮಾವ ಹೇಳಿದರು.ಮದುವೆಯ ನಂತರ, ಸವಾದ್ ಅವರು ಕಣ್ಣೂರು ಜಿಲ್ಲೆಯ ಬಾಡಿಗೆ ವಸತಿಗೆ ತೆರಳುವ ಮೊದಲು ನನ್ನ ಮನೆಯಲ್ಲಿ ಒಂದು ತಿಂಗಳು ಕಳೆದಿದ್ದ ಎಂದು ಅವರು ಮಾಹಿತಿ ನೀಡಿದ್ದಾರೆ. +ತನ್ನ ಅಸ್ಥಿರ ಜೀವನಶೈಲಿಗೆ ಹೆಸರುವಾಸಿಯಾದ ಸವಾದ್ ಉದ್ಯೋಗಗಳನ್ನು ಬದಲಾಯಿಸಿದರು ಮತ್ತು ದೀರ್ಘಕಾಲದವರೆಗೆ ಒಂದೇ ಸ್ಥಳದಲ್ಲಿ ನೆಲೆಸುವುದನ್ನು ತಪ್ಪಿಸಿದರು. ಅವರಿಗೆ ಇಬ್ಬರು ಮಕ್ಕಳಿದ್ದು, ಒಬ್ಬನಿಗೆ ನಾಲ್ಕು ವರ್ಷ ಮತ್ತು ಇನ್ನೊಂದು ಒಂಬತ್ತು ತಿಂಗಳು, ಮತ್ತು ಒಂದು ವರ್ಷದಿಂದ ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. +ಬಡಗಿಯ ಸೋಗಿನಲ್ಲಿ, ಆರೋಪಿಯು ತನ್ನ ನೆರೆಹೊರೆಯವರಿಗೆ ಶಾಜಹಾನ್ ಎಂದು ಪರಿಚಯಿಸಿಕೊಂಡನು, ವಿವೇಚನಾಶೀಲ ಪ್ರೊಫೈಲ್ ಅನ್ನು ನಿರ್ವಹಿಸುತ್ತಿದ್ದನು ಮತ್ತು ಸ್ಥಳೀಯರೊಂದಿಗೆ ನಿಕಟ ಸಂವಹನದಿಂದ ದೂರವಿದ್ದನು ಕಳೆದ 13 ವರ್ಷಗಳಿಂದ ಪರಾರಿಯಾಗಿದ್ದ ಸವಾದ್ ತಲೆಗೆ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. +ಇಡುಕ್ಕಿ ಜಿಲ್ಲೆಯ ತೊಡುಪುಳದ ನ್ಯೂಮನ್ ಕಾಲೇಜಿನಲ್ಲಿ ಬಿಕಾಂ ವಿದ್ಯಾರ್ಥಿಗಳ ಆಂತರಿಕ ಪರೀಕ್ಷೆಯ ಮಲಯಾಳಂ ಪ್ರಶ್ನೆ ಪತ್ರಿಕೆಯಲ್ಲಿ ಪ್ರೊಫೆಸರ್ ಪ್ರವಾದಿ ಮೊಹಮ್ಮದ್ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಪ್ರತಿಯಾಗಿ ಆರೋಪಿಯು ಟಿಜೆ ಜೋಸೆಫ್ ಅವರ ಅಂಗೈ ತುಂಡರಿಸುವಲ್ಲಿ ಭಾಗಿಯಾಗಿದ್ದಾನೆ ಎಂದು ಎನ್‍ಐಎ ಬಹಿರಂಗಪಡಿಸಿದೆ. +ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಇದುವರೆಗೆ ಹತ್ತೊಂಬತ್ತು ಆರೋಪಿಗಳು ವಿವಿಧ ಅಪರಾಧಗಳಿಗೆ ಶಿಕ್ಷೆಗೊಳಗಾಗಿದ್ದಾರೆ.ಅವರಲ್ಲಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, 10 ಮಂದಿಗೆ ಎಂಟು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. +ವರ್ಷದ ಮೊದಲ ಸುಗ್ಗಿ ಹಬ್ಬ ಸಂಕ್ರಾಂತಿ ಸಂಭ್ರಮ +ಪ್ರಕರಣದ ಆರೋಪಿಗಳು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ನಾಯಕರು, ಕಾರ್ಯಕರ್ತರು ಅಥವಾ ಸದಸ್ಯರು. ಮುವಾಟ್ಟುಪುಳದಲ್ಲಿ ಪ್ರೊಫೆಸರ್ ಜೋಸೆಫ್ ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಸಂಬಂಧಿಸಿದ ಕ್ರಿಮಿನಲ್ ಪಿತೂರಿಯಲ್ಲಿ ಅವರು ಸಕ್ರಿಯವಾಗಿ ಭಾಗಿಯಾಗಿದ್ದರು. \ No newline at end of file diff --git a/eesanje/url_47_193_1.txt b/eesanje/url_47_193_1.txt new file mode 100644 index 0000000000000000000000000000000000000000..6cd08fd62b92acac9f745cd50f33c0f95cdb14ef --- /dev/null +++ b/eesanje/url_47_193_1.txt @@ -0,0 +1,8 @@ +ಇಂದು ಲಾಲ್‍ಬಹದ್ದೂರ್ ಶಾಸ್ತ್ರಿ ಅವರ 58ನೇ ಪುಣ್ಯಸ್ಮರಣೆ +ನವದೆಹಲಿ,ಜ.11-ಇಂದು ದೇಶದ ಎರಡನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 58 ನೇ ಪುಣ್ಯತಿಥಿ. ಸೈನಿಕ ಮತ್ತು ರೈತರನ್ನು ಒಂದುಗೂಡಿಸುವ ಜೈ ಜವಾನ್ ಜೈ ಕಿಸಾನ್ ಎಂಬ ಅವರ ಅಪ್ರತಿಮ ಘೋಷಣೆಯು ತಲೆಮಾರುಗಳಾದ್ಯಂತ ಪ್ರತಿಧ್ವನಿಸುತ್ತಲೇ ಇದೆ. +ಶಾಸ್ತ್ರಿಯವರ ಪರಂಪರೆ ಕೇವಲ ನಾಯಕತ್ವವನ್ನು ಮೀರಿದೆ. ಅವರು ತಮ್ಮ ನಮ್ರತೆ ಮತ್ತು ಸೌಮ್ಯ ನಡವಳಿಕೆಯಿಂದ ಜನಸಾಮಾನ್ಯರೊಂದಿಗೆ ಸಂಪರ್ಕ ಹೊಂದಿದ್ದರು, ದೃಢವಾದ ಮನೋಭಾವವನ್ನು ಮೈಗೂಡಿಸಿಕೊಂಡಿದ್ದರು. 1964 ರಲ್ಲಿ, ಜವಾಹರಲಾಲ್ ನೆಹರು ಅವರ ಮರಣದ ನಂತರ, ಶಾಸ್ತ್ರಿ ಅವರು ಅಧಿಕಾರ ವಹಿಸಿಕೊಂಡರು, ಈಗಾಗಲೇ ಭಾರತದ ಮೊದಲ ಸ್ವತಂತ್ರ ಸರ್ಕಾರದಲ್ಲಿ ಗೃಹ ಮಂತ್ರಿ ಮತ್ತು ರೈಲ್ವೆ ಸಚಿವರಂತಹ ನಿರ್ಣಾಯಕ ಪಾತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಅವರು ಇಂದಿಗೂ ತಮ್ಮ ಛಾಪನ್ನು ಉಳಿಸಿಕೊಂಡು ಬಂದಿದ್ದಾರೆ. +ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಕ್ಟೋಬರ್ 2, 1904 ರಂದು ಉತ್ತರ ಪ್ರದೇಶದ ವಾರಣಾಸಿಯಿಂದ ಏಳು ಮೈಲಿ ದೂರದಲ್ಲಿರುವ ಮೊಘಲ್ಸರಾಯ್ ಎಂಬ ಸಣ್ಣ ರೈಲ್ವೆ ಪಟ್ಟಣದಲ್ಲಿ ಜನಿಸಿದರು. ಅವರ ತಂದೆ ಶಾಲಾ ಶಿಕ್ಷಕರಾಗಿದ್ದರು, ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಕೇವಲ ಒಂದೂವರೆ ವರ್ಷದವರಾಗಿದ್ದಾಗ ನಿಧನರಾದರು. ಅವರು ಪ್ರೌಢಶಾಲೆಗೆ ಹೋಗಲು ವಾರಣಾಸಿಯಲ್ಲಿ ಚಿಕ್ಕಪ್ಪನೊಂದಿಗೆ ವಾಸಿಸಲು ಕಳುಹಿಸಲಾಯಿತು. ಬೇಸಿಗೆಯ ಬಿಸಿಯಲ್ಲಿ ಬೀದಿಗಳು ಸುಟ್ಟುಹೋದಾಗಲೂ ಶೂಗಳಿಲ್ಲದೆ ಶಾಲೆಗೆ ಅನೇಕ ಮೈಲುಗಳಷ್ಟು ನಡೆದುಕೊಂಡು ಹೋಗುತ್ತಿದ್ದರಂತೆ ಶಾಸ್ತ್ರಿಯವರು. +ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ..? +ಅವರು ಬೆಳೆದಂತೆ, ಅವರು ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟದಲ್ಲಿ ಆಸಕ್ತಿ ಹೊಂದಿದ್ದರು. ಅವರು ಮಹಾತ್ಮಾ ಗಾಂಯವರಿಂದ ಪ್ರೇರಿತರಾಗಿದ್ದರು ಮತ್ತು ಅವರು 16 ವರ್ಷದವರಾಗಿದ್ದಾಗ ಅಸಹಕಾರ ಚಳವಳಿಯನ್ನು ಸೇರಿದರು. 1927 ರಲ್ಲಿ ಅವರು ವಿವಾಹವಾದರು. ಅವರ ಪತ್ನಿ ಲಲಿತಾ ದೇವಿ ಅವರು ತಮ್ಮ ಊರಿಗೆ ಸಮೀಪದ ಮಿರ್ಜಾಪುರದಿಂದ ಬಂದಿದ್ದರು. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದರು, ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. ಇದು ಅವರ ನಾಯಕತ್ವದ ಗುಣಗಳನ್ನು ರೂಪಿಸಿತು. ಸ್ವಾತಂತ್ರ್ಯದ ನಂತರ, ಅವರಿಗೆ ಸರ್ಕಾರದಲ್ಲಿ ಪ್ರಮುಖ ಪಾತ್ರಗಳನ್ನು ವಹಿಸಲಾಯಿತು. +ವಿಧಾನಸೌಧದ ಮುಂದೆ ದಂಪತಿ ಹೈಡ್ರಾಮ +ಕಾಂಗ್ರೆಸ್ ಪಕ್ಷದ ದಣಿವರಿಯದ ಕೆಲಸಗಾರರಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮಂತ್ರಿ ಹುದ್ದೆಯ ನಡುವೆ ತಮ್ಮ ಸಂಘಟನಾ ಜಾದೂವಿನಿಂದ ಜನರ ಮನಗೆದ್ದಿದ್ದರು. \ No newline at end of file diff --git a/eesanje/url_47_193_10.txt b/eesanje/url_47_193_10.txt new file mode 100644 index 0000000000000000000000000000000000000000..8a67322793ec2dd76a1b6d7bbf1c5b6c6649987d --- /dev/null +++ b/eesanje/url_47_193_10.txt @@ -0,0 +1,8 @@ +ಭಾರತ 35 ಟ್ರಿಲಿಯನ್ ಡಾಲರ್ ಆರ್ಥಿಕತೆ ರಾಷ್ಟ್ರವಾಗುವುದನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ : ಅಂಬಾನಿ +ಗಾಂನಗರ (ಗುಜರಾತ್), ಜ.10- ಮುಂದಿನ 2047ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯನ್ನು ಭೂಮಿಯ ಮೇಲಿನ ಯಾವುದೇ ಶಕ್ತಿಯು ತಡೆಯಲು ಸಾಧ್ಯವಿಲ್ಲ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಹೇಳಿದ್ದಾರೆ. +ಗುಜರಾತ್‍ನಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇದರ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಕಾರಣವಾಗಲಿದೆ ಎಂದು ಹೇಳಿದರು.ಇಂತಹ ಶೃಂಗಸಭೆಯನ್ನು ನನ್ನ 20 ವರ್ಷಗಳ ಸುದೀರ್ಘ ಅವಯಲ್ಲಿ ನೋಡಿಲ್ಲ. ಇದೊಂದು ವಿಶ್ವಮಟ್ಟದ ಅತ್ಯಂತ ಪ್ರತಿಷ್ಠಿತ ಹೂಡಿಕೆದಾರರ ಶೃಂಗಸಭೆ ಎಂದು ಬಣ್ಣಿಸಿದ ಅವರು, ಶಕ್ತಿಯಿಂದ ಮತ್ತಷ್ಟು ಹೆಚ್ಚಿನ ಶಕ್ತಿಗೆ ಸಾಗುತ್ತಿರುವುದು ನಮಗೆ ಹೆಮ್ಮೆ ಎನಿಸುತ್ತದೆ. ಇದರಲ್ಲಿ ಪ್ರಧಾನಿಯವರ ಕೊಡುಗೆ ಅಪಾರ ಎಂದು ಬಣ್ಣಿಸಿದರು. +ಮೋದಿಯವರ ದೃಷ್ಟಿ ಮತ್ತು ಸ್ಥಿರತೆಯಿಂದಾಗಿ ಮುಂದಿನ 2047ರ ವೇಳೆಗೆ ಭಾರತವು 35 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಸಾಸುತ್ತಿದೆ ಎಂಬ ವಿಶ್ವಾಸವಿದೆ. ಆ ಹಾದಿಯಲ್ಲಿ ನಾವೀಗ ಸಾಗುತ್ತಿದ್ದೇವೆ ಎಂದು ಹೇಳಿದರು. +ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ +ಇಂದಿನ ಭಾರತದಲ್ಲಿ ಯುವಜನತೆ ಹೊಸತನ ಕಂಡುಕೊಳ್ಳಲು ಉತ್ಸುಕರಾಗಿದ್ದಾರೆ. ಲಕ್ಷಾಂತರ ಜನರಿಗೆ ಜೀವನ ಮತ್ತು ಸುಲಭವಾಗಿ ಸಂಪಾದಿಸಲು ಆರ್ಥಿಕತೆಯನ್ನು ಪ್ರವೇಶಿಸಲು ಉತ್ತಮ ಸಮಯವಾಗಿದೆ. ಮುಂಬರುವ ಪೀಳಿಗೆಗಳು ನಿಜವಾಗಿಯೂ ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರಬೇಕು ಎಂದರು. +ನಾನು ಗೇಟ್‍ವೇ ಆಫ್ ಇಂಡಿಯಾ ನಗರದಿಂದ ಆಧುನಿಕ ಭಾರತದ ಬೆಳವಣಿಗೆಯ ಹೆಬ್ಬಾಗಿಲಿಗೆ ಬಂದಿದ್ದೇನೆ. ನಾನು ಹೆಮ್ಮೆಯ ಗುಜರಾತಿ. ವಿದೇಶಿಗರು ಹೊಸ ಭಾರತದ ಬಗ್ಗೆ ಯೋಚಿಸಿದಾಗ, ಅವರು ಹೊಸ ಗುಜರಾತ್‍ನ ಬಗ್ಗೆ ಯೋಚಿಸುತ್ತಾರೆ. ಇದು ಹೇಗೆ ಆಯಿತು? ನಮ್ಮ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಒಬ್ಬ ನಾಯಕ ಕಾರಣ ಎಂದು ಪ್ರಧಾನಿಯನ್ನು ಬಣ್ಣಿಸಿದರು. +ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವವೇ ಗುಜರಾತ್‍ನ ಪರಿವರ್ತನಾ ಯಾತ್ರೆಗೆ ಕಾರಣ ಎಂದು ಹೇಳಿದ ಅಂಬಾನಿ, ನಮ್ಮ ಕಾಲದ ಶ್ರೇಷ್ಠ ಜಾಗತಿಕ ನಾಯಕ ಎಂದು ಶ್ಲಾಘಿಸಿದರು. ಮುಂದಿನ ಹತ್ತು ವರ್ಷಗಳಲ್ಲಿ ಗಮನಾರ್ಹ ಹೂಡಿಕೆಯೊಂದಿಗೆ ಗುಜರಾತ್‍ನ ಬೆಳವಣಿಗೆಯ ಕಥೆಯಲ್ಲಿ ರಿಲಾಯನ್ಸ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. \ No newline at end of file diff --git a/eesanje/url_47_193_11.txt b/eesanje/url_47_193_11.txt new file mode 100644 index 0000000000000000000000000000000000000000..6dd0d8e60ab2800cd370e69312c7dce9deda405c --- /dev/null +++ b/eesanje/url_47_193_11.txt @@ -0,0 +1,8 @@ +ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ +ನವದೆಹಲಿ, ಜ.10- ಕೇಂದ್ರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದೆ. ಕೇಂದ್ರ ಸರ್ಕಾರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ ಹೆಚ್ಚಳ) ಮತ್ತು ಮನೆ ಬಾಡಿಗೆ ಭತ್ಯೆ (ಎಚ್‍ಆರ್‍ಎ)ಯನ್ನು ಹೆಚ್ಚಲಿಸಿದೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ತುಟ್ಟಿ ಭತ್ಯೆಯನ್ನು ಶೇ.46ರ ದರದಲ್ಲಿ ಪಡೆಯುತ್ತಿದ್ದಾರೆ. ಕೇಂದ್ರವು ಡಿಎಯನ್ನು ಶೇ.4ರಷ್ಟು ಹೆಚ್ಚಿಸಬಹುದು. ಇದಾದರೆ ಡಿಎ ಶೇ.50ಕ್ಕೆ ಏರಿಕೆಯಾಗಲಿದೆ. +ಡಿಎ ಮತ್ತು ಎಚ್‍ಆರ್‍ಎ ಎರಡನ್ನೂ ಹೆಚ್ಚಿಸಿದರೆ, ಕೇಂದ್ರ ಸರ್ಕಾರಿ ನೌಕರರು ತಮ್ಮ ಸಂಬಳದಲ್ಲಿ ನಿರ್ದಿಷ್ಟ ಹೆಚ್ಚಳ ಪಡೆಯುತ್ತಾರೆ. ಎಚ್‍ಆರ್‍ಎ ಪ್ರಮಾಣವು ನಗರದಿಂದ ನಗರಕ್ಕೆ ಭಿನ್ನವಾಗಿರುತ್ತದೆ ಮತ್ತು ಬಾಡಿಗೆ ಮನೆಯಲ್ಲಿ ವಾಸಿಸುವ ಉದ್ಯೋಗಿಗಳು ಮಾತ್ರ ಎಚ್‍ಆರ್‍ಎ ಪ್ರಯೋಜನವನ್ನು ಪಡೆಯುತ್ತಾರೆ ಎಂಬುದನ್ನು ಗಮನಿಸಬೇಕು. +ಉದಾಹರಣೆಗೆ, ಶ್ರೇಣಿ-1 ನಗರಗಳಲ್ಲಿ ವಾಸಿಸುವ ಉದ್ಯೋಗಿಗಳು ಶ್ರೇಣಿ-2 ಅಥವಾ ಶ್ರೇಣಿ-3 ನಗರಗಳಲ್ಲಿ ವಾಸಿಸುವ ಉದ್ಯೋಗಿಗಳಿಗಿಂತ ಹೆಚ್ಚಿನ ಮನೆ ಬಾಡಿಗೆ ಭತ್ಯೆಯನ್ನು ಪಡೆಯುತ್ತಾರೆ. ಸಾಮಾನ್ಯವಾಗಿ ಎಐಸಿಪಿಐ ಸೂಚ್ಯಂಕದ ಅರ್ಧ-ವಾರ್ಷಿಕ ಡೇಟಾವನ್ನು ಆಧರಿಸಿ ಜನವರಿ ಮತ್ತು ಜುಲೈನಲ್ಲಿ ಡಿಎ ದರವನ್ನು ವರ್ಷಕ್ಕೆ ಎರಡು ಬಾರಿ ಪರಿಷ್ಕರಿಸಲಾಗುತ್ತದೆ. +2023ರಲ್ಲಿ ಒಟ್ಟು ಶೇ.8ರಷ್ಟು ಡಿಎ ಹೆಚ್ಚಿಸಲಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರು ತುಟ್ಟಿಭತ್ಯೆಯಲ್ಲಿ 4% ಅಥವಾ ಅದಕ್ಕಿಂತ ಹೆಚ್ಚಿನ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ. ಡಿಎ ಹೆಚ್ಚಳವು ಜಾರಿಗೆ ಬಂದರೆ, ಜನವರಿ 2024 ರಿಂದ ಜಾರಿಗೆ ಬರಲಿದೆ ಮತ್ತು 2024 ರ ಹೋಳಿ ಮೊದಲು ಘೋಷಿಸುವ ನಿರೀಕ್ಷೆಯಿದೆ. +ಸಮೀಪಿಸುತ್ತಿದೆ ಲೋಕಸಭೆ ಚುನಾವಣೆ, ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆಗಳು +ಕರ್ನಾಟಕದಲ್ಲೂ 7ನೇ ರಾಜ್ಯ ವೇತನ ಆಯೋಗದ ವರದಿಯನ್ನು ಯಾವಾಗ ಜಾರಿ ಮಾಡಬಹುದು ಎಂದು ಸರ್ಕಾರಿ ನೌಕರರು ನಿರೀಕ್ಷೆ ಹೊಂದಿದ್ದಾರೆ. ಮಾರ್ಚ್‍ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದೆ. +ಆಯೋಗದ ಶಿಫಾರಸು ಜಾರಿ ಮಾಡಲು ಮುಂದಾದರೆ ಸರ್ಕಾರಕ್ಕೆ ಆಗುವ ಆರ್ಥಿಕ ಹೊರೆಯ ಕುರಿತು ಈಗ ಚರ್ಚೆಗಳು ನಡೆಯುತ್ತಿವೆ. ನವೆಂಬರ್ 6ರಂದು ಕರ್ನಾಟಕ ಸರ್ಕಾರ ಆದೇಶವೊಂದನ್ನು ಹೊರಡಿಸಿದೆ. 7ನೇ ರಾಜ್ಯ ವೇತನ ಆಯೋಗದ ಅವಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. \ No newline at end of file diff --git a/eesanje/url_47_193_12.txt b/eesanje/url_47_193_12.txt new file mode 100644 index 0000000000000000000000000000000000000000..564f07806bb725380592787172cb362e0e30b225 --- /dev/null +++ b/eesanje/url_47_193_12.txt @@ -0,0 +1,8 @@ +ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕರಸೇವಕರಿಗೂ ಆಹ್ವಾನ +ಅಯೋಧ್ಯೆ(ಉತ್ತರಪ್ರದೇಶ),ಜ.10- ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಮಮಂದಿರ ನಿರ್ಮಾಣದಲ್ಲಿ ಪಾತ್ರವಹಿಸಿದ್ದ ಹಲವು ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ. ಇದರೊಂದಿಗೆ ಕರಸೇವೆಯ ವೇಳೆ ತಲಾ 100 ರೂ. ದೇಣಿಗೆ ನೀಡಿದ ಕರಸೇವಕರಿಗೂ ಆಹ್ವಾನ ನೀಡಲಾಗಿದೆ. +ನಿನ್ನೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಭೆ ನಡೆಸಿದ ಸಂದರ್ಭದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಕರ ಸಂಕ್ರಾಂತಿಯ ನಂತರ ಪ್ರಾರಂಭವಾಗುವ ಪ್ರಾಣ ಪ್ರತಿಷ್ಠೆಯ ವೈದಿಕ ಆಚರಣೆಗಳ ಬಗ್ಗೆ ಮಾಹಿತಿ ಪಡೆದ ಆದಿತ್ಯನಾಥ್, ಸಮಾರಂಭದ ಭದ್ರತೆ ಮತ್ತು ಇತರ ವ್ಯವಸ್ಥೆಗಳಲ್ಲಿ ತೀರ್ಥ ಕ್ಷೇತ್ರ ಟ್ರಸ್ಟ್‍ಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವಂತೆ ಅಕಾರಿಗಳಿಗೆ ಸೂಚಿಸಿದ್ದಾರೆ. +ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಬರುವ ಗಣ್ಯರಿಗೆ ಅಯೋಧ್ಯೆಯಲ್ಲಿ ಉತ್ತಮ ಆತಿಥ್ಯ ಸಿಗಬೇಕು, ಪ್ರತಿ ವಿಐಪಿ ಅತಿಥಿಗಳ ವಿಶ್ರಾಂತಿ ಸ್ಥಳವನ್ನು ಮುಂಚಿತವಾಗಿ ಆಯ್ಕೆ ಮಾಡಬೇಕು. ಹವಾಮಾನವನ್ನು ಪರಿಗಣಿಸಿ, ಕೆಲವು ಅತಿಥಿಗಳು ಒಂದು ಅಥವಾ ಎರಡು ದಿನ ಮುಂಚಿತವಾಗಿ ಬರುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಅವರ ವಾಸ್ತವ್ಯಕ್ಕೆ ಉತ್ತಮ ವ್ಯವಸ್ಥೆಗಳು ಇರಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. +ಪಾಕ್ ಜೈಲಿನಲ್ಲಿ 78 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ ಮುಂಬೈ ದಾಳಿಯ ಮಾಸ್ಟರ್ ಮೈಂಡ್ +ಅಯೋಧ್ಯೆಯಲ್ಲಿ ಹೋಟೆಲ್‍ಗಳು ಮತ್ತು ಧರ್ಮ ಶಾಲಾಗಳಿವೆ. ಹೋಮ್ ಸ್ಟೇ ವ್ಯವಸ್ಥೆಯೂ ಲಭ್ಯವಿದೆ. ಟೆಂಟ್ ನಗರಗಳ ಸಂಖ್ಯೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ. ಕುಂಭ ಮಾದರಿಯಲ್ಲಿ ಅಯೋಧ್ಯೆಯಲ್ಲಿ 25-50 ಎಕರೆ ಪ್ರದೇಶದಲ್ಲಿ ಭವ್ಯ ಟೆಂಟ್ ಸಿಟಿ ನಿರ್ಮಾಣವಾಗಬೇಕು. +ಜ.22ರ ನಂತರ ಪ್ರಪಂಚದಾದ್ಯಂತದ ರಾಮ ಭಕ್ತರು ಅಯೋಧ್ಯೆಗೆ ಆಗಮಿಸುತ್ತಾರೆ ಮತ್ತು ಅವರ ಅನುಕೂಲಕ್ಕಾಗಿ ಇಡೀ ನಗರದಲ್ಲಿ ವಿವಿಧ ಭಾಷೆಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ಮಾರ್ಗಸೂಚಿಗಳು ಸಂವಿಧಾನದ 8ನೇ ಶೆಡ್ಯೂಲ್‍ನಲ್ಲಿರುವ ಭಾಷೆಗಳಲ್ಲಿ ಮತ್ತು ವಿಶ್ವಸಂಸ್ಥೆಯ ಆರು ಭಾಷೆಗಳಲ್ಲಿ ಇರಬೇಕು ಎಂದಿದ್ದಾರೆ. +ಜ.22ರಂದು ಸಂಜೆ ಹರ್ ದೇವ್ ದೇವಸ್ಥಾನದಲ್ಲಿ ದೀಪೋತ್ಸವವನ್ನು ಆಚರಿಸಲಾಗುವುದು. ಪ್ರತಿಯೊಬ್ಬ ಸನಾತನ ಭಕ್ತರು ತಮ್ಮ ಮನೆ/ಸಂಸ್ಥೆಗಳಲ್ಲಿ ರಾಮಜ್ಯೋತಿಯನ್ನು ಬೆಳಗಿಸುವ ಮೂಲಕ ರಾಮಲಲ್ಲಾನನ್ನು ಸ್ವಾಗತಿಸುತ್ತಾರೆ. ಹೀಗಾಗಿ ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಬೇಕು. ಸಂಜೆ ಪಟಾಕಿ ಸಿಡಿಸುವ ವ್ಯವಸ್ಥೆಯನ್ನೂ ಮಾಡಬೇಕು. ಪಟ್ಟಾಕಾರ ಸಮಾರಂಭವನ್ನು ಅಯೋಧ್ಯೆಯಲ್ಲಿ ನೇರಪ್ರಸಾರ ಮಾಡಬೇಕು. ಇದಕ್ಕಾಗಿ ಮೊಬೈಲ್ ವ್ಯಾನ್, ಎಲ್‍ಇಡಿ ಪರದೆ ಇತ್ಯಾದಿ ವ್ಯವಸ್ಥೆ ಮಾಡಬೇಕು ಎಂದೂ ಅವರು ಸೂಚಿಸಿದ್ದಾರೆ. \ No newline at end of file diff --git a/eesanje/url_47_193_2.txt b/eesanje/url_47_193_2.txt new file mode 100644 index 0000000000000000000000000000000000000000..4c0fb3297cab41743d4be5dc579ae8f04fc5a189 --- /dev/null +++ b/eesanje/url_47_193_2.txt @@ -0,0 +1,10 @@ +ರಾಮಮಂದಿರ ಆಹ್ವಾನ ತಿರಸ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ : ಬಿಜೆಪಿ +ತಿರುವನಂತಪುರಂ, ಜ 11 (ಪಿಟಿಐ) ರಾಮ ಮಂದಿರದ ಆಹ್ವಾನವನ್ನು ನಿರಾಕರಿಸುವವರ ವಿರುದ್ಧ ಕೇರಳದ ಪ್ರಭಾವಿ ನಾಯರ್ ಸಮುದಾಯದ ನಿಲುವಿನಿಂದ ಉತ್ತೇಜಿತವಾಗಿರುವ ಬಿಜೆಪಿ ಗುರುವಾರ ಕಾಂಗ್ರೆಸ್-ಕಮ್ಯುನಿಸ್ಟ್ ಮೈತ್ರಿಕೂಟದ ಕಣ್ಣು ತೆರೆಸಿದೆ ಎಂದು ಆರೋಪಿಸಿದೆ ಮಾತ್ರವಲ್ಲ ಈ ಘಟನೆ ಮತ್ತು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ದೂರಿದೆ. +ರಾಜಕೀಯ ಕಾರಣಗಳಿಗಾಗಿ ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದು ದೇವರ ಮೇಲಿನ ಅಗೌರವ ಎಂದು ಪ್ರತಿಪಾದಿಸಿದ ನಾಯರ್ ಸರ್ವೀಸ್ ಸೊಸೈಟಿ (ಎನ್‍ಎಸ್‍ಎಸ್ ) ಪ್ರಧಾನ ಕಾರ್ಯದರ್ಶಿ ಜಿ ಸುಕುಮಾರನ್ ನಾಯರ್ ಅವರ ಹೇಳಿಕೆಯನ್ನು ಸ್ವಾಗತಿಸಿರುವ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರು, ಸಂಘಟನೆಯ ನಿಲುವು ಹಿಂದೂ ಸಮುದಾಯದಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದಿದ್ದಾರೆ. +ಫೇಸ್‍ಬುಕ್ ಪೋಸ್ಟ್‍ನಲ್ಲಿ, ಸುರೇಂದ್ರನ್ ಅವರು, ನಿಮ್ಮ ಸ್ಪಷ್ಟ ನಿಲುವು, ಹಿಂದೂ ಸಮುದಾಯದ ಹೃದಯದಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದು ಪ್ರಭಾವಿ ನಾಯರ್ ಸಂಘಟನೆಯ ಹೇಳಿಕೆಯ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಇದು ಹಿಂದೂ ಸಮುದಾಯದ ಐಕ್ಯತೆ ಬಲಪಡಿಸಲು ಸಹಕಾರಿಯಾಗಲಿದೆ ಎಂದು ಬಣ್ಣಿಸಿದ್ದಾರೆ. +ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ವಿ ಮುರಳೀಧರನ್ ಅವರು ಈ ವಿಷಯದಲ್ಲಿ ಎನ್‍ಎಸ್‍ಎಸ್‍ನ ನಿಲುವನ್ನು ಶ್ಲಾಘಿಸಿದರು, ನಾಯರ್ ಸಂಘಟನೆಯ ನಿಲುವು ಬಹುಮತದ ನಂಬಿಕೆಯನ್ನು ಮತ್ತೊಮ್ಮೆ ಅಗೌರವಿಸಿದ ಕಾಂಗ್ರೆಸ್-ಕಮ್ಯುನಿಸ್ಟ್ ಮೈತ್ರಿಗೆ ಕಣ್ಣು ತೆರೆಸುವಂತಿರಬೇಕು ಎಂದು ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಆಹ್ವಾನವನ್ನು ತಿರಸ್ಕರಿಸಿದೆ. +ಅಯೋಧ್ಯೆಯಲ್ಲಿನ ಮಹಾನ್ ದೇವಾಲಯ ಸನಾತನ ಭಕ್ತರ 500 ವರ್ಷಗಳ ಕಾಯುವಿಕೆಯ ಪರಾಕಾಷ್ಠೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ. ಅಯೋಧ್ಯೆ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದಕ್ಕಾಗಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರನ್ನು ಟೀಕಿಸಿದ ಕೇಂದ್ರ ಸಚಿವ ಮುರುಳೀಧರನ್ ಅವರು ದೇವರ ಪುಣ್ಯಭೂಮಿಯನ್ನು ಅವಮಾನಿಸುವುದು ದೇವರನ್ನು ಅವಮಾನಿಸಿದಂತೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ..? +ಯಾರ ಪ್ರಭಾವದಿಂದ ಈ ಮೈತ್ರಿಕೂಟವು ಸಮಾರಂಭವನ್ನು ಬಹಿಷ್ಕರಿಸಿದೆ ಎಂಬುದು ಸ್ಪಷ್ಟವಾಗಿದೆ. ಕೇರಳದಲ್ಲಿ ದೇವರನ್ನು ನಂಬುವ ಜನರು ಈ ತುಷ್ಟೀಕರಣ ರಾಜಕೀಯಕ್ಕೆ ಪ್ರತಿಕ್ರಿಯಿಸುತ್ತಾರೆ ಎಂದು ಅವರು ಹೇಳಿದರು. +ರಾಮಮಂದಿರ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್‍ನ ಉನ್ನತ ನಾಯಕರ ಆಹ್ವಾನವನ್ನು ಗೌರವಯುತ ತಿರಸ್ಕರಿಸಿದ ತಕ್ಷಣ, ಎನ್‍ಎಸ್‍ಎಸ್ ರಾಜಕೀಯದ ಹೆಸರಿನಲ್ಲಿ ಇಂತಹ ಉಪಕ್ರಮವನ್ನು ಬಹಿಷ್ಕರಿಸುವುದು ದೇವರಿಗೆ ಅಗೌರವ ಎಂದು ಹೇಳಿದೆ. ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷ ವಿರೋಧಿಸುತ್ತಿದ್ದರೆ ಅದು ಅವರ ಸ್ವಾರ್ಥ ಮತ್ತು ರಾಜಕೀಯ ಲಾಭಕ್ಕಾಗಿ ಮಾತ್ರ ಎಂದು ಸುಕುಮಾರನ್ ನಾಯರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅೀಧಿರ್ ರಂಜನ್ ಚೌಧರಿ ಬುಧವಾರ ಬಿಜೆಪಿಯು ಚುನಾವಣಾ ಲಾಭಕ್ಕಾಗಿ ಇದನ್ನು ರಾಜಕೀಯ ಯೋಜನೆ ಆಗಿ ಪರಿವರ್ತಿಸುತ್ತಿದೆ ಎಂದು ಆರೋಪಿಸಿದರು ಮತ್ತು ಧರ್ಮವು ವೈಯಕ್ತಿಕ ವಿಷಯ ಎಂದು ಪ್ರತಿಪಾದಿಸಿದರು. \ No newline at end of file diff --git a/eesanje/url_47_193_3.txt b/eesanje/url_47_193_3.txt new file mode 100644 index 0000000000000000000000000000000000000000..ec96dd98dc8365c03a1d0e9fea9c1880cbc3cae0 --- /dev/null +++ b/eesanje/url_47_193_3.txt @@ -0,0 +1,7 @@ +ನಿರುದ್ಯೋಗ ನಿವಾರಿಸುವಲ್ಲಿ ಮೋದಿ ವಿಫಲರಾಗಿದ್ದಾರೆ : ಜೈರಾಮ್ +ನವದೆಹಲಿ, ಜ 11 (ಪಿಟಿಐ) ಕಳೆದ ಹತ್ತು ವರ್ಷಗಳ ಮೋದಿ ಸರಕಾರದ ಅವಧಿಯಲ್ಲಿ ದೇಶದ ಉದ್ಯೋಗ ಕ್ಷಾಮ ಹೆಚ್ಚಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. +ದೇಶದ ಯುವಜನರು ಉತ್ತಮ ಗುಣಮಟ್ಟದ ಉದ್ಯೋಗಗಳನ್ನು ನೀಡುವ ಬೆಳವಣಿಗೆಗೆ ಅರ್ಹರು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿಅಂಶಗಳ ಪ್ರಕಾರ, 25-29 ವರ್ಷ ವಯಸ್ಸಿನ ಯುವಕರ ನಿರುದ್ಯೋಗವು ಸುಮಾರು ನಾಲ್ಕು ವರ್ಷಗಳಲ್ಲಿ ಅತಿ ಹೆಚ್ಚು, ಡಿಸೆಂಬರ್ 2023 ರಲ್ಲಿ ಶೇ.15.5 ರಷ್ಟಿದೆ ಎಂದು ಅವರು ಹೇಳಿದರು. +ಇದರರ್ಥ ಈಗ ನಿರುದ್ಯೋಗವು ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿದ್ದಕ್ಕಿಂತ ಕೆಟ್ಟದಾಗಿದೆ ಎಂದು ಅವರು ಆರೋಪಿಸಿದರು. 20-24 ವರ್ಷ ವಯಸ್ಸಿನ ಯುವಕರಿಗೆ, ನಿರುದ್ಯೋಗ ದರವು 45.5 ಪ್ರತಿಶತದಷ್ಟಿದೆ ಎಂದು ಅವರು ಹೇಳಿದರು. +ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ..? +30 ರಿಂದ 34 ವರ್ಷದೊಳಗಿನವರಲ್ಲಿಯೂ ನಿರುದ್ಯೋಗ ದರವು ಮೂರು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ ಎಂದು ಅವರು ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಬಿಕ್ಕಟ್ಟು ವಿಶೇಷವಾಗಿ ಕೆಟ್ಟದಾಗಿದೆ ಮತ್ತು ಬೇರೆ ಯಾವುದೇ ಉದ್ಯೋಗಗಳು ಲಭ್ಯವಿಲ್ಲದ ಕಾರಣ ಹೆಚ್ಚಿನ ಕುಟುಂಬಗಳು ಮನರೆಗಾಕ್ಕೆ ತಿರುಗುತ್ತಿವೆ ಎಂದು ಅವರು ಹೇಳಿದರು. +ವರ್ಷಕ್ಕೆ 2 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ಅತ್ಯಂತ ದಯನೀಯವಾಗಿ ವಿಫಲರಾಗಿದ್ದಾರೆ ಎಂಬುದು ಸಂಪೂರ್ಣವಾಗಿ ಸ್ಪಷ್ಟವಾಗಿದೆ ಎಂದು ರಮೇಶ್ ಹೇಳಿದರು. \ No newline at end of file diff --git a/eesanje/url_47_193_4.txt b/eesanje/url_47_193_4.txt new file mode 100644 index 0000000000000000000000000000000000000000..9236aafa98252c91ef205761fa3b8a6bd99a21c0 --- /dev/null +++ b/eesanje/url_47_193_4.txt @@ -0,0 +1,6 @@ +ಶಿಂಧೆ ಬಣಕ್ಕೆ ಮಾನ್ಯತೆ ನೀಡಿರುವುದನ್ನು ಲೇವಡಿ ಮಾಡಿದ ಸಿಬಲ್ +ನವದೆಹಲಿ, ಜ 11 (ಪಿಟಿಐ) ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವನ್ನು ನಿಜ ಶಿವಸೇನೆ ಎಂದು ಘೋಷಿಸಿದ ಒಂದು ದಿನದ ನಂತರ, ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಈ ನಾಟಕವನ್ನು ಬಹಳ ಹಿಂದೆಯೇ ಸ್ಕ್ರಿಪ್ಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. +2022 ರ ಜೂನ್‍ನಲ್ಲಿ ಪ್ರತಿಸ್ರ್ಪಧಿ ಗುಂಪುಗಳು ಹೊರಹೊಮ್ಮಿದಾಗ ಅವರ ನೇತೃತ್ವದ ಶಿವಸೇನೆ ಬಣವೇ ನೈಜ ರಾಜಕೀಯ ಪಕ್ಷ ಎಂದು ಶಿಂಧೆ ಅವರಿಗೆ ದೊಡ್ಡ ರಾಜಕೀಯ ಗೆಲುವಿನಲ್ಲಿ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ ಆದರೆ, ಎರಡು ಶಿಬಿರಗಳಿಂದ ಯಾವುದೇ ಶಾಸಕರನ್ನು ಅನರ್ಹಗೊಳಿಸಿಲ್ಲ. ಶಿಂಧೆ ಅವರ ಬಂಡಾಯದ 18 ತಿಂಗಳ ನಂತರ ಉನ್ನತ ಹುದ್ದೆಯಲ್ಲಿ ಸ್ಥಾನವನ್ನು ಭದ್ರಪಡಿಸಿತು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಮತ್ತು ಎನ್‍ಸಿಪಿ (ಅಜಿತ್ ಪವಾರ್ ಗುಂಪು) ಒಳಗೊಂಡಿರುವ ಆಡಳಿತ ಒಕ್ಕೂಟದಲ್ಲಿ ಅವರ ರಾಜಕೀಯ ಬಲವನ್ನು ಹೆಚ್ಚಿಸಿದೆ. +ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ..? +ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಸಿಬಲ್ಅವರು, ಸ್ಪೀಕರ್ (ಟ್ರಿಬ್ಯೂನಲ್ ಆಗಿ) ಶಿಂಧೆಸ್ ಬಣ ನಿಜವಾದ ಸೇನಾ. ನಾಟಕವನ್ನು ಬಹಳ ಹಿಂದೆಯೇ ಸ್ಕ್ರಿಪ್ಟ್ ಮಾಡಲಾಗಿದೆ. ಯಾವುದೇ ನಿರಾಕರಣೆಯಿಲ್ಲದೆ ಪ್ರಹಸನವನ್ನು ನಾವು ನೋಡುತ್ತಿದ್ದೇವೆ ಎಂದಿದ್ದಾರೆ. ಅದು ಈ ಪ್ರಜಾಪ್ರಭುತ್ವದ ತಾಯಿಯ ದುರಂತ ಎಂದು ಮಾಜಿ ಕೇಂದ್ರ ಸಚಿವರು ಆಗಿರುವ ಸಿಬಲ್ ವಾಗ್ದಾಳಿ ನಡೆಸಿದ್ದಾರೆ. +2022 ರಲ್ಲಿ ಪಕ್ಷದಲ್ಲಿನ ವಿಭಜನೆಯ ನಂತರ ಪರಸ್ಪರರ ಶಾಸಕರನ್ನು ಅನರ್ಹಗೊಳಿಸಲು ಶಿವಸೇನೆ ಬಣಗಳ ಅಡ್ಡ ಅರ್ಜಿಗಳ ಮೇಲಿನ ಬಹುನಿರೀಕ್ಷಿತ ತೀರ್ಪಿನ ಪ್ರಮುಖ ಅಂಶಗಳ ತನ್ನ 105 ನಿಮಿಷಗಳ ಸುದೀರ್ಘ ಓದುವಿಕೆಯಲ್ಲಿ, ನಾರ್ವೇಕರ್ ಕೂಡ ಉದ್ಧವ್ ಠಾಕ್ರೆ ಬಣದ ಅರ್ಜಿಯನ್ನು ತಿರಸ್ಕರಿಸಿದ್ದಾರೆ. \ No newline at end of file diff --git a/eesanje/url_47_193_5.txt b/eesanje/url_47_193_5.txt new file mode 100644 index 0000000000000000000000000000000000000000..5fbddcadd7d72da2374cd35f6fdfc04a7a959903 --- /dev/null +++ b/eesanje/url_47_193_5.txt @@ -0,0 +1,5 @@ +ಪರೇಡ್ ರಿಹರ್ಸಲ್‍ನಿಂದ ಇಂಡಿಯನ್ ಗೇಟ್ ಬಳಿ ಟ್ರಾಫಿಕ್ ಜಾಮ್ +ನವದೆಹಲಿ, ಜ 11 (ಪಿಟಿಐ) ಗಣರಾಜ್ಯೋತ್ಸವ ಪರೇಡ್ ರಿಹರ್ಸಲ್‍ನಿಂದಾಗಿ ಕೇಂದ್ರ ದೆಹಲಿಯ ಇಂಡಿಯಾ ಗೇಟ್ ಬಳಿ ನಾಲ್ಕು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯ್ ಚೌಕ್ ಮತ್ತು ಸುತ್ತಮುತ್ತಲಿನ ಕ್ರಾಸಿಂಗ್‍ಗಳನ್ನು ತಪ್ಪಿಸುವಂತೆ ದೆಹಲಿ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ. +ಗಣರಾಜ್ಯೋತ್ಸವದ ಪರೇಡ್ ಪೂರ್ವಾಭ್ಯಾಸದ ಕಾರಣ ಇಂದು 7.00 ಗಂಟೆಯಿಂದ 11.30 ಗಂಟೆಗಳವರೆಗೆ ವಿಜಯ್ ಚೌಕ್, ರಫಿ ಮಾರ್ಗ-ಕರ್ತವ್ಯಪಥ್ ಕ್ರಾಸಿಂಗ್, ಜನಪಥ್-ಕಾರ್ತವ್ಯಪಥ್ ಕ್ರಾಸಿಂಗ್, ಮತ್ತು ಮಾನ್ ಸಿಂಗ್ ರಸ್ತೆ- ಕರ್ತವ್ಯಪಥ್ ಕ್ರಾಸಿಂಗ್ ಅನ್ನು ದಯವಿಟ್ಟು ತಪ್ಪಿಸಿ ಎಂದು ಅದು ದೆಹಲಿ ಪೊಲೀಸರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಸ್ಪರ್ಧೆ..? +ನಿನ್ನೆ ಪರೇಡ್ ರಿಹರ್ಸಲ್‍ನಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ವಿಪರಿತ ಟ್ರಾಫಿಕ್ ಜಾಮ್ ಉಂಟಾಗಿತ್ತು ಇದನ್ನು ಗಮನದಲ್ಲಿಟ್ಟುಕೊಂಡು ಪೋಲೀಸರು ಈ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_193_6.txt b/eesanje/url_47_193_6.txt new file mode 100644 index 0000000000000000000000000000000000000000..b97bc46a3f7facb05ed6e7b7537be88cfe248497 --- /dev/null +++ b/eesanje/url_47_193_6.txt @@ -0,0 +1,7 @@ +ಆಯೋಧ್ಯೆ ಪ್ರವಾಸಕ್ಕೆ ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆ +ರಾಯ್‍ಪುರ, ಜ 11 (ಪಿಟಿಐ) ಛತ್ತೀಸ್‍ಗಢದ ಬಿಜೆಪಿ ಸರ್ಕಾರವು ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನಕ್ಕೆ ಹೋಗಲು ಬಯಸುವ ಜನರಿಗೆ ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆಗೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದ ಮತ್ತೊಂದು ಭರವಸೆಯನ್ನು ಪೂರೈಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. +ವಾರ್ಷಿಕ ತೀರ್ಥಯಾತ್ರೆಗೆ 20,000 ಜನರನ್ನು ರೈಲಿನಲ್ಲಿ ಅಯೋಧ್ಯೆಗೆ ಕರೆದೊಯ್ಯಲಾಗುವುದು ಎಂದು ಅದು ಹೇಳಿದೆ. ವೈದ್ಯಕೀಯವಾಗಿ ಫಿಟ್ ಆಗಿರುವ 18 ರಿಂದ 75 ವರ್ಷ ವಯಸ್ಸಿನವರು ಈ ಯೋಜನೆಯಡಿ ಅರ್ಹರಾಗಿರುತ್ತಾರೆ. ಮೊದಲ ಹಂತದಲ್ಲಿ 55 ವರ್ಷ ಮೇಲ್ಪಟ್ಟವರ ಆಯ್ಕೆ ನಡೆಯಲಿದೆ. ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು. +ಯೋಜನೆಯನ್ನು ಛತ್ತೀಸ್‍ಗಢ ಪ್ರವಾಸೋದ್ಯಮ ಮಂಡಳಿಯು ಜಾರಿಗೊಳಿಸುತ್ತದೆ ಮತ್ತು ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯ ಬಜೆಟ್ ಅನ್ನು ಒದಗಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು ಭಾರತೀಯ ರೈಲ್ವೇಸ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾಪೆರ್ರೇಷನ್‍ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಮತ್ತು ವಾರಕ್ಕೊಮ್ಮೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು. +ಬಳ್ಳಾರಿ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆ ಬಿ.ಶ್ವೇತಾ ಆಯ್ಕೆ +ಜನರು ರಾಯ್‍ಪುರ, ದುರ್ಗ ರಾಯ್‍ಗಢ ಮತ್ತು ಅಂಬಿಕಾಪುರ ನಿಲ್ದಾಣಗಳಿಂದ ವಿಶೇಷ ರೈಲಿನಲ್ಲಿ ಹತ್ತಬಹುದು. 900-ಕಿಮೀ ಪ್ರವಾಸದ ಮುಖ್ಯ ತಾಣವೆಂದರೆ ಅಯೋಧ್ಯೆ ಎಂದು ಪ್ರಕಟಣೆ ತಿಳಿಸಿದೆ. ಪ್ರವಾಸದ ಸಮಯದಲ್ಲಿ, ಯಾತ್ರಾರ್ಥಿಗಳು ವಾರಣಾಸಿಯಲ್ಲಿ ರಾತ್ರಿ ವಿರಾಮವನ್ನು ಮಾಡುತ್ತಾರೆ, ಅಲ್ಲಿ ಅವರನ್ನು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಕರೆದೊಯ್ಯಲಾಗುತ್ತದೆ ಮತ್ತು ಗಂಗಾ ಆರತಿಯಲ್ಲಿ ಭಾಗವಹಿಸುತ್ತಾರೆ. +ಗಮನಾರ್ಹವಾಗಿ, ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯನ್ನು ಗುರುತಿಸಲು ಸಾಯಿ ಸರ್ಕಾರವು ಕಳೆದ ವಾರ ಜನವರಿ 22 ಅನ್ನು ಒಣ ದಿನವೆಂದು ಘೋಷಿಸಲು ನಿರ್ಧರಿಸಿತು. ಮತ್ತೊಂದು ನಿರ್ಧಾರದಲ್ಲಿ, ಛತ್ತೀಸ್‍ಗಢ ಹೈಕೋರ್ಟ್‍ನ ಹಿರಿಯ ವಕೀಲ ಪ್ರಫುಲ್ ಭರತ್ ಅವರನ್ನು ಹೊಸ ಅಡ್ವೊಕೇಟ್ ಜನರಲ್ (ಎಜಿ) ಆಗಿ ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ. ಕಳೆದ ತಿಂಗಳು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜೀನಾಮೆ ನೀಡಿದ ಮಾಜಿ ಎಜಿ ಸತೀಶ್ ಚಂದ್ರ ವರ್ಮಾ ಅವರ ಸ್ಥಾನಕ್ಕೆ ಅವರು ನೇಮಕಗೊಳ್ಳಲಿದ್ದಾರೆ. \ No newline at end of file diff --git a/eesanje/url_47_193_7.txt b/eesanje/url_47_193_7.txt new file mode 100644 index 0000000000000000000000000000000000000000..e0df64b51073e72a08f9af6467c79a48fd7e168f --- /dev/null +++ b/eesanje/url_47_193_7.txt @@ -0,0 +1,8 @@ +ಜಾಗತಿಕ ಅನಿಶ್ಚಿತತೆಗಳ ನಡುವೆ ಭಾರತ ಭರವಸೆಯ ಹೊಸ ಕಿರಣವಾಗಲಿದೆ : ಮೋದಿ +ಗಾಂಧಿನಗರ,ಜ.10: ಜಾಗತಿಕವಾಗಿ ಎದುರಿಸುತ್ತಿರುವ ಅನೇಕ ಅನಿಶ್ಚಿತತೆಗಳ ನಡುವೆ ಭಾರತವು ಭರವಸೆಯ ಹೊಸ ಕಿರಣವಾಗಿ ಹೊರಹೊಮ್ಮಿದೆ ಮತ್ತು ಜಗತ್ತು ಇದನ್ನು ಸ್ಥಿರತೆಯ ಪ್ರಮುಖ ಸ್ತಂಭ, ವಿಶ್ವಾಸಾರ್ಹ ಸ್ನೇಹಿತ ಮತ್ತು ಶಕ್ತಿ ಎಂದು ನೋಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. +ಜಾಗತಿಕ ಆರ್ಥಿಕತೆಯ ಬೆಳವಣಿಗೆ ನಡುವೆ ವೇಗವಾಗಿ ಬದಲಾಗುತ್ತಿರುವ ವಿಶ್ವ ಕ್ರಮದಲ್ಲಿ ಭಾರತವು ವಿಶ್ವ ಮಿತ್ರ(ವಿಶ್ವದ ಸ್ನೇಹಿತ) ಆಗಿ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.ವೈಬ್ರಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆಯ 10 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ ಕೆಲವು ವರ್ಷಗಳಲ್ಲಿಎಲ್ಲಾ ಪ್ರಮುಖ ರೇಟಿಂಗ್ ಏಜೆನ್ಸಿಗಳು ಭಾರತವು ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಅಭಿಪ್ರಾಯಪಟ್ಟಿವೆ. ಶೀಘ್ರವಾಗಿ ಬದಲಾಗುತ್ತಿರುವ ವಿಶ್ವ ಕ್ರಮದಲ್ಲಿ, ಭಾರತವು ವಿಶ್ವ ಮಿತ್ರನಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು. +ನಾವು ಸಾಮಾನ್ಯ ಗುರಿಗಳನ್ನು ನಿರ್ಧರಿಸಬಹುದು ಮತ್ತು ಅವುಗಳನ್ನು ಸಾ„ಸಬಹುದು ಎಂಬ ಭರವಸೆಯನ್ನು ಭಾರತವು ಜಗತ್ತಿಗೆ ನೀಡಿದೆ. ವಿಶ್ವ ಕಲ್ಯಾಣಕ್ಕಾಗಿ ಭಾರತದ ಬದ್ಧತೆ, ಅದರ ಸಮರ್ಪಣೆ, ಪ್ರಯತ್ನಗಳು ಮತ್ತು ಕಠಿಣ ಪರಿಶ್ರಮ ನೋಡುತ್ತಿದ್ದೀರಿ ಪ್ರಪಂಚವು ಹೆಚ್ಚು ಸುರಕ್ಷಿತ ಮತ್ತು ಸಮೃದ್ಧವಾಗಿದೆ ಎಂದು ಅವರು ಹೇಳಿದರು.ಇಂದು, ಜಗತ್ತು ಭಾರತವನ್ನು ಸ್ಥಿರತೆಯ ಪ್ರಮುಖ ಆಧಾರಸ್ತಂಭವಾಗಿ ನೋಡುತ್ತದೆ, ತಂತ್ರಜ್ಞಾನದ ಕೇಂದ್ರವು ಇಲ್ಲಿ ಪ್ರತಿಭಾವಂತ ಯುವಕರ ಶಕ್ತಿ ಕೇಂದ್ರ ಎಂದಿದೆ ಮತ್ತು ಪ್ರಜಾಪ್ರಭುತ್ವವನ್ನು ನೀಡುತ್ತದೆ, ಎಂದು ಅವರು ಹೇಳಿದರು. +ಮೋದಿ ಅದ್ಭುತ ವ್ಯಕ್ತಿ, ಅವರು ನಮಗೆ ಸೂರ್ತಿ : ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ +ಮುಂದಿನ ಕೆಲವು ವರ್ಷಗಳಲ್ಲಿ ಭಾರತವು ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲಿದೆ,ಇದನ್ನು ದೇಶ ಸಾ„ಸುತ್ತದೆ.ಭಾರತದ 1.4 ಶತಕೋಟಿ ಜನರ ಆದ್ಯತೆಗಳು ಮತ್ತು ಆಕಾಂಕ್ಷೆಗಳು, ಮಾನವ ಕೇಂದ್ರಿತ ಅಭಿವೃದ್ಧಿಯಲ್ಲಿ ಅವರ ನಂಬಿಕೆ, ಒಳಗೊಳ್ಳುವಿಕೆ ಮತ್ತು ಸಮಾನತೆಯ ನಮ್ಮ ಬದ್ಧತೆ, ವಿಶ್ವ ಸಮೃದ್ಧಿ ಮತ್ತು ವಿಶ್ವ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದೆ ಎಂದು ಅವರು ಹೇಳಿದರು. +ಭಾರತದ ಆದ್ಯತೆಗಳು ಸುಸ್ಥಿರ ಉದ್ಯಮ, ಮೂಲಸೌಕರ್ಯ ಮತ್ತು ಉತ್ಪಾದನೆ, ಹೊಸ ಯುಗದ ಕೌಶಲ್ಯಗಳು, -ಫ್ಯೂಚರಿಸ್ಟಿಕ್ ತಂತ್ರಜ್ಞಾನ, ನಾವೀನ್ಯತೆ, ಹಸಿರು ಹೈಡ್ರೋಜನ್, ನವೀಕರಿಸಬಹುದಾದ ಶಕ್ತಿ, ಅರೆವಾಹಕಗಳು ಮತ್ತು ಅದರ ಸಂಪೂರ್ಣ ಪರಿಸರ ವ್ಯವಸ್ಥೆ ಎಂದು ಅವರು ಹೇಳಿದರು. +ಇಂದು ಅಸ್ತಿತ್ವದಲ್ಲಿರುವ ಜಾಗತಿಕ ಪರಿಸ್ಥಿತಿಯಲ್ಲಿ ಭಾರತದ ಆರ್ಥಿಕತೆಯಲ್ಲಿ ಸಾಕಷ್ಟು ಸ್ಥಿತಿಸ್ಥಾಪಕತ್ವ ಮತ್ತು ಬೆಳವಣಿಗೆಯ ಆವೇಗವಿದ್ದರೆ, ಇದರ ಹಿಂದಿನ ದೊಡ್ಡ ಕಾರಣವೆಂದರೆ ಕಳೆದ ದಶಕದಲ್ಲಿ ರಚನಾತ್ಮಕ ಸುಧಾರಣೆಗಳತ್ತ ನಮ್ಮ ಗಮನ. ಈ ಸುಧಾರಣೆಗಳು ಭಾರತದ ಆರ್ಥಿಕತೆಯ ಸಾಮಥ್ರ್ಯ ಮತ್ತು ಸಾಮಥ್ರ್ಯ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_193_8.txt b/eesanje/url_47_193_8.txt new file mode 100644 index 0000000000000000000000000000000000000000..27417a6f811052007bc6e475ab4a6dbcc111e496 --- /dev/null +++ b/eesanje/url_47_193_8.txt @@ -0,0 +1,5 @@ +ಮೋದಿ ಅದ್ಭುತ ವ್ಯಕ್ತಿ, ಅವರು ನಮಗೆ ಸೂರ್ತಿ : ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ +ಗಾಂಧಿನಗರ,ಜ.10 : ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅದ್ಭುತ ವ್ಯಕ್ತಿ, ಅವರ ಶಕ್ತಿ ಮತ್ತು ದೃಷ್ಟಿ ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಡಿಪಿ ವರ್ಲ್ಡ್ ಸಿಇಒ ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ ಹೇಳಿದ್ದಾರೆ. +ಇಲ್ಲಿ ನಡೆದ ಜಾಗತಿಕ ಹೂಡಿಕೆ ಶೃಂಗದಲ್ಲಿ ಮಾತನಾಡಿದ ಅವರು ಈ ವ್ಯಕ್ತಿ ಅದ್ಭುತ, ಅವರ ಶಕ್ತಿ, ದೃಷ್ಟಿ ನಮಗೆ ಸೂರ್ತಿ. ನಾವು ಭಾರತದಲ್ಲಿ ನಮ್ಮ ಹೂಡಿಕೆ ಮತ್ತು ವಿಸ್ತರಣೆಯ ಬಗ್ಗೆ ಈಗಾಗಲೆ ಚರ್ಚಿಸಿದ್ದೇವೆ. ನಾವು ಭಾರತದ ವಿವಿಧ ಪ್ರದೇಶಗಳಲ್ಲಿ ಉತ್ಪಾದನಾ ವಲಯದಲ್ಲಿ ಹೂಡಿಕೆ ಮಾಡುತ್ತೇವೆ ಎಂದು ಸುಲ್ತಾನ್ ಅಹ್ಮದ್ ಬಿನ್ ಸುಲಾಯೆಮ್ ತಿಳಿಸಿದರು. +ಸ್ಲೀವ್‌ಲೆಸ್ ಡ್ರೆಸ್, ಸ್ಕರ್ಟ್, ಮಿಡಿ, ಪ್ಯಾಂಟ್ ಧರಿಸಿ ದೇವಸ್ಥಾನ ಪ್ರವೇಶಿಸುವಂತಿಲ್ಲ +ಗುಜರಾತಿನಲ್ಲಿ ಭಾರತದ ಪ್ರಧಾನಿಯೊಂದಿಗಿನ ಭೇಟಿಯ ಕುರಿತು ಮಾತನಾಡಿ, ಇದು ಅತ್ಯುತ್ತಮ ಭೇಟಿಯಾಗಿತ್ತು ಅವರೊಬ್ಬ ಅದ್ಭುತ ವ್ಯಕ್ತಿ ಎಂಬುದು ಗೊತ್ತಾಯಿತು , ಅವರ ಶಕ್ತಿ, ದೂರದೃಷ್ಟಿ ನಮಗೆ ಸೂರ್ತಿ ನೀಡುತ್ತದೆ. ಭಾರತ ಮತ್ತು ಯುಎಇ ಅದ್ಭುತ ಬಾಂಧವ್ಯವನ್ನು ಹೊಂದಿದೆ ಎಂದರು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಇಂದು ಬಹಳಷ್ಟು ಯೋಜನೆಗಳು ಭಾರತಕ್ಕೆ ಹೋಗುತ್ತಿವೆ ಎಂದು ಖುಷಿ ಹಂಚಿಕೊಂಡರು. \ No newline at end of file diff --git a/eesanje/url_47_193_9.txt b/eesanje/url_47_193_9.txt new file mode 100644 index 0000000000000000000000000000000000000000..f9e3d96c470bd5264455a34dac11b66d7bdcc911 --- /dev/null +++ b/eesanje/url_47_193_9.txt @@ -0,0 +1,7 @@ +ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾದ ದೇಣಿಗೆ ಎಷ್ಟು ಗೊತ್ತೇ..? +ಅಯೋಧ್ಯೆ,ಜ.10- ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶ, ವಿದೇಶದಲ್ಲಿರುವ ರಾಮಭಕ್ತರಿಂದ ಇದುವರೆಗೂ 5 ಸಾವಿರ ಕೋಟಿ ರೂ. ಹೆಚ್ಚು ದೇಣಿಗೆ ಸ್ವೀಕರಿಸಲಾಗಿದೆ ಈಗಲೂ ರಾಮ ಭಕ್ತರು ನಿರಂತರವಾಗಿ ದೇಣಿಗೆ ನೀಡುತ್ತಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ. +ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ಇದೇ 22ರಂದು ರಾಮಲಲ್ಲಾ ಮಹಾಮಸ್ತಕಾಭಿಷೇಕ ನಡೆಯಲಿದೆ. ದೇವಾಲಯದ ಮೊದಲ ಮಹಡಿಯನ್ನು ಭಕ್ತರು ನೀಡಿದ ದೇಣಿಗೆಯ ಬಡ್ಡಿಯ ಹಣದಿಂದ ನಿರ್ಮಿಸಲಾಗಿದೆ ಎಂದು ಹೇಳಿದೆ. +ದೇಶವಷ್ಟೇ ಅಲ್ಲ, ಹೊರ ದೇಶಗಳಲ್ಲಿ ಕುಳಿತಿರುವ ರಾಮಭಕ್ತರು ಕೂಡ ರಾಮಮಂದಿರಕ್ಕಾಗಿ ದೇಣಿಗೆ ನೀಡುತ್ತಿದ್ದಾರೆ. ನಾವು ದೇಶದ ಬಗ್ಗೆ ಮಾತನಾಡುವುದಾದರೆ, ರಾಮಮಂದಿರಕ್ಕಾಗಿ ದೇಣಿಗೆ ನೀಡಿದವರಲ್ಲಿ ಖ್ಯಾತ ಕಥೆಗಾರ ಮತ್ತು ಆಧ್ಯಾತ್ಮಿಕ ಗುರು ಮೊರಾರಿ ಬಾಪು ಅವರ ಹೆಸರು ಅಗ್ರಸ್ಥಾನದಲ್ಲಿದೆ. ಅವರು 11.3 ಕೋಟಿ ರೂ. ನೀಡಿದ್ದಾರೆ ಎಂದು ತಿಳಿಸಿದೆ. +ಶೀಘ್ರದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ +ಅಯೋಧ್ಯೆಯ ರಾಮಮಂದಿರಕ್ಕೆ ಮೊದಲ ವಿದೇಶಿ ದೇಣಿಗೆ ಅಮೆರಿಕದಿಂದಲೇ ಬಂದಿದೆ. ಅಮೆರಿಕದಲ್ಲಿ ಕುಳಿತಿದ್ದ ರಾಮಭಕ್ತರೊಬ್ಬರು ಈ ಹಿಂದೆ ದೇವಸ್ಥಾನದ ಟ್ರಸ್ಟ್‍ಗೆ 11,000 ರೂ. ದೇಣಿಗೆಯಾಗಿ ಕಳುಹಿಸಿದ್ದರು. ಈ ಹಿಂದೆ ರಾಮ ಮಂದಿರಕ್ಕೆ ವಿದೇಶಿ ದೇಣಿಗೆಗೆ ಅವಕಾಶವಿರಲಿಲ್ಲ, ಆದರೆ ಗೃಹ ಸಚಿವಾಲಯದಿಂದ ಎಫ್‍ಸಿಆರ್‍ಎ ಅನುಮೋದನೆ ಪಡೆದ ನಂತರ ಈಗ ವಿದೇಶದಲ್ಲಿರುವ ರಾಮಭಕ್ತರಿಗೆ ಮಂದಿರ ನಿರ್ಮಾಣದಲ್ಲಿ ಸಹಕರಿಸುವುದು ಸುಲಭವಾಗಿದೆ. +ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಾರ, ರಾಮ ಮಂದಿರ ನಿರ್ಮಾಣಕ್ಕಾಗಿ ಇದುವರೆಗೆ ಸುಮಾರು 18 ಕೋಟಿ ರಾಮಭಕ್ತರು ನ್ಯಾಷನಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜÁಬ್ ನ್ಯಾಷನಲ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಖಾತೆಗಳಲ್ಲಿ ಸುಮಾರು 3,200 ಕೋಟಿ ರೂ.ಗಳ ಸಮರ್ಪಣಾ ನಿಯನ್ನು ಜಮೆ ಮಾಡಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. \ No newline at end of file diff --git a/eesanje/url_47_194_1.txt b/eesanje/url_47_194_1.txt new file mode 100644 index 0000000000000000000000000000000000000000..3918185c3dced75ee7680e9d915cf68d9ee9d83d --- /dev/null +++ b/eesanje/url_47_194_1.txt @@ -0,0 +1,8 @@ +ಇನ್ನು ಶರಣಾಗಿಲ್ಲ ಬಿಲ್ಕಿಸ್ ಬಾನೋ ಅತ್ಯಾಚಾರ ಆರೋಪಿಗಳು +ದಾಹೋದ್, ಜ. 10 (ಪಿಟಿಐ) : ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಗಳ ಶರಣಾಗತಿ ಕುರಿತು ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಅವರಿಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ದಾಹೋದ್‍ನ ಹಿರಿಯ ಪೊಲೀಸ್ ಅಕಾರಿಯೊಬ್ಬರು ಹೇಳಿದ್ದಾರೆ. +ಶಾಂತಿ ಕಾಪಾಡಲು ಅಪರಾಗಳು ವಾಸಿಸುವ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.ಆದಾಗ್ಯೂ, ಅಪರಾಗಳು ಸಂಪರ್ಕವಿಲ್ಲದವರಲ್ಲ ಮತ್ತು ಅವರಲ್ಲಿ ಕೆಲವರು ಸಂಬಂಕರನ್ನು ಭೇಟಿ ಮಾಡುತ್ತಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ. +2002 ರಲ್ಲಿ ಗೋಧ್ರಾ ರೈಲು ಸುಟ್ಟ ಘಟನೆಯ ನಂತರ ಕೋಮು ಗಲಭೆಗಳು ಭುಗಿಲೆದ್ದ ನಂತರ 21 ವರ್ಷ ಮತ್ತು ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನೋ ಓಡಿಹೋಗುವಾಗ ಅತ್ಯಾಚಾರಕ್ಕೊಳಗಾದರು. ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರು ಕೊಲ್ಲಲ್ಪಟ್ಟಿದ್ದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-01-2024) +ಗುಜರಾತ್ ಸರ್ಕಾರ ತನ್ನ ವಿವೇಚನೆಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಟೀಕಿಸುವ ಸಂದರ್ಭದಲ್ಲಿ 11 ಅಪರಾಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ.2022ರ ಸ್ವಾತಂತ್ರ್ಯ ದಿನದಂದು ಅಕಾಲಿಕವಾಗಿ ಬಿಡುಗಡೆಯಾದ ಎಲ್ಲಾ ಅಪರಾಗಳನ್ನು ಎರಡು ವಾರಗಳಲ್ಲಿ ಜೈಲಿಗೆ ಹಿಂತಿರುಗಿಸಲು ಅದು ಆದೇಶಿಸಿದೆ. ಆದರೆ, ಆರೋಪಿಗಳ ಅವರ ಶರಣಾಗತಿಗೆ ಸಂಬಂಸಿದಂತೆ ನಮಗೆ ಇನ್ನು ಸುಪ್ರೀಂ ಕೋರ್ಟ್ ತೀರ್ಪಿನ ಪ್ರತಿ ತಲುಪಿಲ್ಲ ಎಂದು ಮೀನಾ ಹೇಳಿದರು. +ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ಸ್ಥಳೀಯರಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ತೀರ್ಪು ಹೊರಬೀಳುವ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದರು. +ಅಪರಾಗಳು ಅಪರಿಚಿತರಲ್ಲ, ಮತ್ತು ಅವರಲ್ಲಿ ಕೆಲವರು ತಮ್ಮ ಸಂಬಂಕರನ್ನು ಭೇಟಿ ಮಾಡುತ್ತಿದ್ದಾರೆ. ನಮಗೆ ಯಾವುದೇ ಮಾಹಿತಿ ಇಲ್ಲ ಮತ್ತು ಯಾವುದೇ ಆದೇಶದ ಪ್ರತಿಯನ್ನು ಸ್ವೀಕರಿಸಿಲ್ಲ, ಆದರೆ ಇಡೀ ರಂಕ್‍ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ನಿಯೋಜಿಸಲ್ಪಟ್ಟಿದ್ದಾರೆ ಎಂದು ಮೀನಾ ಹೇಳಿದರು. \ No newline at end of file diff --git a/eesanje/url_47_194_10.txt b/eesanje/url_47_194_10.txt new file mode 100644 index 0000000000000000000000000000000000000000..4161868d2aa4cb4bd1fd1c1715ba8720e24783e2 --- /dev/null +++ b/eesanje/url_47_194_10.txt @@ -0,0 +1,6 @@ +ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ಅರೆಸ್ಟ್ +ತಿರುವನಂತಪುರಂ, ಜ 9 (ಪಿಟಿಐ) ಕಳೆದ ತಿಂಗಳು ಸಂಘಟನೆಯು ಆಯೋಜಿಸಿದ್ದ ಸೆಕ್ರೆಟರಿಯೇಟ್ ಮಾರ್ಚ್‍ನಲ್ಲಿ ಇತ್ತೀಚೆಗೆ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಕೇರಳ ರಾಜ್ಯ ಅಧ್ಯಕ್ಷ ರಾಹುಲ್ ಮಮ್ಕೂಟತಿಲ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ತಿರುವನಂತಪುರಂ ಕಂಟೋನ್ಮೆಂಟ್ ಪೊಲೀಸರು ಇಂದು ಮುಂಜಾನೆ ಪಥನಂತಿಟ್ಟ ಜಿಲ್ಲೆಯ ಅವರ ನಿವಾಸದಿಂದ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರದ ನವ ಕೇರಳ ಸದಸ್ ಕಾರ್ಯಕ್ರಮದ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದ ದೌರ್ಜನ್ಯವನ್ನು ಎತ್ತಿ ಹಿಡಿಯಲು ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. +ರಾಜಸ್ಥಾನ : ಹಾಲಿ ಸಚಿವನನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ +ಸೆಕ್ರೆಟರಿಯೇಟ್ ಮಾರ್ಚ್ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಸಿದಂತೆ ಪ್ರತಿಪಕ್ಷದ ನಾಯಕ ವಿ ಡಿ ಸತೀಶನ ವಿರುದ್ಧ ಪೊಲೀಸರು ಮೊದಲ ಆರೋಪಿಯಾಗಿ ಪ್ರಕರಣ ದಾಖಲಿಸಿದ್ದಾರೆ. ಡಿಸೆಂಬರ್ 21 ರಂದು ನಡೆದ ಮೆರವಣಿಗೆಯಲ್ಲಿ ಪೊಲೀಸರ ಮೇಲೆ ದಾಳಿ ಮಾಡಿದ ಮತ್ತು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದ ಆರೋಪದಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಜಾಮೀನು ರಹಿತ ಸೆಕ್ಷನ್‍ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. +ಘಟನೆಗೆ ಸಂಬಂಧಿಸಿದಂತೆ ಮಾಮಕೂಟತಿಲ, ಮಾಜಿ ಅಧ್ಯಕ್ಷ ಶಾಫಿ ಪರಂಬಿಲ್ (ಶಾಸಕ) ಮತ್ತು ಎಂ ವಿನ್ಸೆಂಟ್ (ಶಾಸಕ) ಸೇರಿದಂತೆ ಸುಮಾರು 300 ಯೂತ್ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. \ No newline at end of file diff --git a/eesanje/url_47_194_11.txt b/eesanje/url_47_194_11.txt new file mode 100644 index 0000000000000000000000000000000000000000..3baf85eebc03467ca80e45973e26e8a0350ac5af --- /dev/null +++ b/eesanje/url_47_194_11.txt @@ -0,0 +1,5 @@ +ತ್ರಿಪುರಾದ ಧಲೈನಲ್ಲಿ ಉಗ್ರ ಬಿಎಸ್‍ಎಪ್ ಮುಂದೆ ಶರಣಾಗತಿ +ಅಗರ್ತಲಾ,ಜ.8: ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಎನ್‍ಎಲ್‍ಎಫೆಟಿ ಉಗ್ರನೊಬ್ಬ ಬಿಎಸ್‍ಎಪ್ ಮುಂದೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶರಣಾದ ಉಗ್ರರನ್ನು ಸುಮಾರು 37 ವರ್ಷದ ಉದಯ್ ಮಾಣಿಕ್ ಜಮಾತಿಯಾ ಎಂದು ಗುರುತಿಸಲಾಗಿದ್ದು ಅಗರ್ತಲಾ ಜಿಲ್ಲೆಯ ಚವ್ಮಾನು ಪ್ರದೇಶದಲ್ಲಿ ಬಿಎಸ್‍ಎಪ್ ಮುಂದೆ ಶರಣಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ. +ಈತ ಗೋಮತಿ ಜಿಲ್ಲೆಯ ತುಳಸಿರಾಮ್ ಗ್ರಾಮದ ನಿವಾಸಿಯಾಗಿದ್ದಾರೆ. ಸಾಮಾನ್ಯ ಜೀವನ ನಡೆಸಲು ನಿರ್ದರಿಸಿ ಶರಣಾಗಿದ್ದಾನೆ ಎಂದು ಬಿಎ-ï ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ ನಿಷೇಧಿತ ಎನ್‍ಎಲ್‍ಎಫೆಟಿ (ಬಿಎಂ) ಸಂಘಟನೆಯನ್ನು ಸೇರಿಕೊಂಡಿದ್ದ ,ಕೇಂದ್ರ ಏಜೆನ್ಸಿಗಳು ಮತ್ತು ರಾಜ್ಯ ಅಧಿಕಾರಿಗಳ ಪ್ರಯತ್ನದಿಂದಾಗಿ, ಹಲವಾರು ಎನ್‍ಎಲ್‍ಎಫೆಟಿ ಕಾರ್ಯಕರ್ತರು ಹಿಂಸಾಚಾರದ ಹಾದಿಯನ್ನು ತೊರೆದಿದ್ದಾರೆ ಎಂದು ಅವರು ಹೇಳಿದರು. +ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ : ವಿಜಯೇಂದ್ರ +ಶರಣಾದ ಉಗ್ರರನ್ನು ವಿಚಾರಣೆ ಮತ್ತು ಇತರ ಕಾನೂನು ಪ್ರಕ್ರಿಯೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ. ಸಂಘಟನೆಯ ಪ್ರಮುಖ ನಾಯಕರಾದ ಸಚಿನ್ ದೆಬ್ಬರ್ಮಾ ಮತ್ತು ಉತ್ಪಲ್ ದೆಬ್ಬರ್ಮಾನನ್ನು ಈಗಾಗಲೆ ಡಿಸೆಂಬರ್ 14 ರಂದು ಪಶ್ಚಿಮ ತ್ರಿಪುರಾದ ಸಿಮ್ನಾ ಪ್ರದೇಶದಿಂದ ಬಂಧಿಸಲಾಗಿದೆ. \ No newline at end of file diff --git a/eesanje/url_47_194_12.txt b/eesanje/url_47_194_12.txt new file mode 100644 index 0000000000000000000000000000000000000000..078817b48810ad2a3db88219269d3e875c12ddf1 --- /dev/null +++ b/eesanje/url_47_194_12.txt @@ -0,0 +1,5 @@ +ರಾಜಸ್ಥಾನ : ಹಾಲಿ ಸಚಿವನನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ +ಜೈಪುರ, ಜ.8: ರಾಜಸ್ಥಾನ ರಾಜ್ಯದ ಕಾರನ್‍ಪುರ ವಿಧಾನಸಭಾ ಚುನಾವಣೆಯಲ್ಲಿ ಹಾಲಿ ಸಚಿವ ಸುರೇಂದ್ರ ಪಾಲ್ ಸಿಂಗ್ ಅವರನ್ನು ಕಾಂಗ್ರೆಸ್‍ನ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನಾರ್ ಮಣಿಸಿದ್ದಾರೆ. ಒಟ್ಟು 18 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಸುಮಾರು 11,283 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನರ್ ಜಯ ಸಾಧಿಸಿದ್ದಾರೆ. ಇತ್ತೀಚೆಗೆ ನಡೆದಿದ್ದ ವಿಧಾನ ಸಭೆ ಚುನಾವಣೆಯಲ್ಲಿ 199 ಸ್ಥಾನಗಳ ಪೈಕಿ 115 ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಗಳಿಸಿ ಅಧಿಕಾರ ಚುಕ್ಕಾಣಿ ಹಿಡಿದಿತು. +ಜನವರಿ 5ರಂದು ಮತದಾನ ನಡೆದಿತು ಸುಮಾರು 1.85ಲಕ್ಷ ಜನ ಮತಚಲಾಯಿಸಿದ್ದರು ಇಂದು ಮತ ಎಣಿಕೆ ನಡೆಯಿತು ಬಿಜೆಪಿ ಸಚಿವ ಸುರೇಂದ್ರ ಪಾಲ್ ಸಿಂಗ್ 84ಸಾವಿರಕ್ಕೂ ಹೆಚ್ಚು ಮತ ಗಳಿಸಿದರೆ ರೂಪಿಂದರ್ ಸಿಂಗ್ ಕೂನರ್95 ಸಾವಿರಕ್ಕೂ ಹೆಚ್ಚು ಮತ ಗಳಿಸಿ ಗೆಲುವು ಸದಿಸಿದ್ದಾರೆ. +ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಅವರು ಕೂನಾರ್ ಅವರ ಗೆಲುವಿಗೆ ಮುಂಚಿತವಾಗಿ ಅಭಿನಂದಿಸಿದ್ದಾರೆ. ಪ್ರಸ್ತುತ ನಿಯಮಗಳ ಪ್ರಕಾರ, ಸಿಂಗ್ ಅವರು ಸಚಿವರಾಗಿದ್ದು ಶಾಸನ ಸಭೆಗೆ ಆಯ್ಕೆಯಾಗಲು ಆರು ತಿಂಗಳುಗಳಿವೆ. ಕೂನರ್ ಗೆಲುವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ,ಅಭಿನಂದಿಸಿ ಕರಣಪುರದ ಜನರು ಬಿಜೆಪಿಯ ದುರಹಂಕಾರವನ್ನು ಮುರಿದಿದ್ದಾರೆ ಎಂದು ಟೀಕಿಸಿದ್ದಾರೆ. +ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಕಾರಣ ಕರಣ್‍ಪುರ ಚುನಾವಣೆಯನ್ನು ಮುಂದೂಡಲಾಗಿದೆ. ನಂತರ ಕಾಂಗ್ರೆಸ್ ಅವರ ಪುತ್ರ ರೂಪಿಂದರ್ ಸಿಂಗ್ ಕೂನರ್ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸಿತು. \ No newline at end of file diff --git a/eesanje/url_47_194_2.txt b/eesanje/url_47_194_2.txt new file mode 100644 index 0000000000000000000000000000000000000000..e1980b17a6fc507d4ea2f6e59262afaa972d24bc --- /dev/null +++ b/eesanje/url_47_194_2.txt @@ -0,0 +1,6 @@ +ಜ.12ರಿಂದ ಮುಂಬೈನಲ್ಲಿ ವೈಮಾನಿಕ ಪ್ರದರ್ಶನ +ಮುಂಬೈ, ಜ. 10 (ಪಿಟಿಐ) ಭಾರತೀಯ ವಾಯುಪಡೆಯು ಜ 12 ರಿಂದ 14 ರವರೆಗೆ ಮುಂಬೈನಲ್ಲಿ ವೈಮಾನಿಕ ಪ್ರದರ್ಶನವನ್ನು ಆಯೋಜಿಸಲಿದ್ದು, ಜಾಗೃತಿ ಮೂಡಿಸುವ ಮತ್ತು ಐಎಎಫ್ ಮತ್ತು ಸ್ಥಳೀಯ ಸಮುದಾಯದ ನಡುವೆ ಆಳವಾದ ಸಂಪರ್ಕವನ್ನು ಬೆಳೆಸುವ ಗುರಿಯನ್ನು ಹೊಂದಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. . +ಐಎಎಫ್ ಸಿಬ್ಬಂದಿ ಮತ್ತು ವಿಮಾನಗಳ ಪ್ರದರ್ಶನಗಳು ಮತ್ತು ಪ್ರದರ್ಶನಗಳು ಪಡೆಯ ಕೌಶಲ್ಯಗಳು, ಸಾಮರ್ಥ್ಯಗಳು ಮತ್ತು ವೃತ್ತಿಪರತೆಯನ್ನು ಪ್ರದರ್ಶಿಸುತ್ತವೆ.ಐಎಎಫ್ ಮುಂಬೈನಲ್ಲಿ ಭಾರತೀಯ ವಾಯುಪಡೆಯ ಔಟ್ ರೀಚ್ ಕಾರ್ಯಕ್ರಮದ ಭಾಗವಾಗಿ ಮಹಾರಾಷ್ಟ್ರ ಸರ್ಕಾರದ ಸಮನ್ವಯದೊಂದಿಗೆ ಜ 12 ರಿಂದ 14 ರವರೆಗೆ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಮರೈನ್ ಡ್ರೈವ್ ಮೂಲಕ ವೈಮಾನಿಕ ಪ್ರದರ್ಶನವನ್ನು ಆಯೋಜಿಸುತ್ತದೆ ಎಂದು ರಕ್ಷಣಾ ಪ್ರಕಟಣೆ ತಿಳಿಸಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-01-2024) +ಈವೆಂಟ್ ಸೂರ್ಯಕಿರಣ್ ಏರೋಬ್ಯಾಟಿಕ್ ಡಿಸ್ಪ್ಲೇ ಟೀಮ್ ಮತ್ತು ಸಾರಂಗ್ ಹೆಲಿಕಾಪ್ಟರ್ ಡಿಸ್ಪ್ಲೇ ತಂಡದಿಂದ ಏರೋಬ್ಯಾಟಿಕ್ ಡಿಸ್ಪ್ಲೇಗಳನ್ನು ಒಳಗೊಂಡಿರುತ್ತದೆ ಎಂದು ಅದು ಹೇಳಿದೆ. +ಈವೆಂಟ್ ವಿವಿಧ ಶ್ರೇಣಿಯ ವೈಮಾನಿಕ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ ಫ್ಲೈಪಾಸ್ಟ್ ಮತ್ತು ಕಡಿಮೆ-ಮಟ್ಟದ ಏರೋಬ್ಯಾಟಿಕ್ ಪ್ರದರ್ಶನವನ್ನು ಸು-30 ಎಂಕೆಐ, ಫ್ರೀಫಾಲ್ ಮತ್ತು ಆಕಾಶಗಂಗಾ ತಂಡ ಮತ್ತು ಸಿ-130 ವಿಮಾನದಿಂದ ಪ್ಯಾರಾಚೂಟ್ ಪ್ರದರ್ಶನಗಳಿರಲಿವೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_194_3.txt b/eesanje/url_47_194_3.txt new file mode 100644 index 0000000000000000000000000000000000000000..f0497b8aa32726d3a989133e6d49b3f3fb2f8eae --- /dev/null +++ b/eesanje/url_47_194_3.txt @@ -0,0 +1,5 @@ +ಯುಬಿಟಿ ಶಿವಸೇನೆ ಬಣದ ಶಾಸಕನ ಮನೆ ಮೇಲೆ ಇಡಿ ರೇಡ್ +ಮುಂಬೈ, ಜ 9 (ಪಿಟಿಐ) ಜೋಗೇಶ್ವರಿ ಪ್ರದೇಶದಲ್ಲಿ ಐಷಾರಾಮಿ ಹೋಟೆಲ್ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ (ಯುಬಿಟಿ) ಶಾಸಕ ರವೀಂದ್ರ ವೈಕರ್ ಮತ್ತು ಅವರ ಕೆಲವು ಸಂಬಂಧಿತ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ. +ಮುಂಬೈನ ಸುಮಾರು ಏಳು ಸ್ಥಳಗಳನ್ನು ಇಡಿ ಅಧಿಕಾರಿಗಳು ಶೋಧಿಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇವುಗಳಲ್ಲಿ ವೈಕರ್ ಮತ್ತು ಅವರ ಕೆಲವು ಪಾಲುದಾರರು ಮತ್ತು ಇತರರ ಆವರಣಗಳು ಸೇರಿವೆ ಎಂದು ಮೂಲಗಳು ಉಲ್ಲೇಖಿಸಿವೆ. 64 ವರ್ಷದ ವೈಕರ್ ಅವರು ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ಶಿವಸೇನಾ ಶಾಸಕರಾಗಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಜೋಗೇಶ್ವರಿ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. +ಮೋದಿ, ಭಾರತ ವಿರೋಧಿ ಹೇಳಿಕೆಗೆ ಮ್ಯಾಟಿ ಖಂಡನೆ +ಇಡಿಯ ಮನಿ ಲಾಂಡರಿಂಗ್ ಪ್ರಕರಣವು ಮುಂಬೈ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗದ ಎಫ್‍ಐಆರ್‍ನಿಂದ ಉದ್ಭವಿಸಿದೆ, ಇದು ಶಾಸಕರು ಉದ್ಯಾನಕ್ಕಾಗಿ ಕಾಯ್ದಿರಿಸಿದ ಪ್ಲಾಟ್‍ನಲ್ಲಿ ಪಂಚತಾರಾ ಹೋಟೆಲ್‍ನ ನಿರ್ಮಾಣಕ್ಕೆ ಕಾನೂನುಬಾಹಿರವಾಗಿ ಅನುಮೋದನೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ ಇದರಿಂದ ಬಿಎಂಸಿಗೆ ಭಾರಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. \ No newline at end of file diff --git a/eesanje/url_47_194_4.txt b/eesanje/url_47_194_4.txt new file mode 100644 index 0000000000000000000000000000000000000000..14a17317ef2714e68a12a87eb17d2fde41c9fdf9 --- /dev/null +++ b/eesanje/url_47_194_4.txt @@ -0,0 +1,7 @@ +ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ +ನವದೆಹಲಿ, ಜ 9 (ಪಿಟಿಐ) ಕೇಂದ್ರದಿಂದ ಅಧಿಕಾರಶಾಹಿ ಪುನಾರಚನೆಯ ಭಾಗವಾಗಿ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಕುಮಾರ್ ಸಿನ್ಹಾ ಅವರನ್ನು ರಕ್ಷಣಾ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾೀಧಿನ) ಆಗಿ ನೇಮಿಸಲಾಗಿದೆ. +ಸಿನ್ಹಾ ಅವರು 1994-ಬ್ಯಾಚ್‍ನ ಭಾರತೀಯ ಆಡಳಿತ ಸೇವೆ (ಐಎಎಸ್ ) ಅಕಾರಿಯಾಗಿದ್ದು, ಪ್ರಸ್ತುತ ಅವರು ಅಸ್ಸಾಂ-ಮೇಘಾಲಯ ಕೇಡರ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಪುಟದ ನೇಮಕಾತಿ ಸಮಿತಿಯು ಅವರನ್ನು ರಕ್ಷಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಮಹಾನಿರ್ದೇಶಕ (ಸ್ವಾೀಧಿನ) ಆಗಿ ನೇಮಕ ಮಾಡಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯದ ಆದೇಶ ತಿಳಿಸಿದೆ. +ಹಿಮಾಚಲ ಪ್ರದೇಶ ಕೇಡರ್‍ನ 1995 ಬ್ಯಾಚ್‍ನ ಐಎಎಸ್ ಅಧಿಕಾರಿ ಭರತ್ ಹರ್ಬನ್‍ಸ್ಲಾಲ್ ಖೇರಾ ಅವರನ್ನು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಚಂದ್ರಭೂಷಣ್ ಕುಮಾರ್ ಅವರು ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್‍ನ ಮಿಷನ್ ನಿರ್ದೇಶಕರಾಗಿರುತ್ತಾರೆ. +ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ +ಪ್ರಸ್ತುತ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದಲ್ಲಿ ಜಂಟಿ ಮಹಾನಿರ್ದೇಶಕರಾಗಿರುವ ಪೂಜಾ ಸಿಂಗ್ ಮಂಡೋಲ್ ಅವರನ್ನು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. +ಪ್ರಸ್ತುತ ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿರುವ ಸಂಜೀವ್ ಕುಮಾರ್ ಜಿಂದಾಲ್ ಈಗ ಹೆಚ್ಚುವರಿ ಕಾರ್ಯದರ್ಶಿಯಾಗಲಿದ್ದಾರೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿರುವ ಬುಡಕಟ್ಟು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸೊಸೈಟಿಯ ಏಕಲವ್ಯ ಮಾದರಿ ವಸತಿ ಶಾಲೆಯ ಆಯುಕ್ತ ಅಸಿತ್ ಗೋಪಾಲ್ ಅವರನ್ನು ಜವಳಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. \ No newline at end of file diff --git a/eesanje/url_47_194_5.txt b/eesanje/url_47_194_5.txt new file mode 100644 index 0000000000000000000000000000000000000000..b2cd9fb49663996f2c2a96df87b0e7fc78abbcfa --- /dev/null +++ b/eesanje/url_47_194_5.txt @@ -0,0 +1,6 @@ +ಉತ್ತರಾಖಂಡ್‍ನಲ್ಲಿ ಕ್ಲೋರಿನ್ ಸೋರಿಕೆ, ಸ್ಥಳಕ್ಕೆ ದೌಡಾಯಿಸಿದ ಎನ್‌ಡಿಆರ್‌ಎಫ್ +ಡೆಹ್ರಾಡೂನ್,ಜ.9- ಉತ್ತರಾಖಂಡ್‍ನ ಡೆಹ್ರಾಡೂನ್‍ನಲ್ಲಿರುವ ಪ್ರೇಮ್ ನಗರ ಪೊಲೀಸ್ ಠಾಣೆಯ ಜಂಜ್ರಾ ಪ್ರದೇಶದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾದ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಅಲ್ಲಿನ ನಿವಾಸಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿರುವುದರಿಂದ ಜನ ಭಯಭೀತರಾಗಿದ್ದಾರೆ. ಈ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡೆಹ್ರಾಡೂನ್ ಅಜಯ್ ಸಿಂಗ್ ಅವರು, ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್ ) ಮತ್ತು ಇತರ ಭದ್ರತಾ ಪಡೆಗಳು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಡೆಹ್ರಾಡೂನ್‍ನ ಪ್ರೇಮ್‍ನಗರ ಪೊಲೀಸ್ ಠಾಣೆಯ ಜಂಜ್ರಾ ಪ್ರದೇಶದ ಖಾಲಿ ಪ್ಲಾಟ್‍ನಲ್ಲಿ ಇರಿಸಲಾಗಿದ್ದ ಕ್ಲೋರಿನ್ ಸಿಲಿಂಡರ್‍ನಲ್ಲಿ ಸೋರಿಕೆಯಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. +ಮಧ್ಯಪ್ರದೇಶದಲ್ಲಿ ಕೋಮುಗಲಭೆ, ಮೂರು ಪ್ರದೇಶಗಳಲ್ಲಿ ನಿಷೇದಾಜ್ಞೆ +ಸಹಸ್ಪುರ್ ಶಾಸಕ ಸಹದೇವ್ ಸಿಂಗ್ ಪುಂಡಿರ್ ಪ್ರಕಾರ, ಏಳು ಸಿಲಿಂಡರ್ ಕ್ಲೋರಿನ್ ಅನ್ನು ಈ ಪ್ರದೇಶದ ಖಾಲಿ ಪ್ಲಾಟ್‍ನಲ್ಲಿ ಸ್ವಲ್ಪ ಸಮಯದವರೆಗೆ ಇರಿಸಲಾಗಿತ್ತು. ಸೋರಿಕೆ ಇತ್ತು ಮತ್ತು ಅದು ದೊಡ್ಡ ವಿಪತ್ತಾಗಿ ಬದಲಾಗಬಹುದು, ಆದಾಗ್ಯೂ, ಅಧಿಕಾರಿಗಳ ಸಂಘಟಿತ ಪ್ರಯತ್ನಗಳಿಂದ ಪರಿಸ್ಥಿತಿಯನ್ನು ನಿರ್ವಹಿಸಲಾಗಿದೆ ಎಂದು ಅವರು ತಿಳಿಸಿದರು. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +2017 ರಲ್ಲಿ ಉತ್ತರಾಖಂಡ ಜಲ ಸಂಸ್ಥಾನದ (ಯುಜೆಎಸ್) ನೀರು ಸರಬರಾಜು ಕೇಂದ್ರದಿಂದ ಕ್ಲೋರಿನ್ ಅನಿಲ ಸೋರಿಕೆಯಾದ ನಂತರ 15 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. \ No newline at end of file diff --git a/eesanje/url_47_194_6.txt b/eesanje/url_47_194_6.txt new file mode 100644 index 0000000000000000000000000000000000000000..1546edd3692c59cf62ec34b6686e7ac100ee29c4 --- /dev/null +++ b/eesanje/url_47_194_6.txt @@ -0,0 +1,5 @@ +ಜ.17ರಂದು ರಾಮ್‍ಲಲ್ಲಾ ವಿಗ್ರಹ ವೀಕ್ಷಣೆಗೆ ಅವಕಾಶ +ಆಯೋಧ್ಯ,ಜ.9- ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿರುವ ರಾಮ್‍ಲಲ್ಲಾ ಹೊಸ ವಿಗ್ರಹದ ದರ್ಶನ ಭಕ್ತರಿಗೆ ಲಭಿಸಬೇಕು ಎಂಬ ಉದ್ದೇಶದಿಂದ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜ.17 ರಂದು ನಿಗದಿಪಡಿಸಿದ್ದ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. +ಮೆರವಣಿಗೆ ಬದಲಾಗಿ, ಅದೇ ದಿನ ರಾಮ ಜನ್ಮಭೂಮಿಯ ಆವರಣದೊಳಗೆ ಹೊಸ ವಿಗ್ರಹದ ದರ್ಶನವನ್ನು ಟ್ರಸ್ಟ್ ಏರ್ಪಡಿಸಲಿದೆ ಎಂದು ಟ್ರಸ್ಟ್‍ನ ಹಿರಿಯ ಕಾರ್ಯನಿರ್ವಹಣಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಧಿಕಾರಿಗಳು ಕಾಶಿಯ ಆಚಾರ್ಯರು ಮತ್ತು ಹಿರಿಯ ಆಡಳಿತಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. +ಮಧ್ಯಪ್ರದೇಶದಲ್ಲಿ ಕೋಮುಗಲಭೆ, ಮೂರು ಪ್ರದೇಶಗಳಲ್ಲಿ ನಿಷೇದಾಜ್ಞೆ +ಅಯೋಧ್ಯೆ ಜಿಲ್ಲಾಡಳಿತದ ಪ್ರಕಾರ, ನಗರದಲ್ಲಿ ರಾಮಲಲ್ಲಾನ ಹೊಸ ವಿಗ್ರಹವನ್ನು ತೆಗೆದಾಗ ಅದರ ದರ್ಶನಕ್ಕೆ ಭಕ್ತರು ಮತ್ತು ಯಾತ್ರಿಕರು ಧಾವಿಸುವುದರಿಂದ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟಕರವಾಗಿದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು. \ No newline at end of file diff --git a/eesanje/url_47_194_7.txt b/eesanje/url_47_194_7.txt new file mode 100644 index 0000000000000000000000000000000000000000..388261a1b5ead37b287fd7838699baa5ce927243 --- /dev/null +++ b/eesanje/url_47_194_7.txt @@ -0,0 +1,8 @@ +ಗೋವಾದಲ್ಲಿ ಮಗನನ್ನು ಕೊಂದು ಪರಾರಿಯಾಗುತ್ತಿದ್ದ ಸ್ಟಾರ್ಟ್ಅಪ್ ಸಿಇಒ ಚಿತ್ರದುರ್ಗದಲ್ಲಿ ಸೆರೆ +ಪಣಜಿ ,ಜ.9- ಗೋವಾದ ಹೋಟೆಲ್‍ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಸ್ಟಾರ್ಟ್‍ಅಪ್‍ನ ಸಿಇಒ ಅವರನ್ನು ಚಿತ್ರದುರ್ಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ಕೃತಕ ಬುದ್ದಿಮತ್ತೆ ಸ್ಟಾರ್ಟ್‍ಅಪ್‍ನ ಸಿಇಒ ಸುಚನಾ ಸೇಠ್(39) ಬಂಧಿತ ಆರೋಪಿಯಾಗಿದ್ದಾರೆ. +ಸುಚನಾ ಸೇಠ್ ಅವರು ಹೋಟೆಲ್‍ನಿಂದ ಹೊರಬಂದ ನಂತರ ಕೊಠಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಹೋಟೆಲ್ ಸಿಬ್ಬಂದಿಯೊಬ್ಬರು ಹಾಳೆಯಲ್ಲಿ ರಕ್ತದ ಕಲೆಗಳನ್ನು ಗಮನಿಸಿದ ನಂತರ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಎಐ ಸ್ಟಾರ್ಟ್‍ಅಪ್‍ನ ಸಿಇಒ ನಿನ್ನೆ ತನ್ನ ನಾಲ್ಕು ವರ್ಷದ ಮಗನನ್ನು ಗೋವಾದ ಹೋಟೆಲ್‍ನಲ್ಲಿ ಕೊಲೆ ಮಾಡಿ ಶವವನ್ನು ಬ್ಯಾಗ್‍ನಲ್ಲಿ ತುಂಬಿ ಟ್ಯಾಕ್ಸಿಯಲ್ಲಿ ಪರಾರಿಯಾಗುತ್ತಿದ್ದಾಗ ಕರ್ನಾಟಕ ಪೊಲೀಸರು ಚಿತ್ರದುರ್ಗದಿಂದ ಅವರನ್ನು ಬಂಧಿಸಿದ್ದಾರೆ. +ಕೊಲೆ ಆರೋಪಿ ಸೆಠ್ ತನ್ನ ಮಗನೊಂದಿಗೆ ಜ. 6 ರಂದು ಉತ್ತರ ಗೋವಾದ ಸಿಂಕ್ವೆರಿಮ್‍ನಲ್ಲಿರುವ ಹೋಟೆಲ್‍ಗೆ ಚೆಕ್ ಇನ್ ಮಾಡಿದ್ದರು. ಆಕೆ ಚೆಕ್‍ಔಟ್ ಮಾಡಿದಾಗ ಕೊಠಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಹೋಟೆಲ್ ಸಿಬ್ಬಂದಿ, ಹಾಳೆಗಳ ಮೇಲೆ ರಕ್ತದ ಕಲೆಗಳನ್ನು ಗಮನಿಸಿದ ನಂತರ ಹೊಟೆಲ್ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದ್ದರು. +ತ್ರಿಪುರಾದ ಧಲೈನಲ್ಲಿ ಉಗ್ರ ಬಿಎಸ್‍ಎಪ್ ಮುಂದೆ ಶರಣಾಗತಿ +ಪೊಲೀಸರ ಪ್ರಕಾರ, ಸೇಠ್ ತನ್ನ ಮಗನನ್ನು ಹರಿತವಾದ ಆಯುಧದಿಂದ ಕೊಂದು ನಂತರ, ತಾನು ರಸ್ತೆಯಲ್ಲಿ ಪ್ರಯಾಣಿಸಬೇಕೆಂದು ಒತ್ತಾಯಿಸಿ ಬೆಂಗಳೂರಿಗೆ ಹಿಂತಿರುಗಲು ಟ್ಯಾಕ್ಸಿ ವ್ಯವಸ್ಥೆ ಮಾಡುವಂತೆ ಹೋಟೆಲ್ ಆಡಳಿತ ಮಂಡಳಿಯನ್ನು ಕೇಳಿಕೊಂಡಿದ್ದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆಕೆ ಹೋಟೆಲ್‍ನಿಂದ ಒಬ್ಬಳೇ ಚೆಕ್ ಔಟ್ ಮಾಡಿದ್ದಾಳೆಂದು ತಿಳಿದುಬಂದಿದೆ. +ಆರಂಭದಲ್ಲಿ ಆಕೆ ತನ್ನ ಮಗನನ್ನು ದಕ್ಷಿಣ ಗೋವಾದಲ್ಲಿ ಸಂಬಂಧಿಕರೊಬ್ಬರ ಬಳಿ ಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಳು, ಆದರೆ ಕಥೆಯನ್ನು ನಂಬದೆ ನಾವು ಕ್ಯಾಬ್ ಡ್ರೈವರ್‍ಗೆ ಕರೆ ಮಾಡಿ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಹೇಳಿದೆವು. ಬೆಂಗಳೂರಿಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ನಾಟಕ ಪೊಲೀಸರ ಸಹಾಯದಿಂದ ಆಕೆಯನ್ನು ಬಂಧಿಸಲಾಯಿತು ಎಂದು ಕ್ಯಾಲಂಗುಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. +ವಿಚಾರಣೆಗಾಗಿ ಮಹಿಳೆಯನ್ನು ವಶಕ್ಕೆ ಪಡೆಯಲು ಕಲಾಂಗುಟೆ ಪೊಲೀಸರ ತಂಡ ಕರ್ನಾಟಕಕ್ಕೆ ತೆರಳಿದೆ. ಅಪರಾಧದ ಉದ್ದೇಶವನ್ನು ಪೊಲೀಸರು ಇನ್ನೂ ಪತ್ತೆ ಮಾಡಿಲ್ಲ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_194_8.txt b/eesanje/url_47_194_8.txt new file mode 100644 index 0000000000000000000000000000000000000000..b8e4f45595875e15edf5335451c5506454d654b0 --- /dev/null +++ b/eesanje/url_47_194_8.txt @@ -0,0 +1,4 @@ +ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ, ಇಬ್ಬರು ಪೊಲೀಸರು ಬಲಿ +ನವದೆಹಲಿ, ಜ 9 (ಪಿಟಿಐ) ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡಲಿ ಗಡಿಯ ಬಳಿ ಗಾಢ ಮಂಜಿನಿಂದಾಗಿ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದೆಹಲಿ ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಲಿಪಶುಗಳನ್ನು ವಾಯುವ್ಯ ಜಿಲ್ಲೆಯ ವಿಶೇಷ ಸಿಬ್ಬಂದಿಯ ಇನ್ಸ್‍ಪೆಕ್ಟರ್ ದಿನೇಶ್ ಬೇನಿವಾಲ್ ಮತ್ತು ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಎಟಿಒ ಇನ್‍ಸ್ಪೆಕ್ಟರ್ ರಣವೀರ್ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಿನಲ್ಲಿ ತಮ್ಮ ಸೋನಿಪತ್ ಮನೆಗಳಿಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹರಿಯಾಣದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಇವರು ಸಂಚರಿಸುತ್ತಿದ್ದ ಕಾರು ನಿಲುಗಡೆ ಮಾಡಿದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. \ No newline at end of file diff --git a/eesanje/url_47_194_9.txt b/eesanje/url_47_194_9.txt new file mode 100644 index 0000000000000000000000000000000000000000..3c38c7120d3bcfc883b2090615b575f7897f647a --- /dev/null +++ b/eesanje/url_47_194_9.txt @@ -0,0 +1,7 @@ +ಮಧ್ಯಪ್ರದೇಶದಲ್ಲಿ ಕೋಮುಗಲಭೆ, ಮೂರು ಪ್ರದೇಶಗಳಲ್ಲಿ ನಿಷೇದಾಜ್ಞೆ +ಶಾಜಾಪುರ, ಜ 9 (ಪಿಟಿಐ) ಧಾರ್ಮಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವರ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಶಾಜಾಪುರ ನಗರದ ಮೂರು ಪ್ರದೇಶಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. +ನಿನ್ನೆ ಸಂಜೆ ಮಗರಿಯಾ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಸೂಕ್ತ ಭದ್ರತೆಯನ್ನು ನಿಯೋಜಿಸಲಾಗಿದೆ ಮತ್ತು ಈ ಸಂಬಂಧ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶಾಜಾಪುರ ಕಲೆಕ್ಟರ್ ರಿಜು ಬಫ್ನಾ ಅವರು ಎಕ್ಸ್ ಪೋಸ್ಟ್‍ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‍ನ (ಸಿಆರ್‍ಪಿಸಿ) ಸೆಕ್ಷನ್ 144 ಅನ್ನು ಮೂರು ಪ್ರದೇಶಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ. +ತ್ರಿಪುರಾದ ಧಲೈನಲ್ಲಿ ಉಗ್ರ ಬಿಎಸ್‍ಎಪ್ ಮುಂದೆ ಶರಣಾಗತಿ +ಪ್ರಥಮ ಮಾಹಿತಿ ವರದಿಯ ಪ್ರಕಾರ, ನಿನ್ನೆ ರಾತ್ರಿ 8.30 ರ ಸುಮಾರಿಗೆ ಮಸೀದಿ ಬಳಿ ನಾಗ್-ನಾಗಿನ್ ರಸ್ತೆಯಲ್ಲಿ ಏಳು-ಎಂಟು ಜನರು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಮೊದಲು ಸಾಮಾನ್ಯ ಸಂಜೆ ಮೆರವಣಿಗೆಯನ್ನು ನಡೆಸುತ್ತಿದ್ದಾಗ ಜನರ ಗುಂಪನ್ನು ತಡೆದರು. ಮೆರವಣಿಗೆಯ ಭಾಗವಾಗಿದ್ದ ಮೋಹಿತ್ ರಾಥೋಡ್ ಎಂಬುವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. +ವಿವಾದದ ಕೇಂದ್ರ ಬಿಂದುವಾಗಿರುವ ಮಗರಿಯಾ, ಕಚ್ಚಿವಾಡ ಮತ್ತು ಲಾಲ್‍ಪುರಗಳಲ್ಲಿ ನಿಷೇದಾಜ್ಞೆ ವಿಧಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದ್ದು, ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದರು. +ಆ ಪ್ರದೇಶದಿಂದ ಮೆರವಣಿಗೆಯನ್ನು ಹೊರಕ್ಕೆ ತೆಗೆದುಕೊಳ್ಳದಂತೆ ವ್ಯಕ್ತಿಗಳು ಅವರಿಗೆ ಹೇಳಿದರು ಮತ್ತು ನಂತರ ಜನರ ಗುಂಪು ಅಲ್ಲಿ ಜಮಾಯಿಸಿತು ಎಂದು ಎಫ್‍ಐಆರ್‍ನಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_195_1.txt b/eesanje/url_47_195_1.txt new file mode 100644 index 0000000000000000000000000000000000000000..44e32599ff9874af3c4e6c27c15a879bb98b0288 --- /dev/null +++ b/eesanje/url_47_195_1.txt @@ -0,0 +1,9 @@ +ದೇಶದ ಮೊದಲ ಬುಲೆಟ್ ರೈಲು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣ +ಅಹಮದಾಬಾದ್, ಜ.8: ಗುಜರಾತ್-ಮಹಾರಾಷ್ಟ್ರ ನಡುವಿನ ಬುಲೆಟ್ ರೈಲು ಯೋಜನೆಗೆ 100 ಪ್ರತಿಶತ ಭೂಸ್ವಾಧೀನವನ್ನು ಪೂರ್ಣಗೊಳಿಸಿದೆ ಎಂದು ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾಪೆರ್ರೇಷನ್ ಲಿಮಿಟೆಡ್ ಹೇಳಿದೆ. ಮುಂಬೈ-ಅಹಮದಾಬಾದ್ ನಡುವಿನ ರೈಲು ಕಾರಿಡಾರ್‍ಗಾಗಿ ಭೂಸ್ವಾಧೀನ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಎಕ್ಸ್‍ನಲ್ಲಿ ಖುಷಿ ಹಂಚಿಕೊಂಡಿದ್ದಾರೆ, ಯೋಜನೆಗೆ ಅಗತ್ಯವಿರುವ ಸಂಪೂರ್ಣ 1389.49 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. +ಜನಪ್ರೀಯತೆ ಗಳಿಸಿರುವ ಮುಂಬೈ ಮತ್ತು ಅಹಮದಾಬಾದ್ ನಡುವೆ ಹೈಸ್ಪೀಡ್ ರೈಲು ಮಾರ್ಗವನ್ನು ನಿರ್ಮಿಸುವ ಸಿವಿಲ್ ಗುತ್ತಿಗೆಗಳನ್ನು ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ನೀಡಲಾಗಿದೆ, 120.4 ಕಿಮೀ ಗರ್ಡರ್‍ಗಳನ್ನು ಪ್ರಾರಂಭಿಸಲಾಗಿದೆ ಮತ್ತು 271 ಕಿಮೀ ಪಿಯರ್ ಕಾಸ್ಟಿಂಗ್ ಪೂರ್ಣಗೊಂಡಿದೆ ಎಂದು ಎನ್‍ಎಚ್‍ಎಸ್‍ಆರ್‍ಸಿಎಲ್ ತಿಳಿಸಿದೆ. +ಜಪಾನಿನ ಶಿಂಕನ್‍ಸೆನ್‍ನಲ್ಲಿ ಬಳಸಿದಂತೆ ಕಾರಿಡಾರ್ ಟ್ರ್ಯಾಕ್ ಸಿಸ್ಟಮ್‍ಗಾಗಿ ಮೊದಲ ಬಲವರ್ತಧಿ ಕಾಂಕ್ರೀಟ್ ಟ್ರ್ಯಾಕ್ ಬೆಡ್ ಅನ್ನು ಹಾಕುವ ಕಾರ್ಯ ಸೂರತ್ ಮತ್ತು ಆನಂದ್‍ನಲ್ಲಿ ಪ್ರಾರಂಭವಾಗಿದೆ. ಇದು ಮೊದಲ ಬಾರಿಗೆ ಎ- ಸ್ಲ್ಯಾಬ್ ಬ್ಯಾಲೆಸ್ಟ್‍ಲೆಸ್ ಟ್ರ್ಯಾಕ್ ಸಿಸ್ಟಮ್ ಅನ್ನು ಭಾರತದಲ್ಲಿ ಬಳಸಲಾಗುತ್ತಿದೆ ಎಂದು ತಿಳಿಸಿದೆ. ಗುಜರಾತ್‍ನ ವಲ್ಸಾದ್ ಜಿಲ್ಲೆಯ ಜರೋಲಿ ಗ್ರಾಮದ ಬಳಿ 350 ಮೀಟರ್ ಉದ್ದ ಮತ್ತು 12.6 ಮೀಟರ್ ವ್ಯಾಸದ ಮೊದಲ ಪರ್ವತ ಸುರಂಗವನ್ನು ಕೇವಲ 10 ತಿಂಗಳಲ್ಲಿ ಪೂರ್ಣಗೊಳಿಸುವುದರೊಂದಿಗೆ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ ಎಂದು ಹೇಳಿದೆ. +ಜೆಟ್ ಲ್ಯಾಗ್ ಪಾರ್ಟಿ ಪ್ರಕರಣ : ನಟ ದರ್ಶನ್ ಸೇರಿ ಹಲವರಿಗೆ ನೋಟಿಸ್ +ಮೊದಲ ಉಕ್ಕಿನ ಸೇತುವೆ, 70 ಮೀಟರ್ ವ್ಯಾಪಿಸಿರುವ ಮತ್ತು 673 ಒಖಿ ತೂಕವನ್ನು ಸೂರತ್‍ನಲ್ಲಿ ಓಊ 53 ಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಮತ್ತು 28 ರಲ್ಲಿ 16 ಅಂತಹ ಸೇತುವೆಗಳು ತಯಾರಿಕೆಯ ವಿವಿಧ ಹಂತಗಳಲ್ಲಿವೆ ಎಂದು ಅದು ಹೇಳಿದೆ. +ಕಾರಿಡಾರ್‍ನಲ್ಲಿ 24 ರಲ್ಲಿ ಆರು ನದಿಗಳ ಮೇಲೆ ಸೇತುವೆ ನಿರ್ಮಾಣ ಪೂರ್ಣಗೊಂಡಿದೆ, ಪಾರ್ (ವಲ್ಸಾದ್ ಜಿಲ್ಲೆ), ಪೂರ್ಣ (ನವಸಾರಿ ಜಿಲ್ಲೆ), ಮಿಂಧೋಲಾ (ನವಸಾರಿ ಜಿಲ್ಲೆ), ಅಂಬಿಕಾ (ನವಸಾರಿ ಜಿಲ್ಲೆ), ಔರಂಗ (ವಲ್ಸಾದ್ ಜಿಲ್ಲೆ) ಮತ್ತು ವೆಂಗನಿಯಾ ( ನವಸಾರಿ ಜಿಲ್ಲೆ)ಎಂದು ಹೇಳಿದೆ. +ನರ್ಮದಾ, ತಪತಿ, ಮಾಹಿ ಮತ್ತು ಸಬರಮತಿ ನದಿಗಳ ಮೇಲೆ ಸೇತುವೆ ಕಾಮಗಾರಿ ನಡೆಯುತ್ತಿದೆ ಸಂಚಾರ ವೇಳೆ ರೈಲು ಮತ್ತು ಸಿವಿಲ್ ರಚನೆಗಳಿಂದ ಉಂಟಾಗುವ ಶಬ್ದವನ್ನು ತಗ್ಗಿಸಲು ವಾಯಡಕ್ಟ್‍ನ ಎರಡೂ ಬದಿಗಳಲ್ಲಿ ಶಬ್ದ ತಡೆಗಳನ್ನು ನಿರ್ಮಿಸಲಾಗುತ್ತಿದೆ. +ಮಹಾರಾಷ್ಟ್ರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಮತ್ತು ಶಿಲ್ಪಾಟಾ ನಡುವಿನ 21 ಕಿಮೀ ಉದ್ದದ ಸುರಂಗದ ಭಾಗವಾಗಿರುವ ಭಾರತದ ಮೊದಲ 7 ಕಿಮೀ ಸಾಗರದೊಳಗಿನ ರೈಲು ಸಂಚಾರಕ್ಕಾಗಿ ಕೆಲಸ ಪ್ರಾರಂಭವಾಗಿದೆ ಮತ್ತು ಮುಂಬೈ ಎಚ್‍ಎಸ್‍ಆರ್ ನಿಲ್ದಾಣದ ನಿರ್ಮಾಣಕ್ಕಾಗಿ ಉತ್ಖನನ ಕಾರ್ಯಗಳು ಪ್ರಾರಂಭವಾಗಿದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_195_10.txt b/eesanje/url_47_195_10.txt new file mode 100644 index 0000000000000000000000000000000000000000..d7916b37feb51c4942b0364d3c796f92ffb3b9fa --- /dev/null +++ b/eesanje/url_47_195_10.txt @@ -0,0 +1,8 @@ +ಸೂರ್ಯನ ಗುರಿ ತಲುಪಿದ ಆದಿತ್ಯ ಎಲ್-1, ಇಸ್ರೋ ಮತ್ತೊಂದು ಮೈಲಿಗಲ್ಲು +ನವದೆಹಲಿ,ಜ.6- ಇಡೀ ವಿಶ್ವವೇ ಕಾತುರದಿಂದ ಎದುರು ನೋಡುತ್ತಿರುವ ಸೂರ್ಯ ನಮಸ್ಕಾರ ಆದಿತ್ಯ ಎಲ್-1 ಉಪಗ್ರಹ ಇಂದು ಸಂಜೆ 4 ಗಂಟೆಗೆ ಲ್ಯಾಂಗ್ರೇಜಿಯನ್ ಬಿಂದು-1 ರ ಗುರಿ ತಲುಪುವ ಮೂಲಕ ಇತಿಹಾಸ ನಿರ್ಮಾಣವಾಗುವ ನಿರೀಕ್ಷೆಗಳಿವೆ. ಕಳೆದ ಸೆ.2 ರಂದು ಪಿಎಸ್‍ಎಲ್‍ವಿ ರಾಕೆಟ್‍ನೊಂದಿಗೆ ಉಡಾವಣೆಗೊಂಡಿದ್ದ ಆದಿತ್ಯ ಎಲ್-1 ಸೂರ್ಯ ಅಧ್ಯಯನದ ವೈಜ್ಞಾನಿಕ ಉಪಗ್ರಹ ಈವರೆಗೂ 15 ಲಕ್ಷ ಕಿ.ಮೀ. ದೂರ ಪ್ರಯಾಣಿಸಿ ಅಂತಿಮವಾಗಿ ತನ್ನ ಗಮ್ಯ ತಲುಪುವ ಕ್ಷಣಗಳಿಗಾಗಿ ವಿಶ್ವಾದ್ಯಂತ ಕಾತುರದ ಕ್ಷಣಗಳು ಎದುರಾಗಿವೆ. +ಆದಿತ್ಯ ಎಲ್-1 ಗುರಿ ತಲುಪುವ ಬಗ್ಗೆ ಇಸ್ರೊ ಸಂಸ್ಥೆ ಅಧಿಕೃತವಾಗಿ ಇನ್ನೂ ಯಾವುದೇ ಪ್ರಕಟಣೆ ನೀಡಿಲ್ಲ. ಆದರೆ ಬಾಹ್ಯಾಕಾಶ ವಿಚಾರಗಳ ಕುರಿತು ಕಾಲಕಾಲಕ್ಕೆ ಮಾಹಿತಿ ನೀಡುವ ಇಸ್ರೊ ಇನ್ಸೈಟ್ ಎಂಬ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಆದಿತ್ಯ ಎಲ್-1 ಬಗ್ಗೆ ಮಾಹಿತಿ ಪ್ರಕಟಿಸಲಾಗಿದೆ. ನಾನು ಆಲೊಆರ್ಬಿಟ್‍ನತ್ತ ಹೋಗುತ್ತಿದ್ದೇನೆ. ನೀವು ಕೇಳಿದ್ದು ನಿಜ. ಸಂಜೆ 4 ಗಂಟೆಗೆ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಲ್ಯಾಂಗ್ರೇಜಿಯನ್ ಬಿಂದುವಿನಲ್ಲಿ ಪ್ರತಿಷ್ಠಾಪನೆಯಾಗಲಿದೆ. ಇದಕ್ಕಾಗಿ ಇಸ್ರೊ ಅಂತಿಮ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ತಿಳಿಸಲಾಗಿದೆ. +ಆದಿತ್ಯ ಎಲ್-1 ಇಸ್ರೊದ ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಗಗನಯಾನವಾಗಿದೆ. 7 ವೈಜ್ಞಾನಿಕ ಪ್ಲೇ ಲೋಡ್‍ಗಳನ್ನ ಒಳಗೊಂಡಿರುವ ಉಪಗ್ರಹ ಸೂರ್ಯನ ಪ್ರಭಾಗೋಲ (ಫೋಟೋಸ್ಪೇರ್), ವರ್ಣಗೋಲ (ಕ್ರೋಮಾಸ್ಪೇರ್) ಸೂರ್ಯನ ಹೊರ ಮೇಲ್ಮೈ ಅನ್ನು ಅಧ್ಯಯನ ನಡೆಸಲಿದೆ. ಲಕ್ಷಾಂತರ ಕಿ.ಮೀ. ದೂರದಲ್ಲಿರುವ ಎಲ್-1 ಬಿಂದು ಸೂರ್ಯನ ನಿರಂತರ ಅಧ್ಯಯನಕ್ಕೆ ಸೂಕ್ತ ತಾಣವಾಗಿದೆ. ಗ್ರಹಣ ಸೂರ್ಯಾಸ್ತ ಮುಕ್ತ ಬಿಂದುವಿನಲ್ಲಿ ಪ್ರತಿಷ್ಠಾಪನೆಗೊಳ್ಳುವ ಆದಿತ್ಯ ಎಲ್-1 ವರ್ಷಪೂರ್ತಿ ಮತ್ತು ದಿನದ 24 ಗಂಟೆ ಕಾಲ ಸೂರ್ಯ ಅಧ್ಯಯನ ನಡೆಸಲಿದೆ. +ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ : ಸಿಎಂ ಸಿದ್ದರಾಮಯ್ಯ +ಇದರಿಂದಾಗಿ ಈವರೆಗೂ ವಿಶ್ವದ ಯಾವುದೇ ದೇಶದ ವಿಜ್ಞಾನಿಗಳು ಸಾಸದ ಯಶಸ್ಸನ್ನು ಭಾರತೀಯ ವಿಜ್ಞಾನಿಗಳು ಸಾಕಾರಗೊಳಿಸುವ ನಿರೀಕ್ಷೆಗಳಿವೆ. ಈವರೆಗಿನ ಮಾಹಿತಿ ಪ್ರಕಾರ ಪ್ರತಿ 11 ವರ್ಷಕ್ಕೊಮ್ಮೆ ಸೂರ್ಯನಲ್ಲಿನ ಚಟುವಟಿಕೆಗಳು ಬಿರುಸು ಪಡೆದುಕೊಳ್ಳಲಿವೆ. ಬೆಂಕಿಯ ಉಂಡೆಯಾಗಿರುವ ಸೂರ್ಯನಿಂದ ಈ ವೇಳೆ ಕಣ ಪ್ರವಾಹ, ವಿಕಿರಣಗಳು, ಸೌರ ಜ್ವಾಲೆಗಳು ಚಿಮ್ಮಲಿವೆ. ಅವುಗಳ ಪರಿಣಾಮ ಭೂಮಿಯ ಮೇಲ್ಮೈಯನ್ನು ಸುತ್ತುವರೆದಿರುವ ಕಾಂತೀಯ ಕ್ಷೇತ್ರಗಳ ಮೇಲಾಗಲಿದೆ. +ಆರೋಗ್ಯದಲ್ಲಿ ಏರುಪೇರು, ಹವಾಮಾನ ಬದಲಾವಣೆ, ಇಂಟರ್‍ನೆಟ್ ಸೇರಿದಂತೆ ಹಲವು ಸಂಪರ್ಕ ವ್ಯವಸ್ಥೆಗಳಿಗೆ ಅಡಚಣೆ, ವಿದ್ಯುತ್ ಸರಬರಾಜು ಮತ್ತು ಉತ್ಪಾದನಾ ಗ್ರಿಡ್‍ಗಳಿಗೆ ಹಾನಿ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಾಗಲಿವೆ. ಬಾಹ್ಯಾಕಾಶದಲ್ಲಿ ಪ್ರಯಾಣಿಸುವ ಗಗನಯಾತ್ರಿಗಳಿಗೂ ಇದರಿಂದ ತೊಂದರೆಯಾಗುವ ಸಾಧ್ಯತೆಯಿದೆ. ಸೂರ್ಯನಿಂದ ಯಾವ ಕ್ಷಣದಲ್ಲಿ ಸೌರಜ್ವಾಲೆ ಹೊರಹೊಮ್ಮಲಿದೆ, ಅದರ ತೀವ್ರತೆ ಎಷ್ಟು ಎಂಬ ಮಾಹಿತಿಯನ್ನು ಕರಾರುವಕ್ಕಾಗಿ ಪಡೆದುಕೊಂಡಿದ್ದಾದರೆ ಆಗಬಹುದಾದ ಅಪಾಯಗಳನ್ನು ತಪ್ಪಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಆದಿತ್ಯ ಎಲ್-1 ಸೂರ್ಯ ಶಿಕಾರಿ ಇಸ್ರೊದ ಜಾಗತಿಕ ಸಾಧನದ ಮೈಲಿಗಲ್ಲು ಎಂದೇ ಪರಿಭಾವಿಸಲಾಗಿದೆ. +ಸೂರ್ಯ ಶಿಕಾರಿಯಿಂದ ದೊರೆಯುವ ವೈಜ್ಞಾನಿಕ ದತ್ತಾಂಶಗಳನ್ನು ಭಾರತ ಇಡೀ ವಿಶ್ವದೊಂದಿಗೆ ಹಂಚಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಚಂದ್ರಯಾನ-1,2,3, ಮಂಗಳಯಾನ, ಮೆಗಾಟ್ರಾಫಿಕ್, ಅಸ್ಟ್ರೋಸ್ಯಾಟ್ ಸೇರಿದಂತೆ ಇನ್ನಿತರ ಯಾನಗಳು ಯಶಸ್ವಿಯಾಗಿವೆ. ಅವುಗಳ ಮೂಲಕ ರವಾನಿಸಲಾದ ವೈಜ್ಞಾನಿಕ ಉಪಕರಣಗಳಿಂದ ಲಭ್ಯವಾದ ದತ್ತಾಂಶವನ್ನು ಇಸ್ರೊ ವಿವಿಧ ದೇಶಗಳ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಹಂಚಿಕೊಂಡಿತ್ತು. ಇಂದು ಸಂಜೆ ಆದಿತ್ಯ ಎಲ್-1 ಲ್ಯಾಂಗ್ರೇಜಿಯನ್ ಗಮ್ಯ ತಲುಪುವ ಕಾರ್ಯಾಚರಣೆಯು ಯಶಸ್ವಿಯಾಗಲಿದೆ. ಅದರಿಂದ ದೊರೆಯುವ ಅಮೂಲ್ಯ ಮಾಹಿತಿಯನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_195_11.txt b/eesanje/url_47_195_11.txt new file mode 100644 index 0000000000000000000000000000000000000000..0a6717911aafb4e7c43ac0ce216d60887c8e382e --- /dev/null +++ b/eesanje/url_47_195_11.txt @@ -0,0 +1,9 @@ +ಮಹದೇವ ಆ್ಯಪ್ ಆನ್‍ಲೈನ್ ಬೆಟ್ಟಿಂಗ್ ಪ್ರಕರಣದ ಹೊಸ ಚಾರ್ಜ್‍ಶೀಟ್ ಸಲ್ಲಿಕೆ +ರಾಯ್‍ಪುರ,ಜ.6- ಮಹಾದೇವ್ ಆನ್‍ಲೈನ್ ಬುಕ್ ಆಪ್ ಮೂಲಕ ಅಕ್ರಮ ಬೆಟ್ಟಿಂಗ್ ಮತ್ತು ಗೇಮಿಂಗ್‍ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು ರಾಯ್‍ಪುರದ ವಿಶೇಷ ನ್ಯಾಯಾಲಯಕ್ಕೆ ಹೊಸ ಚಾರ್ಜ್‍ಶೀಟ್ ಸಲ್ಲಿಸಿದೆ. ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಹೆಸರನ್ನು ಒಳಗೊಂಡಂತೆ 6 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇತರ ಐವರು ಆರೋಪಿಗಳನ್ನು ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದ್ದು, ವಿವಾದಾತ್ಮಕ ಬೆಟ್ಟಿಂಗ್ ಆಪ್ ಹಗರಣದ ಮೇಲೆ ಬೆಳಕು ಚೆಲ್ಲಿದೆ. +ದೋಷಾರೋಪ ಪಟ್ಟಿಯಲ್ಲಿ ಬಘೇಲ್ ಜತೆಗೆ ಶುಭಂ ಸೋನಿ, ಅಮಿತ್ ಕುಮಾರ್ ಅಗರ್ವಾಲ್, ರೋಹಿತ್ ಗುಲಾಟಿ, ಭೀಮ್ ಸಿಂಗ್ ಮತ್ತು ಅಸೀಮ್ ದಾಸ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಮಹದೇವ್ ಬೆಟ್ಟಿಂಗ್ ಆಪ್‍ನ ಪ್ರವರ್ತಕರ ಕೊರಿಯರ್ ಆಗಿ ಕೆಲಸ ಮಾಡುತ್ತಿದ್ದ ಅಸೀಮ್ ದಾಸ್ ಅವರನ್ನು ಇತ್ತೀಚೆಗೆ ಬಂಧಿಸಲಾಗಿದ್ದು, ಅವರ ನಿವೇಶನದಿಂದ ಸುಮಾರು 5.39 ಕೋಟಿ ರೂ. ವಶಪಡಿಸಿಕೊಂಡಿರುವ ಬಗ್ಗೆ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ. +ಸುಮಾರು 1,700-1,800 ಪುಟಗಳ ಹೊಸ ಚಾರ್ಜ್‍ಶೀಟ್‍ನ್ನು ಜನವರಿ 1ರಂದು ಸಲ್ಲಿಸಲಾಗಿದ್ದು, ನಗದು ಕೊರಿಯರ್ ಆಸಿಮ್ ದಾಸ್, ಪೊಲೀಸ್ ಪೇದೆ ಭೀಮ್ ಸಿಂಗ್ ಯಾದವ್, ಆ್ಯಪ್‍ಗೆ ಸಂಪರ್ಕ ಹೊಂದಿದ ಪ್ರಮುಖ ಕಾರ್ಯನಿರ್ವಾಹಕ ಶುಭಂ ಸೋನಿ ಸೇರಿದಂತೆ ಐವರು ಆರೋಪಿಗಳನ್ನು ಆರೋಪಿಗಳೆಂದು ಹೆಸರಿಸಲಾಗಿದೆ. +ಆಪ್‍ನ ಇಬ್ಬರು ಪ್ರಮುಖ ಪ್ರವರ್ತಕರಾದ ರವಿ ಉಪ್ಪಲ್ ಮತ್ತು ಸೌರಭ್ ಚಂದ್ರಕರ್ ಅವರ ಗಡೀಪಾರು ಅಥವಾ ಹಸ್ತಾಂತರವನ್ನು ಪಡೆಯಲು ಫೆಡರಲ್ ಏಜೆನ್ಸಿಯು ಈ ಎರಡನೇ ಪ್ರಾಸಿಕ್ಯೂಷನ್ ದೂರನ್ನು (ಚಾರ್ಜ್‍ಶೀಟ್) ದುಬೈನಲ್ಲಿರುವ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇಡಿ ಆದೇಶದ ಮೇರೆಗೆ ಇಂಟರ್ಪೋಲ್ ರೆಡ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಇತ್ತೀಚೆಗೆ ದುಬೈನಲ್ಲಿ ಬಂಧಿಸಲಾಗಿತ್ತು. ಸಂಸ್ಥೆಯು ಮೊದಲ ಚಾರ್ಜ್‍ಶೀಟ್‍ನ ವಿಷಯಗಳನ್ನು ಯುಎಇ ಅಧಿಕಾರಿಗಳೊಂದಿಗೆ ಹಂಚಿಕೊಂಡಿದೆ. ಅದರ ಆಧಾರದ ಮೇಲೆ ಇಂಟರ್ಪೋಲ್ ರೆಡ್ ನೋಟಿಸ್ (ಆರೆನ್) ಹೊರಡಿಸಲು ಇಬ್ಬರ ವಿರುದ್ಧ ಜಾಮೀನು ರಹಿತ ವಾರಂಟ್ ಅನ್ನು ಪಡೆದುಕೊಂಡಿದೆ. +ಪಡಿತರ ವಿತರಣೆ ಹಗರಣದಲ್ಲಿ ಟಿಎಂಸಿ ನಾಯಕ ಶಂಕರ್ ಅಧ್ಯಾ ಅರೆಸ್ಟ್ +ವಶಪಡಿಸಿಕೊಂಡ ಹಣವನ್ನು ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್‍ಗೆ ಕಳುಹಿಸಲಾಗಿದೆ ಎಂದು ಅಸೀಮ್ ದಾಸ್ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿ ಸಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾವಣೆಗೂ ಮುನ್ನ ಈ ವಹಿವಾಟು ನಡೆದಿದೆ ಎನ್ನಲಾಗಿದೆ. ಮಹಾದೇವ್ ಬೆಟ್ಟಿಂಗ್ ಆಪ್‍ನ ಪ್ರವರ್ತಕರು ಭೂಪೇಶ್ ಬಘೇಲ್ಗೆ ಒಟ್ಟು 508 ಕೋಟಿ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಲಾಯ ತನಿಖೆ ವೇಳೆ ಗೊತ್ತಾಗಿತ್ತು. ರಾಜ್ಯದಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಲು ಭೂಪೇಶ್ ಬಘೇಲ್ಗೆ ಹಣವನ್ನು ಕಳುಹಿಸಲಾಗಿದೆ ಎಂದು ಚಾರ್ಜ್‍ಶೀಟ್‍ನಲ್ಲಿ ಪ್ರತಿಪಾದಿಸಲಾಗಿದೆ. +ಏನಿದು ಮಹದೇವ್ ಬೆಟ್ಟಿಂಗ್ ಆಪ್ ಹಗರಣ?:ಮಹದೇವ್ ಆನ್‍ಲೈನ್ ಆಪ್ ಪ್ರವರ್ತಕರು 5,000 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ. ಆ್ಯಪ್ ಸ್ಕಿಲ್ ಗೇಮ್‍ಗಳ ಹೆಸರಿನಲ್ಲಿ ಭಾರತದಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‍ಗಳನ್ನು ನಡೆಸುತ್ತಿದೆ. +ಆ್ಯಯಪ್ ಕಂಪನಿಯು ವೆಬ್‍ಸೈಟ್‍ಗಳಲ್ಲಿ ಸಂಪರ್ಕ ಸಂಖ್ಯೆಯ ಜಾಹೀರಾತು ನೀಡಿ, ಹಣ ಠೇವಣಿ ಮಾಡಲು ಲೇಸರ್247 ಡಾಟ್ ಕಾಮ್‍ನಂತಹ ಪ್ಲಾಟ್‍ಫಾರ್ಮ್‍ಗಳನ್ನು ಬಳಸುವಂತೆ ಬಳಕೆದಾರರಿಗೆ ಸೂಚಿಸುತ್ತದೆ. ಈ ಆ್ಯಪ್ ಪ್ರವರ್ತಕರು ಛತ್ತೀಸ್‍ಗಡ ಮಾಜಿ ಸಿಎಂಗೆ ಹಣ ಕಳುಹಿಸಿಕೊಟ್ಟಿರುವುದನ್ನು ಜಾರಿ ನಿರ್ದೇಶನಾಲಯ ಬಯಲಿಗೆಳೆದಿತ್ತು. \ No newline at end of file diff --git a/eesanje/url_47_195_12.txt b/eesanje/url_47_195_12.txt new file mode 100644 index 0000000000000000000000000000000000000000..20415b4f2e3a1c793eb6c8f8ff4c3247e6a5df67 --- /dev/null +++ b/eesanje/url_47_195_12.txt @@ -0,0 +1,8 @@ +ಪಡಿತರ ವಿತರಣೆ ಹಗರಣದಲ್ಲಿ ಟಿಎಂಸಿ ನಾಯಕ ಶಂಕರ್ ಅಧ್ಯಾ ಅರೆಸ್ಟ್ +ಕೋಲ್ಕತ್ತಾ,ಜ.6- ಪಡಿತರ ವಿತರಣೆ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಂಕರ್ ಅಧ್ಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಆವರಣದಲ್ಲಿ ಇಡಿ ವ್ಯಾಪಕ ಶೋಧ ನಡೆಸಿದ ನಂತರ ಬಂಗಾಂವ್ ಪುರಸಭೆಯ ಮಾಜಿ ಅಧ್ಯಕ್ಷ ಶಂಕರ್ ಅಧ್ಯಾ ಅವರನ್ನು ಬಂಧಿಸಲಾಗಿದೆ. +ತನಿಖೆಯ ಸಂದರ್ಭದಲ್ಲಿ ತನಿಖಾ ಸಂಸ್ಥೆ ಅಧಿಕಾರಿಗಳಿಗೆ ಸಹಕರಿಸಿದ ಹೊರತಾಗಿಯೂ ತನ್ನ ಪತಿಯನ್ನು ಬಂಧಿಸಲಾಗಿದೆ ಎಂದು ಅವರ ಪತ್ನಿ ಜ್ಯೋತ್ಸ್ನಾ ಆಧ್ಯ ಹೇಳಿದ್ದಾರೆ. ನಿನ್ನೆಯಿಂದ ಇಡಿ ತಂಡ ಶಂಕರ್ ಆದ್ಯಾ ಮನೆ ಮೇಲೆ ದಾಳಿ ನಡೆಸುತ್ತಿತ್ತು. ಸದ್ಯ ನಾಯಕ ಶಂಕರ್ ಅವರನ್ನು ಬಂಧಿಸಿ ಕೋಲ್ಕತ್ತಾದ ಇಡಿ ಕೇಂದ್ರ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದೆ. +ಶಂಕರ್ ಆಧ್ಯಾ ಅವರ ಮನೆ ಮತ್ತು ಅತ್ತೆಯ ಮನೆ ಮೇಲೂ ನಿನ್ನೆ ದಾಳಿ ನಡೆದಿದೆ. ಟಿಎಂಸಿ ಮುಖಂಡರ ಮನೆಯಲ್ಲಿ ಎಂಟೂವರೆ ಲಕ್ಷ ರೂಪಾಯಿ ಹಾಗೂ ಹಲವು ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಬಂಧನದ ವೇಳೆ ಇಡಿ ತಂಡದ ಮೇಲೂ ದಾಳಿ ನಡೆಸಲಾಗಿತ್ತು. ಶಂಕರ್ ಅವರನ್ನು ಬಂಧಿಸಲು ಆಗಮಿಸಿದಾಗ, ಟಿಎಂಸಿ ನಾಯಕನ ಬೆಂಬಲಿಗರು ಇಡಿ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸಿದರು ಮತ್ತು ಅವರ ವಾಹನವನ್ನು ಇಟ್ಟಿಗೆ ಮತ್ತು ಕಲ್ಲುಗಳಿಂದ ತೂರಿದ್ದರು. ಸಿಆರ್ ಪಿಎಫ್ ಯೋಧರ ಸಹಾಯದಿಂದ ಇಡಿ ಶಂಕರನನ್ನು ಬಂಧಿಸಿದ್ದು, ಇದೀಗ ಟಿಎಂಸಿ ನಾಯಕನನ್ನು ಕೋಲ್ಕತ್ತಾಕ್ಕೆ ಕರೆತರಲಾಗಿದೆ. +ಇವಿಎಂ, ವಿವಿಪ್ಯಾಟ್‍ಗಳ ಕುರಿತ ಆರೋಪಗಳನ್ನು ತಳ್ಳಿಹಾಕಿದ ಚುನಾವಣಾ ಆಯೋಗ +ಇದಕ್ಕೂ ಮುನ್ನ ಶಹಜಹಾನ್ ಶೇಕ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಇಡಿ ತಂಡ ಶುಕ್ರವಾರ ದಾಳಿ ನಡೆಸಿತ್ತು. ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ಶುಕ್ರವಾರ ನಡೆದ ದಾಳಿಯ ವೇಳೆ ಗುಂಪು ದಾಳಿಯಲ್ಲಿ ತನ್ನ ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿವೆ ಮತ್ತು ಮೊಬೈಲ್ ಫೋನ್ಗಳು ಮತ್ತು ವ್ಯಾಲೆಟ್ಗಳಂತಹ ವಸ್ತುಗಳನ್ನು ಲೂಟಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ () ತಿಳಿಸಿದೆ. ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲು ಸ್ಥಳೀಯ ಪೊಲೀಸರಿಗೆ ದೂರು ನೀಡಿರುವುದಾಗಿ ಫೆಡರಲ್ ಏಜೆನ್ಸಿ ತಿಳಿಸಿದೆ. +ದಾಳಿ ಯಾವಾಗ ನಡೆಯಿತು?:ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದಂತೆ ಉತ್ತರ 24 ಪರಗಣದ ಸಂದೇಶಖಾಲಿಯಲ್ಲಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶೇಖ್ ಷಹಜಹಾನ್ ಅವರ ನಿವಾಸವನ್ನು ಶೋಸಲು ಹೋದಾಗ ಇಡಿ ತಂಡ ದಾಳಿ ನಡೆಸಿದೆ. ಇಡಿ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ ಗುಂಪು (ಶೇಖ್ ಮತ್ತು ಅವರ ಸಹಚರರಿಂದ ಪ್ರಚೋದಿತವಾಗಿದೆ ಎಂದು ಶಂಕಿಸಲಾಗಿದೆ) ದಾಳಿ ಮಾಡಿದೆ ಎಂದು ಸಂಸ್ಥೆ ಹೇಳಿದೆ. +ಗುಂಪು ಇಡಿ ಅಧಿಕಾರಿಗಳನ್ನು ಕೊಲ್ಲುವ ಉದ್ದೇಶದಿಂದ ಅವರತ್ತ ಸಾಗುತ್ತಿದ್ದಾಗ ಮೂವರು ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿವೆ. ಫೆಡರಲ್ ಏಜೆನ್ಸಿಯು ಇತರ ಅಧಿಕಾರಿಗಳು ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಹುಡುಕದೆ ಸ್ಥಳದಿಂದ ಪಲಾಯನ ಮಾಡಬೇಕಾಯಿತು ಎಂದು ಹೇಳಿದರು, ಏಕೆಂದರೆ ಜನಸಮೂಹವು ತುಂಬಾ ಹಿಂಸಾತ್ಮಕದಿಂದ ಕೂಡಿತ್ತು. ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ತಡೆಯಲು ಅಧಿಕಾರಿಗಳನ್ನು ಬೆನ್ನಟ್ಟಿದ್ದರು. \ No newline at end of file diff --git a/eesanje/url_47_195_2.txt b/eesanje/url_47_195_2.txt new file mode 100644 index 0000000000000000000000000000000000000000..fcae4de464cca98f42816c8d529360f3697146ec --- /dev/null +++ b/eesanje/url_47_195_2.txt @@ -0,0 +1,12 @@ +ಬಿಲ್ಕಿಸ್‍ಬಾನು ಪ್ರಕರಣ : ಗುಜರಾತ್ ಸರ್ಕಾರಕ್ಕೆ ಸುಪ್ರೀಂನಲ್ಲಿ ಮುಖಭಂಗ +ನವದೆಹಲಿ,ಜ.8- 2002ರ ಗೋದ್ರಾ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್‍ಬಾನು ಅತ್ಯಾಚಾರ ಪ್ರಕರಣದಲ್ಲಿ 11 ಆರೋಪಿಗಳನ್ನು ಅವಧಿಪೂರ್ವ ಮುನ್ನ ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದಾಗ ಗುಜರಾತ್ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ಅವಧಿಗೂ ಪೂರ್ವ ಬಿಡುಗಡೆಯಾಗಿದ್ದ 11 ಆರೋಪಿಗಳು ಈಗ ಪುನಃ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. +ಗುಜರಾತ್ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಲ್ಕಿಸ್ ಬಾನು ಹೊರತಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಮಹುವಾ ಮೊಯಿತ್ರಾ, ಸಿಪಿಐ(ಎಂ) ಪಾಲಿಟ್ ಬ್ಯುರೋ ಸದಸ್ಯೆ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲೌಲ್ ಹಾಗೂ ಲಕ್ನೋ ವಿವಿಯ ಮಾಜಿ ಉಪಕುಲಪತಿ ರೂಪ್ ರೇಖಾ ವರ್ಮಾ ಸಹಿತ ಹಲವರು ಗುಜರಾತ್ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್‍ನ ಕದ ತಟ್ಟಿದ್ದರು. +ಕಳೆದ ವರ್ಷ ಅಕ್ಟೋಬರ್‍ನಲ್ಲಿ 11 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಎರಡು ಕಡೆಯ ವಾದ ಆಲಿಸಿದ್ದ ನ್ಯಾಯಾಲಯ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿತ್ತು. ತೀರ್ಪನ್ನು ಪ್ರಕಟಿಸಿದ ಸುಪ್ರಿಂಕೋರ್ಟ್‍ನ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಉಜ್ವಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಗುಜರಾತ್ ಸರ್ಕಾರ ತೆಗೆದುಕೊಂಡ ತೀರ್ಮಾನ ಸಮರ್ಥವಾಗಿಲ್ಲ. ಇದೊಂದು ವಂಚನೆ ಕಾಯ್ದೆ ಎಂದು ತನ್ನ ಆದೇಶದಲ್ಲಿ ಖಾರವಾಗಿಯೇ ಹೇಳಿದೆ. +ಯಶ್ ಕಟೌಟ್ ಕಟ್ಟುವಾಗ ವಿದ್ಯುತ್ ತಗುಲಿ ಮೂವರು ಅಭಿಮಾನಿಗಳ ಸಾವು +ಅಲ್ಲದೆ ಅರ್ಜಿದಾರರಲ್ಲಿ ಒಬ್ಬರಾಗಿದ್ದ ಬಿಲ್ಕಿಸ್‍ಬಾನು ಸಲ್ಲಿಸಿರುವ ಅರ್ಜಿಯು ಮಾನ್ಯವಾಗಿದ್ದು, ವಿಚಾರಣೆ ಮುಂದುವರೆಯುತ್ತದೆ ಎಂದು ಹೇಳಿದ ನ್ಯಾಯಾಲಯ, ಅಪರಾಧಿಗಳ ಶೀಘ್ರ ಬಿಡುಗಡೆ ಕುರಿತು ಆದೇಶವನ್ನು ಹೊರಡಿಸಲು ಗುಜರಾತ್ ಸರ್ಕಾರಕ್ಕೆ ಅಧಿಕಾರವಿಲ್ಲ. ಏಕೆಂದರೆ ಈ ಪ್ರಕರಣದ ವಿಚಾರಣೆ ನಡೆದಿದ್ದು ಮಹಾರಾಷ್ಟ್ರದಲ್ಲಿ. ಹಾಗಾಗಿ ಇಲ್ಲಿನ ಸರ್ಕಾರಕ್ಕೆ ಮಾತ್ರ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಇದೆ. ಈ ಬಿಡುಗಡೆ ಆದೇಶದಲ್ಲಿ ಸಾಮಥ್ರ್ಯದ ಕೊರತೆ ಇದೆ. ಆ ಕಾರಣದಿಂದ ಈ ಬಿಡುಗಡೆ ಆದೇಶವನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿತು. +1992ರ ಶಿಕ್ಷೆ ಕಡಿತ (ರೆಮಿಷನ್) ನೀತಿಯಾನುಸಾರ ಗುಜರಾತ್ ಸರ್ಕಾರ ಅಪರಾಧಿಗಳನ್ನು ಬಿಡುಗಡೆಗೊಳಿಸಿತ್ತು. ಆದರೆ ಈ ಕಾನೂನಿನ ಸ್ಥಾನದಲ್ಲಿ 2014ರಲ್ಲಿ ಜಾರಿಗೊಳಿಸಲಾದ ಕಾನೂನಿನ ಪ್ರಕಾರ ದೊಡ್ಡ ಶಿಕ್ಷೆ ಎದುರಿಸುವ ಪ್ರಕರಣಗಳಲ್ಲಿ ಶಿಕ್ಷೆ ಕಡಿತಗೊಳಿಸುವುದನ್ನು ನಿಷೇಧಿಸಲಾಗಿದೆ. ಈ 11 ಮಂದಿಗೆ 2008ರಲ್ಲಿ ಶಿಕ್ಷೆ ವಿಧಿಸಲಾಗಿದ್ದರಿಂದ 1992 ರ ನೀತಿ ಅವರಿಗೆ ಅನ್ವಯಿಸುತ್ತದೆ ಎಂದು ಗುಜರಾತ್ ಸರ್ಕಾರದ ಪರ ವಾದಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಹೇಳಿದ್ದರು. +ಪ್ರಕರಣದ ಹಿನ್ನಲೆ:2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು 11 ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಈ ಆದೇಶವು ವಿರೋಧ ಪಕ್ಷ ಹಾಗೂ ಸಾರ್ವಜನಿಕರ ಖಂಡನೆ ಹಾಗೂ ಆಕ್ರೋಶಕ್ಕೆ ಗುರಿಯಾಗಿತ್ತು.ಅಪರಾಧಿಗಳ ಬಿಡುಗಡೆ ವೇಳೆ ಅವರಿಗೆ ಅದ್ಧೂರಿ ಸ್ವಾಗತವನ್ನು ನೀಡಲಾಗಿತ್ತು. ಅಪರಾಧಿಗಳ ಜತೆಗೆ ಬಿಜೆಪಿ ಸಂಸದರು, ಶಾಸಕರು, ವೇದಿಕೆಯನ್ನು ಹಂಚಿಕೊಂಡಿದ್ದರು. +ಈ ಸುದ್ದಿಯು ಭಾರೀ ಸದ್ದು ಮಾಡಿತ್ತು. ಇನ್ನು ಈ ಅಪರಾಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಶಾ ಅವರು ವಕೀಲಿ ವೃತ್ತಿಯನ್ನು ಪ್ರಾರಂಭಿಸಿದ್ದರು, ಇದನ್ನು ಸುಪ್ರೀಂಕೋರ್ಟ್‍ನ ಗಮನಕ್ಕೆ ತರಲಾಗಿತ್ತು. 2022ರ ಆಗಸ್ಟ್‍ನಲ್ಲಿ ದೋಷಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡ ಪ್ರಕ್ರಿಯೆಗಳನ್ನು ಒಳಗೊಂಡ ಮೂಲ ಕಡತಗಳನ್ನು ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು. +ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮನೆ ಸೇರಿ 10 ಕಡೆ ಇಡಿ ದಾಳಿ +ಅಪರಾಧಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂಬ ಕುರಿತು ತಮಗೂ ಮಾಹಿತಿ ನೀಡಲಾಗಿರಲಿಲ್ಲ ಎಂದು ಸಂತ್ರಸ್ತೆ ಬಿಲ್ಕಿಸ್ ಬಾನು ಹೇಳಿದ್ದರು. ಗುಜರಾತ್‍ನಲ್ಲಿ 2002ರಲ್ಲಿ ನಡೆದ ಕೋಮು ಗಲಭೆಗಳ ವೇಳೆ ತಪ್ಪಿಸಿಕೊಳ್ಳುವ ಸಂದರ್ಭ ಆಗ 21 ವರ್ಷದವರಾಗಿದ್ದ ಹಾಗೂ ಐದು ತಿಂಗಳ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆಕೆಯ ಮೂರು ವರ್ಷದ ಪುತ್ರಿ ಸಹಿತ ಏಳು ಕುಟುಂಬ ಸದಸ್ಯರನ್ನೂ ಹತ್ಯೆಗೈಯ್ಯಲಾಗಿತ್ತು. +ಆರೋಪಿಗಳು:ರಾಧೇಶ್ಯಾಮ್ ಷಾ, ಜಸ್ವಂತ್ ಚತುರ್ಭಾಯಿ ನಾಯ್, ಕೇಶುಭಾಯಿ ವದನಿಯಾ, ಬಕಾಭಾಯಿ ವಡಾನಿಯಾ, ರಾಜೀಭಾಯಿ ಸೋನಿ, ರಮೇಶಭಾಯಿ ಚೌಹಾಣ್, ಶೈಲೇಶಭಾಯ್ ಭಟ್, ಬಿಪಿನ್ ಚಂದ್ರ ಜೋಶಿ, ಗೋವಿಂದಭಾಯ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋಯಾ ಅವರಿಗೆ ಜೀವಾವ ಶಿಕ್ಷೆ ವಿಧಿಸಲಾಗಿದೆ. \ No newline at end of file diff --git a/eesanje/url_47_195_3.txt b/eesanje/url_47_195_3.txt new file mode 100644 index 0000000000000000000000000000000000000000..ad73d142d177d4d420111b49cfc97dbfba8e5e7f --- /dev/null +++ b/eesanje/url_47_195_3.txt @@ -0,0 +1,7 @@ +ಛತ್ತೀಸ್‍ಗಢದಲ್ಲಿ ಬಿಜೆಪಿ ನಾಯಕನ ಭೀಕರ ಹತ್ಯೆ +ಕಂಕೇರ್,ಜ.8- ಛತ್ತೀಸ್‍ಗಢದ ಕಂಕೇರ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತರ ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಮುಖಂಡರನ್ನು ಅಸೀಮ್ ರಾಯ್ ಎಂದು ಗುರುತಿಸಲಾಗಿದೆ. ಪಖಂಜೂರ್ ಪಟ್ಟಣದ ಪುರಾಣ ಬಜಾರ್ ಪ್ರದೇಶದಲ್ಲಿ ರಾತ್ರಿ 8.30 ರ ಸುಮಾರಿಗೆ ಅಸೀಮ್ ರೈ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಪಾಖಂಜೂರು ನಗರ ಪಂಚಾಯತ್ ಮಾಜಿ ಅಧ್ಯಕ್ಷ ರಾಯ್ (50) ಹಾಲಿ ಕಾಪೆರ್ರೇಟರ್ ಮತ್ತು ಆಡಳಿತಾರೂಢ ಬಿಜೆಪಿಯ ಕಂಕೇರ್ ಜಿಲ್ಲೆ ಘಟಕದ ಉಪಾಧ್ಯಕ್ಷರಾಗಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ ರಾಯ್ ಇದ್ದಕ್ಕಿದ್ದಂತೆ ವಾಹನದಿಂದ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ +ಮೃತದೇಹದ ಪ್ರಾಥಮಿಕ ಪರೀಕ್ಷೆಯಲ್ಲಿ ರೈ ಅವರ ತಲೆಗೆ ಗುಂಡು ಬಿದ್ದಿರುವುದನ್ನು ವೈದ್ಯರು ದೃಢಪಡಿಸಿದ್ದು, ಶವಪರೀಕ್ಷೆಯ ನಂತರ ಈ ಬಗ್ಗೆ ವಿವರವಾದ ವರದಿ ಲಭ್ಯವಾಗಲಿದೆ ಎಂದು ಅವರು ಹೇಳಿದರು. +ಪ್ರಾಥಮಿಕವಾಗಿ, ಸಾಂದರ್ಭಿಕ ಪುರಾವೆಗಳು ಬಲಿಪಶುವನ್ನು ಪೈಪೋಟಿ ಅಥವಾ ವೈಯಕ್ತಿಕ ಸೇಡಿನ ಮೇಲೆ ಗುಂಡು ಹಾರಿಸಿರಬಹುದು ಎಂದು ಸೂಚಿಸುತ್ತದೆ. ನಾವು ಎಲ್ಲಾ ಸಂಭಾವ್ಯ ಕೋನಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮಹಾನಿರೀಕ್ಷಕ (ಬಸ್ತರ್ ರೇಂಜ) ಸುಂದರರಾಜ್ ಪಿ ಪಿಟಿಐಗೆ ತಿಳಿಸಿದರು. +2014 ರಲ್ಲಿ, ರಾಯ್ ಅವರ ಮೇಲೆ ಇಬ್ಬರು ವ್ಯಕ್ತಿಗಳು ಇದೇ ರೀತಿಯ ದಾಳಿ ನಡೆಸಿದ್ದರು ಆಗ ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದರು, ನಂತರ ಅರೋಪಿಗಳನ್ನು ಬಂಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_195_4.txt b/eesanje/url_47_195_4.txt new file mode 100644 index 0000000000000000000000000000000000000000..327364aecf5232f82585c433d52a88626e067eeb --- /dev/null +++ b/eesanje/url_47_195_4.txt @@ -0,0 +1,5 @@ +ಭಾರಿ ಮಳೆಗೆ ತತ್ತರಿಸಿದ ಚೆನ್ನೈ, ಪುದುಚೇರಿ +ಚೆನ್ನೈ, ಜ 8 (ಪಿಟಿಐ) – ಪುದುಚೇರಿ ಹಾಗೂ ತಮಿಳುನಾಡಿನ ಕೆಲವು ಭಾಗಗಳಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚೆನ್ನೈ ಮತ್ತು ನೆರೆಯ ಚೆಂಗಲ್ಪಟ್ಟು ಮತ್ತು ಕಾಂಚೀಪುರಂ, ಜೊತೆಗೆ ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವಾರೂರ್ ಭಾಗದಲ್ಲಿ ಭಾರಿ ಮಳೆಯಾಗಿದೆ. ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು ಮತ್ತು ಕಲ್ಲಕುರಿಚಿ ಸೇರಿದಂತೆ ಜಿಲ್ಲೆಗಳಲ್ಲಿ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ನಾಗಪಟ್ಟಣಂ ಜಿಲ್ಲಾಡಳಿತವು ನಾಗಪಟ್ಟಣಂ ಮತ್ತು ಕೀಲ್ವೇಲೂರ್ ವೃತ್ತಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. +ನಿನ್ನೆ ಬೆಳಿಗ್ಗೆ 8.30ರಿಂದ ಇಂದು ಮುಂಜಾನೆ 5.30ರ ಅವಧಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ 167 ಮಿ.ಮೀ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಈ ಅವಯಲ್ಲಿ ಕಾರೈಕ್ಕಲ್ (ಪುದುಚೇರಿ ಯುಟಿ) 122 ಮಿ.ಮೀ.ಪುದುಚೇರಿ, ಜನವರಿ 8 (ಪಿಟಿಐ) ಕಳೆದ 24 ಗಂಟೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಪುದುಚೇರಿಯಲ್ಲಿ ಸಹಜ ಜೀವನ ಅಸ್ತವ್ಯಸ್ತಗೊಂಡಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. +ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ +ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಎನ.ರಂಗಸಾಮಿ ಘೋಷಿಸಿದ್ದಾರೆ. ಏತನ್ಮಧ್ಯೆ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪೂರ್ವ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯಲಿಲ್ಲ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕೇಂದ್ರಾಡಳಿತ ಪ್ರದೇಶದ ಹಲವು ಭಾಗಗಳಲ್ಲಿ ಬೆಳೆದ ಬೆಳೆ ಹಾನಿಯಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_195_5.txt b/eesanje/url_47_195_5.txt new file mode 100644 index 0000000000000000000000000000000000000000..f07658832a351f3cb92f89c52d60eb375a3a44eb --- /dev/null +++ b/eesanje/url_47_195_5.txt @@ -0,0 +1,6 @@ +ಇಡಿ ಅಧಿಕಾರಿಗಳ ಮೇಲಿನ ದಾಳಿಯ ವರದಿ ಕೇಳಿದ ರಾಜ್ಯಪಾಲರು +ಕೋಲ್ಕತ್ತಾ, ಜ 8 (ಪಿಟಿಐ) : ಟಿಎಂಸಿ ನಾಯಕ ಸಹಜಹಾನ್ ಶೇಖ್ ಅವರ ಮನೆ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳ ಮೇಲೆ ಗುಂಪು ದಾಳಿಗೆ ಪ್ರತಿಕ್ರಿಯೆಯಾಗಿ ತೆಗೆದುಕೊಂಡ ಕ್ರಮಗಳ ಕುರಿತು ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ ಬೋಸ್ ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. +ಶೇಖ್ ಅವರನ್ನು ಏಕೆ ಬಂಧಿಸಿಲ್ಲ ಎಂಬುದನ್ನು ವಿವರಿಸುವ ವರದಿಯನ್ನು ನೀಡುವಂತೆ ಮತ್ತು ಅವರು ಇನ್ನೂ ಭಾರತದಲ್ಲಿದ್ದಾರೆಯೇ ಎಂದು ಸ್ಪಷ್ಟಪಡಿಸುವಂತೆ ಬೋಸ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ರಾಜ್ಯಪಾಲರು ಪಶ್ಚಿಮ ಬಂಗಾಳ ಸರ್ಕಾರವನ್ನು ಕಾನೂನು ಮತ್ತು ಸುವ್ಯವಸ್ಥೆಯ ಯಂತ್ರಗಳ ವೈಫಲ್ಯಕ್ಕೆ ಹೊಣೆಗಾರರನ್ನು ಹೊಣೆಗಾರರನ್ನಾಗಿ ಮಾಡಬೇಕು ಮತ್ತು ಅವರ ಕರ್ತವ್ಯಗಳನ್ನು ನಿರ್ಲಕ್ಷಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. +ಭಾರತೀಯ ಮೂಲದ ಸಚಿವರ ವಿರುದ್ಧದ ಭ್ರಷ್ಟಾಚಾರ ಆರೋಪ ಆತಂಕಕಾರಿ: ಲೀ +ಬೋಸ್ ಅವರು ಸಿಆರ್‍ಪಿಎಫ್ ಮತ್ತು ಇಡಿ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು, ಈ ಸಂದರ್ಭದಲ್ಲಿ ಅವರು ಶೇಖ್‍ನನ್ನು ಬಂಧಿಸುವಲ್ಲಿ ಪೊಲೀಸರ ವೈಫಲ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. +ಜ 5 ರಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‍ಖಾಲಿಯಲ್ಲಿ ಜನಸಮೂಹದಿಂದ ತನ್ನ ಮೂವರು ಅಧಿಕಾರಿಗಳು ಗಾಯಗೊಂಡ ಮತ್ತು ಹಲವಾರು ವಾಹನಗಳಿಗೆ ಹಾನಿಯಾದ ಘಟನೆಯ ನಂತರ ಶೇಖ್ ದೇಶದಿಂದ ಪಲಾಯನ ಮಾಡಬಹುದೆಂಬ ಆತಂಕದಿಂದಾಗಿ ಇಡಿ ಲುಕ್‍ಔಟ್ ನೋಟಿಸ್ ಜಾರಿ ಮಾಡಿದೆ. \ No newline at end of file diff --git a/eesanje/url_47_195_6.txt b/eesanje/url_47_195_6.txt new file mode 100644 index 0000000000000000000000000000000000000000..0956400ea1933efcd1348a5570c83253704dabf9 --- /dev/null +++ b/eesanje/url_47_195_6.txt @@ -0,0 +1,7 @@ +ದೀದಿ ಟೀಕಿಸಿದ್ದ ಮಾಳವಿಯಾ ವಿರುದ್ಧ ದೂರು ದಾಖಲು +ಕೋಲ್ಕತ್ತಾ, ಜ 8 (ಪಿಟಿಐ) ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ವಿರುದ್ಧ ಟಿಎಂಸಿಯ ಹಿರಿಯ ನಾಯಕಿ ಚಂದ್ರಿಮಾ ಭಟ್ಟಾಚಾರ್ಯ ಪೊಲೀಸ್ ದೂರು ದಾಖಲಿಸಿದ್ದಾರೆ. +ಜಾರಿ ನಿರ್ದೇಶನಾಲಯದ ಸರಗಳ್ಳರ ಮೇಲಿನ ಹಲ್ಲೇ ಪ್ರಕರಣದ ಪ್ರಮುಖ ಆರೋಪಿ ಟಿಎಂಸಿ ನಾಯಕ ಸಹಜಹಾನ್ ಶೇಖ್ ತಲೆಮರೆಸಿಕೊಂಡಿದ್ದು, ಮಮತಾ ಬ್ಯಾನರ್ಜಿಯ ಪೋಷಣೆಯಿಂದಾಗಿ ಕಾನೂನು ಜಾರಿ ಸಂಸ್ಥೆಗಳ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಾಳವೀಯ ಅವರು ಎಕ್ಸ್‍ನಲ್ಲಿ ಮಾಡಿದ ಪೋಸ್ಟ್‍ಗೆ ಪ್ರತಿಕ್ರಿಯೆಯಾಗಿ ಭಟ್ಟಾಚಾರ್ಯ ಅವರು ದೂರಿದ್ದಾರೆ. +ಸರ್ಕಾರಕ್ಕೆ ಅಧಿಕಾರದ ಮದವೇರಿದೆ : ಬೊಮ್ಮಾಯಿ +ಸಂದೇಶ್‍ಖಾಲಿಯ ಡಾನ್ ಎಂದು ಹೇಳಿಕೊಂಡಿದ್ದ ಷಾಜಹಾನ್ ತಲೆಮರೆಸಿಕೊಂಡಿದ್ದಾನೆ. ಪಶ್ಚಿಮ ಬಂಗಾಳದ ಗೃಹ ಸಚಿವರೂ ಆಗಿರುವ ಮಮತಾ ಬ್ಯಾನರ್ಜಿ ಅವರ ಆಶ್ರಯವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಮಾಳವಿಯಾ ಅವರ ಪೋಸ್ಟ್‍ನ ಒಂದು ಭಾಗವನ್ನು ಎಕ್ಸ್‍ನಲ್ಲಿ ಓದಲಾಗಿದೆ. +ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಳವಿಯಾ ವಿರುದ್ಧ ನಾವು ದೂರು ದಾಖಲಿಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಒತ್ತಾಯಿಸಿದ್ದೇವೆ ಎಂದು ರಾಜ್ಯ ಸಚಿವರೂ ಆಗಿರುವ ಭಟ್ಟಾಚಾರ್ಯ ಸುದ್ದಿಗಾರರಿಗೆ ತಿಳಿಸಿದರು. +ಏತನ್ಮಧ್ಯೆ, ಸತ್ಯವನ್ನು ಮೌನಗೊಳಿಸಲು ಪೊಲೀಸರನ್ನು ಬಳಸಿಕೊಳ್ಳಲು ಟಿಎಂಸಿ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಟೀಕಿಸಿದೆ.ಅಮಿತ್ ಮಾಳವಿಯಾ ಹೇಳಿದ್ದೆಲ್ಲವೂ ಸಂಪೂರ್ಣ ಸತ್ಯ. ಟಿಎಂಸಿ ಸರ್ಕಾರವೇ ಕ್ರಿಮಿನಲ್‍ಗಳನ್ನು ರಕ್ಷಿಸುತ್ತಿದೆ ಮತ್ತು ಈ ಪ್ರವೃತ್ತಿಯು ರಾಜ್ಯದಲ್ಲಿ ಕಾನೂನುಬಾಹಿರತೆಗೆ ಕಾರಣವಾಗಿದೆ ಎಂದು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಹೇಳಿದ್ದಾರೆ. \ No newline at end of file diff --git a/eesanje/url_47_195_7.txt b/eesanje/url_47_195_7.txt new file mode 100644 index 0000000000000000000000000000000000000000..6ff2d2dd1917f553c4728db8fae5f96bd3238fdf --- /dev/null +++ b/eesanje/url_47_195_7.txt @@ -0,0 +1,8 @@ +ಸೀತೆಗಾಗಿ ತಯಾರಾಯ್ತು ವಿಶೇಷ ಸೀರೆ +ಸೂರತ್, ಜ.8 (ಪಿಟಿಐ) – ದೇಶದ ಪ್ರಮುಖ ಜವಳಿ ಕೇಂದ್ರವಾಗಿರುವ ಗುಜರಾತ್‍ನ ಸೂರತ್ ನಗರದಲ್ಲಿ ತಯಾರಾದ ವಿಶೇಷ ಸೀರೆಯನ್ನು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಮೂರ್ತಿ ಪ್ರತಿಷ್ಠಾಪನೆ ಸಮಾರಂಭಕ್ಕೆ ಕಳುಹಿಸಲಾಗುವುದು. +ಶ್ರೀರಾಮನ ಚಿತ್ರಗಳು ಮತ್ತು ಅದರ ಮೇಲೆ ಅಯೋಧ್ಯೆ ದೇವಾಲಯವನ್ನು ಮುದ್ರಿಸಲಾಗಿದೆ, ಇದು ರಾಮನ ಪತ್ನಿ ಸೀತೆಗೆ ಮೀಸಲಾಗಿದೆ, ಇದನ್ನು ಮಾ ಜಾನಕಿ ಎಂದು ಪೂಜನೀಯವಾಗಿ ಕರೆಯಲಾಗುತ್ತದೆ ಮತ್ತು ಮೊದಲ ತುಂಡನ್ನು ಇಲ್ಲಿನ ದೇವಸ್ಥಾನಕ್ಕೆ ಅರ್ಪಿಸಲಾಯಿತು ಎಂದು ಉದ್ಯಮಿ ಲಲಿತ್ ಶರ್ಮಾ ಹೇಳಿದ್ದಾರೆ. +ಶರ್ಮಾ ಅವರೊಂದಿಗೆ ಸಮಾಲೋಚಿಸಿ ಸೀರೆಯನ್ನು ಸಿದ್ಧಪಡಿಸಿದ ಜವಳಿ ಉದ್ಯಮಿ ರಾಕೇಶ್ ಜೈನ್, ಈ ಬಟ್ಟೆಯು ಮಾ ಜಾನಕಿಗೆ ಮೀಸಲಾಗಿದೆ ಮತ್ತು ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿರುವ ದೇವಾಲಯಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು. +ಶರ್ಮಾ ಸೀರೆ ಕಳುಹಿಸಲು ಯಾವುದೇ ದಿನಾಂಕವನ್ನು ನಿರ್ದಿಷ್ಟಪಡಿಸಿಲ್ಲ, ಆದರೆ ಜನವರಿ 22 ರ ಮೊದಲು ಅದು ಅಯೋಧ್ಯೆಗೆ ತಲುಪುತ್ತದೆ ಎಂದು ಹೇಳಿದರು. ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭೌತಿಕವಾಗಿ ಇರಲು ಸಾಧ್ಯವಾಗದ ಭಕ್ತರು ತಮ್ಮದೇ ಆದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸಂಪರ್ಕ ಸಾಧಿಸಲು ಬಯಸುವ ಕಾರಣ ಈ ವ್ಯಾಯಾಮವನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. +ಹಲವು ವರ್ಷಗಳ ನಂತರ ಅಯೋಧ್ಯೆ ದೇವಸ್ಥಾನದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಿರುವ ಕಾರಣ ಪ್ರಪಂಚದಾದ್ಯಂತ ಸಂತೋಷವಿದೆ. ಮಾ ಜಾನಕಿ ಮತ್ತು ಭಗವಾನ್ ಹನುಮಾನ್ ಅತ್ಯಂತ ಸಂತೋಷದಾಯಕರು ಎಂದು ಶರ್ಮಾ ಹೇಳಿದರು. +8 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ +ನಾವು ಭಗವಾನ್ ರಾಮನ ಚಿತ್ರಗಳು ಮತ್ತು ಅದರ ಮೇಲೆ ಅಯೋಧ್ಯೆ ದೇವಸ್ಥಾನವನ್ನು ಮುದ್ರಿಸಿದ ವಿಶೇಷ ಸೀರೆಯನ್ನು ಸಿದ್ಧಪಡಿಸಿದ್ದೇವೆ. ನಾವು ಅದನ್ನು ಮಾ ಜಾನಕಿಗೆ ಇಲ್ಲಿನ ದೇವಸ್ಥಾನದಲ್ಲಿ ಅರ್ಪಿಸಿದ್ದೇವೆ. ಸೀರೆಯನ್ನು ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸಲಾಗುವುದು ಎಂದು ಅವರು ಹೇಳಿದರು. ಅವರಿಗೆ ಮನವಿ ಬಂದರೆ, ಮಾ ಜಾನಕಿ ನೆಲೆಸಿರುವ ಶ್ರೀರಾಮನ ಎಲ್ಲಾ ದೇವಾಲಯಗಳಿಗೆ ಸೀರೆಯನ್ನು ಉಚಿತವಾಗಿ ಕಳುಹಿಸುತ್ತೇವೆ ಎಂದು ಶರ್ಮಾ ತಿಳಿಸಿದ್ದಾರೆ. \ No newline at end of file diff --git a/eesanje/url_47_195_8.txt b/eesanje/url_47_195_8.txt new file mode 100644 index 0000000000000000000000000000000000000000..5818819e21d0b116584eecd56b12519d09d526a4 --- /dev/null +++ b/eesanje/url_47_195_8.txt @@ -0,0 +1,8 @@ +ಮೋದಿ ಟೀಕಿಸಿದ ಮಾಲ್ಡೀವ್ಸ್‌ಗೆ ತಿಳಿ ಹೇಳಿದ ಭಾರತ +ನವದೆಹಲಿ, ಜ 8 (ಪಿಟಿಐ) ಮಾಲ್ಡೀವ್ಸ್‌ನ ಹಲವಾರು ಸಚಿವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಟೀಕೆಗಳ ಬಗ್ಗೆ ಇಂದು ಭಾರತಕ್ಕೆ ಮಾಲ್ಡೀವ್ಸ್ ರಾಯಭಾರಿಯನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಸಲಾಯಿತು ಮತ್ತು ತೀವ್ರ ಕಳವಳವನ್ನು ವ್ಯಕ್ತಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +#| , ' . ' ' .../Dxsj3nkNvw +ಮೋದಿ ವಿರುದ್ಧ ಅವಹೇಳನಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಮಾಲ್ಡೀವಸ್ ಸರ್ಕಾರ ಮೂವರು ಉಪ ಮಂತ್ರಿಗಳನ್ನು ಅಮಾನತುಗೊಳಿಸಿತ್ತು. ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಎಕ್ಸ್‍ನಲ್ಲಿ ಮೋದಿ ಅವರು ಮಾಡಿದ ಪೋಸ್ಟ್ ವಿರುದ್ಧ ಮಾಲ್ಡೀವ್ಸ್‍ನ ಮೂವರು ಉಪ ಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದರು. ಮಾಲ್ಡೀವಿಯನ್ ಮಾಧ್ಯಮ ವರದಿಗಳ ಪ್ರಕಾರ, ಯುವ ಸಚಿವಾಲಯದ ಉಪ ಮಂತ್ರಿಗಳಾದ ಮಲ್ಶಾ ಶರೀಫ್, ಮರಿಯಮ್ ಶಿಯುನಾ ಮತ್ತು ಅಬ್ದುಲ್ಲಾ ಮಹಜೂಮ್ ಮಜಿದ್ ಅವರನ್ನು ತಮ್ಮ ಹುದ್ದೆಗಳ ಮೇಲೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. +ನವದೆಹಲಿಯಲ್ಲಿ, ಅಧಿಕೃತ ಮೂಲಗಳು ಮಾಲೆಯಲ್ಲಿರುವ ಭಾರತೀಯ ಹೈಕಮಿಷನ್ ಭಾನುವಾರ ಮಾಲ್ಡೀವಿಯನ್ ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ಬಲವಾಗಿ ಪ್ರಸ್ತಾಪಿಸಿದೆ ಎಂದು ಹೇಳಿದರು. ಮಂತ್ರಿಗಳ ಅವಹೇಳನಕಾರಿ ಹೇಳಿಕೆಗಳು ಭಾರತದಲ್ಲಿ ಫ್ಲಾಕ್ ಅನ್ನು ಸೆಳೆದಿವೆ, ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್‍ಗೆ ಹೋಗುವ ಬದಲು ದೇಶೀಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ಗಿ ನಲ್ಲಿ ಜನರನ್ನು ಒತ್ತಾಯಿಸಿದ್ದಾರೆ. +8 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ +ಕೆಲವು ಭಾರತೀಯರು ಮಾಲ್ಡೀವ್ಸ್‍ಗೆ ತಮ್ಮ ನಿಗದಿತ ಪ್ರವಾಸವನ್ನು ರದ್ದುಗೊಳಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾವಿರಾರು ಪೋಸ್ಟ್‍ಗಳು ಹರಿದಾಡುತ್ತಿವೆ. ಮಾಲ್ಡೀವಿಯನ್ ವಿದೇಶಾಂಗ ಸಚಿವಾಲಯವು ವಿದೇಶಿ ನಾಯಕರ ವಿರುದ್ಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವಹೇಳನಕಾರಿ ಟೀಕೆಗಳು ಸರ್ಕಾರಕ್ಕೆ ತಿಳಿದಿದೆ ಮತ್ತು ವೈಯಕ್ತಿಕ ಅಭಿಪ್ರಾಯಗಳು ಅದರ ಸ್ಥಾನವನ್ನು ಪ್ರತಿನಿಸುವುದಿಲ್ಲ ಎಂದು ಹೇಳಿದೆ. +ವಿದೇಶಿ ನಾಯಕರು ಮತ್ತು ಉನ್ನತ ಶ್ರೇಣಿಯ ವ್ಯಕ್ತಿಗಳ ವಿರುದ್ಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಮಾಲ್ಡೀವ್ಸ್ ಸರ್ಕಾರಕ್ಕೆ ತಿಳಿದಿದೆ. ಈ ಅಭಿಪ್ರಾಯಗಳು ವೈಯಕ್ತಿಕ ಮತ್ತು ಮಾಲ್ಡೀವ್ಸ್ ಸರ್ಕಾರದ ಅಭಿಪ್ರಾಯಗಳನ್ನು ಪ್ರತಿನಿಸುವುದಿಲ್ಲ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. \ No newline at end of file diff --git a/eesanje/url_47_195_9.txt b/eesanje/url_47_195_9.txt new file mode 100644 index 0000000000000000000000000000000000000000..a3fa52aa8933428e5e0e7f05eadec21c573114ec --- /dev/null +++ b/eesanje/url_47_195_9.txt @@ -0,0 +1,7 @@ +8 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿ ರಚನೆ +ನವದೆಹಲಿ, ಜ.7- ಮುಂದಿನ ಲೋಕಸಭೆ ಮಹಾಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸ್‍ಗಢ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ರಚಿಸಿದೆ. ಇದರ ಜೊತೆಗೆ ಮಧ್ಯಪ್ರದೇಶಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯನ್ನು ರಚಿಸಲಾಗಿದೆ ಎಂದು ಪಕ್ಷದ ಅಧಿಕೃತ ಘೋಷಣಾ ಪಟ್ಟಿಯಲ್ಲಿ ತಿಳಿಸಲಾಗಿದೆ.ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸ್‍ಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಪ್ರದೇಶ ಚುನಾವಣಾ ಸಮಿತಿಗಳು ಮತ್ತು ಮಧ್ಯಪ್ರದೇಶದ ಪ್ರದೇಶ ಚುನಾವಣಾ ಸಮಿತಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿಯ ಸಂವಿಧಾನದ ಪ್ರಸ್ತಾವನೆಯನ್ನು ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಹೇಳಿದ್ದಾರೆ. +ರಾಜಸ್ಥಾನ ಪಿಸಿಸಿ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ರಾಜ್ಯದಲ್ಲಿ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್,ಮಹೇಂದ್ರಜೀತ್ ಸಿಂಗ್ ಮಾಳವೀಯ, ಮೋಹನ್ ಪ್ರಕಾಶ್, ಸಿಪಿ ಜೋಶಿ, ಹರೀಶ್ ಚೌಧರಿ, ರಾಮಲಾಲ್ ಜಾಟ್, ಪ್ರಮೋದ್ ಜೈನ್ ಭಯ, ಪ್ರತಾಪ್ ಸಿಂಗ್ ಖಚರಿಯಾವಾಸ್, ಮಮತಾ ಭೂಪೇಶ್, ಭಜನ್ ಲಾಲ್ ಜಾತವ್, ಮುರಾರಿ ಲಾಲ್ ಮೀನಾ, ಅಶೋಕ್ ಚಂದನಾ, ನೀರಜ್ ಡಾಂಗಿ, ಜುಬೇರ್ ಖಾನ್, „ೀರಜ್ ಶರ್ಜಾರ್, ರೋಹಿತ್ ಬೋಹ್ರಾ, ಇಂದ್ರ ಮೀನಾ, ಡುಂಗರ್ ರಾಮ್ ಗೆದರ್, ಶಿಮ್ಲಾ ದೇವಿ ನಾಯಕ್ ಮತ್ತು ಲಲಿತ್ ಯಾದವ್‍ನ ಸದಸ್ಯರಾ ಗಿದ್ದಾರೆ.ಅವರಲ್ಲದೆ, ಯುವ ಕಾಂಗ್ರೆಸ್ ಅಧ್ಯಕ್ಷರು, ಎನ್‍ಎಸ್‍ಯುಐ ಅಧ್ಯಕ್ಷರು, ಸೇವಾದಳದ ಮುಖ್ಯ ಸಂಘಟಕರು ಮತ್ತು ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸಮಿತಿಯ ಸದಸ್ಯರಾಗಿದ್ದಾರೆ.ಕೆ ಸುಧಾಕರ್ ಅವರನ್ನು ಕೇರಳ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. +ಮುಸಲ್ಮಾನ ಗೂಂಡಾಗಳಿಂದ ನೈತಿಕ ಪೋಲೀಸ್‍ಗಿರಿ : ಈಶ್ವರಪ್ಪ ಆಕ್ರೋಶ +ಸಮಿತಿಯಲ್ಲಿ ಎ ಕೆ ಆಂಟನಿ, ಕೆ ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ವಯಲಾರ್ ರವಿ, ವಿ ಡಿ ಸತೀಶನ್, ಕೆ ಸುರೇಶ್, ಶಶಿ ತರೂರ್, ಮತ್ತು ಮುಲ್ಲಪಲ್ಲಿ ರಾಮಚಂದ್ರನ್ ಸೇರಿದಂತೆ ಹಿರಿಯ ನಾಯಕರು ಇದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನೇತೃತ್ವದ ರಾಜ್ಯ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಘೋಷಿಸಲಾಯಿತು. +ಸಮಿತಿಯಲ್ಲಿ ಉಪಮುಖ್ಯಮಂತ್ರಿ ಭಟ್ಟಿವಿಕ್ರಮಾರ್ಕ ಮಲ್ಲು ಸದಸ್ಯರಾಗಿ, ಉತ್ತಮ್ ಕುಮಾರ್ ರೆಡ್ಡಿ ಮತ್ತು ವಿ ಹನುಮಂತ ರಾವ್ ಇದ್ದಾರೆ. ಹಿಮಾಚಲ ಪ್ರದೇಶದಲ್ಲಿ ಪಿಸಿಸಿ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರ ಅಧ್ಯಕ್ಷರಾಗಿ ,ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪ ಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ ಮತ್ತು ಆನಂದ್ ಶರ್ಮಾ, ವಿಪ್ರೋವ್ ಠಾಕೂರ್, ಆಶಾ ಕುಮಾರಿ, ರಾಮ್ ಲಾಲ್ ಠಾಕೂರ್, ಠಾಕೂರ್ ಕೌಲ್ ಸದಸ್ತರಾಗಿದ್ದಾರೆ. +ಇನ್ನು ಮಧ್ಯಪ್ರದೇಶದ ಪ್ರದೇಶ ಚುನಾವಣಾ ಸಮಿತಿಯ ಮುಖ್ಯಸ್ಥರಾಗಿ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್‍ನೇಮಿಸಲಾಗಿದ್ದು ಜಿತು ಪಟ್ವಾರಿ ,ದಿಗ್ವಿಜಯ ಸಿಂಗ್, ವಿವೇಕ್ ಟಂಖಾ, ಸುರೇಶ್ ಪಚೌರಿ, ಕಾಂತಿಲಾಲ್ ಭೂರಿಯಾ ಮತ್ತು ಸದಸ್ಯರಾಗಿದ್ದಾರೆ. \ No newline at end of file diff --git a/eesanje/url_47_196_1.txt b/eesanje/url_47_196_1.txt new file mode 100644 index 0000000000000000000000000000000000000000..4b919bc8631aff8169e31a3628eec3c5dd75102f --- /dev/null +++ b/eesanje/url_47_196_1.txt @@ -0,0 +1,8 @@ +ಗಾಯಕಿ ಸ್ವಸ್ತಿ ಮೆಹುಲ್ ರಚಿಸಿರುವ ಭಜನೆಗೆ ಮನಸೋತ ಮೋದಿ +ನವದೆಹಲಿ,ಜ.6- ಭಗವಾನ್ ಶ್ರೀರಾಮನ ಕುರಿತಂತೆ ಗಾಯಕಿ ಸ್ವಸ್ತಿ ಮೆಹುಲ್ ರಚಿಸಿರುವ ಭಜನೆ ಕೇಳಿದರೆ ಅದು ಧೀರ್ಘಕಾಲ ಕಿವಿಯಲ್ಲಿ ಅನುರಣಿಸುತ್ತದೆ ಮಾತ್ರವಲ್ಲ ರಾಮನ ಹಲವಾರು ಲೀಲೆಗಳನ್ನು ಮನಸ್ಸಿಗೆ ನಾಟುವಂತೆ ಹೇಳಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಣಗಾನ ಮಾಡಿದ್ದಾರೆ. +ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ದೇಶದೆಲ್ಲೇಡೆ ರಾಮ ನಾಮ ಜಪ ಆರಂಭವಾಗಿರುವ ಬೆನ್ನಲ್ಲೇ ಮೋದಿ ಅವರು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ನೀವು ಒಮ್ಮೆ ಸ್ವಸ್ತಿ ಜೀಯವರ ಈ ಭಜನೆಯನ್ನು ಕೇಳಿದರೆ, ಅದು ದೀರ್ಘಕಾಲದವರೆಗೆ ಕಿವಿಯಲ್ಲಿ ಅನುರಣಿಸುತ್ತದೆ. ಇದು ಕಣ್ಣುಗಳಲ್ಲಿ ಕಣ್ಣೀರು ಮತ್ತು ಮನಸ್ಸನ್ನು ಭಾವನೆಗಳಿಂದ ತುಂಬಿಸುತ್ತದೆ ಎಂದು ಮೋದಿ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ. +स्वस्ति जी का ये भजन एक बार सुन लें तो लंबे समय तक कानों में गूंजता रहता है। आंखों को आंसुओं से, मन को भावों से भर देता है।#://./0nD3XmAbzk +ಮೋದಿ ಪೋಸ್ಟ್ ಹಂಚಿಕೊಂಡ ಕೇವಲ ಒಂದು ಗಂಟೆಯಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದು ಸಾಕಷ್ಟು ಜನಪ್ರಿಯತೆಯನ್ನು ಗಳಿಸುತ್ತಿದೆ. ಏತನ್ಮಧ್ಯೆ, ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಸಾವಿರಾರು ಗಣ್ಯರು, ಸಮಾಜದ ಎಲ್ಲಾ ವರ್ಗದ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಅಯೋಧ್ಯೆಯಲ್ಲಿ ರಾಮ್ ಲಲ್ಲಾ (ಶಿಶು ಭಗವಾನ್ ರಾಮ) ಅವರ ಪ್ರಾಣ-ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭದ ವೈದಿಕ ಆಚರಣೆಗಳು ಮುಖ್ಯ ಸಮಾರಂಭದ ಒಂದು ವಾರದ ಮೊದಲು ಅಂದರೆ ಜನವರಿ 16 ರಂದು ಪ್ರಾರಂಭವಾಗುತ್ತವೆ. +ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಟಿಕೆಟ್ ಪಡೆಯೋದು ಹೇಗೆ..? +ವಾರಣಾಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಜನವರಿ 22 ರಂದು ರಾಮ್ ಲಲ್ಲಾ ಅವರ ಪ್ರತಿಷ್ಠಾಪನೆಯ ಮುಖ್ಯ ವಿವಿಧಾನಗಳನ್ನು ನಿರ್ವಹಿಸಲಿದ್ದಾರೆ. ಜನವರಿ 14 ರಿಂದ ಜನವರಿ 22 ರವರೆಗೆ ಅಯೋಧ್ಯೆಯು ಅಮೃತ ಮಹೋತ್ಸವವನ್ನು ಆಚರಿಸಲಿದೆ. +1008 ಹುಂಡಿ ಮಹಾಯಜ್ಞವೂ ನಡೆಯಲಿದ್ದು, ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಅಯೋಧ್ಯೆಯಲ್ಲಿ ಸಾವಿರಾರು ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು ಹಲವಾರು ಟೆಂಟ್ ಸಿಟಿಗಳನ್ನು ನಿರ್ಮಿಸಲಾಗುತ್ತಿದೆ, ಅವರು ಮಹಾ ಸಮರ್ಪಣೆಗಾಗಿ ಉತ್ತರ ಪ್ರದೇಶದ ದೇವಾಲಯ ಪಟ್ಟಣಕ್ಕೆ ಆಗಮಿಸುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_196_10.txt b/eesanje/url_47_196_10.txt new file mode 100644 index 0000000000000000000000000000000000000000..1eece431b50c79983c4d3bbfbea89b16f0825838 --- /dev/null +++ b/eesanje/url_47_196_10.txt @@ -0,0 +1,5 @@ +ಉತ್ತರ ಪ್ರದೇಶ : ವಾಂಟೆಡ್ ಕ್ರಿಮಿನಲ್ ವಿನೋದ್ ಕುಮಾರ್ ಉಪಾಧ್ಯಾಯ ಎನ್‌ಕೌಂಟರ್‌ +ಲಕ್ನೋ, ಜ 5- ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಸುಲ್ತಾನ್‍ಪುರ ಜಿಲ್ಲೆಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧಿಯೊಬ್ಬ ಹತನಾಗಿದ್ದಾನೆ. ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಬೇಕಾಗಿದ್ದ ಆತನ ಪತ್ತೆಗೆ 1 ಲಕ್ಷ ರೂಪಾಯಿ ಬಹುಮಾನವನ್ನು ಹೊತ್ತದ್ದ ವಿನೋದ್ ಕುಮಾರ್ ಉಪಾಧ್ಯಾಯ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ವಿಶೇಷ ಕಾರ್ಯಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಉಪಾಧ್ಯಾಯ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಎಸ್‍ಟಿಎ ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮಿತಾಬ್ ಯಶ್ ತಿಳಿಸಿದ್ದಾರೆ. +ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ +ಗೋರಖ್‍ಪುರ, ಬಸ್ತಿ, ಸಂತ ಕಬೀರ್ ನಗರ ಮತ್ತು ಲಕ್ನೋದಲ್ಲಿ ಉಪಾಧ್ಯಾಯ ವಿರುದ್ಧ 35 ಘೋರ ಅಪರಾಧಗಳ ಪ್ರಕರಣಗಳು ದಾಖಲಾಗಿತ್ತು 2023ರ ಸೆಪ್ಟೆಂಬರ್‍ನಲ್ಲಿ ಗೋರಖ್‍ಪುರ ಪೊಲೀಸರು ಆತನ ಸುಳಿವು ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು ಆತನ ಬಳಿಇದ್ದ ಪಿಸ್ತೂಲು ಸೇರಿ ಹಲವು ಮಾರಕಾಸ ವಶಕ್ಕೆ ಪಡೆಯಲಾಗಿದೆ. \ No newline at end of file diff --git a/eesanje/url_47_196_11.txt b/eesanje/url_47_196_11.txt new file mode 100644 index 0000000000000000000000000000000000000000..be2b78ee476e5928078b4bae6ef43ac3230fb275 --- /dev/null +++ b/eesanje/url_47_196_11.txt @@ -0,0 +1,5 @@ +ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ +ಶ್ರೀನಗರ,ಜ.5- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‍ಕೌಂಟರ್ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೋಟಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮುಂಜಾನೆಯೇ ಅಲ್ಲಿ ಶೋಧ ಕಾರ್ಯಚರಣೆ ಅರಂಭಿಸಿತ್ತು. +ಶೋಪಿಯಾನ್ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಇದೀಗ ಎನ್ಕೌಂಟರ್ ಪ್ರಾರಂಭವಾಗಿದೆ. ಶೋಪಿಯಾನ್ ಪೋಲಿಸ್ , ಸೇನೆ ಮತ್ತು ಸಿಆರ್‍ಪಿಎಫ್ ಈ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ. +ಕೇಜ್ರಿವಾಲ್, ಸೂರೆನ್ ಬಂಧನ ಸಾಧ್ಯತೆ : ಪವಾರ್ +ಭದ್ರತಾ ಸಿಬ್ಬಂದಿಗಳು ಉಗ್ರರು ಇದ್ದಾರೆ ಎಂದು ಶಂಕಿಸಲಾದ ಪ್ರದೇಶದಲ್ಲಿ ಶೋಧ ಕಾರ್ಯಚರಣೆ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದರು ಇದಕ್ಕೆ ಪ್ರತಿಯಾಗಿ ಸೇನೆ ಪ್ರತಿ ದಾಳಿ ನಡೆಸುತ್ತಿದೆ. ಇಲ್ಲಿಯವರೆಗೆ, ಎರಡೂ ಕಡೆಯಿಂದ ಯಾವುದೇ ಜೀವಹಾನಿಯ ವರದಿಯಾಗಿಲ್ಲ ಎಂದು ಸೇನೆ ತಿಳಿಸಿದೆ. \ No newline at end of file diff --git a/eesanje/url_47_196_12.txt b/eesanje/url_47_196_12.txt new file mode 100644 index 0000000000000000000000000000000000000000..d7cc53b95d40f877e61f66e3015e69d2ff1c7a12 --- /dev/null +++ b/eesanje/url_47_196_12.txt @@ -0,0 +1,7 @@ +ಮತ್ತೊಮ್ಮೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಅದಾನಿ +ನವದೆಹಲಿ,ಜ.5- ಸುಪ್ರೀಂಕೋರ್ಟ್‍ನಿಂದ ಕ್ಲೀನ್‍ಚಿಟ್ ಪಡೆದ ಕೆಲವೇ ದಿನಗಳಲ್ಲಿ ಅದಾನಿ ಉದ್ಯಮಗಳ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ. ಅಮೆರಿಕ ಮೂಲದ ಹಿಂಡೆನ್‍ಬರ್ಗ್ ರಿಸರ್ಚ್‍ನ ಆರೋಪಗಳಿಗೆ ಸಂಬಂಧಿಸಿದಂತೆ ಸಮೂಹದ ವಿರುದ್ಧ ಯಾವುದೇ ಹೊಸ ತನಿಖೆಗಳ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ ಕೆಲವು ದಿನಗಳ ನಂತರ ಗೌತಮ್ ಅದಾನಿ ಮತ್ತೆ ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿದ್ದಾರೆ. +ಬ್ಲೂಮ್‍ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ಪ್ರಕಾರ, ಅದಾನಿಯವರ ನಿವ್ವಳ ಮೌಲ್ಯವು ಒಂದು ದಿನದಲ್ಲಿ 7.7 ಶತಕೋಟಿ 97.6 ಶತಕೋಟಿಗೆ ಏರಿತು, ಇದುವರೆಗೂ ಮುಖೇಶ್ ಅಂಬಾನಿ ಈ ರೇಸಿನಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷರಾದ ಅಂಬಾನಿ ಅವರು 97 ಬಿಲಿಯನ್ ನಿವ್ವಳ ಮೌಲ್ಯದೊಂದಿಗೆ ಕಡಿಮೆ ಅಂತರದಿಂದ ಹಿಂದುಳಿದಿದ್ದಾರೆ ಎಂದು ಸೂಚ್ಯಂಕ ತೋರಿಸುತ್ತದೆ. +1980 ರ ದಶಕದಲ್ಲಿ ವಜ್ರದ ವ್ಯಾಪಾರಿಯಾಗಿ ಪ್ರಾರಂಭವಾದ ಮೊದಲ ತಲೆಮಾರಿನ ವಾಣಿಜ್ಯೋದ್ಯಮಿಯ ಪುನರಾಗಮನವು ಅದಾನಿಯವರ ಬಂದರುಗಳಿಂದ ಅಕಾರದ ಸಮೂಹಕ್ಕೆ ಘಟನಾತ್ಮಕ ವರ್ಷವಾಗಿದೆ. ಹಿಂಡೆನ್‍ಬರ್ಗ್‍ನ ಕಾಪೆರ್ರೇಟ್ ವಂಚನೆಯ ಆರೋಪಗಳನ್ನು ನಿರಾಕರಿಸಿದರೂ, ಅದಾನಿ ಗ್ರೂಪ್ ಕಳೆದ ವರ್ಷ ಒಂದು ಹಂತದಲ್ಲಿ 150 ಶತಕೋಟಿಗಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಕಳೆದುಕೊಂಡಿತು ಮತ್ತು ಹೂಡಿಕೆದಾರರು, ಸಾಲದಾತರು, ಸಾಲ ಮರುಪಾವತಿ ಮತ್ತು ನಿಯಂತ್ರಕ ಕಾಳಜಿಗಳನ್ನು ಸಮಾಧಾನಪಡಿಸುವ ಮೂಲಕ ತಿಂಗಳುಗಳನ್ನು ಕಯಬೇಕಾಗಿ ಬಂದಿತ್ತು. +ಕೇಜ್ರಿವಾಲ್, ಸೂರೆನ್ ಬಂಧನ ಸಾಧ್ಯತೆ : ಪವಾರ್ +ಅದಾನಿ ಗ್ರೂಪ್‍ನ ಷೇರುಗಳು ಈ ವಾರ ಸುಪ್ರಿಂಕೋರ್ಟ್ ಸ್ಥಳೀಯ ಮಾರುಕಟ್ಟೆಗಳ ನಿಯಂತ್ರಕರಿಗೆ ಸಂಘಟಿತ ಕಂಪನಿಯ ತನಿಖೆಯನ್ನು ಮೂರು ತಿಂಗಳೊಳಗೆ ಮುಕ್ತಾಯಗೊಳಿಸುವಂತೆ ಆದೇಶಿಸಿದ ನಂತರ ಮತ್ತು ಹೆಚ್ಚಿನ ತನಿಖೆಗಳ ಅಗತ್ಯವಿಲ್ಲ ಎಂದು ಹೇಳಿದ ನಂತರ, ಅದಾನಿ ಸಮೂಹ ಚೇತರಿಸಿಕೊಂಡಿದೆ. +ಮುಂದಿನ ದಶಕದಲ್ಲಿ ತನ್ನ ವ್ಯವಹಾರಗಳಾದ್ಯಂತ ಹಸಿರು ಪರಿವರ್ತನೆಗಾಗಿ 100 ಶತಕೋಟಿಯಷ್ಟು ಬಂಡವಾಳ ಹೂಡಿರುವ ಅದಾನಿ, ತನ್ನ ಕಲ್ಲಿದ್ದಲು ವ್ಯಾಪಾರದ ಮೂಲವನ್ನು ಮೀರಿ ಡಾಟಾ ಸೆಂಟರ್‍ಗಳು, ಕೃತಕ ಬುದ್ಧಿಮತ್ತೆ, ನಗರಾಭಿವೃದ್ಧಿ, ವಿಮಾನ ನಿಲ್ದಾಣಗಳು ಮತ್ತು ಮಾಧ್ಯಮಗಳಲ್ಲಿ ತನ್ನ ಸಾಮ್ರಾಜ್ಯವನ್ನು ವೇಗವಾಗಿ ವೈವಿಧ್ಯಗೊಳಿಸಲು ಮುಂದಾಗಿದ್ದಾರೆ. \ No newline at end of file diff --git a/eesanje/url_47_196_2.txt b/eesanje/url_47_196_2.txt new file mode 100644 index 0000000000000000000000000000000000000000..33cc9be6fe9f09df9aa4e41180d0f8e58dd1ee3b --- /dev/null +++ b/eesanje/url_47_196_2.txt @@ -0,0 +1,6 @@ +ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ : ಇಸ್ರೋ ಮುಖ್ಯಸ್ಥ ಸೋಮನಾಥ್ +ಹೈದರಾಬಾದ್,ಜ.6- ಹೊಸ ವರ್ಷದ ಆರಂಭದಲ್ಲಿ ಉಡಾವಣೆಗೊಂಡ ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ತುಂಬಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಹೇಳಿದ್ದಾರೆ. ಹೈದರಾಬಾದ್‍ನಲ್ಲಿ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ (ಜೆಎನ್‍ಟಿಯು) ಘಟಿಕೋತ್ಸವದ ಸಂದರ್ಭದಲ್ಲಿ ಸೋಮನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು. ಘಟಿಕೋತ್ಸವದ ಸಮಯದಲ್ಲಿ ಜೆಎನ್‍ಟಿಯು ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ (ಆನರಿಸ್ ಕಾಸಾ) ನೀಡಿ ಗೌರವಿಸಲಾಯಿತು. +ಪಿಎಸ್‍ಎಲ್‍ವಿ ಎಕ್ಸ್‌ಪೋಸ್ಯಾಟ್‌ ಉಪಗ್ರಹವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಎಲ್ಲಾ ಉಪಕರಣಗಳು ಈಗ ನಿಧಾನವಾಗಿ ಸ್ವಿಚ್ ಆನ್ ಮತ್ತು ಕಾರ್ಯನಿರ್ವಹಿಸುತ್ತಿವೆ. ಫಲಿತಾಂಶಗಳ ಬಗ್ಗೆ ನಾವು ಶೀಘ್ರದಲ್ಲೇ ತಿಳಿದುಕೊಳ್ಳುತ್ತೇವೆ ಎಂದು ಅವರು ಹೇಳಿದರು. 2024 ಘಟನಾತ್ಮಕ ವರ್ಷವಾಗಲಿದೆ ಎಂದು ಹೇಳಿದ ಎಸ್ ಸೋಮನಾಥ್ ಅನೇಕ ಉಡಾವಣೆಗಳನ್ನು ಪ್ರಸ್ತಾಪಿಸಲಾಗಿದೆ ಎಂದು ವಿವರಿಸಿದರು. +2 ಕೋಟಿಗೆ ದಾವೂದ್ ನಿವೇಶನ ಖರೀದಿಸಿದ ವಕೀಲ +ಮುಂದಿನ ಉಡಾವಣೆಯು ಜಿಎಸ್‍ಎಲ್‍ವಿ ಉಡಾವಣೆ, ಇನ್ಸಾಟ್ -3ಡಿಎಸ್ ಹವಾಮಾನ ಮತ್ತು ಹವಾಮಾನ ಉಪಗ್ರಹವಾಗಿದ್ದು, ನಮ್ಮ ಚಂಡಮಾರುತಗಳನ್ನು ಪತ್ತೆಹಚ್ಚಲು, ಹವಾಮಾನ, ಮಳೆ, ಅನಾವೃಷ್ಟಿ ಮತ್ತು ಇತರ ಹಲವು ವಿಷಯಗಳನ್ನು ತಿಳಿದುಕೊಳ್ಳಲು ಸಹಕಾರಿಯಾಗುವ ಉಪಗ್ರಹವು ಈ ತಿಂಗಳು ಉಡಾವಣೆಯಾಗಲಿದೆ, ಬಹುಶಃ ಇದು ಫೆಬ್ರುವರಿ ಆರಂಭದಲ್ಲಿ ಆಗಬಹುದು ಎಂದು ಅವರು ಮಾಹಿತಿ ನೀಡಿದರು. +ಗಗನಯಾನ್ ಮಾನವ ಬಾಹ್ಯಾಕಾಶ ಯಾನ ಕಾರ್ಯಕ್ರಮಕ್ಕಾಗಿ ಹಲವು ಉಡಾವಣೆಗಳಿವೆ ಮತ್ತು 2024 ಗಗನಯಾನ ವರ್ಷವಾಗಲಿದೆ ಎಂದು ಅವರು ವಿವರಿಸಿದರು. ಇತರ ಉಡಾವಣೆಗಳಲ್ಲಿ ವಾಣಿಜ್ಯ ಉಡಾವಣೆಗಳು ಮತ್ತು ಜಿಎಸ್‍ಎಲ್ವಿ ಉಡಾವಣೆ ಸೇರಿವೆ ಎಂದು ಅವರು ಹೇಳಿದರು. ಬಾಹ್ಯಾಕಾಶ ಸಂಸ್ಥೆಯ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ನಲ್ಲಿ ಜನವರಿ 6 ರಂದು ಪ್ರದರ್ಶನಗೊಳ್ಳುವ ನಿರ್ಣಾಯಕ ಕುಶಲತೆಯ ಕುರಿತು ಮಾತನಾಡಿದ ಅವರು, ಇಂದು ಸಂಜೆ ನೌಕೆ ತನ್ನ ಕಕ್ಷೆ ಸೇರಲಿದೆ ಎಂದು ತಿಳಿಸಿದರು. \ No newline at end of file diff --git a/eesanje/url_47_196_3.txt b/eesanje/url_47_196_3.txt new file mode 100644 index 0000000000000000000000000000000000000000..70f7b678a49a379f4fba8c7c18c1e871377fc409 --- /dev/null +++ b/eesanje/url_47_196_3.txt @@ -0,0 +1,7 @@ +ಭೂಕಂಪಪೀಡಿತ ಜಪಾನ್‍ಗೆ ಅಗತ್ಯ ನೆರವು : ಪ್ರಧಾನಿ ಮೋದಿ +ನವದೆಹಲಿ,ಜ.6- ಜಪಾನ್‍ನಲ್ಲಿ ಸಂಭವಿಸಿದ ಭಾರೀ ಭೂಕಂಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರಿಗೆ ಪತ್ರ ಬರೆದು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜನವರಿ ಒಂದರಂದು ಜಪಾನ್‍ನಲ್ಲಿ ಸಂಭವಿಸಿದ ದೊಡ್ಡ ಭೂಕಂಪದ ಬಗ್ಗೆ ತಿಳಿದುಕೊಳ್ಳಲು ನಾನು ತೀವ್ರ ದುಃಖ ಮತ್ತು ಕಾಳಜಿಯನ್ನು ಹೊಂದಿದ್ದೇನೆ ಎಂದು ಪ್ರಧಾನಿ ಮೋದಿ ಜಪಾನ್ ಪ್ರಧಾನಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. +ತಮ್ಮ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ, ನಾವು ಜಪಾನ್ ಮತ್ತು ಅದರ ಜನರೊಂದಿಗೆ ವಿಪತ್ತಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರರಾಗಿ, ಭಾರತವು ಜಪಾನ್‍ನೊಂದಿಗಿನ ತನ್ನ ಸಂಬಂಧವನ್ನು ಗೌರವಿಸುತ್ತದೆ ಮತ್ತು ಈ ಸಮಯದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. +ಮಧ್ಯ ಜಪಾನ್‍ನ ನೋಟೋ ಪೆನಿನ್ಸುಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಸಂಭವಿಸಿದ 7.5 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 64 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ನ್ಯೂಸ್ ವರದಿ ಮಾಡಿತ್ತು. ಕಲ್ಲುಮಣ್ಣುಗಳು ಮತ್ತು ಕತ್ತರಿಸಿದ ರಸ್ತೆಗಳು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಇನ್ನೂ ತಡೆಯುತ್ತವೆ. +ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಟಿಕೆಟ್ ಪಡೆಯೋದು ಹೇಗೆ..? +ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರದಲ್ಲಿ ಭೂಕಂಪವು ರಚನಾತ್ಮಕ ಹಾನಿ ಮತ್ತು ಬೆಂಕಿಯನ್ನು ಉಂಟುಮಾಡಿದೆ. ಆದಾಗ್ಯೂ, ಪ್ರಬಲ ಭೂಕಂಪದಿಂದ ಉಂಟಾದ ದುರಂತದ ಪೂರ್ಣ ಪ್ರಮಾಣದ ಅನಾಹುತಗಳು ತಿಳಿದಿಲ್ಲ. +ಜಪಾನಿನ ಜನಪ್ರಿಯ ಪ್ರವಾಸಿ ತಾಣವಾದ ಅಸೈಚಿ ಸ್ಟ್ರೀಟ್‍ನ ಸುತ್ತಲೂ ಅಂಗಡಿಗಳು ಮತ್ತು ಮನೆಗಳು ಸೇರಿದಂತೆ ಒಟ್ಟು 200 ಕಟ್ಟಡಗಳು ಸುಟ್ಟುಹೋಗಿವೆ ಎಂದು ವರದಿಯಾಗಿದೆ. ಇಶಿಕಾವಾ ಪ್ರಾಂತ್ಯದ ನೋಟೋ ಪೆನಿನ್ಸುಲಾದಲ್ಲಿ ಸಂಜೆ 4.10 ರ ಸುಮಾರಿಗೆ (ಸ್ಥಳೀಯ ಕಾಲಮಾನ) 10 ಕಿಲೋಮೀಟರ್ (6 ಮೈಲುಗಳು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ ಜಿಯೋಲಾಜಿಕಲ್ ಸರ್ವೆ ವರದಿ ಮಾಡಿದೆ. \ No newline at end of file diff --git a/eesanje/url_47_196_4.txt b/eesanje/url_47_196_4.txt new file mode 100644 index 0000000000000000000000000000000000000000..0b399b7335a2d190aafac22163f528e64073fdec --- /dev/null +++ b/eesanje/url_47_196_4.txt @@ -0,0 +1,8 @@ +ಇವಿಎಂ, ವಿವಿಪ್ಯಾಟ್‍ಗಳ ಕುರಿತ ಆರೋಪಗಳನ್ನು ತಳ್ಳಿಹಾಕಿದ ಚುನಾವಣಾ ಆಯೋಗ +ನವದೆಹಲಿ,ಜ.6- ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಮತ್ತು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಕುರಿತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾಡಿರುವ ಆರೋಪಗಳನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ನಿರಾಕರಿಸಿದೆ. +ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸಮಸ್ಯೆಯನ್ನು ಚರ್ಚಿಸಲು ಇಂಡಿಯಾ ಒಕ್ಕೂಟದ ನಾಯಕರ ನಿಯೋಗವನ್ನು ಭೇಟಿ ಮಾಡಲು ಅಪಾಯಿಂಟ್‍ಮೆಂಟ್ ಕೋರಿ ಚುನಾವಣಾ ಆಯೋಗಕ್ಕೆ ಜೈರಾಮ್ ರಮೇಶ್ ಪತ್ರ ಬರೆದ ನಂತರ ಆಯೋಗದಿಂದ ಈ ಉತ್ತರ ಬಂದಿದೆ. +ಕಾಂಗ್ರೆಸ್ ನಾಯಕರಿಗೆ ಪ್ರತಿಕ್ರಿಯಿಸಿದ ಆಯುಕ್ತರು, ಇವಿಎಂನಲ್ಲಿನ ಸಾರ್ವಜನಿಕ ಡೊಮೇನ್‍ನಲ್ಲಿ ಇತ್ತೀಚಿನ ನವೀಕರಿಸಿದ 85 ಪ್ರಶ್ನೆಗಳು ಸೇರಿದಂತೆ ಇವಿಎಂಗಳ ಬಳಕೆಯ ಎಲ್ಲಾ ಸಮಂಜಸವಾದ ಮತ್ತು ಕಾನೂನುಬದ್ಧ ಅಂಶಗಳಿಗೆ ಸಮರ್ಪಕವಾಗಿ ಮತ್ತು ಸಮಗ್ರವಾಗಿ ಉತ್ತರಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. +ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಟಿಕೆಟ್ ಪಡೆಯೋದು ಹೇಗೆ..? +ವಿವಿಪಿಎಟಿ ಮತ್ತು ಪೇಪರ್ ಸ್ಲಿಪ್‍ಗಳ ನಿರ್ವಹಣೆಯನ್ನು ನಿಯಂತ್ರಿಸುವ ಚುನಾವಣಾ ನಿಯಮಗಳ 1961 ರ ನಿಯಮ 49ಎ ಮತ್ತು 49ಎಂ ಅನ್ನು ಆಗಸ್ಟ್ 14, 2013 ರಂದು ಐಎನ್‍ಸಿ ಪರಿಚಯಿಸಿತು ಎಂದು ಇಸಿಐ ಹೇಳಿದೆ. +ಇಂಡಿಯಾ ಒಕ್ಕೂಟದ ಸಭೆಯಲ್ಲಿ ವಿವಿಪ್ಯಾಟ್ ಹಾಗೂ ಇವಿಎಂಗಳ ಬಳಕೆ ಬೇಡ ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಮತ್ತು ಈ ಕುರಿತಂತೆ ಚುನಾವಣಾ ಆಯೋಗದೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. +ಹೀಗಾಗಿ ಜೈರಾಮ್ ರಮೇಶ್ ಅವರು ಇಸಿಐಗೆ ಪತ್ರ ಬರೆದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿರುವ ಇವಿಎಂ ಹಾಗೂ ವಿವಿಪ್ಯಾಟ್‍ಗಳ ಬಗ್ಗೆ ಸಂಶಯ ಬಗೆಹರಿಸಿಕೊಳ್ಳುವ ಬಗ್ಗೆ ಚರ್ಚಿಸಲು ಮನವಿ ಮಾಡಿಕೊಳ್ಳಲಾಗಿತ್ತು. ಡಿಸೆಂಬರ್ 19, 2023 ರಂದು ನಡೆದ ಭಾರತೀಯ ಪಕ್ಷಗಳ ನಾಯಕರ ಸಭೆಯಲ್ಲಿ ಅಂಗೀಕರಿಸಿದ ನಿರ್ಣಯದ ಆಧಾರದ ಮೇಲೆ ವಿವಿಪಿಎಟಿಗಳ ಬಳಕೆಯ ಕುರಿತು ಚರ್ಚಿಸಲು ಮತ್ತು ಸಲಹೆಗಳನ್ನು ನೀಡಲು ನಿಯೋಗವು ಡಿಸೆಂಬರ್ 20, 2023 ರಂದು ಮತ್ತೊಮ್ಮೆ ಅಪಾಯಿಂಟ್ಮೆಂಟ್ ಕೇಳಿದೆ ಎಂದು ಪತ್ರದಲ್ಲಿ ಸೇರಿಸಲಾಗಿದೆ. \ No newline at end of file diff --git a/eesanje/url_47_196_5.txt b/eesanje/url_47_196_5.txt new file mode 100644 index 0000000000000000000000000000000000000000..4d15c931b1e6a6fc9432f1c62b884c59006e6f72 --- /dev/null +++ b/eesanje/url_47_196_5.txt @@ -0,0 +1,6 @@ +ಪೊಲೀಸ್ ತಂಡದ ಮೇಲೆ ಗುಂಪು ದಾಳಿ, ಎಸ್‍ಐ ಸ್ಥಿತಿ ಗಂಭೀರ +ಸುರೇಂದ್ರನಗರ, ಜ.6- ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ನಡೆದ ದಾಳಿ ಮಾದರಿಯಲ್ಲೇ ಗುಜರಾತಿನ ಸುರೇಂದ್ರನಗರ ಜಿಲ್ಲೆಯ ಜಿಂಜುವಾಡ ಗ್ರಾಮದಲ್ಲಿ ಪೊಲೀಸ್ ತಂಡದ ಮೇಲೆ ಗುಂಪೊಂದು ಹರಿತವಾದ ಆಯುಧಗಳು ಮತ್ತು ದೊಣ್ಣೆಗಳಿಂದ ಹಲ್ಲೇ ನಡೆಸಿರುವ ಘಟನೆ ವರದಿಯಾಗಿದೆ. +ಸಬ್ ಇನ್ಸ್‍ಪೆಕ್ಟರ್ ಕೆಸಿ ದಂಗರ್ ಮತ್ತು ಇಬ್ಬರು ಕಾನ್‍ಸ್ಟೆಬಲ್‍ಗಳು ಖಾಸಗಿ ಕಾರಿನಲ್ಲಿ ಜಲಸಿಂಹ್ ಝಾಲಾ ಎಂಬಾತನೊಂದಿಗೆ ಖಾಸಗಿ ಕಾರಿನಲ್ಲಿ ಜಿಂಜುವಾಡಾ ಪೊಲೀಸ್ ಠಾಣೆಗೆ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆಸಲಾಗಿದೆ. ದಾಳಿ ವೇಳೆ ಪರಾರಿಯಾಗಿದ್ದ ಆರೋಪಿಯನ್ನು ಮತ್ತೆ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜೆಡಿ ಪುರೋಹಿತ್ ತಿಳಿಸಿದ್ದಾರೆ. +ನೈಸ್ ಯೋಜನೆಗೆ ಸ್ವಾದೀನಪಡಿಸಿಕೊಂಡ ಹೆಚ್ಚುವರಿ ಜಮೀನನ್ನು ರೈತರಿಗೆ ಹಿಂದಿರುಗಿಸಿ : ದೇವೇಗೌಡರು +ಗುಂಪು ದಾಳಿಯಲ್ಲಿ ದಂಗರ್ ಗಂಭೀರ ಗಾಯಗೊಂಡು ಅಹಮದಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಮತ್ತು ಇಬ್ಬರು ಕಾನ್‍ಸ್ಟೆಬಲ್‍ಗಳಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದರು.ಜಿಂಜುವಡಾ ನಿವಾಸಿ ಝಲಾ ಒಬ್ಬ ಭೀಕರ ಅಪರಾ ಮತ್ತು ಗಲಭೆ, ಲೂಟಿ ಮತ್ತು ಹಲ್ಲೇಯಂತಹ ವಿವಿಧ ಅಪರಾಧಗಳಿಗಾಗಿ ಈ ಹಿಂದೆ ಬಂಧಿಸಲ್ಪಟ್ಟಿದ್ದ . ಪಟಾನ್ ಜಿಲ್ಲೇಯಲ್ಲಿ ದಾಖಲಾದ ಕಳ್ಳತನದ ಪ್ರಕರಣದಲ್ಲಿ ಬೇಕಾಗಿದ್ದ ಈತನನ್ನು ಪಟಾನ್ ಪೊಲೀಸರು ಅವನನ್ನು ಹಿಡಿಯಲು ಸಾಧ್ಯವಾಗದ ಕಾರಣ, ಅವರು ಸಹಾಯಕ್ಕಾಗಿ ಜಿಂಜುವಾಡ ಪೊಲೀಸರನ್ನು ವಿನಂತಿಸಿದರು ಎಂದು ಉಪ ಎಸ್ಪಿ ಹೇಳಿದರು. +ಕ್ರಿಕೆಟ್ ಆಡುತ್ತಿದ್ದಾಗ ಝಾಲಾ ಅವರನ್ನು ಸುಳಿವಿನ ಮೇರೆಗೆ ಬಂಧಿಸಲಾಯಿತು ಆದರೆ ಅವರ ಸಹಚರರೊಬ್ಬರು ಅವರನ್ನು ಬಿಡುಗಡೆ ಮಾಡಲು ಗುಂಪನ್ನು ಒಟ್ಟುಗೂಡಿಸಿದರು ಎಂದು ಪುರೋಹಿತ್ ಹೇಳಿದರು. ಪಿಎಸ್‍ಐ ಮತ್ತು ಅವರ ತಂಡ ಝಾಲಾ ಸಮೇತ ಕಾರಿನಲ್ಲಿ ಜಿಂಜುವಾಡ ಗ್ರಾಮದ ಪ್ರವೇಶ ದ್ವಾರವನ್ನು ತಲುಪಿದಾಗ ಗುಂಪು ಹರಿತವಾದ ಆಯುಧಗಳು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದೆ. \ No newline at end of file diff --git a/eesanje/url_47_196_6.txt b/eesanje/url_47_196_6.txt new file mode 100644 index 0000000000000000000000000000000000000000..0b42b019923b9362c9c9094e4a0e9d44fd3da63d --- /dev/null +++ b/eesanje/url_47_196_6.txt @@ -0,0 +1,6 @@ +2 ಕೋಟಿಗೆ ದಾವೂದ್ ನಿವೇಶನ ಖರೀದಿಸಿದ ವಕೀಲ +ಮುಂಬೈ,ಜ.6- ಮಹಾರಾಷ್ಟ್ರದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ನಿವೇಶನವನ್ನು ನಿನ್ನೆ 2 ಕೋಟಿಗೆ ಖರೀದಿಸಿರುವ ವಕೀಲರೊಬ್ಬರು ಅಲ್ಲಿ ಸನಾತನ ಶಾಲೆ ನಿರ್ಮಿಸುವ ಉದ್ದೇಶ ಹೊಂದಿರುವುದಾಗಿ ಹೇಳಿದ್ದಾರೆ. ಮಾಜಿ ಶಿವಸೇನಾ ನಾಯಕ ಅಜಯ್ ಶ್ರೀವಾಸ್ತವ ಅವರು ಪ್ಲಾಟ್‍ಗಾಗಿ ಇಷ್ಟು ದೊಡ್ಡ ಮೊತ್ತವನ್ನು ಪಾವತಿಸಿದ್ದಾರೆ ಏಕೆಂದರೆ ಸರ್ವೆ ಸಂಖ್ಯೆ ಮತ್ತು ಮೊತ್ತವು ಅವರ ಪರವಾಗಿ ಕೆಲಸ ಮಾಡುವ ಸಂಖ್ಯಾಶಾಸ್ತ್ರದ ಅಂಕಿ ಅಂಶವನ್ನು ಹೊಂದಿದೆಯಂತೆ. +ನಾನು ಸನಾತನ ಹಿಂದೂ ಮತ್ತು ನಾವು ನಮ್ಮ ಪಂಡಿತ್‍ಜೀ ಅವರನ್ನು ಅನುಸರಿಸುತ್ತೇವೆ. ಸರ್ವೆ ನಂಬರ್ (ಪ್ಲಾಟ್‍ನ) ಮತ್ತು ಮೊತ್ತವು ಸಂಖ್ಯಾಶಾಸ್ತ್ರದ ಪ್ರಕಾರ ನನ್ನ ಪರವಾಗಿ ಹೋಗುವ ಅಂಕಿ ಅಂಶವನ್ನು ಹೊಂದಿದೆ. ಅದನ್ನು ಪರಿವರ್ತಿಸಿದ ನಂತರ ನಾನು ಈ ಪ್ಲಾಟ್‍ನಲ್ಲಿ ಸನಾತನ ಶಾಲೆಯನ್ನು ಪ್ರಾರಂಭಿಸುತ್ತೇನೆ ಎಂದು ಹೇಳಿರುವ ವಾಸ್ತವ ಅವರು ಈ ಹಿಂದೆ ಅದೇ ಗ್ರಾಮದಲ್ಲಿ ಅವರ ಬಾಲ್ಯದ ಮನೆ ಸೇರಿದಂತೆ ಭೂಗತ ಪಾತಕಿಯ ಮೂರು ಆಸ್ತಿಗಳನ್ನು ಖರೀದಿಸಿದ್ದರು. +ಸಂಸದ ಪ್ರತಾಪ್ ಸಿಂಹ ಸೋದರನ ಪ್ರಕರಣಕ್ಕೆ ಬಿಗ್‍ಟ್ವಿಸ್ಟ್ ಕೊಟ್ಟ ಎಚ್‍ಡಿಕೆ +ಮಾರ್ಚ್ 2001 ರಲ್ಲಿ ನಡೆದ ಹರಾಜಿನಲ್ಲಿ ಶ್ರೀವಾಸ್ತವ ಮಾತ್ರ ಬಿಡ್‍ದಾರರಾಗಿದ್ದರು, ವಕೀಲರು ಮುಂಬೈನ ನಾಗ್ಪಾಡಾದಲ್ಲಿ ಭಯೋತ್ಪಾದಕನ ಒಡೆತನದ ಎರಡು ಅಂಗಡಿಗಳನ್ನು ಖರೀದಿಸಿದ್ದರು. 2020 ರಲ್ಲಿ ವಕೀಲರು ಭಯೋತ್ಪಾದಕ ಜನಿಸಿದ ಮುಂಬಾಕೆ ಗ್ರಾಮದಲ್ಲಿ ದಾವೂದ್ ಅವರ ಬಾಲ್ಯದ ಮನೆಯನ್ನು ಖರೀದಿಸಿದರು. ದಾಖಲೆಗಳಲ್ಲಿ ಕೆಲವು ವ್ಯತ್ಯಾಸಗಳಿಂದಾಗಿ ಅವರು ಇನ್ನೂ ಬಂಗಲೆಯ ಪತ್ರವನ್ನು ಪಡೆದಿಲ್ಲ. ಈಗ ಆಗಿರುವ ತಪ್ಪುಗಳನ್ನು ಸರಿಪಡಿಸಲಾಗಿದ್ದು, ಶೀಘ್ರವೇ ದಾಖಲೆ ಸಿಗುವ ಭರವಸೆ ಹೊಂದಿದ್ದಾರೆ. +ನಾನು 2020 ರಲ್ಲಿ ದಾವೂದ್ ಇಬ್ರಾಹಿಂನ ಬಂಗಲೆಗಾಗಿ ಬಿಡ್ ಮಾಡಿದ್ದೇನೆ. ಸನಾತನ ಧರ್ಮ ಪಾಠಶಾಲಾ ಟ್ರಸ್ಟ್ ಅನ್ನು ಸ್ಥಾಪಿಸಲಾಗಿದೆ ಮತ್ತು ಅದನ್ನು ನೋಂದಾಯಿಸಿದ ನಂತರ ನಾನು ಅಲ್ಲಿಯೂ ಸನಾತನ ಶಾಲೆಯನ್ನು ಪ್ರಾರಂಭಿಸುತ್ತೇನೆ ಎಂದು ಅವರು ಹೇಳಿದರು. ದಾವೂದ್ ಇಬ್ರಾಹಿಂ ಒಡೆತನದ ನಾಲ್ಕು ಆಸ್ತಿಗಳ ಹರಾಜು ಪ್ರಕ್ರಿಯೆ ನಿನ್ನೆ ಮುಕ್ತಾಯವಾಗಿದೆ. \ No newline at end of file diff --git a/eesanje/url_47_196_7.txt b/eesanje/url_47_196_7.txt new file mode 100644 index 0000000000000000000000000000000000000000..71a49056a3a87f6969a414212d2b3aa6dd0fda2e --- /dev/null +++ b/eesanje/url_47_196_7.txt @@ -0,0 +1,8 @@ +ರಾಜಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ಟಿಕೆಟ್ ಪಡೆಯೋದು ಹೇಗೆ..? +ನವದೆಹಲಿ,ಜ.6- ನೀವು ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕೆ? ಟಿಕೆಟ್ ಬುಕ್ ಮಾಡೋದು ಎಂದು ನಿಮಗೆ ತಿಳಿದಿಲ್ಲವೇ? ಹಾಗಾದರೆ ಇಲ್ಲಿದೆ ನೋಡಿ ಗಣರಾಜ್ಯೋತ್ಸವದ ಪ್ರವೇಶ ಪತ್ರ ಪಡೆಯೋದು ಹೇಗೆ ಅನ್ನೋದು. ಮೊದಲು ನೀವು ಆಮಂತ್ರಣ ನಿರ್ವಹಣಾ ವ್ಯವಸ್ಥೆ (ಐಎಂಎಸ್ ) ಅಥವಾ ರಕ್ಷಣಾ ಸಚಿವಾಲಯದ ಆಮಂತ್ರನ್ ಆನ್‍ಲೈನ್ ಪೋರ್ಟಲ್‍ಗೆ ಭೇಟಿ ನೀಡಿ. ಅದರಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ತದನಂತರ ಅದಕ್ಕೆ ಕಳುಹಿಸಿದ ಒಟಿಪಿ ಒದಗಿಸಿ. ನಿಮ್ಮ ಹೆಸರು, ಹುಟ್ಟಿದ ದಿನಾಂಕ, ವಿಳಾಸ ಮತ್ತು ಕ್ಯಾಪ್ಚಾ ಕೋಡ್‍ನಂತಹ ಇತರ ವಿವರಗಳನ್ನು ಭರ್ತಿ ಮಾಡಿ ಮತ್ತು ನೋಂದಾಯಿಸಿ. +ನಾಲ್ಕನೆ ಹಂತದಲ್ಲಿ ಈವೆಂಟ್‍ಗಳ ಪಟ್ಟಿಯಿಂದ ಗಣರಾಜ್ಯೋತ್ಸವ ಪರೇಡ್ ಆಯ್ಕೆಮಾಡಿ. ನಂತರ ಐಡಿ ಪ್ರಕಾರವನ್ನು ಆಯ್ಕೆಮಾಡಿ ಮತ್ತು ಮಾನ್ಯವಾದ ಗುರುತಿನ ಪುರಾವೆಯನ್ನು ಅಪ್‍ಲೋಡ್ ಮಾಡಿ. ನಂತರ ಟಿಕೆಟ್‍ಗಾಗಿ ಆನ್‍ಲೈನ್ ಪಾವತಿ ಮಾಡಿ ನಿಮ್ಮ ಟಿಕೆಟ್ ಪಡೆದುಕೊಳ್ಳಬಹುದಾಗಿದೆ. +ಈ ಬಾರಿಯ 75 ನೇ ಗಣರಾಜ್ಯೋತ್ಸವವನ್ನು ಜ. 26 ರಂದು ರಾಷ್ಟ್ರರಾಜಧಾನಿಯ ರಾಜಪಥದಲ್ಲಿ ಬೃಹತ್ ಮತ್ತು ಪ್ರಭಾವಶಾಲಿ ಮೆರವಣಿಗೆಯೊಂದಿಗೆ ಆಚರಿಸಲಾಗುತ್ತಿದೆ. ಮೆರವಣಿಗೆಯು ವಿಜಯ್ ಚೌಕ್‍ನಿಂದ ಬೆಳಿಗ್ಗೆ 9.30 ಕ್ಕೆ ಪ್ರಾರಂಭವಾಗಿ ಐದು ಕಿಲೋಮೀಟರ್‍ಗಳಷ್ಟು ದೂರ ಸಾಗಿ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೊನೆಗೊಳ್ಳುತ್ತದೆ. 1950 ರಲ್ಲಿ ಭಾರತೀಯ ಸಂವಿಧಾನದ ಅಂಗೀಕಾರವನ್ನು ಗುರುತಿಸುವ ಈ ಘಟನೆಯು ಮಹತ್ವದ್ದಾಗಿದೆ. +ಸಂಸದ ಪ್ರತಾಪ್ ಸಿಂಹ ಸೋದರನ ಪ್ರಕರಣಕ್ಕೆ ಬಿಗ್‍ಟ್ವಿಸ್ಟ್ ಕೊಟ್ಟ ಎಚ್‍ಡಿಕೆ +ಮೆರವಣಿಗೆಯು ದೇಶದ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸುವುದಲ್ಲದೆ ಅದರ ಶ್ರೀಮಂತ ಸಂಸ್ಕøತಿಯ ಪ್ರತಿಕವಾಗಿರಲಿದೆ. ಅಚ್ಚುಕಟ್ಟಾಗಿ ಸಮವಸ್ತ್ರದಲ್ಲಿರುವ ಸೈನಿಕರು ಒಟ್ಟಿಗೆ ಸಾಗುತ್ತಾರೆ ಮತ್ತು ಶಸ್ತ್ರಸಜ್ಜಿತ ವಾಹನಗಳು ಮತ್ತು ವೈಮಾನಿಕ ಪ್ರದರ್ಶನಗಳು ಇರಲಿವೆ. ಮಿಲಿಟರಿ ಅಂಶವನ್ನು ಮೀರಿ, ಮೆರವಣಿಗೆಯು ವಿವಿಧ ರಾಜ್ಯಗಳ ವರ್ಣರಂಜಿತ ಟ್ಯಾಬ್ಲೋಗಳು ಗಮನ ಸೆಳೆಯಲಿವೆ. ಉತ್ಸಾಹಭರಿತ ನೃತ್ಯ ಪ್ರದರ್ಶನಗಳು, ಜಾನಪದ ಹಾಡುಗಳು ಮತ್ತು ಭಾರತದ ವೈವಿಧ್ಯಮಯ ಪರಂಪರೆಯ ಆಚರಣೆ ಪರೇಡ್‍ನಲ್ಲಿ ವಿಜೃಂಭಿಸಲಿದೆ. +ಪರೇಡ್ ವೀಕ್ಷಿಸಲು ನಾಡಿನಾದ್ಯಂತ ಜನರು ಸೇರುತ್ತಾರೆ, ಧ್ವಜಗಳನ್ನು ಬೀಸುತ್ತಾರೆ ಮತ್ತು ತಮ್ಮ ದೇಶಪ್ರೇಮವನ್ನು ವ್ಯಕ್ತಪಡಿಸುತ್ತಾರೆ. ಇದು ಪ್ರಾಚೀನ ಕಾಲದಿಂದ ಆಧುನಿಕ ಪ್ರಜಾಪ್ರಭುತ್ವವಾಗುವವರೆಗೆ ಭಾರತದ ಪ್ರಯಾಣ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅದರ ಬದ್ಧತೆಯನ್ನು ಪ್ರತಿಯೊಬ್ಬರಿಗೂ ನೆನಪಿಸುವ ಗುರಿಯನ್ನು ಹೊಂದಿದೆ. +ರಾಷ್ಟ್ರಗೀತೆ ನುಡಿಸುವಿಕೆಯು ರಾಷ್ಟ್ರದಾದ್ಯಂತ ಹೆಮ್ಮೆ ಮತ್ತು ಏಕತೆಯ ಭಾವನೆಯನ್ನು ತುಂಬುತ್ತದೆ. ಮುಂಬರುವ 75 ನೇ ಗಣರಾಜ್ಯೋತ್ಸವದ ಪರೇಡ್ ಶಾಶ್ವತವಾದ ಸ್ಮರಣೆಯಾಗಿದೆ ಎಂದು ನಿರೀಕ್ಷಿಸಲಾಗಿದೆ, ಪ್ರತಿಯೊಬ್ಬರಿಗೂ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಬಲಿಷ್ಠ ಭಾರತವನ್ನು ನಿರ್ಮಿಸಲು ಕೊಡುಗೆ ನೀಡಲು ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಅನೇಕ ವ್ಯಕ್ತಿಗಳು ಈ ಅದ್ಭುತ ಘಟನೆಗೆ ಹಾಜರಾಗಲು ಮತ್ತು ವೀಕ್ಷಿಸಲು ಉತ್ಸುಕರಾಗಿರುತ್ತಾರೆ. \ No newline at end of file diff --git a/eesanje/url_47_196_8.txt b/eesanje/url_47_196_8.txt new file mode 100644 index 0000000000000000000000000000000000000000..8c2b4a9f8b8e65cbfe3a4ae12cc0396462f95083 --- /dev/null +++ b/eesanje/url_47_196_8.txt @@ -0,0 +1,9 @@ +ರಾಮಮಂದಿರ ಉದ್ಘಾಟನೆಯಂದು ಮೋದಿ ವಿಶೇಷ ವ್ರತ +ಅಯೋಧ್ಯೆ,ಜ.5- ಇದೇ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಈ ಮಹತ್ವದ ದಿನ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವ್ರತ ಕೈಗೊಂಡಿದ್ದಾರೆ. ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಂದು ಜೊತೆಗೆ ವಿಶೇಷ ಹೋಮ-ಹವನ ಜರುಗಲಿದೆ. ಉದ್ಘಾಟನೆಯ ದಿನ ಪ್ರಧಾನಿ ಮೋದಿ ಅವರು ಉಪವಾಸ ಕೈಗೊಳ್ಳಲಿದ್ದು, ಅದೊಂದು ದಿನ ಏನೂ ತಿನ್ನುವುದು ಬೇಡ ಎಂದು ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. +ಮೋದಿಯವರು ಅಪ್ಪಟ ದೈವ ಭಕ್ತರು. ಅವರು ಉಪವಾಸ ಮಾಡುವುದು ಇದೇ ಮೊದಲೇನಲ್ಲ. ಪ್ರತಿ ವರ್ಷ ನವರಾತ್ರಿಯಂದು ಮೋದಿ ತಪ್ಪದೇ ಉಪವಾಸ ಮಾಡುತ್ತಾರೆ. ಚೈತ್ರ ನವರಾತ್ರಿಯ ಶುಭ ಸಂದರ್ಭದಲ್ಲಿ 9 ದಿನಗಳ ಉಪವಾಸ ಮಾಡುತ್ತಿದ್ದರು. +ಒಂಬತ್ತು ದಿನಗಳ ಉಪವಾಸದ ಸಮಯದಲ್ಲಿ ಪ್ರಧಾನಿ ಮೋದಿ ಅವರು ಸಂಜೆ ವೇಳೆ ಒಂದು ಹಣ್ಣನ್ನು ನಿಂಬೆ ರಸದೊಂದಿಗೆ ಸೇವಿಸುತ್ತಿದ್ದರು. ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳ ಸೇವನೆಯನ್ನು ಕೈಬಿಟ್ಟಿದ್ದರು. ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ವಿವಿಧಾನಗಳು ಜನವರಿ 16ರಿಂದ ಪ್ರಾರಂಭವಾಗಿದೆ. ಜನವರಿ 22ರಂದು ದೇವಾಲಯದ ಉದ್ಘಾಟನೆಯು ಪ್ರಧಾನಿ ಮೋದಿ ಮೊದಲು ಪ್ರತಿಜ್ಞೆ ಸ್ವೀಕರಿಸಿ ದೇಶಕ್ಕೆ ಸಮರ್ಪಿಸುವುದರೊಂದಿಗೆ ಪ್ರಾರಂಭವಾಗಲಿದೆ. ನಂತರ ಅವರು ರಾಮಲಲ್ಲಾರ ಷೋಡಶೋಪಚಾರ ಪೂಜೆ ಮಾಡುತ್ತಾರೆ. +15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಕರಾವಳಿಯಲ್ಲಿ ಅಪಹರಣ +ರಾಮಮಂದಿರ ಉದ್ಘಾಟನೆಗೂ ಮೊದಲು ಅಂದರೆ ಜ.16ರಂದು ಮೋದಿಯವರ ಸಂಕಲ್ಪ ಅಕ್ಷಿತ ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ. ಅಕ್ಷತೆ ಬಂದ 7 ದಿನಗಳ ಬಳಿಕ ಆಚರಣೆ ಪ್ರಾರಂಭವಾಗುತ್ತದೆ. ಇದೇ ವೇಳೆ ನಾಲ್ಕು ವೇದಗಳ ಎಲ್ಲ ಶಾಖೆಗಳ ಭಕ್ತಿ, ಯಾಗ ನಡೆಯುತ್ತದೆ. +ರಾಮಮಂದಿರ ಉದ್ಘಾಟನೆಯ ಮುನ್ನಾ ದಿನ ಜ.21ರಂದು ಮೋದಿ ಅಯೋಧ್ಯೆಗೆ ತೆರಳಲಿದ್ದಾರೆ. ಮರುದಿನ ಜ.22ರಂದು ಬೆಳಗ್ಗೆ ಸರಯು ನದಿಯಲ್ಲಿ ಪುಣ್ಯ ಸ್ನಾನ ಮಾಡಲಿದ್ದಾರೆ. ಸಂಪ್ರದಾಯದ ಪ್ರಕಾರ ಪ್ರಾಣ ಪ್ರತಿಷ್ಠೆಯ ದಿನದಂದು ಮೋದಿ ಉಪವಾಸ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ. +ಭಗವಾನ್ ಹನುಮಂತನು ಅಯೋಧ್ಯೆಯ ರಾಜನಾಗಿ ಕುಳಿತಿದ್ದಾನೆ ಎಂಬ ನಂಬಿಕೆ ಇದೆ. ಹನುಮನ ಅನುಮತಿಯಿಲ್ಲದೆ ಇಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಈ ನಂಬಿಕೆಯಿಂದಾಗಿ ಪ್ರಧಾನಿಯವರು ಮೊದಲು ಹನುಮಾನ್‍ಗರ್ಹಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅನುಮತಿ ಪಡೆದು ನಂತರ ರಾಮ ಜನ್ಮಭೂಮಿಗೆ ತೆರಳಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪಿಸುತ್ತಾರೆ ಎನ್ನಲಾಗಿದೆ. +ವಾಲ್ಮೀಕಿ ರಾಮಾಯಣದಲ್ಲಿಯೂ ಸಹ ಶ್ರೀರಾಮನು ಸಾಕೇತ್ ಧಾಮಕ್ಕೆ ಹೋಗುವ ಮೊದಲು ಹನುಮಂತನಿಗೆ ಪಟ್ಟಾಭಿಷೇಕ ಮಾಡಿದನೆಂದು ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_47_196_9.txt b/eesanje/url_47_196_9.txt new file mode 100644 index 0000000000000000000000000000000000000000..a09f0839d92d307c51d1e09bde47efa95eab63f4 --- /dev/null +++ b/eesanje/url_47_196_9.txt @@ -0,0 +1,7 @@ +ಉತ್ತರ ಪ್ರದೇಶದ ಸರ್ಕಾರಿ ಬಸ್‍ಗಳಲ್ಲಿ ರಾಮ ಭಜನೆ +ಲಕ್ನೋ,ಜ.5- ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜ.22ರ ವರೆಗೆ ಸರ್ಕಾರಿ ಬಸ್‍ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಲು ಸೂಚಿಸಲಾಗಿದೆ. ಉತ್ತರ ಪ್ರದೇಶದ ಸಾರಿಗೆ ಇಲಾಖೆಯು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಯುಪಿಎಸ್‍ಆರ್ಟಿಸಿ) ಬಸ್‍ಗಳಲ್ಲಿ ಜನವರಿ 22ರವರೆಗೆ ರಾಮ ಭಜನೆ ಪ್ರಸಾರ ಮಾಡಲು ಸೂಚನೆ ನೀಡಿದೆ. +ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಲ್ಲಿನ ಮಹಾಮಸ್ತಕಾಭಿಷೇಕ ಸಮಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ್ದು, ಜನವರಿ 14 ರಿಂದ ಅಯೋಧ್ಯೆಯ ದೇವಾಲಯಗಳಲ್ಲಿ ಭಜನೆ, ರಾಮಾಯಣ ಮತ್ತು ರಾಮಚರಿತಮಾನಗಳ ಪಠಣ ಮತ್ತು ಸುಂದರಕಾಂಡದಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ದೇಶನ ನೀಡಿದ್ದಾರೆ. +ಜನವರಿ 22ಕ್ಕಾಗಿ ಸಾರಿಗೆ ಇಲಾಖೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯ ಪ್ರಕಾರ, ಎಲ್ಲಾ ಪ್ರಯಾಣಿಕ ವಾಹನಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಇರಬೇಕು. ಪ್ರಯಾಣಿಕರಲ್ಲಿ ಭಕ್ತಿ ಭಾವ ಮೂಡಿಸಲು ಬಸ್‍ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಬೇಕು. +ಅಮೃತ್‍ಸರದಲ್ಲಿ ಪತ್ತೆಯಾಯ್ತು ಡ್ರಗ್ಸ್ ದಂಧೆ +ಬಸ್ ಚಾಲಕರಿಂದ ಸುರಕ್ಷಿತ ಚಾಲನೆ, ಸಂಚಾರ ನಿಯಮಗಳ ಅನುಸರಣೆ, ಪ್ರಯಾಣಿಕರೊಂದಿಗೆ ಸರಿಯಾದ ನಡವಳಿಕೆ, ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸುವುದು, ಶುಚಿತ್ವ ಕಾಪಾಡುವುದು, ನಿಗದಿತ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸದೇ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. +ಲಕ್ನೋ ಮತ್ತು ಅಯೋಧ್ಯೆ, ಗೋರಖ್ಪುರ ಮತ್ತು ಅಯೋಧ್ಯೆ, ಸುಲ್ತಾನ್ಪುರ ಮತ್ತು ಅಯೋಧ್ಯೆ ನಡುವೆ ಪ್ರಯಾಣಿಸುವ ಪ್ರವಾಸಿಗರಿಗೆ ಸಹಾಯ ಮಾಡಲು ಸಾರಿಗೆ ಇಲಾಖೆಯು ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. \ No newline at end of file diff --git a/eesanje/url_47_197_1.txt b/eesanje/url_47_197_1.txt new file mode 100644 index 0000000000000000000000000000000000000000..c1b22f61afcc49f708779d075b682df74e8e1614 --- /dev/null +++ b/eesanje/url_47_197_1.txt @@ -0,0 +1,8 @@ +ನಾಳೆ ಸಂಜೆ ನಿಗದಿತ ಕಕ್ಷೆ ಸೇರಲಿದೆ ಆದಿತ್ಯ-ಎಲ್1 ನೌಕೆ +ನವದೆಹಲಿ,ಜ.5- ದೇಶದ ಮೊದಲ ಬಾಹ್ಯಾಕಾಶ-ಆಧಾರಿತ ಸೌರ ನೌಕೆ ಆದಿತ್ಯ-ಎಲ್ 1 ಉಪಗ್ರಹ ನಾಳೆ ಸಂಜೆ 4 ಗಂಟೆಗೆ ಸರಿಯಾಗಿ ತನ್ನ ಗಮ್ಯಸ್ಥಾನದ ಕಕ್ಷೆಯನ್ನು ತಲುಪಲಿದೆ. ಕಳೆದ ವರ್ಷ ಸೆಪ್ಟೆಂಬರ್ 2 ರಂದು ಪ್ರಾರಂಭವಾದ ಅದರ 126 ದಿನಗಳ ಪ್ರಯಾಣದಲ್ಲಿ, ಇದು ತನ್ನ ಕರ್ಮಭೂಮಿ ಅಥವಾ ಕ್ರಿಯೆಯ ಭೂಮಿ ಯನ್ನು ತಲುಪಲು ಸಕ್ರ್ಯೂಟ್ ಮಾರ್ಗದಲ್ಲಿ ಸಾಗಿದಾಗ ಸುಮಾರು 3.7 ಮಿಲಿಯನ್ ಕಿಲೋಮೀಟರ್‍ಗಳನ್ನು ಕ್ರಮಿಸಿದೆ. +ಆದಿತ್ಯ ಆರೋಗ್ಯವಾಗಿದೆ ಮತ್ತು ಸೂರ್ಯನ ಸಂಪೂರ್ಣ ಡಿಸ್ಕ್‍ನ ಸುಂದರವಾದ ಚಿತ್ರಗಳನ್ನು ಸೆರೆ ಹಿಡಿದು ವೈಜ್ಞಾನಿಕ ಫಲಿತಾಂಶಗಳನ್ನು ರವಾನಿಸಲು ಈಗಾಗಲೇ ಆರಂಭಿಸಿದೆ ಎಂದು ಇಸ್ರೋ ಹೇಳಿದೆ. ಆದಿತ್ಯನ ಮನೆಯು ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಹಾಲೋ-ಆಧಿಕಾರದ ಕಕ್ಷೆಯಲ್ಲಿದೆ. ಭೂಮಿಗಿಂತ ಸೂರ್ಯನಿಗೆ ಹತ್ತಿರವಾಗಿದ್ದರೂ, ಕಕ್ಷೆಯು ಇನ್ನೂ ದೂರದಲ್ಲಿದೆ, ಏಕೆಂದರೆ ಸೂರ್ಯನು ನಮ್ಮಿಂದ ಸುಮಾರು 150 ಮಿಲಿಯನ್ ಕಿಲೋಮೀಟರ್ ದೂರದಲ್ಲಿದೆ. +ಲಾಗ್ರಾಂಜಿಯನ್ ಪಾಯಿಂಟ-1 ಎಂದು ಕರೆಯಲ್ಪಡುವ ಅದರ ಅಂತಿಮ ದೃಷ್ಟಿಕೋನದಿಂದ, 1,475 ಕಿಲೋಗ್ರಾಂಗಳಷ್ಟು ಆದಿತ್ಯ-ಎಲ1 ಉಪಗ್ರಹವು ನಮ್ಮ ಸೌರವ್ಯೂಹದ ನಕ್ಷತ್ರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ವೈಜ್ಞಾನಿಕ ಪ್ರಯೋಗಗಳನ್ನು ನಡೆಸುತ್ತದೆ ಅದು ಒಂದು ನಿಗೂಢವಾಗಿ ಉಳಿದಿದೆ ಎಂದು ಇಸ್ರೋ ಹೇಳಿದೆ. +ಚೀನಾಕ್ಕಿಂತ ಭಾರತದ ಹೂಡಿಕೆ ಗಮನಾರ್ಹ : ವಿಶ್ವಸಂಸ್ಥೆ +ವೀಕ್ಷಣಾಲಯವು ಸೂರ್ಯನ ನಿರಂತರ ನೋಟವನ್ನು ಹೊಂದಿರುತ್ತದೆ ಮತ್ತು ಬಾಹ್ಯಾಕಾಶ ಹವಾಮಾನವನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ. ಇದು ಸೌರ ಚಂಡಮಾರುತಗಳ ಮುನ್ಸೂಚನೆ ಮತ್ತು ಎಚ್ಚರಿಕೆ ವೇದಿಕೆಯಂತೆ ಕಾರ್ಯನಿರ್ವಹಿಸುತ್ತದೆ ಎಂದು ಬೆಂಗಳೂರಿನ ಯು.ಆರ್.ರಾವ್ ಉಪಗ್ರಹ ಕೇಂದ್ರದ ಆದಿತ್ಯ-ಎಲ್ 1 ಉಪಗ್ರಹದ ಯೋಜನಾ ನಿರ್ದೇಶಕ ನಿಗರ್ ಶಾಜಿ ಹೇಳಿದ್ದಾರೆ. ಸೌರ ಚಂಡಮಾರುತವು ಸೂರ್ಯನ ಮೇಲೆ ದೊಡ್ಡ ಪ್ರಮಾಣದ ಕಾಂತೀಯ ಸೋಟವಾಗಿದೆ, ಇದು ಇಡೀ ಸೌರವ್ಯೂಹದ ಮೇಲೆ ಪರಿಣಾಮ ಬೀರುತ್ತದೆ. +ಆದಿತ್ಯ-ಎಲ್ 1 ಸೂರ್ಯನನ್ನು ನಿರಂತರವಾಗಿ ನೋಡುವುದರಿಂದ, ಇದು ಭೂಮಿಯ ಮೇಲೆ ಸನ್ನಿಹಿತವಾದ ಸೌರ ವಿದ್ಯುತ್ಕಾಂತೀಯ ಪರಿಣಾಮಗಳ ಬಗ್ಗೆ ನಮಗೆ ಎಚ್ಚರಿಕೆ ನೀಡುತ್ತದೆ ಮತ್ತು ನಮ್ಮ ಉಪಗ್ರಹಗಳು ಮತ್ತು ಇತರ ವಿದ್ಯುತ್ ವಿದ್ಯುತ್ ಮತ್ತು ಸಂವಹನ ಜಾಲಗಳನ್ನು ಅಡ್ಡಿಪಡಿಸದಂತೆ ರಕ್ಷಿಸುತ್ತದೆ. +ಇದು ಅವುಗಳನ್ನು ನಿರ್ವಹಿಸುವ ಮೂಲಕ ಸಾಮಾನ್ಯ ಕಾರ್ಯಾಚರಣೆಯನ್ನು ಮುಂದುವರಿಸಲು ಸಹಾಯ ಮಾಡುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ. ಭಾರತವು ಬಾಹ್ಯಾಕಾಶದಲ್ಲಿ 50,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದೆ, 50 ಕ್ಕೂ ಹೆಚ್ಚು ಕಾರ್ಯಾಚರಣಾ ಉಪಗ್ರಹಗಳು ಸೂರ್ಯನ ಪರಿಣಾಮಗಳಿಂದ ರಕ್ಷಿಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_197_10.txt b/eesanje/url_47_197_10.txt new file mode 100644 index 0000000000000000000000000000000000000000..c1ceb94e76f406f937c72c0fc0470b680b8128b4 --- /dev/null +++ b/eesanje/url_47_197_10.txt @@ -0,0 +1,6 @@ +ಇಡಿ ದಾಳಿ ವೇಳೆ 5ಕೋಟಿ ನಗದು, ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಪತ್ತೆ +ಚಂಡೀಗಢ, ಜ 5 (ಪಿಟಿಐ) ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಅವರ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ನಡೆಸಿದ ಶೋಧದ ವೇಳೆ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು, ಸುಮಾರು 300 ಕಾಟ್ರಿಡ್ಜ್‍ಗಳು, 5 ಕೋಟಿ ರೂಪಾಯಿ ನಗದು ಮತ್ತು 100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಕೇಂದ್ರೀಯ ಸಂಸ್ಥೆ ನಿನ್ನೆ ಮಾಜಿ ಶಾಸಕ ಮತ್ತು ಸೋನಿಪತ್‍ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ವಿರುದ್ಧ ದಾಳಿ ನಡೆಸಿತ್ತು. ಸಿಂಗ್ ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ಸುಮಾರು 5 ಕೋಟಿ ರೂಪಾಯಿ ನಗದು, ಅಕ್ರಮ ವಿದೇಶಿ ನಿರ್ಮಿತ ಆಯುಧಗಳು, ಸುಮಾರು 300 ಕಾಟ್ರ್ರಿಡ್ಜ್‍ಗಳು, 100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳು, 4ರಿಂದ 5 ಕೆಜಿ ಚಿನ್ನ ಮತ್ತು ಭಾರತ ಮತ್ತು ವಿದೇಶಗಳಲ್ಲಿನ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೆಲವೆಡೆ ಶೋಧ ಕಾರ್ಯ ಮುಂದುವರಿದಿದೆ ಎಂದು ಮೂಲಗಳ ಉಲ್ಲೇಖಿಸಿವೆ. +ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ +ಯಮುನಾನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‍ನಲ್ಲಿ ಇಬ್ಬರು ರಾಜಕಾರಣಿಗಳು ಮತ್ತು ಸಂಬಂಧಿತ ಘಟಕಗಳ ಸುಮಾರು 20 ಸ್ಥಳಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಯ ನಿಬಂಧನೆಗಳ ಅಡಿಯಲ್ಲಿ ಈ ದಾಳಿಗಳನ್ನು ನಡೆಸಲಾಗಿತ್ತು. ಸಿಂಗ್ ಅವರು ಯಮುನಾನಗರದ ಭಾರತೀಯ ರಾಷ್ಟ್ರೀಯ ಲೋಕದಳದ ಮಾಜಿ ಶಾಸಕರಾಗಿದ್ದಾರೆ. +ಲೀಸ್ ಅವಧಿ ಮತ್ತು ನ್ಯಾಯಾಲಯದ ಆದೇಶದ ನಂತರವೂ ಯಮುನಾನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ಈ ಹಿಂದೆ ನಡೆದಿರುವ ಬಂಡೆಗಳು, ಜಲ್ಲಿಕಲ್ಲು ಮತ್ತು ಮರಳು ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿದ ಹಲವಾರು ಎಫ್‍ಐಆರ್‍ಗಳಿಂದ ಹಣ ವರ್ಗಾವಣೆ ಪ್ರಕರಣವು ಉದ್ಭವಿಸಿದೆ. \ No newline at end of file diff --git a/eesanje/url_47_197_11.txt b/eesanje/url_47_197_11.txt new file mode 100644 index 0000000000000000000000000000000000000000..4898f752d54371bbe9defbcc61d0d45a5dee5a8a --- /dev/null +++ b/eesanje/url_47_197_11.txt @@ -0,0 +1,6 @@ +2024 ರಲ್ಲಿ 4 ಗ್ರಹಣಗಳು: ಆದರೆ ಭಾರತದಲ್ಲಿ ಗೋಚರವಿಲ್ಲ +ಇಂದೋರ್, ಜ. 4- ಈ ವರ್ಷ 2024 ರಲ್ಲಿ ಒಂದು ಸಂಪೂರ್ಣ ಸೂರ್ಯಗ್ರಹಣ ಸೇರಿದಂತೆ ನಾಲ್ಕು ಗ್ರಹಣಗಳು ಸಂಭವಿಸಲಿವೆ, ಆದರೆ ಅವುಗಳಲ್ಲಿ ಯಾವುದೂ ಭಾರತದಿಂದ ಗೋಚರಿಸುವುದಿಲ್ಲ ಎಂದು ಮಧ್ಯ ಪ್ರದೇಶದ ಉಜ್ಜಯಿನಿ ನಗರದ ಜಿವಾಜಿ ವೀಕ್ಷಣಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪ್ರಸ್ತುತ 2024 ರಲ್ಲಿ ಗ್ರಹಣಗಳ ಸರಣಿಯು ಮಾರ್ಚ್ 25 ರಂದು ಪೆನಂಬ್ರಾಲ್ ಚಂದ್ರಗ್ರಹಣದೊಂದಿಗೆ ಪ್ರಾರಂಭವಾಗುತ್ತದೆ ಎಂದು ವೀಕ್ಷಣಾಲಯದ ಅಧಿಕ್ಷಕ ಡಾ ರಾಜೇಂದ್ರಪ್ರಕಾಶ್ ಗುಪ್ತಾ ತಿಳಿಸಿದ್ದಾರೆ.ಸೂರ್ಯ, ಭೂಮಿ ಮತ್ತು ಚಂದ್ರ ಬಹುತೇಕ ಸರಳ ರೇಖೆಯಲ್ಲಿ ಒಟ್ಟುಗೂಡಿದಾಗ ಪೆನಂಬ್ರಾಲ್ ಚಂದ್ರ ಗ್ರಹಣ ಸಂಭವಿಸುತ್ತದೆ. ವರ್ಷದ ಈ ಮೊದಲ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ ಏಕೆಂದರೆ ಈ ಖಗೋಳ ಘಟನೆಯ ಸಮಯದಲ್ಲಿ ಅದು ದೇಶದಲ್ಲಿ ಹಗಲಿನ ಸಮಯವಾಗಿರುತ್ತದೆ ಎಂದು ಅವರು ಹೇಳಿದರು. +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ಏಪ್ರಿಲ್ 8 ಮತ್ತು 9 ರ ಮಧ್ಯರಾತ್ರಿಯಲ್ಲಿ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ ,ಸೆ.18ರ ಬೆಳಗ್ಗೆ ಸಂಭವಿಸಲಿರುವ ಭಾಗಶಃ ಚಂದ್ರಗ್ರಹಣ ಭಾರತದಲ್ಲಿಯೂ ಗೋಚರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.ಅಕ್ಟೋಬರ್ 2 ಮತ್ತು 3 ರ ಮಧ್ಯರಾತ್ರಿಯಲ್ಲಿ ಸಂಭವಿಸುವ ವಾರ್ಷಿಕ ಸೂರ್ಯಗ್ರಹಣದ ದೃಷ್ಟಿಯಿಂದ ದೇಶದ ಖಗೋಳಶಾಸದ ಉತ್ಸಾಹಿಗಳು ಮತ್ತು ಆಕಾಶ ನೋಡುವವರು ವಂಚಿತರಾಗುತ್ತಾರೆ ಎಂದು ಅವರು ಹೇಳಿದರು. +ವಾರ್ಷಿಕ ಸೂರ್ಯಗ್ರಹಣವು 7 ನಿಮಿಷ ಮತ್ತು 21 ಸೆಕೆಂಡುಗಳ ಕಾಲ ಇರುತ್ತದೆ ಮತ್ತು ಅದರ ಉತ್ತುಂಗದಲ್ಲಿ, ಸೂರ್ಯನ ಶೇಕಡಾ 93 ರಷ್ಟು ಆವರಿಸುತ್ತದೆ, ಇದರಿಂದಾಗಿ ಅದು ಭೂಮಿಯಿಂದ ಹೊಳೆಯುವ ಕಂಕಣದಂತೆ ಗೋಚರಿಸುತ್ತದೆ ಎಂದು ಅವರು ಹೇಳಿದರು. ಕಳೆದ 2023 ರಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣ ಭಾಗಶಃ ಕಣಿಸಿತ್ತು. \ No newline at end of file diff --git a/eesanje/url_47_197_12.txt b/eesanje/url_47_197_12.txt new file mode 100644 index 0000000000000000000000000000000000000000..1ae80ae8a2cd6f1517c2b6b4ece936ac4c8e1280 --- /dev/null +++ b/eesanje/url_47_197_12.txt @@ -0,0 +1,6 @@ +ಲಕ್ಷದ್ವೀಪದಲ್ಲಿ ಪ್ರಧಾನಿ ಮೋದಿ ಸ್ನೋರ್ಕೆಲಿಂಗ್: ಸಮುದ್ರ ತಟದಲ್ಲಿ ನಡಿಗೆ +ಲಕ್ಷದ್ವೀಪ, ಜ.4- ಸಾಹಸಿಯನ್ನು ಸ್ವೀಕರಿಸಲು ಬಯಸುವವರಿಗೆ ಲಕ್ಷದ್ವೀಪವು ನಿಮ್ಮ ಪಟ್ಟಿಯಲ್ಲಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದಿಲ್ಲಿ ಹೇಳಿದ್ದಾರೆ. ಲಕ್ಷದ್ವೀಪಕ್ಕೆ ಭೇಟಿ ನೀಡಿ ಆದ ಅನುಭವಗಳನ್ನು ಹಂಚಿಕೊಂಡಿರುವ ಅವರು, ನನ್ನ ವಾಸ್ತವ್ಯದ ಸಮಯದಲ್ಲಿ ನಾನು ಸ್ಪೀಡ್‍ಬೋಟ್‍ನಲ್ಲಿ ಪ್ರಯಾಣಿಸಿದ್ದು ಮತ್ತು ಸಮುದ್ರದಾಳದಲ್ಲಿ ಪ್ರಯಾಣಿಸಿದ್ದು ರೋಮಾಂಚನಕಾರಿಯಾಗಿತ್ತು. ಸಾಹಸಪ್ರಿಯರಿಗೆ ಇದು ಹೇಳಿ ಮಾಡಿಸಿದ ಪ್ರವಾಸಿ ತಾಣ ಎಂದು ಮೋದಿ ಮನದಾಳದ ಮಾತುಗಳನ್ನಾಡಿದ್ದಾರೆ. +ದೇಶದ ಅತ್ಯಂತ ಚಿಕ್ಕ ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪಕ್ಕೆ ಪ್ರಧಾನಿ ಭೇಟಿ ನೀಡಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಈ ಸಂದರ್ಭದಲ್ಲಿ ಹಲವು ಸಾಹಸಮಯ ಕ್ರೀಡೆಗಳಲ್ಲೂ ಭಾಗಿಯಾಗಿ ತಮ್ಮ ಕ್ಯಾಮೆರಾದಲ್ಲಿ ಸಮುದ್ರದಾಳದಲ್ಲಿರುವ ಹವಳಗಳು, ಬಣ್ಣ ಬಣ್ಣದ ಮೀನುಗಳನ್ನು ಸೆರೆಹಿಡಿದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. +ಸಾಹಸ ಪ್ರಿಯರಾದರೆ ನೀವು ಖಂಡಿತ ಲಕ್ಷದ್ವೀಪಕ್ಕೆ ಬರಬೇಕು, ವಾಸ್ತವ್ಯ ಹೂಡಬೇಕು. ಸ್ನಾರ್ಕೆಲಿಂಗ್ ಸೇರಿದಂತೆ ಇಲ್ಲಿನ ಅಪರೂಪದ ಕ್ರೀಡೆ ಹಾಗೂ ಪ್ರವಾಸಿ ಸೌಲಭ್ಯಗಳನ್ನು ಪಡೆಯಬೇಕು ಎಂದು ಹೇಳಿದರು. + , – – .../1uG3rLnSY4 +ರಮಣೀಯ ಸೌಂದರ್ಯದ ಜತೆಗೆ ಲಕ್ಷದ್ವೀಪದ ಪ್ರಶಾಂತತೆಯೂ ಮೋಡಿ ಮಾಡುತ್ತದೆ. ನಾನು ಇದೇ ಸಂದರ್ಭದಲ್ಲಿ ದೇಶದ 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಇನ್ನಷ್ಟು ಶ್ರಮಿಸಬೇಕೆಂಬ ದೃಢ ನಿರ್ಧಾರ ಮೂಡಿತು ಮತ್ತು ಅದರ ಪ್ರತಿಬಿಂಬವೂ ನನ್ನ ಮುಂದೆ ಹಾದು ಹೋಯಿತು ಎಂದು ಹೇಳಿದ್ದಾರೆ.ಸಮುದ್ರ ತಟದಲ್ಲಿ ಬೆಳಗಿನ ನಡಿಗೆಯೂ ಕೂಡ ಅದ್ವಿತೀಯ ಅನುಭವ ನೀಡಿದೆ. ನನ್ನ ಈ ಪ್ರವಾಸ ಎಂದೆಂದಿಗೂ ಮರೆಯಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_197_2.txt b/eesanje/url_47_197_2.txt new file mode 100644 index 0000000000000000000000000000000000000000..9d75a4f417031705b82fe95bc85cc703a3743671 --- /dev/null +++ b/eesanje/url_47_197_2.txt @@ -0,0 +1,6 @@ +ಅಮೃತ್‍ಸರದಲ್ಲಿ ಪತ್ತೆಯಾಯ್ತು ಡ್ರಗ್ಸ್ ದಂಧೆ +ಅಮೃತಸರ,ಜ.5- ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರು ನಡೆಸುತ್ತಿದ್ದ ಗಡಿಯಾಚೆಗಿನ ಮಾದಕವಸ್ತು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆಯನ್ನು ಅಮೃತಸರದಲ್ಲಿ ಭೇದಿಸಲಾಗಿದ್ದು, 2 ಕೆಜಿ ಐಸ್ ಡ್ರಗ್ (ಮೆಥಾಂಫೆಟಮೈನ್) ವಶಪಡಿಸಿಕೊಂಡು ಪ್ರಮುಖ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಬಂಧಿತ ಕಳ್ಳಸಾಗಾಣಿಕೆದಾರನನ್ನು ಅಮೃತಸರದ ಗಗ್ಗರ್ಮಲ್ ಗ್ರಾಮದ ನಿವಾಸಿ ಸಿಮ್ರಂಜಿತ್ ಸಿಂಗ್ ಅಲಿಯಾಸ್ ಸಿಮರ್ ಮಾನ್ ಎಂದು ಗುರುತಿಸಲಾಗಿದೆ. ಐಸ್ ಡ್ರಗ್ಸ್‍ನ ರವಾನೆಯನ್ನು ವಶಪಡಿಸಿಕೊಳ್ಳುವುದರ ಜೊತೆಗೆ, ಪೊಲೀಸ್ ತಂಡಗಳು ಆತನ ಬಳಿಯಿಂದ ಐದು ಜೀವಂತ ಕಾಟ್ರಿಡ್ಜ್‍ಗಳ ಜೊತೆಗೆ ಹೆಚ್ಚು ಅತ್ಯಾಧುನಿಕ 30-ಬೋರ್ ಚೈನೀಸ್ ಪಿಸ್ತೂಲ್ ಅನ್ನು ವಶಪಡಿಸಿಕೊಂಡಿವೆ ಎಂದು ಪಂಜಾಬ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಚೀನಾಕ್ಕಿಂತ ಭಾರತದ ಹೂಡಿಕೆ ಗಮನಾರ್ಹ : ವಿಶ್ವಸಂಸ್ಥೆ +ಬಂಧಿತ ಆರೋಪಿ ಪಾಕಿಸ್ತಾನ ಮೂಲದ ಸ್ಮಗ್ಲರ್‍ಗಳಾದ ಪಠಾಣ್ ಮತ್ತು ಅಮೇರ್ ಅವರೊಂದಿಗೆ ನೇರವಾಗಿ ಸಂಪರ್ಕ ಹೊಂದಿದ್ದು, ಅವರಿಗೆ ಡ್ರೋನ್ ಮೂಲಕ ಐಸ್ ಡ್ರಗಸ್ ಮತ್ತು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. +ಹೆಚ್ಚಿನ ವಿವರಗಳನ್ನು ಹಂಚಿಕೊಂಡ ಅಮೃತಸರದ ಪೊಲೀಸ್ ಕಮಿಷನರ್ ಗುರ್‍ಪ್ರೀತ್ ಸಿಂಗ್ ಭುಲ್ಲರ್ ಅವರು , ರಾಜ್ಯದಲ್ಲಿ ಪಾಕ್ ಮೂಲದ ಕಳ್ಳಸಾಗಾಣಿಕೆದಾರರಿಂದ ಹೆಚ್ಚಿನ ಪ್ರಮಾಣದ ಐಸ್ ಡ್ರಗ್ ಮತ್ತು ಶಸ್ತ್ರಾಸ್ತ್ರಗಳ ಸಾಗಣೆಯ ಪ್ರಯತ್ನದ ಬಗ್ಗೆ ವಿಶ್ವಾಸಾರ್ಹ ಮಾಹಿತಿಯ ನಂತರ, ಪೊಲೀಸ್ ತಂಡಗಳು ಚೆಹರ್ತಾದಲ್ಲಿ ವ್ಯಾಪಕ ಕಾರ್ಯಾಚರಣೆಯನ್ನು ನಡೆಸಿವೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_197_3.txt b/eesanje/url_47_197_3.txt new file mode 100644 index 0000000000000000000000000000000000000000..eb4b42acada295cd983fe437e43bf4d0477c9357 --- /dev/null +++ b/eesanje/url_47_197_3.txt @@ -0,0 +1,6 @@ +ಕೇಜ್ರಿವಾಲ್, ಸೂರೆನ್ ಬಂಧನ ಸಾಧ್ಯತೆ : ಪವಾರ್ +ಶಿರಡಿ,ಜ.5- ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದರೂ ಅಚ್ಚರಿ ಪಡುವಂತಿಲ್ಲ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ತಿಳಿಸಿದ್ದಾರೆ. ಒಂದೇ ರೀತಿಯ ರಾಜಕೀಯ ದೃಷ್ಟಿಕೋನವನ್ನು ಹೊಂದಿರದವರನ್ನು ನಿರುತ್ಸಾಹಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವೂ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೂ ಕೇಂದ್ರ ತನಿಖಾ ಸಂಸ್ಥೆಯಿಂದ ಸಮನ್ಸ್ ಕಳುಹಿಸಲಾಗಿದೆ ಮತ್ತು ಅವರನ್ನೂ ಬಂಧಿಸಬಹುದು ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ವರ್ಷಗಳಲ್ಲಿ, ಜನರು ಕೇಜ್ರಿವಾಲ್ ಅವರನ್ನು ಅಧಿಕಾರಕ್ಕೆ ತರಲು ಮತ ಹಾಕಿದ್ದಾರೆ ಎಂದು ಹೇಳಿದ ಪವಾರ್, ಆಮ್ ಆದ್ಮಿ ಪಕ್ಷದ ಮಂತ್ರಿಗಳನ್ನು ಜೈಲಿಗೆ ಹಾಕಲಾಗಿದೆ ಮತ್ತು ಅವರನ್ನು ಬಂಧಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. +ಅಧೀನ ಅಧಿಕಾರಿಗೆ ಕಿರುಕುಳ ನೀಡಿದ ಜಡ್ಜ್ ಅಮಾನತು +ಅವರಿಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ದೇಶದ ರಾಜಧಾನಿಯ ಮುಖ್ಯಮಂತ್ರಿ. ದೆಹಲಿಯಲ್ಲಿರುವ ಪ್ರತಿಯೊಬ್ಬರಿಗೂ ಅವರು ಕ್ಲೀನ್ ಇಮೇಜ್ ಹೊಂದಿರುವ ಸರಳ ವ್ಯಕ್ತಿ ಎಂದು ತಿಳಿದಿದ್ದಾರೆ. ಅವರನ್ನು ಬಂಧಿಸಿದರೆ ಆಶ್ಚರ್ಯವೇನಿಲ್ಲ ಎಂದು ಪವಾರ್ ಹೇಳಿದ್ದಾರೆ. +ಇದರರ್ಥ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಒಂದೇ ರೀತಿಯ ರಾಜಕೀಯ ದೃಷ್ಟಿಕೋನಗಳನ್ನು ಹೊಂದಿರದವರನ್ನು ನಿರುತ್ಸಾಹಗೊಳಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪವಾರ್ ಆರೋಪಿಸಿದ್ದಾರೆ. \ No newline at end of file diff --git a/eesanje/url_47_197_4.txt b/eesanje/url_47_197_4.txt new file mode 100644 index 0000000000000000000000000000000000000000..c5651e52a2b84bf4409de041d624010945bc07ad --- /dev/null +++ b/eesanje/url_47_197_4.txt @@ -0,0 +1,9 @@ +‘ಜೈ ಓಬಿಸಿ’ ಅಭಿಯಾನ ಆರಂಭಿಸಿದ ಚಂದ್ರಬಾಬು ನಾಯ್ಡು +ಗುಂಟೂರು,ಜ.5- ತೆಲುಗು ದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ತಮ್ಮ ಪಕ್ಷದ ಕೇಂದ್ರ ಕಚೇರಿಯಲ್ಲಿ ಜೈ ಓಬಿಸಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಆರ್ಥಿಕ ಮತ್ತು ರಾಜಕೀಯ ಸಬಲೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬದ್ಧರಾಗಿರುವುದರಿಂದ ಜೈ ಓಬಿಸಿ ಅಭಿಯಾನ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ. +ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಬೆಂಬಲದಿಂದ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಆಡಳಿತಾರೂಢ ವೈಎಸ್‍ಆರ್ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‍ಆರ್‍ಸಿಪಿ) ಹೀನಾಯ ಸೋಲು ಕಾಣಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‍ಆರ್‍ಸಿಪಿ) ಆಡಳಿತದಲ್ಲಿ ಹಿಂದುಳಿದ ವರ್ಗಗಳು (ಬಿಸಿಗಳು) ಎದುರಿಸಿದ ಅನ್ಯಾಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +ಅಧೀನ ಅಧಿಕಾರಿಗೆ ಕಿರುಕುಳ ನೀಡಿದ ಜಡ್ಜ್ ಅಮಾನತು +ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದಿಂದ ವಂಚನೆಗೊಳಗಾದ ಹಿಂದುಳಿದ ವರ್ಗಗಳಿಗೆ ಟಿಡಿಪಿ ಐತಿಹಾಸಿಕ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ಬಿಡುಗಡೆಯ ಸಂದರ್ಭದಲ್ಲಿ ನಾಯ್ಡು ಹೇಳಿದರು. ಎಸ್‍ಆರ್‍ಸಿಪಿಗಿಂತ ಟಿಡಿಪಿಯು ಓಬಿಸಿ ಸಮುದಾಯದ ಹೆಚ್ಚಿನ ನಾಯಕರನ್ನು ಹೊಂದಿದೆ ಎಂದು ಅವರು ತಿಳಿಸಿದರು. +ಟಿಡಿಪಿಯು ಹಿಂದುಳಿದ ವರ್ಗದ ನಾಯಕತ್ವವನ್ನು ಪೋಷಿಸುವ ಕಾರ್ಖಾನೆ ಮತ್ತು ವಿಶ್ವವಿದ್ಯಾಲಯವಾಗಿದೆ ಎಂದು ನಾಯ್ಡು ಒತ್ತಿ ಹೇಳಿದರು. ಜಗನ್ ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇ.34 ರಿಂದ ಶೇ.24 ಕ್ಕೆ ಇಳಿಸಿದ್ದು, ಕಳೆದ ಐದು ವರ್ಷಗಳಲ್ಲಿ ಉದ್ಯೋಗ ನಷ್ಟ ವಾಗಿದೆ ಎಂದು ಆರೋಪಿಸಿದರು. +ಪ್ರತಿ ವರ್ಷ 75,000 ಕೋಟಿ ಖರ್ಚು ಮಾಡುವುದಾಗಿ ಹೇಳುತ್ತಿದ್ದರೂ ಪ್ರಸ್ತುತ ಆಂಧ್ರ ಸಿಎಂ ಓಬಿಸಿಗಳಿಗೆ ಒಂದು ರೂಪಾಯಿ ಖರ್ಚು ಮಾಡಿಲ್ಲ ಎಂದು ಟಿಡಿಪಿ ಮುಖ್ಯಸ್ಥರು ಟೀಕಿಸಿದರು. ಸಿಎಂ ಜಗನ್ ರೆಡ್ಡಿ ಅವರು ಬಿಸಿಯೂಟಕ್ಕೆ ನೀಡಿದ್ದ ಭರವಸೆಗಳನ್ನು ಅನುಷ್ಠಾನಕ್ಕೆ ತರಲು ವಿಫಲರಾದ ಅವರಿಗೆ ಬಿಸಿ ಅಧಿಕಾರ ಯಾತ್ರೆ ಮಾಡುವ ಹಕ್ಕು ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. +ಇಡಿ ದಾಳಿ ವೇಳೆ 5ಕೋಟಿ ನಗದು, ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಪತ್ತೆ +ಅಮರಾವತಿ ಆಂಧ್ರಪ್ರದೇಶದ ಏಕೈಕ ರಾಜಧಾನಿಯಾಗಿದ್ದು, ಅದನ್ನು ಟಿಡಿಪಿ ನಿರ್ಮಿಸಲಿದೆ ಎಂದು ಘೋಷಿಸಿದ ನಾಯ್ಡು, ಮುಖ್ಯಮಂತ್ರಿ ಒಡೆತನದ ಸಾಕ್ಷಿ ಪತ್ರಿಕೆ ಮತ್ತು ಟಿವಿ ಹೊರತುಪಡಿಸಿ ಜಗನ್ ರೆಡ್ಡಿ ಸರ್ಕಾರದಿಂದ ರಾಜ್ಯದಲ್ಲಿ ಯಾರಿಗೂ ಲಾಭವಿಲ್ಲ ಎಂದು ಹೇಳಿದರು. \ No newline at end of file diff --git a/eesanje/url_47_197_5.txt b/eesanje/url_47_197_5.txt new file mode 100644 index 0000000000000000000000000000000000000000..7e86cccb7ed704686d4ee9590b089bfe9b3a322d --- /dev/null +++ b/eesanje/url_47_197_5.txt @@ -0,0 +1,8 @@ +ರಾಹುಲ್ ಯಾತ್ರೆಗೆ ಜನ ಬರುತ್ತಾರೆ, ಮತ ಬರಲ್ಲ : ಅಜ್ಮಲ್ +ಬಾರ್ಪೇಟಾ, ಜ.5- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ನ್ಯಾಯ ಯಾತ್ರೆ ಆರಂಭಿಸುತ್ತಾರೆ, ಯಾತ್ರೆಯಲ್ಲಿ ಜನ ಸೇರುತ್ತಾರೆ ಆದರೆ ಜನರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಮತ ಹಾಕುವುದಿಲ್ಲ ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಪ್ರತಿಪಾದಿಸಿದ್ದಾರೆ. +ರಾಹುಲ್ ಗಾಂಧಿ ನೆಹರು ಕುಟುಂಬದ ಮಗ, ಅವರು ಯಾವುದೇ ಸ್ಥಳಕ್ಕೆ ಹೋದಾಗ, ಜನರು ಅಲ್ಲಿ ಸೇರುತ್ತಾರೆ ಮತ್ತು ಜನರು ಅವರನ್ನು ಹೀರೋ ಎಂದು ನೋಡುತ್ತಾರೆ. ಆದರೆ ಜನರು ಅವರಿಗೆ ಮತ್ತು ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ. ಅದು ಕೆಲಸ ಮಾಡುವುದಿಲ್ಲ ಎಂದು ಅವರು ಅಸ್ಸಾಂನ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರಿಗೆ ಈ ವಿಚಾರ ತಿಳಿಸಿದರು. +ರಾಹುಲ್ ಗಾಂಧಿ ಜ. 14 ರಂದು ಮಣಿಪುರದಿಂದ ಭಾರತ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ. ಬದ್ರುದ್ದೀನ್ ಅಜ್ಮಲ್ ಅವರು, ಈ ಹಿಂದೆ, ಅವರು (ರಾಹುಲ್ ಗಾಂಧಿ) ದೇಶದ ಶೇಕಡಾ 50 ರಷ್ಟು ಪ್ರವಾಸ ಮಾಡಿದ್ದು ಉತ್ತಮವಾಗಿತ್ತು ಆದರೆ ಫಲಿತಾಂಶ ಏನಾಗಿತ್ತು ಎಂದು ನಿಮಗೆಲ್ಲಾ ಗೊತ್ತೆ ಇದೆ ಎಂದಿದ್ದಾರೆ. +ಮತ್ತೊಂದೆಡೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಇಡಿ ನೋಟೀಸ್ ಜಾರಿ ಮಾಡುತ್ತಿರುವ ಕುರಿತು ಮಾತನಾಡಿದ ಅವರು, ಮೋದಿ ಜಿ ಒತ್ತಡವನ್ನು ಸೃಷ್ಟಿಸಲು ಹೊಸ ಮಾರ್ಗವನ್ನು ಹುಡುಕುತ್ತಿಲ್ಲ ಮತ್ತು ಅವರು ಕೇಜ್ರಿವಾಲ ಹಾಗೂ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರನ್ನು ಜೈಲಿಗೆ ಹಾಕುತ್ತಾರೆ ಎಂದು ಅವರು ತಿಳಿಸಿದರು. +ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಆಯೋಗ +ಇದು ಇಂಡಿಯಾ ಮೈತ್ರಿಕೂಟಕ್ಕೆ ಅಪಾಯವಾಗಿದೆ. ನೀವು ಸುಮ್ಮನೆ ಕುಳಿತುಕೊಳ್ಳದಿದ್ದರೆ ನಾವು ಎಲ್ಲರನ್ನೂ ಒಂದೊಂದಾಗಿ ಇಡಿಗೆ ಒಪ್ಪಿಸುತ್ತೇವೆ. ಅವರು ಸಾಧ್ಯವಾದಷ್ಟು ಜನರನ್ನು ಹೆದರಿಸಲು ಪ್ರಯತ್ನಿಸುತ್ತಾರೆ ಎಂದು ಅಜ್ಮಲ್ ಹೇಳಿದರು.ಕಾಂಗ್ರೆಸ್‍ನ ಭಾರತ್ ನ್ಯಾಯ್ ಯಾತ್ರೆಯ ಘೋಷಣೆಯ ನಂತರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಯಾತ್ರೆಯ ಉದ್ದೇಶ ಸಬ್ಕೆ ಲಿಯೇ ನ್ಯಾಯ (ಎಲ್ಲರಿಗೂ ನ್ಯಾಯ) ಎಂದು ಹೇಳಿದ್ದಾರೆ. +ಈ ಯಾತ್ರೆ ಜನವರಿ 14 ರಂದು ಇಂಫಾಲ್‍ನಿಂದ ಪ್ರಾರಂಭವಾಗಿ ಮಾರ್ಚ್ 20 ರಂದು ಮುಂಬೈನಲ್ಲಿ ಕೊನೆಗೊಳ್ಳಲಿದೆ. ಈ ಯಾತ್ರೆಯು 14 ರಾಜ್ಯಗಳು ಮತ್ತು 85 ಜಿಲ್ಲೆಗಳನ್ನು ಒಳಗೊಂಡಿದೆ. ಇದು ಮಣಿಪುರ, ನಾಗಾಲ್ಯಾಂಡ್ , ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ಮುಂತಾದ ರಾಜ್ಯಗಳನ್ನು ಒಳಗೊಂಡಿದೆ. ಒಡಿಶಾ, ಛತ್ತೀಸ್‍ಗಢ, ಉತ್ತರ ಪ್ರದೇಶ, ಸಂಸದ, ರಾಜಸ್ಥಾನ, ಗುಜರಾತ್ ಮತ್ತು ಅಂತಿಮವಾಗಿ ಮಹಾರಾಷ್ಟ್ರ ಆಗಿರಲಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. \ No newline at end of file diff --git a/eesanje/url_47_197_6.txt b/eesanje/url_47_197_6.txt new file mode 100644 index 0000000000000000000000000000000000000000..8a2547936cc9f500c444100bf5c40e6ccc04962d --- /dev/null +++ b/eesanje/url_47_197_6.txt @@ -0,0 +1,9 @@ +ವಾರದಲ್ಲಿ 70 ಗಂಟೆ ಕೆಲಸ ಮಾಡುವ ತಮ್ಮ ನಿಲುವು ಸಮರ್ಥಿಸಿಕೊಂಡ ನಾರಾಯಣಮೂರ್ತಿ +ನವದೆಹಲಿ,ಜ.5- ವಾರದಲ್ಲಿ 70 ಗಂಟೆಗಳ ಕೆಲಸ ಮಾಡುವಂತೆ ನಾನು ನೀಡಿದ್ದ ಸಲಹೆಯನ್ನು ನನ್ನ ಪಾಶ್ಚಿಮಾತ್ಯ ಸ್ನೇಹಿತರು ಹಾಗೂ ಕೆಲವು ಅನಿವಾಸಿ ಭಾರತೀಯರು ಒಪ್ಪಿದ್ದಾರೆ ಎಂದು ಇನೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ದೇಶದ ವಿದ್ಯಾವಂತ ಜನಸಂಖ್ಯೆಯು ಅತ್ಯಂತ ಕಷ್ಟಪಟ್ಟು ಕೆಲಸ ಮಾಡುವ ಅದೃಷ್ಟಕ್ಕೆ ಒಗ್ಗಿ ಹೋಗಿದ್ದಾರೆ ಎಂದು ಹೇಳಿದ್ದಾರೆ. +ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡುವಂತೆ ನೀಡಿರುವ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿರುವ ಅವರು, ರೈತರು ಮತ್ತು ಕಾರ್ಖಾನೆಯ ಕೆಲಸಗಾರರು ತುಂಬಾ ಕಷ್ಟಪಟ್ಟು ಕೆಲಸ ಮಾಡುತ್ತಾರೆ ಮತ್ತು ಹೆಚ್ಚಿನ ಜನರು ದೈಹಿಕವಾಗಿ ಬೇಡಿಕೆಯಿರುವ ವೃತ್ತಿಗಳನ್ನು ತೆಗೆದುಕೊಳ್ಳುವುದರಿಂದ ಕಠಿಣ ಪರಿಶ್ರಮವು ಭಾರತದಲ್ಲಿ ಸಾಮಾನ್ಯವಾಗಿದೆ ಎಂದಿದ್ದಾರೆ. +ಆದ್ದರಿಂದ, ನಮ್ಮಂತಹವರು ಹೆಚ್ಚಿನ ರಿಯಾಯಿತಿಯಲ್ಲಿ ಶಿಕ್ಷಣವನ್ನು ಪಡೆದವರು, ಈ ಎಲ್ಲಾ ಶಿಕ್ಷಣಕ್ಕಾಗಿ ಸರ್ಕಾರದ ಸಹಾಯಧನಕ್ಕೆ ಧನ್ಯವಾದಗಳು, ಭಾರತದ ಕಡಿಮೆ ಅದೃಷ್ಟವಂತ ನಾಗರಿಕರು ಅತ್ಯಂತ ಕಷ್ಟಪಟ್ಟು ಕೆಲಸ ಮಾಡಲು ಋಣಿಯಾಗಿದ್ದೇವೆ ಎಂದು ಅವರು ಹೇಳಿದರು. ಮೂರ್ತಿ ಅವರು ತಮ್ಮ ಸಲಹೆಯ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾದ ಹಿನ್ನಡೆಯನ್ನು ಸ್ವೀಕರಿಸಿದರೂ, ಬಹಳಷ್ಟು ಒಳ್ಳೆಯ ಜನರು ಮತ್ತು ಅನಿವಾಸಿ ಭಾರತೀಯರು ನನ್ನೆ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. +ಇಡಿ ದಾಳಿ ವೇಳೆ 5ಕೋಟಿ ನಗದು, ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಪತ್ತೆ +ನಾನು ಅದನ್ನು ಈ ರೀತಿ ತರ್ಕಬದ್ಧಗೊಳಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ನನಗಿಂತ ಹೆಚ್ಚು ಉತ್ತಮವಾಗಿರುವ ಯಾರಾದರೂ ನನ್ನ ಕ್ಷೇತ್ರದಲ್ಲಿ ಅಗತ್ಯವಿಲ್ಲದಿದ್ದರೆ, ನಾನು ಅವರನ್ನು ಗೌರವಿಸುತ್ತೇನೆ, ನಾನು ಅವರನ್ನು ಕರೆಯುತ್ತೇನೆ ಮತ್ತು ನಾನು ಇದನ್ನು ಹೇಳುವುದರಲ್ಲಿ ಎಲ್ಲಿ ತಪ್ಪಾಗಿದೆ ಎಂದು ನೀವು ಭಾವಿಸುತ್ತೀರಿ ಎಂದು ಅವರು ಪ್ರಶ್ನಿಸಿದ್ದಾರೆ. +ನನ್ನ ಬಹಳಷ್ಟು ಪಾಶ್ಚಿಮಾತ್ಯ ಸ್ನೇಹಿತರು, ಬಹಳಷ್ಟು ಎನ್‍ಆರ್‍ಐಗಳು, ಭಾರತದಲ್ಲಿ ಬಹಳಷ್ಟು ಒಳ್ಳೆಯ ಜನರು ಸಲಹೆಯನ್ನು ಕೇಳಿ ಸಂತೋಪಪಟ್ಟಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ನನ್ನ ಪತ್ನಿ ಸುಧಾಮೂರ್ತಿ ಅವರು ಕುಟಂಬಕ್ಕೆ ವಾರದಲ್ಲಿ 70 ಗಂಟೆ ಕೆಲಸ ಮಾಡುತ್ತಾರೆ ಒಟ್ಟಾರೆ ಅವರು ವಾರದಲ್ಲಿ 90 ಗಂಟೆಗಳಷ್ಟು ಕಾಲ ನಿಯಮಿತವಾಗಿ ಕೆಲಸ ಮಾಡುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಮೂರ್ತಿ ಹೇಳಿದ್ದಾರೆ. +ನಾನು ಆರೂವರೆ ದಿನ (ಕೆಲಸಕ್ಕೆ) ಹೋಗುತ್ತಿದ್ದೆ, ಎಲೆಕ್ಟ್ರಾನಿಕ್ಸ್ ಸಿಟಿಯಲ್ಲೂ ಸಹ, ನಾನು ಆರೂವರೆ ದಿನ ಕೆಲಸ ಮಾಡುತ್ತಿದ್ದೆ. ಮತ್ತು ಪ್ರತಿದಿನ ನಾನು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಡುತ್ತಿದ್ದೆ. ನಾನು 6.20 ಕ್ಕೆ ಕಚೇರಿ ತಲುಪುತ್ತಿದ್ದ ಮತ್ತು ನಾನು ಸಂಜೆ ಸುಮಾರು 8.15 ಇಲ್ಲವೇ 8.30 ಕ್ಕೆ ಅಲ್ಲಿಂದ ಹೊರಡುತ್ತೇನೆ ಎಂದು ಅವರು ಹೇಳಿದರು. +ಕಳೆದ ವರ್ಷ ಅಕ್ಟೋಬರ್‍ನಲ್ಲಿ, ಇನೋಸಿಸ್ ಸಂಸ್ಥಾಪಕರು ಭಾರತದಲ್ಲಿ ಯುವಕರಿಗೆ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡುವಂತೆ ಮನವಿ ಮಾಡಿದ್ದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು. \ No newline at end of file diff --git a/eesanje/url_47_197_7.txt b/eesanje/url_47_197_7.txt new file mode 100644 index 0000000000000000000000000000000000000000..ff95d56f9117fbeb460d892d42221eb622fad78b --- /dev/null +++ b/eesanje/url_47_197_7.txt @@ -0,0 +1,6 @@ +ಅಧೀನ ಅಧಿಕಾರಿಗೆ ಕಿರುಕುಳ ನೀಡಿದ ಜಡ್ಜ್ ಅಮಾನತು +ನೈನಿತಾಲ್, ಜ 5 (ಪಿಟಿಐ) ಅಧೀನ ಅಧಿಕಾರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರುದ್ರಪ್ರಯಾಗದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾೀಧಿಶರು ಮತ್ತು ಹೈಕೋರ್ಟ್‍ನ ಮಾಜಿ ರಿಜಿಸ್ಟ್ರಾರ್ (ವಿಜಿಲೆನ್ಸ್) ಅನುಜ್ ಕುಮಾರ್ ಸಂಗಲ್ ಅವರನ್ನು ಉತ್ತರಾಖಂಡ ಹೈಕೋರ್ಟ್ ಅಮಾನತುಗೊಳಿಸಿದೆ. +ಸಂಗಲ್ ಅವರ ನಿವಾಸದಲ್ಲಿ ನೇಮಕಗೊಂಡ ನಾಲ್ಕನೆ ವರ್ಗದ ಉದ್ಯೋಗಿಯನ್ನು ನಿಂದಿಸುವ ಮೂಲಕ ಕಿರುಕುಳ ನೀಡಿದ ಆರೋಪವಿದೆ ಮತ್ತು ಸೇವೆಯಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಲಾಗಿತ್ತು. ಇದು ಅಧಿಕಾರಿ ವಿಷ ಸೇವಿಸಲು ಕಾರಣವಾಯಿತು ಎಂದು ರಿಜಿಸ್ಟ್ರಾರ್ ಜನರಲ್ ಆಶಿಶ್ ನೈತಾನಿ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. +ಇಡಿ ದಾಳಿ ವೇಳೆ 5ಕೋಟಿ ನಗದು, ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಪತ್ತೆ +ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ತಿವಾರಿ ಅವರ ಸೂಚನೆ ಮೇರೆಗೆ ಹೊರಡಿಸಿರುವ ಆದೇಶದಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರುದ್ರಪ್ರಯಾಗ ಅವರ ವಿರುದ್ಧದ ಆರೋಪಗಳ ಕುರಿತು ಶಿಸ್ತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ಉತ್ತರಾಖಂಡ ಸರ್ಕಾರಿ ನೌಕರರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು 2003ರ ನಿಯಮ 7ರ ಅಡಿಯಲ್ಲಿ ಅವರ ವಿರುದ್ಧ ನಿಯಮಿತ ವಿಚಾರಣೆಯನ್ನು ಪ್ರಾರಂಭಿಸಲಾಗುವುದು. +ಅಧೀನ ಅಧಿಕಾರಿಗೆ ಕಿರುಕುಳ ನೀಡುವುದು ಮತ್ತು ಅವರನ್ನು ಸೇವೆಯಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕುವುದು ಅಮಾನವೀಯ ನಡವಳಿಕೆ ಮತ್ತು ನ್ಯಾಯಾಂಗ ಅಧಿಕಾರಿಗೆ ಹೊಂದಿಕೆಯಾಗುವುದಿಲ್ಲ ಮತ್ತು ಆದೇಶದ ಪ್ರಕಾರ ಉತ್ತರಾಖಂಡ ಸರ್ಕಾರಿ ನೌಕರರ ನಡವಳಿಕೆ ನಿಯಮಗಳಿಗೆ ವಿರುದ್ಧವಾಗಿದೆ. \ No newline at end of file diff --git a/eesanje/url_47_197_8.txt b/eesanje/url_47_197_8.txt new file mode 100644 index 0000000000000000000000000000000000000000..eb28853044cb0942cc81515b848f5c9935013c83 --- /dev/null +++ b/eesanje/url_47_197_8.txt @@ -0,0 +1,6 @@ +ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಆಯೋಗ +ನವದೆಹಲಿ, ಜ 5 (ಪಿಟಿಐ) ಮುಂದಿನ ವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡುವ ಮೂಲಕ ಚುನಾವಣಾ ಆಯೋಗವು (ಇಸಿ) ಲೋಕಸಭೆ ಚುನಾವಣೆಗೆ ರಾಜ್ಯಗಳ ಸಿದ್ಧತೆಯನ್ನು ಪರಿಶೀಲಿಸಲು ಪ್ರಾರಂಭಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಮತ್ತು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರನ್ನೊಳಗೊಂಡ ಆಯೋಗವು ಜ 7 ಮತ್ತು 10 ರ ನಡುವೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಇರಲಿದೆ. +ಭೇಟಿಗೂ ಮುನ್ನ, ಉಪ ಚುನಾವಣಾ ಆಯುಕ್ತರು ಜ 6 ರಂದು ಎರಡು ರಾಜ್ಯಗಳಲ್ಲಿ ಸಿದ್ಧತೆಗಳ ಬಗ್ಗೆ ಸಂಪೂರ್ಣ ಆಯೋಗಕ್ಕೆ ಮಾಹಿತಿ ನೀಡಲಿದ್ದಾರೆ.ಉಪಚುನಾವಣಾ ಆಯುಕ್ತರು ಬಹುತೇಕ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿ ಲೋಕಸಭಾ ಚುನಾವಣೆಯ ಸಿದ್ಧತೆಯ ಮೇಲ್ವಿಚಾರಣೆ ನಡೆಸಿದ್ದಾರೆ. +ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ +ರಾಜಕೀಯ ಪಕ್ಷಗಳು, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಮತ್ತು ಅದರ ನೆಲದ ಚುನಾವಣಾ ಯಂತ್ರಗಳನ್ನು ಭೇಟಿ ಮಾಡಲು ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಗಳಿಗೆ ಮುಂಚಿತವಾಗಿ ರಾಜ್ಯಗಳ ಪ್ರವಾಸ ಮಾಡುವುದು ಚುನಾವಣಾ ಆಯೋಗಕ್ಕೆ ಸಾಮಾನ್ಯವಾಗಿದೆ. +ಆದಾಗ್ಯೂ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಇದು ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದ ರಾಜ್ಯಗಳನ್ನು ಬಿಟ್ಟುಬಿಡಬಹುದು. 2019 ರಲ್ಲಿ, ಲೋಕಸಭೆ ಚುನಾವಣೆಯನ್ನು ಮಾರ್ಚ್ 10 ರಂದು ಘೋಷಿಸಲಾಗಿತ್ತು ಮತ್ತು ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ನಡೆಸಲಾಯಿತು. ಮತ ಎಣಿಕೆ ಕಾರ್ಯ ಮೇ 23 ರಂದು ನಡೆಸಲಾಗಿತ್ತು. \ No newline at end of file diff --git a/eesanje/url_47_197_9.txt b/eesanje/url_47_197_9.txt new file mode 100644 index 0000000000000000000000000000000000000000..3ec5531ea8bc8129b21df8eaa37765bd3ca04316 --- /dev/null +++ b/eesanje/url_47_197_9.txt @@ -0,0 +1,5 @@ +ಇನ್ನು ಜೀವಂತವಾಗಿದೆ ಬಾಲ್ಯ ವಿವಾಹ +ಥಾಣೆ, ಜ. 5 (ಪಿಟಿಐ) ಹನ್ನೇರಡು ವರ್ಷದ ಬಾಲಕಿಯನ್ನು ಮದುವೆಯಾಗಿ, ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ 29 ವರ್ಷದ ಯುವಕನ ವಿರುದ್ಧ ನವಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. +ದೇಶದಲ್ಲಿ ಕಾನೂನು ಬಾಹಿರವಾದ ಈ ಬಾಲ್ಯವಿವಾಹ ಸುಮಾರು ಆರು ತಿಂಗಳ ಹಿಂದೆ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ವ್ಯಕ್ತಿ ಪದೇ ಪದೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭವತಿಯನ್ನಾಗಿಸಿದ್ದಾನೆ. ಪುರುಷ ಮತ್ತು ಅಪ್ರಾಪ್ತ ಇಬ್ಬರೂ ಮೂಲತಃ ಮಹಾರಾಷ್ಟ್ರದ ಸತಾರಾ ಜಿಲ್ಲೆಯವರು ಎಂದು ಅವರು ತಿಳಿಸಿದ್ದಾರೆ. +ಲಕ್ಷ್ಮೀ ಹೆಬ್ಬಾಳ್ಕರ್​​ಗೆ ರಾಮ ಮಂದಿರ ಉದ್ಘಾಟನೆ ಆಮಂತ್ರಣ +ನಿನ್ನೆ ನಡೆಸಿದ ಸಮೀಕ್ಷೆಯಲ್ಲಿ, ಪನ್ವೇಲ್‍ನ ಸ್ಥಳೀಯ ವೈದ್ಯರಿಗೆ ಬಾಲಕಿ ನಾಲ್ಕು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಖಂಡೇಶ್ವರ ಪೊಲೀಸ್ ಠಾಣೆಯ ಠಾಣಾಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_198_1.txt b/eesanje/url_47_198_1.txt new file mode 100644 index 0000000000000000000000000000000000000000..9a72f0941f5944bf7061877657ebf605b536202c --- /dev/null +++ b/eesanje/url_47_198_1.txt @@ -0,0 +1,6 @@ +75 ವರ್ಷದ ನಂತರ ಕಾಶ್ಮೀರ ಗಡಿ ಗ್ರಾಮಕ್ಕೆ ವಿದ್ಯುತ್ ಸಂಪರ್ಕ +ಶ್ರೀನಗರ, ಜ.4- ಸ್ವಾತಂತ್ರ್ಯ ಭಾರತದ 75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಕೆರಾನ್ ವಲಯದ ಗಡಿ ನಿಯಂತ್ರಣ ರೇಖೆಯ ಹಳ್ಳಿಗಳಿಗೆ ಬುಧವಾರ ಮೊದಲ ಬಾರಿಗೆ ವಿದ್ಯುತ್ ನೀಡಲಾಗಿದೆ.ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಕುಪ್ವಾರ ಜಿಲ್ಲೆಯ ಕೆರಾನ್ ಪ್ರದೇಶದ ಕುಂಡಿಯಾನ್ ಮತ್ತು ಪತ್ರೂಗ್ರಾಮಗಳ ನಿವಾಸಿಗಳಿಗೆ 75 ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯುತ್ ದೀಪಗಳು ಬೆಳಗಿದ್ದು, ಇದರಿಂದ ಜನರು ಸಂಭ್ರಮಿಸಿದ್ದಾರೆ. +ಸಮೃದ್ಧ್ ಸೀಮಾ ಯೋಜನೆ ಅಡಿಯಲ್ಲಿ ಸ್ಥಾಪಿಸಲಾದ ಎರಡು 250-ಕೆವಿ ಉಪ-ಕೇಂದ್ರಗಳನ್ನು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಭಿದುರಿ ಅವರು ಉದ್ಘಾಟಿಸಿದ್ದು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕೇಂದ್ರ ಸರ್ಕಾರಕ್ಕೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. +ಬಿಜೆಪಿ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ : ಸಚಿವ ರಾಜಣ್ಣ +ವಿದ್ಯುತ್ ದೀಪಗಳು ಅವರ ಮನೆಗಳನ್ನು ಬೆಳಗಿಸಿದಂತೆ ಎಲ್ಲರ ಹರ್ಷೋದ್ಗಾರ ಮುಗಿಲು ಮುಟ್ಟಿದೆ. ನಮ್ಮ ಹಳ್ಳಿಗೂ ವಿದ್ಯುತ್ ಸಂಪರ್ಕ ಸಿಗುತ್ತದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಾವು ಚಕಿತಗೊಂಡಿದ್ದೇವು. ಸದಾ ಗುಂಡಿನ ಸದ್ದು ಕೇಳುತ್ತ ಬಹುತೇಕ ಸಮಯ ಮಂದ ಬೆಳಕಿನಲ್ಲಿ ನಾವು ವಾಸಿಸುತ್ತಿದ್ದೇವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ನಮಗೂ ನಾಗರಿಕ ಸೇವೆ ಸಿಕ್ಕ ಖುಷಿ ಉಂಟಾಗಿ ಎಂದು ಗ್ರಾಮಸ್ಥರು ಹೇಳಿದ್ದಾರೆ. +ಕಾಶ್ಮೀರ ವಿದ್ಯುತ್ ಸರಬರಾಜು ಮಂಡಳಿ (ಕೆಪಿಡಿಸಿಎಲ್) ಎಲೆಕ್ಟ್ರಿಕ್ ವಿಭಾಗ, ಕುಪ್ವಾರದಿಂದ ಎರಡು ತಿಂಗಳಲ್ಲಿ ವಿದ್ಯುದ್ದೀಕರಣ ಯೋಜನೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_198_10.txt b/eesanje/url_47_198_10.txt new file mode 100644 index 0000000000000000000000000000000000000000..4be6590029984a48dc0dda545ed3bc654663fc6e --- /dev/null +++ b/eesanje/url_47_198_10.txt @@ -0,0 +1,6 @@ +ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ +ನವದೆಹಲಿ, ಜ 4 (ಪಿಟಿಐ) ವೈಎಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿರುವ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು. +ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ, ಶರ್ಮಿಳಾ ಅವರು ಕಾಂಗ್ರೆಸ್‍ಗೆ ಸೇರುತ್ತೀರಾ ಎಂದು ಕೇಳಿದಾಗ, ಅವರು ಸುದ್ದಿಗಾರರಿಗೆ ಹೌದು, ಹಾಗೆ ತೋರುತ್ತಿದೆ ಎಂದು ಹೇಳಿದ ಅವರು ನಂತರ ಎಐಸಿಸಿ ಕಚೇರಿಗೆ ತೆರಳಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೈದರಾಬಾದ್‍ನಲ್ಲಿ ಮಂಗಳವಾರ ನಡೆದ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರ್ಮಿಳಾ, ನಾನು ಮತ್ತು ಇತರ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‍ನ ಉನ್ನತ ನಾಯಕರನ್ನು ಭೇಟಿ ಮಾಡಿ ದೆಹಲಿಯಲ್ಲಿ ನಿರ್ಣಾಯಕ ಘೋಷಣೆ ಮಾಡಲಿದ್ದೇವೆ ಎಂದು ಘೋಷಿಸಿದ್ದರು. +ಶರ್ಮಿಳಾ ಅವರು ಅವಿಭಜಿತ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ದಿವಂಗತ ವೈ ಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ.ವೈಎಸ್‍ಆರ್‍ಟಿಪಿಯನ್ನು ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸಿದ ನಂತರ ಅವರಿಗೆ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‍ನಲ್ಲಿ ಸ್ಥಾನ ನೀಡಬಹುದು. +ಪ್ರಾಣಿಗಳ ಕೊಬ್ಬಿನಿಂದ ತಯಾರಾಗುತ್ತೆ ತುಪ್ಪ..! +ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‍ಎಸ್‍ನ ಭ್ರಷ್ಟ ಮತ್ತು ಜನವಿರೋಧಿ ಆಡಳಿತವನ್ನು ಕೊನೆಗೊಳಿಸಲು ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶರ್ಮಿಳಾ ಕಾಂಗ್ರೆಸ್‍ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. \ No newline at end of file diff --git a/eesanje/url_47_198_11.txt b/eesanje/url_47_198_11.txt new file mode 100644 index 0000000000000000000000000000000000000000..0045ef7ddcdf1783ea322f864e893c3e44dd2c03 --- /dev/null +++ b/eesanje/url_47_198_11.txt @@ -0,0 +1,6 @@ +ಪ್ರಾಣಿಗಳ ಕೊಬ್ಬಿನಿಂದ ತಯಾರಾಗುತ್ತೆ ತುಪ್ಪ..! +ಥಾಣೆ, ಜ 4 (ಪಿಟಿಐ) ನೀವು ಮಾರುಕಟ್ಟೆಗಳಲ್ಲಿ ಖರೀದಿಸಿ ಬಾಯಿ ಚಪ್ಪರಿಸಿಕೊಂಡು ತಿನ್ನುವ ತುಪ್ಪವನ್ನು ಹೇಗೆ ತಯಾರಿಸುತ್ತಾರೆ ಎಂದು ನಿಮಗೆ ತಿಳಿದಿದೆಯೇ ಇಲ್ಲದಿದ್ದರೆ ಈ ವರದಿ ನೋಡಿ. ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮುಚ್ಚಿದ ಕಸಾಯಿಖಾನೆಯೊಂದರ ಮೇಲೆ ನಾಗರಿಕ ಅಧಿಕಾರಿಗಳು ದಾಳಿ ನಡೆಸಿ ಪ್ರಾಣಿಗಳ ದೇಹದ ಭಾಗಗಳಿಂದ ತುಪ್ಪ ತಯಾರಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. +ಭಿವಂಡಿ ಪಟ್ಟಣದ ಈದ್ಗಾ ರಸ್ತೆಯಲ್ಲಿರುವ ಕಸಾಯಿಖಾನೆ ಮೇಲೆ ದಾಳಿ ನಡೆಸಿದಾಗ ಪ್ರಾಣಿಗಳ ದೇಹದ ಕೊಬ್ಬು ಬಳಸಿ ತುಪ್ಪ ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಮಾರುಕಟ್ಟೆಯಲ್ಲಿ ಉತ್ಪನ್ನವನ್ನು ಸರಬರಾಜು ಮಾಡಲು ಪ್ರಾಣಿಗಳ ದೇಹದ ಭಾಗಗಳಿಂದ ತುಪ್ಪವನ್ನು ರಹಸ್ಯವಾಗಿ ಉತ್ಪಾದಿಸುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಭಿವಂಡಿ ನಿಜಾಂಪುರ್ ಮುನ್ಸಿಪಲ್ ಕಾಪೆರ್ರೇಶನ್‍ನ (ಬಿಎನ್‍ಎಂಸಿ) ವಿಪತ್ತು ನಿರ್ವಹಣಾ ಅಧಿಕಾರಿ ಸಾಕಿಬ್ ಕರ್ಭೆ ಪಿಟಿಐಗೆ ತಿಳಿಸಿದ್ದಾರೆ. +ದ್ವಿತೀಯ ಟೆಸ್ಟ್: ದಕ್ಷಿಣ ಆಫ್ರಿಕಾವನ್ನು 55 ರನ್‌ಗೆ ಆಲೌಟ್ ಮಾಡಿದ ಭಾರತ +ಅಕ್ರಮವಾಗಿ ಉತ್ಪಾದಿಸಿದ ಹತ್ತು ಟಿನ್ ತುಪ್ಪ, ಆರು ದೊಡ್ಡ ಪಾತ್ರೆಗಳು ಮತ್ತು ಉತ್ಪಾದನಾ ಪ್ರಕ್ರಿಯೆಯಲ್ಲಿ ಬಳಸಲಾದ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಅಧಿಕಾರಿಗಳು ತುಪ್ಪ ಉತ್ಪಾದಕರನ್ನು ಬಂಧಿಸುವ ಮೊದಲು ಕಸಾಯಿಖಾನೆಯಲ್ಲಿದ್ದ ವ್ಯಕ್ತಿಗಳು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿ ತಿಳಿಸಿದ್ದಾರೆ. +ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿರುವ ವಿವಿಧ ಕಸಾಯಿಖಾನೆಗಳ ವಿರುದ್ಧ ಬಿಎನ್‍ಎಂಸಿ ಆಯುಕ್ತ ಅಜಯ್ ವೈದ್ಯ ದೂರು ಸ್ವೀಕರಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. \ No newline at end of file diff --git a/eesanje/url_47_198_12.txt b/eesanje/url_47_198_12.txt new file mode 100644 index 0000000000000000000000000000000000000000..836c224cf36bc5547bbf3ad86d78407769026c3f --- /dev/null +++ b/eesanje/url_47_198_12.txt @@ -0,0 +1,8 @@ +ರಾಮಮಂದಿರಕ್ಕೆ ಬಿಗಿ ಭದ್ರತೆಗೆ ವಿಶೇಷ ಪೊಲೀಸ್ ಪಡೆ ನಿಯೋಜನೆ +ಲಕ್ನೋ,ಜ.3- ಅಯೋಧ್ಯೆಯ ರಾಮಮಂದಿರದ ಭದ್ರತೆಯ ಉಸ್ತುವಾರಿಯನ್ನು ಉತ್ತರಪ್ರದೇಶ ಪೊಲೀಸರಿಗೆ ವಹಿಸಲಾಗಿದ್ದು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ನಂತರವೂ ದೇವಾಲಯದ ಆವರಣದಲ್ಲಿ ವಿಶೇಷ ಪೊಲೀಸ್ ಕಾರ್ಯಪಡೆಯನ್ನು ಸಂಪೂರ್ಣವಾಗಿ ನಿಯೋಜಿಸಲಾಗುತ್ತಿದೆ. +ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೂ ಮುನ್ನ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಂಕೀರ್ಣದ ಭದ್ರತೆಯ ಜವಾಬ್ದಾರಿಯನ್ನು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ ಸಂಪೂರ್ಣವಾಗಿ ವಹಿಸಿಕೊಳ್ಳಲಿದೆ. +ಉತ್ತರಪ್ರದೇಶ ಪೊಲೀಸರ ಈ ವಿಶೇಷ ಕಾರ್ಯಪಡೆಯು ಸಿಆರ್‍ಪಿಎಫ್‍ನಿಂದ ಈ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಇಲ್ಲಿಯವರೆಗೆ ಸುಪ್ರೀಂಕೋರ್ಟ್‍ನ ಸೂಚನೆಗಳ ಮೇರೆಗೆ ಪ್ರದೇಶವನ್ನು ರಕ್ಷಿಸಲಾಗುತ್ತಿತ್ತು.1992ರಲ್ಲಿ ಬಾಬರಿ ಕಟ್ಟಡವನ್ನು ಧ್ವಂಸಗೊಳಿಸಿದ ನಂತರ ಸುಪ್ರೀಂಕೋರ್ಟ್ ಆದೇಶದಂತೆ ರಾಮ ಜನ್ಮಭೂಮಿ ಸ್ಥಳದಲ್ಲಿ ಸಿಆರ್‍ಎಫ್‍ನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. +ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಜನವರಿ 22 ರಂದು ನಡೆಯಲಿದೆ. ರಾಮ್‍ಲಲ್ಲಾನ ಪವಿತ್ರೀಕರಣದ ನಂತರ, ಯುಪಿ ವಿಶೇಷ ಭದ್ರತಾ ಪಡೆ (ಎಸ್‍ಎಸ್‍ಎಫ್) ದೇವಾಲಯದಲ್ಲಿ ಸಮಗ್ರ ಭದ್ರತೆಯನ್ನು ಒದಗಿಸಲು ಪ್ರಾರಂಭಿಸುತ್ತದೆ. ವಾಸ್ತವವಾಗಿ ರಾಮಜನ್ಮಭೂಮಿ ಸ್ಥಳದಲ್ಲಿ ಸಿಆರ್‍ಪಿಎಫ್ ಇಲ್ಲಿಯವರೆಗೂ ಭದ್ರತೆಯನ್ನು ಒದಗಿಸುತ್ತಿದೆ. ರಾಮ್‍ಲಲ್ಲಾ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಪಿಎಸಿ ಮತ್ತು ಎಸ್‍ಎಸ್‍ಎಫ್ ಜೊತೆಗೆ ದೇವಾಲಯದ ಸಂಕೀರ್ಣದ ಭದ್ರತೆಯಲ್ಲಿ ನಿಯೋಜನೆಗೊಳ್ಳುವ ನಿರೀಕ್ಷೆಯಿದೆ. +ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ +ಆದಾಗ್ಯೂ, ಯುಪಿ ವಿಶೇಷ ಕಾರ್ಯಪಡೆಯು ಎಲ್ಲ ರೀತಿಯಲ್ಲೂ ತರಬೇತಿ ಪಡೆದಿದೆ ಮತ್ತು ಹೊಸದಾಗಿ ನಿರ್ಮಿಸಲಾದ ದೇವಾಲಯದ ಸಂಕೀರ್ಣದ ಭದ್ರತೆ ಸೇರಿದಂತೆ ಎಲ್ಲಾ ಭದ್ರತಾ ಕರ್ತವ್ಯಗಳನ್ನು ನಿರ್ವಹಿಸಲು ಸಾಕಷ್ಟು ತರಬೇತಿ ಪಡೆದು ಸಜ್ಜುಗೊಂಡಿದೆ. +ಜುಲೈ 2005ರಲ್ಲಿ ಸಿಆರ್‍ಪಿಎಫ್‍ನ ಐವರು ಭಯೋತ್ಪಾದಕರನ್ನು ಕೊಲ್ಲುವ ಮೂಲಕ ರಾಮ ಜನ್ಮಭೂಮಿ ಜಾಗದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದೆ ಎಂಬುವುದು ಉಲ್ಲೇಖನೀಯ.2019ರಲ್ಲಿ ಸುಪ್ರೀಂಕೋರ್ಟ್ ಒಂದು ಶತಮಾನಕ್ಕೂ ಹೆಚ್ಚು ಹಳೆಯ ರಾಮಮಂದಿರ-ಬಾಬರಿ ಮಸೀದಿ ವಿವಾದವನ್ನು ಇತ್ಯರ್ಥಪಡಿಸುವ ಐತಿಹಾಸಿಕ ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣವನ್ನು ಸುಪ್ರೀಂಕೋರ್ಟ್ ಬೆಂಬಲಿಸಿತಲ್ಲದೆ ವಿವಾದಿತ ಸ್ಥಳದಲ್ಲೇ ರಾಮಮಂದಿರ ನಿರ್ಮಿಸಲಾಗುವುದು, ಮಸೀದಿ ನಿರ್ಮಾಣಕ್ಕೆ ಸರ್ಕಾರದಿಂದ ಐದು ಎಕರೆ ಪರ್ಯಾಯ ಜಾಗವನ್ನು ನೀಡಲಾಗುವುದು ಎಂದು ತೀರ್ಪು ನೀಡಿತ್ತು. \ No newline at end of file diff --git a/eesanje/url_47_198_2.txt b/eesanje/url_47_198_2.txt new file mode 100644 index 0000000000000000000000000000000000000000..bbe4907b3afb4500c02516699f38a0a337b47cf4 --- /dev/null +++ b/eesanje/url_47_198_2.txt @@ -0,0 +1,7 @@ +ಜಾಕ್ವೆಲಿನ್ -ಸುಕೇಶ್ ಜತೆಗಿನ ವಾಟ್ಸಾಫ್ ಸಂಭಾಷಣೆ ಬಹಿರಂಗ +ನವದೆಹಲಿ, ಜ.4- ಇನ್ನೂರು ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಅವರು ತಮ್ಮ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡೀಸ್ ನಡುವಿನ ಹಳೆಯ ವಾಟ್ಸಾಪ್ ಸಂಭಾಷಣೆಗಳನ್ನು ಹಂಚಿಕೊಂಡಿದ್ದಾರೆ. +ತಮ್ಮ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡೀಸ್ ನಡುವಿನ ಹತ್ತಾರು ಸೋರಿಕೆಯಾದ ವಾಟ್ಸಾಪ್ ಸಂದೇಶಗಳು ನಕಲಿ ಮತ್ತು ಪ್ರಕರಣದ ಆರೋಪಿಯಾಗಿರುವ ನಟಿ ತಮ್ಮ ಚಾಟ್‍ಗಳನ್ನು ಸಂವೇದನಾಶೀಲ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಕೇಶ್ ಆರೋಪಿಸಿದ ಕೆಲವು ದಿನಗಳ ನಂತರ ಇದು ಬಂದಿದೆ. +ನೀವು ಈಗ ನೋಡುತ್ತಿರುವ ಚಾಟ್ 2021 ರಲ್ಲಿ ಆ ದಿನಗಳಲ್ಲಿ ಒಂದಾಗಿದೆ, ಅಲ್ಲಿ ನಾನು ಮತ್ತು ಜಾಕಿ ತಪ್ಪು ತಿಳುವಳಿಕೆಯನ್ನು ಹೊಂದಿದ್ದೆವು ಮತ್ತು ನಂತರ, ಚಾಟ್‍ನಲ್ಲಿ, ಯಾವುದೇ ರೀತಿಯ ತಪ್ಪು ತಿಳುವಳಿಕೆಯನ್ನು ಲೆಕ್ಕಿಸದೆ ಅವಳು ಕ್ಷಮೆ ಮತ್ತು ಅವಳ ಪ್ರೀತಿಯನ್ನು ಕೇಳುತ್ತಿರುವುದನ್ನು ನೀವು ನೋಡಬಹುದು ಎಂದು ವಂಚಕ ಹೇಳಿಕೊಂಡಿದ್ದಾನೆ. +ಹಮಾಸ್ ಉಗ್ರರು ಎಲ್ಲೇ ಇದ್ದರೂ ಬಿಡಲ್ಲ: ಇಸ್ರೇಲ್ ಘೋಷಣೆ +ನಾನು ಎಂದೆಂದಿಗೂ ನಿಮ್ಮವನೇ… ಲವ್ ಬೊಟ್ಟಾ ಬೊಮ್ಮ ಎಂದು ಫೆರ್ನಾಂಡಿಸ್ ಬರೆದದ್ದು ಎಂದು ಹೇಳುವ ಕೈಬರಹದ ಕಾರ್ಡ್ ಅನ್ನು ಸಹ ವ್ಯಕ್ತಿ ಹಂಚಿಕೊಂಡಿದ್ದಾರೆ. ಇದು ಕೇವಲ ಟೀಸರ್ ಎಂದು ಅವರು ಹೇಳಿಕೊಂಡಿರುವ ಸುಕೇಶ್ ತಮ್ಮ ಬಳಿ ಇರುವ ನೂರಾರು ಚಾಟ್‍ಗಳು ಮತ್ತು ಧ್ವನಿ ರೆಕಾರ್ಡಿಂಗ್‍ಗಳು, ವೀಡಿಯೊ ಚಾಟ್‍ಗಳು ತನಿಖಾ ಸಂಸ್ಥೆಗೆ ಬಹಿರಂಗಗೊಳ್ಳುತ್ತವೆ ಎಂದು ಹೇಳಿದ್ದಾರೆ. +200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಅನೇಕ ಸತ್ಯಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಹೇಳಿರುವ ಸುಕೇಶ್, ಈ ಚಾಟ್‍ಗಳು ಮತ್ತು ಕೈಬರಹದ ಕಾರ್ಡ್‍ನ ಸತ್ಯಾಸತ್ಯತೆ ಜಾರಿ ನಿರ್ದೇಶನಾಲಯದಲ್ಲಿ ಸಾಕಷ್ಟು ಲಭ್ಯವಿದೆ ಮತ್ತು ಅವರು ಅದನ್ನು ಪರಿಶೀಲಿಸಿದ್ದಾರೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_198_3.txt b/eesanje/url_47_198_3.txt new file mode 100644 index 0000000000000000000000000000000000000000..d76c06ba90ce45d868d6571e20bbc9d393dac4fa --- /dev/null +++ b/eesanje/url_47_198_3.txt @@ -0,0 +1,7 @@ +ಕಾಂಗ್ರೆಸ್‍ನ ಆತ್ಮ ಹಿಂದೂ; ಶಿವಸೇನೆ +ಮುಂಬೈ,ಜ.4- ಕಾಂಗ್ರೆಸ್‍ನ ಆತ್ಮ ಹಿಂದೂ ಎಂದು ಒತ್ತಿಹೇಳಿರುವ ಶಿವಸೇನೆ (ಯುಬಿಟಿ) ಬಣದ ಮುಖಂಡರು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ವಿಶೇಷ ಆಹ್ವಾನ ಪಡೆದಿದ್ದರೆ ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆ ಪಕ್ಷದ ನಾಯಕರು ಹಾಜರಾಗಬೇಕು ಎಂದು ಕೇಳಿಕೊಂಡಿದೆ.ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ಮಹಾ ವಿಕಾಸ್ ಅಘಾಡಿಯಲ್ಲಿ ಕಾಂಗ್ರೆಸ್‍ನ ಮಿತ್ರಪಕ್ಷವಾಗಿದೆ ಮತ್ತು ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷವಾಗಿದೆ. +ಪಕ್ಷದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಶಿವಸೇನೆ (ಯುಬಿಟಿ) ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ ಮತ್ತು ಆ ಸಮಯದಲ್ಲಿ ಪ್ರಧಾನಿ ಆ ಪಕ್ಷದವರಾಗಿದ್ದರೆ ಬಾಬ್ರಿ ಮಸೀದಿಯನ್ನು ಉರುಳಿಸುತ್ತಿರಲಿಲ್ಲ ಎಂದು ಬರೆದುಕೊಂಡಿದೆ. ಡಿಸೆಂಬರ್ 1992 ರಲ್ಲಿ ಬಾಬ್ರಿ ಮಸೀದಿ ನೆಲಸಮ ಮಾಡಿದಾಗ ಕಾಂಗ್ರೆಸ್ ಪಕ್ಷದ ಪಿ ವಿ ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದರು. +ರಾಮ ಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ಕಾಂಗ್ರೆಸ್‍ಗೆ ಯಾವುದೇ ವಿಶೇಷ ಆಹ್ವಾನ ಬಂದಿದ್ದರೆ ಅದು (ನಾಯಕರು) ಅಯೋಧ್ಯೆಗೆ ಹೋಗಬೇಕು. ಅದರಲ್ಲಿ ತಪ್ಪೇನಿದೆ? ಸಂಪಾದಕೀಯ ಕೇಳಿದೆ. +ಹಮಾಸ್ ಉಗ್ರರು ಎಲ್ಲೇ ಇದ್ದರೂ ಬಿಡಲ್ಲ: ಇಸ್ರೇಲ್ ಘೋಷಣೆ +ಜನವರಿ 22 ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ. ಖರ್ಗೆ ಮತ್ತು ಸೋನಿಯಾ ಗಾಂಧಿ ಅವರು ಕಾರ್ಯಕ್ರಮಕ್ಕೆ ಸೂಕ್ತ ಸಮಯದಲ್ಲಿ ಹಾಜರಾಗುವ ಬಗ್ಗೆ ನಿರ್ಧರಿಸುವುದಾಗಿ ಕಾಂಗ್ರೆಸ್ ಶುಕ್ರವಾರ ಹೇಳಿದೆ. ಲೋಕಸಭೆಯ ಕಾಂಗ್ರೆಸ್ ನಾಯಕ ಅೀಧಿರ್ ರಂಜನ್ ಚೌಧರಿ ಅವರನ್ನೂ ಆಹ್ವಾನಿಸಲಾಗಿದೆ. ಕಾಂಗ್ರೆಸ್‍ನ ಆತ್ಮ ಹಿಂದೂ. ಅದರಲ್ಲಿ ಮುಚ್ಚಿಡಲು ಏನೂ ಇಲ್ಲ ಎಂದು ಬರೆದುಕೊಳ್ಳಲಾಗಿದೆ. +ಆ ಪಕ್ಷ ಹೇಳಿಕೊಂಡಂತೆ ಬಿಜೆಪಿ ಹಿಂದುತ್ವದ ವೀಕ್ಷಕ ಎಂದು ಹೇಳುವುದು ತಪ್ಪು. ಹಿಂದೂ ಸಂಸ್ಕøತಿಯ ಬೆಳವಣಿಗೆಗೆ ಕಾಂಗ್ರೆಸ್ ಸಮಾನ ಕೊಡುಗೆ ನೀಡಿದೆ ಎಂದು ಅದು ಹೇಳಿದೆ. ಕಾಂಗ್ರೆಸ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಲಿಲ್ಲ. ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದರು. ರಾಜೀವ್ ಗಾಂಧಿಯವರ ಸೂಚನೆಯ ಮೇರೆಗೆ ದೂರದರ್ಶನದಲ್ಲಿ ಪ್ರಸಿದ್ಧ ಧಾರಾವಾಹಿ ರಾಮಾಯಣವನ್ನು ಪ್ರಸಾರ ಮಾಡಲಾಯಿತು ಸಂಪಾದಕಿಯದಲ್ಲಿ ಬರೆದುಕೊಳ್ಳಲಾಗಿದೆ. \ No newline at end of file diff --git a/eesanje/url_47_198_4.txt b/eesanje/url_47_198_4.txt new file mode 100644 index 0000000000000000000000000000000000000000..2d797fcb359f0c1dc415bc98a11ba82a760b2151 --- /dev/null +++ b/eesanje/url_47_198_4.txt @@ -0,0 +1,7 @@ +ಬ್ಲಾಕ್‍ಮೇಲೆ ಮಾಡಿದ ಮಾಜಿ ಮಾಡೆಲ್ ಹತ್ಯೆ +ಗುರುಗ್ರಾಮ್,ಜ.4- ಹರಿಯಾಣದ ಗುರುಗ್ರಾಮ್‍ನಲ್ಲಿ 27 ವರ್ಷದ ಮಹಿಳೆಯೊಬ್ಬರನ್ನು ಹತ್ಯೆಗೈದ ಆರೋಪದ ಪ್ರಕರಣದಲ್ಲಿ ಕನಿಷ್ಠ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಮಹಿಳೆಯನ್ನು ಪಂಜಾಬ್‍ನ ಮಾಜಿ ಮಾಡೆಲ್ ದಿವ್ಯಾ ಪಹುಜಾ ಎಂದು ಗುರುತಿಸಲಾಗಿದ್ದು, ಕೊಲೆ ನಡೆದ ಹೋಟೆಲ್‍ನ ಮಾಲೀಕರಾಗಿರುವ ಅಭಿಜೀತ್ ಸಿಂಗ್ ಕೊಲೆ ಆರೋಪಿ ಎಂದು ಹೇಳಲಾಗಿದೆ. +ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳು ಶವವನ್ನು ಹೋಟೆಲ್‍ನಿಂದ ಕಾರಿನವರೆಗೆ ಎಳೆದೊಯ್ದಿರುವುದು ಪತ್ತೆಯಾಗಿದೆ. ದಿವ್ಯಾ (27) ಎಂಬ ಬಾಲಕಿ ಹೊಟೇಲ್ ಮಾಲೀಕ ಅಭಿಜೀತ್ ಎಂಬಾತನ ಜತೆ ಹೋಗಿದ್ದಳು ಎಂದು ಆಕೆಯ ಕುಟುಂಬದವರು ಆರೋಪಿಸಿದ್ದಾರೆ. ಪೊಲೀಸರು ಹೊಟೇಲ್‍ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಪರಾಧ ಬಯಲಾಗಿದೆ ಎಂದು ಎಸ್‍ಪಿ ಮುಖೇಶ್ ಕುಮಾರ್ ಹೇಳಿದ್ದಾರೆ. +ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರ ಬಂಧನ +ಪಹುಜಾ ಅವರು ಅಶ್ಲೀಲ ಚಿತ್ರಗಳನ್ನು ಇಟ್ಟುಕೊಡು ಬ್ಲ್ಯಾಕ್‍ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾಳೆ ಎಂಬ ಕೋಪದಲ್ಲಿ ಹೋಟೆಲ್ ಮಾಲೀಕರು ಗುಂಡು ಹಾರಿಸಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. +ಪ್ರಮುಖ ಶಂಕಿತ ಅಭಿಜೀತ್ ಸಿಂಗ್ ಮತ್ತು ಇತರ ಇಬ್ಬರು ಸಹಚರರು ಎನ್ನಲಾದ ಹೇಮರಾಜ್ ಮತ್ತು ಓಂಪ್ರಕಾಶ್ ಸೇರಿದಂತೆ ಮೂವರನ್ನು ಗುರುಗ್ರಾಮ್ ಅಪರಾಧ ವಿಭಾಗದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಆರೋಪಿಗಳನ್ನು ಅಭಿಜೀತ್ ಸಿಂಗ್ (56), ಹೇಮರಾಜ್ (28) ಮತ್ತು ಓಂಪ್ರಕಾಶ್ (23) ಎಂದು ಗುರುತಿಸಲಾಗಿದೆ ಎಂದು ಗುರುಗ್ರಾಮ್ ಪೊಲೀಸರು ತಿಳಿಸಿದ್ದಾರೆ. +ಪೊಲೀಸ್ ಠಾಣೆ ಸೆಕ್ಟರ್ -14, ಗುರುಗ್ರಾಮ್‍ನಲ್ಲಿ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಅಪರಾಧ ತಂಡವು ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ದಿವ್ಯಾ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಅಭಿಜೀತ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_47_198_5.txt b/eesanje/url_47_198_5.txt new file mode 100644 index 0000000000000000000000000000000000000000..59868be87c8996582feaf7f0a70de47072b5ded9 --- /dev/null +++ b/eesanje/url_47_198_5.txt @@ -0,0 +1,8 @@ +ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರ ಬಂಧನ +ಲಖನೌ,ಜ.4- ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ನೀಡಿದ್ದಾರೆ. ಗೊಂಡಾದ ಕತ್ರಾ ನಿವಾಸಿಗಳಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಎಸ್‌ಟಿಎಫ್ ಬಂಧಿಸಿದೆ. ಆರೋಪಿಯಿಂದ ಎರಡು ಮೊಬೈಲ್, ಮೇಲ್ ಐಡಿ, ಎರಡು ವೈ-ಫೈ ರೂಟರ್ ಮತ್ತು ಸಿಸಿಟಿವಿ ಡಿವಿಆರ್ ವಶಪಡಿಸಿಕೊಳ್ಳಲಾಗಿದೆ. +ಇಬ್ಬರನ್ನು ಪೊಲೀಸ್ ಠಾಣೆ ವಿಭೂತಿ ಬ್ಲಾಕ್ ಗೋಮತಿ ನಗರ ಪ್ರದೇಶದಲ್ಲಿ ಬಂಧಿಸಲಾಗಿದೆ. ಭಾರತೀಯ ಕಿಸಾನ್ ಮಂಚ್ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ಅದರಲ್ಲಿ ಈ ಬೆದರಿಕೆಯನ್ನು ಹಾಕಲಾಗಿತ್ತು. ಎಸ್‍ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್, ಯೋಗಿ ಆದಿತ್ಯನಾಥ್, ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಹಾಕಿ ಸೋಟಿಸುವುದಾಗಿ ಟ್ವಿಟರ್‍ನಲ್ಲಿ ಈ ಇಬ್ಬರೂ ಬೆದರಿಕೆ ಹಾಕಿದ್ದರು. alamansarikhan608gmail.’ ಮತ್ತು ‘zubairkhanisi199gmail.’ ಎಂಬ ಹೆಸರಿನ ಟ್ವಿಟರ್ ಖಾತೆಯ ಪೋಸ್ಟ್‍ನಲ್ಲಿ ಬೆದರಿಕೆ ಹಾಕಿದ್ದರು. +ಮ್ಯಾನ್ಮಾರ್ ಸೇನೆಯ ಹೇಲಿಕಾಫ್ಟರ್ ಹೊಡೆದುರುಳಿಸಿದ ಬಂಡುಕೋರರು +alamansarikhan608gmail.’ ಮತ್ತು ‘zubairkhanisi199gmail.’ ಇಮೇಲ್ ಐಡಿಗಳನ್ನು ಬೆದರಿಕೆ ಪೋಸ್ಟ್‍ಗಳನ್ನು ಕಳುಹಿಸಲು ಬಳಸಲಾಗಿದೆ ಎಂದು ಆರಂಭಿಕ ತನಿಖೆ ಬಹಿರಂಗಪಡಿಸಿದೆ ಎಂದು ಎಎಸ್‌ಟಿಎಫ್ಅಧಿಕಾರಿಗಳು ಹೇಳಿದ್ದಾರೆ. ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಾಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. +ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದೆ ಎಂದು ಅದು ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲಿ ದ್ವೇಷಪೂರಿತ ಕಾಮೆಂಟ್‍ಗಳನ್ನು ಪೋಸ್ಟ್ ಮಾಡುವ ಮೂಲಕ ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಮಕ್ರಾನಿ ಆರೋಪಿಸಿದ್ದಾರೆ. +ಬಾಬರಿ ಮಸೀದಿ ಧ್ವಂಸಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ಹಲವು ಆಕ್ಷೇಪಾರ್ಹ ಪೋಸ್ಟ್‍ಗಳು ಮತ್ತು ಸ್ಕ್ರೀನ್ಶಾಟ್‍ಗಳು ಮಕ್ರಾನಿ ಅವರ ಮೊಬೈಲ್ ಫೋನ್‍ನಿಂದ ಹಂಚಿಕೊಳ್ಳಲ್ಪಟ್ಟಿರುವುದು ಕಂಡುಬಂದಿದೆ ಎಂದು ಹೇಳಿಕೆ ತಿಳಿಸಿದೆ. +ಎಟಿಎಸ್ ಆರೋಪಿಗಳ ವಿರುದ್ಧ ಸೆಕ್ಷನ್ 153-ಎ (ಧರ್ಮದ ಆಧಾರದ ಮೇಲೆ ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505 (2) (ಎರಡು ವರ್ಗಗಳ ನಡುವೆ ದ್ವೇಷ ಮತ್ತು ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. \ No newline at end of file diff --git a/eesanje/url_47_198_6.txt b/eesanje/url_47_198_6.txt new file mode 100644 index 0000000000000000000000000000000000000000..206ec7a6aeec72dfccfc308f6d793fe4d62cb6e0 --- /dev/null +++ b/eesanje/url_47_198_6.txt @@ -0,0 +1,6 @@ +ಕೇಜ್ರಿವಾಲ್ ನಡೆ ಟೀಕಿಸಿದ ಬಿಜೆಪಿ +ನವದೆಹಲಿ, ಜ 4 (ಪಿಟಿಐ) ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಮೂರನೇ ಬಾರಿಗೆ ಸಮನ್ಸ್‍ಗೆ ದೆಹಲಿ ಮುಖ್ಯಮಂತ್ರಿ ತಪ್ಪಿಸಿಕೊಂಡ ನಂತರ ಅರವಿಂದ್ ಕೇಜ್ರಿವಾಲ್ ಅವರು ತನಿಖೆಯಿಂದ ಓಡಿಹೋಗುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. +ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿರುವ ಎಎಪಿ ನಾಯಕ ಕೇಜ್ರಿವಾಲ್ ಅವರು, ರಾಜ್ಯಸಭಾ ಚುನಾವಣೆ, ಗಣರಾಜ್ಯೋತ್ಸವದ ಸಿದ್ಧತೆಗಳು ಮತ್ತು ತನಿಖಾ ಸಂಸ್ಥೆಯ ಕೆಲ ವಿಧಾನಗಳ ಅನುಮಾನದಿಂದಾಗಿ ಅದರ ಮುಂದೆ ಹಾಜರಾಗದಿರಲು ಕಾರಣವೆಂದು ಉಲ್ಲೇಖಿಸಿದ್ದಾರೆ. +ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‍ದೇವ ಅವರು, ಆಮ್ ಆದ್ಮಿ ಪಕ್ಷದ ನಾಯಕರು ತಮ್ಮ ಸಿಎಂ ಯಾವಾಗ ಬೇಕಾದರೂ ಬಂಧನಕ್ಕೊಳಗಾಗಬಹುದು ಎಂದು ಗಲಾಟೆ ಮಾಡುತ್ತಿದ್ದಾರೆ. ಅವರು ಕಳ್ಳತನ ಮತ್ತು ಭ್ರಷ್ಟಾಚಾರ ಮಾಡಿದ್ದಾರೆ ಮತ್ತು ಈಗ ಅವರು ಗಲಾಟೆ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. +ಕೇಜ್ರಿಗೆ ನಾಲ್ಕನೆ ಸಮನ್ಸ್ ಜಾರಿ ಸಾಧ್ಯತೆ +ತನಿಖಾ ಸಂಸ್ಥೆ ನಿಮಗೆ ಸಾಕ್ಷಿ ಹೇಳಲು ಅವಕಾಶ ನೀಡಿದೆ, ಆದರೆ ನೀವು ಓಡಿಹೋಗಿ ಪರಾರಿಯಾದವರಂತೆ ವರ್ತಿಸುತ್ತಿದ್ದೀರಿ ಎಂದು ಸಚ್‍ದೇವ ಆಕ್ರೋಶ ಹೊರ ಹಾಕಿದ್ದಾರೆ. \ No newline at end of file diff --git a/eesanje/url_47_198_7.txt b/eesanje/url_47_198_7.txt new file mode 100644 index 0000000000000000000000000000000000000000..1bacad50422bfbb334a886b9de5d565f7ceda230 --- /dev/null +++ b/eesanje/url_47_198_7.txt @@ -0,0 +1,6 @@ +ಕೇಜ್ರಿಗೆ ನಾಲ್ಕನೆ ಸಮನ್ಸ್ ಜಾರಿ ಸಾಧ್ಯತೆ +ನವದೆಹಲಿ, ಜ. 4 (ಪಿಟಿಐ) ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕಳುಹಿಸಿರುವ ಉತ್ತರವನ್ನು ಜಾರಿ ನಿರ್ದೇಶನಾಲಯ ಪರಿಶೀಲಿಸುತ್ತಿದೆ ಮತ್ತು ಆಪಾದಿತ ಅಬಕಾರಿ ನೀತಿ ಪ್ರಕರಣದಲ್ಲಿ ಮತ್ತೊಮ್ಮೆ ಅವರಿಗೆ ನಾಲ್ಕನೇ ಸಮನ್ಸ್ ನೀಡಬಹುದು ಎಂದು ಮೂಲಗಳು ತಿಳಿಸಿವೆ. +ಕೇಜ್ರಿವಾಲ್ ಅವರು ಮೂರನೇ ಬಾರಿಗೆ ಇಡಿ ಮುಂದೆ ಹಾಜರಿಗೆ ನಿರಾಕರಿಸಿದರು, ಏಜೆನ್ಸಿಯ ಬಹಿರಂಗಪಡಿಸದಿರುವ ಮತ್ತು ಪ್ರತಿಕ್ರಿಯಿಸದ ವಿಧಾನ ಕಾನೂನಿನ ಪರೀಕ್ಷೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಪ್ರಕರಣದ ತನಿಖಾಕಾಧಿರಿಗೆ ಕೇಜ್ರಿವಾಲ್ ಅವರು ಕಳುಹಿಸಿರುವ ಐದು ಪುಟಗಳ ಉತ್ತರವನ್ನು ಇಡಿ ಪ್ರಸ್ತುತ ಪರಿಶೀಲಿಸುತ್ತಿದೆ ಮತ್ತು ಸಮನ್ಸ್ ಅನ್ನು ಅಕ್ರಮ ಎಂದು ಕರೆದ ಆರೋಪವನ್ನು ತಿರಸ್ಕರಿಸಬಹುದು ಎಂದು ಮೂಲಗಳು ತಿಳಿಸಿವೆ. +ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‍ಎ) ನಿಬಂಧನೆಗಳ ಪ್ರಕಾರ ಏಜೆನ್ಸಿಯು ಕೇಜ್ರಿವಾಲ್‍ಗೆ ನಾಲ್ಕನೇ ಸಮನ್ಸ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಹಿಂದೆ 2023 ರಲ್ಲಿ ನವೆಂಬರ್ 2 ಮತ್ತು ಡಿಸೆಂಬರ್ 21 ರಂದು ಮತ್ತು ಈ ವರ್ಷದ ಜನವರಿ 3 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿತ್ತು. +ಹೊಸ ವರ್ಷದ ಸವಾಲುಗಳನ್ನು ಎದುರಿಸಲು ಭಾರತ ಶಕ್ತವಾಗಿದೆ: ಜೈಶಂಕರ್ +ಎಎಪಿ ನಾಯಕ ಅತಿಶಿ ಮತ್ತು ಇತರ ಕೆಲವು ಪಕ್ಷದ ಮುಖಂಡರು ಎಕ್ಸ್ ನಲ್ಲಿ ಕೇಜ್ರಿವಾಲ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ಅವರನ್ನು ಬಂಧಿಸಬಹುದು ಎಂದು ಪೋಸ್ಟ್ ಮಾಡಿದ್ದಾರೆ. ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‍ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‍ಗಳಿಗೆ ಒಲವು ನೀಡಿದೆ ಎಂದು ಆರೋಪಿಸಲಾಗಿದೆ, ಇದನ್ನು ಎಎಪಿ ಪದೇ ಪದೇ ನಿರಾಕರಿಸಿದೆ. \ No newline at end of file diff --git a/eesanje/url_47_198_8.txt b/eesanje/url_47_198_8.txt new file mode 100644 index 0000000000000000000000000000000000000000..d7bf07385b457a9ef3acf008008dc82699d0e3c4 --- /dev/null +++ b/eesanje/url_47_198_8.txt @@ -0,0 +1,5 @@ +ಪಂಜಾಬ್ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ +ಚಂಡೀಗಢ, ಜ4 (ಪಿಟಿಐ) ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‍ನಲ್ಲಿ ಇಬ್ಬರು ರಾಜಕಾರಣಿಗಳ 20 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. +ಮತ್ತು ಸಂಬಂಧಿತ ಘಟಕಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ನಿಬಂಧನೆಗಳ ಅಡಿಯಲ್ಲಿ ಶೋಧಿಸಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. +ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ +ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿಕೊಂಡಿರುವ ಹಲವು ಎಫ್‍ಐಆರ್‍ಗಳಿಂದ ಹಣ ವರ್ಗಾವಣೆ ಪ್ರಕರಣವು ಹುಟ್ಟಿಕೊಂಡಿದೆ. \ No newline at end of file diff --git a/eesanje/url_47_198_9.txt b/eesanje/url_47_198_9.txt new file mode 100644 index 0000000000000000000000000000000000000000..53ace698cc31aec780d9c150cd48fbcd69ba22c9 --- /dev/null +++ b/eesanje/url_47_198_9.txt @@ -0,0 +1,10 @@ +ಹೊಸ ವರ್ಷದ ಸವಾಲುಗಳನ್ನು ಎದುರಿಸಲು ಭಾರತ ಶಕ್ತವಾಗಿದೆ: ಜೈಶಂಕರ್ +ನವದೆಹಲಿ,ಜ. 4 (ಪಿಟಿಐ) ಹೊಸ ವರ್ಷವು ವಿಶ್ವಕ್ಕೆ ಪ್ರಕ್ಷುಬ್ಧವಾಗಿ ಮುಂದುವರಿಯುತ್ತದೆ ಆದರೆ ಭಾರತವು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಸವಾಲುಗಳನ್ನು ಎದುರಿಸಲು ಹಾಗೂ ಅದರ ಅಭಿವೃದ್ಧಿಯ ಹಾದಿಯನ್ನು ಕಾಪಾಡಿಕೊಳ್ಳಲು ಶಕ್ತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. +ಕೇಂದ್ರ ಸಚಿವರು ತಮ್ಮ ಹೊಸ ಪುಸ್ತಕ ವೈ ಭಾರತ್ ಮ್ಯಾಟರ್ಸ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು, ಇದರಲ್ಲಿ ಅವರು ಭೌಗೋಳಿಕ ರಾಜಕೀಯ ಮತ್ತು ಸ್ವಾತಂತ್ರ್ಯದ ನಂತರ ಭಾರತದ ವಿದೇಶಾಂಗ ನೀತಿಯ ವಿವಿಧ ಅಂಶಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. +2024 ಪ್ರಕ್ಷುಬ್ಧವಾಗಿ ಮುಂದುವರಿಯುತ್ತದೆ ಎಂದು ನಾನು ಭಾವಿಸುತ್ತೇನೆ, (ಮತ್ತು) 2023 ಅನ್ನು ಪ್ರೇರೇಪಿಸಿದ ಅನೇಕ ಅಂಶಗಳು ಆಟದಲ್ಲಿ ಉಳಿಯುತ್ತವೆ ಎಂದು ಅವರು ಶಿಕ್ಷಣತಜ್ಞರು ಮತ್ತು ತಜ್ಞರ ಗುಂಪನ್ನು ಉದ್ದೇಶಿಸಿ ಹೇಳಿದರು. ಸ್ವಾತಂತ್ರ್ಯದ ನಂತರ ಚೀನಾದೊಂದಿಗಿನ ಭಾರತದ ಸಂಬಂಧದ ಬಗ್ಗೆ ಮಾತನಾಡಿದ ಜೈಶಂಕರ್ ಅವರು ಪಂಡಿತ್ ಜವಾಹರಲಾಲ್ ನೆಹರು ಅವರ ನೀತಿಯನ್ನು ಟೀಕಿಸಿದರು, ಈ ವಿಧಾನವು ಹೆಚ್ಚು ಭಾರತವಾಗಿದ್ದರೆ, ನಾವು ಚೀನಾದೊಂದಿಗಿನ ನಮ್ಮ ಸಂಬಂಧದ ಬಗ್ಗೆ ಕಡಿಮೆ ಗುಲಾಬಿ ದೃಷ್ಟಿಕೋನವನ್ನು ಹೊಂದಿದ್ದೇವೆ ಎಂದು ಹೇಳಿದರು. +ಇದು ನನ್ನ ಕಲ್ಪನೆಯಲ್ಲ. ನನ್ನ ಪ್ರಕಾರ ಅಲ್ಲಿ ಒಂದು ರೀತಿಯ ದಾಖಲೆಯಿದೆ. ಸರ್ದಾರ್ (ವಲ್ಲಭಭಾಯಿ) ಪಟೇಲ್ ಮತ್ತು ಪಂಡಿತ್ ನೆಹರೂ ನಡುವೆ ಚೀನಾದ ಬಗ್ಗೆ ಪತ್ರಗಳ ವಿನಿಮಯವಿದೆ. ಮತ್ತು ಅವರು ತುಂಬಾ ವಿಭಿನ್ನವಾದ ಅಭಿಪ್ರಾಯಗಳನ್ನು ಹೊಂದಿದ್ದರು ಎಂದು ಜೈಶಂಕರ್ ಹೇಳಿದರು. +ಪ್ರಾಣಿಗಳ ಕೊಬ್ಬಿನಿಂದ ತಯಾರಾಗುತ್ತೆ ತುಪ್ಪ..! +ವಿಶ್ವಸಂಸ್ಥೆ ಭದ್ರತಾ ಸಮಿತಿಗೆ ಚೀನಾ ಪ್ರವೇಶಿಸುವುದನ್ನು ಮತ್ತು ಈ ವಿಷಯದಲ್ಲಿ ಪಂಡಿತ್ ನೆಹರು ಅವರ ಧೋರಣೆಯನ್ನು ಅವರು ಉಲ್ಲೇಖಿಸಿದ್ದಾರೆ. ನನ್ನ ಪ್ರಕಾರ ನೆಹರೂ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರವಿದೆ, ಮೊದಲು ಚೀನಾ ಭದ್ರತಾ ಮಂಡಳಿಯಲ್ಲಿ ತನ್ನ ಸ್ಥಾನವನ್ನು ಪಡೆದುಕೊಳ್ಳಲಿ ಎಂದಿದ್ದರು. +1962ರ ಚೀನಾದೊಂದಿಗಿನ ಯುದ್ಧದ ನಂತರ ಅಮೆರಿಕದಿಂದ ನೆರವು ಪಡೆಯಲು ಪಂಡಿತ್ ನೆಹರೂ ಅವರು ಹೇಗೆ ಹಿಂದೇಟು ಹಾಕಿದ್ದರು ಎಂಬುದನ್ನು ವಿದೇಶಾಂಗ ವ್ಯವಹಾರಗಳ ಸಚಿವರು ನೆನಪಿಸಿಕೊಂಡರು. ಅವರಿಗೆ ಅಮೆರಿಕದ ಬಗ್ಗೆ ಹಗೆತನವಿತ್ತು ಎಂದು ಜೈಶಂಕರ್ ಹೇಳಿದರು. +ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ +ಆದರೆ, ನಿಮಗೆ ತಿಳಿದಿದೆ, ವಾಸ್ತವವಾಗಿ, ಇದು ಮತ್ತೊಮ್ಮೆ ಆಸಕ್ತಿದಾಯಕ ವಿಷಯವಾಗಿದೆ, ಅಲ್ಲಿ ವಿದೇಶಾಂಗ ನೀತಿಯ ಬಗ್ಗೆ ಸರ್ದಾರ್ ಪಟೇಲ್ ಅವರ ಕೊನೆಯ ಕಾಮೆಂಟ್‍ಗಳಲ್ಲಿ ಒಂದಾದ ನಾವು ಅಮೆರಿಕದ ಬಗ್ಗೆ ಏಕೆ ಅಪನಂಬಿಕೆ ಹೊಂದಿದ್ದೇವೆ; ನಾವು ಅಮೆರಿಕವನ್ನು ನಮ್ಮ ಸ್ವಂತ ಹಿತಾಸಕ್ತಿಯ ದೃಷ್ಟಿಕೋನದಿಂದ ನೋಡಬೇಕು, ಅಮೆರಿಕನ್ನರು ಚೀನಾದೊಂದಿಗೆ ಹೇಗೆ ವ್ಯವಹರಿಸುತ್ತಿದ್ದಾರೆ ಎಂಬ ದೃಷ್ಟಿಕೋನದಿಂದ ಅಲ್ಲ ಎಂದಿದ್ದರು ಎನ್ನುವುದನ್ನು ಜೈಶಂಕರ್ ನೆನಪಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_199_1.txt b/eesanje/url_47_199_1.txt new file mode 100644 index 0000000000000000000000000000000000000000..720502e02dde722e31734126913694f273bf8c81 --- /dev/null +++ b/eesanje/url_47_199_1.txt @@ -0,0 +1,6 @@ +ಬಸ್‍ಗೆ ಗುದ್ದಿದ ಟ್ರಕ್ : 12 ಮಂದಿ ಸಾವು +ಗೋಲಾಘಾಟ್, ಜ.3 ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಕಲ್ಲಿದ್ದಲು ತುಂಬಿದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ದೇಗಾರ್ಂವ್ ಬಳಿಯ ಬಲಿಜಾನ್ ಎಂಬಲ್ಲಿ 45 ಜನರಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಗೋಲಘಾಟ್ ಪೊಲೀಸ್ ವರಿಷ್ಠಾದಿಕಾರಿ ರಾಜೇನ್ ಸಿಂಗ್ ತಿಳಿಸಿದ್ದಾರೆ. +ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ತನಿಖೆ ನಡೆಯುತ್ತಿದೆ ಮತ್ತು ಹೆಚ್ಚಿನ ವಿವರಗಳನ್ನು ನಂತರ ತಿಳಿಸಲಾಗುವುದು ಎಂದು ಸಿಂಗ್ ಹೇಳಿದರು.ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ಸುದ್ದಿಗಾರರೊಂದಿಗೆ ಮಾತನಾಡಿ, ಗಾಯಗೊಂಡ 30 ಜನರು ಆರೋಗ್ಯ ಸೌಲಭ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವರ ಮೇಲೆ ನಿಗಾ ವಹಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. +ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ +ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯ ಪ್ರಕಾರ, ಮುಂಜಾನೆ 4:30 ರ ಸುಮಾರಿಗೆ ಗೋಲಾಘಾಟ್‍ನ ಕಮರ್‍ಗಾಂವ್‍ನಿಂದ ಪಿಕ್ನಿಕ್‍ಗಾಗಿ ತಿನ್ಸುಕಿಯಾ ಜಿಲ್ಲೆಯ ತಿಲಿಂಗ ಮಂದಿರಕ್ಕೆ ತೆರಳುತ್ತಿದ್ದ ಬಸ್ ಟ್ರಕ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. +ದಟ್ಟ ಮಂಜಿನ ನಡುವೆ ಎರಡೂ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸುತ್ತಿದ್ದವು ನಾಲ್ಕು-ಪಥದ ಹೆದ್ದಾರಿಯ ಒಂದು ಭಾಗದಲ್ಲಿ ರಸ್ತೆ ಸ್ವಲ್ಪ ಹಾಳಾಗಿತ್ತು ಇದರಿಂದ ಟ್ರಕ್ ಜೋರ್ಹತ್ ದಿಕ್ಕಿನಿಂದ ತಪ್ಪು ಭಾಗದಲ್ಲಿ ಬಂದು ಸರಿಯಾದ ಮಾರ್ಗದಲ್ಲಿದ ಬಸ್‍ಗೆ ಗುದ್ದಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_199_10.txt b/eesanje/url_47_199_10.txt new file mode 100644 index 0000000000000000000000000000000000000000..13a438313404e6c8ff8abf9dbda3770bb63e6cfa --- /dev/null +++ b/eesanje/url_47_199_10.txt @@ -0,0 +1,6 @@ +ಬಾಬ್ರಿ ಮಸೀದಿ ಕಳೆದುಕೊಂಡ ಬೇಸರ ಇಲ್ಲವೇ: ಮುಸ್ಲಿಂ ಯುವಕರಿಗೆ ಓವೈಸಿ ಪ್ರಶ್ನೆ +ಹೈದರಾಬಾದ್,ಜ.2- ನಾವು ನಮ್ಮ ಬಾಬ್ರಿ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಅಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವು ಇಲ್ಲವೇ ಎಂದು ಮುಸ್ಲಿಂ ಸಮುದಾಯದ ಯುವಕರನ್ನು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದಾರೆ. +ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ನೇತೃತ್ವದ ಕೇಂದ್ರದ ಚಟುವಟಿಕೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದಿರುವ ಓವೈಸಿ, ಮುಸ್ಲಿಂ ಸಮುದಾಯದ ಯುವಕರಿಗೆ ಮನವಿ ಮಾಡಿ ದೇಶದಲ್ಲಿ ಜನವಸತಿ ಉಳಿಯಬೇಕು ಎಂದು ತಿಳಿಸಿದ್ದಾರೆ. +ಬಾಬರಿ ಮಸೀದಿಯನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, ಕಳೆದ 500 ವರ್ಷಗಳಿಂದ ಪವಿತ್ರ ಕುರಾನ್ ಪಠಣ ಮಾಡಿದ ಸ್ಥಳ ಈಗ ನಮ್ಮ ಕೈಯಲ್ಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯುವಕರೇ, ಇನ್ನು ಮೂರ್ನಾಲ್ಕು ಮಸೀದಿಗಳ ಬಗ್ಗೆ ಷಡ್ಯಂತ್ರ ನಡೆಯುತ್ತಿದೆ. ಅದರಲ್ಲಿ ದೆಹಲಿಯ ಸುನ್ಹೇರಿ ಮಸೀದಿ (ಗೋಲ್ಡನ್ ಮಸೀದಿ) ಸಹ ಸೇರಿದೆ ಎಂದು ನೀವು ನೋಡುತ್ತಿಲ್ಲವೇ ವರ್ಷಗಳ ಕಠಿಣ ಪರಿಶ್ರಮದ ನಂತರ ನಾವು ಇಂದು ನಮ್ಮ ಸ್ಥಾನವನ್ನು ಸಾಧಿಸಿದ್ದೇವೆ. ನೀವು ಈ ವಿಷಯಗಳತ್ತ ಗಮನ ಹರಿಸಬೇಕು ಎಂದು ಎಚ್ಚರಿಸಿದ್ದಾರೆ. +ಜ.5ಕ್ಕೆ ದಾವೂದ್ ಇಬ್ರಾಹಿಂ ಬಾಲ್ಯದ ಮನೆ ಹರಾಜು +ಯುವ ಮುಸ್ಲಿಮರು ಜಾಗರೂಕರಾಗಿರಬೇಕು ಮತ್ತು ಒಗ್ಗಟ್ಟಾಗಿರಬೇಕು. ನಿಮ್ಮ ಬೆಂಬಲ ಮತ್ತು ಶಕ್ತಿಯನ್ನು ಕಾಪಾಡಿಕೊಳ್ಳಿ. ಈ ಮಸೀದಿಗಳನ್ನು ನಮ್ಮಿಂದ ಕಸಿದುಕೊಳ್ಳುವ ಸಾಧ್ಯತೆಯಿದೆ. ನಾಳೆ ಮುದುಕರಾಗುವ ಇಂದಿನ ಯುವಕರು ತನಗೆ, ತನ್ನ ಕುಟುಂಬಕ್ಕೆ, ತನ್ನ ನಗರಕ್ಕೆ ಮತ್ತು ತನ್ನ ನೆರೆಹೊರೆಯರಿಗೆ ಹೇಗೆ ಸಹಾಯ ಮಾಡಬಹುದೆಂದು ಯೋಚಿಸುತ್ತಾನೆ ಎಂದು ನಾನು ಭಾವಿಸುತ್ತೇನೆ. ಏಕತೆ ಒಂದು ಶಕ್ತಿ, ಏಕತೆ ಒಂದು ಆಶೀರ್ವಾದ ಎಂದು ಒಗ್ಗಟ್ಟಿಗೆ ಕರೆ ನೀಡಿದ್ದಾರೆ. \ No newline at end of file diff --git a/eesanje/url_47_199_11.txt b/eesanje/url_47_199_11.txt new file mode 100644 index 0000000000000000000000000000000000000000..116956f7b81933fd6f8a92b3dbd866fb963e9b66 --- /dev/null +++ b/eesanje/url_47_199_11.txt @@ -0,0 +1,6 @@ +ಜ.5ಕ್ಕೆ ದಾವೂದ್ ಇಬ್ರಾಹಿಂ ಬಾಲ್ಯದ ಮನೆ ಹರಾಜು +ನವದೆಹಲಿ,ಜ.2- ಮಹಾರಾಷ್ಟ್ರದ ರತ್ನಗಿರಿಯಲ್ಲಿ ಇರುವ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಬಾಲ್ಯದ ಮನೆ ಮತ್ತು ಆತನ ಕುಟುಂಬದ ಒಡೆತನದ ಇತರ ಮೂರು ಆಸ್ತಿಗಳನ್ನು ಶುಕ್ರವಾರ ಹರಾಜು ಮಾಡಲಾಗುತ್ತಿದೆ.ದಾವೂದ್‍ಗೆ ಸೇರಿದ ಈ ಎಲ್ಲಾ ನಾಲ್ಕು ಆಸ್ತಿಗಳು ಕೃಷಿ ಮತ್ತು ಮುಂಬಾಕೆ ಗ್ರಾಮದಲ್ಲಿ ನೆಲೆಗೊಂಡಿವೆ.ಸ್ಮಗ್ಲರ್ಸ್ ಮತ್ತು ಫಾರಿನ್ ಎಕ್ಸ್‍ಚೇಂಜ್ ಮ್ಯಾನಿಪ್ಯುಲೇಟರ್ಸ್ (ಆಸ್ತಿ ಮುಟ್ಟುಗೋಲು) ಕಾಯಿದೆ ಅಡಿಯಲ್ಲಿ ಅಧಿಕಾರಿಗಳು ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. +ಜ. 5 ರಂದು ಮುಂಬೈನಲ್ಲಿ ಹರಾಜು ನಡೆಯಲಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ದಾವೂದ್ ಅಥವಾ ಆತನ ಕುಟುಂಬಕ್ಕೆ ಸೇರಿದ 11 ಆಸ್ತಿಗಳನ್ನು ಹರಾಜು ಮಾಡಲಾಗಿದೆ. 4.53 ಕೋಟಿಗೆ ಮಾರಾಟವಾದ ರೆಸ್ಟೋರೆಂಟ್, 3.53 ಕೋಟಿಗೆ ಆರು ಫ್ಲಾಟ್‍ಗಳು ಮತ್ತು 3.52 ಕೋಟಿಗೆ ಮಾರಾಟವಾದ ಅತಿಥಿ ಗೃಹಗಳು ಸೇರಿವೆ.1993 ರ ಮುಂಬೈ ಸರಣಿ ಸ್ಪೋಟದ ಪ್ರಮುಖ ಆರೋಪಿ ದಾವೂದ್ ಇಬ್ರಾಹಿಂ 1983 ರಲ್ಲಿ ಮುಂಬೈಗೆ ತೆರಳುವ ಮೊದಲು ಮುಂಬಾಕೆ ಗ್ರಾಮದಲ್ಲಿ ವಾಸಿಸುತ್ತಿದ್ದನು. 257 ಜನರ ಸಾವಿಗೆ ಕಾರಣವಾದ ಸರಣಿ ಬಾಂಬ್ ಸ್ಪೋಟದ ನಂತರ ಅವನು ಭಾರತವನ್ನು ತೊರೆದನು. +ಮೆಟ್ರೋ ಟ್ರಾಕ್ ಜಿಗಿದರೂ ಪ್ರಾಣಾಪಾಯದಿಂದ ಪಾರಾದ ಮಹಿಳೆ..! +ಮಾರ್ಚ್ 12, 1993 ರಂದು ಮುಂಬೈ (ಆಗಿನ ಬಾಂಬೆ) ಸರಣಿ ಬಾಂಬ್ ಸ್ಪೋಟಗಳಿಂದ ತತ್ತರಿಸಿತು, ಇದು 257 ಜನರನ್ನು ಕೊಂದಿತು, 700 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿತು ಮತ್ತು ಅಂದಾಜು 27 ಕೋಟಿ ಮೌಲ್ಯದ ಆಸ್ತಿಯನ್ನು ನಾಶಪಡಿಸಿತು. ಮಹಾರಾಷ್ಟ್ರ ಸರ್ಕಾರದ ಕೋರಿಕೆಯ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. +2017 ರಂದು ಮುಸ್ತಫಾ ದೊಸ್ಸಾ ಮತ್ತು ಅಬು ಸಲೇಂ ಸೇರಿದಂತೆ ಹಲವಾರು ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಲಾಯಿತು. ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಈ ದಾಳಿಗಳನ್ನು ಯೋಜಿಸಿದ್ದನು ಎಂದು ಆರೋಪಿಸಲಾಗಿದೆ. \ No newline at end of file diff --git a/eesanje/url_47_199_12.txt b/eesanje/url_47_199_12.txt new file mode 100644 index 0000000000000000000000000000000000000000..a84cdf0479bbbb4aa74e1f1c81a6365358d80c42 --- /dev/null +++ b/eesanje/url_47_199_12.txt @@ -0,0 +1,7 @@ +ಜಗನ್‍ಮೋಹನ್‍ರೆಡ್ಡಿ ಸಹೋದರಿ ಶರ್ಮಿಳಾಗೆ ಕಾಂಗ್ರೆಸ್ ಗಾಳ +ನವದೆಹಲಿ,ಜ.2- ವೈಎಸ್‍ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷೆ ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಈ ವಾರ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. +ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆಯಾಗಿದೆ.ಲೋಕಸಭೆ ಚುನಾವಣೆಯ ಜೊತೆಗೆ ಈ ವರ್ಷ ಆಂಧ್ರದಲ್ಲೂ ಚುನಾವಣೆ ನಡೆಯಲಿದ್ದು, ಅಲ್ಲಿ ಕಾಂಗ್ರೆಸ್ ನಾಯಕತ್ವವು ಶರ್ಮಿಳಾ ಅವರಿಗೆ ಪ್ರಮುಖ ಪಾತ್ರವನ್ನು ನೀಡಲಿದೆ ಎಂದು ಭಾವಿಸಲಾಗಿದೆ. +ಈ ಕ್ರಮವು ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಅನ್ನು ಪುನಶ್ಚೇತನಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿದುಬಂದಿದೆ. ಪ್ರಮುಖ ವಿರೋಧ ಪಕ್ಷ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಪ್ರಭಾವವನ್ನು ಹಿಡಿದಿಟ್ಟುಕೊಳ್ಳಲು ಹೆಣಗಾಡುತ್ತಿರುವ ಸಮಯದಲ್ಲಿ ವೈಎಸ್‍ಆರ್‍ಸಿಪಿಯನ್ನು ತೊರೆಯಲು ಸಿದ್ಧರಿರುವವರು ಈಗ ಕಾಂಗ್ರೆಸ್‍ಗೆ ಸೇರಬಹುದು ಎಂದು ಪಕ್ಷವು ಕರೆ ನೀಡಿದೆ. +ದಕ್ಷಿಣ ಕೊರಿಯಾ ಪ್ರತಿಪಕ್ಷ ನಾಯಕ ಲೀ ಮೇಲೆ ದಾಳಿ +2021ರಿಂದ ಶರ್ಮಿಳಾ ಅವರು ತಮ್ಮ ಸಹೋದರನೊಂದಿಗೆ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದಾರೆ ಎಂದು ವರದಿಯಾಗಿದ್ದು, ತೆಲಂಗಾಣದಲ್ಲಿ ವೈಎಸ್‍ಆರ್‍ಸಿಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಟೀಕಿಸಿದ್ದರು ಮಾತ್ರವಲ್ಲ, ಅದೇ ವರ್ಷ ಜುಲೈನಲ್ಲಿ ವೈಎಸ್‍ಆರ್ ತೆಲಂಗಾಣ ಪಕ್ಷದ ರಚನೆಯನ್ನು ಘೋಷಿಸಿದರು ಮತ್ತು ಹಿಂದಿನ ಕೆ ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರದ ವಿರುದ್ಧ ಪ್ರಚಾರವನ್ನು ಪ್ರಾರಂಭಿಸಿದ್ದರು. +ಈ ವರ್ಷದ ಆರಂಭದಲ್ಲಿ ಶರ್ಮಿಳಾ ಅವರು ತೆಲಂಗಾಣ ಚುನಾವಣೆಯಲ್ಲಿ ಸ್ರ್ಪಧಿಸುವುದಿಲ್ಲ ಎಂದು ಘೋಷಿಸಿದ್ದರು.ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಸಜ್ಜಿತವಾಗಿದ್ದು, ಅದನ್ನು ಹಾಳು ಮಾಡಲು ಬಯಸುವುದಿಲ್ಲ ಎಂದು ಅವರು ಹೇಳಿದ್ದರು. \ No newline at end of file diff --git a/eesanje/url_47_199_2.txt b/eesanje/url_47_199_2.txt new file mode 100644 index 0000000000000000000000000000000000000000..ba8a0dba73fd0992ce94591db81f37e77f447247 --- /dev/null +++ b/eesanje/url_47_199_2.txt @@ -0,0 +1,6 @@ +ಗೌತಮ್ ಅದಾನಿಗೆ ಸುಪ್ರೀಂ ಕೋರ್ಟ್ ರಿಲೀಫ್ +ನವದೆಹಲಿ,ಜ.3- ಹಿಂಡೆನ್‍ಬರ್ಗ್ ಪ್ರಕರಣ ಕುರಿತಂತೆ ದೇಶದ ಕೋಟ್ಯಾಪತಿ ಗೌತಮ್ ಅದಾನಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಹಿಂಡೆನ್‍ಬರ್ಗ್ ಪ್ರಕರಣದ ಕುರಿತು ಬಂಡವಾಳ ಮಾರುಕಟ್ಟೆ ನಿಯಂತ್ರಕ ಸೆಬಿಯ ತನಿಖೆಯನ್ನು ಅನುಮಾನಿಸಲು ಜಾರ್ಜ್ ಸೊರೊಸ್ ನೇತೃತ್ವದ ಒಸಿಸಿಆರ್‌ಪಿ ವರದಿಯು ಆಧಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. +ತೀರ್ಪು ಪ್ರಕಟಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿದೆ. +ಪಿಎಂ ವಿಶ್ವಕರ್ಯ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕಾಶ್ಮೀರ +ಸೆಕ್ಯುರಿಟೀಸ್ ಅಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಮೆರಿಕ ಮೂಲದ ಕಿರು ಮಾರಾಟಗಾರ ಹಿಂಡೆನ್‍ಬರ್ಗ್ ರಿಸರ್ಚ್‍ನ ಆರೋಪಗಳಿಗೆ ಸಂಬಂಧಿಸಿದ 24 ಪ್ರಕರಣಗಳಲ್ಲಿ 22 ಪ್ರಕರಣಗಳನ್ನು ತನಿಖೆ ಮಾಡಿದೆ. ಉಳಿದ ಎರಡು ಪ್ರಕರಣಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೆಬಿಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ. +ಹಿಂಡೆನ್‍ಬರ್ಗ್ ಮಾರುಕಟ್ಟೆಯನ್ನು ಕಡಿಮೆ ಮಾಡುವಲ್ಲಿ ನಿಯಮಗಳನ್ನು ನಿರ್ಲಕ್ಷಿಸಿದೆಯೇ ಎಂದು ಪರಿಶೀಲಿಸಲು ಮತ್ತು ಅದರ ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ಮತ್ತು ಸೆಬಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. \ No newline at end of file diff --git a/eesanje/url_47_199_3.txt b/eesanje/url_47_199_3.txt new file mode 100644 index 0000000000000000000000000000000000000000..ffd99840d180384e2f5d4e2ec3ae10424d455ac2 --- /dev/null +++ b/eesanje/url_47_199_3.txt @@ -0,0 +1,6 @@ +ಹೊಸ ಕಾನೂನು ಮಸೂದೆ ಆಧ್ಯಯನಕ್ಕೆ ಮುಂದಾದ ದೆಹಲಿ ಪೊಲೀಸರು +ನವದೆಹಲಿ,ಜ.3- ಸಂಸತ್ ಇತ್ತೀಚೆಗೆ ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ಕಾನೂನು ಮಸೂದೆಗಳನ್ನು ಅಧ್ಯಯನ ಮಾಡಲು ದೆಹಲಿ ಪೊಲೀಸರು ಉನ್ನತ ಶ್ರೇಣಿಯ ಅಧಿಕಾರಿಗಳ ಸಮಿತಿಯೊಂದನ್ನು ರಚಿಸಿದ್ದಾರೆ.ಭಾರತೀಯ ನ್ಯಾಯ (ಎರಡನೇ) ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, 2023, ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆ, 2023, ವಸಾಹತುಶಾಹಿ ಯುಗದ ಐಪಿಸಿ ಮತ್ತು ಸಿಆರ್‍ಪಿಸಿ ಕಾಯಿದೆಯನ್ನು ಬದಲಿಸಲು ಸಂಸತ್‍ನಲ್ಲಿ ಮಂಡಿಸಲಾಗಿದ್ದ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಒಪ್ಪಿಗೆ ನೀಡಿದ್ದಾರೆ. +ಬಿಲ್‍ಗಳ ಪರಿಣಾಮಕಾರಿ ದಿನಾಂಕದ ಕುರಿತು ಗೃಹ ಸಚಿವಾಲಯವು ಅಧಿಕೃತ ಅಧಿಸೂಚನೆಯನ್ನು ಇನ್ನೂ ಹೊರಡಿಸದಿದ್ದರೂ, ದೆಹಲಿ ಪೊಲೀಸ್ ಆಯುಕ್ತರು ಐಪಿಎಸ್ ಅಧಿಕಾರಿ ಛಾಯಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ 13 ಅಧಿಕಾರಿಗಳ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯು ತನಿಖಾ ಅಧಿಕಾರಿಗಳಿಗೆ ಪ್ರಾಯೋಗಿಕ ತಿಳುವಳಿಕೆಯನ್ನು ಪಡೆಯಲು ಮತ್ತು ಹೊಸ ನಿಬಂಧನೆಗಳು ಮತ್ತು ಕಾರ್ಯವಿಧಾನಗಳಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡಲು ಕೋರ್ಸ್ ವಸ್ತುಗಳನ್ನು ಸಿದ್ಧಪಡಿಸುವ ಕಾರ್ಯವನ್ನು ನಡೆಸುತ್ತಿದೆ. +ಜಾತಿ ರಾಜಕಾರಣದ ಮೂಲಕ ಸಮಾಜ ವಿಭಜನೆಗೆ ಕುತಂತ್ರ: ಯೋಗಿ ಆದಿತ್ಯನಾಥ್ +ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ ಡಿಯೋತೋಷ್ ಕೆಎಸ್ ಸಿಂಗ್ ಅವರು ಹೊರಡಿಸಿದ ಆದೇಶದ ಪ್ರಕಾರ, ಈ ಸಮಿತಿಯು ಹೊಸ ಕಾನೂನುಗಳ ಅಡಿಯಲ್ಲಿ ತನಿಖಾಧಿಕಾರಿಗಳ ಕೌಶಲ್ಯಗಳನ್ನು ನವೀಕರಿಸಲು ಪ್ರಯತ್ನಿಸುತ್ತದೆ. +ಸಮಿತಿಯು ಈ ಹಂತದಲ್ಲಿ ಕೆಲವು ವಕೀಲರು ಮತ್ತು ದೆಹಲಿಯ ಮಾಜಿ ಪೊಲೀಸ್ ಸಿಬ್ಬಂದಿಯನ್ನು ಕೊ-ಆಪ್ಟ್ ಮಾಡಿಕೊಳ್ಳಬಹುದು ಮತ್ತು ನ್ಯಾಯಾಂಗ ಪ್ರಕ್ರಿಯೆಗಳೊಂದಿಗೆ ಸಿಂಕ್ರೊನೈಸ್ ಮಾಡಲು ಕೋರ್ಸ್ ವಿಷಯವನ್ನು ಉತ್ತಮಗೊಳಿಸಬಹುದು. ಸಹಕಾರಿ ಸದಸ್ಯರು ನಂತರ ದೆಹಲಿ ಪೊಲೀಸ್ ಸಿಬ್ಬಂದಿಗೆ ತರಗತಿಗಳನ್ನು ನಡೆಸಲಿದ್ದಾರೆ. \ No newline at end of file diff --git a/eesanje/url_47_199_4.txt b/eesanje/url_47_199_4.txt new file mode 100644 index 0000000000000000000000000000000000000000..5e76ea18a9b8c7fc5d0a671c7d40e7ceeb7485e4 --- /dev/null +++ b/eesanje/url_47_199_4.txt @@ -0,0 +1,6 @@ +ಎಲೆಕ್ಟ್ರೀಕ್ ವಾಹನ ಬಳಕೆಯಲ್ಲಿ ದೆಹಲಿ ಫಸ್ಟ್ +ನವದೆಹಲಿ, ಜ 3 (ಪಿಟಿಐ) ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ಮಾರಾಟವಾದ ಒಟ್ಟು ವಾಹನಗಳಲ್ಲಿ ಶೇ.19.5ರಷ್ಟು ವಾಹನಗಳು ಎಲೆಕ್ಟ್ರೀಕ್ ವಾಹನಗಳಾಗಿರುವುದು ವಿಶೇಷ ಎಂದು ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಹೇಳಿದ್ದಾರೆ. +ದೆಹಲಿಯು ಜನರನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಲು ಪ್ರೋತ್ಸಾಹಿಸುವ ನೀತಿಯನ್ನು ಹೊಂದಿದೆ ಮತ್ತು ಇದು ಅನೇಕ ವಿಸ್ತರಣೆಗಳ ನಂತರ ಡಿಸೆಂಬರ್ 31 ರಂದು ಕೊನೆಗೊಂಡಿತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. +ಡಿಸೆಂಬರ್ 2023 ರಲ್ಲಿ ಮಾರಾಟವಾದ ಒಟ್ಟಾರೆ ವಾಹನಗಳ ಶೇ.19.5 ಎಲೆಕ್ಟ್ರೀಕ ವಾಹನಗಳ ಮಾರಾಟವನ್ನು ದೆಹಲಿ ದಾಖಲಿಸಿದೆ. ಇದು ಇಲ್ಲಿಯವರೆಗಿನ ಭಾರತದ ಯಾವುದೇ ರಾಜ್ಯಗಳಲ್ಲಿ ಅತ್ಯಧಿಕವಾಗಿದೆ. ಒಟ್ಟಾರೆ 2023 ರಲ್ಲಿ ದೆಹಲಿಯು ಒಟ್ಟು 6,57,312 ವಾಹನಗಳನ್ನು ನೋಂದಾಯಿಸಿದ್ದು ಅದರಲ್ಲಿ 73,610 ಎಲೆಕ್ಟ್ರಿಕ್ ವಾಹನಗಳಾಗಿವೆ ಎಂದು ಗೆಹ್ಲೋಟ್ ಎಕ್ಸ್ ಮಾಡಿದ್ದಾರೆ. +ಜಾತಿ ರಾಜಕಾರಣದ ಮೂಲಕ ಸಮಾಜ ವಿಭಜನೆಗೆ ಕುತಂತ್ರ: ಯೋಗಿ ಆದಿತ್ಯನಾಥ್ +ಜನವರಿಯಿಂದ ಡಿಸೆಂಬರ್‍ವರೆಗೆ ದೆಹಲಿಯಲ್ಲಿ ಇವಿ ಮಾರಾಟದ ಶೇಕಡಾವಾರು ಪ್ರಮಾಣವನ್ನು ಸಚಿವರು ಹಂಚಿಕೊಂಡಿದ್ದಾರೆ. ಮಾರ್ಚ್‍ನಲ್ಲಿ, ಮಾರಾಟವಾದ ಒಟ್ಟು ವಾಹನಗಳಲ್ಲಿ ಶೇ. 14.7 ರಷ್ಟು ಇವಿಗಳು, ವರ್ಷದಲ್ಲಿ ಎರಡನೇ ಅತಿ ಹೆಚ್ಚು ಮಾರಾಟವಾಗಿದ್ದರೆ, ಮೇ ತಿಂಗಳಲ್ಲಿ ಶೇ.14.4 ರಷ್ಟಿತ್ತು.ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಾಯಕತ್ವದಲ್ಲಿ, ನಮ್ಮ ಎಲ್ಲಾ ನಾಗರಿಕರಿಗೆ ಸ್ವಚ್ಛ ಮತ್ತು ಹಸಿರು ದೆಹಲಿಯನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_199_5.txt b/eesanje/url_47_199_5.txt new file mode 100644 index 0000000000000000000000000000000000000000..4a881b810c2c4933b87d3844d8ceb478b10d7146 --- /dev/null +++ b/eesanje/url_47_199_5.txt @@ -0,0 +1,8 @@ +ಪಿಎಂ ವಿಶ್ವಕರ್ಮ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕಾಶ್ಮೀರ +ಜಮ್ಮು, ಜ. 3 (ಪಿಟಿಐ) ಜಮ್ಮು ಮತ್ತು ಕಾಶ್ಮೀರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದ ಮೊದಲ ಕೇಂದ್ರಾಡಳಿತ ಪ್ರದೇಶ ಎಂಬ ಕೀರ್ತಿಗೆ ಪಾತ್ರವಾಗಿದೆ. ಇದು ಕುಶಲಕರ್ಮಿ ಸಮುದಾಯದ ಕೌಶಲ್ಯಗಳನ್ನು ಸಬಲೀಕರಣಗೊಳಿಸುವ ಮತ್ತು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +30 ಪ್ರಶಿಕ್ಷಣಾರ್ಥಿಗಳ (ವಿಶ್ವಕರ್ಮರು) ಮೊದಲ ಬ್ಯಾಚ್‍ನ ದರ್ಜಿ ಕ್ರಾಫ್ಟ್ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಲೆಫ್ಟಿನೆಂಟ್ ಗವರ್ನರ್ ರಾಜೀವ್ ರೈ ಭಟ್ನಾಗರ್ ಅವರ ಸಲಹೆಗಾರ ಮತ್ತು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಕಾರ್ಯದರ್ಶಿ ಅತುಲ್ ಅವರು ವಾಸ್ತವಿಕವಾಗಿ ನಡೆಸಿದರು. +ಸ್ವಯಂ ಉದ್ಯೋಗದ ಮೂಲಕ ಕುಶಲಕರ್ಮಿ ಸಮುದಾಯವನ್ನು ಸಬಲೀಕರಣಗೊಳಿಸುವ ಮಹತ್ವದ ಹೆಜ್ಜೆಯಲ್ಲಿ, ಜಮ್ಮು ಮತ್ತು ಕಾಶ್ಮೀರವು ಇಂದು ದರ್ಜಿಯಲ್ಲಿ 30 ಪ್ರಶಿಕ್ಷಣಾರ್ಥಿಗಳ ಮೊದಲ ಬ್ಯಾಚ್‍ಗೆ ತರಬೇತಿಯನ್ನು ಪ್ರಾರಂಭಿಸುವುದರೊಂದಿಗೆ ಪ್ರತಿಷ್ಠಿತ ಪಿಎಂ ವಿಶ್ವಕರ್ಮ ಯೋಜನೆ (ಪಿಎಂವಿವೈ) ಜಾರಿಗೆ ತಂದ ದೇಶದ ಮೊದಲ ಕೇಂದ್ರಾಡಳಿತ ಪ್ರದೇಶವಾಗಿ ಹೊರಹಮ್ಮಿದೆ. +ಜಮ್ಮು ಮತ್ತು ಕಾಶ್ಮೀರ ಯೋಜನೆಯನ್ನು ಜಾರಿಗೊಳಿಸಿದ ಮೊದಲ ಕೇಂದ್ರಾಡಳಿತ ಪ್ರದೇಶವಾಗಿದೆ ಎಂದು ಭಟ್ನಾಗರ್ ಹೆಮ್ಮೆ ವ್ಯಕ್ತಪಡಿಸಿದರು. ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕೌಶಲ್ಯ ಅಭಿವೃದ್ಧಿಯ ಸಂಸ್ಕøತಿಯನ್ನು ಬೆಳೆಸುವ ಆಡಳಿತದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು.ಈ ಯೋಜನೆಯು ಕಣಿವೆಯ ಎಲ್ಲಾ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಾರ್ಯಗತಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು. +ಇಡಿ ನೋಟೀಸ್‍ಗೆ ಕ್ಯಾರೆ ಎನ್ನದ ಕೇಜ್ರಿವಾಲ್ +ಪಿಎಂವಿವೈ, ಸೆಪ್ಟೆಂಬರ್ 2023 ರಲ್ಲಿ ಕೇಂದ್ರ ಸರ್ಕಾರವು ಪ್ರಾರಂಭಿಸಿದ ಉಪಕ್ರಮವಾಗಿದ್ದು, ಪಿಎಂ ವಿಶ್ವಕರ್ಮ ಪ್ರಮಾಣಪತ್ರಗಳು ಮತ್ತು ಐಡಿ ಕಾರ್ಡ್‍ಗಳ ಮೂಲಕ ಕುಶಲಕರ್ಮಿಗಳು ಮತ್ತು ಕುಶಲಕರ್ಮಿಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಈ ಯೋಜನೆಯು ಐದರಿಂದ ಏಳು ದಿನಗಳ ಮೂಲ ತರಬೇತಿ, 15 ದಿನ ಅಥವಾ ಅದಕ್ಕಿಂತ ಹೆಚ್ಚಿನ ಸುಧಾರಿತ ತರಬೇತಿ, ದಿನಕ್ಕೆ ರೂ 500 ಸ್ಟೈಫಂಡ್ ಮತ್ತು ತರಬೇತಿ ಪಡೆದ ವಿಶ್ವಕರ್ಮರಿಗೆ ರೂ 15,000 ಮೌಲ್ಯದ ಉಚಿತ ಆಧುನಿಕ ಟೂಲ್ಕಿಟ್ ಅನ್ನು ಒಳಗೊಂಡಿದೆ. ಹೆಚ್ಚುವರಿಯಾಗಿ, ಯೋಜನೆಯು ಕ್ರೆಡಿಟ್ ಆಧಾರಿತ ಮೃದು ಸಾಲಗಳೊಂದಿಗೆ ಸಂಪರ್ಕವನ್ನು ನೀಡುತ್ತದೆ ಮತ್ತು ಅವರ ವ್ಯವಹಾರಗಳನ್ನು ವಿಸ್ತರಿಸಲು ಮಾರ್ಕೆಟಿಂಗ್ ಬೆಂಬಲವನ್ನು ನೀಡುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_199_6.txt b/eesanje/url_47_199_6.txt new file mode 100644 index 0000000000000000000000000000000000000000..a649ec0b24339dab7d9e21242e5e50df2a20badb --- /dev/null +++ b/eesanje/url_47_199_6.txt @@ -0,0 +1,6 @@ +ಜಾತಿ ರಾಜಕಾರಣದ ಮೂಲಕ ಸಮಾಜ ವಿಭಜನೆಗೆ ಕುತಂತ್ರ: ಯೋಗಿ ಆದಿತ್ಯನಾಥ್ +ಲಕ್ನೋ, ಜ.3 (ಪಿಟಿಐ) – ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಬಡವರ ಹಕ್ಕುಗಳನ್ನು ಕಸಿದುಕೊಂಡವರು ಇಂದು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಆದಿತ್ಯನಾಥ್, ಜಾತಿ ರಾಜಕಾರಣ ಮಾಡುವ ಮೂಲಕ ಸಮಾಜವನ್ನು ವಿಭಜಿಸಲು ಕೆಲಸ ಮಾಡುವವರ ವಿರುದ್ಧ ಜನರಿಗೆ ಎಚ್ಚರಿಕೆ ನೀಡಿದ್ದಾರೆ. +ರಾಷ್ಟ್ರದ ಸಬಲೀಕರಣಕ್ಕಾಗಿ ಜನರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದ ಅವರು ಈ ಹಿಂದೆ ಬಡವರ ಹಕ್ಕನ್ನು ಕಸಿದುಕೊಂಡವರು ಇಂದು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಇಂದು ದೇಶದಲ್ಲಿ ಬಡವರಿಗಾಗಿ ಯೋಜನೆಗಳನ್ನು ಮಾಡುವುದಷ್ಟೇ ಅಲ್ಲ, ಅನುಷ್ಠಾನಗೊಳಿಸಲಾಗುತ್ತಿದೆ. +ಬರ ಪರಿಹಾರ ಅನುದಾನ ಬಿಡುಗಡೆಗೆ ಕಾಂಗ್ರೆಸ್ ಒತ್ತಾಯ +ಸರಕಾರದ ಯೋಜನೆಗಳ ಲಾಭ ಬಡವರು, ಯುವಕರು ಎಂಬ ತಾರತಮ್ಯವಿಲ್ಲದೆ ತಲುಪುತ್ತಿದೆ. ಮುಖದಲ್ಲಿ ಸಂತಸ ಮೂಡಿಸುವುದೇ ವಿಕಸಿತ್ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.ಜಾಗತಿಕ ಏಜೆನ್ಸಿಗಳ ಅಂಕಿಅಂಶಗಳನ್ನು ಉಲ್ಲೇಖಿಸಿದ ಸಿಎಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಒಂಬತ್ತೂವರೆ ವರ್ಷಗಳಲ್ಲಿ 13 ಕೋಟಿಗೂ ಹೆಚ್ಚು ಜನರು ಬಡತನ ರೇಖೆಗಿಂತ ಮೇಲಕ್ಕೆ ಬಂದಿದ್ದಾರೆ ಎಂದು ಹೇಳಿದರು. +ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯಡಿ ರಾಜ್ಯದಲ್ಲಿ 642 ಮೋದಿ ಗ್ಯಾರಂಟಿ ವ್ಯಾನ್‍ಗಳು ಓಡುತ್ತಿವೆ. ಇದುವರೆಗೆ ರಾಜ್ಯದ 57,709 ಗ್ರಾಮ ಪಂಚಾಯಿತಿಗಳ ಪೈಕಿ 36,983 ಗ್ರಾಮ ಪಂಚಾಯಿತಿಗಳಿಗೆ ಈ ವ್ಯಾನ್‍ಗಳು ತಲುಪಿವೆ ಎಂದು ಪ್ರಕಟಣೆ ತಿಳಿಸಿದೆ. ಅಲ್ಲದೆ, 762 ಪುರಸಭೆಗಳಲ್ಲಿ 1,027 ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. \ No newline at end of file diff --git a/eesanje/url_47_199_7.txt b/eesanje/url_47_199_7.txt new file mode 100644 index 0000000000000000000000000000000000000000..e4d12cba09211a292a83ba830ce234a99d9ee716 --- /dev/null +++ b/eesanje/url_47_199_7.txt @@ -0,0 +1,5 @@ +ಇಡಿ ನೋಟೀಸ್‍ಗೆ ಕ್ಯಾರೆ ಎನ್ನದ ಕೇಜ್ರಿವಾಲ್ +ನವದೆಹಲಿ, ಜ 3 (ಪಿಟಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಹೊರಡಿಸಿದ ಮೂರನೇ ಸಮನ್ಸ್ ಕ್ಯಾರೆ ಎಂದಿಲ್ಲ. ಇಂದು ಕೂಡ ಇಡಿ ಅಧಿಕಾರಿಗಳ ಮುಂದೆ ಹಾಜರಾಗಲು ನಿರಾಕರಿಸಿರುವ ಕೇಜ್ರಿವಾಲ್ ಅವರು ನನಗೆ ನೀಡಿರುವ ನೋಟಿಸ್ ಕಾನೂನುಬಾಹಿರ ಎಂದು ಲಿಖಿತ ಉತ್ತರವನ್ನು ಕಳುಹಿಸಿದ್ದಾರೆ ಎಂದು ಎಎಪಿ ಮೂಲಗಳು ತಿಳಿಸಿವೆ. +ಕೇಜ್ರಿವಾಲ್ ಅವರು ಏಜೆನ್ಸಿಯೊಂದಿಗೆ ಸಹಕರಿಸಲು ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ ಆದರೆ ಅವರನ್ನು ಬಂಧಿಸುವ ಉದ್ದೇಶದಿಂದ ಸಮನ್ಸ್ ಕಳುಹಿಸಲಾಗಿದೆ ಎಂದು ಹೇಳಿಕೊಂಡಿದೆ.ಚುನಾವಣೆಗೆ ಮುಂಚೆಯೇ ನೋಟಿಸ್ ಏಕೆ ಕಳುಹಿಸಲಾಗಿದೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವಾಗಿದೆ ಎಂದು ಪಕ್ಷ ಆರೋಪಿಸಿದೆ. +ಜಪಾನ್ ಭೂಕಂಪಕ್ಕೆ 62 ಬಲಿ, ಮುಂದುವರೆದ ರಕ್ಷಣಾ ಕಾರ್ಯಚರಣೆ +ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಇಂದು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು. ನವೆಂಬರ್ 2 ಮತ್ತು ಡಿಸೆಂಬರ್ 21 ರ ಹಿಂದಿನ ಎರಡು ಸಮನ್ಸ್‍ಗಳಲ್ಲಿ ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗಲು ನಿರಾಕರಿಸಿದ ನಂತರ ಎಎಪಿಯ ಸಂಚಾಲಕರೂ ಆಗಿರುವ ಕೇಜ್ರಿವಾಲ್‍ಗೆ ಇದು ಮೂರನೇ ಇಡಿ ನೋಟಿಸ್ ಆಗಿದೆ. \ No newline at end of file diff --git a/eesanje/url_47_199_8.txt b/eesanje/url_47_199_8.txt new file mode 100644 index 0000000000000000000000000000000000000000..e4e6f327f79f2ea74408fcc310cae04798410f71 --- /dev/null +++ b/eesanje/url_47_199_8.txt @@ -0,0 +1,7 @@ +ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅಂದರ್ +ಪುಣೆ, ಜ. 3 (ಪಿಟಿಐ) ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವ ಭಾಗಶಃ ವಾಹನ ನೋಂದಣಿ ಸಂಖ್ಯೆಯ ಅಧಾರದ ಮೇಲೆ ಪುಣೆ ಪೊಲೀಸರು ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 45 ವರ್ಷದ ಕಾಮುಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. +ಕೊಂಡ್ವಾ ಪ್ರದೇಶ ಇತ್ತೀಚೆಗೆ ಕಾಮುಕ ಎಂಟು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಂತರ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಾರುತಿ ನಾನಾವರೆ ಅವರ ವಿರುದ್ಧ ಕಿರುಕುಳ ಮತ್ತು ಅಪಹರಣದ ಆರು ಪ್ರಕರಣಗಳು ದಾಖಲಾಗಿವೆ ಮತ್ತು 2013 ರಲ್ಲಿ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿ ಇತ್ತಿಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ ಎನ್ನಲಾಗಿದೆ. +ಕಳೆದ ತಿಂಗಳು ನಡೆದ ಇತ್ತೀಚಿನ ಘಟನೆಯಲ್ಲಿ, ಕೊಂಡ್ವಾ ಪ್ರದೇಶದಲ್ಲಿ ಎಂಟು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದ ಎಂಬ ದೂರಿನ ಆಧಾರದ ಮೇರೆಗೆ ತನಿಖೆಯ ಸಮಯದಲ್ಲಿ, ನಾವು ಸುಮಾರು 100 ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ ಮತ್ತು ಒಂದು ದೃಶ್ಯದಲ್ಲಿ ವಾಹನದ ಭಾಗಶಃ ನೋಂದಣಿ ಸಂಖ್ಯೆಯನ್ನು ಗುರುತಿಸಲಾಗಿದೆ. ಈ ಲೀಡ್ ಆಧರಿಸಿ, ನಾವು ಅಂತಿಮವಾಗಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. +ರಾಮಮಂದಿರದ ಪ್ರಾಣ ಪ್ರತಿಷ್ಠೆ: ಛತ್ತೀಸ್‍ಗಢದಲ್ಲಿ ಡ್ರೈ ಡೇ ಆಚರಣೆ +ನಾನಾವರೆ ವಿರುದ್ಧ 2007ರಿಂದ 2013ರ ನಡುವೆ ಸ್ವರ್ಗೇಟ್, ಭಾರತಿ ವಿದ್ಯಾಪೀಠ, ಬಿಬ್ವೆವಾಡಿ ಮತ್ತು ಸಹಕಾರ ನಗರ ಪ್ರದೇಶಗಳಲ್ಲಿ ಆರು ವಿಭಿನ್ನ ಪ್ರಕರಣಗಳು ದಾಖಲಾಗಿದ್ದವು ಎಂದು ತನಿಖೆಯಿಂದ ತಿಳಿದುಬಂದಿದೆ. +2013 ರಲ್ಲಿ ಸಹಕಾರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಅತ್ಯಾಚಾರ ಮತ್ತು ಅಪಹರಣದ ಆರೋಪದ ಮೇಲೆ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾನೆ ಎಂದು ಅಧಿಕಾರಿ ಹೇಳಿದರು. ಇತ್ತೀಚಿನ ಪ್ರಕರಣದಲ್ಲಿ, ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ನಾನಾವೇರ್‍ನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_199_9.txt b/eesanje/url_47_199_9.txt new file mode 100644 index 0000000000000000000000000000000000000000..28d6913d9928db9fadb3f41137a413cbccac6247 --- /dev/null +++ b/eesanje/url_47_199_9.txt @@ -0,0 +1,6 @@ +ರಾಮಮಂದಿರದ ಪ್ರಾಣ ಪ್ರತಿಷ್ಠೆ: ಛತ್ತೀಸ್‍ಗಢದಲ್ಲಿ ಡ್ರೈ ಡೇ ಆಚರಣೆ +ರಾಯ್‍ಪುರ, ಜ.3 (ಪಿಟಿಐ) ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ನಡೆಯಲಿರುವ ಜನವರಿ 22ರಂದು ಡ್ರೈ ಡೇ ಎಂದು ಘೋಷಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಹೇಳಿದ್ದಾರೆ.ನಿಮಗೆಲ್ಲರಿಗೂ ತಿಳಿದಿರುವಂತೆ ಡಿಸೆಂಬರ್ 25 ರಿಂದ ಜನವರಿ 2 ರವರೆಗೆ ನಾವು ಉತ್ತಮ ಆಡಳಿತ ದಿನವನ್ನು ಆಚರಿಸುತ್ತಿದ್ದೇವೆ. ಶ್ರೀರಾಮ ನಮ್ಮ ಉತ್ತಮ ಆಡಳಿತದ ಮಾದರಿಯಾಗಿದ್ದಾರೆ ಎಂದು ಸಾಯಿ ತಿಳಿಸಿದರು. +ಛತ್ತೀಸ್‍ಗಢವು ಭಗವಾನ್ ರಾಮನ ನಾನಿಹಾಲ್ (ಭಗವಾನ್ ರಾಮನ ತಾಯಿಯ ಅಜ್ಜಿಯರ ಸ್ಥಳ) ಆಗಿರುವುದು ನಮ್ಮ ಅದೃಷ್ಟ ಮತ್ತು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಜನವರಿ 22 ರಂದು ನಡೆಯುವುದು ಸಹ ಅದೃಷ್ಟ ಎಂದು ಅವರು ಹೇಳಿದರು. ಛತ್ತೀಸ್‍ಗಢದಾದ್ಯಂತ ಸಂತಸವಿದೆ. ಸಮಾರಂಭಕ್ಕಾಗಿ ರಾಜ್ಯದ ಅಕ್ಕಿ ಗಿರಣಿಗಾರರ ಸಂಘವು 300 ಮೆಟ್ರಿಕ್ ಟನ್ ಸುಗಂಧಭರಿತ ಅಕ್ಕಿಯನ್ನು ಅಯೋಧ್ಯೆಗೆ ಕಳುಹಿಸಿದೆ ಮತ್ತು ರಾಜ್ಯದ ಸಾಗುವಳಿದಾರರು ಉತ್ತರ ಪ್ರದೇಶದ ನಗರಕ್ಕೆ ತರಕಾರಿಗಳನ್ನು ರವಾನಿಸಲಿದ್ದಾರೆ ಎಂದು ಸಿಎಂ ಹೇಳಿದರು. +ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ನಾಳೆ ಚಾಲನೆ.. +ಜನವರಿ 22 ರಂದು ರಾಜ್ಯಾದ್ಯಂತ ಹಬ್ಬದ ವಾತಾವರಣ ಇರಲಿದ್ದು, ದೀಪಾವಳಿಯಂತೆ ಆ ದಿನ ದಿಯಾಸ್ (ಮಣ್ಣಿನ ದೀಪಗಳು) ಬೆಳಗಲಾಗುತ್ತದೆ ಎಂದು ಅವರು ಹೇಳಿದರು.ಜನವರಿ 22 ರಂದು ಇಡೀ ರಾಜ್ಯದಲ್ಲಿ ಡ್ರೈ ಡೇ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಾಯಿ ಹೇಳಿದರು. ಸಂಶೋಧನಾ ವಿದ್ವಾಂಸರ ಪ್ರಕಾರ, ಭಗವಾನ್ ರಾಮನು ಅಯೋಧ್ಯೆಯಿಂದ 14 ವರ್ಷಗಳ ವನವಾಸದಲ್ಲಿ ಛತ್ತೀಸ್‍ಗಢದಲ್ಲಿರುವ ಹಲವಾರು ಸ್ಥಳಗಳ ಮೂಲಕ ಹಾದು ಹೋಗಿದ್ದನು. +ಛತ್ತೀಸ್‍ಗಢದ ರಾಜಧಾನಿ ರಾಯ್‍ಪುರದಿಂದ 27 ಕಿ.ಮೀ ದೂರದಲ್ಲಿರುವ ಚಂದ್‍ಖುರಿ ಎಂಬ ಹಳ್ಳಿಯನ್ನು ರಾಮನ ತಾಯಿ ಮಾತಾ ಕೌಶಲ್ಯೆಯ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ. ಗ್ರಾಮದಲ್ಲಿರುವ ಪುರಾತನ ಮಾತಾ ಕೌಶಲ್ಯ ದೇವಸ್ಥಾನಕ್ಕೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನವೀಕರಣ ಮಾಡಲಾಗಿತ್ತು. \ No newline at end of file diff --git a/eesanje/url_47_19_1.txt b/eesanje/url_47_19_1.txt new file mode 100644 index 0000000000000000000000000000000000000000..a461659cc1db02ff484df97cd22f98c03c696a30 --- /dev/null +++ b/eesanje/url_47_19_1.txt @@ -0,0 +1,6 @@ +ಭಕ್ತರಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ, 8 ಮಂದಿ ಸಾವು +8 , 10 +ಚಂಡೀಗಢ, ಸೆ.3 (ಪಿಟಿಐ)ಹರಿಯಾಣದ ಜಿಂದ್ ಜಿಲ್ಲೆಯಲ್ಲಿ ಭಕ್ತರನ್ನು ಸಾಗಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಹಿಸ್ಸಾರ್ ರಾಷ್ಟ್ರೀಯ ಹೆದ್ದಾರಿಯ ಬಿಧರನಾ ಗ್ರಾಮದಲ್ಲಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹಿಸಾರ್ನ ಜಿಂದ್ ಮತ್ತು ಆಗ್ರೋಹಾ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಸದರ್ ನರ್ವಾನಾದ ಎಸ್ಎಚ್ಒ ಇನ್ಸ್ ಪೆಕ್ಟರ್ ಕುಲದೀಪ್ ತಿಳಿಸಿದ್ದಾರೆ. +ಕುರುಕ್ಷೇತ್ರ ಜಿಲ್ಲೆಯಿಂದ ರಾಜಸ್ಥಾನದ ಗೊಗಮೇಡಿ ಎಂಬಲ್ಲಿನ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಭಕ್ತರ ಗುಂಪು ಗೋಗಮೇಡಿಗೆ ತೆರಳುತ್ತಿದ್ದ ಲಘು ವಾಣಿಜ್ಯ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯ ಸಮಯದಲ್ಲಿ, ಭಕ್ತರು ಸ್ವಲ್ಪ ಸಮಯದವರೆಗೆ ನಿಲ್ಲಿಸಿದ್ದರು ಮತ್ತು ಅವರ ವಾಹನ ನಿಂತಿತ್ತು ಎಂದು ಎಸ್ಎಚ್ಒ ಪಿಟಿಐಗೆ ಫೋನ್ ಮೂಲಕ ತಿಳಿಸಿದರು. +ಘಟನೆಯಲ್ಲಿ ಇಬ್ಬರು ಮಹಿಳೆಯರು ಮತ್ತು ಹದಿಹರೆಯದವರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_19_10.txt b/eesanje/url_47_19_10.txt new file mode 100644 index 0000000000000000000000000000000000000000..890730c950447d3532129e61b482b96185baeef0 --- /dev/null +++ b/eesanje/url_47_19_10.txt @@ -0,0 +1,14 @@ +ವರುಣಾರ್ಭಟಕ್ಕೆ ನಲುಗಿದ ಆಂಧ್ರ, ತೆಲಂಗಾಣ : 25ಕ್ಕೂ ಹೆಚ್ಚು ಮಂದಿ ಸಾವು +, : 25 , , 140 +ಅಮರಾವತಿ,ಸೆ.2-ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದು ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯುಂಟಾಗಿದೆ. ಹಲವೆಡೆ ಮಳೆ ಸಂಬಂಧಿ ಅವಘಡಗಳು ಸಂಭವಿಸಿ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. +ಉಭಯ ರಾಜ್ಯಗಳ ನದಿಗಳು ಮೈದುಂಬಿ ಹರಿಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ಪ್ರವಾಹ ಪೀಡಿತ ಪ್ರದೇಶಗಳಿಂದ ಸಾವಿರಾರು ನಿವಾಸಿಗಳನ್ನು ರಕ್ಷಿಸಿ ಪರಿಹಾರ ಕೇಂದ್ರಗಳಿಗೆ ರವಾನಿಸಿವೆ. +ತೆಲಂಗಾಣದಲ್ಲಿ ಹೈದರಾಬಾದ್‌ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ನಾಲ್ಕು ರೈಲುಗಳನ್ನು ಭಾಗಶಃ ರದ್ದುಗೊಂಡಿದ್ದು, 99 ರೈಲುಗಳನ್ನು ರದ್ದುಗೊಂಡಿವೆ. ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ನಿಂತಿದ್ದರಿಂದ 54 ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಎಸ್‌‍ಸಿಆರ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ತಡೆ ಪಡೆಗಳು ಪ್ರವಾಹ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ, ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ.ಈ ನಡುವೆ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ.ರೇವಂತ್‌ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. +ಈ ನಡುವೆ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರೆಫ್‌) 26 ತಂಡಗಳನ್ನು ನಿಯೋಜಿಲಾಗಿದೆ. ಈ ಪೈಕಿ ಈಗಾಗಲೇ ಎರಡು ರಾಜ್ಯಗಳಲ್ಲಿ 12 ತಂಡಗಳನ್ನು ಕಾರ್ಯಾಚರಣೆ ಕೈಗೊಂಡಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.14 ತಂಡಗಳ ಪೈಕಿ 8 ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಈವರೆಗೆ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದಾರೆ. +ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲಂಗಾಣದಲ್ಲಿ ಈವರೆಗೂ 17,000ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮುಖ್ಯಮಮತ್ರಿ ರೇವಂತ್‌ ರೆಡ್ಡಿ ಅವರು ತುರ್ತು ಸಭೆ ನಡೆಸಿ ಸಚಿವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮುಳುಗಡೆಗೊಂಡಿರುವ ಪ್ರದೇಶಗಳಲ್ಲಿ ಪರಿಹಾರ ಕ್ರಮಗಳ ಕೈಗೊಳ್ಳುವಂತೆ ಸೂಚಿಸಿದ್ದಾರೆ. +ಮಹಬೂಬಾಬಾದ್‌ ಮತ್ತು ಖಮಂ ಜಿಲ್ಲೆಗಳಲ್ಲಿ ಭಾನುವಾರ ಪ್ರತ್ಯೇಕ ಮಳೆ ಸಂಬಂಧಿತ ಘಟನೆಗಳಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಕೊಚ್ಚಿಹೋಗಿದ್ದಾರೆ.ಕೆಸಮುದ್ರ ಮಂಡಲದ ತಲ್ಲಪುಸಪಲ್ಲಿ ಗ್ರಾಮದ ಹೊರವಲಯದಲ್ಲಿ ಭಾನುವಾರ ಸುರಿದ ಭಾರೀ ಮಳೆಗೆ ರೈಲು ಹಳಿ ಕೊಚ್ಚಿ ಹೋಗಿದ್ದು, ಇದರಿಂದ ಕೇಸಮುದ್ರ ಮತ್ತು ಮಹಬೂಬಾಬಾದ್‌ ರೈಲು ನಿಲ್ದಾಣಗಳಲ್ಲಿ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. +ಅಂತೆಯೇ ವಿಜಯವಾಡ-ವಾರಂಗಲ್‌ ಮಾರ್ಗದಲ್ಲಿ ರೈಲು ಸಂಚಾರದ ಮೇಲೂ ಪರಿಣಾಮ ಬೀರಿದೆ. ವಿಜಯವಾಡ-ಖಮಂ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಹಗಿತಗೊಳಿಸಲಾಗಿದೆ. ಮಳೆಯ ಪರಿಣಾಮ ತೆಲಂಗಾಣ ಸರ್ಕಾರವು ಸೋಮವಾರ ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ. +ವಾರಂಗಲ್‌ ಜಿಲ್ಲೆಯಲ್ಲಿ ಶನಿವಾರದಿಂದಲೂ ಭಾರೀ ಮಳೆಯಾಗುತ್ತಿದ್ದು, ಕೆರೆ, ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಹಬೂಬಾಬಾದ್‌ ಜಿಲ್ಲೆಯ ಕುರವಿ ಮಂಡಲದ ನಲ್ಲೇಲ ಗ್ರಾಮ ಜಲಾವೃತಗೊಂಡಿದೆ. ಎರಡು ದಶಕಗಳಲ್ಲಿ ಗ್ರಾಮದಲ್ಲಿ ಇಂತಹ ಭೀಕರ ಪ್ರವಾಹ ಉಂಟಾಗಿರುವುದು ಇದೇ ಮೊದಲು ಎನ್ನಲಾಗಿದೆ. +ತೆಲಂಗಾಣದಲ್ಲಿ ರೆಡ್‌ ಅಲರ್ಟ್ :ತೆಲಂಗಾಣದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಪೂರ್ವ ಮತ್ತು ಈಶಾನ್ಯ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಮತ್ತು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಹೈದರಾಬಾದ್‌ನಲ್ಲಿಂದು ಮತ್ತು ನಾಳೆ ಸಾಧಾರಣ ಮಳೆ ಮತ್ತು ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. +ಶಾಲೆಗಳಿಗೆ ರಜೆ:ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹೈದರಾಬಾದ್‌ ಜಿಲ್ಲೆಯ ಎಲ್ಲ ಶಾಲೆಗಳಿಗೆ ಇಂದು (ಸೆಪ್ಟೆಂಬರ್‌ 2) ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವಂತೆ ಸೂಚಿಸಲಾಗಿದೆ.ಆದಿಲಾಬಾದ್‌, ನಿಜಾಮಾಬಾದ್‌, ರಾಜಣ್ಣ ಸಿರ್ಸಿಲ್ಲಾ, ಯಾದಾದ್ರಿ ಭುವನಗಿರಿ, ವಿಕಾರಾಬಾದ್‌, ಸಂಗಾರೆಡ್ಡಿ, ಕಾಮರೆಡ್ಡಿ, ಮಹಬೂಬನಗರ ಮುಂತಾದೆಡೆ ಇಂದು ಬೆಳಗ್ಗೆ 8.30ವರೆಗೂ ಅತೀ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ನೀಡಿದೆ. +ಸಿಎಂ ಚಂದ್ರಬಾಬು ನಾಯ್ಡು ಮಳೆ ಬಾಧಿತ ಪ್ರದೇಶಗಳಿಗೆ ರಾತ್ರಿ ದೋಣಿ ಮೂಲಕ ತೆರಳಿ ನಿವಾಸಿಗಳಿಗೆ ಧೈರ್ಯ ತುಂಬಿದ್ದಾರೆ. ಸರ್ಕಾರ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_47_19_11.txt b/eesanje/url_47_19_11.txt new file mode 100644 index 0000000000000000000000000000000000000000..7fa64164744115ddac0e0872e530f511910c09c1 --- /dev/null +++ b/eesanje/url_47_19_11.txt @@ -0,0 +1,8 @@ +3 ನ್ಯೂಸ್ ಚಾನೆಲ್ ಚರ್ಚೆಗಳಿಗೆ ಟಿಎಂಸಿ ಬಾಯ್ಕಾಟ್ +"- - ": 3 +ನವದೆಹಲಿ,ಸೆ.2– ಕೋಲ್ಕತ್ತಾದ ಆರ್ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತಣಮೂಲ ಕಾಂಗ್ರೆಸ್ ತನ್ನ ವಕ್ತಾರರನ್ನು ಮೂರು ಟಿವಿ ಚಾನೆಲ್ ಚರ್ಚೆಗಳಿಗೆ ಕಳುಹಿಸದಿರಲು ನಿರ್ಧರಿಸಿದೆ. +ಬಂಗಾಳ ವಿರೋಧಿ ಅಜೆಂಡಾ ಹೊಂದಿರುವ ಎಬಿಪಿ ಆನಂದ, ರಿಪಬ್ಲಿಕ್ ಮತ್ತು ಟಿವಿ9 ಚಾನೆಲ್ಗಳಿಗೆ ತನ್ನ ವಕ್ತಾರರನ್ನು ಕಳುಹಿಸದಿರಲು ನಿರ್ಧರಿಸಿದೆ. ದೆಹಲಿಯ ಜಮೀನ್ದಾರರನ್ನು ಸಮಾಧಾನಪಡಿಸಲು ಅವರ ಬಲವಂತವನ್ನು ನಾವು ಅರ್ಥಮಾಡಿಕೊಳ್ಳುತ್ತೇವೆ ಮತ್ತು ತನಿಖೆಗಳು ಮತ್ತು ಅವರ ಪ್ರವರ್ತಕರು ಮತ್ತು ಕಂಪನಿಗಳು ಎದುರಿಸುತ್ತಿರುವ ಜಾರಿ ಪ್ರಕರಣಗಳು ಗಮನದಲ್ಲಿವೆ ಎಂದು ಟಿಎಂಸಿ ಹೇಳಿಕೊಂಡಿದೆ. +ಚರ್ಚೆಗಳು ಅಥವಾ ಚರ್ಚೆಗಳ ಸಮಯದಲ್ಲಿ ಈ ವೇದಿಕೆಗಳಲ್ಲಿ ಪಕ್ಷದ ಬೆಂಬಲಿಗರು ಅಥವಾ ಸಹಾನುಭೂತಿ ಹೊಂದಿರುವ ವ್ಯಕ್ತಿಗಳು ಪಕ್ಷದಿಂದ ಅಧಿಕಾರ ಹೊಂದಿಲ್ಲದ ಕಾರಣ ಮತ್ತು ನಮ ಅಧಿಕತ ನಿಲುವನ್ನು ಪ್ರತಿನಿಧಿಸುವುದಿಲ್ಲವಾದ್ದರಿಂದ ನಾವು ಪಶ್ಚಿಮ ಬಂಗಾಳದ ಜನರನ್ನು ದಾರಿತಪ್ಪಿಸಬೇಡಿ ಎಂದು ನಾವು ಸ್ಪಷ್ಟಪಡಿಸುತ್ತೇವೆ ಮತ್ತು ವಿನಂತಿಸುತ್ತೇವೆ ಎಂದು ಪಕ್ಷ ಎಕ್‌್ಸನಲ್ಲಿ ಪೋಸ್ಟ್ ಹಾಕಿದೆ. +ಬಂಗಾಳದ ಜನರು ಈ ಅಪವಿತ್ರ ಬಾಂಗ್ಲಾ ಬಿರೋಧಿ ನಿಲುವನ್ನು ನಿರಂತರವಾಗಿ ತಿರಸ್ಕರಿಸಿದ್ದಾರೆ ಮತ್ತು ಯಾವಾಗಲೂ ಪ್ರಚಾರಕ್ಕಿಂತ ಸತ್ಯವನ್ನು ಆರಿಸಿಕೊಂಡಿದ್ದಾರೆ ಎಂದು ಅದು ಹೇಳಿದೆ.ಎಬಿಪಿ ಆನಂದ ಟಿವಿ ಚರ್ಚೆಯಲ್ಲಿ ತಣಮೂಲದ ಹಿರಿಯ ನಾಯಕ ಮತ್ತು ಸಂಸದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್ ನಡುವಿನ ಜಟಾಪಟಿ ಕೆಲವು ದಿನಗಳ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. +ಲೋಕಸಭೆಯಲ್ಲಿ ತಣಮೂಲ ಪಕ್ಷದ ಉಪನಾಯಕ ಎಂಎಸ್ ದಸ್ತಿದಾರ್ ಅವರು ಪ್ರಮುಖ ಫ್ಯಾಷನ್ ಡಿಸೈನರ್ ಎಂಎಸ್ ಪಾಲ್ ಅವರನ್ನು ಸೀರೆ ಮೇಕರ್ ಎಂದು ಕರೆದಿದ್ದರು. ತನ್ನ ವತ್ತಿಯ ಬಗ್ಗೆ ನನಗೆ ಅಪಾರವಾದ ಹೆಮೆ ಇದೆ ಎಂದು ಎಮ್ಎಸ್ ಪಾಲ್ ಪ್ರತಿಕ್ರಿಯಿಸಿದ್ದಾರೆ.ಮಮತಾ ಬ್ಯಾನರ್ಜಿ ಸರ್ಕಾರವು ಅಪರಾಧಿಗಳಿಗೆ ಆಶ್ರಯ ನೀಡುತ್ತದೆ ಮತ್ತು ಮಹಿಳೆಯರ ಸ್ಥಿತಿಯನ್ನು ನಿರ್ಲಕ್ಷಿಸುತ್ತದೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದರು. +ಇದೇ ಕಾರ್ಯಕ್ರಮದಲ್ಲಿ ಎಂಎಸ್ ದಸ್ತಿದಾರ್ ಅವರ ಇನ್ನೊಂದು ಮಾತು ಗದ್ದಲಕ್ಕೆ ಕಾರಣವಾಯಿತು. ಬಂಗಾಳದಲ್ಲಿ ಸಿಪಿಎಂ ಯುಗದಲ್ಲಿ ಪಾಸ್ ಅಂಕಗಳಿಗಾಗಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮಡಿಗಳ ಮೇಲೆ ಕುಳಿತುಕೊಳ್ಳುವಂತೆ ಮಾಡಲಾಯಿತು ಎಂದು ಅವರು ಹೇಳಿದ್ದರು. ಈ ಹೇಳಿಕೆಗೆ ಮಹಿಳಾ ವೈದ್ಯರಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ತಣಮೂಲ ಸಂಸದರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_47_19_12.txt b/eesanje/url_47_19_12.txt new file mode 100644 index 0000000000000000000000000000000000000000..22f3e11a54d5f2e9db5087eb0e0973828c55cdce --- /dev/null +++ b/eesanje/url_47_19_12.txt @@ -0,0 +1,10 @@ +ಆಮ್‌ ಆದಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ಇಡಿ ದಾಳಿ + ' , +ನವದೆಹಲಿ,ಸೆ.2-ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ತಂಡ ಇಂದು ಆಮ್‌ ಆದಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್‌ ಅವರ ಮನೆ ಮೇಲೆ ದಾಳಿ ನಡೆಸಿದೆ.ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಕ್ರಮ ನೇಮಕಾತಿ ಮತ್ತು ಹಣಕಾಸಿನ ಅವ್ಯವಹಾರದ ಆರೋಪ ಎದುರಿಸುತ್ತಿರುವ ಖಾನ್‌ ತಮ್ಮನ್ನು ಯಾವುದೇ ಕ್ಷಣ ಇ.ಡಿ ಅಧಿಕಾರಿಗಳು ಬಂಧಿಸಬಹುದು ಎಂದು ಹೇಳಿದ್ದಾರೆ. +ಈ ಕುರಿತು ತಮ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನನ್ನನ್ನು ಬಂಧಿಸಲು ಇಡಿ ಅಧಿಕಾರಿಗಳು ನನ್ನ ಮನೆಗೆ ಬಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.ದೆಹಲಿ ವಿಧಾನಸಭಾ ಕ್ಷೇತ್ರವಾದ ಓಖ್ಲಾದಲ್ಲಿರುವ ಖಾನ್‌ ಅವರ ಮನೆಯ ಹೊರಗೆ ದೆಹಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳ ದೊಡ್ಡ ತುಕಡಿಯನ್ನು ನಿಲ್ಲಿಸಲಾಗಿತ್ತು. ಅವರ ನಿವಾಸಕ್ಕೆ ಹೋಗುವ ರಸ್ತೆಗಳಲ್ಲಿ ಭಾರೀ ಭದ್ರತೆಯೊಂದಿಗೆ ಅಧಿಕಾರಿಗಳು ದಾಖಲೆಗಳು ಮತ್ತು ಸಾಮಗ್ರಿಗಳನ್ನು ಪರಿಶೀಲಿಸುತ್ತಿರುವ ದೃಶ್ಯಗಳು ಕಂಡುಬಂದವು. +ದಾಳಿಗೆ ಪ್ರತಿಕ್ರಿಯೆಯಾಗಿ, ಖಾನ್‌ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್‌ ಮಾಡಿದ್ದು, ಸರ್ಕಾರವು ತನ್ನನ್ನು ಮತ್ತು ಇತರ ಎಎಪಿ ನಾಯಕರನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದರು.ಇಂದು ಬೆಳಗ್ಗೆಯಷ್ಟೇ ಸರ್ವಾಧಿಕಾರಿಯ ಆದೇಶದ ಮೇರೆಗೆ ಆತನ ಕೈಗೊಂಬೆ ಇಡಿ ನನ್ನ ಮನೆಗೆ ತಲುಪಿದೆ. ನನಗೆ ಮತ್ತು ಆಪ್‌ ನಾಯಕರಿಗೆ ಕಿರುಕುಳ ನೀಡಲು ಸರ್ವಾಧಿಕಾರಿ ಯಾವುದೇ ಕಲ್ಲು ಬಿಡುತ್ತಿಲ್ಲ. +ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದು ಅಪರಾಧವೇ? ಈ ಸರ್ವಾಧಿಕಾರ ಎಷ್ಟು ದಿನ ಉಳಿಯುತ್ತದೆ ? ಎಂದು ಪ್ರಶ್ನಿಸಿದ್ದಾರೆ.ಎಎಪಿ ನಾಯಕರು ಅಮಾನತುಲ್ಲಾ ಖಾನ್‌ ಅವರ ಬೆಂಬಲಕ್ಕೆ ನಿಂತಿದ್ದಾರೆ. ಇಡಿ ದಾಳಿಯನ್ನು ಖಂಡಿಸಿರುವ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು, ಬಿಜೆಪಿಯ ರಾಜಕೀಯ ದ್ವೇಷದ ಕಾರಣದಿಂದಾಗಿ ಖಾನ್‌ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದರು. +ಅಮಾನತುಲ್ಲಾ ಅವರು ಇಡಿಯ ಎಲ್ಲಾ ತನಿಖೆಗೆ ಸಹಕಾರ ಕೊಟ್ಟಿದ್ದಾರೆ. ವಿಚಾರಣೆಯ ವೇಳೆ ನಂತರ ಹೆಚ್ಚಿನ ಸಮಯ ಕೇಳಿದ್ದರು. ಅವರ ಅತ್ತೆಗೆ ಕ್ಯಾನ್ಸರ್‌ ಇದೆ, ಅವರು ಆಪರೇಷನ್‌ ಮಾಡಿದ್ದಾರೆ, ಆದರೂ ದಾಳಿ ಮಾಡಲು ಬೆಳಿಗ್ಗೆ ಮನೆಗೆ ಬಂದಿದ್ದಾರೆ. ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ ಆದರೆ ಮೋದಿಯವರ ಸರ್ವಾಧಿಕಾರ ಮತ್ತು ಇಆ ಯ ಗೂಂಡಾಗಿರಿ ಎರಡೂ ಮುಂದುವರೆದಿದೆ ಎಂದು ಸಿಂಗ್‌ ಹೇಳಿದರು. +ಇತ್ತೀಚೆಗಷ್ಟೇ ಮದ್ಯ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಟ್ವೀಟ್‌ ಮಾಡಿದ್ದು, ಇ.ಡಿಗೆ ಇದೊಂದೇ ಕೆಲಸ. ಬಿಜೆಪಿ ವಿರುದ್ಧ ಎದ್ದ ಪ್ರತಿ ದನಿಯನ್ನೂ ದಮನ ಮಾಡಿ, ಮಾಡುವವರನ್ನು ಬಂಧಿಸಿ ಜೈಲಿಗೆ ಹಾಕಿ. ಮುರಿಯಬೇಡಿ ಅಥವಾ ನಿಗ್ರಹಿಸಬೇಡಿ ಎಂದು ಕಿಡಿಕಾರಿದ್ದಾರೆ. +2018 ಮತ್ತು 2022ರ ನಡುವೆ ವಕ್ಫ್ ಬೋರ್ಡ್‌ ಆಸ್ತಿಗಳನ್ನು ಕಾನೂನುಬಾಹಿರವಾಗಿ ನೇಮಕ ಮಾಡಿಕೊಂಡಿದ್ದಾರೆ ಮತ್ತು ಕಾನೂನುಬಾಹಿರ ವಿಧಾನಗಳ ಮೂಲಕ ಹಣಕಾಸಿನ ಲಾಭವನ್ನು ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಖಾನ್‌ ವಿರುದ್ಧ ಇಡಿ ಪ್ರಕರಣವನ್ನು ದಾಖಲಿಸಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಖಾನ್‌ ಅವರನ್ನು ಈ ಹಿಂದೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಮತ್ತು ಈ ಕಾನೂನುಬಾಹಿರ ಚಟುವಟಿಕೆಗಳ ಮೂಲಕ ಅವರು ಅಪಾರದ ಆದಾಯವನ್ನು ನಗದು ರೂಪದಲ್ಲಿ ಗಳಿಸಿದ್ದಾರೆ ಎಂದು ಹೇಳಿದ್ದಾರೆ. ಈ ಆದಾಯವನ್ನು ಖಾನ್‌ ತನ್ನ ಸಹಚರರ ಹೆಸರಿನಲ್ಲಿ ಸ್ಥಿರ ಆಸ್ತಿಗಳನ್ನು ಖರೀದಿಸಲು ಹೂಡಿಕೆ ಮಾಡಿದ್ದಾರೆ ಎಂದು ಅದು ಆರೋಪಿಸಿದೆ. +ಈ ವರ್ಷದ ಆರಂಭದಲ್ಲಿ, ದೆಹಲಿ ಹೈಕೋರ್ಟ್‌ ಮಾರ್ಚ್‌ನಲ್ಲಿ ಖಾನ್‌ಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು, ತನಿಖಾ ಸಂಸ್ಥೆಗಳಿಂದ ಸಮನ್ಸ್ ನಿಂದ ಪದೇ ಪದೇ ತಪ್ಪಿಸಿಕೊಳ್ಳುವುದನ್ನು ಉಲ್ಲೇಖಿಸಿ. ಸುಪ್ರೀಂಕೋರ್ಟ್‌ ಕೂಡ ಬಂಧನದಿಂದ ರಕ್ಷಣೆ ನಿರಾಕರಿಸಿತ್ತು. \ No newline at end of file diff --git a/eesanje/url_47_19_2.txt b/eesanje/url_47_19_2.txt new file mode 100644 index 0000000000000000000000000000000000000000..35f851bc2f641d4ad1bd86f74b4cd737414eed61 --- /dev/null +++ b/eesanje/url_47_19_2.txt @@ -0,0 +1,8 @@ +ದನ ಕಳ್ಳಸಾಗಣೆದಾರ ಎಂದು ಭಾವಿಸಿ ವಿದ್ಯಾರ್ಥಿಯನ್ನು ಕೊಂದ ಗೋರಕ್ಷಕರು + 12 +ಚಂಡೀಗಡ,ಸೆ.3-ಹರಿಯಾಣದ ರಿದಾಬಾದ್ನಲ್ಲಿ 12 ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಗೋರಕ್ಷಕರು ಕಾರಿನಲ್ಲಿ ಹಿಂಬಾಲಿಸಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.ಆ.23 ರಂದು ನಡೆದ ದಾಳಿಗೆ ಸಂಬಂಧಿಸಿದಂತೆ ಗೋರಕ್ಷಕ ಗುಂಪಿನ ಐವರನ್ನು ಬಂಧಿಸಲಾಗಿದೆ. +ಬಂಧಿತ ಆರೋಪಿಗಳಾದ ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಅವರು ಆರ್ಯನ್ ಮಿಶ್ರಾ ಮತ್ತು ಆತನ ಸ್ನೇಹಿತರಾದ ಶಾಂಕಿ, ಹರ್ಷಿತ್ ಮತ್ತು ಇಬ್ಬರು ಹುಡುಗಿಯರನ್ನು ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 30 ಕಿಲೋಮೀಟರ್ ದೂರ ಓಡಿಸಿಕೊಂಡು ಹೋಗಿದ್ದರು. +ಮೂಲಗಳ ಪ್ರಕಾರ, ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವು ಕಳ್ಳಸಾಗಣೆದಾರರು ಜಾನುವಾರುಗಳನ್ನು ಎತ್ತಿಕೊಂಡು ಹೋಗುತ್ತಿದ್ದಾರೆ ಎಂದು ಗೋರಕ್ಷಕರಿಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. +ಜಾನುವಾರು ಕಳ್ಳಸಾಗಣೆದಾರರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಡಸ್ಟರ್ ಕಾರನ್ನು ಗಮನಿಸಿದ ಗುಂಪು ವಾಹನ ಚಲಾಯಿಸುತ್ತಿದ್ದ ಆರ್ಯನ್ ಸ್ನೇಹಿತ ಹರ್ಷಿತ್ನನ್ನು ನಿಲ್ಲಿಸುವಂತೆ ಕೇಳಿದೆ. ಆದಾಗ್ಯೂ, ಅವರು ಕಾರು ನಿಲ್ಲಿಸಲಿಲ್ಲ. ಸ್ನೇಹಿತ ಶಾಂಕಿ ಹಲವರ ಜೊತೆ ದ್ವೇಷವನ್ನು ಹೊಂದಿದ್ದರು. ಅವರನ್ನು ಕೊಲ್ಲಲು ಗೂಂಡಾಗಳನ್ನು ಕಳುಹಿಸಿದ್ದಾರೆ ಎಂದು ಅವರು ಭಾವಿಸಿಕೊಂಡಿದ್ದರು. +ಆರ್ಯನ್ ಮತ್ತು ಆತನ ಸ್ನೇಹಿತರು ನಿಲ್ಲಿಸದ ಕಾರಣ ಆರೋಪಿಗಳು ಕಾರನ್ನು ಹಿಂಬಾಲಿಸಿದ್ದರು. ಕಾರಿಗೆ ಗುಂಡು ಹಾರಿಸಿದಾಗ ಗುಂಡು ಆರ್ಯನ್ – ಪ್ರಯಾಣಿಕರ ಸೀಟಿನಲ್ಲಿದ್ದ – ಕುತ್ತಿಗೆಗೆ ತಗುಲಿತು. ಸ್ನೇಹಿತ ಅಂತಿಮವಾಗಿ ಕಾರನ್ನು ನಿಲ್ಲಿಸಿದಾಗ ಮತ್ತೆ ಗುಂಡು ಹಾರಿಸಲಾಯಿತು. +ಶೂಟರ್ಗಳು ಅವರ ಮೇಲೆ ಮತ್ತೆ ಗುಂಡು ಹಾರಿಸಬಹುದು ಎಂದು ಭಾವಿಸಿದರು. ಎರಡನೇ ಗುಂಡು ಆರ್ಯನ್ ಎದೆಗೆ ತಗುಲಿದೆ.ದಾಳಿಕೋರರು ಕಾರಿನಲ್ಲಿ ಇಬ್ಬರು ಹುಡುಗಿಯರು ಇರುವುದನ್ನು ಕಂಡು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿರಬಹುದು ಎಂದು ಅರಿತು ಪರಾರಿಯಾಗಿದ್ದಾರೆ. \ No newline at end of file diff --git a/eesanje/url_47_19_3.txt b/eesanje/url_47_19_3.txt new file mode 100644 index 0000000000000000000000000000000000000000..3ae42ffe401da0e73a37a97ebc11617e72434c55 --- /dev/null +++ b/eesanje/url_47_19_3.txt @@ -0,0 +1,8 @@ +ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್ + +ಬೆಂಗಳೂರು,ಸೆ.3-ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. +ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ. +ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ. +ತಾವು ಬಳಸಿದ ಪದ ನನಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಕ್ಕೆ, ಈ ಹಿನ್ನಲೆಯಲ್ಲಿ ನಾನು ಕ್ಷಮೆ ಕೇಳುತ್ತೇನೆ ಎಂದು ಕ್ಷಮಾಪಣೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. +ಜಿಂದಾಲ್ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ಬೆಲ್ಲದ್ ಹರಿಹಾಯ್ದಿದ್ದರು. +ಸರ್ಕಾರವು ಕಡಿಮೆ ಬೆಲೆಗೆ ಮಾರಾಟ ಮಾಡುವ ಮೂಲಕ ಆಂತರಿಕ ಒಪ್ಪಂದವನ್ನು ಮಾಡಿಕೊಂಡು ಭೂಮಿಯನ್ನು ಲೂಟಿ ಮಾಡುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. \ No newline at end of file diff --git a/eesanje/url_47_19_4.txt b/eesanje/url_47_19_4.txt new file mode 100644 index 0000000000000000000000000000000000000000..7225fa8dc77039e77284f6c90fb5419378424ca0 --- /dev/null +++ b/eesanje/url_47_19_4.txt @@ -0,0 +1,8 @@ +ಪೋರಬಂದರ್ ಕರಾವಳಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ಮೂವರು ಸಿಬ್ಬಂದಿ ನಾಪತ್ತೆ +3 ' +ಅಹಮದಬಾದ್,ಸೆ.3-ಗುಜರಾತ್ನ ಪೋರಬಂದರ್ ಕರಾವಳಿಯಲ್ಲಿ ರಕ್ಷಣಾ ಕಾರ್ಯಾಚರಣೆಯ ವೇಳೆ ತಡರಾತ್ರಿ ಅರಬ್ಬಿ ಸಮುದ್ರದಲ್ಲಿ ಅವರ ಸುಧಾರಿತ ಲಘು ಹೆಲಿಕಾಪ್ಟರ್(ಎಎಲ್ಹೆಚ್) ತುರ್ತು ಭೂಸ್ಪರ್ಶ ಮಾಡಿದ ನಂತರ ಭಾರತೀಯ ಕೋಸ್ಟ್ ಗಾರ್ಡ್ನ ಮೂವರು ಸದಸ್ಯರು ನಾಪತ್ತೆಯಾಗಿದ್ದಾರೆ. +ಹೆಲಿಕಾಪ್ಟರ್ನಲ್ಲಿ ನಾಲ್ವರು ಸದಸ್ಯರಿದ್ದು, ಒಬ್ಬರನ್ನು ರಕ್ಷಿಸಲಾಗಿದೆ. ಪೋರಬಂದರ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮೋಟಾರ್ ಟ್ಯಾಂಕರ್ ಹರಿ ಲೀಲಾದಿಂದ ಗಾಯಗೊಂಡ ಸಿಬ್ಬಂದಿಯನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಅನ್ನು ಸೆಪ್ಟೆಂಬರ್ 2 ರಂದು ರಾತ್ರಿ 11 ಗಂಟೆಗೆ ಕಳುಹಿಸಿದಾಗ ಈ ಘಟನೆ ಸಂಭವಿಸಿದೆ. ಉಳಿದ ಮೂವರು ಸದಸ್ಯರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ಹೇಳಿದೆ. +ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣಾ ಕಾರ್ಯಾಚರಣೆಗಾಗಿ ನಾಲ್ಕು ಹಡಗುಗಳು ಮತ್ತು 2 ವಿಮಾನಗಳನ್ನು ನಿಯೋಜಿಸಿದೆ. ಗುಜರಾತ್ನಲ್ಲಿ ಇತ್ತೀಚಿನ ಚಂಡಮಾರುತದ ವಾತಾವರಣದಲ್ಲಿ 67 ಜೀವಗಳನ್ನು ಉಳಿಸಿದ ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಸುಧಾರಿತ ಲಘು ಹೆಲಿಕಾಪ್ಟರ್ (ಎಎಲ್ಹೆಚ್) ಅನ್ನು ಭಾರತೀಯ ಧ್ವಜದ ಮೇಲೆ ಗಂಭೀರವಾಗಿ ಗಾಯಗೊಂಡ ಸಿಬ್ಬಂದಿಯನ್ನು ಸ್ಥಳಾಂತರಿಸಲು ಕಾರ್ಯಚಾರಣೆ ಆರಂಭಿಸಿದಾಗ ಈ ಅವಘಡ ಸಂಭವಿಸಿದೆ. +ವಿಮಾನದ ಅವಶೇಷಗಳನ್ನು ಪತ್ತೆ ಮಾಡಲಾಗಿದೆ. ಸ್ಥಳಾಂತರಿಸಲು ಹೆಲಿಕಾಪ್ಟರ್ ಹಡಗಿನ ಬಳಿಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಐಸಿಜಿ ಹೇಳಿಕೆ ತಿಳಿಸಿದೆ. +ಕೋಸ್ಟ್ ಗಾರ್ಡ್ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ನ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಸ್ಥಳಾಂತರಿಸಲು ಹೆಲಿಕಾಪ್ಟರ್ ಹಡಗನ್ನು ಸಮೀಪಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಭಾರತೀಯ ಕೋಸ್ಟ್ ಗಾರ್ಡ್ ತಿಳಿಸಿದೆ.ಸದ್ಯ ಗುಜರಾತ್ನಲ್ಲಿ ಭಾರೀ ಮಳೆ ಅನಾಹುತ ಸೃಷ್ಟಿಸಿದೆ. ಇದರಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಪೋರಬಂದರ್ ಮತ್ತು ದ್ವಾರಕಾದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಇಲ್ಲಿ 33 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. \ No newline at end of file diff --git a/eesanje/url_47_19_5.txt b/eesanje/url_47_19_5.txt new file mode 100644 index 0000000000000000000000000000000000000000..6ad0b625b28bd9869b2b5d58f8a1b758cdc855c2 --- /dev/null +++ b/eesanje/url_47_19_5.txt @@ -0,0 +1,9 @@ +ಆಂಧ್ರ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಸಿಎಂ ನಾಯ್ಡು ಮನವಿ + +ಅಮರಾವತಿ (ಆಂಧ್ರಪ್ರದೇಶ), ಸೆ 3 (ಪಿಟಿಐ)ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ, ಉಂಟಾಗಿರುವ ಜಲ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.ವಿಶೇಷವಾಗಿ ವಿಜಯವಾಡದಲ್ಲಿ ಇತ್ತೀಚಿನ ಧಾರಾಕಾರ ಮಳೆ ಮತ್ತು ನಂತರದ ಪ್ರವಾಹವು ತಮ ರಾಜಕೀಯ ಜೀವನದಲ್ಲಿ ಕಂಡ ದೊಡ್ಡ ದುರಂತ ಎಂದು ನಾಯ್ಡು ಹೇಳಿದರು. +ರಾಜ್ಯದಲ್ಲಿ ಉಂಟಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ನಾಯ್ಡು ತಿಳಿಸಿದ್ದಾರೆ.ನನ್ನ ವತ್ತಿಜೀವನದಲ್ಲಿ, ಇದು ಅತಿದೊಡ್ಡ ವಿಪತ್ತು… ನಾವು ಹುದ್ಹುದ್‌ ಚಂಡಮಾರುತ ಮತ್ತು ತಿತ್ಲಿ ಚಂಡಮಾರುತದಂತಹ ಕೆಲವು ಘಟನೆಗಳನ್ನು ಹೊಂದಿದ್ದೇವೆ ಆದರೆ ಇವುಗಳಿಗೆ ಹೋಲಿಸಿದರೆ, ಇಲ್ಲಿ ಮಾನವನ ನೋವು ಮತ್ತು ಆಸ್ತಿ ನಷ್ಟವು ದೊಡ್ಡದಾಗಿದೆ ಎಂದು ಎನ್‌ಟಿಆರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಾಯ್ಡು ಹೇಳಿದರು. +ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮತ್ತು ಪ್ರವಾಹದಿಂದ ನಲುಗಿ ಹೋಗಿರುವ ಜಿಲ್ಲೆಯ ಕಲೆಕ್ಟರೇಟ್‌ ಅನ್ನು ಮುಖ್ಯಮಂತ್ರಿಗಳು ತಾತ್ಕಾಲಿಕ ಸೆಕ್ರೆಟರಿಯೇಟ್‌ ಆಗಿ ಪರಿವರ್ತಿಸಿದ್ದಾರೆ. ವಿಪತ್ತಿಗೆ ಸಂಬಂಧಿಸಿದ ಎಲ್ಲಾ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವುದು ಮತ್ತು ನಷ್ಟದಿಂದ ಚೇತರಿಸಿಕೊಳ್ಳಲು ರಾಜ್ಯಕ್ಕೆ ಉದಾರವಾಗಿ ಹಣ ನೀಡುವಂತೆ ಮನವಿ ಮಾಡುವುದಾಗಿ ನಾಯ್ಡು ಹೇಳಿದರು. +ವಿಜಯವಾಡದ ಪ್ರಕಾಶಂ ಬ್ಯಾರೇಜ್‌ ತನ್ನ ಅತಿ ಹೆಚ್ಚು ಪ್ರವಾಹದ ನೀರಿನ ಮಟ್ಟವನ್ನು ಕಂಡಿದೆ ಮತ್ತು 11.43 ಲಕ್ಷ ಕ್ಯೂಸೆಕ್‌ನ ಬಿಡುಗಡೆಯನ್ನು ದಾಖಲಿಸಿದೆ ಎಂದು ಅವರು ಹೇಳಿದರು. ಗರಿಷ್ಠ 11.9 ಲಕ್ಷ ಕ್ಯೂಸೆಕ್‌ಗಳಷ್ಟು ಪ್ರವಾಹವನ್ನು ತಡೆದುಕೊಳ್ಳುವಂತೆ ಬ್ಯಾರೇಜ್‌ ಅನ್ನು ವಿನ್ಯಾಸಗೊಳಿಸಲಾಗಿದೆ ಎಂದು ನಾಯ್ಡು ಹೇಳಿದರು. +11.43 ಲಕ್ಷ ಕ್ಯೂಸೆಕ್‌ ಪ್ರವಾಹದ ನೀರು ಭವಾನಿಪುರಂ ರಸ್ತೆ ದಾಟಿ ಸ್ವಾತಿ ಥಿಯೇಟರ್‌ ಪ್ರದೇಶವನ್ನು (ವಿಜಯವಾಡದಲ್ಲಿ) ಮುಳುಗಿಸಿ ನಂತರ ವಾಂಬೆ ಕಾಲೋನಿಗೆ ಹರಿಯಿತು ಎಂದು ಅವರು ಹೇಳಿದರು. ಅಜಿತ್‌ ಸಿಂಗ್‌ ನಗರದಂತಹ ಕೆಲವು ಸ್ಥಳಗಳು ಇನ್ನೂ ಮುಳುಗಡೆಯಾಗಿದ್ದರೂ ನೀರು ನಿಧಾನವಾಗಿ ಇಳಿಯುತ್ತಿದೆ ಎಂದು ಅವರು ಹೇಳಿದರು. +ನಾಯ್ಡು ಪ್ರಕಾರ, ಅಜಿತ್‌ ಸಿಂಗ್‌ ನಗರದಲ್ಲಿ 1.5 ಅಡಿಗಳಷ್ಟು ಪ್ರವಾಹದ ನೀರು ಕಡಿಮೆಯಾಗಿದೆ ಮತ್ತು ಭವಾನಿಪುರಂನಲ್ಲಿಯೂ ಇಳಿಮುಖವಾಗಿದೆ. ಕಷ್ಣಾ ನದಿ ಮತ್ತು ಬುಡಮೇರ್‌ನಲ್ಲಿ ನಿಧಾನವಾಗಿ ನೀರು ಕಡಿಮೆಯಾಗುತ್ತಿದ್ದು, ಇನ್ನೆರಡು ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆ ಇದೆ ಎಂದು ಹೇಳಿದರು. ರಾಜ್ಯದ ಉತ್ತರ ಭಾಗದ ಕಳಿಂಗಪಟ್ಟಣಂ ಬಳಿ ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರೂ, ಎನ್‌ಟಿಆರ್‌ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಅವರು ಹೇಳಿದರು. +ತೆಲಂಗಾಣದ ನಲ್ಗೊಂಡ ಮತ್ತು ಖಮಂ ಜಿಲ್ಲೆಗಳಲ್ಲಿ ಮಳೆಯ ಪರಿಣಾಮವಾಗಿ ಬುಡಮೇರು ಮತ್ತು ಇತರ ನದಿಗಳ ಮೂಲಕ ವಿಜಯವಾಡದ ಕೆಳಭಾಗದಲ್ಲಿ ಪ್ರವಾಹ ಉಂಟಾಗಿದೆ ಎಂದು ನಾಯ್ಡು ಹೇಳಿದರು. ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಕೊನೆಯ ಮೈಲಿ ಪ್ರದೇಶಗಳಲ್ಲಿರುವ ಕೆಲವು ಪ್ರವಾಹ ಸಂತ್ರಸ್ತರಿಗೆ ಆಹಾರ ಪೂರೈಸಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. \ No newline at end of file diff --git a/eesanje/url_47_19_6.txt b/eesanje/url_47_19_6.txt new file mode 100644 index 0000000000000000000000000000000000000000..30da3c775918310dcd84c5d5495e88ede9676691 --- /dev/null +++ b/eesanje/url_47_19_6.txt @@ -0,0 +1,10 @@ +ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಇನ್ಮುಂದೆ ಬಡವರಿಗೆ ಅಕ್ಕಿ ಜೊತೆ ಸಿಗಲಿದೆ 9 ವಸ್ತುಗಳು! + 9 ! +ನವದೆಹಲಿ,ಸೆ.3-ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. +ಭಾರತ ಸರ್ಕಾರದ ಉಚಿತ ಪಡಿತರ ಯೋಜನೆಯಡಿ ದೇಶದ 90 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ಪಡಿತರ ನೀಡುತ್ತಿದೆ. ಈ ಹಿಂದೆ ಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇದೀಗ ಕೆಲವು ಸುದ್ದಿಗಳ ಪ್ರಕಾರ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಬದಲು 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ. +ಇವುಗಳಲ್ಲಿ ಗೋಧಿ, ಕಾಳುಗಳು, ಧಾನ್ಯಗಳು, ಸಕ್ಕರೆ, ಉಪ್ಪು, ಸಾಸಿವೆ ಎಣ್ಣೆ, ಹಿಟ್ಟು, ಸೋಯಾಬೀನ್‌ ಮತ್ತು ಮಸಾಲೆಗಳು ಸೇರಿವೆ ಎಂದು ತಿಳಿದು ಬಂದಿದೆ.ಕೆಲವು ವರದಿಗಳ ಪ್ರಕಾರ, ಉಚಿತ ಅಕ್ಕಿ ಬದಲಿಗೆ ಈ ಸರಕುಗಳನ್ನು ನೀಡಲಾಗುವುದು ಎಂದು ಹೇಳಿದರೆ, ಇನ್ನೂ ಕೆಲವು ವರದಿಗಳು ಅಕ್ಕಿಯೊಂದಿಗೆ ಇತರ ಒಂಬತ್ತು ರೀತಿಯ ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. +ಜನರ ಆರೋಗ್ಯವನ್ನು ಸುಧಾರಿಸಲು ಮತ್ತು ಅವರ ಆಹಾರದಲ್ಲಿ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಇದರಿಂದ ಜನರ ಜೀವನ ಮಟ್ಟವೂ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ. +ನೀವು ಪಡಿತರ ಚೀಟಿಗೆ ಅರ್ಹರಾಗಿದ್ದರೆ ಮತ್ತು ಇನ್ನೂ ಕಾರ್ಡ್‌ ಪಡೆಯದಿದ್ದರೆ, ನೀವು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಸಮೀಪದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿಗೆ ಹೋಗಬೇಕು. ಅಥವಾ ನೀವು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್‌ ಮಾಡಬಹುದು. +ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ಇದರೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಸೇರಿಸಿ ಪಡಿತರ ಕಚೇರಿಯಲ್ಲಿ ಸಲ್ಲಿಸಬೇಕು. ಅದರ ನಂತರ ಸಂಬಂಧಪಟ್ಟ ಅಧಿಕಾರಿ ನಿಮ ವಿವರಗಳನ್ನು ಪರಿಶೀಲಿಸುತ್ತಾರೆ. +ಪರಿಶೀಲನೆ ಪ್ರಕ್ರಿಯೆ ಮುಗಿದ ನಂತರ ಪಡಿತರ ಚೀಟಿ ನೀಡಲಾಗುತ್ತದೆ. ಆದರೆ, ಕರ್ನಾಟಕದಲ್ಲಿ ಕೂಡ ಸಾವಿರಾರು ಮಂದಿ ಹೊಸ ಪಡಿತರ ಚೀಟಿ ಪಡೆಯಲು ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ. +ಭಾರತ ಸರ್ಕಾರ ದೇಶದ ಜನರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಹೆಚ್ಚಿನವು ಬಡ ಮತ್ತು ನಿರ್ಗತಿಕರಿಗೆ ವಿನ್ಯಾಸಗೊಳಿಸಲಾಗಿದೆ. ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಕೇಂದ್ರ ಸರ್ಕಾರ ಉಚಿತ ಪಡಿತರವನ್ನು ನೀಡುತ್ತಿದೆ. ಸರ್ಕಾರವು ಎಲ್ಲಾ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಯೋಜನೆಯಡಿ ಉಚಿತ ಪಡಿತರವನ್ನು ನೀಡುತ್ತದೆ. \ No newline at end of file diff --git a/eesanje/url_47_19_7.txt b/eesanje/url_47_19_7.txt new file mode 100644 index 0000000000000000000000000000000000000000..ec5be4e41637e151b275aa1afb1f9d389aa9b2e9 --- /dev/null +++ b/eesanje/url_47_19_7.txt @@ -0,0 +1,14 @@ +ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಆಕಾಸ ಏರ್ +ಬೆಂಗಳೂರು, ಭಾರತದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಸಂಸ್ಥೆಯಾದ ಆಕಾಸ ಏರ್ ಇಂದು ತನ್ನ ಎರಡನೇ ವಾರ್ಷಿಕೋತ್ಸದ ಸಂಭ್ರಮದಲ್ಲಿದ್ದು ವಾಯುಯಾನ ಇತಿಹಾಸದಲ್ಲಿ ಅಭೂತಪೂರ್ವ ಸಾಧನೆಯೊಂದಿಗೆ ಮಹತ್ತರ ಮೈಲಿಗಲ್ಲುಗಳನ್ನು ಸ್ಥಾಪಿಸಿದೆ. +ಯಾವುದೇ ಭಾರತೀಯ ವಿಮಾನಯಾನ ಸಂಸ್ಥೆಗೆ ಮಾಡಿರದ ಸಾಧನೆಯನ್ನು ಮಾಡಿದ ಹೆಗ್ಗಳಿಕೆಯನ್ನು ಹೊಂದಿದೆ. ಆಕಾಸ ಏರ್‌ಲೈನ್ ತನ್ನ ಮೊದಲ ವಾಣಿಜ್ಯ ಹಾರಾಟವನ್ನು 07 ಆಗಸ್ಟ್ 2022 ರಂದು ಮುಂಬೈನಿಂದ ಅಹಮದಾಬಾದ್‌ಗೆ ನಿರ್ವಹಿಸಿತು. ಸಹಾನುಭೂತಿಯ ಸೇವಾ ಸಂಸ್ಕೃತಿ, ವಿಶ್ವಾಸಾರ್ಹ ಕಾರ್ಯಾಚರಣೆಗಳು ಮತ್ತು ಕೈಗೆಟುಕುವ ದರಗಳ ಮೂಲಕ ಭಾರತೀಯ ಏರ್‌ಲೈನ್‌ನ ಪ್ರಾತಿನಿಧ್ಯವನ್ನು ಮರುವ್ಯಾಖ್ಯಾನಿಸಿದೆ. +ಆಕಾಸ ಏರ್ ಭಾರತದ ಅತ್ಯಂತ ಸಮಯ ಪಾಲನಾ ಏರ್ ಲೈನ್ ಎಂಬ ಹೆಗ್ಗಳಿಕೆಯನ್ನು ಗಳಿಸಿದೆ. ಕಾರ್ಯಾಚರಣೆಯ ದಕ್ಷತೆಗಳು ಮತ್ತು ಅತ್ಯಂತ ಸಕಾರಾತ್ಮಕ ಗ್ರಾಹಕರ ಪ್ರತಿಕ್ರಿಯೆಯೊಂದಿಗೆ ಪ್ರಾರಂಭದಿಂದಲೂ ಭಾರತದಲ್ಲಿ 11 ಮಿಲಿಯನ್ ಪ್ರಯಾಣಿಕರ ಆದ್ಯತಾ ವಾಹಕವಾಗಿದೆ. ಜನರು, ಸಂಸ್ಕೃತಿಗಳು ಮತ್ತು ಪ್ರದೇಶಗಳನ್ನು ಸಂಪರ್ಕಿಸುವ ಮೂಲಕ ವಿಮಾನ ಪ್ರಯಾಣದ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಪ್ರಯತ್ನಕ್ಕೆ ಅನುಗುಣವಾಗಿ, ಆಕಾಸ ಏರ್ ಮೂರು-ಅಂಕಿಯ ಬೆಳವಣಿಗೆಯನ್ನು ದಾಖಲಿಸಿದೆ ಮತ್ತು ಜಾಗತಿಕ ವಾಯುಯಾನ ಇತಿಹಾಸದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಸಂಸ್ಥೆಯಾಗಿ ಮುನ್ನುಗ್ಗುತ್ತಿದೆ. +ಸಂಭ್ರಮಾಚರಣೆ ಸಂದರ್ಭದಲ್ಲಿ ಸಂತಸ ಹಂಚಿಕೊಂಡ ಆಕಾಸ ಏರ್‌ನ ಸಂಸ್ಥಾಪಕ ಮತ್ತು ಸಿಇಒ ವಿನಯ್ ದುಬೆ, “ಎರಡು ವರ್ಷಗಳ ಹಿಂದೆ ನಾವು ವಿಮಾನಯಾನದಲ್ಲಿ ಅತ್ಯುತ್ತಮ ಸೇವೆಯನ್ನು ಒದಗಿಸುವ ಉದ್ದೇಶದೊಂದಿಗೆ ಪ್ರಾರಂಭಗೊಂಡ ನಮ್ಮ ಸಂಸ್ಥೆ ಇಂದು ಯಶಸ್ವಿಯಾಗಿ ತನ್ನ ಗುರಿಸಾಧಿಸಿದ್ದಕ್ಕಾಗಿ ನನಗೆ ಹೆಮ್ಮೆ ಎನ್ನಿಸುತ್ತಿದೆ “’ ಎಂದರು. ವಿಶ್ವಾಸಾರ್ಹತೆ, ಸೇವಾ ಉತ್ಕೃಷ್ಟತೆ ಮತ್ತು ಕೈಗೆಟುಕುವ ಬೆಲೆಗೆ ನಮ್ಮ ಬದ್ಧರಾಗಿದ್ದೇವೆ. ನಾವು ಭಾರತೀಯ ಆಕಾಶದಲ್ಲಿ ಅತ್ಯಂತ ಆರಾಮದಾಯಕವಾದ ಆಸನದೊಂದಿಗೆ ಸಾಟಿಯಿಲ್ಲದ ಹಾರಾಟದ ತಾಜಾ ಅನುಭವವನ್ನು ನೀಡುತ್ತೇವೆ. ಪ್ರಯಾಣಕರಿಗೆ ಆರಾಮದಾಯಕ ಸೇವೆಯನ್ನು ನೀಡುವ ಮನೋಭಾವ ಹೊಂದಿರುರ ನಮ್ಮ ಸಿಬ್ಬಂದಿ ಪ್ರಯಾಣಿಕರಿಗೆ ಎಚ್ಚರಿಕೆಯಿಂದ ಶುದ್ಧ ಮತ್ತು ರುಚಿಕಟ್ಟಾದ ತಿಂಡಿತಿನಿಸು ಮತ್ತು ಭೋಜನ ಪೂರೈಸುವಲ್ಲಿ ಹಿಂದೆ ಬಿದ್ದಿಲ್ಲ. ಇತರ ಭಾರತೀಯ ಏರ್ ಲೈನ್ ಸಂಸ್ಥೆಗಳಿಗೆ ಹೋಲಿಸಿದರೆ ಕಳೆದ ವರ್ಷದಲ್ಲಿ ಹೆಚ್ಚಿನ ಕಾರ್ಯಾಚರಣೆಯ ವಿಶ್ವಾಸಾರ್ಹತೆ ಗಳಿಸಿದ್ದೇವೆ. ಬೆರಳೆಣಿಕೆಯಷ್ಟು ಗ್ರಾಹಕರ ದೂರುಗಳು ಮತ್ತು ವಾಯು ಯಾನದ ರದ್ದತಿಗಳ ಮಿತಿಯಗಾಗಿ ನಾವು ಪ್ರಯಾಣಿಕರಿಂದ ಸೈ ಎನ್ನಿಸಿಕೊಂಡಿದ್ದೇವೆ ಎಂದು ದುಬೆ ಹೇಳಿದ್ದಾರೆ. +ನಮ್ಮ ಸಾಮೂಹಿಕ ಸಾಧನೆಗಳ ಹಿಂದಿನ ಪ್ರೇರಕ ಶಕ್ತಿಯಾಗಿರುವ 4000 ಕ್ಕೂ ಹೆಚ್ಚು ಅಕಾಸಿಯನ್ನರ ಪ್ರಯತ್ನ ಮತ್ತು ಉತ್ಸಾಹವಿಲ್ಲದೆ ಈ ಮೈಲಿಗಲ್ಲುಗಳು ಸಾಧ್ಯವಾಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟರು +ನಮ್ಮ ಯೋಜನೆಗಳಲ್ಲಿ ನಮ್ಮ ಪಾಲುದಾರರ ಅಚಲವಾದ ಬೆಂಬಲ ಮತ್ತು ವಿಶ್ವಾಸದ ನೇರ ಫಲಿತಾಂಶವೇ ನಮ್ಮ ಯಶಸ್ಸು. ಉದ್ಯಮದ ಬೆಳವಣಿಗೆಗೆ ನಿರಂತರವಾಗಿ ಉತ್ತೇಜನ ನೀಡಿದ ನಾವು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಡಿಜಿಎಸಿ ಗೆ ನಾವು ಅತ್ಯಂತ ಕೃತಜ್ಞರಾಗಿರುತ್ತೇವೆ. ನಮ್ಮ ಕನಸನ್ನು ನಂಬಿದ್ದಕ್ಕಾಗಿ ಮತ್ತು ಅವರ ನಿರಂತರ ಬೆಂಬಲ ಮತ್ತು ಮಾರ್ಗದರ್ಶನಕ್ಕಾಗಿ ನಾವು ನಮ್ಮ ಷೇರುದಾರರಿಗೆ ಕೃತಜ್ಞರಾಗಿರುತ್ತೇವೆ ಮತ್ತು ಭವಿಷ್ಯದ ಬಗ್ಗೆ ಉತ್ಸುಕರಾಗಿದ್ದೇವೆ ಮತ್ತು ಮುಂದೆ ಇರುವ ಅವಕಾಶಗಳ ಬಗ್ಗೆ ನಾವು ಉತ್ಸುಕರಾಗಿದ್ದೇವೆ ಮತ್ತು ಭಾರತವನ್ನು ಹೆಮ್ಮೆಪಡಿಸುವಂತಹ ವಿಮಾನಯಾನವನ್ನು ನಿರ್ಮಿಸುವುದನ್ನು ಮುಂದುವರಿಸುತ್ತೇವೆ“ಆಕಾಸ ಏರ್ ಯಾವಾಗಲೂ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹಾರುವ ವಾಹಕಕ್ಕಿಂತ ಹೆಚ್ಚು. ಇದು ಭಾರತೀಯ ಚೈತನ್ಯದ ಸಾಕಾರವಾಗಿದೆ, ಭಾರತವು ವಾಯುಯಾನ ಮಾರುಕಟ್ಟೆಯಾಗಿ ಹೊಂದಿರುವ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ” ಎಂದು ದುಬೆ ಹೇಳಿದ್ದಾರೆ.” +ಸಮಯ ಪ್ರಜ್ಞೆಗೆ ಹೆಸರಾದ ವಿಮಾನಯಾನ ಸಂಸ್ಥೆಅತ್ಯಂತ ವಿಶ್ವಾಸಾರ್ಹ ವಿಮಾನಯಾನ ಸಂಸ್ಥೆ ಎಂಬ ತನ್ನ ಬದ್ಧತೆಯನ್ನು ರುಜುವಾತುಪಡಿಸಿರುವ ಆಕಾಸ ಏರ್ ಲೈನ್ಸ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಣೆಯಲ್ಲಿ ಮುಂಚೂಣಿಯಲ್ಲಿದೆ. ಸೇವಾ ಉತ್ಕೃಷ್ಟತೆ ಮತ್ತು ಕಾರ್ಯಾಚರಣೆಯ ದಕ್ಷತೆಗೆ ಅದರ ಸಮರ್ಪಣೆಯು ಅಸಾಧಾರಣ ಫಲಿತಾಂಶಕ್ಕೆ ಕಾರಣವಾಗಿದೆ.ಸಮಯಪ್ರಜ್ಞೆ , ದೃಢವಾದ ವೇಳಾಪಟ್ಟಿ ಮತ್ತು ನಿರ್ವಹಣೆ ಅಭ್ಯಾಸಗಳಿಂದ ಬೆಂಬಲಿತವಾದ ತಡೆರಹಿತ ಪ್ರಯಾಣಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತದೆ. +ತ್ವರಿತ ವಾಣಿಜ್ಯಿಕ ವಿಸ್ತರಣೆಆಕಾಶ ಏರ್ ಪ್ರಸ್ತುತ 22 ದೇಶೀಯ ಮತ್ತು ಐದು ಅಂತರರಾಷ್ಟ್ರೀಯ ನಗರಗಳೊಂದಿಗೆ ಸಂಪರ್ಕ ಹೊಂದಿದೆ, ಅವುಗಳೆಂದರೆ ಮುಂಬೈ, ಅಹಮದಾಬಾದ್, ಬೆಂಗಳೂರು, ಚೆನ್ನೈ, ಕೊಚ್ಚಿ, ದೆಹಲಿ, ಗುವಾಹಟಿ, ಅಗರ್ತಲಾ, ಪುಣೆ, ಲಕ್ನೋ, ಗೋವಾ, ಹೈದರಾಬಾದ್, ವಾರಣಾಸಿ, ಬಾಗ್ಡೋಗ್ರಾ, ಭುವನೇಶ್ವರ, ಕೋಲ್ಕತ್ತಾ, ಪೋರ್ಟ್ ಬ್ಲೇರ್, ಅಯೋಧ್ಯೆ, ಗ್ವಾಲಿಯರ್, ಶ್ರೀನಗರ, ಪ್ರಯಾಗ್‌ರಾಜ್, ಗೋರಖ್‌ಪುರ, ದೋಹಾ (ಕತಾರ್), ಜೆಡ್ಡಾ, ರಿಯಾದ್ (ಸೌದಿ ಅರೇಬಿಯಾ ಸಾಮ್ರಾಜ್ಯ), ಅಬುಧಾಬಿ (ಯುಎಇ), ಮತ್ತು ಕುವೈತ್. ಏರ್‌ಲೈನ್ ಈಗ 22 ದೇಶೀಯ ಮತ್ತು ಐದು ಅಂತರಾಷ್ಟ್ರೀಯ ಸ್ಥಳಗಳಲ್ಲಿ 900 ಕ್ಕೂ ಹೆಚ್ಚು ಸಾಪ್ತಾಹಿಕ ವಿಮಾನಗಳನ್ನು ನಿರ್ವಹಿಸುತ್ತದೆ, ಎರಡು ವರ್ಷಗಳ ಅಲ್ಪಾವಧಿಯಲ್ಲಿ 11 ಮಿಲಿಯನ್ ಪ್ರಯಾಣಿಕರಿಗೆ ಸೇವೆ ಸಲ್ಲಿಸುವ ಮೈಲಿಗಲ್ಲನ್ನು ಸಾಧಿಸಿದೆ. +ವಿಮಾನದ ಆದೇಶ ಮತ್ತು ಅಂತರಾಷ್ಟ್ರೀಯ ಕಾರ್ಯಾಚರಣೆಯ ಇತಿಹಾಸ ನಿರ್ಮಾಣದಲ್ಲಿ ಮುನ್ನಡೆಜನವರಿ 2024 ರಲ್ಲಿ, ಆಕಾಶ ಏರ್ 150 ವಿಮಾನಗಳ ದೃಢವಾದ ಆದೇಶವನ್ನು ಘೋಷಿಸಿತು, ನಾಗರಿಕ ವಿಮಾನಯಾನ ಇತಿಹಾಸದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ 17 ತಿಂಗಳೊಳಗೆ ಈ ಗಾತ್ರದ ದೃಢವಾದ ಆದೇಶದ ದಾಖಲೆಯನ್ನೇ ನಿರ್ಮಿಸಿದ ಏಕೈಕ ಭಾರತೀಯ ವಿಮಾನಯಾನ ಸಂಸ್ಥೆಯಾಗಿದೆ. ಈ ಹೆಗ್ಗುರುತು ಏರ್‌ಕ್ರಾಫ್ಟ್ ಆರ್ಡರ್ ಏರ್‌ಲೈನ್‌ನ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗಟ್ಟಿಗೊಳಿಸಿದೆ ಮತ್ತು ಅದರ ದೃಢವಾದ ಆರ್ಥಿಕ ಅಡಿಪಾಯಕ್ಕೆ ಸಾಕ್ಷಿಯಾಗಿದೆ. +ಮಾರ್ಚ್ 2024 ರಲ್ಲಿ, ಆಕಾಶ ಏರ್ 19 ತಿಂಗಳ ದಾಖಲೆಯ ಅವಧಿಯಲ್ಲಿ ವಿದೇಶಕ್ಕೆ ಹಾರಿದ ಮೊದಲ ಭಾರತೀಯ ವಿಮಾನಯಾನ ಸಂಸ್ಥೆಯಾಗಿದೆ. ಅಲ್ಲಿಂದೀಚೆಗೆ, ಆಕಾಸ ಏರ್ ತನ್ನ ಜಾಗತಿಕ ಹೆಜ್ಜೆಗುರುತನ್ನು ವೇಗವಾಗಿ ಹೆಚ್ಚಿಸಿದೆ ಮತ್ತು ದೋಹಾ, ರಿಯಾದ್, ಅಬುಧಾಬಿ, ಜೆಡ್ಡಾ ಮತ್ತು ಕುವೈತ್ ಸೇರಿದಂತೆ ಐದು ಸ್ಥಳಗಳಿಗೆ 35 ಸಾಪ್ತಾಹಿಕ ಅಂತರಾಷ್ಟ್ರೀಯ ವಿಮಾನಗಳನ್ನು ಕೇವಲ 120 ದಿನಗಳ ಅಂತರರಾಷ್ಟ್ರೀಯ ಹಾರಾಟದೊಳಗೆ ನಿರ್ವಹಿಸುತ್ತದೆ. +ಸೇವೆಯ ಶ್ರೇಷ್ಠತೆಗೆ ಬದ್ಧಆಕಾಸ ಏರ್‌ನ ಸಹಾನುಭೂತಿ ಮತ್ತು ಯುವ ವ್ಯಕ್ತಿತ್ವ, ಉದ್ಯೋಗಿ-ಸ್ನೇಹಿ ಸಂಸ್ಕೃತಿ, ಗ್ರಾಹಕ-ಸೇವಾ ತತ್ವಶಾಸ್ತ್ರ ಮತ್ತು ಟೆಕ್-ನೇತೃತ್ವದ ವಿಧಾನವು ಲಕ್ಷಾಂತರ ಗ್ರಾಹಕರ ಸೆಳೆಯುತ್ತಿದೆ. ಪ್ರಾರಂಭದಿಂದಲೂ, ಆಕಾಶ ಏರ್ ತನ್ನ ಬಹು ಉದ್ಯಮ-ಪ್ರಥಮ ಮತ್ತು ಗ್ರಾಹಕ-ಸ್ನೇಹಿ ಕೊಡುಗೆಗಳೊಂದಿಗೆ ಭಾರತದಲ್ಲಿ ಹಾರಾಟವನ್ನು ಪ್ರಾರಂಭಿಸಿತು. ಸಾಟಿಯಿಲ್ಲದ ಹಾರಾಟದ ಅನುಭವವನ್ನು ನೀಡುವ ತನ್ನ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತಾ, ಆಕಾಶ ಏರ್ ಹಲವಾರು ಉಪಕ್ರಮಗಳನ್ನು ಪರಿಚಯಿಸಿತು. ಕೆಫೆ ಅಕಾಸಾ, ಏರ್‌ಲೈನ್‌ನ ಆನ್‌ಬೋರ್ಡ್ ಊಟ ಸೇವೆಯು ಇಲ್ಲಿಯವರೆಗೆ ಒಟ್ಟು 3.8 ಊಟಗಳನ್ನು ಒದಗಿಸಿದೆ. ಇದು ಉದ್ಯಮದ ಮೊದಲ ಸಮ್ಮಿಳನ ಊಟಗಳು, ಪ್ರಾದೇಶಿಕ ಸೊಗಡಿನ ರುಚಿಕಟ್ಟಾದ ಭೋಜನ ಮತ್ತು ತಿಂಡಿ ಸಿಹಿತಿಂಡಿಗಳೊಂದಿಗೆ ವಿಶಿಷ್ಟವಾದ ಪಾಕಶಾಲೆಯ ಅನುಭವವನ್ನು ನೀಡುತ್ತದೆ. +ಪೆಟ್ಸ್ ಆನ್ ಆಕಾಸ ಮೂಲಕ ತನ್ನ ಸಾಕುಪ್ರಾಣಿ ಸ್ನೇಹಿ ಕ್ಯಾರೇಜ್ ನೀತಿಯು ನೆಟ್‌ವರ್ಕ್‌ನಾದ್ಯಂತ ಪ್ರಯಾಣಿಕರಿಂದ ಅತ್ಯಂತ ಉತ್ತೇಜಕ ಪ್ರತಿಕ್ರಿಯೆಯನ್ನು ಪಡೆಯಿತು. ಗ್ರಾಹಕರ ಪ್ರತಿಕ್ರಿಯೆಯನ್ನು ಗಮನದಲ್ಲಿಟ್ಟುಕೊಂಡು, ಕ್ಯಾಬಿನ್‌ನಲ್ಲಿ ಅನುಮತಿಸಲಾದ ಸಾಕುಪ್ರಾಣಿಗಳ ತೂಕದ ಮಿತಿಯನ್ನು ಹಿಂದಿನ ಮಿತಿ 7ಕೆಜಿ ನಿಂದ 10 ಕೆಜಿಗೆ ವಿಸ್ತರಿಸಲು ಏರ್‌ಲೈನ್ ತನ್ನ ಸೇವೆಯನ್ನು ಹೆಚ್ಚಿಸಿದೆ. ನವೆಂಬರ್ 2022 ರಲ್ಲಿ ಸೇವೆಯನ್ನು ಪ್ರಾರಂಭಿಸಿದ ನಂತರ, ಆಕಾಸ ಏರ್ ತನ್ನ ದೇಶೀಯ ನೆಟ್ವರ್ಕ್ನಲ್ಲಿ 3700 ಸಾಕುಪ್ರಾಣಿಗಳನ್ನು ಹಾರಿಸಿದೆ. +ಆಕಾಸ ಏರ್ ತನ್ನ ಅಸಾಧಾರಣ ಗ್ರಾಹಕ ಸೇವೆಗಳಾದ ಆಕಾಸ ಗೆಟ್ ಅರ್ಲಿ, ಸೀಟ್ & ಮೀಲ್ ಡೀಲ್, ಎಕ್ಟ್ರಾ ಸೀಟ್ ಮತ್ತು ಆಕಾಸ ಹಾಲಿಡೇಸ ತನ್ನ ಯೋಜನೆಗಳನ್ನು ಈಡೇರಿಸಲು 25+ ಪೂರಕ ಉತ್ಪನ್ನಗಳನ್ನು ನೀಡುತ್ತದೆ. ತನ್ನ ಗ್ರಾಹಕರಿಗೆ ಕ್ಯಾಬಿನ್ ಅನುಭವವನ್ನು ಸ್ಥಿರವಾಗಿ ಹೆಚ್ಚಿಸುವ ಮೂಲಕ, ಆಕಾಸ ಆಕಾಸದಿಂದ ಸ್ಕೈಸ್ಕೋರ್, ಸ್ಕೈಲೈಟ್ಸ್ ಮತ್ತು ಕ್ವೈಟ್‌ಫ್ಲೈಟ್‌ಗಳಂತಹ ಹಲವಾರು ಉದ್ಯಮ-ಸೇವೆಗಳನ್ನು ಪ್ರಾರಂಭಿಸಿದೆ. \ No newline at end of file diff --git a/eesanje/url_47_19_8.txt b/eesanje/url_47_19_8.txt new file mode 100644 index 0000000000000000000000000000000000000000..ef6e869248370c41d739bdaa9c093753ecad8f7c --- /dev/null +++ b/eesanje/url_47_19_8.txt @@ -0,0 +1,12 @@ +ಜಾತಿಯಾರಿತ ಜನಗಣತಿ ನಡೆಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ + - +ನವದೆಹಲಿ,ಸೆ.2– ದೇಶದಲ್ಲಿ ಹಿಂದುಳಿದ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾತಿ ಆಧಾರಿತ ಜನಗಣತಿ ನಡೆಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. +ನಾವು ಇಲ್ಲಿ ನೋಟಿಸ್ ನೀಡುತ್ತಿಲ್ಲ. ಇದನ್ನು ಈಗ ವಿಚಾರಣೆ ನಡೆಸಬೇಕೆ ಅಥವಾ ಆರು ತಿಂಗಳ ನಂತರ ನಡೆಸಬೇಕೆ, ಇವೆಲ್ಲವೂ ಮೂಲಭೂತವಾಗಿ ಆಡಳಿತದ ಸಮಸ್ಯೆಗಳೆಂದು ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಪೀಠವು ಟೀಕಿಸಿತು. +ನಾವು ಈ ಅರ್ಜಿಯನ್ನು ವಜಾ ಮಾಡುತ್ತೇವೆ. ಪ್ರಸ್ತಾಪಿಸಲಾದ ಸಮಸ್ಯೆಗಳು ನೀತಿಯ ಭಾಗದಲ್ಲಿವೆ. ನೀವು ಹಿಂಪಡೆಯಲು ಬಯಸಿದರೆ ಅದನ್ನು ಹಿಂತೆಗೆದುಕೊಳ್ಳಿ. ಇಲ್ಲದಿದ್ದರೆ ನಾವು ವಜಾಗೊಳಿಸುವ ಆದೇಶ ನೀಡುತ್ತೇವೆ ಎಂದು ನ್ಯಾಯಮೂರ್ತಿ ಎಸ್ವಿಎನ್ ಭಟ್ಟಿ ಅವರನ್ನು ಒಳಗೊಂಡ ಪೀಠವು ಹೇಳಿತು. +ಅಂತಿಮವಾಗಿ ಸುಪ್ರೀಂಕೋರ್ಟ್ನಲ್ಲಿ ಸೆ.9ರಂದು ಒಂದೇ ರೀತಿಯ ವಿಷಯ ವಿಚಾರಣೆಗೆ ಬರಲಿದೆ ಎಂದು ಆರಂಭದಲ್ಲಿ ಸಲ್ಲಿಸಿದ ಅರ್ಜಿದಾರರ ವಕೀಲರು, ಪಿಐಎಲ್ ಹಿಂಪಡೆಯಲು ನಿರ್ಧರಿಸಿದರು.2024ರ ಜನಗಣತಿ ಮತ್ತು ಕಲ್ಯಾಣ ಕ್ರಮಗಳ ಅನುಷ್ಠಾನಕ್ಕಾಗಿ ಸಾಮಾಜಿಕ-ಆರ್ಥಿಕ ಜಾತಿ ಗಣತಿ (ಎಸ್ಇಸಿಸಿ) ಗಾಗಿ ಡೇಟಾವನ್ನು ತ್ವರಿತವಾಗಿ ಎಣಿಕೆ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. +ಹಿಂದುಳಿದ ಗುಂಪುಗಳನ್ನು ಗುರುತಿಸಲು, ಸಮಾನ ಸಂಪನೂಲ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಉದ್ದೇಶಿತ ನೀತಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಎಸ್ಇಸಿಸಿ ಸಹಾಯ ಮಾಡುತ್ತದೆ ಎಂದು ಪಿಐಎಲ್ ಹೇಳಿದೆ. ಸಾಮಾಜಿಕ ನ್ಯಾಯ ಮತ್ತು ಸಾಂವಿಧಾನಿಕ ಉದ್ದೇಶಗಳನ್ನು ಸಾಧಿಸಲು ಕೇಂದ್ರ ಸರ್ಕಾರಕ್ಕೆ ಹಿಂದುಳಿದ ಮತ್ತು ಇತರ ಅಂಚಿನಲ್ಲಿರುವ ವರ್ಗಗಳ ನಿಖರವಾದ ದತ್ತಾಂಶವು ನಿರ್ಣಾಯಕವಾಗಿದೆ. +ಇದಲ್ಲದೆ, ತಿಳುವಳಿಕೆಯುಳ್ಳ ನೀತಿ-ನಿರ್ಮಾಣಕ್ಕಾಗಿ ಡೇಟಾ-ಚಾಲಿತ ವಿಧಾನವು ಅತ್ಯಗತ್ಯ ಮತ್ತು ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳು ಮತ್ತು ಜನಸಂಖ್ಯಾಶಾಸ್ತ್ರವನ್ನು ಅರ್ಥಮಾಡಿಕೊಳ್ಳಲು ನಿಖರವಾದ ಡೇಟಾ ಸಹಾಯ ಮಾಡುತ್ತದೆ, ಅನನುಕೂಲಕರ ಸಮುದಾಯಗಳನ್ನು ಮೇಲಕ್ಕೆತ್ತಲು ಉದ್ದೇಶಿತ ಮಧ್ಯಸ್ಥಿಕೆಗಳನ್ನು ಸಕ್ರಿಯಗೊಳಿಸುತ್ತದೆ ಎಂದು ಅರ್ಜಿಯು ಹೇಳಿದೆ. +ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, 2011 ರಲ್ಲಿ ನಡೆಸಿದ ಇಅಅ ಜಾತಿ ಮಾಹಿತಿ ಸೇರಿದಂತೆ ಸಾಮಾಜಿಕ-ಆರ್ಥಿಕ ಸೂಚಕಗಳ ಸಮಗ್ರ ಡೇಟಾವನ್ನು ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಆದಾಗ್ಯೂ, ಡೇಟಾದ ಗುಣಮಟ್ಟ ಮತ್ತು ವರ್ಗೀಕರಣದ ಸವಾಲುಗಳ ಮೇಲಿನ ಕಾಳಜಿಯು ಕಚ್ಚಾ ಜಾತಿಯ ದತ್ತಾಂಶದ ಬಿಡುಗಡೆ ಮತ್ತು ಪರಿಣಾಮಕಾರಿ ಬಳಕೆಯನ್ನು ತಡೆಯುತ್ತದೆ. +ಈ ಡೇಟಾವನ್ನು ವರ್ಗೀಕರಿಸಲು ಮತ್ತು ವರ್ಗೀಕರಿಸಲು ತಜ್ಞರ ಗುಂಪನ್ನು ರಚಿಸಲಾಗಿದೆ, ಆದರೆ ಅದರ ಶಿಫಾರಸುಗಳನ್ನು ಕೇಂದ್ರ ಸರ್ಕಾರವು ಇನ್ನೂ ಬಿಡುಗಡೆ ಮಾಡಬೇಕಾಗಿದೆ ಎಂದು ವಕೀಲ ಶ್ರವಣ್ ಕುಮಾರ್ ಕರಜನ್ ಅವರ ಮೂಲಕ ಸಲ್ಲಿಸಿದ ಪಿಐಎಲ್ ಹೇಳಿದೆ. +ಸಂವಿಧಾನದ 340ನೇ ವಿಧಿಯು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ತನಿಖೆಗಾಗಿ ಆಯೋಗವನ್ನು ನೇಮಿಸುವುದನ್ನು ಕಡ್ಡಾಯಗೊಳಿಸುತ್ತದೆ ಎಂದಿದೆ. +ಜನಗಣತಿ-2021ಕ್ಕೆ ಇಲ್ಲಿಯವರೆಗೆ ಎಣಿಕೆ ನಡೆಸಿಲ್ಲ. ಆರಂಭದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಇದನ್ನು ಮಾಡಲಾಗಲಿಲ್ಲ ಮತ್ತು ನಂತರ ಅದನ್ನು ಮತ್ತೆ ಮತ್ತೆ ಮುಂದೂಡಲಾಗಿದೆ. 2021ರ ದೇಶದ ಜನಗಣತಿಯ ಎಣಿಕೆಯನ್ನು ಏಪ್ರಿಲ್ 2019 ರಲ್ಲಿ ಪ್ರಾರಂಭಿಸಲಾಯಿತು. ಆದರೆ ಇದು ಇಲ್ಲಿಯವರೆಗೆ ಮುಕ್ತಾಯಗೊಂಡಿಲ್ಲಎಂದು ಮನವಿಯಲ್ಲಿ ತಿಳಿಸಲಾಗಿದೆ. ಜನಗಣತಿಯಲ್ಲಿನ ವಿಳಂಬವು ಕಳೆದ ಜನಗಣತಿಯಂತೆ ಪ್ರಮುಖ ಡೇಟಾ ಅಂತರಕ್ಕೆ ಕಾರಣವಾಗಿದೆ ಎಂದು ಪಿಐಎಲ್ನಲ್ಲಿ ವಕೀಲರು ತಿಳಿಸಿದ್ದಾರೆ. \ No newline at end of file diff --git a/eesanje/url_47_19_9.txt b/eesanje/url_47_19_9.txt new file mode 100644 index 0000000000000000000000000000000000000000..6d4938cfb3888bbf0984b9b87035fa3e46df3bf5 --- /dev/null +++ b/eesanje/url_47_19_9.txt @@ -0,0 +1,8 @@ +ಜಾರ್ಖಂಡ್‌: ಕಾನ್ಸ್‌ಟೇಬಲ್‌ಗಳ ನೇಮಕಾತಿ ದೈಹಿಕ ಪರೀಕ್ಷೆ ವೇಳೆ 11 ಅಭ್ಯರ್ಥಿಗಳ ಸಾವು +11 +ರಾಂಚಿ,ಸೆ.2-ಜಾರ್ಖಂಡ್‌ನಲ್ಲಿ ಅಬಕಾರಿ ಕಾನ್ಸ್ ಟೇಬಲ್‌ಗಳ ನೇಮಕಾತಿಗೆ ಚಾಲನೆಯ ಸಂದರ್ಭದಲ್ಲಿ ದೈಹಿಕ ಪರೀಕ್ಷೆಯನ್ನು ಕೈಗೊಳ್ಳುವಾಗ ಸುಮಾರು 11 ಅಭ್ಯರ್ಥಿಗಳು ಸಾವನ್ನಪ್ಪಿದ್ದಾರೆ. +ಜಾರ್ಖಂಡ್‌ ಅಬಕಾರಿ ಕಾನ್ಸ್ ಟೇಬಲ್‌‍ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆ.22 ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ಪ್ರಾರಂಭವಾದವು. +ಪಲಮುದಲ್ಲಿ ನಾಲ್ಕು ಸಾವುಗಳು ಸಂಭವಿಸಿವೆ, ಗಿರಿದಿಹ್‌ ಮತ್ತು ಹಜಾರಿಬಾಗ್‌ನಲ್ಲಿ ತಲಾ ಇಬ್ಬರು ಮತ್ತು ರಾಂಚಿಯ ಜಾಗ್ವಾರ್‌ ಕೇಂದ್ರ ಮತ್ತು ಪೂರ್ವ ಸಿಂಗ್‌ಭೂಮ್‌ನ ಮೊಸಬಾನಿ ಮತ್ತು ಸಾಹೇಬ್‌ಗಂಜ್‌‍ ಕೇಂದ್ರಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಜಿ (ಕಾರ್ಯಾಚರಣೆ) ಅಮೋಲ್‌ ವಿ ಹೋಮ್ಕರ್‌ ಹೇಳಿದ್ದಾರೆ. +ಅಸ್ವಾಭಾವಿಕ ಸಾವಿನ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು ಕಳೆದ ಆಗಸ್ಟ್‌ 30 ರವರೆಗೆ ಒಟ್ಟು 1,27,772 ಆಕಾಂಕ್ಷಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 78,023 ಮಂದಿ ತೇರ್ಗಡೆಯಾಗಿದ್ದಾರೆ ಎಂದು ಅವರು ಹೇಳಿದರು. +ಎಲ್ಲಾ ಕೇಂದ್ರಗಳಲ್ಲಿ ವೈದ್ಯಕೀಯ ತಂಡಗಳು, ಔಷಧಿಗಳು, ಆಂಬ್ಯುಲೆನ್ಸ್ , ಮೊಬೈಲ್‌ ಶೌಚಾಲಯಗಳು ಮತ್ತು ಕುಡಿಯುವ ನೀರು ಸೇರಿದಂತೆ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿತ್ತು ಎಂದು ಹೋಮ್ಕರ್‌ ಹೇಳಿದರು. +ಪೊಲೀಸ್‌‍ ಅಧಿಕಾರಿಗಳ ದುರಾಡಳಿತದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಿ ಬಿಜೆಪಿ ಯುವ ಘಟಕವು ರಾಂಚಿಯ ಆಲ್ಬರ್ಟ್‌ ಎಕ್ಕಾ ಚೌಕ್‌ನಲ್ಲಿ ಜೆಎಂಎಂ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. \ No newline at end of file diff --git a/eesanje/url_47_1_1.txt b/eesanje/url_47_1_1.txt new file mode 100644 index 0000000000000000000000000000000000000000..bef2c3ce9cc779b11952b36ec31acecd09cba1d3 --- /dev/null +++ b/eesanje/url_47_1_1.txt @@ -0,0 +1,6 @@ +ತಿರುಪತಿ ಅನ್ನಪ್ರಸಾದ ಕಲುಷಿತ ಆರೋಪ ತಳ್ಳಿ ಹಾಕಿದ ಟಿಟಿಡಿ + : , ‘ +ತಿರುಪತಿ,ಅ.6-ವೆಂಕಟೇಶ್ವರ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ (ದೇವಸ್ಥಾನದ ನೈವೇದ್ಯ) ಕೀಟಗಳು ಕಂಡುಬಂದಿವೆ ಎಂಬ ಭಕ್ತರ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ತಳ್ಳಿಹಾಕಿದೆ. +ಬುಧವಾರ ಮಧ್ಯಾಹ್ನ 1.30ಕ್ಕೆ ದೇವಸ್ಥಾನದಲ್ಲಿ ಊಟ ಬಡಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ತನ್ನ ಮೊಸರು ಅನ್ನದಲ್ಲಿ ಮಿಲಿಪೈಡ್‌ ಕಂಡುಬಂದಿದೆ. ಈ ನಿರ್ಲಕ್ಷ್ಯ ಸ್ವೀಕಾರಾರ್ಹವಲ್ಲ ಮಕ್ಕಳು ಅಥವಾ ಇತರರು ಕಲುಷಿತ ಆಹಾರವನ್ನು ಸೇವಿಸಿದರೆ, ಸಂಭಾವ್ಯ ಆಹಾರ ವಿಷಕ್ಕೆ ಯಾರು ಹೊಣೆಗಾರರಾಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಟಿಟಿಡಿ ಈ ಆರೋಪಗಳನ್ನು ತಳ್ಳಿ ಹಾಕಿದ್ದು, ಅವುಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದೆ. +ಶ್ರೀವಾರಿ ದರ್ಶನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಬಿಸಿಯೂಟ ಅನ್ನ ಪ್ರಸಾದವನ್ನು ಟಿಟಿಡಿ ಸಿದ್ಧಪಡಿಸುತ್ತಿದ್ದು, ಆಹಾರದಲ್ಲಿ ಮಿಲಿಪೆಡ್‌ ಬೀದಿದ್ದೆ ಎಂಬುದು ಸುಳ್ಳು ಹೇಳಿಕೆಯಾಗಿದೆ. ಇದು ವೆಂಕಟೇಶ್ವರನ ಮೇಲಿನ ಭಕ್ತರ ನಂಬಿಕೆಯನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಮತ್ತು ಸಂಸ್ಥೆಯನ್ನು ದೂಷಿಸುವ ಸಾಧನವಾಗಿದೆ ಎಂದು ಟಿಟಿಡಿ ಹೇಳಿಕೊಂಡಿದೆ. +ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬಿನಂಶವಿದೆ ಎಂಬ ಆರೋಪದ ಕಾರಣ ಸಿಬಿಐ ನೆರವಿನ ವಿಶೇಷ ತನಿಖಾ ತಂಡವು ಸುಪ್ರೀಂಕೋರ್ಟ್‌ ಆದೇಶದ ಮೇರೆಗೆ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಂಶವನ್ನು ಪರಿಶೀಲಿಸುತ್ತಿದೆ. ಇದರ ಬೆನ್ನಲ್ಲೇ ಪ್ರಸಾದದಲ್ಲಿ ಕೀಟ ಬಿದ್ದಿದ್ದೆ ಎಂಬ ದೂರು ಬಂದಿದೆ. \ No newline at end of file diff --git a/eesanje/url_47_1_10.txt b/eesanje/url_47_1_10.txt new file mode 100644 index 0000000000000000000000000000000000000000..67b4f32c0476547bca72cf2a37fa87d77403fe68 --- /dev/null +++ b/eesanje/url_47_1_10.txt @@ -0,0 +1,9 @@ +18ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆ : ದಸರಾಗೆ ಮೋದಿ ಕೊಡುಗೆ +- 18th +ನವದೆಹಲಿ, ಅ.5-ಪ್ರಧಾನಮಂತ್ರಿ ಕಿಸಾನ್‌ ಯೋಜನೆಯಡಿ ದೇಶದ ರೈತರಿಗೆ ನರೇಂದ್ರ ಮೋದಿ ದಸರಾ ಹಬ್ಬದ ಉಡುಗೊರೆ ಎಂಬಂತೆ 18ನೇ ಕಂತಿನ 2000 ರೂಪಾಯಿ ಹಣವನ್ನು ಇಂದು ಬಿಡುಗಡೆ ಮಾಡಿದ್ದಾರೆ. +ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ತಲಾ 2 ಸಾವಿರ ರೂ. ನೇರವಾಗಿ ಜಮೆಯಾಗಿದೆ. ಈ ಕಂತಿನಲ್ಲಿ ಟ್ಟು 20,000 ಕೋಟಿ ರೂ.ಗಳನ್ನು ಸರ್ಕಾರ ರೈತರಿಗೆ ಪಾವತಿಸಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ-ಕಿಸಾನ್‌‍) ಯೋಜನೆಯಡಿ ಪ್ರತಿ ವರ್ಷ 6 ಸಾವಿರ ನೀಡುವುದಾಗಿ ಸರ್ಕಾರ ಘೋಷಿಸಿತ್ತು, ಪ್ರತಿ 4 ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಹಣ ನೀಡುವ ಯೋಜನೆ ಇದಾಗಿದ್ದು, ಈ ಹಿಂದೆ ಕೊನೆಯ ಕಂತು ಜೂನ್‌ನಲ್ಲಿ ಬಿಡುಗಡೆಯಾಗಿತ್ತು. +ರೈತರಿಗೆ 2000 ರೂಪಾಯಿ ಕಂತು ಬಿಡುಗಡೆ ಮಾಡಿದ್ದು, ದೇಶಾದ್ಯಂತ 2.5 ಕೋಟಿ ರೈತರು ವೆಬ್‌‍ಕಾಸ್ಟ್‌ ಮೂಲಕ ಯೋಜನೆಗೆ ಸೇರಿದ್ದಾರೆ. ಮೋದಿಯವರು 17ನೇ ಕಂತಿನ ಮೂಲಕ ರೈತರ ಖಾತೆಗಳಿಗೆ ಸುಮಾರು 30 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು. +17ನೇ ಕಂತಿನಲ್ಲಿ ಸುಮಾರು 9.5 ಕೋಟಿ ರೈತರು ಇದರ ಲಾಭ ಪಡೆದಿದ್ದಾರೆ. ಈ ಹಿಂದೆ ಬಿಡುಗಡೆಯಾದ ಕಂತಿಗೆ ಹೋಲಿಸಿದರೆ ಸುಮಾರು 25 ಲಕ್ಷ ರೈತರು ಹೆಚ್ಚು ಲಾಭ ಪಡೆದಿದ್ದಾರೆ. ಆದರೆ, ಕೆವೈಸಿ ಪೂರ್ಣಗೊಳ್ಳದ ಕಾರಣ ಹೆಚ್ಚಿನ ಸಂಖ್ಯೆಯ ರೈತರು ನಿರಾಶೆಗೊಂಡಿದ್ದರು. +ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಯ ಪ್ರಯೋಜನಗಳನ್ನು ನೀಡಲು ಸರ್ಕಾರವು ಸರಿಯಾದ ಮಾನದಂಡಗಳನ್ನು ಮಾಡಿದೆ. ಕೇವಲ 2 ಹೆಕ್ಟೇರ್‌ ಜಮೀನು ಹೊಂದಿರುವ ರೈತರು ಮಾತ್ರ ಈ ಯೋಜನೆಯ ಲಾಭ ಪಡೆಯುತ್ತಾರೆ. ನೀವು ನಿಮ್ಮ ಅರ್ಹತೆಯನ್ನು ಪರೀಕ್ಷಿಸಲು ಬಯಸಿದರೆ, ಒ ಕಿಸಾನ್‌ ವೆಬ್‌‍ಸೈಟ್‌‍ಗೆ ಹೋಗಿ ಫಲಾನುಭವಿಗಳ ಪಟ್ಟಿಯ ಲಿಂಕ್‌ ಅನ್ನು ತೆರೆಯಿರಿ. ನಿಮ್ಮ ರಾಜ್ಯ, ಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮದ ಬಗ್ಗೆ ಮಾಹಿತಿ ನೀಡುವ ಮೂಲಕ ನಿಮ್ಮ ಹೆಸರನ್ನು ಪರಿಶೀಲಿಸಬಹುದು. +ಅರ್ಹತೆ ಇದ್ದರೂ ಕಂತಿನ ಹಣ ಸಿಗದೇ ಇದ್ದಲ್ಲಿ ದೂರು ನೀಡಲು ಸರ್ಕಾರ ಹಲವು ಆಯ್ಕೆಗಳನ್ನು ನೀಡಿದೆ. ಮೊದಲನೆಯದಾಗಿ, ನಿಮ್ಮ ಸಮಸ್ಯೆಯನ್ನು -@.inನಲ್ಲಿ ಬರೆಯುವ ಮೂಲಕ ನೀವು ದೂರು ನೀಡಬಹುದು. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬರದಿದ್ದರೆ ಸಹಾಯವಾಣಿ ಸಂಖ್ಯೆ 155261 ಅಥವಾ 1800115526 ಅನ್ನು ಸಹ ಸಂಪರ್ಕಿಸಬಹುದು. +ಇದಲ್ಲದೇ 011-23381092 ಈ ಸಂಖ್ಯೆಗೆ ಸಂಪರ್ಕಿಸುವ ಆಯ್ಕೆಯನ್ನೂ ಸರ್ಕಾರ ನೀಡಿದೆ. 2018 ರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಲಾಯಿತು. ಈ ಯೋಜನೆ ಅಡಿಯಲ್ಲಿ ಅರ್ಹ ರೈತರು 3 ಕಂತುಗಳಲ್ಲಿ ತಲಾ 2,000 ರೂ.ಗಳಂತೆ ವಾರ್ಷಿಕ ಒಟ್ಟು 6,000 ರೂ.ಗಳನ್ನು ಪಡೆಯುತ್ತಾರೆ. ಈ ಮೊತ್ತವರು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. \ No newline at end of file diff --git a/eesanje/url_47_1_11.txt b/eesanje/url_47_1_11.txt new file mode 100644 index 0000000000000000000000000000000000000000..09b922ac212ff36ce9a5e5cac4004ee7d2d2d8a7 --- /dev/null +++ b/eesanje/url_47_1_11.txt @@ -0,0 +1,8 @@ +ಹರಿಯಾಣದ ಬದಲಾವಣೆಗಾಗಿ ಮತ ನೀಡುವಂತೆ ಕಾಂಗ್ರೆಸ್‌‍ ನಾಯಕರು ಮನವಿ + : , +ನವದೆಹಲಿ, ಅ. 5 (ಪಿಟಿಐ)ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಹರಿಯಾಣದ ಮತದಾರರು ರಾಜ್ಯದಲ್ಲಿ ಬದಲಾವಣೆಯನ್ನು ಪ್ರಾರಂಭಿಸಲು ಸಹಾಯ ಮಾಡಲು ಕಾಂಗ್ರೆಸ್‌‍ಗೆ ತಮ ಮತವನ್ನು ಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. +ಇಂದು ನಡೆಯುತ್ತಿರುವ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಣ್ಣಿಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ರೈತರ ಏಳಿಗೆ, ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಗೌರವ, ಭದ್ರತೆ ಮತ್ತು ಪ್ರತಿ ಕುಟುಂಬದ ಯೋಗಕ್ಷೇಮಕ್ಕಾಗಿ ಕಾಂಗ್ರೆಸ್‌‍ಗೆ ಮತ ಹಾಕುವಂತೆ ಒತ್ತಾಯಿಸಿ ಎಕ್‌್ಸ ಮಾಡಿದ್ದಾರೆ.ನೀವು ಕಾಂಗ್ರೆಸ್‌‍ಗೆ ನೀಡುವ ಪ್ರತಿ ಮತವೂ ಸಂವಿಧಾನವನ್ನು ರಕ್ಷಿಸುತ್ತದೆ ಮತ್ತು ಬಿಜೆಪಿಯ ದೌರ್ಜನ್ಯದ ವಿರುದ್ಧ ನಿಮ ಅಸ್ತ್ರವಾಗಲಿದೆ ಎಂದು ಅವರು ಹಿಂದಿಯಲ್ಲಿ ಪೋಸ್ಟ್‌ನಲ್ಲಿ ಹೇಳಿದ್ದಾರೆ. +ನಿಮ ಒಂದು ಮತವು ಹರಿಯಾಣವನ್ನು ಸಮದ್ಧಿ ಮತ್ತು ಸಾಮಾಜಿಕ ನ್ಯಾಯದ ಹಾದಿಯಲ್ಲಿ ಕೊಂಡೊಯ್ಯುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಎಕ್‌್ಸನಲ್ಲಿ ಮನವಿ ಮಾಡಿಕೊಂಡಿದ್ದಾರೆ. +ಇವಿಎಂನಲ್ಲಿ ಮತ ಚಲಾಯಿಸುವ ಮೊದಲು, ಕಳೆದ 10 ವರ್ಷಗಳಲ್ಲಿ ಹರಿಯಾಣದಲ್ಲಿ ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ, ಕಾಗದದ ಸೋರಿಕೆ, ಹಳ್ಳಿಗಳು ಮತ್ತು ನಗರಗಳ ಕಳಪೆ ಸ್ಥಿತಿ, ಗುರುತಿನ ಚೀಟಿಗಳಲ್ಲಿನ ವಂಚನೆ, ಮಹಿಳಾ ಅಭದ್ರತೆ, ಸಾಮಾಜಿಕ ತಾರತಮ್ಯ ಮತ್ತು ಬೇರೇನೂ ಆಗಿಲ್ಲ ಎಂಬುದನ್ನು ನೆನಪಿಡಿ ಎಂದು ಅವರು ಕೇಳಿಕೊಂಡಿದ್ದಾರೆ. +ನಮ ಯುವಕರು, ವಿಶೇಷವಾಗಿ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರು ಈ ಪ್ರಜಾಪ್ರಭುತ್ವದ ಆಚರಣೆಯಲ್ಲಿ ಭಾಗವಹಿಸುವಂತೆ ನಾನು ಕೋರುತ್ತೇನೆ ಎಂದು ಅವರು ಹೇಳಿದರು. +ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರೈತರು, ಯುವಕರು ಮತ್ತು ಕುಸ್ತಿಪಟುಗಳಿಗೆ ಮಾಡಿದ ಅನ್ಯಾಯ ವನ್ನು ಸೋಲಿಸಲು ಮತ್ತು ರಾಜ್ಯದಲ್ಲಿ ಬಿಜೆಪಿಯ ಹತ್ತು ವರ್ಷಗಳ ದುರಾಡಳಿತ ದ ವಿರುದ್ಧ ಮತ ಚಲಾಯಿಸುವಂತೆ ಮತದಾರರಿಗೆ ಕರೆ ನೀಡಿದರು. \ No newline at end of file diff --git a/eesanje/url_47_1_12.txt b/eesanje/url_47_1_12.txt new file mode 100644 index 0000000000000000000000000000000000000000..64b4ca5eff74f4cf33008f4f3912eaf1d48152d5 --- /dev/null +++ b/eesanje/url_47_1_12.txt @@ -0,0 +1,6 @@ +ದಾಖಲೆ ಸಂಖ್ಯೆಯಲ್ಲಿ ಮತದಾನಕ್ಕೆ ಹರಿಯಾಣದ ಮತದಾರರಿಗೆ ಮೋದಿ ಕರೆ + +ನವದೆಹಲಿ,ಅ. 5 (ಪಿಟಿಐ)ತೊಂಬತ್ತು ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಹರಿಯಾಣದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. +ಪ್ರಜಾಪ್ರಭುತ್ವದ ಈ ಪವಿತ್ರ ಉತ್ಸವದ ಭಾಗವಾಗಲು ಮತ್ತು ಹೊಸ ಮತದಾನದ ದಾಖಲೆಯನ್ನು ರಚಿಸಲು ನಾನು ಎಲ್ಲ ಮತದಾರರಿಗೆ ಮನವಿ ಮಾಡುತ್ತೇನೆ ಎಂದು ಮೋದಿ ಎಕ್‌್ಸ ನಲ್ಲಿ ಪೋಸ್ಟ್‌ ಮಾಡಿದ್ದು, ತಮ ಮತದಾನದ ಹಕ್ಕನ್ನು ಮೊದಲ ಬಾರಿಗೆ ಬಳಸುತ್ತಿರುವ ಯುವ ಮತದಾರರಿಗೆ ಶುಭ ಹಾರೈಸಿದ್ದಾರೆ. +ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ, ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ಕಾಂಗ್ರೆಸ್‌‍ನ ವಿನೇಶ್‌ ಫೋಗಟ್‌, ಜೆಜೆಪಿಯ ದುಷ್ಯಂತ್‌ ಚೌತಾಲಾ ಮತ್ತು ಇತರ 1,027 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದಿನ ಚುನಾವಣೆಯಲ್ಲಿ ನಿರ್ಧಾರವಾಗಲಿದೆ. +ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಹ್ಯಾಟ್ರಿಕ್‌ ಗೆಲುವಿನ ಮೇಲೆ ಕಣ್ಣಿಟ್ಟಿದೆ, ಆದರೆ ಕಾಂಗ್ರೆಸ್‌‍ 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ. ಅಕ್ಟೋಬರ್‌ 8 ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_1_2.txt b/eesanje/url_47_1_2.txt new file mode 100644 index 0000000000000000000000000000000000000000..4747d2148e2bab27799aa429becaaf1b7f57240b --- /dev/null +++ b/eesanje/url_47_1_2.txt @@ -0,0 +1,12 @@ +ಜಾತಿ-ಪ್ರಾಂತ್ಯದ ಭಿನ್ನಾಭಿಪ್ರಾಯ ಬಿಟ್ಟು ತನ್ನದೇ ಭದ್ರತೆಗೆ ಹಿಂದೂ ಸಮಾಜ ಒಂದಾಗಬೇಕಿದೆ : ಭಾಗವತ್‌ ಕರೆ + +ಬರನ್‌ ನಗರ (ರಾಜಸ್ಥಾನ),ಅ.6– ಹಿಂದೂ ಸಮಾಜವು ತನ್ನದೇ ಆದ ಭದ್ರತೆಗಾಗಿ ಭಾಷೆ, ಜಾತಿ ಮತ್ತು ಪ್ರಾಂತ್ಯದ ಭಿನ್ನಾಭಿಪ್ರಾಯ ಮತ್ತು ವಿವಾದಗಳನ್ನು ತೊಡೆದುಹಾಕುವ ಮೂಲಕ ಒಂದಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್‌‍ಎಸ್‌‍) ಸರ್ಸಂಘಚಾಲಕ್‌ ಮೋಹನ್‌ ಭಾಗವತ್‌ ಕರೆ ನೀಡಿದ್ದಾರೆ. +ಬರನ್‌ ನಗರದ ಕೃಷಿ ಉಪಜ್‌ ಮಂಡಿಯಲ್ಲಿ ಆರೆಸ್‌‍ಎಸ್‌‍ ಸ್ವಯಂಸೇವಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಡವಳಿಕೆಯ ಶಿಸ್ತು, ರಾಜ್ಯದ ಕಡೆಗೆ ಕರ್ತವ್ಯ ಮತ್ತು ಗುರಿ-ಆಧಾರಿತ ಗುಣವನ್ನು ಹೊಂದಿರುವುದು ಸಮಾಜಕ್ಕೆ ಅವಶ್ಯಕವಾಗಿದೆ.ಹಿಂದೂ ಸಮಾಜವು ತನ್ನ ಭದ್ರತೆಗಾಗಿ ಭಾಷೆ, ಜಾತಿ ಮತ್ತು ಪ್ರಾಂತ್ಯದ ಭಿನ್ನಾಭಿಪ್ರಾಯ ಮತ್ತು ವಿವಾದಗಳನ್ನು ತೊಡೆದುಹಾಕುವ ಮೂಲಕ ಒಂದಾಗಬೇಕು ಎಂದರು. +ಸಮಾಜವು ಸಂಘಟನೆ, ಸದ್ಭಾವನೆ ಮತ್ತು ಅನ್ಯೋನ್ಯತೆಯ ಅಭ್ಯಾಸವನ್ನು ಹೊಂದಿರಬೇಕು. ನಡವಳಿಕೆಯ ಶಿಸ್ತು, ರಾಜ್ಯ ಮತ್ತು ಕರ್ತವ್ಯ ಸಮಾಜದಲ್ಲಿ ಗುರಿ ಹೊಂದುವ ಗುಣವು ನನ್ನಿಂದ ಮತ್ತು ನನ್ನ ಕುಟುಂಬದಿಂದ ಮಾತ್ರ ಅಗತ್ಯವಾಗಿದೆ, ಬದಲಿಗೆ ನಾವು ಸಮಾಜದ ಬಗ್ಗೆ ಕಾಳಜಿ ವಹಿಸುವ ಮೂಲಕ ನಮ ಜೀವನದಲ್ಲಿ ದೇವರನ್ನು ಸಾಧಿಸಬೇಕು ಎಂದು ಸಲಹೆ ಮಾಡಿದರು. +ಸಮಾಜದಲ್ಲಿ ಸಂಘಟನೆ, ಸದ್ಭಾವನೆ, ಆತೀಯತೆ ಇರುವಂತೆ ಮಾಡಬೇಕು. ನಡವಳಿಕೆಯ ಶಿಸ್ತು, ರಾಜ್ಯದ ಕಡೆಗೆ ಕರ್ತವ್ಯ ಮತ್ತು ಗುರಿ-ಆಧಾರಿತ ಗುಣ ಸಮಾಜದಲ್ಲಿ ಅಗತ್ಯ. ಸಮಾಜವು ನಾನು ಮತ್ತು ನನ್ನ ಕುಟುಂಬದಿಂದ ಮಾತ್ರ ಮಾಡಲ್ಪಟ್ಟಿಲ್ಲ; ಬದಲಾಗಿ, ಸಮಾಜದ ಬಗ್ಗೆ ಸರ್ವತೋಮುಖ ಕಾಳಜಿಯನ್ನು ತೆಗೆದುಕೊಳ್ಳುವ ಮೂಲಕ ನಾವು ನಮ ಜೀವನದಲ್ಲಿ ದೇವರನ್ನು ಸಾಧಿಸಬೇಕು ಎಂದು ಅವರು ಹೇಳಿದರು. +ಭಾರತವು ಹಿಂದೂ ರಾಷ್ಟ್ರ ಎಂದು ಪುನರುಚ್ಚರಿಸಿದ ಭಾಗವತ್‌, ಹಿಂದೂ ಎಂಬ ಪದವನ್ನು ಇಲ್ಲಿ ವಾಸಿಸುವ ಱಎಲ್ಲಾ ಪಂಗಡಗಳೞ ಜನರಿಗೆ ಬಳಸಲಾಗಿದೆ ಎಂದು ಹೇಳಿದರು, ಱಱನಾವು ಪ್ರಾಚೀನ ಕಾಲದಿಂದಲೂ ಇಲ್ಲಿ ವಾಸಿಸುತ್ತಿದ್ದೇವೆ, ಆದರೆ ಹಿಂದೂ ಎಂಬ ಹೆಸರು ನಂತರ ಬಂದಿತು. ಇಲ್ಲಿ ವಾಸಿಸುವ ಭಾರತದ ಎಲ್ಲಾ ಪಂಗಡಗಳಿಗೆ ಹಿಂದೂ ಬಳಸಲಾಯಿತು. ಹಿಂದೂಗಳು ಎಲ್ಲರನ್ನೂ ತಮವರೆಂದು ಪರಿಗಣಿಸುತ್ತಾರೆ ಮತ್ತು ಎಲ್ಲರನ್ನು ಸ್ವೀಕರಿಸುತ್ತಾರೆ. +ಹಿಂದೂ ರಾಷ್ಟ್ರ ಮತ್ತು ಇಲ್ಲಿ ವಾಸಿಸುವ ಎಲ್ಲ ಪಂಗಡಗಳ ಜನರಿಗೆ ಹಿಂದೂ ಎಂಬ ಪದವನ್ನು ಬಳಸಲಾಗಿದೆ. ಭಾರತವು ಹಿಂದೂ ರಾಷ್ಟ್ರವಾಗಿದೆ, ನಾವು ಪ್ರಾಚೀನ ಕಾಲದಿಂದಲೂ ಇಲ್ಲಿ ವಾಸಿಸುತ್ತಿದ್ದೇವೆ, ಆದರೆ ಹಿಂದೂ ಎಂಬ ಹೆಸರು ನಂತರ ಬಂದಿತು, ಇಲ್ಲಿ ವಾಸಿಸುವ ಭಾರತದ ಎಲ್ಲಾ ಪಂಗಡಗಳಿಗೆ ಹಿಂದೂ ಎಂದು ಬಳಸಲಾಗುತ್ತಿತ್ತು. +ಹಿಂದೂಗಳು ಎಲ್ಲರನ್ನು ತಮವರೆಂದು ಪರಿಗಣಿಸುತ್ತಾರೆ ಮತ್ತು ಎಲ್ಲರನ್ನು ಸ್ವೀಕರಿಸುತ್ತಾರೆ. ಹಿಂದೂ ನಾವು ಎಂದು ಹೇಳುತ್ತಾರೆ. ಸರಿ ಮತ್ತು ನಿಮ ಸ್ಥಳದಲ್ಲಿ ನೀವು ಸಹ ಸರಿಯಾಗಿರುತ್ತೀರಿ ಎಂದು ಅಭಿಪ್ರಾಯಪಟ್ಟರು. ಆರೆಎಸ್‌‍ಎಸ್‌‍ ಕೆಲಸವು ಯಾಂತ್ರಿಕವಲ್ಲ ಆದರೆ ಚಿಂತನೆ ಆಧಾರಿತವಾಗಿದೆ ಮತ್ತು ಆರೆಸ್‌‍ಎಸ್‌‍ ಮಾಡಿದ ಕೆಲಸಕ್ಕೆ ಹೋಲಿಸಬಹುದಾದ ಯಾವುದೇ ಕೆಲಸ ಜಗತ್ತಿನಲ್ಲಿ ಇಲ್ಲ ಎಂದು ಅವರು ಉಲ್ಲೇಖಿಸಿದ್ದಾರೆ. +ಸಂಘಕ್ಕೆ, ಮೌಲ್ಯಗಳು ಗುಂಪಿನ ನಾಯಕನಿಂದ ಸ್ವಯಂಸೇವಕನಿಗೆ ಮತ್ತು ಅವರಿಂದ ಸ್ವಯಂಸೇವಕರ ಕುಟುಂಬ ಸದಸ್ಯರಿಗೆ ಹೋಗುತ್ತದೆ. ಇದು ಸಂಘದಲ್ಲಿ ವ್ಯಕ್ತಿತ್ವ ವಿಕಸನದ ವಿಧಾನವಾಗಿದೆ. ಬಲಪಂಥೀಯ ಸಂಘಟನೆಯಾದ ಆರ್‌ಎಸ್‌‍ಎಸ್‌‍ ಮಾಡುತ್ತಿರುವ ಕಾರ್ಯವನ್ನು ಶ್ಲಾಘಿಸಿದ ಅವರು, ಅದರ ಕೆಲಸ ಕೇವಲ ಯಾಂತ್ರಿಕವಾಗಿರದೆ ಚಿಂತನೆ ಆಧಾರಿತವಾಗಿದೆ ಎಂದು ಹೇಳಿದರು. +ಸಂಘಕ್ಕೆ, ಮೌಲ್ಯಗಳು ಗುಂಪಿನ ನಾಯಕನಿಂದ ಸ್ವಯಂಸೇವಕನಿಗೆ ಮತ್ತು ಅವರಿಂದ ಸ್ವಯಂಸೇವಕರ ಕುಟುಂಬ ಸದಸ್ಯರಿಗೆ ಹೋಗುತ್ತದೆ ಎಂದು ಅವರು ಹೇಳಿದರು. ಇದು ಸಂಘದಲ್ಲಿ ವ್ಯಕ್ತಿತ್ವ ವಿಕಸನದ ವಿಧಾನವಾಗಿತ್ತು ಎಂದು ಭಾಗವತ್‌ ಸೇರಿಸಿದರು.ಸಂಘದ ಕೆಲಸವು ಯಾಂತ್ರಿಕವಲ್ಲ ಆದರೆ ಚಿಂತನೆ ಆಧಾರಿತವಾಗಿದೆ. ಜಗತ್ತಿನಲ್ಲಿ ಸಂಘದ ಕೆಲಸಕ್ಕೆ ಹೋಲಿಸಬಹುದಾದ ಕೆಲಸವಿಲ್ಲ. +ಸಂಘವನ್ನು ಯಾರೊಂದಿಗೂ ಹೋಲಿಸಲು ಸಾಧ್ಯವಿಲ್ಲ. ಸಂಘದಿಂದ, ಮೌಲ್ಯಗಳು ಗುಂಪಿನ ನಾಯಕನಿಗೆ, ಗುಂಪಿನ ನಾಯಕನಿಂದ ಸ್ವಯಂಸೇವಕನಿಗೆ ಮತ್ತು ಸ್ವಯಂಸೇವಕನಿಂದ ಕುಟುಂಬಕ್ಕೆ ಹೋಗುತ್ತದೆ. ಇದು ಸಂಘದಲ್ಲಿ ವ್ಯಕ್ತಿತ್ವ ವಿಕಸನದ ವಿಧಾನವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_1_3.txt b/eesanje/url_47_1_3.txt new file mode 100644 index 0000000000000000000000000000000000000000..1685a68b8ca972d8b87c990349d7097b9dc7e94c --- /dev/null +++ b/eesanje/url_47_1_3.txt @@ -0,0 +1,11 @@ +ಕಾಂಗ್ರೆಸ್ ಪರ ಸಮೀಕ್ಷೆಗಳು ಬಹುಪರಾಕ್, ಹರಿಯಾಣದಲ್ಲಿ ಸಿಎಂ ಸ್ಥಾನಕ್ಕೆ ಪೈಫೋಟಿ ಶುರು + +ಚಂಡೀಗಢ,ಅ.6-ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್ ಪರ ಬರುತ್ತಿದ್ದಂತೆ ಕೈ ಪಾಳಯದಲ್ಲಿ ಈಗಲೇ ಹಲವು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪೈಫೋಟಿ ಆರಂಭಿಸಿದ್ದಾರೆ.ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಶನಿವಾರ ಮತದಾನ ನಡೆದಿದ್ದು, ಒಂದು ದಶಕದ ನಂತರ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಜನಾದೇಶ ಪಡೆದು ಅಧಿಕಾರ ಹಿಡಿಯುವುದು ಖಚಿತ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. +ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಪ್ರಕಾರ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ 90ರಲ್ಲಿ 59 ಸ್ಥಾನಗಳನ್ನು ಮತ್ತು ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಧ್ರುವ್ ರಿಸರ್ಚ್ ಪ್ರಕಾರ, ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟ 57 ಸ್ಥಾನಗಳನ್ನು ಮತ್ತು ಎನ್ಡಿಎ ಮೈತ್ರಿಕೂಟ 27 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. +ಅಲ್ಲದೆ, ಇತರೆ ಪಕ್ಷಗಳು 0ರಿಂದ 6 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಸಿಎನ್ಎನ್ 24ನ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಇಂಡಿಯಾ ಮೈತ್ರಿಕೂಟವು 59 ಸ್ಥಾನಗಳನ್ನು ಮತ್ತು ಓಆಂ ಮೈತ್ರಿಕೂಟವು ರಾಜ್ಯದಲ್ಲಿ 21 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ. ಅಲ್ಲದೆ ಇತರೆ ಪಕ್ಷಗಳು 10 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಎಕ್ಸಿಟ್ ಪೋಲ್ ಕಾಂಗ್ರೆಸ್ ಪರ ಬರುತ್ತಿದ್ದಂತೆ ಕೈ ಪಾಳಯದಲ್ಲಿ ಈಗಲೇ ಹಲವು ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ಪೈಫೋಟಿ ತೆರೆಮರೆಯಲ್ಲಿ ಶುರು ಮಾಡಿದ್ದಾರೆ. +ಭೂಪಿಂದರ್ ಸಿಂಗ್ ಹೂಡಾ:ಸಿಎಂ ಪಟ್ಟಿಯಲ್ಲಿ ಕೇಳಿ ಬರುತ್ತಿರುವ ಮೊದಲ ಹೆಸರು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರದ್ದು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಿದ್ದಾರೆ. ಇದಲ್ಲದೇ 2005ರಿಂದ 2014ರವರೆಗೆ ಎರಡು ಬಾರಿ ಸಿಎಂ ಆಗಿದ್ದರು. ಮುಖ್ಯಮಂತ್ರಿ ಸ್ಥಾನದ ಫೈಟ್ ಬಗ್ಗೆ ಮಾತನಾಡಿದ ಅವರು, ನಾನು ಇನ್ನೂ ನಿವೃತ್ತಿ ಆಗಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಮಾತ್ರ ಸರ್ಕಾರ ರಚನೆ ಮಾಡಲಿದೆ, ಇದಲ್ಲದೇ ಮುಖ್ಯಮಂತ್ರಿ ಯಾರಾಗಬೇಕೆಂದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ +ಶೈಲಜಾ ಸುಂದರಿ:ಸಿಎಂ ರೇಸ್ನಲ್ಲಿರುವ ಮತ್ತೋರ್ವ ಪ್ರಬಲ ಪೈಪೋಟಿಯ ಹೆಸರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಮತ್ತು ಸಿರ್ಸಾದ ಸಂಸದೆ ಕುಮಾರಿ ಶೈಲಜಾ ಅವರು. ಇವರು ಪ್ರಮುಖ ದಲಿತ ನಾಯಕಿಯಾಗಿದ್ದು, ಗಾಂಧಿ ಕುಟುಂಬಕ್ಕೆ ತುಂಬಾ ಆಪ್ತರೂ ಆಗಿದ್ದಾರೆ. ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಇವರು ತಮಗೆ ನೀಡಿದ ಜವಾಬ್ಬಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. +ಸಿಎಂ ರೇಸ್ ಬಗ್ಗೆ ತಮ ಹಕ್ಕೊತ್ತಾಯವನ್ನು ಮಂಡಿಸಿದ ಕುಮಾರಿ ಶೈಲಜಾ ಅವರು, ಕಾಂಗ್ರೆಸ್ ನನ್ನ ಅನುಭವ ಮತ್ತು ಪಕ್ಷದ ಬಗ್ಗೆ ನನ್ನ ಪ್ರಶ್ನಾತೀತ ನಿಷ್ಠೆಯನ್ನು ತಿರಸ್ಕರಿಸಲು ಸಾಧ್ಯವಿಲ್ಲ, ನಾನು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತೆ ಮತ್ತು ಯಾವಾಗಲೂ ಹಾಗೆಯೇ ಇರುತ್ತೇನೆ. ಕಾಂಗ್ರೆಸ್ನಲ್ಲಿ ಸಿಎಂ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ. ಅದನ್ನು ಹೈಕಮಾಂಡ್ ಮಾಡುತ್ತದೆೞ ಎಂದು ಹೇಳಿದ್ದಾರೆ. +ದೀಪೇಂದ್ರ ಹೂಡಾ:ಒಂದು ವೇಳೆ ಭೂಪಿಂದರ್ ಸಿಂಗ್ ಹೂಡಾ ಮುಖ್ಯಮಂತ್ರಿ ಸ್ಥಾನದ ರೇಸ್ನಿಂದ ಹೊರಗುಳಿದಿದರೆ ಅವರ ಪುತ್ರ ದೀಪೇಂದ್ರ ಹೂಡಾ ಅವರ ಹೆಸರನ್ನು ಮುಂದಿಡುವ ಸಾಧ್ಯತೆಯ ಬಗ್ಗೆ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ. ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಕುಮಾರಿ ಶೈಲಜಾ ಹೇಳಿದ್ದರಲ್ಲಿ ತಪ್ಪೇನೂ ಇಲ್ಲ, ಕಾಂಗ್ರೆಸ್ನಲ್ಲಿ ಇದಕ್ಕೆ ಪ್ರಕ್ರಿಯೆ ಇದೆ, ಬಹುಮತ ಪಡೆದು ಸರ್ಕಾರ ರಚನೆ ಮಾಡುವುದು ಪಕ್ಷದ ಮೊದಲ ಆದ್ಯತೆ. ಮುಖ್ಯಮಂತ್ರಿ ಹೆಸರಿಗೆ ಸಂಬಂಧಿಸಿದಂತೆ ಪಕ್ಷವು ಹೈಕಮಾಂಡ್ ಮಟ್ಟದಲ್ಲಿ ಸಭೆಯನ್ನು ನಡೆಸುತ್ತದೆ, ಇದರಲ್ಲಿ ಚುನಾಯಿತ ಶಾಸಕರನ್ನು ಸಮಾಲೋಚಿಸಲಾಗುತ್ತದೆ ಮತ್ತು ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ದೀಪೇಂದ್ರ ಹೂಡಾ ಹೇಳಿದ್ದಾರೆ. +ರಣದೀಪ್ ಸಿಂಗ್ ಸುರ್ಜೆವಾಲಾ:ರಣದೀಪ್ ಸಿಂಗ್ ಸುರ್ಜೇವಾಲಾ ಹೆಸರಿನ ಚರ್ಚೆಯೂ ಸಿಎಂ ಸ್ಥಾನದ ರೇಸ್ನಲ್ಲಿ ಮುನ್ನೆಲೆಗೆ ಬಂದಿದೆ. ತವರು ಕ್ಷೇತ್ರ ಕೈತಾಲ್ನಲ್ಲಿ ಮತ ಚಲಾಯಿಸಿದ ಬಳಿಕ ಮಾತನಾಡಿದ ರಾಜ್ಯಸಭಾ ಸಂಸದ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಱಸಿಎಂ ಆಗುವ ಮಹತ್ವಾಕಾಂಕ್ಷೆ ಇರುವುದು ತಪ್ಪಲ್ಲ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೈಗೊಂಡಿರುವ ನಿರ್ಧಾರವನ್ನು ನಾವು ಒಪ್ಪುತ್ತೇವೆ ಎಂದು ಹೇಳಿದ್ದಾರೆ. +ಉದಯ್ ಭಾನ್:ಹರ್ಯಾಣ ಕಾಂಗ್ರೆಸ್ ಮುಖ್ಯಸ್ಥ ಮತ್ತು ದಲಿತ ನಾಯಕ ಉದಯ್ ಭಾನ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಗಳಲ್ಲಿ ಒಬ್ಬರು ಎಂದು ಪಕ್ಷದ ಮೂಲಗಳು ಹೇಳುತ್ತವೆ. ಅವರನ್ನು ಭೂಪಿಂದರ್ ಸಿಂಗ್ ಹೂಡಾಗೆ ನಿಕಟವಾಗಿರುವ ನಾಯಕರ ಎಂದು ಪರಿಗಣಿಸಲಾಗಿದೆ. ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕರ ಜತೆಗಿನ ಸಭೆಯಲ್ಲಿ ಅವರು ರಾಜ್ಯದಲ್ಲಿ ದಲಿತರ ಮುಖವನ್ನು ಮುಂದಿಡುವ ಬಗ್ಗೆ ಮಾತನಾಡಿದ್ದಾರೆ. \ No newline at end of file diff --git a/eesanje/url_47_1_4.txt b/eesanje/url_47_1_4.txt new file mode 100644 index 0000000000000000000000000000000000000000..1b5bb649d8d66286b205d98b31c5e0825ba10d19 --- /dev/null +++ b/eesanje/url_47_1_4.txt @@ -0,0 +1,7 @@ +ಮೇಘಾಲಯ : ಪ್ರವಾಹದಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ ಕನಿಷ್ಠ 10 ಜನರ ಸಾವು + ' +ಶಿಲ್ಲಾಂಗ್,ಅ.6-ಕಳೆದ 24 ಗಂಟೆಗಳಲ್ಲಿ ಮೇಘಾಲಯದ ದಕ್ಷಿಣ ಗಾರೋ ಹಿಲ್ಸ್ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಒಂದೇ ಕುಟುಂಬದ ಏಳು ಮಂದಿ ಸೇರಿದಂತೆ ಕನಿಷ್ಠ 10 ಜನರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ದಾಲುವಿನ ಮೂವರು ಮತ್ತು ಹತಿಯಾಸಿಯಾ ಸಾಂಗಾದಿಂದ ಏಳು ಜನರು ಸಾವನ್ನಪ್ಪಿದ್ದಾರೆ. ಸತತ ಮಳೆಯಿಂದಾಗಿ ಜಿಲ್ಲೆಯ ಗಸುವಾಪಾರ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಭೂಕುಸಿತ ಸಂಭವಿಸಿದಾಗ ಏಳು ಜನರ ಕುಟುಂಬವು ದೂರದ ಹಳ್ಳಿಯಾದ ಹಟಿಯಾಸಿಯಾ ಸಾಂಗಾದಲ್ಲಿ ತಮ ಮನೆಯೊಳಗೆ ಇದ್ದರು. ಮೃತರಲ್ಲಿ ಮೂವರು ಅಪ್ರಾಪ್ತರು ಸೇರಿದ್ದಾರೆ. ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗಾ ಅವರು ಗಾರೋ ಹಿಲ್‌್ಸನ ಐದು ಜಿಲ್ಲೆಗಳ ಪರಿಸ್ಥಿತಿಯ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ.ಸಂಗಾ ಮೃತರ ಕುಟುಂಬಗಳಿಗೆ ಸಾಂತ್ವನ ಸೂಚಿಸಿ ತಕ್ಷಣವೇ ಪರಿಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. +ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರೆಫ್) ಮತ್ತು ಎಸ್ಡಿಆರೆಫ್ನ ಸಿಬ್ಬಂದಿಯನ್ನು ಅತ್ಯಂತ ಕೆಟ್ಟ ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ನಿಯೋಜಿಸಲಾಗಿದೆ.ಮರುನಿರ್ಮಾಣ ಪ್ರಯತ್ನಗಳಿಗೆ ಬೈಲಿ ಸೇತುವೆ ತಂತ್ರಜ್ಞಾನವನ್ನು ಬಳಸಲು ಸಂಗಾ ಸಲಹೆ ನೀಡಿದರು, ಇದು ತ್ವರಿತ ಜೋಡಣೆ ಮತ್ತು ಸಾರಿಗೆಗೆ ಅನುವು ಮಾಡಿಕೊಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಶುಕ್ರವಾರ ತಡವಾಗಿ ಆರಂಭವಾದ ನಿರಂತರ ಮಳೆಯು ಗಾರೋ ಹಿಲ್ಸ್ ಪ್ರದೇಶದಾದ್ಯಂತ ವ್ಯಾಪಕ ಭೂಕುಸಿತ ಮತ್ತು ಹಠಾತ್ ಪ್ರವಾಹಗಳನ್ನು ಉಂಟುಮಾಡಿದೆ. ಇದರ ಪರಿಣಾಮವಾಗಿ ಒಟ್ಟು 10 ಸಾವುಗಳು ಸಂಭವಿಸಿವೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. +ಇದೇ ರೀತಿಯ ಭೂಕುಸಿತ ಘಟನೆಗಳಿಂದಾಗಿ ಪಶ್ಚಿಮ ಗಾರೋ ಹಿಲ್‌್ಸನ ದಾಲುದಲ್ಲಿ ಮೂವರು ವ್ಯಕ್ತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚುತ್ತಿರುವ ಸಾವಿನ ಸಂಖ್ಯೆಗೆ ಪ್ರತಿಕ್ರಿಯೆಯಾಗಿ ಮುಖ್ಯಮಂತ್ರಿ ಕಾನ್ರಾಡ್ ಸಂಗಾ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ತುರ್ತು ಪರಿಶೀಲನಾ ಸಭೆಯನ್ನು ಕರೆದಿದ್ದಾರೆ. ಈ ಭೂಕುಸಿತ ಎಲ್ಲಾ 5 ಜಿಲ್ಲೆಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಮತ್ತು ಪಶ್ಚಿಮ ಗಾರೋ ಬೆಟ್ಟಗಳ ಮೇಲೆ ತೀವ್ರ ಪರಿಣಾಮ ಬೀರಿದೆ. \ No newline at end of file diff --git a/eesanje/url_47_1_5.txt b/eesanje/url_47_1_5.txt new file mode 100644 index 0000000000000000000000000000000000000000..c25baf47a012843d4347435259c56431b8818455 --- /dev/null +++ b/eesanje/url_47_1_5.txt @@ -0,0 +1,9 @@ +ಮುಂಬೈನ ಕಟ್ಟಡದಲ್ಲಿ ಬೆಂಕಿ, 7 ಮಂದಿ ಸಾವು +5 -- +ಮುಂಬೈ,ಅ.6-ಮುಂಬೈನ ಎರಡು ಅಂತಸ್ತಿನ ಅಂಗಡಿ ಮತ್ತು ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡು ಮೂವರು ಅಪ್ರಾಪ್ತರು ಸೇರಿದಂತೆ ಏಳು ಜನರು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. +ಮೃತರನ್ನು ಪ್ಯಾರಿಸ್‌‍ ಗುಪ್ತಾ (7), ಮಂಜು ಪ್ರೇಮ್‌ ಗುಪ್ತಾ (30), ಅನಿತಾ ಗುಪ್ತಾ (39), ಪ್ರೇಮ್‌ ಗುಪ್ತಾ (30), ನರೇಂದ್ರ ಗುಪ್ತಾ (10), ವಿಧಿ ಚೇದಿರಾಮ್‌ ಗುಪ್ತಾ (15) ಮತ್ತು ಗೀತಾದೇವಿ ಧರಂದೇವ್‌ ಗುಪ್ತಾ (60) ಮೃತಪಟ್ಟ ದುರ್ದೈವಿಗಳು. +ಚೆಂಬೂರ್‌ ಪ್ರದೇಶದ ಸಿದ್ಧಾರ್ಥ್‌ ಕಾಲೋನಿಯಲ್ಲಿ ಬೆಳಿಗ್ಗೆ 5.20 ಕ್ಕೆ ಈ ಘಟನೆ ನಡೆದಿದೆ. ಬೆೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. +ಬೆಂಕಿಯು ನೆಲ ಮಹಡಿಯಲ್ಲಿನ ಅಂಗಡಿಯಲ್ಲಿನ ವಿದ್ಯುತ್‌ ವೈರಿಂಗ್‌ ಮತ್ತು ಅನುಸ್ಥಾಪನೆಗಳಿಗೆ ಸೀಮಿತವಾಗಿತ್ತು ಮತ್ತು ಮೇಲಿನ ಮಹಡಿಗೆ ವ್ಯಾಪಿಸಿದೆ.ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. + +ಚಿಕಿತ್ಸೆ ಫಲಕಾರಿಯಾಗದೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ವಾಹನಗಳು, ನೀರಿನ ಟ್ಯಾಂಕರ್‌ಗಳು ಮತ್ತು ಇತರ ಸಹಾಯವನ್ನು ಸ್ಥಳಕ್ಕೆ ಧಾವಿಸಲಾಯಿತು ಮತ್ತು ಬೆಳಿಗ್ಗೆ 9.15ರ ಹೊತ್ತಿಗೆ ಬೆಂಕಿಯನ್ನು ನಂದಿಸಲಾಗಿದೆ. +ಕಟ್ಟಡದ ನೆಲ ಮಹಡಿಯಲ್ಲಿ ಅಂಗಡಿಗಳಿದ್ದು, ಮೇಲಿನ ಮಹಡಿಯಲ್ಲಿ ಮನೆಗಳಿದ್ದವು. ಬೆಂಕಿಯ ಜ್ವಾಲೆ ನೆಲಮಹಡಿಯ ಎಲೆಕ್ಟ್ರಿಕ್‌ ವೈರಿಂಗ್‌ ಮತ್ತು ಇತರೆ ಸಾಮಗ್ರಿಗಳಿಗೆ ಹೊತ್ತಿಕೊಂಡು ಬಳಿಕ ಎರಡನೇ ಮಹಡಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_1_6.txt b/eesanje/url_47_1_6.txt new file mode 100644 index 0000000000000000000000000000000000000000..2aadb9dcc6da2f51ca2476ae6e1cc2a6d129570e --- /dev/null +++ b/eesanje/url_47_1_6.txt @@ -0,0 +1,8 @@ +ರಕ್ಷಣಾ ಸಾಧನಗಳ ಪ್ರಮುಖ ರಫ್ತುದಾರರಲ್ಲಿ ಒಂದಾದ ಭಾರತ + 10 , +ಮುಂಬೈ,ಅ.6-ಭಾರತವು ಕಳೆದ ಹತ್ತು ವರ್ಷಗಳಲ್ಲಿ ರಕ್ಷಣಾ ಸಾಧನಗಳ ಪ್ರಮುಖ ರಫ್ತುದಾರರಲ್ಲಿ ಒಂದಾಗಿದೆ ಮತ್ತು ಆಮದು ಶೇ.5ರಿಂದ 10 ರಷ್ಟು ಇಳಿಯಲಿದೆ ಎಂದು ಡಿಆರ್‌ಡಿಒ ಅಧ್ಯಕ್ಷ ಸಮೀರ್‌ ವಿ ಕಾಮತ್‌ ಹೇಳಿದ್ದಾರೆ. +ದೇಶದ ರಕ್ಷಣಾ ಆಮದುಗಳು ಕಡಿಮೆಯಾಗುತ್ತಿವೆ ಮತ್ತು ಕಳೆದ ವರ್ಷ ಬಜೆಟ್‌ನಲ್ಲಿ ಸುಮಾರು 90 ಪ್ರತಿಶತ ಸ್ಥಳೀಯ ವ್ಯವಸ್ಥೆಗಳಲ್ಲಿ ಬಳಸಲಾಗಿದೆ ಎಂದು ಕಾಮತ್‌ ತಿಳಿಸಿದ್ದಾರೆ. +ಇಲ್ಲಿನ ಛತ್ರಪತಿ ಶಾಹು ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ನಲ್ಲಿ ಮರಾಠವಾಡದಲ್ಲಿ ಆಯೋಜಿಸಿದ್ದ ಡಿಫೆನ್ಸ್ ಇನ್ನೋವೇಶನ್‌ ಚಾಲೆಂಜ್‌ ಫಾರ್‌ ಎಕ್ಸಲೆನ್ಸ್ ಸಮೇಳನ (ಡೈಸ್‌‍) ಉದ್ಘಾಟಿಸಿ ಅವರು ಮಾತನಾಡಿದರು. +ಹತ್ತು ವರ್ಷಗಳ ಹಿಂದೆ, ನಾವು ರಕ್ಷಣಾ ವ್ಯವಸ್ಥೆಗಳಲ್ಲಿ ಆಮದುದಾರರಲ್ಲಿ ಮುಂಚೂಣಿಯಲ್ಲಿದ್ದೆವು ಆದರೆಕಾಲ ಬದಲಾಗಿದೆ ಕಳೆದ ವರ್ಷದ ಅಂಕಿಅಂಶಗಳನ್ನು ನೋಡಿದರೆ, ನಮ ಬಂಡವಾಳದಲ್ಲಿ ಸುಮಾರು 90 ಪ್ರತಿಶತವನ್ನು ಸ್ವದೇಶಿ ವ್ಯವಸ್ಥೆಗಳಿಗೆ ಬಳಸಲಾಗಿದೆ. ನನಗೆ ವಿಶ್ವಾಸವಿದೆ ಇನ್ನು ಕೆಳವೇ ವರ್ಷದಲ್ಲಿ ಆಮದು ಪ್ರಮಾಣ ಅತ್ಯಲ್ಪವಾಗಿರುತ್ತವೆ ಎಂದರು. +ಈ ನಡುವೆ 10 ವರ್ಷಗಳಲ್ಲಿ ಭಾರತವು ರಕ್ಷಣಾ ಸಾಧನಗಳನ್ನು ರಫ್ತು ಮಾಡುವ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತ 2028 ರ ವೇಳೆಗೆ 50,000 ಕೋಟಿ ಮತ್ತು 2035 ರ ವೇಳೆಗೆ 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ರಫ್ತು ಸಾಧಿಸುವ ಗುರಿಯನ್ನು ಹೊಂದಿದೆ ಎಂದರು. +ರಕ್ಷಣೆಗೆ ಸಂಬಂಧಿಸಿದ ಸಂಶೋಧನೆಗೆ ಖರ್ಚು ಹೆಚ್ಚು ಮಾಡುತ್ತಿದ್ದೇವೆ ನಿಜ . ಆದರೆ, ನಾವು ಇನ್ನೂ ಅಭಿವೃದ್ಧಿ ಹೊಂದಿದ ದೇಶವಾಗಿಲ್ಲ, ಮತ್ತು ಇತರ ಆದ್ಯತೆಗಳಿವೆ. ನಾವು ತಂತ್ರಜ್ಞಾನದಲ್ಲಿ ಹೆಚ್ಚು ಹೂಡಿಕೆ ಮಾಡಬೇಕು ಎಂದು ಅವರು ಹೇಳಿದರು. ಇನ್ನೋವೇಶನ್‌ ಚಾಲೆಂಜ್‌ಗೆ ಅರ್ಜಿಗಳು ಅಕ್ಟೋಬರ್‌ 31 ರವರೆಗೆ ತೆರೆದಿರುತ್ತವೆ ಮತ್ತು ಅಂತಿಮ ಸುತ್ತು ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ಮ್ಯಾಜಿಕ್‌ನ ನಿರ್ದೇಶಕ ಪ್ರಸಾದ್‌ ಕೋಕಿಲ್‌‍ ತಿಳಿಸಿದರು. \ No newline at end of file diff --git a/eesanje/url_47_1_7.txt b/eesanje/url_47_1_7.txt new file mode 100644 index 0000000000000000000000000000000000000000..185633c4e3bcb214517d7b59b2d1f34892cc1583 --- /dev/null +++ b/eesanje/url_47_1_7.txt @@ -0,0 +1,7 @@ +ರಾಮನನ್ನು ನಿಂದಿಸಿದವನ ವಿರುದ್ಧ ಎಫ್‌ಐಆರ್‌ ರದ್ದತಿಗೆ ಹೈಕೋರ್ಟ್‌ ನಿರಾಕರಣೆ + ' '' , +ಜಬಲ್‌ಪುರ, ಅ.5-ಭಗವಾನ್‌ ರಾಮ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಹಿಂದೂ ಧರ್ಮದ ವಿರುದ್ಧ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಅನ್ನು ಅಪ್‌ಲೋಡ್‌ ಮಾಡಿದ ಆರೋಪದ ಮೇಲೆ ತನ್ನ ವಿರುದ್ಧದ ಎಫ್ಐಆರ್‌ ರದ್ದುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ ವಜಾಗೊಳಿಸಿದೆ. +ಮೊಹಮದ್‌ ಬಿಲಾಲ್‌ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 294, 153ಎ, 295ಎ ಮತ್ತು ಎಸ್‌‍ಸಿ/ಎಸ್‌‍ಟಿ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್‌ 3(1) ಮತ್ತು 3(2) ಅಡಿಯಲ್ಲಿ ತಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು ಅವರ ವಿರುದ್ಧ ಸತ್ನಾ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಎರಡು ದಿನಗಳ ಹಿಂದೆ ಕೆಲವು ವ್ಯಕ್ತಿಗಳು ತಮ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಕ್ ಮಾಡಿದ್ದಾರೆ ಮತ್ತು ಆಕ್ಷೇಪಾರ್ಹ ಪೋಸ್ಟ್ ಮಾಡಿ ಅದನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಬಿಲಾಲ್ ತಮ ಮನವಿಯಲ್ಲಿ ಹೇಳಿಕೊಂಡಿದ್ದರು. +ಎಫ್‌ಐಆರ್‌ನಿಂದ ದೂರುದಾರರು ತಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಅನ್ನು ಏಕೆ ಅಪ್‌ಲೋಡ್‌ ಮಾಡಿದ್ದಾರೆ ಎಂದು ಅರ್ಜಿದಾರರಿಂದ ಕೇಳಿದ್ದಾರೆ ಎಂಬುದು ಸ್ಪಷ್ಟವಾಗಿದೆ. ನಂತರ ಈ ಪೋಸ್ಟ್‌ ಅನ್ನು ಬೇರೊಬ್ಬರು ತಮ ಖಾತೆಯನ್ನು ಹ್ಯಾಕ್‌ ಮಾಡುವ ಮೂಲಕ ಅಪ್‌ಲೋಡ್‌ ಮಾಡಿದ್ದಾರೆ ಎಂದು ವಿವರಿಸುವ ಬದಲು, ಅವರು (ಅರ್ಜಿದಾರರು) ದೂರುದಾರರನ್ನು ನಿಂದಿಸಲು ಮತ್ತು ಅವಮಾನಿಸಲು ಪ್ರಾರಂಭಿಸಿದರು ಮತ್ತು ಅವರ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರು ಎಂದು ನ್ಯಾಯಮೂರ್ತಿ ಜಿಎಸ್‌‍ ಅಹ್ಲುವಾಲಿಯಾ ಅವರನ್ನು ಒಳಗೊಂಡ ಹೈಕೋರ್ಟ್‌ನ ಏಕ ಪೀಠ ಹೇಳಿದೆ. +ಅರ್ಜಿದಾರರ ಈ ನಡವಳಿಕೆಯು ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬೇರೊಬ್ಬರು ಆಕ್ಷೇಪಾರ್ಹ ಪೋಸ್ಟ್‌ ಅನ್ನು ಅಪ್‌ಲೋಡ್‌ ಮಾಡುವ ಸಮರ್ಥನೆಯು ತಪ್ಪಾಗಿದೆ ಎಂದು ಸೂಚಿಸುತ್ತದೆ. ಅವರ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಆಕ್ಷೇಪಾರ್ಹ ಪೋಸ್ಟ್‌‍ ಅನ್ನು ಅಪ್‌ಲೋಡ್‌ ಮಾಡುವುದನ್ನು ಅರ್ಜಿದಾರರು ಸ್ವತಃ ಒಪ್ಪಿಕೊಂಡಿದ್ದಾರೆ, ಆದ್ದರಿಂದ ಅವರಿಗೆ ಯಾವುದೇ ಹಕ್ಕಿಲ್ಲ. ದೂರುದಾರರೊಂದಿಗೆ ನಡೆದುಕೊಂಡ ರೀತಿಯಲ್ಲಿ ಪ್ರತಿಕ್ರಿಯಿಸಿ ಎಂದು ಕಳೆದ ತಿಂಗಳ ಹೈಕೋರ್ಟ್‌ ಆದೇಶದಲ್ಲಿ ಹೇಳಲಾಗಿದೆ. +ಎಫ್ಐಆರ್ನಲ್ಲಿ ಮಾಡಿರುವ ಆರೋಪಗಳು ಸರಿಯೇ ಅಥವಾ ಇಲ್ಲವೇ ಎಂಬುದನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಧೀಶರು ಹೇಳಿದರು. ಪ್ರಶ್ನೆಯಲ್ಲಿರುವ ಎಫ್ಐಆರ್ ಅರಿಯಬಹುದಾದ ಅಪರಾಧದ ಆಯೋಗವನ್ನು ಬಹಿರಂಗಪಡಿಸುತ್ತದೆ ಎಂಬ ಅಂಶವನ್ನು ಪರಿಗಣಿಸಿ, ಯಾವುದೇ ಪ್ರಕರಣವನ್ನು ಸಮರ್ಥಿಸುವ ಹಸ್ತಕ್ಷೇಪವನ್ನು ಮಾಡಲಾಗಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_1_8.txt b/eesanje/url_47_1_8.txt new file mode 100644 index 0000000000000000000000000000000000000000..6978354690993d91d449efb5f75c43f4f073156d --- /dev/null +++ b/eesanje/url_47_1_8.txt @@ -0,0 +1,7 @@ +ಲಡ್ಡು ವಿವಾದದ ನಡುವೆಯೂ ತಿರುಪತಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಳ + , 13 4 +ಬೆಂಗಳೂರು,ಅ.5-ಭಾರತದ ಅತಿ ಶ್ರೀಮಂತ ದೇಗುಲಗಳಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯವೂ ಒಂದು. ತಿರುಪತಿ ತಿಮಪ್ಪನಿಗೆ ಲಕ್ಷಾಂತರ ಭಕ್ತರಿದ್ದು, ತಿರುಪತಿ ಲಡ್ಡು ವಿವಾದದ ನಂತರವೂ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲೂ ಕರ್ನಾಟಕದಿಂದ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ, ಆಂಧ್ರ ಸಿಎಂಗೆ ಹೊಸ ಮನವಿ ಮಾಡಿದೆ. +ಭಕ್ತರ ಪಾಲಿಗೆ ಕಲಿಯು ಗದ ವೈಕುಂಠ. ತಿರುಮಲಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಎರಡು ತೆಲುಗು ರಾಜ್ಯಗಳಲ್ಲದೆ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. +ಆಪತ್ತುಗಳನ್ನು ನಿವಾರಿಸುವ ಏಡುಕೊಂಡಲವಾಡ ದರ್ಶನ ಪಡೆಯಲು ಜನ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಥವಾ ಕೆಎಸ್ಟಿಡಿಸಿಯ ಸೀಟ್‌ಗಳಿಗಾಗಿ ಪ್ರತಿದಿನ ಕಾಯುತ್ತಾರೆ. ಪ್ರತಿದಿನ ಟಿಟಿಡಿಯು ಕೆಎಸ್ಟಿಡಿಸಿಗೆ ಕರ್ನಾಟಕದ 250 ಭಕ್ತಾದಿಗಳಿಗೆ ನೇರ ದರ್ಶನಕ್ಕೆ ಸದ್ಯ ಅವಕಾಶ ನೀಡಿದೆ. +ಆದರೂ ನೇರ ದರ್ಶನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದು ತಿರುಪತಿ ಲಡ್ಡು ವಿವಾದದ ನಂತರವೂ ಮುಂದುವರೆದಿದೆ. ಈ ನಿಟ್ಟಿನಲ್ಲಿ ಕೆಎಸ್ಟಿಡಿಸಿಯು ಪ್ರತಿದಿನ 250 ಜನರಿಗೆ ನೇರ ದರ್ಶನದ ಸಂಖ್ಯೆಯನ್ನು, ಒಂದು ಸಾವಿರಕ್ಕೆ ಹೆಚ್ಚಿಸಬೇಕೆಂದು ಆಂಧ್ರ ಸಿಎಂಗೆ ಮನವಿ ಮಾಡಿದ್ದು, ಸದ್ಯ ಮಾತುಕತೆ ನಡೆದಿದೆ. +ಇನ್ನೂ ಸದ್ಯ 250 ಜನ ಭಕ್ತಾದಿಗಳಿಗೆ ನಿಗಮದಿಂದ ಪ್ರತಿನಿತ್ಯ 5-6 ಬಸ್‌‍ಗಳು ರಾಜ್ಯದಿಂದ ತೆರಳುತ್ತಿದ್ದವು. ಸಾವಿರ ಜನರಿಗೆ ಅವಕಾಶ ಸಿಕ್ಕರೇ, ರಾಜ್ಯದಿಂದ ತಿರುಪತಿಯತ್ತ 10-12 ಬಸ್‌‍ಗಳು ಪ್ರವಾಸೋದ್ಯಮ ಇಲಾಖೆಯಿಂದ ಸಂಚರಿಸಲಿವೆ. ಭಕ್ತಾದಿಗಳ ಸಂಖ್ಯೆ ಹೆಚ್ಚಾದರೂ ಅಲ್ಲಿನ ವಸತಿ ವ್ಯವಸ್ಥೆಗೆ ಆತಂಕ ಪಡಬೇಕಿಲ್ಲ. ಏಕೆಂದರೆ ತಿರುಪತಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 350 ರೂಮ್‌ಗಳ ವ್ಯವಸ್ಥೆ ಮಾಡಲಾಗಿದೆ. \ No newline at end of file diff --git a/eesanje/url_47_1_9.txt b/eesanje/url_47_1_9.txt new file mode 100644 index 0000000000000000000000000000000000000000..7ab3f556b1a411371cf58751d23fb4a2e3fb0d49 --- /dev/null +++ b/eesanje/url_47_1_9.txt @@ -0,0 +1,6 @@ +ಮುಖ್ಯಮಂತ್ರಿಗಳ ಕಾರ್ಯದರ್ಶಿ ವರ್ಗಾವಣೆ + ' +ಬೆಂಗಳೂರು,ಅ.5– ರಾಜ್ಯಸರ್ಕಾರ ಇಬ್ಬರು ಐಎಎಸ್‌‍ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ಡಾ.ತ್ರಿಲೋಕ್‌ ಚಂದ್ರ ಕೆ.ವಿ ಅವರನ್ನು ಶಾಲಾ ಶಿಕ್ಷಣ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. +ಶಾಲಾ ಶಿಕ್ಷಣ ಆಯುಕ್ತರಾಗಿದ್ದ ಕಾವೇರಿ.ಬಿ.ಬಿ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. +ಕಾವೇರಿ ಅವರಿಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಯ ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿ ವಹಿಸಲಾಗಿದೆ. +ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದ ಜವಾಬ್ದಾರಿಯಿಂದ ತ್ರಿಲೋಕ್‌ ಚಂದ್ರ ಅವರನ್ನು ಮುಕ್ತಗೊಳಿಸಲಾಗಿದೆ. \ No newline at end of file diff --git a/eesanje/url_47_200_1.txt b/eesanje/url_47_200_1.txt new file mode 100644 index 0000000000000000000000000000000000000000..6a3b1594520ae8cfa9c1550aaf1907bdc0003832 --- /dev/null +++ b/eesanje/url_47_200_1.txt @@ -0,0 +1,7 @@ +ಸಾಮೂಹಿಕ ಅತ್ಯಾಚಾರ, ಮೂವರು ಕಾಮುಕರ ಬಂಧನ +ನೋಯ್ಡಾ,ಜ.2- ನಗರದಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ಮೂವರು ಶಂಕಿತರನ್ನು ಬಂಧಿಸಿರುವುದಾಗಿ ನೋಯ್ಡಾ ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಕೆಲ ದಿನಗಳ ಹಿಂದೆ ಶಾಪಿಂಗ್ ಮಾಲ್ ಬಳಿ ಸಾಮೂಹಿಕ ಅತ್ಯಾಚಾರ ಘಟನೆ ನಡೆದಿತ್ತು ಆದರೆ ಆರೋಪಿಗಳಿಂದ ಪದೇ ಪದೇ ಕಿರುಕುಳ ನೀಡಿದ ನಂತರ ದೂರುದಾರರು ಡಿ. 30 ರಂದು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಡಿಸೆಂಬರ್ 30 ರಂದು ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ, ನಂತರ ತನಿಖೆಯನ್ನು ಕೈಗೆತ್ತಿಕೊಂಡು ಆರೋಪಿಗಳಲ್ಲಿ ಮೂವರನ್ನು ಬಂಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.ಬಂಧಿತರನ್ನು ರಾಜ್‍ಕುಮಾರ್, ಆಜಾದ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ರವಿ ಮತ್ತು ಮೆಹ್ಮಿ ಎಂದು ಗುರುತಿಸಲಾದ ಇತರ ಇಬ್ಬರು ಶಂಕಿತರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ವಕ್ತಾರರು ತಿಳಿಸಿದ್ದಾರೆ. +ಸುನಾಮಿ ಭೀತಿಯಿಂದ ಹೊರ ಬಂದ ಜಪಾನ್ +ದುಷ್ಕರ್ಮಿಗಳು ದಬಾಂಗ್ (ಬಲವಾದ ಪುರುಷರು) ಜನರು ಎಂಬ ಕಾರಣದಿಂದಾಗಿ ದೂರುದಾರರು ತಕ್ಷಣ ಪೊಲೀಸರಿಗೆ ಈ ವಿಷಯವನ್ನು ವರದಿ ಮಾಡಿಲ್ಲ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕಳೆದ ವಾರ ಆಕೆಯ ವೈದ್ಯಕೀಯ ಪರೀಕ್ಷೆಯ ನಂತರ ಕಾರ್ಯವಿಧಾನದ ಪ್ರಕಾರ ದೂರುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಬಂಧಿತ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_200_10.txt b/eesanje/url_47_200_10.txt new file mode 100644 index 0000000000000000000000000000000000000000..1caded3e6174cdab5879514fe3dd7e48c7677d88 --- /dev/null +++ b/eesanje/url_47_200_10.txt @@ -0,0 +1,6 @@ +ಆಯೋಧ್ಯೆಗೆ ಕಾಲ್ನಡಿಗೆಯಲ್ಲಿ ಹೊರಟ ಸ್ನೇಹಿತರು +ಬೆರ್ಹಾಮ್‍ಪುರ,ಜ. 1 (ಪಿಟಿಐ) ಒಡಿಶಾದ ಇಬ್ಬರು ಯುವಕರು ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಕಾಲ್ನಡಿಗೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾದ ಗಂಜಾಂ ಜಿಲ್ಲೆಯ ಬೆರ್ಹಾಮ್‍ಪುರ ಪಟ್ಟಣದಿಂದ 1,400-ಕಿಮೀ ದೂರವನ್ನು ಕ್ರಮಿಸಲು ಅವರು 40 ದಿನಗಳನ್ನು ತೆಗೆದುಕೊಳ್ಳುವುದರಿಂದ ಜನವರಿ 22 ರಂದು ನಿಗದಿಪಡಿಸಲಾದ ದೇವಾಲಯದ ಉದ್ಘಾಟನೆಯನ್ನು ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. +ನಿನ್ನೆ ತಮ್ಮ ಪ್ರಯಾಣವನ್ನು ಪ್ರಾರಂಭಿಸುವ ಮೊದಲು, ಚಂದಾಪುರ ಮತ್ತು ಕನಿಶಿ ಪ್ರದೇಶದ ನಿವಾಸಿಗಳಾದ 22 ವರ್ಷದ ಕುರೇಶ್ ಬೆಹೆರಾ ಮತ್ತು ಸೋನು ಬಿಸೋಯ್ ಎಂಬ ಸ್ನೇಹಿತರು ಬೆರ್ಹಾಮ್‍ಪುರ ಸಮೀಪವಿರುವ ಕನಿಶಿಯಲ್ಲಿರುವ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದರು. ತಮ್ಮ ಬೆನ್ನಿನ ಮೇಲೆ ಚೀಲಗಳು ಮತ್ತು ಕೈಯಲ್ಲಿ ಧ್ವಜಗಳೊಂದಿಗೆ ದೇವಸ್ಥಾನದಲ್ಲಿ ಜಮಾಯಿಸಿದ ಸ್ಥಳೀಯರ ಜೈ ಶ್ರೀರಾಮ್ ಘೋಷಣೆಗಳ ನಡುವೆ ಇಬ್ಬರೂ ಅಯೋಧ್ಯೆಗೆ ಹೊರಟರು. +ದುಷ್ಟಶಕ್ತಿಗಳ ವಿರುದ್ಧ ಹೊರಾಡಲು ಟಿಎಂಸಿ ಕಾರ್ಯಕರ್ತರಿಗೆ ದೀದಿ ಕರೆ +ಮುಂದಿನ 40 ದಿನಗಳಲ್ಲಿ ಅಯೋಧ್ಯೆಗೆ ತಲುಪಲು ನಾವು ಪ್ರತಿದಿನ 30-35 ಕಿಮೀ ನಡೆಯಲು ಗುರಿಯನ್ನು ಹೊಂದಿದ್ದೇವೆ. ನಾವು ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುತ್ತೇವೆ ಆದರೆ ನಾವು ನಂತರ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಬೆಹೆರಾ ಹೇಳಿದರು. ನಾವು ಅಯೋಧ್ಯೆಯ ದೇವಸ್ಥಾನದಲ್ಲಿ ಕುಳಿತಿರುವ ರಾಮ್‍ಲಲ್ಲಾ ಒಂದು ನೋಟವನ್ನು ಹೊಂದಲು ಬಯಸುತ್ತೇವೆ. ನಮ್ಮ ಪ್ರಯಾಣಕ್ಕೆ ಹೊರಡುವ ಮೊದಲು ನಾವು ನನ್ನ ಹಳ್ಳಿಯಲ್ಲಿ ಭಗವಾನ್ ರಾಮನ ಆಶೀರ್ವಾದವನ್ನು ಕೋರಿದ್ದೇವೆ ಎಂದು ಬಿಸೋಯ್ ಹೇಳಿದರು. +ಬೆಹೆರಾ ಮತ್ತು ಬಿಸೋಯಿ ಇಬ್ಬರೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಾರೆ. ರಾತ್ರಿ ವೇಳೆ ರಸ್ತೆ ಬದಿಯ ದೇವಸ್ಥಾನಗಳಲ್ಲಿ ತಂಗುವ ಯೋಜನೆ ಹಾಕಿಕೊಂಡಿದ್ದು, ಆಧ್ಯಾತ್ಮಿಕ ಹಾದಿ ಹಿಡಿಯುವ ಅಗತ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. \ No newline at end of file diff --git a/eesanje/url_47_200_11.txt b/eesanje/url_47_200_11.txt new file mode 100644 index 0000000000000000000000000000000000000000..bc6b2d9d5d7934240457c95421ad88e1eb56655e --- /dev/null +++ b/eesanje/url_47_200_11.txt @@ -0,0 +1,8 @@ +ಪರೀಕ್ಷಾ ಪೇ ಚರ್ಚಾ: ನೋಂದಾಯಿಸಿಕೊಳ್ಳಲು ಜ.12ರವರೆಗೆ ಅವಕಾಶ +ನವದೆಹಲಿ,ಜ.1-ಪರೀಕ್ಷಾ ಪೇ ಚರ್ಚಾದ ಏಳನೇ ಆವೃತ್ತಿಯ ನೋಂದಣಿಗಳು ಆರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುವ ಆಸಕ್ತ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಅಧಿಕೃತ ವೆಬ್‍ಸೈಟ್‍ಗೆ ಭೇಟಿ ನೀಡಬಹುದಾಗಿದೆ. +ಜ.12ರವರೆಗೆ ಆಸಕ್ತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.ಪರೀಕ್ಷೆಯ ಒತ್ತಡಕ್ಕೆ ವಿದಾಯ ಹೇಳಲು ಮತ್ತು ಯಶಸ್ಸಿನ ಸೂರ್ತಿ ತುಂಬುವ ಉದ್ದೇಶದಿಂದ ಪರೀಕ್ಷಾ ಪೇ ಚರ್ಚಾ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವಾಲಯವು ತಿಳಿಸಿದೆ. ಚರ್ಚೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಾದವನ್ನು ನಡೆಸಲಾಗುತ್ತದೆ ಮತ್ತು ಅವರಿಗೆ ಪ್ರಧಾನಿ ಮೋದಿಯನ್ನು ಭೇಟಿ ಮಾಡಲು ಮತ್ತು ಸಂವಾದಿಸಲು ಅವಕಾಶವನ್ನು ನೀಡಲಾಗುತ್ತದೆ. +ಹೊಸ ವರ್ಷದ ದಿನವೇ ಸಿಹಿ ಸುದ್ದಿ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ +ವಿದ್ಯಾರ್ಥಿಗಳು ಎರಡು ರೀತಿಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ವಿದ್ಯಾರ್ಥಿ (ಸ್ವಯಂ ಭಾಗವಹಿಸುವಿಕೆ) ಮತ್ತು ಶಿಕ್ಷಕರ ಲಾಗಿನ್ ಮೂಲಕ ಭಾಗವಹಿಸಬಹುದಾಗಿದೆ. 6 ರಿಂದ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆ ಮುಕ್ತವಾಗಿದೆ. +ಏತನ್ಮಧ್ಯೆ, ವಿದ್ಯಾರ್ಥಿಗಳು ತಮ್ಮ ಪ್ರಶ್ನೆಗಳನ್ನು ಪ್ರಧಾನ ಮಂತ್ರಿಗೆ ಗರಿಷ್ಠ 500 ಅಕ್ಷರಗಳಲ್ಲಿ ಸಲ್ಲಿಸಬಹುದು. ಪಾಲಕರು ಮತ್ತು ಶಿಕ್ಷಕರು ಕೂಡ ಭಾಗವಹಿಸಬಹುದು ಮತ್ತು ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಆನ್‍ಲೈನ್ ಚಟುವಟಿಕೆಗಳಲ್ಲಿ ತಮ್ಮ ನಮೂದುಗಳನ್ನು ಸಲ್ಲಿಸಬಹುದು. +ಪರೀಕ್ಷಾ ಪೇ ಚರ್ಚಾವು ಯುವಜನರಿಗೆ ಒತ್ತಡ-ಮುಕ್ತ ವಾತಾವರಣವನ್ನು ಸೃಷ್ಟಿಸಲು ಪ್ರಧಾನಿ ಮೋದಿ ನೇತೃತ್ವದ ಎಕ್ಸಾಮ್ ವಾರಿಯರ್ಸ್ ಎಂಬ ಬೃಹತ್ ಆಂದೋಲನದ ಭಾಗವಾಗಿದೆ. ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಬೋರ್ಡ್ ಪರೀಕ್ಷೆಗಳು ಮತ್ತು ಪ್ರವೇಶ ಪರೀಕ್ಷೆಗಳನ್ನು ಒತ್ತಡ ರಹಿತ ರೀತಿಯಲ್ಲಿ ಭೇದಿಸಲು ಸಲಹೆಗಳನ್ನು ನೀಡಲಿದ್ದಾರೆ. +ಸ್ಪರ್ಧೆಗಳ ಮೂಲಕ ಆಯ್ಕೆಯಾದ ಸುಮಾರು 2050 ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರಿಗೆ ಶಿಕ್ಷಣ ಸಚಿವಾಲಯದಿಂದ ಪಿಪಿಸಿ ಕಿಟ್‍ಗಳನ್ನು ಉಡುಗೊರೆಯಾಗಿ ನೀಡಲಾಗುತ್ತದೆ. \ No newline at end of file diff --git a/eesanje/url_47_200_12.txt b/eesanje/url_47_200_12.txt new file mode 100644 index 0000000000000000000000000000000000000000..96c4a144a6798ea501a4ddd3f520cf97aeebef3a --- /dev/null +++ b/eesanje/url_47_200_12.txt @@ -0,0 +1,13 @@ +ವರ್ಷದ ಮೊದಲ ದಿನವೇ ಇಸ್ರೋ ಯಶಸ್ಸು : ಕಪ್ಪುಕುಳಿಗಳ ಅಧ್ಯಯನಕ್ಕೆ ಹೊರಟ ಎಕ್ಸ್‌ಪೋಸ್ಯಾಟ್‌ +ಶ್ರೀಹರಿಕೋಟಾ,ಜ.1- ಹೊಸ ವರ್ಷದ ಮೊದಲ ದಿನವೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್‍ಗಳ ಬಗ್ಗೆ ಅಧ್ಯಯನ ನಡೆಸಲು ಎಕ್ಸ್ – ರೇ ಪೋಲಾಮೀಟರ್ ಉಪಗ್ರಹವನ್ನು (ಎಕ್ಸ್ಪೋಸ್ಯಾಟ್) ಇಂದು ಯಶಸ್ವಿಯಾಗಿ ಉಡಾವಣೆ ಮಾಡಿದೆ. +ಚಂದ್ರಯಾನ-3, ಆದಿತ್ಯ ಎಲ್-1 ಯಶಸ್ಸಿನ ಬೆನ್ನಿಗೆ ಮಹತ್ವಾಕಾಂಕ್ಷೆಯ ಬಾಹ್ಯಾಕಾಶ ಸಂಶೋಧನೆಗೆ ಮುಂದಾಗಿರುವ ಇಸ್ರೋದ ಈ ಮಹತ್ತರ ಪ್ರಯತ್ನದಿಂದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬಳಿಕ ಕಪ್ಪು ಕುಳಿಗಳ ಅಧ್ಯಯನಕ್ಕೆ ಮುಂದಾದ ಎರಡನೇ ದೇಶ ಎಂಬ ಶ್ರೇಯ ಭಾರತಕ್ಕೆ ಸೇರಿದೆ. ಬ್ರಹ್ಮಾಂಡದ ಕುರಿತು ಶತಮಾನಗಳಿಂದ ಇರುವ ನಿಗೂಢತೆಯನ್ನು ಭೇದಿಸುವ ಹೊಸ ಯೋಜನೆಯೊಂದಿಗೆ ಇಸ್ರೋ ಮತ್ತೆ ಜಗತ್ತಿನ ಗಮನ ಸೆಳೆದಿದೆ. +ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಮೂಲಕ ಉಪಗ್ರಹವನ್ನು ಉಡಾವಣೆ ಮಾಡಲಾಗಿದ್ದು, ಇದರ ಜೊತೆಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ.ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ. +ಪಿಒಎಲ್‍ಐಎಕ್ಸ್(ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು ಎಕ್ಸ್‍ಪಿಇಸಿಟಿ(ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್ ಪೇಲೋಡ್‍ಗಳಾಗಿವೆ) ಪಿಒಎಲ್‍ಐಎಕ್ಸ್‍ನ್ನು ರಾಮನ್ ರಿಸರ್ಚ್ ಇನ್‍ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‍ಪಿಇಸಿಟಿನ್ನು ಬೆಂಗಳೂರಿನ ಯುಆರೆಸ್‍ಸಿಯ ಬಾಹ್ಯಾಕಾಶ ಖಗೋಳ ವಿಜ್ಞಾನಿಗಳ ತಂಡ ಅಭಿವೃದ್ಧಿಪಡಿಸಿದೆ. +ಹೊಸ ವರ್ಷದ ದಿನವೇ ಸಿಹಿ ಸುದ್ದಿ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ +260 ಟನ್ ತೂಕದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‍ಎಲ್ವಿ) ತನ್ನ 60ನೇ ಹಾರಾಟವನ್ನು ಆರಂಭಿಸಿತು. ಈ ರಾಕೆಟ್ ಅತ್ಯಾಧುನಿಕ ಖಗೋಳ ವೀಕ್ಷಣಾ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ಅಧ್ಯಯನಕ್ಕೆ ಮೀಸಲಾಗಿದೆ. +ಎಕ್ಸ್ – ರೇ ಪೋಟಾನ್‍ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು, ಕಪ್ಪು ಕುಳಿಗಳು ಹಾಗೂ ನ್ಯೂಟ್ರಾನ್ ಸ್ಟಾರ್‍ಗಳ ಸಮೀಪದಿಂದ ವಿಕಿರಣಗಳ ಅಧ್ಯಯನಕ್ಕೆ ಎಕ್ಸ್ಪೋ ಸ್ಯಾಟ್ ಸಹಾಯ ಮಾಡಲಿದೆ. ಇದು ಪೋಲಿಕ್ಸ್ (ಪೋಲಾರಿಮೀಟರ್ ಇನ್ಸ್ಟ್ರುಮೆಂಟ್ ಇನ್ ಎಕ್ಸ್ ರೇ) ಮತ್ತು ಎಕ್ಸ್ಪೆಕ್ಟ್ (ಎಕ್ಸ್- ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೇ ಲೋಡ್‍ಗಳನ್ನು ಕೊಂಡೊಯ್ದಿದೆ. +10 ಉಪಗ್ರಹಗಳ ಯಶಸ್ವಿ ಉಡಾವಣೆಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಈ ಪಿಎಸ್‍ಎಲ್ ಹೊತ್ತೊಯ್ದಿದೆ. ಟೇಕ್ಮೀ2ಸ್ಪೇಸ್‍ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್ಪೆರಿಮೆಂಟಲ್ ಮಾಡ್ಯೂಲ್ , ಮಹಿಳೆಯರಿಗಾಗಿ ಎಲ್ಬಿಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‍ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ , ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‍ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿಂಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್, ಬೆಲಟ್ರಿಕ್ಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರೆಲ್‍ನಿಂದ ಡಸ್ಟ್ ಎಕ್ಸ್ಪರಿಮೆಂಟ್, ವಿಎಸ್‍ಎಸ್ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‍ಎಲ್ವಿ ಹೊತ್ತೊಯ್ದಿದೆ. +ಏನಿದು ಎಕ್ಸ್ಪೋಸ್ಯಾಟ್?ಎಕ್ಸ್ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‍ಪಿಎಲ್‍ರ್ ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ. +ಎಕ್ಸ್ಪೋಸ್ಯಾಟ್ ವಿಶೇಷತೆಗಳೇನು?:ಯು ಆರ್ ರಾವ್ ಉಪಗ್ರಹ ಕೇಂದ್ರದ ಸಹಯೋಗದೊಂದಿಗೆ ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (ಆರಾರೈ) ಅಭಿವೃದ್ಧಿಪಡಿಸಿದ ಈ ಉಪಕರಣಗಳು ಆಕಾಶ ವಸ್ತುಗಳ ಭೌತಶಾಸ್ತ್ರದ ಬಗ್ಗೆ ಹೊಸ ಒಳನೋಟಗಳನ್ನು ನೀಡುವ ನಿರೀಕ್ಷೆಯಿದೆ. ಕ್ಷ ಕಿರಣಗಳ ಧ್ರುವೀಕರಣವನ್ನು ಅಳೆಯುವ ಮೂಲಕ, ವಿಜ್ಞಾನಿಗಳು ಈ ದೂರದ ಮೂಲಗಳ ರೇಖಾಗಣಿತ ಮತ್ತು ಹೊರಸೂಸುವಿಕೆಯ ಕಾರ್ಯವಿಧಾನಗಳ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ಊಹಿಸಬಹುದಾಗಿದೆ. +ಅತ್ಯಾಚಾರ ಆರೋಪ: ಬಿಜೆಪಿಯಿಂದ ಕಮಲ್‍ರಾವತ್ ಉಚ್ಛಾಟನೆ +ಏನಿದರ ಕೆಲಸ?:ಪಲ್ಸಾರ, ಕಪ್ಪು ಕುಳಿ ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಉಷ್ಣವಲ್ಲದ ಸೂಪರ್ನೋವಾ ಅವಶೇಷಗಳನ್ನು ಒಳಗೊಂಡಂತೆ ವಿಶ್ವದಲ್ಲಿ ತಿಳಿದಿರುವ 50 ಪ್ರಕಾಶಮಾನವಾದ ಮೂಲಗಳನ್ನು ಅಧ್ಯಯನ ಮಾಡುವ ಗುರಿಯನ್ನು ಎಕ್ಸ್ಪೋಸ್ಯಾಟ್ ಮಿಷನ್ ಹೊಂದಿದೆ. ಉಪಗ್ರಹವನ್ನು 500-700 ಕಿಮೀ ವೃತ್ತಾಕಾರದ ಕಡಿಮೆ ಭೂಮಿಯ ಕಕ್ಷೆಯಲ್ಲಿ ಇರಿಸಲಾಗುವುದು, ಕನಿಷ್ಠ ಐದು ವರ್ಷಗಳ ಮಿಷನ್ ಸಕ್ರಿಯವಾಗಿರಲಿದೆ. ಕಪ್ಪು ಕುಳಿಗಳ ಕುರಿತು ಇದು ಅಧ್ಯಯನ ಮಾಡಲಿದೆ. \ No newline at end of file diff --git a/eesanje/url_47_200_2.txt b/eesanje/url_47_200_2.txt new file mode 100644 index 0000000000000000000000000000000000000000..f11cc09c3d7cd94c29814f66213158c4d6ad1adc --- /dev/null +++ b/eesanje/url_47_200_2.txt @@ -0,0 +1,6 @@ +ಗಡಿಯಲ್ಲಿ 112 ರೋಹಿಂಗ್ಯಾ ಸೇರಿದಂತೆ 744 ಜನರ ಬಂಧನ +ಅಗರ್ತಲಾ, ಜ 2 (ಪಿಟಿಐ) ತ್ರಿಪುರಾದ ಅಂತಾರಾಷ್ಟ್ರೀಯ ಗಡಿಯ ಮೂಲಕ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ 112 ರೋಹಿಂಗ್ಯಾಗಳು ಸೇರಿದಂತೆ ಒಟ್ಟು 744 ಜನರನ್ನು ಬಿಎಸ್‍ಎಫ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈ ಸಂಖ್ಯೆಯು ಕಳೆದ ಮೂರು ವರ್ಷಗಳಲ್ಲಿ ಅತ್ಯಧಿಕವಾಗಿದೆ, ಬಿಎಸ್‍ಎಫ್ ತ್ರಿಪುರಾ ಫ್ರಾಂಟಿಯರ್ 2022 ರಲ್ಲಿ 369 ಮತ್ತು 2021 ರಲ್ಲಿ 208 ನುಸುಳುಕೋರರನ್ನು ಬಂಧಿಸಿದೆ ಎಂದು ಅವರು ಹೇಳಿದರು. 2023 ರಲ್ಲಿ, ಬಿಎಸ್‍ಎಫ್ ಒಟ್ಟು 744 ನುಸುಳುಕೋರರನ್ನು ಬಂಧಿಸಿತು ಮತ್ತು ಅವರಲ್ಲಿ 112 ರೋಹಿಂಗ್ಯಾಗಳು, 337 ಬಾಂಗ್ಲಾದೇಶಿಗಳು ಮತ್ತು 295 ಭಾರತೀಯರು. ಇದು ಕಳೆದ ಮೂರು ವರ್ಷಗಳಲ್ಲಿ ಗಡಿ ರಾಜ್ಯದಲ್ಲಿ ಅತಿ ಹೆಚ್ಚು ನುಸುಳುಕೋರರ ಬಂಧನವಾಗಿದೆ ಎಂದು ಅವರು ಹೇಳಿದರು. +ನಿಷೇಧಿತ ಕೆಮ್ಮು ಸಿರಪ್, ಗಾಂಜಾ, ಯಾಬಾ ಮಾತ್ರೆಗಳು ಮತ್ತು ಬ್ರೌನ್ ಶುಗರ್ ಸೇರಿದಂತೆ ಒಟ್ಟು 41.82 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ವಸ್ತುಗಳನ್ನು ಸಹ ಬಿಎಸ್‍ಎಫ್ ಸಿಬ್ಬಂದಿ ವಶಪಡಿಸಿಕೊಂಡಿದೆ ಎಂದು ಅವರು ವಿವರಿಸಿದರು. ಅಲ್ಲದೆ, 4 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಪತ್ನಿ, ಮೂರು ಮಕ್ಕಳನ್ನು ಕೊಂದ ಪಿಶಾಚಿ ಪತಿ +ವರ್ಷಗಳಲ್ಲಿ, ಬಿಎಸ್‍ಎಫ್ ತ್ರಿಪುರಾ ಫ್ರಾಂಟಿಯರ್ ಬಂಡಾಯದ ವಿರುದ್ಧ ಹೋರಾಡುವಲ್ಲಿ, ಗಡಿಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಮತ್ತು ದೂರದ ಮತ್ತು ನಿರಾಶ್ರೀತ ಭೂಪ್ರದೇಶದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಕೆಲಸ ಮಾಡುವಾಗ ಎಲ್ಲಾ ರೀತಿಯ ಗಡಿಯಾಚೆಗಿನ ಅಪರಾಧಗಳನ್ನು ತಡೆಗಟ್ಟುವಲ್ಲಿ ಬಹುವಿಧದ ಜವಾಬ್ದಾರಿಗಳನ್ನು ನಿರ್ವಹಿಸಿದೆ ಎಂದು ಅವರು ಹೇಳಿದರು. ತ್ರಿಪುರಾ ಬಾಂಗ್ಲಾದೇಶದೊಂದಿಗೆ 856 ಕಿಮೀ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿದೆ. \ No newline at end of file diff --git a/eesanje/url_47_200_3.txt b/eesanje/url_47_200_3.txt new file mode 100644 index 0000000000000000000000000000000000000000..856937d9e11c528bc690c4f939dd1fceacfa67ef --- /dev/null +++ b/eesanje/url_47_200_3.txt @@ -0,0 +1,5 @@ +ಪತ್ನಿ, ಮೂರು ಮಕ್ಕಳನ್ನು ಕೊಂದ ಪಿಶಾಚಿ ಪತಿ +ಬಿಲಾಸ್‍ಪುರ, ಜ 2 (ಪಿಟಿಐ) ಪತ್ನಿಯ ವಿವಾಹೇತರ ಸಂಬಂಧದ ಶಂಕೆಯಲ್ಲಿ ಅನುಮಾನ ಪಿಶಾಚಿ ಪತಿಯೊಬ್ಬ ಪತ್ನಿ ಹಾಗೂ ಮೂರು ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಛತ್ತೀಸ್‍ಗಢದ ಬಿಲಾಸ್‍ಪುರ ಜಿಲ್ಲೆಯಲ್ಲಿ ನಡೆದಿದೆ. 34 ವರ್ಷದ ಉಮೇಂದ್ರ ಕೇವತ್ ಎಂಬಾತ ತನ್ನ ಪತ್ನಿ ಮತ್ತು ಮೂವರು ಅಪ್ರಾಪ್ತ ಮಕ್ಕಳನ್ನು ಆಕೆಯ ವಿವಾಹೇತರ ಸಂಬಂಧದ ಶಂಕೆಯಿಂದ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಸ್ತೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿರ್ರಿ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಉಮೇಂದ್ರ ಕೇವತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಬಿಲಾಸ್‍ಪುರ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ. +ಮಾಲ್ಡೀವ್ಸ್ ಫೋಟೋಸ್ ಹಂಚಿಕೊಂಡ ಸನಾ +ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇವತ್ ತನ್ನ ಪತ್ನಿ, 4 ಮತ್ತು 5 ವರ್ಷದ ಇಬ್ಬರು ಹೆಣ್ಣುಮಕ್ಕಳು ಮತ್ತು 2 ವರ್ಷದ ಮಗನನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_200_4.txt b/eesanje/url_47_200_4.txt new file mode 100644 index 0000000000000000000000000000000000000000..92894ea5a1f0cd8194b325f26be26f40f2e2e343 --- /dev/null +++ b/eesanje/url_47_200_4.txt @@ -0,0 +1,6 @@ +ತೆರೆದ ಕೊಳವೆ ಬಾವಿಗೆ ಬಿದ್ದು ಮೃತಪಟ್ಟ ಬಾಲಕಿ +ದೇವಭೂಮಿ ದ್ವಾರಕಾ, ಜ 2 (ಪಿಟಿಐ) ಗುಜರಾತ್‍ನ ದೇವಭೂಮಿ ದ್ವಾರಕಾ ಜಿಲ್ಲೆಯಲ್ಲಿ 30 ಅಡಿ ಆಳದ ಬೋರ್‍ವೆಲ್‍ಗೆ ಬಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಕೊಳವೆ ಬಾವಿಯಿಂದ ಹೊರ ತೆಗೆದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. +ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ರಣ ಗ್ರಾಮದಲ್ಲಿ ತೆರೆದ ಬೋರ್‍ವೆಲ್‍ಗೆ ಮಗು ಬಿದ್ದಿದೆ. ರಾತ್ರಿ 9.50 ರ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆಯನ್ನು ಬೋರ್‍ವೆಲ್‍ನಿಂದ ಹೊರತೆಗೆದು ಚಿಕಿತ್ಸೆಗಾಗಿ ಜಮ್ ಖಂಭಾಲಿಯಾ ಪಟ್ಟಣದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅವರು ಹೇಳಿದರು. ರಾತ್ರಿ ಆಸ್ಪತ್ರೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯಕೀಯ ಸೌಲಭ್ಯದ ಅಧಿಕಾರಿಗಳು ತಿಳಿಸಿದ್ದಾರೆ. +ಮಾಲ್ಡೀವ್ಸ್ ಫೋಟೋಸ್ ಹಂಚಿಕೊಂಡ ಸನಾ +ಆರಂಭದಲ್ಲಿ ಆಕೆಯ ಸಾವಿಗೆ ಉಸಿರುಕಟ್ಟುವಿಕೆ ಕಾರಣ ಎಂದು ಹೇಳಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಅವರು ಹೇಳಿದರು. ಬಾಲಕಿ ಆಟವಾಡುತ್ತಿದ್ದಾಗ ತೆರೆದ ಬೋರ್‍ವೆಲ್‍ಗೆ ಬಿದ್ದಿದ್ದಾಳೆ, ನಂತರ ಸೇನೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಸಿಬ್ಬಂದಿ ಆಕೆಯನ್ನು ರಕ್ಷಿಸಲು ಪ್ರಯತ್ನಿಸಿದರು ಎಂದು ಜಿಲ್ಲಾಧಿಕಾರಿ ಎಚ್‍ಬಿ ಭಗೋರಾ ತಿಳಿಸಿದ್ದಾರೆ. +ಎನ್‍ಡಿಆರ್‍ಎಫ್ ಅಧಿಕಾರಿಯೊಬ್ಬರು ಬಾಲಕಿಯನ್ನು ರಕ್ಷಿಸಲು, ಆಕೆಯ ಕೈಯನ್ನು ಹಗ್ಗದಿಂದ ಲಾಕ್ ಮಾಡಲಾಗಿದೆ ಮತ್ತು ಸ್ಥಿರತೆಯನ್ನು ಒದಗಿಸಲು ಎಲ-ಆಧಿಕಾರದ ಕೊಕ್ಕೆಯನ್ನು ನಿಯೋಜಿಸಲಾಗಿತ್ತು ಇದರ ಜತೆಗೆ ಸಮಾನಾಂತರ ಅಗೆಯುವಿಕೆಯನ್ನು ಸಹ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_200_5.txt b/eesanje/url_47_200_5.txt new file mode 100644 index 0000000000000000000000000000000000000000..92804ca48da5bac8257398ac17f317890d7832c2 --- /dev/null +++ b/eesanje/url_47_200_5.txt @@ -0,0 +1,10 @@ +ಅಯೋಧ್ಯೆಯ ರಾಮಮಂದಿರಕ್ಕೆ ಬಾಂಬ್ ಬೆದರಿಕೆ +ಅಯೋಧ್ಯೆ,ಜ.1- ಹಿಂದೂಗಳ ಆರಾಧ್ಯದೈವ ಮರ್ಯಾದಾ ಪುರುಷೋತ್ತಮ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ , ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್‍ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್ಟಿಎಫ್ ಎಡಿಜಿಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ. +ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದ್ದು, ಐಎಸ್‍ಐ ಜತೆ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾನೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್‍ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ ಪೊಲೀಸರು ಕೂಡಲೇ ಎಫ್‍ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. +ಇದರಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ ಎಂದೂ ಹೇಳಲಾಗುತ್ತಿದೆ. ಕಳುಹಿಸುವವರು ಜುಬೇರ್ ಹುಸೇನ್ ಖಾನ್ ಎಂದು ಬರೆದಿದ್ದಾರೆ. ಈ ಅಪರಿಚಿತ ಸಂದೇಶದಾರ ದೇವಸ್ಥಾನಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಸ್ವತಃ ದೇವೇಂದ್ರ ತಿವಾರಿಗೂ ಬೆದರಿಕೆ ಹಾಕಿದ್ದಾನೆ. +ನಾನೂ ಹಿಂದೂ ಆದರೆ, ಬಿಜೆಪಿಯವರಂತೆ ಪ್ರದರ್ಶಿಸುವುದಿಲ್ಲ; ರಂಜನ್ ಸಿಂಗ್ +ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಪೊಲೀಸರು ತನಿಖೆಯ ಭರವಸೆ ಮಾತ್ರ ನೀಡಿದ್ದರು. ಬಳಿಕ ಮೌನ ವಹಿಸಿದ್ದರು ಎಂದು ಎಂದು ದೇವೇಂದ್ರ ತಿವಾರಿ ಆರೋಪಿಸಿದ್ದಾರೆ. +ಇದೀಗ ರಾಮ ಮಂದಿರ, ಸಿಎಂ ಅವರನ್ನೂ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ. ಡಿಸೆಂಬರ್ 27ರ ಸಂಜೆ ದೇವೇಂದ್ರ ಅವರ ಮೇಲ್ ಐಡಿಗೆ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು. ತನಗೆ ಇಂತಹ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಹಿಂದಿನ ಸಂದರ್ಭದಲ್ಲಿ ಎಫ್‍ಐಆರ್ ದಾಖಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ಖಚಿತವಾದ ಕ್ರಮಗಳನ್ನು ತೆಗೆದುಕೊಳ್ಳದೆ ಭರವಸೆಯನ್ನು ಮಾತ್ರ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. +ರಾಮಮಂದಿರ ಶಂಕುಸ್ಥಾಪನೆ ಸಂದರ್ಭದಲ್ಲಿ ಏಕತೆಗಾಗಿ ಮನವಿ ಆರೆಸ್‍ಎಸ್-ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ನ ಮುಖ್ಯ ಪೋಷಕರಾದ ಇಂದ್ರೇಶ್ ಕುಮಾರ್, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಮುಸ್ಲಿಮರು ಮತ್ತು ವಿವಿಧ ಧರ್ಮಗಳ ಜನರು ಶಾಂತಿಯುತವಾಗಿರಲು ಒತ್ತಾಯಿಸಿದರು. +ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ +ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯುವ ಪ್ರಯುಕ್ತ ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್ ಎಂಬ ಮಂತ್ರ ಪಠಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಸ್ಲಿಂ ರಾಷ್ಟ್ರೀಯ ಮಂಚ್ ಮುಖ್ಯ ಪೋಷಕ ಮತ್ತು ಆರ್‍ಎಸ್‍ಎಸ್‍ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಮುಸ್ಲಿಮರು ಮತ್ತು ಇತರರಿಗೆ ಕರೆ ನೀಡಿದ್ದಾರೆ. \ No newline at end of file diff --git a/eesanje/url_47_200_6.txt b/eesanje/url_47_200_6.txt new file mode 100644 index 0000000000000000000000000000000000000000..4ddf8b0c044839171dab8890b175acd57f425ebc --- /dev/null +++ b/eesanje/url_47_200_6.txt @@ -0,0 +1,5 @@ +ನಾನೂ ಹಿಂದೂ ಆದರೆ, ಬಿಜೆಪಿಯವರಂತೆ ಪ್ರದರ್ಶಿಸುವುದಿಲ್ಲ; ರಂಜನ್ ಸಿಂಗ್ +ಪಾಟ್ನಾ,ಜ.1- ಜೆಡಿಯು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ತಮ್ಮ ಮೊದಲ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ರಾಜೀವ್ ರಂಜನ್ ಸಿಂಗ್ ಅವರು ನಾನು ಧರ್ಮನಿಷ್ಠ ಹಿಂದೂ ಆದರೆ ಬಿಜೆಪಿಯವರಂತೆ ಅದನ್ನು ಪ್ರದರ್ಶಿಸುವುದಿಲ್ಲ ಎಂದು ಹೇಳಿದ್ದಾರೆ. +ಧರ್ಮ ಮತ್ತು ನಂಬಿಕೆ ಪ್ರದರ್ಶನಕ್ಕಾಗಿ ಅಲ್ಲ, ನಾನು ಕೂಡ ಹಿಂದೂ ಮತ್ತು ನನ್ನ ನಂಬಿಕೆ ಆಳವಾಗಿದೆ, ಆದರೆ ನಾನು ಅದನ್ನು ಬಿಜೆಪಿಯವರಂತೆ ತೋರಿಸುವುದಿಲ್ಲ. ಧಾರ್ಮಿಕ ಸ್ಥಳಗಳು ಸೈಟ್ ಅಲ್ಲ. ಪ್ರದರ್ಶನ, ಜನರನ್ನು ದಾರಿತಪ್ಪಿಸಲು ಅವುಗಳನ್ನು ಬಳಸಲಾಗುತ್ತಿದೆ, ಪ್ರಾಯೋಜಿತ ಸುದ್ದಿಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲು ಮಾಧ್ಯಮಗಳನ್ನು ಮುಂದಿಡಲಾಗುತ್ತಿದೆ, ಎಂದು ಅವರು ಹೇಳಿದರು. +ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ +ಬಿಹಾರ ಸರ್ಕಾರದ ಪತನ ಮತ್ತು ಜೆಡಿಯು ವಿಭಜನೆಯ ಮುನ್ಸೂಚನೆಗಳು ಸತ್ಯಕ್ಕೆ ದೂರವಾಗಿವೆ ಎಂದು ಅವರು ಹೇಳಿದರು. ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಸರ್ಕಾರ ಬಲಿಷ್ಠವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಇಂಡಿಯಾ ಒಕ್ಕೂಟ ವೇದಿಕೆಯಿಂದ ಒಟ್ಟಾಗಿ ಹೋರಾಡುತ್ತೇವೆ. ಬಿಹಾರ ಬಿಜೆಪಿ ಮತ್ತು (ಪ್ರಧಾನಿ ನರೇಂದ್ರ) ಮೋದಿಯ ವಿದಾಯಕ್ಕೆ ದಾರಿ ತೋರಿಸಲು ಬಿಹಾರಿಗಳು ಮನಸು ಮಾಡಿದ್ದಾರೆ ಎಂದಿದ್ದಾರೆ. \ No newline at end of file diff --git a/eesanje/url_47_200_7.txt b/eesanje/url_47_200_7.txt new file mode 100644 index 0000000000000000000000000000000000000000..cac6cca58379e89eec1bd76cb1675c67b6ad041a --- /dev/null +++ b/eesanje/url_47_200_7.txt @@ -0,0 +1,6 @@ +ಗಣರಾಜ್ಯೋತ್ಸವ ಟ್ಯಾಬ್ಲೋ ಪಾಲ್ಗೊಳ್ಳುವಿಕೆ ಬಗ್ಗೆ ತಾರತಮ್ಯ ಮಾಡಿಲ್ಲ +ನವದೆಹಲಿ,ಜ.1-ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳದಿರುವಂತೆ ಪಂಜಾಬ್ ಮತ್ತು ದೆಹಲಿಯ ಟ್ಯಾಬ್ಲೋಗಳನ್ನು ತಡೆಹಿಡಿದಿರುವ ಕ್ರಮ ತಾರತಮ್ಯದಿಂದ ಕೂಡಿದೆ ಎಂಬ ಆರೋಪವನ್ನು ರಕ್ಷಣಾ ಸಚಿವಾಲಯ ನಿರಾಕರಿಸಿದೆ.ದೆಹಲಿ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಿಂದ ಗಣರಾಜ್ಯೋತ್ಸವ 2024 ರ ಟ್ಯಾಬ್ಲೋಗಳನ್ನು ತಿರಸ್ಕರಿಸಿದ ನಂತರ ಕೇಂದ್ರವು ತಾರತಮ್ಯದ ಆರೋಪಗಳನ್ನು ತಳ್ಳಿಹಾಕಿದೆ, ಈ ವರ್ಷದ ಸಂಭ್ರಮಾಚರಣೆಯ ಮೆರವಣಿಗೆಯ ವಿಶಾಲ ವಿಷಯ ದೊಂದಿಗೆ ಅವು ಹೊಂದಿಕೆಯಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ. +ಪಂಜಾಬ್ ಸಿಎಂ ಭಗವಂತ್ ಮಾನ್‍ಅವರು ಗಣರಾಜ್ಯೋತ್ಸವಕ್ಕಾಗಿ ರಾಜ್ಯದ ಟ್ಯಾಬ್ಲೋ ವಿರುದ್ಧ ಕೇಂದ್ರ ತಾರತಮ್ಯ ಮಾಡಿದೆ ಎಂದು ಆರೋಪಿಸಿದ್ದರು. ಗಣರಾಜ್ಯೋತ್ಸವ 2024 ರ ಪರೇಡ್‍ನಲ್ಲಿ ಟ್ಯಾಬ್ಲೋಗಳ ಬಗ್ಗೆ ತರಾತಮ್ಯ ನೀತಿ ಅನುಸರಿಸಲಾಗಿದೆ ಎಂಬುದನ್ನು ನಿರಾಕರಿಸಿರುವ ರಕ್ಷಣಾ ಸಚಿವಾಲಯವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಸ್ತಾವನೆಗಳನ್ನು ವಿವಿಧ ಕೈಗಾರಿಕೆಗಳ ಕಲಾವಿದರ ತಜ್ಞ ಸಮಿತಿ ಪರಿಶೀಲಿಸಿದೆ ಮತ್ತು ಕೇಂದ್ರದಿಂದ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದೆ. +ಅಯೋಧ್ಯೆಯಲ್ಲಿ ಜೈಶ್ರೀರಾಮ್ ಘೋಷಣೆಯೊಂದಿಗೆ ಹೊಸ ವರ್ಚಾಚರಣೆ +ತಜ್ಞರ ಸಮಿತಿಯ ಮೊದಲ ಮೂರು ಸುತ್ತಿನ ಸಭೆಗಳಲ್ಲಿ ಪಂಜಾಬ್‍ನ ಟ್ಯಾಬ್ಲೋ ಪ್ರಸ್ತಾಪವನ್ನು ಪರಿಗಣಿಸಲಾಯಿತು, ಆದರೆ ಅಂತಿಮವಾಗಿ ವಿಷಯದೊಂದಿಗೆ ಹೊಂದಿಕೆಯಾಗದ ಕಾರಣ ತಿರಸ್ಕರಿಸಲಾಯಿತು. ಅದೇ ಕಾರಣಗಳಿಗಾಗಿ ಪಶ್ಚಿಮ ಬಂಗಾಳದ ಟ್ಯಾಬ್ಲೋಗಳನ್ನು ತಿರಸ್ಕರಿಸಲಾಗಿದೆ ಎಂದು ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. +ಕೇಂದ್ರವು ಟ್ಯಾಬ್ಲೋ ಪರೀಕ್ಷೆಗಾಗಿ ತಜ್ಞರ ಸಮಿತಿಯು ಕಲೆ, ಸಂಸ್ಕøತಿ, ಚಿತ್ರಕಲೆ, ಸಂಗೀತ, ವಾಸ್ತುಶಿಲ್ಪ, ನೃತ್ಯ ಸಂಯೋಜನೆ, ಶಿಲ್ಪಕಲೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿನ ಗಣ್ಯ ವ್ಯಕ್ತಿಗಳನ್ನು ಒಳಗೊಂಡಿರುವ ಸಮಿತಿಯನ್ನು ಕೇಂದ್ರ ಸರ್ಕಾರ ತಿಳಿಸಿದೆ. \ No newline at end of file diff --git a/eesanje/url_47_200_8.txt b/eesanje/url_47_200_8.txt new file mode 100644 index 0000000000000000000000000000000000000000..240f91b251d2b5c5f817c7fef05065da14b22644 --- /dev/null +++ b/eesanje/url_47_200_8.txt @@ -0,0 +1,5 @@ +ಯುಪಿಐ ಬಳಕೆಗೆ ಇಂದಿನಿಂದ ಹೊಸ ನಿಯಮ +ನವದೆಹಲಿ,ಜ.1- ಯುಪಿಐ ಪಾವತಿ ಬಗ್ಗೆ ಮಾಡಲಾಗಿರುವ ಹೊಸ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ.ಡಿಜಿಟಲ್ ವಹಿವಾಟಿನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಕೆಲ ನಿಯಮಗಳನ್ನು ಜಾರಿಗೆ ತರಲಾಗಿದ್ದು, ಹೊಸ ನಿಯಮಗಳು ಇಂದಿನಿಂದ ಜಾರಿಗೆ ಬರಲಿದೆ ಎಂದು ಆರ್‌ಬಿಐ ತಿಳಿಸಿದೆ. ನ್ಯಾಷನಲ್ ಪೇಮೆಂಟ್ಸ್ ಕಾಪೆರ್ರೇಷನ್ ಆಫ್ ಇಂಡಿಯಾ ಮತ್ತಿತರ ಪಾವತಿ ಅಪ್ಲಿಕೇಶನ್‍ಗಳು ಮತ್ತು ಒಂದು ವರ್ಷಕ್ಕಿಂತ ಹೆಚ್ಚು ಕಾಲ ಸಕ್ರಿಯವಾಗಿರದ ಯುಪಿಐ ಐಡಿಗಳು ಮತ್ತು ಸಂಖ್ಯೆಗಳನ್ನು ನಿಷ್ಕ್ರಿಯಗೊಳಿಸಲು ಬ್ಯಾಂಕ್‍ಗಳನ್ನು ಕೇಳಿದೆ. +ಯುಪಿಐ ವಹಿವಾಟುಗಳಿಗೆ ದೈನಂದಿನ ಪಾವತಿ ಮಿತಿಯು ಈಗ ಗರಿಷ್ಠ 1 ಲಕ್ಷವಾಗಿರುತ್ತದೆ. ಆದಾಗ್ಯೂ,ಹೊಸ ನಿಯಮಗಳ ಪ್ರಕಾರ ವಹಿವಾಟಿನ ಮಿತಿಯನ್ನು 5 ಲಕ್ಷಕ್ಕೆ ಏರಿಸಲಾಗಿದೆ. ಹೆಚ್ಚುವರಿಯಾಗಿ, ಆರ್‌ಬಿಐ ಜಪಾನಿನ ಕಂಪನಿ ಹಿಟಾಚಿಯ ಸಹಯೋಗದೊಂದಿಗೆ ಈಗ ಭಾರತದಾದ್ಯಂತ ಯುಪಿಐ ಎಟಿಎಂಗಳನ್ನು ಹೊರತರಲಿದೆ, ಇದರಲ್ಲಿ ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಲು ನೀವು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಬಹುದಾಗಿದೆ. +ತೈವಾನ್ ಜತೆ ಚೀನಾ ಪುನರ್‌ಏಕೀಕರಣ ಶತಸಿದ್ಧ; ಜಿನ್‍ಪಿಂಗ್ +ಗಮನಾರ್ಹವಾಗಿ, ಯುಪಿಐ ಭಾರತದಲ್ಲಿ ನೈಜ-ಸಮಯದ ಪಾವತಿ ವ್ಯವಸ್ಥೆಯಾಗಿದ್ದು, ಸ್ಮಾರ್ಟ್‍ಫೋನ್‍ಗಳನ್ನು ಬಳಸಿಕೊಂಡು ವಿವಿಧ ಬ್ಯಾಂಕ್‍ಗಳ ನಡುವೆ ತಡೆರಹಿತ, ತ್ವರಿತ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಕಳೆದ ವರ್ಷ ಯುಪಿಐ 10 ಬಿಲಿಯನ್ ವಹಿವಾಟುಗಳನ್ನು ದಾಟುವ ಮೂಲಕ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ. ನ್ಯಾಶನಲ್ ದೇಶವು ತಿಂಗಳಿಗೆ 100 ಬಿಲಿಯನ್ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ವಹಿವಾಟುಗಳನ್ನು ಮಾಡುವ ಸಾಮಥ್ರ್ಯವನ್ನು ಹೊಂದಿದೆ ಎನ್ನಲಾಗಿದೆ. \ No newline at end of file diff --git a/eesanje/url_47_200_9.txt b/eesanje/url_47_200_9.txt new file mode 100644 index 0000000000000000000000000000000000000000..de648e42545a95a95b34e3cf1d41cfef00f50fa3 --- /dev/null +++ b/eesanje/url_47_200_9.txt @@ -0,0 +1,6 @@ +ಅಯೋಧ್ಯೆಯಲ್ಲಿ ಜೈಶ್ರೀರಾಮ್ ಘೋಷಣೆಯೊಂದಿಗೆ ಹೊಸ ವರ್ಚಾಚರಣೆ +ಅಯೋಧ್ಯೆ, ಜ. 1 (ಪಿಟಿಐ) ಅಯೋಧ್ಯೆಯ ಪ್ರಸಿದ್ಧ ಲತಾ ಮಂಗೇಶ್ಕರ್ ಚೌಕ್‍ನಲ್ಲಿ ಜೈ ಶ್ರೀ ರಾಮ್ ಘೋಷಣೆಗಳ ನಡುವೆ ಹೊಸ ವರ್ಷವನ್ನು ಆಚರಿಸಲಾಯಿತು. ಸ್ಥಳೀಯ ನಿವಾಸಿಗಳು ತಡರಾತ್ರಿ 11 ಗಂಟೆಗೆ ಐಕಾನಿಕ್ ವೃತ್ತದಲ್ಲಿ ಜಮಾಯಿಸಿ, ಗಡಿಯಾರ 12 ಗಂಟೆ ಬಾರಿಸಿದ ಕೂಡಲೆ ಜೈ ಶ್ರೀರಾಮ್ ಘೋಷಣೆ ಕೂಗುತ್ತ ಹೊಸ ವರ್ಷವನ್ನು ಬರಮಾಡಿಕೊಂಡರು. +ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೆಲಿ ಕ್ಲಿಕ್ಕಿಸಿಕೊಂಡ ನಂತರ ಲತಾ ಮಂಗೇಶ್ಕರ್ ಚೌಕ ಜನರು ಸೆಲ್ಫಿ ತೆಗೆದುಕೊಳ್ಳುವ ಪ್ರಸಿದ್ದ ಸ್ಥಳವಾಗಿ ಮಾರ್ಪಡಾಗಿದೆ. ಲತಾ ಮಂಗೇಶ್ಕರ್ ಚೌಕ್ ಸೇರಿದಂತೆ ಆಯೋಧ್ಯೆಯ ಪ್ರಮುಖ ಸ್ಥಳಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. +ಪರೀಕ್ಷಾ ಪೇ ಚರ್ಚಾ: ನೋಂದಾಯಿಸಿಕೊಳ್ಳಲು ಜ.12ರವರೆಗೆ ಅವಕಾಶ +ನಾವು ನಮ್ಮ ಪೂಜ್ಯ ಶ್ರೀ ರಾಮನ ಪವಿತ್ರ ಜನ್ಮಸ್ಥಳದಲ್ಲಿ ಹೊಸ ವರ್ಷವನ್ನು ಆಚರಿಸಲು ಬಂದಿದ್ದೇವೆ. ಅದೇ ರೀತಿ ನಾವು ಪವಿತ್ರ ಸ್ನಾನ ಮಾಡಲು ಸರಯೂ ನದಿಗೆ ಹೋಗುತ್ತೇವೆ, ಶಿವ ದೇವಾಲಯಕ್ಕೆ ಭೇಟಿ ನೀಡುತ್ತೇವೆ ಮತ್ತು ನಂತರ ರಾಮಜನ್ಮಭೂಮಿಯಲ್ಲಿ ರಾಮ್ ಲಲ್ಲಾ ಅವರ ಆಶೀರ್ವಾದ ಪಡೆಯುತ್ತೇವೆ ಎಂದು ಕೆಲವರು ತಿಳಿಸಿದರು. +ನಯಾ ಘಾಟ್ ಬಳಿಯ ಲತಾ ಮಂಗೇಶ್ಕರ್ ಚೌಕ್‍ನ ಹೊರವಲಯದಲ್ಲಿ ಹಲವಾರು ಜನರು, ಮುಖ್ಯವಾಗಿ ಯುವಕರು ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು. \ No newline at end of file diff --git a/eesanje/url_47_201_1.txt b/eesanje/url_47_201_1.txt new file mode 100644 index 0000000000000000000000000000000000000000..c2cf689ed679bc30002c8008daac4b17dea8997d --- /dev/null +++ b/eesanje/url_47_201_1.txt @@ -0,0 +1,8 @@ +ದುಷ್ಟಶಕ್ತಿಗಳ ವಿರುದ್ಧ ಹೊರಾಡಲು ಟಿಎಂಸಿ ಕಾರ್ಯಕರ್ತರಿಗೆ ದೀದಿ ಕರೆ +ಕೋಲ್ಕತ್ತಾ, ಜ.1 (ಪಿಟಿಐ) ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟಿಎಂಸಿ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ, ಮಾತ್ರವಲ್ಲ, ಯಾವುದೇ ದುಷ್ಟ ಶಕ್ತಿಗಳನ್ನು ವಿರೋಧಿಸಲು ಮತ್ತು ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಲು ನಡೆಯುತ್ತಿರುವ ಹೋರಾಟದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. +ಟಿಎಂಸಿ ರಚನೆಯ ಮಹತ್ವದ ಕುರಿತು ಮಾತನಾಡಿದ ಅವರು, ಮಾತೃಭೂಮಿಯನ್ನು ಗೌರವಿಸಲು, ರಾಜ್ಯದ ಹಿತಾಸಕ್ತಿಗಳನ್ನು ಎತ್ತಿಹಿಡಿಯಲು ಮತ್ತು ಜನಸಾಮಾನ್ಯರಿಗೆ ಪ್ರಜಾಪ್ರಭುತ್ವ ಹಕ್ಕುಗಳ ರಕ್ಷಣೆಗಾಗಿ ನಮ್ಮ ಪಕ್ಷವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತ ಮತ್ತು ಬೆಂಬಲಿಗರ ಸಮರ್ಪಣೆ ಮತ್ತು ಸ್ವಯಂ ತ್ಯಾಗವನ್ನು ನಾನು ವಿನಮ್ರವಾಗಿ ಗೌರವಿಸುತ್ತೇನೆ ಇಂದು ಟಿಎಂಸಿ ಕುಟುಂಬವು ಎಲ್ಲರ ಪ್ರೀತಿ ಮತ್ತು ಪ್ರೀತಿಯಿಂದ ಆಶೀರ್ವದಿಸಲ್ಪಟ್ಟಿದೆ ಎಂದು ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಅತ್ಯಾಚಾರ ಆರೋಪ: ಬಿಜೆಪಿಯಿಂದ ಕಮಲ್‍ರಾವತ್ ಉಚ್ಛಾಟನೆ +ನಿಮ್ಮ ಅವಿರತ ಬೆಂಬಲದ ಬಲದ ಮೇಲೆ ನಾವು ಈ ಮಹಾನ್ ಪ್ರಜಾಪ್ರಭುತ್ವದ ದೇಶದಲ್ಲಿ ಪ್ರತಿಯೊಬ್ಬರಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ. ಯಾವುದೇ ದುಷ್ಟ ಶಕ್ತಿಗೆ ಶರಣಾಗುವುದಿಲ್ಲ. ಎಲ್ಲಾ ಭಯೋತ್ಪಾದನೆಯನ್ನು ವಿರೋಧಿಸಿ ನಾವು ನಮ್ಮ ದೇಶದ ಸಾಮಾನ್ಯ ಜನರಿಗಾಗಿ ನಮ್ಮ ಜೀವಮಾನದ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ. +1998 ರಲ್ಲಿ ಕಾಂಗ್ರೆಸ್‍ನಿಂದ ಹೊರಹೊಮ್ಮಿದ ಟಿಎಂಸಿ 2001 ಮತ್ತು 2006 ರಲ್ಲಿ ಎರಡು ವಿಫಲ ಪ್ರಯತ್ನಗಳ ನಂತರ 2011 ರಲ್ಲಿ ಎಡರಂಗದ ಆಡಳಿತವನ್ನು ಸೋಲಿಸುವ ಮೂಲಕ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. +ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ +ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಬ್ಯಾನರ್ಜಿ ಅವರು 2021 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಅದ್ಭುತ ಗೆಲುವಿನತ್ತ ಮುನ್ನಡೆಸಿದರು, ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_201_10.txt b/eesanje/url_47_201_10.txt new file mode 100644 index 0000000000000000000000000000000000000000..2102ba4732f58291957a6931e9f06a204d054505 --- /dev/null +++ b/eesanje/url_47_201_10.txt @@ -0,0 +1,6 @@ +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ನವದೆಹಲಿ, ಡಿ 31 (ಪಿಟಿಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 2023 ರ ತಮ್ಮ ಕೊನೆಯ ಮನ್ ಕಿ ಬಾತ್ ಭಾಷಣದಲ್ಲಿ ಆಸ್ಕರ್ ಪ್ರಶಸ್ತಿಗೆ ಪಾತ್ರವಾದ ಆರ್‍ಆರ್‍ಆರ್ ಚಿತ್ರದ ನಾಟು ನಾಟು ಹಾಡು ಮತ್ತು ದ ಎಲಿಫೆಂಟ್ ವಿಸ್ಪರರ್ಸ್ ಸಾಕ್ಷ್ಯಚಿತ್ರದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಮನ್ ಕಿ ಬಾತ್‍ನ 108 ನೇ ಸಂಚಿಕೆಯಲ್ಲಿ, ಪ್ರಧಾನಮಂತ್ರಿ ಅವರು ಆರ್‍ಆರ್‍ಆರ್ ಚಿತ್ರದ ನಾಟು ನಾಟು ಹಾಡು ಮತ್ತು ಸಾಕ್ಷ್ಯ ಚಿತ್ರ ಆಸ್ಕರ್ ಪ್ರಶಸ್ತಿ ಗೆಲ್ಲುವ ಮೂಲಕ ಕೋಟ್ಯಂತರ ಭಾರತೀಯರ ಕನಸು ನನಸು ಮಾಡಿವೆ ಎಂದು ಗುಣಗಾನ ಮಾಡಿದ್ದಾರೆ. +ವಿಶ್ವವು ಭಾರತದ ಸೃಜನಶೀಲತೆಯನ್ನು ನೋಡಿದೆ ಮತ್ತು ಅದರ ಮನರಂಜನಾ ಉದ್ಯಮದ ಮೂಲಕ ಪರಿಸರದೊಂದಿಗೆ ದೇಶದ ಸಂಪರ್ಕವನ್ನು ಅರ್ಥಮಾಡಿಕೊಂಡಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.ಸ್ನೇಹಿತರೇ, ನಾಟು ನಾಟು ಹಾಡಿಗೆ ಆಸ್ಕರ್ ಸಿಕ್ಕಾಗ ಇಡೀ ದೇಶವೇ ಖುಷಿಯಿಂದ ಕುಣಿದು ಕುಪ್ಪಳಿಸಿತ್ತು. ದಿ ಎಲಿಫೆಂಟ್ ವಿಸ್ಪರರ್ಸ್‍ಗೆ ನೀಡಿದ ಗೌರವವನ್ನು ಕೇಳಿ ಯಾರಿಗೆ ಸಂತೋಷವಾಗಲಿಲ್ಲ? ಇವುಗಳ ಮೂಲಕ ಜಗತ್ತು ಭಾರತದ ಸೃಜನಶೀಲತೆಗೆ ಸಾಕ್ಷಿಯಾಯಿತು ಮತ್ತು ನಮ್ಮ ಸಂಬಂಧವನ್ನು ಅರ್ಥಮಾಡಿಕೊಂಡಿತು ಎಂದು ಮೋದಿ ಹೇಳಿದರು. +ಮುಂಬೈನಲ್ಲಿ ಸರಣಿ ಸ್ಪೋಟ ನಡೆಸುವುದಾಗಿ ಹುಸಿ ಕರೆ +ನೆಟ್‍ಫ್ಲಿಕ್ಸ್‍ನ ತಮಿಳು ಸಾಕ್ಷ್ಯಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್ ಚೊಚ್ಚಲ ನಟ ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ ಮತ್ತು ಗುನೀತ್ ಮೊಂಗಾ ನಿರ್ಮಿಸಿದ್ದಾರೆ, ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಆಸ್ಕರ್ ಗೆದ್ದ ಮೊದಲ ಭಾರತೀಯ ಸಾಕ್ಷ್ಯಚಿತ್ರವಾಗಿದೆ. ಮನ್ ಕಿ ಬಾತ್ ಪ್ರಸಾರದ ಸಂದರ್ಭದಲ್ಲಿ ನಟ ಅಕ್ಷಯ್ ಕುಮಾರ್ ಕೂಡ ತಮ್ಮ ಫಿಟ್ನೆಸ್ ಸಲಹೆಗಳನ್ನು ಹಂಚಿಕೊಂಡಿದ್ದಾರೆ. +ಫಿಲ್ಟರ್ ಲೈಫ್ ಬೇಡ ಫಿಟ್ಟರ್ ಲೈಫ್ ಎಂದು ಕುಮಾರ್ ಅವರು ದೈಹಿಕ ಕ್ಷಮತೆ ಹಾಗೂ ಒಟ್ಟಾರೆ ಯೋಗಕ್ಷೇಮದತ್ತ ಗಮನ ಹರಿಸುವಂತೆ ಕರೆ ನೀಡಿದ್ದಾರೆ. \ No newline at end of file diff --git a/eesanje/url_47_201_11.txt b/eesanje/url_47_201_11.txt new file mode 100644 index 0000000000000000000000000000000000000000..758f37b9c0dc52be7cad058f7d245e744ae05583 --- /dev/null +++ b/eesanje/url_47_201_11.txt @@ -0,0 +1,6 @@ +ಮುಂಬೈನಲ್ಲಿ ಸರಣಿ ಸ್ಪೋಟ ನಡೆಸುವುದಾಗಿ ಹುಸಿ ಕರೆ +ಮುಂಬೈ,ಡಿ.31- ವಾಣಿಜ್ಯ ರಾಜಧಾನಿಯಲ್ಲಿ ಸರಣಿ ಸ್ಪೋಟ ನಡೆಸುವುದಾಗಿ ಮುಂಬೈ ಪೊಲೀಸರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿರುವ ಪ್ರಕರಣ ನಡೆದಿದೆ. ಅನಾಮಧೇಯ ವ್ಯಕ್ತಿಯ ಕರೆಯ ನಂತರ ಎಚ್ಚೆತ್ತುಕೊಂಡ ಪೊಲೀಸರು ವ್ಯಾಪಕ ಶೋಧ ನಡೆಸಿದಾಗ ಆತ ಹುಸಿ ಕರೆ ಮಾಡಿದ್ಧಾನೆ ಎಂದು ತಿಳಿಯುತ್ತಿದ್ದಂತೆ ಮುಂಬೈ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. +ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‍ಗೆ ಶನಿವಾರ ಸಂಜೆ 6 ರ ಸುಮಾರಿಗೆ ಬೆದರಿಕೆ ಕರೆ ಬಂದಿತು. ಕರೆ ಮಾಡಿದ ವ್ಯಕ್ತಿ ನಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮುಂಬೈನಲ್ಲಿ ಸರಣಿ ಸ್ಪೋಟಗಳು ನಡೆಯಲಿವೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಕಾರ್ಯಾಚರಣೆಗೆ ಇಳಿದರು ಮತ್ತು ನಗರದಾದ್ಯಂತ ಹಲವಾರು ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಸ್ಥಾಪನೆಗಳಲ್ಲಿ ಶೋಧ ನಡೆಸಿದರು. ಆದರೆ, ಯಾವುದೇ ಸ್ಪೋಟಕ ವಸ್ತುಗಳು ಅಥವಾ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. +ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ +ಪ್ರಸ್ತುತ ಕರೆ ಮಾಡಿದವರ ವಿವರಗಳನ್ನು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದರು, ಹೆಚ್ಚಿನ ತನಿಖೆ ನಡೆಯುತ್ತಿದೆ. ಇದಕ್ಕೂ ಮೊದಲು, ಡಿಸೆಂಬರ್ 27 ರಂದು, ಜೈಪುರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕಳುಹಿಸುವವರ ಇಮೇಲ್ ಮೂಲಕ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. +ಬೆದರಿಕೆ ಇಮೇಲ್ ಸ್ವೀಕರಿಸಿದ ನಂತರ, ಟರ್ಮಿನಲ್ ಮ್ಯಾನೇಜರ್ ಅನುರಾಗ್ ಗುಪ್ತಾ ಜೈಪುರ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಮಾನ ನಿಲ್ದಾಣ ಪ್ರಾಧಿಕಾರವು ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಇತರ ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. \ No newline at end of file diff --git a/eesanje/url_47_201_12.txt b/eesanje/url_47_201_12.txt new file mode 100644 index 0000000000000000000000000000000000000000..82bce06fc72b203d2d580f227ec57f10375b633c --- /dev/null +++ b/eesanje/url_47_201_12.txt @@ -0,0 +1,5 @@ +ಅಪ್ರಾಪ್ತೆ ಅಪಹರಿಸಿ ನಿರಂತರ ಅತ್ಯಾಚಾರ ಮಾಡಿದ್ದ ಆರೋಪಿ ಅರೆಸ್ಟ್ +ಭದೋಹಿ,ಡಿ.31- ಉತ್ತರ ಪ್ರದೇಶದಲ್ಲಿ 17 ವರ್ಷದ ಬಾಲಕಿಯನ್ನು ಅಪಹರಿಸಿ 10 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ನಿರಂತರ ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ರಕ್ಷಿಸಲಾಗಿದ್ದು, 30 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಡಿ.18ರಂದು ಬೆಳಗ್ಗೆ ಕಾಲೇಜಿಗೆಂದು ಮನೆಯಿಂದ ಹೊರಟ ಬಾಲಕಿ ವಾಪಸ್ ಬಂದಿರಲಿಲ್ಲ. ಆಕೆಯ ಸಹೋದರ ಡಿಸೆಂಬರ್ 19 ರಂದು ಪೊಲೀಸ್ ದೂರು ನೀಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಗಾಗಿ ಶೋಧ ನಡೆಸಿದಾಗ ಆಕೆಯನ್ನು ರಾಜೇಶ್ ದುಬೆ ಎಂಬಾತ ಅಪಹಸಿರುವ ಸುಳಿವು ಸಿಕ್ಕಿತ್ತು. ತಕ್ಷಣ ಕಾರ್ಯಚರಣೆಗಿಳಿದ ಪೆಪೊಲೀಸರು ಆರೋಪಿಯನ್ನು ಪ್ರಯಾಗ್ರಾಜ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. +ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ +ಆತನ ವಶದಲ್ಲಿದ್ದ ಬಾಲಕಿಯನ್ನು ರಕ್ಷಿಸಿ ಆಕೆಯನ್ನು ಪೋಷಕರಿಗೆ ಒಪ್ಪಿಸಿರುವ ಪೊಲೀಸರು ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್ 363 (ಅಪಹರಣ), 366 (ಮದುವೆಗೆ ಒತ್ತಾಯಿಸುವುದು), ಮತ್ತು 376 (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_201_2.txt b/eesanje/url_47_201_2.txt new file mode 100644 index 0000000000000000000000000000000000000000..438a12006fa2733b01edcccbdb72a11e0a771cd0 --- /dev/null +++ b/eesanje/url_47_201_2.txt @@ -0,0 +1,10 @@ +ಹೊಸ ವರ್ಷದ ದಿನವೇ ಸಿಹಿ ಸುದ್ದಿ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ +ನವದೆಹಲಿ,ಜ.1- ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿ ನೀಡಿವೆ. ಜನವರಿ 1 ರಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ತುಸು ಕಡಿಮೆಯಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. +19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಭಾಗಶಃ ಕಡಿಮೆ ಮಾಡಲಾಗಿದೆ. ಹೊಸ ವರ್ಷದ ಮೊದಲ ದಿನ ಕಂಪನಿಗಳು ಪ್ರತಿ ಸಿಲಿಂಡರ್ ಮೇಲೆ 1.50 ರೂ. ಕಡಿತವನ್ನು ಘೋಷಿಸಿದೆ. ಹೊಸ ಬೆಲೆಗಳು ಇಂದಿನಿಂದ ಅಂದರೆ 2024 ರ ಹೊಸ ವರ್ಷದ ಮೊದಲ ದಿನದಿಂದಲೇ ಅನ್ವಯವಾಗುತ್ತವೆ. ಅಂದ ಹಾಗೆ, ಅಡುಗೆ ಅನಿಲದ ಸಿಲಿಂಡರ್‍ನ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಅಡುಗೆ ಅನಿಲದ ಸಿಲಿಂಡರ್ ಹಳೆಯ ದರದಲ್ಲಿಯೇ ದೊರೆಯಲಿದೆ. +ಬೆಲೆ ಇಳಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದೆ. ಈ ಮೊದಲು ಈ ದರ 1,757 ರೂ. ಇತ್ತು. ಹೀಗಾಗಿ ದೆಹಲಿಯಲ್ಲಿ ಒಂದೂವರೆ ರೂಪಾಯಿಯಷ್ಟು ಬೆಲೆ ಇಳಿಕೆಯಾದಂತಾಗಿದೆ. ಚೆನ್ನೈನಲ್ಲಿ, ಎಲ್ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದೆ ಮತ್ತು 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ. +ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ +ಮುಂಬೈನಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆ 1.50 ರೂಪಾಯಿ ಇಳಿದು 1,708.50 ರೂಪಾಯಿಗೆ ತಲುಪಿದೆ. ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್ಪಿಜಿ ಸಿಲಿಂಡರ್‍ನ ಬೆಲೆ ಇಂದು 50 ಪೈಸೆ ಏರಿಕೆಯಾಗಿದ್ದು, 1,869 ರೂ.ಗೆ ಆಗಿದೆ.ಭಾರತೀಯ ತೈಲ ಕಂಪನಿಗಳು ಈ ಹಿಂದೆ ಡಿಸೆಂಬರ್ 22 ರಂದು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದವು. ಅದಕ್ಕೂ ಮುನ್ನ ಡಿಸೆಂಬರ್ 1ರಂದು ವಾಣಿಜ್ಯ ಎಲ್ಪಿಜಿ ಸಿಲಿಂಡರ್‍ಗಳು ಅಗ್ಗವಾಗಿದ್ದವು. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ. +ಆದರೆ ಗೃಹ ಬಳಕೆಯ 14 ಕೆಜಿ ಗ್ಯಾಸ್ ಸಿಲಿಂಡರ್ ದರ ಸ್ಥಿರವಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಗೃಹಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್‍ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದು ಮುಂಬೈನಲ್ಲಿ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ ಬೆಲೆ 902.50 ರೂ., ದೆಹಲಿಯಲ್ಲಿ 903 ರೂ., ಚೆನ್ನೈನಲ್ಲಿ 918.50 ರೂ. ಕೋಲ್ಕತ್ತಾದಲ್ಲಿ 929 ರೂ. ಆಗಿದೆ. +ಜನವರಿ 1, 2019 ರಂದು, 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಗಣನೀಯವಾಗಿ ಕಡಿಮೆ ಮಾಡಲಾಗಿತ್ತು. ಇಂಡಿಯನ್ ಆಯಿಲ್ನ ವೆಬ್‍ಸೈಟ್‍ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ ಎಲ್ಪಿಜಿ ದರವು ಡಿಸೆಂಬರ್ 1, 2018 ರಂದು ರೂ 809.5 ಆಗಿತ್ತು, ಇದು ಜನವರಿ 1, 2019 ರಂದು 689 ರೂಪಾಯಿಗೆ ಇಳಿದಿತ್ತು. ಅದೇ ರೀತಿ ಎಲ್ಲಾ ಮೆಟ್ರೋ ನಗರಗಳಲ್ಲಿ ಬೆಲೆ ಇಳಿಕೆಯಾಗಿತ್ತು. ಅಂದರೆ ಆ ವರ್ಷ ಪ್ರತಿ ಸಿಲಿಂಡರ್ ಬೆಲೆ 120 ರೂ.ಗಳಷ್ಟು ಅಗವಾಗಿತ್ತು. +ಏಕದಿನ ಕ್ರಿಕೆಟ್‍ಗೆ ಡೇವಿಡ್ ವಾರ್ನರ್ ಗುಡ್‍ಬೈ +ವಿಮಾನ ಪ್ರಯಾಣ ಅಗ್ಗವಾಗಲಿದೆ!ಒಎಂಸಿ ಅಂದರೆ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಕೂಡಾ ಇಂದು ಹೊಸ ವರ್ಷದ ಸಂದರ್ಭದಲ್ಲಿ ವಿಮಾನ ಇಂಧನದ ಬೆಲೆಯನ್ನು ಇಳಿಸಿವೆ. ಪ್ರತಿ ಕಿಲೋ ಲೀಟರ್‍ಗೆ ಸುಮಾರು 4162.50 ರೂ.ಗಳಷ್ಟು ಇಳಿಕೆಯಾಗಿದೆ. ಸತತ ಮೂರನೇ ಕಡಿತದೊಂದಿಗೆ ವಿಮಾನ ದರಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಇಂದಿನಿಂದಲೇ ಹೊಸ ದರಗಳು ಜಾರಿಗೆ ಬರಲಿವೆ. \ No newline at end of file diff --git a/eesanje/url_47_201_3.txt b/eesanje/url_47_201_3.txt new file mode 100644 index 0000000000000000000000000000000000000000..ae8c2156e69df0f26167137c725f46e5d6f3e497 --- /dev/null +++ b/eesanje/url_47_201_3.txt @@ -0,0 +1,4 @@ +ಅತ್ಯಾಚಾರ ಆರೋಪ: ಬಿಜೆಪಿಯಿಂದ ಕಮಲ್‍ರಾವತ್ ಉಚ್ಛಾಟನೆ +ಚಂಪಾವತ್,ಜ.1-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ಉಚ್ಚಾಟಿತ ನಾಯಕ ಕಮಲ್ ರಾವತ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾವತ್ ಅವರನ್ನು ಚಂಪಾವತ್‍ನಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಯೋಗೇಶ್ ಉಪಾಧ್ಯಾಯ ತಿಳಿಸಿದ್ದಾರೆ. +ನಿತೀಶ್‍ಕುಮಾರ್ ಆಸ್ತಿ ಮೌಲ್ಯ 1.64 ಕೋಟಿ +ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿ ಸರ್ಕಾರದ ಪ್ರತಿಕೃತಿ ದಹಿಸಿತು. ಪೊಲೀಸರು ರಾವತ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾವತ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿಯ ಚಂಪಾವತ್ ಜಿಲ್ಲಾಧ್ಯಕ್ಷ ನಿರ್ಮಲ್ ಮೆಹ್ರಾ ಹೇಳಿದ್ದಾರೆ. \ No newline at end of file diff --git a/eesanje/url_47_201_4.txt b/eesanje/url_47_201_4.txt new file mode 100644 index 0000000000000000000000000000000000000000..a3b97951d56fa8620065db5dce590636c1f82108 --- /dev/null +++ b/eesanje/url_47_201_4.txt @@ -0,0 +1,6 @@ +ನಿತೀಶ್‍ಕುಮಾರ್ ಆಸ್ತಿ ಮೌಲ್ಯ 1.64 ಕೋಟಿ +ಪಾಟ್ನಾ, ಜ.1 (ಪಿಟಿಐ) ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಸ್ತಿ ಮೌಲ್ಯ ಕೇವಲ 1.64 ಕೋಟಿ ರೂಪಾಯಿಯಂತೆ. ಸಂಪುಟ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಪೋಸ್ಟ್ ಮಾಡಿದ ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಆಸ್ತಿ ವಿವರಗಳ ಪ್ರಕಾರ, ನಿತೀಶ್ ಅವರ ಬಳಿ 22,552 ರೂ ನಗದು ಮತ್ತು ವಿವಿಧ ಬ್ಯಾಂಕ್ ಖಾತೆಗಳಲ್ಲಿ 49,202 ರೂ.ಗಳನ್ನು ಹೊಂದಿದ್ದಾರೆ. +ಅವರು 11.32 ಲಕ್ಷ ಮೌಲ್ಯದ ಫೋರ್ಡ್ ಇಕೋಸ್ಪೋರ್ಟ್ ಕಾರು, 1.28 ಲಕ್ಷ ಮೌಲ್ಯದ ಎರಡು ಚಿನ್ನದ ಉಂಗುರಗಳು ಮತ್ತು ಬೆಳ್ಳಿಯ ಉಂಗುರ ಮತ್ತು 1.45 ಲಕ್ಷ ಮೌಲ್ಯದ 13 ಹಸುಗಳು ಮತ್ತು 10 ಕರುಗಳು, ಟ್ರೆಡ್ ಮಿಲ, ವ್ಯಾಯಾಮ ಸೈಕಲ್ ಮತ್ತು ಮೈಕ್ರೋವೇವ್ ಓವನ್ ಸೇರಿದಂತೆ ಇತರ ಚರ ಆಸ್ತಿಗಳನ್ನು ಹೊಂದಿದ್ದಾರೆ. +ಕಳೆದ ವರ್ಷ ಕುಮಾರ್ ಒಟ್ಟು ಆಸ್ತಿ 75.53 ಲಕ್ಷ ಎಂದು ಘೋಷಿಸಿದ್ದರು. ಇದೀಗ ಅವರ ಆಸ್ತಿ ಮೌಲ್ಯದಲ್ಲಿನ ಜಿಗಿತವು ಪ್ರಾಥಮಿಕವಾಗಿ ಅವರ ದೆಹಲಿಯ ಅಪಾರ್ಟ್‍ಮೆಂಟ್ ಮೌಲ್ಯದ ಏರಿಕೆಯಿಂದಾಗಿ ಆಗಿದೆ.ಕುಮಾರ್ ಅವರ ಸರ್ಕಾರವು ಪ್ರತಿ ಕ್ಯಾಲೆಂಡರ್ ವರ್ಷದ ಕೊನೆಯ ದಿನದಂದು ಎಲ್ಲಾ ಕ್ಯಾಬಿನೆಟ್ ಮಂತ್ರಿಗಳು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳನ್ನು ಬಹಿರಂಗಪಡಿಸುವುದನ್ನು ಕಡ್ಡಾಯಗೊಳಿಸಿದೆ. +ಏಕದಿನ ಕ್ರಿಕೆಟ್‍ಗೆ ಡೇವಿಡ್ ವಾರ್ನರ್ ಗುಡ್‍ಬೈ +ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು 2022-23ನೇ ಹಣಕಾಸು ವರ್ಷದಲ್ಲಿ ಒಟ್ಟು 4.74 ಲಕ್ಷ ರೂ. ರಾಜ್ಯ ಸರ್ಕಾರದಲ್ಲಿ ಸಚಿವರೂ ಆಗಿರುವ ಅವರ ಹಿರಿಯ ಸಹೋದರ ತೇಜ್ ಪ್ರತಾಪ್ ಅವರ ಆಸ್ತಿ 3.58 ಕೋಟಿ ರೂ.ಗಳಾಗಿದೆ. \ No newline at end of file diff --git a/eesanje/url_47_201_5.txt b/eesanje/url_47_201_5.txt new file mode 100644 index 0000000000000000000000000000000000000000..67da47df0f5b316660fc81e2b7fd6bcc08df6a23 --- /dev/null +++ b/eesanje/url_47_201_5.txt @@ -0,0 +1,3 @@ +ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ಮೋದಿ +ನವದೆಹಲಿ, ಜ 1 (ಪಿಟಿಐ) ಹೊಸ ವರ್ಷದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ಹಾರೈಸಿದ್ದಾರೆ. ಎಲ್ಲರಿಗೂ 2024 ರ ಭವ್ಯವಾದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಅವರು ಎಕ್ಸ್ ಮಾಡಿದ್ದಾರೆ. +ವರ್ಷದ ತಮ್ಮ ಕೊನೆಯ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ, ಪ್ರಧಾನಿಯವರು 2024 ರಲ್ಲೂ ಸ್ವಾವಲಂಬನೆಯ ಮನೋಭಾವವನ್ನು ಕಾಪಾಡಿಕೊಳ್ಳುವಂತೆ ದೇಶವಾಸಿಗಳನ್ನು ಒತ್ತಾಯಿಸಿದ್ದರು. \ No newline at end of file diff --git a/eesanje/url_47_201_6.txt b/eesanje/url_47_201_6.txt new file mode 100644 index 0000000000000000000000000000000000000000..43f14ef79fa9fd850b2446baf34157eb6b45736a --- /dev/null +++ b/eesanje/url_47_201_6.txt @@ -0,0 +1,4 @@ +ರೇವ್‍ಪಾರ್ಟಿ ಮೇಲೆ ದಾಳಿ, ಡ್ರಗ್ಸ್ ಸೇವಿಸಿದ್ದ 80 ಮಂದಿ ಬಂಧನ +ಥಾಣೆ,ಡಿ.31- ಮಹಾರಾಷ್ಟ್ರದ ಥಾಣೆಯಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಸುಮಾರು 80 ಮಂದಿಯನ್ನು ಬಂಧಿಸಿದ್ದಾರೆ. ಪಾರ್ಟಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಸೇವಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ರೇವ್ ಪಾರ್ಟಿಯಿಂದ ಎಲ್‍ಎಸ್‍ಡಿ, ಚರಸ್, ಎಕ್ಸ್‍ಟಾಸಿ ಮಾತ್ರೆಗಳು ಮತ್ತು ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‍ಟಾಗ್ರಾಮ್‍ನಲ್ಲಿ ರೇವ್ ಪಾರ್ಟಿಗಾಗಿ ನೂರಾರು ಯುವಕರಿಗೆ ಆಹ್ವಾನವನ್ನು ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ. ಪಾರ್ಟಿಯ ಇಬ್ಬರು ಸಂಘಟಕರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. \ No newline at end of file diff --git a/eesanje/url_47_201_7.txt b/eesanje/url_47_201_7.txt new file mode 100644 index 0000000000000000000000000000000000000000..cf65b334a0965298fcfcab36deedc90132491d56 --- /dev/null +++ b/eesanje/url_47_201_7.txt @@ -0,0 +1,6 @@ +ಬಿಜೆಪಿ ಸೇರಿದ ಕೇರಳದ 50 ಕ್ರೈಸ್ತ ಕುಟುಂಬಗಳು +ತಿರುವನಂತಪುರಂ, ಡಿ.31 (ಪಿಟಿಐ) – ಕೇರಳದಲ್ಲಿ ಕೆಲ ದಿನಗಳಿಂದ ಕ್ರೈಸ್ತ ಸಮುದಾಯವನ್ನು ಓಲೈಸುತ್ತಿರುವ ಬಿಜೆಪಿ ಪಕ್ಷವು ರಾಜ್ಯದಲ್ಲಿ ಪಾದ್ರಿ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ ಎಂದು ವರದಿಯಾಗಿದೆ. +ದಕ್ಷಿಣ ಕೇರಳದ ಪಥನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಭದ್ರಾಸನಂನ ಕಾರ್ಯದರ್ಶಿ ಫಾದರ್ ಶೈಜು ಕುರಿಯನ್ ಸೇರಿದಂತೆ ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳು ಕೇಂದ್ರ ಸಚಿವ ವಿ ಮುರಳೀಧರನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿವೆ ಎಂದು ಕೇಸರಿ ಪಕ್ಷವು ಫೇಸ್‍ಬುಕ್ ಪೋಸ್ಟ್ ನಲ್ಲಿ ತಿಳಿಸಿದೆ. +ಮಧ್ಯ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಕೇರಳ ಕಾಂಗ್ರೆಸ್ (ಜೇಕಬï) ಬಣದ ಹಲವು ಮಂದಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನಾಯಕತ್ವದಲ್ಲಿ ಅಭಿವೃದ್ಧಿಯ ದೂರದೃಷ್ಟಿಯ ವಿಧಾನಕ್ಕೆ ಅಲ್ಪಸಂಖ್ಯಾತರು ತನ್ನ ಶ್ರೇಣಿಗೆ ಸೇರಲು ಮನವಿಯನ್ನು ಪಕ್ಷವು ಕಾರಣವಾಗಿದೆ. +ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ +ಕಳೆದ ದಶಕದಲ್ಲಿ ಮೋದಿ ಸರ್ಕಾರವು ಅಭಿವೃದ್ಧಿಗೆ ಬಲವಾದ ಸಮರ್ಪಣೆಯನ್ನು ತೋರಿಸಿದೆ. ಇದು ಅಲ್ಪಸಂಖ್ಯಾತರನ್ನು ಬೆಂಬಲಿಸಲು ಮತ್ತು ಬಿಜೆಪಿಗೆ ಸೇರಲು ಪ್ರೇರೇಪಿಸುವ ಮಹತ್ವದ ಅಂಶವಾಗಿದೆ ಎಂದು ಪಕ್ಷವು ಹೇಳಿದೆ. ಸುಳ್ಳು ಪ್ರಚಾರದಿಂದ ಅಲ್ಪಸಂಖ್ಯಾತರನ್ನು ಪಕ್ಷದಿಂದ ದೂರವಿಡಬಹುದು ಎಂಬ ಕಲ್ಪನೆಯನ್ನು ಬಿಜೆಪಿ ಹೊರಹಾಕುತ್ತಿದೆ ಎಂದು ಹೇಳಿಕೊಳ್ಳಲಾಗಿದೆ. \ No newline at end of file diff --git a/eesanje/url_47_201_8.txt b/eesanje/url_47_201_8.txt new file mode 100644 index 0000000000000000000000000000000000000000..fa634be30171d1986230c606dd87185cb3ba885c --- /dev/null +++ b/eesanje/url_47_201_8.txt @@ -0,0 +1,8 @@ +ಹೊಸ ವರ್ಷದಲ್ಲಿ ಭಾರಿ ಏರಿಕೆಯಾಗಲಿದೆಯಂತೆ ಚಿನ್ನದ ಬೆಲೆ..! +ಮುಂಬೈ, ಡಿ 31 (ಪಿಟಿಐ) ಭೌಗೋಳಿಕ ರಾಜಕೀಯ ಅನಿಶ್ಚಿತತೆ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಯ ನಿಧಾನಗತಿಯ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 70,000 ರೂ.ಗಳಿಗೆ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. +ಡಿಸೆಂಬರ್ ಆರಂಭದಲ್ಲಿ ಮಧ್ಯಪ್ರಾಚ್ಯದಲ್ಲಿ ಜಾಗತಿಕ ಉದ್ವಿಗ್ನತೆಗಳಿಂದಾಗಿ ಹಳದಿ ಲೋಹದ ಬೆಲೆಗಳು ಮತ್ತೆ ಗಗನಕ್ಕೇರಿದವು ಈ ವರ್ಷ ಚಿನ್ನದ ಬೆಲೆ ಅಸ್ಥಿರವಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಮೇ 4 ರಂದು ಪ್ರತಿ 10 ಗ್ರಾಂಗೆ ರೂ 61,845 ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಔನ್ಸ್ 2,083 ಅಮೆರಿಕನ್ ಡಾಲರ್‍ಗೆ ತಲುಪಿತ್ತು. ನಂತರ, ಹಳದಿ ಲೋಹವು ನವೆಂಬರ್ 16 ರಂದು 10 ಗ್ರಾಂಗೆ 61,914 ರೂ.ಗೆ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿತು ಎಂದು ಕಾಮ್ಟ್ರೆಂಡ್ಜ್ ಸಂಶೋಧನಾ ನಿರ್ದೇಶ ಕಜ್ಞಾನಶೇಖರ್ ತ್ಯಾಗರಾಜನ್ ಪಿಟಿಐಗೆ ತಿಳಿಸಿದರು. +ಅದರ ಸುರಕ್ಷಿತ-ಧಾಮದ ಮನವಿಯ ಪ್ರತಿಬಿಂಬದಲ್ಲಿ, ಡಿಸೆಂಬರ್ 4 ರಂದು ಚಿನ್ನದ ಬೆಲೆ 10 ಗ್ರಾಂಗೆ 64,063 ರೂ. ಮತ್ತು ಔನ್ಸ್ 2,140 ಡಾಲರ್‍ಗೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿತು. ನಾವು 2024 ರಲ್ಲಿ ಮತ್ತೆ ಏರಿಕೆಯನ್ನು ನಿರೀಕ್ಷಿಸುತ್ತೇವೆ ಮತ್ತು ರೂಪಾಯಿ ಸ್ಥಿರವಾಗಿರಬೇಕಾದರೆ, ಚಿನ್ನವು ಸುಮಾರು 70,000 ರೂಪಾಯಿಗಳನ್ನು ತಲುಪುವ ಸಾಧ್ಯತೆಯಿದೆ. +ಭಾರತವು ಚುನಾವಣೆಗಳನ್ನು ಎದುರಿಸುತ್ತಿರುವಾಗ, ವಿದೇಶಿ ಸಾಂಸ್ಥಿಕ ಹೂಡಿಕೆದಾರರು ನಿರೀಕ್ಷೆಯಂತೆ ರೂಪಾಯಿ ದುರ್ಬಲಗೊಳ್ಳಬಹುದು. ತಮ್ಮ ಬಂಡವಾಳವನ್ನು ಹಗುರಗೊಳಿಸಿ, ಇದು ಚಿನ್ನದ ದೇಶೀಯ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸಬಹುದು, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. +ಅಪ್ರಾಪ್ತೆ ಅಪಹರಿಸಿ ನಿರಂತರ ಅತ್ಯಾಚಾರ ಮಾಡಿದ್ದ ಆರೋಪಿ ಅರೆಸ್ಟ್ +ಕೊಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅವರು, ಚಿಲ್ಲರೆ ಆಭರಣ ಖರೀದಿಯು ಭಾರತ ಮತ್ತು ಚೀನಾದಲ್ಲಿನ ಹೆಚ್ಚಿನ ದೇಶೀಯ ಬೆಲೆಗಳಿಂದ ಹೆಡ್‍ವಿಂಡ್‍ಗಳನ್ನು ಎದುರಿಸಬಹುದು ಆದರೆ ಪ್ರಸ್ತುತ ಆವೇಗ ಮುಂದುವರಿದರೆ ಕೇಂದ್ರ ಬ್ಯಾಂಕ್‍ಗಳ ಬೇಡಿಕೆ ಕಳೆದ ವರ್ಷದ ದಾಖಲೆಯನ್ನು ಮೀರಬಹುದು ಎಂದಿದ್ದಾರೆ. ಅಮೆರಿಕ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು 22 ವರ್ಷಗಳ ಗರಿಷ್ಠಕ್ಕೆ ಏರಿಸಿದ್ದರಿಂದ, ಸಾಲಿಡ್ ಬಾರ್ ಮತ್ತು ನಾಣ್ಯ ಬೇಡಿಕೆಯೊಂದಿಗೆ ದೃಢವಾದ ಸೆಂಟ್ರಲ್ ಬ್ಯಾಂಕ್ ಖರೀದಿಯು ಬಾಂಡ್ ಇಳುವರಿ ಮತ್ತು ವರ್ಷವಿಡೀ ಬಲವಾದ ಅಮೆರಿಕ ಡಾಲರ್ ನಡುವೆ ಚಿನ್ನದ ಬೆಲೆಗೆ ಸಹಾಯ ಮಾಡಿತು ಎಂದು ರಾವ್ ಹೇಳಿದ್ದಾರೆ. +ದರಗಳು ಸ್ವಲ್ಪ ಸಮಯದವರೆಗೆ ಹೆಚ್ಚಿದ್ದರೂ ಸಹ, ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸರ, ನಿಧಾನಗತಿಯ ಜಾಗತಿಕ ಬೆಳವಣಿಗೆ ಮತ್ತು ಆರ್ಥಿಕ ಅನಿಶ್ಚಿತತೆಗಳು ಹಳದಿ ಲೋಹದ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_201_9.txt b/eesanje/url_47_201_9.txt new file mode 100644 index 0000000000000000000000000000000000000000..1c44369a8573a39ce066072bfe511916e3463c8a --- /dev/null +++ b/eesanje/url_47_201_9.txt @@ -0,0 +1,7 @@ +ಹೊಸ ವರ್ಷದ ಆರಂಭದ ದಿನವೇ ಹೊಸ ಇತಿಹಾಸ ಬರೆಯಲು ಇಸ್ರೋ ಸಜ್ಜು +ಶ್ರೀಹರಿಕೋಟಾ, ಡಿ 31 (ಪಿಟಿಐ) ನಾಳೆ ಧ್ರುವೀಯ ಉಪಗ್ರಹ ಉಡಾವಣಾ ವಾಹನ ರಾಕೆಟ್‍ನಲ್ಲಿ ಕಪ್ಪು ಕುಳಿಗಳಂತಹ ಆಕಾಶ ವಸ್ತುಗಳ ಒಳನೋಟಗಳನ್ನು ನೀಡುವ ತನ್ನ ಮೊದಲ ಎಕ್ಸ್ -ರೇ ಪೋಲಾರಿಮೀಟರ್ ಉಪಗ್ರಹವನ್ನು ಉಡಾವಣೆ ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಲು ಇಸ್ರೋ ಸಜ್ಜಾಗಿದೆ. +ಅಕ್ಟೋಬರ್‍ನಲ್ಲಿ ಗಗನ್‍ಯಾನ್ ಟೆಸ್ಟ್ ವೆಹಿಕಲ್ ಡಿ1 ಮಿಷನ್ ಯಶಸ್ವಿಯಾದ ನಂತರ ಈ ಉಡಾವಣೆಯಾಗುತ್ತಿರುವುದು ವಿಶೇಷವಾಗಿದೆ. ಪಿಎಸ್‍ಎಲ್‍ವಿ ಸಿ58 ರಾಕೆಟ್ ತನ್ನ 60 ನೇ ಕಾರ್ಯಾಚರಣೆಯಲ್ಲಿ, ಪ್ರಾಥಮಿಕ ಪೇಲೋಡ್ ಎಕ್ಸ್‍ಪೋ ಸ್ಯಾಟ್ ಮತ್ತು 10 ಇತರ ಉಪಗ್ರಹಗಳನ್ನು ಕಡಿಮೆ ಭೂಮಿಯ ಕಕ್ಷೆಯಲ್ಲಿ ನಿಯೋಜಿಸಲು ಸಾಗಿಸುತ್ತದೆ. +ಜನವರಿಯಲ್ಲಿ ಚೆನ್ನೈನಿಂದ ಪೂರ್ವಕ್ಕೆ 135 ಕಿಮೀ ದೂರದಲ್ಲಿರುವ ಈ ಬಾಹ್ಯಾಕಾಶ ಪೋರ್ಟ್ ಇಂದು ಬೆಳಿಗ್ಗೆ 8.10 ಕ್ಕೆ ಪಿಎಸ್‍ಎಲ್‍ವಿ -ಸಿ 58 ಗೆ ಕೌಂಟ್‍ಡೌನ್ ಪ್ರಾರಂಭವಾಗಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ. ಎಕ್ಸ್ -ರೇ ಪೋಲಾರಿಮೀಟರ್ ಉಪಗ್ರಹವು ಬಾಹ್ಯಾಕಾಶದಲ್ಲಿ ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡುವ ಗುರಿಯನ್ನು ಹೊಂದಿದೆ. ಇದು ಆಕಾಶ ಮೂಲದಿಂದ ಎಕ್ಸ್ -ರೇ ಹೊರಸೂಸುವಿಕೆಯ ಬಾಹ್ಯಾಕಾಶ-ಆಧಾರಿತ ಧ್ರುವೀಕರಣ ಮಾಪನಗಳಲ್ಲಿ ಸಂಶೋಧನೆಯನ್ನು ಕೈಗೊಳ್ಳುತ್ತಿರುವ ಮೊದಲ ವೈಜ್ಞಾನಿಕ ಉಪಗ್ರಹವಾಗಿದೆ ಎಂದು ಇಸ್ರೋ ಹೇಳಿದೆ. +ರಾಜಕೀಯ ಲಾಭಕ್ಕಾಗಿ ರಾಮನ ಹೆಸರು ದುರ್ಬಳಕೆ : ಸಚಿವ ಡಿ.ಸುಧಾಕರ್ +ಇಸ್ರೋ ಜೊತೆಗೆ, ಯುಎಸ್ ಮೂಲದ ನ್ಯಾಷನಲ್ ಏರೋನಾಟಿಕ್ಸ್ ಸ್ಪೇಸ್ ಏಜೆನ್ಸಿ (ನಾಸಾ) ಇದೇ ರೀತಿಯ ಅಧ್ಯಯನವನ್ನು ನಡೆಸುತ್ತಿದೆ. ಇಮೇಜಿಂಗ್ ಮತ್ತು ಟೈಮ್ ಡೊಮೈನ್ ಅಧ್ಯಯನಗಳ ಮೇಲೆ ಕೇಂದ್ರೀಕರಿಸುವ ಬಾಹ್ಯಾಕಾಶ-ಆಧಾರಿತ ಎಕ್ಸ್ -ರೇ ಖಗೋಳಶಾಸ್ತ್ರವನ್ನು ಭಾರತದಲ್ಲಿ ಸ್ಥಾಪಿಸಲಾಗಿದೆ. +ನಾಳೆ ಮಿಷನ್ ವೈಜ್ಞಾನಿಕ ಭ್ರಾತೃತ್ವಕ್ಕೆ ಒಂದು ಪ್ರಮುಖ ಮೌಲ್ಯವರ್ಧನೆಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ. ಎಕ್ಸ್ -ರೇ ಧ್ರುವೀಕರಣವು ಆಕಾಶ ಮೂಲಗಳ ವಿಕಿರಣ ಕಾರ್ಯವಿಧಾನ ಮತ್ತು ರೇಖಾಗಣಿತವನ್ನು ಪರೀಕ್ಷಿಸಲು ನಿರ್ಣಾಯಕ ರೋಗನಿರ್ಣಯ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. \ No newline at end of file diff --git a/eesanje/url_47_202_1.txt b/eesanje/url_47_202_1.txt new file mode 100644 index 0000000000000000000000000000000000000000..c06f5ea404c033db0e00507c144481239b5a0dd1 --- /dev/null +++ b/eesanje/url_47_202_1.txt @@ -0,0 +1,7 @@ +ಲಖ್ಬೀರ್ ಸಿಂಗ್ ವಿರುದ್ಧ ಲುಕ್‍ಔಟ್ ನೋಟಿಸ್ +ನವದೆಹಲಿ, ಡಿ.31 (ಪಿಟಿಐ) ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‍ ನ್ಯಾಶನಲ್‍ನ ಕೆನಡಾ ಮೂಲದ ಕಾರ್ಯಕರ್ತ ಲಖ್ಬೀರ್ ಸಿಂಗ್ ಅಲಿಯಾಸ್ ಲಾಂಡಾ ಅವರನ್ನು ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಸರ್ಕಾರವು ವೈಯಕ್ತಿಕ ಭಯೋತ್ಪಾದಕ ಎಂದು ಘೋಷಿಸಿದೆ. +ಅಧಿಕೃತ ಅಧಿಸೂಚನೆಯ ಪ್ರಕಾರ, ಪಂಜಾಬ್ ಪೊಲೀಸ್‍ನ ಗುಪ್ತಚರ ಶಾಖೆಯ ಪ್ರಧಾನ ಕಛೇರಿಯ ಮೇಲೆ ಮೇ 2022 ರ ರಾಕೆಟ್ ಚಾಲಿತ ಗ್ರೆನೇಡ್ ದಾಳಿಯಲ್ಲಿ ಸಿಂಗ್ ಭಾಗಿಯಾಗಿದ್ದನು, ಜೊತೆಗೆ ದೇಶದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಗಡಿಯುದ್ದಕ್ಕೂ ಐಇಡಿಗಳು, ಶಸ್ತ್ರಾಸ್ತ್ರಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ಪೂರೈಸಿದ್ದ ಎನ್ನಲಾಗಿದೆ. +ಸಿಂಗ್ ಪಂಜಾಬ್‍ನ ತರ್ನ್ ತರನ್ ಜಿಲ್ಲೆಯ ಹರಿಕೆಯಿಂದ ಬಂದವರು ಮತ್ತು ಪ್ರಸ್ತುತ ಕೆನಡಾದ ಆಲ್ಬರ್ಟಾದ ಎಡ್ಮಂಟನ್‍ನಲ್ಲಿ ನೆಲೆಸಿದ್ದಾರೆ. ಅವರು ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‍ ನ್ಯಾಶನಲ್‍ನ ಕಾರ್ಯಕರ್ತರಾಗಿದ್ದಾರೆ. ಭಯೋತ್ಪಾದನಾ ಘಟಕಗಳನ್ನು ಸಂಗ್ರಹಿಸುವುದು, ಸುಲಿಗೆ, ಹತ್ಯೆಗಳು, ಐಇಡಿಗಳನ್ನು ನೆಡುವುದು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಮತ್ತು ಪಂಜಾಬ್ ಮತ್ತು ದೇಶದ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣ ಅಥವಾ ಆದಾಯವನ್ನು ಬಳಸುವುದಕ್ಕೆ ಸಂಬಂಧಿಸಿದ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ. +ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ +ಸಿಂಗ್ ಮತ್ತು ಅವರ ಸಹಚರರು ಭಾರತದ ವಿವಿಧ ಭಾಗಗಳಲ್ಲಿ ಉದ್ದೇಶಿತ ಹತ್ಯೆಗಳು, ಸುಲಿಗೆಗಳು ಮತ್ತು ಇತರ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವ ಮೂಲಕ ಪಂಜಾಬ್‍ನಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಳುಮಾಡಲು ಪಿತೂರಿ ನಡೆಸುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ. ಅವರ ವಿರುದ್ಧ ಮುಕ್ತ ವಾರಂಟ್ ಮತ್ತು ಲುಕ್ ಔಟ್ ಸುತ್ತೋಲೆಯನ್ನೂ ಹೊರಡಿಸಲಾಗಿದೆ. +ಲಖ್ಬೀರ್ ಸಿಂಗ್ ಲಾಂಡಾ ಭಯೋತ್ಪಾದನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ನಂಬುತ್ತದೆ ಮತ್ತು ಲಖ್ಬೀರ್ ಸಿಂಗ್ ಲಾಂಡಾ ಅವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯಿದೆಯ ನಾಲ್ಕನೇ ಶೆಡ್ಯೂಲ್‍ನಲ್ಲಿ ಭಯೋತ್ಪಾದಕ ಎಂದು ಸೇರಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_202_10.txt b/eesanje/url_47_202_10.txt new file mode 100644 index 0000000000000000000000000000000000000000..dd357f5ae6108e3da2aa7df2597c62c11651745c --- /dev/null +++ b/eesanje/url_47_202_10.txt @@ -0,0 +1,11 @@ +ಶ್ರೀರಾಮನೂರಿನಲ್ಲಿ ಮೋದಿ ಮಿಂಚಿನ ಸಂಚಲನ +ಅಯೋಧ್ಯೆ (ಉತ್ತರ ಪ್ರದೇಶ),ಡಿ.30- ಹಿಂದೂಗಳ ಆರಾಧ್ಯದೈವ, ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆ ಗಳಿಗೆ ಚಾಲನೆ ನೀಡುವ ಮೂಲಕ ಲೋಕಸಭಾ ಚುನಾವಣೆಗೆ ಕಹಳೆ ಮೊಳಗಿಸಿದರು. +ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿಂದಿ ಹೃದಯ ಭಾಗಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಘಡದಲ್ಲಿ ಬಿಜೆಪಿ ಸ್ಪಷ್ಟ ಜನಾದೇಶ ಪಡೆದು ಅಕಾರ ಹಿಡಿದಿತ್ತು. ಇದೀಗ ದೇಶದ ರಾಜಕಾರಣದ ದಿಕ್ಕುದೆಸೆಯನ್ನು ನಿರ್ಧರಿಸುವ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಮೋದಿಯವರು ಮೆಗಾ ರೋಡ್ ಶೋ ನಡೆಸುವ ಮೂಲಕ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಿದರು. +ದೆಹಲಿಯಿಂದ ವಿಶೇಷ ವಿಮಾನದಲ್ಲಿ ನೂತನವಾಗಿ ನಿರ್ಮಿಸಿರುವ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿ ಬಿನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು. +ಭಾರತದ ಆಟಗಾರರ ಬರುವಿಕೆಯನ್ನು ಕಾಯುತ್ತದೆಯಂತೆ ಪಾಕ್ +ವಿಮಾನ ನಿಲ್ದಾಣದಿಂದ ಸುಮಾರು 15 ಕಿ.ಮೀವರೆಗೂ ಮೋದಿಯವರು ಮೆಗಾ ರೋಡ್ ಶೋ ನಡೆಸಿದರು. ಪ್ರಧಾನಿಯವರನ್ನು ಕಣ್ತುಂಬಿಸಿಕೊಳ್ಳಲು ದೇಗುಲ ನಗರಿ ಅಯೋಧ್ಯೆಗೆ ಬೆಳಗಿನಿಂದಲೇ ಭಾರೀ ಪ್ರಮಾಣದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ರಸ್ತೆಯ ಇಕ್ಕೆಲಗಳಲ್ಲೂ ಬಿಜೆಪಿ ಬಾವುಟ ಮತ್ತು ಕೇಸರಿ ರುಮಾಲು ಧರಿಸಿದ್ದ ಕಾರ್ಯಕರ್ತರು ಮೋದಿ ಮೋದಿ ಎನ್ನುತ್ತಲೇ ಜಯಕಾರದ ಘೋಷಗಳನ್ನು ಮೊಳಗಿಸಿದರು. +15 ಕಿ.ಮೀವರೆಗೂ ಸಾಗಿಬಂದ ಮೆರವಣಿಗೆಯು ಪರೋಕ್ಷವಾಗಿ ಚುನಾವಣಾ ಅಖಾಡಕ್ಕೆ ಸಿದ್ದವಾಗಿದ್ದೇವೆ ಎಂಬ ಸಂದೇಶವನ್ನು ರವಾನಿಸುವಂತಿತ್ತು. ಕಾರ್ಯಕರ್ತರು, ಅಭಿಮಾನಿಗಳು ಮೋದಿ ಅವರಿಗೆ ಅಭಿಮಾನದಿಂದ ಹೂಮಳೆ ಸುರಿಸಿದರು. ರೋಡ್ ಶೋ ಮುಗಿದ ನಂತರ ಮೋದಿ ಅವರು 15,000 ಕೋಟಿ ರೂ. ಮೊತ್ತದ ಹಲವು ಮೂಲ ಸೌಕರ್ಯ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. +ಪ್ರಧಾನಿ ಮೋದಿ ಅವರ ಆಗಮನದ ಮೂಲಕ ಅಯೋಧ್ಯಾ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಅಂತಿಮ ಸಿದ್ದತೆಗಳಿಗೆ ಶರವೇಗ ಸಿಕ್ಕಂತಾಗಿದೆ. ಪ್ರಧಾನಿ ಮೋದಿ ಅವರು ನವೀಕರಣಗೊಂಡಿರುವ ಹಾಗೂ ಅಯೋಧ್ಯಾ ಧಾಮ್ ಜಂಕ್ಷನ್ ಎಂದು ಮರು ನಾಮಕರಣಗೊಂಡಿರುವ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. +ಇದೇ ವೇಳೆ ಅಮೃತ ಭಾರತ್ ಮತ್ತು ¾ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಅಯೋಧ್ಯೆಯಲ್ಲಿ ನೂತನವಾಗಿ 1450 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಯೋಧ್ಯಾ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಈ ವಿಮಾನ ನಿಲ್ದಾಣದ ಟರ್ಮಿನಲ್ 6,500 ಚದರ ಮೀಟರ್ ಇದ್ದು, ಅಯೋಧ್ಯಾ ಶ್ರೀರಾಮ ಮಂದಿರವನ್ನೇ ಹೋಲುವಂತಿದೆ. ಎಲ್‍ಇಡಿ ಲೈಟಿಂಗ್, ಮಳೆ ನೀರು ಕೊಯ್ಲು ಸೇರಿದಂತೆ ಹಲವು ಸೌಲಭ್ಯಗಳಿವೆ. +ಜರ್ಮನ್ ಆರೈಕೆಯಲ್ಲಿರುವ ಅರಿಹಾ ಶಾ ಜತೆ ದೀಪಾವಳಿ ಆಚರಿಸಿದ ಭಾರತೀಯ ಅಧಿಕಾರಿಗಳು +240 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಿಸಿರುವ ಅಯೋಧ್ಯಾ ಧಾಮ ರೈಲು ನಿಲ್ದಾಣ ಉದ್ಘಾಟನೆ. ಈ ರೈಲು ನಿಲ್ದಾಣ 3 ಮಹಡಿಗಳನ್ನು ಹೊಂದಿದ್ದು, ಲಿಫ್ಟ್, ಎಸ್ಕಲೇಟರ್, ಫುಡ್ ಕೋರ್ಟ್ ಸೇರಿದಂತೆ ಹಲವು ಸೌಲಭ್ಯಗಳಿವೆ. ಅಲ್ಲದೇ ಅಯೋಧ್ಯೆಯಲ್ಲಿ ನವೀಕರಣ ಮಾಡಲಾದ 4 ರಸ್ತೆಗಳು, ಮೆಡಿಕಲ್ ಕಾಲೇಜು, ತ್ಯಾಜ್ಯ ಸಂಸ್ಕರಣಾ ಘಟಕಗಳ ಉದ್ಘಾಟನೆಯನ್ನು ನೆರವೇರಿಸಿದರು. 2180 ಕೋಟಿ ರೂ. ವೆಚ್ಚದ ಗ್ರೀನ್ ಫೀಲ್ಡ್ ಟೌನ್ ಶಿಪ್ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ, 300 ಕೋಟಿ ರೂ. ವೆಚ್ಚದ ವಶಿಷ್ಟ್ಯ ಕುಂಜ ವಸತಿ ಯೋಜನೆಗೂ ಪ್ರಧಾನಿ ಮೋದಿ ಅಡಿಗಲ್ಲು ಹಾಕಿದರು. \ No newline at end of file diff --git a/eesanje/url_47_202_11.txt b/eesanje/url_47_202_11.txt new file mode 100644 index 0000000000000000000000000000000000000000..af4869a3e7e684abba729c914190d45e5346d043 --- /dev/null +++ b/eesanje/url_47_202_11.txt @@ -0,0 +1,4 @@ +ವಿಶ್ವಮಾನ್ಯ ನಗರವಾಗಲಿದೆ ಶ್ರೀರಾಮನ ಅಯೋಧ್ಯೆ : ಮೋದಿ +ನವದೆಹಲಿ,ಡಿ.30- ಅಯೋಧ್ಯೆ ನಗರದಲ್ಲಿ ವಿಶ್ವ ದರ್ಜೆಯ ಮೂಲ ಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರ ತೀರ್ಮಾನಿಸಿದ್ದು, ಆ ವಿಚಾರದಲ್ಲಿ ಬದ್ಧವಾಗಿದೆ ಎಂದು ಅಯೋಧ್ಯೆ ಭೇಟಿಗೂ ಮುನ್ನ ಮೋದಿ ತಿಳಿಸಿದ್ದಾರೆ. ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ನಿರ್ಧರಿಸಿದ್ದು ಅದಕ್ಕೆ ಬದ್ಧವಾಗಿದೆ ಎಂದರು. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಈ ದಿಸೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಹಾಗೂ ಮರು ಅಭಿವೃದ್ಧಿ ಪಡಿಸಿದ ರೈಲು ನಿಲ್ದಾಣವನ್ನು ನಾಳೆ ಉದ್ಘಾಟಿಸಲಿದ್ದೇನೆ. ಇದರೊಂದಿಗೆ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಭಾಗ್ಯ ನನ್ನದಾಗಿದೆ. ಇದು ಅಯೋಧ್ಯೆ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿರುವ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸಲಿದೆ ಎಂದು ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_202_12.txt b/eesanje/url_47_202_12.txt new file mode 100644 index 0000000000000000000000000000000000000000..3db90c95ec5b9f7e03931ee0636d7bed2f2227b0 --- /dev/null +++ b/eesanje/url_47_202_12.txt @@ -0,0 +1,6 @@ +ನಕಲಿ ಎಂಬಿಎ ಕೋರ್ಸ್ ಬಗ್ಗೆ ಇರಲಿ ಎಚ್ಚರ +ನವದೆಹಲಿ,ಡಿ.30- ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ದೇಶದಲ್ಲಿ ನಡೆಯುತ್ತಿರುವ ನಕಲಿ ಎಂಬಿಎ ಕಾರ್ಯಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡುವ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ನಿಯಂತ್ರಣ ಸಂಸ್ಥೆಯಿಂದ ಸರಿಯಾದ ಅನುಮೋದನೆಯಿಲ್ಲದೆ 10 ದಿನಗಳ ಎಂಬಿಎ ಕೋರ್ಸ್‍ಗಳನ್ನು ನೀಡುತ್ತಿರುವ ಪ್ರೇರಕ ಭಾಷಣಕಾರರು ಮತ್ತು ಪ್ರಭಾವಿಗಳ ವಿರುದ್ಧ ತಾಂತ್ರಿಕ ಸಂಸ್ಥೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. +ಸ್ನಾತಕೋತ್ತರ ಪದವಿಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಎಐಸಿಟಿಇ ಎರಡು ವರ್ಷಗಳ ಪದವಿಯಾಗಿದ್ದು, ಉನ್ನತ ಕೌಶಲ್ಯ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರಿಸಲು ವಿನ್ಯಾಸಗೊಳಿಸಲಾಗಿದೆ, ಮಧ್ಯಸ್ಥಗಾರರನ್ನು ಜಾಗರೂಕರಾಗಿರಲು ಕೇಳಿಕೊಂಡಿದೆ. ಕೆಲವು ಪ್ರೇರಕ ಭಾಷಣಕಾರರು ಮತ್ತು ಪ್ರಭಾವಿಗಳು 10-ದಿನಗಳ ಕ್ರ್ಯಾಶ್ ಕೋರ್ಸ್ ಅನ್ನು ನೀಡುತ್ತಿದ್ದಾರೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಗಮನಕ್ಕೆ ಬಂದಿದೆ. ಇಂತಹ ಕ್ರ್ಯಾಶ್ ಕೋರ್ಸ್ ತಪ್ಪುದಾರಿಗೆಳೆಯುವ ಪ್ರಯತ್ನವಾಗಿದೆ ಎಂದು ಎಐಸಿಟಿಇ ತಿಳಿಸಿದೆ. +ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯಾವುದೇ ಸಂಸ್ಥೆ, ವಿಶ್ವವಿದ್ಯಾಲಯಗಳು ಎಂಬಿಎ ಅಥವಾ ಮ್ಯಾನೇಜ್‍ಮೆಂಟ್ ಕೋರ್ಸ್‍ಗಳು (ಸ್ನಾತಕೋತ್ತರ ಪದವಿಗೆ ದಾರಿ) ಸೇರಿದಂತೆ ಎಐಸಿಟಿಇಯಿಂದ ಅನುಮೋದನೆ ಪಡೆಯದೆ ತಾಂತ್ರಿಕ ಕೋರ್ಸ್‍ಗಳನ್ನು ನಡೆಸುವಂತಿಲ್ಲ. +ರಾಮಮಂದಿರ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂ. ವಹಿವಾಟು : ಸಿಎಐಟಿ +ಎಂಬಿಎ ಎರಡು ವರ್ಷಗಳ ಸ್ನಾತಕೋತ್ತರ ಪದವಿ ಕೋರ್ಸ್ ಆಗಿದ್ದು, ವ್ಯವಹಾರ ಮತ್ತು ನಿರ್ವಹಣೆಯ ವಿವಿಧ ಅಂಶಗಳಲ್ಲಿ ಸುಧಾರಿತ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರುವ ವ್ಯಕ್ತಿಗಳನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾಗಿದೆ ಎಂದು ಅಧಿಸೂಚನೆಯನ್ನು ಸೇರಿಸಲಾಗಿದೆ. ಕೇವಲ 10 ದಿನಗಳಲ್ಲಿ ಅದನ್ನು ಪೂರ್ಣಗೊಳಿಸಲಾಗುವುದಿಲ್ಲ. ಆದ್ದರಿಂದ, ಅಂತಹ ವ್ಯಕ್ತಿಗಳು ಮತ್ತು ಸಂಸ್ಥೆಗಳು ನೀಡುವ ಎಂಬಿಎಗೆ ಮಾನ್ಯತೆ ಇಲ್ಲ ಎಂದು ಸಂಸ್ಥೆ ಎಚ್ಚರಿಕೆ ನೀಡಿದೆ. \ No newline at end of file diff --git a/eesanje/url_47_202_2.txt b/eesanje/url_47_202_2.txt new file mode 100644 index 0000000000000000000000000000000000000000..7f742898db1e00b4d60ecc86a098fc2eff688d8a --- /dev/null +++ b/eesanje/url_47_202_2.txt @@ -0,0 +1,7 @@ +ದೇಶಿಯ ತಿಂಡಿಗೆ ಮನಸೋತ ಜಪಾನ್ ರಾಯಭಾರಿ +ನವದೆಹಲಿ,ಡಿ.31- ದೇಶಿಯ ತಿಂಡಿ ತಿನಿಸುಗಳಿಗೆ ಮನ ಸೋಲದವರಿಲ್ಲ. ದೇಶ ವಿದೇಶಗಳ ಗಣ್ಯರಿಗ ಭಾರತೀಯರ ಭಕ್ಷ್ಯ ಭೋಜನವೆಂದರೆ ಎಲ್ಲಿಲ್ಲದ ಪ್ರೀತಿ. ಇದೀಗ ಅಂತಹ ಗಣ್ಯರ ಸಾಲಿಗೆ ಭಾರತದ ಜಪಾನ್ ರಾಯಭಾರಿ ಹಿರೋಷಿ ಸುಜುಕಿ ಸೇರ್ಪಡೆಗೊಂಡಿದ್ದಾರೆ. +ಹಿರೋಷಿ ಸುಜುಕಿ, ಅವರು ಭಾರತೀಯ ಭಕ್ಷ್ಯಗಳನ್ನು ಆನಂದಿಸುತ್ತ ಅವರು ವಾರಣಾಸಿಯಲ್ಲಿ ಬೀದಿ ಆಹಾರ ಸೇವಿಸುತ್ತಿರುವ ಎರಡು ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಾರಣಾಸಿಯಲ್ಲಿ ಸ್ಟ್ರೀಟ್ ಫುಡ್ ಎಂಜಾಯ್ ಮಾಡುತ್ತಿದ್ದೇನೆ ಎಂದು ವಿಡಿಯೋಗೆ ಶೀರ್ಷಿಕೆ ನೀಡಿರುವ ಅವರು ನಗರದ ಜನನಿಬಿಡ ಲೇನ್‍ನಲ್ಲಿ ಕಚೋರಿ ಮತ್ತು ಜಿಲೇಬಿ ಸೇವಿಸುತ್ತಿರುವುದನ್ನು ಕಾಣಬಹುದಾಗಿದೆ. + !../ +ನಾನು ವಾರಣಾಸಿಯಲ್ಲಿ ಕಚೋರಿಯನ್ನು ಸವಿಯುತ್ತಿದ್ದೇನೆ, ಎಂದು ಕಚೋರಿ ಬಾಯಿಗಿಡುವ ಮೊದಲು ಹೇಳಿರುವ ಅವರು ತಿಂದ ನಂತರ ಇದು ತುಂಬಾ ಚೆನ್ನಾಗಿದೆ ಎಂದು ಹೇಳಿಕೊಂಡಿದ್ದಾರೆ. ಎರಡನೇ ವೀಡಿಯೋದಲ್ಲಿ, ಆಮೇಲೆ ನಾನು ಕೂಡ ಜಿಲೇಬಿಯನ್ನು ಸವಿಯುತ್ತೇನೆ ಎಂದು ಘೋಷಿಸಿಕೊಂಡಿರುವುದು ಇದೀಗ ಭಾರಿ ವೈರಲ್ ಆಗಿದೆ. +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಅವರು ತಮ್ಮ ಪತ್ನಿ ಐಕೊ ಸುಜುಕಿ ಅವರೊಂದಿಗೆ ಎಕ್ಸ್‍ನಲ್ಲಿ ಚಿತ್ರವನ್ನು ಹಂಚಿಕೊಂಡಿದ್ದು, ನಾವು ವಾರಣಾಸಿಯಲ್ಲಿದ್ದೇವೆ ಎಂದು ಬರೆದುಕೊಂಡಿದ್ದಾರೆ. \ No newline at end of file diff --git a/eesanje/url_47_202_3.txt b/eesanje/url_47_202_3.txt new file mode 100644 index 0000000000000000000000000000000000000000..5ec71a75693a16e32de47cc750448fdf1338b993 --- /dev/null +++ b/eesanje/url_47_202_3.txt @@ -0,0 +1,5 @@ +ಬಿಜೆಪಿಯ ಸುಳ್ಳುಗಳು ಪ್ರಬಲವಾಗಿವೆ : ಖರ್ಗೆ +ನವದೆಹಲಿ, ಡಿ 31 (ಪಿಟಿಐ) – 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ದು, ಬಿಜೆಪಿಯ ಸುಳ್ಳುಗಳು ಪ್ರಬಲವಾಗಿವೆ ಎಂದು ಆರೋಪಿಸಿದ್ದಾರೆ. +ಎಕ್ಸ್‍ನಲ್ಲಿ ಹಿಂದಿಯಲ್ಲಿ ಬರೆದಿರುವ ಪೋಸ್ಟ್‍ನಲ್ಲಿ ಖರ್ಗೆ ಅವರು, ನರೇಂದ್ರ ಮೋದಿ ಜಿ, ಇಂದು 2023 ರ ಕೊನೆಯ ದಿನ. ನೀವು 2022 ರವರೆಗೆ ಪ್ರತಿ ರೈತರ ಆದಾಯ ದ್ವಿಗುಣಗೊಳ್ಳಲಿದೆ ಎಂದು ಹೇಳಿದ್ದೀರಿ. ಪ್ರತಿಯೊಬ್ಬ ಭಾರತೀಯನಿಗೆ ಮನೆ ಮತ್ತು ದಿನದ 24 ಗಂಟೆ ವಿದ್ಯುತ್ ಇರುತ್ತದೆ. ಆರ್ಥಿಕತೆ 5 ಟ್ರಿಲಿಯನ್ ಅಮೆರಿಕನ್ ಡಾಲರ್ ಆಗಿ ಪರಿವರ್ತನೆಯಾಗಲಿದೆ ಎಂದು ಭರವಸೆ ನೀಡಿದ್ದೀರಾ ಆದರೆ, ಇದೆಲ್ಲ ನಡೆಯಲಿಲ್ಲ ಬಿಜೆಪಿಯ ಸುಳ್ಳುಗಳು ಅತ್ಯಂತ ಪ್ರಬಲವೆಂದು ಪ್ರತಿಯೊಬ್ಬ ಭಾರತೀಯರಿಗೂ ತಿಳಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಆರ್ಥಿಕತೆ ಮತ್ತು ರೈತರ ಬಗ್ಗೆ ಅದರ ನೀತಿಗಳ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ದಶವಾರ್ಷಿಕ ಜನಗಣತಿ ನಡೆಸದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜನಗಣತಿ ವಿಳಂಬದ ಕುರಿತು ಪೋಸ್ಟ್‍ಗೆ ಪ್ರತಿಕ್ರಿಯಿಸಿದ ರಮೇಶ್, 2021 ಕ್ಕೆ ಕೊನೆಯದಾಗಿ ದಶವಾರ್ಷಿಕ ಜನಗಣತಿಯನ್ನು ನಡೆಸುವಲ್ಲಿನ ಅತಿಯಾದ ವಿಳಂಬವು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇದು ಕೇವಲ ಕೋವಿಡ್ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದೆ ಅಲ್ಲ. ನಿಸ್ಸಂದೇಹವಾಗಿ ಇದರ ಹಿಂದೆ ಹುನ್ನಾರವಿದೆ ಎಂದಿದ್ದಾರೆ. \ No newline at end of file diff --git a/eesanje/url_47_202_4.txt b/eesanje/url_47_202_4.txt new file mode 100644 index 0000000000000000000000000000000000000000..c3e904d61021db0fb244def1d2d6a36cfb1b26a0 --- /dev/null +++ b/eesanje/url_47_202_4.txt @@ -0,0 +1,7 @@ +ಕೂಲ್ ಕೂಲ್ ಕಾಶ್ಮೀರ +ಶ್ರೀನಗರ, ಡಿ 31 (ಪಿಟಿಐ) ಕಣಿವೆಯಾದ್ಯಂತ ಕನಿಷ್ಠ ತಾಪಮಾನವು ಘನೀಕರಿಸುವ ಹಂತಕ್ಕಿಂತ ಹಲವಾರು ಡಿಗ್ರಿಗಳಷ್ಟು ಕಡಿಮೆ ಇರುವುದರಿಂದ ಕಾಶ್ಮೀರವು ಇಂದು ಶೀತ ಅಲೆಯ ಪರಿಸ್ಥಿತಿಯಲ್ಲಿ ತತ್ತರಿಸಿ ಹೋಗಿದೆ. ಬೇಸಿಗೆಯ ರಾಜಧಾನಿ ಶ್ರೀನಗರದಲ್ಲಿ ಕನಿಷ್ಠ ತಾಪಮಾನವು ಹಿಂದಿನ ರಾತ್ರಿಯ ಮೈನಸ್ 2.8 ಡಿಗ್ರಿ ಸೆಲ್ಸಿಯಸ್‍ನಿಂದ ಮೈನಸ್ 3.4 ಡಿಗ್ರಿ ಸೆಲ್ಸಿಯಸ್‍ಗೆ ಇಳಿದಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. +ವಾರ್ಷಿಕ ಅಮರನಾಥ ಯಾತ್ರೆಯ ಮೂಲ ಶಿಬಿರವಾಗಿ ಕಾರ್ಯನಿರ್ವಹಿಸುವ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಕನಿಷ್ಠ ತಾಪಮಾನ ಮೈನಸ್ 3.4 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ಹಿಂದಿನ ರಾತ್ರಿಯ ಮೈನಸ್ 4.1 ಡಿಗ್ರಿ ಸೆಲ್ಸಿಯಸ್‍ನಿಂದ ಹೆಚ್ಚಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. +ಬಾರಾಮುಲ್ಲಾದ ಪ್ರಸಿದ್ಧ ಸ್ಕೀ-ರೆಸಾರ್ಟ್ ಗುಲ್ಮಾರ್ಗ್‍ನಲ್ಲಿ ಮೈನಸ್ 3.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹಿಂದಿನ ರಾತ್ರಿ ಮೈನಸ್ 2.5 ಡಿಗ್ರಿ ಸೆಲ್ಸಿಯಸ್‍ನಿಂದ ಕಡಿಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಖಾಜಿಗುಂಡ್‍ನಲ್ಲಿ ಕನಿಷ್ಠ ಮೈನಸ್ 2.6 ಡಿಗ್ರಿ ಸೆಲ್ಸಿಯಸ್, ಕೊಕರ್ನಾಗ್ ಪಟ್ಟಣದಲ್ಲಿ ಮೈನಸ್ 1.4 ಡಿಗ್ರಿ ಸೆಲ್ಸಿಯಸ್ ಮತ್ತು ಕುಪ್ವಾರದಲ್ಲಿ ಮೈನಸ್ 3.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಡಿಸೆಂಬರ್‍ನಲ್ಲಿ ಕಾಶ್ಮೀರದಲ್ಲಿ ಕೆಲವು ಹಿಮಪಾತಗಳು ಮತ್ತು ಮಳೆಗಳು ಸಂಭವಿಸಿದವು, ಇದರ ಪರಿಣಾಮವಾಗಿ ದೀರ್ಘಕಾಲದ ಶೀತ ಅಲೆಯ ಪರಿಸ್ಥಿತಿಗಳು ಉಂಟಾಗಿವೆ ಎಂದು ಅಕಾರಿಗಳು ಮಾಹಿತಿ ನೀಡಿದ್ದಾರೆ.ಕಾಶ್ಮೀರವು 40 ದಿನಗಳ ಕಠಿಣ ಚಳಿಗಾಲದ ಚಿಲ್ಲಾ-ಇ-ಕಲನ್ ಹಿಡಿತದಲ್ಲಿದೆ. ಈ ಅವಧಿಯಲ್ಲಿ ಹಿಮಪಾತದ ಸಾಧ್ಯತೆಗಳು ಅತ್ಯಕವಾಗಿರುತ್ತವೆ ಮತ್ತು ಹೆಚ್ಚಿನ ಪ್ರದೇಶಗಳು, ವಿಶೇಷವಾಗಿ ಎತ್ತರದ ಪ್ರದೇಶಗಳು ಭಾರೀ ಹಿಮವನ್ನು ಪಡೆಯುತ್ತವೆ. ಚಿಲ್ಲಾ-ಇ-ಕಲನ ಜನವರಿ 31 ರಂದು ಕೊನೆಗೊಳ್ಳಲಿದೆ. +ಆದಾಗ್ಯೂ, 20 ದಿನಗಳ ಚಿಲ್ಲಾ-ಇ-ಖುರ್ದ್ ಮತ್ತು 10-ದಿನಗಳ ಚಿಲ್ಲಾ-ಇ-ಬಚ್ಚಾ ದ ನಂತರವೂ ಶೀತದ ಪರಿಸ್ಥಿತಿಗಳು ಮುಂದುವರಿಯುವ ಸಾಧ್ಯತೆಗಳಿವೆ. \ No newline at end of file diff --git a/eesanje/url_47_202_5.txt b/eesanje/url_47_202_5.txt new file mode 100644 index 0000000000000000000000000000000000000000..8c992d22a4c20c13b980fcad06ad332eccdcd770 --- /dev/null +++ b/eesanje/url_47_202_5.txt @@ -0,0 +1,5 @@ +ಅಗ್ನಿ ಅವಘಡದಲ್ಲಿ 6 ಮಂದಿ ಸಜೀವ ದಹನ +ಮುಂಬೈ,ಡಿ.31- ಮಹಾರಾಷ್ಟ್ರದ ಗ್ಲೌಸ್ ಫ್ಯಾಕ್ಟರಿಯಲ್ಲಿ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ಮುಂಜಾನೆ 2.15ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಾಗ ಕಾರ್ಖಾನೆ ಮುಚ್ಚಿದ್ದು, ಆವರಣದೊಳಗೆ ಮಲಗಿದ್ದ ಆರು ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ. +ನಮಗೆ 2. 15 ಗಂಟೆಗೆ ಕರೆ ಬಂದಿತು. ನಾವು ಸ್ಥಳಕ್ಕೆ ತಲುಪಿದಾಗ, ಇಡೀ ಕಾರ್ಖಾನೆ ಬೆಂಕಿಯಲ್ಲಿತ್ತು. ನಮ್ಮ ಅಧಿಕಾರಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಆರು ಜನರ ಶವಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿ ಮೋಹನ್ ಮುಂಗ್ಸೆ ತಿಳಿಸಿದ್ದಾರೆ. +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಕಾರ್ಖಾನೆಯಲ್ಲಿ ಗ್ಲೌಸ್ ತಯಾರಿಕೆಗೆ ಬಳಸುವ ಬಟ್ಟೆಗೆ ಬೆಂಕಿ ತಗುಲಿ ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಕಿ ಕೆನ್ನಾಲಿಗೆಗೆ ಇಡಿ ಕಟ್ಟಡ ಸುಟ್ಟು ಹೋಗಿದ್ದು, ಇನ್ನು ಕೆಲವರು ಸಾವಿಗಿಡಾಗಿರಬಹುದು ಎಂದು ಶಂಕಿಸಲಾಗಿದೆ. \ No newline at end of file diff --git a/eesanje/url_47_202_6.txt b/eesanje/url_47_202_6.txt new file mode 100644 index 0000000000000000000000000000000000000000..580199c9e4d32e2385fad075c0bd1c046a40c873 --- /dev/null +++ b/eesanje/url_47_202_6.txt @@ -0,0 +1,5 @@ +ಒಂದೇ ದಿನ ದೇಶದಲ್ಲಿ 841 ಮಂದಿಗೆ ಕೋವಿಡ್, ಮೂವರು ಬಲಿ +ನವದೆಹಲಿ, ಡಿ 31 (ಪಿಟಿಐ) ದೇಶದಲ್ಲಿ 841 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ, ಇದು 227 ದಿನಗಳಲ್ಲಿ ಅತಿ ಹೆಚ್ಚು, ಆದರೆ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,309 ಕ್ಕೆ ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್‍ನಿಂದಾಗಿ ಮೂರು ಹೊಸ ಸಾವುಗಳು ಸಂಭವಿಸಿದ್ದು, ಕೇರಳ, ಕರ್ನಾಟಕ ಮತ್ತು ಬಿಹಾರದಿಂದ ತಲಾ ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. +ಡಿಸೆಂಬರ್ 5 ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿದೆ, ಆದರೆ ಹೊಸ ರೂಪಾಂತರ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. 2020 ರ ಆರಂಭದಲ್ಲಿ ಪ್ರಾರಂಭವಾದ ಸಾಂಕ್ರಾಮಿಕ ರೋಗದ ಉತ್ತುಂಗದಲ್ಲಿ ದೈನಂದಿನ ಸಂಖ್ಯೆಗಳು ಲಕ್ಷಗಳಲ್ಲಿವೆ ಮತ್ತು ಸುಮಾರು ನಾಲ್ಕು ವರ್ಷಗಳಲ್ಲಿ ದೇಶಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು 5.3 ಲಕ್ಷಕ್ಕೂ ಹೆಚ್ಚು ಸಾವುಗಳನ್ನು ಸಂಭವಿಸಿವೆ. +ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ +ಸಚಿವಾಲಯದ ವೆಬ್‍ಸೈಟ್ ಪ್ರಕಾರ, ರೋಗದಿಂದ ಚೇತರಿಸಿಕೊಂಡ ಜನರ ಸಂಖ್ಯೆ 4.4 ಕೋಟಿಗೂ ಹೆಚ್ಚು ರಾಷ್ಟ್ರೀಯ ಚೇತರಿಕೆ ದರ 98.81 ಪ್ರತಿಶತದಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. \ No newline at end of file diff --git a/eesanje/url_47_202_7.txt b/eesanje/url_47_202_7.txt new file mode 100644 index 0000000000000000000000000000000000000000..5f558c3100b78da98b1179a7a69071855f851a5c --- /dev/null +++ b/eesanje/url_47_202_7.txt @@ -0,0 +1,5 @@ +ಮುಂಬೈನಲ್ಲಿ 2.4 ಕೋಟಿ ರೂ ಮೌಲ್ಯದ ಕಳ್ಳಸಾಗಣೆ ಸಿಗರೇಟ್ ದಾಸ್ತಾನು ವಶಕ್ಕೆ +ಮುಂಬೈ,ಡಿ.31-ಇಲ್ಲಿನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಏರ್ ಕಾರ್ಗೋ ಕಾಂಪ್ಲೆಕ್ಸ್‍ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 2.4 ಕೋಟಿ ರೂ ಮೌಲ್ಯದ ಸಿಗರೇಟ್‍ಗಳನ್ನು ವಶಪಡಿಸಿಕೊಂಡು ಒಬ್ಬನನ್ನು ಬಂಧಿಸಿದ್ದಾರೆ. +ಏರ್ ಕಾರ್ಗೋ ಮಾರ್ಗದ ಮೂಲಕ ದುಬೈನಿಂದ ಬಂದ ಸರಕುಗಳನ್ನು ಪರಿಶೀಲಿಸಿದಾಗ ಬೆಡ್‍ಶೀಟ್‍ಗಳು ಮತ್ತು ಡ್ರೆಸ್ ಮೆಟೀರಿಯಲ್‍ಗಳಲ್ಲಿ ಆಡಗಿಸಿಟ್ಟಿದ್ದ ಸಿಗರೇಟ್‍ ವಶಕ್ಕೆ ಪಡೆಯಲಾಗಿದೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ. ಪರೀಕ್ಷೆಯ ಸಮಯದಲ್ಲಿ, ಸಿಗರೇಟ್ ಪೆಟ್ಟಿಗೆಗಳನ್ನು ಮರೆಮಾಡಲಾಗಿದೆ ಮತ್ತು ಬಟ್ಟೆಗಳ ಬಾಕ್ಸ್‍ಗಳಲ್ಲಿ ಅಂದವಾಗಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇಬ್ಬರ ಸಾವಿಗೆ ಕಾರಣನಾಗಿದ್ದ ವಾಟರ್ ಟ್ಯಾಂಕ್ ಚಾಲಕನಿಗೆ 1 ವರ್ಷ ಜೈಲು +ಕಳ್ಳಸಾಗಣೆಯಾದ ದಾಸ್ತಾನಲ್ಲಿ ಕೆಲವು ಜನಪ್ರಿಯ ಬ್ರಾಂಡ್‍ಗಳ 15,86,960 ಸಿಗರೇಟ್ ಪತ್ರಯಾಗಿದ್ದು ಇದರ ಮಾರುಕಟ್ಟೆ ಮೌಲ್ಯ ಸುಮಾರು 2.4 ಕೋಟಿ ರೂಪಾಯಿ ಎಂದು ಹೇಳಿದರು. ತನಿಖೆಯ ಸಂದರ್ಭದಲ್ಲಿ, ಒಬ್ಬ ವ್ಯಕ್ತಿಯನ್ನು ಕಳ್ಳಸಾಗಣೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ತಿಳಿದುಬಂದು ಆತನನ್ನು ಬಂಧಿಸಲಾಗಿದೆ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು \ No newline at end of file diff --git a/eesanje/url_47_202_8.txt b/eesanje/url_47_202_8.txt new file mode 100644 index 0000000000000000000000000000000000000000..e8c16e1fca2d2ac014e83e7c6fc0191e0aec3314 --- /dev/null +++ b/eesanje/url_47_202_8.txt @@ -0,0 +1,12 @@ +ಪದವೀಧರ, ಶಿಕ್ಷಕರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ +ಬೆಂಗಳೂರು,ಡಿ.30- ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಮೂರು ವಿಧಾನಪರಿಷತ್ ಹಾಗೂ ನಾಲ್ಕು ಪದವೀಧರ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಆಯೋಗ ಪ್ರಕಟಿಸಿದೆ. 1-11-2023ನ್ನು ಅರ್ಹತಾ ದಿನಾಂಕವೆಂದು ಉಲ್ಲೇಖಿಸಿ ಪರಿಷತ್‍ನಲ್ಲಿ ಖಾಲಿ ಇರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ತೆರವಾಗಲಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. +ಆಯೋಗ ಪ್ರಕಟಿಸಿರುವ ಪಟ್ಟಿಯಂತೆ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 1,50,184 ಮತದಾರರು ಇದ್ದಾರೆ. 95,104 ಪುರುಷರು, 55,061 ಮಹಿಳೆಯರು ಮತ್ತು 19 ಇತರೆ ಮತದಾರರು ಇದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 74,118 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. 38,051 ಪುರುಷರು, 36,162 ಮಹಿಳೆಯರು, ಇತರೆ 5 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. +ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 1,00,100 ಈ ಬಾರಿ ಮತ ಚಲಾಯಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿಶೇಷವೆಂದರೆ ಈ ಕ್ಷೇತ್ರದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿದ್ದಾರೆ. 45,236 ಪುರುಷರ ಮತದಾರರು ಇದ್ದರೆ, 51,852 ಮಹಿಳೆಯರು, ಇತರ 12 ಮಂದಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. +ಇನ್ನು ಶಿಕ್ಷಕರ ಕ್ಷೇತ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 23,565 ಮತದಾರರು ಮತ ಚಲಾಯಿಸಲಿದ್ದಾರೆ. ಇದರಲ್ಲಿ 14,714 ಪುರುಷರು, 8,851 ಮಹಿಳೆಯರು ಇದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 19,837 ಮತದಾರರು ಇದ್ದಾರೆ. 9,042 ಪುರಷರು, 10,795 ಮಹಿಳೆಯರು ಇದ್ದಾರೆ. +ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 18,475 ಒಟ್ಟು ಮತದಾರರು ಇದ್ದರೆ, ಇದರಲ್ಲಿ 10,386 ಪುರಷರು ಹಾಗೂ 8,087 ಮಹಿಳಾ ಮತದಾರರು ಇದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 16,063 ಮತದಾರರು ಮತ ಚಲಾಯಿಸಲಿದ್ದು, 5,952 ಪುರುಷರು, 10,106 ಮಹಿಳಾ ಮತದಾರರು ಇದ್ದಾರೆ. +ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ +ಯಾರ್ಯಾರು ನಿವೃತ್ತಿ:ಕಳೆದ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಕೆಲವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. +ಡಾ.ಚಂದ್ರಶೇಖರ್.ಬಿ ಪಾಟೀಲ್-ಈಶಾನ್ಯ ಪದವೀಧರ ಕ್ಷೇತ್ರಆಯನೂರು ಮಂಜುನಾಥ್- ನೈರುತ್ಯ ಪದವೀಧರ ಕ್ಷೇತ್ರಹಾಲಿ ಸದಸ್ಯರಾದ ಎ.ದೇವೇಗೌಡ – ಬೆಂಗಳೂರು ಪದವೀಧರ ಕ್ಷೇತ್ರಡಾ.ವೈ.ಎ.ನಾರಾಯಣಸ್ವಾಮಿ -ಆಗ್ನೇಯ ಶಿಕ್ಷಕರ ಕ್ಷೇತ್ರಎಸ್.ಎಲ್.ಭೋಜೇಗೌಡ – ನೈರುತ್ಯ ಶಿಕ್ಷಕರ ಕ್ಷೇತ್ರಮರಿತಿಬ್ಬೇಗೌಡ- ದಕ್ಷಿಣ ಶಿಕ್ಷಕರ ಕ್ಷೇತ್ರಇವರ ಅಧಿಕಾರಾವ 2024ರ ಜೂನ್ 21ಕ್ಕೆ ಕೊನೆಗೊಳ್ಳಲಿದೆ. ಬಿಜೆಪಿಯಿಂದ ಗೆದ್ದು ವಿಧಾನಪರಿಷತ್ ಸದಸ್ಯರಾಗಿದ್ದ ಪುಟ್ಟಣ ಅವರು ಪ್ರತಿನಿಧಿಸುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅವಧಿ 2026 ನವೆಂಬರ್ 11ಕ್ಕೆ ಕೊನೆಗೊಳ್ಳಲಿದೆ. +ಈಶಾನ್ಯ ಪದವೀಧರ ಕ್ಷೇತ್ರ- ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ನೈರುತ್ಯ ಪದವೀಧರ ಕ್ಷೇತ್ರ -ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಚನ್ನಗಿರಿ ತಾಲ್ಲೂಕು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡುಗು ಜಿಲ್ಲೆ. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ಬೆಂಗಳೂರು ಪದವೀಧರ- ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ.ಆಗ್ನೇಯ ಶಿಕ್ಷಕರ ಕ್ಷೇತ್ರ- ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, (ಹೊನ್ನಾಳಿ, ಚನ್ನಗಿರಿ) ಹೊರತುಪಡಿಸಿ.ನೈರುತ್ಯ ಶಿಕ್ಷಕರ ಕ್ಷೇತ್ರ- ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, (ಹೊನ್ನಾಳಿ, ಚನ್ನಗಿರಿ ಸೇರಿ)ದಕ್ಷಿಣ ಶಿಕ್ಷಕರ ಕ್ಷೇತ್ರ- ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನಬೆಂಗಳೂರು ಶಿಕ್ಷಕರ ಕ್ಷೇತ್ರ – ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ. \ No newline at end of file diff --git a/eesanje/url_47_202_9.txt b/eesanje/url_47_202_9.txt new file mode 100644 index 0000000000000000000000000000000000000000..eb98e8713ad5f18f54f9e041c5d25367b63edb9e --- /dev/null +++ b/eesanje/url_47_202_9.txt @@ -0,0 +1,5 @@ +ಭಗವಾನ್ ರಾಮನೇ ನಮ್ಮ ಅಭ್ಯರ್ಥಿ ಎನ್ನುವುದೊಂದೇ ಬಾಕಿ : ರಾವತ್ ಲೇವಡಿ +ಮುಂಬೈ,ಡಿ.30- ಚುನಾವಣೆಗೆ ಭಗವಾನ್ ರಾಮನೇ ನಮ್ಮ ಅಭ್ಯರ್ಥಿ ಎಂದು ಬಿಜೆಪಿಯಿಂದ ಘೋಷಿಸುವುದೊಂದೇ ಬಾಕಿ ಉಳಿದಿದೆ ಎಂದು ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಟೀಕಿಸಿದ್ದಾರೆ. ಅಯೋಧ್ಯೆಯ ರಾಮಜನ್ಮಭೂಮಿ ದೇಗುಲದ ಉದ್ಘಾಟನಾ ಸಮಾರಂಭದ ಆಹ್ವಾನದ ಕುರಿತು ಪ್ರತಿಕ್ರಿಯಿಸಿದ ಅವರು, ರಾಮನ ಹೆಸರಿನಲ್ಲಿ ರಾಜಕೀಯ ಮಾಡಲಾಗುತ್ತಿದೆ. ಸದ್ಯ ಬಿಜೆಪಿಯವರು ರಾಮನೇ ನಮ್ಮ ಚುನಾವಣೆಯ ಅಭ್ಯರ್ಥಿ ಎಂದು ಹೇಳುವುದೊಂದೆ ಬಾಕಿಯಿರುವುದು ಎಂದು ಲೇವಡಿ ಮಾಡಿದ್ದಾರೆ. +ಇದೇ ವೇಳೆ ಕಾಂಗ್ರೆಸ್ ಝೀರೋದಿಂದ ಆರಂಭವಾಗಬೇಕು ಎಂಬ ತಮ್ಮ ಮೇಲಿನ ಆರೋಪದ ಕುರಿತು ಮಾತನಾಡಿ, ಕಾಂಗ್ರೆಸ್ ಶೂನ್ಯ ಎಂದು ನಾನು ಹೇಳಿಲ್ಲ. ಕಾಂಗ್ರೆಸ್‍ಗೆ ಮಹಾರಾಷ್ಟ್ರದಲ್ಲಿ ಒಬ್ಬನೇ ಒಬ್ಬ ಸಂಸದ ಇಲ್ಲ. ನಮ್ಮಲ್ಲಿ 18 ಸಂಸದರಿದ್ದು, ಅದರಲ್ಲಿ ಕೆಲವರು ಹೋಗಿದ್ದಾರೆ. ಈಗ ನಮ್ಮಲ್ಲಿ 6 ಸಂಸದರಿದ್ದಾರೆ ಎಂದರು. +ಹೊಸ ವರ್ಷದಲ್ಲೂ ಮುಂದುವರೆಯಲಿದೆಯಂತೆ ಇಸ್ರೇಲ್-ಹಮಾಸ್ ಯುದ್ಧ +ನಮ್ಮ ಮೈತ್ರಿ ಕಾಂಗ್ರೆಸ್‍ನೊಂದಿಗೆ ಇದೆ ಮತ್ತು ಮಹಾ ವಿಕಾಸ್ ಅಘಾಡಿ ಸುಮಾರು 40 ಸ್ಥಾನಗಳನ್ನು ಗೆಲ್ಲುತ್ತದೆ. ಇನ್ನು ಬಿಜೆಪಿಗೆ ಗೆಲ್ಲಲು ಇವಿಎಂ ಬೇಕು, ಅವರಿಗೆ ಒಂಟಿಯಾಗಿ ಗೆಲ್ಲಲು ಸಾಧ್ಯವಿಲ್ಲ. ಹೀಗಾಗಿ ಇವಿಎಂ ಜೊತೆ ಅವರ ಮೈತ್ರಿ ಇದೆ ಎಂದು ಸಂಜಯ್ ರಾವತ್ ಟಾಂಗ್ ಕೊಟ್ಟಿದ್ದಾರೆ. \ No newline at end of file diff --git a/eesanje/url_47_203_1.txt b/eesanje/url_47_203_1.txt new file mode 100644 index 0000000000000000000000000000000000000000..a13824ea418138b98c6256be82fdcc3eda76be74 --- /dev/null +++ b/eesanje/url_47_203_1.txt @@ -0,0 +1,8 @@ +ಜರ್ಮನ್ ಆರೈಕೆಯಲ್ಲಿರುವ ಅರಿಹಾ ಶಾ ಜತೆ ದೀಪಾವಳಿ ಆಚರಿಸಿದ ಭಾರತೀಯ ಅಧಿಕಾರಿಗಳು +ನವದೆಹಲಿ,ಡಿ.30- ಎರಡು ವರ್ಷಗಳಿಂದ ಜರ್ಮನಿಯ ರಾಜಧಾನಿಯಲ್ಲಿ ಪೋಷಕರ ಆರೈಕೆಯಲ್ಲಿ ವಾಸಿಸುತ್ತಿರುವ ಹೆಣ್ಣು ಮಗು ಅರಿಹಾ ಶಾ ಅವರೊಂದಿಗೆ ಬರ್ಲಿನ್‍ನಲ್ಲಿರುವ ಭಾರತೀಯ ಅಧಿಕಾರಿಗಳು ಕಳೆದ ತಿಂಗಳು ದೀಪಾವಳಿಯನ್ನು ಆಚರಿಸಿದರು. +ಏಳು ತಿಂಗಳ ಮಗು ಆಕಸ್ಮಿಕವಾಗಿ ಗಾಯಗೊಂಡ ನಂತರ ಅರಿಹಾಳನ್ನು ಕಳೆದ 2021ರಿಂದ ಜರ್ಮನಿಯ ಯುವ ಕಲ್ಯಾಣ ಕಚೇರಿ (ಜುಗೆಂಡಾಮ್ಟ) ವಶದಲ್ಲಿ ಇರಿಸಲಾಗಿದೆ. ಕಳೆದ ತಿಂಗಳ ಎರಡನೇ ವಾರದಲ್ಲಿ ಮಗುವಿಗೆ ಕಾನ್ಸುಲರ್ ಪ್ರವೇಶವನ್ನು ನೀಡಲಾಯಿತು ಮತ್ತು ಭಾರತೀಯ ರಾಯಭಾರಿ ಅಧಿಕಾರಿಗಳು ಅವಳೊಂದಿಗೆ ದೀಪಾವಳಿಯನ್ನು ಆಚರಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದರು. ಮಗು ತನ್ನ ಭಾಷಿಕ, ಧಾರ್ಮಿಕ, ಸಾಂಸ್ಕøತಿಕ ಮತ್ತು ಸಾಮಾಜಿಕ ಪರಿಸರದಲ್ಲಿ ಇರುವುದು ಮುಖ್ಯ ಎಂದು ವಾದಿಸುವ ಮೂಲಕ ಭಾರತಕ್ಕೆ ಆಕೆ ಬೇಗನೆ ಮರಳಲು ಭಾರತ ಒತ್ತಾಯಿಸುತ್ತಿದೆ. +ನಾವು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ… ನಾವು ಕಾನ್ಸುಲರ್ ಪ್ರವೇಶವನ್ನು ಹೊಂದಿದ್ದೇವೆ. ಮಗುವನ್ನು ಭಾರತೀಯ ಸಂಸ್ಕøತಿಯಲ್ಲಿ ಮುಳುಗಿಸುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಅವಳ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ನಿರಂತರ ಪ್ರಯತ್ನಗಳನ್ನು ಖಚಿತಪಡಿಸಿಕೊಳ್ಳಲು ನಾವು ಮಕ್ಕಳ ವಸ್ತುಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಬಾಗ್ಚಿ ತನ್ನ ಸಾಪ್ತಾಹಿಕ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. +ನಾವು ಮಗುವಿನ ಸಾಂಸ್ಕøತಿಕ ಮುಳುಗುವಿಕೆಯ ಕಡೆಗೆ ಕೆಲಸ ಮಾಡುತ್ತಿದ್ದೇವೆ ಮತ್ತು ಭಾರತೀಯ ಹಬ್ಬಗಳು, ಪದ್ಧತಿಗಳು ಮತ್ತು ಆಚರಣೆಗಳಿಗೆ ಸಂಬಂಧಿಸಿದ ಸಂಪನ್ಮೂಲ ಸಾಮಗ್ರಿಗಳನ್ನು ಜರ್ಮನ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಾಗ್ಚಿ ಹೇಳಿದರು. +ರಾಮಮಂದಿರ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂ. ವಹಿವಾಟು : ಸಿಎಐಟಿ +ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಬರ್ಲಿನ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ಅರಿಹಾ ಶಾ ಭಾರತಕ್ಕೆ ಮರಳಲು ಸತತವಾಗಿ ಪ್ರತಿಪಾದಿಸುತ್ತಿದೆ. ಬಾಂಗ್ಲಾದೇಶದ ಚುನಾವಣೆ ಅದು ದೇಶೀಯ ವಿಷಯಗಳಾಗಿವೆ ಮತ್ತು ಬಾಂಗ್ಲಾದೇಶದ ಜನರು ತಮ್ಮ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ನಾವು ನಂಬುತ್ತೇವೆ ಎಂದು ಅವರು ಹೇಳಿದರು. ಬಾಂಗ್ಲಾದೇಶದ ನಿಕಟ ಸ್ನೇಹಿತ ಮತ್ತು ಪಾಲುದಾರರಾಗಿ, ನಾವು ಅಲ್ಲಿ ಶಾಂತಿಯುತ ಚುನಾವಣೆಗಳನ್ನು ನೋಡಲು ಬಯಸುತ್ತೇವೆ ಮತ್ತು ಶಾಂತಿಯುತ ಮತ್ತು ಪ್ರಗತಿಪರ ರಾಷ್ಟ್ರಕ್ಕಾಗಿ ನಾವು ಬಾಂಗ್ಲಾದೇಶವನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು. +ಚೀನಾದ ಸಂಶೋಧನಾ ನೌಕೆಯು ಶ್ರೀಲಂಕಾಕ್ಕೆ ಭೇಟಿ ನೀಡಿದ ವರದಿಗಳ ಬಗ್ಗೆ ಕೇಳಿದಾಗ ನಾವು ಯಾವಾಗಲೂ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಬೆಳವಣಿಗೆಗಳನ್ನು ಮೇಲ್ವಿಚಾರಣೆ ಮಾಡುತ್ತೇವೆ ಮತ್ತು ನಾವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು. \ No newline at end of file diff --git a/eesanje/url_47_203_10.txt b/eesanje/url_47_203_10.txt new file mode 100644 index 0000000000000000000000000000000000000000..d59be745a06170817845f0121c79b0c3ab3bc4fd --- /dev/null +++ b/eesanje/url_47_203_10.txt @@ -0,0 +1,5 @@ +ಹುಣಸೆ ಹಣ್ಣಿನೊಂದಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 5.77ಕೋಟಿ ಮೌಲ್ಯದ ಸಿಗರೇಟ್ ಪ್ಯಾಕೆಟ್‍ಗಳ ವಶ +ಮುಂಬೈ,ಡಿ.29 – ಸರಕು ಸಾಗಣೆ ಕಂಟೈನರ್‍ನಲ್ಲಿದ್ದ ಹುಣಸೆ ಹಣ್ಣಿನ ಜೊತೆ ಅಕ್ರಮವಾಗಿ ಸಾಗಿಸುತ್ತಿದ್ದ 5.77 ಕೋಟಿ ಮೌಲ್ಯದ ಸಿಗರೇಟ್ ಪ್ಯಾಕೆಟ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಮುಂಬೈನ ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‍ಐ) ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. +ಬಂದ ಗುಪ್ತಚರ ಮಾಹಿತಿ ಆಧಾರದ ಮೇಲೆ ಜವಾಹರಲಾಲ್ ನೆಹರು ಬಂದರಿಗೆ ಆಗಮಿಸಿದ 40ಅಡಿ ಉದ್ದದ ಶೈತ್ಯೀಕರಿಸಿದ ಕಂಟೈನರ್ ಪರಿಶೀಲಿಸಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ 33.92.000 ಸಿಗರೇಟ್‍ಗಳು ಪತ್ತೆಯಾಗಿದೆ.ನ್ಹಾವಾ ಶೆವಾದಲ್ಲಿನ ಕಂಟೈನರ್ ಸರಕು ಸಾಗಣೆ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಯಿತು. ಆಗ ಹುಣಸೆಹಣ್ಣು ಹೊಂದಿರುವ ರಟ್ಟಿನ ಪೆಟ್ಟಿಗೆಗಳಲ್ಲಿ ಸಿಗರೇಟ್ ಪೆಟ್ಟಿಗೆಗಳನ್ನು ಜಾಣ್ಮೆಯಿಂದ ಮರೆಮಾಚಲಾಗಿರುವುದು ಬೆಳಕಿಗೆ ಬಂದಿದೆ. +ಭಾರತದೊಂದಿಗಿನ ಮಿಲಿಟರಿ ತೊಡಗಿಸಿಕೊಳ್ಳುವಿಕೆ ವ್ಯಾಪ್ತಿಯನ್ನು ಆಧುನಿಕರಿಸಿದ ಅಮೆರಿಕ +ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆ ಪೆಟ್ಟಿಗೆಯೊಳಗೆ ಇರಿಸಲಾಗಿತ್ತು ಮತ್ತು ಎಲ್ಲಾ ಕಡೆ ಹುಣಸೆಹಣ್ಣಿನಿಂದ ಜಾಣ್ಮೆಯಿಂದ ಮುಚ್ಚಲಾಗಿತ್ತು. ಕಳ್ಳಸಾಗಣೆ ಮಾಡಿರುವ 33,92,000 ಸಿಗರೇಟ್‍ಗಳ ಮಾರುಕಟ್ಟೆ ಮೌಲ್ಯ ಅಂದಾಜು 5.77 ಕೋಟಿ ರೂ.ಗಳಾಗಿವೆ ಎಂದು ಡಿಆರ್‍ಐ ಅಲ್ಲಾಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_203_11.txt b/eesanje/url_47_203_11.txt new file mode 100644 index 0000000000000000000000000000000000000000..b40916d1f70d4d06a8389372028a5d9dd30918a3 --- /dev/null +++ b/eesanje/url_47_203_11.txt @@ -0,0 +1,11 @@ +ಲೋಕಸಭೆ ಚುನಾವಣೆಗೂ ಮುನ್ನ 56 ರಾಜ್ಯಸಭಾ ಸದಸ್ಯರ ಅವಧಿ ಅಂತ್ಯ +ನವದೆಹಲಿ,ಡಿ.29- ಮುಂಬರುವ 2024ರ ಲೋಕಸಭಾ ಚುನಾವಣೆಗೆ ಮೊದಲು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಇರುವ ಅನೇಕ ಕೇಂದ್ರ ಸಚಿವರ ರಾಜ್ಯಸಭಾ ಅಧಿಕಾರಾವಧಿಯು ಕೊನೆಗೊಳ್ಳಲಿದೆ. ಇದರಲ್ಲಿ ಮೋದಿ ಸರ್ಕಾರದ ಹಿರಿಯ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ, ಧರ್ಮೇಂದ್ರ ಪ್ರಧಾನ್, ಭೂಪೇಂದ್ರ ಯಾದವ್, ಜ್ಯೋತಿರಾದಿತ್ಯ ಸಿಂಯಾ, ಪುರುಷೋತ್ತಮ್ ರೂಪಾಲಾ, ರಾಜೀವ್ ಚಂದ್ರಶೇಖರ್, ನಾರಾಯಣ ರಾಣೆ ಮತ್ತು ಅಶ್ವಿನಿ ವೈಷ್ಣವ್ ಅವರ ಹೆಸರುಗಳು ಸೇರಿವೆ. +ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸುಶೀಲ್ ಕುಮಾರ್ ಮೋದಿ, ಪ್ರಕಾಶ್ ಜಾವಡೇಕರ್, ಸರೋಜ್ ಪಾಂಡೆ, ಅನಿಲ್ ಬಲುನಿ, ಸುಧಾಂಶು ತ್ರಿವೇದಿ, ಅನಿಲ್ ಜೈನ್, ಕಾಂತ ಕರ್ದಮ, ಸಕಲದೀಪ್ ರಾಜ್‍ಭರ್, ಜೆವಿಎಲ್ ನರಸಿಂಹ ರಾವ್ ಸೇರಿದಂತೆ ಹಲವು ಪ್ರಮುಖರು ಸೇರಿದ್ದಾರೆ. +ಹೊಸ ವರ್ಷದ ಆರಂಭದಲ್ಲಿ, ಲೋಕಸಭಾ ಚುನಾವಣೆಗೆ ಮುನ್ನ, ಬಿಜೆಪಿಯ 32 ರಾಜ್ಯಸಭಾ ಸಂಸದರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಈ ಹೆಚ್ಚಿನ ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2, 2024 ರಂದು ಕೊನೆಗೊಳ್ಳಲಿದೆ. ಇಂತಹ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರದ ಈ ಸಚಿವರು ಏಪ್ರಿಲ್ 2, 2024 ರ ನಂತರ ರಾಜೀನಾಮೆ ನೀಡುತ್ತಾರಾ ಅಥವಾ ಅವರ ಸಚಿವ ಸ್ಥಾನಗಳು ಹಾಗೆಯೇ ಉಳಿಯುತ್ತವೆಯೇ ಎಂಬ ಪ್ರಶ್ನೆ ಈಗ ಉದ್ಭವಿಸಿದೆ. +ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪರಿಸರ ಸಚಿವ ಭೂಪೇಂದ್ರ ಯಾದವ್, ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಡಾ.ಮನ್ಸುಖ್ ಮಾಂಡವಿಯಾ, ರೈಲ್ವೆ ಮತ್ತು ಟೆಲಿಕಾಂ ಅಶ್ವಿನಿ ವೈಷ್ಣವ್ ಮತ್ತು ಸಂವಹನ ಸಚಿವಾಲಯದ ಉಸ್ತುವಾರಿ ಹೊಂದಿರುವ ಪುರುಷೋತ್ತಮ್ ರೂಪಾಲಾ ಅವರು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಬಹುದು ಎಂದು ಹೇಳಲಾಗುತ್ತಿರುವ ಪ್ರಮುಖ ಹೆಸರುಗಳು. +ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್ +ಜೊತೆಗೆ ಬಿಜೆಪಿ ಮೂಲಗಳನ್ನು ನಂಬುವುದಾದರೆ, ಮನ್ಸುಖ್ ಮಾಂಡವಿಯಾ ಗುಜರಾತ್‍ನಿಂದ, ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರದೇಶದಿಂದ, ಭೂಪೇಂದ್ರ ಯಾದವ್ ಮತ್ತು ರಾಜಸ್ಥಾನದಿಂದ ಅಶ್ವಿನಿ ವೈಷ್ಣವ್ ಲೋಕಸಭೆ ಚುನಾವಣೆಗೆ ಸ್ರ್ಪಧಿಸಬಹುದು. ಇನ್ನು, ಧರ್ಮೇಂದ್ರ ಪ್ರಧಾನ್ ಒಡಿಶಾದಿಂದ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. +ಹೊಸ ವರ್ಷದಲ್ಲಿ ರಾಜ್ಯಸಭೆಯ 69 ಸ್ಥಾನಗಳು ಖಾಲಿಯಾಗುತ್ತಿದ್ದು, ಈ ಪೈಕಿ 56 ಸ್ಥಾನಗಳು ಲೋಕಸಭೆ ಚುನಾವಣೆಗೆ ಮುನ್ನ ಅಂದರೆ ಏಪ್ರಿಲ-ಮೇ ವೇಳೆಗೆ ಖಾಲಿಯಾಗಲಿವೆ. ಇವರಲ್ಲಿ ಕಾಂಗ್ರೆಸ್, ಆರ್‍ಜೆಡಿ, ಜೆಡಿಯು, ಶಿವಸೇನೆ ಸೇರಿದಂತೆ ಹಲವು ಪಕ್ಷಗಳ ಸಂಸದರೂ ಇದ್ದಾರೆ. ಇದೇ ವೇಳೆ ಬಿಜೆಪಿಯ ಎಂಟು ಸಚಿವರ ಅವಧಿಯೂ ಇದೇ ಅವಧಿಯಲ್ಲಿ ಕೊನೆಗೊಳ್ಳಲಿದೆ. ಆದರೆ, ಈ ಸಚಿವರ ಅಧಿಕಾರಾವಧಿ ಮುಗಿದ ಬಳಿಕ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಹಲವು ರಾಜ್ಯಸಭಾ ಸಂಸದರು ಹಾಗೂ ಸಚಿವರೂ ಲೋಕಸಭೆ ಚುನಾವಣೆಗೆ ಸ್ರ್ಪಧಿಸುತ್ತಿರುವ ಸಾಧ್ಯತೆ ಇದೆ. +ಮೋದಿ ಸಂಪುಟದ ಎಂಟು ಸಚಿವರು ತಮ್ಮ ಸಂಸದರ ಅವಧಿ ಮುಗಿದ ನಂತರವೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ನಿಯಮಗಳು ಹೇಳುತ್ತವೆ, ಏಕೆಂದರೆ ಸಂವಿಧಾನದ ಅಡಿಯಲ್ಲಿ ಯಾವುದೇ ವ್ಯಕ್ತಿ ಸಂಸತ್ತಿನ ಸದಸ್ಯನಾಗದೆ ಆರು ತಿಂಗಳ ಕಾಲ ಮಂತ್ರಿಯಾಗಿ ಉಳಿಯಬಹುದು. ಸಂವಿಧಾನದ ನಿಯಮಗಳ ಪ್ರಕಾರ, ಯಾವುದೇ ವ್ಯಕ್ತಿ ಸಂಸತ್ತಿನ ಅಥವಾ ಶಾಸಕಾಂಗದ ಸದಸ್ಯರಾಗದೆಯೂ ಸಹ ಗರಿಷ್ಠ ಆರು ತಿಂಗಳವರೆಗೆ ಸಚಿವ ಸ್ಥಾನವನ್ನು ಹೊಂದಬಹುದು. ಆರು ತಿಂಗಳೊಳಗೆ ಸಂಸತ್ತಿನ ಅಥವಾ ಶಾಸಕಾಂಗದ ಸದಸ್ಯನಾಗದಿದ್ದರೆ ಅವರು ರಾಜೀನಾಮೆ ನೀಡಬೇಕಾಗುತ್ತದೆ. ಈ ದೃಷ್ಟಿಯಿಂದ ನೋಡಿದರೆ ಮೋದಿ ಸರ್ಕಾರದ ಈ ಮಂತ್ರಿಗಳು ಸಚಿವ ಸ್ಥಾನ ಕಳೆದುಕೊಳ್ಳುವ ಅಪಾಯವಿಲ್ಲ. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಸದ್ಯ ಹೊಸ ವರ್ಷದಲ್ಲಿ ರಾಜ್ಯಸಭೆಯ 69 ಸ್ಥಾನಗಳು ಖಾಲಿಯಾಗುತ್ತಿದ್ದು, ಈ ಪೈಕಿ 56 ಸ್ಥಾನಗಳು ಲೋಕಸಭೆ ಚುನಾವಣೆಗೆ ಮುನ್ನ ಅಂದರೆ ಏಪ್ರಿಲï-ಮೇ ವೇಳೆಗೆ ಖಾಲಿಯಾಗಲಿವೆ. ಈ ಬಗ್ಗೆ ಆಯಾ ಪಕ್ಷಗಳು ಏನು ಮಾಡುತ್ತವೆ ಎನ್ನುವುದನ್ನು ಕಾದು ನೋಡಬೇಕಿದೆ. \ No newline at end of file diff --git a/eesanje/url_47_203_12.txt b/eesanje/url_47_203_12.txt new file mode 100644 index 0000000000000000000000000000000000000000..d80dcdac636b94a6130b4048b666e74fd3d3cc71 --- /dev/null +++ b/eesanje/url_47_203_12.txt @@ -0,0 +1,9 @@ +ನಾಳೆ ಅಯೋಧ್ಯೆಗೆ ಮೋದಿ ಭೇಟಿ, 11,100 ಕೋಟಿ ರೂ. ಮೊತ್ತದ ಯೋಜನೆಗಳ ಉದ್ಘಾಟನೆ +ನವದೆಹಲಿ,ಡಿ.29- ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಯೋಧ್ಯೆಗೆ ಭೇಟಿ ನೀಡಲಿದ್ದು, ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ 11,100 ಕೋಟಿ ರೂ. ಮೊತ್ತದ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ ಎರಡು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ಆರು ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. +ರಾಮ ಮಂದಿರದ ಶಂಕು ಸ್ಥಾಪನೆ ಸಮಾರಂಭಕ್ಕೆ ವಾರಗಳ ಮೊದಲು, ಪ್ರಧಾನಿ ಮೋದಿ ಅವರು ದೇವಾಲಯದ ನಗರದಲ್ಲಿ ನಾಲ್ಕು ಹೊಸ ರಸ್ತೆಗಳನ್ನು ಉದ್ಘಾಟಿಸಲಿದ್ದಾರೆ. ಇದರ ಜೊತೆಗೆ ಮೋದಿ ಅವರು ಅಯೋಧ್ಯೆಯಲ್ಲಿ ಗ್ರೀನ್ ಫೀಲ್ಡ ಟೌನ್ಶಿಪ್‍ಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಾಳೆ ಬೆಳಿಗ್ಗೆ 11.15 ಕ್ಕೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರುವರು. +ನೂತನವಾಗಿ ನಿರ್ಮಿಸಲಾಗಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಮಧ್ಯಾಹ್ನ 12.15ಕ್ಕೆ ಸಾರ್ವಜನಿಕರ ಸೇವೆಗೆ ಲೋರ್ಕಾಪಣೆ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 15,700 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ನೇರವೇರಿಸುವರು. +ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್ +ಅಯೋಧ್ಯೆಯಲ್ಲಿ ಆಧುನಿಕ ವಿಶ್ವ ದರ್ಜೆಯ ಮೂಲ ಸೌಕರ್ಯವನ್ನು ಅಭಿವೃದ್ಧಿಪಡಿಸುವುದು, ಸಂಪರ್ಕವನ್ನು ಸುಧಾರಿಸುವುದು ಮತ್ತು ನಗರದ ಶ್ರೀಮಂತ ಇತಿಹಾಸ ಮತ್ತು ಪರಂಪರೆಗೆ ಅನುಗುಣವಾಗಿ ಅದರ ನಾಗರಿಕ ಸೌಲಭ್ಯಗಳನ್ನು ನವೀಕರಿಸುವುದು ಪ್ರಧಾನಮಂತ್ರಿಯವರ ದೃಷ್ಟಿಯಾಗಿದೆ. +240 ಕೋಟಿ ರೂ. ವೆಚ್ಚದಲ್ಲಿ ಅಯೋಧ್ಯೆ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾರ್ಯ ನಡೆದಿದೆ. ಇದು ಈಗ ಮೂರು ಅಂತಸ್ತಿನ ನಿಲ್ದಾಣವಾಗಿದ್ದು, ಲಿಫ್ಟ್‍ಗಳು, ಎಸ್ಕಲೇಟರ್‍ಗಳು, ಫುಡ್ ಪ್ಲಾಜಾಗಳು, ಕ್ಲೋಕ್ ರೂಮ್‍ಗಳು, ಮಕ್ಕಳ ಆರೈಕೆ ಕೊಠಡಿಗಳು, ವೇಟಿಂಗ್ ಹಾಲ್‍ಗಳು ಮುಂತಾದ ಆಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.ಸುಂದರವಾದ ಮತ್ತು ಆಕರ್ಷಕ ವಿನ್ಯಾಸದ ಆಸನಗಳು, ಉತ್ತಮ ಲಗೇಜ್ ರ್ಯಾಕ್, ಸೂಕ್ತವಾದ ಮೊಬೈಲ್ ಹೋಲ್ಡರ್‍ನೊಂದಿಗೆ ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಎಲಇಡಿ ಲೈಟ್‍ಗಳು, ಸಿಸಿಟಿವಿ, ಸಾರ್ವಜನಿಕ ಮಾಹಿತಿ ವ್ಯವಸ್ಥೆ ಮುಂತಾದ ಸೌಲಭ್ಯಗಳನ್ನು ಹೊಂದಿರುವ ಅಮೃತ್ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡುವರು. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‍ಪ್ರೆಸ್ ಮತ್ತು ಮಾಲ್ಡಾ ಟೌನ್- ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‍ಪ್ರೆಸ್ ರೈಲಿಗೆ ಹಸಿರು ನಿಶಾನೆ ಸಿಗಲಿದೆ. ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‍ಪ್ರೆಸ್; ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‍ಪ್ರೆಸ್; ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‍ಪ್ರೆಸ್; ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‍ಪ್ರೆಸ್; ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‍ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲು ಸೇರಿದಂತೆ ಒಟ್ಟು ಆರು ಹೊಸ ವಂದೇ ಭಾರತ್ ರೈಲುಗಳಿಗೂ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. \ No newline at end of file diff --git a/eesanje/url_47_203_2.txt b/eesanje/url_47_203_2.txt new file mode 100644 index 0000000000000000000000000000000000000000..7c07b7a27814041af66cc59e6a7a3742b8ca07e3 --- /dev/null +++ b/eesanje/url_47_203_2.txt @@ -0,0 +1,9 @@ +ಪಾಕ್ ಚುನಾವಣೆ : ಉಗ್ರ ಹಫೀಜ್ ಪಕ್ಷದ ಸ್ಪರ್ಧೆ ಮೇಲೆ ಭಾರತದ ನಿಗಾ +ನವದೆಹಲಿ,ಡಿ.30- ಪಾಕಿಸ್ತಾನದಲ್ಲಿ ಅಮೂಲಾಗ್ರ ಅಂಶಗಳ ಸಾಮಾನ್ಯೀಕರಣವು ಇಸ್ಲಾಮಾಬಾದ್‍ನ ರಾಜ್ಯ ನೀತಿಯ ಒಂದು ಭಾಗವಾಗಿದೆ ಎಂದು ಹೇಳಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬೆಂಬಲಿತ ರಾಜಕೀಯ ಪಕ್ಷವು ಚುನಾವಣೆಯಲ್ಲಿ ಸ್ರ್ಪಧಿಸುತ್ತಿರುವುದು ಗಂಭೀರ ಭದ್ರತಾ ಪರಿಣಾಮಗಳನ್ನು ಬೀರಲಿದೆ ಎಂದಿದೆ.ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುವ ಪ್ರತಿಯೊಂದು ಬೆಳವಣಿಗೆಯ ಮೇಲೆ ಹೊಸ ದೆಹಲಿ ನಿಗಾ ಇರಿಸುವುದನ್ನು ಮುಂದುವರೆಸಿದೆ ಎಂದು ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. +ಪಾಕಿಸ್ತಾನದಲ್ಲಿ ಆಮೂಲಾಗ್ರ ಅಂಶಗಳ ಸಮಸ್ಯೆ ಸಾಮಾನ್ಯೀಕರಿಸಲ್ಪಟ್ಟಿದೆ ಮತ್ತು ಚುನಾವಣೆಯಲ್ಲಿ ಭಾಗವಹಿಸುತ್ತದೆ… ಇದು ಆಂತರಿಕ ವ್ಯವಹಾರವಾಗಿದೆ ಆದ್ದರಿಂದ ನಾನು ಅದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ಪಾಕಿಸ್ತಾನದಲ್ಲಿ ಮೂಲಭೂತವಾದಿ ಸಂಘಟನೆಗಳ ಮುಖ್ಯವಾಹಿನಿಯು ಹೊಸದೇನಲ್ಲ ಮತ್ತು ಅವರ ರಾಜ್ಯ ನೀತಿಯ ಭಾಗವಾಗಿದೆ ಎಂದು ಅವರು ತಿಳಿಸಿದ್ದಾರೆ. +ಇಂತಹ ಬೆಳವಣಿಗೆಗಳು ನಮ್ಮ ಪ್ರದೇಶದ ಭದ್ರತೆಗೆ ಗಂಭೀರವಾದ ಭದ್ರತಾ ಪರಿಣಾಮಗಳನ್ನು ಹೊಂದಿವೆ. ನಮ್ಮ ಪಾಲಿಗೆ, ನಮ್ಮ ರಾಷ್ಟ್ರೀಯ ಭದ್ರತೆಗೆ ಪರಿಣಾಮ ಬೀರುವ ಪ್ರತಿಯೊಂದು ಬೆಳವಣಿಗೆಯನ್ನು ನಾವು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು. +ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕನಾಗಿರುವ ಮುಹಮ್ಮದ್ ಹಫೀಜ್ ಸಯೀದ್ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‍ಇಟಿ) ಸ್ಥಾಪಕ. ಮುಂಬೈನಲ್ಲಿ ನಡೆದ ಮಾರಣಾಂತಿಕ 26/11 ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಈತ ಹಲವಾರು ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿದ್ದಾನೆ. +ಏತನ್ಮಧ್ಯೆ, ಇಸ್ಲಾಮಾಬಾದ್‍ಗೆ ಭಾರೀ ಟೀಕೆಗೆ ಕಾರಣವಾದ ಬೆಳವಣಿಗೆಯಲ್ಲಿ, ಹಫೀಜ್ ಸಯೀದ್ ಸ್ಥಾಪಿಸಿದ ರಾಜಕೀಯ ಘಟಕವಾದ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ (ಪಿಎಂಎಂಎಲ) ಮುಂಬರುವ ಸಾರ್ವತ್ರಿಕ ಚುನಾವಣೆಗೆ ಪಾಕಿಸ್ತಾನದಾದ್ಯಂತ ಪ್ರತಿ ರಾಷ್ಟ್ರೀಯ ಮತ್ತು ಪ್ರಾಂತೀಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. +ರಾಮಮಂದಿರ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂ. ವಹಿವಾಟು : ಸಿಎಐಟಿ +ಹಫೀಜ್ ಸಯೀದ್ ಅವರ ಪುತ್ರ ತಲ್ಹಾ ಸಯೀದ್ ಅವರು ಲಾಹೋರ್‍ನ ನ್ಯಾಷನಲ್ ಅಸೆಂಬ್ಲಿಯ ಕ್ಷೇತ್ರ ದಿಂದ ಚುನಾವಣೆಗೆ ಸ್ರ್ಪಧಿಸಲು ನಿರ್ಧರಿಸಿದ್ದಾರೆ. ಇತರ ಆರೋಪಗಳಿಗಾಗಿ ಜುಲೈ 17, 2019 ರಿಂದ ಜೈಲಿನಲ್ಲಿರುವ ಸಯೀದ್‍ಗೆ 2022 ರ ಏಪ್ರಿಲ್‍ನಲ್ಲಿ ಪಾಕಿಸ್ತಾನದ ಲಾಹೋರ್‍ನಲ್ಲಿರುವ ವಿಶೇಷ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ಭಯೋತ್ಪಾದನೆಗೆ ಹಣಕಾಸು ಒದಗಿಸುವುದಕ್ಕಾಗಿ 33 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಡಿಸೆಂಬರ್ 2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಸಯೀದ್‍ನನ್ನು ಭಯೋತ್ಪಾದಕ ಎಂದು ಹೆಸರಿಸಿತ್ತು. +ಏತನ್ಮಧ್ಯೆ, ನಿರ್ದಿಷ್ಟ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಹಫೀಜ್ ಸಯೀದ್‍ನನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಭಾರತವು ಪಾಕಿಸ್ತಾನ ಸರ್ಕಾರಕ್ಕೆ ಮನವಿಯನ್ನು ರವಾನಿಸಿದೆ. ಎಲ್ಲಾ ಸಂಬಂಧಿತ ಪೋಷಕ ದಾಖಲೆಗಳೊಂದಿಗೆ ನವದೆಹಲಿ ವಿನಂತಿಯನ್ನು ರವಾನಿಸಿದೆ ಎಂದು ಎಂಇಎ ಹೇಳಿದೆ. \ No newline at end of file diff --git a/eesanje/url_47_203_3.txt b/eesanje/url_47_203_3.txt new file mode 100644 index 0000000000000000000000000000000000000000..e430e2aaeab03c63bbd42897b019880d8c0b7417 --- /dev/null +++ b/eesanje/url_47_203_3.txt @@ -0,0 +1,8 @@ +ಪೂರ್ಣಗೊಂಡ ರಾಮಲಲ್ಲಾ ಮೂರ್ತಿ ಆಯ್ಕೆ ಪ್ರಕ್ರಿಯೆ +ಅಯೋಧ್ಯೆ,ಡಿ.30- ರಾಮಲಲ್ಲಾ ಮೂರ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸರ್ವಾನುಮತದಿಂದ ಆಯ್ಕೆಯಾದ ಮೂರ್ತಿಯನ್ನು ಮುಂದಿನ ತಿಂಗಳು ಪ್ರಾಣ ಪ್ರತಿಷ್ಠಾನಕ್ಕೆ ತರಲಾಗುವುದು ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿ ಬಿಮಲೇಂದ್ರ ಮೋಹನ್ ಪ್ರತಾಪ್ ಮಿಶ್ರಾ ತಿಳಿಸಿದ್ದಾರೆ. +ಇಂದಿನ ಟ್ರಸ್ಟ್ ಸಭೆಯು ರಾಮ ಮಂದಿರಕ್ಕೆ ವಿಗ್ರಹವನ್ನು ಆಯ್ಕೆ ಮಾಡುವ ಬಗ್ಗೆ ಮತ್ತು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ನಿರ್ಮಾಣ ಮತ್ತು ನಿರ್ವಹಣೆಯ ಹೊಣೆ ಹೊತ್ತುಕೊಂಡಿದೆ. ಮುಂದಿನ ತಿಂಗಳು ಭವ್ಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುವ ಭಗವಾನ್ ರಾಮಲಲ್ಲಾ ವಿಗ್ರಹವನ್ನು ನಿರ್ಧರಿಸಲು ಮತದಾನವನ್ನು ಕೈಗೊಳ್ಳಲು ಟ್ರಸ್ಟ್‍ನ ಸಭೆ ನಿನ್ನೆ ನಡೆಯಿತು. +ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ +ವಿಗ್ರಹ ಆಯ್ಕೆ ಪ್ರಕ್ರಿಯೆಯ ನಿಯತಾಂಕಗಳ ಬಗ್ಗೆ ಕೇಳಿದಾಗ, ಬಿಮ್ಲೇಂದ್ರ ಅವರು ವಿಗ್ರಹವು ನಿಮ್ಮೊಂದಿಗೆ ಮಾತನಾಡುತ್ತದೆ, ನೀವು ಅದನ್ನು ಒಮ್ಮೆ ನೋಡಿದಂತೆ, ನೀವು ಅದನ್ನು ನೋಡಿ ಮಂತ್ರಮುಗ್ಧರಾಗುತ್ತೀರಿ ಎಂದು ಹೇಳಿದರು. ಹಲವು ವಿಗ್ರಹಗಳನ್ನು ಒಟ್ಟಿಗೆ ಇರಿಸಿದರೂ, ಕಣ್ಣುಗಳು ಉತ್ತಮವಾದವುಗಳ ಮೇಲೆ ಕೇಂದ್ರೀಕರಿಸುತ್ತವೆ. +ಮತ್ತು ಕಾಕತಾಳೀಯವೆಂದರೆ ನಾನು ವಿಗ್ರಹವನ್ನು ಇಷ್ಟಪಟ್ಟೆ ಮತ್ತು ಅದಕ್ಕೆ ನನ್ನ ಮತವನ್ನು ನೀಡಿದ್ದೇನೆ. ಚಂಪತ್ ರೈ ಅವರು ಮುಂದೆ ನಿರ್ಧರಿಸುತ್ತಾರೆ. ಮತದಾನ ನಡೆಯಿತು. ವ್ಯವಸ್ಥೆ ಮತ್ತು ನಾವು ನಮ್ಮ ಆದ್ಯತೆಗಳನ್ನು ನೀಡಿದ್ದೇವೆ. ಸರ್ವಾನುಮತದಿಂದ ಆಯ್ಕೆಯಾದ ಮೂರ್ತಿಯನ್ನು ಪ್ರಾಣ ಪ್ರತಿಷ್ಠೆಗೆ ತರಲಾಗುವುದು, ಎಂದು ಅವರು ಹೇಳಿದರು. +ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಮೂರು ವಿನ್ಯಾಸಗಳಲ್ಲಿ ಐದು ವರ್ಷದ ರಾಮ್ ಲಲ್ಲಾವನ್ನು ಪ್ರತಿಬಿಂಬಿಸುವ 51 ಇಂಚು ಎತ್ತರದ ರಾಮನ ವಿಗ್ರಹವನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು. ಏತನ್ಮಧ್ಯೆ, ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ರಾಮ ಜನ್ಮಭೂಮಿ ಪಥ ಮತ್ತು ಸಂಕೀರ್ಣದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. +ಕೆಲಸವನ್ನು ತರಾತುರಿಯಲ್ಲಿ ಮಾಡಲಾಗುತ್ತಿಲ್ಲ, ಬದಲಿಗೆ ಸಾಕಷ್ಟು ಸಮಯವನ್ನು ಹೂಡಿಕೆ ಮಾಡುವ ಮೂಲಕ ಗುಣಾತ್ಮಕವಾಗಿ ಮಾಡಲಾಗುತ್ತಿದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_47_203_4.txt b/eesanje/url_47_203_4.txt new file mode 100644 index 0000000000000000000000000000000000000000..3792464fba2164ef968f91650835682d806a6ffc --- /dev/null +++ b/eesanje/url_47_203_4.txt @@ -0,0 +1,7 @@ +ಭಯೋತ್ಪಾದಕ ಪಟ್ಟಿಗೆ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆ +ನವದೆಹಲಿ,ಡಿ.30- ಕೆನಡಾ ಮೂಲದ 33 ವರ್ಷದ ದರೋಡೆಕೋರ ಲಖ್‍ಬೀರ್ ಸಿಂಗ್ ಲಾಂಡಾ ಅವರನ್ನು ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಎಂದು ಗೃಹ ಸಚಿವಾಲಯ ಗುರುತಿಸಿದೆ. ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ಇತರ ಭಯೋತ್ಪಾದಕ ಚಟುವಟಿಕೆಗಳ ಜೊತೆಗೆ 2021 ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಗುಪ್ತಚರ ಪ್ರಧಾನ ಕಛೇರಿಯ ಮೇಲೆ ರಾಕೆಟ್ ದಾಳಿಯಲ್ಲಿ ಲಾಂಡಾ ಭಾಗಿಯಾಗಿದ್ದರು. +1989 ರಲ್ಲಿ ಪಂಜಾಬ್‍ನ ತರ್ನ್ ತರನ್ ಜಿಲ್ಲೆಯಲ್ಲಿ ಜನಿಸಿದ ಲಾಂಡಾ ಅವರು 2017 ರಲ್ಲಿ ಕೆನಡಾಕ್ಕೆ ಓಡಿಹೋದರು. ಅವರನ್ನು ಕುಖ್ಯಾತ ಖಲಿಸ್ತಾನಿ ಗುಂಪಿನ ಬಬ್ಬರ್ ಖಾಲ್ಸಾ ಇಂಟರ್‍ನ್ಯಾಶನಲ್ ಸದಸ್ಯ ಎಂದು ಗುರುತಿಸಲಾಗುತ್ತಿದೆ. ಲಾಂಡಾ ಅವರು ಬಿಕೆಐ ಯೊಂದಿಗೆ ಸಹಕರಿಸಿದ ಪಾಕಿಸ್ತಾನ ಮೂಲದ ದರೋಡೆಕೋರ ರಿಂಡಾ ಎಂದೂ ಕರೆಯಲ್ಪಡುವ ಹರ್ವಿಂದರ್ ಸಿಂಗ್ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆಂದು ನಂಬಲಾಗಿದೆ. +ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ +ಮೊಹಾಲಿಯಲ್ಲಿ ನಡೆದ ರಾಕೆಟ್ ದಾಳಿಗೆ ಲಾಂಡಾ ಹೊಣೆಗಾರನಾಗಿದ್ದು, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಘಟಕಗಳಿಗೆ ಸುಧಾರಿತ ಸ್ಪೋಟಕ ಸಾಧನಗಳು (ಐಇಡಿಗಳು), ಶಸ್ತ್ರಾಸ್ತ್ರಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಪೋಟಕಗಳನ್ನು ಗಡಿಯಾಚೆಯಿಂದ ಸರಬರಾಜು ಮಾಡುವಲ್ಲಿ ತೊಡಗಿಸಿಕೊಂಡಿದ್ದಾರೆ. +ಭಯೋತ್ಪಾದನಾ ಘಟಕಗಳ ರಚನೆ, ಸುಲಿಗೆ, ಹತ್ಯೆಗಳು, ಐಇಡಿಗಳನ್ನು ನೆಡುವುದು, ಶಸ್ತ್ರಾಸ್ತ್ರಗಳು ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಮತ್ತು ಪಂಜಾಬ್‍ನಲ್ಲಿ ಮಾತ್ರವಲ್ಲದೆ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಬಳಸುವುದಕ್ಕೆ ಸಂಬಂಧಿಸಿದ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಲಾಂಡಾ ಭಾಗಿಯಾಗಿದ್ದಾರೆ ಎಂದು ಗೃಹ ಸಚಿವಾಲಯ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. +ಲಾಂಡಾ ಅವರು ಕೆನಡಾ ಮೂಲದ ಹಲವಾರು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು, ಸಿಖ್ಸ್ ಫಾರ್ ಜಸ್ಟಿಸ್‍ನ ಗುರುಪತ್‍ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ನ ದಿವಂಗತ ಹರ್ದೀಪ್ ಸಿಂಗ್ ನಿಜ್ಜರ್ ಸೇರಿದಂತೆ ಇತರರು ಸೇರಿದ್ದಾರೆ. \ No newline at end of file diff --git a/eesanje/url_47_203_5.txt b/eesanje/url_47_203_5.txt new file mode 100644 index 0000000000000000000000000000000000000000..216c2211c6ef016010c31bab85f80a568c425b11 --- /dev/null +++ b/eesanje/url_47_203_5.txt @@ -0,0 +1,5 @@ +ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟ, ಅಪರಿಚಿತ ವ್ಯಕ್ತಿಗಳ ವಿರುದ್ದ ಎಫ್‍ಐಆರ್ +ನವದೆಹಲಿ,ಡಿ.30- ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿದ ಕೆಲವೇ ದಿನಗಳ ನಂತರ, ದಿಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಪೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3 (ಸ್ಪೋಟಕ್ಕೆ ಜೀವ ಅಥವಾ ಆಸ್ತಿಗೆ ಅಪಾಯವನ್ನುಂಟುಮಾಡುವ ಶಿಕ್ಷೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. +ಪೃಥ್ವಿರಾಜ್ ರಸ್ತೆಯಲ್ಲಿರುವ ಪ್ಲಾಟ್ ಸಂಖ್ಯೆ 4, ನಂದಾಸ್ ಹೌಸ್ ಮತ್ತು ಸೆಂಟ್ರಲ್ ಹಿಂದಿ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪ್ಲಾಟ್ ಸಂಖ್ಯೆ 2 ಎ ನಲ್ಲಿರುವ ಮನೆಯ ಗಡಿ ಗೋಡೆಗಳ ನಡುವಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಸ್ಪೋಟ ಸಂಭವಿಸಿತ್ತು. ಈ ಪ್ರದೇಶದಲ್ಲಿ ಪೆಪೊದೆಗಳು, ಗಿಡಗಳು ಮತ್ತು ಮರಗಳು ಮತ್ತು ಸಿಸಿಟಿವಿ ಕ್ಯಾಮೆರಾ ಇಲ್ಲದಿರುವುದರಿಂದ ಆರೋಪಿಗಳ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. +ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ +ಇದು ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ, ಪೃಥ್ವಿರಾಜ್ ರಸ್ತೆಗೆ ಸಮಾನಾಂತರವಾಗಿ ಚಲಿಸುತ್ತದೆ. ಸೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸೋಟದ ಸ್ಥಳದ ಬಳಿ ಪೊಲೀಸರು ಇಸ್ರೇಲಿ ರಾಯಭಾರಿಯನ್ನು ಉದ್ದೇಶಿಸಿ ನಿಂದನೀಯ ಪತ್ರವನ್ನು ಕಂಡುಕೊಂಡಿದ್ದಾರೆ. \ No newline at end of file diff --git a/eesanje/url_47_203_6.txt b/eesanje/url_47_203_6.txt new file mode 100644 index 0000000000000000000000000000000000000000..42052ea75f811ce0369d385741c105081610a5be --- /dev/null +++ b/eesanje/url_47_203_6.txt @@ -0,0 +1,9 @@ +7ನೇ ಬಾರಿಗೆ ಜಾರ್ಖಂಡ್ ಸಿಎಂಗೆ ಇಡಿ ಸಮನ್ಸ್ +ರಾಂಚಿ, ಡಿ 30 (ಪಿಟಿಐ) ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಲಭ್ಯವಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಸೊರೆನ್ ಅವರು ಪ್ರಕರಣದ ತನಿಖಾಧಿಕಾರಿಗೆ ಅವರ ಆಯ್ಕೆಯ ದಿನಾಂಕ, ಸ್ಥಳ ಮತ್ತು ಸಮಯದ ಬಗ್ಗೆ ತಿಳಿಸುವಂತೆ ಕೇಂದ್ರ ಸಂಸ್ಥೆ ಕೇಳಿದೆ, ಇದರಿಂದಾಗಿ ಅವರ ಹೇಳಿಕೆಯನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ದಾಖಲಿಸಬಹುದು ಎಂದು ಮೂಲಗಳು ಉಲ್ಲೇಖಿಸಿವೆ. +ಏಜೆನ್ಸಿಯು ಡಿಸೆಂಬರ್ 31 ರೊಳಗೆ ಮುಖ್ಯಮಂತ್ರಿಯಿಂದ ಪ್ರತಿಕ್ರಿಯೆಯನ್ನು ಕೇಳಿದೆ, ಅದು ವಿಫಲವಾದರೆ ಮನಿ ಲಾಂಡರಿಂಗ್ ವಿರೋಧಿ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಮುಂದಿನ ಕಾನೂನು ಕ್ರಮವನ್ನು ಪ್ರಾರಂಭಿಸುತ್ತದೆ. +ರಾಮಮಂದಿರ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂ. ವಹಿವಾಟು : ಸಿಎಐಟಿ +ಇದು ಸೋರೆನ್‍ಗೆ ನೀಡಲಾದ ಏಳನೇ ನೋಟಿಸ್ ಅಥವಾ ಸಮನ್ಸ್ ಆಗಿದೆ ಆದರೆ ಅವರು ಇಡಿ ಮುಂದೆ ಎಂದಿಗೂ ಹಾಜರಾಗಿಲ್ಲ. ಮೊದಲನೆಯದನ್ನು ಕಳೆದ ಆಗಸ್ಟ್ 14 ರಂದು ನೀಡಲಾಯಿತು. ಅವರು ಇಡಿ ಕ್ರಮದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್ ಮತ್ತು ನಂತರ ಜಾರ್ಖಂಡ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು ಮತ್ತು ಸಮನ್ಸ್‍ಗಳನ್ನು ಅನರ್ಜಿತ ಎಂದು ವಾದಿಸಿದ್ದರು ಆದರೆ, ಎರಡೂ ನ್ಯಾಯಾಲಯಗಳು ಅವರ ಅರ್ಜಿಯನ್ನು ವಜಾಗೊಳಿಸಿದ್ದವು. +ಜಾರ್ಖಂಡ್‍ನಲ್ಲಿ ರಾಜಕೀಯ ಅನಿಶ್ಚಿತತೆ ಮತ್ತು ಅಶಾಂತಿಯನ್ನು ಸೃಷ್ಟಿಸುವ ಏಕೈಕ ಉದ್ದೇಶದಿಂದ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಲಾಗಿದ್ದು, ದುರುದ್ದೇಶದಿಂದ ಸಮನ್ಸ್ ನೀಡಲಾಗಿದೆ ಎಂದು ಸೊರೆನ್ ಹೈಕೋರ್ಟ್‍ನಲ್ಲಿ ಆರೋಪಿಸಿದ್ದರು. ಇಡಿ ಪ್ರಕಾರ ಜಾರ್ಖಂಡ್‍ನಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆಗೆ ತನಿಖೆ ಸಂಬಂಧಿಸಿದೆ. ಈ ಪ್ರಕರಣದಲ್ಲಿ 2011ರ ಬ್ಯಾಚ್‍ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಜನರನ್ನು ಏಜೆನ್ಸಿ ಬಂಧಿಸಿದೆ, ಅವರು ಈ ಹಿಂದೆ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. +ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ +ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕನನ್ನು ಕಳೆದ ವರ್ಷ ನವೆಂಬರ್‍ನಲ್ಲಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಮತ್ತೊಂದು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಪ್ರಶ್ನಿಸಿತ್ತು. \ No newline at end of file diff --git a/eesanje/url_47_203_7.txt b/eesanje/url_47_203_7.txt new file mode 100644 index 0000000000000000000000000000000000000000..aae807186f6b32643e165aa8b81d91e8de255184 --- /dev/null +++ b/eesanje/url_47_203_7.txt @@ -0,0 +1,6 @@ +ಶಿವನಿಗೆ ಅವಮಾನ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ +ಪಣಜಿ, ಡಿ.30 (ಪಿಟಿಐ) – ಶಿವನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಇಲ್ಲಿನ ಸನ್‍ಬರ್ನ್ ಇಡಿಎಂ ಉತ್ಸವದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಒತ್ತಾಯಿಸಿವೆ. ಸನ್‍ಬರ್ನ್ ಸಂಘಟಕರ ವಿರುದ್ಧ ಕಾಂಗ್ರೆಸ್ ಮುಖಂಡ ವಿಜಯ್ ಭಿಕೆ ತಡರಾತ್ರಿ ಮಾಪುಸಾದಲ್ಲಿ ಪೊಲೀಸ್ ದೂರು ದಾಖಲಿಸಿದರೆ, ಎಎಪಿ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಅವರು ಸನಾತನ ಧರ್ಮ ವನ್ನು ನೋಯಿಸಿದಕ್ಕಾಗಿ ರಾಜ್ಯ ಸರ್ಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. +ಸನ್‍ಬರ್ನ್ ಜನಪ್ರಿಯ ಎಲೆಕ್ಟ್ರಾನಿಕ್ ಡ್ಯಾನ್ಸ್ ಮ್ಯೂಸಿಕ್ ಫೆಸ್ಟಿವಲ್ ಡಿಸೆಂಬರ್ 28 ರಂದು ಉತ್ತರ ಗೋವಾದ ವಗಟೋರ್‍ನಲ್ಲಿ ಪ್ರಾರಂಭವಾಯಿತು ಮತ್ತು ಇಂದು ಮುಕ್ತಾಯಗೊಳ್ಳಲಿದೆ. ಹಬ್ಬದ ಸಂದರ್ಭದಲ್ಲಿ ಭಗವಾನ್ ಶಂಕರನ ಚಿತ್ರವನ್ನು ಬಳಸಿರುವುದನ್ನು ನಾವು ನೋಡಿದ್ದೇವೆ. ಜನರು ಕುಡಿದು ಕುಣಿದಾಡುತ್ತಿದ್ದಾಗ ಎಲ್‍ಇಡಿ ಪರದೆಯಲ್ಲಿ ಅದು ಮಿಂಚಿತ್ತು ಎಂದು ಪಾಲೇಕರ್ ಸುದ್ದಿಗಾರರಿಗೆ ತಿಳಿಸಿದರು. +ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ +ನಮ್ಮ ಸನಾತನ ಧರ್ಮದ ಪಾವಿತ್ರ್ಯತೆಗೆ ಧಕ್ಕೆಯಾಗಿರುವುದರಿಂದ ಕ್ರಮ ಕೈಗೊಳ್ಳಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ ಎಂದು ಎಎಪಿ ನಾಯಕ ಹೇಳಿದರು. ಮದ್ಯ ಬಡಿಸುವ ಇಡಿಎಂ ಹಬ್ಬದ ಉದ್ದೇಶಕ್ಕೆ ನಮ್ಮ ದೇವರ ಬಳಕೆ ಸರಿಯಲ್ಲ. ಸನ್‍ಬರ್ನ್ ಉತ್ಸವದ ಆಯೋಜಕರ ವಿರುದ್ಧ ಅಪರಾಧವನ್ನು ದಾಖಲಿಸುವಂತೆ ಒತ್ತಾಯಿಸಿ ನಾವು ಪೊಲೀಸ್ ಮಹಾನಿರ್ದೇಶಕರಿಗೆ ಕರೆ ಮಾಡಿದ್ದೇವೆ ಎಂದು ಅವರು ಹೇಳಿದರು. +ಮಾಪುಸಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಕಾಂಗ್ರೆಸ್ ನಾಯಕ ಭಿಕೆ ಅವರು ಆಯೋಜಕರು ಉದ್ದೇಶಪೂರ್ವಕವಾಗಿ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ಅವಮಾನಿಸಿದ್ದಾರೆ, ಭಗವಾನ್ ಶಿವನು ಮದ್ಯಪಾನ, ನಿಷೇಧಿತ ಪದಾರ್ಥಗಳ ಸೇವನೆ ಮತ್ತು ಕಾರ್ಯಕ್ರಮದ ಸಮಯದಲ್ಲಿ ನಡೆಯುವ ಇತರ ಎಲ್ಲಾ ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತಾನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಿಂದ ದೂರು ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_203_8.txt b/eesanje/url_47_203_8.txt new file mode 100644 index 0000000000000000000000000000000000000000..db5ad116d4b319159063ff68ac9fb83b0c035db3 --- /dev/null +++ b/eesanje/url_47_203_8.txt @@ -0,0 +1,8 @@ +ರಾಮಮಂದಿರ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂ. ವಹಿವಾಟು : ಸಿಎಐಟಿ +ಅಯೋಧ್ಯಾ :ಜನವರಿ 22 ರಂದು ಶ್ರೀ ರಾಮ ಮಂದಿರದ ಉದ್ಘಾಟನೆಯಿಂದ ದೇಶದಲ್ಲಿ 50,000 ಕೋಟಿ ರೂಪಾಯಿ ಮೌಲ್ಯದ ವ್ಯವಹಾರ ನಡೆಯುವ ಅಂದಾಜಿದೆ ಎಂದು ಟ್ರೇಡ್ ಬಾಡಿ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ತಿಳಿಸಿದೆ. ಸಿಎಐಟಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಅವರ ಪ್ರಕಾರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ದಿನವು ಪ್ರತಿಯೊಂದು ವಿಷಯದಲ್ಲೂ ಐತಿಹಾಸಿಕವಾಗಿರುತ್ತದೆ, ಏಕೆಂದರೆ ದೇಶಾದ್ಯಂತ ಎಲ್ಲಾ ವರ್ಗಗಳ ಜನರಲ್ಲೂ ಅಪಾರ ಉತ್ಸಾಹವಿದೆ, ಇದು ಶ್ರೀರಾಮ ದೇವಾಲಯಕ್ಕೆ ಸಂಬಂಧಿಸಿದ ಉತ್ಪನ್ನಗಳ ಖರೀದಿಸಲು ಕಾರಣವಾಗುತ್ತದೆ ಎಂದಿದ್ದಾರೆ. +ರಾಷ್ಟ್ರವ್ಯಾಪಿ ವ್ಯಾಪಾರ ಅವಕಾಶಗಳ ಕುರಿತು ಮಾತನಾಡಿದ ಸಿಎಐಟಿಯ ಹಿರಿಯ ಸದಸ್ಯರು, ವಿಶೇಷ ಬಟ್ಟೆಯ ಹೂಮಾಲೆಗಳು, ಲಾಕೆಟ್‌ಗಳು, ಕೀಚೈನ್‌ಗಳು, ರಾಮ್ ದರ್ಬಾರ್‌ನ ಚಿತ್ರಗಳು, ರಾಮಮಂದಿರದ ಮಾದರಿಗಳು, ಶ್ರೀರಾಮ ಧ್ವಜ, ಶ್ರೀರಾಮ ಅಂಗವಸ್ತ್ರ ಇತ್ಯಾದಿಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ಎಂದು ಹೇಳಿದರು. +ದೇಶಾದ್ಯಂತ ಮಾರುಕಟ್ಟೆಗಳಲ್ಲಿ ವಿಶೇಷವಾಗಿ ಶ್ರೀರಾಮ ಮಂದಿರದ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ಮಾದರಿಗಳನ್ನು ಹಾರ್ಡ್‌ಬೋರ್ಡ್, ಪೈನ್‌ವುಡ್, ಮರ ಇತ್ಯಾದಿಗಳಿಂದ ವಿವಿಧ ಗಾತ್ರಗಳಲ್ಲಿ ತಯಾರಿಸಲಾಗುತ್ತಿದೆ ಎಂದು ವ್ಯಾಪಾರ ಸಂಸ್ಥೆಯ ಇಬ್ಬರೂ ನಾಯಕರು ಹೇಳಿದರು. ಈ ಮಾದರಿಗಳನ್ನು ತಯಾರಿಸುವಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಉದ್ಯೋಗ ಪಡೆಯುತ್ತಿದ್ದಾರೆ, ಸ್ಥಳೀಯ ಕುಶಲಕರ್ಮಿಗಳು, ಕಲಾವಿದರು,ಕೆಲಸಗಾರರು ಎಲ್ಲಾ ರಾಜ್ಯಗಳಲ್ಲಿ ವ್ಯಾಪಾರ ಅವಕಾಶಗಳನ್ನು ಪಡೆಯುತ್ತಿದ್ದಾರೆ. ದೇಶದಲ್ಲಿ ಹೊಸ ಉದ್ಯೋಗ ಮತ್ತು ವ್ಯಾಪಾರ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಅವರು ಹೇಳಿದರು. +ಶ್ರೀರಾಮ ಮಂದಿರದ ಮಾದರಿಗಳನ್ನು ಮುದ್ರಿಸಲಾಗಿರುವ ಕುರ್ತಾಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಹೆಚ್ಚಾಗಿ ಸಿದ್ಧಪಡಿಸಲಾಗುತ್ತಿದೆ ಎಂದು ಇಬ್ಬರೂ ಹೇಳಿದರು. ಖಾದಿ ಬಟ್ಟೆಯನ್ನು ಕೈಯಿಂದ ಕಸೂತಿ ಮಾಡಲಾದ ಅಥವಾ ಮುದ್ರಿಸುವ ಕುರ್ತಾಗಳನ್ನು ತಯಾರಿಸಲು ಬಳಸಲಾಗುತ್ತಿದೆ ಎಂದು ಹೇಳಿದರು. +ಶ್ರೀ ರಾಮ ಮಂದಿರದ ಉದ್ಘಾಟನೆ ಸಂದರ್ಭಕ್ಕಾಗಿ ಹೆಚ್ಚುವರಿ ವ್ಯಾಪಾರದ ಬೇಡಿಕೆಯನ್ನು ಪೂರೈಸಲು ಎಲ್ಲಾ ರಾಜ್ಯಗಳ ವ್ಯಾಪಾರಿಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ ಎಂದರು, ಈ ಮಟ್ಟದ ವಹಿವಾಟು ಸನಾತನ ಆರ್ಥಿಕತೆಯ ಬೇರುಗಳು ಭಾರತದಲ್ಲಿ ಬಹಳ ಆಳವಾಗಿವೆ ಎಂಬುದನ್ನು ಇದು ಸಾಬೀತುಪಡಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. +“ರಾಮ ರಾಜ್ಯ ದಿವಸ್” ಎಂದು ಘೋಷಿಸಿ :ಜನವರಿ 22 ಅನ್ನು “ರಾಮ ರಾಜ್ಯ ದಿವಸ್” ಎಂದು ಘೋಷಿಸಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರವೀಣ್ ಖಂಡೇಲ್ವಾಲ್ ಮತ್ತು ರಾಷ್ಟ್ರೀಯ ಅಧ್ಯಕ್ಷ ಬಿ.ಸಿ.ಭಾರ್ಟಿಯಾ ಅವರು ಮನವಿ ಮಾಡಿದ್ದಾರೆ, . +ದೇಶಾದ್ಯಂತ ದೀಪಾವಳಿ ಆಚರಿಸಲು ಕರೆ :ಜ.22ರಂದು ದೇಶಾದ್ಯಂತ ದೀಪಾವಳಿ ಆಚರಿಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಮಣ್ಣಿನ ದೀಪಗಳು, ರಂಗೋಲಿಗಾಗಿ ವಿವಿಧ ಬಣ್ಣಗಳು, ಅಲಂಕಾರಕ್ಕೆ ಹೂವುಗಳು, ದೀಪಾಲಂಕಾರಕ್ಕೆ ಬೇಕಾದ ಎಲೆಕ್ಟ್ರಿಕಲ್ ವಸ್ತುಗಳಿಗೆ ಭಾರಿ ಬೇಡಿಕೆ ಬರಲಿದೆ ಎಂದು ವರ್ತಕ ಸಂಘದ ಹಿರಿಯರು ತಿಳಿಸಿದ್ದಾರೆ. ಮಾರುಕಟ್ಟೆಗಳು ಮತ್ತು ಮನೆಗಳು. ಸೇವಾ ವಲಯವು ದೊಡ್ಡ ಉತ್ತೇಜನವನ್ನು ಪಡೆಯುವ ಸಾಧ್ಯತೆಯಿದೆ ಮತ್ತು ದೇಶಾದ್ಯಂತ ಹೋರ್ಡಿಂಗ್‌ಗಳು, ಪೋಸ್ಟರ್‌ಗಳು, ಬ್ಯಾನರ್‌ಗಳು, ಕರಪತ್ರಗಳು, ಇತರ ಸಾಹಿತ್ಯ, ಸ್ಟಿಕ್ಕರ್‌ಗಳು ಮುಂತಾದ ಪ್ರಚಾರ ಸಾಮಗ್ರಿಗಳ ತಯಾರಕರು ಸಹ ಗಣನೀಯ ವ್ಯವಹಾರಕ್ಕೆ ಸಂಪೂರ್ಣವಾಗಿ ಸಜ್ಜಾಗಿದ್ದಾರೆ. ಅಲ್ಲದೆ, ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯಿಂದ ದೇಶಾದ್ಯಂತ ಸಂಗೀತ ವ್ಯವಹಾರಕ್ಕೆ ಸಂಬಂಧಿಸಿದ ಜನರು ಸಹ ಪ್ರಯೋಜನ ಪಡೆಯುತ್ತಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_203_9.txt b/eesanje/url_47_203_9.txt new file mode 100644 index 0000000000000000000000000000000000000000..a29769f36caf163e65b259ea1949c37211a0926f --- /dev/null +++ b/eesanje/url_47_203_9.txt @@ -0,0 +1,7 @@ +ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ +ನವದೆಹಲಿ,ಡಿ.29- ಮುಂಬರುವ 2024ರ ಫೆಬ್ರವರಿಯಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿಯಾದ ಅಬುಧಾಬಿಯಲ್ಲಿ ಹಿಂದೂ ದೇವಾಲಯವನ್ನು ಉದ್ಘಾಟಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಆಹ್ವಾನ ನೀಡಲಾಗಿದೆ ಎಂದು ಬಿಎಪಿಎಸ್ ಸ್ವಾಮಿನಾರಾಯಣ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ. +ಸ್ವಾಮಿ ಈಶ್ವರ ಚರಣ ದಾಸ್ ಮತ್ತು ಬ್ರಹ್ಮವಿಹಾರಿ ದಾಸ್ ನೇತೃತ್ವದ ಬಿಎಪಿಎಸ್ ಸಂಘಟನೆಯ ಪ್ರತಿನಿಧಿಗಳು ನವದೆಹಲಿಯಲ್ಲಿರುವ ಪ್ರಧಾನಿಗಳ ನಿವಾಸಕ್ಕೆ ಭೇಟಿ ಕೊಟ್ಟು, ಫೆಬ್ರವರಿ 14ರಂದು ಆಗಮಿಸಿ, ನೂತನ ನಿರ್ಮಾಣದ ದೇವಾಲಯವನ್ನು ಉದ್ಘಾಟನೆ ಮಾಡುವಂತೆ ಆಹ್ವಾನ ನೀಡಿದ್ದಾರೆ. +ಅರಬ್ ದೇಶದಲ್ಲಿ ಸ್ಥಾಪನೆಗೊಂಡಿರುವ ದೊಡ್ಡ ಹಿಂದೂ ದೇವಾಲಯವನ್ನು ಉದ್ಘಾಟಿಸುವ ಆಹ್ವಾನವನ್ನು ಪ್ರಧಾನಿಗಳು ದಯೆಯಿಂದ ಸ್ವೀಕರಿಸಿದ್ದಾರೆ. ಐತಿಹಾಸಿಕ ಮತ್ತು ಸಾಂಪ್ರದಾಯಿಕ ದೇವಾಲಯಕ್ಕೆ ತಮ್ಮ ಉತ್ಸಾಹದ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದು ಬಿಎಪಿಎಸ್ ಸಂಸ್ಥೆ ಹೇಳಿದೆ. +ಚಿತ್ರದುರ್ಗ : ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿ ಪಂಜರಗಳು ಪತ್ತೆ +ಸುಮಾರು ಒಂದು ಗಂಟೆಗಳ ಕಾಲ ಪ್ರಧಾನಿಯೊಂದಿಗೆ ಕುಳಿತು ಚರ್ಚಿಸಿದ ಬಿಎಪಿಎಸ್ ನಿಯೋಗವು, ಜಾಗತಿಕ ಸಾಮರಸ್ಯಕ್ಕಾಗಿ ಅಬುಧಾಬಿ ದೇವಾಲಯದ ಮಹತ್ವ ಮತ್ತು ಜಾಗತಿಕ ವೇದಿಕೆಯಲ್ಲಿ ಭಾರತದ ಆಧ್ಯಾತ್ಮಿಕ ನಾಯಕತ್ವಕ್ಕಾಗಿ ಮೋದಿಯವರ ದೃಷ್ಟಿಕೋನದ ಬಗ್ಗೆ ಸಂವಾದ ನಡೆಸಿತು ಎಂದು ತಿಳಿಸಿದೆ. +ಅರಳುತ್ತಿರುವ ಕಮಲದ ಹೂವನ್ನು ಹೋಲುವಂತೆ ದೇವಾಲಯದ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ ಎಂದ ಸಂಸ್ಥೆ, ಈ ದೇವಾಲಯವು ಯುನೈಟೆಡ್ ಅರಬ್ ಎಮಿರೇಟ್ಸ್‍ನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಿದೆ. \ No newline at end of file diff --git a/eesanje/url_47_204_1.txt b/eesanje/url_47_204_1.txt new file mode 100644 index 0000000000000000000000000000000000000000..ee17b6a6a304da7df1e774eae98d00f236bed457 --- /dev/null +++ b/eesanje/url_47_204_1.txt @@ -0,0 +1,11 @@ +ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರು +ಲಕ್ನೋ,ಡಿ.29- ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್ ಎಂದು ಹೆಸರಿಡಲು ನಿರ್ಧಾರ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಹೊಸ ವಿಮಾನ ನಿಲ್ದಾಣ ವನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ವಿಮಾನ ನಿಲ್ದಾಣದ ಆರಂಭಿಕ ಹಂತವು ಜನವರಿ 6 ರಿಂದ ವಿಮಾನ ಹಾರಾಟ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. +ಜನವರಿ 22 ರಂದು ರಾಮಮಂದಿರ ಉದ್ಘಾಟನಾ ಸಮಾರಂಭದ ಮೊದಲು, ಪ್ರಧಾನಿ ಮೋದಿ ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈ ಹಿಂದೆ ವಿಮಾನ ನಿಲ್ದಾಣಕ್ಕೆ ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯೆ ಎಂದು ಹೆಸರಿಡುವುದಾಗಿ ತೀರ್ಮಾನ ಮಾಡಲಾಗಿತ್ತು. ಆದರೆ ಇದೀಗ ಮಹರ್ಷಿ ವಾಲ್ಮೀಕಿ ಎಂದು ನಾಮಕರಣ ಮಾಡುವ ಸಾಧ್ಯತೆಗಳಿವೆ. +ಉದ್ಘಾಟನೆಯ ದಿನದಂದು ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‍ಪ್ರೆಸ್‍ನಿಂದ ಮೊದಲ ವಿಮಾನಗಳು ಕಾರ್ಯನಿರ್ವಹಿಸಲಿವೆ. ಎರಡು ವಿಮಾನಯಾನ ಸಂಸ್ಥೆಗಳು ಕೂಡ ಈಗಾಗಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‍ನಿಂದ ಅಯೋಧ್ಯೆಗೆ ವಿಮಾನಗಳನ್ನು ಘೋಷಿಸಿದ್ದು, ಜನವರಿ 2024 ರಲ್ಲಿ ಹಾರಾಟ ಪ್ರಾರಂಭವಾಗುತ್ತದೆ. +ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್ +ವಿಮಾನ ನಿಲ್ದಾಣದ ಮೊದಲ ಹಂತದ ನಿರ್ಮಾಣಕ್ಕೆ ಅಂದಾಜು 1,450 ಕೋಟಿ ರೂ. ವೆಚ್ಚವಾಗಿದೆ. ಸುಮಾರು 6,500 ಚದರ ಮೀಟರ್‍ಗಳಷ್ಟು ವಿಸ್ತಾರವಾಗಿರುವ ಹೊಸ ಟರ್ಮಿನಲ್ ಕಟ್ಟಡವು ಪೀಕ್ ಅವರ್‍ನಲ್ಲಿ 600 ಮಂದಿ ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವಂತೆ ನಿರ್ಮಾಣ ಮಾಡಲಾಗಿದೆ. ಇನ್ನು ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮಥ್ರ್ಯವನ್ನು ಹೊಂದಿದೆ. +ಮೊದಲ ಹಂತದ ಅತ್ಯಾಧುನಿಕ ವಿಮಾನ ನಿಲ್ದಾಣವನ್ನು 1,450 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದರ ಟರ್ಮಿನಲ್ ಕಟ್ಟಡವು 6,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುತ್ತದೆ, ವಾರ್ಷಿಕವಾಗಿ ಸುಮಾರು 10 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸಲು ಸಜ್ಜುಗೊಂಡಿದೆ. +ಎರಡನೇ ಹಂತದ ಅಭಿವೃದ್ಧಿಯಲ್ಲಿ 50,000 ಚದರ ಮೀಟರ್‍ನ ಹೊಸ ಟರ್ಮಿನಲ್ ಕಟ್ಟಡವನ್ನು ನಿರ್ಮಿಸಲಾಗುವುದು. ಪೀಕ್ ಅವರ್‍ಗಳಲ್ಲಿ 3 ಸಾವಿರ ಮಂದಿ ಪ್ರಯಾಣಿಕರು ಹಾಗೂ ವಾರ್ಷಿಕ 60 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮಥ್ರ್ಯ ಹೊಂದಿದೆ ಎಂದು ಮೂಲಗಳು ತಿಳಿಸಿವೆ. +ಪ್ರತಿಷ್ಠಾಪನೆಯ ನಂತರ ರಾಮ ಮಂದಿರಕ್ಕೆ ಪ್ರತಿದಿನದ ಸಂದರ್ಶಕರ ಒಳಹರಿವನ್ನು ಸರಿಹೊಂದಿಸಲು ಏರ್ಲೈನ್ಸ್ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಿಮಾನಗಳನ್ನು ಒದಗಿಸುತ್ತದೆ. ಕಟ್ಟಡದ ಮುಂಭಾಗವು ರಾಮ ಮಂದಿರದ ವಾಸ್ತುಶಿಲ್ಪವನ್ನು ಚಿತ್ರಿಸುತ್ತದೆ. ಒಳಭಾಗದಲ್ಲಿ ಸ್ಥಳೀಯ ಕಲೆ, ವರ್ಣಚಿತ್ರಗಳು ಮತ್ತು ಭಗವಾನ್ ರಾಮನ ಜೀವನವನ್ನು ಚಿತ್ರಿಸುವ ಭಿತ್ತಿಚಿತ್ರಗಳಿಂದ ಅಲಂಕರಿಸಲಾಗಿದೆ. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಇನ್ಸುಲೇಟೆಡ್ ರೂಫಿಂಗ್ ಸಿಸ್ಟಮ, ಎಲïಇಡಿ ಲೈಟಿಂಗ್, ಮಳೆ-ನೀರು ಕೊಯ್ಲು, ಕಾರಂಜಿಗಳೊಂದಿಗೆ ಭೂದೃಶ್ಯ, ನೀರು ಸಂಸ್ಕರಣಾ ಘಟಕ, ಒಳಚರಂಡಿ ಸಂಸ್ಕರಣಾ ಘಟಕ, ಸೌರ ವಿದ್ಯುತ್ ಸ್ಥಾವರ ಮತ್ತು ಇತರ ಹಲವು ಸೌಲಭ್ಯಗಳಂತಹ ವಿವಿಧ ಸಮರ್ಥನೀಯ ವೈಶಿಷ್ಟ್ಯಗಳನ್ನು ಇದು ಹೊಂದಿದೆ. ವಿಮಾನ ನಿಲ್ದಾಣವು ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದ್ದು ಇದು ಪ್ರವಾಸೋದ್ಯಮ, ವ್ಯಾಪಾರ ಚಟುವಟಿಕೆಗಳು ಮತ್ತು ಉದ್ಯೋಗಾವಕಾಶಗಳಲ್ಲಿ ಉತ್ತೇಜನಕ್ಕೆ ಕಾರಣವಾಗುತ್ತದೆ. \ No newline at end of file diff --git a/eesanje/url_47_204_10.txt b/eesanje/url_47_204_10.txt new file mode 100644 index 0000000000000000000000000000000000000000..becdb253d048555ac3bd63d52a685af29f6195ef --- /dev/null +++ b/eesanje/url_47_204_10.txt @@ -0,0 +1,5 @@ +ಪಾಕಿಸ್ತಾನದಿಂದ ಭಾರತದೊಳಗೆ ಹಾರಿಬಂತು ಜಿಪಿಎಸ್ ಕಟ್ಟಿದ ಹದ್ದು +ಶ್ರೀನಗರ,ಡಿ.28-ಜೈಸಲ್ಮೇರ್ ಜಿಲ್ಲೆಯ ಶಹಗಢ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಕಡೆಯಿಂದ ಭಾರತಕ್ಕೆ ಜಿಪಿಎಸ್ ಟ್ರ್ಯಾಕರ್ ಅಳವಡಿಸಿದ ತರಬೇತಿ ಪಡೆದ ಹದ್ದು ಪಕ್ಷಿಯನ್ನುಗಡಿ ಭದ್ರತಾ ಪಡೆಯ () ಪಡೆಗಳಿಗೆ ಸಿಕ್ಕಿಬಿದ್ದಿದೆ. +ಹಕ್ಕಿಯ ಕಾಲುಗಳಿಗೆ ವಿಶೇಷ ರೀತಿಯ ಉಂಗುರವನ್ನು ಜೋಡಿಸಲಾಗಿದೆ, ಅದರ ಮೇಲೆ ಕೆಲವು ಸಂಖ್ಯೆಗಳನ್ನು ಬರೆಯಲಾಗಿದೆ. ಹದ್ದನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ , ಉಂಗುರದ ಮೇಲೆ ಬರೆದಿರುವ ಸಂಖ್ಯೆಗಳ ಕುರಿತು ತನಿಖೆ ನಡೆಸುತ್ತಿದೆ. +ಯುವನಿಧಿ ಯೋಜನೆಗೆ ಯಾರು ಅರ್ಹರು..? ನೋಂದಣಿ ಹೇಗೆ..? +ವರದಿಯ ಪ್ರಕಾರ ಅರಬ್‍ನಲ್ಲಿ ಇಂತರ ತರಬೇತಿ ಹದ್ದುಗಳನ್ನುಬೇಟೆ ಹಾಗು ಇತರೆ ಕಾರ್ಯಗಳಿಗೆ ಬಳಸಲಾಗುತ್ತದೆ. ಇದಕ್ಕೆ ಟೈಲರ್ ಎಮದು ಕರೆಯುತ್ತಾರೆ ಗುಪ್ತ ಕಾರ್ಯಾಚರಣೆಗೂ ಬಳಸಲಾಗುತ್ತಿದ್ದು ಹೆಚ್ಚಿನ ತನಿಖೆಯಿಂದ ಹೆಚ್ಚಿ ಮಾಹಿತಿ ಸಿಗಬೇಕಿದೆ. \ No newline at end of file diff --git a/eesanje/url_47_204_11.txt b/eesanje/url_47_204_11.txt new file mode 100644 index 0000000000000000000000000000000000000000..1f2a11f594d4e7b469ffbd76a836db9ebf0372bf --- /dev/null +++ b/eesanje/url_47_204_11.txt @@ -0,0 +1,12 @@ +ಕೃಷಿ ಭೂಮಿ ಖರೀದಿ ಹಗರಣದಲ್ಲಿ ಪ್ರಿಯಾಂಕಾ ಗಾಂಧಿ ಹೆಸರು +ನವದೆಹಲಿ,ಡಿ.28- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರಿಯಾಣದ ಫರಿದಾಬಾದ್‍ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ. +2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್.ಎಲ್.ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‍ನಲ್ಲಿ ಐದು ಎಕರೆ ಕೃಷಿ ಭೂಮಿ ಖರೀದಿಸಿ, ಅದೇ ಭೂಮಿಯನ್ನು ಫೆಬ್ರವರಿ, 2010 ರಲ್ಲಿ ಅವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಇಡಿ, ಪ್ರಿಯಾಂಕಾ ಗಾಂಧಿಯ ಹೆಸರು ಉಲ್ಲೇಖಿಸಿದೆ. +ನವದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್.ಎಲ್. ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ. +ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಅದೇ ಭೂಮಿಯನ್ನು 2010ರಲ್ಲಿ ಮಾರಾಟ ಮಾಡಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲಂಡನ್ ಮೂಲದ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. +ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್ +ಈ ಪ್ರಕರಣದಲ್ಲಿ ಯುಎಇ ಮೂಲದ ಎನ್‍ಆರ್‍ಐ ಉದ್ಯಮಿ ಸಿಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ. ಇಡಿ ಪ್ರಕಾರ, ಫರಿದಾಬಾದ್‍ನ ಅಮಿಪುರ್ ಗ್ರಾಮದಲ್ಲಿ ಪಹ್ವಾ ಅವರಿಂದ ಭೂಮಿಯನ್ನು ಖರೀದಿಸಲಾಗಿದೆ. +ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರಿಂದ ಅಮಿಪುರ್ ಗ್ರಾಮದಲ್ಲಿ 40.08 ಎಕರೆಯ ಮೂರು ತುಂಡು ಭೂಮಿಯನ್ನು ಖರೀದಿಸಿ ಅದನ್ನು ಡಿಸೆಂಬರ್, 2010 ರಲ್ಲಿ ಅವರಿಗೇ ಮಾರಾಟ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಪಹ್ವಾ ಅವರು ಎನ್‍ಆರ್‍ಐ ಉದ್ಯಮಿ ಸಿಸಿ ಥಂಪಿಗೆ ಭೂಮಿಯನ್ನು ಮಾರಾಟ ಮಾಡಿದ್ದಾರೆ. +ಈ ದೊಡ್ಡ ಪ್ರಕರಣವು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ಒಳಗೊಂಡಿದ್ದು, ಮನಿ ಲಾಂಡರಿಂಗ್, ವಿದೇಶಿ ವಿನಿಮಯ ಮತ್ತು ಕಪ್ಪು ಹಣದ ಕಾನೂನುಗಳ ಉಲ್ಲಂಘನೆ ಮತ್ತು ಅಕೃತ ರಹಸ್ಯ ಕಾಯಿದೆ ಅಡಿ ತನಿಖೆ ನಡೆಯುತ್ತಿದೆ.ಸಂಜಯ್ ಭಂಡಾರಿ 2016 ರಲ್ಲಿ ಭಾರತದಿಂದ ಯುಕೆಗೆ ಪಲಾಯನ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಸಿದಂತೆ ಇಡಿ ತನ್ನ ಹಿಂದಿನ ಆರೋಪಪಟ್ಟಿಯಲ್ಲಿ ರಾಬರ್ಟ್ ವಾದ್ರಾ ಅವರನ್ನು ಥಂಪಿಯ ಆಪ್ತ ಸಹಾಯಕ ಎಂದು ಹೆಸರಿಸಿದೆ. +ಹೊಸ ಆರೋಪಪಟ್ಟಿಯಲ್ಲಿ, ಪಹ್ವಾ ಅವರು ಭೂ ಸ್ವಾೀನದ ಉದ್ದೇಶಕ್ಕಾಗಿ ಹಣವನ್ನು ಪಡೆಯುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ರಾಬರ್ಟ್ ವಾದ್ರಾ ಅವರು ಪಹ್ವಾಗೆ ಸಂಪೂರ್ಣ ಮಾರಾಟದ ಹಣವನ್ನು ಪಾವತಿಸದಿರುವುದು ಗಮನಕ್ಕೆ ಬಂದಿದೆ ಎಂದು ಇಡಿ ಹೇಳಿದೆ. +ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಹೆಬ್ಬಾರ್ ಮತ್ತು ಸೋಮಶೇಖರ್ +ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಸಲಾಯಿತು ಮತ್ತು ಇಡಿ ಅವರು ವಾದ್ರಾ ಅವರ ಆಪ್ತ ಎಂದು ಆರೋಪಿಸಿದೆ. ಚಾರ್ಜ್ ಶೀಟ್‍ನಲ್ಲಿ, ಎಚ್.ಎಲ್.ಪಹ್ವಾ ವಾದ್ರಾ ಮತ್ತು ಥಂಪಿ ಇಬ್ಬರಿಗೂ ಜಮೀನು ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹರಿಯಾಣದಲ್ಲಿ ಜಮೀನು ಖರೀದಿಸಲು ಬೇನಾಮಿ ಹಣ ನೀಡಲಾಗಿದ್ದು, ವಾದ್ರಾ ಜಮೀನು ಮಾರಾಟಕ್ಕೆ ಸಂಪೂರ್ಣ ಹಣ ನೀಡಿಲ್ಲ ಎನ್ನಲಾಗಿದೆ. \ No newline at end of file diff --git a/eesanje/url_47_204_12.txt b/eesanje/url_47_204_12.txt new file mode 100644 index 0000000000000000000000000000000000000000..d800161c59a9f67c5bbf3b7bd9ef8a23bb6214b8 --- /dev/null +++ b/eesanje/url_47_204_12.txt @@ -0,0 +1,7 @@ +ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ, ಖರ್ಗೆ ಧ್ವಜಾರೋಹಣ +ನವದೆಹಲಿ, ಡಿ. 28- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪ್ರಧಾನ ಕಚೇರಿಯಲ್ಲಿ ಪಕ್ಷದ 139 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಧ್ವಜಾರೋಹಣ ಮಾಡಿದರು. ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಸದ ರಾಜೀವ್ ಶುಕ್ಲಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಇತರರು ಇದ್ದರು. +ಕಾಂಗ್ರೆಸ್ ನಾಯಕ ಹಾಗೂ ಬಿಹಾರ ವಿಧಾನಸಭಾ ಮಾಜಿ ಸದಸ್ಯ ಶಕೀಲ್ ಅಹ್ಮದ್ ಮಾತನಾಡಿ, 1885ರ ಡಿಸೆಂಬರ್ 28ರಂದು ಕಾಂಗ್ರೆಸ್ ಸ್ಥಾಪನೆಯಾದಾಗ ಅದರ ತಳಹದಿಯ ಹಿಂದಿನ ಉದ್ದೇಶ ಇಂದಿಗೂ ಅದೇ ಆಗಿದೆ. ಬ್ರಿಟಿಷರು ಸಮಾಜದಲ್ಲಿ ದ್ವೇಷ ಹರಡಿ ಜನರನ್ನು ಪರಸ್ಪರ ತಿರುಗಿಸಲು ಯತ್ನಿಸುತ್ತಿದ್ದಾಗ ಕಾಂಗ್ರೆಸ್ ಸ್ಥಾಪನೆಯಾಯಿತು. ಸಮಾಜವನ್ನು ಒಗ್ಗೂಡಿಸುವ ಮತ್ತು ಬ್ರಿಟಿಷ್ ಆಡಳಿತದ ಹಿಡಿತದಿಂದ ಮುಕ್ತಗೊಳಿಸುವ ಉದ್ದೇಶವನ್ನು ಹೊಂದಿತ್ತು ಎಂದಿದ್ದಾರೆ. +ಇಂದಿಗೂ ಕಾಂಗ್ರೆಸ್ ಸಮಾಜದಲ್ಲಿ ಹರಡುತ್ತಿರುವ ದ್ವೇಷವನ್ನು ವಿರೋಧಿಸಲು ಪ್ರಯತ್ನಿಸುತ್ತಿದೆ, ಸಮಾಜದಲ್ಲಿನ ದ್ವೇಷವನ್ನು ಕೊನೆಗಾಣಿಸಲು ಮತ್ತು ಮೊಹಬ್ಬತ್ (ಪ್ರೇಮ) ಹರಡಲು ನಾವು ಸಿದ್ಧರಿದ್ದೇವೆ. ದೇಶವು ಒಗ್ಗೂಡಿದಾಗ ಮಾತ್ರ ಅದು ಅಭಿವೃದ್ಧಿ ಹೊಂದುತ್ತದೆ, ಇಲ್ಲದಿದ್ದರೆ ಯಾವುದೇ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದರು. +ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್ +ನಾಗ್ಪುರದಿಂದ ಪ್ರಾರಂಭವಾಗಲಿರುವ ಹೈ ತೈಯಾರ್ ಹಮï ರ್ಯಾಲಿ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವ ಅಂಬಿಕಾ ಸೋನಿ ಅವರು ರ್ಯಾಲಿಯಲ್ಲಿ ಪಕ್ಷವು ಮಹಾರಾಷ್ಟ್ರದಲ್ಲಿ ತನ್ನ ರಾಜಕೀಯ ನೆಲೆಯನ್ನು ಬಲಪಡಿಸಲು ಬಯಸುತ್ತದೆ ಎಂದು ಹೇಳಿದರು.ಮಹಾರಾಷ್ಟ್ರದಲ್ಲಿ ನಮಗೆ ದೊಡ್ಡ ರಾಜಕೀಯ ನೆಲೆಯಿದೆ. ಅದನ್ನು ಬಲಪ ಡಿಸಲು ನಾವು ಬಯಸುತ್ತೇವೆ. +ರಾಹುಲ್ ಗಾಂಧಿಯವರ ಪಾದಯಾತ್ರೆಯು ಮಣಿಪುರದಿಂದ ಮಹಾರಾಷ್ಟ್ರದವರೆಗೆ ನಡೆಯಲಿದೆ ಎಂದು ಅವರು ಹೇಳಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಡಿಸೆಂಬರ್ 28, 1885 ರಂದು ಬಾಂಬೆಯಲ್ಲಿ (ಮುಂಬೈ) ದಾಸ್ ತೇಜ್ಪಾಲ್ ಸಂಸ್ಕøತ ಕಾಲೇಜಿನಲ್ಲಿ 72 ಪ್ರತಿನಿಗಳ ಉಪಸ್ಥಿತಿಯಲ್ಲಿ ಸ್ಥಾಪಿಸಲಾಯಿತು. \ No newline at end of file diff --git a/eesanje/url_47_204_2.txt b/eesanje/url_47_204_2.txt new file mode 100644 index 0000000000000000000000000000000000000000..16b427cb08cbb5bc8a603cb13e0c8d710f840a83 --- /dev/null +++ b/eesanje/url_47_204_2.txt @@ -0,0 +1,5 @@ +ದರೋಡೆಕೊರನ ಸಹಚರನೆಂದು ನಂಬಿಸಿ 2 ಕೋಟಿ ನಗದು, 2 ಕೆಜಿ ಚಿನ್ನ ವಂಚಿಸಿದ್ದ ವ್ಯಾಪಾರಿ ಸೆರೆ +ಮುಂಬೈ,ಡಿ.29-ಕುಖ್ಯಾತ ದರೋಡೆಕೋರರೊಬ್ಬರ ಹೆಸರನ್ನು ಬಳಸಿಕೊಂಡು ಮತ್ತೊಬ್ಬ ಆಭರಣ ವ್ಯಾಪಾರಿಯಿಂದ 2 ಕೋಟಿ ರೂಪಾಯಿ ನಗದು ಮತ್ತು 2 ಕಿಲೋಗ್ರಾಂ ಚಿನ್ನವನ್ನು ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ದಕ್ಷಿಣ ದೆಹಲಿಯಲ್ಲಿ ಭಾರಿ ಸಾಲದಲ್ಲಿದ್ದ ಆಭರಣ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಸಂಗಮ್ ವಿಹಾರ್‍ನ ಕೆ-ಬ್ಲಾಕ್‍ನ ವಿಪಿನ್ ಗುಪ್ತಾ (35) ಬಂಧಿತ ಆರೋಪಿಯಾಗಿದ್ದಾನೆ. +ಈತ ದರೋಡೆಕೋರ ನೀರಜ್ ಬವಾನಾ ಸಹಚರನಂತೆ ನಟಿಸಿ ಸುಲಿಗೆ ಕರೆಗಳನ್ನು ಮಾಡಲು ಧ್ವನಿ ಮಾಡ್ಯುಲೇಶನ್ ಸಾಧನವನ್ನು ಬಳಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಗುಪ್ತಾ ಅವರು ಪ್ರಸ್ತುತ ತಲೆಮರೆಸಿಕೊಂಡಿರುವ ತನ್ನ ಸ್ನೇಹಿತನೊಂದಿಗೆ ಸಂಚು ರೂಪಿಸಿ, ತನ್ನ ಸಾಲವನ್ನು ತೀರಿಸಲು ಆ ಪ್ರದೇಶದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿರುವ ದಕ್ಷಿಣ ದೆಹಲಿ ಮೂಲದ ಇನ್ನೊಬ್ಬ ಆಭರಣ ವ್ಯಾಪಾರಿಯಿಂದ ನಗದು ಮತ್ತು ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಹೊಸ ವರ್ಷದ ಮುನ್ನಾದಿನದ ಮೊದಲು ಬೇಡಿಕೆಗಳನ್ನು ಈಡೇರಿಸದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿಗಳು ಬಲಿಪಶುವಿಗೆ ಬೆದರಿಕೆ ಹಾಕಿದ್ದಾರೆ ಎಂದು ಡಿಸಿಪಿ (ದಕ್ಷಿಣ) ಚಂದನ್ ಚೌಧರಿ ಹೇಳಿದ್ದಾರೆ. \ No newline at end of file diff --git a/eesanje/url_47_204_3.txt b/eesanje/url_47_204_3.txt new file mode 100644 index 0000000000000000000000000000000000000000..01a2c1d45e5a5fd4f5641ca55ec43031c6e6e83c --- /dev/null +++ b/eesanje/url_47_204_3.txt @@ -0,0 +1,5 @@ +ಐಫೋನ್ ಹ್ಯಾಕ್ ಆರೋಪ ನಿರಾಕರಿಸಿದ ರಾಜೀವ್ ಚಂದ್ರಶೇಖರ್ +ನವದೆಹಲಿ,ಡಿ.29- ಸರಕಾರಿ ಹ್ಯಾಕರ್‍ಗಳು ತಮ್ಮ ಐಫೋನ್‍ಗಳಿಗೆ ಕನ್ನ ಹಾಕಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಸ್ವತಂತ್ರ ಪತ್ರಕರ್ತರು ಮತ್ತು ವಿರೋಧ ಪಕ್ಷದ ರಾಜಕಾರಣಿಗಳಿಗೆ ಕಂಪನಿ ಎಚ್ಚರಿಕೆ ನೀಡಿದ ನಂತರ ಕೇಂದ್ರ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ. +ಸ್ವತಂತ್ರ ಭಾರತೀಯ ಪತ್ರಕರ್ತರು ಮತ್ತು ವಿರೋಧ ಪಕ್ಷದ ರಾಜಕಾರಣಿಗಳಿಗೆ ಅಕ್ಟೋಬರ್‍ನಲ್ಲಿ ಸರ್ಕಾರಿ ಹ್ಯಾಕರ್‍ಗಳು ಬಹುಶಃ ಅವರ ಐಜ್ಞಾನ್‍ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಎಚ್ಚರಿಸಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಧಿಕಾರಿಗಳು ತಕ್ಷಣವೇ ಆಪಲ್ ಸಂಸ್ಥೆ ವಿರುದ್ಧ ಕ್ರಮ ಕೈಗೊಂಡರು. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಇದರ ನಂತರ, ಚಂದ್ರಶೇಖರ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಉಳಿದ ಕಥೆಯು ಆಪಲ್‍ನ ಪ್ರತಿಕ್ರಿಯೆಯನ್ನು ಒಳಗೊಂಡಿದೆ ಎಂದು ಎಕ್ಸ್ ಮಾಡಿದ್ದಾರೆ.ಸಂಸದರಿಗೆ ಐಫೋನ್ ಎಚ್ಚರಿಕೆಗಳ ಕುರಿತು ಆಪಲ್ ತಂಡವು ಈ ತಿಂಗಳು ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲಿದೆ ಸಂಸದರಿಗೆ ಐಫೋನ್ ಎಚ್ಚರಿಕೆಗಳ ಕುರಿತು ಆಪಲ್ ತಂಡವು ಈ ತಿಂಗಳು ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದೆ. \ No newline at end of file diff --git a/eesanje/url_47_204_4.txt b/eesanje/url_47_204_4.txt new file mode 100644 index 0000000000000000000000000000000000000000..f6dc88279e7a1e39e9476539d6595e7daa1e14b9 --- /dev/null +++ b/eesanje/url_47_204_4.txt @@ -0,0 +1,7 @@ +ಉಲ್ಫಾ ಉಗ್ರರೊಂದಿಗೆ ಶಾಂತಿ ಸಂಧಾನಕ್ಕೆ ಮುಂದಾದ ಕೇಂದ್ರ ಸರ್ಕಾರ +ಗುವಾಹಟಿ,ಡಿ.20-ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ ಜತೆಗಿನ ಶಾಂತಿ ಒಪ್ಪಂದಕ್ಕೆ ಇಂದು ಕೇಂದ್ರ ಸಹಿ ಹಾಕುವ ಮೂಲಕ ದಶಕಗಳಿಗೂ ಹಿಂದಿನ ಸಮಸ್ಯೆ ನಿವಾರಣೆಯತ್ತ ಗಮನಹರಿಸಿದೆ. ಸಹಿ ಮಾಡುವ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತಿಯಲ್ಲಿ ಇಂದು ಸಂಜೆ ಉಲಾ ಉಗ್ರರೊಂದಿಗಿನ ಶಾಂತಿ ಮಾತುಕತೆಗೆ ಸಹಿ ಹಾಕಲಾಗುತ್ತಿದೆ. +ಒಂದು ದಶಕದಿಂದ ನಡೆದ ಮಾತುಕತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಶ್ಲಾಘನೀಯ ಸಾಧನೆ ಇದಾಗಿದೆ ಎಂದು ಬಣ್ಣಿಸಲಾಗಿದೆ. ಆದರೆ, ಪರೇಶ್ ಬರುವಾ ನೇತೃತ್ವದ ಉಲಾ (ಸ್ವತಂತ್ರ) ಬಣವು ಮಾತುಕತೆಗಳನ್ನು ವಿರೋಧಿಸುತ್ತಿದೆ. +ಉಲ್ಪಾವನ್ನು ಅಸ್ಸಾಂನ ಸಾರ್ವಭೌಮತ್ವವನ್ನು ಮರುಸ್ಥಾಪಿಸುವ ಗುರಿಯೊಂದಿಗೆ ಏಪ್ರಿಲ್ 7, 1979 ರಂದು ರಚಿಸಲಾಯಿತು. ಈ ಗುಂಪು ತನ್ನ ನಾಲ್ಕು ದಶಕಗಳ ಅಸ್ತಿತ್ವದಲ್ಲಿ ಹಲವಾರು ದಾಳಿಗಳಿಗೆ ಕಾರಣವಾಗಿದೆ. ದಂಗೆಕೋರ ಗುಂಪು ಈಗ ಬಾಂಗ್ಲಾದೇಶ, ಭೂತಾನ್ ಮತ್ತು ಮ್ಯಾನ್ಮಾರ್‍ನಲ್ಲಿ ನೆಲೆಗಳನ್ನು ಹೊಂದಿದೆ. ಅದರ ಕೆಲವು ಕಾರ್ಯಕರ್ತರು ಚೀನಾ ಮತ್ತು ಪಾಕಿಸ್ತಾನದಲ್ಲಿ ತರಬೇತಿಯನ್ನೂ ಪಡೆದಿದ್ದಾರೆ. ಉಲ್ಪಾವನ್ನು ಎಲ್ಲಾ ಈಶಾನ್ಯ ಬಂಡುಕೋರ ಗುಂಪುಗಳಲ್ಲಿ ಅತ್ಯಂತ ಭಯಂಕರವೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ ಮತ್ತು ಒಂದು ಹಂತದಲ್ಲಿ, ಆಗ್ನೇಯ ಏಷ್ಯಾದಲ್ಲಿ ಎಲ್‍ಟಿಟಿಇ ನಂತರ ಎರಡನೆಯದು ಎಂದು ಪರಿಗಣಿಸಲಾಗಿದೆ. +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಉಲ್ಪಾ ಅಸ್ಸಾಂ ಆಂದೋಲನಕ್ಕೆ ಮುಂಚಿನದು, ಅದರ ನಂತರ ವೇಗವನ್ನು ಪಡೆಯುತ್ತದೆ. ಅದರ ಅಸ್ತಿತ್ವದ ಉದ್ದಕ್ಕೂ, ಉನ್ನತ ನಾಯಕತ್ವದ ನಡುವಿನ ಆಂತರಿಕ ವ್ಯತ್ಯಾಸಗಳು ಸ್ಪಷ್ಟವಾಗಿವೆ.ರಾಜ್‍ಖೋವಾ ನೇತೃತ್ವದ ಉಲಾ ಬಣವು 2011 ರಲ್ಲಿ ಪರೇಶ್ ಬರುವಾ ನೇತೃತ್ವದ ಕಟ್ಟುನಿಟ್ಟಿನ ವಿಭಾಗದ ತೀವ್ರ ವಿರೋಧದ ಹೊರತಾಗಿಯೂ ಸರ್ಕಾರದೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಿತು. ಇಂದು ಸಹಿ ಹಾಕಲಾಗುತ್ತಿರುವ ಶಾಂತಿ ಒಪ್ಪಂದದಿಂದ ದೂರ ಉಳಿಯುವ ನಿರ್ಧಾರವನ್ನು ಬರುವಾ ಅವರು ವ್ಯಕ್ತಪಡಿಸಿದ್ದಾರೆ ಮತ್ತು ನಂತರ ಉಲ್ಪಾ (ಸ್ವತಂತ್ರ) ರಚಿಸಿದ್ದಾರೆ. +ಶಾಂತಿ ಒಪ್ಪಂದವು ಸರ್ಕಾರದ ವಿಧಾನದಲ್ಲಿನ ಬದಲಾವಣೆಯನ್ನು ಸೂಚಿಸುತ್ತದೆ. 2005 ರಲ್ಲಿ, ಭಾರತ ಸರ್ಕಾರವು ಮೊದಲ ಬಾರಿಗೆ ಸಾರ್ವಭೌಮತ್ವ ಸೇರಿದಂತೆ ಉಲಾ ಎತ್ತಿದ ಪ್ರಮುಖ ವಿಷಯಗಳನ್ನು ಚರ್ಚಿಸಲು ಒಪ್ಪಿಕೊಂಡಿತು. ಈ ಒಪ್ಪಂದವು ದಂಗೆಗೆ ಪರಿಹಾರ ಮಾತ್ರವಲ್ಲದೆ ಅಸ್ಸಾಂನಲ್ಲಿ ಬಾಸುತ್ತಿರುವ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ. \ No newline at end of file diff --git a/eesanje/url_47_204_5.txt b/eesanje/url_47_204_5.txt new file mode 100644 index 0000000000000000000000000000000000000000..ee3d801c33606e554d26f9ce251ac1b0c86c6647 --- /dev/null +++ b/eesanje/url_47_204_5.txt @@ -0,0 +1,7 @@ +ದೇಣಿಗೆ ಸಂಗ್ರಹಕ್ಕೆ ಬಾರ್ ಕೋಡ್ ಮೊರೆ ಹೋದ ಕಾಂಗ್ರೆಸ್ +ನಾಗ್ಪುರ,ಡಿ.29- ಕುರ್ಚಿಗಳ ಹಿಂದೆ ಬಾರ್ ಕೋಡ್ ಹಾಕುವ ಮೂಲಕ ಚುನಾವಣಾ ದೇಣಿಗೆ ಸಂಗ್ರಹಕ್ಕೆ ಕಾಂಗ್ರೆಸ್ ಮುಂದಾಗಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಕ್ರೌಡ್ ಫಂಡಿಂಗ್‍ಗಾಗಿ ಕಾಂಗ್ರೆಸ್ ಬಾರ್ ಕೋಡ್‍ಗಳನ್ನು ಕುರ್ಚಿಗಳ ಹಿಂದೆ ಹಾಕಿತ್ತು. +ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಲಾದ ಕಾಂಗ್ರೆಸ್ ಕ್ರೌಡ್‍ಫಂಡಿಂಗ್ ಅಭಿಯಾನದ ಭಾಗವಾಗಿ ದೇಶಕ್ಕಾಗಿ ದೇಣಿಗೆ ಎಂಬ ಬರಹವಿದ್ದ ಬಾರ್‍ಕೋಡ್‍ಗಳನು ಮೈದಾನದ ಎಲ್ಲಾ ಕುರ್ಚಿಗಳ ಹಿಂದೆ ಅಂಟಿಸಲಾಗಿತ್ತು. ಮತ್ತು ಹೈನ್ ತೈಯಾರ್ ಹಮ ರ್ಯಾಲಿಯಲ್ಲಿ ಭಾಗವಹಿಸಿದವರಿಗೆ ದೇಣಿಗೆ ನೀಡುವಂತೆ ಒತ್ತಾಯಿಸಲಾಗಿದೆ. ಕುರ್ಚಿಗಳ ಹಿಂದಿರುವ ಕರಪತ್ರದಲ್ಲಿ ಬಾರ್ ಕೋಡ್‍ನೊಂದಿಗೆ ರಾಹುಲ್ ಗಾಂಧಿ ಅವರ ಚಿತ್ರವಿದೆ. +ಕರಪತ್ರದಲ್ಲಿ ಉತ್ತಮ ಭಾರತ ರಚನೆಗಾಗಿ 138 ವರ್ಷಗಳ ಈ ಹೋರಾಟದಲ್ಲಿ ಕಾಂಗ್ರೆಸ್‍ಗೆ ನಿಮ್ಮ ಅಗತ್ಯವಿದೆ. ಭಾರತಕ್ಕೆ ನಿಮ್ಮ ಅಗತ್ಯವಿದೆ. ದೇಣಿಗೆ ನೀಡಲು ಈಗಲೇ ಸ್ಕ್ಯಾನ್ ಮಾಡಿ ಎಂದು ಬರೆಯಲಾಗಿದೆ. ಎಲ್ಲಾ ದಾನಿಗಳ ಪೈಕಿ ಐದು ಅದೃಷ್ಟ ದಾನಿಗಳಿಗೆ ರಾಹುಲ್ ಗಾಂಧಿ ಅವರಿಂದ ದೇಣಿಗೆ ಮೆಚ್ಚುಗೆ ಪ್ರಮಾಣಪತ್ರವನ್ನು ನೀಡಲಾಗುವುದು ಎಂದು ಕರಪತ್ರದಲ್ಲಿ ಉಲ್ಲೇಖಿಸಲಾಗಿದೆ. +ಅನ್ಯಾಯಕ್ಕೆ ಹೆಸರಾದವರಿಂದ ನ್ಯಾಯ ಯಾತ್ರೆ : ಇರಾನಿ ವ್ಯಂಗ್ಯ +ಹೈ ತೈಯಾರ್ ಹಮ ರ್ಯಾಲಿಯಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಮಹಾರಾಷ್ಟ್ರ ಮತ್ತು ದೇಶದಾದ್ಯಂತ ಹಳೆಯ ಪಕ್ಷವು ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದು ಸಿದ್ಧಾಂತಗಳ ಹೋರಾಟ. ನಾವು ಒಟ್ಟಾಗಿ ಮಹಾರಾಷ್ಟ್ರ ಮತ್ತು ದೇಶದಲ್ಲಿ ಚುನಾವಣೆಗಳನ್ನು ಗೆಲ್ಲಲಿದ್ದೇವೆ ಎಂದು ಗಾಂಧಿ ಹೇಳಿದರು. +ಕಾಂಗ್ರೆಸ್ ನಾಯಕರು ತಮ್ಮ ಭಾಷಣದಲ್ಲಿ, ದೇಶದಲ್ಲಿ ಎರಡು ವಿರುದ್ಧ ಸಿದ್ಧಾಂತಗಳ ನಡುವೆ ಸಂಘರ್ಷ ನಡೆಯುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ದೇಶದಲ್ಲಿ ಸಿದ್ಧಾಂತಗಳ ಹೋರಾಟ ನಡೆಯುತ್ತಿದೆ, ಇದು ರಾಜಕೀಯ ಹೋರಾಟ, ಅಧಿಕಾರಕ್ಕಾಗಿ ಹೋರಾಟ ಎಂದು ಜನರು ಭಾವಿಸುತ್ತಾರೆ, ಆದರೆ ಈ ಹೋರಾಟದ ಅಡಿಪಾಯವು ಸಿದ್ಧಾಂತ, ಎರಡು ವಿರುದ್ಧವಾದ ಸಿದ್ಧಾಂತಗಳು. (ದೇಶ ಮೈ ವಿಚಾರಧಾರ ಕಿ ಲಡಾಯಿ ಚಲ್ ರಹೀ ಹೈ, ಲೋಗೋ ಕೋ ಲಗ್ತಾ ಹೈ ರಾಜನೀತಿಕ್ ಲಡಾಯಿ ಹೈ, ಸತ್ತಾ ಕಿ ಲಡಾಯಿ ಹೈ, ವೋ ಹೈ, ಮಗರ್ ಇಸ್ಸ್ ಲಡೈ ಕಿ ನೀವ್ ಜೋ ಹೈ ವೋ ವಿಚಾರಧಾರಾ ಹೈ, ದೋ ವಿಚಾರಧಾರಾ ಹೈ, ಎಂದು ರಾಹುಲ್ ಗಾಂಧಿ ಹೇಳಿದರು. \ No newline at end of file diff --git a/eesanje/url_47_204_6.txt b/eesanje/url_47_204_6.txt new file mode 100644 index 0000000000000000000000000000000000000000..a42805ecc03e2e3b9fd58af5ef5d8f54faecc48e --- /dev/null +++ b/eesanje/url_47_204_6.txt @@ -0,0 +1,7 @@ +ಮತಾಂತರಗೊಂಡು ಮುಸ್ಲಿಂ ಯುವತಿಯನ್ನು ಮದುವೆಯಾದ ಕಂದಾಯ ಅಧಿಕಾರಿ +ನವದೆಹಲಿ,ಡಿ.29- ತನ್ನ ಪತಿ ಆಶಿಶ್ ಗುಪ್ತಾ ಇಸ್ಲಾಂಗೆ ಮತಾಂತರಗೊಂಡು ಮೊಹಮ್ಮದ್ ಯೂಸುಫ್ ಎಂದು ಹೆಸರು ಬದಲಿಸಿಕೊಂಡು ಮುಸ್ಲಿಂ ಮಹಿಳೆಯನ್ನು ವಿವಾಹವಾಗಿದ್ದಾನೆ ಎಂದು ಆರೋಪಿಸಿ ಕಂದಾಯ ಅಧಿಕಾರಿಯೊಬ್ಬರ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. +ಕಳೆದ ಸೆಪ್ಟೆಂಬರ್ 2 ರಂದು ಆಶಿಶ್ ಗುಪ್ತಾ ಮೌದಾಹಾದಲ್ಲಿ ನಾಯಬ್ ತಹಸೀಲ್ದಾರ್ ಆಗಿದ್ದಾಗ ಪಟ್ಟಣದ ಕಚರಿಯಾ ಬಾಬಾ ಮಸೀದಿಯಲ್ಲಿ ದಿನಗಟ್ಟಲೆ ನಮಾಜ್‍ನಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಇದನ್ನು ಗಮನಿಸಿದವರು ಪ್ರಶ್ನಿಸಿದಾಗ ಆತ ತನ್ನನ್ನು ಕಾನ್ಪುರದ ಮಹಮದ್ ಯೂಸಫ್ ಎಂದು ಹೇಳಿಕೊಂಡಿದ್ದ. ಆದಾಗ್ಯೂ, ಹೆಚ್ಚಿನ ತನಿಖೆಯಿಂದ ಯೂಸುಫ್ ಬೇರೆ ಯಾರೂ ಅಲ್ಲ, ನಾಯಬ್ ತಹಸೀಲ್ದಾರ್ ಆಶಿಶ್ ಗುಪ್ತಾ ಎಂದು ತಿಳಿದುಬಂದಿದೆ. +ಇದೀಗ ಆತನ ಪತ್ನಿ ಆರತಿ ಯಜ್ಞಸೈನಿ ಅವರು ತನ್ನ ಪತಿ ಬಲವಂತದ ಧಾರ್ಮಿಕ ಮತಾಂತರಗೊಂಡಿದ್ದು ರುಕ್ಷಾರ್ ಎಂಬ ಮಹಿಳೆಯೊಂದಿಗೆ ಅನೈತಿಕ ವಿವಾಹ ಮಾಡಿಕೊಂಡಿದ್ದಾರೆ ಎಂದು ಪ್ರಕರಣವನ್ನು ದಾಖಲಿಸಿದ್ದಾರೆ. +ದೂರಿನ ಪ್ರಕಾರ ರುಖ್ಸಾರ್ ಅವರ ತಂದೆ, ಮುನ್ನಾ ಎಂದು ಗುರುತಿಸಲಾಗಿದೆ, ಮಸೀದಿಯ ಧರ್ಮಗುರು ಮತ್ತು ಹಲವಾರು ಇತರರೊಂದಿಗೆ ಡಿಸೆಂಬರ್ 24 ರಂದು ಗುಪ್ತಾ ಅವರಿಗೆ ಬಲವಂತದ ಮತಾಂತರ ಮಾಡಿಸಿ ನಂತರ ತಮ್ಮ ಮಗಳೊಂದಿಗೆ ವಿವಾಹ ಮಾಡಿಸಿದ್ದಾರೆ ಎಂದು ಆರೋಪಿಸಾಗಿದೆ. +ಸ್ಯಾಂಡಲ್‍ವುಡ್‍ಗೆ ಜ್ಯೂನಿಯರ್ ಎನ್‍ಟಿಆರ್ ಎಂಟ್ರಿ +ಗುಪ್ತಾ ಅವರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆಯೇ ಅಥವಾ ರುಕ್ಷಾರ್ ಜೊತೆಗಿನ ಸಂಬಂಧವನ್ನು ನ್ಯಾಯಸಮ್ಮತಗೊಳಿಸಲು ತನ್ನ ಸ್ವಂತ ಇಚ್ಛೆಯ ಮೇರೆಗೆ ಅದನ್ನು ಮಾಡಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ. ಎಲ್ಲಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_204_7.txt b/eesanje/url_47_204_7.txt new file mode 100644 index 0000000000000000000000000000000000000000..b60bbee46bf496ba3b8d17bf617fb59df37e5c54 --- /dev/null +++ b/eesanje/url_47_204_7.txt @@ -0,0 +1,6 @@ +ಭ್ರಷ್ಟಾಚಾರ ತನಿಖೆಗೆ ಸಿಬಿಐಗೆ ಸಾಮಾನ್ಯ ಅನುಮತಿ ನೀಡಿದ ಮಿಜೋರಾಂ +ಐಜ್ವಾಲï, ಡಿ 29 (ಪಿಟಿಐ) ರಾಜ್ಯದಲ್ಲಿನ ಅಪರಾಧಗಳ ತನಿಖೆಗೆ ಮಿಜೋರಾಂ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸಾಮಾನ್ಯ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆಯಲ್ಲಿ, ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯಿದೆ, 1946 ರ ಸೆಕ್ಷನ್ 6 ರ ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸುವ ಮೂಲಕ, ಮಿಜೋರಾಂ ಸರ್ಕಾರವು ಈ ಆದೇಶ ಹೊರಡಿಸಿದೆ. +ಮಿಜೋರಾಂ ರಾಜ್ಯದಲ್ಲಿನ ಅಪರಾಧಗಳ ಸಿಬಿಐ ತನಿಖೆಗೆ ಮಿಜೋರಾಂ ಸರ್ಕಾರವು ಒಪ್ಪಿಗೆ ನೀಡಿದೆ. ನಮ್ಮ ಸರ್ಕಾರವು ನಮ್ಮ ನಾಗರಿಕರ ಕಲ್ಯಾಣಕ್ಕಾಗಿ ಭ್ರಷ್ಟಾಚಾರವನ್ನು ತೊಡೆದುಹಾಕಲು ದೃಢಸಂಕಲ್ಪ ಹೊಂದಿದೆ ಎಂದು ಸಿಎಂ ಲಾಲ್ದುಹೋಮ ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತದ ಮಾಜಿ ನೌಕಾಪಡೆ ಸಿಬ್ಬಂದಿಗಳಿಗೆ ಶಿಕ್ಷೆ ಕಡಿತ +ಡಿಸೆಂಬರ್ 8 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಲಾಲ್ದುಹೋಮ ಅವರು ತಮ್ಮ ಜೋರಾಮ್ ಪೀಪಲ್ಸ ಮೂವ್ಮೆಂಟ್ ಸರ್ಕಾರವು ಭ್ರಷ್ಟಾಚಾರ ವಿರೋ ಕ್ರಮಗಳಿಗೆ ಆದ್ಯತೆ ನೀಡಲಿದೆ ಮತ್ತು ರಾಜ್ಯದಲ್ಲಿನ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಸಿಬಿಐ ಅನ್ನು ಆಹ್ವಾನಿಸುತ್ತದೆ ಎಂದು ಘೋಷಿಸಿದರು. +ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‍ಪಿಇ) ಕಾಯಿದೆ, 1946 ರ ಪ್ರಕಾರ, ಸಿಬಿಐ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರದ ಒಪ್ಪಿಗೆಯನ್ನು ಪಡೆಯಬೇಕು. \ No newline at end of file diff --git a/eesanje/url_47_204_8.txt b/eesanje/url_47_204_8.txt new file mode 100644 index 0000000000000000000000000000000000000000..e889631d93c8bd2f1436d10956ad1c612094e88c --- /dev/null +++ b/eesanje/url_47_204_8.txt @@ -0,0 +1,9 @@ +ಜಾರ್ಖಂಡ್ : ಈ ವರ್ಷ 397 ನಕ್ಸಲರ ಬಂಧನ, ಒಂಬತ್ತು ಮಂದಿ ಹತ್ಯೆ +ರಾಂಚಿ, ಡಿ 29 (ಪಿಟಿಐ) ಈ ವರ್ಷ ರಾಜ್ಯದಾದ್ಯಂತ 397 ಮಾವೋವಾದಿಗಳನ್ನು ಬಂಧಿಸಲಾಗಿದೆ, ಒಂಬತ್ತು ಮಂದಿ ಕೊಲ್ಲಲ್ಪಟ್ಟರು ಮತ್ತು 26 ಮಂದಿ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ವಿಶೇಷ ಪ್ರದೇಶ ಸಮಿತಿ ಸದಸ್ಯ, ಪ್ರಾದೇಶಿಕ ಸಮಿತಿ ಸದಸ್ಯ, ಐದು ವಲಯ ಕಮಾಂಡರ್‍ಗಳು ಮತ್ತು 11 ಉಪ ವಲಯ ಕಮಾಂಡರ್‍ಗಳು ಸೇರಿದ್ದಾರೆ. +ಈ ವ್ಯಕ್ತಿಗಳ ತಲೆಯ ಮೇಲೆ ಒಟ್ಟು 1.01 ಕೋಟಿ ರೂ.ಗಳ ಬಹುಮಾನ ಘೋಷಿಸಲಾಗಿತ್ತು ಎನ್ನಲಾಗಿದೆ. ಕಳೆದ 12 ತಿಂಗಳ ಅವಧಿಯಲ್ಲಿ 27 ಪೊಲೀಸ್ ಶಸ್ತ್ರಾಸ್ತ್ರಗಳು, 10,350 ಮದ್ದುಗುಂಡುಗಳು ಮತ್ತು 244 ಸುಧಾರಿತ ಸ್ಪೋಟಕ ಸಾಧನಗಳು (ಐಇಡಿ) ಸೇರಿದಂತೆ 152 ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. +ಹೇಮಂತ್ ಸೊರೆನ್ ಸರ್ಕಾರದ ನಾಲ್ಕು ವರ್ಷಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಪ್ರಧಾನ ಕಚೇರಿ ಈ ಡೇಟಾವನ್ನು ಬಿಡುಗಡೆ ಮಾಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ, ಸಿಪಿಐ (ಮಾವೋವಾದಿ), ಪೀಪಲ್ಸ ಲಿಬರೇಶನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್‍ಎಫ್‍ಐ), ತೃತೀಯಾ ಸಮ್ಮೇಳನದ ಪ್ರಸ್ತುತಿ ಸಮಿತಿ (ಟಿಎಸ್‍ಪಿಸಿ), ಮತ್ತು ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ನಂತಹ ನಿಷೇಧಿತ ಸಂಘಟನೆಗಳ ಸದಸ್ಯರು ಸೇರಿದಂತೆ 1,617 ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾಗಿದ್ದ ಭಾರತದ ಮಾಜಿ ನೌಕಾಪಡೆ ಸಿಬ್ಬಂದಿಗಳಿಗೆ ಶಿಕ್ಷೆ ಕಡಿತ +ಜನವರಿ 1, 2020 ರಿಂದ, ಒಟ್ಟು 74 ಮಾವೋವಾದಿಗಳು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ ಮತ್ತು 158 ಪೊಲೀಸ್ ಶಸ್ತ್ರಾಸ್ತ್ರಗಳು ಸೇರಿದಂತೆ 792 ಶಸ್ತ್ರಾಸ್ತ್ರಗಳು ಮತ್ತು 1,882 ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚುವರಿಯಾಗಿ, ಭದ್ರತಾ ಪಡೆಗಳೊಂದಿಗಿನ ಎನ್‍ಕೌಂಟರ್‍ನಲ್ಲಿ 40 ನಕ್ಸಲರು ಕೊಲ್ಲಲ್ಪಟ್ಟಿದ್ದಾರೆ ಮತ್ತು ಅವರಿಂದ 160.81 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. +ಈ ವರ್ಷ ಸೈಬರ್ ಅಪರಾಧಿಗಳ ವಿರುದ್ಧ ದೊಡ್ಡ ಶಿಸ್ತುಕ್ರಮವನ್ನು ಪ್ರಾರಂಭಿಸಿದೆ ಎಂದು ಇಲಾಖೆ ಹೇಳಿಕೊಂಡಿದೆ. ಜನವರಿ 1 ರಿಂದ, ಸೈಬರ್ ಅಪರಾಧದ ವಿರುದ್ಧ ಒಟ್ಟು 1,172 ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ ಮತ್ತು ಅಂತಹ ಅಪರಾಧಗಳಿಗಾಗಿ 834 ವ್ಯಕ್ತಿಗಳನ್ನು ಬಂಧಿಸಲಾಗಿದೆ. +ಇದಲ್ಲದೆ, ಕಾರ್ಯಾಚರಣೆಗಳು 1,417 ಮೊಬೈಲ್ ಫೋನ್‍ಗಳು, 2,328 ಸಿಮ್ ಕಾರ್ಡ್‍ಗಳು, 470 ಎಟಿಎಂ ಕಾರ್ಡ್‍ಗಳು, 128 ಪಾಸ್‍ಬುಕ್‍ಗಳು, 23 ಲ್ಯಾಪ್‍ಟಾಪ್‍ಗಳು, 37 ಚೆಕ್ ಬುಕ್‍ಗಳು, ರೂ 54.31 ಲಕ್ಷ ಮತ್ತು 3,300 ತೈವಾನ್ ಡಾಲರ್‍ಗಳನ್ನು ವಶಪಡಿಸಿಕೊಂಡಿವೆ. +ಸಂಘಟಿತ ಅಪರಾಧಗಳ ವಿರುದ್ಧದ ಕ್ರಮಗಳ ಭಾಗವಾಗಿ, 248 ಅಪರಾಗಳನ್ನು ಬಂಧಿಸಲಾಗಿದೆ ಮತ್ತು 129 ಶಸ್ತ್ರಾಸ್ತ್ರಗಳು ಮತ್ತು 1,677 ಕಾಟ್ರ್ರಿಡ್ಜ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_204_9.txt b/eesanje/url_47_204_9.txt new file mode 100644 index 0000000000000000000000000000000000000000..a343f28a12a6459e2254d93fc999c2529e44d880 --- /dev/null +++ b/eesanje/url_47_204_9.txt @@ -0,0 +1,5 @@ +ಅನ್ಯಾಯಕ್ಕೆ ಹೆಸರಾದವರಿಂದ ನ್ಯಾಯ ಯಾತ್ರೆ : ಇರಾನಿ ವ್ಯಂಗ್ಯ +ಅಮೇಥಿ,ಡಿ.29- ಅನ್ಯಾಯಕ್ಕೆ ಹೆಸರಾದವರು ನ್ಯಾಯ ಕೊಡಿಸುವಂತೆ ನಟಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ನ್ಯಾಯ ಯಾತ್ರೆಯನ್ನು ಟೀಕಿಸಿದ್ದಾರೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಇರಾನಿ ಅವರು ಇಲ್ಲಿನ ಕಾರ್ಯಕ್ರಮವೊಂದರಲ್ಲಿ ಗಾಂಧಿ ಅವರ ಉದ್ದೇಶಿತ ಯಾತ್ರೆಯ ಕುರಿತಾದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. +ಅನ್ಯಾಯಕ್ಕೆ ಹೆಸರಾದವರು ನ್ಯಾಯಕ್ಕಾಗಿ ಧೋಂಗ್ ಮಾಡುತ್ತಿದ್ದಾರೆ ಎಂದು ಅವರು ರಾಹುಲ್‍ಗಾಂಧಿ ಕಾಲೆಳೆದಿದ್ದಾರೆ. ಇರಾನಿ ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ಗೌರಿಗಂಜ್‍ನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಸಾಮಾಜಿಕ ಸಬಲೀಕರಣ ಶಿಬಿರದಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಪ್ರತಿ ವರ್ಷ 10 ಕೋಟಿ ಬಡ ಕುಟುಂಬಗಳಿಗೆ 5 ಲಕ್ಷದವರೆಗೆ ಆರ್ಥಿಕ ನೆರವು ನೀಡುತ್ತದೆ. +ಸ್ಯಾಂಡಲ್‍ವುಡ್‍ಗೆ ಜ್ಯೂನಿಯರ್ ಎನ್‍ಟಿಆರ್ ಎಂಟ್ರಿ +ಈ ಯೋಜನೆಯು ಬಡವರ ವೈದ್ಯಕೀಯ ಚಿಕಿತ್ಸೆಯನ್ನು ನೋಡಿಕೊಳ್ಳುವುದರಿಂದ ಅವರಿಗೆ ಪರಿಹಾರವನ್ನು ಒದಗಿಸಿದೆ ಎಂದು ಅವರು ಹೇಳಿದರು. ಇರಾನಿ ಅವರು ಅಮೇಥಿಯ ಮುಖ್ಯ ವೈದ್ಯಕೀಯ ಅಧಿಕಾರಿಯೊಂದಿಗೆ ಮಾತನಾಡಿದ್ದು, ಮುಂದಿನ ವಾರದಿಂದ ಅಮೇಥಿ ಪ್ರದೇಶದ ಎಲ್ಲಾ ನ್ಯಾಯ ಪಂಚಾಯತ್‍ಗಳಲ್ಲಿ ಅಂಗವಿಕಲರಿಗಾಗಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_47_205_1.txt b/eesanje/url_47_205_1.txt new file mode 100644 index 0000000000000000000000000000000000000000..2d0168ec99e95bba407b02cfb223804d8fa19336 --- /dev/null +++ b/eesanje/url_47_205_1.txt @@ -0,0 +1,6 @@ +ದೆಹಲಿ ಸರ್ಕಾರದ ಟ್ಯಾಬ್ಲೊ ಪ್ರದರ್ಶನಕ್ಕೆ ಬಿಜೆಪಿ ಕೊಕ್ಕೆ +ನವದೆಹಲಿ, ಡಿ 28 (ಪಿಟಿಐ) ಗಣರಾಜ್ಯೋತ್ಸವ ಪರೇಡ್‍ನಲ್ಲಿ ತನ್ನ ಆರೋಗ್ಯ ಮತ್ತು ಶಿಕ್ಷಣ ಮಾದರಿಗಳನ್ನು ಪ್ರದರ್ಶಿಸುವ ದೆಹಲಿ ಸರ್ಕಾರದ ಯೋಜನೆಗಳನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಬಣ್ಣ ಬಯಲು ಮಾಡಿಕೊಂಡಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. +ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಮುಖ್ಯ ರಾಷ್ಟ್ರೀಯ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು, ತಮ್ಮ ಸರ್ಕಾರದ ಟ್ಯಾಬ್ಲೊ ತಿರಸ್ಕರಿಸಿರುವ ಕಾರಣವನ್ನು ನೀಡಿಲ್ಲ ಎಂದು ಆರೋಪಿಸಿದ್ದಾರೆ. ಈ ನಿರ್ಧಾರವು ರಾಜಕೀಯದಿಂದ ನಡೆಸಲ್ಪಟ್ಟಿದೆ. ದೆಹಲಿ ಸರ್ಕಾರವು ಗಣರಾಜ್ಯೋತ್ಸವದ ಪರೇಡ್‍ನಲ್ಲಿ ತನ್ನ ಶಿಕ್ಷಣ ಮತ್ತು ಆರೋಗ್ಯ ಮಾದರಿಯನ್ನು ಪ್ರದರ್ಶಿಸಲು ಬಯಸಿದೆ. ಆದರೆ ದೆಹಲಿ ಮತ್ತು ಪಂಜಾಬ್ ಸರ್ಕಾರಗಳ ಟ್ಯಾಬ್ಲೋಗಳನ್ನು ಆಯ್ಕೆಯಿಂದ ಹೊರಗಿಡಲಾಗಿದೆ ಎಂದು ಅವರು ಆರೋಪಿಸಿದರು. +ಅಸ್ಸಾಂ, ಗುಜರಾತ್ ಮತ್ತು ಉತ್ತರ ಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳ ಕೋಷ್ಟಕಗಳು ಕಳೆದ ಐದು ವರ್ಷಗಳಿಂದ ನಿರಂತರವಾಗಿ ತಮ್ಮ ಕೋಷ್ಟಕಗಳನ್ನು ಪ್ರದರ್ಶಿಸಲು ಅವಕಾಶಗಳನ್ನು ನೀಡಲಾಗಿದೆ ಎಂದು ಕಕ್ಕರ್ ಹೇಳಿದ್ದಾರೆ. +ಮುಂಬರುವ ಚುನಾವಣೆಯಲ್ಲಿ ಮೋದಿ ಯಶಸ್ಸಿಗೆ ಹಾರೈಸಿದ ಪುಟಿನ್ +ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಬಿಜೆಪಿಯನ್ನು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟೀಕಿಸಿದ್ದಾರೆ, ಇದು ರಾಷ್ಟ್ರಗೀತೆಯಿಂದ ಪಂಜಾಬ್ ಪದವನ್ನು ತೆಗೆದುಹಾಕುವ ಒಂದು ಹೆಜ್ಜೆ ಎಂದು ಕರೆದಿದೆ. ಅವರು ತಮ್ಮ ಮಾರ್ಗವನ್ನು ಹೊಂದಿದ್ದರೆ ಅವರು ರಾಷ್ಟ್ರಗೀತೆಯಿಂದ ಪಂಜಾಬ ಪದವನ್ನು ತೆಗೆದುಹಾಕುತ್ತಾರೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_47_205_10.txt b/eesanje/url_47_205_10.txt new file mode 100644 index 0000000000000000000000000000000000000000..8ec2aee50a768bff93df7cb44bc7892c53a556ba --- /dev/null +++ b/eesanje/url_47_205_10.txt @@ -0,0 +1,6 @@ +ದೀದಿ ಸರ್ಕಾರಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು : ಅಮಿತ್ ಶಾ +ಕೋಲ್ಕತ್ತಾ,ಡಿ.27- ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದಾರೆ. ದೀದಿ ಅವರ ಆಡಳಿತ ಕೂನೆಗಾಣಿಸಲು ಬಂಗಾಳದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಈ ನಿಟ್ಟಿನಲ್ಲಿ ನೀವು ಕಾರ್ಯತಂತ್ರ ರೂಪಿಸಬೇಕು ಎಂದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. +1977-2011ರವರೆಗೆ ಪಶ್ಚಿಮ ಬಂಗಾಳದಲ್ಲಿ 34 ವರ್ಷಗಳ ಸಿಪಿಐ(ಎಂ) ಸರ್ಕಾರದ ಆಡಳಿತವನ್ನು ಉಲ್ಲೇಖಿಸಿ, ಬಂಗಾಳದಲ್ಲಿ ಕಮ್ಯುನಿಸ್ಟ್ ಆಳ್ವಿಕೆಯು ದೀದಿ ಆಳ್ವಿಕೆಗಿಂತ ಉತ್ತಮವಾಗಿತ್ತು. ಅದನ್ನೇ ಜನರು ಇಲ್ಲಿ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. +ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ತೃಣಮೂಲದ ತವರು ರಾಜ್ಯವಾದ ಬಂಗಾಳದಲ್ಲಿ ಬಿಜೆಪಿ ಪ್ರಮುಖ ಲಾಭದತ್ತ ಕಣ್ಣಿಟ್ಟಿದೆ. ಈ ಬಾರಿ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ 35 ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಮುಂದಿನ ವಿಧಾನಸಭಾ ಚುನಾವಣೆಯ ನಂತರ ನಾವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಕೆಲಸ ಮಾಡಬೇಕಾಗಿದೆ. ಬಿಜೆಪಿ ಸರ್ಕಾರವು ಒಳನುಸುಳುವಿಕೆ, ಹಸು ಕಳ್ಳಸಾಗಣೆ ಮತ್ತು ಸಿಎಎ ಮೂಲಕ ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ ಎಂದು ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದರು. \ No newline at end of file diff --git a/eesanje/url_47_205_11.txt b/eesanje/url_47_205_11.txt new file mode 100644 index 0000000000000000000000000000000000000000..76cd94792766c9b3631712bc2e4e6463446965a6 --- /dev/null +++ b/eesanje/url_47_205_11.txt @@ -0,0 +1,6 @@ +ಮಂಜಿನ ನಗರಿಯಾದ ದೆಹಲಿ, ಆರೆಂಜ್ ಅಲರ್ಟ್ ಘೋಷಣೆ +ನವದೆಹಲಿ, ಡಿ 27 (ಪಿಟಿಐ) ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಪ್ರದೇಶಗಳಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಆವರಿಸಿದೆ ಮತ್ತು ಕನಿಷ್ಠ ತಾಪಮಾನವು 7.8 ಡಿಗ್ರಿ ಸೆಲ್ಸಿಯಸ್‍ಗೆ ಕುಸಿದಿದೆ. ಹಲವು ಭಾಗಗಳಲ್ಲಿ ಗೋಚರತೆ ಸುಮಾರು 50 ಮೀಟರ್‍ಗಳಷ್ಟು ಉಳಿದುಕೊಂಡಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ನಗರದಾದ್ಯಂತ ಬೆಳಗ್ಗೆ 8 ಗಂಟೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ರೈಲುಗಳು ತಡವಾಗಿ ಓಡುತ್ತಿವೆ ಮತ್ತು ವಿಮಾನ ಹಾರಾಟ ವಿಳಂಬ ಇಲ್ಲವೆ ರದ್ದತಿ ಆಗಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಬೆಳಿಗ್ಗೆ 5.15 ಕ್ಕೆ ತೆಗೆದ ಉಪಗ್ರಹ ಚಿತ್ರಗಳ ಪ್ರಕಾರ, ರಾಷ್ಟ್ರ ರಾಜಧಾನಿಯಾದ್ಯಂತ ದಟ್ಟವಾದ ಮತ್ತು ದಟ್ಟವಾದ ಮಂಜಿನ ಪರಿಸ್ಥಿತಿಗಳು ಚಾಲ್ತಿಯಲ್ಲಿವೆ. ದೆಹಲಿಯ ಮುಖ್ಯ ಹವಾಮಾನ ಕೇಂದ್ರ ಸಫ್ದರ್‍ಜಂಗ್‍ನಲ್ಲಿ 50 ಮೀಟರ್‍ನಲ್ಲಿ ಗೋಚರತೆ ದಾಖಲಾಗಿದ್ದರೆ, ಪಾಲಂನಲ್ಲಿ 5.30 ಕ್ಕೆ 125 ಮೀಟರ್ ಇತ್ತು.ಮಂಜಿನಿಂದಾಗಿ ದೆಹಲಿ ರೈಲು ನಿಲ್ದಾಣಗಳಿಗೆ ಆಗಮಿಸಬೇಕಿದ್ದ ಸುಮಾರು 25 ರೈಲುಗಳು ತಡವಾಗಿ ಆಗಮಿಸಿವೆ.ಆದಾಗ್ಯೂ, ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್‍ನ ಅಕಾರಿಯ ಪ್ರಕಾರ ಬೆಳಿಗ್ಗೆ 11 ಗಂಟೆಯ ನಂತರ ಪರಿಸ್ಥಿತಿ ಸುಧಾರಿಸಿದೆ. +ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟದ ಶಂಕಿತರ ಮೂಲ ಪತ್ತೆ..! +ದೆಹಲಿ ಎನ್‍ಸಿಆರ್‍ನಲ್ಲಿ ತುಂಬಾ ದಟ್ಟವಾದ ಮಂಜು ಆವರಿಸಿದೆ. ಅನೇಕ ಸ್ಥಳಗಳಲ್ಲಿ ಗೋಚರತೆ ಬಹುತೇಕ ಶೂನ್ಯವಾಗಿದೆ. 07:30 ಗಂಟೆಗೆ ಪಾಲಮ್ 50 ಮೀಟರ್ ಗೋಚರತೆಯನ್ನು ವರದಿ ಮಾಡಿದೆ. ಜಾಗರೂಕರಾಗಿರಿ ಮತ್ತು ಎಚ್ಚರಿಕೆಯಿಂದ ಚಾಲನೆ ಮಾಡಿ. 11 ಗಂಟೆಯ ನಂತರ ಸುಧಾರಣೆ ನಿರೀಕ್ಷಿಸಲಾಗಿದೆ ಎಂದು ಸ್ಕೈಮೆಟ್ ಅಕಾರಿ ಮಹೇಶ್ ಪಲಾವತ್ ಎಕ್ಸ್‍ನಲ್ಲಿ ಪೋಸ್ಟ್ ಹಾಕಿದ್ದಾರೆ. +ಪಂಜಾಬ್, ಹರಿಯಾಣ, ದೆಹಲಿ, ಯುಪಿ ಮತ್ತು ಉತ್ತರ ರಾಜಸ್ಥಾನದಾದ್ಯಂತ ಇಂದು ದಟ್ಟವಾದ ಮಂಜು ರೈಲು, ರಸ್ತೆ, ವಿಮಾನ ಸಂಚಾರದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಮತ್ತೊಂದು ಪೋಸ್ಟ್‍ನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_205_12.txt b/eesanje/url_47_205_12.txt new file mode 100644 index 0000000000000000000000000000000000000000..ee73e0c02ad90620033b16a72d708de817467047 --- /dev/null +++ b/eesanje/url_47_205_12.txt @@ -0,0 +1,6 @@ +ಅಗ್ನಿಪಥ್ ವಿರುದ್ದ ಮತ್ತೆ ಕಿಡಿ ಕಾರಿದ ರಾಹುಲ್ ಗಾಂಧಿ +ನವದೆಹಲಿ,ಡಿ.27- ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಕೇಂದ್ರ ಸರ್ಕಾರವು ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಚಂಪಾರಣ್‍ನಿಂದ ಬಂದು ನಿರುದ್ಯೋಗ ಸಮಸ್ಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವಕರ ಗುಂಪಿಗೆ ಬೆಂಬಲ ವ್ಯಕ್ತಪಡಿಸಿರುವ ರಾಹುಲ್‍ಗಾಂಧಿ ಅವರು ಎಕ್ಸ್ ನಲ್ಲಿ ಯುವಕರ ಗುಂಪಿನೊಂದಿಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. +ತಾತ್ಕಾಲಿಕ ನೇಮಕಾತಿ ಒದಗಿಸಲು ತರಲಾದ ಅಗ್ನಿವೀರ್ ಯೋಜನೆಯ ನೆಪದಲ್ಲಿ ಸೇನೆ ಮತ್ತು ಭಾರತೀಯ ವಾಯುಪಡೆಯ ಶಾಶ್ವತ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸುವ ಮೂಲಕ ಸರ್ಕಾರವು ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಗಾಂಧಿ ಪೋಸ್ಟ್‍ನಲ್ಲಿ ತಿಳಿಸಿದ್ದಾರೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಪೂರ್ಣ ಪರದೆ ಸತ್ಯಾಗ್ರಹದ ನಾಡು ಚಂಪಾರಣ್‍ನಿಂದ ದೆಹಲಿಗೆ ಬರಲು 1,100 ಕಿಲೋಮೀಟರ್‍ಗಳಷ್ಟು ಕಾಲ್ನಡಿಗೆಯಲ್ಲಿ ಆಗಮಿಸಿರುವ ಯುವಕರ ಹೋರಾಟವನ್ನು ಮಾಧ್ಯಮಗಳು ತೋರಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಅವರು ಹೇಳಿದ್ದಾರೆ. ಉದ್ಯೋಗದ ಸಮಸ್ಯೆಯನ್ನು ಬೀದಿಗಳಿಂದ ಸಂಸತ್ತಿನವರೆಗೆ ಎತ್ತುವ ಯುವಕರೊಂದಿಗೆ ನಾವು ಇದ್ದೇವೆ ಎಂದು ಗಾಂಧಿ ಹೇಳಿದರು. +ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು 17 ಮತ್ತು 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲು ಒದಗಿಸುತ್ತದೆ ಮತ್ತು ಅವರಲ್ಲಿ ಶೇ.25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. \ No newline at end of file diff --git a/eesanje/url_47_205_2.txt b/eesanje/url_47_205_2.txt new file mode 100644 index 0000000000000000000000000000000000000000..d122ed5104f24bd7a4285035580898d65d9c6f51 --- /dev/null +++ b/eesanje/url_47_205_2.txt @@ -0,0 +1,6 @@ +ಆನ್‍ಲೈನ್ ವಂಚನೆ ಸಂಸ್ಥೆಗಳ 278 ಕೋಟಿ ರೂ. ಆಸ್ತಿ ಜಪ್ತಿ +ನವದೆಹಲಿ,ಡಿ.28-ಮೊಬೈಲ್ ಫೋನ್ ಮೂಲಕ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ಚೀನಾದೊಂದಿಗೆ ಸಂಪರ್ಕ ಹೊಂದಿರುವ ಕಂಪನಿಗಳು ಸೇರಿದಂತೆ ವಿವಿಧ ಸಂಸ್ಥೆಗಳ 278 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ)ತಿಳಿಸಿದೆ. +ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‍ಎ) ಆದೇಶವನ್ನು ಹೊರಡಿಸಲಾಗಿದ್ದು, ಚೈನೀಸ್ ಸಂಬಂಧಿತ ಕಂಪನಿಗಳು ಸೇರಿದಂತೆ ವಿವಿಧ ವ್ಯಕ್ತಿಗಳು ಮತ್ತು ಶೆಲ್ (ಡಮ್ಮಿ) ಘಟಕಗಳಿಗೆ ಸೇರಿದ 278.71 ಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳ ರೂಪದಲ್ಲಿ ಅಪರಾಧದ ಆದಾಯವನ್ನು ತಾತ್ಕಾಲಿಕವಾಗಿ ಲಗತ್ತಿಸಲು ಆದೇಶ ನೀಡಲಾಗಿದೆ. ಶೆಲ್ ಘಟಕಗಳು, ನೂರಾರು ಕೋಟಿ ಹೂಡಿಕೆದಾರರನ್ನು ವಂಚಿಸುವಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ ಎಂದು ಕೇಂದ್ರೀಯ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. +ಮೋದಿ ನೇತೃತ್ವದಲ್ಲಿ ಬದಲಾಗುತ್ತಿದೆ ಭಾರತ : ಓಂ ಬಿರ್ಲಾ +ಬಿಟ್‍ಕಾಯಿನ್‍ಗಳು ಮತ್ತು ಇತರ ಕ್ರಿಪ್ರೋ ಕರೆನ್ಸಿಗಳನ್ನು ಗಣಿಗಾರಿಕೆ ಮಾಡುವ ಉದ್ದೇಶಕ್ಕಾಗಿ ಹಣವನ್ನು ಹೂಡಿಕೆ ಮಾಡಿದ ಮೇಲೆ ಆದಾಯದ ಭರವಸೆ ನೀಡಿದ ಮೋಸಗಾರ ಹೂಡಿಕೆದಾರರನ್ನು ವಂಚಿಸಿದ ಆರೋಪದ ಮೇಲೆ ನಾಗಾಲ್ಯಾಂಡ್‍ನ ಕೊಹಿಮಾದಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯು ಅಕ್ಟೋಬರ್ 2021 ರಂದು ದಾಖಲಿಸಿದ ಎಫ್‍ಐಆರ್‍ನಿಂದ ಹಣ-ಲಾಂಡರಿಂಗ್ ಪ್ರಕರಣವು ಬೆಳಕಿಗೆ ಬಂದಿದೆ. ಹೆಚ್‍ಪಿಝಡ್ ಟೋಕನ್ ಅಪ್ಲಿಕೇಶನ್ ಅನ್ನು ವಂಚನೆ ಉದ್ದೇಶಕ್ಕಾಗಿ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. +57,000 ಹೂಡಿಕೆಗೆ, ಮೂರು ತಿಂಗಳಿಗೆ ದಿನಕ್ಕೆ 4,000 ಆದಾಯವನ್ನು ಭರವಸೆ ನೀಡಲಾಯಿತು ಆದರೆ ಹಣವನ್ನು ಒಮ್ಮೆ ಮಾತ್ರ ಪಾವತಿಸಲಾಯಿತು ನಂತರ ವಂಚಿಸಲಾಯಿತು ಎಂದು ಇಡಿ ಆರೋಪಿಸಿದೆ.ಇಲ್ಲಿಯವರೆಗೆ, ಪ್ರಕರಣದಲ್ಲಿ ಇಡಿ ನಿರ್ಬಂಧಿಸಿರುವ ಅಪರಾಧದ ಒಟ್ಟು ಆದಾಯವು 455.37 ಕೋಟಿಯಾಗಿದೆ ಎಂದು ಸಂಸ್ಥೆ ತಿಳಿಸಿದೆ. \ No newline at end of file diff --git a/eesanje/url_47_205_3.txt b/eesanje/url_47_205_3.txt new file mode 100644 index 0000000000000000000000000000000000000000..a842f6ae19c83f95c28f192bb1750b0264b05043 --- /dev/null +++ b/eesanje/url_47_205_3.txt @@ -0,0 +1,11 @@ +ಮಧ್ಯಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ : 12 ಮಂದಿ ಸಜೀವ ದಹನ +ಭೂಪಾಲ್,ಡಿ.28- ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಭಿಕರ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಗುನಾದಲ್ಲಿ ಘನಘೋರ ಘಟನೆ ಸಂಭವಿಸಿದ್ದು, ಇಲ್ಲಿ ಬಸ್ ಮತ್ತು ಡಂರ್ಪ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಸಂಭವಿಸಿದ ತಕ್ಷಣ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಬಸ್ ಪಲ್ಟಿಯಾಗಿ ಬಸ್‍ನಲ್ಲಿದ್ದವರಿಗೆ ಗಾಯಗಳಾದ ಕಾರಣ ಅಲ್ಲಿಂದ ಪಾರಾಗಲು ಸಾಧ್ಯವಾಗಿಲ್ಲ. ಹೀಗಾಗಿ 13 ಮಂದಿ ಸಜೀವ ದಹನವಾಗಿದ್ದಾರೆ. ಅದಾಗ್ಯೂ, ಬಸ್ಸಿನ ಗಾಜು ಒಡೆದು 25 ಮಂದಿ ಪ್ರಾಣ ಉಳಿಸಿಕೊಂಡಿದ್ದಾರೆ. +ಗಾಯಾಳುಗಳನ್ನು ಗುನ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ. ಪ್ರಸ್ತುತ 17 ಮಂದಿ ಜಿಲ್ಲೆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. +ಕಂಬಕ್ಕೆ ಕಾರು ಅಪ್ಪಳಿಸಿ ನಾಲ್ವರು ಯುವಕರ ಸಾವು +ಮೃತದೇಹಗಳು ಬೆಂಕಿಯಲ್ಲಿ ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‍ಎ ಪರೀಕ್ಷೆ ನಡೆಸಲಾಗುವುದು. ಅಪಘಾತ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲು ಪರಿಶೀಲನೆ ನಡೆಯುತ್ತಿದೆ ಎಂದು ಅವರು ಹೇಳಿದರು. ಘಟನೆಯ ಸಮಯದಲ್ಲಿ ಬಸ್‍ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. +ಮಾಹಿತಿಯ ಪ್ರಕಾರ, ಬಸ್ ಸಂಖ್ಯೆ ಒP08P0199 ಡಿಸೆಂರ್ಬ 27 ರಂದು ರಾತ್ರಿ 8.30 ರ ಸುಮಾರಿಗೆ ಗುನಾದಿಂದ ಆರೋನ್‍ಗೆ ಹೊರಟಿತ್ತು. ಸುಮಾರು 25 ನಿಮಿಷಗಳ ನಂತರ, ಬಜರಂಗಗಡ ಪೊಲೀಸ್ ಠಾಣೆಗಿಂತ 5 ಕಿ.ಮೀ. ಮೊದಲು ಬಸ್ ಚಲಿಸುತ್ತಿದ್ದಾಗ ಎದುರುಗಡೆಯಿಂದ ವೇಗವಾಗಿ ಬಂದ ಡಂಪರ್‍ಗೆ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಡಿಕ್ಕಿ ಸಂಭವಿಸಿದ ತಕ್ಷಣ ಬಸ್ ಪಲ್ಟಿಯಾಗಿದೆ. ಅಷ್ಟರಲ್ಲೇ ಬಸ್‍ಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. +ಬಸ್ ಪಲ್ಟಿಯಾದ ತಕ್ಷಣ ಜೋರಾದ ಬೊಬ್ಬೆ ಕೇಳಿತ್ತು. ಸ್ಥಳೀಯರು ಏನಾಯಿತೆಂದು ಅರ್ಥ ಮಾಡಿಕೊಂಡು ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. +ತನಿಖೆಗೆ ಆದೇಶಈ ಅಪಘಾತದ ಸುದ್ದಿ ತಿಳಿದ ನಂತರ ಮಧ್ಯಪ್ರದೇಶ ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಸಂತಾಪ ವ್ಯಕ್ತಪಡಿಸಿದ್ದು, ಬಸ್ ಅಪಘಾತದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ ಮೃತರಿಗೆ ಸಿಎಂ ಮೋಹನ್ ಯಾದವ್ ತಲಾ 4 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿದ್ದು, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಜೊತೆಗೆ ಘಟನೆಯ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. +ಮೋದಿ ನೇತೃತ್ವದಲ್ಲಿ ಬದಲಾಗುತ್ತಿದೆ ಭಾರತ : ಓಂ ಬಿರ್ಲಾ +ಸಿಕಾರ್ವಾರ್ ಟ್ರಾವೆಲ್ಸ್‍ನ ಈ ಬಸ್‍ಗೆ ವಿಮೆ ಕೂಡ ಅನರ್ಹಗೊಂಡಿದ್ದು, ಫೆಬ್ರವರಿ 17, 2022 ರಿಂದ ಇನ್ಶೂರೆನ್ಸ್ ಚಾಲ್ತಿಯಲ್ಲಿಲ್ಲ ಎಂದು ತಿಳಿದು ಬಂದಿದೆ. ಅದರ ಬಸ್ಸನ್ನು ಓಡಿಸಲಾಗುತ್ತಿತ್ತು. ಅಚ್ಚರಿಯ ಸಂಗತಿ ಎಂದರೆ, ಈ ಬಸ್‍ಗೆ ವಿಮೆ ಮಾಡಿಸದೇ ಇರುವ ವಿಚಾರದಲ್ಲಿ ಆರ್‍ಟಿಒ ನಿರ್ಲಕ್ಷ್ಯ ಕೂಡ ಬೆಳಕಿಗೆ ಬಂದಿದೆ. +ಅಪಘಾತಕ್ಕೆ ಸಂಬಂಸಿದಂತೆ, 5 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಉಳಿದ ಶವಗಳನ್ನು ಗುರುತಿಸುವ ಪ್ರಯತ್ನ ನಡೆಸಲಾಗುತ್ತಿದೆ. ಬಸ್ಸು ಸುಟ್ಟು ಕರಕಲಾದ ಕಾರಣ ಮೃತದೇಹಗಳನ್ನು ಗುರುತಿಸಲು ಸಾಕಷ್ಟು ಕಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. \ No newline at end of file diff --git a/eesanje/url_47_205_4.txt b/eesanje/url_47_205_4.txt new file mode 100644 index 0000000000000000000000000000000000000000..49b1ef521b6314109cc85008fdfb537307cecf90 --- /dev/null +++ b/eesanje/url_47_205_4.txt @@ -0,0 +1,8 @@ +ಗೆಲ್ಲುವ ಅತಿಯಾದ ಆತ್ಮವಿಶ್ವಾಸದಲ್ಲಿ 22 ಲ್ಯಾಂಡ್ ಕ್ರೂಸರ್ ಖರೀದಿಸಿದ್ದ ಕೆಸಿಆರ್ +ಹೈದರಾಬಾದ್,ಡಿ.28- ಮತ್ತೆ ಅಧಿಕಾರಕ್ಕೆ ಬರಬೇಕು ಎಂಬ ಆಸೆಯಿಂದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಚುನಾವಣೆಗೂ ಮುನ್ನ ಯಾರಿಗೂ ಹೇಳದೆ 22 ಲ್ಯಾಂಡ್ ಕ್ರೂಸರ್ ವಾಹನಗಳನ್ನು ಖರೀದಿಸಿದ್ದರು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ. +ಪ್ರಜಾ ಪಾಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಕಾಂಗ್ರೆಸ್‍ನ ಆರು ಚುನಾವಣಾ ಖಾತ್ರಿಗಳ ಲಾಭ ಪಡೆಯಲು ಜನರು ಅರ್ಜಿಗಳನ್ನು ಭರ್ತಿ ಮಾಡಬಹುದು ಎಂದು ಸಿಎಂ ಆಗಿ 10 ದಿನವಾದರೂ ನನಗೆ ಗೊತಿಲ್ಲ. ಆದರೆ, ಕೆಸಿಆರ್ ಅವರು 22 ಲ್ಯಾಂಡ್ ಕ್ರೂಸರ್ ಖರೀದಿಸಿ ಬಚ್ಚಿಟ್ಟಿದ್ದಾರೆ ಎಂದು ದೂರಿದರು. +ಕೋವಿಡ್ ಹಗರಣದ ಪಾಲು ಕೇಂದ್ರಕ್ಕೆ ಹೋಗಿದೆಯೇ..? : ಸಚಿವ ಪ್ರಿಯಾಂಕ್ ಖರ್ಗೆ +ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಪತ್ತೆಹಚ್ಚಲು ಬಿಆರ್‍ಎಸ್ ಛಾಯಾ ತಂಡಗಳನ್ನು ರಚಿಸಲಿದೆ ಎಂಬ ಕೆಟಿಆರ್ ಅವರ ಟೀಕೆಗೆ ಪ್ರತಿಕ್ರಿಯಿಸಿದ ತೆಲಂಗಾಣ ಸಿಎಂ, ಯಾಕೆ ಛಾಯಾ ತಂಡ ಎಂದು ಪ್ರಶ್ನಿಸಿರುವ ಅವರು, ಪ್ರತಿಪಕ್ಷಗಳು ಸಲಹೆಗಳನ್ನು ನೀಡಬಹುದು ಮತ್ತು ಸರ್ಕಾರದ ನಿರ್ಧಾರಗಳನ್ನು ವಿಧಾನಸಭೆಯಲ್ಲಿ ವಿಶ್ಲೇಷಿಸಬಹುದು ಎಂದಿದ್ದಾರೆ. +ಯಾಕೆ ಛಾಯಾ ತಂಡ, ನಿನ್ನೆಯವರೆಗೆ ಸಚಿವರಾಗಿದ್ದಿರಿ, ಗೆದ್ದರೂ ಸೋತರೂ ನಿಮ್ಮ ಜೊತೆಯಲ್ಲಿ ಮಂತ್ರಿಗಳಿದ್ದಾರೆ, ಛಾಯಾ ಸಚಿವರಾಗಿ ಕೆಲಸ ಮಾಡಲಿ, ಇಲ್ಲಿಯವರೆಗೆ ಕೆಲಸ ಮಾಡಿಲ್ಲ, ಈಗಲಾದರೂ ಕೆಲಸ ಮಾಡುತ್ತಾರೆ, ಅಧಿಕಾರ ಕಳೆದುಕೊಂಡ ಕೆ.ಟಿ.ಆರ್ ಅವರು ಹಾಗೆ ಮಾತನಾಡುತ್ತಿದ್ದಾರೆ, ನಾವು ಇದನ್ನು ತಪ್ಪಾಗಿ ತೆಗೆದುಕೊಳ್ಳುವುದಿಲ್ಲ ಏಕೆಂದರೆ ಅಧಿಕಾರ ಕಳೆದುಕೊಂಡಾಗ ಜನರು ಭಯ ಮತ್ತು ನೋವಿನಿಂದ ಅನೇಕ ರೀತಿಯಲ್ಲಿ ಮಾತನಾಡುತ್ತಾರೆ, ಸಲಹೆಗಳನ್ನು ನೀಡಲು ಮತ್ತು ನಮ್ಮ ನಿರ್ಧಾರಗಳನ್ನು ವಿಶ್ಲೇಷಿಸಲು ನಿಮಗೆ ವಿಧಾನಸಭೆಯಲ್ಲಿ ಅವಕಾಶವಿದೆ ಎಂದು ಅವರು ಹೇಳಿದರು. +ಇದಲ್ಲದೆ, ರಾಜ್ಯದ ಪ್ರಮುಖ ವಿಷಯಗಳಲ್ಲಿ ಒಂದಾದ ಟಿಎಸ್‍ಪಿಎಸ್‍ಸಿ ಪರೀಕ್ಷೆಯ ಕುರಿತು ಮಾತನಾಡಿದ ತೆಲಂಗಾಣ ಸಿಎಂ, ಮಂಡಳಿಯ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ ಮತ್ತು ನಿರ್ಧಾರವು ಈಗ ರಾಜ್ಯಪಾಲರ ಬಳಿ ಇದೆ ಎಂದು ಹೇಳಿದರು. +ಪರೀಕ್ಷೆಗಳನ್ನು ನಡೆಸುವುದು ಅಥವಾ ಉದ್ಯೋಗ ಅರ್ಜಿಗಳನ್ನು ನೀಡುವುದು, ತೆಲಂಗಾಣ ರಾಜ್ಯ ಲೋಕಸೇವಾ ಆಯೋಗಕ್ಕೆ (ಟಿಎಸ್‍ಪಿಎಸ್‍ಸಿ) ಅಧ್ಯಕ್ಷರ ಅಗತ್ಯವಿದೆ. ಅಧ್ಯಕ್ಷರಿಲ್ಲದೆ ಈ ಕಾರ್ಯಕ್ರಮ ನಡೆಯಲು ಸಾಧ್ಯವಿಲ್ಲ. ಪ್ರಸ್ತುತ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ ಮತ್ತು ನಿರ್ಧಾರ ರಾಜ್ಯಪಾಲರ ಬಳಿ ಇದೆ. ರಾಜ್ಯಪಾಲರು ತೆಗೆದುಕೊಳ್ಳಲಿದ್ದಾರೆ. ಶೀಘ್ರದಲ್ಲೇ ನಿರ್ಧಾರ ಕೈಗೊಂಡು ಒಂದು ವರ್ಷದೊಳಗೆ 2 ಲಕ್ಷ ಉದ್ಯೋಗಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. \ No newline at end of file diff --git a/eesanje/url_47_205_5.txt b/eesanje/url_47_205_5.txt new file mode 100644 index 0000000000000000000000000000000000000000..31791b8e2389c0fd4b802b86be13171100bbebf6 --- /dev/null +++ b/eesanje/url_47_205_5.txt @@ -0,0 +1,4 @@ +ಕಂಬಕ್ಕೆ ಕಾರು ಅಪ್ಪಳಿಸಿ ನಾಲ್ವರು ಯುವಕರ ಸಾವು +ರಾಂಚಿ, ಡಿಸೆಂಬರ್ (ಪಿಟಿಐ) ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಜಾರ್ಖಾಂಡ್‍ನಲ್ಲಿ ನಡೆದಿದೆ. ರಾಂಚಿಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಿಗ್ಗೆ 1.30 ರ ಸುಮಾರಿಗೆ ಬೂಟಿ ಚೌಕ್ ಮತ್ತು ದುಮರ್ದಗಾ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ವಿಕಸಿತ ಭಾರತ ಸಂಕಲ್ಪ ಯಾತ್ರೆ ಯಶಸ್ವಿಗೆ ವಿಜಯೇಂದ್ರ ಕರೆ +ಬಹುಶಃ ಅತಿವೇಗದಲ್ಲಿ ಚಲಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ ಇದರ ಪರಿಣಾಮ ಕಂಬ ಮೂರು ತುಂಡಾಗಿದೆ ಎಂದು ಅವರು ಹೇಳಿದರು. ಸುಮಾರು 30 ವರ್ಷ ವಯಸ್ಸಿನ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರನ್ನು ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ಕರೆತರಲಾಯಿತು, ಅಲ್ಲಿ ವೈದ್ಯರು ಎಲ್ಲರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮೃತಪಟ್ಟವರೆಲ್ಲರೂ ರಾಂಚಿಯ ಬರಿಯಾತು ಬಸ್ತಿ ನಿವಾಸಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. \ No newline at end of file diff --git a/eesanje/url_47_205_6.txt b/eesanje/url_47_205_6.txt new file mode 100644 index 0000000000000000000000000000000000000000..0dbfcb19c4efaf83a52f6812d09ad22ad6ab2fce --- /dev/null +++ b/eesanje/url_47_205_6.txt @@ -0,0 +1,7 @@ +ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ +ನವದೆಹಲಿ,ಡಿ.27-ಭಾರತ್ ಜೋಡೋ ಯಾತ್ರೆಯ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ನವಚೈತನ್ಯ ತಂದುಕೊಟ್ಟ ರಾಹುಲ್‍ಗಾಂಧಿ, ಮತ್ತೆ 6200 ಕಿಲೋ ಮೀಟರ್ ದೂರದ ಭಾರತ್ ನ್ಯಾಯ ಯಾತ್ರೆಗೆ ಮುಂದಾಗಿದ್ದಾರೆ. ಎಐಸಿಸಿ ಕೇಂದ್ರ ಕಚೇರಿಯಲ್ಲಿಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್ ಮಕರಸಂಕ್ರಾಂತಿಗೂ ಮುನ್ನಾ ದಿನ ಜನವರಿ 14ರಿಂದ ಭಾರತ್ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ. 32 ದಿನಗಳ ಯಾತ್ರೆ ಮುಣಿಪುರದಿಂದ ಮುಂಬೈ ನಡುವೆ 14 ರಾಜ್ಯಗಳು 85 ಜಿಲ್ಲೆಗಳಲ್ಲಿ ಸಂಚರಿಸಲಿದೆ. +ಭಾರತ್ ಜೋಡೋ ಯಾತ್ರೆ ನಂತರ ಇದೀಗ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಭಾರತ ನ್ಯಾಯ ಯಾತ್ರೆ ಆಯೋಜಿಸಿದೆ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಆರ್ಥಿಕ ಅಸಮಾನತೆ, ಸಾಮಾಜಿಕ ಧ್ರುವೀಕರಣ ಮತ್ತು ರಾಜಕೀಯ ಸರ್ವಾಕಾರ ಸೇರಿ 3 ವಿಷಯಗಳನ್ನು ಪ್ರಸ್ತಾಪಿಸಿದ್ದರು. ಭಾರತ ನ್ಯಾಯ ಯಾತ್ರೆಯ ಸಂದರ್ಭದಲ್ಲಿ ಆರ್ಥಿಕ ನ್ಯಾಯ, ಸಾಮಾಜಿಕ ನ್ಯಾಯ ಮತ್ತು ರಾಜಕೀಯ ನ್ಯಾಯ ವಿಷಯಗಳನ್ನು ಪ್ರಸ್ತಾಪಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದರು. +ಯಾತ್ರೆ ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‍ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿ 85 ಜಿಲ್ಲೆಗಳನ್ನು ವ್ಯಾಪಿಸಿರುವ 6200 ಕಿಮೀ ದೂರವನ್ನು ಕ್ರಮಿಸಲಿದೆ. ಈ ಬಾರಿ ಪೂರ್ತಿಯಾಗಿ ಪಾದಯಾತ್ರೆ ಇರುವುದಿಲ್ಲ. ಅಲ್ಲಲ್ಲಿ ಬಸ್ ಮೂಲಕ ಸಂಚರಿಸಲಿದೆ, ಕೆಲವೊಮ್ಮೆ ಪಾದಯಾತ್ರೆ ಆಯೋಜಿಸಲಾಗುವುದು. +ಮದುವೆಯಾದ ಮರುಕ್ಷಣವೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು +ಭದ್ರತಾ ಸಂಸ್ಥೆಗಳ ಸಲಹೆ ಆಧಾರಿಸಿ ಯಾತ್ರೆಯ ಸ್ವರೂಪ ನಿರ್ಧರಿಸಲಾಗುವುದು ಎಂದು ಹೇಳಿದರು. ನಾಳೆ (ಡಿಸೆಂಬರ್ 28) ನಾಗ್ಪುರದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ಹೈ ನಾರಾಯಣ ಹಮ್ ಹೆಸರಿನಲ್ಲಿ ಮೆಗಾ ರ್ಯಾಲಿ ನಡೆಯಲಿದೆ. ಈ ಮೆಗಾ ರ್ಯಾಲಿ 2024 ರ ಲೋಕಸಭೆ ಚುನಾವಣೆಗೆ ಎಚ್ಚರಿಕೆಯ ಗಂಟೆಯಾಗಲಿದೆ ಎಂದು ತಿಳಿಸಿದರು. +ಕೆ.ಸಿ.ವೇಣುಗೋಪಾಲ್ ಮಾತನಾಡಿ, ಡಿಸೆಂಬರ್ 21 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಾಹುಲ್ ಗಾಂಧಿ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ಪ್ರಾರಂಭಿಸಬೇಕು ಎಂಬ ಅಭಿಪ್ರಾಯವನ್ನು ನೀಡಿತು. ಸಿಡಬ್ಲ್ಯುಸಿಯ ಆಶಯವನ್ನು ಈಡೇರಿಸಲು ರಾಹುಲ್ ಗಾಂಧಿ ಕೂಡ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈವರೆಗೆ ಭಾರತ್ ನ್ಯಾಯ ಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎಂದರು. \ No newline at end of file diff --git a/eesanje/url_47_205_7.txt b/eesanje/url_47_205_7.txt new file mode 100644 index 0000000000000000000000000000000000000000..3e17722879d76894c94a107ca66a3cb2c2ea404b --- /dev/null +++ b/eesanje/url_47_205_7.txt @@ -0,0 +1,7 @@ +ಲೋಕಸಭೆ ಚುನಾವಣೆ ಘೋಷಣೆ ಮುನ್ನವೇ ಅಭ್ಯರ್ಥಿಗಳ ಲಿಸ್ಟ್ ಪ್ರಕಟಿಸಲು ಮುಂದಾದ ಬಿಜೆಪಿ +ನವದೆಹಲಿ,ಡಿ.27- ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನಡೆಸಿದ ಕಾರ್ಯತಂತ್ರಗಳು ಫಲ ಕೊಟ್ಟ ಹಿನ್ನೆಲೆಯಲ್ಲಿ ಆಡಳಿತ ಬಿಜೆಪಿ ಈ ಬಾರಿ ಚುನಾವಣಾ ದಿನಾಂಕ ಘೋಷಣೆಯಾಗುವ ಮುನ್ನವೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲು ಮುಂದಾಗಿದೆ. ಮೂಲಗಳ ಪ್ರಕಾರ, ಜನವರಿ ತಿಂಗಳ ಅಂತ್ಯಕ್ಕೆ ಬಿಜೆಪಿ ಸುಮಾರು ಗೆದ್ದೇ ಗೆಲ್ಲುವ 300 ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯಸಭಾ ಸದಸ್ಯರೂ ಕೂಡ ಸ್ಪರ್ಧೆ ಮಾಡುವ ಸಾಧ್ಯತೆಯಿದ್ದು, ಗೆದ್ದೇ ಗೆಲ್ಲುವ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ. +ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ದಿನಾಂಕ ಘೋಷಣೆಯಾಗುವ ಮುನ್ನವೇ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಪರಿಣಾಮ ಆಡಳಿತ ವಿರೋಧಿ ಅಲೆಯ ನಡುವೆಯೂ ಮಧ್ಯಪ್ರದೇಶದಲ್ಲಿ ಮರಳಿ ಅಧಿಕಾರಕ್ಕೆ ಬಂದರೆ ಸೋಲಬಹುದು ಎಂದು ಊಹಿಸಲಾಗಿದ್ದ ರಾಜಸ್ಥಾನ ಮತ್ತು ಛತ್ರೀಸ್‍ಗಡದಲ್ಲಿ ಗೆಲುವು ಸಾಧಿಸಿತು. +ತೆಲಂಗಾಣದಲ್ಲಿ ಗೆದ್ದಿದ್ದು 8 ಕ್ಷೇತ್ರಗಳಾದರೂ ಮತಗಳಿಕೆ ಪ್ರಮಾಣ ಹೆಚ್ಚಾಗಿರುವುದು ಬಿಜೆಪಿಯ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಹೀಗಾಗಿ ಈ ಬಾರಿ ಚುನಾವಣಾ ಆಯೋಗ ಮಾರ್ಚ್ ತಿಂಗಳ ಅಂತ್ಯಕ್ಕೆ ಲೋಕಸಭೆ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಭವವಿದೆ. +ಮಂಜಿನ ನಗರಿಯಾದ ದೆಹಲಿ, ಆರೆಂಜ್ ಅಲರ್ಟ್ ಘೋಷಣೆ +ಇವೆಲ್ಲವನ್ನೂ ಅರಿತಿರುವ ಬಿಜೆಪಿ ವರಿಷ್ಠರು ಟಿಕೆಟ್ ಕೈ ತಪ್ಪುವವರಿಗೆ ಮೊದಲೇ ಮಾಹಿತಿಯನ್ನು ನೀಡಲಿದ್ದಾರೆ. ಅಭ್ಯರ್ಥಿಗಳ ಹೆಸರನ್ನು ಮುಂಚಿತವಾಗಿ ಘೋಷಿಸಿದರೆ ಕನಿಷ್ಠ ಪಕ್ಷ 3 ತಿಂಗಳು ಕ್ಷೇತ್ರದಾದ್ಯಂತ ಪ್ರವಾಸ ಸಂಘಟನೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ. +ಕೊನೆಕ್ಷಣದಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದರೆ ಭಿನ್ನಮತ ಎದುರಾಗುತ್ತದೆ. ಇದನ್ನು ತಪ್ಪಿಸಲು ಮುಂಚಿತವಾಗಿಯೇ ಪಟ್ಟಿಯನ್ನು ಪ್ರಕಟಿಸುವ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. \ No newline at end of file diff --git a/eesanje/url_47_205_8.txt b/eesanje/url_47_205_8.txt new file mode 100644 index 0000000000000000000000000000000000000000..7b60f89385ff0978174196e3926507c515c48d76 --- /dev/null +++ b/eesanje/url_47_205_8.txt @@ -0,0 +1,6 @@ +ಶಬರಿಮಲೈಯಲ್ಲಿ ಭಕ್ತರ ನೂಕುನುಗ್ಗಲು +ಶಬರಿಮಲೈ, ಡಿ.27- ಇಲ್ಲಿನ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಮಂಗಳಕರ ಮಂಡಲ ಪೂಜೆ ಅಂಗವಾಗಿ ಲಕ್ಷಾಂತರ ಭಕ್ತರು ಇಲ್ಲಿಗೆ ಆಗಮಿಸಿದ್ದು, ನೂಕು ನುಗ್ಗಲು ಉಂಟಾಗಿದೆ ದರ್ಶನಕ್ಕಾಗಿ ಭಕ್ತರ ಪರದಾಟ ಹೆಚ್ಚಾಗಿದೆ. ಕನಿಷ್ಠ ಸೌಲಭ್ಯಗಳಿಲ್ಲದೆ ಅಸ್ತವ್ಯಸ್ತ ಉಂಟಾಗಿ ದೇವಾಲಯದ ಆಡಳಿತ ಮಂಡಳಿಯ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಪವಿತ್ರ ಇರುಮುಡಿಕಟ್ಟು ತಲೆಯ ಮೇಲೆ ಹೊತ್ತು ಸ್ವಾಮಿಯೇ ಶರಣಂ ಅಯ್ಯಪ್ಪ ಮಂತ್ರಗಳನ್ನು ಪಠಿಸುತ್ತಿರುವ ಯಾತ್ರಾರ್ಥಿಗಳ ಉದ್ದನೆಯ ಸರತಿ ಸಾಲುಗಳು ದೇವಾಲಯದ ಸಂಕೀರ್ಣವಾದ ಸನ್ನಿಧಾನದಲ್ಲಿ ಕಂಡು ಬಂದಿದೆ. ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಎರಡು ತಿಂಗಳ ಕಾಲ ನಡೆಯುವ ವಾರ್ಷಿಕ ತೀರ್ಥಯಾತ್ರೆಯ ಮೊದಲ ಪಾದದ ಮುಕ್ತಾಯವನ್ನು ಸೂಚಿಸುವ ಮಂಡಲ ಪೂಜೆಯ ಭಕ್ತ ಸಾಗರಕ ದರ್ಶನ ಪಡೆದು ಧನ್ಯತೆ ಭಾವ ಮೂಡಿಸಿಕೊಂಡಿದ್ದಾರೆ. +ಚೆನ್ನೈನಲ್ಲಿ ರಸಗೊಬ್ಬರ ಘಟಕದಿಂದ ಅಮೋನಿಯಾ ಸೋರಿಕೆ +ಅಯ್ಯಪ್ಪ ದೇವರ ಪವಿತ್ರ ತಂಕ ಅಂಕಿ (ಚಿನ್ನದ ವಸ್ತ್ರ) ಹೊತ್ತ ವಿಧ್ಯುಕ್ತ ಮೆರವಣಿಗೆ ನಿನ್ನೆ ಸಂಜೆ ಇಲ್ಲಿನ ಬೆಟ್ಟದ ದೇಗುಲವನ್ನು ತಲುಪಿತು.ದೇವಾಲಯದ ಆಡಳಿತ ಮೂಲಗಳ ಪ್ರಕಾರ, ಪ್ರಧಾನ ದೇವರಾದ ಅಯ್ಯಪ್ಪ ದೇವರ ವಿಗ್ರಹದ ಮೇಲ್ಮೈ ಅಲಂಕರಿಸಿದ ನಂತರ ಪೂಜೆಯನ್ನು ಮಾಡಲಾಗುತ್ತದೆ. +ಬೆಳಗ್ಗೆ 10.30ರಿಂದ 11.30ರವರೆಗೆ ಪೂಜಾ ವಿಧಿವಿಧಾನಗಳು ನೆರವೇರಿದೆ ಮಂಡಲ ಪೂಜೆಯ ನಂತರ, ದೇಗುಲವನ್ನು ರಾತ್ರಿ 11.00 ಗಂಟೆಗೆ ಮುಚ್ಚಲಾಗುವುದು ಮತ್ತು ಡಿಸೆಂಬರ್ 30 ರಂದು ಮಕರವಿಳಕ್ಕು ಧಾರ್ಮಿಕ ಕ್ರಿಯೆಗಳಿಗೆ ಪುನಃ ತೆರೆಯಲಾಗುವುದು. ಶಬರಿಮಲೆ ದೇಗುಲದಲ್ಲಿ ಮಕರವಿಳಕ್ಕು ಆಚರಣೆ ಜನವರಿ 15 ರಂದು ನಡೆಯಲಿದೆ ಎಂದು ಟಿಡಿಬಿ ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_205_9.txt b/eesanje/url_47_205_9.txt new file mode 100644 index 0000000000000000000000000000000000000000..65a08e8cf4fd4aa6923382abf37bac4856852799 --- /dev/null +++ b/eesanje/url_47_205_9.txt @@ -0,0 +1,9 @@ +ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಯ ಮನೆಯಲ್ಲಿ ವಾದ್ರಾ ವಾಸ್ತವ್ಯ +ನವದೆಹಲಿ,ಡಿ.27- ಅಕ್ರಮ ಹಣ ವರ್ಗಾವಣೆ ಪ್ರಕರಣದ ಮಧ್ಯವರ್ತಿಯಾಗಿರುವ ಸಂಜಯ್ ಭಂಡಾರಿ ಅವರ ಲಂಡನ್ ನಿವಾಸದಲ್ಲಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರು ವಾಸ್ತವ್ಯ ಹೂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ಭಂಡಾರಿ ಅವರಿಗೆ ಸೇರಿದ ಲಂಡನ್ ನಿವಾಸವನ್ನು ನವೀಕರಿಸಿ ವಾದ್ರಾ ಅವರು ಅಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಇಡಿ ತಿಳಿಸಿದೆ. +ಭಂಡಾರಿ 2016 ರಲ್ಲಿ ಯುಕೆಗೆ ಪಲಾಯನ ಮಾಡಿದರು ಮತ್ತು ಇಡಿ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ಮಾಡಿದ ಕಾನೂನು ವಿನಂತಿಯ ಮೇರೆಗೆ ಈ ವರ್ಷದ ಜನವರಿಯಲ್ಲಿ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟಿಷ್ ಸರ್ಕಾರ ಅನುಮೋದನೆ ನೀಡಿತು. +ಎರಡು ಫೆಡರಲ್ ಏಜೆನ್ಸಿಗಳು ವಿದೇಶದಲ್ಲಿ ಬಹಿರಂಗಪಡಿಸದ ಆಸ್ತಿಗಳನ್ನು ಹೊಂದಿರುವ ಉದ್ಯಮಿಯ ವಿರುದ್ಧ ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆಯ ಆರೋಪಗಳನ್ನು ತನಿಖೆ ನಡೆಸುತ್ತಿವೆ. ಈ ಪ್ರಕರಣದಲ್ಲಿ ಫೆಡರಲ್ ಏಜೆನ್ಸಿ ವಾದ್ರಾ ಅವರನ್ನು ಹೆಸರಿಸಿರುವುದು ಇದೇ ಮೊದಲು ಎನ್ನಲಾಗಿದೆ. +ಯುಎಇ ಮೂಲದ ಎನ್‍ಆರ್‍ಐ ಉದ್ಯಮಿ ಸಿ ಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಈ ಪ್ರಕರಣದಲ್ಲಿ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ.ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಧಿಸಲಾಯಿತು ಹಾಗೂ ಅವರು ವಾದ್ರಾ ಅವರ ಆಪ್ತ ಸಹಚರ ಎಂದು ಇಡಿ ಆರೋಪಿಸಿದೆ. ಥಂಪಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಸಂಜಯ್ ಭಂಡಾರಿ ಅವರು ಈ ಕೆಳಗಿನ ಆಸ್ತಿಗಳನ್ನು ಒಳಗೊಂಡಂತೆ ಹಲವಾರು ಬಹಿರಂಗಪಡಿಸದ ವಿದೇಶಿ ಆದಾಯ ಮತ್ತು ಆಸ್ತಿಗಳನ್ನು ಲಂಡನ್‍ನ ನಂ 12 ಬ್ರಿಯಾನ್‍ಸ್ಟನ್ ಸ್ಕ್ವೇರ್ ಮತ್ತು 6 ಗ್ರೋಸ್ವೆನರ್ ಹಿಲ್ ಕೋರ್ಟ್ ಎಂಬ ಆಸ್ತಿ ಹೊಂದಿದ್ದಾರೆ. ಈ ಆಸ್ತಿಗಳು ಪಿಎಂಎಲ್‍ಎ ನಿಬಂಧನೆಗಳ ಪ್ರಕಾರ ಅಪರಾಧದ ಆದಾಯವಾಗಿದೆ ಮತ್ತು ಸಿ ಸಿ ಥಂಪಿ ಮತ್ತು ಸುಮಿತ್ ಚಡ್ಡಾ ಈ ಅಪರಾಧದ ಆದಾಯವನ್ನು ಮರೆಮಾಚುವಿಕೆ ಮತ್ತು ಬಳಕೆಯಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿದೆ ಎಂದು ಇಡಿ ಆರೋಪಿಸಿದೆ. +ರಾಬರ್ಟ್ ವಾದ್ರಾ ಲಂಡನ್‍ನ 12 ಬ್ರಿಯಾನ್‍ಸ್ಟನ್ ಸ್ಕ್ವೇರ್‍ನಲ್ಲಿರುವ ಮೇಲೆ ಹೇಳಿದ ಆಸ್ತಿಯನ್ನು ಸುಮಿತ್ ಚಡ್ಡಾ ಮೂಲಕ ನವೀಕರಿಸಿದ್ದು ಮಾತ್ರವಲ್ಲದೆ ಅಲ್ಲೇ ವಾಸ್ತವ್ಯ ಹೂಡಿದ್ದಾರೆ ಎನ್ನುವುದು ಇಡಿ ವಾದವಾಗಿದೆ. ರಾಬರ್ಟ್ ವಾದ್ರಾ ಹಾಗೂ ಸಿ ಸಿ ಥಂಪಿ ಫರಿದಾಬಾದ್‍ನಲ್ಲಿ (ದೆಹಲಿ ಬಳಿ) ದೊಡ್ಡ ಪ್ರಮಾಣದ ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಪರಸ್ಪರ ಹಣಕಾಸಿನ ವಹಿವಾಟು ನಡೆಸಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. +ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ವಾದ್ರಾ ಅವರನ್ನು ಈ ಹಿಂದೆ ಇಡಿ ಪ್ರಶ್ನಿಸಿತ್ತು ಹಾಗು ಅವರು ತಪ್ಪನ್ನು ನಿರಾಕರಿಸಿದ್ದರು. ನವೆಂಬರ್ 22 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ಸಲ್ಲಿಸಲಾದ ಪೂರಕ ಪ್ರಾಸಿಕ್ಯೂಷನ್ ದೂರನ್ನು ದೆಹಲಿ ನ್ಯಾಯಾಲಯವು ಡಿಸೆಂಬರ್ 22 ರಂದು ಪರಿಗಣಿಸಿದೆ ಎಂದು ಇಡಿ ಹೇಳಿದೆ. \ No newline at end of file diff --git a/eesanje/url_47_206_1.txt b/eesanje/url_47_206_1.txt new file mode 100644 index 0000000000000000000000000000000000000000..33c0e6d76e83d61cd3879874d6a84a05888a4a00 --- /dev/null +++ b/eesanje/url_47_206_1.txt @@ -0,0 +1,7 @@ +ಮದುವೆಯಾದ ಮರುಕ್ಷಣವೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು +ಮೀರತ್, ಡಿ.27- ಕುಟುಂಬದವರ ವಿರೋಧವನ್ನು ಲೆಕ್ಕಿಸದೆ ವಿವಾಹದ ವಿಧಿ ವಿಧಾನ ನೆರವೇರಿಸಿಕೊಂಡ ಪ್ರೇಮಿಗಳು ನಂತರ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಬುಧನಗರ ಪ್ರದೇಶದ ರಾಖಿ ಚೌಹಾಣ್ (21) ಮತ್ತು ಉತ್ತರಾಖಂಡದ ಹರಿದ್ವಾರದ ಮನೀಶ್ ಚೌಹಾಣ್ (24) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಪ್ರೇಮಿಗಳು ಇಬ್ಬರ ಮೃತದೇಹಗಳು ಇಲ್ಲಿನ ಬಹ್ಸುಮಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಪ್ರಾಥಮಿಕ ತನಿಖೆಯ ಪ್ರಕಾರ, ರಾಖಿ ಮತ್ತು ಮನೀಶ್ ಪರಸ್ಪರ ಪ್ರೀತಿಸುತ್ತಿದ್ದರು ಆದರೆ ಅವರ ಸಂಬಂಧವನ್ನು ಅವರ ಕುಟುಂಬಗಳು ವಿರೋಸಿದ್ದವು ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‍ಎಚ್‍ಒ) ಸಂತೋಷ್ ಕುಮಾರ್ ಹೇಳಿದ್ದಾರೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ರಾತ್ರಿ ಮನೀಶ್ ರಾಖಿಯನ್ನು ಭೇಟಿಯಾದರು. ಆಕೆಯ ಹಣೆಗೆ ಸಿಂಧೂರ ಹಚ್ಚಿ, ಸಿಹಿ ತಿನ್ನಿಸಿ ವಿವಾಹದ ವಿಧಿ ವಿಧಾನಗಳನ್ನು ಪೂರೈಸಿಕೊಂಡು ನಂತರ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ಹಗ್ಗದಿಂದ ಎರಡು ಕುಣಿಕೆಗಳನ್ನು ಮಾಡಿ ಒಬ್ಬರನ್ನೊಬ್ಬರು ಹಿಡಿದುಕೊಂಡು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ ಎಂದು ಅವರು ಹೇಳಿದರು. ಸ್ಥಳದಲ್ಲಿ ಸಿಂಧೂರ ಮತ್ತು ಸಿಹಿ ಪೆಟ್ಟಿಗೆಗಳು ಪತ್ತೆಯಾಗಿವೆ ಎಂದು ಅವರು ಹೇಳಿದರು. +✦ಯುವನಿಧಿ ಯೋಜನೆಗೆ ಯಾರು ಅರ್ಹರು..? ನೋಂದಣಿ ಹೇಗೆ..? +ನೇಣು ಬಿಗಿದುಕೊಂಡು ಉಸಿರುಗಟ್ಟಿ ಸಾವಿಗೆ ಕಾರಣ ಎಂದು ಮರಣೋತ್ತರ ಪರೀಕ್ಷೆ ವರದಿ ದೃಢಪಡಿಸಿದೆ. ಇಬ್ಬರೂ ಬಹುತೇಕ ಒಂದೇ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ. \ No newline at end of file diff --git a/eesanje/url_47_206_10.txt b/eesanje/url_47_206_10.txt new file mode 100644 index 0000000000000000000000000000000000000000..b6d0905f6171c6705aa675e676ee0541162a0ca3 --- /dev/null +++ b/eesanje/url_47_206_10.txt @@ -0,0 +1,10 @@ +ಫ್ರಾನ್ಸ್ ನಲ್ಲಿ ಸಿಲುಕಿಕೊಂಡಿದ್ದ 276 ಭಾರತೀಯರು ಮುಂಬೈಗೆ ವಾಪಸ್ +ಮುಂಬೈ,ಡಿ.26- ಮಾನವ ಕಳ್ಳಸಾಗಣೆ ಶಂಕೆಯ ಮೇಲೆ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ ಎನ್ನಲಾಗಿದ್ದ ವಿಮಾನದಲ್ಲಿದ್ದ 276 ಜನರು ಭಾರತಕ್ಕೆ ಮರಳಿದ್ದಾರೆ. ಇನ್ನೂ 23 ಮಂದಿ ಫ್ರಾನ್ಸ್‍ಗೆ ತೆರಳಲು ನಿರ್ಧರಿಸಿದ್ದಾರೆ. 303 ಭಾರತೀಯ ಪ್ರಯಾಣಿಕರಿದ್ದ ಲೆಜೆಂಡ್ ಏರ್‍ಲೈನ್ಸ್‍ಗೆ ಸೇರಿದ ವಿಮಾನ ತೆರಳಿದ ಬಳಿಕ ಫುಜಿರಾದಲ್ಲಿ ಅಲ್ಪಾವಧಿಯ ನಿಲುಗಡೆಯೊಂದಿಗೆ ಮುಂಬೈಗೆ ಆಗಮಿಸಿತು. +ವಿಮಾನ ನಿಲ್ದಾಣದಲ್ಲಿಯೇ ಎಲ್ಲಾ ಜನರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಮಾಡಿತ್ತು. ಮಕ್ಕಳ ಶಿಕ್ಷಣಕ್ಕಾಗಿ ಶಿಕ್ಷಕರನ್ನು ನೇಮಿಸಲಾಗಿತ್ತು. ವಿಮಾನವನ್ನು ನಿರ್ವಹಿಸುವ ಖಾಸಗಿ ಜೆಟ್ ಸಿಬ್ಬಂದಿ ಸದಸ್ಯರನ್ನು ಫ್ರಾನ್ಸ್ ಕೂಡ ವಿಚಾರಣೆ ನಡೆಸಿತ್ತು. ಇದಾದ ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು. +ವಿಮಾನದಲ್ಲಿದ್ದ 276 ಪ್ರಯಾಣಿಕರು ಹಿಂತಿರುಗಿದ್ದಾರೆ. ಇದರಲ್ಲಿ 23 ಜನರು ಫ್ರಾನ್ಸ್‍ಗೆ ಮರಳಿದ್ದಾರೆ. ಇತರ ಪ್ರಯಾಣಿಕರು ಸ್ವಯಂಪ್ರೇರಣೆಯಿಂದ ಭಾರತಕ್ಕೆ ಮರಳಿದ್ದಾರೆ. ಒಟ್ಟು 303 ಪ್ರಯಾಣಿಕರ ಪೈಕಿ ನಾಲ್ವರು ನೇಪಾಳದವರು. ಇಬ್ಬರು ಪ್ರಯಾಣಿಕರನ್ನು ಫ್ರೆಂಚ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲವೊಂದು ತಿಳಿಸಿದೆ. +ರಾಜ್ಯ ಬಿಜೆಪಿಯಲ್ಲಿ ಮತ್ತೆ ಪಾರುಪತ್ಯ ಸಾಧಿಸಿದ ಬಿಎಸ್‍ವೈ +11 ಮಂದಿ ಅಪ್ರಾಪ್ತ ವಯಸ್ಕರು ಇದ್ದರು. ಬಂಧಿತ ಇಬ್ಬರು ಪ್ರಯಾಣಿಕರನ್ನು ಮಾನವ ಕಳ್ಳಸಾಗಣೆಯಲ್ಲಿ ಅವರ ಪಾತ್ರ ಏನೆಂಬುದನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ಮೊದಲು ಈ ವಿಮಾನವು ಸೋಮವಾರ ಮಧ್ಯಾಹ್ನ 2:20 ಕ್ಕೆ ಮುಂಬೈ ತಲುಪಬೇಕಾಗಿತ್ತು, ಆದರೆ ಅದು ತಡವಾಯಿತು. ವಿಮಾನದಲ್ಲಿದ್ದ 50 ಪ್ರಯಾಣಿಕರು ಫ್ರಾನ್ಸ್ನಲ್ಲಿ ಆಶ್ರಯಕ್ಕಾಗಿ ಅರ್ಜಿ ಸಲ್ಲಿಸಿದ ಕಾರಣ ಹಿಂತಿರುಗಲು ಬಯಸುವುದಿಲ್ಲ ಎಂದು ಹೇಳಲಾಗಿದೆ. ನಂತರ ಕೆಲವು ಪ್ರಯಾಣಿಕರನ್ನು ಬಿಟ್ಟು ವಿಮಾನ ಮುಂಬೈಗೆ ಹೊರಟಿತು. ಆದರೆ, ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. +ರೊಮೇನಿಯಾದ ಲೆಜೆಂಡ್ ಏರ್ಲೈನ್ಸ್ನ ಈ ವಿಮಾನವು 303 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು, ಅವರಲ್ಲಿ ಹೆಚ್ಚಿನವರು ಭಾರತೀಯರು. ವಿಮಾನವು ದುಬೈನಿಂದ ನಿಕರಾಗುವಾಗೆ ಹೊರಟು ತೈಲ ತುಂಬಲು ಫ್ರಾನ್ಸ್ ವತ್ರಿ ವಿಮಾನ ನಿಲ್ದಾಣದಲ್ಲಿ ಗುರುವಾರ ಬಂದಿಳಿದಿತ್ತು. ಈ ಸಮಯದಲ್ಲಿ, ಮಾನವ ಕಳ್ಳಸಾಗಣೆಯ ಬಲಿಪಶುಗಳನ್ನು ಅದರಲ್ಲಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯನ್ನು ಫ್ರೆಂಚ್ ಅಧಿಕಾರಿಗಳಿಗೆ ತಿಳಿದು ಬಂದಿತ್ತು. +8 ವರ್ಷಗಳಿಂದ ಕೋಮಾದಲ್ಲಿದ್ದ ಯೋಧ ಹುತಾತ್ಮ +ಮಾನವ ಕಳ್ಳಸಾಗಣೆಯ ಶಂಕೆ ಹಿನ್ನಲೆಯಲ್ಲಿ 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಫ್ರಾನ್ಸ್‍ನಲ್ಲಿ ತಡೆದು ನಿಲ್ಲಿಸಲಾಗಿತ್ತು. ಈ ವಿಮಾನ ಯುಎಇಯಿಂದ ನಿಕರಾಗುವಾಗೆ ಹೋಗುತ್ತಿತ್ತು. ಮಾಹಿತಿಯ ಪ್ರಕಾರ, ಮಾನವ ಕಳ್ಳಸಾಗಣೆ ಶಂಕೆಯ ಮೇರೆಗೆ ಈ ವಿಮಾನವನ್ನು ಫ್ರಾನ್ಸ್‍ನಲ್ಲಿ ನಿಲ್ಲಿಸಲಾಗಿದೆ. ವಿಮಾನವನ್ನು ಫ್ರಾನ್ಸ್ ಅಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು. +ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲ ಬಾರಿಗೆ ಹಿಂದೂ ಮಹಿಳೆ ಸ್ಪರ್ಧೆ \ No newline at end of file diff --git a/eesanje/url_47_206_11.txt b/eesanje/url_47_206_11.txt new file mode 100644 index 0000000000000000000000000000000000000000..199320c5868794f7b97e637913dbbb71168b482e --- /dev/null +++ b/eesanje/url_47_206_11.txt @@ -0,0 +1,6 @@ +ಯುಪಿಯಲ್ಲಿ ಹಸಿರು ಹೈಡ್ರೋಜನ್ ನೀತಿ ಜಾರಿಗೆ ಯೋಗಿ ಸೂಚನೆ +ಲಕ್ನೋ,ಡಿ.26- ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿ ಶುದ್ಧ ಮತ್ತು ಹಸಿರು ಇಂಧನ ಉತ್ಪಾದನಾ ಮೂಲಗಳನ್ನು ಉತ್ತೇಜಿಸಲು ಹಸಿರು ಹೈಡ್ರೋಜನ್ ನೀತಿಯನ್ನು ಜಾರಿಗೆ ತರಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆಗಳನ್ನು ನೀಡಿದ್ದಾರೆ. +ಸಭೆಯಲ್ಲಿ ಕರಡು ನೀತಿಯನ್ನು ಪರಿಶೀಲಿಸುವಾಗ, ನೀತಿಯನ್ನು ಅಂತಿಮಗೊಳಿಸುವ ಮೊದಲು, ಈ ವಲಯದಲ್ಲಿ ಕೆಲಸ ಮಾಡುವ ಪಾಲುದಾರರನ್ನು ಸಹ ಸಮಾಲೋಚಿಸಬೇಕು, ಇದರಿಂದ ಹೂಡಿಕೆದಾರರು ಮತ್ತು ಬಳಕೆದಾರರು ಗರಿಷ್ಠ ಲಾಭವನ್ನು ಪಡೆಯಬಹುದು ಎಂದು ಅವರು ಹೇಳಿದರು. +ದೆಹಲಿಯಲ್ಲಿ ಕವಿದ ಮಂಜು : ವಿಮಾನ, ರೈಲು ಸಂಚಾರ ವಿಳಂಬ +ಹಸಿರು ಜಲಜನಕವು ಶುದ್ಧ ಶಕ್ತಿಯ ಮೂಲವಾಗಿದ್ದು, ನಿವ್ವಳ ಶೂನ್ಯ ಗುರಿಯನ್ನು ಸಾಧಿಸಲು ಸಹಾಯ ಮಾಡುತ್ತದೆ ಮತ್ತು ಅದನ್ನು ಪ್ರೋತ್ಸಾಹಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಹಸಿರು ಹೈಡ್ರೋಜನ್ ವಲಯದಲ್ಲಿ ಕೆಲಸ ಮಾಡುವ ಸಂಸ್ಥೆಗಳಿಗೆ ಗರಿಷ್ಠ ಪ್ರೋತ್ಸಾಹ ನೀಡುವ ಮೂಲಕ ಪ್ರೋತ್ಸಾಹಿಸಲು ಸೂಚನೆಗಳನ್ನು ನೀಡಲಾಯಿತು. ಘಟಕಗಳನ್ನು ಸ್ಥಾಪಿಸುವ ಕಂಪನಿಗಳಿಗೆ ಭೂಮಿಯ ಲಭ್ಯತೆ, ಸ್ಟ್ಯಾಂಪ್ ಡ್ಯೂಟಿ ಮತ್ತು ವಿದ್ಯುತ್ ಸುಂಕದಿಂದ ವಿನಾಯಿತಿ, ಬಂಡವಾಳ ಮತ್ತು ಬಡ್ಡಿ ಸಬ್ಸಿಡಿ, ಆಕರ್ಷಕ ಪ್ರೋತ್ಸಾಹ ಇತ್ಯಾದಿ ಸೌಲಭ್ಯಗಳನ್ನು ಒದಗಿಸಬೇಕು. +ನೀತಿಯನ್ನು ಅಂತಿಮಗೊಳಿಸುವ ಮೊದಲು ವಿವಿಧ ರಾಜ್ಯಗಳ ಸಂಬಂಧಿತ ನೀತಿಗಳನ್ನು ಅಧ್ಯಯನ ಮಾಡುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದರು. \ No newline at end of file diff --git a/eesanje/url_47_206_12.txt b/eesanje/url_47_206_12.txt new file mode 100644 index 0000000000000000000000000000000000000000..604bc0f84ef9cb9a4cf05d91d6003774e722934e --- /dev/null +++ b/eesanje/url_47_206_12.txt @@ -0,0 +1,6 @@ +8 ವರ್ಷಗಳಿಂದ ಕೋಮಾದಲ್ಲಿದ್ದ ಯೋಧ ಹುತಾತ್ಮ +ನವದೆಹಲಿ,ಡಿ.26- ಭಯೋತ್ಪಾದಕರ ಗುಂಡೇಟು ತಿಂದು ಕಳೆದ ಎಂಟು ವರ್ಷಗಳಿಂದ ಕೋಮಾದಲ್ಲಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಎಂಟು ವರ್ಷಗಳ ಜೀವನ್ಮರಣ ಹೋರಾಟದ ನಂತರ ಟೆರಿಟೋರಿಯಲ್ ಆರ್ಮಿಯ ಲೆಫ್ಟಿನೆಂಟ್ ಕರ್ನಲ್ ಕರಣ್ಬೀರ್ ಸಿಂಗ್ ನಾಟ್ ಹುತಾತ್ಮರಾದ ವೀರ ಯೋಧ ಎನ್ನಲಾಗಿದೆ. +ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಕಾರ್ಯಾಚರಣೆಯ ವೇಳೆ ಮುಖಕ್ಕೆ ಗುಂಡು ತಗುಲಿದ್ದ ಸೇನಾ ಪದಕ ವಿಜೇತ ಲೆಫ್ಟಿನೆಂಟ್ ಕರ್ನಲ್ ಕೆಬಿಎಸ್ ನ್ಯಾಟ್ ಅವರು 2015 ರಿಂದ ಕೋಮಾದಲ್ಲಿದ್ದರು. ಲೆಫ್ಟಿನೆಂಟ್ ಕರ್ನಲ್ ಕೆಬಿಎಸ್ ನ್ಯಾಟ್ ಅವರು 160 ಪದಾತಿ ಸೈನ್ಯದ ಬೆಟಾಲಿಯನ್ ಟಿಎ (ಜಮ್ಮು ಮತ್ತು ಕಾಶ್ಮೀರ ರೈಫಲ್ಸ) ನ ಎರಡನೇ ಇನ್ ಕಮಾಂಡ್ ಆಗಿದ್ದರು. 2015 ರ ನವಂಬರ್‍ನಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಹಾಜಿ ನಾಕಾ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಸೇನೆಯು ಕಾರ್ಯಾಚರಣೆಯನ್ನು ನಡೆಸಿತ್ತು. +ಅಭಿವೃದ್ಧಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸುವುದೆ ಸರ್ಕಾರದ ಗುರಿ : ಮೋದಿ +ಲೆಫ್ಟಿನೆಂಟ್ ಕರ್ನಲ್ ನ್ಯಾಟ್ ಅವರು ಸುಮಾರು 20 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ ಅನುಭವಿ ಅಧಿಕಾರಿಯಾಗಿದ್ದರು. ಟೆರಿಟೋರಿಯಲ್ ಆರ್ಮಿಗೆ ಸೇರುವ ಮೊದಲು, ಲೆಫ್ಟಿನೆಂಟ್ ಕರ್ನಲ್ ನ್ಯಾಟ್ 1997 ರಲ್ಲಿ ಚೆನ್ನೈನ ಆಫೀಸರ್ಸ್ ಟ್ರೇನಿಂಗ್ ಅಕಾಡೆಮಿಯಿಂದ ಉತ್ತೀರ್ಣರಾದ ನಂತರ ನಿಯಮಿತ ಸೈನ್ಯಕ್ಕೆ ಸೇರಿದರು ಮತ್ತು ಶಾರ್ಟ್ ಸರ್ವಿಸ್ ಕಮಿಷನ್ ಮೂಲಕ ಯಾಂತ್ರಿಕೃತ ಪದಾತಿ ದಳವಾದ ಬ್ರಿಗೇಡ್ ಆಫ್ ಗಾರ್ಡ್‍ನ 19 ನೇ ಬೆಟಾಲಿಯನ್‍ನಲ್ಲಿ ನಿಯೋಜಿಸಲ್ಪಟ್ಟಿದ್ದರು. +ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ, ಅವರು ಸಾಮಾನ್ಯ ಸೈನ್ಯವನ್ನು ತೊರೆದರು, ಆದರೂ ಆಲಿವ್ ಹಸಿರು ಮೇಲಿನ ಅವರ ಪ್ರೀತಿ ಎಂದಿಗೂ ಕೊನೆಗೊಳ್ಳಲಿಲ್ಲ ಮತ್ತು ಅವರು ಪ್ರಾದೇಶಿಕ ಸೈನ್ಯಕ್ಕೆ ಸೇರಿ ತಮ್ಮ ದೇಶ ಸೇವೆ ಮುಂದುವರೆಸಿದ್ದರು. \ No newline at end of file diff --git a/eesanje/url_47_206_2.txt b/eesanje/url_47_206_2.txt new file mode 100644 index 0000000000000000000000000000000000000000..95a2e70c2928e9517fbf05fbfb5edaa7553a7523 --- /dev/null +++ b/eesanje/url_47_206_2.txt @@ -0,0 +1,6 @@ +ಛತ್ತೀಸ್‍ಗಢದಲ್ಲಿ ಬಡವರಿಗೆ 5 ವರ್ಷ ಉಚಿತ ಅಕ್ಕಿ +ರಾಯ್‍ಪುರ,ಡಿ.27-ಛತ್ತೀಸ್‍ಗಢದ ಬಿಜೆಪಿ ಸರ್ಕಾರವು 2024 ರ ಜನವರಿಯಿಂದ ಮುಂದಿನ ಐದು ವರ್ಷಗಳವರೆಗೆ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡಲು ನಿರ್ಧರಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದಿಂದ 67 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +80 ಕೋಟಿ ಬಡವರನ್ನು ಒಳಗೊಂಡಿರುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸುವ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯ ರೀತಿಯಲ್ಲಿ ಛತ್ತೀಸ್‍ಗಢ ರಾಜ್ಯ ಆಹಾರ ಭದ್ರತಾ ಕಾಯ್ದೆಯಡಿ ಮುಂದಿನ ಐದು ವರ್ಷಗಳವರೆಗೆ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. +ಮುಖ್ಯಮಂತ್ರಿ ವಿಷ್ಣು ದೇವು ಸಾಯಿ ಅವರ ನಿರ್ದೇಶನದ ಮೇರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಂತಹ ಅಂತ್ಯೋದಯ ಮತ್ತು ಆದ್ಯತಾ ವರ್ಗದ ಪಡಿತರ ಚೀಟಿದಾರರಿಗೆ ಮುಂದಿನ ಐದು ವರ್ಷಗಳ ಜನವರಿ 2024 ರಿಂದ ಡಿಸೆಂಬರ್ 2028 ರವರೆಗೆ ಮಾಸಿಕ ಅರ್ಹತೆಯ ಪ್ರಕಾರ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲು ಸೂಚನೆಗಳನ್ನು ನೀಡಲಾಗಿದೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಈ ನಿರ್ಧಾರದಿಂದ ಅಂತ್ಯೋದಯ, ಆದ್ಯತೆಯ, ವಿಕಲಚೇತನರು ಮತ್ತು ಒಕ್ಕಲಿಗ ವರ್ಗದ 67,92,153 ಅರ್ಹ ಪಡಿತರ ಚೀಟಿದಾರರಿಗೆ ಅರ್ಹರಿಗೆ ಅನುಗುಣವಾಗಿ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತ ಅಕ್ಕಿ ಸಿಗಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_206_3.txt b/eesanje/url_47_206_3.txt new file mode 100644 index 0000000000000000000000000000000000000000..b5f738dfdd705d34bfa85413375b3e8811f3942d --- /dev/null +++ b/eesanje/url_47_206_3.txt @@ -0,0 +1,6 @@ +ಚೆನ್ನೈನಲ್ಲಿ ರಸಗೊಬ್ಬರ ಘಟಕದಿಂದ ಅಮೋನಿಯಾ ಸೋರಿಕೆ +ಚೆನ್ನೈ, ಡಿ 27 (ಪಿಟಿಐ) ಉತ್ತರ ಚೆನ್ನೈನ ಎನ್ನೋರ್‍ನಲ್ಲಿರುವ ರಸಗೊಬ್ಬರ ತಯಾರಿಕಾ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ಸ್ಥಾವರದಿಂದ ಸೋರಿಕೆಯಾದ ನಂತರ, ಡಿ.26 ರಂದು ರಾತ್ರಿ 11.45 ರ ಸುಮಾರಿಗೆ, ಅಹಿತಕರ ವಾಸನೆಯು ನೆರೆಹೊರೆಯಾದ್ಯಂತ ಹರಡಿತು. ಶೀಘ್ರದಲ್ಲೇ, ಉತ್ಪಾದನಾ ಸೌಲಭ್ಯದ ಸುತ್ತಮುತ್ತಲಿನ ಪೆರಿಯಾ ಕುಪ್ಪಂನಂತಹ ವಸತಿ ನೆರೆಹೊರೆಗಳಲ್ಲಿ 25 ಕ್ಕೂ ಹೆಚ್ಚು ಜನರು ಅಸ್ವಸ್ಥತೆ, ವಾಕರಿಕೆ ಮತ್ತು ಮೂರ್ಛೆ ಅನುಭವಿಸಿದರು ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ. +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಅನಿಲ ಸೋರಿಕೆ ಬಗ್ಗೆ ಸುದ್ದಿ ಹರಡಿದ ತಕ್ಷಣ, ಜನರು ಗಾಬರಿಯಿಂದ ತಮ್ಮ ಮನೆಗಳಿಂದ ಹೊರಬಂದು ರಸ್ತೆಗಳಲ್ಲಿ ಜಮಾಯಿಸಿ ಸಹಾಯಕ್ಕಾಗಿ ಕೋರಿದರು. ಅದೇ ಸಮಯದಲ್ಲಿ, ರಸಗೊಬ್ಬರ ಘಟಕದ ಅಧಿಕಾರಿಗಳು ತಾಂತ್ರಿಕ ದೋಷವನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ. +ತಜ್ಞರು ಸಮಸ್ಯೆಯನ್ನು ಪರಿಹರಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಪೊಲೀಸ್ ಸಿಬ್ಬಂದಿ ಜನರನ್ನು ಸಮಾಧಾನಪಡಿಸಿದರು ಮತ್ತು ಯಾವುದೇ ಸಮಸ್ಯೆ ಇಲ್ಲ ಎಂದು ತಮ್ಮ ಮನೆಗಳಿಗೆ ಹಿಂತಿರುಗಲು ವಿನಂತಿಸಿದರು. \ No newline at end of file diff --git a/eesanje/url_47_206_4.txt b/eesanje/url_47_206_4.txt new file mode 100644 index 0000000000000000000000000000000000000000..8327ef7631653b498c4ef5f833151a24ff6fe88b --- /dev/null +++ b/eesanje/url_47_206_4.txt @@ -0,0 +1,8 @@ +ಅಯೋಧ್ಯೆ ರಸ್ತೆಗಳಲ್ಲಿ ಸೂರ್ಯ ಸ್ತಂಭಗಳ ನಿರ್ಮಾಣ +ಅಯೋಧ್ಯೆ, ಡಿ 27 (ಪಿಟಿಐ) ಮುಂದಿನ ತಿಂಗಳು ರಾಮ ಮಂದಿರದಲ್ಲಿ ಅಯೋಧ್ಯೆಯ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಸಜ್ಜಾಗುತ್ತಿರುವಂತೆಯೇ, ದೇವಾಲಯದ ಪಟ್ಟಣದ ಪ್ರಮುಖ ರಸ್ತೆಯ ಉದ್ದಕ್ಕೂ ಸೂರ್ಯ ಸೂರ್ಯ ಸ್ತಂಭಗಳನ್ನು ಸ್ಥಾಪಿಸಲಾಗುತ್ತಿದೆ. 30 ಅಡಿ ಎತ್ತರದ ಕಂಬಗಳಲ್ಲಿ ಪ್ರತಿಯೊಂದೂ ಅಲಂಕಾರಿಕ ಮಂಡಲವನ್ನು ಹೊಂದಿದ್ದು ಅದು ರಾತ್ರಿಯಲ್ಲಿ ಬೆಳಗಿದಾಗ ಸೂರ್ಯನನ್ನು ಹೋಲುತ್ತದೆ. ಉತ್ತರ ಪ್ರದೇಶ ಲೋಕೋಪಯೋಗಿ ಇಲಾಖೆಯ ಅಯೋಧ್ಯಾ ವಿಭಾಗದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ನಯಾ ಘಾಟ್ ಬಳಿಯ ಲತಾ ಮಂಗೇಶ್ಕರ್ ಚೌಕ್ ಅನ್ನು ಅಯೋಧ್ಯೆ ಬೈಪಾಸ್‍ನೊಂದಿಗೆ ಸಂಪರ್ಕಿಸುವ ರಸ್ತೆ ಧರಮ್ ಪಥ್ ಅಂತಹ 40 ಪಿಲ್ಲರ್‍ಗಳನ್ನು ಸ್ಥಾಪಿಸಲಾಗುತ್ತಿದೆ. +ಹೊಸದಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಭಗವಾನ್ ರಾಮನ ವಿಗ್ರಹದ ಪ್ರತಿಷ್ಠಾಪನೆಗೆ ಮುಂಚಿತವಾಗಿ ಈ ಸೂರ್ಯ ಸ್ತಂಭಗಳನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಇವುಗಳಲ್ಲಿ ಇಪ್ಪತ್ತು ರಸ್ತೆಯ ಎರಡೂ ಬದಿಯಲ್ಲಿ 10 ಪಿಲ್ಲರ್‍ಗಳೊಂದಿಗೆ ಲತಾ ಮಂಗೇಶ್ಕರ್ ಚೌಕ್ ಬಳಿ ನೆಲೆಗೊಳ್ಳಲಿವೆ ಎಂದು ಸಹಾಯಕ ಎಂಜಿನಿಯರ್ ಎ ಪಿ ಸಿಂಗ್ ಇಲ್ಲಿ ಪಿಟಿಐಗೆ ತಿಳಿಸಿದರು. +ಸಿಎಎ ಜಾರಿಯಾಗುವುದು ಶತಸಿದ್ಧ : ಅಮಿತ್ ಶಾ +ಈಗಾಗಲೇ 10 ಪಿಲ್ಲರ್‍ಗಳನ್ನು ಅಳವಡಿಸಲಾಗಿದ್ದು, ರಸ್ತೆಯ ಇನ್ನೊಂದು ಬದಿಯಲ್ಲಿರುವ 10 ಕಾಲಂಗಳಲ್ಲಿ ಅಲಂಕಾರಿಕ ಗೋಳಗಳನ್ನು ಅಳವಡಿಸಲಾಗಿದೆ. ಇತರ 20 ಪಿಲ್ಲರ್‍ಗಳು ಸಾಕೇತ್ ಪೆಟ್ರೋಲ್ ಪಂಪ್ ಬಳಿಯ ಸತ್ರಂಗಿ ಪುಲ್‍ನ ಆಚೆ ಇದೇ ರಸ್ತೆಯಲ್ಲಿವೆ. ಆ ಭಾಗದಲ್ಲಿಯೂ ಕೆಲಸ ನಡೆಯುತ್ತಿದೆ ಮತ್ತು ಡಿಸೆಂಬರ್ 29 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಇದೆ ಎಂದು ಸಿಂಗ್ ಹೇಳಿದರು. +ಬಲರ್ವತ ಸಿಮೆಂಟ್ ಕಾಂಕ್ರೀಟ್‍ನಿಂದ ಮಾಡಿದ ಪ್ರತಿಯೊಂದು ಕಂಬವು ವಿಶೇಷ ಫೈಬರ್‍ನಿಂದ ಮಾಡಿದ ಅಲಂಕಾರಿಕ ಹೊದಿಕೆಯನ್ನು ಹೊಂದಿದೆ. ಇದು ಜೈ ಶ್ರೀರಾಮ್ ಘೋಷಣೆ, ಭಗವಾನ್ ಹನುಮಂತನ ಗದೆ ಮತ್ತು ಇತರ ಅಲಂಕಾರಿಕ ಲಕ್ಷಣಗಳನ್ನು ಹೊಂದಿದೆ ಎಂದು ಅಕಾರಿ ತಿಳಿಸಿದ್ದಾರೆ. ಅಯೋಧ್ಯೆಯು ಭಗವಾನ್ ರಾಮ್ ಜಿ ಮತ್ತು ಭಗವಾನ್ ಹನುಮಾನ್ ನಗರವಾಗಿದೆ ಎಂದು ಅವರು ಸೇರಿಸಿದರು.ಈ ಯೋಜನೆಯನ್ನು ಅಕ್ಟೋಬರ್‍ನಲ್ಲಿ ಕಲ್ಪಿಸಲಾಗಿತ್ತು ಮತ್ತು ಈ ತಿಂಗಳ ಆರಂಭದಲ್ಲಿ ಸ್ಥಾಪನೆಗಳನ್ನು ಪ್ರಾರಂಭಿಸಲಾಯಿತು ಎಂದು ಪಿಡಬ್ಲ್ಯೂಡಿ ಅಧಿಕಾರಿ ಹೇಳಿದರು. +ಬಿಜೆಪಿಯಿಂದ ಅನುಪಮ್ ಹಜ್ರಾ ವಜಾ +ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ದೇವಸ್ಥಾನದ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ, ಮೋದಿ ಅವರು ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಹಾಗೂ ಅವರು ವಿಮಾನ ನಿಲ್ದಾಣದಿಂದ ನಗರದವರೆಗೆ ರೋಡ್‍ಶೋ ನಡೆಸಲಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_206_5.txt b/eesanje/url_47_206_5.txt new file mode 100644 index 0000000000000000000000000000000000000000..db75d5b7368bd32cae471d8d678f913dbd8e7e7a --- /dev/null +++ b/eesanje/url_47_206_5.txt @@ -0,0 +1,8 @@ +ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟದ ಶಂಕಿತರ ಮೂಲ ಪತ್ತೆ..! +ನವದೆಹಲಿ, ಡಿ 27 (ಪಿಟಿಐ) ಇಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಪೋಟದ ಬಗ್ಗೆ ದೆಹಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ ಮತ್ತು ಸ್ಪೋಟಕ್ಕೆ ಸ್ವಲ್ಪ ಮೊದಲು ಇಬ್ಬರು ಯುವಕರು ಸ್ಥಳಕ್ಕೆ ಸಮೀಪವಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಮೂಲಗಳು ತಿಳಿಸಿವೆ. +ಚಾಣಕ್ಯಪುರಿ ರಾಜತಾಂತ್ರಿಕ ಎನ್‍ಕ್ಲೇವ್‍ನಲ್ಲಿರುವ ರಾಯಭಾರ ಕಚೇರಿ ಬಳಿ ನಿನ್ನೆ ನಡೆದ ಸೋಟದ ನಂತರ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಸ್ರೇಲ್ ರಾಯಭಾರಿ ಕಚೇರಿ ಮತ್ತು ದೆಹಲಿಯಲ್ಲಿರುವ ಯಹೂದಿ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳನ್ನು ಭದ್ರತಾ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಕಟ್ಟೆಚ್ಚರವನ್ನು ಹೆಚ್ಚಿಸಲು ಸ್ಥಳೀಯ ಪೊಲೀಸರನ್ನು ಕೇಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಪೊಲೀಸ್ ಮೂಲಗಳ ಪ್ರಕಾರ, ಸ್ಪೋಟಕ್ಕೆ ಸ್ವಲ್ಪ ಮೊದಲು ಇಬ್ಬರು ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸ್ಥಳದ ಸಮೀಪದಿಂದ ಸಿಸಿಟಿವಿ ದೃಶ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರು ಶಂಕಿತರೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಅಧಿಕಾರಿ ಹೇಳಿದರು. +ಭದ್ರತಾ ಸಂಸ್ಥೆಗಳು ಅಬ್ದುಲ್ ಕಲಾಂ ರಸ್ತೆ ಮತ್ತು ಪೃಥ್ವಿರಾಜ್ ರಸ್ತೆಯ ಲೇನ್‍ಗಳಿಂದ ಅನೇಕ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿವೆ. ಘಟನಾ ಸ್ಥಳದಲ್ಲಿ ಸ್ಪೋಟಕಗಳ ಅವಶೇಷಗಳು ಪತ್ತೆಯಾಗದ ಕಾರಣ, ರಾಸಾಯನಿಕ ಸ್ಪೋಟದ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. +ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎಗೆ ಬಹುಮತ ಗ್ಯಾರಂಟಿ : ಸಮೀಕ್ಷೆ +ಸ್ಪೋಟದಲ್ಲಿ ಯಾರೂ ಗಾಯಗೊಂಡಿಲ್ಲ ಆದರೆ ಇಸ್ರೇಲಿ ರಾಯಭಾರಿಯನ್ನು ಉದ್ದೇಶಿಸಿ ನಿಂದನೀಯ ಪತ್ರವು ಸೈಟ್ ಬಳಿ ಕಂಡುಬಂದಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಪತ್ರವು ನಿಂದನೀಯ ಸ್ವಭಾವವನ್ನು ಹೊಂದಿದೆ. ಬೆರಳಚ್ಚು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. +ಇದು ಇಂಗ್ಲಿಷ್‍ನಲ್ಲಿ ಬರೆಯಲಾದ ಒಂದು ಪುಟದ ಪತ್ರವಾಗಿದೆ. ಇದು ಸರ್ ಅಲ್ಲಾ ರೆಸಿಸ್ಟೆನ್ಸ್ ಹೆಸರಿನ ಕೆಲವು ಸಂಘಟನೆಗೆ ಸಂಬಂಧಿಸಿದೆ ಎಂದು ಶಂಕಿಸಲಾಗಿದೆ ಮತ್ತು ಪತ್ರದಲ್ಲಿ ಜಿಯೋನಿಸ್ಟ್‍ಗಳು, ಪ್ಯಾಲೆಸ್ಟೈನ್ ಮತ್ತು ಗಾಜಾ ಮುಂತಾದ ಪದಗಳನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ \ No newline at end of file diff --git a/eesanje/url_47_206_6.txt b/eesanje/url_47_206_6.txt new file mode 100644 index 0000000000000000000000000000000000000000..abac65f8e63a6ab9e88b8ca071763f6926ba1fe7 --- /dev/null +++ b/eesanje/url_47_206_6.txt @@ -0,0 +1,6 @@ +ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ +ಚಂಡೀಗಢ, ಡಿ 27 (ಪಿಟಿಐ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಹರಿಯಾಣದ ಜಜ್ಜರ್ ಜಿಲ್ಲೆಯ ಅಖಾರಾ ಕ್ಕೆ ಭೇಟಿ ನೀಡಿದರು ಮತ್ತು ಬಜರಂಗ್ ಪುನಿಯಾ ಸೇರಿದಂತೆ ಕುಸ್ತಿಪಟುಗಳ ಗುಂಪನ್ನು ಭೇಟಿ ಮಾಡಿದ್ದಾರೆ. ಜಿಲ್ಲೆಯ ಹಿರಿಯ ಹರಿಯಾಣ ಕಾಂಗ್ರೆಸ್ ನಾಯಕರ ಪ್ರಕಾರ, ಗಾಂಧಿಯವರು ಮುಂಜಾನೆಯೇ ಛಾರಾ ಗ್ರಾಮದ ವೀರೇಂದರ್ ಅಖಾರಾ ತಲುಪಿದರು. +ನಂತರ ಅವರು ಪುನಿಯಾ ಸೇರಿದಂತೆ ಇತರ ಹಲವಾರು ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿದರು. ಕುಸ್ತಿಪಟುಗಳೊಂದಿಗೆ ಗಾಂಧಿಯವರ ಭೇಟಿಯು ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‍ಐ) ಸುತ್ತಲಿನ ವಿವಾದದ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. +ಎರಡು ಬಾರಿ ವಿಶ್ವ ಚಾಂಪಿಯನ್‍ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸಲು ನಿರ್ಧರಿಸಿದ್ದಾರೆ, ಕುಸ್ತಿಪಟುಗಳು ನ್ಯಾಯಕ್ಕಾಗಿ ಕೆಟ್ಟದಾಗಿ ಹೋರಾಡುತ್ತಿರುವಾಗ ಅಂತಹ ಗೌರವಗಳು ಅರ್ಥಹೀನವಾಗುತ್ತವೆ ಎಂದು ಅವರು ಹೇಳಿದರು. +ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎಗೆ ಬಹುಮತ ಗ್ಯಾರಂಟಿ : ಸಮೀಕ್ಷೆ +ಡಿಸೆಂಬರ್ 21 ರಂದು ಡಬ್ಲ್ಯುಎಫ್‍ಐ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಒಲಿಂಪಿಕ್ ಪದಕ ವಿಜೇತ ಪುನಿಯಾ ಮತ್ತು ಒಲಂಪಿಕ್ಸ್ ಚಾಂಪಿಯನ್ ವೀರೇಂದ್ರ ಸಿಂಗ್ ಯಾದವ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಕೆಲವು ದಿನಗಳ ನಂತರ ಫೋಗಟ್ ಅವರು ಈ ನಿರ್ಧಾರ ಪ್ರಕಟಿಸಿದ್ದರು. ಅದೇ ರೀತಿ ರಿಯೊ ಗೇಮ್ಸ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಕ್ರೀಡೆಯನ್ನು ತೊರೆದಿದ್ದಾರೆ. \ No newline at end of file diff --git a/eesanje/url_47_206_7.txt b/eesanje/url_47_206_7.txt new file mode 100644 index 0000000000000000000000000000000000000000..c65cff4313391f4238cd4d3bce87a6f680a49f34 --- /dev/null +++ b/eesanje/url_47_206_7.txt @@ -0,0 +1,4 @@ +ಬಿಜೆಪಿಯಿಂದ ಅನುಪಮ್ ಹಜ್ರಾ ವಜಾ +ನವದೆಹಲಿ, ಡಿ 27 (ಪಿಟಿಐ) – ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪಶ್ಚಿಮ ಬಂಗಾಳದ ನಾಯಕ ಅನುಪಮ್ ಹಜ್ರಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಿದ್ದಾರೆ. ಲೋಕಸಭೆಯ ಮಾಜಿ ಸಂಸದ ಹಜ್ರಾ ಅವರು ರಾಜ್ಯದಲ್ಲಿ ಪಕ್ಷದ ಕಾರ್ಯಚಟುವಟಿಕೆಯನ್ನು ಕೆಲವು ಸಮಯದಿಂದ ಟೀಕಿಸುತ್ತಿದ್ದಾರೆ. +ಟೆಸ್ಟ್‌ಗೆ ಕನ್ನಡಿಗ ಪ್ರಸಿಧ್ ಕೃಷ್ಣ ಎಂಟ್ರಿ +ನಿನ್ನೆ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಕೋಲ್ಕತ್ತಾಗೆ ಹಲವಾರು ರಾಜಕೀಯ ಕಾರ್ಯಕ್ರಮಗಳಿಗಾಗಿ ಭೇಟಿ ನೀಡುವುದರೊಂದಿಗೆ ಬಿಜೆಪಿಯ ನಿರ್ಧಾರವು ಹೊರಬಿದ್ದಿದೆ. ಹಜ್ರಾ ಅವರನ್ನು ಹುದ್ದೆಯಿಂದ ತೆಗೆದುಹಾಕಿರುವುದು ಪಕ್ಷದೊಳಗಿನ ಭಿನ್ನಮತೀಯರಿಗೆ ಸಂಘಟನಾ ಶಿಸ್ತಿಗೆ ಅಂಟಿಕೊಳ್ಳುವಂತೆ ಮತ್ತು ನಾಯಕತ್ವದ ಗೆರೆಯನ್ನು ಅನುಸರಿಸಲು ಸಂದೇಶವಾಗಿದೆ ಎಂದು ಪರಿಗಣಿಸಲಾಗಿದೆ. \ No newline at end of file diff --git a/eesanje/url_47_206_8.txt b/eesanje/url_47_206_8.txt new file mode 100644 index 0000000000000000000000000000000000000000..452b5adcf27c6615043e8a97f6a5bbccbe305109 --- /dev/null +++ b/eesanje/url_47_206_8.txt @@ -0,0 +1,7 @@ +ಸಿಎಎ ಜಾರಿಯಾಗುವುದು ಶತಸಿದ್ಧ : ಅಮಿತ್ ಶಾ +ಕೋಲ್ಕತ್ತಾ, ಡಿ 27 (ಪಿಟಿಐ) ಪೌರತ್ವ (ತಿದ್ದುಪಡಿ) ಕಾಯ್ದೆಯ ಅನುಷ್ಠಾನವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇದು ದೇಶದ ಕಾನೂನು ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಲ್ಲಿನ ರಾಷ್ಟ್ರೀಯ ಗ್ರಂಥಾಲಯದಲ್ಲಿ ರಾಜ್ಯ ಬಿಜೆಪಿಯ ಸಾಮಾಜಿಕ ಮಾಧ್ಯಮ ಮತ್ತು ಐಟಿ ವಿಭಾಗದ ಸದಸ್ಯರ ಮುಚ್ಚಿದ ಬಾಗಿಲಿನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾ, ಸಿಎಎ ಜಾರಿಗೊಳಿಸುವುದು ಪಕ್ಷದ ಬದ್ಧತೆಯಾಗಿದೆ ಎಂದು ಹೇಳಿದರು. +ರಾಜ್ಯದ 42 ಲೋಕಸಭಾ ಸ್ಥಾನಗಳ ಪೈಕಿ 35ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು. 2019 ರ ಚುನಾವಣೆಯಲ್ಲಿ ಕೇಸರಿ ಪಾಳಯ 18 ಸ್ಥಾನಗಳನ್ನು ಪಡೆದುಕೊಂಡಿತ್ತು. ಬಂಗಾಳ ಬಿಜೆಪಿ ಮಾಧ್ಯಮ ಸೆಲ್ ಮುಚ್ಚಿದ ಬಾಗಿಲಿನ ಕಾರ್ಯಕ್ರಮದಲ್ಲಿ ಶಾ ಅವರ ಭಾಷಣದ ಪಾಯಿಂಟ್‍ಗಳ ಪಟ್ಟಿಯನ್ನು ಹಂಚಿಕೊಂಡಿದೆ. ನಂತರ ಸಂಜೆ, ಅದು ಶಾ ಅವರ ಭಾಷಣದ ಕೆಲವು ವೀಡಿಯೊ ತುಣುಕುಗಳನ್ನು ಸಹ ಹಂಚಿಕೊಂಡಿತು. +ಮುಂದಿನ ವಿಧಾನಸಭಾ ಚುನಾವಣೆಯ ನಂತರ ನಾವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಕೆಲಸ ಮಾಡಬೇಕಾಗಿದೆ. ಬಿಜೆಪಿ ಸರ್ಕಾರವು ಒಳನುಸುಳುವಿಕೆ, ಗೋವು ಕಳ್ಳಸಾಗಣೆ ಮತ್ತು ಸಿಎಎ ಮೂಲಕ ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ ಎಂದು ಅವರು ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದರು. +ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎಗೆ ಬಹುಮತ ಗ್ಯಾರಂಟಿ : ಸಮೀಕ್ಷೆ +ಸಿಎಎ ವಿಚಾರದಲ್ಲಿ ಜನರನ್ನು ದಾರಿತಪ್ಪಿಸುವುದಕ್ಕಾಗಿ ಬ್ಯಾನರ್ಜಿ ವಿರುದ್ಧ ಶಾ ಕಟುವಾದ ದಾಳಿ ನಡೆಸಿದರು.ಕೆಲವೊಮ್ಮೆ, ಆಕೆ ದೇಶದಲ್ಲಿ ಸಿಎಎ ಜಾರಿಗೆ ಬರುತ್ತದೋ ಇಲ್ಲವೋ ಎಂದು ಜನರನ್ನು, ನಿರಾಶ್ರೀತರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಾರೆ ಸಿಎಎ ದೇಶದ ಕಾನೂನು ಮತ್ತು ಅದರ ಅನುಷ್ಠಾನವನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ ಎಂದಿದ್ದಾರೆ.ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 2019 ರಲ್ಲಿ ಸಂಸತ್ತು ಅಂಗೀಕರಿಸಿದ ಸಿಎಎಯನ್ನು ವಿರೋಧಿಸುತ್ತಿದೆ. +2014 ಅಥವಾ ಅದಕ್ಕೂ ಮೊದಲು ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಸಿಎಎ ಪ್ರಯತ್ನಿಸುತ್ತದೆ. \ No newline at end of file diff --git a/eesanje/url_47_206_9.txt b/eesanje/url_47_206_9.txt new file mode 100644 index 0000000000000000000000000000000000000000..fd5f4d4091e34ac3cd7a0bc4eac0aa277598fff3 --- /dev/null +++ b/eesanje/url_47_206_9.txt @@ -0,0 +1,11 @@ +ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎಗೆ ಬಹುಮತ ಗ್ಯಾರಂಟಿ : ಸಮೀಕ್ಷೆ +ನವದೆಹಲಿ,ಡಿ.26- ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ಈ ಬಾರಿಯು ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಮೂರನೇ ಬಾರಿಗೆ ಜನಾದೇಶ ಪಡೆದು ಅಧಿಕಾರದ ಗದ್ದುಗೆ ಹಿಡಿಯಲಿದೆ. ಸಿವೋಟರ್ ಮತ್ತು ಎಬಿಪಿ ನ್ಯೂಸ್ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ಡಿ.15ರಿಂದ 21ರವರೆಗೆ 13,115 ಸ್ಯಾಂಪಲ್‍ಗಳ ಮೂಲಕ ಸಮೀಕ್ಷೆ ನಡೆಸಿದೆ. +ಈ ಸಮೀಕ್ಷೆಯ ಪ್ರಕಾರ 543 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ 295ರಿಂದ 335 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯುವ ಸಂಭವವಿದೆ. ಬಿಜೆಪಿಗೆ ಪ್ರಬಲ ಪೈಪೆಪೋಟಿ ನೀಡುತ್ತಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 165ರಿಂದ 205 ಕ್ಷೇತ್ರಗಳನ್ನು ಗೆದ್ದರೆ 35ರಿಂದ 60 ಕ್ಷೇತ್ರಗಳಲ್ಲಿ ಇತರರು ಗೆಲ್ಲಬಹುದಾಗಿದೆ. +ಈ ಸಮೀಕ್ಷೆಯಲ್ಲಿ ಮತ್ತೊಂದು ಗೋಚರವಾಗಿರುವ ಅಂಶವೆಂದರೆ ವಲಯವಾರುಗಳಲ್ಲಿ ಉತ್ತರಭಾರತ, ಪಶ್ಚಿಮ ಭಾರತ, ಮಧ್ಯಭಾರತಗಳಲ್ಲಿ ಬಿಜೆಪಿಗೆ ಭಾರೀ ಗೆಲುವು ಸಿಕ್ಕರೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಹಾಗೂ ಪ್ರಾದೇಶಿಕ ಪಕ್ಷಗಳು ಗೆಲ್ಲುವ ಸಂಭವವಿದೆ. ಈಶಾನ್ಯ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷಗಳೇ ಮೇಲುಗೈ ಸಾಧಿಸಲಿವೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. +ಉತ್ತರವಲಯದ 180 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 150ರಿಂದ 160 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಳ್ಳಲಿದೆ. ಪಶ್ಚಿಮ ವಲಯದ 78 ಲೋಕಸಭಾ ಕ್ಷೇತ್ರಗಳ ಪೈಕಿಗೆ ಬಿಜೆಪಿಗೆ 45ರಿಂದ 50 ಕ್ಷೇತ್ರಗಳು ಧಕ್ಕಲಿವೆ. ದಕ್ಷಿಣ ಭಾರತದ 132 ಕ್ಷೇತ್ರಗಳ ಪೈಕಿ ಬಿಜೆಪಿ 20ರಿಂದ 30 ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 70ರಿಂದ 80 ಸ್ಥಾನಗಳನ್ನು ಗೆಲ್ಲಬಹುದಾಗಿದೆ. +ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆಯಾಗಲಿದೆ : ಸಿದ್ದರಾಮಯ್ಯ +ಇದೇ ರೀತಿ ಪೂರ್ವ ವಲಯದಲ್ಲಿ 50ರಿಂದ 60, ಉತ್ತರ ವಲಯದಲ್ಲಿ 20ರಿಂದ 30 ಹಾಗೂ ಪಶ್ಚಿಮ ವಲಯದಲ್ಲಿ 25ರಿಂದ 30 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಭವಿಷ್ಯ ಹೇಳಿದೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ಪೈಕಿ ಮೂರು ರಾಜ್ಯಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. +ಮಧ್ಯಪ್ರದೇಶದ 29 ಕ್ಷೇತ್ರಗಳ ಪೈಕಿ ಬಿಜೆಪಿ 27ರಿಂದ 29, ಛತ್ತೀಸ್‍ಗಢದ 11 ಕ್ಷೇತ್ರಗಳ ಪೈಕಿ 9ರಿಂದ 11, ರಾಜಸ್ಥಾನದ 25 ಕ್ಷೇತ್ರಗಳ ಪೈಕಿ ಕಮಲ ಪಕ್ಷ 23ರಿಂದ 25 ಕ್ಷೇತ್ರಗಳನ್ನು ಗೆಲ್ಲಲಿದೆ. ದೇಶದ ಅತಿದೊಡ್ಡ ರಾಜ್ಯವಾದ ಉತ್ತರಪ್ರದೇಶದ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬರೋಬ್ಬರಿ 73ರಿಂದ 75 ಕ್ಷೇತ್ರಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. +ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಶೇ.52ರಷ್ಟು ಮತ ಪಡೆದು 28 ಕ್ಷೇತ್ರಗಳ ಪೈಕಿ 22ರಿಂದ 24 ಸ್ಥಾನಗಳನ್ನು ಗೆದ್ದರೆ ಕಾಂಗ್ರೆಸ್ 4ರಿಂದ 6 ಸ್ಥಾನಗಳನಷ್ಟೇ ಗೆಲ್ಲಬಹುದಾಗಿದೆ. ಉಳಿದಂತೆ ತೆಲಂಗಾಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ ಪಂಜಾಬ್‍ನಲ್ಲಿ ಆಪ್, ಬಿಹಾರದಲ್ಲಿ ಆರ್‍ಜೆಡಿ, ಜೆಡಿಯು, ಮಹಾರಾಷ್ಟ್ರದಲ್ಲಿ ಅಘಡಿ ಮೈತ್ರಿಕೂಟ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮುನ್ನಡೆ ಸಾಧಿಸಲಿದೆ. +ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆಯಲ್ಲಿ ಏನೇನಿದೆ..? +ದೇಶದಲ್ಲಿ ಯಾರು ಪ್ರಧಾನಿಯಾಗಬೇಕು ಎಂಬುದಕ್ಕೆ ಶೇ.58.6ರಷ್ಟು ಜನ ನರೇಂದ್ರ ಮೋದಿಗೆ ಬೆಂಬಲ ಸೂಚಿಸಿದ್ದರೆ, ಕಾಂಗ್ರೆಸ್ ನಾಯಕ ಶೆಜಕಜೀ.32ರಷ್ಟು ಜನ ಬೆಂಬಲ ಸೂಚಿಸಿದ್ದಾರೆ. ಶೇ.47.2ರಷ್ಟು ಜನ ಪ್ರಧಾನಿ ಕಾರ್ಯವೈಖರಿ ತೃಪ್ತಿಕರವಾಗಿದೆ ಎಂದರೆ, ಶೇ.30.2ರಷ್ಟು ಜನ ಆಡಳಿತ ಸಮಾಧಾನಕರವಾಗಿದೆ ಎಂದಿದ್ದಾರೆ, ಶೇ.21.3ರಷ್ಟು ಜನಎಲ್ಲವೂ ತೃಪ್ತಿಕರವಾಗಿಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_207_1.txt b/eesanje/url_47_207_1.txt new file mode 100644 index 0000000000000000000000000000000000000000..cf945a05dd347be4c81a55fff94a0a1ebc8ca527 --- /dev/null +++ b/eesanje/url_47_207_1.txt @@ -0,0 +1,5 @@ +3 ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ +ನವದೆಹಲಿ, ಡಿ.26- ಕಳೆದ ವಾರ ಸಂಸತ್ತು ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ನ್ಯಾಯ ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ವಸಾಹತುಶಾಹಿ ಯುಗದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872 ರ ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಾಯಿಸಿದ್ದು, ಮೂರು ಹೊಸ ಕಾನೂನುಗಳಾಗಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಅಂಗೀಕರಿಸಲಾಗಿತ್ತು. +ಸಂಸತ್ತಿನಲ್ಲಿ ಮೂರು ವಿಧೇಯಕಗಳ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿಕ್ಷೆ ನೀಡುವ ಬದಲು ನ್ಯಾಯ ಒದಗಿಸುವತ್ತ ಗಮನ ಹರಿಸಲಾಗಿದೆ ಎಂದು ಹೇಳಿದ್ದರು. ಆಗಸ್ಟ್‍ನಲ್ಲಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಸೂದೆಗಳನ್ನು ಮೊದಲು ಮಂಡಿಸಲಾಗಿತ್ತು. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಹಲವಾರು ಶಿಫಾರಸುಗಳನ್ನು ಮಾಡಿದ ನಂತರ, ಸರ್ಕಾರವು ಬಿಲ್‍ಗಳನ್ನು ಹಿಂಪಡೆಯಲು ನಿರ್ಧರಿಸಿತು. ಕಳೆದ ವಾರ ಅವುಗಳ ಮರುರೂಪಿಸಿದ ಆವೃತ್ತಿಗಳನ್ನು ಪರಿಚಯಿಸಿತ್ತು. +ಅಭಿವೃದ್ಧಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸುವುದೆ ಸರ್ಕಾರದ ಗುರಿ : ಮೋದಿ +ಭಾರತೀಯ ನ್ಯಾಯ ಸಂಹಿತೆಯು ಪ್ರತ್ಯೇಕತೆಯ ಕೃತ್ಯಗಳು, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು, ಸಾರ್ವಭೌಮತ್ವ ಅಥವಾ ಏಕತೆಗೆ ಅಪಾಯವನ್ನುಂಟು ಮಾಡುವಂತಹ ಅಪರಾಧಗಳನ್ನು ಪಟ್ಟಿಮಾಡುತ್ತದೆ. ಭಾರತೀಯ ನ್ಯಾಯ ಸಂಹಿತೆಯಲ್ಲಿ ಮೊದಲ ಬಾರಿಗೆ ಭಯೋತ್ಪಾದನೆ ಪದವನ್ನು ವ್ಯಾಖ್ಯಾನಿಸಲಾಗಿದೆ. ಐಪಿಸಿಯಲ್ಲಿ ಅದು ಇರಲಿಲ್ಲ. ಹೊಸ ಕಾನೂನುಗಳ ಅಡಿಯಲ್ಲಿ, ದಂಡವನ್ನು ವಿಸುವ ಮ್ಯಾಜಿಸ್ಟ್ರೇಟ್ ಅಧಿಕಾರವನ್ನು ಹೆಚ್ಚಿಸಲಾಗಿದೆ. \ No newline at end of file diff --git a/eesanje/url_47_207_10.txt b/eesanje/url_47_207_10.txt new file mode 100644 index 0000000000000000000000000000000000000000..0a7155647cb321f75bf97f755a52fc6fe22b813a --- /dev/null +++ b/eesanje/url_47_207_10.txt @@ -0,0 +1,6 @@ +ಕೋಲ್ಕತ್ತಾದಲ್ಲಿ ಅಮಿತ್ ಶಾ, ನಡ್ಡಾ ಸರಣಿ ಸಭೆ +ಕೋಲ್ಕತ್ತಾ, ಡಿ 26 (ಪಿಟಿಐ) ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಇಂದು ಮುಂಜಾನೆ ಕೋಲ್ಕತ್ತಾಗೆ ಆಗಮಿಸಿದ್ದಾರೆ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಸಾಂಸ್ಥಿಕ ಸಿದ್ಧತೆಯನ್ನು ನಿರ್ಣಯಿಸಲಿದ್ದಾರೆ ಎಂದು ತಿಳಿದುಬಂದಿದೆ. +ತಡರಾತ್ರಿ ಕೋಲ್ಕತ್ತಾ ತಲುಪಿರುವ ಈ ಇಬ್ಬರು ಮುಖಂಡರುಗಳು ಇಲ್ಲಿ ಸರಣಿ ಸಾಂಸ್ಥಿಕ ಸಭೆಗಳನ್ನು ನಡೆಸಲಿದ್ದಾರೆ ಎಂದು ಬಂಗಾಳ ಬಿಜೆಪಿ ಶಾಸಕ ಮನೋಜ್ ತಿಗ್ಗಾ ತಿಳಿಸಿದ್ದಾರೆ. ನಮ್ಮ ಕೇಂದ್ರ ನಾಯಕರು, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವರು ಮತ್ತು ಪಕ್ಷದ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡುವುದನ್ನು ಮುಂದುವರೆಸುತ್ತಾರೆ. ಮುಂದಿನ ದಿನಗಳಲ್ಲಿ ಅವರ ಪ್ರವಾಸಗಳು ಹೆಚ್ಚಾಗುತ್ತವೆ ಎಂದು ಟಿಗ್ಗಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ಬಿಜೆಪಿ ಪಶ್ಚಿಮ ಬಂಗಾಳದ ಅಧ್ಯಕ್ಷ ಸುಕಾಂತ ಮಜುಂದಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಕಾರಿ ಮತ್ತು ಸಂಸದ ದಿಲೀಪ್ ಘೋಷ್ ಅವರು ಶಾ ಮತ್ತು ನಡ್ಡಾ ಅವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು. ಗೃಹ ಸಚಿವರು ಮತ್ತು ಬಿಜೆಪಿ ಮುಖ್ಯಸ್ಥರು ಇಂದು ಬೆಳಗ್ಗೆ ಗುರುದ್ವಾರ ಬಾರಾ ಸಿಖ್ ಸಂಗತ್ ಮತ್ತು ಕಾಳಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಗ್ಗಾ ತಿಳಿಸಿದ್ದಾರೆ. +ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ +ಅವರು ರಾಜ್ಯ ಪದಾಧಿಕಾರಿಗಳು ಮತ್ತು ಮುಂಚೂಣಿ ಸಂಸ್ಥೆಗಳೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಾರೆ ಮತ್ತು ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಸಂಘಟನಾ ಶಕ್ತಿಯನ್ನು ನಿರ್ಣಯಿಸುತ್ತಾರೆ ಎಂದು ಅವರು ಹೇಳಿದರು. ಸಂಜೆ ನಂತರ, ಇಬ್ಬರು ಹಿರಿಯ ಬಿಜೆಪಿ ನಾಯಕರು ನವದೆಹಲಿಗೆ ತೆರಳುವ ಮೊದಲು ರಾಷ್ಟ್ರೀಯ ಗ್ರಂಥಾಲಯದಲ್ಲಿ ಮುಚ್ಚಿದ ಬಾಗಿಲಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಗ್ಗಾ ವಿವರಿಸಿದರು. \ No newline at end of file diff --git a/eesanje/url_47_207_11.txt b/eesanje/url_47_207_11.txt new file mode 100644 index 0000000000000000000000000000000000000000..69ee99f54fb74ff232d11236ada17c78e1bbb426 --- /dev/null +++ b/eesanje/url_47_207_11.txt @@ -0,0 +1,5 @@ +ದೇಶದಲ್ಲಿ ಒಂದೇ ದಿನ 628 ಕೋವಿಡ್ ಕೇಸ್ ಪತ್ತೆ +ನವದೆಹಲಿ,ಡಿ.25 – ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಒಂದೇ ದಿನದಲ್ಲಿ ದೇಶದಲ್ಲಿ 628 ಹೊಸ ಕೋವಿಡ್-19 ಪ್ರಕರಣಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 4,054 ಕ್ಕೆ ಏರಿಕೆಯಾಗಿದೆ. +ಇದುವರೆಗೂ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5.33 ಲಕ್ಷಕ್ಕೆ ಏರಿಕೆಯಾಗಿದ್ದು, ಕೇರಳದಿಂದ ಒಂದು ಹೊಸ ಸಾವು ವರದಿಯಾಗಿದೆ ಎಂದು ಡೇಟಾ ತೋರಿಸಿದೆ. ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ ಪ್ರಸ್ತುತ 4,50,09,248 (4.50 ಕೋಟಿ) ಆಗಿದೆ. +ಕಿರಿಕ್ ಪಾರ್ಟಿ : ಕಲ್ಲಿನಿಂದ ಜಜ್ಜಿ ಸ್ನೇಹಿತನ ಕೊಲೆ +ಆರೋಗ್ಯ ಸಚಿವಾಲಯದ ವೆಬ್ಸೈಟ್ ಪ್ರಕಾರ, ರೋಗದಿಂದ ಚೇತರಿಸಿಕೊಂಡ ಜನರ ಸಂಖ್ಯೆ 4,44,71,860 (4.44 ಕೋಟಿ) ಕ್ಕೆ ಏರಿದೆ ಮತ್ತು ರಾಷ್ಟ್ರೀಯ ಚೇತರಿಕೆಯ ಪ್ರಮಾಣವು 98.81 ಪ್ರತಿಶತದಷ್ಟಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, 220.67 ಕೋಟಿ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. \ No newline at end of file diff --git a/eesanje/url_47_207_12.txt b/eesanje/url_47_207_12.txt new file mode 100644 index 0000000000000000000000000000000000000000..9b14e80731e2c3189720f3c78b0a310f40ba0293 --- /dev/null +++ b/eesanje/url_47_207_12.txt @@ -0,0 +1,6 @@ +ಮೆಹಬೂಬಾ ಮುಫ್ತಿಗೆ ಗೃಹ ಬಂಧನ +ಶ್ರೀನಗರ, ಡಿ 25 (ಪಿಟಿಐ)- ಸೇನಾ ವಶದಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ ಪೂಂಚ್ ಜಿಲ್ಲೆಯ ಸುರನ್ಕೋಟೆಗೆ ಭೇಟಿ ನೀಡಲು ನಿರ್ಧರಿಸಿದ ಪಿಡಿಪಿ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿಡಲಾಗಿದೆ. ಗುರುವಾರ ಪೂಂಚ್ನ ಸುರನ್ಕೋಟೆ ಪ್ರದೇಶದ ಧೇರಾ ಕಿ ಗಲಿ ಮತ್ತು ಬಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್ನಲ್ಲಿ ಭಯೋತ್ಪಾದಕರು ತಮ್ಮ ವಾಹನಗಳನ್ನು ಹೊಂಚು ಹಾಕಿದ್ದರಿಂದ ನಾಲ್ವರು ಯೋಧರು ಪ್ರಾಣ ಕಳೆದುಕೊಂಡಿದ್ದರು. +ಈ ದಾಳಿಯ ನಂತರ, 27 ರಿಂದ 42 ವರ್ಷದೊಳಗಿನ ಮೂವರು ನಾಗರಿಕರನ್ನು ಸೇನೆಯು ವಿಚಾರಣೆಗಾಗಿ ಕರೆದೊಯ್ದಿತ್ತು ಎಂದು ಆರೋಪಿಸಲಾಗಿದ್ದು, ಅವರು ಡಿ. 22 ರಂದು ಶವವಾಗಿ ಪತ್ತೆಯಾಗಿದ್ದರು.ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಸುರನ್ಕೋಟೆಗೆ ಭೇಟಿ ನೀಡುವ ಮೊದಲು ಬಲವಂತವಾಗಿ ಗೃಹಬಂಧನದಲ್ಲಿ ಇರಿಸಲಾಗಿದೆ. +ರಾಮಮಂದಿರ ಪ್ರತಿಷ್ಠಾಪನೆಗೆ ರಾಕಿಂಗ್ ಸ್ಟಾರ್ ಯಶ್‍ಗೆ ಆಹ್ವಾನ +ಅಲ್ಲಿ ಅವರು ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ನೀಡುವ ಗುರಿಯನ್ನು ಹೊಂದಿದ್ದರು ಎಂದು ಪಿಡಿಪಿ ಎಕ್ಸ್ನಲ್ಲಿ ಪೊಸ್ಟ್ ಮಾಡಿದೆ.ಮುಫ್ತಿ ಅವರ ಅನ್ಯಾಯದ ಗೃಹಬಂಧನವನ್ನು ಪಿಡಿಪಿ ತೀವ್ರವಾಗಿ ಖಂಡಿಸುತ್ತದೆ. +ಗೇಟ್ಗಳ ಸೀಲಿಂಗ್ ಮತ್ತು ಅವರ ಸುರನ್ಕೋಟೆ ಭೇಟಿಗೆ ಅಡ್ಡಿಯುಂಟುಮಾಡುವ ನಿರ್ಬಂಧಗಳು ಅನಗತ್ಯ ಮತ್ತು ಬಲವಾದ ವಿರೋಧವನ್ನು ಬಯಸುತ್ತದೆ ಎಂದು ಪಕ್ಷವು ಹೇಳಿದೆ. ಹೊಂಚುದಾಳಿಯ ಹಿನ್ನೆಲೆಯಲ್ಲಿ ಅವರ ಕುಟುಂಬಗಳಿಗೆ ಮಾಹಿತಿ ನೀಡದೆ ಹೆಚ್ಚಿನ ಯುವಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಕಾರಣ ಮಧ್ಯಪ್ರವೇಶಿಸುವಂತೆ ಮುಫ್ತಿ ಅವರು ನಿನ್ನೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಒತ್ತಾಯಿಸಿದ್ದರು. \ No newline at end of file diff --git a/eesanje/url_47_207_2.txt b/eesanje/url_47_207_2.txt new file mode 100644 index 0000000000000000000000000000000000000000..74d67a3bfb11edd14df703be36d5f05d88a563a9 --- /dev/null +++ b/eesanje/url_47_207_2.txt @@ -0,0 +1,5 @@ +ಬಂದೂಕು ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ +ಜೈಪುರ, ಡಿ 26 (ಪಿಟಿಐ) ರಾಜಸ್ಥಾನದ ಅಲ್ವಾರ್ ಜಿಲ್ಲೇಯ ಹೋಟೆಲ್‍ವೊಂದರಲ್ಲಿ ಮೂವರು ಪುರುಷರು 17 ವರ್ಷದ ಬಾಲಕಿಯನ್ನು ಬಂದೂಕಿನಿಂದ ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಕೆಲವು ಔಷಧಿಗಳನ್ನು ಖರೀದಿಸಲು ಹೊರಗೆ ಹೋಗಿದ್ದಾಗ ಆರೋಪಿಗಳು ಅವಳನ್ನು ಕಾರಿನಲ್ಲಿ ಅಪಹರಿಸಿ ಬಲವಂತವಾಗಿ ಮದ್ಯ ಕುಡಿಸಿದ್ದರು. ಆಕೆಯನ್ನು ಹೋಟೆಲ್‍ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಕಾಶ್ಮೀರದ ಎರಡು ಕಡೆ ಭೂಕಂಪ +ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಪ್ರಾಪ್ತಿಯನ್ನು ಡಿ.23 ರ ರಾತ್ರಿ ಅಪಹರಿಸಲಾಗಿದೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳು ಬಂದೂಕು ತೋರಿಸಿ ಕಾರಿನಲ್ಲಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಖೇರ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ ಪ್ರಸಾದ್ ಹೇಳಿದ್ದಾರೆ. +ಮನೋಜ್ ಸೈನಿ, ಕೇದಾರ್ ಸೈನಿ ಮತ್ತು ನರೇಂದ್ರ ಅವರನ್ನು ಎಫ್‍ಐಆರ್‍ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯನ್ನು ಡಿಎಸ್ಪಿ ಕಾತುಮಾರ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. diff --git a/eesanje/url_47_207_3.txt b/eesanje/url_47_207_3.txt new file mode 100644 index 0000000000000000000000000000000000000000..72fb44ed44fce409af3ad1be59ebc6375a3fddbd --- /dev/null +++ b/eesanje/url_47_207_3.txt @@ -0,0 +1,7 @@ +ದೆಹಲಿಯಲ್ಲಿ ಕವಿದ ಮಂಜು : ವಿಮಾನ, ರೈಲು ಸಂಚಾರ ವಿಳಂಬ +ನವದೆಹಲಿ,ಡಿ.26- ರಾಷ್ಟ್ರ ರಾಜಧಾನಿ ದೆಹಲಿ ದಟ್ಟವಾದ ಮಂಜಿನಿಂದ ಅವೃತ್ತವಾಗಿರುವುದರಿಂದ ಇಂದು ಹಲವಾರು ರೈಲು ಹಾಗೂ ವಿಮಾನ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಮಂಜು ಮುಸುಕಿದ ವಾತವರಣದಿಂದಾಗಿ ಇಂದು ಬೆಳಗ್ಗೆ ದಿಲ್ಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಹೋಗುವ ವಿಮಾನ ಹಾರಾಟದಲ್ಲಿ ಭಾರಿ ವಿಳಂಬವಾಯಿತು. +ರಾಷ್ಟ್ರ ರಾಜಧಾನಿಯ ತಾಪಾಮಾನ ಸುಮಾರು 7 ಡಿಗ್ರಿ ಸೆಲ್ಸಿಯಸ್ ತಲುಪಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ, ಅಂತರರಾಷ್ಟ್ರೀಯ ವಿಮಾನಗಳು ಸೇರಿದಂತೆ ಸುಮಾರು 30 ವಿಮಾನಗಳು ಆಗಮನ ಮತ್ತು ನಿರ್ಗಮನ ಎರಡರಲ್ಲೂ ವಿಳಂಬವನ್ನು ಅನುಭವಿಸಿದವು. ಇಂದು ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಫ್ಲೈಟ್ ಇನರ್ಮೇಷನ್ ಡಿಸ್ಪ್ಲೇ ಸಿಸ್ಟಮ್ ಡೇಟಾವು ಅಡಚಣೆಗಳನ್ನು ಸೂಚಿಸಿದೆ, ದಿನವಿಡೀ ಹೆಚ್ಚಿನ ವಿಮಾನಗಳು ಪರಿಣಾಮ ಬೀರಬಹುದು ಎಂದು ಮೂಲಗಳು ಸೂಚಿಸಿವೆ.ಅದೇ ರೀತಿ ಮಂಜು ಕವಿದ ವಾತಾವರಣದಿಂದಾಗಿ 14 ರೈಲುಗಳ ಆಗಮನವೂ ವಿಳಂಬವಾಗಿದೆ. +ಕೋಲ್ಕತ್ತಾದಲ್ಲಿ ಅಮಿತ್ ಶಾ, ನಡ್ಡಾ ಸರಣಿ ಸಭೆ +ಇಂಡಿಯಾ ಗೇಟ್, ಸರಾಯ್ ಕಾಲೇ ಖಾನ್, ಎಐಐಎಂಎಸ್, ಸಫ್ದರ್‍ಜಂಗ್ ಮತ್ತು ಆನಂದ್ ವಿಹಾರ್‍ನಂತಹ ಸಾಂಪ್ರದಾಯಿಕ ಸ್ಥಳಗಳ ಬೆಳಗಿನ ದೃಶ್ಯಗಳು ದಟ್ಟವಾದ ಮಂಜಿನಿಂದ ಆವೃತವಾಗಿತ್ತು. +ಪಂಜಾಬ, ಹರಿಯಾಣ, ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಾದ್ಯಂತ ಮಂಜಿನ ವ್ಯಾಪ್ತಿ ವಿಸ್ತರಿಸಿದೆ. ಉತ್ತರ ಪ್ರದೇಶದ ಮೊರಾದಾಬಾದ್ ಮತ್ತು ಕಾನ್ಪುರದಲ್ಲಿ, ಗೋಚರತೆಯು ಬಹುತೇಕ ಶೂನ್ಯಕ್ಕೆ ಕುಸಿದಿದೆ, ಇದು ದೈನಂದಿನ ಜೀವನಕ್ಕೆ ಅಡ್ಡಿಪಡಿಸಿದೆ. ಚಾಲ್ತಿಯಲ್ಲಿರುವ ಪರಿಸ್ಥಿತಿಗಳಿಗೆ ಪ್ರತಿಕ್ರಿಯೆಯಾಗಿ, ಮೂಳೆ ತಣ್ಣಗಾಗುವ ಚಳಿಯನ್ನು ಎದುರಿಸಲು ಜನರು ರಸ್ತೆಗಳಲ್ಲೇ ಬೆಂಕಿ ಕಾಯಿಸಿಕೊಳ್ಳುತ್ತಿರುವ ದೃಶ್ಯಗಳು ಕಂಡು ಬಂದಿದೆ. +ರಾಷ್ಟ್ರ ರಾಜಧಾನಿಯಲ್ಲಿ ದಟ್ಟವಾದ ಮಂಜಿನಿಂದಾಗಿ ಸಂಭಾವ್ಯ ಆರೋಗ್ಯದ ಪರಿಣಾಮಗಳ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಶೀತದಿಂದ ಉಬ್ಬಸ, ಕೆಮ್ಮು ಮತ್ತು ಉಸಿರಾಟದ ತೊಂದರೆಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. \ No newline at end of file diff --git a/eesanje/url_47_207_4.txt b/eesanje/url_47_207_4.txt new file mode 100644 index 0000000000000000000000000000000000000000..0b7fda194771934fbcb90d4b45903b0680b58ffc --- /dev/null +++ b/eesanje/url_47_207_4.txt @@ -0,0 +1,8 @@ +ಅಭಿವೃದ್ಧಿ ಯೋಜನೆಗಳನ್ನು ಎಲ್ಲರಿಗೂ ತಲುಪಿಸುವುದೆ ಸರ್ಕಾರದ ಗುರಿ : ಮೋದಿ +ನವದೆಹಲಿ,ಡಿ.26- ನಮ್ಮ ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಾಯಸ್ ಮಂತ್ರವನ್ನು ಪಠಿಸುತ್ತಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಭಿವೃದ್ಧಿಯ ಪ್ರಯೋಜನಗಳು ಎಲ್ಲರಿಗೂ ತಲುಪುವಂತೆ ನಮ್ಮ ಸರ್ಕಾರ ಖಾತ್ರಿಪಡಿಸುತ್ತಿದೆ ಎಂದು ಹೇಳಿದರು. ಕ್ರಿಸ್‍ಮಸ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಷ್ಟ್ರ ರಾಜಧಾನಿಯ ಅಧಿಕೃತ ನಿವಾಸದಲ್ಲಿ ಕ್ರೈಸ್ತ ಸಮುದಾಯದೊಂದಿಗೆ ಸಂವಾದ ನಡೆಸಿದರು. +ಅಭಿವೃದ್ಧಿಯ ಪ್ರಯೋಜನಗಳು ಪ್ರತಿಯೊಬ್ಬರಿಗೂ ತಲುಪುವಂತೆ ನಮ್ಮ ಸರ್ಕಾರವು ಖಾತ್ರಿಪಡಿಸುತ್ತಿದೆ ಮತ್ತು ಯಾರೂ ಅಸ್ಪಶ್ಯರಾಗಿ ಉಳಿಯುವುದಿಲ್ಲ ಎಂದು ಹೇಳಿದ ಪ್ರಧಾನಿ, ಕ್ರಿಶ್ಚಿಯನ್ ಧರ್ಮದ ಅನೇಕ ಜನರು, ವಿಶೇಷವಾಗಿ ಬಡ ವರ್ಗದವರು ಸರ್ಕಾರದ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು. ಕ್ರೈಸ್ತ ಸಮುದಾಯದ ಕೊಡುಗೆಯನ್ನು ರಾಷ್ಟ್ರವು ಹೆಮ್ಮೆಯಿಂದ ಅಂಗೀಕರಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. +ಸ್ವಾತಂತ್ರ್ಯ ಚಳವಳಿಗೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು ಮತ್ತು ವಿವಿಧ ಬೌದ್ಧಿಕ ಚಿಂತಕರು ಮತ್ತು ನಾಯಕರನ್ನು ಅವರು ಹೆಸರಿಸಿದರು. ಸೈಂಟ್ ಸ್ಟೀಫನ್ಸ್ ಕಾಲೇಜಿನ ಪ್ರಾಂಶುಪಾಲರಾದ ಸುಶೀಲ್ ಕುಮಾರ್ ರುದ್ರ ಅವರ ಸಾರಥ್ಯದಲ್ಲಿ ಅಸಹಕಾರ ಚಳವಳಿಯನ್ನು ರೂಪಿಸಲಾಗಿದೆ ಎಂದು ಗಾಂಧೀಜಿ ಅವರೇ ಹೇಳಿದ್ದಾರೆ ಎಂದು ಅವರು ಒತ್ತಿ ಹೇಳಿದರು. +ಸಮಾಜಕ್ಕೆ ಮಾರ್ಗದರ್ಶನ ನೀಡುವಲ್ಲಿ ಕ್ರಿಶ್ಚಿಯನ್ ಸಮುದಾಯವು ವಹಿಸಿದ ನಿರ್ಣಾಯಕ ಪಾತ್ರವನ್ನು ಎತ್ತಿ ಹಿಡಿದ ಅವರು ಬಡವರು ಮತ್ತು ವಂಚಿತರ ಸಾಮಾಜಿಕ ಸೇವೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಉಲ್ಲೇಖಿಸಿದರು. ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯ ಪ್ರಮುಖ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳನ್ನು ಅವರು ಗುಣಗಾನ ಮಾಡಿದರು. +2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕೆಂಬ ಸಂಕಲ್ಪವನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು ಯುವಜನರ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಸದೃಢತೆಯ ಅಗತ್ಯವನ್ನು ಒತ್ತಿ ಹೇಳಿದರು. +ಕೋಲ್ಕತ್ತಾದಲ್ಲಿ ಅಮಿತ್ ಶಾ, ನಡ್ಡಾ ಸರಣಿ ಸಭೆ +ವೋಕಲ್ ಫಾರ್ ಲೋಕಲ್ ಬಗ್ಗೆಯೂ ಪ್ರಧಾನಿ ಚರ್ಚಿಸಿದರು. ನಾವು ಸ್ಥಳೀಯ ಉತ್ಪನ್ನಗಳನ್ನು ಉತ್ತೇಜಿಸಿದಾಗ, ನಾವು ಭಾರತದಲ್ಲಿ ತಯಾರಿಸಿದ ಸರಕುಗಳ ರಾಯಭಾರಿಗಳಾದಾಗ, ಅದು ದೇಶಕ್ಕೆ ಸೇವೆಯ ಒಂದು ರೂಪವಾಗಿದೆ, ಸ್ಥಳೀಯ ಸಮಸ್ಯೆಗಳ ಬಗ್ಗೆ ಕ್ರಿಶ್ಚಿಯನ್ ಸಮುದಾಯವು ಹೆಚ್ಚು ಧ್ವನಿ ಎತ್ತುವಂತೆ ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು. ಇತರರ ಸೇವೆಗೆ ಒತ್ತು ನೀಡುವ ಪವಿತ್ರ ಬೈಬಲ್‍ನ ಉದಾಹರಣೆಯನ್ನು ನೀಡಿದ ಪ್ರಧಾನಿ ಮೋದಿ ಅವರು ಸಾಮಾಜಿಕ ಜೀವನದ ವಿವಿಧ ಸ್ಟ್ರೀಮ್‍ಗಳ ನಡುವಿನ ಮೌಲ್ಯಗಳ ಹೋಲಿಕೆಯನ್ನು ಎತ್ತಿ ತೋರಿಸಿದರು. \ No newline at end of file diff --git a/eesanje/url_47_207_5.txt b/eesanje/url_47_207_5.txt new file mode 100644 index 0000000000000000000000000000000000000000..c464d1a935099554791010fac37c9b2c844d3295 --- /dev/null +++ b/eesanje/url_47_207_5.txt @@ -0,0 +1,5 @@ +ಕುತೂಹಲ ಕೆರಳಿಸಿದ ಚಿರಂಜಿವಿ-ರೇವಂತ್‍ರೆಡ್ಡಿ ಭೇಟಿ +ಹೈದರಾಬಾದ್,ಡಿ.26- ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಚಿರಂಜೀವಿ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕೂತುಹಲ ಕೆರಳಿಸಿದೆ. ಚಿರಂಜಿವಿ ಮತ್ತು ರೇವಂತ್ ರೆಡ್ಡಿ ಮಾತುಕತೆ ನಡೆಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಚಿರಂಜಿವ ಅವರು ಹೊಸ ಸಿಎಂಗೆ ಶುಭಾಷಯ ತಿಳಿಸಲಷ್ಟೇ ಭೇಟಿ ಮಾಡಿದ್ದೇ ಎಂದು ಸ್ಪಷ್ಟನೆ ನೀಡಿದ್ದಾರೆ. +ನೀಲಿ ಜೀನ್ಸ್‍ನೊಂದಿಗೆ ಬಿಳಿ ಶರ್ಟ್ ಧರಿಸಿ ಚಿರಂಜಿವಿ ಮಿಂಚುತ್ತಿದ್ದರೆ, ಸಿಎಂ ರೆಡ್ಡಿ ಬಿಳಿ ಶರ್ಟ್ ಧರಿಸಿ ಕಪ್ಪು ಪ್ಯಾಂಟ್ ಹಾಕಿಕೊಂಡಿದ್ದರು. ಏತನ್ಮಧ್ಯೆ, ಚಿರಂಜೀವಿ ಅವರು ಮೆಗಾ 156 ಎಂಬ ಫ್ಯಾಂಟಸಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಹುದಿನಗಳ ನಂತರ ಮೆಗಾಸ್ಟಾರ್ ಸಹಿ ಹಾಕಿರುವ ಈ ರೀತಿಯ ಫ್ಯಾಂಟಸಿ ಫ್ಲಿಕ್ ಅನ್ನು ಬಿಂಬಿಸಾರ ಚಿತ್ರದ ಮೂಲಕ ನಿರ್ದೇಶನದ ಚೊಚ್ಚಲ ನಿರ್ದೇಶಕ ವಸಿಷ್ಠ ನಿರ್ದೇಶಿಸಲಿದ್ದಾರೆ. +ಕಣಿವೆಯಲ್ಲಿ ಮೂವರು ಶಂಕಿತರ ಬಂಧನ +ಮೆಗಾ 156 ಚಿತ್ರವನ್ನು ಯುವಿ ಕ್ರಿಯೇಷನ್ಸ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪತಿ ಮತ್ತು ವಿಕ್ರಮ್ ರೆಡ್ಡಿ ಅವರು ಬೃಹತ್ ಪ್ರಮಾಣದಲ್ಲಿ ಚಿತ್ರೀಕರಿಸಲಿದ್ದಾರೆ. \ No newline at end of file diff --git a/eesanje/url_47_207_6.txt b/eesanje/url_47_207_6.txt new file mode 100644 index 0000000000000000000000000000000000000000..22df86f53051ed0c458876e9dbcc3c084061c696 --- /dev/null +++ b/eesanje/url_47_207_6.txt @@ -0,0 +1,6 @@ +ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದವರಿಗೆ 50 ಸಾವಿರ ದಂಡ +ಹೊಸೂರು,ಡಿ.26- ಚುಕ್ಕೆ ಜಿಂಕೆಗಳನ್ನು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಏಳು ಮಂದಿಗೆ ತಲಾ 50 ಸಾವಿರ ದಂಡ ವಿಧಿಸಲಾಗಿದೆ ಎಂದು ಡೆಂಕಣಿಕೋಟೆ ಅರಣ್ಯ ಇಲಾಖೆ ತಿಳಿಸಿದೆ. ಆರೋಪಿಗಳನ್ನು ಚೆಲ್ಲಪ್ಪನ್ (65), ರಾಮರಾಜ್ (31), ರಾಜೀವ್ (31), ನಾಗರಾಜ್ (28), ಶಿವರಾಜಕುಮಾರ್ (31), ಮರಿಯಪ್ಪನ್ (65) ಮತ್ತು 18 ವರ್ಷದ ಬಾಲಕ ಎಂದು ಗುರುತಿಸಲಾಗಿದೆ. +ಹೊಸೂರು ಸಮೀಪದ ಜುಜುವಾಡಿ ಗ್ರಾಮದ ಸಾರ್ವಜನಿಕ ಕೆರೆಯಲ್ಲಿ ಚುಕ್ಕೆ ಜಿಂಕೆ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ಲಭಿಸಿದೆ. ಇದಾದ ಬಳಿಕ ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಚುಕ್ಕೆ ಜಿಂಕೆಯ ಮೃತದೇಹವನ್ನು ಹೊರತೆಗೆದಿದೆ. +ಅರಣ್ಯ ಇಲಾಖೆಯವರು ಅಲ್ಲಿಗೆ ತಲುಪುವ ಮೊದಲೇ ಆರೋಪಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡದೆ ಚುಕ್ಕೆ ಜಿಂಕೆಯ ಶವವನ್ನು ಹೊರತೆಗೆದು ತುಂಡರಿಸಿದ್ದರು. ಚುಕ್ಕೆ ಜಿಂಕೆಯನ್ನು ಬೇಟೆಯಾಡಿರುವುದು ಅರಣ್ಯ ಇಲಾಖೆಯ ತನಿಖೆಯಲ್ಲಿ ಬೆಳಕಿಗೆ ಬಂದಿದೆ. +ಕೋಲ್ಕತ್ತಾದಲ್ಲಿ ಅಮಿತ್ ಶಾ, ನಡ್ಡಾ ಸರಣಿ ಸಭೆ +ಇದಾದ ಬಳಿಕ ಅರಣ್ಯ ಇಲಾಖೆ ಏಳು ಮಂದಿಯನ್ನು ಹಿಡಿದು ತಲಾ 50 ಸಾವಿರ ರೂ. ದಂಡ ವಿಧಿಸಿದ್ದಾರೆ. ಕಾಡು ಪ್ರಾಣಿಗಳನ್ನು ಬೇಟೆಯಾಡಿದರೆ ಅಥವಾ ಕಾಡು ಪ್ರಾಣಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಹೊಂದಿದ್ದರೆ ವನ್ಯಜೀವಿ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಎಲ್ಲರಿಗೂ ಎಚ್ಚರಿಕೆ ನೀಡಿದೆ. \ No newline at end of file diff --git a/eesanje/url_47_207_7.txt b/eesanje/url_47_207_7.txt new file mode 100644 index 0000000000000000000000000000000000000000..471e270f4f98affcf05e677cc969f6a02fe82586 --- /dev/null +++ b/eesanje/url_47_207_7.txt @@ -0,0 +1,6 @@ +ಶೀಘ್ರದಲ್ಲೇ ಅಮೃತ್‍ಭಾರತ್ ರೈಲಿಗೆ ಮೋದಿ ಚಾಲನೆ +ನವದೆಹಲಿ,ಡಿ.26- ಪುಶ್‍ಪುಲ್ ತಂತ್ರಜ್ಞಾನ ಹೊಂದಿರುವ ಅಮೃತ್ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ನವೀನ ತಂತ್ರಜ್ಞಾನ ಹೊಂದಿರುವ ಅಮೃತ್ ಭಾರತ್ ರೈಲುಗಳ ವೇಗ ಗಮನಾರ್ಹವಾಗಿ ಹೆಚ್ಚಿರುವುದಲ್ಲದೆ ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. +ಪುಶ್-ಪುಲ್ ತಂತ್ರಜ್ಞಾನದಿಂದಾಗಿ ಅಮೃತ್ ಭಾರತ್ ರೈಲು ಉತ್ತಮ ವೇಗವನ್ನು ಹೊಂದಿದೆ. ಇದರರ್ಥ ವಾಹನವು ತ್ವರಿತವಾಗಿ ವೇಗಗೊಳ್ಳುತ್ತದೆ ಮತ್ತು ತ್ವರಿತವಾಗಿ ನಿಲ್ಲುತ್ತದೆ, ಇದರಿಂದಾಗಿ ದಾರಿಯಲ್ಲಿ ತಿರುವುಗಳು ಮತ್ತು ಸೇತುವೆಗಳು ಇರುವಲ್ಲೇ ಸಮಯವನ್ನು ಉಳಿಸುತ್ತದೆ. ಇದು ಅರೆ-ಶಾಶ್ವತ ಸಂಯೋಜಕಗಳನ್ನು ಹೊಂದಿದೆ. ರೈಲಿನಲ್ಲಿ ಆಘಾತಗಳ ವ್ಯಾಪ್ತಿಯು. ಪ್ರತಿ ಆಸನದ ಬಳಿ ಚಾರ್ಜಿಂಗ್ ಪಾಯಿಂಟ್‍ಗಳನ್ನು ಒದಗಿಸಲಾಗಿದೆ. ಅಂಗವಿಕಲರಿಗಾಗಿ ವಿಶೇಷ ಶೌಚಾಲಯಗಳನ್ನು ಸಹ ಮಾಡಲಾಗಿದೆ, ಅಗಲವಾದ ಬಾಗಿಲುಗಳು ಮತ್ತು ವಿಶೇಷ ಇಳಿಜಾರುಗಳನ್ನು ಮಾಡಲಾಗಿದೆ, ಎಂದು ಅವರು ಹೇಳಿದರು. +ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ +ಇಂಜಿನ್‍ಗಳಲ್ಲಿ ಸಂಪೂರ್ಣ ಹೊಸ ತಂತ್ರಜ್ಞಾನವನ್ನು ಬಳಸಲಾಗಿದೆ. ವಂದೇ ಭಾರತ್‍ನಂತೆ ಅಮೃತ್ ಭಾರತ್ ರೈಲಿನಲ್ಲಿಯೂ ಸಂಪೂರ್ಣ ಲೊಕೊಮೊಟಿವ್ ಕ್ಯಾಬ್ ಅನ್ನು ಸ್ಥಾಪಿಸಲಾಗಿದೆ ಎಂದು ಅವರು ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಹೊಸದಾಗಿ ನಿರ್ಮಿಸಲಾದ ಅಮೃತ್ ಭಾರತ್ ರೈಲನ್ನು ಪರಿಶೀಲಿಸಿದ ನಂತರ ವಿವರಣೆ ನೀಡಿದರು. +ವಂದೇ ಭಾರತ್ ರೈಲುಗಳು ಮತ್ತು ಮುಂಬರುವ ಅಮೃತ್ ಭಾರತ್ ರೈಲುಗಳಲ್ಲಿ ಬಳಸಲಾಗುವ ತಂತ್ರಜ್ಞಾನವನ್ನು ಭಾರತದಲ್ಲಿ ತಯಾರಿಸಲಾಗುತ್ತದೆ ಎಂದು ರೈಲ್ವೆ ಸಚಿವರು ತಿಳಿಸಿದರು. ವಿಶ್ವದ ಎರಡು ಪ್ರಮುಖ ತಂತ್ರಜ್ಞಾನಗಳೆಂದರೆ – ವಂದೇ ಭಾರತ್ ಟ್ರಾನ್ಸಿಟ್ ಅನ್ನು ರಚಿಸಿರುವ ವಿತರಣಾ ಶಕ್ತಿ ಮತ್ತು ಅಮೃತ್ ಭಾರತವನ್ನು ಸೃಷ್ಟಿಸಿದ ಪುಶ್-ಪುಲ್ ತಂತ್ರಜ್ಞಾನ, ಎರಡೂ ತಂತ್ರಜ್ಞಾನಗಳನ್ನು ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಭಾರತದಲ್ಲಿ ತಯಾರಿಸಲಾಗುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_207_8.txt b/eesanje/url_47_207_8.txt new file mode 100644 index 0000000000000000000000000000000000000000..5abb2dc19469c6c176065833971b3bafa40482b6 --- /dev/null +++ b/eesanje/url_47_207_8.txt @@ -0,0 +1,5 @@ +ಕಾಶ್ಮೀರದ ಎರಡು ಕಡೆ ಭೂಕಂಪ +ಜಮ್ಮು, ಡಿ 26 (ಪಿಟಿಐ) ಇಂದು ಮುಂಜಾನೆ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅವರು ಹೇಳಿದರು. ಎರಡು ಭೂಕಂಪಗಳ ಕೇಂದ್ರಬಿಂದು ಲಡಾಖ್‍ನ ಲೇಹ್ ಜಿಲ್ಲೆ ಮತ್ತು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿದೆ ಎಂದು ಅವರು ಹೇಳಿದರು. +ನ್ಯಾಷನಲ್ ಸೆಂಟರ್ ಆಫ್ ಸೆಸ್ಮಾಲಜಿ (ಎನ್‍ಸಿಎಸ್) ಪ್ರಕಾರ, ಲಡಾಖ್‍ನಲ್ಲಿ ಮುಂಜಾನೆ 4.33 ಕ್ಕೆ 4.5 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ಭೂಮಿಯ ಮೇಲ್ಮೈಯಿಂದ ಐದು ಕಿಲೋಮೀಟರ್ ಕೆಳಗೆ 34.73 ಡಿಗ್ರಿ ಅಕ್ಷಾಂಶ ಮತ್ತು 77.07 ಡಿಗ್ರಿ ರೇಖಾಂಶದಲ್ಲಿದೆ ಎಂದು ಅದು ಹೇಳಿದೆ. +ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ +ಭೂಕಂಪವು ಕಾರ್ಗಿಲ್ ಮತ್ತು ಲೇಹ್ ಜಿಲ್ಲೆಗಳ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ ಆದರೆ ಎಲ್ಲಿಯೂ ಯಾವುದೇ ಹಾನಿಯಾದ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಮುಂಜಾನೆ 1.10 ಗಂಟೆಗೆ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ಮೇಲ್ಮೈಯಿಂದ 33.36 ಡಿಗ್ರಿ ಅಕ್ಷಾಂಶ ಮತ್ತು 76.67 ಡಿಗ್ರಿ ರೇಖಾಂಶದಲ್ಲಿ ಐದು ಕಿಮೀ ಇತ್ತು ಎಂದು ಎನ್‍ಸಿಎಸ್ ತಿಳಿಸಿದೆ \ No newline at end of file diff --git a/eesanje/url_47_207_9.txt b/eesanje/url_47_207_9.txt new file mode 100644 index 0000000000000000000000000000000000000000..7e5f1888b1c79ccbad7d408f96fbfec02582bac4 --- /dev/null +++ b/eesanje/url_47_207_9.txt @@ -0,0 +1,4 @@ +ಕಣಿವೆಯಲ್ಲಿ ಮೂವರು ಶಂಕಿತರ ಬಂಧನ +ಶ್ರೀನಗರ, ಡಿ 26 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೂವರನ್ನು ಬಂಧಿಸಿದ್ದು, ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. +ಪುಲ್ವಾಮಾದ ಪಂಜು ಮತ್ತು ಗಮಿರಾಜ್‍ನಲ್ಲಿ ನಡೆಸಿದ ಕಾರ್ಯಚರಣೆ ಸಂದರ್ಭದಲ್ಲಿ 2 ಪಿಸ್ತೂಲ್‍ಗಳನ್ನು ವಶಪಡಿಸಿಕೊಳ್ಳುವುದರೊಂದಿಗೆ ಮೂವರು ಶಂಕಿತ ವ್ಯಕ್ತಿಗಳನ್ನು ಬಂಧಿಸಲಾಗಿದೆ.ಶೋಧ ಕಾರ್ಯಚರಣೆ ಮುಂದುವರೆಸಲಾಗಿದ್ದು, ಇನ್ನಿತರ ಹಲವಾರು ಶಂಕೀತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ತೀವ್ರಗೊಳಿಸಲಾಗುವುದು ಎಂದು ಶ್ರೀ ೀನಗರ ಮೂಲದ ಚಿನಾರ್ ಕಾಪ್ರ್ಸ್ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದೆ. +ಹಿಜಾಬ್ ನಿಷೇಧ ವಾಪಸಾತಿ ಬಗ್ಗೆ ಡಿಕೆಶಿ ವ್ಯತಿರಿಕ್ತ ಹೇಳಿಕೆ \ No newline at end of file diff --git a/eesanje/url_47_208_1.txt b/eesanje/url_47_208_1.txt new file mode 100644 index 0000000000000000000000000000000000000000..470e9ad7102284402857acd2273555c6bb3cc869 --- /dev/null +++ b/eesanje/url_47_208_1.txt @@ -0,0 +1,6 @@ +ಬಡವರು, ಯುವಕರು, ಮಹಿಳೆಯರು, ರೈತರೇ ನನ್ನ ಜಾತಿ ; ಪ್ರಧಾನಿ ಮೋದಿ +ಇಂದೋರ್, ಡಿ 25 -(ಪಿಟಿಐ) : ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ಇಂದೋರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾವಿರಾರು ಕೋಟಿಗಳ ಹೂಡಿಕೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಇದು ಸಾವಿರಾರು ಉದ್ಯೋಗಾವಕಾಶಗಳನ್ನು ಹುಟ್ಟುಹಾಕುತ್ತದೆ ಎಂದು ಮಧ್ಯಪ್ರದೇಶದ ಇಂದೋರ್ ನಗರದ ಹುಕುಮ್ಚಂದ್ ಮಿಲ್ನ ಕಾರ್ಮಿಕರಿಗೆ ಸಂಬಂಧಿಸಿದ 224 ಕೋಟಿ ರೂಪಾಯಿಗಳ ಬಾಕಿಯನ್ನು ವಿತರಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ವೀಡಿಯೊ ಲಿಂಕ್ ಮೂಲಕ ಉದ್ದೇಶಿಸಿ ಮೋದಿ ಮಾತನಾಡಿದರು. +ಈ ನಿರ್ಧಾರವು 4,800 ಕ್ಕೂ ಹೆಚ್ಚು ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಅವರು ಮಜ್ದೂರನ್ ಕಾ ಹಿಟ್, ಮಜ್ದೂರನ್ ಕೋ ಸಮರ್ಪಿತ್ ಕಾರ್ಯಕ್ರಮದಲ್ಲಿ ಹೇಳಿದರು. ಬಹುಕಾಲದಿಂದ ಬಾಕಿ ಉಳಿದಿದ್ದ ಈ ಸಮಸ್ಯೆಯನ್ನು ಪರಿಹರಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಪ್ರಧಾನಿ ಶ್ಲಾಘಿಸಿದರು ಮತ್ತು ಈ ಕಾರ್ಯಕ್ರಮದ ಭಾಗವಾಗಲು ನಾನು ಅದೃಷ್ಟಶಾಲಿ ಎಂದು ಹೇಳಿದರು. +ವಾಹನ ಸವಾರರಿಗೆ ಗುಡ್ ನ್ಯೂಸ್, ಫಾಸ್ಟ್ ಟ್ಯಾಗ್ ಕಿರಿಕಿರಿಗೆ ಮುಕ್ತಿ +ಬಡವರು, ಯುವಕರು, ಮಹಿಳೆಯರು ಮತ್ತು ರೈತರು ಎಂಬ ನಾಲ್ಕು ಜಾತಿಗಳು ನನಗೆ ಬಹಳ ಮುಖ್ಯ ಎಂದು ಅವರು ಹೇಳಿದರು.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಆಚರಿಸಲಾಗುವ ಉತ್ತಮ ಆಡಳಿತ ದಿನದಂದು ಕಾರ್ಮಿಕರ ಆಶೀರ್ವಾದವನ್ನು ಪಡೆಯುವುದು ಡಬಲ್ ಇಂಜಿನ್ ಸರ್ಕಾರಕ್ಕೆ ಮತ್ತು ರಾಜ್ಯದ ಜನರಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ ಎಂದು ಮೋದಿ ಹೇಳಿದರು. +1992 ರಲ್ಲಿ ಇಂದೋರ್ನಲ್ಲಿನ ಗಿರಣಿ ಮುಚ್ಚಲ್ಪಟ್ಟ ನಂತರ ಹುಕುಮ್ಚಂದ್ ಮಿಲ್ನ ಕಾರ್ಮಿಕರು ತಮ್ಮ ಬಾಕಿ ಪಾವತಿಗಾಗಿ ಸುದೀರ್ಘ ಕಾನೂನು ಹೋರಾಟ ನಡೆಸಿದರು ಮತ್ತು ದಿವಾಳಿಯಾಗಿದ್ದರು. \ No newline at end of file diff --git a/eesanje/url_47_208_10.txt b/eesanje/url_47_208_10.txt new file mode 100644 index 0000000000000000000000000000000000000000..5fb0abff223ac7dfef072fe798c5f0aa1890d4fe --- /dev/null +++ b/eesanje/url_47_208_10.txt @@ -0,0 +1,6 @@ +ವಾಜಪೇಯಿ 99ನೇ ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಶ್ರದ್ದಾಂಜಲಿ +ನವದೆಹಲಿ, ಡಿ 25 (ಪಿಟಿಐ) – ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 99 ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಇಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ಅವರು ತಮ್ಮ ಜೀವನದುದ್ದಕ್ಕೂ ದೇಶದ ಅಭಿವೃದ್ಧಿಯನ್ನು ವೇಗಗೊಳಿಸಲು ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ. +ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಹಲವಾರು ಸಚಿವರು ಬಿಜೆಪಿಯ ೀಮಂತ ನಾಯಕನ ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. +2047 ರಲ್ಲಿ ಭಾರತದ ಸ್ವಾತಂತ್ರ್ಯದ ಶತಮಾನೋತ್ಸವದವರೆಗಿನ ಅವಯ ಅಮೃತ್ ಕಾಲ ಸಮಯದಲ್ಲಿ ವಾಜಪೇಯಿ ಅವರ ಸಮರ್ಪಣೆ ಮತ್ತು ದೇಶಕ್ಕಾಗಿ ಸೇವೆಯ ಮನೋಭಾವವು ಸೂರ್ತಿಯ ಮೂಲವಾಗಿದೆ ಎಂದು ಮೋದಿ ಎಕ್ಸ್‍ನಲ್ಲಿ ಹೇಳಿದರು. + .://./lngfd4lEVn +ಮಹಾನ್ ವಾಗ್ಮಿ, ವಾಜಪೇಯಿ ಅವರು ಭಾರತೀಯ ಜನಸಂಘ ಮತ್ತು ನಂತರ ಭಾರತೀಯ ಜನತಾ ಪಕ್ಷದ ಜನಪ್ರಿಯ ಮುಖವಾಗಿದ್ದರು. ಅವರು 1999 ರಿಂದ 2004 ರವರೆಗೆ ಯಶಸ್ವಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದ್ದಾಗ ಬಿಜೆಪಿಯು ಅನೇಕ ಪಕ್ಷಗಳಿಂದ ಬೆಂಬಲವನ್ನು ಸೆಳೆಯಲು ಸೈದ್ಧಾಂತಿಕ ಗಡಿಗಳನ್ನು ಮೀರಿ ಅವರ ಸ್ವೀಕಾರಾರ್ಹತೆಯು ಪ್ರಮುಖ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_208_11.txt b/eesanje/url_47_208_11.txt new file mode 100644 index 0000000000000000000000000000000000000000..5a3375370f8fc66a0357d9f0f67ef371acdfdabb --- /dev/null +++ b/eesanje/url_47_208_11.txt @@ -0,0 +1,5 @@ +ಕ್ರಿಸ್‍ಮಸ್ ಶುಭಾಶಯ ಕೋರಿದ ಪ್ರಧಾನಿ ಮೋದಿ +ನವದೆಹಲಿ, ಡಿ 25 (ಪಿಟಿಐ) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ರಿಸ್‍ಮಸ್ ಸಂದರ್ಭದಲ್ಲಿ ನಾಡಿನ ಜನರಿಗೆ ಶುಭಾಶಯ ಕೋದ್ದಾರೆ ಮತ್ತು ಅವರಿಗೆ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದ್ದಾರೆ. + ! , . ’ , . … +ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಅವರು ಎಕ್ಸ್ ಮಾಡಿದ್ದಾರೆ. ಕ್ರಿಸ್ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷ ಮತ್ತು ಆರೋಗ್ಯಕರವಾಗಿರುವ ಜಗತ್ತಿಗೆ ಕೆಲಸ ಮಾಡೋಣ. ನಾವು ಲಾರ್ಡ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2023) \ No newline at end of file diff --git a/eesanje/url_47_208_12.txt b/eesanje/url_47_208_12.txt new file mode 100644 index 0000000000000000000000000000000000000000..2343b71d0c9184e7ed8349f8d1d31a37f26a1c36 --- /dev/null +++ b/eesanje/url_47_208_12.txt @@ -0,0 +1,6 @@ +ಡಿ.30ರಂದು ಅಯೋಧ್ಯೆಗೆ ಪ್ರಧಾನಿ ಭೇಟಿ +ನವದೆಹಲಿ, ಡಿ.24- ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಮೋದಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ. +ಡಿ.30ರಂದು ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡುವ ಕುರಿತು ಜಿಲ್ಲೆಯ ಉನ್ನತ ಅಧಿಕಾರಿಗಳು ಹಾಗೂ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಪ್ರಧಾನಿ ಮೋದಿಯವರ ಅಯೋಧ್ಯೆ ಭೇಟಿಯ ಸಿದ್ಧತೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಜನವರಿ 22 ರ ನಂತರ, ಅಂದಾಜು 50,000 ರಿಂದ 55,000 ಜನರು ಪ್ರತಿದಿನ ಅಯೋಧ್ಯೆಗೆ ಬರುತ್ತಾರೆ ಮತ್ತು ಆಡಳಿತವು ಅದಕ್ಕೆ ತಯಾರಿ ನಡೆಸುತ್ತಿದೆ ಎಂದು ಅಯೋಧ್ಯೆ ಸಿಟಿ ಕಮಿಷನರ್ ಗೌರವ್ ದಯಾಳ್ ತಿಳಿಸಿದ್ದಾರೆ. +ಅಯೋಧ್ಯೆ ನಗರಕ್ಕೆ ದಿನಕ್ಕೆ 50,000 ಜನರು ಬರುವ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದು, ವಿಮಾನ ನಿಲ್ದಾಣದಿಂದ ಅಯೋಧ್ಯೆ ರೈಲು ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಆ ಬಳಿಕ ವಿಮಾನ ನಿಲ್ದಾಣದ ಪಕ್ಕದ ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ +ಡಿ.30ರಂದು ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡುವ ಕುರಿತು ಶನಿವಾರ ಜಿಲ್ಲಾಧಿಕಾರಿಗಳು ಹಾಗೂ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಜನವರಿ 21 ಮತ್ತು 22 ರಂದು ಭಕ್ತರಿಗೆ ರಾಮಲಲ್ಲಾನ ದರ್ಶನವಿಲ್ಲ, ಆದರೆ ಜನವರಿ 23 ರಿಂದ ದರ್ಶನ ಪ್ರಾರಂಭವಾಗಲಿದೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಚಾರ್ಟರ್ಡ್ ಫ್ಲೈಟ್‍ಗಳಲ್ಲಿ ಅನೇಕ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_208_2.txt b/eesanje/url_47_208_2.txt new file mode 100644 index 0000000000000000000000000000000000000000..17239a28c6dd6cd10a193ec17177cad147a25ffc --- /dev/null +++ b/eesanje/url_47_208_2.txt @@ -0,0 +1,8 @@ +ಯೋಧರ ಬಲಿದಾನ ಸ್ಮರಿಸಿದ ಸುಪ್ರೀಂ ಸಿಜೆ ಡಿ.ವೈ.ಚಂದ್ರಚೂಡ್ +ನವದೆಹಲಿ,ಡಿ.25- ಇತ್ತೀಚೆಗೆ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಹೋರಾಟ ನಡೆಸಿ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿ ಹುತಾತ್ಮರಾದ ಯೋಧರ ಕಾರ್ಯವನ್ನು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. +ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ಶುಭಾಷಯ ತಿಳಿಸಿದ ಅವರು, ಕಳೆದ ವಾರ ಜಮ್ಮುಕಾಶ್ಮೀರದ ಪೂಂಚ್ನಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡಿದ ಯೋಧರ ಕಾರ್ಯ ನಿಜಕ್ಕೂ ಶ್ಲಾಘನೀಯ. ಹುತಾತ್ಮರಾದ ಸೈನಿಕರಿಗೆ ಶ್ರದ್ದಾಂಜಲಿ ಸಲ್ಲಿಸಿ ಒಂದು ಕ್ಷಣ ಅವರು ಭಾವುಕರಾದರು, +ನಮ್ಮ ಸಶಸ್ತ್ರ ಪಡೆಗಳಲ್ಲಿರುವ ಅನೇಕ ಜನರು ರಾಷ್ಟ್ರದ ಸೇವೆಯಲ್ಲಿ ಮಾಡುತ್ತಿರುವಂತೆ ನಾವು ನಮ್ಮ ಜೀವನಕ್ಕೆ ಬಂದರೂ ಎಲ್ಲವನ್ನೂ ತ್ಯಜಿಸುತ್ತೇವೆ. ಎರಡು ದಿನಗಳ ಹಿಂದೆ (ಪೂಂಚ್ ಎನ್ಕೌಂಟರ್ನಲ್ಲಿ) ನಾವು ನಮ್ಮ ನಾಲ್ಕು ಸಶಸ್ತ್ರ ಪಡೆ ಸದಸ್ಯರನ್ನು ಕಳೆದುಕೊಂಡಿದ್ದೇವೆ. ಆದ್ದರಿಂದ, ನಾವು ಕ್ರಿಸ್ಮಸ್ನ್ನು ಆಚರಿಸುತ್ತಿದ್ದಂತೆ, ನಮ್ಮ ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಜಿಸುವ ಗಡಿಯಲ್ಲಿರುವವರ ಬಗ್ಗೆ ನಾವು ಮರೆಯಬಾರದು ಎಂದು ಹೇಳಿದರು. +ರೈತರಬಗ್ಗೆ ಕೀಳಾಗಿ ಮಾತಾಡಿದ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಕೆರಳಿದ ಕಮಲಪಡೆ +ನಾಲ್ವರು ಯೋಧರು ಹುತಾತ್ಮರಾದ ನಂತರ ಇಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ರಜೌರಿ ಸೆಕ್ಟರ್ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಈ ಹೇಳಿಕೆ ನೀಡಿದ್ದಾರೆ.ಕಳೆದ ವಾರ ಗುರುವಾರ ರಜೌರಿ ಸೆಕ್ಟರ್ನ ಥಾನಂಡಿ ಬಳಿ ಎರಡು ವಾಹನಗಳಿಗೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಹೊಂಚು ಹಾಕಿದ ನಂತರ ನಾಲ್ವರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. + +ಏತನ್ಮಧ್ಯೆ ಭಾನುವಾರ ನಾಲ್ವರು ಯೋಧರಾದ ನಾಯಕ್ ಬಿರೇಂದರ್ ಸಿಂಗ್, ರೈಫಲ್ಮ್ಯಾನ್ ಗೌತಮ್ ಕುಮಾರ್, ನಾಯಕ್ ಕರಣ್ ಕುಮಾರ್ ಮತ್ತು ರೈಫಲ್ಮ್ಯಾನ್ ಚಂದನ್ ಕುಮಾರ್ ಅವರಿಗೆ ರಾಜೌರಿಯಲ್ಲಿ ಪುಷ್ಪಾರ್ಚನೆ ಸಮಾರಂಭದಲ್ಲಿ ಬೀಳ್ಕೊಡಲಾಯಿತು. \ No newline at end of file diff --git a/eesanje/url_47_208_3.txt b/eesanje/url_47_208_3.txt new file mode 100644 index 0000000000000000000000000000000000000000..f7c1a0d5cbb2960459214c74dfd61c97b3f0c73a --- /dev/null +++ b/eesanje/url_47_208_3.txt @@ -0,0 +1,8 @@ +ವಾಹನ ಸವಾರರಿಗೆ ಗುಡ್ ನ್ಯೂಸ್, ಫಾಸ್ಟ್ ಟ್ಯಾಗ್ ಕಿರಿಕಿರಿಗೆ ಮುಕ್ತಿ +ನವದೆಹಲಿ, ಡಿ.25- ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಾಹನ ಸವಾರರಿಗೆ ಶುಭ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ವಾಹನ ಸವಾರರು ಹೆದ್ದಾರಿಗಳಲ್ಲಿ ಬರುವ ಟೋಲ್‍ಗಳಲ್ಲಿ ಹಣ, ಇಲ್ಲವೇ ಫಾಸ್ಟ್ ಟ್ಯಾಗ್ ಮೂಲಕ ಪಾವತಿಸುವ ವ್ಯವಸ್ಥೆ ಇರುವುದಿಲ್ಲ ಎಂದಿದ್ದಾರೆ. +ಟೋಲ್ ತೆರಿಗೆ ಸಂಗ್ರಹಕ್ಕೆ ಹೊಸ ತಂತ್ರಜ್ಞಾನವನ್ನು ಪರಿಚಯಿಸುವ ಯೋಜನೆ ತರುವುದಾಗಿ ತಿಳಿಸಿರುವ ಅವರು, ಮುಂದಿನ ವರ್ಷ ಮಾರ್ಚ್‍ನಿಂದ ಟೋಲ್ ಪ್ಲಾಜಾಗಳಲ್ಲಿ ಜಿಪಿಎಸ್ ಮೂಲಕ ಟೋಲ್ ತೆರಿಗೆ ಸಂಗ್ರಹಿಸಲಾಗುವುದು. ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಹೆದ್ದಾರಿಯಲ್ಲಿ ಪ್ರಯಾಣಿಸುವ ನಿಖರವಾದ ದೂರವನ್ನು ಆಧರಿಸಿ ಟೋಲ್ ತೆರಿಗೆಯನ್ನು ಸಂಗ್ರಹಿಸುವ ಗುರಿ ಹೊಂದಿದೆ. +ಜಿಪಿಎಸ್ ಆಧಾರಿತ ಟೋಲ್ ತೆರಿಗೆ ಸಂಗ್ರಹಣೆಯ ಅನುಷ್ಠಾನವು ಮಾರ್ಚ್ 2024 ರಲ್ಲಿ ಪ್ರಾರಂಭವಾಗಲಿದೆ. ಇದಕ್ಕಾಗಿ ಸ್ವಯಂಚಾಲಿತ ನಂಬರ್‍ಪ್ಲೇಟ್ ರೆಕಗ್ನೆಷನ್ ಸಿಸ್ಟಮ್ ಆಗಿ ಸಚಿವಾಲಯವು ಈಗಾಗಲೇ ಎರಡು ಪ್ರಾಯೋಗಿಕ ಯೋಜನೆಗಳನ್ನು ಪ್ರಾರಂಭಿಸಿದೆ, ಇದು ವಾಹನಗಳು ನಿಲ್ಲುವ ಅಗತ್ಯವಿಲ್ಲದೇ ಟೋಲ್ ಸಂಗ್ರಹಕ್ಕೆ ಅನುವು ಮಾಡಿಕೊಡುತ್ತದೆ. ಇದು ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಿದೆ. +ಕಾಯುವ ಅನಿವಾರ್ಯತೆ ಇರಲ್ಲ:2020-21 ಮತ್ತು 2021-22 ರಲ್ಲಿ ಫಾಸ್ಟ್ಟ್ಯಾಗ್ ಅನುಷ್ಠಾನಗೊಂಡ ನಂತರ, ಟೋಲ್ ಪ್ಲಾಜಾಗಳಲ್ಲಿ ವಾಹನಗಳ ಸರಾಸರಿ ಕಾಯುವ ಸಮಯವು 8 ನಿಮಿಷಗಳಿಂದ ಕೇವಲ 47 ಸೆಕೆಂಡುಗಳಿಗೆ ಕಡಿಮೆಯಾಗಿದೆ. ಇದು ವಿಶೇಷವಾಗಿ ನಗರಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಕಾಯುವ ಸಮಯವನ್ನು ಹೆಚ್ಚು ಸುಧಾರಿಸಿದೆ. +ಕಾಂಗ್ರೆಸ್‍ಗೆ ತೀವ್ರ ಮುಜುಗರವನ್ನುಂಟುಮಾಡಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ +ಆದಾಗ್ಯೂ, ಹೆಚ್ಚು ಜನನಿಬಿಡ ಸ್ಥಳಗಳಲ್ಲಿ, ಕಾಯುವ ಸಮಯವನ್ನು ಕಡಿಮೆ ಮಾಡುವಲ್ಲಿ ಇನ್ನೂ ಸುಧಾರಣೆಗೆ ಅವಕಾಶವಿದೆ. ಟೋಲ್ ಸಂಗ್ರಹದ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು, ದೇಶದಲ್ಲಿ 13.45 ಕೋಟಿಗೂ ಹೆಚ್ಚು ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‍ಗಳನ್ನು ನೀಡಲಾಗಿದೆ.ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆಗೆ ಮುನ್ನ 1,000 ಕಿಲೋಮೀಟರ್ಗಿಂತ ಕಡಿಮೆ ಉದ್ದದ 1.5 ರಿಂದ 2 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹೆದ್ದಾರಿ ಯೋಜನೆಗಳಿಗೆ ಟೆಂಡರ್‍ಗಳನ್ನು ಫ್ರೋಟ್ ಮಾಡಲು ಸಚಿವಾಲಯ ಯೋಜಿಸಿದೆ. ಈ ಉಪಕ್ರಮವು ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲು ಮತ್ತು ಸಂಪರ್ಕವನ್ನು ಸುಧಾರಿಸುವ ಗುರಿ ಹೊಂದಿದೆ. +ಮೇ 1999 ರಲ್ಲಿ ಕೇಂದ್ರ ಮೋಟಾರು ವಾಹನ ನಿಯಮಗಳ ತಾಂತ್ರಿಕ ಸ್ಥಾಯಿ ಸಮಿತಿಯು ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿಗಳನ್ನು ಶಿಫಾರಸು ಮಾಡಿತು. ಇದರಲ್ಲಿ ಹೈ-ಸೆಕ್ಯುರಿಟಿ ನಂಬರ್ ಪ್ಲೇಟ್‍ಗಳನ್ನು ಅಳವಡಿಸಲಾಗಿದೆ. ಈ ವಿಶೇಷ ಪರವಾನಗಿ ಫಲಕಗಳನ್ನು ವಾಹನ ನೋಂದಣಿ ಭದ್ರತೆ ಹೆಚ್ಚಿಸಲು ಮತ್ತು ಕಳ್ಳತನ ಮತ್ತು ವಂಚನೆಯಂತಹ ಕೃತ್ಯಗಳನ್ನು ಕಡಿಮೆ ಮಾಡಲು ವಿನ್ಯಾಸಗೊಳಿಸಲಾಗಿದೆ. \ No newline at end of file diff --git a/eesanje/url_47_208_4.txt b/eesanje/url_47_208_4.txt new file mode 100644 index 0000000000000000000000000000000000000000..8467d0a6015f0992b20d65a4ab6f50b38933534b --- /dev/null +++ b/eesanje/url_47_208_4.txt @@ -0,0 +1,6 @@ +ರಾಮಮಂದಿರ ಉದ್ಘಾಟನೆಗೂ ಮುನ್ನ ಪ್ರಧಾನಿ ಮೋದಿ ಅಯೋಧ್ಯಾ ಭೇಟಿ + +ಅಯೋಧ್ಯೆ (ಉತ್ತರಪ್ರದೇಶ),ಡಿ.25- ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಪ್ರಧಾನಿ ನರೇಂದ್ರಮೋದಿ ಅವರು ಡಿ.30ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್ ಶೋ ನಡೆಸಲಿದ್ದಾರೆ.ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. +ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ.ವರೆಗೆ ರೋಡ್ ಶೋ ನಡೆಯಲಿದೆ. ಇದಾದ ನಂತರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೋಡ್ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಧು, ಸಂತರು ಮೋದಿ ಅವರನ್ನು ಆಶೀರ್ವದಿಸಲಿದ್ದಾರೆ. +ಕಾಂಗ್ರೆಸ್‍ಗೆ ತೀವ್ರ ಮುಜುಗರವನ್ನುಂಟುಮಾಡಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ +ಅಯೋಧ್ಯೆಯಲ್ಲಿ ನವೀಕೃತ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ನೆರವೇರಲಿದೆ. ಪೂರ್ವಭಾವಿಯಾಗಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. \ No newline at end of file diff --git a/eesanje/url_47_208_5.txt b/eesanje/url_47_208_5.txt new file mode 100644 index 0000000000000000000000000000000000000000..1a037cf459169204842823f81a587b30eeb14226 --- /dev/null +++ b/eesanje/url_47_208_5.txt @@ -0,0 +1,5 @@ +ರಾಹುಲ್ ಗಾಂಧಿ ಮೌನವನ್ನು ಪ್ರಶ್ನಿಸಿದ ಬಿಆರ್‌ಎಸ್‌ ನಾಯಕಿ +ಹೈದರಾಬಾದ್,ಡಿ.25-ನಿಮ್ಮ ಮೈತ್ರಿ ನಾಯಕರು ಭಾರತದ ಜನರನ್ನುವಿಭಸುವ ರೀತಿ ಮಾತನಾಡುತ್ತಿದ್ದಾರೆ,ನೀವು ಭಾರತ್ ಜೋಡೋ ಯಾತ್ರೆಯ ಬಗ್ಗೆ ಸಾಕಷ್ಟು ಮಾತಾಡ್ತೀರಾ ಈಗ ನಿಮ್ಮವರ ಬಗ್ಗೆ ಏನನ್ನೂ ಹೇಳದೆ ಸುಮ್ಮನಿದ್ದೀರಲ್ಲ ಎಂದು ರಾಹುಲ್ ಗಾಂಧಿಗೆ ಬಿಆರ್‍ಎಸ್ ನಾಯಕಿ ಕೆ.ಕವಿತಾ ಕಳೆಲೆದಿದ್ದಾರೆ. +ಹಿಂದೆ ಸನಾತನ ದರ್ಂದ ಮೇಲೆ ಈಗ ಹಿಂದಿ ಬಾಷಿಗರ ಮೇಲೆ ಡಿಎಂಕೆ ನಾಯಕರ ಹೇಳಿಕೆ ಭಾರಿ ಟೀಕೆಗೆ,ಚರ್ಚೆಯ ನಡುವೆ, ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಮೌನವನ್ನು ಪ್ರಶ್ನಿಸಿದ್ದಾರೆ. ಇದು ನಿರ್ದಿಷ್ಟ ಪಕ್ಷದ ಅಭಿಪ್ರಾಯಗಳ ಬಗ್ಗೆ ಅಲ್ಲ, ಈ ರೀತಿಯ ಹೇಳಿಕೆಗಳು ನಮ್ಮ ರಾಷ್ಟ್ರದ ಕ್ಕೂಟ ವ್ಯವಸ್ಥೆಯನ್ನುಹಾಳುಮಾಡುತ್ತವೆ ಮತ್ತು ಈ ನಿರ್ದಿಷ್ಟ ಪಕ್ಷವು ಯಾವ ಮೈತ್ರಿಕೂಟದ ಭಾಗವಾಗಿದೆ ಎಂಬುದರ ಬಗ್ಗೆ ಗಮನಿಸಬೇಕಿದೆ. ಇದು ರಾಹುಲ್ ಗಾಂಧಿಯವರ ಕಾಂಗ್ರೆಸ್ ನೇತೃತ್ವದ ಇಂಡಿಯಾ ಬ್ಲಾಕ್‍ನ ಒಂದು ಭಾಗವಲ್ಲವಾ ಎಂದು ಪ್ರಶ್ನಿಸಿದರು. +ಜಮ್ಮು-ಕಾಶ್ಮೀರದಲ್ಲಿ ಭಾರೀ ಚಳಿ, ಹೆಪ್ಪುಗಟ್ಟಿದ ದಾಲ್ ಸರೋವರ +ರಾಹುಲ್ ಗಾಂಧಿ ಅವರು ನಿರಂತರವಾಗಿ ಭಾರತ್ ಜೋಡೋ ಯಾತ್ರೆಯ ಬಗ್ಗೆ ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅಲ್ಲಿ ಅವರು ರಾಷ್ಟ್ರವನ್ನು ಒಂದುಗೂಡಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ ಎನ್ನುತ್ತಾರೆ ಆದರೆ ಅದು ಕೇವಲ ಸ್ಟಂಟ್‍ನಂತೆ ತೋರುತ್ತಿದೆ ಏಕೆಂದರೆ ಡಿಎಂಕೆ ನಾಯಕರು ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡುತ್ತಿದ್ದಾಗಲೆ ಎದ್ದುನಿಂತು ಮಾತನಾಡಬೇಕಿತ್ತು ಆಗಲಿಲ್ಲ ಈಗ ಮತ್ತೊಂದು ಅವಾಂತರ ಮಾಡಿದ್ದಾರೆ ಮೌನವಾಗಿದ್ದಾರೆ ಇದು ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಅವರು ಕವಿತಾ ಹೇಳಿದರು. \ No newline at end of file diff --git a/eesanje/url_47_208_6.txt b/eesanje/url_47_208_6.txt new file mode 100644 index 0000000000000000000000000000000000000000..70d3139875817d8e26f5f5964e9ffdbd24c28e45 --- /dev/null +++ b/eesanje/url_47_208_6.txt @@ -0,0 +1,7 @@ +ಜಮ್ಮು-ಕಾಶ್ಮೀರದಲ್ಲಿ ಭಾರೀ ಚಳಿ, ಹೆಪ್ಪುಗಟ್ಟಿದ ದಾಲ್ ಸರೋವರ +ಶ್ರೀನಗರ,ಡಿ.25-ಜಮ್ಮು ಕಾಶ್ಮೀರದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದ್ದು ಮಂಜಿನಿಂದ ಜನರು ಮನೆಯಿಂದ ಹೊರಗೆ ಬರುತ್ತಿಲ್ಲ ವಾಹನ ಸಂಚಾರವೂ ವಿರಳವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಕೊರೆಯುತ್ತಿರುವ ಚಳಿಯಿಂದ ಶ್ರೀನಗರದ ಪ್ರಸಿದ್ಧ ದಾಲ್ ಸರೋವರ ಹೆಪ್ಪುಗಟ್ಟಿದೆ.ಮರಗಳು ಮಂಜಿನಿಂದ ಆವೃತವಾಗಿದ್ದು, ಜಗದ್ವಿಖ್ಯಾತ ಅಮರನಾಥ ಯಾತ್ರೆಯ ಆರಂಭ ಸ್ಥಾನ ಪಹಲ್ಗಾಂನಲ್ಲಿ ಅತಿ ಕನಿಷ್ಠ ಉಷ್ಣಾಂಶ ಮೈನಸ್ 3.9 ಡಿ.ಸೆ.ನಷ್ಟು ದಾಖಲಾಗಿದೆ. ಉಳಿದಂತೆ ಗುಲ್ಮಾರ್ಗ್‍ನಲ್ಲಿ – 3.5 ಡಿ.ಸೆ., ಕುಪ್ವಾರ – 2.7 ಡಿ.ಸೆ., ಶ್ರೀನಗರ – 2.1 ಡಿ.ಸೆ., ಖಾಸಿಗುಂಡ್ – 2.0 ಡಿ.ಸೆ.ನಷ್ಟು ಉಷ್ಣಾಂಶ ದಾಖಲಾಗಿದೆ. +ಇನ್ನು ರಾಜಸ್ಥಾನದ ವಾಯವ್ಯ ಹಾಗೂ ಪಶ್ಚಿಮ ಭಾಗದಲ್ಲಿ ಭಾರೀ ಚಳಿ ಕಾಣಿಸಿಕೊಂಡಿದೆ.ಹಿಮಾಚಲ ಪ್ರದೇಶ ,ಜಾಖಂಡ್ ಹಲವು ಭಾಗಗಳಲ್ಲಿ ಮಂಜು ಸುರಿಯುತ್ತಿದೆ.ಇನ್ನು ದಕ್ಷಿಣದ ಊಟಿಯಲ್ಲಿ ಶೂನ್ಯಕ್ಕೆ ತಾಪಮಾನ ಇಳಿದಿದೆ.ಸದಾ ಹಸಿರಿನಿಂದ ಕಂಗೊಳಿಸುವ ತಮಿಳುನಾಡಿನ ಪ್ರಸಿದ್ಧ ಗಿರಿಧಾಮ ಉದಕಮಂಡಲ (ಊಟಿ)ಯಲ್ಲಿ ಮರಗಿಡ ಕಟ್ಟಡಗಳು ಬಿಳಿಯ ಹೊದಿಕೆ ಹೊದ್ದುಕೊಂಡಿತ್ತು. +ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್ +ಭಾನುವಾರ ಉಷ್ಣಾಂಶ 1 ಡಿಗ್ರಿ ಸೆಲ್ಷಿಯಸ್‍ಗೆ ಇಳಿದಿದ್ದರೆ, ಅಲ್ಲಿದ ಕೇವಲ 3 ಕಿ.ಮೀ ದೂರದ ತಲಕುಂಡ ಪ್ರದೇಶದಲ್ಲಿ ಉಷ್ಣಾಂಶ ಶೂನ್ಯಕ್ಕೆ ತಲುಪಿತ್ತು. ಹೀಗಾಗಿ ಇಡೀ ಪ್ರದೇಶ ತೆಳುವಾದ ಹಿಮದ ಹೊದಿಕೆ ಹೊದ್ದು ಪ್ರವಾಸಿಗರನ್ನು ಭಾರೀ ಪ್ರಮಾಣದಲ್ಲಿ ಆಕರ್ಷಿಸಿತು. +ಈ ನಡುವೆ ಉಷ್ಣಾಂಶ ಭಾರೀ ಪ್ರಮಾಣದಲ್ಲಿ ಕುಸಿದ ಕಾರಣ ಕೆಲ ಪ್ರವಾಸಿಗರು ಬೆಳಗ್ಗೆ 8.30ರವರೆಗೂ ಹೋಟೆಲ್‍ನಿಂದ ಹೊರಗೆ ಬರಲಾಗದೇ ಪರದಾಡುವಂತೆಯೂ ಆಯಿತು.ಪ್ರತಿವರ್ಷ ಅಕ್ಟೋಬರ್‍ನಿಂದ -ಫೆಬ್ರವರಿ ಅವಧಿಯಲ್ಲಿ ನೀಲಗಿರಿ ತಪ್ಪಲಿನಲ್ಲಿ ಈ ರೀತಿ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಯುವುದು ಸಾಮಾನ್ಯ. \ No newline at end of file diff --git a/eesanje/url_47_208_7.txt b/eesanje/url_47_208_7.txt new file mode 100644 index 0000000000000000000000000000000000000000..b9899e94b7c2cfb83f1c178d74c477f578cd4cd3 --- /dev/null +++ b/eesanje/url_47_208_7.txt @@ -0,0 +1,5 @@ +ಸಾಗರ ತೀರದಲ್ಲಿ ಈರುಳ್ಳಿಯಲ್ಲಿ ಮೂಡಿಬಂದ ಸಾಂತಾಕ್ಲಾಸ್ +ಪುರಿ, ಡಿ.25 (ಪಿಟಿಐ) : ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಮತ್ತು ಈರುಳ್ಳಿ ಬಳಸಿ ಸಾಂತಾಕ್ಲಾಸ್‍ನ ಶಿಲ್ಪವನ್ನು ರಚಿಸಲಾಗಿದೆ.ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಎರಡು ಟನ್ ಈರುಳ್ಳಿಯನ್ನು ಬಳಸಿ 100 ಅಡಿ 20 ಅಡಿ 40 ಅಡಿ ಕಲಾಕೃತಿಯನ್ನು ರಚಿಸಿದ್ದು, ಗಿಡವನ್ನು ಉಡುಗೊರೆಯಾಗಿ ನೀಡುತ್ತಿದ್ದಾರೆ. +ಪಟ್ನಾಯಕ್ ಮತ್ತು ಅವರ ಮರಳು ಕಲಾ ಶಾಲೆಯ ವಿದ್ಯಾರ್ಥಿಗಳು ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಶಿಲ್ಪವನ್ನು ಪೂರ್ಣಗೊಳಿಸಲು ಎಂಟು ಗಂಟೆಗಳ ಕಾಲ ತೆಗೆದುಕೊಂಡರು. ಪ್ರತಿ ವರ್ಷ, ನಾವು ಮರಳಿನಲ್ಲಿ ವಿಭಿನ್ನವಾದದ್ದನ್ನು ಪ್ರಯತ್ನಿಸುತ್ತೇವೆ. ಕಳೆದ ವರ್ಷ ನಾವು ಟೊಮೆಟೊದಿಂದ ಸಾಂಟಾ ಕ್ಲಾಸ್ ಶಿಲ್ಪವನ್ನು ರಚಿಸಿದ್ದೇವೆ. ಈ ವರ್ಷ ನಾವು ಅದನ್ನು ಈರುಳ್ಳಿಯಿಂದ ಮಾಡಿದ್ದೇವೆ ಎಂದು ಪಟ್ನಾಯಕ್ ಹೇಳಿದರು. +ತುಮಕೂರು : ಸ್ಮಶಾನವಿಲ್ಲದ ಕಾರಣ ರಸ್ತೆಬದಿಯೇ ಅಂತ್ಯಸಂಸ್ಕಾರ +ಭಾರತದ ವಲ್ಡರ್ï ರೆಕಾರ್ಡ್ ಬುಕ್ ಈ ಸ್ಯಾಂಡ್ ಆರ್ಟ್ ಸ್ಥಾಪನೆಯನ್ನು ವಿಶ್ವದ ಅತಿದೊಡ್ಡ ಈರುಳ್ಳಿ ಮತ್ತು ಸಾಂಟಾ ಕ್ಲಾಸ್‍ನ ಮರಳು ಸ್ಥಾಪನೆಗೆ ಹೊಸ ದಾಖಲೆ ಎಂದು ಘೋಷಿಸಿದೆ ಎಂದು ಪಟ್ನಾಯಕ್ ಹೇಳಿದರು. \ No newline at end of file diff --git a/eesanje/url_47_208_8.txt b/eesanje/url_47_208_8.txt new file mode 100644 index 0000000000000000000000000000000000000000..8a60380cc2b7058214751a148089589d5ca6c00d --- /dev/null +++ b/eesanje/url_47_208_8.txt @@ -0,0 +1,8 @@ +ಮಂಜಿನಲ್ಲಿ ಮುಳುಗಿದ ದೆಹಲಿ, ಜೊತೆಗೆ ಮೈಕೊರೆಯುವ ಚಳಿ +ನವದೆಹಲಿ,ಡಿ.25- ರಾಷ್ಟ್ರ ರಾಜಧಾನಿ ದೆಹಲಿ ಮಂಜಿನಲ್ಲಿ ಮುಳುಗಿ ಹೋಗಿದೆ. ದಟ್ಟವಾದ ಮಂಜಿನಿಂದಾಗಿ ರಾಷ್ಟ್ರ ರಾಜಧಾನಿಯ ಕೆಲವು ಭಾಗಗಳಲ್ಲಿ ಗೋಚರತೆಯನ್ನು ಶೂನ್ಯಕ್ಕೆ ಇಳಿಸಿದ್ದರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂದು ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಪ್ರಯಾಣಿಕರು ತಮ್ಮ ವಿಮಾನಗಳ ನವೀಕರಣಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. +ದೆಹಲಿಯಲ್ಲಿ ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದಂತೆ ತಾಪಮಾನ 9.4 ಡಿಗ್ರಿ ಸೆಲ್ಸಿಯಸ್‍ಗೆ ಇಳಿದಿದೆ. ರಾಜಧಾನಿಯ ವಿವಿಧ ಭಾಗಗಳಲ್ಲಿನ ಗೋಚರತೆಯು ಕೇವಲ 125 ಮೀಟರ್‍ಗೆ ಕುಸಿದಿದೆ, ಇದು ದೈನಂದಿನ ಜೀವನಕ್ಕೆ ವ್ಯಾಪಕವಾದ ಅಡ್ಡಿಗಳನ್ನು ಉಂಟುಮಾಡಿತು. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲೂ ಸಹ ದಟ್ಟವಾದ ಮಂಜು ಕವಿದಿದೆ. +ಚಳಿಯು ರಾಷ್ಟ್ರ ರಾಜಧಾನಿಯಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿರುವುದರಿಂದ, ನಿವಾಸಿಗಳು ನಗರದ ವಿವಿಧ ಭಾಗಗಳಲ್ಲಿ ರಾತ್ರಿ ಆಶ್ರಯ ಪಡೆದರು. ಕೊರೆಯುವ ಚಳಿಯಿಂದ ಸಾಂತ್ವನ ಪಡೆಯಲು ಸ್ಥಳೀಯರು ಲೋ ರಸ್ತೆ ಪ್ರದೇಶದಲ್ಲಿ ಬೆಂಕಿ ಕಾಯಿಸುತ್ತಿರುವ ದೃಶ್ಯಗಳು ಕಂಡು ಬಂದವು. +ಎಟಿಎಂನಲ್ಲಿ ಹಣ ಕದ್ದು ಯಂತ್ರಕ್ಕೆ ಬೆಂಕಿ ಇಟ್ಟ ಕಳ್ಳರು +ಲೋ ರಸ್ತೆ, ಮುನಿಕಾರ್, ಆರ್‍ಕೆ ಪುರಂ ಮತ್ತು ಏಮ್ಸï ಬಳಿಯ ರಿಂಗ್ ರೋಡ್‍ನಂತಹ ಪ್ರಮುಖ ಸ್ಥಳಗಳಿಂದ ಸೆರೆಹಿಡಿಯಲಾದ ದೃಶ್ಯಗಳು ಸುತ್ತಮುತ್ತಲಿನ ದಟ್ಟವಾದ ಮಂಜಿನ ಪದರವನ್ನು ಆವರಿಸಿದೆ.ರಾಷ್ಟ್ರ ರಾಜಧಾನಿಯಲ್ಲಿನ ಗಾಳಿಯ ಗುಣಮಟ್ಟವು ಅತ್ಯಂತ ಕಳಪೆ ವಿಭಾಗದಲ್ಲಿ ಉಳಿದಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಹಿತಿಯ ಪ್ರಕಾರ ವಾಯು ಗುಣಮಟ್ಟ ಸೂಚ್ಯಂಕ 400 ಎಕ್ಯೂಐರ ಆಸುಪಾಸಿನಲ್ಲಿದೆ. +ಇದರ ಪರಿಣಾಮ ದಕ್ಷಿಣ ಭಾರತದ ಮೇಲೂ ಬಿದ್ದಿದೆ. ವಿಸ್ತಾರಾ ಹಲವಾರು ವಿಮಾನಗಳ ಮಾರ್ಗವನ್ನು ಪ್ರಕಟಿಸಿತು. ಮಂಜು ಕವಿದಿರುವ ಕಾರಣ ಹೈದರಾಬಾದ್‍ನಿಂದ ದೆಹಲಿಗೆ ತೆರಳುತ್ತಿದ್ದ ಆರು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. +ಮೂಲತಃ ಬೆಂಗಳೂರಿನಿಂದ ಹೈದರಾಬಾದ್‍ಗೆ ಪ್ರಯಾಣಿಸಬೇಕಿದ್ದ 897 ವಿಮಾನವನ್ನು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನದ ಕಾರಣ ಬೆಂಗಳೂರಿಗೆ ವಾಪಸ್ ಕಳುಹಿಸಲಾಗಿದೆ ಅದೇ ರೀತಿ ಮುಂಬೈನಿಂದ ಹೈದರಾಬಾದ್ ಮಾರ್ಗವಾಗಿ ಹೊರಟಿದ್ದ ಯುಕೆ 873 ಫ್ಲೈಟ್ ಕೂಡ ಪ್ರತಿಕೂಲ ಹವಾಮಾನವನ್ನು ಎದುರಿಸಿದೆ. \ No newline at end of file diff --git a/eesanje/url_47_208_9.txt b/eesanje/url_47_208_9.txt new file mode 100644 index 0000000000000000000000000000000000000000..caeddedfcc03348119d469cfc58eb2162a054749 --- /dev/null +++ b/eesanje/url_47_208_9.txt @@ -0,0 +1,7 @@ +ಸಂಸದರ ಸಮೂಹಿಕ ಅಮಾನತು ಪೂರ್ವನಿರ್ಧರಿತವಾಗಿತ್ತು : ಖರ್ಗೆ +ನವದೆಹಲಿ,ಡಿ.25- ಸಂಸದರ ಸಾಮೂಹಿಕ ಅಮಾನತು ಪ್ರಕರಣವೂ ಕೇಂದ್ರ ಸರ್ಕಾರದ ಪೂರ್ವನಿರ್ಧರಿತ ಮತ್ತು ಪೂರ್ವಯೋಜಿತವಾಗಿದೆ ಎಂದು ತೋರುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. +ಉಪರಾಷ್ಟ್ರಪತಿ ಮತ್ತು ಮೇಲ್ಮನೆ ಸಭಾಪತಿ ಜಗದೀಪ್ ಧನಕರ್ ಅವರ ಪತ್ರಕ್ಕೆ ತಿರುಗೇಟು ನೀಡಿ, ಲೋಕಸಭೆ ಮತ್ತು ರಾಜ್ಯಸಭೆ ಎರಡರಿಂದಲೂ ಸಂಸದರನ್ನು ಸಾಮೂಹಿಕವಾಗಿ ಅಮಾನತುಗೊಳಿಸಿರುವುದು ಪೂರ್ವನಿರ್ಧರಿತವಾಗಿದೆ ಎಂದು ತೋರುತ್ತದೆ ಮತ್ತು ಸರ್ಕಾರದಿಂದ ಪೂರ್ವಯೋಜಿತವಾಗಿದೆ ಎಂದು ಆರೋಪಿಸಿದ್ದಾರೆ. +ಇಂದು ತಮ್ಮ ಚೇಂಬರ್‍ನಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಲು ಆಹ್ವಾನಿಸಿದ್ದ ಧನಕರ್ ಅವರಿಗೆ ಪತ್ರ ಬರೆದಿರುವ ಖರ್ಗೆ ಅವರು ನಾನು ದೆಹಲಿಯಿಂದ ಹೊರಗಿದ್ದು, ವಾಪಸ್ ಆದ ನಂತರ ತಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. +ಎಟಿಎಂನಲ್ಲಿ ಹಣ ಕದ್ದು ಯಂತ್ರಕ್ಕೆ ಬೆಂಕಿ ಇಟ್ಟ ಕಳ್ಳರು +ಸಂಸದರ ಅಮಾನತು, ಸಂಸತ್ತಿನಲ್ಲಿ ಅಡ್ಡಿ ಮತ್ತು ಇತರ ವಿಷಯಗಳ ನಡುವೆ ಮಸೂದೆಗಳ ಅಂಗೀಕಾರಕ್ಕೆ ಸಂಬಂಸಿದ ಕಳವಳಗಳ ಕುರಿತು ಧನ್‍ಕರ್ ಮತ್ತು ಖರ್ಗೆ ಇಬ್ಬರೂ ಪತ್ರಗಳ ಮೂಲಕ ಪದಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. +ಚಳಿಗಾಲದ ಅವೇಶನದ ನಂತರದ ಸಮಸ್ಯೆಗಳ ನಡುವೆ ಮುಂದುವರಿಯಲು ಧನಕರ್ ಅವರ ಸಲಹೆಯನ್ನು ಖರ್ಗೆ ಅವರು ಒಪ್ಪಿಕೊಂಡರು ಮತ್ತು ಸಂವಿಧಾನ, ಪಾರ್ಲಿಮೆಂಟರಿ, ಪಾರ್ಲಿಮೆಂಟರಿ ಆಚರಣೆಗಳು ಮತ್ತು ನಿರಂಕುಶ ಸರ್ಕಾರದಲ್ಲಿ ಪ್ರಜಾಪ್ರಭುತ್ವದಲ್ಲಿ ಸಹಜ ನಂಬಿಕೆಗೆ ನಾವು ಬದ್ಧರಾಗಿರುವುದರಲ್ಲಿ ಉತ್ತರವಿದೆ ಎಂದು ಖರ್ಗೆ ಹೇಳಿದ್ದಾರೆ. \ No newline at end of file diff --git a/eesanje/url_47_209_1.txt b/eesanje/url_47_209_1.txt new file mode 100644 index 0000000000000000000000000000000000000000..02fb25500f62c5be9eccdc724b3d24f1a8b27eb4 --- /dev/null +++ b/eesanje/url_47_209_1.txt @@ -0,0 +1,6 @@ +ನಾಯಿ ಬೊಗಳಿದ ವಿಚಾರಕ್ಕೆ ಜಗಳ, ಮಹಿಳೆಯ ಕೊಲೆ +ಇಂದೋರ್, ಡಿ 24- ತನ್ನ ಸಾಕುನಾಯಿ ವಿಚಾರವಾಗಿ ರಸ್ತೆಯಲ್ಲಿ ಜಗಳಕ್ಕೆ ನಿಂತ್ತಿದ್ದ ಮಹಿಳೆಯನ್ನು ಕೊಪದಲ್ಲಿ ವ್ಯಕ್ತಿಯೊಬ್ಬ ಹೊಟ್ಟೆಗೆ ಒದ್ದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ನಗರದ ಮುಸಖೇಡಿ ಪ್ರದೇಶದಲ್ಲಿ ನಡೆದಿದೆ. ಶಾಂತಿ ನಗರದ ನಿವಾಸಿಯಾದ ಆರೋಪಿಯನ್ನು ಬಂದಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ವ್ಯಾಪಾರಿಯಾದ ಆತ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಬಂದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಅವರು ಮುಂದೆ ಹೋಗಲು ಸಾಧ್ಯವಾಗಲಿಲ್ಲ. +ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ +ಆಗ ಆರೋಪಿ ಕೂಗಲಾರಂಭಿಸಿದಾಗ ಜನ ಸೇರಿದರು ,ನಾಯಿ ಸಾಕಿದ್ದ 65 ವರ್ಷದ ಮಹಿಳೆ ತನ್ನ ಮನೆಯಿಂದ ಹೊರಬಂದು ಸ್ಥಳೀಯರ ಜೊತೆ ಈ ವಿಷಯದ ಬಗ್ಗೆ ವಾಗ್ವಾದ ನಡೆಸಿದರು ಎಂದು ಪೊಲೀಸ್‍ಅಧಿಕಾರಿ ತಿಳಿಸಿದ್ದಾರೆ. ಕೋಪಗೊಂಡ ಆರೋಪಿ ಏಕಾಏಕಿ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ ಆಕೆ ರಸ್ತೆಯ ಮೇಲೆ ಬಿದ್ದಿದ್ದಾಳೆ ಕೆಲವರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆಕೆ ಸಾವನ್ನಪ್ಪಿದಳು. +ನಂತರ ವಿಷಯವನ್ನು ಪೊಲೀಸರಿಗೆ ತಿಳಿಸಲಾಯಿತು ಮತ್ತು ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿ ಬಂದಿಸಲಾಗಿದೆ ಎಂದು ಅಧಿಕಾರಿ ಹೇಳಿದರು. \ No newline at end of file diff --git a/eesanje/url_47_209_10.txt b/eesanje/url_47_209_10.txt new file mode 100644 index 0000000000000000000000000000000000000000..25f741ab47573942e6e17349111da11c28f08dc6 --- /dev/null +++ b/eesanje/url_47_209_10.txt @@ -0,0 +1,9 @@ +ಎಲ್ಲ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿದೆ ಪರಿಹಾರ : ಅಮಿತ್ ಷಾ +ಕುರುಕ್ಷೇತ್ರ,ಡಿ.23- ಸಮಾಜದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಭಗವದ್ಗೀತೆಯಲ್ಲಿದ್ದು, ಅದರ ಸಂದೇಶ ದೇಶ ಮತ್ತು ಜಗತ್ತಿನ ಮೂಲೆ ಮೂಲೆಗೂ ತಲುಪಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದಿಲ್ಲಿ ಕರೆ ನೀಡಿದರು. ಅಂತಾರಾಷ್ಟ್ರೀಯ ಗೀತಾ ಉತ್ಸವಕ್ಕೆ ಭೇಟಿ ನೀಡಿದ ನಂತರ ಸಂತ ಸಮ್ಮೇಳನದಲ್ಲಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. +ದೇಶಕ್ಕೆ ಸ್ವಾತಂತ್ರ್ಯ ದೊರೆತ 75 ವರ್ಷಗಳಲ್ಲಿ ಭಗವದ್ಗೀತೆಯ ಪುನರುತ್ಥಾನಕ್ಕಾಗಿ ಅನೇಕ ದಾರ್ಶನಿಕರು ಮತ್ತು ಮಹಾತ್ಮರು ಶ್ರಮಿಸಿದ್ದಾರೆ ಎಂದು ಗೃಹ ಸಚಿವರು ಹೇಳಿದರು. ನಾನು ಪ್ರಪಂಚದಾದ್ಯಂತ ಅನೇಕ ವಿದ್ವಾಂಸರನ್ನು ಭೇಟಿ ಮಾಡಿದ್ದೇನೆ ಮತ್ತು ಇಡೀ ಪ್ರಪಂಚದ ಎಲ್ಲಾ ಸಮಸ್ಯೆಗಳಿಗೆ ಗೀತಾ ಸಂದೇಶದಲ್ಲಿ ಪರಿಹಾರವಿದೆ ಎಂದು ಎಲ್ಲರೂ ನಂಬುತ್ತಾರೆ ಎಂದು ಅವರು ಹೇಳಿದರು. +ಮಹಾಭಾರತವನ್ನು ಉಲ್ಲೇಖಿಸಿದ ಅವರು, ನಾವು ಇಲ್ಲಿ ಕುರುಕ್ಷೇತ್ರದ ಪುಣ್ಯಭೂಮಿಯಲ್ಲಿ ಕುಳಿತಿದ್ದೇವೆ. 5,000 ವರ್ಷಗಳ ಹಿಂದೆ ಶ್ರೀಕೃಷ್ಣನು ಅರ್ಜುನನಿಗೆ ಗೀತೆಯ ಸಂದೇಶವನ್ನು ನೀಡಿದ್ದಾನೆ. ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದವರು ಸೇರಿದಂತೆ ಕೆಲವು ಬುದ್ಧಿಜೀವಿಗಳು ಗೀತೆಯ ಸಂದೇಶವನ್ನು ಎಲ್ಲೆಡೆ ಯಶಸ್ವಿಯಾಗಿ ಹರಡಲು ಯಶಸ್ವಿಯಾದರೆ, ಜಗತ್ತಿನಲ್ಲಿ ಎಂದಿಗೂ ಯುದ್ಧ ನಡೆಯುವುದಿಲ್ಲ ಎಂದು ಹೇಳಿದರು ಎಂದು ಶಾ ಹೇಳಿದರು. +ಅವರು ಉಲ್ಲೇಖಿಸಿದ ಪಠ್ಯವು ಯಾರನ್ನಾದರೂ ಯುದ್ಧದಲ್ಲಿ ಹೋರಾಡಲು ಪ್ರೇರೇಪಿಸುವ ಸಂದೇಶವನ್ನು ಒಳಗೊಂಡಿದೆ ಎಂದು ಹೇಳುವ ಮೂಲಕ ಅವರನ್ನು ಸರಿಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದರು. ಇದು ಯುದ್ಧದ ಸಮಯ ಮತ್ತು ಅವನ ಮುಂದೆ ಯಾರಿದ್ದಾರೆಂದು ನೋಡಲು ಸಾಧ್ಯವಿಲ್ಲ ಎಂದು ಭಗವಾನ್ ಕೃಷ್ಣ ಅರ್ಜುನನಿಗೆ ಹೇಳಿದನು ಮತ್ತು ಅವನು ಹೋರಾಡುತ್ತಿರುವುದು ಅವನ ಧರ್ಮಕ್ಕಾಗಿಯೇ ಹೊರತು ತನಗಾಗಿ ಅಲ್ಲ ಎಂದು ಅಮಿತ್ ಶಾ ಹೇಳಿದರು. +ಹಮಾಸ್-ಇಸ್ರೇಲ್ ಯುದ್ಧದಲ್ಲಿ ಈವರೆಗೆ 20 ಸಾವಿರ ಪ್ಯಾಲೆಸ್ಟೀನಿಯರು ಬಲಿ +ನಾನು ಅನೇಕ ಏರಿಳಿತಗಳನ್ನು ಕಂಡಿದ್ದೇನೆ, ಆದರೆ ನನ್ನ ತಾಯಿ ನನಗೆ ನನ್ನ ಬಾಲ್ಯದಲ್ಲಿ ಗೀತೆಯನ್ನು ಕಲಿಸಿದ ಕಾರಣ ನಾನು ಯಾವುದೇ ನಿರಾಶೆ ಮತ್ತು ನೋವನ್ನು ಅನುಭವಿಸಲಿಲ್ಲ ಎಂದು ಅವರು ಹೇಳಿದರು.2016ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೀತಾ ಹಬ್ಬವನ್ನು ಆಯೋಜಿಸಲಾಗುತ್ತಿದ್ದು, ಎರಡು ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇಂತಹ ಕಾರ್ಯಕ್ರಮವನ್ನು ಆಯೋಜಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. ಅಸ್ಸಾಂ ಈ ವರ್ಷ ಉತ್ಸವದ ಪಾಲುದಾರ ರಾಜ್ಯವಾಗಿದೆ. ಮೋದಿಯವರು ಪ್ರಧಾನಿಯಾದ ನಂತರ ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ಆತ್ಮ ಪ್ರಜ್ಞೆಯನ್ನು ಜಾಗೃತಗೊಳಿಸುವ ಕೆಲಸ ಮಾಡಿದ್ದಾರೆ ಎಂದು ಅಮಿತ್ ಶಾ ಹೇಳಿದರು. +ದೇಶದ ಸಂಸ್ಕøತಿಯನ್ನು ಸದಾ ಮುಂದಕ್ಕೆ ಕೊಂಡೊಯ್ಯಬೇಕು ಎಂಬ ನಂಬಿಕೆಯೊಂದಿಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಗಳನ್ನು ಹೊರತಂದಿದೆ ಮತ್ತು ಅದನ್ನು ಮಾರ್ಗದರ್ಶಿ ಶಕ್ತಿಯಾಗಿ ಇಟ್ಟುಕೊಂಡು ಸರ್ಕಾರ ನೀತಿಗಳನ್ನು ಮಾಡಿದೆ ಎಂದು ಅವರು ಹೇಳಿದರು. +ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಯನ್ನು ರದ್ದುಗೊಳಿಸುವುದರಿಂದ ಈ ಪ್ರದೇಶವನ್ನು ಭಾರತದ ಉಳಿದ ಭಾಗಗಳೊಂದಿಗೆ ಸಂಪೂರ್ಣ ಏಕೀಕರಣಗೊಳಿಸಲು ಸಾಧ್ಯವಾಯಿತು ಎಂದು ಸಚಿವರು ಹೇಳಿದರು.ದೇಶದಲ್ಲಿ ಸಾಂಸ್ಕøತಿಕ ಮತ್ತು ಧಾರ್ಮಿಕ ಪುನರುಜ್ಜೀವನದ ಆರಂಭಕ್ಕಾಗಿ, ರಾಮಮಂದಿರವನ್ನು ನಿರ್ಮಿಸಬೇಕು ಮತ್ತು ¿ತ್ರಿವಳಿ ತಲಾಖï¿ ಅನ್ನು ಕೊನೆಗೊಳಿಸಬೇಕು ಎಂದು ಅವರು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿನ ಎರಡು ಭರವಸೆಗಳನ್ನು ಉಲ್ಲೇಖಿಸಿದರು. \ No newline at end of file diff --git a/eesanje/url_47_209_11.txt b/eesanje/url_47_209_11.txt new file mode 100644 index 0000000000000000000000000000000000000000..baf9c684e3b1af4c9ce2bcca7bc7fcf8831caa21 --- /dev/null +++ b/eesanje/url_47_209_11.txt @@ -0,0 +1,8 @@ +ಜ.6 ರಿಂದ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯಾರಂಭ +ನವದೆಹಲಿ,ಡಿ.23-ಶ್ರೀರಾಮನ ಜನ್ಮ ಸ್ಥಾನ ಅಯೋಧ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶದ ಪ್ರಮುಖ ನಗರಗಳಿಗೆ ಜ.6 ರಿಂದ ವಿಮಾನ ಹಾರಾಟ ಆರಂಭವಾಗಲಿದ್ದು, ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. +ಅಯೋಧ್ಯೆ ವಿಮಾನ ನಿಲ್ದಾಣನಲ್ಲಿ ಡಿ.22 ರಂದು ಭಾರತೀಯ ವಾಯುಪಡೆಯ ಏರ್‍ಬಸ್ ಎ320 ಅನ್ನು ಇತ್ತೀಚೆಗೆ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದು, ಮುಂದಿನ ವರ್ಷ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ ವಿಮಾನ ಪ್ರಯಾಣದ ಕೇಂದ್ರವಾಗಲು ಸಜ್ಜಾಗುತ್ತಿರುವಂತೆ ಅಯೋಧ್ಯಾ ಹೊಸ ಯುಗಕ್ಕೆ ನಾಂದಿ ಹಾಡಿದೆ. +ಏರ್‍ಲೈನ್ಸ್ ಕಂಪನಿ ಇಂಡಿಗೋ ದೆಹಲಿ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ, ಹೈದರಾಬಾದ್, ಬೆಂಗಳೂರು, ಚೆನ್ನೈ ಮತ್ತು ಗೋವಾದಂತಹ ಪ್ರಮುಖ ನಗರಗಳಿಗೆ ವಿಮಾನಗಳನ್ನು ಒದಗಿಸಲಿದೆ. ಅಯೋಧ್ಯೆಯಲ್ಲಿ ಏರ್‍ಸ್ಟ್ರಿಪ್ ತುಂಬಾ ಚಿಕ್ಕದಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ, ನಮಗೆ ಇಲ್ಲಿ ಕೇವಲ 178 ಎಕರೆ ಭೂಮಿ ಇತ್ತು, ಇಷ್ಟು ಚಿಕ್ಕ ಪಟ್ಟಿಯಲ್ಲಿ ನಮಗೆ ದೊಡ್ಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೆ ತಿಳಿಸಲಾಗಿತ್ತು. +ರಾಜ್ಯ ಸರ್ಕಾರದಿಂದ 821 ಎಕರೆ ಭೂಮಿಯನ್ನು ಒದಗಿಸಿದ ನಂತರ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಹೊಸ ವಿಮಾನ ನಿಲ್ದಾಣವನ್ನು ಯುದ್ಧದ ಆಧಾರದ ಮೇಲೆ ಅಭಿವೃದ್ಧಿಪಡಿಸಲು ಕೆಲಸ ಮಾಡುತ್ತಿದೆ. ಹೊಸ ವಿಮಾನ ನಿಲ್ದಾಣವು ಡಿಸೆಂಬರ್ 15 ರೊಳಗೆ ಸಿದ್ಧವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಹೇಳಿದ್ದರು. +24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು +ಅಯೋಧ್ಯೆಯ ವಿಮಾನ ನಿಲ್ದಾಣವು ನಗರದ ಐತಿಹಾಸಿಕ ಮಹತ್ವ ಮತ್ತು ಸಂಸ್ಕøತಿಯನ್ನು ಪ್ರತಿಬಿಂಬಿಸಬೇಕು ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ. ದೇಶ ಅಥವಾ ವಿದೇಶದಿಂದ ಯಾರಾದರೂ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದಾಗ ಅವರು ನಗರದ ಐತಿಹಾಸಿಕ ಮಹತ್ವದ ನೋಟವನ್ನು ಪಡೆಯಬೇಕು. ಆದ್ದರಿಂದ ಅಯೋಧ್ಯೆಯ ವಿಮಾನ ನಿಲ್ದಾಣವು ಮತ್ತೊಂದು ವಿಮಾನ ನಿಲ್ದಾಣವಾಗಬಾರದು. ನಾವು ಅಯೋಧ್ಯೆಯ ಸಂಸ್ಕøತಿಯನ್ನು ಅದರ ವಿಮಾನ ನಿಲ್ದಾಣದಲ್ಲಿ ಅಳವಡಿಸಲು ಪ್ರಯತ್ನಿಸಿದ್ದೇವೆ ಎಂದು ಸಿಂಧಿಯಾ ಹೇಳಿದರು. +6500 ಚದರ ಮೀಟರ್ ವಿಮಾನ ನಿಲ್ದಾಣವು ಒಂದು ಗಂಟೆಯಲ್ಲಿ ಎರಡರಿಂದ ಮೂರು ವಿಮಾನಗಳನ್ನು ಇಳಿಸಬಹುದು. 2200 ಮೀಟರ್ ರನ್‍ವೇಯನ್ನು ಎರಡನೇ ಹಂತದಲ್ಲಿ 3700 ಮೀಟರ್‍ಗೆ ವಿಸ್ತರಿಸಲಾಗುವುದು. ಇದು ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಅಯೋಧ್ಯೆಗೆ ಇಳಿಯಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_209_12.txt b/eesanje/url_47_209_12.txt new file mode 100644 index 0000000000000000000000000000000000000000..570e98dd1e53637a6b7bb8637d69a235ee311bb6 --- /dev/null +++ b/eesanje/url_47_209_12.txt @@ -0,0 +1,6 @@ +ಮೋದಿ ವಿರುದ್ಧ ಸ್ಪರ್ಧಿಸುವಂತೆ ದೀದಿಗೆ ಬಿಜೆಪಿ ಮುಖಂಡ ಚಾಲೆಂಜ್ +ನವದೆಹಲಿ,ಡಿ.23- ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ರ್ಪಧಿಸುವಂತೆ ಬಿಜೆಪಿ ಮುಖಂಡ ಅಗ್ನಿಮಿತ್ರ ಪೌಲ್ ಸವಾಲು ಹಾಕಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ನಿಲ್ಲುವಂತೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಬ್ಯಾನರ್ಜಿ ಅವರನ್ನು ಒತ್ತಾಯಿಸಿದರು. +ಮಮತಾ ಬ್ಯಾನರ್ಜಿ ವಾರಣಾಸಿಯಿಂದ ಏಕೆ ಸ್ರ್ಪಧಿಸುವುದಿಲ್ಲ? ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಸ್ಥಾನದಲ್ಲಿ ಮಮತಾ ಬ್ಯಾನರ್ಜಿ ಸ್ರ್ಪಧಿಸುವ ಧೈರ್ಯವಿದ್ದರೆ, ಅವರು ಹಾಗೆ ಮಾಡಬೇಕು. ನೀವು ಪ್ರಧಾನಿಯಾಗಲು ಬಯಸುತ್ತೀರಿ, ಸರಿ? ನಂತರ ಅವರು ನಮ್ಮ ಪ್ರಧಾನಿ ವಿರುದ್ಧ ಸ್ರ್ಪಧಿಸಬೇಕು ಅಲ್ಲವೇ ಎಂದು ಅಗ್ನಿಮಿತ್ರ ತಿಳಿಸಿದ್ದಾರೆ. +2024 ರ ಚುನಾವಣೆಗೆ ಸೀಟು ಹಂಚಿಕೆ ವ್ಯವಸ್ಥೆಯನ್ನು ಅಂತಿಮಗೊಳಿಸುವಂತೆ ಬಂಗಾಳದ ಮುಖ್ಯಮಂತ್ರಿ ಇಂಡಿಯಾ ಒಕ್ಕೂಟವನ್ನು ಒತ್ತಾಯಿಸಿದ ದಿನಗಳ ನಂತರ ಪಾಲ್ ಅವರ ಈ ಪ್ರತಿಕ್ರಿಯೆಯು ಬಂದಿತು. ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ಮುಖವಾಗಬೇಕು ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. +24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು +ತೃಣಮೂಲವು ಸೀಟು ಹಂಚಿಕೆಯ ಮಾತುಕತೆಗಳನ್ನು ತ್ವರಿತಗೊಳಿಸಲು, ಸಾಮೂಹಿಕ ನಿರೂಪಣೆಯನ್ನು ಸ್ಥಾಪಿಸಲು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಶ್ವಾಸಾರ್ಹ ಸವಾಲನ್ನು ಪ್ರಸ್ತುತಪಡಿಸಲು ಪ್ರಣಾಳಿಕೆಯನ್ನು ಅಂತಿಮಗೊಳಿಸಲು ಉತ್ಸುಕವಾಗಿದೆ. ರಾಜ್ಯದ ಕೆಲವು ಕಾಂಗ್ರೆಸ್ ನಾಯಕರು ಎಡಪಕ್ಷಗಳೊಂದಿಗೆ ಸೀಟು ಹಂಚಿಕೆ ವ್ಯವಸ್ಥೆಗೆ ಒತ್ತಾಯಿಸುತ್ತಿದ್ದಾರೆ ಎಂಬ ಗೊಣಗಾಟದ ನಡುವೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್‍ನೊಂದಿಗೆ ಸೀಟು ಹಂಚಿಕೆ ಮಾತುಕತೆಗೆ ಮುಕ್ತರಾಗಿದ್ದಾರೆ ಎಂದು ಮೂಲಗಳು ಹೇಳುತ್ತವೆ. \ No newline at end of file diff --git a/eesanje/url_47_209_2.txt b/eesanje/url_47_209_2.txt new file mode 100644 index 0000000000000000000000000000000000000000..38bbc3384bf663000c12a7845fd74fb30ac108a9 --- /dev/null +++ b/eesanje/url_47_209_2.txt @@ -0,0 +1,7 @@ +ಗುಂಡು ಹಾರಿಸಿ ಎಐಎಂಐಎಂ ನಾಯಕನ ಹತ್ಯೆ +ಪಾಟ್ನಾ, ಡಿ.24- ಎಐಎಂಐಎಂ ನಾಯಕ ಆರಿಫ್ ಜಮಾಲ್ನನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಹುಸೈಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುತುಬ್ ಛಾಪ್ರಾ ತಿರುವಿನಲ್ಲಿ ಈ ಘಟನೆ ನಡೆದಿದೆ. ಆರಿಫ್ ಜಮಾಲ್ ತನ್ನ ಅಂಗಡಿಯಲ್ಲಿ ಕುಳಿತಿದ್ದ ಸಮಯದಲ್ಲಿ ಬೈಕ್ನಲ್ಲಿ ಬಂದ ಮೂವರು ಅಪರಿಚಿತರು ದಾಳಿ ನಡೆಸಿದ್ದಾರೆ. +ಆರಿಫ್ ಜಮಾಲ್ ಫಾಸ್ಟ್ ಫುಡ್ ಅಂಗಡಿ ಹೊಂದಿದ್ದಾರೆ, ರಾತ್ರಿ 8.30ರಿಂದ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುಂಡಿನ ದಾಳಿ ನಡೆಸಿದ ಬಳಿಕ ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಆರಿಫ್ ಜಮಾಲ್ ನನ್ನು ಜನರು ತರಾತುರಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿ ತಪಾಸಣೆ ನಡೆಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. +ಹುಸೈಂಗಂಜ್ ಪೊಲೀಸ್ ಠಾಣೆಯ ಪ್ರಭಾರಿ ವಿಜಯ್ ಯಾದವ್ ಅವರು ಆರಿಫ್ ಜಮಾಲ್ ಅವರನ್ನು ಕ್ರಿಮಿನಲ್ಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಹೇಳಿದ್ದಾರೆ. ಗುಂಡು ಅವರ ಹೊಟ್ಟೆಗೆ ತಗುಲಿತ್ತು. ಸ್ಥಳೀಯರು ಮತ್ತು ಕುಟುಂಬದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. +ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು +ದುಷ್ಕರ್ಮಿಗಳು ಆರಿಫ್ ಜಮಾಲ್ ಹೊಟ್ಟೆಗೆ ಒಂದೇ ಒಂದು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ, ಜನರು ಮೊದಲು ಅವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ದರು. ಇದಾದ ಬಳಿಕ ಇಲ್ಲಿಂದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. +ಆರಿಫ್ ಜಮಾಲ್ ಕೂಡ ಚುನಾವಣೆಗೆ ಸ್ರ್ಪಧಿಸಿದ್ದಾರೆ ಎನ್ನಲಾಗಿದೆ. 2015 ರಲ್ಲಿ ಅವರು ರಘುನಾಥಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ರ್ಪಧಿಸಿ ಸೋತಿದ್ದರು. ಇದಾದ ಬಳಿಕ 2022ರ ಜಿಲ್ಲಾ ಪರಿಷತ್ ಚುನಾವಣೆಗೂ ಸ್ರ್ಪಧಿಸಿದ್ದರು. ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. \ No newline at end of file diff --git a/eesanje/url_47_209_3.txt b/eesanje/url_47_209_3.txt new file mode 100644 index 0000000000000000000000000000000000000000..4658cace637accf15a9c3a960c9b1a508add089c --- /dev/null +++ b/eesanje/url_47_209_3.txt @@ -0,0 +1,6 @@ +ಉಪನ್ಯಾಸದ ವೇಳೆಯಲ್ಲೇ ಹೃದಯಾಘಾತ ಹಿರಿಯ ಉಪನ್ಯಾಸಕ ನಿಧನ +ಕಾನ್ಪುರ, ಡಿ.24- ವೇದಿಕೆ ಮೇಲೆ ಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತಗೊಂಡು ಐಐಟಿ ಕಾನ್ಪುರದ ಹಿರಿಯ ಉಪನ್ಯಾಸಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದ ಸಮೀರ್ ಖಂಡೇಕ ಮೃತ ಪ್ರಾಧ್ಯಾಪಕರು. ರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು. +ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು. ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು. +ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು +ಸುಮಾರು ಐದು ವರ್ಷಗಳ ಹಿಂದೆ ಖಾಂಡೇಕರ್ ಅವರಿಗೆ ಅರೋಗ್ಯ ಸಮಸ್ಯೆ ಎದುರಾದಾಗ ಪರೀಕ್ಷೆ ನಡೆಸಿದ ವೈದ್ಯರು ರಕ್ತದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿರುವುದಾಗಿ ಹೇಳಿದ್ದರು ಎಂದು ಅವರ ಆಪ್ತ ಪ್ರಾಧ್ಯಾಪಕರೊಬ್ಬರು ಹೇಳಿದ್ದರು. ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರೊಫೆಸರ್ ಅವರ ಮಗ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ. ಖಂಡೇಕರ್ ಅವರು 2019 ರಿಂದ ಕೊಲೆಸ್ಟ್ರಾಲ್ನಿಂದ ಬಳಲುತ್ತಿದ್ದರು ಮತ್ತು ನಿರಂತರ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ತಂದೆ-ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. +ಮಧ್ಯಪ್ರದೇಶದ ಜಬಲ್ಪುರದಲ್ಲಿ ಜನಿಸಿದ ಖಾಂಡೇಕರ್ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ಓದಿದ್ದು, ಪಿಎಚ್ಡಿಗಾಗಿ ಜರ್ಮನಿಗೆ ತೆರಳಿದ್ದರು. 2004 ರಲ್ಲಿ, ಅವರು ಐಐಟಿ ಕಾನ್ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದರು, ನಂತರ ಅವರು ಸಹ ಪ್ರಾಧ್ಯಾಪಕರಾದರು. \ No newline at end of file diff --git a/eesanje/url_47_209_4.txt b/eesanje/url_47_209_4.txt new file mode 100644 index 0000000000000000000000000000000000000000..602028fd295a4a87b836a75bce559a3c2605e04b --- /dev/null +++ b/eesanje/url_47_209_4.txt @@ -0,0 +1,13 @@ +ಮತ್ತೊಂದು ವಿವಾದದಲ್ಲಿ ದಯಾನಿಧಿ ಮಾರನ್ +ಚೆನ್ನೈ, ಡಿ.24- ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ಇನ್ನು ಹಸಿಯಾಗಿರುವಾಗಲೇ ಇದೀಗ ಡಿಎಂಕೆ ಸಂಸದ ದಯಾನಿಧಿ ಮಾರನ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. +ಇಂಗ್ಲಿಷ್ ಕಲಿತವರು ಐಟಿಗಳಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ಉತ್ತಮ ಸಂಬಳವೂ ಇರುತ್ತದೆ. ಹಿಂದಿ ಮಾತ್ರ ತಿಳಿದಿದೆ ಎಂದು ಹೇಳುವವರು, ಇಂದು ನಮ್ಮಲ್ಲಿ(ತಮಿಳುನಾಡಿಗೆ) ಬಂದು ತಮಿಳು ಕಲಿತು ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಕೆಲಸವನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜದ್ ಪೂನವಾಲಾ ಹಂಚಿಕೊಂಡಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. +ಡಎಂಕೆ ಸಂಸದ ದಯಾನಿಧಿ ಮಾರನ್ ಕಾರ್ಯಕ್ರಮವೊಂದರಲ್ಲಿ ಇಂಗ್ಲಿಷ್ ಹಿಂದಿ ಕಲಿಕೆಯ ಬಗ್ಗೆ ಮಾತನಾಡಿರುವುದು ವೈರಲ್ ಆಗಿದ್ದು,ಬಿಜೆಪಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಉತ್ತರ ಭಾರತದ ಜನರನ್ನು ಜಾತಿ, ಭಾಷೆ ಮತ್ತು ಧರ್ಮದ ಮೂಲಕ ವಿಭಜಿಸಲು ಪ್ರಯತ್ನಿಸುತ್ತಿರುವ ಇಂಡಿಯಾ ಒಕ್ಕೂಟ ಮತ್ತು ಡಿಎಂಕೆ ಸಂಸದರ ವಿರುದ್ಧ ಮೈತ್ರಿಕೂಟ ನಿಷ್ಕ್ರಿಯತೆಯನ್ನು ವಹಿಸಿರುವುದು ಕಟುವಾಗಿದೆ. ಇದು ಮತ್ತೊಮ್ಮೆ ಒಡೆದಾಳುವ ಪ್ರಯತ್ನ ಎಂದು ಪೂನವಾಲಾ ಟ್ವಿಟರ್‍ನಲ್ಲಿ ಬರೆದುಕೊಂಡದ್ದಾರೆ. +ನಿತೀಶ್ ಕುಮಾರ್, ತೇಜಸ್ವಿ ಯಾದವ್, ಲಾಲು ಯಾದವ್, ಕಾಂಗ್ರೆಸ್, ಎಸ್ಪಿ ಅಖಿಲೇಶ್ ಯಾದವ್ ಈ ಬಗ್ಗೆ ಯಾಕೆ ಮೌನವಾಗಿದ್ದಾರೆ. ನೀವು ಯಾವಾಗ ನಿಲುವು ತೆಗೆದುಕೊಳ್ಳುತ್ತೀರಿ? ಎಂದು ದಯಾನಿಧಿ ಮಾರನ್ ಅವರ ಹೇಳಿಕೆಗೆ ಉತ್ತರ ಪ್ರದೇಶ ಮತ್ತು ಬಿಹಾರದ ಇಂಡಿಯಾ ಬಣದ ನಾಯಕರಲ್ಲಿ ಪೂನವಾಲಾ ಪ್ರಶ್ನೆ ಮಾಡಿದ್ದಾರೆ. ನಿತೀಶ್ ಕುಮಾರ್, ತೇಜಸ್ವಿ ಯಾದವ್, ಲಾಲು ಯಾದವ್, ಕಾಂಗ್ರೆಸ್, ಎಸ್‍ಪಿ ಅಖಿಲೇಶ್ ಯಾದವ್ ಎಲ್ಲರೂ ಇದು ಆಗುತ್ತಿಲ್ಲ ಎಂದು ನಟಿಸುತ್ತಾರೆಯೇ? ಅವರು ಯಾವಾಗ ನಿಲುವು ತೆಗೆದುಕೊಳ್ಳುತ್ತಾರೆ? ಎಂದು ಪೂನಾವಾಲಾ ಪ್ರಶ್ನಿಸಿದ್ದಾರೆ. +ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು +ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಹಿಂದಿ ಹೃದಯ ರಾಜ್ಯಗಳ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಮತ್ತೊಬ್ಬ ಸಂಸದ ಡಿಎನ್‍ವಿ ಸೆಂಥಿಲ್‍ಕುಮಾರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶೆಹಜಾದ್ ಪೂನವಾಲಾ ಹೇಳಿದ್ದಾರೆ. +ಇತ್ತೀಚೆಗೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಬಿಜೆಪಿ ಗೆಲುವು ಸಾಸಿದ ನಂತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಸೆಂಥಿಲ್‍ಕುಮಾರ್ ಹೇಳಿದ್ದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧವೂ ಪೂನಾವಾಲಾ ಅವರು ಹಳೆಯ ಘಟನೆಗಳ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. +2021 ರಲ್ಲಿ, ಆ ವರ್ಷದ ಕೇರಳ ವಿಧಾನಸಭೆ ಚುನಾವಣೆಗೆ ಮುನ್ನ, ವಯನಾಡ್ ಲೋಕಸಭಾ ಸಂಸದ ರಾಹುಲ್ ಗಾಂಧಿ ಅವರು ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಉತ್ತರ ಪ್ರದೇಶದ ಅಮೇಥಿಯನ್ನು ಪ್ರತಿನಿಧಿಸುವಾಗ ಅವರು ವಿಭಿನ್ನ ರೀತಿಯ ರಾಜಕೀಯ ಕ್ಕೆ ಒಗ್ಗಿಕೊಂಡಿದ್ದರು ಎಂದು ಹೇಳಿದರು. +2022 ರಲ್ಲಿ, ಪ್ರಿಯಾಂಕಾ ಗಾಂಧಿ ವಾದ್ರಾ ಪಂಜಾಬಿನ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಸಮರ್ಥಿಸಿಕೊಂಡರು, ಅವರು ಪಂಜಾಬಿಗಳು ಒಂದಾಗಬೇಕು ಮತ್ತು ಯುಪಿ, ಬಿಹಾರ ಮತ್ತು ದೆಹಲಿಯಿಂದ ಭಾಯಿ ರಾಜ್ಯವನ್ನು ಆಳಲು ಬಿಡಬಾರದು ಎಂದು ಹೇಳಿದರು. +ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಟೀಕೆಗಳನ್ನೂ ಪೂನಾವಾಲಾ ಪ್ರಸ್ತಾಪಿಸಿದರು. ಕೆಲ ದಿನಗಳ ಹಿಂದೆ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾ ಕ್ಕೆ ಹೋಲಿಸಿದ ನಂತರ ಕಿಡಿ ಕಾರಿದರು ಮತ್ತು ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಎಂದು ಹೇಳಿದ್ದರು. +ಉದ್ಯಮಿಗಳೊಂದಿಗೆ ಸಿಎಂ ಸಭೆ +ಇದಲ್ಲದೆ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡ ನಂತರ, ಅವರ ಹಳೆಯ ವೀಡಿಯೊ ಪುನರಾವರ್ತನೆಯಾಯಿತು, ಅದರಲ್ಲಿ ಅವರು ತಮ್ಮ ಎದುರಾಳಿ ಮತ್ತು ಮಾಜಿ ಸಿಎಂ ಕೆ ಚಂದ್ರಶೇಖರ ರಾವ್ ಅವರ ಡಿಎನ್‍ಎ ಬಿಹಾರದಿಂದ ಬಂದಿದೆ ಎಂದು ಆರೋಪಿಸಿದ್ದರು. ಇವೆಲ್ಲವನ್ನೂ ಪಟ್ಟಿ ಮಾಡಿರುವ ಶೆಹಜಾದ್ ಪೂನವಾಲಾ,ಇಂಡಿಯಾ ಮೈತ್ರಿಕೂಟ ಬಣದ ಅಜೆಂಡಾ ಸನಾತನ ಧರ್ಮವನ್ನು ಒಡೆದು ಆಳುವುದು ಮತ್ತು ಅವಮಾನಿಸುವುದು ಮತ್ತು ದೇಶದ ಜನರನ್ನು ವಿಭಜಿಸುವುದು ಎಂದು ವಾಗ್ದಳಿ ನಡೆಸಿದ್ದಾರೆ. \ No newline at end of file diff --git a/eesanje/url_47_209_5.txt b/eesanje/url_47_209_5.txt new file mode 100644 index 0000000000000000000000000000000000000000..0865238e99d59c245f319a87783321cc468aada4 --- /dev/null +++ b/eesanje/url_47_209_5.txt @@ -0,0 +1,4 @@ +ಗುಂಡಿಕ್ಕಿ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ ಉಗ್ರರು +ಶ್ರೀನಗರ, ಡಿ.24 – ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂದು ಮುಂಜಾನೆ ಗಂಟ್ಮುಲ್ಲಾ, ಶೀರಿ ಬಾರಾಮುಲ್ಲಾದ ಮಸೀದಿಯೊಳಗೆ ಮೊಹಮ್ಮದ್ ಶಾಫಿ ಪ್ರಾರ್ಥನೆ ಮಾಡುವಾಗ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ : ಜೋಶಿ +ಅವರನ್ನು ಆಸ್ಪತ್ರೆಗೆ ಸೇರಿಸಲು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಭದ್ರತಾ ಪಡೆ ಸ್ಥಳವನ್ನು ಸುತ್ತುವರಿದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_209_6.txt b/eesanje/url_47_209_6.txt new file mode 100644 index 0000000000000000000000000000000000000000..1310990445d92adc543d6afc1fda0ecbd50d3e33 --- /dev/null +++ b/eesanje/url_47_209_6.txt @@ -0,0 +1,5 @@ +ಮುಂಬೈ ವಿವಿಯಲ್ಲಿ ದೇವಸ್ಥಾನ ನಿರ್ವಹಣೆ ಕೋರ್ಸ್ ಆರಂಭ +ಮುಂಬೈ, ಡಿ 23 (ಪಿಟಿಐ) ದೇವಸ್ಥಾನದ ನಿರ್ವಹಣೆಯ ಕುರಿತು ಕೋರ್ಸ್ ನೀಡಲು ಆಕ್ಸ್‍ಫರ್ಡ್ ಸೆಂಟರ್ ಫಾರ್ ಹಿಂದೂ ಸ್ಟಡೀಸ್‍ನೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿರುವುದಾಗಿ ಮುಂಬೈ ವಿಶ್ವವಿದ್ಯಾಲಯ ತಿಳಿಸಿದೆ. ಈ ಸಹಯೋಗದ ಅಡಿಯಲ್ಲಿ ಆಫ್‍ಲೈನ್ ಮತ್ತು ಆನ್‍ಲೈನ್ ಮೋಡ್‍ನಲ್ಲಿ ನೀಡಲಾಗುವ ವಿವಿಧ ಡಿಫ್ಲೋಮಾ ಮತ್ತು ಪ್ರಮಾಣಪತ್ರ ಮಟ್ಟದ ಕೋರ್ಸ್‍ಗಳಲ್ಲಿ ಇದು ಒಂದಾಗಿರುತ್ತದೆ. +ವಿಶ್ವವಿದ್ಯಾನಿಲಯದ ಸೆಂಟರ್ ಫಾರ್ ಹಿಂದೂ ಸ್ಟಡೀಸ್ ಮತ್ತು ಅದರ ಸಂಸ್ಕøತ ವಿಭಾಗವು ಆಕ್ಸ್‍ಫರ್ಡ್ ಸೆಂಟರ್ ಫಾರ್ ಹಿಂದೂ ಸ್ಟಡೀಸ್‍ನೊಂದಿಗೆ ಎಂಒಯುಗೆ ಸಹಿ ಹಾಕಿದೆ ಎಂದು ವಿಶ್ವವಿದ್ಯಾಲಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. +ಮೋದಿ ವಿರುದ್ಧ ಸ್ಪರ್ಧಿಸುವಂತೆ ದೀದಿಗೆ ಬಿಜೆಪಿ ಮುಖಂಡ ಚಾಲೆಂಜ್ +ಪದವಿ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳೊಂದಿಗೆ ಹಿಂದೂ ತತ್ವಶಾಸ್ತ್ರದ ಸಮಗ್ರ ಅಧ್ಯಯನದ ಮೇಲೆ ಕೋರ್ಸ್ ಕೇಂದ್ರೀಕರಿಸುತ್ತದೆ. \ No newline at end of file diff --git a/eesanje/url_47_209_7.txt b/eesanje/url_47_209_7.txt new file mode 100644 index 0000000000000000000000000000000000000000..b8ef41b1e9c020e217162a91f239b673339e1a13 --- /dev/null +++ b/eesanje/url_47_209_7.txt @@ -0,0 +1,6 @@ +60 ಸಿಮ್‍ಕಾರ್ಡ್‍ಗಳೊಂದಿಗೆ ಸಿಕ್ಕಿಬಿದ್ದ ತೈವಾನ್ ಪ್ರಜೆ ವಿಚಾರಣೆ +ನವದೆಹಲಿ,ಡಿ.23- ಅರವತ್ತಕ್ಕೂ ಹೆಚ್ಚು ಮೊಬೈಲ್ ಸಿಮ್ ಕಾರ್ಡ್‍ಗಳೊಂದಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಎಸ್‍ಎಫ್ ಸಿಬ್ಬಂದಿಯಿಂದ ಸೆರೆ ಸಿಕ್ಕ ತೈವಾನ್ ಪ್ರಜೆಯ ಪಾತ್ರದ ಕುರಿತು ಭದ್ರತಾ ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ಲೈ ಜಿನ್ ಪಿಂಗ್ ಅವರು ಡಿ.18 ರಂದು ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಟರ್ಮಿನಲ್ 3 ರಿಂದ ಬ್ಯಾಂಕಾಕ್‍ಗೆ ಥಾಯ್ ಏರ್‍ವೇಸ್ ವಿಮಾನವನ್ನು ಹತ್ತುವ ಮೊದಲು ಕೇಂದ್ರ ಭದ್ರತಾ ಪಡೆಗಳಿಂದ ಬಂಧಿಸಲಾಯಿತು. +ಭೌತಿಕ ತಪಾಸಣೆಯ ಸಮಯದಲ್ಲಿ, ಸಕ್ರಿಯ ಸ್ಥಿತಿಯಲ್ಲಿದ್ದ ವ್ಯಕ್ತಿಯ ಲಗೇಜ್‍ನಲ್ಲಿ 67 ಭಾರತೀಯ ಸಿಮ್ ಕಾರ್ಡ್‍ಗಳು ಪತ್ತೆಯಾಗಿವೆ ಮತ್ತು ವಿವಿಧ ಭಾರತೀಯ ವ್ಯಕ್ತಿಗಳ ಹೆಸರಿನಲ್ಲಿವೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ವಕ್ತಾರರು ತಿಳಿಸಿದ್ದಾರೆ. +ಹಮಾಸ್-ಇಸ್ರೇಲ್ ಯುದ್ಧದಲ್ಲಿ ಈವರೆಗೆ 20 ಸಾವಿರ ಪ್ಯಾಲೆಸ್ಟೀನಿಯರು ಬಲಿ +ಅವರು ಈ ಸಿಮ್ (ಚಂದಾದಾರರ ಗುರುತಿನ ಮಾಡ್ಯೂಲ) ಕಾರ್ಡ್‍ಗಳನ್ನು ಏಕೆ ಸಾಗಿಸುತ್ತಿದ್ದಾರೆ ಎಂಬುದಕ್ಕೆ ತೃಪ್ತಿಕರವಾಗಿ ಉತ್ತರಿಸಲು ಸಾಧ್ಯವಾಗಲಿಲ್ಲ ಎಂದು ವಕ್ತಾರರು ತಿಳಿಸಿದ್ದಾರೆ. ಫೋರ್ಸ್ ನಂತರ ಗುಪ್ತಚರ ಬ್ಯೂರೋ ಮತ್ತು ವಲಸೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ವಿದೇಶಿಯನನ್ನು ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದರು. +ದೆಹಲಿ ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_209_8.txt b/eesanje/url_47_209_8.txt new file mode 100644 index 0000000000000000000000000000000000000000..f2a000c1c596970e4acf32b3c8f4d1d358967a10 --- /dev/null +++ b/eesanje/url_47_209_8.txt @@ -0,0 +1,8 @@ +ನಾರಿಶಕ್ತಿ, ಯುವಶಕ್ತಿ, ಕಿಸಾನ್ ಔರ್ ಗರೀಬ್ ಎಂಬ ಜಾತಿ ಪರ ಕೆಲಸ ಮಾಡಿ : ಮೋದಿ +ನವದೆಹಲಿ,ಡಿ.23- ದೇಶದ ಯುವಕರು, ಬಡವರು , ರೈತರು ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚಿಂತನ ಮಂಥಕ್ಕಾಗಿ ಜೆಪಿ ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುವಕರು, ಬಡವರು, ಮಹಿಳೆಯರು ಮತ್ತು ರೈತರು ಎಂಬ ನಾಲ್ಕು ಜಾತಿಗಳನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಹೇಳಿದರು. +ಡಿ.3 ರಂದು ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ನಂತರ ಪ್ರಧಾನಿ ಮೋದಿ ಅವರು, ಈ ಚುನಾವಣೆಯಲ್ಲಿ ದೇಶವನ್ನು ಜಾತಿಗಳ ಆಧಾರದ ಮೇಲೆ ವಿಭಜಿಸುವ ಪ್ರಯತ್ನಗಳು ನಡೆದಿವೆ, ನನಗೆ ನಾಲ್ಕು ಜಾತಿಗಳು ಮಾತ್ರ ಗೊತ್ತು ಅವುಗಳೆಂದರೆ ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಔರ್ ಗರೀಬ್ ಪರಿವಾರ ಎಂದಿದ್ದಾರೆ. +ಸಭೆಯಲ್ಲಿ ಪ್ರಧಾನಿ ಮೋದಿ ಅವರು ಎಲ್ಲಾ ಅಧಿಕಾರಿಗಳಿಗೆ ಮಿಷನ್ ಮೋಡ್‍ನಲ್ಲಿ ಕೆಲಸ ಮಾಡಲು ಹೇಳಿದರು. ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಕೇಂದ್ರ ಸರ್ಕಾರದ ಬಡವರ ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದ ಹೆಚ್ಚಿನ ಡೇಟಾವನ್ನು ಹಂಚಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಯಿತು. ವಿರೋಧ ಪಕ್ಷಗಳ ಋಣಾತ್ಮಕ ಪ್ರಚಾರದ ಸತ್ಯಗಳ ಪ್ರಕಾರ ಸಕಾರಾತ್ಮಕ ಉತ್ತರಗಳನ್ನು ನೀಡಿ ಎಂದು ಅವರು ಸೂಚಿಸಿದರು. +ಹಮಾಸ್-ಇಸ್ರೇಲ್ ಯುದ್ಧದಲ್ಲಿ ಈವರೆಗೆ 20 ಸಾವಿರ ಪ್ಯಾಲೆಸ್ಟೀನಿಯರು ಬಲಿ +ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಸಭೆಯಲ್ಲಿ ಮೊದಲ ವಿಷಯ ಮಂಡಿಸಿದರು: ಲೋಕಸಭೆ ಚುನಾವಣೆಯಲ್ಲಿ ಶೇ.10ರಷ್ಟು ಮತಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಈ ಕುರಿತು ಮಾತನಾಡಿದ ಪ್ರಧಾನಿ, ನಮ್ಮ ಯೋಜನೆಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರಿಗೆ ಸರಿಯಾದ ರೀತಿಯಲ್ಲಿ ತಲುಪಿದರೆ ಅದು ನಮಗೆ ಸಹಾಯವಾಗುತ್ತದೆ ಎಂದರು. +ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯನ್ನು ಆಯೋಜಿಸುತ್ತಿರುವ ರಾಜ್ಯಗಳತ್ತ ಗಮನ ಹರಿಸಬೇಕು. ಯುಪಿಎ ಸರ್ಕಾರ ಮತ್ತು ಎನ್‍ಡಿಎ ಸರ್ಕಾರದ ನಡುವಿನ ವ್ಯತ್ಯಾಸವನ್ನು ಜನರಿಗೆ ಅರ್ಥಮಾಡಿಕೊಳ್ಳಲು ವಿಶೇಷ ಅಭಿಯಾನವನ್ನು ನಡೆಸಬೇಕು.ಬಿಜೆಪಿ ಪರ ಮತಗಳನ್ನು ಹೆಚ್ಚಿಸಲು ಬೂತ್ ನಿರ್ವಹಣೆಯತ್ತ ಗಮನ ಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು. +ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಬೂತ್ ನಿರ್ವಹಣೆಯ ಉದಾಹರಣೆಯನ್ನು ಪ್ರಧಾನಿ ನೀಡಿದರು. ಪಕ್ಷದ ಪದಾಕಾರಿಗಳು ಬೂತ್ ನಿರ್ವಹಣೆಯನ್ನು ಸವಾಲಾಗಿ ತೆಗೆದುಕೊಳ್ಳಬೇಕು. ಸಂಘಟನಾ ಶಕ್ತಿಯಿಂದ ಮಾತ್ರ ಗೆಲುವು ಸಾಸಲಾಗುತ್ತದೆ; ಆದ್ದರಿಂದ, ಸಂಪೂರ್ಣವಾಗಿ ಸಿದ್ಧಪಡಿಸಿದ ನಂತರ ಜನರ ಬಳಿಗೆ ಹೋಗಿ ಎಂದು ಅವರು ತಿಳಿ ಹೇಳಿದರು. \ No newline at end of file diff --git a/eesanje/url_47_209_9.txt b/eesanje/url_47_209_9.txt new file mode 100644 index 0000000000000000000000000000000000000000..9e7920e8737970c80a437ea318478004a7b0c31e --- /dev/null +++ b/eesanje/url_47_209_9.txt @@ -0,0 +1,8 @@ +ಗಲ್ಫ್ ರಾಷ್ಟ್ರಗಳಿಂದ ಸಾವಿರಾರು ಕೋಟಿ ರೂ. ಸಂಗ್ರಹಿಸಿದೆಯಂತೆ ಪಿಎಫ್‍ಐ +ನವದೆಹಲಿ,ಡಿ.23- ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‍ಐ) ತನ್ನ ಸಾವಿರಾರು ಸಕ್ರಿಯ ಸದಸ್ಯರ ಮೂಲಕ ಗಲ್ಫ್ ರಾಷ್ಟ್ರಗಳು ಮತ್ತು ಇತರೆಡೆ ಸುಸಂಘಟಿತ ಮತ್ತು ರಚನಾತ್ಮಕ ರೀತಿಯಲ್ಲಿ ಸಾಕಷ್ಟು ಹಣವನ್ನು ಸಂಗ್ರಹಿಸಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಭಯೋತ್ಪಾದಕ ಚಟುವಟಿಕೆಗಳು ಮತ್ತು ಐಸಿಸ್‍ನಂತಹ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಆರೋಪಿಸಿ ಪಿಎಫ್‍ಐ ಅನ್ನು ಕೇಂದ್ರವು ನಿಷೇಧಿಸಿದೆ. +ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿಯ ತಿಹಾರ್ ಜೈಲಿನಿಂದ ಐವರು ಪಿಎಫ್‍ಐ ಸದಸ್ಯರನ್ನು ಇಡಿ ಬಂಧಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ನಡೆಸುತ್ತಿರುವ ಮತ್ತೊಂದು ಭಯೋತ್ಪಾದನೆ ಪ್ರಕರಣದಲ್ಲಿ ಐವರು ಜೈಲು ಸೇರಿದ್ದಾರೆ. +ಐವರು ಆರೋಪಿಗಳಾದ ಎಎಸ್ ಇಸ್ಮಾಯಿಲ, ಮೊಹಮ್ಮದ್ ಶಕೀಫ್, ಅನಿಸ್ ಅಹ್ಮದ್, ಅಫ್ಸರ್ ಪಾಶಾ ಮತ್ತು ಇಎಂ ಅಬ್ದುಲ್ ರಹಿಮಾನ್ ಅವರುಗಳು ದಾನಿಗಳಿಂದ ಹಣವನ್ನು ಸಂಗ್ರಹಿಸಿದ್ದಾರೆ, ಹವಾಲಾ ಮತ್ತು ಬ್ಯಾಂಕಿಂಗ್ ಚಾನೆಲ್‍ಗಳಿಂದ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಇಡಿ ಹೇಳಿದೆ. ಇಡಿ ಬಹಿರಂಗಪಡಿಸುವಿಕೆಯಲ್ಲಿ ಪಿಎಫ್‍ಐನಲ್ಲಿ ಐದು ಆರೋಪಿಗಳ ಪಾತ್ರಗಳ ವಿವರವಾದ ಖಾತೆಯನ್ನು ನೀಡಿದೆ. +ಇಎಮ್ ಅಬ್ದುಲ್ ರಹಿಮಾನ್:ಈತ ಮೊದಲಿನಿಂದಲೂ ಪಿಎಫ್‍ಐನಲ್ಲಿದ್ದಾರೆ ಮತ್ತು ಕಳೆದ ಹಲವಾರು ವರ್ಷಗಳಿಂದ ಪಿಎಫ್‍ಐನಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ, ಪಿಎಫ್‍ಐ ತೆಗೆದುಕೊಳ್ಳುವ ಪ್ರತಿಯೊಂದು ಪ್ರಮುಖ ಕ್ರಮ ಮತ್ತು ನಿರ್ಧಾರಗಳಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅಬ್ದುಲ್ ರಹಿಮಾನ್ 1979 ರಿಂದ 1984 ರವರೆಗೆ ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‍ಮೆಂಟ್ ಆಫ್ ಇಂಡಿಯಾದೊಂದಿಗೆ ಸಹ ಸಂಬಂಧ ಹೊಂದಿದ್ದರು. ಸಿಮಿಯನ್ನು ನಿಷೇಸಿದ ನಂತರ, ಅವರು ಪಿಎಫ್‍ಐ ಸೇರಿದರು. +ಹಮಾಸ್-ಇಸ್ರೇಲ್ ಯುದ್ಧದಲ್ಲಿ ಈವರೆಗೆ 20 ಸಾವಿರ ಪ್ಯಾಲೆಸ್ಟೀನಿಯರು ಬಲಿ +ಅನಿಸ್ ಅಹ್ಮದ್:ಪಿಎಫ್‍ಐನ ಹಣಕಾಸು ನಿರ್ವಹಣೆಯಲ್ಲಿ ಅನೀಸ್ ಅಹ್ಮದ್ ಪ್ರಮುಖ ಪಾತ್ರ ವಹಿಸಿದ್ದು, ಗುಂಪಿನ ಹಣ ಸಂಗ್ರಹಿಸುವುದು ಅವರ ಮುಖ್ಯ ಕಾರ್ಯವಾಗಿತ್ತು. ಪಿಎಫ್‍ಐ ವಕ್ತಾರರಾಗಿಯೂ ಸೇವೆ ಸಲ್ಲಿಸಿದ್ದರು. ಪಿಎಫ್‍ಐ ಪ್ರತಿ ಜಿಲ್ಲೆಯಿಂದ ಸಂಗ್ರಹಿಸಿದ ಹಣವನ್ನು ಅದರ ರಾಷ್ಟ್ರೀಯ ಸಮಿತಿಯ ಖಾತೆಗೆ ಜಮಾ ಮಾಡುತ್ತದೆ. ಹಣವನ್ನು ಹೆಚ್ಚಾಗಿ ದೆಹಲಿ ಮತ್ತು ಉತ್ತರ ಪ್ರದೇಶದಿಂದ ಸಂಗ್ರಹಿಸಲಾಗಿದೆ. +ಅಫ್ಸರ್ ಪಾಶಾ:ಅವರು ಪಿಎಫ್‍ಐನಲ್ಲಿ ರಾಷ್ಟ್ರಮಟ್ಟದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪಿಎಫ್‍ಐನ ವಲಯ ಮುಖ್ಯಸ್ಥರಾಗಿದ್ದರು. ಪಿಎಫ್‍ಐನ ಪ್ರತಿಯೊಂದು ಹಣಕಾಸಿನ ವಿಷಯದಲ್ಲಿ ಅವರ ಅಭಿಪ್ರಾಯವು ಮುಖ್ಯವಾಗಿತ್ತು. 2009ರಿಂದ 2010ರವರೆಗೆ ಪಿಎಫ್‍ಐ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು 2009 ರಲ್ಲಿ ಮೈಸೂರು ಕೋಮುಗಲಭೆಯಲ್ಲಿ ಪಾತ್ರ ವಹಿಸಿದ್ದಾರೆಂದು ಆರೋಪಿಸಲಾಗಿದೆ. ಅವರು ಬೆಂಗಳೂರಿನ ಫ್ರೇಜರ್ ಟೌನ್‍ನಲ್ಲಿರುವ ಕಾಪೆರ್ರೇಷನ್ ಬ್ಯಾಂಕ್‍ನಲ್ಲಿ ಈಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪಿಎಫ್‍ಐ ಖಾತೆಯಲ್ಲಿ ಸಹಿ ಹಾಕುವ ಅಧಿಕಾರಿಯಾಗಿದ್ದರು. \ No newline at end of file diff --git a/eesanje/url_47_20_1.txt b/eesanje/url_47_20_1.txt new file mode 100644 index 0000000000000000000000000000000000000000..828d4e1bc2e55a0b6a50d0dcf99fdd5574bd1cfe --- /dev/null +++ b/eesanje/url_47_20_1.txt @@ -0,0 +1,7 @@ +ಲೈಂಗಿಕ ಕಿರುಕುಳ ಆರೋಪ ನಿರಾಕರಿಸಿದ ಮಲಯಾಳಂ ನಟ ಜಯಸೂರ್ಯ + +ನವದೆಹಲಿ,ಸೆ.1-ತಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪವನ್ನು ನಿರಾಕರಿಸಿರುವ ಮಲಯಾಳಂ ನಟ ಜಯಸೂರ್ಯ ಅವರು ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. +ಹಿರಿಯ ನಟ ಸಿದ್ದಿಕ್‌ ಮತ್ತು ಚಿತ್ರನಿರ್ಮಾಪಕ ರಂಜಿತ್‌ ಬಾಲಕಷ್ಣನ್‌ ಸೇರಿದಂತೆ ಮಾಲಿವುಡ್‌ನ ಕೆಲವು ದೊಡ್ಡ ಹೆಸರುಗಳ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.ಇಬ್ಬರು ನಟಿಯರು ಜಯಸೂರ್ಯ ವಿರುದ್ಧ ಮೊಕದ್ದಮೆ ಹೂಡಿದ್ದಾರೆ, ಇವೆರಡೂ ಸುಳ್ಳು ಎಂದು ಅವರು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. +ನಾನು ಈ ಆರೋಪದ ವಿರುದ್ಧ ಕಾನೂನುಬದ್ಧವಾಗಿ ಹೋರಾಟ ನಡೆಸಲು ನಿರ್ಧರಿಸಿದ್ದೇನೆ. ಈ ಪ್ರಕರಣದ ಉಳಿದ ಪ್ರಕ್ರಿಯೆಗಳನ್ನು ನನ್ನ ಕಾನೂನು ತಂಡವು ನೋಡಿಕೊಳ್ಳುತ್ತದೆ. ಆತಸಾಕ್ಷಿಯ ಕೊರತೆಯಿರುವ ಯಾರಿಗಾದರೂ ಸುಳ್ಳು ಆರೋಪಗಳನ್ನು ಮಾಡುವುದು ಸುಲಭ. ಸುಳ್ಳು ಆರೋಪವನ್ನು ಎದುರಿಸುತ್ತಿರುವವರು ಅರಿತುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. +ಕಿರುಕುಳವು ಕಿರುಕುಳದಂತೆಯೇ ನೋವಿನಿಂದ ಕೂಡಿದೆ ಎಂದು ಜಯಸೂರ್ಯ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ಸುಳ್ಳು ಯಾವಾಗಲೂ ಸತ್ಯಕ್ಕಿಂತ ವೇಗವಾಗಿ ಚಲಿಸುತ್ತದೆ ಆದರೆ ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬುತ್ತೇನೆ. +ನಾನು ನಿರಪರಾಧಿ ಎಂದು ಸಾಬೀತುಪಡಿಸುವ ಎಲ್ಲಾ ಕಾನೂನು ಪ್ರಕ್ರಿಯೆಗಳು ಮುಂದುವರಿಯುತ್ತದೆ. ನಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಜನದಿನವನ್ನು ಅತ್ಯಂತ ನೋವಿನಿಂದ ಮಾಡಲು ಸಹಕರಿಸಿದವರಿಗೆ ಧನ್ಯವಾದಗಳು ಎಂದು ಅವರು ಹೇಳಿಕೊಂಡಿದ್ದಾರೆ. \ No newline at end of file diff --git a/eesanje/url_47_20_10.txt b/eesanje/url_47_20_10.txt new file mode 100644 index 0000000000000000000000000000000000000000..2d4db312e1224452508e7dc5d11e99ab61998a74 --- /dev/null +++ b/eesanje/url_47_20_10.txt @@ -0,0 +1,7 @@ +1962ರ ಇಂಡೋ-ಚೀನಾ ಯುದ್ಧ ಕಾಲದ ಸ್ಮೋಕ್ ಬಾಂಬ್‌ ಪತ್ತೆ +1962 - , : +ತೇಜ್‌ಪುರ,ಸೆ.1-ಕಳೆದ 1962ರ ಇಂಡೋ-ಚೀನಾ ಯುದ್ಧದ ಕಾಲದ್ದು ಎಂದು ನಂಬಲಾದ ಸೋಕ್‌ ಬಾಂಬ್‌ ಅನ್ನು ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ನದಿ ಪಾತ್ರದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಧೆಕಿಯಾಜುಲಿ ಪ್ರದೇಶದಲ್ಲಿ ಪತ್ತೆಯಾದ ಬಾಂಬ್‌ ಅನ್ನು ಸೇನಾ ಸಿಬ್ಬಂದಿಯ ಸಹಾಯದಿಂದ ಸುರಕ್ಷಿತವಾಗಿ ಸ್ಫೋಟಿಸಲಾಗಿದೆ ಎಂದು ಅವರು ಹೇಳಿದರು.ಸೇಸಾ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಜೌಗಾಪುರ ಗ್ರಾಮದ ವ್ಯಕ್ತಿಯೊಬ್ಬರು ಎರಡು ಇಂಚು ಉದ್ದದ ಸ್ಫೋಟಕವನ್ನು ಪತ್ತೆ ಮಾಡಿದ್ದಾರೆ ಎಂದು ಸೋನಿತ್‌ಪುರ ಪೊಲೀಸ್‌‍ ವರಿಷ್ಠಾಧಿಕಾರಿ ಬರುನ್‌ ಪುರ್ಕಾಯಸ್ಥ ತಿಳಿಸಿದ್ದಾರೆ. +ಈ ಪ್ರದೇಶವು ಮಿಸ್ಸಮಾರಿ ಪೊಲೀಸ್‌‍ ಠಾಣೆಯ ವ್ಯಾಪ್ತಿಗೆ ಬರುತ್ತದೆ. ಬಾಂಬ್‌ ಹೆಚ್ಚಾಗಿ ಚೀನಾ ನಿರ್ಮಿತವಾಗಿದೆ ಮತ್ತು 1962 ರ ಯುದ್ಧದಿಂದ ಬಂದಿದೆ ಎಂದು ಅವರು ಹೇಳಿದರು. +ಮಾರ್ಟರ್‌ ಸೋಕ್‌ ಬಾಂಬ್‌ ಎನ್ನುವುದು ಶತ್ರುಗಳ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಥವಾ ಶತ್ರುಗಳ ವಿಚಕ್ಷಣ ಮತ್ತು ಕಣ್ಗಾವಲು ತಡೆಯಲು ಹೊಗೆ ಪರದೆಯನ್ನು ರಚಿಸುವಂತಹ ವಿವಿಧ ಉದ್ದೇಶಗಳಿಗಾಗಿ ಬಳಸಲಾಗುವ ಒಂದು ರೀತಿಯ ಮದ್ದುಗುಂಡು. +ಲೆಫ್ಟಿನೆಂಟ್‌ ಕರ್ನಲ್‌ ಅಭಿಜಿತ್‌ ಮಿಶ್ರಾ ನೇತತ್ವದ ಮಿಸ್ಸಮರಿ ಶಿಬಿರದ ಸೇನಾ ತಂಡದ ಸಹಾಯದಿಂದ ಇದನ್ನು ಸುರಕ್ಷಿತವಾಗಿ ಸ್ಫೋಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_20_11.txt b/eesanje/url_47_20_11.txt new file mode 100644 index 0000000000000000000000000000000000000000..c6695c17ca66843b6e51872e3ca1f7e0a36f11a5 --- /dev/null +++ b/eesanje/url_47_20_11.txt @@ -0,0 +1,8 @@ +ವಿಶ್ವದ ಪ್ರಮುಖ ಡಿಜಿಟಲ್‌ ಪಾವತಿಗಳನ್ನು ಹಿಂದಿಕ್ಕಿದ ಯುಪಿಐ + , +ನವದೆಹಲಿ,ಆ.31-ವಿಶ್ವದ ಪ್ರಮುಖ ಡಿಜಿಟಲ್‌ ಪಾವತಿ ಪ್ಲಾಟ್‌ಫಾರ್ಮ್‌ಗಳನ್ನು ಭಾರತದ ಏಕೀಕತ ಪಾವತಿಗಳ ಇಂಟರ್ಫೇಸ್‌‍ (ಯುಪಿಐ) ಹಿಂದಿಕ್ಕಿದೆ. ಈ ವರ್ಷದ ಏಪ್ರಿಲ್‌‍-ಜುಲೈ ಅವಧಿಯಲ್ಲಿ ಸುಮಾರು 81 ಲಕ್ಷ ಕೋಟಿ ವಹಿವಾಟುಗಳನ್ನು ಯುಪಿಐ ಪ್ರಕ್ರಿಯೆಗೊಳಿಸಿದೆ, ಇದು ದಿಗ್ಭಮೆಗೊಳಿಸುವ ಏರಿಕೆಯಾಗಿದೆ. +ಜಾಗತಿಕ ಪಾವತಿ ಕೇಂದ್ರವಾದ ಪೇ ಸೆಕ್ಯೂರ್‌ನ ಇತ್ತೀಚಿನ ಮಾಹಿತಿಯ ಪ್ರಕಾರ, ಯುಪಿಐ ಪ್ರತಿ ಸೆಕೆಂಡಿಗೆ 3,729.1 ವಹಿವಾಟುಗಳನ್ನು ಪ್ರಕ್ರಿಯೆಗೊಳಿಸಿದೆ. 2022 ರಲ್ಲಿ ನೋಂದಾಯಿಸಲಾದ ಪ್ರತಿ ಸೆಕೆಂಡಿಗೆ 2,348 ವಹಿವಾಟುಗಳ ಮೇಲೆ 58 ಪ್ರತಿಶತ ಏರಿಕೆಯಾಗಿದೆ. ವಹಿವಾಟುಗಳ ಸಂಖ್ಯೆಯಲ್ಲಿ ಚೀನಾದ ಅಲಿಪೇ, ಪೇಪಾಲ್‌ ಮತ್ತು ಬ್ರೆಜಿಲ್‌ನ ಪಿಕ್‌್ಸ ಅನ್ನು ಮೀರಿಸಿದೆ. +ಜುಲೈನಲ್ಲಿ, ಯುಪಿಐ ವಹಿವಾಟುಗಳು 20.6 ಲಕ್ಷ ಕೋಟಿಯನ್ನು ದಾಟಿದೆ – ಇದು ಒಂದು ತಿಂಗಳ ಅವಧಿಯಲ್ಲಿ ಇದುವರೆಗಿನ ಅತಿ ಹೆಚ್ಚು. ಯುಪಿಐ ವಹಿವಾಟಿನ ಮೌಲ್ಯವು ಸತತ ಮೂರು ತಿಂಗಳವರೆಗೆ 20 ಲಕ್ಷ ಕೋಟಿಗಿಂತ ಹೆಚ್ಚಿತ್ತು. +ಈ ಡೇಟಾವನ್ನು ಬಹಿರಂಗಪಡಿಸಲು ಪ್ರಪಂಚದಾದ್ಯಂತದ 40 ಉನ್ನತ ಪರ್ಯಾಯ ಪಾವತಿ ವಿಧಾನಗಳನ್ನು ಪೇ ಸೆಕ್ಯೂರ್‌ ಪರಿಶೀಲಿಸಿದೆ.ಆವಿಷ್ಕಾರಗಳು ಭಾರತವು ಡಿಜಿಟಲ್‌ ವಹಿವಾಟುಗಳಲ್ಲಿ ಪ್ರಪಂಚದಲ್ಲಿ ಮುಂಚೂಣಿಯಲ್ಲಿದೆ ಎಂದು ತೋರಿಸಿದೆ, ಶೇಕಡಾ 40 ರಷ್ಟು ಪಾವತಿಗಳನ್ನು ಡಿಜಿಟಲ್‌ ಮೂಲಕ ಮಾಡಲಾಗುತ್ತದೆ ಮತ್ತು ಅವುಗಳಲ್ಲಿ ಹೆಚ್ಚಿನವುಗಳಿಗೆ ಯುಪಿಐ ಅನ್ನು ಬಳಸಲಾಗುತ್ತಿದೆ. +ನ್ಯಾಷನಲ್‌ ಪೇಮೆಂಟ್ಸ್ ಕಾರ್ಪೊರೇಷನ್‌ ಆಫ್‌ ಇಂಡಿಯಾದ ಸಿಇಒ ದಿಲೀಪ್‌ ಅಸ್ಬೆ ಪ್ರಕಾರ, ಯುಪಿಐ ಮುಂದಿನ 10-15 ವರ್ಷಗಳಲ್ಲಿ ಕ್ರೆಡಿಟ್‌ ಬೆಳವಣಿಗೆಯ ಬೆಂಬಲದೊಂದಿಗೆ 100 ಶತಕೋಟಿ ವಹಿವಾಟುಗಳನ್ನು ಮುಟ್ಟುವ ಸಾಮರ್ಥ್ಯವನ್ನು ಹೊಂದಿದೆ. ಯುಪಿಐನಲ್ಲಿ ಈಗಾಗಲೇ ಕ್ರೆಡಿಟ್‌ ಅನ್ನು ಪ್ರಾರಂಭಿಸಲಾಗಿದೆ ಮತ್ತು ಜಾಹೀರಾತುಗಳನ್ನು ಒಂದೆರಡು ವಾರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ. +ಅಧಿಕತ ಅಂಕಿಅಂಶಗಳ ಪ್ರಕಾರ ಜೂನ್‌ನಲ್ಲಿ ಯುಪಿಐನಲ್ಲಿ 13.89 ಶತಕೋಟಿ ವಹಿವಾಟುಗಳು ದಾಖಲಾಗಿವೆ, ಮೇ ತಿಂಗಳಲ್ಲಿ 14.04 ಶತಕೋಟಿಯಷ್ಟು ಹೆಚ್ಚಾಗಿದೆ. ಸಲಹಾ ಸಂಸ್ಥೆ ವರದಿಯ ಪ್ರಕಾರ, ಯುಪಿಐ ಮೇಲಿನ ವಹಿವಾಟುಗಳ ಸಂಖ್ಯೆಯು 2023-24 ರಲ್ಲಿ ಸುಮಾರು 131 ಶತಕೋಟಿಯಿಂದ 2028-29 ರ ವೇಳೆಗೆ 439 ಶತಕೋಟಿಗೆ 3 ಪಟ್ಟು ಹೆಚ್ಚಾಗುವ ನಿರೀಕ್ಷೆಯಿದೆ, ಇದು ಒಟ್ಟು ಚಿಲ್ಲರೆ ಡಿಜಿಟಲ್‌ ವಹಿವಾಟಿನ 91 ಪ್ರತಿಶತವನ್ನು ಹೊಂದಿದೆ. \ No newline at end of file diff --git a/eesanje/url_47_20_12.txt b/eesanje/url_47_20_12.txt new file mode 100644 index 0000000000000000000000000000000000000000..19b7413283398cb461b85de07949ec7c132db5f6 --- /dev/null +++ b/eesanje/url_47_20_12.txt @@ -0,0 +1,8 @@ +ತಮಿಳುನಾಡಿನಲ್ಲಿ ರಾಮನ ಬದಲಿಗೆ ಭಗವಾನ್‌ ಮುರುಗನ್‌ ಉತ್ಸವ + +ಚೆನ್ನೈ, ಆ.31– ರಾಮನ ಉತ್ಸವ, ರ್ಯಾಲಿಗಳ ಬದಲಿಗೆ ತಮಿಳು ಸಂಸ್ಕೃತಿ, ಸಾಹಿತ್ಯ, ಆಧ್ಯಾತಿಕತೆಯನ್ನು ಎತ್ತಿ ಹಿಡಿಯಲು ತಮಿಳುನಾಡು ಸರ್ಕಾರ ಭಗವಾನ್‌ ಮುರುಗನ್‌ ಸಮೇಳನ ಹಮಿಕೊಂಡಿತ್ತು. +ಪಳನಿ ನಗರದಲ್ಲಿ ಆಯೋಜಿಸಿದ್ದ ಬೃಹತ್ ಸಮಾರಂಭವನ್ನು ಚೆನ್ನೈನಲ್ಲಿ ಇದ್ದುಕೊಂಡೆ ವಿಡಿಯೋ ಕಾನ್ಫೆರೆನ್‌್ಸ ಮೂಲಕ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಉದ್ಘಾಟಿಸಿ, ಮುರುಗನ್‌ ದೇವಾಲಯಗಳಲ್ಲಿ 789 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಗಳು ನಡೆಸಲಾಗುತ್ತದೆ ಎಂದು ಹೇಳಿದರು. +ಪಳನಿಯ ಮುರುಗನ್‌ ದೇವಾಲಯದಲ್ಲಿ ಆಯೋಜಿಸಿದ್ದ ಸಮೇಳನದಲ್ಲಿ ಆಧ್ಯಾತಿಕ ಗಣ್ಯರು, ವಿವಿಧ ದೇಶಗಳ ಧಾರ್ಮಿಕ ವಿದ್ವಾಂಸರು, ಸಚಿವ ಪಿ.ಕೆ ಸೇಕರಬಾಬು, ಗ್ರಾಮೀಣಾಭಿವೃದ್ಧಿ ಸಚಿವ ಐ.ಪೆರಿಯಸಾಮಿ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಆರ್‌.ಸ್ಟಾಲಿನ್‌ ಇದ್ದರು. +ಸಂಶೋಧಕರು ತಮ ಸಾಹಿತ್ಯ ಮತ್ತು ಸಾಂಸ್ಕೃತಿಕ ಪುರಾವೆಗಳನ್ನು ಪ್ರಸ್ತುತಪಡಿಸಿದರು. 2 ದಿನಗಳ ಜಾಗತಿಕ ಮುತಮಿಜ್‌ ಮುರುಗನ್‌ ಸಮೇಳನದಲ್ಲಿ ಸಾಕಷ್ಟು ಜನ ಪಾಲ್ಗೊಂಡಿದ್ದರು. ಸಮೇಳನದಲ್ಲಿ ತಮಿಳು ಸಂಸ್ಕೃತಿ, ಆಧ್ಯಾತ ಹಾಗೂ ಸಾಹಿತ್ಯದ ಕುರಿತು 1,300 ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಯಿತು. +ಪಳನಿ ನಗರದ ದೇವಾಲಯದ ವಾಸ್ತುಶಿಲ್ಪವನ್ನು ಪ್ರತಿಬಿಂಬಿಸಲು ವಿನ್ಯಾಸಗೊಳಿಸಲಾದ ಸಮೇಳನದ ಜಾಗವು 8 ಭವ್ಯ ಕಮಾನುಗಳನ್ನು ಒಳಗೊಂಡಿತ್ತು. ಭದ್ರತಾ ಸುರಕ್ಷತೆಗಾಗಿ 2,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಅಲ್ಲದೇ ಎಲ್ಲರಿಗೂ ಉಚಿತ ಪ್ರವೇಶವಿತ್ತು. +ಮಧುರೈ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಂದ ಸರ್ಕಾರ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿತ್ತು ಎಂದು ಹೇಳಲಾಗಿದೆ.ಎರಡು ದಿನಗಳ ಈ ಅದ್ಧೂರಿ ಸಮಾರಂಭದಲ್ಲಿ ಸಾವಿರಾರು ಜನರು ಪಾಲ್ಗೊಂಡು ಯಶಸ್ವಿಗೊಳಿಸಿದರು. \ No newline at end of file diff --git a/eesanje/url_47_20_2.txt b/eesanje/url_47_20_2.txt new file mode 100644 index 0000000000000000000000000000000000000000..0bfb3206d50b8597de2aca4c3949684ebf98b305 --- /dev/null +++ b/eesanje/url_47_20_2.txt @@ -0,0 +1,6 @@ +ತಮಿಳುನಾಡು : ಪಟಾಕಿ ಕಾರ್ಖಾನೆ ಸ್ಫೋಟಕ್ಕೆ ಇಬ್ಬರು ಬಲಿ + 2, 4 +ಚೆನ್ನೈ,ಸೆ.1-ತಮಿಳುನಾಡಿನ ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಇಬ್ಬರು ಬಲಿಯಾಗಿದ್ದಾರೆ.ಘಟನೆಯಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮುತ್ತುಕಣ್ಣನ್‌ (21) ಮತ್ತು ವಿಜಯ್‌ (25) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಸೆಲ್ವಂ (21), ಪ್ರಶಾಂತ್‌ (20), ಸೆಂಧುರ್ಕನಿ (45), ಮುತ್ತುಮರಿ (41) ಗಂಭೀರವಾಗಿ ಗಾಯಗೊಂಡಿದ್ದು, ಸಾತಾಂಕುಳಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. +ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್‌ ಅವರು ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಮುಖ್ಯಮಂತ್ರಿಗಳು ತಲಾ 1 ಲಕ್ಷ ರೂ. ಘೋಷಿಸಿದ್ದಾರೆ. \ No newline at end of file diff --git a/eesanje/url_47_20_3.txt b/eesanje/url_47_20_3.txt new file mode 100644 index 0000000000000000000000000000000000000000..2581278bfe041c7b6bea50aa9a94138399b61db0 --- /dev/null +++ b/eesanje/url_47_20_3.txt @@ -0,0 +1,11 @@ +ಬಿಜೆಪಿಗೆ ಉರುಳಾಯಿತೇ ಉರುಳಿಬಿದ್ದ ಛತ್ರಪತಿ ಶಿವಾಜಿ ಪ್ರತಿಮೆ..? + , +ಮುಂಬೈ,ಸೆ.1-ಶಿವಾಜಿ ಪ್ರತಿಮೆ ಉರುಳಿಬಿದ್ದ ಪ್ರಕರಣ ಮಹಾರಾಷ್ಟ ಸರ್ಕಾರಕ್ಕೆ ಹುರುಳಾಗಿ ಪರಿಣಮಿಸತೊಡಗಿದೆ. ಸಿಂಧುದುರ್ಗದ ಮಾಲ್ವಾನ್‌ನಲ್ಲಿ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಉರುಳಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾ ವಿಕಾಸ್‌‍ ಅಘಾಡಿ ಘೋಷಿಸಿರುವ ಬಹತ್‌ ಮುಂಬೈ ಪ್ರತಿಭಟನೆಗೆ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.ಆಡಳಿತಾರೂಢ ಬಿಜೆಪಿ ಪ್ರತಿಭಟನೆಯ ಔಚಿತ್ಯವನ್ನು ಪ್ರಶ್ನಿಸಿದೆ ಮತ್ತು ಪ್ರತಿಪಕ್ಷಗಳ ಆಂದೋಲನವನ್ನು ಎದುರಿಸಲು ತನ್ನದೇ ಆದ ಮೆರವಣಿಗೆಯನ್ನು ಯೋಜಿಸಿದೆ. +ಗೇಟ್‌ವೇ ಆಫ್‌ ಇಂಡಿಯಾದಲ್ಲಿ ಭದ್ರತಾ ಪಡೆಗಳ ಭಾರೀ ಪೊಲೀಸ್‌‍ ಸಿಬ್ಬಂದಿ ಜಮಾಯಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. +ಮಹಾರಾಷ್ಟ್ರದ ಇಂಡಿಯಾ ಬಣದ ಉನ್ನತ ನಾಯಕ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್‌ ಠಾಕ್ರೆ, ಎನ್‌ಸಿಪಿ (ಎಸ್‌‍ಪಿ) ಮುಖ್ಯಸ್ಥ ಶರದ್‌ ಪವಾರ್‌ ಮತ್ತು ರಾಜ್ಯ ಕಾಂಗ್ರೆಸ್‌‍ ಅಧ್ಯಕ್ಷ ನಾನಾ ಪಟೋಲೆ ಅವರು ಫೋರ್ಟ್‌ ಪ್ರದೇಶದ ಹುತಾತ ಚೌಕ್‌ನಿಂದ ಗೇಟ್‌ವೇ ಆಫ್‌ ಇಂಡಿಯಾದವರೆಗೆ ರ್ಯಾಲಿ ನಡೆಸಲಿದ್ದಾರೆ. +ಆಪ್‌ ಬಣವು ತನ್ನ ಆಂದೋಲನವನ್ನು ಜೋಡೆ ಮಾರೋ ಪ್ರತಿಭಟನೆ ಎಂದು ಕರೆದಿದೆ, ಇದರರ್ಥ ಪಾದರಕ್ಷೆಗಳಿಂದ ಹೊಡೆಯಿರಿ. ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜನರಿಗೆ ಕರೆ ನೀಡಿದ ಶಿವಸೇನೆ (ಯುಬಿಟಿ) ಮಹಾರಾಷ್ಟ್ರದ ಹೆಮೆಯನ್ನು ಜಾಗತಗೊಳಿಸಲು ಶಿವಾಜಿಯ ಪಾದಗಳಿಗೆ ನಮಸ್ಕರಿಸಲು ಬರುತ್ತಿದೆ ಎಂದು ಟ್ವೀಟ್‌ ಮಾಡಿದೆ. +ಭ್ರಷ್ಟ ಶಿವದ್ರೋಹಿಗಳಿಗೆ ಕ್ಷಮೆ ಇಲ್ಲ ಎಂದು ಎನ್‌ಸಿಪಿಯ ಶರದ್‌ ಪವಾರ್‌ ಬಣ ಹೇಳಿದೆ. ಕಳಪೆ ಕೆಲಸ ಮಾಡಿದ, ಭ್ರಷ್ಟಾಚಾರ ಎಸಗಿದ, ಶಿವಾಜಿಯನ್ನು ಅವಮಾನಿಸಿದ ಶಿವದ್ರೋಹಿಗಳಿಗೆ ತಕ್ಕ ಪಾಠ ಕಲಿಸುವ ಉದ್ದೇಶದಿಂದ ಪಾದಯಾತ್ರೆ ಹಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್‌‍ ರಾಜ್ಯ ಘಟಕ ಹೇಳಿದೆ. +ಕಳೆದ 8 ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಶಿವಾಜಿ ಪ್ರತಿಮೆ ಕುಸಿದ ಘಟನೆ ಮಹಾರಾಷ್ಟ್ರದಲ್ಲಿ ಭಾರೀ ರಾಜಕೀಯ ಸಂಚಲನ ಮೂಡಿಸಿದೆ. ಈ ಯೋಜನೆಯನ್ನು ನೌಕಾಪಡೆಯು ರಾಜ್ಯ ಸರ್ಕಾರದ ಸಮನ್ವಯದೊಂದಿಗೆ ನಿರ್ವಹಿಸಿದೆ. +ಪೊಲೀಸರು ಯೋಜನೆಯ ರಚನಾತಕ ಸಲಹೆಗಾರ ಮತ್ತು ಅದರ ಗುತ್ತಿಗೆದಾರನನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಕೊಲೆ ಯತ್ನ, ತಪ್ಪಿತಸ್ಥ ನರಹತ್ಯೆ ಮತ್ತು ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕಾರ್ಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. +ರಾಜಕೀಯ ಹಿನ್ನಡೆಯ ನಡುವೆಯೇ ಪ್ರಧಾನಿ ಮೋದಿ ಪ್ರತಿಮೆ ಕುಸಿತಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಹೆಸರು ಅಥವಾ ರಾಜನಲ್ಲ. ನಮಗೆ ಅವರು ನಮ ಆರಾಧ್ಯದೈವ. ಇಂದು ನಾನು ಅವರ ಪಾದಗಳಿಗೆ ತಲೆಬಾಗಿ ನನ್ನ ದೇವರಲ್ಲಿ ಕ್ಷಮೆಯಾಚಿಸುತ್ತೇನೆ. ಕುಸಿದು ಬಿದ್ದ ಜನರಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. +ಪ್ರತಿಪಕ್ಷಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯೋಜಿಸಲಾಗಿದೆ ಎಂದು ಆಡಳಿತ ಪಕ್ಷ ಆರೋಪಿಸಿದೆ.ಪ್ರಧಾನಿಯವರ ಕ್ಷಮೆ ಸಾಕಾಗುವುದಿಲ್ಲವೇ? ರಫೇಲ್‌ ಎಪಿಸೋಡ್‌ನಲ್ಲಿ ತಮ ಕಾಮೆಂಟ್‌ಗಳಿಗೆ ರಾಹುಲ್‌ ಗಾಂಧಿ ಕೂಡ ಕ್ಷಮೆಯಾಚಿಸಿದ್ದಾರೆ. ಈ ಕ್ಷಮೆಗಾಗಿ ಅವರು (ಎಂವಿಎ) ಇದೇ ರೀತಿಯ ಪ್ರತಿಭಟನೆಯನ್ನು ನಡೆಸುತ್ತಾರೆಯೇ? ಎಂದು ರಾಜ್ಯ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ಪ್ರಶ್ನಿಸಿದ್ದಾರೆ. \ No newline at end of file diff --git a/eesanje/url_47_20_4.txt b/eesanje/url_47_20_4.txt new file mode 100644 index 0000000000000000000000000000000000000000..2e4cf6c7feb1bcf19f22b54c4f63c0ba3c7b0bd5 --- /dev/null +++ b/eesanje/url_47_20_4.txt @@ -0,0 +1,5 @@ +ವಡೋರದ : ಜನವಸತಿ ಪ್ರದೇಶದಲ್ಲಿ ಪ್ರತ್ಯಕ್ಷವಾದ 24 ಮೊಸಳೆಗಳ ರಕ್ಷಣೆ + : 24 2 +ವಡೋದರ, ಸೆ.1– ಗುಜರಾತ್‌ನ ವಡೋದರಾದ ಜನವಸತಿ ಪ್ರದೇಶಗಳಲ್ಲಿ ಹರಿದು ಬಂದ ವಿಶ್ವಮೈತ್ರಿ ನದಿಯ ಪ್ರವಾಹದ ನೀರಿನಿಂದ ಆಗಸ್ಟ್‌ 27ರಿಂದ 29ರ ನಡುವೆ ಒಟ್ಟು 24 ಮೊಸಳೆಗಳನ್ನು ರಕ್ಷಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಯೊಬ್ಬರು ಇಂದು ತಿಳಿಸಿದ್ದಾರೆ. +ಈ ನದಿಯಲ್ಲಿ 440 ಮೊಸಳೆಗಳಿದ್ದು ಭಾರಿ ಮಳೆಯ ಕಾರಣ ಅಜ್ವಾ ಅಣೆಕಟ್ಟಿನಿಂದ ಹೊರಗೆ ಹರಿಯಬಿಟ್ಟ ನೀರಿನಲ್ಲಿ ಇವು ಜನವಸತಿ ಪ್ರದೇಶಗಳಿಗೆ ಬಂದಿದ್ದವು ಎಂದು ವಡೋದರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕರಣ್‌ಸಿನ್ಹ ರಜಪೂತ್‌ ಹೇಳಿದ್ದಾರೆ. +24 ಮೊಸಳೆಗಳ ಜೊತೆಗೆ ನಾವು ಹಾವುಗಳು, ನಾಗರಹಾವುಗಳು, ಸುಮಾರು 40 ಕೆಜಿ ತೂಕವಿದ್ದ ಎರಡು ದೊಡ್ಡ ಆಮೆಗಳು ಮತ್ತು ಮುಳ್ಳುಹಂದಿ ಸೇರಿದಂತೆ ಇತರ 75 ಪ್ರಾಣಿಗಳನ್ನು ಈ ಮೂರು ದಿನಗಳಲ್ಲಿ ರಕ್ಷಿಸಿದ್ದೇವೆ. ವಿಶ್ವಮೈತ್ರಿ ನದಿಗೆ ಸಮೀಪದಲ್ಲಿ ಅನೇಕ ಜನವಸತಿ ಪ್ರದೇಶಗಳಿವೆ ಎಂದು ಅವರು ವಿವರಿಸಿದ್ದಾರೆ. \ No newline at end of file diff --git a/eesanje/url_47_20_5.txt b/eesanje/url_47_20_5.txt new file mode 100644 index 0000000000000000000000000000000000000000..44842db88d47ac83e1b7eebaea257c19a97c091d --- /dev/null +++ b/eesanje/url_47_20_5.txt @@ -0,0 +1,8 @@ +ಅಕ್ರಮ ಸಂಬಂದಕ್ಕಾಗಿ ಪತಿಯನ್ನು ಕೊಂದು ಶೌಚಾಲಯದಲ್ಲಿ ಶವ ಹೂತಿಟ್ಟ ಪತ್ನಿ + , : +ಜೈಪುರ,ಸೆ.1-ಪತ್ನಿಯೊಬ್ಬಳು ಅಕ್ರಮ ಸಂಬಂದಕ್ಕಾಗಿ ಕೈ ಹಿಡಿದ ಪತಿಯನ್ನೇ ಕೊಲೆ ಮಾಡಿ ಶವವನ್ನು ಮನೆಯ ಶೌಚಾಲಯದಲ್ಲೇ ಹೂತಿಟ್ಟಿದ್ದ ಪ್ರಕರಣ ರಾಜಸ್ಥಾನವನ್ನು ಬೆಚ್ಚಿ ಬೀಳಿಸಿದೆ. +ರಾಜಸ್ಥಾನದ ಹನುಮಾನ್‌ಗಢದಲ್ಲಿ ಭೀಕರ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ತನ್ನ ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಂದಿದ್ದಾಳೆ. ಬಳಿಕ, ಪತಿಯ ಶವವನ್ನು ಮನೆಯ ಶೌಚಾಲಯದಲ್ಲಿ ಹೂತಿಟ್ಟಿದ್ದಾಳೆ. +ಈ ವಿಷಯ ಬೆಳಕಿಗೆ ಬಂದಾಗ ಇಡೀ ಪ್ರದೇಶವೇ ಬೆಚ್ಚಿ ಬಿದ್ದಿದೆ. ಆ ಗ್ರಾಮದ ರೂಪರಾಮ್‌ 16 ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ. ಆತ ಬೇರೆ ಊರಿಗೆ ಹೋಗಿರಬಹುದು ಅಕ್ಕಪಕ್ಕದವರು ಅಂದುಕೊಂಡಿದ್ದರು. +ಆದರೆ, ರೂಪರಾಮ್‌ ನಾಪತ್ತೆಯ ಹಿಂದೆ ಆತನ ಹೆಂಡತಿಯ ಕೈವಾಡವಿರಬಹುದು ಎಂದು ಆತನ ಪೋಷಕರಿಗೆ ಅನುಮಾನ ಬಂದಿತ್ತು. ಹೀಗಾಗಿ, ಈ ಬಗ್ಗೆ ಮತ ರೂಪಾರಾಮ್‌ ಕುಟುಂಬಸ್ಥರು ಠಾಣೆಗೆ ದೂರು ಸಲ್ಲಿಸಿದ್ದರು. +ಇಷ್ಟೆಲ್ಲಾ ಆದರೂ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದರಿಂದ ಕೋಪಗೊಂಡ ಕುಟುಂಬಸ್ಥರು ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದ್ದು, ಬಳಿಕ ಪೊಲೀಸರು ಕಾರ್ಯಪ್ರವತ್ತರಾಗಿದ್ದಾರೆ. ಕೊನೆಗೆ ಈ ಬಗ್ಗೆ ತನಿಖೆ ಪ್ರಾರಂಭವಾಯಿತು.ಪೊಲೀಸರು ರೂಪರಾಮ್‌ ಅವರ ಪತ್ನಿಯನ್ನು ಕರೆಸಿ ವಿಚಾರಣೆ ನಡೆಸಿದಾಗ, ಅವಳು ತನ್ನ ಅಪರಾಧವನ್ನು ಒಪ್ಪಿಕೊಂಡಳು. +ಪರಾಮ್‌‍ನನ್ನು ಕೊಲೆ ಮಾಡಿ ಆತನ ಶವವನ್ನು ಬಾತ್‌ ರೂಂನಲ್ಲಿ ಹೂತು ಹಾಕಿದ್ದೇವೆ. ನನ್ನ ಪ್ರಿಯಕರನ ಜೊತೆ ಸೇರಿ ಈ ಕತ್ಯ ಎಸಗಿದ್ದೇನೆ ಎಂದು ಹೇಳಿದಳು. ಇದು ಬಹಿರಂಗವಾಗುತ್ತಿದ್ದಂತೆಯೇ ಪೊಲೀಸರು ಮನೆಯಲ್ಲಿದ್ದ ಶೌಚಾಲಯವನ್ನು ಅಗೆದು ರೂಪರಾಮ್‌ ಶವವನ್ನು ಹೊರತೆಗೆದಿದ್ದಾರೆ. \ No newline at end of file diff --git a/eesanje/url_47_20_6.txt b/eesanje/url_47_20_6.txt new file mode 100644 index 0000000000000000000000000000000000000000..decc7ca5f286ed9657486e5b7febe40840b2121d --- /dev/null +++ b/eesanje/url_47_20_6.txt @@ -0,0 +1,6 @@ +ಅತ್ಯಾಚಾರವೆಸಗಿ ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಸ್ಕೂಲ್‌ ಪ್ಯೂನ್‌ +, 13, +ಫರೂಕಾಬಾದ್‌, ಸೆ.1 (ಪಿಟಿಐ) ಇಲ್ಲಿನ 13 ವರ್ಷದ ಬಾಲಕಿಯೊಬ್ಬಳು ಸರ್ಕಾರಿ ಶಾಲೆಯ ಪ್ಯೂನ್‌ನಿಂದ ಅತ್ಯಾಚಾರಕ್ಕೊಳಗಾದ ನಂತರ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ನಡೆದ ಘಟನೆಯ ಸಂದರ್ಭದಲ್ಲಿ ಸಹಾಯ ಮಾಡಿದ ಕೌನ್ಸಿಲ್‌ ಶಾಲೆಯ ಪ್ಯೂನ್‌ ಮತ್ತು ಆತನ ಸಹಚರನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +13 ವರ್ಷದ ಬಾಲಕಿಯ ಕುಟುಂಬದವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಲಕಿ ರಾತ್ರಿ ಮಲ ವಿಸರ್ಜನೆಗೆ ಹೋಗಿದ್ದ ವೇಳೆ ಗ್ರಾಮದ ಪಂಕಜ್‌ ಮತ್ತು ಅಮಿತ್‌ ಎಂಬವರು ಆಕೆಯನ್ನು ಹಿಡಿದು ಖಾಲಿ ಮನೆಗೆ ಕರೆದೊಯ್ದು ಪಂಕಜ್‌ ಅತ್ಯಾಚಾರವೆಸಗಿದ್ದರೆ. ಅಮಿತ್‌ ಹೊರಗೆ ನಿಂತು ಕಾವಲು ಕಾಯುತ್ತಿದ್ದ ಎನ್ನಲಾಗಿದೆ. +ಆರೋಪಿಗಳು ಆಕೆಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದಾರೆ, ನಂತರ ದೂರು ನೀಡಿದರೆ ಕೊಲ್ಲುತ್ತೇವೆ ಎಂದು ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಆದರೆ ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗ ಆಕೆಯ ತಾಯಿಗೆ ವಿಷಯ ತಿಳಿದಿದೆ. ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. +ಆರೋಪಿಗಳ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_20_7.txt b/eesanje/url_47_20_7.txt new file mode 100644 index 0000000000000000000000000000000000000000..e8441fa63787043675ed899ca6959590040c50e8 --- /dev/null +++ b/eesanje/url_47_20_7.txt @@ -0,0 +1,6 @@ +ಜೆಡಿಯು ವಕ್ತಾರ ಸ್ಥಾನಕ್ಕೆ ಕೆ.ಸಿ.ತ್ಯಾಗಿ ರಾಜೀನಾಮೆ + () +ನವದೆಹಲಿ, ಸೆ.1 (ಪಿಟಿಐ)ಜೆಡಿಯು ಪಕ್ಷದ ವಕ್ತಾರ ಸ್ಥಾನಕ್ಕೆ ಕೆ.ಸಿ.ತ್ಯಾಗಿ ರಾಜೀನಾಮೆ ನೀಡಿದ್ದಾರೆ.ಮಿತ್ರಪಕ್ಷ ಬಿಜೆಪಿಯೊಂದಿಗಿನ ತಮ ಪಕ್ಷದ ಭಿನ್ನಾಭಿಪ್ರಾಯಗಳನ್ನು ಎತ್ತಿ ತೋರಿಸುತ್ತಿದ್ದ ಜನತಾ ದಳ (ಯುನೈಟೆಡ್‌) ವಕ್ತಾರ ಕೆ ಸಿ ತ್ಯಾಗಿ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. +ಜೆಡಿಯು ತನ್ನ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ರಾಜೀವ್‌ ರಂಜನ್‌ ಪ್ರಸಾದ್‌ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ತ್ಯಾಗಿ ಅವರ ರಾಜೀನಾಮೆಗೆ ವೈಯಕ್ತಿಕ ಕಾರಣಗಳು ಕಾರಣ ಎಂದು ಅದು ಹೇಳಿದೆ. +ಏಕರೂಪ ನಾಗರಿಕ ಸಂಹಿತೆ, ವಕ್ಫ್ (ತಿದ್ದುಪಡಿ) ಮಸೂದೆ ಅಥವಾ ಇತರ ವಿಷಯಗಳ ಜೊತೆಗೆ ಪ್ಯಾಲೆಸ್ತೀನ್‌ ವಿಷಯದ ಬಗ್ಗೆ ಸರ್ಕಾರದ ನಿಲುವುಗಳನ್ನು ಟೀಕಿಸುತ್ತಿದ್ದ ಸಮಾಜವಾದಿ ನಾಯಕನ ಸ್ಪಷ್ಟ ನಿಲುವು ಪಕ್ಷದೊಳಗಿನ ಹಲವರಿಗೆ ಅಷ್ಟಾಗಿ ಇಷ್ಟವಾಗಿರಲಿಲ್ಲ ಮತ್ತು ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿತ್ತು ಎಂದು ಮೂಲಗಳು ತಿಳಿಸಿವೆ. +ಬಣದಲ್ಲಿನ ಭಿನ್ನಾಭಿಪ್ರಾಯಗಳ ವರದಿಗಳನ್ನು ತಗ್ಗಿಸಲು ಬಿಜೆಪಿಯು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟದಲ್ಲಿ ಸಮನ್ವಯ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮಿತ್ರಪಕ್ಷಗಳನ್ನು ತಲುಪುತ್ತಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_20_8.txt b/eesanje/url_47_20_8.txt new file mode 100644 index 0000000000000000000000000000000000000000..8c28a99d77e58526e860b2c91159cf0a65668a1f --- /dev/null +++ b/eesanje/url_47_20_8.txt @@ -0,0 +1,8 @@ +ಕಾನ್ಸ್‌ಟೇಬಲ್‌ ನೇಮಕಾತಿ ಪ್ರಕ್ರಿಯೆ ವೇಳೆ ಮೂವರು ಅಭ್ಯರ್ಥಿಗಳ ದುರ್ಮರಣ +3 +ರಾಯ್‌ಪುರ, ಸೆ.1-ಅಬಕಾರಿ ಇಲಾಖೆಯ ಕಾನ್ಸ್‌ಟೇಬಲ್‌ ನೇಮಕಾತಿ ಪ್ರಕ್ರಿಯೆ ವೇಳೆ ಮೂವರು ಅಭ್ಯರ್ಥಿಗಳು ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ನಡೆದಿದೆ. +ಕಾನ್‌‍ಸ್ಟೆಬಲ್‌ ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಯ ವೇಳೆ ಮೂರ್ಛೆ ಹೋದ 25 ಅಭ್ಯರ್ಥಿಗಳ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಅವರನ್ನು ಮೇದಿನಿರೈ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. +ಇಬ್ಬರು ಅಭ್ಯರ್ಥಿಗಳು ಪಲಾಮು ಜಿಲ್ಲೆಯ ಮೇದಿನಿನಗರದಲ್ಲಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರೆ, ಒಬ್ಬರು ರಾಂಚಿಯ ರಿಮ್ಸ್‌‍ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್‌‍ ಅಧಿಕಾರಿ ಮಣಿಭೂಷಣ್‌ ಪ್ರಸಾದ್‌ ತಿಳಿಸಿದ್ದಾರೆ. +ಪ್ರಾಥಮಿಕ ತನಿಖೆಯ ಪ್ರಕಾರ ಉಸಿರಾಟದ ತೊಂದರೆಯಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ಅಧೀಕ್ಷಕ ಡಾ.ಆರ್‌.ಕೆ.ರಂಜನ್‌ ತಿಳಿಸಿದ್ದಾರೆ. ಮೃತಪಟ್ಟವರನ್ನು ಅಮರೇಶ್‌ ಕುಮಾರ್‌ (20), ಅರುಣ್‌ ಕುಮಾರ್‌ (25) ಮತ್ತು ಪ್ರದೀಪ್‌ ಕುಮಾರ್‌ (25) ಎಂದು ಗುರುತಿಸಲಾಗಿದೆ. +ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್‌‍ಸ್ಟೆಬಲ್‌ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸುವುದು ಸೇರಿದಂತೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಿದ್ದ ಸುಮಾರು 100 ಅಭ್ಯರ್ಥಿಗಳು ಇಲ್ಲಿಯವರೆಗೆ ಪ್ರಜ್ಞಾಹೀನರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ.9ರವರೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನಧ್ಯೆ, ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಈ ವಿಷಯದ ಬಗ್ಗೆ ತಕ್ಷಣ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. +ಬಿಸಿಲಿನ ಝಳದಲ್ಲಿ ಓಡಿದ್ದರಿಂದ ಹಲವು ಅಭ್ಯರ್ಥಿಗಳು ಮೂರ್ಛೆ ಹೋಗುತ್ತಿದ್ದಾರೆ. ಒಂದು ವಾರದ ಹಿಂದೆ, ಪೂರ್ವ ಸಿಂಗ್‌ಭೂಮ್‌ ಜಿಲ್ಲೆಯ ಜದುಗೋರಾದಲ್ಲಿ ಗಿರಿದಿಹ್‌ನ ಕೇಶ್ವರಿ ನಿವಾಸಿ ಅಭ್ಯರ್ಥಿಯೊಬ್ಬರು ರೇಸ್‌‍ನಲ್ಲಿ ಸಾವನ್ನಪ್ಪಿದ್ದರು. ಇನ್ನು ಹಲವು ಜಿಲ್ಲೆಗಳಿಂದ ಅಭ್ಯರ್ಥಿಗಳು ಅನಾರೋಗ್ಯಕ್ಕೆ ತುತ್ತಾಗಿರುವ ಬಗ್ಗೆ ವರದಿಯಾಗಿದೆ. \ No newline at end of file diff --git a/eesanje/url_47_20_9.txt b/eesanje/url_47_20_9.txt new file mode 100644 index 0000000000000000000000000000000000000000..c6c35bf971199f3179ad833c2fc5b0bbde6ac387 --- /dev/null +++ b/eesanje/url_47_20_9.txt @@ -0,0 +1,8 @@ +ಕಾಶ್ಮೀರ ಚುನಾವಣೆಗೆ 40 ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ +, , ’ 40 1st & +ಶ್ರೀನಗರ,ಸೆ.1– ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 40 ಜನರ ಹೆಸರುಗಳಿವೆ. +ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್‌ ಸಿಂಗ್‌ ಸುಖು ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರ ಹೆಸರುಗಳೂ ಕಾಂಗ್ರೆಸ್‌‍ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸೇರಿವೆ. +ಇದಲ್ಲದೆ ಕೆಸಿ ವೇಣುಗೋಪಾಲ್‌‍, ಅಜಯ್‌ ಮಾಕನ್‌, ಅಂಬಿಕಾ ಸೋನಿ, ಭರತ್‌ ಸಿಂಗ್‌ ಸೋಲಂಕಿ, ತಾರಿಕ್‌ ಹಮೀದ್‌ ಕರಾರ್‌, ಜೈರಾಮ್‌ ರಮೇಶ್‌, ಗುಲಾಮ್‌ ಅಹಮದ್‌ ಮಿರ್‌, ಮುಖೇಶ್‌ ಅಗ್ನಿಹೋತ್ರಿ, ಚರಂಜಿತ್‌ ಸಿಂಗ್‌ ಚನ್ನಿ, ಸಲಾನ್‌ ಖುರ್ಷಿದ್‌‍, ಸುಖಿಂದರ್‌ ಸಿಂಗ್‌ ರಾಂಧವಾ, ಅಮರಿಂದರ್‌ ಸಿಂಗ್‌, ರಾಜಾದ್‌ ವಾಡಿಂಗ್‌, ನಾಸೀರ್‌ ಹುಸೇನ್‌, ವಿಕಾರ್‌ ರಸೂಲ್‌ ವಾನಿ ಹೆಸರಗಳನ್ನೂ ಘೋಷಿಸಲಾಗಿದೆ. +ರಜನಿ ಪಾಟೀಲ್‌‍, ರಾಜೀವ್‌ ಶುಕ್ಲಾ, ಮನೀಶ್‌ ತಿವಾರಿ, ಇವ್ರಾನ್‌ ಪ್ರತಾಪ್‌ಗರ್ಹಿ, ಕಿಶೋರಿ ಲಾಲ್‌ ಶರ್ಮಾ, ರಂಜಿತ್‌ ರಂಜನ್‌, ರಮಣ್‌ ಭಲ್ಲಾ, ತಾರಾಚಂದ್‌, ಚೌಧರಿ ಲಾಲ್‌ ಸಿಂಗ್‌, ಪೀರ್ಜಾದಾ ಮೊಹಮದ್‌ ಸಯೀದ್‌, ಪವನ್‌ ಮಾಸ್‌‍ , ಸುಪ್ರಿಯಾ ಶ್ರೀನೆಟ್‌ , ಕನ್ಹ್ಯಾ ಕುಮಾರ್‌, ಮನೋಜ್‌ ಯಾದವ್‌, ಶಾನವಾಜ್‌ ಚೌಧರಿ, ರಾಜೇಶ್‌ ಲಿಲೋಥಿಯಾ, ಅಲ್ಕಾ ಲಂಬಾ, ಶ್ರೀನಿವಾಸ್‌‍ ಬೀವಿ ಮತ್ತು ನೀರಜ್‌ ಕುಂದನ್‌ ಕೂಡ ಕಾಂಗ್ರೆಸ್‌‍ನ ಸ್ಟಾರ್‌ ಪ್ರಚಾರಕರಾಗಿದ್ದಾರೆ. +ಜಮು ಮತ್ತು ಕಾಶೀರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳಲ್ಲಿ ಚುನಾವಣಾ ಆಯೋಗವು ಕೆಲವು ಬದಲಾವಣೆಗಳನ್ನು ಮಾಡಿದೆ. ಈಗ ಚುನಾವಣಾ ಫಲಿತಾಂಶವನ್ನು ಅಕ್ಟೋಬರ್‌ 4 ರ ಬದಲು ಅಕ್ಟೋಬರ್‌ 8 ರಂದು ಪ್ರಕಟಿಸಲಾಗುವುದು. +ಜಮು ಮತ್ತು ಕಾಶೀರದ 90 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಚುನಾವಣೆಗಳು ನಡೆಯಲಿವೆ. ಮೊದಲ ಹಂತದಲ್ಲಿ ಸೆಪ್ಟೆಂಬರ್‌ 18 ರಂದು ರಾಜ್ಯದ 24 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ, ಸೆಪ್ಟೆಂಬರ್‌ 25 ರಂದು ಜಮು ಮತ್ತು ಕಾಶೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಹಂತದಲ್ಲಿ, ಅಕ್ಟೋಬರ್‌ 1 ರಂದು ಜಮು ಮತ್ತು ಕಾಶೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. \ No newline at end of file diff --git a/eesanje/url_47_210_1.txt b/eesanje/url_47_210_1.txt new file mode 100644 index 0000000000000000000000000000000000000000..bdf57edd47a6646512c9b57fb6e6f5ed77163ec9 --- /dev/null +++ b/eesanje/url_47_210_1.txt @@ -0,0 +1,5 @@ +ಗಡಿ ನುಸುಳುತ್ತಿದ್ದ ಉಗ್ರ ಖತಂ +ಜಮ್ಮು, ಡಿ 23 (ಪಿಟಿಐ) ಇಂದು ಮುಂಜಾನೆ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಕಾವಲು ಕಾಯುತ್ತಿರುವ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. +ನಾಲ್ವರು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಅಖ್ನೂರ್‍ನ ಖೌರ್ ಸೆಕ್ಟರ್‍ನಲ್ಲಿರುವ ಐಬಿಯಿಂದ ಈ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದರು. ಈ ನುಸುಳುವಿಕೆಯನ್ನು ಗಮನಿಸಿ ತಕ್ಷಣ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಗುಂಡಿಕ್ಕಿ ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. +ಜ.6ಕ್ಕೆ ಗಮ್ಯ ಸ್ಥಾನ ಸೇರಲಿದೆ ಆದಿತ್ಯ್-ಎಲ್1 +ಒಳನುಸುಳುತ್ತಿದ್ದ ಭಯೋತ್ಪಾದಕರ ಮೇಲೆ ಪಡೆಗಳು ಪರಿಣಾಮಕಾರಿ ಗುಂಡಿನ ದಾಳಿ ನಡೆಸಿತು ಮತ್ತು ಅವರಲ್ಲಿ ಒಬ್ಬರು ಹೊಡೆದು ಕೆಳಗೆ ಬಿದ್ದರು ಎಂದು ಅವರು ಹೇಳಿದರು. ಆದರೆ, ಮೃತನ ಶವವನ್ನು ಆತನ ಸಹಚರರು ಐಬಿಯಾದ್ಯಂತ ಎಳೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ \ No newline at end of file diff --git a/eesanje/url_47_210_10.txt b/eesanje/url_47_210_10.txt new file mode 100644 index 0000000000000000000000000000000000000000..6899ff29f8200415e96bee87f72d00a6ddbc2a44 --- /dev/null +++ b/eesanje/url_47_210_10.txt @@ -0,0 +1,6 @@ +ರಾಹುಲ್‍ಗಾಂಧಿ ಸಂಸದರಾಗಲು ನಾಲಾಯಕ್ ; ವಿಜಯ್ ವರ್ಗಿಯಾ +ಇಂದೋರ್,ಡಿ.22- ಸಂಸದರೊಬ್ಬರು ಮಾಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಮಿಮಿಕ್ರಿಯನ್ನು ಚಿತ್ರೀಕರಿಸಿದ ರಾಹುಲ್ ಗಾಂಧಿ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಅವರು ವಾಗ್ದಾಳಿ ನಡೆಸಿದ್ದಾರೆ.ಇಂತಹ ಕೆಟ್ಟ ನಡವಳಿಕೆ ಹೊಂದಿರುವ ರಾಹುಲ್‍ಗಾಂಧಿ ಅವರು ಸಂಸತ್ತಿನ ಸದಸ್ಯರಾಗಲು ಯೋಗ್ಯರಲ್ಲ ಎಂದು ಹೇಳಿದ್ದಾರೆ. +ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು, ಧನಕರ್ ಅವರ ವರ್ತನೆಯನ್ನು ಅನುಕರಿಸುವ ವೀಡಿಯೊ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ ನಂತರ ದೊಡ್ಡ ಗಲಾಟೆ ಭುಗಿಲೆದ್ದಿತು ಮತ್ತು ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು. +ಮನಬಂದಂತೆ ಗುಂಡು ಹಾರಿಸಿದ ವಿದ್ಯಾರ್ಥಿ, 14 ಮಂದಿ ಬಲಿ +ಸಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯನ್ನು ಸಂಸತ್ತಿನ ಸಂಕೀರ್ಣದಲ್ಲಿ ಅನುಕರಿಸುತ್ತಿದ್ದರು ಮತ್ತು ಗಾಂಧಿಯವರು ಕಾಯ್ದೆಯನ್ನು ನಿಲ್ಲಿಸುವ ಬದಲು ಅದನ್ನು ವೀಡಿಯೊ ಮಾಡಿ ಪ್ರಚಾರ ಮಾಡುತ್ತಿದ್ದಾರೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ ಎಂದು ವಿಜಯವರ್ಗಿಯ ಇಂದೋರ್‍ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸ್ರ್ಪಧಿ ಎಂದು ಹೇಗೆ ಹೇಳಲಾಗುತ್ತದೆ. ಅವರು ಸಂಸದ ಸ್ಥಾನಕ್ಕೂ ಯೋಗ್ಯರಲ್ಲ ಎಂದು ನಾನು ಭಾವಿಸುತ್ತೇನೆ. ಅವರಿಗೆ ಪ್ರಧಾನಿ ಹುದ್ದೆ ತುಂಬಾ ದೊಡ್ಡದಾಗಿದೆ ಎಂದು ಅವರು ಹೇಳಿದರು. +ಅಬಕಾರಿ ನೀತಿಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಹೊಸ ಸಮನ್ಸ್‍ನ ಕುರಿತು ಬಿಜೆಪಿ ನಾಯಕ, ಭ್ರಷ್ಟಾಚಾರದಲ್ಲಿ ತೊಡಗಿರುವ ಯಾರನ್ನಾದರೂ ತನಿಖಾ ಸಂಸ್ಥೆಗಳು ಹುಡುಕುತ್ತವೆ ಎಂದು ಹೇಳಿದರು. ಈ ಸಮನ್ಸ್ ಅನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು ಎಂದು ಅವರು ಸಮರ್ಥಿಸಿಕೊಂಡರು. \ No newline at end of file diff --git a/eesanje/url_47_210_11.txt b/eesanje/url_47_210_11.txt new file mode 100644 index 0000000000000000000000000000000000000000..9b3948c1c0c1e32b2aea4517d774805aafbabbbc --- /dev/null +++ b/eesanje/url_47_210_11.txt @@ -0,0 +1,8 @@ +ಋತುಚಕ್ರ ನೈರ್ಮಲ್ಯ ನೀತಿಗೆ ನನ್ನ ವಿರೋಧವಿದೆ ; ಸ್ಮತಿ ಇರಾನಿ +ನವದೆಹಲಿ,ಡಿ.22- ಕೆಲಸದ ಸ್ಥಳದಲ್ಲಿ ಮಹಿಳೆಯರು ತಾರತಮ್ಯ ಮತ್ತು ಕಿರುಕುಳವನ್ನು ಎದುರಿಸುವುದು ನನಗೆ ಇಷ್ಟವಿಲ್ಲದ ಕಾರಣ ಋತುಚಕ್ರದ ನೈರ್ಮಲ್ಯ ನೀತಿಯನ್ನು ನಾನು ವಿರೋಧಿಸಿದ್ದೇನೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಹೇಳಿದ್ದಾರೆ. +ಮುಟ್ಟು ಒಂದು ಅಂಗವಿಕಲತೆ ಅಲ್ಲ ಮತ್ತು ಇದು ಸಂದಾಯ ರಜೆ ಗಾಗಿ ನಿರ್ದಿಷ್ಟ ನೀತಿಯನ್ನು ಖಾತರಿಪಡಿಸಬಾರದು ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. +ನಾನು ಸಂಸತ್ತಿನಲ್ಲಿ ಮಾತನಾಡುವಾಗ, ನನ್ನ ವೈಯಕ್ತಿಕ ಅನುಭವದಿಂದ ಮಾತನಾಡಿದ್ದೇನೆ ಏಕೆಂದರೆ ಹೆಚ್ಚು ಹೆಚ್ಚು ಮಹಿಳೆಯರು ಕಿರುಕುಳಕ್ಕೆ ಒಳಗಾಗುವುದನ್ನು ನಾನು ಬಯಸುವುದಿಲ್ಲ. ಈ ಹೇಳಿಕೆಯನ್ನು ಪ್ರೇರೇಪಿಸಿದ ಪ್ರಶ್ನೆಯು ಆಘಾತಕಾರಿ, ಪ್ರಚೋದಿಸುವ ಅಥವಾ ಗಮನ ಸೆಳೆಯುವ ಉದ್ದೇಶವನ್ನು ಹೊಂದಿದೆ ಎಂದು ಸಚಿವರು ಹೇಳಿದರು. +ಕಾಶ್ಮೀರದ ಪೂಂಚ್ ಅರಣ್ಯದಲ್ಲಿ ಉಗ್ರರಿಗಾಗಿ ಸೇನೆಯಿಂದ ಶೋಧ ಕಾರ್ಯಾಚರಣೆ +ನಾನು ಈ ವಿಷಯದ ಬಗ್ಗೆ ಹೆಚ್ಚು ಹೇಳಬಹುದಿತ್ತು ಆದರೆ ನಾನು ಮಾಡಲಿಲ್ಲ ಏಕೆಂದರೆ ಪ್ರಶ್ನೆಯನ್ನು ಕೇಳಿದ ಸಂಭಾವಿತ ವ್ಯಕ್ತಿ ಎಂದಿಗೂ ಮಹಿಳೆಯರಿಗೆ ಪರಿಹಾರವನ್ನು ಕಂಡುಕೊಳ್ಳುವ ಉದ್ದೇಶವನ್ನು ಹೊಂದಿಲ್ಲ ಎಂದಿದ್ದಾರೆ. +ಡಿ. 13 ರಂದು ರಾಜ್ಯಸಭೆಯ ಅಧಿವೇಶನದಲ್ಲಿ ಕೇಳಲಾಗುವ ಮೌಖಿಕ ಉತ್ತರಗಳ ಪ್ರಶ್ನೆಗಳ ಪಟ್ಟಿಯ ಭಾಗವಾಗಿ ಸಚಿವ ಮನೋಜ್ ಕುಮಾರ್ ಝಾ ಅವರು ಈ ಪ್ರಶ್ನೆಯನ್ನು ಕೇಳಿದ್ದರು. ಮುಟ್ಟಿನ ನೈರ್ಮಲ್ಯ ನೀತಿಯನ್ನು ಶೀಘ್ರದಲ್ಲೇ ಹೊರತರಲು ಸರ್ಕಾರ ಯೋಜಿಸುತ್ತಿದೆಯೇ ಹಾಗಿದ್ದಲ್ಲಿ, ಅದರ ವಿವರಗಳನ್ನು ನೀಡುವಂತೆ ಝಾ ಕೇಳಿದ್ದರು. +ಸಲಿಂಗಕಾಮಿ ಪುರುಷರಿಗಾಗಿ ಮುಟ್ಟಿನ ನೈರ್ಮಲ್ಯ ಯೋಜನೆಯನ್ನು ಉತ್ತೇಜಿಸುವ ಅಥವಾ ಒದಗಿಸುವ ಪ್ರಶ್ನೆಯು ಆಘಾತಕಾರಿ, ಪ್ರಚೋದಿಸುವ ಅಥವಾ ಗಮನ ಸೆಳೆಯುವ ಉದ್ದೇಶವನ್ನು ಹೊಂದಿದೆ ಎಂದು ಇರಾನಿ ಹೇಳಿದರು. \ No newline at end of file diff --git a/eesanje/url_47_210_12.txt b/eesanje/url_47_210_12.txt new file mode 100644 index 0000000000000000000000000000000000000000..6ac0bf7e47088047926de74c7614d93b79a07175 --- /dev/null +++ b/eesanje/url_47_210_12.txt @@ -0,0 +1,8 @@ +ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳಿಗೆ ಮನೋವಿಶ್ಲೇಷಣಾ ಪರೀಕ್ಷೆ +ನವದೆಹಲಿ,ಡಿ.22- ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರು ಆರೋಪಿಗಳು ಮನೋವಿಶ್ಲೇಷಣೆ() ಪರೀಕ್ಷೆಗೆ ಒಳಪಡಿಸಲು ಪೊಲೀಸರು ತೀರ್ಮಾನಿಸಿದ್ದಾರೆ. ಅವರ ನಡವಳಿಕೆಯ ಪ್ರಮುಖ ಮೌಲ್ಯಮಾಪನವು ಹೊಗೆ ಭಯದ ಘಟನೆಯ ಹಿಂದಿನ ಉದ್ದೇಶ ಮತ್ತು ಉದ್ದೇಶಗಳನ್ನು ತನಿಖಾಕಾರಿಗಳಿಗೆ ಕಂಡುಹಿಡಿಯಲು ಈ ವಿಶ್ಲೇಷಣೆ ಸಹಕಾರಿಯಾಗಲಿದೆ ಎನ್ನಲಾಗಿದೆ. +ಆರು ಆರೋಪಿಗಳ ಪೈಕಿ ಒಬ್ಬನನ್ನು ಪರೀಕ್ಷೆಗಾಗಿ ನಿನ್ನೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದೊಯ್ಯಲಾಗಿತ್ತು. ಉಳಿದವರನ್ನು ಒಬ್ಬೊಬ್ಬರನ್ನಾಗಿ ಪರೀಕ್ಷೆಗೆ ಒಳಪಡಿಸಲಾಗುವುದು. ಮನೋವಿಶ್ಲೇಷಣೆ ಎಂದರೆ ಮಾನಸಿಕ ಮೌಲ್ಯಮಾಪನ, ಇದು ಅಂಡರ್ ಟ್ರಯಲ್‍ನಲ್ಲಿ ಅವರ ಅಭ್ಯಾಸಗಳು, ದಿನಚರಿ ಮತ್ತು ನಡವಳಿಕೆಯನ್ನು ಅರ್ಥಮಾಡಿಕೊಳ್ಳಲು ಮಾಡಲಾಗುತ್ತದೆ. +ಪರೀಕ್ಷೆಗಳು ಪ್ರಶ್ನೆ-ಉತ್ತರ ಸ್ವರೂಪವನ್ನು ಹೊಂದಿವೆ ಮತ್ತು ಮನೋವೈದ್ಯರು ನಡೆಸುತ್ತಾರೆ. ಆರೋಪಿಗಳು ನೀಡಿದ ಉತ್ತರಗಳ ಆಧಾರದ ಮೇಲೆ, ಮನೋವೈದ್ಯರು ಮತ್ತು ತನಿಖಾಕಾರಿಗಳು ಅಪರಾಧದ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಾರೆ. +ಕಾಶ್ಮೀರದ ಪೂಂಚ್ ಅರಣ್ಯದಲ್ಲಿ ಉಗ್ರರಿಗಾಗಿ ಸೇನೆಯಿಂದ ಶೋಧ ಕಾರ್ಯಾಚರಣೆ +ಈ ಪರೀಕ್ಷೆಯು ಸುಮಾರು ಮೂರು ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‍ನ ಫೋರೆನ್ಸಿಕ್ ಲ್ಯಾಬ್ ಮತ್ತು ಎಫ್‍ಎಸ್‍ಎಲ್ ರೋಹಿಣಿಯಲ್ಲಿ ನಡೆಸಲಾಗುತ್ತದೆ. ದೆಹಲಿ ಪೊಲೀಸರು ಆರೋಪಿಗಳ ಮೇಲೆ ಇತ್ತೀಚೆಗೆ ಮನೋವಿಶ್ಲೇಷಣೆ ನಡೆಸಿದ ಪ್ರಕರಣಗಳೆಂದರೆ ಶ್ರದ್ಧಾ ವಾಕರ್ ಹತ್ಯೆ ಮತ್ತು ಶಹಬಾದ್ ಡೈರಿ ಕೊಲೆ ಪ್ರಕರಣ. ಕಳೆದ ವಾರ ಸಂಸತ್ತಿನಲ್ಲಿ ನಡೆದ ಹೊಗೆ ಭೀತಿ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. +ಮಣಿಪುರದ ಅಶಾಂತಿ, ನಿರುದ್ಯೋಗ ಮತ್ತು ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವುದು ತಮ್ಮ ಉದ್ದೇಶವಾಗಿತ್ತು ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. +ಡಿಸೆಂಬರ್ 13 ರಂದು ಸಂಸತ್ತಿನ ಸಂಕೀರ್ಣದಿಂದ ಬಂಸಲಾದ ಪ್ರಮುಖ ನಾಲ್ವರು ಆರೋಪಿಗಳನ್ನು ನಿನ್ನೆ ಮತ್ತೆ 15 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಯಿತು. ಆಪಾದಿತ ಮಾಸ್ಟರ್ ಮೈಂಡ್ ಒಂದು ದಿನದ ನಂತರ ಶರಣಾಗಿದ್ದ. \ No newline at end of file diff --git a/eesanje/url_47_210_2.txt b/eesanje/url_47_210_2.txt new file mode 100644 index 0000000000000000000000000000000000000000..892a5c257431e231e6ebb45b1ca622742aabf1a7 --- /dev/null +++ b/eesanje/url_47_210_2.txt @@ -0,0 +1,5 @@ +24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು +ನವದೆಹಲಿ,ಡಿ. 23 (ಪಿಟಿಐ) ದೇಶದಲ್ಲಿ 752 ಕೊರೊನಾ ಸೋಂಕುಗಳ ಒಂದು ದಿನದ ಏರಿಕೆಯನ್ನು ಕಂಡಿದೆ, ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. +ನಾಲ್ಕು ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,33,332 ಕ್ಕೆ ದಾಖಲಾಗಿದೆ – ಕೇರಳದಿಂದ ಇಬ್ಬರು, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,07,964)ಗೆ ಏರಿಕೆಯಾಗಿದೆ. +ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ +ಆರೋಗ್ಯ ಸಚಿವಾಲಯದ ವೆಬ್‍ಸೈಟ್ ಪ್ರಕಾರ, ರೋಗದಿಂದ ಚೇತರಿಸಿಕೊಂಡ ಜನರ ಸಂಖ್ಯೆ 4,44,71,212 ಕ್ಕೆ ಏರಿದೆ ಮತ್ತು ರಾಷ್ಟ್ರೀಯ ಚೇತರಿಕೆ ಪ್ರಮಾಣವು 98.81 ಪ್ರತಿಶತದಷ್ಟಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ. \ No newline at end of file diff --git a/eesanje/url_47_210_3.txt b/eesanje/url_47_210_3.txt new file mode 100644 index 0000000000000000000000000000000000000000..3c5e93dbae7fdb3dc9e62c231b76369ac4f8b6d3 --- /dev/null +++ b/eesanje/url_47_210_3.txt @@ -0,0 +1,11 @@ +ಕಾಶ್ಮೀರದ ಪೂಂಚ್, ರಜೌರಿ ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸಂಪರ್ಕ ಕಟ್ +ಪೂಂಚ್, ಡಿ.23 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಇಂದು ಮುಂಜಾನೆ ಮೊಬೈಲ್ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಭದ್ರತಾ ಪಡೆಗಳು ಇತ್ತೀಚೆಗೆ ಐದು ಸೇನಾ ವಾಹನಗಳ ಮೇಲೆ ಹೊಂಚುದಾಳಿ ನಡೆಸಿದ ಉಗ್ರರನ್ನು ಪತ್ತೆಹಚ್ಚಲು ಭಾರಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ. +ಅವಳಿ ಗಡಿ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ನಂತರ ಮೂರು ವ್ಯಕ್ತಿಗಳು ನಿಗೂಢವಾಗಿ ಸಾವನ್ನಪ್ಪಿದ ನಂತರ ಸೇನೆಯು ವಿಚಾರಣೆಗೆ ಕರೆದೊಯ್ದಿದೆ ಮತ್ತು ಶಂಕಿತರಿಗೆ ಚಿತ್ರಹಿಂಸೆ ನೀಡುವ ವೀಡಿಯೊಗಳನ್ನು ಪ್ರಸಾರ ಮಾಡಿದ ನಂತರ ಜನರಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿದೆ. +ನೆಲದ ಪರಿಸ್ಥಿತಿಯ ಬಗ್ಗೆ ಸೇನೆ ಮತ್ತು ಸಿವಿಲ್ ಅಧಿಕಾರಿಗಳು ಬಿಗಿಯಾಗಿ ಬಾಯಿ ಬಿಟ್ಟಿದ್ದರೂ, ವದಂತಿಗಳನ್ನು ಹರಡುವುದನ್ನು ತಡೆಯಲು ಮತ್ತು ಕಿಡಿಗೇಡಿಗಳು ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಸೃಷ್ಟಿಸುವುದನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. +ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ +ಹಿರಿಯ ಸೇನೆ, ಪೊಲೀಸ್ ಮತ್ತು ಸಿವಿಲ್ ಅಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ, ಶಾಂತಿ ಕಾಪಾಡಲು ಜಿಲ್ಲೆಗಳ ಸೂಕ್ಷ್ಮ ಜೇಬಿನಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. +ಮೂರರಿಂದ ನಾಲ್ಕು ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರು ಗುರುವಾರ ಮಧ್ಯಾಹ್ನ ಪೂಂಚ್‍ನ ಸುರನ್‍ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಧೇರಾ ಕಿ ಗಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್‍ನಲ್ಲಿ ಆರ್ಮಿ ಜಿಪ್ಸಿ ಮತ್ತು ಟ್ರಕ್ ಅನ್ನು ಗುರಿಯಾಗಿಸಿಕೊಂಡು ಐವರು ಸೈನಿಕರನ್ನು ಹತ್ಯೆ ಮಾಡಿದ್ದರು. +ದಾಳಿಯ ನಂತರ, ಭಯೋತ್ಪಾದಕರು ಕನಿಷ್ಠ ಇಬ್ಬರು ಸೈನಿಕರ ದೇಹಗಳನ್ನು ವಿರೂಪಗೊಳಿಸಿದರು ಮತ್ತು ಅವರಲ್ಲಿ ಕೆಲವರ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡರು ಎಂದು ವರದಿಯಾಗಿದೆ. ದಟ್ಟವಾದ ಅರಣ್ಯ ಪ್ರದೇಶಗಳಲ್ಲಿ ದಾಳಿಯ ನಂತರ ತಕ್ಷಣವೇ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ರಾಜೌರಿಯ ಹತ್ತಿರದ ಥಾನಮಂಡಿಯನ್ನು ಸಹ ಆವರಿಸಿದೆ ಆದರೆ ಇದುವರೆಗೆ ಪರಾರಿಯಾದ ಭಯೋತ್ಪಾದಕರ ಸುಳಿವು ಸಿಕ್ಕಿಲ್ಲ್ಲ ಎಂದು ಅಕಾರಿಗಳು ತಿಳಿಸಿದ್ದಾರೆ. +ಸದಾಶಿವ ಆಯೋಗ ವರದಿ ಜಾರಿಗೆ ಮಾದಿಗ ದಂಡೋರ ಆಗ್ರಹ +ಗುರುವಾರದ ದಾಳಿಗೆ ಸಂಬಂಧಿಸಿದಂತೆ ಸೇನೆಯಿಂದ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದ ಮೂವರು ವ್ಯಕ್ತಿಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಅವರ ಸಾವಿನ ಕುರಿತು ತನಿಖೆ ಮುಂದುವರೆದಿದ್ದು, ಅವರ ಮೃತದೇಹಗಳನ್ನು ಅಂತಿಮ ವಿಧಿಗಳಿಗಾಗಿ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಮೃತರನ್ನು ಬುಫ್ಲಿಯಾಜ್‍ನ ಟೋಪಾ ಪೀರ್ ಗ್ರಾಮದ ಸಫೀರ್ ಹುಸೇನ್ (43), ಮೊಹಮ್ಮದ್ ಶೋಕೆಟ್ (27) ಮತ್ತು ಶಬೀರ್ ಅಹ್ಮದ್ (32) ಎಂದು ಗುರುತಿಸಲಾಗಿದೆ ಆದರೆ ಅವರ ಸಾವಿಗೆ ಕಾರಣ ತಕ್ಷಣವೇ ತಿಳಿದುಬಂದಿಲ್ಲ. \ No newline at end of file diff --git a/eesanje/url_47_210_4.txt b/eesanje/url_47_210_4.txt new file mode 100644 index 0000000000000000000000000000000000000000..3c85be3bca56fb1657e76835a62eb1028ca337e5 --- /dev/null +++ b/eesanje/url_47_210_4.txt @@ -0,0 +1,7 @@ +ಜ.6ಕ್ಕೆ ಗಮ್ಯ ಸ್ಥಾನ ಸೇರಲಿದೆ ಆದಿತ್ಯ್-ಎಲ್1 +ಅಹಮದಾಬಾದ್, ಡಿ 23 (ಪಿಟಿಐ) ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು, ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಅನ್ನು ಜನವರಿ 6 ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. +ಹಾಲೋ ಆರ್ಬಿಟ್ ಎಲ್1 ನಿಂದ ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಭಾರತೀಯ ಬಾಹ್ಯಾಕಾಶ ಆಧಾರಿತ ವೀಕ್ಷಣಾಲಯವಾದ ಮಿಷನ್ ಅನ್ನು ಇಸ್ರೋ ಕಳೆದ ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾರಂಭಿಸಿತು. +ಆದಿತ್ಯ-ಎಲ್ 1 ಜನವರಿ 6 ರಂದು ಎಲ್ 1 ಪಾಯಿಂಟ್‍ಗೆ ಪ್ರವೇಶಿಸಲಿದೆ. ಅದನ್ನೇ ನಿರೀಕ್ಷಿಸಲಾಗಿದೆ. ಸರಿಯಾದ ಸಮಯದಲ್ಲಿ ನಿಖರವಾದ ಸಮಯವನ್ನು ಪ್ರಕಟಿಸಲಾಗುವುದು ಎಂದು ಸೋಮನಾಥ್ ಇಲ್ಲಿ ಮಾಧ್ಯಮ ಪ್ರತಿನಿಗಳಿಗೆ ವಿಜ್ಞಾನ ಭಾರತಿ, ಎನ್‍ಜಿಒ ಆಯೋಜಿಸಿದ್ದ ಭಾರತೀಯ ವಿಜ್ಞಾನ ಸಮ್ಮೇಳನದ ಸಂದರ್ಭದಲ್ಲಿ ತಿಳಿಸಿದರು. +ಎಲ್ 1 ಪಾಯಿಂಟ್ ತಲುಪಿದಾಗ, ಅದು ಮುಂದೆ ಹೋಗದಂತೆ ನಾವು ಮತ್ತೊಮ್ಮೆ ಎಂಜಿನ್ ಅನ್ನು ಬೆಂಕಿಯಿಡಬೇಕು. ಅದು ಆ ಹಂತಕ್ಕೆ ಹೋಗುತ್ತದೆ, ಮತ್ತು ಅದು ತಲುಪಿದ ನಂತರ, ಅದು ಅದರ ಸುತ್ತಲೂ ತಿರುಗುತ್ತದೆ ಮತ್ತು ಎಲ್ 1 ನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ, ಅವರು ಹೇಳಿದರು. +ಹೊಸ ವರ್ಷಾಚರಣೆಗೆ ಕಟ್ಟೆಚ್ಚರ, ಗೃಹಸಚಿವ ಪರಮೇಶ್ವರ್ ಸಭೆ +ಆದಿತ್ಯ-ಎಲï1 ತನ್ನ ಗಮ್ಯಸ್ಥಾನವನ್ನು ತಲುಪಿದ ನಂತರ, ಮುಂದಿನ ಐದು ವರ್ಷಗಳವರೆಗೆ ಸೂರ್ಯನ ಮೇಲೆ ನಡೆಯುವ ವಿವಿಧ ಘಟನೆಗಳನ್ನು ಅಳೆಯಲು ಇದು ಸಹಾಯ ಮಾಡುತ್ತದೆ. ಒಮ್ಮೆ ಇದನ್ನು ಯಶಸ್ವಿಯಾಗಿ ಎಲ್1 ಪಾಯಿಂಟ್‍ನಲ್ಲಿ ಇರಿಸಿದರೆ, ಅದು ಮುಂದಿನ ಐದು ವರ್ಷಗಳವರೆಗೆ ಇರುತ್ತದೆ, ಇದು ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬಹಳ ಮುಖ್ಯವಾದ ಎಲ್ಲಾ ಡೇಟಾವನ್ನು ಸಂಗ್ರಹಿಸುತ್ತದೆ. ಡೇಟಾವು ಡೈನಾಮಿಕ್ಸ್ ಅನ್ನು ಅರ್ಥಮಾಡಿಕೊಳ್ಳಲು ತುಂಬಾ ಉಪಯುಕ್ತವಾಗಿದೆ. ಸೂರ್ಯ ಮತ್ತು ಅದು ನಮ್ಮ ಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವುದನ್ನು ಪತ್ತೆ ಹಚ್ಚಬಹುದು ಎಂದು ಇಸ್ರೋ ಮುಖ್ಯಸ್ಥರು ಹೇಳಿದ್ದಾರೆ. \ No newline at end of file diff --git a/eesanje/url_47_210_5.txt b/eesanje/url_47_210_5.txt new file mode 100644 index 0000000000000000000000000000000000000000..a9db982215039c2ca7cce8432947cc6b421657ac --- /dev/null +++ b/eesanje/url_47_210_5.txt @@ -0,0 +1,10 @@ +ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಭಾವನೆ ಇಲ್ಲ : ಮೋದಿ +ನವದೆಹಲಿ, ಡಿ.22- ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯದ ಯಾವುದೇ ಭಾವನೆ ಇಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಫೈನಾನ್ಷಿಯಲ್ ಟೈಮ್ಸ್‍ಗೆ ನೀಡಿದ ಸಂದರ್ಶನದಲ್ಲಿ ಭಾರತದಲ್ಲಿ ಯಾವುದೇ ತಾರತಮ್ಯ, ಜಾತಿ, ಧರ್ಮ, ಧರ್ಮ ಅಥವಾ ಲಿಂಗಕ್ಕೆ ಅವಕಾಶವಿಲ್ಲ ಎಂದರು. +ಭಾರತದಲ್ಲಿ ಮುಸಲ್ಮಾನರ ಭವಿಷ್ಯದ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ದೇಶದ ಸ್ಥಿತಿ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಯನ್ನು ಸೂಚಿಸುತ್ತದೆ. 2014 ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ ಇಸ್ಲಾಮಿಕ್ ವಿರೋಧಿ ಭಾವನೆಗಳು ಮತ್ತು ದ್ವೇಷದ ಮಾತುಗಳು ಪ್ರವರ್ಧಮಾನಕ್ಕೆ ಬಂದಿವೆ ಎಂದು ಹೇಳುವ ವಿದೇಶಿ ಮತ್ತು ದೇಶೀಯ ವಿಮರ್ಶಕರ ಆರೋಪವನ್ನು ನಿರಾಕರಿಸಿದ್ದಾರೆ. +ಭಾರತೀಯ ಸಮಾಜವು ಯಾವುದೇ ಧಾರ್ಮಿಕ ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಭಾವನೆ ಹೊಂದಿಲ್ಲವೆ ಎಂದು ಮುಸ್ಲಿಂ ಅಲ್ಪಸಂಖ್ಯಾತರ ಬಗ್ಗೆ ಕೇಳಿದಾಗ ದೇಶದ ಪಾರ್ಸಿ ಸಮುದಾಯದ ಆರ್ಥಿಕ ಯಶಸ್ಸನ್ನು ಶ್ಲಾಘಿಸಿದರಲ್ಲದೆ, ಅವರು ಭಾರತದಲ್ಲಿ ವಾಸಿಸುವ ಧಾರ್ಮಿಕ ಸೂಕ್ಷ್ಮ-ಅಲ್ಪಸಂಖ್ಯಾತರು ಎಂದು ಬಣ್ಣಿಸಿದರು. +ಜಗತ್ತಿನ ಬೇರೆಡೆ ಕಿರುಕುಳವನ್ನು ಎದುರಿಸುತ್ತಿದ್ದರೂ, ಅವರು (ಪಾರ್ಸಿಗಳು) ಭಾರತದಲ್ಲಿ ಸುರಕ್ಷಿತ ಧಾಮವನ್ನು ಕಂಡುಕೊಂಡಿದ್ದಾರೆ, ಸಂತೋಷದಿಂದ ಮತ್ತು ಸಮೃದ್ಧವಾಗಿ ಬದುಕುತ್ತಿದ್ದಾರೆ. ದೇಶದ ಸರಿಸುಮಾರು 200 ಮಿಲಿಯನ್ ಮುಸ್ಲಿಮರ ಬಗ್ಗೆ ಯಾವುದೇ ನೇರ ಉಲ್ಲೇಖವನ್ನು ಪ್ರಧಾನಿ ಮೋದಿ ಮಾಡಿಲ್ಲ.ಸರ್ಕಾರದ ಟೀಕಾಕಾರರ ಮೇಲೆ ಆಪಾದಿತ ಶಿಸ್ತುಕ್ರಮಗಳ ಕುರಿತು ಕೇಳಿದ ಪ್ರಶ್ನೆಗೆ, ಪ್ರಧಾನಿ ಜೋರಾಗಿ ನಕ್ಕರು ಎಂದು ಎಫ್‍ಟಿ ಹೇಳಿದೆ. +ನಮ್ಮ ದೇಶದಲ್ಲಿ ಲಭ್ಯವಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಇಡೀ ಪರಿಸರ ವ್ಯವಸ್ಥೆಯು ಪ್ರತಿದಿನ ಸಂಪಾದಕೀಯಗಳು, ಟಿವಿ ಚಾನೆಲ್‍ಗಳು, ಸಾಮಾಜಿಕ ಮಾಧ್ಯಮಗಳು, ವೀಡಿಯೊಗಳು, ಟ್ವೀಟ್‍ಗಳು ಇತ್ಯಾದಿಗಳ ಮೂಲಕ ಈ ಆರೋಪಗಳನ್ನು ನಮ್ಮ ಮೇಲೆ ಎಸೆಯಲು ಬಳಸುತ್ತಿದೆ ಎಂದು ಮೋದಿ ಸ್ಪಷ್ಟವಾದ ಮಾತಿನಲ್ಲಿ ಹೇಳಿದ್ದಾರೆ. +ಟೂಲ್‍ಕಿಟ ಮತ್ತು ತುಕ್ಡೆ ತುಕ್ಡೆ ಗ್ಯಾಂಗ್ ಕುರಿತು ಅವರಿಗೆ ಹಾಗೆ ಮಾಡುವ ಹಕ್ಕಿದೆ. ಆದರೆ ಸತ್ಯಗಳೊಂದಿಗೆ ಪ್ರತಿಕ್ರಿಯಿಸಲು ಇತರರಿಗೆ ಸಮಾನ ಹಕ್ಕಿದೆ ಎಂದು ಪ್ರತಿಪಾದಿಸಿದ್ದಾರೆ. ಇತ್ತೀಚಿಗೆ ನಡೆದ ರಾಜಸ್ಥಾನ, ಛತ್ತೀಸ್‍ಗಢ ಮತ್ತು ಮಧ್ಯಪ್ರದೇಶ ಚುನಾವಣೆಗಳಲ್ಲಿ ಬಿಜೆಪಿಯ ಪ್ರಾಬಲ್ಯ ಪ್ರದರ್ಶನದ ಹಿನ್ನೆಲೆಯಲ್ಲಿ, ತಮ್ಮ ಸರ್ಕಾರವು ದೀರ್ಘಕಾಲದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ಕಿತ್ತುಹಾಕುತ್ತಿದೆ ಎಂಬ ಟೀಕೆಗಳನ್ನು ತಳ್ಳಿಹಾಕಿದ್ದಾರೆ. +ಮುನಿಸಿಕೊಂಡಿರುವ ನಿತೀಶ್ ಜತೆ ರಾಹುಲ್ ಮಾತುಕತೆ +ನೀವು ಪ್ರಸ್ತುತ ಮಾಡಿದ ಸಮಸ್ಯೆಗಳು ಸೂಚಿಸಿದಂತೆ ವ್ಯಾಪಕವಾಗಿದ್ದರೆ ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ಸ್ಥಾನಮಾನವನ್ನು ಸಾಸುವುದಿಲ್ಲ ಎಂದು ಗುರುತಿಸುವುದು ಮುಖ್ಯವಾಗಿದೆ ಎಂದು ಅವರು ಪ್ರತಿಕ್ರಿಯಿಸಿದರು. +ನಮ್ಮ ವಿಮರ್ಶಕರು ತಮ್ಮ ಅಭಿಪ್ರಾಯಗಳಿಗೆ ಮತ್ತು ಅವುಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯಕ್ಕೆ ಅರ್ಹರಾಗಿದ್ದಾರೆ. ಆದಾಗ್ಯೂ, ಇಂತಹ ಆರೋಪಗಳಲ್ಲಿ ಮೂಲಭೂತ ಸಮಸ್ಯೆ ಇದೆ, ಅದು ಸಾಮಾನ್ಯವಾಗಿ ಟೀಕೆಗಳಾಗಿ ಕಂಡುಬರುತ್ತದೆ. ಈ ಹಕ್ಕುಗಳು ಭಾರತೀಯ ಜನರ ಬುದ್ಧಿವಂತಿಕೆಯನ್ನು ಅವಮಾನಿಸುವುದಲ್ಲದೆ, ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವದಂತಹ ಮೌಲ್ಯಗಳಿಗೆ ಅವರ ಆಳವಾದ ಬದ್ಧತೆಯನ್ನು ಕಡಿಮೆ ಅಂದಾಜು ಮಾಡುತ್ತವೆ ಎಂದು ಮೋದಿ ಹೇಳಿದ್ದಾರೆ. \ No newline at end of file diff --git a/eesanje/url_47_210_6.txt b/eesanje/url_47_210_6.txt new file mode 100644 index 0000000000000000000000000000000000000000..cb57630ebb1bdd27325b6e76685ac082aef6e58e --- /dev/null +++ b/eesanje/url_47_210_6.txt @@ -0,0 +1,7 @@ +ಜಾತಿ ಗಣತಿಗೆ ವಿರೋಧ ಇಲ್ಲ : ಆರ್‌ಎಸ್‌ಎಸ್‌ +ನವದೆಹಲಿ,ಡಿ.22- ಜಾತಿ ಗಣತಿಯನ್ನು ವಿರೋಧಿಸುವುದಿಲ್ಲ ಎಂದು ಹೇಳಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್), ಜನಗಣತಿಯನ್ನು ಸಮಾಜದ ಪ್ರಗತಿಗೆ ಬಳಸಬೇಕೆಂದು ಸ್ಪಷ್ಟಪಡಿಸಿದ್ದು, ಇದರಲ್ಲಿ ರಾಜಕೀಯ ಬೇಡ ಎಂದು ಸಲಹೆ ಮಾಡಿದೆ. ಆರ್‍ಎಸ್‍ಎಸ್‍ನ ಪದಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಧರ್ ಗಾಡ್ಗೆ ಅವರು ಡಿಸೆಂಬರ್ 19 ರಂದು ಜನಗಣತಿಯನ್ನು ವಿರೋಧಿಸಿದ್ದರು. ಮತ್ತು ಜಾತಿ ಗಣತಿಯು ಒಂದು ನಿರ್ದಿಷ್ಟ ಜಾತಿಯ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಒದಗಿಸುವುದರಿಂದ ಕೆಲವು ಜನರಿಗೆ ರಾಜಕೀಯವಾಗಿ ಲಾಭವಾಗಬಹುದು ಎಂದು ಹೇಳಿದ್ದರು. +ಆದರೆ ಇದು ಸಾಮಾಜಿಕವಾಗಿ ಅಪೇಕ್ಷಣೀಯವಲ್ಲ. ಜೊತೆಗೆ ರಾಷ್ಟ್ರೀಯ ಏಕತೆಯ ವಿಷಯದಲ್ಲಿ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇದೀಗ, ಆರ್‍ಎಸ್‍ಎಸ್‍ನ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಜಾತಿ ಗಣತಿಯನ್ನು ನಡೆಸುವಾಗ, ಅದು ಬಿರುಕು ಸೃಷ್ಟಿಸದಂತೆ ನೋಡಿಕೊಳ್ಳಬೇಕು. ಯಾವುದೇ ತಾರತಮ್ಯ ಮತ್ತು ತಾರತಮ್ಯವಿಲ್ಲದೆ ಸಾಮರಸ್ಯ ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ಹಿಂದೂ ಸಮಾಜವನ್ನು ನಿರ್ಮಿಸಲು ಸಂಘಟನೆಯು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಸಂಘಟನೆ ಹೇಳಿದೆ. +ಜಾತಿವಾರು ಜನಗಣತಿ ಕುರಿತು ಮತ್ತೆ ಚರ್ಚೆ ಆರಂಭಗೊಂಡಿದ್ದು, ಇದನ್ನು ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದು, ಇದನ್ನು ಮಾಡುವಾಗ ಎಲ್ಲ ಪಕ್ಷಗಳು ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆ ಕಾಪಾಡಬೇಕು.ವಿವಿಧ ಐತಿಹಾಸಿಕ ಕಾರಣಗಳಿಂದಾಗಿ ಸಮಾಜದ ಹಲವು ವರ್ಗಗಳು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವುದು ನಿಜ ಎಂದು ಅಂಬೇಕರ್ ಹೇಳಿದ್ದಾರೆ. +ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದಕ್ಕೆ ಧನ್ಯವಾದ ; ಕಾಂಗ್ರೆಸ್ +ಕಾಲಕಾಲಕ್ಕೆ ಅಂತಹ ವಿಭಾಗಗಳ ಅಭಿವೃದ್ಧಿ ಮತ್ತು ಸಬಲೀಕರಣಕ್ಕಾಗಿ ವಿವಿಧ ಸರ್ಕಾರಗಳು ಯೋಜನೆಗಳು ಮತ್ತು ವಿಶೇಷ ನಿಬಂಧನೆಗಳನ್ನು ಪರಿಚಯಿಸಿವೆ ಮತ್ತು ಅಂತಹ ಕ್ರಮಗಳನ್ನು ಆರ್‍ಎಸ್‍ಎಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ವಿಶೇಷವೆಂದರೆ, ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಾತಿ ಗಣತಿಗೆ ಒತ್ತಾಯಿಸುತ್ತಿವೆ ಮತ್ತು ಕಳೆದ ತಿಂಗಳ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಈ ಬೇಡಿಕೆಯು ಚುನಾವಣಾ ವಿಷಯವಾಗಿತ್ತು. +ವಿಶೇಷವಾಗಿ ಬಿಹಾರ ಸರ್ಕಾರವು ಈ ವರ್ಷದ ಆರಂಭದಲ್ಲಿ ನಡೆಸಿದ ಜಾತಿ ಸಮೀಕ್ಷೆಯಿಂದ ಡೇಟಾವನ್ನು ಬಿಡುಗಡೆ ಮಾಡಿದ ನಂತರ ಹಲವು ರಾಜ್ಯಗಳಲ್ಲಿ ಈ ಬೇಡಿಕೆ ಹೆಚ್ಚಾಗಿತ್ತು. ಕಳೆದ ತಿಂಗಳು, ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಎಂದಿಗೂ ಜಾತಿ ಗಣತಿಯನ್ನು ವಿರೋಸಿಲ್ಲ ಎಂದು ಹೇಳಿದ್ದರು. \ No newline at end of file diff --git a/eesanje/url_47_210_7.txt b/eesanje/url_47_210_7.txt new file mode 100644 index 0000000000000000000000000000000000000000..a3c14a62980c3a07b2819962d39802732b7bc7fb --- /dev/null +++ b/eesanje/url_47_210_7.txt @@ -0,0 +1,6 @@ +ಸಂಸದರ ಅಮಾನತು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ +ಬೆಂಗಳೂರು,ಡಿ.22- ವಿರೋಧಪಕ್ಷಗಳ 143 ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಿ ಸಂಸತ್ ಕಲಾಪ ನಡೆಸಿದ್ದನ್ನು ಖಂಡಿಸಿ ಇಂದು ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. +ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಪ್ರಮುಖ ನಾಯಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಂಸತ್ ಕಲಾಪದಲ್ಲಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದೇ ವಿರೋಧಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಿದ್ದಲ್ಲದೆ ಅವರ ಅನುಪಸ್ಥಿತಿಯಲ್ಲಿ ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ ಹಾಗೂ ದೂರಸಂಪರ್ಕ ದಂತಹ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ. +ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದಕ್ಕೆ ಧನ್ಯವಾದ ; ಕಾಂಗ್ರೆಸ್ +ಐಪಿಸಿ, ಸಿಆರ್‍ಪಿಸಿ ಮತ್ತು ಸಾಕ್ಷ್ಯ ಕಾಯಿದೆಗಳಿಗೆ ಪರ್ಯಾಯವಾಗಿ ರೂಪಿಸಲಾಗಿರುವ ಮೂರು ಭಾರತೀಯ ಮಸೂದೆಗಳನ್ನು ವಿಪಕ್ಷಗಳ ರಚನಾತ್ಮಕ ಅಭಿಪ್ರಾಯಗಳಿಲ್ಲದೆ ಅಂಗೀಕರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. +ಕಾಂಗ್ರೆಸ್‍ನ ಬಹುತೇಕ ಸಂಸದರನ್ನು ಸದನದಿಂದ ಹೊರಗಿಟ್ಟು, ಕಾಯಿದೆ ರೂಪಿಸಿರುವುದು ಇದೇ ಸಂದರ್ಭದಲ್ಲಿ ಇತರ ಪಕ್ಷಗಳ ನಾಯಕರುಗಳನ್ನೂ ಕೂಡ ಅಮಾನತುಗೊಳಿಸಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ಹೊರಹಾಕಿದ್ದಾರೆ. \ No newline at end of file diff --git a/eesanje/url_47_210_8.txt b/eesanje/url_47_210_8.txt new file mode 100644 index 0000000000000000000000000000000000000000..5f563eff326ec2f81c401420abc8ba2b2bc2b36f --- /dev/null +++ b/eesanje/url_47_210_8.txt @@ -0,0 +1,6 @@ +ಮುನಿಸಿಕೊಂಡಿರುವ ನಿತೀಶ್ ಜತೆ ರಾಹುಲ್ ಮಾತುಕತೆ +ನವದೆಹಲಿ,ಡಿ.22- ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನವೇ ಇಂಡಿಯಾ ಒಕ್ಕೂಟದಲ್ಲಿ ಇನ್ನಷ್ಟು ಬಿರುಕು ಮೂಡಲಿದೆ ಎಂಬ ಮಾತುಗಳ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಸಂಭಾಷಣೆಯ ವಿವರಗಳು ಪ್ರಸ್ತುತ ಲಭ್ಯವಿಲ್ಲ ಆದರೆ ಬುಧವಾರದ ಸಭೆಯ ಪತನದ ಕುರಿತು ಇಬ್ಬರೂ ಮಾತನಾಡಿದ್ದಾರೆ ಎಂಬ ಊಹಾಪೋಹವಿದೆ. +ನಿತೀಶ್ ಕುಮಾರ್ ಅವರು ಒಕ್ಕೂಟವನ್ನು ಇಂಡಿಯಾ ಎಂದು ನಾಮಕರಣ ಮಾಡುವುದು ಸೇರಿದಂತೆ ಹಲವಾರು ವಿಷಯಗಳಲ್ಲಿ ಒಕ್ಕೂಟದ ನಾಯಕರೊಂದಿಗೆ ಘರ್ಷಣೆ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ. ಆ ಪ್ರಸ್ತಾವನೆಯನ್ನು ಕಾಂಗ್ರೆಸ್‍ನ ಸೋನಿಯಾ ಗಾಂಧಿ ಅವರು ಶೀಘ್ರವಾಗಿ ಅವರ ಬೇಡಿಕೆಯನ್ನು ನಿರಾಕರಿಸಿದ್ದರು. ನವೆಂಬರ್‍ನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‍ನ ಹೀನಾಯ ಪ್ರದರ್ಶನದ ನಂತರ ನಿತೀಶ್ ಕುಮಾರ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು ಇದನ್ನು ಮತದಾರರಲ್ಲಿ ಇಂಡಿಯ ಒಕ್ಕೂಟದ ಒಣ ಓಟ ಎಂದು ಟೀಕಿಸಲಾಗಿತ್ತು. +ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳಿಗೆ ಮನೋವಿಶ್ಲೇಷಣಾ ಪರೀಕ್ಷೆ +2024 ರ ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಕಳೆದ ತಿಂಗಳ ಚುನಾವಣೆಗೆ ಆದ್ಯತೆ ನೀಡಿದ ನಂತರ ದೆಹಲಿ ಸಭೆಯಲ್ಲಿ – ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ದೆಹಲಿ ಕೌಂಟರ್ ಅರವಿಂದ್ ಕೇಜ್ರಿವಾಲ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿರುವುದು ನಿತೀಶ್ ಕೋಪಕ್ಕೆ ಕಾರಣ ಎನ್ನಲಾಗಿದೆ. +ನಿತೀಶ್ ಕುಮಾರ್ ಅವರು ತಮ್ಮ ಪ್ರಧಾನ ಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಯ ಬಗ್ಗೆ ಸಾರ್ವಜನಿಕವಾಗಿ ನಿರಾಕರಿಸಿದ್ದಾರೆ ಆದರೆ ಖಾಸಗಿಯಾಗಿ, ಆಕಾಂಕ್ಷಿ ಎಂದು ನಂಬಲಾಗಿದೆ. \ No newline at end of file diff --git a/eesanje/url_47_210_9.txt b/eesanje/url_47_210_9.txt new file mode 100644 index 0000000000000000000000000000000000000000..ab057831cdf516e81a06f8abb2a31883d8a0ce23 --- /dev/null +++ b/eesanje/url_47_210_9.txt @@ -0,0 +1,6 @@ +ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದಕ್ಕೆ ಧನ್ಯವಾದ ; ಕಾಂಗ್ರೆಸ್ +ರಾಮಮಂದಿರ ನವದೆಹಲಿ,ಡಿ.22- ಮುಂಬರುವ ಜನವರಿ 22 ರಂದು ಅಯೋಧ್ಯೆಯಲ್ಲಿ ನೆರವೇರಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಕ್ಷದ ಉನ್ನತ ನಾಯಕರು ಪಾಲ್ಗೊಳ್ಳುತ್ತಾರೆಯೇ ಎಂಬುದರ ಕುರಿತು ಕಾಂಗ್ರೆಸ್ ತನ್ನ ನಿಲುವನ್ನು ಇನ್ನು ಬಹಿರಂಗಪಡಿಸಿಲ್ಲ, ಆದರೆ ಆಹ್ವಾನಗಳಿಗೆ ಧನ್ಯವಾದ ಎಂದು ಹೇಳಿದೆ. +ಜ. 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಪಕ್ಷದ ನಾಯಕ ಅೀಧಿರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿದೆ.ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿತ್ತು. +ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ಎನ್‍ಐಎಗೆ ವರ್ಗಾವಣೆ +ಪಕ್ಷದ ಮುಖಂಡರು ಸಮಾರಂಭಕ್ಕೆ ಬರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ, ಪಕ್ಷದ ನಿಲುವು ನಿಮಗೆ ತಿಳಿಯುತ್ತದೆ, ಭಾಗವಹಿಸುವ ಬಗ್ಗೆ ಜನವರಿ 22 ರಂದು ತಿಳಿಯಲಿದೆ ಎಂದು ಮಾರ್ಮಿಕವಾಗಿ ತಿಳಿಸಿದ್ದಾರೆ. ಅವರು ನಮ್ಮನ್ನು ಆಹ್ವಾನಿಸಿದ್ದಾರೆ, ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ನಾವು ಅವರಿಗೆ ತುಂಬಾ ಕೃತಜ್ಞರಾಗಿರುತ್ತೇವೆ ಎಂದು ಅವರು ಹೇಳಿದರು. +ಆಮಂತ್ರಣಗಳನ್ನು ಖರ್ಗೆ, ಸೋನಿಯಾ ಗಾಂಧಿ, ಆೀಧಿರ್ ರಂಜನ್ ಚೌಧರಿ ಅವರಿಗೆ ಪ್ರತ್ಯೇಕವಾಗಿ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್ ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರತಿಪಕ್ಷ ನಾಯಕರಿಗೂ ಹೆಚ್ಚಿನ ಆಹ್ವಾನ ಕಳುಹಿಸುವ ಸಾಧ್ಯತೆ ಇದೆ. ದೇಶದ ಗೌರವಕ್ಕೆ ಕೊಡುಗೆ ನೀಡುವ ಎಲ್ಲಾ ಪ್ರಮುಖ ವ್ಯಕ್ತಿಗಳ ಜೊತೆಗೆ ವಿವಿಧ ಸಂಪ್ರದಾಯಗಳ ಪೂಜ್ಯ ದಾರ್ಶನಿಕರಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ ಎಂದು ಟ್ರಸ್ಟ ಹೇಳಿದೆ. \ No newline at end of file diff --git a/eesanje/url_47_211_1.txt b/eesanje/url_47_211_1.txt new file mode 100644 index 0000000000000000000000000000000000000000..3b56035d4f020808ef2c46472362907aa9a78237 --- /dev/null +++ b/eesanje/url_47_211_1.txt @@ -0,0 +1,8 @@ +ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ಎನ್‍ಐಎಗೆ ವರ್ಗಾವಣೆ +ಗುವಾಹಟಿ,ಡಿ.22-ಅರುಣಾಚಲ ಪ್ರದೇಶದ ಮಾಜಿ ಕಾಂಗ್ರೆಸ್ ಶಾಸಕ ಯುಮ್ಸೇನ್ ಮೇಟಿ ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗಿದೆ. ಪ್ರಕರಣವನ್ನು ಭಯೋತ್ಪಾದನಾ ನಿಗ್ರಹ ಸಂಸ್ಥೆಗೆ ವರ್ಗಾಯಿಸುವಂತೆ ರಾಜ್ಯ ಪೊಲೀಸರು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. +ಸೂಕ್ಷ್ಮ ಮತ್ತು ಸಂಪೂರ್ಣ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ರಾಜ್ಯ ಸರ್ಕಾರವು ಪ್ರಕರಣವನ್ನು ಎನ್‍ಐಎಗೆ ವರ್ಗಾಯಿಸುವ ನಿರ್ಣಾಯಕ ಹೆಜ್ಜೆಯನ್ನು ತೆಗೆದುಕೊಂಡಿದೆ. ಅರುಣಾಚಲ ಪ್ರದೇಶ ಸರ್ಕಾರವು ಈಗಾಗಲೇ ಗೃಹ ಸಚಿವಾಲಯಕ್ಕೆ ಪ್ರಕರಣವನ್ನು ರವಾನಿಸಿದ್ದು, ಕೇಂದ್ರ ಸರ್ಕಾರ ಎನ್‍ಐಎ ಮಧ್ಯಪ್ರವೇಶಕ್ಕೆ ಅಗತ್ಯ ನಿರ್ದೇಶನಗಳನ್ನು ಕೋರಿದೆ ಎಂದು ಸರ್ಕಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. +ಕಳೆದ ವಾರ ಅರುಣಾಚಲ ಪ್ರದೇಶದ ತಿರಾಪ್ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಕಾಂಗ್ರೆಸ್ ಶಾಸಕನನ್ನು ಹತ್ಯೆ ಮಾಡಲಾಗಿತ್ತು. ಅವರು ಮ್ಯಾನ್ಮಾರ್ ಗಡಿಯ ಸಮೀಪವಿರುವ ರಾಹೋ ಗ್ರಾಮಕ್ಕೆ ಭೇಟಿ ನೀಡುತ್ತಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. +ಮಾಜಿ ಶಾಸಕ ತನ್ನ ಮೂವರು ಸಹಚರರೊಂದಿಗೆ ಗ್ರಾಮದಲ್ಲಿದ್ದಾಗ ಯಾರೋ ಅವರನ್ನು ಸಮೀಪಿಸಿ ಹತ್ತಿರದ ಕಾಡಿಗೆ ಕರೆದೊಯ್ದರು ಎಂದು ಹಿರಿಯ ತಿರಪ್ ಪೊಲೀಸ್ ಅಧಿಕಾರಿ ರಾಹುಲ್ ಗುಪ್ತಾ ತಿಳಿಸಿದ್ದಾರೆ. ಕಾಡಿನಲ್ಲಿ ಯಾರೋ ಮೇಟಿಗೆ ಗುಂಡು ಹಾರಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ನಂತರ ದಾಳಿಕೋರ ಮ್ಯಾನ್ಮಾರ್ ಕಡೆಗೆ ಪರಾರಿಯಾಗಿದ್ದಾನೆ. +ಆರ್​ಸಿಬಿಗೆ ಕಾಡಲಿದೆ ಸ್ಪಿನ್ನರ್ ಕೊರತೆ +ದಾಳಿಕೋರರನ್ನು ಗುರುತಿಸಲು ಪೊಲೀಸರು ನಿರಾಕರಿಸಿದ್ದರೂ, ಅವರು ಎನ್‍ಎಸ್‍ಸಿಎನ್-ಕೆವೈಎ ಎಂಬ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿರಬಹುದು ಎಂದು ಶಂಕಿಸಲಾಗಿದೆ. ದಾಳಿಕೋರರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 2009 ರಲ್ಲಿ ಮೇಟಿ ಅವರು 56 ನೇ ಖೋನ್ಸಾ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. +ಅವರ ಅಧಿಕಾರಾವಧಿಯಲ್ಲಿ ಅವರು ಸಂಸದೀಯ ಕಾರ್ಯದರ್ಶಿ ಸ್ಥಾನವನ್ನು ಹೊಂದಿದ್ದರು, ಮಹಿಳಾ ಮತ್ತು ಸಮಾಜ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ವ್ಯವಹಾರಗಳ ಇಲಾಖೆಗಳನ್ನು ನೋಡಿಕೊಳ್ಳುತ್ತಿದ್ದರು. ಅವರು 2015 ರಲ್ಲಿ ಬಿಜೆಪಿ ಸೇರಿದರು ಮತ್ತು ಈ ವರ್ಷದ ಆರಂಭದಲ್ಲಿ 2024 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ರ್ಪಧಿಸುವ ಇಚ್ಛೆಯನ್ನು ಘೋಷಿಸಿದ್ದರು. \ No newline at end of file diff --git a/eesanje/url_47_211_10.txt b/eesanje/url_47_211_10.txt new file mode 100644 index 0000000000000000000000000000000000000000..63b306a41363b1561836ca1270eb1ca46f525f13 --- /dev/null +++ b/eesanje/url_47_211_10.txt @@ -0,0 +1,5 @@ +14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ +ಲಕ್ನೋ, ಡಿ 21 (ಪಿಟಿಐ) ಉತ್ತರ ಪ್ರದೇಶ ಮೌ ಜಿಲ್ಲೆಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಐವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕೃತಿಯ ಕರೆಗೆ ಹಾಜರಾಗಲು ಹುಡುಗಿ ತನ್ನ ಮನೆಯಿಂದ ಹೊರಬಂದಾಗ ಐವರು ಪುರುಷರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಸಿಂಗ್ ಅತ್ರಿ ತಿಳಿಸಿದ್ದಾರೆ. +ಆರೋಪಿಗಳು ಘಟನೆಯ ವೀಡಿಯೊವನ್ನು ಮಾಡಿದ್ದಾರೆ ಮತ್ತು ಹುಡುಗಿ ಅಪರಾಧದ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅತ್ರಿ ಹೇಳಿದ್ದಾರೆ. ಬಾಲಕಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐದು ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ಸಂಬಂತ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. +4 ವರ್ಷದೊಳಗಿನ ಮಕ್ಕಳಿಗೆ ಈ ಕೆಮ್ಮಿನ ಸಿರಪ್ ನೀಡುವಂತಿಲ್ಲ +ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಮತ್ತು ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆಯ ನಂತರ ಇಷ್ಟು ದಿನಗಳ ನಂತರ ಪೊಲೀಸ್ ದೂರು ಏಕೆ ದಾಖಲಿಸಲಾಗಿದೆ ಎಂಬುದನ್ನು ನಾವು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಅಧಿಕಾರಿ ಹೇಳಿದರು. \ No newline at end of file diff --git a/eesanje/url_47_211_11.txt b/eesanje/url_47_211_11.txt new file mode 100644 index 0000000000000000000000000000000000000000..55ad87b840f5f28b00ed543484900d0cb96154ce --- /dev/null +++ b/eesanje/url_47_211_11.txt @@ -0,0 +1,6 @@ +1614 ಕೋಟಿ ರೂ.ವೆಚ್ಚದಲ್ಲಿ 6 ಗಸ್ತು ಹಡಗು ಖರೀದಿಗೆ ಒಪ್ಪಂದ +ನವದೆಹಲಿ,ಡಿ.21- ಭಾರತೀಯ ಕೋಸ್ಟ್ ಗಾರ್ಡ್‍ಗಾಗಿ ಮುಂದಿನ ಪೀಳಿಗೆಯ ಆರು ಆಫ್‍ಶೋರ್ ಗಸ್ತು ಹಡಗುಗಳ ಖರೀದಿಗಾಗಿ ರಕ್ಷಣಾ ಸಚಿವಾಲಯವು ಮಜಗಾನ್ ಡಾಕ್‍ಯಾರ್ಡ್ ಶಿಪ್‍ಬಿಲ್ಡರ್ಸ್ ಲಿಮಿಟೆಡ್‍ನೊಂದಿಗೆ 1,614 ಕೋಟಿ ಒಪ್ಪಂದಕ್ಕೆ ಸಹಿ ಹಾಕಿದೆ. ಪ್ಲಾಟ್‍ಫಾರ್ಮ್‍ಗಳ ಸ್ವಾೀಧಿನವು ಕಡಲ ಭದ್ರತೆಯ ಕಡೆಗೆ ಕೋಸ್ಟ್ ಗಾರ್ಡ್‍ನ ಸಾಮಥ್ರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. +ಒಟ್ಟು 1,614.89 ಕೋಟಿ ವೆಚ್ಚದಲ್ಲಿ ಖರೀದಿ (ಭಾರತೀಯ-ಐಡಿಡಿಎಂ) ವಿಭಾಗದ ಅಡಿಯಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಆರು ನೌಕೆಗಳನ್ನು ಖರೀದಿಸಲಾಗುತ್ತಿದೆ ನಾಲ್ಕು ಅಸ್ತಿತ್ವದಲ್ಲಿರುವ ಹಳೆಯ ಕಡಲಾಚೆಯ ಗಸ್ತು ಹಡಗುಗಳನ್ನು ಬದಲಾಯಿಸಲಾಗುತ್ತದೆ ಮತ್ತು ಇತರ ಎರಡು ಹಡಗುಗಳನ್ನು ಹೆಚ್ಚುವರಿಯಾಗಿ ಖರೀದಿಸಲಾಗುತ್ತಿದೆ. +ಪೊಲೀಸರ ಸೋಗಿನಲ್ಲಿ ನುಗ್ಗಿ ಉದ್ಯಮಿ ಮನೆ ದೋಚಿದ್ದ 8 ಡಕಾಯಿತರ ಬಂಧನ +ಈ ಆಧುನಿಕ ಮತ್ತು ಹೈಟೆಕ್ ಹಡಗುಗಳು ಕಣ್ಗಾವಲು, ಕಾನೂನು ಜಾರಿ, ಹುಡುಕಾಟ ಮತ್ತು ಪಾರುಗಾಣಿಕಾ, ಸಮುದ್ರ ಮಾಲಿನ್ಯ ಪ್ರತಿಕ್ರಿಯೆ ಮತ್ತು ಮಾನವೀಯ ನೆರವು ಸೇರಿದಂತೆ ಇತರ ಪ್ರಮುಖ ಸಾಮಥ್ರ್ಯಗಳನ್ನು ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದು ಅದು ಹೇಳಿದೆ. +ಹಲವಾರು ಹೈಟೆಕ್ ಸುಧಾರಿತ ವೈಶಿಷ್ಟ್ಯಗಳು ಮತ್ತು ಸಲಕರಣೆಗಳ ಜೊತೆಗೆ, ಈ ಕಡಲಾಚೆಯ ಗಸ್ತು ನೌಕೆಗಳು ವಿವಿಧೋದ್ದೇಶ ಡ್ರೋನ್‍ಗಳು, ಎಐ(ಕೃತಕ ಬುದ್ಧಿಮತ್ತೆ) ಸಾಮಥ್ರ್ಯಗಳು ಮತ್ತು ವೈರ್‍ಲೆಸ್‍ನಿಂದ ನಿಯಂತ್ರಿತ ರಿಮೋಟ್ ವಾಟರ್ ರೆಸ್ಕ್ಯೂ ಕ್ರಾಫ್ಟ್ ಲೈಫ್‍ಬಾಯ್‍ಗಳನ್ನು ಹೊಂದಿದ್ದು, ಹೆಚ್ಚಿನ ನಮ್ಯತೆ ಮತ್ತು ಕಾರ್ಯಾಚರಣೆಯ ಅಂಚನ್ನು ಸಕ್ರಿಯಗೊಳಿಸುತ್ತದೆ. \ No newline at end of file diff --git a/eesanje/url_47_211_12.txt b/eesanje/url_47_211_12.txt new file mode 100644 index 0000000000000000000000000000000000000000..e7e258105977c14b05cc817564190217866eb582 --- /dev/null +++ b/eesanje/url_47_211_12.txt @@ -0,0 +1,7 @@ +ಕಾಂಗ್ರೆಸ್‍ನಲ್ಲಿ ಸಕ್ರಿಯರಾಗಿರಲು ನವಜೋತ್ ಸಿಂಗ್ ಸಿಧುಗೆ ಕರೆ +ಚಂಡೀಗಢ,ಡಿ.21- ಸ್ವಂತ ಪಕ್ಷ ಸ್ಥಾಪಿಸುವುದನ್ನು ಬಿಟ್ಟು ಮತ್ತೆ ಕಾಂಗ್ರೆಸ್ ಪಾಳಯದಲ್ಲಿ ಗುರುತಿಸಿಕೊಳ್ಳುವಂತೆ ಪಂಜಾಬ್‍ನ ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರು ಖ್ಯಾತ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಆಹ್ವಾನಕ್ಕೆ ಸಿಧು ಪ್ರತಿಕ್ರಿಯಿಸದಿದ್ದರೂ ಅವರ ಜತೆ ಇರುವ ಐವರು ಮಾಜಿ ಶಾಸಕರು ಪಂಜಾಬ್ ಮಾಜಿ ಕಾಂಗ್ರೆಸ್ ಮುಖ್ಯಸ್ಥರಾಗಲೀ ಅಥವಾ ತಮ್ಮನ್ನು ರಾಜ್ಯ ಘಟಕದ ಕಾರ್ಯಕ್ರಮಗಳಿಗೆ ಆಹ್ವಾನಿಸಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. +ಸಿಧು ಅವರು ಬಟಿಂಡಾದಲ್ಲಿ ರ್ಯಾಲಿ ನಡೆಸಿದ ಕೆಲವು ದಿನಗಳ ನಂತರ ಪಂಜಾಬ್ ಕಾಂಗ್ರೆಸ್‍ನಲ್ಲಿನ ಗುಂಪುಗಾರಿಕೆಗೆ ಸಾಕ್ಷಿಯಾಗಿದೆ. 2022 ರ ಚುನಾವಣೆಯ ಮೊದಲು ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆಪಾದಿಸಲಾದ ಎಎಪಿ ಸರ್ಕಾರವನ್ನು ಸಿಧು ಗುರಿಯಾಗಿಸಿರುವ ಡಿ 17 ರ ರ್ಯಾಲಿಯಲ್ಲಿ ರಾಜ್ಯ ಘಟಕದ ಯಾವುದೇ ಗಮನಾರ್ಹ ಹಿರಿಯ ನಾಯಕರು ಭಾಗವಹಿಸಿರಲಿಲ್ಲ. +ಸಿಧು ಅವರ ರ್ಯಾಲಿಗೆ ಪ್ರತಿಕ್ರಿಯಿಸಿದ ಬಜ್ವಾ, ಸಿದ್ದು ಸಾಬ್ ಅವರು ಸ್ವಲ್ಪ ಪ್ರಬುದ್ಧತೆಯಿಂದ ವರ್ತಿಸಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ಹೇಳಿದರು. ಈ ಜಮಾತ್ (ಕಾಂಗ್ರೆಸ್ ಪಕ್ಷ) ನಿಮಗೆ ಗೌರವ ನೀಡಿದ್ದರೆ ಅದನ್ನು ಅರಗಿಸಿಕೊಳ್ಳಿ, ಅಂತಹ ಕೃತ್ಯವನ್ನು ಮಾಡಬೇಡಿ, ನೀವು ಪಿಪಿಸಿಸಿ ಅಧ್ಯಕ್ಷರಾಗಿದ್ದಾಗ ಪಕ್ಷದ ಪರಿಸ್ಥಿತಿ ಹೇಗಿತ್ತು ಎಂದು ನೀವೇ ಊಹಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. +ಪೊಲೀಸರ ಸೋಗಿನಲ್ಲಿ ನುಗ್ಗಿ ಉದ್ಯಮಿ ಮನೆ ದೋಚಿದ್ದ 8 ಡಕಾಯಿತರ ಬಂಧನ +ಪಂಜಾಬ್ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಬಜ್ವಾ ಅವರು ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಸಿಧು ಅವರನ್ನು ಕೇಳಿಕೊಂಡರು. ಪಕ್ಷದ ಕಾರ್ಯಕರ್ತರೊಂದಿಗೆ ಹೋಗುವಂತೆ ನಾನು ಅವರನ್ನು ಒತ್ತಾಯಿಸುತ್ತೇನೆ, ಪಕ್ಷದ ಎಲ್ಲ ಹಂತಗಳಿಗೆ ಬನ್ನಿ. ಎರಡು ದಿನಗಳ ನಂತರ ನಾವು ಜಾಗರಾನ್ ಮತ್ತು ಫಗ್ವಾರದಲ್ಲಿ ಪ್ರತಿಭಟನೆಗಳನ್ನು ಯೋಜಿಸಿದ್ದೇವೆ. +ಆ ವೇದಿಕೆಗೆ ಬಂದು ನೀವು ಏನು ಮಾತನಾಡಲು ಬಯಸುತ್ತೀರೋ ಅದನ್ನು ಮಾತನಾಡಿ. ಅಪ್ನಾ ನವನ ಅಖಾರಾ ಸ್ಥಾಪಿಸಲಾಗುತ್ತಿದೆ (ಸ್ವಂತ ವೇದಿಕೆ) ಎಂಬುದು ಒಳ್ಳೆಯದಲ್ಲ, ಯಾವುದೇ ಪಂಜಾಬ್ ಕಾಂಗ್ರೆಸ್ಸಿಗರೂ ಅದನ್ನು ಒಳ್ಳೆಯದೆಂದು ಪರಿಗಣಿಸುವುದಿಲ್ಲ ಎಂದು ಬಾಜ್ವಾ ಹೇಳಿದರು. \ No newline at end of file diff --git a/eesanje/url_47_211_2.txt b/eesanje/url_47_211_2.txt new file mode 100644 index 0000000000000000000000000000000000000000..dea05cfe5d8327d17745daf7bf3bc851003b98eb --- /dev/null +++ b/eesanje/url_47_211_2.txt @@ -0,0 +1,5 @@ +ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಮುಖ್ಯ ಅತಿಥಿ..? +ನವದೆಹಲಿ, ಡಿ 22 (ಪಿಟಿಐ) ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. +ಮೊದಲು ಅಮೆರಿಕ ಅಧ್ಯಕ್ಷ ಜೋ ಬಿಡೇನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು. +ಜಾರ್ಖಂಡ್‍ : ರೈಲ್ವೆ ಹಳಿ ಸ್ಪೋಟಿಸಿದ ನಕ್ಸಲರು +ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_211_3.txt b/eesanje/url_47_211_3.txt new file mode 100644 index 0000000000000000000000000000000000000000..bd17dff61de83af15e6c31c1bb18b0fd672d0805 --- /dev/null +++ b/eesanje/url_47_211_3.txt @@ -0,0 +1,7 @@ +ಕಾಶ್ಮೀರದ ಪೂಂಚ್ ಅರಣ್ಯದಲ್ಲಿ ಉಗ್ರರಿಗಾಗಿ ಸೇನೆಯಿಂದ ಶೋಧ ಕಾರ್ಯಾಚರಣೆ +ಪೂಂಚ್, ಡಿ 22 (ಪಿಟಿಐ) ಭಯೋತ್ಪಾದಕರ ದಾಳಿಯಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿ ಇಬ್ಬರು ಗಾಯಗೊಂಡ ಒಂದು ದಿನದ ನಂತರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಂದು ಬೃಹತ್ ಸರ್ಪಗಾವಲು ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ. +ನಿನ್ನೆ ಮಧ್ಯಾಹ್ನ ಈ ಪ್ರದೇಶದಲ್ಲಿ ಎರಡು ಸೇನಾ ವಾಹನಗಳ ಮೇಲೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರನ್ನು ಪತ್ತೆಹಚ್ಚಲು ವೈಮಾನಿಕ ಮೇಲ್ವಿಚಾರಣೆಯನ್ನು ಸಹ ನಡೆಸಲಾಗುತ್ತಿದೆ ಮತ್ತು ಸ್ನಿಫರ್ ಡಾಗ್‍ಗಳನ್ನು ಸೇವೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಈ ಪ್ರದೇಶದಲ್ಲಿ ರಾತ್ರಿಯ ಕಾರ್ಡನ್ ನಂತರ ಇಂದು ಬೆಳಿಗ್ಗೆ ಬೃಹತ್ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದರು. ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಚ್ಚುವರಿ ಪಡೆಗಳನ್ನು ಪ್ರದೇಶಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. +ನಿನ್ನೆ ಮಧ್ಯಾಹ್ನ 3.45 ರ ಸುಮಾರಿಗೆ, ಸುರನ್‍ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಧೇರಾ ಕಿ ಗಾಲಿ ಮತ್ತು ಬುಫ್ಲಿಯಾಜ್ ನಡುವಿನ ಧಾತ್ಯಾರ್ ಮೋರ್‍ನಲ್ಲಿರುವ ಕುರುಡು ಕರ್ವ್‍ನಲ್ಲಿ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ಸ್ಥಳಕ್ಕೆ ಸಿಬ್ಬಂದಿಯನ್ನು ಸಾಗಿಸುತ್ತಿದ್ದ ಎರಡು ಸೇನಾ ವಾಹನಗಳು ದಾಳಿಗೆ ಒಳಗಾಗಿದ್ದವು. ಧೇರಾ ಕಿ ಗಲಿ (ಡಿಕೆಜಿ) ರಸ್ತೆಯನ್ನು ಸಂಚಾರಕ್ಕೆ ಮುಚ್ಚಲಾಗಿದೆ ಎಂದು ಮೇಲೆ ಉಲ್ಲೇಖಿಸಿದ ಅಧಿಕಾರಿ ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸ್ ಉನ್ನತ ಅಧಿಕಾರಿಗಳು ಮೈದಾನದಲ್ಲಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. +ಜಾರ್ಖಂಡ್‍ : ರೈಲ್ವೆ ಹಳಿ ಸ್ಪೋಟಿಸಿದ ನಕ್ಸಲರು +ಮೂರರಿಂದ ನಾಲ್ಕು ಮಂದಿ ಎಂದು ನಂಬಲಾದ ಭಯೋತ್ಪಾದಕರು ಆರಂಭದಲ್ಲಿ ಬೆಟ್ಟದ ತುದಿಗಳಲ್ಲಿ ಸ್ಥಾನ ಪಡೆದಿರಬಹುದು ಎಂದು ಶಂಕಿಸಲಾಗಿದೆ. ದಾಳಿಯ ನಂತರ, ಅವರು ಕನಿಷ್ಠ ಇಬ್ಬರು ಸೈನಿಕರ ದೇಹಗಳನ್ನು ವಿರೂಪಗೊಳಿಸಿದ್ದಾರೆ ಮತ್ತು ಅವರಲ್ಲಿ ಕೆಲವರ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ. ಹೊಂಚುದಾಳಿಯಲ್ಲಿ ಸ್ಟೀಲ್ ಕೋರ್ ಬುಲೆಟ್‍ಗಳು ಸೇರಿದಂತೆ ಶಸ್ತ್ರಾಸ್ತ್ರಗಳ ಮಾದರಿ ಮತ್ತು ಬಳಕೆಯ ಬಗ್ಗೆ ತಿಳಿಯಲು ಸೈಟ್‍ನ ತನಿಖೆ ನಡೆಸಲಾಗುತ್ತಿದೆ ಎಂದು ಭದ್ರತಾ ಅಧಿಕಾರಿಗಳು ಹೇಳುತ್ತಾರೆ. \ No newline at end of file diff --git a/eesanje/url_47_211_4.txt b/eesanje/url_47_211_4.txt new file mode 100644 index 0000000000000000000000000000000000000000..849c9f818e388f0167bb3ce309892cd2ad21c499 --- /dev/null +++ b/eesanje/url_47_211_4.txt @@ -0,0 +1,8 @@ +ನದಿ ನೀರಿನ ಹರಿವು ಆಳೆಯುವ ಸಾಧನ ಅಭಿವೃದ್ಧಿ +ಗುವಾಹಟಿ, ಡಿ 22 (ಪಿಟಿಐ) ಕೇಂದ್ರ ಜಲ ಶಕ್ತಿ ಸಚಿವಾಲಯದ ಬ್ರಹ್ಮಪುತ್ರ ಮಂಡಳಿಯ ಸಹಯೋಗದೊಂದಿಗೆ ಗುವಾಹಟಿಯ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿಜಿ) ಸಂಶೋಧಕರು ದೊಡ್ಡ ದೊಡ್ಡ ನದಿಗಳಲ್ಲಿನ ನೀರಿನ ಹರಿವನ್ನು ಅರ್ಥಮಾಡಿಕೊಳ್ಳುವಂತಹ ಮಾದರಿಯನ್ನು ಅಭಿವೃದ್ಧಿಪಡಿಸಿದ್ದಾರೆ. +ನದಿ ದಂಡೆಯ ಸಂರಕ್ಷಣಾ ಕ್ರಮಗಳಿಗಾಗಿ ಸುಸ್ಥಿರ ರಚನೆಗಳನ್ನು ವಿನ್ಯಾಸಗೊಳಿಸಲು ಎಂಜಿನಿಯರ್‍ಗಳಿಗೆ ಅಮೂಲ್ಯವಾದ ಒಳನೋಟಗಳನ್ನು ನೀಡುವ ಉದ್ದೇಶವನ್ನು ಈ ಉಪಕ್ರಮವು ಹೊಂದಿದೆ ಎಂದು ಸಂಶೋಧಕರು ಶುಕ್ರವಾರ ಹೇಳಿದ್ದಾರೆ. +ಮಾದರಿ ಬ್ರೇಡೆಡ್ ರಿವರ್ ಏಡ್. ಹೈಡ್ರೋ-ಮಾರ್ಫಲಾಜಿಕಲ್ ವಿಶ್ಲೇಷಕ ಎನ್ನುವ ಈ ಮಾದರಿ ವಿಶ್ವದ ಎರಡನೇ ಅತಿದೊಡ್ಡ ಸಿಹಿನೀರಿನ ನದಿ ದ್ವೀಪ ಮತ್ತು ನದಿ ತೀರದ ಸವೆತಕ್ಕೆ ಗುರಿಯಾಗುವ ಮಜುಲಿ ದ್ವೀಪದ ಬಳಿಯ ಬ್ರಹ್ಮಪುತ್ರ ನದಿಯಲ್ಲಿ ಯಶಸ್ವಿಯಾಗಿ ಮೌಲ್ಯೀಕರಿಸಲಾಗಿದೆ. ನದಿಯ ವಿವಿಧ ಆಳಗಳಲ್ಲಿ ನೀರು ಎಷ್ಟು ವೇಗವಾಗಿ ಚಲಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. +ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಅರೂಪ್ ಕುಮಾರ್ ಶರ್ಮಾ ನೇತೃತ್ವದ ಸಂಶೋಧನೆಯು ಆಳದಲ್ಲಿನ ನದಿ ಹರಿವಿನ ವ್ಯತ್ಯಾಸಗಳನ್ನು ಊಹಿಸಲು ಸಹಾಯ ಮಾಡಲು ಸಮಗ್ರ ಗಣಿತದ ಮಾದರಿಯನ್ನು ಅಭಿವೃದ್ಧಿಪಡಿಸಿದೆ, ಇದು ಪ್ರವಾಹ ಮತ್ತು ಸವೆತ ನಿಯಂತ್ರಣ, ಕೃಷಿ, ನೀರು ಸರಬರಾಜು ಸೇವನೆ ವಿನ್ಯಾಸ ಮತ್ತು ಶಕ್ತಿ ಉತ್ಪಾದನೆಗೆ ನಿರ್ಣಾಯಕವಾಗಿದೆ. +ವಿಷ್ಣು ಸ್ಮಾರಕ ಅವರ ಕುಟುಂಬದವರ ನಿರ್ಧಾರದ ಮೇಲೆ ಅವಲಂಬಿಸಿದೆ : ಶಿವಣ್ಣ +ನಮ್ಮ ಮಾದರಿಯು ಹೆಚ್ಚು ಸಂಕೀರ್ಣವಾದ ಗಣಿತದ ಮಾಡೆಲಿಂಗ್ ಅನ್ನು ದೊಡ್ಡ ಹೆಣೆಯಲ್ಪಟ್ಟ ನದಿಗಳ ಕ್ಷೇತ್ರ ಆಧಾರಿತ ಸಂಶೋಧನೆಯೊಂದಿಗೆ ಸಂಯೋಜಿಸುತ್ತದೆ. ಈ ನದಿಯ ಹರಿವಿನ ಮಾದರಿಯೊಂದಿಗೆ, ನದಿಯಲ್ಲಿನ ವಿವಿಧ ಆಳಗಳಲ್ಲಿ ನೀರು ಎಷ್ಟು ವೇಗವಾಗಿ ಚಲಿಸುತ್ತದೆ ಮತ್ತು ನದಿ ದಡದ ಸವೆತವನ್ನು ತಡೆಯಲು ಸ್ಥಾಪಿಸಲಾದ ಸ್ಪರ್‍ನಂತಹ ರಚನೆಯ ಸುತ್ತಲೂ ಅದರ ಪರಿಚಲನೆಯನ್ನು ನಾವು ಅರ್ಥಮಾಡಿಕೊಳ್ಳಬಹುದು ಎಂದು ಶರ್ಮಾ ಹೇಳಿದರು. +ನದಿ ದಡಗಳು, ಸ್ಪರ್ಸ್ ಮತ್ತು ಸ್ಯಾಂಡ್‍ಬಾರ್‍ಗಳು ನೀರಿನ ಚಲನೆಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದನ್ನು ಸಂಶೋಧನೆಯು ಪರಿಶೀಲಿಸುತ್ತದೆ, ನದಿ ದಂಡೆ ಸವೆತವನ್ನು ನಿಯಂತ್ರಿಸಲು ಜೈವಿಕ ಎಂಜಿನಿಯರಿಂಗ್ ವಿಧಾನಗಳನ್ನು ವಿನ್ಯಾಸಗೊಳಿಸಲು ಈ ಮಾದರಿಯು ಸಹಾಯ ಮಾಡಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_211_5.txt b/eesanje/url_47_211_5.txt new file mode 100644 index 0000000000000000000000000000000000000000..285be2a0416bb7f9a748d8f820830bc4c0c863ff --- /dev/null +++ b/eesanje/url_47_211_5.txt @@ -0,0 +1,6 @@ +ಜಾರ್ಖಂಡ್‍ : ರೈಲ್ವೆ ಹಳಿ ಸ್ಪೋಟಿಸಿದ ನಕ್ಸಲರು +ಚೈಬಾಸಾ, ಡಿ 22 (ಪಿಟಿಐ) ನಿಷೇಧಿತ ಸಿಪಿಐ (ಮಾವೋವಾದಿ) ನಕ್ಸಲರು ಜಾರ್ಖಂಡ್‍ನ ಪಶ್ಚಿಮ ಸಿಂಗ್‍ಭೂಮ್ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಒಂದು ಭಾಗವನ್ನು ಸ್ಪೋಟಿಸಿದ್ದಾರೆ ಇದರಿಂದ ಹೌರಾ-ಮುಂಬೈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 150 ಕಿಮೀ ದೂರದಲ್ಲಿರುವ ಗೋಯಿಲ್ಕೆರಾ ಮತ್ತು ಪೊಸೊಯಿಟಾ ರೈಲು ನಿಲ್ದಾಣಗಳ ನಡುವೆ ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ ಎಂದು ಪಶ್ಚಿಮ ಸಿಂಗ್‍ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ. +ಆರ್​ಸಿಬಿಗೆ ಕಾಡಲಿದೆ ಸ್ಪಿನ್ನರ್ ಕೊರತೆ +ಸ್ಥಳದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮುಂಜಾನೆಯಿಂದಲೇ ರೈಲು ಹಳಿಗಳ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲಾಗಿದೆ ಮತ್ತು ಶೀಘ್ರದಲ್ಲೇ ರೈಲು ಸಂಚಾರ ಪುನರಾರಂಭವಾಗಲಿದೆ ಎಂದು ಅವರು ಹೇಳಿದರು, ಮಾವೋವಾದಿಗಳು ಆ ಪ್ರದೇಶದಲ್ಲಿ ಬ್ಯಾನರ್ ಮತ್ತು ಪೋಸ್ಟರ್‍ಗಳನ್ನು ಸಹ ಹಾಕಿದ್ದಾರೆ. +ಗಮನಾರ್ಹವಾಗಿ, ನಿಷೇತ ಸಂಘಟನೆಯು ಡಿಸೆಂಬರ್ 16 ರಿಂದ ಪ್ರತಿಭಟನಾ ಸಪ್ತಾಹವನ್ನು ಆಚರಿಸುತ್ತಿದೆ ಮತ್ತು ಇಂದು ಭಾರತ್ ಬಂದ್‍ಗೆ ಕರೆ ನೀಡಿತ್ತು. \ No newline at end of file diff --git a/eesanje/url_47_211_6.txt b/eesanje/url_47_211_6.txt new file mode 100644 index 0000000000000000000000000000000000000000..27b4ee1a91d1db211933c0825e7c4399046da02f --- /dev/null +++ b/eesanje/url_47_211_6.txt @@ -0,0 +1,4 @@ +ತಮಿಳುನಾಡು ಸಚಿವನಿಗೆ 3 ವರ್ಷ ಜೈಲು ಶಿಕ್ಷೆ +ಚೆನ್ನೈ,ಡಿ.21-ಭ್ರಷ್ಟಾಚಾರ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ ಪೊನ್‍ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಆದರೆ ಆತನ ಶಿಕ್ಷೆಯನ್ನು ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದರಿಂದ ಅವರು ಇನ್ನೂ ಶರಣಾಗುವ ಅಗತ್ಯವಿಲ್ಲ. +4 ವರ್ಷದೊಳಗಿನ ಮಕ್ಕಳಿಗೆ ಈ ಕೆಮ್ಮಿನ ಸಿರಪ್ ನೀಡುವಂತಿಲ್ಲ +ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಎಂಕೆ ಹಿರಿಯ ನಾಯಕ ಮತ್ತು ಅವರ ಪತ್ನಿಯನ್ನು ದೋಷಿ ಎಂದು ತೀರ್ಪು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. \ No newline at end of file diff --git a/eesanje/url_47_211_7.txt b/eesanje/url_47_211_7.txt new file mode 100644 index 0000000000000000000000000000000000000000..545408a3e5b12f746d9973171059b0432ca04f53 --- /dev/null +++ b/eesanje/url_47_211_7.txt @@ -0,0 +1,6 @@ +ರೋಗಿ ಸಾವಿಗೆ ಕಾರಣರಾಗುವ ವೈದ್ಯರ ಶಿಕ್ಷಾವಧಿ ಕಡಿತ +ನವದೆಹಲಿ,ಡಿ.21- ವೈದ್ಯಾಧಿಕಾರಿಯೊಬ್ಬರ ನಿರ್ಲಕ್ಷದಿಂದ ರೋಗಿ ಸಾವಿಗೀಡಾದರೆ ನೀಡುವ ಶಿಕ್ಷೆಯ ಅವಧಿಯನ್ನು ಎರಡು ವರ್ಷಕ್ಕೆ ಇಳಿಸುವ ಭಾರತೀಯ ನ್ಯಾಯ (ಎರಡನೇ) ಸಂಹಿತಾ ಮಸೂದೆಗೆ ತಿದ್ದುಪಡಿಯನ್ನು ಲೋಕಸಭೆ ಅಂಗೀಕರಿಸಿದೆ. +ಪ್ರಸ್ತುತ, ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದರೆ, ಅದನ್ನು ಅಪರಾಧಿ ನರಹತ್ಯೆ ಎಂದು ಪರಿಗಣಿಸಲಾಗಿದೆ. ಶಿಕ್ಷೆಯನ್ನು ಸಹ ಹೆಚ್ಚಿಸಲಾಗಿದೆ. ಇದರಿಂದ ವೈದ್ಯರನ್ನು ಮುಕ್ತಗೊಳಿಸಲು ನಾನು ಈಗ ಅಧಿಕೃತ ತಿದ್ದುಪಡಿಯನ್ನು ತರುತ್ತೇನೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. +ಪೊಲೀಸರ ಸೋಗಿನಲ್ಲಿ ನುಗ್ಗಿ ಉದ್ಯಮಿ ಮನೆ ದೋಚಿದ್ದ 8 ಡಕಾಯಿತರ ಬಂಧನ +ವಸಾಹತುಶಾಹಿ ಯುಗದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳ ಕುರಿತು ಲೋಕಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರು ಮಂಡಿಸಿದ ಭಾರತೀಯ ನ್ಯಾಯ (ಎರಡನೇ) ಸಂಹಿತಾ ಮಸೂದೆಯ ತಿದ್ದುಪಡಿಯು ಪದಗಳನ್ನು ಸೇರಿಸುತ್ತದೆ ಮತ್ತು ವೈದ್ಯಕೀಯ ಕಾರ್ಯವಿಧಾನವನ್ನು ನಿರ್ವಹಿಸುವಾಗ ನೋಂದಾಯಿತ ವೈದ್ಯಕೀಯ ವೈದ್ಯರು ಅಂತಹ ಕೃತ್ಯವನ್ನು ಮಾಡಿದರೆ, ಅವರು ಒಂದು ಅವಧಿಗೆ ವಿವರಣೆಯ ಜೈಲು ಶಿಕ್ಷೆಯೊಂದಿಗೆ ಶಿಕ್ಷೆಗೆ ಗುರಿಯಾಗುತ್ತಾರೆ. +ಇದು ಎರಡು ವರ್ಷಗಳವರೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರನಾಗಬಹುದು ಎಂದು ಶಾ ಹೇಳಿದರು. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘದ ನಿಯೋಗವು ಅವರಿಗೆ ಪತ್ರ ಬರೆದಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. \ No newline at end of file diff --git a/eesanje/url_47_211_8.txt b/eesanje/url_47_211_8.txt new file mode 100644 index 0000000000000000000000000000000000000000..cc409a72cb8b52323ff2aa016fa078b3c807743e --- /dev/null +++ b/eesanje/url_47_211_8.txt @@ -0,0 +1,6 @@ +ಸಂಸತ್ ಭದ್ರತಾ ಲೋಪ : ಬಾಗಲಕೋಟೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ ವಶಕ್ಕೆ +ಬಾಗಲಕೋಟೆ, ಡಿ 21 (ಪಿಟಿಐ) ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕರ್ನಾಟಕದ ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಿಲ್ಲಾ ಕೇಂದ್ರವಾದ ಬಾಗಲಕೋಟೆ ಪಟ್ಟಣದ ವಿದ್ಯಾಗಿರಿಯಲ್ಲಿರುವ ಅವರ ಮನೆಯಿಂದ ತಡರಾತ್ರಿ ಟೆಕ್ಕಿ ಹಾಗೂ ನಿವೃತ್ತ ಪೊಲೀಸ್ ಉಪಾೀಧಿಕ್ಷಕರ ಪುತ್ರ ಸಾಯಿಕೃಷ್ಣ ಜಗಲಿ ಅವರನ್ನು ಕರೆದುಕೊಂಡು ಹೋಗಲಾಗಿತ್ತು. +ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಜಗಲಿ, ಕಳೆದ ವಾರ ಲೋಕಸಭೆಯ ಸಭಾಂಗಣಕ್ಕೆ ಅತಿಕ್ರಮವಾಗಿ ನುಗ್ಗಿದ ಇಬ್ಬರು ಒಳನುಗ್ಗುವವರಲ್ಲಿ ಒಬ್ಬರಾದ ಮೈಸೂರಿನ ನಿವಾಸಿ ಮನೋರಂಜನ್ ಡಿ ಅವರ ಸ್ನೇಹಿತ ಎಂದು ಹೇಳಲಾಗಿದೆ. +4 ವರ್ಷದೊಳಗಿನ ಮಕ್ಕಳಿಗೆ ಈ ಕೆಮ್ಮಿನ ಸಿರಪ್ ನೀಡುವಂತಿಲ್ಲ +ಜಗಲಿ ಅವರು ಕಾಲೇಜು ದಿನಗಳಲ್ಲಿ ಮನೋರಂಜನ್ ಅವರ ರೂಮ್‍ಮೇಟ್ ಕೂಡ ಆಗಿದ್ದರು ಎಂದು ಮೂಲಗಳು ತಿಳಿಸಿವೆ. ದೆಹಲಿ ಪೊಲೀಸ್ ತಂಡ ಬಂದು ತನ್ನ ಸಹೋದರನನ್ನು ಕರೆದುಕೊಂಡು ಹೋಗಿದೆ ಎಂದು ಜಗಲಿಯ ಸಹೋದರಿ ಸ್ಪಂದ ಹೇಳಿದ್ದಾರೆ. +ದೆಹಲಿ ಪೊಲೀಸರು ಬಂದಿದ್ದು ನಿಜ. ನನ್ನ ಸಹೋದರನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ನಾವು ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ ಎಂದು ಅವರು ಹೇಳಿದರು.ಸ್ಪಂದ ತನ್ನ ಸಹೋದರ ಏನೂ ತಪ್ಪು ಮಾಡಿಲ್ಲ ಎಂದು ಹೇಳಿದರು. ಮನೋರಂಜನ್ ಮತ್ತು ಸಾಯಿಕೃಷ್ಣ ಜಗಲಿ ಇಬ್ಬರೂ ರೂಮ್‍ಮೇಟ್‍ಗಳಾಗಿದ್ದರು. ಈಗ ನನ್ನ ಸಹೋದರ ಮನೆಯಿಂದಲೇ ಕೆಲಸ ಮಾಡುತ್ತಿದ್ದಾನೆ ಎಂದು ಅವರು ವಿವರಿಸಿದರು. \ No newline at end of file diff --git a/eesanje/url_47_211_9.txt b/eesanje/url_47_211_9.txt new file mode 100644 index 0000000000000000000000000000000000000000..cd0f613a5afd30fbe3a3a49c52cc807026a3223d --- /dev/null +++ b/eesanje/url_47_211_9.txt @@ -0,0 +1,7 @@ +ಸಾಮಾನ್ಯ ಜನರ ಕನಸು ನನಸು ಮಾಡಲು ವಿಕಸಿತ್ ಸಂಕಲ್ಪ ಯಾತ್ರೆ : ಸಿನ್ಹಾ +ಜಮ್ಮು, ಡಿ 21 (ಪಿಟಿಐ) ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯು ಸಾಮಾನ್ಯ ಜನರ ಕನಸುಗಳನ್ನು ನನಸಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವನ್ನು ಸೂಚಿಸುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ. +ಉಧಮ್‍ಪುರ ಜಿಲ್ಲೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಪ್ರಚಾರ ಮಾಡುವ ಉದ್ದೇಶದ ಯಾತ್ರೆಯಲ್ಲಿ ಪಾಲ್ಗೊಂಡ ಅವರು ಮೋದಿ ಅವರ ಕಾರ್ಯಕ್ರಮದಲ್ಲಿ ಅಗಾಧ ಭಾಗವಹಿಸುವಿಕೆಗಾಗಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಅಭಿನಂದಿಸಿದರು. +ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯು ಸಾಮಾನ್ಯ ಜನರ ಕನಸುಗಳನ್ನು ನನಸಾಗಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಂಕಲ್ಪ ಮತ್ತು ಭರವಸೆಯಾಗಿದೆ. ಎಲ್ಲಾ ಪ್ರಯೋಜನಗಳು ನಾಗರಿಕರನ್ನು ತಲುಪುವಂತೆ ಮತ್ತು ಸಮಗ್ರ, ಒಳಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಜನರ ಜೀವನದಲ್ಲಿ ಪರಿವರ್ತನೆ ತರುವಲ್ಲಿ ಇದು ಪ್ರಮುಖ ಪಾತ್ರ ವಹಿಸಿದೆ. +ಅಭಿವೃದ್ಧಿ ಹೊಂದಿದ ಭಾರತ ಮತ್ತು ಅಭಿವೃದ್ಧಿ ಹೊಂದಿದ ಜಮ್ಮು ಕಾಶ್ಮೀರಕ್ಕೆ ಬಡವರು, ಮಹಿಳೆಯರು, ರೈತರು ಮತ್ತು ಸಮಾಜದ ಅಂಚಿನಲ್ಲಿರುವ ವರ್ಗಗಳ ಸಬಲೀಕರಣ ಅತ್ಯಗತ್ಯ ಎಂದು ಅವರು ಹೇಳಿದರು. ಚುನಾಯಿತ ಪ್ರತಿನಿಗಳು ಮತ್ತು ರಾಜಕೀಯ ಮುಖಂಡರು ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಲೆಫ್ಟಿನೆಂಟ್ ಗವರ್ನರ್ ಕರೆ ನೀಡಿದರು. ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಕಣಿವೆ ರಾಜ್ಯದಲ್ಲಿ ಉನ್ನತ ಸಾಧನೆ ಮಾಡಲು ಜಿಲ್ಲೆಗಳ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. +4 ವರ್ಷದೊಳಗಿನ ಮಕ್ಕಳಿಗೆ ಈ ಕೆಮ್ಮಿನ ಸಿರಪ್ ನೀಡುವಂತಿಲ್ಲ +ಲೆಫ್ಟಿನೆಂಟ್ ಗವರ್ನರ್ ಅವರು ಮಹಿಳಾ ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸುವ ಮತ್ತು ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಖಾತ್ರಿಪಡಿಸುವ ಬಗ್ಗೆ ಒತ್ತಿ ಹೇಳಿದರು. ಪ್ರತಿ ಹೆಣ್ಣು ಮಗುವೂ ಉತ್ತಮ ಶಿಕ್ಷಣಕ್ಕೆ ಅರ್ಹರಾಗಿದ್ದು, ಇದು ಪಂಚಾಯಿತಿಗಳ ಪರಮೋಚ್ಚ ಗುರಿಯಾಗಬೇಕು. ಗುಣಮಟ್ಟದ ಶಿಕ್ಷಣಕ್ಕಾಗಿ ಪ್ರತಿ ಪಂಚಾಯಿತಿಯಲ್ಲಿ ಪ್ರಾಥಮಿಕ ಶಾಲೆಯನ್ನು ತೆರೆಯುವುದು ಆಡಳಿತದ ಧ್ಯೇಯವಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_212_1.txt b/eesanje/url_47_212_1.txt new file mode 100644 index 0000000000000000000000000000000000000000..8922ce54ba764b10b11db89b4103d7b7428d05d7 --- /dev/null +++ b/eesanje/url_47_212_1.txt @@ -0,0 +1,7 @@ +4 ವರ್ಷದೊಳಗಿನ ಮಕ್ಕಳಿಗೆ ಈ ಕೆಮ್ಮಿನ ಸಿರಪ್ ನೀಡುವಂತಿಲ್ಲ +ಮುಂಬೈ,ಡಿ.21- ಕೆಮ್ಮು ಸಿರಪ್‍ನಿಂದ ಜಾಗತಿಕವಾಗಿ ಕನಿಷ್ಠ 141 ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಡ್ರಗ್ಸ್ ರೆಗ್ಯುಲೇಟರ್ ಸಂಸ್ಥೆ ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಆಂಟಿ-ಕೋಲ್ಡ ಡ್ರಗ್ ಸಂಯೋಜನೆಯ ಬಳಕೆಯನ್ನು ನಿಷೇಧಿಸಿದೆ ಮತ್ತು ಅದಕ್ಕೆ ಅನುಗುಣವಾಗಿ ಔಷಧಿಗಳನ್ನು ಲೇಬಲ್ ಮಾಡಬೇಕು ಎಂದು ಆದೇಶಿಸಿದೆ. +ಶಿಶುಗಳಲ್ಲಿ ಅನುಮೋದಿತವಲ್ಲದ ಶೀತ-ವಿರೋಧಿ ಔಷಧ ಸೂತ್ರೀಕರಣದ ಉತ್ತೇಜನದ ಬಗ್ಗೆ ಕಾಳಜಿ ಮತ್ತು ಆ ವಯಸ್ಸಿನವರಿಗೆ ಸಂಯೋಜನೆಯನ್ನು ಬಳಸದಂತೆ ಶಿಫಾರಸು ಮಾಡಿದೆ ಎಂದು ನಿಯಂತ್ರಕರು ಹೇಳಿದ್ದಾರೆ. ಕಳೆದ ವರ್ಷದ ಮಧ್ಯದಿಂದ ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್‍ನಲ್ಲಿ ಕನಿಷ್ಠ 141 ಸಾವುಗಳು ಸೇರಿದಂತೆ ದೇಶದಲ್ಲಿ ತಯಾರಿಸಿದ ವಿಷಕಾರಿ ಕೆಮ್ಮು ಸಿರಪ್‍ಗಳಿಗೆ ಅಧಿಕಾರಿಗಳು ಸಂಬಂಧಿಸಿ 2019 ರಿಂದ ಮಕ್ಕಳ ಸಾವಿನ ಸರಣಿಯ ನಂತರ ಈ ಆದೇಶ ಬಂದಿದೆ. +ಭಾರತದಲ್ಲಿ 2019 ರಲ್ಲಿ ದೇಶೀಯವಾಗಿ ತಯಾರಿಸಿದ ಕೆಮ್ಮಿನ ಸಿರಪ್‍ಗಳನ್ನು ಸೇವಿಸಿದ ನಂತರ ಕನಿಷ್ಠ 12 ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ತೀವ್ರ ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಡಿಮೆ ಬೆಲೆಯಲ್ಲಿ ಜೀವರಕ್ಷಕ ಔಷಧಿಗಳ ಪೂರೈಕೆಯಿಂದಾಗಿ ಭಾರತವನ್ನು ಸಾಮಾನ್ಯವಾಗಿ ವಿಶ್ವದ ಔಷಧಾಲಯ ಎಂದು ಕರೆಯಲಾಗುತ್ತದೆ. +ಪೊಲೀಸರ ಸೋಗಿನಲ್ಲಿ ನುಗ್ಗಿ ಉದ್ಯಮಿ ಮನೆ ದೋಚಿದ್ದ 8 ಡಕಾಯಿತರ ಬಂಧನ +ಸ್ಥಿರ-ಔಷಧ ಸಂಯೋಜನೆ ಮೇಲೆ ನಿಯಂತ್ರಕರು ಸಾರ್ವಜನಿಕಗೊಳಿಸಿದ ಆದೇಶದ ಪ್ರಕಾರ, ಔಷಧ ತಯಾರಕರು ತಮ್ಮ ಉತ್ಪನ್ನಗಳನ್ನು 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಬಳಸಬಾರದು ಎಂಬ ಎಚ್ಚರಿಕೆಯೊಂದಿಗೆ ಲೇಬಲ್ ಮಾಡಬೇಕಾಗುತ್ತದೆ ಎಂದು ಸೂಚಿಸಿದೆ. +ಸ್ಥಿರ ಔಷಧ ಸಂಯೋಜನೆಯು ಕ್ಲೋರ್ಫೆನಿರಮೈನ್ ಮೆಲೇಟ್ ಮತ್ತು ಫಿನೈಲ್ರಿನ್ ಅನ್ನು ಒಳಗೊಂಡಿರುತ್ತದೆ – ಇದನ್ನು ಸಾಮಾನ್ಯವಾಗಿ ಶೀತದ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಲು ಸಿರಪ್ ಅಥವಾ ಮಾತ್ರೆಗಳಲ್ಲಿ ಬಳಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೆಮ್ಮು ಮತ್ತು ಶೀತ ರೋಗಲಕ್ಷಣಗಳ ಚಿಕಿತ್ಸೆಗಾಗಿ ಪ್ರತ್ಯಕ್ಷವಾದ ಕೆಮ್ಮಿನ ಸಿರಪ್‍ಗಳು ಅಥವಾ ಔಷಧಗಳ ಬಳಕೆಯನ್ನು ಶಿಫಾರಸು ಮಾಡುವುದಿಲ್ಲ. \ No newline at end of file diff --git a/eesanje/url_47_212_10.txt b/eesanje/url_47_212_10.txt new file mode 100644 index 0000000000000000000000000000000000000000..a39f504e0c6ce6c4ddf1797488128d0b562a9967 --- /dev/null +++ b/eesanje/url_47_212_10.txt @@ -0,0 +1,7 @@ +ಪ್ರತಾಪ್‍ಸಿಂಹರನ್ನು ಏಕೆ ವಿಚಾರಣೆ ಮಾಡಿಲ್ಲ..? : ಕಾಂಗ್ರೆಸ್ +ನವದೆಹಲಿ, ಡಿ 20 (ಪಿಟಿಐ) ಸಂಸತ್ತಿನ ಭದ್ರತಾ ಉಲ್ಲಂಘನೆ ವಿಚಾರವಾಗಿ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಮುಖಂಡರು ಅನಾಮಧೇಯರನ್ನು ಲೋಕಸಭೆಗೆ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ವಾರ ಕಳೆದರೂ ಏಕೆ ವಿಚಾರಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. +ಅಶಿಸ್ತಿನ ವರ್ತನೆಗಾಗಿ 49 ಪ್ರತಿಪಕ್ಷ ಶಾಸಕರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ ಒಂದು ದಿನದ ನಂತರ ವಿರೋಧ ಪಕ್ಷದ ಈ ದಾಳಿ ನಡೆದಿದೆ, ಸಂಸತ್ತಿನ ಉಭಯ ಸದನಗಳಲ್ಲಿ ಕ್ರಮ ಎದುರಿಸುತ್ತಿರುವ ಒಟ್ಟು ಸಂಸದರ ಸಂಖ್ಯೆ 141 ಕ್ಕೆ ತಲುಪಿದೆ. ಭಾರತ ಒಕ್ಕೂಟವು ಶುಕ್ರವಾರ ರಾಷ್ಟ್ರವ್ಯಾಪಿ ಸರ್ಕಾರದ ವಿರೋಧಿ ಪ್ರತಿಭಟನೆಗಳನ್ನು ಘೋಷಿಸಿದೆ. +ಲಾಭದಾಸೆಗೆ ಕಂಡಕಂಡಲ್ಲಿ ಹಣ ಹೂಡಿಕೆ ಮಾಡೋ ಮುನ್ನ ಹುಷಾರ್..! +ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಲೋಕಸಭೆಯಲ್ಲಿ ನಡೆದ ಅತ್ಯಂತ ಗಂಭೀರವಾದ ಭದ್ರತಾ ಲೋಪವು ರಾಷ್ಟ್ರವನ್ನು ಬೆಚ್ಚಿಬೀಳಿಸುವ ಪ್ರಕರಣವಾಗಿದೆ. ತನಿಖೆ ನಡೆಸಲಾಗಿದೆ ಎಂದು ಪ್ರಧಾನಿ, ಗೃಹ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಹೇಳಿದ್ದಾರೆ. ಆದರೆ ಇಬ್ಬರು ಅತಿಕ್ರಮಣದಾರರಿಗೆ ಲೋಕಸಭೆ ಪ್ರವೇಶಿಸಲು ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದ ಪ್ರತಾಪ್ ಸಿಂಹ ಏಳು ದಿನ ಕಳೆದರೂ ಇನ್ನೂ ಏಕೆ ಪ್ರಶ್ನಿಸಿಲ್ಲ? ಅವರು ಕೇಳಿದ್ದಾರೆ. +ಒಳನುಗ್ಗಿದವರ ಮೇಲೆಯೇ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿರುವುದರಿಂದ ಇದೊಂದು ವಿಚಿತ್ರ ಸನ್ನಿವೇಶವಾಗಿದೆ ಎಂದು ರಮೇಶ್ ಹೇಳಿದ್ದಾರೆ.ಈ ಮಧ್ಯೆ, ಡಿಸೆಂಬರ್ 13 ರ ಘಟನೆಗಳ ಕುರಿತು ಸಂಸತ್ತಿನಲ್ಲಿ ಗೃಹ ಸಚಿವರು ನೀಡಿದ ಹೇಳಿಕೆಯ ಮೂಲಭೂತ, ನೇರ ಮತ್ತು ಸಂಪೂರ್ಣ ನ್ಯಾಯಸಮ್ಮತವಾದ ಬೇಡಿಕೆಗಾಗಿ 142 ಭಾರತದ ಸಂಸದರನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ಹೇಳಿದರು. +ಈ ಅಧಿವೇಶನದಲ್ಲಿ 141 ಸಂಸದರನ್ನು ಅಮಾನತುಗೊಳಿಸಿದ್ದಾರೆ, ಎಎಪಿ ಸದಸ್ಯ ಸಂಜಯ್ ಸಿಂಗ್ ಅವರನ್ನು ಜುಲೈ 24 ರಿಂದ ರಾಜ್ಯಸಭಾ ಸದಸ್ಯರಾಗಿ ಅಮಾನತುಗೊಳಿಸಲಾಗಿದೆ. \ No newline at end of file diff --git a/eesanje/url_47_212_11.txt b/eesanje/url_47_212_11.txt new file mode 100644 index 0000000000000000000000000000000000000000..0442bb103c91920696335c4902c7e846253cc648 --- /dev/null +++ b/eesanje/url_47_212_11.txt @@ -0,0 +1,7 @@ +ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಕೆ.ಪೊನ್ಮುಡಿ ದೋಷಿ +ಚೆನ್ನೈ,ಡಿ.19- ಅಕ್ರಮ ಆಸ್ತಿ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ.ಪೊನ್ಮುಡಿ ಅವರನ್ನು ದೋಷಿ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ ಕಳೆದ ಜೂ.18ರಂದು ವೆಲ್ಲೂರಿನ ಪ್ರಧಾನ ಸೆಷನ್ಸ್ ನ್ಯಾಯಾಲಯವು ಸಚಿವ ಪೊನ್ಮುಡಿ ಮತ್ತು ಅವರ ಪತ್ನಿಯ ಅಕ್ರಮ ಆಸ್ತಿ ಪ್ರಕರಣ ವನ್ನು ಖುಲಾಸೆಗೊಳಿಸಿತ್ತು. +ಇದೀಗ ಮದ್ರಾಸ್ ಹೈಕೋರ್ಟ್‍ನ ವಿಚಾರಣಾ ನ್ಯಾಯಾಲಯ ವೆಲ್ಲೂರು ನ್ಯಾಯಾಲಯ ನೀಡಿದ್ದ ತೀರ್ಪು ಮತ್ತು ಖುಲಾಸೆಯನ್ನು ರದ್ದುಗೊಳಿಸಿ ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಒಂದು ವಾರದ ನಂತರ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದ್ದು, ಪೊನ್ನುಡಿಗೆ ಎರಡು ವರ್ಷಕ್ಕೂ ಹೆಚ್ಚು ಕಾಲ ಶಿಕ್ಷೆಯಾದರೆ ಅವರ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. +ವೆಲ್ಲೂರಿನ ಪ್ರಧಾನ ಜಿಲ್ಲಾ ನ್ಯಾಯಾೀಧಿಶೆ ಎನ್.ವಸಂತಲೀಲಾ ಅವರು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಮತ್ತು ಹಿರಿಯ ಡಿಎಂಕೆ ನಾಯಕ ಕೆ.ಪೊನ್ಮುಡಿ ಮತ್ತು ಅವರ ಪತ್ನಿಯನ್ನು ಜಾಗೃತದಳ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ ದಾಖಲಿಸಿದ ಅಕ್ರಮ ಆಸ್ತಿ ಪ್ರಕರಣದಲ್ಲಿ ಖುಲಾಸೆಗೊಳಿಸಿದ್ದರು. +ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ +ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೂನ್‍ನಲ್ಲಿ ವೆಲ್ಲೂರಿನ ನ್ಯಾಯಾಲಯವು ಖುಲಾಸೆಗೊಳಿಸಿದ ನಂತರ ಅವರ ಖುಲಾಸೆಯ ಪರಿಷ್ಕರಣೆಯನ್ನು ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಮದ್ರಾಸ್ ಹೈಕೋರ್ಟ್ ಆಗಸ್ಟ್‍ನಲ್ಲಿ ನಿರ್ಧರಿಸಿತ್ತು.1996-2001ರ ಅವಯಲ್ಲಿ ಆಗಿನ ಎಐಎಡಿಎಂಕೆ ಸರ್ಕಾರ ಅಧಿಕಾರದಲ್ಲಿದ್ದಾಗ 2002ರಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿ ವಿರುದ್ಧ ಜಾಗೃತದಳ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ (ಡಿವಿಎಸಿ) ಪ್ರಕರಣ ದಾಖಲಿಸಲಾಗಿತ್ತು. +ಇದರಲ್ಲಿ ಇಬ್ಬರ ಆದಾಯ 1.4 ಕೋಟಿ ರೂ. ಆ ಸಮಯದಲ್ಲಿ ಅವರ ಆದಾಯಕ್ಕಿಂತ ಹೆಚ್ಚಿನ ಗಳಿಕೆಯಾಗಿದೆ ಎಂದು ಆರೋಪಿಸಲಾಗಿತ್ತು. ಪೊನ್ಮುಡಿ ಅವರು 1996-2001ರ ಅವಧಿಯಲ್ಲಿ ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಅಕ್ರಮ ಸಂಪತ್ತು ಸಂಗ್ರಹಿಸಿದ್ದಾರೆ ಎಂದು ಡಿವಿಎಸಿ ಪ್ರತಿಪಾದಿಸಿದೆ. \ No newline at end of file diff --git a/eesanje/url_47_212_12.txt b/eesanje/url_47_212_12.txt new file mode 100644 index 0000000000000000000000000000000000000000..15b42b4b63b0141ffc57bcd58b65c573e04963ba --- /dev/null +++ b/eesanje/url_47_212_12.txt @@ -0,0 +1,9 @@ +ಸಂಸತ್‍ನ ಕಲಾಪಕ್ಕೆ ಅಡ್ಡಿ : ಇಂದು 50 ಮಂದಿ ಸಂಸದರ ಅಮಾನತು +ನವದೆಹಲಿ,ಡಿ.19- ಸಂಸತ್‍ನ ಭದ್ರತಾ ಲೋಪ ಉಲ್ಲಂಘನೆ ಪ್ರಕರಣದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನಲೆ ಪುನಃ 50 ಮಂದಿ ಸಂಸದರನ್ನು ಸದನದಿಂದ ಅಮಾನತುಪಡಿಸಲಾಗಿದೆ. ಈವರೆಗೂ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಮಾನತುಗೊಂಡ ಸಂಸದರ ಸಂಖ್ಯೆ 142ಕ್ಕೆ ಏರಿಕೆಯಾಗಿದೆ. ಸಂಸತ್‍ನ ಇತಿಹಾಸದಲ್ಲೇ ಇಷ್ಟು ದೊಡ್ಡ ಮಟ್ಟದಲ್ಲಿ ಉಭಯ ಸದನಗಳ ಸದಸ್ಯರನ್ನು ಅಮಾನತುಪಡಿಸಿರುವ ಪ್ರಕರಣ ಇದಾಗಿದೆ. +ಲೋಕಸಭೆ ಸದಸ್ಯರಾದ ಡ್ಯಾನಿಶ್ ಆಲಿ, ಸುಪ್ರಿಯ ಸುಳೆ, ಫಾರೂಖ್ ಅಬ್ದುಲ್, ಶಶಿ ತರೂರ್, ಕಾರ್ತಿಕ್ ಚಿದಂಬರಂ, ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ 50 ಲೋಕಸಭಾ ಸದಸ್ಯರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತುಪಡಿಸಿದ್ದಾರೆ. +ಉಭಯ ಸದನಗಳಲ್ಲಿ ಭಾರೀ ಗದ್ದಲ, ಕೋಲಾಹಲ ಉಂಟಾಗಿದ್ದರಿಂದ ಕಲಾಪವನ್ನು ಎರಡು ಬಾರಿ ಮುಂದೂಡಲಾಯಿತು. ಇದಕ್ಕೂ ಮುನ್ನ ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ಲೋಕಸಭಾ ಸದಸ್ಯರು ಭದ್ರತಾ ಲೋಪ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದರು. ಪ್ರಕರಣದ ತನಿಖೆ ನಡೆಯುತ್ತಿರುವಾಗ ಹೇಳಿಕೆ ಅಗತ್ಯವಿಲ್ಲ. ಕಲಾಪ ನಡೆಯಲು ಅವಕಾಶ ಮಾಡಿಕೊಡಿ ಎಂದು ಓಂ ಬಿರ್ಲಾ ಮನವಿ ಮಾಡಿಕೊಂಡರು. ಇದಕ್ಕೆ ಜಗ್ಗದೆ ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿದರು. +ಸಂಸದನಿಗೆ ತರಾಟೆ:ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಸಂಸತ್ ಮುಂಭಾಗ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಟಿಎಂಸಿಯ ರಾಜ್ಯಸಭಾ ಸದಸ್ಯ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಸಭಾಪತಿ ಜಗದೀಪ್ ಧನ್‍ಕರ್ ಅವರನ್ನು ಗೇಲಿ ಮಾಡಿದರು. ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರು. ರಾಜ್ಯಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ವರ್ತನೆಯನ್ನು ಸಭಾಧ್ಯಕ್ಷರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ನಿಮ್ಮ ನಡವಳಿಕೆ ನಿಮ್ಮ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದು ನನಗೆ ಮಾತ್ರ ಮಾಡಿದ ಅವಮಾನವಲ್ಲ. ನೀವು ಪೀಠಕ್ಕೆ ಮಾಡಿದ ಅಪಮಾನ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ಕುಹಕ ಮಾಡುತ್ತಿದ್ದೀರಿ. ನಿಮ್ಮ ವರ್ತನೆಯನ್ನು ಸಹಿಸಲು ಅಸಾಧ್ಯ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. +ಕೇಂದ್ರ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ : ಪ್ರಿಯಾಂಕ್ ಖರ್ಗೆ +ಪ್ರತಿಭಟನೆ:ಸಂಸತ್ತಿನ ಉಭಯ ಸದನಗಳ ಒಟ್ಟು 92 ವಿಪಕ್ಷ ಸಂಸದರನ್ನು ಪ್ರಸಕ್ತ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿರುವುದರ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಇಂದು ಸಂಸತ್ತಿನ ಒಳಗಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್, ಸಮಾಜವಾದಿ ಪಕ್ಷದ ರಾಮ್‍ಗೋಪಾಲ್ ಯಾದವ್ ಮತ್ತಿತರರು ಪಾಲ್ಗೊಂಡಿದ್ದರು. +ಪ್ರಜಾಪ್ರಭುತ್ವ ಅಪಾಯದಲ್ಲಿದೆ, ನಾವು ಪಂಜರದಲಿಲ್ಲ ಎಂಬ ಭಿತ್ತಿಪತ್ರ ಹಿಡಿದ ಪ್ರತಿಭಟನಾಕಾರರು, ಸಂಸತ್ ಭದ್ರತಾ ಲೋಪ ವಿಚಾರದಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಏಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಖರ್ಗೆ, ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದು ಅಲ್ಲ. ಸಂಸತ್ತಿನಲ್ಲಿ ಅನೇಕ ಸದಸ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಬಯಸುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು. +ಸಂಸತ್ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಒತ್ತಾಯಿಸಿದ ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸದಸ್ಯರು ಸೇರಿದಂತೆ ಒಟ್ಟು 78 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು. ಇದಕ್ಕೂ ಮುನ್ನಾ 13 ಸದಸ್ಯರನ್ನು ಅಮಾನತು ಮಾಡಲಾಗಿತ್ತು. \ No newline at end of file diff --git a/eesanje/url_47_212_2.txt b/eesanje/url_47_212_2.txt new file mode 100644 index 0000000000000000000000000000000000000000..53d207ffc77445ed371f8cf620f87c494e89b737 --- /dev/null +++ b/eesanje/url_47_212_2.txt @@ -0,0 +1,6 @@ +ಪ್ರತಿಪಕ್ಷಗಳ ಸಂಸದರ ಅಮಾನತು ಸಮರ್ಥಿಸಿಕೊಂಡ ಹೇಮಮಾಲಿನಿ +ನವದೆಹಲಿ,ಡಿ.20- ನೂರಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ಸಂಸದೆ ಹಾಗೂ ಖ್ಯಾತ ಬಾಲಿವುಡ್ ನಟಿ ಹೇಮಾ ಮಾಲಿನಿ ಅವರು ಅಮಾನತುಗೊಂಡವರು ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ವಿಚಿತ್ರವಾಗಿ ವರ್ತಿಸುತ್ತಾರೆ ಎಂದಿದ್ದಾರೆ. +ಲೋಕಸಭೆಯಲ್ಲಿ ಮಥುರಾವನ್ನು ಪ್ರತಿನಿಧಿಸುವ ನಟಿ-ರಾಜಕಾರಣಿಯಾಗಿರುವ ಅವರು, ಸಂಸತ್ತನ್ನು ಅಡ್ಡಿಪಡಿಸುವುದು ಮತ್ತು ಮೋದಿ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವುದು ಪ್ರತಿಪಕ್ಷಗಳ ಏಕೈಕ ಗುರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. +ಅವರನ್ನು ಅಮಾನತು ಮಾಡಿದ್ದರೆ ಅವರು ತಪ್ಪು ಮಾಡಿದ್ದಾರೆ ಎಂದರ್ಥ. ಸಂಸತ್ತಿನ ನಿಯಮಗಳ ಪ್ರಕಾರ ಕೆಲಸ ಮಾಡಬೇಕು. ಅವರು ಅದನ್ನು ಮಾಡಲಿಲ್ಲ ಹೀಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಇದು ಸರಿ ಎಂದು ಅವರು ಹೇಳಿದರು. ಕಾಂಗ್ರೆಸ್ ಮತ್ತು ಉನ್ನತ ಪ್ರಾದೇಶಿಕ ಪಕ್ಷಗಳನ್ನು ಒಳಗೊಂಡಿರುವ ಪ್ರಮುಖ ವಿರೋಧ ಪಕ್ಷವಾದ ಇಂಡಿಯಾ ಮೈತ್ರಿಕೂಟದ ನಿನ್ನೆಯ ಸಭೆಯನ್ನು ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. +ಉತ್ತರ ಅಮೆರಿಕದಲ್ಲಿ ರಾಮಮಂದಿರ ಉದ್ಘಾಟನಾ ಸಂಭ್ರಮ +ಅದು ಅವರ ಗುರಿಯಾಗಿದೆ, ಹೇಗಾದರೂ ಸಂಸತ್ತು ಕಾರ್ಯನಿರ್ವಹಿಸಲು ಮತ್ತು ಮೋದಿ ಸರ್ಕಾರವನ್ನು ಬೇರುಸಹಿತ ಕಿತ್ತುಹಾಕಲು ತುಂಬಾ ಶ್ರಮಿಸುತ್ತಿದ್ದಾರೆ, ಆದರೆ ಅವರು ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದರು. ಲೋಕಸಭೆ ಮತ್ತು ರಾಜ್ಯಸಭೆಯ 141 ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. \ No newline at end of file diff --git a/eesanje/url_47_212_3.txt b/eesanje/url_47_212_3.txt new file mode 100644 index 0000000000000000000000000000000000000000..9228ae65bba2aff40719310c2963460c019cb728 --- /dev/null +++ b/eesanje/url_47_212_3.txt @@ -0,0 +1,8 @@ +ವಿವಿಪ್ಯಾಟ್ ಸ್ಲಿಪ್‍ಗಳನ್ನು ಮತದಾರರಿಗೆ ನೀಡಲು ಇಂಡಿಯಾ ಒಕ್ಕೂಟ ಆಗ್ರಹ +ನವದೆಹಲಿ,ಡಿ.20- ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆಯ ಸಮಗ್ರತೆಯ ಬಗ್ಗೆ ಹಲವು ಅನುಮಾನಗಳಿವೆ ಎಂದು ಪ್ರತಿಪಕ್ಷವಾದ ಇಂಡಿಯಾ ಒಕ್ಕೂಟ ಪ್ರತಿಪಾದಿಸಿದ್ದು, ವಿವಿಪ್ಯಾಟ್ ಸ್ಲಿಪ್‍ಗಳನ್ನು ಮತದಾರರಿಗೆ ಹಸ್ತಾಂತರಿಸುವಂತೆ ಮತ್ತು ಅದರ 100 ಪ್ರತಿಶತ ಎಣಿಕೆಯನ್ನು ನಂತರ ಮಾಡುವಂತೆ ಸೂಚಿಸಿದೆ. +ಇಲ್ಲಿ ನಡೆದ ನಾಲ್ಕನೇ ಸಭೆಯಲ್ಲಿ ಮೈತ್ರಿಕೂಟವು ಅಂಗೀಕರಿಸಿದ ನಿರ್ಣಯದಲ್ಲಿ, 28 ವಿರೋಧ ಪಕ್ಷಗಳ ನಾಯಕರು ಗುಂಪುಗಳ ನಿಯೋಗವು ಚುನಾವಣಾ ಆಯೋಗಕ್ಕೆ ಜ್ಞಾಪಕ ಪತ್ರವನ್ನು ನೀಡಿದ್ದರೂ ಚುನಾವಣಾ ಆಯೋಗವು ಕಾಳಜಿಗೆ ಇನ್ನೂ ಸ್ಪಂದಿಸಿಲ್ಲ ಎಂದು ಒಕ್ಕೂಟ ಆರೋಪಿಸಿದೆ. +ನಾವು ಇವಿಎಂಗಳ ವಿನ್ಯಾಸ ಮತ್ತು ಕಾರ್ಯಾಚರಣೆಯ ಕುರಿತು ಹಲವಾರು ನಿರ್ದಿಷ್ಟ ಪ್ರಶ್ನೆಗಳೊಂದಿಗೆ ವಿವರವಾದ ಜ್ಞಾಪಕ ಪತ್ರವನ್ನು ಇಸಿಐಗೆ ಸಲ್ಲಿಸಿದ್ದೇವೆ ದುರದೃಷ್ಟವಶಾತ್ ಈ ಜ್ಞಾಪಕ ಪತ್ರದ ಮೇಲೆ ಭಾರತದ ನಿಯೋಗವನ್ನು ಭೇಟಿ ಮಾಡಲು ಇಸಿಐ ಹಿಂಜರಿಯುತ್ತಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. +ಪ್ರತಾಪ್‍ಸಿಂಹರನ್ನು ಏಕೆ ವಿಚಾರಣೆ ಮಾಡಿಲ್ಲ..? : ಕಾಂಗ್ರೆಸ್ +ಇವಿಎಂಗಳ ಕಾರ್ಯನಿರ್ವಹಣೆಯ ಸಮಗ್ರತೆಯ ಬಗ್ಗೆ ಹಲವು ಅನುಮಾನಗಳಿವೆ ಎಂದು ನಾವು ಪುನರುಚ್ಚರಿಸುತ್ತವೆ. ಇವುಗಳನ್ನು ಅನೇಕ ತಜ್ಞರು ಮತ್ತು ವೃತ್ತಿಪರರು ಸಹ ಎತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ನಮ್ಮ ಸಲಹೆ ಸರಳವಾಗಿದೆ. ಮತದಾರರ-ಪರಿಶೀಲಿಸಿದ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಸ್ಲಿಪ್ ಬಾಕ್ಸ್‍ನಲ್ಲಿ ಬೀಳುವ ಬದಲು, ಅದನ್ನು ಮತದಾರರಿಗೆ ಹಸ್ತಾಂತರಿಸಬೇಕು, ಅವರು ಆಯ್ಕೆಯನ್ನು ಪರಿಶೀಲಿಸಿದ ನಂತರ ಅದನ್ನು ಪ್ರತ್ಯೇಕ ಮತ ಪೆಟ್ಟಿಗೆಯಲ್ಲಿ ಇರಿಸಬೇಕು. +ವಿವಿಪ್ಯಾಟ್ ಸ್ಲಿಪ್‍ಗಳ ಶೇ.100 ಎಣಿಕೆ ನಂತರ ಮಾಡಬೇಕು, ಎಂದು ವಿರೋಧ ಪಕ್ಷದ ಮೈತ್ರಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ಇದು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯಲ್ಲಿ ಜನರ ಸಂಪೂರ್ಣ ವಿಶ್ವಾಸವನ್ನು ಪುನಃಸ್ಥಾಪಿಸುತ್ತದೆ ಎಂದು ಅದು ಹೇಳಿದೆ. +ಇವಿಎಂಗಳ ವಿಷಯದ ಬಗ್ಗೆ ಹಲವಾರು ವಿರೋಧ ಪಕ್ಷಗಳ ನಾಯಕರು ಚರ್ಚಿಸಿದರು, ವಿಶೇಷವಾಗಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಇತ್ತೀಚಿನ ವಿಜಯಗಳ ನಂತರ, ಮತ್ತು ಇಡೀ ವಿರೋಧ ಪಕ್ಷಗಳ ಒಕ್ಕೂಟವು ಜನರ ಮುಂದೆ ಈ ವಿಷಯವನ್ನು ಒಗ್ಗಟ್ಟಾಗಿ ಎತ್ತಬೇಕೆಂದು ತೀರ್ಮಾನಿಸಲಾಗಿದೆ. \ No newline at end of file diff --git a/eesanje/url_47_212_4.txt b/eesanje/url_47_212_4.txt new file mode 100644 index 0000000000000000000000000000000000000000..c245cadfdb7f7eeb51e03e755048b6af3a905d9e --- /dev/null +++ b/eesanje/url_47_212_4.txt @@ -0,0 +1,6 @@ +ಕ್ರೌಢ್ ಫಂಡಿಂಗ್‍ ಅಭಿಯಾನಕ್ಕೆ ದೇಣಿಗೆ ನೀಡಿದ ರಾಹುಲ್ +ನವದೆಹಲಿ,ಡಿ.20- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಪಕ್ಷದ ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ ದೇಣಿಗೆ ನೀಡಿದ್ದಾರೆ, ಇದು ಸಾಮರಸ್ಯ ಮತ್ತು ಪ್ರಗತಿಪರ ಭಾರತಕ್ಕೆ ಅವರ ಕೊಡುಗೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ. ನೀವೆಲ್ಲರೂ ದೇಣಿಗೆ ನೀಡಿ ಮತ್ತು ಭಾರತದ ಆತ್ಮವನ್ನು ಉಳಿಸುವ ಆಂದೋಲನದ ಭಾಗವಾಗಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಅವರು ಎಕ್ಸ್ ಮಾಡಿದ್ದಾರೆ. +ಅವರು ದೇಷ್‍ಗಾಗಿ ದೇಣಿಗೆ ಅಭಿಯಾನಕ್ಕೆ ಕೊಡುಗೆ ನೀಡುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ ಆದರೆ ತಾವು ನೀಡಿದ ದೇಣಿಗೆ ಮೊತ್ತವನ್ನು ಬಹಿರಂಗಪಡಿಸಿಲ್ಲ. ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್ ಅವರನ್ನು ಪಕ್ಷದಿಂದ ಎಷ್ಟು ಹಣ ಸಂಗ್ರಹಿಸಲಾಗುತ್ತದೆ ಎಂದು ಪ್ರಶ್ನಿಸಿದರು ಆಗ ಅವರು ನಿರೀಕ್ಷೆಗಿಂತ ಹೆಚ್ಚು ದೇಣಿಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು. +ಯೂತ್ ಕಾಂಗ್ರೆಸ್ ಮತ್ತು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಸಹ ಅದೇ ರೀತಿ ಮಾಡಬೇಕು ಮತ್ತು ಮಹಿಳಾ ಕಾಂಗ್ರೆಸ್ ಮಾಡಬೇಕು. ಅಖಿಲ ಭಾರತ ವೃತ್ತಿಪರ ಕಾಂಗ್ರೆಸ್ (ಕೊಡುಗೆಯಲ್ಲಿ) ಪ್ರಥಮ ಸ್ಥಾನದಲ್ಲಿರಬೇಕು ಎಂದು ಅವರು ಮನವಿ ಮಾಡಿಕೊಂಡರು. +ಪ್ರತಾಪ್‍ಸಿಂಹರನ್ನು ಏಕೆ ವಿಚಾರಣೆ ಮಾಡಿಲ್ಲ..? : ಕಾಂಗ್ರೆಸ್ +ಮಾಕೆನ್ ಅವರು ರಾಹುಲ್‍ಗೆ ಇದುವರೆಗೆ ಮಹಾರಾಷ್ಟ್ರವು ಪ್ರಚಾರಕ್ಕೆ ಹೆಚ್ಚಿನ ಕೊಡುಗೆಯನ್ನು ನೀಡಿದೆ, ನಂತರ ರಾಜಸ್ಥಾನ ಮತ್ತು ಉತ್ತರ ಪ್ರದೇಶದಿಂದ ಅತಿ ಹೆಚ್ಚು ದೇಣಿಗೆ ಸಂಗ್ರವಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ತನ್ನ ದೇಷ್‍ಗಾಗಿ ದೇಣಿಗೆ ಎಂಬ ಕ್ರೌಡ್‍ಫಂಡಿಂಗ್ ಅಭಿಯಾನವನ್ನು ಸೋಮವಾರ ಪ್ರಾರಂಭಿಸಿತು, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮೊದಲ ಕೊಡುಗೆ ನೀಡಿದರು. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಚಾರದ ಭಾಗವಾಗಿ ಪಕ್ಷಕ್ಕೆ 1.38 ಲಕ್ಷ ದೇಣಿಗೆ ನೀಡಿದ್ದಾರೆ. \ No newline at end of file diff --git a/eesanje/url_47_212_5.txt b/eesanje/url_47_212_5.txt new file mode 100644 index 0000000000000000000000000000000000000000..855550a472946f407a27e328484519ed3b218c6e --- /dev/null +++ b/eesanje/url_47_212_5.txt @@ -0,0 +1,6 @@ +ಉಪರಾಷ್ಟ್ರಪತಿಗೆ ಅವಮಾನ ಮಾಡಿದ ಟಿಎಂಸಿ ಸಂಸದರ ವಿರುದ್ಧ ದೂರು ಕೇಸ್ +ನವದೆಹಲಿ, ಡಿ 20 (ಪಿಟಿಐ) ಸಂಸತ್ತಿನ ಆವರಣದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‍ಕರ್ ಅವರ ಅನುಕರಣೆಗಾಗಿ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ವಿರುದ್ಧ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ. ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ನಿನ್ನೆ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ಬ್ಯಾನರ್ಜಿ ಅವರು ಧನ್‍ಕರ್ ಅವರನ್ನು ಅಪಹಾಸ್ಯ ಮಾಡಿದ್ದರು. ಈ ಧೋರಣೆಗೆ ಆಡಳಿತಾರೂಢ ಬಿಜೆಪಿಯಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. +ನಿನ್ನೆ ಸಂಜೆ ಡಿಫೆನ್ಸ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ವಕೀಲ ಅಭಿಷೇಕ್ ಗೌತಮ್ ಅವರು ದೂರು ನೀಡಿದ್ದಾರೆ. ನಾವು ಅದನ್ನು ನವದೆಹಲಿ ಜಿಲ್ಲಾ ಪೊಲೀಸರಿಗೆ ರವಾನಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೌತಮ್ ತಮ್ಮ ದೂರಿನಲ್ಲಿ ಭಾರತದ ಉಪರಾಷ್ಟ್ರಪತಿ, ಅವರ ಜಾತಿ ಮತ್ತು ಅವರ ರೈತ ಮತ್ತು ವಕೀಲರ ಹಿನ್ನೆಲೆಯನ್ನು ಅವಮಾನಿಸುವ ಮತ್ತು ಅವಮಾನಿಸುವ ಉದ್ದೇಶದಿಂದ ವೀಡಿಯೊ ಮಾಡಲಾಗಿದೆ ಎಂದು ಹೇಳಿದ್ದಾರೆ. +ರೋಟರ್‍ಡ್ಯಾಮ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಪರ್ಣಾ ಸೇನ್ ಸಾಕ್ಷ್ಯಚಿತ್ರ ಆಯ್ಕೆ +ಟಿಎಂಸಿ ಸಂಸದ ಮತ್ತು ಇತರರ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ಸೂಕ್ತ ಸೆಕ್ಷನ್‍ಗಳ ಅಡಿಯಲ್ಲಿ ಎಫ್‍ಐಆರ್ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯಸಭೆಯಲ್ಲಿ ಅಧ್ಯಕ್ಷರ ಮಿಮಿಕ್ರಿಯನ್ನು ಬ್ಯಾನರ್ಜಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಧೋರಣೆಯನ್ನು ಖಂಡಿಸಿದ್ದಾರೆ. ಟಿವಿ ನ್ಯೂಸ್ ಚಾನೆಲ್‍ಗಳಲ್ಲಿ ಮಿಮಿಕ್ರಿ ವಿಡಿಯೋ ಕ್ಲಿಪ್ ಪ್ರಸಾರವಾದ ನಂತರ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು. +ತಮ್ಮ ರೈತ ಮತ್ತು ಜಾಟ್ ಹಿನ್ನೆಲೆಯವರನ್ನು ಗುರಿಯಾಗಿಸಿಕೊಂಡು ವೈಯಕ್ತಿಕವಾಗಿ ನೋವಾಗಿದೆ ಎಂದು ಧನ್‍ಕರ್ ರಾಜ್ಯಸಭೆಯಲ್ಲಿ ತಮ್ಮ ವೇದನೆಯನ್ನು ಹೊರಹಾಕಿದರು. ನಿಮ್ಮ ಹಿರಿಯ ನಾಯಕ ಸಂಸತ್ತಿನ ಸದಸ್ಯರೊಬ್ಬರು ಸಭಾಪತಿಯ ಸಂಸ್ಥೆಯನ್ನು ಅಪಹಾಸ್ಯ ಮಾಡುವ ವೀಡಿಯೊಗ್ರಾಫ್ ಮಾಡುವಾಗ ನನ್ನ ಹೃದಯದಲ್ಲಿ ಏನಾಗುತ್ತಿದೆ ಎಂದು ಊಹಿಸಿ ಎಂದು ಅವರು ಕೇಳಿದ್ದರು. \ No newline at end of file diff --git a/eesanje/url_47_212_6.txt b/eesanje/url_47_212_6.txt new file mode 100644 index 0000000000000000000000000000000000000000..c7bdd71be0eae3304b9bc2cff07d4fab8413fc0b --- /dev/null +++ b/eesanje/url_47_212_6.txt @@ -0,0 +1,5 @@ +ರಸ್ತೆ ಕಾಮಗಾರಿ ವಾಹನಗಳಿಗೆ ಬೆಂಕಿ ಹಚ್ಚಿದ ನಕ್ಸಲರು +ಗಡ್ಚಿರೋಲಿ, ಡಿ.20 (ಪಿಟಿಐ) – ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲರು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಮಣ್ಣು ಚಲಿಸುವ ಯಂತ್ರ ಮತ್ತು ಟ್ಯಾಂಕರ್‍ಗೆ ಬೆಂಕಿ ಹಚ್ಚಿದ್ದಾರೆ. ಇಂದು ನಸುಕಿನ ಜಾವ ದಾಳಿ ನಡೆಸಿದ ನಕ್ಸಲರು ಏಕಾಏಕಿ ರಸ್ತೆಯಲ್ಲಿ ನಿಂತಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರಂಭದಲ್ಲೇ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸಿದ್ಧತೆ : ಗುಂಡೂರಾವ್ +ಮಹಾರಾಷ್ಟ್ರ-ಛತ್ತೀಸ್‍ಗಢ ಗಡಿಯಲ್ಲಿರುವ ಹಿದೂರ್ -ದೊಡೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಯರಕೋಟಿಗೆ ಮತ್ತಷ್ಟು ಸಂಪರ್ಕ ಕಲ್ಪಿಸುವ ಗ್ರಾಮದ ರಸ್ತೆಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ನಕ್ಸಲೀಯರು ಯಂತ್ರ ಮತ್ತು ಕೆಲಸದಲ್ಲಿ ತೊಡಗಿದ್ದ ವಾಹನವನ್ನು ಸುಟ್ಟು ಹಾಕಿದ್ದಾರೆ. +ಈ ಪ್ರದೇಶದಲ್ಲಿ ನಕ್ಸಲೀಯರು ಕರಪತ್ರವನ್ನೂ ಹಾಕಿದ್ದು, ಡಿಸೆಂಬರ್ 22 ರಂದು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_212_7.txt b/eesanje/url_47_212_7.txt new file mode 100644 index 0000000000000000000000000000000000000000..c22d0f10fadc0ae0cc7b731bd0f13532fa4510c2 --- /dev/null +++ b/eesanje/url_47_212_7.txt @@ -0,0 +1,5 @@ +ಕೇರಳದಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ +ತಿರುವನಂತಪುರಂ, ಡಿ 19 (ಪಿಟಿಐ) ಕೇರಳದಲ್ಲಿ ಕೊರೊನಾ ಆರ್ಭಟಿಸುತ್ತಿದ್ದು, ಇಲ್ಲಿ ಮತ್ತೆ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 292 ಹೊಸ ಕೋವಿಡ್ -19 ಸೋಂಕುಗಳು ಮತ್ತು ಮೂರು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. +ಇಂದು ಬೆಳಗ್ಗೆ 8 ಗಂಟೆಯವರೆಗೆ ದೇಶಾದ್ಯಂತ ವರದಿಯಾದ 341 ಕೋವಿಡ್ ಸೋಂಕುಗಳಲ್ಲಿ 292 ಕೇರಳದಿಂದ ಬಂದಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,041 ಕ್ಕೆ ತಲುಪಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ. +ರೋಟರ್‍ಡ್ಯಾಮ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಪರ್ಣಾ ಸೇನ್ ಸಾಕ್ಷ್ಯಚಿತ್ರ ಆಯ್ಕೆ +ಈ ಹಿಂದೆ ನಾಲ್ಕು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದರು ಇದರೊಂದಿಗೆ ಕೇರಳದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಾವು-ನೋವು ಸಂಭವಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದು ಇತರ ರಾಜ್ಯಗಳಿಗೂ ಎಚ್ಚರಿಕೆ ಗಂಟೆಯಾಗಿದ್ದು ಕೇರಳದ ಗಡಿ ಹೊಂದಿಕೊಂಡಿರುವ ರಾಜ್ಯಗಳು ಭಾರಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅದರಲ್ಲೂ ಕರ್ನಾಟಕಕ್ಕೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ ಗಡಿ ಭಾಗದಲ್ಲಿ ಭಾರಿ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. \ No newline at end of file diff --git a/eesanje/url_47_212_8.txt b/eesanje/url_47_212_8.txt new file mode 100644 index 0000000000000000000000000000000000000000..cc2a20344cb0477a31514298f7c1c7220352b5bf --- /dev/null +++ b/eesanje/url_47_212_8.txt @@ -0,0 +1,6 @@ +ಮಿಮಿಕ್ರಿ ಮಾಡಿ ಉಪರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಅಪಮಾನ, ಪ್ರಧಾನಿ ಮೋದಿ ಬೇಸರ +ನವದೆಹಲಿ, ಡಿ 20 (ಪಿಟಿಐ) – ಸಂಸತ್ ಸಂಕೀರ್ಣದಲ್ಲಿ ಕೆಲವು ಸಂಸದರು ನಡೆಸುತ್ತಿರುವ ನಾಟಕಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೀ ಅವರಿಂದ ದೂರವಾಣಿ ಕರೆ ಸ್ವೀಕರಿಸಲಾಗಿದೆ ಎಂದು ಉಪ ರಾಷ್ಟ್ರಪತಿ ಭವನದ ಮೂಲಗಳು ಖಚಿತಪಡಿವೆ. +ಅವರು ನಿನ್ನೆ ಪವಿತ್ರ ಸಂಸತ್ತಿನ ಸಂಕೀರ್ಣದಲ್ಲಿ ಕೆಲವು ಗೌರವಾನ್ವಿತ ಸಂಸದರ ಹೀನಾಯ ನಾಟಕೀಯತೆಯ ಬಗ್ಗೆ ತೀವ್ರ ನೋವನ್ನು ವ್ಯಕ್ತಪಡಿಸಿದರು ಎಂದು ಮೂಲಗಳು ವಿವರಿಸಿವೆ. ಇಪ್ಪತ್ತು ವರ್ಷಗಳಿಂದ ಇಂತಹ ಅವಮಾನಗಳನ್ನು ಎದುರಿಸುತ್ತಿದ್ದೇನೆ ಎಂದು ಅವರು ನನಗೆ ಹೇಳಿದರು ಆದರೆ ಉಪರಾಷ್ಟ್ರಪತಿಯಂತಹ ಸಾಂವಿಧಾನಿಕ ಕಚೇರಿಗೆ ಇದು ಸಂಭವಿಸಬಹುದು ಮತ್ತು ಅದು ಸಂಸತ್ತಿನಲ್ಲೂ ದುರದೃಷ್ಟಕರವಾಗಿದೆ ಎಂದು ಧನ್‍ಖರ್ ಹೇಳಿದ್ದಾರೆ. ಹಾಗೂ ಇಂತಹ ಘಟನೆಗಳು ತನ್ನ ಕರ್ತವ್ಯವನ್ನು ಮಾಡುವುದನ್ನು ತಡೆಯುವುದಿಲ್ಲ ಎಂದು ಅವರು ಪ್ರಧಾನಿಗೆ ಭರವಸೆ ನೀಡಿದ್ದಾರೆ. +ಲಾಭದಾಸೆಗೆ ಕಂಡಕಂಡಲ್ಲಿ ಹಣ ಹೂಡಿಕೆ ಮಾಡೋ ಮುನ್ನ ಹುಷಾರ್..! +ನಾನು ಅವರಿಗೆ ಹೇಳಿದೆ- ಮಿಸ್ಟರ್ ಪ್ರಧಾನ ಮಂತ್ರಿ, ಕೆಲವರ ವರ್ತನೆಗಳು ನನ್ನ ಕರ್ತವ್ಯವನ್ನು ನಿರ್ವಹಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳನ್ನು ಎತ್ತಿಹಿಡಿಯುವುದನ್ನು ತಡೆಯುವುದಿಲ್ಲ. ನನ್ನ ಹೃದಯದ ಕೆಳಗಿನಿಂದ ಆ ಮೌಲ್ಯಗಳಿಗೆ ನಾನು ಬದ್ಧನಾಗಿದ್ದೇನೆ. ಯಾವುದೇ ಅವಮಾನಗಳು ನನ್ನ ಹಾದಿಯನ್ನು ಬದಲಾಯಿಸುವಂತೆ ಮಾಡುವುದಿಲ್ಲ ಎಂದು ಧನ್‍ಕರ್ ಹೇಳಿದ್ದಾರೆ. +ಸಂಸದರ ಅಮಾನತು ವಿರುದ್ಧ ಸಂಸತ್ತಿನ ಮೆಟ್ಟಿಲುಗಳ ಮೇಲೆ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಉಪರಾಷ್ಟ್ರಪತಿ ಅವರನ್ನು ಅಪಹಾಸ್ಯ ಮಾಡಿದ ನಂತರ ರಾಜಕೀಯ ಗದ್ದಲ ಏರ್ಪಟ್ಟಿತು, ಆಡಳಿತಾರೂಢ ಬಿಜೆಪಿಯಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. \ No newline at end of file diff --git a/eesanje/url_47_212_9.txt b/eesanje/url_47_212_9.txt new file mode 100644 index 0000000000000000000000000000000000000000..2f72861565abd6af2143967088b072245d1db8c0 --- /dev/null +++ b/eesanje/url_47_212_9.txt @@ -0,0 +1,7 @@ +ದೇಶದಲ್ಲಿ ಏಕಪಕ್ಷ ಆಡಳಿತ ಸ್ಥಾಪನೆಗೆ ಬಿಜೆಪಿ ಹುನ್ನಾರ : ಖರ್ಗೆ +ನವದೆಹಲಿ, ಡಿ.20 (ಪಿಟಿಐ) – ಪ್ರಧಾನಿ ಮತ್ತು ಬಿಜೆಪಿಯವರು ದೇಶದಲ್ಲಿ ಏಕ ಪಕ್ಷದ ಆಡಳಿತವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ ಮತ್ತು ಅದಕ್ಕಾಗಿಯೇ ಸಂಸತ್ತಿನ ಸಂಸದರನ್ನು ಅಮಾನತು ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. +ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರಿಂದ ಹೇಳಿಕೆ ಬಯಸಿದ ಕಾರಣ 141 ಸಂಸದರನ್ನು ಅಮಾನತುಗೊಳಿಸಲಾಗಿದೆ, ಒಳನುಗ್ಗುವವರ ಪ್ರವೇಶಕ್ಕೆ ಅನುಕೂಲ ಮಾಡಿಕೊಟ್ಟ ಬಿಜೆಪಿ ಸಂಸದರು ಸ್ಕಾಟ್ -ಫ್ರೀ ಆಗಿದ್ದಾರೆ ಮತ್ತು ಇನ್ನೂ ಪ್ರಶ್ನಿಸಲಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಹೇಳಿದರು. ಇದು ಯಾವ ರೀತಿಯ ತನಿಖೆ ಎಂದು ಅವರು ಎಕ್ಸ್ ನಲ್ಲಿಪೋಸ್ಟ್ ಮಾಡಿದ್ದಾರೆ. +ಸಂಸತ್ ಒಳನುಗ್ಗುವವರು ತಿಂಗಳಿಂದ ಈ ಯೋಜನೆ ರೂಪಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು ಮತ್ತು ಈ ಭಾರಿ ಗುಪ್ತಚರ ವೈಫಲ್ಯಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ. ಸಂಸತ್ತಿನ ಬಹು-ಪದರದ ಭದ್ರತೆಯನ್ನು ಗಮನಿಸಿದರೆ, ಇಬ್ಬರು ಒಳನುಗ್ಗುವವರು ತಮ್ಮ ಶೂಗಳಲ್ಲಿ ಹಳದಿ ಅನಿಲ ಡಬ್ಬಿಗಳನ್ನು ಮರೆಮಾಡಲು ಮತ್ತು ಕಟ್ಟಡವನ್ನು ಪ್ರವೇಶಿಸಲು ಮತ್ತು ಭಾರತದ ಪ್ರಜಾಪ್ರಭುತ್ವದ ಗರ್ಭಗುಡಿಯನ್ನು ತಲುಪಲು ಹೇಗೆ ಯಶಸ್ವಿಯಾದರು ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. +ಆರಂಭದಲ್ಲೇ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸಿದ್ಧತೆ : ಗುಂಡೂರಾವ್ +ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ ಏಕ ಪಕ್ಷದ ಆಡಳಿತ ಸ್ಥಾಪಿಸಲು ಬಯಸುತ್ತದೆ. ಅವರು ಏಕ್ ಅಕೇಲಾ ಎಂದು ಮಾತನಾಡುತ್ತಾರೆ, ಇದು ಪ್ರಜಾಪ್ರಭುತ್ವವನ್ನು ಕೆಡವಲು ಸಮಾನವಾಗಿದೆ. ಇದು ನಿಖರವಾಗಿ ಅವರು ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುವ ಮೂಲಕ ಮಾಡಿದ್ದಾರೆ ಎಂದು ಖರ್ಗೆ ಹೇಳಿದರು. +ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಶ್ರೇಣಿಯಲ್ಲಿರುವ ಜನರನ್ನು ಶಿಕ್ಷಿಸುವ ಬದಲು, ಅವರು ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದುಕೊಂಡಿದ್ದಾರೆ, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ತಮ್ಮ ಸಂಸದರ ಅಮಾನತು ವಿರುದ್ಧ ಆಂದೋಲನ ನಡೆಸುತ್ತಿವೆ ಮತ್ತು ಭದ್ರತಾ ಲೋಪದ ವಿಷಯದ ಬಗ್ಗೆ ಗೃಹ ಸಚಿವರಿಂದ ಹೇಳಿಕೆಗೆ ಒತ್ತಾಯಿಸಿ ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ. \ No newline at end of file diff --git a/eesanje/url_47_213_1.txt b/eesanje/url_47_213_1.txt new file mode 100644 index 0000000000000000000000000000000000000000..117ad0fe46c30d880787751476b42e78f069303c --- /dev/null +++ b/eesanje/url_47_213_1.txt @@ -0,0 +1,12 @@ +ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಮುಸ್ಲಿಮರು 5 ಅರ್ಜಿಗಳು ವಜಾ +ಅಲಹಾಬಾದ್,ಡಿ.19-ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳು ಸಲ್ಲಿಸುವ ಪೂಜೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಐದು ಅರ್ಜಿಗಳನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದ ಕಾನೂನು ಹೋರಾಟದಲ್ಲಿ ಹಿಂದೂಗಳ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಿದ್ದರೆ, ಮುಸ್ಲಿಂ ವಕ್‍ಬೋರ್ಡ್ ಮಂಡಳಿಗಳಿಗೆ ಭಾರೀ ಹಿನ್ನಡೆಯಾಗಿದೆ. ಭಾರತೀಯ ಪುರತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆ ಆಧಾರದ ಮೇಲೆ ಗ್ಯಾನವ್ಯಾಪಿ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ಅವಕಾಶ ಕೊಡಬಾರದೆಂದು ಅಲಹಾಬಾದ್‍ನ ಹೈಕೋರ್ಟ್ ಒಟ್ಟು 5 ಅರ್ಜಿಗಳನ್ನು ಸಲ್ಲಿಸಲಾಗಿತ್ತು. +ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸುವ ಬಗ್ಗೆ ಹಿಂದೂ ಸಮುದಾಯ ಸಲ್ಲಿಸಿದ ಅರ್ಜಿಯನ್ನು ಹಾಗೂ ಬಾಕಿ ಉಳಿದಿರುವ ಸಿವಿಲ್ ಮೊಕದ್ದಮೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮಾನ್ ಇಂತೆ ಜಾಮೀಯ ಮಸೀದಿ, ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್‍ಬೋರ್ಡ್ ಸೇರಿ ಒಟ್ಟು ಐದು ಅರ್ಜಿಗಳನ್ನು ಸಲ್ಲಿಸಲಾಗಿತ್ತು. +ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಈ ಎಲ್ಲ ಅರ್ಜಿಗಳನ್ನು ವಜಾಗೊಳಿಸಿದೆ. ನ್ಯಾಯಮೂರ್ತಿ ರೋಹಿತ್ ರಂಜನ್ ಅಗ್ರವಾಲ್ ಅವರಿದ್ದ ಏಕಸದಸ್ಯ ಪೀಠ, ಸಲ್ಲಿಕೆ ಮಾಡಿರುವ ಐದು ಅರ್ಜಿಗಳ ಪೈಕಿ ಮೂರು ಅರ್ಜಿಗಳು 1991ರಲ್ಲಿ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದೆ. ಉಳಿದ ಎರಡು ಅರ್ಜಿಗಳು ಭಾರತೀಯ ಪುರತತ್ವ ಇಲಾಖೆ ಸಮೀಕ್ಷೆ ಆದೇಶದ ವಿರುದ್ಧವಾಗಿದೆ ಎಂದು ತೀರ್ಪು ನೀಡಿತು. +ರಾಷ್ಟ್ರೀಯ ಪ್ರಾಮುಖ್ಯತೆ ಹಾಗೂ 1991 ಕಾಯಿದೆ ಅನುಸಾರವಾಗಿ ಧಾರ್ಮಿಕ ಆರಾಧನೆಗಳನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈಗಾಗಲೇ ಈ ಬಗ್ಗೆ ಕಾನೂನಾತ್ಮಕವಾಗಿ ತನಿಖೆ ಹಾಗೂ ವಿಚಾರಣೆಗಳು ನಡೆಯುತ್ತಿದೆ. ಗ್ಯಾನವ್ಯಾಪಿ ಮಸೀದಿಯ ಸಮಗ್ರ ಸಮೀಕ್ಷೆಯನ್ನು ನಡೆಸಲು ಏಪ್ರಿಲ್ 8, 2021ರ ವಾರಣಾಸಿ ನ್ಯಾಯಾಲಯದ ಆದೇಶ ನೀಡಿತ್ತು. ಇದನ್ನು ಅಂಜುಮನ್ ಇಂತೇಜಾಮಿಯಾ ಮಸಾಜಿದ್ ಸಮಿತಿ (ಎಐಎಂಸಿ) ಮತ್ತು ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ ಬೋರ್ಡ್ ಪ್ರಶ್ನಿಸಿತ್ತು. +ಡಿಸೆಂಬರ್ 8ರಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರು ಎರಡು ಕಡೆಯ ವಾದವನ್ನು ಆಲಿಸಿದ ನಂತರ ಈ ತೀರ್ಪು ನೀಡಿದ್ದಾರೆ. ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಗ್ಯಾನವ್ಯಾಪಿ ಮಸೀದಿಯ ನಿರ್ವಹಣೆಯನ್ನು ನೋಡಿಕೊಳ್ಳುವ ಎಐಎಂಸಿ, ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿದೆ, ಇದರಲ್ಲಿ ಹಿಂದೂ ಅರ್ಜಿದಾರರು ಗ್ಯಾನವ್ಯಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಮರುಸ್ಥಾಪಿಸಲು ಕೋರಿದ್ದಾರೆ. +1991ರಲ್ಲಿ ಆದಿ ವಿಶ್ವೇಶ್ವರ ದೇಗುಲವನ್ನು ಪುನರ್ ನಿರ್ಮಿಸುವಂತೆ ವಾರಣಾಸಿ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣದಲ್ಲಿ ವಿವಾದಿತ ಜಾಗವನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಹಾಗೂ ಅಲ್ಲಿ ಪೂಜೆಗೆ ಅವಕಾಶ ನೀಡುವಂತೆ ಆಗ್ರಹ ಮಾಡಲಾಗಿತ್ತು. ಸೋಮನಾಥ ವ್ಯಾಸ್-ರಾಮನಾರಾಯಣ ಶರ್ಮಾ ಮತ್ತು ಹರಿಹರ ಪಾಂಡೆ ಅವರು ವಾರಣಾಸಿ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಿದ್ದರು. +ಸಲಿಂಗ ದಂಪತಿಗಳನ್ನು ಆಶೀರ್ವದಿಸಲು ಪೋಪ್ ಅನಮೋದನೆ +1991ರ ಪೂಜಾ ಸ್ಥಳಗಳ ಕಾಯಿದೆಯಡಿ ಆದಿ ವಿಶ್ವೇಶ್ವರ ದೇಗುಲ ಪ್ರಕರಣವನ್ನು ವಿಚಾರಣೆ ನಡೆಸುವಂತಿಲ್ಲ ಎಂದು ಮುಸ್ಲಿಮರ ಕಡೆಯವರು ವಾದಿಸಿದ್ದರು. ಈ ವಿವಾದವು ಸ್ವಾತಂತ್ರ್ಯ ಪೂರ್ವದಲ್ಲಿತ್ತು ಮತ್ತು ಗ್ಯಾನವ್ಯಾಪಿ ವಿವಾದದಲ್ಲಿ ಪೂಜಾ ಸ್ಥಳಗಳ ಕಾಯಿದೆಯು ಅನ್ವಯಿಸುವುದಿಲ್ಲ ಎಂದು ಹಿಂದೂಗಳ ಕಡೆಯಿಂದ ವಾದಿಸಲಾಗಿತ್ತು. +ಕಾಶೀ ವಿಶ್ವನಾಥ ಮಂದಿರಕ್ಕೆ ತಾಗಿಕೊಂಡಿದ್ದ ಆದಿ ವಿಶ್ವೇಶ್ವರ ದೇವಸ್ಥಾನ ಒಡೆದೇ ಗ್ಯಾನವ್ಯಾಪಿ ಮಂದಿರ ಕಟ್ಟಲಾಗಿದೆ. ಲಕ್ಷಕ್ಕೂ ಅಧಿಕ ಮಂದಿರಗಳು ಒಡೆಯಲಾಗಿದೆ, ಕೆಲ ಮಂದಿರವನ್ನೇ ಮಸೀದಿಯಾಗಿ ಪರಿವರ್ತಿಸಲಾಗಿದೆ. ಆದರೆ ಹಿಂದೂಗಳ ಮುಖ್ಯ ಶ್ರದ್ಧಾ ಹಾಗೂ ಭಕ್ತಿಯ ಕೇಂದ್ರವಾಗಿರುವ ಹಾಗೂ ಹಿಂದೂಗಳ ಮೂಲ ಆಗಿರುವ ಈ ಧಾರ್ಮಿಕ ಕೇಂದ್ರದಲ್ಲಿ ಮಸೀದಿ ತೆರವು ಮಾಡಿ, ದೇವಸ್ಥಾನ ಪುನರ್ ನಿರ್ಮಾಣ ಮಾಡಬೇಕು ಎಂದು ಕೋರಿ 1991ರಲ್ಲಿ ಕಾನೂನು ಹೋರಾಟ ಆರಂಭಗೊಂಡಿತ್ತು. +ಕಾಶ್ಮೀರದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಿದವರ ವಿರುದ್ಧ ಎಫ್‍ಐಆರ್ +1991ರ ಪ್ರಕರಣದ ವಿಚಾರಣೆಯನ್ನು ಸಹ ಅನುಮೋದಿಸಿರುವ ನ್ಯಾಯಾಲಯ, ಆರು ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಈ ಹಿಂದೆ ಹೈಕೋರ್ಟ್ ಆದೇಶ ನೀಡಿತ್ತು. \ No newline at end of file diff --git a/eesanje/url_47_213_10.txt b/eesanje/url_47_213_10.txt new file mode 100644 index 0000000000000000000000000000000000000000..ee04b10af72260c45b235b6a66f9666edc34cdde --- /dev/null +++ b/eesanje/url_47_213_10.txt @@ -0,0 +1,6 @@ +ಮುಂಬೈನ ಹೋಟೆಲ್‍ವೊಂದರಲ್ಲಿ 40 ಕೋಟಿ ರೂ.ಮೌಲ್ಯದ ಕೊಕೇನ್ ವಶ +ಮುಂಬೈ, ಡಿ.19 (ಪಿಟಿಐ) – ಸಿಯೆರಾ ಲಿಯೋನ್‍ನಿಂದ ಆಗಮಿಸಿದ ನಂತರ ಮುಂಬೈನ ಹೋಟೆಲ್‍ವೊಂದರಲ್ಲಿ ತಂಗಿದ್ದ ವ್ಯಕ್ತಿ ಬಳಿ ಇದ್ದ 40 ಕೋಟಿ ಮೌಲ್ಯದ 4 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‍ಐ) ತಿಳಿಸಿದೆ. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಡಿಆರ್‍ಐ ತಂಡವು ಮುಂಬೈ ವಿಮಾನ ನಿಲ್ದಾಣದ ಬಳಿಯ ಹೋಟೆಲ್ ಕೊಠಡಿಯಲ್ಲಿ ಶೋಧ ನಡೆಸಿತು ಮತ್ತು ಆರೋಪಿಯು ಟ್ರಾವೆಲ್ ಬ್ಯಾಗ್‍ನಲ್ಲಿ ಬಚ್ಚಿಟ್ಟಿದ್ದ ಎರಡು ಪ್ಯಾಕೆಟ್‍ಗಳಲ್ಲಿ ಇರಿಸಿದ್ದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. +ಸಿಯೆರಾ ಲಿಯೋನ್‍ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರಲ್ಲಿ ಒಬ್ಬರು ಡಿಆರ್‍ಐ ಲೆನ್ಸ್‍ನಲ್ಲಿದ್ದರು, ಏಕೆಂದರೆ ಅವರು ಭಾರತಕ್ಕೆ ಮಾದಕ ವಸ್ತುಗಳನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಸಂಸ್ಥೆ ಶಂಕಿಸಿತ್ತು ಈ ಆಧಾರದ ಮೇಲೆ ಆತನ ಹೋಟೆಲ್ ರೂಮ್ ತಪಾಸಣೆ ನಡೆಸಿದಾಗ ಕೋಕೆನ್ ಪತ್ತೆಯಾಗಿದೆ. +ಮತ್ತೆ ವಕ್ಕರಿಸಿದ ಕಿಲ್ಲರ್ ಕೊರೊನಾ, ಶುರುವಾಯ್ತು ಆತಂಕ +ಪಶ್ಚಿಮ ಆಫ್ರಿಕಾದ ದೇಶದಿಂದ ಮುಂಬೈಗೆ ಪ್ರಯಾಣಿಸುವಾಗ ಅವರು ಬ್ಯಾಗ್ ಅನ್ನು ಕೊಂಡೊಯ್ಯಲು ಅವರ ಬಳಿ ಲಭ್ಯವಿರುವ ಪ್ರಯಾಣ ದಾಖಲೆಗಳು ಪತ್ತೆಯಾಗಿದೆ ಎಂದು ಡಿಆರ್‍ಐ ತಿಳಿಸಿದೆ. ಫೀಲ್ಡ ಟೆಸ್ಟಿಂಗ್ ಕಿಟ್‍ನೊಂದಿಗೆ ಪರೀಕ್ಷಿಸಿದಾಗ ಆತನ ಬಳಿ ಇದ್ದ ವಸ್ತುವು ಕೊಕೇನ್ ಎಂದು ಕಂಡುಬಂದಿದೆ, ಇದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ (ಎನ್‍ಡಿಪಿಎಸ್) ಕಾಯ್ದೆಯನ್ನು ಒಳಗೊಂಡಿದೆ ಮತ್ತು ಅದನ್ನು ವಶಪಡಿಸಿಕೊಳ್ಳಲಾಗಿದೆ. +ಆರೋಪಿಯನ್ನು ಸ್ಥಳೀಯ ನ್ಯಾಯಾಲಯವು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಕೇಂದ್ರ ಸಂಸ್ಥೆ ತಿಳಿಸಿದೆ. ಆತ ಸಂಬಂಧ ಹೊಂದಿದ್ದ ಡ್ರಗ್ ಸಿಂಡಿಕೇಟ್‍ನ ಪ್ರಮುಖ ಸದಸ್ಯರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ತನಿಖೆ ನಡೆಯುತ್ತಿದೆ ಎಂದು ಹೇಳಿದೆ. \ No newline at end of file diff --git a/eesanje/url_47_213_11.txt b/eesanje/url_47_213_11.txt new file mode 100644 index 0000000000000000000000000000000000000000..a42a14dc1d87509b34aae005b528945110cf89c1 --- /dev/null +++ b/eesanje/url_47_213_11.txt @@ -0,0 +1,7 @@ +ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ +ನವದೆಹಲಿ,ಡಿ.18- ಕಳೆದ ವಾರ ಸಂಸತ್ತಿನ ಭದ್ರತೆ ಉಲ್ಲಂಘನೆ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಮತ್ತು ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯಿಂದಾಗಿ ಸಂಸತ್‍ನ ಉಭಯ ಸದನಗಳನ್ನು ಮುಂದೂಡಲಾಯಿತು.ಬೆಳಗ್ಗೆ ಸದನ ಆರಂಭವಾ ಗುತ್ತಿದ್ದಂತೆ ಪ್ರತಿಪಕ್ಷಗಳು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಇದರಿಂದ ಮೊದಲು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. ಸಂಸತ್ತಿನ ಭದ್ರತಾ ಉಲ್ಲಂಘನೆ ವಿಚಾರವಾಗಿ ಪ್ರತಿಪಕ್ಷಗಳ ಗದ್ದಲದ ನಡುವೆ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮತ್ತೆ ಮುಂದೂಡಲಾಯಿತು. +ಶನಿವಾರ ನಿಧನರಾದ ಕುವೈತ್‍ನ ಎಮಿರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರಿಗೆ ಸದನವು ಶ್ರದ್ಧಾಂಜಲಿ ಸಲ್ಲಿಸಿದ ನಂತರ, ಡಿಸೆಂಬರ್ 13ರಂದು ಭದ್ರತಾ ಉಲ್ಲಂಘನೆಯ ಘಟನೆಯ ನಂತರ ಲೋಕಸಭೆಯ ಸೆಕ್ರೆಟರಿಯೇಟ್ ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅವರು ಸದನಕ್ಕೆ ತಿಳಿಸಿ, ಸದನವನ್ನು ಸುಗಮವಾಗಿ ನಡೆಸಲು ಎಲ್ಲ ಸದಸ್ಯರ ಸಹಕಾರ ಕೋರಿದರು. +ಆದರೆ, ವಿರೋಧ ಪಕ್ಷದ ಸದಸ್ಯರು ಗೃಹ ಸಚಿವ ಶಾ ಅವರ ಹೇಳಿಕೆ ಮತ್ತು ರಾಜೀನಾಮೆಗೆ ಒತ್ತಾಯಿಸಿದರು. ಪ್ರತಿಪಕ್ಷದ ಕೆಲವು ಸಂಸದರು ತಮ್ಮ ಬೇಡಿಕೆಗಳಿರುವ ಫಲಕಗಳನ್ನು ಸಹ ಹಿಡಿದುಕೊಂಡಿದ್ದರು.ಸದನದೊಳಗೆ ಭಿತ್ತಿಪತ್ರ ತರುವುದನ್ನು ವಿರೋಧಿಸಿದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಇದು ಸದನದ ಘನತೆಯನ್ನು ಕುಗ್ಗಿಸುತ್ತದೆ ಎಂದರು. +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಭಿತ್ತಿಪತ್ರಗಳನ್ನು ಬೀಸದಂತೆ ಪ್ರತಿಪಕ್ಷದ ಸದಸ್ಯರಿಗೆ ಕೈಮುಗಿದು ಮನವಿ ಮಾಡಿಕೊಂಡರು. ಭಿತ್ತಿಪತ್ರಗಳನ್ನು ಹಿಡಿದುಕೊಳ್ಳದಂತೆ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಸಂಸದರು ಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯನ್ನು ನಿರ್ಲಕ್ಷಿಸಿದರು ಮತ್ತು ಘೋಷಣೆಗಳೊಂದಿಗೆ ತಮ್ಮ ಪ್ರತಿಭಟನೆ ಮುಂದುವರೆಸಿದರು. ಇದರಿಂದಾಗಿ ಸ್ಪೀಕರ್ 12 ಗಂಟೆವರೆಗೆ ಸದನದ ಕಲಾಪ ಮುಂದೂಡಿದರು. +ಕಳೆದ ಬುಧವಾರ 2001ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವ ದಿನ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಸಾಗರ್ ಶರ್ಮಾ ಮತ್ತು ಮನೋರಂಜನ್.ಡಿ ಎಂಬುವರು ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‍ಗೆ ಜಿಗಿದು ಬಣ್ಣದ ಹೊಗೆಯನ್ನು ಹರಡಿ ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿತ್ತು. \ No newline at end of file diff --git a/eesanje/url_47_213_12.txt b/eesanje/url_47_213_12.txt new file mode 100644 index 0000000000000000000000000000000000000000..48b45e66a85e58769973a2b1a3d3126ca5f7adff --- /dev/null +++ b/eesanje/url_47_213_12.txt @@ -0,0 +1,13 @@ +ಗಣರಾಜ್ಯೋತ್ಸವದಂದು ದುಷ್ಕೃತ್ಯಕ್ಕೆ ಉಗ್ರರ ಪ್ಲಾನ್, ಬೆಂಗಳೂರು, ಬಳ್ಳಾರಿಯಲ್ಲಿ ಎನ್‍ಐಎ ಶೋಧ +ನವದೆಹಲಿ,ಡಿ.18- ಜನವರಿ 26ರ ಗಣರಾಜ್ಯೋತ್ಸವದಂದು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದ ನಿಷೇಧಿತ ಪಿಎಫ್‍ಐನ 7 ಮಂದಿ ಕಾರ್ಯ ಕರ್ತರನ್ನು ವಶಕ್ಕೆ ಪಡೆದಿರುವ ಎನ್‍ಐಎ ದೇಶದ ವಿವಿಧೆಡೆ ದಾಳಿ ನಡೆಸಿ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದಿದೆ. ನಿಷೇಧಿತ ಪಿಎಫ್‍ಐ ಸಂಘಟನೆಯಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ಆರೋಪದ ಮೇಲೆ ಬಳ್ಳಾರಿಯ ಶಮೀವುಲ್ಲಾ, ಅಜಾಜ್ ಅಹಮ್ಮದ್ ಸುಲೇಮಾನ್, ತಬ್ರೇಜ್, ನಿಖಿಲ್ ಅಲಿಯಾಸ್ ಸೋಫಿಯಾನ್, ಮುಜಾಮಿಲ್ ಎಂಬುವರನ್ನು ಎನ್‍ಐಎ ವಶಕ್ಕೆ ಪಡೆದಿದೆ. +ಇದರಿಂದಾಗಿ ಭವಿಷ್ಯದಲ್ಲಿ ಸಂಭವಿಸಬಹುದಾದ ಭಾರೀ ಅನಾಹುತವೊಂದನ್ನು ಎನ್‍ಐಎ ತಪ್ಪಿಸಿದ್ದು, ವಶಪಡಿಸಿಕೊಂಡಿರುವ ಪಿಎಫ್‍ಐನ 7 ಕಾರ್ಯಕರ್ತರು ಗಣರಾಜ್ಯೋತ್ಸವಂದು ದೇಶದ ಹಲವು ಕಡೆ ಆತ್ಮಾಹುತಿ ದಾಳಿ ನಡೆಸಿ ಅಫ್ಘಾನಿಸ್ತಾನಕ್ಕೆ ಪರಾರಿಯಾಗಲು ಹೊಂಚು ಹಾಕಿದ್ದರು. +ಕರ್ನಾಟಕ, ದೆಹಲಿ, ಮಹಾರಾಷ್ಟ್ರ, ಉತ್ತರಪ್ರದೇಶ, ಜಾರ್ಖಂಡ್ ದೇಶದ ಒಟ್ಟು 41 ಕಡೆ ದಾಳಿ ನಡೆಸಿರುವ ಎನ್‍ಐಎ, ಭಯೋತ್ಪಾದನೆ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಿದೆ ಎಂದು ಗೊತ್ತಾಗಿದೆ. ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರಿನ 7 ಹಾಗೂ ಬಳ್ಳಾರಿಯ 12 ಕಡೆ ಸೇರಿದಂತೆ ಒಟ್ಟು ರಾಜ್ಯದ 19 ಕಡೆ ದಾಳಿಯಾಗಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಕೃತಿ ಲೇಔಟ್‍ನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರಿಕೊಳ್ಳುವ ತವಕದಲ್ಲಿದ್ದ ಮುನಿರುದ್ದೀನ್ ಎಂಬುವರ ಮನೆ ಮೇಲೆ ದಾಳಿ ನಡೆಸಲಾಗಿದೆ. +ಏಕಕಾಲಕ್ಕೆ 4 ಗುರಿಗಳನ್ನು ನಾಶಪಡಿಸುವ ಆಕಾಶ್ ಕ್ಷಿಪಣಿ ಪ್ರಯೋಗ ಯಶಸ್ವಿ +ದಾಳಿ ಸಂದರ್ಭದಲ್ಲಿ ಏಳು ಕೆಜಿ ಸೋಡಿಯಂ ನೇಟ್ರೇಟ್ ರಾಸಾಯನಿಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ರಾಸಾಯನಿಕ ವಸ್ತುಗಳನ್ನು ಬಾಂಬ್ ತಯಾರಿಕೆಗೆ ಸಂಗ್ರಹಿಸಡಲಾಗಿತ್ತೇ ಎಂಬ ಅನುಮಾನ ವ್ಯಕ್ತವಾಗಿದೆ. ಮೂಲತಃ ಎಲ್‍ಎಲ್‍ಬಿ ವ್ಯಾಸಂಗ ಮಾಡುತ್ತಿದ್ದ ಮುನಿರುದ್ದೀನ್ ಐಸಿಸ್ ಕಡೆ ಆಕರ್ಷಿತನಾಗಿದ್ದ ಎಂದು ತಿಳಿದುಬಂದಿದೆ. ಇನ್ನು ಬೆಂಗಳೂರಿನ ಶಿವಾಜಿನಗರ, ಪುಲಕೇಶಿನಗರ, ಸುಲ್ತಾನ್ ಪಾಳ್ಯ , ಆರ್.ಟಿ.ನಗರ, ಜೆ.ಪಿ.ನಗರ, ಚಿನ್ನಪ್ಪ ಗಾರ್ಡನ್ ಸೇರಿದಂತೆ ಹಲವಾರು ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಕೆಲವು ಮಾಹಿತಿಯನ್ನು ಕಲೆಹಾಕಿದೆ. +ಸಂಪತ್ ಎಂಬುವರಿಗೆ ಸೇರಿದ ಈ ಮನೆಯಲ್ಲಿ ಮುನಿರುದ್ದೀನ್ ಕಳೆದ ಹಲವು ತಿಂಗಳಿಂದ ಬಾಡಿಗೆ ಪಡೆದುಕೊಂಡು ವಾಸವಿದ್ದ ಎಂದು ತಿಳಿದುಬಂದಿದೆ. ಇದೇ ರೀತಿ ಬಳ್ಳಾರಿ ನಗರದದ 9 ಸ್ಥಳಗಳಲ್ಲಿ ಎನ್‍ಐಎ ತಂಡ ದಾಳಿ ನಡೆಸಿದ್ದು, ನಿಷೇತ ಸಂಘಟನೆ ಮತ್ತು ಭಯೋತ್ಪಾದಕರೊಂದಿಗೆ ಗುರುಸಿಕೊಂಡ ಹಿನ್ನಲೆಯಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. +ಬಳ್ಳಾರಿ ಪೊಲೀಸರ ಸಹಕಾರದೊಂದಿಗೆ ಭದ್ರತೆ ಪಡೆದು, ಬಳ್ಳಾರಿ ನಗರದ ಕೌಲ್ ಬಜಾರ್, ಜಾಗೃತಿ ನಗರ ಸೇರಿ ಇನ್ನಿತರ ಎನ್‍ಐಎ ಅಕಾರಿಗಳು ದಾಳಿ ಮಾಡಿದೆ. ಡಿಸೆಂಬರ್ 2ರಂದು ನಕಲು ನೋಟು ಮುದ್ರಣ ಮತ್ತು ಚಲಾವಣೆಗೆ ಸಂಬಂಸಿದಂತೆ ದಾಳಿ ಮಾಡಿ 19 ವರ್ಷದ ಯುವಕನನ್ನು ಎನ್‍ಐಎ ತಂಡ ಬಂಸಿತ್ತು. ಆ ಬಳಿಕ ಇದು ಮತ್ತೊಂದು ಬೃಹತ್ ದಾಳಿಯಾಗಿದೆ. +ಕಳೆದ ವಾರವಷ್ಟೇ ಎನ್‍ಐಎ ದೇಶದ ವಿವಿಧೆಡೆ ಮಿಂಚಿನ ದಾಳಿ ನಡೆಸಿ ಐಸಿಎಸ್ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ ಹೊಂದಿ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಿತ್ತು. ಅಲ್ಲದೆ, ಪೂನಾ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರನ್ನು ವಶಕ್ಕೆ ಪಡೆದಿತ್ತು. ಜಾರ್ಖಂಡ್ ರಾಜಧಾನಿ ರಾಂಚಿ, ದೆಹಲಿಯ ಅತೀ ಸೂಕ್ಷ್ಮ ಪ್ರದೇಶಗಳು, ಮಹಾರಾಷ್ಟ್ರದ ಕೆಲವೆಡೆಯೂ ದಾಳಿ ನಡೆದಿದೆ. +ಮೂಲಗಳ ಪ್ರಕಾರ, ವಿದ್ಯಾವಂತ ಯುವಕರನ್ನು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಯಾಗಲು ಬ್ರೈನ್‍ವಾಶ್ ಮಾಡಲಾಗುತ್ತಿತ್ತೆಂಬ ಮಾಹಿತಿ ಆಧಾರದ ಮೇಲೆ ಈ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.ಕಳೆದ ಡಿ.9ರಂದು ಬೆಂಗಳೂರು ಮತ್ತು ಪೂನಾದ 44 ಕಡೆಗಳಲ್ಲಿ ದಾಳಿ ಮಾಡಲಾಗಿತ್ತು. ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಮೋರ್ ರಸ್ತೆಯ ಆಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್‍ಐಎ 16 ಲಕ್ಷಕ್ಕೂ ಹೆಚ್ಚು ನಗದು, ಲ್ಯಾಪ್‍ಟಾಪ್ ಸೇರಿದಂತೆ ಕೆಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. +ಮೂಲತಃ ಮುಂಬೈ ಮೂಲದವನಾದ ಅಬ್ಬಾಸ್ ಪುಲಕೇಶಿ ನಗರದಲ್ಲಿ ಧರ್ಮಬೋಧನೆ ಮಾಡುತ್ತಿದ್ದ ಎನ್ನಲಾಗಿದೆ. ಮೊದಲು ಈತನನ್ನು ವಿಚಾರಣೆ ನಡೆಸಿದ್ದ ಎನ್‍ಐಎ ಅಕಾರಿಗಳು ನಂತರ ಸೂಕ್ತ ಮಾಹಿತಿ ಕಲೆ ಹಾಕಿ ಬಂಧಿಸಿದ್ದರು. ಕಳೆದ 3 ತಿಂಗಳ ಅವಧಿಯಲ್ಲೇ ಎನ್‍ಐಎ ಅಧಿಕಾರಿಗಳು 15ಕ್ಕೂ ಹೆಚ್ಚು ಶಂಕಿತ ಉಗ್ರರನ್ನು ಬಂಧಿಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. +ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು ಉಗ್ರರ ಸ್ಲೀಪರ್‌ಸೆಲ್ ಆಗಿದೆ : ಯತ್ನಾಳ್ +ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ ಸಾಫ್ಟ್‍ವೇರ್ ಉದ್ಯೋಗಿಯಾಗಿದ್ದು, ಐಸಿಸ್ ಉಗ್ರರ ಜೊತೆ ಸಂಪರ್ಕ ಹೊಂದಿದ್ದ. ಟ್ಯಾನರಿ ರಸ್ತೆಯಲ್ಲಿ ಉರ್ದು ಶಾಲೆ ನಡೆಸುವ ಈತ ವಿದ್ಯಾವಂತ ಮುಸ್ಲಿಂ ಯುವಕರನ್ನು ಐಸಿಸ್ ಕಡೆ ಸೆಳೆಯುವಲ್ಲಿ ನಿರತನಾಗಿದ್ದ ಎಂಬ ಖಚಿತ ಮಾಹಿತಿ ಆಧಾರದ ಮೇರೆಗೆ ಬಂಧಿದ್ದರು. ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಘಟನೆ ಸಕ್ರಿಯವಾಗಿದ್ದು, ಕೆಲ ಮೂಲಭೂತವಾದಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳುತ್ತದೆ ಎಂಬ ಆರೋಪವಿದೆ. ಹೀಗಾಗಿಯೇ ತಿಂಗಳಲ್ಲಿ 2 ರಿಂದ 3 ಬಾರಿ ದೇಶಾದ್ಯಂತ ಎನ್‍ಐಎ ದಾಳಿ ನಡೆಸುವ ಮೂಲಕ ಭಯೋತ್ಪಾದನೆಯಲ್ಲಿ ತೊಡಗುವ ಮತಾಂತರರನ್ನು ಎಡೆಮುರಿ ಕಟ್ಟುತ್ತಿದೆ. \ No newline at end of file diff --git a/eesanje/url_47_213_2.txt b/eesanje/url_47_213_2.txt new file mode 100644 index 0000000000000000000000000000000000000000..308c627820734b89d9c5c2afff9515bea444ee1a --- /dev/null +++ b/eesanje/url_47_213_2.txt @@ -0,0 +1,6 @@ +ಮೋದಿ ನಾಯಕತ್ವಕ್ಕೆ ಜಾಗತೀಕ ಮನ್ನಣೆ : ಭೂಪೇಂದರ್ +ನವದೆಹಲಿ, ಡಿ 19 (ಪಿಟಿಐ) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಜಾಗತಿಕ ಸ್ಥಾನವನ್ನು ಗಳಿಸಿದೆ ಮತ್ತು ನಾವೀನ್ಯತೆ ಮತ್ತು ತಂತ್ರಜ್ಞಾನದಲ್ಲಿ ಅದರ ನಾಯಕತ್ವವನ್ನು ಜಗತ್ತು ಗುರುತಿಸಿದೆ ಎಂದು ಕೇಂದ್ರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. +ಭಾರತವು ಕೇವಲ 615 ಕೋಟಿ ರೂಪಾಯಿ ವೆಚ್ಚದಲ್ಲಿ ಯಶಸ್ವಿಯಾಗಿ ಚಂದ್ರನನ್ನು ತಲುಪಿದೆ. ಕೋವಿಡ್-19 ಅನ್ನು ಎದುರಿಸುವಲ್ಲಿ ಭಾರತದ ಪ್ರಯತ್ನಗಳನ್ನು ಜಗತ್ತು ಶ್ಲಾಘಿಸಿದೆ. ಐಎಂಎಫ್, ವಿಶ್ವ ಬ್ಯಾಂಕ್ ಮತ್ತು ಇತರ ಅಂತರರಾಷ್ಟ್ರೀಯ ಸಂಸ್ಥೆಗಳು ಭಾರತದ ಗಮನಾರ್ಹ ಆರ್ಥಿಕ ಚೇತರಿಕೆಯನ್ನು ಒಪ್ಪಿಕೊಂಡಿವೆ, ಚೀನಾ ಮತ್ತು ಅಮೆರಿಕವನ್ನ್ನು ಮೀರಿಸಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. +ಆಪಲ್ ಮತ್ತು ಫಾಕ್ಸ್‍ಕಾನ್‍ನಂತಹ ಕಂಪನಿಗಳನ್ನು ಆಕರ್ಷಿಸುವ ಮೂಲಕ ಭಾರತವು ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ಭಾರತವು ಜಾಗತಿಕ ಮನ್ನಣೆ ಮತ್ತು ಸ್ಥಾನಮಾನವನ್ನು ಗಳಿಸಿದೆ ಎಂದು ಯಾದವ್ ಹೇಳಿದರು, ಎಲಿಫೆಂಟ್ ವಿಸ್ಪರರ್ಸ್‍ನಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಪಡೆದ ಸಾಕ್ಷ್ಯಚಿತ್ರಗಳು ಭಾರತದ ಶ್ರೇಷ್ಠತೆಯನ್ನು ಪ್ರದರ್ಶಿಸುತ್ತವೆ ಎಂದು ಸಚಿವರು ಹೇಳಿದರು. +ಮಣಿಪುರ ಜನಾಂಗೀಯ ಗಲಭೆ ತನಿಖೆ ಪರಿಶೀಲನೆಗೆ ಮುಂದಾದ ಸೂದ್ +ದುಬೈ ಹವಾಮಾನ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಲು ಪ್ರಧಾನಿ ಮೋದಿ ಅವರನ್ನು ಯುಎಇ ಆಹ್ವಾನಿಸಿದೆ. ಭಾರತದ ಸ್ಟಾರ್ಟ್ -ಅಪ್ ಸಂಸ್ಕøತಿಯು ಅಭಿವೃದ್ಧಿ ಹೊಂದುತ್ತಿದೆ, ಗಮನಾರ್ಹ ಏರಿಕೆ ಮತ್ತು ಉದ್ಯೋಗದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿದೆ ಎಂದು ಯಾದವ್ ಹೇಳಿದರು. ಯುನಿಕಾರ್ನ್‍ಗಳ ಸೃಷ್ಟಿಕರ್ತರಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_213_3.txt b/eesanje/url_47_213_3.txt new file mode 100644 index 0000000000000000000000000000000000000000..1f4c7489785f20a9a6ec98129e524d61e4d692c3 --- /dev/null +++ b/eesanje/url_47_213_3.txt @@ -0,0 +1,9 @@ +10ನೇ ತರಗತಿ ನಂತರ ಶಾಲೆ ಡ್ರಾಪ್‍ ಔಟ್ ಪ್ರಕರಣ ಶೇ.20ಕ್ಕೆ ಏರಿಕೆ +ನವದೆಹಲಿ,ಡಿ.19- ಕಳೆದ ಶೈಕ್ಷಣಿಕ ವರ್ಷದಲ್ಲಿ ದೇಶದಲ್ಲಿ 10ನೇ ತರಗತಿ ಶಾಲೆ ಬಿಡುವವರ ಪ್ರಮಾಣ ಶೇ.20.6 ರಷ್ಟು ಏರಿಕೆಯಾಗಿದೆ. ಶಾಲೆ ಬಿಡುವವರ ಸಂಖ್ಯೆ ಒಡಿಶಾದಲ್ಲಿ ಅತಿ ಹೆಚ್ಚು ದರ ದಾಖಲಾಗಿದ್ದು, ನಂತರದ ಸ್ಥಾನ ಬಿಹಾರದಲ್ಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. +ಡಿಎಂಕೆ ಸಂಸದ ಕಲಾನಿ ವೀರಸ್ವಾಮಿ ಅವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಿರ್ದಿಷ್ಟ ಡ್ರಾಫ್‍ಔಟ್ ಶೇಕಡಾವಾರುಗಳನ್ನು ಒದಗಿಸಿದ್ದಾರೆ. ಒಡಿಶಾದಲ್ಲಿ ಶೇಕಡಾ 49.9 ರಷ್ಟು ಡ್ರಾಪ್‍ಔಟ್ ದರ ದಾಖಲಾಗಿದ್ದರೆ, ಬಿಹಾರದಲ್ಲಿ 10 ನೇ ತರಗತಿಯಲ್ಲಿ ಶೇಕಡಾ 42.1 ರಷ್ಟು ಡ್ರಾಪ್‍ಔಟ್ ದರವಿದೆ ಎಂದು ಅವರು ಉಲ್ಲೇಖಿಸಿದ್ದಾರೆ. +10ನೇ ತರಗತಿಯ ನಂತರ ಸರಿಸುಮಾರು 3.5 ಮಿಲಿಯನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸುತ್ತಾರೆ ಎಂದು ಸೂಚಿಸುವ ಶಿಕ್ಷಣ ಸಚಿವಾಲಯದ ವಿಶ್ಲೇಷಣೆಯ ಬಗ್ಗೆ ಸರ್ಕಾರದ ಅರಿವಿನ ಬಗ್ಗೆ ಡಿಎಂಕೆ ಸಂಸದ ಕಲಾನಿ ವೀರಸ್ವಾಮಿ ಅವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವರು ಸೂಕ್ತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. +2022 ರ 10 ನೇ ತರಗತಿ ಪರೀಕ್ಷೆಗೆ ಹಾಜರಾದ 1,89,90,809 ವಿದ್ಯಾರ್ಥಿಗಳ ಪೈಕಿ 29,56,138 ವಿದ್ಯಾರ್ಥಿಗಳು ಮುಂದಿನ ತರಗತಿಗೆ ದಾಖಲಾಗಿಲ್ಲ ಎನ್ನುವುದನ್ನು ಶಿಕ್ಷಣ ಸಚಿವರು ಕೆಳಮನೆಗೆ ತಿಳಿಸಿದರು. ಶಾಲೆಗಳಿಗೆ ಹಾಜರಾಗದಿರುವುದು, ಶಾಲಾ ಸೂಚನೆಗಳನ್ನು ಅರ್ಥಮಾಡಿಕೊಳ್ಳುವಲ್ಲಿನ ಸವಾಲುಗಳು, ಅಧ್ಯಯನದಲ್ಲಿ ಆಸಕ್ತಿಯ ಕೊರತೆ, ಪ್ರಶ್ನೆ ಪತ್ರಿಕೆಗಳ ತೊಂದರೆ ಮಟ್ಟ, ಅರ್ಹ ಶಿಕ್ಷಕರ ಕೊರತೆ, ಪೋಷಕರಿಂದ ಸಾಕಷ್ಟು ಬೆಂಬಲ ಸೇರಿದಂತೆ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ವೈಫಲ್ಯಕ್ಕೆ ಕಾರಣವಾಗಿದೆ. +ಕಾಶ್ಮೀರದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಿದವರ ವಿರುದ್ಧ ಎಫ್‍ಐಆರ್ +ಶಿಕ್ಷಕರು, ಮತ್ತು ಶಾಲೆಗಳು, ಇತರವುಗಳ ಜೊತೆಗೆ, ಶಿಕ್ಷಣವು ಸಂವಿಧಾನದ ಏಕಕಾಲಿಕ ಪಟ್ಟಿಯೊಳಗೆ ಬರುತ್ತದೆ ಮತ್ತು ಹೆಚ್ಚಿನ ಶಾಲೆಗಳು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ಶಿಕ್ಷಣ ಸಚಿವರು ಹೇಳಿದರು. +ಶಿಕ್ಷಣ ಸಚಿವಾಲಯವು ಕಳೆದ ನಾಲ್ಕು ವರ್ಷಗಳಲ್ಲಿ (2018-19 ರಿಂದ 2021-22) 10 ನೇ ತರಗತಿಗೆ ರಾಜ್ಯವಾರು ಡ್ರಾಪ್‍ಔಟ್ ದರಗಳನ್ನು ಪ್ರಸ್ತುತಪಡಿಸಿದೆ. ಒಡಿಶಾ ಮತ್ತು ಬಿಹಾರದ ಜೊತೆಗೆ, ಮೇಘಾಲಯ, ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಗುಜರಾತ್ ಮತ್ತು ತೆಲಂಗಾಣದಂತಹ ರಾಜ್ಯಗಳು ಹೆಚ್ಚಿನ ಡ್ರಾಪ್‍ಔಟ್ ಪ್ರಕರಣಗಳು ವರದಿಯಾಗುತ್ತದೆಯಂತೆ. +ಉತ್ತರ ಪ್ರದೇಶ, ತ್ರಿಪುರಾ, ತಮಿಳುನಾಡು, ಮಣಿಪುರ (ಬಿಡುವವರಿಲ್ಲ), ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ದೆಹಲಿ ರಾಜ್ಯಗಳಲ್ಲಿ ಡ್ರಾಪ್‍ಔಟ್ ದರವನ್ನು 10 ಪ್ರತಿಶತಕ್ಕಿಂತ ಕಡಿಮೆಯಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ, ಅಸ್ಸಾಂ ಸುಧಾರಣೆಯನ್ನು ತೋರಿಸಿದೆ, ಅದರ ಡ್ರಾಪ್‍ಔಟ್ ದರವು ಶೇ.44ರಿಂದ ಶೇ.28.3 ಕ್ಕೆ ಇಳಿದಿದೆ. \ No newline at end of file diff --git a/eesanje/url_47_213_4.txt b/eesanje/url_47_213_4.txt new file mode 100644 index 0000000000000000000000000000000000000000..f026e30d8aafeeef962ecb27e15055cc0ade2a8d --- /dev/null +++ b/eesanje/url_47_213_4.txt @@ -0,0 +1,8 @@ +ರಾಮ ಮಂದಿರ ಉದ್ಘಾಟನಾಗೆ ಅಡ್ವಾಣಿ-ಜೋಶಿ ಗೈರು +ಅಯೋಧ್ಯೆ,ಡಿ.19- ಶ್ರೀರಾಮ ಮಂದಿರದ ಕನಸು ಕಂಡಿದ್ದ, ದೇಶಾದ್ಯಂತ ಅದಕ್ಕಾಗಿ ಹೋರಾಟ ಮಾಡಿದ್ದ ಬಿಜೆಪಿ ಹಿರಿಯರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಅದೃಷ್ಟವಿಲ್ಲ.ಈ ಇಬ್ಬರು ಹಿರಿಯ ನಾಯಕರ ಆರೋಗ್ಯ ಮತ್ತು ವಯಸ್ಸಿನ ಕಾರಣ ಜನವರಿ ತಿಂಗಳು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. +ಇಬ್ಬರೂ ಹಿರಿಯರು ಮತ್ತು ಅವರ ವಯಸ್ಸನ್ನು ಪರಿಗಣಿಸಿ, ಅವರನ್ನು ಬರದಂತೆ ವಿನಂತಿಸಲಾಗಿತ್ತು. ಅದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ ಎಂದು ರಾಮಮಂದಿರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.ಜನವರಿ 22ರಂದು ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಜನವರಿ 15ರೊಳಗೆ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಮತ್ತು ಪ್ರಾಣ ಪ್ರತಿಷ್ಠಾದ ಪೂಜೆಯು ಜನವರಿ 16 ರಿಂದ ಪ್ರಾರಂಭವಾಗಲಿದೆ ಮತ್ತು ಜನವರಿ 22ರವರೆಗೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. +ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಖುದ್ದು ಆಹ್ವಾನಿಸಲು ಮೂವರು ಸದಸ್ಯರ ತಂಡ ರಚಿಸಲಾಗಿದೆ. ಸಮಾರಂಭದಲ್ಲಿ ಆರು ಪ್ರಾಚೀನ ಮಠಗಳ ಶಂಕರಾಚಾರ್ಯರು, ಸರಿಸುಮಾರು 150 ಋಷಿಗಳು, 4,000 ಸಂತರು ಮತ್ತು 2,200 ಇತರ ಗಣ್ಯ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. +ವಾರಣಾಸಿಯ ಕಾಶಿ ವಿಶ್ವನಾಥ ಮತ್ತು ಜಮ್ಮುವಿನ ವೈಷ್ಣೋದೇವಿ ದೇಗುಲದಂತಹ ಪ್ರಮುಖ ದೇವಾಲಯಗಳ ಮುಖ್ಯಸ್ಥರಿಗೆ ಆಮಂತ್ರಣಗಳನ್ನು ನೀಡಲಾಗಿದೆ. ಆಧ್ಯಾತ್ಮಿಕ ನಾಯಕ ದಲೈ ಲಾಮಾ, ಕೇರಳದ ಮಾತಾ ಅಮೃತಾನಂದಮಯಿ ಮತ್ತು ಯೋಗ ಗುರು ಬಾಬಾ ರಾಮ್‍ದೇವ್ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂವಿಧಾನಿಕ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ. +ಗೋವಾ ವಿಮೋಚನೆ ವೇಳೆ ಹುತಾತ್ಮರಾದವರಿಗೆ ರಾಷ್ಟ್ರಪತಿ ಗೌರವ +ನಟರಾದ ರಜನಿಕಾಂತ್, ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ರಾಮಾಯಣದ ನಟ ಅರುಣ್ ಗೋವಿಲ್, ಚಲನಚಿತ್ರ ನಿರ್ಮಾಪಕ ಮಧುರ್ ಭಂಡಾರ್ಕರ್, ಮತ್ತು ಪ್ರಮುಖ ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಖ್ಯಾತ ಚಿತ್ರಕಲಾವಿದ ವಾಸುದೇವ್ ಕಾಮತ್, ಇಸ್ರೋ ನಿರ್ದೇಶಕ ನೀಲೇಶ್ ದೇಸಾಯಿ ಸಹ ಭಾಗವಹಿಸುವ ನಿರೀಕ್ಷೆಯಿದೆ. +ಜನವರಿ 24ರಿಂದ ಮುಂದಿನ 48 ದಿನಗಳವರೆಗೆ ಹಿಂದೂ ಆಚರಣೆಗಳು ಮತ್ತು ಸಂಪ್ರದಾಯಗಳ ಪ್ರಕಾರ ಮಂಡಲ ಪೂಜೆ ನಿಗದಿಪಡಿಸಲಾಗಿದೆ. ಜನವರಿ 23ರಂದು ಭಕ್ತಾದಿಗಳಿಗೆ ದೇವಾಲಯವು ತೆರೆಯಲಿದೆ. ಅಯೋಧ್ಯೆಯ ಮೂರು ಸ್ಥಳಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಮಠಗಳು, ದೇವಾಲಯಗಳು ಮತ್ತು ಭಕ್ತರಿಗೆ ಮನೆಗಳು ನೀಡುವ 600 ಕೊಠಡಿಗಳೊಂದಿಗೆ ಸಾಕಷ್ಟು ವಸತಿ ಸೌಕರ್ಯ ಒದಗಿಸುವ ಬಗ್ಗೆ ರೈ ಭರವಸೆ ನೀಡಿದ್ದಾರೆ. ರಾಮ ಜನ್ಮಭೂಮಿ ಸಂಕೀರ್ಣದೊಳಗೆ ರಾಮ್ ಕಥಾ ಕುಂಜ್ ಕಾರಿಡಾರ್ ನಿರ್ಮಿಸಲು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಿಡಾರ್ ಭಗವಾನ್ ರಾಮನ ಜೀವನದ 108 ಮಹತ್ವದ ಘಟನೆಗಳನ್ನು ವಿವರಿಸುವ ಕೋಷ್ಟಕವನ್ನು ಪ್ರದರ್ಶಿಸಲಿದೆ. \ No newline at end of file diff --git a/eesanje/url_47_213_5.txt b/eesanje/url_47_213_5.txt new file mode 100644 index 0000000000000000000000000000000000000000..7b57cf9cab77895fa1d2139d35ac401a03925d8f --- /dev/null +++ b/eesanje/url_47_213_5.txt @@ -0,0 +1,8 @@ +ಕಾಶ್ಮೀರದಲ್ಲಿ ರೋಹಿಂಗ್ಯಾಗಳಿಗೆ ಆಶ್ರಯ ನೀಡಿದವರ ವಿರುದ್ಧ ಎಫ್‍ಐಆರ್ +ಜಮ್ಮು, ಡಿ 19 (ಪಿಟಿಐ) ರೋಹಿಂಗ್ಯಾಗಳಿಗೆ ಆಶ್ರಯ ಮತ್ತು ಸರ್ಕಾರಿ ಸವಲತ್ತುಗಳನ್ನು ಒದಗಿಸುವಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಇಲ್ಲಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಸತ್ವಾರಿ, ತ್ರಿಕೂಟ ನಗರ, ಬಾಗ್-ಎ-ಬಾಹು, ಚನ್ನಿ ಹಿಮ್ಮತ್, ನೌಬಾದ್, ಡೊಮಾನಾ ಮತ್ತು ನಗ್ರೋಟಾ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. +ವಿದೇಶಿ ವಲಸಿಗರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎಫ್‍ಐಆರ್‍ಗಳನ್ನು ದಾಖಲಿಸಲಾಗಿದೆ ಮತ್ತು ಅವರಿಗೆ ಸರ್ಕಾರದ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ಅಧಿಕಾರಿ ಹೇಳಿದರು. ಮ್ಯಾಜಿಸ್ಟ್ರೇಟ್‍ಗಳ ಸಮ್ಮುಖದಲ್ಲಿ ರೋಹಿಂಗ್ಯಾಗಳಿಗೆ ವಸತಿ ಇರುವ ವಿವಿಧ ಸ್ಥಳಗಳಲ್ಲಿ ಮತ್ತು ಫೆಸಿಲಿಟೇಟರ್‍ಗಳ ವಸತಿ ಸ್ಥಳಗಳಲ್ಲಿ ಶೋಧ ನಡೆಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. +ಶೋಧದ ಸಮಯದಲ್ಲಿ, ಅಕ್ರಮವಾಗಿ ಸಂಪಾದಿಸಿದ ಭಾರತೀಯ ದಾಖಲೆಗಳಾದ ಪ್ಯಾನ್ ಕಾರ್ಡ್‍ಗಳು, ಆಧಾರ್ ಕಾರ್ಡ್‍ಗಳು, ಬ್ಯಾಂಕ್ ದಾಖಲೆಗಳು ಮತ್ತು ಇತರ ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದರು. ಪ್ರಕರಣದ ಕುರಿತು ತನಿಖೆ ಆರಂಭವಾಗಿದ್ದು, ಇತರ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು. +ಭವಿಷ್ಯದಲ್ಲಿ ಇಂತಹ ಎಲ್ಲಾ ಸುಸ್ತಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ. ಒಂದು ದಿನದ ಹಿಂದೆ, ಜಿಲ್ಲೆಯಲ್ಲಿ ರೋಹಿಂಗ್ಯಾಗಳ ವಿರುದ್ಧದ ದಮನದ ಸಂದರ್ಭದಲ್ಲಿ ಕಿಶ್ತ್ವಾರ್ ಜಿಲ್ಲೆಯ ಪೊಲೀಸರು ಆಧಾರ್ ಕಾರ್ಡ್‍ಗಳಂತಹ ಅಕ್ರಮವಾಗಿ ಪಡೆದ ದಾಖಲೆಗಳನ್ನು ವಶಪಡಿಸಿಕೊಂಡ ನಂತರ ಪ್ರಕರಣವನ್ನು ದಾಖಲಿಸಿದ್ದಾರೆ. +ಗಣರಾಜ್ಯೋತ್ಸವದಂದು ದುಷ್ಕೃತ್ಯಕ್ಕೆ ಉಗ್ರರ ಪ್ಲಾನ್, ಬೆಂಗಳೂರು, ಬಳ್ಳಾರಿಯಲ್ಲಿ ಎನ್‍ಐಎ ಶೋಧ +ಭಾರತೀಯ ದಂಡ ಸಂಹಿತೆಯ 420 (ವಂಚನೆ), 467 (ಪ್ರಮುಖ ದಾಖಲೆಗಳ ಫೋರ್ಜರಿ), 468 (ವಂಚನೆಯ ಉದ್ದೇಶಕ್ಕಾಗಿ ಫೋರ್ಜರಿ) ಮತ್ತು 471 (ನಿಜವಾದ ನಕಲಿ ದಾಖಲೆಯಾಗಿ ಬಳಸುವುದು) ಸೇರಿದಂತೆ ಪೊಲೀಸ್ ಠಾಣೆ ದಚನ್‍ನಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ರೋಹಿಂಗ್ಯಾಗಳು ಮ್ಯಾನ್ಮಾರ್‍ನಿಂದ ಬಂದ ಬಂಗಾಳಿ-ಉಪಭಾಷೆಯನ್ನು ಮಾತನಾಡುವ ಮುಸ್ಲಿಂ ಅಲ್ಪಸಂಖ್ಯಾತರು. +ತಮ್ಮ ದೇಶದಲ್ಲಿ ಕಿರುಕುಳದ ನಂತರ, ಅನೇಕ ರೋಹಿಂಗ್ಯಾಗಳು ಬಾಂಗ್ಲಾದೇಶದ ಮೂಲಕ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದರು ಮತ್ತು ಜಮ್ಮು ಮತ್ತು ದೇಶದ ಇತರ ಭಾಗಗಳಲ್ಲಿ ಆಶ್ರಯ ಪಡೆದಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ 13,700 ವಿದೇಶಿಯರು ಜಮ್ಮು ಮತ್ತು ಜಮ್ಮು ಮತ್ತು ಕಾಶ್ಮೀರದ ಇತರ ಜಿಲ್ಲೆಗಳಲ್ಲಿ ನೆಲೆಸಿದ್ದಾರೆ, ಅಲ್ಲಿ ಅವರ ಜನಸಂಖ್ಯೆಯು 2008 ಮತ್ತು 2016 ರ ನಡುವೆ 6,000 ಕ್ಕಿಂತ ಹೆಚ್ಚಾಗಿದೆ. \ No newline at end of file diff --git a/eesanje/url_47_213_6.txt b/eesanje/url_47_213_6.txt new file mode 100644 index 0000000000000000000000000000000000000000..54809c93535c6c3c4108ee0ea6594a26b7c31ee3 --- /dev/null +++ b/eesanje/url_47_213_6.txt @@ -0,0 +1,5 @@ +ಗಡಿಯಲ್ಲಿ ಹೆರಾಯಿನ್ ಸಾಗಿಸುತ್ತಿದ್ದ ಎರಡು ಡ್ರೋಣ್ ಪತ್ತೆ +ಚಂಡೀಗಢ, ಡಿ 19 (ಪಿಟಿಐ) ಪಂಜಾಬ್‍ನ ಅಮೃತಸರದ ಭಾರತ-ಪಾಕಿಸ್ತಾನ ಗಡಿಯ ಬಳಿ ಎರಡು ಡ್ರೋನ್‍ಗಳು ಮತ್ತು ಸುಮಾರು ಒಂದು ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‍ಎಫ್ ವಕ್ತಾರರು ತಿಳಿಸಿದ್ದಾರೆ. +ಇಂದು ಮುಂಜಾನೆ ಅಮೃತಸರದ ಧನೋ ಖುರ್ದ್ ಗ್ರಾಮದ ಬಳಿ ಡ್ರೋನ್ ಗಮನಕ್ಕೆ ಬಂದಿತ್ತು. ಪಂಜಾಬ್ ಪೊಲೀಸರೊಂದಿಗೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ, ಚೀನಾ ನಿರ್ಮಿತ ಡ್ರೋನ್ ಮತ್ತು 430 ಗ್ರಾಂ ತೂಕದ ಹೆರಾಯಿನ್ ಪ್ಯಾಕೆಟ್ ಅನ್ನು ಮೈದಾನದಿಂದ ವಶಪಡಿಸಿಕೊಳ್ಳಲಾಗಿದೆ. ಪ್ಯಾಕೆಟ್‍ಗೆ ನೈಲಾನ್ ರಿಂಗ್ ಮತ್ತು ಸಣ್ಣ ಟಾರ್ಚ್ ಅನ್ನು ಸಹ ಜೋಡಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. +ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ +ನಿನ್ನೆ ಸಂಜೆ ಅದೇ ಧನೋಯ್ ಖುರ್ದ್ ಗ್ರಾಮದಲ್ಲಿ ಬಿಎಸ್‍ಎಫ್ ಪಡೆಗಳು ಮತ್ತೊಂದು ಡ್ರೋನ್ ಅನ್ನು ತಡೆದವು. ಶೋಧ ಕಾರ್ಯಾಚರಣೆಯಲ್ಲಿ ಚೀನಾ ನಿರ್ಮಿತ ಕ್ವಾಡ್‍ಕಾಪ್ಟರ್ ಮತ್ತು 540 ಗ್ರಾಂ ತೂಕದ ಹೆರಾಯಿನ್ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. \ No newline at end of file diff --git a/eesanje/url_47_213_7.txt b/eesanje/url_47_213_7.txt new file mode 100644 index 0000000000000000000000000000000000000000..04d6caab4b1c8308854f4ca6237c3a4a5a8e6ddf --- /dev/null +++ b/eesanje/url_47_213_7.txt @@ -0,0 +1,7 @@ +ಮಣಿಪುರ ಜನಾಂಗೀಯ ಗಲಭೆ ತನಿಖೆ ಪರಿಶೀಲನೆಗೆ ಮುಂದಾದ ಸೂದ್ +ನವದೆಹಲಿ, ಡಿ 19 (ಪಿಟಿಐ) : ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ತನಿಖೆಗಳನ್ನು ಪರಿಶೀಲಿಸಲು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಇಂಫಾಲ್ ತಲುಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಪೊಲೀಸರು ತನಿಖೆ ನಡೆಸಿದ 27 ಹಿಂಸಾಚಾರದ ಪ್ರಕರಣಗಳನ್ನು ಸಂಸ್ಥೆ ವಹಿಸಿಕೊಂಡಿದೆ, ಹಿಂಸಾಚಾರವು 175 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಮೇ ತಿಂಗಳಿನಿಂದ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ. +ಮೇ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡ ತಿಂಗಳೊಳಗೆ ಏಜೆನ್ಸಿಯ ಬಹುತೇಕ ಎಲ್ಲಾ ಘಟಕಗಳಿಗೆ ಭೇಟಿ ನೀಡಿದ ಕೇಂದ್ರೀಯ ತನಿಖಾ ದಳದ (ಸಿಬಿಐ) ಮೊದಲ ಮುಖ್ಯಸ್ಥರಾಗಿರುವ ಸೂದ್ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಗುವಾಹಟಿಯಿಂದ ಇಂಫಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. +ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ +ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಬರಮಾಡಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸೂದ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಅವರು ಹೇಳಿದರು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದವು, ಮೇ 3 ರಂದು ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇಟಿ ಸಮುದಾಯದ ಪರಿಶಿಷ್ಟ ಪಂಗಡ (ಎಸ್‍ಟಿ) ಸ್ಥಾನಮಾನದ ಬೇಡಿಕೆಯನ್ನು ಪ್ರತಿಭಟಿಸಲು ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ ಆಯೋಜಿಸಲಾಗಿತ್ತು. +ಗಣರಾಜ್ಯೋತ್ಸವದಂದು ದುಷ್ಕೃತ್ಯಕ್ಕೆ ಉಗ್ರರ ಪ್ಲಾನ್, ಬೆಂಗಳೂರು, ಬಳ್ಳಾರಿಯಲ್ಲಿ ಎನ್‍ಐಎ ಶೋಧ +ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೈತೈಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು — ನಾಗಾಗಳು ಮತ್ತು ಕುಕಿಗಳು — ಶೇಕಡಾ 40 ಕ್ಕಿಂತ ಸ್ವಲ್ಪ ಹೆಚ್ಚು ಮತ್ತು ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. \ No newline at end of file diff --git a/eesanje/url_47_213_8.txt b/eesanje/url_47_213_8.txt new file mode 100644 index 0000000000000000000000000000000000000000..44359a2290e1b1ad390b4406c9af105565663da6 --- /dev/null +++ b/eesanje/url_47_213_8.txt @@ -0,0 +1,6 @@ +ಎಫ್‍ಟಿಎ ದೃಢಿಕರಣ ವಿಳಂಬ, ಜೈಶಂಕರ್ ಸಮರ್ಥನೆ +ನವದೆಹಲಿ, ಡಿ 19 (ಪಿಟಿಐ) ಯುಕೆ ಜೊತೆಗಿನ ಉದ್ದೇಶಿತ ಮುಕ್ತ ವ್ಯಾಪಾರ ಒಪ್ಪಂದವನ್ನು ದೃಢಪಡಿಸುವಲ್ಲಿನ ವಿಳಂಬಕ್ಕಾಗಿ ನವದೆಹಲಿಯನ್ನು ಟೀಕಿಸುವವರ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಮತ್ತು ಅಂತಹ ಒಪ್ಪಂದಗಳು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರುವುದರಿಂದ ಎಚ್ಚರಿಕೆಯ ಪರಿಶೀಲನೆ ಅಗತ್ಯವಿದೆ ಎಂದು ಹೇಳಿದರು. +ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಹತ್ವಾಕಾಂಕ್ಷೆಯ ಎಫ್‍ಟಿಎಯನ್ನು ದೃಢೀಕರಿಸಲು ಭಾರತ ಮತ್ತು ಯುಕೆ ಮಾತುಕತೆಗಳನ್ನು ನಡೆಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ. ಎಫ್‍ಟಿಎಯಲ್ಲಿನ 26 ಅಧ್ಯಾಯಗಳಲ್ಲಿ 20 ಕ್ಕೂ ಹೆಚ್ಚು ಅಧ್ಯಾಯಗಳನ್ನು ಅಂತಿಮಗೊಳಿಸಲಾಗಿದೆ ಎಂದು ಉಭಯ ಕಡೆಯವರು ಕಲಿತಿದ್ದಾರೆ ಮತ್ತು ಈಗ ಜನರ ಚಲನಶೀಲತೆ ಮತ್ತು ಕೆಲವು ವಸ್ತುಗಳ ಮೇಲೆ ಆಮದು ಸುಂಕದ ರಿಯಾಯಿತಿಗಳು ಸೇರಿದಂತೆ ಕೆಲವು ವಿವಾದಾತ್ಮಕ ವಿಷಯಗಳ ಮೇಲೆ ಭಿನ್ನಾಭಿಪ್ರಾಯಗಳನ್ನು ನಿವಾರಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. +ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ +ಕಳೆದ ವರ್ಷ ಏಪ್ರಿಲ್‍ನಲ್ಲಿ, ಮುಕ್ತ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಲು ಉಭಯ ಪಕ್ಷಗಳು ದೀಪಾವಳಿ ಗಡುವನ್ನು ನಿಗದಿಪಡಿಸಿದ್ದವು ಆದರೆ ಕೆಲವು ವಿಷಯಗಳ ಮೇಲಿನ ಭಿನ್ನಾಭಿಪ್ರಾಯಗಳು ಮತ್ತು ಯುಕೆಯಲ್ಲಿನ ರಾಜಕೀಯ ಬೆಳವಣಿಗೆಗಳ ದೃಷ್ಟಿಯಿಂದ ಒಪ್ಪಂದವನ್ನು ಅಂತಿಮಗೊಳಿಸಲಾಗಲಿಲ್ಲ. ತಮ್ಮ ಭಾಷಣದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವರು, ಎಫ್‍ಟಿಎಗಳು ಒಂದು ಉಪಯೋಗವನ್ನು ಹೊಂದಿವೆ ಎಂದು ಹೇಳಿದರು ಆದರೆ ಅದೇ ಸಮಯದಲ್ಲಿ ವಿವಿಧ ನಿಬಂಧನೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸುವ ಅಗತ್ಯವನ್ನು ಒತ್ತಿಹೇಳಿದರು. +ಭಾರತದಂತಹ ದೇಶಕ್ಕಾಗಿ ಯಾವುದೇ ನಿರ್ಧಾರವು ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಬಹುದು ಮತ್ತು ಅದು ಅವರ ಜೀವನೋಪಾಯದ ವಿಷಯವಾಗಿರಬಹುದು ಎಂಬ ಕಾರಣದಿಂದ ಎಫ್‍ಟಿಎಯ ಅರ್ಹತೆಗಳು ಮತ್ತು ಅಪಾಯಗಳನ್ನು ಬಹಳ ವಿವೇಚನಾಶೀಲವಾಗಿ ಪರಿಗಣಿಸಲು ಜೈಶಂಕರ್ ಹೇಳಿದರು. \ No newline at end of file diff --git a/eesanje/url_47_213_9.txt b/eesanje/url_47_213_9.txt new file mode 100644 index 0000000000000000000000000000000000000000..ee339280faac331fb5b46e26ba44dfc2d5a3e5de --- /dev/null +++ b/eesanje/url_47_213_9.txt @@ -0,0 +1,7 @@ +ಗೋವಾ ವಿಮೋಚನೆ ವೇಳೆ ಹುತಾತ್ಮರಾದವರಿಗೆ ರಾಷ್ಟ್ರಪತಿ ಗೌರವ +ನವದೆಹಲಿ, ಡಿ 19 (ಪಿಟಿಐ) ವಸಾಹತುಶಾಹಿ ಆಳ್ವಿಕೆಯಿಂದ ಗೋವಾದ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಹುತಾತ್ಮರಿಗೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ ಮತ್ತು ಈ ಸುಂದರ ರಾಜ್ಯದ ನಿವಾಸಿಗಳಿಗೆ ಉಜ್ವಲ ಭವಿಷ್ಯವನ್ನು ಹಾರೈಸುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. + , . . … +ಗೋವಾ ವಿಮೋಚನಾ ದಿನವನ್ನು 1961 ರಲ್ಲಿ ಪೋರ್ಚುಗೀಸರಿಂದ ರಾಜ್ಯವನ್ನು ವಿಮೋಚನೆಗೊಳಿಸಲು ಸಶಸ್ತ್ರ ಪಡೆಗಳು ಕೈಗೊಂಡ ಆಪರೇಷನ್ ವಿಜಯ ಯಶಸ್ಸನ್ನು ಗುರುತಿಸಲು ಪ್ರತಿ ವರ್ಷ ಡಿಸೆಂಬರ್ 19 ರಂದು ಗೋವಾ ವಿಮೋಚನಾ ದಿನ ಆಚರಿಸಲಾಗುತ್ತದೆ. +ಸಂಸತ್‍ನಲ್ಲಿ ಮತ್ತೆ ಪ್ರತಿಧ್ವನಿಸಿದ ಭದ್ರತಾ ಲೋಪ, ಕಲಾಪ ಮುಂದೂಡಿಕೆ +ಗೋವಾ ವಿಮೋಚನಾ ದಿನದಂದು, ವಸಾಹತುಶಾಹಿ ಆಳ್ವಿಕೆಯಿಂದ ಗೋವನ್ನು ವಿಮೋಚನೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ಹುತಾತ್ಮರಿಗೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ. +ಅವರ ಮಾದರಿ ಧೈರ್ಯ ಮತ್ತು ತ್ಯಾಗಕ್ಕಾಗಿ ನಾವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಮ್ಮ ಸಶಸ್ತ್ರ ಪಡೆಗಳಿಗೆ ನಮಸ್ಕರಿಸುತ್ತೇವೆ. ನಾನು ಗೋವಾ ನಿವಾಸಿಗಳಿಗೆ ಉಜ್ವಲ ಭವಿಷ್ಯವನ್ನು ಬಯಸುತ್ತೇನೆ ಎಂದು ರಾಷ್ಟ್ರಪತಿ ಕಚೇರಿಯು ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ತಿಳಿಸಿದೆ. \ No newline at end of file diff --git a/eesanje/url_47_214_1.txt b/eesanje/url_47_214_1.txt new file mode 100644 index 0000000000000000000000000000000000000000..872c33c5f16fb014ec8dd9468bba004b1896e2bf --- /dev/null +++ b/eesanje/url_47_214_1.txt @@ -0,0 +1,6 @@ +ಏಕಕಾಲಕ್ಕೆ 4 ಗುರಿಗಳನ್ನು ನಾಶಪಡಿಸುವ ಆಕಾಶ್ ಕ್ಷಿಪಣಿ ಪ್ರಯೋಗ ಯಶಸ್ವಿ +ನವದೆಹಲಿ,ಡಿ.18- ಸುಮಾರು 25 ಕಿಲೋಮೀಟರ್ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ನಾಲ್ಕು ಗುರಿಗಳನ್ನು ನಾಶಗೊಳಿಸಬಲ್ಲ ಅತ್ಯಾಧುನಿಕ ಆಕಾಶ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ () ಅಧಿಕಾರಿಗಳು ತಿಳಿಸಿದ್ದಾರೆ. + 04 25Km . @IAF_MCCusing @@../ut2FDzVd64 +ಒಂದೇ ಉಡಾವಣೆಯಲ್ಲಿ 4 ದಿಕ್ಕಿಗೆ ಹಾರುವ ಇಂತಹ ಕ್ಷಿಪಣಿ ಸಾಮಥ್ರ್ಯವನ್ನು ಹೊಂದಿರುವ ಮೊದಲ ದೇಶ ಭಾರತವಾಗಿದೆ ಎಂದು ಅದು ಹೇಳಿದಾರೆ ಒಂದೇ ಫೈರಿಂಗ್ ಘಟಕವನ್ನು ಬಳಸಿಕೊಂಡು 25 ಕಿಮೀ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ 4 ಗುರಿಗಳ ತಲುಪುವ ಸಾಮಥ್ರ್ಯವನ್ನು ಪ್ರದರ್ಶಿಸಿದ ಮೊದಲ ದೇಶ ಭಾರತವಾಗಿದೆ. ಈ ಪರೀಕ್ಷೆಯನ್ನು ಭಾರತೀಯ ವಾಯುಪಡೆ ಮತ್ತು ಆಕಾಶ್ ವೆಪನ್ ಸಿಸ್ಟಮ್‍ ಬಳಸಲಾಯಿತು ಎಂದು ಎಕ್ಸ್‍ನಲ್ಲಿ ಮಾಹಿತಿ ಹಂಚಿಕೊಳ್ಲಲಾಗಿದೆ. +ಕೇರಳ ರಾಜ್ಯಪಾಲರ ವಿರುದ್ಧ ಶುರುವಾಯ್ತು ಬ್ಯಾನರ್ ಚಳವಳಿ +ಡಿ.12ರಂದು ನಡೆದ ಅಸಶಕ್ತಿ ಸೇನಾ ಸಮರಾಭ್ಯಾಸದಲ್ಲಿ ಸ್ವದೇಶಿ ಕ್ಷಿಪಣಿ ವ್ಯವಸ್ಥೆಯ ಸಾಮಥ್ರ್ಯವನ್ನು ಪ್ರದರ್ಶಿಸಲಾಯಿತು ಈ ಸಮರಾಭ್ಯಾಸವನ್ನು ಭಾರತೀಯ ವಾಯುಪಡೆ ನಡೆಸಿತು. ಇದಲ್ಲದೆ ಭಾರತ ನಿರ್ಮಿತ ಹೈ-ಸ್ಪೀಡ್ ಡ್ರೋನ್ ಹಾರಾಟವನ್ನು ಯಶಸ್ವಿಯಾಗಿ ಕರ್ನಾಟಕದಲ್ಲಿ ಪರೀಕ್ಷಿಸಲಾಗಿದೆ \ No newline at end of file diff --git a/eesanje/url_47_214_10.txt b/eesanje/url_47_214_10.txt new file mode 100644 index 0000000000000000000000000000000000000000..0341aca52b9b855f0bfd75e4ee2629975a415125 --- /dev/null +++ b/eesanje/url_47_214_10.txt @@ -0,0 +1,7 @@ +ಭದ್ರತಾ ಲೋಪದ ಬಗ್ಗೆ ಮೋದಿ ಸಂಸತ್‍ನಲ್ಲಿ ಮಾತನಾಡಲಿ; ಚೌಧರಿ +ಕೋಲ್ಕತ್ತಾ, ಡಿ 18 (ಪಿಟಿಐ) ಭದ್ರತಾ ಲೋಪದ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಪಕ್ಷದ ನಾಯಕ ಅೀಧಿರ್ ರಂಜನ್ ಚೌಧರಿ ಹೇಳಿದ್ದಾರೆ, ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ನಾಲ್ಕು ದಿನ ತೆಗೆದುಕೊಂಡಿದ್ದಾರೆ ಎಂದು ಅವರು ಟೀಕಿಸಿದ್ದಾರೆ. +ವಿರೋಧ ಪಕ್ಷಗಳು ಮತ್ತು ದೇಶದ ಜನರ ಒತ್ತಡದಿಂದಾಗಿ ಮೋದಿ ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ ಎಂದು ಚೌಧರಿ ಹೇಳಿದ್ದಾರೆ. ಪ್ರಧಾನಿ ಜಗತ್ತಿನಲ್ಲಿ ಎಲ್ಲಿಯಾದರೂ ಏನಾದರೂ ಸಂಭವಿಸಿದಾಗ ಎಕ್ಸ್ ತೆಗೆದುಕೊಳ್ಳುತ್ತಾರೆ. ಆದರೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಅವರು ನಾಲ್ಕು ದಿನಗಳನ್ನು ತೆಗೆದುಕೊಂಡರು. ಅವರು ಮರುದಿನ ಸದನಕ್ಕೆ ಬರಬೇಕಿತ್ತು ಮತ್ತು ಜನರು ಚಿಂತಿಸಬೇಡಿ ಎಂದು ಭರವಸೆ ನೀಡಬೇಕಿತ್ತು ಎಂದು ಚೌಧರಿ ಹೇಳಿದರು. +ಅವರು ಅಂತಿಮವಾಗಿ ಪ್ರತಿಪಕ್ಷಗಳು ಮತ್ತು ಸಾಮಾನ್ಯ ಜನರ ಒತ್ತಡದಿಂದಾಗಿ ಮಾತನಾಡಿದರು. ಅವರು ಸಂಸತ್ತಿಗೆ ಬಂದು ಈ ವಿಷಯದ ಬಗ್ಗೆ ಮಾತನಾಡುತ್ತಾರೆ ಎಂದು ನಾನು ನಂಬುತ್ತೇನೆ ಎಂದು ಪಶ್ಚಿಮ ಬಂಗಾಳದ ಪಿಸಿಸಿ ಮುಖ್ಯಸ್ಥರು ಹೇಳಿದ್ದಾರೆ. +ಭೇಟಿಗೆ ಸಮಯ ಕೊಡದ ಪ್ರಧಾನಿ, ಸಿಎಂ ಸಿದ್ದರಾಮಯ್ಯಆಕ್ರೋಶ +ಡಿಸೆಂಬರ್ 13 ರಂದು 2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಶೂನ್ಯ ವೇಳೆಯಲ್ಲಿ ಇಬ್ಬರು ವ್ಯಕ್ತಿಗಳು ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‍ಗೆ ಜಿಗಿದರು, ಡಬ್ಬಿಗಳಿಂದ ಹಳದಿ ಬಣ್ಣದ ಹೊಗೆಯನ್ನು ಬಿಡುಗಡೆ ಮಾಡಿದರು ಮತ್ತು ಘೋಷಣೆಗಳನ್ನು ಕೂಗಿದ್ದರು. +ಸಂಸತ್ತಿನಲ್ಲಿ ಭದ್ರತಾ ಲೋಪದ ಗಂಭೀರತೆಯನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ ಎಂದು ಮೋದಿ ಭಾನುವಾರ ಹೇಳಿದರು ಮತ್ತು ಈ ವಿಷಯದ ಬಗ್ಗೆ ಯಾವುದೇ ಜಗಳ ಬೇಡ ಎಂದು ಕರೆ ನೀಡಿದ್ದರು. \ No newline at end of file diff --git a/eesanje/url_47_214_11.txt b/eesanje/url_47_214_11.txt new file mode 100644 index 0000000000000000000000000000000000000000..d7aa858ba65f9a56d10ad6a339d1794fd8d8e796 --- /dev/null +++ b/eesanje/url_47_214_11.txt @@ -0,0 +1,9 @@ +ಹೈಫೈ ಸೌಲಭ್ಯ ಹೊಂದಿರುವ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ +ವಾರಣಾಸಿ, ಡಿ 18 (ಪಿಟಿಐ) ಇಂದಿನಿಂದ ಸಂಚಾರ ಆರಂಭಿಸಲಿರುವ ವಾರಾಣಸಿ ಮತ್ತು ನವದೆಹಲಿ ನಡುವಿನ ಎರಡನೇ ವಂದೇ ಭಾರತ್ ರೈಲು ಕೇಸರಿ ಬಣ್ಣ ಮತ್ತು ಅನೇಕ ಹೊಸ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ರೈಲ್ವೇ ಸಚಿವಾಲಯ ತಿಳಿಸಿದೆ. ರೈಲ್ವೆ ಸಚಿವಾಲಯವು ದೇಶದಲ್ಲಿ ಪ್ರಾರಂಭಿಸಲಿರುವ ಎರಡನೇ ಕೇಸರಿ ಬಣ್ಣದ ವಂದೇ ಭಾರತ್ ರೈಲು ಇದಾಗಿದೆ ಎಂದು ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ. +ಕೇಸರಿ ಬಣ್ಣ ಹೊಂದಿರುವ ವಂದೇ ಭಾರತ್ ರೈಲನ್ನು ಇಂದು ಮಧ್ಯಾಹ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ರೈಲು ಆನ್‍ಬೋರ್ಡ್ ವೈ-ಫೈ ಇನೋಟೈನ್‍ಮೆಂಟ್, ಜಿಪಿಎಸ್ ಆಧಾರಿತ ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಪ್ಲಶ್ ಇಂಟೀರಿಯರ್‍ಗಳು, ಟಚ್ -ಫ್ರೀ ಅನುಕೂಲತೆಗಳೊಂದಿಗೆ ಜೈವಿಕ-ವ್ಯಾಕ್ಯೂಮ್ ಟಾಯ್ಲೆಟ್‍ಗಳು, ಡಿಫ್ಯೂಸ್ಟ್ ಎಲïಇಡಿ ಲೈಟಿಂಗ್, ಪ್ರತಿ ಸೀಟಿನ ಕೆಳಗೆ ಚಾರ್ಜಿಂಗ್ ಪಾಯಿಂಟ್‍ಗಳಂತಹ ಉತ್ತಮ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ವೈಯಕ್ತಿಕ ಸ್ಪರ್ಶ ಆಧಾರಿತ ಓದುವ ದೀಪಗಳು ಮತ್ತು ಮರೆಮಾಚುವ ರೋಲರ್ ಬ್ಲೈಂಡ್‍ಗಳು ಇರಲಿವೆಯಂತೆ. +ಇದು ಸೂಕ್ಷ್ಮಾಣು ಮುಕ್ತ ಗಾಳಿಯ ಪೂರೈಕೆಗಾಗಿ ಎಲ್‍ಇಡಿ ದೀಪದೊಂದಿಗೆ ಉತ್ತಮ ಶಾಖದ ವಾತಾಯನ ಮತ್ತು ಹವಾನಿಯಂತ್ರಣ ವ್ಯವಸ್ಥೆಯನ್ನು ಹೊಂದಿದೆ. ಉತ್ತಮ ಹವಾನಿಯಂತ್ರಣ ವ್ಯವಸ್ಥೆಯು ಹವಾಮಾನ ಪರಿಸ್ಥಿತಿಗಳು ಮತ್ತು ಆಕ್ಯುಪೆನ್ಸಿಗೆ ಅನುಗುಣವಾಗಿ ತಂಪಾಗುವಿಕೆಯನ್ನು ಸರಿಹೊಂದಿಸುತ್ತದೆ ಎಂದು ಹೇಳಿಕೆ ತಿಳಿಸಿದೆ. ಆದಾಗ್ಯೂ, ಸಾಮಾನ್ಯ ದಿನಗಳಲ್ಲಿ ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನಗಳವರೆಗೆ ವಾರಣಾಸಿಯಿಂದ ನವದೆಹಲಿಗೆ ಬೆಳಿಗ್ಗೆ 6 ಗಂಟೆಗೆ ರೈಲು ಪ್ರಯಾಣ ಪ್ರಾರಂಭವಾಗಲಿದೆ. +ರೈಲು ಮಧ್ಯಾಹ್ನ 2. 05 ಕ್ಕೆ ನವದೆಹಲಿ ತಲುಪುತ್ತದೆ ಮತ್ತು 55 ನಿಮಿಷಗಳ ನಂತರ 3:00 ಗಂಟೆಗೆ ವಾರಣಾಸಿಗೆ ಹೊರಡುತ್ತದೆ. ಇದು ರಾತ್ರಿ 11:05 ಕ್ಕೆ ತನ್ನ ಗಮ್ಯಸ್ಥಾನ ನಿಲ್ದಾಣವನ್ನು ತಲುಪುತ್ತದೆ. ಪ್ರಸ್ತುತ ಹೊಸ ದೆಹಲಿ ಮತ್ತು ವಾರಣಾಸಿ ನಡುವೆ ಓಡುತ್ತಿರುವ ಮೊದಲ ವಂದೇ ಭಾರತ್ ರೈಲು ದೆಹಲಿಯಿಂದ ಬೆಳಿಗ್ಗೆ 6:00 ಗಂಟೆಗೆ ಪ್ರಾರಂಭವಾಗುತ್ತದೆ ಮತ್ತು ಮಧ್ಯಾಹ್ನ 2:00 ಗಂಟೆಗೆ ತನ್ನ ಗಮ್ಯಸ್ಥಾನವನ್ನು ತಲುಪುತ್ತದೆ. ಇದು ನವದೆಹಲಿಗೆ ಮಧ್ಯಾಹ್ನ 3:00 ಗಂಟೆಗೆ ಹೊರಟು ರಾತ್ರಿ 11:00 ಗಂಟೆಗೆ ಗಮ್ಯಸ್ಥಾನವನ್ನು ತಲುಪುತ್ತದೆ. ಇದು ಗುರುವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸುತ್ತಿದೆ. +ಪ್ಯಾಂಟ್‍ನಲ್ಲಿ ಚಿನ್ನ ಕಳ್ಳ ಸಾಗಣೆ, ಸಿಕ್ಕಿಬಿದ್ದ ಪ್ರಯಾಣಿಕ +ರೈಲ್ವೇ ತನ್ನ ಮೊದಲ ಕೇಸರಿ-ಬೂದು ಬಣ್ಣದ ವಂದೇ ಭಾರತ್ ರೈಲನ್ನು ಸೆಪ್ಟೆಂಬರ್ 24 ರಂದು ಕೇರಳದ ಕಾಸರಗೋಡು ಮತ್ತು ತಿರುವನಂತಪುರಂ ನಡುವೆ ಪ್ರಾರಂಭಿಸಿತು. ಸೆಪ್ಟೆಂಬರ್ 24 ರಂದು ವಿಡಿಯೋ ಕಾನರೆನ್ಸ್‍ನಲ್ಲಿ ಪ್ರಧಾನ ಮಂತ್ರಿಗಳು ಫ್ಲ್ಯಾಗ್ ಆಫ್ ಮಾಡಿದ ಒಂಬತ್ತು ವಂದೇ ಭಾರತ್ ರೈಲುಗಳಲ್ಲಿ ಇದೂ ಒಂದಾಗಿದೆ. +ಕುಖ್ಯಾತ ಕಳ್ಳನ ಬಂಧನ ಲ್ಯಾಪ್‍ಟಾಪ್, ದ್ವಿಚಕ್ರ ವಾಹನಗಳ ವಶ +ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಇತ್ತೀಚೆಗೆ ಪತ್ರಕರ್ತರೊಂದಿಗಿನ ಸಂವಾದದಲ್ಲಿ ಕಿತ್ತಳೆ ಅಥವಾ ಕೇಸರಿ ಬಣ್ಣದ ವಂದೇ ಭಾರತ್ ರೈಲುಗಳನ್ನು ಪ್ರಾರಂಭಿಸುವುದರ ಹಿಂದೆ ಯಾವುದೇ ರಾಜಕೀಯವಿದೆ ಎಂಬ ಕಲ್ಪನೆಯನ್ನು ತಳ್ಳಿಹಾಕಿದರು, ಬಣ್ಣಗಳ ಆಯ್ಕೆಯು ವೈಜ್ಞಾನಿಕ ಚಿಂತನೆಯಿಂದ ಮಾಡಲಾಗಿದೆ ಎಂದು ಹೇಳಿದ್ದರು. \ No newline at end of file diff --git a/eesanje/url_47_214_12.txt b/eesanje/url_47_214_12.txt new file mode 100644 index 0000000000000000000000000000000000000000..75df567ec638c4336a3e2cbb2518363dfad2c93f --- /dev/null +++ b/eesanje/url_47_214_12.txt @@ -0,0 +1,5 @@ +ನನಗಿನ್ನೂ ವಯಸ್ಸಾಗಿಲ್ಲ : ಶರದ್ ಪವಾರ್ +ಪುಣೆ, ಡಿ 18 (ಪಿಟಿಐ) ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ನನಗಿನ್ನೂ ವಯಸ್ಸಾಗಿಲ್ಲ ಮತ್ತು ಇನ್ನೂ ಕೆಲವು ಜನರನ್ನು ಸೋಲಿಸುವ ಶಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಪುಣೆಯ ಹವೇಲಿ ತಹಸಿಲ್‍ನ ಚಾರ್ಕೋಲಿಯಲ್ಲಿ ನಡೆದ ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಮಾತನಾಡಿದ ಪವಾರ್, ನನಗೆ ನಿಮ್ಮ ವಿರುದ್ಧ ದೂರು ಇದೆ. ನಿಮ್ಮ ಭಾಷಣಗಳಲ್ಲಿ ನೀವೆಲ್ಲರೂ ನನಗೆ 83 ವರ್ಷ, ನನಗೆ 84 ವರ್ಷ ಎನ್ನುತ್ತೀರಿ. ಆದರೆ ನನಗಿನ್ನೂ ವಯಸ್ಸಾಗಿಲ್ಲ, ಕೆಲವರನ್ನು ಸೋಲಿಸುವ ಶಕ್ತಿ ಹೊಂದಿದ್ದೇನೆ ಚಿಂತಿಸಬೇಡಿ ಎಂದಿದ್ದಾರೆ. +ಈ ವರ್ಷ ಜುಲೈ 2 ರಂದು ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರು ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರಿದ ನಂತರ ಶರದ್ ಪವಾರ್ ನೇತೃತ್ವದ ಎನ್‍ಸಿಪಿ ವಿಭಜನೆಯಾಯಿತು. ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪನಿಗೆ ವಯಸ್ಸಾಗಿದೆ ಮತ್ತು ಮುಂದಿನ ಪೀಳಿಗೆಗೆ ಪಕ್ಷದ ಆಡಳಿತವನ್ನು ವಹಿಸಿಕೊಳ್ಳಲು ದಾರಿ ಮಾಡಿಕೊಡಬೇಕು ಎಂದು ಹೇಳಿದರು. ಡಿಸೆಂಬರ್ 12 ರಂದು ಕೇಂದ್ರದ ಮಾಜಿ ಕೃಷಿ ಸಚಿವರ ಜನ್ಮದಿನದ ಅಂಗವಾಗಿ ಇಲ್ಲಿ ಎತ್ತಿನಗಾಡಿ ಓಟವನ್ನು ಆಯೋಜಿಸಲಾಗಿತ್ತು. +ಪ್ಯಾಂಟ್‍ನಲ್ಲಿ ಚಿನ್ನ ಕಳ್ಳ ಸಾಗಣೆ, ಸಿಕ್ಕಿಬಿದ್ದ ಪ್ರಯಾಣಿಕ +ಈ ಸಂದರ್ಭದಲ್ಲಿ ಮಾತನಾಡಿದ ಶರದ್ ಪವಾರ್, ಕ್ರೀಡೆಯು ರೈತರಿಗೆ ತೃಪ್ತಿ ಮತ್ತು ಆತ್ಮವಿಶ್ವಾಸವನ್ನು ನೀಡುತ್ತದೆ. ಅಧಿಕಾರದಲ್ಲಿರುವವರಿಗೆ ರೈತರ ಮೇಲೆ ಪ್ರೀತಿ ಇಲ್ಲ ಎಂದ ಅವರು, ಈರುಳ್ಳಿ ಸೇರಿದಂತೆ ಕೆಲವು ಕೃಷಿ ಉತ್ಪನ್ನಗಳ ರಫ್ತು ನಿಷೇಧದಂತಹ ನಿರ್ಧಾರಗಳ ಉದಾಹರಣೆಗಳನ್ನು ನೀಡಿದರು. ಸರ್ಕಾರ ರೈತರಿಗೆ ಸಹಾಯ ಮಾಡುವ ಬದಲು ಅಡೆತಡೆಗಳನ್ನು ಸೃಷ್ಟಿಸುತ್ತದೆ ಎಂದು ಆರೋಪಿಸಿದರು. \ No newline at end of file diff --git a/eesanje/url_47_214_2.txt b/eesanje/url_47_214_2.txt new file mode 100644 index 0000000000000000000000000000000000000000..fc3b7513fb8f952720259852ad5e0fb6408e7976 --- /dev/null +++ b/eesanje/url_47_214_2.txt @@ -0,0 +1,9 @@ +ಸಂಸತ್‍ನಲ್ಲಿ ಭದ್ರತಾ ಲೋಪ ಪ್ರಕರಣದ ತನಿಖೆ ಚುರುಕು +ನವದೆಹಲಿ,ಡಿ.18-ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿದ ನಾಲ್ಕು ದಿನಗಳ ನಂತರ ದೆಹಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆರೋಪಿಗಳ ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿವೆ ಮತ್ತು ರಾಜಸ್ಥಾನದ ನಾಗೌರ್‍ನಲ್ಲಿ ಕೆಲವು ಒಡೆದ ಮತ್ತು ಸುಟ್ಟುಹೋದ ಮೊಬೈಲ್ ಫೋನ್‍ಗಳ ತುಣುಕುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. +ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಲಾಗಿದ್ದು, ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ಪೊಲೀಸ್ ತಂಡ ದಾಖಲಿಸಿಕೊಂಡಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಆರೋಪಿಗಳ ವಿರುದ್ಧ ಎಫ್‍ಐಆರ್‍ಗೆ ಸಾಕ್ಷ್ಯ ನಾಶಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್‍ಗಳನ್ನು ಪೊಲೀಸರು ದಾಖಲಿಸಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರು ಮಂದಿಯಲ್ಲಿ ಲಲಿತ್ ಝಾ ಅವರ ನಿದರ್ಶನದಲ್ಲಿ ಕೆಲವು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತನಿಖೆಯ ಗೌಪ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ದ.ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಉ.ಕೊರಿಯಾ +ಡಿ.13 ರಂದು ದಾಖಲಾದ ಎಫ್‍ಐಆರ್‍ನಲ್ಲಿ ಸೆಕ್ಷನ್ 201 (ಸಾಕ್ಷ್ಯ ನಾಶ/ಸಾಕ್ಷ್ಯ ಕಣ್ಮರೆ) ಸೇರಿದಂತೆ ಹೆಚ್ಚಿನ ಐಪಿಸಿ ಸೆಕ್ಷನ್‍ಗಳನ್ನು ದೆಹಲಿ ಪೊಲೀಸರು ಸೇರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದನೆ ಆರೋಪಗಳನ್ನು ದಾಖಲಿಸಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದ ತಾಂತ್ರಿಕ ಪುರಾವೆಗಳನ್ನು ಮರೆಮಾಡಲು ಝಾ ಮತ್ತು ಕುಮಾವತ್ ಉದ್ದೇಶಪೂರ್ವಕವಾಗಿ ಮೊಬೈಲ್ ಫೋನ್‍ಗಳನ್ನು ನಾಶಪಡಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಉಗ್ರರು ಅಪಹರಿಸಿದ್ದ ಯುವಕರ ರಕ್ಷಣೆ +ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ದೆಹಲಿ ಪೊಲೀಸರು ಇದುವರೆಗೆ ಸಾಗರ್ ಶರ್ಮಾ, ಮನೋರಂಜನ್ ಡಿ, ಅಮೋಲ್ ಶಿಂಧೆ, ನೀಲಂ ದೇವಿ, ಲಲಿತ್ ಝಾ ಮತ್ತು ಮಹೇಶ್ ಕುಮಾವತ್ ಅವರನ್ನು ಬಂಧಿಸಿದ್ದಾರೆ. \ No newline at end of file diff --git a/eesanje/url_47_214_3.txt b/eesanje/url_47_214_3.txt new file mode 100644 index 0000000000000000000000000000000000000000..8d65d477cd70672e7606e29bc3d6809f0a91a931 --- /dev/null +++ b/eesanje/url_47_214_3.txt @@ -0,0 +1,11 @@ +ತಮಿಳುನಾಡಿನಲ್ಲಿ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ +ಚನ್ನೈ,ಡಿ.18-ನೆರೆಯ ತಮಿಳುನಾಡಿನ ಹಲವು ಕಡೆ ಎಡೆಬಿಡದೆ ನಿರಂತವಾಗಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ, ವಿರುದುನಗರ ಮತ್ತು ತೆಂಕಶಿ ಜಿಲ್ಲೆಗಳ ಎಲ್ಲಾ ಶಾಲಾಕಾಲೇಜುಗಳು, ಖಾಸಗಿ ಸಂಸ್ಥೆಗಳು, ಬ್ಯಾಂಕ್‍ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಹಲವು ಕಡೆ ರೈಲು ಪ್ರಯಾಣವನ್ನು ಕೂಡ ರದ್ದು ಮಾಡಲಾಗಿದೆ. +ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಪಾಳಯಂಕೊಟ್ಟೈನಲ್ಲಿ 26 ಸೆಂ.ಮೀ, ಮತ್ತು ಕನ್ಯಾಕುಮಾರಿಯಲ್ಲಿ 17 ಸೆಂ.ಮೀ ಮಳೆ ದಾಖಲಾಗಿದೆ. ತೂತುಕುಡಿ ಜಿಲ್ಲೆಯಲ್ಲಿ ರಾತ್ರಿಯೂ ಮಳೆ ಸುರಿದು ನಿರಂತರ ಮಳೆಯಿಂದಾಗಿ ಕೋವಿಲ್ಪಟ್ಟಿ ಪ್ರದೇಶದಲ್ಲಿ 40 ಕೆರೆಗಳು ತುಂಬಿ ಹರಿಯುತ್ತಿವೆ. +ತಿರುನಲ್ವೇಲಿ ಜಿಲ್ಲೆಯಲ್ಲಿ ಪ್ರವಾಹಪೀಡಿತ ಜನರು ಆಶ್ರಯ ಶಿಬಿರಗಳಲ್ಲಿ ತಂಗಿದ್ದು, ತೂತುಕುಡಿ ಜಿಲ್ಲೆಯ ಶ್ರೀವೈಕುಂಟಂನಲ್ಲಿ 525 ಮಿ.ಮೀ ಮಳೆಯಾಗಿದ್ದು, ಈ ಪ್ರದೇಶದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಲ್ಲದೆ, ತಿರುಚೆಂದರ್, ಸಾತಾಂಕುಳಂ, ಕಯತಾರ್, ಒಟ್ಟಾಪಿದ್ರಂ ಕೂಡ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. +ತೂತುಕುಡಿಯಲ್ಲಿ ರಸ್ತೆಗಳು, ಮನೆಗಳು, ಹೊಲ ಗದ್ದೆಗಳು ಜಲಾವೃತವಾಗಿದೆ. ಮಳೆಯು ಸವಾಲಿನ ಪರಿಸ್ಥಿತಿಗಳಿಗೆ ಕಾರಣವಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಇದೆ. ಎಟ್ಟಾಯಪುರಂ, ವಿಲತ್ತಿಕುಲಂ, ಕಲುಗುಮಲೈ, ಕಯತಾರ್, ಕಡಂಬೂರ್, ವೆಂಬಾರ್, ಸುರಂಗುಡಿ ಮತ್ತು ಇತರ ಪ್ರದೇಶಗಳ ಮೇಲೆ ಪರಿಣಾಮ ಬೀರಿದೆ. ನಿರಂತರ ಮಳೆಯಿಂದಾಗಿ ಕೋವಿಲ್ಪಟ್ಟಿ ಸುತ್ತಮುತ್ತಲಿನ ನದಿಗಳು ಮತ್ತು ಕೆರೆಗಳು ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ. +ಇಂದು ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಡಿ.19ರಂದು ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. +ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ +ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕನ್ಯಾಕುಮಾರಿ, ತಿರುನಲ್ವೇಲಿ ಮತ್ತು ತೂತುಕುಡಿಯಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಇಂದು ತಮಿಳುನಾಡಿನ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‍ನಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಂಭವಿಸುವ ಸಾಧ್ಯತೆಯಿದೆ. +ಅದೇ ರೀತಿ ತಿರುನಲ್ವೇಲಿಯಲ್ಲಿ 19 ಶಿಬಿರಗಳು, ಕನ್ಯಾಕುಮಾರಿಯಲ್ಲಿ ನಾಲ್ಕು ಶಿಬಿರಗಳು, ತೂತುಕುಡಿಯಲ್ಲಿ ಎರಡು ಶಿಬಿರಗಳು ಮತ್ತು ತೆಂಕಶಿ ಜಿಲ್ಲೆಯಲ್ಲಿ ಒಂದು ಶಿಬಿರವನ್ನು ವಿಪತ್ತಿನ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಸತಿ ಕಲ್ಪಿಸಲು ಸ್ಥಾಪಿಸಲಾಗಿದೆ. ಹವಾಮಾನ ಇಲಾಖೆಯು ತಮಿಳುನಾಡಿನ ಪೂರ್ವ ಕರಾವಳಿ ಪ್ರದೇಶಗಳು ಮತ್ತು ಮನ್ನಾರ್ ಕೊಲ್ಲಿಯಲ್ಲಿ ಚಂಡಮಾರುತದ ಗಾಳಿಯ ಬಗ್ಗೆ ಎಚ್ಚರಿಕೆ ನೀಡಿದೆ. +ಉಗ್ರರು ಅಪಹರಿಸಿದ್ದ ಯುವಕರ ರಕ್ಷಣೆ +ಸರ್ಕಾರವು ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕನ್ಯಾಕುಮಾರಿ, ತಿರುನಲ್ವೇಲಿ, ಟುಟಿಕೋರಿನ್ ಮತ್ತು ತೆಂಕಶಿ ಜಿಲ್ಲೆಗಳಲ್ಲಿ 250 ರಾಜ್ಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳನ್ನು ನಿಯೋಜಿಸಲಾಗಿದ್ದು, ಇನ್ನೂ ಕೆಲವು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸದಸ್ಯರು ಇಂದು ತೆಂಕಶಿ ಜಿಲ್ಲೆಗೆ ಆಗಮಿಸಲಿದ್ದಾರೆ. ನಾನು ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ ಎಂದು ತಮಿಳುನಾಡಿನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ತಿಳಿಸಿದ್ದಾರೆ. \ No newline at end of file diff --git a/eesanje/url_47_214_4.txt b/eesanje/url_47_214_4.txt new file mode 100644 index 0000000000000000000000000000000000000000..1f413b65b22a90c986a2c42ded48cc92b9a21b1f --- /dev/null +++ b/eesanje/url_47_214_4.txt @@ -0,0 +1,8 @@ + : ಬೆಂಗಳೂರು ಸೇರಿ ದೇಶದ ಹಲವೆಡೆ ಎನ್‍ಐಎ ದಾಳಿ +ನವದೆಹಲಿ,ಡಿ.18- ಜಾಗತಿಕ ಭಯೋತ್ಪಾದಕ ಐಸಿಸ್ ಸಂಘಟನೆ ಜೊತೆ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ದಾಳಿ ನಡೆಸಿದೆ.ಕರ್ನಾಟಕದ ರಾಜಧಾನಿ ಬೆಂಗಳೂರು, ನವದೆಹಲಿ, ಜಾರ್ಖಂಡ್, ಮಹಾರಾಷ್ಟ್ರ ಸೇರಿದಂತೆ ಒಟ್ಟು 4 ರಾಜ್ಯಗಳ 19 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. +ಬೆಂಗಳೂರಿನ ಶಿವಾಜಿನಗರ, ಪುಲಕೇಶಿ ನಗರ, ಸುಲ್ತಾನ್ ಪಾಳ್ಯ , ಆರ್.ಟಿ.ನಗರ, ಜೆ.ಪಿ.ನಗರ, ಚಿನ್ನಪ್ಪ ಗಾರ್ಡನ್ ಸೇರಿದಂತೆ ಹಲವಾರು ಕಡೆ ದಾಳಿ ನಡೆಸಿ ಪ್ರಕರಣ ಸಂಬಂಧ ಕೆಲವು ಮಾಹಿತಿಯನ್ನು ಕಲೆಹಾಕಿದೆ.ಕಳೆದ ವಾರವಷ್ಟೆ ಎನ್‍ಐಎ ದೇಶದ ವಿವಿಧೆಡೆ ಮಿಂಚಿನ ದಾಳಿ ನಡೆಸಿ ಐಸಿಎಸ್ ಉಗ್ರಗಾಮಿ ಸಂಘಟನೆ ಜೊತೆ ಸಂಪರ್ಕ ಹೊಂದಿ ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಲವರನ್ನು ಬಂಧಿಸಿತ್ತು. ಅಲ್ಲದೆ, ಪೂನಾ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಕೆಲವರನ್ನು ವಶಕ್ಕೆ ಪಡೆದಿತ್ತು.ಇದೀಗ ಪುನಃ ಇಂದು ನವದೆಹಲಿ, ಜಾರ್ಖಂಡ್, ಮಹಾರಾಷ್ಟ್ರದಲ್ಲೂ ಎನ್‍ಐಎ ತಂಡ ದಾಳಿ ನಡೆಸಿರುವುದಾಗಿ ವರದಿಯಾಗಿದೆ. +ಜಾರ್ಖಂಡ್ ರಾಜಧಾನಿ ರಾಂಚಿ, ದೆಹಲಿಯ ಅತೀ ಸೂಕ್ಷ್ಮ ಪ್ರದೇಶಗಳು, ಮಹಾರಾಷ್ಟ್ರದ ಕೆಲವೆಡೆ ದಾಳಿ ಮಾಡಲಾಗಿದೆ. ಮೂಲಗಳ ಪ್ರಕಾರ, ವಿದ್ಯಾವಂತ ಯುವಕರನ್ನು ಐಸಿಸ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಯಾಗಲು ಬ್ರೈನ್‍ವಾಶ್ ಮಾಡಲಾಗುತ್ತಿತ್ತೆಂಬ ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಕಳೆದ ಡಿ.9 ರಂದು ಬೆಂಗಳೂರು ಮತ್ತು ಪೂನಾದ 44 ಕಡೆಗಳಲ್ಲಿ ದಾಳಿ ಮಾಡಲಾಗಿತ್ತು. +ಬೆಂಗಳೂರಿನ ಪುಲಕೇಶಿ ನಗರದಲ್ಲಿರುವ ಮೋರ್ ರಸ್ತೆಯ ಆಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್‍ಐಎ 16 ಲಕ್ಷಕ್ಕೂ ಹೆಚ್ಚು ನಗದು, ಲ್ಯಾಪ್‍ಟಾಪ್ ಸೇರಿದಂತೆ ಕೆಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಮೂಲತಃ ಮುಂಬೈ ಮೂಲದವನಾದ ಅಬ್ಬಾಸ್ ಪುಲಕೇಶಿ ನಗರದಲ್ಲಿ ಧರ್ಮಬೋಧನೆ ಮಾಡುತ್ತಿದ್ದ ಎನ್ನಲಾಗಿದೆ. ಮೊದಲು ಈತನನ್ನು ವಿಚಾರಣೆ ನಡೆಸಿದ್ದ ಎನ್‍ಐಎ ಅಧಿಕಾರಿಗಳು ನಂತರ ಸೂಕ್ತ ಮಾಹಿತಿ ಕಲೆ ಹಾಕಿ ಬಂಧಿಸಿದ್ದರು. +ದ.ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾಯಿಸಿದ ಉ.ಕೊರಿಯಾ +ಕಳೆದ 3 ತಿಂಗಳ ಅವಧಿಯಲ್ಲೇ ಎನ್‍ಐಎ ಅಧಿಕಾರಿಗಳು 15 ಕ್ಕೂ ಹೆಚ್ಚು ಶಂಕಿತ ಉಗ್ರರನ್ನು ಬಂಧಿಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈ ಮೂಲದ ಆಲಿ ಅಬ್ಬಾಸ್ ಪೇಟಿವಾಲ ಸಾಫ್ಟ್‍ವೇರ್ ಉದ್ಯೋಗಿಯಾಗಿದ್ದು, ಐಸಿಸ್ ಉಗ್ರರ ಜೊತೆ ಸಂಪರ್ಕ ಹೊಂದಿದ್ದ. ಟ್ಯಾನರಿ ರಸ್ತೆಯಲ್ಲಿ ಉರ್ದು ಶಾಲೆ ನಡೆಸುವ ಈತ ವಿದ್ಯಾವಂತ ಮುಸ್ಲಿಂ ಯುವಕರನ್ನು ಐಸಿಸ್ ಕಡೆ ಸೆಳೆಯುವಲ್ಲಿ ನಿರತನಾಗಿದ್ದ ಎಂಬ ಖಚಿತ ಮಾಹಿತಿ ಆಧಾರದ ಮೇರೆಗೆ ಬಂಧಿಸಿದ್ದರು. +ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಘಟನೆ ಸಕ್ರಿಯವಾಗಿದ್ದು, ಕೆಲ ಮೂಲಭೂತವಾದಿಗಳನ್ನು ಈ ಕೆಲಸಕ್ಕೆ ಬಳಸಿಕೊಳ್ಳುತ್ತದೆ ಎಂಬ ಆರೋಪವಿದೆ. ಹೀಗಾಗಿಯೇ ತಿಂಗಳಲ್ಲಿ 2 ರಿಂದ 3 ಬಾರಿ ದೇಶಾದ್ಯಂತ ಎನ್‍ಐಎ ದಾಳಿ ನಡೆಸುವ ಮೂಲಕ ಭಯೋತ್ಪಾದನೆಯಲ್ಲಿ ತೊಡಗುವ ಮತಾಂತರರನ್ನು ಎಡೆಮುರಿ ಕಟ್ಟುತ್ತಿದೆ. \ No newline at end of file diff --git a/eesanje/url_47_214_5.txt b/eesanje/url_47_214_5.txt new file mode 100644 index 0000000000000000000000000000000000000000..d2e549b7b153ec224e43af9f38a7a8a5611fb55a --- /dev/null +++ b/eesanje/url_47_214_5.txt @@ -0,0 +1,7 @@ +61 ಪ್ರವಾಸಿಗರನ್ನು ರಕ್ಷಿಸಿದ ಚಿನಾರ್ ವಾರಿಯರ್ಸ್ +ಗುಲ್ಮಾರ್ಗ್,ಡಿ.18- ಉತ್ತರ ಕಾಶ್ಮೀರದ ಗುಲ್ಮಾರ್ಗ್‍ನಲ್ಲಿ ಸಿಲುಕಿಕೊಂಡಿದ್ದ 61 ಪ್ರವಾಸಿಗರನ್ನು ಭಾರತೀಯ ಸೇನೆಯ ಚಿನಾರ್ ವಾರಿಯರ್ಸ್ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಶನಿವಾರ ಈ ಪ್ರದೇಶದಲ್ಲಿ ನಿರಂತರ ಹಿಮಪಾತದಿಂದಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಪ್ರವಾಸಿಗರು ಸಿಲುಕಿಕೊಂಡಿದ್ದರು. +ಹಿಮಪಾತದಿಂದಾಗಿ ತಾಪಮಾನದಲ್ಲಿನ ಕುಸಿತವು ಪ್ರವಾಸಿಗರನ್ನು ಕಂಗಾಲಾಗಿಸಿದೆ. ಸೇನಾ ಯೋಧರು ಅವರಿಗೆ ಬಿಸಿಯೂಟ, ಮಲಗುವ ಚೀಲಗಳು ಮತ್ತು ಬಿಸಿ ಊಟವನ್ನು ಒದಗಿಸಿ ಕಷ್ಟಗಳನ್ನು ನಿವಾರಿಸಿದರು ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. +ಗುಲ್ಮಾರ್ಗ್ ವಿಶ್ವಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಶನಿವಾರದಂದು ಹೊಸ ಹಿಮಪಾತದ ನಂತರ ಈ ಸ್ಥಳವು ಚಳಿಗಾಲದ ಅದ್ಭುತಲೋಕವಾಗಿ ಮಾರ್ಪಟ್ಟಿತು. ವರದಿಗಳ ಪ್ರಕಾರ, ಹಿಮಪಾತದಿಂದಾಗಿ ಈ ಪ್ರದೇಶದಲ್ಲಿ ಹಲವಾರು ರಸ್ತೆಗಳನ್ನು ನಿರ್ಬಂಧಿಸಲಾಗಿದೆ, ಇದು ನಿವಾಸಿಗಳ ಕಷ್ಟವನ್ನು ಹೆಚ್ಚಿಸಿದೆ. ಆದಾಗ್ಯೂ, ಕಣಿವೆಯ ನಿವಾಸಿಗಳಿಗೆ ಚಿನಾರ್ ವಾರಿಯರ್ಸ್ ಸಹಾಯ ಮಾಡಿರುವುದು ಇದೇ ಮೊದಲಲ್ಲ. ಶನಿವಾರ, ಈ ತಂಡವು ರಾಮಹಾಲ್ ಮತ್ತು ತಾರಾತ್‍ಪೋರಾದಲ್ಲಿ ವೈದ್ಯಕೀಯ ಶಿಬಿರವನ್ನು ಆಯೋಜಿಸಿತ್ತು. +ಹೈಫೈ ಸೌಲಭ್ಯ ಹೊಂದಿರುವ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ +ಶುಕ್ರವಾರ, ಗುಂಪು ಕಾಶ್ಮೀರದ ಮನಸ್ಬಾಲ್‍ನ ಬಾಜಿಪೋರ್ ಪ್ರದೇಶದಲ್ಲಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಇಲಾಖೆಗೆ ಸಹಾಯ ಮಾಡಿತು, ಇದರಿಂದಾಗಿ ಜೀವ ಮತ್ತು ಆಸ್ತಿ ನಷ್ಟವನ್ನು ತಡೆಯುವಲ್ಲಿ ಯಶಸ್ವಿಯಾಗಿತ್ತು. +ಚಿನಾರ್ ವಾರಿಯರ್ಸ್ ಭಾರತೀಯ ಸೇನೆಯ ಒಂದು ಭಾಗವಾಗಿದೆ, ಇದನ್ನು ಚಿನಾರ್ ಕಾಪ್ರ್ಸ್ ಎಂದು ಕರೆಯಲಾಗುತ್ತದೆ. ಅವರು ಕಾಶ್ಮೀರ ಕಣಿವೆಯಲ್ಲಿ ಮಿಲಿಟರಿ ಕಾರ್ಯಾಚರಣೆಗಳಿಗೆ ಜವಾಬ್ದಾರರಾಗಿದ್ದಾರೆ ಮತ್ತು ನೆರೆಯ ಪಾಕಿಸ್ತಾನ ಮತ್ತು ಚೀನಾದೊಂದಿಗಿನ ಎಲ್ಲಾ ಮಿಲಿಟರಿ ಸಂಘರ್ಷಗಳಲ್ಲಿ ಭಾಗವಹಿಸಿದ್ದಾರೆ. \ No newline at end of file diff --git a/eesanje/url_47_214_6.txt b/eesanje/url_47_214_6.txt new file mode 100644 index 0000000000000000000000000000000000000000..803b5207227f638e5066a549fccd817a368ff737 --- /dev/null +++ b/eesanje/url_47_214_6.txt @@ -0,0 +1,6 @@ +ಕೇರಳ ರಾಜ್ಯಪಾಲರ ವಿರುದ್ಧ ಶುರುವಾಯ್ತು ಬ್ಯಾನರ್ ಚಳವಳಿ +ತಿರುವನಂತಪುರಂ, ಡಿ.18 (ಪಿಟಿಐ)- ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಎಸ್‍ಎಫ್‍ಐ ಇಂದಿನಿಂದ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಬ್ಯಾನರ್‍ಗಳನ್ನು ಹಾಕುವ ಮೂಲಕ ಅವರ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿದೆ. ರಾಜ್ಯ ರಾಜಧಾನಿಯ ಸರ್ಕಾರಿ ಸಂಸ್ಕøತ ಕಾಲೇಜಿನ ಹೊರಗಿನ ಅಂತಹ ಬ್ಯಾನರ್‍ನಲ್ಲಿ ಖಾನ್ ಕುಲಪತಿಯಾಗಿ ವಿಶ್ವವಿದ್ಯಾಲಯಗಳಿಗೆ ಕೆಲಸ ಮಾಡಬೇಕೇ ಹೊರತು ಸಂಘಪರಿವಾರಕ್ಕಲ್ಲ ಎಂದು ಬರೆಯಲಾಗಿದೆ. +ಮಲಪ್ಪುರಂ ಜಿಲ್ಲೆಯ ಕ್ಯಾಲಿಕಟ್ ವಿಶ್ವವಿದ್ಯಾನಿಲಯ ಮತ್ತು ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾನ್ ವಿರುದ್ಧ ನೂರಾರು ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಹಾಕುವುದಾಗಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‍ಎಫ್‍ಐ) ತಡರಾತ್ರಿ ಘೋಷಿಸಿತ್ತು. ರಾಜ್ಯಪಾಲರು ತಂಗಿರುವ ವಿಶ್ವವಿದ್ಯಾನಿಲಯದ ಅತಿಥಿ ಗೃಹದ ಹೊರಗಿನ ಕೆಲವು ಬ್ಯಾನರ್‍ಗಳನ್ನು ಖಾನ್ ಅವರ ನಿರ್ದೇಶನದ ಮೇರೆಗೆ ಪೋಲೀಸರು ಕೆಳಗಿಳಿಸಿದ ನಂತರ ವಿದ್ಯಾರ್ಥಿಗಳ ತಂಡ ಈ ರೀತಿಯ ಹೋರಾಟಕ್ಕೆ ಮುಂದಾಗಿದೆ. +ಹೈಫೈ ಸೌಲಭ್ಯ ಹೊಂದಿರುವ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ +ಭಾನುವಾರ ಮಧ್ಯಾಹ್ನವೇ ಬ್ಯಾನರ್‍ಗಳ ಗಮನಸೆಳೆದರೂ ತೆಗೆದಿಲ್ಲ ಎಂದು ರಾಜ್ಯಪಾಲರು ಕಿಡಿ ಕಾರಿದರು ಹಾಗೂ ಯಾವುದೇ ಕ್ರಮ ಕೈಗೊಳ್ಳದ ಪೋಲೀಸರ ವಿರುದ್ಧ ವಾಗ್ದಾಳಿ ನಡೆಸಿದರು. ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ಅತಿಥಿ ಗೃಹದ ಹೊರಗೆ ಎಸ್‍ಎಫ್‍ಐ ಬ್ಯಾನರ್‍ಗಳು ಅವರನ್ನು ಸಂಘಿ ಎಂದು ಕರೆದು ಹಿಂತಿರುಗಿ ಎಂದು ಒತ್ತಾಯಿಸಿದ್ದರಿಂದ ಆಕ್ರೋಶಗೊಂಡ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿರ್ದೇಶನದ ಮೇರೆಗೆ ರಾಜ್ಯ ಪೊಲೀಸರು ಇವುಗಳನ್ನು ಹಾಕಿದ್ದಾರೆ ಎಂದು ಆರೋಪಿಸಿದರು. +ರಾಜಭವನ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಆರೋಪ ಮಾಡಲಾಗಿದೆ. ವಿಶ್ವವಿದ್ಯಾಲಯದಲ್ಲಿ ಸಿಎಂ ತಂಗಿದ್ದರೆ ಇಂತಹ ಬ್ಯಾನರ್‍ಗಳಿಗೆ ಅವಕಾಶ ನೀಡಲಾಗುತ್ತಿತ್ತೇ ಎಂದು ಖಾನ್ ಅವರು ವಿಶ್ವವಿದ್ಯಾಲಯದಲ್ಲಿ ನಿಯೋಜಿಸಲಾಗಿದ್ದ ಪೊಲೀಸರನ್ನು ಪ್ರಶ್ನಿಸಿದ್ದರು. \ No newline at end of file diff --git a/eesanje/url_47_214_7.txt b/eesanje/url_47_214_7.txt new file mode 100644 index 0000000000000000000000000000000000000000..4cf4a76612d31990cd50dc7fc5b618171a2a0234 --- /dev/null +++ b/eesanje/url_47_214_7.txt @@ -0,0 +1,7 @@ +ರಾಷ್ಟ್ರಪತಿಗಳಿಂದ 5 ದಿನಗಳ ತೆಲಂಗಾಣ ಪ್ರವಾಸ +ಹೈದರಾಬಾದ್, ಡಿ.18 (ಪಿಟಿಐ) ಐದು ದಿನಗಳ ಪ್ರವಾಸದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ತೆಲಂಗಾಣಕ್ಕೆ ಬಂದಿಳಿಯಲಿದ್ದಾರೆ. ರಾಷ್ಟ್ರಪತಿಗಳು ಪಶ್ಚಿಮ ಬಂಗಾಳದ ಐಐಟಿ ಖರಗ್‍ಪುರದ 69 ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ ಮತ್ತು ನಂತರ ಸಿಕಂದರಾಬಾದ್‍ನ ರಾಷ್ಟ್ರಪತಿ ನಿಲಯಕ್ಕೆ ಆಗಮಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. +ನಾಳೆ ಮುರ್ಮು ಅವರು ಹೈದರಾಬಾದ್ ಪಬ್ಲಿಕ್ ಸ್ಕೂಲ್ ಸೊಸೈಟಿಯ ಶತಮಾನೋತ್ಸವ ಆಚರಣೆಯನ್ನು ಅಲಂಕರಿಸಲಿದ್ದಾರೆ.ಅವರು ಡಿ. 20 ರಂದು ತೆಲಂಗಾಣದ ಪೋಚಂಪಲ್ಲಿಯಲ್ಲಿರುವ ಕೈಮಗ್ಗ ಮತ್ತು ನೂಲುವ ಘಟಕ ಹಾಗೂ ಜವಳಿ ಸಚಿವಾಲಯದ ಥೀಮ್ ಪೆವಿಲಿಯನ್‍ಗೆ ಭೇಟಿ ನೀಡಲಿದ್ದಾರೆ. ಅವರು ಈ ಸಂದರ್ಭದಲ್ಲಿ ನೇಕಾರರೊಂದಿಗೆ ಸಂವಾದ ನಡೆಸಲಿದ್ದಾರೆ. +ಅದೇ ದಿನ ಅವರು ಸಿಕಂದರಾಬಾದ್‍ನ ಎಂಎನ್‍ಆರ್ ಎಜುಕೇಶನಲ್ ಟ್ರಸ್ಟ್‍ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಡಿ. 21 ರಂದು ರಾಷ್ಟ್ರಪತಿ ನಿಲಯದಲ್ಲಿ ಮುರ್ಮು ಅವರು ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. +ಹೈಫೈ ಸೌಲಭ್ಯ ಹೊಂದಿರುವ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ +ಡಿ. 22 ರಂದು ರಾಜ್ಯದ ಪ್ರಮುಖ ನಾಗರಿಕರು ಮತ್ತು ಶಿಕ್ಷಣ ತಜ್ಞರು ಸೇರಿದಂತೆ ಗಣ್ಯರಿಗೆ ರಾಷ್ಟ್ರಪತಿ ನಿಲಯಂನಲ್ಲಿ ಅಟ್ ಹೋಮïಆರತಕ್ಷತೆಯನ್ನು ಆಯೋಜಿಸಲಿದ್ದಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ನಗರದ ಕೆಲವೆಡೆ ನಗರ ಪೊಲೀಸರು ಸಂಚಾರ ನಿರ್ಬಂಧ ಹೇರಲಾಗಿದೆ. ನಗರದ ಬೊಲಾರಂನಲ್ಲಿ ನೆಲೆಗೊಂಡಿರುವ ರಾಷ್ಟ್ರಪತಿ ನಿಲಯಂ ಕಟ್ಟಡವನ್ನು ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ ಹೈದರಾಬಾದ್ ನಿಜಾಮರಿಂದ ವಶಪಡಿಸಿಕೊಳ್ಳಲಾಯಿತು ಮತ್ತು ಅದನ್ನು ರಾಷ್ಟ್ರಪತಿಗಳ ಸಚಿವಾಲಯಕ್ಕೆ ಹಸ್ತಾಂತರಿಸಲಾಯಿತು. +1860 ರಲ್ಲಿ ನಿರ್ಮಿಸಲಾದ ಈ ಕಟ್ಟಡವು ಒಟ್ಟು 90 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಒಂದೇ ಅಂತಸ್ತಿನ ಕಟ್ಟಡ, ಇದು 11 ಕೊಠಡಿಗಳನ್ನು ಒಳಗೊಂಡಿದೆ. ಇದು ಡೈನಿಂಗ್ ಹಾಲ್, ಸಿನಿಮಾ ಹಾಲ್, ದರ್ಬಾರ್ ಹಾಲ್ ಮತ್ತು ಡೈನಿಂಗ್ ರೂಮ್ ಅನ್ನು ಸಹ ಹೊಂದಿದೆ. \ No newline at end of file diff --git a/eesanje/url_47_214_9.txt b/eesanje/url_47_214_9.txt new file mode 100644 index 0000000000000000000000000000000000000000..4b58030ef04450cf603b1cc6ab37f523bfa18332 --- /dev/null +++ b/eesanje/url_47_214_9.txt @@ -0,0 +1,6 @@ +ಉಗ್ರರು ಅಪಹರಿಸಿದ್ದ ಯುವಕರ ರಕ್ಷಣೆ +ಕೊಹಿಮಾ, ಡಿ 18 (ಪಿಟಿಐ) ಮ್ಯಾನ್ಮಾರ್ ಮೂಲದ ಎನ್‍ಎಸ್‍ಸಿಎನ್-ಕೆ (ಅಂಗ್ ಮಾಯï) ಉಗ್ರಗಾಮಿಗಳಿಂದ ಅಪಹರಿಸಿದ್ದ ಇಬ್ಬರು ಯುವಕರನ್ನು ನಾಗಾಲ್ಯಾಂಡ್‍ನ ಮೋನ್ ಜಿಲ್ಲೆಯ ಅರಣ್ಯದಿಂದ ಗುಂಡಿನ ಚಕಮಕಿಯ ನಂತರ ರಕ್ಷಿಸಲಾಗಿದೆ ಎಂದು ರಕ್ಷಣಾ ಹೇಳಿಕೆ ತಿಳಿಸಿದೆ. +ಜಿಲ್ಲೆಯ ಯನ್ಯು ಗ್ರಾಮದಿಂದ ಉಗ್ರಗಾಮಿ ಸಂಘಟನೆಯ ಶಸ್ತ್ರಸಜ್ಜಿತ ಕಾರ್ಯಕರ್ತರ ಗುಂಪು ಇಬ್ಬರು ಯುವಕರನ್ನು ಅಪಹರಿಸಿತ್ತು. ಘಟನೆ ವರದಿಯಾದ ನಂತರ ಅಸ್ಸಾಂ ರೈಫಲ್ಸ ಮತ್ತು ನಾಗಾಲ್ಯಾಂಡ್ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. +ಪ್ಯಾಂಟ್‍ನಲ್ಲಿ ಚಿನ್ನ ಕಳ್ಳ ಸಾಗಣೆ, ಸಿಕ್ಕಿಬಿದ್ದ ಪ್ರಯಾಣಿಕ +ಹುಡುಕಾಟದ ಸಮಯದಲ್ಲಿ ವೆಟ್ಟಿಂಗ್ ಗ್ರಾಮದ ಬಳಿಯ ಕಾಡಿನಲ್ಲಿ ಉಗ್ರರನ್ನು ತಡೆದಾಗ ನಡೆದ ಗುಂಡಿನ ಚಕಮಕಿಯ ನಂತರ ಅವರು ಯುವಕರನ್ನು ಬಿಟ್ಟು ಕತ್ತಲಿನಲ್ಲಿ ಪರಾರಿಯಾಗಿದ್ದಾರೆ. +ಸ್ಥಳದಲ್ಲಿ ಎಕೆ-16 ರೈಫಲ್ ಮತ್ತು ಮೂರು ಪಿಸ್ತೂಲ್‍ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ಬಿಟ್ಟು ಹೋಗಿ್ದದ್ದಾರೆ ಎಂದು ಹೇಳಿಕೆ ತಿಳಿಸಿದೆ. ಕಾರ್ಯಾಚರಣೆಯಲ್ಲಿ ನಾಗರಿಕ ಮಾರ್ಗದರ್ಶಕನನ್ನು ಸಹ ಬಂಧಿಸಲಾಗಿದೆ ಎಂದು ಅದು ಹೇಳಿದೆ. \ No newline at end of file diff --git a/eesanje/url_47_215_1.txt b/eesanje/url_47_215_1.txt new file mode 100644 index 0000000000000000000000000000000000000000..9435159ee2577c07a617b5c8a39f76ae47ad3c0e --- /dev/null +++ b/eesanje/url_47_215_1.txt @@ -0,0 +1,11 @@ +ಸ್ಥಿರ, ಶಾಶ್ವತ ಮತ್ತು ಸಮರ್ಥ ಸರ್ಕಾರಕ್ಕಾಗಿ ಜನಾದೇಶ : ಮೋದಿ +ನವದೆಹಲಿ,ಡಿ.17- ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಕಾರಕ್ಕೆ ಬಂದಿರುವುದು ಸ್ಥಿರ, ಶಾಶ್ವತ ಮತ್ತು ಸಮರ್ಥ ಸರ್ಕಾರಕ್ಕಾಗಿ ದೇಶದ ಜನತೆ ನೀಡಿದ ಜನಾದೇಶ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಘಡದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. +ಇದು 2024ರ ಲೋಕಸಭೆ ಚುನಾವಣೆಗೆ ಮತದಾರರು ನೀಡಿದ ದಿಕ್ಸೂಚಿ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮೋದಿಯವರು, ಬಿಜೆಪಿ ಮೇಲೆ ಜನ ನಂಬಿಕೆ ಇಟ್ಟಿರುವ ಸಂಕೇತವಾಗಿದೆ. ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ನಾವು ಹುಸಿಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. +ವಿಧಾನಸಭೆ ಚುನಾವಣೆ ಫಲಿತಾಂಶ ದೇಶದ ಮತದಾರರು ಎತ್ತ ಇದ್ದಾರೆ ಎಂಬುದಕ್ಕೆ ಒಂದು ಜನಾದೇಶವಾಗಿದೆ. ಈಗಿನ ಮತದಾರರು ಸ್ಥಿರ, ಸುಭದ್ರ ಮತ್ತು ಸಮರ್ಪಿತ ಮನೋಭಾವನೆಗೆ ಮತ ಹಾಕುತ್ತಾರೆ. ಬಿಜೆಪಿ ಅದನ್ನು ಉಳಿಸಿಕೊಳ್ಳಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ. ದೈನಿಕ್ ಜಾಗರಣ್‍ಗೆ ನೀಡಿದ ಸಂದರ್ಶನದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಗಳನ್ನು ಲೋಕಸಭೆಗೆ ಸೆಮಿಫೈನಲ್ ಎಂದು ಪರಿಗಣಿಸಬಹುದೇ ಎಂದು ಪ್ರಧಾನಿ ಮೋದಿಯವರನ್ನು ಕೇಳಿದಾಗ, ನಾವು ಕೇವಲ ಮೂರು ರಾಜ್ಯಗಳಲ್ಲಿ ಸರ್ಕಾರವನ್ನು ರಚಿಸಿಲ್ಲ, ದಕ್ಷಿಣ ಭಾರತದಲ್ಲೂ ನಮ್ಮ ನೆಲೆ ವಿಸ್ತಾರವಾಗಿದೆ. ತೆಲಂಗಾಣದಲ್ಲಿ ಮತ ಗಳಿಕೆಯಲ್ಲಿ ಮಾತ್ರವಲ್ಲದೆ ಸೀಟುಗಳ ಕ್ಷೇತ್ರಗಳನ್ನು ಹೆಚ್ಚಿಸಿಕೊಂಡಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. +ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ +ವಿಧಾನಸಭಾ ಚುನಾವಣೆಯ ಸಮಯದಲ್ಲಿ, ಮೊದಲ ಬಾರಿಗೆ ಪ್ರಧಾನಿ ಮೋದಿಯವರ ಹೆಸರಿನಲ್ಲಿ ಮತಕ್ಕಾಗಿ ಪ್ರಚಾರ ಮಾಡಲಾಯಿತು. ಇದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮರುಕಳಿಸುತ್ತದೆಯೇ ಎಂಬ ಪ್ರಶೆಗೆ, ಗ್ಯಾರಂಟಿ ಕೇವಲ ಮೂರು ಅಕ್ಷರಗಳಿಗೆ ಸೀಮಿತವಾಗಿಲ್ಲ. ಇದು ನಾಲ್ಕು ಮಾನದಂಡಗಳನ್ನು ಹೊಂದಿದೆ. ನೀತಿ, ಉದ್ದೇಶಗಳು, ನಾಯಕತ್ವ ಮತ್ತು ಕೆಲಸದ ದಾಖಲೆ. +ಅದಕ್ಕಾಗಿಯೇ ನಾನು ಮೋದಿಯವರ ಗ್ಯಾರಂಟಿ ಎಂದು ಹೇಳಿದಾಗ, ಸಾರ್ವಜನಿಕರು ಕಳೆದ ವರ್ಷಗಳ ಸಂಪೂರ್ಣ ಇತಿಹಾಸವನ್ನು ನೋಡುತ್ತಾರೆ. ಸಾರ್ವಜನಿಕರು ನಮ್ಮ ನೀತಿಗಳನ್ನು ಬೆಂಬಲಿಸುತ್ತಾರೆ, ನಮ್ಮ ಉದ್ದೇಶಗಳನ್ನು ಬೆಂಬಲಿಸುತ್ತಾರೆ, ನಮ್ಮ ನಾಯಕತ್ವವನ್ನು ಬೆಂಬಲಿಸುತ್ತಾರೆ ಮತ್ತು ನಮ್ಮ ಟ್ರ್ಯಾಕ್ ರೆಕಾರ್ಡ್ ಅನ್ನು ನಿರಂತರವಾಗಿ ವೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ. +ಕೋವಿಡ್ ಹೆಚ್ಚಳ ; ಮುಂಜಾಗ್ರತಾ ಕ್ರಮ ಸಿಎಂ ಸಿದ್ದರಾಮಯ್ಯ ಸೂಚನೆ +ಕಳೆದ ಒಂಬತ್ತು ವರ್ಷಗಳಲ್ಲಿ ಬಡವರಿಗೆ ನಾಲ್ಕು ಕೋಟಿ ಮನೆಗಳನ್ನು ನಿರ್ಮಿಸಿರುವುದು, ಉಚಿತ ಪಡಿತರ ಯೋಜನೆ, ರೈಲ್ವೇ ಪರಿವರ್ತನೆ ಮತ್ತು ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ಮಟ್ಟದಲ್ಲಿ ಪಕ್ಷದ ನಾಯಕತ್ವದ ವಿಷಯದಲ್ಲಿ ಬಿಜೆಪಿ ಸರ್ಕಾರ ಮಾಡಿದ ಕೆಲಸಗಳನ್ನು ಮೋದಿ ವಿವರಿಸಿದ್ದಾರೆ. ಹಿಂದೆ, ತಮ್ಮ ಹಕ್ಕುಗಳನ್ನು ಪಡೆಯಲು, ಜನರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಲಂಚ ನೀಡಬೇಕಾಗಿತ್ತು. ಈಗ, ಸರ್ಕಾರವು ಜನರ ಬಳಿಗೆ ಹೋಗುತ್ತಿದೆ, ಅದು ಹಕ್ಕುಗಳನ್ನು ಹೊಂದಿರುವವರಿಗೆ ತಲುಪುತ್ತಿದೆ ಎಂದು ಪ್ರಧಾನಿ ಒತ್ತಿ ಹೇಳಿದ್ದಾರೆ. +ಮೈತ್ರಿಕೂಟ: ಕಾಂಗ್ರೆಸ್ ಮೈತ್ರಿಕೂಟ ಕುರಿತು ಮೋದಿಯವರು ವ್ಯಂಗ್ಯಭರಿತವಾಗಿ ನಗುತ್ತಾ ಪ್ರತಿಕ್ರಿಯಿಸಿದ್ದಾರೆ.ಇಂಡಿಯಾ ಮೈತ್ರಿಕೂಟ ಬಿಜೆಪಿಗೆ ಹೊಸ ರೀತಿಯ ತಂತ್ರ ಮತ್ತು ಹೊಸ ಪ್ರಯೋಗ ಮಾತ್ರವಲ್ಲ. ಮುಂದೆ ಏನೋ ಇತ್ತು ಆದರೆ ತೆರೆಮರೆಯಲ್ಲಿ ಭಾರತದ ಮೈತ್ರಿ ಇತ್ತು. ಬಿಜೆಪಿ ಅಭ್ಯರ್ಥಿಗಳ ಮತಗಳನ್ನು ಕಡಿತಗೊಳಿಸಲು ಅವರು ಯೋಜನೆ ರೂಪಿಸಿ ಭ್ರಮೆ ಮೂಡಿಸಿದ್ದರು ಆದರೆ ಸಾರ್ವಜನಿಕರು ಅವರ ಎಲ್ಲಾ ಷಡ್ಯಂತ್ರಗಳನ್ನು ವಿಫಲಗೊಳಿಸಿದ್ದಾರೆ ಎಂದಿದ್ದಾರೆ. +ದೇಶವನ್ನು ವಿಭಜಿಸುವ ರಾಜಕೀಯವು ಹತಾಶೆಯಿಂದ ಹುಟ್ಟಿದೆ. ಈ ಜನರು ಅಧಿಕಾರಕ್ಕೆ ಬರಲು ಏನು ಬೇಕಾದರೂ ಮಾಡಲು ಪ್ರಯತ್ನಿಸುತ್ತಿದ್ದಾರೆ. ದೇಶ ಇದನ್ನು ಗಮನಿಸುತ್ತಿದೆ; ಇದನ್ನು ದೇಶದ ಜನತೆ ಗಮನಿಸುತ್ತಿದ್ದಾರೆ. ದೇಶದ ಜನರ ತಿಳುವಳಿಕೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. \ No newline at end of file diff --git a/eesanje/url_47_215_10.txt b/eesanje/url_47_215_10.txt new file mode 100644 index 0000000000000000000000000000000000000000..5fb16115d4fa218fe2692893ceee85397b3c769e --- /dev/null +++ b/eesanje/url_47_215_10.txt @@ -0,0 +1,5 @@ +12 ಕೋಟಿ ಮೌಲ್ಯದ ಕೊಕೇನ್ ವಶ +ಚೆನ್ನೈ, ಡಿ.16- ಇಲ್ಲಿನ ವಿಮಾನ ನಿಲ್ದಾಣದಲ್ಲಿ 12 ಕೋಟಿ ಮೌಲ್ಯದ 1,201 ಗ್ರಾಂ ಮಾದಕ ತೂಕದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಅಡಿಸ್ ಅಬಾಬಾದಿಂದ ಆಗಮಿಸುತ್ತಿದ್ದ ನೈಜಿರಿಯನ್ ಪ್ರಜೆಯಿಂದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಚೆನ್ನೈ ಏರ್‍ಪೋರ್ಟ್ ಕಸ್ಟಮ್ಸ ಅಧಿಕಾರಿಗಳು ತಿಳಿಸಿದ್ದಾರೆ. +ನೈಜಿರಿಯನ್ ಪ್ರಜೆಯ ಪರೀಕ್ಷೆಯ ಸಮಯದಲ್ಲಿ, 71 ಸಂಖ್ಯೆಯ ಹೈಪರ್‍ಡೆನ್ಸ್ ಸಿಲಿಂಡರಾಕಾರದ ಬಂಡಲ್‍ಗಳ ರೂಪದಲ್ಲಿ ನಿಷಿದ್ಧ ವಸ್ತು ಪತ್ತೆಯಾಗಿದೆ ಎಂದು ಕಸ್ಟಮ್ಸ ಪ್ರಧಾನ ಆಯುಕ್ತರ ಕಚೇರಿ ತಿಳಿಸಿದೆ. +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +12 ಕೋಟಿ ಮೌಲ್ಯದ 1,201 ಗ್ರಾಂ ತೂಕದ ಕೊಕೇನ್ ಅನ್ನು ಕಸ್ಟಮ್ಸ ಆಕ್ಟ್ 1962 ರ ಅಡಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕಸ್ಟಮ್ಸ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. \ No newline at end of file diff --git a/eesanje/url_47_215_11.txt b/eesanje/url_47_215_11.txt new file mode 100644 index 0000000000000000000000000000000000000000..b046849d3fdab39f742ebb76949f69c2fc4e72e9 --- /dev/null +++ b/eesanje/url_47_215_11.txt @@ -0,0 +1,6 @@ +ಚಲಿಸುತ್ತಿದ್ದ ಬಸ್‍ನಲ್ಲಿ ದಲಿತ ಮಹಿಳೆ ಮೇಲೆ ಚಾಲಕರಿಂದ ಅತ್ಯಾಚಾರ +ಜೈಪುರ,ಡಿ.16- ನಿರ್ಭಯಾ ಪ್ರಕರಣಕ್ಕೆ 10 ವರ್ಷ ತುಂಬುತ್ತಿರುವ ಸಂದರ್ಭದಲ್ಲೇ ಉತ್ತರ ಪ್ರದೇಶದಿಂದ ಜೈಪುರಕ್ಕೆ ಬರುತ್ತಿದ್ದ ಬಸ್ಸಿನಲ್ಲಿ 20 ವರ್ಷದ ದಲಿತ ಮಹಿಳೆಯ ಮೇಲೆ ಇಬ್ಬರು ಚಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. +ಡಿ 9 ಮತ್ತು 10 ರ ಮಧ್ಯರಾತ್ರಿ ಖಾಸಗಿ ಬಸ್ ಉತ್ತರ ಪ್ರದೇಶದಿಂದ ಜೈಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾನ್ಪುರದಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದ ಸಂತ್ರಸ್ತೆ ಕ್ಯಾಬಿನ್‍ನಲ್ಲಿ ಕುಳಿತಿದ್ದಾಗ ಚಾಲಕರು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಕ್ಯಾಬಿನ್‍ನೊಳಗೆ ಆರಿಫ್ ಮತ್ತು ಲಲಿತ್ ಎಂದು ಗುರುತಿಸಲಾದ ಚಾಲಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ. ಆರಿಫ್‍ನನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಕನೋಟಾ ಪೊಲೀಸ್ ಠಾಣೆಯ ಎಸ್‍ಎಚ್‍ಒ ಭಗವಾನ್ ಸಹಾಯ್ ಮೀನಾ ತಿಳಿಸಿದ್ದಾರೆ. ಲಲಿತ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಆತನ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +ಸಂತ್ರಸ್ತೆ ಕ್ಯಾಬಿನ್‍ನಲ್ಲಿದ್ದಾಗ ಬಸ್‍ನೊಳಗೆ ಕೆಲವು ಪ್ರಯಾಣಿಕರಿದ್ದರು, ಆದರೆ ಡೋರ್ ಲಾಕ್ ಮಾಡಿ ಕಾಮುಕರು ಈ ಕೃತ್ಯವೆಸಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಸಂಭವಿಸಿದಾಗ ಮಹಿಳೆ ಅಲಾರಾಂ ಒತ್ತುವಲ್ಲಿ ಯಶಸ್ವಿಯಾದ್ದರಿಂದ ಬೇರೆ ಪ್ರಯಾಣಿಕರ ಬಸ್ ಅನ್ನು ನಿಲ್ಲಿಸುವಂತೆ ಸೂಚಿಸಿದಾಗ ಲಲಿತ್ ಬಸ್‍ನಿಂದ ಇಳಿದು ಪರಾರಿಯಾಗಿದ್ದರೆ. ಆರಿಫ್ ಅನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_215_12.txt b/eesanje/url_47_215_12.txt new file mode 100644 index 0000000000000000000000000000000000000000..af9c5a6d2c17c595a8864ec33cc5694a0b4cd958 --- /dev/null +++ b/eesanje/url_47_215_12.txt @@ -0,0 +1,10 @@ +ಸಿಂಧೂ ಕಣಿವೆ ನಾಗರಿಕತೆ ಅಂತ್ಯದ ಕುರಿತು ಕೇರಳ ವಿಜ್ಞಾನಿಗಳ ಮಹತ್ವದ ಆವಿಷ್ಕಾರ +ತಿರುವನಂತಪುರಂ, ಡಿ 16 (ಪಿಟಿಐ) ಸಿಂಧೂ ಕಣಿವೆ ನಾಗರಿಕತೆಯ ಅಂತ್ಯಕ್ಕೆ ಕಾರಣವಾದ ಘಟನೆಗಳ ಬಗ್ಗೆ ಸ್ಪಷ್ಟವಾದ ತಿಳುವಳಿಕೆಯನ್ನು ನೀಡುವ ಮಹತ್ವದ ವೈಜ್ಞಾನಿಕ ಆವಿಷ್ಕಾರವನ್ನು ಕೇರಳ ವಿಶ್ವವಿದ್ಯಾಲಯದ ಭೂವಿಜ್ಞಾನಿಗಳ ಗುಂಪು ಮಾಡಿದೆ ಎಂದು ಹೇಳಲಾಗಿದೆ. +ಗುಜರಾತಿನ ಕಚ್‍ನ ಲೂನಾದಲ್ಲಿನ ಕುಳಿ ಉಲ್ಕೆಯ ಪ್ರಭಾವದಿಂದ ಸಿಂಧೂ ನಾಗರಿಕತೆ ನಶೀಸಿಹೋಗಲು ಕಾರಣವಾಯಿತು ಎಂದು ಅವರು ಪ್ರತಿಪಾದಿಸಿದ್ದಾರೆ, ಇದು ಮಾನವರು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಇರುವ ಒಂದೇ ಒಂದು ದೊಡ್ಡ ಕುಳಿಯಾಗಿದೆ. +ಕ್ರೇಟರ್ ಸೈಟ್‍ನಿಂದ ಕರಗಿದ ಬಂಡೆಗಳ ವಿಶ್ಲೇಷಣೆಯು ಬಂಡೆಗಳು ಉಲ್ಕೆಯ ಅವಶೇಷಗಳಾಗಿವೆ ಎಂದು ದೃಢಪಡಿಸಿದೆ ಮತ್ತು ಕಳೆದ 6,900 ವರ್ಷಗಳಲ್ಲಿ ಈ ಪ್ರದೇಶದಲ್ಲಿ ಸಿಂಧೂ ಕಣಿವೆಯ ನಾಗರಿಕತೆಯ ಅಭಿವೃದ್ಧಿ ಹೊಂದುತ್ತಿರುವ ಅವಧಿಗೆ ಹೊಂದಿಕೆಯಾಯಿತು. +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +ಕಳೆದ 6,900 ವರ್ಷಗಳಲ್ಲಿ ಈ ಪರಿಣಾಮ ಸಂಭವಿಸಿದೆ ಎಂದು ನಾವು ದೃಢೀಕರಿಸಬಹುದು. ಪರಿಣಾಮದ ನಿಖರವಾದ ಸಮಯವನ್ನು ನಿರ್ಧರಿಸಲು ನಾವು ನಿಖರವಾದ ಡೇಟಿಂಗ್ ನಡೆಸಬೇಕಾಗಿದೆ ಎಂದು ಈ ಆವಿಷ್ಕಾರವನ್ನು ಮಾಡಿದ ತಂಡದ ಪ್ರಮುಖ ಭೂವಿಜ್ಞಾನಿ ಕೆ ಎಸ್ ಸಜಿನ್ ಕುಮಾರ್ ಪಿಟಿಐಗೆ ತಿಳಿಸಿದರು. +ಲೂನಾದಲ್ಲಿ ಕ್ರೇಟರ್ ರಿಸರ್ಚ್ ಸೆಂಟರ್ ಸ್ಥಾಪಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಇದು ಭಾರತದಲ್ಲಿ ಪತ್ತೆಯಾದ ನಾಲ್ಕನೇ ಕುಳಿ, ಮತ್ತು ಭಾರತೀಯ ತಂಡದಿಂದ ಮೊದಲನೆಯದು. ಉಳಿದ ಮೂರನ್ನು ವಿದೇಶಿ ಭೂವಿಜ್ಞಾನಿಗಳು ಕಂಡುಹಿಡಿದಿದ್ದಾರೆ. +ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಇಂತಹ ಸಂಶೋಧನೆಗಳಿಗೆ ಬಹಳ ಸೀಮಿತ ಸಂಪನ್ಮೂಲಗಳಿವೆ ಎಂದು ಕುಮಾರ್ ಹೇಳಿದರು. ಲೂನಾದಿಂದ ಹತ್ತಿರದ ಸಿಂಧೂ ಕಣಿವೆ ಪ್ರದೇಶವು ಸುಮಾರು 200 ಕಿಲೋಮೀಟರ್ ದೂರದಲ್ಲಿದೆ. ಆದಾಗ್ಯೂ, ಈ ಪರಿಣಾಮವು ಸಿಂಧೂ ಕಣಿವೆಯ ನಾಗರಿಕತೆಯನ್ನು ಅಳಿಸಿಹಾಕಬಹುದೇ ಎಂಬ ಬಗ್ಗೆ ವಿಜ್ಞಾನಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. +ಬಹಿರಂಗವಾಯ್ತು ಸಂಸತ್ ಮೇಲೆ ಹೊಗೆ ದಾಳಿ ಹಿಂದಿನ ಉದ್ದೇಶ +ಕುಳಿಯು ಸರಿಸುಮಾರು 2 ಕಿಮೀ ಅಗಲವಿದೆ, 100 ರಿಂದ 200 ಮೀಟರ್ ವ್ಯಾಸವನ್ನು ಹೊಂದಿರುವ ಉಲ್ಕೆಯು ಇದಕ್ಕೆ ಕಾರಣವಾಗಬಹುದೆಂದು ಅಂದಾಜಿಸಲಾಗಿದೆ. ಇದರ ತಕ್ಷಣದ ಪರಿಣಾಮವು 5 ಕಿಮೀ ವ್ಯಾಪ್ತಿಯೊಳಗೆ ಪರಿಣಾಮಕಾರಿಯಾಗಬಹುದು. ಆದರೆ ಅದರಿಂದ ಉಂಟಾಗುವ ಧೂಳಿನ ಮೋಡವು ನೆಲೆಗೊಳ್ಳಲು ಕನಿಷ್ಠ ಒಂದು ತಿಂಗಳು ತೆಗೆದುಕೊಳ್ಳುತ್ತದೆ ಎಂದು ಕುಮಾರ್ ಹೇಳಿದರು. ಇದು ಮಾನವನ ವಿಕಾಸದ ನಂತರ ಮೊದಲ ಉಲ್ಕೆಯ ಪ್ರಭಾವವನ್ನು ಗುರುತಿಸುವುದರಿಂದ ಇದು ಆಕರ್ಷಕ ಆವಿಷ್ಕಾರವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_215_2.txt b/eesanje/url_47_215_2.txt new file mode 100644 index 0000000000000000000000000000000000000000..8f01f03c63fafeed3299a1a3cff11142e6a9ee3b --- /dev/null +++ b/eesanje/url_47_215_2.txt @@ -0,0 +1,9 @@ +ವಿಶ್ವದ ಅತಿದೊಡ್ಡ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ +ಸೂರತ್,ಡಿ.17- ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿರುವ ಸೂರತ್ ಡೈಮಂಡ್ ಬೋರ್ಸ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಇದಕ್ಕೂ ಮೊದಲು, ಗುಜರಾತ್‍ನ ಸೂರತ್ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡಕ್ಕೆ ಚಾಲನೆ ನೀಡಿದರು. +ಸೂರತ್ ಡೈಮಂಡ್ ಬೋರ್ಸ್ ಅಂತಾರಾಷ್ಟ್ರೀಯ ವಜ್ರ ಮತ್ತು ಆಭರಣ ವ್ಯಾಪಾರಕ್ಕಾಗಿ ವಿಶ್ವದ ಅತಿದೊಡ್ಡ ಮತ್ತು ಆಧುನಿಕ ಕೇಂದ್ರವಾಗಲಿದೆ. ಸೂರತ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು 1,200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪೀಕ್ ಅವರ್‍ಗಳಲ್ಲಿ ನಿರ್ವಹಿಸುವ ಸಾಮಥ್ರ್ಯವನ್ನು ಹೊಂದಿದೆ. ಈ ಅವಧಿಯಲ್ಲಿ ಅದರ ಸಾಮಥ್ರ್ಯವನ್ನು 3,000 ಪ್ರಯಾಣಿಕರಿಗೆ ಹೆಚ್ಚಿಸುವ ನಿಬಂಧನೆ ಇದೆ. ಇದರೊಂದಿಗೆ ಈ ವಿಮಾನ ನಿಲ್ದಾಣದ ವಾರ್ಷಿಕ ಪ್ರಯಾಣಿಕರ ನಿರ್ವಹಣಾ ಸಾಮಥ್ರ್ಯ ಈಗ 55 ಲಕ್ಷ ಪ್ರಯಾಣಿಕರಿಗೆ ಏರಿಕೆಯಾಗಿದೆ. +ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ +ಸೂರತ್ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಬಳಿಕ ಸೂರತ್ ಡೈಮಂಡ್ ಬೋರ್ಸ್ ಅನ್ನು ಮೋದಿ ಉದ್ಘಾಟಿಸಲಿದ್ದಾರೆ, ಇದು ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡ ಎಂದು ಹೇಳಲಾಗುತ್ತದೆ. ಪ್ರಧಾನಿ ಮೋದಿ ಸೂರತ್ ವಿಮಾನ ನಿಲ್ದಾಣದಿಂದ ಡೈಮಂಡ್ ಬೋರ್ಸ್‍ಗೆ ರಸ್ತೆ ಮೂಲಕ ತೆರಳಿದ್ದು, ದಾರಿಯಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. +ಸೂರತ್ ವಿಮಾನ ನಿಲ್ದಾಣದಿಂದ ಡೈಮಂಡ್ ಬೋರ್ಸ್ ವರೆಗಿನ 6 ಸ್ಥಳಗಳಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಾಯಿತು. ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಸೂರತ್‍ನಲ್ಲಿ ಏರ್‍ಪೋರ್ಟ್‍ನ ಹೊಸ ಟರ್ಮಿನಲ್ ಕಟ್ಟಡದ ಉದ್ಘಾಟನೆಗೆ ಮುನ್ನ, ಸೂರತ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು. +ಇದು ಸೂರತ್‍ಗೆ ಪ್ರಮುಖ ಮೂಲಸೌಕರ್ಯದ ಸೌಲಭ್ಯವನ್ನು ಒದಗಿಸುತ್ತದೆ. ‘ಜೀವನ ಸುಲಭ’ವನ್ನು ಉತ್ತೇಜಿಸುತ್ತದೆ ಮತ್ತು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚಿನ ವಾಣಿಜ್ಯೋದ್ಯಮವನ್ನು ಖಾತ್ರಿಪಡಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದರು. +ಸಂಸತ್ತಿಗೆ ನುಗ್ಗಿದವರ ಮೊಬೈಲ್ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ +ಸೂರತ್ ಡೈಮಂಡ್ ಬೋರ್ಸ್ ಡೈಮಂಡ್ ರಿಸರ್ಚ್ ಅಂಡ್ ಟ್ರೇಡ್ (ಡ್ರೀಮ್ ಸಿಟಿ) ನ ಭಾಗವಾಗಿದೆ. ಎಸ್‍ಡಿಬಿ ಕಟ್ಟಡವು 67 ಲಕ್ಷ ಚದರ ಅಡಿಗಳಿಗಿಂತ ಹೆಚ್ಚು ವಿಸ್ತೀರ್ಣವನ್ನು ಹೊಂದಿರುವ ವಿಶ್ವದ ಅತಿದೊಡ್ಡ ಕಚೇರಿ ಸಂಕೀರ್ಣವಾಗಿದೆ. ಇದು ಸೂರತ್ ನಗರದ ಸಮೀಪದ ಖಜೋದ್ ಗ್ರಾಮದಲ್ಲಿ ನೆಲೆಗೊಂಡಿದ್ದು, ಉದ್ಘಾಟನೆಗೂ ಮುನ್ನವೇ ಮುಂಬೈ ಮೂಲದ ಹಲವು ವಜ್ರದ ವ್ಯಾಪಾರಿಗಳು ತಮ್ಮ ಕಚೇರಿಗಳನ್ನು ಖಾತ್ರಿಪಡಿಸಿಕೊಂಡಿದ್ದಾರೆ. ಇವುಗಳನ್ನು ಹರಾಜು ನಂತರ ಆಡಳಿತ ಮಂಡಳಿ ಹಂಚಿಕೆ ಮಾಡಿದೆ. \ No newline at end of file diff --git a/eesanje/url_47_215_3.txt b/eesanje/url_47_215_3.txt new file mode 100644 index 0000000000000000000000000000000000000000..83f11117842f25b88fbc984b716c3761e162d73d --- /dev/null +++ b/eesanje/url_47_215_3.txt @@ -0,0 +1,16 @@ +ಸಂಸತ್‍ನ ಭದ್ರತಾ ಲೋಪ : ಕೊನೆಗೂ ಮೌನ ಮುರಿದ ಮೋದಿ +ನವದೆಹಲಿ,ಡಿ.17-ದೇಶಾದ್ಯಂತ ಭಾರೀ ವಿವಾದವನ್ನೇ ಸೃಷ್ಟಿಸಿರುವ ಸಂಸತ್‍ನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರಮೋದಿ ಅವರು, ಇದು ಅತ್ಯಂತ ಗಂಭೀರವಾದ ಪ್ರಕರಣವಾಗಿದ್ದು, ಅಷ್ಟೇ ಆತಂಕಕಾರಿಯೂ ಹೌದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. +ಇದು ಗಂಭೀರವಾದ ವಿಚಾರ ಎಂಬುದರಲ್ಲಿ ಎರಡು ಮಾತಿಲ್ಲ. ಇದು ರಾಷ್ಟ್ರೀಯ ಭದ್ರತಾ ವಿಷಯವಾಗಿರುವುದರಿಂದ ಆಳವಾದ ತನಿಖೆ ನಡೆಯಬೇಕು. ಯಾರೊಬ್ಬರು ಇದರಲ್ಲಿ ರಾಜಕೀಯವನ್ನು ಬೆರೆಸಬಾರದೆಂದು ವಿರೋಧ ಪಕ್ಷಗಳು ಹಾಗೂ ದೇಶದ ಜನತೆಯಲ್ಲಿ ಮನವಿ ಮಾಡಿದ್ದಾರೆ. +ಹಿಂದಿ ದೈನಿಕ ಡ್ಯಾನಿಶ್ ಜಾಗರಣ್ ಪತ್ರಿಕೆಯೊಂದಿಗೆ ಮಾತನಾಡಿರುವ ಅವರು, ಘಟನೆ ನಡೆದು ಐದು ದಿನಗಳ ನಂತರ ಮೊದಲ ಬಾರಿಗೆ ಅವರು ಮಾತನಾಡಿದ್ದಾರೆ. ಸಂಸತ್‍ನಲ್ಲಿ ನಡೆದ ಘಟನೆಯ ಗಂಭೀರತೆಯನ್ನು ನಾವು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಲೋಕಸಭೆಯ ಸ್ಪೀಕರ್ ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಈ ಘಟನೆಯ ಹಿಂದಿನ ಉದ್ದೇಶ ಏನೆಂಬುದನ್ನು ತಿಳಿಯಲು ವಿಷಯದ ಆಳಕ್ಕೆ ಹೋಗುವುದು ಮುಖ್ಯ. +ಒಟ್ಟಾರೆ ನಮಗೆ ಪರಿಹಾರ ಸಿಗಬೇಕು. ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣವು ಗಂಭೀರವಾಗಿಯೇ ಇದೆ. ನಾವು ಕಡಿಮೆ ಅಂದಾಜು ಮಾಡಬಾರದು. ಡಿ.13ರಂದು ಏನಾಯಿತು ಎಂಬುದರ ಹಿಂದಿನ ಉದ್ದೇಶಗಳನ್ನು ತನಿಖೆ ಮಾಡಲು ಅಗತು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. +ಈ ವಿಷಯದ ಬಗ್ಗೆ ಪ್ರತಿರೋಧಗಳಿಂದ ದೂರ ಇರಬೇಕು ಎಂದು ಮನವಿ ಮಾಡಿದ್ದಾರೆ. ಸಭಾಧ್ಯಕ್ಷರು ಪ್ರಕರಣದ ಬಗ್ಗೆ ಗಂಭೀರತೆಯಿಂದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ತನಿಖಾ ಸಂಸ್ಥೆಗಳು ಈ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸುತ್ತಿವೆ. ಒಂದೇ ಮನಸ್ಸಿನಿಂದ ಪರಿಹಾರವನ್ನೂ ಕಂಡುಕೊಳ್ಳಬೇಕು. ತಪ್ಪು ಹುಡುಕುವುದರಿಂದ ಪರಿಹಾರ ಸಿಗುವುದಿಲ್ಲ. ಸಂಸತ್ ಒಳಗೆ ನುಗ್ಗಿದವರ ಉದ್ದೇಶಗಳು ಹಾಗೂ ಅದರ ಹಿಂದಿನ ಉದ್ದೇಶಗಳನ್ನು ನಮ್ಮ ತನಿಖಾಧಿಕಾರಿಗಳು ಪತ್ತೆ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. +ಕಾಂಗ್ರೆಸ್ ವಿರುದ್ಧ ವಾಗ್ದಾಳಿ:ಇನ್ನು ಮೋದಿ ಅವರು ತಮ್ಮ ಮಾತಿನ ಉದ್ದಕ್ಕೂ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಈಗ ದೇಶದ ಜನತೆಯ ನಂಬಿಕೆ ಕಳೆದುಕೊಂಡಿರುವ ರಾಜಕೀಯ ಪಕ್ಷವಾಗಿದೆ. ಇತಿಹಾಸದ ಶತಮಾನವುಳ್ಳ ಪಕ್ಷವನ್ನು ನಂಬುವ ಸ್ಥಿತಿಯಲ್ಲಿ ಯಾರೊಬ್ಬರು ಇಲ್ಲ ಎಂದು ಕಿಡಿಕಾರಿದ್ದಾರೆ. +ಪ್ರತಿಯೊಂದರಲ್ಲೂ ತಪ್ಪು ಹುಡುಕುವುದು ಕಾಂಗ್ರೆಸ್‍ನ ಹುಟ್ಟಗುಣ. ಸಾಲು ಸಾಲು ಸೋಲುಗಳನ್ನು ಅನುಭವಿಸಿದ್ದರೂ ತನ್ನ ತಪ್ಪನ್ನು ತಿದ್ದುಕೊಳ್ಳದೆ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ನಾವು ಸ್ಪಷ್ಟ ಜನಾದೇಶ ಪಡೆಯಲಿದ್ದೇವೆ. 2019ರ ಲೋಕಸಭೆ ಚುನಾವಣೆಯಲ್ಲಿ ಗಳಿಸಿದ ಸ್ಥಾನಕ್ಕಿಂತಲೂ ಹೆಚ್ಚಿನ ಸ್ಥಾನವನ್ನು ಬಿಜೆಪಿಗೆ ದೇಶದ ಜನತೆ ನೀಡಲಿದ್ದಾರೆ. ಕೇಂದ್ರದಲ್ಲಿ ನಾವು ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದನ್ನು ಯಾವುದೇ ಶಕ್ತಿಗಳು ತಡೆಯುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಮೋದಿ ನುಡಿದಿದ್ದಾರೆ. +ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಬ್ರಹ್ಮಾಂಡದ ಯಾವುದೇ ಶಕ್ತಿಯು ಈಗ ಆಗಸ್ಟ್ 2019 ರ ನಿರ್ಧಾರವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. +ರಾಮಮಂದಿರ ಉದ್ಘಾಟನೆ : ಅಮೆರಿಕದಲ್ಲಿನ ಹಿಂದೂ ಸಮುದಾಯದಿಂದ ಕಾರು ರ‍್ಯಾಲಿ +ಬ್ರಹ್ಮಾಂದ್ ಕಿ ಕೋಯಿ ಭಿ ತಾಕತ್ ಅಬ್ ಆರ್ಟಿಕಲ್ 370 ಕಿ ವಾಪ್ಸಿ ನಹಿಂ ಕರ ಶಕ್ತಿ, ಲಿಹಾಜ ಸಕಾರಾತ್ಮತ್ ಕಾರ್ಯ ಮೈನ್ ಲಗೇನ್ (ವಿಶ್ವದಲ್ಲಿ ಯಾವುದೇ ಶಕ್ತಿಯು ಈಗ ಆರ್ಟಿಕಲ್ 370 ಅನ್ನು ಹಿಂತಿರುಗಿಸಲು ಸಾಧ್ಯವಿಲ್ಲ, ಆದ್ದರಿಂದ ಸಕಾರಾತ್ಮಕ ಕೆಲಸದಲ್ಲಿ ತೊಡಗಿಸಿಕೊಳ್ಳಿ) ಎಂದು ಪ್ರಧಾನಿ ತಿಳಿಸಿದ್ದಾರೆ. +ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ರಾಜಸ್ಥಾನದ ಗೆಲುವು ಮುಂಬರುವ ಲೋಕಸಭೆ ಚುನಾವಣೆಗೆ ಪ್ರಮುಖ ಸಂದೇಶ ಎಂದರಲ್ಲದೇ, ಜನರ ಹೃದಯವನ್ನು ಗೆಲ್ಲುವುದು ಚುನಾವಣಾ ಸ್ಥಾನಗಳನ್ನು ಎಣಿಕೆ ಮಾಡುವುದಕ್ಕಿಂತ ಹೆಚ್ಚಿನದು. ಇದಕ್ಕಾಗಿ ನಾನು ಶ್ರಮಿಸುತ್ತೇನೆ ಎಂದು ಹೇಳಿದರು. +ಯಾವುದೇ ಕ್ಷೇತ್ರದಲ್ಲಿ ಹೆಸರು ದೊಡ್ಡದಾದರೆ, ಯಾರಾದರೂ ತಮ್ಮದೇ ಆದ ಬ್ರ್ಯಾಂಡಿಂಗ್ ಮಾಡಿದರೆ, ಉಳಿದ ಜನರು ಎಷ್ಟೇ ಪ್ರತಿಭಾವಂತರಾಗಿದ್ದರೂ, ಎಷ್ಟೇ ಒಳ್ಳೆಯ ಕೆಲಸ ಮಾಡಿದರೂ ಗಮನ ಸೆಳೆಯುವುದಿಲ್ಲ ಎಂದು ಹೇಳಿದ ಪ್ರಧಾನಿ ಮೋದಿ, ಈ ಕಾರಣದಿಂದಾಗಿ, ಕೆಲವೊಮ್ಮೆ ಕೆಲವರು ಹೊಸದಾಗಿ ಕಾಣಿಸಿಕೊಳ್ಳುತ್ತಾರೆ. ಅದೇನೆಂದರೆ ಅವು ಹೊಸಬರಲ್ಲ ಎಂಬುದು ಸತ್ಯ. ಅವರಿಗೆ ಅವರದೇ ಆದ ದೀರ್ಘ ತಪಸ್ಸು ಮತ್ತು ಅನುಭವವಿದೆ ಎಂದರು. +ಇನ್ನು ಜನವರಿ 22ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ದಿನ ತಮಗೆ ವಿಶೇಷವಾದ ದಿನ. ಭಾರತದ 140 ಕೋಟಿ ಹೃದಯಗಳ ಸಂತೋಷ ಮತ್ತು ನೆಮ್ಮದಿಗೆ ಇದೊಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ. +ಸಂಸತ್ತಿಗೆ ನುಗ್ಗಿದವರ ಮೊಬೈಲ್ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ +370ನೇ ವಿಧಿಯನ್ನು ರದ್ದುಗೊಳಿಸುವ ರಾಷ್ಟ್ರಪತಿಗಳ ಅಧಿಕಾರವನ್ನು ಎತ್ತಿಹಿಡಿಯುವ ಸುಪ್ರೀಂಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆಯಾಗಿ, ಸೋಮವಾರದ ಮೊದಲು ಪ್ರಧಾನಿ ಮೋದಿ ಈ ಕ್ರಮವನ್ನು ಐತಿಹಾಸಿಕ ಎಂದು ಕರೆದಿದ್ದರು. ಇದು ಕೇವಲ ಕಾನೂನು ತೀರ್ಪು ಅಲ್ಲ, ಆದರೆ ಭರವಸೆಯ ದಾರಿದೀಪ ಮತ್ತು ಸಾಕ್ಷಿಯಾಗಿದೆ. ಬಲಿಷ್ಠ ಮತ್ತು ಹೆಚ್ಚು ಅಖಂಡ ಭಾರತವನ್ನು ನಿರ್ಮಿಸುವ ಸಾಮೂಹಿಕ ಸಂಕಲ್ಪಕ್ಕೆ ದಾರಿ ಆಶಾವಾದವನ್ನು ವ್ಯಕ್ತಪಡಿಸಿದ್ದರು. \ No newline at end of file diff --git a/eesanje/url_47_215_4.txt b/eesanje/url_47_215_4.txt new file mode 100644 index 0000000000000000000000000000000000000000..5f6461046fc0636e488b021de0b352a929d33622 --- /dev/null +++ b/eesanje/url_47_215_4.txt @@ -0,0 +1,7 @@ +ಪ್ರಧಾನಿ ಕಚೇರಿಯ ಅಧಿಕಾರಿ ಎಂದು ವಂಚಿಸುತ್ತಿದ್ದ ವ್ಯಕ್ತಿಯ ಬಂಧನ +ನವದೆಹಲಿ,ಡಿ.17- ನಾನು ಸೇನಾ ವೈದ್ಯ, ನರಶಸ್ತ್ರಚಿಕಿತ್ಸಕ, ಪ್ರಧಾನ ಮಂತ್ರಿ ಕಚೇರಿಯ ಅಧಿಕಾರಿ ಎಂದೆಲ್ಲ ಸುಳ್ಳು ಹೇಳಿಕೊಂಡು ಮಹಿಳೆಯರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಒಡಿಶಾ ಪೊಲೀಸ್ ವಿಶೇಷ ಕಾರ್ಯಪಡೆ(ಎಸ್‍ಟಿಎಫ್) ಬಂಧಿಸಿದೆ. ಆರೋಪಿಯನ್ನು ಸೈಯದ್ ಇಶಾನ್(37) ಬುಖಾರಿ ಎಂದು ಗುರುತಿಸಲಾಗಿದೆ. ಈತನನ್ನು ಇಶಾನ್ ಬುಖಾರಿ ಮತ್ತು ಡಾ ಇಶಾನ್ ಬುಖಾರಿ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಕಾಶ್ಮೀರದ ಕುಪ್ವಾರದವನಾದ ಈತನನ್ನು ಒಡಿಶಾ ಎಸ್‍ಟಿಎಫ್ ಒಡಿಶಾದ ಜೈಪುರ ಜಿಲ್ಲೆಯ ನ್ಯೂಲ್‍ಪುರ ಗ್ರಾಮದಲ್ಲಿ ಬಂಧಿಸಲಾಗಿದೆ. +ಈತ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿರುವ ಅಧಿಕಾರಿಗಳು, ಕಾಶ್ಮೀರವಲ್ಲದೆ ದೇಶದ ಇತರೆ ರಾಜ್ಯಗಳಲ್ಲಿ 6-7 ಮದುವೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಒಡಿಶಾದ ಹೆಣ್ಣುಮಕ್ಕಳು ಈತ ಮದುವೆಯಾಗಿದ್ದ. ದಾಳಿಯ ಸಮಯದಲ್ಲಿ 100ಕ್ಕೂ ಹೆಚ್ಚು ಗಂಭೀರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾಗಿ ಪೆಪೊಲೀಸರು ತಿಳಿಸಿದ್ದಾರೆ. +ಹಲವಾರು ನಕಲಿ ಗುರುತುಗಳನ್ನು ಹೊಂದಿರುವ ಈತ ಪಾಕಿಸ್ತಾನದ ಹಲವಾರು ಜನರೊಂದಿಗೆ ಮತ್ತು ಕೇರಳದ ಕೆಲವು ಅನುಮಾನಾಸ್ಪದ ಅಂಶಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಎಸ್‍ಟಿಎಫ್ ಇನ್ಸ್‍ಪೆಕ್ಟರ್ ಜನರಲ್ ಜೆ.ಎನ್.ಪಂಕಜ್ ತಿಳಿಸಿದ್ದಾರೆ. +ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ಕಿಚ್ಚ ಸುದೀಪ್ ಸಾಥ್ +ಅಮೆರಿಕದ ಕಾರ್ನೆಲ್ ಯೂನಿವರ್ಸಿಟಿ, ಕೆನಡಾದ ಹೆಲ್ತ್ ಸರ್ವೀಸಸ್ ಇನ್‍ಸ್ಟಿಟ್ಯೂಟ್, ತಮಿಳುನಾಡಿನ ವೆಲ್ಲೂರ್ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು ಹೆಸರಿನಲ್ಲಿ ಪಡೆದಿರುವ ನಕಲಿ ವೈದ್ಯಕೀಯ ಪದವಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಲವಾರು ಬಾಂಡ್‍ಗಳು, ಅಫಿಡವಿಟ್‍ಗಳು, ಎಟಿಎಂ ಕಾರ್ಡ್‍ಗಳು, ಗುರುತಿನ ಚೀಟಿಗಳು, ಖಾಲಿ ಚೆಕ್‍ಗಳು ಮತ್ತು ಆಧಾರ್ ಕಾರ್ಡ್‍ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. +ಅಂತಾರಾಷ್ಟ್ರೀಯ ಪದವಿಗಳು, ಅಫಿಡವಿಟ್‍ಗಳು, ಬಾಂಡ್‍ಗಳು, ಎಟಿಎಂ ಕಾರ್ಡ್‍ಗಳು, ಖಾಲಿ ಚೆಕ್‍ಗಳು, ಆಧಾರ್ ಕಾರ್ಡ್‍ಗಳು ಮತ್ತು ವಿಸಿಟಿಂಗ್ ಕಾರ್ಡ್‍ಗಳನ್ನು ಇಟ್ಟುಕೊಂಡು ಸುಳ್ಳು ಹೇಳಿ ಜನರನ್ನು ವಂಚಿಸುತ್ತಿದ್ದ. ಎಸ್‍ಟಿಎಫ್ ತಂಡಕ್ಕೆ ದೊರೆತ ಸುಳಿವು ಆಧರಿಸಿ ಪೆಪೊಲೀಸರು ನಡೆಸಿದ ದಾಳಿಯಲ್ಲಿ 100ಕ್ಕೂ ಹೆಚ್ಚು ದಾಖಲೆಗಳು ಮತ್ತು ಹಲವಾರು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. \ No newline at end of file diff --git a/eesanje/url_47_215_5.txt b/eesanje/url_47_215_5.txt new file mode 100644 index 0000000000000000000000000000000000000000..16a73f7f5856063fbbd8ee4a061b34f09cec5efb --- /dev/null +++ b/eesanje/url_47_215_5.txt @@ -0,0 +1,11 @@ +ಸಂಸತ್ತಿಗೆ ನುಗ್ಗಿದವರ ಮೊಬೈಲ್ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ +ನವದೆಹಲಿ,ಡಿ.17- ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ತನಿಖೆಯಲ್ಲಿ ಮತ್ತೊಂದು ಮೈಲಿಗಲು ತಲುಪಿದ್ದಾರೆ. ಈ ಪ್ರಕರಣದ ಕಿಂಗ್‍ಪಿನ್ ಎಂದೇ ಹೇಳಲಾಗಿರುವ ಲಲಿತ್ ಝಾ ಬಳಿ ಎಲ್ಲಾ ಆರೋಪಿಗಳ ಫೋನ್‍ಗಳು ಇತ್ತು ಎಂದು ಹೇಳಲಾಗಿದೆ. ಎಲ್ಲ ಫೋನ್‍ಗಳನ್ನು ಮುರಿದು ಹಾಕಿದ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರೋಪಿಗಳಿಗೆ ಸಂಬಂಧಿಸಿದ ಸುಟ್ಟ ಸ್ಥಿತಿಯಲ್ಲಿದ್ದ ಮೊಬೈಲ್ ಫೋನ್‍ಗಳ ಬಿಡಿ ಭಾಗಗಳು, ಬಟ್ಟೆಗಳು ಮತ್ತು ಶೂಗಳನ್ನು ರಾಜಸ್ಥಾನದಲ್ಲಿ ಇಂದು ಬೆಳಗ್ಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರು ಆರೋಪಿಗಳಾದ ಸಾಗರ್, ಮನೋರಂಜನ್, ನೀಲಂ ಆಜಾದ್, ಅಮೋಲ್ ಶಿಂಧೆ, ಲಲಿತ್ ಝಾ ಮತ್ತು ಮಹೇಶ್ ಅವರನ್ನು ಬಂಧಿಸಲಾಗಿದೆ. +ಲಲಿತ್ ಝಾ ಕೆಲವು ದಿನಗಳ ನಂತರ ಸಿಕ್ಕಿಬೀಳುವ ಭಯದಿಂದ ಎಲ್ಲಾ ಫೋನ್‍ಗಳನ್ನು ಸುಟ್ಟು ಹಾಕಿದ್ದಾಗಿ ಒಪ್ಪಿಕೊಂಡಿದ್ದಾರೆ. 2 ವರ್ಷಗಳಿಂದ ದೇಶದ ವಿರುದ್ಧ ಷಡ್ಯಂತ್ರ ರೂಪಿಸಲಾಗಿತ್ತು. ಡಿ.13ರಂದು ಸಂಸತ್ತಿನ ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಸಾಗರ್ ಹಾಗೂ ಮನೋರಂಜ್ ಸಂದನದ ಒಳಗೆ ನುಗ್ಗಿದ್ದರು, ಬಳಿಕ ಹೊಗೆ ಬಾಂಬ್ ಸಿಡಿಸಿದ್ದರು. +ಅವರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು, ಸಂಸತ್ತಿನ ಹೊರಗೆ ಘೋಷಣೆ ಕೂಗುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಲಲಿತ್ ಝಾ ಪೊಲೀಸರಿಗೆ ಶರಣಾಗಿದ್ದ, ಒಂದು ದಿನದ ಬಳಿಕ ಮಹೇಶ್‍ನನ್ನೂ ಪೊಲೀಸರು ಬಂಧಿಸಿದ್ದಾರೆ. +ಘಟನೆ ಕುರಿತು ಸದನದಲ್ಲಿ ಪ್ರತಿಭಟನೆ ಮಾಡಿದ್ದ 13 ಸಂಸದರಲ್ಲಿ ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ. ಈ ಕುರಿತು ಸಚಿವೆ ಸ್ಮತಿ ಇರಾನಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸಂಸದೆ ಮತ್ತು ಕೇಂದ್ರ ಸಚಿವೆ ಸ್ಮತಿ ಇರಾನಿ ಮಾತನಾಡಿ, ಲೋಕಸಭೆ ಸ್ಪೀಕರ್ ಅವರು ಯಾವುದೇ ಪಕ್ಷಪಾತವಿಲ್ಲದೆ ದೇಶದ ಪ್ರತಿಯೊಂದು ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಂಡಿಸಲು ಎಲ್ಲಾ ಪಕ್ಷಗಳ ನಾಯಕರಿಗೆ ಅವಕಾಶ ನೀಡಿದ್ದಾರೆ ಆದರೆ ಅಮಾನತುಗೊಂಡಿರುವ 13 ಸಂಸದರು ರಾಜಕೀಯ ಮಾಡಲು ಪ್ರಯತ್ನಿಸಿದ್ದರು ಎಂದು ಹೇಳಿದ್ದಾರೆ. +ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಭದ್ರತಾ ಲೋಪ ಎಸಗಿದ ಇಬ್ಬರು ಕಿಡಿಗೇಡಿಗಳ ಬಳಿ ಸಂಸದ ಪ್ರತಾಪ್ ಸಿಂಹ ಹೆಸರಿನಲ್ಲಿ ಪಾಸ್ ಇದ್ದಿದ್ದರಿಂದ ಅವರನ್ನೂ ಸಹ ತನಿಖೆ ಮಾಡುವ ಸಾಧ್ಯತೆ ಇದೆ. +ಸರ್ಕಾರಕ್ಕೆ ತಮ್ಮ ಸಂದೇಶ ರವಾನಿಸಲು, ಆಡಳಿತದ ಮೇಲೆ ಪ್ರಭಾವ ಬೀರುವ ಕೆಲವು ಮಾರ್ಗಗಳ ಬಗ್ಗೆ ಐವರು ಆರೋಪಿಗಳು ಚರ್ಚೆ ನಡೆಸಿದ್ದರು. ತಮ್ಮ ದೇಹವನ್ನು ಅಗ್ನಿಶಾಮಕ ಜೆಲ್ನಿಂದ ಲೇಪಿಸಿಕೊಂಡು ಸದನದಲ್ಲೇ ಬೆಂಕಿ ಹಚ್ಚಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದರು. ಆದರೆ ಭದ್ರತಾ ಕಾರಣ ಮತ್ತು ಹಣದ ಕೊರತೆಯಿಂದ ಇದು ಅಸಾಧ್ಯ ಎಂಬ ಕಾರಣಕ್ಕೆ ಕೈಬಿಟ್ಟಿದ್ದರು. ಸಂಸತ್ತಿನ ಒಳಗೆ ಕರಪತ್ರಗಳನ್ನು ಹಂಚುವ ಬಗ್ಗೆಯೂ ಅವರು ಯೋಚಿಸಿದ್ದರು. ಆದರೆ ಅಂತಿಮವಾಗಿ ಅವರು ಕಲರ್ ಸ್ಪ್ರೇ ಮಾಡುವ ನಿರ್ಧಾರ ಕೈಕೊಂಡಿದ್ದರು. +ಹೊಂದಾಣಿಕೆ ರಾಜಕಾರಣದ ಅನುಮಾನ, ಸೈಲೆಂಟಾಗಿ ಮುಗಿದೋಯ್ತು ಬೆಳಗಾವಿ ಅಧಿವೇಶನ +ಡಿ.13 ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಆರೋಪಿ ಸಾಗರ್ ಶರ್ಮಾ, ಸಂದರ್ಶಕರ ಗ್ಯಾಲರಿಯಿಂದ ಚೇಂಬರ್‍ಗೆ ಜಿಗಿದ ಆಘಾತಕಾರಿ ದೃಶ್ಯಗಳಿಗೆ ಸಾಕ್ಷಿಯಾಯಿತು. ಹಳದಿ ಹೊಗೆ ಹೊರಸೂಸುವ ಡಬ್ಬಿಯನ್ನು ತೆರೆದು ಸ್ಪೀಕರ್ ಕುರ್ಚಿಯನ್ನು ತಲುಪುವ ಪ್ರಯತ್ನದಲ್ಲಿ ಸಾಗರ್ ಶರ್ಮ ಡೆಸ್ಕ್‍ನಿಂದ ಡೆಸ್ಕ್‍ಗೆ ಜಿಗಿದರು. ಆದರೆ, ಕೆಲ ಸಂಸದರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸುತ್ತಿದ್ದಂತೆ, ಅಲ್ಲಿಯೇ ಇದ್ದ ಮನೋರಂಜನ್ ಕೂಡ ಹೊಗೆ ಡಬ್ಬಿ ತೆರೆದು ಓಡಲು ಆರಂಭಿಸಿದರು. ಆದರೆ ಆತನನ್ನು ಕೂಡ ಶೀಘ್ರದಲ್ಲೇ ವಶಕ್ಕೆ ಪಡೆಯಲಾಯಿತು. +ಲೋಕಸಭೆಯ ಒಳಗೆ ನಡೆದ ಈ ಆಘಾತಕಾರಿ ಘಟನೆಗೂ ಮುನ್ನ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಸಂಸತ್ತಿನ ಹೊರಗೆ ಹೊಗೆ ಡಬ್ಬಿಗಳನ್ನು ಸಿಡಿಸಿ ಸರ್ವಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. \ No newline at end of file diff --git a/eesanje/url_47_215_6.txt b/eesanje/url_47_215_6.txt new file mode 100644 index 0000000000000000000000000000000000000000..96e3c32a9d39593f3dc9c55e4f03901632aec0e5 --- /dev/null +++ b/eesanje/url_47_215_6.txt @@ -0,0 +1,5 @@ +ವಿದೇಶಿ ವಿವಿ ಪದವಿ ಮಾನ್ಯವಲ್ಲ ; ಯುಜಿಸಿ +ನವದೆಹಲಿ, ಡಿ 16 (ಪಿಟಿಐ) ತನ್ನಿಂದ ಮಾನ್ಯತೆ ಪಡೆಯದ ವಿದೇಶಿ ವಿಶ್ವವಿದ್ಯಾನಿಲಯಗಳ ಸಹಯೋಗದಲ್ಲಿ ಪದವಿಗಳನ್ನು ನೀಡುತ್ತಿರುವ ಎಡ್ಟೆಕ್ ಕಂಪನಿಗಳು ಮತ್ತು ಕಾಲೇಜುಗಳಿಗೆ ಯುಜಿಸಿ ಎಚ್ಚರಿಕೆ ನೀಡಿದೆ. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಈ ಯಾವುದೇ ಪದವಿಗಳು ಮಾನ್ಯವಾಗಿರುವುದಿಲ್ಲ ಎಂದು ಪುನರುಚ್ಚರಿಸಿದೆ ಮತ್ತು ಅಂತಹ ಕೋರ್ಸ್‍ಗಳಿಗೆ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದೆ. +ಹಲವು ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜುಗಳು ವಿದೇಶಿ ಮೂಲದ ಶಿಕ್ಷಣ ಸಂಸ್ಥೆಗಳು ಅಥವಾ ಆಯೋಗದಿಂದ ಗುರುತಿಸಲ್ಪಡದ ಪೂರೈಕೆದಾರರೊಂದಿಗೆ ಸಹಯೋಗದ ಒಪ್ಪಂದಗಳನ್ನು ಮಾಡಿಕೊಂಡಿವೆ ಮತ್ತು ವಿದ್ಯಾರ್ಥಿಗಳಿಗೆ ವಿದೇಶಿ ಪದವಿಗಳನ್ನು ವಿತರಿಸಲು ಅನುಕೂಲ ಮಾಡಿಕೊಟ್ಟಿರುವುದನ್ನು ಗಮನಿಸಲಾಗಿದೆ ಎಂದು ಸಂಸ್ಥೆ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದರು. +ಸಿಂಧೂ ಕಣಿವೆ ನಾಗರಿಕತೆ ಅಂತ್ಯದ ಕುರಿತು ಕೇರಳ ವಿಜ್ಞಾನಿಗಳ ಮಹತ್ವದ ಆವಿಷ್ಕಾರ +ಅಂತಹ ಯಾವುದೇ ರೀತಿಯ ಸಹಯೋಗ ಅಥವಾ ವ್ಯವಸ್ಥೆಯನ್ನು ಯುಜಿಸಿ ಗುರುತಿಸುವುದಿಲ್ಲ ಮತ್ತು ಅದರ ಪ್ರಕಾರ, ಅಂತಹ ಸಹಯೋಗದ ವ್ಯವಸ್ಥೆಗೆ ನಂತರ ನೀಡಲಾದ ಪದವಿಗಳನ್ನು ಆಯೋಗವು ಗುರುತಿಸುವುದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_215_7.txt b/eesanje/url_47_215_7.txt new file mode 100644 index 0000000000000000000000000000000000000000..b116fe3a64151e27458396ec01b61b6207ce2d4d --- /dev/null +++ b/eesanje/url_47_215_7.txt @@ -0,0 +1,5 @@ +ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ +ನವದೆಹಲಿ, ಡಿ 16 (ಪಿಟಿಐ) ಬಿಲಿಯನೇರ್ ಗೌತಮ್ ಅದಾನಿ ಅವರ ಸಮೂಹವು ಮಾಧ್ಯಮ ಕ್ಷೇತ್ರದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುತ್ತಿರುವುದರಿಂದ ಸುದ್ದಿ ಸಂಸ್ಥೆ ಐಎಎನ್‍ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಬಹುಪಾಲು ಷೇರುಗಳನ್ನು ಬಹಿರಂಗಪಡಿಸದ ಮೊತ್ತಕ್ಕೆ ಸ್ವಾೀಧಿನಪಡಿಸಿಕೊಂಡಿದೆ. +ನಿಯಂತ್ರಕ ಫೈಲಿಂಗ್‍ನಲ್ಲಿ ಗುಂಪಿನ ಮಾಧ್ಯಮ ಆಸಕ್ತಿಯನ್ನು ಹೊಂದಿರುವ ಸಂಸ್ಥೆಯಾದ ಅದಾನಿ ಎಂಟರ್‍ಪ್ರೈಸಸ್ ತನ್ನ ಅಂಗಸಂಸ್ಥೆ ಎಎಂಜಿ ಮೀಡಿಯಾ ನೆಟ್‍ವಕ್ಸರ್ ಲಿಮಿಟೆಡ್ ಐಎಎನ್‍ಎಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ಈಕ್ವಿಟಿ ಷೇರುಗಳಲ್ಲಿ ಶೇ.50 ರಷ್ಟನ್ನು ಖರೀದಿಸಿದೆ ಎಂದು ತಿಳಿದುಬಂದಿದೆ.ಕಂಪನಿಯು ಸ್ವಾೀಧಿನದ ಬೆಲೆಯನ್ನು ಬಹಿರಂಗಪಡಿಸಿಲ್ಲ. +ಸಿಂಧೂ ಕಣಿವೆ ನಾಗರಿಕತೆ ಅಂತ್ಯದ ಕುರಿತು ಕೇರಳ ವಿಜ್ಞಾನಿಗಳ ಮಹತ್ವದ ಆವಿಷ್ಕಾರ +ಕಳೆದ ವರ್ಷ ಮಾರ್ಚ್‍ನಲ್ಲಿ ವ್ಯವಹಾರ ಮತ್ತು ಹಣಕಾಸು ಸುದ್ದಿ ಡಿಜಿಟಲ್ ಮಾಧ್ಯಮ ಪ್ಲಾಟ್‍ಫಾರ್ಮ್ ಬಿಕ್ಯೂ ಪ್ರೈಮ್ ಅನ್ನು ನಿರ್ವಹಿಸುವ ಕ್ವಿಂಟಿಲಿಯನ್ ಬಿಸಿನೆಸ್ ಮೀಡಿಯಾವನ್ನು ಸ್ವಾಧೀನಪಡಿಸಿಕೊಂಡಾಗ ಅದಾನಿ ಮಾಧ್ಯಮ ವ್ಯವಹಾರಕ್ಕೆ ಪ್ರವೇಶಿಸಿದ್ದರು. ಅದರ ನಂತರ ಡಿಸೆಂಬರ್‍ನಲ್ಲಿ ಎನ್‍ಡಿಟಿವಿ ಸುಮಾರು 65 ಪ್ರತಿಶತ ಪಾಲನ್ನು ಪಡೆದುಕೊಂಡಿದೆ. \ No newline at end of file diff --git a/eesanje/url_47_215_8.txt b/eesanje/url_47_215_8.txt new file mode 100644 index 0000000000000000000000000000000000000000..65f81c5e11c5112242ddd96a1e659f6faff2c349 --- /dev/null +++ b/eesanje/url_47_215_8.txt @@ -0,0 +1,7 @@ +ರತನ್ ಟಾಟಾಗೆ ಜೀವ ಬೆದರಿಕೆ ಹಾಕಿದ ವ್ಯಕಿ ಸುಳಿವು ಲಭ್ಯ +ಮುಂಬೈ,ಡಿ.16- ಹಿರಿಯ ಕೈಗಾರಿಕೋದ್ಯಮಿ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪಿ ಎಂಬಿಎ ಪದವಿದರನನ್ನು ಪತ್ತೆಹಚ್ಚಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಅನಾಮಧೇಯ ಕರೆ ಮಾಡಿದ ವ್ಯಕ್ತಿಗೆ ಸ್ಕಿಜೋಫ್ರೇನಿಯಾ ಇದೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಆರೋಪಿ ಪೊಲೀಸರಿಗೆ ಕರೆ ಮಾಡಿ ರತನ್ ಟಾಟಾ ಅವರಿಗೆ ಭದ್ರತೆ ಹೆಚ್ಚಿಸದಿದ್ದರೆ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರಂತೆ ಪ್ರಾಣ ಕಳೆದುಕೊಳ್ಳಲಿದ್ದಾರೆ ಎಂದು ಎಚ್ಚರಿಸಿದ್ದ.ಪ್ರಸಿದ್ಧ ಕೈಗಾರಿಕೋದ್ಯಮಿಯೂ ಆಗಿದ್ದ ಮಿಸ್ತ್ರಿ ಅವರು 2022ರಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. +ಬಹಿರಂಗವಾಯ್ತು ಸಂಸತ್ ಮೇಲೆ ಹೊಗೆ ದಾಳಿ ಹಿಂದಿನ ಉದ್ದೇಶ +ಕರೆ ಸ್ವೀಕರಿಸಿದ ನಂತರ, ಮುಂಬೈ ಪೊಲೀಸರು ಸಂಪೂರ್ಣ ಅಲರ್ಟ್ ಮೋಡ್‍ಗೆ ತೆರಳಿದರು ಮತ್ತು ರತನ್ ಟಾಟಾ ಅವರ ವೈಯಕ್ತಿಕ ಭದ್ರತೆಯನ್ನು ಪೂರೈಸಲು ವಿಶೇಷ ತಂಡವನ್ನು ನಿಯೋಜಿಸಲಾಯಿತು ಮತ್ತು ಇತರ ತಂಡವು ಕರೆ ಮಾಡಿದವರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಮುಂದಾಯಿತು. +ತಾಂತ್ರಿಕ ಬೆಂಬಲ ಮತ್ತು ಟೆಲಿಕಾಂ ಸೇವಾ ಪೂರೈಕೆದಾರರ ಸಹಾಯದಿಂದ ಕರೆ ಮಾಡಿದವರನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕರೆ ಮಾಡಿದವರ ಸ್ಥಳ ಕರ್ನಾಟಕದಲ್ಲಿ ಇರುವುದು ಪತ್ತೆಯಾಗಿದ್ದು, ಆತ ಪುಣೆ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. +ಪೊಲೀಸರು ಪುಣೆಯ ನಿವಾಸಕ್ಕೆ ತಲುಪಿದಾಗ, ಕರೆ ಮಾಡಿದ ವ್ಯಕ್ತಿ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದ್ದು ಅವರ ಪತ್ನಿ ನಗರದ ಭೋಸಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕರೆ ಮಾಡಿದವರ ಸಂಬಂಕರನ್ನು ಪ್ರಶ್ನಿಸಿದ ನಂತರ, ಅವರು ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದಾರೆ ಎಂದು ತಿಳಿದುಕೊಂಡರು ಮತ್ತು ಆರೋಪಿ ಕದ್ದ ಫೋನ್‍ನಿಂದ ಪೊಲೀಸರಿಗೆ ಕರೆ ಮಾಡಿದ್ದಾನೆ ಎನ್ನುವುದು ಪತ್ತೆಯಾಗಿದೆ. \ No newline at end of file diff --git a/eesanje/url_47_215_9.txt b/eesanje/url_47_215_9.txt new file mode 100644 index 0000000000000000000000000000000000000000..9e749928665ce8c805f503380f44030633f581ba --- /dev/null +++ b/eesanje/url_47_215_9.txt @@ -0,0 +1,5 @@ +ಮಧ್ಯಪ್ರದೇಶ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಕುಮಾರ್ ಸಿಂಗ್ ನೇಮಕ +ಭೋಪಾಲ್, ಡಿ 16 (ಪಿಟಿಐ) ಹಿರಿಯ ಐಎಎಸ್ ಅಧಿಕಾರಿ ರಾಘವೇಂದ್ರ ಕುಮಾರ್ ಸಿಂಗ್ ಅವರನ್ನು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಶುಕ್ರವಾರ ತಡರಾತ್ರಿ ಮಧ್ಯಪ್ರದೇಶ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. +1994 ರ ಬ್ಯಾಚ್‍ನ ಐಎಎಸ್ ಅಧಿಕಾರಿ ಮನೀಶ್ ರಸ್ತೋಗಿ ಅವರನ್ನು ಬದಲಿಸಿ ಅವರ ಸ್ಥಾನಕ್ಕೆ 1997 ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಸಿಂಗ್ ಅವರನ್ನು ನೇಮಿಸಲಾಗಿದೆ. ರಸ್ತೋಗಿ ಅವರು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಈ ಹುದ್ದೆಗೆ ನೇಮಕಗೊಳ್ಳುವ ಮೊದಲು ಸಿಂಗ್ ಅವರು ಗಣಿಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +ಉಜ್ಜಯಿನಿ ದಕ್ಷಿಣದ ಶಾಸಕ ಮೋಹನ್ ಯಾದವ್ ಅವರು ಡಿಸೆಂಬರ್ 13 ರಂದು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. \ No newline at end of file diff --git a/eesanje/url_47_216_1.txt b/eesanje/url_47_216_1.txt new file mode 100644 index 0000000000000000000000000000000000000000..d8326cb2cee386f86328b811a699dd91548eb9db --- /dev/null +++ b/eesanje/url_47_216_1.txt @@ -0,0 +1,7 @@ +ನಿರ್ಭಯಾ ಘಟನೆ ನಡೆದು ದಶಕವಾದರೂ ಬದಲಾಗಿಲ್ಲ ಪರಿಸ್ಥಿತಿ +ನವದೆಹಲಿ, ಡಿ 16 (ಪಿಟಿಐ)- ನಿರ್ಭಯಾ ಘಟನೆ ನಡೆದು ಒಂದು ದಶಕ ಕಳೆದರೂ ದೇಶದಲ್ಲಿ ಏನೂ ಬದಲಾಗಿಲ್ಲ ಮತ್ತು ದೆಹಲಿಯಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಮಾತ್ರ ಹೆಚ್ಚಿವೆ ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅಭಿಪ್ರಾಯಪಟ್ಟಿದ್ದಾರೆ. ನಿರ್ಭಯಾ ಘಟನೆಯ 11 ನೇ ವಾರ್ಷಿಕೋತ್ಸವದಂದು ಮಾತನಾಡಿರುವ ಅವರು, ನಿರ್ಭಯಾ ಪ್ರಕರಣದ ದೇಶದಲ್ಲಿ ಹಲವಾರು ಹೊಸ ಲೈಂಗಿಕ ದೌರ್ಜನ್ಯ ಕಾನೂನುಗಳ ಅಂಗೀಕಾರಕ್ಕೆ ಕಾರಣವಾಯಿತು ಅಷ್ಟೆ ಎಂದಿದ್ದಾರೆ. +2012 ರ ಡಿಸೆಂಬರ್ 16 ರಂದು ದಕ್ಷಿಣ ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆ ನಿರ್ಭಯಾ (ನಿರ್ಭಯ) ಎಂದು ಕರೆಯಲ್ಪಡುವ 23 ವರ್ಷದ ಫಿಸಿಯೋಥೆರಪಿ ಇಂಟರ್ನಿ ಮೇಲೆ ಆರು ಮಂದಿ ಅತ್ಯಾಚಾರ ಮತ್ತು ಹಲ್ಲೇ ನಡೆಸಿ ಬಸ್ಸಿನಿಂದ ಹೊರಗೆಸೆದಿದ್ದರು. ಆಕೆ ತೀವ್ರ ಗಾಯಗಳಿಂದ ಡಿಸೆಂಬರ್ 29 ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದಳು. +ಘಟನೆಯ ಸಮಯದಲ್ಲಿ, ಜನರು ಬದಲಾವಣೆಗಾಗಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಆದರೆ ಆ ದುರಂತದ ವರ್ಷಗಳ ನಂತರವೂ ನಾವು ಅದೇ ಸ್ಥಳದಲ್ಲಿ ನಿಂತಿದ್ದೇವೆ. ಮಹಿಳೆಯರ ಮೇಲಿನ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅಪರಾಧಿಗಳು ಭಯಪಡುವವರೆಗೆ ಏನೂ ಬದಲಾಗುವುದಿಲ್ಲ. ಅಂತಹ ಅಪರಾಧಗಳಿಗೆ ವ್ಯವಸ್ಥೆಯು ಅವರನ್ನು ಬಿಡುವುದಿಲ್ಲ, ಎಂದು ಅವರು ಹೇಳಿದರು. +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +ದೆಹಲಿಯ ಮಹಿಳಾ ಆಯೋಗದ ಅಧ್ಯಕ್ಷರು ಶಿಕ್ಷೆಗಳಲ್ಲಿ ಖಚಿತತೆ ಮತ್ತು ತ್ವರಿತತೆಗಾಗಿ ಕರೆ ನೀಡಿದರು ಮತ್ತು ಸರ್ಕಾರಗಳು ಇಂತಹ ಸೂಕ್ಷ್ಮ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದರು. ನಮಗೆ ಶಿಕ್ಷೆಗಳಲ್ಲಿ ಖಚಿತತೆ ಮತ್ತು ತ್ವರಿತತೆ ಬೇಕು ಮತ್ತು ಅಂತಹ ವಿಷಯಗಳನ್ನು ಸರ್ಕಾರಗಳು ಗಂಭೀರವಾಗಿ ಪರಿಗಣಿಸಬೇಕು. ಪೊಲೀಸ್ ಬಲ ಮತ್ತು ತ್ವರಿತ ನ್ಯಾಯಾಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ತ್ವರಿತ ಮತ್ತು ವ್ಯವಸ್ಥಿತವಾಗಿ ನ್ಯಾಯವನ್ನು ಖಾತರಿಪಡಿಸುವ ವ್ಯವಸ್ಥೆಯು ನಮಗೆ ಅಗತ್ಯವಿದೆ ಎಂದು ಮಲಿವಾಲ್ ಹೇಳಿದರು. +ಪ್ರತಿ ಡಿಸೆಂಬರ್ 16 ರಂದು, ರಾಜಕಾರಣಿಗಳು ಬದಲಾವಣೆಯನ್ನು ತರುವ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ ಆದರೆ (ಅವುಗಳು) ವ್ಯರ್ಥವಾಗಿವೆ ಎಂದು ಅವರು ಪ್ರತಿಪಾದಿಸಿದರು. ಪ್ರಕರಣದ ಆರು ಮಂದಿ ಆರೋಪಿಗಳ ಪೈಕಿ, ವಿಚಾರಣೆ ಆರಂಭವಾದ ಕೆಲವೇ ದಿನಗಳಲ್ಲಿ ರಾಮ್ ಸಿಂಗ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪ್ರಾಪ್ತ ಆರೋಪಿಯೊಬ್ಬ ಮೂರು ವರ್ಷ ಸುಧಾರಣಾ ಗೃಹದಲ್ಲಿ ಕಳೆದ ನಂತರ 2015ರಲ್ಲಿ ಬಿಡುಗಡೆಗೊಂಡಿದ್ದ. ಇತರ ನಾಲ್ವರು — ಮುಖೇಶ್ ಸಿಂಗ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ ಕುಮಾರ್ ಸಿಂಗ್ (31)ಅವರನ್ನು 2020 ಮಾ.20 ರಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿತು. \ No newline at end of file diff --git a/eesanje/url_47_216_10.txt b/eesanje/url_47_216_10.txt new file mode 100644 index 0000000000000000000000000000000000000000..d79df61b3c5d5cada4d1f35a7b779b7c31314760 --- /dev/null +++ b/eesanje/url_47_216_10.txt @@ -0,0 +1,6 @@ +ಸಾಕ್ಷ್ಯ ನಾಶ ಮಾಡಿದ ಸಂಸತ್ತಿನಲ್ಲಿ ಸ್ಮೋಕ್ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ +ನವದೆಹಲಿ,ಡಿ.15- ಸಂಸತ್ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಲಲಿತ್ ಝಾ ತಮ್ಮ ಬಳಿ ಇದ್ದ ಸಾಕ್ಷ್ಯ ಸಂಪೂರ್ಣ ನಾಶಪಡಿಸಿದ್ದಾರೆ ಎನ್ನಲಾಗಿದೆ.ಸಂಸತ್ ಮೇಲೆ ದಾಳಿ ಮಾಡಿದ ನಾಲ್ವರು ಸಹಚರರ ಮೊಬೈಲ್ ಫೋನ್‍ಗಳನ್ನು ಅವರು ಸುಟ್ಟು ಹಾಕಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. +ಕಳೆದ ರಾತ್ರಿ ಪೊಲೀಸರಿಗೆ ಶರಣಾದ ಝಾ, ಹಳದಿ ಹೊಗೆ ಡಬ್ಬಿಗಳನ್ನು ಹಾಕಿದ ಇಬ್ಬರ ಮೊಬೈಲ್ ಫೋನ್‍ಗಳನ್ನು ಲೋಕಸಭೆಯ ಒಳಗೆ ಇಟ್ಟುಕೊಂಡಿದ್ದೆ ನಂತರದ ಘಟನೆಯನ್ನು ಚಿತ್ರೀಕರಿಸಿ ಕ್ಲಿಪ್ ಅನ್ನು ಇನ್‍ಸ್ಟಾಗ್ರಾಮ್‍ಗೆ ಅಪ್‍ಲೋಡ್ ಮಾಡಿ ಅಲ್ಲಿಂದ ಪರಾರಿಯಾಗಿದ್ದೇ ಎಂದು ಆತ ತಪ್ಪೊಪ್ಪಿಕೊಂಡಿದ್ದಾನೆ. +ಸುವರ್ಣಸೌಧದಲ್ಲಿ ಜಾರಿ ಬಿದ್ದ ಶಾಸಕ, ಸದನದಲ್ಲಿ ಸ್ವಾರಸ್ಯಕರ ಚರ್ಚೆ +ಪಲಾಯನ ಮಾಡುವ ಮೊದಲು ಮಾಧ್ಯಮ ಪ್ರಸಾರವನ್ನು ಖಚಿತಪಡಿಸಿಕೊಳ್ಳಲು ಕೋಲ್ಕತ್ತಾ ಮೂಲದ ಎನ್‍ಜಿಒಗೆ ಕಳುಹಿಸಿದ್ದೇನೆ ಎಂದು ಝಾ ಪೊಲೀಸರಿಗೆ ತಿಳಿಸಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಇರಲು ರಾಜಸ್ಥಾನದ ನಾಗೌರ್‍ಗೆ ಪ್ರಯಾಣಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಲಲಿತ್ ಝಾ ಮತ್ತು ಮತ್ತೊಬ್ಬ ವ್ಯಕ್ತಿ ಮಹೇಶ್ ನಿನ್ನೆ ಸಂಜೆ ದೆಹಲಿಗೆ ಮರಳಿ ನಂತರ ಝಾ ಕೇಂದ್ರ ದೆಹಲಿಯ ಪೊಲೀಸ್ ಠಾಣೆಗೆ ಶರಣಾದರು. +ಕೋಲ್ಕತ್ತಾದ ಶಿಕ್ಷಕ ಲಲಿತ್ ಝಾ ಅವರನ್ನು ಬಂಸಿ ದೆಹಲಿ ಪೊಲೀಸರ ವಿಶೇಷ ಸೆಲ್‍ಗೆ ಹಸ್ತಾಂತರಿಸಲಾಗಿದ್ದು ಪೊಲೀಸರು ಫೋನ್‍ಗಳನ್ನು ಸುಟ್ಟು ಹಾಕಿರುವ ಅವರ ಹೇಳಿಕೆಯನ್ನು ಪರಿಶೀಲಿಸುತ್ತಿದ್ದಾರೆ. ಷಡ್ಯಂತ್ರದ ಸಂಪೂರ್ಣ ಮಾಹಿತಿ ಹೊಂದಿರುವ ಮಹೇಶ್ ನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_216_11.txt b/eesanje/url_47_216_11.txt new file mode 100644 index 0000000000000000000000000000000000000000..d1a53105d2d95e27a1bf46eb7bc7bdd1e5771594 --- /dev/null +++ b/eesanje/url_47_216_11.txt @@ -0,0 +1,7 @@ +ನ್ಯಾಯಧೀಶೆಗೆ ಲೈಂಗಿಕ ಕಿರುಕುಳ ಆರೋಪ, ವರದಿ ಕೇಳಿದ ಸುಪ್ರೀಂ ಸಿಜೆ ಚಂದ್ರಚೂಡ್ +ನವದೆಹಲಿ,ಡಿ.15- ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶರೊಬ್ಬರು ನನ್ನ ಮೇಳೆ ಲೈಂಗಿಕ ಕಿರುಕುಳ ನಡೆಸಲಾಗಿದೆ ಹೀಗಾಗಿ ಆತ್ಮಹತ್ಯೆಗೆ ಅನುಮತಿ ಕೋರಿದ್ದಾರೆ ಎಂಬ ಬಹಿರಂಗ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವರದಿ ಕೇಳಿದ್ದಾರೆ. +ಬಾರಾಬಂಕಿ ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಅನುಭವಿಸಿದ್ದೇನೆ. ನನ್ನ ಜೀವನವನ್ನು ಗೌರವಯುತವಾಗಿ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿಸಿ. ನನ್ನ ಜೀವನವನ್ನು ವಜಾಗೊಳಿಸಲಿ ಎಂದು ಬಂಡಾದ ಮಹಿಳಾ ನ್ಯಾಯಾಧೀಶರು ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು. ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಸಂಪೂರ್ಣ ಕಸದಂತೆ ನೋಡಿಕೊಳ್ಳಲಾಗಿದೆ. ನಾನು ಬೇಡದ ಕೀಟದಂತೆ ಭಾವಿಸುತ್ತೇನೆ ಎಂದು ಅವರು ಪತ್ರದಲ್ಲಿ ಅಲವತ್ತುಕೊಂಡಿದ್ದಾರೆ. +ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಸೂಚನೆಯ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಿಗ್ಗೆ ವರದಿಯನ್ನು ಕೇಳಿದ್ದಾರೆ. +ಸುವರ್ಣಸೌಧದಲ್ಲಿ ಜಾರಿ ಬಿದ್ದ ಶಾಸಕ, ಸದನದಲ್ಲಿ ಸ್ವಾರಸ್ಯಕರ ಚರ್ಚೆ +ಹೈಕೋರ್ಟ್‍ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯವರೂ ಬಹಿರಂಗ ಪತ್ರದ ಬಗ್ಗೆ ಗಮನಹರಿಸಿದ್ದಾರೆ ಎಂದು ನಿನ್ನೆ ರಾತ್ರಿ ಮಹಾಲೇಖಪಾಲರಿಗೆ ದೂರವಾಣಿ ಮೂಲಕ ತಿಳಿಸಲಾಗಿದೆ. ಜುಲೈ 2023 ರಲ್ಲಿ ಹೈಕೋರ್ಟ್‍ನ ಆಂತರಿಕ ದೂರುಗಳ ಸಮಿತಿಗೆ ದೂರು ಸಲ್ಲಿಸಿದ ನಂತರ ತನ್ನ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ನ್ಯಾಯಾಧೀಶರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ, ಆದರೆ ವಿಚಾರಣೆ ಪ್ರಹಸನ ಮತ್ತು ನೆಪ ಎಂದು ಅವರು ಆರೋಪಿಸಿದ್ದಾರೆ. +ನನಗೆ ಇನ್ನು ಬದುಕುವ ಇಚ್ಛೆ ಇಲ್ಲ. ಕಳೆದ ಒಂದೂವರೆ ವರ್ಷದಲ್ಲಿ ನನ್ನನ್ನು ನಡೆದಾಡುವ ಶವದಂತೆ ನೋಡಿಕೊಂಡಿದ್ದಾರೆ. ಇನ್ನು ಮುಂದೆ ಈ ನಿರ್ಜೀವ ದೇಹವನ್ನು ಹೊತ್ತುಕೊಂಡು ಹೋಗುವುದರಲ್ಲಿ ಯಾವುದೇ ಉದ್ದೇಶವಿಲ್ಲ. ನನ್ನ ಜೀವನದಲ್ಲಿ ಯಾವುದೇ ಉದ್ದೇಶವಿಲ್ಲ, ಎರಡು ಪುಟಗಳ ಪತ್ರ ಭಾರಿ ವೈರಲ್ ಆಗಿತ್ತು. \ No newline at end of file diff --git a/eesanje/url_47_216_12.txt b/eesanje/url_47_216_12.txt new file mode 100644 index 0000000000000000000000000000000000000000..ac4059f648e125d823eb299a25bbf668abfa9426 --- /dev/null +++ b/eesanje/url_47_216_12.txt @@ -0,0 +1,7 @@ +ಸರ್ದಾರ್ ವಲ್ಲಭಭಾಯಿ ಪಟೇಲ್‍ ಪುಣ್ಯತಿಥಿ, ಪ್ರಧಾನಿ ಮೋದಿ ನಮನ +ನವದೆಹಲಿ, ಡಿ 15 (ಪಿಟಿಐ) : ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದು, ಪಟೇಲ್ ಅವರ ಅನುಕರಣೀಯ ಕಾರ್ಯವು ಬಲಿಷ್ಠ ಮತ್ತು ಹೆಚ್ಚು ಏಕತೆಯ ದೇಶವನ್ನು ನಿರ್ಮಿಸಲು ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ. + . ' . , . … +ಅವರ ನಾಯಕತ್ವದ ಗುಣಗಳಿಗಾಗಿ ಸರ್ದಾರ್ ಎಂಬ ವಿಶೇಷಣವನ್ನು ನೀಡಲಾಗಿದ್ದು, ಪಟೇಲ್ ಅವರು ಆಧುನಿಕ ಭಾರತದ ವಾಸ್ತುಶಿಲ್ಪಿ ಎಂದು ಶ್ಲಾಘಿಸಿದ್ದಾರೆ, ಅವರು ಮನವೊಲಿಸುವ ಚತುರ ಬಳಕೆ ಮತ್ತು ಅಗತ್ಯವಿದ್ದಾಗ ಬಲವಂತವಾಗಿ ನೂರಾರು ರಾಜಪ್ರಭುತ್ವದ ರಾಜ್ಯಗಳನ್ನು ಒಕ್ಕೂಟಕ್ಕೆ ಸಂಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮೋದಿ ಗುಣಗಾನ ಮಾಡಿದ್ದಾರೆ. +ಸುವರ್ಣಸೌಧದಲ್ಲಿ ಜಾರಿ ಬಿದ್ದ ಶಾಸಕ, ಸದನದಲ್ಲಿ ಸ್ವಾರಸ್ಯಕರ ಚರ್ಚೆ +ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಅವರ ಪುಣ್ಯ ತಿಥಿಯಂದು ನಮನಗಳು. ಅವರ ದೂರದೃಷ್ಟಿಯ ನಾಯಕತ್ವ ಮತ್ತು ರಾಷ್ಟ್ರದ ಏಕತೆಗೆ ಅಚಲವಾದ ಬದ್ಧತೆಯು ಆಧುನಿಕ ಭಾರತಕ್ಕೆ ಅಡಿಪಾಯವನ್ನು ಹಾಕಿತು ಎಂದು ಮೋದಿ ಎಕ್ಸ್ ಮಾಡಿದ್ದಾರೆ. +ಅವರ ಅನುಕರಣೀಯ ಕೆಲಸವು ನಮಗೆ ಬಲಿಷ್ಠ, ಹೆಚ್ಚು ಒಗ್ಗಟ್ಟಿನ ದೇಶವನ್ನು ನಿರ್ಮಿಸುವತ್ತ ಮಾರ್ಗದರ್ಶನ ನೀಡುತ್ತದೆ. ನಾವು ಅವರ ಜೀವನದಿಂದ ಸೂರ್ತಿಯನ್ನು ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಅವರ ಸಮೃದ್ಧ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_216_2.txt b/eesanje/url_47_216_2.txt new file mode 100644 index 0000000000000000000000000000000000000000..ac3c8100ca1f28d9cc64d83fbd5ad0c9dc1584b3 --- /dev/null +++ b/eesanje/url_47_216_2.txt @@ -0,0 +1,7 @@ +ವಿಜಯ್ ದಿವಸ್ : ವೀರ ಯೋಧರಿಗೆ ಮೋದಿ ನಮನ +ಹೊಸದಿಲ್ಲಿ, ಡಿ.16 (ಪಿಟಿಐ) – 1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿಸಿದ ವೀರಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ವಿಜಯ್ ದಿವಸ್ ಸಂದರ್ಭದಲ್ಲಿ ನಮನ ಸಲ್ಲಿಸಿದರು. +ಅವರ ಶೌರ್ಯ ಮತ್ತು ಸಮರ್ಪಣೆ ರಾಷ್ಟ್ರಕ್ಕೆ ಅಪಾರವಾದ ಹೆಮ್ಮೆಯ ಮೂಲವಾಗಿ ಉಳಿದಿದೆ. ಅವರ ತ್ಯಾಗ ಮತ್ತು ಅಚಲವಾದ ಮನೋಭಾವವು ಜನರ ಹೃದಯದಲ್ಲಿ ಮತ್ತು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +, , 1971, . . … +ಅವರ ಧೈರ್ಯವನ್ನು ಭಾರತ ವಂದಿಸುತ್ತದೆ ಮತ್ತು ಅವರ ಅದಮ್ಯ ಮನೋಭಾವವನ್ನು ಸ್ಮರಿಸುತ್ತದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು, ಇಂದು, ವಿಜಯ್ ದಿವಸ್‍ನಲ್ಲಿ, ನಿರ್ಣಾಯಕ ವಿಜಯವನ್ನು ಖಚಿತಪಡಿಸಿಕೊಳ್ಳಲು 1971 ರಲ್ಲಿ ಭಾರತಕ್ಕೆ ಕರ್ತವ್ಯದಿಂದ ಸೇವೆ ಸಲ್ಲಿಸಿದ ಎಲ್ಲಾ ವೀರ ವೀರರಿಗೆ ನಾವು ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು. +“ನನ್ನನ್ನೂ ಮಂತ್ರಿ ಮಾಡಿ” ಎಂದು ಬೇಡಿಕೆಯಿಟ್ಟ ಆಡಳಿತ ಪಕ್ಷದ ಶಾಸಕರು +ಭಾರತವು ಪಾಕಿಸ್ತಾನದ ವಿರುದ್ಧದ ನಿರ್ಣಾಯಕ ಗೆಲುವು ಬಾಂಗ್ಲಾದೇಶದ ಹುಟ್ಟಿಗೆ ಕಾರಣವಾಯಿತು. ಪಾಕಿಸ್ತಾನದ ಮಿಲಿಟರಿ ಭಾರತೀಯ ಪಡೆಗಳಿಗೆ ಶರಣಾಗುತ್ತದೆ ಆ ದಿನವನ್ನು ವಿಜಯ್ ದಿವಸ್ ಎಂದು ವಾರ್ಷಿಕವಾಗಿ ಆಚರಿಸಲಾಗುತ್ತದೆ. \ No newline at end of file diff --git a/eesanje/url_47_216_3.txt b/eesanje/url_47_216_3.txt new file mode 100644 index 0000000000000000000000000000000000000000..e9b90b31d4f4b1cb068fa1d0046ae4fd344e11fd --- /dev/null +++ b/eesanje/url_47_216_3.txt @@ -0,0 +1,6 @@ +ಟ್ರಕ್‍ಗೆ ಕಾರು ಡಿಕ್ಕಿ, 6 ಮಂದಿ ದುರ್ಮರಣ +ನಾಗ್ಪುರ, ಡಿ 16 (ಪಿಟಿಐ) ಮಹಾರಾಷ್ಟ್ರದ ನಾಗ್ಪುರ ನಗರದ ಹೊರವಲಯದಲ್ಲಿ ಇಂದು ನಸುಕಿನ ವೇಳೆಯಲ್ಲಿ ಕಾರೊಂದು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಕಟೋಲ-ಕಲ್ಮೇಶ್ವರ ರಸ್ತೆಯ ಸೋನ್‍ಖಾಂಬ್ ಗ್ರಾಮದ ಬಳಿ ಮಧ್ಯರಾತ್ರಿ 12.15 ರಿಂದ 2 ಗಂಟೆಯ ನಡುವೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +“ನನ್ನನ್ನೂ ಮಂತ್ರಿ ಮಾಡಿ” ಎಂದು ಬೇಡಿಕೆಯಿಟ್ಟ ಆಡಳಿತ ಪಕ್ಷದ ಶಾಸಕರು +ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದಾಗ ಅವರ ವಾಹನ ಸೋಯಾಬೀನ್ ಸಾಗಿಸುತ್ತಿದ್ದ ಟ್ರಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು. +ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಇತರ ಮೂವರನ್ನು ಚಿಕಿತ್ಸೆಗಾಗಿ ನಾಗ್ಪುರಕ್ಕೆ ಕರೆತರಲಾಯಿತು, ಮತ್ತು ಅವರಲ್ಲಿ ಇಬ್ಬರು ಅಲ್ಲಿ ನಿಧನರಾದರು, ಒಬ್ಬ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಕಾರಿ ತಿಳಿಸಿದ್ದಾರೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_216_4.txt b/eesanje/url_47_216_4.txt new file mode 100644 index 0000000000000000000000000000000000000000..fff41a290c237d2203b7572b2f83ffc067a72129 --- /dev/null +++ b/eesanje/url_47_216_4.txt @@ -0,0 +1,6 @@ +ಬಂಧಿತ ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸಲು ಸಿಜೆಗೆ ಚೌಹಾಣ್ ಪತ್ರ +ಭೋಪಾಲ್, ಡಿ 16 (ಪಿಟಿಐ) ಗ್ವಾಲಿಯರ್‍ನಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ನ್ಯಾಯಾೀಧಿಶರ ಕಾರನ್ನು ಕೊಂಡೊಯ್ದಿದ್ದಕ್ಕಾಗಿ ಬಂಧಿತರಾಗಿರುವ ಇಬ್ಬರು ಎಬಿವಿಪಿ ಕಾರ್ಯಕರ್ತರನ್ನು ಕ್ಷಮಿಸುವಂತೆ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರವಿ ಮಳಿಮಠ್ ಅವರಿಗೆ ಪತ್ರ ಬರೆದಿದ್ದಾರೆ. +ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಗ್ವಾಲಿಯರ್ ಕಾರ್ಯದರ್ಶಿ ಹಿಮಾಂಶು ಶ್ರೋತ್ರಿಯಾ (22) ಮತ್ತು ಉಪ ಕಾರ್ಯದರ್ಶಿ ಸುಕೃತ್ ಶರ್ಮಾ (24) ಅವರನ್ನು ಸೋಮವಾರ ಎಂಪಿ ದಕೈತಿ ಔರ್ ವ್ಯಾಪರಣ್ ಪ್ರಭಾವಿ ಕ್ಷೇತ್ರ ಅನಿಯಮ, ಡಕಾಯಿತಿ ವಿರೋಧಿ ಕಾನೂನು ಅಡಿಯಲ್ಲಿ ಬಂಧಿಸಲಾಗಿದೆ. +“ನನ್ನನ್ನೂ ಮಂತ್ರಿ ಮಾಡಿ” ಎಂದು ಬೇಡಿಕೆಯಿಟ್ಟ ಆಡಳಿತ ಪಕ್ಷದ ಶಾಸಕರು +ನ್ಯಾಯಮೂರ್ತಿ ಮಳಿಮಠ್ ಅವರಿಗೆ ಬರೆದ ಪತ್ರದಲ್ಲಿ ಚೌಹಾಣ ಅವರು, ಇದು ಪವಿತ್ರ ಉದ್ದೇಶಕ್ಕಾಗಿ ಮಾಡಿದ ಮತ್ತು ಮಾನವೀಯ ನೆಲೆಯಲ್ಲಿ ಜೀವ ಉಳಿಸಲು ಮಾಡಿದ ವಿಭಿನ್ನ ರೀತಿಯ ಅಪರಾಧವಾಗಿರುವುದರಿಂದ ಕ್ಷಮಿಸಲು ಯೋಗ್ಯವಾಗಿದೆ. ಹಿಮಾಂಶು ಶ್ರೋತ್ರಿಯಾ (22) ಉದ್ದೇಶ ಮತ್ತು ಸುಕೃತ್ ಶರ್ಮಾ (24) ಅಪರಾಧ ಮಾಡಲಿಲ್ಲ, ಆದ್ದರಿಂದ ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅವರನ್ನು ಕ್ಷಮಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. +ಅವರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಡಕಾಯಿತಿ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾೀಧಿಶ ಸಂಜಯ್ ಗೋಯಲ್ ಅವರು ಸಭ್ಯತೆಯಿಂದ ಸಹಾಯವನ್ನು ಕೇಳುತ್ತಾರೆಯೇ ಹೊರತು ಬಲವಂತದಿಂದಲ್ಲ ಎಂದು ಹೇಳಿದ್ದನ್ನು ಉಲ್ಲೇಖಿಸಿ ಅವರು ಈ ಮನವಿ ಮಾಡಿಕೊಂಡಿದ್ದಾರೆ. \ No newline at end of file diff --git a/eesanje/url_47_216_5.txt b/eesanje/url_47_216_5.txt new file mode 100644 index 0000000000000000000000000000000000000000..5c1e85d0180b03157212f42ff7920e1691e7f01b --- /dev/null +++ b/eesanje/url_47_216_5.txt @@ -0,0 +1,8 @@ +ಬಹಿರಂಗವಾಯ್ತು ಸಂಸತ್ ಮೇಲೆ ಹೊಗೆ ದಾಳಿ ಹಿಂದಿನ ಉದ್ದೇಶ +ನವದೆಹಲಿ,ಡಿ.16- ಸಂಸತ್ತಿನ ಭದ್ರತಾ ಉಲ್ಲಂಘನೆಯ ಹಿಂದಿನ ಸೂತ್ರಧಾರ ಲಲಿತ್ ಝಾ ಮತ್ತು ಆತನ ಸಹ ಆರೋಪಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಲು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಬಯಸಿದ್ದರು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. +ಮೂಲಗಳ ಪ್ರಕಾರ, 2001 ರ ದಾಳಿಯ ವಾರ್ಷಿಕೋತ್ಸವದಂದು ನಡೆದ ಘಟನೆಯನ್ನು ಮರುಸೃಷ್ಟಿಸಲು ಪೊಲೀಸರು ಸಂಸತ್ತಿನ ಅನುಮೋದನೆಯನ್ನು ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಸಂಸತ್ತಿನಲ್ಲಿ ಹೊಗೆ ಬಾಂಬ್ ಮತ್ತು ಪ್ರತಿಭಟನೆಗಳನ್ನು ಒಳಗೊಂಡ ಪ್ರಮುಖ ಭದ್ರತಾ ಉಲ್ಲಂಘನೆಗಾಗಿ ಐವರು ವ್ಯಕ್ತಿಗಳನ್ನು ಇದುವರೆಗೆ ಬಂಧಿಸಲಾಗಿದೆ. ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಅವರನ್ನು ಲೋಕಸಭೆಯ ಚೇಂಬರ್ ಒಳಗೆ ಬಂಧಿಸಿದರೆ, ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ಸಂಸತ್ ಭವನದ ಹೊರಗೆ ಬಂಧಿಸಲಾಯಿತು. +“ನನ್ನನ್ನೂ ಮಂತ್ರಿ ಮಾಡಿ” ಎಂದು ಬೇಡಿಕೆಯಿಟ್ಟ ಆಡಳಿತ ಪಕ್ಷದ ಶಾಸಕರು +ಸಂಸತ್ತಿನ ಭದ್ರತಾ ಉಲ್ಲಂಘನೆಯ ಯೋಜನೆಗಾಗಿ ಪ್ರಕರಣದ ಇತರ ಆರೋಪಿಗಳನ್ನು ಹಲವು ಬಾರಿ ಭೇಟಿಯಾಗಿದ್ದಾಗಿ ಝಾ ಒಪ್ಪಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ತಿಳಿಸಿಪೊರೆ. ಬಿಹಾರ ಮೂಲದ ಝಾ ಕೋಲ್ಕತ್ತಾದಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. +ಆರಂಭದಲ್ಲಿ ಹೊರಾಂಗಣ ಪ್ರತಿಭಟನೆ ಮಾಡಲು ಅಲೋಚಿಸುತ್ತಿದ್ದವರು ಏಕಾಏಕಿ ಸಂಸತ್ ಒಳನುಸುಳುವಿಕೆಯಂತಹ ದಿಟ್ಟ ಕ್ರಮಕೈಗೊಂಡರು ಎಂದು ಪೊಲೀಸರು ವಿವರಣೆ ನೀಡಿದ್ದಾರೆ. ಆರೋಪಿಗಳು ಮಾಹಿತಿ ಪಡೆಯಲು ಗೂಗಲ್ ಬಳಸಿದ್ದಾರೆ. ಹುಡುಕಾಟಗಳು ಸಂಸತ್ತಿನ ಭದ್ರತಾ ಕ್ರಮಗಳ ಹಳೆಯ ವೀಡಿಯೊಗಳನ್ನು ಅಧ್ಯಯನ ಮಾಡುವುದು ಮತ್ತು ಸುರಕ್ಷಿತ ಸಂವಹನ ವಿಧಾನಗಳ ಬಗ್ಗೆ ಕಲಿಯುವುದನ್ನು ಒಳಗೊಂಡಿವೆ. ಪತ್ತೆಹಚ್ಚುವಿಕೆಯನ್ನು ತಪ್ಪಿಸುವ ಪ್ರಯತ್ನದಲ್ಲಿ ಗುಂಪು ಪ್ರತ್ಯೇಕವಾಗಿ ಸಿಗ್ನಲ್ ಅಪ್ಲಿಕೇಶನ್ ಬಳಸಿ ಸಂವಹನ ನಡೆಸಿತು ಎನ್ನಲಾಗಿದೆ. +ನ್ಯಾಯವಾದಿಗಳ ರಕ್ಷಣಾ ಕಾಯ್ದೆ ಮೇಲ್ಮನೆಯಲ್ಲಿ ಅಂಗೀಕಾರ +ಆರೋಪಿಗಳು ಶತ್ರು ದೇಶ ಅಥವಾ ಭಯೋತ್ಪಾದಕ ಸಂಘಟನೆಯೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ನಿರ್ಧರಿಸಲು ಝಾ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತದೆ. \ No newline at end of file diff --git a/eesanje/url_47_216_6.txt b/eesanje/url_47_216_6.txt new file mode 100644 index 0000000000000000000000000000000000000000..e2a291a8f1399339b14ca666b92541ab29b34853 --- /dev/null +++ b/eesanje/url_47_216_6.txt @@ -0,0 +1,5 @@ +ಭದ್ರತಾ ಲೋಪದ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು, ಲೋಕಸಭೆಯಲ್ಲಿ ಕೋಲಾಹಲ +ನವದೆಹಲಿ,ಡಿ.15- ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದ್ದರಿಂದ ಲೋಕಸಭೆಯನ್ನು ಇಂದು ಮತ್ತೆ ಮುಂದೂಡಲಾಯಿತು. ಚಳಿಗಾಲದ ಕಲಾಪದಲ್ಲಿ ಲೋಕಸಭೆಯ ಹದಿಮೂರು ಸಂಸದರು ಮತ್ತು ರಾಜ್ಯಸಭೆಯ ಒಬ್ಬ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಸಿ ನಿರಂತರ ನಡೆದ ಪ್ರತಿಭಟನೆಯ ನಂತರ ಸದನವನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು. +ಪ್ರತಿಪಕ್ಷದ ಸಂಸದರು ಅಮಾನತುಗೊಳಿಸಿರುವುದನ್ನು ಖಂಡಿಸಿದರು, ಪ್ರಶ್ನೆ ಕೇಳುವುದು ಪ್ರತಿಯೊಬ್ಬ ಚುನಾಯಿತ ಜನಪ್ರತಿನಿಯ ಹಕ್ಕು ಎಂದು ವಾದಿಸಿದರು. ಲೋಕಸಭೆಯಿಂದ ಅಮಾ ನತುಗೊಂಡಿರುವ 13 ಸಂಸದರ ಪೈಕಿ ಒಂಬತ್ತು ಮಂದಿ ಕಾಂಗ್ರೆಸ್, ಇಬ್ಬರು ಸಿಪಿಎಂ,ಒಬ್ಬರು ಸಿಪಿಐ ಮತ್ತು ಒಬ್ಬರು ಡಿಎಂಕೆ ಸದಸ್ಯರಿದ್ದಾರೆ. +ರಾಜ್ಯಸಭೆಯಲ್ಲಿ, ಟಿಎಂಸಿ ಸಂಸದ ಡೆರೆಕ್ ಒ ಬ್ರೇನ್ ಅವರನ್ನು ಚಳಿಗಾಲದ ಅವೇಶನದ ಉಳಿದ ಅವಗೆ ಅಮಾನತುಗೊಳಿಸಲಾಗಿದೆ ಸಮಗ್ರ ದುರ್ನಡತೆ ಮತ್ತು ಕುರ್ಚಿಯನ್ನು ಕ್ಕರಿಸಿದ ಕಾರಣಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ. +ಸಂಸತ್ತಿನ ಚಳಿಗಾಲದ ಅವೇಶನ ಡಿಸೆಂಬರ್ 22 ರಂದು ಮುಕ್ತಾಯಗೊಳ್ಳಲಿದ್ದು, ಅಷ್ಟರಲ್ಲಿ ಸರ್ಕಾರ ಹಲವಾರು ಮಹತ್ವದ ಮಸೂದೆಗಳಿಗೆ ಅನುಮೊದನೆ ಪಡೆದುಕೊಳ್ಳಬೇಕಿದೆ. \ No newline at end of file diff --git a/eesanje/url_47_216_7.txt b/eesanje/url_47_216_7.txt new file mode 100644 index 0000000000000000000000000000000000000000..7d1149c1c716e5cb37dff508315c1a21eaeb35be --- /dev/null +++ b/eesanje/url_47_216_7.txt @@ -0,0 +1,7 @@ +ಶಿಮ್ಲಾಗಿಂತಲೂ ತಂಪಾದ ದೆಹಲಿ +ನವದೆಹಲಿ,ಡಿ.15- ರಾಷ್ಟ್ರ ರಾಜಧಾನಿಯ ಕನಿಷ್ಠ ತಾಪಮಾನ ಇಂದು ಬೆಳಗ್ಗೆ ಐದು ಡಿಗ್ರಿಗಿಂತ ಕಡಿಮೆಯಾಗಿದ್ದು, ಈ ಋತುವಿನ ಅತ್ಯಂತ ಚಳಿಯ ದಿನವಾಗಿದೆ. ಭಾರತೀಯ ಹವಾಮಾನ ಇಲಾಖೆಯ ನವದೆಹಲಿ-ಸಫ್ದರ್‍ಜಂಗ್ ಮಾನಿಟರಿಂಗ್ ಸ್ಟೇಷನ್ ಇಂದಿನ ಕನಿಷ್ಠ ತಾಪಮಾನ 4.9 ಡಿಗ್ರಿ ಸೆಲ್ಸಿಯಸ್ ಎಂದು ವರದಿ ಮಾಡಿದೆ. +ಇಂದು, ದೆಹಲಿಯು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾಗಿಂತ ತಂಪಾಗಿದೆ, ಏಕೆಂದರೆ ಶಿಮ್ಲಾ ನಗರದ ಕನಿಷ್ಠ ತಾಪಮಾನವು 6.8 ಡಿಗ್ರಿ ಸೆಲ್ಸಿಯಸ್‍ನಲ್ಲಿ ದಾಖಲಾಗಿದೆ. ಏತನ್ಮಧ್ಯೆ, ನಿನ್ನೆ ದೆಹಲಿಯ ಗರಿಷ್ಠ ತಾಪಮಾನವು 24.1 ಡಿಗ್ರಿಯಲ್ಲಿ ನೆಲೆಸಿದೆ ಮತ್ತು ಮುನ್ಸೂಚನೆಗಳು 24 ಡಿಗ್ರಿಗಳಷ್ಟು ಇರಬಹುದೆಂದು ನಿರೀಕ್ಷಿಸಲಾಗಿದೆ. ಶಿಮ್ಲಾದಲ್ಲಿ ಇಂದು ಗರಿಷ್ಠ ತಾಪಮಾನ 15 ಡಿಗ್ರಿಯಲ್ಲಿ ನೆಲೆಸುವ ನಿರೀಕ್ಷೆಯಿದೆ. +ನಿನ್ನೆ, ದೆಹಲಿಯು 6.2 ಡಿಗ್ರಿಗಳಷ್ಟು ಕನಿಷ್ಠ ತಾಪಮಾನವನ್ನು ವರದಿ ಮಾಡಿದೆ ಮತ್ತು ಈ ವರ್ಷದ ಚಳಿಗಾಲದಲ್ಲಿ ಅತ್ಯಂತ ಕಡಿಮೆ ತಾಪಮಾನವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನ ದಾಖಲಾಗಿದೆ. ಬುಧವಾರ ಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್, ಮಂಗಳವಾರ 6.8 ಡಿಗ್ರಿ ಸೆಲ್ಸಿಯಸ್ ಮತ್ತು ಸೋಮವಾರ 6.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. +ಸಂಸದ ಧೀರಜ್ ಸಾಹು ಬಚ್ಚಿಟ್ಟಿ ಚಿನ್ನ ಪತ್ತೆಗೆ ಹೈಟೆಕ್ ತಂತ್ರ +ದೆಹಲಿಯಾದ್ಯಂತ ಹಲವಾರು ಮೇಲ್ವಿಚಾರಣಾ ಕೇಂದ್ರಗಳಲ್ಲಿ, ಗಾಳಿಯ ಗುಣಮಟ್ಟವನ್ನು ಇಂದು ಬೆಳಿಗ್ಗೆ ಅತ್ಯಂತ ಅನಾರೋಗ್ಯಕರ ವಿಭಾಗದಲ್ಲಿ ದಾಖಲಿಸಲಾಗಿದೆ, ವಾಯು ಗುಣಮಟ್ಟ ಸೂಚ್ಯಂಕ 250 ಕ್ಕಿಂತ ಹೆಚ್ಚಿದೆ. ರಾಷ್ಟ್ರ ರಾಜಧಾನಿಯ ಆನಂದ್ ವಿಹಾರ್‍ನಲ್ಲಿ, ಎಕ್ಯೂಐ 475 ಆಗಿತ್ತು, ಇದು ಗಾಳಿಯ ಗುಣಮಟ್ಟವನ್ನು ಹಾಳು ಮಾಡಿದೆ. +ಉತ್ತರ ಮತ್ತು ಈಶಾನ್ಯ ಭಾರತದ ಹಲವಾರು ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಮಂಜು ಕವಿದಿದ್ದು, ಗೋಚರತೆಯ ಮೇಲೆ ಪರಿಣಾಮ ಬೀರಿದೆ. ಪಂಜಾಬ್‍ನ ಹಲವಾರು ಪ್ರದೇಶಗಳಲ್ಲಿ ದಟ್ಟವಾದ ಮಂಜು ಕಂಡುಬಂದಿದೆ. ಉತ್ತರ ಪ್ರದೇಶ, ಬಿಹಾರ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದ ಕೆಲ ಕಡೆಗಳಲ್ಲಿ ಭಾರಿ ಮುಸುಕು ಕವಿದಿದೆ. \ No newline at end of file diff --git a/eesanje/url_47_216_8.txt b/eesanje/url_47_216_8.txt new file mode 100644 index 0000000000000000000000000000000000000000..ded9fb499e3f15fb4fd7ff0b9bd1a5c622160c41 --- /dev/null +++ b/eesanje/url_47_216_8.txt @@ -0,0 +1,7 @@ +ಸಂಸದ ಧೀರಜ್ ಸಾಹು ಬಚ್ಚಿಟ್ಟಿ ಚಿನ್ನ ಪತ್ತೆಗೆ ಹೈಟೆಕ್ ತಂತ್ರ +ನವದೆಹಲಿ,ಡಿ.15- ಕಾಂಗ್ರೆಸ್ ಸಂಸದ ಧೀರಜ್ ಕುಮಾರ್ ಸಾಹು ಕುಟುಂಬದ ಒಡೆತನದ ಒಡಿಶಾ ಮೂಲದ ಡಿಸ್ಟಿಲರಿ ಕಂಪನಿ ವಿರುದ್ಧ ನಡೆದ ತೆರಿಗೆ ಶೋಧದಲ್ಲಿ ಐದು ದಿನಗಳ ಎಣಿಕೆಯ ನಂತರ 355.5 ಕೋಟಿ ರೂ. ನಗದು ವಶಪಡಿಸಿಕೊಂಡ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಾಹು ಅವರು ಭೂಗರ್ಭದಲ್ಲಿ ಅಡಗಿಸಿಟ್ಟಿರಬಹುದು ಎಂದು ಶಂಕಿಸಲಾದ ಚಿನ್ನದ ಆಭರಣಗಳ ಪತ್ತೆಗೆ ಹೈಟೆಕ್ ಗ್ಯಾಜೆಟ್‍ಗಳನ್ನು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. +ರಾಂಚಿಯ ಧೀರಜ್ ಸಾಹು ಮತ್ತು ಜಾರ್ಖಂಡ್‍ನ ಲೋಹರ್ದಗಾ ಅವರ ಎರಡು ಮನೆಗಳಲ್ಲಿ ಐಟಿ ತಂಡಗಳು ಜಿಯೋ ಕಣ್ಗಾವಲು ವ್ಯವಸ್ಥೆಯನ್ನು ಬಳಸುತ್ತಿವೆ ಎಂದು ಅಕಾರಿಗಳು ತಿಳಿಸಿದ್ದಾರೆ.ಆದಾಯ ತೆರಿಗೆ ಇಲಾಖೆಯು ಹೈಟೆಕ್ ಆಗಿದೆ, ಆದ್ದರಿಂದ ಮುಚ್ಚಿಟ್ಟಿರುವ ಚಿನ್ನವನ್ನು ಹುಡುಕಲು ಇತ್ತೀಚಿನ ಲಭ್ಯವಿರುವ ತಂತ್ರಜ್ಞಾನವನ್ನು ಹುಡುಕಾಟದಲ್ಲಿ ಬಳಸಲಾಗುವುದು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. +ಛತ್ತೀಸ್‍ಗಢದ ಇಬ್ಬರು ಮಾಜಿ ಶಾಸಕರನ್ನು ಉಚ್ಛಾಟಿಸಿದ ಕಾಂಗ್ರೆಸ್ +ತೆರಿಗೆ ವಂಚನೆ ಮತ್ತು ಆಫ್ -ದಿ-ಬುಕ್ ವಹಿವಾಟಿನ ಆರೋಪದ ಮೇಲೆ ಡಿಸೆಂಬರ್ 6 ರಂದು ಆದಾಯ ತೆರಿಗೆ ಇಲಾಖೆ ಅಕಾರಿಗಳು ದಾಳಿಗಳನ್ನು ಪ್ರಾರಂಭಿಸಿದ್ದರು. ಬೌದ್ ಡಿಸ್ಟಿಲರಿಗಳು ಮತ್ತು ಸಂಬಂಧಿತ ಘಟಕಗಳ ಮೇಲಿನ ದಾಳಿಯ ಸಮಯದಲ್ಲಿ ಪತ್ತೆಯಾದ ಬೃಹತ್ ನಗದು ಸಂಗ್ರಹವು ದೇಶದ ಮದ್ಯದ ಮಾರಾಟದಿಂದ ಉತ್ಪತ್ತಿಯಾಗುವ ಲೆಕ್ಕವಿಲ್ಲದ ಆದಾಯವನ್ನು ಪ್ರತಿನಿಸುತ್ತದೆ ಎಂದು ಐಟಿ ಇಲಾಖೆ ಶಂಕಿಸಿದೆ. +ಲೂಟಿ ಮಾಡಿದ ಹಣವನ್ನು ಜನರಿಗೆ ವಾಪಸ್ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ವಶಪಡಿಸಿಕೊಂಡಿರುವ ಹಣದ ಪರ್ವತಗಳನ್ನು ತೋರಿಸುವ ಹಿಂದಿ ಪತ್ರಿಕೆಯ ವರದಿಯನ್ನು ಪ್ರಧಾನಿ ಹಂಚಿಕೊಂಡಿದ್ದಾರೆ. +ಏತನ್ಮಧ್ಯೆ, ಧೀರಜ್ ಸಾಹು ಅವರಿಂದ ದೂರ ಉಳಿದಿರುವ ಕಾಂಗ್ರೆಸ್ ನಮಗೂ ಸಾಹುಗೂ ಯಾವುದೇ ರೀತಿಯ ವ್ಯವಹಾರಗಳೊಂದಿಗೆ ಸಂಪರ್ಕವಿಲ್ಲ ಮತ್ತು ಸಂಸದರು ನಗದು ಮತ್ತು ಅದರ ಮೂಲವನ್ನು ವಿವರಿಸಬೇಕು ಎಂದು ಕೇಳಿಕೊಂಡಿದೆ. \ No newline at end of file diff --git a/eesanje/url_47_216_9.txt b/eesanje/url_47_216_9.txt new file mode 100644 index 0000000000000000000000000000000000000000..6615b61e7af9b5cbaf12ffac29be6d0014574655 --- /dev/null +++ b/eesanje/url_47_216_9.txt @@ -0,0 +1,7 @@ +ಛತ್ತೀಸ್‍ಗಢದ ಇಬ್ಬರು ಮಾಜಿ ಶಾಸಕರನ್ನು ಉಚ್ಛಾಟಿಸಿದ ಕಾಂಗ್ರೆಸ್ +ರಾಯ್‍ಪುರ,ಡಿ.15- ಛತ್ತೀಸ್‍ಗಢ ವಿಧಾನಸಭೆ ಚುನಾವಣೆಯಲ್ಲಿ ಸೋತ ಕೆಲವೇ ದಿನಗಳ ನಂತರ ಕಾಂಗ್ರೆಸ್ ತನ್ನ ಇಬ್ಬರು ಮಾಜಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ್ದು, ಮಾಜಿ ಸಚಿವರೊಬ್ಬರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. +ನವೆಂಬರ್ 7 ಮತ್ತು 17 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ 90 ಸದಸ್ಯ ಬಲದ ಸದನದಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದಿತು, ಆದರೆ ಕಾಂಗ್ರೆಸ್ 2018 ರ ಆವೃತ್ತಿಯಲ್ಲಿ ಗೆದ್ದ 68 ಸ್ಥಾನಗಳಿಂದ 35 ಸ್ಥಾನಗಳಿಗೆ ಕುಸಿದಿತ್ತು.ಕಾಂಗ್ರೆಸ್ ಶಾಸಕರಾದ ಬೃಹಸ್ಪತ್ ಸಿಂಗ್ ಮತ್ತು ಡಾ ವಿನಯ್ ಜೈಸ್ವಾಲ್ ಅವರನ್ನು ಪಕ್ಷ ವಿರೋ ಚಟುವಟಿಕೆಗಳ ಆರೋಪದ ಮೇಲೆ ಆರು ವರ್ಷಗಳ ಅವಗೆ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. +2023 ರ ಅಸೆಂಬ್ಲಿ ಚುನಾವಣೆಯಲ್ಲಿ ಸಿಂಗ್ ಮತ್ತು ಜೈಸ್ವಾಲ್ ಅವರಿಗೆ ಟಿಕೆಟ್ ನೀಡಿರಲಿಲ್ಲ ಮತ್ತು ಚುನಾವಣಾ ಸೋಲಿನ ನಂತರ ಇಬ್ಬರು ಪಕ್ಷದ ಹಿರಿಯ ನಾಯಕರ ಅವರ ವಿರುದ್ಧ ಹಲವಾರು ಗುರುತರ ಆರೋಪಗಳನ್ನು ಹೊರಿಸಿದ್ದರು. +ಅಮೆರಿಕದಲ್ಲಿದ್ದಾರೆ 2 ಲಕ್ಷ ಅಕ್ರಮ ಭಾರತೀಯ ವಲಸೆಗಾರರು +ರಾಮಾನುಜ್‍ಗಂಜ್ (ಎಸ್‍ಟಿ) ಕ್ಷೇತ್ರದ ಮಾಜಿ ಶಾಸಕ ಸಿಂಗ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಛತ್ತೀಸ್‍ಗಢದ ಪಕ್ಷದ ಉಸ್ತುವಾರಿ ಕುಮಾರಿ ಶೆಜ್ಲಾ ಮತ್ತು ಮಾಜಿ ಉಪಮುಖ್ಯಮಂತ್ರಿ ಟಿ ಎಸ್ ಸಿಂಗ್‍ದೇವ್ ಅವರ ಚುನಾವಣೆಯ ಸೋಲಿಗೆ ಕಾರಣರಾಗಿದ್ದಾರೆ. +2018 ರಲ್ಲಿ ಮನೇಂದ್ರಗಢದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಜೈಸ್ವಾಲï, ಕಾಂಗ್ರೆಸ್ ಚುನಾವಣೆಯಲ್ಲಿ ಸೋತ ನಂತರ, ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಚಂದನ್ ಯಾದವ್ ಅವರಿಗೆ ಹಣ ನೀಡಿದ್ದೇನೆ ಎಂದು ಹೇಳಿಕೊಂಡಿದ್ದರು. \ No newline at end of file diff --git a/eesanje/url_47_217_1.txt b/eesanje/url_47_217_1.txt new file mode 100644 index 0000000000000000000000000000000000000000..80e4a6d49d9afe813212729acf5e894ae1152382 --- /dev/null +++ b/eesanje/url_47_217_1.txt @@ -0,0 +1,5 @@ +ಶೀನಾ ಬೋರಾ ಹತ್ಯೆ ಪ್ರಕರಣ, ಸಿಬಿಐನಿಂದ ಸಾಕ್ಷಿಪಟ್ಟಿ ಸಲ್ಲಿಕೆ +ಮುಂಬೈ, ಡಿ 15 (ಪಿಟಿಐ) – ಮಗಳು ಶೀನಾ ಬೋರಾ ಹತ್ಯೆಗೆ ಸಂಬಂಸಿದಂತೆ ಮಾಜಿ ಮಾಧ್ಯಮ ಕಾರ್ಯನಿರ್ವಾಹಕ ಇಂದ್ರಾಣಿ ಮುಖರ್ಜಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) 23 ಸಾಕ್ಷಿಗಳ ಪಟ್ಟಿಯನ್ನು ಸಲ್ಲಿಸಿದೆ. +ಮುಂಬೈನ ಮಾಜಿ ಪೊಲೀಸ್ ಕಮಿಷನರ್ ರಾಕೇಶ್ ಮಾರಿಯಾ ಮತ್ತು ಇತರ ಪೊಲೀಸ್ ಅಕಾರಿಗಳನ್ನು ಒಳಗೊಂಡಿರುವ ಪಟ್ಟಿಯಲ್ಲಿ ಸಿಬಿಐ ಅವರು ಅವಲಂಬಿತ ಸಾಕ್ಷಿಗಳು ಆಗಿರುವುದರಿಂದ ಅವರನ್ನು ವಿಚಾರಣೆಯಲ್ಲಿ ಪರಿಶೀಲಿಸಲಾಗುವುದಿಲ್ಲ ಎಂದು ಹೇಳಿದರು.ಇಂದ್ರಾಣಿ ಮತ್ತು ಆಕೆಯ ಇಬ್ಬರು ಮಾಜಿ ಗಂಡಂದಿರಾದ ಪೀಟರ್ ಮುಖರ್ಜಿ, ಸಂಜೀವ್ ಖನ್ನಾ ಅವರುಗಳು ಇಂದ್ರಾಣಿ ಅವರ ಮೊದಲ ಸಂಬಂಧದಿಂದ ಜನಿಸಿದ್ದ ಮಗಳು ಶೀನಾ ಬೋರಾ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ಶೀನಾ (24) ಅವರನ್ನು ಏಪ್ರಿಲ್ 24, 2012 ರಂದು ಆಕೆಯ ತಾಯಿ ಇಂದ್ರಾಣಿ, ಖನ್ನಾ ಮತ್ತು ಚಾಲಕ ಶ್ಯಾಮ್ವರ್ ರೈ ಅವರು ಪೀಟರ್ ಮುಖರ್ಜಿಯೊಂದಿಗೆ ಸಂಚು ರೂಪಿಸಿ ಕೊಲೆ ಮಾಡಿದ್ದರು ಎಂದು ಆರೋಪಿಸಲಾಗಿತ್ತು. \ No newline at end of file diff --git a/eesanje/url_47_217_10.txt b/eesanje/url_47_217_10.txt new file mode 100644 index 0000000000000000000000000000000000000000..feb68cdf612d27d1c25c3adc4b56352573bf7e88 --- /dev/null +++ b/eesanje/url_47_217_10.txt @@ -0,0 +1,11 @@ + : ಸಂಸತ್‍ನಲ್ಲಿ ಭದ್ರತಾಲೋಪ, ಆತಂಕ ಸೃಷ್ಟಿಸಿದ ಅಪರಿಚಿತ ವ್ಯಕ್ತಿಗಳು..! +ನವದೆಹಲಿ, ಡಿ.13- ಲೋಕಸಭೆ ಅಧಿವೇಶನ ನಡೆಯುತ್ತಿದ್ದ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಆಗಂತುಕರು ಏಕಾಏಕಿ ಸಂಸದರೆಡೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಬಿಗಿಭದ್ರತೆ ನಡುವೆಯೂ ಈ ಭದ್ರತಾ ಲೋಪ ಭಾರೀ ಸಂಚಲನ ಸೃಷ್ಟಿಸಿದೆ. +ಇಂದು ಮಧ್ಯಾಹ್ನ 1 ಗಂಟೆ ಸಂದರ್ಭದಲ್ಲಿ ಏಕಾಏಕಿ ಪ್ರೇಕ್ಷಕರ ಗ್ಯಾಲರಿಯಿಂದ ಸಂಸದರ ಆಸನದೆಡೆಗೆ ನೆಗೆದ ಇಬ್ಬರು ವ್ಯಕ್ತಿಗಳು ಮೇಜುಗಳ ಮೇಲೇರಿ ಅಸಂಬದ್ಧವಾಗಿ ವರ್ತಿಸಿದ್ದಾರೆ.ಕೂಡಲೇ ಸ್ಪೀಕರ್ ಏನಾಗುತ್ತಿದೆ ಎಂದು ತಿಳಿಯದೆ ಸಂಸತ್‍ನ ಮಾರ್ಷಲ್‍ಗಳನ್ನು ಕರೆದಿದ್ದಾರೆ. ಗದ್ದಲ ಏರ್ಪಟ್ಟಾಗ ಸದನವನ್ನು ಮುಂದೂಡಿದ್ದಾರೆ. ಸಂಸದರನ್ನು ಯಾಮಾರಿಸಿ ಇಬ್ಬರು ವ್ಯಕ್ತಿಗಳು ಕೆಲವು ನಿಮಿಷಗಳ ಕಾಲ ಎಲ್ಲೆಂದರಲ್ಲಿ ನುಗ್ಗಿ ಕೆಲ ಸಮಯ ಭೀತಿಯ ವಾತಾವರಣ ಸೃಷ್ಟಿಯಾಯಿತು. + + | . .#../O9n9nu6ZKj + +ಕೆಲ ಸಂಸದರು ಅವರನ್ನು ಹಿಡಿಯಲು ಪ್ರಯತ್ನಿಸಿದರೂ ಸಿಗದೆ ಆ ಇಬ್ಬರು ವ್ಯಕ್ತಿಗಳು ಮೇಜಿನಿಂದ ಮೇಜಿಗೆ ಜಿಗಿದು ಹೈಡ್ರಾಮಾ ಸೃಷ್ಟಿಸಿದ್ದಾರೆ.ಇದೇ ವೇಳೆ ಈ ಇಬ್ಬರು ಹೊಗೆ ಬರುವ ರಾಸಾಯನಿಕ (ಕಲರ್ ಸ್ಪ್ರೇ) ತಂದು ಸಿಂಪಡಿಸಿದ್ದರಿಂದ ಕೆಲವರು ವಿಚಲಿತರಾದರು. ಕೂಡಲೇ ಮಾರ್ಷಲ್‍ಗಳು ಅವರಿಬ್ಬರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. +ಸಂಸತ್ ಪ್ರವೇಶಿಸುವಾಗ ಸಾರ್ವಜನಿಕರ ಪ್ರತಿಯೊಂದು ಮಾಹಿತಿಯನ್ನೂ ಕೂಡ ಕಲೆ ಹಾಕಲಾಗುತ್ತದೆ ಮತ್ತು ಒಳ ಪ್ರವೇಶಿಸುವಾಗ ಅವರನ್ನು ಕೂಲಂಕುಶವಾಗಿ ಪರೀಕ್ಷಿಸಲಾಗುತ್ತದೆ. ಆದರೆ, ಈ ಇಬ್ಬರು ಹೇಗೆ ಪ್ರೇಕ್ಷಕರ ಗ್ಯಾಲರಿಗೆ ಬಂದರು ಎಂಬುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. + | # .../V6nB7ljhXh +ಕಳೆದ 2001ರಲ್ಲಿ ಸಂಸತ್ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ ಭದ್ರತಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದರು.ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಸಂಸತ್‍ನ ಒಳಗೆ ಹಾಗೂ ಹೊರಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರ ನಡುವೆಯೇ ಈ ಘಟನೆ ನಡೆದಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.ಇತ್ತೀಚೆಗೆ ಖಲಿಸ್ತಾನ್ ನಾಯಕ ಸಂಸತ್ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದನ್ನು ಕೂಡ ಇಲ್ಲಿ ಸ್ಮರಿಸಬಹುದಾಗಿದೆ. +ಸಂಸತ್ ಆವರಣಕ್ಕೆ ಭದ್ರತಾ ಪಡೆಗಳು ಕೂಡ ದಾವಿಸಿದ್ದು, ಸಂಸದರಿಗೆ ಸುರಕ್ಷತೆ ನೀಡಿದ್ದಾರೆ. ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ಸುಮಾರು ಅರ್ಧ ಗಂಟೆ ಕಾಲ ಸಂಸತ್‍ನಲ್ಲಿ ನೆರೆದಿದ್ದ ಸಂಸದರು ವಿಚಲಿತರಾದರು. \ No newline at end of file diff --git a/eesanje/url_47_217_11.txt b/eesanje/url_47_217_11.txt new file mode 100644 index 0000000000000000000000000000000000000000..efa5f253ebf8100239721ead799983d8cb86ade4 --- /dev/null +++ b/eesanje/url_47_217_11.txt @@ -0,0 +1,8 @@ +ಸಂಸತ್ ಮೇಲಿನ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗಣ್ಯರ ನಮನ +ನವದೆಹಲಿ, ಡಿ 13 (ಪಿಟಿಐ) : ಕಳೆದ 2001 ರಲ್ಲಿ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಉಪರಾಷ್ಟ್ರಪತಿ ಜಗದೀಪ್ ಧನ್‍ಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಗೌರವ ಸಲ್ಲಿಸಿದರು. +ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂ, ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್ ಶಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ವಾಣಿಜ್ಯ ಸಚಿವ ಪಿಯೂಷ್ ಗೋಯಲï, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಹಲವರು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು. +ಮೋದಿ ಅವರು ಹುತಾತ್ಮರ ಕುಟುಂಬ ಸದಸ್ಯರೊಂದಿಗೆ ವಿಶೇಷವಾಗಿ ಚಳಿಗಾಲದ ಬೆಳಿಗ್ಗೆ ಸಮಾರಂಭಕ್ಕೆ ನೆರೆದಿದ್ದ ಮಕ್ಕಳೊಂದಿಗೆ ಸಂವಾದ ನಡೆಸುತ್ತಿದ್ದರು.ಬಳಿಕ ಮೋದಿ ಅವರು ರಾಜ್ಯಸಭಾ ಅಧ್ಯಕ್ಷರ ಜತೆ ಮಾತುಕತೆ ನಡೆಸಿದರು.ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಅವರು ಸ್ಥಳದಿಂದ ನಿರ್ಗಮಿಸುವ ಮೊದಲು ಪ್ರಧಾನಿ ಅವರೊಂದಿಗೆ ಮಾತುಕತೆ ನಡೆಸಿದರು. +ಬಿಜೆಪಿ ನಾಯಕರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ನಿರ್ಧರಿಸಿತ್ತು : ಸಹಾ +2001 ರಲ್ಲಿ ನಮ್ಮ ಸಂಸತ್ತಿನ ಮೇಲಿನ ದಾಳಿಯ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಧೈರ್ಯಶಾಲಿ ಭದ್ರತಾ ಸಿಬ್ಬಂದಿಯನ್ನು ಸ್ಮರಿಸುತ್ತಿದ್ದೇವೆ. ಅವರ ಅತ್ಯುನ್ನತ ತ್ಯಾಗಕ್ಕಾಗಿ ಭಾರತವು ಅವರಿಗೆ ಸದಾ ಋಣಿಯಾಗಿದೆ ಎಂದು ಉಪರಾಷ್ಟ್ರಪತಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.ಭಯೋತ್ಪಾದನೆಯು ವಿಶ್ವಾದ್ಯಂತ ಮಾನವೀಯತೆಗೆ ಬೆದರಿಕೆಯಾಗಿ ಉಳಿದಿದೆ ಮತ್ತು ಜಾಗತಿಕ ಶಾಂತಿಗೆ ಈ ಅಡಚಣೆಯನ್ನು ನಿರ್ಮೂಲನೆ ಮಾಡುವಲ್ಲಿ ರಾಷ್ಟ್ರಗಳು ಒಗ್ಗಟ್ಟಾಗಿ ನಿಲ್ಲುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. +2001 ರಲ್ಲಿ ಸಂಸತ್ತಿನ ದಾಳಿಯಲ್ಲಿ ಹುತಾತ್ಮರಾದ ಕೆಚ್ಚೆದೆಯ ಭದ್ರತಾ ಸಿಬ್ಬಂದಿಯನ್ನು ನಾವು ಇಂದು ಸ್ಮರಿಸುತ್ತೇವೆ ಮತ್ತು ಅವರಿಗೆ ಹೃತ್ಪೂರ್ವಕ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ. ಅಪಾಯದ ಸಂದರ್ಭದಲ್ಲಿ ಅವರ ಧೈರ್ಯ ಮತ್ತು ತ್ಯಾಗ ನಮ್ಮ ರಾಷ್ಟ್ರದ ಸ್ಮರಣೆಯಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಕ್ಸ್ ಮಾಡಿದ್ದಾರೆ. +ಸಂಸತ್ ಭವನಕ್ಕೆ ಮುತ್ತಿಗೆ ಹಾಕುವ ಅವರ ಪ್ರಯತ್ನವನ್ನು ಸಂಸತ್ ಭದ್ರತಾ ಸೇವೆ, ಸಿಆರ್‍ಪಿಎಫ್ ಮತ್ತು ದೆಹಲಿ ಪೊಲೀಸರ ಸಿಬ್ಬಂದಿ ವಿಫಲಗೊಳಿಸಿದರು.ದಾಳಿಗೆ ಒಳಗಾದವರಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‍ಪಿಎಫ್ ) ಕಾನ್‍ಸ್ಟೆಬಲ್ ಕಮಲೇಶ್ ಕುಮಾರಿ, ಭಯೋತ್ಪಾದಕರನ್ನು ಗುರುತಿಸಿ ಎಚ್ಚರಿಕೆ ನೀಡಿದ ಮೊದಲಿಗರು, ಜಗದೀಶ್ ಪ್ರಸಾದ್ ಯಾದವ್ ಮತ್ತು ಸಂಸತ್ ವಾಚ್ ಮತ್ತು ವಾರ್ಡ್‍ನ ಮತ್ಬರ್ ಸಿಂಗ್ ನೇಗಿ ಮತ್ತು ನಾನಕ್ ಚಂದ್, ರಾಂಪಾಲ್ , ಓಂ ಪ್ರಕಾಶ್, ಬಿಜೇಂದರ್ ಸಿಂಗ್, ದೆಹಲಿ ಪೊಲೀಸರ ಘನಶ್ಯಾಮ್ ಮತ್ತು ಸಿಪಿಡಬ್ಲ್ಯೂಡಿಯಲ್ಲಿ ತೋಟಗಾರ ದೇಶರಾಜ್ ಈ ದಾಳಿಯಲ್ಲಿ ಹುತಾತ್ಮರಾಗಿದ್ದರು.ದಾಳಿಯಲ್ಲಿ ಗಾಯಗೊಂಡಿದ್ದ ಪತ್ರಕರ್ತರೊಬ್ಬರು ಬಳಿಕ ಮೃತಪಟ್ಟಿದ್ದರು. ಎಲ್ಲಾ ಐವರು ಭಯೋತ್ಪಾದಕರನ್ನು ಭದ್ರತಾ ಸಿಬ್ಬಂದಿಗಳು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದರು. \ No newline at end of file diff --git a/eesanje/url_47_217_12.txt b/eesanje/url_47_217_12.txt new file mode 100644 index 0000000000000000000000000000000000000000..5db5ff77682f193af51a9ef3f54901867a4644c9 --- /dev/null +++ b/eesanje/url_47_217_12.txt @@ -0,0 +1,8 @@ +ಚೀನಿ ಪ್ರಜೆಗಳಿಗೆ ವೀಸಾ ಪ್ರಕರಣ : ಇಡಿ ಮುಂದೆ ಹಾಜರಾಗದ ಕಾರ್ತಿ ಚಿದಂಬರಂ +ನವದೆಹಲಿ, ಡಿ.13 (ಪಿಟಿಐ) : 2011ರಲ್ಲಿ 263 ಚೀನಿ ಪ್ರಜೆಗಳಿಗೆ ವೀಸಾ ನೀಡಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ಮನಿ ಲಾಂಡರಿಂಗ್ ತನಿಖೆಯಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ ಮತ್ತು ಪ್ರಕರಣವನ್ನು ಅತ್ಯಂತ ನಕಲಿ ಎಂದು ಬಣ್ಣಿಸಿದ್ದಾರೆ. +ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಸುತ್ತಿರುವ ಕಾರ್ತಿ ಅವರನ್ನು ಈ ವಾರ ಇಡಿ ಕಚೇರಿಗೆ ಹಾಜರಾಗಲು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಸಮನ್ಸ್ ನೀಡಿತ್ತು. ನಾನು ಸಂಸತ್ ಅಧಿವೇಶನದಲ್ಲಿ ನಿರತನಾಗಿದ್ದೇನೆ ಹೀಗಾಗಿ ನಾನು ಇಡಿ ಮುಂದೆ ಹಾಜರಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. +2022 ರ ಇಡಿ ಪ್ರಕರಣವು ಪಂಜಾಬ್‍ನಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುತ್ತಿರುವ ವೇದಾಂತ ಗ್ರೂಪ್ ಕಂಪನಿ ತಲ್ವಂಡಿ ಸಾಬೋ ಪವರ್ ಲಿಮಿಟೆಡ್‍ನ (ಟಿಎಸ್‍ಪಿಎಲï) ಉನ್ನತ ಕಾರ್ಯನಿರ್ವಾಹಕರಿಂದ ಕಾರ್ತಿ ಮತ್ತು ಅವರ ನಿಕಟವರ್ತಿ ಎಸ್ ಭಾಸ್ಕರರಾಮನ್‍ಗೆ ಕಿಕ್‍ಬ್ಯಾಕ್ ಆಗಿ ರೂ 50 ಲಕ್ಷ ಪಡೆದುಕೊಂಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದ್ದಂತೆ ಸಿಬಿಐ ಪ್ರಕರಣ ದಾಖಲಿಸಿತ್ತು. +ಈ ಪ್ರಕರಣವು ಅತ್ಯಂತ ಬೋಗಸ್ ಎಂದು ಕಾರ್ತಿ ಪಿಟಿಐಗೆ ತಿಳಿಸಿದರು ಮತ್ತು ಅವರ ಕಾನೂನು ತಂಡವು ಅದನ್ನು ಮುಂದುವರಿಸುತ್ತದೆ.ನನ್ನ ಮೇಲೆ ಮೂರು ವರ್ಗದ ಪ್ರಕರಣಗಳಿವೆ. ಬೋಗಸ್, ಹೆಚ್ಚು ಬೋಗಸ್ ಮತ್ತು ಹೆಚ್ಚಿನ ಬೋಗಸ್ ಎಂದು ಅವರು ಲೇವಡಿ ಮಾಡಿದ್ದಾರೆ. ಕಾರ್ತಿಯನ್ನು ವಿಚಾರಣೆಗೊಳಪಡಿಸಿದ ಸಿಬಿಐ ಕಳೆದ ವರ್ಷ ಚಿದಂಬರಂ ಕುಟುಂಬದ ನಿವೇಶನಗಳ ಮೇಲೆ ದಾಳಿ ನಡೆಸಿ ಭಾಸ್ಕರರಾಮನ್ ಅವರನ್ನು ಬಂಸಿತ್ತು.ಸಿಬಿಐ ಆರೋಪದ ಪ್ರಕಾರ, ಪವರ್ ಪ್ರಾಜೆಕ್ಟ್ ಸ್ಥಾಪನೆಯ ಕೆಲಸವನ್ನು ಚೀನಾದ ಕಂಪನಿಯು ಕಾರ್ಯಗತಗೊಳಿಸುತ್ತಿದೆ ಮತ್ತು ನಿಗದಿತ ಸಮಯದಿಂದ ಹಿಂದೆ ಸರಿಯುತ್ತಿದೆ. +ಬಿಜೆಪಿ ನಾಯಕರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ನಿರ್ಧರಿಸಿತ್ತು : ಸಹಾ +ಕಂಪನಿಯ ಕಾರ್ಯನಿರ್ವಾಹಕರೊಬ್ಬರು 263 ಚೀನೀ ಉದ್ಯೋಗಿಗಳಿಗೆ ಪ್ರಾಜೆಕ್ಟ್ ವೀಸಾಗಳನ್ನು ಮರು ನೀಡುವಂತೆ ಕೋರಿದ್ದರು, ಇದಕ್ಕಾಗಿ 50 ಲಕ್ಷ ರೂಪಾಯಿ ವಿನಿಮಯವಾಗಿದೆ ಎಂದು ಸಿಬಿಐ ಎಫ್‍ಐಆರ್‍ನಲ್ಲಿ ಆರೋಪಿಸಿದೆ.ಮಾನ್ಸಾ ಮೂಲದ ಪವರ್ ಪ್ಲಾಂಟ್‍ನಲ್ಲಿ ಕೆಲಸ ಮಾಡುತ್ತಿರುವ ಚೀನಾದ ಕಾರ್ಮಿಕರಿಗೆ ಪ್ರಾಜೆಕ್ಟ್ ವೀಸಾಗಳನ್ನು ಮರುಹಂಚಿಕೆ ಮಾಡಲು ಟಿಎಸ್‍ಪಿಎಲ್‍ನ ಅಂದಿನ ಅಸೋಸಿಯೇಟ್ ಉಪಾಧ್ಯಕ್ಷ ವಿಕಾಸ್ ಮಖಾರಿಯಾ ಅವರು ಭಾಸ್ಕರರಾಮನ್ ಅವರನ್ನು ಸಂಪರ್ಕಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ. +ಸಿಬಿಐ ಎಫ್‍ಐಆರ್‍ನಲ್ಲಿ ಮಖಾರಿಯಾ ಅವರು ಭಾಸ್ಕರರಾಮನ್ ಮೂಲಕ ಕಾರ್ತಿಯನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರಾಜೆಕ್ಟ್ ವೀಸಾಗಳು ವಿದ್ಯುತ್ ಮತ್ತು ಉಕ್ಕು ವಲಯಕ್ಕೆ 2010 ರಲ್ಲಿ ಪರಿಚಯಿಸಲಾದ ವಿಶೇಷ ಸೌಲಭ್ಯವಾಗಿದ್ದು, ಪಿ ಚಿದಂಬರಂ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ವಿವರವಾದ ಮಾರ್ಗಸೂಚಿಗಳನ್ನು ನೀಡಲಾಗಿತ್ತು. \ No newline at end of file diff --git a/eesanje/url_47_217_2.txt b/eesanje/url_47_217_2.txt new file mode 100644 index 0000000000000000000000000000000000000000..0fdab60531211a540d967c9fff4c5c09e9ab6077 --- /dev/null +++ b/eesanje/url_47_217_2.txt @@ -0,0 +1,8 @@ +ನ್ಯಾಯಾಧೀಶರ ಕಾರಲ್ಲಿ ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಕಾರ್ಯಕರ್ತರಿಗೆ ಜಾಮೀನು ನಿರಾಕರಣೆ + +ಗ್ವಾಲಿಯರ್, ಡಿ 15 (ಪಿಟಿಐ) : ಖಾಸಗಿ ವಿಶ್ವವಿದ್ಯಾನಿಲಯದ ಉಪಕುಲಪತಿಯಾಗಿದ್ದ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲು ರೈಲ್ವೆ ನಿಲ್ದಾಣದ ಹೊರಗೆ ನಿಲ್ಲಿಸಿದ್ದ ಹೈಕೋರ್ಟ್ ನ್ಯಾಯಾಧೀಶರ ಕಾರನ್ನು ಬಲವಂತವಾಗಿ ಕೊಂಡೊಯ್ದ ಆರೋಪದಲ್ಲಿ ಬಂಧಿತರಾಗಿದ್ದ ಇಬ್ಬರು ಎಬಿವಿಪಿ ಕಾರ್ಯಕರ್ತರಿಗೆ ಮಧ್ಯಪ್ರದೇಶದ ನ್ಯಾಯಾಲಯವು ಜಾಮೀನು ನಿರಾಕರಿಸಿದೆ. +ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗ್ವಾಲಿಯರ್ ಕಾರ್ಯದರ್ಶಿ ಹಿಮಾಂಶು ಶ್ರೋತ್ರಿಯಾ (22) ಮತ್ತು ಉಪ ಕಾರ್ಯದರ್ಶಿ ಸುಕೃತ್ ಶರ್ಮಾ (24) ಅವರ ಜಾಮೀನು ಅರ್ಜಿಯನ್ನು ಡಕಾಯಿತಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಸಂಜಯ್ ಗೋಯಲ್ ಅವರು ತಿರಸ್ಕರಿಸಿದ್ದಾರೆ, ಒಬ್ಬರು ಬಲವಂತದಿಂದ ಅಲ್ಲ ಸೌಜನ್ಯದಿಂದ ಸಹಾಯವನ್ನು ಕೋರುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. +ಹೆಚ್ಚುವರಿ ಸರ್ಕಾರಿ ಅಭಿಯೋಜಕ ಸಚಿನ್ ಅಗರವಾಲ್ ಪ್ರಕಾರ, ಶ್ರೋತ್ರಿಯಾ ಮತ್ತು ಶರ್ಮಾ ಅವರನ್ನು ಸೋಮವಾರ ಬಂಸಲಾಯಿತು ಮತ್ತು ಗ್ವಾಲಿಯರ್ ರೈಲ್ವೇ ನಿಲ್ದಾಣದಲ್ಲಿ ಕಾರಿನ ಚಾಲಕನಿಂದ ಕಾರಿನ ಕೀಯನ್ನು ಕಸಿದುಕೊಂಡ ನಂತರ, ಡಕಾಯಿತಿ ವಿರೋಧಿ ಕಾನೂನು ಅನಿಯಮ ಕಾಯ್ದೆ ಅಡಿಯಲ್ಲಿ ಆರೋಪ ಹೊರಿಸಲಾಗಿತ್ತು ಎಂದು ತಿಳಿಸಿದ್ದಾರೆ. +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸ್ ಕೇಸ್ ಡೈರಿಯನ್ನು ಉಲ್ಲೇಖಿಸಿದ ನ್ಯಾಯಾಧೀಶ ಗೋಯಲ್ , ಆರೋಪಿಗಳು ಅಸ್ವಸ್ಥ ವ್ಯಕ್ತಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸುವ ವೇಳೆಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿತ್ತು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಸೂಕ್ತ ವಾಹನವಾಗಿತ್ತು ಎಂದು ಉಲ್ಲೇಖಿಸಿದ್ದಾರೆ. +ಏತನ್ಮಧ್ಯೆ, ಕಾರ್ಯಕರ್ತರ ವಿರುದ್ಧದ ಅನ್ಯಾಯವನ್ನು ಖಂಡಿಸಿ ಎಬಿವಿಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದೆ. \ No newline at end of file diff --git a/eesanje/url_47_217_3.txt b/eesanje/url_47_217_3.txt new file mode 100644 index 0000000000000000000000000000000000000000..a175659009ac0b3d8438b5bb858b579ea46218b1 --- /dev/null +++ b/eesanje/url_47_217_3.txt @@ -0,0 +1,18 @@ +ಕೇಂದ್ರದಲ್ಲಿ ಮೋದಿ ಹ್ಯಾಟ್ರಿಕ್ ಸರ್ಕಾರ ಗ್ಯಾರಂಟಿ : ಸಮೀಕ್ಷೆ +ನವದೆಹಲಿ,ಡಿ.15- ಇತ್ತೀಚಿನ ಟೈಮ್ಸ್ ನೌ-ಇಟಿಜಿ ಸಮೀಕ್ಷೆಯ ಪ್ರಕಾರ ನರೇಂದ್ರ ಮೋದಿ ಸರ್ಕಾರವು ಮೂರನೇ ಬಾರಿಗೆ ಕೇಂದ್ರದಲ್ಲಿ ಅಕಾರದ ಗದ್ದುಗೆ ಏರಲಿದ್ದು, ಐತಿಹಾಸಿಕ ಸಾಧನೆ ಮೆರೆಯಲಿದೆ. ಸಮೀಕ್ಷೆಯು 2024ರ ಲೋಕಸಭೆ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟವು 323 ಸ್ಥಾನಗಳಲ್ಲಿ ಗೆಲುವು ಸಾಸುವ ಮೂಲಕ ಭರ್ಜರಿ ಬಹುಮತ ಗಳಿಸಲಿದ್ದು, ಮೂರನೇ ಅವಗೆ ಕೇಂದ್ರದಲ್ಲಿ ಅಕಾರ ಹಿಡಿಯಲಿದೆ ಎಂದು ಹೇಳಿದೆ. ಇದೇ ವೇಳೆ ಎನ್‍ಡಿಎ ನಾಗಾಲೋಟಕ್ಕೆ ಅಡ್ಡಗಾಲು ಹಾಕುವ ತುಡಿತಲ್ಲಿರುವ ಇಂಡಿಯಾ ಮೈತ್ರಿಕೂಟವು ಕೇವಲ 163 ಸ್ಥಾನಗಳಲ್ಲಿ ಜಯ ಗಳಿಸುವ ಮೂಲಕ ಹೀನಾಯ ಸೋಲು ಕಾಣಲಿದೆ ಎಂದು ಸಮೀಕ್ಷೆಯು ಭವಿಷ್ಯ ನುಡಿದಿದೆ. +ಇಟಿಜಿ ಸಮೀಕ್ಷೆಯು ಬಿಜೆಪಿ ಏಕಾಂಗಿಯಾಗಿ ಸುಮಾರು 308-328 ಸ್ಥಾನಗಳನ್ನು ಗಳಿಸಬಹುದು ಎಂದು ಹೇಳಿದೆ. ಆದರೆ, ಕಾಂಗ್ರೆಸ್ ಮೂರನೇ ಬಾರಿಗೆ ಹೀನಾಯ ಪ್ರದರ್ಶನ ತೋರಲಿದ್ದು ಕೇವಲ 52-72 ಸ್ಥಾನ ಗಳಿಸಬಹುದು ಎಂದು ತಿಳಿಸಿದೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಸವಾಲೆಸೆಯುವ ಪ್ರಯತ್ನವಾಗಿ 18 ಪಕ್ಷಗಳು ಇಂಡಿಯಾ ಒಕ್ಕೂಟವನ್ನು ರಚಿಸಿಕೊಂಡಿದ್ದರೂ, 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂಬುದನ್ನು ಸಮೀಕ್ಷೆಯು ಹೇಳುತ್ತಿದೆ. +ಬಿಜೆಪಿ ಸೀಟು ಗಳಿಕೆ ಇಳಿಕೆ :2019ಕ್ಕೆ ಹೋಲಿಸಿದರೆ ಎನ್‍ಡಿಎ ಮತ್ತು ಬಿಜೆಪಿಯ ಸ್ಥಾನಗಳು ಸ್ವಲ್ಪಮಟ್ಟಿಗೆ ಕಡಿಮೆಯಾಗಬಹುದು ಎಂದು ಸಮೀಕ್ಷೆಯು ಸೂಚಿಸಿದೆ. 2019ರಲ್ಲಿ, ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಮೈತ್ರಿಕೂಟವು (ಎನ್‍ಡಿಎ) 353 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ ಶೇ. 37.76ರಷ್ಟು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿತ್ತು. ಒಟ್ಟಾರೆ ಎನ್‍ಡಿಎಯ ಮತ ಗಳಿಕೆಯು ಶೇ.45ರಷ್ಟಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2023) +ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿಂದಿ ಬೆಲ್ಟ್‍ನಲ್ಲಿ ಬಿಜೆಪಿ ಪ್ರಾಬಲ್ಯ ಸಾಸಿದೆ. ಇದು 2024ರಲ್ಲಿಯೂ ಮುಂದುವರಿಯುವ ನಿರೀಕ್ಷೆಯಿದೆ. ವಿಶೇಷವಾಗಿ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳು ಬಿಜೆಪಿಯ ಚುನಾವಣಾ ಬಲಕ್ಕೆ ಗಣನೀಯ ಕೊಡುಗೆ ನೀಡಲಿವೆ. +ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?ಬಿಜೆಪಿ: 308-328ಎನ್ಡಿಎ: 319-339ಕಾಂಗ್ರೆಸ್: 52-72ಬಿಜೆಡಿ: 13-15ವೈಎಸ್‍ಆರ್ ಕಾಂಗ್ರೆಸ್: 24-25ಟಿಎಂಸಿ: 20-24ಡಿಎಂಕೆ: 20-24ಎಎಪಿ: 4-7ಬಿಆರ್‍ಎಸ್: 3-5ಇತರರು: 66-76 +ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?ಮಹಾರಾಷ್ಟ್ರಬಿಜೆಪಿ: 27-31 (48%)ಕಾಂಗ್ರೆಸ್: 16-20 (41%) +ಕರ್ನಾಟಕಬಿಜೆಪಿ: 20-22ಕಾಂಗ್ರೆಸ್: 6-8ಜೆಡಿಎಸ್: 0 +ತಮಿಳುನಾಡುಡಿಎಂಕೆ: 20-24ಕಾಂಗ್ರೆಸ್: 10-12ಎಐಎಡಿಎಂಕೆ: 3-5 +ತೆಲಂಗಾಣಬಿಜೆಪಿ: 3-5ಕಾಂಗ್ರೆಸ್: 8-10ಬಿಆರ್‍ಎಸ್: 3-5 +ಆಂಧ್ರ ಪ್ರದೇಶವೈಎಸ್‍ಆರ್ ಕಾಂಗ್ರೆಸ್: 24-25ಟಿಡಿಪಿ: 0-1 +ಪಶ್ಚಿಮ ಬಂಗಾಳಬಿಜೆಪಿ: 17-19ಟಿಎಂಸಿ: 20-24ಸಿಪಿಐಎಂ: 1-2ಕಾಂಗ್ರೆಸ್: 1-2 +ಪಂಜಾಬ್ಎನ್‍ಡಿಎ: 3-6ಇಂಡಿಯಾ: 6-10ಶಿರೋಮಣಿ ಅಕಾಲಿದಳ: 1-2 +ಗುಜರಾತ್ಎನ್‍ಡಿಎ: 26ಇಂಡಿಯಾ:0 +ರಾಜಸ್ಥಾನಎನ್‍ಡಿಎ: 24-25ಇಂಡಿಯಾ: 0-1ಛತ್ತೀಸ್ಗಢಎನ್‍ಡಿಎ: 10-11ಇಂಡಿಯಾ: 0-1 +ಕೇರಳಬಿಜೆಪಿ: 0-1ಕಾಂಗ್ರೆಸ್: 11-13ಸಿಪಿಎಂ: 3-5ಐಯುಎಂಎಲï: 1-2 +ಉತ್ತರ ಪ್ರದೇಶಎನ್‍ಡಿಎ: 70-74ಇಂಡಿಯಾ: 4-8ಬಿಎಸ್‍ಪಿ: 0-1ಇತರ: 1-3. \ No newline at end of file diff --git a/eesanje/url_47_217_4.txt b/eesanje/url_47_217_4.txt new file mode 100644 index 0000000000000000000000000000000000000000..8251e169166af6d76df464b2509a1497670b3e46 --- /dev/null +++ b/eesanje/url_47_217_4.txt @@ -0,0 +1,7 @@ +ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ವಿಡಿಯೋ ಮಾಡಿದ ಪತಿರಾಯ +ಹೈದರಾಬಾದ್,ಡಿ.14- ಕುಡಿತ ಬಿಡದಿದ್ದಕ್ಕೆ ಬೇಸತ್ತು ಸಾಯಲು ಮುಂದಾಗಿದ್ದ ಪತ್ನಿಯನ್ನು ತಡೆಯದೆ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಖುದ್ದು ಪತಿಯೇ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿರುವ ಅಮಾನವೀಯ ಘಟನೆ ತೆಲಂಗಾಣದಲ್ಲಿ ನಡೆದಿದೆ. +ಆರ್ಶಿಯಾ ಆತ್ಮಹತ್ಯೆ ಮಾಡಿಕೊಂಡಿರುವ ಪತ್ನಿ. ಪತಿ ರಸೂಲ್ ತನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ರೆಕಾರ್ಡ್ ಮಾಡಿಕೊಂಡಿರುವ ಭೂಪ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮುರಾದ್ನಗರ ಸೈಯದ್ ಅಲಿಗುಡದಲ್ಲಿ ವಾಸಿಸುತ್ತಿದ್ದ ರಸೂಲ್ ಮತ್ತು ಅರ್ಷಿಯಾ ಬೇಗಂ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ರಸೂಲ್ ಆಗಲೇ ಮದುವೆಯಾಗಿದ್ದರಿಂದ ಅದನ್ನು ಮುಚ್ಚಿಟ್ಟು ಅರ್ಷಿಯಾಳನ್ನು 2ನೇ ಮದುವೆಯಾಗಿದ್ದ. +ಕುಡಿತಕ್ಕೆ ದಾಸನಾಗಿದ್ದ ಪತಿಗೆ ಕುಡಿತ ಬಿಡುವಂತೆ ಆರ್ಶಿಯಾ ಸಾಕಷ್ಟು ಮನವಿ ಮಾಡಿದ್ದಳು. ಕುಡಿತದ ಚಟವಿದ್ದ ಕಾರಣ ಇಬ್ಬರ ನಡುವೆ ಬಹುತೇಕ ದಿನವೂ ಜಗಳ ನಡೆಯುತ್ತಿದ್ದು, ಗಂಡನ ಚಟದಿಂದ ಮಾನಸಿಕವಾಗಿ ಬೇಸತ್ತು ಕುಡಿತ ಬಿಡದಿದ್ದರೆ ನೇಣು ಹಾಕಿಕೊಳ್ಳುವುದಾಗಿ ಹೆದರಿಸಿದ್ದಾಳೆ. +ಮತ್ತೊಬ್ಬ ಮಹಿಳೆಯನ್ನು ಬಲಿಪಡೆದ ಕಿಲ್ಲರ್ ಬಿಎಂಟಿಸಿ +ಮಧ್ಯರಾತ್ರಿ ಇಬ್ಬರ ನಡುವೆ ಜಗಳ ಮತ್ತೆ ನಡೆದಿದ್ದು, ಆಕೆ ನೇಣು ಹಾಕಿಕೊಳ್ಳಲು ಮುಂದಾಗಿದ್ದಾಳೆ. ಮದ್ಯದ ಅಮಲಿನಲ್ಲಿದ್ದ ರಸೂಲ್ ತನ್ನ ಸೆಲ್ ಫೋನ್ ನಲ್ಲಿ ವಿಡಿಯೋ ತೆಗೆಯಲು ಆರಂಭಿಸಿದ್ದಾನೆ. ಇದು ಆಕೆಯನ್ನು ಮತ್ತಷ್ಟು ಕೆರಳಿಸಿದೆ. ಕೊನೆಗೂ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. +ಅರ್ಶಿಯಾ ತನಗೆ ಹೆದರಿಸಲು ಈ ರೀತಿ ಮಾಡುತ್ತಿದ್ದಾನೆ ಎಂದು ರಸೂಲ್ ವೀಡಿಯೋ ಮಾಡಿದ್ದು, ಆದರೆ ಆಕೆ ನಿಜವಾಗಲು ಸಾಯುತ್ತಾಳೆ ಅಂದುಕೊಂಡಿರಲಿಲ್ಲ ಎಂದು ರಸೂಲ್ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾರೆ. ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪತ್ನಿ ಸಾವಿಕೆ ಕಾರಣ ಎಂದು ಪೊಲೀಸರು ಆತನನ್ನು ಬಂಧಿಸಿದ್ದಾರೆ. \ No newline at end of file diff --git a/eesanje/url_47_217_5.txt b/eesanje/url_47_217_5.txt new file mode 100644 index 0000000000000000000000000000000000000000..b17854b3b627038b93b0347769ad1507e805e40a --- /dev/null +++ b/eesanje/url_47_217_5.txt @@ -0,0 +1,9 @@ +ಭದ್ರತಾ ವೈಫಲ್ಯ : ಸಂಸತ್ತಿನಲ್ಲಿ ಕೋಲಾಹಲ, ಕಲಾಪ ಮುಂದೂಡಿಕೆ +ನವದೆಹಲಿ, ಡಿ.14- ಸಂಸತ್ತಿನ ಉಭಯ ಸದನದಲ್ಲಿ ಇಂದು ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿ ಧರಣಿಗೆ ಮುಂದಾದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಪ್ರಸಂಗ ನಡೆಯಿತು. ಸದನ ಆರಂಭವಾಗುತ್ತಿ ದ್ದಂತೆ ಸರ್ಕಾರ ಭದ್ರತಾಲೋಪಕ್ಕೆ ಸಂಬಂದಿಸಿದಂತೆ ಸಮಗ್ರ ಹೇಳಿಕೆ ನೀಡಬೇಕೆಂದು ಆಗ್ರಹಿಸಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಘೋಷಣೆ ಕೂಗಿದ್ದಾಗ ಗದ್ದಲ ಉಂಟಾಯಿತು. +ಇದು ನಮ್ಮ ಅಧಿಕಾರ ವ್ಯಾಪ್ತಿ. ಸಂಸತ್ತಿನ ಸಂಕೀರ್ಣದ ಭದ್ರತೆಯಲ್ಲಿ ಲೋಕಸಭೆ ಸಚಿವಾಲಯದ ಜವಾಬ್ದಾರಿಯಾಗಿದೆ ಎಲ್ಲವನ್ನು ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಸದಸ್ಯರು ಆತಂಕಗೊಳ್ಳುವ ಅಗತ್ಯವಿಲ್ಲ. ಸದನ ಕಲಾಪಕ್ಕೆ ಅವಕಾಶ ಮಾಡಿಕೊಡಿ ಎಂದು ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ಸಿಂಗ್ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಯನ್ನು ಎಲ್ಲರೂ ಖಂಡಿಸಿದ್ದಾರೆ. +ಹಳೆ ಸಂಸತ್ತಿನಲ್ಲೂ ಪೇಪರ್ ಎಸೆದು ಜಿಗಿಯುವ ಘಟನೆಗಳು ನಡೆದಿವೆ. ಸದನದಲ್ಲಿ ಗದ್ದಲ ಸೃಷ್ಟಿಸುವ ಅಗತ್ಯವಿಲ್ಲ ಎಂದು ಹೇಳಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿ ಘೋಷಣೆಯನ್ನು ಕೂಗಿದರು.ಇದರಿಂದ ಸದನ ಗದ್ದಲದಲ್ಲಿ ಮುಳುಗಿದ್ದಾಗ ಸ್ಪೀಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. +ಇದೇ ಪರಿಸ್ಥಿತಿ ರಾಜ್ಯಸಭೆಯಲ್ಲೂ ಮುಂದುವರೆದು ಸದನ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ಸದಸ್ಯರು ಸಭಾಪತಿಗಳ ಮುಂದಿನ ಬಾವಿಗೆ ಬಂದು ಸರ್ಕಾರ ಕೂಡಲೇ ಭದ್ರತಾ ಲೋಪದ ಬಗ್ಗೆ ಹೇಳಿಕೆ ನೀಡಬೇಕು. ಗೃಹಸಚಿವರು ಸದನಕ್ಕೆ ಬರಬೇಕೆಂದು ಪಟ್ಟು ಹಿಡಿದರು. ಈ ವೇಳೆ ಸಭಾಪತಿ ಜಗದೀಪ್ ಧನ್ಖರ್ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದರು. ವಿಪಕ್ಷ ಸದಸ್ಯರಿಂದ ಸುಮಾರು 28 ನೋಟಿಸ್ಗಳು ಸಲ್ಲಿಕೆಯಾಗಿದ್ದು ಇದಕ್ಕೆ ಗೃಹ ಸಚಿವರ ಉತ್ತರಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. +ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ +ಇದಕ್ಕೆ ಕೆಂಡಾಮಂಡಲರಾದ ಸಭಾಪತಿಗಳು ಸದಸ್ಯರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ ಇದು ಸರಿಯಾದ ನಡೆಯಲ್ಲ ಎಲ್ಲದಕ್ಕೂ ಸರ್ಕಾರ ಉತ್ತರಿಸಲಿದೆ. ಕಲಾಪ ಸುಗಮವಾಗಿ ನಡೆಯಲು ಸಹಕರಿಸಿಯೆಂದು ಪದೇ ಪದೇ ಮನವಿ ಮಾಡಿದರು.ಆದರೂ ಕೆಲ ಸದಸ್ಯರು ಇದಕ್ಕೆ ಒಪ್ಪಲಿಲ್ಲ. ಈ ವೇಳೆ ಟಿಎಂಸಿ ಸದಸ್ಯ ಡೆರೆಕ್ ಓ ಬ್ರೇನ್ ಅವರು ಸಭಾಪತಿಗಳ ಆಸನದ ಬಳಿ ನುಗ್ಗಿ ಮೇಜನ್ನು ಗುದ್ದಿದ ಪರಿಣಾಮ ಇದು ಗಂಭೀರ ದುರ್ನಡತೆ ಎಂದು ಹೇಳಿ ಸಭಾಪತಿಗಳು ಅವರನ್ನು ಅಮಾನತುಗೊಳಿಸಿ ಸದನದಿಂದ ಹೊರಗೆ ಹೋಗುವಂತೆ ಆದೇಶಿಸಿದರು. +ಈ ವೇಳೆ ಕೆಲವರು ಕೇಂದ್ರ ಗೃಹಸಚಿವರ ವಿರುದ್ಧ ಘೋಷಣೆಯನ್ನು ಕೂಗು ಮುಂದುವರೆದ ಹಿನ್ನೆಲೆಯಲ್ಲಿ ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು. ನಂತರ ಮತ್ತೆ ಸದನ ಆರಂಭಗೊಂಡಾಗ ಇದೇ ಪರಿಸ್ಥಿತಿ ಮುಂದುವರೆಯಿತು. ಒಟ್ಟಾರೆ ಸಂಸತ್ತಿನ ಮೇಲೆ ನಡೆದ ದಾಳಿ ಖಂಡಿಸಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಸದನ ಕಲಾಪಕ್ಕೆ ಅಡ್ಡಿಯಾಯಿತು. +8 ಸಿಬ್ಬಂದಿ ಅಮಾನತು :ನವದೆಹಲಿ, ಡಿ.14 – (ಪಿಟಿಐ) ಸಂಸತ್ತಿನಲ್ಲಿ ಭದ್ರತಾ ಲೋಪ ಎಸಗಿದ ಎಂಟು ಮಂದಿ ಸಿಬ್ಬಂದಿಯನ್ನು ಲೋಕಸಭೆ ಸೆಕ್ರೆಟರಿಯೇಟ್ ಅಮಾನತುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಅಮಾನತುಗೊಂಡವರನ್ನು ರಾಂಪಾಲï, ಅರವಿಂದ್, ವೀರ್ ದಾಸ್, ಗಣೇಶ್, ಅನಿಲï, ಪ್ರದೀಪ್, ವಿಮಿತ್ ಮತ್ತು ನರೇಂದ್ರ ಎಂದು ಗುರುತಿಸಲಾಗಿದೆ.ಬುಧವಾರ 2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಇಬ್ಬರು ವ್ಯಕ್ತಿಗಳು ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ – ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ಗೆ ಜಿಗಿದು, ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದ್ದರು ಮತ್ತು ಘೋಷಣೆಗಳನ್ನು ಕೂಗಿದರು. \ No newline at end of file diff --git a/eesanje/url_47_217_6.txt b/eesanje/url_47_217_6.txt new file mode 100644 index 0000000000000000000000000000000000000000..da1179e847d68266d229d9ee9b08445a0e65f255 --- /dev/null +++ b/eesanje/url_47_217_6.txt @@ -0,0 +1,5 @@ +ಲೋಕಸಭೆಯಲ್ಲಿ ಹೊಗೆ ಹಾಕಿದವನನ್ನು ಹಿಡಿದ ಗುರ್ಜಿತ್ ‘ಸಿಂಗ್ ಈಸ್ ಕಿಂಗ್’ +ನವದೆಹಲಿ,ಡಿ.14- ಲೋಕಸಭೆಯಲ್ಲಿ ಹೊಗೆ ಬಾಂಬ್ ಸಿಡಿಸಿದ ಇಬ್ಬರಲ್ಲಿ ಒಬ್ಬರನ್ನು ಸೆರೆ ಹಿಡಿದ ಕಾಂಗ್ರೆಸ್ ಸಂಸದ ಗುರ್ಜಿತ್‍ಸಿಂಗ್ ಔಜ್ಲಾ ಅವರನ್ನು ಶಶಿ ತರೂರ್ ಅವರು ಸಿಂಗ್ ಈಸ್ ಕಿಂಗ್ ಎಂದು ಬಣ್ಣಿಸಿದ್ದಾರೆ. +ಔಜ್ಲಾ ಅದ್ಭುತ ಸಿಂಗ್ ಈಸ್ ಕಿಂಗï! ಲೋಕಸಭೆಯಲ್ಲಿ ಒಳನುಗ್ಗುವವರನ್ನು ಎದುರಿಸಿದ ನನ್ನ ಕೆಚ್ಚೆದೆಯ ಸಹೋದ್ಯೋಗಿ ಎಂದು ಅವರು ಎಕ್ಸ್ ಮಾಡಿದ್ದಾರೆ.ಕಾಂಗ್ರೆಸ್ ಸಂಸದ ಗುರ್ಜಿತ್ ಸಿಂಗ್ ಔಜ್ಲಾ ಅವರು ಲೋಕಸಭೆಯೊಳಗೆ ಶರ್ಮಾ ಅವರನ್ನು ಹಿಡಿದ ನಾಯಕರಲ್ಲಿ ಒಬ್ಬರು. ಶರ್ಮಾ ಶೂ ತೆಗೆದು ಮತ್ತೊಂದು ಹೊಗೆಯ ಡಬ್ಬಿಯನ್ನು ಹೊರ ತೆಗೆಯುವಾಗ ಅವರನ್ನು ಸಿನಿಮಿಯ ರೀತಿಯಲ್ಲಿ ಸೆರೆ ಹಿಡಿಯುವುದನ್ನು ನಾನು ನೋಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. +ಸಂಸತ್‍ಗೆ ನುಗ್ಗಿದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲು +ಕರ್ನಾಟಕದ ಕೋಲಾರ ಸಂಸದ ಮುನಿಸ್ವಾಮಿ ಸೇರಿದಂತೆ ನಾಲ್ವರು ಸಂಸದರು ಶರ್ಮಾನನ್ನು ಹಿಡಿದು ಹಲ್ಲೆ ನಡೆಸಿ ನಂತರ ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದರು. ಆರೋಪಿಗಳು ಭಗತ್ ಸಿಂಗ್ ಫ್ಯಾನ್ ಕ್ಲಬ್ ಹೆಸರಿನ ಸಾಮಾಜಿಕ ಮಾಧ್ಯಮ ಪುಟದಲ್ಲಿ ಸಂಪರ್ಕ ಹೊಂದಿದ್ದರು. \ No newline at end of file diff --git a/eesanje/url_47_217_7.txt b/eesanje/url_47_217_7.txt new file mode 100644 index 0000000000000000000000000000000000000000..e5060e24b2517877ea3115bd417890e9c187d219 --- /dev/null +++ b/eesanje/url_47_217_7.txt @@ -0,0 +1,8 @@ +ಸಂಸತ್ ಮೇಲಿನ ದಾಳಿಗೆ ಮೈಸೂರಿನಲ್ಲೇ ರೆಡಿಯಾಗಿತ್ತು ಪ್ಲಾನ್ +ನವದೆಹಲಿ,ಡಿ.14- ಲೋಕಸಭೆ ಮೇಲೆ ದಾಳಿ ನಡೆಸಲು ಆರೋಪಿಗಳು 18 ತಿಂಗಳುಗಳ ಹಿಂದೆ ಕರ್ನಾಟಕದ ಮೈಸೂರಿನಲ್ಲಿ ನಿಖರವಾದ ಯೋಜನೆ ರೂಪಿಸಿರುವುದು ಪೊಲೀಸರ ತನಿಖೆ ವೇಳೆ ಇದೀಗ ಬಹಿರಂಗಗೊಂಡಿದೆ.ಎಲ್ಲ ಆರು ಆರೋಪಿಗಳು ಭಗತ್ ಸಿಂಗ್ ಎಂಬ ಸಾಮಾಜಿಕ ಮಾಧ್ಯಮ ಪುಟ ಅಭಿಮಾನಿಗಳ ಸಂಘದ ಪದಾಧಿಕಾರಿಗಳಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +2001 ರಲ್ಲಿ ಸಂಸತ್ತಿನ ದಾಳಿಯ ವಾರ್ಷಿಕೋತ್ಸವದಂದು ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಅವರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‍ಗೆ ಜಿಗಿದು, ಇಬ್ಬರೂ ಹಳದಿ ಹೊಗೆಯನ್ನು ಹಾರಿಸಿದ್ದರು.ಇದೇ ವೇಳೆ ಸಂಸತ್ತಿನ ಹೊರಗೆ ನೀಲಂ ಆಜಾದ್ ಮತ್ತು ಅಮೋಲ್ ಶಿಂಧೆ ಹಳದಿ ಮತ್ತು ಕೆಂಪು ಹೊಗೆಯ ಡಬ್ಬಿಗಳನ್ನು ಬಳಸಿ ಸರ್ವಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಶರ್ಮಾ ಲಕ್ನೋ ನಿವಾಸಿಯಾಗಿದ್ದರೆ, ಮನೋರಂಜನ್ ಮೈಸೂರಿನವರು, ನೀಲಂ ಹರಿಯಾಣದ ಜಿಂದ್ ಮತ್ತು ಶಿಂಧೆ ಮಹಾರಾಷ್ಟ್ರದವರು. +ಇತರ ಇಬ್ಬರು ಆರೋಪಿಗಳೆಂದರೆ ಲಲಿತ್ ಝಾ, ಅವರು ಸಂಸತ್ತಿನ ಹೊರಗೆ ಡಬ್ಬಿಗಳನ್ನು ಬಳಸಿ ನೀಲಂ ಮತ್ತು ಶಿಂಧೆ ಅವರ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಮತ್ತು ನಂತರ ತಮ್ಮ ಸೆಲ್‍ ಫೋನ್‍ಗಳೊಂದಿಗೆ ಪರಾರಿಯಾಗಿದ್ದಾರೆ ಮತ್ತು ವಿಕ್ಕಿ ಶರ್ಮಾ ದಾಳಿಯ ಮೊದಲು ಇತರ ಆರೋಪಿಗಳು ಅವರ ಮನೆಯಲ್ಲಿಯೇ ಇದ್ದರು. ಲಲಿತ್ ಝಾ ಬಿಹಾರದವರಾಗಿದ್ದರೆ, ವಿಕ್ಕಿ ಶರ್ಮಾ ಗುರಗಾಂವ್‍ನವರು. +ಮಾರುತಿ 800 ಕಾರಿಗೆ 40 ವರ್ಷ : ಇಂದಿರಾ, ರಾಜೀವ್ ಕೊಡುಗೆ ಸ್ಮರಿಸಿಕೊಂಡ ಜೈರಾಮ್ ರಮೇಶ್ +ದೆಹಲಿ ಪೊಲೀಸರ ತನಿಖೆಯ ಪ್ರಕಾರ, ಆರೋಪಿಗಳ ಮೊದಲ ಸಭೆ ಸುಮಾರು 18 ತಿಂಗಳ ಹಿಂದೆ ಮೈಸೂರಿನಲ್ಲಿ ನಡೆದಿತ್ತು. ಈ ಸಭೆಯಲ್ಲಿ ಅವರು ನಿರುದ್ಯೋಗ, ಹಣದುಬ್ಬರ ಮತ್ತು ಮಣಿಪುರದ ಹಿಂಸಾಚಾರ ಸೇರಿದಂತೆ ಸಂಸತ್ತು ಚರ್ಚಿಸಬೇಕು ಎಂದು ಅವರು ನಂಬಿರುವ ವಿಷಯಗಳನ್ನು ಹೈಲೈಟ್ ಮಾಡುವ ವಿವಿಧ ವಿಧಾನಗಳ ಕುರಿತು ಮಾತನಾಡಿದರು. ಒಂಬತ್ತು ತಿಂಗಳ ಹಿಂದೆ, ಈ ವರ್ಷದ ಮಾರ್ಚ್‍ನಲ್ಲಿ ಮತ್ತೊಂದು ಸಭೆ ನಡೆಸಲಾಯಿತು ಮತ್ತು ವಿವರವಾದ ಯೋಜನೆ ರೂಪುಗೊಂಡಿತು ಎಂದು ಪೊಲೀಸ್ ಅಕಾರಿಗಳು ತಿಳಿಸಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದ ಬಳಿ ಈ ಸಭೆ ನಡೆದಿದ್ದು, ಕನಿಷ್ಠ ಬೆಂಬಲ ಬೆಲೆಗೆ ಕಾನೂನಾತ್ಮಕ ಖಾತರಿ ನೀಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. +ಇದರ ಸುಮಾರು ನಾಲ್ಕು ತಿಂಗಳ ನಂತರ, ಜುಲೈನಲ್ಲಿ, ಸಂಸತ್ತಿನ ಸಂಕೀರ್ಣದ ವಿಚಕ್ಷಣವನ್ನು ನಡೆಸಲು ಶರ್ಮಾ ಲಕ್ನೋದಿಂದ ನವದೆಹಲಿಗೆ ತೆರಳಿದರು.ಸೆಪ್ಟೆಂಬರ್‍ನಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮೊದಲ ಅಧಿವೇಶನ ನಡೆಯುವುದಕ್ಕೂ ಮುನ್ನ ಇದು ಶರ್ಮಾ ಅವರಿಗೆ ಪ್ರವೇಶ ಪಡೆಯಲು ಸಾಧ್ಯವಾಗಲಿಲ್ಲ. ಅವರು ಹೊರಗಿನಿಂದ ಕಟ್ಟಡದ ಪಹರೆ ನಡೆಸಿದರು, ಎಲ್ಲಾ ಭದ್ರತಾ ವ್ಯವಸ್ಥೆಗಳನ್ನು ಗಮನಿಸಿದರು ಮತ್ತು ಗುಂಪಿನ ಉಳಿದವರಿಗೆ ವರದಿ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಸಂಸತ್ ದಾಳಿಯ ವಾರ್ಷಿಕೋತ್ಸವವನ್ನು ಉಲ್ಲಂಘಿಸಲು ನಿರ್ಧರಿಸಿದ ನಂತರ, ಶರ್ಮಾ, ಮನೋರಂಜನ್, ನೀಲಂ ಮತ್ತು ಶಿಂಧೆ ಅವರು ಡಿ.10 ರ ಭಾನುವಾರದಂದು ದೆಹಲಿಯನ್ನು ತಲುಪಿದರು ಮತ್ತು ಗುರ್ಗಾಂವ್‍ನಲ್ಲಿರುವ ವಿಕ್ಕಿ ಶರ್ಮಾ ಅವರ ಮನೆಯಲ್ಲಿ ಬಿಡಾರ ಹೂಡಿದ್ದರು ಎಂದು ಪೊಲೀಸ ತನಿಖೆಯಿಂದ ತಿಳಿದುಬಂದಿದೆ. \ No newline at end of file diff --git a/eesanje/url_47_217_8.txt b/eesanje/url_47_217_8.txt new file mode 100644 index 0000000000000000000000000000000000000000..cb4109399164da405a43c193b0fbabbeb0b68d5c --- /dev/null +++ b/eesanje/url_47_217_8.txt @@ -0,0 +1,7 @@ +ಮಾರುತಿ 800 ಕಾರಿಗೆ 40 ವರ್ಷ : ಇಂದಿರಾ, ರಾಜೀವ್ ಕೊಡುಗೆ ಸ್ಮರಿಸಿಕೊಂಡ ಜೈರಾಮ್ ರಮೇಶ್ +ನವದೆಹಲಿ, ಡಿ 14 (ಪಿಟಿಐ) : 40 ವರ್ಷಗಳ ಮಾರುತಿ 800 ಕಾರನ್ನು ಬಿಡುಗಡೆ ಮಾಡಿರುವುದನ್ನು ನೆನಪಿಸಿಕೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ. +ಇಂದು 40 ವರ್ಷಗಳ ಹಿಂದೆ, ಗ್ರಾಹಕ ಕ್ರಾಂತಿಯು ಭಾರತವನ್ನು ಹಿಂದಿಕ್ಕಿತು ಮತ್ತು ಅದರ ಎಂಜಿನಿಯರಿಂಗ್ ಉದ್ಯಮವು ರೂಪಾಂತರಗೊಂಡಿದೆ. ಮಾರುತಿ 800 ಜನರ ಕಾರು ಬಿಡುಗಡೆಯಾಯಿತು ಇದಕ್ಕಾಗಿ ರಾಷ್ಟ್ರವು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯನ್ನು ನೆನಪಿಸಿಕೊಳ್ಳುತ್ತದೆ ಎಂದು ಅವರು ಎಕ್ಸ್ ಮಾಡಿದ್ದಾರೆ. +ಹೆಗ್ಗುರುತು ಸುಜುಕಿ-ಮಾರುತಿ ಜಂಟಿ ಉದ್ಯಮವನ್ನು ಸಾಧ್ಯವಾಗಿಸಿದ ಓ ಸುಜುಕಿ ಮತ್ತು ವಿ ಕೃಷ್ಣಮೂರ್ತಿ ಅವರನ್ನು ನೆನಪಿಸಿಕೊಳ್ಳುವುದು ಸಹ ಮುಖ್ಯವಾಗಿದೆ ಎಂದು ಅವರು ಹೇಳಿದರು. ಕೃಷ್ಣಮೂರ್ತಿ ಅವರು ಈ ಹಿಂದೆ ಬಿಎಚ್‍ಇಎಲ್ ಅನ್ನು ನಿರ್ಮಿಸಿದ್ದರು ಎಂದು ರಮೇಶ್ ಗಮನಸೆಳೆದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2023) +ಭಾರತ ನಿರ್ಮಿಸಿದ ಮಹಾನ್ ಸಾರ್ವಜನಿಕ ವಲಯದ ವ್ಯವಸ್ಥಾಪಕರಲ್ಲಿ ಒಬ್ಬರು. ಅವರು (ಕೃಷ್ಣಮೂರ್ತಿ) ನನಗೆ ಮೂರು ವಿಭಿನ್ನ ಸಂದರ್ಭಗಳಲ್ಲಿ ಕೆಲಸ ನೀಡಿದ್ದರು ಆದರೆ ನನ್ನ ದೃಷ್ಟಿ ಸರಿಯೋ ತಪ್ಪೋ ಬೇರೆಡೆ ಇತ್ತು. ಅವರು ಅತ್ಯಂತ ಬಲವಾದ ವ್ಯಕ್ತಿತ್ವಹೊಂದಿದ್ದರು ಎಂದು ರಮೇಶ್ ಹೇಳಿದರು. +1983 ಡಿಸೆಂಬರ್ 14ರಂದು ಐಕಾನಿಕ್ ಮಾರುತಿ 800 ಕಾರು ಲೋಕಾರ್ಪಣೆಗೊಂಡಿತ್ತು. ಮತ್ತು ಅದು ಭಾರತ ಕಂಡ ಅತ್ಯಂತ ಯಶಸ್ವಿ ಕಾರುಗಳಲ್ಲಿ ಒಂದಾಗಿದೆ ಎನ್ನುವುದು ಇಲ್ಲಿ ಉಲ್ಲೇಖಾರ್ಹ. \ No newline at end of file diff --git a/eesanje/url_47_217_9.txt b/eesanje/url_47_217_9.txt new file mode 100644 index 0000000000000000000000000000000000000000..81f99be59a21518c73131ae5f48f2eded48abdaf --- /dev/null +++ b/eesanje/url_47_217_9.txt @@ -0,0 +1,6 @@ +ಸಂಸತ್‍ಗೆ ನುಗ್ಗಿದ ಆರೋಪಿಗಳ ವಿರುದ್ಧ ಯುಎಪಿಎ ಪ್ರಕರಣ ದಾಖಲು +ನವದೆಹಲಿ, ಡಿ 14 (ಪಿಟಿಐ): ಸಂಸತ್ತಿನ ಭದ್ರತಾ ಉಲ್ಲಂಘನೆಗೆ ಸಂಬಂಸಿದಂತೆ ದೆಹಲಿ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ನಿನ್ನೆ 2001 ರ ಸಂಸತ್ತಿನ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಪ್ರಮುಖ ಭದ್ರತಾ ಉಲ್ಲಂಘನೆಯಲ್ಲಿ, ಇಬ್ಬರು ವ್ಯಕ್ತಿಗಳು – ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ – ಶೂನ್ಯ ವೇಳೆಯಲ್ಲಿ ಸಾರ್ವಜನಿಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್‍ಗೆ ಜಿಗಿದು, ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದರು ಮತ್ತು ಘೋಷಣೆಗಳನ್ನು ಕೂಗಿ ಗದ್ದಲ ಸೃಷ್ಟಿಸಿದ್ದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-12-2023) +ಅದೇ ಸಮಯದಲ್ಲಿ ಇತರ ಇಬ್ಬರು ಆರೋಪಿಗಳು – ಅಮೋಲ್ ಶಿಂಧೆ ಮತ್ತು ನೀಲಂ ದೇವಿ – ಸಂಸತ್ತಿನ ಆವರಣದ ಹೊರಗೆ ತನಾಶಾಹಿ ನಹೀ ಚಲೇಗಿ ಎಂದು ಕೂಗುತ್ತಾ ಡಬ್ಬಿಗಳಿಂದ ಬಣ್ಣದ ಅನಿಲವನ್ನು ಸಿಂಪಡಿಸಿದ್ದರು. +ಈ ನಾಲ್ವರು ಘಟನೆಯನ್ನು ಯೋಜಿಸಿದ ಆರು ಜನರ ಗುಂಪಿನ ಭಾಗವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಸಿದಂತೆ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_218_1.txt b/eesanje/url_47_218_1.txt new file mode 100644 index 0000000000000000000000000000000000000000..4bd13234aecc5b87653af800d2270f474848a363 --- /dev/null +++ b/eesanje/url_47_218_1.txt @@ -0,0 +1,8 @@ +ಬಿಜೆಪಿ ನಾಯಕರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ನಿರ್ಧರಿಸಿತ್ತು : ಸಹಾ +ಅಗರ್ತಲಾ, ಡಿ 13 (ಪಿಟಿಐ) – ಈ ವರ್ಷದ ಫೆಬ್ರವರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಜೀವಂತ ಸಮಾಧಿ ಮಾಡಲು ಸಿಪಿಐ(ಎಂ) ಪಕ್ಷವು ನೆಲದಲ್ಲಿ ಗುಂಡಿಗಳನ್ನು ಅಗೆದಿತ್ತು ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ವಾಗ್ದಾಳಿ ನಡೆಸಿದ್ದಾರೆ. . +ಬಿಜೆಪಿ ಸತತ ಎರಡನೇ ಬಾರಿಗೆ ಚುನಾವಣೆಯಲ್ಲಿ ಜಯಗಳಿಸಿದ್ದರಿಂದ ಪಕ್ಷದ ಸಂಚು ವಿಫಲವಾಗಿದೆ ಎಂದು ಖೋವೈ ಜಿಲ್ಲೆಯ ಬಜಾರ್ ಕಾಲೋನಿಯಲ್ಲಿ ನಡೆದ ಸಮಾರಂಭದಲ್ಲಿ ಸಹಾ ಹೇಳಿದ್ದಾರೆ. ಈ ಆರೋಪವನ್ನು ನಿರಾಧಾರ ಎಂದು ತಳ್ಳಿಹಾಕಿರುವ ಸಿಪಿಐ(ಎಂ) ಬಿಜೆಪಿಯೇತರ ಪಕ್ಷಗಳ ನಡುವಿನ ಮತಗಳ ವಿಭಜನೆಯಿಂದಾಗಿ ಕೇಸರಿ ಪಕ್ಷವು ಚುನಾವಣೆಯಲ್ಲಿ ಗೆದ್ದಿದೆ ಎಂದು ಹೇಳಿದೆ. +ಫೆಬ್ರವರಿ 2023 ರ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದ್ದುದರಿಂದ ಬಿಜೆಪಿ ನಾಯಕರ ಆಯ್ದ ಹತ್ಯೆಗಾಗಿ ಅನೇಕ ಸಮಾಧಿಗಳನ್ನು ಅಗೆದು ಅವರನ್ನು ಜೀವಂತವಾಗಿ ಹೂಳುವ ಮೂಲಕ ಕೆಲಸ ಮಾಡಲಾಗಿದೆ ಎಂದು ನಮಗೆ ಮಾಹಿತಿ ಇತ್ತು. ಆದರೆ ಮತಗಳ ಯುದ್ಧದಲ್ಲಿ ಬಿಜೆಪಿ ಗೆದ್ದಿದ್ದರಿಂದ ಜನರು ಅದನ್ನು ವಿಫಲಗೊಳಿಸಿದರು ಎಂದು ಸಹಾ ಹೇಳಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(13-12-2023) +1996ರ ಡಿಸೆಂಬರ್ 12ರ ನಸುಕಿನಲ್ಲಿ ಎನ್‍ಎಲ್‍ಎಫ್‍ಟಿ ಉಗ್ರಗಾಮಿಗಳಿಂದ ಹತ್ಯೆಗೀಡಾದ 26 ಗ್ರಾಮಸ್ಥರಿಗೆ ಶ್ರದ್ಧಾಂಜಲಿ ಅರ್ಪಿಸಲು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಶಾನ್ಯ ರಾಜ್ಯದಲ್ಲಿ ಸಿಪಿಐ(ಎಂ) ಭಯೋತ್ಪಾದನಾ ತಂತ್ರಗಳಿಗೆ ಕುಮ್ಮಕ್ಕು ನೀಡುವ ಮೂಲಕ ಅಕ್ಷಮ್ಯ ಅಪರಾಧ ಎಸಗಿದೆ ಎಂದು ಆರೋಪಿಸಿರುವ ಸಹಾ, ವಿಧಾನಸಭೆ ಚುನಾವಣೆಗೆ ಮುನ್ನ ಎಡಪಕ್ಷಗಳೊಂದಿಗೆ ಕೈಜೋಡಿಸಿದ್ದರಿಂದ ಕಾಂಗ್ರೆಸ್ ಬಗ್ಗೆ ಅನುಕಂಪವಿದೆ ಎಂದು ಹೇಳಿದರು. ಕಮ್ಯುನಿಸ್ಟ್ ಆಡಳಿತದಲ್ಲಿ ಕಾಂಗ್ರೆಸ್ ಸಾಕಷ್ಟು ನಷ್ಟ ಅನುಭವಿಸಿದೆ ಎಂದರು. +ಮುಖ್ಯಮಂತ್ರಿಯವರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ, ಪಕ್ಷವು ಹಿಂಸಾಚಾರ ಅಥವಾ ಭಯೋತ್ಪಾದಕ ತಂತ್ರಗಳಲ್ಲಿ ನಂಬಿಕೆ ಹೊಂದಿಲ್ಲ ಎಂದು ಹೇಳಿದ್ದಾರೆ. +2023ರ ವಿಧಾನಸಭೆ ಚುನಾವಣೆಯಲ್ಲಿ ಶೇ.40ಕ್ಕಿಂತ ಕಡಿಮೆ ಮತಗಳನ್ನು ಪಡೆದ ಬಿಜೆಪಿಗೆ ಜನಾದೇಶ ಸಿಗಲಿಲ್ಲ. ಮತ ವಿಭಜನೆಯ ಲಾಭ ಪಡೆದು ಸರ್ಕಾರ ರಚಿಸಿದರು ಇದರಿಂದ ಆತಂಕಗೊಂಡಿದ್ದು, ಈ ಕಾರಣಕ್ಕಾಗಿಯೇ ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_218_10.txt b/eesanje/url_47_218_10.txt new file mode 100644 index 0000000000000000000000000000000000000000..52bdeef8152821ffa4f9b09ba9f772b776c828dc --- /dev/null +++ b/eesanje/url_47_218_10.txt @@ -0,0 +1,7 @@ +ಇಂದು ಸಂಜೆ ಫೈನಲ್ ಆಗಲಿದೆ ರಾಜಸ್ಥಾನದ ಸಿಎಂ ಆಯ್ಕೆ +ಜೈಪುರ, ಡಿ.12 (ಪಿಟಿಐ) – ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರು ಎಂಬ ಸಸ್ಪೆನ್ಸ್ ಗೆ ಇಂದು ಸಂಜೆ ತೆರೆಬೀಳಲಿದೆ.ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. +ಬಿಜೆಪಿ ಕೇಂದ್ರ ವೀಕ್ಷಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇಬ್ಬರು ಸಹ ವೀಕ್ಷಕರಾದ ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್ ಪಾಂಡೆ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಉಪಸ್ಥಿತಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಭಜನಲಾಲ್ ಶರ್ಮಾ ತಿಳಿಸಿದ್ದಾರೆ. +ಹೊಸದಾಗಿ ಆಯ್ಕೆಯಾದ ಎಲ್ಲ ಶಾಸಕರು ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಹೆಸರು ಘೋಷಣೆ ಮಾಡಲಾಗುವುದು ಎಂದು ಅವರು ವಿವರಿಸಿದರು. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ , ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅಶ್ವಿನಿ ವೈಷ್ಣವ್ ಅವರು ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಮೂರು ರಾಜ್ಯಗಳ ಪೈಕಿ ಒಂದಾದ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.ಚುನಾವಣೆ ನಡೆದ 199 ಸ್ಥಾನಗಳ ಪೈಕಿ ಬಿಜೆಪಿ 115 ಸ್ಥಾನಗಳನ್ನು ಗೆದ್ದಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(12-12-2023) +ಅಭ್ಯರ್ಥಿಯೊಬ್ಬರು ಮೃತಪಟ್ಟಿದ್ದರಿಂದ ಒಂದು ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿತ್ತು.ಇತ್ತೀಚಿನ ದಿನಗಳಲ್ಲಿ ಹಲವಾರು ಬಿಜೆಪಿ ಶಾಸಕರು ಮಾಜಿ ಮುಖ್ಯಮಂತ್ರಿ ರಾಜೇ ಅವರನ್ನು ಭೇಟಿಯಾಗಿ ಬೆಂಬಲದ ಪ್ರದರ್ಶನವಾಗಿ ಕಂಡುಬಂದಿದ್ದು, ಪಕ್ಷವು ಈ ಬಾರಿ ಅಚ್ಚರಿ ಮೂಡಿಸಬಹುದು ಎಂಬ ಊಹಾಪೋಹಗಳ ನಡುವೆ. ಅವರು ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. +ಆದರೆ, ಚುನಾವಣೆಯಲ್ಲಿ ಪರಾಭವಗೊಂಡ ರಾಜೇಂದ್ರ ರಾಥೋಡ್ ಸೇರಿದಂತೆ ಪಕ್ಷದ ಮುಖಂಡರು, ಬಿಜೆಪಿಯಲ್ಲಿ ಶಕ್ತಿ ಪ್ರದರ್ಶನದ ಸಂಪ್ರದಾಯವಿಲ್ಲ ಎಂದಿದ್ದಾರೆ.ಶಾಸಕರು ಹಿರಿಯ ನಾಯಕರನ್ನು ಭೇಟಿಯಾಗಿ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ ಮತ್ತು ಅದನ್ನು ಆ ಅರ್ಥದಲ್ಲಿ ಮಾತ್ರ ನೋಡಬಾರದು ಮತ್ತು ರಾಜ್ಯದ ಎಲ್ಲಾ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. \ No newline at end of file diff --git a/eesanje/url_47_218_11.txt b/eesanje/url_47_218_11.txt new file mode 100644 index 0000000000000000000000000000000000000000..3f4e9def79cb02d2f323ca57e615599ae97ed0c4 --- /dev/null +++ b/eesanje/url_47_218_11.txt @@ -0,0 +1,5 @@ +ಶರದ್ ಪವಾರ್ ಹುಟ್ಟುಹಬ್ಬ, ಶುಭ ಕೋರಿದ ಮೋದಿ +ನವದೆಹಲಿ, ಡಿ 12 (ಪಿಟಿಐ) – ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎನ್‍ಸಿಪಿ ನಾಯಕ ಶರದ್ ಪವಾರ್ ಅವರ 83 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಅವರು ಎಕ್ಸ್ ನಲ್ಲಿ ಶರದ್ ಪವಾರ್ ಜಿ ಅವರಿಗೆ ಅವರ ಜನ್ಮದಿನದಂದು ನನ್ನ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(12-12-2023) +ದೇಶದ ಅತ್ಯಂತ ಅನುಭವಿ ಶಾಸಕರಲ್ಲಿ ಒಬ್ಬರಾದ ಪವಾರ್ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ರಾಜಕೀಯ ಪೈಪೋಟಿಯನ್ನು ಲೆಕ್ಕಿಸದೆ ಪಕ್ಷದ ರೇಖೆಗಳಾದ್ಯಂತ ನಾಯಕರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ ಎಂದು ಮೋದಿ ಬಣ್ಣಿಸಿದ್ದಾರೆ. + . .@ \ No newline at end of file diff --git a/eesanje/url_47_218_12.txt b/eesanje/url_47_218_12.txt new file mode 100644 index 0000000000000000000000000000000000000000..db7217414569d07fa5a1f9814c13ba766e33be52 --- /dev/null +++ b/eesanje/url_47_218_12.txt @@ -0,0 +1,5 @@ +ಈರುಳ್ಳಿ ನಂತರ ಈಗ ಬೆಳ್ಳುಳ್ಳಿ ಬೆಲೆ ಏರಿಕೆ +ಮುಂಬೈ,ಡಿ.11: ಟೊಮೆಟೋ, ಈರುಳ್ಳಿ ನಂತರ ಈಗ ಬೆಲೆ ಏರಿಕೆ ಸರದಿ ಬೆಳ್ಳುಳ್ಳಿ ಮೇಲೆ ಬಿದ್ದಿದೆ. ಈಗಾಗಲೇ ದೇಶದಾದ್ಯಂತ ಭಾರಿ ಸದ್ದು ಮಾಡಿದ ಟೊಮೆಟೋ ಬೆಲೆ ಏರಿಕೆ ನಂತರ ಈರುಳ್ಳಿ ದುಬಾರಿಯಾಗಿದ್ದು, ಈಗ ಅದು ಸ್ವಲ್ಪ ಮಟ್ಟಿಗೆ ಬೆಲೆ ಇಳಿಕೆಯಾಗಿದೆ. ಆದರೆ ಈಗ ಬೆಳ್ಳುಳ್ಳಿ ಬೆಲೆ ಹೆಚ್ಚಾಗುತ್ತಿದೆ. +ಬಹುತೇಕ ಖಾದ್ಯಗಳಿಗೆ ಬಳಸುವ ಬೆಳ್ಳುಳ್ಳಿ ಬೆಲೆ ಏರಿಕೆ ಗೃಹಿಣಿಯರ ಚಿಂತೆಗೀಡು ಮಾಡಿದೆ.ಪ್ರತಿ ಕೆಜಿ ಬೆಳ್ಳುಳ್ಳಿ 400 ರೂ.ಗೆ ಏರಿಕೆಯಾಗಿದ್ದು, ಇದರಿಂದ ಬಹುಬಗೆಯ ಖಾದ್ಯಗಳನ್ನು ತಯಾರಿಸುವುದು ಕೂಡ ಕಡಿಮೆಯಾಗುತ್ತಿದೆ. ಬೆಳ್ಳುಳ್ಳಿ ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಹೋಟೆಲ್ಗಳಲ್ಲಿ ಬೆಲೆ ಏರಿಕೆಯನ್ನು ಮಾಡಲಾಗುತ್ತಿದೆ. +ಬೆಳಗಾವಿ : ಓಡಿಹೋದ ಪ್ರೇಮಿಗಳು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ +ಇನ್ನು ಸ್ವಲ್ಪ ದಿನದಲ್ಲೇ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಇದನ್ನು ಬೆಳೆಯುವ ರೈತರು ಸಂತಸಗೊಂಡಿದ್ದಾರೆ. ಇದರ ಜೊತೆಗೆ ಈಗ ಮೆಣಸಿನಕಾಯಿ ಕೂಡ ದುಬಾರಿಯಾಗಿದ್ದು, ಸಾಂಬಾರ್ ಪಾದಾರ್ಥಗಳು ಕೂಡ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದ್ದು, ಹಣದುಬ್ಬರದ ಮೇಲೆ ಇದು ಬಾರಿ ಪರಿಣಾಮ ಬೀರಲಿದೆ. \ No newline at end of file diff --git a/eesanje/url_47_218_2.txt b/eesanje/url_47_218_2.txt new file mode 100644 index 0000000000000000000000000000000000000000..35565196edc4e3171986085e7b87cb1372c3eef7 --- /dev/null +++ b/eesanje/url_47_218_2.txt @@ -0,0 +1,7 @@ +ವಾಕ್ ಸ್ವಾತಂತ್ರ್ಯ ಮಿತಿ ಮೀರಬಾರದು ; ಬಾಂಬೆ ಹೈಕೋರ್ಟ್ +ಮುಂಬೈ, ಡಿ 13 (ಪಿಟಿಐ) ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಂಜಸತೆಯ ಮಿತಿಯನ್ನು ಮೀರಿ ಹೋಗಲು ಅನುಮತಿಸಲಾಗುವುದಿಲ್ಲ ಇಲ್ಲದಿದ್ದರೆ ಅದು ವಿನಾಶಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜಸ್ಟಿಸ್ ಮಿಲಿಂದ್ ಜಾಧವ್ ಅವರ ಏಕ ಪೀಠವು ಹಿಟಾಚಿ ಆಸ್ಟೆಮೊ ಫೈ ಎಂಬ ವಾಹನ ಬಿಡಿಭಾಗಗಳನ್ನು ತಯಾರಿಸುವ ಕಂಪನಿಯ ಉದ್ಯೋಗಿಯ ಸೇವೆಯನ್ನು ವಜಾಗೊಳಿಸುವುದನ್ನು ಎತ್ತಿಹಿಡಿದಿದೆ. +ಕಂಪನಿಯ ವಿರುದ್ಧ ಫೇಸ್‍ಬುಕ್‍ನ ಎರಡು ಪೋಸ್ಟ್ ಗಳನ್ನು ಅಪ್‍ಲೋಡ್ ಮಾಡಿದ ನಂತರ ಉದ್ಯೋಗಿಯನ್ನು ವಜಾಗೊಳಿಸಲಾಗಿದೆ.ಹಿಟಾಚಿ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕಿದ್ದಕ್ಕಾಗಿ ಉದ್ಯೋಗಿಯ ವಜಾಗೊಳಿಸುವಿಕೆಯನ್ನು ರದ್ದುಗೊಳಿಸಿದ ಕಾರ್ಮಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್‍ಗೆ ಮೊರೆ ಹೋಗಿತ್ತು. +ದ್ವೇಷವನ್ನು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಕಂಪನಿಯ ವಿರುದ್ಧ ಪೋಸ್ಟ್ ಗಳನ್ನು ನಿರ್ದೇಶಿಸಲಾಗಿದೆ ಮತ್ತು ಇದು ಪ್ರಚೋದನಕಾರಿ ಎಂದು ಆದೇಶದಲ್ಲಿ ನ್ಯಾಯಮೂರ್ತಿ ಜಾಧವ್ ಹೇಳಿದ್ದಾರೆ. ಇಂತಹ ಕೃತ್ಯಗಳ ವಿರುದ್ಧ ಬಲವಾದ ಸಂದೇಶವನ್ನು ಕಳುಹಿಸಬೇಕಾಗಿದೆ ಎಂದು ನ್ಯಾಯಾಲಯವು ಅಂತಹ ಕೃತ್ಯಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು ಎಂದು ಹೇಳಿದೆ. +ಕೆಇಎ : 40 ಸಾವಿರ ಸೀಟುಗಳ ಭರ್ತಿಗೆ ಫೆ.18ಕ್ಕೆ ಪರೀಕ್ಷೆ , ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ +ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಮಂಜಸತೆಯನ್ನು ಮೀರಿ ಉಲ್ಲಂಘಿಸಲು ಅನುಮತಿಸಲಾಗುವುದಿಲ್ಲ. ಅದಕ್ಕೆ ಅವಕಾಶ ನೀಡಿದರೆ, ಅದು ವಿನಾಶಕಾರಿ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಪೀಠವು ತನ್ನ ಆದೇಶದಲ್ಲಿ ಹೇಳಿದೆ.ಒಂದು ನಿರ್ದಿಷ್ಟ ಸಂದರ್ಭದಲ್ಲಿ, ಪರಿಣಾಮಗಳು ಸಂಭವಿಸುವವರೆಗೆ ಒಬ್ಬರು ಕಾಯಬಾರದು ಮತ್ತು ಕಾಯಬಾರದು. ಇಂತಹ ಕೃತ್ಯಗಳನ್ನು ಮೊಗ್ಗಿನಲ್ಲೇ ಚಿವುಟಿ ಹಾಕುವ ಅಗತ್ಯವಿದೆ. +ಇಲ್ಲದಿದ್ದರೆ, ಅದು ಸಮಾಜಕ್ಕೆ ತಪ್ಪು ಸಂಕೇತವನ್ನು ನೀಡುತ್ತದೆ ಎಂದು ಅದು ಹೇಳಿದೆ. ಯಾವುದೇ ಉದ್ಯೋಗಿ ಅಥವಾ ಕೆಲಸಗಾರನು ಕೆಲಸಗಾರನಾಗಿ ತನ್ನನ್ನು ತಾನು ನಡೆಸಿಕೊಳ್ಳಬೇಕಾದಾಗ ಶಿಸ್ತು ಅವರ ವಿಶಿಷ್ಟ ಲಕ್ಷಣವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಸಂಸ್ಥೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತು ಸಂಸ್ಥೆಯ ಆವರಣದೊಳಗೆ ಕೈಗಾರಿಕಾ ಚಟುವಟಿಕೆಯನ್ನು ಶಾಂತಿಯುತವಾಗಿ ನಡೆಸಲು ಕೆಲಸಗಾರನ ನಡವಳಿಕೆಯ ನಿಯಂತ್ರಣವು ಅತ್ಯಗತ್ಯ ಎಂದು ಅದು ಹೇಳಿದೆ. \ No newline at end of file diff --git a/eesanje/url_47_218_3.txt b/eesanje/url_47_218_3.txt new file mode 100644 index 0000000000000000000000000000000000000000..abdabbb3cb8eb0b31bdf668b16aed3ae111317ed --- /dev/null +++ b/eesanje/url_47_218_3.txt @@ -0,0 +1,7 @@ +ಒಡಿಶಾದಲ್ಲಿ ಸಿಕ್ಕಿಬಿದ್ದ ಅಂತರಾಜ್ಯ ಡ್ರಗ್ಸ್ ಕಿಂಗ್‍ಪಿನ್ +ಮುಂಬೈ, ಡಿ 13 (ಪಿಟಿಐ) : ಮಹಾನಗರದಲ್ಲಿ 3.85 ಕೋಟಿ 2ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಂಡ ಎರಡು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅಂತರರಾಜ್ಯ ಡ್ರಗ್ ಸಿಂಡಿಕೇಟ್‍ನ ಕಿಂಗ್‍ಪಿನ್ ಮತ್ತು ಆತನ ಸಹಾಯಕನನ್ನು ಒಡಿಶಾದಿಂದ ಬಂಧಿಸಿದ್ದಾರೆ. +ಮುಂಬೈ ಅಪರಾಧ ವಿಭಾಗದ ಆಂಟಿ ನಾರ್ಕೋಟಿಕ್ ಸೆಲ್ (ಎಎನ್‍ಸಿ) ಅಧಿಕಾರಿಗಳು ಡ್ರಗ್ಸ್ ಕಿಂಗ್‍ಪಿನ್ ಲಕ್ಷ್ಮೀಕಾಂತ್ ಅಲಿಯಾಸ್ ಲಕ್ಷ್ಮಿಭಾಯಿ ಪ್ರಧಾನ್ ಮತ್ತು ಅವರ ಸಹಾಯಕ ಬಿದ್ಯಾಧರ್ ಪ್ರಧಾನ್ ಅವರನ್ನು ಒಡಿಶಾದ ಗಂಜಾಂ ಜಿಲ್ಲೆಯ ಗೊಲಾಂತರಾದಲ್ಲಿ ಬಂಧಿಸಿದ್ದಾರೆ. +ಇದರೊಂದಿಗೆ, ಮಾದಕ ವಸ್ತು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಐವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಎಎನ್‍ಸಿಯ ಘಾಟ್‍ಕೋಪರ್ ಘಟಕವು ಡಿಸೆಂಬರ್ 2021 ರಲ್ಲಿ 1,820 ಕೆಜಿ ತೂಕದ ಮತ್ತು 3.85 ಕೋಟಿ ಮೌಲ್ಯದ ಗಾಂಜಾ (ಗಾಂಜಾ) ಹೊಂದಿರುವ ಮೂವರನ್ನು ಬಂಧಿಸುವ ಮೂಲಕ ಅಂತಾರಾಜ್ಯ ಡ್ರಗ್ ಸಿಂಡಿಕೇಟ್ ಅನ್ನು ಭೇದಿಸಿತ್ತು. +ಕೆಇಎ : 40 ಸಾವಿರ ಸೀಟುಗಳ ಭರ್ತಿಗೆ ಫೆ.18ಕ್ಕೆ ಪರೀಕ್ಷೆ , ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ +ತನಿಖೆಯ ವೇಳೆ ಒಡಿಶಾದಿಂದ ಅಕ್ರಮವಾಗಿ ಖರೀದಿಸಿರುವುದು ಬೆಳಕಿಗೆ ಬಂದಿತ್ತು. ಸಿಂಡಿಕೇಟ್‍ನ ಇತರ ಸದಸ್ಯರನ್ನು ಪತ್ತೆಹಚ್ಚಲು ಆಳವಾದ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. +ಲಕ್ಷ್ಮೀಭಾಯಿ ಪ್ರಧಾನ್ ಅವರ ವಿರುದ್ಧ ಒಡಿಶಾದ ವಿವಿಧ ಭಾಗಗಳಲ್ಲಿ ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಬಿದ್ಯಾಧರ್ ಪ್ರಧಾನ್ ಕೂಡ ಮೂರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_218_4.txt b/eesanje/url_47_218_4.txt new file mode 100644 index 0000000000000000000000000000000000000000..136577b7a2b4cdca9715e4d3d0d64e3a90be0b37 --- /dev/null +++ b/eesanje/url_47_218_4.txt @@ -0,0 +1,8 @@ +370ನೇ ವಿಧಿ ರದ್ದು ತೀರ್ಪು ಸ್ವಾಗತಾರ್ಹ : ಆರ್‌ಎಸ್‌ಎಸ್‌ +ನವದೆಹಲಿ,ಡಿ.12- ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ರಾಷ್ಟ್ರೀಯ ಏಕತೆಯನ್ನು ಬಲಪಡಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಭಿಪ್ರಾಯಪಟ್ಟಿದೆ.ಆರೆಸ್ಸೆಸ್ ಸಂವಿಧಾನದ 370 ನೇ ವಿಧಿಯನ್ನು ಮೊದಲಿನಿಂದಲೂ ವಿರೋಧಿಸುತ್ತಿದೆ ಎಂದು ಸಂಘದ ಅಖಿಲ ಭಾರತ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ವಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸರ್ವಾನುಮತದಿಂದ ಎತ್ತಿಹಿಡಿದಿದೆ. ಸರ್ಕಾರವನ್ನು ಬೇಗನೆ ಮರುಸ್ಥಾಪಿಸುವುದರ ಜೊತೆಗೆ ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆಗೆ ಚುನಾವಣೆ ನಡೆಸುವಂತೆ ನಿರ್ದೇಶಿಸಿದೆ. +ಆರ್ಟಿಕಲ್ 370 ರದ್ದತಿಯನ್ನು ಕಾನೂನುಬದ್ಧಗೊಳಿಸಿರುವ ಸುಪ್ರೀಂ ಕೋರ್ಟ್ ಸ್ವಾಗತಾರ್ಹವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸï) ಈ ನಿರ್ಧಾರವನ್ನು ಸ್ವಾಗತಿಸುತ್ತದೆ ಎಂದು ಸುನಿಲ್ ಅಂಬೇಕರ್ ಹೇಳಿದ್ದಾರೆ. ಆರ್‍ಎಸ್‍ಎಸ್ ಕೂಡ ಈ ವಿಷಯದಲ್ಲಿ ಹಲವು ನಿರ್ಣಯಗಳನ್ನು ಅಂಗೀಕರಿಸಿದೆ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಬಂಧನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುವ ಎಲ್ಲಾ ಚಳುವಳಿಗಳಲ್ಲಿ ಭಾಗವಹಿಸಿದೆ ಎಂದು ಅವರು ಹೇಳಿದರು. +ಬೆಂಗಳೂರಲ್ಲಿ ಅಕ್ರಮ ನೀರು ಸಂಪರ್ಕ ಹೊಂದಿದ್ದರೆ ಜೈಲು ಗ್ಯಾರಂಟಿ..! +ಈ ನಿರ್ಧಾರವು ರಾಷ್ಟ್ರೀಯ ಏಕತೆಯನ್ನು ಬಲಪಡಿಸುತ್ತದೆ. 370 ನೇ ವಿಧಿಯಿಂದಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ವರ್ಷಗಳಿಂದ ಅನ್ಯಾಯವನ್ನು ಅನುಭವಿಸುತ್ತಿರುವ ಜನರಿಗೆ ಈ ನಿರ್ಧಾರದಿಂದ ಪರಿಹಾರ ಸಿಕ್ಕಿದೆ ಎಂದು ಸುನಿಲ್ ಅಂಬೇಕರ್ ತಿಳಿಸಿದ್ದಾರೆ.ಆರ್‍ಎಸ್‍ಎಸ್-ಸಂಯೋಜಿತ ಮಹಿಳಾ ಸಂಘಟನೆ ಸಂರ್ವನಿ ನ್ಯಾಸ್ ಕೂಡ ಸುಪ್ರೀಂ ಕೋರ್ಟ್ ತೀರ್ಪನ್ನು ಶ್ಲಾಘಿಸಿದೆ. ಕೇಂದ್ರವು 370 ನೇ ವಿಧಿಯನ್ನು ರದ್ದುಗೊಳಿಸಿರುವುದು ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಮುಖ್ಯವಾಹಿನಿಗೆ ಏಕೀಕರಣ ಮಾಡಲು ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ದಾರಿ ಮಾಡಿಕೊಟ್ಟಿದೆ ಎಂದು ಅದು ಹೇಳಿದೆ. +ನಾವು, ಸಂರ್ವನಿ ನ್ಯಾಸ್ ಕಾರ್ಯಕರ್ತರು, 370 ನೇ ವಿಧಿಯ ರದ್ದತಿಯ ಬಗ್ಗೆ ಸಕಾರಾತ್ಮಕ ತೀರ್ಪು ನೀಡಿದ್ದಕ್ಕಾಗಿ ನಿಮಗೆ ಅಪಾರ ಕೃತಜ್ಞತೆ ಸಲ್ಲಿಸುತ್ತೇವೆ … ನ್ಯಾಯ ಮತ್ತು ನಮ್ಮ ದೇಶದ ಸುಧಾರಣೆಗೆ ನಿಮ್ಮ ಅಚಲ ಬದ್ಧತೆಗೆ ಧನ್ಯವಾದಗಳು ಎಂದು ಸಂಸ್ಥೆಯು ಪತ್ರದಲ್ಲಿ ತಿಳಿಸಿದೆ. +ನಮ್ಮ ನ್ಯಾಯಾಂಗವು ಒಂದು ರಾಷ್ಟ್ರ, ಒಂದು ಪ್ರಧಾನಿ, ಒಂದು ಧ್ವಜದ ಕಡೆಗೆ ಪ್ರಬಲ ಹೆಜ್ಜೆ ಇಟ್ಟಿದೆ ಎಂದು ನಾವು ತುಂಬಾ ಹೆಮ್ಮೆಪಡುತ್ತೇವೆ. ನಾವು ಒಂದೇ. ತೀರ್ಪು ನಮ್ಮ ರಾಷ್ಟ್ರದೊಳಗೆ ನ್ಯಾಯಸಮ್ಮತತೆ, ಏಕತೆ ಮತ್ತು ಕಾನೂನಿನ ಆಳ್ವಿಕೆಗೆ ಬದ್ಧತೆಯನ್ನು ತೋರಿಸುತ್ತದೆ ಎಂದು ಸಂರ್ವನಿ ನ್ಯಾಸ್ ಹೇಳಿದ್ದಾರೆ. \ No newline at end of file diff --git a/eesanje/url_47_218_5.txt b/eesanje/url_47_218_5.txt new file mode 100644 index 0000000000000000000000000000000000000000..a52aead137d8b184518056fb3117fc16ab64dbce --- /dev/null +++ b/eesanje/url_47_218_5.txt @@ -0,0 +1,6 @@ +ಒಮರ್ ಅಬ್ದುಲ್ಲಾ ಡಿವೋರ್ಸ್ ಕೇಸ್ ವಜಾ +ನವದೆಹಲಿ, ಡಿ.12 (ಪಿಟಿಐ) ತಮ್ಮ ದೂರವಾಗಿರುವ ಪತ್ನಿಯಿಂದ ವಿಚ್ಛೇದನ ಕೋರಿ ನ್ಯಾಷನಲ್ ಕಾನರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಅವರ ಮನವಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಸಚ್‍ದೇವ ಮತ್ತು ವಿಕಾಸ್ ಮಹಾಜನ್ ಅವರ ಪೀಠವು ಅಬ್ದುಲ್ಲಾಗೆ ವಿಚ್ಛೇದನ ನೀಡಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ. +ವಿಚಾರಣಾ ನ್ಯಾಯಾಲಯದ 2016ರ ತೀರ್ಪನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಸಲ್ಲಿಸಿರುವ ಮೇಲ್ಮನವಿಯಲ್ಲಿ ಯಾವುದೇ ಅರ್ಹತೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.ವಿಚ್ಛೇದಿತ ಪತ್ನಿ ಪಾಯಲ್ ಅಬ್ದುಲ್ಲಾ ಅವರಿಂದ ಕ್ರೌರ್ಯಕ್ಕೆ ಒಳಗಾಗಿದ್ದಾರೆ ಎಂಬ ಕಾರಣಕ್ಕೆ ಅಬ್ದುಲ್ಲಾ ವಿಚ್ಛೇದನ ಕೋರಿದ್ದಾರೆ. +ಬೆಂಗಳೂರಲ್ಲಿ ಅಕ್ರಮ ನೀರು ಸಂಪರ್ಕ ಹೊಂದಿದ್ದರೆ ಜೈಲು ಗ್ಯಾರಂಟಿ..! +ಕ್ರೌರ್ಯದ ಆರೋಪಗಳು ಅಸ್ಪಷ್ಟ ಮತ್ತು ಸ್ವೀಕಾರಾರ್ಹವಲ್ಲ ಎಂದು ಕುಟುಂಬ ನ್ಯಾಯಾಲಯವು ತೆಗೆದುಕೊಂಡ ದೃಷ್ಟಿಕೋನದಲ್ಲಿ ನಾವು ಯಾವುದೇ ದೌರ್ಬಲ್ಯವನ್ನು ಕಾಣುವುದಿಲ್ಲ, ಮೇಲ್ಮನವಿದಾರನು ಕ್ರೌರ್ಯದ ಕ್ರಿಯೆ ಎಂದು ಕರೆಯಬಹುದಾದ ಯಾವುದೇ ಕೃತ್ಯವನ್ನು ಸಾಬೀತುಪಡಿಸಲು ವಿಫಲವಾಗಿದೆ, ಅದು ದೈಹಿಕ ಅಥವಾ ಮಾನಸಿಕವಾಗಿರಬಹುದು, ಎಂದು ತೀರ್ಪು ಪ್ರಕಟಿಸುವಾಗ ಪೀಠ ಹೇಳಿದೆ. +ಆಗಸ್ಟ್ 30, 2016 ರಂದು ವಿಚಾರಣಾ ನ್ಯಾಯಾಲಯವು ಅಬ್ದುಲ್ಲಾ ವಿಚ್ಛೇದನದ ಮನವಿಯನ್ನು ವಜಾಗೊಳಿಸಿತ್ತು. ವಿಚ್ಛೇದನದ ತೀರ್ಪು ನೀಡಲು ಅಬ್ದುಲ್ಲಾ ಆರೋಪಿಸಿರುವ ಕ್ರೌರ್ಯ ಅಥವಾ ತಪಾಸಣೆಯ ಹಕ್ಕುಗಳನ್ನು ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ವಿಚಾರಣಾ ನ್ಯಾಯಾಲಯ ಹೇಳಿತ್ತು. \ No newline at end of file diff --git a/eesanje/url_47_218_6.txt b/eesanje/url_47_218_6.txt new file mode 100644 index 0000000000000000000000000000000000000000..df03b254e4c2d3a88ec0fd99944912cfdad0f2c2 --- /dev/null +++ b/eesanje/url_47_218_6.txt @@ -0,0 +1,6 @@ +ಕರ್ಣಿ ಸೇನಾ ಮುಖ್ಯಸ್ಥರ ಹಂತಕರೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಬಂಧನ +ಜೈಪುರ,ಡಿ.12- ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಗೆ ಸಂಬಂಸಿದಂತೆ ಅಪರಾಧ ಜಾಲದೊಂದಿಗೆ ಸಂಬಂಧ ಹೊಂದಿರುವ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧಿಸಲಾದ ಇಬ್ಬರು ಶೂಟರ್‍ಗಳು ಸೇರಿದಂತೆ ಮೂವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರನ್ನು ಮ್ಯಾಜಿಸ್ಟ್ರೇಟ್ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. +ಚಂಡೀಗಢದಲ್ಲಿ ಸೆಕ್ಟರ್ 22 ರಿಂದ ಶೂಟರ್‍ಗಳಾದ ನಿತಿನ್ ಫೌಜಿ ಮತ್ತು ರೋಹಿತ್ ರಾಥೋಡ್ ಅವರ ಸಹಚರ ಉಧಮ್ ಸಿಂಗ್ ಅವರನ್ನು ಬಂಧಿಸಿದ್ದರು. ಜೈಪುರದ ಜಗತ್‍ಪುರ ಪ್ರದೇಶದಲ್ಲಿ ದಂಪತಿಯ ಬಾಡಿಗೆ ಫ್ಲಾಟ್‍ನಲ್ಲಿ ಡಿಸೆಂಬರ್ 5 ರಂದು ಹತ್ಯೆ ಮಾಡುವ ಮೊದಲು ಸುಮಾರು ಒಂದು ವಾರದವರೆಗೆ ಫೌಜಿಗೆ ಪೂಜಾ ಸೈನಿ ಮತ್ತು ಆಕೆಯ ಪತಿ ಮಹೇಂದ್ರ ಮೇಘವಾಲ್ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದಾರೆ ಎಂದು ಜೈಪುರ ಪೊಲೀಸ್ ಕಮಿಷನರ್ ಬಿಜು ಜಾರ್ಜ್ ಜೋಸೆಫ್ ಹೇಳಿದ್ದಾರೆ. ಮೇಘವಾಲ್ ಅಲಿಯಾಸ್ ಸಮೀರ್ ಕೋಟಾ ಮೂಲದವನಾಗಿದ್ದು, ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಧ್ಯಪ್ರದೇಶ ಸಿಎಂ ಆಯ್ಕೆಗೆ ಕಾಂಗ್ರೆಸ್ ಲೇವಡಿ +ಫೌಜಿ ನವೆಂಬರ್ 28 ರಂದು ಟ್ಯಾಕ್ಸಿಯಲ್ಲಿ ಜೈಪುರಕ್ಕೆ ಬಂದರು ಮತ್ತು ಮೇಘವಾಲ್ ಅವರನ್ನು ಭೇಟಿಯಾದರು ಮತ್ತು ಅವರನ್ನು ಜಗತ್ಪುರದ ಫ್ಲಾಟ್‍ಗೆ ಕರೆದೊಯ್ದರು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಕೈಲಾಶ್ ಚಂದ್ರ ಬಿಷ್ಣೋಯ್ ಹೇಳಿದರು.ಮೇಘವಾಲ್ ಮೂಲಕವೇ ಫೌಜಿ ದರೋಡೆಕೋರ ರೋಹಿತ್ ಗೋಡಾರಾ ಜೊತೆ ಸಂಪರ್ಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‍ನೊಂದಿಗೆ ಸಂಪರ್ಕ ಹೊಂದಿರುವ ಗೋದಾರಾ ಅವರು ಫೇಸ್‍ಬುಕ್ ಪೋಸ್ಟ್ ನಲ್ಲಿ ಗೊಗಮೆಡಿಯ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದರು, ಕರ್ಣಿ ಸೇನಾ ಮುಖ್ಯಸ್ಥರು ತಮ್ಮ ಶತ್ರುಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. \ No newline at end of file diff --git a/eesanje/url_47_218_7.txt b/eesanje/url_47_218_7.txt new file mode 100644 index 0000000000000000000000000000000000000000..5856a60aba06afcfdb6f504f1736df4780a0520d --- /dev/null +++ b/eesanje/url_47_218_7.txt @@ -0,0 +1,5 @@ +ಮಧ್ಯಪ್ರದೇಶ ಸಿಎಂ ಆಯ್ಕೆಗೆ ಕಾಂಗ್ರೆಸ್ ಲೇವಡಿ +ನವದೆಹಲಿ, ಡಿ 12 (ಪಿಟಿಐ) ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಉಜ್ಜಯಿನಿ ಮಾಸ್ಟರ್ ಪ್ಲಾನ್ ನಲ್ಲಿ ದೊಡ್ಡ ಪ್ರಮಾಣದ ಕುಶಲತೆ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಬಿಜೆಪಿ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಕಾಂಗ್ರೆಸ್ ಪಕ್ಷ ಲೇವಡಿ ಮಾಡಿದೆ. +ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ಚುನಾವಣೆ ಫಲಿತಾಂಶದ ಎಂಟು ದಿನಗಳ ನಂತರ, ಬಿಜೆಪಿ ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿದೆ, ಅವರ ವಿರುದ್ಧ ಉಜ್ಜಯಿನಿಯಲ್ಲಿ ದೊಡ್ಡ ಪ್ರಮಾಣದ ಕುಶಲತೆ ಸೇರಿದಂತೆ ಹಲವು ಗಂಭೀರ ಆರೋಪಗಳಿವೆ ಎಂದು ಆರೋಪಿಸಿದ್ದಾರೆ. +ಅಯೋಧ್ಯೆಯಲ್ಲಿ ಗಗನಕ್ಕೇರಿದ ಭೂಮಿ ಬೆಲೆ +ಯಾದವ್ ಅವರ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಅವರು ನಿಂದನೆ, ಬೆದರಿಕೆ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಇದೇಣಾ ಮಧ್ಯಪ್ರದೇಶಕ್ಕೆ ಮೋದಿ ಗ್ಯಾರಂಟಿ ಎಂದು ಅವರು ಪ್ರಶ್ನಿಸಿದರು. ಮುಖ್ಯಮಂತ್ರಿ ಹುದ್ದೆಯ ಸ್ರ್ಪಗಳ ನಡುವೆ ಕಾಣದ ಯಾದವ್, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‍ಎಸ್‍ಎಸ್) ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿದ್ದಾರೆ ಮತ್ತು ಮೂರು ಬಾರಿ ಶಾಸಕರಾಗಿದ್ದಾರೆ ಮತ್ತು ಒಬಿಸಿಗಳ ಪ್ರಮುಖ ನಾಯಕರಾಗಿದ್ದಾರೆ. \ No newline at end of file diff --git a/eesanje/url_47_218_8.txt b/eesanje/url_47_218_8.txt new file mode 100644 index 0000000000000000000000000000000000000000..81f87bfd7448d429a85b0cac3280e2c90ec9725a --- /dev/null +++ b/eesanje/url_47_218_8.txt @@ -0,0 +1,9 @@ +ಅಯೋಧ್ಯೆಯಲ್ಲಿ ಗಗನಕ್ಕೇರಿದ ಭೂಮಿ ಬೆಲೆ +ನವದೆಹಲಿ,ಡಿ.12- ಬಹುನಿರೀಕ್ಷಿತ ರಾಮಮಂದಿರ ಉದ್ಘಾಟನೆಗೆ ಕೆಲವೇ ವಾರಗಳು ಬಾಕಿಯಿದ್ದು, ಅಯೋಧ್ಯೆಯಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆ ನಡೆಯುತ್ತಿದೆ. ಇದು ನಗರದಲ್ಲಿ ರಿಯಲ್ ಎಸ್ಟೇಟ್ ಬೂಮ್‍ಗೆ ಕಾರಣವಾಗಿದ್ದು, ಆಸ್ತಿ ಬೆಲೆಗಳು ಗಗನಕ್ಕೇರಿವೆ. ಹೂಡಿಕೆದಾರರು, ಹೋಟೆಲ್ ಮಾಲೀಕರು ಮತ್ತು ವ್ಯಾಪಾರ ಮಾಲೀಕರು ನಗರದತ್ತ ಧಾವಿಸಿದ್ದು, ಸ್ಥಳೀಯರು ತಮ್ಮ ಆಸ್ತಿ ಬೆಲೆಯನ್ನು ಮೂಲ ಬೆಲೆಗಿಂತ ಮೂರು ಪಟ್ಟು ಹೆಚ್ಚಿಸಿದ್ದಾರೆ. +ಸ್ಥಳೀಯ ಆಸ್ತಿ ವಿತರಕರು ಹೇಳುವಂತೆ ಯಾವುದೇ ಆಸ್ತಿಯನ್ನು ಖರೀದಿಸಲು ಉಳಿದಿಲ್ಲ. ಅಯೋಧ್ಯೆಯಲ್ಲಿ ಈಗ ಯಾವುದೇ ಭೂಮಿ ಲಭ್ಯವಿಲ್ಲ ಎಂದು ಆಸ್ತಿ ಡೀಲರ್ ಕಕ್ಕು ಸಿಂಗ್ ಹೇಳಿದ್ದಾರೆ.ಹೊರ ಪ್ರದೇಶಗಳಲ್ಲಿ 3 ಸಾವಿರದ ಆಸುಪಾಸಿನಲ್ಲಿದ್ದ ಭೂಮಿ ದರ 6,000ದಿಂದ 7,000ಕ್ಕೆ ಏರಿದೆ. ರಾಮಮಂದಿರದ ಸುತ್ತಮುತ್ತ ಭೂಮಿ ಸಿಗುತ್ತಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. +ಅಯೋಧ್ಯೆಯ ಸ್ಟಾಂಪ್ ಮತ್ತು ನೋಂದಣಿ ಇಲಾಖೆಯ ದತ್ತಾಂಶವು 2018-19ರಲ್ಲಿ ನವೆಂಬರ್‍ವರೆಗೆ ಸುಮಾರು 9,000 ಆಸ್ತಿಗಳನ್ನು ಮಾರಾಟ ಮಾಡಲಾಗಿದೆ ಎಂದು ತೋರಿಸುತ್ತದೆ. ಈ ವರ್ಷ, ಅನುಗುಣವಾದ ಅಂಕಿ ದ್ವಿಗುಣಗೊಂಡಿದೆ. ನವೆಂಬರ್ ವರೆಗೆ, ಈ ವರ್ಷ 20,067 ಆಸ್ತಿಗಳನ್ನು ಮಾರಾಟ ಮಾಡಲಾಗಿದೆ ಎಂದು ಅಂಕಿಅಂಶಗಳು ತೋರಿಸುತ್ತವೆ. +ಸರ್ಕಾರಿ ಜಾಗಕ್ಕೆ ‘ಈ ಜಾಗ ನಮ್ಮದು’ ಎಂದು ಬೋರ್ಡ್ ಹಾಕಿದ್ದಾರೆ : ಶಾಸಕ ಮುನಿರತ್ನ +ಹೋಟೆಲ್ , ರೆಸಾರ್ಟ್‍ಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸಲು ಬಯಸುವವರಿಂದ ನನಗೆ ಫೋನ್ ಕರೆಗಳು ಬರುತ್ತವೆ. ಹೀಗಾಗಿ ಮುದ್ರಾಂಕ ಇಲಾಖೆಯ ಆದಾಯವನ್ನು ಹೆಚ್ಚಿಸಿದೆ ಎಂದು ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಸಹಾಯಕ ಆಯುಕ್ತ ಯೋಗೇಂದ್ರ ಪ್ರತಾಪ್ ಹೇಳಿದರು. ಹೂಡಿಕೆಯು ಪ್ರವಾಸಿಗರನ್ನು ತರುತ್ತದೆ ಮತ್ತು ಅನೇಕರಿಗೆ ಆದಾಯವನ್ನು ನೀಡುತ್ತದೆ ಎಂದು ಸ್ಥಳೀಯರು ಭಾವಿಸುತ್ತಾರೆ. +ಅಯೋಧ್ಯೆಯಿಂದ 40 ಕಿ.ಮೀ ದೂರದಲ್ಲಿ ವಾಸಿಸುವ ರಜ್ಜನ್ ಲಾಲ್ ಅವರು ಹಳ್ಳಿಯಲ್ಲಿರುವ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಮತ್ತು ಅಭಿವೃದ್ಧಿ ಹೊಂದುತ್ತಿರುವ ಮೂಲಸೌಕರ್ಯ ವಿಸ್ತರಣೆಯಿಂದ ಲಾಭ ಪಡೆಯಲು ಅಯೋಧ್ಯೆಯ ಬಳಿ ಸಿಮೆಂಟ್ ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ಪ್ರಾರಂಭಿಸಲು 1000 ಚದರ ಅಡಿ ನಿವೇಶನವನ್ನು ಖರೀದಿಸಿದ್ದಾರೆ. +ದೇವಸ್ಥಾನ ನಿರ್ಮಾಣ ಮಾಡಿರುವುದರಿಂದ ಉತ್ತಮ ಆದಾಯ ಬರುವ ಅವಕಾಶವಿದೆ…ಇಲ್ಲಿ ವ್ಯಾಪಾರ ಮಾಡುತ್ತೇನೆ ಆದರೆ ದರವೂ ಜಾಸ್ತಿಯಾಗಿದೆ ಎಂದರು. ಅಯೋಧ್ಯೆಯಲ್ಲಿ 4.40 ಎಕರೆ ವಿಸ್ತೀರ್ಣದ ಪ್ರವಾಸೋದ್ಯಮ ಸೌಲಭ್ಯ ಕೇಂದ್ರವನ್ನು ನಿರ್ಮಿಸಲು ಸರ್ಕಾರ ಯೋಜಿಸುತ್ತಿದೆ. ಇದರ ಅಂದಾಜು ವೆಚ್ಚ 130 ಕೋಟಿ ರೂ.ಗಳಾಗಿದೆ. +ಯೋಜನೆಯಡಿ ಪ್ರವಾಸೋದ್ಯಮ ಕಚೇರಿ, ಪ್ರಯಾಣಿಕರ ವಸತಿ, ಕಲಾ ಮತ್ತು ಕರಕುಶಲ ಕೇಂದ್ರ, ಫುಡ್ ಕೋರ್ಟ್ , ಶಾಪಿಂಗ್ ಮಾರ್ಟ್ ಮತ್ತು ಪಾರ್ಕಿಂಗ್ ಸ್ಥಳ ಸೇರಿದಂತೆ ವಿವಿಧ ವಾಣಿಜ್ಯ ಕೇಂದ್ರಗಳನ್ನು ಪ್ರವಾಸಿ ಕೇಂದ್ರದಲ್ಲಿ ಅಭಿವೃದ್ಧಿಪಡಿಸಲಾಗುವುದು. ಯೋಜನೆಯು ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ.ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಈ ತಿಂಗಳ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಯಾ ಹೇಳಿದ್ದಾರೆ. \ No newline at end of file diff --git a/eesanje/url_47_218_9.txt b/eesanje/url_47_218_9.txt new file mode 100644 index 0000000000000000000000000000000000000000..48cd7cb41c626fafcf117190c24b736fdc8805d7 --- /dev/null +++ b/eesanje/url_47_218_9.txt @@ -0,0 +1,6 @@ +ಕೇರಳದಲ್ಲಿ ಎಲ್ಲೆಂದರಲ್ಲಿ ಕಸ ಎಸೆದರೆ 50 ಸಾವಿರ ದಂಡ, ತಪ್ಪಿದರೆ 1ವರ್ಷ ಜೈಲು +ತಿರುವನಂತಪುರಂ, ಡಿ 12 (ಪಿಟಿಐ) ಕೇರಳದಲ್ಲಿ ಇನ್ನು ಮುಂದೆ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದರೆ ತಿದ್ದುಪಡಿ ಮಾಡಲಾದ ಕಾನೂನುಗಳ ಅಡಿಯಲ್ಲಿ ಗರಿಷ್ಠ 50,000 ರೂ ದಂಡ ಮತ್ತು ಒಂದು ವರ್ಷದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಕಸ ಮುಕ್ತ ಕೇರಳ ಅಭಿಯಾನದ ಭಾಗವಾಗಿ ಕಳೆದ ವಾರ ಹೊರಡಿಸಲಾದ ಕೇರಳ ಪಂಚಾಯತ್ ರಾಜ್ (ತಿದ್ದುಪಡಿ) ಸುಗ್ರೀವಾಜ್ಞೆ 2023 ಮತ್ತು ಕೇರಳ ಪುರಸಭೆ (ತಿದ್ದುಪಡಿ) ಸುಗ್ರೀವಾಜ್ಞೆ 2023 ರ ಪ್ರಕಾರ, ನಿಯಮ ಉಲ್ಲಂಘಿಸಿದವರು ದಂಡವನ್ನು ಪಾವತಿಸಲು ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಸಲಾಗುತ್ತದೆ. +ಸಾರ್ವಜನಿಕ ಮತ್ತು ಖಾಸಗಿ ಭೂಮಿಯಲ್ಲಿ ಕಸ ಸುರಿಯುವವರ ವಿರುದ್ಧ ಕಾರ್ಯದರ್ಶಿ ವಿಧಿಸಿರುವ ದಂಡವನ್ನು 5,000 ರೂ.ಗೆ ಹೆಚ್ಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿಕ್ಷೆಯ ಕ್ರಮಗಳನ್ನು ಜಾರಿಗೊಳಿಸಲು ಕಾರ್ಯದರ್ಶಿಗೆ ಅಕಾರ ನೀಡಲಾಗಿದೆ ಮತ್ತು ನೋಟಿಸ್ ನೀಡುವ ಮೂಲಕ ನಿಯವ ಉಲ್ಲಂಘಿಸುವವರನ್ನು ಆಲಿಸಿದ ನಂತರ ದಂಡ ವಿಸಬಹುದು ಎಂದು ಸ್ಥಳೀಯ ಸ್ವಯಂ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(12-12-2023) +ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದರೆ ಗರಿಷ್ಠ 50,000 ರೂ ದಂಡ ಮತ್ತು ತಿದ್ದುಪಡಿ ಮಾಡಿದ ಕಾನೂನುಗಳ ಅಡಿಯಲ್ಲಿ ಒಂದು ವರ್ಷದವರೆಗೆ ಜೈಲು ಶಿಕ್ಷೆ ವಿಸಲಾಗುತ್ತದೆ.ತಿದ್ದುಪಡಿಯು ತ್ಯಾಜ್ಯ ಉತ್ಪಾದಕಗಳ ಮೇಲೆ ಹೆಚ್ಚಿನ ಜವಾಬ್ದಾರಿಗಳನ್ನು ಇರಿಸಿದೆ ಮತ್ತು ಹಾಗೆ ಮಾಡಲು ವಿಫಲವಾದರೆ ಅವರ ಮೇಲೆ ವಿಸಬಹುದಾದ ದಂಡದ ಮಟ್ಟವನ್ನು ಹೆಚ್ಚಿಸಿದೆ. ಸುಸ್ಥಿರ ಭವಿಷ್ಯವನ್ನು ಬಲಪಡಿಸಲು ಸಂಭಾವ್ಯ ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಾನಿಯ ವಿರುದ್ಧ ನಿರೋಧಕವಾಗಿ ಕಾರ್ಯನಿರ್ವಹಿಸಲು ದಂಡಗಳು ಭಾರೀ ಪ್ರಮಾಣದಲ್ಲಿರಬೇಕು ಎಂದು ಅವರು ಹೇಳಿದರು. +ಸೂಚನೆಗಳನ್ನು ಅನುಸರಿಸದಿದ್ದಲ್ಲಿ ಸ್ಥಳೀಯ ಸ್ವ-ಸರ್ಕಾರ ಸಂಸ್ಥೆಗಳಿಗೆ ದಂಡ ವಿಸಲು ಸುಗ್ರೀವಾಜ್ಞೆಗಳು ಸರ್ಕಾರಕ್ಕೆ ಅವಕಾಶ ನೀಡುತ್ತವೆ ಎಂದು ಸಚಿವರು ಹೇಳಿದರು. ತಮ್ಮ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಂಗಡಿಗಳ ಮಾಲೀಕರ ಕರ್ತವ್ಯವಾಗಿದೆ, ಸ್ಥಳೀಯ ಅಕಾರಿಗಳು ಕಸ ಅಥವಾ ಮಲವಿಸರ್ಜನೆಯ ಅಸಮರ್ಪಕ ವಿಲೇವಾರಿಗೆ ಬಳಸುವ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ. ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕೊಡುಗೆಗಳು ಅಥವಾ ಪ್ರಾಯೋಜಕತ್ವಗಳು ಮತ್ತು ಸರ್ಕಾರವು ಸೂಚಿಸಿದ ಇತರವುಗಳನ್ನು ರಚಿಸಬೇಕಾದ ತ್ಯಾಜ್ಯ ನಿರ್ವಹಣಾ ನಿಗೆ ಠೇವಣಿ ಮಾಡಬೇಕಿದೆ. \ No newline at end of file diff --git a/eesanje/url_47_219_1.txt b/eesanje/url_47_219_1.txt new file mode 100644 index 0000000000000000000000000000000000000000..9861ef5ed185b38ef7b9dac5d65194ef6609c116 --- /dev/null +++ b/eesanje/url_47_219_1.txt @@ -0,0 +1,9 @@ + : 370ನೇ ವಿಧಿ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಸುಪ್ರೀಂ +ನವದೆಹಲಿ,ಡಿ.11- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ರಾಷ್ಟ್ರಪತಿಗಳ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಮಾತ್ರವಲ್ಲ, ಮುಂಬರುವ ಸೆ. 2024 ರೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆಗಳನ್ನು ನಡೆಸುವಂತೆ ಇಂದು ಚುನಾವಣಾ ಆಯೋಗಕ್ಕೂ ನಿರ್ದೇಶನ ನೀಡಿದೆ. +ಕೇಂದ್ರದ ಒಪ್ಪಿಗೆಯೊಂದಿಗೆ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ರಾಷ್ಟ್ರಪತಿಗಳು ಜಮ್ಮು-ಕಾಶ್ಮೀರಕ್ಕೆ ಅನ್ವಯಿಸಬಹುದಿತ್ತು ಮತ್ತು ರಾಜ್ಯ ವಿಧಾನಸಭೆಯ ಒಪ್ಪಿಗೆಯನ್ನು ಪಡೆಯುವ ಅಗತ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಅರ್ಟಿಕಲ್ 370 ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿದಾರರ ಪ್ರಕರಣವನ್ನು ತಿರಸ್ಕರಿಸಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಾತ್ಕಾಲಿಕ ನಿಬಂಧನೆಯಾಗಿ 370 ನೇ ವಿಧಿಯನ್ನು ಎತ್ತಿಹಿಡಿದಿದೆ. +ಪ್ರಧಾನ ಪಾತ್ರದ ಅಡಿಯಲ್ಲಿ ಕೇಂದ್ರವು ರಾಜ್ಯ ಸರ್ಕಾರದ ಅಕಾರವನ್ನು ಚಲಾಯಿಸಬಹುದು ಎಂದು ಸಿಜೆಐ ಹೇಳಿದರು. ಸಂಸತ್ತು ಮತ್ತು ರಾಷ್ಟ್ರಪತಿಗಳ ಘೋಷಣೆಯ ಅಡಿಯಲ್ಲಿ ರಾಜ್ಯದ ಶಾಸಕಾಂಗ ಅಕಾರವನ್ನು ಚಲಾಯಿಸಬಹುದು ಎಂದು ಪೀಠ ಹೇಳಿದೆ.ಆರ್ಟಿಕಲ್ 356 ರ ಅಡಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ ನಂತರ ಚಲಾಯಿಸುವ ಅಕಾರಗಳ ಮೇಲೆ ನಿರ್ಬಂಧಗಳಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. +ಆರ್ಟಿಕಲ್ 370 ಜಾರಿ ಅನುಷ್ಠಾನದ ನಾಲ್ಕು ವರ್ಷಗಳ ನಂತರ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಯನ್ನು ರದ್ದುಗೊಳಿಸುವುದನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ 370 ನೇ ವಿಧಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯಿದೆ, 2019 ರ ರದ್ದತಿಯನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು 2019 ರಲ್ಲಿ ಸಂವಿಧಾನ ಪೀಠಕ್ಕೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕೋರ್ಟ್ ವಜಾಗೊಳಿಸಿದೆ. +1947 ರಲ್ಲಿ ಭಾರತದ ಒಕ್ಕೂಟಕ್ಕೆ ಸೇರಿದ ನಂತರ ಕಾಶ್ಮೀರ ಸ್ವತಂತ್ರ ಸಾರ್ವಭೌಮತ್ವವನ್ನು ಉಳಿಸಿಕೊಂಡಿಲ್ಲ ಎಂದು ಸಿಜೆಐ ಹೇಳಿದರು. ಕಾಶ್ಮೀರ ವಿಲೀನದೊಂದಿಗೆ ತನ್ನ ಸಂಪೂರ್ಣ ಸಾರ್ವಭೌಮತ್ವಕ್ಕೆ ಶರಣಾಯಿತು. ಸಂವಿಧಾನವು ಭಾರತದೊಂದಿಗಿನ ತನ್ನ ಸಂಬಂಧವನ್ನು ಮತ್ತಷ್ಟು ವ್ಯಾಖ್ಯಾನಿಸಲು ಮಾತ್ರ ಎಂದು ಅವರು ಹೇಳಿದರು. ಕಾಶ್ಮೀರ ಯಾವುದೇ ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ. ಅದರ ಸಂವಿಧಾನವು ಭಾರತದ ಸಂವಿಧಾನಕ್ಕೆ ಅೀನವಾಗಿತ್ತು. +ಲೋಕಸಭೆ ಚುನಾವಣೆಗೆ ಅಣ್ಣಾವ್ರ ಕುಟುಂಬದ ವರ್ಚಸ್ಸು ಬಳಕೆಗೆ ಡಿಕೆಶಿ ಗೇಮ್ ಪ್ಲಾನ್ +ಆರ್ಟಿಕಲ್ 370 ರದ್ದತಿಗೆ ಮೊದಲು ಸಂವಿಧಾನ ಸಭೆಯ ಶಿಫಾರಸು ಅಗತ್ಯವಿಲ್ಲ ಎಂದು ಚಂದ್ರಚೂಡ್ ಹೇಳಿದರು. 370 ರ ಅಡಿಯಲ್ಲಿ ರದ್ದತಿಯ ಅಕಾರವು ಕಾಶ್ಮೀರದ ಏಕೀಕರಣಕ್ಕಾಗಿ. ಅಸಾಧಾರಣ ಸಂದರ್ಭಗಳಲ್ಲಿ ಹೊರತುಪಡಿಸಿ 370 ನೇ ವಿಯನ್ನು ರದ್ದುಗೊಳಿಸುವ ಅಧ್ಯಕ್ಷರ ನಿರ್ಧಾರದ ಮೇಲೆ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಕೇಂದ್ರದ ಒಪ್ಪಿಗೆಯೊಂದಿಗೆ ಅನ್ವಯಿಸಬಹುದು ಮತ್ತು ರಾಜ್ಯ ವಿಧಾನಸಭೆಯ ಒಪ್ಪಿಗೆಯನ್ನು ಪಡೆಯುವ ಅಗತ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿದ್ದಾರೆ. +ಐವರು ನ್ಯಾಯಮೂರ್ತಿಗಳಾದ ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್ ಕೆ ಕೌಲï, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು 16 ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರದ ವಾದವನ್ನು ಆಲಿಸಿದ್ದರು. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. \ No newline at end of file diff --git a/eesanje/url_47_219_10.txt b/eesanje/url_47_219_10.txt new file mode 100644 index 0000000000000000000000000000000000000000..562711c0ddb89adbfcb8ba738f74611f516bcdb0 --- /dev/null +++ b/eesanje/url_47_219_10.txt @@ -0,0 +1,4 @@ +ತಮ್ಮ ಉತ್ತರಾಧಿಕಾರಿ ಘೋಷಿಸಿದ ಮಾಯಾವತಿ +ಲಕ್ನೋ,ಡಿ.10- ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಹೆಸರಿಸಿದ್ದಾರೆ. +2019 ರಲ್ಲಿ ಮಾಯಾವತಿಯವರ ಲೋಕಸಭಾ ಪ್ರಚಾರದ ಸಮಯದಲ್ಲಿ ಪ್ರಮುಖ ಮುಖವಾಗಿದ್ದ ಆಕಾಶ್ ಆನಂದ್ ಅವರು ಈ ಹಿಂದೆ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿದ್ದರು. ಇಂದು ನಡೆದ ಪಕ್ಷದ ಪ್ರಮುಖ ಸಭೆಯಲ್ಲಿ ಹಿರಿಯ ನಾಯಕ ಈ ಘೋಷಣೆ ಮಾಡಿದ್ದಾರೆ. +ಇತ್ತೀಚೆಗಷ್ಟೇ ಸದನದ ಮಹಡಿಯಲ್ಲಿ ಅಸಹ್ಯಕರ ವಿಚಾರ ವಿನಿಮಯಕ್ಕೆ ಗುರಿಯಾದ ಲೋಕಸಭಾ ಸಂಸದ ಡ್ಯಾನಿಶ್ ಅಲಿ ಅವರನ್ನು ಬಿಎಸ್‍ಪಿಯಿಂದ ಅಮಾನತುಗೊಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. \ No newline at end of file diff --git a/eesanje/url_47_219_11.txt b/eesanje/url_47_219_11.txt new file mode 100644 index 0000000000000000000000000000000000000000..e7812612342716f3679b6b6c0791472ac27b7da7 --- /dev/null +++ b/eesanje/url_47_219_11.txt @@ -0,0 +1,8 @@ +ಭಾರತ ವಿಶ್ವದ ಔಷಧಾಲಯ : ಎಸ್.ಜೈಶಂಕರ್ +ನವದೆಹಲಿ,ಡಿ.10- ಜಾಗತೀಕರಣ ಯುಗದ ಹೆಸರಿನಲ್ಲಿ ಭಾರತವು ಅನ್ಯಾಯರಹಿತ ಸ್ಪರ್ಧೆಯನ್ನು ಬಹಳ ಸಮಯದಿಂದ ಎದುರಿಸುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಸ್ಪರ್ಧೆಯಲ್ಲಿ ಅನ್ಯಾಯವಾದರೆ ಅದನ್ನು ಕೂಗುವ ಸಾಮರ್ಥ್ಯ ಭಾರತಕ್ಕಿರಬೇಕು ಎಂದು ಅವರು ಅಭಿಪ್ರಾಯಪಟ್ಟ್ದಿದ್ದಾರೆ. +ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‍ಐಸಿಸಿಐ) ಯ 96 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇತಿಹಾಸವು ಭಾರತದ ಕಡೆ ಇದೆ ಮತ್ತು ಪ್ರತಿ ಅಳೆಯಬಹುದಾದ ಸೂಚ್ಯಂಕವು ಭಾರತದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. +ನಮಗೆ ದೇಶ ಮತ್ತು ವಿದೇಶಗಳೆರಡೂ ಸವಾಲಾಗಿದೆ, ನಿಜವಾಗಿಯೂ ಅನ್ಯಾಯದ ಸ್ಪರ್ಧೆಯಿಂದ ರಕ್ಷಣೆಯಾಗಿದೆ. ನಾವು ಡೇಟಾವನ್ನು ಹೇಗೆ ಪಡೆಯುತ್ತೇವೆ, ನಾವು ಹೇಗೆ ತಿಳುವಳಿಕೆಯನ್ನು ಬೆಳೆಸಿಕೊಳ್ಳುತ್ತೇವೆ, ನೀತಿಗಳಲ್ಲಿ ಫೀಡ್ಗಳನ್ನು ನಾವು ಹೇಗೆ ಖಚಿತಪಡಿಸಿಕೊಳ್ಳುತ್ತೇವೆ? ಹಾಗಾದರೆ ಹೇಗೆ ನಾವು ನಮ್ಮ ರಕ್ಷಣೆಯನ್ನು ನಿರ್ಮಿಸುತ್ತೇವೆಯೇ?ಮತ್ತು ಅನ್ಯಾಯದ ಸ್ಪರ್ಧೆಯ ವಿರುದ್ಧ ನಾವು ಹೇಗೆ ಕ್ರಮ ತೆಗೆದುಕೊಳ್ಳುತ್ತೇವೆ ಏಕೆಂದರೆ ಬಹಳ ಸಮಯದಿಂದ ಈ ದೇಶವು (ಭಾರತ) ಜಾಗತೀಕರಣದ ಯುಗವಿದೆ ಎಂಬ ಹೆಸರಿನಲ್ಲಿ ಅನ್ಯಾಯದ ಸ್ಪರ್ಧೆಯನ್ನು ಎದುರಿಸುತ್ತಿದೆ, ಐಸಾ ಹಿ ಹೋತಾ ಹೈ, ನಾವು ಅದರೊಂದಿಗೆ ಬದುಕಬೇಕು ಎಂದಿದ್ದಾರೆ. +ನಾವು ಅದರೊಂದಿಗೆ ಬದುಕಬೇಕಾಗಿಲ್ಲ. ಸ್ಪರ್ಧೆಯು ಅನ್ಯಾಯವಾಗಿದ್ದರೆ, ಅದನ್ನು ಕರೆಯುವ ಸಾಮಥ್ರ್ಯ ನಮಗಿರಬೇಕು ಮತ್ತು ಅಂತಿಮವಾಗಿ, ಜಗತ್ತು ಜಾಗತೀಕರಣಗೊಳ್ಳುತ್ತಿರುವ ಕಾರಣ ನಾವು ಭಾರತದ ಜಾಗತೀಕರಣಕ್ಕೆ ಹೇಗೆ ಸಹಾಯ ಮಾಡುತ್ತೇವೆ. ಇತಿಹಾಸವು ನಮ್ಮ ಕಡೆ ಇದೆ. ಅಳೆಯಬಹುದಾದ ಸೂಚ್ಯಂಕವು ನಮ್ಮ ಪರವಾಗಿ ಕೆಲಸ ಮಾಡುತ್ತಿದೆ. ಆ 25 ವರ್ಷಗಳಲ್ಲಿ, ಆ 25 ವರ್ಷಗಳು ಭಾರತದಲ್ಲಿ ಕೇವಲ ವಿಕ್ಷಿತ ಭಾರತವಾಗಿ ಬೆಳೆಯುವುದಿಲ್ಲ. ಇದು ವಾಸ್ತವವಾಗಿ ವಿಶ್ವದಲ್ಲಿ ವಿಕ್ಷಿತ್ ಭಾರತವಾಗಿ ಬೆಳೆಯುತ್ತಿದೆ ಎಂದು ಅವರು ಹೇಳಿದರು. +ಭಾರತ-ಪ್ಯಾಲೇಸ್ತೀನ್‍ ದೀರ್ಘಕಾಲದ ಸಂಬಂಧ ಮುಂದುವರೆಯಲಿದೆ : ಜೈಶಂಕರ್ +ವಿಶ್ವದಲ್ಲಿ ಭಾರತದ ಸ್ಥಾನವು ಕಾಲಾನಂತರದಲ್ಲಿ ಹೇಗೆ ಬದಲಾಗಿದೆ ಎಂಬುದನ್ನು ಎತ್ತಿ ತೋರಿಸಿದ ಜೈಶಂಕರ್, 15 ವರ್ಷಗಳ ಹಿಂದೆ ಭಾರತವನ್ನು ವಿಶ್ವದ ಬ್ಯಾಕ್ ಆಫೀಸ್ ಎಂದು ಕರೆಯಲಾಗುತ್ತಿತ್ತು ಎಂದು ಹೇಳಿದರು. ಆದಾಗ್ಯೂ, ಇಂದು ಭಾರತವನ್ನು ವಿಶ್ವದ ಔಷಧಾಲಯ, ಪ್ರಪಂಚದ ವಿನ್ಯಾಸಕ ಮತ್ತು ಪ್ರಪಂಚದ ಉತ್ಪಾದಕ ಎಂದು ಕರೆಯಲಾಗುತ್ತದೆ ಎಂದು ಅವರು ಹೇಳಿದರು. +ಸುಮಾರು 15 ವರ್ಷಗಳ ಹಿಂದೆ ನಾನು ಹೇಳುತ್ತೇನೆ, ನಮ್ಮನ್ನು ಪ್ರಪಂಚದ ಬ್ಯಾಕ್ ಆಫೀಸ್ ಎಂದು ಕರೆಯಲಾಗುತ್ತಿತ್ತು, ಇಂದು ನಮ್ಮನ್ನು ವಿಶ್ವದ ಫಾರ್ಮಸಿ ಎಂದು ಕರೆಯಲಾಗುತ್ತದೆ, ನಮ್ಮನ್ನು ಪ್ರಪಂಚದ ವಿನ್ಯಾಸಕ ಎಂದು ಕರೆಯಲಾಗುತ್ತದೆ, ನಮ್ಮನ್ನು ಸಂಶೋಧಕ ಎಂದು ಕರೆಯಲಾಗುತ್ತದೆ. ಪ್ರಪಂಚದ, ನಮ್ಮನ್ನು ಪ್ರಪಂಚದ ನಿರ್ಮಾಪಕ ಎಂದು ಕರೆಯಲಾಗುತ್ತದೆ. ನೀವು ಬಯಸಿದರೆ ನಮ್ಮನ್ನು ಡಿಜಿಟಲ್ ಎಂದು ಕರೆಯಲಾಗುತ್ತದೆ, ಒಂದು ಅರ್ಥದಲ್ಲಿ, ಡಿಜಿಟಲ್ ಪಯೋನಿಯರ್ ಎಂದು ಅವರು ಬಣ್ಣಿಸಿದರು. \ No newline at end of file diff --git a/eesanje/url_47_219_12.txt b/eesanje/url_47_219_12.txt new file mode 100644 index 0000000000000000000000000000000000000000..995e37e38f62a40bb838f26c36da520f175908ef --- /dev/null +++ b/eesanje/url_47_219_12.txt @@ -0,0 +1,6 @@ +ಸಿಕ್ಕಿಬಿದ್ದ ಕರ್ಣಿ ಸೇನೆಯ ಮುಖ್ಯಸ್ಥನ ಹಂತಕರು +ನವದೆಹಲಿ, ಡಿ 10 (ಪಿಟಿಐ) ರಜಪೂತ ಕರ್ಣಿ ಸೇನೆಯ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಸ್ಥಾನ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ಅಪರಾಧ ವಿಭಾಗವು ಇಬ್ಬರು ಶೂಟರ್‍ಗಳು ಸೇರಿದಂತೆ ಮೂವರನ್ನು ಚಂಡೀಗಢದಿಂದ ಬಂಧಿಸಿದೆ. ಡಿ 5 ರಂದು ಜೈಪುರದ ಅವರ ಮನೆಯ ಲಿವಿಂಗ್ ರೂಮ್‍ನಲ್ಲಿ ಗೊಗಮೆಡಿ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಗೊಗಮೆಡಿಯಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಭಾರಿ ವೈರಲ್ ಆಗಿತ್ತು. + ಪ್ರಯೋಗ : ಭವಿಷ್ಯದ ಯುದ್ಧಗಳಿಗೆ ಹೊಸ ರೂಪ ನೀಡಿದ ಇಸ್ರೇಲ್ +ಇಬ್ಬರು ಆರೋಪಿಗಳನ್ನು ಜೈಪುರದ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗಢದ ನಿತಿನ್ ಫೌಜಿ ಎಂದು ಪೊಲೀಸರು ಗುರುತಿಸಿದ್ದಾರೆ ಮತ್ತು ಅವರ ಬಂಧನಕ್ಕೆ ಕಾರಣವಾಗುವ ಮಾಹಿತಿಗಾಗಿ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದ್ದಾರೆ. +ದೆಹಲಿ ಪೊಲೀಸ್ ಮೂಲಗಳು ಭಾನುವಾರ ರಾಜಸ್ಥಾನ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ ಅಪರಾಧ ವಿಭಾಗದ ತಂಡವು ಚಂಡೀಗಢದ ಸೆಕ್ಟರ್ 22 ರಿಂದ ಇಬ್ಬರನ್ನು ಬಂಧಿಸಿದೆ ಎಂದು ಹೇಳಿದರು. ಅವರ ಜೊತೆಯಲ್ಲಿ ಮತ್ತೊಬ್ಬ ಸಹಚರ ಉಧಮ್ ಸಿಂಗ್ ಕೂಡ ಸಿಕ್ಕಿಬಿದ್ದಿದ್ದಾನೆ. +ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಜೈಪುರ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಯನ್ನು ಬಂಸಲು ರಾಜಸ್ಥಾನ ಪೊಲೀಸರು 11 ಸದಸ್ಯರ ಎಸ್‍ಐಟಿ ರಚಿಸಿದ್ದರು. \ No newline at end of file diff --git a/eesanje/url_47_219_2.txt b/eesanje/url_47_219_2.txt new file mode 100644 index 0000000000000000000000000000000000000000..3a55cf34d0e81221ef56ab283ae67fdc062a271e --- /dev/null +++ b/eesanje/url_47_219_2.txt @@ -0,0 +1,7 @@ +2 ವರ್ಷದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆದ 13 ಕೋಟಿ ಭಕ್ತರು +ವಾರಣಾಸಿ, ಡಿ.11- ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ಧಾಮದಲ್ಲಿ ಭಕ್ತರಿಗೆ ಪ್ರವೇಶ ಮತ್ತು ಸೌಕರ್ಯಗಳನ್ನು ಹೆಚ್ಚಿಸುವ ಯೋಗಿ ಸರ್ಕಾರದ ಅಚಲ ಬದ್ಧತೆಯ ಪರಿಣಾಮವಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಕಳೆದ ಎರಡು ವರ್ಷಗಳಲ್ಲಿ 16,000 ಅಂತರಾಷ್ಟ್ರೀಯ ಪ್ರವಾಸಿಗರು ಸೇರಿದಂತೆ 13 ಕೋಟಿಗೂ ಹೆಚ್ಚು ಭಕ್ತರು ಕಳೆದ ಬಾರಿ ಈ ಪವಿತ್ರ ಕ್ಷೇತ್ರಕ್ಕೆ ಆಗಮಿಸಿದ್ದಾರೆ. +ಕಾಶಿ ವಿಶ್ವನಾಥ ಧಾಮ ಮತ್ತು ವಿಶೇಷ ಪ್ರದೇಶಾಭಿವೃದ್ಧಿ ಪ್ರಾಕಾರದ ಮುಖ್ಯ ಕಾರ್ಯನಿರ್ವಹಣಾಕಾರಿ ಸುನಿಲ್ ವರ್ಮಾ, ಡಿಸೆಂಬರ್ 13, 2021 ರಿಂದ ಡಿಸೆಂಬರ್ 6, 2023 ರವರೆಗೆ 15,930 ವಿದೇಶಿ ಭಕ್ತರು ಪೂಜ್ಯ ವಿಶ್ವನಾಥ ದೇವಾಲಯದ ತಡೆರಹಿತ ದರ್ಶನಕ್ಕಾಗಿ ಕಾಯ್ದಿರಿಸಿದ್ದಾರೆ ಎಂದು ಹಂಚಿಕೊಂಡಿದ್ದಾರೆ. +ಡಿಸೆಂಬರ್ 13, 2021 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪುನರುಜ್ಜೀವನಗೊಂಡ ಕಾಶಿ ವಿಶ್ವನಾಥ ದೇವಾಲಯದ ಶುಭ ಉದ್ಘಾಟನೆಯಿಂದ, ಯಾತ್ರಾಸ್ಥಳವು ಅಭೂತಪೂರ್ವ ಪಾದಯಾತ್ರೆಯನ್ನು ಅನುಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಲೋಕಸಭೆ ಚುನಾವಣೆಗೆ ಅಣ್ಣಾವ್ರ ಕುಟುಂಬದ ವರ್ಚಸ್ಸು ಬಳಕೆಗೆ ಡಿಕೆಶಿ ಗೇಮ್ ಪ್ಲಾನ್ +ವರ್ಮಾ ಅವರು 2022 ಕ್ಕೆ ಹೋಲಿಸಿದರೆ, 2023 ರ ಬುಕಿಂಗ್ ಸುಮಾರು ದ್ವಿಗುಣಗೊಂಡಿದೆ ಎಂದು ಹೈಲೈಟ್ ಮಾಡುವ ಮೂಲಕ ಹೆಚ್ಚುತ್ತಿರುವ ಆಸಕ್ತಿಯನ್ನು ಒತ್ತಿಹೇಳಿದರು, ಇದು ಕಾಶಿಯಲ್ಲಿ ನೀಡುವ ಆಧ್ಯಾತ್ಮಿಕ ಅನುಭವಕ್ಕಾಗಿ ದೇಶೀಯ ಮತ್ತು ಅಂತರರಾಷ್ಟ್ರೀಯ ಉತ್ಸಾಹದಲ್ಲಿ ಗಮನಾರ್ಹ ಏರಿಕೆಯನ್ನು ಸೂಚಿಸುತ್ತದೆ. +ಯಾತ್ರಾಸ್ಥಳವು ಧಾರ್ಮಿಕ ಪ್ರವಾಸೋದ್ಯಮದಲ್ಲಿ ಗಣನೀಯ ಹೆಚ್ಚಳಕ್ಕೆ ಸಾಕ್ಷಿಯಾಗಿದೆ, ಡಿಸೆಂಬರ್ 13, 2021 ರಿಂದ ಡಿಸೆಂಬರ್ 6, 2023 ರವರೆಗೆ 12 ಕೋಟಿ 92 ಲಕ್ಷದ 24 ಸಾವಿರ ಜನರು ಭೇಟಿ ನೀಡಿದ್ದಾರೆ ಎಂದು ಸಿಇಒ ತಿಳಿಸಿದ್ದಾರೆ.ಸಿಇಒ ಪ್ರಕಾರ, ಡಿಸೆಂಬರ್ 2021 ರಲ್ಲಿ ಭಕ್ತರ ಸಂಖ್ಯೆ 40, ಜನವರಿ 1, 2022 ರಿಂದ ಡಿಸೆಂಬರ್ 31, 2022 ರ ನಡುವೆ 4540 ಮತ್ತು ಜನವರಿ 1, 2023 ರಿಂದ ಡಿಸೆಂಬರ್ 6, 2023 ರ ನಡುವೆ 11,350 ಆಗಿದೆ. \ No newline at end of file diff --git a/eesanje/url_47_219_3.txt b/eesanje/url_47_219_3.txt new file mode 100644 index 0000000000000000000000000000000000000000..3827effbdf0bc775d0cfa2c775d05e9f6088eb87 --- /dev/null +++ b/eesanje/url_47_219_3.txt @@ -0,0 +1,6 @@ +ಮೆಹಬೂಬಾ ಮುಫ್ತಿಗೆ ಗೃಹಬಂಧನ +ಶ್ರೀನಗರ, ಡಿ.11 (ಪಿಟಿಐ) ಜಮ್ಮುವಿಗೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ನ ತೀರ್ಪು ಹೊರಬೀಳುವ ಮುನ್ನವೇ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. +ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನವೇ, ಪೊಲೀಸರು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿದ್ದಾರೆ ಮತ್ತು ಅವರನ್ನು ಅಕ್ರಮ ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಪಕ್ಷವು ಎಕ್ಸ್ನ ಪೊಸ್ಟ್ನಲ್ಲಿ ತಿಳಿಸಿದೆ. +ಏತನ್ಮಧ್ಯೆ, ನ್ಯಾಷನಲ್ ಕಾನರೆನ್ಸ್ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ಗುಪ್ಕಾರ್ನಲ್ಲಿರುವ ನಿವಾಸದ ಬಳಿ ಪತ್ರಕರ್ತರಿಗೆ ಸೇರಲು ಪೊಲೀಸರು ಅವಕಾಶ ನೀಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುಪ್ಕಾರ್ ರಸ್ತೆಯ ಪ್ರವೇಶ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಎನ್ಸಿ ನಾಯಕರ ನಿವಾಸದ ಬಳಿ ಎಲ್ಲೂ ಪತ್ರಕರ್ತರನ್ನು ಬಿಡಲಿಲ್ಲ. +ಹಮಾಸ್‌ನಿಂದ ಒತ್ತೆಯಾಳುಗಳ ನರಮೇಧದ ಬೆದರಿಕೆ, ಬಾಂಬ್ ದಾಳಿ ಮೂಲಕ ಇಸ್ರೇಲ್ ಉತ್ತರ +ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 2020 ರಲ್ಲಿ ತಮ್ಮ ಅಕೃತ ನಿವಾಸವನ್ನು ಖಾಲಿ ಮಾಡಿದ ನಂತರ ತಮ್ಮ ತಂದೆಯೊಂದಿಗೆ ವಾಸಿಸುತ್ತಿದ್ದಾರೆ.ಶ್ರೀನಗರದ ಸಂಸತ್ ಸದಸ್ಯರಾಗಿರುವ ಫಾರೂಕ್ ಅಬ್ದುಲ್ಲಾ ಅವರು ನಡೆಯುತ್ತಿರುವ ಸಂಸತ್ ಅವೇಶನಕ್ಕಾಗಿ ದೆಹಲಿಯಲ್ಲಿದ್ದರೆ, ಅವರ ಮಗ ಕಣಿವೆಯಲ್ಲಿದ್ದಾರೆ. \ No newline at end of file diff --git a/eesanje/url_47_219_4.txt b/eesanje/url_47_219_4.txt new file mode 100644 index 0000000000000000000000000000000000000000..31233a28d48a570b17c815f79d68a8ebc0b6366b --- /dev/null +++ b/eesanje/url_47_219_4.txt @@ -0,0 +1,6 @@ +ಪತ್ನಿ ಮತ್ತು ಇಬ್ಬರು ಪುತ್ರರನ್ನು ಕೊಂದು ತಂದೆ ಆತ್ಮಹತ್ಯೆ +ಬಲ್ಲಿಯಾ, ಡಿ 11 (ಪಿಟಿಐ) ಕೌಟುಂಬಿಕ ಕಲಹಗಳಿಂದಾಗಿ 35 ವರ್ಷದ ವ್ಯಕ್ತಿಯೊಬ್ಬರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸಂಭವಿಸಿದೆ. +ಶಶಿಕಲಾ (30) ಮತ್ತು ಅವರ ಇಬ್ಬರು ಮಕ್ಕಳಾದ ಸೂರ್ಯ ರಾವ್ (7) ಮತ್ತು ಮಿತ್ತು (4 ತಿಂಗಳು) ಅವರ ಮೃತದೇಹಗಳು ದೇವದೀ ಗ್ರಾಮದ ಅವರ ಮನೆಯ ಮುಂಭಾಗದ ತೋಟದಲ್ಲಿ ಪತ್ತೆಯಾಗಿದ್ದು, ಶ್ರವಣ್ ರಾಮ್ (35) ಸಮೀಪದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ತಿಳಿಸಿದ್ದಾರೆ. +ಮೂವರನ್ನು ಯಾವುದೋ ಹರಿತವಾದ ಆಯುಧದಿಂದ ಹತ್ಯೆಗೈದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದರು.ರಾಮ್ ಅವರ ಜೇಬಿನಿಂದ ಆತ್ಮಹತ್ಯೆ ಪತ್ರವೊಂದು ಪೊಲೀಸರಿಗೆ ಸಿಕ್ಕಿದ್ದು, ಅದರಲ್ಲಿ ಕೌಟುಂಬಿಕ ಕಲಹದಿಂದ ಕುಟುಂಬವನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾನೆ. +ಹಮಾಸ್‌ನಿಂದ ಒತ್ತೆಯಾಳುಗಳ ನರಮೇಧದ ಬೆದರಿಕೆ, ಬಾಂಬ್ ದಾಳಿ ಮೂಲಕ ಇಸ್ರೇಲ್ ಉತ್ತರ +ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ರಾಮ್ ಮತ್ತು ಆತನ ಪತ್ನಿ ನಡುವೆ ಕೌಟುಂಬಿಕ ಕಲಹ ಪ್ರಕರಣ ನಡೆಯುತ್ತಿದೆ ಎಂದು ರಾಮ್ ಅವರ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ. ಭಾನುವಾರವೂ ದಂಪತಿ ನಡುವೆ ಯಾವುದೋ ವಿಷಯಕ್ಕೆ ಜಗಳವಾಗಿದ್ದು, ನಂತರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_219_5.txt b/eesanje/url_47_219_5.txt new file mode 100644 index 0000000000000000000000000000000000000000..fd8c1e707a23ffcc58b06a504930e7a6a2986a05 --- /dev/null +++ b/eesanje/url_47_219_5.txt @@ -0,0 +1,9 @@ +50 ಅಧಿಕಾರಿಗಳು, 40 ಎಣಿಕೆ ಯಂತ್ರ, ಎಣಿಸಿದಷ್ಟು ಹೆಚ್ಚುತ್ತಲೆ ಇದೆ ಸಾಹು ಸಂಪತ್ತು +ನವದೆಹಲಿ,ಡಿ.11- ಐವತ್ತು ಬ್ಯಾಂಕ್ ಅಧಿಕಾರಿಗಳು, 40 ಎಣಿಕೆ ಯಂತ್ರಗಳು ಮತ್ತು ಐದು ದಿನಗಳ ದಣಿವರಿಯದೆ ಹಣ ಎಣಿಕೆ ಮಾಡುತ್ತಿದ್ದರು ಕಂತೆ ಕಂತೆ ಹಣ ಮಾತ್ರ ಇನ್ನು ಬಾಕಿ ಉಳಿದಿರುವುದು ದಿಗ್ಭ್ರಮೆಗೊಳಿಸಿದೆ. ಕಾಂಗ್ರೆಸ್ ಸಂಸದರ ಕುಟುಂಬದ ಒಡೆತನದ ಒಡಿಶಾ ಮೂಲದ ಡಿಸ್ಟಿಲರಿಯಿಂದ 353.5 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಈ ಅಭೂತಪೂರ್ವ ಸಾಗಾಟವು ಭಾರತದಲ್ಲಿನ ಯಾವುದೇ ತನಿಖಾ ಸಂಸ್ಥೆಯು ಇದುವರೆಗೆ ಮಾಡಿದ ಅತಿದೊಡ್ಡ ದಾಳಿ ಇದಾಗಿದ್ದು, ಇದು ಹಿಂದಿನ ಎಲ್ಲಾ ದಾಖಲೆಗಳನ್ನು ಛಿದ್ರಗೊಳಿಸಿದೆ. +ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಅವರಿಗೆ ಸಂಬಂಧಿಸಿದ ಆವರಣಗಳನ್ನು ರಾಂಚಿ ಮತ್ತು ಇತರ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಶೋಸಲಾಗಿದೆ. ಒಡಿಶಾದಲ್ಲಿ ನಗದು ಎಣಿಕೆ ಬಹುತೇಕ ಪೂರ್ಣಗೊಂಡಿದೆ ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಬಲಂಗೀರ್ ಜಿಲ್ಲೆ ಅತ್ಯಂತ ಮಹತ್ವದ ಚೇತರಿಕೆಗೆ ಸಾಕ್ಷಿಯಾಗಿದ್ದು, ಅಂದಾಜು 305 ಕೋಟಿ ಪತ್ತೆಯಾಗಿದೆ. ಸಂಬಲ್ಪುರ ಮತ್ತು ತಿತ್ಲಗಢ ಕ್ರಮವಾಗಿ 37.5 ಕೋಟಿ ಮತ್ತು 11 ಕೋಟಿಗಳೊಂದಿಗೆ ನಂತರದ ಸ್ಥಾನದಲ್ಲಿದೆ. +ಆದಾಯ ತೆರಿಗೆ ಇಲಾಖೆಯು ಇತ್ತೀಚಿನ ದಾಳಿಯಲ್ಲಿ ವಶಪಡಿಸಿಕೊಂಡ ಎಲ್ಲಾ ಹಣವನ್ನು ಇಂದು ಬಲಂಗಿರ್ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮುಖ್ಯ ಶಾಖೆಯಲ್ಲಿ ಠೇವಣಿ ಮಾಡಲಿದೆ. ಈ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ಬ್ಯಾಂಕ್ ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಎಸ್ಬಿಐ ಪ್ರಾದೇಶಿಕ ವ್ಯವಸ್ಥಾಪಕರು ಖಚಿತಪಡಿಸಿದ್ದಾರೆ. +ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ‘ರಹಸ್ಯ ಮೆಮೊ’ ಹೊರಡಿಸಿಲ್ಲ : ಭಾರತ +ಎಸ್ಬಿಐ ಪ್ರಾದೇಶಿಕ ಮ್ಯಾನೇಜರ್ ಭಗತ್ ಬೆಹೆರಾ ಅವರು ವಶಪಡಿಸಿಕೊಂಡ ನಗದಿನ ಎಣಿಕೆಯ ಬಗ್ಗೆ ನವೀಕರಣವನ್ನು ನೀಡಿದರು. ತಂಡಗಳು 176 ಬ್ಯಾಗ್ಗಳಲ್ಲಿ 140 ಅನ್ನು ಪ್ರಕ್ರಿಯೆಗೊಳಿಸಿವೆ, ಉಳಿದ 36 ಬ್ಯಾಗ್ಗಳನ್ನು ಇಂದು ಎಣಿಕೆಗೆ ನಿಗದಿಪಡಿಸಲಾಗಿದೆ ಎಂದು ಅವರು ಬಹಿರಂಗಪಡಿಸಿದರು. +ನಾವು 176 ಬ್ಯಾಗ್ಗಳನ್ನು ಸ್ವೀಕರಿಸಿದ್ದೇವೆ ಮತ್ತು ಅವುಗಳಲ್ಲಿ 140 ಎಣಿಕೆ ಮಾಡಲಾಗಿದೆ, ಉಳಿದವುಗಳನ್ನು ಇಂದು ಎಣಿಸಲಾಗುತ್ತದೆ. 3 ಬ್ಯಾಂಕ್ಗಳ ಅಧಿಕಾರಿಗಳು ಎಣಿಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ನಮ್ಮ 50 ಅಧಿಕಾರಿಗಳು ಭಾಗಿಯಾಗಿದ್ದಾರೆ. ಸುಮಾರು 40 (ಕರೆನ್ಸಿ ಎಣಿಕೆ) ಯಂತ್ರಗಳನ್ನು ಇಲ್ಲಿಗೆ ತರಲಾಗಿದೆ. 25 ಬಳಕೆಯಲ್ಲಿವೆ ಮತ್ತು 15 ಅನ್ನು ಬ್ಯಾಕಪ್ ಆಗಿ ಇರಿಸಲಾಗಿದೆ ಎಂದು ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. + +ನಿನ್ನೆ, ಆದಾಯ ತೆರಿಗೆ ಇಲಾಖೆಯು ಬೌಧ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಮೇಲೆ ತನ್ನ ದಾಳಿಯನ್ನು ಮುಂದುವರೆಸಿದೆ, ಸಾಹು ಅವರ ಕುಟುಂಬಕ್ಕೆ ಸಂಬಂಧಿಸಿದೆ ಎನ್ನಲಾದ ಕಂಪನಿಯಾದ ಬಲ್ದೇವ್ ಸಾಹು ಇನ್ರಾ ಪ್ರೈವೇಟ್ ಲಿಮಿಟೆಡ್ ಅನ್ನು ಸೇರಿಸಲು ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ. \ No newline at end of file diff --git a/eesanje/url_47_219_6.txt b/eesanje/url_47_219_6.txt new file mode 100644 index 0000000000000000000000000000000000000000..2c3becd2f2a7a2988646c91d7571d8e46bb07a80 --- /dev/null +++ b/eesanje/url_47_219_6.txt @@ -0,0 +1,7 @@ +ಜಾರ್ಖಾಂಡ್ ಸಿಎಂಗೆ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವರೇ ಸೊರೆನ್..? +ರಾಂಚಿ, ಡಿ 11 (ಪಿಟಿಐ) ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ ಎಂದು ಅಕೃತ ಮೂಲಗಳು ತಿಳಿಸಿವೆ. +ಇಲ್ಲಿನ ಫೆಡರಲ್ ಏಜೆನ್ಸಿಯ ಕಚೇರಿಯಲ್ಲಿ ಸೊರೆನ್ ಅವರನ್ನು ಪದಚ್ಯುತಗೊಳಿಸಲು ಮತ್ತು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲು ಕೇಳಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.ಮುಖ್ಯಮಂತ್ರಿಗೆ ಸಮನ್ಸ್ ಡಿಸೆಂಬರ್ 12 ಕ್ಕೆ ಇದೆ ಹೀಗಾಗಿ ಅವರು ನಾಳೆ ಇಡಿ ವಿಚಾರಣೆಗೆ ಒಳಗಾಗಬೇಕಾಗುತ್ತದೆ. +ಇದು ಸೋರೆನ್ ಅವರಿಗೆ ನೀಡಲಾದ ಆರನೇ ನೋಟಿಸ್ ಆಗಿದೆ, ಆದರೆ ಅವರು ಇಡಿ ಕ್ರಮದಿಂದ ರಕ್ಷಣೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರಿಂದ ಅವರು ಎಂದಿಗೂ ಪದಚ್ಯುತಗೊಳಿಸಲಿಲ್ಲ. ಜಾರ್ಖಂಡ್ನಲ್ಲಿ ಮಾಫಿಯಾದಿಂದ ಭೂಮಿಯ ಮಾಲೀಕತ್ವದ ಅಕ್ರಮ ಬದಲಾವಣೆಯ ಬೃಹತ್ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಇಡಿ ತನಿಖೆಗೆ ಸಂಬಂಧಿಸಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-12-2023) +ಈ ಪ್ರಕರಣದಲ್ಲಿ 2011ರ ಬ್ಯಾಚ್ನ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಛಾವಿ ರಂಜನ್ ಸೇರಿದಂತೆ 14 ಜನರನ್ನು ಏಜೆನ್ಸಿ ಬಂಧಿಸಿದೆ, ಅವರು ಈ ಹಿಂದೆ ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಮತ್ತು ರಾಂಚಿಯ ಡೆಪ್ಯುಟಿ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. +48 ವರ್ಷದ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ಕಳೆದ ವರ್ಷ ನವೆಂಬರ್ನಲ್ಲಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಮತ್ತೊಂದು ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಪ್ರಶ್ನಿಸಿತ್ತು. \ No newline at end of file diff --git a/eesanje/url_47_219_7.txt b/eesanje/url_47_219_7.txt new file mode 100644 index 0000000000000000000000000000000000000000..35d6a1f0ba56895025275131afb8a82c13db0c67 --- /dev/null +++ b/eesanje/url_47_219_7.txt @@ -0,0 +1,7 @@ +ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ‘ರಹಸ್ಯ ಮೆಮೊ’ ಹೊರಡಿಸಿಲ್ಲ : ಭಾರತ +ನವದೆಹಲಿ, ಡಿ 11 (ಪಿಟಿಐ) ಹರ್ದೀಪ್ ಸೇರಿದಂತೆ ಕೆಲವು ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲು ಏಪ್ರಿಲ್ನಲ್ಲಿ ನವದೆಹಲಿಯು ರಹಸ್ಯ ಮೆಮೊ ಹೊರಡಿಸಿದೆ ಎಂದು ಹೇಳುವ ಮಾಧ್ಯಮ ವರದಿಯನ್ನು ಭಾರತವು ನಕಲಿ ಮತ್ತು ಸಂಪೂರ್ಣವಾಗಿ ಕಟ್ಟು ಎಂದು ಬಣ್ಣಿಸಿದೆ. +ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಈ ವರದಿಯು ಭಾರತದ ವಿರುದ್ಧದ ನಿರಂತರವಾದ ತಪ್ಪು ಮಾಹಿತಿ ಅಭಿಯಾನದ ಭಾಗವಾಗಿದೆ ಮತ್ತು ಅದನ್ನು ಪ್ರಕಟಿಸಿದ ಔಟ್ಲೆಟ್ ಪಾಕಿಸ್ತಾನಿ ಗುಪ್ತಚರರಿಂದ ನಕಲಿ ನಿರೂಪಣೆಗಳನ್ನು ಪ್ರಚಾರ ಮಾಡುವುದಕ್ಕೆ ಹೆಸರುವಾಸಿಯಾಗಿದೆ ಎಂದು ಹೇಳಿದರು.ಈ ವರದಿಯನ್ನು ಆನ್ಲೈನ್ ಅಮೇರಿಕನ್ ಮಾಧ್ಯಮ ಔಟ್ಲೆಟ್ ದಿ ಇಂಟರ್ಸೆಪ್ಟ್ ಪ್ರಕಟಿಸಿದೆ. +ಅಂತಹ ವರದಿಗಳು ನಕಲಿ ಮತ್ತು ಸಂಪೂರ್ಣವಾಗಿ ಸುಳ್ಳು ಎಂದು ನಾವು ಬಲವಾಗಿ ಪ್ರತಿಪಾದಿಸುತ್ತೇವೆ. ಅಂತಹ ಯಾವುದೇ ಮೆಮೊ ಇಲ್ಲ ಎಂದು ಬಾಗ್ಚಿ ಹೇಳಿದರು.ಇದು ಭಾರತದ ವಿರುದ್ಧ ನಿರಂತರವಾದ ತಪ್ಪು ಮಾಹಿತಿ ಅಭಿಯಾನದ ಭಾಗವಾಗಿದೆ. ಪ್ರಶ್ನೆಯಲ್ಲಿರುವ ಔಟ್ಲೆಟ್ ಪಾಕಿಸ್ತಾನಿ ಗುಪ್ತಚರರಿಂದ ನಕಲಿ ನಿರೂಪಣೆಗಳನ್ನು ಪ್ರಚಾರ ಮಾಡಲು ಹೆಸರುವಾಸಿಯಾಗಿದೆ. ಲೇಖಕರ ಪೊಸ್ಟ್ಗಳು ಈ ಸಂಬಂಧವನ್ನು ದೃಢೀಕರಿಸುತ್ತವೆ, ಅವರು ಸೇರಿಸಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-12-2023) +ಅಂತಹ ನಕಲಿ ಸುದ್ದಿಗಳನ್ನು ರ್ವಸುವವರು ತಮ್ಮ ವಿಶ್ವಾಸಾರ್ಹತೆಯ ವೆಚ್ಚದಲ್ಲಿ ಮಾತ್ರ ಮಾಡುತ್ತಾರೆ ಎಂದು ವರದಿಯ ಕುರಿತು ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಬಾಗ್ಚಿ ಹೇಳಿದರು. ಸೆಪ್ಟೆಂಬರ್ನಲ್ಲಿ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಜೂನ್ 18 ರಂದು ಕೆನಡಾದ ನೆಲದಲ್ಲಿ ಖಲಿಸ್ತಾನಿ ಉಗ್ರಗಾಮಿ ನಿಜ್ಜರ್ನ ಹತ್ಯೆಯಲ್ಲಿ ಭಾರತೀಯ ಏಜೆಂಟ್ಗಳ ಸಂಭಾವ್ಯ ಒಳಗೊಳ್ಳುವಿಕೆಯ ಆರೋಪವನ್ನು ಹೊರಿಸಿದರು. +ಭಾರತವು ಆರೋಪಗಳನ್ನು ಬಲವಾಗಿ ತಳ್ಳಿಹಾಕಿತು, ಅವುಗಳನ್ನು ಅಸಂಬದ್ಧ ಎಂದು ಕರೆದಿದೆ.ದಿ ಇಂಟರ್ಸೆಪ್ಟ್ ತನ್ನ ವರದಿಯಲ್ಲಿ, ಪಾಶ್ಚಿಮಾತ್ಯ ದೇಶಗಳಲ್ಲಿ ಕೆಲವು ಸಿಖ್ ಘಟಕಗಳ ವಿರುದ್ಧ ಭಾರತ ಸರ್ಕಾರವು ಕ್ರ್ಯಾಕ್ಡೌನ್ ಸ್ಕೀಮï ಕುರಿತು ಸೂಚನೆಗಳನ್ನು ನೀಡಿದೆ ಎಂದು ಹೇಳಿಕೊಂಡಿದೆ \ No newline at end of file diff --git a/eesanje/url_47_219_8.txt b/eesanje/url_47_219_8.txt new file mode 100644 index 0000000000000000000000000000000000000000..f3e4c379cd0b8ef267e7f05e788fd7802017ef33 --- /dev/null +++ b/eesanje/url_47_219_8.txt @@ -0,0 +1,6 @@ +ಹಳಿತಪ್ಪಿದ ಗೂಡ್ಸ್ ರೈಲಿನ ಏಳು ವ್ಯಾಗನ್‌ಗಳು +ಮುಂಬೈ, ಡಿ. 11-ಸೆಂಟ್ರಲ್ ರೈಲ್ವೇಯ ಮುಂಬೈ ಸಮೀಪದ ಕಸಾರಾ ಮತ್ತು ಟಿಜಿಆರ್ -3 ನಿಲ್ದಾಣದ ನಡುವೆ ಗೂಡ್ಸ್ ರೈಲಿನ ಏಳು ವ್ಯಾಗನ್ಗಳು ಹಳಿತಪ್ಪಿದ ನಂತರ 12 ಗಂಟೆ ಸತತ ಕಾರ್ಯಾಚರಣೆ ನಡೆಸಿ ಮಾರ್ಗ ಮುಕ್ತಗೊಳಿಸಲಾಗಿದೆ . +ಗೂಡ್ಸ್ ರೈಲಿನ ಏಳು ಲೋಡ್ ವ್ಯಾಗನ್ಗಳು ಮುಂಬೈನಿಂದ ಸುಮಾರು 125 ಕಿಮೀ ದೂರದಲ್ಲಿರುವ ಕಾಸರ ಮತ್ತು ಟಿಜಿಆರ್ -3 ನಿಲ್ದಾಣದ ನಡುವೆ ಭಾನುವಾರ ಸಂಜೆ 6.30 ರ ಸುಮಾರಿಗೆ ಹಳಿತಪ್ಪಿದವು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-12-2023) +ಅಪಘಾತದ ಸ್ಥಳದಿಂದ ಹಳಿತಪ್ಪಿದ ಎಲ್ಲಾ ವ್ಯಾಗನ್ಗಳನ್ನು ಈಗ ಹಳಿಯಿಮದ ತೆಗೆದುಹಾಕಲಾಗಿದೆ. ಉಳಿದ ವ್ಯಾಗನ್ಗಳನ್ನು ಕಾಸರ ಅಂಗಳಕ್ಕೆ ಹಿಂತಿರುಗಿಸುವ ಕಾರ್ಯ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸಪುರೆ ತಿಳಿಸಿದ್ದಾರೆ. +ಕೆಲವು ಎಕ್ಸ್ಪ್ರೆಸ್ ರೈಲುಗಳನ್ನು ಮಾರ್ಗವನ್ನು ತಿರುಗಿಸಲಾಯಿತು, ಈಗ ಅವುಗಳ ಸರಿಯಾದ ನಿಗದಿತ ಮಾರ್ಗದಲ್ಲಿ ಮರುಸ್ಥಾಪಿಸಲಾಗಿದೆ ಎಂದರು. \ No newline at end of file diff --git a/eesanje/url_47_219_9.txt b/eesanje/url_47_219_9.txt new file mode 100644 index 0000000000000000000000000000000000000000..1438f773e12910268165e0b43b6ba31f10f48ca4 --- /dev/null +++ b/eesanje/url_47_219_9.txt @@ -0,0 +1,6 @@ +ಪಾಕ್ ಜೊತೆ ಲಿಂಕ್ : ಸೈಬರ್ ಕ್ರೈಮ್ ಸಿಂಡಿಕೇಟ್ ನಾಲ್ವರ ಬಂಧನ +ಹಜಾರಿಬಾಗ್ (ಜಾರ್ಖಂಡ್), ಡಿ 11-ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಸೈಬರ್ ಕ್ರೈಮ್ ಸಿಂಡಿಕೇಟ್ ನ ಭಾಗವಾಗಿದ್ದ ನಾಲ್ವರನ್ನು ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.ಪಂಜಾಬ್ನಲ್ಲಿ ವ್ಯಕ್ತಿಯೊಬ್ಬನಿಗೆ 1.63 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣದ ತನಿಖೆ ವೇಳೆ ಇದು ಪತ್ತೆಯಾಗಿದ್ದು,ಅಪರಾಧದಲ್ಲಿ ಬಳಸಲಾದ -ಫೋನ್ ಸಂಖ್ಯೆಯ ಜಾಡು ಹಿಡಿದಾಗ ಅದು ಹಜಾರಿಬಾಗ್ನಲ್ಲಿ ದಂಧೆ ಖಚಿತಪಡಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಂಧಿತರಿಮದ ಮೊಬೈಲ್ -ಫೋನ್ ಗಳು , 36 ಸಿಮ್ ಕಾರ್ಡ್ಗಳು, 37 ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳು, 12 ಪಾಸ್ ಬುಕ್ ಮತ್ತು ಚೆಕ್ ಗಳು , ದ್ವಿಚಕ್ರ ವಾಹನ, ನಾಲ್ಕು ಚಕ್ರದ ವಾಹನ ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ 19 ರಿಂದ 25 ವರ್ಷದೊಳಗಿನ ನಾಲ್ವರನ್ನು ಜಾರ್ಖಂಡ್ನ ರಾಜಧಾನಿ ರಾಂಚಿಯಿಂದ 105 ಕಿಮೀ ದೂರದಲ್ಲಿರುವ ಕೊರಾರ್ ಪ್ರದೇಶದ ಪ್ರದೇಶದಲ್ಲಿ ಬಂಧಿಸಲಾಗಿದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-12-2023) +ವಿಚಾರಣೆ ವೇಳೆ ಆರೋಪಿಗಳು ತಾವು ಪಾಕಿಸ್ತಾನಿ ಹ್ಯಾಂಡ್ಲರ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಹಜಾರಿಬಾಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ತಿಳಿಸಿದ್ದಾರೆ. ಇದು ಗಂಭೀರವಾದ ವಿಷಯವಾದ್ದರಿಂದ, ಈ ಹಣವನ್ನು ಸೈಬರ್ ಅಪರಾಧಗಳಿಗಾಗಿ ಅಥವಾ ರಾಷ್ಟ್ರದ ಹಿತಾಸಕ್ತಿ ವಿರುದ್ಧವಾದ ಯಾವುದೇ ಉದ್ದೇಶಕ್ಕಾಗಿ ಉದ್ದೇಶಿಸಲಾಗಿದೆಯೇ ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಎಸ್ಪಿ ಹೇಳಿದರು. +ಕಳೆದ ನ. 28 ರಂದು ಪಂಜಾಬ್ನಲ್ಲಿ 1.63 ಲಕ್ಷ ರೂ.ಗಳ ಆನ್ಲೈನ್ ವಂಚನೆ ನಡೆದಿದ್ದು, ಮಾಹಿತಿ ಪಡೆದ ನಂತರ, ಕೊರಾರ್ ಪ್ರದೇಶದಲ್ಲಿ ಮೊಬೈಲ್ ಸಂಖ್ಯೆ ಸಕ್ರಿಯವಾಗಿರುವುದನ್ನು ಖಚಿತಪಡಿಸಿವಿಶೇಷ ತಂಡ ದಾಳಿ ನಡೆಸಿದೆ ,ಮೊದಲು, ನಾವು ಇಬ್ಬರನ್ನು ಬಂಧಿಸಿದ್ದೇವೆ ಮತ್ತು ನಂತರ, ಅವರ ವಿಚಾರಣೆಯ ನಂತರ, ಇತರ ಇಬ್ಬರನ್ನು ಸೆರೆಯಾಗಿದ್ದಾರೆ ಎಂದು ಅವರು ಹೇಳಿದರು.ತನಿಖೆಯ ಸಲುವಾಗಿ ಪ್ರಸ್ತುತ ಪ್ರಕರಣದ ಬಗ್ಗೆ ಹೆಚ್ಚಿನದನ್ನು ಬಹಿರಂಗಪಡಿಸಲಿಲ್ಲ. \ No newline at end of file diff --git a/eesanje/url_47_21_1.txt b/eesanje/url_47_21_1.txt new file mode 100644 index 0000000000000000000000000000000000000000..84c9e4099d2f4b026e378dc641138d91e98d1807 --- /dev/null +++ b/eesanje/url_47_21_1.txt @@ -0,0 +1,5 @@ +ತಮಿಳುನಾಡು ಗವರ್ನರ್‌ ಜೊತೆ ದೋವಲ್‌ ಚರ್ಚೆ + +ಚೆನ್ನೈ, ಅ 31 (ಪಿಟಿಐ)ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಇಂದು ತಮಿಳುನಾಡು ರಾಜ್ಯಪಾಲ ಆರ್‌ ಎನ್‌ ರವಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. +ಉಭಯ ನಾಯಕರ ನಡುವೆ ರಾಷ್ಟ್ರೀಯ ಭದ್ರತೆ ಕುರಿತು ಫಲಪ್ರದ ಚರ್ಚೆ ನಡೆಸಲಾಗಿದೆ ಎಂದು ರಾಜಭವನ ಮೂಲಗಳು ತಿಳಿಸಿವೆ.ರಾಜ್ಯಪಾಲ ರವಿ ಅವರು ರಾಜಭವನದಲ್ಲಿ ದೋವಲ್‌ ಅವರನ್ನು ಆತೀಯವಾಗಿ ಸ್ವಾಗತಿಸಿದರು ಮತ್ತು ರಾಷ್ಟ್ರೀಯ ಭದ್ರತಾ ಕಾಳಜಿಯ ವಿಷಯಗಳ ಬಗ್ಗೆ ವಿವರವಾದ ಮತ್ತು ಫಲಪ್ರದ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. +ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ವಿದೇಶ ಪ್ರವಾಸದಲ್ಲಿರುವ ಸಂದರ್ಭದಲೇ ದೋವಲ್‌ ತಮಿಳುನಾಡಿಗೆ ಭೇಟಿ ನೀಡಿರುವುದು ಹಲವಾರು ಅನುಮಾನಗಳಿಗೂ ಎಡೆ ಮಾಡಿಕೊಟ್ಟಿದೆ. \ No newline at end of file diff --git a/eesanje/url_47_21_10.txt b/eesanje/url_47_21_10.txt new file mode 100644 index 0000000000000000000000000000000000000000..0e4b310d47a28e395e8a7c8e5b63a441ed54f75e --- /dev/null +++ b/eesanje/url_47_21_10.txt @@ -0,0 +1,5 @@ +ಕರೆಂಟ್‌ ಹೋದಾಗ ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರ +ಲಕ್ನೋ,ಆ.30- ವಿದ್ಯುತ್‌ ಕಡಿತಗೊಂಡ ಸಮಯದಲ್ಲಿ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ನಡೆದಿದೆ. ಕರೆಂಟ್‌ ಇಲ್ಲದ ವೇಳೆ ನಡೆದ ಈ ಘನಘೋರ ಘಟನೆಯನ್ನು ಖಂಡಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ ಎಂದು ಸಹಾಯಕ ಪೊಲೀಸ್‌‍ ಆಯುಕ್ತ ರಜನೀಶ್‌ ಕುಮಾರ್‌ ಉಪಾಧ್ಯಾಯ ತಿಳಿಸಿದ್ದಾರೆ. +ಅದೇ ಊರಿನಲ್ಲಿ ಸ್ಕ್ರ್ಯಾಪ್‌ ಡೀಲರ್‌ ಆಗಿ ಕೆಲಸ ಮಾಡುವ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹಲ್ಲೆ ನಡೆಸಿದ್ದಾನೆ. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯ ಕುಟುಂಬದವರು ಅಪರಾಧದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿರುವುದರಿಂದ ತನಿಖೆಯನ್ನು ಚುರುಕುಗೊಳಿಸಲಾಗಿದೆ. +ನಾವು ಆ ಕೋನದಲ್ಲಿಯೂ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಮುಂದಿನ ತನಿಖೆಯ ನಂತರ ಪ್ರಮುಖ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು, ಅಪರಾಧಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಪ್ರದರ್ಶನದ ಸಮಯದಲ್ಲಿ, ಅವರು ಸ್ಕ್ರ್ಯಾಪ್‌ ಡೀಲರ್‌ ಅಂಗಡಿಗೆ ನುಗ್ಗಿ ಸರಕುಗಳನ್ನು ಹೊರಗೆಸೆದಿದ್ದಾರೆ. +ಅವರು ಇ-ರಿಕ್ಷಾಕ್ಕೆ ಬೆಂಕಿ ಹಚ್ಚಿದರು ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. \ No newline at end of file diff --git a/eesanje/url_47_21_11.txt b/eesanje/url_47_21_11.txt new file mode 100644 index 0000000000000000000000000000000000000000..c269ba9d65d6d4dfc8d10b0fd9112b1cce4e4e09 --- /dev/null +++ b/eesanje/url_47_21_11.txt @@ -0,0 +1,4 @@ +ದೆಹಲಿ ಕಾಂಗ್ರೆಸ್‌‍ಗೆ ಶುಕ್ರದೆಸೆ +ನವದೆಹಲಿ,ಆ.30- ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ದೆಹಲಿಯಲ್ಲಿ ಕಾಂಗ್ರೆಸ್‌‍ ಪಕ್ಷಕ್ಕೆ ಶುಕ್ರದೆಸೆ ಆರಂಭವಾಗಿದೆ. ಆಡಳಿತಾರೂಢ ಎಎಪಿ ಹಾಗೂ ಬಿಜೆಪಿಯ ಹಲವಾರು ನಾಯಕರುಗಳು ಕಾಂಗ್ರೆಸ್‌‍ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.ಕಾಂಗ್ರೆಸ್‌‍ನ ದೆಹಲಿ ಘಟಕದ ಪ್ರಧಾನ ಕಛೇರಿ ರಾಜೀವ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಮ್‌ ಆದಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕರು ಔಪಚಾರಿಕವಾಗಿ ಕಾಂಗ್ರೆಸ್‌‍ಗೆ ಸೇರ್ಪಡೆಗೊಂಡರು ಮತ್ತು ಅವರನ್ನು ದೆಹಲಿ ಕಾಂಗ್ರೆಸ್‌‍ ಮುಖ್ಯಸ್ಥ ದೇವೇಂದ್ರ ಯಾದವ್‌ ಸ್ವಾಗತಿಸಿದರು. +ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿಯವರ ಪ್ರಬಲ ನಾಯಕತ್ವದಿಂದ ಪ್ರೇರಿತರಾಗಿ ಬಿಜೆಪಿ ಮತ್ತು ಎಎಪಿ ಎರಡೂ ನಾಯಕರು ತಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌‍ಗೆ ಪರಿವರ್ತನೆಯಾಗುತ್ತಿದ್ದಾರೆ ಎಂದು ಯಾದವ್‌ ಹೇಳಿದರು.ಯಾದವ್‌ ಅವರು ಮಾಜಿ ಕೌನ್ಸಿಲರ್‌ ಮತ್ತು ತಿಮಾರ್‌ಪುರದ ಶಾಸಕ ಅಭ್ಯರ್ಥಿ ಅಮರಲತಾ ಸಾಂಗ್ವಾನ್‌ ಅವರನ್ನು ವಿಶೇಷವಾಗಿ ಕಾಂಗ್ರೆಸ್‌‍ ಪಕ್ಷಕ್ಕೆ ಸ್ವಾಗತಿಸಿದರು. +ಮಾಜಿ ಶಾಸಕ ಅನಿಲ್‌ ಭಾರದ್ವಾಜ್‌‍, ಸಂವಹನ ವಿಭಾಗದ ಅಧ್ಯಕ್ಷ ಕುನ್ವರ್‌ ಕರಣ್‌ ಸಿಂಗ್‌ ಮತ್ತು ಇತರ ಹಿರಿಯ ದೆಹಲಿ ಕಾಂಗ್ರೆಸ್‌‍ ನಾಯಕರು ಸೇರಿದಂತೆ ಹಲವಾರು ಹಿರಿಯ ಕಾಂಗ್ರೆಸ್‌‍ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.ಮುಂ ಬರುವ ವಿಧಾನಸಭಾ ಚುನಾವಣೆಯನ್ನು ದಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್‌‍ ಎಎಪಿ ಸರ್ಕಾರವನ್ನು ಗುರಿಯಾಗಿಸಿಕೊಂಡು ತನ್ನ ಮತದಾರರ ನೆಲೆಯನ್ನು ಮರಳಿ ಪಡೆಯಲು ಶ್ರಮಿಸುತ್ತಿದೆ. ದೆಹಲಿಯಲ್ಲಿ ತನ್ನ 15 ವರ್ಷಗಳ ಆಡಳಿತವನ್ನು ಹೈಲೈಟ್‌ ಮಾಡುವ ಪ್ರಚಾರವನ್ನು ಶೀಘ್ರದಲ್ಲೇ ಪ್ರಾರಂಭಿಸಲು ಪಕ್ಷವು ಯೋಜಿಸಿದೆ. \ No newline at end of file diff --git a/eesanje/url_47_21_12.txt b/eesanje/url_47_21_12.txt new file mode 100644 index 0000000000000000000000000000000000000000..8b1e8e6ea2889f8b2400a5234835bdbff9cb9ae9 --- /dev/null +++ b/eesanje/url_47_21_12.txt @@ -0,0 +1,8 @@ +ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಅಸುರಕ್ಷಿತ : +ನವದೆಹಲಿ,ಆ. 30 (ಪಿಟಿಐ) ದೇಶದ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರಲ್ಲಿ ಮೂರನೇ ಒಂದು ಭಾಗದಷ್ಟು ಮಂದಿ ಅಸುರಕ್ಷಿತ ಎಂದು ಭಾವಿಸಿದ್ದಾರೆ ಎಂದು ಇಂಡಿಯನ್‌ ಮೆಡಿಕಲ್‌ ಅಸೋಷಿಯೇಷನ್‌ ವರದಿ ಮಾಡಿದೆ. ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ನಡೆದ ಘಟನೆಯ ನಂತರ ಐಎಂಎ ನಡೆಸಿದ ಸಮೀಕ್ಷೆಯಲ್ಲಿ ಶೇ.45ರಷ್ಟು ಮಂದಿ ವೈದ್ಯರು ರಾತ್ರಿ ಪಾಳಿಯಲ್ಲಿ ಡ್ಯೂಟಿ ರೂಮ್‌ ಲಭ್ಯವಿಲ್ಲ ಹೀಗಾಗಿ ನಾವು ಅತ್ಯಂತ ಅಸುರಕ್ಷಿತರಾಗಿದ್ದೇವೆ ಎಂದು ತಿಳಿಸಿದ್ದಾರೆ ಎಂದು ಐಎಂಎ ಹೇಳಿದೆ. +ದೇಶದ ವಿವಿಧ ಆಸ್ಪತ್ರೆಗಳ ಸುಮಾರು 3,885 ಮಹಿಳಾ ವೈದ್ಯರ ವೈಯಕ್ತಿಕ ಪ್ರತಿಕ್ರಿಯೆಗಳೊಂದಿಗೆ ಈ ವರದಿ ಸಿದ್ದಪಡಿಸಲಾಗಿದ್ದು, ಇದು ದೇಶದ ಅತಿದೊಡ್ಡ ಅಧ್ಯಯನವಾಗಿದೆ ಎಂದು ಐಎಂಎ ಹೇಳಿಕೊಂಡಿದೆ. ಕೇರಳದ ಐಎಂಎ ಸಂಶೋಧನಾ ಕೋಶದ ಅಧ್ಯಕ್ಷ ಡಾ ರಾಜೀವ್‌ ಜಯದೇವನ್‌ ಮತ್ತು ಅವರ ತಂಡದಿಂದ ಸಂಕಲಿಸಲಾದ ಸಮೀಕ್ಷೆಯ ಫಲಿತಾಂಶಗಳನ್ನು ಕೇರಳ ವೈದ್ಯಕೀಯ ಜರ್ನಲ್‌ ಅಕ್ಟೋಬರ್‌ 2024 ರ ಸಂಚಿಕೆಯಲ್ಲಿ ಪ್ರಕಟಿಸಲು ಸ್ವೀಕರಿಸಲಾಗಿದೆ. +ಈ ಸಮೀಕ್ಷೆಗೆ ಪ್ರತಿಕ್ರಿಯಿಸಿದವರು 22 ರಾಜ್ಯಗಳಿಂದ ಬಂದವರಾಗಿದ್ದು, ಅವರಲ್ಲಿ 85 ಪ್ರತಿಶತ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಮತ್ತು 61 ಪ್ರತಿಶತದಷ್ಟು ಇಂಟರ್ನಿಗಳು ಅಥವಾ ಸ್ನಾತಕೋತ್ತರ ತರಬೇತಿದಾರರಿದ್ದರು ಎನ್ನಲಾಗಿದೆ. ಕೆಲವು ಕೋರ್ಸ್‌ಗಳಲ್ಲಿ ಲಿಂಗ ಅನುಪಾತಕ್ಕೆ ಅನುಗುಣವಾಗಿ ಮಹಿಳೆಯರು ಶೇಕಡಾ 63 ರಷ್ಟಿದ್ದಾರೆ. ಹಲವಾರು ವೈದ್ಯರು ಅಸುರಕ್ಷಿತ (ಶೇ. 24.1) ಅಥವಾ ತುಂಬಾ ಅಸುರಕ್ಷಿತ (ಶೇ. 11.4) ಎಂದು ವರದಿ ಮಾಡಿದ್ದಾರೆ, ಒಟ್ಟು ಮೂರನೇ ಒಂದು ಭಾಗದಷ್ಟು ಜನರು ಅಸುರಕ್ಷಿತರಾಗಿದ್ದಾರೆ. ಮಹಿಳೆಯರಲ್ಲಿ ಅಸುರಕ್ಷಿತ ಭಾವನೆಯ ಪ್ರಮಾಣವು ಹೆಚ್ಚಿದೆ ಎಂದು ಸಮೀಕ್ಷೆಯ ಸಂಶೋಧನೆಗಳು ತೋರಿಸಿವೆ. +20-30 ವರ್ಷ ವಯಸ್ಸಿನ ವೈದ್ಯರು ಕಡಿಮೆ ಸುರಕ್ಷತೆಯ ಅರ್ಥವನ್ನು ಹೊಂದಿದ್ದರು ಮತ್ತು ಈ ಗುಂಪು ಹೆಚ್ಚಾಗಿ ಇಂಟರ್ನಿಗಳು ಮತ್ತು ಸ್ನಾತಕೋತ್ತರ ಪದವೀಧರರನ್ನು ಒಳಗೊಂಡಿದೆ. ರಾತ್ರಿ ಪಾಳಿಯಲ್ಲಿ 45 ಪ್ರತಿಶತದಷ್ಟು ಮಂದಿಗೆ ಕರ್ತವ್ಯ ಕೊಠಡಿ ಲಭ್ಯವಿರಲಿಲ್ಲ. ಡ್ಯೂಟಿ ಕೋಣೆಗೆ ಪ್ರವೇಶ ಹೊಂದಿರುವವರು ಹೆಚ್ಚಿನ ಸುರಕ್ಷತೆಯ ಅರ್ಥವನ್ನು ಹೊಂದಿದ್ದರು. +ಜನಸಂದಣಿ, ಗೌಪ್ಯತೆಯ ಕೊರತೆ ಮತ್ತು ಲಾಕ್‌ಗಳು ಕಳೆದುಹೋಗಿರುವುದರಿಂದ ಡ್ಯೂಟಿ ಕೊಠಡಿಗಳು ಸಾಮಾನ್ಯವಾಗಿ ಅಸಮರ್ಪಕವಾಗಿರುತ್ತವೆ, ಪರ್ಯಾಯ ವಿಶ್ರಾಂತಿ ಪ್ರದೇಶಗಳನ್ನು ಹುಡುಕಲು ವೈದ್ಯರನ್ನು ಒತ್ತಾಯಿಸುತ್ತದೆ ಮತ್ತು ಲಭ್ಯವಿರುವ ಡ್ಯೂಟಿ ಕೊಠಡಿಗಳಲ್ಲಿ ಮೂರನೇ ಒಂದು ಭಾಗದಷ್ಟು ಲಗತ್ತಿಸಲಾದ ಸ್ನಾನಗಹವನ್ನು ಹೊಂದಿಲ್ಲ ಎಂದು ಸಮೀಕ್ಷೆಯು ಕಂಡುಹಿಡಿದಿದೆ. ಅರ್ಧಕ್ಕಿಂತ ಹೆಚ್ಚು ನಿದರ್ಶನಗಳಲ್ಲಿ (53 ಪ್ರತಿಶತ), ಡ್ಯೂಟಿ ರೂಮ್‌ ವಾರ್ಡ್‌‍/ಅಪಘಾತ ಪ್ರದೇಶದಿಂದ ದೂರದಲ್ಲಿದೆ, ಸಂಶೋಧನೆಗಳು ಹೇಳಿವೆ. +ಸುರಕ್ಷತೆಯನ್ನು ಹೆಚ್ಚಿಸುವ ಸಲಹೆಗಳು ತರಬೇತಿ ಪಡೆದ ಭದ್ರತಾ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸುವುದು, ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು, ಸರಿಯಾದ ಬೆಳಕನ್ನು ಖಾತ್ರಿಪಡಿಸುವುದು, ಕೇಂದ್ರೀಯ ರಕ್ಷಣಾ ಕಾಯಿದೆ (ಸಿಪಿಎ), ವೀಕ್ಷಕರ ಸಂಖ್ಯೆಯನ್ನು ನಿರ್ಬಂಧಿಸುವುದು, ಎಚ್ಚರಿಕೆಯ ವ್ಯವಸ್ಥೆಗಳನ್ನು ಸ್ಥಾಪಿಸುವುದು ಮತ್ತು ಬೀಗಗಳನ್ನು ಹೊಂದಿರುವ ಸುರಕ್ಷಿತ ಕರ್ತವ್ಯ ಕೊಠಡಿಗಳಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯವಶ್ಯಕವಾಗಿದೆ. +ಆನ್‌ಲೈನ್‌ ಸಮೀಕ್ಷೆಯನ್ನು ಗೂಗಲ್‌ ಫಾರ್ಮ್‌ ಮೂಲಕ ಭಾರತದಾದ್ಯಂತ ಸರ್ಕಾರಿ ಮತ್ತು ಖಾಸಗಿ ವೈದ್ಯರಿಗೆ ಕಳುಹಿಸಲಾಗಿದೆ. 24 ಗಂಟೆಗಳ ಒಳಗೆ 3,885 ಪ್ರತಿಕ್ರಿಯೆಗಳು ಬಂದಿವೆ ಎಂದು ಡಾ ಜಯದೇವನ್‌ ಹೇಳಿದರು. \ No newline at end of file diff --git a/eesanje/url_47_21_2.txt b/eesanje/url_47_21_2.txt new file mode 100644 index 0000000000000000000000000000000000000000..c7d25fd19120d61ef678966c5cbc085403c76a43 --- /dev/null +++ b/eesanje/url_47_21_2.txt @@ -0,0 +1,10 @@ +ಭಾರತ ಅಂಡರ್‌-19 ತಂಡಕ್ಕೆ ದ್ರಾವಿಡ್‌ ಪುತ್ರ ಸಮಿತ್‌ ಸೇರ್ಪಡೆ + ' +ನವದೆಹಲಿ, ಆ.31 (ಪಿಟಿಐ)ಭಾರತ ತಂಡದ ಮಾಜಿ ನಾಯಕ ಹಾಗೂ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಪುತ್ರ ಸಮಿತ್‌ ದ್ರಾವಿಡ್‌ ಅವರನ್ನು ಆಸ್ಟ್ರೇಲಿಯ ವಿರುದ್ಧದ ಬಹುರೂಪಿ ಸರಣಿಗೆ ಭಾರತ ಅಂಡರ್‌-19 ತಂಡಕ್ಕೆ ಆಯ್ಕೆ ಮಾಡಲಾಗಿದೆ. +ಮೂರು ಪಂದ್ಯಗಳ ಏಕದಿನ ಸರಣಿಯು ಪುದುಚೇರಿಯಲ್ಲಿ ಸೆಪ್ಟೆಂಬರ್‌ 21, 23 ಮತ್ತು 26 ರಂದು ನಡೆಯಲಿದ್ದು, ಭಾರತವನ್ನು ಉತ್ತರ ಪ್ರದೇಶದ ಮೊಹಮದ್‌ ಅಮಾನ್‌ ಮುನ್ನಡೆಸಲಿದ್ದಾರೆ. +ಸರಣಿಯು ನಂತರ ಸೆಪ್ಟೆಂಬರ್‌ 30 ಮತ್ತು ಅಕ್ಟೋಬರ್‌ 7 ರಂದು ಪ್ರಾರಂಭವಾಗುವ ಎರಡು ನಾಲ್ಕು ದಿನಗಳ ಪಂದ್ಯಗಳಿಗಾಗಿ ಚೆನ್ನೈಗೆ ರೋಲ್‌ ಆಗಲಿದೆ. ಈ ಪ್ರವಾಸದ ಭಾರತ ತಂಡವನ್ನು ಮಧ್ಯಪ್ರದೇಶದ ಸೋಹಮ್‌ ಪಟವರ್ಧನ್‌ ನಾಯಕತ್ವ ವಹಿಸಲಿದ್ದಾರೆ. +ಪೇಸ್‌‍ ಬೌಲಿಂಗ್‌ ಆಲ್‌ ರೌಂಡರ್‌ ಸಮಿತ್‌ ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ಪರ ಆಡುತ್ತಿದ್ದಾರೆ. +ಆದಾಗ್ಯೂ, ಇದುವರೆಗಿನ ಅವರ ಔಟಿಂಗ್‌ಗಳು ಬ್ಯಾಟ್‌ನೊಂದಿಗೆ ದುರ್ಬಲವಾಗಿವೆ – ಏಳು ಇನ್ನಿಂಗ್‌್ಸಗಳಿಂದ 82 ರನ್‌ಗಳು ಮಾತ್ರ ಬಂದಿದೆ. ಅತ್ಯಧಿಕ 33, ಮತ್ತು ಅವರು ಇನ್ನೂ ಪಂದ್ಯಾವಳಿಯಲ್ಲಿ ಬೌಲ್‌ ಮಾಡಿಲ್ಲ.ಆದರೆ ಈ ವರ್ಷದ ಆರಂಭದಲ್ಲಿ, ಸಮಿತ್‌ ಕೂಚ್‌ ಬೆಹಾರ್‌ ಟ್ರೋಫಿಯಲ್ಲಿ ಉತ್ಪಾದಕ ಸಮಯವನ್ನು ಹೊಂದಿದ್ದರು, ಈವೆಂಟ್‌ನಲ್ಲಿ ಕರ್ನಾಟಕದ ಚೊಚ್ಚಲ ಪ್ರಶಸ್ತಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. +18ರ ಹರೆಯದ ಅವರು ಎಂಟು ಪಂದ್ಯಗಳಿಂದ 362 ರನ್‌ ಗಳಿಸಿದರು ಮತ್ತು ಜಮು ಮತ್ತು ಕಾಶೀರ ವಿರುದ್ಧ ಅವರ 98 ರನ್‌ಗಳು ಅದರ ಗುಣಮಟ್ಟ ಮತ್ತು ನಿರರ್ಗಳತೆಗೆ ಎದ್ದು ಕಾಣುತ್ತವೆ. +ಏಕದಿನ ಸರಣಿಗಾಗಿ ಭಾರತ ಅಂಡರ್‌ 19 ತಂಡ:ರುದ್ರ ಪಟೇಲ್‌‍, ಸಾಹಿಲ್‌ ಪರಾಖ್‌, ಕಾರ್ತಿಕೇಯ ಕೆಪಿ, ಮೊಹಮದ್‌ ಅಮಾನ್‌ (ನಾಯಕ), ಕಿರಣ್‌ ಚೋರ್ಮಲೆ, ಅಭಿಗ್ಯಾನ್‌ ಕುಂದು (ಕೀಪರ್‌ ), ಹರ್ವಂಶ್‌ ಸಿಂಗ್‌ ಪಾಂಗಾಲಿಯಾ, ಸಮಿತ್‌ ದ್ರಾವಿಡ್‌, ಯುಧಾಜಿತ್‌ ಗುಹಾ, ಸಮರ್ಥ್‌ ಎನ್‌, ನಿಖಿಲ್‌ ಕುಮಾರ್‌, ಚೇತನ್‌ ಶರ್ಮಾ, ಹಾರ್ದಿಕ್‌ ರಾಜ್‌‍, ರೋಹಿತ್‌ ರಾಜಾವತ್‌, ಮೊಹಮದ್‌ ಏನನ್‌. +ನಾಲ್ಕು ದಿನಗಳ ಸರಣಿಗೆ ಭಾರತ ಅಂಡರ್‌ 19 ತಂಡ:ವೈಭವ್‌ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್‌ ಮಲ್ಹೋತ್ರಾ, ಸೋಹಮ್‌ ಪಟವರ್ಧನ್‌ (ನಾಯಕ), ಕಾರ್ತಿಕೇಯ ಕೆಪಿ, ಸಮಿತ್‌ ದ್ರಾವಿಡ್‌‍, ಅಭಿಗ್ಯಾನ್‌ ಕುಂದು , ಹರ್ವಂಶ್‌ ಸಿಂಗ್‌ ಪಂಗಾಲಿಯಾ , ಚೇತನ್‌ ಶರ್ಮಾ, ಸಮರ್ಥ್‌ ಎನ್‌‍, ಆದಿತ್ಯ ರಾವತ್‌, ನಿಖಿಲ್‌ ಕುಮಾರ್‌, ಅನೋಲ್ಜೀತ್‌ ಸಿಂಗ್‌, ಆದಿತ್ಯ ಸಿಂಗ್‌, ಮೊಹಮದ್‌ ಇನಾನ್‌‍ ಇರಲಿದ್ದಾರೆ. \ No newline at end of file diff --git a/eesanje/url_47_21_3.txt b/eesanje/url_47_21_3.txt new file mode 100644 index 0000000000000000000000000000000000000000..564bccc1c8feafef5a5ea4e6a211fb9665ddbd73 --- /dev/null +++ b/eesanje/url_47_21_3.txt @@ -0,0 +1,7 @@ +ಕಂಗನಾ ಸಂಸತ್‌ನಲ್ಲಿರಲು ಲಾಯಕ್ಕಿಲ್ಲ : ಸೋನಿಯಾ ಗಾಂಧಿ ಅಳಿಯ ವಾದ್ರಾ + ’ +ಹೈದರಾಬಾದ್‌, ಆ.31 (ಪಿಟಿಐ) –ರೈತರ ಪ್ರತಿಭಟನೆಗಳ ಕುರಿತು ಬಿಜೆಪಿ ಸಂಸದೆ ಕಂಗನಾ ರಣಾವತ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌‍ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್‌ ವಾದ್ರಾ ಅವರು ಕಂಗನಾ ಸಂಸತ್ತಿನಲ್ಲಿರಲು ಅರ್ಹರಲ್ಲ ಎಂದು ಹೇಳಿದ್ದಾರೆ. +ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಕೆ (ರಣಾವತ್‌) ಒಬ್ಬ ಮಹಿಳೆ, ನಾನು ಅವಳನ್ನು ಗೌರವಿಸುತ್ತೇನೆ. ಆದರೆ ಆಕೆ ಸಂಸತ್ತಿನಲ್ಲಿರಲು ಅರ್ಹಳಲ್ಲ ಎಂದು ನಾನು ಭಾವಿಸುತ್ತೇನೆ. +ಅವಳು ವಿದ್ಯಾವಂತಳಲ್ಲ, ಅವಳು ಜನರ ಬಗ್ಗೆ ಯೋಚಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.ಮಹಿಳೆಯರ ಸುರಕ್ಷತೆಯು ಪ್ರಮುಖ ವಿಷಯವಾಗಿದೆ ಎಂದು ತಿಳಿಸಿದ ಅವರು, ಇದನ್ನು ಪರಿಹರಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡಬೇಕು ಎಂದು ಹೇಳಿದರು. +ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸತ್ತಿನ ಸದಸ್ಯರಾಗಿರುವ ಕಂಗನಾ ಅವರು ಹಿಂದಿ ದೈನಿಕ ದೈನಿಕ್‌ ಭಾಸ್ಕರ್‌ ಗೆ ನೀಡಿದ ಸಂದರ್ಶನದ ಕ್ಲಿಪ್‌ ಅನ್ನು ಎಕ್‌್ಸನಲ್ಲಿ ಪೋಸ್ಟ್‌ ಮಾಡಿ ರೈತರಿಂದಾಗಿ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿ ಉದ್ಭವಿಸಬಹುದೆಂದು ಹೇಳಿದ್ದರು. +ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಮತ್ತು ವಿಕಲಚೇತನ ಮಕ್ಕಳು ಸೇರಿದಂತೆ ಸಮಾಜದ ವಿವಿಧ ವರ್ಗಗಳ ಜನರನ್ನು ಭೇಟಿ ಮಾಡಲು ವಾದ್ರಾ ಶುಕ್ರವಾರ ಇಲ್ಲಿಗೆ ಆಗಮಿಸಿದರು. \ No newline at end of file diff --git a/eesanje/url_47_21_4.txt b/eesanje/url_47_21_4.txt new file mode 100644 index 0000000000000000000000000000000000000000..4f8174a3fbbb84467b6130057765c719b83fdaef --- /dev/null +++ b/eesanje/url_47_21_4.txt @@ -0,0 +1,7 @@ +ಮತ್ತಷ್ಟು ದೇಶಗಳಿಗೆ ಯುಪಿಐ ವಿಸ್ತರಣೆ : ಶಕ್ತಿಕಾಂತ ದಾಸ್‌‍ + : +ಭುವನೇಶ್ವರ್‌,ಆ. 31 (ಪಿಟಿಐ)ಹಲವಾರು ದೇಶಗಳಲ್ಲಿ ಯುನಿಫೈಡ್‌ ಪೇಮೆಂಟ್ಸ್ ಇಂಟರ್‌ಫೇಸ್‌‍ (ಯುಪಿಐ) ಮತ್ತಷ್ಟು ಬೆಳೆಯಲಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಗವರ್ನರ್‌ ಶಕ್ತಿಕಾಂತ ದಾಸ್‌‍ ಹೇಳಿದ್ದಾರೆ. +ಒಡಿಸಾಕ್ಕೆ ಐದು ದಿನಗಳ ಭೇಟಿಯಲ್ಲಿರುವ ದಾಸ್‌‍ ಅವರು, ಕ್ಯೂಆರ್‌ ಕೋಡ್‌ಗಳು ಮತ್ತು ವೇಗದ ಪಾವತಿ ವ್ಯವಸ್ಥೆಗಳ ಸಂಪರ್ಕದ ಮೂಲಕ ಯುಪಿಐ ಈಗಾಗಲೇ ಅನೇಕ ದೇಶಗಳಲ್ಲಿ ಪ್ರಸ್ತುತವಾಗಿದೆ ಮತ್ತು ಹಲವಾರು ಇತರ ರಾಷ್ಟ್ರಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು. +ಇದು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬೆಳೆಯುತ್ತದೆ ಮತ್ತು ಭವಿಷ್ಯದಲ್ಲಿ ಅಂತರಾಷ್ಟ್ರೀಯೀಕರಣಗೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ಮುಂಬೈನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ದಾಸ್‌‍, ಭೂತಾನ್‌‍, ನೇಪಾಳ, ಶ್ರೀಲಂಕಾ, ಸಿಂಗಾಪುರ್‌, ಯುಎಇ, ಮಾರಿಷಸ್‌‍, ನಮೀಬಿಯಾ, ಪೆರು, ಫ್ರಾನ್ಸ್ ಮತ್ತು ಇತರ ಕೆಲವು ದೇಶಗಳೊಂದಿಗೆ ಈಗಾಗಲೇ ಈ ದಿಕ್ಕಿನಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಹೇಳೀದ್ದರು. +ರುಪೇ ಕಾರ್ಡ್‌ಗಳು ಮತ್ತು ಯುಪಿಐ ನೆಟ್‌ವರ್ಕ್‌ ಮೂಲಕ ಪಾವತಿಗಳು ಹೆಚ್ಚು ಪ್ರಚಲಿತಗೊಳಿಸಲಾಗುವುದು ಎಂದು ತಿಳಿಸಿದ್ದರು.ಈ ಪ್ರಯತ್ನಗಳು, ಜಗತ್ತಿನಾದ್ಯಂತ ಭಾರತದ ಉಪಕ್ರಮಗಳನ್ನು ಅಳವಡಿಸಿಕೊಳ್ಳಲು ಸಹಕಾರಿ ಪ್ರಯತ್ನಗಳನ್ನು ಒತ್ತಿಹೇಳುತ್ತವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_21_5.txt b/eesanje/url_47_21_5.txt new file mode 100644 index 0000000000000000000000000000000000000000..6f40893d8ccdadad9e3107d62d028475fa50737e --- /dev/null +++ b/eesanje/url_47_21_5.txt @@ -0,0 +1,8 @@ + : ಮುಡಾ ನಿವೇಶನ ಹಂಚಿಕೆ : ಸ್ಫೋಟಕ ಆಡಿಯೋ ಬಿಡುಗಡೆ +ಬೆಂಗಳೂರು,ಆ.30- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಗಂಭೀರ ಆರೋಪ ಮಾಡಿದ್ದು, ಆಡಿಯೋ ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ. +ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಲವಾರು ಮಾಹಿತಿಗಳನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಹಾಗೂ ಮುಡಾದಲ್ಲಿ ಬಿಜೆಪಿಯ ವ್ಯಕ್ತಿ ಅಧ್ಯಕ್ಷರಾಗಿದ್ದಾಗ ತಮಗೆ ನಿವೇಶನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ವಾದಿಸುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಜಂಟಿ ಸಹಭಾಗಿತ್ವದಲ್ಲಿ ನಿವೇಶನಗಳ ಅಭಿವೃದ್ಧಿಗೆ 2009 ರಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದಕ್ಕೆ ಭೂಪರಿವರ್ತನೆಯಾದ ನಿವೇಶನ ಹಂಚಿಕೆಯ ಪ್ರಮಾಣ 60:40 ರಷ್ಟಿತ್ತು. +ಇದಕ್ಕೆ ಜಮೀನು ನೀಡಲು ರೈತರು ಮುಂದೆ ಬರಲಿಲ್ಲ, ಅಧಿಕಾರಿಗಳೂ ಉತ್ಸಾಹ ತೋರಲಿಲ್ಲ. ಹೀಗಾಗಿ 2015 ರಲ್ಲಿ ಈ ಪ್ರಮಾಣವನ್ನು 50:50 ರ ಅನುಪಾತಕ್ಕೆ ಮುಡಾ ಹೆಚ್ಚಿಸಿದೆ. ಆದರೆ ಈ ನಿರ್ಣಯಕ್ಕೆ ರಾಜ್ಯಸರ್ಕಾರದ ಅನುಮತಿ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ 2020ರಲ್ಲೇ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು. ಈ ನಿರ್ಣಯ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ. ಆದಾಗ್ಯೂ ಮುಡಾ ಸಭೆಯಲ್ಲಿ ಚರ್ಚೆ ಮಾಡಿ ಭೂಸ್ವಾಧೀನ ಪ್ರಕ್ರಿಯೆಗಳು ನಡೆಯದೆ ಅನಧಿಕೃತವಾಗಿ ಭೂಮಿ ಬಳಸಿಕೊಂಡು ಬಡಾವಣೆ ನಿರ್ಮಿಸಿದ ಪ್ರಕರಣಗಳಲ್ಲಿ 50:50 ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಬೇಕು ಎಂಬ ನಿರ್ಣಯವಾಗಿಲ್ಲ. +ಇದನ್ನು ಬಳಸಿಕೊಂಡು ಸಿದ್ದರಾಮಯ್ಯನವರು ನಿವೇಶನ ಪಡೆದಿದ್ದಾರೆ. ನಕಲಿ ನಿರ್ಣಯವನ್ನು ಬಳಕೆ ಮಾಡಿರುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. ಸಭೆಯಲ್ಲಿ ನಡೆದಿರುವ ಚರ್ಚೆಯ ಆಡಿಯೊವನ್ನು ಬಿಡುಗಡೆ ಮಾಡಿದ ಬಿಜೆಪಿ ನಾಯಕರು ಸಭೆಯಲ್ಲಿ ನಿರ್ಣಯವಾಗದೇ ಇದ್ದರೂ ಈ ರೀತಿಯ ನಿರ್ಣಯ ಆಗಿದೆ ಎಂದು ಆಗಿನ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ಮತ್ತು ಆಯುಕ್ತ ನಟೇಶ್‌ ಅವರು ಹೇಳಿಕೆ ನೀಡಿದ್ದಾರೆ. ಸದರಿ ಅಧಿಕಾರಿ ನಟೇಶ್‌ ವರ್ಗಾವಣೆಯಾಗಿ ಎಂತಂತಹ ಜಾಗಗಳಿಗೆ ತಲುಪುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು. +ಈ ನಕಲಿ ನಿರ್ಣಯವನ್ನಿಟ್ಟುಕೊಂಡು ಸುಮಾರು 13 ಸಾವಿರಕ್ಕೂ ಹೆಚ್ಚಿನ ನಿವೇಶನಗಳ ಅಕ್ರಮ ಹಂಚಿಕೆಯಾಗಿದ್ದು, 10 ಸಾವಿರ ಕೋಟಿ ರೂ.ಗಳ ಹಗರಣವಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯನವರ ಪತ್ನಿ ಪಾರ್ವತಮನವರು ಪಡೆದಿರುವ 14 ನಿವೇಶನಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಬಿಜೆಪಿ ಸರ್ಕಾರದಲ್ಲೇ ನಿವೇಶನಗಳನ್ನು ಹಂಚಿಕೆ ಮಾಡಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಂತ್ರರಿದ್ದಾರೆ. +ಅವರನ್ನು ಯಾರೂ ತಡೆದಿಲ್ಲ ಎಂದು ರವಿಕುಮಾರ್‌ ಹೇಳಿದರು. ಪದೇಪದೇ ತಮನ್ನು ಪ್ರಾಮಾಣಿಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿಯವರ ಮತ್ತೊಂದು ಮುಖ ಅನಾವರಣಗೊಂಡಿದೆ. ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಕೆಲವು ದಸ್ತಾವೇಜುಗಳನ್ನು ಬಿಡುಗಡೆ ಮಾಡಿದರು. ನಕಲಿ ಆದೇಶಕ್ಕೆ ಮುಡಾ ಆಯುಕ್ತರು ಮತ್ತು ಅಧ್ಯಕ್ಷರು ಮಾತ್ರ ಸಹಿ ಹಾಕಿದ್ದಾರೆ. ಅವರಿಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಾವಿಂದು ಸಭೆಯಲ್ಲಿ ನಡೆದ ನಡಾವಳಿಗಳು, ಚರ್ಚೆಗೆ ಆಡಿಯೊ ಬಿಡುಗಡೆ ಮಾಡಿದ್ದೇವೆ. +ಸಿದ್ದರಾಮಯ್ಯ ಶುದ್ಧರಾಮಯ್ಯ ಅಲ್ಲ, ಸುಳ್ಳುರಾಮಯ್ಯ ಎಂದು ವಾಗ್ದಾಳಿ ನಡೆಸಿದರು. ಬಸವರಾಜ ಬೊಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಡಾ ಹಗರಣದ ತನಿಖೆಗೆ ತಾಂತ್ರಿಕ ಸಮಿತಿಯನ್ನು ರಚಿಸಿದ್ದರು. ಅದರ ವರದಿ ಸರ್ಕಾರದ ಬಳಿಯಿದ್ದು, ಅದನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು. \ No newline at end of file diff --git a/eesanje/url_47_21_6.txt b/eesanje/url_47_21_6.txt new file mode 100644 index 0000000000000000000000000000000000000000..3870a73da0d84273f66520124e9c8dcd3b5e8c9b --- /dev/null +++ b/eesanje/url_47_21_6.txt @@ -0,0 +1,11 @@ +ಕಾಶ್ಮೀರದ ಉರಿ ಜಲವಿದ್ಯುತ್‌ ಘಟಕ ವೀಕ್ಷಿಸಿದ ದೇವೇಗೌಡರು +ನವದೆಹಲಿ/ಶ್ರೀನಗರ, ಅ.30-ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್‌.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್‌ ಘಟಕವನ್ನು ಖುದ್ದು ವೀಕ್ಷಿಸಿದರು. ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಅವರು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದರು. ನಿನ್ನೆ ಬೆಳಿಗ್ಗೆ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿದ ಅವರು, ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. + , .2/2pic../ILa2Xu1S7p +ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು, ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್‌ ಉತ್ಪಾದನಾ ಘಟಕಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್‌ ಸಾಮರ್ಥ್ಯದ ಈ ವಿದ್ಯುತ್‌ ಘಟಕವು ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್‌ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿದೆ. ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ ಅತಿ ಸಮೀಪದಲ್ಲಿದೆ. +ವಿದ್ಯುತ್‌ ಸ್ಥಾವರದ ಉದ್ದಗಲಕ್ಕೂ ತೆರಳಿದ ಅವರು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸರಣೆ ಮಾಡಿಕೊಂಡರಲ್ಲದೆ, ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು. +ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು; ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್‌ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಮತ್ತೆ ಈ ವಿದ್ಯುತ್‌ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು. +ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್‌ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು. +ರೈಲು ಪ್ರಯಾಣದ ಬಗ್ಗೆ ಸಂತಸ: ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಗೌಡರು, ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು. +ಅಂದರೆ, 1996, 1997ರ ಸಂದರ್ಭದಲ್ಲಿ ಕಾಶೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೇಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೇಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸರಣೀಯ ಕ್ಷಣ ಎಂದು ಅವರು ಭಾವುಕರಾದರು. +ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ಆತೀಯವಾಗಿ ಬರ ಮಾಡಿಕೊಂಡ ರೇಲ್ವೆ ಅಧಿಕಾರಿಗಳಿಂದ ರೇಲ್ವೆ ಮಾರ್ಗ ಮತ್ತು ಅದರಿಂದ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು. ಬೆಳಿಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹತ್ತಿದ ಗೌಡರು ಮಧ್ಯಾಹ್ನ 12:30 ಗಂಟೆಗೆ ಬಾರಮುಲ್ಲಾ ತಲುಪಿದರು. +ತಾವು ಪ್ರಧಾನಿಯಾಗಿದ್ದಾಗ ಕಾಶೀರದ ರೈತರಿಗಾಗಿ ಒಟ್ಟು 200 ಕೋಟಿ ರೂ.ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ 50,000 ರೂ. ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. \ No newline at end of file diff --git a/eesanje/url_47_21_7.txt b/eesanje/url_47_21_7.txt new file mode 100644 index 0000000000000000000000000000000000000000..f42acdb186f9ec71943903abb4120d184b876536 --- /dev/null +++ b/eesanje/url_47_21_7.txt @@ -0,0 +1,5 @@ +ಚಂಪೈ ಸ್ಥಾನ ತುಂಬಿದ ರಾಮದಾಸ್‌‍ ಸೊರೆನ್‌ +ರಾಂಚಿ,ಆ.30- ಜಾರ್ಖಂಡ್‌ನ ಹೇಮಂತ್‌ ಸೊರೆನ್‌ ಸರ್ಕಾರದಲ್ಲಿ ಜೆಎಂಎಂ ಶಾಸಕ ರಾಮದಾಸ್‌‍ ಸೊರೆನ್‌ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ರಾಮದಾಸ್‌‍ ಸೊರೆನ್‌ ಅವರನ್ನು ನಿಯೋಜನೆ ಮಾಡಲಾಗಿದೆ. +ಮುಖ್ಯಮಂತ್ರಿ ಹೇಮಂತ್‌ ಸೊರೆನ್‌, ಜೆಎಂಎಂ ನೇತತ್ವದ ಮೈತ್ರಿಕೂಟದ ಹಿರಿಯ ನಾಯಕರು ಮತ್ತು ಹಲವಾರು ಸರ್ಕಾರಿ ಅಧಿಕಾರಿಗಳ ಸಮುಖದಲ್ಲಿ ಇಲ್ಲಿನ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸಂತೋಷ್‌ ಕುಮಾರ್‌ ಗಂಗ್ವಾರ್‌ ಅವರು ರಾಮದಾಸ್‌‍ ಸೊರೆನ್‌ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. +ಜೆಎಂಎಂ ಪಕ್ಷ ತೊರೆದಿರುವ ಚಂಪೈ ಸೊರೆನ್‌ ಇಂದು ಮಧ್ಯಾಹ್ನ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗುವ ಮೊದಲು ಹೇಮಂತ್‌ ಸೊರೆನ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಲ್ಪ ಸಮಯದ ನಂತರ ಚಂಪೈ ಸೊರೆನ್‌ ಫೆಬ್ರವರಿ 2 ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದರು. +ಹೇಮಂತ್‌ ಸೊರೆನ್‌ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಜುಲೈ 4 ರಂದು ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಾಗ ಚಂಪೈ ತಮ ಸ್ಥಾನ ಬಿಟ್ಟುಕೊಟ್ಟಿದ್ದರು. \ No newline at end of file diff --git a/eesanje/url_47_21_8.txt b/eesanje/url_47_21_8.txt new file mode 100644 index 0000000000000000000000000000000000000000..7c6644ffb248677ebd45e2ae3f29188a16e42a5b --- /dev/null +++ b/eesanje/url_47_21_8.txt @@ -0,0 +1,5 @@ +ಮಲಯಾಳಂ ನಟ ಜಯಸೂರ್ಯ ವಿರುದ್ಧ 2ನೇ ಎಫ್‌ಐಆರ್‌ +ತಿರುವನಂತಪುರಂ,ಆ.30- ಮಲಯಾಳಂ ನಟಿಯೊಬ್ಬರ ದೂರಿನ ಹಿನ್ನೆಲೆಯಲ್ಲಿ ನಟ ಜಯಸೂರ್ಯ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ನಟ ಜಯಸೂರ್ಯ ವಿರುದ್ಧ 354, 354ಎ(ಎ1)(ಐ) 354ಡಿ ಐಪಿಸಿ ಅಡಿಯಲ್ಲಿ ಎರಡನೇ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. +ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡ ನಂತರ ಪ್ರಕರಣ ದಾಖಲಿಸಲಾಗಿದೆ. ತಿರುವನಂತಪುರದಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ತೋಡುಪುಳ ಪೊಲೀಸ್‌‍ ಠಾಣೆಗೆ ವರ್ಗಾಯಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೇಮಾ ಸಮಿತಿಯ ವರದಿ ಹೊರಬಿದ್ದ ಬಳಿಕ ಮಲಯಾಳಂ ಚಿತ್ರರಂಗದ ಕೆಲವು ಮಹಿಳೆಯರು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದರು. +ನಿನ್ನೆ ನಟಿ ಸೋನಿಯಾ ಮಲ್ಹಾರ್‌ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ತಮ ವತ್ತಿಜೀವನದ ಆರಂಭಿಕ ವರ್ಷಗಳಲ್ಲಿ ತಮ ಮೇಲಾದ ದುರುಪಯೋಗ ಮತ್ತು ಶೋಷಣೆಯ ಆಘಾತಕಾರಿ ಘಟನೆಗಳನ್ನು ಬಹಿರಂಗಪಡಿಸಿದ್ದರು. ನಂತರವೂ ನಾನು ಅನೇಕ ತೊಂದರೆಗಳನ್ನು ಎದುರಿಸಿದೆ, ನಾನು ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತ್ದೆಿ, ಪಾವತಿಗಳು ವಿಳಂಬವಾಯಿತು ಮತ್ತು ಪತ್ರಿಕೆಗಳಲ್ಲಿ ಮತ್ತು ಟಿವಿಯಲ್ಲಿ ಚಲನಚಿತ್ರವನ್ನು ಪ್ರಕಟಿಸಿದ ನಂತರ ನನ್ನನ್ನು ಬದಲಾಯಿಸಲಾಯಿತು. ಈ ಸುದ್ದಿ ಹರಡಿದ ನಂತರ, ನನಗೆ ಭರವಸೆ ನೀಡಲಾಯಿತು. ಬೇರೆಯವರಿಗೆ ನೀಡಲಾಗಿದೆ ಎಂದು ತಿಳಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. +ಬೇರೆ ರಾಜ್ಯದ ನಟಿಯೊಬ್ಬರಿಗೂ ಇಂತಹ ಕೆಟ್ಟ ಅನುಭವಗಳು ಆಗಿದೆ. ಬೇರೆ ರಾಜ್ಯದ ಮಹಿಳೆಗೆ ನೀಡಬೇಕಾದ ಗೌರವವನ್ನು ತೋರಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಕಿಡಿಕಾರಿದ್ದರು. ಹೇಮಾ ಸಮಿತಿಯ ವರದಿ ಹೊರಬಂದ ನಂತರ, ಹಲವು ಜನರ ಮೌನ ತನ್ನನ್ನು ತೀವ್ರವಾಗಿ ನೋಯಿಸಿತು ಎಂದು ಅವರು ಹೇಳಿಕೊಂಡಿದ್ದಾರೆ. ಆ. 28 ರಂದು, ನಟಿ ಮಿನು ಮುನೀರ್‌ ದೂರಿನ ಮೇರೆಗೆ ನಟ ಮತ್ತು ಕೊಲ್ಲಂನ ಸಿಪಿಐ (ಎಂ) ಶಾಸಕ ಮುಖೇಶ್‌ ಎಂ ವಿರುದ್ಧ ಮೊದಲ ಎಫ್‌ಐಆರ್‌ ದಾಖಲಾಗಿತ್ತು. \ No newline at end of file diff --git a/eesanje/url_47_21_9.txt b/eesanje/url_47_21_9.txt new file mode 100644 index 0000000000000000000000000000000000000000..5d0112bb1f50bb386b3c28c897eebc16a5ebf0f7 --- /dev/null +++ b/eesanje/url_47_21_9.txt @@ -0,0 +1,5 @@ +ಕಚ್‌ಗೆ ಆಸ್ನಾ ಚಂಡಮಾರುತದ ಭೀತಿ +ಅಹಮದಾಬಾದ್‌,ಆ. 30 (ಪಿಟಿಐ) ಗುಜರಾತ್‌ನ ಕಚ್‌ ಜಿಲ್ಲೆಯಲ್ಲಿ ಆಸ್ನಾ ಚಂಡ ಮಾರುತದ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಗುಡಿಸಲುಗಳು ಮತ್ತು ತಾತ್ಕಾಲಿಕ ಮನೆಗಳಲ್ಲಿ ವಾಸಿಸುವ ಜನರು ಶಾಲೆಗಳು, ದೇವಾಲಯಗಳು ಅಥವಾ ಇತರ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ಗುಜರಾತ್‌ನ ಕಚ್‌ ಜಿಲ್ಲೆಯ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. +ಭಾರತೀಯ ಹವಾಮಾನ ಇಲಾಖೆಯ ಎಚ್ಚರಿಕೆಯ ನಂತರ, ಕಚ್‌ ಕಲೆಕ್ಟರ್‌ ಅಮಿತ್‌ ಅರೋರಾ ಅವರು ಅಬ್ದಾಸಾ, ಮಾಂಡ್ವಿ ಮತ್ತು ಲಖ್ಪತ್‌ ತಾಲೂಕುಗಳಲ್ಲಿ ವಾಸಿಸುವ ಜನರು ತಮ ಗುಡಿಸಲು ಮತ್ತು ಕಚ್ಚಾ ಮನೆಗಳನ್ನು ಬಿಟ್ಟು ಯಾವುದೇ ಶಾಲೆ ಅಥವಾ ಇತರ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ವೀಡಿಯೊ ಸಂದೇಶ ನೀಡಿದ್ದಾರೆ. +ಅಂತಹ ಬಡವರಿಗೆ ಇಂದು ಸಂಜೆಯವರೆಗೂ ಅವರ ಮನೆಗಳಲ್ಲಿ ಆಶ್ರಯ ನೀಡಲು ಸ್ಥಳೀಯರು ಮುಂದಾಗಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಕಚ್‌ ಮತ್ತು ಪಕ್ಕದ ಪ್ರದೇಶಗಳಲ್ಲಿನ ಆಳವಾದ ಖಿನ್ನತೆಯು ಸುಮಾರು ಪಶ್ಚಿಮಕ್ಕೆ ಈಶಾನ್ಯ ಅರೇಬಿಯನ್‌ ಸಮುದ್ರಕ್ಕೆ ಚಲಿಸುವ ಸಾಧ್ಯತೆಯಿದೆ ಮತ್ತು ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುತ್ತದೆ. ಇದು ನಂತರದ ಎರಡು ದಿನಗಳಲ್ಲಿ ಭಾರತೀಯ ಕರಾವಳಿಯಿಂದ ಪಶ್ಚಿಮ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. +ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ತಡರಾತ್ರಿ ಗಾಂಧಿನಗರದ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತಲುಪಿದರು ಮತ್ತು ಜಿಲ್ಲಾಡಳಿತದ ಸನ್ನದ್ಧತೆಯ ಬಗ್ಗೆ ವೀಡಿಯೊ ಕಾನ್ಫರೆನ್ಸ್‌‍ ಮೂಲಕ ಅರೋರಾ ಅವರೊಂದಿಗೆ ಮಾತನಾಡಿದರು ಎಂದು ಅಧಿಕತ ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_220_1.txt b/eesanje/url_47_220_1.txt new file mode 100644 index 0000000000000000000000000000000000000000..ddfe1b46d7eb797730ff400f10d5efac9e86ebf4 --- /dev/null +++ b/eesanje/url_47_220_1.txt @@ -0,0 +1,6 @@ +ಛತ್ತೀಸ್‍ಗಢ ಮುಖ್ಯಮಂತ್ರಿ ಆಯ್ಕೆ ಇಂದು ಫೈನಲ್ +ರಾಯ್‍ಪುರ, ಡಿ.10 (ಪಿಟಿಐ) – ಛತ್ತೀಸ್‍ಗಢದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕೂತುಹಲಕ್ಕೆ ಇಂದು ತೆರೆ ಬೀಳಲಿದೆ. ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಚುನಾಯಿತ 54 ಶಾಸಕರ ಪ್ರಮುಖ ಸಭೆ ಇಂದು ನಡೆಯಲಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸಸ್ಪೆನ್ಸ್‍ಗೆ ಅಂತ್ಯ ಹಾಡುವ ಸಾಧ್ಯತೆ ಇದೆ.ಇತ್ತೀಚೆಗಿನ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸಿಎಂ ಮುಖ ಘೋಷಣೆ ಮಾಡದೆ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಗಾದಿ ಯಾರಿಗೆ ಒಲಿಯಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. +ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದೆ. ಪಕ್ಷದ ಮೂವರು ವೀಕ್ಷಕರು – ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಸರ್ಬಾನಂದ ಸೋನೋವಾಲ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ಉಪಸ್ಥಿತರಿರುವರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಸಾವೋ ಸುದ್ದಿಗಾರರಿಗೆ ತಿಳಿಸಿದರು. + ಪ್ರಯೋಗ : ಭವಿಷ್ಯದ ಯುದ್ಧಗಳಿಗೆ ಹೊಸ ರೂಪ ನೀಡಿದ ಇಸ್ರೇಲ್ +ಬಿಜೆಪಿಯ ಛತ್ತೀಸ್‍ಗಢ ಉಸ್ತುವಾರಿ ಓಂ ಮಾಥುರ್, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯದ ಪಕ್ಷದ ಸಹ-ಪ್ರಭಾರಿ ನಿತಿನ್ ನಬಿನ್ ಸಹ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಮಾಥುರ್ ಅವರು ಶನಿವಾರ ಸಂಜೆ ರಾಯಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. +ಬಿಜೆಪಿ ಶಾಸಕರ ಸಭೆಯ ಕುರಿತು ಕೇಳಿದ ಪ್ರಶ್ನೆಗೆ, ನಮ್ಮ ಪಕ್ಷದ ವೀಕ್ಷಕರು ಬರುತ್ತಿದ್ದಾರೆ ಮತ್ತು ಅವರು ತೆಗೆದುಕೊಳ್ಳುವ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ ಎಂದು ಮಾಥೂರ್ ಹೇಳಿದರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಮಾಥುರ್, ಮುಖ್ಯಮಂತ್ರಿ ಆಯ್ಕೆಗೆ ಯಾವುದೇ ಸೂತ್ರ ಇಲ್ಲ ಎಂದರು. ವೀಕ್ಷಕರ ಭೇಟಿಯ ಕುರಿತು ಕೇಳಿದ ಪ್ರಶ್ನೆಗೆ, ಬಿಜೆಪಿಯ ಸಂಸದೀಯ ಮಂಡಳಿಯಿಂದ ಒಂದು ವ್ಯವಸ್ಥೆ ಇದೆ, ಅದನ್ನು ಅನುಸರಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_47_220_10.txt b/eesanje/url_47_220_10.txt new file mode 100644 index 0000000000000000000000000000000000000000..34ec3c6d5e6c2d1558784b8ac06e746d76285914 --- /dev/null +++ b/eesanje/url_47_220_10.txt @@ -0,0 +1,10 @@ +ದೇಶದ ಆರ್ಥಿಕತೆ ವೃದ್ದಿಯಿಂದ ಉತ್ತಮ ಭವಿಷ್ಯ : ಮೋದಿ +ನವದೆಹಲಿ,ಡಿ.9- ಭಾರತವು ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುತ್ತಿರುವಾಗ, ಪ್ರತಿಯೊಬ್ಬರೂ ಅದರಲ್ಲಿ ಉತ್ತಮ ಭವಿಷ್ಯವನ್ನು ನೋಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು ಕೆಂಪುಕೋಟೆಯಲ್ಲಿ ನಡೆಯುತ್ತಿರುವ ಮೊದಲ ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ಬೈನಾಲೆ 2023 ಅನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು. +ಭಾರತದ ಆರ್ಥಿಕ ಬೆಳವಣಿಗೆಯು ಇಡೀ ಪ್ರಪಂಚದ ಪ್ರಗತಿಯೊಂದಿಗೆ ಸಂಬಂಧ ಹೊಂದಿದೆ ಮತ್ತು ಅದರ ಆತ್ಮನಿರ್ಭರ ಭಾರತದ ದೃಷ್ಟಿಕೋನವು ಹೊಸ ಅವಕಾಶಗಳನ್ನು ತರುತ್ತದೆ, ಎಂದು ಪ್ರಧಾನಿ ತಿಳಿಸಿದರು. ಭಾರತದ ಆರ್ಥಿಕ ಸಮೃದ್ಧಿಯ ಬಗ್ಗೆ ಪ್ರಪಂಚದಾದ್ಯಂತ ಚರ್ಚೆಯಾದಾಗ ಅದರ ವೈಭವಯುತ ಗತಕಾಲವನ್ನು ನೆನಪಿಸಿಕೊಂಡ ಪ್ರಧಾನಿ, ಅದರ ಸಂಸ್ಕøತಿ ಮತ್ತು ಪರಂಪರೆ ಇಂದಿಗೂ ಪ್ರಪಂಚದಾದ್ಯಂತದ ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದು ಹೇಳಿದರು. +ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಕೆಂಪುಕೋಟೆಯಲ್ಲಿ ಆತ್ಮನಿರ್ಭರ್ ಭಾರತ್ ಸೆಂಟರ್ ಫಾರ್ ಡಿಸೈನ್ ಮತ್ತು ವಿದ್ಯಾರ್ಥಿ ಬಿಯೆನ್ನಾಲೆ-ಸಮುನ್ನತಿಯನ್ನು ಉದ್ಘಾಟಿಸಿದರು. ಸ್ಮರಣಾರ್ಥ ಅಂಚೆಚೀಟಿಯನ್ನೂ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನದ ದರ್ಶನವನ್ನೂ ಪ್ರಧಾನಿ ಮೋದಿ ವೀಕ್ಷಿಸಿದರು. ಭಾರತೀಯ ಕಲೆ, ವಾಸ್ತುಶಿಲ್ಪ ಮತ್ತು ವಿನ್ಯಾಸ ಬಿನಾಲೆ ದೆಹಲಿಯ ಸಾಂಸ್ಕøತಿಕ ಜಾಗಕ್ಕೆ ಪರಿಚಯವಾಗಿ ಕಾರ್ಯನಿರ್ವಹಿಸುತ್ತದೆ. +ದೆಹಲಿ, ಕೋಲ್ಕತ್ತಾ, ಮುಂಬೈ, ಅಹಮದಾಬಾದ್ ಮತ್ತು ವಾರಣಾಸಿಯಂತಹ ಐದು ನಗರಗಳಲ್ಲಿ ಸಾಂಸ್ಕøತಿಕ ಸ್ಥಳಗಳನ್ನು ರಚಿಸುವುದನ್ನು ಐತಿಹಾಸಿಕ ಹೆಜ್ಜೆ ಎಂದು ಒತ್ತಿ ಹೇಳಿದ ಪ್ರಧಾನಿ, ಇದು ಈ ನಗರಗಳನ್ನು ಸಾಂಸ್ಕøತಿಕವಾಗಿ ಮತ್ತಷ್ಟು ಶ್ರೀಮಂತಗೊಳಿಸುತ್ತದೆ ಎಂದು ಹೇಳಿದರು. ಸ್ಥಳೀಯ ಕಲೆಯನ್ನು ಶ್ರೀಮಂತಗೊಳಿಸಲು ಈ ಕೇಂದ್ರಗಳು ವಿನೂತನ ಚಿಂತನೆಗಳನ್ನು ಸಹ ಮುಂದಿಡಲಿವೆ ಎಂದು ಮಾಹಿತಿ ನೀಡಿದರು. +ಅಸ್ಸಾಂ ಎಂದಿಗೂ ಮ್ಯಾನ್ಮಾರ್ ಭಾಗವಾಗಿರಲಿಲ್ಲ : ಹಿಮಂತ ಬಿಸ್ವಾ ಶರ್ಮಾ +ಮುಂದಿನ 7 ದಿನಗಳ ಕಾಲ 7 ಪ್ರಮುಖ ವಿಷಯಗಳನ್ನು ಗಮನಿಸಿದ ಪ್ರಧಾನಮಂತ್ರಿಯವರು, ದೇಶಜ್ ಭಾರತ್ ವಿನ್ಯಾಸ: ಸ್ವದೇಶಿ ವಿನ್ಯಾಸಗಳು ಮತ್ತು ಸಮತ್ವ: ನಿರ್ಮಿತಿಯನ್ನು ರೂಪಿಸುವತಹ ವಿಷಯಗಳನ್ನು ಮುಂದಕ್ಕೆ ಕೊಂಡೊಯ್ಯುವಂತೆ ಪ್ರತಿಯೊಬ್ಬರನ್ನು ಒತ್ತಾಯಿಸಿದರು.ಯುವಕರು ಅದನ್ನು ಮತ್ತಷ್ಟು ಪುಷ್ಟೀಕರಿಸಲು ದೇಶೀಯ ವಿನ್ಯಾಸವನ್ನು ಅಧ್ಯಯನ ಮತ್ತು ಸಂಶೋಧನೆಯ ಭಾಗವಾಗಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು. +ಸಮಾನತೆಯ ವಿಷಯವು ವಾಸ್ತುಶಿಲ್ಪ ಕ್ಷೇತ್ರದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಆಚರಿಸುತ್ತದೆ ಎಂದು ಗಮನಿಸಿದ ಅವರು, ಈ ಕ್ಷೇತ್ರವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಮಹಿಳೆಯರ ಕಲ್ಪನೆ ಮತ್ತು ಸೃಜನಶೀಲತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. +ಲೀಲಮ್ಮ ಇನ್ನು ನೆನಪು ಮಾತ್ರ +ಆತ್ಮನಿರ್ಭರ್ ಭಾರತ್ ವಿನ್ಯಾಸ ಕೇಂದ್ರದ ಉದ್ಘಾಟನೆ ಕುರಿತು ಮಾತನಾಡಿದ ಪ್ರಧಾನಮಂತ್ರಿಯವರು, ಇದು ಭಾರತದ ವಿಶಿಷ್ಟ ಮತ್ತು ಅಪರೂಪದ ಕರಕುಶಲಗಳನ್ನು ಉತ್ತೇಜಿಸಲು ವೇದಿಕೆಯನ್ನು ಒದಗಿಸುತ್ತದೆ ಮತ್ತು ಮಾರುಕಟ್ಟೆಗೆ ಅನುಗುಣವಾಗಿ ಹೊಸತನವನ್ನು ಮಾಡಲು ಕುಶಲಕರ್ಮಿಗಳು ಮತ್ತು ವಿನ್ಯಾಸಕರನ್ನು ಒಟ್ಟುಗೂಡಿಸುತ್ತದೆ ಎಂದು ಹೇಳಿದರು \ No newline at end of file diff --git a/eesanje/url_47_220_11.txt b/eesanje/url_47_220_11.txt new file mode 100644 index 0000000000000000000000000000000000000000..4e90e09ed0440f9be725b816f3d7e854229b65c1 --- /dev/null +++ b/eesanje/url_47_220_11.txt @@ -0,0 +1,5 @@ +ಮೆರವಣಿಗೆ ವೇಳೆ ಗೋಡೆ ಕುಸಿದು ಮಗು ಸೇರಿ 7 ಮಹಿಳೆಯರ ಸಾವು +ನವದೆಹಲಿ,ಡಿ.9- ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೋಡೆ ಕುಸಿದುಬಿದ್ದ ಪರಿಣಾಮ ಒಂದು ಮಗು ಹಾಗೂ ಆರು ಮಹಿಳೆಯರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದ್ದು ಘಟನೆಯಲ್ಲಿ ಕನಿಷ್ಠ 21 ಮಂದಿ ಗಾಯಗೊಂಡಿದ್ದಾರೆ. +ಡ್ರಮ್ ಬಾರಿಸುವ ಕೆಲವು ಪುರುಷರ ಹಿಂದೆ ಮಹಿಳೆಯರ ಗುಂಪು ನಡೆಯುತ್ತಿರುವುದು ಕಂಡುಬರುತ್ತದೆ. ಅವರು ಹಳದಿ ಸಮಾರಂಭಕ್ಕೆ ಹೋಗುತ್ತಿದ್ದಾಗ ಗೊಡೆ ಕುಸಿದು ಬೀಳುವ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಣ್ಣ ಮನೆಗಳಿಂದ ಸುತ್ತುವರಿದ ಕಿರಿದಾದ ರಸ್ತೆಯಲ್ಲಿ ಅವರು ನಡೆದುಕೊಂಡು ಹೋಗುತ್ತಿದ್ದಾಗ, ಮೆರವಣಿಗೆಯ ಹಿಂಭಾಗದಲ್ಲಿದ್ದವರ ಮೇಲೆ ಇದ್ದಕ್ಕಿದ್ದಂತೆ ಗೋಡೆಯೊಂದು ಬಿದ್ದಿತು. +ಅಸ್ಸಾಂ ಎಂದಿಗೂ ಮ್ಯಾನ್ಮಾರ್ ಭಾಗವಾಗಿರಲಿಲ್ಲ : ಹಿಮಂತ ಬಿಸ್ವಾ ಶರ್ಮಾ +ಧೂಳಿನ ಮೋಡವು ತ್ವರಿತವಾಗಿ ಬೀದಿಯನ್ನು ಆವರಿಸಿದ್ದರಿಂದ ಕೆಲ ಕಾಲ ಏನು ನಡೆಯಿತು ಎಂದು ಊಹಿಸಲು ಯಾರಿಗೂ ಸಾಧ್ಯವಾಗಲಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. \ No newline at end of file diff --git a/eesanje/url_47_220_12.txt b/eesanje/url_47_220_12.txt new file mode 100644 index 0000000000000000000000000000000000000000..a552403156c20b05e13b48b5334c9348fc401573 --- /dev/null +++ b/eesanje/url_47_220_12.txt @@ -0,0 +1,11 @@ +ವಿಶ್ವದ ಅಗ್ರಗಣ್ಯ ನಾಯಕರ ಪಟ್ಟಿಯಲ್ಲಿ ಮೋದಿ ಈಗಲೂ ನಂ.1 +ನವದೆಹಲಿ,ಡಿ.9- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ವಿಶ್ವದ ಅಗ್ರ ನಾಯಕರಾಗಿ ಹೊರ ಹೊಮ್ಮಿದ್ದಾರೆ. ಮಾರ್ನಿಂಗ್ ಕನ್ಸಲ್ಟ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ಶೇ.76ರಷ್ಟು ಅನುಮೋದನೆಯೊಂದಿಗೆ ವಿಶ್ವ ನಾಯಕರಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. +ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆಯ ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್ ಪ್ರಕಾರ ಭಾರತದಲ್ಲಿ ಶೇ. 76 ರಷ್ಟು ಜನರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ, ಆದರೆ ಶೇ.18 ರಷ್ಟು ಜನರು ಅದನ್ನು ಒಪ್ಪುವುದಿಲ್ಲ ಮತ್ತು ಶೇ.6 ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಲಿಲ್ಲ ಎಂದು ತಿಳಿಸಿದೆ. +ಗಮನಾರ್ಹವಾಗಿ, ಇದು ದೂರದ ಅಂತರದಲ್ಲಿ ದೊಡ್ಡ ಸಂಖ್ಯೆಯಾಗಿದೆ, ಏಕೆಂದರೆ ಎರಡನೇ ಅತ್ಯುತ್ತಮ ಅನುಮೋದನೆ ರೇಟಿಂಗ್ ಅನ್ನು ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ (66 ಪ್ರತಿಶತ) ಮತ್ತು ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ (58 ಪ್ರತಿಶತ) ಹೊಂದಿದ್ದಾರೆ. +ಹಿಂದಿನ ಸಮೀಕ್ಷೆಗಳಲ್ಲೂ ಪ್ರಧಾನಿ ಮೋದಿ ಜಾಗತಿಕ ರೇಟಿಂಗ್‍ನಲ್ಲಿ ಅಗ್ರಸ್ಥಾನದಲ್ಲಿದ್ದರು. ಅದೇ ಸಮಯದಲ್ಲಿ, ಇತರ ದೊಡ್ಡ ಜಾಗತಿಕ ನಾಯಕರ ಅನುಮೋದನೆ ರೇಟಿಂಗ್‍ಗಳು ಸಾಧಾರಣ ಮಟ್ಟದಲ್ಲಿವೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಶೇ. 37 ರ ಅನುಮೋದನೆಯನ್ನು ಹೊಂದಿದ್ದಾರೆ, ಕೆನಡಾದ ಪಿಎಂ ಜಸ್ಟಿನ್ ಟ್ರುಡೊ ಶೇ. 31, ಯುಕೆ ಪಿಎಂ ರಿಷಿ ಸುನಕ್ ರೇಟಿಂಗ್ ಶೇ.25 ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕೇವಲ ಶೇ. 24 ರಷ್ಟಿದ್ದಾರೆ. +ಪ್ರಧಾನಿ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷವು ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢದ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಭಾರಿ ವಿಜಯಗಳನ್ನು ದಾಖಲಿಸಿದ ನಂತರ ಈ ರೇಟಿಂಗ್‍ಗಳು ಬಂದಿವೆ. +2024ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಮುನ್ನ ಪ್ರಧಾನಿ ಮೋದಿ ಮತ್ತು ಅವರ ಪಕ್ಷಕ್ಕೆ ಇದು ಭಾರೀ ಉತ್ತೇಜನ ಎಂದು ಪರಿಗಣಿಸಲಾಗಿದೆ. ಏತನ್ಮಧ್ಯೆ, ಪ್ರಧಾನಿ ಮೋದಿ ಇತ್ತೀಚೆಗೆ ಯುಎಇಯಲ್ಲಿ ನಡೆದ ಪಕ್ಷಗಳ ಸಮ್ಮೇಳನ -28 (ಕಾಪ್28) ಹವಾಮಾನ ಕ್ರಿಯೆ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. +ಭಾರತೀಯ ವಿಮಾನಗಳಿಗೆ ಡಿಜಿಟಲ್ ನಕ್ಷೆ ಅಳವಡಿಕೆ +ಹವಾಮಾನ ಬದಲಾವಣೆಯನ್ನು ಎದುರಿಸುವ ಪ್ರಯತ್ನಗಳ ಭಾಗವಾಗಿ ಉದ್ದೇಶಿತ ರಾಷ್ಟ್ರೀಯವಾಗಿ ನಿರ್ಧರಿಸಿದ ಕೊಡುಗೆಯನ್ನು (ಎನ್‍ಡಿಸಿ) ಪೂರೈಸುವ ಕೆಲವು ದೇಶಗಳಲ್ಲಿ ಭಾರತವೂ ಸೇರಿದೆ ಎಂದು ಪ್ರಧಾನಿ ಮೋದಿ ಹೇಳಿದರು ಮತ್ತು ದೇಶವು 2028 ರಲ್ಲಿ ಸಿಒಪಿ 33 ಅನ್ನು ಆಯೋಜಿಸುತ್ತದೆ ಎಂದು ಪ್ರಸ್ತಾಪಿಸಿದರು. +ಅಸ್ಸಾಂ ಎಂದಿಗೂ ಮ್ಯಾನ್ಮಾರ್ ಭಾಗವಾಗಿರಲಿಲ್ಲ : ಹಿಮಂತ ಬಿಸ್ವಾ ಶರ್ಮಾ +ತಮ್ಮ ಯುಎಇ ಭೇಟಿಯ ಸಂದರ್ಭದಲ್ಲಿ, ಹವಾಮಾನ ಬದಲಾವಣೆಯು ಜಾಗತಿಕ ದಕ್ಷಿಣದ ದೇಶಗಳ ಮೇಲೆ ಅಪಾರ ಪರಿಣಾಮ ಬೀರಿದೆ ಎಂದು ಪ್ರಧಾನಿ ಮೋದಿ ಗಮನಿಸಿದರು. ಭಾರತ ಸೇರಿದಂತೆ ಜಾಗತಿಕ ದಕ್ಷಿಣದಲ್ಲಿರುವ ದೇಶಗಳು ಹವಾಮಾನ ಬದಲಾವಣೆಯಲ್ಲಿ ಸಣ್ಣ ಪಾತ್ರವನ್ನು ವಹಿಸುತ್ತವೆ ಆದರೆ ಹವಾಮಾನ ಬದಲಾವಣೆಯ ಪ್ರಭಾವವು ಅವುಗಳ ಮೇಲೆ ಅಪಾರವಾಗಿದೆ ಎಂದು ಅವರು ಒತ್ತಿ ಹೇಳಿದರು. \ No newline at end of file diff --git a/eesanje/url_47_220_2.txt b/eesanje/url_47_220_2.txt new file mode 100644 index 0000000000000000000000000000000000000000..55bbc5da5b0322e0a495dd88af400db719f38b63 --- /dev/null +++ b/eesanje/url_47_220_2.txt @@ -0,0 +1,7 @@ +ಭಾರತ-ಪ್ಯಾಲೇಸ್ತೀನ್‍ ದೀರ್ಘಕಾಲದ ಸಂಬಂಧ ಮುಂದುವರೆಯಲಿದೆ : ಜೈಶಂಕರ್ +ನವದೆಹಲಿ,ಡಿ.10- ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಪ್ಯಾಲೇಸ್ತೀನ್ ಪ್ರಧಾನಿ ಮೊಹಮ್ಮದ್ ಶತಾಯೆಹ್ ಅವರೊಂದಿಗೆ ಶನಿವಾರ ಮಾತುಕತೆ ನಡೆಸಿದರು. ಜೈಶಂಕರ್ ಅವರು ಪ್ಯಾಲೆಸ್ತೀನ್ ಕುರಿತು ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದರು. ಟೆಲಿಫೋನಿಕ್ ಸಂಭಾಷಣೆಯ ಸಮಯದಲ್ಲಿ ಮೊಹಮ್ಮದ್ ಸ್ತಯ್ಯೆ ಅವರು ಗಾಜಾ ಮತ್ತು ಪಶ್ಚಿಮ ದಂಡೆಯಲ್ಲಿನ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು. ಉಭಯ ನಾಯಕರು ಸಂಪರ್ಕದಲ್ಲಿರಲು ಒಪ್ಪಿಕೊಂಡರು. +ಪ್ಯಾಲೆಸ್ತೀನ್ ಪ್ರಧಾನಿ ಮೊಹಮ್ಮದ್ ಶತಾಯೆಹ್ ಅವರೊಂದಿಗೆ ಮಾತನಾಡಿದ್ದೇನೆ ಅವರು ಗಾಜಾ ಮತ್ತು ವೆಸ್ಟ್ ಬ್ಯಾಂಕ್ ಎರಡರ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು. ಪ್ಯಾಲೆಸ್ತೀನ್ ಕುರಿತು ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದರು. ಸಂಪರ್ಕದಲ್ಲಿರಲು ಒಪ್ಪಿಕೊಂಡರು ಎಂದು ಜೈಶಂಕರ್ ಎಕ್ಸ್‍ನಲ್ಲಿ ಫೋಸ್ಟ್ ಮಾಡಿದ್ದಾರೆ. +ಪ್ಯಾಲೆಸ್ತೀನ್ ಸಮಸ್ಯೆಗೆ ಸಂಬಂಧಿಸಿದಂತೆ ಭಾರತದ ನಿಲುವು ದೀರ್ಘಕಾಲದ ಮತ್ತು ಸ್ಥಿರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅರಿಂದಮ್ ಬಾಗ್ಚಿ ಅಕ್ಟೋಬರ್ 12 ರಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅರಿಂದಮ್ ಬಾಗ್ಚಿ, ಭಾರತವು ಯಾವಾಗಲೂ ಇಸ್ರೇಲ್‍ನೊಂದಿಗೆ ಶಾಂತಿಯಿಂದ ಸುರಕ್ಷಿತ ಮತ್ತು ಮಾನ್ಯತೆ ಪಡೆದ ಗಡಿಗಳಲ್ಲಿ ವಾಸಿಸುವ ಪ್ಯಾಲೆಸ್ತೀನ್‍ನ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ರಾಜ್ಯವನ್ನು ಸ್ಥಾಪಿಸುವ ಕಡೆಗೆ ನೇರ ಮಾತುಕತೆಗಳ ಪುನರಾರಂಭವನ್ನು ಪ್ರತಿಪಾದಿಸುತ್ತದೆ. ಆ ಸ್ಥಾನವು ಹಾಗೆಯೇ ಉಳಿದಿದೆ ಎಂದಿದ್ದರು. +ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ಓವೈಸಿ ನೇಮಕ, ಪ್ರಮಾಣವಚನ ಬಹಿಷ್ಕರಿಸಿದ ಬಿಜೆಪಿ +ಕಳೆದ ಅಕ್ಟೋಬರ್‍ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದರು ಮತ್ತು ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಿದರು.ಇಸ್ರೇಲ-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ದೀರ್ಘಕಾಲೀನ ತತ್ವದ ನಿಲುವನ್ನು ಪುನರುಚ್ಚರಿಸುವಾಗ ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ನೀಡುವ ಭಾರತದ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು. +ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದರು. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಪ್ರಾಣಹಾನಿಗಾಗಿ ನನ್ನ ಸಂತಾಪವನ್ನು ತಿಳಿಸಿದ್ದೇನೆ. ನಾವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತೇವೆ ಎಂದು ಪ್ರಧಾನಿ ಮೋದಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_220_3.txt b/eesanje/url_47_220_3.txt new file mode 100644 index 0000000000000000000000000000000000000000..08175bc33ff1d75c00401dfbea27cc6633412955 --- /dev/null +++ b/eesanje/url_47_220_3.txt @@ -0,0 +1,5 @@ +ಟ್ರಕ್‍ಗೆ ಅಪ್ಪಳಿಸಿ ಹೊತ್ತಿ ಉರಿದ ಕಾರು, 8 ಮಂದಿ ಸಜೀವ ದಹನ +ಲಖನೌ,ಡಿ.10- ಉತ್ತರ ಪ್ರದೇಶದಲ್ಲಿ ನಿನ್ನೆ ತಡರಾತ್ರಿ ಹೆದ್ದಾರಿಯಲ್ಲಿ ಟ್ರಕ್‍ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಮಂದಿ ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಸೆಂಟ್ರಲ್ ಲಾಕ್ ಆಗಿದ್ದ ಕಾರು ಬರೇಲಿಯಲ್ಲಿ ಏಳು ವಯಸ್ಕರು ಮತ್ತು ಮಗುವನ್ನು ಸಿಕ್ಕಿಹಾಕಿಕೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಅಪಘಾತ ಸ್ಥಳದ ದೃಶ್ಯಾವಳಿಗಳ ಪ್ರಕಾರ, ನೈನಿತಾಲ್ ಹೆದ್ದಾರಿಯಲ್ಲಿ ಟ್ರಕ್ ಪಕ್ಕದಲ್ಲಿ ಹೊತ್ತಿ ಉರಿಯುತ್ತಿರುವ ಕಾರು ಕಂಡುಬಂದಿದೆ. ಅಪಘಾತದ ನಂತರ ಕಾರಿನ ಬಾಗಿಲುಗಳು ಜಾಮ್ ಆಗಿತ್ತು ಮತ್ತು ಅದನ್ನು ತೆರೆಯಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. +ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಆ್ಯಪ್ +ಕಾರು ಎದುರಿನ ಲೇನ್‍ಗೆ ತಿರುಗಿ ಟ್ರಕ್‍ಗೆ ಡಿಕ್ಕಿ ಹೊಡೆದಿದೆ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಚಂದ್ರ ಭನ್ ಧುಲೆ ತಿಳಿಸಿದ್ದಾರೆ. ಭೋಜಿಪುರದ ಬಳಿ ಹೆದ್ದಾರಿಯಲ್ಲಿ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದು ಎಳೆದ ಪರಿಣಾಮ ಬೆಂಕಿ ಹೊತ್ತಿಕೊಂಡಿತು. ಅದು ಸೆಂಟ್ರಲ್ ಲಾಕ್ ಆಗಿದ್ದು, ಬೆಂಕಿಯಿಂದಾಗಿ ಒಳಗಿದ್ದ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪ್ರಯಾಣಿಕರು ಮದುವೆಗೆ ತೆರಳುತ್ತಿದ್ದರು, ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_220_4.txt b/eesanje/url_47_220_4.txt new file mode 100644 index 0000000000000000000000000000000000000000..ded550ea937746456c955ce745a6944613ee9c01 --- /dev/null +++ b/eesanje/url_47_220_4.txt @@ -0,0 +1,6 @@ +2030ರ ವೇಳೆಗೆ 1 ಟ್ರಿಲಿಯನ್ ಮರ ನೆಡಲು ಅದಾನಿ ಸಂಸ್ಥೆ ನಿರ್ಧಾರ +ನವದೆಹಲಿ,ಡಿ.10- ಮುಂಬರುವ 2030 ರ ವೇಳೆಗೆ ಒಂದು ಟ್ರಿಲಿಯನ್ ಮರಗಳನ್ನು ನೆಡುವ ವಿಶ್ವ ಆರ್ಥಿಕ ವೇದಿಕೆಯ ಗುರಿಯ ಭಾಗವಾಗಿ ಅದಾನಿ ಗ್ರೂಪ್ 29 ಮಿಲಿಯನ್ ಮರಗಳನ್ನು ನೆಟ್ಟಿದೆ ಎಂದು ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಇಂದು ಹೇಳಿದ್ದಾರೆ. ಮಿಷನ್‍ಗೆ ಕೊಡುಗೆ ನೀಡಲು ಈ ದಶಕದ ಅಂತ್ಯದ ವೇಳೆಗೆ 100 ಮಿಲಿಯನ್ ಮರಗಳನ್ನು ನೆಡುವುದು ಅವರ ಗುರಿಯಾಗಿದೆ. ಇವುಗಳಲ್ಲಿ, ಗ್ರೂಪ್ ಭಾರತದ ಕರಾವಳಿಯಲ್ಲಿ 37 ಮಿಲಿಯನ್ ಮ್ಯಾಂಗ್ರೋವ್ ಮರಗಳನ್ನು ಮತ್ತು 63 ಮಿಲಿಯನ್ ಒಳನಾಡಿನ ಮರಗಳನ್ನು ನೆಡುವ ಗುರಿಯನ್ನು ಹೊಂದಿದೆ ಎಂದು ಅದಾನಿ ಎಕ್ಸ್ ಮಾಡಿದ್ದಾರೆ. +2030 ರ ವೇಳೆಗೆ ಒಂದು ಟ್ರಿಲಿಯನ್ ಮರಗಳನ್ನು ನೆಡುವ ಮಹತ್ವಾಕಾಂಕ್ಷೆಯನ್ನು ಬೆಂಬಲಿಸಲು ತನ್ನ ಐತಿಹಾಸಿಕ ಪ್ರತಿಜ್ಞೆಯನ್ನು ಕಾರ್ಯಗತಗೊಳಿಸುವುದನ್ನು ಮುಂದುವರಿಸುವುದನ್ನು ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಈ ಜಾಗತಿಕ ಪ್ರತಿಜ್ಞೆಯಲ್ಲಿ, ನಾವು 2030 ರ ವೇಳೆಗೆ 100 ಮಿಲಿಯನ್ ಮರಗಳನ್ನು ನೆಡಲು ಬದ್ಧರಾಗಿದ್ದೇವೆ, ಜಾಗತಿಕವಾಗಿ ಭಾರತೀಯ ಕಾಪೆರ್ರೇಟ್‍ನ ಅತ್ಯಂತ ಮಹತ್ವಾಕಾಂಕ್ಷೆಯ ಪ್ರತಿಜ್ಞೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. +ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ, ಉಜಿರೆಯಿಂದ ಪಾದಯಾತ್ರೆ +ಈಗಾಗಲೇ 29 ಮಿಲಿಯನ್ ನಾವು ಜೀವವೈವಿಧ್ಯತೆ, ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಗ್ರಾಮೀಣ ಜೀವನೋಪಾಯವನ್ನು ಹೆಚ್ಚಿಸಲು ನಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡುವುದನ್ನು ಮುಂದುವರಿಸುತ್ತೇವೆ. +ನಮ್ಮ ಗುರಿ:ಭಾರತದ ಕರಾವಳಿಯಲ್ಲಿ 37 ಮಿಲಿಯನ್ ಮ್ಯಾಂಗ್ರೋವ್ಗಳು ಮತ್ತು 63 ಮಿಲಿಯನ್ ಒಳನಾಡಿನ ಮರಗಳನ್ನು ನೇಡಲು ಉದ್ದೇಶಿಸಲಾಗಿದೆ ಎಂದು ಅದಾನಿ ಸೇರಿಸಿದ್ದಾರೆ. ಹಸಿರು ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅದಾನಿ ಗ್ರೂಪ್ ಕೈಗೊಂಡ ವಿವಿಧ ಹಸಿರು ಉಪಕ್ರಮಗಳಲ್ಲಿ ಇದು ಒಂದಾಗಿದೆ. ಅದಾನಿ ಗ್ರೂಪ್ ಒಡೆತನದ ಅಂಬುಜಾ ಮತ್ತು ಎಸಿಸಿ ಎರಡೂ ಸಿಮೆಂಟ್ ಉದ್ಯಮದಲ್ಲಿ ಸುಸ್ಥಿರ ಕ್ರಾಂತಿಯನ್ನು ಮುನ್ನಡೆಸುತ್ತಿವೆ ಎಂದು ಅದಾನಿ ಕಳೆದ ಗುರುವಾರ ಹೇಳಿಕೊಂಡಿದ್ದರು. \ No newline at end of file diff --git a/eesanje/url_47_220_5.txt b/eesanje/url_47_220_5.txt new file mode 100644 index 0000000000000000000000000000000000000000..236bab9a9eaec4f98c9dbf3c8d9e2f2f5f304452 --- /dev/null +++ b/eesanje/url_47_220_5.txt @@ -0,0 +1,10 @@ +ಬೆಂಗಳೂರು ಸೇರಿ ದೇಶದ 40ಕ್ಕೂ ಹೆಚ್ಚು ಕಡೆ ಎನ್‍ಐಎ ದಾಳಿ +ಮುಂಬೈ,ಡಿ.9- ಐಸಿಸ್ ಭಯೋತ್ಪಾದನಾ ಘಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಬೆಳಗ್ಗೆ ಮಹಾರಾಷ್ಟ್ರದ 40 ಸ್ಥಳಗಳಲ್ಲಿ ದಾಳಿ ನಡೆಸಿ 13 ಜನರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲೂ ದಾಳಿ ಮಾಡಿ ಓರ್ವ ಶಂಕಿತ ವ್ಯಕ್ತಿಯನ್ನು ವಿಚಾರಣೆ ನಡೆಸಿದೆ. +ಪುಲಿಕೇಶಿನಗರದ ಮೋರ್ ರಸ್ತೆಯಲ್ಲಿರುವ ಮನೆಯೊಂದರ ಮೂರನೇ ಮಹಡಿಯಲ್ಲಿ ವಾಸವಾಗಿರುವ ಆಲಿ ಅಬ್ಬಾಸ್ ಅವರ ಮನೆ ಮೇಲೆ ಇಂದು ಬೆಳಗಿನ ಜಾವ 5.30ರ ಸುಮಾರಿನಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ಮಾಡಿ ಅವರನ್ನು ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. +ಮುಂಬೈ ಮೂಲದ ಆಲಿ ಅಬ್ಬಾಸ್ ಕಳೆದ ನಾಲ್ಕು ವರ್ಷಗಳ ಹಿಂದೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದು, ಇವರಿಗೆ ಮೂರು ಮಕ್ಕಳಿದ್ದಾರೆ. ಈ ಹಿಂದೆ ಡಾಟಾ ಕನ್ಸಲ್ಟೆನ್ಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಕರೋನ ನಂತರ ಕೆಲಸ ಬಿಟ್ಟಿದ್ದರು. ಇವರ ಪತ್ನಿ ಕ್ಲಿನಿಕ್ ನಡೆಸುತ್ತಾರೆ. +ಇತ್ತೀಚೆಗೆ ಆಲಿ ಅಬ್ಬಾಸ್ ವಾಟ್ಸಪ್ ಗ್ರೂಪ್ ಮಾಡಿಕೊಂಡು ಪ್ರಚೋದನಾ ಹೇಳಿಕೆ ಕಳುಹಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಎನ್‍ಐಎ ಅಧಿಕಾರಿಗಳು ಇಂದು ಅವರ ಮನೆ ಮೇಲೆ ದಾಳಿ ಮಾಡಿ ವಿಚಾರಣೆಗೊಳಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. +ಈ ಸ್ಥಳಗಳಲ್ಲಿ ಹೆಚ್ಚಿನವು ಥಾಣೆ ಗ್ರಾಮಾಂತರ (31) ಮತ್ತು ಥಾಣೆ ನಗರದಲ್ಲಿ (9), ಮುಂಬೈನ ಪಕ್ಕದಲ್ಲಿದೆ. ಪುಣೆಯಲ್ಲಿ, ಎರಡು ಸ್ಥಳಗಳಲ್ಲಿ ಮತ್ತು ಮೀರಾ ಭಯಂದರ್‍ನಲ್ಲಿ ಒಂದು ಸ್ಥಳದ ಮೇಳೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. +ಅಸ್ಸಾಮಿ ಮುಸ್ಲಿಮರ ಆರ್ಥಿಕ ಮೌಲ್ಯಮಾಪನಕ್ಕೆ ನಿರ್ಧಾರ +ಸ್ಪೋಟಕಗಳನ್ನು ತಯಾರಿಸುವಲ್ಲಿ ತೊಡಗಿಸಿಕೊಂಡಿರುವ ಶಂಕಿತ ಆರೋಪಿ – ಆಕಿಫ್ ಅತೀಕ್ ನಾಚನ್ – ಕಳೆದ ಆಗಸ್ಟ್‍ನಲ್ಲಿ ಐಸಿಸ್ ಭಯೋತ್ಪಾದನಾ ಘಟಕದ ಪ್ರಕರಣದಲ್ಲಿ ಆರನೇ ಆರೋಪಿಯನ್ನಾಗಿ ಬಂಧಿಸಲಾಗಿತ್ತು.ಮುಂಬೈನ ತಬಿಶ್ ನಾಸರ್ ಸಿದ್ದಿಕಿ, ಪುಣೆಯ ಜುಬೈರ್ ನೂರ್ ಮೊಹಮ್ಮದ್ ಶೇಖ್ ಅಲಿಯಾಸ್ ಅಬು ನುಸೈಬಾ ಮತ್ತು ಅದ್ನಾನ್ ಸರ್ಕಾರ್ ಮತ್ತು ಥಾಣೆಯ ಶಾರ್ಜೀಲ್ ಶೇಖ್ ಮತ್ತು ಜುಲಿಕರ್ ಅಲಿ ಬರೋಡಾವಾಲಾ ಅವರನ್ನು ಕಳೆದ ತಿಂಗಳು ಏಜೆನ್ಸಿ ಬಂಧಿಸಿತ್ತು. +ಐಸಿಸ್ ಸಂಪರ್ಕ ಮಾಹಿತಿ ಹಿನ್ನಲೆ:ದಾಳಿ ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಂಡ್ಲರ್‍ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆಂಬ ಆರೋಪ ಕೇಳಿಬಂದಿದ್ದು, ಭಾರತದಲ್ಲಿ ಐಸಿಸ್ ವಿಚಾರಧಾರೆ ಹರಡುವ ಪ್ರಯತ್ನ ಮಾಡುತ್ತಿದ್ದ ಹಿನ್ನಲೆಯಲ್ಲಿ ಎನ್‍ಐಎ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. +ಈ ಹಿಂದೆ ಜುಲೈನಲ್ಲಿ ಪುಣೆ ಪೊಲೀಸರು ಅಮೀರ್ ಅಬ್ದುಲ್ ಹಮೀದ್‍ಖಾನ್ ಹಾಗೂ ಮೊಹ್ಮದ ಯಾಕೂಬ್ ಸಾಕಿ ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಇಬ್ಬರೂ ಐಸಿಸ್ ಸಂಪರ್ಕದಲ್ಲಿರುವುದು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ತನಿಖೆ ಆರಂಭಿಸಿದರು. ಶಂಕಿತ ಉಗ್ರರು ಕರ್ನಾಟಕ-ಮಹಾರಾಷ್ಟ್ರ ಗಡಿಯ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ ಮಾಡಿಸಿದ್ದರು ಎಂಬ ಅಂಶ ಬಯಲಾಗಿತ್ತು. ಹೀಗಾಗಿ ಎನ್‍ಐಎ ಅಕಾರಿಗಳು ಈ ದಾಳಿ ಮಾಡಿದ್ದಾರೆ. \ No newline at end of file diff --git a/eesanje/url_47_220_6.txt b/eesanje/url_47_220_6.txt new file mode 100644 index 0000000000000000000000000000000000000000..65b052cc779cd38b28e86fd2c96dc7a93db46888 --- /dev/null +++ b/eesanje/url_47_220_6.txt @@ -0,0 +1,8 @@ +ಕಾಶ್ಮೀರದಲ್ಲಿ ಮೈನಸ್ 4.6 ಡಿಗ್ರಿ ಸೆಲ್ಸಿಯಸ್‍ಗೆ ಕುಸಿದ ತಾಪಮಾನ +ಶ್ರೀನಗರ, ಡಿ 9 (ಪಿಟಿಐ) ಈ ಋತುವಿನ ಅತ್ಯಂತ ತಂಪಾದ ರಾತ್ರಿಯನ್ನು ಕಣಿವೆ ರಾಜ್ಯ ಕಾಶ್ಮೀರ ಅನುಭವಿಸಿದೆ, ಇಲ್ಲಿನ ಕನಿಷ್ಠ ತಾಪಮಾನವು ಮೈನಸ್ 4.6 ಡಿಗ್ರಿ ಸೆಲ್ಸಿಯಸ್‍ನಲ್ಲಿ ಘನೀಕರಿಸುವ ಹಂತಕ್ಕಿಂತ ಕೆಳಕ್ಕೆ ನೆಲೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯಲ್ಲಿ ನಿನ್ನೆ ರಾತ್ರಿ ದಾಖಲಾದ ತಾಪಮಾನವು ಗುರುವಾರ ರಾತ್ರಿಯ ಮೈನಸ್ 2.4 ಡಿಗ್ರಿ ಸೆಲ್ಸಿಯಸ್‍ನಿಂದ ಎರಡು ಹಂತಗಳಿಗಿಂತ ಕಡಿಮೆಯಾಗಿದೆ ಎಂದು ಅವರು ಹೇಳಿದರು. +ಈ ಋತುವಿನಲ್ಲಿ ಶ್ರೀನಗರದ ತಾಪಮಾನ ಕಡಿಮೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಹಲ್ಗಾಮ್ ಕಾಶ್ಮೀರ ಕಣಿವೆಯಲ್ಲಿ ಅತ್ಯಂತ ಶೀತಲ ಪ್ರದೇಶವಾಗಿತ್ತು. ವಾರ್ಷಿಕ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್‍ಗಳಲ್ಲಿ ಒಂದಾಗಿರುವ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ತನ್ನ ಕನಿಷ್ಠ ತಾಪಮಾನವನ್ನು ಮೈನಸ್ 5 ಡಿಗ್ರಿ ಸೆಲ್ಸಿಯಸ್‍ನಲ್ಲಿ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಾರಾಮುಲ್ಲಾ ಜಿಲ್ಲಾಯ ಪ್ರಸಿದ್ಧ ರೆಸಾರ್ಟ್ ಗುಲ್ಮಾರ್ಗ್‍ನಲ್ಲಿ ಮೈನಸ್ 4.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಗುರುವಾರ ರಾತ್ರಿ ಮೈನಸ್ 3 ಡಿಗ್ರಿ ಸೆಲ್ಸಿಯಸ್‍ನಿಂದ ಕಡಿಮೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಖಾಜಿಗುಂಡ್‍ನಲ್ಲಿ ಕನಿಷ್ಠ ಮೈನಸ್ 2.8 ಡಿಗ್ರಿ ಸೆಲ್ಸಿಯಸ್, ಕೊಕರ್ನಾಗ್ ಪಟ್ಟಣದಲ್ಲಿ ಮೈನಸ್ 2.3 ಡಿಗ್ರಿ ಸೆಲ್ಸಿಯಸ್ ಮತ್ತು ಕುಪ್ವಾರದಲ್ಲಿ ಮೈನಸ್ 3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. +ಮೆರವಣಿಗೆ ವೇಳೆ ಗೋಡೆ ಕುಸಿದು ಮಗು ಸೇರಿ 7 ಮಹಿಳೆಯರ ಸಾವು +ಹವಾಮಾನವು ಸಾಮಾನ್ಯವಾಗಿ ಮೋಡವಾಗಿರುತ್ತದೆ ಆದರೆ ಡಿಸೆಂಬರ್ 11 ರವರೆಗೆ ಮುಖ್ಯವಾಗಿ ಶುಷ್ಕವಾಗಿರುತ್ತದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇದು ರಾತ್ರಿಯ ತಾಪಮಾನದಲ್ಲಿ ಕೆಲವು ಡಿಗ್ರಿಗಳಷ್ಟು ಕುಸಿತವನ್ನು ಊಹಿಸುತ್ತದೆ. +ಡಿಸೆಂಬರ್ 12 ರಿಂದ 15 ರವರೆಗೆ ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶಗಳಲ್ಲಿನ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಅಥವಾ ಹಿಮಪಾತದ ಸಾಧ್ಯತೆಯಿದೆ ಎಂದು ಕಚೇರಿ ತಿಳಿಸಿದೆ. \ No newline at end of file diff --git a/eesanje/url_47_220_7.txt b/eesanje/url_47_220_7.txt new file mode 100644 index 0000000000000000000000000000000000000000..a15337bb1d51ec4caa2ec76ba47f97e060e045fe --- /dev/null +++ b/eesanje/url_47_220_7.txt @@ -0,0 +1,6 @@ +ಅಸ್ಸಾಮಿ ಮುಸ್ಲಿಮರ ಆರ್ಥಿಕ ಮೌಲ್ಯಮಾಪನಕ್ಕೆ ನಿರ್ಧಾರ +ಗುವಾಹಟಿ, ಡಿ 9 (ಪಿಟಿಐ) ರಾಜ್ಯದ ಸ್ಥಳೀಯ ಅಸ್ಸಾಮಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮೌಲ್ಯಮಾಪನವನ್ನು ನಡೆಸುವುದಾಗಿ ಅಸ್ಸಾಂ ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. +ಸ್ಥಳೀಯ ಅಸ್ಸಾಮಿ ಮುಸ್ಲಿಮರ ಸಾಮಾಜಿಕ-ಆರ್ಥಿಕ ಮೌಲ್ಯಮಾಪನವನ್ನು ಅಲ್ಪಸಂಖ್ಯಾತ ವ್ಯವಹಾರಗಳ ನಿರ್ದೇಶನಾಲಯ ಮತ್ತು ಚಾರ್ ಪ್ರದೇಶಗಳ ಮೂಲಕ ನಡೆಸಲಾಗುವುದು ಎಂದು ಶರ್ಮಾ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.ಅಸ್ಸಾಂನ ಚಾರ್ ಪ್ರದೇಶಗಳ ಅಭಿವೃದ್ಧಿ ನಿರ್ದೇಶನಾಲಯವನ್ನು ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಚಾರ್ ಪ್ರದೇಶಗಳ ನಿರ್ದೇಶನಾಲಯ, ಅಸ್ಸಾಂ ಎಂದು ಮರುನಾಮಕರಣ ಮಾಡಲು ಸಭೆ ನಿರ್ಧರಿಸಿತು. +ಮಾಗ್ ಬಿಹು ಸಮಯದಲ್ಲಿ ಆಯೋಜಿಸಲಾಗುವ ಸಾಂಪ್ರದಾಯಿಕ ಎಮ್ಮೆ ಮತ್ತು ಗೂಳಿ ಕಾಳಗಗಳಿಗೆ ಅನುಮತಿ ನೀಡುವ ವಿವರವಾದ ಕಾರ್ಯವಿಧಾನ ಮತ್ತು ಪ್ರಮಾಣಿತ ಕಾರ್ಯ ವಿಧಾನ (ಎಸ್‍ಒಪಿ) ವಿಷಯಕ್ಕೆ ಕ್ಯಾಬಿನೆಟ್ ತಾತ್ವಿಕ ಒಪ್ಪಿಗೆ ನೀಡಿದೆ. +ಸೋನಿಯಾ ಗಾಂಧಿ ಹುಟ್ಟುಹಬ್ಬ, ಶುಭ ಕೋರಿದ ಮೋದಿ +ಎಸ್‍ಒಪಿಯು ಪ್ರಾಣಿಗಳ ಮೇಲೆ ಯಾವುದೇ ಉದ್ದೇಶಪೂರ್ವಕ ಚಿತ್ರಹಿಂಸೆ ಅಥವಾ ಕ್ರೌರ್ಯವನ್ನು ನಡೆಸುವುದಿಲ್ಲ ಮತ್ತು ಶತಮಾನಗಳ-ಹಳೆಯ ಅಸ್ಸಾಮಿ ಸಾಂಸ್ಕøತಿಕ ಸಂಪ್ರದಾಯದ ಅವಿಭಾಜ್ಯ ಅಂಗವಾದ ವಾರ್ಷಿಕ ಎಮ್ಮೆ ಕಾದಾಟಗಳ ಸಮಯದಲ್ಲಿ ಸಂಘಟಕರು ಅವುಗಳ ಯೋಗಕ್ಷೇಮವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದೆ. \ No newline at end of file diff --git a/eesanje/url_47_220_8.txt b/eesanje/url_47_220_8.txt new file mode 100644 index 0000000000000000000000000000000000000000..bada4b0890d242c498e8ea525138c01fe20a0ff3 --- /dev/null +++ b/eesanje/url_47_220_8.txt @@ -0,0 +1,7 @@ +ಕೋಟಿ ಕೋಟಿ ಹಣ ಪತ್ತೆಯಾದ ಕಾಂಗ್ರೆಸ್ ಸಂಸದನ ಬಂಧನಕ್ಕೆ ಮರಾಂಡಿ ಒತ್ತಾಯ +ರಾಂಚಿ, ಡಿ 9 (ಪಿಟಿಐ) ಬಿಜೆಪಿಯ ಜಾರ್ಖಂಡ್ ಘಟಕದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರು ಕಾಂಗ್ರೆಸ್‍ನ ರಾಜ್ಯಸಭಾ ಸಂಸದ ಧೀರಜ್ ಪ್ರಸಾದ್ ಸಾಹು ಅವರ ನಿವೇಶನದಿಂದ ಲೆಕ್ಕದಲ್ಲಿ ಇಲ್ಲದ ನಗದು ಪತ್ತೆಯಾಗಿರುವುದರಿಂದ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. +ಒಡಿಶಾ ಮೂಲದ ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ಮತ್ತು ಅದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ಮೂಲಕ ಇದುವರೆಗೆ ಸುಮಾರು 225 ಕೋಟಿ ರೂ. ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಸಾಹು ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಬೇಕು ಎಂದು ಇದೇ ಸಂದರ್ಭದಲ್ಲಿ ಮರಾಂಡಿ ಆಗ್ರಹಿಸಿದ್ದಾರೆ.ಇಷ್ಟು ದೊಡ್ಡ ಪ್ರಮಾಣದ ನಗದು ದಂಧೆ ಅಭೂತಪೂರ್ವವಾಗಿದೆ ಎಂದು ಒತ್ತಿ ಹೇಳಿದ ಅವರು, ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು ಮತ್ತು ಹಣವು ಉನ್ನತ ಕಾಂಗ್ರೆಸ್ ನಾಯಕತ್ವ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‍ಗೆ ಸಂಬಂಧಿಸಿದೆ ಎಂದು ಆರೋಪಿಸಿದರು. +ಅಸ್ಸಾಂ ಎಂದಿಗೂ ಮ್ಯಾನ್ಮಾರ್ ಭಾಗವಾಗಿರಲಿಲ್ಲ : ಹಿಮಂತ ಬಿಸ್ವಾ ಶರ್ಮಾ +ಐಟಿ ಇಲಾಖೆಯಿಂದ ಮೂರು ಡಜನ್ ಎಣಿಕೆ ಯಂತ್ರಗಳನ್ನು ನಿಯೋಜಿಸಲಾಗಿದೆ. ಯಂತ್ರಗಳು ಸೀಮಿತ ಸಾಮಥ್ರ್ಯ ಹೊಂದಿರುವುದರಿಂದ ಎಣಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ಸಾಹು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಅವರು ಲಭ್ಯವಿಲ್ಲ ಎಂದು ಅವರ ಕಚೇರಿ ಮೂಲಗಳು ಪಿಟಿಐಗೆ ತಿಳಿಸಿದೆ. +ಅಲ್ಮಿರಾಗಳಲ್ಲಿ ಬಚ್ಚಿಟ್ಟಿದ್ದ 200 ಕೋಟಿ ರೂಪಾಯಿ ನಗದು, ಒಡಿಶಾದ ಬೋಲಂಗಿರ್ ಜಿಲ್ಲೆಯ ಡಿಸ್ಟಿಲರಿ ಗುಂಪಿನ ಆವರಣದಿಂದ ವಶಪಡಿಸಿಕೊಂಡರೆ, ಉಳಿದ ಮೊತ್ತವು ಒಡಿಶಾದ ಸಂಬಲ್‍ಪುರ ಮತ್ತು ಸುಂದರ್‍ಗಢ್ , ಬೊಕಾರೊ ಮತ್ತು ರಾಂಚಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_220_9.txt b/eesanje/url_47_220_9.txt new file mode 100644 index 0000000000000000000000000000000000000000..86f399d3896f615e11ae754407175d1eef52ccc5 --- /dev/null +++ b/eesanje/url_47_220_9.txt @@ -0,0 +1,6 @@ +ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ +ಹೈದರಾಬಾದ್, ಡಿ.9- ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಮಹಿಳೆಯರು, ಹುಡುಗಿಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಮಹಾ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ತೆಲಂಗಾಣ ಸರ್ಕಾರದ ಸಾರಿಗೆ ಇಲಾಖೆಯು 6 ಗ್ಯಾರಂಟಿಗಳಲ್ಲಿ ಒಂದಾದ ಮಹಾ ಲಕ್ಷ್ಮಿಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. +ಸೆಪ್ಟೆಂಬರ್ 18 ರಂದು ತೆಲಂಗಾಣದ ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಾಲಕ್ಷ್ಮಿ ಯೋಜನೆಯನ್ನು ಘೋಷಿಸಿತು. ಯೋಜನೆಯ ಪ್ರಕಾರ, ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸುತ್ತದೆ ಮತ್ತು ಮಹಾಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2500 ನೀಡುತ್ತದೆ. +ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಭರವಸೆ ನೀಡಿದ ಎಲ್ಲಾ ಆರು ಭರವಸೆಗಳನ್ನು ರೇವಂತ್ ರೆಡ್ಡಿ ಅಂಗೀಕರಿಸಿದ್ದಾರೆ. ಮಹಾಲಕ್ಷ್ಮಿ ಯೋಜನೆಯು ತೆಲಂಗಾಣ ರಾಜ್ಯದ ಗಡಿಯೊಳಗೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‍ಆರ್‍ಟಿಸಿ) ನಿರ್ವಹಿಸುವ ಸರ್ಕಾರಿ ಪಲ್ಲೆ ವೆಲುಗು ಮತ್ತು ಎಕ್ಸ್‍ಪ್ರೆಸ್ ಬಸ್‍ಗಳಲ್ಲಿ ಹುಡುಗಿಯರು, ಎಲ್ಲಾ ವಯೋಮಾನದ ಮಹಿಳೆಯರು ಮತ್ತು ಟ್ರಾನ್ಸ್‍ಜೆಂಡರ್ ವ್ಯಕ್ತಿಗಳಿಗೆ ಉಚಿತ ಪ್ರಯಾಣವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯು ಇಂದಿನಿಂದ ರಿಂದ ಜಾರಿಗೆ ಬಂದಿದೆ. +ಸೋನಿಯಾ ಗಾಂಧಿ ಹುಟ್ಟುಹಬ್ಬ, ಶುಭ ಕೋರಿದ ಮೋದಿ +ತೆಲಂಗಾಣದಲ್ಲಿ ನೆಲೆಸಿರುವ ಹುಡುಗಿಯರು, ಎಲ್ಲಾ ವಯೋಮಾನದ ಮಹಿಳೆಯರು ಮತ್ತು ಟ್ರಾನ್ಸ್‍ಜೆಂಡರ್ ವ್ಯಕ್ತಿಗಳ ಅನುಕೂಲಕ್ಕಾಗಿ ಈ ಯೋಜನೆಯನ್ನು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಇದಲ್ಲದೆ, ಸಾಫ್ಟ್‍ವೇರ್ ಆಧಾರಿತ ಮಹಾ ಲಕ್ಷ್ಮಿ ಸ್ಮಾರ್ಟ್ ಕಾರ್ಡ್ ಅನ್ನು ಅಭಿವೃದ್ಧಿಪಡಿಸುವ ಯೋಜನೆಗಳು ನಡೆಯುತ್ತಿವೆ, ಈ ಯೋಜನೆಯ ಪ್ರಯೋಜನಗಳನ್ನು ಸರಿಯಾದ ಸಮಯದಲ್ಲಿ ಪಡೆಯಲು ತಡೆರಹಿತ ಮತ್ತು ಪರಿಣಾಮಕಾರಿ ಮೋಡ್ ಅನ್ನು ಒದಗಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ. \ No newline at end of file diff --git a/eesanje/url_47_221_1.txt b/eesanje/url_47_221_1.txt new file mode 100644 index 0000000000000000000000000000000000000000..0a25c683ecfbc28b6f0ae02ece4e27a817aa7897 --- /dev/null +++ b/eesanje/url_47_221_1.txt @@ -0,0 +1,6 @@ +ಐಸಿಸ್ ಲಿಂಕ್ : ಮಹಾರಾಷ್ಟ್ರ, ಕರ್ನಾಟಕದ ಹಲವೆಡೆ ದಾಳಿ +ಮುಂಬೈ,ಡಿ.9- ಐಸಿಸ್ ಭಯೋತ್ಪಾದನಾ ಘಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭಯೋತ್ಪಾದನಾ ನಿಗ್ರಹ ದಳ ಇಂದು ಬೆಳಗ್ಗೆ ಮಹಾರಾಷ್ಟ್ರದ 40 ಸ್ಥಳಗಳಲ್ಲಿ ದಾಳಿ ನಡೆಸಿ 13 ಜನರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಕರ್ನಾಟಕದ ಮತ್ತೊಂದು ಸ್ಥಳದ ಮೇಲೂ ದಾಳಿ ನಡೆಸಿದೆ ಎಂದು ವರದಿಯಾಗಿದೆ. +ಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು +ಮಹಾರಾಷ್ಟ್ರದಲ್ಲಿ ಥಾಣೆ, ಪುಣೆ, ಮೀರಾ ಭಯಂದರ್ ಸೇರಿದಂತೆ 40 ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಸ್ಥಳಗಳಲ್ಲಿ ಹೆಚ್ಚಿನವು ಥಾಣೆ ಗ್ರಾಮಾಂತರ (31) ಮತ್ತು ಥಾಣೆ ನಗರದಲ್ಲಿ (9), ಮುಂಬೈನ ಪಕ್ಕದಲ್ಲಿದೆ. ಪುಣೆಯಲ್ಲಿ, ಎರಡು ಸ್ಥಳಗಳಲ್ಲಿ ಮತ್ತು ಮೀರಾ ಭಯಂದರ್‍ನಲ್ಲಿ ಒಂದು ಸ್ಥಳದ ಮೇಳೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. +ಸ್ಪೋಟಕಗಳನ್ನು ತಯಾರಿಸುವಲ್ಲಿ ತೊಡಗಿಸಿಕೊಂಡಿರುವ ಶಂಕಿತ ಆರೋಪಿ – ಆಕಿಫ್ ಅತೀಕ್ ನಾಚನ್ – ಕಳೆದ ಆಗಸ್ಟ್‍ನಲ್ಲಿ ಐಸಿಸ್ ಭಯೋತ್ಪಾದನಾ ಘಟಕದ ಪ್ರಕರಣದಲ್ಲಿ ಆರನೇ ಆರೋಪಿಯನ್ನಾಗಿ ಬಂಧಿಸಲಾಗಿತ್ತು. +ಮುಂಬೈನ ತಬಿಶ್ ನಾಸರ್ ಸಿದ್ದಿಕಿ, ಪುಣೆಯ ಜುಬೈರ್ ನೂರ್ ಮೊಹಮ್ಮದ್ ಶೇಖ್ ಅಲಿಯಾಸ್ ಅಬು ನುಸೈಬಾ ಮತ್ತು ಅದ್ನಾನ್ ಸರ್ಕಾರ್ ಮತ್ತು ಥಾಣೆಯ ಶಾರ್ಜೀಲ್ ಶೇಖ್ ಮತ್ತು ಜುಲಿಕರ್ ಅಲಿ ಬರೋಡಾವಾಲಾ ಅವರನ್ನು ಕಳೆದ ತಿಂಗಳು ಏಜೆನ್ಸಿ ಬಂಧಿಸಿತ್ತು. ಕರ್ನಾಟಕದ ಕೆಲ ಸ್ಥಳಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. \ No newline at end of file diff --git a/eesanje/url_47_221_10.txt b/eesanje/url_47_221_10.txt new file mode 100644 index 0000000000000000000000000000000000000000..5ca8b1684e17595bd75591f36530908e7d036a16 --- /dev/null +++ b/eesanje/url_47_221_10.txt @@ -0,0 +1,11 @@ +ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ +ಹೈದರಾಬಾದ್, ಡಿ.7- ತೆಲಂಗಾಣ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ತೆಲಂಗಾಣ ರಾಜ್ಯ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಪಕ್ಷ ಇಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 10 ವರ್ಷ ಕಾಯಬೇಕಾಯಿತು. +ಅಂತೂ ಇಂತೂ ತೆಲಂಗಾಣ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ರೇವಂತ್ ರೆಡ್ಡಿ ಪಟ್ಟಾಭಿಷೇಕಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಘಟಾನುಘಟಿ ಕಾಂಗ್ರೆಸ್ ಮುಖಂಡರುಗಳು ಸಾಕ್ಷಿಯಾಗಿದ್ದರು. +ಹೈದರಾಬಾದ್‍ನ ಎಲ್‍ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. +ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ್ ರಾಜನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನಸೂಯ, ತುಮ್ಮಲ ನಾಗೇಶ್ವರ ರಾವ್, ಕೊಂಡ ಸುರೇಖಾ ಮತ್ತು ಜೂಪಲ್ಲಿ ಕೃಷ್ಣರಾವ್ ಅವರು ರೇವಂತ್ ರೆಡ್ಡಿ ಜೊತೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. +ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ +ತೆಲಂಗಾಣದ ಉಪಮುಖ್ಯಮಂತ್ರಿಯಾಗಿ ಮಲ್ಲು ಭಟ್ಟಿ ವಿಕ್ರಮಾರ್ಕ ನೇಮಕಗೊಂಡಿದ್ದು, ಸಚಿವರು ಹಾಗೂ ಚುನಾಯಿತ ಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರ ಅನುಯಾಯಿಗಳಿಂದ ಟೈಗರ್ ರೇವಂತ್ ಎಂದೂ ಕರೆಯಲ್ಪಡುವ ರೇವಂತ್ ರೆಡ್ಡಿ ತೆಲಂಗಾಣದ ಅತಿ ಎತ್ತರದ ನಾಯಕ, ಭಾರತ ರಾಷ್ಟ್ರ ಸಮಿತಿ (ಬಿಆರ್‍ಎಸ್) ನಾಯಕ ಕೆ ಚಂದ್ರಶೇಖರ್ ರಾವ್ ಅವರನ್ನು ಎದುರಿಸಿದರು ಮತ್ತು 2014 ರಲ್ಲಿ ತೆಲಂಗಾಣ ರಚನೆಯಾದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದ ಕೀರ್ತಿಗೆ ಪಾತ್ರರಾಗಿದ್ದಾರೆ. +ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ಸಂಭ್ರಮದಲ್ಲಿದೆ. ಮುಖ್ಯಮಂತ್ರಿಯಾಗಿ ಆಯ್ಕೆಯಾದ ರೆಡ್ಡಿ ವಿಧಾನಸಭಾ ಚುನಾವಣೆಯಲ್ಲಿ ಕಾಮರೆಡ್ಡಿ ಮತ್ತು ಕೊಡಂಗಲ್ ಎಂಬ ಎರಡು ಸ್ಥಾನಗಳಿಂದ ಸ್ರ್ಪಧಿಸಿದ್ದರು. ರೆಡ್ಡಿ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಕೆಸಿಆರ್ ಅವರನ್ನು ಎದುರಿಸುತ್ತಿದ್ದರು ಆದರೆ ಅಲ್ಲಿ ಬಿಜೆಪಿಯ ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ಅವರು ಇಬ್ಬರು ಘಟಾನುಘಟಿಗಳನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದರು. ಕೊಡಂಗಲ್ ಕ್ಷೇತ್ರದಲ್ಲಿ ರೇವಂತ್ ರೆಡ್ಡಿ ಗೆಲುವು ಸಾಧಿಸಿದ್ದರು. +ಹೊಸ ಸೌಲಭ್ಯ: ಪೇಟಿಎಂನಲ್ಲಿ ಬುಕ್ ಮಾಡಿ ರೈಲು ಟಿಕೆಟ್ +ರೇವಂತ್ ರೆಡ್ಡಿ ಅವರು ಕಚೇರಿಯ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ವ್ಯವಹಾರದಲ್ಲಿ ಚುನಾವಣಾ ಖಾತರಿಗಳನ್ನು ಪೂರೈಸುವ ಫೈಲ್‍ಗೆ ಸಹಿ ಹಾಕಲಿದ್ದಾರೆ. ಮುಖ್ಯಮಂತ್ರಿಯಾಗಿ ಆಯ್ಕೆಯಾದವರು ಮೊದಲ ಕೆಲಸವನ್ನು 38 ವರ್ಷದ ಮಹಿಳೆಗೆ ನೀಡುವುದಾಗಿ ಭರವಸೆ ನೀಡಿದ್ದರು. +ತೆಲಂಗಾಣದ ಗೆಲುವಿಗೆ ಕರ್ನಾಟಕ ಮಾದರಿ ಕಾರಣವಾಗಿದ್ದು, ಅಲ್ಲಿನ ಜನರಿಗೆ ಸಿದ್ದರಾಮಯ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ತೆಲಂಗಾಣದಲ್ಲೂ ಜಾರಿಗೆ ತರಲು ಪ್ರಯತ್ನಿಸುವುದಾಗಿ ರೇವಂತ್ ರೆಡ್ಡಿ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_47_221_11.txt b/eesanje/url_47_221_11.txt new file mode 100644 index 0000000000000000000000000000000000000000..801b6a54bf19c7a94c7f1de12515194795e3e89f --- /dev/null +++ b/eesanje/url_47_221_11.txt @@ -0,0 +1,8 @@ +ಬಿಎಂಡಬ್ಲ್ಯೂ ಕಾರು, ಚಿನ್ನಾಭರಣ ನೀಡದಕ್ಕೆ ಮದುವೆ ರದ್ದು : ವೈದೈ ಆತ್ಮಹತ್ಯೆ +ತಿರುವನಂತಪುರಂ,ಡಿ.7- ವಿದ್ಯಾವಂತರ ವರದಕ್ಷಿಣೆ ಮೋಹ ಇನ್ನು ನಿಂತಿಲ್ಲ. ವಿದ್ಯಾವಂತನೊಬ್ಬನ ಕುಟುಂಬದವರ ಡೌರಿ ಆಸೆಗೆ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇರಳದ ತಿರುವನಂತಪುರಂನಲ್ಲಿ 26ರ ಹರೆಯದ ಡಾ.ಶಹಾನಾ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆ ಬೇಡಿಕೆಗಳನ್ನು ತನ್ನ ಕುಟುಂಬವು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಆಕೆಯ ಪ್ರಿಯಕರ ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. +ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ನಾತಕೋತ್ತರ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಡಾ.ಶಹಾನಾ ಸಾವಿನ ಕುರಿತು ತನಿಖೆಗೆ ಆದೇಶಿಸಿದ್ದಾರೆ. +ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ +ಆತ್ಮಹತ್ಯೆಗೆ ಪ್ರಚೋದನೆ ಹಾಗೂ ವರದಕ್ಷಿಣೆ ತಡೆ ಕಾಯ್ದೆಯಡಿ ಪೊಲೀಸರು ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡಾ ಶಹಾನಾ ತನ್ನ ತಾಯಿ ಮತ್ತು ಇಬ್ಬರು ಒಡಹುಟ್ಟಿದವರ ಜೊತೆ ವಾಸಿಸುತ್ತಿದ್ದರು. ಗಲ್‍ನಲ್ಲಿ ಕೆಲಸ ಮಾಡುತ್ತಿದ್ದ ಆಕೆಯ ತಂದೆ ಎರಡು ವರ್ಷಗಳ ಹಿಂದೆ ನಿಧನರಾದರು. ಅವರು ಡಾ ಇಎ ರುವೈಸ್ ಅವರೊಂದಿಗೆ ಸ್ನೇಹ ಹೊಂದಿದ್ದರು ಮತ್ತು ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. +ಡಾ.ರುವಾಯಿಸ್ ಅವರ ಕುಟುಂಬ ವರದಕ್ಷಿಣೆಯಾಗಿ 150 ಗ್ರಾಂ ಚಿನ್ನಾಭರಣ, 15 ಎಕರೆ ಜಮೀನು ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದೆ ಎಂದು ಡಾ.ಶಹಾನಾ ಕುಟುಂಬ ಆರೋಪಿಸಿದೆ. ಶಹಾನಾ ಅವರ ಕುಟುಂಬವು ಬೇಡಿಕೆಯನ್ನು ಪೂರೈಸಲು ಸಾಧ್ಯವಿಲ್ಲ ಎಂದು ಹೇಳಿದಾಗ, ಆಕೆಯ ಗೆಳೆಯನ ಕುಟುಂಬವು ಮದುವೆಯನ್ನು ರದ್ದುಗೊಳಿಸಿತು ಎಂದು ತಿಳಿದುಬಂದಿದೆ. +ಇದರಿಂದ ಮನನೊಂದ ಯುವ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆಕೆಯ ಅಪಾರ್ಟ್‍ಮೆಂಟ್‍ನಲ್ಲಿ ಸಿಕ್ಕ ಸೂಸೈಡ್ ನೋಟ್‍ನಲ್ಲಿ ಎಲ್ಲರಿಗೂ ಹಣ ಮಾತ್ರ ಬೇಕು ಎಂದು ಬರೆಯಲಾಗಿದೆ ಎಂದು ತಿಳಿದುಬಂದಿದೆ. +ವರದಕ್ಷಿಣೆ ಬೇಡಿಕೆಯ ಆರೋಪದ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. \ No newline at end of file diff --git a/eesanje/url_47_221_12.txt b/eesanje/url_47_221_12.txt new file mode 100644 index 0000000000000000000000000000000000000000..6af67dfb9b70a274f6882924e42a192c6d451377 --- /dev/null +++ b/eesanje/url_47_221_12.txt @@ -0,0 +1,7 @@ +ಇಸ್ರೋ ಸಾಧನೆಗೆ ಮೋದಿ ಅಭಿನಂದನೆ +ನವದೆಹಲಿ,ಡಿ.7- ಬಾಹ್ಯಾಕಾಶದಲ್ಲಿ ಮತ್ತೊಂದು ತಾಂತ್ರಿಕ ಮೈಲಿಗಲ್ಲನ್ನು ಸಾಧಿಸಿರುವ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3 ರ ಪ್ರೊಪಲ್ಷನ್ ಮಾಡ್ಯೂಲ್ ಯಶಸ್ವಿ ಮಾರ್ಗವನ್ನು ತೆಗೆದುಕೊಂಡಿತು. ಮತ್ತೊಂದು ವಿಶಿಷ್ಟ ಪ್ರಯೋಗದಲ್ಲಿ, ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತರಲಾಗುತ್ತದೆ. +ಈ ಸಾಧನೆಯ ಬಗ್ಗೆ ಇಸ್ರೋದ ಎಕ್ಸ್ ಪೋಸ್ಟ್‍ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಅಭಿನಂದನೆಗಳು ನಮ್ಮ ಭವಿಷ್ಯದ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಸಾಸಲಾದ ಮತ್ತೊಂದು ತಂತ್ರಜ್ಞಾನದ ಮೈಲಿಗಲ್ಲು 2040 ರ ವೇಳೆಗೆ ಭಾರತೀಯರನ್ನು ಚಂದ್ರನತ್ತ ಕಳುಹಿಸುವ ನಮ್ಮ ಗುರಿಯನ್ನು ಒಳಗೊಂಡಿದೆ ಎಂದು ಪೋಸ್ಟ್ ಮಾಡಿದ್ದಾರೆ. +ಮತ್ತೊಂದು ವಿಶಿಷ್ಟ ಪ್ರಯೋಗದಲ್ಲಿ ವಿಕ್ರಮ್ ಲ್ಯಾಂಡರ್‍ನಲ್ಲಿ ಹಾಪ್ ಪ್ರಯೋಗದಂತೆ ಚಂದ್ರಯಾನ -3 ರ ಪ್ರೊಪಲ್ಷನ್ ಮಾಡ್ಯೂಲ್ (ಪಿಎಂ) ಅನ್ನು ಚಂದ್ರನ ಸುತ್ತಲಿನ ಕಕ್ಷೆಯಿಂದ ಭೂಮಿಯ ಸುತ್ತಲಿನ ಕಕ್ಷೆಗೆ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿದೆ. +ಬಿಬಿಸಿ ಮುಖ್ಯಸ್ಥರಾಗುತ್ತಿದ್ದಾರೆ ಭಾರತ ಮೂಲದ ಸಮೀರ್ ಶಾ +ಚಂದ್ರಯಾನ-3 ಮಿಷನ್‍ನ ಪ್ರಾಥಮಿಕ ಉದ್ದೇಶವೆಂದರೆ ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಬಳಿ ಮೃದುವಾದ ಲ್ಯಾಂಡಿಂಗ್ ಅನ್ನು ಪ್ರದರ್ಶಿಸುವುದು ಮತ್ತು ವಿಕ್ರಮ್ ಮತ್ತು ಪ್ರಜ್ಞಾನ್‍ನಲ್ಲಿ ಉಪಕರಣಗಳನ್ನು ಬಳಸಿಕೊಂಡು ಪ್ರಯೋಗಗಳನ್ನು ಮಾಡುವುದು. +ಬಾಹ್ಯಾಕಾಶ ನೌಕೆಯನ್ನು ಜುಲೈ 14, 2023 ರಂದು ಉಡಾವಣೆ ಮಾಡಲಾಯಿತು. ಆಗಸ್ಟ್ 23 ರಂದು, ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ತನ್ನ ಐತಿಹಾಸಿಕ ಸ್ಪರ್ಶವನ್ನು ಮಾಡಿತು ಮತ್ತು ತರುವಾಯ ಪ್ರಗ್ಯಾನ್ ರೋವರ್ ಅನ್ನು ನಿಯೋಜಿಸಲಾಯಿತು. ಲ್ಯಾಂಡರ್ ಮತ್ತು ರೋವರ್‍ನಲ್ಲಿರುವ ವೈಜ್ಞಾನಿಕ ಉಪಕರಣಗಳು ವ್ಯಾಖ್ಯಾನಿಸಲಾದ ಮಿಷನ್ ಜೀವನದ ಪ್ರಕಾರ 1 ಚಂದ್ರನ ದಿನದವರೆಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತವೆ. ಚಂದ್ರಯಾನ-3 ರ ಮಿಷನ್ ಉದ್ದೇಶಗಳು ಸಂಪೂರ್ಣವಾಗಿ ಈಡೇರಿವೆ. \ No newline at end of file diff --git a/eesanje/url_47_221_2.txt b/eesanje/url_47_221_2.txt new file mode 100644 index 0000000000000000000000000000000000000000..9711acd4056cec27e266d02c36f8d8bb915a835c --- /dev/null +++ b/eesanje/url_47_221_2.txt @@ -0,0 +1,10 @@ +ಭಾರತೀಯ ವಿಮಾನಗಳಿಗೆ ಡಿಜಿಟಲ್ ನಕ್ಷೆ ಅಳವಡಿಕೆ +ನವದೆಹಲಿ,ಡಿ.8- ಪೈಲಟ್‍ಗಳು ದಿಕ್ಕು ತಪ್ಪಿಸುವುದನ್ನು ತಪ್ಪಿಸಲು ಭಾರತೀಯ ಫೈಟರ್ ಜೆಟ್‍ಗಳು ಶೀಘ್ರದಲ್ಲೇ ಡಿಜಿಟಲ್ ನಕ್ಷೆಗಳೊಂದಿಗೆ ಸಜ್ಜುಗೊಳ್ಳಲಿವೆ ಎಂದು ಪ್ರೀಮಿಯರ್ ಏರೋಸ್ಪೇಸ್ ಮತ್ತು ರಕ್ಷಣಾ ತಯಾರಕರಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನ (ಹೆಚ್‍ಎಎಲ್) ಉನ್ನತ ಅಧಿಕಾರಿ ತಿಳಿಸಿದ್ದಾರೆ. +ಈಗ ಯಾವುದೇ ಪೈಲಟ್ ತಪ್ಪಾಗಿ ಗಡಿ ದಾಟುವುದಿಲ್ಲ. ಅವರು ಗ್ರೂಪ್ ಕ್ಯಾಪ್ಟನ್ ಅಭಿನಂದನ್ ರೀತಿಯಲ್ಲಿ ದಾರಿ ತಪ್ಪುವುದಿಲ್ಲ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಪೈಲಟ್‍ಗಳಿಗಾಗಿ ಡಿಜಿಟಲ್ ನಕ್ಷೆಯನ್ನು ಸಿದ್ಧಪಡಿಸಿರುವುದರಿಂದ ಇನ್ನು ಮುಂದೆ ಯಾವುದೇ ಪೈಲಟ್‍ನ ಕೈಯಲ್ಲಿ ಮ್ಯಾಪ್ ಇರುವುದಿಲ್ಲ ಎಂದು ಹೆಚ್‍ಎಎಲ್ ನಿರ್ದೇಶಕ ಡಿಕೆ ಸುನೀಲ್ ಹೇಳಿದರು. +ಡಿಜಿಟಲ್ ನಕ್ಷೆಗಳನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಉತ್ಪಾದಿಸಲಾಗುತ್ತದೆ. 2019 ರ ಬಾಲಾಕೋಟ್ ವೈಮಾನಿಕ ದಾಳಿಯ ಸಮಯದಲ್ಲಿ ಶತ್ರು ಜೆಟ್ ಅನ್ನು ಹೊಡೆದ ನಂತರ ಕೆಳಗಿಳಿದ ತನ್ನ ಮಿಗ್ -21 ನಿಂದ ಹೊರಹಾಕಲ್ಪಟ್ಟ ನಂತರ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನಿ ಪಡೆಗಳಿಂದ ಸೆರೆಹಿಡಿಯಲ್ಪಟ್ಟರು ಮೂರು ದಿನಗಳ ನಂತರ ಅವರನ್ನು ಹಿಂತಿರುಗಿಲಾಗಿತ್ತು. +ಅಂತಹ ಯುದ್ಧದ ಸಂದರ್ಭಗಳಲ್ಲಿ, ಡಿಜಿಟಲ್ ನಕ್ಷೆಗಳು ಪೈಲಟ್‍ಗಳು ದಿಕ್ಕುಗಳನ್ನು ಕಳೆದುಕೊಳ್ಳುವುದನ್ನು ತಪ್ಪಿಸಲು ಮತ್ತು ಗಡಿಯೊಳಗೆ ಉಳಿಯಲು ಸಹಾಯ ಮಾಡುತ್ತದೆ ಎಂದು ರಕ್ಷಣಾ ತಯಾರಕರು ನಿರೀಕ್ಷಿಸುತ್ತಾರೆ. ಭಾರತೀಯ ಯುದ್ಧ ವಿಮಾನಗಳನ್ನು ಇತ್ತೀಚಿನ ಡಿಜಿಟಲ್ ನಕ್ಷೆಗಳೊಂದಿಗೆ ಸಜ್ಜುಗೊಳಿಸುವ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ. +ಈ ಕ್ಷಣವೇ ರಾಜೀನಾಮೆ ನೀಡಲು ಸಿದ್ಧ : ಬಸವರಾಜ ಹೊರಟ್ಟಿ +ಹಾರುವ ಸಮಯದಲ್ಲಿ ಪೈಲಟ್‍ಗಳು ತಮ್ಮ ಕಾಕ್‍ಪಿಟ್ ಪ್ರದರ್ಶನದಲ್ಲಿ ನಕ್ಷೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಮತ್ತು ಇದು ನ್ಯಾವಿಗೇಷನ್‍ಗೆ ಸಹಾಯ ಮಾಡುತ್ತದೆ ಎಂದು ಸುನಿಲ್ ತಿಳಿಸಿದರು.ನಕ್ಷೆಯು 2ಡಿ ಮತ್ತು 3ಡಿಯಲ್ಲಿ ಲಭ್ಯವಿರುತ್ತದೆ. ಪೈಲಟ್‍ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಕೆ ನೀಡಲಾಗುವುದು. +ಇದರಿಂದ ಎತ್ತರದ ಗುಡ್ಡಗಾಡು ಪ್ರದೇಶಗಳಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಶತ್ರುಗಳ ಸೇನಾ ನೆಲೆಗಳು ಮತ್ತು ವಾಯು ರಕ್ಷಣಾ ಬಗ್ಗೆಯೂ ಡಿಜಿಟಲ್ ನಕ್ಷೆ ಹೇಳುತ್ತದೆ. ಎಲ್ಲಾ ಫೈಟರ್ ಜೆಟ್‍ಗಳಲ್ಲಿ ಅವುಗಳನ್ನು ಅಳವಡಿಸಲಾಗುತ್ತಿದೆ, ವಿಶ್ವದ ಕೆಲವೇ ದೇಶಗಳು ಅಂತಹ ನಕ್ಷೆಗಳನ್ನು ಸ್ವತಃ ಮಾಡಲು ಸಾಧ್ಯವಾಗಿದೆ ಎಂದು ಅವರು ಹೇಳಿದರು. +ಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು +ನಾವು ಪ್ರತಿ ವಿಮಾನದಲ್ಲಿ ಇವುಗಳನ್ನು ಅಳವಡಿಸುತ್ತೇವೆ. ಅದರ ಎಲ್ಲಾ ಹಾರ್ಡ್‍ವೇರ್ ಮತ್ತು ಸಾಫ್ಟ್‍ವೇರ್ ಅನ್ನು ದೇಶದಲ್ಲಿ ತಯಾರಿಸಲಾಗಿದೆ. ಈ ಮೊದಲು, ಈ ನಕ್ಷೆಗಳನ್ನು ವಿದೇಶದಲ್ಲಿ ಮಾತ್ರ ತಯಾರಿಸಲಾಗುತ್ತಿತ್ತು, ಆದರೆ ನಾವು ಅವುಗಳನ್ನು ತಯಾರಿಸಲು ಪ್ರಾರಂಭಿಸಿರಲಿಲ್ಲ ಎಂದು ಸುನಿಲ್ ಹೇಳಿದರು. \ No newline at end of file diff --git a/eesanje/url_47_221_3.txt b/eesanje/url_47_221_3.txt new file mode 100644 index 0000000000000000000000000000000000000000..f0e9b929d0ef2d106bcfbd06f4466693920189d2 --- /dev/null +++ b/eesanje/url_47_221_3.txt @@ -0,0 +1,8 @@ +ಅಸ್ಸಾಂ ಎಂದಿಗೂ ಮ್ಯಾನ್ಮಾರ್ ಭಾಗವಾಗಿರಲಿಲ್ಲ : ಹಿಮಂತ ಬಿಸ್ವಾ ಶರ್ಮಾ +ಗುವಾಹಟಿ,ಡಿ.9 ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಅಸ್ಸಾಂ ಮ್ಯಾನ್ಮಾರ್‍ನ ಭಾಗವಾಗಿದೆ ಎಂದು ಹೇಳಿದ್ದ ಹಿರಿಯ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್‍ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ.ಪೌರತ್ವ ಕಾಯಿದೆ, 1955 ರ ಸೆಕ್ಷನ್ 6 ಎ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸಿಬಲ್ ಅವರು ಈ ಕಾಮೆಂಟ್ ಮಾಡಿದ್ದಾರೆ ಎಂದು ವರದಿಯಾಗಿತ್ತು. ಅಸ್ಸಾಂನ ಇತಿಹಾಸದ ಬಗ್ಗೆ ಅರಿವಿಲ್ಲದವರು ಮಾತನಾಡಬಾರದು. +ಅಸ್ಸಾಂ ಎಂದಿಗೂ ಮ್ಯಾನ್ಮಾರ್‍ನ ಭಾಗವಾಗಿರಲಿಲ್ಲ. ಅಲ್ಪಾವಧಿಗೆ ಘರ್ಷಣೆಗಳು ನಡೆದವು. ಅದೊಂದೇ ಸಂಬಂಧವಾಗಿತ್ತು. ಇಲ್ಲದಿದ್ದರೆ, ಅಸ್ಸಾಂ ಒಂದು ಭಾಗವಾಗಿದೆ ಎಂದು ಹೇಳುವ ಯಾವುದೇ ಡೇಟಾವನ್ನು ನಾನು ನೋಡಿಲ್ಲ ಎಂದಿದ್ದಾರೆ. +ಈಶಾನ್ಯ ಭಾಗದ ಬಿಜೆಪಿಯ ತಂತ್ರಗಾರ ಎಂದು ಕರೆಯಲ್ಪಡುವ ಶರ್ಮಾ ಮತ್ತು ಮೇ 2022 ರಲ್ಲಿ ಕಾಂಗ್ರೆಸ್ ತೊರೆದ ರಾಜ್ಯಸಭಾ ಸಂಸದ ಸಿಬಲ್ ನಡುವೆ ಪದೆ ಪದೇ ಮಾತಿನ ಸಮರ ನಡೆಯುತ್ತಿರುತ್ತದೆ ಆದರಲ್ಲೂ ಮ್ಯಾನ್ಮಾರ್‍ನಿಂದ ಅಕ್ರಮ ವಲಸಿಗರ ಸಮಸ್ಯೆ ಇರುವ ಮಣಿಪುರದ ಬಿಕ್ಕಟ್ಟು ಕುರಿತಂತೆ ಹೆಚ್ಚು ಚರ್ಚೆ ನಡೆಯುವುದು ವಿಶೇಷ. +ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ಹಲವು ನಾಯಕರು ಈಶಾನ್ಯ ರಾಜ್ಯದಲ್ಲಿ ಅಶಾಂತಿಯ ಹಿಂದಿನ ಪ್ರಮುಖ ಅಂಶಗಳಲ್ಲಿ ಅಕ್ರಮ ವಲಸಿಗರ ಪ್ರವೇಶವೂ ಒಂದು ಎಂದು ಹೇಳಿದ್ದಾರೆ. +ಕಾರಿಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಐವರ ಸಾವು +ಬುಧವಾರದ ಸುಪ್ರೀಂ ಕೋರ್ಟ್ ಕಲಾಪದಲ್ಲಿ, ಸಿಬಲ್ ಯಾವುದೇ ವಲಸೆಯನ್ನು ಮ್ಯಾಪ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಮತ್ತು ನೀವು ಅಸ್ಸಾಂನ ಇತಿಹಾಸವನ್ನು ನೋಡಿದರೆ, ಯಾರು ಯಾವಾಗ ಬಂದರು ಎಂದು ಕಂಡುಹಿಡಿಯುವುದು ಅಸಾಧ್ಯವೆಂದು ನೀವು ಅರ್ಥಮಾಡಿಕೊಳ್ಳುತ್ತೀರಿ. +ಅಸ್ಸಾಂ ಮೂಲತಃ ಮ್ಯಾನ್ಮಾರ್‍ನ ಒಂದು ಭಾಗವಾಗಿತ್ತು. ಮತ್ತು ಅದು 1824 ರಲ್ಲಿ ಬ್ರಿಟಿಷರು ಪ್ರದೇಶದ ಒಂದು ಭಾಗವನ್ನು ವಶಪಡಿಸಿಕೊಂಡ ನಂತರ ಅಸ್ಸಾಂ ಅನ್ನು ಬ್ರಿಟಿಷರಿಗೆ ಹಸ್ತಾಂತರಿಸುವ ಒಪ್ಪಂದವನ್ನು ಮಾಡಲಾಯಿತು ಎಂದು ಸಿಬಲ್ ಹೇಳಿದ್ದರು. \ No newline at end of file diff --git a/eesanje/url_47_221_4.txt b/eesanje/url_47_221_4.txt new file mode 100644 index 0000000000000000000000000000000000000000..d8245a73dcca06edee97f07a437e2f9436e784e9 --- /dev/null +++ b/eesanje/url_47_221_4.txt @@ -0,0 +1,6 @@ +ಸೋನಿಯಾ ಗಾಂಧಿ ಹುಟ್ಟುಹಬ್ಬ, ಶುಭ ಕೋರಿದ ಮೋದಿ +ನವದೆಹಲಿ,ಡಿ.9 – ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 77 ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. +ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನಡೆಸಲು ದೇವರು ಆಶೀರ್ವದಿಸಲಿ ಎಂದು ಅವರು ಎಕ್ಸ್ ನಲ್ಲಿ ಹೇಳಿದ್ದಾರೆ. + . . . +ಲೀಲಮ್ಮ ಇನ್ನು ನೆನಪು ಮಾತ್ರ +ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಆರೋಗ್ಯದ ಕಾರಣಗಳಿಗಾಗಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದಾರೆ, ಅವರ ಮಗ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. \ No newline at end of file diff --git a/eesanje/url_47_221_5.txt b/eesanje/url_47_221_5.txt new file mode 100644 index 0000000000000000000000000000000000000000..10e02ee98029eed74564428ba639b994953fe69a --- /dev/null +++ b/eesanje/url_47_221_5.txt @@ -0,0 +1,6 @@ +ದಲಿತರು, ಬುಡಕಟ್ಟು ಜನಾಂಗದವರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ : ಮಲ್ಲಿಕಾರ್ಜುನ ಖರ್ಗೆ +ನವದೆಹಲಿ, ಡಿ 8 (ಪಿಟಿಐ) ದೇಶದಲ್ಲಿ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಮೋದಿ ಸರ್ಕಾರವನ್ನು ಗುರಿಯಾಗಿಸಿದ್ದಾರೆ ಮತ್ತು ಇದು ಸಮಾಜವನ್ನು ವಿಭಜಿಸುವ ಬಿಜೆಪಿಯ ಅಜೆಂಡಾದ ಭಾಗವಾಗಿದೆ ಎಂದು ಆರೋಪಿಸಿದ್ದಾರೆ. +ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‍ಸಿಆರ್‍ಬಿ)ಯ ಇತ್ತೀಚಿನ ವರದಿಯು ಕೇವಲ ಅಂಕಿಅಂಶಗಳಲ್ಲ, ಇದು ಎಸ್‍ಸಿ-ಎಸ್‍ಟಿ ಸಮುದಾಯದ ಜೀವನವನ್ನು ಅಸುರಕ್ಷಿತವಾಗಿಸುವ ಬಿಜೆಪಿಯ ದಾಖಲೆಯಾಗಿದೆ ಎಂದು ಅವರು ಎಕ್ಸ್‍ನಲ್ಲಿ ಹಿಂದಿಯಲ್ಲಿ ಪೋಸ್ಟ್ ಮಾಡಿದ್ದಾರೆ. +ಜಾರಿಬಿದ್ದ ಕೆಸಿಆರ್ ಆಸ್ಪತ್ರೆಗೆ ದಾಖಲು, ಚೇತರಿಕೆಗೆ ಮೋದಿ ಹಾರೈಕೆ +ಕಳೆದ ದಶಕದಲ್ಲಿ ಸಮಾಜವನ್ನು ವಿಭಜಿಸುವ ಬಿಜೆಪಿಯ ಷಡ್ಯಂತ್ರದ ಅಜೆಂಡಾದ ಭಾಗವಾಗಿ ಅನ್ಯಾಯ, ದೌರ್ಜನ್ಯ ಮತ್ತು ದಮನವಾಗಿದೆ ಎಂದು ಆರೋಪಿಸಿದರು. ದಲಿತರು ಮತ್ತು ಆದಿವಾಸಿಗಳ ಮೇಲಿನ ನಿರಂತರ ದಬ್ಬಾಳಿಕೆಯು ಬಿಜೆಪಿ-ಆರ್‍ಎಸ್‍ಎಸ್‍ನ ಬೂಟಾಟಿಕೆಯನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ. +2013 ರಿಂದ ದಲಿತರ ಮೇಲಿನ ಅಪರಾಧಗಳಲ್ಲಿ ಶೇ. 46.11 ಮತ್ತು ಆದಿವಾಸಿಗಳ ವಿರುದ್ಧ ಶೇ.48.15 ರಷ್ಟು ಹೆಚ್ಚಳವಾಗಿದೆ ಎಂದು ಹೇಳುವ ಪೋಸ್ಟ್ ಅನ್ನು ಖರ್ಗೆ ಹಂಚಿಕೊಂಡಿದ್ದಾರೆ. \ No newline at end of file diff --git a/eesanje/url_47_221_6.txt b/eesanje/url_47_221_6.txt new file mode 100644 index 0000000000000000000000000000000000000000..46c67b6562637bb55abb7e354e5a12535770524b --- /dev/null +++ b/eesanje/url_47_221_6.txt @@ -0,0 +1,11 @@ +ಮತ್ತೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ +ನವದೆಹಲಿ,ಡಿ.8- ಭಾರತೀಯ ರಿಸರ್ವ್ ಬ್ಯಾಂಕ್‍ನ ಪ್ರಮುಖ ಸಾಲದ ದರವು ಶೇ. 6.5ರಲ್ಲಿ ಸ್ಥಿರವಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಘೋಷಿಸಿದರು. ಮುಂಬರುವ ತಿಂಗಳುಗಳಲ್ಲಿ ಆಹಾರದ ಬೆಲೆಗಳ ಏರಿಕೆ ಮತ್ತು ನಿರೀಕ್ಷಿತ ಆರ್ಥಿಕ ಬೆಳವಣಿಗೆಗಿಂತ ಉತ್ತಮವಾದ ನಿರೀಕ್ಷೆಗಳ ನಡುವೆ ಹಣದುಬ್ಬರ ನಿಯಂತ್ರಣವು ಪ್ರಮುಖ ಗಮನವನ್ನು ಉಳಿಸಿಕೊಂಡು ವಿತ್ತೀಯ ನೀತಿ ಸಮಿತಿಯು ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು. +ಆರ್‌ಬಿಐ ವಿತ್ತೀಯ ನೀತಿಯು ರೆಪೋ ದರವನ್ನು ಪ್ರಮುಖ ಸಾಲದ ದರವನ್ನು ಸತತ ಐದನೇ ಬಾರಿಗೆ ಬದಲಾಯಿಸದೆ ಇರಿಸಿದೆ. ರೆಪೋ ದರವು ಆರ್‍ಬಿಐ ಇತರ ಬ್ಯಾಂಕ್‍ಗಳಿಗೆ ಸಾಲ ನೀಡುವ ಬಡ್ಡಿ ದರವಾಗಿದೆ. ಇದರರ್ಥ ಸಾಲದ ಬಡ್ಡಿದರಗಳು ಸಹ ಬದಲಾಗದೆ ಉಳಿಯುವ ಸಾಧ್ಯತೆಯಿದೆ. +ಜಾಗತಿಕ ಆರ್ಥಿಕತೆಯು ಆರ್ಥಿಕತೆಯ ಲಕ್ಷಣಗಳನ್ನು ತೋರಿಸುತ್ತಿದೆ ಎಂದು ಆರ್‍ಬಿಐ ಗವರ್ನರ್ ಹೇಳಿದರು ಮತ್ತು ಕಳೆದ ವರ್ಷದಿಂದ ಮುಖ್ಯ ಹಣದುಬ್ಬರವು ಕಡಿಮೆಯಾಗಿದೆ, ಇದು ಅನೇಕ ದೇಶಗಳಲ್ಲಿ ಗುರಿಗಿಂತ ಹೆಚ್ಚಾಗಿರುತ್ತದೆ ಮತ್ತು ಪ್ರಮುಖ ಹಣದುಬ್ಬರವು ಜಿಗುಟಾದ ಸ್ಥಿತಿಯಲ್ಲಿದೆ ಎಂದು ಹೇಳಿದರು. +ಭಾರತದ ಆರ್ಥಿಕತೆಯು ಸ್ಥಿತಿಸ್ಥಾಪಕತ್ವ ಮತ್ತು ಆವೇಗದ ಚಿತ್ರವನ್ನು ಪ್ರಸ್ತುತಪಡಿಸುತ್ತದೆ ಎಂದು ದಾಸ್ ಹೇಳಿದರು, ಕ್ಯೂ2 ಜಿಡಿಪಿ ಎಲ್ಲಾ ಮುನ್ಸೂಚನೆಗಳನ್ನು ಮೀರಿದೆ ಮತ್ತು ಹಣಕಾಸಿನ ಬಲವರ್ಧನೆಯ ಕೋರ್ಸ್‍ನಲ್ಲಿದೆ ಎಂದು ಒತ್ತಿ ಹೇಳಿದರು. +ಕೇಂದ್ರದಿಂದ 40 ಸಾವಿರ ಕೋಟಿ ಕಡಿಮೆಯಾದ ಜಿಎಸ್‍ಟಿ ಪರಿಹಾರ : ಸಚಿವ ಕೃಷ್ಣಭೈರೇಗೌಡ +ಬಾಹ್ಯ ಸಮತೋಲನವು ಅತ್ಯುತ್ತಮವಾಗಿ ನಿರ್ವಹಿಸಬಲ್ಲದು ಎಂದು ಕೇಂದ್ರ ಬ್ಯಾಂಕರ್ ಹೇಳಿದರು, ಈ ಮೂಲಭೂತ ಅಂಶಗಳನ್ನು ಮತ್ತಷ್ಟು ನಿರ್ಮಿಸಲು ಇದು ಆರ್‍ಬಿಐನ ಪ್ರಯತ್ನವಾಗಿದೆ ಎಂದು ಹೇಳಿದರು. ಏತನ್ಮಧ್ಯೆ, ಆರ್‍ಬಿಐನ ಹಣಕಾಸು ನೀತಿ ಸಮಿತಿಯು ಪ್ರಮುಖ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ್ದರಿಂದ ನಿಫ್ಟಿ ಮೊದಲ ಬಾರಿಗೆ 21,000 ತಲುಪಿತು. +ಆರ್‍ಬಿಐ ಆರ್ಥಿಕ ಬೆಳವಣಿಗೆಗೆ ಬೆಂಬಲವಾಗಿ ಉಳಿದಿರುವಾಗ ಹಣದುಬ್ಬರವು ಸಮಿತಿಯ ಗುರಿಯೊಂದಿಗೆ ಹಂತಹಂತವಾಗಿ ಹೊಂದಾಣಿಕೆಯಾಗುವುದನ್ನು ಖಚಿತಪಡಿಸಿಕೊಳ್ಳಲು ವಸತಿಯನ್ನು ಹಿಂತೆಗೆದುಕೊಳ್ಳುವ ನೀತಿಯ ನಿಲುವನ್ನು ಸಹ ಉಳಿಸಿಕೊಂಡಿದೆ. +ಆರ್‍ಬಿಐ 2024 ರ ಹಣಕಾಸು ವರ್ಷಕ್ಕೆ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 5.4 ಎಂದು ಅಂದಾಜು ಮಾಡಿದೆ ಎಂದು ದಾಸ್ ಹೇಳಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಬೆಳವಣಿಗೆಯ ಪ್ರಕ್ಷೇಪಣವನ್ನು ಈ ಹಿಂದೆ ಶೇ 6.5 ರಿಂದ ಶೇ 7 ಕ್ಕೆ ಏರಿಸಲಾಗಿದೆ. +ಆರ್‍ಬಿಐ ಮೇ 2022 ರಿಂದ ರೆಪೊ ದರವನ್ನು ಒಟ್ಟು 250 ಬೇಸಿಸ್ ಪಾಯಿಂಟ್‍ಗಳಿಂದ (ಬಿಪಿಎಸ್) ಹೆಚ್ಚಿಸಿದೆ, ಇದು ಏರುತ್ತಿರುವ ಹಣದುಬ್ಬರವನ್ನು ತಣ್ಣಗಾಗಿಸುವ ಪ್ರಯತ್ನಗಳಲ್ಲಿ ಒಂದಾಗಿದೆ. ಅಕ್ಟೋಬರ್‍ನಲ್ಲಿ ನಾಲ್ಕು ತಿಂಗಳ ಕನಿಷ್ಠ ಮಟ್ಟವಾದ ಶೇ/4.8 ಕ್ಕೆ ಇಳಿದಿದೆ, ಆದರೆ ಆರ್‍ಬಿಐನ 4% ಕ್ಕಿಂತ ಹೆಚ್ಚು ಉಳಿಯುವ ನಿರೀಕ್ಷೆಯಿದೆ. +ಭಾರತದ ಆರ್ಥಿಕತೆಯು ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ.7.6ರಷ್ಟು ಬೆಳವಣಿಗೆಯಾಗಿದೆ, ಸಮೀಕ್ಷೆಯ ಸರಾಸರಿ ಶೇ. 6.8 ಮತ್ತು ಆರ್‍ಬಿಐನ ಅಂದಾಜು ಶೇ.6. ಗಿಂತ ಹೆಚ್ಚು ವೇಗವಾಗಿ, ಸರ್ಕಾರದ ಖರ್ಚು ಮತ್ತು ಉತ್ಪಾದನೆಯಿಂದ ಸಹಾಯ ಮಾಡಲ್ಪಟ್ಟಿದೆ, ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯು ತನ್ನದೇ ಆದ ಅಂದಾಜುಗಳನ್ನು ಮೀರಿಸುತ್ತ ಸಾಗುತ್ತಿದೆ. \ No newline at end of file diff --git a/eesanje/url_47_221_7.txt b/eesanje/url_47_221_7.txt new file mode 100644 index 0000000000000000000000000000000000000000..6fd34c040e114df3655fa3cb8a7b33b68fbb8b25 --- /dev/null +++ b/eesanje/url_47_221_7.txt @@ -0,0 +1,7 @@ +2018 ರಿಂದ ಇಲ್ಲಿಯವರೆಗೆ ವಿದೇಶಗಳಲ್ಲಿ 403 ಭಾರತೀಯ ವಿದ್ಯಾರ್ಥಿಗಳ ಸಾವು +ನವದೆಹಲಿ,ಡಿ.8-ನೈಸರ್ಗಿಕ ಕಾರಣಗಳು ಮತ್ತು ಅಪಘಾತಗಳು ಸೇರಿದಂತೆ ವಿವಿಧ ಕಾರಣಗಳಿಂದ 2018 ರಿಂದ ಇಲ್ಲಿಯವರೆಗೆ ಕನಿಷ್ಠ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಇಂದು ತಿಳಿಸಿದೆ. 34 ರಾಷ್ಟ್ರಗಳಲ್ಲಿ ಅದರಲ್ಲೂ ಕೆನಡಾದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ. +2018 ರಿಂದ 403 ಭಾರತೀಯ ವಿದ್ಯಾರ್ಥಿಗಳು ವಿದೇಶದಲ್ಲಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಅವರು ರಾಜ್ಯಸಭೆಯಲ್ಲಿ ಡೇಟಾವನ್ನು ಮಂಡಿಸಿದರು. ಸಚಿವಾಲಯವು ಸಲ್ಲಿಸಿದ ಮಾಹಿತಿಯ ಪ್ರಕಾರ, ಕೆನಡಾವು 2018 ರಿಂದ 91 ಭಾರತೀಯ ವಿದ್ಯಾರ್ಥಿಗಳ ಸಾವುಗಳನ್ನು ವರದಿ ಮಾಡಿದೆ ನಂತರ ಯುನೈಟೆಡ್ ಕಿಂಗ್‍ಡಮ್ (48), ರಷ್ಯಾ (40), ಯುನೈಟೆಡ್ ಸ್ಟೇಟ್ಸ್ (36), ಆಸ್ಟ್ರೇಲಿಯಾ (35), ಉಕ್ರೇನ್ (21), ಜರ್ಮನಿ (20), ಸೈಪ್ರಸ್ (14), ಇಟಲಿ ಮತ್ತು ಫಿಲಿಪೈನ್ಸ್ ಗಳಲ್ಲಿ ತಲಾ 10 ಮಂದಿ ಸಾವನ್ನಪ್ಪಿದ್ದಾರೆ. +ಹೊಸ ಮದ್ಯದಂಗಡಿಗಳಿಗೆ ಪರವಾನಗಿ ಇಲ್ಲ : ಸಚಿವ ಆರ್.ಬಿ.ತಿಮ್ಮಾಪುರ +ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಕೇಂದ್ರದ ಬದ್ಧತೆಯನ್ನು ಅವರು ಒತ್ತಿ ಹೇಳಿದರು, ವೈಯಕ್ತಿಕ ಪ್ರಕರಣಗಳನ್ನು ಪರಿಹರಿಸಲು ಮತ್ತು ಭವಿಷ್ಯದಲ್ಲಿ ಯಾವುದೇ ಅಹಿತಕರ ಘಟನೆಗಳನ್ನು ತಡೆಯಲು ಕೆಲಸ ಮಾಡಲು ಪ್ರತಿಜ್ಞೆ ಮಾಡಿದರು. ಮಿಷನ್ ಮುಖ್ಯಸ್ಥರು ಮತ್ತು ಹಿರಿಯ ಅಧಿಕಾರಿಗಳು ನಿಯಮಿತವಾಗಿ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಿ ಅಲ್ಲಿ ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದು ಅವರು ಹೇಳಿದರು. +ವಿದೇಶದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಭದ್ರತೆಯು ಭಾರತ ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ, ಘಟನೆಯ ಸರಿಯಾದ ತನಿಖೆ ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಆತಿಥೇಯ ದೇಶದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಕ್ಷಣವೇ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು. +ತೊಂದರೆಗೀಡಾದ ವಿದ್ಯಾರ್ಥಿಗಳಿಗೆ ತುರ್ತು ವೈದ್ಯಕೀಯ ಆರೈಕೆ, ಬೋರ್ಡಿಂಗ್ ಮತ್ತು ಅಗತ್ಯವಿದ್ದಾಗ ವಸತಿ ಸೇರಿದಂತೆ ಸಮಗ್ರ ಕಾನ್ಸುಲರ್ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು. ಹೆಚ್ಚಿನ ಸಂಖ್ಯೆಯ ಭಾರತೀಯ ವಿದ್ಯಾರ್ಥಿಗಳ ಸಾವಿನ ಬಗ್ಗೆ ಕೇಳಿದಾಗ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಅಧ್ಯಯನ ಮಾಡಲು ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ಹೇಳಿದರು. \ No newline at end of file diff --git a/eesanje/url_47_221_8.txt b/eesanje/url_47_221_8.txt new file mode 100644 index 0000000000000000000000000000000000000000..53346a9e7c67b54bb6f0267b4bc6b2c2d7a8ad27 --- /dev/null +++ b/eesanje/url_47_221_8.txt @@ -0,0 +1,9 @@ +ಜಾರಿಬಿದ್ದ ಕೆಸಿಆರ್ ಆಸ್ಪತ್ರೆಗೆ ದಾಖಲು, ಚೇತರಿಕೆಗೆ ಮೋದಿ ಹಾರೈಕೆ +ಹೈದರಾಬಾದ್,ಡಿ.8-ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಹೈದರಾಬಾದ್‍ನಲ್ಲಿ ತಮ್ಮ ಮನೆಯಲ್ಲಿ ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸೊಂಟದ ಮುರಿತಕ್ಕೆ ಒಳಗಾಗಿರಬಹುದು ಮತ್ತು ಶಸ್ತ್ರಚಿಕಿತ್ಸೆಯ ಅಗತ್ಯವಿರಬಹುದು ಎಂದು ವೈದ್ಯರು ಶಂಕಿಸಿದ್ದಾರೆ. +ಇಂದು ನಸುಕಿನ 2 ಗಂಟೆ ಸುಮಾರಿಗೆ ಅವರನ್ನು ಹೈದರಾಬಾದ್‍ನ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ/ ಮಾಜಿ ಮುಖ್ಯಮಂತ್ರಿ ಅವರು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಕಳೆದ ಮೂರು ದಿನಗಳಿಂದ ತಮ್ಮ ಮನೆಯಲ್ಲಿ ಜನರನ್ನು ಭೇಟಿಯಾಗುತ್ತಿದ್ದರು. +ಇತ್ತೀಚೆಗೆ ಮುಕ್ತಾಯಗೊಂಡ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪಕ್ಷವಾದ ಭಾರತ್ ರಾಷ್ಟ್ರ ಸಮಿತಿ (ಬಿಆರ್‍ಎಸ್) ಅನ್ನು ಸೋಲಿಸುವವರೆಗೂ ಕೆಸಿಆರ್ 2014 ರಿಂದ 2023 ರವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. +ಕೆಸಿಆರ್ ತೆಲಂಗಾಣದ ಎರಡು ಸ್ಥಾನಗಳಲ್ಲಿ ಸ್ರ್ಪಧಿಸಿ ಗಜ್ವೆಲ್ ಕ್ಷೇತ್ರವನ್ನು ಗೆದ್ದರು ಆದರೆ ಕಾಮರೆಡ್ಡಿ ವಿರುದ್ಧ ಸೋತರು. ಅವರು ಕಾಮರೆಡ್ಡಿ ಕ್ಷೇತ್ರದಿಂದ ಬಿಜೆಪಿಯ ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ ವಿರುದ್ಧ ಸೋತರು, ಅವರು ಕೆಸಿಆರ್ ಮತ್ತು ರೇವಂತ್ ರೆಡ್ಡಿ ಇಬ್ಬರನ್ನೂ ಸೋಲಿಸಿದರು. ಕಾಂಗ್ರೆಸ್ ನ ರೇವಂತ್ ರೆಡ್ಡಿ ನಿನ್ನೆ ತೆಲಂಗಾಣ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. +ಹೊಸ ಮದ್ಯದಂಗಡಿಗಳಿಗೆ ಪರವಾನಗಿ ಇಲ್ಲ : ಸಚಿವ ಆರ್.ಬಿ.ತಿಮ್ಮಾಪುರ +119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ 64 ಸ್ಥಾನಗಳನ್ನು ಗೆದ್ದಿದ್ದರೆ, ಬಿಆರ್‍ಎಸ್ ಕೇವಲ 39 ಸ್ಥಾನಗಳನ್ನು ಗಳಿಸಿದೆ. 2014 ರಲ್ಲಿ ತೆಲಂಗಾಣ ಹುಟ್ಟಿದ ನಂತರ ಇದು ಬಿಆರ್‍ಎಸ್‍ನ ಮೊದಲ ಸೋಲು. ವ್ಯಾಪಕವಾದ ಚುನಾವಣಾ ಪ್ರಚಾರದಲ್ಲಿ, ಪಕ್ಷವು ಬಡವರಿಗಾಗಿ ತನ್ನ ಎಲ್ಲಾ ಕಲ್ಯಾಣ ಯೋಜನೆಗಳನ್ನು ಹೈಲೈಟ್ ಮಾಡಲು ಪ್ರಯತ್ನಿಸಿತು. ಆದಾಗ್ಯೂ, ಕೆಲವು ಯೋಜನೆಗಳ ಅನುಷ್ಠಾನವು ಹಣ ಹಂಚಿಕೆಯ ಬಗ್ಗೆ ನಿರ್ಧರಿಸಲು ಶಾಸಕರಿಗೆ ಹೆಚ್ಚಿನ ಅಧಿಕಾರವನ್ನು ನೀಡಿತು, ಇದು ತಾರತಮ್ಯ ಮತ್ತು ಭ್ರಷ್ಟಾಚಾರದ ಆರೋಪಗಳಿಗೆ ಕಾರಣವಾಯಿತು. +ಕೆಸಿಆರ್ ಚೇತರಿಕೆಗೆ ಮೋದಿ ಹಾರೈಕೆಹೊಸದಿಲ್ಲಿ, ಡಿ.8 (ಪಿಟಿಐ) : ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಗಾರು ಅವರು ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ದುಃಖಿತರಾಗಿದ್ದೇನೆ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ. +69 ವರ್ಷದ ಬಿಆರ್‍ಎಸ್ ಅಧ್ಯಕ್ಷರ ಸ್ಥಿತಿಯನ್ನು ವೈದ್ಯರು ಮೌಲ್ಯಮಾಪನ ಮಾಡುತ್ತಿದ್ದಾರೆ ಮತ್ತು ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. \ No newline at end of file diff --git a/eesanje/url_47_221_9.txt b/eesanje/url_47_221_9.txt new file mode 100644 index 0000000000000000000000000000000000000000..552989c339402824501dd364f4000aa53b400c43 --- /dev/null +++ b/eesanje/url_47_221_9.txt @@ -0,0 +1,8 @@ +ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು ಮಾಡುತ್ತೇವೆ : ಸಚಿವ ಡಾ.ಜಿ.ಪರಮೇಶ್ವರ್ +ಬೆಳಗಾವಿ, ಡಿ.7- ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರನ್ನು ವಿಶೇಷ ಕಾರ್ಯಾಚರಣೆ ಮೂಲಕ ಪತ್ತೆಹಚ್ಚಿ ಗಡಿವರೆಗೂ ಕರೆದೊಯ್ದು ಬಿಟ್ಟು ಬರುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿಂದು ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ಆನಂತರ, ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್‍ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು. +ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ +ಇತ್ತೀಚಿಗೆ ಪೊಲೀಸ್ ಇಲಾಖೆಯೂ 45 ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿ ಬರೋಬ್ಬರಿ 5 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇನ್ನೂ, ಅಕ್ರಮ ವಲಸಿಗರು ಇರುವ 28 ಹಾಟ್‍ಸ್ಪಾಟ್‍ಗಳನ್ನು ಗುರುತಿಸಲಾಗಿದೆ. ಹೀಗೆ ಹಂತ ಹಂತವಾಗಿ ಅಕ್ರಮ ವಲಸಿಗರನಯ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಹೇಳಿದರು. +ರಾಜ್ಯದಲ್ಲಿ ಈಗಾಗಲೇ ವಾಸಿಸುತ್ತಿರುವ ಅಕ್ರಮ ಬಾಂಗ್ಲಾ ಹಾಗೂ ವಿದೇಶಿ ವಲಸಿಗರನ್ನು ಪತ್ತೆ ಹಚ್ಚುವ ಸಲುವಾಗಿ ಗುಪ್ತಚರ ವಿಭಾಗದ ಸಿಬ್ಬಂದಿ, ಠಾಣಾ ಸಿಬ್ಬಂದಿಗಳು ಸೂಕ್ತ ಗಸ್ತು ಮಾಡುವ ಮೂಲಕ ಅಕ್ರಮ ಬಾಂಗ್ಲಾ ಹಾಗೂ ವಿದೇಶಿ ವಲಸಿಗರನ್ನು ಪತ್ತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಅವರು ತಿಳಿಸಿದರು. +ಇದುವರೆಗೂ ಅಕ್ರಮ ಬಾಂಗ್ಲಾ ಮತ್ತು ವಿದೇಶಿಯರ ಮೇಲೆ ಒಟ್ಟು 764 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳು ದಾಖಲಾಗಿವೆ. ವಿದೇಶಿಯರ ವಿರುದ್ಧವೂ 711 ಪ್ರಕರಣಗಳು ದಾಖಲಾಗಿವೆ. ಜೊತೆಗೆ ಒಟ್ಟು 135 ಜನ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ನುಡಿದರು. +ಪ್ರಮುಖವಾಗಿ ಈ ಅಕ್ರಮ ವಲಸಿಗರಿಗೆ ನಕಲಿ ಆಧಾರ ಕಾರ್ಡ್ ಸೇರಿದಂತೆ ಇನ್ನಿತರೆ ದಾಖಲೆಗಳನ್ನು ಮಾಡಿ ಕೊಡುತ್ತಿರುವ ಎಂಟಕ್ಕೂ ಅಧಿಕ ಜನ ಮಧ್ಯವರ್ತಿ ಏಜೆಂಟ್‍ಗಳನ್ನು ಪತ್ತೆ ಮಾಡಿ ಹಲವಾರು ದಾಖಲೆ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. +ಈ ವೇಳೆ ಮರು ಪ್ರಶ್ನಿಸಿದ ಉಮಾಶ್ರೀ, ರಾಜ್ಯ ಸರ್ಕಾರ ಅಕ್ರಮ ವಲಸಿಗರು ರಾಜ್ಯದ ಗಡಿ ಪ್ರವೇಶ ಮಾಡುವ ಮುನ್ನವೇ ನಿಯಂತ್ರಣ ಮಾಡಬೇಕು. ವಾಹನಗಳಲ್ಲಿಯೇ ತಡೆಯಬೇಕು ಎಂದರು. ಆಗ ಸಚಿವರು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_47_222_1.txt b/eesanje/url_47_222_1.txt new file mode 100644 index 0000000000000000000000000000000000000000..a96a8b586fd48cb5a1c9b2e199a5e82bb1b79c02 --- /dev/null +++ b/eesanje/url_47_222_1.txt @@ -0,0 +1,6 @@ +ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು +ಜೈಪುರ,ಡಿ.7- ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರ ಹತ್ಯೆಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಶ್ಯಾಮ್ ನಗರ ಪೊಲೀಸ್ ಠಾಣೆಯ ಎಸ್‍ಎಚ್‍ಒ ಮತ್ತು ಬೀಟ್ ಕಾನ್‍ಸ್ಟೆಬಲ್ ಅನ್ನು ಅಮಾನತುಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. +ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಶ್ಯಾಮ್ ನಗರ ಪೊಲೀಸ್ ಠಾಣೆಯ ಎಸ್‍ಎಚ್‍ಒ ಮತ್ತು ಬೀಟ್ ಕಾನ್‍ಸ್ಟೆಬಲ್ ಅವರನ್ನು ಅಮಾನತುಗೊಳಿಸಲಾಗಿದೆ. 72 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದರು. +ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ +ಇಂದು ಜೈಪುರದ ರಜಪೂತ ಸಭಾ ಭವನದಲ್ಲಿ ಕರ್ಣಿ ಸೇನಾ ಮುಖ್ಯಸ್ಥರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರ ಸ್ವಗ್ರಾಮ ಗೊಗಮೇಡಿಯಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. +ಅವರ ಅಂತ್ಯಕ್ರಿಯೆಯ ದಿನದಂದು ಅಹಿತಕರ ಘಟನೆಗಳನ್ನು ತಪ್ಪಿಸಲು ಜೈಪುರ ಮತ್ತು ರಾಜಸ್ಥಾನದ ಇತರ ಭಾಗಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ನಗರದ ಕೆಲವು ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. \ No newline at end of file diff --git a/eesanje/url_47_222_10.txt b/eesanje/url_47_222_10.txt new file mode 100644 index 0000000000000000000000000000000000000000..fdb5636b219cc2ff05f0a9a501b3ac485d51fe42 --- /dev/null +++ b/eesanje/url_47_222_10.txt @@ -0,0 +1,7 @@ +ಅನರ್ಹತೆ ಅರ್ಜಿ ವಿಚಾರಣೆಗೆ ಹೆಚ್ಚುವರಿ ಕಾಲಾವಕಾಶ ಬೇಕು : ಮಹಾರಾಷ್ಟ್ರ ಸ್ಪೀಕರ್ +ನಾಗ್ಪುರ, ಡಿ 7 (ಪಿಟಿಐ) ಸದನದ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅನರ್ಹತೆ ಅರ್ಜಿಗಳ ವಿಚಾರಣೆ ನಡೆಸಲು ಹೆಚ್ಚುವರಿ ಗಂಟೆಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ. +ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಇಂದಿನಿಂದ ಡಿಸೆಂಬರ್ 20 ರವರೆಗೆ ನಾಗ್ಪುರದಲ್ಲಿ ನಡೆಯಲಿದೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರ್ವೇಕರ್ ಅವರು ಶಾಸಕಾಂಗ ಸಭೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ನನ್ನ ಮುಂದೆ ಬಾಕಿ ಇರುವ ಅನರ್ಹತೆಯ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಎರಡೂ ಜವಾಬ್ದಾರಿಗಳಿಗೆ ನ್ಯಾಯ ಒದಗಿಸಲು ನಾನು ಈ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 10 ರವರೆಗೆ ಕೆಲಸ ಮಾಡುತ್ತೇನೆ ಎಂದು ತೋರುತ್ತಿದೆ ಎಂದಿದ್ದಾರೆ. +ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ : ಸಚಿವ ರಾಮಲಿಂಗಾರೆಡ್ಡಿ +ಕಳೆದ ವರ್ಷ ಪಕ್ಷದಲ್ಲಿ ಭಿನ್ನಾಭಿಪ್ರಾಯ ಉಂಟಾದ ಹಿನ್ನೆಲೆಯಲ್ಲಿ ಪ್ರತಿಸ್ರ್ಪಧಿ ಶಿವಸೇನೆ ಬಣಗಳು ಪರಸ್ಪರರ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅಡ್ಡ ಅರ್ಜಿಗಳನ್ನು ರಾಹುಲ್ ನಾರ್ವೇಕರ್ ವಿಚಾರಣೆ ನಡೆಸುತ್ತಿದ್ದಾರೆ. ನಾಗ್ಪುರದ ವಿಧಾನ ಭವನದಲ್ಲಿ ಎರಡೂವರೆ ಗಂಟೆಗಳ ಕಾಲ ಅರ್ಜಿಗಳ ವಿಚಾರಣೆ ನಡೆಸುವುದಾಗಿ ನಾರ್ವೇಕರ್ ತಿಳಿಸಿದ್ದಾರೆ. +ಸದನದ ವಿಚಾರಣೆ ಹಾಗೂ ಸುಗಮ ಕಲಾಪ ಎರಡಕ್ಕೂ ಗಮನ ಕೊಡುವುದು ಅವರಿಗೆ ಸವಾಲಿನ ಕೆಲಸ ಎಂದು ಸ್ಪೀಕರ್ ಹೇಳಿದರು.ಶಿವಸೇನೆ ಅಧ್ಯಕ್ಷ ಠಾಕ್ರೆ ವಿರುದ್ಧ ಬಂಡಾಯವೆದ್ದ ಶಿಂಧೆ ನೇತೃತ್ವದ 40 ಬಂಡಾಯ ಶಾಸಕರನ್ನು ಅನರ್ಹಗೊಳಿಸಲು ಪ್ರಯತ್ನಿಸುತ್ತಿದೆ, ಇದು ಜೂನ್ 2022 ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರದ ಪತನಕ್ಕೆ ಕಾರಣವಾಯಿತು ಮಾತ್ರವಲ್ಲದೆ 57 ಶಾಸಕರ ವಿಭಜನೆಗೆ ಕಾರಣವಾಯಿತು. +ಠಾಕ್ರೆ ನೇತೃತ್ವದ ಗುಂಪು ತಮ್ಮ ಪ್ರತಿಸ್ರ್ಪಧಿ ಶಾಸಕರನ್ನು ಅನರ್ಹಗೊಳಿಸಲು ಕೋರುತ್ತಿರುವ ದಾಖಲೆಗಳು ನಕಲಿ ಎಂದು ಶಿಂಧೆ ಶಿಬಿರವು ಆರೋಪಿಸಿದೆ. ಡಿಸೆಂಬರ್ 31 ರೊಳಗೆ ಅನರ್ಹತೆ ಅರ್ಜಿಗಳ ಬಗ್ಗೆ ನಿರ್ಧರಿಸಲು ಸ್ಪೀಕರ್‍ಗೆ ಸುಪ್ರೀಂ ಕೋರ್ಟ್ ಹೇಳಿದೆ. \ No newline at end of file diff --git a/eesanje/url_47_222_11.txt b/eesanje/url_47_222_11.txt new file mode 100644 index 0000000000000000000000000000000000000000..11266030ff1c32e1cb7e1ddc83b4dec48d8b57a9 --- /dev/null +++ b/eesanje/url_47_222_11.txt @@ -0,0 +1,9 @@ +ಮಧ್ಯಪ್ರದೇಶದಲ್ಲಿ ಆಯ್ಕೆಯಾದ 230 ಶಾಸಕರಲ್ಲಿ 90 ಮಂದಿ ಕ್ರಿಮಿನಲ್‌ ಆರೋಪಿಗಳು +ಭೋಪಾಲ್, ಡಿ 7 (ಪಿಟಿಐ) ಮಧ್ಯಪ್ರದೇಶದಲ್ಲಿ ಹೊಸದಾಗಿ ಚುನಾಯಿತರಾದ 230 ಶಾಸಕರ ಪೈಕಿ ಸುಮಾರು ಶೇ.39 ರಷ್ಟು ಶಾಸಕರು ಅಂದರೆ ಸುಮಾರು 90 ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿಕೊಂಡಿದ್ದಾರೆ, 34 ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದು ಗರಿಷ್ಠ ಐದಕ್ಕಿಂತ ಹೆಚ್ಚು ವರ್ಷ ಜೈಲುವಾಸ ಅನುಭವಿಸಿ ಬಂದವರಾಗಿದ್ದಾರೆ. +ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ಸರ್ (ಎಡಿಆರ್) ಪ್ರಕಾರ 94 ಶಾಸಕರು ಅಥವಾ ಒಟ್ಟು ಶೇ, 41 ರಷ್ಟು ಜನರು ಹಿಂದಿನ ಚುನಾವಣೆಗಳು ನಡೆದಾಗ 2018 ರಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದರು ಎಂದು ಘೋಷಿಸಿದೆ. +2023 ರಲ್ಲಿ, ಈ ಸಂಖ್ಯೆಯು 90 ಕ್ಕೆ ಇಳಿದಿದೆ, 230-ಸದಸ್ಯ ಸದನದ ಸುಮಾರು 39 ಮಂದಿಯಲ್ಲಿ 34 ಶಾಸಕರು ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದು, ಐದು ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಅನುಭವಿಸಿದ್ದರು ಎಂದು ವರದಿ ಹೇಳಿದೆ. 2018 ರಲ್ಲಿ ಈ ಸಂಖ್ಯೆ 47 ಆಗಿತ್ತು. +ಶಿವಪುರಿ ಜಿಲ್ಲೆಯ ಪಿಚೋರ್‍ನಿಂದ ಬಿಜೆಪಿ ಟಿಕೆಟ್‍ನಿಂದ ಆಯ್ಕೆಯಾಗಿರುವ ಪ್ರೀತಮ್ ಲೋ ಕೊಲೆ ಆರೋಪ ಎದುರಿಸುತ್ತಿರುವ ಏಕೈಕ ಶಾಸಕರಾಗಿದ್ದಾರೆ. ಹೊಸದಾಗಿ ಆಯ್ಕೆಯಾದ ಐವರು ಶಾಸಕರು ಕೊಲೆ ಯತ್ನದ ಆರೋಪ ಎದುರಿಸುತ್ತಿದ್ದಾರೆ. ಮೂವರು ಅಭ್ಯರ್ಥಿಗಳು ಮಹಿಳೆಯರಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ವರದಿ ತಿಳಿಸಿದೆ. +ಬಡತನದಲ್ಲಿದ್ದಾರಂತೆ ವಿಶ್ವದ 40 ಶ್ರೀಮಂತ ರಾಷ್ಟ್ರಗಳ 69 ಮಿಲಿಯನ್ ಮಕ್ಕಳು +ಬಿಜೆಪಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 163 ಸ್ಥಾನಗಳನ್ನು ಗೆದ್ದು, 2018 ರಲ್ಲಿ 109 ರಿಂದ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. 2018 ರಲ್ಲಿ 114 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ 66 ಕ್ಕೆ ಇಳಿದಿದ್ದರೆ, ಹೊಸದಾಗಿ ಪ್ರವೇಶಿಸಿದ ಭಾರತ್ ಆದಿವಾಸಿ ಪಕ್ಷವು ಒಂದು ಕ್ಷೇತ್ರದಲ್ಲಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. +163 ಬಿಜೆಪಿ ಶಾಸಕರ ಪೈಕಿ 51 ಮಂದಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದು, ಅವರಲ್ಲಿ 16 ಮಂದಿ ಗಂಭೀರ ಅಪರಾಧಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್‍ನ ಈ ಸಂಖ್ಯೆಯು 38 ಶಾಸಕರಾಗಿದ್ದು, ಇದರಲ್ಲಿ 17 ಮಂದಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಎಡಿಆರ್ ಹೇಳಿದೆ.ಭಾರತ ಆದಿವಾಸಿ ಪಕ್ಷದ ಏಕೈಕ ವಿಜೇತ ಅಭ್ಯರ್ಥಿಯೂ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. +ಚಿಂದ್ವಾರದಿಂದ ಚುನಾಯಿತರಾಗಿರುವ ಸಂಸದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ಭೋಪಾಲ್ ಮತ್ತು ಇಂದೋರ್‍ನಲ್ಲಿ ತಮ್ಮ ವಿರುದ್ಧ ನಕಲಿ ಮತ್ತು ವಂಚನೆಯ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಘೋಷಿಸಿದ್ದಾರೆ. ಎರಡೂ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪ ಹೊರಿಸಲಾಗಿಲ್ಲ ಎಂದು ವರದಿ ತಿಳಿಸಿದೆ. ಬ್ನುಯಿಂದ ಆಯ್ಕೆಯಾದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಯಾವುದೇ ಪ್ರಕರಣ ಬಾಕಿ ಉಳಿದಿಲ್ಲ. \ No newline at end of file diff --git a/eesanje/url_47_222_12.txt b/eesanje/url_47_222_12.txt new file mode 100644 index 0000000000000000000000000000000000000000..7e2ae9917ab44ce9afb63ac5407f81e5774dfbe5 --- /dev/null +++ b/eesanje/url_47_222_12.txt @@ -0,0 +1,6 @@ +ರಜಪೂತ ಕರ್ಣಿ ಸೇನಾ ಅಧ್ಯಕ್ಷನ ಹತ್ಯೆ, ರಾಜಸ್ಥಾನ ಉದ್ವಿಗ್ನ +ಜೈಪುರ,ಡಿ.6- ಇಬ್ಬರು ದುಷ್ಕರ್ಮಿಗಳು ಮನೆಗೆ ನುಗ್ಗಿ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್ ಸಿಂಗ್ ಗೊಗಮೆಡಿ ಅವರನ್ನು ಹತ್ಯೆ ಮಾಡಿದ್ದು,ಇದರಿಂದ ರಾಜ್ಯದ ಹಲವಡೆ ಪ್ರತಿಭಟನೆ ನಡೆಸಿ ರಾಜಸ್ಥಾನ ಬಂದ್ ಗೆ ಕರೆ ನೀಡಲಾಗಿದೆ. +ಆರೋಪಿಗಳನ್ನು ಬಂ„ಸಿ ಗಲ್ಲು ಶಿಕ್ಷೆ ವಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದು ,ಹತ್ಯೆಯ ಮಾಡಿರುವ ದೃಶ್ಯ ಸಿಸಿಟಿವಿ ಕಂಡುಬಂದಿದೆ. ಸರ್ಕಾರಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆದಿದೆ.ಪೊಲೀಸ್ ತಂಡ ಆರೋಪಿಗಳ ಹುಡುಕಾಟದಲ್ಲಿ ನಿರತವಾಗಿದೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿದ್ದಾರೆ. +ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..? +ಕಳೆದ ಡಿ.3 ರಂದು ವಿಧಾನ ಸಭೆ ಚುನಾವಣೆ -ಫಲಿತಾಂಶ ಪ್ರಕಟಗೊಂಡ ನಂತರ ಕರ್ಣಿ ಸೇನೆಯನ್ನು ನಿರ್ಲಕ್ಷಿಸಿದ್ದರಿಂದ ಕಾಂಗ್ರೆಸ್ ಸೋತಿದೆ ಎಂದು ಸುಖದೇವ್ ಸಿಂಗ್ ಗೊಗಮೆಡಿ ಎಕ್ಸ್ನಲ್ಲಿ ಬರೆದಿದ್ದರು. +ಕಳೆದ ರಾತ್ರಿ ಸುಖದೇವ್ ಹತ್ಯೆಯ ನಂತರ ರಾಜಸ್ಥಾನದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ,ರಾಜ್ಸಮಂದ್ನ ಕುಂಭಲ್ಗಢದಲ್ಲಿ ಮಾರುಕಟ್ಟೆಗಳನ್ನು ಮುಚ್ಚಲಾಗಿದೆ.ಸರೋಹಿತ್ ಗೋಡಾರಾ ಗ್ಯಾಂಗ್ ಗೊಗ ಮಡಿಯನ್ನು ಹತ್ಯೆ ಮಾಡಿದ್ದು ನಾವೇ ಎಂದು ಒಪ್ಪಿಕೊಂಡಿದೆ. \ No newline at end of file diff --git a/eesanje/url_47_222_2.txt b/eesanje/url_47_222_2.txt new file mode 100644 index 0000000000000000000000000000000000000000..3d83aabed75e59b5945284ee77fc1bb5e2c9ce3d --- /dev/null +++ b/eesanje/url_47_222_2.txt @@ -0,0 +1,10 @@ +ರಾಷ್ಟ್ರ ಉಳಿಸಲು ಸರ್ಕಾರಕ್ಕೆ ಅವಕಾಶ ನೀಡಬೇಕು : ಸುಪ್ರೀಂ ಕೋರ್ಟ್ +ನವದೆಹಲಿ, ಡಿ.7- ಈಶಾನ್ಯ ರಾಜ್ಯಗಳು ದಂಗೆ ಮತ್ತು ಹಿಂಸಾಚಾರದಿಂದ ಪ್ರಭಾವಿತವಾಗಿವೆ ಎಂಬುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ರಾಷ್ಟ್ರವನ್ನು ಉಳಿಸಲು ಅಗತ್ಯವಾದ ಹೊಂದಾಣಿಕೆಗಳನ್ನು ಮಾಡಲು ಸರ್ಕಾರಕ್ಕೆ ಅಕ್ಷಾಂಶ ಮತ್ತು ಅವಕಾಶ ನೀಡಬೇಕು ಆದೇಶಿಸಿದೆ. ಅಸ್ಸಾಂಗೆ ಪ್ರತ್ಯೇಕವಾಗಿ ಅನ್ವಯವಾಗುವ ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಅನ್ನು ಉಲ್ಲೇಖಿಸಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾೀಧಿಶರ ಸಂವಿಧಾನ ಪೀಠವು ರಾಷ್ಟ್ರದ ಒಟ್ಟಾರೆ ಯೋಗಕ್ಷೇಮಕ್ಕಾಗಿ ಸರ್ಕಾರಗಳು ರಾಜಿ ಮಾಡಿಕೊಳ್ಳಬೇಕು ಎಂದು ಹೇಳಿದೆ. +ನಾವು ಸರ್ಕಾರಕ್ಕೆ ಆ ಅಕ್ಷಾಂಶವನ್ನು ನೀಡಬೇಕು. ಇಂದಿಗೂ ಈಶಾನ್ಯ ಭಾಗಗಳಿವೆ, ನಾವು ಅವುಗಳನ್ನು ಹೆಸರಿಸದಿರಬಹುದು, ಆದರೆ ದಂಗೆಯಿಂದ ಪ್ರಭಾವಿತವಾಗಿರುವ ರಾಜ್ಯಗಳು, ಹಿಂಸಾಚಾರದಿಂದ ಪ್ರಭಾವಿತವಾಗಿವೆ. ಅಗತ್ಯ ಹೊಂದಾಣಿಕೆಗಳನ್ನು ಮಾಡಲು ನಾವು ಸರ್ಕಾರಕ್ಕೆ ಅವಕಾಶ ನೀಡಬೇಕು. ದೇಶವನ್ನು ಉಳಿಸಿ ಎಂದು ಚಂದ್ರಚೂಡ್ ಹೇಳಿದರು. +ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಶ್ಯಾಮ್ ದಿವಾನ್ ಸೆಕ್ಷನ್ 6ಎ ಕಂಬಳಿ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಪೌರತ್ವ ಕಾನೂನನ್ನು ಉಲ್ಲಂಘಿಸಿ ಅಸ್ಸಾಂನಲ್ಲಿ ಉಳಿಯುವ ಅಕ್ರಮ ವಲಸಿಗರಿಗೆ ಬಹುಮಾನ ನೀಡಿದಂತಾಗುತ್ತದೆ ಎಂದು ವಾದಿಸಿದ್ದರು.ಅಸ್ಸಾಂ ಮತ್ತು ಇತರ ತಕ್ಷಣದ ನೆರೆಯ ಗಡಿ ರಾಜ್ಯಗಳು ಏಕರೂಪದ ಏಕ ವರ್ಗವನ್ನು ರೂಪಿಸುತ್ತವೆ. ಅಸ್ಸಾಂ ಅನ್ನು ಪ್ರತ್ಯೇಕಿಸುವುದು ಅನುಮತಿಸಲಾಗುವುದಿಲ್ಲ ಎಂದು ದಿವಾನ್ ಹೇಳಿದರು. +ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ +ನ್ಯಾಯಮೂರ್ತಿಗಳಾದ ಸೂರ್ಯಕಾಂತ್ , ಎಂಎಂ ಸುಂದ್ರೇಶ್, ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಅಸ್ಸಾಂನಲ್ಲಿ ಅಕ್ರಮ ವಲಸಿಗರಿಗೆ ಸಂಬಂಧಿಸಿದ ಪೌರತ್ವ ಕಾಯ್ದೆಯ ಸೆಕ್ಷನ್ 6ಎ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಲು 17 ಅರ್ಜಿಗಳ ವಿಚಾರಣೆ ನಡೆಸುತ್ತಿದೆ.ಅಸ್ಸಾಂ ಒಪ್ಪಂದದ ಅಡಿಯಲ್ಲಿ ಒಳಗೊಳ್ಳುವ ಜನರ ಪೌರತ್ವವನ್ನು ವ್ಯವಹರಿಸಲು ವಿಶೇಷ ನಿಬಂಧನೆಯಾಗಿ ಪೌರತ್ವ ಕಾಯ್ದೆಯಲ್ಲಿ ಸೆಕ್ಷನ್ 6ಎ ಅನ್ನು ಸೇರಿಸಲಾಯಿತು. +1966 ರ ಜನವರಿ 1 ರಂದು ಅಥವಾ ನಂತರ ಅಸ್ಸಾಂಗೆ ಬಂದವರು ಆದರೆ ಮಾರ್ಚ್ 25, 1971 ರ ಮೊದಲು ಬಾಂಗ್ಲಾದೇಶ ಸೇರಿದಂತೆ ನಿರ್ದಿಷ್ಟ ಪ್ರದೇಶಗಳಿಂದ 1985 ರಲ್ಲಿ ತಿದ್ದುಪಡಿ ಮಾಡಿದ ಪೌರತ್ವ ಕಾಯ್ದೆಯ ಪ್ರಕಾರ ಮತ್ತು ಅಂದಿನಿಂದ ಈಶಾನ್ಯ ರಾಜ್ಯದ ನಿವಾಸಿಗಳು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಭಾರತೀಯ ಪೌರತ್ವವನ್ನು ಪಡೆದುಕೊಳ್ಳಲು ಸೆಕ್ಷನ್ 18 ರ ಅಡಿಯಲ್ಲಿ. ಪರಿಣಾಮವಾಗಿ, ನಿಬಂಧನೆಯು ಅಸ್ಸಾಂನಲ್ಲಿ ಬಾಂಗ್ಲಾದೇಶಿ ವಲಸಿಗರಿಗೆ ಪೌರತ್ವವನ್ನು ನೀಡಲು ಮಾರ್ಚ್ 25, 1971 ರಂದು ಕಟ್‍ಆಫ್ ದಿನಾಂಕವನ್ನು ನಿಗದಿಪಡಿಸುತ್ತದೆ. +ನಿಬಂಧನೆಯನ್ನು ಅಮಾನ್ಯವೆಂದು ಘೋಷಿಸಲು ಕೋರಿ, ದಿವಾನ್‍ಅವರು, ಜನವರಿ 6, 1951 ರ ನಂತರ ಅಸ್ಸಾಂಗೆ ಬಂದ ಎಲ್ಲಾ ಭಾರತೀಯ ಮೂಲದ ಜನರ ನೆಲೆ ಮತ್ತು ಪುನರ್ವಸತಿಗಾಗಿ ರಾಜ್ಯಗಳು ಮತ್ತು ಯುಟಿಗಳೊಂದಿಗೆ ಸಮಾಲೋಚಿಸಿ ನೀತಿಯನ್ನು ರೂಪಿಸಲು ಕೇಂದ್ರಕ್ಕೆ ನಿರ್ದೇಶನವನ್ನು ಕೋರಿದ್ದರು.ಅವರ ಸಲ್ಲಿಕೆಗೆ ಪ್ರತಿಕ್ರಿಯಿಸಿದ ಪೀಠ, ಕಾನೂನು ರಾಜ್ಯಗಳ ನಡುವೆ ತಾರತಮ್ಯವನ್ನು ಉಂಟುಮಾಡುತ್ತದೆ ಎಂಬ ಕಾರಣಕ್ಕಾಗಿ ಅಸ್ಸಾಂನಲ್ಲಿ ಕಲಹ ಮುಂದುವರೆಯಲು ಸಂಸತ್ತಿಗೆ ಅವಕಾಶ ನೀಡಬಹುದೇ ಎಂದು ಕೇಳಿತು. +ಜಗನ್ನಾಥನ ದರ್ಶನಕ್ಕೆ ಹವಾನಿಯಂತ್ರಿತ ಫ್ಯಾಬ್ರಿಕ್ ಸುರಂಗ +ಕಲಹಗಳಿಂದ ಕೂಡಿದ ರಾಜ್ಯದಲ್ಲಿ ಶಾಂತಿಯನ್ನು ತರಲು ನಾವು ಇದನ್ನು ಮಾಡುತ್ತಿದ್ದೇವೆ ಎಂದು ಸಂಸತ್ತು ಹೇಳಬಹುದೇ? ಅಥವಾ ನಾವು ರಾಜ್ಯಗಳ ನಡುವೆ ತಾರತಮ್ಯವನ್ನು ಮಾಡುತ್ತೇವೆ ಎಂಬ ಕಾರಣಕ್ಕಾಗಿ ನಾವು ಆ ಕಲಹವನ್ನು ಮುಂದುವರಿಸಬೇಕೇ? … 1985 ರಲ್ಲಿ ಅಸ್ಸಾಂನ ಪರಿಸ್ಥಿತಿಯು ತುಂಬಾ ಹಿಂಸಾಚಾರವಾಗಿತ್ತು. ಅವರು ಕಂಡುಕೊಂಡ ಯಾವುದೇ ಪರಿಹಾರವು ನಿಖರವಾದ ಪರಿಹಾರವಾಗಿದೆ, ಎಂದು ಪೀಠ ಹೇಳಿದೆ. \ No newline at end of file diff --git a/eesanje/url_47_222_3.txt b/eesanje/url_47_222_3.txt new file mode 100644 index 0000000000000000000000000000000000000000..35c4e56bd4217ab3e01add3a0fae07af3d71c982 --- /dev/null +++ b/eesanje/url_47_222_3.txt @@ -0,0 +1,9 @@ +ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ +ಲಕ್ನೋ,ಡಿ.7- ಉತ್ತರ ಪ್ರದೇಶದಲ್ಲಿ ಅಧಿಕಾರ ದುರುಪಯೋಗ, ಕೆಲಸದಲ್ಲಿ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರದ ಆರೋಪ ಹೊತ್ತಿರುವ ಹಲವು ಅಧಿಕಾರಿಗಳನ್ನು ಯೋಗಿ ಆದಿತ್ಯನಾಥ್ ಸರ್ಕಾರ ವಜಾ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಮುಜಾಫರ್‍ನಗರದ ಏಕೀಕರಣ ಅಧಿಕಾರಿ ಅನುಜ್ ಸಕ್ಸೇನಾ ಅವರು ತಮ್ಮ ಕರ್ತವ್ಯಗಳನ್ನು ನಿರ್ವಹಿಸದ ಕಾರಣ ಸೇವೆಯಿಂದ ವಜಾಗೊಂಡವರಲ್ಲಿ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. +ಬಲ್ಲಿಯಾದಲ್ಲಿ ನಿಯೋಜನೆಗೊಂಡಿದ್ದ ಏಕೀಕರಣ ಅಧಿಕಾರಿ ಶಿವಶಂಕರ್ ಪ್ರಸಾದ್ ಸಿಂಗ್ ಅವರ ವಾರ್ಷಿಕ ವೇತನ ಹೆಚ್ಚಳವನ್ನು ಸರ್ಕಾರ ತಡೆಹಿಡಿದಿದೆ ಮತ್ತು ಮೀರತ್‍ನಲ್ಲಿ ನಿಯೋಜಿಸಲಾಗಿದ್ದ ಸಹಾಯಕ ಬಲವರ್ಧನೆ ಅಧಿಕಾರಿ ಮನೋಜ್ ಕುಮಾರ್ ನೀರಜ್ ಅವರ ಸೇವೆಯನ್ನು ವಜಾಗೊಳಿಸಿದೆ. ನಂತರದವರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ಸುದ್ದಿಗಾರರೊಂದಿಗೆ ಮಾತನಾಡಿದ ಬಲವರ್ಧನೆ ಆಯುಕ್ತ ಜಿಎಸ್ ನವೀನ್ ಕುಮಾರ್ ಅವರು ಅಮ್ರೋಹಾದ ಸಹಾಯಕ ಬಲವರ್ಧನೆ ಅಧಿಕಾರಿ ನಿತಿನ್ ಚೌಹಾಣ್ ವಿರುದ್ಧವೂ ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. +ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ +ಇಟಾವಾ ಜಿಲ್ಲೆಯ ಬಾನಿ ಗ್ರಾಮದಲ್ಲಿ ನಡೆದ ಕಾಮಗಾರಿಯಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಬಲವರ್ಧನೆ ಅಧಿಕಾರಿ ಅವಧೇಶ್ ಕುಮಾರ್ ಗುಪ್ತಾ ಹಾಗೂ ಸಹಾಯಕ ಬಲವರ್ಧನೆ ಅಧಿಕಾರಿಗಳಾದ ಸಂತೋಷ್ ಕುಮಾರ್ ಯಾದವ್ ಮತ್ತು ಅಖಿಲೇಶ್ ಕುಮಾರ್ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳಲಾಗಿದೆ. ಲೇಖ್‍ಪಾಲ್‍ನ ಏಕೀಕರಣ ಅಧಿಕಾರಿ ಓಂ ನಾರಾಯಣ ಅವರನ್ನೂ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. +ರಾಜ್ಯದ ಎಲ್ಲಾ ಬಲವರ್ಧನೆ ಅಧಿಕಾರಿಗಳು ತಮ್ಮ ಅಧಿಕೃತ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಲಾಗಿದೆ, ತಪ್ಪಿದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನವೀನ್ ಕುಮಾರ್ ಎಚ್ಚರಿಸಿದ್ದಾರೆ. +ಜಗನ್ನಾಥನ ದರ್ಶನಕ್ಕೆ ಹವಾನಿಯಂತ್ರಿತ ಫ್ಯಾಬ್ರಿಕ್ ಸುರಂಗ +2023-24ನೇ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು 1,34,425 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಏಕೀಕರಣ ಆಯುಕ್ತರು ತಿಳಿಸಿದ್ದಾರೆ. ಇದುವರೆಗೆ 2023-24ನೇ ಹಣಕಾಸು ವರ್ಷದಲ್ಲಿ ಒಟ್ಟು 231 ಗ್ರಾಮಗಳ ಕ್ರೋಡೀಕರಣ ಪ್ರಕ್ರಿಯೆ ಪೂರ್ಣಗೊಂಡಿದ್ದು, ಭೂ ಬಲವರ್ಧನೆ ಕಾಯ್ದೆಯ ಕಲಂ 52 (1)ರ ಅಡಿಯಲ್ಲಿ ಘೋಷಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. \ No newline at end of file diff --git a/eesanje/url_47_222_4.txt b/eesanje/url_47_222_4.txt new file mode 100644 index 0000000000000000000000000000000000000000..3cab285daad0317d3329c0c8d031ef3de84dcf29 --- /dev/null +++ b/eesanje/url_47_222_4.txt @@ -0,0 +1,6 @@ +ಮೋದಿ ಪ್ರಶಂಸಿದ ಬಿಜೆಪಿ ಸಂಸದೀಯ ಮಂಡಳಿ +ನವದೆಹಲಿ, ಡಿ.7 (ಪಿಟಿಐ) ಮೂರು ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಮೊದಲ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಿರಿಯ ನಾಯಕರು ಮೋದಿ ಅವರನ್ನು ಅಭಿನಂದಿಸುತ್ತಿದ್ದಂತೆ ಪಕ್ಷದ ಸಂಸದರು ಅವರ ನಾಯಕತ್ವವನ್ನು ಶ್ಲಾಘಿಸಿ ಘೋಷಣೆಗಳನ್ನು ಕೂಗಿದರು. +ಮೂರು ರಾಜ್ಯಗಳಾದ ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ರಾಜಸ್ಥಾನಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.ಮೋದಿಯವರ ನಾಯಕತ್ವವೇ ಅವರ ದೊಡ್ಡ ಗೆಲುವಿಗೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. +ರೇವಂತ್ ರೆಡ್ಡಿ ‘ಬಿಹಾರ ಡಿಎನ್‍ಎ’ ಹೇಳಿಕೆಗೆ ಕೇಂದ್ರ ಸಚಿವ ಆಕ್ರೋಶ +ತೆಲಂಗಾಣದಲ್ಲಿ ಬಿಆರ್‍ಎಸ್‍ನಿಂದ ಕಾಂಗ್ರೆಸ್ ಅಧಿಕಾರವನ್ನು ಕಸಿದುಕೊಂಡಿತು, ಅಲ್ಲಿ ಬಿಜೆಪಿಯ ಮತ ಹಂಚಿಕೆ ಮತ್ತು ಲೆಕ್ಕಾಚಾರವು ಏರಿತು. ತನ್ನ ಎಲ್ಲಾ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರನ್ನು ಒಳಗೊಂಡಿರುವ ಬಿಜೆಪಿ ಸಂಸದೀಯ ಪಕ್ಷವು ಸಾಮಾನ್ಯವಾಗಿ ಪ್ರತಿ ವಾರ ಅಧಿವೇಶನಗಳ ಸಮಯದಲ್ಲಿ ಸಭೆ ಸೇರುತ್ತದೆ. +ಸಭೆಗಳಲ್ಲಿ, ಮೋದಿ ಸೇರಿದಂತೆ ಅದರ ನಾಯಕರು ಸಂಸತ್ತಿನಲ್ಲಿ ಕಾರ್ಯಸೂಚಿಗೆ ಮತ್ತು ಅದರ ಸಾಂಸ್ಥಿಕ ಮತ್ತು ರಾಜಕೀಯ ಪ್ರಚಾರಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಮಾತನಾಡುತ್ತಾರೆ. \ No newline at end of file diff --git a/eesanje/url_47_222_5.txt b/eesanje/url_47_222_5.txt new file mode 100644 index 0000000000000000000000000000000000000000..ad8a1bc10b16b43dd1022c17e9ae0c19f1fdeaed --- /dev/null +++ b/eesanje/url_47_222_5.txt @@ -0,0 +1,10 @@ +ಉತ್ತರಭಾರತ-ನೇಪಾಳದಲ್ಲಿ ಭೂಕಂಪನಗಳು ಸಾಮಾನ್ಯವಂತೆ +ನವದೆಹಲಿ,ಡಿ.7- ಉತ್ತರ ಭಾರತ ಮತ್ತು ನೇಪಾಳದಲ್ಲಿ ಭೂಕಂಪನ ಚಟುವಟಿಕೆಯಲ್ಲಿನ ಏರುಪೇರುಗಳಿಂದಾಗಿ ಕೆಲವೊಮ್ಮೆ ಸಾಧಾರಣ ಭೂಕಂಪಗಳು ಸಂಭವಿಸುವುದು ಸಾಮಾನ್ಯವಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ, ರಿಜಿಜು ಪಶ್ಚಿಮ ನೇಪಾಳದ ಅಲ್ಮೋರಾ ದೋಷದ ಸಕ್ರಿಯಗೊಳಿಸುವಿಕೆಯು ಉತ್ತರ ಭಾರತ ಮತ್ತು ನೇಪಾಳದ ಕೆಲವು ಭಾಗಗಳಲ್ಲಿ ಭೂಕಂಪಗಳಿಗೆ ಕಾರಣವಾಗಿದೆ, ಇದು ಜನವರಿ 24 ಮತ್ತು 6.2 ಮತ್ತು 6.4 ರಂದು 5.8 ತೀವ್ರತೆಯ ಭೂಕಂಪಕ್ಕೆ ಕಾರಣವಾಯಿತು. ಕ್ರಮವಾಗಿ ಅಕ್ಟೋಬರ್ 3 ಮತ್ತು ನವೆಂಬರ್ 3 ರಂದು ತೀವ್ರತೆಯ ಕಂಪನಗಳು ಸಂಭವಿಸಿದ್ದವು. +ಈ ಮೈನ್‍ಶಾಕ್‍ಗಳು, ನಂತರದ ಉತ್ತರಾಘಾತಗಳ ಜೊತೆಗೆ 2023 ರಲ್ಲಿ ಭೂಕಂಪಗಳ ಆವರ್ತನಕ್ಕೆ ಕಾರಣವಾಯಿತು ಎಂದು ರಿಜಿಜು ಹೇಳಿದರು, ಈ ಅವಯಲ್ಲಿ ಹಿನ್ನಲೆ ಭೂಕಂಪನವು ಬದಲಾಗದೆ ಉಳಿದಿದೆ ಎಂದು ಹೇಳಿದರು.ಉತ್ತರ ಭಾರತ ಮತ್ತು ನೇಪಾಳವು ಜನವರಿಯಿಂದ ನವೆಂಬರ್‍ವರೆಗೆ 3.0 ರಿಂದ 3.9 ರ ತೀವ್ರತೆಯ 97 ಭೂಕಂಪಗಳನ್ನು ಅನುಭವಿಸಿದೆ ಎಂದು ಸಚಿವರು ಹೇಳಿದರು, 2022 ಮತ್ತು 2021 ರಲ್ಲಿ ತಲಾ 41 ಮತ್ತು 2020 ರಲ್ಲಿ 42 ಭೂಕಂಪಗಳು ಸಂಭವಿಸಿದ್ದವು. +ಈ ಪ್ರದೇಶವು 2022 ರಲ್ಲಿ 20 ಮತ್ತು 2021 ಮತ್ತು 2020 ರಲ್ಲಿ ತಲಾ 18 ರ ವಿರುದ್ಧ ಜನವರಿ-ನವೆಂಬರ್‍ನಿಂದ 4.0-4.9 ತೀವ್ರತೆಯ 21 ಭೂಕಂಪಗಳನ್ನು ಅನುಭವಿಸಿದೆ ಎಂದು ಅವರು ಹೇಳಿದರು. ಉತ್ತರ ಭಾರತ ಮತ್ತು ನೇಪಾಳವು ಸಾಂದರ್ಭಿಕವಾಗಿ ಮಧ್ಯಮ ಭೂಕಂಪಗಳನ್ನು ಅನುಭವಿಸುವುದು ಮತ್ತು ಭೂಕಂಪನ ಚಟುವಟಿಕೆಯಲ್ಲಿ ಏರಿಳಿತಗಳನ್ನು ಅನುಭವಿಸುವುದು ಸಾಮಾನ್ಯವಾಗಿದೆ. ನೇಪಾಳ ಮತ್ತು ಭಾರತದ ನೆರೆಯ ಉತ್ತರ ಭಾಗವು ಹಿಮಾಲಯ ಪ್ರದೇಶದ ಸಕ್ರಿಯ ದೋಷಗಳ ಸಮೀಪದಲ್ಲಿದೆ, ಆಗಾಗ್ಗೆ ಭೂಕಂಪಗಳಿಗೆ ಒಳಗಾಗುವ ಅತ್ಯಂತ ಭೂಕಂಪನ ಸಕ್ರಿಯ ಪ್ರದೇಶಗಳಾಗಿವೆ. ಘರ್ಷಣೆಯ ಟೆಕ್ಟೋನಿಕ್ಸ್‍ಗೆ, ಅಲ್ಲಿ ಭಾರತೀಯ ಪ್ಲೇಟ್ ಯುರೇಷಿಯನ್ ಪ್ಲೇಟ್‍ನ ಕೆಳಗೆ ಒಳಪಡುತ್ತದೆ ಎಂದು ಅವರು ಹೇಳಿದರು. +ರೇವಂತ್ ರೆಡ್ಡಿ ‘ಬಿಹಾರ ಡಿಎನ್‍ಎ’ ಹೇಳಿಕೆಗೆ ಕೇಂದ್ರ ಸಚಿವ ಆಕ್ರೋಶ +ಅಲ್ಮೋರಾ ದೋಷವು ಹೆಚ್ಚಿನ-ಕೋನದ ಪಶ್ಚಿಮ-ವಾಯುವ್ಯ-ಪೂರ್ವ-ಆಗ್ನೇಯದಿಂದ ವಾಯುವ್ಯ-ಆಗ್ನೇಯ ಪ್ರವೃತ್ತಿಯ ಟೆಕ್ಟೋನಿಕ್ ಸಮತಲವಾಗಿದೆ, ಇದು ಉತ್ತರದಲ್ಲಿ ಒಳಗಿನ ಕಡಿಮೆ ಹಿಮಾಲಯದ ಗರ್ವಾಲ್ ಗುಂಪನ್ನು ದಕ್ಷಿಣದಲ್ಲಿ ಹೊರಗಿನ ಕಡಿಮೆ ಹಿಮಾಲಯದ ಜೌನ್ಸಾರ್ ಮತ್ತು ಡುಡಾಟೋಲಿ ಗುಂಪುಗಳಿಂದ ಪ್ರತ್ಯೇಕಿಸುತ್ತದೆ. +ಭಾರತೀಯ ಮಾನದಂಡಗಳ ಬ್ಯೂರೋ ಭಾರತದ ಭೂಕಂಪನ ವಲಯ ನಕ್ಷೆಯನ್ನು ಪ್ರಕಟಿಸಿದೆ ಮತ್ತು ಭೂಕಂಪ-ನಿರೋಧಕ ಕಟ್ಟಡಗಳನ್ನು ನಿರ್ಮಿಸಲು ಅಗತ್ಯವಾದ ಎಂಜಿನಿಯರಿಂಗ್ ಕೋಡ್‍ಗಳು ಮತ್ತು ಅಭ್ಯಾಸಗಳನ್ನು ಅಳವಡಿಸಲು ಮಾರ್ಗಸೂಚಿಗಳನ್ನು ನೀಡುತ್ತದೆ ಎಂದು ರಿಜಿಜು ಹೇಳಿದರು. +ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭೂಕಂಪದ ಅಭ್ಯಾಸಗಳು, ಜಾಗೃತಿ ಕಾರ್ಯಕ್ರಮಗಳು, ಭೂಕಂಪನ ನಿರ್ವಹಣೆಯನ್ನು ಹೆಚ್ಚಿಸಲು ಸನ್ನದ್ಧತೆಯನ್ನು ಹೆಚ್ಚಿಸಲು ಮತ್ತು ಭೂಕಂಪ ಸಂಬಂಧಿತ ಘಟನೆಗಳಿಗೆ ಪ್ರತಿಕ್ರಿಯೆಯಂತಹ ವಿವಿಧ ಮುನ್ನೆಚ್ಚರಿಕೆ ಕ್ರಮಗಳಿಗೆ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಜನವರಿ 24 ರಂದು ನೇಪಾಳದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಲವಾಗಿ ಕಂಡುಬಂದಿದೆ. +ಮಧ್ಯಪ್ರದೇಶದಲ್ಲಿ ಆಯ್ಕೆಯಾದ 230 ಶಾಸಕರಲ್ಲಿ 90 ಮಂದಿ ಕ್ರಿಮಿನಲ್‌ ಆರೋಪಿಗಳು +ಅಕ್ಟೋಬರ್ 3 ರಂದು, ನೇಪಾಳದಲ್ಲಿ 4.6 ಮತ್ತು 6.2 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದವು ಮತ್ತು ದೆಹಲಿ-ಎನ್‍ಸಿಆರ್‍ನಲ್ಲಿ ಕಂಪನಗಳನ್ನು ಅನುಭವಿಸಲಾಯಿತು. ನವೆಂಬರ್ 3 ರಂದು, 6.4 ತೀವ್ರತೆಯ ಪ್ರಬಲ ಭೂಕಂಪವು ನೇಪಾಳವನ್ನು 382 ಕ್ಕೂ ಹೆಚ್ಚು ನಂತರದ ಆಘಾತಗಳೊಂದಿಗೆ ಅಪ್ಪಳಿಸಿತ್ತು. \ No newline at end of file diff --git a/eesanje/url_47_222_6.txt b/eesanje/url_47_222_6.txt new file mode 100644 index 0000000000000000000000000000000000000000..2ff73ffe3326118045d52cc731ca4113f57878a3 --- /dev/null +++ b/eesanje/url_47_222_6.txt @@ -0,0 +1,9 @@ +ಮಧ್ಯಪ್ರದೇಶದ 230 ಶಾಸಕರಲ್ಲಿ 205 ಮಂದಿ ಕೋಟ್ಯಪತಿಗಳು +ಭೋಪಾಲ್, ಡಿ 7 (ಪಿಟಿಐ) ಮಧ್ಯಪ್ರದೇಶದಲ್ಲಿ ಹೊಸದಾಗಿ ಚುನಾಯಿತರಾದ 230 ಶಾಸಕರಲ್ಲಿ 205 ಮಂದಿ ಕೋಟ್ಯಾಪತಿಗಳಾಗಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು 134 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದಿರುವ ಮೂವರು ಶ್ರೀಮಂತ ಶಾಸಕರಲ್ಲಿ ಸ್ಥಾನ ಪಡೆದಿದ್ದಾರೆ. ಶಾಸಕರ ಸರಾಸರಿ ಆಸ್ತಿ 11.77 ಕೋಟಿ ರೂ.ಗಳಿಗೂ ಹೆಚ್ಚಿರುವುದು ವಿಶೇಷ. +ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ಸರ್ï ಪ್ರಕಾರ, ರತ್ಲಾಮ್ ಸಿಟಿಯಿಂದ ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕ ಚೈತನ್ಯ ಕಶ್ಯಪ್ 296 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಅವರ ಪಕ್ಷದ ಸಹೋದ್ಯೋಗಿ ಸಂಜಯ್ ಸತ್ಯೇಂದ್ರ ಪಾಠಕ್ (ವಿಜಯರಾಘವಗಢ) 242 ಕೋಟಿ ಆಸ್ತಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. +2018 ರಲ್ಲಿ 187 ರಿಂದ 2023 ರಲ್ಲಿ 1 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿ ಹೊಂದಿರುವ ಶಾಸಕರ ಸಂಖ್ಯೆ 205 ಕ್ಕೆ ಏರಿದೆ ಎಂದು ಅದು ಹೇಳಿದೆ. ಈ ಕೋಟ್ಯಾಪತಿ ಶಾಸಕರಲ್ಲಿ 144 ಬಿಜೆಪಿ ಮತ್ತು 61 ಕಾಂಗ್ರೆಸ್‍ನವರು. ಭಾರತ ಆದಿವಾಸಿ ಪಕ್ಷದ ವಿಜೇತ ಅಭ್ಯರ್ಥಿ ಕಮಲೇಶ್ ದೊಡಿಯಾರ್ ಅವರು ಕಡಿಮೆ ಆಸ್ತಿಯೊಂದಿಗೆ ಹೊಸದಾಗಿ ಚುನಾಯಿತರಾದ ಶಾಸಕರಲ್ಲಿ ಮುಂಚೂಣಿಯಲ್ಲಿದ್ದಾರೆ. ದೊಡಿಯಾರ್ 18 ಲಕ್ಷ ಮೌಲ್ಯದ ಆಸ್ತಿ ಘೋಷಿಸಿದ್ದಾರೆ. +ಕಡಿಮೆ ಆಸ್ತಿ ಹೊಂದಿರುವ ಇತರ ಇಬ್ಬರು ಅಭ್ಯರ್ಥಿಗಳಲ್ಲಿ ಬಿಜೆಪಿಯ ಸಂತೋಷ್ ವರ್ಕಡೆ (ಸಿಹೋರಾ) 25 ಲಕ್ಷ ರೂಪಾಯಿ ಆಸ್ತಿ ಮತ್ತು ಅವರ ಪಕ್ಷದ ಸಹೋದ್ಯೋಗಿ ಕಾಂಚನ್ ಮುಖೇಶ್ ತನ್ವೆ (ಖಾಂಡ್ವಾ) ಒಟ್ಟು 26 ಲಕ್ಷ ಆಸ್ತಿ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ. +ಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆ : 12 ವರ್ಷ ಜೈಲು, 10 ಕೋಟಿವರೆಗೂ ದಂಡ +ಅತಿ ಹೆಚ್ಚು ಹೊಣೆಗಾರಿಕೆ ಹೊಂದಿರುವ ಅಭ್ಯರ್ಥಿಗಳ ಪೈಕಿ ಬಿಜೆಪಿಯ ಮಾಜಿ ಸಚಿವ ಸುರೇಂದ್ರ ಪಟ್ವಾ (ಭೋಜ್‍ಪುರ್) 57 ಕೋಟಿ ರೂ. ಸಾಲದೊಂದಿಗೆ ಮುನ್ನಡೆಯಲ್ಲಿದ್ದಾರೆ, ಕಾಂಗ್ರೆಸ್‍ನ ದಿನೇಶ್ ಜೈನ್ (ಮಹಿದ್‍ಪುರ) 30 ಕೋಟಿ ರೂ.ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ ಮತ್ತು ಬಿಜೆಪಿಯ ಭೂಪೇಂದ್ರ ಸಿಂಗ್ (ಖುರೈ) ಮೂರನೇ ಸ್ಥಾನದಲ್ಲಿದ್ದಾರೆ. +205 ಕೋಟ್ಯಾಪತಿಗಳ ಪೈಕಿ 102 ಶಾಸಕರು 5 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ. ಸುಮಾರು 71 ಶಾಸಕರು 2 ಕೋಟಿಯಿಂದ 5 ಕೋಟಿ ರೂ.ವರೆಗೆ ಆಸ್ತಿ ಘೋಷಿಸಿಕೊಂಡಿದ್ದಾರೆ. ಅಲ್ಲದೆ, 48 ಶಾಸಕರು 50 ಲಕ್ಷದಿಂದ 2 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರೆ, ಒಂಬತ್ತು ಚುನಾಯಿತ ಶಾಸಕರು 50 ಲಕ್ಷಕ್ಕಿಂತ ಕಡಿಮೆ ಆಸ್ತಿ ಹೊಂದಿದ್ದಾರೆ. +ಹೊಸದಾಗಿ ಆಯ್ಕೆಯಾದ ಶಾಸಕರ ಸರಾಸರಿ ಆಸ್ತಿ 2018 ರಲ್ಲಿ 10.17 ಕೋಟಿಯಿಂದ 11.77 ಕೋಟಿ ರೂಪಾಯಿಯಾಗಿದೆ ಎಂದು ವರದಿ ತಿಳಿಸಿದೆ. \ No newline at end of file diff --git a/eesanje/url_47_222_7.txt b/eesanje/url_47_222_7.txt new file mode 100644 index 0000000000000000000000000000000000000000..fbde1a2595eccbd5b69cf0e910740f740d8406b1 --- /dev/null +++ b/eesanje/url_47_222_7.txt @@ -0,0 +1,8 @@ +ಜಗನ್ನಾಥನ ದರ್ಶನಕ್ಕೆ ಹವಾನಿಯಂತ್ರಿತ ಫ್ಯಾಬ್ರಿಕ್ ಸುರಂಗ +ಭುವನೇಶ್ವರ, ಡಿ.7 (ಪಿಟಿಐ) ಜಗನ್ನಾಥ ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗೆ ಸರತಿ ಸಾಲು ನಿರ್ವಹಣಾ ವ್ಯವಸ್ಥೆಯನ್ನು ಸರಳೀಕರಿಸಲು ಒಡಿಶಾ ಸರ್ಕಾರವು ಪುರಿಯ ಗ್ರ್ಯಾಂಡ್ ರಸ್ತೆಯಲ್ಲಿ ಹವಾನಿಯಂತ್ರಿತ ಟೆನ್ಸೈಲ್ ಫ್ಯಾಬ್ರಿಕ್ ರಚನೆಯನ್ನು ಸ್ಥಾಪಿಸುತ್ತಿದೆ. ಆಕರ್ಷಕ ಬಟ್ಟೆಯ ರಚನೆಯನ್ನು ಮೂರು ಬದಿಗಳಿಂದ ಮುಚ್ಚಲಾಗುತ್ತದೆ ಮತ್ತು ಸುರಂಗದಂತೆ ಕಾಣುತ್ತದೆ. +ಇದನ್ನು 84 ಮೀಟರ್ ಉದ್ದ ಮತ್ತು 12 ಮೀಟರ್ ಅಗಲದಲ್ಲಿ ಸ್ಥಾಪಿಸಲಾಗುವುದು ಎಂದು ಪುರಿಯಲ್ಲಿ ಪಾರಂಪರಿಕ ಕಾರಿಡಾರ್ ಯೋಜನೆಯಡಿಯಲ್ಲಿ ವಿವಿಧ ಮೂಲಸೌಕರ್ಯಗಳನ್ನು ಕಾರ್ಯಗತಗೊಳಿಸುತ್ತಿರುವ ಒಡಿಶಾ ಬ್ರಿಡ್ಜ್ ಮತ್ತು ಕನ್ಸ್ಟ್ರಕ್ಷನ್ ಕಾಪೆರ್ರೇಷನ್ ಲಿಮಿಟೆಡ್‍ನ ಹಿರಿಯ ಎಂಜಿನಿಯರ್ ಪ್ರಭಾತ್ ಕುಮಾರ್ ಪಾಣಿಗ್ರಾಹಿ ಹೇಳಿದ್ದಾರೆ. +ಪರೀಕ್ಷಾ ಅಕ್ರಮ ತಡೆಗೆ ಮಸೂದೆ ಮಂಡನೆ : 12 ವರ್ಷ ಜೈಲು, 10 ಕೋಟಿವರೆಗೂ ದಂಡ +ಗ್ರ್ಯಾಂಡ್ ರೋಡ್‍ನಲ್ಲಿರುವ ದೇವಸ್ಥಾನದ ಮೊದಲು ಧರ್ಮಜ್ಯೋತಿ ಲಾಡ್ಜ್‍ನಿಂದ ದೇವಸ್ಥಾನದ ಕಚೇರಿಯವರೆಗೆ ಚರಂಡಿಯಿಂದ ಸುಮಾರು ಎರಡು ಮೀಟರ್ ರಚನೆಯನ್ನು ಸ್ಥಾಪಿಸಲಾಗುವುದು, ಮೀಸಲಾದ ಕಾರಿಡಾರ್ ಅನ್ನು ದೇವಾಲಯದ ಪ್ರವೇಶಕ್ಕೆ ಮಾತ್ರ ಬಳಸಲಾಗುವುದು ಎಂದು ಅವರು ಹೇಳಿದರು. +ಪ್ರಸ್ತುತ 12 ನೇ ಶತಮಾನದ ದೇಗುಲದ ಮೊದಲು ಭಕ್ತರು ದೇವಾಲಯಕ್ಕೆ ಪ್ರವೇಶಿಸಲು ತಾತ್ಕಾಲಿಕ ರಚನೆಯನ್ನು ಸ್ಥಾಪಿಸಲಾಗಿದೆ. ದೇವಸ್ಥಾನ ಪ್ರವೇಶಿಸುವ ಮೊದಲು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲುವುದರಿಂದ ಹಿರಿಯ ಭಕ್ತರು ಮತ್ತು ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಂಜಿನಿಯರ್ ತಿಳಿಸಿದರು. +ಸಚಿವ ಜಮೀರ್ ಗೈರು, ಮೇಲ್ಮನೆಯಲ್ಲಿ ಕಾವೇರಿದ ಚರ್ಚೆ +ಭಕ್ತರು ಸರತಿ ಸಾಲಿನಲ್ಲಿ ನಿಂತಾಗ ದೇವಸ್ಥಾನಕ್ಕೆ ಸರಾಗವಾಗಿ ಭೇಟಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಎಸಿ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_222_8.txt b/eesanje/url_47_222_8.txt new file mode 100644 index 0000000000000000000000000000000000000000..d497f1bde8c67d9831820128fc5824e41e4ac733 --- /dev/null +++ b/eesanje/url_47_222_8.txt @@ -0,0 +1,7 @@ +ರೇವಂತ್ ರೆಡ್ಡಿ ‘ಬಿಹಾರ ಡಿಎನ್‍ಎ’ ಹೇಳಿಕೆಗೆ ಕೇಂದ್ರ ಸಚಿವ ಆಕ್ರೋಶ +ಪಾಟ್ನಾ, ಡಿ 7 (ಪಿಟಿಐ) ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತೆಲಂಗಾಣ ನಿಯೋಜಿತ ಸಿಎಂ ರೇವಂತ್ ರೆಡ್ಡಿ ಅವರ ಬಿಹಾರ-ಡಿಎನ್‍ಎ ಹೇಳಿಕೆಯನ್ನು ಕಟುವಾಗಿ ಟೀಕಿಸಿದ್ದಾರೆ ಮತ್ತು ಇದು ರಾಜ್ಯದ ಜನರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ. +ರಾಜ್ಯದ ಉಜಿಯಾರಪುರದ ಸಂಸದ ರೈ ಅವರು ರೆಡ್ಡಿ ಅವರ ಬಿಹಾರ ಡಿಎನ್‍ಎ ಹೇಳಿಕೆಯು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ ಎಂದು ದೂರಿದ್ದಾರೆ. +ರೆಡ್ಡಿ ಹೇಳಿಕೆಯು ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ. ರಾಜ್ಯದಲ್ಲಿನ ಮಹಾಮೈತ್ರಿ ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲವಿದೆ, ಅವರ ನಾಯಕರು ಬಿಹಾರದ ಜನರ ವಿರುದ್ಧ ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಎಂದು ರೈ ಹೇಳಿದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಜನರು ಕಾಂಗ್ರೆಸ್ ನಾಯಕರನ್ನು ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು. +ಬಡತನದಲ್ಲಿದ್ದಾರಂತೆ ವಿಶ್ವದ 40 ಶ್ರೀಮಂತ ರಾಷ್ಟ್ರಗಳ 69 ಮಿಲಿಯನ್ ಮಕ್ಕಳು +ವರದಿಗಳ ಪ್ರಕಾರ, ಪತ್ರಕರ್ತರೊಂದಿಗಿನ ಸಂವಾದದಲ್ಲಿ ರೆಡ್ಡಿ ಅವರು ತೆಲಂಗಾಣದ ಮೊದಲ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಬಿಹಾರಿ ಜೀನ್‍ಗಳನ್ನು ಹೊಂದಿದ್ದಾರೆ ಮತ್ತು ಕೆಸಿಆರ್ ಅವರಿಗಿಂತ ರಾಜ್ಯಕ್ಕೆ ಉತ್ತಮ ಆಯ್ಕೆ ಎಂದು ಹೇಳಿದ್ದರು ಎಂದು ವರದಿಯಾಗಿದೆ. +ನನ್ನ ಡಿಎನ್‍ಎ ತೆಲಂಗಾಣ. ಕೆಸಿಆರ್ ಅವರ ಡಿಎನ್‍ಎ ಬಿಹಾರ. ಅವರು ಬಿಹಾರಕ್ಕೆ ಸೇರಿದವರು. ಕೆಸಿಆರ್ ಅವರ ಜಾತಿ ಕುರ್ಮಿ. ಅವರು ಬಿಹಾರದಿಂದ ವಿಜಯನಗರಕ್ಕೆ ಮತ್ತು ಅಲ್ಲಿಂದ ತೆಲಂಗಾಣಕ್ಕೆ ವಲಸೆ ಬಂದಿದ್ದಾರೆ. ಬಿಹಾರದ ಡಿಎನ್‍ಎಗಿಂತ ತೆಲಂಗಾಣ ಡಿಎನ್‍ಎ ಉತ್ತಮವಾಗಿದೆ ಎಂದು ಅವರು ಆರೋಪಿಸಿದ್ದರು. \ No newline at end of file diff --git a/eesanje/url_47_222_9.txt b/eesanje/url_47_222_9.txt new file mode 100644 index 0000000000000000000000000000000000000000..a423984b11cbe0e963d0f4c065d422f6bbff6098 --- /dev/null +++ b/eesanje/url_47_222_9.txt @@ -0,0 +1,10 @@ +ಗಾಜಾದಲ್ಲಿ ಇಸ್ರೇಲ್ ಕ್ರೂರ ದಾಳಿ ಖಂಡಿಸಿದ ಪ್ರಿಯಾಂಕಾ ವಾದ್ರಾ +ನವದೆಹಲಿ, ಡಿ.7 (ಪಿಟಿಐ) ಕದನ ವಿರಾಮದ ಹಿಂದೆ ಇದ್ದಕ್ಕಿಂತಲೂ ಹೆಚ್ಚು ಅನಾಗರಿಕತೆಯಿಂದ ಗಾಜಾದ ಮೇಲಿನ ಕರುಣೆಯಿಲ್ಲದ ಬಾಂಬ್ ದಾಳಿ ಮುಂದುವರಿದಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. +ಹಾಗೂ ಅಂತಾರಾಷ್ಟ್ರೀಯ ಸಮುದಾಯದ ಸದಸ್ಯರಾಗಿ ಅವರ ಪರ ಎದ್ದು ನಿಲ್ಲುವುದು ಭಾರತದ ಕರ್ತವ್ಯ ಎಂದು ಹೇಳಿದ್ದಾರೆ. ಯಾವುದು ಸರಿ ಮತ್ತು ಸಾಧ್ಯವಾದಷ್ಟು ಬೇಗ ಕದನ ವಿರಾಮವನ್ನು ಖಚಿತಪಡಿಸಿಕೊಳ್ಳಲು ಎಲ್ಲವನ್ನೂ ಮಾಡಿ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ. +ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭಾರತವು ಯಾವಾಗಲೂ ನ್ಯಾಯಕ್ಕಾಗಿ ನಿಂತಿದೆ ಮತ್ತು ಸ್ವಾತಂತ್ರ್ಯಕ್ಕಾಗಿ ಅವರ ಸುದೀರ್ಘ ಹೋರಾಟದ ಆರಂಭದಿಂದಲೂ ಪ್ಯಾಲೆಸ್ತೀನ್ ಜನರನ್ನು ಬೆಂಬಲಿಸುತ್ತದೆ ಎಂದು ಹೇಳಿದರು.ಗಾಜಾದ ಮೇಲೆ ದಯೆಯಿಲ್ಲದ ಬಾಂಬ್ ದಾಳಿಯು ಕದನ ವಿರಾಮಕ್ಕಿಂತ ಹೆಚ್ಚು ಅನಾಗರಿಕವಾಗಿ ಮುಂದುವರಿಯುತ್ತದೆ. ಆಹಾರ ಸರಬರಾಜುಗಳು ವಿರಳವಾಗಿವೆ, ವೈದ್ಯಕೀಯ ಸೌಲಭ್ಯಗಳು ನಾಶವಾಗಿವೆ ಮತ್ತು ಮೂಲಭೂತ ಸೌಕರ್ಯಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು. +ಇಡೀ ದೇಶವೇ ನಾಶವಾಗುತ್ತಿದೆ, ಸುಮಾರು 10,000 ಮಕ್ಕಳು, 60 ಕ್ಕೂ ಹೆಚ್ಚು ಪತ್ರಕರ್ತರು ಮತ್ತು ನೂರಾರು ವೈದ್ಯಕೀಯ ಕಾರ್ಯಕರ್ತರು ಸೇರಿದಂತೆ 16,000 ಅಮಾಯಕ ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಪ್ರತಿಪಾದಿಸಿದರು. +ಸಾರಿಗೆ ನೌಕರರಿಗೆ ಸಕಾಲದಲ್ಲಿ ವೇತನ : ಸಚಿವ ರಾಮಲಿಂಗಾರೆಡ್ಡಿ +ಇವರು ನಮ್ಮೆಲ್ಲರಂತೆಯೇ ಕನಸುಗಳು ಮತ್ತು ಭರವಸೆಗಳನ್ನು ಹೊಂದಿರುವ ಜನರು, ನಮ್ಮ ಕಣ್ಣಮುಂದೆಯೇ ಅವರನ್ನು ನಿರ್ದಯವಾಗಿ ಸಾವಿಗೆ ಎಸೆಯಲಾಗುತ್ತಿದೆ. ನಮ್ಮ ಮಾನವೀಯತೆ ಎಲ್ಲಿದೆ?ಎಂದು ಅವರು ಪ್ರಶ್ನಿಸಿದ್ದಾರೆ. ಭಾರತ ಯಾವಾಗಲೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಏನಿದೆಯೋ ಅದರ ಪರವಾಗಿ ನಿಂತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರತಿಪಾದಿಸಿದ್ದಾರೆ. +ನಾವು ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿಯ ವಿರುದ್ಧ ನಿರ್ಬಂಧಗಳಿಗಾಗಿ ಹೋರಾಡಿದ್ದೇವೆ. ನಾವು ಪ್ಯಾಲೆಸ್ಟೈನ್‍ನಲ್ಲಿನ ನಮ್ಮ ಸಹೋದರ ಸಹೋದರಿಯರನ್ನು ಸ್ವಾತಂತ್ರ್ಯಕ್ಕಾಗಿ ಅವರ ಸುದೀರ್ಘ ಹೋರಾಟದ ಆರಂಭದಿಂದಲೂ ಬೆಂಬಲಿಸಿದ್ದೇವೆ ಮತ್ತು ಈಗ ನಾವು ಹಿಂದೆ ನಿಂತು ಏನನ್ನೂ ಮಾಡದೆ ನರಮೇಧ ನೋಡಿಕೊಂಡು ಕೂರುವಂತಾಗಿದೆ ಎಂದು ಪ್ರಿಯಾಂಕಾ ಗಾಂ ಹೇಳಿದರು. +ಸಚಿವ ಜಮೀರ್ ಗೈರು, ಮೇಲ್ಮನೆಯಲ್ಲಿ ಕಾವೇರಿದ ಚರ್ಚೆ +ಹಮಾಸ್ ನಡೆಸುತ್ತಿರುವ ಗಾಜಾದಲ್ಲಿನ ಆರೋಗ್ಯ ಸಚಿವಾಲಯವು ಭೂಪ್ರದೇಶದಲ್ಲಿ ಸಾವಿನ ಸಂಖ್ಯೆ 16,200 ಮೀರಿದೆ, 42,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳಿಂದ ಉಲ್ಲೇಖಿಸಲಾಗಿದೆ. \ No newline at end of file diff --git a/eesanje/url_47_223_1.txt b/eesanje/url_47_223_1.txt new file mode 100644 index 0000000000000000000000000000000000000000..b29f57365af574e9b23f167b69e5be451cd4f63c --- /dev/null +++ b/eesanje/url_47_223_1.txt @@ -0,0 +1,7 @@ +ತೆರೆದ ಬಾವಿಗೆ ಬಿದ್ದಿದ್ದ ಬಾಲಕಿಯನ್ನು ರಕ್ಷಿಸಿದರೂ ಉಳಿಲಿಲ್ಲ ಜೀವ +ರಾಜ್ಗಢ, ಡಿ 6 (ಪಿಟಿಐ) -ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಲ್ಲಿ ಬೋರ್ವೆಲ್ಗೆ ಬಿದ್ದ ನಾಲ್ಕು ವರ್ಷದ ಬಾಲಕಿ ಇಂದು ಮುಂಜಾನೆ ರಕ್ಷಿಸಿದ ಕೆಲವೇ ಗಂಟೆಗಳ ನಂತರ ಭೋಪಾಲ್ನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಹಿ ಎಂದು ಗುರುತಿಸಲಾದ ಮಗುವನ್ನು ಬೆಳಗಿನ ಜಾವ 2.45 ರ ಸುಮಾರಿಗೆ ಜೀವಂತವಾಗಿ ರಕ್ಷಿಸಲಾಯಿತು ಮತ್ತು ಪಚೋರ್ನಲ್ಲಿರುವ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಮಾರ್ಗಮಧ್ಯೆ ಆಕೆಯ ಸ್ಥಿತಿ ಹದಗೆಟ್ಟಿತು ಎಂದು ಅಧಿಕಾರಿ ತಿಳಿಸಿದ್ದಾರೆ. +ನಂತರ ಬಾಲಕಿಯನ್ನು ಸುಮಾರು 70 ಕಿ.ಮೀ ದೂರದಲ್ಲಿರುವ ಭೋಪಾಲ್ನಲ್ಲಿರುವ ಸರ್ಕಾರಿ ಹಮೀಡಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಚಿಕಿತ್ಸೆ ವೇಳೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ ಕಿರಣ್ ವಾಡಿಯಾ ತಿಳಿಸಿದ್ದಾರೆ.ಮರಣೋತ್ತರ ಪರೀಕ್ಷೆಯ ನಂತರ ಮಗುವಿನ ಸಂಬಂಕರಿಗೆ ಶವವನ್ನು ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು. +ಸಿ.ಪಿ.ಯೋಗೇಶ್ವರ್ ಭಾವನ ಕೊಲೆ ಹಿಂದೆ ಇದೆಯಾ ಹಣಕಾಸು ವಿಚಾರ..? +ನಿನ್ನೆ ಸಂಜೆ ಹೊಲದಲ್ಲಿ ತೆರೆದ ಬೋರ್ವೆಲ್ಗೆ ಮಹಿ ಬಿದ್ದಿದ್ದು, ತಜ್ಞರ ತಂಡ ಸುಮಾರು 25 ಅಡಿ ಆಳಕ್ಕೆ ಸಮಾನಾಂತರ ಹೊಂಡ ತೋಡಿ ರಕ್ಷಿಸಿದ್ದರು. ಆಕೆ 22 ಅಡಿ ಎತ್ತರದಲ್ಲಿ ಸಿಲುಕಿಕೊಂಡಿದ್ದು, ಎರಡು ಹೊಂಡಗಳನ್ನು ಜೋಡಿಸಿದ ನಂತರ ಆಕೆಯನ್ನು ತಜ್ಞರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ರಾಜ್ಗಢ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ತಿಳಿಸಿದ್ದಾರೆ. +ಬೋಡಾ ಪೊಲೀಸ್ ಠಾಣಾ ವ್ಯಾಪ್ತಿಯ ಪಿಪ್ಲಿಯಾ ರಸೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು.ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್ಡಿಇಆರ್ಎಫï) ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೋರ್ವೆಲ್ ಶಾಫ್ಟ್ನೊಳಗೆ ಆಮ್ಲಜನಕವನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು. +ಇದಕ್ಕೂ ಮುನ್ನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಸ್ಡಿಇಆರ್ಎಫ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್ ) ತಂಡಗಳನ್ನು ಸ್ಥಳಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಜಿಲ್ಲಾಡಳಿತವನ್ನು ಕೋರಿದ್ದರು. \ No newline at end of file diff --git a/eesanje/url_47_223_10.txt b/eesanje/url_47_223_10.txt new file mode 100644 index 0000000000000000000000000000000000000000..02ed27c9b3004b2153d9384bf13171dd1efae109 --- /dev/null +++ b/eesanje/url_47_223_10.txt @@ -0,0 +1,8 @@ +ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆ ನಿಗೂಢ ಸಾವು +ದುರ್ಗ್, ಡಿ 6 (ಪಿಟಿಐ) ಛತ್ತೀಸ್‍ಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ಎಂದು ಹೆಸರಿಸಲಾದ ವ್ಯಕ್ತಿಯ ತಂದೆ ಅನುಮಾನಾಸ್ಪದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸುಶೀಲ್ ದಾಸ್ (62) ಮೃತದೇಹ ನಿನ್ನೆ ಮಧ್ಯಾಹ್ನ ಅಂಡಾ ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಚೋಟಿ ಗ್ರಾಮದ ಬಾವಿಯಲ್ಲಿ ಪತ್ತೆಯಾಗಿದ್ದು, ಪ್ರಾಥಮಿಕ ದೃಷ್ಟಿಯಲ್ಲಿ ಇದು ಆತ್ಮಹತ್ಯೆಯಂತಿದೆ ಎಂದು ದುರ್ಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಗೋಪಾಲ್ ಗಾರ್ಗ್ ಹೇಳಿದರು. ಮೃತರು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಪ್ರಕರಣದಲ್ಲಿ ನಗದು ಕೊರಿಯರ್ ಆಗಿದ್ದ ಆಸಿಮ್ ದಾಸ್ ಅವರ ತಂದೆ. +ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸುಶೀಲ್ ದಾಸ್ ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದರು ಎಂದು ಗಾರ್ಗ್ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತೋರುತ್ತದೆ, ಆದರೆ ಸಾವಿನ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. +ಮಾದಕ ವಸ್ತು ಮಾರಾಟ-ಸಾಗಾಟ : 8 ಮಂದಿ ವಿದೇಶಿಗರು ಸೇರಿ 47 ಮಂದಿ ಬಂಧನ +ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಸೀಮ್ ದಾಸ್ ಮತ್ತು ಮತ್ತೊಬ್ಬ ಆರೋಪಿ, ಕಾನ್‍ಸ್ಟೆಬಲ್ ಭೀಮ್ ಸಿಂಗ್ ಯಾದವ್ ಅವರನ್ನು ನವೆಂಬರ್ 3 ರಂದು ಇಡಿ ಬಂಧಿಸಿತ್ತು. +ಫೋರೆನ್ಸಿಕ್ ವಿಶ್ಲೇಷಣೆ ಮತ್ತು ಕ್ಯಾಶ್ ಕೊರಿಯರ್ ದಾಸ್ ನೀಡಿದ ಹೇಳಿಕೆಯು ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ನಿರ್ಗಮಿತ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್‍ಗೆ ಇದುವರೆಗೆ ಸುಮಾರು 508 ಕೋಟಿ ರೂಪಾಯಿಗಳನ್ನು ಪಾವತಿಸಿದ್ದಾರೆ ಎಂಬ ಆಘಾತಕಾರಿ ಆರೋಪಗಳಿಗೆ ಕಾರಣವಾಯಿತು ಮತ್ತು ಇವು ತನಿಖೆಯ ವಿಷಯಗಳಾಗಿವೆ ಎಂದು ಇಡಿ ಹೇಳಿಕೊಂಡಿದೆ. +ಬಾಘೇಲ್ ಅವರು ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು ಮತ್ತು ಬಿಜೆಪಿಯು ಇಡಿಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.ಅಸೀಂ ದಾಸ್‍ನಿಂದ 5.39 ಕೋಟಿ ನಗದು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡ ನಂತರ ರಾಯ್‍ಪುರದಲ್ಲಿ ಕೇಂದ್ರ ಏಜೆನ್ಸಿಯಿಂದ ಬಂಧಿಸಲಾಯಿತು. ಇಡಿ ಪ್ರಕಾರ, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಚುನಾವಣಾ ವೆಚ್ಚಗಳಿಗಾಗಿ ದೊಡ್ಡ ಮೊತ್ತದ ಹಣವನ್ನು ತಲುಪಿಸಲು ಯುಎಇಯಿಂದ ವಿಶೇಷವಾಗಿ ಅಪ್ಲಿಕೇಶನ್ ಪ್ರವರ್ತಕರು ಅವರನ್ನು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ. +ವಶಪಡಿಸಿಕೊಂಡ ಹಣವನ್ನು ಛತ್ತೀಸ್‍ಗಢ ರಾಜ್ಯದಲ್ಲಿ ಮುಂಬರುವ ಚುನಾವಣಾ ವೆಚ್ಚಕ್ಕಾಗಿ ಒಬ್ಬ ರಾಜಕಾರಣಿ ಬಾಘೆಲಗೆ ತಲುಪಿಸಲು ಮಹದೇವ್ ಆ್ಯಪ್ ಪ್ರವರ್ತಕರು ವ್ಯವಸ್ಥೆಗೊಳಿಸಿದ್ದರು ಎಂದು ಅಸೀಮ್ ದಾಸ್ ಒಪ್ಪಿಕೊಂಡಿದ್ದಾರೆ ಎಂದು ಸಂಸ್ಥೆಯು ನವೆಂಬರ್‍ನಲ್ಲಿ ಎರಡು ಹಂತದ ಮತದಾನಕ್ಕೆ ಮುನ್ನ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ. \ No newline at end of file diff --git a/eesanje/url_47_223_11.txt b/eesanje/url_47_223_11.txt new file mode 100644 index 0000000000000000000000000000000000000000..8d8a60adc85a54d827559a19320a434ae6dbac7c --- /dev/null +++ b/eesanje/url_47_223_11.txt @@ -0,0 +1,13 @@ +ವಸತಿ ಗೃಹಗಳಲ್ಲಿ ಮದ್ಯಮಾರಾಟ ಹಗರಣ : ವಿಧಾನಸಭೆಯಲ್ಲಿ ಕೋಲಾಹಲ +ಬೆಳಗಾವಿ, ಡಿ.5-ವಸತಿ ಗೃಹಗಳಲ್ಲಿ ಮದ್ಯಮಾರಾಟಕ್ಕೆ ಪರವಾನಗಿ ನೀಡಿರುವುದರಲ್ಲಿ ಹಗರಣಗಳಾಗಿದ್ದು, ತನಿಖೆ ನಡೆಸಬೇಕೆಂದು ಪಕ್ಷಾತೀತವಾಗಿ ವಿಧಾನಸಭೆಯಲ್ಲಿ ಒತ್ತಾಯಿಸಿದ್ದಲ್ಲದೆ ಆಡಳಿತ ಮತ್ತು ವಿರೋಧಪಕ್ಷಗಳ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪಗಳು ನಡೆದು ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು. +ಪ್ರಶ್ನೋತ್ತರದ ಅವಧಿಯಲ್ಲಿ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿ ತಮ್ಮ ಕ್ಷೇತ್ರದಲ್ಲಿ ನಿಯಮ ಮೀರಿ ಸಿಎಲ್ 7 ಪರವಾನಗಿಗಳನ್ನು ನೀಡಲಾಗಿದೆ. ಇದರಲ್ಲಿ ಶೇಕಡಾ 80 ರಷ್ಟು ನಿಯಮಗಳ ಉಲ್ಲಂಘನೆಯಾಗಿದೆ. ಯಾವ ಅಂಗಡಿಗೂ ಪಾರ್ಕಿಂಗ್ ಸ್ಥಳಾವಕಾಶ ಇಲ್ಲ. ನಿಯಮಗಳ ಅನುಸಾರ ಕೊಠಡಿಗಳ ವಿನ್ಯಾಸ ಇಲ್ಲ. ಜಿಲ್ಲಾ ಅಬಕಾರಿ ಕಚೇರಿಯಲ್ಲಿ ಸೂಪರಿಟೆಂಡೆಂಟ್ ಆಗಿರುವ ರಂಗಪ್ಪ ಎಂಬುವರು ನಿಯಮ ಮೀರಿ ಪರವಾನಗಿಗಳನ್ನು ಕೊಡುತ್ತಿರುವುದಲ್ಲದೆ, ಸದರಿ ಮದ್ಯದಂಗಡಿಗಳಲ್ಲಿ ಪಾಲುದಾರರಾಗುತ್ತಿದ್ದಾರೆ ಎಂದು ಆರೋಪಿಸಿದರು. +ಇದಕ್ಕೆ ಸ್ಪಷ್ಟನೆ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಸಿಎಲ್ 7 ಪರವಾನಗಿಗಳನ್ನು ನೀಡಬೇಕಾದರೆ 18 ಪ್ರಮಾಣಪತ್ರಗಳನ್ನು ಸಲ್ಲಿಸಬೇಕು. ಬಹುತೇಕ ಎಲ್ಲಾ ಸನ್ನದ್ಧುದಾರರಲ್ಲೂ ಪ್ರಮಾಣಪತ್ರಗಳಿವೆ. ಆದರೆ ಕಟ್ಟಡ ವಿನ್ಯಾಸ ಮತ್ತು ಪಾರ್ಕಿಂಗ್ ಸ್ಥಳದ ಬಗ್ಗೆ ಸ್ಪಷ್ಟ ನಿಯಮಗಳಿಲ್ಲ. ನಮ್ಮ ಸರ್ಕಾರ ಇದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ರೂಪಿಸಲಿದೆ ಎಂದು ಹೇಳಿದರು. +ಶಾಸಕರು ಉಲ್ಲೇಖಿಸಿರುವ ಅಧಿಕಾರಿಯ ವಿರುದ್ಧ ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಹಂತದಲ್ಲಿ ಮಧ್ಯಪ್ರವೇಶ ಮಾಡಿದ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಗೋಪಾಲಕೃಷ್ಣ ಬೇಳೂರು, ಸಿ.ಎನ್.ಬಾಲಕೃಷ್ಣ, ಸುರೇಶ್‍ಗೌಡ ಸೇರಿದಂತೆ ಹಲವು ಶಾಸಕರು ಈ ಕುರಿತು ವಿಸ್ತೃತ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. +ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಸಿಎಲ್ 7 ಎಂಬುದು ದಂಧೆಯಾಗಿದೆ. ಬೆಂಗಳೂರಿನಿಂದ ಬಂದ ಅರಸೀಕೆರೆಯಲ್ಲಿ ಪರವಾನಗಿ ಪಡೆದು ಮದ್ಯ ಮಾರಾಟ ಮಾಡುತ್ತಿದ್ದಾರೆ. ಕಡಿವಾಣ ಹಾಕದಿದ್ದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದರು. +ಬೇಳೂರು ಗೋಪಾಲಕೃಷ್ಣ ಮಾತನಾಡಿ, ಇದು ಸುಮಾರು 1 ಸಾವಿರ ಕೋಟಿ ರೂ.ಗಳಷ್ಟು ಪ್ರಕರಣ, ಎಷ್ಟು ಪರವಾನಗಿಗಳನ್ನು ನೀಡಲಾಗಿದೆ ಎಂಬುದು ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಇವು ನಮ್ಮ ಸರ್ಕಾರದ ಅವಧಿಯಲ್ಲಿ ನೀಡಲಾಗಿರುವ ಪರವಾನಗಿಗಳಲ್ಲ. 2020 ರಿಂದ 2023 ರ ಅವಧಿಯಲ್ಲಿ ನೀಡಲಾಗಿದೆ ಎಂದು ಹೇಳಿದರು. +ಮಧ್ಯಪ್ರವೇಶಿಸಿದ ಮಾಜಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ರಾಜ್ಯಸರ್ಕಾರಕ್ಕೆ ಧೈರ್ಯ ಮತ್ತು ಕಾಳಜಿ ಇದ್ದರೆ ಈ ಬಗ್ಗೆ ತನಿಖೆ ಮಾಡಿ ಅಕ್ರಮವಾಗಿರುವುದನ್ನು ರದ್ದು ಮಾಡಿ ಎಂದು ಸವಾಲು ಹಾಕಿದರು. ಇದು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕಾವೇರಿದ ಚರ್ಚೆಗೆ ಗ್ರಾಸವಾಯಿತು. +ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, 21 ಕೊಠಡಿಗಳಿರಬೇಕು ಎಂಬ ನಿಯಮವಿದೆ. ಆದರೆ ಶೌಚಾಲಯವನ್ನು ಕೊಠಡಿ ಎಂದು ಪರಿವರ್ತಿಸಿದ್ದಾರೆ. ತನಿಖೆ ಮಾಡಿ ನಿಯಮ ಉಲ್ಲಂಘನೆಯಾಗಿದ್ದರೆ ಪರವಾನಗಿಗಳನ್ನು ರದ್ದು ಮಾಡಿ, ಚಿಲ್ಲರೆ ಅಂಗಡಿಗಳಲ್ಲೂ ಮದ್ಯ ಮಾರಾಟವಾಗುತ್ತಿದೆ, ಅದನ್ನು ತಡೆಗಟ್ಟಿ ಎಂದು ಆಗ್ರಹಿಸಿದರು. +ಸಚಿವ ಆರ್.ಬಿ.ತಿಮ್ಮಾಪುರ್ ಮಾತನಾಡಿ, ಕೊಠಡಿ ವಿನ್ಯಾಸ, ಪಾರ್ಕಿಂಗ್ ಸ್ಥಳಗಳ ಬಗ್ಗೆ ಸ್ಪಷ್ಟ ನಿಯಮಗಳಿಲ್ಲ ಎಂದು ನಾನೇ ಒಪ್ಪಿಕೊಂಡಿದ್ದೇನೆ. ಇದರ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಪರವಾನಗಿ ನೀಡುವುದರಲ್ಲಿ ಮೀಸಲಾತಿ ಪಾಲನೆಯಾಗಿಲ್ಲ ಎಂದು ಆಕ್ಷೇಪಿಸಿದರು. +ಮುಸ್ಲಿಮರಿಗೆ ಸಂಪತ್ತು ಹಂಚುತ್ತೇನೆ ಎಂದ ಸಿಎಂಗೆ ತಿರುಗೇಟು ಕೊಟ್ಟ ಅಶೋಕ್ +ಇದಕ್ಕೆ ಉತ್ತರ ನೀಡಿದ ಸಚಿವ ಆರ್.ಬಿ.ತಿಮ್ಮಾಪುರ್, 3975 ಸಿಎಲ್2 ಪರವಾನಗಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ತಲಾ 65 ಹಂಚಿಕೆ ಮಾಡಲಾಗಿದೆ. 3024 ಸಿಎಲ್ 9ನಲ್ಲಿ ಪರಿಶಿಷ್ಟ ಜಾತಿಗೆ 49, ಪರಿಶಿಷ್ಟ ಪಂಗಡಕ್ಕೆ 34, ಸಿಎಲ್ 7 2444 ರಲ್ಲಿ ಪರಿಶಿಷ್ಟ ಜಾತಿಗೆ 96, ಪರಿಶಿಷ್ಟ ಪಂಗಡಕ್ಕೆ 68 ಪರವಾನಗಿಗಳನ್ನು ನೀಡಲಾಗಿದೆ. ಮೀಸಲಾತಿ ಜಾರಿಯಾಗಿಲ್ಲ ಎಂಬುದು ಸ್ಪಷ್ಟ. ಈ ಕುರಿತು ಅನುಸೂಚಿತ ಜಾತಿ ಮತ್ತು ಪಂಗಡಗಳ ಸಮಿತಿಯು ವರದಿ ನೀಡಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. +ಚರ್ಚೆ ವ್ಯಾಪಕವಾದ ಹಿನ್ನೆಲೆಯಲ್ಲಿ ಎಲ್ಲರಿಗೂ ಮಾತನಾಡುವ ಅವಕಾಶ ಕೊಡುವ ಸಲುವಾಗಿ ಅರ್ಧ ಗಂಟೆ ಕಾಲಾವಯನ್ನು ನಿಗದಿ ಮಾಡುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಭರವಸೆ ನೀಡಿದರು. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವ್ಯಾಪಕ ಚರ್ಚೆಗಳಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್‍ರವರು ಹಲವು ಬಾರಿ ಅಸಮಾಧಾನ ಹೊರಹಾಕಿದರು. ಶಾಸಕರು ತಮ್ಮಷ್ಟಕ್ಕೆ ತಾವು ಮಾತನಾಡಲು ಇದು ಜಾತ್ರೆ ಅಥವಾ ಮಾರುಕಟ್ಟೆಯಲ್ಲ. ಇಲ್ಲೇನು ನಾಟಕ ನಡೆಯುತ್ತಿದೆಯೇ ಎಂಬೆಲ್ಲಾ ಪದ ಬಳಕೆ ಮಾಡಿ ಆಕ್ಷೇಪ ವ್ಯಕ್ತಪಡಿಸುವ ಮೂಲಕ ಪರಿಸ್ಥಿತಿಯನ್ನು ತಹಬದಿಗೆ ತರುವ ಪ್ರಯತ್ನ ನಡೆಸಿದರು. \ No newline at end of file diff --git a/eesanje/url_47_223_12.txt b/eesanje/url_47_223_12.txt new file mode 100644 index 0000000000000000000000000000000000000000..80524590dde631225e2378bf2c2c3f28f7e0efcc --- /dev/null +++ b/eesanje/url_47_223_12.txt @@ -0,0 +1,10 @@ +ಚಂಡಮಾರುತಕ್ಕೆ ಚೆನ್ನೈ ತತ್ತರ, 8 ಮಂದಿ ಸಾವು +ಚೆನ್ನೈ,ಡಿ.5- ಮಿಚುವಾಂಗ್ ಚಂಡಮಾರುತಕ್ಕೆ ಚೆನ್ನೈ ಸಂಪೂರ್ಣ ತತ್ತರಿಸಿ ಹೋಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿ ಚಂಡಮಾರುತದ ಅಬ್ಬರಕ್ಕೆ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವೆಡೆ ವಿದ್ಯುತ್ ಸಂಪರ್ಕ ಕಡಿಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. +ಚಂಗುಲುಗಟ್ಟುವಿನಲ್ಲಿ ಇಬ್ಬರು ಸೇರಿದಂತೆ ಚಂಡಮಾರುತದ ಅಬ್ಬರಕ್ಕೆ 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.ಚೆನ್ನೈ ಸಂಪೂರ್ಣ ಜಲಾವೃತಗೊಂಡು ಕಾರು, ದ್ವಿಚಕ್ರ ವಾಹನಗಳು ನೀರಿನಲ್ಲಿ ತೇಲಿ ಹೋಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಜನರು ಆಶ್ರಯ ಪಡೆಯಲು ಹರಸಾಹಸ ಪಡುತ್ತಿದ್ದಾರೆ. +ಚಂಡಮಾರುತದ ಅಬ್ಬರಕ್ಕೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಚೆನ್ನೈನಲ್ಲಿ ನಿನ್ನೆಯಿಂದ 400 ರಿಂದ 500 ಮಿಲಿ ಮೀಟರ್‍ನಷ್ಟು ಮಳೆ ಸುರಿದಿದೆ. ಅಣ್ಣಾಸಲೈ ಸೇರಿದಂತೆ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತವಾಗಿವೆ. ಮಿಚುವಾಂಗ್ ಚಂಡಮಾರುತಕ್ಕೆ ಭಾರೀ ಹಾನಿ ಉಂಟಾಗಿದ್ದು, ಬಹುತೇಕ ಎಲ್ಲಾ ರಸ್ತೆ, ವಸತಿ ಪ್ರದೇಶ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಬಸ್ ನಿಲ್ದಾಣಗಳು ನದಿಗಳಂತೆ ಮಾರ್ಪಟ್ಟಿವೆ. +ಸರ್ಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗೆ ಕಠಿಣ ಕಾನೂನು +ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುತ್ತಿದ್ದು, ವಿಮಾನ ನಿಲ್ದಾಣಗಳು ಜಲಾವೃತವಾಗಿರುವ ಹಿನ್ನೆಲೆಯಲ್ಲಿ 33 ವಿಮಾನಗಳನ್ನು ಚೆನ್ನೈನಿಂದ ಬೆಂಗಳೂರು ವಿಮಾನನಿಲ್ದಾಣಕ್ಕೆ ಡೈವರ್ಟ್ ಮಾಡಲಾಗಿದೆ.ಚೆನ್ನೈ ವಿಮಾನನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಾಗಿದ್ದ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. +ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಚೆನ್ನೈ ಮಾತ್ರವಲ್ಲದೆ, ತಿರುಪತಿ, ವಿಶಾಖಪಟ್ಟಣ ಎಲ್ಲಾ ಪ್ರದೇಶಗಳ ವಿಮಾನಗಳ ಹಾರಟವು ಕೂಡ ವಿಳಂಬವಾಗುತ್ತಿದೆ. ನಗರದ ಸುಮಾರು 16 ಸುರಂಗಗಳಲ್ಲಿ ನೀರು ತುಂಬಿ ಓಡಾಟಕ್ಕೆ ಭಾರೀ ಅಡಚಣೆಯಾಗಿದೆ. +ಆಂಧ್ರಪ್ರದೇಶದಲ್ಲೂ ಕೂಡ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಲ್ಲೂರು, ಮಚಲಿಪಟ್ಟಣಂ ನಡುವೆ ಕರಾವಳಿಯಲ್ಲಿ ಭೂಕುಸಿತದ ಆತಂಕ ಎದುರಾಗಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಲುಗು, ಭದ್ರಾದ್ರಿ, ಕೊತೆಗುಡ್ಡಂ ಮತ್ತು ಕಮ್ಮಮ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. +ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಸಜ್ಜಾದ ಬಿಜೆಪಿ-ಜೆಡಿಎಸ್ +ನಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ದಕ್ಷಿಣ ಆಂಧ್ರ ಪ್ರದೇಶದ ಕರಾವಳಿಯನ್ನು ಚಂಡಮಾರುತ ದಾಟುವ ನಿರೀಕ್ಷೆಯಿದ್ದು, ಸುಮಾರು ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.ರಾಜ್ಯದ ಹಲವು ಭಾಗಗಳಲ್ಲಿ ಆರೆಂಜ್ ಮತ್ತು ಎಲ್ಲೋ ಎಚ್ಚರಿಕೆಗಳನ್ನು ನೀಡಲಾಗಿದೆ. ಸೂರ್ಯಪೇಟೆ, ಮೆಹಬೂಬ್‍ಬಾದ್, ವಾರಂಗಲ್, ಹನುಮಕೊಂಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. \ No newline at end of file diff --git a/eesanje/url_47_223_2.txt b/eesanje/url_47_223_2.txt new file mode 100644 index 0000000000000000000000000000000000000000..9224ad8461cb895d3a4a51818d3a2aa9788095ba --- /dev/null +++ b/eesanje/url_47_223_2.txt @@ -0,0 +1,8 @@ +ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ 8000ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ +ಅಯೋಧ್ಯೆ,ಡಿ.6- ಸುದೀರ್ಘ ಕಾಲದ ಬಳಿಕ ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಐತಿಹಾಸಿಕ ದಿನವನ್ನು ಇನ್ನಷ್ಟು ವಿಶೇಷವಾಗಿಸಲು ದೇಶಾದ್ಯಂತ ಸುಮಾರು 8000 ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿದೆ. ರಾಮಜನ್ಮಭೂಮಿ ಪರವಾಗಿ ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ 2019ರಲ್ಲಿ ದೇವಾಲಯದ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ಈಗ ದೇವಾಲಯವು ಬಹುತೇಕ ಸಿದ್ದಗೊಂಡಿದ್ದು, ಜನವರಿಯಲ್ಲಿ ವಿಗ್ರಹ ಪ್ರತಿಷ್ಠಾಪಿಸಿದ ನಂತರ ವಿಶ್ವದಾದ್ಯಂತ ಇರುವ ಭಕ್ತರಿಗೆ ದೇವಾಲಯ ಮುಕ್ತವಾಗಿರುತ್ತದೆ. +ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಈಗಾಗಲೇ ಪ್ರಧಾನಿ ನರೇಂದ್ರಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ಉಪಸ್ಥಿತರಿರುತ್ತಾರೆ. +ದೇಶಾದ್ಯಂತ ಸುಮಾರು 8000 ಗಣ್ಯ ವ್ಯಕ್ತಿಗಳನ್ನು ದೇವಾಲಯದ ಸಂಘಟನಾ ಸಂಸ್ಥೆಯಾದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಈ ಸಂದರ್ಭಕ್ಕೆ ಸಾಕ್ಷಿಯಾಗಲು ಆಹ್ವಾನಿಸಿದೆ. ಆಹ್ವಾನಿತ ಅತಿಥಿಗಳಲ್ಲಿ ದೇಶದ ಮಹಾನ್ ನಾಯಕರು ಅಥವಾ ಧಾರ್ಮಿಕ ಮುಖಂಡರು ಮತ್ತು ಕಾರ್ಯಕರ್ತರು ಮಾತ್ರವಲ್ಲದೆ ಅನೇಕ ದೊಡ್ಡ ಕೈಗಾರಿಕೋದ್ಯಮಿಗಳು, ಮನರಂಜನಾ ಉದ್ಯಮದ ತಾರೆಗಳು ಮತ್ತೂ ಭಾರತೀಯ ಕ್ರಿಕೆಟಿಗರ ಹೆಸರುಗಳೂ ಇದರಲ್ಲಿದೆ. +ಮತ್ತೆ ಅಮೆರಿಕ ಅಧ್ಯಕ್ಷನಾದರೆ ಸರ್ವಾಧಿಕಾರಿಯಾಗಿ ಬದಲಾಗುವುದಿಲ್ಲ : ಟ್ರಂಪ್ +ಸಚಿನ್ ಮತ್ತು ವಿರಾಟ್ ಅಲ್ಲದೆ, ಬಾಲಿವುಡ್ ಸ್ಟಾರ್ ಅಮಿತಾಬ್ ಬಚ್ಚನ್, ದೇಶದ ದೊಡ್ಡ ಕೈಗಾರಿಕೋದ್ಯಮಿಗಳಾದ ರತನ್ ಟಾಟಾ, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಗೂ ಆಹ್ವಾನ ನೀಡಲಾಗಿದೆ. ಇವರಲ್ಲಿ ಎಷ್ಟು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. +ಇದೆಲ್ಲದರ ಹೊರತಾಗಿ 1990ರ ರಾಮಮಂದಿರ ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ 50 ಕರಸೇವಕರ ಕುಟುಂಬಗಳಿಗೂ ಆಹ್ವಾನ ನೀಡಲಾಗಿದೆ. ಅನೇಕ ಪತ್ರಕರ್ತರು, ಮಾಜಿ ಸೇನಾಧಿಕಾರಿಗಳು, ನಿವೃತ್ತ ನಾಗರಿಕ ಸೇವಕರು, ವಕೀಲರು ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರನ್ನೂ ಆಹ್ವಾನಿಸಲಾಗಿದೆ. +ವಾಸ್ತವವಾಗಿ, ಜನವರಿ ಅಂತ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಕೂಡ ನಡೆಯಲಿದೆ. ಈ ಸರಣಿಗೆ ಇಂಗ್ಲೆಂಡ್ ತಂಡ ಭಾರತದಲ್ಲಿ ಇರಲಿದ್ದು, ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾ ಕೂಡ ಸಿದ್ಧತೆಯಲ್ಲಿ ನಿರತವಾಗಿದೆ. ಸರಣಿಯ ಮೊದಲ ಪಂದ್ಯ ಜನವರಿ 25ರಿಂದ ಹೈದರಾಬಾದ್‍ನಲ್ಲಿ ಆರಂಭವಾಗಲಿದೆ. ಹೀಗಿರುವಾಗ ಕೊಹ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. \ No newline at end of file diff --git a/eesanje/url_47_223_3.txt b/eesanje/url_47_223_3.txt new file mode 100644 index 0000000000000000000000000000000000000000..0968a9328d2715e46a56c5897b329db707ceb3ca --- /dev/null +++ b/eesanje/url_47_223_3.txt @@ -0,0 +1,9 @@ +ಭಾರತ-ಪಾಕ್ ಮಧ್ಯೆ ಆರಳಿದ ಮತ್ತೊಂದು ಪ್ರೇಮಕಾವ್ಯ +ನವದೆಹಲಿ,ಡಿ.6- ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಂದು ಪ್ರೇಮಕಾವ್ಯ ಮೂಡಿದೆ. ಪಾಕಿಸ್ತಾನದ ಜವೇರಿಯಾ ಖಾನಮ್ ಅವರು ತನ್ನ ಪ್ರಿಯಕರನಿಗಾಗಿ ಅಮೃತಸರದ ಅಟ್ಟಾರಿ-ವಾಘಾ ಗಡಿಯನ್ನು ದಾಟಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಆಕೆ ಮುಂದಿನ ಜನವರಿಯಲ್ಲಿ ಕೋಲ್ಕತ್ತಾ ನಿವಾಸಿ ಸಮೀರ್ ಖಾನ್ ಅವರನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ. +ಐದು ವರ್ಷಗಳ ಹಿಂದೆ ಜರ್ಮನಿಯಿಂದ ಕೋಲ್ಕತ್ತಾಗೆ ಹಿಂದಿರುಗಿದಾಗ ಜವೇರಿಯಾ ಮತ್ತು ಸಮೀರ್ ಅವರು ತಮ್ಮ ತಾಯಿಯ ಫೋನ್‍ನಲ್ಲಿ ಖಾನಮ್ ಅವರ ಚಿತ್ರವನ್ನು ನೋಡಿದಾಗ ಪರಸ್ಪರ ಪರಿಚಯವಾಯಿತು. ಅವನಿಗೆ ಮೊದಲ ನೋಟದಲ್ಲೇ ಪ್ರೀತಿ. ಅವನು ತನ್ನ ತಾಯಿಗೆ ಆಕೆಯನ್ನು ಮದುವೆಯಾಗಲು ಬಯಸುವುದಾಗಿ ಹೇಳಿದನು. ಸಮೀರ್‍ನ ತಾಯಿ ಪಾಕಿಸ್ತಾನದ ಡೇರಾ ಇಸ್ಮಾಯಿಲ್‍ನಲ್ಲಿರುವ ಜವೇರಿಯಾಳ ತಾಯಿಗೆ ಪ್ರಸ್ತಾಪವನ್ನು ಕಳುಹಿಸಿದ್ದಾರೆ ಮತ್ತು ಎರಡೂ ಕುಟುಂಬಗಳು ಒಪ್ಪಿಗೆ ಸೂಚಿಸಿದವು, ಆದರೆ ಈ ಪ್ರೇಮಕಥೆಯ ಮುಂದಿನ ಹಾದಿಯು ಸುಲಭವಾಗಿರಲಿಲ್ಲ. +ಜವೇರಿಯಾ ಖಾನಮ್ ಭಾರತಕ್ಕೆ ಪ್ರಯಾಣಿಸಲು ವೀಸಾಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಭಾರತೀಯ ಹೈಕಮಿಷನ್ ಆರಂಭದಲ್ಲಿ ಆಕೆಯ ಅರ್ಜಿಯನ್ನು ಎರಡು ಬಾರಿ ತಿರಸ್ಕರಿಸಿತು ಮತ್ತು ನಂತರ ಜಾಗತಿಕ ದುರಂತವಾದ ಕೋವಿಡ್ ಸಾಂಕ್ರಾಮಿಕವು ಅವರ ಕಥೆಯ ಪ್ರಗತಿಯನ್ನು ಮತ್ತಷ್ಟು ವಿಳಂಬಗೊಳಿಸಿತು. +ಸಿಖ್ ನಾಯಕನ ಹತ್ಯೆ ಸಂಚಿನ ತನಿಖಾ ಫಲಿತಾಂಶಕ್ಕೆ ಕಾಯುತ್ತಿದೆಯಂತೆ ಅಮೆರಿಕ +ಜವೇರಿಯಾ ಖಾನಮ್ ಮತ್ತೆ ಅರ್ಜಿ ಸಲ್ಲಿಸಿದರು, ಮತ್ತು ಅವರ ಪ್ರೇಮಕಥೆಯು ವೀಸಾ ಪಡೆಯುವ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ನಿನ್ನೆ ಅಮೃತಸರದ ಅಟ್ಟಾರಿ-ವಾಘಾ ಕ್ರಾಸಿಂಗ್‍ನಲ್ಲಿ ಖಾನಮ್ ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರರಾಷ್ಟ್ರೀಯ ಗಡಿಯನ್ನು ದಾಟಿದರು. ಸಮೀರ್ ಗಡಿಯಲ್ಲಿ ಸ್ವಾಗತಿಸಲಾಯಿತು. +ನಮ್ಮ ಕುಟುಂಬಗಳು ಮದುವೆಗೆ ಒಪ್ಪಿಕೊಂಡರು ಆದರೆ ನಾವು ವೀಸಾ ಪಡೆಯಲು ಪ್ರಯತ್ನಿಸುತ್ತಿದ್ದೇವೆ. ನನಗೆ 45 ದಿನಗಳ ವೀಸಾ ನೀಡಿದ್ದಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ನಾವು ಕಳೆದ ಐದು ವರ್ಷಗಳಿಂದ ಸಂಬಂಧ ಹೊಂದಿದ್ದೇವೆ ಮತ್ತು ನಾನು ಅದನ್ನು ಪಡೆಯಲು ಪ್ರಯತ್ನಿಸುತ್ತಿದ್ದೆವು. ದೀರ್ಘಕಾಲದವರೆಗೆ ವೀಸಾ ಮತ್ತು ಅಂತಿಮವಾಗಿ ಅದು ಸಂಭವಿಸಿತು. ಮನೆಗೆ ಮರಳಿದ ಎಲ್ಲರೂ ತುಂಬಾ ಸಂತೋಷಪಟ್ಟರು, ಎಂದು ಜವೇರಿಯಾ ತಿಳಿಸಿದರು. +ನನಗೆ ತುಂಬಾ ಸಂತೋಷವಾಗಿದೆ. ನಾನು ಭಾರತಕ್ಕೆ ಪ್ರವೇಶಿಸಿದ ಕ್ಷಣ, ಎಲ್ಲರೂ ನನ್ನನ್ನು ಅಭಿನಂದಿಸಿದರು, ಮತ್ತು ನಾನು ಎಲ್ಲರಿಂದ ಪ್ರೀತಿಯನ್ನು ಪಡೆಯುತ್ತಿದ್ದೆ. ನನಗೆ ದೊರೆತ ಭವ್ಯವಾದ ಸ್ವಾಗತವನ್ನು ನೋಡಿ ನನಗೆ ಸಂತೋಷವಾಯಿತು. ನಾನು ಇದನ್ನು ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು. +ಸಮೀರ್ ಮತ್ತು ಜವೇರಿಯಾ ತಮ್ಮ ಸಮಸ್ಯೆಯ ತ್ವರಿತ ಪರಿಹಾರಕ್ಕಾಗಿ ಭಾರತ ಸರ್ಕಾರದಿಂದ ಅನೇಕ ಬಾರಿ ಸಹಾಯವನ್ನು ಕೋರಿದರು. ಖಾನ್ ಕಳೆದ ತಿಂಗಳುಎಕ್ಸ್ ನಲ್ಲಿ ಪೋಸ್ಟ ಮಾಡಿದರು, ಕಳೆದ ಐದು ವರ್ಷಗಳಲ್ಲಿ ಅವರು ಜವೇರಿಯಾ ಅವರನ್ನು ಕೇವಲ ಮೂರು ಬಾರಿ ಭೇಟಿಯಾಗಲು ಸಾಧ್ಯವಾಯಿತು. ಎರಡು ಬಾರಿ ಥಾಯ್ಲೆಂಡ್‍ನಲ್ಲಿ ಮತ್ತು ಒಮ್ಮೆ ದುಬೈನಲ್ಲಿ ಆಕೆಯ ವೀಸಾವನ್ನು ಭಾರತವು ಎರಡು ಬಾರಿ ತಿರಸ್ಕರಿಸಿತ್ತು. \ No newline at end of file diff --git a/eesanje/url_47_223_4.txt b/eesanje/url_47_223_4.txt new file mode 100644 index 0000000000000000000000000000000000000000..1aceecba27b1b08bd4240ed57a799287cb2b67e5 --- /dev/null +++ b/eesanje/url_47_223_4.txt @@ -0,0 +1,6 @@ +ಉದ್ಯೋಗ ವಂಚನೆ : 100 ಕ್ಕೂ ಹೆಚ್ಚು ಆ್ಯಪ್‍ಗಳಿಗೆ ನಿರ್ಬಂಧ +ನವದೆಹಲಿ, ಡಿ.6 (ಪಿಟಿಐ) ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಸಂಘಟಿತ ಅಕ್ರಮ ಹೂಡಿಕೆಗಳು ಮತ್ತು ಕಾರ್ಯ ಆಧಾರಿತ ಅರೆಕಾಲಿಕ ಉದ್ಯೋಗ ವಂಚನೆಗಳನ್ನು ಸುಗಮಗೊಳಿಸುವ 100ಕ್ಕೂ ಹೆಚ್ಚು ವೆಬ್‍ಸೈಟ್‍ಗಳನ್ನು ನಿರ್ಬಂಧಿಸಲಾಗಿದೆ. +ಕೇಂದ್ರ ಗೃಹ ಸಚಿವಾಲಯದ ವಿಭಾಗವಾದ ಇಂಡಿಯನ್ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ ಅದರ ಅಂಗವಾದ ರಾಷ್ಟ್ರೀಯ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಮೂಲಕ ಕಳೆದ ವಾರ ಸಂಘಟಿತ ಹೂಡಿಕೆ ಮತ್ತು ಕಾರ್ಯ ಆಧಾರಿತ ಅರೆಕಾಲಿಕ ಉದ್ಯೋಗ ವಂಚನೆಗಳಲ್ಲಿ ತೊಡಗಿರುವ 100 ವೆಬ್‍ಸೈಟ್‍ಗಳನ್ನು ಗುರುತಿಸಿ ನಿರ್ಬಂಧಿಸಲು ಶಿಫಾರಸು ಮಾಡಲಾಗಿದೆ. +ಸಿಖ್ ನಾಯಕನ ಹತ್ಯೆ ಸಂಚಿನ ತನಿಖಾ ಫಲಿತಾಂಶಕ್ಕೆ ಕಾಯುತ್ತಿದೆಯಂತೆ ಅಮೆರಿಕ +ಇದರ ನಂತರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ , ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿ ಈ ವೆಬ್‍ಸೈಟ್‍ಗಳನ್ನು ನಿರ್ಬಂಧಿಸಿದೆ ಎಂದು ಹೇಳಿಕೆ ತಿಳಿಸಿದೆ. ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ ಕಾರ್ಯ-ಆಧಾರಿತ ಸಂಘಟಿತ ಅಕ್ರಮ ಹೂಡಿಕೆಯನ್ನು ಸುಗಮಗೊಳಿಸುವ ಈ ವೆಬ್‍ಸೈಟ್‍ಗಳನ್ನು ಸಾಗರೋತ್ತರ ನಟರು ನಿರ್ವಹಿಸುವುದನ್ನು ಕಲಿತರು ಮತ್ತು ಡಿಜಿಟಲ್ ಜಾಹೀರಾತು, ಚಾಟ್ ಮೆಸೆಂಜರ್‍ಗಳು ಮತ್ತು ಹೇಸರಗತ್ತೆ ಮತ್ತು ಬಾಡಿಗೆ ಖಾತೆಗಳನ್ನು ಬಳಸುತ್ತಿದ್ದರು. +ದೊಡ್ಡ ಪ್ರಮಾಣದ ಆರ್ಥಿಕ ವಂಚನೆಗಳ ಆದಾಯವನ್ನು ಕಾರ್ಡ್ ನೆಟ್‍ವರ್ಕ್, ಕ್ರಿಪ್ರೋ ಕರೆನ್ಸಿ, ಸಾಗರೋತ್ತರ ಎಟಿಎಂ ಹಿಂಪಡೆಯುವಿಕೆ ಮತ್ತು ಅಂತರಾಷ್ಟ್ರೀಯ ಫಿನ್‍ಟೆಕ್ ಕಂಪನಿಗಳನ್ನು ಬಳಸಿಕೊಂಡು ಭಾರತದಿಂದ ಹೊರಹಾಕಲಾಗಿದೆ ಎಂದು ಹೇಳಿಕೆ ತಿಳಿಸಿದೆ. \ No newline at end of file diff --git a/eesanje/url_47_223_5.txt b/eesanje/url_47_223_5.txt new file mode 100644 index 0000000000000000000000000000000000000000..0e44522568fb8bab5f80a236edd0a0cf0082ce0f --- /dev/null +++ b/eesanje/url_47_223_5.txt @@ -0,0 +1,8 @@ +ಗೆದ್ದ 3 ರಾಜ್ಯಗಳಲ್ಲಿ ಬಿಜೆಪಿಯ ಹೊಸ ಮುಖಗಳಿಗೆ ಸಿಎಂ ಸ್ಥಾನ +ನವದೆಹಲಿ,ಡಿ.6- ಬಿಜೆಪಿಯು ಅಮೋಘ ಚುನಾವಣಾ ಗೆಲುವು ದಾಖಲಿಸಿರುವ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢದ ರಾಜ್ಯಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಮುಖಗಳನ್ನು ಆಯ್ಕೆ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಆಯ್ಕೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಭಾನುವಾರ ಫಲಿತಾಂಶ ಪ್ರಕಟವಾಗಿದೆ. ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಸಾಧ್ಯತೆಗಳ ಕುರಿತು ಪಕ್ಷದ ಕೇಂದ್ರ ನಾಯಕತ್ವವು ಚರ್ಚೆ ನಡೆಸುತ್ತಿದೆ. +ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಸಭೆ ನಡೆಸಲಾಗಿದ್ದು, ಈ ವೇಳೆ ಮೂರು ರಾಜ್ಯಗಳ ಮುಂಚೂಣಿಯಲ್ಲಿರುವವರನ್ನು ಪರಿಗಣಿಸಲಾಗಿದೆ. ಸಭೆಯಲ್ಲಿ ಪ್ರಧಾನಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಉಪಸ್ಥಿತರಿದ್ದರು. +ಈ ಮ್ಯಾರಥಾನ್ ಸಭೆಯು ಶಾ ಮತ್ತು ನಡ್ಡಾ ಅವರು ಈ ರಾಜ್ಯಗಳ ಬಿಜೆಪಿಯ ಉಸ್ತುವಾರಿಗಳೊಂದಿಗೆ ರಾಜ್ಯ ನಾಯಕರ ಬಗ್ಗೆ ಪ್ರತಿಕ್ರಿಯೆಯನ್ನು ಸಂಗ್ರಹಿಸಲು ನಡೆಸಿದ ಸಭೆಗಳ ಸರಣಿಯನ್ನು ಅನುಸರಿಸಿದರು. ಬಿಜೆಪಿಯ ಕೇಂದ್ರ ನಾಯಕತ್ವವು ಮೂರು ರಾಜ್ಯಗಳಿಗೆ ವೀಕ್ಷಕರನ್ನು ಶೀಘ್ರದಲ್ಲೇ ನೇಮಿಸುವ ಸಾಧ್ಯತೆಯಿದೆ. ಈ ವೀಕ್ಷಕರು ವಿಧಾನಸಭೆಯಲ್ಲಿ ತಮ್ಮ ನಾಯಕರನ್ನು ಆಯ್ಕೆ ಮಾಡಲು ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರ ಸಭೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. +ಇಸ್ರೇಲ್ ಮಹಿಳೆಯರ ಮೇಲೆ ಹಮಾಸ್ ಉಗ್ರರ ಲೈಂಗಿಕ ಅಟ್ಟಹಾಸ : ಬಿಡೆನ್ ಖಂಡನೆ +ಮಧ್ಯಪ್ರದೇಶದಲ್ಲಿ, ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಮತ್ತು ಹಿರಿಯ ರಾಜ್ಯ ನಾಯಕ ಕೈಲಾಶ್ ವಿಜಯವರ್ಗಿಯಾ ಅವರೊಂದಿಗೆ ಉನ್ನತ ಹುದ್ದೆಗೆ ಆಕಾಂಕ್ಷಿಯಾಗಿದ್ದಾರೆ. +ರಾಜಸ್ಥಾನದ ಉನ್ನತ ಹುದ್ದೆಗೂ ಹಲವಾರು ಹೆಸರುಗಳು ಸುತ್ತು ಹಾಕುತ್ತಿವೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಶಾಸಕರಾಗಿ ಆಯ್ಕೆಯಾಗಿದ್ದರೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಅರ್ಜುನ್ ರಾಮ್ ಮೇಘವಾಲï, ಪಕ್ಷದ ರಾಜ್ಯಾಧ್ಯಕ್ಷ ಸಿಪಿ ಜೋಶಿ ಮತ್ತು ಪ್ರಮುಖ ನಾಯಕರಾದ ದಿಯಾ ಕುಮಾರಿ ಮತ್ತು ಮಹಂತ್ ಬಾಲಕನಾಥ್ ಅವರನ್ನು ಸಂಭಾವ್ಯ ಎಂದು ಪರಿಗಣಿಸಲಾಗಿದೆ. +ಛತ್ತೀಸ್‍ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಸ್ರ್ಪಧಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೋ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಓ ಪಿ ಚೌಧರಿ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. diff --git a/eesanje/url_47_223_6.txt b/eesanje/url_47_223_6.txt new file mode 100644 index 0000000000000000000000000000000000000000..2b2b240198f45e3027479267f0807b24019c4501 --- /dev/null +++ b/eesanje/url_47_223_6.txt @@ -0,0 +1,6 @@ +ಮಳೆ ಹಾನಿ : 5060 ಕೋಟಿ ರೂ. ಪರಿಹಾರಕ್ಕೆ ತಮಿಳುನಾಡು ಮನವಿ +ಚೆನ್ನೈ, ಡಿ.6 (ಪಿಟಿಐ) – ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಗೆ ಸಂಬಂಧಿಸಿದಂತೆ ತಮಿಳುನಾಡು ಕೇಂದ್ರದಿಂದ 5,060 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ಕೋರಿದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದ್ದಾರೆ. ಒಟ್ಟು ಹಾನಿಯನ್ನು ಅಂದಾಜಿಸಲು ಸಮೀಕ್ಷೆ ನಡೆಯುತ್ತಿದ್ದು, ವಿವರವಾದ ವರದಿಯನ್ನು ನಂತರ ಸಿದ್ಧಪಡಿಸಲಾಗುವುದು ಮತ್ತು ಹೆಚ್ಚುವರಿ ಹಣವನ್ನು ಕೋರಲಾಗುವುದು ಎಂದು ತಮಿಳುನಾಡು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. +5,060 ಕೋಟಿ ಮಧ್ಯಂತರ ಪರಿಹಾರ ನೀಡುವಂತೆ ಕೋರಿ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಡಿಎಂಕೆ ಸಂಸದ ಟಿಆರ್ ಬಾಲು ಅವರು ಪತ್ರವನ್ನು ಪ್ರಧಾನಿಗೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ತಮಿಳುನಾಡಿದ ಉತ್ತರ ಜಿಲ್ಲೆಗಳಾದ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‍ಪೇಟ್‍ನಲ್ಲಿ ಚಂಡಮಾರುತದಿಂದ ಉಂಟಾದ ರಣ ಮಳೆಯಿಂದ ಉಂಟಾದ ಹಾನಿಯನ್ನು ಸ್ಟಾಲಿನ್ ಪತ್ರದಲ್ಲಿ ವಿವರಿಸಿದ್ದಾರೆ. +ಇಸ್ರೇಲ್ ಮಹಿಳೆಯರ ಮೇಲೆ ಹಮಾಸ್ ಉಗ್ರರ ಲೈಂಗಿಕ ಅಟ್ಟಹಾಸ : ಬಿಡೆನ್ ಖಂಡನೆ +ವಿಶೇಷವಾಗಿ, ಚೆನ್ನೈ ಕಾಪೆರ್ರೇಷನ್ ವ್ಯಾಪ್ತಿಯ ಪ್ರದೇಶಗಳಲ್ಲಿ ಹಾನಿ ತೀವ್ರವಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ಸಾರ್ವಜನಿಕ ಕಟ್ಟಡಗಳಂತಹ ಮೂಲಸೌಕರ್ಯಗಳು ತೀವ್ರ ಹಾನಿಗೊಳಗಾಗಿವೆ. ಲಕ್ಷಗಟ್ಟಲೆ ಜನರ ಜೀವನೋಪಾಯಕ್ಕೆ ತೊಂದರೆಯಾಗಿದೆ. +ಇವುಗಳನ್ನು ವಿವರವಾಗಿ ವಿವರಿಸಿ, ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ, ವಿವಿಧ ಶೀರ್ಷಿಕೆಗಳ ಅಡಿಯಲ್ಲಿ 5,060 ಕೋಟಿ ರೂಪಾಯಿಗಳ ಮಧ್ಯಂತರ ಪರಿಹಾರವನ್ನು ಕೋರಿ ಎಂದು ಪ್ರಕಟಣೆ ತಿಳಿಸಿದೆ. ಹಾನಿ ಅಂದಾಜು ಮಾಡಲು ಕೇಂದ್ರ ತಂಡವನ್ನು ನಿಯೋಜಿಸುವಂತೆಯೂ ಸಿಎಂ ಕೋರಿದ್ದಾರೆ. \ No newline at end of file diff --git a/eesanje/url_47_223_7.txt b/eesanje/url_47_223_7.txt new file mode 100644 index 0000000000000000000000000000000000000000..d95eb387c4443280492a7bfed600488e7287a015 --- /dev/null +++ b/eesanje/url_47_223_7.txt @@ -0,0 +1,6 @@ +ತುರ್ತು ಚಿಕಿತ್ಸೆಗಾಗಿ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದ ಸ್ಪೈಸ್‍ಜೆಟ್ +ಕರಾಚಿ, ಡಿ 6 (ಪಿಟಿಐ) ತುರ್ತು ವೈದ್ಯಕೀಯ ನೆರವಿನ ಕಾರಣಕ್ಕಾಗಿ ಅಹಮದಾಬಾದ್‍ನಿಂದ ದುಬೈಗೆ ಸಂಚರಿಸುತ್ತಿದ್ದ ಸ್ಪೈಸ್‍ಜೆಟ್ ವಿಮಾನವನ್ನು ವೈದ್ಯಕೀಯ ತುರ್ತುಪರಿಸ್ಥಿತಿಯ ಕಾರಣ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಅಧಿಕಾರಿಗಳು ಇಲ್ಲಿ ತಿಳಿಸಿದ್ದಾರೆ. ನಿನ್ನೆ ರಾತ್ರಿ 9.30ರ ಸುಮಾರಿಗೆ ಸ್ಪೈಸ್‍ಜೆಟ್ ವಿಮಾನ ಎಸ್‍ಜಿ-15 ಇಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಪ್ರಯಾಣಿಕರೊಬ್ಬರಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. +ಬೋಯಿಂಗ್ 737 ವಿಮಾನವು ಅಹಮದಾಬಾದ್‍ನಿಂದ ದುಬೈಗೆ ಹೋಗುತ್ತಿದ್ದಾಗ 27 ವರ್ಷದ ಪ್ರಯಾಣಿಕ ಧರ್ವಾಲ್ ದರ್ಮೇಶ್ ಅವರು ಹೃದಯಾಘಾತದಿಂದ ಬಳಲುತ್ತಿದ್ದರು ಮತ್ತು ವೈದ್ಯಕೀಯ ಆರೈಕೆಯ ಅಗತ್ಯವಿತ್ತು ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರದ (ಸಿಎಎ) ವಕ್ತಾರರು ಇಲ್ಲಿ ತಿಳಿಸಿದ್ದಾರೆ. +ಮಹದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಆರೋಪಿ ತಂದೆ ನಿಗೂಢ ಸಾವು +ಸಿಎಎಯ ವೈದ್ಯಕೀಯ ತಂಡವು ಪ್ರಯಾಣಿಕರಿಗೆ ತುರ್ತು ವೈದ್ಯಕೀಯ ಆರೈಕೆಯನ್ನು ನೀಡಿತು, ಅವರ ಸಕ್ಕರೆ ಮಟ್ಟವು ಕುಸಿದಿದೆ ಮತ್ತು ಬಡಿತವನ್ನು ಅನುಭವಿಸುತ್ತಿದೆ ಎಂದು ಅವರು ಹೇಳಿದರು. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ, ಪ್ರಯಾಣಿಕರು ಚೇತರಿಸಿಕೊಂಡಿದ್ದಾರೆ ಮತ್ತು ವಿಮಾನಕ್ಕೆ ಇಂಧನ ತುಂಬಿಸಲಾಗಿದೆ ಮತ್ತು ದುಬೈಗೆ ಹಾರಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಅಹಮದಾಬಾದ್‍ನಿಂದ ದುಬೈಗೆ ಹಾರುತ್ತಿದ್ದ ಸ್ಪೈಸ್‍ಜೆಟ್ ವಿಮಾನವನ್ನು ಕರಾಚಿಗೆ ತಿರುಗಿಸಲಾಗಿದೆ ಎಂದು ನವದೆಹಲಿಯಲ್ಲಿ ಏರ್‍ಲೈನ್‍ನ ವಕ್ತಾರರು ತಿಳಿಸಿದ್ದಾರೆ. ಡಿಸೆಂಬರ್ 5, 2023 ರಂದು, ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಸ್ಪೈಸ್‍ಜೆಟ್ ಬೋಯಿಂಗ್ 737 ವಿಮಾನವನ್ನು ನಿರ್ವಹಿಸುವ (ಅಹಮದಾಬಾದ್ -ದುಬೈ) ವಿಮಾನವನ್ನು ಕರಾಚಿಗೆ ತಿರುಗಿಸಲಾಗಿತು ಎಂದು ವಕ್ತಾರರು ತಿಳಿಸಿದ್ದಾರೆ. \ No newline at end of file diff --git a/eesanje/url_47_223_8.txt b/eesanje/url_47_223_8.txt new file mode 100644 index 0000000000000000000000000000000000000000..9163d5d34397e919bda91ca8e47cd027e66b7bfe --- /dev/null +++ b/eesanje/url_47_223_8.txt @@ -0,0 +1,5 @@ +ಸಂವಿಧಾನ ಶಿಲ್ಪಿಗೆ ಮೋದಿ ನಮನ +ನವದೆಹಲಿ, ಡಿ 6 (ಪಿಟಿಐ) – ಸಂವಿಧಾನ ಶಿಲ್ಪಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಶೋಷಿತ ಮತ್ತು ವಂಚಿತರ ಕಲ್ಯಾಣಕ್ಕಾಗಿ ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. +ಸಂವಿಧಾನ ಶಿಲ್ಪಿ ಅಲ್ಲದೆ, ಅವರು ಸಾಮಾಜಿಕ ಸೌಹಾರ್ದತೆಯ ಅಮರ ಹೋರಾಟಗಾರರಾಗಿದ್ದರು ಎಂದು ಮೋದಿ ಅವರು ದಲಿತ ಕುಟುಂಬದಿಂದ ಬಂದ ಅಂಬೇಡ್ಕರ್ ಬಗ್ಗೆ ಹೇಳಿದರು ಮತ್ತು ಹಿಂದುಳಿದವರ ಪರವಾಗಿ ಹೋರಾಡುವ ಮೂಲಕ ಭಾರತದ ರಾಜಕೀಯದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾದರು ಎಂದು ಬಣ್ಣಿಸಿದ್ದಾರೆ. +ಮಾದಕ ವಸ್ತು ಮಾರಾಟ-ಸಾಗಾಟ : 8 ಮಂದಿ ವಿದೇಶಿಗರು ಸೇರಿ 47 ಮಂದಿ ಬಂಧನ +1956 ರಲ್ಲಿ ಅವರು ನಿಧನರಾದಾಗಿನಿಂದ ಅವರ ಆಲೋಚನೆಗಳ ಮನ್ನಣೆಯು ವರ್ಷಗಳಲ್ಲಿ ಬೆಳೆದಿದೆ, ನಾಯಕರು, ವಿಶೇಷವಾಗಿ ದಲಿತ ಹಿನ್ನೆಲೆಯುಳ್ಳವರು, ಶಿಕ್ಷಣ, ಸಾಂವಿಧಾನಿಕ ಆಂದೋಲನ ಮತ್ತು ಬಲವರ್ಧನೆಗಾಗಿ ಅಂಬೇಡ್ಕರ್ ಅವರ ಒತ್ತಡದ ಸುತ್ತ ಪರಿಶಿಷ್ಟ ಜಾತಿಗಳು, ಪ್ರಭಾವಿ ಮತದಾರ ಬಣ ಮತ್ತು ಇತರ ದುರ್ಬಲ ವರ್ಗಗಳನ್ನು ಒಟ್ಟುಗೂಡಿಸಿದ್ದಾರೆ ಎಂದು ಗುಣಗಾನ ಮಾಡಿದ್ದಾರೆ. \ No newline at end of file diff --git a/eesanje/url_47_223_9.txt b/eesanje/url_47_223_9.txt new file mode 100644 index 0000000000000000000000000000000000000000..8eddf6102ab87ac2e1d610bc8ccee075a0172031 --- /dev/null +++ b/eesanje/url_47_223_9.txt @@ -0,0 +1,8 @@ +ಆರ್‌ಜೆಡಿ ಉಪಾಧ್ಯಕ್ಷರಿಗೆ ಜೈಲು ಶಿಕ್ಷೆ +ಪಾಟ್ನಾ, ಡಿ.6 (ಪಿಟಿಐ) ಐದು ವರ್ಷಗಳ ಹಿಂದೆ ಬಿಹಾರದ ಸಚಿವ ಸಂಜಯ್ ಕುಮಾರ್ ಝಾ ಅವರು ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆರ್‌ಜೆಡಿ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಅವರಿಗೆ ಪಾಟ್ನಾ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. +ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಾರಿಕಾ ಬಹಲಿಯಾ ಅವರು ಮಾಜಿ ರಾಜ್ಯ ಸಚಿವ ತಿವಾರಿಗೆ 10,000 ರೂ. ದಂಡ ವಿಧಿಸಿದ್ದಾರೆ. ಆದರೆ, ನ್ಯಾಯಾಲಯವು ಶಿವಾನಂದ್ ತಿವಾರಿಗೆ ತಾತ್ಕಾಲಿಕ ಜಾಮೀನು ನೀಡಿದೆ ಮತ್ತು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಿದೆ. +ನಿತೀಶ್ ಕುಮಾರ್ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕಗಳಂತಹ ಪ್ರಮುಖ ಖಾತೆಗಳನ್ನು ಹೊಂದಿರುವ ಝಾ ಅವರು ಜೆಡಿಯು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾಗ 2018 ರಲ್ಲಿ ಅರ್ಜಿ ಸಲ್ಲಿಸಿದ್ದರು. +ಮಾದಕ ವಸ್ತು ಮಾರಾಟ-ಸಾಗಾಟ : 8 ಮಂದಿ ವಿದೇಶಿಗರು ಸೇರಿ 47 ಮಂದಿ ಬಂಧನ +ಜೆಡಿಯುನ ಸರ್ವೋಚ್ಚ ನಾಯಕ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗಿನ ನಿಕಟ ಸಂಬಂಧದ ಬಗ್ಗೆ ತಿವಾರಿ ಅವರು ಮಾಡಿದ ಕಾಮೆಂಟ್‍ಗಳನ್ನು ಹೊರತುಪಡಿಸಿ ಝಾ ಅವರು ತಿವಾರಿ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದರು. +ಕುಮಾರ್ ಅವರು 2017 ರಲ್ಲಿ ತ್ಯಜಿಸಿದ್ದ ಆರ್‍ಜೆಡಿಯೊಂದಿಗೆ ಮರುಹೊಂದಿಸಿದ್ದಾರೆ ಮತ್ತು ಅವರ ತಂದೆ ಲಾಲು ಪ್ರಸಾದ್ ಪಕ್ಷದ ಮುಖ್ಯಸ್ಥರಾಗಿರುವ ತಮ್ಮ ಉಪ ತೇಜಸ್ವಿ ಯಾದವ್‍ಗೆ ಈಗ ನಿಲುವಂಗಿಯನ್ನು ನೀಡಲು ಸಿದ್ಧರಿದ್ದಾರೆ ಎಂದು ಸುಳಿವು ನೀಡಿದ್ದಾರೆ. +ಸುಮಾರು ಐದು ದಶಕಗಳಿಂದ ಪ್ರಸಾದ್ ಮತ್ತು ಕುಮಾರ್ ಇಬ್ಬರನ್ನೂ ತಿಳಿದಿರುವ ಹಿರಿಯ ಸಮಾಜವಾದಿ ನಾಯಕ ತಿವಾರಿ, ವಿಭಿನ್ನ ಸಮಯಗಳಲ್ಲಿ ಇಬ್ಬರು ನಾಯಕರು ತೇಲಿದ ಪಕ್ಷಗಳ ಸದಸ್ಯರಾಗಿದ್ದರು. \ No newline at end of file diff --git a/eesanje/url_47_224_1.txt b/eesanje/url_47_224_1.txt new file mode 100644 index 0000000000000000000000000000000000000000..6c9a1704994c6ff5a8fe346ce1f11398cbaf7a78 --- /dev/null +++ b/eesanje/url_47_224_1.txt @@ -0,0 +1,6 @@ +ಲೋಕಸಭೆಯಲ್ಲಿ ಮೊಳಗಿದ ‘ತೀಸ್ರಿ ಬಾರ್ ಮೋದಿ ಸರ್ಕಾರ್’ ಘೋಷಣೆ +ನವದೆಹಲಿ,ಡಿ.4- ಇಂದು ಬೆಳಗ್ಗೆ ಸಂಸತ್ತಿನ ಚಳಿಗಾಲದ ಅವೇಶನ ಆರಂಭವಾಗುತ್ತಿದ್ದಂತೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಮೂರು ಹೃದಯ ಭಾಗದ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಒಂದು ದಿನದ ನಂತರ ಲೋಕಸಭೆಯಲ್ಲಿ ತೀಸ್ರಿ ಬಾರ್ ಮೋದಿ ಸಕಾರ್ರ ಘೋಷಣೆಗಳು ಪ್ರತಿಧ್ವನಿಸಿದವು. +ಪ್ರಧಾನಿ ತಮ್ಮ ಸಂಪುಟದ ಸಹೋದ್ಯೋಗಿಗಳಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರೊಂದಿಗೆ ಮೊದಲ ಸಾಲಿನಲ್ಲಿ ಕುಳಿತಿದ್ದರು. ಮುಂದಿನ ವರ್ಷ ದೇಶದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅವರ ಹಿಂದೆ ಸಾಲು ಸಾಲಾಗಿ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿ ಅವರು ಮೂರನೇ ಅವಗೆ ಅಧಿಕಾರಕ್ಕೆ ಮರಳಲು ಹರ್ಷ ವ್ಯಕ್ತಪಡಿಸಿದರು. +ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ +ಬಿಜೆಪಿಯು ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮುಖ್ಯಮಂತ್ರಿಯ ಮುಖಗಳನ್ನು ಬಿಂಬಿಸದೆ ಅಥವಾ ಪಿಎಂ ಮೋದಿಯವರನ್ನು ಮಾತ್ರ ಪಕ್ಷದ ಮುಖವಾಗಿ ಬಿಂಬಿಸುವ ಸಾಮೂಹಿಕ ನಾಯಕತ್ವದಲ್ಲಿ ಸ್ರ್ಪಧಿಸಿದೆ. +ಮೂರು ಹೃದಯ ಭಾಗದ ರಾಜ್ಯಗಳು ಮತ್ತು ದಕ್ಷಿಣದ ಒಂದು ರಾಜ್ಯ ಚುನಾವಣಾ ಫಲಿತಾಂಶಗಳನ್ನು ಘೋಷಿಸಿದ ಒಂದು ದಿನದ ನಂತರ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತದೆ. ಬಿಜೆಪಿಯು ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದ್ದು ಮಾತ್ರವಲ್ಲದೆ ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಅನ್ನು ಅಧಿಕಾರದಿಂದ ಕೆಳಗಿಳಿಸಿದೆ. \ No newline at end of file diff --git a/eesanje/url_47_224_10.txt b/eesanje/url_47_224_10.txt new file mode 100644 index 0000000000000000000000000000000000000000..05788c05fe15195bf950cf128ad68185d081b142 --- /dev/null +++ b/eesanje/url_47_224_10.txt @@ -0,0 +1,19 @@ +3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ : ತೆಲಂಗಾಣ ಕಾಂಗ್ರೆಸ್ ಪಾಲು +ನವದೆಹಲಿ,ಡಿ.3- ಮುಂಬರುವ ಲೋಕಸಭಾ ಮಹಾ ಚುನಾವಣೆಯ ದಿಕ್ಸೂಚಿಯೆಂದೇ ಬಿಂಬಿಸಲಾಗಿರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ದಾಖಲಿಸಿ, ತೆಲಂಗಾಣದಲ್ಲಿ ಕಾಂಗ್ರೆಸ್ ಅಪತ್ಯ ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ. +ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ನಡುವೆಯೂ ಬಿಜೆಪಿ 155ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಐತಿಹಾಸಿಕ ಜಯದತ್ತ ದಾಪುಗಾಲಿಟ್ಟಿದೆ. 52 ಜಿಲ್ಲಾ ಕೇಂದ್ರಗಳಲ್ಲಿ ಇಂದು 230 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಇಂದು ಬಿಗಿಭದ್ರತೆಯ ನಡುವೆ ನಡೆದಿದ್ದು, ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತವಾಗಿದೆ. +ಶಿವರಾಜ್ ಸಿಂಗ್ ಚವ್ಹಾಣ್, ಜ್ಯೋತಿರಾತ್ಯ ಸಿಂಧ್ಯ ಅವರ ಜೋಡೆತ್ತಿನ ಹೋರಾಟ ಎದುರಾಳಿ ಕಾಂಗ್ರೆಸ್‍ನ್ನು ಮಣಿಸಿದೆ. ಬಿಜೆಪಿ ನೀಡಿದ್ದ ಅಯೋಧ್ಯೆಯ ರಾಮಮಂದಿರ ಉಚಿತ ತೀರ್ಥ ಯಾತ್ರೆ, ಮಹಿಳಾ ಸಬಲೀಕರಣ ಹಲವು ಭರವಸೆಗಳು ಇಲ್ಲಿ ವರ್ಕೌಟ್ ಆಗಿದೆ. +ರಾಜಸ್ಥಾನ ಮಾಂತ್ರಿಕನ ಕಾಟದಿಂದ ಮುಕ್ತವಾಗಿದೆ : ಶೇಖಾವತ್ +ಇಂಡಿಯಾ ಮೈತ್ರಿಕೂಟದ ಹೆಸರಿನಲ್ಲೇ ಇಲ್ಲಿ ಕಾಂಗ್ರೆಸ್, ಟಿಎಂಸಿ, ಎನ್‍ಸಿಪಿ ಸೇರಿದಂತೆ ಹಲವು ಪಕ್ಷಗಳ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತರೂ ಅದನ್ನು ಬೇಸಿ ಕಮಲ ಪಡೆ ಗೆಲುವಿನ ಕೇಕೆ ಹಾಕಿದೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದಿದ್ದರೂ ಈಗ ಹಾಲಿ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಅವರೇ ಮತ್ತೆ ಮುಖ್ಯಮಂತ್ರಿ ಗಾದಿ ಹಿಡಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಕೇಂದ್ರ ಸಚಿವ ಜ್ಯೋತಿರಾತ್ಯ ಹೆಸರು ಕೂಡ ಕೇಳಿಬರುತ್ತಿದೆ. +ಇಬ್ಬರೂ ಕೂಡ ಭಾರೀ ಅಂತರದಿಂದ ಗೆಲುವು ಸಾಸಿದ್ದು, ಒಟ್ಟಾರೆ ಮುನ್ನಡೆ ಅಂಕಿಅಂಶಗಳ ಪ್ರಕಾರ 230 ಕ್ಷೇತ್ರಗಳಲ್ಲಿ ಬಿಜೆಪಿ 156, ಕಾಂಗ್ರೆಸ್ 65, ಬಿಎಸ್‍ಪಿ 01 ಹಾಗೂ ಇತರರು 01 ಸ್ಥಾನಗಳಲ್ಲಿದ್ದಾರೆ. ಇಲ್ಲಿ ಒಟ್ಟು 2533 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ ಇಲ್ಲಿ ರಣತಂತ್ರ ರೂಪಿಸಿ ನಾಲ್ವರು ಕೇಂದ್ರ ಸಚಿವರನ್ನು ಕೂಡ ವಿಧಾನಸಭಾ ಚುನಾವಣೆಗಿಳಿಸಿದ್ದು, ಅದರಲ್ಲಿ ಮೂವರು ಜಯಗಳಿಸಿದ್ದಾರೆ. +ಕಾಂಗ್ರೆಸ್‍ನ ಮುಖಂಡ ಹಾಗೂ ಮಾಜಿ ಸಿಎಂ ಕಮಲ್‍ನಾಥ್ ಗೆಲುವು ಸಾಧಿಸಿದ್ದರೂ ಕೂಡ ಪಕ್ಷ ಸೋಲು ಕಂಡಿದೆ. ಮಹಿಳಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ನಾವು ಘೋಷಿಸದೆ ಕಡೆಗಣಿಸಿದ ಕಾರಣ ನಮಗೆ ಸೋಲುಂಟಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯ ಶ್ರೀನಾಟಿ ಹೇಳಿದ್ದಾರೆ. +ಇನ್ನು ರಾಜಸ್ಥಾನದಲ್ಲಿ ನಾಯಕರ ಕಚ್ಚಾಟದಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಕಾನೂನು ಸುವ್ಯವಸ್ಥೆ ಹಾದಿ ತಪ್ಪಿದ್ದು, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಪಕ್ಷಕ್ಕೆ ಮುಳುವಾಗಿದೆ. ಇಲ್ಲಿ ಬಿಜೆಪಿ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತವಾಗಿದ್ದು, ಆರಂಭಿಕ ಮುನ್ನಡೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 112 ಸ್ಥಾನಗಳಲ್ಲಿ ಮುಂದಿದ್ದು ಮ್ಯಾಜಿಕ್ ನಂಬರ್ 100ನ್ನು ದಾಟುವುದು ನಿಶ್ಚಿತವಾಗಿದೆ. +ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಪಕ್ಷೇತರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಎಸ್‍ಪಿ 2 ಹಾಗೂ ಇತರರು 2 ಸಾನಗಳಲ್ಲಿ ಮುನ್ನಡೆ ಸಾಸಿದ್ದಾರೆ. ಇದರಲ್ಲಿ ಕೆಲ ಬಂಡಾಯ ಬಿಜೆಪಿ ಅಭ್ಯರ್ಥಿಗಳು ಜಯದ ಕೇಕೆ ಹಾಕಿದ್ದಾರೆ. ಒಟ್ಟಾರೆ ರಾಜಸ್ಥಾನದಲ್ಲಿ ಈಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಸ್ಥಾನಕ್ಕೆ ವಸುಂಧರಾ ರಾಜೇ ಹೆಸರು ಮುಂಚೂಣಿಯಲ್ಲಿದೆ. +ಕಾಂಗ್ರೆಸ್ ಇಲ್ಲಿ ಪ್ರಬಲ ಪೈಪೋಟಿ ಕಂಡುಬಂದರೂ ಕೂಡ ನಂತರದ ಮತ ಎಣಿಕೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಇನ್ನು ಛತ್ತೀಸ್‍ಘಡದಲ್ಲಿ ಆರಂಭದ ಫಲಿತಾಂಶದ ಪ್ರಕಾರ ಬಿಜೆಪಿ ಸರಳ ಬಹುಮತ ಗಳಿಸಿದೆ. ಆದರೆ ಕಾಂಗ್ರೆಸ್ ಕೂಡ ಜಿದ್ದಾಜಿದ್ದಿ ಹೋರಾಟ ನಡೆಸಿದೆ. +ಒಟ್ಟು 90 ಸ್ಥಾನಗಳ ಮತ ಎಣಿಕೆ ಕಾರ್ಯ 33 ಜಿಲ್ಲಾ ಕೇಂದ್ರಗಳಲ್ಲಿಂದು ನಡೆದಿದ್ದು, ಬಿಜೆಪಿ 53, ಕಾಂಗ್ರೆಸ್ 34 ಹಾಗೂ ಇತರರು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಸಿದ್ದಾರೆ. ಅಂತಿಮ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಚಿಕ್ಕ ರಾಜ್ಯದಲ್ಲಿ ಕೇವಕಜಕಜಕಜಕಜಲ ಸಾವಿರ ಮತಗಳ ಅಂತರದಲ್ಲೇ ಕೆಲವರ ಸೋಲು-ಗೆಲುವು ನಿರ್ಧಾರವಾಗುತ್ತದೆ. ಛತ್ತೀಸ್‍ಘಡದ ಮುಖ್ಯಮಂತ್ರಿಯಾಗಿರುವ ಭೂಪೇಂದ್ರ ಬಘೇಲ್ ಅವರ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರೂ ಆಡಳಿತ ವಿರೋಧಿ ಅಲೆ ಸ್ವಲ್ಪ ಮಟ್ಟಿಗೆ ತಟ್ಟಿದೆ. +ಛತ್ತೀಸ್‍ಘಡ ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ಡಿಯೋಗೆ ಹಿನ್ನಡೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಬಘೇಲ್ ಅವರಿಗೂ ಕೂಡ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಇಲ್ಲಿ ಪ್ರಬಲ ಪೈಪೋಟಿ ನೀಡಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ ಮುನ್ನಡೆ ಎಂದು ಹೇಳಲಾಗುತ್ತಿದ್ದು, ಆದರೆ ಬಿಜೆಪಿ ಗೆಲವಿನ ನಾಗಾಲೋಟದಲ್ಲಿದೆ. +ದಕ್ಷಿಣ ಭಾರತದ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 10 ವರ್ಷಗಳ ಕಾಲ ಬಿಆರ್‍ಎಸ್‍ನ ಕೆ.ಸಿ.ಚಂದ್ರಶೇಖರ್ ರಾವ್ ಆಡಳಿತ ಕೊನೆಗೊಂಡಿದೆ. ಕರ್ನಾಟಕದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ತೆಲಂಗಾಣ ಚುನಾವಣಾ ಪ್ರಚಾರಕ್ಕಿಳಿದು ಶತಾಯಗತಾಯ ಕಾಂಗ್ರೆಸ್‍ನ್ನು ಗೆಲ್ಲಿಸಬೇಕೆಂಬ ಛಲ ಕೊನೆಗೂ ಫಲ ನೀಡಿದಂತೆ ಕಾಣುತ್ತಿದೆ. +ಇಲ್ಲಿ ಒಟ್ಟು 119 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಸರಳ ಬಹುಮತ ಗಳಿಸುವತ್ತ ಮುನ್ನುಗ್ಗಿ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಆರ್‍ಎಸ್ 40 ಕ್ಷೇತ್ರಗಳಲ್ಲಿ, ಬಿಜೆಪಿ 9 ಕ್ಷೇತ್ರಗಳು, ಎಐಎಂಐಎಂ 04 ಕ್ಷೇತ್ರಗಳಲ್ಲಿ ಹಾಗೂ ಸಿಪಿಎಂ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. +ತೆಲಂಗಾಣದ ಕೊಡಂಗಲ್ ಕ್ಷೇತ್ರದಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಜಯಭೇರಿ ಬಾರಿಸಿದ್ದು, ಮತ್ತೊಂದು ಕ್ಷೇತ್ರದಲ್ಲೂ ಕೂಡ ಮುನ್ನಡೆ ಸಾಧಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಈಗ ಕೇವಲ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ರೇವಂತ್ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ. +ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ +ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನಪಡುವಂತಾಗುತ್ತದೆ. ಬಿಜೆಪಿಗೆ ಮೂರು ರಾಜ್ಯಗಳು ಒಲಿದು ಬೋನಸ್ ಪಡೆದರೆ, ಕಾಂಗ್ರೆಸ್ ಒಂದು ರಾಜ್ಯದಲ್ಲಿ ಅಕಾರ ಚುಕ್ಕಾಣಿ ಹಿಡಿದು ಎರಡು ರಾಜ್ಯಗಳನ್ನು ಕಳೆದುಕೊಂಡಂತಾಗಿದೆ. +ಗ್ಯಾರಂಟಿ ಉಚಿತ ಯೋಜನೆಗಳು ಅಷ್ಟಾಗಿ ಸದ್ದು ಮಾಡಿಲ್ಲ. ಅಭಿವೃದ್ಧಿ ಮತ್ತು ಜನಕಲ್ಯಾಣ ಭರವಸೆಗಳು ಜನರ ಮನಸ್ಸನ್ನು ತಟ್ಟಿದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಬಲಗೊಂಡರೆ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಬಿಜೆಪಿ ಶಕ್ತಿ ವೃದ್ಧಿಸಿಕೊಂಡಿದೆ. \ No newline at end of file diff --git a/eesanje/url_47_224_11.txt b/eesanje/url_47_224_11.txt new file mode 100644 index 0000000000000000000000000000000000000000..671431587574a93ba670e8ffca4790fe783d28c3 --- /dev/null +++ b/eesanje/url_47_224_11.txt @@ -0,0 +1,5 @@ +ರಾಜಸ್ಥಾನ ಮಾಂತ್ರಿಕನ ಕಾಟದಿಂದ ಮುಕ್ತವಾಗಿದೆ : ಶೇಖಾವತ್ +ನವದೆಹಲಿ,ಡಿ.3- ರಾಜಸ್ಥಾನ ಮಾಂತ್ರಿಕನ ಕಾಟದಿಂದ ಹೊರಬಂದಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾದೂ ಮುಗಿದಿದೆ ಮತ್ತು ರಾಜಸ್ಥಾನವು ಜಾದೂಗಾರನ ಕಾಟದಿಂದ ಹೊರಬಂದಿದೆ. ಮಹಿಳೆಯರ ಗೌರವಕ್ಕಾಗಿ ಮತ್ತು ಬಡವರ ಕಲ್ಯಾಣಕ್ಕಾಗಿ ಜನರು ಮತ ಹಾಕಿದ್ದಾರೆ ಎಂದು ಅವರು ಹೇಳಿದರು. +ಗೆಹ್ಲೋಟ್ ಜಾದೂಗಾರರ ಕುಟುಂಬದಲ್ಲಿ ಜನಿಸಿದರು ಮತ್ತು ಅವರ ಪ್ರವಾಸಗಳಲ್ಲಿ ಅವರ ತಂದೆಗೆ ಸಹಾಯ ಮಾಡಿದರು. ಕಾಂಗ್ರೆಸ್‍ನ ಭರವಸೆಗಳನ್ನು ಜನರು ವಿಫಲಗೊಳಿಸಿದ್ದಾರೆ. ಅವರು ಭ್ರಷ್ಟ ಕಾಂಗ್ರೆಸ್ ಅನ್ನು ಹೊರಹಾಕಲು ಮತ ಹಾಕಿದ್ದಾರೆ ಎಂದು ಶೇಖಾವತ್ ಜೈಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು. +ದೇಶದ ಜಿಡಿಪಿ ಹೊರಸೂಸುವಿಕೆ ಶೇ.33 ಕಡಿಮೆಯಾಗಿದೆಯಂತೆ +ರಾಜಸ್ಥಾನದಲ್ಲಿ ಬಿಜೆಪಿ 108 ಸ್ಥಾನಗಳೊಂದಿಗೆ ಅರ್ಧದಾರಿಯ ಗಡಿ ದಾಟಿದೆ, ಆದರೆ ಕಾಂಗ್ರೆಸ್ 75 ಸ್ಥಾನಗಳಲ್ಲಿ ಹಿಂದುಳಿದಿದ್ದು, ಬಿಜೆಪಿ ಮುನ್ನಡೆಯಲ್ಲಿದೆ. ರಾಜಸ್ಥಾನ ವಿಧಾನಸಭೆಯಲ್ಲಿ 199 ಸ್ಥಾನಗಳಿವೆ, ಮತ್ತು ಮ್ಯಾಜಿಕ್ ಸಂಖ್ಯೆ 100. ಕಳೆದ ಅವಧಿಯಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಬಿಜೆಪಿಗೆ ಶೇ 38.77 ಮತ್ತು ಕಾಂಗ್ರೆಸ್‍ಗೆ ಶೇ 39.30 ಮತ ಹಂಚಿಕೆಯಾಗಿತ್ತು. \ No newline at end of file diff --git a/eesanje/url_47_224_12.txt b/eesanje/url_47_224_12.txt new file mode 100644 index 0000000000000000000000000000000000000000..f5fd7bf81738e01784c810cce73d534dccdd9c1f --- /dev/null +++ b/eesanje/url_47_224_12.txt @@ -0,0 +1,5 @@ +ಮೋದಿ ಗ್ಯಾರಂಟಿಗೆ ಜನ ಬೆಂಬಲ : ರಮಣ್‍ಸಿಂಗ್ +ರಾಯ್‍ಪುರ,ಡಿ.3- ಈ ಬಾರಿಯ ಚುನಾವಣೆಯಲ್ಲಿ ಮೋದಿಜಿ ಗ್ಯಾರಂಟಿಗೆ ಜಯ ದೊರೆತಿದೆ ಎಂದು ಛತ್ತೀಸ್‍ಗಢದ ಮಾಜಿ ಮುಖ್ಯಮಂತ್ರಿ ರಮಣ್‍ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಮೊದ ಮೊದಲು ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಮುನ್ನಡೆಗೆ ಬಂದರೂ ನಂತರ ಬಿಜೆಪಿ ಚೇತರಿಸಿಕೊಂಡು ಸರ್ಕಾರ ರಚನೆ ಕನಸು ಕಾಣುತ್ತಿರುವಂತೆಯೇ ರಮಣ್‍ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ. +ಜನರು ಮೋದಿಜಿಯವರ ಗ್ಯಾರಂಟಿಯನ್ನು ನಂಬಿದ್ದಾರೆ, ಅದನ್ನೇ ಟ್ರೆಂಡ್‍ಗಳು ತೋರಿಸುತ್ತವೆ. ನಾವು ಅಂಡರ್‍ಕರೆಂಟ್ ಅನ್ನು ನೋಡಿದ್ದೇವೆ, ಅದು ಇಷ್ಟು ದೊಡ್ಡದಾಗಿದೆ ಎಂದು ತಿಳಿದಿರಲಿಲ್ಲ. ಹಾಲಿ ಸಿಎಂ ಭೂಪೇಶ್ ಬಘೇಲ್ ಅವರನ್ನು ಛತ್ತೀಸ್‍ಗಢ ತಿರಸ್ಕರಿಸಿದೆ. ಭೂಪೇಶ್ ಬಾಘೇಲ್ ಅವರಿಗೆ ಭ್ರಷ್ಟಾಚಾರ, ಮದ್ಯ ಹಗರಣ, ಮಹದೇವ್ ಆ್ಯಪ್ ಹಗರಣವು ಕೊಡುಗೆ ನೀಡಿದೆ. ಇದು ಫಲಿತಾಂಶವಾಗಿದೆ ಎಂದು ರಮಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. +ಡಿ.6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ +ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದಕ್ಕೆ ಉತ್ತರಕ್ಕಾಗಿ ಒತ್ತಾಯಿಸಿದ ಅವರು, ಇದು ಪಕ್ಷದ ನಿರ್ಧಾರವಾಗಿರುತ್ತದೆ, ನಾನು ಎಂದಿಗೂ ಏನನ್ನೂ ಕೇಳಲಿಲ್ಲ, ನನಗೆ ನಿಯೋಜಿಸಲಾದ ಯಾವುದೇ ಕೆಲಸ, ನಾನು ಅದನ್ನು ಎಲ್ಲಾ ಸಮರ್ಪಣೆಯಿಂದ ಮಾಡಿದ್ದೇನೆ ಎಂದರು. \ No newline at end of file diff --git a/eesanje/url_47_224_2.txt b/eesanje/url_47_224_2.txt new file mode 100644 index 0000000000000000000000000000000000000000..12d767ec3c666a9378bb0ae5e507530b9c3cf844 --- /dev/null +++ b/eesanje/url_47_224_2.txt @@ -0,0 +1,5 @@ +ವಾಯುಪಡೆ ತರಬೇತಿ ವಿಮಾನ ಪತನ +ಹೈದರಾಬಾದ್, ಡಿ.4 (ಪಿಟಿಐ)- ಇಬ್ಬರು ಅಧಿಕಾರಿಗಳೊಂದಿಗೆ ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವೊಂದು ಇಂದು ಬೆಳಗ್ಗೆ ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ಜಿಲ್ಲೆಯ ತೂಪ್ರಾನ್ ಮಂಡಲದಲ್ಲಿ ಈ ಘಟನೆ ಸಂಭವಿಸಿದ್ದು, ವಿಮಾನ ಪತನಗೊಂಡ ಸಂದರ್ಭದಲ್ಲಿ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು ಎಂದು ಅವರು ಹೇಳಿದ್ದಾರೆ. ಅವರ ಸ್ಥಿತಿ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ +ಇಲ್ಲಿಗೆ ಸಮೀಪದ ದುಂಡಿಗಲ್‍ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (ಎಎಫ್‍ಎ) ವಿಮಾನ ಟೇಕ್ ಆಫ್ ಆಗಿದೆ ಎಂದು ಹಿರಿಯ ಪೊಲೀಸ್ ಅಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಎಎಫ್‍ಎ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_224_3.txt b/eesanje/url_47_224_3.txt new file mode 100644 index 0000000000000000000000000000000000000000..8f3383d946a4cd2dfdad40f9337725f148a65114 --- /dev/null +++ b/eesanje/url_47_224_3.txt @@ -0,0 +1,5 @@ +ಜನ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ : ಮೋದಿ +ನವದೆಹಲಿ,ಡಿ.4- ನಿನ್ನೆಯ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಜನರು ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ ಎಂದು ತೋರಿಸುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಸಂಸತ್ತಿನ ಒಳಗೆ ಸೋಲಿನ ಹತಾಶೆಯನ್ನು ಹೊರಹಾಕಬೇಡಿ ಎಂದು ಪ್ರತಿಪಕ್ಷಗಳನ್ನು ಒತ್ತಾಯಿಸಿದರು. +ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ ಅವರು, ಸಂಸದರು ಪೂರ್ವಸಿದ್ಧತೆಯೊಂದಿಗೆ ಸಂಸತ್ತಿಗೆ ಬರಬೇಕೆಂದು ನಾನು ವಿನಂತಿಸುತ್ತೇನೆ. ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ, ನಾನು ಪ್ರತಿಪಕ್ಷಗಳಿಗೆ ಇದೊಂದು ಸುವರ್ಣಾವಕಾಶ ಎಂದು ಹೇಳುತ್ತೇನೆ, ಅವರು ಒಂಬತ್ತು ವರ್ಷಗಳಿಂದ ಹೊತ್ತಿರುವ ನಕಾರಾತ್ಮಕತೆಯನ್ನು ತೊಡೆದುಹಾಕಬೇಕು ಮತ್ತು ಸಕಾರಾತ್ಮಕತೆಯಿಂದ ಮುಂದುವರಿಯಬೇಕು. ದಯವಿಟ್ಟು ಸಂಸತ್ತಿನಲ್ಲಿ ಸೋಲಿನ ಹತಾಶೆಯನ್ನು ಹೊರಹಾಕಬೇಡಿ ಎಂದು ಮನವಿ ಮಾಡಿಕೊಂಡರು. +ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ +ಇದಕ್ಕಾಗಿ ಪ್ರತಿಪಕ್ಷಗಳು ಪ್ರತಿಭಟನೆ ಮಾಡಬೇಡಿ ಎಂದು ಒತ್ತಾಯಿಸಿದ ಅವರು, ಇದು ನಿಮ್ಮ ಲಾಭಕ್ಕಾಗಿ, ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳು ಮಹತ್ವದ ಪಾತ್ರವನ್ನು ಹೊಂದಿವೆ, ದಯವಿಟ್ಟು ಇದನ್ನು ಅರ್ಥಮಾಡಿಕೊಳ್ಳಿ, ದೇಶವು ಅಭಿವೃದ್ಧಿಯ ಹಾದಿಯಲ್ಲಿ ನಿಲ್ಲಲು ಸಹಕರಿಸಿ ಎಂದು ಪ್ರಧಾನಿ ಹೇಳಿದರು. \ No newline at end of file diff --git a/eesanje/url_47_224_4.txt b/eesanje/url_47_224_4.txt new file mode 100644 index 0000000000000000000000000000000000000000..2836234209816d36c5f5c75c5e7571d47f2b839d --- /dev/null +++ b/eesanje/url_47_224_4.txt @@ -0,0 +1,5 @@ +ಚುನಾವಣೆಯಲ್ಲಿ ಸೋತ ಮಿಜೋರಾಂ ಡಿಸಿಎಂ +ಐಜ್ವಾಲ, ಡಿ.4 (ಪಿಟಿಐ) ಮಿಜೋರಾಂ ಉಪಮುಖ್ಯಮಂತ್ರಿ ಮತ್ತು ಎಂಎನ್‍ಎಫ್ ಅಭ್ಯರ್ಥಿ ತೌನ್ಲುಯಾ ಅವರು ಝಡ್‍ಪಿಎಂ ಅಭ್ಯರ್ಥಿ ವಿರುದ್ಧ ಸೋತಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‍ಎಫ್)ನ ತೌಲುಯಾ 6,079 ಮತಗಳನ್ನು ಪಡೆದರೆ, ಜೋರಾಮ್ ಪೀಪಲ್ಸ ಮೂವ್‍ಮೆಂಟ್ (ಝಡ್‍ಪಿಎಂ) ಅಭ್ಯರ್ಥಿ ಡಬ್ಲ್ಯೂ ಚುವಾನವ್ಮಾ 6,988 ಮತಗಳನ್ನು ಪಡೆದರು. +ಕಾಂಗ್ರೆಸ್ ಅಭ್ಯರ್ಥಿ ಸಿ ಲಾಲ್ಹ್ರಿಯಾತುಯಾ 1,674 ಮತಗಳನ್ನು ಪಡೆದರೆ, ಸ್ವತಂತ್ರ ಅಭ್ಯರ್ಥಿ ಲಾಲ್‍ಮುನ್ಸಿಯಾಮಿ ಕೇವಲ 67 ಮತಗಳನ್ನು ಪಡೆದರು ಎಂದು ಚುನಾವಣಾ ಆಯೋಗ ತಿಳಿಸಿದೆ. +ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುಸಿತ +ಬಿಗಿ ಭದ್ರತೆಯ ನಡುವೆ ಇಂದು ಬೆಳಗ್ಗೆ 8 ಗಂಟೆಗೆ ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ರಾಜ್ಯಾದ್ಯಂತ 13 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಚ್.ಲಿಯಾಂಜೆಲಾ ಪಿಟಿಐಗೆ ತಿಳಿಸಿದ್ದಾರೆ. \ No newline at end of file diff --git a/eesanje/url_47_224_5.txt b/eesanje/url_47_224_5.txt new file mode 100644 index 0000000000000000000000000000000000000000..f5b4aba75042e25b382db22c397e9980e14bb082 --- /dev/null +++ b/eesanje/url_47_224_5.txt @@ -0,0 +1,7 @@ +ಸ್ನೇಹಿತರ ಜೊತೆ ಸೇರಿ ತಂಗಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಪಾಪಿ ಅಣ್ಣ +ಫುಲ್ಬಾನಿ,ಡಿ.4- ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ನಾಲ್ವರು ಸ್ನೇಹಿತರೊಂದಿಗೆ ತನ್ನ ಸಹೋದರಿಯ ಮೇಲೆ ಅತ್ಯಾಚಾರವೆಸಗಿ ನಂತರ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನ 3 ರಂದು ಚಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ, ಆದರೆ ಪೊಲೀಸರು ಪ್ರಕರಣವನ್ನು ಭೇದಿಸಿದ ನಂತರ ವ್ಯಕ್ತಿ ಮತ್ತು ಅವನ ಸ್ನೇಹಿತರನ್ನು ಇದೀಗ ಬಂಧಿಸಲಾಗಿದೆ. +25ರ ಹರೆಯದ ಮಹಿಳೆಗೆ ಆತನ ಸಹೋದರ ತನ್ನ ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ತಿಳಿದು ಬಂದಿದೆ. ಅದನ್ನು ಕೊನೆಗೊಳಿಸುವಂತೆ ಕೇಳಿಕೊಂಡಳು ಮತ್ತು ಇಲ್ಲದಿದ್ದರೆ ಇತರರಿಗೆ ಈ ಬಗ್ಗೆ ತಿಳಿಸುವುದಾಗಿ ಬೆದರಿಕೆ ಹಾಕಿದ್ದಳು. ಆಕೆಯನ್ನು ತಡೆಯಲು ಆತ ಯೋಜನೆ ರೂಪಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. +ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು +ಘಟನೆ ನಡೆದ ದಿನ ಮಹಿಳೆ ಸಿಯಾಲಿ ಎಲೆಗಳನ್ನು ಸಂಗ್ರಹಿಸಲು ಸಮೀಪದ ಕಾಡಿಗೆ ತೆರಳಿದ್ದಳು. ಅವಳ ಅಣ್ಣನೂ ತನ್ನ ಹಸುಗಳೊಂದಿಗೆ ಅಲ್ಲಿದ್ದ. ಆತ ತನ್ನ ನಾಲ್ವರು ಸ್ನೇಹಿತರನ್ನು ಕಾಡಿಗೆ ಕರೆಸಿ, ಕುಡಿದು ಕುಡಿತದ ಅಮಲಿನಲ್ಲಿ ಸರದಿಯಂತೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮಹಿಳೆ ಜಗಳವಾಡುತ್ತಿದ್ದಂತೆಯೇ ಆಕೆಯ ಕತ್ತು ಹಿಸುಕಿ, ನಂತರ ಕೊಡಲಿಯಿಂದ ಹಲ್ಲೇ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಚಾಕಪಾಡ್ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಲಲಿತ್ ಮೋಹನ್ ಸಾಗರ್ ತಿಳಿಸಿದ್ದಾರೆ. ನವೆಂಬರ್ 6 ರಂದು ಸಹೋದರ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾನೆ ಎಂದು ಅವರು ಹೇಳಿದರು. +ಮಹಿಳೆಯ ಕೊಳೆತ ಶವವು ನವೆಂಬರ್ 7 ರಂದು ಕಾಡಿನಲ್ಲಿ ಪತ್ತೆಯಾಗಿದೆ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ, ಆಕೆಯ ಮೇಲೆ ಅನೇಕ ಜನರು ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಕೊಂದಿದ್ದಾರೆ ಎಂದು ಗೊತ್ತಾಗಿತ್ತು.ತನಿಖೆ ಆರಂಭಿಸಿದ ಪೊಲೀಸರು ಆಕೆಯ ಸಹೋದರ ಮತ್ತು ಸ್ನೇಹಿತರನ್ನು ಬಂಧಸಿದ್ದಾರೆ. \ No newline at end of file diff --git a/eesanje/url_47_224_6.txt b/eesanje/url_47_224_6.txt new file mode 100644 index 0000000000000000000000000000000000000000..a2e3317cfcd4ce665d2a461ebcb94b7772a322ab --- /dev/null +++ b/eesanje/url_47_224_6.txt @@ -0,0 +1,10 @@ +ಮಧ್ಯಪ್ರದೇಶದಲ್ಲಿ ಫಲ ನೀಡದ ಭಾರತ್‍ ಜೋಡೋ ಯಾತ್ರೆ +ಭೋಪಾಲï, ಡಿ.4 (ಪಿಟಿಐ) – ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತ್ ಜೋಡೋ ಯಾತ್ರೆ ಲಾಭಾಂಶವನ್ನು ನೀಡಲಿದೆ ಎಂಬ ಕಾಂಗ್ರೆಸ್‍ನ ನಿರೀಕ್ಷೆ ಹುಸಿಯಾಗಿದೆ. ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಸಾಗಿದ 21 ಕ್ಷೇತ್ರಗಳ ಪೈಕಿ 17 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆದ್ದುಕೊಂಡಿದೆ. +ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸಿತು, ಸದನದ 230 ಸ್ಥಾನಗಳಲ್ಲಿ 163 ಸ್ಥಾನಗಳನ್ನು ಗೆದ್ದಿತು, ಕಾಂಗ್ರೆಸ್ 66 ಸ್ಥಾನ ಪಡೆದು ಎರಡನೇ ಸ್ಥಾನದಲ್ಲಿದೆ. ಕಳೆದ ವರ್ಷ ನವೆಂಬರ್ 23 ಮತ್ತು ಡಿಸೆಂಬರ್ 4 ರ ನಡುವೆ, ಭಾರತ್ ಜೋಡೋ ಯಾತ್ರೆಯು ಸಂಸದರ ಮಾಲ್ವಾ-ನಿಮಾರ್ ಪ್ರದೇಶದ ಆರು ಜಿಲ್ಲೆಗಳಾದ ಬುರ್ಹಾನ್‍ಪುರ, ಖಾಂಡ್ವಾ, ಖಾರ್ಗೋನ್ , ಇಂದೋರ್, ಉಜ್ಜಯಿನಿ ಮತ್ತು ಅಗರ್ ಮಾಲ್ವಾಗಳ ಮೂಲಕ 380 ಕಿಲೋಮೀಟರ್‍ಗಳನ್ನು ಕ್ರಮಿಸಿತು ಇದು ಒಟ್ಟು 21 ಸ್ಥಾನಗಳನ್ನು ಹೊಂದಿದೆ. +2018ರಲ್ಲಿ ಬಿಜೆಪಿ ಈ ಪೈಕಿ 14 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಕಾಂಗ್ರೆಸ್ ಏಳರಲ್ಲಿ ಜಯಭೇರಿ ಬಾರಿಸಿತ್ತು. ಈ ಬಾರಿ ಬಿಜೆಪಿ ತನ್ನ ಬಲವನ್ನು 17ಕ್ಕೆ ಹೆಚ್ಚಿಸಿಕೊಂಡಿದ್ದು, ಕಾಂಗ್ರೆಸ್ 4 ಸ್ಥಾನಗಳಿಗೆ ಇಳಿದಿದೆ. ಬಿಜೆಪಿಯ ಅರ್ಚನಾ ಚಿಟ್ನಿಸ್ ಬುರ್ಹಾನ್‍ಪುರ ಮತ್ತು ಮಂಜು ದಾದು ಬುರ್ಹಾನ್‍ಪುರ ಜಿಲ್ಲೆಯ ನೇಪಾನಗರ ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದ್ದಾರೆ. ಬುರ್ಹಾನ್‍ಪುರ ಕ್ಷೇತ್ರವನ್ನು 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ವತಂತ್ರ ಅಭ್ಯರ್ಥಿ ಸುರೇಂದ್ರ ಸಿಂಗ್ ಶೇರಾ ಗೆದ್ದಿದ್ದರು. +ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ +2018 ರಲ್ಲಿ, ಕಾಂಗ್ರೆಸ್‍ನ ಸುಮಿತ್ರಾ ಕಾಸ್ಡೇಕರ್ ನೇಪಾನಗರ ಕ್ಷೇತ್ರವನ್ನು ಗೆದ್ದರು, ಆದರೆ ಅವರು ನಂತರ ಪಕ್ಷಗಳನ್ನು ಬದಲಾಯಿಸಿದರು ಮತ್ತು 2020 ರ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್‍ನಲ್ಲಿ ಆಯ್ಕೆಯಾದರು. ಈ ಸ್ಥಾನವನ್ನು ಬಿಜೆಪಿ ಉಳಿಸಿಕೊಂಡಿದೆ. ಬಿಜೆಪಿಯ ನಾರಾಯಣ ಪಟೇಲ್ ಮತ್ತು ಛಾಯಾ ಮೋರೆ ಅವರು ಕ್ರಮವಾಗಿ ಮಂಧಾತ ಮತ್ತು ಪಂಧಾನದಿಂದ ಗೆದ್ದಿದ್ದಾರೆ. +2018 ರಲ್ಲಿ, ಪಂಧಾನ ಸ್ಥಾನವನ್ನು ಬಿಜೆಪಿಯ ರಾಮ್ ದಂಗೋರ್ ಗೆದ್ದರು, ಆದರೆ ಕಾಂಗ್ರೆಸ್‍ನ ನಾರಾಯಣ ಪಟೇಲ್ ಮಂಧಾತ ಕ್ಷೇತ್ರದಿಂದ ಗೆದ್ದರು. ಪಟೇಲ್ ನಂತರ ಬಿಜೆಪಿಗೆ ಬದಲಾಯಿತು ಮತ್ತು 2020 ರಲ್ಲಿ ಉಪಚುನಾವಣೆಯಲ್ಲಿ ಗೆದ್ದರು. ಆಡಳಿತ ಪಕ್ಷದಿಂದ ಅವರಿಗೆ ಮತ್ತೆ ಟಿಕೆಟ್ ನೀಡಲಾಯಿತು. +ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುಸಿತ +ಖಾರ್ಗೋನ್ ಜಿಲ್ಲೆಯಲ್ಲಿ, ಭಾರತ್ ಜೋಡೋ ಯಾತ್ರೆಯು ಬದ್ವಾಹ್ ಮತ್ತು ಭಿಕಂಗಾವ್ ಅಸೆಂಬ್ಲಿ ಸ್ಥಾನಗಳ ಮೂಲಕ ಹಾದುಹೋಯಿತು. ಬದ್ವಾದಲ್ಲಿ ಬಿಜೆಪಿಯ ಸಚಿನ್ ಬಿರ್ಲಾ ಜಯಗಳಿಸಿದರೆ, ಭಿಕಾಂಗಂಗಾವ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜುಮಾ ಸೋಲಂಕಿ ಗೆಲುವು ಸಾಧಿಸಿದ್ದಾರೆ. 2018 ರಲ್ಲಿ ಎರಡೂ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತು. ಬದ್ವಾ ಶಾಸಕ ಸಚಿನ್ ಬಿರ್ಲಾ ನಂತರ ಬಿಜೆಪಿ ಸೇರಿದರು. +ಭಾರತ್ ಜೋಡೋ ಯಾತ್ರೆ ಇಂದೋರ್ ಜಿಲ್ಲೆಯ ಎಲ್ಲಾ ಎಂಟು ಸ್ಥಾನಗಳನ್ನು ಒಳಗೊಂಡಿದೆ. ಎಲ್ಲ ಎಂಟು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. \ No newline at end of file diff --git a/eesanje/url_47_224_7.txt b/eesanje/url_47_224_7.txt new file mode 100644 index 0000000000000000000000000000000000000000..833f3e5064e759b5d9eb6273cbc3b570e65e441e --- /dev/null +++ b/eesanje/url_47_224_7.txt @@ -0,0 +1,10 @@ +ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಕುಸಿತ +ನವದೆಹಲಿ,ಡಿ.4- ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ತನ್ನ ಸರ್ಕಾರವನ್ನು ಕಳೆದುಕೊಂಡು ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ವಿಫಲವಾದ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶಗಳು ಪಕ್ಷದ ನಾಯಕರಿಗೆ ಭಾರಿ ನಿರಾಶೆಯನ್ನುಂಟು ಮಾಡಿದೆ. +ತೆಲಂಗಾಣದಲ್ಲಿನ ಗೆಲುವು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಸಾಂತ್ವನ ಹೇಳಿದೆ. ಏಕೆಂದರೆ ಅದು ದಕ್ಷಿಣ ಭಾರತದಲ್ಲಿ ತನ್ನ ಸ್ಥಾನವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಕೇವಲ ತಿಂಗಳುಗಳ ಅಂತರದಲ್ಲಿ ಭದ್ರಪಡಿಸಿಕೊಂಡಿದೆ. +ಮೂರು ರಾಜ್ಯಗಳಲ್ಲಿನ ಸೋಲು ಮತ್ತು ತೆಲಂಗಾಣದಲ್ಲಿನ ಗೆಲುವು ಕಾಂಗ್ರೆಸ್‍ಗೆ ಹಲವಾರು ಪಾಠಗಳನ್ನು ಕಲಿಸಿದೆ. ಇಂಡಿಯಾ ಕೂಟದ ಸದಸ್ಯರ ನಡುವೆ ಯಾವುದೇ ಸೀಟು ಹಂಚಿಕೆಯ ಮಾತುಕತೆಯ ಸಮಯದಲ್ಲಿ ಪಕ್ಷವು ಇತರ ಪಕ್ಷಗಳ ಒತ್ತಡಕ್ಕೆ ಹೆಚ್ಚು ಒಳಗಾಗಬೇಕಾಗುತ್ತದೆ. +ನಾಲ್ಕು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬಿಜೆಪಿಯೊಂದಿಗೆ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್‍ನ ದುರ್ಬಲತೆಯನ್ನು ಬಹಿರಂಗಪಡಿಸಿವೆ. ಕಾಂಗ್ರೆಸ್ ಈ ವರ್ಷದ ಆರಂಭದಲ್ಲಿ ಹಿಮಾಚಲ ಪ್ರದೇಶ ಮತ್ತು ಕರ್ನಾಟಕವನ್ನು ಬಿಜೆಪಿಯಿಂದ ಕಸಿದುಕೊಂಡಿತ್ತು ಮತ್ತು ಮಧ್ಯಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಅದೇ ರೀತಿ ಮಾಡಲು ಆಶಿಸಿತ್ತು. +ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು +ಹಿಂದಿನ ಆಂತರಿಕ ಕಚ್ಚಾಟಗಳು ಮತ್ತು ರಾಜ್ಯದ ಸುಮಾರು ಮೂರು ದಶಕಗಳ ಸಂಪ್ರದಾಯದ ಪ್ರಸ್ತುತ ಸರ್ಕಾರವನ್ನು ಮರಳಿ ಮತ ಹಾಕದ ಕಾರಣ ರಾಜಸ್ಥಾನದಲ್ಲಿ ಕೆಲವು ತೊಂದರೆಗಳನ್ನು ಪಕ್ಷದ ನಾಯಕರು ನಿರೀಕ್ಷಿಸಿದ್ದರು. +ಆದರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಕೊನೆಯ ಕ್ಷಣದ ಕಲ್ಯಾಣ ಯೋಜನೆಗಳಿಂದಾಗಿ ರಾಜಸ್ಥಾನದಲ್ಲಿ ಪಕ್ಷವು ಸೋಲನ್ನು ಎದುರಿಸಲಿಲ್ಲವಾದರೂ, ಮಧ್ಯಪ್ರದೇಶದಲ್ಲಿ ಐತಿಹಾಸಿಕ ಜನಾದೇಶದಿಂದ ಬಿಜೆಪಿಯನ್ನು ತಡೆಯಲು ಅದರ ಖಾತರಿ ಯಿಂದ ಹೆಚ್ಚು ಹೇಳಲಾಗಲಿಲ್ಲ. ಕಾಂಗ್ರೆಸ್ ಎತ್ತಿರುವ ವಿಷಯಗಳಲ್ಲಿ ಜಾತಿ ಸಮೀಕ್ಷೆಯ ಬೇಡಿಕೆಯನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಪದೇ ಪದೇ ಎತ್ತುವ ಮೂಲಕ ಜನರೊಂದಿಗೆ ಕೆಲಸ ಮಾಡಲಿಲ್ಲ. +ಒಂಬತ್ತು ಲೋಕಸಭಾ ಚುನಾವಣೆಗಳನ್ನು ಗೆದ್ದಿರುವ ಕಮಲ್ ನಾಥ್, ಸಪ್ತಪಕ್ಷದ ಮತ್ತು ಚುನಾವಣಾ ಕದನಗಳ ಅನುಭವಿ, ಮಧ್ಯಪ್ರದೇಶದ ಮತದಾರರನ್ನು ಹುರಿದುಂಬಿಸಲು ಸಾಧ್ಯವಾಗಲಿಲ್ಲ. ಕಮಲ್ ನಾಥ್ ಅವರು ಚುನಾವಣೆಯಲ್ಲಿ ಪಕ್ಷದ ಮುಖವಾಗಿದ್ದರು ಮತ್ತು ರಾಜ್ಯದಲ್ಲಿ ಪಕ್ಷದ ಮುಖ್ಯಸ್ಥರಾಗಿದ್ದರು. ಇದಕ್ಕೆ ವ್ಯತಿರಿಕ್ತವಾಗಿ, ಕಾಂಗ್ರೆಸ್ 2021 ರಲ್ಲಿ ತೆಲಂಗಾಣದಲ್ಲಿ ಯುವ ನಾಯಕ ರೇವಂತ್ ರೆಡ್ಡಿ ಅವರನ್ನು ರಾಜ್ಯ ಮುಖ್ಯಸ್ಥರನ್ನಾಗಿ ನೇಮಿಸಿತು. +ಕರ್ನಾಟಕ ಚುನಾವಣೆಯಲ್ಲಿ ಜಯಗಳಿಸಿದ ನಂತರ, ಕೆ ಚಂದ್ರಶೇಖರ ರಾವ್ ಸರ್ಕಾರದ ವಿರುದ್ಧ ಬಿಜೆಪಿ ಹುಟ್ಟುಹಾಕಿದ ಆಡಳಿತ ವಿರೋಧಿ ಭಾವನೆಯನ್ನು ಕಾಂಗ್ರೆಸ್ ಚೆನ್ನಾಗಿ ಬಳಸಿಕೊಂಡಿತು ಮತ್ತು ರೇವಂತ್ ರೆಡ್ಡಿ ನೇತೃತ್ವದಲ್ಲಿ ಪಕ್ಷವು ಉತ್ಸಾಹಭರಿತ ಪ್ರಚಾರವನ್ನು ನಡೆಸಿತು. \ No newline at end of file diff --git a/eesanje/url_47_224_8.txt b/eesanje/url_47_224_8.txt new file mode 100644 index 0000000000000000000000000000000000000000..ce1299693be01e65251b0da460156a494a6cd1a1 --- /dev/null +++ b/eesanje/url_47_224_8.txt @@ -0,0 +1,7 @@ +ಅಬ್ಬರಿಸುತ್ತಿದೆ ಮೈಚಾಂಗ್ ಚಂಡಮಾರುತ +ಚೆನ್ನೈ,ಡಿ.4- ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತವು ಆಂಧ್ರ ಕರಾವಳಿಯತ್ತ ಸಾಗುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಣಂ ಮತ್ತು ಕಡಲೂರು ಜಿಲ್ಲೆಗಳನ್ನು ಒಳಗೊಂಡಂತೆ ಭಾರೀ ಮಳೆಯಾಗುತ್ತಿದೆ ಎಂದು ವರದಿಯಾಗಿದೆ, ತಿರುವಳ್ಳೂರು ಜಿಲ್ಲೆಯು ಮಳೆಯ ಅಬ್ಬರ ಜೋರಾಗಿದೆ. +ಚೆನ್ನೈನ ಬಹುತೇಕ ಭಾಗಗಳು ನೀರಿನಲ್ಲಿ ಮುಳುಗಿದ್ದು, ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮುಳುಗಡೆಯಾಗಿದೆ. ನಾಳೆ ಮಧ್ಯಾಹ್ನ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಚಂಡಮಾರುತ ಅಪ್ಪಳಿಸಲಿದೆ. ಚೆನ್ನೈ ನಗರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದೆ, ಇಂದು ಬೆಳಿಗ್ಗೆ 5:30 ರವರೆಗಿನ 24 ಗಂಟೆಗಳಲ್ಲಿ ಮೀನಂಬಾಕ್ಕಂನಲ್ಲಿ 196 ಮಿಮೀ ಮತ್ತು ನುಂಗಂಬಾಕ್ಕಂನಲ್ಲಿ 154.3 ಮಿಮೀ ಮಳೆಯಾಗಿದೆ. +ಇದರ ಪರಿಣಾಮವಾಗಿ, ಚೆನ್ನೈ ಮತ್ತು ಪಕ್ಕದ ಮೂರು ಜಿಲ್ಲೆಗಳಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳು ಇಂದು ಮುಚ್ಚಲ್ಪಡುತ್ತವೆ ಮತ್ತು ರಾಜ್ಯ ಸರ್ಕಾರವು ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದೆ. +ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು +ನಗರ ಮತ್ತು ಅದರ ನೆರೆಯ ಜಿಲ್ಲೆಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ಕರಾವಳಿ ಜಿಲ್ಲೆಗಳಲ್ಲಿ ಅಧಿಕಾರಿಗಳು ಸುಮಾರು 5,000 ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನಿನ್ನೆ ರಾತ್ರಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. +ಮೈಚಾಂಗ್ ಚಂಡಮಾರುತವನ್ನು ಎದುರಿಸಲು ರಾಜ್ಯ ಯಂತ್ರ ಸಿದ್ಧವಾಗಿದೆ. ಸಚಿವರು ಮತ್ತು ಅಧಿಕಾರಿಗಳು ಕ್ಷೇತ್ರದಲ್ಲಿದ್ದಾರೆ. ಸಾರ್ವಜನಿಕರು ಒದಗಿಸಿದ ಸುರಕ್ಷತಾ ಪ್ರೋಟೋಕಾಲ್‍ಗಳನ್ನು ಅನುಸರಿಸಬೇಕು. ಚಂಡಮಾರುತದ ಪ್ರಭಾವ ಕಡಿಮೆಯಾಗುವವರೆಗೆ ಸಾರ್ವಜನಿಕರು ಅಗತ್ಯ ಅಗತ್ಯವಿಲ್ಲದೆ ಹೊರಗೆ ಬರಬಾರದು ಎಂದು ನಾನು ವಿನಂತಿಸುತ್ತೇನೆ. ಮುಖ್ಯಮಂತ್ರಿ ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. \ No newline at end of file diff --git a/eesanje/url_47_224_9.txt b/eesanje/url_47_224_9.txt new file mode 100644 index 0000000000000000000000000000000000000000..3218cdb9ceaff3221eb04f8f0e1353d8a28c3290 --- /dev/null +++ b/eesanje/url_47_224_9.txt @@ -0,0 +1,6 @@ +ಮೂರು ರಾಜ್ಯಗಳ ಗೆಲುವಿಗೆ ನಡ್ಡಾ ಪರಿಶ್ರಮ ಕಾರಣ : ಮೋದಿ +ನವದೆಹಲಿ,ಡಿ.4- ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ನಿರ್ಣಾಯಕ ಜನಾದೇಶ ಬರಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಪರಿಶ್ರಮವೇ ಕಾರಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಬಿಜೆಪಿ ಪ್ರಧಾನ ಕಛೇರಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಡ್ಡಾ ಅವರ ಸಂಘಟನಾ ಕೌಶಲ್ಯ ಮತ್ತು ತೆರೆಮರೆಯಲ್ಲಿ ಅವರು ಮಾಡಿದ ದಣಿವರಿಯದ ಕೆಲಸಕ್ಕಾಗಿ ಶ್ಲಾಘಿಸಿದರು, ಇದು ಪಕ್ಷದ ಅಂತಿಮ ಚುನಾವಣಾ ಯಶಸ್ಸಿಗೆ ಅಡಿಪಾಯ ಹಾಕಿತು. +ವೈಯಕ್ತಿಕ ದುಃಖದ ನಡುವೆಯೂ ಬಿಜೆಪಿ ರಾಷ್ಟ್ರೀಯ ಮುಖ್ಯಸ್ಥರು ಚುನಾವಣಾ ಪ್ರಚಾರಕ್ಕೆ ಹೇಗೆ ಧುಮುಕಿದರು ಎಂಬುದರ ಕುರಿತು ಪ್ರಧಾನಿ ಮೋದಿ ವಿಶೇಷ ಉಲ್ಲೇಖವನ್ನು ಮಾಡಿದರು. ಭಾರತ್ ಮಾತಾ ಕಿ ಜೈ ಘೋಷಣೆಗಳೊಂದಿಗೆ ಕಾರ್ಯಕರ್ತರು ಅವರ ಹೆಸರನ್ನು ಜಪಿಸುತ್ತಿದ್ದಂತೆ, ಪಕ್ಷದ ಅದ್ಭುತ ಗೆಲುವಿಗೆ ನಡ್ಡಾ ಅವರು ಪಕ್ಷದಲ್ಲಿನ ಆರೋಪಗಳ ಸಮರ್ಥ ಉಸ್ತುವಾರಿ ಮತ್ತು ಅವರ ಚುನಾವಣಾ ಚಾಣಾಕ್ಷತೆ ಮತ್ತು ತಂತ್ರಗಳು ಕಾರಣವೆಂದು ಪ್ರಧಾನಿ ಮೋದಿ ಹೇಳಿದರು. +ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ `ಕೈ’ಕೊಟ್ಟ ಗ್ಯಾರಂಟಿಗಳು +ಈ ವಿಜಯಗಳು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ-ಜಿ ಅವರ ದಣಿವರಿಯದ ಕೆಲಸದಿಂದ ಬಂದಿವೆ. ಅವರು ಜಾರಿಗೆ ತಂದ ತಂತ್ರಗಳು ನಮ್ಮನ್ನು ಇಂದಿಗೂ ಮುನ್ನಡೆಸಿದೆ. ಚುನಾವಣೆಗೆ ಮುಂಚಿತವಾಗಿ ಅವರ ಕುಟುಂಬದಲ್ಲಿ ದುಃಖವಿತ್ತು ಆದರೆ ಅವರು ಶ್ರಮಿಸುವುದನ್ನು ಮುಂದುವರೆಸಿದರು ಮತ್ತು ಪಕ್ಷವನ್ನು ಸಂಪೂರ್ಣ ಬದ್ಧತೆ ಮತ್ತು ಶ್ರದ್ಧೆಯಿಂದ ಮುನ್ನಡೆಸಿಕೊಳ್ಳಿ ಎಂದು ಪ್ರಧಾನಿ ಮೋದಿ ಹೇಳಿದರು.ವಿಜಯೋತ್ಸವದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ನಡ್ಡಾ, ಪ್ರಧಾನಿ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು. +ದೇಶ್ ಮೇ ಏಕ್ ಹೈ ಗ್ಯಾರಂಟಿ ಚಲ್ತಿ ಹೈ, ವೋ ಹೈ ಮೋದಿ ಕಿ ಗ್ಯಾರಂಟಿ (ದೇಶದಲ್ಲಿ ಕೆಲಸ ಮಾಡುವ ಏಕೈಕ ಗ್ಯಾರಂಟಿ ಮೋದಿ ಗ್ಯಾರಂಟಿ), ಪ್ರಧಾನಿ ನರೇಂದ್ರ ಮೋದಿಜಿಯವರ ನಾಯಕತ್ವದಲ್ಲಿ ನಾವು ಅಭೂತಪೂರ್ವ ವಿಜಯಗಳನ್ನು ಗಳಿಸಿರುವುದು ನಮ್ಮ ಅದೃಷ್ಟ ಎಂದು ನಾವು ಪರಿಗಣಿಸುತ್ತೇವೆ. ಮೂರು ರಾಜ್ಯಗಳಲ್ಲಿ ನಾವು ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಬಿಜೆಪಿಯು ಚುನಾವಣೆ ಎದುರಿಸಿದಾಗಲೆಲ್ಲೆ ಪ್ರಧಾನಿ ಮೋದಿಯವರು ನಮ್ಮನ್ನು ಯಾವಾಗಲೂ ಮುಂಭಾಗದಿಂದ ಮುನ್ನಡೆಸಿದ್ದಾರೆ ಎಂದು ನಡ್ಡಾ ಹೇಳಿದರು. \ No newline at end of file diff --git a/eesanje/url_47_225_1.txt b/eesanje/url_47_225_1.txt new file mode 100644 index 0000000000000000000000000000000000000000..37148e835bc50b7798d2fe555d4fa8c15aa27780 --- /dev/null +++ b/eesanje/url_47_225_1.txt @@ -0,0 +1,6 @@ +ಹಡಗು ತಡೆದು ಸಮುದ್ರದಲ್ಲಿ ಪ್ರತಿಭಟನೆ +ಥಾಣೆ, ಡಿ 3 (ಪಿಟಿಐ) ಜವಾಹರಲಾಲ್ ನೆಹರು ಬಂದರು ಯೋಜನೆಗೆ ಭೂಮಿ ನೀಡಿದ ಗ್ರಾಮಸ್ಥರು ಸಮುದ್ರದ ಮಧ್ಯದಲ್ಲಿ ಪ್ರತಿಭಟನೆ ನಡೆಸಿದರು ಮತ್ತು ನವಿ ಮುಂಬೈನ ಬಂದರಿನಲ್ಲಿ ಹಡಗುಗಳ ಸಂಚಾರವನ್ನು ತಡೆದಿದ್ದಾರೆ. +ಜೆಎನ್‍ಪಿಟಿಯಲ್ಲಿ ಹಡಗುಗಳ ಸಂಚಾರವನ್ನು ತಡೆದು ಸಮುದ್ರ ಮಧ್ಯದಲ್ಲಿ ಪ್ರತಿಭಟನೆ ನಡೆಸಿದ ಸುಮಾರು 60 ಅಪರಿಚಿತ ಪುರುಷರು ಮತ್ತು ಮಹಿಳೆಯರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ ಎಂದು ನ್ಹವಾ ಶೇವಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಹನುಮಾನ್ ಕೋಳಿವಾಡದ ಗ್ರಾಮಸ್ಥರು ಒಳಬರುವ ಮತ್ತು ಹೊರಹೋಗುವ ಹಡಗುಗಳಿಗೆ ನಾಲೆಯನ್ನು ತಡೆದು ದೋಣಿಯನ್ನು ಬಳಸಿದರು ಮತ್ತು ಹಡಗು ಮಾರ್ಗಗಳಿಗೆ ಅಡ್ಡಿಪಡಿಸಿದರು, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದರು. +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +ಹನುಮಾನ ಕೋಳಿವಾಡ ಗ್ರಾಮದ ಸರಪಂಚ ಪರಮಾನಂದ ಕೋಳಿ ಮಾತನಾಡಿ, ಬಂದರು ಯೋಜನೆಗೆ ಭೂಸ್ವಾೀಧಿನಪಡಿಸಿಕೊಂಡಿರುವ ಜನರು ಕಳೆದ 38 ವರ್ಷಗಳಿಂದ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸುತ್ತಿದ್ದು, ಯಾವುದೇ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ. \ No newline at end of file diff --git a/eesanje/url_47_225_10.txt b/eesanje/url_47_225_10.txt new file mode 100644 index 0000000000000000000000000000000000000000..bd56e87764bce33108d6ffe5ccf64501c341a8b2 --- /dev/null +++ b/eesanje/url_47_225_10.txt @@ -0,0 +1,8 @@ +ಜಿಎಸ್‍ಟಿ ಸಂಗ್ರಹ ಶೇ.15ರಷ್ಟು ಏರಿಕೆ +ನವದೆಹಲಿ,ಡಿ.2- ನವೆಂಬರ್‍ನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು 1.68 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹ ಶೇ.15ರಷ್ಟು ಏರಿಕೆ ಕಂಡಿದೆ. ಆದಾಗ್ಯೂ ಕಳೆದ ಅಕ್ಟೋಬರ್‍ಗೆ ಹೋಲಿಸಿದರೆ ನವೆಂಬರ್‍ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಕುಸಿತ ಕಂಡುಬಂದಿದೆ.ಅಕ್ಟೋಬರ್‌ಲ್ಲಿ1.72 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. +ಹಣಕಾಸು ಸಚಿವಾಲಯವು ಜಿಎಸ್ಟಿ ಸಂಗ್ರಹದ ಡೇಟಾವನ್ನು ಬಿಡುಗಡೆ ಮಾಡಿದ್ದು, 2023-24ರ ಹಣಕಾಸು ವರ್ಷದಲ್ಲಿ ಇದು ಆರನೇ ಬಾರಿಗೆ 1.60 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಜಿಎಸ್ಟಿ ಸಂಗ್ರಹವಾಗಿದೆ. ನವೆಂಬರ್‌ನಲ್ಲಿ ಸಿಜಿಎಸ್ಟಿ 30,420 ಕೋಟಿ ರೂ., ಎಸ್‍ಜಿಎಸ್ಟಿ 38,226 ಕೋಟಿ ರೂ., ಐಜಿಎಸ್ಟಿ 87,009 ಕೋಟಿ ರೂ. ಸಂಗ್ರಹವಾಗಿದ್ದು ಒಟ್ಟಾರೆ 1,67,929 ಕೋಟಿ ರೂ. ಜಿಎಸ್‍ಟಿ ಸಂಗ್ರಹವಾಗಿದೆ. +2023-24ರ ಹಣಕಾಸು ವರ್ಷದಲ್ಲಿ ಏಪ್ರಿಲ್‍ನಿಂದ ನವೆಂಬರ್ ಅವಧಿಯಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ಶೇ.11.9ರಷ್ಟು ಏರಿಕೆಯಾಗಿ 13,32,440 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷದ ಇದೇ ಅವಯಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು 11,90,920 ಕೋಟಿ ರೂ. ಇತ್ತು. +ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ : ತನಿಖೆ ಬಗ್ಗೆ ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..? +ನಂ.2 ಸ್ಥಾನದಲ್ಲಿ ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಜಿಎಸ್ಟಿ ಸಂಗ್ರಹದಲ್ಲಿ ಮಹಾರಾಷ್ಟ್ರಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕವು 2ನೇ ಸ್ಥಾನವನ್ನು ಕಾಯ್ದುಗೊಂಡಿದೆ. ಮಹಾರಾಷ್ಟ್ರದಲ್ಲಿ ಜಿಎಸ್ಟಿ ಸಂಗ್ರಹವು ಶೇ.18ರಷ್ಟು ವೃದ್ಧಿಯಾಗಿ 25,585 ಕೋಟಿ ರೂ.ಗೆ ತಲುಪಿದೆ. +ಕಳೆದ ಎಂಟು ತಿಂಗಳಲ್ಲಿ ಸರಾಸರಿ ಜಿಎಸ್ಟಿ ಸಂಗ್ರಹವು ಪ್ರತಿ ತಿಂಗಳು 1.66 ಲಕ್ಷ ಕೋಟಿ ರೂ. ಇದೆ. 2022-23ರ ಇದೇ ಅವಧಿಯಲ್ಲಿ ಸರಾಸರಿ 1.49 ಲಕ್ಷ ಕೋಟಿ ರೂ. ಇತ್ತು. ಈ ಹಣಕಾಸು ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜಿಎಸ್ಟಿ ಸಂಗ್ರಹವು 1,87,035 ಕೋಟಿ ರೂ.ಗಳಾಗಿದ್ದು, ಇದು ಗರಿಷ್ಠ ದಾಖಲೆಯಾಗಿದೆ. ಇದರ ನಂತರ ಮೇ ಮತ್ತು ಸೆಪ್ಟೆಂಬರ್ ನಡುವೆ ಸ್ವಲ್ಪ ಇಳಿಕೆ ಕಂಡುಬಂದಿತ್ತು. +ಕಳೆದ ನವೆಂಬರ್‍ನಲ್ಲಿ ಕರ್ನಾಟಕದಲ್ಲಿ ಜಿಎಸ್ಟಿ ಸಂಗ್ರಹವು ಶೇ. 17ರಷ್ಟು ವೃದ್ಧಿಯಾಗಿದ್ದು 11,970 ಕೋಟಿ ರೂ.ಗೆ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ರಾಜ್ಯದಲ್ಲಿ 10,238 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು. \ No newline at end of file diff --git a/eesanje/url_47_225_11.txt b/eesanje/url_47_225_11.txt new file mode 100644 index 0000000000000000000000000000000000000000..85d6f6c940c3e9164d3db155913581ea4de6d72a --- /dev/null +++ b/eesanje/url_47_225_11.txt @@ -0,0 +1,13 @@ +ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಹೆಚ್ಚಿದ ಕಾತುರ +ನವದೆಹಲಿ, ಡಿ. 2- ಮುಂಬರುವ 2024 ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಹಲವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತಗಳ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿ ಬಹುತೇಕ ಮಧ್ಯಾಹ್ನದೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. +ಈಶಾನ್ಯ ರಾಜ್ಯವಾದ ಮಿಜೋರಾಂನಲ್ಲಿ ಮತಗಳ ಎಣಿಕೆ ಸೋಮವಾರ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈ ರಾಜ್ಯದಲ್ಲಿ ಕ್ರಿಶ್ಚಿಯನ್ ಸಮುದಾಯ ಹೆಚ್ಚಾಗಿರುವುದರಿಂದ ನಾಳೆ ಭಾನುವಾರ ಪ್ರಾರ್ಥನೆ ಸೇರಿದಂತೆ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡಬೇಕೆಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಆಯೋಗ ಸೋಮವಾರ ಮತ ಎಣಿಕೆ ನಡೆಸಲಿದೆ. +2024 ರ ಲೋಕಸಭೆ ಚುನಾವಣಾ ದೃಷ್ಟಿಯಿಂದ ಈ ಐದು ರಾಜ್ಯಗಳ ಫಲಿತಾಂಶ ಬಿಜೆಪಿ, ಕಾಂಗ್ರೆಸ್ ಹಾಗೂ ವಿವಿಧ ಪ್ರಾದೇಶಿಕ ಪಕ್ಷಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಬಿಜೆಪಿ ನೇತೃತ್ವದ ಎನ್‍ಡಿಎ ಶತ ಪ್ರಯತ್ನ ನಡೆಸಿದ್ದರೆ ಫಲಿತಾಂಶದ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ವೇಗಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಹರಸಾಹಸ ಪಡುತ್ತಿದೆ. +ಮೇಲ್ನೋಟಕ್ಕೆ ಫಲಿತಾಂಶ ಕೇಂದ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗುತ್ತದೆ. ವಿಧಾನಸಭೆ ಚುನಾವಣೆಗಳು ಆಯಾ ರಾಜ್ಯಗಳ ಸ್ಥಳೀಯ ವಿಷಯಗಳ ಮೇಲೆ ನಡೆಯುವುದರಿಂದ ಲೋಕಸಭೆ ಚುನಾವಣೆಗೂ, ಈ ಚುನಾವಣೆಗೂ ಹೋಲಿಕೆ ಮಾಡುವಂತಿಲ್ಲ ಎಂಬುದು ರಾಜಕೀಯ ಪಕ್ಷಗಳ ಮುಖಂಡರ ವಾದವಾಗಿದೆ. +ಆದರೆ ಜನರ ನಾಡಿಮಿಡಿತವನ್ನು ಅರಿಯಲು ಈ ಚುನಾವಣೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಸೆಮಿಫೈನಲ್ ಎಂದೇ ಹೇಳಲಾಗುತ್ತದೆ. ಹೆಚ್ಚು ರಾಜ್ಯಗಳನ್ನು ಗೆದ್ದ ಪಕ್ಷ ಮತದಾರರು ತಮ್ಮ ಪರವಾಗಿ ಇದ್ದಾರೆ. ಇದು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಬಿಂಬಿಸಿಕೊಳ್ಳುವ ಲೆಕ್ಕಾಚಾರದಲ್ಲಿವೆ. +ಇದಕ್ಕೆ ವ್ಯತಿರಿಕ್ತ ಎನ್ನುವಂತೆ 2018 ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‍ಗಢದಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಆದರೆ 6 ತಿಂಗಳ ನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಈ ಮೂರೂ ರಾಜ್ಯಗಳಲ್ಲೂ ಬಿಜೆಪಿ ಶೇ.90 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬೀಗಿತ್ತು. ಅದರಲ್ಲೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ 25 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು. ಹೀಗೆ ಫಲಿತಾಂಶದ ಬಗ್ಗೆ ನಾನಾ ರಾಜಕೀಯ ಲೆಕ್ಕಾಚಾರಗಳು ಪ್ರಾರಂಭವಾಗಿದೆ. +ಕಿಂಗ್ ಚಾಲ್ರ್ಸ್ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ; ಮೋದಿ +ಮತದಾನ ಮುಗಿದ ಬಳಿಕ ವಿವಿಧ ಖಾಸಗಿ ಸುದ್ದಿವಾಹಿನಿಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೂ ಸಿಹಿಕಹಿಯನ್ನೇ ಮತದಾರ ನೀಡುವ ಸುಳಿವು ಕೊಟ್ಟಿದ್ದಾನೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರ ಹಿಡಿಯಬಹುದೆಂದು ಸಮೀಕ್ಷೆಗಳು ಹೇಳಿದರೆ ಛತ್ತೀಸ್‍ಗಢ ಹಾಗೂ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದೆಂಬ ಸುಳಿವು ಸಿಕ್ಕಿದೆ. ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಎಂಎನ್‍ಎಫ್ ಅಧಿಕಾರ ಹಿಡಿಯುವ ಸಾಧ್ಯತೆ ಇದೆ ಎಂದು ಸಮೀಕ್ಷೆಗಳು ಹೇಳಿವೆ. +ರಾಜಸ್ಥಾನದಲ್ಲಿ ಒಂದು ಬಾರಿ ಆಡಳಿತ ನಡೆಸಿದ ಪಕ್ಷ ಮತ್ತೊಂದು ಬಾರಿಗೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ನಂಬಿಕೆಯನ್ನು ಮುಖ್ಯಮಂತ್ರಿ ಗೆಹ್ಲೊಟ್ ತಮ್ಮ ಜಾದು ನಡೆಸಲಿದ್ದಾರೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ. ಫಲಿತಾಂಶಕ್ಕೂ ಮುನ್ನವೇ ಗೆಹ್ಲೊಟ್ ರಾಜ್ಯಪಾಲ ಕಲ್‍ರಾಜ್ ಮಿಶ್ರಾ ಅವರನ್ನು ಭೇಟಿಯಾಗಿರುವುದು ಕುತೂಹಲಕಾರಿಯಾಗಿದೆ. ಈ ಬೆಳವಣಿಗೆಗಳ ನಡುವೆಯೇ ಬಿಜೆಪಿ ನಾಯಕಿ ಮಾಜಿ ಸಿಎಂ ವಸುಂಧರಾ ರಾಜೇ ಕೂಡ ಕಳೆದ ರಾತ್ರಿ ದಿಢೀರನೇ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. +ನಾಲ್ಕು ಬಾರಿ ಆಡಳಿತ ನಡೆಸಿರುವ ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ಮತ್ತೆ ಅಧಿಕಾರಕ್ಕೆ ಬರುವ ಧಾವಂತದಲ್ಲಿದೆ. ಬಿಜೆಪಿಗೆ ಭರ್ಜರಿ ಠಕ್ಕರ್ ಕೊಟ್ಟಿರುವ ಕಾಂಗ್ರೆಸ್ ಕೂಡ ಅಧಿಕಾರಕ್ಕೆ ಬರುತ್ತೇವೆ ಎಂಬ ಉಮೇದಿನಲ್ಲಿದೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಛತ್ತೀಸ್‍ಗಢದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದೆಂದು ಸಮೀಕ್ಷೆ ಹೇಳಿದೆ. +ಎರಡು ಬಾರಿ ಅಧಿಕಾರಕ್ಕೆ ಬಂದ ತೆಲಂಗಾಣದಲ್ಲಿ ಈ ಬಾರಿ ಸಿಎಂ ಕೆ.ಸಿ.ಚಂದ್ರಶೇಖರ್ ರಾವ್ ಅವರ ಆಡಳಿತ ವಿರೋಧಿ ಅಲೆಯಿಂದ ಬಿಆರ್‍ಎಸ್‍ಗೆ ಹಿನ್ನಡೆಯಾಗಬಹುದೆಂದು ಹೇಳಲಾಗುತ್ತದೆ. ಕಾಂಗ್ರೆಸ್ ಇಲ್ಲಿ ಅಧಿಕಾರಕ್ಕೆ ಬರಬಹುದು ಇಲ್ಲವೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಸುಳಿವು ಸಿಕ್ಕಿದೆ. ಫಲಿತಾಂಶಕ್ಕೂ ಮುನ್ನವೇ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಹಿಡಿದುಕೊಳ್ಳಲು ಮುಂದಾಗಿವೆ. +ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಶಾಸಕರ ಕುದುರೆ ವ್ಯಾಪಾರ ನಡೆಯಬಹುದೆಂಬ ಭೀತಿಯಿಂದ ಈಗಾಗಲೇ ಅನೇಕ ಕಡೆ ರೆಸಾರ್ಟ್ ರಾಜಕೀಯ ಕೂಡ ಆರಂಭವಾಗಿದೆ. ಒಂದು ವೇಳೆ ಎಲ್ಲರ ನಿರೀಕ್ಷೆಗಳನ್ನೂ ತಲೆಕೆಳಗೆ ಮಾಡಿ ಯಾವುದಾದರೂ ಪಕ್ಷಕ್ಕೆ ಸ್ಪಷ್ಟ ಜನಾದೇಶ ಸಿಕ್ಕರೆ ಕುದುರೆ ವ್ಯಾಪಾರವೂ ಇಲ್ಲ, ರೆಸಾರ್ಟ್‍ಗೆ ತೆರಳುವ ಪ್ರಮೇಯವೂ ಉದ್ಭವಿಸುವುದಿಲ್ಲ. \ No newline at end of file diff --git a/eesanje/url_47_225_12.txt b/eesanje/url_47_225_12.txt new file mode 100644 index 0000000000000000000000000000000000000000..45daadd8207087eb2e7a40afce4e36a8ce30cc0f --- /dev/null +++ b/eesanje/url_47_225_12.txt @@ -0,0 +1,6 @@ +ನಕ್ಸಲರು ಹುದುಗಿಸಿಟ್ಟಿದ ಸ್ಪೋಟ, ಇಬ್ಬರು ಯೋಧರು ಗಂಭೀರ +ದಾಂತೇವಾಡ, ಡಿ 2 (ಪಿಟಿಐ) ಛತ್ತೀಸ್‍ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲೀಯರು ಹುದುಗಿದ್ದ ಸುಧಾರಿತ ಸ್ಪೋಟಕ ಸಾಧನ (ಐಇಡಿ) ಸ್ಪೋಟಗೊಂಡ ಪರಿಣಾಮ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬಾರ್ಸೂರು ಪೊಲೀಸ್ ಠಾಣಾ ವ್ಯಾಪ್ತಿಯ ಇಂದ್ರಾವತಿ ನದಿಯ ಸೇತುವೆಯ ಬಳಿ ಮಾವೋವಾದಿಗಳ ಬ್ಯಾನರ್‍ನಲ್ಲಿ ಅಡಗಿಸಿಟ್ಟಿದ್ದ ಸ್ಪೋಟಕವನ್ನು ಭದ್ರತಾ ಸಿಬ್ಬಂದಿ ತಟಸ್ಥಗೊಳಿಸುತ್ತಿದ್ದಾಗ ಇಂದು ಬೆಳಿಗ್ಗೆ ಸ್ಪೋಟಿಸಿದೆ ಎಂದು ಸಿಆರ್‍ಪಿಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ನಡ್ಡಾ ಹುಟ್ಟುಹಬ್ಬ : ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯರಿಂದ ಶುಭಾಶಯ +ಇಂದಿನಿಂದ ಪ್ರಾರಂಭವಾಗಿರುವ ಪೀಪಲ್ಸ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‍ಜಿಎ) ಸಪ್ತಾಹದ ಅಂಗವಾಗಿ ಬಾರ್ಸೂರು-ಪಲ್ಲಿ ಮಾರ್ಗದಲ್ಲಿ ನಕ್ಸಲೀಯರ ಚಲನವಲನದ ಬಗ್ಗೆ ಸುಳಿವು ನೀಡಿದ ಮೇರೆಗೆ ಸಿಆರ್‍ಪಿಎಫ್‍ನ 195 ನೇ ಬೆಟಾಲಿಯನ್ ತಂಡವನ್ನು ಅಲ್ಲಿಗೆ ರವಾನಿಸಲಾಗಿತ್ತು. ಸಾತ್‍ಧಾರ್ ಸೇತುವೆಯ ಬಳಿ ಮಾವೋವಾದಿಗಳ ಬ್ಯಾನರ್ ಮತ್ತು ಐಇಡಿ ಬಚ್ಚಿಟ್ಟಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಅದನ್ನು ನಿಷ್ಕ್ರಿಯಗೊಳಿಸಲು ಪ್ರಾರಂಭಿಸಿದರು. +ಆದರೆ, ಈ ಪ್ರಕ್ರಿಯೆಯಲ್ಲಿ ಅದು ಸೋಟಗೊಂಡು ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಇಬ್ಬರು ಯೋಧರನ್ನು ವಿಮಾನದಲ್ಲಿ ರಾಯ್‍ಪುರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_225_2.txt b/eesanje/url_47_225_2.txt new file mode 100644 index 0000000000000000000000000000000000000000..6c526cabbfbe2692a4ea6c377474f45f247fa9d9 --- /dev/null +++ b/eesanje/url_47_225_2.txt @@ -0,0 +1,6 @@ +ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಹರ್ಷೋದ್ಘಾರ +ನವದೆಹಲಿ,ಡಿ.3- ನಿರೀಕ್ಷೆಯಂತೆ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಪಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಎರಡು ರಾಜ್ಯಗಳಲ್ಲೂ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸುತ್ತಿದ್ದು, ಜೈ ಮೋದಿಜೀ ಘೋಷಣೆ ಕೂಗುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. +ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಕಾಯ್ದುಕೊಂಡಿರುವುದರಿಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಿವಾಸದ ಮುಂದೆ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ಜಯಘೋಷ ಮೊಳಗಿಸುತ್ತಿದ್ದಾರೆ. ಮಹಿಳೆಯರು ಕುಣಿದು ಕುಪ್ಪಳಿಸಿ ಬಣ್ಣದೋಕುಳಿ ಎರಚಿ ತಮ್ಮ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +ಅದೇ ರೀತಿ ರಾಜಸ್ಥಾನದಲ್ಲೂ ಆಡಳಿತರೂಢ ಕಾಂಗ್ರೆಸ್ ಹಿನ್ನಡೆಯಲ್ಲಿದ್ದು, ಅಲ್ಲೂ ಕೇಸರಿ ಪಡೆ ಕಮಾಲು ಮಾಡುತ್ತಿರುವುದರಿಂದ ಬಿಜೆಪಿ ಕಾರ್ಯಕರ್ತರು ರಾಜ್ಯದೆಲ್ಲೇಡೆ ಸಂಭ್ರಮಿಸುತ್ತಿದ್ದಾರೆ.ರಸ್ತೆ, ರಸ್ತೆಗಳಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ. +ಒಟ್ಟಾರೆ, ರಾಜಸ್ತಾನ ಮತ್ತು ಮಧ್ಯಪ್ರದೇಶದಲ್ಲಿ ಕಮಲ ಅರಳುವುದು ಖಚಿತವಾಗಿದ್ದು, ಛತೀಸ್‍ಗಢದಲ್ಲೂ ಆರಂಭಿಕ ಹಿನ್ನೆಡೆ ನಂತರ ಬಿಜೆಪಿ ಪಕ್ಷ ಚೇತರಿಸಿಕೊಂಡಿರುವುದರಿಂದ ಚುನಾವಣಾ ಫಲಿತಾಂಶ ಕೂತುಹಲಕ್ಕೆ ಎಡೆ ಮಾಡಿಕೊಟ್ಟಿದೆ. ಇನ್ನು ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಪಟ್ಟಿದ್ದು, ಅಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಷೋದ್ಘಾರ ಮುಗಿಲು ಮುಟ್ಟಿದೆ. \ No newline at end of file diff --git a/eesanje/url_47_225_3.txt b/eesanje/url_47_225_3.txt new file mode 100644 index 0000000000000000000000000000000000000000..f8d7b9ae13724e49f90cbf0c626a3d6c0c965a1c --- /dev/null +++ b/eesanje/url_47_225_3.txt @@ -0,0 +1,5 @@ +ಡಿ.6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ +ಬೆಂಗಳೂರು,ಡಿ.3- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಡಿ. 6ರಂದು ವಿಪಕ್ಷ ನಾಯಕರ ಸಭೆ ಕರೆದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಐಎನ್‍ಡಿಐಎ ಒಕ್ಕೂಟದ ನಾಯಕರ ಸಭೆ ಕರೆದಿರುವ ಮಲ್ಲಿಕಾರ್ಜುನ ಖರ್ಗೆಯವರು ಅಂದು ಮಹತ್ವದ ಚರ್ಚೆ ನಡೆಸಲಿದ್ದಾರೆ. +ಮಧ್ಯಪ್ರದೇಶ, ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ತೀರಾ ಮುಖಭಂಗವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದತ್ತ ದಾಪುಗಾಲು ಇಟ್ಟಿದೆ. ಛತ್ತೀಸ್‍ಗಢದಲ್ಲಿ ಬಿಜೆಪಿ ಪ್ರಭಲ ಪೈಪೋಟಿ ನೀಡಿದೆ. +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +ಮುಂಬರುವ ಲೋಕಸಭೆ ಚುನಾವಣೆಗೆ ಈ ಚುನಾವಣಾ ಫಲಿತಾಂಶ ದಿಕ್ಸೂಚಿಯಂತೆ ಪರಿಗಣಿಸಲಾಗಿದ್ದು, ಪ್ರತಿಪಕ್ಷಗಳು ಪುಟಿದೇಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಖರ್ಗೆಯವರು ಡಿ. 6 ರಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದು, ಅಂದಿನ ಸಭೆ ಮಹತ್ವ ಪಡೆದುಕೊಂಡಿದೆ. \ No newline at end of file diff --git a/eesanje/url_47_225_4.txt b/eesanje/url_47_225_4.txt new file mode 100644 index 0000000000000000000000000000000000000000..44a720ac88b2307e8b6842c162fb6a6baec08c3a --- /dev/null +++ b/eesanje/url_47_225_4.txt @@ -0,0 +1,9 @@ +ದೇಶದ ಜಿಡಿಪಿ ಹೊರಸೂಸುವಿಕೆ ಶೇ.33 ಕಡಿಮೆಯಾಗಿದೆಯಂತೆ +ದುಬೈ, ಡಿಸೆಂಬರ್ 3 (ಪಿಟಿಐ) ಭಾರತವು 2005 ಮತ್ತು 2019ರ ನಡುವೆ ತನ್ನ ಜಿಡಿಪಿ ಹೊರಸೂಸುವಿಕೆಯ ತೀವ್ರತೆಯನ್ನು ಶೇ.33 ರಷ್ಟು ಕಡಿಮೆ ಮಾಡಿದೆ, 11 ವರ್ಷಗಳ ಮುಂಚಿತವಾಗಿ ಗುರಿಯನ್ನು ಸಾಧಿಸಿದೆ ಎಂದು ಸರ್ಕಾರದ ವರದಿಯೊಂದು ತಿಳಿಸಿದೆ. ಭಾರತದ ಜಿಡಿಪಿಯು 7 ಪ್ರತಿಶತದ ಸಂಚಿತ ವಾರ್ಷಿಕ ಬೆಳವಣಿಗೆಯ ದರದಲ್ಲಿ ಬೆಳೆದಿದೆ ಆದರೆ ಈ ಅವಧಿಯಲ್ಲಿ ಅದರ ಹೊರಸೂಸುವಿಕೆಗಳು ವರ್ಷಕ್ಕೆ ಕೇವಲ 4 ಪ್ರತಿಶತದಷ್ಟು ಏರಿದೆ ಎಂದು ವರದಿ ಹೇಳಿದೆ, ಇದು ಗ್ರಹ-ಬೆಚ್ಚಗಾಗುವ ಹಸಿರುಮನೆ ಅನಿಲದಿಂದ ತನ್ನ ಆರ್ಥಿಕ ಬೆಳವಣಿಗೆಯನ್ನು ಬೇರ್ಪಡಿಸುವಲ್ಲಿ ದೇಶವು ಯಶಸ್ವಿಯಾಗಿದೆ ಎಂದು ಸೂಚಿಸುತ್ತದೆ. +ದುಬೈನಲ್ಲಿ ನಡೆಯುತ್ತಿರುವ ಹವಾಮಾನ ಮಾತುಕತೆಯ ಸಂದರ್ಭದಲ್ಲಿ ಹವಾಮಾನ ಬದಲಾವಣೆಯ ಮೇಲಿನ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ ಮೂರನೇ ರಾಷ್ಟ್ರೀಯ ಸಂವಹನ ಎಂಬ ವರದಿಯನ್ನು ಯುಎನ್ ಹವಾಮಾನ ಬದಲಾವಣೆ ಸಂಸ್ಥೆಗೆ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ರಾಷ್ಟ್ರೀಯ ಸಂವಹನಗಳು ದೇಶದ ಹಸಿರುಮನೆ ಅನಿಲ ಹೊರಸೂಸುವಿಕೆ, ಹವಾಮಾನ ಬದಲಾವಣೆಗೆ ಅದರ ದುರ್ಬಲತೆ ಮತ್ತು ಹೊರಸೂಸುವಿಕೆಯನ್ನು ತಗ್ಗಿಸಲು ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಹೊಂದಿಕೊಳ್ಳಲು ಯಾವುದೇ ದೇಶವು ತೆಗೆದುಕೊಳ್ಳುತ್ತಿರುವ ಕ್ರಮಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. +ಭಾರತವು 2005 ಮತ್ತು 2019 ರ ನಡುವೆ ತನ್ನ ಜಿಡಿಪಿ ಹೊರಸೂಸುವಿಕೆಯ ತೀವ್ರತೆಯನ್ನು ಶೇ 33 ರಷ್ಟು ಕಡಿಮೆ ಮಾಡಿದೆ ಎಂದು ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ, 11 ವರ್ಷಗಳ ಮುಂಚಿತವಾಗಿ ಗುರಿಯನ್ನು ಸಾಧಿಸಲಾಗಿದೆ. ಆದಾಗ್ಯೂ, ದೇಶದ ಒಟ್ಟು ಹೊರಸೂಸುವಿಕೆಗಳು (ಭೂ ಬಳಕೆ, ಭೂ-ಬಳಕೆ ಬದಲಾವಣೆ ಮತ್ತು ಅರಣ್ಯ ವಲಯ ಸೇರಿದಂತೆ) 2016 ಕ್ಕೆ ಸಂಬಂಧಿಸಿದಂತೆ ಶೇಕಡಾ 4.56 ರಷ್ಟು ಹೆಚ್ಚಾಗಿದೆ. ಆರ್ಥಿಕತೆಯ ಹೊರಸೂಸುವಿಕೆಯ ತೀವ್ರತೆಯು ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಪ್ರತಿ ಯೂನಿಟ್ ಹೆಚ್ಚಳಕ್ಕೆ ಹೊರಸೂಸುವ ಹಸಿರುಮನೆ ಅನಿಲಗಳ ಒಟ್ಟು ಪ್ರಮಾಣವನ್ನು ಸೂಚಿಸುತ್ತದೆ. ಇದು ಸಂಪೂರ್ಣ ಹೊರಸೂಸುವಿಕೆಯಿಂದ ಭಿನ್ನವಾಗಿದೆ. +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +2005 ರ ಮಟ್ಟಕ್ಕೆ ಹೋಲಿಸಿದರೆ 2030 ರ ವೇಳೆಗೆ ನಮ್ಮ ಹೊರಸೂಸುವಿಕೆಯ ತೀವ್ರತೆಯನ್ನು ಶೇಕಡಾ 45 ರಷ್ಟು ಕಡಿಮೆ ಮಾಡುವ ಗುರಿಯನ್ನು ಸಾಧಿಸಲು ನಾವು ಉತ್ತಮ ಹಾದಿಯಲ್ಲಿದ್ದೇವೆ ಮತ್ತು 2030 ರ ವೇಳೆಗೆ ಮರ ಮತ್ತು ಅರಣ್ಯದ ಮೂಲಕ 2.5 ರಿಂದ 3.0 ಶತಕೋಟಿ ಟನ್‍ಗಳಷ್ಟು ಹೆಚ್ಚುವರಿ ಕಾರ್ಬನ್ ಸಿಂಕ್ ಅನ್ನು ರಚಿಸುತ್ತೇವೆ. ಎಂದು ಸಚಿವರು ಹೇಳಿದರು. +1.5 ಡಿಗ್ರಿ ಸೆಲ್ಸಿಯಸ್‍ನ ರಕ್ಷಾಕವಚವನ್ನು ಉಲ್ಲಂಘಿಸಿದರೆ ಶಾಖ/ಶೀತ ಅಲೆಗಳು, ಪ್ರವಾಹಗಳು, ಚಂಡಮಾರುತಗಳು, ಭಾರೀ ಮಳೆ, ಹಿಮನದಿಗಳ ಕರಗುವಿಕೆ ಮತ್ತು ಪರಿಣಾಮವಾಗಿ ಸಮುದ್ರ ಮಟ್ಟ ಏರಿಕೆಯಂತಹ ಹವಾಮಾನ ಪರಿಣಾಮಗಳು ಕೆಟ್ಟದಾಗಿರುತ್ತವೆ ಎಂದು ವಿಜ್ಞಾನಿಗಳು ಹೇಳುತ್ತಾರೆ. +ಮೂರನೇ ರಾಷ್ಟ್ರೀಯ ಸಂವಹನದ ಪ್ರಕಾರ, ಇಂಧನ ವಲಯವು ಮಾನವಜನ್ಯ ಹೊರಸೂಸುವಿಕೆಯ ಗರಿಷ್ಠ ಪಾಲನ್ನು (ಶೇ. 75.81) ಹೊಂದಿದೆ, ನಂತರ ಕೃಷಿ (ಶೇ. 13.44), ಕೈಗಾರಿಕಾ ಪ್ರಕ್ರಿಯೆ ಮತ್ತು ಉತ್ಪನ್ನ ಬಳಕೆ (ಶೇ. 8.41), ಮತ್ತು ತ್ಯಾಜ್ಯ (ಶೇ. 2.34) ಕೈಗಾರಿಕಾ ವಲಯವು 4,85,472 ಗಿಗಾಟನ್ ಇಂಗಾಲದ ಡೈಆಕ್ಸೈಡ್ ಸಮಾನ ಹೊರಸೂಸುವಿಕೆಯನ್ನು ತೆಗೆದುಹಾಕಿತು. ಒಟ್ಟು ಹೊರಸೂಸುವಿಕೆ ಮತ್ತು ತೆಗೆದುಹಾಕುವಿಕೆಯನ್ನು ಪರಿಗಣಿಸಲಾಗಿದೆ. \ No newline at end of file diff --git a/eesanje/url_47_225_5.txt b/eesanje/url_47_225_5.txt new file mode 100644 index 0000000000000000000000000000000000000000..c5cc77dfc5b72318ffd27d8694f43b49adeab023 --- /dev/null +++ b/eesanje/url_47_225_5.txt @@ -0,0 +1,5 @@ +ಮತದಾರರಿಗೆ ಧನ್ಯವಾದ ಅರ್ಪಿಸಿದ ಶಿವರಾಜ್ ಸಿಂಗ್ ಚೌಹಾಣ್ +ಭೋಪಾಲ್,ಡಿ.3- ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. 230 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 124 ಸ್ಥಾನಗಳಿಗೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಮತ್ತೆ ಸರ್ಕಾರ ರಚಿಸಲು ಆಶೀರ್ವಾದ ಮಾಡಿರುವ ರಾಜ್ಯದ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. +ಜನರ ಆಶೀರ್ವಾದ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದೊಂದಿಗೆ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರವನ್ನು ರಚಿಸುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಚೌಹಾಣ್ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ, +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಜನರ ನಂಬಿಕೆ ಬಿಜೆಪಿಯೊಂದಿಗಿರುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಫಲಿತಾಂಶ ಬರುವವರೆಗೆ ನಾವು ಕಾಯುತ್ತೇವೆ. ನಾವು ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ. ಜನರು ಪ್ರಧಾನಿ ಮತ್ತು ಕಲ್ಯಾಣ ಯೋಜನೆಗಳು ಇಂತಹ ಜನಾದೇಶಕ್ಕೆ ಕಾರಣವಾಗಿವೆ ಎಂದಿದ್ದಾರೆ. \ No newline at end of file diff --git a/eesanje/url_47_225_6.txt b/eesanje/url_47_225_6.txt new file mode 100644 index 0000000000000000000000000000000000000000..6bfa0597cba1aece62bdea3b8329f0ae81882821 --- /dev/null +++ b/eesanje/url_47_225_6.txt @@ -0,0 +1,6 @@ +ಜಾರ್ಖಂಡ್‍ನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ : ಮರಾಂಡಿ +ಧನ್‍ಬಾದ್, ಡಿ 3 (ಪಿಟಿಐ) ಹೇಮಂತ್ ಸೊರೇನ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಆರೋಪಿಸಿದ್ದಾರೆ.ಇಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಮರಾಂಡಿ ಈ ವಿಷಯ ತಿಳಿಸಿದರು. +ಕ್ರಿಮಿನಲ್‍ಗಳು, ಕಲ್ಲಿದ್ದಲು ಕಳ್ಳರು ಮತ್ತು ಪೊಲೀಸರ ನಡುವಿನ ನಂಟು ಜಾರ್ಖಂಡ್‍ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಪಾಶ್ರ್ವವಾಯುವಿಗೆ ತಂದಿದೆ. ಕಲ್ಲಿದ್ದಲು ಬೆಲ್ಟ ಧನ್‍ಬಾದ್‍ನಲ್ಲಿನ ಸಂಪೂರ್ಣ ಯಂತ್ರಗಳು ಕಲ್ಲಿದ್ದಲು ಕಳ್ಳತನದಲ್ಲಿ ತೊಡಗಿವೆ ಮತ್ತು ಅದರ ಪಾಲು ನೇರವಾಗಿ ಮುಖ್ಯಮಂತ್ರಿಗೆ ಹೋಗುತ್ತದೆ ಎಂದು ಅವರು ಆರೋಪಿಸಿದರು. +ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ( ) +ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಜಾರಿ ನಿರ್ದೇಶನಾಲಯದಿಂದ (ಇಡಿ) ಓಡಿಹೋಗುತ್ತಿದ್ದಾರೆ ಎಂದು ಮರಾಂಡಿ ಆರೋಪಿಸಿದ್ದಾರೆ. ಸಿಎಂ ಯಾವುದೇ ತಪ್ಪು ಮಾಡಿಲ್ಲ ಎಂದಾದರೆ ಇಡಿಯಿಂದ ಏಕೆ ಓಡಿ ಹೋಗುತ್ತಿದ್ದಾರೆ, ಅವರು ಶುದ್ಧರಾಗಿದ್ದು, ಯಾವುದೇ ಕಾಳಿ ಕಮೈ (ಕಪ್ಪುಹಣ) ಸಂಪಾದಿಸದಿದ್ದರೆ ಇಡಿಯನ್ನು ದಿಟ್ಟತನದಿಂದ ಎದುರಿಸಬೇಕು ಎಂದು ಮರಾಂಡಿ ಹೇಳಿದರು. +ಜಾರ್ಖಂಡ್‍ನಲ್ಲಿ ಅಪರಾಧ ಮತ್ತು ನಿರುದ್ಯೋಗವು ಉತ್ತುಂಗದಲ್ಲಿದೆ. ರಾಜ್ಯದ ಯುವಕರ ವಲಸೆ ಮುಂದುವರೆದಿದೆ. ಉದ್ಯೋಗದ ಕಳಪೆ ಸ್ಥಿತಿಯಿಂದಾಗಿ, ಉದ್ಯೋಗಕ್ಕಾಗಿ ಉತ್ತರಾಖಂಡಕ್ಕೆ ತೆರಳಿದ್ದ ಜಾರ್ಖಂಡ್‍ನ 15 ಕಾರ್ಮಿಕರು ಸುರಂಗದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅವರು ಹೇಳಿದರು. ಧನ್‍ಬಾದ್‍ನಲ್ಲಿ ಸುಲಿಗೆ ಹೆಚ್ಚುತ್ತಿದೆ ಎಂದು ಧನಬಾದ್ ಸದರ್ ಬಿಜೆಪಿ ಶಾಸಕ ಹೇಳಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಮತ್ತು ಕಲ್ಲಿದ್ದಲು ಲೂಟಿಯ ಬಗ್ಗೆ ಸಂಸದ ಪಿಎನ್ ಸಿಂಗ್ ಕಳವಳ ವ್ಯಕ್ತಪಡಿಸಿದರು. \ No newline at end of file diff --git a/eesanje/url_47_225_7.txt b/eesanje/url_47_225_7.txt new file mode 100644 index 0000000000000000000000000000000000000000..baceffd2816308e2c33255ee15e8e5dbf9a57106 --- /dev/null +++ b/eesanje/url_47_225_7.txt @@ -0,0 +1,7 @@ +ನಾಲ್ಕಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರ ಸಜೀವ ದಹನ, ಮೂವರ ರಕ್ಷಣೆ +ಮುಂಬೈ, ಡಿ.3 (ಪಿಟಿಐ) – ಮುಂಬೈನ ಗಿರ್ಗಾಂವ್ ಚೌಪಾಟಿ ಬಳಿಯ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ತಡರಾತ್ರಿ 9.30 ರ ಸುಮಾರಿಗೆ ರಂಗ್ನೇಕರ್ ರಸ್ತೆಯಲ್ಲಿರುವ ಗೋಮತಿ ಭವನದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಆರು ಗಂಟೆಗಳ ನಂತರ ನಂದಿಸಲಾಗಿದೆ. +ಮೂರನೇ ಮಹಡಿಯಲ್ಲಿರುವ ಮನೆಯೊಂದರ ಮಲಗುವ ಕೋಣೆ ಮತ್ತು ಸ್ನಾನಗೃಹದಲ್ಲಿ ಎರಡು ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಟ್ಟಡದಿಂದ ಮೂವರನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ಎಂಟು ಅಗ್ನಿಶಾಮಕ ವಾಹನಗಳು ಮತ್ತು ಆರು ಜಂಬೋ ಟ್ಯಾಂಕರ್‍ಗಳು ಸ್ಥಳಕ್ಕೆ ಧಾವಿಸಿವೆ. +ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಅಂತಿಮ : ನಾಳೆಯೊಳಗೆ ಹೊರಬೀಳಲಿದೆ ಪಟ್ಟಿ +ಅಗ್ನಿಶಾಮಕ ಕಾರ್ಯಾಚರಣೆಗಾಗಿ ಒಟ್ಟು ಐದು ಮಾರ್ಗಗಳನ್ನು ಮಾಡಲಾಗಿದೆ, ಇದರಲ್ಲಿ ಎರಡು ಮೆಟ್ಟಿಲುಗಳು, ಪಕ್ಕದ ಕಟ್ಟಡದ ಉತ್ತರ ಮತ್ತು ದಕ್ಷಿಣ ಭಾಗದಿಂದ ತಲಾ ಒಂದು ಮತ್ತು ಆಂಗಸ್ ಲ್ಯಾಡರ್‍ನಿಂದ ಹೆಚ್ಚಿನ ಒತ್ತಡದ ರೇಖೆಯನ್ನು ಒಳಗೊಂಡಿವೆ ಎಂದು ಅಧಿಕಾರಿ ಹೇಳಿದರು. +ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅವರು ತಿಳಿಸಿದರು.ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_225_8.txt b/eesanje/url_47_225_8.txt new file mode 100644 index 0000000000000000000000000000000000000000..72f726a023cd60d30b64e65f7f5585fcb24040c1 --- /dev/null +++ b/eesanje/url_47_225_8.txt @@ -0,0 +1,8 @@ +ಆಂಧ್ರ, ತಮಿಳುನಾಡಿಗೆ ಚಂಡಮಾರುತದ ಎಚ್ಚರಿಕೆ +ನವದೆಹಲಿ,ಡಿ.3- ಮುಂದಿನ 12 ಗಂಟೆಗಳ ಕಾಲ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಗೆ ಭಾರತೀಯ ಹವಾಮಾನ ಇಲಾಖೆ ಚಂಡಮಾರುತದ ಎಚ್ಚರಿಕೆ ನೀಡಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ಆಳವಾದ ಖಿನ್ನತೆಯು ಮುಂದಿನ 12 ಗಂಟೆಗಳಲ್ಲಿ ಚಂಡಮಾರುತದ ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ ಮತ್ತು ಡಿಸೆಂಬರ್ 4 ರ ಮುಂಜಾನೆ ವೇಳೆಗೆ ದಕ್ಷಿಣ ಆಂಧ್ರಪ್ರದೇಶ ಮತ್ತು ಪಕ್ಕದ ಉತ್ತರ ತಮಿಳುನಾಡು ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯನ್ನು ತಲುಪುತ್ತದೆ. +ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ನಿನ್ನೆಯ ಆಳವಾದ ಖಿನ್ನತೆಯು ಕಳೆದ 6 ಗಂಟೆಗಳಲ್ಲಿ 10ಕಿ.ಮೀ ವೇಗದಲ್ಲಿ ವಾಯುವ್ಯಕ್ಕೆ ಚಲಿಸಿತು ಮತ್ತು ಅದೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿತ್ತು ಎಂದು ಪ್ರಕಟಣೆ ತಿಳಿಸಿದೆ. ಇದು ಮುಂದಿನ 12 ಗಂಟೆಗಳಲ್ಲಿ ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತದೆ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಸೈಕ್ಲೋನಿಕ್ ಚಂಡಮಾರುತವಾಗಿ ತೀವ್ರಗೊಳ್ಳುತ್ತದೆ ಮತ್ತು ಡಿಸೆಂಬರ್ 4 ರ ಮುಂಜಾನೆ ವೇಳೆಗೆ ದಕ್ಷಿಣ ಆಂಧ್ರಪ್ರದೇಶ ಮತ್ತು ಪಕ್ಕದ ಉತ್ತರ ತಮಿಳುನಾಡು ಕರಾವಳಿಯ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯನ್ನು ತಲುಪುತ್ತದೆ ಎಂದು ಅದು ಹೇಳಿದೆ. +ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಅಂತಿಮ : ನಾಳೆಯೊಳಗೆ ಹೊರಬೀಳಲಿದೆ ಪಟ್ಟಿ +ಸೈಕ್ಲೋನಿಕ್ ಚಂಡಮಾರುತವು ಡಿಸೆಂಬರ್ 5 ರ ಮುಂಜಾನೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ದಾಟಲಿದ್ದು, ಗಂಟೆಗೆ ಗರಿಷ್ಠ 80-90 ಕಿ.ಮೀ ನಿಂದ 100 ಕಿ.ಮೀ ವೇಗದಲ್ಲಿ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.ನಂತರ, ಇದು ಉತ್ತರದ ಕಡೆಗೆ ಬಹುತೇಕ ಸಮಾನಾಂತರವಾಗಿ ಚಲಿಸುತ್ತದೆ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯ ಸಮೀಪದಲ್ಲಿದೆ ಮತ್ತು ನೆಲ್ಲೂರು ಮತ್ತು ಮಚಲಿಪಟ್ನಂ ನಡುವೆ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಡಿಸೆಂಬರ್ 5 ರ ಮುಂಜಾನೆಯಲ್ಲಿ ಸೈಕ್ಲೋನಿಕ್ ಚಂಡಮಾರುತವಾಗಿ 80-90 ಕಿಮೀ ವೇಗದಲ್ಲಿ 100 ಕ್ಕೆ ಗರಿಷ್ಠ ನಿರಂತರ ಗಾಳಿ ಬೀಸುತ್ತದೆ. +ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಎಚ್ಚರಿಕೆಯ ನಂತರ, ಜನರನ್ನು ಎಚ್ಚರಿಸಲು ಚೆನ್ನೈ, ಕಡಲೂರು ಮತ್ತು ಎನ್ನೋರ್ ಬಂದರುಗಳಲ್ಲಿ ಸ್ಥಳೀಯ ಎಚ್ಚರಿಕೆಯ ಸಿಗ್ನಲ್ ಸಂಖ್ಯೆ ಅನ್ನು ಹಾರಿಸಲಾಗಿದೆ.ಇದಕ್ಕೂ ಮುನ್ನ, ವಿಶಾಖಪಟ್ಟಣಂ ಸೈಕ್ಲೋನ್ ಎಚ್ಚರಿಕೆ ಕೇಂದ್ರವು ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ಮೈಚಾಂಗ್ ಚಂಡಮಾರುತವು ನಗರವನ್ನು ಬಿಟ್ಟು ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ ಎಂದು ಮಂಗಳವಾರ ಬೆಳಿಗ್ಗೆ ಗಂಟೆಗೆ 100 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು. +ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಜಾರಿ : ಗುಂಡೂರಾವ್ +ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಮೂಡುತ್ತಿರುವ ಚಂಡಮಾರುತದ ಚಂಡಮಾರುತವು ದಕ್ಷಿಣ ಮತ್ತು ಪೂರ್ವ ಭಾರತದ ಹಲವಾರು ಪ್ರದೇಶಗಳಿಗೆ ಸಮಗ್ರ ಮಳೆಯ ಎಚ್ಚರಿಕೆಯನ್ನು ನೀಡಲು ಹವಾಮಾನ ಅಧಿಕಾರಿಗಳನ್ನು ಪ್ರೇರೇಪಿಸಿತು. ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಬಹುತೇಕ ಸ್ಥಳಗಳಲ್ಲಿ ಮಳೆಯಾಗುತ್ತಿದ್ದು, ಕೆಲವೆಡೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಿದೆ. \ No newline at end of file diff --git a/eesanje/url_47_225_9.txt b/eesanje/url_47_225_9.txt new file mode 100644 index 0000000000000000000000000000000000000000..aad8b7e24748f55bcd10631b7591f4553ea04cc0 --- /dev/null +++ b/eesanje/url_47_225_9.txt @@ -0,0 +1,22 @@ +ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ( ) +ಮಧ್ಯಪ್ರದೇಶ (ಒಟ್ಟು ಕ್ಷೇತ್ರಗಳು-229 / ಮ್ಯಾಜಿಕ್ ನಂಬರ್ -116) +ಬಿಜೆಪಿ :165ಕಾಂಗ್ರೆಸ್ :63ಬಿಎಸ್‌ಪಿ :01ಇತರೆ :01 +ರಾಜಸ್ತಾನ : (ಒಟ್ಟು ಕ್ಷೇತ್ರಗಳು-199 / ಮ್ಯಾಜಿಕ್ ನಂಬರ್ – 100)ಬಿಜೆಪಿ :115ಕಾಂಗ್ರೆಸ್ :70ಬಿಎಸ್‌ಪಿ :02ಇತರೆ :12 +ಛತ್ತೀಸಘಡ : (ಒಟ್ಟು ಕ್ಷೇತ್ರಗಳು-90 / ಮ್ಯಾಜಿಕ್ ನಂಬರ್ – 46)ಬಿಜೆಪಿ :53ಕಾಂಗ್ರೆಸ್ :35ಬಿಎಸ್‌ಪಿ :02ಇತರೆ :00 +ತೆಲಂಗಾಣ : (ಒಟ್ಟು ಕ್ಷೇತ್ರಗಳು-119 / ಮ್ಯಾಜಿಕ್ ನಂಬರ್ – 60)ಕಾಂಗ್ರೆಸ್ :64ಬಿಆರ್‌ಎಸ್‌ :40ಬಿಜೆಪಿ :08ಎಐಎಂಐಎಂ :06ಇತರೆ :00 +ಮುಂಬರುವ ಲೋಕಸಭಾ ಮಹಾ ಚುನಾವಣೆಯ ದಿಕ್ಸೂಚಿಯೆಂದೇ ಬಿಂಬಿಸಲಾಗಿರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಘಡದಲ್ಲಿ ಬಿಜೆಪಿ ಭರ್ಜರಿ ಜಯಭೇರಿ ದಾಖಲಿಸಿ, ತೆಲಂಗಾಣದಲ್ಲಿ ಕಾಂಗ್ರೆಸ್ ಅಪತ್ಯ ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ. +ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ನಡುವೆಯೂ ಬಿಜೆಪಿ 155ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಐತಿಹಾಸಿಕ ಜಯದತ್ತ ದಾಪುಗಾಲಿಟ್ಟಿದೆ. 52 ಜಿಲ್ಲಾ ಕೇಂದ್ರಗಳಲ್ಲಿ ಇಂದು 230 ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಇಂದು ಬಿಗಿಭದ್ರತೆಯ ನಡುವೆ ನಡೆದಿದ್ದು, ಮತ್ತೊಮ್ಮೆ ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತವಾಗಿದೆ. +ಶಿವರಾಜ್ ಸಿಂಗ್ ಚವ್ಹಾಣ್, ಜ್ಯೋತಿರಾತ್ಯ ಸಿಂಧ್ಯ ಅವರ ಜೋಡೆತ್ತಿನ ಹೋರಾಟ ಎದುರಾಳಿ ಕಾಂಗ್ರೆಸ್‍ನ್ನು ಮಣಿಸಿದೆ. ಬಿಜೆಪಿ ನೀಡಿದ್ದ ಅಯೋಧ್ಯೆಯ ರಾಮಮಂದಿರ ಉಚಿತ ತೀರ್ಥ ಯಾತ್ರೆ, ಮಹಿಳಾ ಸಬಲೀಕರಣ ಹಲವು ಭರವಸೆಗಳು ಇಲ್ಲಿ ವರ್ಕೌಟ್ ಆಗಿದೆ. +ಇಂಡಿಯಾ ಮೈತ್ರಿಕೂಟದ ಹೆಸರಿನಲ್ಲೇ ಇಲ್ಲಿ ಕಾಂಗ್ರೆಸ್, ಟಿಎಂಸಿ, ಎನ್‍ಸಿಪಿ ಸೇರಿದಂತೆ ಹಲವು ಪಕ್ಷಗಳ ಬಿಜೆಪಿ ವಿರುದ್ಧ ತೊಡೆ ತಟ್ಟಿ ನಿಂತರೂ ಅದನ್ನು ಬೇಸಿ ಕಮಲ ಪಡೆ ಗೆಲುವಿನ ಕೇಕೆ ಹಾಕಿದೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸದಿದ್ದರೂ ಈಗ ಹಾಲಿ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಅವರೇ ಮತ್ತೆ ಮುಖ್ಯಮಂತ್ರಿ ಗಾದಿ ಹಿಡಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಇನ್ನು ಕೇಂದ್ರ ಸಚಿವ ಜ್ಯೋತಿರಾತ್ಯ ಹೆಸರು ಕೂಡ ಕೇಳಿಬರುತ್ತಿದೆ. +ಇಬ್ಬರೂ ಕೂಡ ಭಾರೀ ಅಂತರದಿಂದ ಗೆಲುವು ಸಾಸಿದ್ದು, ಒಟ್ಟಾರೆ ಮುನ್ನಡೆ ಅಂಕಿಅಂಶಗಳ ಪ್ರಕಾರ 230 ಕ್ಷೇತ್ರಗಳಲ್ಲಿ ಬಿಜೆಪಿ 156, ಕಾಂಗ್ರೆಸ್ 65, ಬಿಎಸ್‍ಪಿ 01 ಹಾಗೂ ಇತರರು 01 ಸ್ಥಾನಗಳಲ್ಲಿದ್ದಾರೆ. ಇಲ್ಲಿ ಒಟ್ಟು 2533 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಬಿಜೆಪಿ ಇಲ್ಲಿ ರಣತಂತ್ರ ರೂಪಿಸಿ ನಾಲ್ವರು ಕೇಂದ್ರ ಸಚಿವರನ್ನು ಕೂಡ ವಿಧಾನಸಭಾ ಚುನಾವಣೆಗಿಳಿಸಿದ್ದು, ಅದರಲ್ಲಿ ಮೂವರು ಜಯಗಳಿಸಿದ್ದಾರೆ. +ಕಾಂಗ್ರೆಸ್‍ನ ಮುಖಂಡ ಹಾಗೂ ಮಾಜಿ ಸಿಎಂ ಕಮಲ್‍ನಾಥ್ ಗೆಲುವು ಸಾಧಿಸಿದ್ದರೂ ಕೂಡ ಪಕ್ಷ ಸೋಲು ಕಂಡಿದೆ. ಮಹಿಳಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ನಾವು ಘೋಷಿಸದೆ ಕಡೆಗಣಿಸಿದ ಕಾರಣ ನಮಗೆ ಸೋಲುಂಟಾಗಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯ ಶ್ರೀನಾಟಿ ಹೇಳಿದ್ದಾರೆ. +ಇನ್ನು ರಾಜಸ್ಥಾನದಲ್ಲಿ ನಾಯಕರ ಕಚ್ಚಾಟದಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಕಾನೂನು ಸುವ್ಯವಸ್ಥೆ ಹಾದಿ ತಪ್ಪಿದ್ದು, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಪಕ್ಷಕ್ಕೆ ಮುಳುವಾಗಿದೆ. ಇಲ್ಲಿ ಬಿಜೆಪಿ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತವಾಗಿದ್ದು, ಆರಂಭಿಕ ಮುನ್ನಡೆಯಲ್ಲಿ ಬಿಜೆಪಿ ಅಭ್ಯರ್ಥಿಗಳು 112 ಸ್ಥಾನಗಳಲ್ಲಿ ಮುಂದಿದ್ದು ಮ್ಯಾಜಿಕ್ ನಂಬರ್ 100ನ್ನು ದಾಟುವುದು ನಿಶ್ಚಿತವಾಗಿದೆ. +ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಪಕ್ಷೇತರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಎಸ್‍ಪಿ 2 ಹಾಗೂ ಇತರರು 2 ಸಾನಗಳಲ್ಲಿ ಮುನ್ನಡೆ ಸಾಸಿದ್ದಾರೆ. ಇದರಲ್ಲಿ ಕೆಲ ಬಂಡಾಯ ಬಿಜೆಪಿ ಅಭ್ಯರ್ಥಿಗಳು ಜಯದ ಕೇಕೆ ಹಾಕಿದ್ದಾರೆ. ಒಟ್ಟಾರೆ ರಾಜಸ್ಥಾನದಲ್ಲಿ ಈಗ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಎಂ ಸ್ಥಾನಕ್ಕೆ ವಸುಂಧರಾ ರಾಜೇ ಹೆಸರು ಮುಂಚೂಣಿಯಲ್ಲಿದೆ. +ಕಾಂಗ್ರೆಸ್ ಇಲ್ಲಿ ಪ್ರಬಲ ಪೈಪೋಟಿ ಕಂಡುಬಂದರೂ ಕೂಡ ನಂತರದ ಮತ ಎಣಿಕೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಇನ್ನು ಛತ್ತೀಸ್‍ಘಡದಲ್ಲಿ ಆರಂಭದ ಫಲಿತಾಂಶದ ಪ್ರಕಾರ ಬಿಜೆಪಿ ಸರಳ ಬಹುಮತ ಗಳಿಸಿದೆ. ಆದರೆ ಕಾಂಗ್ರೆಸ್ ಕೂಡ ಜಿದ್ದಾಜಿದ್ದಿ ಹೋರಾಟ ನಡೆಸಿದೆ. +ಒಟ್ಟು 90 ಸ್ಥಾನಗಳ ಮತ ಎಣಿಕೆ ಕಾರ್ಯ 33 ಜಿಲ್ಲಾ ಕೇಂದ್ರಗಳಲ್ಲಿಂದು ನಡೆದಿದ್ದು, ಬಿಜೆಪಿ 53, ಕಾಂಗ್ರೆಸ್ 34 ಹಾಗೂ ಇತರರು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಸಿದ್ದಾರೆ. ಅಂತಿಮ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ. ಚಿಕ್ಕ ರಾಜ್ಯದಲ್ಲಿ ಕೇವಕಜಕಜಕಜಕಜಲ ಸಾವಿರ ಮತಗಳ ಅಂತರದಲ್ಲೇ ಕೆಲವರ ಸೋಲು-ಗೆಲುವು ನಿರ್ಧಾರವಾಗುತ್ತದೆ. ಛತ್ತೀಸ್‍ಘಡದ ಮುಖ್ಯಮಂತ್ರಿಯಾಗಿರುವ ಭೂಪೇಂದ್ರ ಬಘೇಲ್ ಅವರ ಜನಪರ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರೂ ಆಡಳಿತ ವಿರೋಧಿ ಅಲೆ ಸ್ವಲ್ಪ ಮಟ್ಟಿಗೆ ತಟ್ಟಿದೆ. +ಛತ್ತೀಸ್‍ಘಡ ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ಡಿಯೋಗೆ ಹಿನ್ನಡೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಬಘೇಲ್ ಅವರಿಗೂ ಕೂಡ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಇಲ್ಲಿ ಪ್ರಬಲ ಪೈಪೋಟಿ ನೀಡಿದೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‍ಗೆ ಮುನ್ನಡೆ ಎಂದು ಹೇಳಲಾಗುತ್ತಿದ್ದು, ಆದರೆ ಬಿಜೆಪಿ ಗೆಲವಿನ ನಾಗಾಲೋಟದಲ್ಲಿದೆ. +ದಕ್ಷಿಣ ಭಾರತದ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 10 ವರ್ಷಗಳ ಕಾಲ ಬಿಆರ್‍ಎಸ್‍ನ ಕೆ.ಸಿ.ಚಂದ್ರಶೇಖರ್ ರಾವ್ ಆಡಳಿತ ಕೊನೆಗೊಂಡಿದೆ. ಕರ್ನಾಟಕದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಘಟಾನುಘಟಿ ನಾಯಕರು ತೆಲಂಗಾಣ ಚುನಾವಣಾ ಪ್ರಚಾರಕ್ಕಿಳಿದು ಶತಾಯಗತಾಯ ಕಾಂಗ್ರೆಸ್‍ನ್ನು ಗೆಲ್ಲಿಸಬೇಕೆಂಬ ಛಲ ಕೊನೆಗೂ ಫಲ ನೀಡಿದಂತೆ ಕಾಣುತ್ತಿದೆ. +ಇಲ್ಲಿ ಒಟ್ಟು 119 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಸರಳ ಬಹುಮತ ಗಳಿಸುವತ್ತ ಮುನ್ನುಗ್ಗಿ 65 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಆರ್‍ಎಸ್ 40 ಕ್ಷೇತ್ರಗಳಲ್ಲಿ, ಬಿಜೆಪಿ 9 ಕ್ಷೇತ್ರಗಳು, ಎಐಎಂಐಎಂ 04 ಕ್ಷೇತ್ರಗಳಲ್ಲಿ ಹಾಗೂ ಸಿಪಿಎಂ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. +ತೆಲಂಗಾಣದ ಕೊಡಂಗಲ್ ಕ್ಷೇತ್ರದಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಜಯಭೇರಿ ಬಾರಿಸಿದ್ದು, ಮತ್ತೊಂದು ಕ್ಷೇತ್ರದಲ್ಲೂ ಕೂಡ ಮುನ್ನಡೆ ಸಾಧಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಈಗ ಕೇವಲ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ. ರೇವಂತ್ ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ಬಹುತೇಕ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ. +ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಚುನಾವಣೆಯಲ್ಲಿ ಸ್ವಲ್ಪ ಮಟ್ಟಿಗೆ ಸಮಾಧಾನಪಡುವಂತಾಗುತ್ತದೆ. ಬಿಜೆಪಿಗೆ ಮೂರು ರಾಜ್ಯಗಳು ಒಲಿದು ಬೋನಸ್ ಪಡೆದರೆ, ಕಾಂಗ್ರೆಸ್ ಒಂದು ರಾಜ್ಯದಲ್ಲಿ ಅಕಾರ ಚುಕ್ಕಾಣಿ ಹಿಡಿದು ಎರಡು ರಾಜ್ಯಗಳನ್ನು ಕಳೆದುಕೊಂಡಂತಾಗಿದೆ. +ಗ್ಯಾರಂಟಿ ಉಚಿತ ಯೋಜನೆಗಳು ಅಷ್ಟಾಗಿ ಸದ್ದು ಮಾಡಿಲ್ಲ. ಅಭಿವೃದ್ಧಿ ಮತ್ತು ಜನಕಲ್ಯಾಣ ಭರವಸೆಗಳು ಜನರ ಮನಸ್ಸನ್ನು ತಟ್ಟಿದೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಬಲಗೊಂಡರೆ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಬಿಜೆಪಿ ಶಕ್ತಿ ವೃದ್ಧಿಸಿಕೊಂಡಿದೆ. diff --git a/eesanje/url_47_226_1.txt b/eesanje/url_47_226_1.txt new file mode 100644 index 0000000000000000000000000000000000000000..7a4d24c397ea5a7b9af0812fe38775cbb4ee877a --- /dev/null +++ b/eesanje/url_47_226_1.txt @@ -0,0 +1,10 @@ +ಬಾಹ್ಯಾಕಾಶದಲ್ಲಿ ಕಾರ್ಯಚರಣೆ ಆರಂಭಿಸಿದ ಆದಿತ್ಯ-ಎಲ್1 +ಬೆಂಗಳೂರು, ಡಿ 2 (ಪಿಟಿಐ) : ಭಾರತದ ಆದಿತ್ಯ-ಎಲ್ 1 ಉಪಗ್ರಹದಲ್ಲಿ ಆದಿತ್ಯ ಸೌರ ಮಾರುತದ ಕಣದ ಪ್ರಯೋಗ ಪೇಲೋಡ್ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ. ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ಕೇಂದ್ರದಿಂದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು. +ಆದಿತ್ಯ-ಎಲ್1 ಮೊದಲ ಭಾರತೀಯ ಬಾಹ್ಯಾಕಾಶ-ಆಧಾರಿತ ವೀಕ್ಷಣಾಲಯವಾಗಿದ್ದು, ಇದು ಮೊದಲ ಸೂರ್ಯ-ಭೂಮಿಯ ಲಗ್ರಾಂಜಿಯನ್ ಪಾಯಿಂಟ್ (ಎಲ್1) ಸುತ್ತ ಹಾಲೋ ಕಕ್ಷೆಯಿಂದ ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿ.ಮೀ.ಸೂರ್ಯನನ್ನು ಅಧ್ಯಯನ ಮಾಡುತ್ತದೆ. +ನಡ್ಡಾ ಹುಟ್ಟುಹಬ್ಬ : ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯರಿಂದ ಶುಭಾಶಯ +ಇಸ್ರೋ ಆದಿತ್ಯ ಸೌರ ಮಾರುತ ಕಣ ಪ್ರಯೋಗ ಎರಡು ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡಿದೆ ಸೋಲಾರ್ ವಿಂಡ್ ಐಯಾನ್ ಸ್ಪೆಕ್ಟ್ರೋಮೀಟರ್ ಮತ್ತು ಸುಪ್ರಾಥರ್ಮಲ್ ಮತ್ತು ಎನರ್ಜಿಟಿಕ್ ಪಾರ್ಟಿಕಲ್ ಸ್ಪೆಕ್ಟ್ರೋಮೀಟರ್. ಈ ಉಪಕರಣವು ಸೆಪ್ಟೆಂಬರ್ 10, 2023 ರಿಂದ ಕಾರ್ಯನಿರ್ವಹಿಸುತ್ತಿದೆ. ಮತ್ತೊಂದು ಉಪಕರಣವನ್ನು ನವೆಂಬರ್ 2, 2023 ರಂದು ಸಕ್ರಿಯಗೊಳಿಸಲಾಗಿದೆ ಮತ್ತು ಅತ್ಯುತ್ತಮ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದೆ. +ನವೆಂಬರ್ 2023 ರಲ್ಲಿ ಎರಡು ದಿನಗಳಲ್ಲಿ ಸಂವೇದಕಗಳಲ್ಲಿ ಒಂದರಿಂದ ಸ್ವಾಧೀನಪಡಿಸಿಕೊಂಡಿರುವ ಮಾದರಿ ಶಕ್ತಿ ಹಿಸ್ಟೋಗ್ರಾಮ್ ಪ್ರೋಟಾನ್ ಮತ್ತು ಆಲಾ ಕಣಗಳ (ಡಬಲ್ ಅಯಾನೀಕೃತ ಹೀಲಿಯಂ, ಎಚ್‍ಇಒಪ್ಲಸ್ ) ಎಣಿಕೆಗಳಲ್ಲಿನ ವ್ಯತ್ಯಾಸಗಳನ್ನು ವಿವರಿಸುತ್ತದೆ ಎಂದು ಸಂಸ್ಥೆ ಹೇಳಿದೆ. ಈ ವ್ಯತ್ಯಾಸಗಳನ್ನು ನಾಮಮಾತ್ರದ ಏಕೀಕರಣ ಸಮಯದೊಂದಿಗೆ ದಾಖಲಿಸಲಾಗಿದೆ, ಇದು ಸೌರ ಮಾರುತದ ನಡವಳಿಕೆಯ ಸಮಗ್ರ ಸ್ನ್ಯಾಪ್‍ಶಾಟ್ ಅನ್ನು ಒದಗಿಸುತ್ತದೆ ಎಂದು ಇಸ್ರೋ ಹೇಳಿದೆ. +ದಿಕ್ಕಿನ ಸಾಮಥ್ರ್ಯಗಳು ಸೌರ ಮಾರುತ ಪ್ರೋಟಾನ್‍ಗಳು ಮತ್ತು ಆಲಾಗಳ ನಿಖರವಾದ ಮಾಪನಗಳನ್ನು ಸಕ್ರಿಯಗೊಳಿಸುತ್ತದೆ, ಸೌರ ಮಾರುತದ ಗುಣಲಕ್ಷಣಗಳು, ಆಧಾರವಾಗಿರುವ ಪ್ರಕ್ರಿಯೆಗಳು ಮತ್ತು ಭೂಮಿಯ ಮೇಲೆ ಅವುಗಳ ಪ್ರಭಾವದ ಬಗ್ಗೆ ದೀರ್ಘಕಾಲದ ಪ್ರಶ್ನೆಗಳನ್ನು ಪರಿಹರಿಸಲು ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದು ಬಾಹ್ಯಾಕಾಶ ಸಂಸ್ಥೆ ವಿವರಿಸಿದೆ. +-L1 : (), () . 2-.…../I5BRBgeYY5 +ಸ್ವಿಸ್ ಗಮನಿಸಿದಂತೆ ಪ್ರೋಟಾನ್ ಮತ್ತು ಆಲಾ ಕಣಗಳ ಸಂಖ್ಯೆಯ ಅನುಪಾತದಲ್ಲಿನ ಬದಲಾವಣೆಯು ಸೂರ್ಯ-ಭೂಮಿಯ ಲ್ಯಾಗ್ರೇಂಜ್ ಪಾಯಿಂಟ್ ಎಲ್1 ನಲ್ಲಿ ಕರೋನಲ್ ಮಾಸ್ ಎಜೆಕ್ಷನ್‍ಗಳ ಆಗಮನದ ಬಗ್ಗೆ ಪರೋಕ್ಷ ಮಾಹಿತಿಯನ್ನು ಒದಗಿಸುವ ಸಾಮಥ್ರ್ಯವನ್ನು ಹೊಂದಿದೆ ಎಂದು ಇಸ್ರೋ ಹೇಳಿದೆ. +ರ್ವತ ಆಲಾ-ಟು-ಪ್ರೋಟಾನ್ ಅನುಪಾತವನ್ನು ಸಾಮಾನ್ಯವಾಗಿ ಎಲ್1 ನಲ್ಲಿ ಇಂಟರ್‍ಪ್ಲಾನೆಟರಿ ಕರೋನಲ್ ಮಾಸ್ ಎಜೆಕ್ಷನ್‍ಗಳ ಅಂಗೀಕಾರದ ಸೂಕ್ಷ್ಮ ಗುರುತುಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ ಮತ್ತು ಆದ್ದರಿಂದ ಬಾಹ್ಯಾಕಾಶ ಹವಾಮಾನ ಅಧ್ಯಯನಗಳಿಗೆ ನಿರ್ಣಾಯಕವೆಂದು ಪರಿಗಣಿಸಲಾಗುತ್ತದೆ. \ No newline at end of file diff --git a/eesanje/url_47_226_10.txt b/eesanje/url_47_226_10.txt new file mode 100644 index 0000000000000000000000000000000000000000..1f398293bb22d342ac074ee1b4fee84eabb84cc0 --- /dev/null +++ b/eesanje/url_47_226_10.txt @@ -0,0 +1,6 @@ +ನಿಂತಿದ್ದ ಟ್ರಕ್‍ಗೆ ವಾಹನ ಡಿಕ್ಕಿ, 8 ಮಂದಿ ಸಾವು +ಕಿಯೋಂಜಾರ್ (ಒಡಿಶಾ), ಡಿ 1 (ಪಿಟಿಐ) ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಇಂದು ಮುಂಜಾನೆ ವಾಹನವು ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಮಗು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ರಾಷ್ಟ್ರೀಯ ಹೆದ್ದಾರಿ 20 ರಲ್ಲಿ ಘಾಟಗೋನ್ ಪ್ರದೇಶದ ಬಲಿಜೋಡಿ ಗ್ರಾಮದ ಬಳಿ ವಾಹನದಲ್ಲಿದ್ದವರು ದೇವಸ್ಥಾನಕ್ಕೆ ಭೇಟಿ ನೀಡಲು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. +ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಉಗ್ರ ಖತಂ +ಗಾಯಗೊಂಡವರ ಪೈಕಿ ಐವರು ಕಿಯೋಂಜಾರ್ ಜಿಲ್ಲಾಸ್ಪತ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರನ್ನು ಕಟಕ್‍ನ ಎಸ್‍ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟಿದೆ. +ಗಂಜಾಂ ಜಿಲ್ಲೆಯ ಪುದಮರಿ ಗ್ರಾಮದ ಒಟ್ಟು 20 ಜನರು ತ್ರಾರಿಣಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕ ನಿದ್ರೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ ಅದು ದೇವಸ್ಥಾನದಿಂದ ಕೇವಲ ಮೂರು ಕಿಮೀ ದೂರದಲ್ಲಿ ನಡೆಯಿತು. ಪೊಲೀಸರು ತನಿಖೆ ಆರಂಭಿಸಿದ್ದಾರೆ. \ No newline at end of file diff --git a/eesanje/url_47_226_11.txt b/eesanje/url_47_226_11.txt new file mode 100644 index 0000000000000000000000000000000000000000..200f34148a492dbda942177a98ecccc1faee2db1 --- /dev/null +++ b/eesanje/url_47_226_11.txt @@ -0,0 +1,6 @@ +ಮಾಸ್ಕ್ ಧರಿಸಿ 18 ಕೋಟಿ ಲೂಟಿ ಮಾಡಿದ ಡಕಾಯಿತರು +ಇಂಫಾಲ್, ಡಿ 1 (ಪಿಟಿಐ) ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಶಸ್ತ್ರ ಸಜ್ಜಿತ ಡಕಾಯಿತರ ಗುಂಪೊಂದು ಬ್ಯಾಂಕ್‍ಗೆ ನುಗ್ಗಿ 18.80 ಕೋಟಿ ರೂ. ದೋಚಿ ಪರಾರಿಯಾಗಿರುವ ಘಟನೆ ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ನಡೆದಿದೆ. ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‍ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್‍ಗಳನ್ನು ಹಾಕಿಕೊಂಡಿದ್ದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂಪಾಯಿ ಹಣವನ್ನು ದೋಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. +ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊತ್ತ ದರೋಡೆಕೋರರು ರಾಜ್ಯ ರಾಜಧಾನಿ ಇಂಫಾಲ್‍ನಿಂದ ಸುಮಾರು 80 ಕಿಮೀ ದೂರದಲ್ಲಿರುವ ಉಖ್ರುಲ್ ಪಟ್ಟಣದ ಬ್ಯಾಂಕ್‍ಗೆ ಆಗಮಿಸಿ, ಭದ್ರತಾ ಸಿಬ್ಬಂದಿಯನ್ನು ಸದೆಬಡಿದು ಸಿಬ್ಬಂದಿಯನ್ನು ಬೆದರಿಸಿ ಬ್ಯಾಂಕ್‍ನಿಂದ ಮೊತ್ತವನ್ನು ದೋಚಿದ್ದಾರೆ. +ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿ : ಸತೀಶ್ ಜಾರಕಿಹೊಳಿ +ಮರೆಮಾಚುವ ಸಮವಸ್ತ್ರದಲ್ಲಿದ್ದ ದುಷ್ಕರ್ಮಿಗಳು, ಬ್ಯಾಂಕ್‍ನ ವಾಶ್‍ರೂಮ್‍ನೊಳಗೆ ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಲಾಕ್ ಮಾಡಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ. ಹಿರಿಯ ಸಿಬ್ಬಂದಿಯೊಬ್ಬರು ಬಂದೂಕು ತೋರಿಸಿ ವಾಲ್ಟ ತೆರೆಯಲು ಯತ್ನಿಸಿದ್ದು, ಬಳಿಕ ದರೋಡೆಕೋರರು ಹಣವನ್ನು ದೋಚಿದ್ದಾರೆ. +ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ. \ No newline at end of file diff --git a/eesanje/url_47_226_12.txt b/eesanje/url_47_226_12.txt new file mode 100644 index 0000000000000000000000000000000000000000..c167e3b26cdde3b93b10dc667ca27a8f611b333d --- /dev/null +++ b/eesanje/url_47_226_12.txt @@ -0,0 +1,9 @@ +ಸೌರಶಕ್ತಿ ಚಾಲಿತ ಬಸ್‍ನಲ್ಲಿ ಸಂಚರಿಸುತ್ತ ಹವಾಮಾನ ಬದಲಾವಣೆ ಜಾಗೃತಿ ಮೂಡಿಸುತ್ತಿದ್ದಾರೆ ಐಐಟಿ ಪ್ರೊಫೆಸರ್ +ಇಂದೋರ್,ಡಿ.1- ಸೌರಶಕ್ತಿ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು 2020ರಿಂದ ಐಐಟಿ ಪ್ರಾಧ್ಯಾಪಕರೊಬ್ಬರು ಪ್ರತಿನಿತ್ಯ ಸೌರಶಕ್ತಿ ಚಾಲಿತ ಬಸ್‍ನಲ್ಲಿ ದೇಶಾದ್ಯಂತ ಪ್ರವಾಸ ಮಾಡುತ್ತ ಗಮನ ಸೆಳೆಯುತ್ತಿದ್ದಾರೆ. ಮಾತ್ರವಲ್ಲ ಅವರು, ಹವಾಮಾನ ಬದಲಾವಣೆಯ ಪ್ರಭಾರ ಬೀರುವ ಅಗ್ರ ರಾಷ್ಟ್ರಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಎಚ್ಚರಿಸಿದ್ದಾರೆ. +ಪ್ರೊಫೆಸರ್ ಚೇತನ್ ಸಿಂಗ್ ಸೋಲಂಕಿ ಅವರನ್ನು ಸಾಮಾನ್ಯವಾಗಿ ಭಾರತದ ಸೌರಮಾನ ಎಂದು ಕರೆಯುತ್ತಾರೆ, ಅವರು ತಮ್ಮ ಎನಜಿ ಸ್ವರಾಜ್ ಯಾತ್ರೆಯ ಭಾಗವಾಗಿ ಮಧ್ಯಪ್ರದೇಶದ ಇಂದೋರ್‍ಗೆ ಆಗಮಿಸಿದರು. ಹವಾಮಾನ ಬದಲಾವಣೆಯಿಂದ ಹೆಚ್ಚು ಪರಿಣಾಮ ಬೀರುವ ದೇಶಗಳಲ್ಲಿ ಭಾರತವೂ ಸೇರಿದೆ. ಹವಾಮಾನ ಬದಲಾವಣೆಯು ಅಕಾಲಿಕ ಮಳೆ ಮತ್ತು ತೀವ್ರ ಪ್ರವಾಹಕ್ಕೆ ಕಾರಣವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ ಎಂದು ಸೋಲಂಕಿ ಪಿಟಿಐಗೆ ತಿಳಿಸಿದರು. +ಡ್ರಗ್ ಪೆಡ್ಲಿಂಗ್ : ವಿದೇಶಿ ಪ್ರಜೆ ಸೇರಿ ಮೂವರ ಬಂಧನ +ಹವಾಮಾನ ಬದಲಾವಣೆಯ ಬೆದರಿಕೆಯ ಬಗ್ಗೆ ಜಾಗೃತಿ ಮೂಡಿಸಲು, ಸೋಲಂಕಿ ಅವರು ನವೆಂಬರ್ 2020 ರಲ್ಲಿ ಎನರ್ಜಿ ಸ್ವರಾಜ್ ಯಾತ್ರೆಗೆ ತೆರಳಲು ಐಐಟಿ ಬಾಂಬೆಯಿಂದ ವೇತನವಿಲ್ಲದೆ ರಜೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು,ಈ ಪ್ರವಾಸ 2030 ರವರೆಗೆ ಮುಂದುವರಿಯುತ್ತದೆ ಎಂದು ಹೇಳಿದರು. +ಯಾತ್ರೆ ಮುಗಿಯುವವರೆಗೂ ಮನೆಗೆ ಹೋಗುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇನೆ. ಈ ಸೌರಶಕ್ತಿ ಚಾಲಿತ ಬಸ್ ಈಗ ನನ್ನ ಮನೆಯಾಗಿದೆ. ಇದು 47,000 ಕಿಲೋಮೀಟರ್‍ಗಳಿಗಿಂತ ಹೆಚ್ಚು ಕ್ರಮಿಸಿದೆ ಮತ್ತು 600 ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ನಾನು ಕಾರ್ಯಕ್ರಮಗಳನ್ನು ಉದ್ದೇಶಿಸಿ ಮಾತನಾಡಿದ್ದೇನೆ ಎಂದು ಅವರು ಹೇಳಿದರು. +ಬಸ್ಸಿನಲ್ಲಿ ಅವರು ಕಚೇರಿ, ಅಡುಗೆ ಕೋಣೆ, ಪೂಜಾ ಕೊಠಡಿ, ಹಾಸಿಗೆ, ತರಬೇತಿ ಕೊಠಡಿ, ಊಟದ ಕೋಣೆ, ಗ್ರಂಥಾಲಯ ಮತ್ತು ಬಾತ್-ಕಮ-ಟಾಯ್ಲೆಟ್ ಅನ್ನು ನಿರ್ಮಿಸಿದ್ದಾರೆ ಎಂದು ಸೋಲಂಕಿ ಹೇಳಿದರು.ಹವಾಮಾನ ಬದಲಾವಣೆಗೆ ಮೂಲ ಕಾರಣ ನಿರಂತರವಾಗಿ ಹೆಚ್ಚುತ್ತಿರುವ ಇಂಗಾಲದ ಹೊರಸೂಸುವಿಕೆ. ಹವಾಮಾನ ಬದಲಾವಣೆಯ ಸಮಸ್ಯೆಗೆ ಸೌರ ಶಕ್ತಿಯು ಪರಿಹಾರವಾಗಬಹುದು, ಆದರೆ ಸೌರ ಶಕ್ತಿಯನ್ನು ಸರಿಯಾಗಿ ಬಳಸುವುದು ಬಹಳ ಮುಖ್ಯ ಎಂದು ಅವರು ಹೇಳಿದರು. +ಬಿಜೆಪಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು +ದೇಶದಲ್ಲಿ ಅವ್ಯಾಹತವಾಗಿ ಬೃಹತ್ ಸೌರವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವುದು ಸರಿಯಲ್ಲ, ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದನೆಯಲ್ಲಿ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು.ಆಗ ಮಾತ್ರ ಇಂಧನ ಕ್ಷೇತ್ರದಲ್ಲಿ ಸ್ವರಾಜ್ಯ ಸಿಗುತ್ತದೆ, ಬೇರೆ ದೇಶಗಳನ್ನು ಅವಲಂಬಿಸಬೇಕಾಗಿಲ್ಲ. ಇಂಧನಗಳಿಗಾಗಿ ಎಂದು ಮಧ್ಯಪ್ರದೇಶ ಸರ್ಕಾರದ ಸೌರಶಕ್ತಿ ರಾಯಭಾರಿಯಾಗಿರುವ ಸೋಲಂಕಿ ಹೇಳಿದ್ದಾರೆ. \ No newline at end of file diff --git a/eesanje/url_47_226_2.txt b/eesanje/url_47_226_2.txt new file mode 100644 index 0000000000000000000000000000000000000000..0d3fb7ba4cbf200fc8940b001cb0b9896695cc1d --- /dev/null +++ b/eesanje/url_47_226_2.txt @@ -0,0 +1,5 @@ +ಬಲವಂತದ ಮತಾಂತರ : 42 ಜನರ ವಿರುದ್ಧ ಎಫ್‍ಐಆರ್, 9 ಮಂದಿ ಬಂಧನ +ಸೋನಭದ್ರ, ಡಿ 2 (ಪಿಟಿಐ) ಉತ್ತರ ಪ್ರದೇಶ ಪೊಲೀಸರು ಸೋನಭದ್ರಾ ಜಿಲ್ಲೆಯಲ್ಲಿ ಬಡವರು ಮತ್ತು ಬುಡಕಟ್ಟು ಜನರನ್ನು ವಂಚನೆಯ ಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡಿದ ಆರೋಪದ ಮೇಲೆ 42 ಜನರ ವಿರುದ್ಧ ಪ್ರಕರಣ ದಾಖಲಿಸಿ 9 ಮಂದಿಯನ್ನು ಬಂಧಿಸಲಾಗಿದೆ. +ಬಂಧಿತ ಆರೋಪಿಗಳಿಂದ ಅಪಾರ ಪ್ರಮಾಣದ ಧಾರ್ಮಿಕ ಪುಸ್ತಕಗಳು, ಪ್ರಚಾರ ಸಾಮಗ್ರಿಗಳು ಮತ್ತು ಲ್ಯಾಪ್‍ಟಾಪ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಚೋಪಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಹಿಯಾ ತೋಲಾ ನಿವಾಸಿ ನರಸಿಂಗ್ ಎಂಬುವರು ಬುಡಕಟ್ಟು ಜನರು ಮತ್ತು ಬಡವರನ್ನು ವಂಚನೆಯ ಮೂಲಕ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡುತ್ತಿದ್ದಾರೆ ಎಂದು ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಲು ಸಿಂಗ್ ಹೇಳಿದ್ದಾರೆ. +ದೂರಿನ ಆಧಾರದ ಮೇಲೆ, ಗುರುವಾರ ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯಡಿ 42 ಜನರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.ನಂತರ ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಗಳಲ್ಲಿ ತಮಿಳುನಾಡಿನ ಚೆನ್ನೈನ ಜೈಪ್ರಭು, ಉತ್ತರ ಪ್ರದೇಶದ ರಾಬಟ್ರ್ಸ್‍ಗಂಜ್‍ನ ಅಜಯ್ ಕುಮಾರ್ ಮತ್ತು ಆಂಧ್ರಪ್ರದೇಶದ ವಿಜಯವಾಡದ ಚೆಕ್ಕಾ ಇಮ್ಯಾನುಯೆಲ್ ಸೇರಿದ್ದಾರೆ. +ಬಂಧಿತ ಉಳಿದ ಆರೋಪಿಗಳನ್ನು ರಾಜೇಂದ್ರ ಕೋಲ, ಛೋಟು ಅಲಿಯಾಸ್ ರಂಜನ್, ಪರಮಾನಂದ್, ಸೋಹನ್, ಪ್ರೇಮ್ ನಾಥ್ ಪ್ರಜಾಪತಿ ಮತ್ತು ರಾಮ್ ಪ್ರತಾಪ್ ಎಂದು ಗುರುತಿಸಲಾಗಿದೆ. \ No newline at end of file diff --git a/eesanje/url_47_226_3.txt b/eesanje/url_47_226_3.txt new file mode 100644 index 0000000000000000000000000000000000000000..66bd9e4ece74118b132d89ad407d5e844a02450e --- /dev/null +++ b/eesanje/url_47_226_3.txt @@ -0,0 +1,7 @@ +ನಡ್ಡಾ ಹುಟ್ಟುಹಬ್ಬ : ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯರಿಂದ ಶುಭಾಶಯ +ನವದೆಹಲಿ, ಡಿ 2 (ಪಿಟಿಐ) ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ 63 ನೇ ಹುಟ್ಟುಹಬ್ಬದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಶುಭಾಶಯ ಕೋರಿದ್ದಾರೆ. ನಡ್ಡಾ ಅವರ ಸಂಘಟನಾ ಕೌಶಲ್ಯ ಮತ್ತು ಶಾಸಕರಾಗಿ ಮತ್ತು ಸಚಿವರಾಗಿ ಸೇರಿದಂತೆ ಅವರ ವೃತ್ತಿಜೀವನದಲ್ಲಿ ವಿವಿಧ ಸಾಮಥ್ರ್ಯಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಅವರ ಸರಳ ಮತ್ತು ಆತ್ಮೀಯ ಸ್ವಭಾವವು ಅವರನ್ನು ಹಲವಾರು ಜನರಿಗೆ ಇಷ್ಟವಾಗಿದೆ. ಕಳೆದ ಹಲವಾರು ದಶಕಗಳಲ್ಲಿ ಅವರು ಪಕ್ಷಕ್ಕಾಗಿ ಶ್ರಮಿಸುತ್ತಿರುವುದನ್ನು ನಾನು ನೋಡಿದ್ದೇನೆ. ಅವರು ಉತ್ತಮ ಶಾಸಕರು, ಸಂಸದರು ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಜನರ ಸೇವೆಯಲ್ಲಿ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಸೇರಿಸಿದರು. +ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ +ಕೆಳಮಟ್ಟದ ನಾಯಕ, ನಡ್ಡಾ ಅವರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಲ್ಲಿ ವಿದ್ಯಾರ್ಥಿ ನಾಯಕರಾಗಿ ಮತ್ತು ನಂತರ ಬಿಜೆಪಿಯ ಯುವ ಘಟಕವಾಗಿ ತಮ್ಮ ದಿನಗಳಿಂದ ಶ್ರೇಣಿಗಳ ಮೂಲಕ ಏರಿದರು, ಗುಂಪುವಾದವನ್ನು ತಪ್ಪಿಸುವ ಮತ್ತು ಸಾಂಸ್ಥಿಕ ಶಿಸ್ತಿನ ಕಾರ್ಯಸೂಚಿಗೆ ಅಂಟಿಕೊಳ್ಳುವ ಆದ್ಯತೆಯನ್ನು ಪ್ರದರ್ಶಿಸಿದರು. ಮತ್ತು ಅವರ ಜವಾಬ್ದಾರಿಗಳು ಬೆಳೆದಂತೆ ದಕ್ಷತೆ.ಬಿಜೆಪಿಯ ರಾಷ್ಟ್ರೀಯ ರಾಜಕೀಯಕ್ಕೆ ಕರೆತರುವ ಮೊದಲು ಹಿಮಾಚಲ ಪ್ರದೇಶದಲ್ಲಿ ಶಾಸಕ ಮತ್ತು ಸಚಿವರಾಗಿದ್ದರು. +ನಡ್ಡಾ ಅವರು 2020 ರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಮೊದಲ ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು, ಅವರು ಅಮಿತ್ ಶಾ ಅವರಿಂದ ಗೃಹ ಸಚಿವರಾಗಿ ಕೇಂದ್ರ ಸರ್ಕಾರವನ್ನು ಸೇರಿಕೊಂಡರು. +ನಡ್ಡಾ ಅವರು ಬಿಜೆಪಿಯನ್ನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಮತ್ತು ಅವರ ಸಂಘಟನಾ ಕೌಶಲ್ಯ ಮತ್ತು ಕಠಿಣ ಪರಿಶ್ರಮದಿಂದ ಅದನ್ನು ಮತ್ತಷ್ಟು ಬಲಪಡಿಸುತ್ತಿದ್ದಾರೆ ಎಂದು ಶಾ ತಮ್ಮ ಪೋಸ್ಟ್‍ನಲ್ಲಿ ಹೇಳಿದ್ದಾರೆ. \ No newline at end of file diff --git a/eesanje/url_47_226_4.txt b/eesanje/url_47_226_4.txt new file mode 100644 index 0000000000000000000000000000000000000000..4d5d6379798d08d347170fe7394cf1acd497c26b --- /dev/null +++ b/eesanje/url_47_226_4.txt @@ -0,0 +1,6 @@ +ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ,ಎನ್‍ಸಿಪಿ,ಶಿವಸೇನೆ ಮೈತ್ರಿ : ಶಿಂಧೆ +ನಾಗ್ಪುರ, ಡಿ 2 (ಪಿಟಿಐ) ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ತಮ್ಮ ನೇತೃತ್ವದ ಶಿವಸೇನೆ, ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿಯ ಆಡಳಿತಾರೂಢ ಮೈತ್ರಿಕೂಟವು 48 ಲೋಕಸಭಾ ಸ್ಥಾನಗಳ ಪೈಕಿ ಕನಿಷ್ಠ 45 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ. +ಎನ್‍ಸಿಪಿ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪುಣೆ ಜಿಲ್ಲೆಯ ಬಾರಾಮತಿ ಮತ್ತು ಇತರ ಕೆಲವು ಕ್ಷೇತ್ರಗಳಿಂದ (ಮೂರು ಪಕ್ಷಗಳ ನಡುವೆ ಸೀಟು ಹಂಚಿಕೆಯ ಮಾತುಕತೆ ಇನ್ನೂ ನಡೆಯಲಿರುವಾಗ) ಲೋಕಸಭೆ ಚುನಾವಣೆಯಲ್ಲಿ ಸ್ರ್ಪಧಿಸಲಿದೆ ಎಂದು ನೀಡಿದ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಶಿಂಧೆ ಈ ರೀತಿ ಹೇಳಿದರು. ಮೂರು ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂದು ಅವರು ಹೇಳಿದರು. +ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಡಿಸಿಎಂ +ಮಹಾಯುತಿ (ಮಹಾ ಮೈತ್ರಿ) ಲೋಕಸಭೆ ಮತ್ತು ವಿಧಾನಸಭಾ (ಮಹಾರಾಷ್ಟ್ರ ವಿಧಾನಸಭೆ) ಚುನಾವಣೆಗಳನ್ನು ಒಟ್ಟಿಗೆ ಎದುರಿಸಲಿದೆ ಮತ್ತು ಲೋಕಸಭೆ ಚುನಾವಣೆಯಲ್ಲಿ ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ 45 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಕೊಡುತ್ತೇವೆ ಎಂದು ಶಿಂಧೆ ಹೇಳಿದರು. ಈ ವಾರದ ಆರಂಭದಲ್ಲಿ ಸುರಿದ ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪಂಚನಾಮ ಅಥವಾ ಸ್ಥಳ ಪರಿಶೀಲನೆ ವರದಿ ಸಿದ್ಧವಾದ ನಂತರ ಪರಿಹಾರ ನೀಡಲಾಗುವುದು ಎಂದು ಸಿಎಂ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. +ಈ ಮಧ್ಯೆ, ಬೇರೆಡೆ ಮಾತನಾಡಿದ ಶಿಂಧೆ ನೇತೃತ್ವದ ಶಿವಸೇನೆ ಬಣಕ್ಕೆ ಸೇರಿದ ಹಿಂಗೋಲಿ ಸಂಸದ ಹೇಮಂತ್ ಪಾಟೀಲ, ಮುಖ್ಯಮಂತ್ರಿಯನ್ನು ಬೆಂಬಲಿಸುವ ಎಲ್ಲಾ 13 ಶಿವಸೇನೆ ಸಂಸದರು (ಕಳೆದ ವರ್ಷ ಶಿವಸೇನೆಯಲ್ಲಿ ಭಿನ್ನಾಭಿಪ್ರಾಯವನ್ನು ಅನುಸರಿಸಿ) 2024 ರಲ್ಲಿ ಮತ್ತೆ ಟಿಕೆಟ್ ಪಡೆಯುತ್ತಾರೆ ಎಂದು ತಿಳಿಸಿದರು. \ No newline at end of file diff --git a/eesanje/url_47_226_5.txt b/eesanje/url_47_226_5.txt new file mode 100644 index 0000000000000000000000000000000000000000..fd685aa59a8ca324ce6a962dea389969dd348d7a --- /dev/null +++ b/eesanje/url_47_226_5.txt @@ -0,0 +1,6 @@ +ಸೆಂಬರ್‌ನಲ್ಲಿ 18 ದಿನ ಬ್ಯಾಂಕ್‍ ರಜೆ +ನವದೆಹಲಿ,ಡಿ.1- ಹಣಕಾಸು ವ್ಯವಹಾರ ನಡೆಸುವವರೇ ಇರಲಿ ಎಚ್ಚರ….ಏಕೆಂದರೆ ಈ ತಿಂಗಳು ಬ್ಯಾಂಕ್‍ಗಳಿಗೆ ಸುಮಾರು 18 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಡಿಸೆಂಬರ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. +ಆರ್‌ಬಿಐ ರಜೆಯ ಕ್ಯಾಲೆಂಡರ್ ಪ್ರಕಾರ ಈ ತಿಂಗಳು ಒಟ್ಟು 18 ದಿನಗಳ ಕಾಲ ಬ್ಯಾಂಕ್‍ಗಳು ಮುಚ್ಚಿರುತ್ತವೆ. ಇದು ಎಲ್ಲಾ ಭಾನುವಾರಗಳು ಮತ್ತು ಈ ವರ್ಷದ ಅಂತಿಮ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರಗಳನ್ನು ಒಳಗೊಂಡಿದೆ. ರಾಜ್ಯ-ನಿರ್ದಿಷ್ಟ ಹಬ್ಬಗಳ ಸಂದರ್ಭದಲ್ಲಿ, ಆ ರಾಜ್ಯಗಳಲ್ಲಿ ಮಾತ್ರ ಬ್ಯಾಂಕ್‍ಗಳು ಮುಚ್ಚಲ್ಪಡುತ್ತವೆ, ಆದರೆ ಕ್ರಿಸ್‍ಮಸ್‍ನಂತಹ ರಾಷ್ಟ್ರೀಯ ಹಬ್ಬಗಳ ಸಮಯದಲ್ಲಿ, ದೇಶಾದ್ಯಂತ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. +ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿದ ಇಲಿ ಪಡೆಯನ್ನು ಭೇಟಿಯಾಗಲಿದ್ದಾರೆ ಕೇಜ್ರಿವಾಲ್ +ಪ್ರತಿ ತಿಂಗಳು ರಜೆಗಳ ಪಟ್ಟಿಯನ್ನು ಆರ್‍ಬಿಐ ಸಿದ್ಧಪಡಿಸುತ್ತದೆ. ನೆಗೋಷಿಯೇಬಲ್ ಇನ್‍ಸ್ಟ್ರುಮೆಂಟ್ಸ ಆಕ್ಟ್, ಹಾಲಿಡೇ, ರಿಯಲ್ ಟೈಮ್ ಗ್ರಾಸ್ ಸೆಟಲ್‍ಮೆಂಟ್ ಹಾಲಿಡೇ ಮತ್ತು ಬ್ಯಾಂಕ್‍ಗಳ ಕ್ಲೋಸಿಂಗ್ ಆಫ್ ಅಕೌಂಟ್ಸ್ ಎಂಬ ಮೂರು ವಿಭಾಗಗಳ ಅಡಿಯಲ್ಲಿ ಇದನ್ನು ಸೂಚಿಸಲಾಗುತ್ತದೆ. +ಡಿಸೆಂಬರ್ 2023 ರ ರಾಷ್ಟ್ರೀಯ ಮತ್ತು ಪ್ರಾದೇಶಿಕ ರಜಾದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ:ಡಿಸೆಂಬರ್ 1 (ಶುಕ್ರವಾರ): ರಾಜ್ಯ ಉದ್ಘಾಟನಾ ದಿನ/ಸ್ಥಳೀಯ ನಂಬಿಕೆಯ ದಿನ (ಇಟಾನಗರ ಮತ್ತು ಕೊಹಿಮಾ)ಡಿಸೆಂಬರ್ 3 (ಭಾನುವಾರ): ವಾರಾಂತ್ಯ (ಎಲ್ಲಾ ರಾಜ್ಯಗಳು)ಡಿಸೆಂಬರ್ 4 (ಸೋಮವಾರ): ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ (ಗೋವಾ) ಹಬ್ಬಡಿಸೆಂಬರ್ 9 (ಶನಿವಾರ): ತಿಂಗಳ ಎರಡನೇ ಶನಿವಾರ (ಎಲ್ಲಾ ರಾಜ್ಯಗಳು)ಡಿಸೆಂಬರ್ 10 (ಭಾನುವಾರ): ವಾರಾಂತ್ಯ (ಎಲ್ಲಾ ರಾಜ್ಯಗಳು)ಡಿಸೆಂಬರ್ 12 (ಮಂಗಳವಾರ): ಪಾ-ತೋಗನ್ ನೆಂಗ್ಮಿಂಜ ಸಂಗ್ಮಾ (ಶಿಲ್ಲಾಂಗ್)ಡಿಸೆಂಬರ್ 14 (ಗುರುವಾರ): ಲೊಸೂಂಗ/ನಮ್ಸೂಂಗ್ (ಗ್ಯಾಂಗ್ಟಾಕï)ಡಿಸೆಂಬರ್ 17 (ಭಾನುವಾರ): ವಾರಾಂತ್ಯ (ಎಲ್ಲಾ ರಾಜ್ಯಗಳು)ಡಿಸೆಂಬರ್ 18 (ಸೋಮವಾರ): ಯು ಸೋಸೋ ಥಾಮ್ (ಶಿಲ್ಲಾಂಗ್) ಅವರ ಮರಣ ವಾರ್ಷಿಕೋತ್ಸವಡಿಸೆಂಬರ್ 19 (ಮಂಗಳವಾರ): ಗೋವಾ ವಿಮೋಚನಾ ದಿನ (ಗೋವಾ)ಡಿಸೆಂಬರ್ 23 (ಶನಿವಾರ): ತಿಂಗಳ ನಾಲ್ಕನೇ ಶನಿವಾರ (ಎಲ್ಲಾ ರಾಜ್ಯಗಳು).ಡಿಸೆಂಬರ್ 24 (ಭಾನುವಾರ): ವಾರಾಂತ್ಯ (ಎಲ್ಲಾ ರಾಜ್ಯಗಳು)ಡಿಸೆಂಬರ್ 25 (ಸೋಮವಾರ): ಕ್ರಿಸ್ಮಸ್ (ಎಲ್ಲಾ ರಾಜ್ಯಗಳು)ಡಿಸೆಂಬರ್ 26 (ಮಂಗಳವಾರ): ಕ್ರಿಸ್ಮಸ್ ಆಚರಣೆ (ಐಜ್ವಾಲï, ಕೊಹಿಮಾ ಮತ್ತು ಶಿಲ್ಲಾಂಗ್)ಡಿಸೆಂಬರ್ 27 (ಬುಧವಾರ): ಕ್ರಿಸ್ಮಸ್ (ಕೊಹಿಮಾ)ಡಿಸೆಂಬರ್ 30 (ಶನಿವಾರ): ಯು ಕಿಯಾಂಗ್ ನಂಗ್ಬಾ (ಶಿಲ್ಲಾಂಗ್)ಡಿಸೆಂಬರ್ 31 (ಭಾನುವಾರ): ವಾರಾಂತ್ಯ (ಎಲ್ಲಾ ರಾಜ್ಯಗಳು) \ No newline at end of file diff --git a/eesanje/url_47_226_6.txt b/eesanje/url_47_226_6.txt new file mode 100644 index 0000000000000000000000000000000000000000..0c40db77c1c5e0114575c3bd40304a99d7d885ec --- /dev/null +++ b/eesanje/url_47_226_6.txt @@ -0,0 +1,9 @@ +ಸಶಸ್ತ್ರ ಪಡೆಗಳಿಗೆ ಡ್ರೋನ್ ತರಬೇತಿ +ಗುವಾಹಟಿ, ಡಿ 1 (ಪಿಟಿಐ) ಸಶಸ್ತ್ರ ಪಡೆಗಳು ಮತ್ತು ಅಧಿಕಾರಿಗಳಿಗೆ ಡ್ರೋನ್ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಲು ಭಾರತೀಯ ತಂತ್ರಜ್ಞಾನ ಸಂಸ್ಥೆ, ಗುವಾಹಟಿ ಐಐಟಿ ಸಂಸ್ಥೆಗಳು ನಿರ್ಧರಿಸಿವೆ. ಕೋರ್ಸ್ ಭಾಗವಹಿಸುವವರಿಗೆ ನಿವೃತ್ತಿಯ ನಂತರದ ವೃತ್ತಿ ಆಯ್ಕೆಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ ಏಕೆಂದರೆ ಕಾರ್ಯಕ್ರಮವು ವೈವಿಧ್ಯಮಯ ಡ್ರೋನ್ ಉದ್ಯಮದಲ್ಲಿ ಅಥವಾ ತಂತ್ರಜ್ಞಾನದ ಉದ್ಯಮಿಗಳಾಗಿ ಯಶಸ್ವಿಯಾಗಲು ಅಗತ್ಯವಾದ ಜ್ಞಾನ, ಗ್ರಹಿಕೆ ಮತ್ತು ದೃಷ್ಟಿಯೊಂದಿಗೆ ಅವರನ್ನು ಸಜ್ಜುಗೊಳಿಸುತ್ತದೆ. +ದೇಶದ ಈ ಮೊದಲ-ರೀತಿಯ ಕಾರ್ಯಕ್ರಮವು ಡ್ರೋನ್ ತಂತ್ರಜ್ಞಾನಗಳು, ಪೈಲಟ್ ತರಬೇತಿ, ಸಾಫ್ಟ್‍ವೇರ್ ಕಾರ್ಯಾಚರಣೆಗಳು ಮತ್ತು ಅಪ್ಲಿಕೇಶನ್‍ಗಳ ಕುರಿತು ಸಮಗ್ರ ತರಬೇತಿಯನ್ನು ನೀಡುವುದರ ಮೇಲೆ ಕೇಂದ್ರೀಕರಿಸುತ್ತದೆ ಎಂದು ಐಐಟಿಜಿಯ ಡ್ರೋನ್ ತಂತ್ರಜ್ಞಾನದ ಕೇಂದ್ರದ ಡೀನ್ ಪರಮೇಶ್ವರ್ ಕೆ ಅಯ್ಯರ್ ಹೇಳಿದ್ದಾರೆ. +ಕಾರ್ಯಕ್ರಮದ ಪ್ರಸ್ತುತ ಬ್ಯಾಚ್ ವಿವಿಧ ಸಶಸ್ತ್ರ ಪಡೆಗಳ 30 ಸಿಬ್ಬಂದಿಯನ್ನು ಹೊಂದಿದೆ. ಎಐ ತಂತ್ರಜ್ಞಾನದೊಂದಿಗೆ ಸಶಸ್ತ್ರ ಪಡೆಗಳನ್ನು ಕೌಶಲ್ಯಗೊಳಿಸಲು ಮತ್ತು ಹಿರಿಯ ಅಧಿಕಾರಿಗಳಿಗೆ ನಿವೃತ್ತಿಯ ನಂತರ ಅವರ ವೃತ್ತಿ ಅವಕಾಶಗಳನ್ನು ಹೆಚ್ಚಿಸಲು ಡ್ರೋನ್ ತಂತ್ರಜ್ಞಾನದ ಕುರಿತು ಪ್ರಮಾಣಪತ್ರ ಕಾರ್ಯಕ್ರಮವನ್ನು ನೀಡುತ್ತಿದೆ ಎಂದು ಶೈಕ್ಷಣಿಕ ತಂತ್ರಜ್ಞಾನ ಕೇಂದ್ರದ ಮುಖ್ಯಸ್ಥ ಟಿ ವಿ ಭರತ್ ಹೇಳಿದ್ದಾರೆ. + : ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ +ವಿವಿಧ ವಿಭಾಗಗಳು ಮತ್ತು ಕೇಂದ್ರಗಳ ಅನುಭವಿ ಅಧ್ಯಾಪಕರಿಂದ ನಡೆಯುತ್ತಿರುವ ತರಬೇತಿ ಕಾರ್ಯಕ್ರಮವು ರಕ್ಷಣಾ ಪಡೆಗಳ ಸದಸ್ಯರಿಗೆ ವಾಣಿಜ್ಯೋದ್ಯಮಿಗಳಾಗಿ ಅಥವಾ ಯಾವುದೇ ತಂತ್ರಜ್ಞಾನ ಆಧಾರಿತ ಎರಡನೇ ವೃತ್ತಿಯಾಗಿ ಹಲವಾರು ಅವಕಾಶಗಳನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. +ಶೈಕ್ಷಣಿಕ ತಂತ್ರಜ್ಞಾನ ಕೇಂದ್ರ, ಇಂಟೆಲಿಜೆಂಟ್ ಸೈಬರ್ ಫಿಸಿಕಲ್ ಸಿಸ್ಟಂಗಳ ಕೇಂದ್ರ (ಸಿಐಸಿಪಿಎಸ), ಡ್ರೋನ್ ತಂತ್ರಜ್ಞಾನ ಕೇಂದ್ರ ಮತ್ತು ಐಐಟಿಜಿ ತಂತ್ರಜ್ಞಾನ ಆವಿಷ್ಕಾರ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಐಐಟಿಜಿ ಟಿಐಡಿಎಫ) ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. +ಸಿಐಸಿಪಿಎಸ್‍ನ ಪರಿಣಿತ ಅಧ್ಯಾಪಕರು ಥಿಯರಿ ಕೋರ್ಸ್‍ಗಳನ್ನು ನೋಡಿಕೊಳ್ಳುತ್ತಿದ್ದರೆ, ಐಐಟಿಜಿ ಟಿಐಡಿಎಫ್‍ನ ತಾಂತ್ರಿಕ ಸದಸ್ಯರು ಭಾಗವಹಿಸುವವರಿಗೆ ಪ್ರಾಯೋಗಿಕ ತರಬೇತಿ ಮತ್ತು ಅನುಭವವನ್ನು ನೀಡುತ್ತಿದ್ದಾರೆ ಎಂದು ಟಿಐಡಿಎಫ್ ಯೋಜನಾ ನಿರ್ದೇಶಕ ಸಂತೋಷ ಕೆ ದ್ವಿವೇದಿ ಹೇಳಿದರು. +ಡ್ರೋನ್ ತಂತ್ರಜ್ಞಾನದ ಮೂಲಭೂತ ಮತ್ತು ಪ್ರಾಯೋಗಿಕ ಅಂಶಗಳನ್ನು ಸಂಯೋಜಿಸಲು ಪ್ರೋಗ್ರಾಂ ಅನ್ನು ರಚಿಸಲಾಗಿದೆ ಮತ್ತು ಸೈದ್ಧಾಂತಿಕ, ತರಗತಿಯ ಅವಧಿಗಳು ಮತ್ತು ಪ್ರಾಯೋಗಿಕ ನಿರ್ವಹಣೆಯನ್ನು ಒಳಗೊಂಡಿರುತ್ತದೆ. \ No newline at end of file diff --git a/eesanje/url_47_226_7.txt b/eesanje/url_47_226_7.txt new file mode 100644 index 0000000000000000000000000000000000000000..43d7e3e21f945cd66bbcaa76df0971877093bb43 --- /dev/null +++ b/eesanje/url_47_226_7.txt @@ -0,0 +1,8 @@ +ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿಲ್ಲ : ಶ್ರೀನಿವಾಸನ್ +ತಿರುವನಂತಪುರಂ,ಡಿ.1- ಭಾರತದಿಂದ ಗೊತ್ತುಪಡಿಸಲಾದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ತನಿಖೆಗೆ ಭಾರತದ ಸಹಕಾರಕ್ಕಾಗಿ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇತ್ತೀಚೆಗೆ ಕರೆ ನೀಡಿದ ಬೆನ್ನಲ್ಲೇ, ಭಾರತವು ಅಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಮಾಜಿ ರಾಜತಾಂತ್ರಿಕ ಟಿ.ಪಿ. ಶ್ರೀನಿವಾಸನ್ ಸ್ಪಷ್ಟಪಡಿಸಿದ್ದಾರೆ. +ಆದ್ದರಿಂದ ಇದು ಸಂಕೀರ್ಣವಾದ ಸಮಸ್ಯೆಯಾಗಿದೆ, ಆದರೆ, ಭಾರತವು ಭಾಗಿಯಾಗಿಲ್ಲ ಎಂದು ನನಗೆ ಖಚಿತವಾಗಿ ತಿಳಿದಿದೆ. ಹಾಗಾಗಿ ಮತ್ತೆ ಕೆಲವು ತಪ್ಪು ತಿಳುವಳಿಕೆ ಉಂಟಾಗಬಹುದು, ಏಕೆಂದರೆ ಭಾರತವು ಈ ರೀತಿಯ ವ್ಯವಹಾರದಲ್ಲಿಲ್ಲ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. + : ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ +ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ಗೊತ್ತುಪಡಿಸಿದ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ತನಿಖೆಯಲ್ಲಿ ಕೆನಡಾದೊಂದಿಗೆ ಸಹಕರಿಸುವಂತೆ ಭಾರತ ಸರ್ಕಾರಕ್ಕೆ ಅವರು ಕರೆ ನೀಡಿದ್ದಾರೆ.ಸುದ್ದಿಯ ಅನಿರೀಕ್ಷಿತ ಸ್ವರೂಪವನ್ನು ಉದ್ದೇಶಿಸಿ, ಶ್ರೀನಿವಾಸನ್ ಕೆಲವು ದಿನಗಳ ಹಿಂದೆ ಫೈನಾನ್ಷಿಯಲ್ ಟೈಮ್ಸ ನಡೆಸಿದ ಇದೇ ರೀತಿಯ ಕಥೆಯನ್ನು ಉಲ್ಲೇಖಿಸಿ, ಕಾಂಕ್ರೀಟ್ ಪುರಾವೆಗಳ ಕೊರತೆಯ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದರು. ಅವರು ಸಮಸ್ಯೆಯ ಸಂಕೀರ್ಣತೆಯನ್ನು ಒಪ್ಪಿಕೊಂಡರು ಆದರೆ ಭಾರತವು ಅಂತಹ ಚಟುವಟಿಕೆಗಳಲ್ಲಿ ತೊಡಗುವುದಿಲ್ಲ ಎಂದು ಪುನರುಚ್ಚರಿಸಿದರು. +ಮಾಜಿ ರಾಜತಾಂತ್ರಿಕರು ಭಾರತ ಮತ್ತು ಯುನೈಟೆಡ್ ಸ್ಟೇಟ್ಸ ನಡುವಿನ ಸಂಬಂಧವನ್ನು ಒಪ್ಪಿಕೊಂಡರು ಆದರೆ ಭಾರತದ ಮೇಲೆ ಆರೋಪ ಮಾಡಲು ಯುನೈಟೆಡ್ ಸ್ಟೇಟ್ಸ ಉದ್ದೇಶಪೂರ್ವಕ ಪ್ರಯತ್ನವಿಲ್ಲ ಎಂದು ಸ್ಪಷ್ಟಪಡಿಸಿದರು. ಯುಎಸ್ ವ್ಯವಸ್ಥೆಯಲ್ಲಿ ಒಂದು ಸಮಸ್ಯೆ ನ್ಯಾಯಾಲಯಕ್ಕೆ ಹೋದರೆ, ವಿವರಗಳನ್ನು ಬಹಿರಂಗಪಡಿಸಬೇಕೆ ಎಂದು ನಿರ್ಧರಿಸಲು ನ್ಯಾಯಾಲಯಕ್ಕೆ ಬಿಟ್ಟದ್ದು ಎಂದು ಅವರು ಗಮನಸೆಳೆದರು. +ದುಬೈನಲ್ಲಿಂದು 7 ದ್ವಿಪಕ್ಷಿಯ ಸಭೆಗಳನ್ನು ನಡೆಸಲಿದ್ದಾರೆ ಮೋದಿ +ಕೆನಡಾ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಶ್ರೀನಿವಾಸನ್ ಅವರು, ನಾವು ಆರೋಪಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ನೀವು ನಮಗೆ ಸಾಕ್ಷ್ಯವನ್ನು ಕೊಡಿ ಎಂದು ನಾವು ಹೇಳಿದ್ದೇವೆ. ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದರೆ, ಇದುವರೆಗೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_226_8.txt b/eesanje/url_47_226_8.txt new file mode 100644 index 0000000000000000000000000000000000000000..57c46aad5c501f2a1b8c0c48807331a790293c9f --- /dev/null +++ b/eesanje/url_47_226_8.txt @@ -0,0 +1,7 @@ +ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿದ ಇಲಿ ಪಡೆಯನ್ನು ಭೇಟಿಯಾಗಲಿದ್ದಾರೆ ಕೇಜ್ರಿವಾಲ್ +ನವದೆಹಲಿ, ಡಿ 1 (ಪಿಟಿಐ) ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ದೆಹಲಿಯ ಇಲಿ-ಪಡೆ ಗಣಿಗಾರಿಕೆ ತಜ್ಞರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಉತ್ತರಾಖಂಡದಲ್ಲಿ ಸುರಂಗದ ಒಂದು ಭಾಗ ಕುಸಿದಿದ್ದರಿಂದ ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡರು. 17 ದಿನಗಳ ಬಹು ಏಜೆನ್ಸಿ ಕಾರ್ಯಾಚರಣೆಯ ನಂತರ ಮಂಗಳವಾರ ಅವರನ್ನು ರಕ್ಷಿಸಲಾಯಿತು. ಅವಶೇಷಗಳನ್ನು ತೆರವುಗೊಳಿಸುವಾಗ ಅಮೆರಿಕದ ಆಗರ್ ಯಂತ್ರವು ಅಡಚಣೆಗಳನ್ನು ಎದುರಿಸಿದ ನಂತರ ಕೊರೆಯಲು ಇಲಿ-ಪಡೆ ಗಣಿಗಾರಿಕೆ ತಜ್ಞರ 12 ಸದಸ್ಯರ ತಂಡವನ್ನು ಕರೆಯಲಾಯಿತು. +ಅಧಿಕಾರಿಗಳ ಪ್ರಕಾರ, ಅವರಲ್ಲಿ ಕೆಲವರು ದೆಹಲಿ ಜಲ ಮಂಡಳಿಗೆ ಒಳಚರಂಡಿ ಮಾರ್ಗಗಳು ಮತ್ತು ಪೈಪ್‍ಲೈನ್‍ಗಳನ್ನು ಹಾಕುವಲ್ಲಿ ತೊಡಗಿಸಿಕೊಂಡಿದ್ದಾರೆ. ಕೇಜ್ರಿವಾಲ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅಕಾರಿಯೊಬ್ಬರು ತಿಳಿಸಿದ್ದಾರೆ. +ದುಬೈನಲ್ಲಿಂದು 7 ದ್ವಿಪಕ್ಷಿಯ ಸಭೆಗಳನ್ನು ನಡೆಸಲಿದ್ದಾರೆ ಮೋದಿ +ಇಲಿ-ರಂಧ್ರ ಗಣಿಗಾರಿಕೆಯು ಕಾರ್ಮಿಕರಿಗೆ ಪ್ರವೇಶಿಸಲು ಮತ್ತು ಕಲ್ಲಿದ್ದಲನ್ನು ಹೊರತೆಗೆಯಲು ಸಾಮಾನ್ಯವಾಗಿ 3-4 ಅಡಿ ಎತ್ತರದ ಕಿರಿದಾದ ಸುರಂಗಗಳನ್ನು ಅಗೆಯುವುದನ್ನು ಒಳಗೊಂಡಿರುತ್ತದೆ. ಸಮತಲವಾಗಿರುವ ಸುರಂಗಗಳನ್ನು ಸಾಮಾನ್ಯವಾಗಿ ಇಲಿ ರಂಧ್ರಗಳು ಎಂದು ಕರೆಯಲಾಗುತ್ತದೆ, ಪ್ರತಿಯೊಂದೂ ಒಬ್ಬ ವ್ಯಕ್ತಿಗೆ ಸರಿಹೊಂದುತ್ತದೆ. +ಸಿಲ್ಕ್ಯಾರಾ ಸುರಂಗದಲ್ಲಿ, 12 ತಜ್ಞರನ್ನು ಟ್ರೆಂಚ್‍ಲೆಸ್ ಇಂಜಿನಿಯರಿಂಗ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ನವಯುಗ ಇಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಮುಖ್ಯ ರಚನೆಯ ಕುಸಿದ ಭಾಗದಲ್ಲಿ ಇಲಿ-ಹೋಲ್ ಗಣಿಗಾರಿಕೆ ತಂತ್ರವನ್ನು ಅಡ್ಡಲಾಗಿ ನಿಯೋಜಿಸಲು ಕರೆದಿದ್ದವು. \ No newline at end of file diff --git a/eesanje/url_47_226_9.txt b/eesanje/url_47_226_9.txt new file mode 100644 index 0000000000000000000000000000000000000000..93fd04d98e6a7da4ea8f42dbb289d4df284fa31d --- /dev/null +++ b/eesanje/url_47_226_9.txt @@ -0,0 +1,6 @@ +ಭಾರತದಲ್ಲಿ ಸೋಮವಾರದಿಂದ ಜಾಗತಿಕ ತಂತ್ರಜ್ಞಾನ ಶೃಂಗಸಭೆ +ನವದೆಹಲಿ, ಡಿ.1 (ಪಿಟಿಐ) ಭಾರತವು ಸೋಮವಾರದಿಂದ ಮೂರು ದಿನಗಳ ಜಾಗತಿಕ ಶೃಂಗಸಭೆಯನ್ನು ಆಯೋಜಿಸಲಿದ್ದು, ಡೇಟಾ ರಕ್ಷಣೆ, ರಫ್ತು ನಿಯಂತ್ರಣಗಳು ಮತ್ತು ತಂತ್ರಜ್ಞಾನ ಮತ್ತು ಭೌಗೋಳಿಕ ರಾಜಕೀಯದ ಮೇಲೆ ಅದರ ಪ್ರಭಾವವನ್ನು ಕೇಂದ್ರೀಕರಿಸಿದೆ. ಶೃಂಗಸಭೆಯು ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ನಾವೀನ್ಯತೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕ್ರಾಸ್-ಕಟಿಂಗ್ ನೀತಿ ಸಮಸ್ಯೆಗಳ ಬಗ್ಗೆಯೂ ಚರ್ಚಿಸುತ್ತದೆ. ಗ್ಲೋಬಲ್ ಟೆಕ್ನಾಲಜಿ ಶೃಂಗಸಭೆಯ (ಜಿಟಿಎಸ) ವಿಷಯವು ತಂತ್ರಜ್ಞಾನದ ಜಿಯೋಪಾಲಿಟಿಕ್ಸ್ ಆಗಿರುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತಿಳಿಸಿದೆ. +ದುಬೈನಲ್ಲಿಂದು 7 ದ್ವಿಪಕ್ಷಿಯ ಸಭೆಗಳನ್ನು ನಡೆಸಲಿದ್ದಾರೆ ಮೋದಿ +ಶೃಂಗಸಭೆಯು ಭೌಗೋಳಿಕ ತಂತ್ರಜ್ಞಾನದ ಭಾರತದ ಪ್ರಮುಖ ಕಾರ್ಯಕ್ರಮವಾಗಿದೆ ಮತ್ತು ಇದನ್ನು ಎಂಇಎ ಮತ್ತು ಕಾರ್ನೆಗೀ ಇಂಡಿಯಾದ ನೀತಿ ಯೋಜನೆ ಮತ್ತು ಸಂಶೋಧನಾ ವಿಭಾಗವು ಸಹ-ಹೋಸ್ಟ್ ಮಾಡುತ್ತಿದೆ. ಭಾರತ ಮತ್ತು ಪ್ರಪಂಚದಾದ್ಯಂತದ ನೀತಿ ನಿರೂಪಕರು, ಉದ್ಯಮ ತಜ್ಞರು, ಶಿಕ್ಷಣ ತಜ್ಞರು, ತಂತ್ರಜ್ಞರು ಮತ್ತು ನವೋದ್ಯಮಿಗಳು ಸೇರಿದಂತೆ ಸುಮಾರು ನೂರು ಸ್ಪೀಕರ್‍ಗಳು ಮತ್ತು ಸಾವಿರಾರು ಭಾಗವಹಿಸುವವರನ್ನು ಜಿಟಿಎಸ್ ಕರೆಯಲಿದೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ. +ಯುಎಸ್ , ಯುಕೆ, ಜರ್ಮನಿ, ಸಿಂಗಾಪುರ, ಸಿಯೆರಾ ಲಿಯೋನ್, ಶ್ರೀಲಂಕಾ, ಕೀನ್ಯಾ, ಲಿಥುವೇನಿಯಾ, ಬ್ರೆಜಿಲ್ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ಹಲವಾರು ದೇಶಗಳ ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅದು ಹೇಳಿದೆ. +ಶೃಂಗಸಭೆಯು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳು, ಭೌಗೋಳಿಕ ರಾಜಕೀಯ ಮತ್ತು ಹೊಸ, ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಿಗೆ ಸಂಬಂಧಿಸಿದ ನೀತಿ ಸಮಸ್ಯೆಗಳು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ರಫ್ತು ನಿಯಂತ್ರಣಗಳು, ಡೇಟಾ ರಕ್ಷಣೆ ಮತ್ತು ನಾವೀನ್ಯತೆಗೆ ಸಂಬಂಧಿಸಿದ ಕ್ರಾಸ-ಕಟಿಂಗ್ ನೀತಿ ಸಮಸ್ಯೆಗಳನ್ನು ಚರ್ಚಿಸುತ್ತದೆ. ಶೃಂಗಸಭೆಯ ಉದ್ಘಾಟನಾ ಅಧಿವೇಶನವು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ. \ No newline at end of file diff --git a/eesanje/url_47_227_1.txt b/eesanje/url_47_227_1.txt new file mode 100644 index 0000000000000000000000000000000000000000..37f6807ac2e9dc50b1ef581e60afed11b494173b --- /dev/null +++ b/eesanje/url_47_227_1.txt @@ -0,0 +1,8 @@ +“ಸದ್ಯಕ್ಕೆ 8ನೇ ವೇತನ ಆಯೋಗ ರಚನೆ ಇಲ್ಲ” +ನವದೆಹಲಿ,ಡಿ.1- ಮುಂದಿನ ವರ್ಷ ನಡೆಯಲಿರುವ ರಾಷ್ಟ್ರೀಯ ಚುನಾವಣೆಗೆ ಮುನ್ನ ಸುಮಾರು 5.4 ಮಿಲಿಯನ್ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎಂಟನೇ ವೇತನ ಆಯೋಗವನ್ನು ಸ್ಥಾಪಿಸುವ ಯಾವುದೇ ಯೋಜನೆಯನ್ನು ಸರ್ಕಾರ ಹೊಂದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ಹೇಳಿದ್ದಾರೆ. +8ನೇ ವೇತನ ಆಯೋಗವನ್ನು ಸ್ಥಾಪಿಸುವ ಬಗ್ಗೆ ಯಾವುದೇ ಉದ್ದೇಶವಿಲ್ಲ. ಇದು ಸದ್ಯಕ್ಕೆ ಬಾಕಿ ಉಳಿದಿಲ್ಲ ಎಂದು ಸೋಮನಾಥನ್ ಹೇಳಿದ್ದಾರೆ. ಹಿಂದೆ, ಚುನಾವಣೆಯ ಪೂರ್ವದಲ್ಲಿ, ಕೇಂದ್ರ ಸರ್ಕಾರಿ ನೌಕರರು, ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಕುಟುಂಬ ಪಿಂಚಣಿದಾರರನ್ನು ಗೆಲ್ಲಲು ಸರ್ಕಾರಗಳು ವೇತನ ಆಯೋಗದ ಸ್ಥಾಪನೆ ಅಥವಾ ಅನುಷ್ಠಾನವನ್ನು ಪರಿಣಾಮಕಾರಿ ಸಾಧನವಾಗಿ ಬಳಸಿಕೊಂಡಿವೆ. 7 ನೇ ವೇತನ ಆಯೋಗವನ್ನು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಸೆಪ್ಟೆಂಬರ್ 2013 ರಲ್ಲಿ ರಾಜ್ಯ ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ತಿಂಗಳ ಮೊದಲು ಸ್ಥಾಪಿಸಿತು. +ಡ್ರಗ್ ಪೆಡ್ಲಿಂಗ್ : ವಿದೇಶಿ ಪ್ರಜೆ ಸೇರಿ ಮೂವರ ಬಂಧನ +ಆದಾಗ್ಯೂ, ಬಿಜೆಪಿಯು ಅಂತಹ ಕ್ರಮದಿಂದ ಸ್ಪಷ್ಟವಾಗಿದೆ, ಬದಲಿಗೆ ಹೊಸ ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ವಿವಾದದ ಬಿಂದುವಾಗಿ ಮಾರ್ಪಟ್ಟಿರುವ ಹೊಸ ಪಿಂಚಣಿ ಯೋಜನೆಯ ಪರಿಶೀಲನೆಯ ಮೇಲೆ ಕೇಂದ್ರೀಕರಿಸಿದೆ. +ಪ್ರಸ್ತುತ ಯೋಜನೆಯಡಿ, ನೌಕರರು ತಮ್ಮ ಮೂಲ ವೇತನದ ಶೇಕಡಾ 10 ರಷ್ಟು ಕೊಡುಗೆ ನೀಡಿದರೆ, ಸರ್ಕಾರವು ಶೇ.14 ಪಾವತಿಸುತ್ತದೆ. ಇದು ರಾಜಕೀಯವಾಗಿ ವಿವಾದಾಸ್ಪದವಾಗಿದೆ, ಹಲವಾರು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಿದ್ದು, ಪಿಂಚಣಿದಾರರಿಗೆ ಯಾವುದೇ ಉದ್ಯೋಗಿ ಕೊಡುಗೆಯಿಲ್ಲದೆಯೇ ಮಾಸಿಕ ಅವರ ಕೊನೆಯ ಸಂಬಳದ 50 ಪ್ರತಿಶತವನ್ನು ಖಾತರಿಪಡಿಸುತ್ತದೆ.ವ್ಯವಸ್ಥೆಯನ್ನು ಪರಿಶೀಲಿಸಲು ಹಣಕಾಸು ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿತು. +ನಿಗಮ ಮಂಡಳಿಯಲ್ಲಿ ಕಾರ್ಯಕರ್ತರಿಗೂ ಅವಕಾಶ ಕಲ್ಪಿಸಿ : ಸತೀಶ್ ಜಾರಕಿಹೊಳಿ +ನಾವು ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚನೆಗಳನ್ನು ಪೂರ್ಣಗೊಳಿಸಿದ್ದೇವೆ ಮತ್ತು ನಮ್ಮ ವರದಿಯನ್ನು ಶೀಘ್ರದಲ್ಲೇ ಸಲ್ಲಿಸಬೇಕು ಎಂದು ಸೋಮನಾಥನ್ ಹೇಳಿದರು. ನೌಕರರು ತಮ್ಮ ಕೊನೆಯ ಸಂಬಳದ ಕನಿಷ್ಠ ಶೇ.40 ರಿಂದ 45 ರಷ್ಟು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಬದಲಾವಣೆಗಳನ್ನು ತರಬಹುದು. \ No newline at end of file diff --git a/eesanje/url_47_227_10.txt b/eesanje/url_47_227_10.txt new file mode 100644 index 0000000000000000000000000000000000000000..6e756e42448887591e7435fae872f53690b199b1 --- /dev/null +++ b/eesanje/url_47_227_10.txt @@ -0,0 +1,8 @@ +ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ +ಬೆಂಗಳೂರು,ನ.29- ನೆರೆಯ ಚೀನಾ ದೇಶದಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ತತ್‍ಕ್ಷಣವೇ ಆರೋಗ್ಯದ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕೆಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. +ಕರ್ನಾಟಕ, ರಾಜಸ್ಥಾನ, ಗುಜರಾತ್, ಉತ್ತರಕಾಂಡ ಮತ್ತು ತಮಿಳುನಾಡು ಸೇರಿದಂತೆ ಒಟ್ಟು ಐದು ರಾಜ್ಯಗಳು ಚೀನಾದಲ್ಲಿ ಉಸಿರಾಟದ ಕಾಯಿಲೆಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸೂಚನೆ ಕೊಟ್ಟಿದೆ. +ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯವರು ಈ ಐದು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪ್ರತ್ಯೇಕ ಪತ್ರ ಬರೆದು ಆಸ್ಪತ್ರೆಯಲ್ಲಿ ಅಗತ್ಯವಿರುವ ಐಸಿಯು ವಾರ್ಡ್, ಬೆಡ್, ಆಕ್ಸಿಜನ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕಡೆ ಹೆಚ್ಚಿನ ಗಮನಹರಿಸಿ ಎಂದು ಸಲಹೆ ಕೊಟ್ಟಿದ್ದಾರೆ. +ಉತ್ತರಾಕಾಶಿ ಸುರಂಗ ದಿಂದ ಬದುಕಿಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ +ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಸೋಂಕು ಭಾರತದಲ್ಲಿ ಹೆಚ್ಚಿನ ದುಷ್ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಇದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ದೊಡ್ಡವರಲ್ಲಿ ಕಂಡುಬಂದರೆ 5ರಿಂದ 7 ದಿನಗಳ ಒಳಗೆ ವಾಸಿಯಾಗುತ್ತದೆ. ಮಕ್ಕಳಲ್ಲಿ ಕಂಡರೆ ಎರಡು ವಾರ ವಿಶ್ರಾಂತಿ ಪಡೆಯಬೇಕಾಗುತ್ತದೆ. ಈ ಸೋಂಕು ಕಡಿಮೆ ರೋಗ ಪ್ರಮಾಣವನ್ನು ಹೊಂದಿದೆ. ಆದರೂ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದೆ. +ಮಕ್ಕಳು, ವೈದ್ಯರು ಮತ್ತು ಗರ್ಭಿಣಿಯರ ಮೇಲೆ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇತರೆ ಬೇರೆ ಯಾವುದಾದರೂ ಕಾಯಿಲೆಗಳಿಂದ ಬಳಲುತ್ತಿದ್ದರೆ ಅಂಥವರಿಗೆ ಜೀವಕ್ಕೂ ಅಪಾಯ. ಜ್ವರ, ಶೀತ, ಅಸ್ವಸ್ಥತೆ, ಮೈಯಾಲ್ಜಿಯಾ, ವಾಕರಿಕೆ, ಸೀನುವಿಕೆ, ಮತ್ತು ಒಣ ಕೆಮ್ಮು ಹೆಚ್ಚಿನ ಅಪಾಯದ ಗುಂಪುಗಳಲ್ಲಿ ಮೂರು ವಾರಗಳವರೆಗೆ ಇರುತ್ತದೆ ಎಂದು ತಜ್ಞರು ಹೇಳಿದ್ದಾರೆ. +ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯು ತನ್ನ ಸಿಬ್ಬಂದಿಗೆ ಜಾಗರೂಕವಾಗಿರಲು ಸೂಚಿಸಿದ್ದು, ಕೆಲವು ಕಡೆ ಕ್ಷಿಪ್ರ ಪ್ರತಿಕ್ರಿಯೆ ನೀಡುವ ತಂಡಗಳನ್ನು ರಚನೆ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಇದಕ್ಕಾಗಿ ಪ್ರತ್ಯೇಕ ವಾರ್ಡ್‍ಗಳನ್ನು ಮೀಸಲಿಡಲಾಗಿದ್ದು, ಅಗತ್ಯ ಕಂಡಬಂದರೆ ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಕಾರ್ಯದರ್ಶಿ ಐದು ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. \ No newline at end of file diff --git a/eesanje/url_47_227_11.txt b/eesanje/url_47_227_11.txt new file mode 100644 index 0000000000000000000000000000000000000000..8cc43906dd4b980a3e99400c7c355f8763be69bf --- /dev/null +++ b/eesanje/url_47_227_11.txt @@ -0,0 +1,9 @@ +ಲೋಕಸಭೆ ಚುನಾವಣೆಗೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಸಚಿವರಿಗೆ ಪ್ರಧಾನಿ ಮೋದಿ ನಿರ್ದೇಶನ +ನವದೆಹಲಿ,ನ.29- ಮುಂಬರುವ 2024ರ ಲೋಕಸಭೆ ಚುನಾವಣೆಗೆ ಇಂದಿನಿಂದಲೇ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಪುಟದ ಎಲ್ಲ ಸಚಿವರಿಗೆ ಪ್ರಧಾನಿ ನರೇಂದ್ರಮೋದಿ ಅವರು ನಿರ್ದೇಶನ ನೀಡಿದ್ದಾರೆ. ಕಳೆದ ರಾತ್ರಿ ತಮ್ಮ ನಿವಾಸದಲ್ಲಿ ಸಂಪುಟದ ಕೆಲವು ಹಿರಿಯ ಸಚಿವರ ಜೊತೆ ಸಭೆ ನಡೆಸಿರುವ ಮೋದಿ ಅವರು ಈ ಬಾರಿಯ 2024ರ ಲೋಕಸಭೆ ಚುನಾವಣೆ ಪಕ್ಷಕ್ಕೆ ಮಾಡು ಇಲ್ಲವೇ ಮಡಿ ಎಂಬಂತಿದೆ. ಹೀಗಾಗಿ ಚುನಾವಣೆಗೆ ಬೇಕಾದ ಸಿದ್ದತೆಗಳನ್ನು ಇಂದಿನಿಂದಲೇ ಆರಂಭಿಸಿ ಎಂದು ಸೂಚನೆ ಕೊಟ್ಟಿದ್ದಾರೆ. +ಇದೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಸಲುಪಿಸುವ ಭಾರತ ಸಂಕಲ್ಪ ಯಾತ್ರೆ ದೇಶಾದ್ಯಂತ ಸಂಚರಿಸಲಿದ್ದು, ಇದನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರು ಇದರಲ್ಲಿ ತೊಡಗಿಸಿಕೊಳ್ಳಬೇಕು. ಮತದಾರರ ಜೊತೆ ಕೆಳಹಂತದ ಕಾರ್ಯಕರ್ತರನ್ನು ತಲುಪಲು ಇದು ಅನುಕೂಲವಾಗಲಿದೆ ಎಂದಿದ್ದಾರೆ. +ಯಾತ್ರೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು. ಇದರಲ್ಲಿ ಯಾರೊಬ್ಬರು ಗಣ್ಯವ್ಯಕ್ತಿಗಳಾಗುವುದಿಲ್ಲ. ಪ್ರತಿಯೊಬ್ಬರು ಸಂಘಟನೆ ಹಿನ್ನಲೆಯಿಂದ ಬಂದವರು. ಕೇಂದ್ರ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತಲುಪಿವೆ ಎಂಬುದನ್ನು ಖುದ್ದು ವೀಕ್ಷಿಸಲು ಇದೊಂದು ಸುವರ್ಣಾವಕಾಶ. ಹಾಗಾಗಿ ಇದನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವ ಸಿದ್ದತೆಗಳನ್ನು ತೆಗೆದುಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ. +ಭಾರತ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿ ರಾಹುಲ್ ದ್ರಾವಿಡ್ ಮುಂದುವರಿಕೆ..? +ನಾವು ಜನತೆಗೆ ಯಾವೆಲ್ಲ ಭರವಸೆಗಳನ್ನು ಕೊಟ್ಟಿದ್ದೇವೆ, ಅದು ಎಷ್ಟರಮಟ್ಟಿಗೆ ಫಲಾನುಭವಿಗಳನ್ನು ತಲುಪಿದೆ, ಇದರಿಂದ ಜನರಿಗೆ ಅನುಕೂಲವಾಗಿದೆಯೇ? ಇಲ್ಲವೇ ಯೋಜನೆ ಅನುಷ್ಠಾನದಲ್ಲಿ ಲೋಪವಾಗಿದೆಯೇ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲು ಭಾರತ್ ಸಂಪರ್ಕ ಯಾತ್ರೆ ಒಂದು ವೇದಿಕೆಯಾಗಲಿದೆ ಎಂದಿದ್ದಾರೆ. +ಮೂಲಗಳ ಪ್ರಕಾರ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಬಂದ ನಂತರ ಹಾಗೂ ಚಳಿಗಾಲದ ಅವೇಶನ ಮುಗಿದ ಬಳಿಕ ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಮೋದಿಯವರೇ ಪಕ್ಷದ ಪ್ರಮುಖರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. +ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಷಾ, ಸಂಘಟನಾ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಆಯಾ ರಾಜ್ಯ ಘಟಕದ ಅಧ್ಯಕ್ಷರು ಸೇರಿದಂತೆ ಹಲವರ ಜೊತೆ ಸಭೆ ನಡೆಸಿ ಚುನಾವಣೆ ಗೆಲ್ಲಲು ಕಾರ್ಯತಂತ್ರವನ್ನು ರೂಪಿಸಲಿದ್ದಾರೆ. +ಚಳಿಗಾಲದ ಅಧಿವೇಶನದಲ್ಲಿ ದೇಶಾದ್ಯಂತ ಪ್ರತಿಯೊಬ್ಬರಿಗೂ ಸಮಾನ ಕಾನೂನು ನೀಡುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಬಿಜೆಪಿಯೊಳಗೆ ಒತ್ತಡ ಹೆಚ್ಚಾಗಿದೆ. ಈ ಕಾಯ್ದೆ ಜಾರಿಯಾದರೆ ಹಿಂದೂ ಮತಗಳ ಕ್ರೌಢೀಕರಣವಾಗಲಿದ್ದು, ಚುನಾವಣೆಗೆ ಇದು ಅನುಕೂಲವಾಗಲಿದೆ ಎಂಬುದು ಪ್ರಮುಖರ ಒತ್ತಾಸೆ. ಆದರೆ ಈ ಅವೇಶನದಲ್ಲಿ ಮೂರು ಐಪಿಸಿ ಸೆಕ್ಷನ್ ಕಾಯ್ದೆಗಳನ್ನು ತಿದ್ದುಪಡಿ ಮಾಡಿರುವ ಕಾಯ್ದೆ ಮಂಡನೆಯಾಗಲಿದೆ. ನಂತರವಷ್ಟೇ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಮಂಡನೆ ಮಾಡುವ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ ಎಂದು ಗೊತ್ತಾಗಿದೆ. \ No newline at end of file diff --git a/eesanje/url_47_227_12.txt b/eesanje/url_47_227_12.txt new file mode 100644 index 0000000000000000000000000000000000000000..6739f796ec840cc2da911104eb1479e34574482c --- /dev/null +++ b/eesanje/url_47_227_12.txt @@ -0,0 +1,9 @@ +ಉತ್ತರಾಕಾಶಿ ಸುರಂಗ ದಿಂದ ಬದುಕಿಬಂದ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ಮಾತುಕತೆ +ನವದೆಹಲಿ,ನ.29- ಉತ್ತರಾಕಾಶಿಯಲ್ಲಿ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಸಿದಂತೆ ರಕ್ಷಣೆಗೊಂಡ ಕಾರ್ಮಿಕರ ಜೊತೆಗೆ ದೂರವಾಣಿ ಮೂಲಕ ಪ್ರಧಾನಿ ನರೇಂದ್ರಮೋದಿ ಮಾತುಕತೆ ನಡೆಸಿದರು. ಎಲ್ಲಾ ಕಾರ್ಮಿಕರ ಬಳಿ ಮಾತನಾಡಿ, ಆರೋಗ್ಯ ವಿಚಾರಿಸಿದ ಅವರು, ನೀವು ಸುರಕ್ಷಿತವಾಗಿ ಹೊರ ಬಂದಿರುವುದು ಖುಷಿಯ ಸಂಗತಿ. ಅದನ್ನು ಶಬ್ದದಲ್ಲಿ ವರ್ಣನೆ ಮಾಡಲು ಸಾಧ್ಯವಿಲ್ಲ. ಕೇದಾರನಾಥ ಬದರಿನಾಥ ಆರ್ಶಿವಾದ ಎಂದರು. +ಎಲ್ಲರ ಧೈರ್ಯ ಮೆಚ್ಚುವಂತದ್ದು, ಒಬ್ಬರಿಗೊಬ್ಬರು ಆತ್ಮ ವಿಶ್ವಾಸ ತುಂಬಿದ್ದೀರಿ ಅದು ದೊಡ್ಡ ವಿಚಾರವಾಗಿದೆ. ನಾನು ಸಿಎಂ ಸೇರಿ ಎಲ್ಲರಿಂದ ಮಾಹಿತಿ ಪಡೆಯುತ್ತಿದ್ದೆ. ಮಾಹಿತಿ ಪಡೆದರೂ ನಿಮ್ಮ ಬಗೆಗಿನ ಚಿಂತೆ ಕಡಿಮೆಯಾಗುತ್ತಿರಲಿಲ್ಲ. ನಿಮ್ಮ ಕುಟುಂಬಸ್ಥರ ಪುಣ್ಯದಿಂದ ಎಲ್ಲರೂ ಸುರಕ್ಷಿತವಾಗಿ ಹೊರಬಂದದ್ದೀರಿ ಹೇಳಿದ್ದಾರೆ. +ಉತ್ತರಕಾಶಿಯಲ್ಲಿ ಕಾರ್ಮಿಕ ಸಹೋದರರ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನು ಭಾವುಕರನ್ನಾಗಿಸುತ್ತಿದೆ. ನಿಮ್ಮ ಧೈರ್ಯ ಹಾಗೂ ತಾಳ್ಮೆ ಎಲ್ಲರಿಗೂ ಸೂರ್ತಿ, ನೀವೆಲ್ಲರೂ ದೀರ್ಘಕಾಲ ಆರೋಗ್ಯವಾಗಿರಿ. ದೀರ್ಘಾವಯ ಕಾಯುವಿಕೆಯ ಬಳಿಕ ನೀವು ನಿಮ್ಮ ಪ್ರೀತಿ ಪಾತ್ರರನ್ನು ಭೇಟಿಯಾಗಿರುವುದು ತುಂಬಾ ತೃಪ್ತಿದಾಯಕ ಸಂಗತಿ ಎಂದಿದ್ದಾರೆ. +ಮುಂಬರುವ ಲೋಕಸಭಾ ಚುನಾವಣೆಯಲ್ಲಿ 4 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ..? +ಕಾರ್ಮಿಕರ ರಕ್ಷಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂ ಕೂಡ ಹರ್ಷ ವ್ಯಕ್ತಪಡಿಸಿದ್ದು, ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕ ಬಂಧುಗಳು ಸುರಕ್ಷಿತವಾಗಿ ವಾಪಸ್ ಬಂದಿರುವುದು ಸಂತಸದ ಸುದ್ದಿ. ಅವರಿಗೆ ಮತ್ತು ಅವರ ಕುಟುಂಬದವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ತಿಳಿಸಿದ್ದಾರೆ. +ಉತ್ತರಕಾಶಿ ಜಿಲ್ಲೆಯ ಸಿಲ್‍ಕ್ಯಾರ ಹಾಗೂ ದಂಡಲ್‍ಗಾಂವ್‍ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿತ್ತು.ನವೆಂಬರ್ 12ರಂದು ಉತ್ತರ ಕಾಶಿಯ ಸಿಲ್ಕ್ಯಾರಾ ಸುರಂಗದ ಒಂದು ಭಾಗ ಕುಸಿದಿತ್ತು. +ಅದರೊಳಗೆ 41 ಕಾರ್ಮಿಕರು ಸಿಕ್ಕಿಹಾಕಿಕೊಂಡಿದ್ದರು. ಸತತ ಪ್ರಯತ್ನದ ಬಳಿಕ 17 ದಿನಗಳ ನಂತರ ಈ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸದ್ಯ ಕಾರ್ಮಿಕರಿಗೆ ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಲವು ರೀತಿಯ ವೈದ್ಯಕೀಯ ತಪಾಸಣೆ ನಡೆದಿದೆ. +ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು 41 ಕಾರ್ಮಿಕರಿಗೆ ಹೂಮಾಲೆಯೊಂದಿಗೆ ಸ್ವಾಗತಿಸಿ, ಕೈಕುಲುಕಿ ಅವರನ್ನು ಅಪ್ಪಿಕೊಂಡರು, ರಕ್ಷಣಾ ತಂಡಗಳು ಮತ್ತು ಅಕಾರಿಗಳು ಚಪ್ಪಾಳೆ ತಟ್ಟಿದರು. \ No newline at end of file diff --git a/eesanje/url_47_227_2.txt b/eesanje/url_47_227_2.txt new file mode 100644 index 0000000000000000000000000000000000000000..2ddcf2f75436762afe8b0cb5d149d04eb83c2d6f --- /dev/null +++ b/eesanje/url_47_227_2.txt @@ -0,0 +1,4 @@ +ಭದ್ರತಾ ಪಡೆ ಎನ್‌ಕೌಂಟರ್‌ನಲ್ಲಿ ಉಗ್ರ ಖತಂ +ಶ್ರೀನಗರ,ಡಿ.1- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಜಿಲ್ಲೆಯ ಅರಿಹಾಲ್ ಪ್ರದೇಶದ ನ್ಯೂ ಕಾಲೋನಿಯಲ್ಲಿ ನಿನ್ನೆ ಭದ್ರತಾ ಪಡೆಗಳು ಅಲ್ಲಿನ ತೋಟಗಳಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಕಾಳಗ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಡ್ರಗ್ ಪೆಡ್ಲಿಂಗ್ : ವಿದೇಶಿ ಪ್ರಜೆ ಸೇರಿ ಮೂವರ ಬಂಧನ +ಕಾರ್ಯಾಚರಣೆ ಮುಂದುವರೆದಿದ್ದು ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಯೋತ್ಪಾದಕರ ಗುರುತು ಮತ್ತು ಗುಂಪು ಸಂಬಂಧ ತಕ್ಷಣವೇ ತಿಳಿದಿಲ್ಲ ಎಂದು ಅವರು ಹೇಳಿದರು. \ No newline at end of file diff --git a/eesanje/url_47_227_3.txt b/eesanje/url_47_227_3.txt new file mode 100644 index 0000000000000000000000000000000000000000..581542ce0c132eebd939f491adfece3fa61d1bc0 --- /dev/null +++ b/eesanje/url_47_227_3.txt @@ -0,0 +1,14 @@ +ತೆಲಂಗಾಣ ಚುನಾವಣೆ : ಮತ ಚಲಾಯಿಸಿದ ಸ್ಟಾರ್ ನಟರು +ಹೈದರಾಬಾದ್,ನ.30- ಹಿಂದೆಂದಿಗಿಂತಲೂ ಭಾರೀ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಿರುವ ತೆಲಂಗಾಣ ವಿಧಾನಸಭೆಗೆ ನಡೆದ ಮತದಾನದಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರೆತುಪಡಿಸಿದರೆ, ರಾಜ್ಯದ್ಯಾಂತ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಒಟ್ಟು 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು 3.26 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಿದ್ದಾರೆ. +ಮತದಾರರ ಪಟ್ಟಿಯಲ್ಲಿ ಹೆಸರುಗಳ ನಾಪತ್ತೆ, ಕೈಕೊಟ್ಟ ಇವಿಎಂಗಳು, ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಬಿಟ್ಟರೆ, ಒಂದೇ ಹಂತದಲ್ಲಿ ನಡೆದ ಮತದಾನಕ್ಕೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸಿದರು. ನಕ್ಸಲ್ ಪೀಡಿತ 13 ಕ್ಷೇತ್ರಗಳಲ್ಲಿ ಬೆಳಿಗ್ಗೆ 7ರಿಂದ ಸಂಜೆ 4 ರವರೆಗೆ ಮತದಾನ ನಡೆಯಿತು. 119 ಸ್ಥಾನಗಳ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು 3.26 ಕೋಟಿಗೂ ಹೆಚ್ಚು ಮತದಾರರು ನಿರ್ಧರಿಸಿದ್ದಾರೆ. +ಮುಖ್ಯಮಂತ್ರಿ ಕೆಸಿಆರ್ ಚಂದ್ರಶೇಖರ್ ರಾವ್, ಟಿಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ, ಅಕ್ಬುರುದ್ದೀನ್ ಓವೈಸಿ, ಭಾರತದ ಮಾಜಿ ಕ್ರಿಕೆಟ್ ತಂಡದ ನಾಯಕ ಮೊಹಮ್ಮದ್ ಅಜರುದ್ದೀನ್ ಸೇರಿದಂತೆ ಹಲವು ಗಣ್ಯರು ತಮ್ಮ ತಮ್ಮ ಮತಗಟ್ಟೆಗೆ ಬಂದು ಮತಚಲಾಯಿಸಿದರು. +ಈ ನಡುವೆ ತೆಲುಗು ಚಿತ್ರರಂಗದ ಖ್ಯಾತ ನಟರಾದ ಅಲ್ಲು ಅರ್ಜುನ್ , ಜೂನಿಯರ್ ಎನ್‍ಟಿಆರ್ ಹಾಗೂ ಚಿರಂಜೀವಿ ಹೈದರಾಬಾದ್‍ನಲ್ಲಿ ತಮ್ಮ ಕುಟುಂಬಗಳೊಂದಿಗೆ ಬಂದು ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಬೆಳ್ಳಂ ಬೆಳಗ್ಗೆಯೇ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು, ವಿಶೇಷವಾಗಿತ್ತು. +ಅಲ್ಲು ಅರ್ಜುನ್ ತಾವೊಬ್ಬರೇ ಮತಗಟ್ಟೆಗೆ ಬಂದು ವೋಟ್ ಮಾಡಿದರು. ಜೂನಿಯರ್ ಎನ್‍ಟಿಆರ್ ಲಕ್ಷ್ಮಿ ಪ್ರಣತಿ, ತಾಯಿ ಶಾಲಿನಿ ನಂದಮೂರಿ ಅವರೊಂದಿಗೆ ಬಂದು ವೋಟ್ ಮಾಡಿದ್ರು. ಇನ್ನೂ ಮೆಗಾಸ್ಟಾರ್ ಚಿರಂಜೀವಿ ಸಹ ತಮ್ಮ ಕುಟುಂಬ ಸಮೇತರಾಗಿ ಬಂದು ವೋಟ್ ಮಾಡಿ ತನ್ಮ ಹಕ್ಕು ಚಲಾಯಿಸಿದರು. ಜೊತೆಗೆ ಪ್ರತಿಯೊಬ್ಬರು ಬಂದು ವೋಟ್ ಮಾಡುವಂತೆ ಮನವಿ ಮಾಡಿದರು. ಸದ್ಯ ಸ್ಟಾರ್ಸ್‍ಗಳು ವೋಟ್ ಮಾಡಿರುವ ಫೆÇೀಟೋ ವೀಡಿಯೋ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. +ಸೂರತ್ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ, 7 ಕಾರ್ಮಿಕರ ಶವ ಪತ್ತೆ +ತೆಲಂಗಾಣ ರಾಜ್ಯದಲ್ಲಿ ಒಟ್ಟು 3,26,02,799 ಮತದಾರರಿದ್ದು, ಇದರಲ್ಲಿ 1,62,98,418 ಪುರುಷರು, 1,63,01,705 ಮಹಿಳೆಯರು ಮತ್ತು 2,676 ತೃತೀಯಲಿಂಗಿಗಳು ಇದ್ದಾರೆ. ಇವರಲ್ಲಿ 15,406 ಸೇವಾ ಮತದಾರರು ಮತ್ತು 2,944 ಎನ್‍ಆರ್‍ಐ ಮತದಾರರು ಸೇರಿದ್ದಾರೆ. 18-19 ವಯೋಮಾನದ ಮತದಾರರ ಸಂಖ್ಯೆ 9,99,667. 221 ಮಹಿಳೆಯರು ಮತ್ತು ಒಬ್ಬ ತೃತೀಯಲಿಂಗಿ ಸೇರಿದಂತೆ ಒಟ್ಟು 2,290 ಅಭ್ಯರ್ಥಿಗಳು ಕಣದಲ್ಲಿದ್ದಾರೆ. +ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಚುನಾವಣಾ ಆಯೋಗವು ಎಲ್ಲಾ 119 ಕ್ಷೇತ್ರಗಳಲ್ಲಿ ಮತದಾನಕ್ಕೆ ವಿಸ್ತಾರವಾದ ವ್ಯವಸ್ಥೆಯನ್ನು ಮಾಡಿತ್ತು. ಆಯೋಗವು 35,655 ಮತಗಟ್ಟೆಗಳಲ್ಲಿ 1.85 ಲಕ್ಷಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿನೆ ಮಾಡಲಾಗಿತ್ತು. +ಬಿಗಿ ಭದ್ರತೆಗೆ ರಾಜ್ಯದಿಂದ ಒಟ್ಟು 45,000 ಸಿಬ್ಬಂದಿ, ಇತರ ಇಲಾಖೆಗಳ 3,000 ಸಿಬ್ಬಂದಿ, ತೆಲಂಗಾಣ ರಾಜ್ಯ ವಿಶೇಷ ಪೊಲೀಸ್ (ಟಿಎಸ್‍ಎಸ್ಪಿ) 50 ಕಂಪನಿಗಳು ಮತ್ತು ಕೇಂದ್ರ ಅರೆಸೇನಾ ಪಡೆಗಳ 375 ಕಂಪನಿಗಳನ್ನು ನಿಯೋಜಿಸಲಾಗಿತ್ತು. ಜೊತೆಗೆ . ನೆರೆಯ ರಾಜ್ಯಗಳ 23,500 ಗೃಹರಕ್ಷಕರೂ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿಕಾಸ್ ರಾಜ್ ಮಾಹಿತಿ ನೀಡಿದ್ದಾರೆ. +ಚುನಾವಣಾ ಅಧಿಕಾರಿಗಳು ಒಟ್ಟು 72,931 ಬ್ಯಾಲೆಟ್ ಯೂನಿಟ್ ಅಥವಾ ಇವಿಎಂಗಳನ್ನು ವ್ಯವಸ್ಥೆ ಮಾಡಿದ್ದರು. ಅವರಲ್ಲಿ 59,779 ಮಂದಿಯನ್ನು ಮತಗಟ್ಟೆಗಳಲ್ಲಿ ನಿಯೋಜಿಸಲಾಗಿದೆ. ಅತಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದಿರುವ (48) ಗ್ರೇಟರ್ ಹೈದರಾಬಾದ್‍ನ ಲಾಲ್ ಬಹದ್ದೂರ್ ನಗರ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ನಾಲ್ಕು ಬ್ಯಾಲೆಟ್ ಯೂನಿಟ್‍ಗಳನ್ನು ನಿಯೋಜಿಸಲಾಗುವುದು. 9 ಕ್ಷೇತ್ರಗಳ ಪ್ರತಿ ಮತಗಟ್ಟೆಯಲ್ಲಿ ಮೂರು ಇವಿಎಂಗಳು ಇರುತ್ತವೆ. +ಕಾಮರೆಡ್ಡಿಯ ಮತಗಟ್ಟೆಗಳಲ್ಲಿ ಮೂರು ಇವಿಎಂಗಳನ್ನು ನಿಯೋಜಿಸಲಾಗುವುದು, ಅಲ್ಲಿ ಮುಖ್ಯಮಂತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‍ಎಸ್) ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎ.ರೇವಂತ್ ರೆಡ್ಡಿ ಸೇರಿದಂತೆ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ. +ಪಾಕಿಸ್ತಾನಕ್ಕೆ ಹೋಗಿ ಮದುವೆಯಾಗಿದ್ದ ಅಂಜು ಭಾರತಕ್ಕೆ ವಾಪಾಸ್ +ಕೆಸಿಆರ್ ಅವರು ಸಿದ್ದಿಪೇಟೆ ಜಿಲ್ಲೆಯ ಗಜ್ವೆಲ್ ಕ್ಷೇತ್ರದಿಂದ ಮರುಚುನಾವಣೆಯಲ್ಲಿ ಸ್ರ್ಪಧಿಸಿದ್ದಾರೆ. ರೇವಂತ್ ರೆಡ್ಡಿ ಅವರು ವಿಕಾರಾಬಾದ್ ಜಿಲ್ಲೆಯ ಕೊಡಂಗಲ್ ನಿಂದ ಸ್ರ್ಪಸುತ್ತಿದ್ದಾರೆ. ಭಾರತದ ಕಿರಿಯ ರಾಜ್ಯದಲ್ಲಿ ಅಧಿಕಾರಕ್ಕಾಗಿ ಬಿಆರ್‍ಎಸ್ ಮತ್ತು ಕಾಂಗ್ರೆಸ್ ನಡುವೆ ಕಠಿಣ ಸ್ಪರ್ಧೆಯಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_227_4.txt b/eesanje/url_47_227_4.txt new file mode 100644 index 0000000000000000000000000000000000000000..e24cbf03b938f92222bd798643288106cd882908 --- /dev/null +++ b/eesanje/url_47_227_4.txt @@ -0,0 +1,10 @@ +ಯುವಜನರ ಸಬಲೀಕರಣಕ್ಕೆ ಎನ್‍ಇಪಿ ಪೂರಕ : ನಾರಾಯಣ ಮೂರ್ತಿ +ಬೆಂಗಳೂರು, ನ.30- ಯುವಜನರು ಮತ್ತು ವಿದ್ಯಾರ್ಥಿಗಳ ಸಬಲೀಕರಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ 2020) ಪೂರಕ ಮತ್ತು ಸಮರ್ಪಕವಾಗಿದೆ ಎಂದು ಹೆಸರಾಂತ ಉದ್ಯಮಿ ಹಾಗೂ ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಹೇಳಿದ್ದಾರೆ. +ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ವಿಶೇಷ ಸಂವಾದದಲ್ಲಿ ಭಾಗವಹಿಸಿದ ಅವರು, ವಿದ್ಯಾರ್ಥಿಗಳು ಹೆಚ್ಚು ಸಮರ್ಥರಾಗಲು ಎನ್‍ಇಪಿ ನೆರವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್‍ಇಪಿ ಕರಡು ರಚನೆ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅಭಿನಂದನಾರ್ಹರು ಎಂದರು. +ವಿದ್ಯಾರ್ಥಿಗಳು ಸ್ವತಂತ್ರವಾಗಿ ಚಿಂತನೆ ಮಾಡುವುದು, ಕ್ರಿಯಾತ್ಮಕವಾಗಿ ಆಲಿಸುವುದು, ವಿಶ್ಲೇಷಣಾ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದು ಅತ್ಯಗತ್ಯ. ಅಂತರಶಿಸ್ತೀಯ ವಿಷಯಗಳನ್ನು ಕಲಿಯುವುದು ಪ್ರಸಕ್ತ ಕಾಲಕ್ಕೆ ಮಹತ್ವದ್ದು. ಈ ನಿಟ್ಟಿನಲ್ಲಿ ಎನ್ ಇ ಪಿ ಸಕಾರಾತ್ಮಕ ಹೆಜ್ಜೆಯಾಗಿದೆ ಎಂದರು. +ಭಾರತದಂತಹ ರಾಷ್ಟ್ರ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಸಹಾನುಕಂಪದಿಂದ ಕೂಡಿದ ಬಂಡವಾಳಶಾಹಿ ವ್ಯವಸ್ಥೆಯೇ ಅತ್ಯಂತ ಸೂಕ್ತ. ನನ್ನ ವಿದ್ಯಾರ್ಥಿದೆಸೆ ಹಾಗೂ ಯೌವನದಲ್ಲಿ ನಾನು ಕೂಡಾ ಬೇರೆ ನಿಲುವುಗಳನ್ನು ಹೊಂದಿದ್ದೆ. ಆದರೆ, ಕಾಲಾನಂತರದಲ್ಲಿ ಇತರ ದೇಶಗಳ ಅಭಿವೃದ್ಧಿ ಹಾದಿ ಗಮನಿಸಿದ ಮೇಲೆ ಸಹಾನುಕಂಪದಿಂದ ಕೂಡಿದ ಬಂಡವಾಳಶಾಹಿಯಾಗಿ ಬದಲಾದೆ. ಫ್ರಾನ್ಸ್ ನಲ್ಲಿ ನಾನು ಕಳೆದ ದಿನಗಳು ನನ್ನ ಚಿಂತನೆಯನ್ನು ಬದಲಾಯಿಸಿತು ಎಂದು ನಾರಾಯಣ ಮೂರ್ತಿ ತಮ್ಮ ಅನುಭವ ಹಂಚಿಕೊಂಡರು. +ದಾಸ ಶ್ರೇಷ್ಠ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣ : ಎಚ್‍ಡಿಡಿ +ಪ್ರತಿ ಉದ್ಯಮಿಯೂ ಕೆಲವು ನಿಯಮಗಳನ್ನು ಅನುಸರಿಸಬೇಕು, ಸಮಾಜದ ಹಿತಾಸಕ್ತಿಯಲ್ಲಿ ಯಾವುದೇ ರಾಜಿ ಇಲ್ಲ, ಆಡಳಿತದ ಎಲ್ಲ ನಿಯಮಗಳ ಪಾಲನೆ, ನಿಯಮಿತ ತೆರಿಗೆ ಪಾವತಿಸುವುದು, ಉತ್ತಮ ನಾಗರಿಕ ಆಗುವುದು. ಈ ನಾಲ್ಕು ಅಂಶಗಳು ಬಹುಮುಖ್ಯ ಎಂದರು. +ನಾಗರಿಕರಿಗೆ ಉಚಿತ ಕೊಡುಗೆಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಯಾವುದೇ ಸರಕು ಉಚಿತವಾಗಿ ದೊರಕಬಾರದು. ಪ್ರತಿಯೊಂದಕ್ಕೂ ಒಂದು ಮೌಲ್ಯವಿದೆ. ಹಾಗಂತ ನಾನು ಬಡಜನರಿಗೆ ಉಚಿತ ಕೊಡುಗೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ನಾನು ಕೂಡಾ ಬಡತನದ ಹಿನ್ನೆಲೆಯಿಂದಲೇ ಬಂದವನು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಯೋಜನೆಯನ್ನು ಇನ್ನೂ 5 ವರ್ಷ ವಿಸ್ತರಿಸಿದ್ದಾರೆ. ಇಂತಹ ಕ್ರಮಗಳು ಬಡಜನರಿಗೆ ಆಹಾರ ಖಾತ್ರಿಪಡಿಸುತ್ತವೆ ಎಂದು ಹೇಳಿದರು. +ನ್ಯೂಜೆರ್ಸಿಯಲ್ಲಿ ಅಜ್ಜ, ಅಜ್ಜಿ, ಚಿಕ್ಕಪ್ಪನನ್ನು ಕೊಂದ ಭಾರತೀಯ ವಿದ್ಯಾರ್ಥಿ +ಉಚಿತ ಕೊಡುಗೆಗಳನ್ನು ಪಡೆದ ಜನರು ಸಮಾಜಕ್ಕೆ ಮರುಕೊಡುಗೆ ನೀಡುವ ತಮ್ಮ ಜವಾಬ್ದಾರಿ ಅರಿಯಬೇಕು. ಭವಿಷ್ಯದ ತಲೆಮಾರಿಗಾಗಿ ಕೊಡುಗೆ ನೀಡಬೇಕು. ಆರ್ಥಿಕ ಮತ್ತು ಔದ್ಯಮಿಕ ಅಭಿವೃದ್ಧಿಯಲ್ಲಿ ಚೀನಾ ಉತ್ತಮ ಸಾಧನೆ ಮಾಡಿದ್ದು, ಭಾರತ ಅದರಿಂದ ಕಲಿಯುವುದು ಸಾಕಷ್ಟಿದೆ. ಈ ಬಗ್ಗೆ ನಮ್ಮ ರಾಜಕೀಯ ನೇತಾರರು ಅಧ್ಯಯನ ಮಾಡಬೇಕು. ಯಾವುದೇ ಪಕ್ಷ ಅಕಾರ ವಹಿಸಿಕೊಂಡರೂ ದೇಶದ ಅಭಿವೃದ್ಧಿ ಮೊದಲ ಆದ್ಯತೆಯಾಗಬೇಕು. ದೇಶ ಮೊದಲು, ನಂತರ ಪಕ್ಷ ಎಂಬ ಮನೋಭಾವ ಬೆಳೆಯಬೇಕು ಎಂದು ನಾರಾಯಣಮೂರ್ತಿ ಹೇಳಿದರು. \ No newline at end of file diff --git a/eesanje/url_47_227_5.txt b/eesanje/url_47_227_5.txt new file mode 100644 index 0000000000000000000000000000000000000000..67214e3bad828bef29f7ba77ef0c68dc3b5b98bd --- /dev/null +++ b/eesanje/url_47_227_5.txt @@ -0,0 +1,8 @@ +ಸೂರತ್ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ, 7 ಕಾರ್ಮಿಕರ ಶವ ಪತ್ತೆ +ಸೂರತ್, ನ.30- ಗುಜರಾತಿನ ಸೂರತ್ ನಗರದಲ್ಲಿ ರಾಸಾಯನಿಕ ತಯಾರಿಕಾ ಘಟಕದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಒಂದು ದಿನದ ನಂತರ, ಕಾಣೆಯಾದ ಏಳು ಕಾರ್ಮಿಕರ ಶವಗಳನ್ನು ಇಂದು ಮುಂಜಾನೆ ಆವರಣದಿಂದ ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ನಗರದ ಸಚಿನ್ ಕೈಗಾರಿಕಾ ಪ್ರದೇಶದಲ್ಲಿನ ಈಥರ್ ಇಂಡಸ್ಟ್ರೀಸ್ ಲಿಮಿಟೆಡ್‍ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಮೃತಪಟ್ಟ ಏಳು ಜನರ ಪೈಕಿ ಒಬ್ಬರು ಕಂಪನಿಯ ಉದ್ಯೋಗಿಯಾಗಿದ್ದು, ಆರು ಮಂದಿ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸೂರತ್ ಕಲೆಕ್ಟರ್ ಆಯುಷ್ ಓಕ್ ಹೇಳಿದ್ದಾರೆ. +ಕಾರ್ಖಾನೆ ಆವರಣದಲ್ಲಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಅಧಿಕಾರಿಗಳು ಬುಧವಾರ ಸ್ಥಾವರವನ್ನು ಆವರಿಸಿದ ಬೆಂಕಿಯ ನಂತರ ನಾಪತ್ತೆಯಾದ ಏಳು ಕಾರ್ಮಿಕರ ಶವಗಳನ್ನು ಪತ್ತೆ ಮಾಡಿದರು ಎಂದು ಅವರು ಹೇಳಿದರು. +ದಾಸ ಶ್ರೇಷ್ಠ ಚಿಂತನೆಗಳಿಂದ ಉತ್ತಮ ಸಮಾಜ ನಿರ್ಮಾಣ : ಎಚ್‍ಡಿಡಿ +ಮೃತರನ್ನು ದಿವ್ಯೇಶ್ ಪಟೇಲ್ (ಕಂಪೆನಿ ಉದ್ಯೋಗಿ), ಸಂತೋಷ್ ವಿಶ್ವಕರ್ಮ, ಸನತ್ ಕುಮಾರ್ ಮಿಶ್ರಾ, ಧರ್ಮೇಂದ್ರ ಕುಮಾರ್, ಗಣೇಶ್ ಪ್ರಸಾದ್, ಸುನೀಲ್ ಕುಮಾರ್ ಮತ್ತು ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ. +ಘಟನೆಯಲ್ಲಿ ಗಾಯಗೊಂಡಿರುವ 24 ಜನರು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ರಾಸಾಯನಿಕ ಸ್ಥಾವರದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಸಂಗ್ರಹವಾಗಿದ್ದ ದಹಿಸಬಲ್ಲ ರಾಸಾಯನಿಕಗಳ ಸೋರಿಕೆಯಿಂದಾಗಿ ದೊಡ್ಡ ಟ್ಯಾಂಕ್‍ನಲ್ಲಿ ಸ್ಪೋಟ ಸಂಭವಿಸಿದೆ ಎಂದು ಸೂರತ್ ಉಸ್ತುವಾರಿ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಸಂತ್ ಪರೀಕ್ ಈ ಹಿಂದೆ ತಿಳಿಸಿದ್ದಾರೆ. +ಸುಮಾರು 15 ಅಗ್ನಿಶಾಮಕ ಟೆಂಡರ್‍ಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದು, 9 ಗಂಟೆಗಳ ಕಾಲ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. \ No newline at end of file diff --git a/eesanje/url_47_227_6.txt b/eesanje/url_47_227_6.txt new file mode 100644 index 0000000000000000000000000000000000000000..502d876e7aea782cd8606f9f47703f99b829f036 --- /dev/null +++ b/eesanje/url_47_227_6.txt @@ -0,0 +1,9 @@ +ನಾಳೆಯಿಂದ ದುಬಾರಿ ದುನಿಯಾ, ಏನೆಲ್ಲಾ ಬದಲಾಗುತ್ತೆ..? ಇಲ್ಲಿದೆ ಮಾಹಿತಿ +ನವದೆಹಲಿ,ನ.30- ದೇಶದಲ್ಲಿ ಹಣಕಾಸು ಹಾಗೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ನಾಳೆಯಿಂದ ದುಬಾರಿ ದುನಿಯಾ ಪ್ರಾರಂಭವಾಗಲಿದೆ. ಬ್ಯಾಂಕಿಂಗ್, ಟೆಲಿಕಾಂ, ತಂತ್ರಜ್ಞಾನ ಮತ್ತು ಇತರೆ ಕ್ಷೇತ್ರಗಳಲ್ಲಿ ಬದಲಾವಣೆಗಳಾಗಿದ್ದು, ಸಿಮ್ ಕಾರ್ಡ್, ಕ್ರೆಡಿಟ್ ಕಾರ್ಡ್, ಗ್ಯಾಸ್ ಸಿಲಿಂಡರ್‍ಗಳಿಗೆ ಸಂಬಂಧಿಸಿದ ಹಲವು ಹೊಸ ನಿಯಮಗಳು ನಾಳೆಯಿಂದ ಜಾರಿಗೆ ಬರಲಿವೆ. +ಸಿಮ್ ಕಾರ್ಡ್:ಈ ಹೊಸ ನಿಯಮವು ಸಿಮ್ ಕಾರ್ಡ್‍ಗಳ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದೆ. ದೂರಸಂಪರ್ಕ ಇಲಾಖೆಯ ಪ್ರಕಾರ, ಈಗ ಕೆವೈಸಿ ಪ್ರಕ್ರಿಯೆಯಿಲ್ಲದೆ ಸಿಮ್ ಕಾರ್ಡ್‍ಗಳನ್ನು ಖರೀದಿಸಲು ಸಾಧ್ಯವಿಲ್ಲ. ಇದಲ್ಲದೆ ಸೀಮಿತ ಸಿಮ್ ಕಾರ್ಡ್‍ಗಳನ್ನು ಒಂದೇ ಐಡಿಯಲ್ಲಿ ಮಾರಾಟ ಮಾಡುವ ನಿಯಮವನ್ನು ಸಹ ಜಾರಿಗೆ ತರಲಾಗುವುದು. ಇದನ್ನು ಉಲ್ಲಂಘಿಸುವವರಿಗೆ 10 ಲಕ್ಷ ರೂ. ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ಹೊಸ ನಿಯಮಗಳಲ್ಲಿ, ಸಿಮ್ ಕಾರ್ಡ್ ಮಾರಾಟಗಾರರು ಸಿಸ್ಟಮ್‍ನಡಿ ಕೆವೈಸಿ ಪ್ರಕ್ರಿಯೆಯ ಮೂಲಕ ನೋಂದಾಯಿಸಿಕೊಳ್ಳಬೇಕು. +ಎಚ್‍ಡಿಎಫ್‍ಸಿ ರೆಗಾಲಿಯಾ ಕ್ರೆಡಿಟ್ ಕಾರ್ಡ್:ಎಚ್‍ಡಿಎಫ್‍ಸಿ ಬ್ಯಾಂಕ್ ತನ್ನ ರೆಗಾಲಿಯಾ ಕ್ರೆಡಿಟ್ ಕಾರ್ಡ್‍ನ ನಿಯಮಗಳನ್ನು ಬದಲಾಯಿಸುತ್ತದೆ. ನಾಳೆಯಿಂದ ಬಳಕೆದಾರರು ಲಾಂಜ್ ಪ್ರವೇಶ ಪಡೆಯಲು ನಿಯಮಗಳನ್ನು ಬದಲಾಯಿಸಲಾಗುತ್ತಿದೆ. ಲಾಂಜ್ ಪ್ರವೇಶಕ್ಕಾಗಿ ಬಳಕೆದಾರರು ವರ್ಷದ ತ್ರೈಮಾಸಿಕದಲ್ಲಿ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಖರ್ಚು ಮಾಡಬೇಕಾಗುತ್ತದೆ. +ನ್ಯೂಜೆರ್ಸಿಯಲ್ಲಿ ಅಜ್ಜ, ಅಜ್ಜಿ, ಚಿಕ್ಕಪ್ಪನನ್ನು ಕೊಂದ ಭಾರತೀಯ ವಿದ್ಯಾರ್ಥಿ +ಜನವರಿಯಿಂದ ಮಾರ್ಚ್, ಏಪ್ರಿಲ್‍ನಿಂದ ಜೂನ್, ಜುಲೈನಿಂದ ಸೆಪ್ಟೆಂಬರ್, ಅಕ್ಟೋಬರ್‍ನಿಂದ ಡಿಸೆಂಬರ್ ತ್ರೈಮಾಸಿಕದಲ್ಲಿ ಬಳಕೆದಾರರು 1 ಲಕ್ಷ ರೂ.ವರೆಗೆ ಖರ್ಚು ಮಾಡುವುದು ಅಗತ್ಯವಾಗಿರುತ್ತದೆ. ನಂತರ ಅವರು ಲಾಂಜ್ ಪ್ರವೇಶವನ್ನು ಪಡೆಯಲು ಸಾಧ್ಯವಾಗುತ್ತದೆ. +ಬಳಕೆದಾರರು ತ್ರೈಮಾಸಿಕದಲ್ಲಿ ಎರಡು ಬಾರಿ ಮಾತ್ರ ಲಾಂಜ್ ಪ್ರವೇಶದ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಇದಕ್ಕಾಗಿ ಎರಡು ರೂಪಾಯಿಗಳ ವಹಿವಾಟು ಶುಲ್ಕವೂ ಇದೆ. ಆದಾಗ್ಯೂ, ಮಾಸ್ಟರ್ ಕಾರ್ಡ್ ಬಳಕೆದಾರರಿಗೆ 25 ರೂಪಾಯಿಗಳ ಶುಲ್ಕವನ್ನು ವಿಸಲಾಗುತ್ತದೆ, ಅದನ್ನು ನಂತರ ಮರುಪಾವತಿಸಲಾಗುತ್ತದೆ. +ಎಲ್‍ಪಿಜಿ ಸಿಲಿಂಡರ್ ಬೆಲೆ:ನಾಳೆಯಿಂದ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ನವೆಂಬರ್‍ನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ.ಗೆ ಹೆಚ್ಚಳ ಮಾಡಲಾಗಿತ್ತು. ಮದುವೆಯ ಋತುವಿನ ಕಾರಣದಿಂದಾಗಿ ಅದರ ಬೆಲೆಯೂ ಹೆಚ್ಚಳ ಆಗಬಹುದು ಎಂದು ನಿರೀಕ್ಷಿಸಲಾಗಿದೆ. ದೇಶೀಯ ಸಿಲಿಂಡರ್ ದರಗಳು ಬದಲಾವಣೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. +ಸಾಲದ ಹೊಸ ನಿಯಮಗಳು:ಆರ್‍ಬಿಐ ನಾಳೆಯಿಂದ ಸಾಲಗಳಿಗೆ ಸಂಬಂಸಿದ ನಿಯಮಗಳನ್ನು ಜಾರಿಗೆ ತರಲಿದೆ. ಇದರಡಿ ಸಾಲವನ್ನು ಮರುಪಾವತಿ ಮಾಡಿದ 1 ತಿಂಗಳಿನೊಳಗೆ ಸಾಲ ನೀಡಲು ಬ್ಯಾಂಕ್ ಸಲ್ಲಿಸಿದ ಆಸ್ತಿ ದಾಖಲೆಗಳನ್ನು ಹಿಂದಿರುಗಿಸುವುದು ಅಗತ್ಯವಾಗಿರುತ್ತದೆ. ಬ್ಯಾಂಕ್ ಇದನ್ನು ಮಾಡದಿದ್ದರೆ ಅದು 5,000 ರೂ.ಗಳವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. \ No newline at end of file diff --git a/eesanje/url_47_227_7.txt b/eesanje/url_47_227_7.txt new file mode 100644 index 0000000000000000000000000000000000000000..611408e9c673f78df77b2b686e2097c3fe10e831 --- /dev/null +++ b/eesanje/url_47_227_7.txt @@ -0,0 +1,8 @@ +ಪಾಕಿಸ್ತಾನಕ್ಕೆ ಹೋಗಿ ಮದುವೆಯಾಗಿದ್ದ ಅಂಜು ಭಾರತಕ್ಕೆ ವಾಪಾಸ್ +ನವದೆಹಲಿ,ನ.30- ಫೇಸ್‍ಬುಕ್ ಸ್ನೇಹಿತನನ್ನು ಅರಸಿ ಪಾಕಿಸ್ತಾನಕ್ಕೆ ಹೋಗಿ ಮದುವೆಯಾಗಿದ್ದ ಅಂಜು ಇದೀಗ ಭಾರತಕ್ಕೆ ಮರಳಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ತನ್ನ ಪತಿ ಪಾಕಿಸ್ತಾನದ ಪ್ರಜೆ ನಸ್ರುಲ್ಲಾ ಅವರೊಂದಿಗೆ ವಾಸಿಸುತ್ತಿರುವ 34 ವರ್ಷದ ಅಂಜು ವಾಘಾ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ. +ಏಜೆನ್ಸಿಗಳಿಂದ ಹಲವಾರು ಸುತ್ತಿನ ವಿಚಾರಣೆಯ ನಂತರ, ಆಕೆಯ ಕುಟುಂಬವನ್ನು ಭೇಟಿಯಾಗಲು ತನ್ನ ತಾಯ್ನಾಡಿಗೆ ಪ್ರಯಾಣಿಸಲು ಅವಕಾಶ ನೀಡಲಾಯಿತು. ಆಕೆಯನ್ನು ಅಮೃತಸರ ವಿಮಾನ ನಿಲ್ದಾಣಕ್ಕೆ ಕರೆದೊಯ್ದು ಅಲ್ಲಿಂದ ದೆಹಲಿಗೆ ತಲುಪಿದ್ದಾರೆ. +ಶ್ರೀ ಗುರು ರಾಮದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂಜು ಬುರ್ಖಾ ಧರಿಸಿ ಕಾಣಿಸಿಕೊಂಡಿದ್ದಾರೆ. ನಾನು ನನ್ನ ಸ್ವಂತ ಇಚ್ಛೆಯಿಂದ ಭಾರತಕ್ಕೆ ಮರಳಿದ್ದೇನೆ, ನನ್ನ ಮಕ್ಕಳು ಕುಟುಂಬದವರನ್ನು ಭೇಟಿಯಾಗಬೇಕಿದೆ ಎಂದು ಹೇಳಿದ್ದಾರೆ. +ಶಂಕರ್ ನಾಗ್ ನಂತರ ಸಿಲ್ವರ್ ಪೀಕಾಕ್ ಪ್ರಶಸ್ತಿ ಪಡೆದ ರಿಷಭ್ ಶೆಟ್ಟಿ +ಎಎನ್‍ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ನಾನು ಸಂತೋಷವಾಗಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಅಂಜು ಹಿಂದಿರುಗಿದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಭಿವಾಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್ ಸೈನಿ ಹೇಳಿದ್ದಾರೆ. +ಅರವಿಂದ್ ಈಗ ಭಿವಾಡಿಯಲ್ಲಿಲ್ಲ ತಮ್ಮ ಮಕ್ಕಳೊಂದಿಗೆ ಬೇರೊಂದು ಸ್ಥಳದಲ್ಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜುಲೈನಿಂದ, ಅಂಜು ಅಥವಾ ಫಾತಿಮಾ ತನ್ನ 29 ವರ್ಷದ ಪತಿ ನಸ್ರುಲ್ಲಾ ಅವರೊಂದಿಗೆ ಪಾಕಿಸ್ತಾನದಲ್ಲಿ ವಾಸಿಸುತ್ತಿದ್ದಾರೆ. ಫೇಸ್ಬುಕ್ ಮೂಲಕ ಭೇಟಿಯಾಗಿದ್ದರು, ಅಂಜು ಇಸ್ಲಾಂ ಧರ್ಮವನ್ನು ಸ್ವೀಕರಿಸಿದ್ದಾರೆ. +ರಾಜಸ್ಥಾನದ ಅಂಜು ಪೇಶಾವರದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಸ್ಥಳೀಯ ನ್ಯಾಯಾಲಯದಲ್ಲಿ ತನ್ನ ಗಂಡನ ಕುಟುಂಬ ಸದಸ್ಯರು, ಪೊಲೀಸ್ ಸಿಬ್ಬಂದಿ ಮತ್ತು ವಕೀಲರ ಸಮ್ಮುಖದಲ್ಲಿ ಮದುವೆಯಾದರು. ಉತ್ತರಪ್ರದೇಶದಲ್ಲಿ ಜನಿಸಿದ ಅಂಜು ರಾಜಸ್ಥಾನದ ಭಿವಾಡಿಯಲ್ಲಿರುವ ಅರವಿಂದ್ ಅವರನ್ನು ವಿವಾಹವಾಗಿದ್ದಾರೆ. ದಂಪತಿಗೆ 15 ವರ್ಷದ ಮಗಳು ಮತ್ತು ಆರು ವರ್ಷದ ಮಗ ಇದ್ದಾರೆ. ಅಂಜು ಜೈಪುರಕ್ಕೆ ಹೋಗುವುದಾಗಿ ತಿಳಿಸಿದ್ದಳು. ಆದರೆ ಆಕೆ ಪಾಕಿಸ್ತಾನದಲ್ಲಿದ್ದಾಳೆ ಎಂದು ತಡವಾಗಿ ಗೊತ್ತಾಗಿತ್ತು ಎಂದು ಅಂಜು ಪತಿ ಅರವಿಂದ್ ಹೇಳಿದ್ದಾರೆ. \ No newline at end of file diff --git a/eesanje/url_47_227_8.txt b/eesanje/url_47_227_8.txt new file mode 100644 index 0000000000000000000000000000000000000000..684b66aa5e33bbdc014be399cf39f44ec7e3536b --- /dev/null +++ b/eesanje/url_47_227_8.txt @@ -0,0 +1,8 @@ +2030ರ ವೇಳೆಗೆ 3 ಪಟ್ಟು ಹೆಚ್ಚಳವಾಗಲಿದೆ ನವೀಕರಿಸಬಹುದಾದ ಇಂಧನ ಸಾಮರ್ಥ್ಯ +ನವದೆಹಲಿ, ನವೆಂಬರ್ 29 – (ಪಿಟಿಐ) ಭಾರತದ 14 ನೇ ರಾಷ್ಟ್ರೀಯ ವಿದ್ಯುತ್ ಯೋಜನೆ (ಎನ್ಇಪಿ) 2030 ರ ವೇಳೆಗೆ ಅದರ ನವೀಕರಿಸಬಹುದಾದ ಇಂಧನ ಸಾಮಥ್ರ್ಯವನ್ನು ಮೂರು ಪಟ್ಟು ಹೆಚ್ಚಿಸುವ ಹಾದಿಯಲ್ಲಿದೆ.ಆದರೆ ಇದನ್ನು ಸಾಸಲು ದೇಶಕ್ಕೆ 293 ಬಿಲಿಯನ್ ಅಮೆರಿಕನ್ ಡಾಲರ್ ಹಣದ ಅಗತ್ಯವಿದೆ ಎಂದು ಇಂದು ಜಾಗತಿಕ ಶಕ್ತಿ ಥಿಂಕ್ ಟ್ಯಾಂಕ್ ಬಿಡುಗಡೆ ಮಾಡಿರುವ ವರದಿ ಹೇಳಿದೆ. +ಪಳೆಯುಳಿಕೆ ಇಂಧನಗಳ ಅಗತ್ಯವನ್ನು ಕಡಿಮೆ ಮಾಡಲು ಮತ್ತು ಶತಮಾನದ ಅಂತ್ಯದ ವೇಳೆಗೆ ಜಾಗತಿಕ ತಾಪಮಾನವನ್ನು 1.5 ಡಿಗ್ರಿ ಸೆಲ್ಸಿಯಸ್ಗೆ ಮಿತಿಗೊಳಿಸಲು 2030 ರ ವೇಳೆಗೆ ಜಗತ್ತು ತನ್ನ ನವೀಕರಿಸಬಹುದಾದ ಇಂಧನ ಸಾಮಥ್ರ್ಯವನ್ನು ಮೂರು ಪಟ್ಟು ಹೆಚ್ಚಿಸಬೇಕು ಮತ್ತು ಇಂಧನ ದಕ್ಷತೆಯನ್ನು ದ್ವಿಗುಣಗೊಳಿಸಬೇಕು ಎಂದು ಇಂಟನ್ರ್ಯಾಷನಲ್ ಎನರ್ಜಿ ಏಜೆನ್ಸಿ ಹೇಳಿದೆ. +ಅಮೆರಿಕ, ಯುರೋಪಿಯನ್ ಯೂನಿಯನ್ ಮತ್ತು ಯುಎಇ ನೇತೃತ್ವದಲ್ಲಿ 60 ಕ್ಕೂ ಹೆಚ್ಚು ದೇಶಗಳು ಈಗ ಟ್ರಿಪಲ್ ನವೀಕರಿಸಬಹುದಾದ ಶಕ್ತಿ ಮತ್ತು ದ್ವಿಗುಣ ಇಂಧನ ದಕ್ಷತೆಯ ಬದ್ಧತೆಯನ್ನು ಬೆಂಬಲಿಸುತ್ತವೆ.ಜಿ20 ರಾಷ್ಟ್ರಗಳು ಭಾರತದ ಅಧ್ಯಕ್ಷತೆಯಲ್ಲಿ 2030 ರ ವೇಳೆಗೆ ನವೀಕರಿಸಬಹುದಾದ ಇಂಧನ ಸಾಮಥ್ರ್ಯವನ್ನು ಮೂರು ಪಟ್ಟು ಹೆಚ್ಚಿಸಿರುವುದನ್ನು ಅನುಮೋದಿಸಿದರೆ, ಯುಎಇ ಈ ವರ್ಷದ ಯುಎನ್ ಹವಾಮಾನ ಸಮ್ಮೇಳನವನ್ನು ಆಯೋಜಿಸುತ್ತದೆ, ಸಿಒಪಿ 28 ನಲ್ಲಿ ಈ ಕುರಿತು ಜಾಗತಿಕ ಒಪ್ಪಂದಕ್ಕೆ ಪ್ರತಿಪಾದಿಸುತ್ತದೆ. +26ನೇ ಬೆಂಗಳೂರು ಟೆಕ್ ಸಮ್ಮಿಟ್ ಉಧ್ಘಾಟನೆ, ಇಲ್ಲಿದೆ ಹೈಲೈಟ್ಸ್ +ತನ್ನ ನವೀಕರಿಸಬಹುದಾದ ಇಂಧನ ಸಾಮಥ್ರ್ಯವನ್ನು ಇನ್ನಷ್ಟು ವಿಸ್ತರಿಸಲು ಮತ್ತು ಯುಎಇಯ ಪ್ರಸ್ತಾವಿತ ನಿವ್ವಳ-ಶೂನ್ಯ ಸನ್ನಿವೇಶದೊಂದಿಗೆ ಹೊಂದಾಣಿಕೆ ಮಾಡಲು ಭಾರತಕ್ಕೆ 101 ಶತಕೋಟಿ (ಒಂದು ಬಿಲಿಯನ್ 100 ಕೋಟಿ) ಹೆಚ್ಚುವರಿ ಹಣಕಾಸು ಅಗತ್ಯವಿದೆ ಎಂದು ಎಂಬರ್ನ ವಿಶ್ಲೇಷಣೆ ಬಹಿರಂಗಪಡಿಸುತ್ತದೆ. +2050 ರ ಹೊತ್ತಿಗೆ ಐಈಎಯ ನಿವ್ವಳ ಶೂನ್ಯ ಹೊರಸೂಸುವಿಕೆಗಳು 2050 ರ ವೇಳೆಗೆ ನಿವ್ವಳ ಶೂನ್ಯ ಸಿಒಟು ಹೊರಸೂಸುವಿಕೆಯನ್ನು ಸಾಸಲು ಜಾಗತಿಕ ಮಾರ್ಗವನ್ನು ವಿವರಿಸುತ್ತದೆ, ಮುಂದುವರಿದ ಆರ್ಥಿಕತೆಗಳು ಇತರರಿಗಿಂತ ಮುಂದೆ ನಿವ್ವಳ ಶೂನ್ಯ ಹೊರಸೂಸುವಿಕೆಯನ್ನುತಲುಪುತ್ತವೆ. +ಹವಾಮಾನದ ಪರಿಭಾಷೆಯಲ್ಲಿ, ನಿವ್ವಳ ಶೂನ್ಯ ಎಂದರೆ ವಾತಾವರಣಕ್ಕೆ ಹಾಕಲಾದ ಹಸಿರುಮನೆ ಅನಿಲಗಳು ಮತ್ತು ಹೊರತೆಗೆಯಲಾದ ನಡುವಿನ ಸಮತೋಲನವನ್ನು ಸಾಸುವುದು.ಎಂಬರ್ ವರದಿಯು ಭಾರತವು ಈಗಾಗಲೇ ನವೀಕರಿಸಬಹುದಾದ ಶಕ್ತಿಯಲ್ಲಿ ಗಣನೀಯ ಹೆಚ್ಚಳವನ್ನು ಯೋಜಿಸುತ್ತಿದೆ ಎಂದು ಸೂಚಿಸುತ್ತದೆ, ನವೀಕರಿಸ ಬಹುದಾದ ಇಂಧನ ಸಾಮಥ್ರ್ಯವನ್ನು ಮೂರು ಪಟ್ಟು ಹೆಚ್ಚಿಸುವ ಗುರಿಯನ್ನು ಸಾಸಲು ಇದು ಕಾರ್ಯಸಾಧ್ಯವಾಗಿದೆ. \ No newline at end of file diff --git a/eesanje/url_47_227_9.txt b/eesanje/url_47_227_9.txt new file mode 100644 index 0000000000000000000000000000000000000000..e569f9baebb75a045af0f4a5a4202367a072698e --- /dev/null +++ b/eesanje/url_47_227_9.txt @@ -0,0 +1,5 @@ +ಗುಜರಾತ್‍ನ ಸೂರತ್‌ನ ರಾಸಾಯನಿಕ ಘಟಕದಲ್ಲಿ ಸ್ಫೋಟ +ಸೂರತ್,ನ.29- ಗುಜರಾತ್‍ನ ಸೂರತ್ ನಗರದಲ್ಲಿರುವ ರಾಸಾಯನಿಕ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 24 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಚಿನ್ ಜಿಐಡಿಸಿ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿ ಶೇಖರಿಸಲಾಗಿದ್ದ ರಾಸಾಯನಿಕಗಳ ಸೋರಿಕೆಯಿಂದಾಗಿ ದೊಡ್ಡ ಟ್ಯಾಂಕ್‍ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸೂರತ್ ಉಸ್ತುವಾರಿ ಮುಖ್ಯ ಅಗ್ನಿಶಾಮಕ ಅಕಾರಿ ಬಸಂತ್ ಪರೀಕ್ ಹೇಳಿದ್ದಾರೆ. +ಘಟನೆಯಲ್ಲಿ ಕನಿಷ್ಠ 24 ಕಾರ್ಮಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.ಘಟನೆ ನಡೆದಾಗ ಕಾರ್ಖಾನೆಯೊಳಗೆ ಎಷ್ಟು ಕಾರ್ಮಿಕರು ಇದ್ದರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ. +ಚೀನಾದಲ್ಲಿ ಹೊಸ ಮಾದರಿ ಸೋಂಕು, ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರ ಕಟ್ಟುನಿಟ್ಟಿನ ಸೂಚನೆ +ಸೋಟದಿಂದಾಗಿ ಕಾರ್ಖಾನೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಮತ್ತು ಬೆಂಕಿ ಇಡೀ ಘಟಕಕ್ಕೆ ಆವರಿಸಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ. \ No newline at end of file diff --git a/eesanje/url_47_228_1.txt b/eesanje/url_47_228_1.txt new file mode 100644 index 0000000000000000000000000000000000000000..a61c1a40af74c62be05ea84614d54c3a2e263a32 --- /dev/null +++ b/eesanje/url_47_228_1.txt @@ -0,0 +1,8 @@ +ನಾಗರೀಕರ ಜೀವ ಉಳಿಸಲು ದೇಶ ಏನು ಬೇಕಾದರೂ ಮಾಡಲು ಸಿದ್ದ : ಪಟ್ನಾಯಕ್ +ಭುವನೇಶ್ವರ್, ನ.29 (ಪಿಟಿಐ) ಉತ್ತರಾಖಂಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದೊಳಗೆ ಸಿಲುಕಿದ್ದ ಎಲ್ಲ 41 ಕಾರ್ಮಿಕರನ್ನು ರಕ್ಷಿಸುವ ಮೂಲಕ ದೇಶವು ತನ್ನ ನಾಗರಿಕರ ಜೀವ ಉಳಿಸಲು ಏನು ಬೇಕಾದರೂ ಮಾಡಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ. +ಸುಮಾರು 17 ದಿನಗಳ ನಂತರ ಒಡಿಶಾದ ಐವರು ಸೇರಿದಂತೆ 41 ಕಾರ್ಮಿಕರನ್ನು ಸಿಲ್ಕ್ಯಾರಾ ಸುರಂಗದಿಂದ ಸ್ಥಳಾಂತರಿಸಿದ್ದಕ್ಕಾಗಿ ಪಾಟ್ನಾಯಕ್ ರಕ್ಷಣಾ ತಂಡಕ್ಕೆ ಧನ್ಯವಾದ ಅರ್ಪಿಸಿದರು.ನಿನ್ನೆ ಸಂಜೆ ರಾಜ್ಯದ ಐವರು ಕಾರ್ಮಿಕರ ಹಳ್ಳಿಗಳಲ್ಲಿ ಸಿಹಿ ಹಂಚಿ, ಡೋಲು ಬಾರಿಸಿ, ಸಂಗೀತಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. +ಐವರ ಕುಟುಂಬ ಸದಸ್ಯರು ಈಗ ನಿರಾಳವಾಗಿದ್ದು, ಬೃಹತ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಸರ್ಕಾರ ಮತ್ತು ಎಲ್ಲಾ ಸಂಸ್ಥೆಗಳಿಗೆ ಧನ್ಯವಾದ ಹೇಳಿದ್ದಾರೆ. ಯಶಸ್ವಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ತಿಳಿಯಲು ಇದು ನನಗೆ ಅಪಾರ ಸಂತೋಷವನ್ನು ನೀಡುತ್ತದೆ ಮತ್ತು ನಮ್ಮ ಕಾರ್ಯಕರ್ತರು ಸುರಕ್ಷಿತವಾಗಿ ಮನೆಗೆ ಮರಳುತ್ತಾರೆ ಎಂದು ನನಗೆ ತುಂಬಾ ಸಂತೋಷವಾಗಿದೆ ಎಂದು ಪಟ್ನಾಯಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. +ಸುರಂಗದಲ್ಲಿದ್ದಾಗ ವಾಕ್, ಯೋಗ ಮಾಡುತ್ತಿದ್ದರಂತೆ ಕಾರ್ಮಿಕರು +ಉತ್ತರಕಾಶಿ ಜಿಲ್ಲೆಯಲ್ಲಿ ಸಿಕ್ಕಿಬಿದ್ದ ಓಡಿಯಾ ಕೂಲಿ ಕಾರ್ಮಿಕರ ತಂಡ ಮತ್ತು ಕುಟುಂಬ ಸದಸ್ಯರನ್ನು ರಾಜ್ಯ ಸರ್ಕಾರ ಸ್ಥಳಕ್ಕೆ ಕಳುಹಿಸಿದೆ ಎಂದು ಅವರು ಹೇಳಿದರು. ಯಶಸ್ವಿ ರಕ್ಷಣಾ ಕಾರ್ಯಾಚರಣೆಗಾಗಿ ಉತ್ತರಾಖಂಡ ಸರ್ಕಾರ, ಎನ್‍ಡಿಆರ್‍ಎಫ್ ಮತ್ತು ರಕ್ಷಣಾ ತಂಡಕ್ಕೆ ಮುಖ್ಯಮಂತ್ರಿ ಧನ್ಯವಾದ ಅರ್ಪಿಸಿದರು. +ಭಾರತವು ತನ್ನ ನಾಗರಿಕರ ಜೀವಗಳನ್ನು ಉಳಿಸಲು ಎಲ್ಲವನ್ನೂ ಮತ್ತು ಎಲ್ಲವನ್ನೂ ಮಾಡಬಹುದು ಎಂಬುದನ್ನು ಇದು ಸಾಬೀತುಪಡಿಸುತ್ತದೆ.ಸುರಂಗದಲ್ಲಿ ಸಿಲುಕಿರುವ ಒಡಿಶಾದ ಐವರು ಕಾರ್ಮಿಕರು ಮಯೂರ್‍ಭಂಜ್ ಜಿಲ್ಲೆಯ ಖಿರೋಡ್ (ರಾಜು) ನಾಯಕ್, ೀರೇನ್ ನಾಯಕ್ ಮತ್ತು ಬಿಸ್ವೇಶ್ವರ್ ನಾಯಕï, ನಬರಂಗಪುರದ ಭಗವಾನ್ ಭಟ್ರಾ ಮತ್ತು ಭದ್ರಕ್‍ನ ತಪನ್ ಮಂಡಲï. +ಭಟ್ರ ಗ್ರಾಮ ತಾಳಬೇಡದಲ್ಲಿ ಸ್ಥಳೀಯರು ಪಟಾಕಿ ಸಿಡಿಸಿ, ಡೋಲು ಬಾರಿಸಿ ಸಂಭ್ರಮಿಸಿದರು. ಭಗವಾನ್ ಅನ್ನು ಸುರಂಗದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದು ನಮಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ನಾವು ದೇವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಕಾರ್ಮಿಕನ ಅತ್ತಿಗೆ ಹೇಳಿದರು. \ No newline at end of file diff --git a/eesanje/url_47_228_10.txt b/eesanje/url_47_228_10.txt new file mode 100644 index 0000000000000000000000000000000000000000..00f09ce46be54e0fab9a8cec07350122b16e5b80 --- /dev/null +++ b/eesanje/url_47_228_10.txt @@ -0,0 +1,8 @@ +ಮಾ.30ರೊಳಗೆ ಸಿದ್ಧವಾಗಲಿದೆ ಅಂತಿಮ ಕರಡು : ಅಜಯ್ ಮಿಶ್ರಾ +ಕೋಲ್ಕತ್ತಾ, ನ.27 (ಪಿಟಿಐ) ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎಯ ಅಂತಿಮ ಕರಡು ಮುಂದಿನ ವರ್ಷ ಮಾರ್ಚ್ 30 ರೊಳಗೆ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. +ಉತ್ತರ ಪ್ರದೇಶದ ಬಿಜೆಪಿ ಸಂಸದರು ಉತ್ತರ 24 ಪರಗಣ ಜಿಲ್ಲೆಯ ಠಾಕೂರ್‍ನಗರದಲ್ಲಿ ಮತುವ ಸಮುದಾಯದ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳದಿಂದ ಪಲಾಯನ ಮಾಡಿದ ಮತುವಾಸ್‍ನಿಂದ ಪೌರತ್ವ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. +ಕಳೆದ ಎರಡು ವರ್ಷಗಳಲ್ಲಿ ಸಿಎಎ ಅನ್ನು ಹೊರತರುವ ಪ್ರಕ್ರಿಯೆಯು ವೇಗವನ್ನು ಪಡೆದುಕೊಂಡಿದೆ… ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ. ಅದರಿಂದ ಪೌರತ್ವ ಹಕ್ಕುಗಳನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಮುಂದಿನ ವರ್ಷ ಮಾರ್ಚ್ ವೇಳೆಗೆ ಸಿಎಎಯ ಅಂತಿಮ ಕರಡು ನಿರೀಕ್ಷಿಸಲಾಗಿದೆ. ಜಾರಿಗೆ ಬರಲು ಸಿದ್ಧವಾಗಿದೆ, ಎಂದು ಅವರು ಗುಡುಗಿನ ಚಪ್ಪಾಳೆಯೊಂದಿಗೆ ಹೇಳಿದರು. ಸ್ಥಳೀಯ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಸಂತಾನು ಠಾಕೂರ್ ಅವರ ಪಕ್ಕದಲ್ಲಿದ್ದರು. +ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ..? : ವಿಜಯೇಂದ್ರ ಪ್ರಶ್ನೆ +ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಪ್ರವೇಶಿಸುವ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲು ಸಿಎಎ ಪ್ರಯತ್ನಿಸುತ್ತದೆ. +ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಟಿಎಂಸಿ ರಾಜ್ಯಸಭಾ ಸಂಸದ ಸಂತಾನು ಸೇನ್, ಬಿಜೆಪಿಯು ಚುನಾವಣೆಯ ಸಮಯದಲ್ಲಿ ಮಾತ್ರ ಮತವಾಸ್ ಮತ್ತು ಸಿಎಎ ಅನ್ನು ನೆನಪಿಸಿಕೊಳ್ಳುತ್ತದೆ. ಕೇಸರಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಸಿಎಎ ಅನ್ನು ಜಾರಿಗೆ ತರಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. +ಬಿಜೆಪಿಯ ಸುಳ್ಳು ಹೇಳಿಕೆಗಳು ಮತುವವರಿಗೆ ಮತ್ತು ಇತರರಿಗೆ ಸ್ಪಷ್ಟವಾಗುತ್ತಿದೆ. ಮುಂದಿನ ವರ್ಷದ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಎಲ್ಲರೂ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_228_11.txt b/eesanje/url_47_228_11.txt new file mode 100644 index 0000000000000000000000000000000000000000..60df44721695acfc951232e9b2fa59efe3131b14 --- /dev/null +++ b/eesanje/url_47_228_11.txt @@ -0,0 +1,6 @@ +ಭಾರತೀಯರ ಯೋಗಕ್ಷೇಮಕ್ಕೆ ತಿಮ್ಮಪ್ಪನ ಮೊರೆ ಹೋದ ಮೋದಿ +ತಿರುಪತಿ, ನ.27 (ಪಿಟಿಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಿರುಮಲದಲ್ಲಿರುವ ಪ್ರಸಿದ್ಧ ವೆಂಕಟೇಶ್ವರನ ಬೆಟ್ಟಕ್ಕೆ ಭೇಟಿ ನೀಡಿ ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. +ఓం నమో వేంకటాశాయ!తిరుమల నుండి మరికొన్ని దృశ్యాలు.../B8yPfPOF2t +ಬೆಳಗ್ಗೆ 8 ಗಂಟೆ ಸುಮಾರಿಗೆ ಪ್ರಧಾನಿ ದೇವಸ್ಥಾನಕ್ಕೆ ಭೇಟಿ ನೀಡಿದರು. ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಗಿದೆ ಎಂದು ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. +ಕಾಂತರಾಜು ಆಯೋಗದ ವರದಿಯಲ್ಲಿ ಲೋಪ, ನೈಜ ವರದಿ ತಯಾರಿಕೆಗೆ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹ +ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ ಮೋದಿ ಅವರಿಗೆ ದೇವಸ್ಥಾನದ ಅರ್ಚಕರು ವೈದಿಕ ಆಶೀರ್ವಾದವನ್ನು ನೀಡಿದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ರೆನಿಗಿಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡರು. ದೇವಾಲಯ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಿದರು. \ No newline at end of file diff --git a/eesanje/url_47_228_12.txt b/eesanje/url_47_228_12.txt new file mode 100644 index 0000000000000000000000000000000000000000..799dc56e01edf1bdbab8750d0f1afd595899e0e9 --- /dev/null +++ b/eesanje/url_47_228_12.txt @@ -0,0 +1,9 @@ +ಧೈರ್ಯದಿಂದ ಭಾರತ ಭಯೋತ್ಪಾದನೆ ಹತ್ತಿಕ್ಕುತ್ತಿದೆ : ಮೋದಿ +ನವದೆಹಲಿ, ನ.26 (ಪಿಟಿಐ)- ಮುಂಬೈ ಭಯೋತ್ಪಾದನಾ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವೂ ಅತ್ಯಂತ ಘೋರ ದಾಳಿಯನ್ನು ಈ ದಿನ ಎದುರಿಸಿದೆ ಆದರೆ ಆ ದಾಳಿಯಿಂದ ಚೇತರಿಸಿಕೊಂಡಿರುವುದು ನಮ್ಮ ದೇಶದ ಸಾಮಥ್ರ್ಯವಾಗಿದೆ ಎಂದು ಹೇಳಿದರು. +ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ, ಮುಂಬೈ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ನಮನ ಸಲ್ಲಿಸಿದ ಮೋದಿ ಮತ್ತು ರಾಷ್ಟ್ರವು ವೀರ ಹುತಾತ್ಮರನ್ನು ಸ್ಮರಿಸುತ್ತಿದೆ ಎಂದು ಹೇಳಿದ ಅವರು ಭಾರತ ತನ್ನೆಲ್ಲ ದೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿದೆ ಎಂದು ಪ್ರತಿಪಾದಿಸಿದರು. +ನವೆಂಬರ್ 26 ಅನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಘೋರ ಭಯೋತ್ಪಾದಕ ದಾಳಿ ನಡೆಯಿತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದಾರೆ. ಆದರೆ, ನಾವು ಆ ದಾಳಿಯಿಂದ ಚೇತರಿಸಿಕೊಂಡಿದ್ದು, ಈಗ ನಾವು ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಸಾಮಥ್ರ್ಯ ಎಂದು ಅವರು ಪ್ರತಿಪಾದಿಸಿದರು. +ಭ್ರೂಣ ಹತ್ಯೆ ಕೋರರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ +ನವೆಂಬರ್ 26, 2008 ರಂದು, ಪಾಕಿಸ್ತಾನದಿಂದ 10 ಲಷ್ಕರ್ -ಎ-ತೊಯ್ಬಾ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಆಗಮಿಸಿ ಗುಂಡಿನ ದಾಳಿ ನಡೆಸಿದರು, ಮುಂಬೈನಲ್ಲಿ 60 ಗಂಟೆಗಳ ಮುತ್ತಿಗೆಯಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರನ್ನು ಕೊಂದರು ಮತ್ತು ಹಲವರು ಗಾಯಗೊಂಡರು. +1949 ರಲ್ಲಿ ಸಂವಿಧಾನ ರಚನಾ ಸಭೆಯು ಈ ದಿನದಂದು ಸಂವಿಧಾನವನ್ನು ಅಂಗೀಕರಿಸಿದಂತೆ ಮತ್ತೊಂದು ಕಾರಣಕ್ಕಾಗಿ ನವೆಂಬರ್ 26 ಸಹ ಮುಖ್ಯವಾಗಿದೆ ಎಂದು ಪ್ರಧಾನಿ ಗಮನಿಸಿದರು.ನಾವು 2015 ರಲ್ಲಿ ಬಿ.ಆರ್. ಅಂಬೇಡ್ಕರ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವಾಗ ನನಗೆ ನೆನಪಿದೆ, ನವೆಂಬರ್ 26 ಅನ್ನು ಸಂವಿಧಾನ ದಿನವಾಗಿ ಆಚರಿಸಬೇಕು ಎಂಬ ಆಲೋಚನೆ ಬಂದಿತು … ನಾನು ಸಂವಿಧಾನದ ದಿನದಂದು ಎಲ್ಲರಿಗೂ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. +ನಾವೆಲ್ಲರೂ ಒಟ್ಟಾಗಿ, ನಾಗರಿಕರ ಕರ್ತವ್ಯಗಳಿಗೆ ಆದ್ಯತೆ ನೀಡುವ ಮೂಲಕ, ದೇಶವನ್ನು ಅಭಿವೃದ್ಧಿಪಡಿಸುವ ಸಂಕಲ್ಪವನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಮೋದಿ ಹೇಳಿದರು. ಇತ್ತೀಚಿನ ಹಬ್ಬಗಳಲ್ಲಿ ಸುಮಾರು 4 ಲಕ್ಷ ಕೋಟಿ ರೂಪಾಯಿಗಳ ವ್ಯವಹಾರ ನಡೆದಿದೆ ಮತ್ತು ಭಾರತದಲ್ಲಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಲು ಜನರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿದೆ ಎಂದು ಪ್ರಧಾನಿ ತಮ್ಮ ಹೇಳಿಕೆಯಲ್ಲಿ ಹೇಳಿದರು. +ಕೆಲವು ಕುಟುಂಬಗಳು ವಿದೇಶದಲ್ಲಿ ಮದುವೆಗಳನ್ನು ಆಯೋಜಿಸುವ ಪದ್ಧತಿಯನ್ನು ಪ್ರಶ್ನಿಸಿದ ಮೋದಿ, ಅಂತಹ ಆಚರಣೆಗಳನ್ನು ದೇಶದೊಳಗೆ ನಡೆಸುವಂತೆ ಒತ್ತಾಯಿಸಿದರು. \ No newline at end of file diff --git a/eesanje/url_47_228_2.txt b/eesanje/url_47_228_2.txt new file mode 100644 index 0000000000000000000000000000000000000000..f9c0542fb02ee1f59aaf2421a714478a799a65f7 --- /dev/null +++ b/eesanje/url_47_228_2.txt @@ -0,0 +1,10 @@ +ಸುರಂಗದಲ್ಲಿದ್ದಾಗ ವಾಕ್, ಯೋಗ ಮಾಡುತ್ತಿದ್ದರಂತೆ ಕಾರ್ಮಿಕರು +ನವದೆಹಲಿ, ನ.29 (ಪಿಟಿಐ) ಬಹು ಏಜೆನ್ಸಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ 41 ಕಾರ್ಮಿಕರು, ಬೆಳಗಿನ ವಾಕ್ ಮತ್ತು ಯೋಗಾಭ್ಯಾಸ ಮಾಡುವ ಮೂಲಕ ಒಳಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಉತ್ಸಾಹವನ್ನು ಕಾಪಾಡಿಕೊಂಡಿದ್ದಾರೆ ಎಂದು ರಕ್ಷಿಸಲ್ಪಟ್ಟ ಕಾರ್ಮಿಕರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು. +ಕಾರ್ಮಿಕರು ಪ್ರಧಾನಿ ಮೋದಿ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ರಕ್ಷಣಾ ತಂಡಗಳನ್ನು ಅವರ ಪ್ರಯತ್ನಗಳಿಗಾಗಿ ಶ್ಲಾಘಿಸಿದರು, ಅವರಲ್ಲಿ ಒಬ್ಬರು ವಿದೇಶದಲ್ಲಿರುವ ಭಾರತೀಯರನ್ನು ಸರ್ಕಾರವು ಯಾವಾಗ ಉಳಿಸಬಹುದು, ಅವರು ದೇಶದೊಳಗೆ ಇರುವುದರಿಂದ ಚಿಂತಿಸಬೇಕಾಗಿಲ್ಲ ಎಂದು ಹೇಳಿದರು. +ತಡರಾತ್ರಿ ರಕ್ಷಿಸಲಾದ ಕಾರ್ಮಿಕರೊಂದಿಗೆ ತಮ್ಮ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರಿಗೆ, ಇಷ್ಟು ದಿನಗಳ ಕಾಲ ಅಪಾಯದಲ್ಲಿ ಸಿಲುಕಿದ ನಂತರ ಸುರಕ್ಷಿತವಾಗಿ ಹೊರಬಂದಿದ್ದಕ್ಕಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ. ಇದು ನನಗೆ ಸಂತೋಷದ ವಿಷಯ ಮತ್ತು ಅದನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಕೆಟ್ಟದ್ದೇನಾದರೂ ಸಂಭವಿಸಿದ್ದರೆ, ಅದನ್ನು ಹೇಗೆ ತೆಗೆದುಕೊಳ್ಳುತ್ತಿದ್ದೆವು ಎಂದು ಹೇಳಲು ಸಾಧ್ಯವಿಲ್ಲ. ನೀವೆಲ್ಲರೂ ಸುರಕ್ಷಿತವಾಗಿರಲು ದೇವರ ದಯೆ ಇದೆ. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2023) +ಹದಿನೇಳು ದಿನಗಳು ಕಡಿಮೆ ಸಮಯವಲ್ಲ. ನೀವೆಲ್ಲರೂ ಸಾಕಷ್ಟು ಧೈರ್ಯವನ್ನು ತೋರಿಸಿದ್ದೀರಿ ಮತ್ತು ಒಬ್ಬರಿಗೊಬ್ಬರು ಪ್ರೋತ್ಸಾಹಿಸುತ್ತಿದ್ದೀರಿ, ಎಂದು ಮೋದಿ ಕಾರ್ಮಿಕರಿಗೆ ಹೇಳಿದ್ದಾರೆ.ಕಾರ್ಯಾಚರಣೆಯ ಬಗ್ಗೆ ಮಾಹಿತಿ ಕೇಳುತ್ತಲೇ ಇದ್ದೇನೆ ಮತ್ತು ಮುಖ್ಯಮಂತ್ರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಮೋದಿ ಹೇಳಿದರು. +ನನ್ನ ಪಿಎಂಒ ಅಕಾರಿಗಳು ಕೂಡ ಅಲ್ಲಿ ಕುಳಿತಿದ್ದರು. ಆದರೆ ಕೇವಲ ಮಾಹಿತಿ ಪಡೆಯುವುದರಿಂದ ಆತಂಕ ಕಡಿಮೆಯಾಗುವುದಿಲ್ಲ ಎಂದು ಪ್ರಧಾನಿ ಹೇಳಿದರು. ಬಿಹಾರದ ಕಾರ್ಮಿಕ, ಸಬಾ ಅಹ್ಮದ್ ಅವರು ಸುರಂಗದಲ್ಲಿ ದಿನಗಟ್ಟಲೆ ಸಿಲುಕಿದ್ದರೂ, ಅವರು ಯಾವುದೇ ಭಯ ಅಥವಾ ಆತಂಕವನ್ನು ಅನುಭವಿಸಲಿಲ್ಲ ಎಂದು ಪ್ರಧಾನಿಗೆ ತಿಳಿಸಿದರು. ನಾವು ಸಹೋದರರಂತೆ ಇದ್ದೆವು, ನಾವು ಒಟ್ಟಿಗೆ ಇದ್ದೆವು. ಊಟದ ನಂತರ ಸುರಂಗದಲ್ಲಿ ಅಡ್ಡಾಡುತ್ತಿದ್ದೆವು. ನಾನು ಅವರಿಗೆ ಬೆಳಗಿನ ವಾಕ್ ಮತ್ತು ಯೋಗ ಮಾಡಲು ಹೇಳುತ್ತಿದ್ದೆ. ನಾವು ಉತ್ತರಾಖಂಡ ಸರ್ಕಾರಕ್ಕೆ, ವಿಶೇಷವಾಗಿ ಸಿಎಂ, ವಿಕೆ ಸಿಂಗ್ ಸಾಹಿಬ್‍ಗೆ ಧನ್ಯವಾದ ಹೇಳಲು ಬಯಸುತ್ತೇವೆ ಎಂದು ಅಹ್ಮದ್ ಹೇಳಿದರು. +ಭಾರತದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ ಕೆ ಸಿಂಗ್ ಅವರನ್ನು ಶ್ಲಾಘಿಸಿದ ಮೋದಿ, ಅವರು ಸೈನಿಕನ ತರಬೇತಿಯನ್ನು ತೋರಿಸಿದ್ದಾರೆ ಎಂದು ಹೇಳಿದರು.ಕಾರ್ಮಿಕರು ತಾವು ಸಿಕ್ಕಿಬಿದ್ದಿದ್ದ ಸುರಂಗದ ಸುಮಾರು 2 ಕಿಮೀ ವ್ಯಾಪ್ತಿಯಲ್ಲಿ ಬೆಳಗಿನ ವಾಕ್ ಮಾಡುತ್ತಿದ್ದರು ಮತ್ತು ಯೋಗಾಭ್ಯಾಸವನ್ನೂ ಮಾಡುತ್ತಿದ್ದರು ಎಂದು ಅಹ್ಮದ್ ಪ್ರಧಾನಿಗೆ ತಿಳಿಸಿದರು. +ಉತ್ತರಾಖಂಡದ ಮತ್ತೋರ್ವ ಕಾರ್ಮಿಕ ಗಬ್ಬರ್ ಸಿಂಗ್ ನೇಗಿ ಅವರು ಪ್ರಧಾನಿ ಮತ್ತು ಸಿಎಂ ಧಾಮಿ, ಅವರು ಕೆಲಸ ಮಾಡುವ ಕಂಪನಿ, ಕೇಂದ್ರ ಸರ್ಕಾರ ಮತ್ತು ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಹಗಲಿರುಳು ಶ್ರಮಿಸಿದರು.ನಾವು ಪ್ರಧಾನಿಯಾಗಿದ್ದಾಗ … ಮತ್ತು ಇತರ ದೇಶಗಳಿಂದ ಜನರನ್ನು ಉಳಿಸಿದಾಗ, ನಾವು ನಮ್ಮ ದೇಶದಲ್ಲಿದ್ದೆವು ಮತ್ತು ಆದ್ದರಿಂದ ನಾವು ಚಿಂತಿಸಬೇಕಾಗಿಲ್ಲ ಎಂದು ಅಹ್ಮದ್ ಪ್ರಧಾನಿ ಮೋದಿಗೆ ತಿಳಿಸಿದರು. +ಅವರೊಂದಿಗೆ ಮಾತನಾಡುವ ಮೊದಲು ಅವರ ವೈದ್ಯಕೀಯ ತಪಾಸಣೆಯನ್ನು ಮೊದಲು ಮಾಡಬೇಕೆಂದು ನಾನು ಬಯಸುತ್ತೇನೆ ಮತ್ತು ಎಲ್ಲ್ಲಾ ಕೆಲಸಗಾರರು ಉತ್ತಮ ಆರೋಗ್ಯ ಮತ್ತು ಫಿಟ್ ಆಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ ಎಂದು ಮೋದಿ ಹೇಳಿದರು. ಮುಖ್ಯಮಂತ್ರಿಗಳು ಅವರ ಮುಂದಿನ ಪ್ರಯಾಣದಲ್ಲಿ ಅವರ ಮನೆಗೆ ಹಿಂದಿರುಗಲು ವ್ಯವಸ್ಥೆ ಮಾಡುತ್ತಾರೆ ಎಂದು ಅವರು ಅವರಿಗೆ ಹೇಳಿದರು.ಇಬ್ಬರು ಕಾರ್ಯಕರ್ತರ ನಾಯಕತ್ವ ಮತ್ತು ಧೈರ್ಯವನ್ನು ಮೋದಿ ಶ್ಲಾಘಿಸಿದರು \ No newline at end of file diff --git a/eesanje/url_47_228_3.txt b/eesanje/url_47_228_3.txt new file mode 100644 index 0000000000000000000000000000000000000000..710b03f777b97db43427303ccd461d7891171ea7 --- /dev/null +++ b/eesanje/url_47_228_3.txt @@ -0,0 +1,7 @@ +ಚೀನಾ ನ್ಯೂಮೋನಿಯ ಆತಂಕ, ಭಾರತದಲ್ಲಿ ಹೈ ಅಲರ್ಟ್ ಘೋಷಣೆ +ಬೆಂಗಳೂರು,ನ.28- ಕೊರೊನಾ ಸೋಂಕು ಮೊದಲು ಕಾಣಿಸಿಕೊಂಡ ಚೀನಾದಲ್ಲಿ ನ್ಯೂಮೋನಿಯ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಚೀನಾದಲ್ಲಿ ಮಕ್ಕಳಲ್ಲಿ ಹೆಚ್ಚಾಗಿರುವ ಉಸಿರಾಟ ಕಾಯಿಲೆಗಳು ಭೀತಿ ಹುಟ್ಟಿಸಿದ್ದು, ಅಲ್ಲಿನ ಜನ ನ್ಯೂಮೋನಿಯಾದಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಕೊರೊನಾ ಮಾದರಿಯಲ್ಲೇ ಚೀನಾ ನ್ಯೂಮೋನಿಯಾ ಇತರೆ ದೇಶಗಳಿಗೆ ಹರಡುವ ಸಾಧ್ಯತೆ ಇರುವುದರಿಂದ ಕೇಂದ್ರ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. +ಈ ಸಂಬಂಧ ಎಲ್ಲಾ ರಾಜ್ಯದ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಜಾಗ್ರತ ಕ್ರಮವಹಿಸುವಂತೆ ಪತ್ರ ಬರೆದು ಎಚ್ಚರಿಕೆ ನೀಡಿದೆ. ಆಯಾ ರಾಜ್ಯಗಳಲ್ಲಿ ಇರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಯಾವುದೇ ರೀತಿಯ ಸೋಂಕು ನಿವಾರಣೆಗೆ ಸಿದ್ದತೆ ನಡೆಸಿಕೊಳ್ಳುವಂತೆ ಸೂಚಿಸಲಾಗಿದೆ. +ಆಸ್ಪತ್ರೆಯಲ್ಲಿ ಅಗತ್ಯ ಔಷದೋಪಚಾರ ಜತೆಗೆ ಮಾನವ ಸಂಪನ್ಮೂಲ ಸಮರ್ಪಕ ಲಭ್ಯತೆ ಇರುವಂತೆ ನೋಡಿಕೊಳ್ಳುವಂತೆಯೂ ತಿಳಿಸಲಾಗಿದೆ. ಜ್ವರಕ್ಕೆ ಸಂಬಂಧಿಸಿದ ಔಷದಿಗಳು ಲಸಿಕೆಗಳು ಆಮ್ಲೆಜನಕ ಪರೀಕ್ಷಾ ಕಿಟ್ ಹೀಗೆ ಅಗತ್ಯ ಇರುವ ಎಲ್ಲಾ ಸಲಕರಣೆ ಗೆ ಸಿದ್ಧತೆ ಮಾಡಿಕೊಳ್ಳಬೇಕು ಒಂದು ವೇಳೆ ಸ್ಟಾಕ್ ಇಲ್ಲದಿದ್ದರೆ ಸಂಬಂಧಪಟ್ಟ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ಔಷದೋಪಚಾರ ಸಿದ್ದಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. +ಭಾರತದಲ್ಲಿ ಮತ್ತೆ 1.6 ಶತಕೋಟಿ ಡಾಲರ್ ಹೂಡಿಕೆಗೆ ಮುಂದಾದ ಫಾಕ್ಸ್‌ಕಾನ್ +ಈ ಹಿಂದೆ ಕೊರೊನಾ ಸೋಂಕಿನ ಸಮಯದಲ್ಲಿ ಜಾರಿಗೆ ಗೆ ತಂದಿರುವ ಮಾರ್ಗಸೂಚಿಯನ್ನು ತಪ್ಪದೆ ಪಾಲನೆ ಮಾಡುವಂತೆಯೂ ತಿಳಿಸಲಾಗಿದೆ. ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸೇರಿ ಅರೋಗ್ಯ ಸಂಸ್ಥೆಗಳಿಂದ ಪಡೆದ ಡೇಟಾ ವನ್ನು ಪೋರ್ಟಲ್ ನಲ್ಲಿ ಅಫ್ಲೋಡ್ ಮಾಡಬೇಕು ಎಂದು ಹೇಳಲಾಗಿದೆ. +ರೋಗದ ಲಕ್ಷಣ ಹೊಂದಿರುವವರ ಮೂಗು ಗಂಟಲು ದ್ರವವನ್ನು ಪರೀಕ್ಷೆ ಮಾಡಬೇಕು ಹೀಗೆ ಹಲವು ವಿಚಾರಗಳ ಬಗ್ಗೆ ಕೇಂದ್ರ ಅರೋಗ್ಯ ಇಲಾಖೆ ಇಂದ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸೂಚನೆ ಬಂದಿದ್ದು, ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈಗಾಗಲೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. \ No newline at end of file diff --git a/eesanje/url_47_228_4.txt b/eesanje/url_47_228_4.txt new file mode 100644 index 0000000000000000000000000000000000000000..7d785d493d09a1c2bbaa476b31321ec8f171a866 --- /dev/null +++ b/eesanje/url_47_228_4.txt @@ -0,0 +1,6 @@ +ಕಾರ್ತಿಕ ಹುಣ್ಣಿಮೆ ದೀಪದ ಕಿಚ್ಚಿಗೆ ಜೀವಂತ ದಹಿಸಿ ಹೋದ ಬಾಲಕಿ +ಹಜಾರಿಬಾಗ್,ನ.28- ಕಾರ್ತಿಕ ಹುಣ್ಣೆಮೆ ಅಂಗವಾಗಿ ಹಚ್ಚಲಾಗಿದ್ದ ಮಣ್ಣಿನ ದೀಪಗಳಿಂದ ಉಂಟಾದ ಬೆಂಕಿ ಅನಾಹುತದಲ್ಲಿ 6 ವರ್ಷದ ಬಾಲಕಿಯೊಬ್ಬಳು ಜೀವಂತವಾಗಿ ದಹಿಸಿ ಹೋಗಿ ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್‍ನಲ್ಲಿ ನಡೆದಿದೆ. +ನಿನ್ನೆ ಸಂಜೆ ಕಾರ್ತಿಕ ಪೂರ್ಣಿಮೆಯ ಸಂದರ್ಭದಲ್ಲಿ ಜನರು ದಿಯಾಸ್ (ಮಣ್ಣಿನ ದೀಪಗಳು) ಹಚ್ಚಿದ ಘಟನೆ ಮಾಳವಿಯಾ ಮಾರ್ಗದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದಿದೆ. ಮಾರುಕಟ್ಟೆ ಪ್ರದೇಶದಲ್ಲಿನ ಖಾಸಗಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತು ಮತ್ತು ತಕ್ಷಣವೇ ಪಕ್ಕದ ಕಟ್ಟಡಗಳಿಗೆ ಹರಡಿತು ಎಂದು ಹಜಾರಿಬಾಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೌಥೆ ತಿಳಿಸಿದ್ದಾರೆ, ಮಧ್ಯರಾತ್ರಿಯ ನಂತರವೂ ಮುಂದುವರಿದ ಐದು ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಲಾಯಿತು. +ಉರ್ದು ಶಾಲೆ ಸ್ಥಳಾಂತರ ಮಾಡುವಂತೆ ಒತ್ತಡ : ಸಿಎಂಗೆ ದೂರು +ಘಟನೆಯಲ್ಲಿ ಅಣ್ಣು ಎಂದು ಗುರುತಿಸಲಾದ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಅಗ್ನಿಶಾಮಕ ಕಾರ್ಯಾಚರಣೆಯ ಸಮಯದಲ್ಲಿ ಇಡೀ ಪ್ರದೇಶವನ್ನು ಸುತ್ತುವರಿಯಲಾಗಿದೆ, ಬೆಂಕಿಯನ್ನು ಪ್ರಚೋದಿಸಲು ಕಾರಣವೇನು ಎಂಬುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_228_5.txt b/eesanje/url_47_228_5.txt new file mode 100644 index 0000000000000000000000000000000000000000..5afac0c5d582c47da6df5e4cf8b2ffb8eca677b9 --- /dev/null +++ b/eesanje/url_47_228_5.txt @@ -0,0 +1,5 @@ +ಮದ್ರಾಸ್ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ, ಪ್ರೊಫೇಸರ್ ಅಮಾನತು +ಚೆನ್ನೈ,ನ.28- ಈ ವರ್ಷದ ಮಾರ್ಚ್ 31ರಂದು ನಡೆದ ಸಂಶೋಧನಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಐಐಟಿ ಮದ್ರಾಸ್ ಪ್ರಾಧ್ಯಾಪಕರೊಬ್ಬರನ್ನು ಅಮಾನತುಗೊಳಿಸಿದೆ. ಗವರ್ನರ್ ಮಂಡಳಿಯ ನಿರ್ದೇಶನದ ಆಧಾರದ ಮೇಲೆ ಪ್ರೊಫೆಸರ್ ಆಶಿಶ್ ಸೇನ್ ಅವರನ್ನು ಅಮಾನತುಗೊಳಿಸಲಾಗಿದೆ. ಸಂಸ್ಥೆಯು ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸುತ್ತಿದೆ ಎಂದು ಐಐಟಿ ಮದ್ರಾಸ್‍ನ ಹೇಳಿಕೆ ತಿಳಿಸಿದೆ. +ಪಶ್ಚಿಮ ಬಂಗಾಳದ 32 ವರ್ಷದ ಡಾಕ್ಟರೇಟ್ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವರ್ಷ ಸಂಸ್ಥೆಯಲ್ಲಿ ನಡೆದ ಮೂರನೇ ಘಟನೆಯಾಗಿದೆ. ಸಚಿನ್ ಎಂದು ಗುರುತಿಸಲಾದ ವಿದ್ಯಾರ್ಥಿ ಪಿಎಚ್‍ಡಿ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 31 ರಂದು ಕ್ಯಾಂಪಸ್‍ನ ಹೊರಗಿನ ಹಾಸ್ಟೆಲ್ ಕೋಣೆಯಲ್ಲಿ ಸಚಿನ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಗಂಟೆಗಳ ಮೊದಲು, ಅವರು ಕ್ಷಮಿಸಿ, ನಾನು ಸಾಕಷ್ಟು ಒಳ್ಳೆಯವನಲ್ಲ ಎಂದು ವಾಟ್ಸಾಪ್ ಸ್ಟೇಟಸ್ ಅನ್ನು ಪೋಸ್ಟ್ ಮಾಡಿದ್ದರು. +ಲಾಂಗ್‍ನಿಂದ ಬೆದರಿಸಿ ಸುಲಿಗೆ ಮಾಡಿದ್ದ ನಾಲ್ವರು ಖಾಕಿ ಬಲೆಗೆ +ಸಚಿನ್ ಅವರ ಕುಟುಂಬದವರು ತಮ್ಮ ವಿವರವಾದ ದೂರಿನಲ್ಲಿ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಸೇನ್ ಮತ್ತು ಇತರರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಇತ್ತೀಚೆಗೆ, ಭಾರತದ ಉನ್ನತ ಶ್ರೇಣಿಯ ಎಂಜಿನಿಯರಿಂಗ್ ಸಂಸ್ಥೆಯು ನಿವೃತ್ತ ಐಪಿಎಸ್ ಅಧಿಕಾರಿ ಜಿ ತಿಲಗಾವತಿ ಅವರನ್ನು ವಿಚಾರಣಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಪ್ರೊಫೆಸರ್ ಸೇನ್ ವಿರುದ್ಧದ ಕ್ರಮವನ್ನು ವಿದ್ಯಾರ್ಥಿ ಸಂಘವು ಸ್ವಾಗತಿಸಿದೆ. \ No newline at end of file diff --git a/eesanje/url_47_228_6.txt b/eesanje/url_47_228_6.txt new file mode 100644 index 0000000000000000000000000000000000000000..9c39a60fd8ba56f7b15848c7d9639dc3dab7b9f9 --- /dev/null +++ b/eesanje/url_47_228_6.txt @@ -0,0 +1,6 @@ +ನೀಟ್ ಪರೀಕ್ಷೆ ಭೀತಿಗೆ ಮತ್ತೊಂದು ಬಲಿ +ಕೋಟಾ, ನ 28 (ಪಿಟಿಐ) -ನೀಟ್ ಪರೀಕ್ಷೆ ಆತಂಕಕ್ಕೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ದೇಶದಲ್ಲಿ ಇದುವರೆಗೂ ನೀಟ್‍ನಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳದ 20 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯೊಂದರ ಗ್ರಾಮದ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಆದರೆ ಅವರ ಕೊಠಡಿಯಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಪಶ್ಚಿಮ ಬಂಗಾಳದ ಬಿರ್ಹಮ್ ಜಿಲ್ಲೆಯವರಾದ ಫೌರೀದ್ ಹುಸೇನ್ (20) ಕೋಟಾದ ಕೋಚಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‍ಗೆ ಸುಮಾರು ಒಂದು ವರ್ಷದಿಂದ ತಯಾರಿ ನಡೆಸುತ್ತಿದ್ದರು. ಈ ವರ್ಷ ಜುಲೈನಿಂದ ವೌಫ್ ನಗರದಲ್ಲಿ ಬಾಡಿಗೆಗೆ ವಾಸವಾಗಿದ್ದರು. +ಉರ್ದು ಶಾಲೆ ಸ್ಥಳಾಂತರ ಮಾಡುವಂತೆ ಒತ್ತಡ : ಸಿಎಂಗೆ ದೂರು +ಅದೇ ಮನೆಯಲ್ಲಿ ಕೋಚಿಂಗ್ ಇನ್‍ಸ್ಟಿಟ್ಯೂಟ್‍ಗಳ ಇತರ ಕೆಲವು ವಿದ್ಯಾರ್ಥಿಗಳು ವಾಸಿಸುತ್ತಿದ್ದರು. ನಿನ್ನೆ ಮಧ್ಯಾಹ್ನ ಹುಸೇನ್ ಕೊನೆಯದಾಗಿ ಕಾಣಿಸಿಕೊಂಡಿದ್ದರು. ರಾತ್ರಿ 8 ಗಂಟೆಯಾದರೂ ಕೊಠಡಿಯಿಂದ ಹೊರಗೆ ಬಾರದಿದ್ದಾಗ ಸ್ನೇಹಿತರು ಕರೆ ಮಾಡಿದರೂ ಬಾಗಿಲು ತೆರೆಯಲಿಲ್ಲ. ನಂತರ ಅವರು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ಕರೆ ಮಾಡಿದ್ದಾರೆ ಎಂದು ದಾದಾಬರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ರಾಜೇಶ್ ಪಾಠಕ್ ತಿಳಿಸಿದ್ದಾರೆ. +ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಗಿಲು ಮುರಿದು ಯುವಕ ನೇಣು ಬಿಗಿದಿರುವುದನ್ನು ಕಂಡು, ಕೋಣೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ತೀವ್ರ ಹೆಜ್ಜೆಯ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅವರು ಹೇಳಿದರು. ನೀಟ್ ಪರೀಕ್ಷೆ ಆತಂಕದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. \ No newline at end of file diff --git a/eesanje/url_47_228_7.txt b/eesanje/url_47_228_7.txt new file mode 100644 index 0000000000000000000000000000000000000000..e3378286ebe2d4b08a4102b089e0533a053829eb --- /dev/null +++ b/eesanje/url_47_228_7.txt @@ -0,0 +1,7 @@ +ರಕ್ತದಾನ ಕುರಿತು ಜಾಗೃತಿ ಮೂಡಿಸಲು 21 ಸಾವಿರ ಕಿ.ಮೀ ಕಾಲ್ನಡಿಗೆ ಹೊರಟ ಮಹಾನುಭಾವ +ಕೊಹಿಮಾ, ನ 28 (ಪಿಟಿಐ) ದೆಹಲಿ ಮೂಲದ ಸಮಾಜ ಸೇವಕರೊಬ್ಬರು ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆಯಲ್ಲಿ 21,000 ಕಿ.ಮೀ ಪ್ರಯಾಣವನ್ನು ಕೈಗೊಳ್ಳುತ್ತಿದ್ದಾರೆ. ಕಿರಣ್ ವರ್ಮಾ ಅವರು ಡಿಸೆಂಬರ್ 28, 2021 ರಂದು ಕೇರಳದ ರಾಜಧಾನಿ ತಿರುವನಂತಪುರಂನಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು ಮತ್ತು ಇಲ್ಲಿಯವರೆಗೆ ಅವರು 17,700 ಕಿಮೀ ಕ್ರಮಿಸಿ ಈಶಾನ್ಯ ರಾಜ್ಯವಾದ ನಾಗಾಲ್ಯಾಂಡ್ ಅನ್ನು ತಲುಪಿದ್ದಾರೆ. +ವರ್ಮಾ ಅವರು ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ನನ್ನ ಉದ್ದೇಶವಾಗಿದೆ, ಇದರಿಂದಾಗಿ ಯಾರೂ ರಕ್ತದ ಕೊರತೆಯಿಂದ ಸಾಯುವುದಿಲ್ಲ ಎಂದಿದ್ದಾರೆ. ಅವರ ಉದ್ದೇಶವನ್ನು ಬೆಂಬಲಿಸಲು ಇದುವರೆಗೆ ದೇಶಾದ್ಯಂತ 126 ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ ಮತ್ತು 26,722 ಯುನಿಟ್‍ಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು. +ಉರ್ದು ಶಾಲೆ ಸ್ಥಳಾಂತರ ಮಾಡುವಂತೆ ಒತ್ತಡ : ಸಿಎಂಗೆ ದೂರು +ಶಿಬಿರಗಳಲ್ಲದೇ ದೇಶ ಮತ್ತು ವಿದೇಶದ ವಿವಿಧ ರಕ್ತನಿ ಕೇಂದ್ರಗಳಲ್ಲಿ 9 ಸಾವಿರಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ ಎಂದರು. ಕೊಹಿಮಾವನ್ನು ತಲುಪಿದ ಅವರು ಪ್ರವಾಸೋದ್ಯಮ ಮತ್ತು ಉನ್ನತ ಶಿಕ್ಷಣ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಅವರನ್ನು ಭೇಟಿ ಮಾಡಿದರು, ಅವರು ತಮ್ಮ ಹಾಸ್ಯದ ಹಾಸ್ಯಪ್ರಜ್ಞಾಗಾಗಿ ರಾಷ್ಟ್ರದಾದ್ಯಂತ ಸಾಮಾಜಿಕ ಮಾಧ್ಯಮದಲ್ಲಿ ಅಪಾರವಾಗಿ ಜನಪ್ರಿಯರಾಗಿದ್ದಾರೆ. +ಜೊತೆಗೆ, ಸಾಮಾಜಿಕ ಮಾಧ್ಯಮ ಪೋಸ್ಟ್‍ನಲ್ಲಿ, ವರ್ಮಾ ಅವರಿಗೆ ಶುಭ ಹಾರೈಸಿದ್ದಾರೆ ಮತ್ತು ಜನರ ಜೀವ ಉಳಿಸಲು ರಕ್ತದಾನ ಮಾಡಲು ಸಾಧ್ಯವಿರುವವರಿಗೆ ಮನವಿ ಮಾಡಿದ್ದಾರೆ. ವರ್ಮಾ ಅವರು ಕೊಹಿಮಾವನ್ನು ತಲುಪಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 229 ಜಿಲ್ಲೆಗಳನ್ನು ಸವೆಸಿದ್ದಾರೆ. +ಕನಿಷ್ಠ 50 ಲಕ್ಷ ಹೊಸ ದಾನಿಗಳನ್ನು ಉತ್ತೇಜಿಸಲು ಅವರು ಬಯಸುತ್ತಾರೆ, ಇದರಿಂದಾಗಿ ರಕ್ತನಿಗಳು ಮತ್ತು ಆಸ್ಪತ್ರೆಗಳು ರಕ್ತದ ಮೇಲೆ ಬತ್ತಿ ಹೋಗುವುದಿಲ್ಲ.ಅವರು ಮುಂದೆ ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಈಶಾನ್ಯದ ಇತರ ಭಾಗಗಳಿಗೆ ಭೇಟಿ ನೀಡಲಿದ್ದಾರೆ. \ No newline at end of file diff --git a/eesanje/url_47_228_8.txt b/eesanje/url_47_228_8.txt new file mode 100644 index 0000000000000000000000000000000000000000..2df4027cfc6f8d1dfca28ac7e8c3c19de25ba49c --- /dev/null +++ b/eesanje/url_47_228_8.txt @@ -0,0 +1,9 @@ +ಚಳಿಗಾಲದ ಅಧಿವೇಶನಕ್ಕೆ ಸಜ್ಜಾದ ನೂತನ ಸಂಸತ್ +ನವದೆಹಲಿ,ನ.27- ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದ್ದು, ಇದು ಹೊಸ ಸಂಸತ್ ಕಟ್ಟಡದಲ್ಲಿ ಮೊದಲ ಪೂರ್ಣ ಅಧಿವೇಶನವಾಗಿದೆ. ಒಟ್ಟು 19 ದಿನಗಳ ಕಾಲ ನಡೆಯುವ ಸಂಸತ್ ಅಧಿವೇಶನದಲ್ಲಿ ದೇಶದ ಹಿತದೃ ಷ್ಟಿಯಿಂದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. +ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಡಿ.2ರಂದು ಬೆಳಿಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. +ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುಂಚಿತವಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದರೂ, ಡಿ.3ರಂದು ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳ ಮತ ಎಣಿಕೆಯಿಂದಾಗಿ ಈ ಬಾರಿ ಒಂದು ದಿನ ಮುಂದೂಡಲಾಗಿದೆ. ಪ್ರಮುಖ ಮಸೂದೆಗಳನ್ನು ಅಂಗೀಕರಿಸಲು ಸರ್ಕಾರ ಉತ್ಸುಕವಾಗಿರುವ ಅಧಿವೇಶನದ ಮೇಲೆ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪರಿಣಾಮ ಬೀರುವ ಸಂಭವವಿದೆ. +ಡಿಸಂಬರ್‌ನಲ್ಲಿ ಆಗಲಿವೆ ಹಲವಾರು ಮಹತ್ವದ ಬದಲಾವಣೆಗಳು +ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗೆ ನಗದು ಆರೋಪದ ಕುರಿತು ನೈತಿಕ ಸಮಿತಿಯ ವರದಿಯನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ. ಸಮಿತಿಯು ಶಿಫಾರಸು ಮಾಡಿದ ಉಚ್ಚಾಟನೆ ಜಾರಿಗೆ ಬರುವ ಮೊದಲು ಸದನವು ವರದಿಯನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. +ಈಗಾಗಲೇ ಲೋಕಸಭೆಯಲ್ಲಿ ಇಂಡಿಯನ್ ಪೀನಲ್ ಕೋಡ್ (ಭಾರತೀಯ ದಂಡ ಸಂಹಿತೆ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ ಮಸೂದೆ-2023, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮಸೂದೆ-2023 ಮತ್ತು ಇಂಡಿಯನ್ ಎವಿಡನ್ಸ್ ಆ್ಯಕ್ಟ್ (ಭಾರತೀಯ ಸಾಕ್ಷ್ಯ ಕಾಯ್ದೆ) ಬದಲಿಗೆ ಭಾರತೀಯ ಸಾಕ್ಷ್ಯ ಮಸೂದೆ 2023 ಅನ್ನು ಕೇಂದ್ರ ಸಚಿವಾಲಯವು ಮಂಡಿಸಿದೆ. ಇವುಗಳಿಗೆ ಅನುಮೋದನೆ ಪಡೆಯಲು ಅಧಿವೇಶನಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ. +ಪ್ರತಿಪಕ್ಷಗಳು ಮತ್ತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪ್ರತಿಭಟನೆಯ ನಡುವೆ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅದನ್ನು ಅಂಗೀಕರಿಸಲು ಸರ್ಕಾರವು ಒತ್ತಾಯಿಸಲಿಲ್ಲ, ಏಕೆಂದರೆ ಸಿಇಸಿ ಮತ್ತು ಇಸಿಗಳ ಸ್ಥಾನಮಾನವನ್ನು ಕ್ಯಾಬಿನೆಟ್ ಕಾರ್ಯದರ್ಶಿಗೆ ಸಮಾನವಾಗಿ ತರಲು ಪ್ರಯತ್ನಿಸುತ್ತಿದೆ. ಪ್ರಸ್ತುತ ಅವರು ಸುಪ್ರೀಂಕೋರ್ಟ್ ನ್ಯಾಯಾೀಧಿಶರ ಸ್ಥಾನಮಾನವನ್ನು ಅನುಭವಿಸುತ್ತಿದ್ದಾರೆ. +ಸೆಪ್ಟೆಂಬರ್‍ನಲ್ಲಿ ಸಂಸತ್ತಿನ ವಿಶೇಷ ಅಧಿವೇಶನ ನಡೆದು ಹಳೆಯ ಕಟ್ಟಡದಿಂದ ಹೊಸ ಕಟ್ಟಡಕ್ಕೆ ಕಲಾಪಗಳು ಸ್ಥಳಾಂತರಗೊಂಡು ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. \ No newline at end of file diff --git a/eesanje/url_47_228_9.txt b/eesanje/url_47_228_9.txt new file mode 100644 index 0000000000000000000000000000000000000000..6a125d6e0b5da354d0002d5e13913620e53343fc --- /dev/null +++ b/eesanje/url_47_228_9.txt @@ -0,0 +1,10 @@ +ಡಿಸಂಬರ್‌ನಲ್ಲಿ ಆಗಲಿವೆ ಹಲವಾರು ಮಹತ್ವದ ಬದಲಾವಣೆಗಳು +ನವದೆಹಲಿ,ನ.27- ವರ್ಷದ ಕೊನೆಯ ತಿಂಗಳಾದ ಡಿಸಂಬರ್‌ನಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಲಿದೆ. ಸಿಮ್ ಕಾರ್ಡ್ ಸಂಗ್ರಹಿಸುವುದರಿಂದ ಹಿಡಿದು ಮಲೇಷ್ಯಾಗೆ ವೀಸಾಮುಕ್ತ ಪ್ರವೇಶ ಸೇರಿದಂತೆ ಹಲವಾರು ನಿಯಮಗಳು ಜಾರಿಗೆ ಬರಲಿವೆ. +ಸಿಮ್ ಕಾರ್ಡ್‍ಗಳನ್ನು ಸಂಗ್ರಹಿಸುವುದರಿಂದ ಹಿಡಿದು ಮಲೇಷ್ಯಾದಲ್ಲಿ ವೀಸಾ-ಮುಕ್ತ ಪ್ರವೇಶದವರೆಗಿನ ಈ ಬದಲಾವಣೆಗಳು ದೇಶದ ಜನರಿಗೆ ಜೀವನವನ್ನು ಸುಲಭ ಮತ್ತು ಹೆಚ್ಚು ಸುರಕ್ಷಿತವಾಗಿಸುತ್ತದೆ. ಜಾರಿಗೆ ಬರಲಿರುವ ಮತ್ತೊಂದು ಪ್ರಮುಖ ಬದಲಾವಣೆಯು ನಿಮ್ಮ ಡಿಜಿಟಲ್ ಜೀವನದ ಮೇಲೆ ಪರಿಣಾಮ ಬೀರುತ್ತದೆ, ಅದರಲ್ಲೂ ವಿಶೇಷವಾಗಿ ಬಳಕೆಯಾಗದ ಜಿಮೇಲ್ ಖಾತೆಗಳನ್ನು ಹೊಂದಿರುವವರು ಅಂತಹ ಖಾತೆಗಳನ್ನು ಅಳಿಸುವುದಾಗಿ ಗೂಗಲ್ ಘೋಷಿಸಿದೆ. +ನ್ಯೂಜಿಲ್ಯಾಂಡ್ ಪ್ರಧಾನಿಯಾದ ಕ್ರಿಸ್ಟೋಫರ್ ಲಕ್ಸನ್ ಪ್ರಮಾಣ +ಯಾವ ಯಾವ ಬದಲಾವಣೆಗಳಾಗಲಿವೆ:ಜಿ20 ಅಧ್ಯಕ್ಷ ಸ್ಥಾನ ಬದಲಾವಣೆ:2023ರ ಡಿಸೆಂಬರ್ 1ರಿಂದ ಗ್ರೂಪ್ ಆಫ್ 20 (ಜಿ20) ರಾಷ್ಟ್ರಗಳ ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ವಹಿಸಿಕೊಳ್ಳಲಿದೆ. ಬ್ರೆಜಿಲ್ 2024 ರಲ್ಲಿ ಜಿ20 ಶೃಂಗಸಭೆಯನ್ನು ಆಯೋಜಿಸುತ್ತದೆ ಮತ್ತು ದಕ್ಷಿಣ ಆಫ್ರಿಕಾವು 2025 ರಲ್ಲಿ ಆತಿಥ್ಯ ವಹಿಸಲಿದೆ. +ಸಿಮ್ ಕಾರ್ಡ್ ಖರೀದಿಗೆ ಹೊಸ ನಿಯಮಗಳು:ವಂಚನೆಗಳು ಮತ್ತು ವಂಚನೆಗಳನ್ನು ಎದುರಿಸಲು ದೂರಸಂಪರ್ಕ ಇಲಾಖೆ (ಡಿಒಟಿ) ಡಿಸೆಂಬರ್ 1 ರಿಂದ ಸಿಮ್ ಕಾರ್ಡ್‍ಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಹೊಸ ನಿಯಮಗಳನ್ನು ಪರಿಚಯಿಸುತ್ತಿದೆ. ಹೊಸ ನಿಯಮಗಳು ಎಲ್ಲಾ ಸಿಮ್ ಕಾರ್ಡ್ ಡೀಲರ್‍ಗಳು ಪರಿಶೀಲನೆಗೆ ಒಳಗಾಗುವುದನ್ನು ಕಡ್ಡಾಯಗೊಳಿಸುತ್ತದೆ. ನಿಯಮ ಪಾಲಿಸಲು ವಿಫಲವಾದರೆ 10 ಲಕ್ಷ ದಂಡ ವಿಸಬಹುದಾಗಿದೆ. +ಕೇಂದ್ರ ಸರ್ಕಾರವು ಸಿಮ್ ಕಾರ್ಡ್‍ಗಳನ್ನು ಬೃಹತ್ ಪ್ರಮಾಣದಲ್ಲಿ ಖರೀದಿಸುವ ನಿಯಮಗಳನ್ನೂ ಬಿಗಿಗೊಳಿಸುತ್ತಿದೆ. ವ್ಯವಹಾರ ಸಂಪರ್ಕವನ್ನು ಮಾತ್ರ ಹಾಗೆ ಮಾಡಲು ಅನುಮತಿಸಲಾಗುವುದು, ಆದಾಗ್ಯೂ, ಅಸ್ತಿತ್ವದಲ್ಲಿರುವ ವೈಯಕ್ತಿಕ ಸಂಪರ್ಕಕ್ಕಾಗಿ ನಿಯಮಗಳಿಗೆ ಯಾವುದೇ ಬದಲಾವಣೆಗಳಿಲ್ಲ. ಆದಾಗ್ಯೂ, ಸಿಮ್ ಕಾರ್ಡ್ ಅನ್ನು ಮುಚ್ಚುವುದರಿಂದ 90 ದಿನಗಳ ಅವಯ ನಂತರ ಮಾತ್ರ ಆ ಸಂಖ್ಯೆಯನ್ನು ಇನ್ನೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ. ಹೊಸ ನಿಯಮಗಳನ್ನು ಅನುಸರಿಸಲು ಸಿಮ್ ಮಾರಾಟ ಮಾಡುವ ಮಾರಾಟಗಾರರು ನವೆಂಬರ್ 30 ರೊಳಗೆ ನೋಂದಾಯಿಸಿಕೊಳ್ಳಬೇಕು. +ಜಿಮೇಲ್ ಸ್ಥಗಿತ;ಟೆಕ್ ದೈತ್ಯ ಗೂಗಲ್ ತನ್ನ ಎಲ್ಲಾ ಉತ್ಪನ್ನ ಮತ್ತು ಸೇವೆಗಳಲ್ಲಿ ಜಿಮೇಲ್ ಖಾತೆಯ ನಿಷ್ಕ್ರಿಯತೆಯ ಅಧಿವಯನ್ನು ಎರಡು ವರ್ಷಗಳವರೆಗೆ ನವೀಕರಿಸುತ್ತಿದೆ ಎಂದು ಘೋಷಿಸಿದೆ. ಕಂಪನಿಯು ತನ್ನ ಎಲ್ಲಾ ಬಳಕೆದಾರರಿಗೆ ಇಮೇಲ್‍ಗಳ ಮೂಲಕ ಬದಲಾವಣೆಯ ಬಗ್ಗೆ ತಿಳಿಸಿದೆ. ಬದಲಾವಣೆಯು ಡಿಸೆಂಬರ್ 1 ರಿಂದ ಜಾರಿಗೆ ಬರಲಿದೆ ಮತ್ತು ನಿಷ್ಕ್ರಿಯವಾಗಿರುವ ಯಾವುದೇ ಜಿಮೇಲ್ ಖಾತೆಗೆ ಅನ್ವಯಿಸುತ್ತದೆ, +ಪ್ರಧಾನಿ ಮೋದಿ ಶ್ಲಾಘನೆ ಖುಷಿ ತಂದಿದೆ : ವರ್ಷಾ +ಐಪಿಒಗಳಿಗೆ ಹೊಸ ಟೈಮ್‍ಲೈನ್;ಸೆಕ್ಯುರಿಟೀಸ್ ಅಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಐಪಿಒಗಳ ಪಟ್ಟಿಗಾಗಿ ಟೈಮ್‍ಲೈನ್ ಅನ್ನು ಅಸ್ತಿತ್ವದಲ್ಲಿರುವ ಟಿ+6 ದಿನಗಳಿಂದ ಟಿ+3 ದಿನಗಳವರೆಗೆ ಕಡಿಮೆ ಮಾಡಿದೆ. ಹೊಸ ನಿಯಮಗಳು ಐಪಿಒಗಳನ್ನು ಮುಚ್ಚಿದ ನಂತರ ಸ್ಟಾಕ್ ಎಕ್ಸ್‍ಚೇಂಜ್‍ಗಳಲ್ಲಿ ಷೇರುಗಳ ಪಟ್ಟಿಯನ್ನು ಪ್ರಸ್ತುತ ಆರು ದಿನಗಳಿಂದ ಮೂರು ದಿನಗಳವರೆಗೆ ಅರ್ಧಕ್ಕೆ ಇಳಿಸಿವೆ. ಸೆಪ್ಟೆಂಬರ್ 1 ರಂದು ಅಥವಾ ನಂತರ ತೆರೆಯುವ ಎಲ್ಲಾ ಸಾರ್ವಜನಿಕ ಸಮಸ್ಯೆಗಳಿಗೆ ಸ್ವಯಂಪ್ರೇರಿತವಾಗಿರುತ್ತದೆ ಮತ್ತು ಡಿಸೆಂಬರ್ 1 ರ ನಂತರ ಬರುವ ಎಲ್ಲಾ ಸಮಸ್ಯೆಗಳಿಗೆ ಕಡ್ಡಾಯವಾಗಿರುತ್ತದೆ. \ No newline at end of file diff --git a/eesanje/url_47_229_1.txt b/eesanje/url_47_229_1.txt new file mode 100644 index 0000000000000000000000000000000000000000..e1e0a4a2a8d1f04417650a39b7dc3a608b2ca151 --- /dev/null +++ b/eesanje/url_47_229_1.txt @@ -0,0 +1,5 @@ +11ನೇ ವರ್ಷ ಪೂರ್ಣಗೊಳಿಸಿದ ಎಎಪಿ +ನವದೆಹಲಿ, ನ.26 (ಪಿಟಿಐ) ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಶುಭ ಹಾರೈಸಿದ್ದಾರೆ ಮತ್ತು 11 ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದ ತನ್ನ ಪ್ರಯಾಣವನ್ನು ನೆನಪಿಸಿಕೊಂಡಿದ್ದಾರೆ. +2012 ರ ಈ ದಿನದಂದು, ದೇಶದ ಸಾಮಾನ್ಯ ಜನರು ಎದ್ದುನಿಂತು ತನ್ನದೇ ಆದ ಪಕ್ಷ ಆಮ್ ಆದ್ಮಿ ಪಾರ್ಟಿ ಸ್ಥಾಪಿಸಿದರು. ಅಂದಿನಿಂದ ಇಂದಿನವರೆಗೆ, ಈ 11 ವರ್ಷಗಳಲ್ಲಿ ಅನೇಕ ಏರಿಳಿತಗಳು ಮತ್ತು ಅನೇಕ ತೊಂದರೆಗಳಿವೆ, ಆದರೆ ನಮ್ಮೆಲ್ಲರ ಉತ್ಸಾಹ ಮತ್ತು ಉತ್ಸಾಹದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ, ಎಂದು ದೆಹಲಿ ಮುಖ್ಯಮಂತ್ರಿ ಹಿಂದಿಯಲ್ಲಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. +ಮುಂಬೈ ದಾಳಿಗೆ 15 ವರ್ಷ, ಹುತಾತ್ಮರಿಗೆ ಶ್ರದ್ದಾಂಜಲಿ +ಎಎಪಿ ಪ್ರಸ್ತುತ ದೆಹಲಿ ಮತ್ತು ಪಂಜಾಬ್‍ನಲ್ಲಿ ಅಧಿಕಾರದಲ್ಲಿದೆ ಮತ್ತು ಹಲವಾರು ಇತರ ರಾಜ್ಯಗಳಲ್ಲಿ ತನ್ನ ನೆಲೆಯನ್ನು ಹರಡಲು ಶ್ರಮಿಸುತ್ತಿದೆ. ಇಂದು ಸಣ್ಣ ಪಕ್ಷವನ್ನು ಜನರು ತಮ್ಮ ಪ್ರೀತಿ ಮತ್ತು ಆಶೀರ್ವಾದದಿಂದ ರಾಷ್ಟ್ರೀಯ ಪಕ್ಷವಾಗಿ ಪರಿವರ್ತಿಸಿದ್ದಾರೆ, ಸಾರ್ವಜನಿಕರ ಆಶೀರ್ವಾದ ನಮ್ಮೊಂದಿಗಿದೆ, ನಾವೆಲ್ಲರೂ ನಮ್ಮ ದೃಢವಾದ ಉದ್ದೇಶದಿಂದ ಮುಂದೆ ಸಾಗುತ್ತೇವೆ ಮತ್ತು ಸಾರ್ವಜನಿಕರ ಕೆಲಸ ಮಾಡುತ್ತೇವೆ. ಶುಭಾಶಯಗಳು ಪಕ್ಷದ ಸಂಸ್ಥಾಪನಾ ದಿನದಂದು ಎಲ್ಲಾ ಕಾರ್ಯಕರ್ತರಿಗೆ ಎಂದು ಕೇಜ್ರಿವಾಲ್ ಪೋಸ್ಟ್‍ನಲ್ಲಿ ತಿಳಿಸಿದ್ದಾರೆ. \ No newline at end of file diff --git a/eesanje/url_47_229_10.txt b/eesanje/url_47_229_10.txt new file mode 100644 index 0000000000000000000000000000000000000000..9eb7e09a4bd524c58eccea80c06683f4213fc0a7 --- /dev/null +++ b/eesanje/url_47_229_10.txt @@ -0,0 +1,8 @@ +ದೆಹಲಿ ಮಾಲಿನ್ಯಕ್ಕೆ ಉಷ್ಣ ವಿದ್ಯುತ್ ಸ್ಥಾವರಗಳೇ ಕಾರಣ +ನವದೆಹಲಿ, ನ 26 (ಪಿಟಿಐ) ಉಷ್ಣ ವಿದ್ಯುತ್ ಸ್ಥಾವರಗಳ ಹೊರಸೂಸುವಿಕೆ ಮಾನದಂಡಗಳನ್ನು ಅನುಸರಿಸದಿರುವುದು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ವಾಯು ಮಾಲಿನ್ಯಕ್ಕೆ ಗಣನೀಯವಾಗಿ ಕೊಡುಗೆ ನೀಡುತ್ತಿದೆ ಎಂಬ ಅಂಶ ಇದೀಗ ಬಹಿರಂಗಗೊಂಡಿದೆ. ದಿಲ್ಲಿ- ಎನ್‌ಸಿಆರ್‌ನಲ್ಲಿರುವ11 ಥರ್ಮಲ್ ಪವರ್ ಪ್ಲಾಂಟ್‍ಗಳಿಂದ (ಟಿಪಿಪಿ) ಕಣಗಳು, ನೈಟ್ರೋಜನ್ ಆಕ್ಸೈಡ್ ಮತ್ತು ಸಲರ್ ಡೈಆಕ್ಸೈಡ್ ಹೊರಸೂಸುವಿಕೆಗಳ ಮೇಲೆ ಪರಿಸರ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‍ಮೆಂಟ್ (ಸಿಎಸ್‍ಇ) ಅಧ್ಯಯನವು ಕೇಂದ್ರೀಕರಿಸಿದೆ ಮತ್ತು ವೆಬ್‍ಸೈಟ್‍ನಿಂದ ಪಡೆದ ಪರಿಸರ ಸ್ಥಿತಿಯ ವರದಿಗಳನ್ನು ಆಧರಿಸಿ ಈ ವಿವರಣೆ ನೀಡಲಾಗಿದೆ. +ಅಧ್ಯಯನಗಳ ಪ್ರಕಾರ, ದೆಹಲಿ-ಎನ್‍ಸಿಆರ್‍ನಲ್ಲಿನ ಪಿಎಮ 2.5 ಮಾಲಿನ್ಯದ ಸುಮಾರು ಎಂಟು ಪ್ರತಿಶತದಷ್ಟು ಟಿಪಿಪಿಗಳನ್ನು ಹೊಂದಿದೆ. ಉಷ್ಣ ವಿದ್ಯುತ್ ಸ್ಥಾವರಗಳಂತಹ ಮಾಲಿನ್ಯದ ನಿರಂತರ ಮೂಲಗಳು ಹೆಚ್ಚಿನ ಮಟ್ಟದಲ್ಲಿ ಮಾಲಿನ್ಯಕಾರಕಗಳನ್ನು ಹೊರಸೂಸುವುದನ್ನು ಮುಂದುವರೆಸಿದರೆ ದೆಹಲಿ-ಎನ್‍ಸಿಆರ್ ಶುದ್ಧ ಗಾಳಿ ಮಾನದಂಡವನ್ನು ಸಾಧಿಸಲು ಮತ್ತು ಸಾರ್ವಜನಿಕ ಆರೋಗ್ಯವನ್ನು ರಕ್ಷಿಸಲು ಸಾಧ್ಯವಿಲ್ಲ. ಈ ಸ್ಥಾವರಗಳು ಮಾನದಂಡಗಳನ್ನು ಪೂರೈಸಲು ಹೆಣಗಾಡುತ್ತಿವೆ, ಮುಖ್ಯವಾಗಿ ಅನುಸರಣೆ ಗಡುವುಗಳನ್ನು ನಿರಂತರವಾಗಿ ಬದಲಾಯಿಸುವ ಕಾರಣದಿಂದಾಗಿ ಮಾಲಿನ್ಯ ಮುಂದುವರೆದಿದೆ ಎಂದು ಸಂಶೋಧಕ ಅನುಮಿತಾ ರಾಯ್‍ಚೌಧರಿ ಹೇಳುತ್ತಾರೆ. +ಮುಂಬೈನ ಅಂಗಡಿ, ಮಳಿಗೆಗಳ ಮೇಲೆ ದೇವನಾಗರಿ ಲಿಪಿ ಬೋರ್ಡ್ ಕಡ್ಡಾಯ +ಕೇಂದ್ರ ಪರಿಸರ ಸಚಿವಾಲಯದ ಹಲವು ಗಡುವು ವಿಸ್ತರಣೆಗಳು ಮತ್ತು ಪರಿಷ್ಕøತ ವರ್ಗೀಕರಣಗಳ ಹೊರತಾಗಿಯೂ, ಈ ಪ್ರದೇಶದಲ್ಲಿನ ಅನೇಕ ಸಸ್ಯಗಳು ನೈಟ್ರೋಜನ್ ಆಕ್ಸೈಡ್ , ಸಲರ್ ಡೈಆಕ್ಸೈಡ್ ಮತ್ತು ಕಣಗಳ ಹೊರಸೂಸುವಿಕೆಗೆ ನಿಗದಿತ ಮಾನದಂಡಗಳನ್ನು ಪೂರೈಸಲು ಹೆಣಗಾಡುತ್ತಿವೆ ಎಂದು ವರದಿ ಹೇಳಿದೆ. +ಸಚಿವಾಲಯವು ಡಿಸೆಂಬರ್ 2015 ರಲ್ಲಿ ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ಕಟ್ಟುನಿಟ್ಟಾದ ಹೊರಸೂಸುವಿಕೆ ಮಾನದಂಡಗಳನ್ನು ಸ್ಥಾಪಿಸಿತು, ಎರಡು ವರ್ಷಗಳಲ್ಲಿ ಅನುಸರಣೆ ಅಗತ್ಯವಿರುತ್ತದೆ. ನಂತರ, ಇದು ದೆಹಲಿ-ಎನ್‍ಸಿಆರ್‍ನಲ್ಲಿ ಹೊರತುಪಡಿಸಿ ಎಲ್ಲಾ ವಿದ್ಯುತ್ ಸ್ಥಾವರಗಳಿಗೆ ಐದು ವರ್ಷಗಳ ವಿಸ್ತರಣೆಯನ್ನು ನೀಡಿತು, ಈ ಪ್ರದೇಶದ ಹೆಚ್ಚಿನ ಮಾಲಿನ್ಯದ ಮಟ್ಟಗಳಿಂದ ಅನುಸರಿಸಲು 2019 ರವರೆಗೆ ನೀಡಲಾಯಿತು. +ಇದರ ಹೊರತಾಗಿಯೂ, ದಾದ್ರಿ ಟಿಪಿಪಿ ಮತ್ತು ಮಹಾತ್ಮ ಗಾಂಧಿ ಟಿಪಿಪಿ ಹೊರತುಪಡಿಸಿ, ಎಲ್ಲಾ ಎನ್‍ಸಿಆರ್ ಸ್ಥಾವರಗಳು ಪರಿಷ್ಕøತ ಗಡುವನ್ನು ಪೂರೈಸಲು ವಿಫಲವಾಗಿವೆ ಮತ್ತು ಮಾರ್ಚ್ 2021 ರಲ್ಲಿ ಮತ್ತೊಂದು ವಿಸ್ತರಣೆಯಾಗುವವರೆಗೆ ಉಲ್ಲಂಘನೆಯಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿವೆ. ದಾದ್ರಿ, ಇಂದಿರಾ ಗಾಂಧಿಲ್ಲಾ, ಮಹಾತ್ಮ ಗಾಂಧಿಲ್ಲಾ, ಮತ್ತು ಪಾಣಿಪತ್ ಟಿಪಿಪಿ ಗಳನ್ನು ಹೊರತುಪಡಿಸಿ, ಉಳಿದ ಏಳು ಸ್ಥಾವರಗಳನ್ನು ಇ ವರ್ಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ, ಅನುಸರಣೆಗೆ ಹೆಚ್ಚುವರಿ ಸಮಯವನ್ನು ನೀಡಿತು. +ಮೊದಲ ಗಡುವಿನ ಸುಮಾರು ಆರು ವರ್ಷಗಳ ನಂತರ ಎನ್‍ಸಿಆರ್‍ನಲ್ಲಿನ ಮೂರು ಸ್ಥಾವರಗಳು — ಹರ್ದುವಾಗಂಜ್ ಟಿಪಿಪಿ, ಪಾಣಿಪತ್ ಟಿಪಿಪಿ ಮತ್ತು ಗುರು ಹರಗೋಬಿಂದ್ ಟಿಪಿಪಿ ಇನ್ನೂ ಹೆಚ್ಚಿನ ಅಮಾನತುಗೊಂಡ ಕಣಗಳ ಹೊರಸೂಸುವಿಕೆಯನ್ನು ವರದಿ ಮಾಡುತ್ತಿವೆ ಎಂದು ಸಿಎಸ್‍ಇ ವರದಿ ತಿಳಿಸಿದೆ. \ No newline at end of file diff --git a/eesanje/url_47_229_11.txt b/eesanje/url_47_229_11.txt new file mode 100644 index 0000000000000000000000000000000000000000..69e0419703241ead6ee94d7110a03be6a0342bb1 --- /dev/null +++ b/eesanje/url_47_229_11.txt @@ -0,0 +1,6 @@ +ಮನೆಗೆ ನುಗ್ಗಿದ ಪೊಲೀಸ್ ಜೀಪ್, ಇಬ್ಬರ ದುರ್ಮರಣ +ಮಾಲ್ಡಾ, ನ.26 (ಪಿಟಿಐ) ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಪೊಲೀಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. +ಸಿತಾಲ್‍ಪುರ ಗ್ರಾಮದಲ್ಲಿ ಪ್ರಕರಣವೊಂದರ ತನಿಖೆಗಾಗಿ ಪೊಲೀಸ್ ತಂಡ ಅಲ್ಲಿಗೆ ಹೋದಾಗ ಅಪಘಾತ ಸಂಭವಿಸಿದೆ ಮತ್ತು ಅವರ ವಾಹನವು ಮನೆಯೊಂದಕ್ಕೆ ನುಗ್ಗುವ ಮೊದಲು ನಾಲ್ವರು ಸ್ಥಳೀಯರಿಗೆ ಡಿಕ್ಕಿ ಹೊಡೆದಿದೆ ಎಂದು ಚಂಚಲ್ ಉಪವಿಭಾಗಾಧಿಕಾರಿ ಸೌವಿಕ್ ಮುಖರ್ಜಿ ತಿಳಿಸಿದ್ದಾರೆ. +ಅರವತ್ತೆರಡು ವರ್ಷದ ದಾನಿಶಾ ಬೇವಾ ಮತ್ತು 60 ವರ್ಷದ ಎಸ್‍ಕೆ ಮೊಹಮ್ಮದ್ ಅವರನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಇಬ್ಬರು ಮಕ್ಕಳಿಗೆ ಚಂಚಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಅವರು ಹೇಳಿದರು. +ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ವೀರತರ್ಪಣ +ಪೊಲೀಸ್ ವಾಹನದ ಚಾಲಕ ಪಾನಮತ್ತನಾಗಿದ್ದ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿ, ಅಪಘಾತಕ್ಕೆ ಕಾರಣರಾದ ಪೊಲೀಸ್ ಸಿಬ್ಬಂದಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. \ No newline at end of file diff --git a/eesanje/url_47_229_12.txt b/eesanje/url_47_229_12.txt new file mode 100644 index 0000000000000000000000000000000000000000..bcfa900b3c53a40de4a6d0bd3cb7a97d4216bf45 --- /dev/null +++ b/eesanje/url_47_229_12.txt @@ -0,0 +1,8 @@ +1984ರ ಭೋಪಾಲ್ ಅನಿಲ ದುರಂತದ ವಿಚಾರಣೆ ಜ.6ಕ್ಕೆ ಮುಂದೂಡಿಕೆ +ಭೋಪಾಲ್ , ನ.26 (ಪಿಟಿಐ) 1984ರ ಭೋಪಾಲ್ ಅನಿಲ ದುರಂತದಲ್ಲಿ 3,000ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಮತ್ತು ಪರಿಸರ ಹಾನಿಗೆ ಕಾರಣವಾದ ಡೌ ಕೆಮಿಕಲ್ ಅನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೋರಿ ಸಿಬಿಐ ಸೇರಿದಂತೆ ವಿವಿಧ ಅರ್ಜಿಗಳ ವಿಚಾರಣೆಯನ್ನು ಇಲ್ಲಿನ ನ್ಯಾಯಾಲಯವು ಜನವರಿ 6ಕ್ಕೆ ಮುಂದೂಡಿದೆ. +ಅಮೆರಿಕದ ಮಿಚಿಗನ್‍ನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಡೌ ಕೆಮಿಕಲ್ , ಯೂನಿಯನ್ ಕಾರ್ಬೈಡ್ ಕಾಪೆರ್ರೇಶನ್ ಅನ್ನು ಖರೀದಿಸಿತು, ಡಿಸೆಂಬರ್ 2 ಮತ್ತು 3, 1984 ರ ಮಧ್ಯರಾತ್ರಿ ಭೋಪಾಲ್‍ನಲ್ಲಿ ಅನಿಲ ಸೋರಿಕೆಯು ದುರಂತಕ್ಕೆ ಕಾರಣವಾಯಿತು. +ಅರ್ಜಿದಾರರ ಮನವಿಯ ಮೇರೆಗೆ ಶೋಕಾಸ್ ನೋಟಿಸ್ ನೀಡಿದ ಭೋಪಾಲ್ ನ್ಯಾಯಾಲಯದ ವ್ಯಾಪ್ತಿಗೆ ಈ ಪ್ರಕರಣ ಬರುವುದಿಲ್ಲ ಎಂದು ಅಮೆರಿಕದ ಬಹುರಾಷ್ಟ್ರೀಯ ಸಂಸ್ಥೆ ವಾದಿಸಿದ ನಂತರ ಜ್ಯುಡಿಷಿಯಲ್ ಪ್ರಥಮ ದರ್ಜೆ ವಿಧಾನ ಮಾಹೇಶ್ವರಿ ಶನಿವಾರ ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿದರು. +ಮಿಚೆಲ್ ಮಾರ್ಷ್ ವಿಶ್ವಕಪ್ ಮೇಲೆ ಕಾಲಿಟ್ಟಿರುವುದು ನೋವು ತಂದಿದೆ:ಶಮಿ +ಆದಾಗ್ಯೂ, ಅರ್ಜಿದಾರರು, ಮಧ್ಯಪ್ರದೇಶ ಹೈಕೋರ್ಟ್ 2012 ರಲ್ಲಿ ನ್ಯಾಯವ್ಯಾಪ್ತಿಯ ವಿಷಯವನ್ನು ನಿರ್ಧರಿಸಿದ್ದಾರೆ, ಹೀಗಾಗಿ ಡೌ ಕೆಮಿಕಲ್ ಅನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು ಎಂದು ಅನಿಲ ದುರಂತ ಸಂತ್ರಸ್ತರ ಪರವಾಗಿ ಕೆಲಸ ಮಾಡುವ ಸಂಸ್ಥೆಗಳನ್ನು ಪ್ರತಿನಿಧಿಸುವ ವಕೀಲ ಅವಿ ಸಿಂಗ್ ಪಿಟಿಐಗೆ ತಿಳಿಸಿದರು. +ಸುಪ್ರೀಂ ಕೋರ್ಟ್‍ನ ಹಿರಿಯ ವಕೀಲ ಮತ್ತು ಛತ್ತೀಸ್‍ಗಢದ ಮಾಜಿ ಅಡ್ವೊಕೇಟ್ ಜನರಲ್ ರವೀಂದ್ರ ಶ್ರೀವಾಸ್ತವ ಮತ್ತು ಸಂದೀಪ್ ಗುಪ್ತಾ ನೇತೃತ್ವದ ವಕೀಲರು ಕಂಪನಿಯ ಪರ ವಾದ ಮಂಡಿಸಿದರು. ಡೌ ಕೆಮಿಕಲ್ ಅನ್ನು ಪ್ರತಿನಿಸುವ ವಕೀಲರು ಪಿಟಿಐಗೆ ಈ ಪ್ರಕರಣವು ಭೋಪಾಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ, ಏಕೆಂದರೆ ಬಹುರಾಷ್ಟ್ರೀಯ ಸಂಸ್ಥೆಯು ಅಂತರರಾಷ್ಟ್ರೀಯ ಕಾನೂನಿನಿಂದ ನಿಯಂತ್ರಿಸಲ್ಪಡುತ್ತದೆ. +ಅಧಿಕಾರದ ಸಮಸ್ಯೆಯನ್ನು ಉಚ್ಚ ನ್ಯಾಯಾಲಯವು ಇತ್ಯರ್ಥಪಡಿಸಿಲ್ಲ ಎಂದು ನಾವು ನ್ಯಾಯಾಲಯದ ಮುಂದೆ ಸಲ್ಲಿಸಿದ್ದೇವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_229_2.txt b/eesanje/url_47_229_2.txt new file mode 100644 index 0000000000000000000000000000000000000000..dca3e9b2e2f950a62947429af7eda4d07146c883 --- /dev/null +++ b/eesanje/url_47_229_2.txt @@ -0,0 +1,7 @@ +ಬಿಜೆಪಿಯಿಂದ ಸಂವಿಧಾನ ಹತ್ತಿಕ್ಕುವ ಕಾರ್ಯ ನಡೆಯುತ್ತಿದೆ : ಖರ್ಗೆ +ನವದೆಹಲಿ, ನ.26 (ಪಿಟಿಐ) ಬಿಜೆಪಿ ಸರಕಾರ ತನ್ನ ಪಠ್ಯಪುಸ್ತಕದಲ್ಲಿ ಸಂವಿಧಾನ ನೀಡಿರುವ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲು ಮತ್ತು ಮೊಟಕುಗೊಳಿಸಲು ಎಲ್ಲ ತಂತ್ರಗಳನ್ನು ಬಳಸುತ್ತಿದೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನದ ಮೇಲಿನ ದಾಳಿಯನ್ನು ಪ್ರತಿಯೊಬ್ಬ ನಾಗರಿಕರು ಪ್ರಶ್ನಿಸಬೇಕು ಎಂದು ಕೇಳಿಕೊಂಡಿದ್ದಾರೆ. +1949 ರಲ್ಲಿ ಭಾರತ ಸಂವಿಧಾನವನ್ನು ಅಂಗೀಕರಿಸಿದ ದಿನವನ್ನು ಗುರುತಿಸುವ ಸಂವಿಧಾನ ದಿನದಂದು ಎಕ್ಸ್ ನಲ್ಲಿ ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಭಾರತದ ಸಂವಿಧಾನವು ನಮ್ಮ ಪ್ರಜಾಪ್ರಭುತ್ವದ ಜೀವಸೆಲೆ ನಾವು 74 ನೇ ಸಂವಿಧಾನ ದಿನವನ್ನು ಆಚರಿಸುತ್ತಿರುವಾಗ ಮತ್ತು ಆಚರಿಸುತ್ತಿರುವಾಗ, ಅದರ ತಯಾರಕರಿಗೆ ನಾವು ಅತ್ಯಂತ ಗೌರವದಿಂದ ನಮಸ್ಕರಿಸುತ್ತೇವೆ – ಏಕೆಂದರೆ ಅವರು ಪ್ರತಿಯೊಬ್ಬ ಭಾರತೀಯನ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಹಕ್ಕುಗಳನ್ನು ಖಾತರಿಪಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು. +ಪ್ರಸ್ತುತ ಆಡಳಿತವು ತನ್ನ ಪಠ್ಯಪುಸ್ತಕದಲ್ಲಿನ ಪ್ರತಿಯೊಂದು ತಂತ್ರವನ್ನು ಬಳಸಿಕೊಂಡು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಎಲ್ಲಾ ಸ್ವಾತಂತ್ರ್ಯಗಳನ್ನು ಹತ್ತಿಕ್ಕಲು ಮತ್ತು ಮೊಟಕುಗೊಳಿಸಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದರು. +ಭಾರತಕ್ಕೆ ಬರುತ್ತಿದ್ದಾರೆ ನಾಸಾದ ನಿವಾರ್ಹಕ ಬಿಲ್ ನೆಲ್ಸನ್ +ಬಿಜೆಪಿ-ಆರ್‍ಎಸ್‍ಎಸ್‍ಗಳು ಸಂವಿಧಾನದ ಮೇಲೆ ವ್ಯವಸ್ಥಿತ ಮತ್ತು ಕಟ್ಟುನಿಟ್ಟಿನ ದಾಳಿ ಸರ್ಕಾರಿ ಯಂತ್ರದ ಪ್ರತಿಯೊಂದು ಅಡಿಕೆ ಮತ್ತು ಬೋಲ್ಟ್‍ಗಳ ಅಕ ದುರ್ಬಳಕೆಯಲ್ಲಿ ಗೋಚರಿಸುತ್ತವೆ ಎಂದು ಅವರು ಆರೋಪಿಸಿದರು. ರಾಷ್ಟ್ರೀಯ ರಾಜ್ಯವಾಗಿ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯು ಒಂದು ಬಲಿಪಶುವಾಗಿ ಪರಿಣಮಿಸುವ ಮತ್ತು ದುರ್ಬಲ ವರ್ಗಗಳ ಹಕ್ಕುಗಳನ್ನು ಕ್ರಮೇಣ ವಶಪಡಿಸಿಕೊಳ್ಳುವ ಒಂದು ತುದಿಯನ್ನು ನಾವು ಶೀಘ್ರದಲ್ಲೇ ತಲುಪಬಹುದು. +ಈ ವಿಭಜನೆ ಮತ್ತು ದ್ವೇಷದ ರಾಜಕಾರಣದ ವಿರುದ್ಧ ಸೆಟೆದು ನಿಲ್ಲುವ ಸಮಯ ಬಂದಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಹೋರಾಟವನ್ನು ಮುಂಭಾಗದಿಂದ ನಡೆಸುತ್ತಿದೆ ಎಂದು ಖರ್ಗೆ ಹೇಳಿದರು. ನಮ್ಮ ಸಂವಿಧಾನ, ಅದರ ತತ್ವಗಳು ಮತ್ತು ಅದರ ಮೌಲ್ಯಗಳ ಮೇಲಿನ ದಾಳಿಯನ್ನು ಪ್ರತಿಯೊಬ್ಬ ನಾಗರಿಕನೂ ಪ್ರಶ್ನಿಸಬೇಕು ಎಂದು ಅವರು ಹೇಳಿದರು. \ No newline at end of file diff --git a/eesanje/url_47_229_3.txt b/eesanje/url_47_229_3.txt new file mode 100644 index 0000000000000000000000000000000000000000..bd523369b9ea528d5166fc193d555236144b3635 --- /dev/null +++ b/eesanje/url_47_229_3.txt @@ -0,0 +1,7 @@ +ಮೋದಿ ಪಂಜಾಬ್‍ ಭೇಟಿ ವೇಳೆ ಭದ್ರತಾಲೋಪ, ಮತ್ತೆ 6 ಪೊಲೀಸರ ಅಮಾನತು +ಚಂಡೀಗಢ, ನ.26 (ಪಿಟಿಐ) ಕಳೆದ 2022ರ ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಎಸಗಿದ ಆರೋಪದಲ್ಲಿ ಇನ್ನೂ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಆರು ಮಂದಿಯನ್ನು ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಯೊಂದಿಗೆ ಅಮಾನತುಗೊಳಿಸಲಾಗಿದೆ, ಅವರನ್ನು ಈ ಹಿಂದೆ ಅಮಾನತುಗೊಳಿಸಲಾಗಿತ್ತು ಎಂದು ವರದಿಯಾಗಿದೆ. +ರಾಜ್ಯ ಗೃಹ ಇಲಾಖೆಯ ನವೆಂಬರ್ 22 ರ ಆದೇಶದ ಪ್ರಕಾರ ಇಬ್ಬರು ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗಳಾದ ಪರ್ಸನ್ ಸಿಂಗ್ ಮತ್ತು ಜಗದೀಶ್ ಕುಮಾರ್, ಇನ್‍ಸ್ಪೆಕ್ಟರ್‍ಗಳಾದ ಜತೀಂದರ್ ಸಿಂಗ್ ಮತ್ತು ಬಲ್ವಿಂದರ್ ಸಿಂಗ್, ಸಬ್ ಇನ್‍ಸ್ಪೆಕ್ಟರ್ ಜಸ್ವಂತ್ ಸಿಂಗ್ ಮತ್ತು ಸಹಾಯಕ ಸಬ್ ಇನ್ಸ್‍ಪೆಕ್ಟರ್ ರಮೇಶ್ ಕುಮಾರ್ ಎಂಬುವರನ್ನು ಅಮಾನತುಗೊಳಿಸಲಾಗಿದೆ. +ಪ್ರಸ್ತುತ ಬಟಿಂಡಾ ಜಿಲ್ಲೆಯಲ್ಲಿ ಎಸ್ಪಿಯಾಗಿ ನಿಯೋಜನೆಗೊಂಡಿರುವ ಎಸ್ಪಿ ಗುರ್ಬಿಂದರ್ ಸಿಂಗ್ ಅವರನ್ನು ಶನಿವಾರ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಆದೇಶದ ಪ್ರಕಾರ, ಪಂಜಾಬ್ ನಾಗರಿಕ ಸೇವೆಗಳ ನಿಯಮ (ಶಿಕ್ಷೆ ಮತ್ತು ಮೇಲ್ಮನವಿ) 1970 ರ ಸೆಕ್ಷನ್ 8 ರ ಅಡಿಯಲ್ಲಿ ಎಲ್ಲಾ ಏಳು ಪೊಲೀಸರನ್ನು ಚಾರ್ಜ್ ಶೀಟ್‍ನಲ್ಲಿ ಹೆಸರಿಸಲಾಗಿದೆ. +“ಜಾಗತೀಕ ಸಂಘರ್ಷ ನಿವಾರಣೆಯಲ್ಲಿ ಮಧ್ಯವರ್ತಿಯಾಗಿ ಭಾರತ ಬೆಳೆದಿದೆ” +ಜನವರಿ 5, 2022 ರಂದು, ಫಿರೋಜ್‍ಪುರದಲ್ಲಿ ಪ್ರತಿಭಟನಾಕಾರರ ದಿಗ್ಬಂಧನದಿಂದಾಗಿ ಪ್ರಧಾನಿ ಮೋದಿಯವರ ಬೆಂಗಾವಲು ಪಡೆ ಫ್ಲೈಓವರ್‍ನಲ್ಲಿ ಸಿಕ್ಕಿಹಾಕಿಕೊಂಡಿತು, ನಂತರ ಅವರು ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪಂಜಾಬ್‍ನಿಂದ ಹಿಂತಿರುಗಿದರು ಮತ್ತು ರ್ಯಾಲಿಯನ್ನು ರದ್ದುಗೊಳಿಸಬೇಕಾಯಿತು. +2022 ರ ಜನವರಿಯಲ್ಲಿ ಪ್ರಧಾನಿ ಮೋದಿಯವರ ಪಂಜಾಬ್ ಭೇಟಿಯ ಸಂದರ್ಭದಲ್ಲಿ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಿದ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಹಲವಾರು ರಾಜ್ಯ ಅಧಿಕಾರಿಗಳನ್ನು ಲೋಪದೋಷಗಳಿಗೆ ದೋಷಾರೋಪಣೆ ಮಾಡಿತ್ತು. \ No newline at end of file diff --git a/eesanje/url_47_229_4.txt b/eesanje/url_47_229_4.txt new file mode 100644 index 0000000000000000000000000000000000000000..3d88cc43130654dc8b268df26dc3583fec6a267b --- /dev/null +++ b/eesanje/url_47_229_4.txt @@ -0,0 +1,7 @@ +ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ +ನವದೆಹಲಿ,ನ.26- ಮುಂಬೈನಲ್ಲಿ ನಡೆದ 26/11ರ ಭಯೋತ್ಪಾದಕ ದಾಳಿಯನ್ನು ಸಾರ್ವಜನಿಕ ಜೀವನವನ್ನು ಅಸ್ತವ್ಯಸ್ತಗೊಳಿಸಿದ ಭಯಾನಕ ಘಟನೆ ಎಂದು ಕರೆದಿರುವ ಭಾರತದ ಇಸ್ರೇಲ್ ರಾಯಭಾರಿ ನವೋರ್ ಗಿಲೋನ್ ಅವರು, ಭಯೋತ್ಪಾದನೆ ಜಾಗತಿಕ ವಿದ್ಯಮಾನವಾಗಿದೆ ಮತ್ತು ಅದರ ವಿರುದ್ಧ ಹೋರಾಡಲು ಎಲ್ಲ ದೇಶಗಳು ಕೈಜೋಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. +ಭಯೋತ್ಪಾದನೆಯ ಕುರಿತಾದ ಪ್ರಧಾನಿ ನರೇಂದ್ರ ಮೋದಿಯವರ ಟೀಕೆಗಳನ್ನು ಅವರು ಪ್ರತಿಧ್ವನಿಸಿದರು ಮತ್ತು ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಸ್ರೇಲ್ ಯಾವಾಗಲೂ ಭಾರತದೊಂದಿಗೆ ನಿಲ್ಲುತ್ತದೆ ಎಂದು ದೃಢಪಡಿಸಿದರು. +ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ನಿಮ್ಮ ಸುರಕ್ಷಿತ ಧಾಮಕ್ಕೆ, ಮುಂಬೈನಲ್ಲಿರುವ ನಿಮ್ಮ ಮನೆಗಳಿಗೆ ಜೀವನವನ್ನು ಅಡ್ಡಿಪಡಿಸಲು, ಭಯಭೀತರಾಗಲು ಬಂದಾಗ ಇದು ಭಯಾನಕ ವಿದ್ಯಮಾನವಾಗಿದೆ. ಅವರು ಭಯಭೀತರಾಗಲು ಬಯಸಿದ್ದರು, ಅವರು ಅದನ್ನು ರವಾನಿಸಲು ಬಯಸಿದ್ದರು – ನಿಖರವಾಗಿ ಹಮಾಸ್‍ನಂತೆ. ಅವರ ಗುರಿ ಕೊಲ್ಲುವುದು ಮಾತ್ರವಲ್ಲ, ಬದುಕುಳಿದವರನ್ನು ಭಯಭೀತರನ್ನಾಗಿಸುವುದು ಎಂದಿದ್ದಾರೆ. +ಭಾನುವಾರ ಮುಂಬೈನಲ್ಲಿ ನಡೆದ ಭೀಕರ 26/11 ಭಯೋತ್ಪಾದಕ ದಾಳಿಯ 15 ನೇ ವಾರ್ಷಿಕೋತ್ಸವವನ್ನು ಗುರುತಿಸುತ್ತದೆ, ಅವರ ಸ್ಮರಣೆಯು ಇನ್ನೂ ಆಘಾತ ತರಂಗಗಳನ್ನು ಕಳುಹಿಸುವುದನ್ನು ಮುಂದುವರೆಸಿದೆ ಮತ್ತು ರಾಷ್ಟ್ರದ ಸಾಮೂಹಿಕ ಸ್ಮರಣೆಯಲ್ಲಿ ಕಾಲಹರಣ ಮಾಡುತ್ತಿದೆ ಎಂದ ಗಿಲೋನ್, ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಮೀನಾಮೇಷ ಎಣಿಸಬಾರದು ಬೆದರಿಕೆಯನ್ನು ಕೊನೆಗೊಳಿಸಲು ದೇಶಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಎಂದು ಹೇಳಿದರು. +ದೆಹಲಿ ಮಾಲಿನ್ಯಕ್ಕೆ ಉಷ್ಣ ವಿದ್ಯುತ್ ಸ್ಥಾವರಗಳೇ ಕಾರಣ +ನಾವು ಭಾರತೀಯರಿಗೆ ಹೇಳುತ್ತಿದ್ದೇವೆ, ಭಾರತ ಯಾವಾಗಲೂ ಇಸ್ರೇಲ್‍ನೊಂದಿಗೆ ನಿಂತಿದೆ, ಇತ್ತೀಚೆಗೆ ಆದರೆ ಯಾವಾಗಲೂ. ನಮಗೆ ಅಗತ್ಯವಿರುವಾಗ, ಭಾರತ ನಮ್ಮ ಪರವಾಗಿದೆ. ಭಾರತೀಯರು ತಿಳಿದಿರಬೇಕು, ನಾವು ನಿಮ್ಮ ಪರವಾಗಿರುತ್ತೇವೆ. ಭಯೋತ್ಪಾದನೆ ವಿರುದ್ಧ ಹೋರಾಡುವಾಗ, ಅಲ್ಲಿ ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ, ನಾವು ಭಯೋತ್ಪಾದನೆಯನ್ನು ಕೊನೆಗೊಳಿಸುತ್ತೇವೆ ಎಂದು ಗಿಲೋನ್ ಹೇಳಿದರು. \ No newline at end of file diff --git a/eesanje/url_47_229_5.txt b/eesanje/url_47_229_5.txt new file mode 100644 index 0000000000000000000000000000000000000000..65e344ab4eff7f716b94f99adcf4e200d508c8d4 --- /dev/null +++ b/eesanje/url_47_229_5.txt @@ -0,0 +1,6 @@ +ಆನ್‍ಲೈನ್ ಸ್ನೇಹಿತರನ್ನು ಹೊಂದಿದ್ದ ಪತ್ನಿಯ ಕತ್ತು ಸೀಳಿ ಕೊಂದ ಪತಿ +ಕೋಲ್ಕತ್ತಾ,ನ.26- ಅನ್‍ಲೈನ್ ಸ್ನೇಹಿತರನ್ನು ಹೊಂದಿದ್ದ ತನ್ನ ಪತ್ನಿಯ ವರ್ತನೆಯಿಂದ ಬೇಸತ್ತ ಪತಿ ಆಕೆಯ ಕತ್ತನ್ನು ತರಕಾರಿ ಕಟರ್‌ನಿಂದ ಸೀಳಿ ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಕೊಲೆಯ ನಂತರ ವ್ಯಕ್ತಿ ಓಡಿಹೋಗಿದ್ದಾನೆ. ದಂಪತಿಯ ಅಪ್ರಾಪ್ತ ಮಗ ಮನೆಗೆ ಹಿಂದಿರುಗಿದಾಗ ತನ್ನ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಲಾಗಿದೆ. +ದಕ್ಷಿಣ 24 ಪರಗಣ ಜಿಲ್ಲೆಯ ಜೋಯ್‍ನಗರದ ಹರಿನಾರಾಯಣಪುರದಲ್ಲಿರುವ ತಮ್ಮ ಮನೆಯ ಮುಂದೆ ಮಾತನಾಡಿದ ಬಾಲಕ, ತನ್ನ ಹೆತ್ತವರಾದ ಪರಿಮಲ್ ಮತ್ತು ಅಪರ್ಣಾ ಬೈದ್ಯ ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ತನ್ನ ತಂದೆ ತನ್ನ ತಾಯಿಯನ್ನು ತುಂಡು ತುಂಡಾಗಿ ಕತ್ತರಿಸುವುದಾಗಿ ಹಲವಾರು ಸಂದರ್ಭಗಳಲ್ಲಿ ಬೆದರಿಕೆ ಹಾಕಿದ್ದಾನೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ. +ದೆಹಲಿ ಮಾಲಿನ್ಯಕ್ಕೆ ಉಷ್ಣ ವಿದ್ಯುತ್ ಸ್ಥಾವರಗಳೇ ಕಾರಣ +ಅಪರ್ಣ ಅವರನ್ನು ಬೋಟಿಯನ್ನು (ತರಕಾರಿ ಮತ್ತು ಮಾಂಸವನ್ನು ಕತ್ತರಿಸಲು ಬಳಸುವ ಉಪಕರಣ) ಎತ್ತಿಕೊಂಡು ತನ್ನ ಹೆಂಡತಿಯ ಮೇಲೆ ಹಲ್ಲೇ ನಡೆಸಿದ್ದಾನೆ ಎಂದು ನೆರೆಹೊರೆಯವರು ಹೇಳಿದ್ದಾರೆ. ಅಪರ್ಣಾ ಅವರ ಸಾಮಾಜಿಕ ಮಾಧ್ಯಮ ಚಟುವಟಿಕೆ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‍ಫಾರ್ಮ್‍ಗಳ ಮೂಲಕ ಅವಳು ಮಾಡಿಕೊಂಡ ಕೆಲವು ಸ್ನೇಹಿತರ ಬಗ್ಗೆ ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಕೆಯ ಸಾಮಾಜಿಕ ಮಾಧ್ಯಮ ಚಟುವಟಿಕೆಯನ್ನು ಒಪ್ಪದ ಕಾರಣ ಪತಿ ಅವಳನ್ನು ಕೊಂದಿದ್ದಾನೆ ಎಂದು ನಾವು ಅನುಮಾನಿಸುತ್ತೇವೆ. +ಪರಿಮಲ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ತಂಡ ರಚಿಸಲಾಗಿದೆ. ಅಪರ್ಣಾ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕೊಲೆಗೈದ ಮಾರಕಾಸ್ತ್ರ ಪತ್ತೆಯಾಗಿದೆ. \ No newline at end of file diff --git a/eesanje/url_47_229_6.txt b/eesanje/url_47_229_6.txt new file mode 100644 index 0000000000000000000000000000000000000000..e050d8298731104896b3bfe08f16db883f26ffab --- /dev/null +++ b/eesanje/url_47_229_6.txt @@ -0,0 +1,12 @@ +ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಎದುರಾಯ್ತು ಮತ್ತೊಂದು ಅಪಾಯ +ನವದೆಹಲಿ,ನ.26- ಕಳೆದ 15 ದಿನಗಳಿಂದ ಉತ್ತರಾಖಂಡದ ಸುರಂಗದಲ್ಲಿ ಸಿಲುಕಿಕೊಂಡಿರುವ 41 ಕಾರ್ಮಿಕರ ರಕ್ಷಣೆಗೆ ಮತ್ತೊಂದು ಅಪಾಯ ಎದುರಾಗಿದೆ. ಕಾರ್ಮಿಕರ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದ್ದ ದೈತ್ಯ ಡ್ರಿಲ್ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಕರು ಈಗ ಹಸ್ತಚಾಲಿತ ಕೊರೆಯುವಿಕೆಯನ್ನು ಪ್ರಾರಂಭಿಸುತ್ತಾರೆ, ಇದು ಹಲವಾರು ದಿನಗಳು, ವಾರಗಳು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. +ಕುಸಿದಿರುವ ಸಿಲ್ಕ್ಯಾರಾ ಸುರಂಗದ ಅವಶೇಷಗಳ ಮೂಲಕ ಕೊರೆಯುತ್ತಿದ್ದಾಗ ಆಗರ್ ಯಂತ್ರದ ಬ್ಲೇಡ್‍ಗಳು ಅವಶೇಷಗಳಲ್ಲಿ ಸಿಲುಕಿಕೊಂಡಿವೆ. ಸುಮಾರು 60 ಮೀಟರ್ ಶಿಲಾಖಂಡರಾಶಿಗಳನ್ನು ಭೇದಿಸಲು ಅಮೆರಿಕದಿಂದ ತರಲಾದ ಭಾರೀ ಡ್ರಿಲ್ ಹಾನಿಗೊಳಗಾಗಿದೆ ಮತ್ತು ಈಗ ಹೊರತೆಗೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಕೊನೆಯ 10-15 ಮೀಟರ್‍ಗಳನ್ನು ಕೈಯಲ್ಲಿ ಹಿಡಿಯುವ ವಿದ್ಯುತ್ ಉಪಕರಣಗಳಿಂದ ಒಡೆಯಬೇಕಾಗುತ್ತದೆ. +ಹಸ್ತಚಾಲಿತ ಕೊರೆಯುವಿಕೆಯು ಕೆಲಸಗಾರನು ಈಗಾಗಲೇ ಬೇಸರಗೊಂಡಿರುವ ಪಾರುಗಾಣಿಕಾ ಮಾರ್ಗವನ್ನು ಪ್ರವೇಶಿಸುವುದನ್ನು ಒಳಗೊಂಡಿರುತ್ತದೆ, ಸೀಮಿತ ಜಾಗದಲ್ಲಿ ಸ್ವಲ್ಪ ಸಮಯದವರೆಗೆ ಕೊರೆಯುವುದು ಮತ್ತು ನಂತರ ಬೇರೆಯವರಿಗೆ ವಹಿಸಿಕೊಳ್ಳಲು ಅವಕಾಶ ನೀಡುತ್ತದೆ. +13 ಇಸ್ರೇಲಿಗರು, 7 ವಿದೇಶಿಯರ ಬಿಡುಗಡೆಗೆ ಹಮಾಸ್ ಸಮ್ಮತಿ +360 ಗಂಟೆಗಳಿಗೂ ಹೆಚ್ಚು ಕಾಲ ಸಿಕ್ಕಿಬಿದ್ದಿರುವ 41 ಪುರುಷರು ಈಗ ಅವರನ್ನು ಸುರಕ್ಷಿತವಾಗಿ ಹೊರತರುವ ಮೊದಲು ಇನ್ನೂ ಹಲವು ದಿನಗಳು, ಬಹುಶಃ ವಾರಗಳವರೆಗೆ ಕಾಯಬೇಕಾಗಬಹುದು. ಬೆಳಕು, ಆಮ್ಲಜನಕ, ಆಹಾರ, ನೀರು ಮತ್ತು ಔಷಧಿಗಳ ಪ್ರವೇಶದೊಂದಿಗೆ ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. +ತಾಳ್ಮೆಗೆ ಸಲಹೆ ನೀಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎನ್‍ಡಿಎಂಎ) ಸದಸ್ಯ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅಟಾ ಹಸ್ನೇನ್ ಅವರು, ಈ ಕಾರ್ಯಾಚರಣೆಯು ಬಹಳ ಸಮಯ ತೆಗೆದುಕೊಳ್ಳಬಹುದು. ನೀವು ಪರ್ವತದ ಮೇಲೆ ಕೆಲಸ ಮಾಡುವಾಗ, ಎಲ್ಲವೂ ಅನಿರೀಕ್ಷಿತವಾಗಿದೆ. ನಾವು ಯಾವುದೇ ಟೈಮ್‍ಲೈನ್ ನೀಡಿಲ್ಲ ಎಂದಿದ್ದಾರೆ. +ದುರಂತದ ಸ್ಥಳದಲ್ಲಿ, ಅಂತರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ ಡಿಕ್ಸ್ ಅವರು ಕ್ರಿಸ್‍ಮಸ್ ಹೊತ್ತಿಗೆ ಕಾರ್ಮಿಕರು ಹೊರಬರುತ್ತಾರೆ ಎಂದು ಭರವಸೆ ನೀಡಿದ್ದಾರೆ. ಹಸ್ತಚಾಲಿತ ಕೊರೆಯುವಿಕೆಯು ಇಂದು ಪ್ರಾರಂಭವಾಗುವ ನಿರೀಕ್ಷೆಯಿದೆ, ಆದರೆ 25 ಟನ್ ಆಗರ್ ಡ್ರಿಲ್ಲಿಂಗ್ ಯಂತ್ರವು ಅವಶೇಷಗಳನ್ನು ಕತ್ತರಿಸಿದ ನಂತರವೇ. ಅಂಟಿಕೊಂಡಿರುವ ರೋಟರಿ ಬ್ಲೇಡ್‍ಗಳನ್ನು ತೆಗೆದುಹಾಕಲು ಹೈದರಾಬಾದ್‍ನಿಂದ ಪ್ಲಾಸ್ಮಾ ಕಟ್ಟರ್ ಅನ್ನು ವಿಮಾನದಲ್ಲಿ ತರಲಾಗುತ್ತಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. +ಏತನ್ಮಧ್ಯೆ, ಮ್ಯಾನ್ಯುವಲ್ ಡ್ರಿಲ್ಲಿಂಗ್ ಅನ್ನು ಸವಾಲಾಗಿ ಸ್ವೀಕರಿಸುವ ಕಾರ್ಮಿಕರಿಗೆ ರಕ್ಷಣಾ ಛತ್ರಿ ಹಾಕಲಾಗುತ್ತಿದೆ. ಸಿಕ್ಕಿಬಿದ್ದಿರುವ ಪುರುಷರಿಗೆ ಅವರ ಕುಟುಂಬಗಳೊಂದಿಗೆ ಮಾತನಾಡಲು ಮತ್ತು ಸಂಪರ್ಕದಲ್ಲಿರಲು ಲ್ಯಾಂಡ್‍ಲೈನ್ ಅನ್ನು ಸಹ ಸ್ಥಾಪಿಸಲಾಗುತ್ತಿದೆ. +1984ರ ಭೋಪಾಲ್ ಅನಿಲ ದುರಂತದ ವಿಚಾರಣೆ ಜ.6ಕ್ಕೆ ಮುಂದೂಡಿಕೆ +ನಲವತ್ತೊಂದು ಆಂಬ್ಯುಲೆನ್ಸ್‍ಗಳು ಸುರಂಗದ ಪ್ರವೇಶದ್ವಾರದಲ್ಲಿ ಸ್ಟ್ಯಾಂಡ್‍ಬೈನಲ್ಲಿ ಉಳಿದಿವೆ, ಕೆಲಸಗಾರರನ್ನು ಚಿನ್ಯಾಲಿಸೌರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲು ಸಿದ್ಧವಾಗಿವೆ. 41 ಆಮ್ಲಜನಕ-ಸಜ್ಜಿತ ಹಾಸಿಗೆಗಳೊಂದಿಗೆ ಗೊತ್ತುಪಡಿಸಿದ ವಾರ್ಡ್ ಅನ್ನು ಸಹ ಸ್ಥಾಪಿಸಲಾಗಿದೆ, ಪ್ರತಿ ಕಾರ್ಮಿಕರಿಗೆ ತ್ವರಿತ ವೈದ್ಯಕೀಯ ಆರೈಕೆಯನ್ನು ಒದಗಿಸಲು ಸಿದ್ಧಪಡಿಸಲಾಗಿದೆ. +ಉತ್ತರಕಾಶಿಯಿಂದ ಸುಮಾರು 30 ಕಿಮೀ ಮತ್ತು ಡೆಹ್ರಾಡೂನ್‍ನಿಂದ ಏಳು ಗಂಟೆಗಳ ಪ್ರಯಾಣದ ದೂರದಲ್ಲಿರುವ ಸಿಲ್ಕ್ಯಾರಾ ಸುರಂಗವು ಕೇಂದ್ರ ಸರ್ಕಾರದ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಅವಿಭಾಜ್ಯ ಅಂಗವಾಗಿದೆ. \ No newline at end of file diff --git a/eesanje/url_47_229_7.txt b/eesanje/url_47_229_7.txt new file mode 100644 index 0000000000000000000000000000000000000000..97730da353113adc8e1aef40bc3ede9c20096712 --- /dev/null +++ b/eesanje/url_47_229_7.txt @@ -0,0 +1,6 @@ +ಮುಂಬೈ ದಾಳಿಗೆ 15 ವರ್ಷ, ಹುತಾತ್ಮರಿಗೆ ಶ್ರದ್ದಾಂಜಲಿ +ಮುಂಬೈ,ನ.26- ವಾಣಿಜ್ಯ ರಾಜಧಾನಿ ಮುಂಬೈ ಮೇಲೆ 26/11 ರಂದು ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದಂದು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. +15 ವರ್ಷಗಳ ಹಿಂದೆ ಇದೇ ದಿನ ಮಹಾನಗರದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಹೋರಾಡಿ ಹುತಾತ್ಮರಾದ ಹುತಾತ್ಮ ಯೋಧರಿಗೆ ಮಹಾರಾಷ್ಟ್ರ ರಾಜ್ಯಪಾಲ ರಮೇಶ್ ಬೈಸ್ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಪುಷ್ಪ ನಮನ ಸಲ್ಲಿಸಿದರು. +ಮುಂಬೈನ ಅಂಗಡಿ, ಮಳಿಗೆಗಳ ಮೇಲೆ ದೇವನಾಗರಿ ಲಿಪಿ ಬೋರ್ಡ್ ಕಡ್ಡಾಯ +ದಕ್ಷಿಣ ಮುಂಬೈನ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು, ಅಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು. +ನವೆಂಬರ್ 2008 ರ ದಾಳಿಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸರ ಕುಟುಂಬ ಸದಸ್ಯರು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. \ No newline at end of file diff --git a/eesanje/url_47_229_8.txt b/eesanje/url_47_229_8.txt new file mode 100644 index 0000000000000000000000000000000000000000..5bedd50a95fcece29be49e2cb7fa4f23264ecfa1 --- /dev/null +++ b/eesanje/url_47_229_8.txt @@ -0,0 +1,8 @@ +2040ರ ವೇಳೆಗೆ ಭಾರತದ ಬಾಹ್ಯಾಕಾಶ ಆರ್ಥಿಕತೆ 40 ಶತಕೋಟಿ ಡಾಲರ್‌ಗೆ ಏರಿಕೆ +ತಿರುವನಂತಪುರಂ, ನ.26 (ಪಿಟಿಐ) ಭಾರತದ ಬಾಹ್ಯಾಕಾಶ ಆರ್ಥಿಕತೆಯು 2040 ರ ವೇಳೆಗೆ 40 ಶತಕೋಟಿ ಡಾಲರ್ ತಲುಪಲು ಸಿದ್ಧವಾಗಿದೆ ಮತ್ತು ವಿಜ್ಞಾನಿಗಳು ಸಹ ಉತ್ತಮ ಕೆಲಸದ ವಾತಾವರಣವನ್ನು ಆನಂದಿಸುತ್ತಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಇಲ್ಲಿ ಹೇಳಿದರು. +ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಪರಮಾಣು ಶಕ್ತಿ ಮತ್ತು ಬಾಹ್ಯಾಕಾಶ ರಾಜ್ಯ ಸಚಿವರಾಗಿರುವ ಸಿಂಗ್ ಅವರು, ಎಕೆಡಿಯಂತಹ ಕೆಲವು ವಿದೇಶಿ ಏಜೆನ್ಸಿಗಳು ಈ ಅಂಕಿ ಅಂಶವು 2040 ರ ವೇಳೆಗೆ 100 ಶತಕೋಟಿಗೆ ಏರಬಹುದು ಎಂದು ಭವಿಷ್ಯ ನುಡಿದಿದೆ ಎಂದು ಹೇಳಿದರು. +ಪ್ರಸ್ತುತ, ನಮ್ಮ ಬಾಹ್ಯಾಕಾಶ ಆರ್ಥಿಕತೆಯು ಹೆಚ್ಚು ಪ್ರಭಾವಶಾಲಿಯಾಗಿಲ್ಲ, ಏಕೆಂದರೆ ನಮ್ಮಲ್ಲಿ ಸುಮಾರು 8 ಮಿಲಿಯನ್ ಅಮೆರಿಕನ್ ಡಾಲರ್ ಇದೆ. ಆದರೆ ನಾವು ಕ್ವಾಂಟಮ್ ಜಿಗಿತಗಳಲ್ಲಿ ಚಲಿಸುತ್ತಿದ್ದೇವೆ ಮತ್ತು ವಿದೇಶಿ ಉಪಗ್ರಹ ಉಡಾವಣೆಯಲ್ಲಿ ಮಾತ್ರ, ನಾವು ಯುರೋಪಿಯನ್ ಉಪಗ್ರಹಗಳನ್ನು ಉಡಾವಣೆ ಮಾಡಲು ಸುಮಾರು 230-240 ಮಿಲಿಯನ್ ಗಳಿಸಿದ್ದೇವೆ. ಮತ್ತು ಸುಮಾರು 170-180 ಮಿಲಿಯನ್ ಅಮೆರಿಕನ್ ಉಪಗ್ರಹಗಳನ್ನು ಉಡಾವಣೆ ಮಾಡಲು ಸಿದ್ದ ಎಂದು ಸಿಂಗ್ ಹೇಳಿದರು. +ಮುಂಬೈನ ಅಂಗಡಿ, ಮಳಿಗೆಗಳ ಮೇಲೆ ದೇವನಾಗರಿ ಲಿಪಿ ಬೋರ್ಡ್ ಕಡ್ಡಾಯ +ಇಸ್ರೋ ರಾಕೆಟ್ ಉಡಾವಣೆಯ 60ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಪಿಟಿಐ ಜೊತೆ ಮಾತನಾಡಿದರು. ನ್ಯಾಶನಲ್ ರಿಸರ್ಚ್ ಫೌಂಡೇಶನ್ ಅನು ಸಂಧನ್ ಸ್ಥಾಪನೆಯೊಂದಿಗೆ ಅಮೆರಿಕದಲ್ಲಿ ಅಸ್ತಿತ್ವದಲ್ಲಿರುವ ಇದೇ ರೀತಿಯ ಅಡಿಪಾಯಗಳ ಉತ್ತಮ ಮಾದರಿ, ಗಮನಾರ್ಹವಾದ ಉದ್ಯಮದ ಉಪಸ್ಥಿತಿಯನ್ನು ಸ್ಥಾಪಿಸಬಹುದು ಎಂದು ಸಿಂಗ್ ಹೇಳಿದರು. +ಇದರೊಂದಿಗೆ, ನಮ್ಮ ಬಾಹ್ಯಾಕಾಶ ಸಂಪನ್ಮೂಲಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಸರ್ಕಾರೇತರ ವಲಯದಿಂದ ಬರಲಿದೆ. ಆದ್ದರಿಂದ, ಇದು ನಮ್ಮ ಸಂಪನ್ಮೂಲಗಳಿಗೆ ಪೂರಕವಾಗಲಿದೆ ಎಂದು ಸಚಿವರು ಹೇಳಿದರು.ಭಾರತವು ತನ್ನ ಬಾಹ್ಯಾಕಾಶ ಕ್ಷೇತ್ರದಲ್ಲಿ ಸಂಪನ್ಮೂಲ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂಬ ಅಂಶವನ್ನು ಒಪ್ಪಿಕೊಂಡ ಅವರು, ನಮ್ಮಲ್ಲಿರುವ ಮಹಾನ್ ವೈಜ್ಞಾನಿಕ ಕುಶಾಗ್ರಮತಿಯಿಂದ ನಾವು ಅದನ್ನು ನಿಭಾಯಿಸಬಹುದು ಎಂದು ಹೇಳಿದರು. +ನಾವು ಅದರೊಂದಿಗೆ ಇತರ ದೇಶಗಳನ್ನು ಹಿಂದಿಕ್ಕಬಹುದು. ಅವರು ಚಂದ್ರನ ಮೇಲೆ ಮಾನವನನ್ನು ಇಳಿಸಿದ ಮೊದಲಿಗರಾಗಿದ್ದರೂ, ಚಂದ್ರಯಾನವು ಎಚ್‍ಟುಓ ಅಣುವನ್ನು ಪತ್ತೆಹಚ್ಚುವಲ್ಲಿ ಮೊದಲಿಗರು ಎಂದು ಸಚಿವರು ಹೇಳಿದರು. \ No newline at end of file diff --git a/eesanje/url_47_229_9.txt b/eesanje/url_47_229_9.txt new file mode 100644 index 0000000000000000000000000000000000000000..005625faf1235c1af51dad260d703babef7656b8 --- /dev/null +++ b/eesanje/url_47_229_9.txt @@ -0,0 +1,7 @@ +“ಜಾಗತೀಕ ಸಂಘರ್ಷ ನಿವಾರಣೆಯಲ್ಲಿ ಮಧ್ಯವರ್ತಿಯಾಗಿ ಭಾರತ ಬೆಳೆದಿದೆ” +ನ್ಯೂಯಾರ್ಕ್, ನ.26 (ಪಿಟಿಐ) ಭಾರತದ ಆಯಕಟ್ಟಿನ ಸ್ಥಾನವು ವಿವಿಧ ಶಕ್ತಿ ಗುಂಪುಗಳೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಮತ್ತು ಸಂಕೀರ್ಣ ರಾಜತಾಂತ್ರಿಕ ನೀರಿನಲ್ಲಿ ನ್ಯಾವಿಗೇಟ್ ಮಾಡುವ ಸಾಮರ್ಥ್ಯವು ದೇಶವನ್ನು ಅಂತರರಾಷ್ಟ್ರೀಯ ಸಂಘರ್ಷಗಳಲ್ಲಿ ಸಂಭಾವ್ಯ ಮಧ್ಯವರ್ತಿಯಾಗಿ ಪರಿವರ್ತಿಸಿದೆ ಎಂದು ವಿಶ್ವಸಂಸ್ಥೆಯ ದೇಶದ ರಾಯಭಾರಿ ಹೇಳಿದ್ದಾರೆ. +ಕ್ಷಿಪ್ರ ಬದಲಾವಣೆಗಳು ಮತ್ತು ಸಂಕೀರ್ಣ ಸವಾಲುಗಳಿಂದ ಗುರುತಿಸಲ್ಪಟ್ಟಿರುವ ಯುಗದಲ್ಲಿ, ಭಾರತವು ಅಪಾರ ವೈವಿಧ್ಯತೆ ಮತ್ತು ಸಾಂಸ್ಕøತಿಕ ಶ್ರೀಮಂತಿಕೆಯ ರಾಷ್ಟ್ರವಾಗಿ ಹೊರಹೊಮ್ಮುತ್ತದೆ, ಆದರೆ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸಹಕಾರ, ಶಾಂತಿ ಮತ್ತು ಪರಸ್ಪರ ಗೌರವದ ತತ್ವಗಳನ್ನು ಒಳಗೊಂಡಿರುವ ಪ್ರಮುಖ ಆಟಗಾರನಾಗಿ ಹೊರಹೊಮ್ಮುತ್ತದೆ ಎಂದು ಭಾರತದ ವಿಶ್ವಸಂಸ್ಥೆಯ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಹೇಳಿದರು. +ಕೊಲಂಬಿಯಾ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇಂಟರ್‍ನ್ಯಾಷನಲ್ ಅಂಡ್ ಪಬ್ಲಿಕ್ ಅಫೇರ್ಸ್‍ನಲ್ಲಿ ದೀಪಕ್ ಮತ್ತು ನೀರಾ ರಾಜ್ ಸೆಂಟರ್ ಆಯೋಜಿಸಿದ್ದ ಭಾರತ: ಮುಂದಿನ ದಶಕ ಸಮ್ಮೇಳನದಲ್ಲಿ ಕಾಂಬೋಜ್ ಅವರು ಎಮರ್ಜಿಂಗ್ ಗ್ಲೋಬಲ್ ಆರ್ಡರ್ ವಿಷಯದ ಕುರಿತು ವಿಶೇಷ ಭಾಷಣ ಮಾಡಿದರು. +ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್‍ಗೆ ವೀರತರ್ಪಣ +ಭಾರತದ ಪ್ರಾಚೀನ ತತ್ತ್ವವಾದ ವಸುಧೈವ ಕುಟುಂಬಕಂ- ಜಗತ್ತು ಒಂದೇ ಕುಟುಂಬ – ವಿಶ್ವ ವ್ಯವಹಾರಗಳಲ್ಲಿ ದೇಶವನ್ನು ಮಧ್ಯವರ್ತಿ ಮತ್ತು ಸಂಧಾನಕಾರನಾಗಿ ಅನನ್ಯವಾಗಿ ಇರಿಸುತ್ತದೆ ಎಂದು ಕಾಂಬೋಜ್ ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ವಿವಿಧ ರಾಷ್ಟ್ರಗಳಾದ್ಯಂತ ಸಂವಾದ ಮತ್ತು ತಿಳುವಳಿಕೆಯನ್ನು ಬೆಳೆಸಲು ಭಾರತದ ಪೂರ್ವಭಾವಿ ವಿಧಾನವನ್ನು ಅಂತರರಾಷ್ಟ್ರೀಯ ಸಮುದಾಯವು ಸಾಕ್ಷಿಯಾಗಿದೆ ಎಂದು ಅವರು ತಮ್ಮ ಸಿದ್ಧಪಡಿಸಿದ ಹೇಳಿಕೆಗಳಲ್ಲಿ ತಿಳಿಸಿದ್ದಾರೆ. +ಇದಲ್ಲದೆ, ಭಾರತದ ಕಾರ್ಯತಂತ್ರದ ಸ್ಥಾನವು ಅದರ ಅಲಿಪ್ತ ಇತಿಹಾಸದೊಂದಿಗೆ ಸೇರಿಕೊಂಡು, ವಿವಿಧ ಶಕ್ತಿಗಳ ಗುಂಪುಗಳೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_22_1.txt b/eesanje/url_47_22_1.txt new file mode 100644 index 0000000000000000000000000000000000000000..4c61ce08409011489e873145f97fddc46e0e22ad --- /dev/null +++ b/eesanje/url_47_22_1.txt @@ -0,0 +1,13 @@ +28 ವರ್ಷಗಳ ಬಳಿಕ ಕಾಶ್ಮೀರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಭೇಟಿ + 28 +ನವದೆಹಲಿ/ಶ್ರೀನಗರ:ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. +ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. +ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು; ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ ( - ) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ () ಅತಿ ಸಮೀಪದಲ್ಲಿದೆ. +ವಿದ್ಯುತ್ ಸ್ಥಾವರದ ಉದ್ದಗಲಕ್ಕೂ ತೆರಳಿದ ಮಾಜಿ ಪ್ರಧಾನಿಗಳು, ತಾವು ಘಟಕಕ್ಕೆ ಭೇಟಿ ನೀಡಿದ್ದ ಸಂದರ್ಭವನ್ನು ಸ್ಮರಣೆ ಮಾಡಿಕೊಂಡರಲ್ಲದೆ; ಅಲ್ಲಿನ ಸಿಬ್ಬಂದಿ, ಅಧಿಕಾರಿಗಳ ಜತೆ ಅಂದಿನ ಸಂದರ್ಭವನ್ನು, ಸೇನೆಯ ಎಚ್ಚರಿಕೆಯನ್ನು ಲೆಕ್ಕಿಸದೆ ಘಟಕದ ಸುರಂಗಕ್ಕೆ ಭೇಟಿ ಕೊಟ್ಟಿದ್ದನ್ನು ನೆನಪು ಮಾಡಿಕೊಂಡರು. +ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಪ್ರಧಾನಿಗಳು; ನಾನು ಪ್ರಧಾನಿ ಸ್ಥಾನದಿಂದ ಕೆಳಗಿಳಿದ 28 ವರ್ಷಗಳ ನಂತರ ನಾನು ಕಾಶ್ಮೀರಕ್ಕೆ ಭೇಟಿ ನೀಡಿದ್ದೇನೆ. ಅಂದಿನ ಕಾಶ್ಮೀರಕ್ಕೂ ಇಂದಿನ ಕಾಶ್ಮೀರಕ್ಕೂ ಬಹಳಷ್ಟು ವ್ಯತ್ಯಾಸ ಕಾಣುತ್ತಿದೆ. ನಾನು ಪ್ರಧಾನಿ ಆಗಿದ್ದಾಗ 13 ಫೆಬ್ರವರಿ 1997ರಂದು ಈ ಘಟಕವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದೆ. ನಿರ್ಮಾಣ ಹಂತದಲ್ಲಿದ್ದ ಈ ಘಟಕಕ್ಕೆ ಎರಡು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆ. ಆ ಭೇಟಿಗಳು ನನ್ನ ಪಾಲಿಗೆ ರೋಚಕ ಅನುಭವ ಎಂದು ಹೇಳಬಹುದು. ಮತ್ತೆ ಈ ವಿದ್ಯುತ್ ಘಟಕಕ್ಕೆ ಭೇಟಿ ನೀಡಿದ್ದು ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು. +ಇದೇ ವೇಳೆ ಮಾಜಿ ಪ್ರಧಾನಿಗಳು ಈ ವಿದ್ಯುತ್ ಘಟಕದ ಉದ್ಘಾಟನಾ ಫಲಕದ ಮುಂದೆ ನಿಂತು ಬಹಳ ಸಂತೋಷದಿಂದ ಫೋಟೋ ತೆಗೆಸಿಕೊಂಡರು. ಅಂದಿನ ಕಾರ್ಯಕ್ರಮದ ಕ್ಷಣಗಳನ್ನು ಅಧಿಕಾರಿಗಳ ಜತೆ ಹಂಚಿಕೊಂಡರು. ಅಲ್ಲಿನ ಪ್ರಕೃತಿ ಸೌಂದರ್ಯಕ್ಕೆ ಮನಸೋತರು. +ರೈಲು ಪ್ರಯಾಣದ ಬಗ್ಗೆ ಸಂತಸ:ಶ್ರೀನಗರ – ಬಾರಮುಲ್ಲಾ ನಡುವಿನ ರೈಲು ಪ್ರಯಾಣದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ತಾವು ಪ್ರಧಾನಿಯಾಗಿದ್ದಾಗ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ ಸಂದರ್ಭವನ್ನು ಮೆಲುಕು ಹಾಕಿದರು. +1996, 1997ರ ಸಂದರ್ಭದಲ್ಲಿ ಕಾಶ್ಮೀರದ ಜನರು ಸಂಪರ್ಕ ಜಾಲದಿಂದ ವಂಚಿತರಾಗಿದ್ದರು. ಭಯೋತ್ಪಾದಕ ಚಟುವಟಿಕೆಗಳಿಂದ ಜರ್ಜರಿತರಾಗಿದ್ದರು. ಆ ಸಂದರ್ಭದಲ್ಲಿ ಬಾರಾಮುಲ್ಲಾ ಮತ್ತು ಶ್ರೀನಗರ ನಡುವೆ ರೇಲ್ವೆ ಮಾರ್ಗ ನಿರ್ಮಿಸುವ ಯೋಜನೆಗೆ ನಾನು ಮಂಜೂರಾತಿ ಕೊಟ್ಟೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ್ದೆ. ಇವತ್ತು ಅದೇ ರೈಲು ಮಾರ್ಗದ ರೇಲಿನಲ್ಲಿ ಪ್ರಯಾಣ ಮಾಡಿದ್ದು ನನಗೆ ಮರೆಯಲಾಗದ ಅವಿಸ್ಮರಣೀಯ ಕ್ಷಣ ಎಂದು ಅವರು ಭಾವುಕರಾದರು. +ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳನ್ನು ರೇಲ್ವೆ ಅಧಿಕಾರಿಗಳು ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ರೇಲ್ವೆ ಮಾರ್ಗದ ಬಗ್ಗೆ, ಜತೆಗೆ ಆಗುತ್ತಿರುವ ಉಪಯೋಗದ ಬಗ್ಗೆ ಮಾಜಿ ಪ್ರಧಾನಿಗಳು ಮಾಹಿತಿ ಪಡೆದುಕೊಂಡರು. ಬೆಳಗ್ಗೆ 11:30ಕ್ಕೆ ಶ್ರೀನಗರದಲ್ಲಿ ರೈಲು ಹಿಡಿದ ಮಾಜಿ ಪ್ರಧಾನಿಗಳು, 12:30 ಗಂಟೆಗೆ ಬಾರಮುಲ್ಲಾ ತಲುಪಿದರು. +ತಾವು ಪ್ರಧಾನಿಯಾಗಿದ್ದಾಗ ಕಾಶ್ಮೀರದ ರೈತರಿಗಾಗಿ ಒಟ್ಟು ₹200 ಕೋಟಿ ಸಾಲ ಮನ್ನಾ ಮಾಡಿದೆ. ಕಣಿವೆ ರಾಜ್ಯದ ಪ್ರತಿ ರೈತರ ₹50,000 ಸಾಲ ಮನ್ನಾ ಮಾಡಲಾಯಿತು. ಅಂದು ಪ್ರಧಾನಿಯಾಗಿ ರೈತರನ್ನು ಭೇಟಿಯಾಗಿ ಅವರ ಸಂಕಷ್ಟವನ್ನು ಆಲಿಸಿದ್ದೆ. ಅವರಿಗೆ ನೆರವಾಗುವ ಉದ್ದೇಶದಿಂದ ಸಾಲ ಮನ್ನಾ ಮಾಡಲಾಯಿತು ಎಂದು ಮಾಜಿ ಪ್ರಧಾನಿಗಳು ಸುದ್ದಿಗಾರರ ಜತೆ ಮಾತಾಡುತ್ತಾ ಹೇಳಿದರು. +ನಾಳೆ ದಾಲ್ ಸರೋವರ, ಶಂಕರರ ದೇಗುಲಕ್ಕೆ ಭೇಟಿ :ಶುಕ್ರವಾರವೂ ಮಾಜಿ ಪ್ರಧಾನಿಗಳು ಶ್ರೀನಗರದ ದಾಲ್ ಸರೋವರ ಹಾಗೂ ಶ್ರೀ ಶಂಕರಾಚಾರ್ಯ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. \ No newline at end of file diff --git a/eesanje/url_47_22_10.txt b/eesanje/url_47_22_10.txt new file mode 100644 index 0000000000000000000000000000000000000000..bf3cac42639e0b5769794f0ac87c9a383bbe7562 --- /dev/null +++ b/eesanje/url_47_22_10.txt @@ -0,0 +1,9 @@ +ಕಳ್ಳತನದ ಆರೋಪಿ ಗುದದ್ವಾರದಲ್ಲಿ ಖಾರದಪುಡಿ ತುಂಬಿ ವಿಕೃತಿ ಮೆರೆದಿದ್ದ ಮೂವರ ಬಂಧನ +: 3 +ಅರಾರಿಯಾ, ಅ 28 (ಪಿಟಿಐ)ಕಳ್ಳತನದ ಶಂಕೆಯ ಮೇಲೆ ಸಿಕ್ಕಿಬಿದ್ದ ನಂತರ ಅರಾರಿಯಾ ಜಿಲ್ಲೆಯಲ್ಲಿ ಜನರ ಗುಂಪೊಂದು ವ್‌ಯಕ್ತಿಯೊಬ್ಬನಿಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಮೂವರನ್ನು ಬಂಧಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ಬುಧವಾರ ತಿಳಿಸಿದೆ. +ಘಟನೆಯ ವಿಡಿಯೋ, ಜನರ ಗುಂಪೊಂದು ವ್‌ಯಕ್ತಿಯ ಪ್ಯಾಂಟ್‌ ಅನ್ನು ಕೆಳಕ್ಕೆ ಎಳೆದು, ನಿರ್ದಯವಾಗಿ ಹಲ್ಲೆ ಮಾಡಿದ ಮತ್ತು ಅವನ ಖಾಸಗಿ ಅಂಗಗಳಿಗೆ ಮೆಣಸಿನ ಪುಡಿಯನ್ನು ಸುರಿದು, ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. +ಬುಧವಾರ ನೀಡಿದ ಹೇಳಿಕೆಯಲ್ಲಿ, ಅರಾರಿಯಾ ಜಿಲ್ಲಾ ಪೊಲೀಸರು ಈ ಕೃತ್ಯವನ್ನು ಅಮಾನವೀಯ ಎಂದು ಬಣ್ಣಿಸಿದ್ದಾರೆ ಮತ್ತು ಘಟನೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಿದ್ದಾರೆ. ಮಂಗಳವಾರ ಪೊಲೀಸರು ಅರಾರಿಯಾ ಜಿಲ್ಲೆಯ ಇಬ್ಬರು ವ್‌ಯಕ್ತಿಗಳನ್ನು ಬಂಧಿಸಿದ್ದರು. ಇನ್ನೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. +ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರನ್ನು ಪೊಲೀಸರು ಇದುವರೆಗೆ ಬಂಧಿಸಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಮಾನವನ ಆತ್ಮಗೌರವಕ್ಕೆ ಧಕ್ಕೆಯಾಗುವಂತಹ ಅಮಾನವೀಯ ಕೃತ್ಯಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಎಂದು ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. +ಇಂತಹ ವಿಡಿಯೋಗಳ ಬಗ್ಗೆ ಜನರಿಂದ ಕೂಡಲೇ ಜಿಲ್ಲಾ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ವೀಡಿಯೊಗಳನ್ನು ಮತ್ತಷ್ಟು ಹಂಚಿಕೊಳ್ಳುವುದು ಅಪರಾಧ ಮತ್ತು ಅಂತಹ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲು ತೊಡಗುವವರ ವಿರುದ್ಧ ಪೊಲೀಸರು ಕ್ರಮವನ್ನು ಪ್ರಾರಂಭಿಸುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. +ವೀಡಿಯೊದಲ್ಲಿ ಬಲಿಪಶು ತನ್ನ ಕೈಗಳನ್ನು ಕಟ್ಟಿ ಪ್ಯಾಂಟ್‌ ಕೆಳಗೆ ಹಾಕಿರುವುದನ್ನು ತೋರಿಸುತ್ತದೆ. ಆತನನ್ನು ಒತ್ತೆಯಾಳಾಗಿ ತೆಗೆದುಕೊಂಡು ಜನರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದೆ. ವ್‌ಯಕ್ತಿಯೊಬ್ಬ ತನ್ನ ಖಾಸಗಿ ಅಂಗಗಳ ಮೇಲೆ ಮೆಣಸಿನ ಪುಡಿಯನ್ನು ಸುರಿಯುತ್ತಾನೆ …, ಎಂದು ಸ್ಥಳೀಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಅನಾಮಧೇಯತೆ. ಜಿಲ್ಲಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. \ No newline at end of file diff --git a/eesanje/url_47_22_11.txt b/eesanje/url_47_22_11.txt new file mode 100644 index 0000000000000000000000000000000000000000..b4f1a03bcd3f57c9024468378e41633f24b4d360 --- /dev/null +++ b/eesanje/url_47_22_11.txt @@ -0,0 +1,9 @@ +ಪಶ್ಚಿಮ ಬಂಗಾಳ ಬಂದ್‌, ಜನಜೀವನ ಅಸ್ತವ್ಯಸ್ತ +’ 12- +ಕೋಲ್ಕತ್ತಾ, ಆ.28 (ಪಿಟಿಐ)ರಾಜ್ಯ ಸಚಿವಾಲಯಕ್ಕೆ ನಡೆದ ಮೆರವಣಿಗೆಯಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರ ಕ್ರಮವನ್ನು ವಿರೋಧಿಸಿ ಬಿಜೆಪಿ ಕರೆದಿರುವ 12 ಗಂಟೆಗಳ ಬಂದ್‌ನಿಂದಾಗಿ ಬುಧವಾರ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ದೈನಂದಿನ ಜೀವನವು ಸ್ವಲ್ಪಮಟ್ಟಿಗೆ ಪರಿಣಾಮ ಬೀರಿತು. +ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ, ವಾರದ ದಿನದ ಬೆಳಿಗ್ಗೆ ರಸ್ತೆಗಳಲ್ಲಿನ ಸಾಮಾನ್ಯ ಕಾರ್ಯನಿರತತೆ ಕಡಿಮೆ ಸಂಖ್ಯೆಯ ಬಸ್‌‍ಗಳು, ಆಟೋ-ರಿಕ್ಷಾಗಳು ಮತ್ತು ಟ್ಯಾಕ್ಸಿಗಳು ಸಂಚರಿಸುತ್ತಿವೆ. ಮಾರುಕಟ್ಟೆಗಳು ಮತ್ತು ಅಂಗಡಿಗಳು ಎಂದಿನಂತೆ ತೆರೆದಿದ್ದರೂ ಸಹ, ಖಾಸಗಿ ವಾಹನಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ. +ಶಾಲೆಗಳು ಮತ್ತು ಕಾಲೇಜುಗಳು ತೆರೆದಿದ್ದವು, ಆದರೆ ಹೆಚ್ಚಿನ ಖಾಸಗಿ ಕಚೇರಿಗಳಲ್ಲಿ ಹಾಜರಾತಿ ಕಡಿಮೆಯಿತ್ತು, ಉದ್ಯೋಗಿಗಳನ್ನು ಮನೆಯಿಂದಲೇ ಕೆಲಸ ಮಾಡಲು ಕೇಳಲಾಯಿತು. ಭಬಾನಿಪುರದಲ್ಲಿ ಬಿಜೆಪಿ ಶಾಸಕ ಅಗ್ನಿಮಿತ್ರ ಪಾಲ್‌ ಅವರು ತಮ್ಮ ವಾಹನಗಳನ್ನು ಹೊರಗೆ ತೆಗೆದುಕೊಳ್ಳದಂತೆ ಕೈಗಳನ್ನು ಕಟ್ಟಿ ಜನರನ್ನು ಒತ್ತಾಯಿಸಿದರು. +ಬಿಜೆಪಿ ಕಾರ್ಯಕರ್ತರು ಉತ್ತರ 24 ಪರಗಣದ ಬೊಂಗಾವ್‌ ನಿಲ್ದಾಣ, ದಕ್ಷಿಣ 24 ಪರಗಣಗಳ ಗೋಚರಣ್‌ ನಿಲ್ದಾಣ ಮತ್ತು ಮುರ್ಷಿದಾಬಾದ್‌ ನಿಲ್ದಾಣದಲ್ಲಿ ಬಂದ್‌ಗೆ ಬೆಂಬಲ ಸೂಚಿಸಿದರು. ಬಿಜೆಪಿ ಬೆಂಬಲಿಗರು ಮತ್ತು ಟಿಎಂಸಿ ಕಾರ್ಯಕರ್ತರು ಮುಖಾಮುಖಿಯಾದ ಕಾರಣ ಉತ್ತರ 24 ಪರಗಣದ ಬ್ಯಾರಕ್‌ರ್ಪೋ ನಿಲ್ದಾಣದಲ್ಲಿ ಉದ್ವಿಗ್ನತೆ ಉಂಟಾಗಿತ್ತು. +ಹೂಗ್ಲಿ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಸ್ಥಳೀಯ ರೈಲಿಗೆ ಅಡ್ಡಿಪಡಿಸಿದರು. ಪುರ್ಬಾ ಮೇದಿನಿಪುರ್‌ ಜಿಲ್ಲೆಯ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಧರಣಿ ನಡೆಸಿ ಸಂಚಾರಕ್ಕೆ ಅಡ್ಡಿಪಡಿಸಿದರು. ಮಾಲ್ಡಾದಲ್ಲಿ, ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆಗೆ ಜಗಳವಾಡಿದರು. +ಕಾದಾಡುತ್ತಿದ್ದ ಗುಂಪುಗಳನ್ನು ಚದುರಿಸಲು ಪೊಲೀಸರು ಕ್ರಮಕೈಗೊಂಡರು. ಬಂಕುರಾ ಪಟ್ಟಣದ ಬಸ್‌‍ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲಿಪುರ್‌ದವಾರ್‌ನಲ್ಲಿ ಬಿಜೆಪಿ ಕಾರ್ಯಕರ್ತರು ದಫಾ ಏಕ್‌ ದಾಬಿ ಏಕ್‌‍, ಮುಖ್ಯಮಂತ್ರಿರ್‌ ಪದತ್ಯಾಗ (ಒಂದೇ ಬೇಡಿಕೆ, ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು) ಎಂಬ ಘೋಷಣೆಗಳನ್ನು ಕೂಗುತ್ತಾ ಆರ್ಟಿರಿಯಲ್‌ ರಸ್ತೆ ತಡೆಗೆ ಯತ್ನಿಸಿದಾಗ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. +ಆರ್‌ಜಿಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಒತ್ತಾಯಿಸಿ ಮಂಗಳವಾರ ನಡೆದ ನಬಣ್ಣ ಅಭಿಜನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರ ಮೇಲಿನ ಪೊಲೀಸ್‌‍ ಕ್ರಮವನ್ನು ವಿರೋಧಿಸಿ ಬಿಜೆಪಿಯು ಬೆಳಗ್ಗೆ 6 ಗಂಟೆಗೆ ಆರಂಭವಾದ ಬಾಂಗ್ಲಾ ಬಂದ್‌‍ಗೆ ಕರೆ ನೀಡಿತ್ತು. ಕಾರ್‌ ಆಸ್ಪತ್ರೆ. ಹೊಸದಾಗಿ ರಚನೆಯಾದ ವಿದ್ಯಾರ್ಥಿಗಳ ಗುಂಪು ಛತ್ರ ಸಮಾಜದಿಂದ ಸೆಕ್ರೆಟರಿಯೇಟ್‌ಗೆ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. \ No newline at end of file diff --git a/eesanje/url_47_22_12.txt b/eesanje/url_47_22_12.txt new file mode 100644 index 0000000000000000000000000000000000000000..1ff6c441d5e4e097152f0d44f461976f15d78f4c --- /dev/null +++ b/eesanje/url_47_22_12.txt @@ -0,0 +1,8 @@ +ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಸಾರಾಂ ಆಸ್ಪತ್ರೆಗೆ ದಾಖಲು + - +ಮುಂಬೈ, ಆ.28-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೋಧ್‌ಪುರ ಸೆಂಟ್ರಲ್‌ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂನನ್ನು ಬಾಪು ಹೃದಯ ಸಂಬಂಧಿ ಕಾಯಿಲೆಯ ಚಿಕಿತ್ಸೆಗಾಗಿ ಮಹಾರಾಷ್ಟ್ರದ ರಾಯಗಢದ ಖೋಪೋಲಿಯಲ್ಲಿರುವ ವೈದ್ಯಕೀಯ ಕೇಂದ್ರದಲ್ಲಿ ದಾಖಲಿಸಲಾಗಿದೆ. +ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಖೋಪೋಲಿಯಲ್ಲಿರುವ ಆಯುರ್ವೇದ ಆಸ್ಪತ್ರೆಯ ಮಲ್ಟಿಡಿಸಿಪ್ಲಿನರಿ ಕಾರ್ಡಿಯಾಕ್‌ ಕೇರ್‌ ಕ್ಲಿನಿಕ್‌ಗೆ ಸಂಪೂರ್ಣ ಪೊಲೀಸ್‌‍ ರಕ್ಷಣೆಯೊಂದಿಗೆ ಕರೆತರಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಅವರು ಮುಂದಿನ ಏಳು ದಿನಗಳ ಕಾಲ ವೈದ್ಯಕೀಯ ಸೌಲಭ್ಯದಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಹೇಳಿದ್ದಾರೆ.ಆ.13ರಂದು ಮಹಾರಾಷ್ಟ್ರದ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ರಾಜಸ್ಥಾನ ಹೈಕೋರ್ಟ್‌ ಅನುಮತಿ ನೀಡಿತ್ತು. +ಅದರಂತೆ ಜೋಧ್‌ಪುರ ಪೊಲೀಸರ ತಂಡ ಮತ್ತು ಇಬ್ಬರು ಪರಿಚಾರಕರೊಂದಿಗೆ ವಿಮಾನದ ಮೂಲಕ ಮುಂಬೈಗೆ ಕರೆತರಲಾಯಿತು. ಇಂದು ಅಸಾರಾಂನನ್ನು ಖೋಪೋಲಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಗಢ ಪೊಲೀಸ್‌‍ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. +ಆರೋಗ್ಯದ ಆಧಾರದ ಮೇಲೆ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಅಸಾರಾಂ ಸಲ್ಲಿಸಿದ ಮನವಿಯನ್ನು ಈ ಹಿಂದೆ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು.201 ರಲ್ಲಿ ತನ್ನ ಆಶ್ರಮದಲ್ಲಿ ಹದಿಹರೆಯದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಇಂದೋರ್‌ನಲ್ಲಿ ಅಸರಾಮ್‌ನನ್ನು ಬಂಧಿಸಲಾಗಿತ್ತು. 2018ರಲ್ಲಿ ವಿಶೇಷ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತು. +ಗುಜರಾತ್‌ ನ್ಯಾಯಾಲಯವು ಜನವರಿ 2023ರಲ್ಲಿ, ಮಹಿಳಾ ಶಿಷ್ಯೆಯೊಬ್ಬರನ್ನು ಒಳಗೊಂಡ ಒಂದು ದಶಕದ-ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.ಸೂರತ್‌ ಮೂಲದ ಸಂತ್ರಸ್ತೆ 2013ರಲ್ಲಿ ತನ್ನ ಆಶ್ರಮದಲ್ಲಿ ಪದೇ ಪದೇ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಳು. \ No newline at end of file diff --git a/eesanje/url_47_22_2.txt b/eesanje/url_47_22_2.txt new file mode 100644 index 0000000000000000000000000000000000000000..00e32dc345ed982917132de6c699a288c4850644 --- /dev/null +++ b/eesanje/url_47_22_2.txt @@ -0,0 +1,7 @@ +ಜನಸಂಖ್ಯೆ ಬೆಳವಣಿಗೆ ದರವನ್ನು ಮೀರಿಸಿದ ವಿದ್ಯಾರ್ಥಿಗಳ ಆತಹತ್ಯೆ ಪ್ರಕರಣಗಳು +' +ನವದೆಹಲಿ,ಆ.29-ದೇಶದಲ್ಲಿ ವಿದ್ಯಾರ್ಥಿಗಳ ಆತಹತ್ಯೆ ಪ್ರಕರಣಗಳು ಜನಸಂಖ್ಯೆ ಬೆಳವಣಿಗೆ ದರವನ್ನು ಮೀರಿಸುತ್ತಿದೆ ಎಂದು ಹೊಸ ವರದಿಯೊಂದು ಬಹಿರಂಗಗೊಳಿಸಿದೆ. +ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ನೀಡಿರುವ ವರದಿಯಲ್ಲಿ ಒಟ್ಟಾರೆ ಆತಹತ್ಯೆ ಸಂಖ್ಯೆಗಳು ವಾರ್ಷಿಕವಾಗಿ ಶೇ 2 ರಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿಗಳ ಆತಹತ್ಯೆ ಪ್ರಕರಣಗಳು ಶೇ.4ರಷ್ಟು ಹೆಚ್ಚಾಗಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಎರಡು ಪಟ್ಟು ಹೆಚ್ಚಾಗಿರುವುದು ಕಂಡು ಬಂದಿದೆ. +2022ಕ್ಕೆ ಹೋಲಿಸಿದರೆ ಒಟ್ಟು ವಿದ್ಯಾರ್ಥಿಗಳ ಆತಹತ್ಯೆಯಲ್ಲಿ 53 ಪ್ರತಿಶತ ಪುರುಷ ವಿದ್ಯಾರ್ಥಿಗಳಿದ್ದರು, 2021 ಮತ್ತು 2022 ರ ನಡುವೆ ವಿದ್ಯಾರ್ಥಿಗಳ ಆತಹತ್ಯೆಯಲ್ಲಿ ಶೇ. 6 ರಷ್ಟು ಇಳಿಕೆ ಕಂಡುಬಂದಿದೆ, ಆದರೆ ವಿದ್ಯಾರ್ಥಿನಿಯರ ಆತಹತ್ಯೆಗಳು ಶೇ.7 ರಷ್ಟು ಹೆಚ್ಚಾಗಿದೆ. +ಕಳೆದ ದಶಕದಲ್ಲಿ 0-24 ವರ್ಷ ವಯಸ್ಸಿನ ಮಕ್ಕಳ ಜನಸಂಖ್ಯೆಯು 582 ಮಿಲಿಯನ್ನಿಂದ 581 ಮಿಲಿಯನ್ಗೆ ಕುಸಿದಿದ್ದರೆ, ವಿದ್ಯಾರ್ಥಿಗಳ ಆತಹತ್ಯೆಗಳ ಸಂಖ್ಯೆ 6,654 ರಿಂದ 13,044 ಕ್ಕೆ ಏರಿದೆ. ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶಗಳು ಅತಿ ಹೆಚ್ಚು ವಿದ್ಯಾರ್ಥಿಗಳು ಆತಹತ್ಯೆ ಮಾಡಿಕೊಂಡಿದ್ದಾರೆ. ರಾಜಸ್ಥಾನವು 10 ನೇ ಸ್ಥಾನದಲ್ಲಿದೆ. +ಭಾರತದಲ್ಲಿ 15 ಮತ್ತು 24 ವರ್ಷದೊಳಗಿನ ಏಳು ಯುವಕರಲ್ಲಿ ಒಬ್ಬರು ಖಿನ್ನತೆಯ ಲಕ್ಷಣಗಳು ಮತ್ತು ನಿರಾಸಕ್ತಿ ಸೇರಿದಂತೆ ಮಾನಸಿಕ ಅಸಮತೋಲನ ಅನುಭವಿಸುತ್ತಿದ್ದಾರೆ. ಭಾರತದ ಎಲ್ಲಾ ರಾಜ್ಯಗಳಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಉತ್ತರ ಪ್ರದೇಶವು ಈಗ ಅತ್ಯಧಿಕ ವಿದ್ಯಾರ್ಥಿಗಳ ಆತಹತ್ಯೆ ದರಗಳನ್ನು ಹೊಂದಿರುವ ಐದು ರಾಜ್ಯಗಳಲ್ಲಿ ಒಂದಾಗಿದೆ. ತಮಿಳುನಾಡು ಮತ್ತು ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಆತಹತ್ಯೆ ಪ್ರಮಾಣ ಹೆಚ್ಚಾಗಿದೆ. \ No newline at end of file diff --git a/eesanje/url_47_22_3.txt b/eesanje/url_47_22_3.txt new file mode 100644 index 0000000000000000000000000000000000000000..89d39ccc9252d34e472c2982c71d92a954f663c4 --- /dev/null +++ b/eesanje/url_47_22_3.txt @@ -0,0 +1,9 @@ +ದೀದಿ ಬೆಂಕಿ ಹಚ್ಚುವ ಹೇಳಿಕೆಗೆ ಅಸ್ಸಾಂ ಸಿಎಂ ಬಿಸ್ವಾ ಶರ್ಮಾ ಕಿಡಿ + +ದಿಬ್ರುಗಢ,ಆ.29-ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಬಂಗಾಳ ಸುಟ್ಟುಹೋದರೆ, ಅಸ್ಸಾಂ ಆಶಾಂತಗೊಳ್ಳಲಿದೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ್ದು, ದೀದಿ, ಅಸ್ಸಾಂಗೆ ಬೆದರಿಕೆ ಹಾಕಲು ನಿಮಗೆ ಎಷ್ಟು ಧೈರ್ಯ? ಎಂದು ಪ್ರಶ್ನಿಸಿದ್ದಾರೆ. +ಎಕ್‌್ಸನಲ್ಲಿನ ಪೋಸ್ಟ್ನಲ್ಲಿ, ಅಸ್ಸಾಂ ಮುಖ್ಯಮಂತ್ರಿ, ದೀದಿ, ನೀವು ಅಸ್ಸಾಂಗೆ ಬೆದರಿಕೆ ಹಾಕಲು ಎಷ್ಟು ಧೈರ್ಯ? ನಮಗೆ ಕೆಂಪು ಕಣ್ಣುಗಳನ್ನು ತೋರಿಸಬೇಡಿ. ನಿಮ ವೈಫಲ್ಯದ ರಾಜಕೀಯದಿಂದ ಭಾರತವನ್ನು ಸುಡಲು ಸಹ ಪ್ರಯತ್ನಿಸಬೇಡಿ. ನೀವು ಮಾತನಾಡಲು ಇದು ಸರಿಹೊಂದುವುದಿಲ್ಲ ಎಂದು ಕಿಡಿ ಕಾರಿದ್ದಾರೆ. +ಕೋಲ್ಕತ್ತಾದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೋಲ್ಕತ್ತಾ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ ಪಕ್ಷವನ್ನು ಬಳಸಿಕೊಂಡು ಬಂಗಾಳದಲ್ಲಿ ಬೆಂಕಿಯನ್ನು ಉಂಟುಮಾಡುತ್ತಿದ್ದಾರೆ. +ಕೆಲವರು ಇದು ಬಾಂಗ್ಲಾದೇಶ ಎಂದು ಭಾವಿಸುತ್ತಾರೆ. ನಾನು ಬಾಂಗ್ಲಾದೇಶವನ್ನು ಪ್ರೀತಿಸುತ್ತೇನೆ; ಅವರು ನಮಂತೆ ಮಾತನಾಡುತ್ತಾರೆ ಮತ್ತು ನಮ ಸಂಸ್ಕೃತಿಯನ್ನು ಹಂಚಿಕೊಳ್ಳುತ್ತಾರೆ. ಆದರೆ ನೆನಪಿಡಿ, ಬಾಂಗ್ಲಾದೇಶ ಪ್ರತ್ಯೇಕ ದೇಶ, ಮತ್ತು ಭಾರತ ಪ್ರತ್ಯೇಕ ದೇಶ. ಮೋದಿ ಬಾಬು ತಮ ಪಕ್ಷವನ್ನು ಇಲ್ಲಿ ಬೆಂಕಿ ಹಚ್ಚಲು ಬಳಸುತ್ತಿದ್ದಾರೆ. +ಬಂಗಾಳ, ಅಸ್ಸಾಂ, ಈಶಾನ್ಯ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ದೆಹಲಿಯನ್ನು ಸುಟ್ಟುಹಾಕುತ್ತೇವೆ, ನಾವು ನಿಮ ಕುರ್ಚಿಯನ್ನು ಉರುಳಿಸುತ್ತೇವೆ, ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು. +ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆವರಣದಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ ಮತ್ತು ಅಂದಿನಿಂದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಹಲವಾರು ಪ್ರತಿಭಟನೆಗಳನ್ನು ನಡೆಸಲಾಯಿತು. ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದುರಂತವಾಗಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಗೆ ನ್ಯಾಯಕ್ಕಾಗಿ ಆಗ್ರಹಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. +ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡಿರುವುದರಿಂದ ದೀದಿ ಮೋದಿ ವಿರುದ್ಧ ಮಾತನಾಡಿರುವುದಕ್ಕೆ ಹಾಗೂ ಅಸ್ಸಾಂ ಬಗ್ಗೆ ನೀಡಿರುವ ಹೇಳಿಕೆಯನ್ನು ಶರ್ಮಾ ಖಂಡಿಸಿದ್ದಾರೆ ಮಾತ್ರವಲ್ಲ ಭವಿಷ್ಯದಲ್ಲಿ ಇಂತಹ ಹೇಳಿಕೆ ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. \ No newline at end of file diff --git a/eesanje/url_47_22_4.txt b/eesanje/url_47_22_4.txt new file mode 100644 index 0000000000000000000000000000000000000000..de644b721bfe4a9149fe7b9f2d512fc482e1e115 --- /dev/null +++ b/eesanje/url_47_22_4.txt @@ -0,0 +1,12 @@ +ಮಲಯಾಳಂ ನಟ ಕಮ್ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು + - +ಕೊಚ್ಚಿ, ಆ.29 (ಪಿಟಿಐ)ವರ್ಷಗಳ ಹಿಂದೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ನಟಿಯ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂನ ಖ್ಯಾತ ನಟ ಮತ್ತು ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕ ಎಂ ಮುಖೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. +ರಾತ್ರಿ ಕೊಚ್ಚಿ ನಗರದ ಮರಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಹೊಸ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಅಪರಾಧ ನಡೆದಿರುವುದರಿಂದ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. +ನ್ಯಾಯಮೂರ್ತಿ ಕೆ ಹೇಮಾ ಸಮಿತಿಯ ವರದಿಯಲ್ಲಿ ಬಹಿರಂಗವಾದ ಹಿನ್ನೆಲೆಯಲ್ಲಿ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ನಂತರ ಹೈ ಪೊಫೈಲ್ ಮಲಯಾಳಂ ಚಿತ್ರರಂಗದ ವ್ಯಕ್ತಿಯ ವಿರುದ್ಧ ಇದು ಮೂರನೇ ಎಫ್ಐಆರ್ ಆಗಿದೆ. +ಎಂಟು ವರ್ಷಗಳ ಹಿಂದೆ ಹೋಟೆಲ್ವೊಂದರಲ್ಲಿ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಸಿದ್ಧಿಕ್ ವಿರುದ್ಧ ತಿರುವನಂತಪುರಂ ಮ್ಯೂಸಿಯಂ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದರು. +2009 ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಹಿಳಾ ನಟರೊಬ್ಬರು ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಮೊದಲ ಪ್ರಕರಣವು ನಿರ್ದೇಶಕ ರಂಜಿತ್ ವಿರುದ್ಧ ದಾಖಲಾಗಿತ್ತು. +ಪಲೇರಿ ಮಾಣಿಕ್ಯಂ ಚಿತ್ರದಲ್ಲಿ ನಟಿಸಲು ಆಹ್ವಾನ ನೀಡಿದ ನಂತರ ನಿರ್ದೇಶಕರು ತನ್ನನ್ನು ಲೈಂಗಿಕ ಉದ್ದೇಶದಿಂದ ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪದ ನಂತರ, ರಂಜಿತ್ ಅವರು ಕೇರಳ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತಮ ವಿರುದ್ಧದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ) ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೂ ಸಿದ್ಧಿಕ್ ರಾಜೀನಾಮೆ ನೀಡಿದ್ದರು. +2017 ರ ನಟಿಯ ಮೇಲಿನ ಹಲ್ಲೆ ಪ್ರಕರಣದ ನಂತರ ಕೇರಳ ಸರ್ಕಾರವು ನ್ಯಾಯಮೂರ್ತಿ ಹೇಮಾ ಸಮಿತಿಯನ್ನು ರಚಿಸಿತು ಮತ್ತು ಅದರ ವರದಿಯು ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಕಿರುಕುಳ ಮತ್ತು ಶೋಷಣೆಯ ನಿದರ್ಶನಗಳನ್ನು ಬಹಿರಂಗಪಡಿಸಿತು. +ಹಲವಾರು ನಟರು ಮತ್ತು ನಿರ್ದೇಶಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಶೋಷಣೆಯ ಆರೋಪಗಳ ನಡುವೆ, ರಾಜ್ಯ ಸರ್ಕಾರ ಆ.25 ರಂದು ಅವರ ತನಿಖೆಗಾಗಿ ಏಳು ಸದಸ್ಯರ ವಿಶೇಷ ತನಿಖಾ ತಂಡವನ್ನು ಸ್ಥಾಪಿಸುವುದಾಗಿ ಘೋಷಿಸಿತು. +ನಂತರ ಹೆಚ್ಚಿನ ದೂರುಗಳು ಬಂದವು. ಮುಖೇಶ್ ವಿರುದ್ಧ ದೂರು ದಾಖಲಾದರೂ ಅವರು ನಮ ಪಕ್ಷದ ಶಾಸಕರಾಗಿ ಮುಂದುವರೆಯಲಿದ್ಧಾರೆ ಎಂದು ಆಡಳಿತಾರೂಢ ಸಿಪಿಐ (ಎಂ) ಪಕ್ಷ ತಿಳಿಸಿದೆ. \ No newline at end of file diff --git a/eesanje/url_47_22_5.txt b/eesanje/url_47_22_5.txt new file mode 100644 index 0000000000000000000000000000000000000000..eb841081c9d2d356608b44ede21d248c0b9f5b41 --- /dev/null +++ b/eesanje/url_47_22_5.txt @@ -0,0 +1,6 @@ +ಕ್ರೀಡೆಯ ಪ್ರೋತ್ಸಾಹಕ್ಕೆ ಸರ್ಕಾರ ಬದ್ಧ : ಪ್ರಧಾನಿ ಮೋದಿ + : +ನವದೆಹಲಿ, ಅ 29 (ಪಿಟಿಐ)ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರಿಗೆ ಗೌರವ ಸಲ್ಲಿಸಿದ್ದಾರೆ. +ಮಾತ್ರವಲ್ಲ ಕ್ರೀಡೆಗಳನ್ನು ಬೆಂಬಲಿಸಲು ಮತ್ತು ಹೆಚ್ಚಿನ ಯುವಕರು ಆಟವಾಡಲು ಮತ್ತು ಮಿಂಚುವಂತೆ ಮಾಡಲು ತಮ ಸರ್ಕಾರ ಬದ್ಧವಾಗಿದೆ ಎಂದು ಅವರು ಎಖ್ಸ್ ಮಾಡಿದ್ದಾರೆ. +ರಾಷ್ಟ್ರೀಯ ಕ್ರೀಡಾ ದಿನದ ಶುಭಾಶಯಗಳು. ಇಂದು ನಾವು ಮೇಜರ್ ಧ್ಯಾನ್ ಚಂದ್ ಜಿ ಅವರಿಗೆ ಗೌರವ ಸಲ್ಲಿಸುತ್ತೇವೆ. ಕ್ರೀಡೆಯ ಬಗ್ಗೆ ಆಸಕ್ತಿ ಹೊಂದಿರುವ ಮತ್ತು ಭಾರತಕ್ಕಾಗಿ ಆಡಿದ ಎಲ್ಲರನ್ನು ಅಭಿನಂದಿಸಲು ಇದು ಒಂದು ಸಂದರ್ಭವಾಗಿದೆ ಎಂದು ಮೋದಿ ಎಕ್ಸ್ ನಲ್ಲಿ ಹೇಳಿದ್ದಾರೆ. +ನಮ ಸರ್ಕಾರವು ಕ್ರೀಡೆಗಳನ್ನು ಬೆಂಬಲಿಸಲು ಬದ್ಧವಾಗಿದೆ ಮತ್ತು ಹೆಚ್ಚಿನ ಯುವಕರು ಆಟವಾಡಲು ಮತ್ತು ಮಿಂಚಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು ಪ್ರಧಾನಿ ತಿಳಿಸಿದರು.ಮೇಜರ್ ಚಂದ್ ಅವರ ಜನದಿನದಂದು ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತದೆ. \ No newline at end of file diff --git a/eesanje/url_47_22_6.txt b/eesanje/url_47_22_6.txt new file mode 100644 index 0000000000000000000000000000000000000000..d1aacce036c7d4b6ec00b7ba21290cfa695c1174 --- /dev/null +++ b/eesanje/url_47_22_6.txt @@ -0,0 +1,7 @@ +ಗಡಿಯಲ್ಲಿ ಒಳನುಸುಳಲೆತ್ನಿಸುತ್ತಿದ್ದ ಮೂವರು ಉಗ್ರರ ಹತ್ಯೆ +3 , +ಶ್ರೀನಗರ, ಆ.29 (ಪಿಟಿಐ)ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಎರಡು ಪ್ರತ್ಯೇಕ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ. +ಗುಪ್ತಚರ ಮಾಹಿತಿಯ ನಂತರ ಮಚ್ಚಲ್‌ ಮತ್ತು ತಂಗ್‌ಧಾರ್‌ ಪ್ರದೇಶಗಳಲ್ಲಿ ನಿನ್ನೆಯಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.ಎಕ್ಸ್ ನಲ್ಲಿನ ಪೋಸ್ಟ್‌ನಲ್ಲಿ, ಸೇನೆಯ ಶ್ರೀನಗರ ಮೂಲದ ಚಿನಾರ್‌ ಕಾರ್ಪ್ಸ್ ಹೀಗೆ ಹೇಳಿದೆ, ಒಳನುಸುಳುವಿಕೆ ಪ್ರಯತ್ನಗಳಿಗೆ ಸಂಬಂಧಿಸಿದಂತೆ ಗುಪ್ತಚರ ಇನ್‌ಪುಟ್‌ಗಳ ಆಧಾರದ ಮೇಲೆ, ಮಧ್ಯರಾತ್ರಿಯಲ್ಲಿ ಭಾರತೀಯ ಸೇನೆ ಮತ್ತು ಜಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. +ಇಂದು ಮುಂಜಾನೆ ಸಾಮಾನ್ಯ ಪ್ರದೇಶದಲ್ಲಿ ಮಚ್ಚಲ್‌‍, ಕುಪ್ವಾರ ಪ್ರದೇಶಗಳ ಕೆಟ್ಟ ವಾತಾವರಣದಲ್ಲಿ ಅನುಮಾನಾಸ್ಪದ ಚಲನೆಯನ್ನು ಗಮನಿಸಲಾಯಿತು ಮತ್ತು ಪಡೆಗಳಿಂದ ಪರಿಣಾಮಕಾರಿ ಗುಂಡಿನ ದಾಳಿಯಲ್ಲಿ ತೊಡಗಿದೆ ಈ ಘಟನೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. +ತಂಗ್ಧಾರ್‌ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ನಂಬಲಾಗಿದೆ ಎಂದು ಸೇನೆ ಹೇಳಿದೆ. +ಒಳನುಸುಳುವಿಕೆ ಬಿಡ್‌ಗಳ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮು ಮತ್ತು ಕಾಶೀರ ಪೊಲೀಸರು ಜಂಟಿ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯನ್ನು ಮಧ್ಯರಾತ್ರಿ ಸಾಮಾನ್ಯ ಪ್ರದೇಶದಲ್ಲಿ ತಂಗ್‌ಧರ್‌, ಕುಪ್ವಾರದಲ್ಲಿ ಪ್ರಾರಂಭಿಸಲಾಯಿತು ಎಂದು ಎಕ್ಸ್ ನಲ್ಲಿ ತಿಳಿಸಲಾಗಿದೆ. ಕಾರ್ಯಚರಣೆ ಮುಂದುವರೆದಿದ್ದು ಇತಹ ಕೆಲ ಉಗ್ರರು ಗುಂಡಿನ ದಾಳಿಗೆ ಬಲಿಯಾಗಿರುವ ಸಾಧ್ಯತೆಗಳಿವೆ ಎಂದು ನಂಬಲಾಗಿದೆ. \ No newline at end of file diff --git a/eesanje/url_47_22_7.txt b/eesanje/url_47_22_7.txt new file mode 100644 index 0000000000000000000000000000000000000000..c026f1f62f352955bf9a5eb597205e25f8d6bb5f --- /dev/null +++ b/eesanje/url_47_22_7.txt @@ -0,0 +1,8 @@ +ಮಣಿಪುರದಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶ + +ಇಂಫಾಲ್‌‍, ಅ 29 (ಪಿಟಿಐ)ಇಂಫಾಲ್‌ ಪೂರ್ವ ಜಿಲ್ಲೆಯ ಸೆಕ್ತಾ ಅವಾಂಗ್‌ ಲೈಕೈ ಪ್ರದೇಶದಲ್ಲಿ ಮಣಿಪುರ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. +ಈ ಕಾರ್ಯಾಚರಣೆಯಲ್ಲಿ ಮೂರು ಐಎನ್‌ಎಸ್‌‍ಎಎಸ್‌‍ ರೈಫಲ್‌ಗಳು, ಎರಡು ಎಕೆ-56 ರೈಫಲ್‌ಗಳು ಮತ್ತು ವ್ಯಾಗಜೀನ್‌ಗಳು, ಜೀವಂತ ಮದ್ದುಗುಂಡುಗಳು ಸೇರಿದಂತೆ ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. +ಕಳೆದ ಸೋಮವಾರ ಇಂಫಾಲ್‌ ಪಶ್ಚಿಮ ಜಿಲ್ಲೆಯ ಲೈಕಿಂತಾಬಿ ಪ್ರದೇಶದಲ್ಲಿ ಕೆಲವು ಬಂದೂಕುಧಾರಿಗಳು ಪೊಲೀಸ್‌‍ ಸಿಬ್ಬಂದಿಯಿಂದ ಮೂರು ರೈಫಲ್‌ಗಳು ಮತ್ತು ಮದ್ದುಗುಂಡುಗಳನ್ನು ಕಸಿದುಕೊಂಡ ನಂತರ ಕಾರ್ಯಾಚರಣೆ ನಡೆಸಲಾಯಿತು. +ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್‌‍ ಸಿಬ್ಬಂದಿ ಮತ್ತು ಒಬ್ಬ ವ್ಯಕ್ತಿಯನ್ನು ಬಂಧಿಸಿ ಹತ್ತು ದಿನಗಳ ಕಾಲ ಪೊಲೀಸ್‌‍ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸ್‌‍ ಹೇಳಿಕೆ ತಿಳಿಸಿದೆ. +ಪ್ರತ್ಯೇಕ ವಶಪಡಿಸಿಕೊಳ್ಳುವಿಕೆಯಲ್ಲಿ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಗಳು ಮತ್ತು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳ ದುರ್ಬಲ ಪ್ರದೇಶಗಳಲ್ಲಿನ ಪ್ರದೇಶದ ಪ್ರಾಬಲ್ಯ ಚಟುವಟಿಕೆಗಳ ಸಮಯದಲ್ಲಿ ಕಾಕ್ಚಿಂಗ್‌ನ ವಬಗೈ ನಟೆಕಾಂಗ್‌ನಿಂದ ಶಸಾ್ತ್ರಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡವು ಎಂದು ಅದು ಹೇಳಿದೆ. +ಕಾರ್ಯಾಚರಣೆಯ ವೇಳೆ ಐದು ಗನ್‌ಗಳು, 10 ಗ್ರೆನೇಡ್‌ಗಳು, ಬುಲೆಟ್‌ ಪೂಫ್‌ ಜಾಕೆಟ್‌ ಮತ್ತು ವೈರ್‌ಲೆಸ್‌‍ ಸೆಟ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್‌ ಕಣಿವೆ ಮೂಲದ ಮೈತೀಸ್‌‍ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿಗಳ ನಡುವಿನ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರೀತರಾಗಿದ್ದಾರೆ. \ No newline at end of file diff --git a/eesanje/url_47_22_8.txt b/eesanje/url_47_22_8.txt new file mode 100644 index 0000000000000000000000000000000000000000..883b6b11b0cd3adfb97a259b03c01beecdc14181 --- /dev/null +++ b/eesanje/url_47_22_8.txt @@ -0,0 +1,7 @@ +ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸುತ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್‌ +: +ಥಾಣೆ, ಅ 29 (ಪಿಟಿಐ)ತನ್ನ ಮೊಬೈಲ್‌ ಫೋನ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿದ್ದಕ್ಕಾಗಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ನಾಗರಿಕ ಶಾಲೆಯ ಪುರುಷ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮುಝಮಿಲ್‌ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. +ಬಾಲಕಿಯೊಬ್ಬಳು ತನ್ನ ಪೋಷಕರಿಗೆ ವಿಷಯ ತಿಳಿಸಿದ್ದರಿಂದ ಆತನ ಕತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 7 ನೇ ತರಗತಿಯ ಬಾಲಕಿ ತನ್ನ ಶಾಲೆಗೆ ತಡವಾಗಿ ಹೋಗುತ್ತಿದ್ದಳು, ಇದು ನಿಯಮಿತವಾಗಿ ಸಂಭವಿಸಿದಂತೆ, ಇದು ಏಕೆ ನಡೆಯುತ್ತಿದೆ ಎಂದು ತಿಳಿಯಲು ಶಾಲೆಯ ಮುಖ್ಯೋಪಾಧ್ಯಾಯರು ಆಕೆಯ ಪೋಷಕರಿಗೆ ಕರೆ ಮಾಡಿದರು, ಆದರೆ ಆ ಸಮಯದಲ್ಲಿ ಆಕೆ ಈ ಬಗ್ಗೆ ಅವರಿಗೆ ಏನನ್ನೂ ಹೇಳಲಿಲ್ಲ ಎಂದು ಶಾಂತಿ ನಗರ ಪೊಲೀಸ್‌‍ ಠಾಣೆಯ ಹಿರಿಯ ಇನ್ಸ್ ಪೆಕ್ಟರ್‌ ವಿನಾಯಕ ಗಾಯಕವಾಡ್‌ ತಿಳಿಸಿದ್ದಾರೆ. +ಸಂತ್ರಸ್ತೆ ಮನೆಗೆ ಹಿಂದಿರುಗಿದಾಗ, ಅವಳು ತನ್ನ ಪೋಷಕರಿಗೆ ಕಾಮುಕ ಶಿಕ್ಷಕನ ವರ್ತನೆ ಬಗ್ಗೆ ಬಾಯ್ಬಿಟ್ಟಿದ್ದು ಆತ ತನ್ನ ಮೊಬೈಲ್‌ ಫೋನ್‌ನಲ್ಲಿ ಅಶ್ಲೀಲ ವೀಡಿಯೊಗಳನ್ನು ತೋರಿಸಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದಾಗಿನಿಂದ ಶಾಲೆಗೆ ಹೋಗಲು ತನಗೆ ಮನಸ್ಸಿಲ್ಲ ಎಂದು ತಿಳಿಸಿದ್ದಾಳೆ. +ಇದನ್ನು ತಿಳಿದ ಆಕೆಯ ಪೋಷಕರು ಪೊಲೀಸರನ್ನು ಸಂಪರ್ಕಿಸಿ ಶಿಕ್ಷಕನ ವಿರುದ್ಧ ದೂರು ನೀಡಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅವರು ಹೇಳಿದರು. +ಶಿಕ್ಷಕನನ್ನು ನಂತರ ಬಂಧಿಸಲಾಯಿತು ಮತ್ತು ಭಾರತೀಯ ನ್ಯಾಯ ಸಂಹಿ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಸೆಕ್ಷನ್‌ 74 (ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್‌ ಬಲದ ಬಳಕೆ) ಮತ್ತು 351 (ಅಪರಾಧದ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. \ No newline at end of file diff --git a/eesanje/url_47_22_9.txt b/eesanje/url_47_22_9.txt new file mode 100644 index 0000000000000000000000000000000000000000..2a77070e40881045b6fe2ff13f939bb8572136cb --- /dev/null +++ b/eesanje/url_47_22_9.txt @@ -0,0 +1,16 @@ +ಜನ್‌ಧನ್‌ ಯಶಸ್ವಿಗೆ ಶ್ರಮಿಸಿದವರಿಗೆ ಪ್ರಧಾನಿ ಅಭಿನಂದನೆ + 10 +ನವದೆಹಲಿ, ಆ.28-ಜನ್‌ ಧನ್‌ ಯೋಜನೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದು, ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸುವಲ್ಲಿ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. +ಜನ್‌ ಧನ್‌ ಯೋಜನೆಯು ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಮತ್ತು ಕೋಟಿಗಟ್ಟಲೆ ಜನರಿಗೆ ವಿಶೇಷವಾಗಿ ಮಹಿಳೆಯರು, ಯುವಕರು ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಘನತೆಯನ್ನು ನೀಡುವಲ್ಲಿ ಪ್ರಮುಖವಾಗಿದೆ ಎಂದು ಅವರು ಹೇಳಿದರು. +2014 ರಲ್ಲಿ ಈ ದಿನದಂದು ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಜನ್‌ ಧನ್‌ ಯೋಜನೆಯು ದೇಶದ ಎಲ್ಲಾ ಕುಟುಂಬಗಳ ಸಮಗ್ರ ಆರ್ಥಿಕ ಸೇರ್ಪಡೆಯನ್ನು ತರಲು ಸಮಗ್ರ ವಿಧಾನವನ್ನು ಒಳಗೊಂಡಿರುವ ಆರ್ಥಿಕ ಸೇರ್ಪಡೆಯ ರಾಷ್ಟ್ರೀಯ ಮಿಷನ್‌ ಆಗಿದೆ. ಯೋಜನೆಯು ಪ್ರತಿ ಕುಟುಂಬಕ್ಕೆ ಕನಿಷ್ಠ ಒಂದು ಮೂಲಭೂತ ಬ್ಯಾಂಕಿಂಗ್‌ ಖಾತೆಯೊಂದಿಗೆ ಬ್ಯಾಂಕಿಂಗ್‌ ಸೌಲಭ್ಯಗಳಿಗೆ ಸಾರ್ವತ್ರಿಕ ಪ್ರವೇಶ, ಆರ್ಥಿಕ ಸಾಕ್ಷರತೆ, ಸಾಲದ ಪ್ರವೇಶ, ವಿಮೆ ಮತ್ತು ಪಿಂಚಣಿ ಸೌಲಭ್ಯವನ್ನು ಕಲ್ಪಿಸುತ್ತದೆ ಎಂದು ಹೇಳಿದರು. +ಪ್ರಧಾನ ಮಂತ್ರಿ ಜನ್‌ಧನ್‌ ಯೋಜನೆ (ಪಿಎಂಜೆಡಿವೈ) ವಿಶ್ವದ ಅತಿದೊಡ್ಡ ಹಣಕಾಸು ಸೇರ್ಪಡೆ ಉಪಕ್ರಮವಾಗಿದ್ದು, ಬಡವರನ್ನು ಆರ್ಥಿಕ ಮುಖ್ಯವಾಹಿನಿಗೆ ಸೇರಿಸುತ್ತದೆ ಮತ್ತು ಅಂಚಿನಲ್ಲಿರುವ ಸಮುದಾಯಗಳ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. +ಪಿಎಂಜೆಡಿವೈ, ಹಣಕಾಸು ಸೇರ್ಪಡೆಗಾಗಿ ರಾಷ್ಟ್ರೀಯ ಮಿಷನ್‌, ಒಂದು ದಶಕವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ತನ್ನ ಹಣಕಾಸಿನ ಒಳಗೊಳ್ಳುವಿಕೆಯ ಮಧ್ಯಸ್ಥಿಕೆಗಳ ಮೂಲಕ ಅಂಚಿನಲ್ಲಿರುವ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಬೆಂಬಲವನ್ನು ನೀಡಲು ನಿರಂತರವಾಗಿ ಪ್ರಯತ್ನಿಸುತ್ತಿದೆ. +10ನೇ ವಾರ್ಷಿಕೋತ್ಸವದ ಸಂದೇಶದಲ್ಲಿ, ಸೀತಾರಾಮನ್‌ ಅವರು, ಆರ್ಥಿಕ ಸೇರ್ಪಡೆ ಮತ್ತು ಸಬಲೀಕರಣವನ್ನು ಸಾಧಿಸಲು ಔಪಚಾರಿಕ ಬ್ಯಾಂಕಿಂಗ್‌ ಸೇವೆಗಳಿಗೆ ಸಾರ್ವತ್ರಿಕ ಮತ್ತು ಕೈಗೆಟುಕುವ ಪ್ರವೇಶವು ಅತ್ಯಗತ್ಯವಾಗಿದೆ. ಇದು ಬಡವರನ್ನು ಆರ್ಥಿಕ ಮುಖ್ಯವಾಹಿನಿಗೆ ಸೇರಿಸುತ್ತದೆ ಮತ್ತು ಅಂಚಿನಲ್ಲಿರುವ ಸಮುದಾಯಗಳ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. +ಬ್ಯಾಂಕ್‌ ಖಾತೆಗಳು, ಸಣ್ಣ ಉಳಿತಾಯ ಯೋಜನೆಗಳು, ವಿಮೆ ಮತ್ತು ಹಿಂದೆ ಬ್ಯಾಂಕ್‌ ಮಾಡದವರಿಗೆ ಸಾಲ ಸೇರಿದಂತೆ ಸಾರ್ವತ್ರಿಕ, ಕೈಗೆಟುಕುವ ಮತ್ತು ಔಪಚಾರಿಕ ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಪ್ರಧಾನಮಂತ್ರಿ ಜನ್‌ ಧನ್‌ ಯೋಜನೆಯು ಕಳೆದ ದಶಕದಲ್ಲಿ ದೇಶದ ಬ್ಯಾಂಕಿಂಗ್‌ ಮತ್ತು ಆರ್ಥಿಕ ಭೂದೃಶ್ಯವನ್ನು ಪರಿವರ್ತಿಸಿದೆ ಎಂದು ಅವರು ಹೇಳಿದರು. +ಜನ್‌ ಧನ್‌ ಖಾತೆಗಳನ್ನು ತೆರೆಯುವ ಮೂಲಕ 53 ಕೋಟಿ ಜನರನ್ನು ಔಪಚಾರಿಕ ಬ್ಯಾಂಕಿಂಗ್‌ ವ್ಯವಸ್ಥೆಗೆ ಕರೆತರುವಲ್ಲಿ ಈ ಉಪಕ್ರಮದ ಯಶಸ್ಸನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. +ಈ ಬ್ಯಾಂಕ್‌ ಖಾತೆಗಳು 2.3 ಲಕ್ಷ ಕೋಟಿ ಠೇವಣಿ ಬ್ಯಾಲೆನ್‌್ಸ ಗಳಿಸಿವೆ ಮತ್ತು ಇದರ ಪರಿಣಾಮವಾಗಿ 36 ಕೋಟಿಗೂ ಹೆಚ್ಚು ಉಚಿತ ರುಪೇ ಕಾರ್ಡ್‌ಗಳ ವಿತರಣೆ, ಇದು ರೂ. 2 ಲಕ್ಷ ಅಪಘಾತ ವಿಮಾ ರಕ್ಷಣೆಯನ್ನು ಸಹ ಒದಗಿಸುತ್ತದೆ. ಗಮನಾರ್ಹವಾಗಿ, ಯಾವುದೇ ಖಾತೆ ತೆರೆಯುವ ಶುಲ್ಕಗಳು ಅಥವಾ ನಿರ್ವಹಣೆ ಶುಲ್ಕಗಳು ಮತ್ತು ಕನಿಷ್ಠ ಬ್ಯಾಲೆನ್‌್ಸಅನ್ನು ನಿರ್ವಹಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು. +ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ತಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಘೋಷಿಸಿದ ಜನ್‌ ಧನ್‌ ಯೋಜನೆಯನ್ನು ಅದೇ ವರ್ಷದ ಆ. 28 ರಂದು ಪ್ರಾರಂಭಿಸಲಾಯಿತು. 67 ರಷ್ಟು ಖಾತೆಗಳನ್ನು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿ ತೆರೆಯಲಾಗಿದೆ ಮತ್ತು 55 ಪ್ರತಿಶತ ಖಾತೆಗಳನ್ನು ಮಹಿಳೆಯರು ತೆರೆದಿದ್ದಾರೆ ಎಂಬುದನ್ನು ಗಮನಿಸುವುದು ಹರ್ಷದಾಯಕ ಎಂದು ಹಣಕಾಸು ಸಚಿವರು ಹೇಳಿದರು. +ಜನ್‌ ಧನ್-ಮೊಬೈಲ್‌‍-ಆಧಾರ್‌ ಲಿಂಕ್‌ ಮಾಡುವ ಮೂಲಕ ರಚಿಸಲಾದ ಒಪ್ಪಿಗೆ ಆಧಾರಿತ ಪೈಪ್‌ಲೈನ್‌ ಆರ್ಥಿಕ ಸೇರ್ಪಡೆ ಪರಿಸರ ವ್‌ಯವಸ್ಥೆಯ ಪ್ರಮುಖ ಆಧಾರ ಸ್ತಂಭಗಳಲ್ಲಿ ಒಂದಾಗಿದೆ. ಇದು ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಕಲ್ಯಾಣ ಯೋಜನೆಗಳ ತ್ವರಿತ, ತಡೆರಹಿತ ಮತ್ತು ಪಾರದರ್ಶಕ ವರ್ಗಾವಣೆಯನ್ನು ಸಕ್ರಿಯಗೊಳಿಸಿದೆ ಮತ್ತು ಡಿಜಿಟಲ್ ಪ್ರಚಾರ ಪಾವತಿಗಳು, ಅವರು ಹೇಳಿದರು. +ಈ ಸಂದರ್ಭದಲ್ಲಿ ತಮ ಸಂದೇಶದಲ್ಲಿ, ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ, ಕೇವಲ ಒಂದು ಯೋಜನೆಯಾಗಿಲ್ಲ, ಆದರೆ ಬ್ಯಾಂಕ್‌ ಇಲ್ಲದ ಅನೇಕ ಜನರ ಆರ್ಥಿಕ ಸ್ವಾತಂತ್ರ್ಯವನ್ನು ಸಕ್ರಿಯಗೊಳಿಸಿದ ಮತ್ತು ಆರ್ಥಿಕ ಭದ್ರತೆಯ ಭಾವನೆಯನ್ನು ತುಂಬಿದ ಪರಿವರ್ತನಾ ಆಂದೋಲನವಾಗಿದೆ. +ಕಳೆದ ದಶಕದಲ್ಲಿ ಕೈಗೊಂಡ ನೇತೃತ್ವದ ಮಧ್ಯಸ್ಥಿಕೆಗಳ ಪಯಣವು ಪರಿವರ್ತನಾಶೀಲ ಹಾಗೂ ದಿಕ್ಕಿನ ಬದಲಾವಣೆಯನ್ನು ಉಂಟುಮಾಡಿದೆ, ಇದರಿಂದಾಗಿ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆ ಪರಿಸರ ವ್ಯವಸ್ಥೆಯು ಸಮಾಜದ ಕಟ್ಟಕಡೆಯ ವ್ಯಕ್ತಿಗೆ-ಬಡವರ ಬಡವರಿಗೆ ಆರ್ಥಿಕ ಸೇವೆಗಳನ್ನು ತಲುಪಿಸಲು ಸಮರ್ಥವಾಗಿದೆ ಎಂದರು. +ಕಳೆದ ದಶಕದಲಿ, ಲಕ್ಷಾಂತರ ಬ್ಯಾಂಕ್‌ ಇಲ್ಲದ ವ್ಯಕ್ತಿಗಳನ್ನು, ವಿಶೇಷವಾಗಿ ಮಹಿಳೆಯರನ್ನು ಔಪಚಾರಿಕ ಹಣಕಾಸು ವ್ಯವಸ್ಥೆಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಮಹಿಳಾ ವಿಶ್ವ ಬ್ಯಾಂಕಿಂಗ್‌ ಪ್ರಾದೇಶಿಕ ಮುಖ್ಯಸ್ಥೆ (ದಕ್ಷಿಣ ಏಷ್ಯಾ) ಕಲ್ಪನಾ ಅಜಯನ್‌ ಹೇಳಿದ್ದಾರೆ. ಈ ಯೋಜನೆಯ ಪ್ರಭಾವವು ಮಹಿಳೆಯರ ಹೆಚ್ಚಿದ ಆರ್ಥಿಕ ಭಾಗವಹಿಸುವಿಕೆಯಲ್ಲಿ ಸ್ಪಷ್ಟವಾಗಿದೆ, ಅವರು ಈಗ ತಮ್ಮ ಆರ್ಥಿಕ ಭವಿಷ್ಯವನ್ನು ಉಳಿಸಲು, ಹೂಡಿಕೆ ಮಾಡಲು ಮತ್ತು ಸುರಕ್ಷಿತಗೊಳಿಸಲು ಅವಕಾಶವನ್ನು ಹೊಂದಿದ್ದಾರೆ ಎಂದು ಅಜಯನ್‌ ಹೇಳಿದರು. \ No newline at end of file diff --git a/eesanje/url_47_230_1.txt b/eesanje/url_47_230_1.txt new file mode 100644 index 0000000000000000000000000000000000000000..e4d5fd24d908e8b17461f03b6c3a58b275ccf1a1 --- /dev/null +++ b/eesanje/url_47_230_1.txt @@ -0,0 +1,6 @@ +ಮುಂಬೈನ ಅಂಗಡಿ, ಮಳಿಗೆಗಳ ಮೇಲೆ ದೇವನಾಗರಿ ಲಿಪಿ ಬೋರ್ಡ್ ಕಡ್ಡಾಯ +ಮುಂಬೈ, ನ.26 (ಪಿಟಿಐ) – ದೇವನಾಗರಿ ಲಿಪಿಯಲ್ಲಿ ಹೆಸರುಗಳಿರುವ ಫಲಕಗಳನ್ನು ಹಾಕಲು ವಿಫಲವಾದ ಅಂಗಡಿಗಳು, ಹೋಟೆಲ್‍ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬೃಹನ್‍ಮುಂಬೈ ಮುನ್ಸಿಪಲ್ ಕಾಪೆರ್ರೇಷನ್ ಮಂಗಳವಾರದಿಂದ ಕ್ರಮ ಕೈಗೊಳ್ಳಲು ಪ್ರಾರಂಭಿಸುತ್ತದೆ ಎಂದು ನಾಗರಿಕ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. +ಬಿಎಂಸಿ ಆಡಳಿತಾಧಿಕಾರಿ ಐ ಸಿ ಚಾಹಲ್ ಸಭೆ ನಡೆಸಿ, ಅಂಗಡಿಗಳು, ಸಂಸ್ಥೆಗಳು ಮತ್ತು ಹೋಟೆಲ್‍ಗಳ ಹೆಸರುಗಳು ದೇವನಾಗರಿ ಲಿಪಿಯಲ್ಲಿ (ಇತರ ಲಿಪಿಯ ಜೊತೆಗೆ) ಇರಬೇಕು ಎಂಬ ಸುಪ್ರೀಂ ಕೋರ್ಟ್‍ನ ನಿರ್ದೇಶನದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. +ನವೆಂಬರ್ 25 ರೊಳಗೆ ದೇವನಾಗರಿ ಬೋರ್ಡ್‍ಗಳನ್ನು ಹಾಕಲು ಸುಪ್ರೀಂ ಕೋರ್ಟ್ ಸಮಯ ನೀಡಿದೆ, ಆದರೆ ನಾಗರಿಕ ಸಂಸ್ಥೆ ನವೆಂಬರ್ 28 ರಿಂದ ಕ್ರಮವನ್ನು ಪ್ರಾರಂಭಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. +ಮಿಚೆಲ್ ಮಾರ್ಷ್ ವಿಶ್ವಕಪ್ ಮೇಲೆ ಕಾಲಿಟ್ಟಿರುವುದು ನೋವು ತಂದಿದೆ:ಶಮಿ +ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ ನವೆಂಬರ್ 22 ರಂದು ಮುಂಬೈನಲ್ಲಿ ಬ್ಯಾನರ್‍ಗಳನ್ನು ಪ್ರದರ್ಶಿಸಿದ್ದು, ಮರಾಠಿಯಲ್ಲಿ (ದೇವನಾಗರಿ ಲಿಪಿ) ಅಂಗಡಿಗಳು ಮತ್ತು ಹೋಟೆಲ್‍ಗಳ ಸೈನ್‍ಬೋರ್ಡ್‍ಗಳನ್ನು ಹಾಕಲು ಸುಪ್ರೀಂ ಕೋರ್ಟ್ ಗಡುವು ಪಾಲನೆಯಾಗದಿದ್ದರೆ ಆಕ್ರಮಣಕಾರಿ ಪ್ರತಿಭಟನೆಯ ಸುಳಿವು ನೀಡಿದೆ. ಅಂಗಡಿಗಳು ಮತ್ತು ಇತರ ಸಂಸ್ಥೆಗಳ ಸೈನ್‍ಬೋರ್ಡ್‍ಗಳನ್ನು ಪ್ರಾದೇಶಿಕ ಭಾಷೆಯಲ್ಲಿ (ಮಹಾರಾಷ್ಟ್ರದ ಮರಾಠಿ) ಹೊಂದಲು ಠಾಕ್ರೆ ಈ ಹಿಂದೆ ಒತ್ತಿಹೇಳಿದ್ದರು. \ No newline at end of file diff --git a/eesanje/url_47_230_10.txt b/eesanje/url_47_230_10.txt new file mode 100644 index 0000000000000000000000000000000000000000..a07731e5e581f29afed883d4b536aec13e1502c8 --- /dev/null +++ b/eesanje/url_47_230_10.txt @@ -0,0 +1,6 @@ +ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ +ಬರ್ಹಾಂಪುರ, ನ.24 (ಪಿಟಿಐ)- ಕೀಚಕ ಪತಿಯೊಬ್ಬ ತನ್ನ ಮಲಗುವ ಕೋಣೆಗೆ ವಿಷಪೂರಿತ ಹಾವು ಬಿಟ್ಟು ತನ್ನ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಲೆ ಮಾಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿಂದ ಸುಮಾರು 60 ಕಿಮೀ ದೂರದಲ್ಲಿರುವ ಕಬಿಸೂರ್ಯ ನಗರ ಪ್ರದೇಶದ ಅಧೇಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. +ಆರೋಪಿಯನ್ನು ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಕೆ ಬಸಂತಿ ಪಾತ್ರಾ (23) ಜತೆ ವೈವಾಹಿಕ ಕಲಹವಿತ್ತು ಹೀಗಾಗಿ ಆತ ವಿಷಪೂರಿತ ಹಾವಿನ ಸಹಾಯದಿಂದ ಪತ್ನಿ-ಮಗಳನ್ನು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಹಾವು ಮೋಡಿ ಮಾಡುವವರಿಂದ ಹಾವನ್ನು ಸಂಗ್ರಹಿಸಿದ್ದ ಆರೋಪಿ ನಂತರ ಹಾವನ್ನು ರೂಮಿಗೆ ಬಿಟ್ಟು ಕೊಲೆ ಮಾಡಿಸಿದ್ದಾನೆ. ಪ್ಲಾಸ್ಟಿಕ್ ಜಾರ್‍ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಹಾವನ್ನು ಬಿಟ್ಟಿದ್ದರು. ಮರುದಿನ ಬೆಳಗ್ಗೆ ಇಬ್ಬರೂ ಹಾವು ಕಡಿತದಿಂದ ಮೃತಪಟ್ಟಿದ್ದು, ಆರೋಪಿ ಮತ್ತೊಂದು ಕೋಣೆಯಲ್ಲಿ ಮಲಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. +ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್ +ಪೊಲೀಸರು ಆರಂಭದಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದರು, ಆದರೆ ಅವರ ಮಾವ ಎಫ್‍ಐಆರ್ ದಾಖಲಿಸಿದ ನಂತರ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಇಬ್ಬರ ಸಾವಿನಲ್ಲೂ ಭಾಗಿಯಾಗಿದ್ದಾರೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಮೀನಾ ತಿಳಿಸಿದ್ದಾರೆ. \ No newline at end of file diff --git a/eesanje/url_47_230_11.txt b/eesanje/url_47_230_11.txt new file mode 100644 index 0000000000000000000000000000000000000000..2df8465ab044baa8aae93286c61b7882aeb7e9c2 --- /dev/null +++ b/eesanje/url_47_230_11.txt @@ -0,0 +1,9 @@ +ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ವಿನಾಕಾರಣ ತಡೆಹಿಡಿಯುವಂತಿಲ್ಲ : ಸುಪ್ರೀಂ +ನವದೆಹಲಿ,ನ.24- ರಾಜ್ಯಗಳ ಶಾಸಕಾಂಗಗಳು ಅಂಗೀಕರಿಸಿದ ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಪಾತ್ರ ಮತ್ತು ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಂತಹ ಕ್ರಮಗಳು ಶಾಸಕಾಂಗ ಪ್ರಕ್ರಿಯೆ ಮತ್ತು ಚುನಾಯಿತ ಪ್ರತಿನಿಧಿಗಳ ಪರಮಾಧಿಕಾರವನ್ನು ದುರ್ಬಲಗೊಳಿಸುತ್ತವೆ ಎಂದು ಒತ್ತಿಹೇಳಿರುವ ನ್ಯಾಯಾಲಯ ರಾಜ್ಯಪಾಲರು ಮಸೂದೆಗೆ ಒಪ್ಪಿಗೆಯನ್ನು ಅನಿರ್ದಿಷ್ಟವಾಗಿ ವಿಳಂಬಗೊಳಿಸುವಂತಿಲ್ಲ ಅಥವಾ ತಡೆಹಿಡಿಯುವಂತಿಲ್ಲ ಎಂದು ತೀರ್ಪು ನೀಡಿದೆ. +ನ 10 ರಂದು ಬಿಡುಗಡೆಯಾದ ತೀರ್ಪಿನಲ್ಲಿ ಮತ್ತು ನಿನ್ನೆ ಸಂಜೆ ಸಾರ್ವಜನಿಕವಾಗಿ ಪ್ರಕಟಿಸಿದ ತೀರ್ಪಿನಲ್ಲಿ, ಪಂಜಾಬ್‍ನ ಎಎಪಿ ಸರ್ಕಾರ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತು, ರಾಜ್ಯ ವಿಧಾನಸಭೆ ಅಂಗೀಕರಿಸಿದ ನಾಲ್ಕು ಮಸೂದೆಗಳಿಗೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ತಮ್ಮ ಅನುಮೋದನೆಯನ್ನು ತಡೆಹಿಡಿಯುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದರು. +ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್ +ರಾಜ್ಯಪಾಲರು ಯಾವುದೇ ಕ್ರಮ ಕೈಗೊಳ್ಳದೆ ವಿಧೇಯಕವನ್ನು ಅನಿರ್ದಿಷ್ಟಾವಗೆ ಬಾಕಿ ಇಡಲು ಸ್ವತಂತ್ರರಾಗಿರಲು ಸಾಧ್ಯವಿಲ್ಲ. ನಿರ್ಧಾರ ತೆಗೆದುಕೊಳ್ಳಲು ವಿಫಲರಾಗುವುದು ಮತ್ತು ಅನಿರ್ದಿಷ್ಟ ಅವಧಿಗೆ ಸರಿಯಾಗಿ ಅಂಗೀಕರಿಸಿದ ಮಸೂದೆಯನ್ನು ಬಾಕಿ ಇಡುವುದು ಆ ಅಭಿವ್ಯಕ್ತಿಗೆ ಹೊಂದಿಕೆಯಾಗದ ಕ್ರಮವಾಗಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. +27 ಪುಟಗಳ ತೀರ್ಪಿನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ , ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡಿತ್ತು. ರಾಜ್ಯಪಾಲರು ಚುನಾಯಿತರಾಗದ ಮುಖ್ಯಸ್ಥರಾಗಿ, ಕೆಲವು ಸಾಂವಿಧಾನಿಕ ಅಕಾರಗಳನ್ನು ವಹಿಸಿಕೊಂಡಿದ್ದಾರೆ. ಆದಾಗ್ಯೂ, ಈ ಅಧಿಕಾರಗಳನ್ನು ರಾಜ್ಯ ಶಾಸಕಾಂಗಗಳ ಸಾಮಾನ್ಯ ಕಾನೂನು ರಚನೆಯನ್ನು ತಡೆಯಲು ಬಳಸಲಾಗುವುದಿಲ್ಲ ಎಂದು ಪೀಠವು ಸೇರಿಸಿತು. +ಜೂನ್ 19 ಮತ್ತು 20 ರಂದು ನಡೆದ ವಿಧಾನಸಭಾ ಅವೇಶನವನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ ಮತ್ತು ಆ ಅವೇಶನದಲ್ಲಿ ಸದನವು ತೆಗೆದುಕೊಂಡ ಎಲ್ಲಾ ಕ್ರಮಗಳು ಮಾನ್ಯವಾಗಿವೆ ಎಂದು ಪಂಜಾಬ್ ಸರ್ಕಾರವು ಔಪಚಾರಿಕ ನ್ಯಾಯಾಂಗ ಘೋಷಣೆಯನ್ನು ಕೋರಿದೆ. +ಪ್ರಜಾಪ್ರಭುತ್ವದ ಸಂಸದೀಯ ಸ್ವರೂಪದಲ್ಲಿ, ನಿಜವಾದ ಅಧಿಕಾರವು ಜನರ ಚುನಾಯಿತ ಪ್ರತಿನಿಧಿಗಳಿಗೆ ಇರುತ್ತದೆ. ರಾಜ್ಯಪಾಲರು, ರಾಷ್ಟ್ರಪತಿಗಳ ನೇಮಕಗೊಂಡವರು, ನಾಮಸೂಚಕ ರಾಷ್ಟ್ರದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. +ಸಂವಿಧಾನದ ಅಂಗೀಕಾರದ ನಂತರ ಸತತವಾಗಿ ಅನುಸರಿಸುತ್ತಿರುವ ಸಾಂವಿಧಾನಿಕ ಕಾನೂನಿನ ಮೂಲಭೂತ ತತ್ವವೆಂದರೆ, ರಾಜ್ಯಪಾಲರು ರಾಜ್ಯಪಾಲರಿಗೆ ವಿವೇಚನಾ ಅಧಿಕಾರವನ್ನು ವಹಿಸಿಕೊಟ್ಟಿರುವ ಕ್ಷೇತ್ರಗಳನ್ನು ಹೊರತುಪಡಿಸಿ, ಮಂತ್ರಿಮಂಡಲದ ¿ಸಹಾಯ ಮತ್ತು ಸಲಹೆ¿ ಮೇರೆಗೆ ಕಾರ್ಯನಿರ್ವಹಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. \ No newline at end of file diff --git a/eesanje/url_47_230_12.txt b/eesanje/url_47_230_12.txt new file mode 100644 index 0000000000000000000000000000000000000000..46dd0c0e68d44a844c2559dda1587b26813d5147 --- /dev/null +++ b/eesanje/url_47_230_12.txt @@ -0,0 +1,9 @@ +ನೌಕಾಪಡೆಯ ಸಿಬ್ಬಂದಿ ಮರಣದಂಡನೆ ರದ್ದುಗೊಳಿಸುವ ಭಾರತದ ಮನವಿಗೆ ಕತಾರ್ ಸಮ್ಮತಿ +ನವದೆಹಲಿ,ನ.24- ಗೂಢಚರ್ಯೆ ಆರೋಪದಡಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಸ್ವೀಕರಿಸಿದೆ. ಕತಾರ್ ನ್ಯಾಯಾಲಯವು ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ. +ವರದಿಗಳ ಪ್ರಕಾರ, ಎಂಟು ಜನರನ್ನು ಗೂಢಚಾರಿಕೆಗಾಗಿ ಕತಾರ್‍ನ ಗುಪ್ತಚರ ಸಂಸ್ಥೆಯು ಕಳೆದ ಆಗಷ್ಟ್ 2022 ರಲ್ಲಿ ಬಂಧಿಸಿತು. ಆದರೆ ಕತಾರ್ ಅಧಿಕಾರಿಗಳು ಅವರ ವಿರುದ್ಧದ ಆರೋಪಗಳನ್ನು ಇನ್ನೂ ಬಹಿರಂಗಗೊಳಿಸಿಲ್ಲ. ಅವರ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಯಿತು ಮತ್ತು ಅವರ ವಿರುದ್ಧದ ತೀರ್ಪನ್ನು ಕಳೆದ ತಿಂಗಳು ಕತಾರ್‍ನ ಪ್ರಥಮ ನಿದರ್ಶನದ ನ್ಯಾಯಾಲಯವು ಪ್ರಕಟಿಸಿತು. +ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್ +ಅವರಿಗೆ ಕಾನ್ಸುಲರ್ ಪ್ರವೇಶವನ್ನು ನೀಡಲಾಯಿತು, ಭಾರತೀಯ ಅಧಿಕಾರಿಗಳು ಅವರನ್ನು ಬಿಡುಗಡೆ ಮಾಡಲು ಕೆಲಸ ಮಾಡುತ್ತಿದ್ದಾರೆ. ಕಮಾಂಡರ್ ಪೂರ್ಣೇಂದು ತಿವಾರಿ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಅಮಿತ್ ನಾಗ್ಪಾಲ, ಕಮಾಂಡರ್ ಸಂಜೀವ್ ಗುಪ್ತಾ, ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕ್ಯಾಪ್ಟನ್ ಸೌರಭ್ ವಸಿಷ್ಟ್ ಮತ್ತು ನಾವಿಕ ರಾಗೇಶ್ ಗೋಪಕುಮಾರ್ ಬಂತ ಭಾರತೀಯ ನೌಕಾಪಡೆಯ ಯೋಧರು. +ಎಲ್ಲಾ ಮಾಜಿ ನೌಕಾಪಡೆಯ ಅಧಿಕಾರಿಗಳು ಭಾರತೀಯ ನೌಕಾಪಡೆಯಲ್ಲಿ 20 ವರ್ಷಗಳವರೆಗಿನ ವಿಶಿಷ್ಟ ಸೇವಾ ದಾಖಲೆಯನ್ನು ಹೊಂದಿದ್ದಾರೆ ಮತ್ತು ಪಡೆಯಲ್ಲಿ ಬೋಧಕರನ್ನು ಒಳಗೊಂಡಂತೆ ಪ್ರಮುಖ ಹುದ್ದೆಗಳನ್ನು ಹೊಂದಿದ್ದಾರೆ. +ಬಂಧಿತ ಮಾಜಿ ಅಧಿಕಾರಿಯೊಬ್ಬರ ಸಹೋದರಿ ಮೀಟೂ ಭಾರ್ಗವ ಅವರು ತಮ್ಮ ಸಹೋದರನನ್ನು ಮರಳಿ ಕರೆತರಲು ಸರ್ಕಾರದಿಂದ ಸಹಾಯ ಕೋರಿದ್ದರು. ಜೂನ್ 8 ರಂದು ಎಕ್ಸ್‍ನಲ್ಲಿ ಪೋಸ್ಟ್‍ನಲ್ಲಿ, ಅವರು ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದರು. +ಸಿದ್ದು ಸರ್ಕಾರದ 6 ತಿಂಗಳ ವೈಫಲ್ಯಗಳನ್ನು ಪಟ್ಟಿ ಮಾಡಿದ ಬಿಜೆಪಿ +ಈ ಮಾಜಿ ನೌಕಾಪಡೆಯ ಅಧಿಕಾರಿಗಳು ರಾಷ್ಟ್ರದ ಹೆಮ್ಮೆ ಮತ್ತು ಮತ್ತೊಮ್ಮೆ ನಾನು ನಮ್ಮ ಗೌರವಾನ್ವಿತ ಪ್ರಧಾನಿಯವರಿಗೆ ಕೈ ಜೋಡಿಸಿ ವಿನಂತಿಸುತ್ತೇನೆ, ಯಾವುದೇ ವಿಳಂಬವಿಲ್ಲದೆ ಅವರೆಲ್ಲರನ್ನೂ ಭಾರತಕ್ಕೆ ಕರೆತರಲು ಇದು ಸುಸಮಯವಾಗಿದೆ ಎಂದು ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಲಾಗಿದೆ. \ No newline at end of file diff --git a/eesanje/url_47_230_2.txt b/eesanje/url_47_230_2.txt new file mode 100644 index 0000000000000000000000000000000000000000..0de88c5220ecc2f48934f824e49d8739f31faff7 --- /dev/null +++ b/eesanje/url_47_230_2.txt @@ -0,0 +1,17 @@ +ಯುದ್ಧ ವಿಮಾನ ತೇಜಸ್‍ನಲ್ಲಿ ಪ್ರಧಾನಿ ಮೋದಿ ಹಾರಾಟ +ಬೆಂಗಳೂರು,ನ.25- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಚ್‍ಎಎಲ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದ ಹೆಮ್ಮೆಯ ಲಘು ಯುದ್ಧ ವಿಮಾನ ತೇಜಸ್‍ನಲ್ಲಿ ಹಾರಾಟ ನಡೆಸಿದ್ದಾರೆ. ಈ ಮೂಲಕ ಯುದ್ಧ ವಿಮಾನದಲ್ಲಿ ದೇಶದ ಪ್ರಧಾನಿಯೊಬ್ಬರು ಬಹು ವರ್ಷಗಳ ನಂತರ ಹಾರಾಟ ನಡೆಸಿದ ಹೆಗ್ಗಳಿಕೆಗೆ ಮೋದಿಯವರು ಪಾತ್ರರಾಗಿದ್ದಾರೆ. +ಬೆಳಗ್ಗೆ 9.30ಕ್ಕೆ ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಎಚ್‍ಎಚ್‍ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿಯವರ ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದಲ್ಲಿ ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಹಾರಾಟ ನಡೆಸಿದ್ದಾರೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭದ್ರತಾ ದೃಷ್ಟಿಯಿಂದ ಇದನ್ನು ಗೌಪ್ಯವಾಗಿ ಇಡಲಾಗಿತ್ತು. ಈ ಮೊದಲೇ ಮೋದಿಯವರು ಬೆಂಗಳೂರಿಗೆ ಆಗಮಿಸಿದ ವೇಳೆ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು. +ಹೀಗಾಗಿ ಅವರಿಗೆ ಕಳೆದ ಒಂದು ವಾರದಿಂದ ವೈದ್ಯರು ನಿರಂತರವಾಗಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಏಕೆಂದರೆ ಯುದ್ಧ ವಿಮಾನದಲ್ಲಿ ಹಾರಾಟ ನಡೆಯುವ ವೇಳೆ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸವಾದರೂ ಬಹುದೊಡ್ಡ ಸಮಸ್ಯೆಗೆ ಸಿಲುಕುವ ಸಂಭವವಿರುತ್ತದೆ. +ಹೀಗಾಗಿ ಬೆಂಗಳೂರಿಗೆ ಬಂದ ಮೋದಿಯವರನ್ನು ನುರಿತ ತಜ್ಞ ವೈದ್ಯರ ತಂಡ ದೈಹಿಕ ತಪಾಸಣೆ ನಡೆಸಿದ ಬಳಿಕವೇ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ಅನುಮತಿ ನೀಡಿದರು. ನಿಯಮದಂತೆ ಮೋದಿಯವರಿಗೆ ಭಾರತೀಯ ವಾಯುಪಡೆಯ ಸಮವಸ್ತ್ರವನ್ನು ನೀಡಲಾಗಿತ್ತು. ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಹೊರಟ ತೇಜಸ್ ಯುದ್ಧ ವಿಮಾನ ಆಗಸದಲ್ಲಿ ಸುಮಾರು 10 ನಿಮಿಷಕ್ಕೂ ಹೆಚ್ಚು ಹಾರಾಟ ನಡೆಸಿದೆ. +ಬಿಜೆಪಿಯಲ್ಲಿ ನಿಲ್ಲದ ಬಡಿದಾಟ: ದೆಹಲಿಯತ್ತ ಅತೃಪ್ತರ ಬಣ +ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣವಾದ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು ತೇಜಸ್‍ನಲ್ಲಿ ಒಂದು ಪಯಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆ. ಈ ಅನುಭವವು ವಿಸ್ಮಯಕಾರಿಯಾಗಿ ಪುಷ್ಟೀಕರಿಸಿದೆ, ನಮ್ಮ ದೇಶದ ಸ್ಥಳೀಯ ಸಾಮಥ್ರ್ಯಗಳಲ್ಲಿ ವಿಶ್ವಾಸವನ್ನು ಹೆಚ್ಚಿಸಿದೆ ಮತ್ತು ನಮ್ಮ ರಾಷ್ಟ್ರೀಯ ಸಾಮಥ್ರ್ಯದ ಬಗ್ಗೆ ನನಗೆ ಹೊಸ ಹೆಮ್ಮೆ ಮತ್ತು ಆಶಾವಾದವನ್ನು ನೀಡಿತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ. +ನಾವು ಜಗತ್ತಿನಲ್ಲಿ ಯಾರಿಗೂ ಕೂಡ ಕಡಿಮೆಯಿಲ್ಲ. ನಮ್ಮ ಎಚ್‍ಎಎಲ್, ಡಿಆರ್‍ಡಿಒ, ಇಸ್ರೊ ಹೆಮ್ಮೆಯ ಸಂಸ್ಥೆಗಳಾಗಿವೆ. ತೇಜಸ್ ಯುದ್ಧ ವಿಮಾನ ನನಗೆ ರೋಮಾಂಚನಕಾರಿ ಅನುಭವ ಉಂಟು ಮಾಡಿತು ಇದಕ್ಕಾಗಿ ಭಾರತೀಯರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. +ಲಘು ಯುದ್ಧ ವಿಮಾನವಾದ ತೇಜಸ್ ಅನ್ನು ಖರೀದಿಸಲು ಹಲವಾರು ದೇಶಗಳು ಆಸಕ್ತಿ ತೋರಿಸಿವೆ. 2022-2023ರ ಆರ್ಥಿಕ ವರ್ಷದಲ್ಲಿ ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠ 15,920 ಕೋಟಿ ರೂ.ಗಳನ್ನು ತಲುಪಿದೆ. +ಭಾರತೀಯ ವಾಯುಪಡೆಯು ಹೆಚ್ಚಿನ ಫೈಟರ್ ಜೆಟ್‍ಗಳು ಮತ್ತು ಲಘು ಯುದ್ಧ ಹೆಲಿಕಾಪ್ಟರ್‍ಗಳನ್ನು (ಎಲ್‍ಸಿಎಚ್) ಖರೀದಿಸುವ ಮತ್ತು ಅದರ ಸುಖೋಯ್-30 ಅನ್ನು ನವೀಕರಿಸುವ ಯೋಜನೆಗಳನ್ನು ಘೋಷಿಸಿದ ನಂತರದ ಗಮನಾರ್ಹ ಬೆಳವಣಿಗೆ ಎಂದು ಹೇಳಲಾಗುತ್ತಿದೆ. ಭಾರತೀಯ ಸೇನೆಯ ಜತೆಗೆ ಎಚ್‍ಎಎಲ್ ಮಾಡಿಕೊಂಡಿರುವ ಒಪ್ಪಂದಗಳು ಬಹುಕೋಟಿ ಮೌಲ್ಯದ್ದು ಎಂದು ಮೂಲಗಳು ತಿಳಿಸಿರುವುದಾಗಿ ಎಎನ್‍ಐ ವರದಿ ಮಾಡಿದೆ. +ಫ್ರೆಂಚ್ ಸಂಸ್ಥೆ ಸಫ್ರಾನ್ ಜತೆಗೆ ಜಂಟಿಯಾಗಿ ಹೆಲಿಕಾಪ್ಟರ್ ಎಂಜಿನ್‍ಗಳನ್ನು ವಿನ್ಯಾಸಗೊಳಿಸುವ ಮತ್ತು ಅಭಿವೃದ್ಧಿಪಡಿಸುವ ಕೆಲಸವನ್ನು ಎಚ್‍ಎಎಲ್ ಪ್ರಾರಂಭಿಸಲು ಸಿದ್ಧವಾಗಿದೆ. ಅದೇ ರೀತಿ, ಅಮೆರಿಕನ್ ಸಂಸ್ಥೆ ಜಿಇ ಏರೋಸ್ಪೇಸ್‍ನೊಂದಿಗೆ ದೇಶದಲ್ಲಿ ಫೈಟರ್ ಜೆಟ್ ಎಂಜಿನ್‍ಗಳ ಜಂಟಿ ಉತ್ಪಾದನೆಯ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆ ನಡೆಸಿದೆ. +ಭಾರತೀಯ ವಾಯುಪಡೆಯ ಫೈಟರ್ ಜೆಟ್‍ಗಳು ಮತ್ತು ತರಬೇತುದಾರರಿಗೆ ಅಗತ್ಯಗಳನ್ನು ಪೂರೈಸಲು ಎಲ್‍ಸಿಎ ಎಂಕೆ-1ಎ ಮತ್ತು ಹಿಂದೂಸ್ತಾನ್ ಟರ್ಬೊ ಟ್ರೈನರ್-40 (ಎಚ್‍ಟಿಟಿ-40) ವಿಮಾನಗಳಿಗಾಗಿ ನಾಸಿಕ್‍ನಲ್ಲಿ ಹೊಸ ಉತ್ಪಾದನಾ ಘಟಕವನ್ನು ಸಕ್ರಿಯಗೊಳಿಸಲು ಎಚ್‍ಎಎಲ್ ಸಿದ್ಧತೆ ನಡೆಸುತ್ತಿದೆ. +ಎಂಕೆ -1ಎ ತಯಾರಿಕೆ ಮಾಡುವ ಹೊಸ ಸ್ಥಾವರವು 2021 ರ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯಿಂದ 48,000 ಕೋಟಿ ರೂಪಾಯಿ ಮೌಲ್ಯದ ಆರ್ಡರ್ ಪಡೆದುಕೊಂಡಿದೆ. ಇದರಂತೆ ಎಚ್‍ಎಎಲ್, 83 ಎಂಕೆ 1ಎ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಬೇಕಾಗಿದೆ. +ಬಿಜೆಪಿಯಲ್ಲಿ ನಿಲ್ಲದ ಬಡಿದಾಟ: ದೆಹಲಿಯತ್ತ ಅತೃಪ್ತರ ಬಣ +ಇದಲ್ಲದೆ ಇನ್ನೂ 97 ಎಂಕೆ 1 ಎಎಸ್ ಖರೀದಿಗೆ ಭಾರತೀಯ ವಾಯುಪಡೆ ಯೋಜಿಸುತ್ತಿದೆ ಎಂದು ಅಕ್ಟೋಬರ್ ತಿಂಗಳಲ್ಲಿ ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಘೋಷಿಸಿದ್ದರು. ಈ ಒಪ್ಪಂದದ ಮೌಲ್ಯ 67,000 ಕೋಟಿ ರೂಪಾಯಿ. +ಎಚ್‍ಎಎಲ್ ಬೆಂಗಳೂರಿನಲ್ಲಿ ಪ್ರತಿ ವರ್ಷ 16 ಎಂಕೆ -1 ಎ ಲಘು ಸಮರ ವಿಮಾನ ನಿರ್ಮಿಸುವ ಸಾಮಥ್ರ್ಯವನ್ನು ಹೊಂದಿದೆ. ಅದೇ ರೀತಿ, ನಾಸಿಕ್ ಎಚ್‍ಎಎಲ್ 24 ಎಂಕೆ -1 ಎ ಲಘು ಸಮರ ವಿಮಾನ ಉತ್ಪಾದಿಸುವ ಸಾಮಥ್ರ್ಯವನ್ನು ಹೊಂದಿದೆ. +ಹೈದರಾಬಾದ್‍ಗೆ ತೆರಳಿದ ಮೋದಿ:ಇನ್ನು ಮೋದಿಯವರು ಎಚ್‍ಎಎಲ್ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಳ್ಳಲು ಹೈದರಾಬಾದ್‍ಗೆ ತೆರಳಿದರು. \ No newline at end of file diff --git a/eesanje/url_47_230_3.txt b/eesanje/url_47_230_3.txt new file mode 100644 index 0000000000000000000000000000000000000000..67548c62340f0fb1906213c31eed6dad75992e98 --- /dev/null +++ b/eesanje/url_47_230_3.txt @@ -0,0 +1,13 @@ +ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನ +ಜೈಪುರ,ನ.25- ಜಿದ್ದಾಜಿದ್ದಿನ ಕಣವಾಗಿರುವ ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆದ ಒಂದೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯವನ್ನು ಮತದಾರರ ಬರೆದಿದ್ದಾನೆ. +ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೂ ನಡೆದ ಮತದಾನಕ್ಕೆ ಈ ಬಾರಿ ಮತದಾರ ಹೆಚ್ಚಿನ ಉತ್ಸಾಹ ತೋರಿಸಿರುವುದು ವಿಶೇಷವಾಗಿದೆ. ಕೆಲವು ಕಡೆ ತಾಂತ್ರಿಕ ಕಾರಣಗಳು, ರಾಜಕೀಯ ಪಕ್ಷಗಳ ನಾಯಕರ ನಡುವೆ ಮಾತಿನ ಚಕಮಕಿ, ಮತಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದು, ಇಂತಹ ಸಣ್ಣಪುಟ್ಟ ಲೋಪಗಳನ್ನು ಹೊರತುಪಡಿಸಿದರೆ ಬಹುತೇಕ ಎಲ್ಲ ಶಾಂತಿಯುತ ಮತದಾನ ನಡೆದಿದೆ. +ರಾಜ್ಯದಾದ್ಯಂತ ಒಟ್ಟು 51,507 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ಅವರ ನಿಧನದ ನಂತರ ಶ್ರೀಗಂಗಾನಗರ ಜಿಲ್ಲೆಯ ಕರಣ್‍ಪುರ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿರುವುದರಿಂದ 199 ಸ್ಥಾನಗಳಲ್ಲಿ ಮತದಾನ ನಡೆಯಿತು. +ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲೆಟ್, ಮಾಜಿ ಮುಖ್ಯಮಂತ್ರಿ ವಸುಂಧರ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ಮೇಗರ್‍ವಾಗಲ್ ಸೇರಿದಂತೆ ಹಲವರು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. +ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಸಲು ಜೆಡಿಎಸ್ ಸಿದ್ದತೆ +ರಾಜ್ಯದಲ್ಲಿ ಎಲ್ಲ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಮತದಾರ ನಮ್ಮನ್ನೇ ಎರಡನೇ ಬಾರಿಗೆ ಅಧಿಕಾರಕ್ಕೆ ತರಲಿದ್ದಾನೆ ಎಂಬ ವಿಶ್ವಾಸವನ್ನು ಅಶೋಕ್ ಗೆಲ್ಹೋಟ್ ವ್ಯಕ್ತಪಡಿಸಿದರು.ಇತ್ತ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯೆಂದೇ ಬಿಂಬಿತವಾಗಿರು ವಸುಂಧರ ರಾಜೇ ಕಳೆದ ಐದು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಮಹಿಳೆಯರಿಗೆ ಸುರಕ್ಷತೆ ಇರದಿರುವುದು ಅತ್ಯಾಚಾರ, ಪ್ರಶ್ನೆಪತ್ರಿಕೆಗಳ ಸೋರಿಕೆ ಹೀಗೆ ಹಗರಣಗಳ ವಿರುದ್ದವೂ ಮತದಾರ ಆಕ್ರೋಶಗೊಂಡಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾನೆ ಎಂದು ಭರವಸೆ ವ್ಯಕ್ತಪಡಿಸಿದರು. +ಹಿಂದೆಂದೂ ಕಾಣದ ಜಿದ್ದಾಜಿದ್ದಿನ ರಣರಂಗವಾಗಿ ಮಾರ್ಪಟ್ಟಿರುವ ರಾಜಸ್ಥಾನದಲ್ಲಿ ಬಿಜೆಪಿಯಿಂದ ಸಂಸದರು ಕೂಡ ಈ ಬಾರಿ ಕಣಕ್ಕಿಳಿದಿರುವುದು ವಿಶೇಷವಾಗಿದೆ. ಕೇಂದ್ರದ ಮಾಜಿ ಸಚಿವರಾಗಿರುವ ಹಾಲಿ ಸಂಸದ ರಾಜವರ್ಧನ ಸಿಂಗ್ ರಾಥೋಡ್, ದಿವ್ಯಕುಮಾರಿ, ನರೇಂದ್ರಕುಮಾರ್ ಬಾಬ ಬಾಲಕಾನ್ , ಭಗೀರಥ್ ಚೌಧರಿ, ದೇವ್‍ಜೀ ಪಟೇಲ್ ಸೇರಿದಂತೆ ಹಾಲಿ ಸಂಸದರೇ ಸ್ಪರ್ಧೆ ಮಾಡಿರುವುದು ವಿಶೇಷ. +ಆಡಳಿತ ವಿರೋಧಿ ಅಲೆಯನ್ನು ತಡೆಗಟ್ಟಲು ಕಾಂಗ್ರೆಸ್ ಕೂಡ ಕೆಲ ಶಾಸಕರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು.199 ವಿಧಾನಸಭಾ ಕ್ಷೇತ್ರಗಳಲ್ಲಿ 5,26,90,146 ಮತದಾರರಿದ್ದಾರೆ. ಡಿಸೆಂಬರ್ 3 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಕಣದಲ್ಲಿರುವ 1,862 ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖ ಮುಖಗಳೆಂದರೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (ಸರ್ದಾರ್‍ಪುರ), ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ (ಟೋಂಕ್), ರಾಜ್ಯ ಪಿಸಿಸಿ ಮುಖ್ಯಸ್ಥ ಗೋವಿಂದ್ ಸಿಂಗ್ ದೋತಸ್ರಾ (ಲಚ್‍ಮಾಂಗಢ), ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ( ಝಲ್ರಾಪಟನ್), ಆರ್ ಲ್ಪಿ ಸಂಚಾಲಕ ಹನುಮಾನ್ ಬೇನಿವಾಲ್ (ಖಿನ್ವ್ಸರ್). +ರಾಜ್ಯಾದ್ಯಂತ 1.70 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 70,000 ರಾಜಸ್ಥಾನ ಪೊಲೀಸ್ ಸಿಬ್ಬಂದಿ, 18,000 ರಾಜಸ್ಥಾನ ಗೃಹರಕ್ಷಕರು, 2,000 ರಾಜಸ್ಥಾನ ಗಡಿ ಗೃಹರಕ್ಷಕರು, 15,000 ಇತರ ರಾಜ್ಯಗಳಿಂದ (ಉತ್ತರ ಪ್ರದೇಶ, ಗುಜರಾತ್, ಹರಿಯಾಣ, ಮಧ್ಯಪ್ರದೇಶ) ಗೃಹ ರಕ್ಷಕರು ಮತ್ತು 120 ಕಂಪನಿಗಳನ್ನು ದಿನಕ್ಕೆ ನಿಯೋಜಿಸಲಾಗಿದೆ. +ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪ್ರಮುಖ ಚಿರಂಜೀವಿ ಆರೋಗ್ಯ ವಿಮೆಯ ಅಡಿಯಲ್ಲಿ ವಿಮಾ ಮೊತ್ತವನ್ನು 25 ಲಕ್ಷದಿಂದ 50 ಲಕ್ಷಕ್ಕೆ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತು, 4 ಲಕ್ಷ ಸರ್ಕಾರಿ ಉದ್ಯೋಗಗಳು ಸೇರಿದಂತೆ 10 ಲಕ್ಷ ಉದ್ಯೋಗಗಳು ಮತ್ತು ಹಳೆಯ ಪಿಂಚಣಿ ಯೋಜನೆಯನ್ನು. ಮತ್ತೆ ಅಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವ ಬಗ್ಗೆಯೂ ಒತ್ತು ನೀಡಿದೆ. +ದೀರ್ಘ ಕಾಲದ ಗೆಳತಿಯ ವರಿಸಿದ ನವದೀಪ್ ಶೈನಿ +ಕಳೆದ 25 ವರ್ಷಗಳಿಂದ ರಾಜಸ್ಥಾನದಲ್ಲಿ ಯಾವುದೇ ರಾಜಕೀಯ ಪಕ್ಷವು ಎರಡನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡಿಲ್ಲದ ಕಾರಣ, ಈ ಬಾರಿ 1998ರಿಂದ ಐದು ವರ್ಷಗಳಿಗೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುತ್ತಿವೆ. ಆಡಳಿತಾರೂಢ ಕಾಂಗ್ರೆಸ್ ರಾಜಸ್ಥಾನದಲ್ಲಿ ತನ್ನ ಸರ್ಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷ ಬಿಜೆಪಿ ರಾಜ್ಯದಲ್ಲಿ ಅಕಾರ ಹಿಡಿಯುವತ್ತ ಕಣ್ಣಿಟ್ಟಿದೆ. \ No newline at end of file diff --git a/eesanje/url_47_230_4.txt b/eesanje/url_47_230_4.txt new file mode 100644 index 0000000000000000000000000000000000000000..7a866a480573c909d8a32d89933b9e47d6df7cc2 --- /dev/null +++ b/eesanje/url_47_230_4.txt @@ -0,0 +1,16 @@ +ಸುರಂಗ ಕಾರ್ಯಾಚರಣೆಗೆ ಮತ್ತೆ ಅಡ್ಡಿ +ಉತ್ತರಕಾಶಿ, ನ.25- ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಜೀವಂತವಾಗಿ ಹೊರತರುವ ರಕ್ಷಣಾ ಕಾರ್ಯಚರಣೆ ಮುಂದುವರಿದಿದ್ದು, ತಾಂತ್ರಿಕ ಕಾರಣಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ಮತ್ತಷ್ಟು ವಿಳಂಬವಾಗಿದೆ. +ಡ್ರಿಲ್ಲಿಂಗ್ ಮಷಿನ್‍ನಲ್ಲಿ ಪದೇ ಪದೇ ದೋಷ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಲ್ಲಿಸಲಾಯಿತು. ಡ್ರಿಲ್ಲಿಂಗ್ ಮಷಿನ್‍ನಲ್ಲಿ ಕಂಡು ಬಂದಿರುವ ತಾಂತ್ರಿಕ ಸಮಸ್ಯೆ ಪತ್ತೆ ಹಚ್ಚಿ ಸರಿಪಡಿಸಲು ವಿಶೇಷ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಯಂತ್ರ ಸರಿಪಡಿಸಿದ ಬಳಿಕ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. +ಕಳೆದ 13 ದಿನಗಳಿಂದ ಕಾರ್ಯಚರಣೆ ನಡೆಯುತ್ತಿದ್ದು, ಕಾರ್ಯಚರಣೆ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಕಡೆಯ ಹಂತದ ಡ್ರಿಲ್ಲಿಂಗ್ ವೇಳೆ ತಾಂತ್ರಿಕ ಸಮಸ್ಯೆ ಎದುರಾದ ಬಳಿಕ ಕಾರ್ಯಚರಣೆ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆಯಿಂದ ಮತ್ತೆ ಪುನಾರಂಭಗೊಂಡಿದ್ದು, ಈವರೆಗೂ ರಕ್ಷಣಾ ತಂಡವು 50 ಮೀಟರ್‍ಗಳವರೆಗೆ ಕೊರೆದಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಲು ಇನ್ನೂ 10 ಮೀಟರ್‍ಗಳು ಉಳಿದಿವೆ. ಇನ್ನು ಪೈಪ್‍ಗಳನ್ನು ಮೃದುವಾಗಿ ಇಳಿಸಲು 6 ಮೀಟರ್‍ಗಳ ಮೂರು ಪೈಪ್‍ಗಳನ್ನು ಬಳಸಲಾಗುತ್ತಿದೆ. +ಯಂತ್ರವು ಇಲ್ಲಿಯವರೆಗೆ 46.8 ಮೀಟರ್ ಕೊರೆದಿದ್ದು, ಒಟ್ಟು 57 ಮೀಟರ್ ಕೊರೆದು ಪೈಪ್‍ಗಳನ್ನು ಹಾಕುವ ಮೂಲಕ ಪ್ರತ್ಯೇಕ ದಾರಿಯನ್ನು ನಿರ್ಮಿಸಬೇಕಿದೆ. ಯಂತ್ರಕ್ಕೆ ಕಬ್ಬಿಣ ಕವಚ ಅಡ್ಡಿಯಾಗಿದ್ದು, ಅದನ್ನು ಕೊರೆಯಲಾಗದೆ ಯಂತ್ರ ಕೆಟ್ಟು ನಿಲ್ಲುತ್ತಿದೆ. +ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನಿರಂತರವಾಗಿ ಶ್ರಮ ಹಾಕಲಾಗುತ್ತಿದೆ. ಕೆಲವೊಮ್ಮೆ ಮೆಷಿನ್‍ಗಳು ಕೈಕೊಡುತ್ತಿವೆ. ಈ ಮಧ್ಯೆ ಸುರಂಗದೊಳಗೆ ಪೈಪ್‍ಗಳನ್ನು ಜೋಡಿಸಲು ವೆಲ್ಡಿಂಗ್ ಮಾಡುತ್ತಿರುವ ಹೊಗೆ, ಕಾರ್ಮಿಕರ ಮೂಗಿಗೆ ಬಡಿದಿದೆ. ಇದರಿಂದ ಕಾರ್ಮಿಕರಲ್ಲಿ ಸುರಂಗದಿಂದ ಹೊರಹೋಗುತ್ತೇವೆ ಎಂಬ ಆಶಾಭಾವ ಮೂಡಿದೆ. ಕಾರ್ಮಿಕರರಿಗೆ ವೆಲ್ಡಿಂಗ್ ವಾಸನೆ ತಲುಪಿರುವುದನ್ನು ವಾಕಿಟಾಕಿ ಮೂಲಕ ಕಾರ್ಮಿಕರು ಅಕಾರಿಗಳಿಗೆ ತಿಳಿಸಿದ್ದಾರೆ. +ಇನ್ನು ಮಾಧ್ಯಮಗಳು ರಕ್ಷಣಾ ಕಾರ್ಯದ ಸಮಯದ ಮಿತಿಯ ಬಗ್ಗೆ ಊಹಿಸಬೇಡಿ ಎಂದು ವಿಪತ್ತು ನಿರ್ವಹಣ ಪ್ರಾಧಿಕಾರ ಸಲಹೆ ನೀಡಿದೆ. ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವ ಸಮಯದ ಬಗ್ಗೆ ಊಹಿಸಬೇಡಿ. ಇದು ತಪ್ಪು ಅಭಿಪ್ರಾಯವನ್ನು ಸೃಷ್ಟಿಸುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಾಧ್ಯಮಗಳಿಗೆ ಸಲಹೆ ನೀಡಿದೆ. +ಇದನ್ನು 100% ನಿಖರತೆಯೊಂದಿಗೆ ಹೇಳಲು ಸಾಧ್ಯವಾಗಲಿಲ್ಲ. ಆದರೆ ಅವರು ನಿರೀಕ್ಷಿಸುತ್ತಿರುವುದು ಮುಂದಿನ 5.4 ಮೀಟರ್‍ಗಳಲ್ಲಿ ಗರ್ಡರ್‍ಗಳು, ಪೈಪ್‍ಗಳು ಮತ್ತು ಲೋಹದ ತಟ್ಟೆಗಳಂತಹ ನಿರಂತರ ಲೋಹದ ವಸ್ತುವಿಲ್ಲ ಎಂದು ಅವರು ಸೂಚಿಸಿದ್ದರು ಎಂದು ರಕ್ಷಣಾ ಕಾರ್ಯಾಚರಣೆ ನೋಡಲ್ ಅಧಿಕಾರಿಯಾಗಿರುವ ಉತ್ತರಾಖಂಡ ಕಾರ್ಯದರ್ಶಿ ನೀರಜ್ ಖೈರ್ವಾಲ್ ಹೇಳಿದ್ದಾರೆ. +ಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ +ಕಾರ್ಯಾಚರಣೆ ಮುಂದೂಡಿಕೆ ಡ್ರಿಲ್ ನಿಲ್ಲಿಸಿದ ನಂತರ, ಸಿಕ್ಕಿಬಿದ್ದ ಕಾರ್ಮಿಕರನ್ನು ಹಸ್ತಚಾಲಿತವಾಗಿ ಹತ್ತಿರಕ್ಕೆ ತರುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಆದರೆ ರಕ್ಷಣೆ ಅಸಾಧ್ಯವಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆಆಗರ್ ಯಂತ್ರವು ಮತ್ತೆ ಕೆಲವು ತೊಂದರೆ ಎದುರಿಸಿದೆ ಮತ್ತು ಅದಕ್ಕಾಗಿಯೇ ಅದನ್ನು ವಾಪಸ್ ತೆಗೆಯಲಾಗುತ್ತಿದೆ. ಏಕಕಾಲದಲ್ಲಿ ಸಿಕ್ಕಿಬಿದ್ದ ಕಾರ್ಮಿಕರನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ. +ಕಾರ್ಮಿಕರ ಪರಿಸ್ಥಿತಿ ಹೇಗಿದೆ: ಕಾರ್ಮಿಕರು 13 ದಿನಗಳಿಂದ ಸಿಕ್ಕಿಬಿದ್ದಿದ್ದರೂ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಸಮರ್ಪಕವಾಗಿ ಬಟ್ಟೆ ಧರಿಸಿದ್ದಾರೆ ಮತ್ತು ನಾವು ಅವರೊಂದಿಗೆ ಮಾತನಾಡುವಾಗ, ಅವರು ತಾವಾಗಿಯೇ ಹೊರಬರುವುದಾಗಿ ಹೇಳಿದ್ದಾರೆ. ಅದು ಅವರಲ್ಲಿರುವ ಮಾನಸಿಕ ಶಕ್ತಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಈ ಹಿಂದೆ ಅಂತಹ ಪರಿಸ್ಥಿತಿಯಲ್ಲಿದ್ದ ಒಬ್ಬ ಕಾರ್ಮಿಕರು ತಮ್ಮ ಸಹೋದ್ಯೋಗಿಗಳಿಗೆ ಅವರ ನೈತಿಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತಿದ್ದಾರೆ. ಕಾರ್ಮಿಕರಿಗೆ ಕತ್ತರಿಸಿದ ಹಣ್ಣುಗಳು, ಬಿಸಿ ಚಪಾತಿ, ದಾಲ್ ಮತ್ತು ಸಬ್ಜಿ ನೀಡಲಾಗುತ್ತಿದೆ. ಇವುಗಳನ್ನು ಬಾಟಲಿಗಳಲ್ಲಿ ತುಂಬಿ ಪೈಪ್ ಮೂಲಕ ತಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸರ್ಕಾರದ ತೀರ್ಮಾನವನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇನೆ : ಯತ್ನಾಳ್ +ಸುರಂಗದೊಳಗೆ ಸಿಲುಕಿರುವ ಕಾರ್ಮಿಕರಿಗೆ ಆಹಾರ ಪಾನೀಯ ತಯಾರಿಸಿ ರವಾನಿಸಲು ಏಳು ಮಂದಿಯನ್ನು ನೇಮಿಸಲಾಗಿದೆ. ಈ ಹಿಂದೆ ಪಫ್ ರೈಸ್ ಸರಬರಾಜು ಮಾಡಲಾಗಿತ್ತು. ಪ್ರತಿ 45 ನಿಮಿಷಗಳಿಗೊಮ್ಮೆ 4 ಇಂಚಿನ ಪೈಪ್ ಮೂಲಕ ಕಳುಹಿಸಲಾಗುತ್ತಿತ್ತು. ಹುರಿದ ಬೇಳೆ, ನೆನೆಸಿದ ಬೇಳೆ, ಬಾದಾಮಿ, ಗೋಡಂಬಿ, ಒಣದ್ರಾಕ್ಷಿ ಮತ್ತು ಪಾಪ್‍ಕಾರ್ನ್ ಮತ್ತು ಕಡಲೆಕಾಯಿಗಳನ್ನು ನೀಡಲಾಗುತ್ತಿತ್ತು. ಈಗ ಆರು ಇಂಚಿನ ಪೈಪ್ ಮೂಲಕ ಕಾರ್ಮಿಕರಿಗೆ ಬೇಯಿಸಿದ ಆಹಾರ ನೀಡಲಾಗುತ್ತಿದೆ. ಇನ್ನು ಉತ್ತರಕಾಶಿಯಲ್ಲಿ ನಡೆಯುತ್ತಿರುವ ಆಪರೇಷನ್‍ಗಾಗಿ ಬೆಂಗಳೂರಿನ ತಂಡವು ಸೇರಿಕೊಂಡಿದೆ. +ಸ್ಕ್ವಾಡ್ರನ್ ಇನ್ರಾದಿಂದ ಆರು ಸುರಂಗ ಗಣಿಗಾರಿಕೆ ತಜ್ಞ ಎಂಜಿನಿಯರ್‍ಗಳ ತಂಡ ತೆರಳಿದೆ. ತಂಡವು ಡ್ರೋನ್ ಕ್ಯಾಮೆರಾಗಳ ಸಹಾಯದಿಂದ ಸುರಂಗದೊಳಗಿನ ಪರಿಸ್ಥಿತಿಗಳನ್ನು ರೆಕಾರ್ಡ್ ಮಾಡಿ ರಕ್ಷಣಾ ತಂಡದ ಜೊತೆಗೆ ಚಿಕೊಳ್ಳಲಿದೆ. ಮತ್ತು ಕೃತಕ ಬುದ್ದಿಮತ್ತೆ ಸಹಾಯದಿಂದ ಡೇಟಾವನ್ನು ಸಂಗ್ರಹಿಸಿದೆ. ಈ ಡೇಟಾ ರಕ್ಷಣಾ ಕಾರ್ಯಾಚರಣೆಗೆ ಸಾಕಷ್ಟು ಸಹಾಯ ಮಾಡಿದೆ. +ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿಗೆ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಟನಲ್ ಒಳಗೆ ಇರುವ ಕಾರ್ಮಿಕರ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿರುವ ರಕ್ಷಣಾ ತಂಡಗಳ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಿನ್ನೆಯಷ್ಟೆ ಸಿಎಂ ಧಾಮಿ ಟನಲ್ ಒಳಗಿರುವ ಕಾರ್ಮಿಕರ ಜೊತೆಗೆ ಮಾತುಕತೆ ನಡೆಸಿ ಸಾಧ್ಯವಾದಷ್ಟು ಬೇಗ ಎಲ್ಲರನ್ನು ಹೊರ ಕರೆತರುವ ಭರವಸೆ ನೀಡಿದ್ದಾರೆ. +ನ.12ರಂದು ಸುರಂಗ ಕುಸಿದಿದ್ದು ಕಳೆದ 14 ದಿನಗಳ ಕಾರ್ಮಿಕರು ಟನಲ್ ಒಳಗೆ ಸಿಲುಕಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ, ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ. \ No newline at end of file diff --git a/eesanje/url_47_230_5.txt b/eesanje/url_47_230_5.txt new file mode 100644 index 0000000000000000000000000000000000000000..946ab9312ca337562cd339a205b29b93cf62e281 --- /dev/null +++ b/eesanje/url_47_230_5.txt @@ -0,0 +1,8 @@ +ರೇಷ್ಮೆ ಹುಳು ಕೊಲ್ಲದೆ ರೇಷ್ಮೆ ನೂಲು ತಯಾರಿಕೆಗೆ ಮುಂದಾದ ಒಡಿಶಾ +ಭುವನೇಶ್ವರ, ನ.24 (ಪಿಟಿಐ) ಸಾಂಪ್ರದಾಯಿಕ ಪಟ್ಟಾ ಸೀರೆಗಳನ್ನು ತಯಾರಿಸಲು ರೇಷ್ಮೆ ಹುಳುಗಳನ್ನು ಕೊಲ್ಲದೆ ರೇಷ್ಮೆಯನ್ನು ಹೊರತೆಗೆಯುವ ಹೊಸ ವಿಧಾನವನ್ನು ಒಡಿಶಾ ಅಳವಡಿಸಿಕೊಂಡಿದೆ ಎಂದು ಕೈಮಗ್ಗ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ರೇಷ್ಮೆ ಹುಳುಗಳನ್ನು ಕೊಲ್ಲುವ ಬದಲು ಅನುಕಂಪವು ಕಾರ್ಯವಿಧಾನದಲ್ಲಿ ತೊಡಗಿಸಿಕೊಂಡಿರುವುದರಿಂದ ಹೊಸ ರೇಷ್ಮೆಗೆ ಕರುಣಾ ಸಿಲ್ಕ ಎಂದು ಹೆಸರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, 10ರಿಂದ 20 ಸಾವಿರ ರೇಷ್ಮೆ ಹುಳುಗಳನ್ನು ಕೊಲ್ಲುವ ಮೂಲಕ ವಿಶಿಷ್ಟವಾದ ಮಲ್ಬೆರಿ ರೇಷ್ಮೆ ಸೀರೆಯನ್ನು ಉತ್ಪಾದಿಸಲಾಗುತ್ತದೆ. ಅದೇ ರೀತಿ ಸಾಂಪ್ರದಾಯಿಕ ಪ್ರಕ್ರಿಯೆಯಲ್ಲಿ 5ರಿಂದ 7 ಸಾವಿರ ರೇಷ್ಮೆ ಹುಳುಗಳು ತಾಸರ್ ರೇಷ್ಮೆ ಸೀರೆ ತಯಾರಿಕೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತವೆ. +ಕೈಮಗ್ಗ, ಜವಳಿ ಮತ್ತು ಕರಕುಶಲ ಇಲಾಖೆ ನಿರ್ದೇಶಕ ಶೋವನ್ ಕೃಷ್ಣ ಸಾಹು ಮಾತನಾಡಿ, ನಮ್ಮ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಯಾವಾಗಲೂ ಅಹಿಂಸೆಯ ಕಲ್ಪನೆಯನ್ನು ಉತ್ತೇಜಿಸುತ್ತಾರೆ ಮತ್ತು ಎಲ್ಲಾ ಉತ್ಪಾದನಾ ಪ್ರಕ್ರಿಯೆಗಳು ಒಂದೇ ರೀತಿ ನಡೆಯಬೇಕು ಎಂದು ಬಯಸುತ್ತಾರೆ. ಆದ್ದರಿಂದ ನಾವು ಸಾಂಪ್ರದಾಯಿಕ ವಿಧಾನವಾದ ಫಿಲಾಮೆಂಟ್ ಸಿಲ್ಕ ಅನ್ನು ಮುರಿದು ಸಹಾನುಭೂತಿಯನ್ನು ಉತ್ತೇಜಿಸಲು ಬಯಸಿದ್ದೇವೆ. ಇದು ರೇಷ್ಮೆ ಹುಳುಗಳನ್ನು ಕೊಲ್ಲುತ್ತದೆ. ಹೊಸ ಪ್ರಕ್ರಿಯೆಯಲ್ಲಿ, ಅದರ ಜೀವನ ಚಕ್ರವನ್ನು ಗೌರವಿಸುವ ಪತಂಗವನ್ನು ನಾವು ಬಿಡುತ್ತೇವೆ ಎಂದಿದ್ದಾರೆ. +ಪತಂಗವು ಕೋಕೂನ್‍ನಿಂದ ಹಾರಿಹೋದಾಗ ಅದು ಫೈಬರ್ ಅನ್ನು ಛಿದ್ರಗೊಳಿಸುತ್ತದೆ. ಕೆಟ್ಟ ನೂಲುವ ಪ್ರಕ್ರಿಯೆ ಮೂಲಕ ನಾವು ರೇಷ್ಮೆ ನಾರನ್ನು ಬಣ್ಣ ಮತ್ತು ನೇಯ್ಗೆಗೆ ಸಿದ್ಧಗೊಳಿಸುತ್ತೇವೆ. ಒಡಿಶಾ ಅಳವಡಿಸಿಕೊಂಡ ಈ ಮಾನವೀಯ ಪ್ರಕ್ರಿಯೆಯು ಉದ್ಯಮದಲ್ಲಿ ಮೆಚ್ಚುಗೆ ಪಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ. +ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ +ಕರುಣಾ ಸಿಲ್ಕ ಸಂಪ್ರದಾಯವನ್ನು ತಂತ್ರಜ್ಞಾನದೊಂದಿಗೆ ಸಂಯೋಜಿಸುವುದರ ಜೊತೆಗೆ ಸಹಾನುಭೂತಿಯನ್ನು ಬೆಳೆಸುವುದರೊಂದಿಗೆ, ಒಡಿಶಾ ಸುಸ್ಥಿರ ಶೈಲಿಯಲ್ಲಿ ಹೊಸ ಮಾನದಂಡವನ್ನು ಹೊಂದಿಸುತ್ತಿದೆ ಎಂದು ನಿರ್ದೇಶಕರು ಹೇಳಿದ್ದಾರೆ. +ರೇಷ್ಮೆ ಹುಳುಗಳನ್ನು ಉಳಿಸುವ ಒಡಿಶಾದ ಹೊಸ ಉಪಕ್ರಮವು ಭಾರತ ಅಂತರರಾಷ್ಟ್ರೀಯ ವ್ಯಾಪಾರ ಮೇಳ (ಐಐಟಿಎಫï) ಪ್ರಗತಿ ಮೈದಾನ, ನವದೆಹಲಿಯಲ್ಲಿ ಸಂದರ್ಶಕರ ಗಮನ ಸೆಳೆಯುತ್ತಿದೆ ಎಂದು ಸಾಹು ಹೇಳಿದರು. \ No newline at end of file diff --git a/eesanje/url_47_230_6.txt b/eesanje/url_47_230_6.txt new file mode 100644 index 0000000000000000000000000000000000000000..08d5c803a55fab9406cdd49ae8c346a37bc819f3 --- /dev/null +++ b/eesanje/url_47_230_6.txt @@ -0,0 +1,6 @@ +ಸುರಂಗದಲ್ಲಿ ಸಿಲುಕಿಕೊಂಡಿರುವ ರಕ್ಷಣೆಗೆ ರೆಡಿಯಾಯ್ತು ಸ್ಟ್ರೇಚರ್ +ಡೆಹ್ರಾಡೂನ್,ನ.24- ಉತ್ತರಾಖಂಡ್‍ನಲ್ಲಿ ಕುಸಿದ ಸುರಂಗದಡಿಯಲ್ಲಿ 13 ದಿನಗಳಿಂದ ಸಿಲುಕಿರುವ ನಲವತ್ತೊಂದು ಕಾರ್ಮಿಕರನ್ನು ವೀಲ್ಡ್ ಸ್ಟ್ರೆಚರ್‍ಗಳನ್ನು ಬಳಸಿ ದೊಡ್ಡ ಪೈಪ್ ಮೂಲಕ ಹೊರತೆಗೆಯಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಎನ್‍ಡಿಆರ್‍ಎಫ್ ತಿಳಿಸಿದೆ. +ಇದೇ ಸಂದರ್ಭದಲ್ಲಿ ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರನ್ನು ಹೊರತೆಗೆಯಲು ಬಳಸುವ ಸ್ಟ್ರೆಚರ್‍ಗಳ ಬಳಕೆಯನ್ನು ಪ್ರದರ್ಶಿಸಲಾಯಿತು. ಎನ್‍ಡಿಆರ್‍ಎಫ್ ಸಿಬ್ಬಂದಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ವೆಲ್ಡಿ ಪೈಪ್‍ನ ಲೋಹದ ಕೆಳಭಾಗವನ್ನು ಅವರ ಕೈಕಾಲುಗಳು ಸ್ಕ್ರ್ಯಾಪ್ ಮಾಡುವುದನ್ನು ತಡೆಯಲು ಪ್ರತಿಯೊಬ್ಬ ಕೆಲಸಗಾರನನ್ನು ಸ್ಟ್ರೆಚರ್‍ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯ +ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಗಳು ಅಂತಿಮ ಹಂತವನ್ನು ಪ್ರವೇಶಿಸಿವೆ. ಕಳೆದ ವಾರದಲ್ಲಿ, ಸ್ಥಳಾಕೃತಿ ಮತ್ತು ಪ್ರದೇಶದಲ್ಲಿನ ಬಂಡೆಗಳ ಸ್ವರೂಪ ಸೇರಿದಂತೆ ಸವಾಲುಗಳ ಕಾರಣ ಕಾರ್ಮಿಕರನ್ನು ರಕ್ಷಿಸುವ ಪುನರಾವರ್ತಿತ ಪ್ರಯತ್ನಗಳು ವಿಫಲವಾಗಿವೆ. ಕಳೆದ ವಾರ ಬೀಳುವ ಅವಶೇಷಗಳು ಮತ್ತು ಭೂಕುಸಿತಗಳಿಂದ ಪ್ರಯತ್ನಗಳು ಜಟಿಲವಾಗಿವೆ. +ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‍ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ, ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ. \ No newline at end of file diff --git a/eesanje/url_47_230_7.txt b/eesanje/url_47_230_7.txt new file mode 100644 index 0000000000000000000000000000000000000000..4c425988b360a11c3f58f37da776e963bd0a1644 --- /dev/null +++ b/eesanje/url_47_230_7.txt @@ -0,0 +1,8 @@ +ಒಂದು ಮಿಲಿಯನ್ ಡಾಲರ್ ಕೊಡದಿದ್ದರೆ ಮುಂಬೈ ವಿಮಾನ ನಿಲ್ದಾಣ ಸ್ಫೋಟಿಸುತ್ತೇವೆ : ಬೆದರಿಕೆಯ ಇಮೇಲ್ +ಮುಂಬೈ, ನ.24 (ಪಿಟಿಐ) ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಸ್ಪೋಟಿಸುವ ಬೆದರಿಕೆಯ ಇಮೇಲ್ ಬಂದಿದ್ದು, ಸ್ಪೋಟವನ್ನು ತಡೆಯಲು ಬಿಟ್‍ಕಾಯಿನ್‍ನಲ್ಲಿ ಒಂದು ಮಿಲಿಯನ್ ಡಾಲರ್‍ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಬೆದರಿಕೆ ಇಮೇಲ್ ಬಂದಿದ್ದು, ಅದರ ನಂತರ ಸಹರ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ +ವಿಮಾನ ನಿಲ್ದಾಣವನ್ನು ಮುಂಬೈ ಇಂಟರ್‍ನ್ಯಾಷನಲ್ ಏಪೆರ್ಪೋರ್ಟ್ ಲಿಮಿಟೆಡ್ ನಿರ್ವಹಿಸುತ್ತದೆ. ನಿನ್ನೆ ವಿಮಾನ ನಿಲ್ದಾಣದ ಪ್ರತಿಕ್ರಿಯೆ ಇನ್‍ಬಾಕ್ಸ್‍ನಲ್ಲಿ ಇಮೇಲ್ ಸ್ವೀಕರಿಸಲಾಗಿದೆ. ಅದನ್ನು ಕಳುಹಿಸುವವರು 48 ಗಂಟೆಗಳ ಒಳಗೆ ಬಿಟ್‍ಕಾಯಿನ್‍ನಲ್ಲಿ 1 ಮಿಲಿಯನ್ ಡಾಲರ್ ಹಣ ಹಾಕಬೇಕು. ಇಲ್ಲದಿದ್ದರೆ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಸ್ಪೋಟ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ. +ಇಮೇಲ, ಇದು ನಿಮ್ಮ ವಿಮಾನ ನಿಲ್ದಾಣಕ್ಕೆ ಅಂತಿಮ ಎಚ್ಚರಿಕೆಯಾಗಿದೆ. ಬಿಟ್‍ಕಾಯಿನ್‍ನಲ್ಲಿರುವ ಒಂದು ಮಿಲಿಯನ್ ಯುಎಸ್ ಡಾಲರ್‍ಗಳನ್ನು ವಿಳಾಸಕ್ಕೆ ವರ್ಗಾಯಿಸದ ಹೊರತು ನಾವು 48 ಗಂಟೆಗಳಲ್ಲಿ ಟರ್ಮಿನಲ್ 2 ಅನ್ನು ಸ್ಪೋಟಿಸುತ್ತೇವೆ. ಮತ್ತೊಂದು ಎಚ್ಚರಿಕೆಯು 24 ಗಂಟೆಗಳ ನಂತರ ಬಂದಿದೆ. +ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ವಿನಾಕಾರಣ ತಡೆಹಿಡಿಯುವಂತಿಲ್ಲ : ಸುಪ್ರೀಂ +ಇಮೇಲ್ ಸ್ವೀಕರಿಸಿದ ನಂತರ, ಮುಂಬೈ ವಿಮಾನ ನಿಲ್ದಾಣದ ಎಂಐಎಎಲ್‍ನ ಗುಣಮಟ್ಟ ಮತ್ತು ಗ್ರಾಹಕ ಆರೈಕೆ ವಿಭಾಗದ ಕಾರ್ಯನಿರ್ವಾಹಕರು ಸಹರ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರು ಮತ್ತು ಅಪರಿಚಿತ ಕಳುಹಿಸುವವರ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_230_8.txt b/eesanje/url_47_230_8.txt new file mode 100644 index 0000000000000000000000000000000000000000..6cda1bb7a45d96bccd7d5bb26a59b88696c6e1d2 --- /dev/null +++ b/eesanje/url_47_230_8.txt @@ -0,0 +1,11 @@ +ರಾಹುಲ್ ವಿರುದ್ಧ ಹರಿಹಾಯ್ದ ಮಾಯಾವತಿ +ಹೈದರಾಬಾದ್, ನ.24 (ಪಿಟಿಐ) – ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ಈಗ ಜಾತಿ ಆಧಾರಿತ ಜನಗಣತಿಗೆ ಬೊಬ್ಬೆ ಹೊಡೆಯುತ್ತಿದ್ದಾರೆ ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಒಬಿಸಿಗಳ ಬೇಡಿಕೆಯನ್ನು ಒಪ್ಪಿಕೊಳ್ಳಲಿಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. +ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕಾರವಾದ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಕೇಂದ್ರದ ಎನ್‍ಡಿಎ ಸರ್ಕಾರ ಎಸ್‍ಸಿ, ಎಸ್‍ಟಿ ಮತ್ತು ಒಬಿಸಿಗಳಿಗೆ ಪ್ರತ್ಯೇಕ ಕೋಟಾ ನೀಡಿಲ್ಲ ಎಂದು ಅವರು ಟೀಕಿಸಿದರು. ತೆಲಂಗಾಣದ ಪೆದ್ದಪಲ್ಲಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಾಯಾವತಿ, ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ ಸುದೀರ್ಘ ಅವಧಿಗೆ ಅಧಿಕಾರದಲ್ಲಿದ್ದ ಕಾಂಗ್ರೆಸ್‍ನಿಂದ ಹೆಚ್ಚಿನ ಹಿಂದುಳಿದ ವರ್ಗಗಳವರು ಎಸ್‍ಸಿ ಮತ್ತು ಎಸ್‍ಟಿಗಳಂತಹ ಮೀಸಲಾತಿ ಪ್ರಯೋಜನಗಳನ್ನು ಬಯಸಿದ್ದರು ಎಂದು ನೆನಪಿಸಿಕೊಂಡರು. +ಎಸ್‍ಸಿ, ಎಸ್‍ಟಿ, ಒಬಿಸಿಗಳ ಮತಗಳನ್ನು ಪಡೆಯುವ ಉದ್ದೇಶದಿಂದ ಕಾಂಗ್ರೆಸ್‍ನ ಹಿರಿಯ ನಾಯಕರೊಬ್ಬರು ತಮ್ಮ ಚುನಾವಣಾ ಸಭೆಗಳಲ್ಲಿ ಜಾತಿ ಗಣತಿ ನಡೆಸಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. +ಹಿಂದೂ ಧರ್ಮದ ಜಾಗೃತಿಗಾಗಿ ಮಿಲಿಯನ್ ಡಾಲರ್ ಖರ್ಚು ಮಾಡುತ್ತಿರುವ ವೈದ್ಯಈ ಜನರು ಜಾತಿ ಜನಗಣತಿಯ ಬಗ್ಗೆ ಮಾತನಾಡುತ್ತಿದ್ದಾರೆ (ಈಗ). ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ದೀರ್ಘಕಾಲ ಅಧಿಕಾರದಲ್ಲಿದ್ದಾಗ, ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಜನರು ಎಸ್‍ಸಿ ಮತ್ತು ಎಸ್‍ಟಿಯಂತೆಯೇ ಅವರಿಗೆ ಮೀಸಲಾತಿಗೆ ಒತ್ತಾಯಿಸಿದ್ದರು ಎಂದು ಅವರು ಹೇಳಿದರು. +ಒಬಿಸಿಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡುವ ಕಾಕಾ ಕಾಲೇಲ್ಕರ್ ಆಯೋಗ ಮತ್ತು ಮಂಡಲ್ ಆಯೋಗದ ವರದಿಗಳನ್ನು ಉಲ್ಲೇಖಿಸಿದ ಮಾಯಾವತಿ, ಅವುಗಳನ್ನು ಕಾಂಗ್ರೆಸ್ ಜಾರಿಗೆ ತಂದಿಲ್ಲ ಎಂದು ಹೇಳಿದರು. +ತಮ್ಮ ಪಕ್ಷವು ಮಂಡಲ್ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಆಂದೋಲನಗಳನ್ನು ನಡೆಸಿತು ಮತ್ತು ಕೇಂದ್ರದಲ್ಲಿ ಆಗಿನ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹೇರಿತ್ತು ಎಂದು ಬಿಎಸ್ಪಿ ನಾಯಕಿ ನೆನಪಿಸಿಕೊಂಡರು. ಆದರೆ, ಹಳೆಯ ಪಕ್ಷವು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಅವರು ಹೇಳಿದರು. +ಮಂಡಲ್ ಆಯೋಗದ ವರದಿಯನ್ನು ಆಗಿನ ವಿಪಿ ಸಿಂಗ್ ಸರ್ಕಾರವು ಬಿಎಸ್‍ಪಿಯ ಪ್ರಯತ್ನದಿಂದ ಜಾರಿಗೆ ತಂದಿದೆಯೇ ಹೊರತು ಕಾಂಗ್ರೆಸ್‍ನಿಂದಲ್ಲ ಎಂಬುದನ್ನು ಒಬಿಸಿ ಸಮುದಾಯದ ಜನರು ತಿಳಿದುಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. +ಕೇಂದ್ರ ಸರ್ಕಾರ ಮತ್ತು ಬಹುತೇಕ ರಾಜ್ಯ ಸರ್ಕಾರಗಳು ದುರ್ಬಲ ವರ್ಗದವರಿಗೆ ದಬ್ಬಾಳಿಕೆಯಿಂದ ಮುಕ್ತಿ ನೀಡಲು ಉದ್ದೇಶಿಸಿರುವ ಕಾನೂನುಗಳನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದು ಮಾಯಾವತಿ ಪ್ರತಿಪಾದಿಸಿದರು. +ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ +ಹಿರಿಯ ರಾಜಕಾರಣಿ ತೆಲಂಗಾಣದ ಬಿಆರ್‍ಎಸ್ ಸರ್ಕಾರವು ದಲಿತ ವಿರೋ¿ಎಂದು ಆರೋಪಿಸಿದರು, ರಾಜ್ಯದಲ್ಲಿ ಬಿಎಸ್‍ಪಿ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಉಲ್ಲೇಖಿಸಿ. ಅದೇ ರೀತಿ, ಮುಸ್ಲಿಂ ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಜನರ ಸ್ಥಿತಿಯು ದೇಶದಲ್ಲಿ ಉತ್ತಮವಾಗಿಲ್ಲ ಎಂದು ಅವರು ಆರೋಪಿಸಿದರು. ಮೇಲ್ವರ್ಗದ ಬಡವರ ಆರ್ಥಿಕ ಸ್ಥಿತಿಯು ದೇಶದಲ್ಲಿ ಇನ್ನೂ ಕರುಣಾಜನಕ ಎಂದು ಅವರು ಹೇಳಿದರು. \ No newline at end of file diff --git a/eesanje/url_47_230_9.txt b/eesanje/url_47_230_9.txt new file mode 100644 index 0000000000000000000000000000000000000000..d0e84cb287f23856f2fe1b4277637b1104a9b22a --- /dev/null +++ b/eesanje/url_47_230_9.txt @@ -0,0 +1,7 @@ +ಗಡಿಯಲ್ಲಿ ಮದ್ದುಗುಂಡುಗಳಿದ್ದ ಪ್ಯಾಕೆಟ್ ಪತ್ತೆ +ಜಮ್ಮು, ನ.24 (ಪಿಟಿಐ) ಜಮ್ಮುವಿನ ಅಖ್ನೂರ್ ಸೆಕ್ಟರ್‍ನ ಗಡಿ ನಿಯಂತ್ರಣ ರೇಖೆಯಲ್ಲಿ ಕ್ವಾಡ್‌ಕಾಪ್ಟರ್‌ನಿಂದ ಬಿದ್ದ ಒಂಬತ್ತು ಗ್ರೆನೇಡ್‍ಗಳು ಮತ್ತು ಐಇಡಿ ಸೇರಿದಂತೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಪೋಟಕಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಮುಂಜಾನೆ ಎಲ್‍ಒಸಿ ಬಳಿಯ ಪಲನ್‍ವಾಲಾದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾದ ಪೆಟ್ಟಿಗೆಯಲ್ಲಿ ಎಲ್ಲವನ್ನೂ ಪ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಕ್ಸ್ ತೆರೆಯುವ ಮೊದಲು ಬಾಂಬ್ ನಿಷ್ಕ್ರಿಯ ದಳದಿಂದ ಸ್ಕ್ಯಾನ್ ಮಾಡಲಾಯಿತು. +ಅದನ್ನು ತೆರೆದಾಗ ಅದರಲ್ಲಿ ಸುಧಾರಿತ ಸ್ಪೋಟಕ ಸಾಧನ ಅಥವಾ ಐಇಡಿ, ಟರ್ಕಿ ನಿರ್ಮಿತ ಪಿಸ್ತೂಲ್, ಎರಡು ಮ್ಯಾಗಜೀನ್‍ಗಳು, 38 ಸುತ್ತು ಮದ್ದುಗುಂಡುಗಳು ಮತ್ತು ಒಂಬತ್ತು ಗ್ರೆನೇಡ್‍ಗಳು ಇರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ನನ್ನ ಕಲಾಸೇವೆ ಅತ್ಯಂತ ಕಿರಿದು, ಕರುನಾಡ ಪ್ರೀತಿ ಅತ್ಯಂತ ಹಿರಿದು : ಯಶ್ +ಲೌಕಿಖಾಡ್ ಸೇತುವೆಯ ಸಮೀಪದಲ್ಲಿ ಪೊಲೀಸರು ಮತ್ತು ಸೇನೆಯ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳಿಂದ ಕ್ವಾಡ್‍ಕಾಪ್ಟರ್ ತರಹದ ಶಬ್ದದ ವರದಿಗಳ ಆಧಾರದ ಮೇಲೆ ಪ್ರಾರಂಭಿಸಲಾಯಿತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. +ಸುಮಾರು 7 ಗಂಟೆಗೆ, ಹುಡುಕಾಟ ತಂಡವು ಡ್ರಾಪಿಂಗ್ ಸ್ಟ್ರಿಂಗ್ ಜೊತೆಗೆ ಪ್ಯಾಕೇಜ್ ಅನ್ನು ಕಂಡುಕೊಂಡಿದೆ ಎಂದು ಅವರು ಹೇಳಿದರು. ಇದು ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಅಖ್ನೂರ್ ಸೆಕ್ಟರ್‍ಗಳಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿರುವ ಅಖ್ನೂರ್ ಸೆಕ್ಟರ್‍ನಲ್ಲಿ ಕ್ವಾಡ್‍ಕಾಪ್ರ್ಟ-ಡ್ರಾಪ್ ಮಾಡಲಾದ ಯುದ್ಧದಂತಹ ಮಳಿಗೆಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಖೌರ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. diff --git a/eesanje/url_47_231_1.txt b/eesanje/url_47_231_1.txt new file mode 100644 index 0000000000000000000000000000000000000000..2f391edb04537d7d7340773c5706441c4074f078 --- /dev/null +++ b/eesanje/url_47_231_1.txt @@ -0,0 +1,14 @@ +ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ +ಉತ್ತರಕಾಶಿ,ನ.23- ನಿರ್ಮಾಣ ಹಂತದದಲ್ಲಿದ್ದ ಉತ್ತರಕಾಶಿ ಸುರಂಗ ದಿಢೀರ್ ಕುಸಿತ ಕಂಡ ಪರಿಣಾಮ ಅದರ ಅವಶೇಷಗಳಡಿ ಸಿಲುಕಿದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ತರಲು ಕಳೆದ 11 ದಿನಗಳಿಂದ ನಿರಂತರವಾಗಿ ಶ್ರಮಿಸಲಾಗುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ಶೀಘ್ರವೇ ತಲುಪುವ ಪ್ರಯತ್ನಗಳು ಭರದಿಂದ ಸಾಗುತ್ತಿದ್ದು, ಕೊನೆಯ ಪೈಪ್‍ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ. +ರಕ್ಷಣಾ ಕಾರ್ಯವನ್ನು ವೇಗಗೊಳಿಸಲು ಸಹಾಯ ಮಾಡಲು ದೆಹಲಿಯಿಂದ ಏಳು ತಜ್ಞರ ತಂಡವು ಸ್ಥಳಕ್ಕೆ ತಲುಪಿದೆ. ಈ ಮೂಲಕ ರಕ್ಷಣಾ ಕಾರ್ಯವನ್ನು ಮತ್ತಷ್ಟು ಸುಗುಮಗೊಳಿಸಲು ಭಾರೀ ಶ್ರಮ ವಹಿಸಲಾಗುತ್ತಿದೆ. ಒಳಗೆ ಸಿಲುಕಿರುವ 41 ಕಾರ್ಮಿಕರನ್ನು ತಲುಪಲು ಅವರು ಈಗ ಹೆಚ್ಚುವರಿ 12 ಮೀಟರ್ ಕೊರೆಯಬೇಕಿದೆ. ಕಾರ್ಮಿಕರು ಪೈಪ್ ಮೂಲಕ ಹೊರಬರುವುದರಿಂದ ಅವರಿಗೆ ತಕ್ಷಣದ ವೈದ್ಯಕೀಯ ಆರೈಕೆ ನೀಡಲು ಆರೋಗ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. +ಕಾರ್ಮಿಕರನ್ನು ಸ್ಥಳಾಂತರಿಸಿದ ನಂತರ ತಕ್ಷಣವೇ ವೈದ್ಯಕೀಯ ಸೇವೆಯನ್ನು ಒದಗಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಯಂತ್ರಣ ಕೊಠಡಿಯಲ್ಲಿ ಎಂಟು ಹಾಸಿಗೆಗಳ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಸ್ಥಳದಲ್ಲಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಆಂಬ್ಯುಲೆನ್ಸ್‍ಗಳು ಮತ್ತು ಹೆಲಿಕಾಪ್ಟರ್‍ಗಳು ತ್ವರಿತ ವೈದ್ಯಕೀಯ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಿದ್ಧವಾಗಿವೆ. +ಅವಶೇಷಗಳ ಮೂಲಕ 800 ಎಂಎಂ ವ್ಯಾಸದ ಉಕ್ಕಿನ ಪೈಪ್‍ಗಳನ್ನು ಕೊರೆಯಲು ತಡರಾತ್ರಿ ಕೆಲವು ಕಬ್ಬಿಣದ ರಾಡ್‍ಗಳು ಆಗರ್ ಯಂತ್ರಕ್ಕೆ ಅಡ್ಡಿಪಡಿಸಿದಾಗ ಸಣ್ಣ ಅಡಚಣೆಯಾಗಿದೆ. ಕಳೆದ ಒಂದು ಗಂಟೆಯಲ್ಲಿ ಆರು ಮೀಟರ್ ಉದ್ದ ಕೊರೆಯಲಾಗಿದೆ ಎಂದು ನಿಮಗೆ ತಿಳಿಸಲು ನಮಗೆ ತುಂಬಾ ಸಂತೋಷವಾಗಿದೆ. +ಆಶಾದಾಯಕವಾಗಿ, ಮುಂದಿನ ಎರಡು ಮೂರು ಗಂಟೆಗಳು ಮುಂದಿನ ಕಾರ್ಯ ನಡೆಸಲಾಗುವುದು, ನಾವು ರಾತ್ರಿ 8 ಗಂಟೆಗೆ ಮತ್ತೆ ಒಟ್ಟುಗೂಡಿದಾಗ, ನಿಮ್ಮೊಂದಿಗೆ ಹಂಚಿಕೊಳ್ಳಲು ನಮಗೆ ಅಂತಹದ್ದೇ ಒಳ್ಳೆಯ ಸುದ್ದಿ ಇದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ಕಚೇರಿಯ ಮಾಜಿ ಸಲಹೆಗಾರರಾದ ಭಾಸ್ಕರ್ ಖುಲ್ಬೆ ಹೇಳಿದ್ದಾರೆ. +ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವನ್ನು ಪಡೆದುಕೊಂಡಿದೆ. ಅಮೆರಿಕದ ಆಗರ್ ಯಂತ್ರವು ಕುಸಿತಗೊಂಡ ಸುರಂಗದ ಅವಶೇಷಗಳ ಒಳಗೆ 45 ಮೀಟರ್ಗಳಷ್ಟು ದೂರ ಕ್ರಮಿಸಿದೆ. ಒಳಗೆ ಸಿಲುಕಿರುವ ಕಾರ್ಮಿಕರನ್ನು ತಲುಪಲು 6 ಮೀಟರ್ ಉದ್ದದ 800 ಎಂಎಂ ವ್ಯಾಸದ ಎರಡು ಉಕ್ಕಿನ ಪೈಪ್‍ಗಳನ್ನು ಹಾಕಲು ಸುಮಾರು 12 ಮೀಟರ್‍ಗಳಷ್ಟು ಅಗೆಯಬೇಕಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. +ಸಿಲುಕಿರುವವರು ಅದೃಷ್ಟವಶಾತ್ ಜೀವಂತವಾಗಿದ್ದಾರೆ. ಅವರಿಗೆ ಸೂಕ್ತ ಆಹಾರ ಒದಗಿಸಲಾಗಿದೆ. ರಕ್ಷಣೆಯ ಬಳಿಕ ಅವರ ಆರೈಕೆಗಾಗಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ತಕ್ಷಣದ ವೈದ್ಯಕೀಯ ಆರೈಕೆಗಾಗಿ ಎಂಟು ಹಾಸಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಳದಲ್ಲಿ ಸ್ಥಾಪಿಸಲಾಗಿದೆ. ಹಲವಾರು ಅಂಬುಲೆನ್ಸ್ಗಳು ಮತ್ತು ಹೆಲಿಕಾಪ್ಟರ್‍ನ್ನು ಸ್ಥಳದಲ್ಲಿ ಇರಿಸಲಾಗಿದೆ. +ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಹಾಗೂ ಏಮ್ಸ್, ಋಷಿಕೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯ ಸ್ಥಳ ಪರಿಶೀಲನೆ ನಡೆಸಿದ್ದಾರೆ. +ಶಿಲಾಖಂಡ ರಾಶಿಗಳಿಗೆ ಅಡ್ಡಲಾಗಿ ಕೊರೆಯುವ ಮೂಲಕ 44 ಮೀಟರ್‍ಗಳ ಪೈಪ್‍ಗಳನ್ನು ಸೇರಿಸಲಾಗಿದೆ. ಆದರೆ ಎನ್‍ಡಿಆರ್‍ಎಫ್ ಸಿಬ್ಬಂದಿ ಅದರೊಳಗೆ ಯಂತ್ರವನ್ನು ಕತ್ತರಿಸಲು ಸಾಧ್ಯವಾಗದ ಉಕ್ಕಿನ ರಾಡ್‍ಗಳನ್ನು ಕಂಡುಕೊಂಡಿದ್ದಾರೆ ಎಂದು ಪಾರುಗಾಣಿಕಾ ಅಕಾರಿ ಹರ್ಪಾಲ್ ಸಿಂಗ್ ತಿಳಿಸಿದ್ದಾರೆ. +ಸಿಎಂ ಧಾಮಿ ಭರವಸೆ:ಸಿಕ್ಕಿಬಿದ್ದಿರುವ 41 ಕಾರ್ಮಿಕರನ್ನು ಬಿಡುಗಡೆ ಮಾಡಲು ನಡೆಯುತ್ತಿರುವ ತೀವ್ರವಾದ ರಕ್ಷಣಾ ಕಾರ್ಯಾಚರಣೆಯಲ್ಲಿ, ಎಲ್ಲಾ ಸಂತ್ರಸ್ತರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ರಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಶಾವಾದ ವ್ಯಕ್ತಪಡಿಸಿದ್ದಾರೆ. +ಅಧಿಕಾರಿಗಳೊಂದಿಗೆ ನಿರಂತರ ಸಂವಹನದೊಂದಿಗೆ ಸಿಲ್ಕ್ಯಾರಾ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವಾಗಿ ಪ್ರಗತಿಯಲ್ಲಿದೆ. ಯಂತ್ರವನ್ನು ಮರುಪ್ರಾರಂಭಿಸುವ ಮೂಲಕ 45 ಮೀಟರ್ ಆಳದವರೆಗೆ ಕೊರೆಯುವುದು ಪೂರ್ಣಗೊಂಡಿದೆ. ಕೇಂದ್ರದಿಂದ ಪಡೆದ ಉಪಕರಣಗಳನ್ನು ಬಳಸಿಕೊಂಡು ಲಂಬ ಮತ್ತು ಅಡ್ಡ ಕೊರೆಯುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. +ಮುಂಬೈನ ವಸತಿ ಕಟ್ಟಡದಲ್ಲಿ ಬೆಂಕಿ, 135 ಜನರ ರಕ್ಷಣೆ +ಸರ್ಕಾರ ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ನೆರವಿನೊಂದಿಗೆ ಸಿಕ್ಕಿಬಿದ್ದ ಕಾರ್ಮಿಕರಿಗಾಗಿ ಆಡಿಯೋ ಸಂವಹನ ಸೆಟಪ್‍ನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರೊಂದಿಗೆ ವೈಯಕ್ತಿಕ ಸಂಭಾಷಣೆಗಳನ್ನು ನಡೆಸಲಾಗುತ್ತಿದೆ. ಕಾರ್ಮಿಕರ ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡಿ, ಮನೋವಿಜ್ಞಾನಿಗಳೊಂದಿಗೆ ಚರ್ಚೆಯೂ ನಡೆಯುತ್ತಿದೆ. ಕಾರ್ಮಿಕರ ಆರೋಗ್ಯ ಮತ್ತು ಯೋಗಕ್ಷೇಮವು ನಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_231_10.txt b/eesanje/url_47_231_10.txt new file mode 100644 index 0000000000000000000000000000000000000000..1e01582ca4232a09c39a7ea5bc25b8f798be1523 --- /dev/null +++ b/eesanje/url_47_231_10.txt @@ -0,0 +1,8 @@ +ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ +ಮುಂಬೈ, ನ 23 (ಪಿಟಿಐ) ಮಹಾದೇವ್ ಬೆಟ್ಟಿಂಗ್ ಆ್ಯಪ್‍ಗೆ ಸಂಬಂಸಿದ 15,000 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಜೂಜು ಮತ್ತು ಸೈಬರ್ ವಂಚನೆಗೆ ಸಂಬಂಧಿಸಿದಂತೆ ಇಲ್ಲಿ ದಾಖಲಾಗಿರುವ ಎಫ್‍ಐಆರ್ ಅನ್ನು ತನಿಖೆಗಾಗಿ ಮುಂಬೈ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ. +ಪ್ರಕರಣದ ತನಿಖೆಯ ವ್ಯಾಪ್ತಿಯನ್ನು ಪರಿಗಣಿಸಿ, ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರು ಅದನ್ನು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ ಎಂದು ಅವರು ಹೇಳಿದರು. 2019 ರಿಂದ ವಂಚನೆ ಮಾಡಿದ ಆರೋಪದ ಮೇಲೆ ಆ್ಯಪ್‍ನ ಪ್ರವರ್ತಕ ಸೌರಭ್ ಚಂದ್ರಕರ್, ರವಿ ಉಪ್ಪಲ, ಶುಭಂ ಸೋನಿ ಮತ್ತು ಇತರರು ಸೇರಿದಂತೆ 32 ಜನರ ವಿರುದ್ಧ ಮುಂಬೈನ ಮಾಟುಂಗಾ ಪೊಲೀಸ್ ಠಾಣೆಯಲ್ಲಿ ಈ ತಿಂಗಳ ಆರಂಭದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಎಫ್‍ಐಆರ್‍ನ ಪ್ರಕಾರ ಆರೋಪಿಗಳು ಜನರಿಗೆ ಸುಮಾರು 15,000 ಕೋಟಿ ರೂಪಾಯಿ ವಂಚಿಸಿದ್ದಾರೆ ಎನ್ನಲಾಗಿದೆ. +ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಫೋರೆನ್ಸಿಕ್ ವಿಶ್ಲೇಷಣೆಯನ್ನು ಹೇಳಿಕೊಂಡಿದೆ ಮತ್ತು ನಗದು ಕೊರಿಯರ್ ನೀಡಿದ ಹೇಳಿಕೆಯು ಆಘಾತಕಾರಿ ಆರೋಪಗಳಿಗೆ ಕಾರಣವಾಯಿತು, ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರವರ್ತಕರು ಇದುವರೆಗೆ ಛತ್ತೀಸ್‍ಗಢ ಮುಖ್ಯಮಂತ್ರಿಗೆ ಸುಮಾರು 508 ಕೋಟಿ ರೂ. ನೀಡಿದ್ದಾರೆ ಎಂಬುದು ತನಿಖೆಯ ವಿಷಯವಾಗಿದೆ. +ಬೆಳಗಾವಿ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ +ಬಿಜೆಪಿಯು ಶುಭಂ ಸೋನಿ ಆ್ಯಪ್‍ನ ಮಾಲೀಕ ಎಂದು ಹೇಳುವ ವೀಡಿಯೊವನ್ನು ಬಿಡುಗಡೆ ಮಾಡಿತು ಮತ್ತು ಛತ್ತೀಸ್‍ಗಢ ಸಿಎಂ ಭೂಪೇಶ್ ಬಘೇಲ್‍ಗೆ ಇದುವರೆಗೆ 508 ಕೋಟಿ ರೂಪಾಯಿ ಪಾವತಿಸಿದ ಪುರಾವೆ ಇದೆ ಎಂದು ಹೇಳಿಕೊಂಡಿದೆ ಆದರೆ, ಮುಖ್ಯಮಂತ್ರಿಗಳು ಈ ಆರೋಫವನ್ನು ತಿರಸ್ಕರಿಸಿದ್ದಾರೆ. +ನವೆಂಬರ್ 5 ರಂದು, ಇಡಿ ಮನವಿಯ ಮೇರೆಗೆ ಮಹದೇವ್ ಆ್ಯಪ್ ಸೇರಿದಂತೆ 22 ಅಕ್ರಮ ಬೆಟ್ಟಿಂಗ್ ಪ್ಲಾಟ್‍ಫಾರ್ಮ್‍ಗಳ ವಿರುದ್ಧ ಕೇಂದ್ರವು ತಡೆಯಾಜ್ಞೆ ನೀಡಿತು. 22 ಅಕ್ರಮ ಬೆಟ್ಟಿಂಗ್ ಪ್ಲಾಟ್‍ಫಾರ್ಮ್‍ಗಳನ್ನು ನಿಷೇಸುವ ಕ್ರಮವು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ಸಿಂಡಿಕೇಟ್ ವಿರುದ್ಧ ಇಡಿ ನಡೆಸಿದ ತನಿಖೆಗಳು ಮತ್ತು ಛತ್ತೀಸ್‍ಗಢದಲ್ಲಿ ಮಹಾದೇವ್ ಅಪ್ಲಿಕೇಶನ್‍ಗೆ ಸಂಬಂಸಿದಂತೆ ನಂತರದ ದಾಳಿಗಳನ್ನು ಅನುಸರಿಸುತ್ತದೆ. +ಆ್ಯಪ್‍ಗೆ ಸಂಬಂಧಿಸಿದಂತೆ ಛತ್ತೀಸ್‍ಗಢ ಪೊಲೀಸರು ಕನಿಷ್ಠ 75 ಎಫ್‍ಐಆರ್‍ಗಳನ್ನು ದಾಖಲಿಸಿದ್ದಾರೆ ಮತ್ತು ಇಡಿ ಕೂಡ ಪ್ರಕರಣದ ತನಿಖೆಯನ್ನು ನಡೆಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_231_11.txt b/eesanje/url_47_231_11.txt new file mode 100644 index 0000000000000000000000000000000000000000..3f5fc621da5a4e2681a718bfbeb7bbadb4e021b6 --- /dev/null +++ b/eesanje/url_47_231_11.txt @@ -0,0 +1,10 @@ +ಹಸಿರು ಕ್ರಾಂತಿ ಜಾರಿಯಾದಗ ಕೆಸಿಆರ್ ಎಲ್ಲಿದ್ದರು..? : ಖರ್ಗೆ +ಹೈದ್ರಾಬಾದ್,ನ.23- ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಆಡಳಿತದ ವಿರುದ್ಧ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಟೀಕೆಗೆ ತೀವ್ರ ವ್ಯತಿರಿಕ್ತವಾಗಿ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯಾಹ್ನದ ಊಟ ಮತ್ತು ಹಸಿರು ಕ್ರಾಂತಿಯಂತಹ ಯೋಜನೆಗಳನ್ನು ಜಾರಿಗೆ ತಂದಾಗ ರಾವ್ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. +ನಲ್ಗೊಂಡ ಮತ್ತು ಆಲಂಪುರದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ತೆಲಂಗಾಣದಲ್ಲಿ ಇಂದಿರಾ ಗಾಂಧಿಯವರ ಕಲ್ಯಾಣ ಆಡಳಿತದ ಇಂದಿರಮ್ಮ ರಾಜ್ಯವನ್ನು ಮರಳಿ ತರುವುದಾಗಿ ಕಾಂಗ್ರೆಸ್ ಪಕ್ಷದ ಭರವಸೆಯ ವಿರುದ್ಧ ರಾವ್ ಅವರ ಹೇಳಿಕೆಗಳ ಬಗ್ಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. +ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ +ಹಸಿರು ಕ್ರಾಂತಿ, 20 ಅಂಶಗಳ ಕಾರ್ಯಕ್ರಮ ಮತ್ತು ಇತರ ಪ್ರಮುಖ ಬಡವರ ಪರ ಕಾರ್ಯಕ್ರಮಗಳನ್ನು ಇಂದಿರಾ ಗಾಂಧಿಯವರ ಆಡಳಿತದಲ್ಲಿ ನಡೆಸಲಾಯಿತು ಎಂದು ಅವರು ಹೇಳಿದರು. ಈ ಕೆಸಿಆರ್ ಇಂದಿರಾ ಗಾಂಧಿಯವರನ್ನೂ ನಿಂದಿಸುತ್ತಾರೆ. ಇಂದಿರಾಗಾಂಧಿ ಆಡಳಿತದಲ್ಲಿ ಬಡತನದ ಬಗ್ಗೆ ಕೆಸಿಆರ್ ಕೇಳುತ್ತಾರೆ. ಹಸಿರು ಕ್ರಾಂತಿ ಮತ್ತು ಮಧ್ಯಾಹ್ನದ ಊಟ ನಡೆದಾಗ ನೀವು ಎಲ್ಲಿದ್ದೀರಿ ಮತ್ತು ನೀವು ಏನು ಮಾಡುತ್ತಿದ್ದೀರಿ ಎಂದು ಅವರು ಹೇಳಿದರು. +ಮಂಗಳವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೆಸಿಆರ್, ಕಾಂಗ್ರೆಸ್ ನಾಯಕರು ಇಂದಿರಮ್ಮ ರಾಜ್ಯವನ್ನು ಮರಳಿ ತರುವುದಾಗಿ ಭರವಸೆ ನೀಡುತ್ತಾರೆ ಆದರೆ ಆ ಅವಧಿಯನ್ನು ತುರ್ತು ಪರಿಸ್ಥಿತಿಯಿಂದ ಗುರುತಿಸಲಾಗಿದೆ ಮತ್ತು ದಲಿತರ ಪರಿಸ್ಥಿತಿ ಹಾಗೆಯೇ ಉಳಿದಿದೆ ಎಂದು ಹೇಳಿದ್ದರು. +ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದ್ದು, ಕೆಸಿಆರ್ ಕುಟುಂಬದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಈ ಚುನಾವಣೆಯಲ್ಲಿ ಹೋರಾಡುತ್ತಿದೆ ಎಂದು ಹೇಳಿದ ಖರ್ಗೆ, ಬಡವರ ಭೂಮಿಯನ್ನು ಕಿತ್ತುಕೊಂಡವರ ವಿರುದ್ಧ ನಾವು ಹೋರಾಟ ನಡೆಸುತ್ತಿದ್ದೇವೆ ಎಂದರು.ತೆಲಂಗಾಣ ಜನತೆ ಆಶಿಸಿದ ಅಭಿವೃದ್ಧಿ ನಡೆದಿಲ್ಲ, ರಸ್ತೆಗಳಾಗಲಿ, ಶಾಲೆಗಳಾಗಲಿ, ನೀರಾವರಿ ಯೋಜನೆಗಳಾಗಲಿ ಮಾಡಿಲ್ಲ ಎಂದು ಆರೋಪಿಸಿದರು. +ಕೆಸಿಆರ್ ಅವರು ತಮ್ಮ ಫಾರ್ಮ್‍ಹೌಸ್‍ನಲ್ಲಿ ಕುಳಿತು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಎಂದಿಗೂ ಜನರನ್ನು ಭೇಟಿಯಾಗುವುದಿಲ್ಲ. ಜನರನ್ನು ಎಂದಿಗೂ ಭೇಟಿಯಾಗದವರು ಮತ್ತು ಜನರ ನಡುವೆ ಇರದವರು ಅವರಿಗೆ ಎಂದಿಗೂ ಮತ ಚಲಾಯಿಸುವುದಿಲ್ಲ ಎಂದ ಖರ್ಗೆ ಅವರು ತೆಲಂಗಾಣ ಜನತೆಗೆ ಕಾಂಗ್ರೆಸ್ ಅನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು. +ಆರೋಗ್ಯ ಇಲಾಖೆಯಲ್ಲೂ ಕೌನ್ಸಿಲಿಂಗ್ ಮೂಲಕ ವರ್ಗಾವಣೆ +ಕೆಸಿಆರ್, ಬಿಜೆಪಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಸ್ನೇಹಿತರು ಎಂದು ಹೇಳಿದ ಖರ್ಗೆ, ಮೂರು ಪಕ್ಷಗಳು ಒಟ್ಟಾಗಿ ಕೆಲಸ ಮಾಡುತ್ತಿವೆ ಮತ್ತು ಕಾಂಗ್ರೆಸ್ ವಿರುದ್ಧ ಪಿತೂರಿ ನಡೆಸುತ್ತಿವೆ ಎಂದು ಆರೋಪಿಸಿದರು. \ No newline at end of file diff --git a/eesanje/url_47_231_12.txt b/eesanje/url_47_231_12.txt new file mode 100644 index 0000000000000000000000000000000000000000..a481839b45e139150d9fadb0edf5b6a7442f049d --- /dev/null +++ b/eesanje/url_47_231_12.txt @@ -0,0 +1,8 @@ +ಜ.22 ರಂದು ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ, 48 ದಿನ ಮಂಡಲೋತ್ಸವ ಆಚರಣೆ.. +ಅಯೋಧ್ಯೆ, ನ.22- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮುಂದಿನ ವರ್ಷ 2024ರ ಜನವರಿ 22ರಿಂದ ಮಾರ್ಚ್ 10ರವರೆಗೆ 48 ದಿನಗಳ ಕಾಲ ನಡೆಯಲಿದೆ. ರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ನಂತರ ಜ.22ರಿಂದಲೇ 48 ದಿನಗಳ ಮಂಡಲೋತ್ಸವ ಆರಂಭವಾಗಲಿದ್ದು, ಈ ಸೇವೆಯಲ್ಲಿ ದೇಶದ ಎಲ್ಲಾ ಜನತೆ ಭಾಗಿಯಾಗುವಂತೆ ಉಡುಪಿ ಪೇಜಾವರ ಮಠಾೀಧಿಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ. +ಜ.22ರಂದು ಅಭಿಜಿನ್ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಭವ್ಯವಾದ ರಾಮ ಮಂದಿರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜ.22ರಂದುಲೋಕಾರ್ಪಣೆ ಮಾಡಲಿದ್ದಾರೆ. +ಶ್ರೀರಾಮ ಮಂದಿರ ಲೋಕಾರ್ಪಣೆಯ ಬಗ್ಗೆ ವಿವರ ನೀಡಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕೋಟ್ಯಂತರ ಭಕ್ತರ ಆಶಯದಂತೆ ಅಯೋಧ್ಯೆ ರಾಮ ಮಂದಿರ ನಿರ್ಮಾಣಗೊಳ್ಳುತ್ತಿದೆ. ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು, ಸಿದ್ಥತೆಗಳು ಅಂತಿಮಗೊಳ್ಳುತ್ತಿದೆ. ಈಗಾಗಲೇ ಅಯೋಧ್ಯೆಯಲ್ಲಿ ಶ್ರೀರಾಮನ ಶಿಲಾ ವಿಗ್ರಹ ಸಿದ್ಧಗೊಳ್ಳುತ್ತಿದ್ದು, ಜ.17ರಂದು ಅಯೋಧ್ಯೆಗೆ ವಿಗ್ರಹದ ಮೆರವಣಿಗೆ ನಡೆಯಲಿದೆ ಎಂದರು. +ಪಾಕ್ ಉಗ್ರ ನಂಟು: ನಾಲ್ವರು ಸರ್ಕಾರಿ ಅಧಿಕಾರಿಗಳು ಸೇವೆಯಿಂದ ವಜಾ +ಇನ್ನು ಜ.17ರಂದು ಸರಯೂ ನದಿಯಲ್ಲಿ ಶ್ರೀರಾಮನ ಶಿಲಾಮೂರ್ತಿಗೆ ಅಭಿಷೇಕ ನೆರವೇರಿಸಿ, ಅಲ್ಲಿಂದ ಮತ್ತೆ ಮೆರವಣಿಗೆಯಲ್ಲಿ ಅಯೋಧ್ಯೆಗೆ ಕರೆತರಲಾಗುತ್ತದೆ. ಜ.18ರಂದು ಶಿಲಾಮೂರ್ತಿಯನ್ನು ಶ್ರೀರಾಮ ಜನ್ಮಸ್ಥಳದ ಮೂಲ ಸ್ಥಾನದಲ್ಲಿ ನಿಲ್ಲಿಸಿ ಜ.18ರಿಂದ ಜನವರಿ 20ರವರೆಗೆ ಜಲಾವಾಸ, ಧಾನ್ಯಾವಾಸ, ಶಿಲಾವಾಸ ವಿಧಿ ವಿಧಾನ ನೆರವೇರಿಸಲಾಗುತ್ತದೆ. ಬಳಿಕ ಜ.21ರಂದು ಪ್ರತಿಷ್ಠಾಪನೆಯ ಪೂರ್ವಸಿದ್ಧತೆ ನಡೆಸಿ ಜನವರಿ 22ರಂದು ಅಭಿಜಿನ್ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮನ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಮಾಡಲಾಗುತ್ತದೆ ಎಂದು ರಾಮಮಂದಿರ ಲೋಕಾರ್ಪಣೆಯ ಧಾರ್ಮಿಕ ಕಾರ್ಯಗಳ ಬಗ್ಗೆ ವಿವರಿಸಿದರು. +ಮುಖ್ಯವಾಗಿ ದೇಶದಾದ್ಯಂತ ಇರುವ ಕೋಟ್ಯಂತ ಭಕ್ತರಿಗಿದ್ದ ಗೊಂದಲಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉತ್ತರಿಸಿದ್ದಾರೆ. ಅಯ್ಯೋಧ್ಯೆಯ ಶ್ರೀರಾಮನಿಗೆ ಯಾವ ಹರಕೆ ಸಿಲ್ಲಿಸಬಹುದು ಎನ್ನುವ ಭಕ್ತರ ಪ್ರಶ್ನೆಗೆ ಶ್ರೀಗಳು ವಿವರಣೆ ನೀಡಿದ್ದಾರೆ. ಸಾಮಾನ್ಯವಾಗಿ ಶ್ರೀರಾಮನ ಮಂದಿರಗಳಲ್ಲಿ ಅಷ್ಟೋತ್ತರ, ಶತನಾಮಾವಳಿ, ಅರ್ಚನೆ, ಅಭಿಷೇಕ ಹರಕೆ ಸೇವೆಯನ್ನು ಭಕ್ತರು ಸಲ್ಲಿಸುತ್ತಾರೆ. ಆದರೆ ಅಯ್ಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಈ ರೀತಿಯ ಯಾವುದೇ ಪ್ರತ್ಯೇಕ ಹರಕೆಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ. +ಶ್ರೀರಾಮನಿಗೆ ಪ್ರತ್ಯೇಕ ಹರಕೆ ಸೇವೆ ಎಂಬುದು ಇರುವುದಿಲ್ಲ. ಬದಲಾಗಿ ಪ್ರತಿಯೊಬ್ಬ ಭಕ್ತರು ಮಾಡಿದ ಸಮಾಜ ಸೇವೆಯನ್ನು ರಾಮನ ಸಾನ್ನಿಧ್ಯದಲ್ಲಿ ನಿವೇದಿಸಿಕೊಳ್ಳುವ ರಾಮಾರ್ಪಣೆಯೇ ಸೇವೆ ಇರಲಿದೆ. ಜೊತೆಗೆ ಭಕ್ತರಿಗಾಗಿ ಆರತಿ, ತೀರ್ಥ ಹಾಗೂ ಉತ್ತರ ಭಾರತದ ಸಿಹಿಯ ನೈವೇದ್ಯ ಇರುತ್ತದೆ. ಇದು ಬಿಟ್ಟರೆ ಹರಕೆ, ಸೇವೆ ಯಾವುದೂ ಇಲ್ಲ ಎಂದು ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿವರಿಸಿದ್ದಾರೆ. ಇನ್ನು ಅಯ್ಯೋಧ್ಯೆಯ ಶ್ರೀ ರಾಮ ಮಂದಿರ ಲೋಕಾರ್ಪಣೆಯ ಎಲ್ಲಾ ಕಾರ್ಯದಲ್ಲೂ ದೇಶದಾದ್ಯಂತ ಎಲ್ಲಾ ಭಕ್ತರು ಭಾಗಿಯಾಗುವಂತೆ ಶ್ರೀಗಳು ಮನವಿ ಮಾಡಿದ್ದಾರೆ. \ No newline at end of file diff --git a/eesanje/url_47_231_2.txt b/eesanje/url_47_231_2.txt new file mode 100644 index 0000000000000000000000000000000000000000..ba4d67f12576cc2b57fd98f5c6c480d7c7c9a281 --- /dev/null +++ b/eesanje/url_47_231_2.txt @@ -0,0 +1,5 @@ +ಸೇನಾ ಶಿಬಿರದ ಮೇಲೆ ಗ್ರೆನೇಡ್ ದಾಳಿ +ತಿನ್ಸುಕಿಯಾ, ನ.23 (ಪಿಟಿಐ) ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಗೇಟ್‍ನ ಹೊರಗೆ ಗ್ರೆನೇಡ್ ಸ್ಪೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ನಿನ್ನೆ ಸಂಜೆ ಡಿರಾಕ್‍ನಲ್ಲಿರುವ ಸೇನಾ ಶಿಬಿರದ ಗೇಟ್‍ಗಳ ಮುಂದೆ ಸೋಟ ಸಂಭವಿಸಿದೆ ಎಂದು ಅವರು ಹೇಳಿದರು. ನಮ್ಮ ಮಾಹಿತಿಯ ಪ್ರಕಾರ, ಇಬ್ಬರು ಮೋಟಾರ್‌ಸೈಕಲ್‌ನಲ್ಲಿ ಬಂದ ವ್ಯಕ್ತಿಗಳು ಶಿಬಿರದೊಳಗೆ ಗ್ರೆನೇಡ್ ಅನ್ನು ಎಸೆಯಲು ಪ್ರಯತ್ನಿಸಿದರು ಆದರೆ ಅದು ಹೊರಗೆ ಬಿದ್ದು ಸ್ಪೋಟಗೊಂಡಿದೆ ಎಂದು ಅವರು ಹೇಳಿದರು. +ಹೈದರಾಬಾದ್ : ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ +ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಅಪರಾಗಳನ್ನು ಹಿಡಿಯಲು ಶೋಧವನ್ನು ಪ್ರಾರಂಭಿಸಿದ್ದೇವೆ ಎಂದು ಅವರು ಹೇಳಿದರು. ಅಸ್ಸಾಂನ ನಾಲ್ಕು ಜಿಲ್ಲೆಗಳಾದ ದಿಬ್ರುಗಢ್, ತಿನ್ಸುಕಿಯಾ, ಶಿವಸಾಗರ್ ಮತ್ತು ಚರೈಡಿಯೊ ಜಿಲ್ಲೆಗಳಿಗೆ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯಿದೆಯನ್ನು ಜಾರಿಗೆ ತರಲಾಗಿದೆ. \ No newline at end of file diff --git a/eesanje/url_47_231_3.txt b/eesanje/url_47_231_3.txt new file mode 100644 index 0000000000000000000000000000000000000000..3547a3f01ba348458bac91e1b55a5ee894cc50e4 --- /dev/null +++ b/eesanje/url_47_231_3.txt @@ -0,0 +1,7 @@ +ಮರಾಠ ಮೀಸಲಾತಿಗೆ ನಾವು ಬದ್ಧ : ದೇವೇಂದ್ರ ಫಡ್ನವಿಸ್ +ಮುಂಬೈ, ನ 23 (ಪಿಟಿಐ) – ಮರಾಠರು ಎತ್ತಿರುವ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಸಕಾರಾತ್ಮಕವಾಗಿದೆ ಮತ್ತು ಸಮುದಾಯಕ್ಕೆ ಮೀಸಲಾತಿ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. +ಕಾರ್ತಿಕಿ ಏಕಾದಶಿಯಂದು ಉಪ ಮುಖ್ಯಮಂತ್ರಿ ಮತ್ತು ಅವರ ಪತ್ನಿ ವಿಠ್ಠಲ ಮತ್ತು ರುಕ್ಮಿಣಿ ದೇವಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು ನಂತರ ಸೊಲ್ಲಾಪುರ ಜಿಲ್ಲೆಯ ಪಂಢರಪುರ ಪಟ್ಟಣದಲ್ಲಿ ಮರಾಠ ಸಮುದಾಯದ ನಿಯೋಗದ ಭೇಟಿ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು. +ಹೈದರಾಬಾದ್ : ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ +ಮರಾಠ ಸಮುದಾಯದ ಬೇಡಿಕೆಗಳಿಗೆ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ನಾವು ಸಂಪೂರ್ಣ ಬೆಂಬಲದೊಂದಿಗೆ ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಅವರು ಎಕ್ಸ್ ಮಾಡಿದ್ದಾರೆ. ಸಮಸ್ಯೆಯನ್ನು ಖಚಿತವಾಗಿ ಪರಿಹರಿಸಲಾಗುವುದು. ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು. +ಪಂಢರಪುರದಲ್ಲಿ ಮರಾಠಾ ಭವನ ನಿರ್ಮಾಣ, ಅಣ್ಣಾಸಾಹೇಬ ಪಾಟೀಲ ಆರ್ಥಿಕ ವಿಕಾಸ ಮಹಾಮಂಡಳ ಹಾಗೂ ಸಾರಥಿ ಉಪಕೇಂದ್ರಗಳ ಆರಂಭ, ದೇವಸ್ಥಾನ ಪೇಟೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸರಕಾರ ನಿವೇಶನ ನೀಡಬೇಕು ಎಂದು ನಿಯೋಗ ಒತ್ತಾಯಿಸಿತು. +ಛತ್ರಪತಿ ಶಾಹು ಮಹಾರಾಜ್ ಸಂಶೋಧನೆ, ತರಬೇತಿ ಮತ್ತು ಮಾನವ ಅಭಿವೃದ್ಧಿ ಸಂಸ್ಥೆ ಮಹಾರಾಷ್ಟ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, ಮರಾಠ ಮತ್ತು ಮರಾಠ-ಕುಂಬಿ ವಿಭಾಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿದೆ. \ No newline at end of file diff --git a/eesanje/url_47_231_4.txt b/eesanje/url_47_231_4.txt new file mode 100644 index 0000000000000000000000000000000000000000..f2fc2c452f81995e0f961a53621fe98bbfae25a8 --- /dev/null +++ b/eesanje/url_47_231_4.txt @@ -0,0 +1,6 @@ +ಖಾಸಗಿ ಬಸ್ ಪಲ್ಟಿ, ಒಂದೇ ಕುಟುಂಬದ ಮೂವರ ದುರ್ಮರಣ +ಪುಣೆ, ನ.23 (ಪಿಟಿಐ) – ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಇಂದು ನಸುಕಿನಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಪುಣೆಯಿಂದ ಸುಮಾರು 240 ಕಿಮೀ ದೂರದಲ್ಲಿರುವ ಕೊಲ್ಹಾಪುರ ನಗರದ ಹೊರವಲಯದಲ್ಲಿರುವ ಪುಯಿಖಾಡಿ ಗ್ರಾಮದ ಬಳಿ ಮುಂಜಾನೆ 2 ಗಂಟೆಗೆ ಅಪಘಾತ ಸಂಭವಿಸಿದೆ, ಸುಮಾರು 25 ಪ್ರಯಾಣಿಕರನ್ನು ಹೊತ್ತ ಸ್ಲೀಪರ್ ಕೋಚ್ ಬಸ್ ಗೋವಾದಿಂದ ಮುಂಬೈಗೆ ತೆರಳುತ್ತಿತ್ತು ಎಂದು ಅವರು ತಿಳಿಸಿದ್ದಾರೆ. +ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ +ನಮಗೆ ಬಂದ ಮಾಹಿತಿಯ ಪ್ರಕಾರ, ಕೊಲ್ಹಾಪುರ-ರಾಧನಗರಿ ರಸ್ತೆಯ ಪುಯಿಖಾಡಿ ಬಳಿ ಬಸ್ ಚಾಲಕ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಬಸ್ ಪಲ್ಟಿಯಾಗಿದೆ ಎಂದು ಕಾರ್ವಿರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕ್ರೇನ್‍ಗಳೊಂದಿಗೆ ಸ್ಥಳಕ್ಕೆ ಧಾವಿಸಿದರು.ಒಂದು ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಂಬತ್ತು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಕೊಲ್ಲಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_231_5.txt b/eesanje/url_47_231_5.txt new file mode 100644 index 0000000000000000000000000000000000000000..d33ea584d4de7a261c540f07bb80b948d257f2db --- /dev/null +++ b/eesanje/url_47_231_5.txt @@ -0,0 +1,7 @@ +ಮುಂಬೈನ ವಸತಿ ಕಟ್ಟಡದಲ್ಲಿ ಬೆಂಕಿ, 135 ಜನರ ರಕ್ಷಣೆ +ಮುಂಬೈ, ನ 23 (ಪಿಟಿಐ) ಇಲ್ಲಿನ 24 ಅಂತಸ್ತಿನ ವಸತಿ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 135 ಜನರನ್ನು ಅಲ್ಲಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ. +ಘೋಡಾಪ್ಡಿಯೊ ಪ್ರದೇಶದ ಎಂಎಚ್‍ಎಡಿಎ ಕಾಲೋನಿಯಲ್ಲಿರುವ ನ್ಯೂ ಹಿಂದ್ ಮಿಲ್ ಕಾಂಪೌಂಡ್‍ನಲ್ಲಿರುವ ಕಟ್ಟಡದ ಮೂರನೇ ಮಹಡಿಯಲ್ಲಿ ಮುಂಜಾನೆ 3.40 ಕ್ಕೆ ಬೆಂಕಿ ಕಾಣಿಸಿಕೊಂಡಿತು. ಕಟ್ಟಡದ 1 ರಿಂದ 24 ನೇ ಮಹಡಿಯವರೆಗಿನ ಎಲೆಕ್ಟ್ರಿಕ್ ಮೀಟರ್ ಕ್ಯಾಬಿನ್, ವೈರಿಂಗ್, ಕೇಬಲ, ವಿದ್ಯುತ್ ನಾಳದಲ್ಲಿನ ಸ್ಕ್ರ್ಯಾಪ್ ವಸ್ತುಗಳು, ಕಸ ಮತ್ತು ಕಸದ ನಾಳದಲ್ಲಿನ ವಸ್ತುಗಳಿಗೆ ಬೆಂಕಿ ಸೀಮಿತವಾಗಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ +ಕಟ್ಟಡದ ವಿವಿಧ ಮಹಡಿಗಳಿಂದ ಕನಿಷ್ಠ 135 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅವರು ಹೇಳಿದರು.ಅವರಲ್ಲಿ 25 ಮಂದಿಯನ್ನು ಟೆರೇಸ್‍ನಿಂದ, 30 ಮಂದಿಯನ್ನು 15ನೇ ಮಹಡಿಯಲ್ಲಿನ ಆಶ್ರಯ ಪ್ರದೇಶದಿಂದ ಮತ್ತು 80 ಜನರನ್ನು ಕಟ್ಟಡದ 22ನೇ ಮಹಡಿಯಲ್ಲಿರುವ ಆಶ್ರಯ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. +ಕರೆ ಸ್ವೀಕರಿಸಿದ ನಂತರ ಐದು ಅಗ್ನಿಶಾಮಕ ದಳಗಳು ಮತ್ತು ಮೂರು ನೀರಿನ ಟ್ಯಾಂಕರ್‍ಗಳು ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಳಿಗ್ಗೆ 7.20 ರ ಹೊತ್ತಿಗೆ ಬೆಂಕಿಯನ್ನು ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಶಾರ್ಟ್ ಸಕ್ರ್ಯೂಟ್ ಇದನ್ನು ಪ್ರಚೋದಿಸಬಹುದು ಎಂದು ನಾಗರಿಕ ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_231_6.txt b/eesanje/url_47_231_6.txt new file mode 100644 index 0000000000000000000000000000000000000000..faa8c714afb21dcbf880100be24eb898ecca3c37 --- /dev/null +++ b/eesanje/url_47_231_6.txt @@ -0,0 +1,5 @@ +ರಾಮಮಂದಿರವನ್ನು ಲೋಕಸಭಾ ಚುನಾವಣಾ ಅಸ್ತ್ರವನ್ನಾಗಿಸಲು ಬಿಜೆಪಿ ಪ್ಲಾನ್ +ನವದೆಹಲಿ,ನ.23- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಯೋಧ್ಯ ರಾಮಮಂದಿರ ನಿರ್ಮಾಣ ಕಾರ್ಯವನ್ನು ಯಾವ ರೀತಿ ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಈಗಾಗಲೇ ಬಿಜೆಪಿ ಲೆಕ್ಕಾಚಾರ ಹಾಕಿದೆ. 2024ರ ಲೋಕಸಭೆ ಚುನಾವಣೆಯ ಮೇಲೆ ಬಿಜೆಪಿ ಕಣ್ಣು ಹಾಕಿದ್ದು, ಐದು ರಾಜ್ಯಗಳಲ್ಲಿ ಪ್ರಚಾರ ಅಂತ್ಯಗೊಳ್ಳುತ್ತಿದ್ದಂತೆ, ರಾಮ ಮಂದಿರದ ರಾಜಕೀಯ ಲಾಭವನ್ನು ಪಡೆಯುವ ಸಾಹಸಕ್ಕೆ ಕೈ ಹಾಕಿದೆ. +ಜನವರಿಯಲ್ಲಿ ಉದ್ಘಾಟನೆಗೊಳ್ಳಲಿರುವ ರಾಮಮಂದಿರವನ್ನು ರಾಜಕೀಯ ದಾಳವನ್ನಾಗಿಸಿಕೊಳ್ಳಲು ಮುಂದಾಗಿರುವ ಬಿಜೆಪಿ ತನ್ನ ಅಧಿಕೃತ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪಕ್ಷವು ಅಯೋಧ್ಯೆಯಲ್ಲಿ ಮುಂಬರುವ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾವನ್ನು ತೋರಿಸುವ ಹೊಸ ಬ್ಯಾನರ್ ಚಿತ್ರವನ್ನು ಪೋಸ್ಟ್ ಮಾಡಿದೆ. +ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ ಅಪರಾಧ ವಿಭಾಗಕ್ಕೆ ವರ್ಗಾವಣೆ +ಜೈ ಶ್ರೀ ರಾಮ, ಜನವರಿ 22, 2024 ಎಂದಿರುವ ಬ್ಯಾನರ್ ಚಿತ್ರದ ಅಡಿಬರಹವನ್ನು ನೇರವಾಗಿ ಅಯೋಧ್ಯೆಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶಾದ್ಯಂತದ ಸಾವಿರಾರು ಸಂತರು ಉಲ್ಲೇಖಿಸಿದ್ದಾರೆ. \ No newline at end of file diff --git a/eesanje/url_47_231_7.txt b/eesanje/url_47_231_7.txt new file mode 100644 index 0000000000000000000000000000000000000000..a6e8dd297604b44fd1bb9d7aea3a8d36095043a6 --- /dev/null +++ b/eesanje/url_47_231_7.txt @@ -0,0 +1,6 @@ +ಅಮೆರಿಕ ನಡೆ ಮೇಲೆ ಭಾರತದ ಕಣ್ಣು +ನವದೆಹಲಿ,ನ.23- ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‍ವಂತ್ ಸಿಂಗ್ ಪನ್ನು ನನ್ನು ಹತ್ಯೆ ಮಾಡುವ ಯೋಜನೆಯನ್ನು ಅಮೆರಿಕ ವಿಫಲಗೊಳಿಸಿದೆ ಎಂಬ ವರದಿಗಳ ನಡುವೆಯೇ ಸಂಘಟಿತ ಕ್ರಿಮಿನಲ್‍ಗಳು, ಗನ್ ರನ್ನರ್‍ಗಳು, ಭಯೋತ್ಪಾದಕರು ಮತ್ತು ಇತರರ ನಡುವಿನ ನಂಟು ಕುರಿತು ಅಮೆರಿಕದ ನಡೆಗಳನ್ನು ಪರಿಶೀಲಿಸುತ್ತಿದೆ ಎಂದು ಭಾರತ ಹೇಳಿದೆ. +ಭಾರತವು ಅಂತಹ ಒಳಹರಿವುಗಳನ್ನು ನಮ್ಮದೇ ಆದ ರಾಷ್ಟ್ರೀಯ ಭದ್ರತೆಯ ಹಿತಾಸಕ್ತಿಗಳ ಮೇಲೂ ಅಡ್ಡಿಪಡಿಸುವುದರಿಂದ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಯುಎಸ್ ಒಳಹರಿವಿನ ಸಂದರ್ಭದಲ್ಲಿ ಸಂಬಂಧಿಸಿದ ಸಮಸ್ಯೆಗಳನ್ನು ಈಗಾಗಲೇ ಸಂಬಂಧಿತ ಇಲಾಖೆಗಳು ಪರಿಶೀಲಿಸುತ್ತಿವೆ ಎಂದು ಮಾಧ್ಯಮದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿದಮ್ ಬಾಗ್ಚಿ ಹೇಳಿದರು. +ಹಸಿರು ಕ್ರಾಂತಿ ಜಾರಿಯಾದಗ ಕೆಸಿಆರ್ ಎಲ್ಲಿದ್ದರು..? : ಖರ್ಗೆ +ಶ್ವೇತಭವನವು ಅಮೆರಿಕದ ನೆಲದಲ್ಲಿ ಸಿಖ್ ಪ್ರತ್ಯೇಕತಾವಾದಿಯನ್ನು ಕೊಲ್ಲುವ ವರದಿಯ ಸಂಚನ್ನು ಯುಎಸ್ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದೆ ಮತ್ತು ಹಿರಿಯ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಸಮಸ್ಯೆಯನ್ನು ಎತ್ತಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. +ಈ ವರದಿಯ ಬಗ್ಗೆ ಕೇಳಿದಾಗ, ಶ್ವೇತಭವನದ ವಕ್ತಾರ ಅಡ್ರಿಯೆನ್ನೆ ವ್ಯಾಟ್ಸನ್ ಅವರು, ಭಾರತದ ಈ ಹೇಳಿಕೆಗೆ ಆಶ್ಚರ್ಯ ಮತ್ತು ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಮತ್ತು ಈ ರೀತಿಯ ಚಟುವಟಿಕೆಯು ತಮ್ಮ ನೀತಿಯಲ್ಲ ಎಂದು ಹೇಳಿದ್ದಾರೆ. \ No newline at end of file diff --git a/eesanje/url_47_231_8.txt b/eesanje/url_47_231_8.txt new file mode 100644 index 0000000000000000000000000000000000000000..b5f8e95b561a0a838fab96e36e1e7de89c4a1f34 --- /dev/null +++ b/eesanje/url_47_231_8.txt @@ -0,0 +1,6 @@ +ಹೈದರಾಬಾದ್ : ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ +ಹೈದರಾಬಾದ್, ನ.23- ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೊಟೇಲ್ ಮೇಲೆ ಹೈದರಾಬಾದ್ ಪೊಲೀಸರು ದಾಳಿ ನಡೆಸಿರುವ ಘಟನೆ ತಡರಾತ್ರಿ ನಡೆಸಿದ್ದಾರೆ. +ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ತಡರಾತ್ರಿ ದಾಳಿ ನಡೆಸಲಾಗಿದೆ. ಅಕ್ರಮವಾಗಿ ಹಣ ಸಾಗಾಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ ದಾಳಿ ನಡೆಸಿ ಜಮೀರ್ ಮತ್ತು ಬೆಂಬಲಿಗರ ಕೊಠಡಿಗಳನ್ನು ಪರಿಶೀಲನೆ ನಡೆಸಿದ್ದಾರೆ. +ಬೆಳಗಾವಿ ಅಧಿವೇಶನದಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ +ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದರೆ, ಅವರಿಗೆ ಏನು ಸಿಕ್ಕಿಲ್ಲ. +ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‍ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ. ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ದಾಳಿಯು ನಮ್ಮನ್ನು ಹೆದರಿಸಿ ಹಿಮ್ಮೆಟ್ಟಿಸುವ ಕುತಂತ್ರವಾಗಿದೆ. ಇದಕ್ಕೆಲ್ಲ ನಾವು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. \ No newline at end of file diff --git a/eesanje/url_47_231_9.txt b/eesanje/url_47_231_9.txt new file mode 100644 index 0000000000000000000000000000000000000000..c1da1ae8084040aa802bbf8b51b1376563533374 --- /dev/null +++ b/eesanje/url_47_231_9.txt @@ -0,0 +1,6 @@ +ನಿಹಾಂಗ್ ಸಿಖ್‍ರ ದಾಳಿಗೆ ಪೊಲೀಸ್ ಅಧಿಕಾರಿ ಬಲಿ +ಕಪುರ್ತಲಾ,ನ.23- ಪಂಜಾಬ್‍ನ ಕಪುರ್ತಲದ ಗುರುದ್ವಾರವೊಂದರಲ್ಲಿ ನಿಹಾಂಗ್ ಸಿಖ್‍ರ ಗುಂಪೊಂದು ಗುಂಡು ಹಾರಿಸಿದ ಪರಿಣಾಮ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗುರುದ್ವಾರದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಘರ್ಷಣೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ರುದ್ವಾರವನ್ನು ಅತಿಕ್ರಮಿಸಿದ ಆರೋಪದ ಮೇಲೆ ಪೊಲೀಸರು ನಿಹಾಂಗ್ ಪಂಗಡದ 10 ಜನರನ್ನು ಬಂಧಿಸಿದ್ದಾರೆ, ಆದರೆ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಆವರಣವನ್ನು ತೆರವುಗೊಳಿಸಲು ಹೋದಾಗ ನಿಹಾಂಗ್‍ಗಳಲ್ಲಿ ಒಬ್ಬರು ಪೊಲೀಸರ ಮೇಲೆ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. +ನಿಹಾಂಗ್‍ಗಳು ಅವರ ಮೇಲೆ ಗುಂಡು ಹಾರಿಸಿದಾಗ ಪೊಲೀಸರು ರಸ್ತೆಯಲ್ಲಿ ನಿಂತಿದ್ದರು ಎಂದು ಕಪುರ್ತಲಾ ಪೊಲೀಸ್ ವರಿಷ್ಠಾಧಿಕಾರಿ (ಪ್ರಧಾನ ಕಛೇರಿ) ತೇಜ್‍ಬೀರ್ ಸಿಂಗ್ ಹುಂದಾಲ್ ಪಿಟಿಐಗೆ ತಿಳಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಕನಿಷ್ಠ 30 ನಿಹಾಂಗ್‍ಗಳು ಇನ್ನೂ ಗುರುದ್ವಾರದೊಳಗೆ ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. +ಜಯಪ್ರಕಾಶ್ ಹೆಗ್ಡೆ ಅವಧಿ ಮುಂದುವರಿಕೆ: ಸಿಎಂ ಸಿದ್ದರಾಮಯ್ಯ +1699 ರಲ್ಲಿ ಗುರು ಗೋಬಿಂದ್ ಸಿಂಗ್ ಅವರಿಂದ ಖಾಲ್ಸಾವನ್ನು ರಚಿಸಿದಾಗ ನಿಹಾಂಗ್ ಸಿಖ್ ಯೋಧರ ಆದೇಶವಾಗಿದೆ. ಅವರು ತಮ್ಮ ನೀಲಿ ನಿಲುವಂಗಿಗಳು, ಅಲಂಕರಿಸಿದ ಪೇಟಗಳಿಂದ ಗುರುತಿಸಲ್ಪಡುತ್ತಾರೆ ಮತ್ತು ಆಗಾಗ್ಗೆ ಕತ್ತಿಗಳು ಮತ್ತು ಈಟಿಗಳಂತಹ ಆಯುಧಗಳನ್ನು ಹೊತ್ತಿರುವುದನ್ನು ಕಾಣಬಹುದು. 2020 ರಲ್ಲಿ, ನಿಹಾಂಗ್ ಪ್ರತಿಭಟನಾಕಾರರು ಕೋವಿಡ್ ಲಾಕ್‍ಡೌನ್ ಹೇರಲು ಪ್ರಯತ್ನಿಸುತ್ತಿದ್ದಾಗ ಪಟಿಯಾಲಾದಲ್ಲಿ ಪೊಲೀಸ್ ಅಧಿಕಾರಿಯ ಕೈಯನ್ನು ಕತ್ತರಿಸಿದ್ದರು. \ No newline at end of file diff --git a/eesanje/url_47_232_1.txt b/eesanje/url_47_232_1.txt new file mode 100644 index 0000000000000000000000000000000000000000..365ae43e83e45dc55b83b56f40eafba1ed8e97e9 --- /dev/null +++ b/eesanje/url_47_232_1.txt @@ -0,0 +1,10 @@ +ಎನ್‌ಸಿಇಆರ್‌ಟಿ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆಗೆ ಶಿಫಾರಸು +ನವದೆಹಲಿ, ನ.22- ಸಾಮಾಜಿಕ ವಿಜ್ಞಾನಗಳ ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಉನ್ನತ ಮಟ್ಟದ ಸಮಿತಿಯು ಭಾರತೀಯ ಮಹಾಕಾವ್ಯಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಪಠ್ಯಪುಸ್ತಕಗಳಲ್ಲಿ ಸೇರಿಸಲು ಶಿಫಾರಸು ಮಾಡಿದೆ. +ಪ್ರೊಫೆಸರ್ ಸಿಐ ಐಸಾಕ್ ನೇತೃತ್ವದ ಎನ್‌ಸಿಇಆರ್‌ಟಿ ಸಮಾಜ ವಿಜ್ಞಾನ ಸಮಿತಿಯು ಪ್ರಸ್ತುತ ಪಠ್ಯಕ್ರಮಕ್ಕೆ ಹಲವಾರು ಮಾರ್ಪಾಡುಗಳನ್ನು ಪ್ರಸ್ತಾಪಿಸಿದೆ, ಇತಿಹಾಸ ಪಠ್ಯಕ್ರಮವನ್ನು ನಾಲ್ಕು ವಿಭಾಗಗಳಾಗಿ ಪುನರ್ರಚಿಸುವುದು ಸೇರಿದಂತೆ: ಶಾಸ್ತ್ರೀಯ, ಮಧ್ಯಕಾಲೀನ, ಬ್ರಿಟಿಷ್ ಮತ್ತು ಆಧುನಿಕ ಭಾರತ. ಸುಭಾಷ್ ಚಂದ್ರ ಬೋಸ್ ಅವರಂತಹ ರಾಷ್ಟ್ರೀಯ ವ್ಯಕ್ತಿಗಳನ್ನು ಸೇರಿಸಿಕೊಳ್ಳುವಂತೆಯೂ ಸಮಿತಿ ಸಲಹೆ ನೀಡಿದೆ. +ಪ್ರಸ್ತಾವನೆಯು ವೇದಗಳು ಮತ್ತು ಆಯುರ್ವೇದಕ್ಕೆ ಸಂಬಂಧಿಸಿದ ಪಠ್ಯಪುಸ್ತಕಗಳಂತಹ ಪೂಜ್ಯ ಗ್ರಂಥಗಳ ಸೇರ್ಪಡೆಯನ್ನೂ ಒಳಗೊಂಡಿದೆ. ಈ ಶಿಫಾರಸುಗಳು ಮುಂಬರುವ ಎನ್‍ಸಿಇಆರ್‍ಟಿ ಪಠ್ಯಪುಸ್ತಕಗಳ ರಚನೆಗೆ ಮಾರ್ಗದರ್ಶನ ನೀಡುವ ಸಮಾಜ ವಿಜ್ಞಾನದ ನಿರ್ಣಾಯಕ ಸ್ಥಾನದ ಪತ್ರಿಕೆಗೆ ಅವಿಭಾಜ್ಯವಾಗಿದೆ. +ಸಮಿತಿಯ ಸಲಹೆಗಳನ್ನು ಜುಲೈನಲ್ಲಿ ಸ್ಥಾಪಿಸಲಾದ 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ ಪರಿಶೀಲಿಸಬಹುದು. ಈ ಸಮಿತಿಯು ಆಯಾ ತರಗತಿಗಳಿಗೆ ಪಠ್ಯಕ್ರಮ, ಪಠ್ಯಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ಅಂತಿಮಗೊಳಿಸುವ ಜವಾಬ್ದಾರಿಯನ್ನು ಹೊಂದಿದೆ. +ಪಾಕ್ ಉಗ್ರ ನಂಟು: ನಾಲ್ವರು ಸರ್ಕಾರಿ ಅಧಿಕಾರಿಗಳು ಸೇವೆಯಿಂದ ವಜಾ +ಇತಿಹಾಸವನ್ನು ನಾಲ್ಕು ಅವಧಿಗಳಾಗಿ ವರ್ಗೀಕರಿಸಲು ಸಮಿತಿಯು ಶಿಫಾರಸು ಮಾಡಿದೆ: ಶಾಸ್ತ್ರೀಯ, ಮಧ್ಯಕಾಲೀನ, ಬ್ರಿಟಿಷ್ ಯುಗ ಮತ್ತು ಆಧುನಿಕ ಭಾರತ. ಇಲ್ಲಿಯವರೆಗೆ, ಭಾರತೀಯ ಇತಿಹಾಸವನ್ನು ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತ ಎಂದು ಮೂರು ಅವಧಿಗಳಾಗಿ ವರ್ಗೀಕರಿಸಲಾಗಿದೆ ಎಂದು ಐಸಾಕ್ ತಿಳಿಸಿದ್ದಾರೆ. +ಶಾಸ್ತ್ರೀಯ ಅವಧಿಯಲ್ಲಿ, ಭಾರತೀಯ ಮಹಾಕಾವ್ಯಗಳು, ರಾಮಾಯಣ ಮತ್ತು ಮಹಾಭಾರತಗಳನ್ನು ಕಲಿಸಲು ನಾವು ಸಲಹೆ ನೀಡಿದ್ದೇವೆ. ರಾಮನಂತಹ ವ್ಯಕ್ತಿಗಳು ಮತ್ತು ಮಹಾಕಾವ್ಯದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳುವಳಿಕೆಯನ್ನು ಒದಗಿಸುವಂತೆ ನಾವು ಪ್ರಸ್ತಾಪಿಸುತ್ತೇವೆ ಎಂದು ಅವರು ಹೇಳಿದರು. ಪ್ರತಿ ತರಗತಿಯ ಗೋಡೆಗಳ ಮೇಲೆ ಸ್ಥಳೀಯ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕೆತ್ತುವಂತೆ ಸಮಿತಿಯು ಶಿಫಾರಸು ಮಾಡಿದೆ. +ಖ್ಯಾತ ನೇತ್ರ ತಜ್ಞ ಬದ್ರಿನಾಥ್ ಇನ್ನಿಲ್ಲ +ಇದರ ಹಿಂದಿನ ತಾರ್ಕಿಕತೆಯನ್ನು ವಿವರಿಸಿದ ಐಸಾಕ್, ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಂತಹ ಸಾಮಾಜಿಕ ಮೌಲ್ಯಗಳಿಗೆ ಒತ್ತು ನೀಡುವ ಉದಾತ್ತ ಆದರ್ಶಗಳನ್ನು ಪೀಠಿಕೆಯು ಒಳಗೊಂಡಿದೆ. ಆದ್ದರಿಂದ, ಪ್ರತಿಯೊಬ್ಬರೂ ಅದರ ಸಾರವನ್ನು ಗ್ರಹಿಸಲು ಮತ್ತು ಆಂತರಿಕಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ತರಗತಿಯ ಗೋಡೆಗಳ ಮೇಲೆ ಅದನ್ನು ಪ್ರದರ್ಶಿಸಲು ನಾವು ಪ್ರಸ್ತಾಪಿಸುತ್ತೇವೆ ಎಂದಿದ್ದಾರೆ. \ No newline at end of file diff --git a/eesanje/url_47_232_10.txt b/eesanje/url_47_232_10.txt new file mode 100644 index 0000000000000000000000000000000000000000..53b828f114692812095166473271734f2e95ecc0 --- /dev/null +++ b/eesanje/url_47_232_10.txt @@ -0,0 +1,7 @@ +ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠ ಮೀಸಲಾತಿ +ಮುಂಬೈ,ನ.21- ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಜಾತಿ ಗಣತಿ ಆಧಾರದ ಮೇಲೆ ಮರಾಠಾ ಮೀಸಲಾತಿ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. +ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಆಧಾರದ ಮೇಲೆ ಮರಾಠಾ ಮೀಸಲಾತಿ ನೀಡುತ್ತೇವೆ ಎಂದು ನಾನಾ ಪಟೋಲೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಮತ್ತು ಮಹಾರಾಷ್ಟ್ರ ಸರ್ಕಾರಗಳು ಸಿದ್ಧರಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು. +ಕೇಂದ್ರ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಾವು ಖಂಡಿತವಾಗಿಯೂ ಈ ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಜಾತಿ ಗಣತಿಗಾಗಿ ನಮ್ಮ ನಾಯಕ ರಾಹುಲ್ ಗಾಂಧಿ ಅವರ ಬೇಡಿಕೆಯು ಈ ಸಮಸ್ಯೆಗಳ ಮೂಲವನ್ನು ಪಡೆಯಲು ಮತ್ತು ಪರಿಹಾರವನ್ನು ನೀಡುವ ನಮ್ಮ ಸಂಕಲ್ಪಕ್ಕೆ ಅನುಗುಣವಾಗಿದ್ದೇವೆ ಎಂದಿದ್ದಾರೆ. +ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬಸ್ ಕಂಡಕ್ಟರ್ ಬಂಧನ +ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಅನಿಯಮಿತ ಮಳೆಯಿಂದ ಬೆಳೆ ಕಳೆದುಕೊಂಡ ರೈತರ ಬಗ್ಗೆ ಅಸಡ್ಡೆ ತೋರುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಹೂಡಿಕೆ ಇಳಿಮುಖವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರಕ್ಕೆ ಪ್ರತಿ ಬಾರಿ ಭೇಟಿ ನೀಡಿದಾಗ, ಗುಜರಾತ್‍ಗೆ ಕೆಲವು ಹೂಡಿಕೆ ಅವಕಾಶವನ್ನು ಕಸಿದುಕೊಳ್ಳುತ್ತಾರೆ, ಇದು ರಾಜ್ಯ ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. +ಒಬಿಸಿ ವರ್ಗದಡಿಯಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೋರಿ ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದ ಮರಾಠ ಸಮುದಾಯದ ಪ್ರತಿಭಟನೆಗಳಿಗೆ ಮಹಾರಾಷ್ಟ್ರ ಸಾಕ್ಷಿಯಾಗಿದೆ. \ No newline at end of file diff --git a/eesanje/url_47_232_11.txt b/eesanje/url_47_232_11.txt new file mode 100644 index 0000000000000000000000000000000000000000..edea94f40bf075961295bb689417c2689460b2a7 --- /dev/null +++ b/eesanje/url_47_232_11.txt @@ -0,0 +1,5 @@ +ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ: ಗೆಹ್ಲೋಟ್ +ನವದೆಹಲಿ,ನ.21- ಇದೇ 25 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.ಪ್ರಣಾಳಿಕೆಯು ಪಂಚಾಯತ್ ಮಟ್ಟದಲ್ಲಿ ಉದ್ಯೋಗಗಳಿಗೆ ಹೊಸ ಉದ್ಯೋಗ ಯೋಜನೆಯನ್ನು ಭರವಸೆ ನೀಡುತ್ತದೆ. +ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಪೇಪರ್ ಸೋರಿಕೆ ಹಾವಳಿಯನ್ನು ನಿಭಾಯಿಸಲು ಕಾನೂನು ತರಲಾಗುವುದು ಎಂದು ಹೇಳಿದರು. ನಮ್ಮ ಸರ್ಕಾರವನ್ನು ಪುನರಾವರ್ತಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತಿದ್ದೇನೆ. +ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬಸ್ ಕಂಡಕ್ಟರ್ ಬಂಧನ +ನನ್ನ ಅವಧಿಯಲ್ಲಿ ಮಾಡಿದ ಯೋಜನೆಗಳು ಮತ್ತು ಕಾನೂನುಗಳು ಮತ್ತು ನೀಡಿದ ಖಾತರಿಗಳು ದೊಡ್ಡ ಪರಿಣಾಮವನ್ನು ಬೀರಿವೆ. ಸರ್ಕಾರ ರಚನೆಯಾದಾಗ ಈ ಭರವಸೆಗಳನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭರವಸೆ ನೀಡಿದ್ದಾರೆ. \ No newline at end of file diff --git a/eesanje/url_47_232_12.txt b/eesanje/url_47_232_12.txt new file mode 100644 index 0000000000000000000000000000000000000000..12f78c671e773c31791a3884d5f0a874871ebfa4 --- /dev/null +++ b/eesanje/url_47_232_12.txt @@ -0,0 +1,6 @@ +ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಬಸ್ ಕಂಡಕ್ಟರ್ ಬಂಧನ +ಪಣಜಿ, ನ.21 (ಪಿಟಿಐ) – ಗೋವಾದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ವಿದ್ಯಾರ್ಥಿನಿ ಮಾಪುಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, 20 ವರ್ಷದ ಕಂಡಕ್ಟರ್ ತಾನು 12 ನೇ ತರಗತಿಯಲ್ಲಿದ್ದಾಗ (ಅಪ್ರಾಪ್ತ ವಯಸ್ಸಿನವನಾಗಿದ್ದಾಗ) ತನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರು ನೀಡಿದ್ದಾರೆ. +ಖಲಿಸ್ತಾನಿ ಪರ ಘೋಷಣೆ ಬರೆದಿದ್ದ ಹರಿಯಾಣ ಯುವಕ ಬಂಧನ +ತಿವಿಮ್ ಗ್ರಾಮದಿಂದ ಮಾಪುಸಾಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಾಗ ಆತ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಯುವತಿ ದೂರು ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿವ್ಬಾ ದಳವಿ ತಿಳಿಸಿದ್ದಾರೆ. +ಮಾಪುಸಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಮತ್ತು ಭಾರತೀಯ ದಂಡ ಸಂಹಿತೆ, ಗೋವಾ ಮಕ್ಕಳ ಕಾಯ್ದೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಫೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_232_2.txt b/eesanje/url_47_232_2.txt new file mode 100644 index 0000000000000000000000000000000000000000..33de3354b9d374e4435ba14f33882fab33232600 --- /dev/null +++ b/eesanje/url_47_232_2.txt @@ -0,0 +1,7 @@ +41 ಕಾರ್ಮಿಕರನ್ನು ರಕ್ಷಿಸುವ ಅರ್ಧ ದಾರಿ ಸವೇಸಿರುವ ರಕ್ಷಣಾ ಸಿಬ್ಬಂದಿ +ಸಿಲ್ಕ್ಯಾರಾ,ನ.22- ಉತ್ತರಾಖಂಡದಲ್ಲಿ ಕುಸಿದ ಸುರಂಗದೊಳಗೆ ಹತ್ತು ದಿನಗಳಿಂದ ಸಿಕ್ಕಿಬಿದ್ದ 41 ಕಾರ್ಮಿಕರನ್ನು ತಲುಪಲು ರಕ್ಷಣಾಕಾರರು ಈಗಾಗಲೇ ಅರ್ಧ ಗುಡ್ಡವನ್ನು ಕೊರೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ಉತ್ತರಾಖಂಡ್‍ನ 4.5 ಕಿಮೀ ಸುರಂಗದಲ್ಲಿ ನ.12ರ ಆರಂಭದಲ್ಲಿ ಪುರುಷರು ಸಿಲುಕಿಕೊಂಡಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಬೆಳಕು, ಆಮ್ಲಜನಕ, ಆಹಾರ, ನೀರು ಮತ್ತು ಔಷಧಿಗಳನ್ನು ರವಾನಿಸಲಾಗುತ್ತಿದೆ. +ರಕ್ಷಣಾ ಕಾರ್ಯಕರ್ತರು ಅಂದಾಜು 60 ಮೀಟರ್‍ನ 32 ಮೀಟರ್‍ಗಳನ್ನು ಕೊರೆದಿದ್ದಾರೆ, ಪುರುಷರು ತೆವಳಲು ಸಾಕಷ್ಟು ಅಗಲವಾದ ಪೈಪ್ ಮೂಲಕ ತಳ್ಳಲು ಅದನ್ನು ತೆರವುಗೊಳಿಸಬೇಕು ಎಂದು ರಕ್ಷಣಾ ಪ್ರಯತ್ನದ ನೇತೃತ್ವದ ನಿವೃತ್ತ ಸೇನಾ ಅಧಿಕಾರಿ ದೀಪಕ್ ಪಾಟೀಲ್ ಹೇಳಿದ್ದಾರೆ. +ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ತಿತ್ತು: ಅಖಿಲೇಶ್ +ವೈದ್ಯಕೀಯ ಎಂಡೋಸ್ಕೋಪಿ ಕ್ಯಾಮೆರಾವನ್ನು ಸಣ್ಣ ಪೈಪ್‍ಲೈನ್ ಮೂಲಕ ತಳ್ಳಿದ ನಂತರ, ಸುರಂಗದ ಒಳಗಿನಿಂದ ಮಂಗಳವಾರ ಮೊದಲ ಚಿತ್ರಗಳು ಹೊರಹೊಮ್ಮಿದವು, ಬಿಳಿ ಮತ್ತು ಹಳದಿ ಬಣ್ಣದ ಹಾರ್ಡ್‍ಹ್ಯಾಟ್‍ಗಳ ಕಾರ್ಮಿಕರು ಸೀಮಿತ ಜಾಗದಲ್ಲಿ ನಿಂತು ರಕ್ಷಕರೊಂದಿಗೆ ಸಂವಹನ ನಡೆಸುತ್ತಿದ್ದಾರೆ. +ಸುರಂಗ ಕುಸಿತಕ್ಕೆ ಕಾರಣವೇನು ಎಂದು ಅಧಿಕಾರಿಗಳು ಹೇಳಿಲ್ಲ, ಆದರೆ ಈ ಪ್ರದೇಶವು ಭೂಕುಸಿತ, ಭೂಕಂಪ ಮತ್ತು ಪ್ರವಾಹಕ್ಕೆ ಗುರಿಯಾಗುತ್ತದೆ. ಪರ್ವತ ಪ್ರದೇಶಗಳಲ್ಲಿ ಕೊರೆತದ ಸ್ನ್ಯಾಗ್‍ಗಳಿಂದ ಪುರುಷರನ್ನು ಹೊರತರುವ ಪ್ರಯತ್ನಗಳು ನಿಧಾನಗೊಂಡಿವೆ. \ No newline at end of file diff --git a/eesanje/url_47_232_3.txt b/eesanje/url_47_232_3.txt new file mode 100644 index 0000000000000000000000000000000000000000..a49ea65d845899f2c7b011b93fc6175dc6ce1c62 --- /dev/null +++ b/eesanje/url_47_232_3.txt @@ -0,0 +1,6 @@ +ಪಾಕ್ ಉಗ್ರ ನಂಟು: ನಾಲ್ವರು ಸರ್ಕಾರಿ ಅಧಿಕಾರಿಗಳು ಸೇವೆಯಿಂದ ವಜಾ +ಜಮ್ಮು, ನ 22 (ಪಿಟಿಐ) ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕ ನಂಟು ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ವೈದ್ಯರು ಮತ್ತು ಪೊಲೀಸ್ ಸೇರಿದಂತೆ ನಾಲ್ವರು ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಶ್ರೀನಗರದ ಎಸ್‍ಎಂಎಚ್‍ಎಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ನಿಸಾರ್-ಉಲï-ಹಸನ್, ಕಾನ್ಸ್‍ಟೇಬಲ್ ಅಬ್ದುಲ್ ಮಜೀದ್ ಭಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಲ್ಯಾಬೋರೇಟರಿ ಬೇರರ್ ಅಬ್ದುಲ್ ಸಲಾಂ ರಾಥರ್ ಮತ್ತು ಶಿಕ್ಷಣ ಇಲಾಖೆಯ ಶಿಕ್ಷಕ ಫಾರೂಕ್ ಅಹ್ಮದ್ ಮಿರ್ ಅವರನ್ನು ಸಂವಿಧಾನದ 11ನೇ ವಿಯ ಪ್ರಕಾರ ವಜಾಗೊಳಿಸಲಾಗಿದೆ. +ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ತಿತ್ತು: ಅಖಿಲೇಶ್ +ಕಳೆದ ಮೂರು ವರ್ಷಗಳಲ್ಲಿ, ಕೇಂದ್ರಾಡಳಿತ ಪ್ರದೇಶದ ಆಡಳಿತವು ಸಂವಿಧಾನದ 311 (2) (ಸಿ) ಅಡಿಯಲ್ಲಿ 50 ಕ್ಕೂ ಹೆಚ್ಚು ನೌಕರರನ್ನು ವಜಾಗೊಳಿಸಿದೆ, ಅವರು ಸರ್ಕಾರದೊಳಗೆ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಸಾರ್ವಜನಿಕ ಖಜಾನೆಯಿಂದ ಸಂಬಳ ಪಡೆಯುತ್ತಿದ್ದಾರೆ ಎಂದು ಆರೋಪಿಸಲಾಗಿದೆ. +ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳಿಗೆ ಸಹಾಯ ಮಾಡುತ್ತ ಭಯೋತ್ಪಾದಕರ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು ಎನ್ನಲಾಗಿದೆ. \ No newline at end of file diff --git a/eesanje/url_47_232_4.txt b/eesanje/url_47_232_4.txt new file mode 100644 index 0000000000000000000000000000000000000000..c6b4cfd92a069f332c417463a86ed00c83b16a11 --- /dev/null +++ b/eesanje/url_47_232_4.txt @@ -0,0 +1,7 @@ +ಹಲವು ವರ್ಷಗಳ ನಂತರ ವೇದಿಕೆ ಹಂಚಿಕೊಂಡ ಮೋದಿ- ವಸುಂಧರಾ +ಜೈಪುರ,ನ.22- ರಾಜಸ್ಥಾನದಲ್ಲಿ ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಚುನಾವಣಾ ರ್ಯಾಲಿಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ. ಬಿಜೆಪಿ ಹೈಕಮಾಂಡ್ ಮತ್ತು ಅವರ ನಡುವೆ ಎಲ್ಲವೂ ಸರಿಯಾಗಿದೆ ಎಂಬ ಸಂದೇಶವನ್ನು ರವಾನಿಸುವ ಪ್ರಯತ್ನವಾಗಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. +ಚುನಾವಣೆ ಘೋಷಣೆಯಾದ ನಂತರ ಪ್ರಧಾನಿ ಮೋದಿ ಮತ್ತು ರಾಜೆ ಒಟ್ಟಿಗೆ ಹಾಜರಿದ್ದ ಮೊದಲ ರ್ಯಾಲಿ ಇದಾಗಿದೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿರುವ ನಾಯಕರಲ್ಲಿ ಎಂಎಸ್ ರಾಜೆ ಅವರನ್ನು ಪರಿಗಣಿಸಲಾಗಿದೆ. +ಅವಳಿ ಸಹೋದರನನ್ನು ಕೊಂದ 5 ವರ್ಷದ ಬಾಲಕ +ಬರಾನ್ ಜಿ¯್ಲÉಯಲ್ಲಿ ನಡೆದ ರ್ಯಾಲಿಯಲ್ಲಿ ರಾಜೆ ಅವರು ಪ್ರಧಾನಿ ಮೋದಿಯವರನ್ನು ಹೊಗಳಿದರು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗಳಿಸಲು ದೇಶದ ಜನರು ಕಾತುರದಿಂದ ಕಾಯುತ್ತಿ್ದÁರೆ ಎಂದು ಹೇಳಿದರು. +ಇಡೀ ದೇಶವು ಪ್ರಧಾನಿ ಮೋದಿಯವರ ಶಕ್ತಿಯನ್ನು ಗುರುತಿಸುತ್ತದೆ ಮತ್ತು ಈಗ ಇಡೀ ಜಗತ್ತು ಅವರ ನಾಯಕತ್ವವನ್ನು ಒಪ್ಪಿಕೊಳ್ಳುತ್ತಿದೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿ ಮೋದಿಯವರನ್ನು ವೇದಿಕೆಗೆ ದೊಡ್ಡ ಹಾರ ಹಾಕಿ ಸ್ವಾಗತಿಸಲಾಯಿತು. ಮಾಜಿ ಸಿಎಂ ರಾಜೆ ಮತ್ತು ಮೋದಿ ಇಬ್ಬರೂ ಚೌಕಟ್ಟಿನಲ್ಲಿದ್ದರು. ಆಕೆಯ ಪುತ್ರ ಹಾಗೂ ಜಲಾವರ್-ಬರನ್ ಸಂಸದ ದುಶ್ಯಂತ್ ಸಿಂಗ್ ಮತ್ತು ಪಕ್ಷದ ಸ್ಥಳೀಯ ಅಭ್ಯರ್ಥಿಗಳು ಚುನಾವಣಾ ಸಭೆಯಲ್ಲಿ ಉಪಸ್ಥಿತರಿದ್ದರು. +ಪ್ರಧಾನಿ ಮೋದಿಯವರ ಒಂದು ಬದಿಯಲ್ಲಿ ರಾಜೇ ಮತ್ತು ಇನ್ನೊಂದು ಬದಿಯಲ್ಲಿ ದುಶ್ಯಂತ್ ಕುಳಿತಿದ್ದರು. ಕಾರ್ಯಕ್ರಮದ ವೇಳೆ, ಪ್ರಧಾನಿ ಮೋದಿ ಅವರಿಬ್ಬರೊಂದಿಗೆ ಮಾತನಾಡುತ್ತಿದ್ದರು. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. \ No newline at end of file diff --git a/eesanje/url_47_232_5.txt b/eesanje/url_47_232_5.txt new file mode 100644 index 0000000000000000000000000000000000000000..dfe90b60726ce9a7c5712bc82d73b03bfeceb801 --- /dev/null +++ b/eesanje/url_47_232_5.txt @@ -0,0 +1,5 @@ +ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ತಿತ್ತು: ಅಖಿಲೇಶ್ +ಇಟಾವಾ,ನ.22- ಏಕದಿನ ವಿಶ್ವಕಪ್‍ನ ಅಂತಿಮ ಪಂದ್ಯವನ್ನು ಗುಜರಾತ್‍ನ ಬದಲಿಗೆ ಲಕ್ನೋದಲ್ಲಿ ಆಯೋಜಿಸಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. +ಗುಜರಾತ್‍ನಲ್ಲಿ ನಡೆದ ಪಂದ್ಯ (ವಿಶ್ವಕಪ್ 2023 ಫೈನಲï), ಅದು ಲಕ್ನೋದಲ್ಲಿ ನಡೆದಿದ್ದರೆ, ಅವರಿಗೆ (ಟೀಮ್ ಇಂಡಿಯಾ) ಅನೇಕರ ಆಶೀರ್ವಾದ ಸಿಗುತ್ತಿತ್ತು ಪಂದ್ಯ ಅಲ್ಲಿ (ಲಕ್ನೋ) ನಡೆದಿದ್ದರೆ, ಟೀಂ ಇಂಡಿಯಾ ಭಗವಾನ್ ವಿಷ್ಣು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಆಶೀರ್ವಾದವನ್ನು ಪಡೆದಿದ್ದರೆ ಗೆಲ್ಲುತ್ತಿತ್ತು. ಈಗ ಪಿಚ್‍ನಲ್ಲಿ ಸ್ವಲ್ಪ ಸಮಸ್ಯೆ ಇದೆ ಎಂದು ಕೇಳಬಹುದು ಎಂದು ಅವರು ಪರೋಕ್ಷವಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. +ರಾಜಕೀಯ ಪರಿಹಾರದಿಂದ ಮಣಿಪುರ ಸಮಸ್ಯೆ ನಿವಾರಣೆ: ಸೇನೆ +2024 ರ ಚುನಾವಣೆಯ ನಂತರ ದೇಶದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. \ No newline at end of file diff --git a/eesanje/url_47_232_6.txt b/eesanje/url_47_232_6.txt new file mode 100644 index 0000000000000000000000000000000000000000..05b0dacd832df3a3b4d9f1af97c435d53a84e3ff --- /dev/null +++ b/eesanje/url_47_232_6.txt @@ -0,0 +1,8 @@ +ಖ್ಯಾತ ನೇತ್ರ ತಜ್ಞ ಬದ್ರಿನಾಥ್ ಇನ್ನಿಲ್ಲ +ಚೆನ್ನೈ,ನ.22- ಭಾರತದ ಅತಿದೊಡ್ಡ ದತ್ತಿ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಶಂಕರ ನೇತ್ರಾಲಯವನ್ನು ಸ್ಥಾಪಿಸಿದ ಖ್ಯಾತ ವಿಟ್ರೊರೆಟಿನಲ್ ಸರ್ಜನ್ ಡಾ.ಎಸ್.ಎಸ್. ಬದ್ರಿನಾಥ್ ಅವರು ನಿಧನರಾಗಿದ್ದಾರೆ. +ಡಾ ಬದ್ರಿನಾಥ್ ಅವರು ಫೆಬ್ರವರಿ 24, 1940 ರಂದು ಚೆನ್ನೈನ ಟ್ರಿಪ್ಲಿಕೇನ್‍ನಲ್ಲಿ ಜನಿಸಿದರು. ಅವರು ಮದ್ರಾಸ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದರು. ಅವರು 1963 ಮತ್ತು 1968 ರ ನಡುವೆ ನ್ಯೂಯಾರ್ಕ್ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವೈದ್ಯಕೀಯ ಶಾಲೆ ಮತ್ತು ಬ್ರೂಕ್ಲಿನ್ ಐ ಮತ್ತು ಇಯರ್ ಇನ್‍ಫರ್ಮರಿಯಲ್ಲಿ ಗ್ರಾಸ್‍ಲ್ಯಾಂಡ್ ಆಸ್ಪತ್ರೆಯ ನೇತ್ರವಿಜ್ಞಾನದಲ್ಲಿ ತಮ್ಮ ಸ್ನಾತಕೋತ್ತರ ಅಧ್ಯಯನವನ್ನು ನಡೆಸಿದರು. +ಅಮೇರಿಕಾದಲ್ಲಿ ಡಾ.ಬದ್ರಿನಾಥ್ ಡಾ.ವಾಸಂತಿಯವರನ್ನು ಭೇಟಿಯಾದರು. ಒಂದು ವರ್ಷದ ನಂತರ, ಅವರು 1970 ರವರೆಗೆ ಡಾ ಚಾಲ್ಸರ್ ಎಲ್ ಷೆಪೆನ್ಸ್ ಅವರ ಅಡಿಯಲ್ಲಿ ಬೋಸ್ಟನ್‍ನ ಮ್ಯಾಸಚೂಸೆಟ್ಸ್ ಐ ಮತ್ತು ಇಯರ್ ಇನ್‍ಫರ್ಮರಿಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದರು ಮತ್ತು ರಾಯಲ್ ಕಾಲೇಜ್ ಆಫ್ ಸರ್ಜನ್ಸ್ (ಕೆನಡಾ) ಮತ್ತು ನೇತ್ರಶಾಸ್ತ್ರದಲ್ಲಿನ ಅಮೇರಿಕನ್ ಬೋರ್ಡ್ ಪರೀಕ್ಷೆಯ ಫೆಲೋ ಪರೀಕ್ಷೆಯಲ್ಲಿ ಬಹುತೇಕ ಏಕಕಾಲದಲ್ಲಿ ಉತ್ತೀರ್ಣರಾದರು. +1970 ರಲ್ಲಿ ವೈದ್ಯರು ತಮ್ಮ ಕುಟುಂಬದೊಂದಿಗೆ ಭಾರತಕ್ಕೆ ಮರಳಿದರು. ಅವರು ಆರು ವರ್ಷಗಳ ಕಾಲ ಅಡ್ಯಾರ್‍ನ ಸ್ವಯಂಸೇವಾ ಆರೋಗ್ಯ ಸೇವೆಗಳಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು. ನಂತರ ಅವರು ನೇತ್ರವಿಜ್ಞಾನ ಮತ್ತು ವಿಟ್ರೊರೆಟಿನಲ್ ಶಸ್ತ್ರಚಿಕಿತ್ಸೆಯಲ್ಲಿ ತಮ್ಮ ಖಾಸಗಿ ಅಭ್ಯಾಸವನ್ನು ಆಸ್ಪತ್ರೆ ಸ್ಥಾಪಿಸಿದರು.1978 ರಲ್ಲಿ, ಡಾ ಬದ್ರಿನಾಥ್ ಅವರು ವೈದ್ಯಕೀಯ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಿದರು, ಅದರಲ್ಲಿ ಶಂಕರ ನೇತ್ರಾಲಯವು ಆಸ್ಪತ್ರೆಯ ಘಟಕವಾಗಿದೆ, ನೋಂದಾಯಿತ ಸಮಾಜ ಮತ್ತು ದತ್ತಿ ಲಾಭರಹಿತ ನೇತ್ರ ಸಂಸ್ಥೆಯಾಗಿದೆ. +ರಾಜಕೀಯ ಪರಿಹಾರದಿಂದ ಮಣಿಪುರ ಸಮಸ್ಯೆ ನಿವಾರಣೆ: ಸೇನೆ +ಮುಂದಿನ 24 ವರ್ಷಗಳಲ್ಲಿ, ಅವರು ಮತ್ತು ಅವರ ಸಹೋದ್ಯೋಗಿಗಳು ಭಾರತದಲ್ಲಿ ಅಂಧತ್ವವನ್ನು ಎದುರಿಸಲು ಸೈನ್ಯವನ್ನು ರಚಿಸಲು ನೇತ್ರಶಾಸ್ತ್ರಜ್ಞರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಬೋಧನೆ ಮತ್ತು ತರಬೇತಿ ನೀಡುವುದರ ಜೊತೆಗೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಕಣ್ಣಿನ ಆರೈಕೆಯನ್ನು ನೀಡಿದರು ಮತ್ತು ಸಂಶೋಧನೆಯ ಮೂಲಕ ಕಣ್ಣಿನ ಆರೈಕೆ ಸಮಸ್ಯೆಗಳಿಗೆ ಸುಸ್ಥಿರವಾದ ಸ್ಥಳೀಯ ಪರಿಹಾರಗಳನ್ನು ಹುಡುಕುವುದನ್ನು ಮುಂದುವರೆಸಿದರು. +ವರ್ಷಗಳಾದ್ಯಂತ ಅವರ ದತ್ತಿ ಕಾರ್ಯಗಳಿಗಾಗಿ, ಡಾ ಬದರಿನಾಥ್ ಅವರು ಭಾರತ ಸರ್ಕಾರದಿಂದ ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು, ಇದು ಕ್ರಮವಾಗಿ ದೇಶದ ಮೂರನೇ ಮತ್ತು ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾಗಿದೆ. \ No newline at end of file diff --git a/eesanje/url_47_232_7.txt b/eesanje/url_47_232_7.txt new file mode 100644 index 0000000000000000000000000000000000000000..f37e88cf1fe9cbdc9102e647c08494e9167d3f86 --- /dev/null +++ b/eesanje/url_47_232_7.txt @@ -0,0 +1,7 @@ +ರಾಜಕೀಯ ಪರಿಹಾರದಿಂದ ಮಣಿಪುರ ಸಮಸ್ಯೆ ನಿವಾರಣೆ: ಸೇನೆ +ಗುವಾಹಟಿ,ನ.22- ಮಣಿಪುರದ ಸದ್ಯದ ಪರಿಸ್ಥಿತಿ ನಿವಾರಣೆಗೆ ರಾಜಕೀಯ ಪರಿಹಾರದ ಅಗತ್ಯವಿದೆ ಎಂದು ಸೇನೆಯ ಪೂರ್ವ ಕಮಾಂಡ್ ಮುಖ್ಯಸ್ಥರು ಹೇಳಿದ್ದಾರೆ. ಈಸ್ಟರ್ನ್ ಕಮಾಂಡ್‍ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್ -ಚೀಫ್ ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಕಲಿತಾ ಅವರು, ಸಮುದಾಯಗಳ ನಡುವಿನ ತೀಕ್ಷ್ಣವಾದ ಧ್ರುವೀಕರಣದಿಂದಾಗಿ ಈಶಾನ್ಯ ರಾಜ್ಯದಲ್ಲಿ ವಿರಳ ಹಿಂಸಾಚಾರದ ಘಟನೆಗಳು ಮುಂದುವರೆದಿದೆ ಎಂದಿದ್ದಾರೆ. +ರಾಜ್ಯದಲ್ಲಿ ಎರಡು ಸಮುದಾಯಗಳಾದ ಕುಕಿಗಳು ಮತ್ತು ಮೇಟಿಗಳು ಧ್ರುವೀಕರಣಗೊಂಡಿರುವ ರಾಜಕೀಯ ಸಮಸ್ಯೆಯಾಗಿದೆ. ಮಣಿಪುರದ ಪರಿಸ್ಥಿತಿಗೆ ರಾಜಕೀಯ ಪರಿಹಾರವಾಗಬೇಕಿದೆ ಎಂದು ಅವರು ಹೇಳಿದರು. 4,000 ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಜನರ ಕೈಯಲ್ಲಿ ಮುಂದುವರಿದಿವೆ ಮತ್ತು ಈ ಶಸ್ತ್ರಾಸ್ತ್ರಗಳನ್ನು ಹಿಂಸಾಚಾರದ ಘಟನೆಗಳಲ್ಲಿ ಬಳಸಲಾಗುತ್ತಿದೆ ಎಂದು ಉನ್ನತ ಸೇನಾ ಅಧಿಕಾರಿ ತಿಳಿಸಿದ್ದಾರೆ. +ಜಸ್ಟ್‍ಇನ್ | ಶಂಕಿತ ಬಂಡುಕೋರರಿಂದ ಇಬ್ಬರು ವ್ಯಕ್ತಿಗಳನ್ನು ಕೊಂದ ನಂತರ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ 48 ಗಂಟೆಗಳ ಸ್ಥಗಿತ; ಹೆಚ್ಚಿನ ವಿವರಗಳೊಂದಿಗೆ ಮಣಿಪುರದ ಜೀವಸೆಲೆ ಮೇಲೆ ಆರ್ಥಿಕ ದಿಗ್ಬಂಧನ ವಿಧಿಸಲಾಗಿದೆ. +ಮಹಿಳೆ ಮೇಲೆ ಕ್ರೌರ್ಯ: ಕುಟುಂಬದವರ ವಿರುದ್ಧ ಎಫ್‍ಐಆರ್ +ಭದ್ರತಾ ಸಿಬ್ಬಂದಿ ಮತ್ತು ಅವರ ಚಾಲಕನ ಹತ್ಯೆಯನ್ನು ವಿರೋಸಿ ಮಣಿಪುರದ ಕಾಂಗ್‍ಪೆಪೋಕ್ಪಿ ಜಿಲ್ಲೆಯಲ್ಲಿ 48 ಗಂಟೆಗಳ ಕಾಲ ಬಂದ್‍ನ ನಡುವೆ ಮಹತ್ವದ ಹೇಳಿಕೆಗಳು ಬಂದಿವೆ. +ಹೊಂಚುದಾಳಿಯಲ್ಲಿ ಇಂಡಿಯಾ ರಿಸರ್ವ್ ಬೆಟಾಲಿಯನ್ ಸಿಬ್ಬಂದಿ ಮತ್ತು ಅವರ ಚಾಲಕ ಸಾವನ್ನಪ್ಪಿದ್ದಾರೆ. ಸ್ಥಗಿತಗೊಳಿಸುವ ಕರೆ ನೀಡಿದ ಬುಡಕಟ್ಟು ಏಕತೆಯ ಸಮಿತಿ, ಬಲಿಪಶುಗಳು ಕುಕಿ-ಜೋ ಸಮುದಾಯಕ್ಕೆ ಸೇರಿದವರು ಮತ್ತು ಕಣಿವೆ ಮೂಲದ ದಂಗೆಕೋರ ಗುಂಪುಗಳು ಅವರನ್ನು ಕೊಂದಿದ್ದಾರೆ ಎಂದು ಆರೋಪಿಸಿದೆ. \ No newline at end of file diff --git a/eesanje/url_47_232_8.txt b/eesanje/url_47_232_8.txt new file mode 100644 index 0000000000000000000000000000000000000000..4bfe1ad09572bd34f741fd9821b9ce8b9157eabc --- /dev/null +++ b/eesanje/url_47_232_8.txt @@ -0,0 +1,6 @@ +ಮಹಿಳೆ ಮೇಲೆ ಕ್ರೌರ್ಯ: ಕುಟುಂಬದವರ ವಿರುದ್ಧ ಎಫ್‍ಐಆರ್ +ಥಾಣೆ, ನ.22 (ಪಿಟಿಐ) ಮಹಾರಾಷ್ಟ್ರದ ಥಾಣೆ ನಗರದಲ್ಲಿ ತನ್ನ ಪತ್ನಿಯನ್ನು ಕ್ರೌರ್ಯಕ್ಕೆ ಒಳಪಡಿಸಿದ ಆರೋಪದ ಮೇಲೆ ಪುರುಷ ಮತ್ತು ಆತನ ನಾಲ್ವರು ಕುಟುಂಬ ಸದಸ್ಯರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. +ಸಂತ್ರಸ್ತೆ ತನ್ನ ದೂರಿನಲ್ಲಿ ತಾನು 2018 ರಲ್ಲಿ ವ್ಯಕ್ತಿಯನ್ನು ವಿವಾಹವಾದೆ ಮತ್ತು ಅವನ ಕುಟುಂಬದೊಂದಿಗೆ ವಾಗ್ಲೆ ಎಸ್ಟೇಟ್ ಪ್ರದೇಶದಲ್ಲಿ ವಾಸಿಸಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ. ಮದುವೆಯಾದ ಕೆಲವೇ ದಿನಗಳಲ್ಲಿ ಪತಿಗೆ ಕುಡಿತದ ಚಟವಿದ್ದು, ಆತ ಕುಡಿದು ಮನೆಗೆ ಬಂದು ಹಣ ಕೇಳುತ್ತಿದ್ದ. ಹಣ ಕೊಡಲು ನಿರಾಕರಿಸಿದರೆ ಥಳಿಸುತ್ತಾನೆ. +ಅತ್ತೆಯೂ ಆಕೆಯನ್ನು ದೂಷಿಸಿದ್ದರು. ಆಕೆಯ ಪತಿಯ ಕುಡಿತದ ಚಟ, ಆಕೆಯ ಅತ್ತಿಗೆ ಮತ್ತು ಇತರ ಕುಟುಂಬದ ಸದಸ್ಯರು ಆಕೆಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಪೆÇಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ. ಚಿತ್ರಹಿಂಸೆಯಿಂದ ಬೇಸತ್ತು ಮಹಿಳೆ ಪೆÇಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.ಆರೋಪಿಗಳನ್ನು ಗಣೇಶ ಧೋಂಡಿರಾಮ್ ಕಾಂಬಳೆ, ಲಕ್ಷ್ಮೀಬಾಯಿ ಧೋಂಡಿರಾಮ್ ಕಾಂಬಳೆ, ಜ್ಯೋತಿ ಗಾಯಕವಾಡ, ಸ್ವಾತಿ ರೂಕೆ ಮತ್ತು ಪ್ರೀತಿ ಮೋರೆ ಎಂದು ಗುರುತಿಸಲಾಗಿದೆ. +ಪಿಜಿಗಳಲ್ಲಿ ವಾಸಿಸುವವರ ಮಾಹಿತಿ ಸಂಗ್ರಹಕ್ಕೆ ವೆಬ್ ಪೋರ್ಟಲ್: ದಯಾನಂದ +ಅವರ ವಿರುದ್ಧ ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 498ಎ (ಗಂಡ ಅಥವಾ ಮಹಿಳೆಯ ಪತಿ ಅಥವಾ ಸಂಬಂ ಮಹಿಳೆಯನ್ನು ಕ್ರೌರ್ಯಕ್ಕೆ ಒಳಪಡಿಸುವುದು), 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_232_9.txt b/eesanje/url_47_232_9.txt new file mode 100644 index 0000000000000000000000000000000000000000..51cdbf215a6e68641e681afd7920e19cfba78d82 --- /dev/null +++ b/eesanje/url_47_232_9.txt @@ -0,0 +1,14 @@ +ಪೋಷಕರ ಒತ್ತಡವೇ ಮಕ್ಕಳ ಆತ್ಮಹತ್ಯೆಗೆ ಕಾರಣ : ಸುಪ್ರೀಂ +ನವದೆಹಲಿ,ನ.21- ಆತ್ಮಹತ್ಯೆ ಪ್ರಕರಣದಲ್ಲಿ ಮಕ್ಕಳ ಪೋಷಕರೇ ಹೊಣೆಗಾರರೆಂದು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಪ್ರಬಲ ಪೈಪೋಟಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಮಕ್ಕಳ ಮೇಲೆ ಪಾಲಕರು ಹೇರುವ ಒತ್ತಡವೇ ಪ್ರಮುಖ ಕಾರಣ ಎಂದು ಕಳವಳ ವ್ಯಕ್ತಪಡಿಸಿದೆ. +ರಾಜಸ್ಥಾನದ ಕೋಟಾದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣಕ್ಕೆ ಪೋಷಕರು ಮಾತ್ರ ಕಾರಣ ಎಂದು ಅರ್ಜಿಯೊಂದರ ವಿಚಾರಣೆ ವೇಳೆ, ಇಂತಹ ಸನ್ನಿವೇಶಗಳಲ್ಲಿ ನ್ಯಾಯಾಂಗ ಯಾವುದೇ ಸೂಚನೆ ನೀಡುವುದು ಸಾಧ್ಯವಾಗುವುದಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದೆ. +ದೇಶದ ಹಲವು ನಗರಗಳಲ್ಲಿ ನಾಯಿ ಕೊಡೆಗಳಂತೆ ಬೆಳೆಯುತ್ತಿರುವ ಕೋಚಿಂಗ್ ಸೆಂಟರ್ಗಳ ಮೇಲೆ ನಿಗಾ ವಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮುಂಬಯಿ ಮೂಲದ ವೈದ್ಯ ಅನಿರುದ್ಧ ನಾರಾಯಣ ಮಾಲ್ಪನಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್.ವಿ.ಎನ್ ಭಟ್ಟಿ ಅವರನ್ನು ಒಳಗೊಂಡ ಪೀಠ ಹೇಳಿದೆ. +ಇದರೊಂದಿಗೆ ಕೋಚಿಂಗ್ ಸೆಂಟರ್‍ಗಳಿಗೆ ಲಗಾಮು ಹಾಕಲು ಕೋರ್ಟ್ ನಿರಾಕರಿಸಿದೆ. ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 24 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೋಷಕರು ತಮ್ಮ ಮಕ್ಕಳಿಂದ ತಮ್ಮ ಸಾಮಥ್ರ್ಯಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಇದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಹೆಜ್ಜೆ ಇಡುತ್ತಾರೆ. ಮಕ್ಕಳ ಆತ್ಮಹತ್ಯೆಗೆ ಕೋಚಿಂಗ್ ಸೆಂಟರ್‍ಗಳೇ ಕಾರಣ ಎಂದು ಮುಂಬೈ ಮೂಲದ ವೈದ್ಯ ಅನಿರುದ್ಧ್ ನಾರಾಯಣ್ ಮಲ್ಪಾನಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. +ಕೋಚಿಂಗ್ ಇನ್‍ಸ್ಟಿಟ್ಯೂಟ್‍ಗಳಲ್ಲಿ ಕನಿಷ್ಠ ಗುಣಮಟ್ಟವನ್ನು ಕಾಯ್ದುಕೊಳ್ಳುವ ಬಗ್ಗೆಯೂ ಅವರು ತಮ್ಮ ಅರ್ಜಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಕಾನೂನು ರೂಪಿಸಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು, ತಪ್ಪು ಮಕ್ಕಳ ಪೋಷಕರಲ್ಲಿದೆಯೇ ಹೊರತು ಕೋಚಿಂಗ್ ಸಂಸ್ಥೆಗಳದ್ದಲ್ಲ ಎಂದು ಹೇಳಿದೆ. +ಜೆಡಿಎಸ್ ನಾಯಕರ ತೇಜೋವಧೆ ನಿಲ್ಲಿಸದಿದ್ದರೆ ಉಗ್ರ ಹೋರಾಟ.. +ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ವಯಸ್ಸು 14-16 ವರ್ಷಗಳು. ಈ ವರ್ಷ ರಾಜಸ್ಥಾನದ ಕೋಟಾದಲ್ಲಿ ನೀಟ್ ಮತ್ತು ಜೆಇಇ ಕೋಚಿಂಗ್‍ಗೆ ಬಂದ 24 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಅಂಕಿ ಅಂಶವು ಕಳೆದ 8 ವರ್ಷಗಳಲ್ಲಿಯೇ ಅತ್ಯಕವಾಗಿದೆ. ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ತರಬೇತಿ ಸಂಸ್ಥೆಗಳಿಗೆ ವಿಶೇಷ ಶಿಫಾರಸುಗಳನ್ನು ಸಹ ಮಾಡಲಾಗಿದೆ. ಇಷ್ಟೆಲ್ಲಾ ಇದ್ದರೂ ಆತ್ಮಹತ್ಯೆ ಪ್ರಕರಣಗಳಲ್ಲಿ ಇಳಿಮುಖವಾಗಿಲ್ಲ. +ದೇಶದಲ್ಲಿ ಕೋಚಿಂಗ್ ಸೆಂಟರ್‍ಗಳೇ ಇರಬಾರದು ಎಂದು ನಮ್ಮಲ್ಲಿ ಹೆಚ್ಚಿನವರು ಬಯಸುವುದುಂಟು. ಆದರೆ, ಶಾಲೆಗಳ ಸ್ಥಿತಿ ಎಲ್ಲ ರೀತಿಯಿಂದಲೂ ಉತ್ತಮವಾಗಿಲ್ಲ. ಮತ್ತೊಂದು ಕಡೆ ತೀವ್ರತರದ ಸ್ಪರ್ಧೆ ಇದೆ. ಹೀಗಾಗಿ ವಿದ್ಯಾರ್ಥಿಗಳು ಕೋಚಿಂಗ್ ಕೇಂದ್ರಗಳ ಮೊರೆ ಹೋಗದೆ ಬೇರೆ ಆಯ್ಕೆ ಇಲ್ಲದಂತಾಗಿದೆ. ಎಂದು ನ್ಯಾ.ಖನ್ನಾ ಹೇಳಿದರು. +ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೊದ (ಎನ್‍ಸಿಆರ್ಬಿ) 2020ನೇ ಸಾಲಿನ ದತ್ತಾಂಶಗಳ ಪ್ರಕಾರ ದೇಶದಲ್ಲಿ ಸಂಭವಿಸಿದ ವಿದ್ಯಾರ್ಥಿಗಳ ಸಾವಿನ ಪ್ರಕರಣಗಳ ಪೈಕಿ ಸುಮಾರು ಶೇ 8.2ರಷ್ಟು ಆತ್ಮಹತ್ಯೆ ಪ್ರಕರಣಗಳಾಗಿವೆ ಎಂದು ವಕೀಲೆ ಪ್ರಿಯಾ ತಿಳಿಸಿದರು. +ತನಗೆ ಪರಿಸ್ಥಿತಿಯ ಅರಿವು ಇದೆ. ಆದರೆ ಕೋರ್ಟ್ ನಿರ್ದೇಶನ ನೀಡುವುದು ಸಾಧ್ಯವಿಲ್ಲ. ಇದರ ಬದಲು ಅರ್ಜಿದಾರರು ತಮ್ಮ ಸಲಹೆಗಳೊಂದಿಗೆ ಸರ್ಕಾರವನ್ನು ಸಂಪರ್ಕಿಸಲಿ ಎಂದು ನ್ಯಾಯಪೀಠ ಸಲಹೆ ನೀಡಿತು. ಸೂಕ್ತ ವೇದಿಕೆಯನ್ನು ಸಂಪರ್ಕಿಸಲು ತಮ್ಮ ಅರ್ಜಿಯನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಿಯಾ ಹೇಳಿದರು. ಅದಕ್ಕೆ ಕೋರ್ಟ್ ಅನುಮತಿ ನೀಡಿತು. +ಐಐಟಿ- ಜೆಇಇ ಮತ್ತು ನೀಟ್‍ನಂತಹ ವಿವಿಧ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ತರಬೇತಿ ನೀಡಲು ದೇಶಾದ್ಯಂತ ನಾಯಿ ಕೊಡೆಗಳಂತೆ ಖಾಸಗಿ ಕೋಚಿಂಗ್ ಕೇಂದ್ರಗಳು ತಲೆ ಎತ್ತುತ್ತಿವೆ. ಇವೆಲ್ಲವೂ ಲಾಭಕ್ಕಾಗಿ ಹವಣಿಸುತ್ತಿವೆ ಎಂದು ಅರ್ಜಿದಾರ ಮಾಲ್ಪನಿ ಹೇಳಿದ್ದರು. +ಹೆಚ್‌ಡಿಕೆ ಆರೋಪ ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತನಾಗುತ್ತೇನೆ: ಡಿಸಿಎಂ +14 ವರ್ಷ ತಲುಪುತ್ತಿದ್ದಂತೆಯೇ ಮಕ್ಕಳು ಈ ಕೋಚಿಂಗ್ ಫ್ಯಾಕ್ಟರಿಗಳ ಪ್ರವೇಶ ಪಡೆಯುತ್ತಾರೆ. ಅವರು ಹೆಚ್ಚಾಗಿ ತಮ್ಮ ಮನೆಗಳಿಂದ ದೂರವೇ ಇರುತ್ತಾರೆ. ಒಳ್ಳೆಯ ವೈದ್ಯಕೀಯ ಅಥವಾ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪಡೆಯುವ ಗುರಿಯೊಂದಿಗೆ ಕಠಿಣ ಸಿದ್ಧತೆಗೆ ಒಳಗಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. \ No newline at end of file diff --git a/eesanje/url_47_233_1.txt b/eesanje/url_47_233_1.txt new file mode 100644 index 0000000000000000000000000000000000000000..46a11f78f7882c609ae57ddab9f07b6d4ec32caf --- /dev/null +++ b/eesanje/url_47_233_1.txt @@ -0,0 +1,6 @@ +ಖಲಿಸ್ತಾನಿ ಪರ ಘೋಷಣೆ ಬರೆದಿದ್ದ ಹರಿಯಾಣ ಯುವಕ ಬಂಧನ +ನವದೆಹಲಿ,ನ.21- ಇಲ್ಲಿನ ದೆಹಲಿ ಮೇಲ್ಸೇತುವೆ ಮೇಲೆ ಖಲಿಸ್ತಾನ್ ಪರ ಗೀಚುಬರಹ ಬರೆಯುತ್ತಿದ್ದ ಹರಿಯಾಣ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. +ಇಲ್ಲಿನ ಫ್ಲೈಓವರ್‍ನಲ್ಲಿ ಖಾಲಿಸ್ತಾನ ಪರ ಗೀಚುಬರಹ ಪತ್ತೆಯಾಗಿ ಸುಮಾರು ಎರಡು ತಿಂಗಳ ಬಳಿಕ ದೆಹಲಿ ಪೊಲೀಸರ ವಿಶೇಷ ದಳವು ಹರಿಯಾಣದ ಯುವಕನೊಬ್ಬನನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ. +ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರ ಪತ್ತೆ +ಬಂಧಿತ ಯುವಕ, ನಿಷೇತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಮುಖ್ಯಸ್ಥ ಗುರುಪತ್‍ವಂತ್ ಸಿಂಗ್ ಪನ್ನು ಅವರ ಆದೇಶದ ಮೇರೆಗೆ ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಗೀಚುಬರಹವನ್ನು ಚಿತ್ರಿಸಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. +ಬಂಧಿತನ ಹೇಳಿಕೆ ಮೇರೆಗೆ ಪಂಜಾಬ್‍ನಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕಾಶ್ಮೀರ್ ಗೇಟ್ ಮೇಲ್ಸೇತುವೆಯಲ್ಲಿ ಖಲಿಸ್ತಾನ್ ಪರ ಮತ್ತು ಭಾರತ ವಿರೋಧಿ ಘೋಷಣೆಗಳು ಕಂಡುಬಂದ ನಂತರ ಪೊಲೀಸರು ಸೆಪ್ಟೆಂಬರ್ 27 ರಂದು ಎಫ್‍ಐಆರ್ ದಾಖಲಿಸಿದ್ದರು. \ No newline at end of file diff --git a/eesanje/url_47_233_10.txt b/eesanje/url_47_233_10.txt new file mode 100644 index 0000000000000000000000000000000000000000..ca03539d7580506e961f1ba4704890b7912dfeb5 --- /dev/null +++ b/eesanje/url_47_233_10.txt @@ -0,0 +1,5 @@ +ವಿಶಾಖಪಟ್ಟಣಂ ಜೆಟ್ಟಿ ಪ್ರದೇಶದಲ್ಲಿ 25 ದೋಣಿಗಳು ಬೆಂಕಿಗೆ ಆಹುತಿ +ವಿಶಾಖಪಟ್ಟಣಂ, ನ.20 (ಪಿಟಿಐ) ಇಂದು ಮುಂಜಾನೆ ಇಲ್ಲಿನ ಜೆಟ್ಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 25 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಳಗಿನ ಜಾವ 4 ಗಂಟೆಯ ವೇಳೆಗೆ ಬೆಂಕಿ ನಂದಿಸಲಾಗಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಮೀನುಗಾರಿಕಾ ದೋಣಿಗಳು ಲಂಗರು ಹಾಕಲಾಗಿದ್ದ ಪಟ್ಟಣದ ಜೆಟ್ಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ವಿಶಾಖಪಟ್ಟಣಂ ಜಿಲ್ಲೆ ಅಗ್ನಿಶಾಮಕ ಅಧಿಕಾರಿ ಎಸ್. ರೇಣುಕಯ್ಯ ಪಿಟಿಐಗೆ ತಿಳಿಸಿದರು. +ಮೋದಿ ಶ್ರೀಮಂತರ ಸಾಲ ಮನ್ನಾ ಮಾಡಿ, ಬಡವರನ್ನು ದೂರ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ +ನಾವು 12 ಅಗ್ನಿಶಾಮಕ ಟೆಂಡರ್‍ಗಳನ್ನು ಸೇವೆಗೆ ಒತ್ತಿದ್ದೇವೆ ಮತ್ತು ರಾಷ್ಟ್ರೀಯ ವಿಪತ್ತು ರೆಸ್ಪಾನ್ಸ್ ಫೋರ್ಸ್ ಮತ್ತು ವಿಶಾಖಪಟ್ಟಣಂ ಫೋರ್ಟ್ ಟ್ರಸ್ಟ್‍ನಿಂದ ಸಹಾಯವನ್ನು ಪಡೆದುಕೊಂಡಿದ್ದೇವೆ ಎಂದು ಅವರು ಹೇಳಿದರು. ಇದುವರೆಗೆ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_233_11.txt b/eesanje/url_47_233_11.txt new file mode 100644 index 0000000000000000000000000000000000000000..c21b0ff89326122b6169ac12ba83b7ee6681e7e6 --- /dev/null +++ b/eesanje/url_47_233_11.txt @@ -0,0 +1,6 @@ +ಆಲ್ ದಿ ಬೆಸ್ಟ್ ಟೀಂ ಇಂಡಿಯಾ: ಶುಭಕೋರಿದ ಪ್ರಧಾನಿ ಮೋದಿ +ನವದೆಹಲಿ,ನ.19-ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯದ ಮಹಾಸಮರಕ್ಕೆ ಕೆಲವೇ ಸೆಕೆಂಡ್‍ಗಳು ಬಾಕಿ ಇರುವಂತೆ ಪ್ರಧಾನಿ ನರೇಂದ್ರಮೋದಿ ಅವರು ಟೀಂ ಇಂಡಿಯಾಕ್ಕೆ ಶುಭ ಕೋರಿದ್ದು, ಗೆದ್ದು ಬರಲಿ ಎಂದು ಹಾರೈಸಿದ್ದಾರೆ. +ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಫೋಸ್ಟ್ ಮಾಡಿರುವ ಮೋದಿಯವರು ಭಾರತೀಯ ಕ್ರಿಕೆಟ್ ತಂಡಕ್ಕೆ ಶುಭಾಷಯ ಕೋರಿರುವ ಅವರು, 140 ಕೋಟಿ ಭಾರತೀಯರು ನಿಮ್ಮನ್ನು ಹುರಿದುಂಬಿಸುತ್ತಿದ್ದಾರೆ. ಅವರೆಲ್ಲರ ಪ್ರಾರ್ಥನೆಯ ಫಲವಾಗಿ ಟೀಂ ಇಂಡಿಯಾ ಗೆಲ್ಲಲ್ಲಿ ಎಂದು ಆಶಿಸಿದ್ದಾರೆ. +ಆಲ್ ದಿ ಬೆಸ್ಟ್ ಟೀಂ ಇಂಡಿಯಾ ಎಂದು ಫೋಸ್ಟ್ ಮಾಡಿರುವ ಮೋದಿ ಅವರು, ನಿಮ್ಮ ಆಟವನ್ನು ಕಣ್ತುಂಬಿಕೊಳ್ಳಲು 140 ಕೋಟಿ ಭಾರತೀಯರು ಕಾತುರದಿಂದ ಎದುರುನೋಡುತ್ತಿದ್ದಾರೆ. ನೀವು ಪ್ರಕಾಶಮಾನವಾಗಿ ಮಿಂಚಿ ಉತ್ತಮವಾಗಿ ಆಡಿ. ಜೊತೆಗೆ ಕ್ರೀಡಾ ಮನೋಭಾವನೆಯನ್ನು ಸಹ ಎತ್ತಿಹಿಡಿಯಿರಿ ಎಂದು ಕಿವಿಮಾತು ಹೇಳಿದ್ದಾರೆ. +ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ +ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಟೀಂ ಇಂಡಿಯಾಕ್ಕೆ ಶುಭ ಹಾರೈಸಿದ್ದು, ಕ್ರೀಡೆಯು ಯಾವಾಗಲೂ ದೇಶ, ಭಾಷೆ ಮತ್ತು ವರ್ಗವನ್ನು ಒಂದುಗೂಡಿಸುತ್ತದೆ. ಗೆಲುವು ನಿಮ್ಮದಾಗಲಿ ಎಂದು ರೋಹಿತ್ ಶರ್ಮ ನೇತೃತ್ವದ ಭಾರತೀಯ ಕ್ರಿಕೆಟ್ ತಂಡಕ್ಕೆ ಶುಭಾಷಯಗಳನ್ನು ಹೇಳಿದ್ದಾರೆ. \ No newline at end of file diff --git a/eesanje/url_47_233_12.txt b/eesanje/url_47_233_12.txt new file mode 100644 index 0000000000000000000000000000000000000000..ca560d6dab2538d068521a399cc3037dde7c6cb1 --- /dev/null +++ b/eesanje/url_47_233_12.txt @@ -0,0 +1,6 @@ +ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರ ಸಾವು +ಸಿತಾಮರ್ಹಿ (ಬಿಹಾರ), ನ.19 ಬಿಹಾರದ ಸಿತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿದ ಆರೋಪದ ಮೇಲೆ ಮೂವರು ಸಾವನ್ನಪ್ಪಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆಸುಮಾರು 90 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. +ಇಬ್ಬರು ವ್ಯಕ್ತಿಗಳು ನಕಲಿ ಮದ್ಯ ಸೇವಿಸಿ ಸೀತಾಮರ್ಹಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ಮಧ್ಯರಾತ್ರಿ ಪೊಲೀಸರು ಸ್ಥಳಕ್ಕೆ ತಲುಪಿದರು. ಆದಾಗ್ಯೂ, ಅವರು ಆಸ್ಪತ್ರೆಗೆ ಬರುವ ಹೊತ್ತಿಗೆ, ಅವದೇಶ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಬಹುದು ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. +ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ +ರೋಶನ್ ರೈ ಎಂದು ಗುರುತಿಸಲಾದ ಇನ್ನೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಆತನ ಕುಟುಂಬ ಸದಸ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅದು ಹೇಳಿದೆ. +ತನಿಖೆಯ ವೇಳೆ ಈ ಪ್ರದೇಶದಲ್ಲಿ ಮತ್ತಿಬ್ಬರು ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವುದು ಪೊಲೀಸರಿಗೆ ತಿಳಿದು ಬಂದಿದೆ.ಈ ಪ್ರದೇಶದಲ್ಲಿ ಇನ್ನಿಬ್ಬರು ಸಾವನ್ನಪ್ಪಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಆದರೆ ಶವಗಳನ್ನು ಸುಟ್ಟುಹಾಕಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_233_2.txt b/eesanje/url_47_233_2.txt new file mode 100644 index 0000000000000000000000000000000000000000..c91023a3c50562fefea4da84c5971aaad3494594 --- /dev/null +++ b/eesanje/url_47_233_2.txt @@ -0,0 +1,7 @@ +ಇನ್ನು ಮುಂದೆ ಅತ್ಯುತ್ತಮ ವೆಬ್‍ಸರಣಿಗೂ ಪ್ರಶಸ್ತಿ +ಪಣಜಿ,ನ.21- ಮುಂದಿನ ಐದು ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಮಾಧ್ಯಮ ಮತ್ತು ಮನರಂಜನಾ ಮಾರುಕಟ್ಟೆಯಾಗಲಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. +ಪಣಜಿಯಲ್ಲಿ ನಡೆದ ಇಂಟರ್‍ನ್ಯಾಶನಲ್ ಫಿಲ್ಮ ಫೆಸ್ಟಿವಲ್ ಆಫ್ ಇಂಡಿಯಾ (ಐಎಫ್‍ಎಫ್‍ಐ)ದ 54 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಠಾಕೂರ್, ಮೊದಲ ಬಾರಿಗೆ ಐಎಫ್‍ಎಫ್‍ಐ ಅತ್ಯುತ್ತಮ ವೆಬ್ ಸರಣಿಯ ಒಟಿಟಿ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದರು. +ಭಾರತವು ಒಂದು ಕಡೆ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮಾಧ್ಯಮ ಮತ್ತು ಮನರಂಜನಾ ಉದ್ಯಮದ ವಿಷಯದಲ್ಲಿ ಇದು ವಿಶ್ವದಲ್ಲೇ ಐದನೇ ದೊಡ್ಡದಾಗಿದೆ. ಮುಂದಿನ ಐದು ವರ್ಷಗಳಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ವಿಶ್ವ ಮತ್ತು ಮೂರನೇ ಅತಿದೊಡ್ಡ ಮಾಧ್ಯಮ ಮತ್ತು ಮನರಂಜನಾ ಮಾರುಕಟ್ಟೆಯಾಗಲಿದೆ ಎಂದು ಅವರು ಹೇಳಿದರು. +ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರ ಪತ್ತೆ +ಅವರು ಕೆಲವು ಪ್ರಥಮಗಳನ್ನು ಪ್ರಾರಂಭಿಸಿದಾಗ ಕಳೆದ ವರ್ಷದ ಆವೃತ್ತಿಯಂತೆಯೇ, ಈ ಆವೃತ್ತಿಯಲ್ಲಿಯೂ ಕೆಲವು ಪ್ರಥಮಗಳೊಂದಿಗೆ ಉತ್ಸಾಹವು ಮುಂದುವರಿಯುತ್ತದೆ ಎಂದು ಸಚಿವರು ಹೇಳಿದರು. ಮೊದಲ ಬಾರಿಗೆ ಮತ್ತು ಇಲ್ಲಿಂದ ಅತ್ಯುತ್ತಮ ವೆಬ್ ಸರಣಿ ಪ್ರಶಸ್ತಿಯನ್ನು ನೀಡುತ್ತದೆ. ಇದು ಭಾರತದಲ್ಲಿ ಮೂಲ ವಿಷಯ ರಚನೆಕಾರರ ಪರಿವರ್ತಕ ಪಾತ್ರವನ್ನು ಅಂಗೀಕರಿಸುತ್ತದೆ ಮತ್ತು ಉದ್ಯೋಗ ಮತ್ತು ನಾವೀನ್ಯತೆಗೆ ಅವರ ಕೊಡುಗೆಯನ್ನು ಆಚರಿಸುತ್ತದೆ ಎಂದು ಅವರು ಹೇಳಿದರು. +ಒಟಿಟಿ (ವಿಭಾಗ) ಪ್ರಸ್ತುತ ಶೇ.28 ರ ದರದಲ್ಲಿ ಬೆಳೆಯುತ್ತಿದೆ. ಅದಕ್ಕಾಗಿಯೇ ನಾವು ಈ ಪ್ರಶಸ್ತಿಯನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದರು. ಈ ವರ್ಷದ ಆವೃತ್ತಿಯಲ್ಲಿ ಮತ್ತೊಂದು ಮೊದಲನೆಯದು ಸಿನಿಮಾ ಪ್ರಪಂಚದಿಂದ ನಾವೀನ್ಯತೆಗಳನ್ನು ಪ್ರದರ್ಶಿಸಲು ಉತ್ತಮವಾದ ವಿಎಫ್‍ಎಕ್ಸ ಮತ್ತು ಟೆಕ್ ಪೆವಿಲಿಯನ್ ಅನ್ನು ಪರಿಚಯಿಸುವ ಮೂಲಕ ಫಿಲ್ಮ ಬರ್ಜಾ (ಉತ್ಸವದ ಸಂದರ್ಭದಲ್ಲಿ ನಡೆಯುವ ಕಾರ್ಯಕ್ರಮ) ವ್ಯಾಪ್ತಿಯನ್ನು ಹೆಚ್ಚಿಸಲಾಗುವುದು ಎಂದರು. \ No newline at end of file diff --git a/eesanje/url_47_233_3.txt b/eesanje/url_47_233_3.txt new file mode 100644 index 0000000000000000000000000000000000000000..b29b3636edf0acd8488d7c10e1d4d7009841b262 --- /dev/null +++ b/eesanje/url_47_233_3.txt @@ -0,0 +1,7 @@ +ಸುರಂಗದಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರ ಪತ್ತೆ +ನವದೆಹಲಿ,ನ.21-ಹತ್ತು ದಿನಗಳ ನಿರಂತರ ಕಾರ್ಯಚರಣೆ ನಂತರ ಉತ್ತರಾಖಂಡದ ಸುರಂಗದಲ್ಲಿ ಸಿಕ್ಕಿಬಿದ್ದ ಕಾರ್ಮಿಕರು ಇಂದು ಮುಂಜಾನೆ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ಸುರಂಗದಲ್ಲಿ ಸಿಲುಕಿ ಹಾಕಿಕೊಂಡಿದ್ದವರ ಸ್ಥಳಕ್ಕೆ ಪೈಪ್ ಮೂಲಕ ಸೇರಿಸಲಾದ ಕ್ಯಾಮೆರಾ ಕಳುಹಿಸಿದಾಗ ಅವರು ಸುರಂಗದಲ್ಲಿ ಸಿಲುಕಿಹಾಕಿಕೊಂಡಿರುವ ದೃಶ್ಯಗಳು ಸೆರೆಯಾಗಿದೆ. +ನ 12 ರಂದು ಸುರಂಗದ ಒಂದು ಭಾಗವು ಸಿಲುಕಿಕೊಂಡಿದ್ದರಿಂದ ಸಿಕ್ಕಿಬಿದ್ದ 41 ಕಾರ್ಮಿಕರಿಗೆ ಆಹಾರವನ್ನು ಕಳುಹಿಸಲು ಕಳೆದ ರಾತ್ರಿ ಆರು ಇಂಚಿನ ಪೈಪ್ ಮೂಲಕ ಎಂಡೋಸ್ಕೋಪಿಕ್ ಕ್ಯಾಮೆರಾವನ್ನು ಸುರಂಗದೊಳಗೆ ತಳ್ಳಲಾಯಿತು. +ದೃಶ್ಯಗಳಲ್ಲಿ, ಕಾರ್ಮಿಕರು ತಮ್ಮ ಕಠಿಣ ಟೋಪಿಗಳಲ್ಲಿ ಕಾಣಿಸಿಕೊಂಡು ಕ್ಯಾಮೆರಾದತ್ತ ಕೈ ಬೀಸುತ್ತಿದ್ದರು, ಅವರ ಕಷ್ಟದ ಸಂದರ್ಭಗಳನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಮತ್ತು ಸಂವಹನ ನಡೆಸುತ್ತಿದ್ದಾರೆ. ರಕ್ಷಣಾ ಅಧಿಕಾರಿಗಳು, ವಾಕಿ ಟಾಕಿ ಅಥವಾ ರೇಡಿಯೋ ಹ್ಯಾಂಡ್‍ಸೆಟ್‍ಗಳ ಮೂಲಕ ಕಾರ್ಮಿಕರೊಂದಿಗೆ ಮಾತನಾಡುತ್ತಾ, ಕಾರ್ಮಿಕರನ್ನು ಕ್ಯಾಮೆರಾ ಮುಂದೆ ಬರುವಂತೆ ಕೇಳಿಕೊಳ್ಳುತ್ತಿರುವುದು ಕಂಡುಬಂದಿದೆ. +ವ್ಯಕ್ತಿಯನ್ನು ಅಪಹರಿಸಿ ಹಣ ವಸೂಲಿ: ಪ್ರೊಬೇಶನರಿ ಪಿಎಸ್‍ಐ ಸೇರಿ ನಾಲ್ವರ ಬಂಧನ +ಆಪ್ ಕ್ಯಾಮೆರಾ ಕೆ ಪಾಸ್ ವಾಕಿ ಟಾಕಿ ಪೆ ಆಕೆ ಬಾತ್ ಕರೇನ್ (ಕ್ಯಾಮೆರಾ ಮುಂದೆ ಬಂದು ವಾಕಿ ಟಾಕಿ ಮೂಲಕ ನಮ್ಮೊಂದಿಗೆ ಮಾತನಾಡಿ) ಎಂದು ಅಧಿಕಾರಿಯೊಬ್ಬರು ಅವರನ್ನು ಕೇಳಿದರು. ಕಳೆದ ರಾತ್ರಿ ಗಾಜಿನ ಬಾಟಲಿಗಳಲ್ಲಿ ಖಿಚಡಿಯನ್ನು ಪೈಪ್ ಮೂಲಕ ಕಳುಹಿಸಿದ್ದರಿಂದ ರಕ್ಷಕರು 10 ದಿನಗಳಲ್ಲಿ ತಮ್ಮ ಮೊದಲ ಬಿಸಿ ಊಟವನ್ನು ಕಾರ್ಮಿಕರು ಮಾಡಿದರು. ಇಲ್ಲಿಯವರೆಗೆ, ಅವರು ಒಣ ಹಣ್ಣುಗಳು ಮತ್ತು ನೀರಿನಿಂದ ಬದುಕುತ್ತಿದ್ದರು. +ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿ ಅಧಿಕಾರಿ ಕರ್ನಲ್ ದೀಪಕ್ ಪಾಟೀಲ್ ಮಾತನಾಡಿ, ಕಾರ್ಮಿಕರಿಗೆ ಶೀಘ್ರದಲ್ಲೇ ಮೊಬೈಲ್ ಮತ್ತು ಚಾರ್ಜರ್‍ಗಳನ್ನು ಪೈಪ್ ಮೂಲಕ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಕಾರ್ಮಿಕರ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಮತ್ತು ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ಹೇಳಿದರು. \ No newline at end of file diff --git a/eesanje/url_47_233_4.txt b/eesanje/url_47_233_4.txt new file mode 100644 index 0000000000000000000000000000000000000000..4b1b1648cbd8a57d1f0467bf38da50c6e43c8290 --- /dev/null +++ b/eesanje/url_47_233_4.txt @@ -0,0 +1,7 @@ +ಸಿಎಸ್ ವಿರುದ್ಧದ ದೂರಿಗೆ ಕ್ಯಾರೆ ಎನ್ನದ ದೆಹಲಿ ಲೆಫ್ಟಿನೆಂಟ್ ಗವರ್ನರ್ +ನವದೆಹಲಿ,ನ.20- ಬಮ್ನೋಲಿ ಭೂಸ್ವಾೀಧಿನ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ಅವರು ಪ್ರಾಥಮಿಕ ಹಂತದ ತೊಡಕಾಗಿದ್ದಾರೆ ಎಂಬ ವಿಜಿಲೆನ್ಸ್ ಸಚಿವ ಅತಿಶಿ ಅವರ ವರದಿಯನ್ನು ಪರಿಗಣಿಸಲು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ನಿರಾಕರಿಸಿದ್ದಾರೆ. ಇದು ಸಚಿವರ ಪೂರ್ವಾಗ್ರಹ ಪೀಡಿತ ಊಹೆಗಳನ್ನು ಆಧರಿಸಿದೆ ಎಂದು ಹೇಳಿದ್ದಾರೆ. +ವರದಿಯನ್ನು ಸರ್ಕಾರವು ತನಗೆ ಸಲ್ಲಿಸಿದ ಬಗ್ಗೆ ಒಂದು ಕಡತದಲ್ಲಿ, ಸಕ್ಸೇನಾ ವರದಿಯು ಪ್ರಸ್ತುತ ತನಿಖೆಯನ್ನು ಸುಗಮಗೊಳಿಸುವ ಬದಲು ಉತ್ತಮವಾಗಿ ಮುಂದುವರಿಯಬಹುದು ಎಂದು ಹೇಳಿದ್ದಾರೆ. ದೂರುಗಳ ಕುರಿತು ಪ್ರಾಥಮಿಕ ವರದಿಯನ್ನು ಮಾನ್ಯ ಸಚಿವರು ಸಲ್ಲಿಸಿದ್ದಾರೆ ಮತ್ತು ಮಾನ್ಯ ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಕನಿಷ್ಠ ಹೇಳಲು ಆಶ್ಚರ್ಯಕರ ಮತ್ತು ದುರದೃಷ್ಟಕರ, +ಜೈಲಿನಿಂದ ಸಾಕ್ಷಿಗೆ ಬೆದರಿಕೆ- ಛೋಟಾ ಶಕೀಲ್ ಸಹಚರನ ವಿರುದ್ಧ ಎಫ್‍ಐಆರ್ +ಈ ವರದಿಯು ವ್ಯವಹರಿಸುತ್ತದೆ. ಸೂಕ್ಷ್ಮ ಜಾಗರೂಕತೆಗೆ ಸಂಬಂಸಿದ ವಿಷಯಗಳು ಮತ್ತು ಗೌಪ್ಯ ಕವರ್‍ನಲ್ಲಿ ನನ್ನ ಸೆಕ್ರೆಟರಿಯೇಟ್‍ಗೆ ಗುರುತಿಸಲಾಗಿದೆ, ಈಗಾಗಲೇ ಸಾರ್ವಜನಿಕ ಡೊಮೇನ್‍ನಲ್ಲಿದೆ ಮತ್ತು ಅದರ ಡಿಜಿಟಲ/ಎಲೆಕ್ಟ್ರಾನಿಕ್ ಪ್ರತಿಗಳು ಉಚಿತವಾಗಿ ಲಭ್ಯವಿವೆ ಮತ್ತು ಅದರ ವಿವರಗಳನ್ನು ಮಾಧ್ಯಮಗಳಲ್ಲಿ ವ್ಯಾಪಕವಾಗಿ ವರದಿ ಮಾಡಲಾಗಿದೆ, ಎಂದು ಅವರು ಹೇಳಿದ್ದಾರೆ. +ವರದಿಯಿಂದ ಆಯ್ದ ಪಠ್ಯವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗಿದೆ ಎಂದು ಹೇಳಿರುವ ಅವರು, ಈ ಭಾವಿಸಲಾದ ವಿಚಾರಣೆಯ ಸಂಪೂರ್ಣ ಉದ್ದೇಶವು ಸತ್ಯವನ್ನು ಬಹಿರಂಗಪಡಿಸಲು ಅಲ್ಲ, ಆದರೆ ಮಾಧ್ಯಮ ವಿಚಾರಣೆಯನ್ನು ಪ್ರಾರಂಭಿಸಲು ಮತ್ತು ಈ ಸಂಪೂರ್ಣ ಸಮಸ್ಯೆಯನ್ನು ರಾಜಕೀಯಗೊಳಿಸುವುದು ಎಂದು ಪ್ರಾಥಮಿಕವಾಗಿ ತೋರುತ್ತದೆ. , ಇದು ಸುಪ್ರೀಂ ಕೋರ್ಟ್‍ನ ಮುಂದೆಯೂ ಇದೆ. +ಗೌರವಾನ್ವಿತ ನ್ಯಾಯಾಲಯಗಳ ಮೇಲೆ ಪ್ರಭಾವ ಬೀರುವ ಗುರಿಯನ್ನು ಹೊಂದಿರುವ ಸಾರ್ವಜನಿಕ ಗ್ರಹಿಕೆ ಪೂರ್ವಾಗ್ರಹವನ್ನು ಸೃಷ್ಟಿಸಲು ಇದು ಸಮಾನವಾಗಿಲ್ಲವೇ ಎಂದು ಒಬ್ಬರು ಆಶ್ಚರ್ಯ ಪಡಬೇಕಾಗುತ್ತದೆ ಎಂದು ಅವರು ಸೇರಿಸಿದ್ದಾರೆ. \ No newline at end of file diff --git a/eesanje/url_47_233_5.txt b/eesanje/url_47_233_5.txt new file mode 100644 index 0000000000000000000000000000000000000000..8dc447cb8588046676c05b247e2efccd0b490709 --- /dev/null +++ b/eesanje/url_47_233_5.txt @@ -0,0 +1,7 @@ +ವಿಶ್ವದ ವಿಶ್ವಾಸಾರ್ಹ ಪಕ್ಷ ಬಿಜೆಪಿ; ರಾಜ್‍ನಾಥ್‍ಸಿಂಗ್ +ಶಹಪುರ,ನ.20- ಭಾರತೀಯ ಜನತಾ ಪಕ್ಷ ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ವಿಶ್ವಾಸಾರ್ಹ ರಾಜಕೀಯ ಪಕ್ಷವಾಗಿದೆ ಎಂದು ರಕ್ಷಣಾ ಸಚಿವ ಮತ್ತು ರಾಜಸ್ಥಾನದ ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾದ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. +ಶಹಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಕಳೆದ ಐದು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರವು ರಾಜಸ್ಥಾನದ ಹೆಮ್ಮೆ ಮತ್ತು ಘನತೆಗೆ ಗಾಯವನ್ನುಂಟುಮಾಡುವ ಕೆಲಸವನ್ನು ಮಾಡಿದೆ, ನಮ್ಮ ಪಕ್ಷದಲ್ಲಿ, ಬಹುಶಃ ಒಬ್ಬ ವ್ಯಕ್ತಿ ತಪ್ಪಾಗಬಹುದು ಆದರೆ ನಮ್ಮ ಪಕ್ಷವು ಹೋಗಲಾರದು. ಬಿಜೆಪಿ ವಿಶ್ವದ ಅತಿದೊಡ್ಡ ಮತ್ತು ವಿಶ್ವಾಸಾರ್ಹ ರಾಜಕೀಯ ಪಕ್ಷವಾಗಿದೆ ಎಂದಿದ್ದಾರೆ. +ಸುರಂಗದಲ್ಲಿ ಸಿಲುಕದ 41 ಕಾರ್ಮಿಕರ ರಕ್ಷಣೆಗೆ ಐದು ಪ್ರತ್ಯೇಕ ಕಾರ್ಯಾಚರಣೆ +ಕೇಂದ್ರದ ಭರವಸೆಗಳನ್ನು ಎತ್ತಿ ಹಿಡಿದ ಅವರು, ನಾವು 370 ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದೇವೆ ಮತ್ತು ನಾವು ಅದನ್ನು ಮಾಡಿದ್ದೇವೆ. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ನಾವು ಭರವಸೆ ನೀಡಿದ್ದೇವೆ ಮತ್ತು ಈಗ ನಿಮ್ಮೆಲ್ಲರನ್ನು ಜನವರಿ 22 ರಂದು ಭಗವಾನ್ ರಾಮನ ದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಹೇಳಿದರು. +ಇದಲ್ಲದೆ, ರಾಜ್ಯದ ಚುನಾವಣಾ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾದ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಪ್ರತಿಜ್ಞೆ ಮಾಡಿದ ಸಿಂಗ್ ಅವರು ಸೂಚಿಸಲಾದ ಪ್ರತಿಯೊಂದು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು. ಈಗಲಾದರೂ ಅವಕಾಶ ಕೊಟ್ಟರೆ ನಮ್ಮ ಪ್ರಣಾಳಿಕೆಯಲ್ಲಿ ಏನೇನು ಭರವಸೆ ನೀಡಿದ್ದೇವೆಯೋ ಅದನ್ನು ಖಾತರಿ ಪಡಿಸುತ್ತೇನೆ ಎಂದರು. +ಮೊದಲು, ಭಾರತವು ಏನನ್ನಾದರೂ ಹೇಳಿದಾಗ, ವಿಶ್ವ ರಾಷ್ಟ್ರಗಳು ನಮ್ಮನ್ನು ದುರ್ಬಲ ರಾಷ್ಟ್ರವೆಂದು ಪರಿಗಣಿಸಿ ನಮ್ಮ ಅಭಿಪ್ರಾಯವನ್ನು ಕುರುಡಾಗಿಸಿದವು. ಆದರೆ ಈಗ ಇಡೀ ಜಗತ್ತು ಅದು ಏನು ಹೇಳುತ್ತದೆ ಎಂಬುದನ್ನು ಭಾರತವನ್ನು ಎದುರು ನೋಡುತ್ತಿದೆ ಎಂದು ನೀವು ಹೆಮ್ಮೆಪಡಬಹುದು ಎಂದು ಅವರು ಹೇಳಿದರು. \ No newline at end of file diff --git a/eesanje/url_47_233_6.txt b/eesanje/url_47_233_6.txt new file mode 100644 index 0000000000000000000000000000000000000000..f030fbfb15e11405b0bf337d7e935c5e7bed5295 --- /dev/null +++ b/eesanje/url_47_233_6.txt @@ -0,0 +1,7 @@ +ಜೈಲಿನಿಂದ ಸಾಕ್ಷಿಗೆ ಬೆದರಿಕೆ- ಛೋಟಾ ಶಕೀಲ್ ಸಹಚರನ ವಿರುದ್ಧ ಎಫ್‍ಐಆರ್ +ಮುಂಬೈ, ನ.20 (ಪಿಟಿಐ) – ಸುಲಿಗೆ ಪ್ರಕರಣದಲ್ಲಿ ಜೈಲಿನಿಂದ ಸಾಕ್ಷಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪರಾರಿಯಾಗಿರುವ ಗ್ಯಾಂಗ್‍ಸ್ಟರ್ ಛೋಟಾ ಶಕೀಲ್‍ನ ಸಹಚರ ರಿಯಾಜ್ ಭಾಟಿ ವಿರುದ್ಧ ಮುಂಬೈ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಸುಲಿಗೆ ಪ್ರಕರಣದಲ್ಲಿ ಭಾಟಿಯನ್ನು ಮುಂಬೈನ ಜೈಲಿನಲ್ಲಿ ಇರಿಸಲಾಗಿದ್ದು, ಇದರಲ್ಲಿ ಶಕೀಲ್‍ನ ಸೋದರ ಮಾವ ಸಲೀಂ ಮತ್ತು ಇತರ ಐವರು ಆರೋಪಿಗಳಾಗಿದ್ದಾರೆ. +ಮುಂಬೈ ಪೊಲೀಸರು ಈ ಪ್ರಕರಣದಲ್ಲಿ ಕಟ್ಟುನಿಟ್ಟಾದ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ ನಿಬಂಧನೆಗಳನ್ನು ಅನ್ವಯಿಸಿದ್ದಾರೆ ಮತ್ತು ಎಲ್ಲಾ ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕಳೆದ ವಾರ ಇಲ್ಲಿ ಖಾರ್ ಪೊಲೀಸರು ಭಾಟಿ ವಿರುದ್ಧ ದಾಖಲಿಸಿದ ಇತ್ತೀಚಿನ ಎಫ್‍ಐಆರ್ ಪ್ರಕಾರ, 43 ವರ್ಷದ ಉದ್ಯಮಿಯೊಬ್ಬರು ಕಳೆದ 10 ವರ್ಷಗಳಿಂದ ತಿಳಿದಿರುವ ರಾಜೇಶ್ ಬಜಾಜ್ ಎಂಬ ವ್ಯಕ್ತಿ ನ್ಯಾಯಾಲಯದಲ್ಲಿ ಪರವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಭಾಟಿಯ ವಿರುದ್ಧ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. +ಭಾರತಕ್ಕೆ ಆಗಮಿಸಿದ ಅಸ್ಟ್ರೇಲಿಯಾ ವಿದೇಶಾಂಗ ಸಚಿವೆ +ಭಾಟಿ ಅವರನ್ನು ಭೇಟಿಯಾದ ವರ್ಸೋವಾ ಪೊಲೀಸ್ ಠಾಣೆಯ ಬಳಿ ಉದ್ಯಮಿಯನ್ನು ಬಜಾಜ್ ಕರೆದೊಯ್ದಿದ್ದರು ಮತ್ತು ಅವರ ಪರವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. 2021 ರಲ್ಲಿ, ಉದ್ಯಮಿಯ ಸ್ನೇಹಿತ ಭಾಟಿ ವಿರುದ್ಧ ವರ್ಸೋವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. +ದೂರಿನ ಪ್ರಕಾರ, ಭಾಟಿ ತನ್ನ ಹೆಂಡತಿಯನ್ನು ತನ್ನ ಸ್ನೇಹಿತ ಎಂದು ಹೇಳಿಕೊಂಡು ಉದ್ಯಮಿಯ ಸಹಚರನಿಗೆ ಪರಿಚಯಿಸಿದ್ದ. ಭಾಟಿ ತನ್ನ ಹೆಂಡತಿಗೆ ಬೆದರಿಕೆ ಹಾಕಿದ್ದಾನೆ ಮತ್ತು ಹಣದ ಆಮಿಷ ಒಡ್ಡಿದ ನಂತರ ಉದ್ಯಮಿ ಮತ್ತು ಅವನ ಸ್ನೇಹಿತನೊಂದಿಗೆ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ್ದಾನೆ ಎಂದು ಎಫ್‍ಐಆರ್‍ನಲ್ಲಿ ಉಲ್ಲೇಖಿಸಲಾಗಿದೆ. ನಂತರ, ಭಾಟಿ ಉದ್ಯಮಿ ಮತ್ತು ಅವನ ಸ್ನೇಹಿತನಿಂದ ತನ್ನ ಹೆಂಡತಿಯೊಂದಿಗಿನ ಲೈಂಗಿಕ ಸಂಬಂಧಕ್ಕಾಗಿ ಹಣವನ್ನು ಸುಲಿಗೆ ಮಾಡಿದ್ದಾನೆ ಎಂದು ಅದು ಹೇಳಿದೆ. +ದೂರಿನ ಆಧಾರದ ಮೇಲೆ, ಭಾಟಿ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 195 ಎ (ಸುಳ್ಳು ಹೇಳಿಕೆ ನೀಡುವಂತೆ ವ್ಯಕ್ತಿಯನ್ನು ಬೆದರಿಸುವುದು), 506-2 (ಅಪರಾಧದ ಬೆದರಿಕೆ) ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_233_7.txt b/eesanje/url_47_233_7.txt new file mode 100644 index 0000000000000000000000000000000000000000..e5f1c56f0de1c5edd7e6a9c33ea8ca30013dd838 --- /dev/null +++ b/eesanje/url_47_233_7.txt @@ -0,0 +1,8 @@ +ಸುರಂಗದಲ್ಲಿ ಸಿಲುಕದ 41 ಕಾರ್ಮಿಕರ ರಕ್ಷಣೆಗೆ ಐದು ಪ್ರತ್ಯೇಕ ಕಾರ್ಯಾಚರಣೆ +ಡೆಹ್ರಾಡೂನ್,ನ.20- ಉತ್ತರಾಖಂಡದಲ್ಲಿ ಒಂದು ವಾರದ ಹಿಂದೆ ಕುಸಿದಿರುವ ಸುರಂಗದೊಳಗೆ 41 ಕಾರ್ಮಿಕರು ಸಿಲುಕಿದ್ದು, ಅವರನ್ನು ರಕ್ಷಿಸಲು ಐದು ಆಯ್ಕೆಗಳ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. +ಸಿಕ್ಕಿಬಿದ್ದ ಕಾರ್ಮಿಕರನ್ನು ಪ್ರವೇಶಿಸಲು ಮೂರು ಕಡೆಯಿಂದ ಕೊರೆಯುವಿಕೆಯನ್ನು ಒಳಗೊಂಡಿರುವ ಈ ಪರ್ಯಾಯಗಳಲ್ಲಿ ಐದು ಪ್ರತ್ಯೇಕ ಏಜೆನ್ಸಿಗಳು ಕಾರ್ಯನಿರ್ವಹಿಸಲಿವೆ ಎಂದು ಸಾರಿಗೆ ಮತ್ತು ಹೆದ್ದಾರಿ ಕಾರ್ಯದರ್ಶಿ ಅನುರಾಗ್ ಜೈನ್ ಹೇಳಿದ್ದಾರೆ. ಅಮೂಲ್ಯ ಜೀವಗಳನ್ನು ಉಳಿಸಲು ಸರ್ಕಾರ ಎಲ್ಲಾ ರಂಗಗಳಲ್ಲಿ ಕೆಲಸ ಮಾಡಲು ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು. ತಜ್ಞರ ಸಲಹೆ ಮೇರೆಗೆ ವಿವಿಧ ಆಯ್ಕೆಗಳನ್ನು ಪರಿಶೀಲಿಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. +ಐದು ಆಯ್ಕೆಗಳನ್ನು ನಿರ್ಧರಿಸಲಾಯಿತು ಮತ್ತು ಈ ಆಯ್ಕೆಗಳನ್ನು ಕೈಗೊಳ್ಳಲು ಐದು ವಿಭಿನ್ನ ಏಜೆನ್ಸಿಗಳನ್ನು ನೇಮಿಸಲಾಗಿದೆ. ಐದು ಏಜೆನ್ಸಿಗಳಾದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ, ಸತ್ಲುಜ್ ಜಲ ವಿದ್ಯುತ್ ನಿಗಮ, ರೈಲ್ ವಿಕಾಸ್ ನಿಗಮ್ ಲಿಮಿಟೆಡ್, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಪೆರ್Çರೇಷನ್ ಲಿಮಿಟೆಡ್ (ಎನ್‍ಎಚ್‍ಐಡಿಸಿಎಲï), ಮತ್ತು ತೆಹ್ರಿ ಹೈಡ್ರೊ ಡೆವಲಪ್‍ಮೆಂಟ್ ಕಾಪೆರ್ರೇಷನ್ ಲಿಮಿಟೆಡ್ (ಟಿಎಚ್‍ಡಿಸಿಎಲï) ಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ, ಎಂದು ಅವರು ಹೇಳಿದರು. +ಗಡಿ ರಸ್ತೆಗಳ ಸಂಸ್ಥೆ ಮತ್ತು ಭಾರತೀಯ ಸೇನೆಯ ನಿರ್ಮಾಣ ವಿಭಾಗ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ ಎಂದು ಜೈನ್ ಹೇಳಿದರು. ಸಿಕ್ಕಿಬಿದ್ದ ಕಾರ್ಮಿಕರನ್ನು ರಕ್ಷಿಸಲು ಸಟ್ಲುಜ್ ಜೈಲ್ ವಿದ್ಯುತ್ ನಿಗಮದಿಂದ ಸುರಂಗದ ಮೇಲ್ಭಾಗದಿಂದ ಲಂಬ ಕೊರೆಯುವಿಕೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕೇವಲ ಒಂದು ದಿನದಲ್ಲಿ ಅಪ್ರೋಚ್ ರಸ್ತೆಯನ್ನು ಪೂರ್ಣಗೊಳಿಸಿದ ನಂತರ ಅಗತ್ಯ ಸರಬರಾಜುಗಳಿಗಾಗಿ ಮತ್ತೊಂದು ಲಂಬ ಪೈಪ್‍ಲೈನ್‍ನ ಕೆಲಸವನ್ನು ರೈಲ್ ವಿಕಾಸ್ ನಿಗಮವು ಪ್ರಾರಂಭಿಸಿದೆ. +ಪತ್ನಿ ಶೀಲ ಶಂಕಿಸಿ ಇಡೀ ಕುಟುಂಬವನ್ನೆ ಬಲಿ ತೆಗೆದುಕೊಂಡು ತಾನು ಪ್ರಾಣ ತೆತ್ತ +ಆಳವಾದ ಕೊರೆಯುವ ಪರಿಣತಿಯೊಂದಿಗೆ ಪರಿಣತಿಯನ್ನು ಹೊಂದಿದೆ, ಮತ್ತೊಂದು ತುದಿಯಿಂದ ಲಂಬ ಕೊರೆಯುವ ಕೆಲಸವನ್ನು ಪ್ರಾರಂಭಿಸಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯು ಸುರಕ್ಷತಾ ವ್ಯವಸ್ಥೆಗಳನ್ನು ರೂಪಿಸಿದ ನಂತರ ಮುಖ್ಯ ಸಿಲ್ಕ್ಯಾರಾ ತುದಿಯಿಂದ ಡ್ರಿಲ್ ಅನ್ನು ಮುಂದುವರಿಸುತ್ತದೆ. ಇದಕ್ಕೆ ಅನುಕೂಲವಾಗುವಂತೆ ಬಾಕ್ಸ್ ಕಲ್ವರ್ಟ್ ಅನ್ನು ಸೇನೆ ಸಿದ್ಧಪಡಿಸಿದೆ. ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೇಲಾವರಣದ ಚೌಕಟ್ಟನ್ನು ಮಾಡಲಾಗುತ್ತಿದೆ. +ತೆಹ್ರಿ ಹೈಡ್ರೊ ಡೆವಲಪ್‍ಮೆಂಟ್ ಕಾಪೆರ್ರೇಷನ್ ಮೈಕ್ರೋ ಟನೆಲಿಂಗ್‍ನಲ್ಲಿ ಕೆಲಸ ಮಾಡಲಿದ್ದು, ಇದಕ್ಕಾಗಿ ಈಗಾಗಲೇ ಭಾರೀ ಯಂತ್ರೋಪಕರಣಗಳನ್ನು ಸಜ್ಜುಗೊಳಿಸಲಾಗಿದೆ. \ No newline at end of file diff --git a/eesanje/url_47_233_8.txt b/eesanje/url_47_233_8.txt new file mode 100644 index 0000000000000000000000000000000000000000..2d3a74fe6519cec6f347a9fc292b8b598147fa48 --- /dev/null +++ b/eesanje/url_47_233_8.txt @@ -0,0 +1,10 @@ +ಭಾರತಕ್ಕೆ ಆಗಮಿಸಿದ ಅಸ್ಟ್ರೇಲಿಯಾ ವಿದೇಶಾಂಗ ಸಚಿವೆ +ನವದೆಹಲಿ,ನ.20- ಆಸ್ಟ್ರೇಲಿಯದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಇಂದು ಬೆಳಗ್ಗೆ ಎರಡನೇ ಭಾರತ-ಆಸ್ಟ್ರೇಲಿಯಾ 2+2 ಸಚಿವರ ಸಂವಾದದಲ್ಲಿ ಭಾಗವಹಿಸಲು ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ನವದೆಹಲಿಯ ಪಾಲಮ್‍ನ ವಾಯುಪಡೆ ನಿಲ್ದಾಣದಲ್ಲಿ ಆಕೆಗೆ ಆತ್ಮೀಯ ಸ್ವಾಗತ ನೀಡಲಾಯಿತು. +2ನೇ ಭಾರತ-ಆಸ್ಟ್ರೇಲಿಯಾ 2+2 ಸಚಿವರ ಸಂವಾದ ಮತ್ತು 14ನೇ ವಿದೇಶಾಂಗ ಸಚಿವರ ಚೌಕಟ್ಟಿನ ಸಂವಾದದ ಸಹ-ಅಧ್ಯಕ್ಷತೆಗಾಗಿ ನವದೆಹಲಿಗೆ ಆಗಮಿಸುತ್ತಿರುವ ಆಸ್ಟ್ರೇಲಿಯದ ಸಚಿವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಭಾರತದ ವಿವಿಧ ಅಂಶಗಳನ್ನು ಒಳಗೊಂಡಿರುವ ಚರ್ಚೆಯ ಶ್ರೀಮಂತ ಕಾರ್ಯಸೂಚಿ- ಆಸ್ಟ್ರೇಲಿಯಾ ಪಾಲುದಾರಿಕೆ ಕಾಯುತ್ತಿದೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಎಕ್ಸ್ ಮಾಡಿದ್ದಾರೆ. +ಏತನ್ಮಧ್ಯೆ, ಆಸ್ಟ್ರೇಲಿಯಾದ ಉಪ ಪ್ರಧಾನಿ ಮತ್ತು ರಕ್ಷಣಾ ಸಚಿವ ರಿಚರ್ಡ್ ಮಾಲ್ಸರ್ ಈಗಾಗಲೇ 2+2 ಸಂವಾದಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಆಸ್ಟ್ರೇಲಿಯಾದ ಇಬ್ಬರು ನಾಯಕರು ತಮ್ಮ ಭಾರತೀಯ ಸಹವರ್ತಿಗಳಾದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಸಂವಾದದ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ. +ಇದಕ್ಕೂ ಮೊದಲು, ಭಾರತವು ಆಸ್ಟ್ರೇಲಿಯಾಕ್ಕೆ ಉನ್ನತ-ಶ್ರೇಣಿಯ ಭದ್ರತಾ ಪಾಲುದಾರ ಮತ್ತು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ನೇರವಾಗಿ ಪ್ರಯೋಜನಕಾರಿಯಾದ ಪ್ರಾಯೋಗಿಕ, ಸ್ಪಷ್ಟವಾದ ಕ್ರಮಗಳಲ್ಲಿ ಒಂದಾಗಿದೆ ಎಂದು ಮಾಲ್ಸರ್ï ಹೇಳಿದ್ದರು. +ಪತ್ನಿ ಶೀಲ ಶಂಕಿಸಿ ಇಡೀ ಕುಟುಂಬವನ್ನೆ ಬಲಿ ತೆಗೆದುಕೊಂಡು ತಾನು ಪ್ರಾಣ ತೆತ್ತ +ಪರ್ತ್‍ಗೆ ಭಾರತೀಯ ಜಲಾಂತರ್ಗಾಮಿ ಭೇಟಿ ಮತ್ತು ಆಸ್ಟ್ರೇಲಿಯಾದ ವ್ಯಾಯಾಮ ಮಲಬಾರ್‍ನ ಆತಿಥ್ಯ ಸೇರಿದಂತೆ ಭಾರತ-ಆಸ್ಟ್ರೇಲಿಯಾ ರಕ್ಷಣಾ ಸಂಬಂಧದಲ್ಲಿ ಈ ವರ್ಷ ಹಲವಾರು ಪ್ರಥಮಗಳನ್ನು ಕಂಡಿದೆ ಎಂದು ಗಮನಿಸಿದ ಮಾಲ್ರ್ಸ್ ಇವೆಲ್ಲವೂ ರಾಷ್ಟ್ರದ ರಕ್ಷಣೆ ಮತ್ತು ಭದ್ರತಾ ಪಾಲುದಾರಿಕೆಗಳ ಬೆಳೆಯುತ್ತಿರುವ ನಿಕಟತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು. ಭಾರತದೊಂದಿಗಿನ ನಮ್ಮ ಸಹಕಾರವು ಇಂಡೋ-ಪೆಸಿಫಿಕ್ ಮುಕ್ತ, ಅಂತರ್ಗತ ಮತ್ತು ಸ್ಥಿತಿಸ್ಥಾಪಕತ್ವವನ್ನು ಖಚಿತಪಡಿಸಿಕೊಳ್ಳಲು ಆಸ್ಟ್ರೇಲಿಯಾದ ವಿಧಾನದ ಹೃದಯಭಾಗದಲ್ಲಿದೆ ಎಂದು ಅವರು ಹೇಳಿದರು. +ಏತನ್ಮಧ್ಯೆ, ಭಾರತ-ಆಸ್ಟ್ರೇಲಿಯಾ ಪಾಲುದಾರಿಕೆಯು ನಮ್ಮ ಹಂಚಿಕೆಯ ಪ್ರದೇಶದ ಸ್ಥಿರತೆ ಮತ್ತು ಸಮೃದ್ಧಿಗೆ ಕೇಂದ್ರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ವಾಂಗ್ ಹೇಳಿದ್ದಾರೆ. ನಮ್ಮ ಆಳವಾದ ರಕ್ಷಣಾ ಮತ್ತು ಭದ್ರತಾ ಸಹಕಾರದ ಜೊತೆಗೆ, ನಮ್ಮ ಪ್ರದೇಶ, ಹಿಂದೂ ಮಹಾಸಾಗರ, ಆಗ್ನೇಯ ಏಷ್ಯಾ ಮತ್ತು ಪೆಸಿಫಿಕ್‍ನಲ್ಲಿನ ಅನುಕೂಲಕ್ಕಾಗಿ ಭಾರತದೊಂದಿಗೆ ಹೆಚ್ಚು ನಿಕಟ ಪಾಲುದಾರಿಕೆಗೆ ಆಸ್ಟ್ರೇಲಿಯಾ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು. +ಅರ್ಜೆಂಟೀನಾ ಆಧ್ಯಕ್ಷರಾದ ಮಿಲೀ +ಇದಲ್ಲದೆ, 2+2 ಸಚಿವರ ಸಂವಾದವು ಭಾರತ-ಆಸ್ಟ್ರೇಲಿಯಾ ಸಂಬಂಧದ ಮೂಲಾಧಾರವಾಗಿದೆ ಮತ್ತು ಅವರು ಬಯಸಿದ ಪ್ರದೇಶದ ಪ್ರಕಾರವನ್ನು ರೂಪಿಸಲು ಒಟ್ಟಾಗಿ ಕೆಲಸ ಮಾಡುವಲ್ಲಿ ಪ್ರಗತಿ ಸಾಸುವ ಅವಕಾಶವಾಗಿದೆ.ಅವರ ಸಭೆಯ ಸಮಯದಲ್ಲಿ, ರಕ್ಷಣಾ, ಭದ್ರತೆ, ನವೀಕರಿಸಬಹುದಾದ ಇಂಧನ ಮತ್ತು ತಂತ್ರಜ್ಞಾನ ಸೇರಿದಂತೆ ತಮ್ಮ ಹಂಚಿಕೆಯ ಪ್ರಾದೇಶಿಕ ಹಿತಾಸಕ್ತಿಗಳ ಕುರಿತು ಸಚಿವರು ಸಹಕಾರವನ್ನು ಮುಂದುವರೆಸುತ್ತಾರೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ. \ No newline at end of file diff --git a/eesanje/url_47_233_9.txt b/eesanje/url_47_233_9.txt new file mode 100644 index 0000000000000000000000000000000000000000..011a432cd5474393d223dbfd157d56e0c8bddbc1 --- /dev/null +++ b/eesanje/url_47_233_9.txt @@ -0,0 +1,6 @@ +ಪತ್ನಿ ಶೀಲ ಶಂಕಿಸಿ ಇಡೀ ಕುಟುಂಬವನ್ನೆ ಬಲಿ ತೆಗೆದುಕೊಂಡು ತಾನು ಪ್ರಾಣ ತೆತ್ತ +ಬರಾಸತ್, ನ.20 (ಪಿಟಿಐ) ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಫ್ಲಾಟ್‍ವೊಂದರಲ್ಲಿ ಒಂದೇ ಕುಟುಂಬದ ನಾಲ್ವರ ಕೊಳೆತ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. +ಮೃತರನ್ನು ಬಟ್ಟೆ ವ್ಯಾಪಾರಿ 52 ವರ್ಷದ ಬೃಂದಾಬನ್ ಕರ್ಮಾಕರ್, ನಲವತ್ತರ ಹರೆಯದ ಅವರ ಪತ್ನಿ ದೇಬಶ್ರೀ ಕರ್ಮಾಕರ್, ಅವರ 17 ವರ್ಷದ ಮಗಳು ದೇಬಲೀನಾ ಮತ್ತು ಎಂಟು ವರ್ಷದ ಮಗ ಉತ್ಸಾಹ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಖಾರ್ದಾ ಪ್ರದೇಶದ ಎಂಎಸ್ ಮುಖರ್ಜಿ ರಸ್ತೆಯಲ್ಲಿರುವ ಮುಚ್ಚಿದ ಅಪಾರ್ಟ್‍ಮೆಂಟ್‍ನಲ್ಲಿ ಶವಗಳು ಪತ್ತೆಯಾಗಿವೆ. ಮನೆ ಯಜಮಾನ ಕುಟುಂಬಸ್ಥರಿಗೆ ವಿಷ ಕುಡಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. +ಅವರ ದೇಹವು ಚಾವಣಿಯ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರ ಮೂರು ಶವಗಳು ಫ್ಲಾಟ್‍ನಲ್ಲಿ ವಿವಿಧ ಸ್ಥಳಗಳಲ್ಲಿವೆ ಎಂದು ಅವರು ಹೇಳಿದರು. ಆತ್ಮಹತ್ಯೆ ಪತ್ರವೂ ಪತ್ತೆಯಾಗಿದ್ದು, ಅದರಲ್ಲಿ ತನ್ನ ಪತ್ನಿಗೆ ವಿವಾಹೇತರ ಸಂಬಂಧವಿದ್ದು, ಅದನ್ನು ಸಹಿಸಲಾಗುತ್ತಿಲ್ಲ ಎಂದು ವ್ಯಕ್ತಿ ಹೇಳಿಕೊಂಡಿದ್ದು, ಹೀಗಾಗಿ ಆತ ತೀವ್ರ ಕ್ರಮ ಕೈಗೊಂಡಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ. +ವಿಶಾಖಪಟ್ಟಣಂ ಜೆಟ್ಟಿ ಪ್ರದೇಶದಲ್ಲಿ 25 ದೋಣಿಗಳು ಬೆಂಕಿಗೆ ಆಹುತಿ +ಅಪಾರ್ಟ್‍ಮೆಂಟ್‍ನಿಂದ ದುರ್ವಾಸನೆ ಬರುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಒಳಗಿನಿಂದ ಚಿಲಕ ಹಾಕಿದ್ದರಿಂದ ಬಾಗಿಲು ಒಡೆದು ತೆರೆಯಬೇಕಾಯಿತು ಎಂದರು. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. \ No newline at end of file diff --git a/eesanje/url_47_234_1.txt b/eesanje/url_47_234_1.txt new file mode 100644 index 0000000000000000000000000000000000000000..eb01fbb413eacd66a95c3a7aa9982aca3f554c58 --- /dev/null +++ b/eesanje/url_47_234_1.txt @@ -0,0 +1,7 @@ +ರಾಜ್ಯಪಾಲರು ತಿರಸ್ಕರಿಸಿದ ಮಸೂದೆ ಮರು ಮಂಡನೆ ಮಾಡಿದ ಸ್ಟಾಲಿನ್ +ಚೆನ್ನೈ, ನ.18 (ಪಿಟಿಐ) – ರಾಜ್ಯಪಾಲ ಆರ್ ಎನ್ ರವಿ ಅವರು ಹಿಂತಿರುಗಿಸಿದ್ದ 10 ಮಸೂದೆಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ಮತ್ತೆ ವಿಧಾನಸಭೆಯಲ್ಲಿ ಮರುಪರಿಶೀಲನೆಗೆ ನಿರ್ಣಯವನ್ನು ಮಂಡಿಸಿದ್ದಾರೆ. +ನಿರ್ಣಯವನ್ನು ಮಂಡಿಸಿದ ಸ್ಟಾಲಿನ್, ಯಾವುದೇ ಕಾರಣಗಳನ್ನು ನೀಡದೆ, ರವಿ ಅವರು ಬಿಲ್‍ಗಳಿಗೆ ನಾನು ಒಪ್ಪಿಗೆಯನ್ನು ತಡೆಹಿಡಿಯುತ್ತೇನೆ ಎಂದು ನಮೂದಿಸಿ ಹಿಂದಿರುಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.2020 ಮತ್ತು 2023ರಲ್ಲಿ ತಲಾ 2 ಮಸೂದೆಗಳನ್ನು ಸದನವು ಅಂಗೀಕರಿಸಿದ್ದರೆ, ಇತರ ಆರು ಮಸೂದೆಗಳನ್ನು ಕಳೆದ ವರ್ಷ ಅಂಗೀಕರಿಸಲಾಗಿತ್ತು. +ಭಾರತದ ಸಂವಿಧಾನದ 200 ನೇ ವಿಧಿಯ ನಿಬಂಧನೆಯ ಅಡಿಯಲ್ಲಿ, ಮೇಲಿನ ಮಸೂದೆಗಳನ್ನು ಮತ್ತೊಮ್ಮೆ ಅಂಗೀಕರಿಸಿದರೆ ಮತ್ತು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಸಲ್ಲಿಸಿದರೆ, ಅವರು ಅದರಿಂದ ಒಪ್ಪಿಗೆಯನ್ನು ತಡೆಹಿಡಿಯುವುದಿಲ್ಲ ಎಂದು ಸದನವು ಗಮನಿಸುತ್ತದೆ ಎಂದು ಅವರು ಹೇಳಿದರು. +ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು +ತಮಿಳುನಾಡು ವಿಧಾನಸಭೆಯ ನಿಯಮ 143 ರ ಅಡಿಯಲ್ಲಿ ಈ ಕೆಳಗಿನ ಮಸೂದೆಗಳನ್ನು ಈ ಸಭೆಯು ಮರುಪರಿಶೀಲಿಸಬಹುದು ಎಂದು ಈ ಸದನವು ನಿರ್ಧರಿಸುತ್ತದೆ ಎಂದು ಸ್ಟಾಲಿನ್ ಮಂಡಿಸಿದ ನಿರ್ಣಯವು ತಿಳಿಸಿದೆ. ರವಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಸರ್ಕಾರದ ಉಪಕ್ರಮಗಳನ್ನು ತಡೆಯಲು ರಾಜ್ಯಪಾಲರು ಉತ್ಸುಕರಾಗಿದ್ದಾರೆ ಎಂದು ಆರೋಪಿಸಿದರು. +ಅವರು ತಮ್ಮ ವೈಯಕ್ತಿಕ ಆಸೆ ಮತ್ತು ಅಭಿಮಾನದ ಕಾರಣದಿಂದ ಮಸೂದೆಗಳನ್ನು ಹಿಂದಿರುಗಿಸಿದ್ದಾರೆ…ಸಮ್ಮತಿ ನೀಡದಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನವಿರೋಯಾಗಿದೆ ಎಂದು ಸಿಎಂ ಹೇಳಿದರು.ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_47_234_10.txt b/eesanje/url_47_234_10.txt new file mode 100644 index 0000000000000000000000000000000000000000..46740b9b69b8a029cc0f271d149cc02d083d22de --- /dev/null +++ b/eesanje/url_47_234_10.txt @@ -0,0 +1,8 @@ +ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ +ಶ್ರೀನಗರ,ನ.17- ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಸೇನಾಪಡೆ ಮತ್ತು ಪಾಕಿಸ್ತಾನ ಮೂಲದ ಲಷ್ಕರ್- ಇ-ತೊಯ್ಬ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿ ದ್ದಾರೆ. ಆಪರೇಷನ್ ಕಲಿ ಹೆಸರಿನಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. +ಕುಲ್ಗಾಂ ಜಿಲ್ಲೆಯ ಸ್ಯಾಮ್ನೊಪಾಕೆಟ್‍ನ ಡಿ.ಎಚ್. ಪೋರಾ ಪ್ರದೇಶದಲ್ಲಿ ಪಾಕ್ ಮೂಲದ ಉಗ್ರರು ಭಾರತದೊಳಗೆ ಒಳನುಸುಳಲು ಹೊಂಚು ಹಾಕಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಸೇನಾಪಡೆ ಗುರುವಾರವೇ ಉಗ್ರರನ್ನು ಸದೆಬಡೆಯುವ ಕಾರ್ಯಾಚರಣೆಗೆ ಇಳಿದಿತ್ತು. ಸೇನೆಯ 34 ರಾಷ್ಟ್ರೀಯ ರೈಫೆಲ್ಸ್, ಎಲೈಟ್, ಸ್ಪೆಷಲ್ ಫೋರ್ಸ್ ಯುನಿಟ್ ಹಿರಿಯ ಪೊಲೀಸರು, ಸಿಆರ್‍ಪಿಎಫ್ ಯೋಧರು ಜಂಟಿಯಾಗಿ ಕಾರ್ಯಚರಣೆ ಆರಂಭಿಸಿದ್ದರು. +ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್ +ನಿನ್ನೆ ರಾತ್ರಿಯಾಗಿದ್ದರಿಂದ ಸ್ಥಳೀಯ ಗ್ರಾಮಸ್ಥರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಸೇನಾಪಡೆ ಕಾರ್ಯಾಚರಣೆಯನ್ನು ನಿಲ್ಲಿಸಿತ್ತು. ಪುನಃ ಇಂದು ಬೆಳಗ್ಗೆ ಉಗ್ರರ ಬೇಟೆಗೆ ಕಾರ್ಯಾಚರಣೆಗೆ ಇಳಿದಾಗ ಶರಣಾಗುವಂತೆ ಸೂಚನೆ ಕೊಡಲಾಯಿತು. ಈ ವೇಳೆ ಶರಣಾಗುವ ಬದಲು ಉಗ್ರರು ಮನೆಗೆ ಬೆಂಕಿ ಹಚ್ಚಿ ಸೇನಾಪಡೆಗಳ ಮೇಲೆ ಪ್ರತಿದಾಳಿ ನಡೆಸಲು ಮುಂದಾದರು. ಈ ಹಂತದಲ್ಲಿ ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆಗಿಳಿದ ಸೇನಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಹತ್ಯೆಗೀಡಾಗಿರುವ ಉಗ್ರರ ವಿವರಗಳು ತಿಳಿದುಬಂದಿಲ್ಲ. ಅವರ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಕಳೆದ ಅಕ್ಟೋಬರ್ 10ರಂದು ಕೂಡ ಶೋಪಿಯಾನ್‍ನ ಅಲ್ಶಿಪೋರಾ ಪ್ರದೇಶದಲ್ಲಿ ಎನ್‍ಕೌಂಟರ್ ನಡೆದಿತ್ತು. ಮೋರಿಫತ್ ಮಕ್ಬೂಲ್ ಮತ್ತು ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಎಂಬ ಇಬ್ಬರು ಉಗ್ರರು ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಫೆಬ್ರವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. +ಪ್ರೀತಿಸುತ್ತಿದ್ದ ಯುವತಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ +ಸ್ಥಳೀಯ ಮಾರುಕಟ್ಟೆಗೆ ತೆರಳುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. \ No newline at end of file diff --git a/eesanje/url_47_234_11.txt b/eesanje/url_47_234_11.txt new file mode 100644 index 0000000000000000000000000000000000000000..43db4b4dfea4312d141405239a25c3d40e358170 --- /dev/null +++ b/eesanje/url_47_234_11.txt @@ -0,0 +1,8 @@ +ಇಸ್ರೇಲ್-ಹಮಾಸ್ ಯುದ್ದದ ಸಾವು-ನೋವುಗಳಿಗೆ ಮೋದಿ ಖಂಡನೆ +ನವದೆಹಲಿ,ನ.17- ಇಸ್ರೇಲ್-ಹಮಾಸ್ ಯುದ್ಧದಲ್ಲಿ ಸಂಭವಿಸಿರುವ ನಾಗರಿಕರ ಸಾವು-ನೋವುಗಳನ್ನು ಖಂಡಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಇಂದು ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಸವಾಲುಗಳನ್ನು ಎದುರಿಸುತ್ತಿರುವ ಜಾಗತಿಕ ದಕ್ಷಿಣದ ನಡುವೆ ಏಕತೆ ಮತ್ತು ಸಹಕಾರದ ತುರ್ತು ಅಗತ್ಯವಿದೆ ಎಂದಿದ್ದಾರೆ. +2ನೇ ವಾಯ್ಸ್ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಇ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿ ಸೇರಿದಂತೆ ಹಿಂಸೆ ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವನ್ನು ಒತ್ತಿ ಹೇಳಿದರು. ಸಂಘರ್ಷ ಪರಿಹಾರದ ಮೂಲಾಧಾರವಾಗಿ ಸಂಯಮ ಮತ್ತು ಸಂವಾದಕ್ಕೆ ಆದ್ಯತೆ ನೀಡುವ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು. +ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ +ಪಶ್ಚಿಮ ಏಷ್ಯಾ ಪ್ರದೇಶದ ಘಟನೆಗಳಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅಕ್ಟೋಬರ್ 7 ರಂದು ಇಸ್ರೇಲ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸಿದೆ. ಎಂದು ಪ್ರಧಾನಿ ಮೋದಿ ಹೇಳಿದರು. ನಾವು ಸಂಯಮವನ್ನೂ ಅನುಸರಿಸಿದ್ದೇವೆ. ನಾವು ಸಂವಾದ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದಿದ್ದಾರೆ. +ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ ನಂತರ, ನಾವು ಪ್ಯಾಲೆಸ್ಟೈನ್ ಜನರಿಗೆ ಮಾನವೀಯ ನೆರವನ್ನು ಸಹ ಕಳುಹಿಸಿದ್ದೇವೆ. ಜಾಗತಿಕ ದಕ್ಷಿಣದ ದೇಶಗಳು ಹೆಚ್ಚಿನ ಜಾಗತಿಕ ಒಳಿತಿಗಾಗಿ ಒಂದಾಗಬೇಕಾದ ಸಮಯ ಇದು ಎಂದು ಅವರು ಹೇಳಿದರು. +ಇಂದೋರ್‌ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮತಕೇಂದ್ರ +ಅಕ್ಟೋಬರ್ 7 ರಂದು ಪ್ಯಾಲೇಸ್ಟಿನಿಯನ್ ಗುಂಪು ಹಮಾಸ್ ಸಂವೇದನಾಶೀಲ ಭೂ-ಸಮುದ್ರ-ವಾಯು ದಾಳಿಯನ್ನು ಪ್ರಾರಂಭಿಸಿದ ನಂತರ 1,200 ಕ್ಕೂ ಹೆಚ್ಚು ಇಸ್ರೇಲಿಗಳು, ಹೆಚ್ಚಾಗಿ ನಾಗರಿಕರು ಕೊಲ್ಲಲ್ಪಟ್ಟರು. ಪ್ರತೀಕಾರವಾಗಿ, ಇಸ್ರೇಲ್ ಗಾಜಾ ಪಟ್ಟಿಯನ್ನು – ಹಮಾಸ್ ಭದ್ರಕೋಟೆ – ವೈಮಾನಿಕ ದಾಳಿಯೊಂದಿಗೆ ಹೊಡೆದು 9,000 ಕ್ಕೂ ಹೆಚ್ಚು ಜನರನ್ನು ಕೊಂದಿತ್ತು. \ No newline at end of file diff --git a/eesanje/url_47_234_12.txt b/eesanje/url_47_234_12.txt new file mode 100644 index 0000000000000000000000000000000000000000..5032e7c9726bec66cd7233df2c853d7802904b26 --- /dev/null +++ b/eesanje/url_47_234_12.txt @@ -0,0 +1,6 @@ +ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಏರ್​ಶೋ +ಅಹಮದಾಬಾದ್,ನ.17- ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನ.19ರಂದು ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಸೂರ್ಯಕಿರಣ್ ವಿಮಾನ ವೈಮಾನಿಕ ಪ್ರದರ್ಶನ ನೀಡಲಿದೆ. +ಮೊಟೆರಾ ಪ್ರದೇಶದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯ ಪ್ರಾರಂಭವಾಗುವ ಮೊದಲು ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಹತ್ತು ನಿಮಿಷಗಳ ಕಾಲ ಜನರನ್ನು ಆಕರ್ಷಿಸಲಿದೆ.ಇಂದು ಮತ್ತು ಶನಿವಾರ ವೈಮಾನಿಕ ಪ್ರದರ್ಶನದ ತಾಲೀಮು ನಡೆಯಲಿದೆ ಎಂದು ಪಿಆರ್‍ಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. +ಬುಧವಾರ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಈಗಾಗಲೇ ಏಕದಿನ ವಿಶ್ವಕಪ್ ಫೈನಲ್ ತಲುಪಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿರುವ ಆಸ್ಟ್ರೇಲಿಯಾ ಮತ್ತು ಭಾರತ ಫೈನಲ್ ಪಂದ್ಯವನ್ನು ಆಡಲಿವೆ. +ಇಂದೋರ್‌ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮತಕೇಂದ್ರ +ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಸಾಮಾನ್ಯವಾಗಿ ಒಂಬತ್ತು ವಿಮಾನಗಳನ್ನು ಒಳಗೊಂಡಿರುತ್ತದೆ ಮತ್ತು ಇದು ದೇಶಾದ್ಯಂತ ಹಲವಾರು ಏರ್ ಶೋಗಳನ್ನು ಪ್ರದರ್ಶಿಸಿದೆ. ವಿಜಯ ರಚನೆ, ಬ್ಯಾರೆಲ್ ರೋಲ್ ಕುಶಲತೆ ಮತ್ತು ಆಕಾಶದಲ್ಲಿ ವಿವಿಧ ಆಕಾರಗಳ ರಚನೆಯಲ್ಲಿ ಕುಣಿಕೆ ಕುಶಲತೆ ಅದರ ಪ್ರದರ್ಶನದ ವಿಶಿಷ್ಟ ಲಕ್ಷಣವಾಗಿದೆ. \ No newline at end of file diff --git a/eesanje/url_47_234_2.txt b/eesanje/url_47_234_2.txt new file mode 100644 index 0000000000000000000000000000000000000000..74b1eca61929a654a98a52c45426a1aedbb06c99 --- /dev/null +++ b/eesanje/url_47_234_2.txt @@ -0,0 +1,6 @@ +ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ +ನವದೆಹಲಿ, ನ.18 (ಪಿಟಿಐ) – ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಇತ್ಯರ್ಥಗೊಳಿಸುವಲ್ಲಿ ಕೇಂದ್ರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. +ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ, ಸುಧಾಂಶು ಧುಲಿಯಾ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಸೋಮವಾರ ವಿಚಾರಣೆ ನಡೆಸಲಿದೆ ನ. 7 ರಂದು ಅರ್ಜಿಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಮೂರ್ತಿಗಳನ್ನು ಕೇಂದ್ರವು ಆಯ್ದು ಆಯ್ಕೆ ಮತ್ತು ನೇಮಕ ಮಾಡುತ್ತಿರುವುದು ತೊಂದರೆ ಎಂದು ಹೇಳಿದೆ. +ಭಾರತದಿಂದ 20 ಶತಕೋಟಿ ಮೌಲ್ಯದ ಸರಕು ರಫ್ತು ಗುರಿ: ಅಮೆಜಾನ್ +ಒಂದು ಹೈಕೋರ್ಟ್‍ನಿಂದ ಇನ್ನೊಂದು ಹೈಕೋರ್ಟ್‍ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾದ ಹೆಸರುಗಳ ಬಾಕಿ ಇರುವ ಬಗ್ಗೆಯೂ ಅದು ಕಳವಳ ವ್ಯಕ್ತಪಡಿಸಿದೆ. +ಒಮ್ಮೆ ಈ ಜನರು ಈಗಾಗಲೇ ನ್ಯಾಯಾೀಶರಾಗಿ ನೇಮಕಗೊಂಡರೆ, ಅವರು ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸುವ ವಿಷಯವು ನಿಜವಾಗಿಯೂ ಸರ್ಕಾರಕ್ಕೆ ಕಾಳಜಿಯ ವಿಷಯವಾಗಬಾರದು ಮತ್ತು ಈ ನ್ಯಾಯಾಲಯ ಅಥವಾ ಕೊಲಿಜಿಯಂ ಸಂಭವಿಸುವ ಪರಿಸ್ಥಿತಿ ಬರುವುದಿಲ್ಲ ಎಂದು ನಾವು ಅವರಿಗೆ ಮತ್ತೊಮ್ಮೆ ಒತ್ತಿಹೇಳಿದ್ದೇವೆ. ರುಚಿಕರವಲ್ಲದ ನಿರ್ಧಾರವನ್ನು ತೆಗೆದುಕೊಳ್ಳಬೇಕು, ಎಂದು ಅದು ಹೇಳಿದೆ. \ No newline at end of file diff --git a/eesanje/url_47_234_3.txt b/eesanje/url_47_234_3.txt new file mode 100644 index 0000000000000000000000000000000000000000..71c3dc5cbadbeb8126bc6eb5b34fe3eea7d25549 --- /dev/null +++ b/eesanje/url_47_234_3.txt @@ -0,0 +1,7 @@ +ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಗವರ್ನರ್‌ಗೆ ದೂರು +ನವದೆಹಲಿ,ನ.18- ತಮ್ಮ ಮಗ ಪಾಲುದಾರರಾಗಿರುವ ಕಂಪನಿ ಮತ್ತು ಐಎಲ್‍ಬಿಎಸ್ ನಡುವೆ ಲಾಭದಾಯಕ ಸಹಯೋಗವನ್ನು ಸಕ್ರಿಯಗೊಳಿಸಲು ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ತಮ್ಮ ಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ವಿಜಿಲೆನ್ಸ್ ಸಚಿವ ಅತಿಶಿ ನೀಡಿರು ವರದಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‍ಗೆ ಕಳುಹಿಸಿದ್ದಾರೆ. +ಕಂಪನಿ ಮತ್ತು ಐಎಲ್‍ಬಿಎಸ್ ನಡುವಿನ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಅವರ ಮಗ ಸಹಿ ಹಾಕಿಲ್ಲ ಎಂದು ಮುಖ್ಯ ಕಾರ್ಯದರ್ಶಿಯ ಆಪ್ತ ಮೂಲಗಳು ಹೇಳಿಕೊಂಡಿವೆ. ಅವರು ಷೇರುದಾರ ಅಥವಾ ನಿರ್ದೇಶಕ ಅಥವಾ ಪಾಲುದಾರ ಅಥವಾ ಉದ್ಯೋಗಿಯಾಗಿ ಪ್ರಶ್ನೆಯಲ್ಲಿರುವ ಕಂಪನಿಯೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ. +ಇನ್‍ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಪಿಲಿಯರಿ ಸೈನ್ಸಸ್ (ಐಎಲ್‍ಬಿಎಸ) ಗುರುವಾರ ಹೇಳಿಕೆಯಲ್ಲಿ ಸಂಪೂರ್ಣವಾಗಿ ಆಧಾರರಹಿತ ಮತ್ತು ಅರ್ಹತೆಯಿಲ್ಲದ ಆರೋಪಗಳನ್ನು ನಿರಾಕರಿಸಿದೆ.ಐಎಲ್‍ಬಿಎಸ್ ಯಾವುದೇ ಖರೀದಿ ಆದೇಶವನ್ನು ನೀಡಿಲ್ಲ ಅಥವಾ ಯಾವುದೇ ಅಲ್ ಸಾಫ್ಟ್‍ವೇರ್ ಡೆವಲಪರ್ ಅಥವಾ ಕಂಪನಿಗೆ ಯಾವುದೇ ಪಾವತಿ ಮಾಡಿಲ್ಲ ಎಂದು ಖಚಿತಪಡಿಸುತ್ತದೆ ಎಂದು ಐಎಲ್‍ಬಿಎಸ್ ಹೇಳಿಕೆ ತಿಳಿಸಿದೆ. +ಜನವರಿ 24, 2023 ರಂದು ಐಎಲ್‍ಬಿಎಸ್ ಮತ್ತು ಮುಖ್ಯ ಕಾರ್ಯದರ್ಶಿಯವರ ಮಗನ ಕಂಪನಿಯ ನಡುವೆ ಎಂಒಯುಗೆ ಸಹಿ ಹಾಕಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ, ಇದು ಅಭಿವೃದ್ಧಿ ಹೊಂದಿದ ಯಾವುದೇ ಬೌದ್ಧಿಕ ಆಸ್ತಿಗೆ ಜಂಟಿ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಒದಗಿಸುವ ಮೂಲಕ ಕಂಪನಿಗೆ ಲಾಭದಾಯಕವಾಗಲು ದೊಡ್ಡ ಅವಕಾಶವನ್ನು ಒದಗಿಸಿದೆ. ಯೋಜನೆಯ ಮೂಲಕ ಮತ್ತು ಯಾವುದೇ ಭವಿಷ್ಯದ ವಾಣಿಜ್ಯೀಕರಣಕ್ಕಾಗಿ ಎರಡೂ ಪಕ್ಷಗಳಿಂದ ಲಾಭದ ಶೇಕಡಾ 50 ರಷ್ಟು ಪಾಲು ಇರುತ್ತದೆ. +ರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್ +ನರೇಶ್ ಕುಮಾರ್ ಅವರು ಅಖಿಲ ಭಾರತ ಸೇವೆಗಳ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಸಾರ್ವಜನಿಕ ಖಜಾನೆಗೆ ನಷ್ಟವನ್ನುಂಟುಮಾಡುವ ಮೂಲಕ ತಮ್ಮ ಮಗನ ಕಂಪನಿಗೆ ಲಾಭದಾಯಕ ಸಹಯೋಗವನ್ನು ಸಕ್ರಿಯಗೊಳಿಸಲು ತಮ್ಮ ಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಪ್ರಾಥಮಿಕವಾಗಿ ತೋರುತ್ತಿದೆ ಎಂದು ವರದಿ ಆರೋಪಿಸಿದ್ದು, ಅವರನ್ನು ಅಮಾನತುಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಲಾಗಿದೆ. \ No newline at end of file diff --git a/eesanje/url_47_234_4.txt b/eesanje/url_47_234_4.txt new file mode 100644 index 0000000000000000000000000000000000000000..645087222a556da1ee5b98af77ff0ab38a548a76 --- /dev/null +++ b/eesanje/url_47_234_4.txt @@ -0,0 +1,8 @@ +ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು +ಶಿಮ್ಲಾ,ನ.18- ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪವಿತ್ರ ಪಟ್ಟಣ ಮಣಿಕರಣ್ ಬಳಿಯ ಸಣ್ಣ ಕೊಳದಲ್ಲಿ ರಷ್ಯಾದಿಂದ ಬಂದವರು ಎಂದು ನಂಬಲಾದ ದಂಪತಿಗಳ ಬೆತ್ತಲೆ ಶವಗಳು ಪತ್ತೆಯಾಗಿವೆ. ಶವಗಳಲ್ಲಿ ಕೆಲವು ಗಾಯದ ಗುರುತುಗಳಿವೆ. ಇದು ಆತ್ಮಹತ್ಯೆ ಎಂದು ಮೇಲ್ನೋಟಕ್ಕೆ ಕಂಡುಬಂದರೂ ಕೊಲೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. +ಇಪ್ಪತ್ತರ ಹರೆಯದ ಪುರುಷ ಮತ್ತು ಮಹಿಳೆಯನ್ನು ತಕ್ಷಣ ಗುರುತಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸಮೀಪದಲ್ಲಿ ದೊರೆತ ಕೆಲವು ವಸ್ತುಗಳ ಆಧಾರದ ಮೇಲೆ, ಬಲಿಪಶುಗಳು ರಷ್ಯಾದವರಾಗಿರಬಹುದು ಎಂದು ನಂಬಲಾಗಿದೆ. +ಮಣಿಕರಣ್‍ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಪಾರ್ವತಿ ನದಿಯ ದಡದಲ್ಲಿರುವ ಟ್ಯಾಗ್ರಿಯಲ್ಲಿ ಕ್ರಮವಾಗಿ ಕುಂಡ್ (ಹಾಟ್ ಸ್ಪ್ರಿಂಗ್ ಪೂಲ) ಮತ್ತು ಕೊಳದ ಹೊರಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ದೇಹಗಳು ಪತ್ತೆಯಾಗಿವೆ. +ಕ್ರಿಕೆಟ್, ಮೆಟ್ರೋ ಸೇರಿ ಎಲ್ಲವನ್ನೂ ಬಿಜೆಪಿ ಕೇಸರಿಮಯಗೊಳಿಸುತ್ತಿದೆ: ದೀದಿ +ಎಎಸ್ಪಿ ಸಂಜೀವ್ ಚೌಹಾಣ್ ಪಿಟಿಐಗೆ ಪುರುಷನ ಕೈ ಮತ್ತು ಕುತ್ತಿಗೆಯ ಮೇಲೆ ಕತ್ತರಿಸಿದ ಗುರುತುಗಳಿವೆ, ಆದರೆ ಮಹಿಳೆಯ ಕೈಯಲ್ಲಿ ಗಾಯದ ಗುರುತುಗಳಿವೆ. ಅವರ ಗಾಯಗಳು ಮಾರಣಾಂತಿಕವಾಗಿಲ್ಲ ಮತ್ತು ಸಾವಿಗೆ ಕಾರಣವನ್ನು ಇನ್ನೂ ಕಂಡುಹಿಡಿಯಬೇಕಾಗಿದೆ ಎಂದು ಅವರು ಹೇಳಿದರು. +ಸ್ಥಳದಿಂದ ಒಂದು ಬ್ಲೇಡ್, ಮೊಬೈಲ್ ಫೋನ್, ಇತರ ವಸ್ತುಗಳು ಮತ್ತು ಡ್ರಗ್ಸ್ (ಚರಸ್) ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ವಿಷಯ ತಿಳಿಯಲಿದೆ ಎಂದರು. +ಮೃತದೇಹಗಳನ್ನು ಕುಲುವಿನ ಪ್ರಾದೇಶಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದನ್ನು ಮಂಡಿಯ ವೈದ್ಯಕೀಯ ಕಾಲೇಜಿಗೆ ಉಲ್ಲೇಖಿಸಲಾಗಿದೆ. ಅವರ ಮುಖಗಳು ಊದಿಕೊಂಡಿವೆ ಮತ್ತು ಗುರುತಿಸಲಾಗಲಿಲ್ಲ ಮತ್ತು ಬಲಿಪಶುಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_234_5.txt b/eesanje/url_47_234_5.txt new file mode 100644 index 0000000000000000000000000000000000000000..1b77930e3c4f4f85519979b3bc4c18911e98f3da --- /dev/null +++ b/eesanje/url_47_234_5.txt @@ -0,0 +1,8 @@ +ಭಾರತದಿಂದ 20 ಶತಕೋಟಿ ಮೌಲ್ಯದ ಸರಕು ರಫ್ತು ಗುರಿ: ಅಮೆಜಾನ್ +ನವದೆಹಲಿ,ನ.18- ಅಮೆಜಾನ್ ತನ್ನ ಇ-ಕಾಮರ್ಸ್ ಪ್ಲಾಟ್‍ಫಾರ್ಮ್‍ಗೆ ಸಾವಿರಾರು ಸಣ್ಣ ಮಾರಾಟಗಾರರನ್ನು ಸೇರಿಸುವ ಮೂಲಕ 2025 ರ ವೇಳೆಗೆ ಭಾರತದಿಂದ 20 ಶತಕೋಟಿ ಮೌಲ್ಯದ ಸರಕು ರಫ್ತು ಮಾಡುವ ಗುರಿಯನ್ನು ಹೊಂದಿದೆ. +ಈ ವರ್ಷ ಸಹಿ ಮಾಡಿದ ಉದ್ಯಮಿಗಳ ಸಂಖ್ಯೆಯಿಂದ ನಾವು ತುಂಬಾ ಉತ್ತೇಜಿತರಾಗಿದ್ದೇವೆ ಎಂದು ಅಮೆಜಾನ್ ಜಾಗತಿಕ ವ್ಯಾಪಾರದ ನಿರ್ದೇಶಕ ಭೂಪೇನ್ ವಾಕಂಕರ್ ರಫ್ತು ಯೋಜನೆಗಳನ್ನು ಉಲ್ಲೇಖಿಸಿ ಉದ್ಯಮದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. +ರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್ +ಶುಕ್ರವಾರದಿಂದ 11 ದಿನಗಳ ಶಾಪಿಂಗ್ ಅವಯ ಕಪ್ಪು ಶುಕ್ರವಾರದ ಸೈಬರ್ ಸೋಮವಾರ ಮಾರಾಟದ ಮೊದಲು ಭಾರತದಲ್ಲಿ ತಯಾರಿಸಿದ ಸಾವಯವ ಆರೋಗ್ಯ ಪೂರಕಗಳು, ಸ್ನಾನದ ಟವೆಲ್‍ಗಳು, ಸೆಣಬಿನ ರಗ್ಗುಗಳು ಮತ್ತು ಮಕ್ಕಳಿಗಾಗಿ ರೋಬೋಟಿಕ್ ಆಟಗಳಂತಹ ಹೋಮ್‍ವೇರ್‍ಗಳಿಗೆ ಭಾರಿ ಬೇಡಿಕೆಯಿದೆ ಎಂದು ಭೂಪೇನ್ ವಾಕಂಕರ್ ಹೇಳಿದರು. +2015 ರಲ್ಲಿ ಬೆರಳೆಣಿಕೆಯ ಮಾರಾಟಗಾರರೊಂದಿಗೆ ಪ್ರಾರಂಭವಾದ ಅಮೆಜಾನ್ ಗ್ಲೋಬಲ್ ಟ್ರೇಡ್, ಇ-ಕಾಮರ್ಸ್ ದೈತ್ಯದ ಗ್ರಾಹಕರಿಗೆ ವ್ಯಾಪಾರ ರಫ್ತು ವೇದಿಕೆಯಾಗುವ ಮೂಲಕ ಭಾರತದಲ್ಲಿ ಗಮನ ಸೆಳೆದಿದೆ.ಕಂಪನಿಯು ಸಾಗರೋತ್ತರ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಉತ್ಪನ್ನಗಳನ್ನು ಮಾರಾಟ ಮಾಡಲು 100,000 ಕ್ಕೂ ಹೆಚ್ಚು ಸಣ್ಣ ತಯಾರಕರನ್ನು ಸೇರಿಸಿದೆ ಎಂದು ಅವರು ಹೇಳಿದರು. +ಇ-ಕಾಮರ್ಸ್ ರಫ್ತುಗಳನ್ನು ಪ್ರಾರಂಭಿಸಲು ತಮ್ಮ ಕಾಪೆರ್ರೇ ಟ್ ಉದ್ಯೋಗಗಳನ್ನು ತೊರೆದವರು ಸೇರಿದಂತೆ ಕೆಲವು ಮಾರಾಟಗಾರರು ಮೊದಲ ಬಾರಿಗೆ ರಫ್ತುದಾರರಾಗಿದ್ದಾರೆ ಎಂದು ಅವರು ಹೇಳಿದರು. +ಈ ಹಿಂದೆ ಜಾಗತಿಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಹೊಂದಿರದ ಸಾವಿರಾರು ಸಣ್ಣ ರಫ್ತುದಾರರು ಇ-ಕಾಮರ್ಸ್ ಪ್ಲಾಟ್‍ಫಾರ್ಮ್ ಮೂಲಕ ವಾರ್ಷಿಕವಾಗಿ ಶೇ.70 ವ್ಯಾಪಾರ ಬೆಳವಣಿಗೆಯನ್ನು ಕಂಡಿದ್ದಾರೆ, ಇದು ಜಾಗತಿಕವಾಗಿ 200 ಮಿಲಿಯನ್‍ಗಿಂತಲೂ ಹೆಚ್ಚು ಅಮೆಜಾನ್ ಪ್ರೈಮ್ ಸದಸ್ಯರಿಗೆ ಲಾಜಿಸ್ಟಿಕ್ಸ್ ಬೆಂಬಲ ಮತ್ತು ಪ್ರವೇಶವನ್ನು ಒದಗಿಸಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_234_6.txt b/eesanje/url_47_234_6.txt new file mode 100644 index 0000000000000000000000000000000000000000..7014e67a78dd4b6ac6167f4ffe15a60909ba88b5 --- /dev/null +++ b/eesanje/url_47_234_6.txt @@ -0,0 +1,7 @@ +ಕ್ರಿಕೆಟ್, ಮೆಟ್ರೋ ಸೇರಿ ಎಲ್ಲವನ್ನೂ ಬಿಜೆಪಿ ಕೇಸರಿಮಯಗೊಳಿಸುತ್ತಿದೆ: ದೀದಿ +ಕೋಲ್ಕತ್ತಾ,ನ.18- ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಭಾರತೀಯ ಕ್ರಿಕೆಟ್ ತಂಡ ಸೇರಿದಂತೆ ದೇಶಾದ್ಯಂತ ವಿವಿಧ ಸಂಸ್ಥೆಗಳನ್ನು ಕೇಸರಿಮಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಕ್ರಿಕೆಟ್ ಆಟಗಾರರು ಅಭ್ಯಾಸ ಮಾಡುವಾಗ ಧರಿಸುವ ಅಭ್ಯಾಸ ಜೆರ್ಸಿಗಳು ಈಗ ಕೇಸರಿ ಬಣ್ಣವನ್ನು ಹೊಂದಿವೆ ಎಂದು ಅವರು ಕಿಡಿಕಾರಿದ್ದಾರೆ. +ಸೆಂಟ್ರಲ್ ಕೋಲ್ಕತ್ತಾದ ಪೋಸ್ಟಾ ಬಜಾರ್‍ನಲ್ಲಿ ನಡೆದ ಜಗಧಾತ್ರಿ ಪೂಜೆಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾನರ್ಜಿ, ಕ್ರಿಕೆಟ್ ತಂಡದ ಅಭ್ಯಾಸ ಜೆರ್ಸಿಯಲ್ಲಿ ಮಾತ್ರವಲ್ಲದೆ ಮೆಟ್ರೋ ನಿಲ್ದಾಣಗಳ ಪೇಂಟಿಂಗ್‍ನಲ್ಲಿಯೂ ಬಿಜೆಪಿ ಕೇಸರಿ ಬಣ್ಣವನ್ನು ಪರಿಚಯಿಸಿದೆ ಎಂದು ಆರೋಪಿಸಿದರು. +ಬಿಜೆಪಿಯವರು ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಅವರು ವಿಶ್ವಕಪ್‍ನಲ್ಲಿ ಚಾಂಪಿಯನ್ ಆಗುತ್ತಾರೆ ಎಂದು ನಾನು ನಂಬುತ್ತೇನೆ. ಆದರೆ ಅವರು (ಬಿಜೆಪಿ) ಅಲ್ಲಿಯೂ ಕೇಸರಿ ಬಣ್ಣಗಳನ್ನು ತಂದರು. , ಮತ್ತು ನಮ್ಮ ಹುಡುಗರು ಈಗ ಕೇಸರಿ ಬಣ್ಣದ ಜರ್ಸಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮೆಟ್ರೋ ನಿಲ್ದಾಣಗಳಿಗೆ ಕೇಸರಿ ಬಣ್ಣ ಬಳಿಯಲಾಗಿದೆ ಇದು ಸ್ವೀಕಾರಾರ್ಹವಲ್ಲ ಎಂದರು. +ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ +ಯಾರನ್ನೂ ಸ್ಪಷ್ಟವಾಗಿ ಹೆಸರಿಸದ ಬ್ಯಾನರ್ಜಿ ಅವರು ಪಕ್ಷಪಾತದ ರಾಜಕೀಯವೆಂದು ಪರಿಗಣಿಸಿರುವುದನ್ನು ಖಂಡಿಸಿದರು. ಅವರು ಪ್ರತಿಮೆಗಳನ್ನು ಸ್ಥಾಪಿಸುವುದರಲ್ಲಿ ನನಗೆ ಯಾವುದೇ ಸಮಸ್ಯೆಗಳಿಲ್ಲ, ಆದರೆ ಅವರು ಎಲ್ಲವನ್ನೂ ಕೇಸರಿ ಮಾಡಲು ಪ್ರಯತ್ನಿಸುತ್ತಿದ್ದಾರೆ, ಮಾಯಾವತಿ ಅವರ ಪ್ರತಿಮೆಯನ್ನು ನಾನು ಒಮ್ಮೆ ನೋಡಿದ್ದೇನೆ, ಅದರ ನಂತರ, ನಾನು ಏನನ್ನೂ ಕೇಳಲಿಲ್ಲ. ಈ ರೀತಿ. ಈ ರಂಗಭೂಮಿಗಳು ಯಾವಾಗಲೂ ಪ್ರಯೋಜನಗಳಿಗೆ ಕಾರಣವಾಗುವುದಿಲ್ಲ. ಶಕ್ತಿ ಬರುತ್ತದೆ ಮತ್ತು ಹೋಗುತ್ತದೆ ಎಂದರು. +ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶವು ರಾಷ್ಟ್ರದ ಜನತಾ (ಜನರಿಗೆ) ಸೇರಿದೆಯೇ ಹೊರತು ಕೇವಲ ಪಕ್ಷದ ಜನತಾ ಪಕ್ಷಕ್ಕೆ ಅಲ್ಲ ಎಂದು ಹೇಳಿದರು. ದೀದಿ ಅವರ ಈ ಹೇಳಿಕೆ ಬಿಜೆಪಿ ನಾಯಕರನ್ನು ಕೆರಳಿಸಿದ್ದು, ಹಲವಾರು ಮಂದಿ ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. \ No newline at end of file diff --git a/eesanje/url_47_234_7.txt b/eesanje/url_47_234_7.txt new file mode 100644 index 0000000000000000000000000000000000000000..ee7ef62ed1fbc6a26be216218a4a0242864c01fc --- /dev/null +++ b/eesanje/url_47_234_7.txt @@ -0,0 +1,7 @@ +ರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್ +ನವದೆಹಲಿ,ನ.18- ಮೋದಿ ಉಪನಾಮೆಗೆ ಸಂಬಂಧಿಸಿದಂತೆ ರಾಹುಲ್‍ಗಾಂಧಿ ವಿರುದ್ಧ ಗುಜರಾತ್‍ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದ ಪೂರ್ಣೇಶ್ ಮೋದಿಗೆ ಲಕ್ ಖುಲಾಯಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಪೂರ್ಣೇಶ್ ಮೋದಿ ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಿಯು ದಮನ್‍ನಲ್ಲಿ ಬಿಜೆಪಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. +ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಮತ್ತು ದುಶ್ಯಂತ್ ಪಟೇಲ್ ಸಹ-ಪ್ರಭಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ ಎಂದು ಪಕ್ಷವು ಅಸೂಚನೆಯಲ್ಲಿ ತಿಳಿಸಿದೆ. +2019 ರ ಏಪ್ರಿಲ್‍ನಲ್ಲಿ ಕರ್ನಾಟಕದ ಕೊಲಾರದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಹೇಳಿಕೆ ನೀಡಿದ ನಂತರ ಬಿಜೆಪಿಯ ಸೂರತ್ ಪಶ್ಚಿಮ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. +ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ +ಮಾರ್ಚ್‍ನಲ್ಲಿ, ಸೂರತ್ ನ್ಯಾಯಾಲಯವು ಗಾಂಯನ್ನು ತಪ್ಪಿತಸ್ಥರೆಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು, ನಂತರ ಅವರನ್ನು ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿ ಅನರ್ಹಗೊಳಿಸಲಾಗಿತ್ತು. +ಆಗಸ್ಟ್‍ನಲ್ಲಿ ಸುಪ್ರೀಂ ಕೋರ್ಟ್ ಅವರ ಅಪರಾಧವನ್ನು ತಡೆಹಿಡಿದ ನಂತರ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಯಿತು. \ No newline at end of file diff --git a/eesanje/url_47_234_8.txt b/eesanje/url_47_234_8.txt new file mode 100644 index 0000000000000000000000000000000000000000..f2730f35860990f5e432726d8271c0cd5648135b --- /dev/null +++ b/eesanje/url_47_234_8.txt @@ -0,0 +1,5 @@ +ಎಸ್‍ಯುವಿ ಮರಕ್ಕೆ ಅಪ್ಪಳಿಸ ಐವರ ಸಾವು +ಗಿರಿದಿಹ್,ನ.18- ಜಾರ್ಖಂಡ್‍ನ ಗಿರಿದಿಹ್ ಜಿಲ್ಲೆಯಲ್ಲಿ ಎಸ್‍ಯುವಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, ಮತ್ತು ಇಬ್ಬರು ಮಕ್ಕಳು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಮುಫಸ್ಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗ್ಮಾರಾದಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ವಾಹನದಲ್ಲಿ 10 ಜನರು ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಿರಿದಿಹ್ ಸದರ್ ಉಪವಿಭಾಗೀಯ ಪೊಲೀಸ್ ಅಧಿಕಾರಿ ಅನಿಲ್ ಸಿಂಗ್ ಮಾತನಾಡಿ, ಕಾರಿನಲ್ಲಿದ್ದವರು ಬಿರ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಥೋರಿಯಾ ಗ್ರಾಮದಿಂದ ಸುಮಾರು 40 ಕಿಮೀ ದೂರದಲ್ಲಿರುವ ಟಿಕೋಡಿಹ್‍ನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು ಮತ್ತು ಅಪಘಾತ ಸಂಭವಿಸಿದಾಗ ಮನೆಗೆ ಹಿಂದಿರುಗುತ್ತಿದ್ದರು ಎಂದು ತಿಳಿಸಿದ್ದಾರೆ. +ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ +ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಉಳಿದ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನ ಚಾಲಕ ಕಾರು ಚಾಲನೆ ಮಾಡುತ್ತಿದ್ದಾಗಲೇ ನಿದ್ರಿಸಿದ ಪರಿಣಾಮ ಈ ಅಪಘಾತವಾಗಿದೆ. \ No newline at end of file diff --git a/eesanje/url_47_234_9.txt b/eesanje/url_47_234_9.txt new file mode 100644 index 0000000000000000000000000000000000000000..395487a9e7f41999e489886a783c056d316061a3 --- /dev/null +++ b/eesanje/url_47_234_9.txt @@ -0,0 +1,7 @@ +ಮಧ್ಯಪ್ರದೇಶದಲ್ಲಿ 340 ಕೋಟಿ ರೂ.ಮೌಲ್ಯದ ಮಾದಕ ವಸ್ತು, ನಗದು ಜಪ್ತಿ +ಭೋಪಾಲ್,ನ.18- ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಅಕ್ಟೋಬರ್ 9 ರಿಂದ ಜಾರಿಗೆ ಬಂದ ನಂತರ ಇದುವರೆಗೂ 40.18 ಕೋಟಿ ಮೌಲ್ಯದ ನಗದು ಮತ್ತು ಸುಮಾರು 300 ಕೋಟಿ ಮೌಲ್ಯದ ಮದ್ಯ, ಮಾದಕ ವಸ್ತುಗಳು, ಆಭರಣಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. +ರಾಜ್ಯದ 230 ವಿಧಾನಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆದಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಸುಮಾರು ಶೇ.76 ರಷ್ಟು ಮತದಾನವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನುಪಮ್ ರಾಜನ್ ಅವರು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ನಂತರ ನೀತಿ ಸಂಹಿತೆ ಜಾರಿಯಾದಾಗಿನಿಂದ ರಾಜ್ಯಾದ್ಯಂತ ಜಾರಿ ಸಂಸ್ಥೆಗಳು ನಿರಂತರ ಕ್ರಮ ಕೈಗೊಂಡಿವೆ. +ಸೈಬರ್ ಪ್ರಕರಣ ಭೇದಿಸಲು 4 ವಿಶೇಷ ತಂಡ ರಚನೆ +ಫ್ಲೈಯಿಂಗ್ ಸರ್ವೆಲೆನ್ಸ್ ಟೀಮ್ (ಎಫ್‍ಎಸ್‍ಟಿ), ಸ್ಟ್ಯಾಟಿಕ್ ಸರ್ವೆಲೆನ್ಸ್ ಟೀಮ್ (ಎಸ್‍ಎಸ್‍ಟಿ) ಮತ್ತು ಪೊಲೀಸರ ಜಂಟಿ ತಂಡವು ಸುಮಾರು 339.95 ಕೋಟಿ ಮೌಲ್ಯದ ಅಕ್ರಮ ಮದ್ಯ, ಮಾದಕ ದ್ರವ್ಯಗಳು, ನಗದು, ಅಮೂಲ್ಯವಾದ ಲೋಹಗಳು, ಚಿನ್ನ, ಬೆಳ್ಳಿ, ಆಭರಣಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅವರು ಹೇಳಿದರು. +ಅಕ್ಟೋಬರ್ 9ರಿಂದ ನವೆಂಬರ್ 16ರವರೆಗೆ ಈ ಜಂಟಿ ತಂಡಗಳು 40.18 ಕೋಟಿ ನಗದು, 65.56 ಕೋಟಿ ಮೌಲ್ಯದ 34.68 ಲಕ್ಷ ಲೀಟರ್ ಅಕ್ರಮ ಮದ್ಯ, 17.25 ಕೋಟಿ ಮೌಲ್ಯದ ಮಾದಕ ವಸ್ತು, 92.76 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತಿತರ ಅಮೂಲ್ಯ ಲೋಹಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ. 124.18 ಕೋಟಿ ಎಂದು ರಾಜನ್ ಹೇಳಿದರು. +2018 ರ ಚುನಾವಣೆಯಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಅವಯಲ್ಲಿ ಇಂತಹ ಕ್ರಮದಲ್ಲಿ 72.93 ಕೋಟಿ ಮೌಲ್ಯದ ನಗದು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಸೂಚಿಸಿದರು. \ No newline at end of file diff --git a/eesanje/url_47_235_1.txt b/eesanje/url_47_235_1.txt new file mode 100644 index 0000000000000000000000000000000000000000..d62b2b15e1f420e17a2354211e6160d589822c32 --- /dev/null +++ b/eesanje/url_47_235_1.txt @@ -0,0 +1,6 @@ +ಕಣಿವೆಯಲ್ಲಿ ಮುಂದುವರೆದ ಉಗ್ರ ಬೇಟೆ +ಶ್ರೀನಗರ, ನ.17 (ಪಿಟಿಐ) – ಕಣಿವೆ ರಾಜ್ಯದಲ್ಲಿ ನಿನ್ನೆಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆಗಳು ಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಮಾಡುತ್ತಿವೆ. +ಕುಲ್ಗಾಮ್‍ನ ನೆಹಮಾ ಪ್ರದೇಶದ ಸಾಮ್ನೋದಲ್ಲಿ ರಾತ್ರಿಯಿಡೀ ವಿರಾಮದ ನಂತರ ಇಂದು ಮುಂಜಾನೆ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಲ್ಗಾಮ್‍ನ ನೆಹಮಾ ಗ್ರಾಮದಲ್ಲಿ ನಿನ್ನೆ ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಇಂದೋರ್‌ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮತಕೇಂದ್ರ +ಭದ್ರತಾ ಸಿಬ್ಬಂದಿಯತ್ತ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ಶೋಧ ಕಾರ್ಯಾಚರಣೆಯು ಗುಂಡಿನ ಚಕಮಕಿಯಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಭಯೋತ್ಪಾದಕರು ಸಿಕ್ಕಿಬಿದ್ದಿರುವ ಪ್ರದೇಶದ ಸುತ್ತಲೂ ಭದ್ರತಾ ಪಡೆಗಳು ಬಿಗಿಯಾದ ಬಂದೋಬಸ್ತ್ ಅನ್ನು ನಿರ್ವಹಿಸುತ್ತಿದ್ದರೆ, ರಾತ್ರಿಯಿಡೀ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ಯಾವುದೇ ವರದಿ ಬಂದಿಲ್ಲ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರು – ಇಬ್ಬರು ಸ್ಥಳೀಯರು ಮತ್ತು ಒಬ್ಬ ವಿದೇಶಿ ಉಗ್ರ ಸುತ್ತುವರಿದ ಪ್ರದೇಶದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಅಧಿಕಾರಿಗಳು ಅದನ್ನು ಖಚಿತಪಡಿಸಲು ಅಥವಾ ನಿರಾಕರಿಸಲು ನಿರಾಕರಿಸಿದರು. \ No newline at end of file diff --git a/eesanje/url_47_235_10.txt b/eesanje/url_47_235_10.txt new file mode 100644 index 0000000000000000000000000000000000000000..2239713e13986f93b46533493dfb05aa429d3fe5 --- /dev/null +++ b/eesanje/url_47_235_10.txt @@ -0,0 +1,5 @@ +ರೈಲಿನಲ್ಲಿ ಸ್ಪೋಟ, ನಾಲ್ವರಿಗೆ ಗಾಯ +ಸಮಸ್ತಿಪುರ್, ನ.16 – ರೈಲಿನ ಬೋಗಿಯೊಂದರಲ್ಲಿ ಸ್ಪೋಟ ಸಂಭವಿಸಿ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲು ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕರ ಬ್ಯಾಗ್‍ನೊಳಗಿದ್ದ ಗನ್‍ಪೌಡರ್‍ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಸ್ಪೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. +ತಮಿಳುನಾಡು, ಪುದುಚೇರಿಯಲ್ಲಿ ರಣಮಳೆ +ಭಾಗಲ್ಪುರ್-ದರ್ಬಂಗಾ ಇಂಟರ್‍ಸಿಟಿ ಎಕ್ಸ್‍ಪ್ರೆಸ್ ರೈಲು ಸಮಸ್ತಿಪುರ ರೈಲು ನಿಲ್ದಾಣದ ಹೊರ ಸಿಗ್ನಲ್‍ನಲ್ಲಿದ್ದಾಗ ಸ್ಪೋಟ ಸಂಭವಿಸಿದೆ. ಆರ್‍ಪಿಎಫ್ ಮತ್ತು ಜಿಆರ್‍ಪಿ ಸಿಬ್ಬಂದಿಯ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಮಲಗುವ ಸ್ಥಳದ ಮೇಲೆ ಇರಿಸಲಾಗಿದ್ದ ಬ್ಯಾಗ್‍ನಿಂದ ಹೊಗೆ ಕಾಣಿಸಿಕೊಂಡಿತು. +ಮತ್ತು ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮಾಹಿತಿ ನೀಡಿದ್ದಾರೆ. ಈ ಬೋಗಿಯಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಲಾಯಿತು. ಮಧುಬನಿ ಜಿಲ್ಲೆಯ ನಿವಾಸಿಗಳಾದ ಅರವಿಂದ್ ಮಂಡಲ್ ಮತ್ತು ನವೆಂದು ಮಂಡಲ್ ಎಂಬ ಇಬ್ಬರು ಪ್ರಯಾಣಿಕರು ಪಟಾಕಿ ತಯಾರಿಸಲು ಗನ್‍ಪೌಡರ್‍ನ ಬ್ಯಾಗ್‍ನೊಂದಿಗೆ ರೈಲಿಗೆ ಹತ್ತಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.ಇಬ್ಬರನ್ನೂ ಬಂಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. \ No newline at end of file diff --git a/eesanje/url_47_235_11.txt b/eesanje/url_47_235_11.txt new file mode 100644 index 0000000000000000000000000000000000000000..2abfb6b9abbd74c2b154f468cff7fd281cdb7e32 --- /dev/null +++ b/eesanje/url_47_235_11.txt @@ -0,0 +1,9 @@ +ತಮಿಳುನಾಡು, ಪುದುಚೇರಿಯಲ್ಲಿ ರಣಮಳೆ +ಚೆನ್ನೈ,ನ.15- ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಚೆನ್ನೈನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪಕ್ಕದ ತಿರುವಳ್ಳೂರು ಜಿಲ್ಲೆ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿಯೂ ಶಾಲೆಗಳು ಹಾಗೂ ಸಂಸ್ಥೆಗಳು ಮಳೆ ರಜೆ ಘೋಷಿಸಿವೆ. +ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರ್, ತಂಜಾವೂರು ಮತ್ತು ವಿಲ್ಲುಪುರಂ ಸೇರಿದಂತೆ ಆರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. +ಕಳೆದ 24 ಗಂಟೆಗಳಲ್ಲಿ ನಾಗಪಟ್ಟಣಂ ನ ವೆಲಂಕಣಿಯಲ್ಲಿ 17 ಸೆಂ.ಮೀ ಮಳೆಯಾಗಿದ್ದು, ಕಡಲೂರು, ಪುದುಚೇರಿ, ಚೆಂಗಲ್ಪಟ್ಟು ಮತ್ತು ಚೆನ್ನೈನಲ್ಲಿ ಸಹ ಗಮನಾರ್ಹ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶವು ವಾಯುಭಾರ ಕುಸಿತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. +ಅಕ್ಟೋಬರ್ 1 ರಿಂದ ತಮಿಳುನಾಡಿನಲ್ಲಿ 221 ಮಿಮೀ ಮಳೆಯಾಗಿದೆ, ಇದು ಸಾಮಾನ್ಯ ಸರಾಸರಿಗಿಂತ ಶೇ|17 ರಷ್ಟು ಕಡಿಮೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ಈಶಾನ್ಯ ಮಾನ್ಸೂನ್ ರಾಜ್ಯದ ಕುಡಿಯುವ ನೀರು ಮತ್ತು ನೀರಾವರಿ ಅಗತ್ಯಗಳಿಗೆ ನಿರ್ಣಾಯಕವಾಗಿದೆ. +ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು +ಮುಂಬರುವ ಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಕಡಲೂರು, ಮೈಲಾಡುತುರೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಸನ್ನದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವರನ್ನು ನಿಯೋಜಿಸಿದ್ದಾರೆ. ಇತರ 13 ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. +ಸಂಬಂಧಪಟ್ಟ ನಾಗರಿಕರು 1070 ಮತ್ತು 1077 ದೂರವಾಣಿ ಮೂಲಕ ನಿಯಂತ್ರಣ ಕೊಠಡಿಗೆ ಅಥವಾ 9445869848 ಸಂಖ್ಯೆಯನ್ನು ಸಂಪರ್ಕಿಸಬಹುದು.ಸ್ಟಾಲಿನ್ ಅವರು ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು ಮತ್ತು ಭಾರೀ ಮಳೆಯನ್ನು ಅನುಭವಿಸುತ್ತಿರುವ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ತೊಡಗಿಸಿಕೊಂಡರು. +ಕಡಲೂರಿನಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜಲಾಶಯಗಳು ಸೇರಿದಂತೆ ಹಲವು ಜಲಮೂಲಗಳು ವೇಗವಾಗಿ ಭರ್ತಿಯಾಗುತ್ತಿವೆ. ಡೆಲ್ಟಾ ಪ್ರದೇಶದಲ್ಲಿ ನಿಂತಿರುವ ಭತ್ತದ ಬೆಳೆಗಳ ದೊಡ್ಡ ಪ್ರದೇಶಗಳು ಮುಳುಗಡೆಯಾಗಿವೆ. ಮಳೆಯ ಅಬ್ಬರಕ್ಕೆ ಬಿಡುವು ನೀಡದೇ ಇದ್ದಲ್ಲಿ ಹೆಚ್ಚಿನ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ. \ No newline at end of file diff --git a/eesanje/url_47_235_12.txt b/eesanje/url_47_235_12.txt new file mode 100644 index 0000000000000000000000000000000000000000..2344654a862ff1a687d6976ca69486972f4b695f --- /dev/null +++ b/eesanje/url_47_235_12.txt @@ -0,0 +1,7 @@ +ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 6 ತಿಂಗಳಿಗೊಬ್ಬ ಸಿಎಂ ಗ್ಯಾರಂಟಿ : ಕೆ.ಟಿ.ರಾಮರಾವ್ +ಹೈದರಾಬಾದ್,ನ.15- ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಆರು ತಿಂಗಳಿಗೊಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಬಿಆರ್ಎಸ್ ಪಕ್ಷದ ಐಟಿ ಸಚಿವ ಕೆ.ಟಿ.ರಾಮರಾವ್ ಅಭಿಪ್ರಾಯಪಟ್ಟಿದ್ದಾರೆ. +ತೆಲಂಗಾಣ ಬಿಲ್ಡರ್ಸ್ ಫೆಡರೇಶನ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಥಿರ ಸರ್ಕಾರ ಮತ್ತು ಸಮರ್ಥ ನಾಯಕತ್ವವು ಅಭಿವೃದ್ಧಿಗೆ ಪ್ರಮುಖವಾಗಬೇಕಾದರೆ ಬಿಆರ್ಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರು.ಕರ್ನಾಟಕದಲ್ಲಿ ಸಿಎಂ ಹುದ್ದೆಗೆ 3 ಜನ ಹೆಣಗಾಡುತ್ತಿದ್ದಾರೆ. ಇಲ್ಲಿ 11 ಮಂದಿ ರೆಡಿಯಾಗಿ ದ್ದಾರೆ. ರೆಡ್ಡಿ ನಾಮಪತ್ರ ತಿರಸ್ಕøತವಾದರೂ ಸಿಎಂ ಆಗಲು ಕಾದು ಕುಳಿತಿದ್ದಾರೆ.ಕೆಲವರು ಹೊಸ ಪೈಜಾಮ, ಹೊಸ ಧೋತಿ, ಗಡ್ಡಕ್ಕೆ ಬಣ್ಣ ಬಳಿಯುತ್ತಿದ್ದಾರೆ. + +ಕಾಂಗ್ರೆಸ್ ಸೇರ್ಪಡೆಯಾದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು +6 ಗ್ಯಾರಂಟಿ ಬಗ್ಗೆ ನನಗೆ ಗೊತ್ತಿಲ್ಲ, ಆದರೆ ಪ್ರತಿ 6 ತಿಂಗಳಿಗೆ 1 ಸಿಎಂ ಗ್ಯಾರಂಟಿ ಎಂದು ಅವರು ಹೇಳಿದರು. ಅವರು ಕಾಂಗ್ರೆಸ್ನ ಕೇಂದ್ರ ನಾಯಕತ್ವವನ್ನು ಟೀಕಿಸಿದರು ಮತ್ತು ಅದರ ಸ್ಥಿರತೆಯನ್ನು ಪ್ರಶ್ನಿಸಿದರು.ಕೆಲವರು ನಮ್ಮನ್ನು ಟೀಕಿಸುತ್ತಲೇ ಇದ್ದಾರೆ, ಕೆಸಿಆರ್ ಏನೂ ಮಾಡದೆ ತೆಲಂಗಾಣ ಇಷ್ಟು ಅಭಿವೃದ್ಧಿ ಸಾಸಿದೆಯೇ? ಸ್ಥಿರ ಸರ್ಕಾರ ಮತ್ತು ಸಮರ್ಥ ನಾಯಕತ್ವವೇ ರಾಜ್ಯದ ಅಭಿವೃದ್ಧಿಗೆ ಕಾರಣ, ಪ್ರತಿ 6 ತಿಂಗಳಿಗೊಮ್ಮೆ ಸಂಸ್ಥೆಯ ಮುಖ್ಯಸ್ಥರು ಬದಲಾದರೆ ಏನಾದರೂ ಕೆಲಸ ಮಾಡುತ್ತದೆ. ಸ್ಥಿರ ನಾಯಕತ್ವವಿದ್ದರೆ ಮಾತ್ರ ಕೆಲಸಗಳು ನಡೆಯುತ್ತವೆ ಎಂದು ರಾವ್ ಹೇಳಿದರು. +ತೆಲಂಗಾಣದಲ್ಲಿ ನವೆಂಬರ್ 30 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಇತರೆ ನಾಲ್ಕು ರಾಜ್ಯಗಳ ಮತ ಎಣಿಕೆಯೊಂದಿಗೆ ಡಿಸೆಂಬರ್ 3 ರಂದು ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ, ಬಿಆರ್ಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ನಾವು ರಾಜ್ಯದ ಬದ್ಧತೆಯನ್ನು ಹೊಂದಿರಬೇಕು ಎಂದಿದ್ದಾರೆ. \ No newline at end of file diff --git a/eesanje/url_47_235_2.txt b/eesanje/url_47_235_2.txt new file mode 100644 index 0000000000000000000000000000000000000000..281e57569f615cb2c73aab7e1521d169d359e5d7 --- /dev/null +++ b/eesanje/url_47_235_2.txt @@ -0,0 +1,7 @@ +ಇಂದೋರ್‌ನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮತಕೇಂದ್ರ +ಇಂದೋರ್, ನ. 17 (ಪಿಟಿಐ) ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೃತಕ ಬುದ್ಧಿಮತ್ತೆ ಹೊಂದಿದ ಕ್ಯಾಮೆರಾದ ಸಹಾಯದಿಂದ ಜನರು ಸರತಿ ಸಾಲಿನಲ್ಲಿ ನಿಂತು ಇಂಕ್ಡ್ ಫಿಂಗರ್ ಸೆಲ್ಫಿ ತೆಗೆದುಕೊಳ್ಳದೆಯೇ ಮತ ಚಲಾಯಿಸಲು ಸ್ಮಾರ್ಟ್ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. +ಇಂದೋರ್ ವಿಧಾನಸಭಾ ಕ್ಷೇತ್ರ ಸಂಖ್ಯೆ 2 ರ ನಂದಾ ನಗರದ ಮಾ ಕನಕೇಶ್ವರಿ ದೇವಿ ಸರ್ಕಾರಿ ಕಾಲೇಜಿನಲ್ಲಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸ್ಮಾರ್ಟ್ ಪೋಲಿಂಗ್ ಸ್ಟೇಷನ್ ಕ್ಯೂ-ಕಡಿಮೆ ಇರಿಸಲು, ನಾವು ಆನ್‍ಲೈನ್ ಟೋಕನ್ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. ಮತದಾನಕ್ಕೆ ಆಗಮಿಸುವ ಜನರಿಗೆ ಟೋಕನ್ ಸಂಖ್ಯೆಗಳನ್ನು ನೀಡಲಾಗುವುದು ಮತ್ತು ಅವರು ತಮ್ಮ ಸರದಿ ಬರುವವರೆಗೆ ಆರಾಮವಾಗಿ ಮತದಾನ ಕೇಂದ್ರದಲ್ಲಿ ಕುಳಿತುಕೊಳ್ಳಬಹುದು ಎಂದು ಇಂದೋರ್ ಸ್ಮಾರ್ಟ್ ಸಿಟಿ ಡೆವಲಪ್‍ಮೆಂಟ್ ಲಿಮಿಟೆಡ್‍ನ ಸಹಾಯಕ ಯೋಜಕ ರೂಪಲ್ ಚೋಪ್ರಾ ಪಿಟಿಐಗೆ ತಿಳಿಸಿದರು. +ವಾಮಾಚಾರ ಶಂಕೆಯಲ್ಲಿ ದಂಪತಿ ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ +ಮತಗಟ್ಟೆಯಲ್ಲಿ ಡಿಜಿಟಲ್ ಸೆಲ್ಫಿ ಪಾಯಿಂಟ್ ಅನ್ನು ಸಹ ಅಭಿವೃದ್ಧಿಪಡಿಸಲಾಗಿದೆ, ಅಲ್ಲಿ ಎಐ-ಸಜ್ಜಿತ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಮತದಾನದ ನಂತರ, ಒಬ್ಬ ವ್ಯಕ್ತಿಯು ಈ ಸ್ಥಳದಲ್ಲಿ ನಿಂತು, ಅಳಿಸಲಾಗದ ಶಾಯಿಯನ್ನು ಹೊಂದಿರುವ ತನ್ನ ಬೆರಳನ್ನು ಕ್ಯಾಮರಾಗೆ ತೋರಿಸಿದರೆ, ತಕ್ಷಣವೇ ಸೆಲ್ಫಿ ಕ್ಲಿಕ್ ಮಾಡಲಾಗುವುದು, ಎಂದು ಅವರು ಹೇಳಿದರು. +ಸೆಲ್ಫಿ ಪಾಯಿಂಟ್‍ನಲ್ಲಿ ಪರದೆಯ ಮೇಲೆ ಬಾರ್ ಕೋಡ್ ಕಾಣಿಸಿಕೊಳ್ಳುತ್ತದೆ ಮತ್ತು ಅದನ್ನು ಸ್ಕ್ಯಾನ್ ಮಾಡುವುದರಿಂದ ಛಾಯಾಚಿತ್ರವು ಮತದಾರರ ಮೊಬೈಲ್ ಫೋನ್‍ಗೆ ರವಾನೆಯಾಗುವುದನ್ನು ಖಚಿತಪಡಿಸುತ್ತದೆ, ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಹುದು ಎಂದು ಅಧಿಕಾರಿ ವಿವರಿಸಿದರು. +ಇಂದೋರ್ (ನಗರ) ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಒಟ್ಟು 15.55 ಲಕ್ಷ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಡಿಸೆಂಬರ್ 3 ರಂದು ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. \ No newline at end of file diff --git a/eesanje/url_47_235_3.txt b/eesanje/url_47_235_3.txt new file mode 100644 index 0000000000000000000000000000000000000000..d5ab06a686a8bc41f7d4b4d36697dd69ee13e740 --- /dev/null +++ b/eesanje/url_47_235_3.txt @@ -0,0 +1,13 @@ +ಮಧ್ಯಪ್ರದೇಶ: 2,533 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ +ಭೋಪಾಲ್, ನ.17 (ಪಿಟಿಐ) ಮಧ್ಯಪ್ರದೇಶದಲ್ಲಿ ಇಂದು ಬೆಳಗ್ಗೆ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅವರ ಮಾಜಿ ಸಿಎಂ ಕಮಲ್ ನಾಥ್ ಸೇರಿದಂತೆ 2,533 ಅಭ್ಯರ್ಥಿಗಳು 230 ವಿಧಾನಸಭಾ ಸ್ಥಾನಗಳಿಗೆ ಕಣದಲ್ಲಿದ್ದಾರೆ. +ಬಾಲಾಘಾಟ್ ಜಿಲ್ಲೆಯ ಬೈಹಾರ್, ಲಾಂಜಿ ಮತ್ತು ಪರಸ್ವಾಡ ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲಾ ವಿಧಾನಸಭಾ ಕ್ಷೇತ್ರಗಳು, ಮಂಡ್ಲಾ ಜಿಲ್ಲೆಯ ಬಿಚಿಯಾ ಮತ್ತು ಮಂಡ್ಲಾ ಕ್ಷೇತ್ರಗಳ 55 ಬೂತ್‍ಗಳು ಮತ್ತು ಎಲ್ಲಾ ನಕ್ಸಲೀಯರು ಪೀಡಿತವಾಗಿರುವ ದಿಂಡೋರಿ ಜಿಲ್ಲೆಯ 40 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. +ಎಲ್ಲಾ 230 ವಿಧಾನಸಭಾ ಸ್ಥಾನಗಳಿಗೂ ಒಂದೇ ಹಂತದ ಮತದಾನ ನಡೆಯುತ್ತಿದೆ. ಅವುಗಳಲ್ಲಿ 47 ಪರಿಶಿಷ್ಟ ಪಂಗಡಗಳಿಗೆ ಮತ್ತು 35 ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿದ್ದು, 5.6 ಕೋಟಿಗೂ ಹೆಚ್ಚು ನೋಂದಾಯಿತ ಮತದಾರರಿದ್ದಾರೆ. +ಮತದಾನ ಪ್ರಾರಂಭವಾಗುವ 90 ನಿಮಿಷಗಳ ಮೊದಲು ಅಕೃತ ಮತಗಟ್ಟೆ ಏಜೆಂಟರ ಸಮ್ಮುಖದಲ್ಲಿ ಅಣಕು ಮತದಾನ ನಡೆಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸ್ಥಾಪಿಸಲಾಗಿರುವ 64,626 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಅವುಗಳಲ್ಲಿ 64,523 ಮುಖ್ಯ ಮತಗಟ್ಟೆಗಳು ಮತ್ತು 103 ಸಹಾಯಕ (ಸಹಾಯಕ) ಕೇಂದ್ರಗಳು ಸೇರಿವೆ, ಅಲ್ಲಿ ಮತದಾರರ ಸಂಖ್ಯೆ 1,500 ಕ್ಕಿಂತ ಹೆಚ್ಚು. +ನನ್ನ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆ ಮೇಲು ಆಗಿದೆ: ಜಗದೀಶ್ ಶೆಟ್ಟರ್ +2,87,82,261 ಪುರುಷರು, 2,71,99,586 ಮಹಿಳೆಯರು ಮತ್ತು 1,292 ತೃತೀಯಲಿಂಗಿಗಳು ಸೇರಿದಂತೆ 5,60,58,521 ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಲ್ಲಿ ಸೇವಾ ಮತ್ತು ಸಾಗರೋತ್ತರ ಮತದಾರರು ಸೇರಿದ್ದಾರೆ. +ರಾಜಕೀಯ ಪಕ್ಷಗಳ ಮತ್ತು ಸ್ವತಂತ್ರ ಅಭ್ಯರ್ಥಿಗಳ ಒಟ್ಟು 2,533 ಅಭ್ಯರ್ಥಿಗಳು — 2,280 ಪುರುಷರು, 252 ಮಹಿಳೆಯರು ಮತ್ತು ಒಬ್ಬ ತೃತೀಯ ಲಿಂಗ ವ್ಯಕ್ತಿ ರಾಜ್ಯ ವಿಧಾನಸಭೆಗೆ ಪ್ರವೇಶಿಸಲು ಸ್ರ್ಪಧಿಸುತ್ತಿದ್ದಾರೆ.ನಿರ್ಣಾಯಕ ಮತದಾನ ಕೇಂದ್ರಗಳ ಸಂಖ್ಯೆ 17,032 ಆಗಿದ್ದು, 5,260 ಬೂತ್‍ಗಳಲ್ಲಿ ಎಲ್ಲಾ ಮಹಿಳಾ ಮತಗಟ್ಟೆ ಸಿಬ್ಬಂದಿ ಇದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ಹಿಂದಿನ ಚುನಾವಣೆಗಳಲ್ಲಿ ಅತಿ ಹೆಚ್ಚು ಮತದಾನವಾದ ಅಥವಾ ಯಾವುದೇ ರೀತಿಯ ಹಿಂಸಾಚಾರಕ್ಕೆ ಸಾಕ್ಷಿಯಾದ ಬೂತ್‍ಗಳನ್ನು ನಿರ್ಣಾಯಕ ಮತಗಟ್ಟೆ ಎಂದು ಗೊತ್ತುಪಡಿಸಲಾಗಿದೆ.ವಿಕಲಚೇತನರಿಗಾಗಿ 183 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. +ಮೊದಲ ಬಾರಿಗೆ, 371 ಯುವ-ನಿರ್ವಹಣೆಯ ಬೂತ್‍ಗಳನ್ನು ಸ್ಥಾಪಿಸಲಾಗಿದೆ, ಆದರೆ ಮಾದರಿ ಮತಗಟ್ಟೆಗಳ ಸಂಖ್ಯೆ 2,536 ಆಗಿದೆ. ಐವತ್ತೇಳು ಹಸಿರು ಬೂತ್‍ಗಳನ್ನು (ಪರಿಸರ ಸ್ನೇಹಿ ಕೇಂದ್ರಗಳು) — ಜಬಲ್‍ಪುರದಲ್ಲಿ 50 ಮತ್ತು ಬಾಲಘಾಟ್‍ನಲ್ಲಿ ಏಳು — ಸಹ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. +ಮತದಾರರ ಕರಡು ಪಟ್ಟಿ ಸಿದ್ಧ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ +ಚುನಾವಣೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,90,233 ವ್ಯಕ್ತಿಗಳ ವಿರುದ್ಧ ನಿಷೇಧಾಜ್ಞೆ ಕ್ರಮ ಕೈಗೊಳ್ಳಲಾಗಿದೆ ಮತ್ತು 2,69,318 ಪರವಾನಗಿ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳಿಗೆ ಠೇವಣಿ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗಾಗಿ 1,142 ಎಫ್‍ಐಆರ್‍ಗಳನ್ನು (ಪ್ರಥಮ ಮಾಹಿತಿ ವರದಿಗಳು) ದಾಖಲಿಸಲಾಗಿದೆ. +52 ಜಿಲ್ಲೆಗಳಲ್ಲಿ ಹರಡಿರುವ 230 ವಿಧಾನಸಭಾ ಸ್ಥಾನಗಳಲ್ಲಿ ಒಟ್ಟು 73,622 ಬ್ಯಾಲೆಟ್ ಯೂನಿಟ್‍ಗಳು (ಬಿಯುಗಳು), 64,626 ಕೇಂದ್ರೀಯ ಘಟಕಗಳು (ಸಿಯುಗಳು) ಮತ್ತು 64,626 ವಿವಿಪ್ಯಾಟ್ (ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲï) ಘಟಕಗಳನ್ನು ಬಳಸಲಾಗುತ್ತಿದೆ. \ No newline at end of file diff --git a/eesanje/url_47_235_4.txt b/eesanje/url_47_235_4.txt new file mode 100644 index 0000000000000000000000000000000000000000..0cec6601de6c7a6debcef55ae46507c3f2491935 --- /dev/null +++ b/eesanje/url_47_235_4.txt @@ -0,0 +1,6 @@ +ವಾಮಾಚಾರ ಶಂಕೆಯಲ್ಲಿ ದಂಪತಿ ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ +ಜಾಜ್‍ಪುರ, ನ.17 (ಪಿಟಿಐ) ಮೂರು ವರ್ಷಗಳ ಹಿಂದೆ ವಾಮಾಚಾರ ನಡೆಸಿದ್ದಾರೆ ಎಂಬ ಶಂಕೆಯಲ್ಲಿ ದಂಪತಿಯನ್ನು ಸುಟ್ಟು ಕೊಂದಿದ್ದ 17 ಮಂದಿಗೆ ಒಡಿಶಾದ ಜಾಜ್‍ಪುರ ಜಿಲ್ಲೆಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. +ಪ್ರಕರಣದಲ್ಲಿ ಅವರನ್ನು ದೋಷಿ ಎಂದು ಘೋಷಿಸಿದ ನಂತರ, ಜಾಜ್‍ಪುರ ರಸ್ತೆಯ ಹೆಚ್ಚುವರಿ ಜಿಲ್ಲೆ ಮತ್ತು ಸೆಷನ್ಸ್ ನ್ಯಾಯಾೀಧಿಶ ಹೃಶಿಕೇಶ್ ಆಚಾರ್ಯ ಅವರು 17 ಜನರಿಗೆ ತಲಾ 10,000 ರೂ. ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. +ಜುಲೈ 7, 2020 ರ ತಡರಾತ್ರಿಯಲ್ಲಿ ಕಳಿಂಗ ನಗರ ಪ್ರದೇಶದ ನಿಮಾಪಾಲಿ ಗ್ರಾಮದಲ್ಲಿ ಶೈಲಾ ಬಲ್ಮುಜ್ ಮತ್ತು ಸಾಂಬಾರಿ ಬಲ್ಮುಜ್ ಎಂದು ಗುರುತಿಸಲಾದ ದಂಪತಿಗಳ ಮನೆಗೆ ಹಲವಾರು ಗ್ರಾಮಸ್ಥರು ನುಗ್ಗಿದರು ಮತ್ತು ವಾಮಾಚಾರದ ಅನುಮಾನದ ಮೇಲೆ ಅವರ ಮೇಲೆ ಹಲ್ಲೆ ನಡೆಸಿದ್ದರು. ನಂತರ ಅವರು ದಂಪತಿಯ ಮನೆಗೆ ಬೆಂಕಿ ಹಚ್ಚಿದರು, ಅದರಲ್ಲಿ ಪುರುಷ ಮತ್ತು ಅವನ ಹೆಂಡತಿ ಸುಟ್ಟುಹೋದರು. +ಛತ್ತೀಸ್‍ಗಢದ 70 ಕ್ಷೇತ್ರಗಳಿಗೆ ಮತದಾನ ಆರಂಭ +ಪಬ್ಲಿಕ್ ಪ್ರಾಸಿಕ್ಯೂಟರ್ ರಜತ್ ಕುಮಾರ್ ರೌತ್ ಅವರ ಪ್ರಕಾರ 20 ಸಾಕ್ಷಿಗಳು ಮತ್ತು ಇತರ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ತನ್ನ ತೀರ್ಪು ಪ್ರಕಟಿಸಿತು. \ No newline at end of file diff --git a/eesanje/url_47_235_5.txt b/eesanje/url_47_235_5.txt new file mode 100644 index 0000000000000000000000000000000000000000..28160f695da50785335c816f964f264248ddbba2 --- /dev/null +++ b/eesanje/url_47_235_5.txt @@ -0,0 +1,7 @@ +ಛತ್ತೀಸ್‍ಗಢದ 70 ಕ್ಷೇತ್ರಗಳಿಗೆ ಮತದಾನ ಆರಂಭ +ರಾಯ್‍ಪುರ, ನ.17 (ಪಿಟಿಐ) ಛತ್ತೀಸ್‍ಗಢದಲ್ಲಿ ಎರಡನೇ ಮತ್ತು ಅಂತಿಮ ಹಂತದ 70 ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಇಂದು ಬೆಳಗ್ಗೆ ಮತದಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ಭೂಪೇಶ್ ಬಘೇಲ್, ಉಪ ಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್, ಎಂಟು ರಾಜ್ಯ ಸಚಿವರು ಮತ್ತು ನಾಲ್ವರು ಸಂಸತ್ ಸದಸ್ಯರು ಸೇರಿದಂತೆ 958 ಅಭ್ಯರ್ಥಿಗಳು ಕಣದಲ್ಲಿದ್ದಾರೆ. +ಭದ್ರತಾ ಕಾರಣಗಳಿಗಾಗಿ ಗರಿಯಾಬಂದ್ ಜಿಲ್ಲೆಯ ನಕ್ಸಲ್ ಪೀಡಿತ ಬಿಂದ್ರನವಗಢ್ ಕ್ಷೇತ್ರದಲ್ಲಿರುವ ಒಂಬತ್ತು ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. +ನನ್ನ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆ ಮೇಲು ಆಗಿದೆ: ಜಗದೀಶ್ ಶೆಟ್ಟರ್ +ಈ ಒಂಬತ್ತು ಬೂತ್‍ಗಳನ್ನು ಹೊರತುಪಡಿಸಿ ಉಳಿದ 70 ಕ್ಷೇತ್ರಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅಕಾರಿಯೊಬ್ಬರು ತಿಳಿಸಿದ್ದಾರೆ. ಬೂತ್‍ಗಳು ಕಮರ್‍ಭೌಡಿ, ಅಮಮೋರ, ಓಧ್, ಬಡೇ ಗೋಬ್ರಾ, ಗನ್ವರ್ಗಾಂವ್, ಗರೀಬಾ, ನಾಗೇಶ್, ಸಾಹಬಿಂಕಚಾರ್ ಮತ್ತು ಕೊಡೋಮಾಲಿಗಳಿರಲಿವೆ. +90 ಸದಸ್ಯ ಬಲದ ವಿಧಾನಸಭೆ ಹೊಂದಿರುವ ನಕ್ಸಲ್ ಪೀಡಿತ ರಾಜ್ಯದಲ್ಲಿ 20 ಸ್ಥಾನಗಳಿಗೆ ಮೊದಲ ಹಂತದ ಚುನಾವಣೆ ನ.7ರಂದು ನಡೆದಿದ್ದು, ಶೇ.78ರಷ್ಟು ಹೆಚ್ಚಿನ ಮತದಾನವಾಗಿತ್ತು. ಆಡಳಿತಾರೂಢ ಕಾಂಗ್ರೆಸ್,15 ವರ್ಷಗಳ ವಿರೋಧದ ನಂತರ 2018 ರಲ್ಲಿ ಅಧಿಕಾರಕ್ಕೆ ಮತ ಬಂದಿತ್ತು ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜ್ಯದಲ್ಲಿ ಅಧಿಕಾರಕ್ಕಾಗಿ ಪ್ರಮುಖ ಸ್ರ್ಪಧಿಗಳು, ಅಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ), ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮತ್ತು ಕೆಲವು ಪ್ರಾದೇಶಿಕ ಬಟ್ಟೆಗಳು ಕೂಡ ಕಣದಲ್ಲಿವೆ. +ಕಾಂಗ್ರೆಸ್ 75 ಪ್ಲಸ್ ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದ್ದು, ಪ್ರತಿಪಕ್ಷ ಬಿಜೆಪಿಯು 2003 ರಿಂದ 2018 ರವರೆಗೆ 15 ವರ್ಷಗಳ ಕಾಲ ತಡೆರಹಿತವಾಗಿ ಆಳ್ವಿಕೆ ನಡೆಸಿದ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. \ No newline at end of file diff --git a/eesanje/url_47_235_6.txt b/eesanje/url_47_235_6.txt new file mode 100644 index 0000000000000000000000000000000000000000..778e5f4e42475f79e355a51d25935b48ce3f9b00 --- /dev/null +++ b/eesanje/url_47_235_6.txt @@ -0,0 +1,7 @@ +ಬಂಧಿತ ಸಚಿವ ಸೆಂಥಿಲ್ ಬಾಲಾಜಿಗೆ ಆಂಜಿಯೋಗ್ರಾಮ್ ಮಾಡಲು ಸೂಚನೆ +ಚೆನ್ನೈ, ನ.15- ಬಂಧಿತ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಇಲ್ಲಿನ ಸರ್ಕಾರಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸರಣಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಂಜಿಯೋಗ್ರಾಮ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. +ಜೂನ್‍ನಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಿತ್ತು. ಪುಝಲ್ ಜೈಲಿನಲ್ಲಿದ್ದ ಬಾಲಾಜಿ ಅವರ ಆರೋಗ್ಯ ಬುಧವಾರ ಹದಗೆಟ್ಟಿದೆ. ಬೆನ್ನು, ಕುತ್ತಿಗೆ ನೋವು ಮತ್ತು ಕಾಲಿನ ಮರಗಟ್ಟುವಿಕೆ ಹೆಚ್ಚಾಗಿದ್ದರಿಂದ ತಕ್ಷಣ ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಓಮಂದೂರರ್ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. +ಹೃದ್ರೋಗ ತಜ್ಞರನ್ನೊಳಗೊಂಡ ವೈದ್ಯರ ತಂಡವು ಅವರನ್ನು ಪರೀಕ್ಷಿಸಿದೆ. ಎಕೋ ಮತ್ತು ಇಸಿಜಿಯಲ್ಲಿ ಯಾವುದೇ ಪ್ರಮುಖ ವ್ಯತ್ಯಾಸಗಳು ಕಂಡು ಬಂದಿಲ್ಲ. ಸಣ್ಣ ಪ್ರಮಾಣದ ಸಮಸ್ಯೆ ಇರುವುದರಿಂದ ಆಂಜಿಯೋಗ್ರಾಮ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. +ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್ +ಆಂಜಿಯೋಗ್ರಾಮ್ ಎನ್ನುವುದು ವ್ಯಕ್ತಿಯ ಹೃದಯದ ರಕ್ತನಾಳಗಳನ್ನು ನೋಡಲು ಎಕ್ಸ್-ರೇ ಇಮೇಜಿಂಗ್ ಅನ್ನು ಬಳಸುವ ಒಂದು ವಿಧಾನವಾಗಿದೆ. ಹೃದಯಕ್ಕೆ ಹೋಗುವ ರಕ್ತದ ಹರಿವಿನಲ್ಲಿ ತಡೆಗಳಿರುವುದನ್ನು ಪತ್ತೆ ಹಚ್ಚಲು ಸಾಮಾನ್ಯವಾಗಿ ಈ ಪರೀಕ್ಷೆ ಮಾಡಲಾಗುತ್ತದೆ. +47 ವರ್ಷ ವಯಸ್ಸಿನ ಸಚಿವರು ಜೂನ್ 14 ರಂದು ಅವರನ್ನು ಬಂಸಿದ ನಂತರ ಜೂನ್ 21 ರಂದು ಕಾಪೆರ್ರೇಟ್ ಆಸ್ಪತ್ರೆಯಲ್ಲಿ ಪರಿಧಮನಿಯ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳ ಪಡಿಸಲಾಗಿತ್ತು. ಆಸ್ಪತ್ರೆಯಿಂದ ಬಿಡುಗಡೆಯಾದಾಗಿನಿಂದ ಅವರು ಪುಝಲ್ ಜೈಲಿನಲ್ಲಿದ್ದರು. \ No newline at end of file diff --git a/eesanje/url_47_235_7.txt b/eesanje/url_47_235_7.txt new file mode 100644 index 0000000000000000000000000000000000000000..85ad7acb87c565909e4f612d461880be5c8e1e76 --- /dev/null +++ b/eesanje/url_47_235_7.txt @@ -0,0 +1,7 @@ +ಗುಂಡಿಕ್ಕಿ ಮಾಜಿ ಸೈನಿಕನ ಹತ್ಯೆ, ಹಂತಕರನ್ನು ಹೊಡೆದು ಕೊಂದ ಗುಂಪು +ರೋಹ್ತಾಸ್, ನ.16- ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಮಾಜಿ ಸೈನಿಕನನ್ನು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಗುಂಪೊಂದು ಹೊಡೆದು ಕೊಂದಿದೆ. ಮೂರನೇ ಆಪಾದಿತ ದಾಳಿಕೋರನನ್ನು ಸಹ ತೀವ್ರವಾಗಿ ಥಳಿಸಲಾಗಿದೆ, ಆತ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. +ಮಾಜಿ ಸೈನಿಕ ಬಿಜೇಂದ್ರ ಸಿಂಗ್ (55) ಎಂದು ಗುಂಡಿಗೆ ಬಲಿಯಾಗಿದ್ದು, ಗುಂಪಿನಿಂದ ಹತ್ಯೆಗೀಡಾದ ಇಬ್ಬರನ್ನು ಮಿಥಿಲೇಶ್ ಕುಮಾರ್ (23) ಮತ್ತು ಆದಿತ್ಯ ಕುಮಾರ್ (25) ಎಂದು ಗುರುತಿಸಲಾಗಿದೆ. ಮೂರನೇ ದಾಳಿಕೋರನನ್ನು ಅಜೀತ್ ಕುಮಾರ್ ಎಂದು ತಿಳಿದು ಬಂದಿದೆ. +ಬುಧವಾರ ಬೆಳಗ್ಗೆ 9.45ರ ಸುಮಾರಿಗೆ ಕಲ್ಯಾಣಿ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬೈಕ್‍ನಲ್ಲಿ ಬಂದ ಮೂವರು ಶಸ್ತ್ರಧಾರಿ ದುಷ್ಕರ್ಮಿಗಳು ನಿವೃತ್ತ ಸೇನಾ ಯೋಧ ಬಿಜೇಂದ್ರರನ್ನು ಗುಂಡಿಕ್ಕಿ ಹತ್ಯೆಗೈದು ಪರಾರಿಯಾಗುತ್ತಿದ್ದರು. ಸ್ಥಳೀಯ ನಿವಾಸಿಗಳು ಮೂವರು ದಾಳಿಕೋರರನ್ನು ಹಿಂಬಾಲಿಸಿ, ಹಿಡಿದು ಹಲ್ಲೆ ನಡೆಸಿದ್ದಾರೆ. ಗ್ರಾಮಸ್ಥರು ಹಿಡಿದಾಗ ದಾಳಿಕೋರರು ಗ್ರಾಮಸ್ಥರ ಮೇಲೂ ಗುಂಡು ಹಾರಿಸಿದ್ದಾರೆ. ಇದರಿಂದ ಅಂಕಿತ್ ಕುಮಾರ್ ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. +ಆಸ್ತಿಗಾಗಿ ಪತ್ನಿಯನ್ನೇ ಕೊಂದು ನಾಟಕವಾಡಿದ್ದ ಉಪನ್ಯಾಸಕ ಅರೆಸ್ಟ್ +ಬಿಜೇಂದ್ರ ಸಿಂಗ್ ಅವರು ಸ್ಥಳದಲ್ಲೇ ಸಾವನ್ನಪ್ಪಿದರು, ಶಸ್ತ್ರಸಜ್ಜಿತ ದಾಳಿಕೋರರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಮಿಥಿಲೇಶ್ ಕುಮಾರ್ ಮತ್ತು ಆದಿತ್ಯ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. +ಮಾಜಿ ಸೈನಿಕನ ಹತ್ಯೆಯ ಹಿಂದಿನ ಕಾರಣ ಇನ್ನೂ ಪತ್ತೆಯಾಗಿಲ್ಲ. ಬಿಜೇಂದ್ರ ಸಿಂಗ್ ಹತ್ಯೆಯ ಹಿಂದಿನ ನಿಗೂಢತೆಯನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿದೆ ಮತ್ತು ನಂತರದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಕಾರಣವಾದ ಘಟನೆಯನ್ನು ಗುಂಪು ಹತ್ಯೆ ಎಂದು ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‍ಪಿ ತಿಳಿಸಿದ್ದಾರೆ. \ No newline at end of file diff --git a/eesanje/url_47_235_8.txt b/eesanje/url_47_235_8.txt new file mode 100644 index 0000000000000000000000000000000000000000..61e561ef714871d6c2387b326d210215c074d98b --- /dev/null +++ b/eesanje/url_47_235_8.txt @@ -0,0 +1,11 @@ +ಪಂಚರಾಜ್ಯಗಳ ಚುನಾವಣೆ : ನಾಳೆ ಮಧ್ಯಪ್ರದೇಶದಲ್ಲಿ ಮತದಾನ +ಬೆಂಗಳೂರು, ನ.16-ಮಿನಿ ಮಹಾಸಮರವೆಂದೇ ಬಿಂಬಿಸಲಾಗಿರುವ ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ಅತಿ ಹೆಚ್ಚು ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶಕ್ಕೆ ನಾಳೆ ಮತದಾನ ನಡೆಯಲಿದೆ. 230 ಕ್ಷೇತ್ರಗಳನ್ನು ಹೊಂದಿರುವ ವಿಧಾನಸಭೆಯ ಚುನಾವಣೆಯಲ್ಲಿ ಗೆದ್ದು ಮರಳಿ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಹವಣಿಸುತ್ತಿದೆ. +ಬಿಜೆಪಿ, ಕಾಂಗ್ರೆಸ್ ಸ್ವತಂತ್ರವಾಗಿ 230 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಎಸ್‍ಪಿ, ಗೊಂಡವಾನ ಗಣತಂತ್ರ ಪಕ್ಷದ ಮೈತ್ರಿಕೂಟವು ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಮಾಜವಾದಿ ಪಕ್ಷ, ಅಜಾದ್ ಸಮಾಜ್ ಪಕ್ಷಗಳು ತಲಾ -80, ಅಮ್‍ಆದ್ಮಿ -69, ಸಿಪಿಐ-9, ಜೆಡಿಯು-5 ಕ್ಷೇತ್ರಗಳಲ್ಲಿ ಸ್ರ್ಪಧಿಸಿವೆ. +ಬಹುತೇಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ಇದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‍ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ ಸೇರಿದಂತೆ ಬಿಜೆಪಿ ಅತಿರಥ ಮಹಾರಥರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ್ದಾರೆ. +ಕಾಂಗ್ರೆಸ್‍ನಿಂದ ರಾಹುಲ್ ಗಾಂಧಿ, ಪ್ರಿಯಾಂಕಗಾಂಧಿ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದ್ದಾರೆ. ಹಲವಾರು ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಮಿಶ್ರ ಫಲಿತಾಂಶ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ನಡೆದ ಸಮೀಕ್ಷೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವ ಮುನ್ಸೂಚನೆ ಇತ್ತು.ಅಕ್ಟೋಬರ್‍ನಲ್ಲಿ ನಡೆದ ಸಮೀಕ್ಷೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವರದಿಯಾಗಿದ್ದರೆ, ನವೆಂಬರ್‍ನಲ್ಲಿ ನಡೆದ ಸಮೀಕ್ಷೆಯಲ್ಲಿ ಬಿಜೆಪಿ ಪರವಾದ ಒಲವು ವ್ಯಕ್ತವಾಗಿತ್ತು. ಇತ್ತೀಚಿನ ವರದಿಗಳು ಮತ್ತೆ ಕಾಂಗ್ರೆಸ್‍ನಲ್ಲಿ ನಿರೀಕ್ಷೆಗಳನ್ನು ಹುಟ್ಟಿಸಿವೆ. +ಆಸ್ತಿಗಾಗಿ ಪತ್ನಿಯನ್ನೇ ಕೊಂದು ನಾಟಕವಾಡಿದ್ದ ಉಪನ್ಯಾಸಕ ಅರೆಸ್ಟ್ +ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಸಿಕೊಳ್ಳಲು ಎಲ್ಲಾ ರಾಜಕೀಯ ಪಕ್ಷಗಳು ನಾನಾ ರೀತಿಯ ಕಸರತ್ತುಗಳನ್ನು ನಡೆಸಿವೆ. ಕಾಂಗ್ರೆಸ್ ಎಂದಿನಂತೆ ಗ್ಯಾರಂಟಿ ಯೋಜನೆಗಳ ಮೊರೆ ಹೋಗಿದೆ. ಎರಡು ಲಕ್ಷ ರೂ.ವರೆಗೂ ಕೃಷಿ ಸಾಲ ಮನ್ನಾ, ಉಚಿತ ಶಾಲಾ ಶಿಕ್ಷಣ, 100 ಯುನಿಟ್ ವರೆಗೆ ಉಚಿತ ಹಾಗೂ 200 ಯುನಿಟ್ ವರೆಗೆ ರಿಯಾಯ್ತಿ ಘೋಷಿಸಿದೆ. +500 ರೂ.ಗೆ ಸಿಲಿಂಡರ್ ಪೂರೈಕೆ, ಒಬಿಸಿ ಶೇ.25ರಷ್ಟು ಮೀಸಲಾತಿ, ಜಾತಿಜನಗಣತಿ, ಮಹಿಳೆಯರಿಗೆ, ಯುವಕರಿಗೆ ಮಾಶಾಸನ ಘೋಷಣೆ ಮಾಡಿದ್ದರೆ, ಬಿಜೆಪಿ ಕೂಡಾ ಉಚಿತ ವಿದ್ಯುತ್, 450 ರೂ.ಗೆ ಸಿಲಿಂಡರ್ ಪೂರೈಕೆ, ಬಡವರಿಗೆ 5 ವರ್ಷ ಉಚಿತ ಪಡಿತರ ಸೇರಿದಂತೆ ಹಲವು ಗ್ಯಾರಂಟಿಗಳನ್ನು ಪ್ರಕಟಿಸಿದೆ.ಏಕಕಾಲಕ್ಕೆ ಎಲ್ಲಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಪ್ರಜಾಪ್ರಭುತ್ವದ ಪ್ರಭುಗಳು ಯಾರ ಪರವಾಗಿ ಒಲವು ವ್ಯಕ್ತಪಡಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. +ಪಂಚ ರಾಜ್ಯಗಳ ಪೈಕಿ ಮಿಜೋರಾಂಗೆ ನ.7ರಂದು ಏಕಕಾಲಕ್ಕೆ 40 ಕ್ಷೇತ್ರಗಳಿಗೂ ಚುನಾವಣೆ ನಡೆದರೆ, 90 ಕ್ಷೇತ್ರಗಳಿರುವ ಛತ್ತೀಸ್‍ಗಢಕ್ಕೆ ಎರಡು ಹಂತಗಳಲ್ಲಿ ಮತದಾನ ನಿಗದಿಯಾಗಿದೆ. ಮೊದಲ ಹಂತದ ಮತದಾನ ನ.7ರಂದು 20 ಕ್ಷೇತ್ರಗಳಿಗೆ ನಡೆದಿದ್ದು, ನಾಳೆ ಎರಡನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. +ವಿಪಕ್ಷ ನಾಯಕನ ಆಯ್ಕೆಗೆ ನಾಳೆ ಬಿಜೆಪಿ ಶಾಸಕರ ಸಭೆ +200 ಕ್ಷೇತ್ರಗಳಿರುವ ರಾಜಸ್ಥಾನಕ್ಕೆ ನ.23ರಂದು, 119 ಕ್ಷೇತ್ರಗಳಿರುವ ತೆಲಂಗಾಣಕ್ಕೆ ನ.30ರಂದು ಮತದಾನ ನಡಯಲಿದೆ. ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಡಿ.3ರಂದು ಆಯಾ ರಾಜ್ಯಗಳಲ್ಲಿ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ. \ No newline at end of file diff --git a/eesanje/url_47_235_9.txt b/eesanje/url_47_235_9.txt new file mode 100644 index 0000000000000000000000000000000000000000..03f8235d988ba1a19b2a9611b368b92bf58f4283 --- /dev/null +++ b/eesanje/url_47_235_9.txt @@ -0,0 +1,8 @@ +ಬಿಜೆಪಿ ಪರ ಪ್ರಚಾರ ನಡೆಸಿದ ರಾಜ್ಯಪಾಲರ ವಜಾಕ್ಕೆ ಆಗ್ರಹ +ಗುವಾಹಟಿ, ನ.16- ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಆರೋಪದ ಮೇಲೆ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ವಜಾಗೊಳಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಅಸ್ಸಾಂ ಘಟಕಗಳು ಒತ್ತಾಯಿಸಿವೆ. +ಈ ವಿಷಯದ ಬಗ್ಗೆ ಕಟಾರಿಯಾ ಅಥವಾ ಅಸ್ಸಾಂ ಗವರ್ನರ್ ಕಚೇರಿಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆಗಳು ದೊರೆತಿಲ್ಲ. ಸಾಂವಿಧಾನಿಕ ಹುದ್ದೆ ರಾಜ್ಯಪಾಲರಾಗುವ ಮೊದಲು ರಾಜಕೀಯ ಪಕ್ಷದ ಎಲ್ಲಾ ಹೊಣೆಗಾರಿಕೆಗಳನ್ನು ತ್ಯಜಿಸಿರಬೇಕಾಗುತ್ತದೆ. ಆದರೆ ಗುಲಾಬ್ ಚಂದ್ ಕಟಾರಿಯಾ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿರುವುದು ಸಂವಿಧಾನ ಬಾಹಿರವಗಿದೆ, ಅವರನ್ನು ಹುದ್ದೆಯಿಂದ ವಜಾಗೊಳಿಸಲು ರಾಷ್ಟ್ರಪತಿ ಮತ್ತು ಭಾರತೀಯ ಚುನಾವಣಾ ಆಯೋಗದ ಮಧ್ಯಪ್ರವೇಶ ಮಾಡಬೇಕು ಎಂದು ಉಭಯ ಪಕ್ಷಗಳು ಆಗ್ರಹಿಸಿವೆ. +ಗುಲಾಬ್ ಚಂದ್ ಕಟಾರಿಯಾ ರಾಜಸ್ಥಾನದ ಉದಯಪುರದಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿದ್ದರು, ಇದು ಪ್ರಜಾಪ್ರಭುತ್ವಕ್ಕೆ ಸವಾಲಾಗಿದೆ, ಭಾರತೀಯ ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಸ್ಸಾಂ ಟಿಎಂಸಿ ಅಧ್ಯಕ್ಷ ರಿಪುನ್ ಬೋರಾ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಂವಿಧಾನದ ಪಾಲಕರಾಗಿದ್ದರೂ ಕಟಾರಿಯಾ ಅವರು ಬಿಜೆಪಿ ಪರ ಪ್ರಚಾರ ನಡೆಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಬೋರಾ ಆಗ್ರಹಿಸಿದ್ದಾರೆ. +ದೇಶ ತೊರೆಯಲು ಭಾರತೀಯ ಪಡೆಗಳಿಗೆ ಮಾಲ್ಡೀವ್ಸ್ ಸೂಚನೆ +ಸಂವಿಧಾನ ಹುದ್ದೆಯ ಘನತೆ ಮರೆತು ಬಿಜೆಪಿ ಅಭ್ಯರ್ಥಿ ತಾರಾಚನ್ ಜೈನ್ ಪರ ಪ್ರಚಾರ ನಡೆಸಿ ಚುನಾವಣಾ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ಆಕ್ರೋಶ ವ್ಯಕ್ತ ಪಡಿಸಿದೆ. ಅಸ್ಸಾಂನ ಟಿಎಂಸಿ ಘಟಕ ಪತ್ರಿಕಾ ಹೇಳಿಕೆ ನೀಡಿ, ಕೆಲವು ದಿನಗಳ ಹಿಂದೆ ಅಸ್ಸಾಂ ವಿಧಾನಸಭೆಯ ಉಪ ಸ್ಪೀಕರ್ ನುಮಲ್ ಮೊಮಿನ್ ಮಿಜೋರಾಂನಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದರು. ಈಗ ಕಟಾರಿಯಾ ಸರದಿಯಾಗಿದೆ. +ಇದು ಸಾಂವಿಧಾನಿಕ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ರಾಜ್ಯದ ಮುಖ್ಯಸ್ಥರಾಗಿ, ರಾಜ್ಯಪಾಲರು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸಬಾರದಿತ್ತು. ನಿರಂಕುಶ ಮತ್ತು ಪ್ರಜಾಪ್ರಭುತ್ವ ವಿರೋಧಿ ಸರ್ಕಾರವನ್ನು ನಡೆಸಲು ಬಿಜೆಪಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬುದನ್ನು ಈ ಎರಡು ಉದಾಹರಣೆಗಳು ತೋರಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. +ಎಎಪಿ ಅಸ್ಸಾಂ ಸಂಯೋಜಕ ಭಾಬೆನ್ ಚೌಧರಿ ಮಾತನಾಡಿ, ರಾಜ್ಯಪಾಲರು ಜಾತಿ, ಮತ ಮತ್ತು ಧರ್ಮವನ್ನು ಲೆಕ್ಕಿಸದೆ ಸಂವಿಧಾನವನ್ನು ಎತ್ತಿಹಿಡಿಯಬೇಕು ಮತ್ತು ರಾಜಕೀಯದಿಂದ ದೂರವಿರಬೇಕು. ಆದಾಗ್ಯೂ, ಕಟಾರಿಯಾ ಅವರು ಚುನಾವಣೆಯಲ್ಲಿ ರಾಜಕೀಯ ಪಕ್ಷದ ಪರವಾಗಿ ಪ್ರಚಾರ ಮಾಡುವ ಮೂಲಕ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಇದು ರಾಜ್ಯಪಾಲರ ಹುದ್ದೆಯನ್ನು ಕೀಳಾಗಿ ಮಾಡಿದೆ. ಇದು ಭಾರತದ ರಾಜಕೀಯವನ್ನು ಕರಾಳಗೊಳಿಸಿದೆ ಎಂದು ಅವರು ಹೇಳಿದ್ದು, ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. \ No newline at end of file diff --git a/eesanje/url_47_236_1.txt b/eesanje/url_47_236_1.txt new file mode 100644 index 0000000000000000000000000000000000000000..7d1c1bf1562b569ab51c83873ff610d2ac3b2ff5 --- /dev/null +++ b/eesanje/url_47_236_1.txt @@ -0,0 +1,7 @@ +ಬಿಜೆಪಿ ಗೆದ್ದರೆ ಮಹಿಳೆಯರಿಗೆ ಉಚಿತ ಆಯೋಧ್ಯೆ ದರ್ಶನ +ರತ್ಲಾಮ್, ನ.14 (ಪಿಟಿಐ)- ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನು ಉಳಿಸಿಕೊಂಡರೆ ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಉಚಿತವಾಗಿ ರಾಮಮಂದಿರ ದರ್ಶನಕ್ಕಾಗಿ ಅಯೋಧ್ಯೆಗೆ ಕರೆದೊಯ್ಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. +ಶುಕ್ರವಾರದ ವಿಧಾನಸಭಾ ಚುನಾವಣೆಗೆ ಮುನ್ನ ರತ್ಲಾಮ್ ಜಿಲ್ಲೆಯ ಜೌರಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಸಿಂಗ್, 1980 ರಲ್ಲಿ ಪಕ್ಷವು ತನ್ನ ಪ್ರಯಾಣವನ್ನು ಪ್ರಾರಂಭಿಸಿದಾಗ, ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಪಡೆದ ನಂತರ ಅಯೋಧ್ಯೆಯಲ್ಲಿ ರಾಮನ ಭವ್ಯ ಮಂದಿರ ನಿರ್ಮಾಣ ಮಾಡುವುದನ್ನು ವಿಶ್ವದ ಯಾವುದೇ ಶಕ್ತಿಯು ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಜ್ಞಾ ಮಾಡಿತ್ತು. +ಜನವರಿ 22, 2024 ರಂದು ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭಕ್ಕೆ ನಿಮ್ಮನ್ನು ಆಹ್ವಾನಿಸಲು ನಾನು ಬಂದಿದ್ದೇನೆ ಎಂದು ಅವರು ಹೇಳಿದರು.ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ವೃದ್ಧರು ಮತ್ತು ಮಹಿಳೆಯರನ್ನು ಅಯೋಧ್ಯೆಗೆ ಕರೆದೊಯ್ಯಲು ಬಿಜೆಪಿ ನಿರ್ಧರಿಸಿದೆ ಎಂದು ಕೇಂದ್ರ ಸಚಿವರು ಹೇಳಿದರು. +ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದ ಹಂತಕನ ಬಂಧನ +ಬಿಜೆಪಿ ಸರ್ಕಾರ ಯಾವುದೇ ವ್ಯಕ್ತಿಯನ್ನು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದರು.ಒಂದು ಧರ್ಮಕ್ಕೆ ಸೇರಿದ ಸಹೋದರಿಯರ ಗಂಡಂದಿರು ಮೂರು ಬಾರಿ ತಲಾಖ್ ಹೇಳುವ ಮೂಲಕ ತಮ್ಮ ವೈವಾಹಿಕ ಸಂಬಂಧವನ್ನು ಮುರಿದುಕೊಳ್ಳುವುದನ್ನು ನಾವು ನೋಡಿದ್ದೇವೆ. ನಾವು ಮತಗಳ ಬಗ್ಗೆ ಕಾಳಜಿ ವಹಿಸಲಿಲ್ಲ ಮತ್ತು ತ್ವರಿತ ತ್ರಿವಳಿ ತಲಾಖ್ ಪದ್ಧತಿಯನ್ನು ಕೊನೆಗೊಳಿಸಲು ಕಾನೂನನ್ನು ಜಾರಿಗೊಳಿಸಿದ್ದೇವೆ ಎಂದು ಸಿಂಗ್ ಹೇಳಿದರು. +ಒಂದು ಕಾಲದಲ್ಲಿ ಗರೀಬಿ ಹಠಾವೋ (ಬಡತನ ನಿರ್ಮೂಲನೆ) ಘೋಷಣೆಯನ್ನು ನೀಡಿದ ಕಾಂಗ್ರೆಸ್ 50-55 ವರ್ಷಗಳ ಕಾಲ ಅಡೆತಡೆಯಿಲ್ಲದೆ ದೇಶವನ್ನು ಆಳಿದರೂ ಬಡತನವನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ನಾಯಕ ಹೇಳಿದರು. ಮಧ್ಯಪ್ರದೇಶದ ಹಿಂದಿನ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕೇಂದ್ರದ ಅನೇಕ ಯೋಜನೆಗಳನ್ನು ನಿಲ್ಲಿಸಿತು ಎಂದು ಅವರು ಆರೋಪಿಸಿದರು. \ No newline at end of file diff --git a/eesanje/url_47_236_10.txt b/eesanje/url_47_236_10.txt new file mode 100644 index 0000000000000000000000000000000000000000..0411ed544d7d24446ddfb2629526090bd6291b83 --- /dev/null +++ b/eesanje/url_47_236_10.txt @@ -0,0 +1,8 @@ +ತಮಿಳುನಾಡಿನ 7 ಹಳ್ಳಿಗಳಲ್ಲಿ ಶಬ್ದರಹಿತ ದೀಪಾವಳಿ ಆಚರಣೆ +ಈರೋಡ್,ನ.13-ಪಟಾಕಿ ಸಿಡಿತ ಪರಿಸರದ ಮೇಲೆ ಹಾನಿ ಮಾಡುತ್ತದೆ ಎಂಬ ಅರಿವಿದ್ದರೂ ಜನ ಪಟಾಕಿ ಸಿಡಿಸುವುದನ್ನು ಮಾತ್ರ ಬಿಡಲ್ಲ. ಆದರೆ, ತಮಿಳುನಾಡಿನ 7 ಪುಟ್ಟ ಹಳ್ಳಿಗಳೂ ಬೆಳಕಿನ ಹಬ್ಬದಂದು ಕೇವಲ ದೀಪ ಬೆಳಗಿಸುವ ಮೂಲಕ ಶಬ್ದರಹಿತ ದೀಪಾವಳಿ ಆಚರಿಸುತ್ತ ಗಮನ ಸೆಳೆಯುತ್ತಿವೆ. +ತಮ್ಮ ಗ್ರಾಮಗಳ ಸಮೀಪವೇ ಪಕ್ಷಿಧಾಮ ಇರುವುದರಿಂದ ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಹಳ್ಳಿಗಳು ಕೇವಲ ದೀಪಗಳು ಮತ್ತು ಶಬ್ದವಿಲ್ಲದೆ ಹಬ್ಬವನ್ನು ಆಚರಿಸಲು ನಿರ್ಧರಿಸಿವೆ. ಪಕ್ಷಿಧಾಮವಿರುವ ಈರೋಡ್‍ನಿಂದ 10 ಕಿಲೋಮೀಟರ್ ದೂರದಲ್ಲಿರುವ ವಡಮುಗಂ ಸುತ್ತಮುತ್ತ ಈ ಗ್ರಾಮಗಳಿವೆ. +ಸಾವಿರಾರು ಸ್ಥಳೀಯ ಪಕ್ಷಿ ಪ್ರಭೇದಗಳು ಮತ್ತು ಇತರ ಪ್ರದೇಶಗಳಿಂದ ವಲಸೆ ಹಕ್ಕಿಗಳು ಅಕ್ಟೋಬರ್ ಮತ್ತು ಜನವರಿ ನಡುವೆ ಮೊಟ್ಟೆಗಳನ್ನು ಇಡಲು ಮತ್ತು ಅವುಗಳನ್ನು ಮರಿ ಮಾಡಲು ಅಭಯಾರಣ್ಯಕ್ಕೆ ಭೇಟಿ ನೀಡುತ್ತವೆ. +ನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ +ದೀಪಾವಳಿ ಸಾಮಾನ್ಯವಾಗಿ ಅಕ್ಟೋಬರ್ ಅಥವಾ ನವೆಂಬರ್‍ನಲ್ಲಿ ಬರುವುದರಿಂದ ಪಕ್ಷಿಧಾಮದ ಸುತ್ತಮುತ್ತ ವಾಸಿಸುವ 900 ಕ್ಕೂ ಹೆಚ್ಚು ಕುಟುಂಬಗಳು ಪಕ್ಷಿಗಳನ್ನು ಉಳಿಸಲು ಮತ್ತು ಪಟಾಕಿಗಳನ್ನು ಸಿಡಿಸಬಾರದು ಎಂದು ನಿರ್ಧರಿಸಿದ್ದಾರೆ. ಅವರು ಕಳೆದ 22 ವರ್ಷಗಳಿಂದ ಈ ಸಂರಕ್ಷಣಾ ವಿಧಾನವನ್ನು ಅನುಸರಿಸಿಕೊಂಡು ಬರುತ್ತಿದ್ದಾರೆ. +ದೀಪಾವಳಿ ಸಮಯದಲ್ಲಿ, ಅವರು ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸುತ್ತಾರೆ ಮತ್ತು ಕೇವಲ ಮಿಂಚುಗಳನ್ನು ಸುಡಲು ಅವಕಾಶ ನೀಡುತ್ತಾರೆ ಮತ್ತು ಪಟಾಕಿಗಳನ್ನು ಸಿಡಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿದರು. ಈ ವರ್ಷವೂ ಸೆಲ್ಲಪ್ಪಂಪಳಯಂ, ವಡಮುಗಂ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಸೇರಿ ಎರಡು ಗ್ರಾಮಗಳು ಮೌನ ದೀಪಾವಳಿಯ ಗೌರವಯುತ ಸಂಪ್ರದಾಯವನ್ನು ಎತ್ತಿ ಹಿಡಿದಿವೆ. +ಕುಟುಂಬಗಳು ತಮ್ಮದೇ ಆದ ರೀತಿಯಲ್ಲಿ ದೀಪಾವಳಿಯನ್ನು ಸಂತೋಷದಿಂದ ಆಚರಿಸುತ್ತಿದ್ದಂತೆ, ಶನಿವಾರ ಮತ್ತು ಭಾನುವಾರದಂದು ಯಾವುದೇ ಘಟನೆ ವರದಿಯಾಗದೆ, ಸಾವಿರಾರು ಪಕ್ಷಿಗಳು ಸುರಕ್ಷಿತವಾಗಿ ಮತ್ತು ಆನಂದದಿಂದ ಅಭಯಾರಣ್ಯದಲ್ಲಿ ಉಳಿದಿವೆ. \ No newline at end of file diff --git a/eesanje/url_47_236_11.txt b/eesanje/url_47_236_11.txt new file mode 100644 index 0000000000000000000000000000000000000000..cb23bd2d8903ba843af9daccb0744c879f2934bc --- /dev/null +++ b/eesanje/url_47_236_11.txt @@ -0,0 +1,5 @@ +42 ಕೋಟಿ ರೂ.ಮೌಲ್ಯದ ಡ್ರಗ್ಸ್ ವಶ +ಐಜ್ವಾಲ್,ನ.13- ಅಸ್ಸಾಂ ರೈಫಲ್ಸ್ ಮತ್ತು ಮಿಜೋರಾಂ ಪೊಲೀಸರ ತಂಡವು ಚಂಫೈ ಜಿಲ್ಲೆಯ ಝೋಖಾವ್ತಾರ್ ಗ್ರಾಮದಲ್ಲಿ 42 ಕೋಟಿ ಮೌಲ್ಯದ 15.9 ಕೆಜಿ ಮೆಥಾಂಫೆಟಮೈನ್ ಮಾತ್ರೆಗಳನ್ನು ವಶಪಡಿಸಿಕೊಂಡಿದೆ. +ಅದಾಗ್ಯೂ ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಜಂಟಿ ಪೊಲೀಸರ ತಂಡ ನಿಖರ ದಾಳಿ ನಡೆಸಿ ಉದ್ದೀಪನ ಮದ್ದು ವಶಪಡಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. +ವಿಜಯೇಂದ್ರಗೆ ಪಟ್ಟ : ಸೈಲೆಂಟ್ ಅದ ಸಿ.ಟಿ.ರವಿ, ಯತ್ನಾಳ್ +ಅಸ್ಸಾಂ ಗಡಿಯಲ್ಲಿ ನಿರಂತರವಾಗಿ ಮಾದಕ ದ್ರವ್ಯ ಕಳ್ಳ ಸಾಗಾಣಿಕೆ ನಡೆಸಿಕೊಂಡು ಬರಲಾಗುತ್ತಿದೆ. ಪೊಲೀಸರು ಎಷ್ಟೆ ಹದ್ದಿನಕಣ್ಣಿಟ್ಟರು ದಂಧೆಕೋರರು ನಾನಾ ಮಾರ್ಗದಲ್ಲಿ ತಮ್ಮ ವ್ಯವಹಾಹ ನಡೆಸಿಕೊಂಡು ಬರುತ್ತಲೆ ಇರುವುದರಿಂದ ಈ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ ಪದೇ ಪದೇ ಕಾರ್ಯಚರಣೆ ನಡೆಸಲಾಗುತ್ತಿರುತ್ತದೆ. \ No newline at end of file diff --git a/eesanje/url_47_236_12.txt b/eesanje/url_47_236_12.txt new file mode 100644 index 0000000000000000000000000000000000000000..6b2340793edda23d271e527d11799ea47cb0bcad --- /dev/null +++ b/eesanje/url_47_236_12.txt @@ -0,0 +1,10 @@ +ದೆಹಲಿಯಲ್ಲಿ ವಾಸ ಮಾಡಿದರೆ ಶ್ವಾಸಕೋಶ ಕಾಯಿಲೆ ಉಚಿತ +ನವದೆಹಲಿ,ನ.13- ರಾಷ್ಟ್ರ ರಾಜಧಾನಿಯ ವಾಯು ಮಾಲಿನ್ಯದಲ್ಲಿ ಜೀವನ ಸಾಗಿಸುವುದೇ ದುಸ್ತರವಾಗಿದೆ. ಶ್ವಾಸಕೋಶದ ಮೇಲೆ ಪರಿಣಾಮ ಬೀರುವ ಮತ್ತು ಪ್ರಮುಖ ಆರೋಗ್ಯ ಸಮಸ್ಯೆಗಳಿಗೆ ಅಪಾಯವನ್ನುಂಟುಮಾಡುವ ಪ್ರಮುಖ ಮಾಲಿನ್ಯಕಾರಕವು ಕಳೆದ ಬೆಳಿಗ್ಗೆಯಿಂದ 24 ಗಂಟೆಗಳ ಅವಧಿಯಲ್ಲಿ ಶೇ.140ರಷ್ಟು ಜಿಗಿತ ದಾಖಲಿಸಿದೆ, ಏಕೆಂದರೆ ದೀಪಾವಳಿಯ ಒಂದು ದಿನದ ನಂತರ ದೆಹಲಿಯ ಗಾಳಿಯ ಗುಣಮಟ್ಟವು ವಿಷಕಾರಿ ಮಟ್ಟಕ್ಕೆ ಮರಳಿದೆ. +ಪಿಎಂ 2.5, ಗಾಳಿಯಲ್ಲಿರುವ ಎಲ್ಲಾ ಕಣಗಳಲ್ಲಿ ಅತ್ಯಂತ ಹಾನಿಕಾರಕವಾಗಿದೆ, ಬೆಳಿಗ್ಗೆ 7 ಗಂಟೆಗೆ ಗಂಟೆಗೆ ಸರಾಸರಿ 200.8 ರಷ್ಟಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ದಾಖಲಿಸಿರುವ ಮಾಹಿತಿ ಪ್ರಕಾರ ನಿನ್ನೆ ಇದೇ ವೇಳೆಗೆ 83.5 ಇತ್ತು. +ಈ ಅವಧಿಯಲ್ಲಿ ರೋಹಿಣಿ, ಐಟಿಒ ಮತ್ತು ದೆಹಲಿ ವಿಮಾನ ನಿಲ್ದಾಣ ಪ್ರದೇಶ ಸೇರಿದಂತೆ ಹೆಚ್ಚಿನ ಸ್ಥಳಗಳಲ್ಲಿ ಪಿ.ಎಂ 2.5 ಮತ್ತು ಪಿಎಂ10 ಮಾಲಿನ್ಯಕಾರಕ ಮಟ್ಟಗಳು 500 ಕ್ಕೆ ತಲುಪಿದೆ ಎಂದು ಸಿಪಿಸಿಬಿ ಡೇಟಾವನ್ನು ತೋರಿಸಿದೆ. +ಗಾಳಿಯ ಗುಣಮಟ್ಟ ಸೂಚ್ಯಂಕವನ್ನು (ಎಕ್ಯೂಐ ) ಗಾಳಿಯಲ್ಲಿರುವ ಆರು ಕಣಗಳು ಮತ್ತು ಅನಿಲ ಪದಾರ್ಥಗಳ ಮೌಲ್ಯದಿಂದ ಪಡೆಯಲಾಗಿದೆ. ಇವುಗಳಲ್ಲಿ ಪಿಎಂ 2.5 ಮುಖ್ಯ ಅಂಶವಾಗಿದ್ದು ಅದು ಮೂಗು ಮತ್ತು ಗಂಟಲಿನ ತಡೆಗೋಡೆಯನ್ನು ಹಾದುಹೋಗುತ್ತದೆ, ಶ್ವಾಸಕೋಶಕ್ಕೆ ಹೋಗುತ್ತದೆ, ಅಲ್ಲಿ ಸಂಗ್ರಹವಾಗುತ್ತದೆ ಮತ್ತು ರಕ್ತದಲ್ಲಿ ಹೀರಲ್ಪಡುತ್ತದೆ ಎಂದು ಮೇದಾಂತ ಗುರುಗ್ರಾಮ್‍ನಲ್ಲಿರುವ ಎದೆಯ ಶಸ್ತ್ರಚಿಕಿತ್ಸೆಯ ಸಂಸ್ಥೆಯ ಅಧ್ಯಕ್ಷ ಡಾ.ಅರವಿಂದ್ ಕುಮಾರ್ ಹೇಳಿದ್ದಾರೆ. +ನ.15ಕ್ಕೆ ವಿಜಯೇಂದ್ರ ಪದಗ್ರಹಣ, 16ಕ್ಕೆ ಕಾರ್ಯಕರ್ತರ ಬೃಹತ್ ಸಮಾವೇಶ +ಪಿಎಂ 2.5 ಮತ್ತು ಸಣ್ಣ ಕಣಗಳು ಶ್ವಾಸಕೋಶಗಳು ಮತ್ತು ದೇಹದ ಉಳಿದ ಭಾಗಗಳನ್ನು ಹಾನಿಗೊಳಿಸುವಾಗ ನಿರ್ಣಾಯಕವಾಗಿವೆ. ದೆಹಲಿ ನಿನ್ನೆ ಎಂಟು ವರ್ಷಗಳಲ್ಲಿ ಅದರ ಅತ್ಯುತ್ತಮ ದೀಪಾವಳಿ ದಿನದ ಗಾಳಿಯ ಗುಣಮಟ್ಟವನ್ನು ಕಂಡಿತು, ಆದರೆ ಎನ್‍ಸಿಆರ್ ಪ್ರದೇಶವು ಸುಪ್ರೀಂ ಕೋರ್ಟ್‍ನ ಕ್ರ್ಯಾಕರ್ ನಿಷೇಧದ ವ್ಯಾಪಕ ಉಲ್ಲಂಘನೆಗೆ ಸಾಕ್ಷಿಯಾದ ನಂತರ ಇಂದು ಬೆಳಿಗ್ಗೆ ಹೆಚ್ಚಿನ ಸ್ಥಳಗಳಲ್ಲಿ ಎಕ್ಯೂಐ 500 ದಾಟಿದೆ. +ರಿಯಲ್‍ಟೈಮ್ ಮಾನಿಟರಿಂಗ್ ವೆಬ್‍ಸೈಟ್‍ಗಳು ಲಜಪತ್ ನಗರ್ ಮತ್ತು ಜವಾಹರಲಾಲ್ ನೆಹರು ಸ್ಟೇಡಿಯಂ ಸೇರಿದಂತೆ ಹಲವಾರು ಸ್ಥಳಗಳನ್ನು ತೋರಿಸಿದ್ದು, ಎಕ್ಯೂಐ 900 ಕ್ಕಿಂತ ಹೆಚ್ಚು ವರದಿಯಾಗಿದೆ. ಸೊನ್ನೆ ಮತ್ತು 50 ರ ನಡುವಿನ ಎಕ್ಯೂಐ ಅನ್ನು ಉತ್ತಮ, 51 ಮತ್ತು 100 ತೃಪ್ತಿದಾಯಕ, 101 ಮತ್ತು 200 ಮಧ್ಯಮ, 201 ಮತ್ತು 300 ಕಳಪೆ, 301 ಮತ್ತು 400 ಅತ್ಯಂತ ಕಳಪೆ, 401 ಮತ್ತು 450 ತೀವ್ರ ಮತ್ತು 450 ಕ್ಕಿಂತ ಹೆಚ್ಚನ್ನು ಅತಿ ತೀವ್ರ ಎಂದು ಪರಿಗಣಿಸಲಾಗುತ್ತದೆ. +ಬೇರಿಯಂ ಹೊಂದಿರುವ ಪಟಾಕಿಗಳನ್ನು ನಿಷೇಸುವ ಆದೇಶವು ಪ್ರತಿ ರಾಜ್ಯವನ್ನು ಬಂಧಿಸುತ್ತದೆ ಮತ್ತು ದೆಹಲಿ-ಎನ್‍ಸಿಆರ್ ಪ್ರದೇಶಕ್ಕೆ ಸೀಮಿತವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ವಾರ ಸ್ಪಷ್ಟಪಡಿಸಿದೆ. +ನಿನ್ನೆ ಸಂಜೆಯೂ ಹಲವು ಅಗ್ನಿ ಅವಘಡಗಳು ವರದಿಯಾಗಿವೆ. ದೆಹಲಿ ಅಗ್ನಿಶಾಮಕ ಸೇವೆಯು ನಿನ್ನೆ ಸಂಜೆ 6 ರಿಂದ ರಾತ್ರಿ 10.45 ರ ನಡುವೆ 100 ಬೆಂಕಿಗೆ ಸಂಬಂಧಿಸಿದ ಕರೆಗಳನ್ನು ಸ್ವೀಕರಿಸಿದೆ ಎಂದು ಡಿಎಫ್‍ಎಸ್ ಮುಖ್ಯಸ್ಥ ಅತುಲ್ ಗಾರ್ಗ್ ಹೇಳಿದ್ದಾರೆ. \ No newline at end of file diff --git a/eesanje/url_47_236_2.txt b/eesanje/url_47_236_2.txt new file mode 100644 index 0000000000000000000000000000000000000000..2f5226a3340ada7865c0dadd7ac3888653df36be --- /dev/null +++ b/eesanje/url_47_236_2.txt @@ -0,0 +1,6 @@ +ಗೆಹ್ಲೋಟ್-ಪೈಲಟ್ ನಡುವೆ ಸಂಧಾನ.? +ಜೈಪುರ,ನ.15- ರಾಜಸ್ಥಾನ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವಿನ ವೈಷಮ್ಯ ಕೊನೆಗಾಣಿಸುವ ಕಸರತ್ತಿಗೆ ಕೈ ಹಾಕಲಾಗಿದೆ.ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಇಬ್ಬರು ಒಟ್ಟಿಗೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಪಣ ತೊಟ್ಟಿದ್ದೇವೆ ಎಂದು ಗೆಹ್ಲೋಟ್ ಎಕ್ಸ್ ಮಾಡಿದ್ದಾರೆ. +ಬಿಡಿ! ಯಾರು ಏನು ಹೇಳಿದರು? ನಾನು ಹೇಳಿದ್ದಕ್ಕೆ ನಾನು ಜವಾಬ್ದಾರನಾಗಿರುತ್ತೇನೆ … ರಾಜಕೀಯ ಚರ್ಚೆಗಳಲ್ಲಿ ನಾವು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು 46 ವರ್ಷದ ಪೈಲಟ್ ಪಿಟಿಐಗೆ ತಿಳಿಸಿದರು. ಹಾಗೂ ಒಟ್ಟಿಗೆ ಕಾಂಗ್ರೆಸ್ ಗೆಲ್ಲಿಸುತ್ತೇವೆ ಎಂದು ಹೇಳಿದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕ್ಷಮಿಸಿ, ಮರೆತುಬಿಡಿ ಮತ್ತು ಮುಂದುವರಿಯಿರಿ ಎಂದು ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದರು. +ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ಪ್ರಕರಣದಲ್ಲಿ ಬಿಹಾರದ ಯುವಕನ ವಿಚಾರಣೆ +ತನ್ನ ಟೋಂಕ್ ಕ್ಷೇತ್ರದ ಸ್ಥಾನವನ್ನು ಉಳಿಸಿಕೊಳ್ಳಲು ನೋಡುತ್ತಿರುವ ಪೈಲಟ್, ಕಾಂಗ್ರೆಸ್ ಅಕಾರವನ್ನು ಉಳಿಸಿಕೊಂಡರೆ, ಮೂರು ವರ್ಷಗಳ ಹಿಂದೆ ಅವರ ಬಂಡಾಯವು ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಅವಕಾಶಗಳ ಮೇಲೆ ಪರಿಣಾಮ ಬೀರಬಹುದು ಎಂಬ ಮಾತನ್ನು ಸಹ ಕಡಿಮೆ ಮಾಡಿದ್ದಾರೆ. +ಇದು ನನ್ನ ಅವಕಾಶ, ನಿಮ್ಮ ಅವಕಾಶ ಅಥವಾ ಅವರ ಅವಕಾಶದ ಪ್ರಶ್ನೆ ಎಂದು ನಾನು ಭಾವಿಸುವುದಿಲ್ಲ. ಇದೀಗ ನಾವು ಕಾಂಗ್ರೆಸ್ ಪಕ್ಷವನ್ನು ಗೆಲ್ಲುವುದನ್ನು ಖಚಿತಪಡಿಸಿಕೊಳ್ಳಬೇಕು … ಸಂಪ್ರದಾಯವೆಂದರೆ ನೀವು ಚುನಾವಣೆಯಲ್ಲಿ ಸ್ರ್ಪಸುತ್ತೀರಿ … ಒಮ್ಮೆ ನೀವು ಬಹುಮತವನ್ನು ದಾಟಿದರೆ, ದೆಹಲಿಯ ಶಾಸಕರು ಮತ್ತು ನಾಯಕತ್ವವು ಯಾರಿಗೆ ಯಾವ ಜವಾಬ್ದಾರಿಯನ್ನು ನೀಡಬೇಕೆಂದು ನಿರ್ಧರಿಸುತ್ತದೆ ಎಂದಿದ್ದಾರೆ. \ No newline at end of file diff --git a/eesanje/url_47_236_3.txt b/eesanje/url_47_236_3.txt new file mode 100644 index 0000000000000000000000000000000000000000..3b81f63e3b48ea5a190b513bd8be56ee67501942 --- /dev/null +++ b/eesanje/url_47_236_3.txt @@ -0,0 +1,7 @@ +ಮಹಾರಾಷ್ಟ್ರ : ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿ +ಛತ್ರಪತಿ ಸಂಭಾಜಿನಗರ, ನ.15 (ಪಿಟಿಐ) ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿಯಾಗಿದೆ.ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ 23 ವರ್ಷದ ಮರಾಠಾ ಸಮುದಾಯದ ವ್ಯಕ್ತಿಯೊಬ್ಬ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. +ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.ಅವರು ಯಾವುದೋ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದರು ಮತ್ತು ನವೆಂಬರ್ 11 ರಂದು ಝೆಂಡಾ ಚೌಕ್ ಪ್ರದೇಶದಲ್ಲಿ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. +ದಾಜಿಬಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ಸಂಬಂಕರಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. +ಸಹಾರಾ ಗ್ರೂಪ್‍ನ ಸಂಸ್ಥಾಪಕ ಸುಬ್ರತಾ ರಾಯ್ ನಿಧನ +ಪೊಲೀಸರಿಗೆ ವ್ಯಕ್ತಿಯ ಬಳಿ ಚೀಟಿ ಸಿಕ್ಕಿದ್ದು, ಅದರಲ್ಲಿ ಇದು ನನಗೆ ಸರ್ಕಾರಿ ಉದ್ಯೋಗದ ಪ್ರಶ್ನೆ. ಏಕ್ ಮರಾಠಾ, ಲಕ್ಷ ಮರಾಠಾ ಎಂದು ಬರೆದುಕೊಂಡಿದ್ದರು ಎಂದು ಅಕಾರಿ ಹೇಳಿದರು.ಭಾಗ್ಯನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ವರದಿ ದಾಖಲಾಗಿದೆ ಎಂದರು. ಮಹಾರಾಷ್ಟ್ರದಲ್ಲಿ ಶೇಕಡಾ 30 ಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಮರಾಠರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ. +ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಡಿಸೆಂಬರ್ 24 ರೊಳಗೆ ಮೀಸಲಾತಿ ಘೋಷಿಸಲು ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದು, ಮರಾಠ ಯುವಕರು ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಡಬೇಕು ಮತ್ತು ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದರು. \ No newline at end of file diff --git a/eesanje/url_47_236_4.txt b/eesanje/url_47_236_4.txt new file mode 100644 index 0000000000000000000000000000000000000000..3b5f36f49514b385d820401ca831a28b2bcf41dc --- /dev/null +++ b/eesanje/url_47_236_4.txt @@ -0,0 +1,10 @@ +ಸಹಾರಾ ಗ್ರೂಪ್‍ನ ಸಂಸ್ಥಾಪಕ ಸುಬ್ರತಾ ರಾಯ್ ನಿಧನ +ಮುಂಬೈ.ನ.15-ದೇಶದ ಅದ್ಬುತ ಉದ್ಯಮಿ ಸಹಾರಾ ಗ್ರೂಪ್‍ನ ಸಂಸ್ಥಾಪಕ ಸುಬ್ರತಾ ರಾಯ್ ನಿಧನರಾಗಿದ್ದಾರೆ. ಆನಾರೋಗ್ಯದ ಕಾರಣ 75 ವರ್ಷದ ಸುಬ್ರತಾ ಅವರನ್ನು ನ. 12ರಂದು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ . +ಸುಬ್ರತಾ ರಾಯ್ ಅವರು ಮೆಟಬಾಲಿಕ್ ಕಾಯಿಲೆ, ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು, ದೀರ್ಘಕಾಲದ ಹೋರಾಟದ ಬಳಿಕ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ ,ಸೂರ್ತಿದಾಯಕ ನಾಯಕ ಹಾಗೂ ದೂರದೃಷ್ಟಿಯುಳ್ಳವರು ಎಂದು ಸಹಾರಾ ಇಂಡಿಯಾ ಕುಟುಂಬವು ತನ್ನ ಸಂತಾಪವನ್ನು ವ್ಯಕ್ತಪಡಿಸುತ್ತಿದೆ, +ಜೂನ್ 10, 1948 ರಂದು ಬಿಹಾರದ ಅರಾರಿಯಾದಲ್ಲಿ ಜನಿಸಿದ ರಾಯ್ ಅವರು ಕಾರ್ಖಾನೆಗಳು, ಹಣಕಾಸು, ರಿಯಲ್ ಎಸ್ಟೇಟ್, ಮಾಧ್ಯಮ ಸೇರಿ ವಿವಿಧ ಕ್ಷೇತ್ರದಲ್ಲಿ ಛಾಪು ಮೂಡಿಸಿ ವಿಶಾಲವಾದ ಸಾಮ್ರಾಜ್ಯವನ್ನು ಸ್ಥಾಪಿಸಿದ್ದರು. +ಪಾಕಿಸ್ತಾನದಲ್ಲಿ ಮತ್ತೊಬ್ಬ ಮಸೂದ್ ಆಪ್ತನನ್ನು ಹೊಸಕಿಹಾಕಿದ ‘ಪರಿಚಿತ ವ್ಯಕ್ತಿ’ +ರಾಯ್ ಅವರ ಮೊದಲು ಗೋರಖ್‍ಪುರದ ಸರ್ಕಾರಿ ತಾಂತ್ರಿಕ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‍ನಲ್ಲಿ ಶಿಕ್ಷಣ ಪಡೆದು ವ್ಯವಹಾರ ಆರಂಭಿಸಿದರು 1976 ರಲ್ಲಿ ಸಹಾರಾ ಫೈನಾನ್ಸ್ ಸಂಸ್ಥೆ ಖರೀದಿಸಿ ನಂತರ 1978 ರ ಹೊತ್ತಿಗೆ ಅವರು ಅದನ್ನು ಸಹಾರಾ ಇಂಡಿಯಾ ಪರಿವಾರ್ ಆಗಿ ಪರಿವರ್ತಿಸಿದರು. +ರಾಯ್ ಅವರ ನಾಯಕತ್ವದಲ್ಲಿ, ಸಹಾರಾ ಹಲವಾರು ವ್ಯವಹಾರಗಳಿಗೆ ವಿಸ್ತರಿಸಿತು. 1992 ರಲ್ಲಿ ಹಿಂದಿ ಭಾಷೆಯ ಪತ್ರಿಕೆ ರಾಷ್ಟ್ರೀಯ ಸಹಾರಾವನ್ನು ಪ್ರಾರಂಭಿಸಿತು, 1990 ರ ದಶಕದ ಉತ್ತರಾರ್ಧದಲ್ಲಿ ಪುಣೆ ಬಳಿ ಮಹತ್ವಾಕಾಂಕ್ಷೆಯ ಆಂಬಿ ವ್ಯಾಲಿ ಸಿಟಿ ಯೋಜನೆಯನ್ನು ಪ್ರಾರಂಭಿಸಿತು ಮತ್ತು ಸಹಾರಾ ಟಿವಿಯೊಂದಿಗೆ ದೂರದರ್ಶನ ಕ್ಷೇತ್ರವನ್ನು ಪ್ರವೇಶಿಸಿತು, ನಂತರ ಅದನ್ನು ಸಹಾರಾ ಒನ್ ಎಂದು ಮರುನಾಮಕರಣ ಮಾಡಲಾಯಿತು. +2000 ರ ದಶಕದಲ್ಲಿ, ಲಂಡನ್‍ನ ಗ್ರೋಸ್ವೆನರ್ ಹೌಸ್ ಹೋಟೆಲ್ ಮತ್ತು ನ್ಯೂಯಾರ್ಕ್ ನಗರದ ಪ್ಲಾಜಾ ಹೋಟೆಲ್‍ಗಳಂತಹ ಸಾಂಪ್ರದಾಯಿಕ ಆಸ್ತಿಗಳನ್ನು ಸ್ವಾೀನಪಡಿಸಿಕೊಳ್ಳುವ ಮೂಲಕ ಸಹಾರಾ ಅಂತಾರಾಷ್ಟ್ರೀಯ ಮಟ್ಟಕ್ಕೂ ಕಾಲಿಟ್ಟಿತ್ತು. +ಸಹಾರಾ ಕಂಪನಿಯಲ್ಲಿ 1ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ವ್ಯಾಪಾರ ಯಶಸ್ಸಿನ ಹೊರತಾಗಿಯೂ, ರಾಯ್ ಕಾನೂನು ಸವಾಲುಗಳನ್ನು ಎದುರಿಸಿದರು. 2014 ರಲ್ಲಿ, ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ ದೊಂದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಕಾರಣಕ್ಕಾಗಿ ಸುಪ್ರೀಂಕೋರ್ಟ್ ಅವರನ್ನು ಬಂಧನಕ್ಕೆ ಆದೇಶಿಸಿತ್ತು, +ಇದು ಸುದೀರ್ಘವಾದ ಕಾನೂನು ಹೋರಾಟಕ್ಕೆ ಕಾರಣವಾಯಿತು, ರಾಯ್ ತಿಹಾರ್ ಜೈಲಿನಲ್ಲಿ ಕಾಲ ಕಳೆದರು ಮತ್ತು ಅಂತಿಮವಾಗಿ ಪೆರೋಲ್ ಮೇಲೆ ಬಿಡುಗಡೆಯಾದರು.ಕ್ರೀಡಾ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದ್ದು ದೇಶಪ್ರೇಮಿಯಾಗಿದ್ದಾರು. \ No newline at end of file diff --git a/eesanje/url_47_236_5.txt b/eesanje/url_47_236_5.txt new file mode 100644 index 0000000000000000000000000000000000000000..18afc61a4e0111f5d0e8c34aa6c0f5ca8ed7b6eb --- /dev/null +++ b/eesanje/url_47_236_5.txt @@ -0,0 +1,5 @@ +ಕೆಮಿಕಲ್ ಗೋದಾಮಿಗೆ ಬೆಂಕಿ, 9ಮಂದಿ ಸಜೀವದಹನ +ಹೈದರಾಬಾದ್,ನ.13- ಇಲ್ಲಿನ ಕೆಮಿಕಲ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಹೈದರಾಬಾದ್‍ನ ನಾಂಪಲ್ಲಿ ಪ್ರದೇಶದ ಬಜಾರ್‍ಘಾಟ್‍ನಲ್ಲಿರುವ ಅಪಾರ್ಟ್‍ಮೆಂಟ್ ಸಂಕೀರ್ಣದಲ್ಲಿರುವ ರಾಸಾಯನಿಕ ಗೋಡೌನ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ. +ಅಗ್ನಿ ಅವಘಡಕ್ಕೆ ಕಾರಣ ಮತ್ತು ಹಾನಿಯ ಪ್ರಮಾಣ ಇನ್ನೂ ಅಧಿಕೃತವಾಗಿ ತಿಳಿದು ಬರಬೇಕಿದೆ. ಮೊನ್ನೆಯಷ್ಟೇ ಹೈದರಾಬಾದ್‍ನ ಶಾಲಿಬಂಡಾದಲ್ಲಿರುವ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. +ದೇವೇಗೌಡರು, ಎಸ್.ಎಂ.ಕೃಷ್ಣ ಹಾಗೂ ಬೊಮ್ಮಾಯಿ ಭೇಟಿ ಮಾಡಿದ ವಿಜಯೇಂದ್ರ +ಆರು ಅಗ್ನಿಶಾಮಕ ಟೆಂಡರ್‍ಗಳು ಮತ್ತು 30 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ರವಾನಿಸಿದ್ದಾರೆ ಮತ್ತು ಯಶಸ್ವಿಯಾಗಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ವರದಿಯಾಗಿದೆ. \ No newline at end of file diff --git a/eesanje/url_47_236_6.txt b/eesanje/url_47_236_6.txt new file mode 100644 index 0000000000000000000000000000000000000000..5c65685bf3acd0a3499dc482d2beef89acd8059a --- /dev/null +++ b/eesanje/url_47_236_6.txt @@ -0,0 +1,8 @@ +ಶುಕ್ರ, ಮಂಗಳನತ್ತ ಇಸ್ರೋ ಚಿತ್ತ +ಬೆಂಗಳೂರು,ನ.13- ಸೂರ್ಯ, ಚಂದ್ರ ಶಿಕಾರಿ ನಂತರ ಇಸ್ರೋ ಇದೀಗ ಶುಕ್ರ ಮತ್ತು ಮಂಗಳ ಗ್ರಹಗಳ ಮೇಲೆ ಕಣ್ಣಿಟ್ಟಿದೆ. ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭೂಮಿಯ ಗ್ರಹಗಳ ನೆರೆಹೊರೆಯವರ ಮೇಲೆ ತನ್ನ ದೃಷ್ಟಿಯನ್ನು ಇರಿಸಿದೆ ಮತ್ತು ಐದು ವರ್ಷಗಳಲ್ಲಿ ಮಂಗಳ ಮತ್ತು ಶುಕ್ರನಲ್ಲಿ ದೇಶದ ಉಪಸ್ಥಿತಿಯನ್ನು ಗುರುತಿಸುವ ನಿರೀಕ್ಷೆ ಇರಿಸಿಕೊಂಡಿದೆ ಎಂದು ಬೆಂಗಳೂರಿನ ಯುಆರ್ ರಾವ್ ಉಪಗ್ರಹ ಕೇಂದ್ರದ ನಿರ್ದೇಶಕ ಡಾ ಎಂ ಶಂಕರನ್ ತಿಳಿಸಿದ್ದಾರೆ. +ಡಾ ಶಂಕರನ್ ಅವರು ಕಕ್ಷೆಯಲ್ಲಿರುವ ಡಜನ್‍ಗಟ್ಟಲೆ ಭಾರತೀಯ ಉಪಗ್ರಹಗಳ ಹಿಂದೆ ಪವರ್‍ಹೌಸ ಘಟಕದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕೆಲವು ಸವಾಲುಗಳನ್ನು ಗುರುತಿಸಿದ್ದಾರೆ, ಆದರೆ ಮಿಷನ್ ಪರಿಕಲ್ಪನೆಗಳ ಕುರಿತು ಆಂತರಿಕ ಮಾತುಕತೆಗಳು ಈಗಾಗಲೇ ನಡೆಯುತ್ತಿವೆ ಎಂದು ಅವರು ಬಹಿರಂಗಪಡಿಸಿದರು. +ಸಮುದ್ರದಾಳದಿಂದ ತೈಲ ತೆಗೆಯಲು ಮುಂದಾದ ಒಎನ್‍ಜಿಸಿ +ಪ್ರತಿಯೊಂದೂ ತನ್ನದೇ ಆದ ಸವಾಲುಗಳೊಂದಿಗೆ ಬರುತ್ತದೆ, ಉದಾಹರಣೆಗೆ ಮಂಗಳನ ವಾತಾವರಣಕ್ಕೆ ಪ್ರವೇಶಿಸಿದಾಗ ಬಾಹ್ಯಾಕಾಶ ನೌಕೆಯು ಹೆಚ್ಚು ಬಿಸಿಯಾಗುವುದು ಮತ್ತು ಪ್ರತಿ ಕಾರ್ಯಾಚರಣೆಗೆ ಸೂಕ್ತವಾದ ಉಡಾವಣಾ ವಿಂಡೋವನ್ನು ಕಂಡುಹಿಡಿಯುವುದು. ಮಂಗಳ, ಶುಕ್ರ ಅಥವಾ ಅದಕ್ಕೂ ಮೀರಿದ ಕಾರ್ಯಾಚರಣೆಗಳಿಗೆ ಅಗತ್ಯವಾದ ಭಾರವಾದ ಪೇಲೋಡ್‍ಗಳನ್ನು – ಹೆಚ್ಚು ಇಂಧನ, ಹೆಚ್ಚಿನ ಉಪಕರಣಗಳು, ಇತ್ಯಾದಿಗಳನ್ನು ಸಾಗಿಸುವ ಸಾಮಥ್ರ್ಯವನ್ನು ಹೊಂದಿರುವ ಉಡಾವಣಾ ವಾಹನಗಳನ್ನು ಅಭಿವೃದ್ಧಿಪಡಿಸುವಂತಹ ಸಾಮಾನ್ಯ ಲಾಜಿಸ್ಟಿಕಲ್ ಸವಾಲುಗಳಿವೆ ಎಂದಿದ್ದಾರೆ. +ಕಳೆದ ಎರಡು ವರ್ಷಗಳಿಂದ… ನಾವು ಮಂಗಳ ಗ್ರಹದಲ್ಲಿ ಇಳಿಯಲು ಮಿಷನ್ ಕಾನಿಗರೇಶನ್‍ಗಳನ್ನು ಅಧ್ಯಯನ ಮಾಡುತ್ತಿದ್ದೇವೆ. ಎರಡು ವಿಷಯಗಳು ನಮ್ಮನ್ನು ತಡೆಹಿಡಿಯುತ್ತಿವೆ. ಒಂದು ಚಂದ್ರಯಾನ -2 ರ ವಿಫಲ ಲ್ಯಾಂಡಿಂಗ್, ಇದು ಲ್ಯಾಂಡಿಂಗ್‍ಗೆ ಅಗತ್ಯವಾದ ಸಂವೇದಕಗಳ ಮೇಲಿನ ನಮ್ಮ ವಿಶ್ವಾಸವನ್ನು ನಿಧಾನಗೊಳಿಸಿತು. +ಸಂವೇದಕಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ, ಆದರೆ ನಮ್ಮ ಅಂತಿಮ ಗುರಿಯನ್ನು ನಾವು ಸಾಸಲು ಸಾಧ್ಯವಾಗದ ಕಾರಣ ಇವುಗಳು ಸಮರ್ಪಕವಾಗಿವೆಯೇ ಎಂದು ನಮಗೆ ಖಚಿತವಾಗಿರಲಿಲ್ಲ. ಈಗ ನಮಗೆ ಏನು ಮಾಡಬಹುದೆಂದು ತಿಳಿದಿದೆ, ನಾವು ಮುಂದುವರಿಯಬಹುದಾಗಿದೆ ಎಂದು ಡಾ ಶಂಕರನ್ ವಿವರಿಸಿದರು. +ನಮಗೆ ಈಗ ಒಂದು ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ . ಎರಡು-ಮೂರು ವರ್ಷಗಳಲ್ಲಿ ಸುಮಾರು 20-30 ಶೇಕಡಾ ಸಾಮಥ್ರ್ಯದ ಹೆಚ್ಚಳದೊಂದಿಗೆ ನಾವು ಮಂಗಳ ಲ್ಯಾಂಡರ್ ಮಿಷನ್‍ಗಾಗಿ ಯೋಜನೆಯನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_47_236_7.txt b/eesanje/url_47_236_7.txt new file mode 100644 index 0000000000000000000000000000000000000000..abdef78a28ad4f6e5100e685ea4e3341a27e790e --- /dev/null +++ b/eesanje/url_47_236_7.txt @@ -0,0 +1,6 @@ +ಸಮುದ್ರದಾಳದಿಂದ ತೈಲ ತೆಗೆಯಲು ಮುಂದಾದ ಒಎನ್‍ಜಿಸಿ +ನವದೆಹಲಿ, ನ.13 (ಪಿಟಿಐ) ರಾಜ್ಯ ನಿಯಂತ್ರಿತ ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು (ಒಎನ್‍ಜಿಸಿ ) ಬಂಗಾಳಕೊಲ್ಲಿಯ ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ತನ್ನ ಬಹು ವಿಳಂಬವಾದ ಪ್ರಮುಖ ಆಳಸಮುದ್ರದಲ್ಲಿ ತೈಲ ಉತ್ಪಾದನೆ ಯೋಜನೆಯನ್ನು ಈ ತಿಂಗಳು ಪ್ರಾರಂಭಿಸುತ್ತಿದೆ. +ಇದು ಸಂಂಸ್ಥೆಯ ಉತ್ಪಾದನೆಯಲ್ಲಿ ವರ್ಷಗಳ ಕುಸಿತವನ್ನು ಹಿಮ್ಮೆಟ್ಟಿಸಲು ಸಹಾಯ ಮಾಡುತ್ತದೆ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ಈ ತಿಂಗಳು ಉತ್ಪಾದನೆಯನ್ನು ಪ್ರಾರಂಭಿಸಲು ಯೋಜಿಸಿದ್ದೇವೆ ಮತ್ತು ನಿಧಾನವಾಗಿ ರಾಂಪ್ ಮಾಡಲು ಯೋಜಿಸಿದ್ದೇವೆ ಎಂದು ಒಎನ್‍ಜಿಸಿ ನಿರ್ದೇಶಕ (ಉತ್ಪಾದನೆ) ಪಂಕಜ್ ಕುಮಾರ್‍ತಿಳಿಸಿದರು. +ರಿಷಿ ಸುನಕ್ ದಂಪತಿ ಜೊತೆ ಜೈಶಂಕರ್ ದಂಪತಿ ದೀಪಾವಳಿ ಸಂಭ್ರಮ +ತೈಲವನ್ನು ಉತ್ಪಾದಿಸಲು ಬಳಸಲಾಗುವ ಎಫ್‍ಪಿಎಸ್‍ಓ ಎಂಬ ತೇಲುವ ಉತ್ಪಾದನಾ ಘಟಕವು ಈಗಾಗಲೇ ಬ್ಲಾಕ್‍ನಲ್ಲಿದೆ. ಹಲವಾರು ತಪ್ಪಿದ ಗಡುವುಗಳ ನಂತರ, ತನ್ನ ತೇಲುವ ಉತ್ಪಾದನೆ, ಸಂಗ್ರಹಣೆ ಮತ್ತು ಆಫ್‍ಲೋಡಿಂಗ್ ಹಡಗು, ಆರ್ಮಡಾ ಸ್ಟರ್ಲಿಂಗ್ -ವಿ ಈ ತಿಂಗಳು ಮೊದಲ ತೈಲವನ್ನು ಸ್ವೀಕರಿಸಲು ತಯಾರಿ ನಡೆಸಬೇಕೆಂದು ಶಪೂರ್ಜಿ ತೈಲ ಮತ್ತು ಅನಿಲ ಘಟಕಕ್ಕೆ ತಿಳಿಸಿದೆ. +ಕ್ಲಸ್ಟರ್ -2 ರಿಂದ ತೈಲ ಉತ್ಪಾದನೆಯು ನವೆಂಬರ್ 2021 ರ ವೇಳೆಗೆ ಪ್ರಾರಂಭವಾಗಬೇಕಿತ್ತು, ಆದರೆ ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಆರಂಭದಲ್ಲಿ 3 ರಿಂದ 4 ಬಾವಿಗಳನ್ನು ಉತ್ಪಾದಿಸಲು ಪ್ರಾರಂಭಿಸಲು ಮತ್ತು ನಿಧಾನವಾಗಿ ಇತರರನ್ನು ಸಂಪರ್ಕಿಸಲು ಒಎನ್‍ಜಿಸಿ ಯೋಜಿಸಿದೆ ಎಂದು ಕುಮಾರ್ ಹೇಳಿದರು. ಆರಂಭಿಕ ಉತ್ಪಾದನೆಯು ದಿನಕ್ಕೆ 8,000 ರಿಂದ 9,000 ಬ್ಯಾರೆಲ್‍ಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. \ No newline at end of file diff --git a/eesanje/url_47_236_8.txt b/eesanje/url_47_236_8.txt new file mode 100644 index 0000000000000000000000000000000000000000..e88cae3b59193f64e74d507416580f596d009613 --- /dev/null +++ b/eesanje/url_47_236_8.txt @@ -0,0 +1,7 @@ +ಕಮಲ್‍ನಾಥ್ ನಮ್ಮವರಲ್ಲ, ಹೊರಗಿನವರು : ಶಿವರಾಜ್‍ಸಿಂಗ್ ಚೌಹಾಣ್ +ಭೋಪಾಲï.ನ.13-ಯೇ ತೋ ಥಹ್ರೆ ಪರದೇಶಿ, ಸಾಥ್ ಕ್ಯಾ ನಿಭಾಯೇಂಗೆ ಎಂಬ ಜನಪ್ರಿಯ ಹಾಡು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಕಮಲ್‍ನಾಥ್ ನಮ್ಮವರಲ್ಲ ಅವರು ಹೊರಗಿನವರು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕುಹಕವಾಡಿದ್ದಾರೆ. +ಚೌಹಾಣ್ ಅವರು ಭೋಪಾಲ್ ಜಿಲ್ಲೆಯ ಬೆರಾಸಿಯಾ ವಿಧಾನಸಭಾ ಕ್ಷೇತ್ರದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು,ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಅವರು ರಾಜ್ಯಕ್ಕೆ ಹೊರಗಿನವರು ಮತ್ತು ಅವರನ್ನು ನಂಬಲು ಸಾಧ್ಯವಿಲ್ಲ ಎಂದಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಗೊಂದಲ ಸೃಷ್ಟಿಸಿ ಸುಳ್ಳು ಭರವಸೆಗಳನ್ನು ನೀಡಲಿದೆ ಎಂದ ಸಿಎಂ, ಜನ ಈ ಬಾರಿ ತಪ್ಪು ಮಾಡದಂತೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. +ಜನರಿಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದೂ ಅವರು ತಮ್ಮ ಭರವಸೆಗಳನ್ನು ಈಡೇರಿಸುವುದಿಲ್ಲ. ಅದೇನೇ ಇದ್ದರೂ, ಕಮಲ್ ನಾಥ್ ಭಯ್ಯಾ ಮಧ್ಯಪ್ರದೇಶದವರಲ್ಲ. ನಾವು ಇಲ್ಲೇ ಹುಟ್ಟಿದ್ದೇವೆ. ಅವರು (ನಾಥ್) ಎಲ್ಲಿ ಜನಿಸಿದರು, ಹೇಳಿ ಎಂದು ಅವರು ಕೇಳಿದರು. +ತಮಿಳುನಾಡಿನ 7 ಹಳ್ಳಿಗಳಲ್ಲಿ ಶಬ್ದರಹಿತ ದೀಪಾವಳಿ ಆಚರಣೆ +ಜನಪ್ರಿಯ ಹಿಂದಿ ಹಾಡಿನ ಸಾಲನ್ನು ಮಾರ್ಪಡಿಸುತ್ತಾ, ಯೇ ತೋ ಥಹ್ರೆ ಪರದೇಶಿ, ಸಾಥ್ ಕ್ಯಾ ನಿಭಾಯೇಂಗೆ (ಅವರು ಅಪರಿಚಿತರು, ನಮ್ಮೊಂದಿಗೆ ಉಳಿಯುವುದಿಲ್ಲ) ಎಂದು ಹಾಡಿದರು. ನಾಥ್ ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. +ಅಭಿವೃದ್ಧಿ ಕಾರ್ಯಗಳಿಗೆ ನನ್ನ ಬಳಿ ಹಣದ ಕೊರತೆ ಇಲ್ಲ ಎಂದು ನಾನು ಹೇಳುತ್ತಿದ್ದೇನೆ ಎಂದು ಚೌಹಾಣ್ ಹೇಳಿದರು, ಅವರು ಎಲ್ಲಾ ಕೆಲಸಗಳನ್ನು ನಿರ್ವಹಿಸುತ್ತಾರೆ ಎಂದು ಜನರಿಗೆ ಭರವಸೆ ನೀಡಿದರು. \ No newline at end of file diff --git a/eesanje/url_47_236_9.txt b/eesanje/url_47_236_9.txt new file mode 100644 index 0000000000000000000000000000000000000000..8f58af1622803cf8617014fc9475ed169fa8a2fd --- /dev/null +++ b/eesanje/url_47_236_9.txt @@ -0,0 +1,7 @@ +ಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ +ಆಗ್ರಾ,ನ.13- ಉತ್ತರಪ್ರದೇಶದಲ್ಲೋಂದು ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ವರದಿಯಾಗಿದೆ. ಉತ್ತರ ಪ್ರದೇಶದ ಆಗ್ರಾದ ಹೋಟೆಲ್‍ವೊಂದರಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. +ತಡರಾತ್ರಿ ಸಂತ್ರಸ್ತೆಯಿಂದ ತಮಗೆ ಕರೆ ಬಂದಿದ್ದು, ನಂತರ ನಾವು ಹೋಂಸ್ಟೇಗೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ತಾಜ್‍ಗಂಜ್ ಪೊಲೀಸರಿಗೆ ಶ್ರೀಮಂತ ಹೋಂಸ್ಟೇಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಕರೆ ಬಂದಿತು. +ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಸಿಪಿ ಅರ್ಚನಾ ಸಿಂಗ್ ತಿಳಿಸಿದ್ದಾರೆ. ಘಟನೆ ವರದಿಯಾದ ನಂತರ ಒಬ್ಬ ಮಹಿಳೆ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಆಗ್ರಾ ಪೊಲೀಸರು ತಿಳಿಸಿದ್ದಾರೆ. +ರಿಷಿ ಸುನಕ್ ದಂಪತಿ ಜೊತೆ ಜೈಶಂಕರ್ ದಂಪತಿ ದೀಪಾವಳಿ ಸಂಭ್ರಮ +ಹಲ್ಲೆಗೊಳಗಾದವರು ಹೋಟೆಲ್ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ವೈರಲ್ ವೀಡಿಯೊ ಸಂತ್ರಸ್ತೆಯ ಮೇಲೆ ಪುರುಷರ ಗುಂಪೊಂದು ಹಲ್ಲೆ ನಡೆಸುತ್ತಿರುವುದನ್ನು ತೋರಿಸುತ್ತದೆ. ಘಟನೆಯ ನಂತರ ನಾಲ್ವರು ಪುರುಷರು ಮತ್ತು ಮಹಿಳೆಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ಮಾಡಲಾಗುವುದು ಮತ್ತು ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಗ್ರಾ ಸದರ್‍ನ ಸಹಾಯಕ ಪೊಲೀಸ್ ಆಯುಕ್ತ ಅರ್ಚನಾ ಸಿಂಗ್ ತಿಳಿಸಿದ್ದಾರೆ. +ಈ ಸಂಬಂಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಾಯ್ದೆಯಡಿ ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. \ No newline at end of file diff --git a/eesanje/url_47_237_1.txt b/eesanje/url_47_237_1.txt new file mode 100644 index 0000000000000000000000000000000000000000..e46d2bc5353d9a1937334a5c4ed26227e843483c --- /dev/null +++ b/eesanje/url_47_237_1.txt @@ -0,0 +1,5 @@ +ಕಣಿವೆಯಲ್ಲಿ ಗುಂಡಿನ ಚಕಮಕಿ +ರಜೌರಿ, ನ.12 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಗ್ರಾಮ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರು ದಾಳಿಯಲ್ಲಿ ಏಳು ಜನರನ್ನು ಕೊಂದ ಹಳ್ಳಿಯಾದ ಮೇಲಿನ ಧಂಗ್ರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ನಡೆದ ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. +ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ +ಗ್ರಾಮದ ಮನೆಯೊಂದರ ಹೊರಗೆ ಕೆಲವು ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ವಿಡಿಜಿಗಳು ಸುಮಾರು ಎರಡು ಡಜನ್ ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದರು. ಮುಂಜಾಗ್ರತಾ ಕ್ರಮವಾಗಿ ಗ್ರಾಮ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಪೊಲೀಸರು ಮತ್ತು ಸೇನೆಯು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. \ No newline at end of file diff --git a/eesanje/url_47_237_10.txt b/eesanje/url_47_237_10.txt new file mode 100644 index 0000000000000000000000000000000000000000..6c7b8351d01b587e88d8127908efa1743f6cfdde --- /dev/null +++ b/eesanje/url_47_237_10.txt @@ -0,0 +1,6 @@ +80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್ +ಅಮೃತಸರ, ನ.11- ಮೀನುಗಾರಿಕೆ ವೇಳೆ ಅಂತಾರಾಷ್ಟ್ರೀಯ ಗಡಿ ದಾಟಿ ಬಂತರಾಗಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿದೆ.ಪಂಜಾಬ್‍ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಮೀನುಗಾರರನ್ನು ಬರಮಾಡಿಕೊಂಡರು. ಬಿಡುಗಡೆಯಾದ ಮೀನುಗಾರರು ತಮ್ಮ ಅನುಭವವನ್ನು ಎಎನ್‍ಐಗೆ ತಿಳಿಸಿದ್ದು, ಮೀನುಗಾರಿಕೆ ಮಾಡುವಾಗ ತಪ್ಪಾಗಿ ಪಾಕಿಸ್ತಾನದ ಗಡಿ ದಾಟಿದ್ದೇವೆ ಎಂದು ಹೇಳಿದ್ದಾರೆ. +ಪಾಕಿಸ್ತಾನದ ಜೈಲುಗಳಲ್ಲಿ ಬಂಯಾಗಿರುವ ಇತರ ಭಾರತೀಯ ಮೀನುಗಾರರನ್ನೂ ಬಿಡುಗಡೆ ಮಾಡುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.ಮಾಧ್ಯಮದ ಜೊತೆ ಮಾತನಾಡಿದ ಮೀನುಗಾರರೊಬ್ಬರು, ನಾವು ಆಕಸ್ಮಿಕವಾಗಿ ಚಂಡಮಾರುತದ ನಡುವೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿದ್ದೇವೆ. ನಾವು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದೆವು. ನಾವು ಒಟ್ಟು 12 ಜನರಿದ್ದೇವೆ ಮತ್ತು ಈಗ ಎಲ್ಲರೂ ಹಿಂತಿರುಗಿದ್ದಾರೆ ಎಂದರು. +ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್ +ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ನಾನು ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು. +ನಾವು ಗಡಿ ದಾಟಿದಾಗ ನಮಗೆ ಅರ್ಥವಾಗಲಿಲ್ಲ. ಪಾಕಿಸ್ತಾನ ನೌಕಾಪಡೆ ಬಂದು ನಮ್ಮನ್ನು ಬಂಸಿತು. ನಾನು ಬಂದು ಸುಮಾರು 3 ವರ್ಷ, 3 ತಿಂಗಳ ನಂತರ. ನಮ್ಮ ದೋಣಿಗಳನ್ನು ಬಿಡುಗಡೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಅವು ತುಂಬಾ ದುಬಾರಿಯಾಗಿದೆ ಎಂದು ಇನ್ನೊಬ್ಬ ಮೀನುಗಾರ ಹೇಳಿದರು. \ No newline at end of file diff --git a/eesanje/url_47_237_11.txt b/eesanje/url_47_237_11.txt new file mode 100644 index 0000000000000000000000000000000000000000..ea3545c63f8cb2b852c6e00b33d556dd372e929a --- /dev/null +++ b/eesanje/url_47_237_11.txt @@ -0,0 +1,7 @@ +ಮಧ್ಯಪ್ರದೇಶ ಸಿಎಂ ರೇಸ್‍ನಲ್ಲಿ ನಾನಿಲ್ಲ : ಜ್ಯೋತಿರಾದಿತ್ಯ ಸಿಂಧಿಯಾ +ಭೋಪಾಲ್,ನ.11- ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವ ರೇಸ್‍ನಲ್ಲಿ ನಾನಿಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ನಾಗರಿಕ ವಿಮಾನಯಾನ ಸಚಿವರು, ಮುಖ್ಯಮಂತ್ರಿ ಹುದ್ದೆಗೆ ಸ್ರ್ಪಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಏಕೆಂದರೆ ಅವರು ಯಾವಾಗಲೂ ಪಕ್ಷದ ಕಾರ್ಯಕರ್ತರಾಗಿದ್ದಾರೆ ಮತ್ತು ಹಾಗೆಯೇ ಉಳಿಯುತ್ತಾರೆ ಎಂದು ಹೇಳಿದರು. +ಕಾಂಗ್ರೆಸ್‍ನಲ್ಲಿ ಅಕಾರಕ್ಕಾಗಿ ಪೈಪೋಟಿ ನಡೆಸುವ ಜನರಿದ್ದಾರೆ, ಅವರಲ್ಲಿ ಗುಂಪುಗಳಿವೆ, ಅವರು ಮುಖ್ಯಮಂತ್ರಿಯಾಗಲು ಸ್ಕೀಮ್‍ಗಳನ್ನು ಹೊಂದಿದ್ದಾರೆ, ಮತ್ತು ಚುನಾವಣೆಗೆ ಮುನ್ನ ಕಾಂಗ್ರೆಸ್‍ನಲ್ಲಿ ಎಂಟು ನಾಯಕರು ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ನಾವೆಲ್ಲರೂ ಕಾರ್ಯಕರ್ತರು ಮತ್ತು ಹಾಗೆಯೇ ಉಳಿಯುತ್ತೇವೆ ಎಂದು ಸಿಂಧಿಯಾ ತಿಳಿಸಿದ್ದಾರೆ. +ಮಧ್ಯಪ್ರದೇಶದ ಸಂಪೂರ್ಣ ಬಿಜೆಪಿಯು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಯಲ್ಲಿ ಹೋರಾಡುತ್ತಿದೆ… ನಾನು ಈ ರೇಸ್‍ನಲ್ಲಿ (ಮುಖ್ಯಮಂತ್ರಿ ಸ್ಥಾನಕ್ಕಾಗಿ) ಇಲ್ಲ. ನಾನು ಸೇವಕ, ನಾನು ರೇಸ್‍ನಲ್ಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. +ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್ +ನ. 2 ರಂದು ಬಿಜೆಪಿ ನಾಯಕರು ಸಿಂಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಸೇರಿಸದಿರುವ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಸಿಂಧ್ಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಎಂದಿಗೂ ಸೇರಿಸಬೇಡಿ (ಮುಖ್ಯಮಂತ್ರಿ ಸ್ಥಾನವನ್ನು ಉಲ್ಲೇಖಿಸಿ) ಸಿಂಯಾ ಕುಟುಂಬವು ಅಭಿವೃದ್ಧಿ, ಪ್ರಗತಿ ಮತ್ತು ಸಾರ್ವಜನಿಕ ಸೇವೆಯ ಉತ್ಸಾಹದಿಂದ ಹಗಲಿರುಳು ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ. +ಇತರ ಹಿಂದುಳಿದ ವರ್ಗಗಳ (ಒಬಿಸಿ) ಮತದಾರರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿರುವ ಇಂಡಿಯಾ ಒಕ್ಕೂಟದಲ್ಲಿ ಭ್ರಷ್ಟಾಚಾರ ತುಂಬಿತುಳುಕುತ್ತಿದೆ ಎಂದು ಕೇಂದ್ರ ಸಚಿವರು ತಮ್ಮ ಹಿಂದಿನ ಪಕ್ಷವಾದ ಕಾಂಗ್ರೆಸ್‍ಗೆ ತಿರುಗೇಟು ನೀಡಿದರು. \ No newline at end of file diff --git a/eesanje/url_47_237_12.txt b/eesanje/url_47_237_12.txt new file mode 100644 index 0000000000000000000000000000000000000000..5eb78a45704f4a849e34fbdb3956ba68af358f52 --- /dev/null +++ b/eesanje/url_47_237_12.txt @@ -0,0 +1,7 @@ +4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ +ದೌಸಾ,ನ.11- ನಾಲ್ಕು ವರ್ಷದ ಬಾಲಕಿ ಮೇಲೆ ಸಬ್ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅ ಒಬ್ಬ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.ನಾಲ್ಕು ವರ್ಷದ ಬಾಲಕಿಯ ಮೇಲೆ ಎಸ್‍ಐ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಸ್‍ಐನನ್ನು ಥಳಿಸಿದ್ದಾರೆ. +ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಬಂಸಿ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ. +ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು +ಸಮೀಪದಲ್ಲಿ ವಾಸಿಸುವ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‍ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿರುವ ಬಗ್ಗೆ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಸಿಂಗ್ ಹೇಳಿದರು. +ಸುದ್ದಿ ತಿಳಿಯುತ್ತಿದ್ದಂತೆ ರಾಹುವಾಸ್ ಪೊಲೀಸ್ ಠಾಣೆಯ ಸುತ್ತ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ ರು. ಅವರು ಭೂಪೇಂದ್ರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಥಳಿಸಿದರು. +ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಮಾತನಾಡಿ, ಲಾಲ್ಸೋಟ್‍ನಲ್ಲಿ ಏಳು ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅದನ್ನು ಪಡೆಯಲು ನಾನು ಸ್ಥಳಕ್ಕೆ ಬಂದಿದ್ದೇನೆ. ಅಮಾಯಕ ಮಗುವಿಗೆ ನ್ಯಾಯ ಕೊಡಿ ಎಂದ ಬಿಜೆಪಿ ಸಂಸದರು ಬಾಲಕಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿದ್ದಾರೆ. \ No newline at end of file diff --git a/eesanje/url_47_237_2.txt b/eesanje/url_47_237_2.txt new file mode 100644 index 0000000000000000000000000000000000000000..a0d4ee6ac3ad0b46d3e8ae8e7918beb0773b0090 --- /dev/null +++ b/eesanje/url_47_237_2.txt @@ -0,0 +1,6 @@ +ಟ್ರಕ್‍ಗೆ ಕಾರು ಅಪ್ಪಳಿಸಿ ಒಂದೇ ಕುಟುಂಬದ ನಾಲ್ವರ ಸಾವು +ಕೋಟಾ, ನ.12 (ಪಿಟಿಐ) ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಸಂತ್ರಸ್ತರು ಪುಷ್ಕರ್‍ಗೆ ತೆರಳುತ್ತಿದ್ದಾಗ ಹಿಂದೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಅರ್ಗ-ಮಾಲ್ವಾ ಜಿಲ್ಲೆಯ ಗಂಗುಖೇಡಿ ಗ್ರಾಮದ ನಿವಾಸಿಗಳಾದ ದೇವಿ ಸಿಂಗ್ (50), ಅವರ ಪತ್ನಿ ಮಾಂಖೋರ್ ಕನ್ವರ್ (45), ಅವರ ಸಹೋದರ ರಾಜಾರಾಂ (40) ಮತ್ತು ಸೋದರಳಿಯ ಜಿತೇಂದ್ರ (20) ಎಂದು ಗುರುತಿಸಲಾಗಿದೆ. +ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್ +12.30 ರ ಸುಮಾರಿಗೆ ನಾಲ್ವರನ್ನು ಹೊತ್ತೊಯ್ಯುತ್ತಿದ್ದ ಎಸ್‍ಯುವಿ ಹಿಂದೋಲಿ ಪಟ್ಟಣದ ಬಳಿ ಹಿಂದಿನಿಂದ ಹೆವಿ ಡ್ಯೂಟಿ ಟ್ರಕ್‍ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹಿಂದೋಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಮನೋಜ್ ಸಿಕರ್ವಾಲ್ ತಿಳಿಸಿದ್ದಾರೆ. +ಎಸ್‍ಯುವಿ ಬಹುಶಃ ವೇಗವಾಗಿ ಚಲಿಸುತ್ತಿತ್ತು ಮತ್ತು ಮುಂದೆ ಇದ್ದ ಟ್ರಕ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ವಾಹನವು ಅದರೊಳಗೆ ನುಗ್ಗಿತು ಎಂದು ಅವರು ಹೇಳಿದರು. \ No newline at end of file diff --git a/eesanje/url_47_237_3.txt b/eesanje/url_47_237_3.txt new file mode 100644 index 0000000000000000000000000000000000000000..07c21e5bb22c5784f33bf0e9aeba448601141701 --- /dev/null +++ b/eesanje/url_47_237_3.txt @@ -0,0 +1,5 @@ +ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ +ನವದೆಹಲಿ, ನ.12 (ಪಿಟಿಐ) – ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿ ಅಲ್ಲಿನ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಮೋದಿ ಅವರು ದೀಪಾವಳಿಯನ್ನು ಆಚರಿಸಲು ಮಿಲಿಟರಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದುನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. +ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ, ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೂ ಮುನ್ನ ಅವರು ದೀಪಾವಳಿಯ ಶುಭಾಶಯಗಳನ್ನು ಕೋರಿದರು ಮತ್ತು ಜನರಿಗೆ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ಹಾರೈಸಿದರು. +ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ +ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಮೋದಿ ಹೇಳಿದರು. \ No newline at end of file diff --git a/eesanje/url_47_237_4.txt b/eesanje/url_47_237_4.txt new file mode 100644 index 0000000000000000000000000000000000000000..e71c1276b87329fbb1120185f24e8eb5adf277d6 --- /dev/null +++ b/eesanje/url_47_237_4.txt @@ -0,0 +1,6 @@ +ಡ್ರಗ್ಸ್ ದಂಧೆಯಲ್ಲಿ ಸಿಕ್ಕಿಬಿದ್ದ 15 ವರ್ಷದ ಬಾಲಕ +ಭುವನೇಶ್ವರ್, ನ.12 (ಪಿಟಿಐ)- ಹದಿನೈದು ವರ್ಷದ ಬಾಲಕ ಲಕ್ಷಾಂತರ ಮೌಲ್ಯದ ಬ್ರೌನ್ ಶುಗರ್ ಸಾಗಿಸುತ್ತಿದ್ದ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಬಾಲಕಿನ ಬಳಿ ಇದ್ದ 1.26 ಕೆಜಿ ತೂಕದ ಬ್ರೌನ್ ಶುಗರ್ ವಶಪಡಿಸಿಕೊಂಡಿದ್ದ ಆತನನ್ನು ಮೂರು ವರ್ಷಗಳ ಕಾಲ ಬಾಲಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ. +ಜುವೆನೈಲ್ ಜಸ್ಟೀಸ್ ಬೋರ್ಡ್‍ನವರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ (ಎನ್‍ಡಿಪಿಎಸ್) ಕಾಯ್ದೆ 1985 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಹುಡುಗನನ್ನು ಬರ್ಹಾಂಪುರದ ವಿಶೇಷ ಮನೆಯಲ್ಲಿ ಇರಿಸಿದ್ದಾರೆ. +ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸಮಾಲೋಚನೆ, ನಡವಳಿಕೆ ಮಾರ್ಪಾಡು ಚಿಕಿತ್ಸೆ, ಮನೋವೈದ್ಯಕೀಯ ಬೆಂಬಲ ಮತ್ತು ತಂಗಿರುವ ಅವಯಲ್ಲಿ ಚಿಕಿತ್ಸೆ ಸೇರಿದಂತೆ ಸುಧಾರಣಾ ಸೇವೆಗಳನ್ನು ಒದಗಿಸಲು ಮನೆಗೆ ನಿರ್ದೇಶಿಸಿದೆ. ಆಗಸ್ಟ್ 12, 2021 ರಂದು ಖುರ್ಧಾ ಬಸ್ ನಿಲ್ದಾಣದ ಬಳಿ 1.26 ಕೆಜಿ ಬ್ರೌನ್ ಶುಗರ್‍ನೊಂದಿಗೆ ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯಿಂದ ಬಾಲಕ ಇತರ ಮೂವರ ಜೊತೆಗೆ ಸಿಕ್ಕಿಬಿದ್ದಿದ್ದಾನೆ. +ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್ +ಹುಡುಗನಿಗೆ ಶಿಕ್ಷೆ ವಿಧಿಸುವ ಮೊದಲು ಹನ್ನೊಂದು ಸಾಕ್ಷಿಗಳು ಮತ್ತು ಇತರ ಸಾಕ್ಷ್ಯಗಳನ್ನು ಮಂಡಳಿಯು ಪರಿಶೀಲಿಸಿತು. ವಯಸ್ಕರಾದ ಉಳಿದ ಆರೋಪಿಗಳ ವಿಚಾರಣೆ ಸದ್ಯಕ್ಕೆ ನಡೆಯುತ್ತಿದೆ. \ No newline at end of file diff --git a/eesanje/url_47_237_5.txt b/eesanje/url_47_237_5.txt new file mode 100644 index 0000000000000000000000000000000000000000..085c04e2ed83e512d2bf70d82dc90dd4e60af30d --- /dev/null +++ b/eesanje/url_47_237_5.txt @@ -0,0 +1,5 @@ +ಶರದ್‍ ಪವಾರ್ ಅಸ್ವಸ್ಥ +ಪುಣೆ, ನ.12 (ಪಿಟಿಐ) ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅಸ್ವಸ್ಥಗೊಂಡಿದ್ದಾರೆ. ಅವರು ಮಹಾರಾಷ್ಟ್ರದ ಪುಣೆ ಜಿಲ್ಲೆಯ ತಮ್ಮ ಸ್ವಗ್ರಾಮ ಬಾರಾಮತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾಗ ಅಸ್ವಸ್ಥಗೊಂಡಿದ್ದಾರೆ ಮತ್ತು ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. +ಪವಾರ್ ಅವರು ಶನಿವಾರ ಸಂಜೆ ತಮ್ಮ ಕುಟುಂಬದ ನಿಯಂತ್ರಣದಲ್ಲಿರುವ ವಿದ್ಯಾ ಪ್ರತಿಷ್ಠಾನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು, ಅವರು ಅಸ್ವಸ್ಥರಾಗಿದ್ದರು ಮತ್ತು ತಕ್ಷಣ ವೈದ್ಯರು ಪರೀಕ್ಷಿಸಿದರು ಎಂದು ಅವರು ಹೇಳಿದರು. +ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ +82 ವರ್ಷದ ನಾಯಕ ದೀಪಾವಳಿಗೆ ಬಾರಾಮತಿಯಲ್ಲಿದ್ದರು. ಇಂದು ಅವರ ಪುಣೆ ಜಿಲ್ಲೆಯ ಪುರಂದರ ಅವರ ನಿಗದಿತ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. \ No newline at end of file diff --git a/eesanje/url_47_237_6.txt b/eesanje/url_47_237_6.txt new file mode 100644 index 0000000000000000000000000000000000000000..cd79e130b4a0ff883e1434555fc982411c38658f --- /dev/null +++ b/eesanje/url_47_237_6.txt @@ -0,0 +1,7 @@ +ಅಪ್ರಾಪ್ರೆ ಮೇಲೆ ಅತ್ಯಾಚಾರವೆಸಗಿದ್ದ ಎಸ್‍ಐ ಸೇವೆಯಿಂದ ವಜಾ +ಜೈಪುರ,ನ.12- ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಎಸ್‍ಐ ನನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಎಸ್‍ಸಿ/ಎಸ್‍ಟಿ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಮತ್ತು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. +ಐಜಿ ಉಮೇಶ್ ದತ್ತಾ ಅವರು ಸಬ್ ಇನ್ಸ್‍ಪೆಕ್ಟರ್ ಭೂಪೇಂದ್ರ ಸಿಂಗ್ ಅವರಿಗೆ ಶನಿವಾರ ವಜಾ ಪತ್ರ ನೀಡಿದ್ದಾರೆ ಎಂದು ಡಿಜಿಪಿ ಉಮೇಶ್ ಮಿಶ್ರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರನ್ನು ವಜಾಗೊಳಿಸಲು ಶುಕ್ರವಾರ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. +ಪ್ರಕರಣ ಬೆಳಕಿಗೆ ಬಂದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕುರಿತು ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದ್ದು, ಕೇಂದ್ರವು ಬೇಟಿ ಬಚಾವೋ ನಲ್ಲಿ ನಂಬಿಕೆ ಇಟ್ಟಿದ್ದರೆ, ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಆಡಳಿತವು ಅತ್ಯಾಚಾರಿಗಳು ಬಚಾವೋ ಆಗಿದೆ ಎಂದು ಆರೋಪಿಸಿದೆ. +ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್ +ಈ ಘಟನೆಯನ್ನು ಖಂಡಿಸಿರುವ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ, ಇದು ಇಡೀ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ ಮತ್ತು ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾ ಅವರಿಗೆ ಸೂಚಿಸಿದ್ದಾರೆ. +ಅಪ್ರಾಪ್ತ ಬಾಲಕಿಯನ್ನು ಸಬ್ ಇನ್ಸ್‍ಪೆಕ್ಟರ್ ಕೋಣೆಗೆ ಕರೆದೊಯ್ದು ಶುಕ್ರವಾರ ಮಧ್ಯಾಹ್ನ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಶುಕ್ರವಾರವೇ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಅವರ ದುಷ್ಕøತ್ಯದ ವರದಿಯನ್ನು ಮುಂದಿನ ಕ್ರಮಕ್ಕಾಗಿ ಜೈಪುರ ಗ್ರಾಮಾಂತರದ ಐಜಿಪಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_237_7.txt b/eesanje/url_47_237_7.txt new file mode 100644 index 0000000000000000000000000000000000000000..037da4c56cce5a5e00e2ac611efacd8469ef01b6 --- /dev/null +++ b/eesanje/url_47_237_7.txt @@ -0,0 +1,8 @@ +ಐಸಿಎಸ್ ಸಂಪರ್ಕ ಹೊಂದಿದ್ದ ನಾಲ್ವರ ಬಂಧನ +ಲಕ್ನೋ,ನ.12- ಐಸಿಸ್‍ನ ಅಲಿಗಢ ಘಟಕದೊಂದಿಗೆ ನಂಟು ಹೊಂದಿದ್ದ ನಾಲ್ವರನ್ನು ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಭಯೋತ್ಪಾದನಾ ನಿಗ್ರಹ ದಳದವರು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಬಿಟೆಕ್ ಮತ್ತು ಎಂಟೆಕ್ ಪದವೀಧರರಾಗಿರುವ 29 ವರ್ಷದ ರಕೀಬ್ ಇಮಾಮ್ ಅನ್ಸಾರಿಯನ್ನು ಅಲಿಘರ್‍ನಿಂದ ಬಂಧಿಸಿದೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ. +ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ನಾವೇದ್ ಸಿದ್ದಿಕಿ (23)ನನ್ನು ಎಟಿಎಸ್ ಬಂಧಿಸಿದೆ; ಮೊಹಮ್ಮದ್ ನೋಮನ್ (27), ವಿಶ್ವವಿದ್ಯಾನಿಲಯದಿಂದ ಬಿಎ (ಆನರ್ಸ್) ಮತ್ತು 23 ವರ್ಷದ ಮೊಹಮ್ಮದ್ ನಜೀಮ,ನನ್ನು ಸಂಭಾಲ್‍ನಿಂದ ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಐಸಿಸ್ ಸಾಹಿತ್ಯ, ಮೊಬೈಲ್ ಫೋನ್‍ಗಳು ಮತ್ತು ಪೆನ್ ಡ್ರೈವ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಟಿಎಸ್ ಸೇರಿಸಲಾಗಿದೆ. +ಆರೋಪಿಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‍ಗೆ ಸಂಪರ್ಕ ಹೊಂದಿದ್ದಾರೆ ಮತ್ತು ಹಿಂಸಾತ್ಮಕ ಭಯೋತ್ಪಾದಕ ಜಿಹಾದ್ ಮೂಲಕ ಚುನಾಯಿತ ಸರ್ಕಾರವನ್ನು ಉರುಳಿಸಲು ಮತ್ತು ಷರಿಯಾ ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಐಸಿಸ್‍ಗೆ ಸಂಬಂಧಿಸಿದ ಸಾಹಿತ್ಯವನ್ನು ಸಮಾನ ಮನಸ್ಕ ಜನರಲ್ಲಿ ಹಂಚುತ್ತಿದ್ದರು ಮತ್ತು ಅವರನ್ನು ಭಯೋತ್ಪಾದಕ ಗುಂಪಿನೊಂದಿಗೆ ಸಂಯೋಜಿಸುತ್ತಿದ್ದರು ಎಂದು ಪ್ರಕಟಣೆ ತಿಳಿಸಿದೆ. +ಪಕ್ಷಗಳಲ್ಲಿ ಗುಂಪುಗಳು ಇರೋದು ಸಹಜ : ಸತೀಸ್ ಜಾರಕಿಹೊಳಿ +ಅವರು ಆನ್‍ಲೈನ್ ಪ್ಲಾಟ್‍ಫಾರ್ಮ್‍ಗಳ ಮೂಲಕ ಭಯೋತ್ಪಾದನೆ ಜಿಹಾದ್‍ಗಾಗಿ ಜನರನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸಿದ್ಧಪಡಿಸುತ್ತಿದ್ದರು ಮತ್ತು ರಾಜ್ಯ ಮತ್ತು ದೇಶದಲ್ಲಿ ಪ್ರಮುಖ ಕ್ರಮವನ್ನು ಕೈಗೊಳ್ಳಲು ಯೋಜಿಸಿದ್ದಾರೆ ಎಂದು ಅದು ಹೇಳಿದೆ. ನಾಲ್ವರು ಆರೋಪಿಗಳು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಭೆಯ ಸಮಯದಲ್ಲಿ ಪರಸ್ಪರ ಸಂಪರ್ಕಕ್ಕೆ ಬಂದರು – ವಿದ್ಯಾರ್ಥಿಗಳ ಒಕ್ಕೂಟ – ಮತ್ತು ಹೊಸ ಜನರನ್ನು ಐಸಿಸ್‍ನೊಂದಿಗೆ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದರು. +ಈ ತಿಂಗಳ ಆರಂಭದಲ್ಲಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಟಿಎಸ್) ಮೋಹಿತ್ ಅಗರ್ವಾಲï, ಐಸಿಸ್‍ನಿಂದ ಪ್ರಭಾವಿತರಾದ ಕೆಲವು ಮೂಲಭೂತವಾದಿಗಳು ದೇಶ ವಿರೋ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಸಮಾನ ಮನಸ್ಕ ಜನರ ಜಿಹಾದಿ ಗುಂಪನ್ನು ರಚಿಸುತ್ತಿದ್ದಾರೆ ಎಂದು ಘಟಕಕ್ಕೆ ಸುಳಿವು ಸಿಕ್ಕಿದೆ ಎಂದು ಹೇಳಿದ್ದರು. ಅವರು ಉತ್ತರ ಪ್ರದೇಶದಲ್ಲಿ ದೊಡ್ಡ ದಾಳಿ ನಡೆಸಲು ಯೋಜಿಸಿದ್ದರು ಎಂದು ಅವರು ಹೇಳಿದ್ದಾರೆ. +ನಂತರ ಪೊಲೀಸರು ಅಬ್ದುಲ್ಲಾ ಅರ್ಸಲಾನ್, ಮಾಜ್ ಬಿನ್ ತಾರಿಕ್ ಮತ್ತು ವಜಿಯುದಿನ್ ಅವರನ್ನು ಬಂಧಿಸಿದರು, ಅವರು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆಂದು ಹೇಳಲಾಗಿದೆ. ಶುಕ್ರವಾರ ಮತ್ತು ಶನಿವಾರ ಬಂಧಿತ ನಾಲ್ವರು ಆರೋಪಿಗಳ ಬಗ್ಗೆ ಮೂವರನ್ನು ವಿಚಾರಣೆ ನಡೆಸಿದಾಗ ಸಿಕ್ಕ ಮಾಹಿತಿ ಮೇಲೆ ಈ ನಾಲ್ವರನ್ನು ಬಂಧಿಸಲಾಗಿದೆ. \ No newline at end of file diff --git a/eesanje/url_47_237_8.txt b/eesanje/url_47_237_8.txt new file mode 100644 index 0000000000000000000000000000000000000000..3ebc916d122704d29f039652224286ab7c4193d0 --- /dev/null +++ b/eesanje/url_47_237_8.txt @@ -0,0 +1,6 @@ +ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್ +ಮುಂಬೈ.ನ.12- ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ದುರುಪಯೋಗ ಮತ್ತು ರಾಜ್ಯದ ಬೊಕ್ಕಸಕ್ಕೆ 7.61 ಕೋಟಿ ನಷ್ಟ ಉಂಟು ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಮಾಜಿ ಸಚಿವ ಸೇರಿದಂತೆ ಎಂಟು ಜನರ ವಿರುದ್ಧ ನವಿ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. +ಎಪಿಎಂಸಿ ನಿಯಂತ್ರಣಕ್ಕೆ ಒಳಪಡುವ ಪ್ರದೇಶಗಳಲ್ಲಿ ಶೌಚಾಲಯ ನಿರ್ಮಾಣದ ಗುತ್ತಿಗೆಯನ್ನು ಕೆಲವು ಸಂಸ್ಥೆಗಳಿಗೆ ಒಲವು ತೋರುವ ಮೂಲಕ ನೀಡಲಾಗಿದೆ ಎಂಬ ಆರೋಪ ಮಾಡಲಾಗಿದೆ ಎಂದು ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ. +ವಿಜಯೇಂದ್ರ ನೇಮಕ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ +2005 ಮತ್ತು 2022 ರ ನಡುವೆ ಆರೋಪಿಗಳು ಎಪಿಎಂಸಿ ನಿರ್ವಹಣೆಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ ವಿತ್ತೀಯ ನಷ್ಟವನ್ನು ಉಂಟುಮಾಡಿದ್ದಾರೆ ಎಂದು ಪೊಲೀಸರು ದಾಖಲಿಸಿದ ಎಫ್‍ಐಆರ್‍ನಲ್ಲಿ ತಿಳಿಸಿದ್ದಾರೆ. +ಸರ್ಕಾರಿ ಲೆಕ್ಕ ಪರಿಶೋಧನಾ ತಂಡದ ದೂರಿನ ಆಧಾರದ ಮೇಲೆ, ಮಾಜಿ ಸಚಿವರು, ಎಪಿಎಂಸಿಯ ಕೆಲವು ನಿವೃತ್ತ ಮತ್ತು ಹಾಲಿ ಅಧಿಕಾರಿಗಳು ಸೇರಿದಂತೆ ಎಂಟು ಜನರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406, 409 (ಕ್ರಿಮಿನಲ್ ನಂಬಿಕೆ ದ್ರೋಹ), 420 (ವಂಚನೆ) ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಲಾಗಿದೆ. ) ಮತ್ತು 34 (ಸಾಮಾನ್ಯ ಉದ್ದೇಶ) ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳು ಎಂದು ಪೊಲೀಸರು ತಿಳಿಸಿದ್ದಾರೆ. \ No newline at end of file diff --git a/eesanje/url_47_237_9.txt b/eesanje/url_47_237_9.txt new file mode 100644 index 0000000000000000000000000000000000000000..b9522aeca556ed9b4e26eaed3682d988528f19f7 --- /dev/null +++ b/eesanje/url_47_237_9.txt @@ -0,0 +1,6 @@ +ಲಾಲು ಪ್ರಸಾದ್ ಯಾದವ್ ಸಹವರ್ತಿ ಸೆರೆ +ನವದೆಹಲಿ, ನ.11- (ಪಿಟಿಐ) ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಸಹವರ್ತಿ ಅಮಿತ್ ಕತ್ಯಾಲ್ ಎಂಬುವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಕೃತ ಮೂಲಗಳು ತಿಳಿಸಿವೆ. +ಕತ್ಯಾಲ್ ಅವರನ್ನು ಶುಕ್ರವಾರ ಏಜೆನ್ಸಿ ವಶಕ್ಕೆ ತೆಗೆದುಕೊಂಡಿತು ಮತ್ತು ವಿಚಾರಣೆಯ ನಂತರ ಬಂಸಲಾಯಿತು ಎನ್ನಲಾಗಿದ್ದು, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಡಿ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಸುಮಾರು ಎರಡು ತಿಂಗಳ ಕಾಲ ವಿಚಾರಣೆಗಾಗಿ ಏಜೆನ್ಸಿಯ ಸಮನ್ಸ್ನಿಂದ ಕತ್ಯಾಲ್ ತಪ್ಪಿಸಿಕೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ತನ್ನ ವಿರುದ್ಧದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. +80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್ +ಲಾಲು ಪ್ರಸಾದ್, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಹೋದರಿಯರು ಮತ್ತು ಇತರರ ಆವರಣಗಳ ಮೇಲೆ ಏಜೆನ್ಸಿಯು ಮಾರ್ಚ್ನಲ್ಲಿ ಕಟ್ಯಾಲ್ನ ಆವರಣದ ಮೇಲೆ ದಾಳಿ ನಡೆಸಿತು. ಇಡಿ ಪ್ರಕಾರ ಕತ್ಯಾಲ್ ಅವರು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಸುಪ್ರೀಂ ಲಾಲೂ ಅವರ ಆಪ್ತ ಸಹವರ್ತಿ ಮತ್ತು ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ನ ಮಾಜಿ ನಿರ್ದೇಶಕರಾಗಿದ್ದಾರೆ. +ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ ಪ್ರಕರಣದಲ್ಲಿ ಫಲಾನುಭವಿ ಕಂಪನಿ ಎಂದು ಹೇಳಲಾಗಿದೆ ಮತ್ತು ಅದರ ನೋಂದಾಯಿತ ವಿಳಾಸವು ದಕ್ಷಿಣ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಕಟ್ಟಡವಾಗಿದೆ, ಇದನ್ನು ತೇಜಸ್ವಿ ಯಾದವ್ ಬಳಸುತ್ತಿದ್ದರು.ಲಾಲೂ ಪ್ರಸಾದ್ ಅವರು ಯುಪಿಎ-1 ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದ ಅವಗೆ ಸಂಬಂಧಿಸಿದ ಹಗರಣವಾಗಿದೆ. \ No newline at end of file diff --git a/eesanje/url_47_238_1.txt b/eesanje/url_47_238_1.txt new file mode 100644 index 0000000000000000000000000000000000000000..b47a9f31325a41beb474daa2fd98c71224254d74 --- /dev/null +++ b/eesanje/url_47_238_1.txt @@ -0,0 +1,7 @@ +ಜೈ ಶ್ರೀರಾಮ್ ಘೋಷಣೆ ಏಕತೆಯ ಸಂಕೇತ : ಜಾವೇದ್ ಅಖ್ತರ್ +ಮುಂಬೈ,ನ.11- ಧರ್ಮ ಮತ್ತು ರಾಜಕೀಯದ ಬಗ್ಗೆ ಬಹಿರಂಗ ಅಭಿಪ್ರಾಯಗಳಿಗೆ ಹೆಸರಾಗಿರುವ ಬಾಲಿವುಡ್ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಜೈ ಶ್ರೀರಾಮ್ ಘೋಷಣೆ ಏಕತೆಗೆ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ. +ಮುಂಬೈನಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆಯೋಜಿಸಿದ್ದ ದೀಪೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮ ಮತ್ತು ಸೀತೆ ಆದರ್ಶ ಸತಿ-ಪತಿಗಳಾಗಿದ್ದರು ಎಂದು ಬಣ್ಣಿಸಿದ್ದಾರೆ. +ಅನೇಕ ದೇವತೆಗಳಿದ್ದಾರೆ, ಆದರೆ ನಾವು ಆದರ್ಶ ಪತಿ ಮತ್ತು ಆದರ್ಶ ಪತ್ನಿಯ ಬಗ್ಗೆ ಮಾತನಾಡುವಾಗ, ರಾಮ ಮತ್ತು ಸೀತೆ ನೆನಪಿಗೆ ಬರುತ್ತಾರೆ. ಜೈ ಶ್ರೀರಾಮ್ ಘೋಷಣೆ ಪ್ರೀತಿ ಮತ್ತು ಏಕತೆಗೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಅಖ್ತರ್ ಹೇಳಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023) +ಅವರು ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಕ್ಷೀಣಿಸುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೆಲವರು ಯಾವಾಗಲೂ ಅಸಹಿಷ್ಣುತೆ ಹೊಂದಿರುತ್ತಾರೆ ಆದರೆ, ಹಿಂದೂಗಳು ಹಾಗಲ್ಲ, ಅವರ ವಿಶೇಷತೆ ಎಂದರೆ ಅವರು ಉದಾರ ಮತ್ತು ದೊಡ್ಡ ಹೃದಯ. +ಇದು ಹಿಂದೂ ಸಂಸ್ಕøತಿ, ಇದು ನಾಗರಿಕತೆ. ಇದು ನಮಗೆ ಪ್ರಜಾಸತ್ತಾತ್ಮಕ ಧೋರಣೆಗಳನ್ನು ಕಲಿಸಿದೆ. ಆದ್ದರಿಂದ ಪ್ರಜಾಪ್ರಭುತ್ವವಿದೆ. ಈ ದೇಶದಲ್ಲಿ ನಾವು ಸರಿ ಮತ್ತು ಎಲ್ಲರೂ ತಪ್ಪು ಎಂದು ಯೋಚಿಸುವುದು ಹಿಂದೂಗಳ ಕೆಲಸವಲ್ಲ ಎಂದಿದ್ದಾರೆ ಆಖ್ತರ್. ಭಗವಾನ್ ರಾಮ ಮತ್ತು ಸೀತೆ ಕೇವಲ ಹಿಂದೂ ದೇವರು ಮತ್ತು ದೇವತೆಗಳಲ್ಲ ಅವರು ಭಾರತದ ಸಾಂಸ್ಕೃತಿಕ ಪರಂಪರೆ ಎಂದು ಗೀತರಚನೆಕಾರರು ಸೇರಿಸಿದ್ದಾರೆ. \ No newline at end of file diff --git a/eesanje/url_47_238_10.txt b/eesanje/url_47_238_10.txt new file mode 100644 index 0000000000000000000000000000000000000000..413a340477a186cb6f476d22901283d0e8ad088f --- /dev/null +++ b/eesanje/url_47_238_10.txt @@ -0,0 +1,6 @@ +ದೀಪಾವಳಿಯಲ್ಲಿ ಸ್ಥಳೀಯ ಉತ್ಪನ್ನ ಖರೀದಿಸಿ ಸೆಲ್ಫಿ ಕಳುಹಿಸಿ : ಮೋದಿ +ನವದೆಹಲಿ, ನ.9- ಈ ದೀಪಾವಳಿಯಲ್ಲಿ ಸ್ಥಳೀಯವಾಗಿ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ನಂತರ ಆ ಉತ್ಪನ್ನ ಅಥವಾ ಅದರ ತಯಾರಕರೊಂದಿಗೆ ಸೆಲ್ಫಿಯನ್ನು ಕ್ಲಿಕ್ಕಿಸಿ, ನಮೋ ಆ್ಯಪ್‍ನಲ್ಲಿ ಪೋಸ್ಟ್ ಮಾಡಿ ಎಂದು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. +ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಸಂದೇಶವನ್ನು ಪ್ರಧಾನಿ ಪ್ರಕಟಿಸಿದ್ದಾರೆ. ಈ ದೀಪಾವಳಿಯಲ್ಲಿ ನಮೋ ಅಪ್ಲಿಕೇಷನ್‍ನಲ್ಲಿ#VocalForLocalಥ್ರೆಡ್‍ಗಳೊಂದಿಗೆ ನಿಮ್ಮ ಸೆಲ್ಫಿಯನ್ನು ಪೋಸ್ಟ್ ಮಾಡಿ. ಭಾರತದ ಉದ್ಯಮಶೀಲತೆ ಮತ್ತು ಸೃಜನಶೀಲ ಮನೋಭಾವ ಹಬ್ಬದ ಸಂದರ್ಭದಲ್ಲಿ ಎತ್ತಿ ಹಿಡಿಯೋಣ ಎಂದು ಮೋದಿ ಹೇಳಿದ್ದಾರೆ. +ಈ ಅಭಿಯಾನ ಗಟ್ಟಿಗೊಳಿಸಲು, ಸಕಾರಾತ್ಮಕ ಮನೋಭಾವವನ್ನು ಹರಡಲು ನಿಮ್ಮ ಸ್ನೇಹಿತರು ಮತ್ತು ಕುಟುಂಬವನ್ನು ಆಹ್ವಾನಿಸಿ ಎಂದೂ ಕರೆ ನೀಡಿದ್ದಾರೆ. ಸ್ಥಳೀಯ ಪ್ರತಿಭೆಗಳನ್ನು ಬೆಂಬಲಿಸಲು ಡಿಜಿಟಲ್ ಮಾಧ್ಯಮದ ಶಕ್ತಿಯನ್ನು ಬಳಸೋಣ. ನಮ್ಮ ಜತೆಗಿನ ಭಾರತೀಯರ ಸೃಜನಶೀಲತೆಯನ್ನು ಪ್ರೋತ್ಸಾಹಿಸೋಣ ಮತ್ತು ನಮ್ಮ ಸಂಪ್ರದಾಯಗಳನ್ನು ಪ್ರವರ್ಧಮಾನಕ್ಕೆ ತರೋಣ ಎಂದು ಅವರು ಸಲಹೆ ನೀಡಿದ್ದಾರೆ. +ಅಕ್ಟೋಬರ್‍ನ ಮನ್ ಕಿ ಬಾತ್ ಕಾರ್ಯಕ್ರಮದಲ್ಲೂ ಸ್ವದೇಶಿ ಉತ್ಪನ್ನಗಳನ್ನು ಮೋದಿ ಬೆಂಬಲಿಸಿದ್ದರು. ಸ್ಥಳೀಯರಿಗೆ ಧ್ವನಿಯಾಗಲು ಅವರು ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಹಬ್ಬ ಹರಿದಿನಗಳಲ್ಲಿ ವೋಕಲ್ ಫಾರ್ ಲೋಕಲï ನಮ್ಮ ಆದ್ಯತೆಯಾಗಬೇಕು ಎಂದು ಹೇಳಿದ್ದರು. +ನೀವು ಪ್ರವಾಸ ಅಥವಾ ತೀರ್ಥಯಾತ್ರೆಗೆ ಹೋದಲ್ಲಾ ಸ್ಥಳೀಯ ಕುಶಲಕರ್ಮಿಗಳಿಂದ ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಎಂದು ನಾನು ನನ್ನ ವಿನಂತಿಯನ್ನು ಪುನರುಚ್ಚರಿಸಲು ಬಯಸುತ್ತೇನೆ ಎಂದಿದ್ದರು.ವಹಿವಾಟಿನ ಸಮಯದಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಳಸುವಂತೆ ನಾಗರಿಕರನ್ನು ಪ್ರಧಾನಿ ಒತ್ತಾಯಿಸಿದ್ದಾರೆ. ಸ್ಥಳೀಯ ಉತ್ಪನ್ನಗಳನ್ನು ಖರೀದಿಸುವುದರಿಂದ ಕುಶಲಕರ್ಮಿಗಳಿಗೆ ಮುಂಬರುವ ದೀಪಾವಳಿ ಹಬ್ಬದ ಹೊಳಪು ಹರಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. \ No newline at end of file diff --git a/eesanje/url_47_238_11.txt b/eesanje/url_47_238_11.txt new file mode 100644 index 0000000000000000000000000000000000000000..a72e2e4263791c516cc245a1f13a67131a8736bf --- /dev/null +++ b/eesanje/url_47_238_11.txt @@ -0,0 +1,7 @@ +ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನ ಹತ್ಯೆ +ಶ್ರೀನಗರ,ನ.9- ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‍ನ ಕಥೋಹಾಲನ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್‍ಫ್ರಂಟ್‍ನೊಂದಿಗೆ (ಟಿಆರ್‍ಎಫ್) ಸಂಪರ್ಕ ಹೊಂದಿದ್ದ ಭಯೋತ್ಪಾದಕನೊಬ್ಬ ಸಾವನ್ನಪ್ಪಿದ್ದಾನೆ. ಹತ್ಯೆಗೀಡಾದ ಭಯೋತ್ಪಾದಕನನ್ನು ಮೈಸರ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. +ಭಯೋತ್ಪಾದಕ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‍ಎಫ್) ನೊಂದಿಗೆ ಸಂಬಂಧ ಹೊಂದಿದ್ದನು ಎಂದು ಕಾಶ್ಮೀರ ವಲಯ ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‍ಐ ವರದಿ ಮಾಡಿದೆ. ಹತ್ಯೆಯಾದ ಭಯೋತ್ಪಾದಕನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ಇನ್ನಿತರ ಭಯೋತ್ಪಾದನೆ ನಡೆಸಲು ಸಂಚು ರೂಪಿಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂಬ ಮಾಹಿತಿಯನ್ನು ಅಧಿಕಾರಿ ನೀಡಿದ್ದಾರೆ. +ದಕ್ಷಿಣ ಕಾಶ್ಮೀರ ಜಿಲ್ಲೆಯ ಕಥೋಹಲನ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ನೀಡಿದ ನಂತರ ಭದ್ರತಾ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಮೊದಲು ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು, ಬಳಿಕ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರನನ್ನು ಸದೆಬಡಿಯಲಾಗಿದೆ. +ವಾಯಮಾಲಿನ್ಯ ತಡೆಗಟ್ಟಲು ನ.20 ರಂದು ನವದೆಹಲಿಯಲ್ಲಿ ಕೃತಕ ಮಳೆ +ಪ್ರತ್ಯೇಕ ಘಟನೆಯಲ್ಲಿ ಇಂದು ಮುಂಜಾನೆ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‍ನಲ್ಲಿ ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಪಾಕಿಸ್ತಾನಿ ರೇಂಜರ್‍ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿ ತೀವ್ರ ಕಟ್ಟೆಚ್ಚರವಹಿಸಿದ್ದಾರೆ. +ಅಕ್ಟೋಬರ್ 30ರಿಂದ ಸತತ ಮೂರು ದಿನಗಳಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ ತಲಾ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. \ No newline at end of file diff --git a/eesanje/url_47_238_12.txt b/eesanje/url_47_238_12.txt new file mode 100644 index 0000000000000000000000000000000000000000..45037e0f72a6da60b7c95cdff8dd368e8719e521 --- /dev/null +++ b/eesanje/url_47_238_12.txt @@ -0,0 +1,7 @@ +ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ರೇಡ್ +ಹೈದರಾಬಾದ್ , ನ.9 (ಪಿಟಿಐ)- ಇದೇ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಖಮ್ಮಂ ಜಿಲ್ಲೆಯ ಪಲೈರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ರ್ಪಧಿಸಿರುವ ಶ್ರೀನಿವಾಸ್ ರೆಡ್ಡಿ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. +ಈ ಐಟಿ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ನಾಯಕನ ಅನುಯಾಯಿಗಳು ಖಮ್ಮಂನಲ್ಲಿ ಪ್ರತಿಭಟಿಸಿ ಘೋಷಣೆಗಳನ್ನು ಕೂಗಿದರು. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಂತಹ ಕೇಂದ್ರ ಏಜೆನ್ಸಿಗಳು ತನ್ನನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಹುದು ಎಂದು ರೆಡ್ಡಿ ನಿನ್ನೆಯಷ್ಟೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು. +ಕಳೆದ ಹಲವು ದಿನಗಳಿಂದ ಕೇಂದ್ರ ಏಜೆನ್ಸಿಗಳು ಕಾಂಗ್ರೆಸ್ ನಾಯಕರ ಮೇಲೆ ತಮ್ಮ ಮನೆ ಶೋಧನೆಯನ್ನು ಕೇಂದ್ರೀಕರಿಸುತ್ತಿವೆ ಎಂದು ರೆಡ್ಡಿ ಆರೋಪಿಸಿದ್ದಾರೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‍ಎಸ್ ಸರ್ಕಾರ ಮತ್ತು ಬಿಜೆಪಿ ನಾಯಕರುಗಳು ಕಾಂಗ್ರೆಸ್ ಪಕ್ಷದ ನಾಯಕರ ಮೇಲಿನ ದಾಳಿಯಲ್ಲಿ ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. +“ಬಡತನ ಏಕೈಕ ಜಾತಿ ಎನ್ನುವ ಮೋದಿ ಒಬಿಸಿ ಎಂದು ಗುರುತಿಕೊಳ್ಳುವುದೇಕೆ..?” +ಕೇಂದ್ರ ತನಿಖಾ ತಂಡಗಳು ನನಗೆ ಮತ್ತು ನನ್ನ ಕಂಪನಿಗಳಿಗೆ ತೊಂದರೆ ಉಂಟುಮಾಡುವ ಕಾರಣ ಯಾವುದೇ ಚಟುವಟಿಕೆಯನ್ನು ಆಶ್ರಯಿಸದಂತೆ ನಾನು ವಿನಂತಿಸುತ್ತೇನೆ ಎಂದು ರೆಡ್ಡಿ ತಮ್ಮ ಅನುಯಾಯಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. +ಕಳೆದ ವಾರ ಮಹೇಶ್ವರಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಲಕ್ಷ್ಮಾ ರೆಡ್ಡಿ ಮತ್ತು ಬಡಂಗ್‍ಪೇಟೆ ಮಹಾನಗರ ಪಾಲಿಕೆ ಮೇಯರ್ ಚಿಗುರಿಂಥ ಪಾರಿಜಾತ ನರಸಿಂಹ ರೆಡ್ಡಿ ಅವರ ನಿವಾಸಗಳಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದರು \ No newline at end of file diff --git a/eesanje/url_47_238_2.txt b/eesanje/url_47_238_2.txt new file mode 100644 index 0000000000000000000000000000000000000000..3574e26e6b4051a757233459b80994b315fed201 --- /dev/null +++ b/eesanje/url_47_238_2.txt @@ -0,0 +1,7 @@ +ಕೃಪಲಾನಿ, ಅಜಾದ್‍ಗೆ ಪ್ರಧಾನಿ ಮೋದಿ ನಮನ +ನವದೆಹಲಿ, ನ 11 (ಪಿಟಿಐ) : ಸ್ವಾತಂತ್ರ್ಯ ಹೋರಾಟಗಾರರಾದ ಆಚಾರ್ಯ ಕೃಪಲಾನಿ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. +ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಮಾಜವಾದಿ ನಾಯಕ ಕೃಪಲಾನಿ ಅವರನ್ನು ಮೋದಿಯವರು ವಸಾಹತುಶಾಹಿ ವಿರುದ್ಧದ ಭಾರತದ ಹೋರಾಟದ ನಿಜವಾದ ದಾರಿದೀಪ ಎಂದು ನೆನಪಿಸಿಕೊಂಡರು. +ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಮಾನತೆಯನ್ನು ಬಲಪಡಿಸಲು ಅವರ ದಣಿವರಿಯದ ಕೆಲಸವು ನಮ್ಮ ರಾಷ್ಟ್ರದ ಬಟ್ಟೆಯ ಮೇಲೆ ಶಾಶ್ವತವಾದ ಛಾಪು ಮೂಡಿಸಿದೆ. ಅವರ ಜೀವನ ಮತ್ತು ಕೆಲಸವು ಯಾವಾಗಲೂ ಸ್ವಾತಂತ್ರ್ಯ ಮತ್ತು ನ್ಯಾಯದ ಮËಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಪ್ರಧಾನಿ ಎಕ್ಸ್‍ನಲ್ಲಿ ಹೇಳಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023) +ಮೌಲಾನಾ ಆಜಾದ್ ಅವರನ್ನು ಸ್ಮರಿಸಿದ ಮೋದಿ ಅವರು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಆಳವಾದ ವಿದ್ವಾಂಸರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಆಧಾರಸ್ತಂಭ ಎಂದು ಬಣ್ಣಿಸಿದರು. +ಶಿಕ್ಷಣಕ್ಕೆ ಅವರ ಬದ್ಧತೆ ಶ್ಲಾಘನೀಯವಾಗಿದೆ. ಆಧುನಿಕ ಭಾರತವನ್ನು ರೂಪಿಸುವಲ್ಲಿ ಅವರ ಪ್ರಯತ್ನಗಳು ಅನೇಕ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇವೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_238_3.txt b/eesanje/url_47_238_3.txt new file mode 100644 index 0000000000000000000000000000000000000000..b8d0b5edf53697a5a4cc1aa9312e0c8bb03b68c6 --- /dev/null +++ b/eesanje/url_47_238_3.txt @@ -0,0 +1,8 @@ +ಆಯೋಧ್ಯೆ ಮಹಾಮಸ್ತಕಾಭಿಷೇಕ ಎಲ್ಲರಿಗೂ ಸಂತೋಷದ ಕ್ಷಣ : ಆರ್‌ಎಸ್‌ಎಸ್ +ನವದೆಹಲಿ, ನ.11 (ಪಿಟಿಐ) : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು ಎಲ್ಲ ದೇಶವಾಸಿಗಳಿಗೆ ಸಂತೋಷದ ಮಹಾನ್ ಕ್ಷಣ ಎಂದು ಆರ್‌ಎಸ್‌ಎಸ್ ಹೇಳಿದೆ ಮತ್ತು ಈ ದಿನವನ್ನು ಹಬ್ಬ ವಾಗಿ ಆಚರಿಸಲು ಜನರಿಗೆ ಕರೆ ನೀಡಿದೆ. +ಈ ವಾರದ ಆರಂಭದಲ್ಲಿ ಗುಜರಾತ್‍ನ ಕಚ್ ಜಿಲ್ಲೆಯ ಭುಜ್‍ನಲ್ಲಿ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯ ಮೂರು ದಿನಗಳ ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ದೇವಾಲಯದ ಉದ್ಘಾಟನೆ ಮತ್ತು ದೇಶಾದ್ಯಂತ ಅದಕ್ಕೆ ಸಂಬಂಸಿದ ಕಾರ್ಯಕ್ರಮಗಳ ಕುರಿತು ಚರ್ಚಿಸಿತು. +ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ, ಆರ್‍ಎಸ್‍ಎಸ್ ಕಾರ್ಯಕರ್ತರು ಜನವರಿ 1 ರಿಂದ 15 ರ ನಡುವೆ ರಾಷ್ಟ್ರವ್ಯಾಪಿ ಮನೆ-ಮನೆ ಪ್ರಚಾರವನ್ನು ಆರಂಭಿಸಲಿದ್ದು, ಉದ್ಘಾಟನೆಗೆ ಜನರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸುದ್ದಿಗಾರರಿಗೆ ತಿಳಿಸಿದರು. +ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023) +ನಮ್ಮ ಪೂಜ್ಯ ಶ್ರೀರಾಮನ ಭವ್ಯವಾದ ದೇವಾಲಯವನ್ನು ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿದೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭವು ಜನವರಿ 22 ರಂದು ನಡೆಯಲಿದೆ. ನಂತರ ವಿದೇಶದಲ್ಲಿ ವಾಸಿಸುವವರು ಸೇರಿದಂತೆ ನಮಗೆಲ್ಲರಿಗೂ ಇದು ಸಂತೋಷದ ಕ್ಷಣವಾಗಿದೆ. ವರ್ಷಗಳ ಪ್ರಯತ್ನದಿಂದ ಅಯೋಧ್ಯೆಯಲ್ಲಿ ನಮ್ಮ ಭಗವಾನ್ ಶ್ರೀರಾಮನ ಭವ್ಯವಾದ ಮಂದಿರವನ್ನು ನಿರ್ಮಿಸಲಾಗುತ್ತಿದೆ ಎಂದು ಆರ್‍ಎಸ್‍ಎಸ್‍ನ ರಾಷ್ಟ್ರೀಯ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು. +ದೇಶಾದ್ಯಂತ ಜನರು ತಮ್ಮ ತಮ್ಮ ಪ್ರದೇಶಗಳಲ್ಲಿನ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಈ ಆಚರಣೆ ಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.ಇದು ಉತ್ಸವದ ಸಂದರ್ಭವಾಗಿದೆ. ಎಲ್ಲರೂ ಅಯೋಧ್ಯೆಗೆ ಹೋಗುವುದಿಲ್ಲ. ಜನರು ಈ ಹಬ್ಬವನ್ನು ತಮ್ಮ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಆಚರಿಸುತ್ತಾರೆ. ರಾತ್ರಿ ಸಮಯದಲ್ಲಿ ಎಲ್ಲರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಬೇಕು. ಇಂತಹ ಮನವಿಯನ್ನು ಆರ್‍ಎಸ್‍ಎಸ್ ಮಾಡಿದೆ ಎಂದು ಅಂಬೇಕರ್ ಹೇಳಿದರು. +ಭಗವಾನ್ ರಾಮನು ಗೌರವ, ಪ್ರೀತಿ ಮತ್ತು ಧರ್ಮ ದ ಸಂಕೇತವಾಗಿದೆ ಮತ್ತು ಪಟ್ಟಾಭಿಷೇಕ ಸಮಾರಂಭವನ್ನು ಹಬ್ಬದಂತೆ ಆಚರಿಸಲು ಜನರಿಗೆ ಕರೆ ನೀಡಿದರು.ಇದು ನಮಗೆಲ್ಲರಿಗೂ ಸಂತೋಷದ ಕ್ಷಣವಾಗಿರುತ್ತದೆ. ಇದು ಸಾಮರಸ್ಯದ ಕ್ಷಣವಾಗಿರುತ್ತದೆ ಎಂದು ಅವರು ಹೇಳಿದರು ಮತ್ತು ಮತ್ತು, ದೇವಸ್ಥಾನದಲ್ಲಿ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ, ಭಾರತವು ತನ್ನ ಮೆರವಣಿಗೆಯನ್ನು ಮುಂದುವರೆಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶಾದ್ಯಂತ ಸಾವಿರಾರು ಭಕ್ತರನ್ನು ಆಹ್ವಾನಿಸಲಾಗಿದೆ. \ No newline at end of file diff --git a/eesanje/url_47_238_4.txt b/eesanje/url_47_238_4.txt new file mode 100644 index 0000000000000000000000000000000000000000..a8b187ad102a81f70b5390966c84e195b37e3372 --- /dev/null +++ b/eesanje/url_47_238_4.txt @@ -0,0 +1,5 @@ +ಭಯೋತ್ಪಾದಕರಿಗೆ ಧನ ಸಹಾಯ ಮಾಡಿದವರ ಮೇಲೆ ಪೊಲೀಸ್ ದಾಳಿ +ಶ್ರೀನಗರ, ನ 10 (ಪಿಟಿಐ)- ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಭಯೋತ್ಪಾದಕರಿಗೆ ಧನ ಸಹಾಯ ಪ್ರಕರಣಗಳ ಬೆನ್ನು ಬಿದ್ದಿದ್ದಾರೆ. ಪೊಲೀಸ್ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಮುಂಜಾನೆ ಕಣಿವೆಯಲ್ಲಿ ಭಯೋತ್ಪಾದಕರಿಗೆ ಧನಸಹಾಯ ಪ್ರಕರಣದಲ್ಲಿ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. +ಅನಂತನಾಗ್ ಮತ್ತು ಪುಲ್ವಾಮಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಈ ಪ್ರಕರಣವು ಆರೋಪಿಗಳಿಂದ ಅಪರಾಧದ ಆದಾಯವನ್ನು ಅಕ್ರಮವಾಗಿ ಸಂಗ್ರಹಿಸುವುದು, ಲೇಯರ್ ಮಾಡುವುದು ಮತ್ತು ಲಾಂಡರಿಂಗ್‍ಗೆ ಸಂಬಂಧಿಸಿದೆ ಎಂದು ಅವರು ಹೇಳಿದರು. +ಇನ್ನೋವಾ ಕಾರಿನಿಂದ ಸರಣಿ ಅಪಘಾತ, ಮೂವರ ದುರ್ಮರಣ +ಅಪರಾಧದ ಆದಾಯವನ್ನು ತರುವಾಯ ಪ್ರತ್ಯೇಕತೆ ಮತ್ತು ಭಯೋತ್ಪಾದನೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಬಳಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ಈ ದಾಳಿ ನಡೆಸಲಾಗಿದೆ. \ No newline at end of file diff --git a/eesanje/url_47_238_5.txt b/eesanje/url_47_238_5.txt new file mode 100644 index 0000000000000000000000000000000000000000..18ee97a4983c4ed8ebfabd7028eab0e29b2ce9c2 --- /dev/null +++ b/eesanje/url_47_238_5.txt @@ -0,0 +1,9 @@ +ಕೆಸಿಆರ್ 59 ಕೋಟಿ ರೂ. ಆಸ್ತಿ ಒಡೆಯ +ಹೈದರಾಬಾದ್, ನ.10 (ಪಿಟಿಐ) – ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಹಿಂದೂ ಅವಿಭಜಿತ ಕುಟುಂಬ ಸೇರಿದಂತೆ ಸುಮಾರು 59 ಕೋಟಿ ರೂಪಾಯಿ ಮೌಲ್ಯದ ಕುಟುಂಬದ ಆಸ್ತಿ ಮತ್ತು 25 ಕೋಟಿ ರೂಪಾಯಿಗಳ ಹೊಣೆಗಾರಿಕೆಯನ್ನು ಘೋಷಿಸಿದ್ದಾರೆ. +ನವೆಂಬರ್ 30 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ ಅವರು ಸಲ್ಲಿಸಿದ ಚುನಾವಣಾ ಅಫಿಡವಿಟ್‍ನಿಂದ ಈ ವರದಿ ಬಹಿರಂಗಗೊಂಡಿದ್ದರೂ ಅವರ ಬಳಿ ಸ್ವಂತ ಕಾರಿಲ್ಲ ಎನ್ನುವುದು ವಿಶೇಷವಾಗಿದೆ. +ಅವರ ವಿರುದ್ಧ ಒಂಬತ್ತು ಪ್ರಕರಣಗಳು ಬಾಕಿ ಉಳಿದಿವೆ, ಎಲ್ಲವೂ ತೆಲಂಗಾಣ ರಾಜ್ಯ ಆಂದೋಲನದ ಸಮಯದಲ್ಲಿ ದಾಖಲಾಗಿವೆ ಮತ್ತು ಅವರು ಯಾವುದೇ ಕ್ರಿಮಿನಲ್ ಅಪರಾಧಕ್ಕೆ ಶಿಕ್ಷೆಗೊಳಗಾಗಿಲ್ಲ.ಅವರ ಪತ್ನಿ ಶೋಭಾ ಅವರ ಹೆಸರಿನಲ್ಲಿರುವ ಚರ ಆಸ್ತಿಗಳ ಒಟ್ಟು ಮೌಲ್ಯವು ಏಳು ಕೋಟಿ ರೂ.ಗಿಂತ ಹೆಚ್ಚಿದ್ದು, ಅವರ ಹಿಂದೂ ಅವಿಭಜಿತ ಕುಟುಂಬದ ಒಂಬತ್ತು ಕೋಟಿ ರೂ. ಹಾಗೂ ಆಕೆಯ ಬಳಿ ಸುಮಾರು 1.5 ಕೋಟಿ ಮೌಲ್ಯದ 2.81 ಕೆಜಿ ಚಿನ್ನಾಭರಣ, ವಜ್ರ ಮತ್ತಿತರ ಬೆಲೆಬಾಳುವ ವಸ್ತುಗಳು ಇವೆ. +ಮೊಹಮ್ಮದ್ ಶಮಿಯನ್ನು ಮದುವೆಯಾಗಲು ಷರತ್ತು ವಿಧಿಸಿದ ಬಾಲಿವುಡ್ ನಟಿ +ರಾವ್ ಅವರ ಹೆಸರಿನಲ್ಲಿರುವ ಸ್ಥಿರಾಸ್ತಿಗಳ ಒಟ್ಟು ಮಾರುಕಟ್ಟೆ ಮೌಲ್ಯ ಸುಮಾರು 8.50 ಕೋಟಿ ರೂ.ಗಳಾಗಿದ್ದು, ಹೆಚ್‍ಯುಎಫ್ ಹೆಸರಿನಲ್ಲಿ ಸುಮಾರು 15 ಕೋಟಿ ರೂ.ಗಳಿವೆ. ಐಟಿ ರಿಟನ್ರ್ಸ್ ಪ್ರಕಾರ ರಾವ್ ಅವರ ಒಟ್ಟು ಆದಾಯವು ಮಾರ್ಚ್ 31, 2023 ರ ವೇಳೆಗೆ 1.60 ಕೋಟಿ ರೂ.ಗಿಂತ ಹೆಚ್ಚಿದ್ದರೆ, ಮಾರ್ಚ್ 31, 2019 ರ ವೇಳೆಗೆ ಇದು ರೂ. 1.74 ಕೋಟಿ ಆಗಿತ್ತು. ಅಫಿಡವಿಟ್‍ನಲ್ಲಿ ರಾವ್ ಅವರು ಕೃಷಿಕ ಎಂದು ತೋರಿಸಿದರು ಮತ್ತು ಅವರ ಶೈಕ್ಷಣಿಕ ಅರ್ಹತೆ ಬಿಎ ಆಗಿದೆ. +ಏತನ್ಮಧ್ಯೆ, ರಾವ್ ಅವರ ಪುತ್ರ ಮತ್ತು ಬಿಆರ್‍ಎಸ್ ಕಾರ್ಯಾಧ್ಯಕ್ಷ ಕೆ ಟಿ ರಾಮರಾವ್ ಮತ್ತು ಅವರ ಕುಟುಂಬವು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರು ಸಲ್ಲಿಸಿದ ಅಫಿಡವಿಟ್‍ನಲ್ಲಿ ಒಟ್ಟು 54.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಹಿರಂಗಪಡಿಸಿದ್ದಾರೆ. +ಅಫಿಡವಿಟ್ ಪ್ರಕಾರ, ರಾಮರಾವ್ ಅವರ ಪತ್ನಿ ಶೈಲಿಮಾ ಅವರು 4.5 ಕೆಜಿ ಚಿನ್ನಾಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳು ಸೇರಿದಂತೆ 26.4 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. +ಅದೇ ರೀತಿ, 2018 ರಲ್ಲಿ 1.30 ಕೋಟಿ ರೂಪಾಯಿಗಳ ಸ್ಥಿರಾಸ್ತಿಗಳಿಗೆ ಹೋಲಿಸಿದರೆ ರಾಮರಾವ್ ಅವರ 10.4 ಕೋಟಿ ರೂಪಾಯಿಗಳ ಸ್ಥಿರ ಆಸ್ತಿ (ಮಾರುಕಟ್ಟೆ ಮೌಲ್ಯ) ಹೆಚ್ಚಾಗಿದೆ. ಅವರ ಪತ್ನಿ 7.42 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ ಮತ್ತು ಅವರ ಮಗಳು 46.7 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ. \ No newline at end of file diff --git a/eesanje/url_47_238_6.txt b/eesanje/url_47_238_6.txt new file mode 100644 index 0000000000000000000000000000000000000000..eeb796fbc11b1058bff8eb1e1d24c64a1c58eb93 --- /dev/null +++ b/eesanje/url_47_238_6.txt @@ -0,0 +1,6 @@ +ಜಾತಿ ಗಣತಿ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಬಿಜೆಪಿ +ನವದೆಹಲಿ,ನ.10- ಪ್ರತಿಪಕ್ಷಗಳ ಜಾತಿ ಗಣತಿ ವಿಚಾರದಿಂದ ತಲೆ ಕೆಡಿಸಿಕೊಂಡಿರುವ ಬಿಜೆಪಿ ಮುಖಂಡರುಗಳು ಒಬಿಸಿ ಸಮುದಾಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಭಾರಿ ಕಸರತ್ತು ನಡೆಸಿದೆ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಸೇರಿದಂತೆ ಉನ್ನತ ನಾಯಕರು ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಸಭೇ ನಡೆಸಿದ್ದಾರೆ ಎಂದು ತಿಳಿದುಬಂದಿದೆ. +ಕಳೆದ ವಾರ ದೆಹಲಿಯಲ್ಲಿ ಈ ನಾಯಕರುಗಳು ಭೇಟಿಯಾಗಿ ವಿವರಗಳನ್ನು ಚರ್ಚಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ 10 ರಾಜ್ಯಗಳ ನಲವತ್ತು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. +ಎನ್‍ಡಿಎ ಮಿತ್ರಪಕ್ಷಗಳಾಗಿದ್ದ ಅಪ್ನಾ ದಳ (ಸೋನೆಲಾಲ), ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷ, ನಿಶಾದ್ ಪಕ್ಷ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಸೆಕ್ಯುಲರ್ ಸೇರಿದಂತೆ ಅದರ ಹಲವಾರು ಪಕ್ಷಗಳು ಜಾತಿ ಗಣತಿ ವಿಷಯವನ್ನು ಬೆಂಬಲಿಸಿವೆ ಎಂಬ ಅಂಶವು ಬಿಜೆಪಿಯ ಒತ್ತಡ ಹೆಚ್ಚಿಸಿದೆ. +ಕಲಾ ಲೋಕದ ರಾಯಭಾರಿಗೆ 68ನೇ ಹುಟ್ಟುಹಬ್ಬ +ಒಬಿಸಿ ಮತ್ತು ಅತ್ಯಂತ ಹಿಂದುಳಿದ ವರ್ಗಗಳು ಬಿಹಾರದ ಜನಸಂಖ್ಯೆಯ ಶೇ.60 ಕ್ಕಿಂತ ಹೆಚ್ಚಾಗಿದೆ ಎಂಬ ವರದಿಯು ಭಾರತದ ಜನಸಂಖ್ಯೆಯ ಕನಿಷ್ಠ 40 ಪ್ರತಿಶತದಷ್ಟಿರುವುದು ವಿಶೇಷ. ಮೂಲಗಳ ಪ್ರಕಾರ ದೆಹಲಿ ಸಭೆ (ಮತ್ತು ಬಿಹಾರ ವರದಿ) ಜಾತಿ ಜನಗಣತಿ ಸಮಸ್ಯೆಯನ್ನು ಪರಿಹರಿಸಲು ಬಿಜೆಪಿಯನ್ನು ಕ್ರಿಯಾತ್ಮಕ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ. \ No newline at end of file diff --git a/eesanje/url_47_238_7.txt b/eesanje/url_47_238_7.txt new file mode 100644 index 0000000000000000000000000000000000000000..4ab015f9a1640bb60da1681ea4b68c4db32b3c02 --- /dev/null +++ b/eesanje/url_47_238_7.txt @@ -0,0 +1,6 @@ +ಧಂತೇರಸ್ ದಿನದ ಶುಭ ಕೋರಿದ ಮೋದಿ +ನವದೆಹಲಿ,ನ.10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಧಂತೇರಸ್ ಹಬ್ಬದ ಶುಭಾಷಯ ಕೋರಿದ್ದಾರೆ. ದೇಶದಲ್ಲಿರುವ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ, ಆರೋಗ್ಯ ಮತ್ತು ಸಮೃದ್ಧಿಯ ಸಂಕೇತವಾದ ಧಂತೇರಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ಧನ್ವಂತರಿಯ ಆಶೀರ್ವಾದದೊಂದಿಗೆ, ನೀವೆಲ್ಲರೂ ಆರೋಗ್ಯವಾಗಿ, ಸಮೃದ್ಧವಾಗಿ ಮತ್ತು ಸಂತೋಷದಿಂದ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. +ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವು ಹೊಸ ಶಕ್ತಿಯನ್ನು ಪಡೆಯುವುದನ್ನು ಮುಂದುವರೆಸಿದೆ ಎಂದು ಪ್ರಧಾನಿ ಮೋದಿ ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಧಂತೇರೆಸ್ ಪ್ರಮುಖ ಹಿಂದೂ ಹಬ್ಬಗಳಲ್ಲಿ ಒಂದಾಗಿದೆ, ಇದನ್ನು ದೇಶದಾದ್ಯಂತ ಅಪಾರ ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. +ಕಲಾ ಲೋಕದ ರಾಯಭಾರಿಗೆ 68ನೇ ಹುಟ್ಟುಹಬ್ಬ +ಸಿದ್ಧಿ ವಿನಾಯಕ ಗಣೇಶ, ಸಂಪತ್ತಿನ ದೇವತೆ ಮಹಾಲಕ್ಷ್ಮೀ ಮತ್ತು ಕುಬೇರ ಅವರನ್ನು ಪೂಜಿಸಲು ಸಮರ್ಪಿತವಾದ ಧಂತೇರಸಾ ದಿನದಂದು ಚಿನ್ನಾಭರಣ ಮತ್ತಿತರ ಬೆಲೆಬಾಳುವ ವಸ್ತುಗಳನ್ನು ಖರೀದಿಸಿದರೆ ಮಂಗಳಕರ ಎಂದು ಭಾವಿಸಲಾಗಿದೆ. +ಈ ದಿನದಂದು ಚಿನ್ನ ಮತ್ತು ಬೆಳ್ಳಿಯ ಆಭರಣಗಳು, ಪಾತ್ರೆಗಳು, ಅಡುಗೆ ಸಾಮಾನುಗಳು, ವಾಹನಗಳು, ಬಟ್ಟೆ, ಎಲೆಕ್ಟ್ರಾನಿಕ್ಸ್ ಮತ್ತಿತರ ವಸ್ತುಗಳ ಜೊತೆಗೆ ಪೊರಕೆಗಳ ಖರೀದಿಯನ್ನು ವಿಶೇಷವಾಗಿ ಮಂಗಳಕರವೆಂದು ಪರಿಗಣಿಸಲಾಗುತ್ತದೆ. \ No newline at end of file diff --git a/eesanje/url_47_238_8.txt b/eesanje/url_47_238_8.txt new file mode 100644 index 0000000000000000000000000000000000000000..be0869bed6ffac77d162c5a00aa9e0ca6963d7d1 --- /dev/null +++ b/eesanje/url_47_238_8.txt @@ -0,0 +1,6 @@ +ಇನ್ನೋವಾ ಕಾರಿನಿಂದ ಸರಣಿ ಅಪಘಾತ, ಮೂವರ ದುರ್ಮರಣ +ಮುಂಬೈ, ನ.10 (ಪಿಟಿಐ) ಇಲ್ಲಿನ ಬಾಂದ್ರಾ-ವರ್ಲಿ ಸೀ ಲಿಂಕ್‍ನಲ್ಲಿ ವೇಗವಾಗಿ ಬಂದ ಟೊಯೊಟಾ ಇನ್ನೋವಾ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. +ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಉತ್ತರ ದಿಕ್ಕಿನ ಲೇನ್‍ನಲ್ಲಿ ಸಮುದ್ರ ಸಂಪರ್ಕದ ಬಾಂದ್ರಾ ತುದಿಯಲ್ಲಿರುವ ಟೋಲ್ ಬೂತ್‍ಗೆ ಸುಮಾರು 100 ಮೀಟರ್ ಮೊದಲು ಇನ್ನೋವಾ ಮೊದಲು ಮರ್ಸಿಡಿಸ್ ಬೆಂಜ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ವಲಯ 9 ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೃಷ್ಣಕಾಂತ್ ಉಪಾಧ್ಯಾಯ ಹೇಳಿದ್ದಾರೆ. +ಮೊಹಮ್ಮದ್ ಶಮಿಯನ್ನು ಮದುವೆಯಾಗಲು ಷರತ್ತು ವಿಧಿಸಿದ ಬಾಲಿವುಡ್ ನಟಿ +ಇನ್ನೋವಾ ಚಾಲಕ ಸೇರಿದಂತೆ ಗಾಯಗೊಂಡಿರುವ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ. ಇನ್ನೋವಾ ಹೊರತುಪಡಿಸಿ ಇನ್ನೂ ಐದು ವಾಹನಗಳು ಸಮುದ್ರ ಕೊಂಡಿಯಲ್ಲಿ ಅಪಘಾತಕ್ಕೀಡಾಗಿವೆ ಎಂದು ಅವರು ಹೇಳಿದರು.ಅಪಘಾತದ ಸಮಯದಲ್ಲಿ ಚಾಲಕ ಸೇರಿದಂತೆ ಏಳು ಜನರು ಇನ್ನೋವಾದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ. +ಪ್ರಾಥಮಿಕ ಮಾಹಿತಿ ಮೇರೆಗೆ ಇನ್ನೋವಾ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ. \ No newline at end of file diff --git a/eesanje/url_47_238_9.txt b/eesanje/url_47_238_9.txt new file mode 100644 index 0000000000000000000000000000000000000000..1fd43b68fb97909ac0ccc12e620e073e9a676efa --- /dev/null +++ b/eesanje/url_47_238_9.txt @@ -0,0 +1,11 @@ +ತಾ.ಪಂ,ಜಿ.ಪಂ ಮೀಸಲಾತಿ ನಿಗದಿಗೆ ಹೈಕೋರ್ಟ್ ಗಡುವು +ಬೆಂಗಳೂರು,ನ.9- ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾ ಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. +ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. +ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆಯಾಗಿತ್ತು. ಆದರೆ, ಕೆಲವು ಆಕ್ಷೇಪಣೆಗಳು ಬಂದಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಮರುವಿಂಗಡಣೆಯನ್ನು ಮರು ನಿಗದಿ (ರೀಡೂ) ಮಾಡಬೇಕಾಗಿದೆ. ಆನಂತರ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಮಯ ಅವಕಾಶ ಬೇಕೆಂದು ಕೋರಿದರು. +ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಇದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಅಡ್ವೇಕೇಟ್ ಜನರಲ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಕೊನೆಯ ಅವಕಾಶವನ್ನು ನೀಡಿತು. +ಇದನ್ನು ಒಪ್ಪದ ನ್ಯಾಯಪೀಠ ಸಂವಿಧಾನ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ ಹತ್ತು ವಾರಗಳ ಕಾಲಾವಕಾಶ ನೀಡಲಾಗಿದೆ. ಪುನಃ ಸಮಯವನ್ನು ವಿಸ್ತರಣೆ ಮಾಡಲು ಬರುವುದಿಲ್ಲ. ನಾಲ್ಕು ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿಪಡಿಸಿ ಅಂತಿಮಗೊಳಿಸಬೇಕೆಂದು ನಿರ್ದೇಶನ ನೀಡಿ ಮುಂದಿನ ಅರ್ಜಿ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದೆ. +ರಾಜ್ಯದಲ್ಲಿ ಜಿ.ಪಂ, ತಾ.ಪಂ.ಗಳಿಗೆ 2021ರ ಏಪ್ರಿಲ್ -ಮೇ ತಿಂಗಳಲ್ಲಿ ಅವ ಪೂರ್ಣಗೊಂಡಿತ್ತು. ಮೊದಲು ಕೊರೊನಾ ಕಾರಣಕ್ಕೆ ಚುನಾವಣೆ ಆಗಿರಲಿಲ್ಲ. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತು. ಈ ಮಧ್ಯೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ರಾಜ್ಯ ಸರ್ಕಾರ ಹೊಸದಾಗಿ ಸೀಮಾ ನಿರ್ಣಯ ಆಯೋಗ ರಚಿಸಿತು. ಈ ಆಯೋಗವು ಎರಡು ವರ್ಷ ಪ್ರಹಸನ ನಡೆಸಿ ಕೊನೆಗೂ ಈ ವರ್ಷ ಮಾರ್ಚ್‍ನಲ್ಲಿ ಕ್ಷೇತ್ರ ಪುನರ್‍ವಿಂಗಡಣೆ ಅಧಿಸೂಚನೆ ಹೊರಡಿಸಿತು. ಅಷ್ಟರಲ್ಲೇ ವಿಧಾನಸಭೆ ಚುನಾವಣೆ ಘೋಷಣೆ ಆಯಿತು. +ಹಾಗಾಗಿ ಜಿಪಂ, ತಾಪಂ ಚುನಾವಣೆ ನನೆಗುದಿಗೆ ಬಿತ್ತು. ಈ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಅನೇಕ ಸಬೂಬುಗಳನ್ನು ಹೇಳುತ್ತಲೇ ಬಂದಿತ್ತು. ಇದಕ್ಕಾಗಿ ಹೈಕೋರ್ಟ್ ಸರ್ಕಾರಕ್ಕೆ ಅನೇಕ ಬಾರಿ ಚಾಟಿ ಬೀಸಿದೆ, ಛೀಮಾರಿ ಹಾಕಿದೆ. 5 ಲಕ್ಷ ರೂ. ದಂಡ ಸಹ ಹಾಕಿತ್ತು. +ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ +ಪ್ರಕರಣ ಹೈಕೋರ್ಟ್‍ನಲ್ಲಿ 2023ರ ಮೇ 29ಕ್ಕೆ ವಿಚಾರಣೆಗೆ ಬಂದಿದ್ದಾಗ ಈಗಷ್ಟೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವರಿಗೆ ಖಾತೆಗಳ ಹಂಚಿಕೆಯಾಗಿದ್ದು, ಜಿಪಂ, ತಾಪಂ ಚುನಾವಣೆಗೆ ಸಂಬಂಧಿಸಿದ ಇಲಾಖೆಯ ಸಚಿವರು ಇನ್ನಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಜಿ.ಪಂ., ತಾ.ಪಂ. ಚುನಾವಣೆ, ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಸಮಯ ಬೇಕು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಸರ್ಕಾರ ಹೈಕೋರ್ಟ್‍ಗೆ ಮನವಿ ಮಾಡಿತ್ತು. +ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆಯೋಗ ಈ ಪಿಐಎಲ್ ಸಲ್ಲಿಸಿದೆ. \ No newline at end of file diff --git a/eesanje/url_47_239_1.txt b/eesanje/url_47_239_1.txt new file mode 100644 index 0000000000000000000000000000000000000000..f6d1fc2f9a4d4d719390dec17db46a885ef6086e --- /dev/null +++ b/eesanje/url_47_239_1.txt @@ -0,0 +1,9 @@ +ವಾಯಮಾಲಿನ್ಯ ತಡೆಗಟ್ಟಲು ನ.20 ರಂದು ನವದೆಹಲಿಯಲ್ಲಿ ಕೃತಕ ಮಳೆ +ನವದೆಹಲಿ,ನ.9- ನ್ಯಾಯಾಲಯ ಅನುಮತಿ ನೀಡಿದರೆ ಕಳೆದ ಒಂದು ವಾರದಿಂದ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತದಿಂದ ಉಸಿರುಗಟ್ಟಿಸುತ್ತಿರುವ ದೆಹಲಿ ನಿವಾಸಿಗಳಿಗೆ ಪರಿಹಾರ ನೀಡಲು ಅರವಿಂದ್ ಕೇಜ್ರಿವಾಲ್ ಸರ್ಕಾರ ನ. 20 ಮತ್ತು 21 ರಂದು ಕೃತಕ ಮಳೆ ಸುರಿಸಲು ಮುಂದಾಗಿದೆ. +ನೆರೆಯ ರಾಜ್ಯಗಳಲ್ಲಿ ಸುಡುವ ಬೆಳೆಗಳ ಅವಶೇಷಗಳು ಮತ್ತು ವಾಹನಗಳ ಹೊರಸೂಸುವಿಕೆಯಂತಹ ಸ್ಥಳೀಯ ಅಂಶಗಳ ಸಂಯೋಜನೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ವಾಯು ಗುಣಮಟ್ಟದ ಸೂಚ್ಯಂಕವು ಸತತ ಏಳನೆ ದಿನವೂ ಭಾರಿ ಕುಸಿತ ಕಂಡಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. +ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಮತ್ತು ಹಣಕಾಸು ಸಚಿವ ಅತಿಶಿ ಅವರು ಐಐಟಿ ಕಾನ್ಪುರದ ತಂಡದೊಂದಿಗೆ ಸಭೆ ನಡೆಸಿದರು, ಇದು ರಾಷ್ಟ್ರ ರಾಜಧಾನಿಯಲ್ಲಿ ವಾಯು ತುರ್ತುಸ್ಥಿತಿಯ ಮಧ್ಯೆ ಕೃತಕ ಮಳೆಯ ಕಾಗುಣಿತ ಸಹಾಯ ಮಾಡಬಹುದು ಎಂದು ಪ್ರಸ್ತಾಪಿಸಿದರು. +ದೆಹಲಿ ಸರ್ಕಾರ ಈಗ ಐಐಟಿ ತಂಡವನ್ನು ವಿವರವಾದ ಯೋಜನೆಯನ್ನು ಕೇಳಿದೆ. ಈ ಯೋಜನೆಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಲಿದೆ. ದೆಹಲಿಯ ವಿಷಕಾರಿ ಗಾಳಿ ದಿನಗಳನ್ನು ಪರಿಹರಿಸಲು ತುರ್ತು ಕ್ರಮಗಳನ್ನು ಕೋರಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಅನುಮತಿ ನೀಡಿದರೆ, ದೆಹಲಿ ಸರ್ಕಾರ ಮತ್ತು ಕೇಂದ್ರವು ಯೋಜನೆಯನ್ನು ಜಾರಿಗೆ ತರಲು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. +ಕೃತಕ ಮಳೆ ಸೃಷ್ಟಿಸಲು ಕನಿಷ್ಠ ಶೇ.40ರಷ್ಟು ಮೋಡ ಕವಿದಿರುವುದು ಅಗತ್ಯ ಎಂದು ಐಐಟಿ ತಂಡ ಹೇಳಿದ್ದು, ನ.20-21ರಂದು ಮೋಡ ಕವಿದಿರುವ ಸಾಧ್ಯತೆ ಇದ್ದು, ಈ ಯೋಜನೆ ಜಾರಿಗೆ ಅನುಮತಿ ಸಿಕ್ಕರೆ, ನಾವು ಪ್ರಾಯೋಗಿಕ ಅಧ್ಯಯನವನ್ನು ನಡೆಸಬಹುದು ಎಂದು ಅವರು ಹೇಳಿದರು. +ಅಮೆರಿಕದಲ್ಲಿ ಇರಿತಕ್ಕೊಳಗಾಗಿದ್ದ ಭಾರತೀಯ ವಿದ್ಯಾರ್ಥಿ ವರಣ್ ಸಾವು +ಶುಕ್ರವಾರ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆಯ ಸಮಯದಲ್ಲಿ, ನಾವು ಈ ಪ್ರಸ್ತಾಪವನ್ನು ಮುಂದಿಡುತ್ತೇವೆ ಇದರಿಂದ ನ್ಯಾಯಾಲಯವು ಅದನ್ನು ಪರಿಶೀಲಿಸಬಹುದು. ನ್ಯಾಯಾಲಯವು ಅನುಮತಿ ನೀಡಿದರೆ, ಅಗತ್ಯ ಅನುಮತಿಗಳನ್ನು ತೆಗೆದುಕೊಳ್ಳಲು ನಾವು ಕೇಂದ್ರದೊಂದಿಗೆ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು. +ಸುಪ್ರೀಂ ಕೋರ್ಟ್ ಈ ಹಿಂದೆ ದೆಹಲಿಯಲ್ಲಿನ ಮಾಲಿನ್ಯವನ್ನು ತೀವ್ರವಾಗಿ ಗಮನಿಸಿತ್ತು ಮತ್ತು ಜನರ ಆರೋಗ್ಯದ ಕೊಲೆ ನಡುವೆ ರಾಜಕೀಯ ಯುದ್ಧವನ್ನು ಆಡಲು ಅನುಮತಿಸುವುದಿಲ್ಲ ಎಂದು ಹೇಳಿದೆ. ಪಂಜಾಬï, ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ತಾನಕ್ಕೆ ಕೋರ್ಟು ಸುಡುವುದನ್ನು ತಕ್ಷಣವೇ ನಿಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. \ No newline at end of file diff --git a/eesanje/url_47_239_10.txt b/eesanje/url_47_239_10.txt new file mode 100644 index 0000000000000000000000000000000000000000..86d9654216dda3baac258ed56094b891502145fa --- /dev/null +++ b/eesanje/url_47_239_10.txt @@ -0,0 +1,12 @@ +ಮಹಿಳೆಯರ ಕುರಿತು ಹೊಲಸು ನಾಲಿಗೆ ಹರಿಬಿಟ್ಟಿದ್ದ ನಿತೀಶ್ ಕುಮಾರ್ ಕ್ಷಮೆಯಾಚನೆ +ಪಾಟ್ನಾ, ನ.8- ಮಹಿಳೆಯರು ಕುರಿತು ವಿವಾದತ್ಮಾಕ ಹೇಳಿಕೆ ನೀಡಿ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದು, ಕ್ಷಮೆಯಾಚಿಸಿದ್ದಾರೆ. ನಾನು ಯಾರ ಮನಸ್ಸುನ್ನು ನೋಯಿಸಬೇಕೆಂಬ ಕಾರಣಕ್ಕಾಗಿ ಈ ಹೇಳಿಕೆ ನೀಡಿರಲಿಲ್ಲ. ಒಂದು ವೇಳೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಈ ಕೂಡಲೇ ಜನಸಂಖ್ಯೆ ನಿಯಂತ್ರಣದ ಬಗ್ಗೆ ತಪ್ಪು ಸಂದೇಶವನ್ನು ನೀಡಿದ್ದರೆ ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ. +ये है दूसरा वीडियो जो नीतीश जी ने अपना ज्ञान दोहराया कि पानी कहाँ जाता है और कब कहाँ निकाल देना चाहिए।../HaDfZMjWm4 +ಮಹಿಳಾ ಅಭಿವೃದ್ಧಿಯಲ್ಲಿ ರಾಜ್ಯವು ಮುಂದಿದೆ. ನನ್ನ ಹೇಳಿಕೆಗೆ ನಾನು ಕ್ಷಮೆಯಾಚಿಸುತ್ತೇನೆ, ನನ್ನ ಹೇಳಿಕೆಯು ತಪ್ಪು ಸಂದೇಶವನ್ನು ಕಳುಹಿಸಿದ್ದರೆ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಹೇಳಿದರು. ನಿನ್ನೆ ವಿಧಾನಸಭೆಯಲ್ಲಿ ಜನಸಂಖ್ಯಾ ನಿಯಂತ್ರಣದ ವಿಷಯದಲ್ಲಿ ಮಹಿಳೆಯರಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡುವ ಬಿಹಾರ ಸಿಎಂ ನಿತೀಶ್ ಕುಮಾರ್, ವಿದ್ಯಾವಂತ ಮಹಿಳೆ ತನ್ನ ಪತಿ ಸಂಭೋಗದ ಸಮಯದಲ್ಲಿ ಸಂಯಮದಿಂದ ವರ್ತಿಸುವುದನ್ನು ಹೇಗೆ ತಡೆಯಬಹುದು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಭಾರೀ ವಿವಾದವನ್ನು ಸೃಷ್ಟಿಸಿತ್ತು. +ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ರೋಹಿಂಗ್ಯಾ ನಾಯಕನ ಬಂಧನ +ನಿತೀಶ್ ಕುಮಾರ್ ಹೇಳಿಕೆಗೆ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು, ನಿತೀಶ್ ಕುಮಾರ್ ಅವರ ಕ್ಷಮೆಯಾಚನೆಯನ್ನು ಬಯಸುವುದಿಲ್ಲ, ಬದಲಿಗೆ ಅವರ ರಾಜೀನಾಮೆ ಎಂದು ಒತ್ತಾಯಿಸಿದ್ದರು. ಇದರ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗ ತಮ್ಮ ಹೇಳಿಕೆ ಕುರಿತು ವಿವರಣೆ ನೀಡುವಂತೆ ನೋಟೀಸ್ ಜಾರಿ ಮಾಡಿತ್ತು. +ಮಹಿಳೆಯರ ಬಗ್ಗೆ ನಿತೀಶ್ ಕುಮಾರ್ ಹೇಳಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‍ಸಿಡಬ್ಲ್ಯೂ) ಆಕ್ರೋಶ ವ್ಯಕ್ತಪಡಿಸಿ ನಿತೀಶ್ ಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಎನ್‍ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಒತ್ತಾಯಿಸಿದ್ದರು. +ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಆಡಿರುವ ಅಸಭ್ಯ ಮಾತುಗಳಿಂದ ಪ್ರತಿಯೊಬ್ಬ ಮಹಿಳೆಯ ಘನತೆ ಹಾಗೂ ಗೌರವಕ್ಕೆ ಧಕ್ಕೆಯುಂಟಾಗಿದೆ. ಅವರ ಭಾಷಣದಲ್ಲಿ ಬಳಸಲಾದ ಭಾಷೆಯು ಸಮಾಜಕ್ಕೆ ಕಪ್ಪು ಚುಕ್ಕೆಯಾಗಿದೆ. ನಾವು ಅಂತಹ ನಡವಳಿಕೆ ವಿರುದ್ಧ ಬಲವಾಗಿ ನಿಲ್ಲುತ್ತೇವೆ ಎಂದು ರೇಖಾ ತಿಳಿಸಿದ್ದಾರೆ. +ಬಿಹಾರ ಮುಖ್ಯಮಂತ್ರಿಯನ್ನು ಟೀಕಿಸಿರುವ ಬಿಜೆಪಿಯ ಬಿಹಾರ ಘಟಕವು ನಿತೀಶ್ ಕುಮಾರ್ ಅವರನ್ನು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಅಸಭ್ಯ ರಾಜಕಾರಣಿ ಎಂದು ಟೀಕಾ ಪ್ರಹಾರ ನಡೆಸಿತ್ತು. ಮುಖ್ಯಮಂತ್ರಿ ಇನ್ನು ಮುಂದೆ ಸುಸಂಸ್ಕೃತ ಸಮಾಜವನ್ನು ಪ್ರತಿನಿಸಲು ಯೋಗ್ಯರಲ್ಲ ಎಂದು ಹೇಳಿದರು. ನಿತೀಶ್ ಕುಮಾರ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು. +ಮೋದಿ ವಿರುದ್ಧ ಹರಿಹಾಯ್ದ ಅಸಾದುದ್ದೀನ್ ಓವೈಸಿಏನಿದು ವಿವಾದ:ಮದುವೆಯ ನಂತರ ಪುರುಷರು ತಮ್ಮ ಪತ್ನಿಯರನ್ನು ಸಂಭೋಗಿಸಲು ಕೇಳುತ್ತಾರೆ, ಆದರೆ ಬಿಹಾರದಲ್ಲಿ ವಿದ್ಯಾವಂತ ಮಹಿಳೆಯರು ತಮ್ಮ ಗಂಡಂದಿರನ್ನು ಸರಿಯಾದ ಸಮಯದಲ್ಲಿ ಹಾಗೆ ಮಾಡುವುದನ್ನು ನಿಲ್ಲಿಸುವಂತೆ ಕೇಳುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದ್ದರು. ಇದರಿಂದಾಗಿ ಬಿಹಾರದ ಜನಸಂಖ್ಯೆ ನಿಯಂತ್ರಣದಲ್ಲಿದೆ ಎಂದಾಗ ಹಿಂದೆ ಕುಳಿತಿದ್ದ ಕೆಲ ಶಾಸಕರು ನಗುತ್ತಿದ್ದರು. +ಕಳೆದ ವಾರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ, ನಿತೀಶ್ ಕುಮಾರ್ ಅವರು 1987ರಲ್ಲಿ ಸ್ರ್ಪಧಿಸಿದ್ದ ಚುನಾವಣೆಯಲ್ಲಿ ಸಿಪಿಐ ಮತ್ತು ಸಿಪಿಐ-ಎಂ ತನಗೆ ಸಹಾಯ ಮಾಡಿದೆ ಎಂದು ಹೇಳಿಕೊಂಡಿದ್ದರು. ಆದರೆ, ಆ ವರ್ಷ ಯಾವುದೇ ಚುನಾವಣೆ ನಡೆದಿರಲಿಲ್ಲ. ಇತ್ತೀಚೆಗಷ್ಟೇ ಜನತಾ ದರ್ಬಾರ್‍ನಲ್ಲಿ ಗೃಹ ಸಚಿವರನ್ನು ಕರೆಸುವಂತೆ ಅಲ್ಲಿನ ಅಧಿಕಾರಿಗಳನ್ನು ಕೇಳಿಕೊಂಡಿದ್ದು, ಈ ಹುದ್ದೆಯನ್ನು ತಾವೇ ನಿರ್ವಹಿಸಿದ್ದರಿಂದ ಎಡವಟ್ಟು ಎದುರಿಸಬೇಕಾಯಿತು. +ಸಿಎಂ ಹೇಳಿಕೆ ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದ್ದು. ಲೈಂಗಿಕ ಶಿಕ್ಷಣದ ವಿಷಯ ಚರ್ಚೆಯಾದಾಗಲೆಲ್ಲಾ ಜನರು ಹಿಂಜರಿಯುತ್ತಾರೆ. ಇದನ್ನು ಈಗ ಶಾಲೆಗಳಲ್ಲಿ ಕಲಿಸಲಾಗುತ್ತದೆ. ಶಾಲೆಗಳಲ್ಲಿ ವಿಜ್ಞಾನ ಮತ್ತು ಜೀವಶಾಸ್ತ್ರವನ್ನು ಕಲಿಸಲಾಗುತ್ತದೆ. ಮಕ್ಕಳು ಅದನ್ನು ಕಲಿಯುತ್ತಾರೆ. ಜನಸಂಖ್ಯೆಯ ಹೆಚ್ಚಳವನ್ನು ತಡೆಯಲು ಪ್ರಾಯೋಗಿಕವಾಗಿ ಏನು ಮಾಡಬೇಕು ಎಂಬುದನ್ನು ಹೇಳಿದ್ದಾರೆ ಎಂದು ತೇಜಸ್ವಿ ಯಾದವ್ ಸಮರ್ಥಿಸಿಕೊಂಡಿದ್ದರು. \ No newline at end of file diff --git a/eesanje/url_47_239_11.txt b/eesanje/url_47_239_11.txt new file mode 100644 index 0000000000000000000000000000000000000000..904f620e254c21cf3e84b9553924358e72641562 --- /dev/null +++ b/eesanje/url_47_239_11.txt @@ -0,0 +1,7 @@ +ನಾಳೆ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ ಅಭಿಷೇಕ್ ಬ್ಯಾನರ್ಜಿ +ಕೋಲ್ಕತ್ತಾ, ನ.8 (ಪಿಟಿಐ) ಆಪಾದಿತ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. +ಬ್ಯಾನರ್ಜಿ ಅವರು ನಾಳೆ ಇಡಿ ಮುಂದೆ ಹಾಜರಾಗಲಿದ್ದಾರೆ ಎಂದು ಪಶ್ಚಿಮ ಬಂಗಾಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಮತ್ತು ಟಿಎಂಸಿ ವಕ್ತಾರ ಶಶಿ ಪಂಜಾ ಹೇಳಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯುವ ನಿರ್ಣಾಯಕ ಚುನಾವಣೆಗೆ ಮುನ್ನ ನಾಯಕರಿಗೆ ಕಿರುಕುಳ ನೀಡಲು ಬಿಜೆಪಿ ಇಂತಹ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. +ರಾಜ್ಯ ಬಿಜೆಪಿ ವಕ್ತಾರ ಶಮಿಕ್ ಲಾಹಿರಿ ಮಾತನಾಡಿ, ಪಕ್ಷಕ್ಕೆ ಸೇಡಿನ ರಾಜಕಾರಣದಲ್ಲಿ ನಂಬಿಕೆ ಇಲ್ಲ. ಕೇಂದ್ರೀಯ ಸಂಸ್ಥೆಗಳಿಂದ ಸಮನ್ಸ್ ನೀಡುವುದು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದ್ದು, ಟಿಎಂಸಿಗೆ ಯಾವುದೇ ಸಮಸ್ಯೆ ಇದ್ದರೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದಿದ್ದಾರೆ. +ಭಾರತ-ಅಮೆರಿಕ ನಡುವೆ 2+2 ಸಚಿವರ ಮಾತುಕತೆ +ರಾಜ್ಯಕ್ಕೆ ನೀಡಬೇಕಾದ ಕೇಂದ್ರದ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನವದೆಹಲಿಯಲ್ಲಿ ನಡೆದ ಟಿಎಂಸಿ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಲು ಅಕ್ಟೋಬರ್ 3 ರ ಸಮನ್ಸ್‍ನಿಂದ ಹೊರಗುಳಿದ ನಂತರ ಅಕ್ಟೋಬರ್ 9 ರಂದು ಬ್ಯಾನರ್ಜಿಯವರಿಗೆ ಹಾಜರಾಗುವಂತೆ ಇಡಿ ಈ ಹಿಂದೆ ಸಮನ್ಸ್ ನೀಡಿತ್ತು. +ಸೆಪ್ಟೆಂಬರ್ 13 ರಂದು ನಡೆದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸುಮಾರು ಒಂಬತ್ತು ಗಂಟೆಗಳ ಕಾಲ ಇಡಿ ವಿಚಾರಣೆಗೆ ಒಳಗಾದ ಬ್ಯಾನರ್ಜಿ, ನಂತರ ವಿಚಾರಣೆಯು ತನಗೆ ಇಂಡಿಯಾ ಕೂಟದಲ್ಲಿ ಭಾಗವಹಿಸದಂತೆ ತಡೆಯುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು. \ No newline at end of file diff --git a/eesanje/url_47_239_12.txt b/eesanje/url_47_239_12.txt new file mode 100644 index 0000000000000000000000000000000000000000..dbc3cf70d3597849ec85934eb30658a8af2cb15a --- /dev/null +++ b/eesanje/url_47_239_12.txt @@ -0,0 +1,6 @@ +ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್ +ಹೈದರಾಬಾದ್,ನ.8- ಪವರ್ ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದೊಂದಿಗೆ ಬಿಜೆಪಿ ಸಖ್ಯ ಮುಂದುವರೆದಿದೆ. ತೆಲಂಗಾಣದಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುವ ಹುಮ್ಮಸ್ಸಿನಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪವನ್ ಕಲ್ಯಾಣ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಮೂಲಕ ಉಭಯ ಪಕ್ಷಗಳ ನಡುವಿನ ಮೈತ್ರಿ ಮುಂದುವರೆಯಲಿದೆ ಎಂಬ ಸೂಚನೆ ನೀಡಿದ್ದಾರೆ. +ತೆಲಂಗಾಣದಲ್ಲಿ ಜನಸೇನಾ ಪಕ್ಷಕ್ಕೆ ಎಂಟು ಸ್ಥಾನಗಳನ್ನು ನೀಡಲಾಗಿದೆ ಅಲ್ಲಿ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷವು ರೇಸ್‍ನಲ್ಲಿ ಇರುವುದಿಲ್ಲ. ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಇಲ್ಲಿಯವರೆಗೆ ರಾಜಕಾರಣದಲ್ಲಿ ಅಂತಹ ದೊಡ್ಡ ಪ್ರಭಾವ ಬೀರಿಲ್ಲ, ಆದರೂ ಕೆ ಚಂದ್ರಶೇಖರ್ ರಾವ್ ಅವರ ಭಾರತ ರಾಷ್ಟ್ರ ಸಮಿತಿಯಿಂದ ಆಳ್ವಿಕೆ ನಡೆಸುತ್ತಿರುವ ರಾಜ್ಯದಲ್ಲಿ ನಟನ ದೊಡ್ಡ ಅಭಿಮಾನಿ ಬಳಗವನ್ನು ಸೆಳೆಯಲು ಬಿಜೆಪಿ ಆಶಿಸುತ್ತಿದೆ. +ಪವನ್ ಕಲ್ಯಾಣ್ ಆಂಧ್ರಪ್ರದೇಶದಲ್ಲಿ ನಾಯ್ಡು ಅವರೊಂದಿಗೆ ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ. ಆದರೆ ಟಿಡಿಪಿ ಮುಖ್ಯಸ್ಥರು 2018 ರ ಒಕ್ಕೂಟದಿಂದ ಹೊರನಡೆಯುವ ನಿರ್ಧಾರದ ನಂತರ ಮತ್ತೆ ಎನ್‍ಡಿಎ ಬಣದಲ್ಲಿ ಗುರುತಿಸಿಕೊಂಡಿಲ್ಲ. +ಕೇರಳದಲ್ಲಿ ಇಬ್ಬರು ನಕ್ಸಲರ ಬಂಧನ +ಆದರೆ ಇದು ಪವನ್ ಕಲ್ಯಾಣ್ ಅವರ ಬಿಜೆಪಿ ಜೊತೆಗಿನ ಸಂಬಂಧದ ಮೇಲೆ ಪರಿಣಾಮ ಬೀರಿಲ್ಲ. ಇಂದು ಹೈದರಾಬಾದ್‍ನಲ್ಲಿ ನಡೆದ ಸಭೆಯಲ್ಲಿ, ಜನಸೇನಾ ಪಕ್ಷದ ಮುಖ್ಯಸ್ಥರು, ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಪ್ರಧಾನಿ ಮೋದಿಯವರ ಕಠಿಣತೆ ಮತ್ತು ಚುನಾವಣಾ ಲಾಭಗಳನ್ನು ಮಾತ್ರ ನೋಡದೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಾಗಿ ನಾನು ಇಷ್ಟಪಡುತ್ತೇನೆ ಎಂದು ಹೇಳಿದರು. \ No newline at end of file diff --git a/eesanje/url_47_239_2.txt b/eesanje/url_47_239_2.txt new file mode 100644 index 0000000000000000000000000000000000000000..3ce473a7ba41316e7b4c6b7b7a32abfeaa7bad00 --- /dev/null +++ b/eesanje/url_47_239_2.txt @@ -0,0 +1,7 @@ +ದೇಶ ವಿಭಜನೆಗೆ ಕಾಂಗ್ರೆಸ್ ಕಾರಣ ; ಯೋಗಿ +ನರಸಿಂಗ್‍ಪುರ, ನ.9- ದೇಶ ವಿಭಜನೆಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ನರಸಿಂಗ್‍ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೃಷ್ಟಿಗೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳಿದರು. +ಕಾಂಗ್ರೆಸ್ ನಾಯಕರಿಗೆ ಅಧಿಕಾರದ ಅತಿಯಾದ ಆಸೆ ಇಲ್ಲದಿದ್ದರೆ ದೇಶ ಇಬ್ಭಾಗವಾಗುತ್ತಿರಲಿಲ್ಲ, ಒಂದಾಗುತ್ತಿರಲಿಲ್ಲ, 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ಕೂಡಲೇ ಸೋಮನಾಥನ ಪುನರುತ್ಥಾನದ ಕೆಲಸವನ್ನು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಮಾಡಿದ್ದರು. ಆಗಿನ ಪ್ರಧಾನಿ ಜವಾಹರ್ ಲಾಲ್ ನೆಹರು ಇದನ್ನು ವಿರೋಧಿಸಿದ್ದರು ಎಂದು ಅವರು ಹೇಳಿದರು. +ಮಧ್ಯಪ್ರದೇಶದಲ್ಲಿ ಬಿಜೆಪಿ ಸಾರ್ವಜನಿಕರೊಂದಿಗೆ ನಿಂತಿದೆ ಮತ್ತು ಕೇಂದ್ರ ಮಂತ್ರಿಗಳನ್ನು ಚುನಾವಣೆಯಲ್ಲಿ ನಿಲ್ಲಿಸಿದ ನಂತರ ಅವರ ಕಾರ್ಯಗಳಲ್ಲಿ ಇದು ಚೆನ್ನಾಗಿ ಪ್ರತಿಫಲಿಸುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಹೇಳಿದರು. +ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ರೂ. ಅವ್ಯವಹಾರ: ಪ್ರಧಾನಿಗೆ ದೂರು ಸಲ್ಲಿಕೆ +ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿಯು ಸಾರ್ವಜನಿಕರಿಗೆ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ದಟ್ಟವಾಗಿ ನಿಮ್ಮ ಪರವಾಗಿ ನಿಲ್ಲುತ್ತಾರೆ ಎಂದು ಹೇಳಿದರು. ಬಿಜೆಪಿ ನಾಯಕ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ನ ಅರಾಜಕತೆ ಮತ್ತು ಗೂಂಡಾಗಿರಿಯ ವಿರುದ್ಧ ಬರಿಗಾಲಿನ ಹೋರಾಟದಿಂದ ಗಟ್ಟಿಯಾದ ಯೋಧ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. +ಜನರು ಈಗಾಗಲೇ ಪ್ರಹ್ಲಾದ್ ಜೀ ಅವರನ್ನು ನಾಯಕ ಎಂದು ಪರಿಗಣಿಸಿದ್ದಾರೆ ಮತ್ತು ಅವರ ಹೋರಾಟಗಳಲ್ಲಿ ನಿರಂತರವಾಗಿ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂಬುದಕ್ಕೆ ಇಲ್ಲಿ ನೆರೆದಿರುವ ಸಹಸ್ರಾರು ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. \ No newline at end of file diff --git a/eesanje/url_47_239_3.txt b/eesanje/url_47_239_3.txt new file mode 100644 index 0000000000000000000000000000000000000000..273de2c5923bff7bae7d2b4740c9bebcc16b8105 --- /dev/null +++ b/eesanje/url_47_239_3.txt @@ -0,0 +1,9 @@ +“ಬಡತನ ಏಕೈಕ ಜಾತಿ ಎನ್ನುವ ಮೋದಿ ಒಬಿಸಿ ಎಂದು ಗುರುತಿಕೊಳ್ಳುವುದೇಕೆ..?” +ಅಂಬಿಕಾಪುರ,ನ.9- ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಕೈಕ ಜಾತಿ ಎಂದರೆ ಅದು ಬಡತನ ಎಂದಿದ್ದಾರೆ ಹಾಗಾದರೆ ಅವರು ತಮ್ಮನ್ನು ಇತರ ಹಿಂದುಳಿದ ವರ್ಗ (ಒಬಿಸಿ) ಎಂದು ಏಕೆ ಗುರುತಿಸಿಕೊಳ್ಳುತ್ತಾರೆ ಎಂದು ರಾಹುಲ್‍ಗಾಂಧಿ ಪ್ರಶ್ನಿಸಿದ್ದಾರೆ. +ಪ್ರಧಾನಿ ಮೋದಿಯವರು ಪ್ರತಿ ಭಾಷಣದಲ್ಲಿ ನಾನು ಒಬಿಸಿ ಎಂದು ಹೇಳುತ್ತಾರೆ. ಆದರೆ ನಾನು ಜಾತಿ ಜನಗಣತಿಯ ಬಗ್ಗೆ ಮಾತನಾಡುವಾಗ ಅವರು ಭಾರತದಲ್ಲಿ ಜಾತಿ ಇಲ್ಲ ಎಂದು ಹೇಳುತ್ತಾರೆ. ಭಾರತದಲ್ಲಿ ಒಂದೇ ಜಾತಿ ಇದೆ ಅದು ಗರೀಬ್ಎನ್ನುತ್ತಾರೆ ಅವರು ಹಾಗಾದರೆ ಮೋದಿ ಜಿ, ಬಡವರಾಗಿದ್ದರೆ ದೇಶದಲ್ಲಿ ಒಂದೇ ಜಾತಿ ಇದ್ದರೆ ನಿಮ್ಮನ್ನು ಏಕೆ ಒಬಿಸಿ ಎಂದು ಕರೆಯುತ್ತೀರಿ? ಎಂದು ಛತ್ತೀಸ್‍ಗಢದ ಅಂಬಿಕಾಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪ್ರಶ್ನಿಸಿದ್ದಾರೆ. +ಕಪ್ಪುಹಣ, ನೋಟು ಅಮಾನ್ಯೀಕರಣ ಅಥವಾ ಹಿಂದೆ ಹಿಂಪಡೆದಿರುವ ಕೃಷಿ ಕಾನೂನುಗಳ ಬಗ್ಗೆ ಪ್ರಧಾನಿ ಮೋದಿಯವರು ನೀಡಿದ ಎಲ್ಲಾ ಭರವಸೆಗಳು ಸುಳ್ಳು ಅಥವಾ ಜನರಿಗೆ ತಲುಪಿಸಲಾಗಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. +ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ರೂ. ಅವ್ಯವಹಾರ: ಪ್ರಧಾನಿಗೆ ದೂರು ಸಲ್ಲಿಕೆ +ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೆ ಬಂದು 15 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದರು. ನೀವು ಅದನ್ನು ಸ್ವೀಕರಿಸಿದ್ದೀರಾ? ನೋಟು ಅಮಾನ್ಯೀಕರಣದಿಂದ ಕಪ್ಪುಹಣ ನಿರ್ಮೂಲನೆ ಮಾಡುವುದಾಗಿ ಹೇಳಿದ್ದಾರಾ? ಹೀಗಾಯಿತೇ? ಫಾರ್ಮ್ ಬಿಲ್‍ನಿಂದ ರೈತರಿಗೆ ಲಾಭವಾಗಲಿದೆ ಎಂದು ಹೇಳಿದರು. ರೈತರೇ ಮಸೂದೆಯನ್ನು ತಿರಸ್ಕರಿಸಿದರು. ನಿಮಗೆ ತಿಳಿದಿದೆ. ಯಾರು ಸತ್ಯವನ್ನು ಮಾತನಾಡುತ್ತಾರೆ ಮತ್ತು ಯಾರು ಸುಳ್ಳು ಹೇಳುತ್ತಾರೆ, ಎಂದು ಅವರು ಹೇಳಿದರು. +ಹಿಂದಿನ ಚುನಾವಣೆಯ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಸೇರಿದಂತೆ ಛತ್ತೀಸ್‍ಗಢದ ಜನತೆಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ ಎಂದು ರಾಹುಲ್ ಗಾಂಧಿ ಹೇಳಿದರು. +ಕಳೆದ ಚುನಾವಣೆಯಲ್ಲಿ ಕೃಷಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ, ಬರೆದುಕೊಡಿ, ಈ ಬಾರಿ ಮನ್ನಾ ಮಾಡುತ್ತೇನೆ ಎಂದಿದ್ದೆವು, ಕಳೆದ ಬಾರಿ ಬಿಜಿಲಿ ಬಿಲ್ ಅರ್ಧದಷ್ಟು ಎಂದು ಹೇಳಿದ್ದಾವು. 200 ಯೂನಿಟ್‍ಗಳವರೆಗೆ ಮನ್ನಾ ಮಾಡಲಾಗುವುದು. +ಇದರರ್ಥ ಛತ್ತೀಸ್‍ಗಢದ 40 ಲಕ್ಷ ಕುಟುಂಬಗಳು ವಿದ್ಯುತ್‍ಗೆ ಒಂದು ಪೈಸೆಯನ್ನೂ ಪಾವತಿಸುವುದಿಲ್ಲ. ಕೆಜಿಯಿಂದ ಪಿಜಿ–ಇದು ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡುವ ಭಾರತದ ಮೊದಲ ರಾಜ್ಯವಾಗಿದೆ ಅವರು ಹೇಳಿದರು.ಛತ್ತೀಸ್‍ಗಢ ವಿಧಾನಸಭಾ ಚುನಾವಣೆಯ ಮೊದಲ ಹಂತದ 20 ಸ್ಥಾನಗಳಿಗೆ ಮಂಗಳವಾರ ಮತದಾನ ನಡೆದಿದೆ. \ No newline at end of file diff --git a/eesanje/url_47_239_4.txt b/eesanje/url_47_239_4.txt new file mode 100644 index 0000000000000000000000000000000000000000..5db60df115bb4cfd1f05c9e3ad085d4fe5ff5750 --- /dev/null +++ b/eesanje/url_47_239_4.txt @@ -0,0 +1,5 @@ +ತಲೆ ಬೋಳಿಸಿ ರ‍್ಯಾಗಿಂಗ್ ಮಾಡಿದ 7 ವಿದ್ಯಾರ್ಥಿಗಳ ಬಂಧನ +ಕೊಯಮತ್ತೂರು,ನ.9- ವಿದ್ಯಾರ್ಥಿಯೊಬ್ಬರ ತಲೆ ಬೋಳಿಸಿ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಪಿಎಸ್‍ಜಿ ಕಾಲೇಜ್ ಆಫ್ ಟೆಕ್ನಾಲಜಿಯ ಏಳು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. +ಎಲ್ಲಾ ಏಳು ಆರೋಪಿಗಳು ಎರಡನೇ ವರ್ಷದಲ್ಲಿ ಓದುತ್ತಿದ್ದಾರೆ ಮತ್ತು ರ‍್ಯಾಗಿಂಗ್ ನಲ್ಲಿ ತೊಡಗಿದ್ದರು ಮತ್ತು ಮದ್ಯಕ್ಕಾಗಿ ಸಂತ್ರಸ್ತರಿಂದ ಹಣಕ್ಕಾಗಿ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. +ಬಿಬಿಎಂಪಿಯಲ್ಲಿ 10 ಸಾವಿರ ಕೋಟಿ ರೂ. ಅವ್ಯವಹಾರ: ಪ್ರಧಾನಿಗೆ ದೂರು ಸಲ್ಲಿಕೆ +ಏಳು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಕಾಲೇಜು ಆಡಳಿತ ಮಂಡಳಿಯು ಎಲ್ಲಾ ಏಳು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. \ No newline at end of file diff --git a/eesanje/url_47_239_5.txt b/eesanje/url_47_239_5.txt new file mode 100644 index 0000000000000000000000000000000000000000..8869c0257bd1e7b57f2fbeaeae62e6a4bbb9be48 --- /dev/null +++ b/eesanje/url_47_239_5.txt @@ -0,0 +1,6 @@ +ಜಾರ್ಖಂಡ್ : ಇಬ್ಬರು ಐಸಿಸ್ ಉಗ್ರರ ಬಂಧನ +ರಾಂಚಿ,ನ.9- ಜಾರ್ಖಂಡ್ ಪೊಲೀಸ್‍ನ ಭಯೋತ್ಪಾದನಾ ನಿಗ್ರಹ ದಳ () ರಾಜ್ಯದ ಗೊಡ್ಡಾ ಮತ್ತು ಹಜಾರಿಬಾಗ್ ಜಿಲ್ಲೆಗಳಲ್ಲಿ ಇಬ್ಬರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿರುವುದಾಗಿ ತಿಳಿಸಿದೆ. ಇಬ್ಬರ ವಿರುದ್ಧ ಯುಎಪಿಎ ಮತ್ತು ಐಪಿಸಿ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. +ಉಗ್ರರಲ್ಲಿ ಒಬ್ಬರಾದ ಗೊಡ್ಡಾ ಜಿಲ್ಲೆಯ ಅಸಾನ್‍ಬಾನಿ ಪ್ರದೇಶದ ನಿವಾಸಿ ಎಂಡಿ ಆರಿಜ್ ಹುಸೇನೈನ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯುವಕರನ್ನು ಭೇಟಿಯಾಗುತ್ತಿದ್ದರು ಮತ್ತು ಅವರಿಗೆ ಬೋಧನೆ ಮಾಡುತ್ತಿದ್ದರು ಎಂದು ಎಟಿಎಸ್ ಹೇಳಿಕೆಯಲ್ಲಿ ತಿಳಿಸಿದೆ. +ಐಸಿಸಿ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್ 1 ಸ್ಥಾನಕ್ಕೇರಿದ ಗಿಲ್, ಸಿರಾಜ್ +ಮತ್ತೊಬ್ಬ ವ್ಯಕ್ತಿ ನಸೀಮ್‍ನನ್ನು ಹಜಾರಿಬಾಗ್‍ನ ಪೆಲಾವಲ್ ಪ್ರದೇಶದಲ್ಲಿ ಬಂಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ನೆಲೆಗೊಂಡಿರುವ ಐಸಿಸ್ ಮತ್ತು ಇತರ ನಿಷೇತ ಭಯೋತ್ಪಾದಕ ಗುಂಪುಗಳೊಂದಿಗೆ ತನ್ನ ಸಂಪರ್ಕವನ್ನು ಹುಸೇನೈನ್ ತಪ್ಪೋಪ್ಪಿಕೊಂಡಿದ್ದಾನೆ. +ಜಿಹಾದ್ ಮತ್ತು ಐಸಿಸ್ ಸಿದ್ಧಾಂತಕ್ಕೆ ಸಂಬಂಸಿದ ಎರಡು ಪುಸ್ತಕಗಳನ್ನು ಹುಸೇನ್‍ಗೆ ನಸೀಮ್ ಕಳುಹಿಸಿದ್ದನು, ಎಟಿಎಸ್ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ. \ No newline at end of file diff --git a/eesanje/url_47_239_6.txt b/eesanje/url_47_239_6.txt new file mode 100644 index 0000000000000000000000000000000000000000..39aa1d4951225daf9ca1745ce3443c7d963a12a2 --- /dev/null +++ b/eesanje/url_47_239_6.txt @@ -0,0 +1,12 @@ +ಮಾನವಕಳ್ಳ ಸಾಗಾಣಿಕೆ ದಂಧೆ : ಬೆಂಗಳೂರು ಸೇರಿ ದೇಶದ ಹಲವೆಡೆ ದಾಳಿ +ನವದೆಹಲಿ, ನ.8- ಮಾನವ ಕಳ್ಳ ಸಾಗಣೆ ಆರೋಪದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ವಿವಿಧ ಕಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದೆ. +ತ್ರಿಪುರಾ, ಅಸ್ಸಾಂ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ, ಹರಿಯಾಣ, ಪುದುಚೇರಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‍ಐಎ ಶೋಧ ನಡೆಸಿದೆ. +ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ ಎನ್‍ಐಎ ದಾಳಿ ನಡೆಸಿದೆ. ನಗರದ ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದೆ.8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. +ಎನ್‍ಐಎ ನ 15 ಅಧಿಕಾರಿಗಳ ತಂಡವು ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಬೆಂಗಳೂರು ನಗರದ 15ಕ್ಕೂ ಹೆಚ್ಚು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ ಮಂಗಳವಾರ ರಾತ್ರಿ ದಾಳಿ ಮಾಡಿದೆ. ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ಎನ್‍ಐಎ ಅಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. +ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡಲು ಸರ್ಕಾರ ಆದೇಶ : ಡಿಸಿಎಂ +ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಂಗ್ಲಾ ದೇಶದಿಂದ ನೂರಾರು ಮಂದಿಯನ್ನು ಭಾರತಕ್ಕೆ ಅಕ್ರಮವಾಗಿ ಕರೆ ತರುವುದು, ಇಲ್ಲಿ ಅವರನ್ನು ಉಗ್ರಗಾಮಿ ಚಟುವಟಿಕೆಗಳಿಗೆ ಬಳಸುವುದು ಇವರ ಮೇಲಿನ ಆರೋಪವಾಗಿತ್ತು. +ಉದ್ಯೋಗದ ಆಮಿಷವೊಡ್ಡಿ ಅವರನ್ನು ಇಲ್ಲಿಗೆ ಕರೆತಂದು ಬಳಿಕ ಅವರಿಗೆ ಉಗ್ರ ತರಬೇತಿ ನೀಡಿ ದುಷ್ಕøತ್ಯಗಳಿಗೆ ಬಳಸುವ ವಿದ್ಯಮಾನಗಳು ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಅವರಲ್ಲಿ ಕೆಲವರು ಕಳ್ಳತನ, ದರೋಡೆ ಕೃತ್ಯಗಳಲ್ಲಿ ಶಾಮೀಲಾದರೆ ಇನ್ನೂ ಕೆಲವರು ಕೊಲೆ, ಉಗ್ರ ಕೃತ್ಯಗಳಲ್ಲೂ ಭಾಗಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ರಾಜ್ಯದ ಕೆಲವು ಕಡೆ ಅವರು ತಮ್ಮದೇ ಆದ ಕಾಲೋನಿಗಳನ್ನು ಸೃಷ್ಟಿಸಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ ಎಂಬ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದವು. +ಬೆಂಗಳೂರಿನ ಜಕ್ಕಸಂದ್ರ, ಬೆಳ್ಳಂದೂರು ಕೆರೆ ಮುಂಭಾಗ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಮುನ್ನೇಕೊಳಲು, ಸೋಮಸುಂದರಪಾಳ್ಯ, ಬೇಗೂರು ರಸ್ತೆ ನೈಸ್ ರಸ್ತೆ ಸೇರುವ ಭಾಗ ಸೇರಿದಂತೆ ಅನೇಕ ಪ್ರದೇಶದಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಮಾತು ಈ ಹಿಂದೆಯೇ ಕೇಳಿ ಬಂದಿತ್ತು. ಕೆಲವರು ವೀಸಾ ಅವಧಿ ಮುಗಿದರೂ ಕಾನೂನು ಬಾಹಿರವಾಗಿ ದೇಶದ ವಿವಿಧ ಕಡೆ ನೆಲೆಸಿದ್ದರು. +ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ +ಇನ್ನು ಕೆಲವು ಶ್ರೀಲಂಕಾ ಪ್ರಜೆಗಳು ಭಾರತದಲ್ಲಿ ಅಕ್ರಮವಾಗಿ ತಂಗಿದ್ದಕ್ಕೆ ಸಂಬಂಧಿಸಿದಂತೆ ಎನ್‍ಐಎ ಕಳೆದ ತಿಂಗಳು ತಮಿಳುನಾಡು ಮೂಲದ ವ್ಯಕ್ತಿ – ಮೊಹಮ್ಮದ್ ಇಮ್ರಾನ್ ಖಾನ್ ಅವರನ್ನು ಬಂಧಿಸಿತ್ತು ದಾಳಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ಖಚಿತಪಟ್ಟಿಲ್ಲ. +ಇದಕ್ಕೂ ಮೊದಲು, 2022ರಲ್ಲಿ, ರೊಹಿಂಗ್ಯಾಗಳು ಮತ್ತು ಬಾಂಗ್ಲಾದೇಶಿ ಮುಸ್ಲಿಮರನ್ನು ಭಾರತದ ಭೂಪ್ರದೇಶಕ್ಕೆ ಸಾಗಿಸುವ ಹಾಗೂ ನಕಲಿ ದಾಖಲೆಗಳೊಂದಿಗೆ ಇಲ್ಲಿ ನೆಲೆಸಿರುವ ಬಗ್ಗೆ ತನಿಖೆ ನಡೆಸಿತ್ತು. \ No newline at end of file